ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ : ಭಾರತೀಯ ಸೇನೆಯಿಂದ ಪ್ರತಿದಾಳಿ
ಜಮ್ಮುಕಾಶ್ಮೀರ: ಪಾಕಿಸ್ತಾನದ ಸೈನಿಕರು ಕಳೆದ ರಾತ್ರಿ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯು ತಕ್ಕ ಪ್ರತಿಕ್ರಿಯೆ ನೀಡಿದೆ ಎಂದು ವರದಿಯಾಗಿದೆ. ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದನಾ ದಾಳಿ ಬಳಿಕ ಭಾರತ-ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವ ಮಧ್ಯೆ ಕಳೆದ ಎರಡು ದಿನಗಳಲ್ಲಿ ರಾತ್ರಿ ವೇಳೆ ಪಾಕ್ ಸೇನೆ ಗಡಿನಿಯಂತ್ರಣಾ ರೇಖೆಯಾದ್ಯಂತ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಗುಂಡಿನ ಚಕಮಕಿಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಎಪ್ರೀಲ್ 25 ಮತ್ತು 26ರಂದು ರಾತ್ರಿ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಾದ್ಯಂತ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಪಡೆಗಳು ಸರಿಯಾಗಿ ಪ್ರತಿಕ್ರಿಯೆಯನ್ನು ನೀಡಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಕಲಬುರಗಿ: ದರೋಡೆಕೋರರ ಮೇಲೆ ಪೊಲೀಸರಿಂದ ಫೈರಿಂಗ್; ಇಬ್ಬರ ಬಂಧನ
ಕಲಬುರಗಿ: ಕಳೆದ ಎರಡು ವಾರಗಳ ಹಿಂದೆ ನಗರದ ಪೂಜಾರಿ ಚೌಕ್ ಬಳಿ ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ 18 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪಿಗಳಿಬ್ಬರ ಮೇಲೆ ಪೊಲೀಸರು ಫೈರಿಂಗ್ ನಡೆಸಿ, ಅವರನ್ನು ಬಂಧಿಸಿರುವ ಘಟನೆ ನಗರದ ಬೇಲೂರು ಕ್ರಾಸ್ ಸಮೀಪ ಶನಿವಾರ ಬೆಳಗ್ಗೆ ನಡೆದಿದೆ. ಹರಿಯಾಣ ಮೂಲದ ತಸ್ಲಿಮ್(28) ಮತ್ತು ಶರೀಫ್ (22) ಬಂಧಿತ ದರೋಡೆಕೋರರು ಎಂದು ತಿಳಿದುಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ ಅವರು, ಈ ಹಿಂದೆ ಎಟಿಎಂ ದರೋಡೆ ಮಾಡಿರುವ ಆರೋಪಿಗಳು ಮತ್ತೊಮ್ಮೆ ದರೋಡೆ ಮಾಡಲು ನಗರಕ್ಕೆ ಆಗಮಿಸಿದ್ದರು. ಅನುಮಾನಾಸ್ಪದ ವಾಹನ ಗಮನಿಸಿದ ಪೊಲೀಸರು, ಸಬ್ ಅರ್ಬನ್ ಮತ್ತು ವಿವಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಅವರದೇ ತಂಡಗಳನ್ನು ರಚಿಸಿ, ಆರೋಪಿಗಳನ್ನು ಬಂಧಿಸಲು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಇಬ್ಬರ ಮೇಲೆ ಇನ್ಸ್ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಇಬ್ಬರ ಮೊಣಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ ಎಂದರು. ಘಟನೆಯಲ್ಲಿ ಪಿಎಸ್ಐ ಬಸವರಾಜ್ ಹಾಗೂ ಇಬ್ಬರು ಪೊಲೀಸರು ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಏಪ್ರಿಲ್ 9ರಂದು ಕಲಬುರಗಿ ನಗರದ ಪೂಜಾರಿ ಚೌಕ್ ನಲ್ಲಿದ್ದ ಎಸ್ಬಿಐ ಬ್ಯಾಂಕ್ ಎಟಿಎಂ ಅನ್ನು ಒಡೆದು ದರೋಡೆಕೋರರು 18 ಲಕ್ಷ ಹಣ ದೋಚಿದ್ದರು. ಆರೋಪಿಯನ್ನು ಬಂಧಿಸಲು ಸವಾಲಾಗಿದ್ದ ಈ ಪ್ರಕರಣವನ್ನು ಭೇದಿಸುವಲ್ಲಿ ಕೊನೆಗೂ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಫ್ಲೆಕ್ಸ್ಗಳದ್ದೇ ಕಾಟ! ಹೈಕೋರ್ಟ್ ಆದೇಶ ಇದ್ದರೂ ಜನಪ್ರತಿನಿಧಿಗಳೇ ಡೋಂಟ್ ಕೇರ್
ಬೆಂಗಳೂರು ನಗರದಲ್ಲಿ ಎಲ್ಲಾ ಕಡೆಗಳಲ್ಲಿ ಫ್ಲೆಕ್ಸ್, ಕಟೌಟ್ಗಳೇ ರಾರಾಜಿಸುತ್ತಿವೆ. ನಗರದಲ್ಲಿ ಫ್ಲೆಕ್ಸ್, ಕಟೌಟ್ ಹಾಕಲು ನಿಷೇಧ ಇದ್ದರೂ ಜನಪ್ರತಿನಿಧಿಗಳೇ ಅದನ್ನು ಪಾಲನೆ ಮಾಡುತ್ತಿಲ್ಲ. ವಿಜಯ ನಗರದಲ್ಲಿ ಕಾಂಗ್ರೆಸ್ ಶಾಸಕರಿಬ್ಬರ ಹುಟ್ಟುಹಬ್ಬಕ್ಕೆ ಶುಭಕೋರುವ ಫ್ಲೆಕ್ಸ್, ಕಟೌಟ್ ರಾಜಾಜಿಸುತ್ತಿವೆ. ಈ ಹಿಂದೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಯಾರೂ ಫ್ಲೆಕ್ಸ್ ಹಾಕುವ ಹಾಗಿಲ್ಲ. ಇದರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಈ ಕುರಿತಾದ ಒಂದು ವರದಿ ಇಲ್ಲಿದೆ.
ಈ ಬಾರಿ ಶೇ.30 ಮಾವಿನ ಫಸಲು ; ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರಲ್ಲಿ ಆತಂಕ
ಕಳೆದ ವರ್ಷ ಹಿಂಗಾರು ಮಳೆ ಉತ್ತಮವಾಗಿ ಆಗಿದ್ದರಿಂದ ಭೂಮಿ ತಂಪಾಗಿ ಮಾಮರಗಳು ಶೇ.70 ಭಾಗ ಚಿಗುರು ಬಂದಿವೆ. ಡಿಸೆಂಬರ್, ಜನವರಿಯಲ್ಲಿಅರಳಿದ ಹೂವುಗಳಲ್ಲಿ ಸರಾಸರಿ 30 ಪರ್ಸೆಂಟ್ ಮಾತ್ರ ಮಿಡಿ ಕಟ್ಟಿವೆ. ಎರಡು ತಿಂಗಳು ತಡವಾಗಿ ಹೂವು ಉತ್ತಮವಾಗಿ ಅರಳಿತ್ತಾದರೂ ಟ್ರಿಫ್ಸ್ ರೋಗಾಣುಗಳು ಬಿದ್ದು ಸಂಪೂರ್ಣ ಹೂವನ್ನು ನಾಶ ಮಾಡಿದೆ.
ತಿರುವನಂತಪುರ- ಮಂಗಳೂರು ಮಾರ್ಗದಲ್ಲಿ ಬರಲಿದೆ ವಂದೇ ಭಾರತ್ ಸ್ಲೀಪರ್ ರೈಲು; ಏನಿದರ ವಿಶೇಷತೆ?
ಕೇರಳ ಮತ್ತು ಕರ್ನಾಟಕಕ್ಕೆ ವಂದೇ ಭಾರತ್ ಸ್ಲೀಪರ್ ರೈಲುಗಳು ದೊರೆಯಲಿದ್ದು, ತಿರುವನಂತಪುರ-ಮಂಗಳೂರು ಮಾರ್ಗದಲ್ಲಿ ಸಂಚರಿಸುವ ಸಾಧ್ಯತೆ ಇದೆ. ಚೆನ್ನೈ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಇದರ ವಿನ್ಯಾಸ ನಡೆಯುತ್ತಿದೆ. ಇದಲ್ಲದೆ ತಿರುವನಂತಪುರ-ಬೆಂಗಳೂರು ಮತ್ತು ಕನ್ಯಾಕುಮಾರಿ- ಶ್ರೀನಗರ (ಕೊಂಕಣ ಮೂಲಕ) ಮಾರ್ಗಗಳನ್ನು ಕೂಡ ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಓಡಿಸಲು ಪರಿಗಣಿಸಲಾಗುತ್ತಿದೆ.
SRH ವಿರುದ್ಧದ ಪಂದ್ಯದಲ್ಲಿ ಸೋತಿದ್ದಕ್ಕೆ ಬ್ಯಾಟ್ಸ್ಮನ್ಗಳ ಕಳಪೆ ಆಟವೇ ಕಾರಣ ಎಂದು CSK ತಂಡದ ನಾಯಕ ಎಂ.ಎಸ್. ಧೋನಿ ನೇರವಾಗಿ ಟೀಕಿಸಿದ್ದಾರೆ. ಸನ್ರೈಸರ್ಸ್ ವಿರುದ್ಧದ ಪಂದ್ಯದಲ್ಲಿ, ಗೆಲ್ಲಲೇಬೇಕಾದ ಒತ್ತಡದಲ್ಲಿದ್ದ CSK ತಂಡವು ಕೆಲವು ಬದಲಾವಣೆಗಳನ್ನು ಮಾಡಿತ್ತು. ಡೆವಾಲ್ಡ್ ಬ್ರೆವಿಸ್ ಮತ್ತು ದೀಪಕ್ ಹೂಡಾ ತಂಡಕ್ಕೆ ಸೇರಿಕೊಂಡರೆ, ರಚಿನ್ ರವೀಂದ್ರ ಅವರನ್ನು ಕೈಬಿಡಲಾಗಿತ್ತು. ಆದರೆ, ಬದಲಾವಣೆಗಳ ಹೊರತಾಗಿಯೂ, CSK ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಮೊದಲ ಎಸೆತದಲ್ಲೇ ಶೈಕ್ ರಶೀದ್ ವಿಕೆಟ್ ಕಳೆದುಕೊಂಡಿತು. ಪಂದ್ಯದ ನಂತರ ಮಾತನಾಡಿದ ಧೋನಿ, ಬ್ಯಾಟ್ಸ್ಮನ್ಗಳು ಉತ್ತಮ ಆರಂಭ ನೀಡುವಲ್ಲಿ ವಿಫಲರಾದದ್ದನ್ನು ಟೀಕಿಸಿದರು.
ಸಿದ್ದರಾಮಯ್ಯಗೆ ತುಂಬಾ ಇಷ್ಟವಾದ ಜಿಲ್ಲೆ ಯಾವುದು ಗೊತ್ತಾ?
ಚಾಮರಾಜನಗರ, ಏಪ್ರಿಲ್ 26: ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆ ಜಿಲ್ಲೆಯ ಜನರಿಗೆ ಮಾಡುವ ಅವಮಾನ. ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ. ನನಗೆ ಚಾಮರಾಜನಗರ ಅತ್ಯಂತ ಇಷ್ಟವಾದ ಜಿಲ್ಲೆ. ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ
ವಕ್ಫ್ ತಿದ್ದುಪಡಿ ವಿರೋಧಿ ಹೋರಾಟದಲ್ಲಿ ಭಾಗಿ ಆರೋಪ; ಬಿಜೆಪಿಯಿಂದ ರೌಫುದ್ದೀನ್ ಕಚೇರಿವಾಲೆ ಉಚ್ಛಾಟನೆ
ಬೀದರ್ : ವಕ್ಫ್ ಕಾಯಿದೆ ತಿದ್ದುಪಡಿ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದಾರೆ ಎಂದು ಕಾರಣ ನೀಡಿ ಅವರು, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ರೌಫುದ್ದೀನ್ ಕಚೇರಿವಾಲೆ ಅವರನ್ನು ಬಿಜೆಪಿಯು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ರಾಜ್ಯ ಹಜ್ ಕಮಿಟಿಯ ಮಾಜಿ ಅಧ್ಯಕ್ಷರಾಗಿದ್ದ ಇವರು ಕಾಂಗ್ರೆಸ್ ಹಾಗೂ ಕೆಲ ಮುಸ್ಲಿಂ ಮುಖಂಡರ ಜೊತೆಗೂಡಿ ಕಪ್ಪು ಪಟ್ಟಿ ಧರಿಸಿ ವಕ್ಫ್ ಕಾಯಿದೆ ತಿದ್ದುಪಡಿ ವಿರೋಧದ ಹೋರಾಟದಲ್ಲಿ ಅವರು ಭಾಗಿಯಾಗಿದ್ದರು. ಇದಕ್ಕೆ ಕಾರಣ ಕೇಳಿ ಬಿಜೆಪಿ ಪಕ್ಷವು ಅವರಿಗೆ ನೋಟಿಸ್ ಕೂಡ ನೀಡಿತ್ತು. ಬಿಜೆಪಿಯಿಂದ ನೀಡಿರುವ ನೋಟಿಸ್ ಗೆ ಅವರು ಸ್ಪಷ್ಟಿಕರಣ ನೀಡಿರಲಿಲ್ಲ. ಇದರಿಂದಾಗಿ ರೌಫುದ್ದೀನ್ ಕಚೇರಿವಾಲೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಎಲ್ಲ ರೀತಿಯ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಪತ್ರದ ಮೂಲಕ ತಿಳಿಸಿದ್ದಾರೆ.
ಬಲೂಚಿಸ್ತಾನದಲ್ಲಿ ಬಿಎಲ್ಎನಿಂದ ಭೀಕರ ಬಾಂಬ್ ಸ್ಫೋಟ, 10 ಪಾಕಿಸ್ತಾನಿ ಸೈನಿಕರು ಸಾವು
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಯ ನಡುವೆಯೇ, ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ಕ್ವೆಟ್ಟಾದಲ್ಲಿ ಪಾಕಿಸ್ತಾನ ಸೇನೆಯ ಮೇಲೆ ಐಇಡಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಹತ್ತು ಜನ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ಪಾಕ್ ಸೇನೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸುವುದಾಗಿ ಬಿಎಲ್ಎ ಎಚ್ಚರಿಕೆ ನೀಡಿದೆ. ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಪ್ರತ್ಯೇಕಿಸುವ ಗುರಿಯೊಂದಿಗೆ ಬಿಎಲ್ಎ ಹೋರಾಟ ನಡೆಸುತ್ತಿದೆ.
‘‘ಇಷ್ಟೊಂದು ದೊಡ್ಡ ದಾಳಿ ನಡೆದಿದೆ. ಆದರೆ ಸರಕಾರದ ಸುದ್ದಿಯೇ ಇಲ್ಲ. ಅವರಿಗೆ ಇದರ ಬಗ್ಗೆ ಗೊತ್ತೇ ಇರಲಿಲ್ಲ. ಪಕ್ಕದಲ್ಲೇ ಇದ್ದ ಸೇನಾ ನೆಲೆಯಿಂದ ಒಂದು ಗಂಟೆ ಕಳೆದರೂ ಯಾರೂ ನೆರವಿಗೆ ಬರಲೇ ಇಲ್ಲ’’ ಹೀಗೆಂದು ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ಗುಜರಾತ್ನ ಸೂರತ್ನ ಪುಟ್ಟ ಬಾಲಕ ನಕ್ಷ್ ಕಲ್ತಿಯಾ. ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಈ ಬಾಲಕನ ತಂದೆ ಮೃತಪಟ್ಟಿದ್ದರು. ನೂರಾರು ಪ್ರವಾಸಿಗರು ಪ್ರತಿನಿತ್ಯ ಬಂದು ಹೋಗುವ ಸ್ಥಳದಲ್ಲಿ ಸರಕಾರ ಯಾಕೆ ಒಬ್ಬನೇ ಒಬ್ಬ ಭದ್ರತಾ ಸಿಬ್ಬಂದಿಯನ್ನು ಗಸ್ತಿಗಾಗಿ ಇಟ್ಟಿರಲಿಲ್ಲ ? ಎನ್ನುವ ಪ್ರಶ್ನೆ ಇನ್ನೂ ಉತ್ತರವಿಲ್ಲದೆ ಬಿದ್ದುಕೊಂಡಿದೆ. ಉಗ್ರರ ದಾಳಿಯಲ್ಲಿ ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡವರೆಲ್ಲರ ಕಟ್ಟ ಕಡೆಯ ಪ್ರಶ್ನೆ ‘ಸರಕಾರದ ಭದ್ರತೆ’ಯ ಲೋಪವನ್ನೇ ಗುರಿಯಾಗಿಸಿಕೊಂಡಿದೆ. ಬರೇ ನಾಲ್ಕು ಮಂದಿ ಉಗ್ರರು ಕೈಯಲ್ಲಿ ಬಂದೂಕುಗಳನ್ನು ಹಿಡಿದುಕೊಂಡು ಬಂದು, ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಾರೆ. ಗಸ್ತು ಪಡೆ ಇದ್ದಿದ್ದರೆ ಅವರನ್ನು ಎದುರಿಸುವುದು ಕಷ್ಟ ಸಾಧ್ಯವೇನೂ ಆಗಿರಲಿಲ್ಲ. ಇಷ್ಟೊಂದು ಸಾವು ನೋವಂತೂ ಖಂಡಿತಾ ನಡೆಯುತ್ತಿರಲಿಲ್ಲ. ಕನಿಷ್ಠ ಆ ಉಗ್ರರನ್ನಾದರೂ ಕೊಂದು ಹಾಕಿ ಬಿಡಬಹುದಾಗಿತ್ತು. ಎಲ್ಲ ಸಂತ್ರಸ್ತ ಕುಟುಂಬಗಳೂ ಇದನ್ನೇ ಪದೇ ಪದೇ ಉಲ್ಲೇಖಿಸುತ್ತಿವೆ. ಉಗ್ರರ ಹೇಯ ಕೃತ್ಯ ಖಂಡನೀಯ ಎನ್ನುವುದರಲ್ಲಿ ಎರಡು ಮಾತಿಲ್ಲ. ಉಗ್ರರನ್ನು ಸಂಪೂರ್ಣ ದಮನ ಮಾಡಲು ದೇಶ ಎಲ್ಲ ಪಕ್ಷ, ಧರ್ಮ, ಜಾತಿ ಭೇದಗಳನ್ನು ಬದಿಗಿಟ್ಟು ಒಂದಾಗಿವೆ. ಉಗ್ರವಾದಿಗಳ ವೃತ್ತಿಯೇ ಕೊಲ್ಲುವುದಾಗಿದೆ ಮತ್ತು ಸಾಯುವುದಕ್ಕೂ ಅವರು ಸಿದ್ಧರಾಗಿಯೇ ಬರುತ್ತಾರೆ. ಆದರೆ ಕಾಯಬೇಕಾಗಿದ್ದ ಭದ್ರತಾ ಸಿಬ್ಬಂದಿ ಎಲ್ಲಿದ್ದರು? ಸಂತ್ರಸರು ಈ ಪ್ರಶ್ನೆಯನ್ನು ದೊಡ್ಡ ಧ್ವನಿಯಲ್ಲಿ ಕೇಳುತ್ತಿದ್ದಾರೆ. ಸರಕಾರ ಸಂತ್ರಸ್ತರಿಗೆ ಉತ್ತರಿಸಲೇಬೇಕಾಗಿದೆ. ಕಳೆದ ಐದು ವರ್ಷಗಳ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಮೇಲೆ ಸೇನೆ ಸಂಪೂರ್ಣ ಗೆಲುವು ಸಾಧಿಸಿದೆ ಎಂಬ ಅಮಿತ್ ಶಾ ಮಾತುಗಳನ್ನು ದೇಶ ನಂಬಿದೆ. ಆ ನಂಬಿಕೆಯ ಬಲದಿಂದಲೇ, ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಈಗಲೂ ಕಾಶ್ಮೀರ ಕೇಂದ್ರ ಸರಕಾರದ ನಿಯಂತ್ರಣದಲ್ಲಿದೆ. ಸೇನಾ ಪಡೆಗಳು ಮತ್ತು ಪೊಲೀಸರ ನಿಯಂತ್ರಣ ಕೇಂದ್ರ ಸರಕಾರದ ಬಳಿಯೇ ಇದೆ. ಕಾಶ್ಮೀರಕ್ಕೆ ಇನ್ನೂ ರಾಜ್ಯದ ಸ್ಥಾನಮಾನ ದೊರಕಿಲ್ಲ. ಒಂದು ಚುನಾಯಿತ ಸರಕಾರ ಅಲ್ಲಿ ಅಸ್ತಿತ್ವದಲ್ಲಿದೆಯಾದರೂ, ಅದರ ಅಧಿಕಾರ ಸೀಮಿತವಾದುದು. ಸ್ಥಳೀಯ ಸರಕಾರ ಕಾಶ್ಮೀರಕ್ಕೆ ಭದ್ರತೆ ನೀಡುವುದಕ್ಕೆ ಸಾಮರ್ಥ್ಯವನ್ನು ಹೊಂದಿಲ್ಲ ಎನ್ನುವ ಕಾರಣಕ್ಕಾಗಿಯೇ ಅಲ್ಲಿನ ಸರಕಾರವನ್ನು ವಜಾಗೊಳಿಸಿ ಇಡೀ ಕಾಶ್ಮೀರವನ್ನು ಕೇಂದ್ರ ಸರಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಈ ಕಾರಣದಿಂದ, ಎಲ್ಲೇ ಭದ್ರತಾ ಲೋಪಗಳು ನಡೆದರೂ ಅದರ ಹೊಣೆಗಾರಿಕೆಯನ್ನು ಕೇಂದ್ರ ಸರಕಾರವೇ ಹೊತ್ತುಕೊಳ್ಳಬೇಕಾಗುತ್ತದೆ. ಉಗ್ರರ ದಾಳಿಯ ಕುರಿತಂತೆ ಸಂತ್ರಸ್ತ ಪ್ರವಾಸಿಗರು ನಾಲ್ಕು ವಿಷಯಗಳನ್ನು ದೇಶದ ಮುಂದಿಟ್ಟಿದ್ದಾರೆ. ಒಂದು, ಉಗ್ರರು ದೊಡ್ಡ ಸಂಖ್ಯೆಯಲ್ಲೇನೂ ಇರಲಿಲ್ಲ. ನಾಲ್ಕೇ ನಾಲ್ಕು ಜನರು ಇಷ್ಟು ದೊಡ್ಡ ಹಿಂಸಾಚಾರವನ್ನು ಎಸಗಿದ್ದರು. ಅವರು ಯಾವುದೇ ಬಾಂಬ್ ಸ್ಫೋಟ ಅಥವಾ ಆತ್ಮಹತ್ಯಾ ದಾಳಿಯ ಮೂಲಕ ಹಿಂಸಾಚಾರ ಎಸಗಿರಲಿಲ್ಲ. ಅತ್ಯಂತ ನಿರ್ಭಯವಾಗಿ, ಸಾವಧಾನದಿಂದ ಕೆಲವರ ಧರ್ಮಗಳನ್ನು ವಿಚಾರಣೆ ನಡೆಸಿ ಗುಂಡು ಹಾರಿಸಿದ್ದರು. ಎರಡನೆಯದು, ಈ ಸಂದರ್ಭದಲ್ಲಿ ಆ ಪರಿಸರದಲ್ಲಿ ಒಬ್ಬನೇ ಒಬ್ಬ ಭದ್ರತಾ ಸಿಬ್ಬಂದಿಯಿರಲಿಲ್ಲ. ಅಲ್ಲಿಗೆ ಉಗ್ರರು ನುಸುಳಿರುವುದು ಹೇಗೆ ಎನ್ನುವುದು ಇನ್ನೊಂದು ಪ್ರಶ್ನೆ. ಹಿಂಸಾಚಾರ ನಡೆದ ಬಳಿಕವೂ ಸುಮಾರು ಒಂದು ಗಂಟೆಗಳ ಕಾಲ ಯಾವುದೇ ಆ್ಯಂಬ್ಯುಲೆನ್ಸ್ ಅಥವಾ ಭದ್ರತಾ ಪಡೆಗಳು ನೆರವಿಗೆ ಧಾವಿಸಿ ಬಂದಿರಲಿಲ್ಲ. ಇದು ಕೇಂದ್ರ ಸರಕಾರದ ನಿಯಂತ್ರಣದಲ್ಲಿರುವ ಭದ್ರತಾ ಪಡೆಗಳು ಉಗ್ರರನ್ನು ನಿಯಂತ್ರಿಸುತ್ತಿರುವ ಮತ್ತು ನಾಗರಿಕರಿಗೆ ರಕ್ಷಣೆ ನೀಡುತ್ತಿರುವ ರೀತಿ. ಈ ಸಂದರ್ಭದಲ್ಲಿ ಪ್ರವಾಸಿಗರ ಜೊತೆಗೆ ನಿಂತು, ಅವರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದವರು ಸ್ಥಳೀಯ ಕಾಶ್ಮೀರಿಗಳು. ಯೋಧರು ಬರುವವರೆಗೆ ಅವರು ಕಾಯಲಿಲ್ಲ. ಗಾಯಾಳುಗಳನ್ನು ಮತ್ತು ಬದುಕುಳಿದವರನ್ನು ಸುರಕ್ಷಿತ ಸ್ಥಳಗಳಿಗೆ ಸೇರಿಸುವಲ್ಲಿ ಅವರು ತಮ್ಮ ಪ್ರಾಣವನ್ನೇ ಒತ್ತೆಯಿಟ್ಟು ಕೆಲಸ ಮಾಡಿದರು. ಎಲ್ಲ ಪ್ರವಾಸಿಗರು ಒಕ್ಕೊರಲಿನಲ್ಲಿ ಕಾಶ್ಮೀರಿಗಳನ್ನು ಶ್ಲಾಘಿಸಿದ್ದಾರೆ ಮತ್ತು ಅವರೆಲ್ಲರೂ ಸರಕಾರದ ಭದ್ರತಾ ಲೋಪಗಳನ್ನು ಆಕ್ರೋಶ ಭರಿತವಾಗಿ ಖಂಡಿಸಿದ್ದಾರೆ. ವಿದೇಶದಲ್ಲಿದ್ದ ಪ್ರಧಾನಿ ಮೋದಿಯವರು ತಕ್ಷಣ ಭಾರತಕ್ಕೇನೋ ಆಗಮಿಸಿದರು. ಆದರೆ ಅವರು ತೆರಳಿದ್ದು ಚುನಾವಣೆ ನಡೆಯಲಿರುವ ಬಿಹಾರಕ್ಕೆ. ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಭಾಗವಹಿಸಲೇ ಇಲ್ಲ. ಯಾಕೆಂದರೆ, ಅಲ್ಲಿ ಕೇಂದ್ರ ಸರಕಾರದ ಭದ್ರತಾ ಲೋಪಗಳನ್ನು ವಿರೋಧ ಪಕ್ಷಗಳು ಪ್ರಶ್ನಿಸುತ್ತವೆ. ಅದಕ್ಕೆ ಉತ್ತರ ಅವರ ಬಳಿ ಇರಲಿಲ್ಲ. ಸರ್ವ ಪಕ್ಷ ಸಭೆಯಲ್ಲಿ ಭದ್ರತಾ ಲೋಪವನ್ನು ಕೇಂದ್ರ ಸರಕಾರ ಒಪ್ಪಿಕೊಂಡಿದೆ. ಅದನ್ನು ಒಪ್ಪಿಕೊಳ್ಳದೇ ಇದ್ದರೆ ಸರಕಾರ ಇನ್ನಷ್ಟು ಟೀಕೆ, ಮುಜುಗರಗಳನ್ನು ಎದುರಿಸುವ ಸಾಧ್ಯತೆಗಳಿದ್ದವು. ಈಗಾಗಲೇ ಮಾಜಿ ಸೇನಾ ಮುಖ್ಯಸ್ಥರು, ಹಿರಿಯ ರಾಜಕೀಯ ತಜ್ಞರು ಘಟನೆಯಲ್ಲಿ ಕೇಂದ್ರ ಸರಕಾರದ ವೈಫಲ್ಯವನ್ನು ನೇರವಾಗಿ ಉಲ್ಲೇಖಿಸಿದ್ದಾರೆ. ‘‘ದಾಳಿಗೆ ಗುಪ್ತಚರ ವೈಫಲ್ಯ ಮುಖ್ಯ ಕಾರಣ. ಆ ಉಗ್ರರು ಹೇಗೆ ಗಡಿದಾಟಿ ಕಾಶ್ಮೀರದ ಪ್ರವಾಸಿ ಸ್ಥಳಕ್ಕೆ ಕಾಲಿಟ್ಟರು ಎನ್ನುವುದು ತನಿಖೆಗೆ ಅರ್ಹವಾಗಿದೆ’’ ಎಂದು ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಶಂಕರ್ ರಾಯ್ ಚೌಧುರಿ ಆರೋಪಿಸಿದ್ದಾರೆ. ಇನ್ನೋರ್ವ ಹಿರಿಯ ನಿವೃತ್ತ ಸೇನಾಧಿಕಾರಿಯವರು ಕೇಂದ್ರ ಸರಕಾರದ ಭದ್ರತಾ ಲೋಪವನ್ನು ಉಲ್ಲೇಖಿಸುತ್ತಾ ‘‘ಅಗ್ನಿಪಥ ಯೋಜನೆಯ ಅನುಷ್ಠಾನವು ಸೇನೆಯ ಮೇಲೆ ದೊಡ್ಡ ಮಟ್ಟದ ಪರಿಣಾಮ ಉಂಟು ಮಾಡಿದೆ. ಕಾಶ್ಮೀರದ ಭದ್ರತೆಯ ವಿಷಯದಲ್ಲಿ ಕೇಂದ್ರ ಸರಕಾರ ಬೇಜವಾಬ್ದಾರಿ ನೀತಿಯನ್ನು ಅನುಸರಿಸುತ್ತಿದೆ. ಭದ್ರತೆಗೆ ಬೇಕಾದ ಸೈನಿಕರ ಕೊರತೆ ಎದ್ದು ಕಾಣುತ್ತಿದೆ’’ ಎಂದು ಆರೋಪಿಸಿದ್ದಾರೆ. ಭದ್ರತಾ ಲೋಪವನ್ನು ಒಪ್ಪಿಕೊಳ್ಳುವುದರಿಂದ ಸರಕಾರ ಹೊಣೆಗಾರಿಕೆ ಮುಗಿಯುವುದಿಲ್ಲ. ಈ ಹಿಂದೆ ಪುಲ್ವಾಮಾ ದಾಳಿಗೂ ಭದ್ರತಾ ಲೋಪವೇ ಕಾರಣವಾಗಿತ್ತು. ಅಷ್ಟೊಂದು ಪ್ರಮಾಣದ ಸ್ಫೋಟಗಳು ಗಡಿದಾಟಿ ಹೆದ್ದಾರಿಯ ಮೂಲಕ ಪುಲ್ವಾಮಾಗೆ ಹೇಗೆ ಬಂತು? ನೇರವಾಗಿ ಯೋಧರ ಮೇಲೆ ಇಂತಹದೊಂದು ದಾಳಿ ನಡೆಯುವ ಸಂಚು ನಡೆದಾಗ ಇದು ನಮ್ಮ ಭದ್ರತಾ ಸಿಬ್ಬಂದಿಯ ಗಮನಕ್ಕೆ ಯಾಕೆ ಬರಲಿಲ್ಲ? ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು? ಮೊದಲಾದ ಪ್ರಶ್ನೆಗಳಿಗೆ ಈವರೆಗೆ ಸರಕಾರ ಉತ್ತರಿಸಿಲ್ಲ. ಈ ಲೋಪಗಳಿಗೆ ಸಂಬಂಧಿಸಿ ಯಾವುದೇ ಅಧಿಕಾರಿಯ ಮೇಲಾಗಲಿ, ರಾಜಕಾರಣಿಯ ಮೇಲಾಗಲಿ ಸರಕಾರ ಕ್ರಮ ಕೈಗೊಂಡಿಲ್ಲ. ಪುಲ್ವಾಮಾದ ಭದ್ರತಾ ಲೋಪದ ಮುಂದುವರಿದ ಭಾಗ ಇದಾಗಿದೆ. ಈ ಲೋಪಕ್ಕೆ ಯಾರು ಕಾರಣ ಎನ್ನುವುದನ್ನು ಗುರುತಿಸುವ ಕೆಲಸಕ್ಕೆ ಈಗಲೂ ಸರಕಾರ ಸಿದ್ಧವಿಲ್ಲ. ಬದಲಿಗೆ, ಸರಕಾರವನ್ನು ಪ್ರಶ್ನಿಸಿದವರ ಮೇಲೆಯೇ ಪ್ರತಿದಾಳಿ ನಡೆಸಿ ಅವರ ಬಾಯಿ ಮುಚ್ಚಿಸುವ ಪ್ರಯತ್ನವನ್ನು ಸರಕಾರದೊಳಗಿರುವವರು ಮಾಡುತ್ತಿದ್ದಾರೆ. ಉಗ್ರರನ್ನು ದೇಶ ಒಕ್ಕೊರಲಲ್ಲಿ ಖಂಡಿಸಿದೆ. ಆದರೆ ಈ ಖಂಡನೆಗೆ ಹೆದರಿ ಉಗ್ರರು ತಮ್ಮ ಕಾರ್ಯಾಚರಣೆಯಿಂದ ಹಿಂದೆ ಸರಿಯಲಾರರು. ಸರಕಾರ ತನ್ನ ಲೋಪದೋಷಗಳನ್ನು ತಿದ್ದಿ ಉಗ್ರರನ್ನು ಮಟ್ಟಹಾಕಲು ಪ್ರಾಮಾಣಿಕ ಪ್ರಯತ್ನ ಮಾಡಿದರೆ ಮಾತ್ರ ಕಾಶ್ಮೀರದಲ್ಲಿ ಉಗ್ರರನ್ನು ದಮನಿಸಲು ಸಾಧ್ಯ. ಇದೇ ಸಂದರ್ಭದಲ್ಲಿ ಉಗ್ರರ ದಾಳಿಯನ್ನು ಮುಂದಿಟ್ಟುಕೊಂಡು ಭಾರತದೊಳಗೆ, ಕೆಲವು ರಾಜಕೀಯ ಶಕ್ತಿಗಳು ಧರ್ಮದ ಹೆಸರಿನಲ್ಲಿ ಮನಸ್ಸು ಒಡೆಯುವ ಕೆಲಸದಲ್ಲಿ ತೊಡಗಿವೆ. ಉಗ್ರರ ದಾಳಿಯನ್ನು ಬಳಸಿಕೊಂಡು ಇಡೀ ಭಾರತದೊಳಗಿನ ಆಂತರಿಕ ಭದ್ರತೆಗೆ ಧಕ್ಕೆಯುಂಟು ಮಾಡಲು ಹವಣಿಸುತ್ತಿವೆ. ದೇಶದೊಳಗೆ ಅರಾಜಕತೆಯನ್ನು ಸೃಷ್ಟಿಸಲು ಮುಂದಾಗುತ್ತಿರುವ ಈ ಶಕ್ತಿಗಳು ಉಗ್ರರ ಇನ್ನೊಂದು ಮುಖವೇ ಆಗಿವೆ. ದೇಶಭಕ್ತರ ಮುಖವಾಡದಲ್ಲಿರುವ ಆ ಮುಖಗಳನ್ನು ಗುರುತಿಸಿ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅಧಿಕೃತವಾಗಿ ಉಗ್ರ ಸಂಘಟನೆಯಲ್ಲಿ ಗುರುತಿಸಿಲ್ಪಟ್ಟಿರುವ ಉಗ್ರರಿಗಿಂತಲೂ, ಈ ದೇಶಭಕ್ತಿಯ ಮುಖವಾಡ ಧರಿಸಿ ಜನರ ನಡುವೆ ಒಡಕುಂಟು ಮಾಡುವ ಉಗ್ರವಾದಿಗಳು ದೇಶಕ್ಕೆ ಅತಿ ಹೆಚ್ಚು ಹಾನಿಯನ್ನು ಉಂಟು ಮಾಡಬಲ್ಲರು ಎನ್ನುವುದನ್ನು ಸರಕಾರ ಗಮನಿಸಬೇಕಾಗಿದೆ.
ಭಾರತ, ಪಾಕಿಸ್ತಾನ ಎರಡೂ ನನಗೆ ಆಪ್ತ ದೇಶಗಳು; ಆದರೆ ಪಹಲ್ಗಾಮ್ ದಾಳಿ ಕೆಟ್ಟದು: ಟ್ರಂಪ್
ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ತೀರಾ ಕೆಟ್ಟದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷಗಳು ಸದಾ ಇವೆ. ಉಭಯ ದೇಶಗಳು ಒಂದಲ್ಲ ಒಂದು ವಿಧಾನದಲ್ಲಿ ಇವುಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದರು. ನಾನು ಭಾರತಕ್ಕೆ ತೀರಾ ಆಪ್ತ; ಅಂತೆಯೇ ಪಾಕಿಸ್ತಾನಕ್ಕೆ ಕೂಡಾ ಆಪ್ತ. ಕಾಶ್ಮೀರದಲ್ಲಿ ಸಾವಿರ ವರ್ಷ ಅವರು ಯುದ್ಧ ಮಾಡಿಕೊಳ್ಳಬಹುದು. ಸಾವಿರ ವರ್ಷಕ್ಕಿಂತಲೂ ಅಧಿಕ ಅವಧಿಗೂ ಅದು ಮುಂದುವರಿಯಬಹುದು. ಆದರೆ ಭಯೋತ್ಪಾದಕ ದಾಳಿ ಕೆಟ್ಟದು ಎಂದು ಟ್ರಂಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. 1500 ವರ್ಷಗಳಿಂದ ಇಲ್ಲಿ ಸಂಘರ್ಷ ಇದೆ. ಇದು ಒಂದೇ ಬಗೆಯದ್ದು; ಆದರೆ ಒಂದಲ್ಲ ಒಂದು ವಿಧಾನದಲ್ಲಿ ಇದನ್ನು ಬಗೆಹರಿಸಿಕೊಳ್ಳಬಹುದು ಎಂಬ ನಿರೀಕ್ಷೆ ನನ್ನದು ಎಂದರು. ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಹತ್ಯೆಗೀಡಾದ ಬಳಿಕ ಉಭಯ ದೇಶಗಳ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚದೆ. 2019ರ ಪುಲ್ವಾಮಾ ಬಾಂಬ್ ದಾಳಿಯ ಬಳಿಕ ನಡೆದ ಅತಿದೊಡ್ಡ ಭಯೋತ್ಪಾದಕ ದಾಳಿ ಇದಾಗಿದೆ. #WATCH | On #PahalgamTerroristAttack , US President Donald Trump says, I am very close to India and I'm very close to Pakistan, and they've had that fight for a thousand years in Kashmir. Kashmir has been going on for a thousand years, probably longer than that. That was a bad… pic.twitter.com/R4Bc25Ar6h — ANI (@ANI) April 25, 2025
ಜರ್ಮನಿ, ಜಪಾನ್ ದೇಶಗಳನ್ನು ಹಿಂದಿಕ್ಕಿ 3ನೇ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿರುವ ಭಾರತ!
ಹೊಸದಿಲ್ಲಿ: ವಿಶ್ವದಲ್ಲೇ ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿರುವ ಭಾರತದ ಆರ್ಥಿಕತೆ ಸದ್ಯಕ್ಕೆ ವಿಶ್ವದಲ್ಲಿ 5ನೇ ದೊಡ್ಡ ಆರ್ಥಿಕತೆಯಾಗಿದ್ದು, ಸದ್ಯದಲ್ಲೇ ಜರ್ಮನಿ ಮತ್ತು ಜಪಾನ್ ದೇಶಗಳನ್ನು ಹಿಂದಿಕ್ಕಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ರೂಪುಗೊಳ್ಳಲಿದೆ ಎಂದು ಐಎಂಎಫ್ ಅಂದಾಜಿಸಿದೆ. ಕಳೆದ ಹತ್ತು ವರ್ಷಗಳಲ್ಲಿ ಭಾರತದ ನಾಮಿನಲ್ ಜಿಡಿಪಿ ಶೇಕಡ 100ರಷ್ಟು ಪ್ರಗತಿ ಸಾಧಿಸಿದೆ. ಆದರೆ ಐಎಂಎಫ್ ನ 2025ರ ಅಂದಾಜಿನ ಪ್ರಕಾರ, ವಿಶ್ವದ ಎರಡು ಅತಿದೊಡ್ಡ ಆರ್ಥಿಕತೆಗಳಾದ ಅಮೆರಿಕ ಮತ್ತು ಚೀನಾದ ಆರ್ಥಿಕತೆಗಳು ಭಾರತದ ಆರ್ಥಿಕತೆಯ ಗಾತ್ರಕ್ಕಿಂತ ಕ್ರಮವಾಗಿ 7.3 ಪಟ್ಟು ಹಾಗೂ 4.6 ಪಟ್ಟು ದೊಡ್ಡದಾಗಿರುತ್ತವೆ. ಅಮೆರಿಕದ ಆರ್ಥಿಕತೆಯ ಗಾತ್ರ 2025ರಲ್ಲಿ 30507.217 ಶತಕೋಟಿ ಡಾಲರ್ ಎಂದು ಅಂದಾಜಿಸಲಾಗಿದೆ. ಅಂತೆಯೇ ಚೀನಾದ ಆರ್ಥಿಕತೆಯ ಗಾತ್ರ 18,231.705 ಶತಕೋಟಿ ಡಾಲರ್ ಗಳಾಗಲಿವೆ. 4744.804 ಡಾಲರ್ ಗಳೊಂದಿಗೆ ಜರ್ಮನಿ ಆರ್ಥಿಕತೆ ಮೂರನೇ ಸ್ಥಾನದಲ್ಲಿದ್ದರೆ, ನಾಲ್ಕನೇ ಸ್ಥಾನದಲ್ಲಿರುವ ಜಪಾನ್ ಆರ್ಥಿಕತೆಯ ಗಾತ್ರ 4,186.341 ಡಾಲರ್ ಗಳು ಎಂದು ಐಎಂಎಫ್ ನ ಡಬ್ಲ್ಯುಇಓ ಅಂದಾಜಿಸಿದೆ. ಐದನೇ ಸ್ಥಾನದಲ್ಲಿರುವ ಭಾರತದ ಆರ್ಥಿಕತೆಯ ಪ್ರಸಕ್ತ ಗಾತ್ರ 4187 ಶತಕೋಟಿ ಡಾಲರ್ ಆಗಿದ್ದು, ಭಾರತ ಶೀಘ್ರದಲ್ಲೇ ಜಪಾನ್ ಮತ್ತು ಜರ್ಮನಿಯನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಲಿದೆ. 2026ರಲ್ಲಿ 4601.225 ಶತಕೋಟಿ ಡಾಲರ್ ನೊಂದಿಗೆ ಭಾರತ ನಾಲ್ಕನೇ ಸ್ಥಾನಕ್ಕೇರಲಿದ್ದು, 2028ರಲ್ಲಿ 5584.476 ಶತಕೋಟಿ ಡಾಲರ್ ನೊಂದಿಗೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಅಂದಾಜಿಸಲಾಗಿದೆ. ಬ್ರಿಟನ್ (3839.18 ಶತಕೋಟಿ ಡಾಲರ್), ಫ್ರಾನ್ಸ್ (3211.292 ಶತಕೋಟಿ ಡಾಲರ್), ಇಟೆಲಿ (2422.855 ಶತಕೋಟಿ ಡಾಲರ್), ಕೆನಡಾ (2225.341 ಶತಕೋಟಿ ಡಾಲರ್) ಹಾಗೂ ಬ್ರೆಝಿಲ್ (2125.958 ಶತಕೋಟಿ ಡಾಲರ್) ಅನುಕ್ರಮವಾಗಿ ಅಗ್ರ 10ರಲ್ಲಿ ಸ್ಥಾನ ಪಡೆದಿವೆ.
ಪಾಕ್ ಪ್ರಜೆಗಳಿಗೆ ಭಾರತ ನೀಡಿದ್ದ 14 ಬಗೆಯ ವೀಸಾಗಳು ರದ್ದು
ಹೊಸದಿಲ್ಲಿ: ಪಾಕಿಸ್ತಾನ ಪ್ರಜೆಗಳಿಗೆ ನೀಡಿದ್ದ 14 ವಿಧದ ವೀಸಾ ಸೇವೆಗಳನ್ನು ತಕ್ಷಣದಿಂದ ರದ್ದುಪಡಿಸಿರುವುದಾಗಿ ಭಾರತ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಪಾಕಿಸ್ತಾನಿ ಪ್ರಜೆಗಳಿಗೆ ನೀಡಿದ್ದ ಧೀರ್ಘಾವಧಿ, ರಾಜತಾಂತ್ರಿಕ ಮತ್ತು ಅಧಿಕಾರಿ ವೀಸಾಗಳನ್ನು ಹೊರತುಪಡಿಸಿ, ಈಗಾಗಲೇ ನೀಡಿರುವ ಎಲ್ಲ ವೀಸಾಗಳನ್ನು ರದ್ದುಪಡಿಸಿರುವುದಾಗಿ ಹೇಳಿದೆ. ಸಾರ್ಕ್ ವೀಸಾಗಳು ಏಪ್ರಿಲ್ 26ರ ಬಳಿಕ ಹಾಗೂ ವೈದ್ಯಕೀಯ ವೀಸಾಗಳು ಏಪ್ರಿಲ್ 29ರ ಬಳಿಕ ರದ್ದಾಗುತ್ತವೆ. ಇತರ ಎಲ್ಲ ವರ್ಗಗಳ ವೀಸಾಗಳು ಏಪ್ರಿಲ್ 27ರಿಂದಲೇ ರದ್ದಾಗಲಿವೆ. ಒಂದು ವೇಳೆ ನಿರ್ದಿಷ್ಟಪಡಿಸಿದ ಗಡುವಿನ ಒಳಗೆ ಪಾಕಿಸ್ತಾನಿ ಪ್ರಜೆಗಳು ಭಾರತವನ್ನು ತೊರೆಯಲು ವಿಫಲವಾದಲ್ಲಿ, ಅವರನ್ನು ಅವಧಿ ಮೀರಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳು ಎಂದು ಪರಿಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ. ಜತೆಗೆ ಅವಧಿ ಮೀರಿ ವಾಸಿಸುವ ಪಾಕ್ ಪ್ರಜೆಗಳ ವಿರುದ್ಧ ಹೊಸದಾಗಿ ಜಾರಿ ಮಾಡಲಾದ ವಲಸೆ ಮತ್ತು ವಿದೇಶಿಯರ ಕಾಯ್ದೆ-2025ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ. ಗೃಹ ಸಚಿವಾಲಯದ ವಿದೇಶಿಯರ ವಿಭಾಗ ಈ ಸಂಬಂಧ ಆದೇಶ ಹೊರಡಿಸಿದ್ದು, ಸಾರ್ಕ್ ವೀಸಾ, ಆಗಮನ ವೀಸಾ, ವ್ಯವಹಾರ ವೀಸಾ, ಚಲನಚಿತ್ರ ವೀಸಾ, ಪತ್ರಕರ್ತರ ವೀಸಾ, ವರ್ಗಾಂತರ ವೀಸಾ, ವೈದ್ಯಕೀಯ ವೀಸಾ, ಕಾನ್ಫರೆನ್ಸ್ ವೀಸಾ, ಪರ್ವತಾರೋಹಣ ವೀಸಾ, ವಿದ್ಯಾರ್ಥಿ ವೀಸಾ, ಭೇಟಿ ವೀಸಾ, ಗುಂಪು ಪ್ರವಾಸಿ ವೀಸಾ, ತೀರ್ಥಯಾತ್ರೆ ವೀಸಾ ಮತ್ತು ತೀರ್ಥಯಾತ್ರಾ ಗುಂಪು ವೀಸಾ ಸೇರಿದಂತೆ 14 ಬಗೆಯ ವೀಸಾಗಳನ್ನು ರದ್ದುಪಡಿಸಲಾಗಿದೆ ಹಾಗೂ ಹೊಸ ವೀಸಾಗಳನ್ನು ಪಾಕ್ ಪ್ರಜೆಗಳಿಗೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ರಾಜತಾಂತ್ರಿಕ ವೀಸಾಗಳು ಮತ್ತು ಅಧಿಕಾರಿ ವೀಸಾಗಳು ಮಾನ್ಯವಾಗಿರುತ್ತವೆ. ಇವುಗಳಿಗೆ ಗಡುವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರ್ಧರಿಸಬೇಕಿದೆ. ಧೀರ್ಘಾವಧಿ ವೀಸಾಗಳೂ ಮಾನ್ಯವಾಗಿದ್ದು, ಮೂರೂ ವರ್ಗದ ವೀಸಾಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.
Tim David- ಆಪತ್ಬಾಂಧವ ಬ್ಯಾಟರ್ ನನ್ನು ಸುಲಭದಲ್ಲಿ ಬಿಟ್ಟುಕೊಟ್ಟ ನೀತಾ ಅಂಬಾನಿ: ಈಗ RCBಗೆ ಬೊಂಬಾಟ್ ಲಾಭ!
IPL 2025 - ಐಪಿಎಲ್ ಹರಾಜಿನ ವೇಳೆ ಲೆಕ್ಕಾಚಾರ ಪಕ್ಕಾ ಆಗಿರ್ಬೇಕು ಎಂದು ಹೇಳುವುದು ಇದಕ್ಕೇ. ಒಂದು ಸಣ್ಣ ಎಡವಟ್ಟೂ ಎದುರಾಳಿ ತಂಡಕ್ಕೆ ಲಾಭ ತಂದುಕೊಡಬಲ್ಲದು.ಇದೀಗ ಮುಂಬೈ ಇಂಡಿಯನ್ಸ್ ತಾನು ಮಾಡಿದ ಒಂದು ಸಣ್ಣ ತಪ್ಪಿಗೆ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ರಾಯಲ್ ಚಾಲೆಂಜರ್ಸ್ ಬೆಗಳೂರು ತಂಡ ಮಾತ್ರ ಫುಲ್ ಖುಷ್ ಆಗಿದೆ. ಹೌದು ಇದೀಗ ಹೇಳ ಹೊರಟಿರುವುದು ಆರ್ ಸಿಬಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಪತ್ಬಾಂಧವನಾಗಿ ಮಿಂಚುತ್ತಿರುವ ಟಿಂ ಡೇವಿಡ್ ಬಗ್ಗೆ . ಅಸಲಿ ಕಳೆದ ವರ್ಷದವರೆಗೂ ಮುಂಬೈ ಬಳಗದಲ್ಲಿದ್ದ ಈ ಆಸ್ಟ್ರೇಲಿಯಾದ ಆಟಗಾರ ಇದೀಗ ಆರ್ ಸಿಬಿಗಾಗಿ ಅದ್ಭುತಗಳನ್ನೇ ಸೃಷ್ಟಿಸಿದ್ದಾರೆ.
ಕೆಎಸ್ಆರ್ಟಿಸಿ ಸೇವೆ ಮತ್ತಷ್ಟು ಹೈಟೆಕ್, ಬಸ್ ಟ್ರ್ಯಾಕಿಂಗ್ ಸೇರಿ ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ
ಕೆಎಸ್ಆರ್ಟಿಸಿ ತನ್ನ ಸೇವೆಯನ್ನು ಆಧುನೀಕರಣಗೊಳಿಸುತ್ತಿದ್ದು, ಪ್ರಯಾಣಿಕರಿಗೆ ಬಸ್ಗಳ ಸಂಚಾರದ ಮಾಹಿತಿ ಬೆರಳ ತುದಿಯಲ್ಲಿಯೇ ಲಭ್ಯವಾಗಲಿದೆ. ವಾಹನ ಟ್ರ್ಯಾಕಿಂಗ್ ವ್ಯವಸ್ಥೆ (ವಿಟಿಎಂಎಸ್) ಜಾರಿಗೆ ತರುತ್ತಿದ್ದು, ಬಸ್ಗಳ ಸಂಚಾರದ ಕುರಿತು ನಿಖರ ಮಾಹಿತಿ ಪಡೆಯಬಹುದು. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಸಂಸ್ಥೆಯ ಕಾರ್ಯಾಚರಣೆಯಲ್ಲಿ ಪಾರದರ್ಶಕತೆ ಹೆಚ್ಚಲಿದೆ.
'ಹಿಂದ್ ಕಾ ಸಿಂಧ್' ಆದರೆ ಪಾಕಿಸ್ತಾನದ ಆಟವೆಲ್ಲಾ ಬಂದ್; ನೆರೆ ರಾಷ್ಟ್ರಕ್ಕೆ ಸಂಕಷ್ಟಗಳ ಸರಮಾಲೆ!
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಬಾರಯತವು 1960 ಸಿಂಧು ನದಿ ನೀರು ಹಂಚಿಕೆ ಒಪೊಪಂದವನ್ನು ಅಮಾನತುಗೊಳಿಸಿದೆ. ಭಾರತದ ಈ ಕಠಿಣ ನಿರ್ಧಾರ ಪಾಕಿಸ್ತಾನದ ನಿದ್ದೆಗೆಡೆಸಿದೆ. ಇನ್ನು ಸಿಂಧು ನದಿ ಒಪ್ಪಂದ ಅಮಾನತಿನಲ್ಲಿರುವುದರಿಂದ ಪಾಕಿಸ್ತಾನಕ್ಕೆ ಏನೆಲ್ಲಾ ಸಂಕಷ್ಟಗಳು ಎದುರಾಗಲಿವೆ ಎಂಬುದನ್ನು ಕೇಂದ್ರ ಜಲ ಆಯೋಗದ ಮಾಜಿ ಅಧ್ಯಕ್ಷ ಕುಶ್ವಿಂದರ್ ವೋಹ್ರಾ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ಒಪ್ಪಂದ ಅಮಾನತುಗೊಂಡಿರುವುದು, ಪಾಕಿಸ್ತಾನಕ್ಕೆ ಸಂಕಷ್ಟಗಳ ಸರಮಾಲೆಯನ್ನೇ ಹೊತ್ತು ತರಲಿದೆ ಎಂದು ಕುಶ್ವಿಂದರ್ ವೋಹ್ರಾ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿದೆ ಮಾಹಿತಿ.
Namma Metro Fare hike effect: ಫೆಬ್ರವರಿಯಲ್ಲಿ ಪ್ರಯಾಣ ದರ ಏರಿಕೆಯಿಂದಾಗಿ ನಿರಂತರವಾಗಿ ಕುಸಿತ ಕಂಡಿದ್ದ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಈಗ ಸ್ವಲ್ಪ ಚೇತರಿಕೆ ಕಾಣುತ್ತಿದೆ. ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳಕ್ಕೆ ಮುನ್ನ ನಿತ್ಯ ಸರಾಸರಿ 8 ಲಕ್ಷಕ್ಕೂ ಅಧಿಕ ಜನರು ಪ್ರಯಾಣಿಸುತ್ತಿದ್ದರು. ಆನಂತರ ಪ್ರಯಾಣಿಕರ ಸಂಖ್ಯೆ 7.24 ಲಕ್ಷಕ್ಕೆ ಇಳಿಕೆಯಾಗಿತ್ತು. ಏಪ್ರಿಲ್ನಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದ್ದು, ಕಳೆದ 15 ದಿನಗಳಲ್ಲಿ ದೈನಂದಿನ ಪ್ರಯಾಣಿಕರ ಸಂಖ್ಯೆ 7.70 ಲಕ್ಷಕ್ಕೆ ತಲುಪಿದೆ. ಏಪ್ರಿಲ್ 18ರ ಹೊತ್ತಿಗೆ, ಸುಮಾರು 1.4 ಕೋಟಿ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಪಡಿತರರಿಗೆ ಗುಡ್ ನ್ಯೂಸ್; ಅಕ್ಕಿ ಜೊತೆಗೆ ಜೋಳ ವಿತರಣೆ: ಮಹತ್ವದ ಮಾಹಿತಿ ನೀಡಿದ ಕೆ ಹೆಚ್ ಮುನಿಯಪ್ಪ
ಬೆಂಗಳೂರು, ಏಪ್ರಿಲ್ 26: ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದು ಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಆಹಾರ ನಾಗರಿಕ ಸರಬರಾಜು ಮತ್ತು
ಬಿಡಿದ ಟೌನ್ಶಿಪ್ಗಾಗಿ ಭೂಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಪತ್ರ; ಎಚ್ಡಿ ದೇವೇಗೌಡ ಮಾತು ಕೇಳ್ತಾರಾ ಸಿದ್ದರಾಮಯ್ಯ?
ಬಿಡದಿ ಬಳಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ಶಿಪ್ ನಿರ್ಮಾಣಕ್ಕಾಗಿ ರೈತರ ಭೂಮಿ ಸ್ವಾಧೀನಕ್ಕೆ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಎಚ್ಡಿ ದೇವೇಗೌಡ, ಟೌನ್ಶಿಪ್ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ರೈತರ ಭೂಮಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ. ಮಾಜಿ ಪ್ರಧಾನಿ ಅವರ ಈ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದು ಇದೀಗ ಕುತೂಗಲ ಮೂಡಿಸಿದೆ.
ದಲಿತ ಉದ್ದಿಮೆಗಾರರ ಸಮಸ್ಯೆಗಳ ಶೀಘ್ರವೇ ಪರಿಹರಿಸಿ : ಡಾ.ಎಲ್.ಹನುಮಂತಯ್ಯ
ಬೆಂಗಳೂರು : ದಲಿತ ಉದ್ಯಮಿಗಳ ಸಮಸ್ಯೆಗಳನ್ನು ರಾಜ್ಯ ಸರಕಾರ ಶೀಘ್ರವೇ ಪರಿಹರಿಸಲು ಮುಂದಾಗಬೇಕು, ಇಲ್ಲದಿದ್ದರೆ ಪ್ರತಿಭಟನಾ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಅಧ್ಯಕ್ಷ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ನಗರದ ಗಾಂಧಿ ಭವನದಲ್ಲಿ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ವತಿಯಿಂದ ನಡೆದ ದಲಿತ ಉದ್ದಿಮೆದಾರರ ಸಮಾಲೋಚನಾ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸತತ ಹನ್ನೆರಡು ವರ್ಷಗಳಿಂದ ದಲಿತ ಉದ್ದಿಮೆದಾರರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಾ ಇಲ್ಲಿವರೆಗಿನ ಸರಕಾರಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇಂದಿಗೂ ದಲಿತ ಉದ್ದಿಮೆದಾರರ ನಿರ್ಲಕ್ಷ್ಯಕ್ಕೊಳಪಡಿಸಲಾಗುತ್ತಿದೆ ಎಂದು ಎಲ್.ಹನುಮಂತಯ್ಯ ಆಕ್ರೋಶ ವ್ಯಕ್ತಪಡಿಸಿದರು. ದಲಿತ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನಗಳ ಹಂಚಿಕೆಯಲ್ಲಿ ಕೆಐಎಡಿಬಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಸೇರಿದಂತೆ ತಾತ್ಸಾರ ಮನೋಭಾವ ಅನುಸರಿಸುತ್ತಿದ್ದಾರೆ. ಹೀಗೆ ದಲಿತ ಉದ್ದಿಮೆದಾರರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಸೇರಿದಂತೆ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಅವರಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹನುಮಂತಯ್ಯ ಅಸಮಾಧಾನ ಹೊರಹಾಕಿದರು. ಸಂಘದ ಕಾರ್ಯಾಧ್ಯಕ್ಷ ಸಿ.ಜಿ.ಶ್ರೀನಿವಾಸನ್ ಮಾತನಾಡಿ, ರಾಜ್ಯದ ಹಲವಾರು ಕೈಗಾರಿಕಾ ಪ್ರದೇಶಗಳನ್ನು ಒಳಗೊಂಡು ಸಾಕಷ್ಟು ಭಾಗಗಳಲ್ಲಿ ದಲಿತ ಉದ್ದಿಮೆದಾರರು ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುವಂತಾಗಿದೆ. ಕೆಐಎಡಿಬಿಗೆ ಹಣ ಕಟ್ಟಿದರೂ ದಲಿತ ಉದ್ದಿಮೆದಾರರಿಗೆ ಭೂಮಿ ಮಂಜೂರು ಮಾಡುತ್ತಿಲ್ಲ. ಒಂದು ವೇಳೆ ನಿವೇಶನ ಹಂಚಿಕೆಯಾದರೂ ಕೆಲ ಕಾರಣಗಳನ್ನು ನೀಡಿ ಯೋಜನೆ ಪ್ರಾರಂಭಿಸಲು ಅನುಮತಿ ನೀಡುತ್ತಿಲ್ಲ. ನಿವೇಶನ ಹಂಚಿಕೆಯಾಗಿ, ಯೋಜನೆ ಪೂರ್ಣಗೊಂಡರೂ ಕೆಲ ಕಾರಣಗಳನ್ನು ತೊಂದರೆ ನೀಡುತ್ತಿರುವುದು ನಡೆಯುತ್ತಲೇ ಇದೆ ಎಂದರು. ಕಾರ್ಯಕ್ರಮದಲ್ಲಿ ಉದ್ದಿಮೆದಾರರ ಸಂಘದ ಡಾ.ಗಣಪತಿ ರಾಥೋಡ್, ಪ್ರಸನ್ನ, ಮೋಹನಾಂಗಯ್ಯ ಸ್ವಾಮಿ, ಚಂದ್ರಶೇಖರ್, ಎನ್.ಚೆನ್ನಕೇಶವ, ಎಸ್.ನಾರಾಯಣಸ್ವಾಮಿ, ಕೆ.ಸೇವಂತ ವಾಸುದೇವ ಉಪಸ್ಥಿತರಿದ್ದರು. ರಾಜ್ಯದ ಹಲವು ಭಾಗಗಳಿಂದ ದಲಿತ ಉದ್ದಿಮೆದಾರರು ತಮ್ಮ ಸಮಸ್ಯೆಗಳನ್ನು ಸಮಾಲೋಚನೆ ವೇಳೆ ಹೇಳಿಕೊಂಡರು.
ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಆರೋಪಿ ಹತ್ಯೆ: ಮೂವರ ಬಂಧನ
ಬೆಂಗಳೂರು: 2020ರಲ್ಲಿ ನಡೆದಿದ್ದ ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಆರೋಪಿ ಇರ್ಫಾನ್ ಹತ್ಯೆ ಪ್ರಕರಣ ಸಂಬಂಧ ಮೂವರನ್ನು ಇಲ್ಲಿನ ಗೋವಿಂದಪುರ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಉವೈಸ್, ಅಬ್ದುಲ್ ಅಲೀಮ್ ಹಾಗೂ ಹನೀಫ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆಯಾದ ಇರ್ಫಾನ್ ಎ.22ರ ರಾತ್ರಿ ಪತ್ನಿಯನ್ನು ಮನೆಗೆ ಬಿಟ್ಟು ಎಚ್ಬಿಆರ್ ಲೇಔಟ್ ಬಳಿ ವಾಪಸ್ ನಡೆದುಕೊಂಡು ಬರುವಾಗ ಏಕಾಏಕಿ ಮೂವರು ಆರೋಪಿಗಳು ಆಟೊದಲ್ಲಿ ಬಂದು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿ ಆಗಿದ್ದರು. ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಮೃತ ಇರ್ಫಾನ್ ಆರೋಪಿಯಾಗಿ ಬಂಧನಕ್ಕೊಳಗಾಗಿದ್ದ ಸಂದರ್ಭದಲ್ಲಿ ಅಬ್ಬಾಸ್ ಎಂಬಾತನೊಂದಿಗೆ ಪರಪ್ಪನ ಅಗ್ರಹಾರದಲ್ಲಿ ಸ್ನೇಹ ಬೆಳೆಸಿದ್ದ. ಕೆಲ ತಿಂಗಳ ಹಿಂದೆ ಇರ್ಫಾನ್ ಜಾಮೀನು ಪಡೆದು ಹೊರಬಂದಿದ್ದು, ಅಬ್ಬಾಸ್ ಪತ್ನಿಯೊಂದಿಗೆ ಇರ್ಫಾನ್ ಸ್ನೇಹ ಬೆಳೆಸಿಕೊಂಡಿದ್ದ. ಇದೇ ವಿಚಾರವಾಗಿ ಅಬ್ಬಾಸ್ ತನ್ನ ಸಹಚರರೊಂದಿಗೆ ಸೇರಿ ಕೃತ್ಯವೆಸಗಿರುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಪಿರಿಯಾಪಟ್ಟಣ | ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯ; ಮೈಮೇಲೆ ಸೆಗಣಿ ಸುರಿದು ಧರಣಿ
ಮೈಸೂರು : ಪಿರಿಯಾಪಟ್ಟಣ ತಾಲೂಕಿನ ಮುಮ್ಮಡಿ ಕಾವಲ್ ಗ್ರಾಮಕ್ಕೆ ಸಂಬಂಧಿಸಿದ ಭೂ ಸಮಸ್ಯೆಗೆ ಸಂಬಂಧಿಸಿದಂತೆ ಮೂರು ವರ್ಷಗಳಿಂದ ಧರಣಿ ನಡೆಸುತ್ತಿರುವ ದಸಂಸ ಮುಖಂಡರು ಶುಕ್ರವಾರ ಮೈಮೇಲೆ ಸೆಗಣಿ ಸುರಿದುಕೊಂಡು ಧರಣಿ ನಡೆಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಎ.26ರಂದು ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಪಿರಿಯಾಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಭೇಟಿಗೆ ನಿರಾಕರಿಸಿದ ತಾಲೂಕು ಆಡಳಿತದ ವಿರುದ್ಧ ದಸಂಸ ಮುಖಂಡರಾದ ಸಿ.ಎಸ್.ಜಗದೀಶ್ ಮತ್ತು ದೊಡ್ಡಯ್ಯ ಮುಮ್ಮಡಿ ಕಾವಲ್ ಅವರು ಸಿಎಂ ಭೇಟಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಧರಣಿ ನಡೆಸಿದರು.
ಸೇವಾ ಭಡ್ತಿ ನೀಡದ ವಿಚಾರ: ಹೈಕೋರ್ಟ್ ಮೊರೆಹೋದ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್
ಬೆಂಗಳೂರು : ಸೇವಾ ಭಡ್ತಿ ನೀಡುವಂತೆ ಕೋರಿ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮನವಿಯನ್ನು 8 ವಾರಗಳಲ್ಲಿ ಕಾನೂನಿನಂತೆ ಪರಿಗಣಿಸಲು ಸರಕಾರಕ್ಕೆ ಸೂಚನೆ ನೀಡಿ ಹೈಕೋರ್ಟ್ ಆದೇಶ ನೀಡಿದೆ. ತಮಗೆ ಸಲ್ಲಬೇಕಾದ ಭಡ್ತಿ ತಡೆಹಿಡಿದಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ರೂಪಾ ಮೌದ್ಗಿಲ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಇದೇ ವೇಳೆ ರೂಪಾ ಮೌನ್ಸಿಲ್ ಅರ್ಜಿಗೆ ಆಕ್ಷೇಪಿಸಿ ರೋಹಿಣಿ ಸಿಂಧೂರಿಯ ಮಧ್ಯಂತರ ಅರ್ಜಿಯನ್ನು ಹಿರಿಯ ವಕೀಲ ಕೆ.ಎನ್.ಫಣೀಂದ್ರ ಸಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ ರೋಹಿಣಿ ಪರ ವಾದ ಆಲಿಸಬೇಕಿಲ್ಲವೆಂದು ರೂಪಾ ಮೌದ್ಗಿಲ್ ಪರ ವಕೀಲ ಬಿಪಿನ್ ಹೆಗ್ಡೆ ಆಕ್ಷೇಪ ವ್ಯಕ್ತಪಡಿಸಿದರು. ಆದರೆ ವಾದ ಪ್ರತಿ ವಾದ ಆಲಿಸಿದ ಪೀಠ, ರೂಪಾ ಮೌದ್ಗಿಲ್ ಮನವಿಯನ್ನು8 ವಾರಗಳಲ್ಲಿ ಕಾನೂನಿನಂತೆ ಪರಿಗಣಿಸಲು ಆದೇಶಿದರು. ರೂಪಾ ಮೌದ್ಗಿಲ್, ರೋಹಿಣಿ ಸಿಂಧೂರಿ ಮಾನನಷ್ಟ ದಾವೆ, ಪ್ರತಿದಾವೆ ಹೂಡಿದ್ದಾರೆ. ಈ ಕಾರಣಕ್ಕೆ ಭಡ್ತಿ ತಡೆಹಿಡಿದಿರುವುದಾಗಿ ರಾಜ್ಯ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಿಳಿಸಿದೆ. ಹಾಗಾಗಿ ರೂಪಾ ಮೌದ್ಗಿಲ್ ಹೈಕೋರ್ಟ್ ಮೊರೆ ಹೋಗಿದ್ದರು
ಸ್ಮಾರ್ಟ್ ಮೀಟರ್ಗಳ ಬೆಲೆ ಏರಿಕೆಗೆ ಸರಕಾರಕ್ಕೆ ಹೈಕೋರ್ಟ್ ತರಾಟೆ
ಬೆಂಗಳೂರು : ಹೊಸದಾಗಿ ನಿರ್ಮಾಣಗೊಂಡಿರುವ ಮನೆಯೊಂದಕ್ಕೆ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳುವಂತೆ ಒತ್ತಾಯಿಸಿ ಬೆಸ್ಕಾಂ ನೀಡಿದ್ದ ಸಂವಹನ ಪತ್ರಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶಿದೆ. ಅಲ್ಲದೇ ಸ್ಮಾರ್ಟ್ ಮೀಟರ್ಗಳ ಬೆಲೆ ನಿಗದಿಗೆ ರಾಜ್ಯ ಸರಕಾರವನ್ನು ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. ಸ್ಮಾರ್ಟ್ ಮೀಟರ್ ಅಳವಡಿಕೆಗೆ ಒತ್ತಾಯಿಸಿ ದೊಡ್ಡಬಳ್ಳಾಪುರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಜಯಲಕ್ಷ್ಮೀ ಎಂಬವರಿಗೆ ನೀಡಿದ್ದ ಸಂವಹನ ಪತ್ರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಸರಕಾರದ ಪರ ವಕೀಲರಿಗೆ, ಇದೆಲ್ಲವೂ ಉಚಿತ ಗ್ಯಾರೆಂಟಿಗಳಿಂದ ಎದುರಾಗಿರುವರ ಸಮಸ್ಯೆಗಳೇ? ಎಂದು ಪ್ರಶ್ನಿಸಿದರು. ಉಚಿತವಾಗಿ ವಿದ್ಯುತ್ ಕೊಡಿ ಎಂದು ನಿಮ್ಮನ್ನು ಯಾರು ಕೇಳಿದ್ದರು? ಬಡವರಿಗೆ ಏಕಾಏಕಿ ಈ ರೀತಿ ಬೆಲೆ ಏರಿಕೆ ಮಾಡಿದರೆ ಎಲ್ಲಿಗೆ ಹೋಗಬೇಕು? ಎಲ್ಲರೂ ಹೆಚ್ಚು ಹಣ ಕೊಟ್ಟು ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದರೆ ಬಡವರು ಏನು ಮಾಡಬೇಕು? ಎಂದು ಪ್ರಶ್ನೆ ಮಾಡಿತು. ತಾತ್ಕಾಲಿಕ ಸಂಪರ್ಕಕ್ಕೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ ಎಂದು ತಿಳಿಸಿ, ಇದೀಗ ಶಾಶ್ವತ ಸಂಪರ್ಕಕ್ಕೂ ಸ್ಮಾರ್ಟ್ ಮೀಟರ್ ಅಳವಡಿಕೆ ಒತ್ತಾಯಿಸುವುದು ಕಠಿಣ ಕ್ರಮವಾಗಿದೆ. ಈ ರೀತಿಯಲ್ಲಿ ಕಡ್ಡಾಯ ಮಾಡಿದಲ್ಲಿ ಬಡವರು ಎಲ್ಲಿಗೆ ಹೋಗಬೇಕು ಎಂದು ಸರಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದರು. ವಾದ ಆಲಿಸಿ ಮಧ್ಯಂತರ ತಡೆಯಾಜ್ಞೆ ನೀಡಿದ ನ್ಯಾಯಾಲಯ ವಿಚಾರಣೆ ಮುಂದೂಡಿದೆ.
ಪಹಲ್ಗಾಮ್ ದಾಳಿಕೋರರಿಗೆ ಟ್ರೈನಿಂಗ್ ಕೊಟ್ಟಿದ್ದು ಇಸ್ರೇಲಿನ ಶತ್ರು ‘ಹಮಾಸ್’ - ತರಬೇತಿ ಕೊಡಿಸಿದ್ದು ಪಾಕಿಸ್ತಾನ!
ಜಮ್ಮು ಮತ್ತು ಕಾಶ್ಮೀರದಲ್ಲಿನ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರನ್ನು ಹೊಡೆದು ಕೊಂದು ಹಾಕಿದ ಲಷ್ಕರ್ ಎ ತೊಯ್ಬಾ ಅದೀನದ ದ ರೆಸಿಸ್ಟಂಟ್ ಫ್ರಂಟ್ (ಟಿಆರ್ ಎಫ್) ಉಗ್ರರಿಗೆ ಇಸ್ರೇಲ್ ವಿರುದ್ಧ ದಂಗೆಯಿದ್ದಿರುವ ಹಮಾಸ್ ಉಗ್ರರಿಂದ ತರಬೇತಿ ನೀಡಲಾಗಿತ್ತೆಂಬ ಭಯಾನಕ ವಿಚಾರ ಬೆಳಕಿಗೆ ಬಂದಿದೆ. ಹಮಾಸ್ ಉಗ್ರರು ಕಳೆದೊಂದು ವರ್ಷದಿಂದಲೂ ಇಸ್ರೇಲ್ ವಿರುದ್ಧ ಮುಗಿಬಿದ್ದಿದ್ದಾರೆ. ಪಾಕಿಸ್ತಾನದ ಗುಪ್ತಚರ ಇಲಾಖೆ (ಐಎಸ್ಐ) ಅಂತ ಹಮಾಸ್ ಉಗ್ರರಿಂದ ಟಿಆರ್ ಎಫ್ ಉಗ್ರರಿಗೆ ತರಬೇತಿ ನೀಡಿ ಪಹಲ್ಗಾಮ್ ಕಡೆಗೆ ಛೂ ಬಿಟ್ಟಿತ್ತೆಂದು ಹೇಳಲಾಗಿದೆ.
ಬೆಂಗಳೂರು : ವಾಹನ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣ ಸಂಬಂಧ ದಾಖಲಾದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಕೊಲೆಯತ್ನ ಪ್ರಕರಣದಲ್ಲಿ ನ್ಯಾಯಾಲಯದ ಅನುಮತಿ ಇಲ್ಲದೆ ಚಾರ್ಚ್ ಶೀಟ್ ಸಲ್ಲಿಸದಂತೆ ಹೈಕೋರ್ಟ್ ಆದೇಶಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ನೀಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್, ವಿಕಾಸ್ ಹಲ್ಲೆಯಿಂದ ಶಿಲಾದಿತ್ಯಗೆ ಗಂಭೀರ ಗಾಯವಾಗಿದೆ. ವಿಕಾಸ್ಗೆ ಸಣ್ಣ ಗಾಯವೆಂದು ಎಫ್ಐಆರ್ನಲ್ಲೇ ಉಲ್ಲೇಖವಾಗಿದೆ. ಆದರೂ ಶಿಲಾದಿತ್ಯ ವಿರುದ್ಧ ಕೊಲೆಯತ್ನದ ಎಫ್ಐಆರ್ ದಾಖಲಿಸಲಾಗಿದೆ. 12 ಗಂಟೆ ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಪೀಠ ಶಿಲಾದಿತ್ಯ ಬೋಸ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು. ಶಿಲಾದಿತ್ಯ ಬೋಸ್ ಪೊಲೀಸರ ವಿಚಾರಣೆಗೆ ಸಹಕರಿಸಬೇಕು. ಸಮನ್ಸ್ ನೀಡುವಾಗ ಕಾನೂನಿನ ಪ್ರಕ್ರಿಯೆ ಪಾಲಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೇ ದೋಷಾರೋಪ ಪಟ್ಟಿ ಸಲ್ಲಿಸಬಾರದು ಎಂದು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ನೀಡಿದೆ. ಅಲ್ಲದೆ, ದೂರುದಾರ ವಿಕಾಸ್ ಕುಮಾರ್ಗೂ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿದೆ.
CSK vs SRH: ಗೆದ್ದ ಸನ್ರೈಸರ್ಸ್ ಹೈದಾರಾಬಾದ್; ಪ್ಲೇಆಫ್ ರೇಸ್ನಿಂದ ಹೊರಬಿದ್ದ ಸಿಎಸ್ಕೆ!
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 5 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಚೆನ್ನೈನಲ್ಲಿ ಸಿಎಸ್ಕೆ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ಗೆ ಇದು ಮೊದಲ ಗೆಲುವಾಗಿದೆ. ಈ ಅಂಗಳದಲ್ಲಿ ಸಿಎಸ್ಕೆ ವಿರುದ್ಧ ಸತತ ಆರು ಪಂದ್ಯಗಳಲ್ಲಿ ಸೋತಿದ್ದ ಸನ್ರೈಸರ್ಸ್ ಹೈದರಾಬಾದ್ ಕೊನೆಗೂ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
CSK Vs SRH - ಚೆಪಾಕ್ ನಲ್ಲಿ ಪ್ರಪಾತಕ್ಕೆ ಕುಸಿದ ಚೆನ್ನೈ ಸೂಪರ್ ಕಿಂಗ್ಸ್; ಕೊಂಚ ಮೇಲೇರಿದ ಸನ್ ರೈಸರ್ಸ್!
IPL 2025 - ಈ ಸೀಸನ್ ನಲ್ಲಿ ಸೋಲುಗಳಿಂದ ಕಂಗೆಟ್ಟಿದ್ದ ಸನ್ ರೈಸರ್ಸ್ ತಂಡ 5 ಬಾರಿಯ ಚಾಂಪಿಯನ್ ಚೆನೈ ಸೂಪರ್ ಕಿಂಗ್ಸ್ ಅನ್ನು 5 ವಿಕೆಟ್ ಗಳಿಂದ ಸೋಲಿಸುವ ಮೂಲಕ ಚೆಪಾಕ್ ನಲ್ಲಿ ಮೊದಲ ಜಯ ದಾಖಲಿಸಿದೆ. ಜೊತೆಗೆ ಅಂಕಪಟ್ಟಿಯಲ್ಲಿ 6 ಅಂಕಗಳನ್ನು ಕಲೆ ಹಾಕಿ 8ನೇ ಸ್ಥಾನಕ್ಕೇರಿದ್ದು ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಇನ್ನು ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಗೆ ಟೂರ್ನಿಯಲ್ಲಿ 5 ಪಂದ್ಯಗಳು ಬಾಕಿ ಉಳಿದಿದ್ದು ಪ್ಲೇ ಆಫ್ ಬಾಗಿಲು ಬಹುತೇಕ ಮುಚ್ಚಿದೆ.
Gaza War: ಗಾಜಾ ಸ್ಥಿತಿ ಮತ್ತಷ್ಟು ಸೂಕ್ಷ್ಮ, ಇಸ್ರೇಲ್ ಸೇನೆಯಿಂದ ಮುಂದುವರಿದ ದಾಳಿ
ಗಾಜಾ ಪಟ್ಟಿಯಲ್ಲಿ ಯುದ್ಧ ನಿಲ್ಲುತ್ತಿಲ್ಲ, ಒಂದು ಕಡೆ ಹಮಾಸ್ ಹಠ ಬಿಟ್ಟು ಒಪ್ಪಂದವನ್ನ ಮಾಡಿಕೊಳ್ಳುತ್ತಿಲ್ಲ. ಇನ್ನೊಂದು ಕಡೆ, ಇಸ್ರೇಲ್ ಕೂಡ ತನ್ನ ದಾಳಿಯನ್ನು ನಿಲ್ಲಿಸುತ್ತಿಲ್ಲ. ಹೀಗಾಗಿ ಗಾಜಾ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ದಾಳಿ ನಡೆಯುತ್ತಿದ್ದು ತಲ್ಲಣವೇ ಸೃಷ್ಟಿ ಆಗಿದೆ. ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಇನ್ನಷ್ಟು ಹೆಚ್ಚಾಗಿದ್ದು, ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಉಗುರಲ್ಲಿ
ಶಿವಮೊಗ್ಗ | ಮಂಜುನಾಥ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ
ಶಿವಮೊಗ್ಗ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಮೃತರಾದ ಶಿವಮೊಗ್ಗದ ಮಂಜುನಾಥ್ ರಾವ್ ನಿವಾಸಕ್ಕೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಗರದ ವಿಜಯನಗರದಲ್ಲಿರುವ ಮನೆಗೆ ಭೇಟಿ ನೀಡಿದ ಸ್ಪೀಕರ್ ಖಾದರ್ ಅವರು, ಮೃತ ಮಂಜುನಾಥ್ ರಾವ್ ಪತ್ನಿ ಪಲ್ಲವಿ, ಮಗ ಅಭಿಜಯ್ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ರೀತಿಯ ಘಟನೆ ಯಾರಿಗೂ ಆಗಬಾರದು, ಪ್ರವಾಸಿ ತಾಣದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಉಗ್ರರನ್ನು ಸುಮ್ಮನೆ ಬಿಡಬಾರದು ಎಂದು ಪಲ್ಲವಿ ಅವರು ಸ್ಪೀಕರ್ಗೆ ಮನವಿ ಮಾಡಿದರು. ಈ ವೇಳೆ ರಾಜ್ಯ ಸರಕಾರ ನಿಮ್ಮ ಜೊತೆ ಇದೆ ಎಂದು ಯು.ಟಿ.ಖಾದರ್ ಧೈರ್ಯ ತುಂಬಿದರು.
Ukraine War: ಸಮಾಧಾನ... ಸಮಾಧಾನ... ಕ್ರಿಮಿಯಾ ಬಗ್ಗೆ ಟ್ರಂಪ್ ಹೇಳಿದ್ದು ಏನು?
ಉಕ್ರೇನ್ ಯುದ್ಧ ನಿಲ್ಲಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ರೀತಿ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ. ಇಷ್ಟಾದರೂ ಉಕ್ರೇನ್ ಯುದ್ಧ ನಿಲ್ಲಿಸುವ ಬಗ್ಗೆ ರಷ್ಯಾ ಯಾವುದೇ ಖಡಕ್ ನಿರ್ಧಾರ ಕೈಗೊಂಡಿಲ್ಲ. ಮತ್ತೊಂದ ಕಡೆ ಉಕ್ರೇನ್ ಗೋಳು ಕೂಡ ಅದೇ ಆಗಿದೆ, ಹೀಗಾಗಿ ರಷ್ಯಾ &ಉಕ್ರೇನ್ ಯುದ್ಧ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಹೀಗಿರುವಾಗ ದಿಢೀರ್ ಅಮೆರಿಕ
ಲಾಜಿಸ್ಟಿಕ್ಸ್ ವೆಚ್ಚದಲ್ಲಿ ಮಿತವ್ಯಯ ಅತ್ಯಗತ್ಯ : ಎಂ.ಬಿ.ಪಾಟೀಲ್
ಮುಂಬೈ : ಉಕ್ಕು ವಲಯದಲ್ಲಿನ ಲಾಜಿಸ್ಟಿಕ್ಸ್ ವೆಚ್ಚವನ್ನು ಈಗಿರುವ ಶೇ.14ರಿಂದ ಸ್ಪರ್ಧಾತ್ಮಕ ದರವಾದ ಶೇ.8ಕ್ಕೆ ಇಳಿಸುವ ಅಗತ್ಯವಿದೆ. ಕರ್ನಾಟಕ ಸರಕಾರವು ಕ್ಲಸ್ಟರ್ ಆಧರಿತ ಕೈಗಾರಿಕಾ ಬೆಳವಣಿಗೆ, ವಿಶ್ವದರ್ಜೆಯ ಲಾಜಿಸ್ಟಿಕ್ಸ್ ಮೂಲಸೌಕರ್ಯ ಮತ್ತು ಸಮಗ್ರ ಕೈಗಾರಿಕಾ ಕಾರಿಡಾರುಗಳ ಅಭಿವೃದ್ಧಿಗೆ ಹಲವು ರಚನಾತ್ಮಕ ಉಪಕ್ರಮಗಳನ್ನು ತೆಗೆದುಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಶುಕ್ರವಾರ ಮುಂಬೈನಲ್ಲಿ ನಡೆಯುತ್ತಿರುವ 6ನೆ ವರ್ಷದ `ಇಂಡಿಯಾ ಸ್ಟೀಲ್-25’ ಅಂತರ ರಾಷ್ಟ್ರೀಯ ಪ್ರದರ್ಶನ ಮತ್ತು ವಾಣಿಜ್ಯ ಸಮಾವೇಶದ ಭಾಗವಾಗಿ ಏರ್ಪಡಿಸಿದ್ದ `ಕರ್ನಾಟಕದಲ್ಲಿನ ಉಕ್ಕು ವಲಯದ ಭವಿಷ್ಯ’ ಕುರಿತ ದುಂಡು ಮೇಜಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕರ್ನಾಟಕ ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ಸಂಡೂರು ಪ್ರದೇಶಗಳಲ್ಲಿನ ಕಬ್ಬಿಣದ ಅದಿರಿನ ನಿಕ್ಷೇಪಗಳು ಭಾರತದ ಮೆಟಲರ್ಜಿ ಆಧರಿತ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ದೇಶದ ಉಕ್ಕು ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ.15ರಷ್ಟಿದೆ. ಜತೆಗೆ ಉಕ್ಕು ಉದ್ಯಮದ ದೈತ್ಯ ಕಂಪನಿಗಳಾಸ ಜಿಂದಾಲ್ ಸ್ಟೀಲ್ಸ್, ಕಲ್ಯಾಣಿ ಸ್ಟೀಲ್ಸ್, ಕಿರ್ಲೋಸ್ಕರ್ ಫರೋಸ್ ಮತ್ತು ಬಲ್ದೋಟ ಉದ್ಯಮ ಸಮೂಹಗಳು ರಾಜ್ಯದಲ್ಲಿ ನೆಲೆಯೂರಿವೆ ಎಂದು ಅವರು ತಿಳಿಸಿದರು. ಉದ್ಯಮ ಬೆಳವಣಿಗೆಗೆ ಮೂಲಸೌಕರ್ಯ, ಬಂದರುಗಳು, ಕೈಗಾರಿಕಾ ಕ್ಲಸ್ಟರುಗಳು, ಟ್ರಕ್ ಟರ್ಮಿನಲ್ಗಳು ಮತ್ತು ನಾನಾ ಬಗೆಯ ಸಾರಿಗೆ ವ್ಯವಸ್ಥೆಯ ಸಂಪರ್ಕ ಜಾಲಗಳು ಅತ್ಯಗತ್ಯವಾಗಿ ಬೇಕಾಗುತ್ತವೆ. ಈ ನಿಟ್ಟಿನಲ್ಲಿ ಕೈಗಾರಿಕಾ ಮೂಲಸೌಕರ್ಯದ ಅಭಿವೃದ್ಧಿಯ ಸಲುವಾಗಿ ಕೇಂದ್ರ ಸರಕಾರವು ಈಗ ಕೊಡುತ್ತಿರುವುದಕ್ಕಿಂತಲೂ ಹೆಚ್ಚಿನ ಸಹಕಾರವನ್ನು ನಮಗೆ ಕೊಡಬೇಕು ಎಂದು ಅವರು ಮನವಿ ಮಾಡಿದರು. ಉದ್ದೇಶಿತ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ಕನಸು ನನಸಾದರೆ, ಬಂದರುಗಳಿಂದ ಒಳನಾಡಿಗೆ ಒಳ್ಳೆಯ ಸಂಪರ್ಕ ಸಾಧ್ಯವಾಗುತ್ತದೆ. ಇನ್ನೊಂದೆಡೆಯಲ್ಲಿ, ಹಲವು ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕಿನಿಂದ ಬೃಹತ್ ಪ್ರಮಾಣದ ಸರಕು ಸಾಗಣೆಗೆ ಅನುಕೂಲವಾಗಲಿದೆ. ಅಲ್ಲದೆ ನವ ಮಂಗಳೂರು ಬಂದರಿನಿಂದ ರಫ್ತಾಗುತ್ತಿರುವ ಉಕ್ಕು ಸ್ಥಳೀಯ ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಅವರು ವಿವರಿಸಿದರು. ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಮತ್ತು ಬೆಂಗಳೂರು-ಮುಂಬೈ ಆರ್ಥಿಕ ಕಾರಿಡಾರ್ ಯೋಜನೆಗಳು ದಕ್ಷಿಣ ಮತ್ತು ಪಶ್ಚಿಮ ಭಾರತಗಳನ್ನು ಮತ್ತಷ್ಟು ಹತ್ತಿರಕ್ಕೆ ತರಲಿವೆ. ಇವು ಈ ಭಾಗಗಳಲ್ಲಿರುವ ಕೈಗಾರಿಕಾ ನೆಲೆಗಳನ್ನು ಬೆಸೆಯಲಿದ್ದು, ಸರಕು ಸಾಗಣೆಗೆ ಈಗ ಬೇಕಾಗುತ್ತಿರುವ ಸಮಯವನ್ನು ಸಾಕಷ್ಟು ಕಡಿಮೆ ಮಾಡಲಿವೆ. ಕರ್ನಾಟಕ ಸರಕಾರವು ಡಿಜಿಟಲ್ ಸೌಲಭ್ಯ ಮತ್ತು ಸುಸ್ಥಿರ ಮಾದರಿಯ ಲಾಜಿಸ್ಟಿಕ್ಸ್ ಕಾರ್ಯ ಪರಿಸರವನ್ನು ಸೃಷ್ಟಿಸಲು ಬದ್ಧವಾಗಿದೆ. ಇದರ ಭಾಗವಾಗಿ ಸರಕು ಸಾಗಣೆ ಕಾರಿಡಾರ್, ಬಂದರುಗಳ ಆಧುನೀಕರಣ, ಒಳನಾಡು ಜಲಸಾರಿಗೆ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ ಎಂದು ಪಾಟೀಲ ನುಡಿದಿದರು.
17ನೇ ಆವೃತ್ತಿಯ TCS ವರ್ಲ್ಡ್ 10K ಮ್ಯಾರಥಾನ್ಗೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದೆ. ಏಪ್ರಿಲ್ 27ರಂದು ಭಾನುವಾರ ನಡೆಯಲಿರುವ ಅಂತಾರಾಷ್ಟ್ರೀಯ ಮ್ಯಾರಥಾನ್ನಲ್ಲಿ 30 ಸಾವಿರ ಜನ ಭಾಗವಹಿಸಲಿದ್ದಾರೆ. ಆದ್ದರಿಂದ ಮ್ಯಾರಥಾನ್ ನಡೆಯಲಿರುವ ಬೆಳಗ್ಗೆ 5 ಗಂಟೆಯಿಂದ 10 ಗಂಟೆಯವರೆಗೂ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಬೆಂಗಳೂರು ಸಂಚಾರ ಪೊಲೀಸರು ಕೆಲ ಮಾರ್ಪಾಡುಗಳನ್ನ ಮಾಡಿ ಆದೇಶಿಸಿದ್ದಾರೆ.
ಪಹಲ್ಗಾಮ್ ದಾಳಿ: ಮೃತರ ಕುಟುಂಬಕ್ಕೆ ಎನ್ಎಸ್ಇಯಿಂದ ತಲಾ 4 ಲಕ್ಷ ರೂ. ನೆರವು
ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಭಾರತೀಯ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್ಎಸ್ಇ)ದ ವತಿಯಿಂದ ತಲಾ 4 ಲಕ್ಷ ರೂ. ನೆರವು ನೀಡಲಾಗುವುದು ಎಂದು ಪ್ರಕಟಿಸಿದೆ. ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಬೆಂಬಲವಾಗಿ ಒಟ್ಟು 1 ಕೋಟಿ ರೂ. ಗಳನ್ನು ನೀಡಲಾಗುವುದು. ಇದು ನಮ್ಮ ದೇಶಕ್ಕೆ ಸಾಮೂಹಿಕ ಶೋಕದ ಕ್ಷಣ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತ ಕುಟುಂಬಗಳೊಂದಿಗಿವೆ. ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲ ನೀಡಬೇಕೆಂದು ನಾವು ಆಶಿಸುತ್ತೇವೆ ಎಂದು ಎನ್ಎಸ್ಇ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಶಿಶ್ಕುಮಾರ್ ಚೌಹಾಣ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ
IPL 2025 | ಚೆನ್ನೈ ವಿರುದ್ಧ ಹೈದರಾಬಾದ್ಗೆ 5 ವಿಕೆಟ್ಗಳ ಜಯ
ಚೆನ್ನೈ | ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯದಲ್ಲಿ ಚೆನ್ನೈ ವಿರುದ್ಧ ಹೈದರಾಬಾದ್ 5 ವಿಕೆಟ್ಗಳ ಜಯಸಾಧಿಸಿದೆ.
ಮಂಗಳೂರು: ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ಮಂಗಳೂರು: ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ 2025ನೇ ಸಾಲಿನ ಪವಿತ್ರ ಹಜ್ಜ್ ಯಾತ್ರೆ ಕೈಗೊಳ್ಳಲಿರುವ ಸಹಕಾರಿ ಸಂಘದ ನಿರ್ದೇಶಕರಿಗೆ ಬಿಳ್ಕೋಡಿಗೆ ಕಾರ್ಯಕ್ರಮ ಮಂಗಳೂರು ಬಂದರ್ ನ ಬಹರ್-ಎ-ನೂರ್ ಸಭಾಂಗಣದಲ್ಲಿ ನಡೆಯಿತು. ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿಯಮಿತ ನಿರ್ದೇಶಕ ಟಿ.ಎಚ್. ಹಮೀದ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಬ್ದುಲ್ ಲತೀಫ್ ಡಿ, ಸದಸ್ಯ ಹನೀಫ್ ತೋಟಬೆಂಗ್ರೆ, ಫಯಾಝ್ ಉಳ್ಳಾಲ್, ಮುಹಮ್ಮದ್ ಮುಸ್ಲಿಯಾರ್ ಇರಾ ಇವರನ್ನು ಬೀಳ್ಕೊಡಲಾಯಿತು. ಬಹರ್-ಎ- ನೂರು ಕಟ್ಟಡದ ಪೈಟಿಂಗ್ ಗುತ್ತಿಗೆದಾರ ಗಿರೀಶ್ ಕುಮಾರ್ ಕದ್ರಿ ಅವರನ್ನು ಸನ್ಮಾನಿಸಲಾಯಿತು. ಸಂಘ ಅಧ್ಯಕ್ಷ ಜೆ. ಮುಹಮ್ಮದ್ ಇಸಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಬಿ.ಆಹ್ಮದ್ ಬಾವಾ, ನಿರ್ದೇಶಕರಾದ ಯು.ಟಿ.ಆಹ್ಮದ್ ಶರೀಫ್, ಬಿ.ಇಬ್ರಾಹಿಂ ಖಲೀಲ್, ಎ.ಎಮ್.ಕೆ.ಮೊಹಮ್ಮದ್ ಇಬ್ರಾಹಿಂ, ಎಸ್.ಎಮ್.ಇಬ್ರಾಹಿಂ, ಮೊಹಮ್ಮದ್ ಆಶ್ರಫ್, ಎಸ್.ಕೆ. ಇಸ್ಮಾಯಿಲ್, ಸದಸ್ಯರಾದ ಎಂ.ಎ ಗಫೂರ್, ಶಂಶುದ್ದೀನ್ ಕುದ್ರೋಳಿ, ಯು.ಎಫ್ ಇಕ್ಬಾಲ್, ಮುನೀರ್ ಎಂಎನ್ ಆರ್, ಮೊಹಮ್ಮದ್ ಎಮ್ಎಕ್ಸ್ ಎಮ್, ರಹಿಮಾನ್ ಸಾಗರ್, ಸಲಹೆಗಾರ ಮಯ್ಯದಿ ಕಾರ್ನಾಡ್ ಮೊದಲಾದವರು ಉಪಸ್ಥಿತರಿದ್ದರು. ಸಲಹೆಗಾರ ಮುಸ್ತಫಾ ಹರೇಕಳ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಬ್ದುಲ್ ಲತೀಫ್ ಡಿ ವಂದಿಸಿದರು.
ನೆಲಮಂಗಲದಲ್ಲಿ ಯುವ ವಕೀಲೆ ರಮ್ಯಾ ಆತ್ಮಹತ್ಯೆ - ಶವ ಕೆಳಗಿಸಿದ ಸಹೋದರ ಕೂಡ ಸುಸೈಡ್!
ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಏ. 25ರಂದು ಯುವ ವಕೀಲರಾದ ರಮ್ಯಾ ಎಂಬುವರು ತಾವು ವಾಸಿಸುತ್ತಿದ್ದ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆಯ ಸಾವನ್ನು ಕಂಡ ಆಕೆಯ ತಮ್ಮ ಪುನೀತ್ ಎಂಬಾತ ಕೂಡ ಬೇರೆ ಜಾಗಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 7 ಟೌನ್ಶಿಪ್ ನಿರ್ಮಾಣ : ಡಿ.ಕೆ.ಶಿವಕುಮಾರ್
ಮಂಡ್ಯ : ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯಲ್ಲಿ ಇಡೀ ದೇಶಕ್ಕೇ ಮಾದರಿಯಾಗುವಂತಹ 7 ಟೌನ್ ಶಿಪ್ ನಿರ್ಮಾಣ ಮಾಡಲಾಗುವುದು. ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾವೇರಿ ಆರತಿ ನಡೆಸುವ ಸಂಬಂಧ ಶುಕ್ರವಾರ ಕೆಆರ್ಎಸ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಟೌನ್ಶಿಪ್ಗೆ ಭೂ ಸ್ವಾಧೀನವಾಗಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಡಿನೋಟಿಫಿಕೇಷನ್ ಮಾಡುವುದಿಲ್ಲ. ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು. ಇಲ್ಲವೇ ಹಾಲಿ ಜಮೀನಿಗಿಂತ ದುಪ್ಪಟ್ಟು ಬೆಲೆಯ ಭೂಮಿ ನೀಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಒಪ್ಪಿಗೆ ದೊರೆಯುತ್ತಿದ್ದಂತೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಕೆಆರ್ಎಸ್ಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದರ್ಶನ ಪುಟ್ಟಣ್ಣಯ್ಯ, ದಿನೇಶ್ ಗೂಳಿಗೌಡ, ಬೆಂಗಳೂರು ನೀರು ಸರಬರಾಜು, ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಮಂಡ್ಯ, ಮೈಸೂರು ಜಿಲ್ಲಾಧಿಕಾರಿ ಡಾ.ಕುಮಾರ, ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಆರ್.ನಂದಿನಿ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಕಾವೇರಿ ಆರತಿಗೆ 98 ಕೋಟಿ ರೂ. ಬಜೆಟ್ನಲ್ಲಿ ಮೀಸಲಿಡಲಾಗಿದೆ. ಸುಮಾರು 10 ಸಾವಿರ ಜನರಿಗೆ ಆರತಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುವುದು. ರಸ್ತೆ ಅಭಿವೃದ್ಧಿ ಸೇರಿದಂತೆ ಎಲ್ಲ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಮೈಸೂರು ದಸರಾ ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಜನಪ್ರಿಯ ಕ್ರೀಡೆಯಾದ ಕಂಬಳ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ. -ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ
ಸೌದಿ : ಪ್ರಧಾನಿ ಮೋದಿಯನ್ನು ಭೇಟಿಯಾದ ಎಕ್ಸ್ ಪರ್ಟೈಸ್ ಸಿ ಇ ಒ ಆಶಿಫ್ ಕರ್ನಿರೆ
ಮಂಗಳೂರು, ಎ.25: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿಗಿನ ಸೌದಿ ಅರೇಬಿಯಾ ಭೇಟಿ ವೇಳೆ ಸೌದಿಯಲ್ಲಿರುವ ಭಾರತೀಯ ಉದ್ಯಮ ಕ್ಷೇತ್ರದ ಪ್ರಮುಖ ನಾಯಕರನ್ನು ಅವರು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ಮೂಲದ ಸೌದಿ ಅರೇಬಿಯಾದ ಪ್ರತಿಷ್ಠಿತ ಕಂಪೆನಿ ಎಕ್ಸ್ ಪರ್ಟೈಸ್ ಗ್ರೂಪ್ ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಆಶಿಫ್ ಕರ್ನಿರೆ ಹಾಗೂ ಚೀಫ್ ಸ್ಟ್ರಾಟಜಿ ಆಫೀಸರ್ ಅಂಶಿಫ್ ಕರ್ನಿರೆ ಅವರು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಲುಲು ಗ್ರೂಪ್ ನ ಅಡಲಿತ ನಿರ್ದೇಶಕ ಯೂಸುಫ್ ಅಲಿ, ಆಸ್ಟರ್ ಹೆಲ್ತ್ ಕೇರ್ ನ ಸಿ ಇ ಒ ಅಲಿಷಾ ಮೂಪನ್ ಅವರೂ ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದರು. ಪ್ರಧಾನಿ ಮೋದಿ ಹಾಗೂ ಉದ್ಯಮ ರಂಗದ ಭಾರತ ಮೂಲದ ಈ ಪ್ರಭಾವೀ ನಾಯಕರ ನಡುವೆ ರಚನಾತ್ಮಕ ಮಾತುಕತೆ ನಡೆಯಿತು. ಸೌದಿ ಅರೇಬಿಯಾದ ಅಭಿವೃದ್ಧಿಗೆ ಭಾರತೀಯ ಮೂಲದ ಈ ಉದ್ಯಮಿಗಳು ನೀಡುತ್ತಿರುವ ಅಮೂಲ್ಯ ಕೊಡುಗೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಇಂತಹ ಬೃಹತ್ ಉದ್ಯಮ ಸಮೂಹಗಳಿಂದ ಭವಿಷ್ಯದಲ್ಲಿ ಭಾರತ ಹಾಗೂ ಸೌದಿ ಅರೇಬಿಯಾ ನಡುವೆ ಇನ್ನಷ್ಟು ಬಾಂಧವ್ಯ ಬೆಳೆಯುವ ಸಾಧ್ಯತೆ ಹಾಗೂ ಎರಡೂ ದೇಶಗಳ ಆರ್ಥಿಕತೆಗೆ ಸಿಗುವ ಲಾಭದ ಕುರಿತು ಪ್ರಧಾನಿ ಮೋದಿ ಆಶಾಭಾವ ವ್ಯಕ್ತಪಡಿಸಿದರು. ಭಾರತ ಹಾಗೂ ಸೌದಿ ಅರೇಬಿಯಾ ನಡುವೆ ಸುದೀರ್ಘ ಕಾಲದಿಂದ ಅತ್ಯುತ್ತಮ ಸಂಬಂಧ ಇರುವುದನ್ನು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಸ್ಮರಿಸಿದರು.
Pahalgam Attack: ಪಾಕಿಸ್ತಾನಕ್ಕೆ ಒಂದೇ ಒಂದು ಹನಿ ನೀರು ಬಿಡಲ್ಲ; ಜಲಶಕ್ತಿ ಸಚಿವ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರ ಸಾವಿಗೆ ಕಾರಣವಾದ ಆರೋಪಕ್ಕೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನಕ್ಕೆ ಒಂದು ಹನಿ ನೀರು ಹರಿಯಲು ಬಿಡುವುದಿಲ್ಲ ಎಂದು ಜಲಶಕ್ತಿ ಸಚಿವ ಸಿ.ಆರ್. ಪಾಟಿಲ್ ಹೇಳಿದ್ದಾರೆ. ಭಯೋತ್ಪಾದಕ ದಾಳಿಯಿಂದ ಸಿಟ್ಟಿಗೆದ್ದಿರುವ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಭಾರತದಿಂದ ಒಂದೇ ಒಂದು ಹನಿ
ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಸಾಮಾನ್ಯ ಸಭೆ
ವಿಟ್ಲ: ವಿಟ್ಲದ ಪಳಿಕೆ ಎಂಬಲ್ಲಿ ನಿರ್ಮಾಣಗೊಂಡಿರುವ ಪಿಯು ಕಾಲೇಜ್ ಪರವಾನಿಗೆ ಪಡೆದ ಮೂಲ ಉದ್ದೇಶವನ್ನು ಮರೆಮಾಚಿ ಬೇರೆ ಕಾರ್ಯಕ್ಕೆ ಬಳಸುವ ಹುನ್ನಾರ ನಡೆಯುತ್ತಿದೆ. ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳುವ ಕಾರ್ಯವೂ ಆಗಿದೆ. ಪರವಾನಿಗೆ ಇಲ್ಲದೆ ಕಟ್ಟಡ ನಿರ್ಮಾಣ ಆಗುತ್ತಿದ್ದು, ಇದರ ಬಗ್ಗೆ ಸೂಕ್ತ ಕ್ರಮ ಆಗಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಅರುಣ್ ಎಂ ವಿಟ್ಲ ತಿಳಿಸಿದರು. ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಅಧ್ಯಕ್ಷ ಕರುಣಾಕರ ನಾಯ್ತೋಟ್ಟು ಅಧ್ಯಕ್ಷತೆ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. 94ಸಿ ಹಾಗೂ ಸಿಸಿ ನಿವೇಶನದಲ್ಲಿ ನಿರ್ಮಾಣ ಮಾಡಿದ ಮನೆಗಳ ದಾಖಲೆಗಳ ಬಗ್ಗೆ ಗೊಂದಲ ಏರ್ಪಡಿಸುವುದು ಸರಿಯಲ್ಲ. ಈ ನಿವೇಶನಕ್ಕೆ ಸಿಂಗಲ್ ಸೈಟ್ ನ ಅಗತ್ಯವಿಲ್ಲ, ಅದನ್ನು ಕೇಳುವುದೂ ಸರಿಯಲ್ಲ. ಪುಡಾ ಸಭೆಯಲ್ಲಿ ಸಮಸ್ಯೆಯ ಬಗ್ಗೆ ಮಾತನಾಡ ಬೇಕು ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಪ್ರಕಾಶ್ ಅವರು ಹೇಳಿದರು. ಮಳೆ ಬರುವ ಮೊದಲು ಚರಂಡಿಗಳ ದುರಸ್ಥಿ ನಡೆಯಬೇಕು. ದೇವಸ್ಥಾನ ರಸ್ತೆಯಲ್ಲಿ ಎಲ್ಲಾ ವಾಹನ ನಿಲ್ಲಿಸಿ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಬಸ್ ನಿಲ್ದಾಣ ಏಲಂ ಆಗಿದ್ದು, ಬಸ್ ಮಾತ್ರ ರಸ್ತೆಯಲ್ಲಿ ನಿಲ್ಲುತ್ತಿದೆ. ವಾಹನ ಸಂಚಾರ ನಿಯಂತ್ರಣ ಸರಿಪಡಿಸುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾ ದರೂ ಕೆಲಸ ನಡೆಯುತ್ತಿಲ್ಲ. ಸಂಚಾರ ನಿಯಂತ್ರಣಕ್ಕೆಂದು ಒಬ್ಬರು ಉಪ ನಿರೀಕ್ಷಕರನ್ನು ನೇಮಕ ಮಾಡಿದ್ದು, ರಸ್ತೆಯಲ್ಲಿ ನಿಂತು ವಾಹನ ಸಂಚಾರ ಸರಿ ಪಡಿಸುವ ಕಾರ್ಯ ಮಾಡಬೇಕು. ವಿವಿಧ ರಸ್ತೆಯಲ್ಲಿ ಚರಂಡಿ ಮೇಲಿನ ಸ್ಲ್ಯಾಬ್ ತುಂಡಾಗಿ ಸಮಸ್ಯೆಯಾಗುತ್ತಿದೆ. ಸಂತೆ ಅಂಗಡಿಯವರು ಮತ್ತೆ ರಸ್ತೆಗೆ ಬರು ತ್ತಿದ್ದು, ಅದನ್ನು ಪಂಚಾಯಿತಿ ವಶಕ್ಕೆ ಪಡೆಯುವ ಕಾರ್ಯವಾಗಬೇಕು. ನೀರು ಸರಬರಾಜು ವ್ಯವಸ್ಥೆಯನ್ನು ಸರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಸದಸ್ಯರು ಆಗ್ರಹಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ರವಿಪ್ರಕಾಶ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕರುಣಾಕರ ವಿ., ಕಿರಿಯ ಅಭಿಯಂತರರಾದ ಡೊಮಾನಿಕ್ ಡಿಮೆಲ್ಲೋ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ ಹರೀಶ್ ಸಿ.ಎಚ್, ಜಯಂತ ಸಿ.ಎಚ್, ಕೃಷ್ಣ, ವಸಂತ, ಹಸೈನಾರ್ ನೆಲ್ಲಿಗುಡ್ಡೆ, ವಿಕೆಎಂ ಅಶ್ರಫ್, ಅಶೋಕ್ ಕುಮಾರ್ ಶೆಟ್ಟಿ,,, ಶಾಕೀರ, ಸುನೀತ, ವಿಜಯಲಕ್ಷ್ಮಿ ಪದ್ಮನಿ, ಲತಾವೇಣಿ, ನಾಮನಿರ್ದೇಶಿತ ಸದಸ್ಯ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಶ್ರೀನಿವಾಸ ಶೆಟ್ಟಿ ಕೊಲ್ಯ, ಸುನೀತಾ ಕೋಟ್ಯಾನ್, ಮೊದಲಾದವರು ಉಪಸ್ಥಿತರಿದ್ದರು. ಸಿಬ್ಬಂದಿಗಳು ಸಹಕರಿಸಿದರು.
ಪಿಯುಸಿ ಪರೀಕ್ಷೆ-2: 13 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು, ಒಬ್ಬ ಡಿಬಾರ್
ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯುತ್ತಿದ್ದು, ಶುಕ್ರವಾರ ನಡೆದ ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಜೀವಶಾಸ್ತ್ರ ಪರೀಕ್ಷೆಯಲ್ಲಿ 13 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಒಬ್ಬರನ್ನು ಡಿಬಾರ್ ಮಾಡಲಾಗಿದೆ. ಪರೀಕ್ಷೆಗೆ 94,687 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 81,097 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, 13,590 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಬೆಂಗಳೂರಿನ ಪಿಯು ಕಾಲೇಜುವೊಂದರಲ್ಲಿ ವಿದ್ಯಾರ್ಥಿಯೊಬ್ಬರು ನಕಲು ಮಾಡಿ ಪರೀಕ್ಷಾ ದುರಾಚಾರವನ್ನು ಎಸಗಿದ್ದು, ಅವರನ್ನು ಡಿಬಾರ್ ಮಾಡಲಾಗಿದೆ. ವಿಜಯಪುರದಲ್ಲಿ 1,213, ದಾವಣಗೆರೆಯಲ್ಲಿ 1,067, ಕಲಬುರಗಿ 1,074, ಬೀದರ್ನಲ್ಲಿ 883, ರಾಯಚೂರಿನಲ್ಲಿ 947, ಬಳ್ಳಾರಿ 649 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಗೈರಾಗಿದ್ದಾರೆ.
ಕೋಲ್ಕೊತಾ: ಕಳೆದ ಆವೃತ್ತಿಯಲ್ಲಿ ತಂಡವನ್ನು ಪ್ರಶಸ್ತಿಯೆಡೆ ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಈ ಬಾರಿ ಕೋಲ್ಕೊತಾ ನೈಟ್ ರೈಡರ್ಸ್ ಪ್ಲೇಆಫ್ ಪ್ರವೇಶದ ಕನಸಿಗೆ ತೊಡಕಾಗಿದ್ದಾರೆ. ಶನಿವಾರ ಕೆಕೆಆರ್, ಶ್ರೇಯಸ್ ಅಯ್ಯರ್ರವರ ನೂತನ ನಾಯಕತ್ವದ ಪಂಜಾಬ್ ತಂಡವನ್ನು ಎದುರಿಸಲಿದೆ. ಪಂದ್ಯ ತೀವ್ರ ಜಿದ್ದಾಜಿದ್ದಿನಿಂದ ಕೂಡಿರುವ ನಿರೀಕ್ಷೆಯನ್ನು ಹುಟ್ಟುಹಾಕಿದೆ.ಹನ್ನೆರಡು ತಿಂಗಳ ಹಿಂದೆ ಶ್ರೇಯಸ್ ಅಯ್ಯರ್ ಕೋಲ್ಕೊತಾ ನೈಟ್ರೈಡರ್ಸ್ ನಾಯಕರಾಗಿ ತಂಡಕ್ಕೆ ಮೊದಲ ಐಪಿಎಲ್ ಕಿರೀಟ ಮುಡಿಗೇರಿಸಿಕೊಟ್ಟಿದ್ದರು. ಈ ಬಾರಿ ಅದೇ ತಂಡದ ಎದುರಾಗಿ ಈಡನ್ ಗಾರ್ಡನ್ಸ್ನಲ್ಲಿ ಆಡುತ್ತಿರುವುದು ವಿಶೇಷವಾಗಿದೆ. ಐಪಿಎಲ್ ಪ್ರಶಸ್ತಿ ದೊರಕಿಸಿಕೊಟ್ಟಿದ್ದರ ಹೊರತಾಗಿಯೂ ಅಯ್ಯರ್ರನ್ನು ಪ್ರಸಕ್ತ ಆವೃತ್ತಿಯಲ್ಲಿ ತಂಡದಿಂದ ಕೈಬಿಟ್ಟಿದ್ದು ಕ್ರೀಡಾಪ್ರೇಮಿಗಳ ಅಚ್ಚರಿಗೆ ಕಾರಣವಾಗಿತ್ತು. ಶನಿವಾರದ ಪಂದ್ಯದಲ್ ಲಿಅವೆಲ್ಲಾವಿಚಾರಗಳು ಮರುಕಳಿಸಲಿವೆ. ಕೆಕೆಆರ್ ವಿರುದ್ಧ ಸಿಡಿಯುತ್ತಾರಾ ಶ್ರೇಯಸ್? ಪ್ರಸಕ್ತ ಆವೃತ್ತಿಯಲ್ಲಿ 3 ಅರ್ಧ ಶತಕಗಳನ್ನು ಬಾರಿಸಿ ಒಟ್ಟು 263 ರನ್ ಕಲೆ ಹಾಕಿ ತಂಡಕ್ಕೆ ಆಸರೆ ಒದಗಿಸಿದ್ದಾರೆ. ಆದರೆ ಈ ಹಿಂದಿನ ಪಂದ್ಯಗಳಲ್ಲಿ ಒಂದಂಕಿ ಮೊತ್ತಕ್ಕೆ ಸೀಮಿತರಾಗಿರುವ ಅಯ್ಯರ್ ತಮ್ಮ ಫಾರ್ಮನ್ನು ಕಂಡುಕೊಳ್ಳಬೇಕಿದೆ. ಪ್ರಸ್ತುತ ಡೆಲ್ಲಿ ತಂಡದ ತಮ್ಮ ಹಿಂದಿನ ತಂಡ ಲಖನೌ ವಿರುದ್ಧದ ಪಂದ್ಯದಲ್ಲಿ 57 ರನ್ ಸಿಡಿಸಿ ಗೆಲುವಿಗೆ ಕಾರಣರಾಗಿದ್ದರು. ಅಂಥದ್ದೇ ಅವಕಾಶವೊಂದು ಶ್ರೇಯಸ್ ಅಯ್ಯರ್ ಮುಂದಿದೆ. ಅದನ್ನವರು ಬಳಸಿಕೊಳ್ಳುವರೇ ಇಲ್ಲವೇ ಎಂಬುದು ಕುತೂಹಲ ಮೂಡಿಸಿದೆ.ಕೆಕೆಆರ್ನ ಅಗ್ರಕ್ರಮಾಂಕದ ಬ್ಯಾಟರ್ಗಳ ಪೈಕಿ ರಸೆಲ್, ರಿಂಕು ಸಿಂಗ್ ಮತ್ತು ರಮಣ್ದೀಪ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇದರಿಂದಾಗಿ ತಂಡ ವೆಸ್ಟ್ಇಂಡೀಸ್ನ ಆಲ್ರೌಂಡರ್ ರೋವ್ಮನ್ ಪೊವೆಲ್ರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಕೆಕೆಆರ್ನ ಬ್ಯಾಟಿಂಗ್ ಪಡೆಯ ಅಂಗ್ಕ್ರಿಶ್ ರಘುವಂಶಿ, ಪಂಜಾಬ್ನ ಆಷ್ರ್ದೀಪ್ ಸಿಂಗ್ ಮತ್ತು ಯಜ್ವೇಂದ್ರ ಚಾಹಲ್ರ ಬೌಲಿಂಗ್ ಅನ್ನು ಸಮರ್ಥವಾಗಿ ಎದುರಿಸುವ ಭರವಸೆ ಮೂಡಿಸಿದ್ದಾರೆ. ಕೆಕೆಆರ್ನ ನಾಯಕ ಅಜಿಂಕ್ಯ ರಹಾನೆ ಅವರ ಪ್ರದರ್ಶನವೂ ಏಳುಬೀಳುಗಳಿಂದ ಕೂಡಿದ್ದು ಟೀಕೆಗೆ ಗುರಿಯಾಗಿದೆ. ಕಳೆದ ವಾರ ಯಲ್ಲಿ ಚಹಲ್ ಸೇರಿದಂತೆ ಪಂಜಾಬ್ ಬೌಲಿಂಗ್ ಪಡೆಯ ದಾಳಿಗೆ ತತ್ತರಿಸಿದ ಕೋಲ್ಕೊತಾ 95ಕ್ಕೆ ಸರ್ವಪತನ ಕಂಡಿತ್ತು. ಚಹಲ್ ಒಬ್ಬರೇ ರಹಾನೆ, ರಘುವಂಶಿ, ರಿಂಕು, ಮತ್ತು ರಮಣ್ದೀಪ್ ಸಿಂಗ್ ವಿಕೆಟ್ ಉರುಳಿಸಿದ್ದರು. ಹೀಗಾಗಿ ಮುಖ್ಯವಾಗಿ ರ ಸ್ಪಿನ್ ಮಂತ್ರವನ್ನು ಎದುರಿಸಲು ಕೆಕೆಆರ್ ರಣತಂತ್ರ ಹೆಣೆಯಬೇಕಿದೆ. ಹೇಗಿದೆ ಈಡನ್ ಗಾರ್ಡನ್ಸ್ ಪಿಚ್ ? ಈಡನ್ ಗಾರ್ಡನ್ಸ್ ಪಿಚ್ ಇತ್ತೀಚಿನ ವರ್ಷಗಳಲ್ಲಿ ಬ್ಯಾಟಿಂಗ್ಸ್ನೇಹಿಯಾಗಿಯೇ ಗೋಚರಿಸಿದೆ. ಈ ಸೀಸನ್ ನಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಇಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ಸರಾಸರಿ ಸ್ಕೋರ್ 202 ಆಗಿರುವುದೇ ಇದು ಎಷ್ಟರಮಟ್ಟಿಗೆ ಬ್ಯಾಟಿಂಗ್ ಗೆ ಉಪಕಾರಿ ಎಂಬುದಕ್ಕೆ ಸಾಕ್ಷಿಯಾಗಿದೆ. ಜೊತೆಗೆ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಗೆದ್ದಿವೆ. ಹೀಗಾಗಿ ಟಾಸ್ ಗೆದ್ದ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವುದೇ ಉತ್ತಮ ರಣತಂತ್ರವಾಗಬಹುದು.. ಸ್ಥಳ: ಈಡನ್ ಗಾರ್ಡನ್ಸ್, ಕೋಲ್ಕೊತಾ ಪಂದ್ಯ ಆರಂಭ: ರಾತ್ರಿ 7.30 ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಇಲೆವೆನ್ ರೆಹಮಾನ್ ಉಲ್ಲಾ ಗುರ್ಬಾಜ್, ಸುನಿಲ್ ನರೈನ್,, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮೊಯಿನ್ ಅಲಿ, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ.ಇಂಪ್ಯಾಕ್ಟ್ ಪ್ಲೇಯರ್: ಆಂಗ್ಕ್ರಿಶ್ ರಘುವಂಶಿ ಪಂಜಾಬ್ ಕಿಂಗ್ಸ್ ಸಂಭಾವ್ಯ ಇಲೆವೆನ್ ಶ್ರೇಯಸ್ ಅಯ್ಯರ್ (ನಾಯಕ), ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್,, ಜೋಶ್ ಇಂಗ್ಲಿಸ್, ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಹರ್ಪ್ರೀತ್ ಬ್ರಾರ್, ಅರ್ಶದೀಪ್ ಸಿಂಗ್.ಇಂಪ್ಯಾಕ್ಟ್ ಪ್ಲೇಯರ್: ಯುಜುವೇಂದ್ರ ಚಹಲ್
ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ: ಜೂ.19-20ರಂದು ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ
ಉಡುಪಿ, ಎ.25: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೂ.19 ಮತ್ತು ಜೂ.20ರಂದು ದಿನ ನಿಗದಿ ಪಡಿಸಿದೆ. ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು, ಈ ನಿಟ್ಟಿನಲ್ಲಿ ಸದ್ಯ ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ ಪಡಿಸುವುದು ಬೇಡ ಎಂದು ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ, ಈ ಸಂಬಂಧ ವಿಚಾರಣೆಗೆ ಹೈಕೋರ್ಟ್ ಯಾವುದೇ ತಡೆಯಾಜ್ಞೆ ನೀಡಿಲ್ಲ. ಈ ಪ್ರಕರಣದ ಸಾಕ್ಷಿಗಳ ವಿಚಾರಣೆ ಕಳೆದ ಜೂನ್ ತಿಂಗಳಲ್ಲಿಯೇ ಆರಂಭ ವಾಗಬೇಕಿತ್ತು. ಆದರೆ ಆರೋಪಿ ಒಂದಲ್ಲ ಒಂದು ಕಾರಣ ನೀಡಿ, ಅದನ್ನು ಮುಂದೂಡುತ್ತಿದ್ದಾರೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ವಿಳಂಬವಾಗುತ್ತಿದೆ. ಆದುದರಿಂದ ಇವತ್ತೇ ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿಪಡಿಸಬೇಕೆಂದು ಹೇಳಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಜೂ.19ರಂದು ದೂರುದಾರೆ ಹಾಗೂ ಒಂದನೇ ಸಾಕ್ಷಿಯ ವಿಚಾರಣೆ ಮತ್ತು ಜೂ.20ರಂದು ಎರಡು ಮತ್ತು ಮೂರನೇ ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿಪಡಿಸಿದರು. ಆ ದಿನದಂದು ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಖುದ್ಧು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅವರು ಆದೇಶ ನೀಡಿದರು.
ಉಪ್ಪಿನಂಗಡಿ: ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
ಉಪ್ಪಿನಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಹಿಂದೂ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ಎ.25ರಂದು ಸಂಜೆ ಪ್ರತಿಭಟನೆ ಹಾಗೂ ಉಗ್ರರ ದಾಳಿಯಲ್ಲಿ ಮಡಿದವರಿಗೆ ಸಂತಾಪ ಸೂಚಕ ಸಭೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಮೊದಲಿಗೆ ಹಣತೆ ಬೆಳಗಿ ಉಗ್ರರ ದಾಳಿಯಲ್ಲಿ ಮಡಿದವರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರು, ಮತಾಂಧ ಶಕ್ತಿಗಳು ಈ ದೇಶದ ಏಕತೆ ಮತ್ತು ಅಖಂಡತೆಗೆ ಸವಾಲು ಹಾಕುವ ಕೆಲಸ ಮಾಡುತ್ತಿದ್ದು, ಹಿಂದೂ ಧರ್ಮವನ್ನೇ ಟಾರ್ಗೆಟ್ ಮಾಡಿ ಕಾಶ್ಮೀರದ ಪಹಲ್ಗಾಮ್ನಲ್ಲಿ 27 ಜನರನ್ನು ಅಮಾನುಷವಾಗಿ ಕೊಲ್ಲುವ ಕೆಲಸ ಮಾಡಿದ್ದಾರೆ. ಇಂಥ ಉಗ್ರವಾದಿಗಳಿಗೆ ಹಾಗೂ ಅವರಿಗೆ ಬೆಂಬಲ ನೀಡುವ ಶಕ್ತಿಗಳಿಗೆ ಹಿಂದೂ ಸಮಾಜದ ಯುವಕರು ಜಾತಿ, ಮತ ಬದಿಗಿಟ್ಟು ರಾಷ್ಟಕ್ಕಾಗಿ ಸಮರ್ಪಣೆಗೆ ಮುಂದಾಗಬೇಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು- ಕಾಶ್ಮೀರದಲ್ಲಿದ್ದ 370 ವಿಧಿಯನ್ನು ತೆಗೆಯುವ ಮೂಲಕ ಭಯೋತ್ಪಾದಕರ ಬೆನ್ನು ಮೂಳೆ ಮುರಿಯುವ ಕೆಲಸ ಮಾಡಿದ್ದಾರೆ. ಇದೀಗ ಮತ್ತೆ ಭಯೋತ್ಪಾದಕ ಶಕ್ತಿಗಳು ಹಿಂದೂ ಧರ್ಮದವರ ಮೇಲೆ ಆಕ್ರಮಣಕ್ಕೆ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಇಂಥ ವಿಚಿಧ್ರಕಾರಿ ಶಕ್ತಿಗಳನ್ನು ಹೊಸಕಿ ಹಾಕುವ ಕೆಲಸ ಪ್ರಧಾನಿ ನರೇಂದ್ರ ಮೋದಿಯವರಿಂದ ನಡೆಯಲಿದೆ ಹಾಗೂ ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳುವ ಕೆಲಸವೂ ನಡೆಯಲಿದೆ. ಆದ್ದರಿಂದ ಪ್ರಧಾನಿಯವರಿಗೆ ನಾವೆಲ್ಲಾ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದರು. ಮುರಳೀಕೃಷ್ಣ ಹಸಂತಡ್ಕ, ಅರುಣ್ ಕುಮಾರ್ ಪುತ್ತಿಲ ಮಾತನಾಡಿದರು. ಪ್ರತಿಭಟನೆಯಲ್ಲಿ ಪ್ರಮುಖರಾದ ಎನ್. ಉಮೇಶ್ ಶೆಣೈ, ಸುನೀಲ್ ಕುಮಾರ್ ದಡ್ಡು, ಚಿದಾನಂದ ಪಂಚೇರು, ರಾಜೇಶ್ ಕೊಡಂಗೆ, ಸುಜೀತ್ ಬೊಳ್ಳಾವು, ಸಂದೀಪ್ ಕುಪ್ಪೆಟ್ಟಿ, ರಾಧಾಕೃಷ್ಣ ಭಟ್ ಬೊಳ್ಳಾವು, ಯು. ರಾಮ, ವಿಶ್ವನಾಥ ಶೆಟ್ಟಿ ಕಂಗ್ವೆ, ಧನಂಜಯ ನಟ್ಟಿಬೈಲು, ಚಂದ್ರಶೇಖರ ಮಡಿವಾಳ, ಚಂದ್ರಶೇಖರ ತಾಳ್ತಜೆ, ಜಯಂತ ಪೊರೋಳಿ, ರಾಜಗೋಪಾಲ ಭಟ್ ಕೈಲಾರು, ಪುರುಷೋತ್ತಮ ಮುಂಗ್ಲಿಮನೆ, ಮನೀಷ್, ಹರೀಶ್ ಪಟ್ಲ, ಪ್ರಸಾದ್ ಭಂಡಾರಿ, ರಾಮಚಂದ್ರ ಪೂಜಾರಿ, ಗಂಗಾಧರ ಪಿ.ಎನ್., ಸುದರ್ಶನ್, ಹರಿರಾಮಚಂದ್ರ, ಉದಯ ಅತ್ರೆಮಜಲು, ಮಹೇಶ್ ಬಜತ್ತೂರು, ಸಂತೋಷ್ ಕರ್ಲಾಪು, ಕಿಶೋರ್ ಬಜತ್ತೂರು, ರವಿನಂದನ್ ಹೆಗ್ಡೆ, ಜಯರಾಮ ಆಚಾರ್ಯ, ರವಿ ಇಳಂತಿಲ, ಮೂಲಚಂದ್ರ ಕಾಂಚನ, ಕೈಲಾರ್ ಸತ್ಯನಾರಾಯಣ ಭಟ್, ಡಾ. ಗೋವಿಂದ ಪ್ರಸಾದ್ ಕಜೆ, ಪ್ರಶಾಂತ್ ನೆಕ್ಕಿಲಾಡಿ, ಶರತ್ ಕೋಟೆ, ಶ್ರೀರಾಮ ಭಟ್ ಪಾತಾಳ, ಡಾ. ಶಿವರಾಮ ಭಟ್, ರವೀಂದ್ರ ಆಚಾರ್ಯ, ಹೇರಂಭ ಶಾಸ್ತ್ರಿ, ಗಿರೀಶ್ ಕುಂದರ್, ಗೋಪಾಲಕೃಷ್ಣ ದುರ್ಗಾಗಿರಿ ಮತ್ತಿತರರು ಉಪಸ್ಥಿತರಿದ್ದರು. ಸುರೇಶ್ ಅತ್ರೆಮಜಲು ಕಾರ್ಯಕ್ರಮ ನಿರೂಪಿಸಿದರು.
ಭಯೋತ್ಪಾದನೆ ವಿರುದ್ಧ ಭಾರತ ಒಗ್ಗಟ್ಟಾಗಿ ನಿಲ್ಲುವುದು ಮುಖ್ಯ: ರಾಹುಲ್ ಗಾಂಧಿ
ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಉದ್ದೇಶ ದೇಶದ ಜನರನ್ನು ವಿಭಜಿಸುವುದಾಗಿತ್ತು. ಭಯೋತ್ಪಾದನೆಯನ್ನು ಶಾಶ್ವತವಾಗಿ ಸೋಲಿಸಲು ಭಾರತ ಒಗ್ಗಟ್ಟಿನಿಂದ ಇರುವುದು ಅಗತ್ಯವಾಗಿದೆ ಎಂದು ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. ‘‘ಇದೊಂದು ಭಯಾಕ ದುರಂತ. ಇಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಹಾಗೂ ನೆರವು ನೀಡಲು ನಾನು ಇಲ್ಲಿಗೆ ಬಂದಿದ್ದೇನೆ. ಜಮ್ಮು ಹಾಗೂ ಕಾಶ್ಮೀರದ ಎಲ್ಲಾ ಜನರು ಈ ಭಯಾನಕ ಕೃತ್ಯವನ್ನು ಖಂಡಿಸಿದ್ದಾರೆ. ಅವರು ದೇಶವನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ’’ ಎಂದು ರಾಹುಲ್ ಗಾಂಧಿ ಶ್ರೀನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಶ್ರೀನಗರಕ್ಕೆ ಶುಕ್ರವಾರ ಬೆಳಗ್ಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಘಟನೆಯಲ್ಲಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಲು ಬಾದಾಮಿಬಾಗ್ ಕಂಟೋನ್ಮೆಂಟ್ನಲ್ಲಿರುವ ಸೇನೆಯ 92 ಬೇಸ್ ಆಸ್ಪತ್ರೆಗೆ ಭೇಟಿ ನೀಡಿದರು. ‘‘ನಾನು ಗಾಯಗೊಂಡವರಲ್ಲಿ ಓರ್ವನನ್ನು ಮಾತ್ರ ಭೇಟಿಯಾದೆ. ಇತರರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಯಾಕೆಂದರೆ, ಅವರೆಲ್ಲ ಮನೆಗೆ ಹಿಂದಿರುಗಿದ್ದಾರೆ. ಕುಟುಂಬದ ಸದಸ್ಯರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಪ್ರೀತಿ ಹಾಗೂ ವಾತ್ಸಲ್ಯ ಇರುತ್ತದೆ. ಇಡೀ ರಾಷ್ಟ್ರ ಒಂದಾಗಿ ನಿಂತಿದೆ ಎಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ನಾನು ಬಯಸುತ್ತೇನೆ ’’ ಎಂದು ಅವರು ಹೇಳಿದರು. ದಿಲ್ಲಿಯಲ್ಲಿ ಗುರುವಾರ ನಡೆದ ಸರ್ವ ಪಕ್ಷಗಳ ಸಭೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಭಯೋತ್ಪಾದಕ ದಾಳಿಯನ್ನು ಪ್ರತಿಪಕ್ಷ ಖಂಡಿಸುತ್ತದೆ ಹಾಗೂ ಸರಕಾರದ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಪ್ರತಿಪಾದಿಸಿದರು. ‘‘ಈ ಘಟನೆಯ ಹಿಂದಿರುವ ಉದ್ದೇಶ ಸಮಾಜವನ್ನು ವಿಭಜಿಸುವುದು, ಸಹೋದರರು ಸಹೋದರೊಂದಿಗೆ ಹೋರಾಡುವಂತೆ ಮಾಡುವುದಾಗಿದೆ. ಪ್ರತಿಯೊಬ್ಬ ಭಾರತೀಯನೂ ಸಂಘಟಿತವಾಗಿ ಹಾಗೂ ಒಟ್ಟಾಗಿ ನಿಲ್ಲುವುದು ಮುಖ್ಯವಾಗಿದೆ. ಆಗ ನಾವು ಭಯೋತ್ಪಾದಕರ ಕೃತ್ಯಕ್ಕೆ ಸೋಲುಂಟು ಮಾಡಬಹುದು’’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಜಮು ಹಾಗೂ ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರನ್ನು ಭೇಟಿಯಾದರು.
ಬದ್ಲಾಪುರ ಆರೋಪಿ ಎನ್ಕೌಂಟರ್; ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸದ ಮಹಾರಾಷ್ಟ್ರ ಸರಕಾರಕ್ಕೆ ಹೈಕೋರ್ಟ್ ತರಾಟೆ
ಮುಂಬೈ: ನ್ಯಾಯಾಲಯದ ಸ್ಪಷ್ಟ ಆದೇಶದ ಹೊರತಾಗಿಯೂ ಬದ್ಲಾಪುರ ಶಾಲಾ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್ ಶಿಂಧೆಯ ಕಸ್ಟಡಿ ಸಾವಿನ ಕುರಿತು ಐವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸದ ಮಹಾರಾಷ್ಟ್ರ ಸರಕಾರವನ್ನು ಬಾಂಬೆ ಉಚ್ಚ ನ್ಯಾಯಾಲಯ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ. ಮೇಲ್ನೋಟಕ್ಕೆ ಅಪರಾಧ ಬಹಿರಂಗವಾದಾಗ ಪೊಲೀಸರು ಪ್ರಕರಣ ದಾಖಲಿಸುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಎಪ್ರಿಲ್ 7ರಂದು ಹೇಳಿತ್ತು. ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಲಕ್ಷ್ಮೀ ಗೌತಮ್ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡವನ್ನು ನ್ಯಾಯಾಲಯ ರೂಪಿಸಿತ್ತು. ಶಿಂಧೆಯ ಕಸ್ಟಡಿ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಗೌತಮ್ ಅವರಿಗೆ ಎರಡು ದಿನಗಳ ಒಳಗೆ ಹಸ್ತಾಂತರಿಸುವಂತೆ ನ್ಯಾಯಾಲಯ ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಗೆ ನಿರ್ದೇಶಿಸಿತ್ತು. ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಹಾಗೂ ನೀಲಾ ಗೋಖಲೆ ಅವರನ್ನು ಒಳಗೊಂಡ ಪೀಠ, ಆದೇಶವನ್ನು ಅನುಸರಿಸದೇ ಇರುವುದು ದಿಗಿಲು ಹುಟ್ಟಿಸಿದೆ ಎಂದು ಶುಕ್ರವಾರ ಹೇಳಿತು.
ಸೇನಾ ನರ್ಸಿಂಗ್ ಕಾಲೇಜ್ನ ವೆಬ್ಸೈಟ್ ಹ್ಯಾಕ್
ಹೊಸದಿಲ್ಲಿ: ಭಾರತೀಯ ಸೇನೆಯ ನರ್ಸಿಂಗ್ ಕಾಲೇಜ್ ನ ವೆಬ್ಸೈಟ್ ಒಂದನ್ನು ‘ ಟೀಮ್ ಇನ್ಸೇನ್ ಪಿಕೆ’ ಎಂಬ ಪಾಕ್ ಮೂಲದ ಹ್ಯಾಕರ್ ಗಳ ಗುಂಪು ಹ್ಯಾಕ್ ಮಾಡಿರುವುದಾಗಿ ವರದಿಯಾಗಿದೆ. ಭಾರತೀಯ ಭೂಸೇನೆಯ ನರ್ಸಿಂಗ್ ಕಾಲೇಜ್ನ ಅಧಿಕಕೃತ ವೆಬ್ಸೈಟ್ನಲ್ಲಿ ಹ್ಯಾಕರ್ಗಳು ಉರ್ದು ಹಾಗೂ ಇಂಗ್ಲೀಷ್ ಭಾಷೆಯಲ್ಲಿ ‘ನೀವು ಟೀಮ್ ಇನ್ಸೇನ್ ಪಿಕೆ’ಯಿಂದ ಹ್ಯಾಕ್ ಆಗಿದ್ದೀರಿ ’ ಎಂಬ ಸಂದೇಶದೊಂದಿಗೆ ಕೋಮುವಾದಿ ಹೇಳಿಕೆಗಳನ್ನು ಪ್ರದರ್ಶಿಸಿದ್ದಾರೆ.
ಭಾರತ-ಪಾಕ್ ಉದ್ವಿಗ್ನತೆ: ಕುಸಿದ ಶೇರು ಮಾರುಕಟ್ಟೆ
ಮುಂಬೈ: ಶೇರು ಮಾರುಕಟ್ಟೆ ಸೂಚ್ಯಂಕಗಳಾದ ನಿಫ್ಟಿಹಾಗೂ ಸೆನ್ಸೆಕ್ಸ್ ಶುಕ್ರವಾರ ಬೆಳಗ್ಗೆ ಭಾರೀ ಕುಸಿತವನ್ನು ಕಂಡವು. ಜಮ್ಮುಕಾಶ್ಮೀರದ ಫುಲ್ಗಾಂವ್ನಲ್ಲಿ ಭಯೋತ್ಪಾದಕ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ತಲೆದೋರಿರುವ ಉದ್ವಿಗ್ನತೆ ಶೇರು ಸೂಚ್ಯಂಕಗಳ ಕುಸಿತಕ್ಕೆ ಕಾರಣವೆಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ. ಮುಂಬೈ ಶೇರುಮಾರುಕಟ್ಟೆಯ ಸೆನ್ಸೆಕ್ಸ್ 588.90 ಅಂಶಗಳಷ್ಟು ಕುಸಿತವನ್ನು ಕಂಡಿದ್ದು, 79,212.53ಕ್ಕೆ ತಲುಪಿದೆ ಹಾಗೂ ರಾಷ್ಟ್ರೀಯ ಶೇರುಮಾರುಕಟ್ಟೆ ಸೂಚ್ಯಂಕ ನಿಫ್ಟಿ 207.35 ಅಂಶಗಳಷ್ಟು ಅಥವಾ 0.86ರಷ್ಟು ಕುಸಿದಿದ್ದು, 24,039.35ಕ್ಕೆ ಕಲುಪಿದೆ. ಆದಾನಿಪೋರ್ಟ್ಸ್, ಬಜಾಜ್ ಫೈನಾನ್ಸ್, ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾ, ಪವರ್ಗ್ರಿಡ್ ಇತ್ಯಾದಿ ಹಲವು ಪ್ರಮುಖ ಕಂಪೆನಿಗಳ ಶೇರುಗಳ ಮೌಲ್ಯಗಳು ತೀವ್ರ ಕುಸಿತವನ್ನು ಕಂಡಿವೆ. ಆದರೆ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಾದ ಇನ್ಪೋಸಿಸ್ ಹಾಗೂ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ಗಳ ಶೇರುಗಳು ಏರಿಕೆಯನ್ನು ಕಂಡಿವೆ.
ವಿಟ್ಲ: ನಿರ್ಜನ ಪ್ರದೇಶದ ಗುಡ್ಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ವಿಟ್ಲ : ನಿರ್ಜನ ಪ್ರದೇಶದ ಗುಡ್ಡದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸಾಲೆತ್ತೂರು ಗ್ರಾಮದಲ್ಲಿ ಪತ್ತೆಗಾಗಿದೆ. ಪಾಲ್ತಾಜೆ ನಿವಾಸಿ ನಾರಾಯಣ ಪೂಜಾರಿ ಮೃತ ವ್ಯಕ್ತಿ. ಶನಿವಾರ ಮಧ್ಯಾಹ್ನ ಸ್ಥಳೀಯ ನಿವಾಸಿಯೊಬ್ಬರು ಗುಡ್ಡಕ್ಕೆ ಕಟ್ಟಿಗೆ ತರಲು ಹೋದಾಗ ಪೊದೆಗಳ ಎಡೆಯಲ್ಲಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕಂಡುಬಂದಿದೆ. ತಕ್ಷಣವೇ ಆ ವ್ಯಕ್ತಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದು ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಮೃತ ವ್ಯಕ್ತಿ ಪಾಲ್ತಾಜೆ ನಿವಾಸಿ ನಾರಾಯಣ ಪೂಜಾರಿ ಎಂಬುದು ತಿಳಿದುಬಂದಿದೆ. ಮೃತರ ಪತ್ನಿ ಮತ್ತು ಮಕ್ಕಳು ಕೆಲ ವರ್ಷಗಳ ಹಿಂದೆ ನಾರಾಯಣ ಪೂಜಾರಿ ಜೊತೆ ಮನಸ್ತಾಪ ಬಂದು ಪೆರುವಾಯಿ ಸಮೀಪ ವಾಸವಾಗಿದ್ದಾರೆ. ಕೆಲ ಸಮಯಗಳಿಂದ ಒಬ್ಬಂಟಿಯಾಗಿ ನಿರ್ಜನ ಪ್ರದೇಶದ ಪಾಲ್ತಾಜೆ ಗುಡ್ಡದಲ್ಲಿ ಮಲಗುತ್ತಿದ್ದ ನಾರಾಯಣ ಪೂಜಾರಿ ಮೂರು ದಿನಗಳ ಹಿಂದೆ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಮೃತದೇಹ ಭಾಗಶಃ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ವಿಟ್ಲದ ಮುರಳೀಧರ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದವರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಟ್ಲ ಸಮುದಾಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಕುಡಿತದ ಚಟ ಹೊಂದಿದ್ದ ನಾರಾಯಣ ಪೂಜಾರಿ ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲ್ಕತಾ: ದುಷ್ಕರ್ಮಿಗಳಿಂದ ಗೆಳತಿಯನ್ನು ರಕ್ಷಿಸಲು ಯತ್ನಿಸಿದ್ದ ಯುವಕನ ಹತ್ಯೆ
ಕೋಲ್ಕತಾ: ತನ್ನ ಲಿವ್-ಇನ್ ಸಂಗಾತಿಯನ್ನು ಲೈಂಗಿಕ ಕಿರುಕುಳದಿಂದ ರಕ್ಷಿಸುವ ಪ್ರಯತ್ನಿಸಿದ್ದ ಯುವಕನನ್ನು ದುಷ್ಕರ್ಮಿಗಳು ಥಳಿಸಿ ಹತ್ಯೆಗೈದಿರುವ ಘಟನೆ ಕೋಲ್ಕತಾದ ಗೌರಾಂಗ ನಗರದಲ್ಲಿ ನಡೆದಿದೆ. ಯುವಕ ಮತ್ತು ಯುವತಿ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಲಿವ್-ಇನ್ ಸಂಬಂಧದಲ್ಲಿದ್ದು, ಶೀಘ್ರವೇ ಮದುವೆಯಾಗಲಿದ್ದರು. ಜೋಡಿಯ ನಡುವೆ ಬಿರುಸಿನ ವಾಗ್ವಾದದ ಬಳಿಕ ಯುವತಿ ನಸುಕಿನ 2:30ರ ಸುಮಾರಿಗೆ ತಮ್ಮ ಫ್ಲ್ಯಾಟ್ ನಿಂದ ತೆರಳಿದ್ದಳು. ಕಳವಳಗೊಂಡಿದ್ದ ಪ್ರಿಯಕರ ಸಂಕೇತ ಚಟರ್ಜಿ (29) ಆಕೆಯನ್ನು ಹುಡುಕಿಕೊಂಡು ಹೊರಟಿದ್ದ. ಆ ವೇಳೆಗೆ ಪಾನಮತ್ತರಾಗಿ ಅವರ ನಿವಾಸದ ಬಳಿ ಠಳಾಯಿಸುತ್ತಿದ್ದ ಮೂವರು ಯುವತಿಯನ್ನು ಅಡ್ಡಗಟ್ಟಿದ್ದು, ಓರ್ವ ಆಕೆಯ ತೋಳು ಹಿಡಿದು ತನ್ನ ಬಳಿಗೆ ಎಳೆದುಕೊಂಡಿದ್ದ. ಯುವತಿಯು ಕೂಗಿಕೊಂಡಾಗ ಸಂಕೇತ್ ಆಕೆಯ ರಕ್ಷಣೆಗೆ ಧಾವಿಸಿದ್ದ. ಯುವತಿಯನ್ನು ದುಷ್ಕರ್ಮಿಗಳಿಂದ ಮುಕ್ತಗೊಳಿಸಲು ಯಶಸ್ವಿಯಾಗಿದ್ದರೂ ಅವರಲ್ಲೋರ್ವ ಇಟ್ಟಿಗೆಯಿಂದ ಆತನ ತಲೆಗೆ ಹೊಡೆದಿದ್ದ. ಇತರ ಇಬ್ಬರು ದೊಣ್ಣೆಗಳಿಂದ ಥಳಿಸಿದ್ದರು. ಸಂಕೇತನನ್ನು ಬಿಡುವಂತೆ ಯುವತಿ ದುಷ್ಕರ್ಮಿಗಳನ್ನು ಬೇಡಿಕೊಂಡಿದ್ದಳು, ಬಳಿಕ ನೆರವು ಕೋರಿ ಸಮೀಪದ ಮನೆಗಳಿಗೆ ಧಾವಿಸಿದ್ದಳು, ಆದರೆ ಅದೆಲ್ಲವೂ ನಿಷ್ಫಲವಾಗಿತ್ತು. ನಂತರ ಯುವತಿ ತನ್ನ ಸ್ನೇಹಿತರಿಗೆ ಕರೆ ಮಾಡಿದ್ದು, ಅವರು ಪೋಲಿಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಆಗಮಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಸಂಕೇತ ಆಸ್ಪತ್ರೆ ದಾರಿಯಲ್ಲಿ ಮೃತಪಟ್ಟಿದ್ದಾನೆ. ಕೊಲೆ ಆರೋಪದಲ್ಲಿ ಶಂಭು ಮಂಡಲ್, ಸಾಗರ ದಾಸ್ ಮತ್ತು ರಾಜು ಘೋಷ್ ಎನ್ನುವವರನ್ನು ಪೋಲಿಸರು ಬಂಧಿಸಿದ್ದಾರೆ.
ಕೃತಿಸ್ವಾಮ್ಯ ಉಲ್ಲಂಘನೆ ಪ್ರಕರಣ; 2 ಕೋಟಿ ರೂ. ಠೇವಣಿಯಿಡಿ : ಎ.ಆರ್.ರಹಮಾನ್ ಗೆ ದಿಲ್ಲಿ ಹೈಕೋರ್ಟ್ ನಿರ್ದೇಶನ
ಹೊಸದಿಲ್ಲಿ: ಪೊನ್ನಿಯನ್ ಸೆಲ್ವನ್ 2 ಚಿತ್ರದ ‘ವೀರ ರಾಜಾ ವೀರ’ ಹಾಡಿಗೆ ಸಂಬಂಧಿಸಿದ ಕೃತಿಸ್ವಾಮ್ಯ ಉಲ್ಲಂಘನೆ ಪ್ರಕರಣದಲ್ಲಿ ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ ಎರಡು ಕೋಟಿ ರೂ.ಗಳನ್ನು ಠೇವಣಿಯಿರಿಸುವಂತೆ ಸಂಗೀತ ನಿರ್ದೇಶಕ ಎ.ಆರ್.ರಹಮಾನ್ ಮತ್ತು ನಿರ್ಮಾಣ ಸಂಸ್ಥೆ ಮದ್ರಾಸ್ ಟಾಕೀಸ್ಗೆ ಶುಕ್ರವಾರ ನಿರ್ದೇಶನ ನೀಡಿದ ದಿಲ್ಲಿ ಉಚ್ಚ ನ್ಯಾಯಾಲಯವು, ಎರಡು ಲಕ್ಷ ರೂ.ಗಳ ದಂಡವನ್ನು ವಿಧಿಸಿದೆ. ಜ್ಯೂನಿಯರ್ ಡಾಗರ್ ಬ್ರದರ್ಸ್ ಎಂದೇ ಜನಪ್ರಿಯರಾಗಿದ್ದ ತನ್ನ ತಂದೆ ನಾಸಿರ್ ಫೈಯಾಝುದ್ದೀನ್ ಡಾಗರ್ ಮತ್ತು ಚಿಕ್ಕಪ್ಪ ಝಹೀರುದ್ದೀನ್ ಡಾಗರ್ ಅವರು ಸಂಯೋಜಿಸಿದ್ದ ಶಿವ ಸ್ತುತಿ ಗೀತೆಯಿಂದ ವೀರ ರಾಜಾ ವೀರ ಹಾಡನ್ನು ನಕಲು ಮಾಡಲಾಗಿದೆ ಎಂದು ಆರೋಪಿಸಿ ಶಾಸ್ತ್ರೀಯ ಸಂಗೀತಕಾರ ಹಾಗೂ ಪದ್ಮಶ್ರೀ ಪುರಸ್ಕೃತ ಫೈಯಾಝ್ ವಸಿಫುದ್ದೀನ್ ಡಾಗರ್ ಅವರು 2023ರಲ್ಲಿ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು. ರಹಮಾನ್ ಮತ್ತು ಮದ್ರಾಸ್ ಟಾಕೀಸ್ ಸೇರಿದಂತೆ ಪ್ರತಿವಾದಿಗಳು ಹಾಡನ್ನು ಬಳಸುವುದನ್ನು ನಿರ್ಬಂಧಿಸಿ ಕಾಯಂ ತಡೆಯಾಜ್ಞೆಯನ್ನು ಹೊರಡಿಸುವಂತೆ ಅರ್ಜಿಯಲ್ಲಿ ಕೋರಿದ್ದ ಡಾಗರ್, ನಷ್ಟ ಪರಿಹಾರವನ್ನೂ ಕೇಳಿದ್ದರು. ಶುಕ್ರವಾರ ವಿಚಾರಣೆ ಸಂದರ್ಭದಲ್ಲಿ ನ್ಯಾ.ಪ್ರತಿಭಾ ಎಂ.ಸಿಂಗ್ ಅವರು ವೀರ ರಾಜಾ ವೀರ ಹಾಡು ಶಿವ ಸ್ತುತಿಯನ್ನೇ ಆಧರಿಸಿಲ್ಲ ಅಥವಾ ಪ್ರೇರೇಪಿತವಾಗಿಲ್ಲ,ಆದರೆ ಕೆಲವು ಬದಲಾವಣೆಗಳೊಂದಿಗೆ ಅದನ್ನೇ ಹೋಲುತ್ತದೆ ಎಂದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯು ನಡೆಯುತ್ತಿರುವಂತೆ ಎರಡು ಕೋಟಿ ರೂ.ಗಳನ್ನು ಠೇವಣಿ ಮಾಡುವಂತೆ ರಹಮಾನ್ ಮತ್ತು ಮದ್ರಾಸ್ ಟಾಕೀಸ್ಗೆ ಆದೇಶಿಸಿತು. ಗೀತೆ ರಚನೆಯು ಭಿನ್ನವಾಗಿದ್ದರೂ ಸಂಗೀತ ಸಂಯೋಜನೆಯಲ್ಲಿ ವೀರ ರಾಜಾ ವೀರ ಹಾಡು ಶಿವ ಸ್ತುತಿಯನ್ನು ಹೋಲುತ್ತದೆ ಎಂದು ಡಾಗರ್ ಪ್ರತಿಪಾದಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ರಹಮಾನ್ ಅವರು,ಶಿವ ಸ್ತುತಿಯು ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತದ ಧ್ರುಪದ್ ಘರಾಣೆಯ ಸಾಂಪ್ರದಾಯಿಕ ಸಂಯೋಜನೆಯಾಗಿದ್ದು,ಅದು ಸಾರ್ವಜನಿಕ ವಲಯದಲ್ಲಿದೆ. ವೀರ ರಾಜಾ ವೀರ ಕೂಡ ಮೂಲ ಕೃತಿಯಾಗಿದ್ದು,227 ವಿಭಿನ್ನ ಪದರಗಳೊಂದಿಗೆ ಪಾಶ್ಚಾತ್ಯ ಸಂಗೀತದ ಮೂಲಭೂತ ಅಂಶಗಳನ್ನು ಬಳಸಿ ಸಂಯೋಜಿಸಲಾಗಿದೆ ಎಂದು ವಾದಿಸಿದ್ದಾರೆ.
ರೂಪಾ ಮೌದ್ಗಿಲ್, ರೋಹಿಣಿ ಸಿಂಧೂರಿ ನಡುವೆ ಈಗ ‘ಪ್ರಮೋಷನ್’ ಸಂಘರ್ಷ - ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಹೇಳಿದ್ದೇನು?
ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ ವಿವಾದ ಎಲ್ಲರಿಗೂ ಗೊತ್ತಿರುವ ವಿಚಾರ. ಇತ್ತೀಚೆಗೆ ಪುನಃ ನ್ಯಾಯಾಲಯದ ಮೆಟ್ಟಿಲೇರಿದ್ದ ರೂಪಾ ಮೌದ್ಗೀಲ್ ಅವರು ರೋಹಿಣಿಯವರು ತಮ್ಮ ವಿರುದ್ಧ ಹೂಡಿರುವ ಮಾನನಷ್ಟ ದಾವೆಯು ಖಾಸಗಿ ಸ್ವರೂಪದ್ದಾಗಿದ್ದು, ಆ ಕಾರಣದಿಂದಾಗಿ ತಮಗೆ ತಡೆಹಿಡಿದಿರುವ ಸೇವಾ ಜೇಷ್ಠತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕೆಂದು ಕೋರಿದ್ದರು. ಅದರಂತೆ, ಹೈಕೋರ್ಟ್, ರಾಜ್ಯಸರ್ಕಾರಕ್ಕೆ ಈ ಬಗ್ಗೆ ಗಮನಿಸುವಂತೆ ಸೂಚಿಸಿದೆ.
ಉಳ್ಳಾಲ ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಕೇಂದ್ರ: ಅಬ್ದುಲ್ ರಹ್ಮಾನ್ ಮದನಿ
ಉಳ್ಳಾಲ: ಉಳ್ಳಾಲ ದರ್ಗಾ ಉರೂಸ್ ಬಂದರೆ ಭಾರತದ ಜನತೆಗೆ ಸಂತಸವಾಗುತ್ತದೆ. ದೂರದ ಊರಿನಿಂದ ಬಂದ ಭಕ್ತಾದಿಗಳಿಗೆ ಉಳಕೊಳ್ಳಲು ಇಲ್ಲಿ ಸೌಲಭ್ಯ ಇದೆ. ಇಲ್ಲಿ ಶೈಕ್ಷಣಿಕ ಕೇಂದ್ರ ಅಭಿವೃದ್ಧಿ ಆಗಲು ತಾಜುಲ್ಉ ಲಮಾ ಕಾರಣರು ಎಂದು ಉಡುಪಿ ಸಹಾಯಕ ಖಾಝಿ ಮೂಳೂರು ಅಬ್ದುಲ್ ರಹ್ಮಾನ್ ಮದನಿ ಹೇಳಿದರು. ಅವರು ಖುತ್ ಬುಝ್ಝಮಾನ್ ಹಝ್ರತ್ ಅಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ ತಂಙಳ್ ಅವರ ಹೆಸರಿನಲ್ಲಿ ಉಳ್ಳಾಲ ದರ್ಗಾ ವಠಾರದಲ್ಲಿ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಅಧ್ಯಕ್ಷತೆಯಲ್ಲಿ ನಡೆಯುವ 22 ಪಂಚವಾರ್ಷಿಕ ಉರೂಸ್ ಪ್ರಯುಕ್ತ ಶುಕ್ರವಾರ ಧಾರ್ಮಿಕ ಉಪನ್ಯಾಸ ನೀಡಿದರು. ಉಳ್ಳಾಲ ಈಗ ಒಂದು ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಕೇಂದ್ರ ಆಗಿಬಿಟ್ಟಿದೆ.ಇದನ್ನು ಅಭಿವೃದ್ಧಿ ಮಾಡುವ ಜವಾಬ್ದಾರಿ ನಮ್ಮಲ್ಲಿ ಇದೆ ಎಂದರು. ಅಲ್ಲಾಹನು ಭೂಮಿ ಯಲ್ಲಿ ವಿವಿಧ ವಸ್ತುಗಳನ್ನು ಸೃಷ್ಟಿ ಮಾಡಿರುವುದು ಮನುಷ್ಯರಿಗಾಗಿ.ಮನುಷ್ಯನ ಬದುಕಿಗೆ ಅನುಕೂಲವಾದ ವ್ಯವಸ್ಥೆ ಭೂಮಿಯಲ್ಲಿ ಇದೆ ಎಂದು ಅವರು ಹೇಳಿದರು. ಶಾಕಿರ್ ಬಾಖವಿ ಮಂಬಾಡಿ ಧಾರ್ಮಿಕ ಉಪನ್ಯಾಸ ನೀಡಿದರು. ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ ಮಾಜಿ ಖತೀಬ್ ಅಬ್ದುಲ್ ರವೂಫ್ ಮುಸ್ಲಿಯಾರ್ ದುಆ ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದರ್ಗಾ ಅಧ್ಯಕ್ಷ ಹನೀಫ್ ಹಾಜಿ , ಕೋಟೆಪುರ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್, ಖತೀಬ್ ಇರ್ಷಾದ್ ಸಖಾಫಿ, ಉಪಾಧ್ಯಕ್ಷ ಅಬೂಬಕ್ಕರ್, ಕಾರ್ಯದರ್ಶಿ ಅಶ್ರಫ್,ಹಾಜಿ ಫಾರೂಕ್ ಅಬ್ಬಾಸ್ ಉಳ್ಳಾಲ,ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಕಾರ್ಯದರ್ಶಿ ಮುಸ್ತಫಾ, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಸದಸ್ಯ ಝೈನುದ್ದೀನ್ ಮೇಲಂಗಡಿ, ಅರೆಬಿಕ್ ಕಾಲೇಜು ಪ್ರೊಫೆಸರ್ ಇಬ್ರಾಹಿಂ ಅಹ್ಸನಿ, ದರ್ಗಾ ಮಾಜಿ ಉಪಾಧ್ಯಕ್ಷ ಯು.ಕೆ ಮೋನು ಇಸ್ಮಾಯಿಲ್ , ಮೆಹಬೂಬ್ ಸಖಾಫಿ ಕಿನ್ಯ ,ಆಝಾದ್ ಇಸ್ಮಾಯಿಲ್, ರಿಯಾಝ್,ಕೆ.ಇ.ರಝ್ವಿ ,ಖಲೀಲ್ ಮತ್ತಿತರರು ಉಪಸ್ಥಿತರಿದ್ದರು. ದರ್ಗಾ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು. ಎಸ್ ಎಂಎ ರಶೀದ್ ಹಾಜಿ, ದರ್ಗಾ ಮಾಜಿ ಅಧ್ಯಕ್ಷ ಕಣಚೂರು ಮೋನು, ಸಯ್ಯಿದ್ ಅಬ್ದುರ್ರಹ್ಮಾನ್ ಮಸ್ಊದ್ ತಂಙಳ್, ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಸಯ್ಯಿದ್ ಹಾಮಿದ್ ಇಂಬಿಚ್ಚಿ ತಂಙಳ್, ಸಯ್ಯಿದ್ ಅಲಿ ಬಾಫಕಿ ತಂಙಳ್, ಅಶ್ರಫ್ ಸ ಅದಿ ಆದೂರು, ಹುಸೈನ್ ಸ ಅದಿ ಕೆಸಿರೋಡ್, ಮಜೀದ್ ಹಾಜಿ ಉಚ್ಚಿಲ, ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್, ಶರೀಯತ್ ಕಾಲೇಜು ಪ್ರಾಂಶುಪಾಲ ಪ್ರೊ.ಅಹ್ಮದ್ ಕುಟ್ಟಿ ಸಖಾಫಿ, ಶಾಕೀರ್ ಹಾಜಿ, ಎಸ್ ಕೆ ಖಾದರ್ ಹಾಜಿ, ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಜುಲ್ಫಿಕರ್ ಅಲಿ, ಸಿದ್ದೀಕ್ ಮೋಂಟುಗೋಳಿ, ಅಬ್ದುಲ್ ಮಜೀದ್ ಕೊಡ್ಲಿಪೇಟೆ, ದರ್ಗಾ ಮಾಜಿ ಅಧ್ಯಕ್ಷ ಯು.ಎಸ್.ಹಂಝ,ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಕಾರ್ಯದರ್ಶಿ ಮುಸ್ತಫಾ, ಕೋಶಾಧಿಕಾರಿ ನಾಝೀಮ್ ಮುಕಚೇರಿ ಮತ್ತಿತರರು ಉಪಸ್ಥಿತರಿದ್ದರು. ದರ್ಗಾ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು.
ರ್ಯಾಪಿಡೋ, ಊಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ : ಹೈಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಆದೇಶ
ಬೆಂಗಳೂರು: ರ್ಯಾಪಿಡೋ, ಊಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯಾದ್ಯಂತ ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತಾಗಿ ಸಾರಿಗೆ ಇಲಾಖೆಯ ಕಾರ್ಯದರ್ಶಿ, ಆಯುಕ್ತರಿಗೆ ಪತ್ರ ಬರೆದಿರುವ ರಾಮಲಿಂಗಾರೆಡ್ಡಿ, ಹೈಕೋರ್ಟ್ನ ಆದೇಶವನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮುಂದಿನ 6 ವಾರಗಳಲ್ಲಿ ರ್ಯಾಪಿಡೋ ಸೇರಿದಂತೆ ಇತರ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಮಾಡುವಂತೆ ಸೂಚಿಸಿ ಹೈಕೋರ್ಟ್ ಎ.2ರಂದು ರಾಜ್ಯ ಸರಕಾರಕ್ಕೆ ಆದೇಶ ನೀಡಿತ್ತು. ಸರಕಾರಿ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 3ರಡಿ ಮಾರ್ಗಸೂಚಿಗಳನ್ನು ರೂಪಿಸಬೇಕು, ಅಲ್ಲಿಯವರೆಗೆ ಯಾವುದೇ ರ್ಯಾಪಿಡೋ, ಊಬರ್ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿತ್ತು.
ಭಯೋತ್ಪಾದಕರ ದಾಳಿ ಖಂಡಿಸಿ ದ.ಕ.ಜಿಲ್ಲೆಯ ಮಸೀದಿಗಳ ಮುಂದೆ ಪ್ರತಿಭಟನೆ
ಮಂಗಳೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದ ಕರು ನಡೆಸಿದ ದಾಳಿಯನ್ನು ಖಂಡಿಸಿ ದ.ಕ.ಜಿಲ್ಲೆಯ ಬಹುತೇಕ ಮಸೀದಿಗಳ ಮುಂದೆ ಶುಕ್ರವಾರ ಜುಮಾ ನಮಾಝ್ ಬಳಿಕ ಪ್ರತಿಭಟನೆ ನಡೆಯಿತು. ಮಸೀದಿಯ ಖತೀಬರು, ಆಡಳಿತ ಕಮಿಟಿಯ ಪದಾಧಿಕಾರಿಗಳು, ಮದ್ರಸದ ಶಿಕ್ಷಕರು, ವಿದ್ಯಾರ್ಥಿಗಳು, ಜಮಾಅತರು ನಮಾಝ್ ಬಳಿಕ ಪ್ರತಿಭಟನೆ ನಡೆಸಿದರು. ಭಯೋತ್ಪಾದಕರ ಅಟ್ಟಹಾಸವನ್ನು ಖಂಡಿಸಿ ಘೋಷಣೆ ಕೂಗಿದರು. ಭಿತ್ತಿಪತ್ರ ಪ್ರದರ್ಶಿಸಿದರು. ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಕಿಡಿಕಾರಿದರು. ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.
ಬೆಂಗಳೂರು | ಇಂಡೋ-ಫ್ರೆಂಚ್ ಶೈಕ್ಷಣಿಕ, ಸಾಂಸ್ಕೃತಿಕ ಸಂಬಂಧಗಳಿಗೆ ಬಲ : ಮಾರ್ಕ್ ಲಾಮಿ
ಬೆಂಗಳೂರು : ನಗರದ ಲಿಸಾ ಸ್ಕೂಲ್ ಆಫ್ ಡಿಸೈನ್ ವತಿಯಿಂದ ಎ.25 ರಿಂದ 27ರವರೆಗೆ ಮೂರು ದಿನಗಳ `ಓಪನ್ ಡೇಸ್ 2025' ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ಫ್ಯಾಷನ್, ಇಂಟೀರಿಯರ್ ಮತ್ತು ಪ್ರಾಡಕ್ಟ್ ಡಿಸೈನ್, ಗ್ರಾಫಿಕ್ ಡಿಸೈನ್ ಮತ್ತು ಯುಐ/ಯುಎಕ್ಸ್ ವಿಭಾಗಗಳ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕ್ರಿಯಾಶೀಲತೆಗೆ ಅವಕಾಶ ಒದಗಿಸಿ ಕೊಡಲಾಗುತ್ತಿದೆ. ಮೂರು ದಿನಗಳ ಈ ಕಾರ್ಯಕ್ರಮಕ್ಕೆ ಇಂದು ಫ್ರಾನ್ಸ್ ನ ಕೌನ್ಸಲ್ ಜನರಲ್ ಮಾರ್ಕ್ ಲಾಮಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ವಿನ್ಯಾಸದಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳನ್ನು ಹುರಿದುಂಬಿಸುವ ಮತ್ತು ಇಂಡೋ-ಫ್ರೆಂಚ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸುವ ಲಿಸಾ ಸ್ಕೂಲ್ ಅವರ ಬದ್ಧತೆಯನ್ನು ಶ್ಲಾಘಿಸಿದರು. ಲಿಸಾ ಸ್ಕೂಲ್ ನ 'ಓಪನ್ ಡೇಸ್' ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸೃಜನಾತ್ಮಕ ವಿನ್ಯಾಸಗಳು ನಿಜಕ್ಕೂ ಸ್ಪೂರ್ತಿದಾಯಕವಾಗಿತ್ತು. ವಿದ್ಯಾರ್ಥಿಗಳು ಸುಂದರವಾದ ಉತ್ಪನ್ನಗಳನ್ನು ಮಾತ್ರ ರಚಿಸದೆ ಸುಸ್ಥಿರತೆ, ಸಾಮಾಜಿಕ ಬದಲಾವಣೆ ಮತ್ತು ಕ್ರಿಯಾಶೀಲ ವಿಚಾರಗಳೊಂದಿಗೆ ವಿನ್ಯಾಸಗಳನ್ನು ರಚಿಸಿದ್ದಾರೆ. ಈ ಯುವ ವಿನ್ಯಾಸಕರು ಮುಂದಿನ ದಿನಗಳಲ್ಲಿ ಜಾಗತಿಕವಾಗಿ ತಮ್ಮ ಛಾಪು ಮೂಡಿಸುತ್ತಾರೆಂದು ನನಗೆ ವಿಶ್ವಾಸವಿದೆ ಎಂದು ಹೇಳಿದರು. ಕಾರ್ಯಕ್ರಮದ ಕುರಿತು ಲಿಸಾ ಬೆಂಗಳೂರು ನಿರ್ದೇಶಕ ಗಿರೀಶ್ ಕೆಸ್ವಾನಿ ಮಾತನಾಡಿ, ಓಪನ್ ಡೇಸ್' ಕಾರ್ಯಕ್ರಮ ವಿದ್ಯಾರ್ಥಿಗಳ ವಿನ್ಯಾಸ ಪ್ರದರ್ಶನಕ್ಕಿಂತ ಸೃಜನಾತ್ಮಕತೆ, ಸಮಸ್ಯೆ-ಪರಿಹರಿಸುವಿಕೆ, ಕಥೆ ಹೇಳುವಿಕೆ ಮತ್ತು ಸಹಭಾಗಿತ್ವಕ್ಕೆ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಲಿಸಾ ಸ್ಕೂಲ್ ಆಫ್ ಡಿಸೈನ್ ನಿರ್ದೇಶಕಿ ಅವಿ ಕೆಸ್ವಾನಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶನದ ಜೊತೆಗೆ ತಮ್ಮಲ್ಲಿರುವ ಕೌಶಲ್ಯವನ್ನು ವ್ಯಕ್ತಪಡಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ರಚಿಸಿರುವ ವಿಶೇಷ ವಿನ್ಯಾಸಗಳನ್ನು ಪ್ರದರ್ಶನ ಮಾಡಲಾಯಿತು. ಗ್ರಾಫಿಕ್ ಡಿಸೈನ್ ವಿದ್ಯಾರ್ಥಿಗಳು ವಿನ್ಯಾಸ, ಟೈಪೋಗ್ರಫಿ, ಮೋಷನ್ ಗ್ರಾಫಿಕ್ಸ್, ಜಾಹೀರಾತು, ಪ್ಯಾಕೇಜಿಂಗ್ ಮತ್ತು ಯುಐ/ಯುಎಕ್ಸ್ ವಿನ್ಯಾಸವನ್ನು ಒಳಗೊಂಡಿರುವ ಚಿಂತನೆಗಳನ್ನು ಪ್ರದರ್ಶಿಸಿದರು.
ಸಮಸ್ತ ಮದ್ರಸ ಪಾಟ್ನರ್ಸ್ ಮೀಟ್ ಪಂಚ ಮಾಸಿಕ ಅಭಿಯಾನ
ಮಂಗಳೂರು: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಅಂಗೀಕೃತ ಮದ್ರಸಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿನೂತನ ಶೈಲಿಯಲ್ಲಿ ಪಠ್ಯ ಪುಸ್ತಕಗಳು ಪರಿಷ್ಕರಣೆಗೊಂಡ ಹಿನ್ನಲೆಯಲ್ಲಿ ಪೋಷಕರ ಸಭೆಗಳನ್ನು ಕೂಡ ವಿಶಿಷ್ಟ ರೀತಿಯಲ್ಲಿ ಆಯೋಜಿಸಲು ಸಮಸ್ತ ಆದೇಶಿಸಿದೆ. ಅದರಂತೆ ಸಮಸ್ತದ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಚಿಣ್ಣರು ಚಿನ್ನವಾಗಿರಲಿ ಎಂಬ ಶೀರ್ಷಿಕೆಯಡಿ ಎಪ್ರಿಲ್-ಆಗಸ್ಟ್ ಪಂಚ ಮಾಸಿಕ ಅಭಿಯಾನ ನಡೆಯಲಿದೆ. ಪೇರೆಂಟ್ಸ್ ಮೀಟ್ ಬದಲಾಗಿ ಪಾಟ್ನಸ್ ಮೀಟ್ ಎಂಬುದಾಗಿ ಕಾರ್ಯಕ್ರಮದ ಆಯೋಜನೆಯಲ್ಲಿಯೇ ಹೊಸತನವನ್ನು ತರಲಾಗಿದೆ. ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಪ್ರಕ್ರಿಯೆಗಳಲ್ಲಿ ಹಾಗೂ ಮದ್ರಸ ಆಡಳಿತ ನಿರ್ವಹ ಣೆಯ ಕರ್ತವ್ಯಗಳಲ್ಲಿ ಸಮಾನ ಪಾಲುದಾರರಾಗಿರಬೇಕೆಂಬುದು ಈ ಅಭಿಯಾನದ ಉದ್ದೇಶವಾಗಿದೆ. ಮಕ್ಕಳ ಬೆಳವಣಿಗೆ, ಪ್ರತಿಭೆ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪಾಲಕರೊಂದಿಗೆ ದಿಟ್ಟ ಹೆಜ್ಜೆಯಿಡುವ ಗುರಿಯನ್ನಿಟ್ಟುಕೊಳ್ಳಲಾಗಿದೆ. ಮಕ್ಕಳಲ್ಲಿನ ಅಮೂಲ್ಯ ಮೌಲ್ಯಗಳನ್ನು ಬೆಳಗಿಸಲು ಮದ್ರಸ ಮತ್ತು ಮನೆ ಹೇಗೆ ಸಹಭಾಗಿಯಾಗಬೇ ಕೆಂಬುದರ ಬಗ್ಗೆ ಪ್ರಭಾಷಣಗಳು, ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೈಯಕ್ತಿಕ ಪ್ರಗತಿ ಕುರಿತು ಪಾಲಕರು ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಅವಕಾಶ, ಮಕ್ಕಳ ಮುಂದಿನ ಶೈಕ್ಷಣಿಕ ಹಾದಿಯಲ್ಲಿ ಮದ್ರಸ ದೊಂದಿಗೆ ಜೊತೆಯಾಗಿ ಕೆಲಸ ಮಾಡುವ ಸಂಕಲ್ಪ, ಪಾಲಕರು ಶಿಕ್ಷಕರೊಂದಿಗೆ ಪ್ರತ್ಯೇಕವಾಗಿ ಮಾತು ಕತೆ, ತಮ್ಮ ಮಕ್ಕಳ ಬಗ್ಗೆಯಾದ ವಿಚಾರಣೆಗಳು, ಮಕ್ಕಳ ಕಲೆ ಮತ್ತು ಪಠ್ಯೇತರ ಚಟುವಟಿಕೆಗಳ ಪ್ರದರ್ಶನಗಳು, ಆಲ್ಫಾ ಜನರೇಶನ್ ವಿದ್ಯಾರ್ಥಿಗಳನ್ನು ಆಧುನಿಕ ಅಲಂಕಾರಗಳ ಜೊತೆಗೆ ಆಧ್ಯಾತ್ಮಿಕ ಶಿಕ್ಷಣಕ್ಕೂ ಒತ್ತು ನೀಡಿ ಚಿನ್ನದಂತೆ ಬಾಹ್ಯ ಮತ್ತು ಆಂತರಿಕವಾಗಿ ಪ್ರಶೋಭಿತರಾಗಿಸಲು ವಿವಿಧ ರೀತಿಯ ಮೋಟಿವೇಶನ್ಗಳು ಈ ಅಭಿಯಾನದಲ್ಲಿ ನಡೆಯಲಿದೆ. ಸಂತಾನಗಳು ಸೌಂದರ್ಯವಾಗಿದ್ದಾರೆ ಎಂಬ ಪವಿತ್ರ ಕುರ್ಆನಿನ ಆಶಯ ಈ ಕಾರ್ಯಕ್ರಮದ ಸ್ಫೂರ್ತಿ ಯಾಗಿದ್ದು ಮಕ್ಕಳ ನವಜೀವನದ ಅಲೆ, ಅವರ ಕನಸುಗಳಲ್ಲಿ ಇರುವ ಭವಿಷ್ಯದ ಬೆಳಕು, ಬುದ್ಧಿ-ಪ್ರೀತಿ-ಕೌಶಲ-ಸಹಾನುಭೂತಿ ತುಂಬಿದ ಅವರ ಮನಸ್ಸಿನ ಸೌಂದರ್ಯವನ್ನು ಗುರುತಿಸಿ ಬೆಳೆಸಿ ಅವರೊಂದಿಗೆ ಬೆಳೆಯುದನ್ನು ಕಲಿಯುವ ನಿಟ್ಟಿನಲ್ಲಿ ಮದ್ರಸಗಳನ್ನು ಕೇಂದ್ರೀಕರಿಸಿ ಈ ಸಂಭ್ರಮವನ್ನು ಆಯೋಜಿಸ ಲಾಗುತ್ತದೆ ಎಂದು ಸಮಸ್ತ ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಎ.26: ಪೇಜಾವರಶ್ರೀಗಳಿಂದ ಶ್ರೀಕೃಷ್ಣ 108 ಕೃತಿ ಬಿಡುಗಡೆ
ಉಡುಪಿ, ಎ.25: ಶ್ರೀಕೃಷ್ಣನ ಬಾಲಲೀಲೆಗಳಿಂದ ತೊಡಗಿ ನಿರ್ಯಾಣ ದವರೆಗಿನ 108 ವಿವಿಧ ಘಟನಾವಳಿಗಳನ್ನು ನಿರೂಪಿಸುವ ಮೂಲಕ ರಚನೆಗೊಂಡಿರುವ ಲೇಖಕ, ಸಾಹಿತಿ ಎಚ್.ಶಾಂತರಾಜ ಐತಾಳರ ಕೃತಿ ‘ಶ್ರೀ ಕೃಷ್ಣ 108’ ಎ.26ರ ಶನಿವಾರ ಸಂಜೆ 4:00ಕ್ಕೆ ಉಡುಪಿ ಕಿನ್ನಿಮುಲ್ಕಿಯ ಶ್ರೀದೇವಿ ಸಭಾಭವನದಲ್ಲಿ ಬಿಡುಗಡೆಗೊಳ್ಳಲಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ನ ವಿಶ್ವಸ್ಥರೂ, ಪೇಜಾವರ ಮಠಾಧೀಶರೂ ಆಗಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕೃತಿ ಲೋಕಾರ್ಪಣೆಗೊಳಿಸ ಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕೃತಿ ಬಿಡುಗಡೆ ಸಮಾರಂಭದಲ್ಲಿ ಮೈಸೂರಿನ ಉದ್ಯಮಿ ಎಂ. ಕೃಷ್ಣದಾಸ ಪುರಾಣಿಕ, ಪೆರಂಪಳ್ಳಿ ವಾಸುದೇವ ಭಟ್, ಉಡುಪಿ ಉದ್ಯಮಿ ರಮೇಶ ರಾವ್ ಬೀಡು ಹಾಗೂ ವೈದ್ಯ ಡಾ. ಸಪ್ನ ಜೆ ಉಕ್ಕಿನಡ್ಕ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಮಂಗಳೂರಿನ ಕಲ್ಕೂರ ಪ್ರಕಾಶನದಿಂದ ಈ ಕೃತಿಯು ಪ್ರಕಟಗೊಂಡಿದೆ. ಉಡುಪಿಯ ಇಂಪುಗುಂಪು ಬಂಧುಗಳ ಸಹಯೋಗದೊಂದಿಗೆ ಜರಗಲಿರುವ ಕೃತಿ ಅನಾವರಣ ಕಾರ್ಯಕ್ರಮದಲ್ಲಿ ಕೃತಿಕರ್ತ ಎಚ್. ಶಾಂತರಾಜ ಐತಾಳರಿಗೆ ಕಲ್ಕೂರ ಪ್ರತಿಷ್ಠಾನದಿಂದ ‘ಕಲ್ಕೂರ ಸಾಹಿತ್ಯ ಭೂಷಣ’ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.
RCB vs DC: ಆರ್ಸಿಬಿ ಮುಂದಿನ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್; ಹೇಗಿದೆ ರಣತಂತ್ರ?
ಐಪಿಎಲ್ 2025ರ ಆವೃತ್ತಿಯಲ್ಲಿ ತವರಿನಲ್ಲಿ ಸತತ ಮೂರು ಪಂದ್ಯಗಳನ್ನು ಸೋತ ಬಳಿಕ ಗೆಲುವಿನ ಲಯಕ್ಕೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತೆ ತವರಿನಿಂದ ಹೊರಗೆ ಪಂದ್ಯ ಆಡಲು ಸಜ್ಜಾಗಿದೆ. ಈವರೆಗೆ ತವರಿನಿಂದ ಹೊರಗೆ ಆಡಿರುವ ಎಲ್ಲಾ ಐದು ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸಿರುವು ಆರ್ ಸಿಬಿ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ತವರಿನಿಂದ
ಉಡುಪಿ: ಎ.29ಕ್ಕೆ ಅಂತರಜಿಲ್ಲಾ ಚೆಸ್ ಪಂದ್ಯಕೂಟ
ಉಡುಪಿ, ಎ.25: ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘವು, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ನ ಸಹಭಾಗಿತ್ವದಲ್ಲಿ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಅಂತರಜಿಲ್ಲಾ ಚೆಸ್ ಪಂದ್ಯಕೂಟವನ್ನು ಎ.29ರ ಮಂಗಳವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯ ಮಂಜುನಾಥ ಮಣಿಪಾಲ ತಿಳಿಸಿದ್ದಾರೆ. ಉಡುಪಿ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯಕೂಟವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಶಾಸಕ ಯಶಪಾಲ್ ಸುವರ್ಣ, ಜಿಲ್ಲಾ ಚೆಸ್ ಅಸೋಸಿಯೇಷನ್ನ ಗೌರವ ಅಧ್ಯಕ್ಷ ಡಾ.ರಾಜಗೋಪಾಲ ಶೆಣೈ, ಅಧ್ಯಕ್ಷ ಉಮಾನಾಥ ಕಾಪು ಮತ್ತಿರರು ಉಪಸ್ಥಿತ ರಿರುವರು ಎಂದರು. ಪಂದ್ಯಕೂಟ ಬೆಳಗೆಗ 8:30ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಸ್ಪರ್ಧೆಗಳು ಒಟ್ಟು ಆರು ವಿಭಾಗಗಳಲ್ಲಿ- 7ವರ್ಷದೊಳಗೆ, 9ವರ್ಷದೊಳಗೆ, 11 ವರ್ಷದೊಳಗೆ, 13ವರ್ಷದೊಳಗೆ, 16 ವರ್ಷದೊಳಗೆ ಹಾಗೂ ಮುಕ್ತ ವಿಭಾಗ- ನಡೆಯಲಿವೆ. ಪ್ರವೇಶ ಶುಲ್ಕ ವಯೋಮಿತಿ ವಿಭಾಗಗಳಿಗೆ 500ರೂ. ಹಾಗೂ ಮುಕ್ತ ವಲಯಕ್ಕೆ 700ರೂ. ಎಂದರು. ಹೆಸರು ನೊಂದಣಿಗೆ ಎ.27 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಮೊಬೈಲ್ ನಂ.:7019191835, 9448501387ನ್ನು ಸಂಪರ್ಕಿಸಬಹುದು. ಮುಕ್ತ ವಿಭಾಗದಲ್ಲಿ ಪ್ರಥಮ 15 ಸ್ಥಾನ ಪಡೆಯುವವರಿಗೆ ಹಾಗೂ ವಯೋಮಿತಿ ವಿಭಾಗದಲ್ಲಿ ಮೊದಲ 10 ಸ್ಥಾನ ಪಡೆಯುವವರಿಗೆ ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ ಎಂದು ಮಂಜುನಾಥ ಮಣಿಪಾಲ ತಿಳಿಸಿದರು. ಮುಕ್ತ ವಿಭಾಗದಲ್ಲಿ ಪ್ರಥಮ ಬಹುಮಾನ 5,000ರೂ. ದ್ವಿತೀಯ 3,000, ತೃತೀಯ 2,000ರೂ. ಹಾಗೂ 4ರಿಂದ 10ನೇ ಸ್ಥಾನದವರೆಗೆ ತಲಾ 1,000ರೂ. ನಗದು, ಪ್ರಮಾಣ ಪತ್ರ ಮತ್ತು ಟ್ರೋಫಿ ಇರುತ್ತದೆ. ವಯೋಮಿತಿ ವಿಭಾಗದಲ್ಲಿ ಮೊದಲ 7 ಸ್ಥಾನ ಪಡೆಯುವ ಬಾಲಕಿಯರಿಗೆ ಪ್ರಶಸ್ತಿ ಇರುತ್ತದೆ. ಅಲ್ಲದೇ ಇಬ್ಬರು ಹಿರಿಯ ಆಟಗಾರರಿಗೆ, ಉಡುಪಿ ಜಿಲ್ಲೆಯ ಒಬ್ಬ ಅತ್ಯುತ್ತಮ ಆಟಗಾರನಿಗೆ ವಿಶೇಷ ಬಹುಮಾನವಿರುತ್ತದೆ ಎಂದರು. ಈವರೆಗೆ 50ಕ್ಕೂ ಅಧಿಕ ಮಂದಿ ಸ್ಪರ್ಧೆಗೆ ಹೆಸರು ನೊಂದಾಯಿಸಿಕೊಂಡಿದ್ದಾರೆ. ಸುಮಾರು 200ರಿಂದ 250 ಮಂದಿ ಸ್ಪರ್ಧಾಕೂಟದಲ್ಲಿ ಭಾಗವಹಿ ಸುವ ನಿರೀಕ್ಷೆ ಸಂಘಟಕರಿಗಿದೆ ಎಂದು ಮಂಜುನಾಥ ಮಣಿಪಾಲ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಉಮಾನಾಥ ಕಾಪು, ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ರೋಶನ್ ಕರ್ಕಡ ಕಾಪು, ಸ್ಥಾಪಕ ಅಧ್ಯಕ್ಷ ಪ್ರಭಾಕರ ಕೆ., ಉಪಾಧ್ಯಕ್ಷ ವಿನಯಕುಮಾರ್ ಕಲ್ಮಾಡಿ, ಮಧುಸೂಧನ್ ಕನ್ನರ್ಪಾಡಿ, ನವೀನ್ ಉದ್ಯಾವರ, ಶ್ರೀಕೃಷ್ಣ ಕಟಪಾಡಿ ಮುಂತಾದವರು ಉಪಸ್ಥಿತರಿದ್ದರು.
ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಅಮೃತ ಮಹೋತ್ಸವ
ಉಡುಪಿ, ಎ.25: ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ 75ವರ್ಷಗಳನ್ನು ಪೂರೈಸಿ ಅಮೃತ ಮಹೋತ್ಸವ ಸಂಭ್ರಮದಲ್ಲಿದ್ದು, ಈ ಪ್ರಯುಕ್ತ ಅಮೃತ ಮಹೋತ್ಸವ ಸಮಿತಿ ಹಾಗೂ ಕಾರ್ಯಾಲಯದ ಉದ್ಘಾಟನೆ ಎ.27ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ಚಂದಯ್ಯ ಹೆಗ್ಡೆ ಸಭಾಭವನದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಉಡುಪಿ ಪ್ರೆಸ್ಕ್ಲಬ್ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1950ರಲ್ಲಿ ಪ್ರಾರಂಭ ಗೊಂಡ ಹಿರಿಯಡಕ ಬೋರ್ಡ್ ಹೈಸ್ಕೂಲ್ 1975ರಲ್ಲಿ ಪದವಿ ಪೂರ್ವ ಕಾಲೇಜು ಆಗಿ ಪರಿವರ್ತನೆ ಗೊಂಡಿತು. ಪ್ರಸ್ತುತ 2020ರಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಘೋಷಣೆಗೊಂಡು ಪೂರ್ವ ಪ್ರಾಥಮಿಕ ದಿಂದ ಪದವಿ ಪೂರ್ವ ಕಾಲೇಜಿನವರೆಗೆ ಸುಮಾರು 2000 ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡುತ್ತಿದೆ ಎಂದರು. ಇಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಉತ್ತಮ ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ಇದು ಆಕರ್ಷಿಸುತ್ತಿದೆ. 2026ರ ಜನವರಿ ತಿಂಗಳಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆಗೊಂಡು ವರ್ಷವಿಡೀ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಣೆಗೊಳ್ಳಲಿದೆ ಎಂದು ಸುರೇಶ್ ನಾಯಕ್ ಹೇಳಿದರು. ಇದಕ್ಕಾಗಿ ಅಮೃತ ಮಹೋತ್ಸವ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಹಾಗೂ ಕಾರ್ಯಾಲಯವನ್ನು ಎ.27ರಂದು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಲಿದ್ದಾರೆ. ಕೃಷಿ ಅರ್ಥಶಾಸ್ತ್ರಜ್ಞ ಡಾ.ಎನ್.ಎಸ್.ಶೆಟ್ಟಿ, ಸಮಿತಿ ಗೌರವಾಧ್ಯಕ್ಷ ಎ.ಬಾಲಕೃಷ್ಣ ಶೆಟ್ಟಿ ಬೆಂಗಳೂರು, ಪಳ್ಳಿ ನಟರಾಜ ಹೆಗ್ಡೆ ಹಿರಿಯಡ್ಕ, ಪ್ರಾಂಶುಪಾಲ ಮಂಜುನಾಥ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಚ್.ಶ್ರೀನಿವಾಸ ರಾವ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎಲ್.ವಿಶ್ವಾಸ್ ಉಪಸ್ಥಿತರಿರುವರು ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಮೃತಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ನಟರಾಜ್ ಹೆಗ್ಡೆ, ಪ್ರಾಂಶುಪಾಲರಾದ ಮಂಜುನಾಥ ಭಟ್, ಉಪ ಪ್ರಾಂಶುಪಾಲ ಪ್ರಕಾಶ್ ಪ್ರಭು, ಬಿ.ಎಲ್.ವಿಶ್ವಾಸ್, ಪ್ರಧಾನ ಕಾರ್ಯದರ್ಶಿ ನಾಗರಾಜೇಂದ್ರ ಎಂ.ಆರ್., ದೇವರಾಜ ಶಾಸ್ತ್ರಿ ಉಪಸ್ಥಿತರಿದ್ದರು.
ಯೋಗೇಶ್ಗೌಡ ಹತ್ಯೆ ಕೇಸ್: ನ್ಯಾಯಾಲಯದಿಂದ ಆರೋಪಿ ಜಾಮೀನು ರದ್ದು; ಶಾಸಕ ವಿನಯ್ ಕುಲಕರ್ಣಿಗೆ ರಿಲೀಫ್
ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಂದ್ರಶೇಖರ್ ಇಂಡಿ ಅಲಿಯಾಸ್ ಚಂದುಮಾಮನ ಜಾಮೀನನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿದೆ. ಸಾಕ್ಷ್ಯ ನಾಶ ಮತ್ತು ಬೆದರಿಕೆ ಆರೋಪದ ಮೇಲೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಚಂದ್ರಶೇಖರ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ವಿನಯ್ ಕುಲಕರ್ಣಿ ಜಾಮೀನು ವಿಷಯದಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗಲು ಸಿಬಿಐಗೆ ಸೂಚಿಸಲಾಗಿದೆ.
ಬಿಪಿಎಲ್ ಕಾರ್ಡುದಾರರಿಗೆ ಮೇ ತಿಂಗಳಿನಿಂದ ಅಕ್ಕಿ ಜೊತೆ ರಾಗಿ, ಜೋಳ ಲಭ್ಯ - ಯಾವ ಜಿಲ್ಲೆಯವರಿಗೆ ಏನು ಸಿಗುತ್ತೆ ನೋಡಿ!
ಇದೇ ಮೇ ತಿಂಗಳಿನಿಂದ ಬಿಪಿಎಲ್ ಕಾರ್ಡುದಾರಿಗೆ ಅಕ್ಕಿ ಜೊತೆಗೆ ರಾಗಿ ಅಥವಾ ಜೋಳವನ್ನು ನೀಡಲು ನಿರ್ಧರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ, ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಹಾಗೂ ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿ ಸೇರಿ ಒಟ್ಟು 10 ಕೆಜಿ ಅಕ್ಕಿಯನ್ನು ಬಿಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದೆ. ಮೇ 1ರಿಂದ ಅಕ್ಕಿ ಜೊತೆಗೆ 2 ಅಥವಾ ಮೂರು ಕೆಜಿ ಜೋಳ ಅಥವಾ ರಾಗಿಯನ್ನು ನೀಡಲು ನಿರ್ಧರಿಸಲಾಗಿದೆ. ರಾಗಿಯನ್ನು ಹೆಚ್ಚಾಗಿ ಬಳಸುವ ರಾಜ್ಯದ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಅಕ್ಕಿ ಹಾಗೂ ರಾಗಿ ಹಾಗೂ ಜೋಳವನ್ನು ಹೆಚ್ಚಾಗಿ ಬಳಸುವ ಜಿಲ್ಲೆಗಳಲ್ಲಿ ಅಕ್ಕಿ ಮತ್ತು ಜೋಳವನ್ನು ನೀಡಲಾಗುತ್ತದೆ.
ಪಹಲ್ಗಾಮ್ ದಾಳಿಯನ್ನು ಪ್ರತಿಭಟಿಸಿ ದಿಲ್ಲಿ ವ್ಯಾಪಾರಿಗಳಿಂದ ಬಂದ್ ; 900ಕ್ಕೂ ಅಧಿಕ ಮಾರುಕಟ್ಟೆಗಳು ಸ್ಥಗಿತ
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ವಿರೋಧಿಸಿ ವ್ಯಾಪಾರಿಗಳು ಶುಕ್ರವಾರ ‘ದಿಲ್ಲಿ ಬಂದ್’ಗೆ ಕರೆ ನೀಡಿದ್ದು, ಕನಾಟ್ ಪ್ಲೇಸ್, ಸದರ ಬಝಾರ್ ಮತ್ತು ಚಾಂದನಿ ಚೌಕ್ ನಂತಹ ಪ್ರಮುಖ ಶಾಪಿಂಗ್ ಕೇಂದ್ರಗಳು ಸೇರಿದಂತೆ ನಗರದ 900ಕ್ಕೂ ಅಧಿಕ ಮಾರುಕಟ್ಟೆಗಳು ಬಿಕೋ ಎನ್ನುತ್ತಿದ್ದವು. ಜವಳಿ, ಮಸಾಲೆಗಳು, ಪಾತ್ರೆಗಳು ಮತ್ತು ಚಿನ್ನಬೆಳ್ಳಿಯಂತಹ ವಲಯಗಳ ವಿವಿಧ ವ್ಯಾಪಾರಿ ಸಂಘಗಳು ಸಹ ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಿದ್ದವು. ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ)ದ ಪ್ರಕಾರ ದಿಲ್ಲಿಯಲ್ಲಿ ಎಂಟು ಲಕ್ಷಕ್ಕೂ ಅಧಿಕ ಅಂಗಡಿಗಳು ಶುಕ್ರವಾರ ಮುಚ್ಚಿದ್ದು,ಇದರಿಂದ ಅಂದಾಜು 1,500 ಕೋಟಿ ರೂ.ಗಳ ವ್ಯಾಪಾರ ನಷ್ಟಗೊಂಡಿದೆ. ಚೇಂಬರ್ ಆಫ್ ಟ್ರೇಡ್ ಆ್ಯಂಡ್ ಇಂಡಸ್ಟ್ರಿ(ಸಿಟಿಐ)ಯು ದಿಲ್ಲಿ ಬಂದ್ಗೆ ಕರೆ ನೀಡಿತ್ತು. ‘ಇದು ಕೇವಲ ಪ್ರತಿಭಟನೆಯಲ್ಲ,ಇದು ಭಯೋತ್ಪಾದನೆಯ ವಿರುದ್ಧ ಸಾಮೂಹಿಕ ನಿಲುವು ಕೂಡ ಆಗಿದೆ. ಈ ಹೋರಾಟದಲ್ಲಿ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಮತ್ತು ಪಹಲ್ಗಾಮ್ ನಲ್ಲಿ ಜೀವಗಳನ್ನು ಕಳೆದುಕೊಂಡವರ ಸ್ಮರಣಾರ್ಥ ಬಂದ್ ಆಚರಿಸುತ್ತಿದ್ದೇವೆ ’ ಎಂದು ಶುಕ್ರವಾರ ಇಲ್ಲಿ ಹೇಳಿದ ಸಿಟಿಐ ಅಧ್ಯಕ್ಷ ಬ್ರಿಜೇಶ ಗೋಯಲ್, ಪಾಕಿಸ್ತಾನದೊಂದಿಗೆ ಎಲ್ಲ ವ್ಯಾಪಾರ ಸಂಬಂಧಗಳನ್ನು ಕಡಿದುಕೊಳ್ಳುವಂತೆ ಮತ್ತು ಭಾರತದಲ್ಲಿ ಪಾಕಿಸ್ತಾನಿ ಉತ್ಪನ್ನಗಳಿಗೆ ಬಹಿಷ್ಕಾರವನ್ನು ಹೇರುವಂತೆ ಸರಕಾರವನ್ನು ಆಗ್ರಹಿಸಿದರು.
ಉತ್ತರ ಪ್ರದೇಶ | ಮುಸ್ಲಿಂ ಕಾರ್ಮಿಕರನ್ನು ದೇವಾಲಯ ಕಾಮಗಾರಿ ಕೆಲಸ ಮಾಡದಂತೆ ತಡೆ
ಲಕ್ನೋ: ಉತ್ತರಪ್ರದೇಶದ ಹಾಥರಸ್ ನ ದೇವಾಲಯವೊಂದರಲ್ಲಿ ಇಬ್ಬರು ಮುಸ್ಲಿಂ ಕಾರ್ಮಿಕರನ್ನು ಕಟ್ಟಡ ನಿರ್ಮಾಣ ಕೆಲಸ ಮಾಡದಂತೆ ಕೇಸರಿ ಸಂಘಟನೆಯೊಂದರ ಕಾರ್ಯಕರ್ತರು ತಡೆದಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ಘಟನೆಯ ಕಾರಣವನ್ನು ಮುಂದಿಟ್ಟುಕೊಂಡು ಈ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿದ್ದಾರೆಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಹಾಥರಸ್ ನ ಶ್ರೀಬಾಲ್ಕೇಶ್ವರ ಮಹಾದೇವ ದೇವಾಲಯದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸುವಂತೆ ಮುಸ್ಲಿಂ ಕಾರ್ಮಿಕನೊಬ್ಬನಿಗೆ, ವ್ಯಕ್ತಿಯೊಬ್ಬ ಹೇಳುತ್ತಿರುವ ದೃಶ್ಯವಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘‘ ಪಹಲ್ಗಾಮ್ ನಲ್ಲಿರುವ ಭಯೋತ್ಪಾದಕ ದಾಳಿಯಲ್ಲಿ ಹಿಂದೂಗಳನ್ನು ಗುರುತಿಸಿ, ಹತ್ಯೆಗೈಯಲಾಗಿದೆ. ಈ ಕಾರಣಕ್ಕಾಗಿ ನಾವು ನಿಮ್ಮನ್ನು ನಮ್ಮ ದೇವಾಲಯದಲ್ಲಿ ಕೆಲಸದಿಂದ ತೆಗೆದುಹಾಕುತ್ತಿದ್ದೇವೆ...’’ ಎಂಬಿತ್ಯಾದಿ ಮಾತುಗಳನ್ನು ಆ ವ್ಯಕ್ತಿಯು ಆಡುತ್ತಿರುವುದು ವೀಡಿಯೊದಲ್ಲಿ ಕೇಳಿಸಿದೆ. ಆಗ ಕಾರ್ಮಿಕರು ಅದಕ್ಕೆ ಉತ್ತರಿಸುತ್ತಾ ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ ಎಂದು ಹೇಳಿದಾಗ, ಆ ವ್ಯಕ್ತಿಯು ‘‘ ಧರ್ಮ? ಹಾಗಾದರೆ ಭಯೋತ್ಪಾದಕರೆಲ್ಲಾ ಯಾಕೆ ಮುಸ್ಲಿಮರಾಗಿರುತ್ತಾರೆ? ಯಾವುದೇ ಹಿಂದೂವು ಭಯೋತ್ಪಾದನೆಯ ಕೃತ್ಯವನ್ನು ಎಸಗಿದ್ದಾನೆಯೇ’’ ಎಂದು ಪ್ರಶ್ನಿಸುತ್ತಾನೆ. ಈ ಇಬ್ಬರು ಮುಸ್ಲಿಂ ಕಾರ್ಮಿಕರ ವಿರುದ್ಧ ಆಕ್ಷೇಪಕಾರಿ ಮಾತುಗಳನ್ನಾಡಿದ ವ್ಯಕ್ತಿಯನ್ನು ಪ್ರಜಾತಾಂತ್ರಿಕ ಮಾನವೀಯ ಹಕ್ಕುಗಳ ಸಂಸ್ಥೆಯ ಕಾರ್ಯದರ್ಶಿ ಪ್ರವೀಣ್ ವಾರ್ಷ್ಣೆ ಎಂದು ಗುರುತಿಸಲಾಗಿದೆ. ಈ ಇಬ್ಬರು ಕಾರ್ಮಿಕರು ಕೆಲಸ ಮಾಡುವುದನ್ನು ನಿಲ್ಲಿಸಬೇಕೆಂದು ಆತ ಬೆದರಿಕೆ ಹಾಕಿದ್ದಾನೆಂದು ವರದಿಗಳು ತಿಳಿಸಿವೆ.
ಗಡುವು ಮುಗಿದ ಬಳಿಕವೂ ಭಾರತದಲ್ಲಿ ಉಳಿದುಕೊಳ್ಳುವ ಪಾಕ್ ಪ್ರಜೆಗಳ ಗಡಿಪಾರಿಗೆ ರಾಜ್ಯಗಳಿಗೆ ಕೇಂದ್ರ ಆದೇಶ
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ, ದೇಶ ತೊರೆಯಲು ನಿಗದಿಪಡಿಸಿದ ಗಡುವಿನ ಬಳಿಕ ಯಾವುದೇ ಪಾಕಿಸ್ತಾನಿ ಪ್ರಜೆ ಭಾರತದಲ್ಲಿ ಉಳಿದುಕೊಳ್ಳಂತೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದಾರೆ. ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ಭಯೋತ್ಪಾದಕ ದಾಳಿಗೆ ಬಲಿಯಾದ ಘಟನೆಯ ಬೆನ್ನಲ್ಲೇ ಭಾರತವು ಎಪ್ರಿಲ್ 27ರಿಂದ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಪಡಿಸಲಾಗುವುದೆಂದು ಘೋಷಿಸಿತ್ತು. ಸಾಧ್ಯವಿದ್ದಷ್ಟು ಶೀಘ್ರವಾಗಿ ತಾಯ್ನಾಡಿಗೆ ವಾಪಾಸಾಗುವಂತೆ ಪಾಕಿಸ್ತಾನದಲ್ಲಿ ನೆಲೆರುವ ಎಲ್ಲಾ ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿತ್ತು. ಅಮಿತ್ ಶಾ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ವೈಯಕ್ತಿಕವಾಗಿ ಕರೆ ಮಾಡಿದ್ದು, ತಮ್ಮ ಪ್ರದೇಶಗಳಲ್ಲಿ ಉಳಿದುಕೊಂಡಿರುವ ಪಾಕ್ ಪ್ರಜೆಗಳನ್ನು ಗುರುತಿಸುವಂತೆ ಮುಖ್ಯಮಂತ್ರಿಗಳಿಗೆ ಸೂಚಿಸಲಾಗಿದೆ ಹಾಗೂ ಅವರ ಗಡಿಪಾರನ್ನು ಖಾತರಿಪಡಿಸಬೇಕೆಂದು ಮೂಲಗಳು ತಿಳಿಸಿವೆ. ಆದರೆ ಈ ವೀಸಾ ರದ್ದತಿಯ ಆದೇಶವು ಪಾಕಿಸ್ತಾನದ ಹಿಂದೂ ಪೌರರಿಗೆ ನೀಡಲಾದ ದೀರ್ಘಾವಧಿಯ ವೀಸಾಗಳಿಗೆ ಅನ್ವಯವಾಗುವುದಿಲ್ಲ ಮತ್ತು ಅವು ಸಿಂಧುವಾಗಿರುತ್ತವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ಘಟನೆಯಲ್ಲಿ ಗಡಿಯಾಚೆಗಿನ ನಂಟು ಇರುವ ಹಿನ್ನೆಲೆಯಲ್ಲಿ ಭಾರತವು ಪಾಕಿಸ್ತಾನಿ ಪ್ರಜೆಗಳಿಗೆ ತಕ್ಷಣದಿಂದಲೇ ವೀಸಾ ಸೇವೆಗಳನ್ನು ಅಮಾನತುಗೊಳಿಸುವುದಾಗಿ ಗುರುವಾರ ಘೋಷಿಸಿತ್ತು.
ಮಂಗಳೂರು: ಪೋಪ್ ಫ್ರಾನ್ಸಿಸ್ಗೆ ಶ್ರದ್ಧಾಂಜಲಿ ಸಭೆ
ಮಂಗಳೂರು: ಮಂಗಳೂರು ಧರ್ಮಪ್ರಾಂತದ ವತಿಯಿಂದ ಕೆಥೋಲಿಕರ ಪರಮೋಚ್ಛ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆಯು ಶುಕ್ರವಾರ ನಗರದ ಮಿಲಾಗ್ರಿಸ್ ಚರ್ಚ್ ಆವರಣದಲ್ಲಿ ನಡೆಯಿತು. ಮಂಗಳೂರು ಬಿಷಪ್ ಅ.ವಂ.ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಮಾತನಾಡಿ ಪೋಪ್ ಫ್ರಾನ್ಸಿಸ್ ಜಗತ್ತಿಗೆ ಬೆಳಕಾಗಿದ್ದರು. ಮಕ್ಕಳು, ಯುವಕರು, ದೀನರು ಮತ್ತು ವಲಸಿಗರಿಗೆ ತುಂಬಾ ಹತ್ತಿರವಾಗಿದ್ದರು. ನಮಗೆ ಅವರು ಸಹೋದರತ್ವವನ್ನು ಕಲಿಸಿದ್ದರು ಎಂದರು. ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ಪೋಪ್ ಫ್ರಾನ್ಸಿಸ್ ಪ್ರೀತಿ, ಸರಳತೆಯ ಜೀವನದಿಂದಾಗಿ ಜಾಗತಿಕ ಸುಧಾರಣಾವಾದಿಯಾಗಿ ಗುರುತಿಸಿಕೊಂಡಿದ್ದರು. ನಾಡಿಗೆ ಪರಿಸರ ಪ್ರೀತಿ ಮತ್ತು ಸಹಬಾಳ್ವೆಯ ಪಾಠ ಮಾಡಿದ್ದರು. ಸಂಪ್ರದಾಯವಾದಿಯಾಗದೆ ಪವಿತ್ರ ಸಭೆಯಲ್ಲಿ ಬದಲಾವಣೆ, ನವೀನತೆಯೊಂದಿಗೆ ಜನರ ಪೋಪ್ ಎಂದೇ ಕರೆಯಲ್ಪಟ್ಟಿದ್ದರು. ಚರ್ಚ್ ಬಡವರ ಪರ ಇರಬೇಕೆಂದು ಸದಾ ಆಶಿಸಿದ್ದರು ಎಂದರು. ಲೇಖಕಿ ಜ್ಯೋತಿ ಚೇಳಾಯಾರು ಉಪನ್ಯಾಸ ನೀಡಿದರು. ಮಂಗಳೂರು ಧರ್ಮಪ್ರಾಂತದ ವಿಶ್ರಾಂತ ಬಿಷಪ್ ಅ.ವಂ.ಡಾ. ಅಲೋಶಿಯಸ್ ಪಾವ್ಲ್ ಡಿಸೋಜ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ, ಮಾಜಿ ಸಚಿವ ಬಿ. ರಮಾನಾಥ ರೈ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಮಾಜಿ ಶಾಸಕ ಜೆ.ಆರ್. ಲೋಬೊ, ಬಿಜೆಪಿ ಯುವ ಮೋರ್ಚ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು, ಮಂಗಳೂರು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಕಾರಿಗಳಾದ ವಂ.ಜೆ.ಬಿ. ಸಲ್ಡಾನ್ಹಾ, ರಾಯ್ ಕ್ಯಾಸ್ತಲಿನೊ, ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಟ್ಯಾನಿ ಆಳ್ವಾರಿಸ್, ಎಲಿಯಾಸ್ ಫೆರ್ನಾಂಡಿಸ್, ವಂ. ಫಾವುಸ್ತಿನ್ ಲೋಬೊ, ಜೋಯ್ಲಾಸ್ ಪಿಂಟೊ, ವಂ.ಡಾ. ಡೇನಿಯಲ್ ವೇಗಸ್, ವಂ. ಡಾ. ಜೋಸೆಫ್ ಮಾರ್ಟಿಸ್, ಶ್ರೀಕಾಂತ್ ಕಾಸರಗೋಡು ಮತ್ತಿತರರು ಉಪಸ್ಥಿತರಿದ್ದರು.
ರಶ್ಯ: ಕಾರಿನಲ್ಲಿ ಬಾಂಬ್ ಸ್ಫೋಟ; ಸೇನೆಯ ಉನ್ನತ ಕಮಾಂಡರ್ ಮೃತ್ಯು
ಮಾಸ್ಕೋ: ಮಾಸ್ಕೋದಲ್ಲಿ ಶುಕ್ರವಾರ ಕಾರಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಸೇನೆಯ ಹಿರಿಯ ಕಮಾಂಡರ್ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮೃತ ಸೇನಾಧಿಕಾರಿಯನ್ನು 59 ವರ್ಷದ ಯರೊಸ್ಲಾವ್ ಮೊಸ್ಕಾಲಿಕ್ ಎಂದು ಗುರುತಿಸಲಾಗಿದೆ. ಮಾಸ್ಕೋ ಹೊರವಲಯದ ಬಲಾಶಿಖಾ ನಗರದಲ್ಲಿ ಸ್ಫೋಟ ಸಂಭವಿಸಿದೆ. ಮೊಸ್ಕಾಲಿಕ್ ಅವರ ಕಾರಿನ ಗ್ಯಾಸ್ ಸಿಲಿಂಡರ್ ಬಳಿ ಸ್ಫೋಟಕವನ್ನು ಇರಿಸಿದ್ದು ಮೊಸ್ಕಾಲಿಕ್ ಕಾರಿನ ಬಾಗಿಲು ತೆಗೆಯುತ್ತಿದ್ದಂತೆಯೇ ದೂರ ನಿಯಂತ್ರಕ ಸಾಧನದ ಮೂಲಕ ಸ್ಫೋಟ ನಡೆಸಲಾಗಿದೆ. ಸ್ಫೋಟದ ತೀವ್ರತೆಗೆ ಮೊಸ್ಕಾಲಿಕ್ ದೇಹ ಹಲವು ಮೀಟರ್ ಗಳಷ್ಟು ದೂರ ಹಾರಿದ್ದು ಕಾರು ಬೆಂಕಿಯಲ್ಲಿ ಸುಟ್ಟು ಹೋಗಿದೆ. ಸಮೀಪದ ಹಲವು ಕಟ್ಟಡಗಳ ಕಿಟಕಿ ಬಾಗಿಲುಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯರನ್ನು ಉಲ್ಲೇಖಿಸಿ `ದಿ ಸನ್' ವರದಿ ಮಾಡಿದೆ. ಮೊಸ್ಕಾಲಿಕ್ ರಶ್ಯ ಸಶಸ್ತ್ರಪಡೆಗಳ ಮುಖ್ಯ ಕಾರ್ಯಾಚರಣೆಗಳ ನಿರ್ದೇಶನಾಲಯದ ಉಪ ಮುಖ್ಯಸ್ಥರಾಗಿದ್ದರು ಮತ್ತು 2015ರಲ್ಲಿ ಉಕ್ರೇನ್ ಜತೆಗಿನ ಸೇನಾಧಿಕಾರಿಗಳ ಮಟ್ಟದ ಸಭೆಯಲ್ಲಿ ರಶ್ಯ ನಿಯೋಗದ ಸದಸ್ಯರಾಗಿದ್ದರು ಎಂದು ವರದಿ ಹೇಳಿದೆ. BREAKING:: A senior Russian military officer was just killed by a car bomb. Yaroslav Moskalik, deputy chief of operations for Russia’s military General Staff, was killed in the explosion in the town of Balashikha. Maybe they should have thought before invading a sovereign… pic.twitter.com/nDyCkpJ0vr — Brian Krassenstein (@krassenstein) April 25, 2025
ಮಲ್ಪೆ, ಎ.25: ಕೆಲಸದ ಒತ್ತಡದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಮಲ್ಪೆಯ ಚಂದ್ರಕಾಂತ್ ಎಂಬವರ ಮಗ ಸಚಿನ್ ಸಿ.ಕುಂದರ್(30) ಎಂಬವರು ಕೋಡಿಬೇಂಗ್ರೆಯಲ್ಲಿರುವ ಅಜ್ಜಿ ಮನೆಯ ಕೋಣೆಯಲ್ಲಿ ಎ.24ರಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಥೈಲ್ಯಾಂಡ್: ಸಮುದ್ರಕ್ಕೆ ಉರುಳಿದ ಲಘು ವಿಮಾನ; 5 ಮಂದಿ ಮೃತ್ಯು
ಬ್ಯಾಂಕಾಕ್: ಥೈಲ್ಯಾಂಡ್ ನ ಹುವಾ ಹಿನ್ ವಿಮಾನ ನಿಲ್ದಾಣದ ಬಳಿ ಶುಕ್ರವಾರ ಥೈಲ್ಯಾಂಡ್ ಪೊಲೀಸ್ ಇಲಾಖೆಯ ಲಘು ವಿಮಾನವೊಂದು ಸಮುದ್ರಕ್ಕೆ ಉರುಳಿದ್ದು ಕನಿಷ್ಠ 5 ಮಂದಿ ಮೃತಪಟ್ಟಿದ್ದಾರೆ ಮತ್ತು ಒಬ್ಬ ಗಾಯಗೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಪ್ಯಾರಾಚೂಟ್ ತರಬೇತಿಗಾಗಿ ಬಳಸುತ್ತಿದ್ದ ಲಘು ವಿಮಾನ ಫೆಟ್ಚಾಬುರಿ ಪ್ರಾಂತದ ರೆಸಾರ್ಟ್ ನಗರ ಚಾ-ಆಮ್ ಬಳಿ ಶುಕ್ರವಾರ ಬೆಳಿಗ್ಗೆ ಸಮುದ್ರಕ್ಕೆ ಪತನಗೊಂಡಿದ್ದು ವಿಮಾನದಲ್ಲಿದ್ದ ಐದು ಮಂದಿ ಸಾವನ್ನಪ್ಪಿದ್ದು ಓರ್ವ ಗಾಯಗೊಂಡಿರುವುದಾಗಿ ಪ್ರಾಥಮಿಕ ವರದಿ ಹೇಳಿದೆ. ಕಡಲ ತೀರದ ಬಳಿ ಅವಳಿ ಇಂಜಿನ್ನ ಲಘುವಿಮಾನ ಸಮುದ್ರಕ್ಕೆ ಪತನಗೊಳ್ಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ❗️ Five people were killed and one injured when a small airplane crashed off Cha Am Beach in Thailand's Phetchaburi province on Friday morning, shortly before 8:15 a.m. local time. ➡️ The cause of the crash remains unknown. pic.twitter.com/lraYZvasBO — Marketing_medias (@Headlin35006781) April 25, 2025
ಕಾಶ್ಮೀರದಲ್ಲಿ ಮಡಿದವರ ಸಾವಿಗೆ ಪ್ರಧಾನಿ ಮೋದಿ ಉತ್ತರ ಕೊಡಬೇಕು : ಎಂ.ಲಕ್ಷ್ಮಣ್
ಮೈಸೂರು : ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಬಳಿಕ ಕಾಶ್ಮೀರದಲ್ಲಿ 3,982 ಮಂದಿ ಸಾವನ್ನಪ್ಪಿದ್ದು, ಹೀಗೆ ಮಡಿದವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಬಿಜೆಪಿ ಸರಕಾರ ಉತ್ತರ ಕೊಡಬೇಕು ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2014ರಲ್ಲಿ ಮೋದಿ ನೇತೃತ್ವದ ಸರಕಾರ ರಚನೆ ಆದಮೇಲೆ ಕಾಶ್ಮಿರದಲ್ಲಿ 3,982 ಮಂದಿ ಮೃತಪಟ್ಟಿದ್ದಾರೆ. ಕಳೆದ 2019 ರಲ್ಲಿ ಪುಲ್ವಾಮ ದಾಳಿ ವರದಿ ಏನಾಯಿತು. ಆರ್ಡಿಎಕ್ಸ್ ಗಡಿದಾಟಿ ಒಳಗೆ ಹೇಗೆ ಬಂತು. ಇದರ ಉತ್ತರವನ್ನು ಜನರಿಗೆ ತಿಳಿಸಿ. ಪುಲ್ವಾಮ ದಾಳಿಯನ್ನು ಬಳಸಿಕೊಂಡು 2019 ಚುನಾವಣೆ ಗೆದ್ದಿರೋದು. ಈಗ ಕಾಶ್ಮಿರದ ಪಹಲ್ಗಾಮ್ ದಾಳಿಯನ್ನು ಬಳಸಿಕೊಂಡು ಬಿಹಾರ ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. ಭಾರತ ಭದ್ರತಾ ವಿಚಾರದಲ್ಲಿ ಇಡೀ ಜಗ್ಗತಿನ ಮುಂದೆ ತಲೆ ತಗ್ಗಿಸುವಂತಾಗಿದೆ. ಒಂದು ಹಳ್ಳಿಯಲ್ಲಿ ಜಾತ್ರೆ ನಡೆದರೆ, ಅಲ್ಲಿ 4 ಮಂದಿ ಪೊಲೀಸ್ ಇರುತ್ತಾರೆ, ಇಲ್ಲ ಇಬ್ಬರು ಕಾನ್ ಸ್ಟೇಬಲ್ ಇರುತ್ತಾರೆ. ಅಂಥದರಲ್ಲಿ ಕಾಶ್ಮಿರದ ಪಹಲ್ಗಾಮ್ ಗೆ ಸರಿಯಾದ ರಸ್ತೆ ಮಾರ್ಗವಿಲ್ಲ ಆದರೂ ಪ್ರತಿದಿನ ಒಂದರಿಂದ ಎರಡು ಸಾವಿರ ಪ್ರವಾಸಿಗರು ಬಂದು ಹೋಗುತ್ತಾರೆ. ಅಲ್ಲಿ 3.67ಲಕ್ಷ ಮಿಲಿಟರಿ ಹುದ್ದೆಯಲ್ಲಿ 4 ಲಕ್ಷ ಜನ ಸೈನಿಕರು ಕೆಲಸ ಮಾಡುತ್ತಿದ್ದಾರೆ. ಆದರೇ ಅಲ್ಲಿಗೆ ಒಬ್ಬ ಪೊಲೀಸ್ನವರು ಇಲ್ಲ. ಮಿಲಿಟರಿಯವರು ಇಲ್ಲ ಏಕೆ? ಇದಕ್ಕೆ ಕೇಂದ್ರ ಸರಕಾರ ಉತ್ತರ ನೀಡಲೇಬೇಕು ಎಂದು ಒತ್ತಾಯಿಸಿದರು. ಕಾಶ್ಮಿರದ ಪ್ರವಾಸಕ್ಕೆ ತೆರಳಿದ ಕನ್ನಡಿಗರನ್ನು ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಂತೋಷ್ ಲಾಡ್ ವಿಶೇಷ ವಿಮಾನದಲ್ಲಿ ಕರೆತಂದಿರುವುದಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಬಿಜೆಪಿಯವರು ಇದರ ಬಿಟ್ಟಿ ಪ್ರಚಾರ ಪಡೆದುಕೊಳ್ಳುವ ಆಯೋಗ್ಯರಾಗಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹೇಶ್, ಮುಖಂಡರಾದ ಮೋಹನ್ ಇನ್ನಿತರರು ಉಪಸ್ಥಿತರಿದ್ದರು.
RCB ವಿರುದ್ಧ ಸೋಲಿಗೆ ಯಾಕೆ ಈ ನೆಪ?: ರಿಯಾನ್ ಪರಾಗ್ ವಿರುದ್ಧ ಅಮಿತ್ ಮಿಶ್ರಾ ಆಕ್ರೋಶ; ಸೆಹ್ವಾಗ್ ಬೆಂಬಲ!
ಸೋಲು ಯಾವತ್ತೂ ಅನಾಥ ಎಂಬ ಮಾತು ಯಾವತ್ತೂ ನಿಜ. ಸಮರ್ಥ ನಾಯಕನಾದವನು ಯಾವತ್ತೂ ಸೋಲಿನ ಹೊಣೆಯನ್ನು ತಾನು ಹೊತ್ತುಕೊಳ್ಳುತ್ತಾನೆ, ಅದೇ ಅಸಮರ್ಥನಾದವನು ಇನ್ನೊಬ್ಬರ ತಲೆಗೆ ಕಟ್ಟಿ ನುಣುಚಿಕೊಳ್ಳಲು ನೋಡುತ್ತಾನೆ. ಗುರುವಾರ ಆರ್ ಸಿಬಿ ವಿರುದ್ಧ ಪಂದ್ಯ ಸೋತ ಬಳಿಕ ರಿಯಾನ್ ಪರಾಗ್ ಅವರು ಮಾಡಿದ್ದೂ ಅದನ್ನೇ. ಇದಕ್ಕೆ ಮಾಜಿ ಕ್ರಿಕೆಟರ್ ಅಮಿತ್ ಮಿಶ್ರಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಹೀಗೆ ಹೇಳಲು ಹೇಗೆ ಸಾಧ್ಯ ಎಂದು ಪಶ್ನಿಸಿದ್ದಾರೆ. ಇದಕ್ಕೆ ವೀರೇಂದ್ರ ಸೆಹ್ವಾಗ್ ಅವರು ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರ ವಿವಾದ ಭಾರತದೊಂದಿಗೆ ವ್ಯಾಪಕ ಯುದ್ಧಕ್ಕೆ ಕಾರಣವಾಗಬಹುದು: ಪಾಕ್ ಎಚ್ಚರಿಕೆ
ಇಸ್ಲಮಾಬಾದ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದ ವಿವಾದವು ಪಾಕಿಸ್ತಾನ-ಭಾರತ ನಡುವೆ ವ್ಯಾಪಕ ಯುದ್ಧಕ್ಕೆ ಕಾರಣವಾಗಬಹುದು ಎಂದು ಪಾಕಿಸ್ತಾನ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ `ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಎರಡು ದೇಶಗಳ ನಡುವಿನ ಪೂರ್ಣ ಪ್ರಮಾಣದ ಸಂಘರ್ಷದ ಸಂಭಾವ್ಯತೆ ಜಾಗತಿಕ ಸಮುದಾಯದ ಕಳವಳಕ್ಕೆ ಕಾರಣವಾಗಲಿದೆ. ಆದರೆ ವಿವಾದವು ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುವ ನಿರೀಕ್ಷೆಯೂ ಇದೆ' ಎಂದು ಹೇಳಿದ್ದಾರೆ. ಕಾಶ್ಮೀರ ಪ್ರದೇಶದಲ್ಲಿ ಬಿಕ್ಕಟ್ಟನ್ನು ಸೃಷ್ಟಿಸಿ ಪಾಕಿಸ್ತಾನದ ಮೇಲೆ ಗೂಬೆ ಕೂರಿಸಲು ಪಹಲ್ಗಾಮ್ ಭಯೋತ್ಪಾದಕರ ದಾಳಿ ಎಂಬುದನ್ನು ಭಾರತವೇ ಸೃಷ್ಟಿಸಿದೆ ಎಂದು ಆರೋಪಿಸಿದ ಖ್ವಾಜಾ ಆಸಿಫ್, ದಾಳಿಯ ಹೊಣೆ ವಹಿಸಿಕೊಂಡಿದೆ ಎನ್ನಲಾದ `ದಿ ರೆಸಿಸ್ಟೆನ್ಸ್ ಫ್ರಂಟ್(ಲಷ್ಕರೆ ತೈಬಾದ ಅಂಗಸಂಸ್ಥೆ) ಪಾಕಿಸ್ತಾನದಲ್ಲಿ ಅಸ್ತಿತ್ವದಲ್ಲಿಯೇ ಇಲ್ಲ ಎಂದು ಪ್ರತಿಪಾದಿಸಿದರು. ಪ್ರತೀ ಬಾರಿ ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆದಾಗಲೆಲ್ಲಾ ಅವರು ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಆದರೆ ಇದುವರೆಗೂ ಈ ಬಗ್ಗೆ ಯಾವುದೇ ಸಾಕ್ಷ್ಯ ಒದಗಿಸಿಲ್ಲ. ದಾಳಿ ನಡೆಸಿದೆ ಎನ್ನಲಾದ ಗುಂಪಿನ ಬಗ್ಗೆ ಇದುವರೆಗೆ ಯಾರಿಗೂ ಯಾವುದೇ ಮಾಹಿತಿಯಿಲ್ಲ. ಲಷ್ಕರೆ ತೈಬಾ ಎಂಬುದು ಭೂತಕಾಲದ ಹೆಸರು. ಅದು ಈಗ ಅಸ್ತಿತ್ವದಲ್ಲಿಲ್ಲ' ಎಂದು ಖ್ವಾಜಾ ಆಸಿಫ್ ಪ್ರತಿಪಾದಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಲ್ಲ: ಎಸ್ಪಿ ಡಾ.ಕೆ.ಅರುಣ್
ಉಡುಪಿ, ಎ.25: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನೆ ದಾಳಿ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಾಸ್ಸು ಕಳುಹಿಸಲು ನಿರ್ಧರಿಸಿದೆ. ಆ ಹಿನ್ನೆಲೆಯಲ್ಲಿ ಮಾಹಿತಿ ಕಳೆ ಹಾಕಿದಂತೆ ಉಡುಪಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಯಾವುದೇ ನೋಂದಾಯಿತ ಪಾಕಿಸ್ತಾನಿ ಪ್ರಜೆಗಳು ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ: ಭಾರತ, ಪಾಕ್ನಿಂದ ಗರಿಷ್ಠ ಸಂಯಮಕ್ಕೆ ವಿಶ್ವಸಂಸ್ಥೆ ಆಗ್ರಹ
ವಿಶ್ವಸಂಸ್ಥೆ: ಮಾರಣಾಂತಿಕ ಪಹಲ್ಗಾಮ್ ಭಯೋತ್ಪಾದಕ ದಾಳಿ ಘಟನೆಯ ಹಿನ್ನೆಲೆಯಲ್ಲಿ, ಉಪಖಂಡದಲ್ಲಿ ನೆಲೆಸಿರುವ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಹದಗೆಡುವುದನ್ನು ತಪ್ಪಿಸಲು ಭಾರತ ಮತ್ತು ಪಾಕಿಸ್ತಾನಗಳು ಗರಿಷ್ಠ ಸಂಯಮ ವಹಿಸಬೇಕು ಎಂದು ವಿಶ್ವಸಂಸ್ಥೆ ಆಗ್ರಹಿಸಿದೆ. `ಗರಿಷ್ಠ ಸಂಯಮ ವಹಿಸುವಂತೆ ಮತ್ತು ಪರಿಸ್ಥಿತಿ ಹಾಗೂ ನಾವು ಗಮನಿಸಿರುವ ಬೆಳವಣಿಗೆಗಳು ಮತ್ತಷ್ಟು ಹದಗೆಡುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಭಾರತ ಮತ್ತು ಪಾಕಿಸ್ತಾನದ ಸರಕಾರಗಳಿಗೆ ಮನವಿ ಮಾಡುತ್ತೇವೆ ಎಂದು ವಿಶ್ವಸಂಸ್ಥೆಯ ವಕ್ತಾರ ಸ್ಟೀಫನ್ ಡ್ಯುಜರಿಕ್ ಹೇಳಿಕೆ ನೀಡಿದ್ದು ಎಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಖಂಡನೆಯನ್ನು ಪುನರುಚ್ಚರಿಸಿದ್ದಾರೆ. `ಭಾರತ ಮತ್ತು ಪಾಕಿಸ್ತಾನ ನಡುವಿನ ಯಾವುದೇ ಸಮಸ್ಯೆಗಳಿಗೆ ಅರ್ಥಪೂರ್ಣವಾದ ಪರಸ್ಪರ ಮಾತುಕತೆಗಳ ಮೂಲಕ ಶಾಂತಿಯುತವಾಗಿ ಪರಿಹಾರ ಕಂಡುಕೊಳ್ಳಬೇಕು ಎಂಬುದು ನಮ್ಮ ಸ್ಪಷ್ಟ ನಿಲುವಾಗಿದೆ ಎಂದವರು ಹೇಳಿದ್ದಾರೆ. ನದಿ ಸಂಪನ್ಮೂಲಗಳನ್ನು ಹಂಚಿಕೊಳ್ಳುವ ಸಿಂಧೂ ನೀರಿನ ಒಪ್ಪಂದವನ್ನು ಭಾರತ ಅಮಾನತುಗೊಳಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಡ್ಯುಜರಿಕ್ ` ಗರಿಷ್ಠ ಸಂಯಮ ವಹಿಸುವಂತೆ ಹಾಗೂ ಉದ್ವಿಗ್ನತೆಯನ್ನು ಇನ್ನಷ್ಟು ಬಿಗಡಾಯಿಸುವ ಯಾವುದೇ ಕ್ರಮಕ್ಕೆ ಮುಂದಾಗಬೇಡಿ ಎಂಬ ನಮ್ಮ ಮನವಿಯಲ್ಲಿ ಈ ಪ್ರಶ್ನೆಗೆ ಉತ್ತರವಿದೆ' ಎಂದರು. ಭಯೋತ್ಪಾದಕ ದಾಳಿಯ ಬಳಿಕ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಟೆರಸ್ ಭಾರತ ಮತ್ತು ಪಾಕಿಸ್ತಾನ ನಾಯಕರನ್ನು ನೇರವಾಗಿ ಸಂಪರ್ಕಿಸಿಲ್ಲ ಎಂದವರು ಇದೇ ಸಂದರ್ಭ ಪ್ರತಿಕ್ರಿಯಿಸಿದ್ದಾರೆ. ಈ ಮಧ್ಯೆ, ಗಡಿ ನಿಯಂತ್ರಣ ರೇಖೆಯ ಬಳಿ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಗುರುವಾರ ರಾತ್ರಿ ಗುಂಡಿನ ಚಕಮಕಿ ನಡೆದಿರುವುದಾಗಿ ವರದಿಯಾಗಿದೆ.
ಕಲಬುರಗಿ | ಪ್ರಥಮ ಬಿವಿಎ ಪದವಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊoಡಿರುವ ಮೈಸೂರು ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) [ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ. ಪದ್ದತಿ] ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ.ಪದವಿ (UUCMS) ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಮೈಸೂರು ಸಿದ್ಧಾರ್ಥ ನಗರ (ಕಾವಾ) ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ತಿಳಿಸಿದ್ದಾರೆ. ಸದರಿ ಪದವಿಯಲ್ಲಿ 3ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ https;//uucms.karnataka.gov.in ಅಥವಾ https://www.cavamysore.karnataka.gov.in ವೆಬ್ ಸೈಟ್ನಲ್ಲಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುತ್ತದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ಸಹಾಯವಾಣಿಗೆ ಕಚೇರಿ ಸಮಯದಲ್ಲಿ 0821-2438931 ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ | ಎ.30 ರಂದು ಸಾಂಸ್ಕೃತಿಕ ನಾಯಕ ಬಸವ ಜಯಂತಿ ಆಚರಣೆ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಬಸವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಎ.30 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆ ಹತ್ತಿರದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸಿಂಗ್, ಅಫಜಲಪುರ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ವೈ.ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಝ್ ಫಾತೀಮಾ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್ ಹಾಗೂ ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ್ ಲೋಕಸಭಾ ಸದಸ್ಯ ಸಾಗರ್ ಖಂಡ್ರೆ, ಶಾಸಕರುಗಳಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಉಮೇಶ ಜಾಧವ್, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲಾಪುರೆ, ಶಶೀಲ್ ಜಿ.ನಮೋಶಿ, ಡಾ.ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ.ತಳವಾರ ಸಾಬಣ್ಣ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸೈಯದ್ ಮಹಮ್ಮದ್ ಅಲಿ ಅಲ್ ಹುಸೇನಿ, ಮಹಾನಗರಪಾಲಿಕೆ ಮಹಾಪೌರ ಯಲ್ಲಪ್ಪ ನಾಯ್ಕೋಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಅಜಯ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ. ಸುಂದರೇಶ ಬಾಬು ಹಾಗೂ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಎಸ್ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಧಾರವಾಡದ ನಿವೃತ್ತ ಉಪನ್ಯಾಸಕ ಡಾ. ದುರ್ಗಾದಾಸ್ ಅವರು ವಿಶೇಷ ಉಪನ್ಯಾಸ ನೀಡುವರು.
ಪಹಲ್ಗಾಮ್ನಲ್ಲಿ ಭಯೋತ್ಪಾದರ ದಾಳಿಯಾದ ನಂತರ ಪಾಕಿಸ್ತಾನದ ವಿರುದ್ಧ ಹೋರಾಡಲು ಭಾರತ ನೂರೆಂಟು ತಂತ್ರಗಳನ್ನು ರೂಪಿಸಿದೆ. ಇಂದು ಪ್ರಮುಖ ಉಗ್ರರ ಮನೆಯನ್ನು ಸ್ಫೋಟಿಸಿದೆ. ಜೊತೆಗೆ ಕೇಂದ್ರ ಸಚಿವ ಅಮಿತ್ ಶಾ, ಪಾಕ್ ಪ್ರಜೆಗಳನ್ನು ಹುಡುಕಿ ಅವರನ್ನು ಗಡಿಪಾರು ಮಾಡಲು ಸೂಚನೆ ನೀಡಿದ್ದಾರೆ. ಇನ್ನೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಾವರ್ಕರ್ ವಿರುದ್ಧ ವಿವಾದಾತ್ಮಕವಾಗಿ ಮಾತನಾಡಿದ್ದಕ್ಕೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಉತ್ತರ ಪ್ರದೇಶ | ಅಕ್ಕಿ ಗಿರಣಿಯ ಒಣಗಿಸುವ ಯಂತ್ರ ಹೊರ ಸೂಸಿದ ಹೊಗೆ ಸೇವಿಸಿ ಐವರು ಮೃತ್ಯು
ಬಹರಾಯಿಚ್ : ಇಲ್ಲಿನ ಅಕ್ಕಿ ಗಿರಣಿಯೊಂದರ ದೋಷಪೂರಿತ ಒಣಗಿಸುವ ಯಂತ್ರದಿಂದ ಶುಕ್ರವಾರ ಸೂಸಿದ ಹೊಗೆ ಸೇವಿಸಿ ಕನಿಷ್ಠ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಗೆ ಸೇವಿಸಿ ಇತರ ಮೂವರು ಕಾರ್ಮಿಕರು ಪಜ್ಞೆ ಕಳೆದುಕೊಂಡಿದ್ದಾರೆ. ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು. ಒಣಗಿಸುವ ಯಂತ್ರದ ತಾಂತ್ರಿಕ ದೋಷದಿಂದಾಗಿ ಹೊಗೆ ಹೊರ ಸೂಸಲು ಆರಂಭವಾಯಿತು. ಹೊಗೆ ಸೇವನೆಯಿಂದ ಮೂವರಿಗೆ ಉಸಿರಾಟದ ತೊಂದರೆ ಉಂಟಾಯಿತು ಎಂದು ಪ್ರಾಥಮಿಕ ತನಿಖೆ ತಿಳಿಸಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಇಲ್ಲಿನ ರಾಜ್ಗರಿಯಾದಲ್ಲಿರುವ ಅಕ್ಕಿ ಗಿರಣಿಯ ಒಣಗಿಸುವ ಯಂತ್ರದಿಂದ ಹೊಗೆ ಹೊರ ಸೂಸುತ್ತಿರುವುದನ್ನು ಪರಿಶೀಲಿಸಲು ಹಲವು ಕಾರ್ಮಿಕರು ಬೆಳಗ್ಗೆ ತೆರಳಿದ್ದರು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಮಾನಂದ್ ಪ್ರಸಾದ್ ಕುಶ್ವಾಹ ತಿಳಿಸಿದ್ದಾರೆ. ಹೊಗೆ ಎಷ್ಟು ತೀವ್ರವಾಗಿತ್ತೆಂದರೆ, ಅಲ್ಲಿದ್ದ ಎಲ್ಲಾ ಕಾರ್ಮಿಕರು ಪ್ರಜ್ಞೆ ಕಳೆದುಕೊಂಡರು. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿ ಶಾಮಕ ದಳದ ತಂಡ ಸ್ಥಳಕ್ಕೆ ಧಾವಿಸಿತು. ಸಂತ್ರಸ್ತ ಕಾರ್ಮಿಕರನ್ನು ತೆರವುಗೊಳಿಸಿತು. ಅವರನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ದು ದಾಖಲಿಸಿತು. ಆದರೆ, ಅವರಲ್ಲಿ ಐವರು ದಾರಿಯಲ್ಲಿಯೇ ಮೃತಪಟ್ಟರು. ಇತರ ಮೂವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಚಿನ್ನ ಸ್ಮಗ್ಲಿಂಗ್ ಕೇಸ್: ರನ್ಯಾರಾವ್ಗೆ ಒಂದು ವರ್ಷ ಜೈಲು ಫಿಕ್ಸ್
ಕನ್ನಡದ ನಟಿ ರನ್ಯಾ ರಾವ್ ಅವರು ಚಿನ್ನದ ಸ್ಮಗ್ಲಿಂಗ್ ಕೇಸ್ ನಲ್ಲಿ ಸಿಲುಕಿಕೊಂಡಿರುವುದು ಎಲ್ಲರಿಗೂ ತಿಳಿದ ವಿಚಾರ. ಈಗ ಆಕೆಯ ವಿರುದ್ಧ ಕೇಂದ್ರ ವಿದೇಶಿ ವಿನಿಮಯ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯ ಅಸ್ತ್ರವನ್ನು ಕೇಂದ್ರ ಸರ್ಕಾರ ಬಿಟ್ಟಿದೆ. ಅದರಂತೆ ಆಕೆಯ ವಿರುದ್ಧ ಕೇಂದ್ರ ಆರ್ಥಿಕ ಗುಪ್ತಚರ ದಳದ ಆಯುಕ್ತರು ಆದೇಶ ಹೊರಡಿಸಿದ್ದು ಮುಂದಿನ ದಿನಗಳಲ್ಲಿ ಆಕೆಯಿಂದ ಯಾವುದೇ ಕಳ್ಳಸಾಗಣೆಯಾಗದಂತೆ ತಡೆಯಲು ಆಕೆಯನ್ನು ಬಂಧಿಸುತ್ತಿರುವುದಾಗಿ ಹೇಳಲಾಗಿದೆ. ಈ ಕಾಯ್ದೆಯಡಿ ಬಂಧನವಾದರೆ ಕನಿಷ್ಟ ಒಂದು ವರ್ಷ ಜೈಲಿನಲ್ಲೇ ಇರಬೇಕಾಗುತ್ತದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಚರ್ಚೆಗೆ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ಪ್ರಧಾನಿಗೆ ಸಿಬಲ್ ಆಗ್ರಹ
ಹೊಸದಿಲ್ಲಿ: ಭಯೋತ್ಪಾದಕ ಭಯೋತ್ಪಾದಕನೇ ಮತ್ತು ಭಯೋತ್ಪಾದಕರಿಗೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಶುಕ್ರವಾರ ಇಲ್ಲಿ ಹೇಳಿದ ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಿಬಲ್, ‘ಪ್ರಧಾನಿಯವರಿಗೆ ಕೆಲವು ಸಲಹೆಗಳನ್ನು ನೀಡಲು ನಾನು ಬಯಸುತ್ತೇನೆ. ಮೊದಲನೆಯದಾಗಿ ಇಡೀ ದೇಶವು ನಿಮ್ಮೊಂದಿಗೆ ನಿಂತಿದೆ. ನೀವು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದು ಚರ್ಚಿಸಬೇಕು ಮತ್ತು ಪ್ರತಿಯೊಬ್ಬರ ಅಭಿಪ್ರಾಯವನ್ನು ಪಡೆದುಕೊಳ್ಳಬೇಕು. ನಿಮ್ಮೊಂದಿಗೆ ನಿಲ್ಲದ ಒಬ್ಬನೇ ಒಬ್ಬ ಪ್ರತಿಪಕ್ಷ ನಾಯಕನಿಲ್ಲ, ಏಕೆಂದರೆ ಇದು ಭಾರತದ ಸಾರ್ವಭೌಮತೆಯ ಮೇಲಿನ ದಾಳಿಯಾಗಿದೆ. ಅಮಾಯಕ ಪ್ರವಾಸಿಗಳ ಮೇಲೆ ಗುಂಡು ಹಾರಿಸುವುದು ಮಾನವೀಯ ಕೃತ್ಯವಲ್ಲ’, ಎಂದು ಹೇಳಿದರು. ಭಯೋತ್ಪಾದನೆಯ ಮೂಲಕ ತನ್ನ ಸಮಸ್ಯೆಗಳನ್ನು ವಿಶ್ವದ ಮುಂದೆ ತರಲು ಪಾಕಿಸ್ತಾನವು ಬಯಸಿದೆ ಎಂದು ಹೇಳಿದ ಸಿಬಲ್, ಪ್ರತಿಯೊಬ್ಬರೂ ಸರಕಾರದ ಜೊತೆಯಲ್ಲಿದ್ದಾರೆ, ದೇಶವು ಒಗ್ಗಟ್ಟಾಗಿದೆ ಮತ್ತು ಭಾರತವು ಇದನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಅಂತರರಾಷ್ಟ್ರೀಯ ಸಮುದಾಯಕ್ಕೆ ರವಾನಿಸುವ ಸರ್ವಾನುಮತದ ನಿರ್ಣಯವನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕು ಎಂದು ಒತ್ತಿ ಹೇಳಿದರು. ನಿರ್ಣಯ ಅಂಗೀಕಾರದ ಬಳಿಕ ಸರಕಾರವು ಅಮೆರಿಕ, ಯುರೋಪ್, ಚೀನಾ, ರಶ್ಯಾ, ಜಪಾನ್ನಂತಹ ಪ್ರಮುಖ ದೇಶಗಳಿಗೆ ನಿಯೋಗಗಳನ್ನು ಕಳುಹಿಸಬೇಕು ಮತ್ತು ಈ ನಿಯೋಗಗಳಲ್ಲಿ ಸರ್ವಪಕ್ಷಗಳ ಸಂಸದರು ಒಳಗೊಂಡಿರಬೇಕು ಎಂದರು. ‘ನೀವು ಈ ರಾಜತಾಂತ್ರಿಕ ಉಪಕ್ರಮಗಳನ್ನು ತೆಗೆದುಕೊಳ್ಳುವವರೆಗೆ ಅಗತ್ಯವಿರುವ ಅಂತರರಾಷ್ಟ್ರೀಯ ಒತ್ತಡವನ್ನು ಸೃಷ್ಟಿಸಲು ನಿಮಗೆ ಸಾಧ್ಯವಾಗುವುದಿಲ್ಲ. ನಾವು ಆಂತರಿಕವಾಗಿ ಯಾವುದೇ ಕ್ರಮಗಳನ್ನು ತೆಗೆದುಕೊಂಡರೆ ಅದು ಪ್ರತ್ಯೇಕ ವಿಷಯ, ಆದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಒತ್ತಡವನ್ನು ಹೇರಬೇಕು ’ಎಂದರು. ಅಮೆರಿಕ ಇತರ ದೇಶಗಳೊಂದಿಗೆ ಮಾಡುತ್ತಿರುವುದನ್ನು ನೀವೂ ಮಾಡಿ. ನೀವು ಪಾಕಿಸ್ತಾನದೊಂದಿಗೆ ವ್ಯಾಪಾರ ಮಾಡಿದರೆ ಭಾರತೀಯ ಮಾರುಕಟ್ಟೆಗೆ ನಿಮಗೆ ಪ್ರವೇಶವಿಲ್ಲ ಎಂದು ಭಾರತವು ಎಲ್ಲ ಪ್ರಮುಖ ದೇಶಗಳಿಗೆ ತಿಳಿಸಬೇಕು. ಇದರಿಂದ ನಮಗೆ ಸ್ಪಲ್ಪ ನಷ್ಟವಾಗಬಹುದು,ಆದರೆ ಅದು ಸ್ವೀಕಾರಾರ್ಹ. ಪ್ರತಿಯೊಂದು ರಾಜತಾಂತ್ರಿಕ ಉಪಕ್ರಮದಲ್ಲಿ ಈ ಅಂಶವನ್ನು ಸ್ಪಷ್ಟಪಡಿಸಬೇಕು ಎಂದ ಸಿಬಲ್,ವಿಶ್ವಸಂಸ್ಥೆಯ ಮೂಲಕವೂ ಒತ್ತಡವನ್ನು ಹೇರಬೇಕು ಮತ್ತು ನಿರ್ಣಯವೊಂದನ್ನು ಭದ್ರತಾ ಮಂಡಳಿಗೆ ಸಲ್ಲಿಸಬೇಕು. ಚೀನಾ ಅದನ್ನು ಬೆಂಬಲಿಸುವುದೇ ಅಥವಾ ವಿರೋಧಿಸುವುದೇ, ಅದು ಭಾರತದೊಂದಿಗೆ ನಿಲ್ಲುತ್ತದೆಯೇ ಅಥವಾ ಇಲ್ಲವೇ ಎನ್ನುವುದನ್ನು ನೋಡೋಣ ಎಂದು ಹೇಳಿದರು.
ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ: ದ.ಕ. ಜಿಲ್ಲಾ ಕಾಂಗ್ರೆಸ್ನಿಂದ ಮೊಂಬತ್ತಿ ಪ್ರದರ್ಶಿಸಿ ಶ್ರದ್ಧಾಂಜಲಿ ಸಭೆ
ಮಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದ ಕರು ನಡೆಸಿದ ದಾಳಿಯನ್ನು ಖಂಡಿಸಿ ಮತ್ತು ಹುತಾತ್ಮರ ಗೌರವಾರ್ಥ ದ.ಕ.ಜಿಲ್ಲಾ ಕಾಂಗ್ರೆಸ್ ಮತ್ತು ಅಲ್ಪಸಂಖ್ಯಾತರ ಘಟಕದ ವತಿಯಿಂದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಶುಕ್ರವಾರ ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಈ ಸಂದರ್ಭ ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಹರೀಶ್ ಕುಮಾರ್, ಜೆ. ಆರ್.ಲೋಬೋ, ಮಾಜಿ ಮೇಯರ್ಗಳಾದ ಕೆ. ಅಶ್ರಫ್, ಕೆ. ಶಶಿಧರ ಹೆಗ್ಡೆ, ಪಕ್ಷದ ಮುಖಂಡರಾದ ಕೆ.ಕೆ.ಶಾಹುಲ್ ಹಮೀದ್, ಪದ್ಮರಾಜ್, ಶಾಲೆಟ್ ಪಿಂಟೋ, ಯು.ಟಿ.ಫರ್ಝಾನಾ, ರವೂಫ್ ಬಜಾಲ್, ಅಬ್ಬಾಸ್ ಅಲಿ ಬೋಳಂತೂರು, ಟಿ.ಕೆ.ಸುಧೀರ್, ಅಪ್ಪಿ ಮತ್ತಿತರರು ಉಪಸ್ಥಿತರಿದ್ದರು.
ಮುಂಗಾರು ಪೂರ್ವ ವ್ಯವಸಾಯಕ್ಕೆ ತುಮಕೂರು ರೈತ ಸಮುದಾಯ ಸಿದ್ಧತೆ - 810 ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆ
ತುಮಕೂರು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಈ ಜಿಲ್ಲ್ಲೆಯಲ್ಲಿ ಮುಂಗಾರು ಪೂರ್ವ ಹೆಸರು, ಉದ್ದು, ಎಳ್ಳು ಮತ್ತು ಅಲಸಂದೆ ಬಿತ್ತನೆ ಆಗಲಿದೆ. ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ ಮತ್ತು ಕುಣಿಗಲ್ ತಾಲೂಕುಗಳಲ್ಲಿ ಈ ಕುರಿತಾದ ಬೆಳೆಗಳನ್ನು ಬೆಳೆಯಲು ನಿರ್ಧರಿಸಲಾಗಿದೆ. ಒಟ್ಟು 35,321.10 ಮೆ.ಟನ್ ರಸಗೊಬ್ಬರ ಲಭ್ಯವಿದ್ದು, ಕೃಷಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಲಾಗಿದೆ.
ಮಂಗಳೂರು: ಪಹಾಲ್ಗಾಮ್ ದಾಳಿ ಖಂಡಿಸಿ ಡಿವೈಎಫ್ಐ ಪ್ರತಿಭಟನೆ
ಮಂಗಳೂರು, ಎ.25: ಜಮ್ಮು ಕಾಶ್ಮೀರದ ಪಹಾಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಮೊನ್ನೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಭದ್ರತಾ ವೈಫಲ್ಯ ವನ್ನು ವಿರೋಧಿಸಿ ಹಾಗೂ ನರೇಂದ್ರ ಮೋದಿ ಮತ್ತು ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧದ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು. ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿದರು. ಸಂಘಟನೆಯ ಜಿಲ್ಲಾ ಮುಖಂಡರಾದ ರಿಜ್ವಾನ್ ಹರೇಕಳ, ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ತಯ್ಯೂಬ್ ಬೆಂಗರೆ, ಪ್ರಮೀಳಾ ಶಕ್ತಿನಗರ, ಮಾಧುರಿ ಬೋಳಾರ, ಶ್ರೀನಾಥ್ ಕಾಟಿಪಳ್ಳ, ನಿತಿನ್ ಕುತ್ತಾರ್, ಸುನೀಲ್ ತೇವುಲ, ಯೋಗೀಶ್ ಜಪ್ಪಿನಮೊಗರು, ಯೋಗಿತಾ ಮತ್ತಿತರರು ಪಾಲ್ಗೊಂಡಿದ್ದರು.
ಉಡುಪಿ: ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಹಾಗೂ ಈ ದುರ್ಘಟನೆಯಲ್ಲಿ ಬಲಿಯಾದವರಿಗೆ ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಶುಕ್ರವಾರ ಮೇಣದ ಬತ್ತಿ ಹೊತ್ತಿಸಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಇದೊಂದು ಹೇಯ ಕೃತ್ಯ. ಇಡೀ ದೇಶವೇ ನೋವಿನಲ್ಲಿ ಮುಳುಗಿದೆ. ಭಯೋತ್ಪಾದಕರಿಗೆ ಜಾತಿ, ಧರ್ಮ ಎಂಬುದು ಇಲ್ಲ. ಈ ಕೃತ್ಯ ವನ್ನು ಇಡೀ ದೇಶದ ಎಲ್ಲ ವರ್ಗದ ಜನರು ಒಕ್ಕೋರಲಿನಿಂದ ಖಂಡಿಸಿದ್ದಾರೆ. ಭಯೋತ್ಪಾದನೆ ಧಮನ ಮಾಡಲು ಕೇಂದ್ರ ಸರಕಾರ ಎಲ್ಲ ರೀತಿಯ ಸಹಕಾರ ವನ್ನು ಕಾಂಗ್ರೆಸ್ ನೀಡುತ್ತಿದೆ. ಇದಕ್ಕೆ ಸರಿಯಾದ ಪ್ರತ್ಯುತ್ತರವನ್ನು ಸರಕಾರ ನೀಡ ಬೇಕು ಎಂದು ತಿಳಿಸಿದರು. ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ದ್ವೇಷದ ಆಡಳಿತದಿಂದ ಯಾವುದೇ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಇಲ್ಲ. ಪ್ರೀತಿಯ ಆಡಳಿತದಿಂದ ಮಾತ್ರ ಈ ದೇಶ ಪ್ರಗತಿ ಕಾಣಲು ಸಾಧ್ಯ. ಈ ದುರ್ಘಟನೆ ಯಿಂದ ಭಾರತೀಯರೇ ಈ ದೇಶದಲ್ಲಿ ಭಯದಲ್ಲಿ ಬದುಕುವ ವಾತಾವಣ ನಿರ್ಮಾಣ ವಾಗಿದೆ. ಕಾಶ್ಮೀರದಿಂದ ಆರ್ಟಿಕಲ್ 370 ರದ್ದು ಮಾಡಿದರೂ ಇನ್ನೂ ಶಾಂತಿ ನೆಲೆಸಿಲ್ಲ. ಭಯೋತ್ಪಾದನೆ ವಿಚಾರದಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಮಮತಾ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಜ್ಜನ್ ಶೆಟ್ಟಿ, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ನಾಗೇಶ್ ಕುಮಾರ್ ಉದ್ಯಾವರ, ಜ್ಯೋತಿ ಹೆಬ್ಬಾರ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸರ್ಫುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.
'ನನಗೆ ಸಹಕರಿಸು, ರಾಣಿ ಥರ ನೋಡ್ಕೋತಿನಿ' - ಜೀನಿ ಕಂಪನಿ ಮಾಲೀಕನ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲು
ಶಿರಾ ತಾಲೂಕಿನ ಯರಗುಂಟೆ ಗ್ರಾಮದ ಜೀನಿ ಕಂಪನಿ ಮಾಲೀಕ ದಿಲೀಪ್ ಕುಮಾರ್, ತಮ್ಮ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದಿಲೀಪ್ ಕುಮಾರ್ ಜಾತಿ ನಿಂದನೆ ಮಾಡಿದ್ದಾರೆಂದು ಸಹ ಆರೋಪಿಸಲಾಗಿದೆ. ಪ್ರಕರಣ ದಾಖಲಾದ ನಂತರ ದಿಲೀಪ್ ಕುಮಾರ್ ವಿಡಿಯೋ ಮಾಡಿ, ಆರೋಪ ನಿರಾಕರಿಸಿ ನಾಪತ್ತೆಯಾಗಿದ್ದಾರೆ.
ಎ.30ಕ್ಕೆ ಸಂಸತ್ ಭವನದಲ್ಲಿ ಬಸವ ಜಯಂತಿ : ಸಚಿವ ವಿ.ಸೋಮಣ್ಣ
ಬೆಂಗಳೂರು : ಬಸವ ಜಯಂತಿ ಆಚರಣೆ ಇಂದಿನ ದಿನಗಳಲ್ಲಿ ಬಹಳ ಪ್ರಸ್ತುತವಾಗಿದ್ದು, ಯುವ ಪೀಳಿಗೆಗೆ ಬಸವಣ್ಣ ಅವರ ತತ್ವವನ್ನು ಪಾಲಿಸಬೇಕಾಗಿರುವುದು ಅನಿವಾರ್ಯವಾಗಿದೆ. ಆದುದರಿಂದ ಎ.30ರ ಬೆಳಗ್ಗೆ 8 ಗಂಟೆಗೆ ಸಂಸತ್ ಭವನದಲ್ಲಿ ಬಸವಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜನಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಶುಕ್ರವಾರ ನಗರದ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಭಾರಿಗೆ ಸಂಸತ್ ಭವನದಲ್ಲಿ ಬಸವಣ್ಣರ ಜಯಂತಿ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂಪ್ರಕಾಶ್ ಬಿರ್ಲಾ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಬಸವಣ್ಣ ಎಲ್ಲ ಸಮುದಾಯದ ನಾಯಕರಾಗಿದ್ದು, ಅವರು ಜಗತ್ತಿಗೆ ಸೇರಿದ ವ್ಯಕ್ತಿಯಾಗಿದ್ದು, ಆದರೆ ಪ್ರಸ್ತುತ ಅವರನ್ನು ಒಂದು ಜಾತಿ ಹಾಗೂ ಧರ್ಮಕ್ಕೆ ಸೀಮಿತ ಮಾಡಲಾಗುತ್ತಿದ್ದು, ಅದನ್ನು ಭೇದಿಸಬೇಕಾಗಿದೆ. ದೇಶದ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಸವಣ್ಣನವರಿಗೆ ಕೊಟ್ಟಷ್ಟು ಗೌರವವನ್ನು ಯಾರೂ ಕೊಟ್ಟಿಲ್ಲ ಎಂದು ಹೇಳಿದರು. ನೂತನ ಸಂಸತ್ ಭವನದ ಮೇಲೆ ಬಸವಣ್ಣನವರ ವಚನವನ್ನು ಬರೆದಿದ್ದು ನರೇಂದ್ರ ಮೋದಿರವರ ಸಾಧನೆಯಾಗಿದೆ. ಜತೆಗೆ ಬಸವಣ್ಣನವರ ಇವ ನಾರವ ಇವ ನಮ್ಮವ ಎನ್ನುವ ವಚನಕ್ಕೂ ನರೇಂದ್ರ ಮೋದಿರವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ತತ್ವವೂ ಬೇರೆಯಲ್ಲ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಶ್ರೀಧರ್ ಮತ್ತಿತರರು ಹಾಜರಿದ್ದರು.
Consequences of terrorism in Pakistan : ಪಾಕಿಸ್ತಾನವು ಹಲವು ದಶಕಗಳ ಕಾಲ ಭಯೋತ್ಪಾದನೆಯನ್ನು ಅಮೆರಿಕಾ ಮತ್ತು ಬ್ರಿಟನ್ ದೇಶಕ್ಕೆ ಮಾಡುತ್ತಿತ್ತು. ಉಗ್ರ ಕೃತ್ಯದಿಂದಾಗಿ ನಮ್ಮ ದೇಶ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದೇವೆ. ಇದನ್ನು ನಾವು ಒಪ್ಪಿಕೊಳ್ಳುತ್ತೇವೆ, ಭಾರತ ನಮ್ಮ ವಿರುದ್ದ ಸಮರವನ್ನು ಸಾರಿದರೆ ಅದಕ್ಕೆ ನಾವು ಸಿದ್ದರಾಗಿದ್ದೇವೆ ಎಂದು ಪಾಕ್ ರಕ್ಷಣಾ ಸಚಿವರು ಹೇಳಿದ್ದಾರೆ.
ಪೋಪ್ ಶಾಂತಿ-ಪ್ರೀತಿ, ಭರವಸೆಯ ದಾರಿದೀಪ: ಬಿಷಪ್ ಜೆರಾಲ್ಡ್
ಉಡುಪಿ, ಎ.25: ಪೋಪ್ ಫ್ರಾನ್ಸಿಸ್ ದ್ವೇಷ, ಯುದ್ಧ, ವಿಭಜನೆಯಿಂದ ಮೋಡ ಕವಿದಿರುವ ಜಗತ್ತಿನಲ್ಲಿ ಶಾಂತಿ-ಪ್ರೀತಿಯ, ಭರವಸೆಯ ದಾರಿದೀಪ ವಾಗುವುದರೊಂದಿಗೆ. ಕರುಣೆ, ದಯೆಯೇ ಧರ್ಮಸಭೆಯ ಅತ್ಯಂತ ಶ್ರೇಷ್ಟ ಬಡಿತ ಎಂದು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಎಂದು ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ. ಇತ್ತೀಚೆಗೆ ಅಗಲಿದ ಕಥೊಲಿಕ ಕ್ರೈಸ್ತ ಸಮುದಾಯದ ಪರಮಪವಿತ್ರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಸ್ಮರಣಾರ್ಥವಾಗಿ ಉಡುಪಿ ಕಥೊಲಿಕ ಧರ್ಮ ಪ್ರಾಂತ್ಯದ ನೇತೃತ್ವದಲ್ಲಿ ಅಖಿಲ ಕರ್ನಾಟಕ ಮಾನವ ಹಕ್ಕುಗಳ ಕೈಸ್ತ ಐಕ್ಯತಾ ಒಕ್ಕೂಟ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸ ಲಾದ ಸರ್ವ ಧರ್ಮ ಶೃದ್ಧಾಂಜಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಪೋಪ್ ಫ್ರಾನ್ಸಿಸ್ ಅವರು ನಮ್ರತೆ, ಸಹಾನುಭೂತಿ ಮತ್ತು ಸುವಾರ್ತೆಗೆ ಅಚಲವಾದ ಬದ್ಧತೆಯೊಂದಿಗೆ ಮುನ್ನಡೆಸಿದರು. ಸತ್ಯ ಮತ್ತು ಧರ್ಮದ ಮಾರ್ಗಗಳನ್ನು ಅನುಸರಿಸಿ, ನಿಷ್ಟೆ, ಧೈರ್ಯ ಹಾಗೂ ಸಾರ್ವ ತ್ರಿಕ ಪ್ರೀತಿಯಿಂದ, ವಿಶೇಷವಾಗಿ ಬಡವರು, ನಿರ್ಗತಿಕರು, ಗಡಿ ಅಂಚಿನಲಿಲ್ಲಿ ನೆರವಿನ ಅಗತ್ಯ ವಿರುವ ಜನರಿಗಾಗಿ ಬದುಕಿದರು ಮತ್ತು ನಮಗೂ ಅದೇ ರೀತಿ ಮುಂದುವರಿ ಯುವಂತೆ ಸ್ಪೂರ್ತಿ ನೀಡಿದರು. ಅವರ ಅಧಿಕಾರವು ಶಾಂತಿ, ನ್ಯಾಯ, ಬಡವರ ಬಗ್ಗೆ ಕಾಳಜಿ ಮತ್ತು ಸೃಷ್ಟಿಯ ಮೇಲಿನ ಪ್ರೀತಿ, ದಣಿವರಿಯದ ಅನ್ವೇಷಣೆಯಿಂದ ಗುರುತಿಸಲ್ಪಟ್ಟಿತ್ತು ಎಂದರು. ಪ್ರೀತಿ, ಶಾಂತಿ, ಸೌಹಾರ್ದತೆಯ ಮೂಲಕ ಧಾರ್ಮಿಕ ಸಾಮಾರಸ್ಯ ಮತ್ತು ಜಾಗತಿಕ ಶಾಂತಿಗೆ ಹೆಚ್ಚು ಒತ್ತು ನೀಡಿದ್ದಲ್ಲದೆ ವಿಶ್ವದ ಎಲ್ಲಾ ಮಾನವೀಯ ಬಂಧುತ್ವದ ಸಂಕಲ್ಪವನ್ನು ಪುನರುಜ್ಜೀವಿತಗೊಳಿಸಿ, ಅನ್ಯಾಯ, ಆರ್ಥಿಕ ಅಸಮತೋಲನವನ್ನು ಖಂಡಿಸಿದರು. ಜಗತ್ತು ಒಂದು ಕುಟುಂಬ, ನಾವೆಲ್ಲರೂ ಸಹೋದರ ಸಹೋದರಿಯರು ಎಂಬುದನ್ನು ಮತ್ತೊಮ್ಮೆ ಜಗತ್ತಿಗೆ ಸಾರಿದರು. ಪೋಪ್ ಫ್ರಾನ್ಸಿಸ್ ಅವರ ಬಾಳು ನಮಗೆಲ್ಲರಿಗೂ ವಿಶ್ವಾಸ, ನ್ಯಾಯ ಹಾಗೂ ಶಾಂತಿಯಲ್ಲಿ ಬಾಳಲು ದಾರಿದೀಪವಾಗಿದೆ ಎಂದು ಅವರು ಹೇಳಿದರು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಪೋಪ್ ಫ್ರಾನ್ಸಿಸ್ ವಿಶ್ವದ ಧರ್ಮದ ಗೋಡೆ ಗಳನ್ನು ಮೀರಿ ಸರ್ವ ಧರ್ಮದ ಪ್ರತೀಕವಾದರು. ದ್ವೇಶ ಅಶಾಂತಿಗೆ ಶಾಂತಿಯ ದೂತರಾಗಿ ಸ್ಪಂದಿಸಿ ದರು. ಬಡವರ ಹೃದಯದಲ್ಲಿ ದೇವರಿದ್ದಾರೆ ಎನ್ನುವುದನ್ನು ತನ್ನ ಕೃತ್ಯದಲ್ಲಿ ತೋರ್ಪಡಿಸುವುದರ ಮೂಲಕ ಜಗತ್ತಿಗೆ ಮಾದರಿಯಾದರು. ಅವರ ಮಾನವೀಯತೆ ಹಾಗೂ ಪ್ರೀತಿಯ ವ್ಯಕ್ತಿತ್ವ ಸಮಾಜದಲ್ಲಿ ಶಾಶ್ವತವಾಗಿ ಉಳಿಯಲಿದೆ ಎಂದರು. ಕಾರ್ಯಕ್ರಮದಲ್ಲಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ.ಸ್ಟೀವನ್ ಡಿಸೋಜ, ವಂ.ಡಾ.ರೋಶನ್ ಡಿಸೋಜ, ವಂ.ವಿಶಾಲ್ ಲೋಬೊ, ವಂ.ಅನಿಲ್ ಡಿಸೋಜ, ವಂ.ರಾಜೇಶ್ ಪಸಾನ್ನಾ, ವಂ.ರೋಮೀಯೋ ಲೂವಿಸ್, ವಂ.ಜೋರ್ಜ್ ಡಿಸೋಜ, ವಂ.ವಿಜಯ್ ಡಿಸೋಜ, ವಂ.ಅಶ್ವಿನ್ ಆರಾನ್ಹಾ, ವಂ.ಅಲ್ಫೋನ್ಸಸ್ ಡಿಲೀಮಾ, ವಿವಿಧ ಕ್ರೈಸ್ತ ಸಭೆಗಳಾದ ಸಿರೀಯನ್, ಸಿಎಸ್ಐ ಮತ್ತು ಬಾಸೆಲ್ ಮಿಶನ್ ಧರ್ಮಗುರುಗಳು, ಸಭಾ ಪಾಲಕರು ಉಪಸ್ಥಿತರಿದ್ದರು. ಉಡುಪಿ ವಲಯ ಪ್ರಧಾನ ಧರ್ಮಗುರು ಹಾಗೂ ಶೋಕಮಾತಾ ಚರ್ಚಿನ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್ ಸ್ವಾಗತಿಸಿದರು. ಸಹಾಯಕ ಧರ್ಮಗುರು ವಂ.ಲಿಯೋ ಪ್ರವೀಣ್ ಡಿಸೋಜ ವಂದಿಸಿದರು. ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ.ಡೆನಿಸ್ ಡೆಸಾ ಕಾರ್ಯಕ್ರಮ ನಿರೂಪಿಸಿದರು.