Karnataka Weather : ರಾಜ್ಯದಲ್ಲಿಂದು ಬಿಸಿಲು, ಮಳೆ, ಗಾಳಿ ಒಟ್ಟೊಟ್ಟಿಗೆ ದಾಳಿ
Rain News : ಒಳನಾಡಿನಲ್ಲಿ ಮಳೆ ಜತೆಗೆ ತಾಪಮಾನ ಏರಿಕೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. The post Karnataka Weather : ರಾಜ್ಯದಲ್ಲಿಂದು ಬಿಸಿಲು, ಮಳೆ, ಗಾಳಿ ಒಟ್ಟೊಟ್ಟಿಗೆ ದಾಳಿ first appeared on Vistara News .
Traffic Rule: ಇನ್ಮೇಲೆ ಇಂತಹ ವಾಹನ ಸವಾರರ್ ಮನೆಗೆ ಭೇಟಿ ಕೊಡಲಿದ್ದಾರೆ ಪೊಲೀಸರು! ಹೊಸ ರೂಲ್ಸ್ ಜಾರಿಗೆ
ಇನ್ನು ಮುಂದೆ ನೀವು ಬೇಕಾಬಿಟ್ಟಿಯಾಗಿ ವಾಹನ ಚಲಾವಣೆ ಮಾಡುವಂತಿಲ್ಲ. ನೀವು ನಿಯಮ (Traffic Rule) ಮೀರಿದ್ದರೂ ದಂಡ ಸಂಗ್ರಹ ಮಾಡಲು ಸಂಚಾರಿ ಪೊಲೀಸರು ದಂಡ ಕಟ್ಟದಿದ್ದವರ ಮನೆಗೇ ಎಂಟ್ರಿ ನೀಡಲಿದ್ದಾರೆ. The post Traffic Rule: ಇನ್ಮೇಲೆ ಇಂತಹ ವಾಹನ ಸವಾರರ್ ಮನೆಗೆ ಭೇಟಿ ಕೊಡಲಿದ್ದಾರೆ ಪೊಲೀಸರು! ಹೊಸ ರೂಲ್ಸ್ ಜಾರಿಗೆ appeared first on Karnataka Times .
Jeep Cars: ಜೀಪ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್ ! BMW ರೀತಿಯ ಫೀಚರ್ ಕಡಿಮೆ ಬೆಲೆಗೆ
ಜೀಪ್ (Jeep) ಹಲವಾರು ಡಿಸ್ಕೌಂಟ್ ಗಳನ್ನು ನಿಮ್ಮ ಮುಂದೆ ನೀಡುತ್ತಿದೆ. ಜೊತೆಗೆ ಮೇಂಟೆನೆನ್ಸ್ ಆಫರ್ಸ್ ಹಾಗೂ ಅಡಿಷನಲ್ ವಾರಂಟಿ ಕೂಡ ನಿಮ್ಮದಾಗಲಿದೆ. ಎಲ್ಲಾ ಆಫರ್ ಗಳ ಮೂಲಕ ಜೀಪ್ ತನ್ನ ಗ್ರಾಹಕರ ಬೇಸ್ ಅನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. The post Jeep Cars: ಜೀಪ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್ ! BMW ರೀತಿಯ ಫೀಚರ್ ಕಡಿಮೆ ಬೆಲೆಗೆ appeared first on Karnataka Times .
(ಬೆಂಗಳೂರು) ಆಜಾನ್ ವೇಳೆಯಲ್ಲಿ ಭಕ್ತಿಗೀತೆ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ
ಆಜಾನ್ (ಮುಸ್ಲಿಮರ ಪ್ರಾರ್ಥನೆ) ಸಮಯದಲ್ಲಿ ಭಕ್ತಿ ಗೀತೆಯನ್ನು ಜೋರಾಗಿ ಹಾಕಿದ್ದಕ್ಕೆ ರೊಚ್ಚಿಗೆದ್ದ ಯುವಕರ ಗುಂಪೊಂದು ಅಂಗಡಿಯೊಂದಕ್ಕೆ ನುಗ್ಗಿ ಭಕ್ತಿ ಗೀತೆ ಹಾಕಿದ್ದ ವ್ಯಕ್ತಿಯನ್ನು ಮನಸೋ ಇಚ್ಛೆ ಥಳಿಸಿದ ಘಟನೆ ಬೆಂಗಳೂರಿನ ಹಲಸೂರು ಗೇಟ್ನ ಸಿದ್ದಣ್ಣ ಗಲ್ಲಿಯಲ್ಲಿ ಮಾ. 18ರಂದು ನಡೆದಿದೆ. ಟೆಲಿಕಾಂ ಅಂಗಡಿಯ ಮಾಲೀಕ ಮುಕೇಶ್ ಹಲ್ಲೆಗೊಳಗಾದವರು. ಆರೋಪಿಗಳಾದ ಶಹನವಾಜ್, ಸುಲೇಮಾನ್, ರೋಹಿತ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಪಾರ್ಕಿಂಗ್ ಕಿರಿಕ್: ಟೆಕ್ಕಿ ದಂಪತಿಗೆ ಥಳಿತ
ಬೆಂಗಳೂರಿನಲ್ಲಿ ಪಾರ್ಕಿಂಗ್ ಸಮಸ್ಯೆ ಇದ್ದು, ಇದು ಹಲವಾರು ಜನರ ನಡುವೆ ಜಗಳ, ಹೊಡೆದಾಟಕ್ಕೆ ಕಾರಣವಾಗಿದೆ. ನಗರದ ದೊಡ್ಮನೆಕುಂದಿಯಲ್ಲಿ ಭಾನುವಾರ ರಾತ್ರಿ ಟೆಕ್ಕಿ ದಂಪತಿಯು ನೆರೆಮನೆಯ ಮುಂದೆ ಕಾರು ನಿಲ್ಲಿಸಿದ್ದು ಇದೇ ಕಾರಣಕ್ಕೆ ಜಗಳ ತೆಗೆದ ನೆರೆಮನೆಯವರು ಟೆಕ್ಕಿ ದಂಪತಿಯನ್ನು ಹೊಡೆದಿರುವ ಘಟನೆ ನಡೆದಿದೆ. ಎಚ್ ಎಎಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಮೂವರನ್ನು ಬಂಧಿಸಿದ್ದಾರೆ.
ಗೂಗಲ್ ಟೆಕ್ಕಿಯನ್ನು ಅರ್ಧ ದಾರಿಯಲ್ಲೇ ಇಳಿಸಿದ ಬೆಂಗಳೂರು ಊಬರ್ ಚಾಲಕ!
ಮೊಬೈಲ್ ಲೌಡ್ ಸ್ಪೀಕರ್ ನಲ್ಲಿ ಮಾತನಾಡಬೇಡಿ, ಇಯರ್ ಫೋನ್ ಹಾಕಿ ಮಾತನಾಡಿ ಎಂದಿದ್ದಕ್ಕೆ ರೊಚ್ಚಿಗೆದ್ದ ಉಬರ್ ಕಾರು ಚಾಲಕನೊಬ್ಬ ತನ್ನ ಕ್ಯಾಬ್ ನಲ್ಲಿ ಪ್ರಯಾಣಿಸುತ್ತಿದ್ದ ಗೂಗಲ್ ಕಂಪನಿಯ ಟೆಕ್ಕಿ ಹಾಗೂ ಅವರ ಸ್ನೇಹಿತನನ್ನು ಕ್ಯಾಬ್ ನಿಂದ ಕೆಳಗೆ ಇಳಿಸಿದ ಘಟನೆ ಬೆಂಗಳೂರಿನಲ್ಲಿ ಮಾ. 18ರಂದು ನಡೆದಿದೆ. ಗೂಗಲ್ ಟೆಕ್ಕಿ ಹಾಗೂ ಅವರ ಸ್ನೇಹಿತ ಗೂಗಲ್ ಕಂಪನಿಗೆ ಹೋಗಲು ಕ್ಯಾಬ್ ಒಂದನ್ನು ಬುಕ್ ಮಾಡಿದ್ದರು. ಕ್ಯಾಬ್ ನಲ್ಲಿ ಪ್ರಯಾಣಿಸುವಾಗ ಈ ಘಟನೆ ನಡೆದಿದೆ.
Assault Case: ಬೆಂಗಳೂರಲ್ಲಿ ಪಾರ್ಕಿಂಗ್ ವಿಚಾರಕ್ಕೆ ಟೆಕ್ಕಿ ದಂಪತಿ ಮೇಲೆ ಹಲ್ಲೆ
ಬೆಂಗಳೂರು ಹೊರವಲಯದ ದೊಡ್ಡನೆಕ್ಕುಂದಿ ಬಳಿ ಘಟನೆ ನಡೆದಿದೆ. ಖಾಲಿ ಜಾಗದಲ್ಲಿ ಕಾರು ಪಾರ್ಕಿಂಗ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪಕ್ಕದ ಮನೆ ಮನೆಯ ಮೂವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. The post Assault Case: ಬೆಂಗಳೂರಲ್ಲಿ ಪಾರ್ಕಿಂಗ್ ವಿಚಾರಕ್ಕೆ ಟೆಕ್ಕಿ ದಂಪತಿ ಮೇಲೆ ಹಲ್ಲೆ first appeared on Vistara News .
IPL 2024 - ಸ್ಟಾರ್ ವೇಗದ ಬೌಲರ್ ಸೇವೆ ಕಳೆದುಕೊಂಡ ಮುಂಬೈ ಇಂಡಿಯನ್ಸ್!
Luke Wood set to Join Mumbai Indians: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರವೇ ಬಾಕಿಯಿರುವ ಸಂದರ್ಭದಲ್ಲಿ ಐದು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತನ್ನ ಪ್ರಮುಖ ವೇಗದ ಬೌಲರ್ ಸೇವೆಯನ್ನು ಕಳೆದುಕೊಂಡಿದೆ. ಆಸ್ಟ್ರೇಲಿಯಾದ ಅನುಭವಿ ಎಡಗೈ ವೇಗದ ಬೌಲರ್ ಜೇಸನ್ ಬೆಹ್ರೆನ್ಡಾರ್ಫ್ ಗಾಯದ ಸಮಸ್ಯೆ ಕಾರಣ ಐಪಿಎಲ್ 2024 ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಇದರ ಬೆನ್ನಲ್ಲೇ ಮುಂಬೈ ಫ್ರಾಂಚೈಸಿ ಬದಲಿ ಆಟಗಾರನ ಘೋಷಣೆ ಮಾಡಿದೆ.
ಹಠ ಮುಂದುವರಿಸಿದ ಈಶ್ವರಪ್ಪ; ಬಿಜೆಪಿಯ ಸರಣಿ ಸಂಧಾನಗಳು ವಿಫಲ
ಪ್ರಧಾನಿ ನರೇಂದ್ರ ಮೋದಿಯವರು ಮಾ. 18ರಂದು ಶಿವಮೊಗ್ಗಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು. ಈ ಹಿನ್ನೆಲೆಯಲ್ಲಿ, ಬಿಜೆಪಿಯ ಅಸಮಾಧಾನಗೊಂಡ ನಾಯಕ ಈಶ್ವರಪ್ಪನವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಯಾರೂ ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಈಶ್ವರಪ್ಪನವರ ಪುತ್ರ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಈಶ್ವರಪ್ಪ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿರುವುದು ಕಾರ್ಯಕ್ರಮ ಬಹಿಷ್ಕಾರಕ್ಕೆ ಕಾರಣವಾಗಿತ್ತು. ಕಾರ್ಯಕ್ರಮಕ್ಕೆ ಹೋಗುವ ಮನಸ್ಸಿದ್ದರೂ ಅಲ್ಲಿ ಬಿಎಸ್ ಯಡಿಯೂರಪ್ಪನವರ ಪುತ್ರರಾದ ಶಿವಮೊಗ್ಗ ಸಂಸದ ಬಿ.ವೈ. ಸಂಸದ ಬಿ.ವೈ. ರಾಘವೇಂದ್ರ ಅವರು ಬರುತ್ತಾರೆಂಬ ಕಾರಣಕ್ಕೆ ತಾವು ಹೋಗಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.
ಬೆಂಗಳೂರು: ʼಹ್ಯಾಪಿಯೆಸ್ಟ್ ಹರ್: ಮಹಿಳೆಯರ ಯೋಗಕ್ಷೇಮ ಸಮಾವೇಶʼ
ಬೆಂಗಳೂರು: ಆರೋಗ್ಯ ಮತ್ತು ಕ್ಷೇಮ ಕುರಿತ ಜ್ಞಾನ ನೀಡುವ ಪ್ಲಾಟ್ ಫಾರ್ಮ್ ಆಗಿರುವ ಹ್ಯಾಪಿಯೆಸ್ಟ್ ಹೆಲ್ತ್ “ಹ್ಯಾಪಿಯೆಸ್ಟ್ ಹರ್: ಮಹಿಳೆಯರ ಯೋಗಕ್ಷೇಮ ಸಮಾವೇಶ” ಎಂಬ ಕಾರ್ಯಕ್ರಮವನ್ನು ನಗರದಲ್ಲಿ ಆಯೋಜಿಸಿತ್ತು. ದಿನಪೂರ್ತಿ ನಡೆದ ಈ ಕಾರ್ಯಕ್ರಮದಲ್ಲಿ ಮಹಿಳೆಯರ ಜೀವನದ ಅಂಶಗಳ ಕುರಿತು ಚರ್ಚೆಗಳು ನಡೆದುವು. ಪ್ರಖ್ಯಾತ ವಾಗ್ಮಿಗಳು ಆರೋಗ್ಯ, ಜೀವನಶೈಲಿ ಮತ್ತಿತರ ವಿಚಾರಗಳ ಕುರಿತು ಒಳನೋಟಗಳನ್ನು ನೀಡಿದರು. ಹ್ಯಾಪಿಯೆಸ್ಟ್ ಹೆಲ್ತ್ ಅಧ್ಯಕ್ಷ ಮತ್ತು ಸಿಇಒ ಅನಿಂದ್ಯಾ ಚೌಧರಿ, ಮಹಿಳೆಯರು ವೃತ್ತಿಪರ ಮತ್ತು ವೈಯಕ್ತಿಕ ರಂಗಗಳಲ್ಲಿ ಅನೇಕ ಪಾತ್ರಗಳನ್ನು ನಿಭಾಯಿಸುವಾಗ ತಮ್ಮ ಆರೋಗ್ಯವನ್ನು ನಿರ್ಲಕ್ಷಿಸುತ್ತಾರೆ. ಮಹಿಳೆಯರ ಜೀವನದ ಕುರಿತು ಹೆಚ್ಚಿನ ಸಂವಾದಗಳನ್ನು ನಡೆಸಲು ಮತ್ತು ಅವರು ಸ್ವಯಂ-ಆರೈಕೆಯಲ್ಲಿ ಹೇಗೆ ಸಮಯವನ್ನು ಕಳೆಯಬಹುದು ಎಂಬುದರ ಕುರಿತು ಜಾಗೃತಿ ಮೂಡಿಸುವುದರಲ್ಲಿ ನಾವು ನಂಬಿಕೆ ಹೊಂದಿದ್ದೇವೆ ಎಂದು ಹೇಳಿದರು. ಬೆಂಗಳೂರಿನ ಕ್ಲೌಡ್ನೈನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗತಜ್ಞೆ ಡಾ.ಅರುಣಾ ಮುರಳೀಧರ್, ದೇಬ್ಜಾನಿ ಮುಖರ್ಜಿ, ಡಾ ಸಾಕ್ಷಿ ಅರೋರಾ, ಡಾ. ಮಾಧುರಿ ವಿದ್ಯಾಶಂಕರ್. ಪಿ, ಸುನೀಲಾ ಬೆಂಜಮಿನ್, ಬೆಂಗಳೂರಿನ ಸೈಟ್ಕೇರ್ ಹಾಸ್ಪಿಟಲ್ಸ್ನಲ್ಲಿ ಹಿರಿಯ ಸಲಹೆಗಾರ್ತಿ ಮತ್ತು ಬ್ರೆಸ್ಟ್ ಆಂಕೊಲಾಜಿ ನಿರ್ದೇಶಕಿ ಡಾ ಪೂವಮ್ಮ ಸಿ ಯು, ಮಣಿಪಾಲ್ ಹಾಸ್ಪಿಟಲ್ಸ್ ನ ಕನ್ಸಲ್ಟೆಂಟ್-ಇಂಟರ್ವೆನ್ಷನಲ್ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಂಜನ್ ಶೆಟ್ಟಿ, ಡಾ.ಸುನೀತಾ ಮಹೇಶ್ ವಿವಿಧ ಗೋಷ್ಠಿಯಲ್ಲಿ ಭಾಗವಹಿಸಿದ್ದರು.
ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಮಂಗಳವಾರ ದಿಲ್ಲಿಯಲ್ಲಿ ಸಭೆ
ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಅವರೊಂದಿಗೆ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕೆಲವು ಸಚಿವರು ತೆರಳುವ ಸಾಧ್ಯತೆಯಿದೆ. ಕಾಂಗ್ರೆಸ್ ಹೈಕಮಾಂಡ್ ಈಗಾಗಲೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ತುಮಕೂರು, ಹಾಸನ, ಹಾವೇರಿ ಹಾಗೂ ಬಿಜಾಪುರ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟ ಮಾಡಿದೆ. ನಾಳೆ(ಮಂಗಳವಾರ) ನಡೆಯಲಿರುವ ಸಭೆಯಲ್ಲಿ ಬಹುತೇಕ ಉಳಿದ 21 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. ಅಲ್ಲದೇ, ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದರು ಹಾಗೂ ಮಾಜಿ ಸಚಿವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರದ ಬಗ್ಗೆಯೂ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಬಹುದು ಎನ್ನಲಾಗಿದೆ.
ಚಿಕ್ಕಮಗಳೂರು: ಹಾಸ್ಟೆಲ್ ವಿದ್ಯಾರ್ಥಿನಿಯರಲ್ಲಿ ದಿಢೀರ್ ಕಾಣಿಸಿಕೊಂಡ ಅನಾರೋಗ್ಯ
ಚಿಕ್ಕಮಗಳೂರು: ನಗರದ ಪರಿಶಿಷ್ಟ ಸಮುದಾಯದ ಬಾಲಕಿಯರ ಹಾಸ್ಟೆಲ್ನ 10 ವಿದ್ಯಾರ್ಥಿನಿಯರಲ್ಲಿ ಸೋಮವಾರ ಸಂಜೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡಿದ್ದು, ವಿದ್ಯಾರ್ಥಿನಿಯರನ್ನು ನಗರದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ನಗರದ ಜಯನಗರ ಬಡಾವಣೆಯಲ್ಲಿರುವ ಪರಿಶಿಷ್ಟ ಪಂಗಡದ ಬಾಲಕಿಯರ ಹಾಸ್ಟೆಲ್ನಲ್ಲಿ ಸುಮಾರು 70 ವಿದ್ಯಾರ್ಥಿನಿಯರಿದ್ದು, ಈ ವಿದ್ಯಾರ್ಥಿನಿಯರ ಪೈಕಿ 10 ವಿದ್ಯಾರ್ಥಿಯರಲ್ಲಿ ಸೋಮವಾರ ಸಂಜೆ 8ರ ಸಮಯದಲ್ಲಿ ದಿಢೀರ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ವಿದ್ಯಾರ್ಥಿನಿಯರ ಪೈಕಿ ಕೆಲವರು ಹೊಟ್ಟೆನೋವು, ಆಯಾಸದಿಂದ ಅಸ್ವಸ್ಥರಾಗಿದ್ದರೆ, ಇನ್ನು ಕೆಲವರು ಹೆದರಿಕೆ, ಗಾಬರಿಯಿಂದ ಅಸ್ವಸ್ಥರಾಗಿದ್ದರು ಎಂದು ತಿಳಿದು ಬಂದಿದೆ. ಇದನ್ನು ಕಂಡು ಹಾಸ್ಟೆಲ್ ಸಿಬ್ಬಂದಿ ಮೇಲಾಧಿಕಾರಿಗಳಿಗೆ ಸುದ್ದಿ ತಿಳಿಸಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು, ಅಸ್ವಸ್ಥರಾಗಿದ್ದ ವಿದ್ಯಾರ್ಥಿನಿಯರನ್ನು ನಗರದ ಜಿಲ್ಲಾಸ್ಪತ್ರೆ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರು ಹಾಸ್ಟೆಲ್ನಲ್ಲಿ ಮಧ್ಯಾಹ್ನ ಆಹಾರ ಸೇವಿಸಿದ್ದು, ಆಹಾರ ಸೇವಿಸಿದ ವಿದ್ಯಾರ್ಥಿನಿಯರು ವಿಷಾಹಾರ ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ. ಈ ಹಾಸ್ಟಲ್ನಲ್ಲಿ 5-7ನೇತರಗತಿ ವ್ಯಾಸಂಗ ಮಾಡುತ್ತಿರುವ ಸುಮಾರು 70 ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಈ ಪೈಕಿ 10 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, 10 ವಿದ್ಯಾರ್ಥಿನಿಯರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರು ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದು ಬಂದಿದೆ. ಹಾಸ್ಟಲ್ 10 ಮಕ್ಕಳಿಗೆ ರಾತ್ರಿ 7:30 ರ ಹೊತ್ತಿನಲ್ಲಿ ದಿಢೀರ್ ಅನಾರೋಗ್ಯ ಕಾಣಿಸಿಕೊಂಡಿದೆ. ಅನಾರೋಗ್ಯಕ್ಕೆ ಆಹಾರ ಕಾರಣವಲ್ಲ. ಮಕ್ಕಳಿಗೆ ಈ ಸಮಯಲ್ಲಿ ಇನ್ನೂ ಊಟ ನೀಡಿರಲಿಲ್ಲ. ವಿಷಾಹಾರ ಸೇವನೆ ಆಗಿದ್ದರೆ ಎಲ್ಲ ಮಕ್ಕಳೂ ಅನಾರೋಗ್ಯಕ್ಕೆ ತುತ್ತಾಗಬೇಕಿತ್ತು. ಕೆಲ ಮಕ್ಕಳು ಹೇಳಿದ ಪ್ರಕಾರ, ವಿದ್ಯಾರ್ಥಿನಿಯರು ಹಾಸ್ಟೆಲ್ನಲ್ಲಿ ಏನನ್ನೋ ನೋಡಿ ಗಾಬರಿಗೊಂಡಿದ್ದಾರೆ. ಹೆದರಿಕೊಂಡಿದ್ದ ಮಕ್ಕಳು ನಂತರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. 10 ವಿದ್ಯಾರ್ಥಿನಿಯರಿಗೂ ಚಿಕಿತ್ಸೆ ಕೊಡಿಸಲಾಗಿದೆ. ಮಕ್ಕಳು ಚೇತರಿಸಿಕೊಂಡಿದ್ದಾರೆ. ಯಾವುದೇ ಆತಂಕ ಇಲ್ಲ. ಘಟನೆ ಸಂಬಂಧ ಮಂಗಳವಾರ ಸಮಗ್ರ ಮಾಹಿತಿ ಕಲೆ ಹಾಕಲಾಗುವುದು. - ರೇವಣ್ಣ, ತಾಲೂಕು ಸಮಾಜ ಕಲ್ಯಾಣಾಧಿಕಾರಿ
ವಿಸ್ತಾರ ಸಂಪಾದಕೀಯ: ಬೆಂಗಳೂರು ರೌಡಿಗಳ ಸಾಮ್ರಾಜ್ಯ ಆಗದಿರಲಿ
ರೌಡಿಗಳ ಸಂಖ್ಯೆ ಎಷ್ಟು ಬೆಳೆದಿದೆ ಎಂದರೆ, ಚುನಾವಣೆಗೆ ಮುಂಚಿತವಾಗಿ ರೌಡಿ ಶೀಟರ್ಗಳನ್ನು ಠಾಣೆಗೆ ಕರೆತಂದು ಪರೇಡ್ ಮಾಡಿಸುವಾಗ ಕಾಣುವ ರೌಡಿಗಳ ಸಂಖ್ಯೆಯನ್ನು ಗಮನಿಸಿದರೆ ಗಾಬರಿಯಾಗುತ್ತದೆ. ಬೆಂಗಳೂರಿನ ಭೂಗತ ಜಗತ್ತು ಮತ್ತೆ ತುಂಬಿ ತುಳುಕುತ್ತಿದೆಯೇ ಎನ್ನುವ ಅನುಮಾನ ಮೂಡುತ್ತಿದೆ. The post ವಿಸ್ತಾರ ಸಂಪಾದಕೀಯ: ಬೆಂಗಳೂರು ರೌಡಿಗಳ ಸಾಮ್ರಾಜ್ಯ ಆಗದಿರಲಿ first appeared on Vistara News .
ಮಂಗಳೂರು: ಗಾಂಜಾ ಮಾರಾಟ ಪ್ರಕರಣ; 4 ಮಂದಿ ಆರೋಪಿಗಳ ಬಂಧನ
ಮಂಗಳೂರು, ಮಾ.18: ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್ಸ್ ಟೀಮ್ ಒಂದು ವಾರದ ಅವಧಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ನಾಲ್ವರನ್ನು ಬಂಧಿಸಿದ್ದಾರೆ. ತಿರುವೈಲು ಗ್ರಾಮದ ವಾಮಂಜೂರು ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪಿಗಳಾದ ಕನಕೂರುಪದವಿನ ಅಶ್ರಫ್ ಯಾನೆ ಪೊಂಗ ಅಶ್ರಫ್(30) ಮತ್ತು ತಿಲಕನಗರದ ಅಲ್ಪಾಝ್ (26) ಎಂಬವರನ್ನು ಪೊಲೀಸರು ಬಂಧಿಸಿ 115 ಗ್ರಾಂ ಗಾಂಜಾ ಮತ್ತು ಒಂದು ಮೊಬೈಲ್ ಪೋನ್ನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ 10, 300 ರೂ. ಆಗಿರುತ್ತದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಆಶ್ರಫ್ ವಿರುದ್ಧ ಈ ಹಿಂದೆ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತನ ವಿರುದ್ಧ ವಾರೆಂಟ್ ಇದ್ದು, ಆರು ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಮಾ.17ರಂದು ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾಣ ಬೋಳ ಲವಕುಶ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಕಾಟಿಪಳ್ಳದ ಉಮ್ಮರ್ ಫಾರೂಕ್ ಯಾನೆ ಮಂಗಳ ಫಾರೂಕ್ ಯಾನೆ ಕುಂಞಿಮೋನು(68) ಎಂಬಾತನನ್ನು ಪೊಲೀಸರು ಬಂಧಿಸಿ ಆತನಿಂದ ದ್ವಿಚಕ್ರ ವಾಹನ ಮತ್ತು 998 ಗ್ರಾಮ್ ಗಾಂಜಾ ಸೇರಿದಂತೆ 52,800 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಓವರ್ ಬ್ರಿಡ್ಜ್ ಬಳಿ ಮಾ.17ರಂದು ಗಾಂಜಾ ಮಾರಾಟ ಮಾಡುತ್ತಿದ್ದ ಕಲ್ಲಾಪು ಪಟ್ಲದ ನಿಝಾಮ್ ಯಾನೆ ನಿಜ್ಜಾ ಎಂಬಾತನನ್ನು ಬಂಧಿಸಲಾಗಿದೆ. ಮೊಬೈಲ್ ಮತ್ತು 254 ಗ್ರಾಮ್ ಗಾಂಜಾ ಸೇರಿದಂತೆ ವಶಪಡಿಸಿಕೊಂಡ ಒಟ್ಟು ಮೌಲ್ಯ 9,900 ರೂ. ಆರೋಪಿ ನಿಝಾಮ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಾರೆಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೆ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದನು. ಹಳೆ ಆರೋಪಿ ಸೆರೆ: ನ್ಯಾಯಾಲಯಕ್ಕೆ ಹಾಜರಾಗದೆ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಳಿಯದ ರಾಜೇಶ್ ಸುವರ್ಣ(24) ಎಂಬಾತನನ್ನು ಮಾ.16ರಂದು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 26 ಮಂದಿ ಮಾದಕ ವಸ್ತು ಸೇವಿಸಿರುವುದು ದೃಢ: ಮಂಗಳೂರು ನಗರದ ದಕ್ಷಿಣ ಉಪವಿಭಾಗದಲ್ಲಿ ಒಂದು ತಿಂಗಳ ಅವಧಿಯಲ್ಲಿ 56 ಮಂದಿ ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 26 ಮಂದಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪ್ರಕಟನೆ ತಿಳಿಸಿದೆ.
ಕಾಂಗ್ರೆಸ್ ಗೂಂಡಾಗಿರಿಗೆ ಸೂಕ್ತ ಉತ್ತರ: ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು: ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎನ್ನಲಾದ ಘಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ ಭೀತಿ ಎದುರಾಗಿದೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರು ಗೂಂಡಾಗಿರಿ ನಡೆಸಲು ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ. ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರ ದರ್ಪಕ್ಕೆ ಬಿಜೆಪಿ ಕಾರ್ಯಕರ್ತರು ಅಂಜುವುದಿಲ್ಲ. ಜನತೆ ಕೂಡಾ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ. ಶಾಂತಿ ಕದಡಲು ಯತ್ನಿಸಿದ ಶಾಸಕರ ಬೆಂಬಲಿಗರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ನಳಿನ್ ಕುಮಾರ್ ಆಗ್ರಹಿಸಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಇಲ್ಲ ಎಂದೇ ಬಿಜೆಪಿ ಯದುವೀರ್ ರನ್ನು ಕಣಕ್ಕಿಳಿಸಿದೆ: ಸಿದ್ದರಾಮಯ್ಯ
ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಇಲ್ಲ ಎಂದೇ ಬಿಜೆಪಿ ಯದುವೀರ್ ಅವರನ್ನು ಕಣಕ್ಕಿಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸೋಮವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚು ಅಭ್ಯರ್ಥಿಗಳು ಇರುವುದರಿಂದ ಸಮಸ್ಯೆ ಆಗಿದೆ. ಒಂದೊಂದು ಕಡೆ ಮೂರು-ನಾಲ್ಕು ಜನ ಇರುವುದು ಸಮಸ್ಯೆಯಾಗಿದೆ. ಬಿಜೆಪಿಯವರು ಮೈಸೂರಿನಲ್ಲಿ ಇರೋ ಅಭ್ಯರ್ಥಿ ಬದಲಾವಣೆ ಮಾಡಿದ್ದಾರೆ. ಆಗ ಬಿಜೆಪಿಯವರಿಗೆ ಅಭ್ಯರ್ಥಿ ಇದ್ದರೇ?. ಯದುವೀರ್ ಈಗ ಕಣಕ್ಕಿಳಿಸಿದ್ದಾರೆ ಎಂದು ಆರೋಪಿಸಿದರು. ಮೈಸೂರಿನಲ್ಲಿ ಯಾವ ರಾಜ ಸ್ಪರ್ಧೆ. ಅವರು ಬಿಜೆಪಿ ಅಭ್ಯರ್ಥಿ. ನನಗೆ ಮೈಸೂರು ಮಾತ್ರವಲ್ಲ ಇಡೀ ರಾಜ್ಯವೇ ಸ್ವಕ್ಷೇತ್ರ. ನಾನು ಓದಿದ್ದು ಮೈಸೂರಿಲ್ಲಿ ಮಾತ್ರ. ಮೈಸೂರು ಹಳ್ಳಿಯಲ್ಲಿ ಓದಿದ್ದು ಅಷ್ಟೇ. ರಾಜ್ಯದ 28 ಲೋಕಸಭಾ ಕ್ಷೇತ್ರವೂ ನಮ್ಮದೇ ಎಂದು ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಸಂಸದ ಡಿ.ವಿ.ಸದಾನಂದಗೌಡರಿಗೆ ಕಾಂಗ್ರೆಸ್ ಸಂಪರ್ಕ ಮಾಡಿದ್ದಾರೆಂಬ ವಿಚಾರ ನನಗೆ ಗೊತ್ತಿಲ್ಲ. ಯಾರನ್ನು ಸಂಪರ್ಕ ಮಾಡಿದ್ದಾರೋ ಅವರನ್ನೇ ಕೇಳಿ. ಸದಾನಂದ ಗೌಡ ನನ್ನ ಹೆಸರು ಹೇಳಿದ್ದರಾ?. ನನ್ನ ಸಂಪರ್ಕದಲ್ಲಂತೂ ಇಲ್ಲ. ಕಾಂಗ್ರೆಸ್ ನಾಯಕರು ಯಾರನ್ನಾದರೂ ಸಂಪರ್ಕ ಮಾಡಿರಬಹುದು. ಆ ಬಗ್ಗೆ ನನಗೆ ಗೊತ್ತಿಲ್ಲ’ ಎಂದು ಸಿದ್ದರಾಮಯ್ಯ ವಿವರಣೆ ನೀಡಿದರು.
ಮೂಡಿಗೆರೆ ಬಿಜೆಪಿ ಮಂಡಲ ಅಧ್ಯಕ್ಷರ ಅಮಾನತು ಆದೇಶ ಹಿಂಪಡೆದ ಜಿಲ್ಲಾಧ್ಯಕ್ಷ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಮಂಡಲದ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಿದ್ದ ಆದೇಶವನ್ನು ಜಿಲ್ಲಾಧ್ಯಕ್ಷ ಹಿಂದಕ್ಕೆ ಪಡೆದಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ಸೋಮವಾರು ಅಮಾನತು ಆದೇಶವನ್ನು ವಾಪಾಸ್ಸು ಪಡೆದಿದ್ದು, ಬಿಜೆಪಿ ಮೂಡಿಗೆರೆ ಮಂಡಲದ ಬಣಕಲ್ ಹೋಬಳಿ ಅಧ್ಯಕ್ಷ ಪಿ.ಜಿ.ಅನುಕುಮಾರ್ (ಪಟ್ಟದೂರು ಪುಟ್ಟಣ್ಣ) ಮತ್ತು ಗೋಣಿಬೀಡು ಹೋಬಳಿ ಅಧ್ಯಕ್ಷ ಭರತ್ ಕನ್ನೇಹಳ್ಳಿ ಇವರನ್ನು ಅಶಿಸ್ತಿನ ಕಾರಣಕ್ಕೆ ಇತ್ತೀಚೆಗೆ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದೀಗ ಈ ಅಮಾನತು ಆದೇಶವನ್ನು ಪಕ್ಷದ ಜಿಲ್ಲಾಧ್ಯಕ್ಷರು ಹಿಂದಕ್ಕೆ ಪಡೆದಿದ್ದಾರೆ. ಮೂಡಿಗೆರೆ ಮಂಡಲ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಉಂಟಾದ ಗೊಂದಲ, ಪಕ್ಷದ ಅಧ್ಯಕ್ಷರನ್ನಾಗಿ ಗಜೇಂದ್ರ ಅವರನ್ನು ನೇಮಕ ಮಾಡಿದ ಸಂದರ್ಭದಲ್ಲಿ ಅಸಮಾಧಾನ ಸ್ಪೋಟಗೊಂಡಿತ್ತು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದ ಅನುಕುಮಾರ್ ಮತ್ತು ಭರತ್ ಅವರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು. ಈ ಸಂಬಂಧ ನಡೆದ ಸಭೆಯೊಂದರಲ್ಲಿ ತಾ.ಪಂ. ಮಾಜಿ ಅಧ್ಯಕ್ಷ ಕೆ.ಸಿ.ರತನ್ ಅವರ ಮೇಲೆ ಅನುಕುಮಾರ್ ಮತ್ತು ಭರತ್ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಈ ಘಟನೆಯ ಹಿನ್ನಲೆಯಲ್ಲಿ ಜಿಲ್ಲಾಧ್ಯಕ್ಷರು ಅಶಿಸ್ತಿನ ಕಾರಣ ನೀಡಿ ಅನುಕುಮಾರ್ ಮತ್ತು ಭರತ್ ಅವರನ್ನು ಪಕ್ಷದಿಂದ ಅಮಾನತು ಮಾಡಿದ್ದರು. ಯಾವುದೇ ನೋಟೀಸ್ ನೀಡದೇ ಏಕಾಏಕಿ ಅಮಾನತು ಮಾಡಲಾಗಿದೆ ಎಂದು ಅಮಾನತುಗೊಂಡಿದ್ದ ಮುಖಂಡರು ಜಿಲ್ಲಾಧ್ಯಕ್ಷರ ವಿರುದ್ಧ ಹರಿಹಾಯ್ದಿದ್ದರು. ಮಾತ್ರವಲ್ಲ ಇವರ ಬೆಂಬಲಿಗರು ಸಹ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಅಮಾನತು ಆದೇಶದ ಹಿನ್ನೆಲೆಯಲ್ಲಿ ಮಾ.15ರಂದು ಮೂಡಿಗೆರೆ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದ ದಿನವೇ ಅನುಕುಮಾರ್ ಮತ್ತು ಭರತ್ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಸೇರಿ ಸ್ವಾಭಿಮಾನಿ ಕಾರ್ಯಕರ್ತರ ಹೆಸರಿನಲ್ಲಿ ಪರ್ಯಾಯ ಸಮಾವೇಶ ಮಾಡಿದ್ದರು. ಈ ಸಮಾವೇಶಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಈ ಗೊಂದಲದಿಂದಾಗಿ ಅಂದು ನಿಗದಿಯಾಗಿದ್ದ ಪದಗ್ರಹಣ ಸಮಾರಂಭವನ್ನು ಮುಂದೂಡಲಾಗಿತ್ತು. ಗೊಂದಲ ನಿವಾರಣೆಗೆ ಮುಖಂಡರು ಆಸಕ್ತಿ ತೋರಿ ಮುಂದಿನ ದಿನಗಳಲ್ಲ ಒಟ್ಟಾಗಿ ಸೇರಿ ಪದಗ್ರಹಣ ಸಮಾರಂಭ ಏರ್ಪಡಿಸುವ ಇಂಗಿತ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಪಕ್ಷದ ಹಿರಿಯ ಮುಖಂಡರು ಮಧ್ಯಪ್ರವೇಶಿಸಿ ಪರಸ್ಪರ ಮುನಿಸಿಕೊಂಡಿದ್ದ ಎರಡೂ ಗುಂಪಿನ ನಾಯಕರ ನಡುವೆ ರಾಜಿಸಂಧಾನ ನಡೆಸಿದ್ದಾರೆ ಎನ್ನಲಾಗಿದೆ. ಅದರ ಪರಿಣಾಮ ಇಂದು ಜಿಲ್ಲಾಧ್ಯಕ್ಷರು ಅಮಾನತು ಆದೇಶವನ್ನು ವಾಪಾಸ್ಸು ಪಡೆದಿದ್ದಾರೆ.
Sarfaraz Khan : ಬಿಸಿಸಿಐ ಕೇಂದ್ರ ಗುತ್ತಿಗೆಗೆ ಸರ್ಫರಾಜ್ ಖಾನ್, ಧ್ರುವ್ ಜುರೆಲ್ ಸೇರ್ಪಡೆ
Sarfaraz Khan : ಸರ್ಫರಾಜ್ ಖಾನ್ ಹಾಗೂ ಧ್ರುವ್ ಜುರೆಲ್ ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಆಡಿದ್ದರು. The post Sarfaraz Khan : ಬಿಸಿಸಿಐ ಕೇಂದ್ರ ಗುತ್ತಿಗೆಗೆ ಸರ್ಫರಾಜ್ ಖಾನ್, ಧ್ರುವ್ ಜುರೆಲ್ ಸೇರ್ಪಡೆ first appeared on Vistara News .
ನಾರಾಯಣಮೂರ್ತಿಯವರ ನಾಲ್ಕು ತಿಂಗಳ ಮೊಮ್ಮಗ ಈಗ ಕೋಟ್ಯಧಿಪತಿ!
ಹೊಸದಿಲ್ಲಿ: ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರ ರೋಹನ್ ಮೂರ್ತಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ndtv ವರದಿ ಮಾಡಿದೆ. ಷೇರು ಮಾರುಕಟ್ಟೆಯ ಮಾಹಿತಿಯಂತೆ, ನಾರಾಯಣಮೂರ್ತಿಯವರು ಇನ್ಫೋಸಿಸ್ ನ 15 ಲಕ್ಷ ಷೇರುಗಳನ್ನು ಮೊಮ್ಮಗನಿಗೆ ನೀಡಿದ್ದಾರೆ. ಈ ವರ್ಗಾವಣೆಯು ಷೇರು ಮಾರುಕಟ್ಟೆಯ ಅವಧಿಯ ಹೊರಗೆ ನಡೆದಿದ್ದು, ಫೈಲಿಂಗ್ ಸಂದರ್ಭದಲ್ಲಿ ಬಹಿರಂಗಗೊಂಡಿದೆ ಎಂದು ತಿಳಿದು ಬಂದಿದೆ. ಆ ಮೂಲಕ ಕೋಟ್ಯಧಿಪತಿಗಳ ಸಾಲಿಗೆ ನಾಲ್ಕು ತಿಂಗಳ ಮಗು ಸೇರಿದೆ. ನಾರಾಯಣಮೂರ್ತಿ ಅವರ ಪುತ್ರ ರೋಹನ್ ಮೂರ್ತಿ ಹಾಗೂ ಅಪರ್ಣಾ ಕೃಷ್ಣನ್ ದಂಪತಿಗೆ 2023ರ ನವೆಂಬರ್ನಲ್ಲಿ, ಏಕಾಗ್ರ ಜನಿಸಿದ್ದರು. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರಿಗೆ ಏಕಾಗ್ರ ಮೂರನೇ ಮೊಮ್ಮಗು. ಅಕ್ಷತಾ ಮೂರ್ತಿ - ರಿಷಿ ಸುನಕ್ ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.
ಕಲಬುರಗಿ: ಸಿಡಿಲು ಬಡಿದು ಯುವಕ ಸಾವು
ಕಲಬುರಗಿ: ಸಿಡಿಲು ಬಡೆದು ಯುವಕ ಮತ್ತು ಎರಡು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೇಡಂ ತಾಲೂಕಿನ ಮುಧೋಳ ವ್ಯಾಪ್ತಿಯ ಕಿಷ್ಟಪೂರ ಗ್ರಾಮದಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಕಿಷ್ಟಪುರ ಗ್ರಾಮದ ಶಾಂತಕುಮಾರ್ (30) ಮೃತಪಟ್ಟ ಯುವಕ. ಹತ್ತಿರದ ಹೋಲದಲ್ಲಿ ಕುರಿ ಕಾಯುವ ವೇಳೆ ಗಾಳಿ ಮಳೆ ಬರಲು ಶುರುವಾದಾಗ ಅಲ್ಲೇ ಇದ್ದ ಗೀಡದ ಕೇಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಜೊತೆಗೆ ಎರಡು ಕುರಿಗಳು ಕೂಡ ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದಂತೆ ಘಟನಾ ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಪೋಲಿಸರು ಭೇಟಿ ನೀಡಿ ಪರಿಶಿಲನೆ ನಡೆಸಿದರು. ಈ ಕುರಿತು ಮುಧೋಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ. ಜಪ್ತಿ
ಮಂಡ್ಯ: ಜಿಲ್ಲೆಯ ಗಡಿಭಾಗದ ಮದ್ದೂರು ತಾಲೂಕಿನ ಕೊಂಗಬೋರನದೊಡ್ಡಿ ಬಳಿಯಲ್ಲಿ ಕಾರಿನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಅಂದಾಜು 1 ಕೋಟಿ ರೂ.ವನ್ನು ಚುನಾವಣಾ ಸಿಬ್ಬಂದಿ ಮತ್ತು ಮದ್ದೂರು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ ಸಾಗುತ್ತಿದ್ದಂತಹ ಕ್ರೇಟಾ ಕಾರೊಂದನ್ನು ತಡೆದ ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಕಾರನ್ನು ತಪಾಸಣೆ ನಡೆಸಿದ ವೇಳೆಯಲ್ಲಿ ಅಂದಾಜು ಒಂದು ಕೋಟಿ ರೂಪಾಯಿ ಪತ್ತೆಯಾಗಿದೆ. ಗಿರೀಶ್ ಎಂಬವರು ಬೆಂಗಳೂರಿನಿಂದ ಹ್ಯೂಂಡಾಯ್ ಕ್ರೇಟಾ ಕೆಎ - 54 - ಎಂ - 4030 ಕಾರಿನಲ್ಲಿ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ ಮದ್ದೂರು ತಾಲೂಕಿನ ಗಡಿಭಾಗ ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ.ಆರ್.ಪ್ರಸಾದ್ ಹಾಗೂ ಚುನಾವಣಾಧಿಕಾರಿ ಲೋಕನಾಥ್ ಹಾಗೂ ಪೋಲೀಸ್ ಸಿಬ್ಬಂದಿ ಕಾರನ್ನು ಪರಿಶೀಲನೆ ನಡೆಸಿದಾಗ ಚೀಲದಲ್ಲಿ ಹಣ ಪತ್ತೆಯಾಗಿದೆ. ಈ ಬಗ್ಗೆ ಅವರನ್ನು ಚುನಾವಣಾಧಿಕಾರಿಗಳು ಪ್ರಶ್ನಿಸಿದ್ದಾರೆ. ದೊರೆತ ಹಣಕ್ಕೆ ಸೂಕ್ತ ಉತ್ತರ, ದಾಖಲೆ ನೀಡದ ಪರಿಣಾಮ ಹಣವನ್ನು ಸೀಝ್ ಮಾಡಿದ್ದಾರೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uttara Kannada News: ಖರೀದಿಗೂ ಮುನ್ನ ವಸ್ತುಗಳನ್ನು ಪರಿಶೀಲಿಸಿ; ನ್ಯಾ. ಮಾಯಣ್ಣ
Uttara Kannada News: ಕಾರವಾರ ನಗರದ ನಂದನಗದ್ದಾದ ಪ್ರೀಮಿಯರ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಗ್ರಾಹಕರ ಚಟುವಟಿಕೆ ಕಾರ್ಯಕ್ರಮ ಜರುಗಿತು. The post Uttara Kannada News: ಖರೀದಿಗೂ ಮುನ್ನ ವಸ್ತುಗಳನ್ನು ಪರಿಶೀಲಿಸಿ; ನ್ಯಾ. ಮಾಯಣ್ಣ first appeared on Vistara News .
ಬಿಹಾರ: ಬಿಜೆಪಿ 17, ಜೆಡಿಯು 16 ಕ್ಷೇತ್ರಗಳಲ್ಲಿ ಸ್ಪರ್ಧೆ; ಪಾಸ್ವಾನ್ ಪಕ್ಷಕ್ಕೆ 5 ಸ್ಥಾನ ಹಂಚಿಕೆ
ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಸ್ಥಾನ ಹಂಚಿಕೆಯ ಒಪ್ಪಂದವನ್ನು ಎನ್ಡಿಎ ಸೋಮವಾರ ಅಂತಿಮಗೊಳಿಸಿದೆ. ರಾಜ್ಯದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಜೆಡಿಯು 16 ಹಾಗೂ ಎಲ್ಜೆಪಿ (ರಾಮ್ ವಿಲಾಸ್ ಪಾಸ್ವಾನ್) 5 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಹಿಂದೂಸ್ತಾನಿ ಅವಾಮ್ ಮೋರ್ಚಾ (HAM) ಹಾಗೂ ರಾಷ್ಟ್ರೀಯ ಲೋಕ ಮೋರ್ಚಾ (RLM) ತಲಾ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ. ಬಿಹಾರದಲ್ಲಿ ಎನ್ಡಿಎ ಬಿಜೆಪಿ, ಜೆಡಿಯು, ಚಿರಾಗ್ ಪಾಸ್ವಾನ್ರ ಎಲ್ಜೆಪಿ (ರಾಮ್ ವಿಲಾಸ್), ಕೇಂದ್ರ ಸಚಿವ ಪಶುಪತಿ ಕುಮಾರ್ ಪರಸ್ ಅವರ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (RLJP), ಮಾಜಿ ಮುಖ್ಯಮಂತ್ರಿ ಜಿತಿನ್ ರಾಮ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ (Hm) ಹಾಗೂ ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮೋರ್ಚಾ (RLM) ಪಕ್ಷಗಳನ್ನು ಒಳಗೊಂಡಿದೆ.
RCB vs CSK ಪಂದ್ಯಕ್ಕೆ ಭಾರಿ ಡಿಮ್ಯಾಂಡ್, ತನ್ನ ಮಕ್ಕಳಿಗೆ ಟಿಕೆಟ್ ಕೊಡಿಸಲು ಅಶ್ವಿನ್ ಹರಸಾಹಸ!
RCB vs CSK Opening Match: ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಆರಂಭಕ್ಕೆ ಇನ್ನು ಕೇವಲ ಮೂರು ದಿನಗಳು ಮಾತ್ರ ಬಾಕಿ ಇವೆ. ಮಾರ್ಚ್ 22ರಂದು ಚೆನ್ನೈನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಟಿಕೆಟ್ಗಳಿಗೆ ಬಾರಿ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ತಮ್ಮ ಮಕ್ಕಳಿಗೆ ಈ ಪಂದ್ಯದ ಟಿಕೆಟ್ ಕೊಡಿಸಲು ರಾಜಸ್ಥಾನ್ ರಾಯಲ್ಸ್ ತಂಡದ ಅಶ್ವಿನ್ ಹರಸಾಹಸ ಪಡುತ್ತಿದ್ದಾರೆ.
ಮಾ.21ರಿಂದ ಕರಾವಳಿ, ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಮಳೆಯ ಸಾಧ್ಯತೆ
ಉಡುಪಿ, ಮಾ.18: ಸಧ್ಯದ ಒಟ್ಟಾರೆ ವಾತಾವರಣದ ಹಿನ್ನೆಲೆಯಲ್ಲಿ ಮಾ.21ರಿಂದ 26ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಹಗುರದಿಂದ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರದ ಮುನ್ಸೂಚನೆಯನ್ನು ಉಲ್ಲೇಖಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮಾಹಿತಿ ನೀಡಿದೆ.
ಚುನಾವಣಾ ರ್ಯಾಲಿಯಲ್ಲಿ ಐಎಎಫ್ ಹೆಲಿಕಾಪ್ಟರ್ ಬಳಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ
ಹೊಸದಿಲ್ಲಿ : ಆಂಧ್ರಪ್ರದೇಶದ ಪಾಲ್ನಾಡುವಿನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಭಾರತೀಯ ವಾಯು ಪಡೆ (ಐಎಎಫ್)ಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದ ಸಾಕೇತ್ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಾಕೇತ ಗೋಖಲೆ ಅವರು ಮಾರ್ಚ್ ೧೮ರಂದು ಚುನಾವಣಾ ಆಯೋಗಕ್ಕೆ ಈ ದೂರು ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ರಾಜ್ಯದ ಆಡಳಿತ ಯಂತ್ರವನ್ನು ಬಳಸುವುದನ್ನು ನಿಯಮಗಳು ನಿಷೇಧಿಸುತ್ತವೆ. ನಿರ್ದಿಷ್ಟವಾಗಿ ಇದೇ ಕಾರಣಕ್ಕೆ ೧೯೭೫ರಲ್ಲಿ ಇಂದಿರಾ ಗಾಂಧಿ ಅವರು ಅನರ್ಹಗೊಂಡಿದ್ದರು ಎಂದು ಅವರು ತಿಳಿಸಿದ್ದಾರೆ. ಬಿಜೆಪಿ ಐಎಎಫ್ ಹೆಲಿಕಾಪ್ಟರ್ಗೆ ಬಾಡಿಗೆ ಪಾವತಿಸಿದ್ದರೆ, ಯಾಕೆ ಐಎಎಫ್ ಹೆಲಿಕಾಪ್ಟರೇ ಅಗತ್ಯವಿತ್ತು ಎಂಬುದನ್ನು ಚುನಾವಣಾ ಆಯೋಗ ನಮಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ. ಲೋಕಸಭಾ ಚುನಾವಣಾ ವೇಳಾವಟ್ಟಿ ಪ್ರಕಟಿಸುವಾಗ ಚುನಾವಣಾ ಆಯೋಗ, ಮಾದರಿ ನೀತಿ ಸಹಿಂತೆ ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು ಎಂದು ಸಾಕೇತ್ ಗೋಖಲೆ ತಿಳಿಸಿದರು.
ರಂಗಭೂಮಿ ಕಲಾವಿದರಿಗೆ ರಕ್ಷಣೆಗೆ ಆಗ್ರಹಿಸಿ ಕಲಾವಿದರ ಕಾಲ್ನಡಿಗೆ ಜಾಥಾ
ಮಂಗಳೂರು: ಕಲಾವಿದರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಮತ್ತು ಅವಿಭಜಿತ ದ.ಕ.ಜಿಲ್ಲೆಯ ಸಮಸ್ತ ರಂಗಭೂಮಿ ಕಲಾವಿದರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ತುಳು ನಾಟಕ ಕಲಾವಿದರ ಒಕ್ಕೂಟ (ರಿ) ಮಂಗಳೂರು, ಜಿಲ್ಲಾ ರಂಗಭೂಮಿ ಸಂಘದ ವೇದಿಕೆ, ದಕ್ಷಿಣ ಕನ್ನಡ (ದ.ಕ.), ಉಡುಪಿ, ಕಾಸರಗೋಡು ಇವುಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಯಿತು. ಜಾಥಾ ಆರಂಭಕ್ಕೂ ಮುನ್ನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆದ ಕಲಾವಿದರ ಸಮಾವೇಶವನ್ನುದ್ದೇಶಿಸಿ ಮಾತನಾ ಡಿದ ಸಿನಿ ನಟ, ನಿರ್ದೇಶಕ ಡಾ.ದೇವದಾಸ್ ಕಾಪಿಕಾಡ್, ಇಂದು ನಾವು ನಮ್ಮ ಕ್ಷೇತ್ರದ ಒಗ್ಗಟ್ಟಿಗಾಗಿ ಇಲ್ಲಿ ಕೂಡಿ ಬಂದಿದ್ದೇವೆ, ನಮ್ಮ ನಾಟಕ, ಕಿರುನಾಟಕಗಳಿಂದ ಸಮಾಜದಲ್ಲಿ ಗೌರವ ಮೂಡಿದೆ. ಆದರೆ ಇಂದು ಅದೇ ನಾಟಕ ಕಲಾವಿದರಿಗೆ ಭದ್ರತೆ ಇಲ್ಲ. ಹೇಳಿಕೆ ನೀಡಲು, ಸಂವಾದ ನಡೆಸಲು ಹೆದರುವಂತಾಗಿದೆ. ನಮ್ಮ ದೈವಗಳಲ್ಲಿ ನಂಬಿಕೆ ಯುಳ್ಳವರಾಗಿದ್ದೇವೆ ಮತ್ತು ನಾವು ಅವರನ್ನು ಪೂಜಿಸುವೆವು, ಅವುಗಳನ್ನು ತಪ್ಪಾಗಿ ನಿರೂಪಿಸುವುದು ನಮ್ಮ ಉದ್ದೇಶ ವಲ್ಲ. ಯಕ್ಷಗಾನವು ನಮ್ಮ ಸಂಸ್ಕೃಯ ಅವಿಭಾಜ್ಯ ಅಂಗವಾಗಿದೆ ನಮ್ಮ ಕಡೆಯಿಂದ ಏನಾದರೂ ತಪ್ಪಾಗಿದ್ದರೆ ನಮ್ಮನ್ನು ಸಂಪರ್ಕಿಸಿ, ನಟರನ್ನು ಗೌರವಿಸಬೇಕು ಎಂದು ನಾವು ವಿನಂತಿಸುತ್ತೇವೆ ಎಂದರು. ಲಕುಮಿ ಬಳಗದ ಕಿಶೋರ ಶೆಟ್ಟಿ ಮಾತನಾಡಿ, ‘‘ಈ ಸಾಂಪ್ರದಾಯಿಕ ಮೌಲ್ಯಗಳು ನಾಟಕಗಳಿಗೆ ಯಾವತ್ತೂ ನಿರ್ಬಂಧ ಗಳಾಗಿರಲಿಲ್ಲ, ತುಳು ಭಾಷೆಗೆ ಮನ್ನಣೆ ತರುವ ಹೋರಾಟದಲ್ಲಿ ತುಳು ನಾಟಕಗಳು ಸಾಕಷ್ಟು ಕೊಡುಗೆ ನೀಡಿವೆ ಎಂದರು. ನಟ-ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲಬೈಲ್ ವಿಷಾದ ವ್ಯಕ್ತಪಡಿಸಿ, ಕೌಶಲ್ಯದಿಂದ ಸರಿಯಾದ ಉತ್ತರವನ್ನು ನೀಡುವ ನಟರ ಸಂಖ್ಯೆ ಇಂದು ಬಹಳ ಕಡಿಮೆಯಾಗಿದೆ ಎಂದರು. ಸಮಾವೇಶದ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸರಪಾಡಿ ಅಶೋಕ್ ಶೆಟ್ಟಿ, ಕೃಷ್ಣ ಮಂಜೇಶ್ವರ, ಕೆಕೆ ಗಟ್ಟಿ, ಜಗನ್ ಪವಾರ್ ಬೇಕಲ್, ಶರತ್ ಶೆಟ್ಟಿ ಕಿನ್ನಿಗೋಳಿ, ಪವನ್ ಜೈಕಲ್, ಮಧು ಬಂಗೇರ, ಮತ್ತಿತರರು ಉಪಸ್ಥಿತರಿದ್ದರು.
ವೈದ್ಯಕೀಯ ವೃತ್ತಿಯಲ್ಲಿ ನೈತಿಕತೆ ಅಗತ್ಯ: ಡಾ.ರಮೇಶ್ಚಂದ್ರ
ಮಂಗಳೂರು: ವೈದ್ಯಕೀಯ ವೃತ್ತಿಯಲ್ಲಿ ನೈತಿಕತೆ ಅಗತ್ಯ. ತಮ್ಮ ಮೇಲಿರುವ ಜವಾಬ್ದಾರಿಯನ್ನು ಅರಿತುಕೊಂಡು ಸಮರ್ಪಣೆ ಮತ್ತು ಸಹಾನುಭೂತಿಯಿಂದ ಸಮಾಜಕ್ಕೆ ಸೇವೆ ಸಲ್ಲಿಸುವಂತೆ ಭಾರತ ಸರಕಾರದ ವಿದೇಶಾಂಗ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಡಾ ಎ ವಿ ಎಸ್ ರಮೇಶ್ ಚಂದ್ರ ಕರೆ ನೀಡಿದ್ದಾರೆ. ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಸೋಮವಾರ ಸಂಜೆ ನಡೆದ ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ ಕಾಲೇಜುಗಳ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪದವೀಧರರಾಗಿ ನಿರ್ಗಮಿಸುವ ವಿದ್ಯಾರ್ಥಿಗಳು ತಮ್ಮ ಮೇಲಿರುವ ಜವಾಬ್ದಾರಿಯನ್ನು ಯಾವತ್ತೂ ಮರೆಯಬಾರದು ಎಂದರು. ಹೊಸದಿಲ್ಲಿಯ ಲೇಡಿ ಹಾರ್ಡಿಂಜ್ ವೈದ್ಯಕೀಯ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಗಳ ನಿರ್ದೇಶಕರಾದ ಡಾ ಸುಭಾಷ್ ಗಿರಿ ಅತಿಥಿಯಾಗಿ ಮಾತನಾಡಿ ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ ಮಹತ್ತರ ಬದಲಾವಣೆಗಳನ್ನು ತಿಳಿಸಿ, ಪದವೀಧರರು ಮಾನವೀಯತೆಯನ್ನು ಬೆಳೆಸಿಕೊಳ್ಳುವಂತೆ ಕಿವಿಮಾತು ನುಡಿದರು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಮತ್ತು ಎಫ್ಎಂಸಿಐ ಅಧ್ಯಕ್ಷ ಅತಿ ವಂದನೀಯ ಡಾ.ಪೀಟರ್ ಪೌಲ್ ಸಲ್ಡಾನ್ಹಾ ಅಧ್ಯಕ್ಷತೆ ವಹಿಸಿ ಮಾತನಾಡಿ ಭಾರೀ ನಿರೀಕ್ಷೆಯೊಂದಿಗೆ ಆಗಮಿಸಿದ್ದ ವಿದ್ಯಾರ್ಥಿಗಳ ಕನಸು ನನಸಾದ ದಿನವಾಗಿದೆ ಇಂದು. ವೈದ್ಯರಾದವರು ಮಾನವೀಯತೆಯನ್ನು ಬೆಳೆಸಿಕೊಂಡು ರೋಗಿಗಳ ನಾಡಿಮಿಡಿತವನ್ನು ಅರಿತುಕೊಂಡು ಉತ್ತಮ ಸೇವೆಯೊಂದಿಗೆ ಅವರ ಮನ ಗೆಲ್ಲಲು ಶ್ರಮಿಸುವಂತೆ ಕಿವಿ ಮಾತು ನುಡಿದರು. ಅತ್ಯುತ್ತಮ ನಿರ್ಗಮಿತ ವಿದ್ಯಾರ್ಥಿಗೆ ನೀಡಲಾಗುವ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಸಂಸ್ಥೆಗಳ ಅಧ್ಯಕ್ಷರ ಚಿನ್ನದ ಪದಕ ಪುರಸ್ಕಾರಕ್ಕೆ ಡಾ ಅರಲ್ ಅಲಿಶಾ ಮೊಂತೆರೊ ಭಾಜನರಾದರು. ಎಫ್ ಎಂಸಿಐ ನಿರ್ದೇಶಕ ಫಾ. ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿ ಪದವಿ ಪಡೆದ ವಿದ್ಯಾರ್ಥಿಗಳ ಸಾಧನೆಗೆ ಸಂತೋಷ ಮತ್ತು ಹೆಮ್ಮೆ ವ್ಯಕ್ತಪಡಿಸಿರು. ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಮತ್ತು ಕಾಲೇಜ್ ಆಫ್ ಫಿಸಿಯೋಥೆರಪಿಯ ಆಡಳಿತಾಧಿಕಾರಿ ಫಾ.ಅಜಿತ್ ಬಿ.ಮಿನೇಜಸ್ ಅವರು ಸಂಸ್ಥೆಗಳ ಶೈಕ್ಷಣಿಕ ಪ್ರಗತಿ, ಸಾಧನೆಗಳನ್ನು ಬಿಂಬಿಸುವ ಸಮಗ್ರ ವರದಿಯನ್ನು ಮಂಡಿಸಿದರು. ಎಂಬಿಬಿಎಸ್ 2018ರ ತಂಡದ ಡಾ. ರಘುನಂದನ್ ಉದ್ದಿಹಾಳ್ ಅವರು ತಾವು ಎದುರಿಸಿದ ಸವಾಲುಗಳನ್ನು ವಿವರಿಸಿ. ತಮ್ಮ ಕಲಿಕೆಯ ಅನುಭವಗಳಿಗೆ ಕೊಡುಗೆ ನೀಡಿದ ತಮ್ಮ ಶಿಕ್ಷಕರು, ಆಡಳಿತ ಮಂಡಳಿ ಮತ್ತು ರೋಗಿಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಎಫ್ಎಂಎಂಸಿ ಡೀನ್ ಡಾ .ಆಂಟನಿ ಸಿಲ್ವನ್ ಡಿಸೋಜ , ಆಡಳಿತಾಧಿಕಾರಿಗಳಾದ ಜಾರ್ಜ್ ಜೀವನ್ ಸಿಕ್ವೇರಾ, ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ, ಸಹಾಯಕ ಆಡಳಿತಾಧಿಕಾರಿ ನೆಲ್ಸನ್ ಧೀರಜ್ ಪೈಸ್, ವೈದ್ಯಕೀಯ ಅಧೀಕ್ಷಕ ಡಾ ಉದಯ ಕುಮಾರ್ ,ಎಫ್ಎಂಸಿಒಪಿ ಪ್ರಾಂಶುಪಾಲ ಪ್ರೊ.ಚೆರಿಶ್ಮಾ ಡಿಸಿಲ್ವಾ ಉಪಸ್ಥಿತರಿದ್ದರು. ಡಾ.ಶ್ರೇಯಸ್ ಮತ್ತು ಡಾ.ಸವಿತಾ ಲಸ್ರಾದೊ ಕಾರ್ಯಕ್ರಮ ನಿರೂಪಿಸಿದರು. ಎಫ್ ಎಂಸಿಎಎಚ್ಎಸ್ ಪ್ರಾಂಶುಪಾಲ ಡಾ ಹಿಲ್ಡಾ ಡಿಸೋಜ ವಂದಿಸಿದರು. ‘‘ನಮ್ಮ ವೃತ್ತಿ ಬದುಕಿನ ಬೆಳವಣಿಗೆಯನ್ನು ಎಲ್ಲರೂ ಎದುರು ನೋಡುತ್ತಾರೆ. ಬೆಳವಣಿಗೆಗೂ ಪ್ರಗತಿಗೂ ವ್ಯತ್ಯಾಸವಿದೆ. ಪ್ರಗತಿಯ ಜೊತೆ ನೈತಿಕತೆಯೂ ಬೆಸೆದಿರುತ್ತದೆ. ವೃತ್ತಿಬದುಕಿನಲ್ಲಿ ಪ್ರಗತಿಯ ಜೊತೆ ಯಶಸ್ಸನ್ನೂ ಗಳಿಸಬೇಕಾದರೆ ಮೌಲ್ಯವನ್ನೂ ಅಳವಡಿಸಿಕೊಳ್ಳಬೇಕಾಗುತ್ತದೆ. ವೈದ್ಯಕೀಯ ಶಿಕ್ಷಣ ಪೂರೈಸಿದ ತಕ್ಷಣ ವಿದೇಶಕ್ಕೆ ಹಾರುವ ಬದಲು ಕನಿಷ್ಠಎರಡು ವರ್ಷಗಳ ತನಕ ಸ್ವದೇಶದಲ್ಲಿ ಕೆಲಸ ಮಾಡುವ ಮೂಲಕ ತಾಯ್ನೆಲದ ಋಣ ತೀರಿಸುವ ನಿಟ್ಟಿನಲ್ಲಿ ಗಮನ ನೀಡಬೇಕಾಗಿದೆ. -ಡಾ ಎ ವಿ ಎಸ್ ರಮೇಶ್ ಚಂದ್ರ ,ಹೆಚ್ಚುವರಿ ಕಾರ್ಯದರ್ಶಿ, ವಿದೇಶಾಂಗ ಸಚಿವಾಲಯ ಭಾರತ ಸರಕಾರ
Hospet News: ಬಸ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಚಕ್ರದಡಿ ಸಿಲುಕಿ ಬಾಲಕ ಸಾವು
Hospet News: ಹೊಸಪೇಟೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ದುರ್ಘಟನೆ ಸಂಭವಿಸಿದೆ. ಬಸ್ ಹಿಮ್ಮುಖವಾಗಿ ಚಲಿಸುವಾಗ ಪ್ಲಾಟ್ ಫಾರಂ ಬಳಿ ನಿಂತಿದ್ದ ಬಾಲಕನ ಮೇಲೆ ಹರಿದು ದುರಂತ ನಡೆದಿದೆ. The post Hospet News: ಬಸ್ ರಿವರ್ಸ್ ತೆಗೆದುಕೊಳ್ಳುವ ವೇಳೆ ಚಕ್ರದಡಿ ಸಿಲುಕಿ ಬಾಲಕ ಸಾವು first appeared on Vistara News .
ಉತ್ತರ ಗಾಝಾ | ಭೀಕರ ಹಸಿವೆಯಿಂದ ಬಳಲುತ್ತಿರುವ ಅರ್ಧ ಜನಸಂಖ್ಯೆ, ಮೇ ತಿಂಗಳೊಳಗೆ ಬರಗಾಲ ನಿಶ್ಚಿತ: ವಿಶ್ವಸಂಸ್ಥೆ
ವಿಶ್ವಸಂಸ್ಥೆ : ಗಾಝಾ ಪಟ್ಟಿಯಲ್ಲಿ ವಾಸಿಸುತ್ತಿರುವ ಅರ್ಧದಷ್ಟು ಜನರು ಭೀಕರ ಹಸಿವೆಯಿಂದ ಬಳಲುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ಪ್ರಾಯೋಜಕತ್ವದ ಆಹಾರ ಸುರಕ್ಷತಾ ಅಂದಾಜು ವರದಿ ಸೋಮವಾರ ಹೇಳಿದೆ. ಸೂಕ್ತ ಮತ್ತು ತುರ್ತು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಮೇ ತಿಂಗಳ ವೇಳೆಗೆ ಉತ್ತರ ಗಾಝಾವನ್ನು ಬರಗಾಲ ಆವರಿಸಲಿದೆ ಎಂದು ಅದು ಎಚ್ಚರಿಸಿದೆ. “ಒಂದು ಪ್ರದೇಶದ ಜನಸಂಖ್ಯೆಯ 50 ಶೇಕಡ ಭಾಗ ಭೀಕರ ಹಸಿವೆಯಿಂದ ಬಳಲುವುದು ಮತ್ತು ಬರಗಾಲಕ್ಕೆ ಒಳಗಾಗುವುದು ಹಿಂದೆಂದೂ ನಡೆದಿಲ್ಲ’’ ಎಂದು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆ (ಎಫ್ಎಒ)ಯ ಉಪ ಮಹಾ ನಿರ್ದೇಶಕಿ ಬೆತ್ ಬೆಕ್ಡೋಲ್ ಎಎಫ್ಪಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಸೇನಾ ದಾಳಿಯಿಂದಾಗಿ ಸುಮಾರು 11 ಲಕ್ಷ ಜನರು “ಭೀಕರ ಆಹಾರ ಅಭದ್ರತೆ’’ಗೆ ಒಳಗಾಗಿದ್ದಾರೆ ಎಂದು ಇಂಟಗ್ರೇಟಡ್ ಫೂಡ್ ಸೆಕ್ಯುರಿಟಿ ಫೇಸ್ ಕ್ಲಾಸಿಫಿಕೇಶನ್ (ಐಪಿಸಿ) ಪಾರ್ಟ್ನರ್ಶಿಪ್ ತನ್ನ ವರದಿಯಲ್ಲಿ ಹೇಳಿದೆ. ಮುಖ್ಯವಾಗಿ ಉತ್ತರ ಗಾಝಾದಲ್ಲಿ ಪರಿಸ್ಥಿತಿ ಭೀಕರವಾಗಿದೆ ಎಂದು ವರದಿ ಹೇಳುತ್ತದೆ. ಆಹಾರ ಮತ್ತು ಇತರ ನೆರವು ಸಾಮಗ್ರಿಗಳನ್ನು ವಿತರಿಸಲು ಅಲ್ಲಿಗೆ ಹೋಗುವುದು ಭಾರೀ ಕಷ್ಟದ ಕೆಲಸವಾಗಿದೆ ಎಂದು ಅದು ತಿಳಿಸಿದೆ.
ಕಾಂಗ್ರೆಸ್ ನಿಂದ ಆಹ್ವಾನ?: ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಹೀಗೆ...
ಮೈಸೂರು: ಬಿಜೆಪಿ ಟಿಕೆಟ್ ಕೈ ತಪ್ಪಿದ ಮೇಲೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದಿಯಾ ಎಂಬ ಪ್ರಶ್ನೆಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ಬಿಜೆಪಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿದಾಗ ನನಗೆ ಎಲ್ಲಾ ಪಕ್ಷದವರು ಮತ ಹಾಕಿದ್ದಾರೆ. ರಾಜಕಾರಣದಲ್ಲಿ ಕೆಲವೊಂದು ವಿಚಾರಗಳನ್ನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ಟಿಕೆಟ್ ತಪ್ಪಿದಾಗ ಕುರುಬ ಸಮಾಜದ ಮುಖಂಡರು ದೂರವಾಣಿ ಕರೆ ಮಾಡಿ ನೀವು ಚುನಾವಣೆಗೆ ಸ್ಪರ್ಧಿಸಿ, ಬೇಕಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಹೇಳಿದ್ದರು. ಹಾಗಾಗಿ ಎಲ್ಲರೂ ನನ್ನೊಂದಿಗೆ ಚೆನ್ನಾಗಿದ್ದಾರೆ ಎಂದರು. ಯದುವೀರ್ ಅವರು ಅರಮನೆ ಉತ್ತರಾಧಿಕಾರಿಯಾಗಿರುವುದರಿಂದ ಮಹರಾಜರಾಗಿ ಕೆಲಸ ಮಾಡುತ್ತಾರಾ? ಅಥವಾ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಾರಾ ಎಂಬ ಪ್ರಶ್ನೆ ಎತ್ತಿದ್ದೆ ಅಷ್ಟೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪಕ್ಷ ಈ ಬಾರಿ ಬೇರೆಯವರಿಗೆ ಟಿಕೆಟ್ ಕೊಟ್ಟಿದೆ. ಇದರಿಂದ ನನಗೆ ಯಾವುದೇ ಬೇಸರ ಇಲ್ಲ. ಪಕ್ಷ ನನ್ನ ತಾಯಿ ಇದ್ದ ಹಾಗೆ. ಪಕ್ಷದ ಅಭ್ಯರ್ಥಿy ಗೆಲವಿಗೆ ಶ್ರಮಿಸುತ್ತೇನೆ. ಯದುವೀರ್ ಗೆ ಟಿಕೆಟ್ ಸಿಕ್ಕಿದಾಗ ನಾನು ನಿಮ್ಮ ಏಜೆಂಟ್ ಆಗಿ ಕೆಲಸ ಮಾಡುತ್ತೇನೆ ಎಂದಿದ್ದೇನೆ. ಹಾಗಾಗಿ ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಉಪ್ಪಿನಂಗಡಿ: ಮಹಿಳೆಗೆ ಹಲ್ಲೆ, ಬೆದರಿಕೆ; ಪ್ರಕರಣ ದಾಖಲು
ಉಪ್ಪಿನಂಗಡಿ: ಇಚ್ಲಂಪಾಡಿ ಗ್ರಾಮದ ಅಲಂಗಾ ಮನೆ ನಿವಾಸಿ 66 ವರ್ಷ ಪ್ರಾಯದ ರೋಸಮ್ಮ ಎಂಬಾಕೆಯ ಮೇಲೆ ನೆರೆ ಮನೆಯ ತೋಮಸ್ ಎಂಬಾತ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇಯಲು ಬಿಟ್ಟ ದನವನ್ನು ಕಟ್ಟಿ ಹಾಕಲೆಂದು ತನ್ನ ಮನೆ ಪಕ್ಕದ ಪಂಚಾಯತ್ ರಸ್ತೆಗೆ ರೋಸಮ್ಮ ಹೋಗಿದ್ದ ವೇಳೆ ಆರೋಪಿ ತೋಮಸ್, ರೋಸಮ್ಮ ರಿಗೆ ಹಲ್ಲೆ ನಡೆಸಿ , ಆಕೆ ಧರಿಸಿದ ಬಟ್ಟೆಯನ್ನು ಹರಿದು ಹಾಕಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ, ರಕ್ಷಿಸಲು ಬಂದ ಆಕೆಯ ಮಗನಿಗೆ ಕತ್ತಿ ತೋರಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಹಾಗೂ ನನ್ನ ಬಗ್ಗೆ ಯಾರಿಗಾದರೂ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲವೆಂದು ಜೀವ ಬೆದರಿಕೆಯೊಡ್ಡಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಗೀಡಾದ ರೋಸಮ್ಮ ರವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಸಂಪೂರ್ಣ ಚಂದ್ರಗ್ರಹಣ: ಅಮೆರಿಕದಲ್ಲಿ ನೂರಾರು ಶಾಲೆಗಳಿಗೆ ರಜೆ
ವಾಶಿಂಗ್ಟನ್ : ಮುಂದಿನ ತಿಂಗಳು ನಡೆಯಲಿರುವ ಸಂಪೂರ್ಣ ಚಂದ್ರಗ್ರಹಣವನ್ನು ಎದುರಿಸಲು ಉತ್ತರ ಅಮೆರಿಕ ಖಂಡದಲ್ಲಿ ಭಾರೀ ಸಿದ್ಧತೆಗಳು ನಡೆಯುತ್ತಿವೆ. ಸುರಕ್ಷತಾ ಕಾರಣಗಳಿಗಾಗಿ ಹಲವು ಶಾಲೆಗಳನ್ನು ಮುಚ್ಚಲು ಅಮೆರಿಕ ನಿರ್ಧರಿಸಿದೆ. ಎಪ್ರಿಲ್ 8ರ ಖಗ್ರಾಸ ಚಂದ್ರಗ್ರಹಣದ ದಿನ ಅಮೆರಿಕದ ಹೆಚ್ಚಿನ ರಾಜ್ಯಗಳು ಕತ್ತಲೆಗೆ ಜಾರುತ್ತವೆ ಎನ್ನಲಾಗಿದೆ. ಚಂದ್ರಗ್ರಹಣದ ಪ್ರಭಾವಕ್ಕೆ ಒಳಪಡುವ ಅಮೆರಿಕದ ರಾಜ್ಯಗಳೆಂದರೆ- ಟೆಕ್ಸಾಸ್, ಓಕ್ಲಹಾಮ, ಅರ್ಕಾನ್ಸಸ್, ಮಿಝೂರಿ, ನ್ಯೂಯಾರ್ಕ್, ಪೆನ್ಸಿಲ್ವೇನಿಯ, ವರ್ಮಂಟ್, ಇಲಿನಾಯಿಸ್, ಇಂಡಿಯಾನ, ಓಹಿಯೊ, ನ್ಯೂಹ್ಯಾಂಪ್ಶಯರ್ ಮತ್ತು ಮೇನ್. ಸಂಪೂರ್ಣ ಚಂದ್ರಗ್ರಹಣವು ಸೌರ ವಿದ್ಯುತ್ ಉತ್ಪಾದನೆಯಲ್ಲಿ ಭಾರೀ ಖೋತಾಕ್ಕೆ ಕಾರಣವಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆ ದಿನ ಅಮೆರಿಕದಾದ್ಯಂತದ ನೂರಾರು ಶಾಲೆಗಳು ಮುಚ್ಚಲಿವೆ.
Money Seize : ಮಂಡ್ಯದಲ್ಲಿ ದಾಖಲೆ ಇಲ್ಲದ 1 ಕೋಟಿ ರೂಪಾಯಿ ವಶಕ್ಕೆ
Money Seize: ಗಿರೀಶ್ ಎಂಬುವವರು ತಮ್ಮ ಕ್ರೆಡಾ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ಪೇಟೆ ಕಡೆಗೆ ನಗದು ಸಾಗಾಟ ಮಾಡುತ್ತಿದ್ದರು. The post Money Seize : ಮಂಡ್ಯದಲ್ಲಿ ದಾಖಲೆ ಇಲ್ಲದ 1 ಕೋಟಿ ರೂಪಾಯಿ ವಶಕ್ಕೆ first appeared on Vistara News .
ಅಫ್ಘಾನ್ ನಲ್ಲಿ ಪಾಕ್ ವಾಯು ದಾಳಿಯಿಂದ 8 ಸಾವು: ತಾಲಿಬಾನ್ ಆರೋಪ
ಕಾಬೂಲ್ : ನಮ್ಮ ಭೂಭಾಗದ ಮೇಲೆ ಪಾಕಿಸ್ತಾನವು ಎರಡು ವಾಯು ದಾಳಿಗಳನ್ನು ನಡೆಸಿದೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ ಸೋಮವಾರ ಹೇಳಿದೆ. ದಾಳಿಯಲ್ಲಿ ಐವರು ಮಹಿಳೆಯರು ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಅದು ಆರೋಪಿಸಿದೆ. ಅದೇ ವೇಳೆ, ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಗಡಿಯುದ್ದಕ್ಕೂ ಪಾಕಿಸ್ತಾನಿ ಪಡೆಗಳ ಮೇಲೆ ಗಡಿಯುದ್ದಕ್ಕೂ ಭಾರೀ ಗುಂಡಿನ ದಾಳಿ ನಡೆಸಿರುವುದಾಗಿ ಅದು ಹೇಳಿದೆ. ಪಾಕಿಸ್ತಾನದಲ್ಲಿ ಇತ್ತೀಚೆಗೆ ನಡೆದಿರುವ ಹಲವು ಭಯೋತ್ಪಾದಕ ದಾಳಿಗಳಿಗೆ ಯಾರು ಕಾರಣ ಎಂಬ ಬಗ್ಗೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳು ಆರೋಪಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡಿವೆ. ದಾಳಿಗಳನ್ನು ಅಫ್ಘಾನಿಸ್ತಾನದ ನೆಲದಿಂದ ಮಾಡಲಾಗಿದೆ ಎಂದು ಪಾಕಿಸ್ತಾನ ಆರೋಪಿಸಿದರೆ, ಅಫ್ಘಾನಿಸ್ತಾನದ ಆಡಳಿತಾರೂಢ ತಾಲಿಬಾನ್ ಇದನ್ನು ನಿರಾಕರಿಸಿದೆ.
Property Auction: ಎಷ್ಟು ದಿನಗಳವರೆಗೆ EMI ಕಟ್ಟದಿದ್ದರೆ ಆಸ್ತಿ ಹರಾಜಾಗಲಿದೆ ಗೊತ್ತಾ? ಹೊಸ ರೂಲ್ಸ್
ವ್ಯಕ್ತಿಗಳು ತಮ್ಮ ಹಕ್ಕುಗಳನ್ನು ಅಥವಾ ಅವರು ಹೊಂದಿರುವ ಯಾವುದೇ ಆಕ್ಷೇಪಣೆಗಳನ್ನು 14 ದಿನಗಳೊಳಗೆ ಸಲ್ಲಿಸಲು ಸೂಚನೆಯು ಕೇಳುತ್ತದೆ. ಒಂದು ವೇಳೆ ಸಂಬಂಧಪಟ್ಟವರು ಸಲ್ಲಿಸದಿದ್ದಲ್ಲಿ ಆಸ್ತಿ ಹರಾಜಾ (Property Auction) ಗುತ್ತದೆ.. The post Property Auction: ಎಷ್ಟು ದಿನಗಳವರೆಗೆ EMI ಕಟ್ಟದಿದ್ದರೆ ಆಸ್ತಿ ಹರಾಜಾಗಲಿದೆ ಗೊತ್ತಾ? ಹೊಸ ರೂಲ್ಸ್ appeared first on Karnataka Times .
ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿ ಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚನೆ ನೀಡಿದ್ದಾರೆ. ಅವರು ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜಕೀಯ ಪಕ್ಷಗಳು, ಚುನಾವಣೆ ಸಂಬಂಧ ನಡೆಸಲಾಗುವ ಸಭೆ-ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳಿಗೆ, ವಾಹನ ಬಳಕೆಗಾಗಿ ಅನುಮತಿ ಪಡೆಯಲು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗಿರುವ ಏಕ ಗವಾಕ್ಷಿ ಪದ್ಧತಿಯಡಿ ಅರ್ಜಿ ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಭಾರತ ಚುನಾವಣಾ ಆಯೋಗವು ‘‘ಸುವಿಧಾ ಆಪ್’’ ಪರಿಚಯಿಸಿದೆ, ಈ ಆಪ್ ಮೂಲಕವು ಅನುಮತಿ ಪಡೆಯಬಹುದಾಗಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ಮತ್ತು ವಾಹನ ಪರವಾನಿಗೆಗಾಗಿಯೂ ಅನುಮತಿ ಪಡೆಯಬೇಕು. ಸ್ಟಾರ್ ಪ್ರಚಾರಕರು ಹಾಗೂ ಪ್ರಚಾರ ಸ್ಥಳಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಮಾದರಿ ನೀತಿ ಸಂಹಿತೆಯು ಎಲ್ಲಾ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಯಮಗಳನ್ನು ಪಾಲನೆ ಮಾಡುವುದರಿಂದ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಚುನಾವಣೆ ನಡೆಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಸಹ ಸಹಕಾರ ನೀಡಬೇಕೆಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಪಂಜಿಮೊಗರು ಸರಕಾರಿ ಶಾಲೆಯ ಆವರಣಗೋಡೆ ಕೆಡವಿಹಾಕಿರುವ ಕಾರ್ಪೊರೇಟರ್: ಡಿವೈಎಫ್ಐ ಆರೋಪ
ಕಾವೂರು: ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಪಂಜಿಮೊಗರು ಇಲ್ಲಿನ ಆವರಣಗೋಡೆ ನಿರ್ಮಾಣಕ್ಕೆ ಪಿಡ್ಲ್ಯೂಡಿ ಇಲಾಖೆಯಿಂದ ಅನುದಾನ ಮಂಜೂರು ಆಗಿರುತ್ತದೆ. ಶಿಥಿಲಗೊಂಡಿದ್ದ ಹಳೆಯ ಆವರಣಗೋಡೆಯನ್ನು ಕೆಡವಿ ಹೊಸ ಗೋಡೆ ನಿರ್ಮಾಣ ಆರಂಭಿಸುವಾಗ ಸ್ಥಳೀಯ ಕಾರ್ಪೊರೇಟರ್ ಅನಿಲ್ ಕುಮಾರ್ ಕಾಮಗಾರಿಗೆ ತಡೆಯೊಡ್ಡಿ ಅಕ್ರಮ ವಾಗಿ ಶಾಲೆಯ ಜಾಗದಲ್ಲಿ ರಸ್ತೆ ನಿರ್ಮಿಸಲು ಮುಂದಾಗಿದ್ದಾರೆ ಎಂದು ಡಿವೈಎಫ್ ಐ ಆರೋಪಿಸಿದೆ. ರಸ್ತೆ ಅಗಲೀಕರಣದ ಕುರಿತು ಶಾಲೆಯ ಹಾಗೂ ಶಿಕ್ಷಣ ಇಲಾಖೆಯ ಯಾವುದೇ ಅನುಮತಿ ಪಡೆಯದ ಕಾರಣ ಶಾಲೆಯ ಜಾಗವನ್ನು ಅತಿಕ್ರಮಣ ಮಾಡದಂತೆ ಶಾಲಾ ಆಡಳಿತ ಮಂಡಳಿ ಆದೇಶಿಸಿರುತ್ತದೆ. ಆದರೂ ಕಾರ್ಪೊರೇಟರ್ ಶಾಲೆಯ ತಡೆಗೋಡೆ ನಿರ್ಮಿಸಲು ತಡೆಯೊಡ್ಡುತ್ತಿದ್ದಾರೆ. ತಡೆಗೋಡೆ ಕೆಡವಿ ಹಲವು ತಿಂಗಳಾದರೂ ಕಾಮಗಾರಿ ಆರಂಭಿಸಿಲ್ಲ. ಮುಖ್ಯ ರಸ್ತೆಯ ಪಕ್ಕದಲ್ಲಿಯೇ ಇರುವ ಶಾಲೆಗೆ ತಡೆಗೋಡೆ ಇಲ್ಲದಿರುವುದರಿಂದ ಮಕ್ಕಳಿಗೆ ಹಾಗೂ ಶಾಲೆಯ ಸೊತ್ತುಗಳಿಗೆ ರಕ್ಷಣೆ ಇಲ್ಲದಾಗಿದೆ ಎಂದು ಡಿವೈಎಫ್ ಐ ದೂರಿದೆ. ಸರಕಾರಿ ಶಾಲೆಯ ಸ್ವಂತ ಜಾಗದಲ್ಲಿ ಇರುವ ಆವರಣಗೋಡೆಗೂ ನಗರಪಾಲಿಕೆಗೂ ಯಾವುದೇ ಸಂಬಂಧ ಇರುವುದಿಲ್ಲ. ರಸ್ತೆ ಆಗಲೀಕರಣದ ಯಾವುದೇ ಪ್ರಸ್ತಾವನೆಯೂ ಪಾಲಿಕೆಯಲ್ಲಿ ಈವರೆಗೆ ಮಾಡಿರುವ ದಾಖಲೆಗಳಿಲ್ಲ. ಆದರೂ ಸ್ಥಳೀಯ ಕಾರ್ಪೊರೇಟರ್ ಕಾಮಗಾರಿಗೆ ತಡೆಯೊಡ್ಡುತ್ತಿರುವುದು ಕಾನೂನು ಬಾಹಿರ ಎಂದು ಡಿವೈಎಫ್ಐ ಆಕ್ರೋಶ ವ್ಯಕ್ತಪಡಿಸಿದೆ. ಯಾವುದೇ ಲಿಖಿತ ವ್ಯವಹಾರಗಳಿಲ್ಲದೆ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಕಾಮಗಾರಿಯನ್ನು ಅಕ್ರಮ ವಾಗಿ ತಡೆಹಿಡಿದಿರುವುದು ಅಕ್ಷಮ್ಯ ಅಪರಾಧ ಹಾಗೂ ಸರಕಾರಿ ಶಾಲೆಗೆ ಕಾರ್ಪೊರೇಟರ್ ಅನ್ಯಾಯ ಮಾಡುತ್ತಿದ್ದಾರೆ. ರಸ್ತೆ ಅಗಲೀಕರಣ ಸಂದರ್ಭ ನ್ಯಾಯಯುತವಾಗಿ ಶಿಕ್ಷಣ ಇಲಾಖೆ ಅನುಮತಿ ಮೂಲಕ ಹಾಗೂ ನಗರ ಪಾಲಿಕೆ ಕಾಮಗಾರಿ ಮಂಜೂರಾದ ನಂತರ ನಡೆಯುವ ಕಾಮಗಾರಿಯನ್ನು ಡಿವೈಎಫ್ಐ ಬೆಂಬಲಿಸುತ್ತದೆ. ಆದರೆ ಈ ಪ್ರಕ್ರಿಯೆಗಳಿಗೆ ಸಾಕಷ್ಟು ಸಮಯವಕಾಶ ಬೇಕಾಗಿರುವುದರಿಂದ ಮಕ್ಕಳ ಹಾಗೂ ಶಾಲೆಯ ಹಿತದೃಷ್ಟಿಯಿಂದ ಈಗ ನಿಲ್ಲಿಸಿರುವ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು. ತಪ್ಪಿದ್ದಲ್ಲಿ ಕಾರ್ಪೊರೇಟರ್ ಹಾಗೂ ಗುತ್ತಿಗೆದಾರರ ವಿರುದ್ಧ ಪ್ರತಿಭಟನೆಯನ್ನು ಡಿವೈಎಫ್ಐ ಸಂಘಟಿಸಲಿದೆ ಎಂದು ಪಂಜಿಮೊಗರು ಘಟಕದ ಅಧ್ಯಕ್ಷ ಚರಣ್ ಶೆಟ್ಟಿ, ಕಾರ್ಯದರ್ಶಿ ಸಂತೋಷ್ ಡಿ'ಸೋಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗಾಝಾ: ಅಲ್ ಶಿಫಾ ಆಸ್ಪತ್ರೆಯಲ್ಲಿ ಇಸ್ರೇಲ್ ಸೇನೆಯ ಕಾರ್ಯಾಚರಣೆ
ಗಾಝಾ: ಗಾಝಾದ ಅತಿ ದೊಡ್ಡ ಆಸ್ಪತ್ರೆ ಅಲ್-ಶಿಫಾದ ಸುತ್ತ ಇಸ್ರೇಲ್ ಸೇನೆಯು ಸೋಮವಾರ ಕಾರ್ಯಾಚರಣೆ ನಡೆಸಿದೆ. ಆಸ್ಪತ್ರೆಯ ಸುತ್ತಮುತ್ತಲ ಸ್ಥಳಗಳ ಮೇಲೆ ವಾಯು ದಾಳಿಗಳು ನಡೆದಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಎಎಫ್ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. “ಇಸ್ರೇಲಿ ಸೈನಿಕರು ಈಗ ಶಿಫಾ ಆಸ್ಪತ್ರೆ ಇರುವ ಪ್ರದೇಶದಲ್ಲಿ ನಿಖರ ಕಾರ್ಯಾಚರಣೆ ನಡೆಸುತ್ತಿದ್ದಾರೆ” ಎಂದು ಇಸ್ರೇಲ್ ಸೇನೆಯ ಹೇಳಿಕೆಯೊಂದು ತಿಳಿಸಿದೆ. “ಹಿರಿಯ ಹಮಾಸ್ ಭಯೋತ್ಪಾದಕರು ಆಸ್ಪತ್ರೆಯನ್ನು ಬಳಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಗಳ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ’’ ಎಂದು ಹೇಳಿಕೆ ತಿಳಿಸಿದೆ. ಆಸ್ಪತ್ರೆಯ ಸುತ್ತ ಯುದ್ಧ ಟ್ಯಾಂಕ್ಗಳು ಜಮಾಯಿಸಿರುವುದನ್ನು ನೋಡಿರುವುದಾಗಿ ಗಾಝಾ ನಗರದಲ್ಲಿ ಪ್ರತ್ಯಕ್ಷದರ್ಶಿಗಳು ಎಎಫ್ಪಿಗೆ ತಿಳಿಸಿದ್ದಾರೆ. ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಸೇನಾ ದಾಳಿಗಳಿಂದ ನಿರ್ವಸಿತರಾಗಿರುವ ಸಾವಿರಾರು ಫೆಲೆಸ್ತೀನೀಯರು ಈ ಆಸ್ಪತ್ರೆಯ ಆವರಣದಲ್ಲಿ ಆಶ್ರಯ ಪಡೆದಿದ್ದಾರೆ. ಇಸ್ರೇಲ್ ಸೇನೆಯು ಕಳೆದ ವರ್ಷದ ನವೆಂಬರ್ ನಲ್ಲೂ ಅಲ್ ಶಿಫಾ ಆಸ್ಪತ್ರೆಯಲ್ಲಿ ಸೇನಾ ಕಾರ್ಯಾಚರಣೆ ನಡೆಸಿತ್ತು. ಆಗ ಅದು ಭಾರೀ ಅಂತರರಾಷ್ಟ್ರೀಯ ಆಕ್ರೋಶಕ್ಕೆ ಕಾರಣವಾಗಿತ್ತು. ಹಮಾಸ್ ತನ್ನ ಸೇನಾ ಕಾರ್ಯಾಚರಣೆಗಳನ್ನು ಆಸ್ಪತ್ರೆಗಳು ಮತ್ತು ವೈದ್ಯಕೀಯ ಕೇಂದ್ರಗಳಿಂದ ನಡೆಸುತ್ತಿದೆ ಎಂಬುದಾಗಿ ಇಸ್ರೇಲ್ ಪದೇ ಪದೇ ಆರೋಪಿಸಿದೆ. ಆದರೆ, ಗಾಝಾ ಪಟ್ಟಿಯಲ್ಲಿ ಆಡಳಿತ ನಡೆಸುತ್ತಿರುವ ಹಮಾಸ್ ಈ ಆರೋಪಗಳನ್ನು ನಿರಾಕರಿಸಿದೆ. ಗಾಝಾದಲ್ಲಿರುವ ಹಮಾಸ್ ಸರಕಾರದ ಮಾಧ್ಯಮ ಕಚೇರಿಯು ಇಸ್ರೇಲ್ ಸೇನೆಯ ಕಾರ್ಯಾಚರಣೆಯನ್ನು ಖಂಡಿಸಿದೆ. “ಇಸ್ರೇಲ್ ಸೇನೆಯು ಅಲ್-ಶಿಫಾ ವೈದ್ಯಕೀಯ ಸಂಕೀರ್ಣದೊಳಗೆ ಯುದ್ಧ ಟ್ಯಾಂಕ್ಗಳು, ಡ್ರೋನ್ಗಳು ಮತ್ತು ಶಸ್ತ್ರಾಸ್ತ್ರಗಳೊಂದಿಗೆ ನುಗ್ಗಿದೆ ಹಾಗೂ ಅಲ್ಲಿ ಗುಂಡಿನ ದಾಳಿ ನಡೆಸುತ್ತಿದೆ. ಇದು ಯುದ್ಧಾಪರಾಧವಾಗಿದೆ’’ ಎಂದು ಅದು ಹೇಳಿದೆ. ಆಸ್ಪತ್ರೆ ದ್ವಾರದಲ್ಲಿ ಇಸ್ರೇಲ್ ಸೇನೆಯಿಂದ ಬೆಂಕಿ?: ಗಾಝಾ ಆರೋಗ್ಯ ಸಚಿವಾಲಯ ಆರೋಪ ಅಲ್-ಶಿಫಾ ಆಸ್ಪತ್ರೆ ಆವರಣದ ಪ್ರವೇಶ ದ್ವಾರದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಗಾಝಾ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರಿಂದಾಗಿ ಆಸ್ಪತ್ರೆಯ ಆವರಣದಲ್ಲಿ ಆಸರೆ ಪಡೆದಿರುವ ನಿರಾಶ್ರಿತ ಮಹಿಳೆಯರು ಮತ್ತು ಮಕ್ಕಳು ಉಸಿರು ಉಸಿರುಗಟ್ಟುವಂತಾಯಿತು ಎಂದಿದೆ. ಆಸ್ಪತ್ರೆಯ ಒಳಗೆ ಸಂಪರ್ಕ ಕಡಿದಿದೆ ಹಾಗೂ ಶಸ್ತ್ರಚಿಕಿತ್ಸೆ ಮತ್ತು ತುರ್ತು ಚಿಕಿತ್ಸಾ ಘಟಕಗಳಿರುವ ಕಟ್ಟಡಗಳಲ್ಲಿ ಜನರು ಸಿಕ್ಕಿಹಾಕಿಕೊಂಡಿದ್ದಾರೆ. “ಬೆಂಕಿಯಿಂದಾಗಿ ಸಾವು-ನೋವುಗಳು ಸಂಭವಿಸಿವೆ. ಬೆಂಕಿಯ ತೀವ್ರತೆಯಿಂದಾಗಿ ಮತ್ತು ಕಿಟಿಕಿ ಕಡೆಗೆ ಬರುವವರ ಮೇಲೆ ದಾಳಿ ನಡೆಯುತ್ತಿರುವುದರಿಂದಾಗಿ ಯಾರನ್ನೂ ರಕ್ಷಿಸಲು ಸಾಧ್ಯವಾಗಿಲ್ಲ’’ ಎಂದು ಆರೋಗ್ಯ ಸಚಿಚಾಲಯ ತಿಳಿಸಿದೆ. ಇಸ್ರೇಲ್ ಪಡೆಗಳು ಆರೋಗ್ಯ ಸಂಸ್ಥೆಗಳ ವಿರುದ್ಧ ಇನ್ನೊಂದು ಅಪರಾಧ ನಡೆಸುತ್ತಿವೆ ಎಂದು ಅದು ಆರೋಪಿಸಿದೆ. ನಿರ್ವಸಿತರು ಎಲ್ಲಿಗೆ ಹೋಗಬೇಕು? ಗಾಝಾ ಪಟ್ಟಿಯಾದ್ಯಂತ ರವಿವಾರ ರಾತ್ರಿ ಇಸ್ರೇಲ್ ಸೇನೆಯ ದಾಳಿಯಲ್ಲಿ ಡಝನ್ಗಟ್ಟಳೆ ಜನರು ಮೃತಪಟ್ಟಿದ್ದಾರೆ ಎಂದು ಹಮಾಸ್ ಆಡಳಿತಕ್ಕೆ ಒಳಪಟ್ಟ ಆರೋಗ್ಯ ಸಚಿವಾಲಯ ಸೋಮವಾರ ಮುಂಜಾನೆ ತಿಳಿಸಿದೆ. ವಾರಾಂತ್ಯದಲ್ಲಿ, ಮಧ್ಯ ಗಾಝಾದ ಡೇಯಿರ್ ಅಲ್-ಬಲಾಹ್ನಲ್ಲಿರುವ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಒಂದೇ ಕುಟುಂಬದ 12 ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅದು ಹೇಳಿದೆ. ಕಳೆದ ಕೆಲವು ವಾರಗಳಿಂದ ದಕ್ಷಿಣ ಗಾಝಾವನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್ ಸೇನೆಯು ಆಕ್ರಮಣ ನಡೆಸುತ್ತಿದೆ. ಇಸ್ರೇಲ್ ಸೇನೆಯ ದಾಳಿಗೆ ಬೆದರಿ ಗಾಝಾದ ಇತರ ಭಾಗಗಳ ಜನರು ದಕ್ಷಿಣ ಗಾಝಾಕ್ಕೆ ಪಲಾಯನಗೈದಿದ್ದಾರೆ. ಹಮಾಸ್ ಭಯೋತ್ಪಾದಕರ ಬೆನ್ನತ್ತಿ ಇಸ್ರೇಲ್ ಸೇನೆಯು ಬರುವ ಮೊದಲು ದಕ್ಷಿಣ ಗಾಝಾದಲ್ಲಿ ಜಮಾಯಿಸಿರುವ ನಾಗರಿಕರು ಅಲ್ಲಿಂದ ಹೋಗಬೇಕು ಎಂಬುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ರವಿವಾರ ಎಚ್ಚರಿಕೆ ನೀಡಿದ್ದರು. ಆದರೆ, ಅವರು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆಯನ್ನು ಮಾನವಹಕ್ಕುಗಳ ಕಾರ್ಯಕರ್ತರು ಕೇಳುತ್ತಿದ್ದಾರೆ.
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು: ಕನ್ನಡ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಕನ್ನಡ ಕಡ್ಡಾಯಗೊಳಿಸುವ ಕಾಯ್ದೆ ಹಾಗೂ ಸುತ್ತೋಲೆಯನ್ನು ಪ್ರಶ್ನಿಸಿ ಮುಂಬೈನಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ ಸೇರಿದಂತೆ ಒಟ್ಟು ಎಂಟು ಕಂಪನಿಗಳು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿದೆ. ಅರ್ಜಿದಾರರು, ಸರ್ಕಾರದ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ಪೀಠ, ಸುತ್ತೋಲೆಯ ಅನುಸಾರ ವಾಣಿಜ್ಯ ಸಂಸ್ಥೆಗಳ ವಿರುದ್ಧ ಸದ್ಯಕ್ಕೆ ಬಲವಂತದ ಕ್ರಮ ಜರುಗಿಸಬಾರದು. ಅಂತೆಯೇ, ಕಾಯ್ದೆ ಯಾವ ದಿನದಿಂದ ಜಾರಿಗೆ ಬಂದಿದೆ? ಯಾವ ದಿನ ಸರ್ಕಾರದ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಅಧಿಸೂಚನೆಗೊಂಡು ಪ್ರಕಟವಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಈ ಕುರಿತ ದಾಖಲೆಗಳನ್ನು ಒದಗಿಸಿ ಎಂದು ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರಿಗೆ ಸೂಚಿಸಿ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ. ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ’ಕರ್ನಾಟಕದಲ್ಲಿ ವ್ಯಾಪಾರ ಮಾಡುವಾಗ ಕನ್ನಡ ನಾಮಫಲಕವಿರಬೇಕು. ಶೇ 60ರಷ್ಟು ಕನ್ನಡ ನಾಮಫಲಕ ಹಾಕಿದರೆ ಸಮಸ್ಯೆ ಏನು? ಎಂದು ವಾಣಿಜ್ಯ ಮಳಿಗೆಗಳ ಸಂಘದ ಪರ ವಕೀಲರನ್ನು ಮೌಖಿಕವಾಗಿ ಪ್ರಶ್ನಿಸಿದರು.ಇದಕ್ಕೆ ಅರ್ಜಿದಾರರ ಪರ ವಕೀಲರು, ಎಲ್ಲಾ ಬಗೆಯ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ-2022ರ ಜಾರಿ ಸಮರ್ಪಕವಾಗಿಲ್ಲ. ಜಾರಿ ದಿನಾಂಕದ ಬಗ್ಗೆ ಗೆಜೆಟ್ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಅಂತೆಯೇ, ಡಿಜಿಟಲ್ ನಾಮಫಲಕಗಳನ್ನು ಬದಲಿಸಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ’ ಎಂದು ಸ್ಪಷ್ಟಪಡಿಸಿದರು. ಸರ್ಕಾರ ಮತ್ತು ಬಿಬಿಎಂಪಿ ಸ್ವಲ್ಪ ಸಮಯಾವಕಾಶ ನೀಡಿದೆಯಾದರೂ ಅದು ಸಾಕಾಗುತ್ತಿಲ್ಲ. ಒಂದೇ ಬಾರಿಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ಫಲಕ ಬದಲಾವಣೆಗೆ ಮುಂದಾಗಿರುವುದರಿಂದ ನಾಮಫಲಕಗಳು ಸಕಾಲದಲ್ಲಿ ಲಭ್ಯವಾಗುತ್ತಿಲ್ಲ. ಆದರೆ, ಸರ್ಕಾರ ಮತ್ತು ಬಿಬಿಎಂಪಿ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇಲ್ಲದಿದ್ದರೆ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಲು ಮುಂದಾಗುತ್ತಿವೆ. ವ್ಯಾಪಾರಿಗಳ ವಿರುದ್ಧ ಇದೊಂದು ಉಗ್ರ ಕ್ರಮವಾಗಿದೆ. ಇದರಿಂದ ವಾಣಿಜ್ಯ ಸಂಸ್ಥೆಗಳ ವ್ಯಾಪಾರ, ವಹಿವಾಟಿಗೆ ತೊಂದರೆಯಾಗುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಚೆನ್ನೈ : ಡಿಎಂಕೆ ನೇತೃತ್ವದ ಮೈತ್ರಿಕೂಟದಡಿ ಸ್ಥಾನ ಹಂಚಿಕೆ ಮಾತುಕತೆಗಳು ಸೋಮವಾರ ಅಂತಿಮಗೊಂಡಿದ್ದು, 39 ಲೋಕಸಭಾ ಸ್ಥಾನಗಳ ಪೈಕಿ ತಮಿಳುನಾಡಿನ ಒಂಭತ್ತು ಮತ್ತು ಪುದುಚೇರಿಯ ಒಂದು ಸ್ಥಾನಗಳಿಗೆ ಕಾಂಗ್ರೆಸ್ ಸ್ಪರ್ಧಿಸಲಿದೆ. 2019ರಲ್ಲಿ ತಾನು ಸ್ಪರ್ಧಿಸಿದ್ದ ತಮಿಳುನಾಡಿನ ಒಂಭತ್ತು ಕ್ಷೇತ್ರಗಳ ಪೈಕಿ ಆರನ್ನು ಕಾಂಗ್ರೆಸ್ ಮರಳಿ ಪಡೆದಿದೆ. ಅದು ತಿರುವಲ್ಲೂರು (ಎಸ್ಸಿ),ಶಿವಗಂಗಾ,ಕೃಷ್ಣಗಿರಿ,ಕರೂರ್, ವಿರುಧುನಗರ ಮತ್ತು ಕನ್ಯಾಕುಮಾರಿಗಳಿಂದ ಮತ್ತೆ ಕಣಕ್ಕಿಳಿಯಲಿದೆ. ಕುಡ್ಡಲೂರು, ಮಾಯಿಲಡತುರೈ ಮತ್ತು ತಿರುನೆಲ್ವೇಲಿ ಅದಕ್ಕೆ ಹೊಸದಾಗಿ ದಕ್ಕಿರುವ ಲೋಕಸಭಾ ಕ್ಷೇತ್ರಗಳಾಗಿವೆ. ಕಾಂಗ್ರೆಸ್ 2019ರಲ್ಲಿ ಗೆದ್ದಿದ್ದ ಪುದುಚೇರಿ ಕ್ಷೇತ್ರವನ್ನು ಅದಕ್ಕೇ ಬಿಟ್ಟುಕೊಡಲಾಗಿದೆ. 2019ರ ಲೋಕಸಭಾ ಚುನಾವಣೆಗಳಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟವು 39ರಲ್ಲಿ 38 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಮೈತ್ರಿಕೂಟದ ಭಾಗವಾಗಿದ್ದ ಕಾಂಗ್ರೆಸ್ ಸ್ಪರ್ಧಿಸಿದ್ದ ಒಂಬತ್ತು ಕ್ಷೇತ್ರಗಳ ಪೈಕಿ ಎಂಟನ್ನು ಗೆದ್ದುಕೊಂಡಿತ್ತು. ಬಿಜೆಪಿ ನೇತೃತ್ವದ ಎನ್ ಡಿ ಎ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಆಡಳಿತಾರೂಢ ಡಿಎಂಕೆ 21 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಎಂಡಿಎಂಕೆ, ಐಯುಎಂಎಲ್ ಮತ್ತು ಕೆಎಂಡಿಕೆ (ಡಿಎಂಕೆ ಚಿಹ್ನೆ)ಗೆ ತಲಾ ಒಂದು ಕ್ಷೇತ್ರ ಹಾಗೂ ವಿಸಿಕೆ, ಸಿಪಿಎಂ, ಸಿಪಿಐಗೆ ತಲಾ ಎರಡು ಕ್ಷೇತ್ರಗಳನ್ನು ನೀಡಲಾಗಿದೆ. ಕಾಂಗ್ರೆಸ್ ಮತ್ತು ಡಿಎಂಕೆ ಇಂಡಿಯಾ ಮೈತ್ರಿಕೂಟದ ಭಾಗವಾಗಿವೆ.
ಉದ್ಯೋಗ ಕೊಡುವುದಾಗಿ ನಂಬಿಸಿ ವಂಚನೆ
ಬೈಂದೂರು, ಮಾ.18: ಟಾಸ್ಕ್ ಆಧಾರಿತ ಉದ್ಯೋಗ ಕೊಡುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ಮೋಸ ಮಾಡಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗರಾಜ(33) ಎಂಬವರಿಗೆ ಟಾಸ್ಕ್ ಆಧಾರಿತ ಉದ್ಯೋಗ ಕೊಡುವು ದಾಗಿ ನಂಬಿಸಿ ಟಾಸ್ಕ್ ನೀಡಲಾಗಿತ್ತು. ಬಳಿಕ ನಾಗರಾಜ್ ಅವರಿಂದ 5,25,000ರೂ. ಹಣ ಪಡೆದುಕೊಂಡು ಹಣ ಕೊಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ.
ಮಣಿಪಾಲ: ಹಳೆ ಪ್ರಕರಣದ ಆರೋಪಿ ಪಂಜಾಬ್ನಲ್ಲಿ ಬಂಧನ
ಮಣಿಪಾಲ, ಮಾ.18: ಪ್ರಕರಣವೊಂದಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ಆರೋಪಿ ಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಪಂಜಾಬ್ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಬಂಧಿತ ಆರೋಪಿ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾಮ್ಸನ್, ಶರಣಬಸವ ಆರೋಪಿಯನ್ನು ಪಂಜಾಬ್ ರಾಜ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣ | ಆಪ್ ನಾಯಕ ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ
ಹೊಸದಿಲ್ಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕ ಸತ್ಯೇಂದ್ರ ಜೈನ್ ಅವರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಬೇಳಾ ಎಂ. ತ್ರಿವೇದಿ ಹಾಗೂ ಪಂಕಜ್ ಮಿತ್ತಲ್ ಅವರನ್ನು ಒಳಗೊಂಡ ಪೀಠ, ತತ್ಕ್ಷಣವೇ ಶರಣಾಗುವಂತೆ ಮಧ್ಯಂತರ ಜಾಮೀನನಲ್ಲಿ ಬಿಡುಗಡೆಯಾಗಿರುವ ಸತ್ಯೇಂದ ಜೈನ್ ಅವರಿಗೆ ತಿಳಿಸಿತು. ಶರಣಾಗತರಾಗಲು ಸತ್ಯೇಂದ್ರ ಜೈನ್ ಅವರಿಗೆ ಒಂದು ವಾರಗಳ ಕಾಲಾವಕಾಶ ನೀಡುವಂತೆ ಅವರ ವಕೀಲರು ಮಾಡಿದ ಮೌಖಿಕ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಅವರ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಜನವರಿ 17ರಂದು ಕಾಯ್ದಿರಿಸಿದೆ. ಸತ್ಯೇಂದ್ರ ಜೈನ್ ಅವರಿಗೆ ನ್ಯಾಯಾಲಯ ವೈದ್ಯಕೀಯ ನೆಲೆಯಲ್ಲಿ 2023 ಮೇ 26ರಂದು ಮಧ್ಯಂತರ ಜಾಮೀನು ನೀಡಿತ್ತು. ಅನಂತರ ಅದನ್ನು ಕಾಲಕಾಲಕ್ಕೆ ವಿಸ್ತರಿಸಿತ್ತು.
SIM Card: ಸಿಮ್ ಕಾರ್ಡ್ ಪೋರ್ಟ್ ಮಾಡಿಸುವವರಿಗೆ ತಕ್ಷಣವೇ ಜಾರಿ ಬರುವಂತೆ ಹೊಸ ರೂಲ್ಸ್!
ಟೆಲಿಕಾಂ ಚಂದಾದಾರರು ಇತ್ತೀಚೆಗೆ ತಮ್ಮ ಸಿಮ್ ಕಾರ್ಡ್ (SIM Card) ಗಳನ್ನು ವಿನಿಮಯ ಮಾಡಿಕೊಂಡಿದ್ದರೆ ಅವರ ಪ್ರಸ್ತುತ ನೆಟ್ವರ್ಕ್ ಆಪರೇಟರ್ನಿಂದ ಪೋರ್ಟ್ (Port) ಮಾಡಲು ಸಾಧ್ಯವಾಗುವುದಿಲ್ಲ. The post SIM Card: ಸಿಮ್ ಕಾರ್ಡ್ ಪೋರ್ಟ್ ಮಾಡಿಸುವವರಿಗೆ ತಕ್ಷಣವೇ ಜಾರಿ ಬರುವಂತೆ ಹೊಸ ರೂಲ್ಸ್! appeared first on Karnataka Times .
ಕರ್ನಾಟಕದಲ್ಲಿ ನೀರಿನ ಬಿಕ್ಕಟ್ಟು| ಜನರಿಗೆ ನೆರವಾಗಲು ಮೋದಿ ಸರಕಾರದ ನಿರಾಕರಣೆ: ಕಾಂಗ್ರೆಸ್
ಹೊಸದಿಲ್ಲಿ : ರಾಜ್ಯದ ಹೆಚ್ಚಿನ ಭಾಗಗಳಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಕರ್ನಾಟಕದಲ್ಲಿ ನೀರಿನ ಅಭಾವ ಎದುರಾಗಿದೆ. ಆದರೂ ಕೇಂದ್ರದ ಮೋದಿ ಸರಕಾರವು ರಾಜ್ಯದ ಜನರಿಗೆ ನೆರವಾಗಲು ನಿರಾಕರಿಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸೋಮವಾರ ಆರೋಪಿಸಿದ್ದಾರೆ. ಕೇಂದ್ರದ ವಿರುದ್ಧ ದಾಳಿ ನಡೆಸಿರುವ ಅವರು,‘ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕದ ಶಿವಮೊಗ್ಗದಲ್ಲಿದ್ದಾರೆ. ತನ್ನ ಭಾಷಣದಲ್ಲಿ ಅವರು ರಾಜ್ಯದ ಕೆಲವು ಪ್ರಮುಖ ಸಮಸ್ಯೆಗಳನ್ನು ಪ್ರಸ್ತಾವಿಸುತ್ತಾರೆ ಮತ್ತು ಪರಿಹಾರವನ್ನು ಸೂಚಿಸುತ್ತಾರೆ ಎಂದು ನಾವು ಆಶಿಸಿದ್ದೇವೆ ’ ಎಂದು ತನ್ನ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ. ರಾಜ್ಯದ 236 ಜಿಲ್ಲೆಗಳ ಪೈಕಿ 223 ಜಿಲ್ಲೆಗಳಲ್ಲಿ ತೀವ್ರ ಬರ ಪರಿಸ್ಥಿತಿಯಿದೆ. ಬರ ಪರಿಹಾರಕ್ಕಾಗಿ 18,172 ಕೋ.ರೂ.ಗಳನ್ನು ಬಿಡುಗಡೆಗೊಳಿಸುವಂತೆ ರಾಜ್ಯ ಸರಕಾರವು ಮೋದಿ ಸರಕಾರವನ್ನು ಕೋರಿಕೊಂಡಿದೆ. ಈವರೆಗೆ ರಾಜ್ಯದ ಜನತೆಗೆ ನೆರವಾಗಲು ಮೋದಿ ಸರಕಾರವು ನಿರಾಕರಿಸಿದ್ದೇಕೆ ಎಂದು ಅವರು ಪ್ರಶ್ನಿಸಿದ್ದಾರೆ. ಗ್ರಾಮೀಣ ಆರ್ಥಿಕತೆಯ ಮೇಲೆ ಬರ ಪರಿಸ್ಥಿತಿಯ ಒತ್ತಡ ನಿವಾರಣೆಗೆ ನೆರವಾಗಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100ರಿಂದ 150ಕ್ಕೆ ಹೆಚ್ಚಿಸಲು ಕರ್ನಾಟಕ ಸರಕಾರವು ಬಯಸಿದೆ. ಯೋಜನೆಯಡಿ ಬರಗಾಲದ ಅವಧಿಯಲ್ಲಿ ಅದಕ್ಕೆ ಅವಕಾಶವೂ ಇದೆ. ಆದರೆ ಮೋದಿ ಸರಕಾರವು ಯೋಜನೆಯ ವಿಸ್ತರಣೆಯನ್ನು ಅನುಮೋದಿಸಿಲ್ಲ,ನರೇಗಾದಡಿ ಕಾರ್ಮಿಕರ ವೇತನಗಳ ಪಾವತಿಗೆ 1,600 ಕೋ.ರೂ.ಗಳನ್ನು ಬಿಡುಗಡೆ ಮಾಡುವಲ್ಲಿಯೂ ಅದು ವಿಫಲಗೊಂಡಿದೆ ಎಂದು ರಮೇಶ ಹೇಳಿದ್ದಾರೆ.
ಹಿಮಾಚಲ ಪ್ರದೇಶ | ಕಾಂಗ್ರೆಸ್ ಶಾಸಕರ ಅನರ್ಹತೆ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಹೊಸದಿಲ್ಲಿ : ಇತ್ತೀಚಿಗೆ ರಾಜ್ಯದಿಂದ ರಾಜ್ಯಸಭೆಗೆ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಅಡ್ಡ ಮತದಾನ ಮಾಡಿದ್ದ ಕಾಂಗ್ರೆಸ್ ನ ಆರು ಬಂಡುಕೋರ ಶಾಸಕರನ್ನು ಅನರ್ಹಗೊಳಿಸಿರುವ ಹಿಮಾಚಲ ವಿಧಾನಸಭಾ ಸ್ಪೀಕರ್ ಆದೇಶಕ್ಕೆ ತಡೆಯಾಜ್ಞೆ ನೀಡಲು ಸರ್ವೋಚ್ಚ ನ್ಯಾಯಾಲಯವು ಸೋಮವಾರ ನಿರಾಕರಿಸಿದೆ. ಸ್ಪೀಕರ್ ಕುಲ್ದೀಪ ಸಿಂಗ್ ಪಠಾನಿಯಾ ಅವರ ಕಚೇರಿಗೆ ನೋಟಿಸನ್ನು ಹೊರಡಿಸಿರುವ ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರ ಪೀಠವು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಸರ್ವೋಚ್ಚ ನ್ಯಾಯಾಲಯವು ಅನರ್ಹತೆಯನ್ನು ಪ್ರಶ್ನಿಸಿರುವ ಅರ್ಜಿಯ ಇತ್ಯರ್ಥವು ಬಾಕಿಯುಳಿದಿರುವಂತೆ ಅನರ್ಹ ಶಾಸಕರು ಸದನದ ಕಲಾಪಗಳಲ್ಲಿ ಭಾಗವಹಿಸಲು ಅಥವಾ ಮತದಾನ ಮಾಡಲು ಅನುಮತಿಯನ್ನು ನಿರಾಕರಿಸಿದೆ. ಮೇ 6ಕ್ಕೆ ವಿಚಾರಣೆಯನ್ನು ನಿಗದಿಗೊಳಿಸಿರುವ ನ್ಯಾಯಾಲಯವು ಅನರ್ಹ ಶಾಸಕರು ತಮ್ಮ ಉತ್ತರಗಳನ್ನು ಸಲ್ಲಿಸಲು ಒಂದು ವಾರದ ಸಮಯಾವಕಾಶವನ್ನು ನೀಡಿದೆ. ಬಂಡುಕೋರ ಶಾಸಕರಾದ ಸುಧೀರ ಶರ್ಮಾ,ರವಿ ಠಾಕೂರ್, ರಾಜಿಂದರ್ ರಾಣಾ,ಇಂದ್ರದತ್ತ ಲಖನಪಾಲ್,ಚೈತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ ಭುಟ್ಟೋ ಅವರನ್ನು ಫೆ.29ರಂದು ಅನರ್ಹಗೊಳಿಸಲಾಗಿತ್ತು.
ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಇರದಿದ್ದರೂ ವಾಣಿಜ್ಯ ಮಳಿಗೆ ಮುಚ್ಚುವಂತಿಲ್ಲ, ಹೈಕೋರ್ಟ್ ಮಧ್ಯಂತರ ಆದೇಶ
ಕರ್ನಾಟಕದಲ್ಲಿ ವ್ಯಾಪಾರ ವಹಿವಾಟು ನಡೆಸುವ ಅಂಗಡಿಗಳು, ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಪದಗಳ ಬಳಕೆ ಮಾಡುವಂತೆ ರಾಜ್ಯ ಸರಕಾರವು ಈ ಹಿಂದೆಯೇ ಸುತ್ತೋಲೆ ಹೊರಡಿಸಿದ್ದು, ನಾಮಫಲಕದಲ್ಲಿ ಕನ್ನಡ ಬಳಸದಿರುವ ಮಳಿಗೆಗಳನ್ನು ಬಂದ್ ಮಾಡಲು ಸರಕಾರವು ಮುಂದಾಗಿದೆ. ಆ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ತಕರಾರರು ಅರ್ಜಿ ಸಲ್ಲಿಕೆಯಾಗಿತ್ತು. ಅದರ ವಿಚಾರಣೆ ನಡೆಸಿರುವ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಸದ್ಯಕ್ಕೆ ಮಳಿಗೆಗಳನ್ನು ಮುಚ್ಚದಂತೆ ಸೂಚಿಸಿದೆ. ಅಲ್ಲದೇ, ಕರ್ನಾಟಕದಲ್ಲಿ ವ್ಯಾಪಾರ ಮಾಡುವಾಗ ಕನ್ನಡ ನಾಮಫಲಕವಿರಬೇಕು ಅದರಲ್ಲಿ ಏನು ಸಮಸ್ಯೆ ಎಂದು ಅರ್ಜಿ ಪರವಾದ ವಕೀಲರನ್ನು ಕೋರ್ಟ್ ಪ್ರಶ್ನಿಸಿದೆ. ಡಿಜಿಟಲ್ ನಾಮಫಲಕಗಳ ಬದಲಾವಣೆಗೆ ಹೆಚ್ಚು ಸಮಯ ಬೇಕಾಗುತ್ತದೆ ಹಾಗೂ ಫಲಕಗಳ ತಿದ್ದುಪಡಿಗೆ ಬೇಡಿಕೆ ಹೆಚ್ಚಿರುವುದರಿಂದ ಹೊಸ ಫಲಕಗಳು ತಲುಪುವುದು ತಡವಾಗುತ್ತಿರುವ ಬಗ್ಗೆಯೂ ಪ್ರಸ್ತಾಪವಾಗಿದೆ.
ಮಹಿಳೆಗೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು
ಬ್ರಹ್ಮಾವರ, ಮಾ.18: ಪೋಸ್ಟ್ ಆಫೀಸ್ ಬ್ಯಾಲೆನ್ಸ್ ಹೇಳುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.31ರಂದು ಹೇಮಲತಾ ಎಂಬವರಿಗೆ ಅಪರಿಚಿತರು ಕರೆ ಮಾಡಿ ಪೋಸ್ಟ್ ಆಫೀಸ್ ಬ್ಯಾಲೆನ್ಸ್ ಹೇಳುವುದಾಗಿ ನಂಬಿಸಿ ಮೊಬೈಲ್ನಲ್ಲಿ ಫೋನ್ ಪೇ ಇದೆಯಾ ಎಂದು ಕೇಳಿದರು. ಬಳಿಕ ಅದರ ಪಾಸ್ವರ್ಡ್ ಪಡೆದು, ಹೇಮಲತಾ ಅವರ ಬ್ಯಾಂಕ್ ಖಾತೆಯಿಂದ ಒಟ್ಟು 1,19,316ರೂ. ಹಣವನ್ನು ಆನ್ಲೈನ್ ಮೂಲಕ ವರ್ಗಾವಣೆ ಮಾಡಿ ಮೋಸ ಮಾಡಿರುವುದಾಗಿ ದೂರಲಾಗಿದೆ.
ಕಸ್ಟಮ್ಕೇರ್ ಹೆಸರಿನಲ್ಲಿ 75 ಸಾವಿರ ರೂ. ವಂಚನೆ
ಹಿರಿಯಡ್ಕ, ಮಾ.18: ಗೂಗಲ್ ಪೇ ಕಸ್ಟಮ್ಕೇರ್ ಹೆಸರಿನಲ್ಲಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರ್ ಎಂಬವರು ಮಾ.14ರಂದು ತನ್ನ ವ್ಯವಹಾರದ 6000ರೂ. ಹಣವನ್ನು ಗೂಗಲ್ ಪೇನಲ್ಲಿ ಕೈತಪ್ಪಿನಿಂದ ಬೇರೊಂದು ನಂಬರಿಗೆ ಕಳುಹಿಸಿದ್ದು, ಈ ಸಂಬಂಧ ಗೂಗಲ್ನಲ್ಲಿ ಸಿಕ್ಕಿದ ಕಸ್ಟಮರ್ ಕೇರ್ಗೆ ಕರೆ ಮಾಡಿದ್ದರು. ಹಣವನ್ನು ಹಿಂದಕ್ಕೆ ಪಡೆಯಲು 5 ಡಿಜಿಟ್ಗಳ ಸಂಖ್ಯೆಗಳ ಆ್ಯಪ್ನಲ್ಲಿ ನಮೂದಿಸುವಂತೆ ತಿಳಿಸಿದ್ದರು. ಅದರಂತೆ ನಂಬರ್ ನಮೂದಿ ಸಿದ ಬಳಿಕ ಇವರ ಖಾತೆಯಿಂದ 75,040ರೂ. ಹಣವನ್ನು ಆನ್ಲೈನ್ ಮೂಲಕ ವರ್ಗಾವಣೆ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.
ಡಬ್ಲ್ಯುಪಿಎಲ್ ದೇಶೀಯ ಆಟಗಾರ್ತಿಯರಿಗೆ ಹೊಸ ವೇದಿಕೆ ಕಲ್ಪಿಸಿದೆ: ಶ್ರೇಯಾಂಕಾ ಪಾಟೀಲ್
ಹೊಸದಿಲ್ಲಿ : ಡಬ್ಲ್ಯುಪಿಎಲ್ ಸ್ಪರ್ಧಾವಳಿಯು ದೇಶೀಯ ಆಟಗಾರ್ತಿಯರಿಗೆ ಹೊಸ ವೇದಿಕೆ ಕಲ್ಪಿಸಿದೆ. ಕ್ರಿಕೆಟ್ ನಿಂದ ಉತ್ತಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಅವಕಾಶವನ್ನು ನೀಡಿದೆ ಎಂದು ಮಹಿಳೆಯರ ಪ್ರೀಮಿಯರ್ ಲೀಗ್ ಚಾಂಪಿಯನ್ ಆರ್ಸಿಬಿಯ ಬೌಲಿಂಗ್ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಆರ್ಸಿಬಿಯ ಸ್ಪಿನ್ನರ್ ಗಳ ಪೈಕಿ ಶ್ರೇಯಾಂಕಾ(4-12)ಅವರ ಶ್ರೇಷ್ಠ ಬೌಲಿಂಗ್ , ಸೋಫಿ ಡಿವೈನ್, ನಾಯಕಿ ಸ್ಮತಿ ಮಂಧಾನ ಹಾಗೂ ಪೆರ್ರಿ ಅವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಆರ್ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಮೊದಲ ಬಾರಿ ಡಬ್ಲ್ಯುಪಿಎಲ್ ಪ್ರಶಸ್ತಿ ಜಯಿಸಿದೆ. ನಮಗೆ ಈಗ ಕ್ರಿಕೆಟ್ನ ದ ಏನಾದರೂ ಸಿಗುತ್ತದೆ. ಒಂದೆರಡು ವರ್ಷಗಳ ಹಿಂದೆ ಈ ಕ್ರೀಡೆಯಿಂದ ವೃತ್ತಿಜೀವನವಿದೆಯೇ ಎಂದು ಎಲ್ಲರೂ ಪ್ರಶ್ನಿಸಿದ್ದರು. ಡಬ್ಲ್ಯುಪಿಎಲ್ ದೇಶೀಯ ಆಟಗಾರ್ತಿಯರಿಗೆ ವೇದಿಕೆಯನ್ನು ತೆರೆದಿದೆ. ಇದಕ್ಕೆ ಬಿಸಿಸಿಐಗೆ ಧನ್ಯವಾದಗಳು. ಆಟಗಾರ್ತಿಯರು ಉತ್ತಮ ಪ್ರದರ್ಶನ ನೀಡುತ್ತಿರುವುದು ಸಂತೋಷಕರವಾಗಿದೆ. ಡಬ್ಲ್ಯುಪಿಎಲ್ ಒಂದು ದೊಡ್ಡ ಟೂರ್ನಿಯಾಗಿದ್ದು, ಅಲ್ಲಿ ನಾವು ನಮ್ಮ ಕೌಶಲ್ಯವನ್ನು ಪ್ರದರ್ಶಿಸಬಹುದು ಎಂದು ಶ್ರೇಯಾಂಕಾ ಹೇಳಿದರು. ನನಗೀಗ ತುಂಬಾ ಸಂತೋಷವಾಗಿದ್ದು, ತವರುಪಟ್ಟಣ ಬೆಂಗಳೂರಿಗೆ ಹೋಗಲು ಉತ್ಸುಕಳಾಗಿದ್ದೇನೆ. ನಾವೀಗ ಟ್ರೋಫಿ ಜಯಿಸಿದ್ದೇವೆ. ನಮಗೆ ಇದನ್ನು ವರ್ಣಿಸಲು ಪದಗಳೇ ಸಿಗುತ್ತಿಲ್ಲ. ಆದಷ್ಟು ಬೇಗನೆ ಬೆಂಗಳೂರಿಗೆ ತೆರಳಿ ಜನಸಮೂಹ ನಮ್ಮ ಹೆಸರನ್ನು ಜಪಿಸುವುದನ್ನು ಕೇಳಲು ಬಯಸಿದ್ದೇನೆ ಎಂದು ಕರ್ನಾಟಕದ ಆಟಗಾರ್ತಿ ಶ್ರೇಯಾಂಕಾ ತಿಳಿಸಿದರು.
ಕಾರ್ಕಳ, ಮಾ.18: ಪೆರ್ವಾಜೆ ಪತ್ತೊಂಜಿಕಟ್ಟೆ ಸರಕಾರಿ ಹಾಡಿಯಲ್ಲಿ ಮಾ.17ರಂದು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಉಮೇಶ, ಪ್ರೇಮಾನಂದ, ಪ್ರದೀಪ, ಸಂದೀಪ, ಗಣೇಶ ಎಂಬವರನ್ನು ಪೊಲೀಸರು ಬಂಧಿಸಿ, 1600ರೂ. ನಗದು ವಶಪಡಿಸಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ಹಾವು ಕಚ್ಚಿದ ಪರಿಣಾಮ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಾ.17ರಂದು ಸಂಜೆ ವೇಳೆ ಮಣಿಪುರ ಎಂಬಲ್ಲಿ ನಡೆದಿದೆ. ಮೃತರನ್ನು ಮಣಿಪುರ ಗ್ರಾಮದ ಸುಂದರಿ(80) ಎಂದು ಗುರುತಿಸಲಾಗಿದೆ. ಇವರು ಮನೆಯ ಹಿಂಬದಿಯಲ್ಲಿರುವ ಮಗ ಮನೆಗೆ ಹೋಗಿ ವಾಪಸ್ಸು ಬರುವಾಗ ಅಂಗಳದಲ್ಲಿ ನೋಡದೇ ನಾಗರ ಹಾವು ಒಂದರ ಮೇಲೆ ಕಾಲಿಟ್ಟರೆನ್ನಲಾಗಿದೆ. ಇದರಿಂದ ಹಾವು ಅವರ ಕಾಲಿಗೆ ಕಚ್ಚಿದೆ ಎಂದು ತಿಳಿದು ಬಂದಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ: ಹೆಂಗವಳ್ಳಿ ಗ್ರಾಮದ ಮರೂರು ಎಂಬಲ್ಲಿ ಅಡಿಕೆ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಹೆಂಗವಳ್ಳಿ ಗ್ರಾಮದ ಕೃಷ್ಣ(58) ಎಂದು ಗುರುತಿಸಲಾಗಿದೆ. ಇವರು ಫೆ.28ರಂದು ತಮ್ಮ ತೋಟದಲ್ಲಿರುವ ಮಾವಿನ ಮರದಿಂದ ಕಾಯಿ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಮಾ.17ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vistara News Polling Booth: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯೇ ದೊಡ್ಡಣ್ಣ!
Vistara News Polling Booth: ವಿಸ್ತಾರ ಪೋಲಿಂಗ್ ಬೂತ್ನಲ್ಲಿ ಸಂಗ್ರಹಿಸಿದ ಜನಾಭಿಪ್ರಾಯದ ಪ್ರಕಾರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. The post Vistara News Polling Booth: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯೇ ದೊಡ್ಡಣ್ಣ! first appeared on Vistara News .
ಉಡುಪಿ, ಮಾ.18: ನಗರದ ಶಿರಿಬೀಡು ಟವರ್ಸ್ ಅಪಾರ್ಟ್ಮೆಂಟ್ನ ಪಾರ್ಕಿಂಗ್ ಸ್ಥಳದಲ್ಲಿ ಮಾ.16ರಂದು ನಿಲ್ಲಿಸಿದ್ದ ತೌಸಿಫ್ ಅಹಮ್ಮದ್ ಎಂಬವರ ಕೆಎ-20-ವೈ-2990 ನಂಬರಿನ ಹೋಂಡಾ ಆಕ್ಟೀವಾ ಸ್ಕೂಟರ್ ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uttara Kannada News: ಲೋಕಸಭಾ ಚುನಾವಣೆಗೆ ಯಲ್ಲಾಪುರ ಕ್ಷೇತ್ರದಲ್ಲಿ ಸಕಲ ಸಿದ್ಧತೆ: ಅಜ್ಜಪ್ಪ ಸೊಗಲದ
Uttara Kannada News: ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಗಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಚುನಾವಣೆಯನ್ನು ಯಾವುದೇ ಲೋಪದೋಷವಿಲ್ಲದೆ ನಡೆಸಲಾಗುವುದು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ ತಿಳಿಸಿದ್ದಾರೆ. The post Uttara Kannada News: ಲೋಕಸಭಾ ಚುನಾವಣೆಗೆ ಯಲ್ಲಾಪುರ ಕ್ಷೇತ್ರದಲ್ಲಿ ಸಕಲ ಸಿದ್ಧತೆ: ಅಜ್ಜಪ್ಪ ಸೊಗಲದ first appeared on Vistara News .
Uttara Kannada News: ಲೋಕಸಭಾ ಚುನಾವಣೆಗೆ ಯಲ್ಲಾಪುರ ಕ್ಷೇತ್ರದಲ್ಲಿ ಸಕಲ ಸಿದ್ಧತೆ: ಅಜ್ಜಪ್ಪ ಸೊಗಲದ
Uttara Kannada News: ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಗಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಚುನಾವಣೆಯನ್ನು ಯಾವುದೇ ಲೋಪದೋಷವಿಲ್ಲದೆ ನಡೆಸಲಾಗುವುದು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ ತಿಳಿಸಿದ್ದಾರೆ. The post Uttara Kannada News: ಲೋಕಸಭಾ ಚುನಾವಣೆಗೆ ಯಲ್ಲಾಪುರ ಕ್ಷೇತ್ರದಲ್ಲಿ ಸಕಲ ಸಿದ್ಧತೆ: ಅಜ್ಜಪ್ಪ ಸೊಗಲದ first appeared on Vistara News .
Fraud Case : 10 ಕೋಟಿ ಮೌಲ್ಯದ ವಜ್ರ ಬರೀ 3 ಕೋಟಿಗೆ ಕೊಡ್ತೀವಿ ಅಂದವರು ಅಂದರ್!
Fraud Case : ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಹೋಟೆಲ್ನಲ್ಲಿ ನಕಲಿ ವಜ್ರ ಡೀಲ್ ನಡೆಸಿ ವಂಚಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. The post Fraud Case : 10 ಕೋಟಿ ಮೌಲ್ಯದ ವಜ್ರ ಬರೀ 3 ಕೋಟಿಗೆ ಕೊಡ್ತೀವಿ ಅಂದವರು ಅಂದರ್! first appeared on Vistara News .
Fraud Case : 10 ಕೋಟಿ ಮೌಲ್ಯದ ವಜ್ರ ಬರೀ 3 ಕೋಟಿಗೆ ಕೊಡ್ತೀವಿ ಅಂದವರು ಅಂದರ್!
Fraud Case : ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಹೋಟೆಲ್ನಲ್ಲಿ ನಕಲಿ ವಜ್ರ ಡೀಲ್ ನಡೆಸಿ ವಂಚಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. The post Fraud Case : 10 ಕೋಟಿ ಮೌಲ್ಯದ ವಜ್ರ ಬರೀ 3 ಕೋಟಿಗೆ ಕೊಡ್ತೀವಿ ಅಂದವರು ಅಂದರ್! first appeared on Vistara News .
ಮುನ್ನೂರು, ಬೆಳ್ಮ, ಅಂಬ್ಲಮೊಗರು ಗ್ರಾಮಗಳಲ್ಲಿನ ಸಮಸ್ಯೆ ನಿವಾರಣೆಗೆ ದ.ಕ. ಡಿಸಿಗೆ ಮನವಿ
ಮಂಗಳೂರು: ಮುನ್ನೂರು, ಬೆಳ್ಮ, ಅಂಬ್ಲಮೊಗರು ಗ್ರಾಮಗಳಲ್ಲಿ ಖಾಸಗಿ ವ್ಯಕ್ತಿಗಳಿಂದ ಕಳೆದ ಹಲವು ಸಮಯಗಳಿಂದ ವ್ಯಾಪಕ ಭೂಸ್ವಾಧೀನ ನಡೆಯುತ್ತಿದ್ದು, ಆ ಪ್ರದೇಶಗಳಲ್ಲಿ ಉಂಟಾಗಿರುವ ತೊಂದರೆ, ಆತಂಕಗಳ ಕುರಿತು ಕೃಷಿ ಭೂಮಿ ಸಂರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಸೋಮವಾರ ದ.ಕ. ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಅರ್ಪಿಸಲಾಯಿತು. ಉಳ್ಳಾಲ ತಾಲೂಕಿನ ಮುನ್ನೂರು, ಬೆಳ್ಮ, ಅಂಬಮೊಗರು ಗ್ರಾಮಗಳು ಕೃಷಿ ಪ್ರಧಾನ ಗ್ರಾಮಗಳಾಗಿರುವುದು ಮಾತ್ರ ವಲ್ಲ, ಕೃಷಿ ಬಿಕ್ಕಟ್ಟಿನ ಈ ಸಂದರ್ಭದಲ್ಲೂ ವ್ಯಾಪಕ ಕೃಷಿ ಚಟುವಟಿಕೆಗಳು ಇಂದಿಗೂ ನಡೆಯುತ್ತಿದೆ. ಕಳೆದ ಕೆಲವು ವರ್ಷ ಗಳಲ್ಲಿ ಈ ಗ್ರಾಮದ ಕೃಷಿ ಭೂಮಿಗಳನ್ನು ಖಾಸಗಿ ವ್ಯಕ್ತಿಗಳು ಅನುಮಾನಾಸ್ಪದ ರೀತಿಯಲ್ಲಿ ಖರೀದಿಸತೊಡಗಿದ್ದಾರೆ. ಸುಮಾರು ಇನ್ನೂರು ಎಕರೆಯಷ್ಟು ಕೃಷಿ ಭೂಮಿ ಈಗಾಗಲೇ ಮಾರಾಟವಾಗಿದೆ. ಬಲಾಢ್ಯ ಲಾಬಿಯೊಂದು ಈ ರೀತಿ ಏಜಂಟರನ್ನು ಮುಂದಿಟ್ಟು ಭೂಮಿಯನ್ನು ಖರೀದಿಸುತ್ತಿದೆ ಎಂಬ ಆರೋಪ ಕೇಳಿ ಬಂದಿವೆ. ಒಂದೇ ಭಾಗದಲ್ಲಿ ಭೂಮಿಯನ್ನು ಖರೀದಿಸುತ್ತಿರುವ ಉದ್ದೇಶ ನಿಗೂಢವಾಗಿದೆ. ಈ ಮೂರು ಗ್ರಾಮಗಳಲ್ಲಿ ಒಂದಕ್ಕೊಂದು ಅಂಟಿಕೊಂಡಿರುವ ಜಮೀನನ್ನು ಖರೀದಿಸುವಾಗ ಅಮಾಯಕ ರೈತರನ್ನು ವಿವಿಧ ರೀತಿಯಲ್ಲಿ ಮೋಸಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಲಾಗಿದೆ. ದೇರಳಕಟ್ಟೆಗೆ ತಾಗಿಕೊಂಡಿರುವ ಈ ಗ್ರಾಮಗಳ ಕೃಷಿ ಭೂಮಿಗೆ ಯಾವುದೇ ಬೆಲೆಯಿಲ್ಲ, ಕೃಷಿಯಲ್ಲದ ಅನ್ಯ ಉದ್ದೇಶ ಗಳಿಗೆ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ನಂಬಿಸಿ ಆತ್ಯಂತ ಅಗ್ಗದ ದರದಲ್ಲಿ ಏಜಂಟರು ಭೂಮಿಯನ್ನು ಮಾರಾಟ ಮಾಡಿಸಿದ್ದಾರೆ. ಕೆಲವೆಡೆ ರಸ್ತೆ ಸಂಪರ್ಕ ಇಲ್ಲ, ಅದರಿಂದ ನಿಮ್ಮ ಭೂಮಿ ಕೊನೆಗೆ ಯಾರಿಗೂ ಬೇಡದಂತಾಗುತ್ತದೆ ಎಂದು ಆತಂಕ ಹುಟ್ಟಿಸಿ ಮಾರಾಟ ಮಾಡಿಸಿದ್ದಾರೆ. ದಾಖಲೆಗಳು ಸರಿ ಇಲ್ಲದ, ಕುಟುಂಬಗಳಲ್ಲಿ ತಕರಾರು ಇದ್ದ ಜಮೀನುಗಳನ್ನು ವಿವಿಧ ರೀತಿಯ ತಂತ್ರ, ಆಮಿಷಗಳ ಮೂಲಕ ತಮ್ಮ ಪಾಲು ಮಾಡಿಕೊಂಡಿರುತ್ತಾರೆ. ಕೆಲವೆಡೆ ದಶಕಗಳ ಹಿಂದೆ ಕೈ ಬರಹದ ಮೂಲಕ ಖರೀದಿ ಮಾಡಿದ ಗ್ರಾಮಸ್ಥರ ಭೂಮಿಯನ್ನು ಅವರ ಗಮನಕ್ಕೆ ತಾರದೆ ಮೂಲ ಮಾಲಕರಿಂದ ಖರೀದಿ ಮಾಡಿ ವಂಚಿಸಿದ್ದಾರೆ ಎಂಬ ಆರೋಪವೂ ಇದೆ. ಮಾರಾಟ ಮಾಡುವುದಿಲ್ಲ ಎಂದು ಹಠ ಹಿಡಿದವರನ್ನು ಬೆದರಿಸಿ, ರಸ್ತೆ ಸಂಪರ್ಕ ಕಡಿತದ ಭೀತಿ ಹುಟ್ಟಿಸಿ ಖರೀದಿ ಮಾಡುವ ಘಟನೆಗಳೂ ನಡೆದಿದೆ. ಈಗಾಗಲೇ ಮಾರಾಟಗೊಂಡಿರುವ ಜಮೀನಿನ ನಡುವೆ ಬಾಕಿ ಉಳಿದಿರುವ ಜಮೀನಿನ ಮಾಲಕರ ಸ್ಥಿತಿ ಅತಂತ್ರವಾಗಿದೆ. ಮರಾಟವಾಗಿರುವ ಜಮೀನುಗಳ ಒಳಗಿರುವ ಸರಕಾರಿ ಜಮೀನು, ರಸ್ತೆ, ನೀರು ಹರಿಯುವ ಕಾಲುವೆಗಳನ್ನು ಅತಿಕ್ರಮಿಸಲಾಗುತ್ತಿದೆ. ಕಾಲುವೆಗಳನ್ನು ಮುಚ್ಚಲಾಗುತ್ತಿದೆ. ಗುಡ್ಡಗಳನ್ನು ಸಮತಟ್ಟುಗೊಳಿಸಲಾಗುತ್ತಿದೆ. ನೂರಾರು ಟಿಪ್ಪರ್ ಗಳಲ್ಲಿ ಮಣ್ಣನ್ನು ಸಾಗಿಸಲಾಗುತ್ತಿದೆ. ಇದೆಲ್ಲವನ್ನು ನಿಯಮ ಬಾಹಿರವಾಗಿ ನಡೆಸಲಾಗುತ್ತಿದೆ. ಈ ಕುರಿತು ಸ್ಥಳೀಯ ಪಂಚಾಯತ್ ಗಳಿಗೆ ಯಾವುದೇ ಮಾಹಿತಿ ಇಲ್ಲ, ಅಥವಾ ಮಾಹಿತಿ ಇಲ್ಲದಂತೆ ವರ್ತಿಸಲಾಗುತ್ತಿದೆ. ಇದೆಲ್ಲದರಿಂದ ಈ ಮೂರೂ ಗ್ರಾಮಗಳಲ್ಲಿ ಅಸಹನೀಯ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಹೋರಾಟ ಸಮಿತಿಯು ಗಂಭೀರವಾಗಿ ಆರೋಪಿಸಿದೆ. ಈ ಕುರಿತು ಚರ್ಚಿಸಿದ ಹೋರಾಟ ಸಮಿತಿಯು, ಈ ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಬೇಕು ಹಾಗೂ ಸರಿಯಾದ ಕ್ರಮಗಳನ್ನು ಕೈಗೊಂಡು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿದೆ. ನಿಯೋಗದಲ್ಲಿ ಕೃಷಿ ಭೂಮಿ ಸಂರಕ್ಷಣಾ ಹೋರಾಟ ಸಮಿತಿಯ ಗೌರವ ಸಂಚಾಲಕ ಕೃಷ್ಣಪ್ಪ ಸಾಲ್ಯಾನ್, ಸಂಚಾಲಕ ಜಯಂತ ನಾಯಕ್, ಗೌರವ ಸಲಹೆಗಾರರಾದ ಕೆ.ಯಾದವ ಶೆಟ್ಟಿ, ಮುನೀರ್ ಕಾಟಿಪಳ್ಳ, ಸುನಿಲ್ ಕುಮಾರ್ ಬಜಾಲ್, ಇತರ ಮುಖಂಡರಾದ ಜಯಂತ ಅಂಬ್ಲಮೊಗರು, ಇಬ್ರಾಹಿಂ ಮದಕ, ಸುಂದರ ಅಂಬ್ಲಮೊಗರು ಮುಂತಾದವರು ಉಪಸ್ಥಿತರಿದ್ದರು.
Koppala News: ಸಂಸದ ಸಂಗಣ್ಣ ಕರಡಿ ಅವರ ಮುನಿಸು ಶೀಘ್ರ ಶಮನ, ಬಿಜೆಪಿ ಪರ ಪ್ರಚಾರ: ಡಾ. ಬಸವರಾಜ ಕ್ಯಾವಟರ್
Koppala News: ಟಿಕೆಟ್ ಸಿಗದ ಹಿನ್ನೆಲೆ ಅಸಮಧಾನಗೊಂಡಿರುವ ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಸಂಗಣ್ಣ ಕರಡಿ ಅವರ ಮುನಿಸು ಶೀಘ್ರ ಶಮನವಾಗಲಿದ್ದು, ಬಿಜೆಪಿಯ ಪರವಾಗಿ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ತಿಳಿಸಿದ್ದಾರೆ. The post Koppala News: ಸಂಸದ ಸಂಗಣ್ಣ ಕರಡಿ ಅವರ ಮುನಿಸು ಶೀಘ್ರ ಶಮನ, ಬಿಜೆಪಿ ಪರ ಪ್ರಚಾರ: ಡಾ. ಬಸವರಾಜ ಕ್ಯಾವಟರ್ first appeared on Vistara News .
ಅಲೆಮಾರಿ ಶಿಳ್ಳೆಕ್ಯಾತ ಸಮುದಾಯಕ್ಕೆ ಮೀನು ಹಿಡಿಯಲು ನಿರ್ಬಂಧ
ಕುಂದಾಪುರ, ಮಾ.18: ಗುಲ್ವಾಡಿ ಅಣೆಕಟ್ಟು ಬಳಿ ನದಿ ತೀರದಲ್ಲಿ ಕಳೆದ 40 ವರ್ಷಗಳಿಂದ ತೆಪ್ಪದ ಮೂಲಕ ಮೀನು ಹಿಡಿದು ಜೀವನ ಸಾಗಿಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ(ಬುಡಕಟ್ಟು) ಸಮುದಾಯಕ್ಕೆ ಸೇರಿದ 6 ಕುಟುಂಬಗಳಿಗೆ ಕಳೆದ ಕೆಲವು ದಿನಗಳಿಂದ ಸ್ಥಳೀಯ ಕೆಲವೊಂದು ವ್ಯಕ್ತಿಗಳು ಮೀನು ಹಿಡಿಯಲು ನಿರ್ಬಂಧ ಹೇರಿ ನಿರಂತರ ದೌರ್ಜನ್ಯ ನಡೆಸುತ್ತಿರುವ ದೂರಿನ ಹಿನ್ನೆಲೆಯಲ್ಲಿ ಅಲೆಮಾರಿ ಸಂಘಟನೆಯ ನಾಯಕರುಗಳ ನಿಯೋಗ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿತು. ಗುಲ್ವಾಡಿ ಹೊಳೆ ಬದಿಯಲ್ಲಿ ದೌರ್ಜನ್ಯಕ್ಕೊಳಗಾದ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಗುಡಿಸಲಿಗೆ ನಿಯೋಗ ಭೇಟಿ ನೀಡಿತು. ಸ್ಥಳೀಯ ಅಲೆಮಾರಿ ಕುಟುಂಬಗಳು ಅನುಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತ ಮತ್ತು ಮೀನುಗಾರಿಕಾ ಇಲಾಖೆ ಕೂಡಲೇ ಕ್ರಮಕೈಗೊಳ್ಳಬೇಕೆಂದು ಕರಾವಳಿ ವೃತ್ತಿನಿರತ ಅಲೆಮಾರಿ (ಶಿಳ್ಳೆಕ್ಯಾತ) ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷ, ಡಿವೈಎಫ್ಐ ರಾಜ್ಯ ಮುಖಂಡ ಸಂತೋಷ್ ಬಜಾಲ್ ಆಗ್ರಹಿಸಿದರು. ಕಳೆದ ಒಂದು ವಾರಗಳಿಂದ ಮೀನುಗಾರಿಕೆಗೆ ತೆರಳದಂತೆ ನಿರ್ಬಂಧ ಹೇರಿ ನಿರಂತರ ದೌರ್ಜನ್ಯ ನೀಡುತ್ತಿರುವ ಬಗ್ಗೆ ಸ್ಥಳೀಯ ಪೊಲೀಸರಿಗೆ ಮತ್ತು ಮೀನುಗಾರಿಕಾ ಸಹಾಕಯ ನಿರ್ದೇಶಕರಿಗೆ ತಿಳಿಸಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಸಮುದಾಯ ನದಿಯಲ್ಲಿ ಅನುಮತಿ ಪಡೆದು ಮೀನು ಹಿಡಿಯಬೇಕು ಮತ್ತು ಅಲ್ಲಿಯವರೆಗೆ ನದಿಗೆ ತೆರಳದ ಹಾಗೆ ನಿರ್ಬಂಧ ಹೇರಿರುವುದು ಮೀನುಗಾರಿಕೆ ಇಲಾಖೆಯ ನಿಯಮಗಳ ಉಲ್ಲಂಘನೆಯಾಗಿದೆ. ನದಿ ನೀರಿನಲ್ಲಿ ತೆಪ್ಪದ ಮೂಲಕ ಮೀನು ಹಿಡಿಯಲು ಕಡ್ಡಾಯ ಪರವಾನಿಗೆ ಪಡೆಯುವ ಸರಕಾರದ ಯಾವುದೇ ನಿಯಮಗಳು ಜಾರಿಯಲ್ಲಿಲ್ಲ ಎಂದು ಅವರು ತಿಳಿಸಿದ್ದಾರೆ. ಅಲೆಮಾರಿ ಶಿಳ್ಳೆಕ್ಯಾತ ಸಮುದಾಯಗಳಂತಹ ಬುಡಕಟ್ಟು ಸಮುದಾಯ ಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು, ಅವರನ್ನು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ತರುವ ಸಲುವಾಗಿಯೇ ಕರ್ನಾಟಕ ರಾಜ್ಯ ಸರಕಾರದಡಿಯಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮವೂ ರಚನೆಯಾಗಿವೆ. ಆದ್ದರಿಂದ ಜಿಲ್ಲಾಡಳಿತ ಈ ಕೂಡಲೇ ಉಡುಪಿ ಜಿಲ್ಲಾಧ್ಯಂತ ನದಿ ತೀರದ ಬಳಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಗುಲ್ವಾಡಿ ಅಣೆಕಟ್ಟು ಬಳಿ ಸ್ಥಳೀಯರಿಂದ ದೌರ್ಜನ್ಯಕ್ಕೊಳಗಾಗುವ ಸಮುದಾಯಗಳಿಗೆ ರಕ್ಷಣೆಯನ್ನು ಒದಗಿಸಿ ತಪ್ಪಿತಸ್ತರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಸಮಸ್ಯೆಗಳು ಬಗೆಹರಿಯದೆ ಹೋದಲ್ಲಿ ಮುಂದಿನ ದಿನ ಸಂಬಂಧಪಟ್ಟ ಇಲಾಖೆ ಮುಂಭಾಗ ಪ್ರತಿಭಟನೆ ನಡೆಸಲಿದ್ದೇವೆ ಎಂದು ಸಂತೋಷ್ ಬಜಾಲ್ ಎಚ್ಚರಿಕೆ ನೀಡಿದ್ದಾರೆ. ನಿಯೋಗದಲ್ಲಿ ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್.ಕಾಂಚನ್, ಕಾರ್ಮಿಕ ಮುಖಂಡರಾದ ಜಿ.ಡಿ.ಪಂಜು, ಅಲೆಮಾರಿ ಸಂಘಟನೆಯ ಜೊತೆ ಕಾರ್ಯ ದರ್ಶಿ ಲಕ್ಷ್ಮಣ, ರಾಮ, ಶಂಕರ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು ಜಲಮಂಡಳಿ ಕೊಳವೆ ಬಾವಿಗಳಿಗೆ ಆಧುನಿಕ ರೊಬೋಟಿಕ್ ತಂತ್ರಜ್ಞಾನ ಅಳವಡಿಕೆಗೆ ಕ್ರಮ! ನೀರು ಉಳಿತಾಯ
Bengaluru Water Crisis: ಬೆಂಗಳೂರು ಜಲಮಂಡಳಿಯು ನೀರು ವ್ಯರ್ಥ ತಡೆಗಟ್ಟಲು ಹಾಗೂ ಆದಾಯ ನಷ್ಟ ತಗ್ಗಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕೊಳವೆ ಬಾವಿಗಳಿಗೆ ರೋಬೋಟಿಕ್ ತಂತ್ರಜ್ಞಾನ ಅಳವಡಿಸಲು ಮುಂದಾಗಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
Aston Martin DB12: ಅಂಬಾನಿಗೂ ಮೊದಲು ಭಾರತದಲ್ಲಿ ಈ ಕಾರು ಖರೀದಿಸಿದ ಜೊಮಾಟೊ ಸಿಇಒ ದೀಪಿಂದರ್! ಬೆಲೆ ಎಷ್ಟು ಗೊತ್ತಾ?
ಜೊಮಾಟೊ ಸಂಸ್ಥಾಪಕ ದೀಪಿಂದರ್ ಗೋಯಲ್ (Zomato CEO Deepinder Goel) ಈಗ ಆಸ್ಟನ್ ಮಾರ್ಟಿನ್ ಡಿಬಿ 12 ಸ್ಪೋರ್ಟ್ಸ್ ಕಾರ್ ಖರೀದಿಸಿದ್ದಾರೆ. Aston Martin DB12 ಎಕ್ಸ್ ಶೋ ರೂಂ ಬೆಲೆ 4.59 ಕೋಟಿ ರೂ. ಇದನ್ನು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಭಾರತದಲ್ಲಿ ಪ್ರಾರಂಭಿಸಲಾಯಿತು. ವರದಿಯ ಪ್ರಕಾರ, ದೀಪಿಂದರ್ ಗೋಯಲ್ ಆಸ್ಟನ್ ಮಾರ್ಟಿನ್ DB12 (Aston Martin DB12) ಅನ್ನು ಸ್ವೀಕರಿಸಿದ ಭಾರತದ ಮೊದಲ ವ್ಯಕ್ತಿಯಾಗಿದ್ದಾರೆ. The post Aston Martin DB12: ಅಂಬಾನಿಗೂ ಮೊದಲು ಭಾರತದಲ್ಲಿ ಈ ಕಾರು ಖರೀದಿಸಿದ ಜೊಮಾಟೊ ಸಿಇಒ ದೀಪಿಂದರ್! ಬೆಲೆ ಎಷ್ಟು ಗೊತ್ತಾ? appeared first on Karnataka Times .
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 536 ಶತಾಯುಷಿಗಳು
ಉಡುಪಿ: ಎರಡನೇ ಹಂತದಲ್ಲಿ ಎಪ್ರಿಲ್ 26ರಂದು ನಡೆಯುವ ಈ ಬಾರಿಯ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನಕ್ಕೆ ಎರಡೂ ಜಿಲ್ಲೆಗಳ ಜನತೆ, ವಿವಿಧ ಪಕ್ಷಗಳು ಹಾಗೂ ಸ್ಪರ್ಧಾಕಾಂಕ್ಷಿ ಅಭ್ಯರ್ಥಿಗಳು ಅವರವರ ಮಟ್ಟದಲ್ಲಿ ಸಿದ್ಧತೆ ನಡೆಸಲು ಪ್ರಾರಂಭಿಸಿದ್ದು, ಕ್ಷೇತ್ರದಲ್ಲಿ ಹಲವು ಸ್ವಾರಸ್ಯಕರ ಅಂಶಗಳು ಕಂಡುಬಂದಿವೆ. ಇದರಲ್ಲಿ ಪ್ರಮುಖವಾದುದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿರುವ ಶತಾಯುಷಿ ಮತದಾರರು. ಬದುಕಿನಲ್ಲೂ ಶತಕವನ್ನು ದಾಟಿ ಮುಂದುವರಿದ 536 ಮಂದಿ ಮತದಾರರೂ ಕ್ಷೇತ್ರದಲ್ಲಿದ್ದಾರೆ. ಕ್ಷೇತ್ರದಲ್ಲಿ ಒಟ್ಟು ಮತದಾರರ ಮಟ್ಟಿಗೆ ಉಡುಪಿ ಮೇಲುಗೈ ಪಡೆದಿದ್ದರೆ, ಶತಾಯುಷಿ ಮತದಾರರ ಮಟ್ಟಿಗೆ ಚಿಕ್ಕಮಗಳೂರು ಸ್ಪಷ್ಟ ಮುನ್ನಡೆ ಸಾಧಿಸಿದೆ. ಉಡುಪಿ ಜಿಲ್ಲೆಯಲ್ಲಿ 178 ಮಂದಿ 100+ ಮತದಾರರಿದ್ದರೆ, ಚಿಕ್ಕಮಗಳೂರಿನಲ್ಲಿ ಇದರ ಎರಡರಷ್ಟು 378 ಮಂದಿ ಇದ್ದಾರೆ. ಇಲ್ಲೂ ಮಹಿಳೆಯರೇ ಮೇಲುಗೈ: ಶತಾಯುಷಿ ಮತದಾರರಲ್ಲೂ ಮಹಿಳೆಯರದೇ ಮೇಲುಗೈ. ಒಟ್ಟು 536 ಮಂದಿಯಲ್ಲಿ 205 ಮಂದಿ ಪುರುಷರಾದರೆ, 331 ಮಂದಿ ಮಹಿಳೆಯರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಧಿಕ 148 ಮಂದಿ ಶತಾಯುಷಿಗಳಿದ್ದರೆ, ತರೀಕೆರೆಯಲ್ಲಿ 121 ಮಂದಿ ಇದ್ದಾರೆ. ಮೂರನೇ ಸ್ಥಾನ 71 ಮಂದಿ ಇರುವ ಉಡುಪಿ ವಿಧಾನಸಭಾ ಕ್ಷೇತ್ರ. ವಿಧಾನಸಭಾ ಕ್ಷೇತ್ರವಾರು ಶತಾಯುಷಿ ಮತದಾರರ ವಿವರ ಹೀಗಿದೆ: ಕುಂದಾಪುರದಲ್ಲಿ 21, ಉಡುಪಿಯಲ್ಲಿ 71, ಕಾಪು-50, ಕಾರ್ಕಳ-36, ಶೃಂಗೇರಿ-34, ಮೂಡಿಗೆರೆ-55, ಚಿಕ್ಕಮಗಳೂರು-148, ತರೀಕೆರೆ-121 ಮಂದಿ ಶತಾಯುಷಿ ಮತದಾರರಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 21,521 ಮಂದಿ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರಿದ್ದಾರೆ. ಇವರೊಂದಿಗೆ 17,959 ಮಂದಿ ವಿಕಲಚೇತನ ಮತದಾರರು ಸಹ ಕ್ಷೇತ್ರದಲ್ಲಿದ್ದಾರೆ. ಕುಂದಾಪುರದಲ್ಲಿ 2603, ಉಡುಪಿ 1840, ಕಾಪು 2336, ಕಾರ್ಕಳ 2137, ಶೃಂಗೇರಿ 1865, ಮೂಡಿಗೆರೆ 1936, ಚಿಕ್ಕಮಗಳೂರು 2755, ತರೀಕೆರೆ 2487 ಮಂದಿ ವಿಕಲಚೇತನರಿದ್ದಾರೆ. 21521 ಮಂದಿ ಹಿರಿಯ ಮತದಾರರು ಹಾಗೂ 17959 ವಿಕಲಚೇತನ ಮತದಾರರಿಗೆ ಮನೆಯಲ್ಲೇ ಮತದಾನ ಮಾಡುವ ಸೌಲಭ್ಯ ಪಡೆಯಲು ಅವಕಾಶವಿದೆ. ಇವರೆಲ್ಲರಿಗೂ ಜಿಲ್ಲಾಡಳಿತದಿಂದ ಅರ್ಜಿಗಳು ತಲುಪಲಿದ್ದು, ಮತ ಕೇಂದ್ರಗಳಿಗೆ ಬಂದು ಮತದಾನ ಮಾಡಲು ಸಾಧ್ಯವಿಲ್ಲದವರು, ಅನಾರೋಗ್ಯ ಪೀಡಿತರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಅವರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಮಾಡಿಕೊಳ್ಳಲಾಗುವುದು. ಆದರೆ ಸಾಧ್ಯವಿದ್ದವರು ಮತಗಟ್ಟೆಗೆ ಬಂದೇ ಮತ ಹಾಕುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮನವಿ ಮಾಡಿದ್ದಾರೆ. 47,804 ಮಹಿಳಾ ಮತದಾರರು ಅಧಿಕ: ಉಡುಪಿ- ಚಿಕ್ಕಮಗಳೂರು ಕ್ಷೇತ್ರ ಮಹಿಳೆಯರ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲೊಂದು. ಕ್ಷೇತ್ರದಲ್ಲಿ ಒಟ್ಟಾರೆಯಾಗಿ 7,62,558 ಪುರುಷ ಮತದಾರರಿದ್ದರೆ, ಇಲ್ಲಿರುವ ಮಹಿಳಾ ಮತದಾರರ ಸಂಖ್ಯೆ 8,10,362. ಅಂದರೆ 47,804 ಮಂದಿ ಅಧಿಕ. ಹೀಗಾಗಿ ಒಗ್ಗಟ್ಟಾಗಿ ಮಹಿಳೆಯರು ಮನಸ್ಸು ಮಾಡಿದರೆ ಅಭ್ಯರ್ಥಿಯ ಹಣೆಬರಹವನ್ನು ನಿರ್ಧರಿಸಬಲ್ಲರು! ಮಹಿಳೆಯರ ಮಟ್ಟಿಗೆ ಉಡುಪಿ ಜಿಲ್ಲೆ ಸದಾ ಮುಂದುವರಿದ ಜಿಲ್ಲೆಯಾಗಿದೆ. ಗಂಡು-ಹೆಣ್ಣುಗಳ ಅನುಪಾತದಲ್ಲಿ ಉಳಿದೆಲ್ಲ ಜಿಲ್ಲೆಗಳಿಗಿಂತ ಸದಾ ಉನ್ನತ ಸ್ಥಾನದಲ್ಲಿರುವ ಉಡುಪಿ ಜಿಲ್ಲೆಯಲ್ಲಿ 31,272 ಮಂದಿ ಮಹಿಳಾ ಮತದಾರರು ಅಧಿಕವಿ ದ್ದಾರೆ. ಅದೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವರ ಸಂಖ್ಯೆ 16,532 ಅಧಿಕ. ಯುವ ಮತದಾರರು: ಎ.26ರಂದು ಮೊದಲ ಬಾರಿ ಮತದಾನದ ಹಕ್ಕನ್ನು ಪಡೆಯುವ ಒಟ್ಟು 29,909 ಮಂದಿ ಯುವ ಮತದಾರರು ಸಹ ಈ ಕ್ಷೇತ್ರದಲ್ಲಿದ್ದಾರೆ. ಇವರ ಸಂಖ್ಯೆ ಕುಂದಾಪುದಲ್ಲಿ 3916, ಉಡುಪಿಯಲ್ಲಿ 4477, ಕಾಪು-4235, ಕಾರ್ಕಳ-4528, ಶೃಂಗೇರಿ-3346, ಮೂಡಿಗೆರೆ- 2692, ಚಿಕ್ಕಮಗಳೂರು-3796, ತರೀಕೆರೆ-2919. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರ ವಿವರ ಉಡುಪಿ ಜಿಲ್ಲೆ- ಕ್ಷೇತ್ರ ಪುರುಷರು ಮಹಿಳೆಯರು ತೃತೀಯ ಲಿಂಗಿ ಒಟ್ಟು ಕುಂದಾಪುರ 101066 109051 2 210119 ಉಡುಪಿ 105654 113372 2 219028 ಕಾಪು 91492 99382 5 190879 ಕಾರ್ಕಳ 92226 99905 0 192131 ಒಟ್ಟು 390438 421710 9 812157 ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ 81874 86209 1 168084 ಮೂಡಿಗೆರೆ 82835 87784 5 170624 ಚಿಕ್ಕಮಗಳೂರು 112797 117205 21 230023 ತರೀಕೆರೆ 94614 97454 2 192070 ಒಟ್ಟು 372120 388652 29 760801 ಚುನಾವಣಾ ಭದ್ರತೆಗೆ ಪೊಲೀಸ್ ನಿಯೋಜನೆ ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆಯೂ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದಕ್ಕಾಗಿ ಈಗಾಗಲೇ ಬೈಂದೂರಿನಲ್ಲಿ 3, ಕುಂದಾಪುರದಲ್ಲಿ 1, ಉಡುಪಿ ಮತ್ತು ಕಾಪುನಲ್ಲಿ ತಲಾ 2 ಹಾಗೂ ಕಾರ್ಕಳದಲ್ಲಿ 6 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಇಲ್ಲಿ ಪೊಲೀಸ್, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಐವರು ಸಿಬ್ಬಂದಿಗಳು ಮೂರು ಪಾಳಿಗಳಲ್ಲಿ ಸೇವೆ ಸಲ್ಲಿಸಲಿದ್ದಾರೆ. ಇನ್ನು ಪೊಲೀಸ್ ಇಲಾಖೆಯಿಂದ ಚುನಾವಣಾ ಸಮಯದ ಭದ್ರತೆಗಾಗಿ ಆರು ಮಂದಿ ಡಿವೈಎಸ್ಪಿಗಳು, 18 ಮಂದಿ ಇನ್ಸ್ಪೆಕ್ಟರ್ಗಳು, 51 ಮಂದಿ ಪಿಎಸ್ಐಗಳು, 101 ಮಂದಿ ಎಎಸ್ಐಗಳು, 480 ಮಂದಿ ಹೆಡ್ ಕಾನ್ಸ್ಟೇಬಲ್ಗಳು, 622 ಮಂದಿ ಕಾನ್ಸ್ಟೇಬಲ್ಗಳು ಹಾಗೂ 588 ಮಂದಿ ಹೋಮ್ಗಾರ್ಡ್ಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಇನ್ನಷ್ಟು ಸಿಬ್ಬಂದಿಗಳ ನಿಯೋಜನೆಗಾಗಿ ಕೋರಿಕೆ ಸಲ್ಲಿಸಿದ್ದೇವೆ ಎಂದೂ ಅವರು ಹೇಳಿದ್ದಾರೆ.
ಮೊಬೈಲ್ ಪೋರ್ಟಬಿಲಿಟಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ TRAI : ಜುಲೈ 1ರಿಂದ ಜಾರಿ
ಹೊಸ ದಿಲ್ಲಿ: ಭಾರತದಲ್ಲಿನ ಸಿಮ್ ಬದಲಾವಣೆ ಹಗರಣವನ್ನು ತಗ್ಗಿಸಲು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರವು ಇತ್ತೀಚೆಗೆ ಮೊಬೈಲ್ ನಂಬರ್ ಪೋರ್ಟಬಿಲಿಟಿಯಲ್ಲಿ ಬದಲಾವಣೆಗಳನ್ನು ತರುವುದಾಗಿ ಪ್ರಕಟಿಸಿತ್ತು. ಹೊಸ ನಿಯಮಗಳ ಪ್ರಕಾರ, ಯಾರಾದರೂ ಸಿಮ್ ಕಳೆದುಕೊಂಡರೆ ಅಥವಾ ಸಿಮ್ ಹಾನಿಗೊಳಗಾಗಿ ಹೊಸ ಸಿಮ್ ಖರೀದಿಸಿದರೆ, ಅಂಥವರು ಮುಂದಿನ 7 ದಿನಗಳ ಕಾಲ ಹೊಸ ಸಿಮ್ ಅನ್ನು ಪೋರ್ಟ್ ಮಾಡಲು ಅವಕಾಶವಿಲ್ಲ. ಈ ಹೊಸ ನಿಯಮಾವಳಿಗಳನ್ನು ದೂರಸಂಪರ್ಕ ಇಲಾಖೆಯ ಸಲಹೆ ಹಾಗೂ ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ನಂತರ ರೂಪಿಸಲಾಗಿದೆ ಎಂದು ಟ್ರಾಯ್ ಹೇಳಿದೆ. ಇದಲ್ಲದೆ, ಈ ನಿಯಮಗಳು ಜುಲೈ 1ರ ನಂತರ ಜಾರಿಗೆ ಬರಲಿವೆ ಎಂದೂ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರವು ಹೇಳಿದೆ. ಪೋರ್ಟಬಿಲಿಟಿ ನಿಯಮಗಳಲ್ಲಿನ ಬದಲಾವಣೆಯ ಹಿಂದಿರುವ ಚಿಂತನೆಯ ಕುರಿತು ವಿವರಿಸಿರುವ ಟ್ರಾಯ್, “ವಂಚಕ ಮಾರ್ಗದಲ್ಲಿ ಮೊಬೈಲ್ ನಂಬರ್ ಗಳನ್ನು ಪೋರ್ಟ್ ಮಾಡುವ ಅಭ್ಯಾಸವನ್ನು ತಗ್ಗಿಸಲು ಅಥವಾ ನಿರ್ಲಜ್ಜ ಸಾಧನಗಳ ಮೂಲಕ ಬದಲಾವಣೆ ಮಾಡಿಕೊಳ್ಳುವುದನ್ನು ತಡೆಯಲು ಈ ತಿದ್ದುಪಡಿ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ” ಎಂದು ಹೇಳಿದೆ. ಮೊಬೈಲ್ ಪೋರ್ಟಬಿಲಿಟಿ ಸೌಲಭ್ಯವು ಬಳಕೆದಾರರು ತಮ್ಮ ಹಾಲಿ ಸೇವಾದಾರರ ಸೇವೆಯಿಂದ ಅತೃಪ್ತರಾಗಿದ್ದರೆ, ತಮ್ಮ ಭೌಗೋಳಿಕ ಎಲ್ಲೆಯನ್ನು ಮೀರಿ ತಮ್ಮ ಮೊಬೈಲ್ ನಂಬರ್ ಗಳನ್ನು ಪೋರ್ಟ್ ಮಾಡಲು ಅವಕಾಶ ಒದಗಿಸುತ್ತದೆ. ಆದರೆ, ವಂಚಕರು ಹಾಲಿ ಜಾರಿಯಲ್ಲಿರುವ ಮೊಬೈಲ್ ನಂಬರ್ ಪೋರ್ಟಿಬಿಲಿಟಿ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವಂತೆ ಕಂಡು ಬರುತ್ತಿದ್ದು, ಇದರಿಂದಾಗಿ ಟ್ರಾಯ್ ಇತ್ತೀಚಿನ ಬದಲಾವಣೆಗಳನ್ನು ಘೋಷಿಸಿದೆ.
ಮಂಡ್ಯ ಕ್ಷೇತ್ರದ ಸೀಟು ಹಂಚಿಕೆ ಇನ್ನೂ ತೀರ್ಮಾನವಾಗಿಲ್ಲ: ಜೆಪಿ ನಡ್ಡಾ ಭೇಟಿ ಬಳಿಕ ಸುಮಲತಾ ಅಚ್ಚರಿಯ ಹೇಳಿಕೆ
ಬೆಂಗಳೂರು: ‘ಮಂಡ್ಯ ಲೋಕಸಭಾ ಕ್ಷೇತ್ರದ ಸೀಟು ಹಂಚಿಕೆ ಸಂಬಂಧ ಇನ್ನೂ ಅಂತಿಮ ತೀರ್ಮಾನವಾಗಿಲ್ಲ’ ಎಂದು ಹಾಲಿ ಸಂಸದೆ ಸಮಲತಾ ಅಂಬರೀಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸೋಮವಾರ ಹೊಸದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮಂಡ್ಯ ಕ್ಷೇತ್ರದ ಬಗ್ಗೆ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಕ್ಷೇತ್ರದಿಂದಲೇ ಟಿಕೆಟ್ ಕೊಡಲು ನಾನು ಕೇಳಿದ್ದೇನೆ. ಪ್ರಧಾನಿ ಮೋದಿಯವರು ನನಗೆ ಭರವಸೆ ನೀಡಿದ್ದಾರೆ. ನಿಮ್ಮನ್ನ ಮತ್ತು ನಿಮ್ಮ ಕಾರ್ಯಕರ್ತರನ್ನ ಕೈಬಿಡುವ ಪ್ರಶ್ನೆ ಇಲ್ಲ ಎಂದು ಭರವಸೆ ನೀಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು. ‘ನನ್ನ ಮುಂದಿನ ನಿರ್ಧಾರವನ್ನ ಕ್ಷೇತ್ರಕ್ಕೆ ತೆರಳಿ ನಮ್ಮ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ದೂರ ಹೋಗುವ ಪ್ರಶ್ನೆ ಇಲ್ಲ. ನನ್ನ ಲೋಕಸಭಾ ಅವಧಿ ಮುಕ್ತಾಯದ ನಂತರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ಸುಮಲತಾ ತಿಳಿಸಿದರು. ‘ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ನಿಶ್ಚಿಂತೆಯಾಗಿರಿ ಏನೂ ನಿರ್ಧಾರ ಆಗಿಲ್ಲ ಎಂದು ಜೆ.ಪಿ ನಡ್ಡಾ ಹೇಳಿದ್ದಾರೆ. ನಿಮ್ಮಂತಹ ನಾಯಕಿ ಬಿಜೆಪಿ ಪಕ್ಷಕ್ಕೆ ಬೇಕು. ಈ ಬಗ್ಗೆ ಸಭೆ ನಡೆಯಲಿದ್ದು, ಮಂಡ್ಯ ಕ್ಷೇತ್ರದ ಬಗ್ಗೆ ಅಂತಿಮ ತೀರ್ಮಾನವನ್ನು ತಿಳಿಸುತ್ತೇವೆಂದು ನಡ್ಡಾ ಹೇಳಿದ್ದಾರೆ’ ಎಂದು ಸುಮಲತಾ ಅಂಬರೀಶ್ ವಿವರಣೆ ನೀಡಿದರು. ನಾನು ಸ್ಪರ್ಧೆ ಮಾಡಬೇಕು ಎನ್ನುವುದಕ್ಕಿಂತ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧೆ ಮಾಡಬೇಕು. ಸ್ಪರ್ಧೆ ಮಾಡಿದರೆ ಮಂಡ್ಯದಲ್ಲಿ ಬಿಜೆಪಿ ಪಕ್ಷ ಉಳಿಯುತ್ತದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವ ವಿಚಾರ ಕೇವಲ ಊಹಾಪೋಹ. ಯಾವ ಕ್ಷೇತ್ರ ಖಾಲಿ ಇರುತ್ತೆ ಅಲ್ಲಿ ನನ್ನ ಹೆಸರು ಜೋಡಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತೇವೆಂದು ಆ ಪಕ್ಷ ಹೇಳುವುದು ಸಹಜ. ಬಿಜೆಪಿ ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಂಬುದನ್ನು ನೋಡಿಕೊಂಡು ತಮ್ಮ ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ. ನನ್ನ ಕಾರ್ಯಕರ್ತರನ್ನು ಬಿಟ್ಟು ನಿರ್ಧಾರ ಮಾಡುವುದಿಲ್ಲ. ಏನೇ ಆಗಲಿ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಸುಮಲತಾ ತಿಳಿಸಿದರು.
Basavaraja Bommai : ಚುನಾವಣೆ ಬಳಿಕ ಕಾಂಗ್ರೆಸ್ ಇಬ್ಭಾಗ, ಸರ್ಕಾರ ಪತನ; ಬೊಮ್ಮಾಯಿ ಭವಿಷ್ಯ
Basavaraja Bommai : ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಹೋಳಾಗಿ ಸರ್ಕಾರ ಪತನಗೊಳ್ಳಲಿದೆ ಎಂಬ ಭವಿಷ್ಯವನ್ನು ಬಸವರಾಜ ಬೊಮ್ಮಾಯಿ ಹೇಳಿದರು. ತಮಗೆ ಹಾವೇರಿ ಮತ ಕ್ಷೇತ್ರದಲ್ಲಿ ಯಾವುದೇ ಬಂಡಾಯ ಎದುರಾಗಿಲ್ಲ ಎಂದು ಅವರು ಹೇಳಿಕೊಂಡರು. The post Basavaraja Bommai : ಚುನಾವಣೆ ಬಳಿಕ ಕಾಂಗ್ರೆಸ್ ಇಬ್ಭಾಗ, ಸರ್ಕಾರ ಪತನ; ಬೊಮ್ಮಾಯಿ ಭವಿಷ್ಯ first appeared on Vistara News .
ಅಡ್-ಹಾಕ್ ಸಮಿತಿ ವಿಸರ್ಜಿಸಿದ ಐಒಎ, ಮತ್ತೆ ಅಧಿಕಾರ ವಹಿಸಿಕೊಂಡ ಭಾರತದ ಕುಸ್ತಿ ಫೆಡರೇಶನ್
ಹೊಸದಿಲ್ಲಿ: ಕುಸ್ತಿ ಒಕ್ಕೂಟದ ಆಡಳಿತವನ್ನು ನೋಡಿಕೊಳ್ಳಲು ನೇಮಿಸಲಾಗಿರುವ ಅಡ್-ಹಾಕ್(ತಾತ್ಕಾಲಿಕ) ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಭಾರತೀಯ ಒಲಿಂಪಿಕ್ಸ್ ಸಂಸ್ಥೆ(IOA)ಸೋಮವಾರ ಪ್ರಕಟಿಸಿದೆ. ರಾಷ್ಟ್ರೀಯ ಕುಸ್ತಿ ಫೆಡರೇಶನ್ ಅನ್ನು ಮರು ಸ್ಥಾಪಿಸಲಾಗಿದ್ದು, ಅದು ಕ್ರೀಡೆಯ ಮೇಲೆ ಸಂಪೂರ್ಣ ಆಡಳಿತಾತ್ಮಕ ನಿಯಂತ್ರಣವನ್ನು ಹೊಂದಿದೆ. ಹೀಗಾಗಿ ಇನ್ನು ಮುಂದೆ ಅಡ್ ಹಾಕ್ ಸಮಿತಿಯ ಅಗತ್ಯವಿಲ್ಲ ಎಂದು ಐಒಎ ತಿಳಿಸಿದೆ. ಮುಂದಿನ ತಿಂಗಳು ನಡೆಯುವ ಒಲಿಂಪಿಕ್ಸ್ ಅರ್ಹತಾ ಟೂರ್ನಮೆಂಟ್ ಗಾಗಿ ನಡೆದ ಆಯ್ಕೆ ಟ್ರಯಲ್ಸ್ ಅನ್ನು ಯಶಸ್ವಿಯಾಗಿ ಆಯೋಜಿಸಿದ ನಂತರ ಅಡ್ ಹಾಕ್ ಸಮಿತಿಯನ್ನು ವಿಸರ್ಜಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕ್ರೀಡಾ ಸಚಿವಾಲಯವು ಭಾರತದ ಕುಸ್ತಿ ಫೆಡರೇಶನ್(WFI)ಅನ್ನು ಅಮಾನತುಗೊಳಿಸಿದ ನಂತರ ಕಳೆದ ವರ್ಷದ ಡಿಸೆಂಬರ್ ನಲ್ಲಿ ಅಡ್-ಹಾಕ್ ಸಮಿತಿಯನ್ನು ರಚಿಸಲಾಗಿತ್ತು. ಜಾಗತಿಕ ಆಡಳಿತ ಮಂಡಳಿ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ನಿಂದ ವಿಧಿಸಲಾದ ನಿಷೇಧವನ್ನು ಫೆಬ್ರವರಿಯಲ್ಲಿ ಹಿಂಪಡೆಯಲಾಗಿತ್ತು. ಇದರಿಂದ ಡಬ್ಲ್ಯುಎಫ್ಐ ಸಮಾಧಾನದ ನಿಟ್ಟುಸಿರು ಬಿಟ್ಟಿತ್ತು. ಭಾರತದ ಕುಸ್ತಿ ಫೆಡರೇಶನ್ ಮೇಲೆ ವಿಧಿಸಲಾಗಿರುವ ನಿಷೇಧವನ್ನು ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ತೆಗೆದುಹಾಕಿರುವುದು ಹಾಗೂ ದಿಲ್ಲಿಯ ಹೈಕೋರ್ಟ್ನ ನಿರ್ದೇಶನದ ಪ್ರಕಾರ ಐಒಎ ನೇಮಿಸಿದ ಅಡ್ಹಾಕ್ ಸಮಿತಿಯು ಆಯ್ಕೆ ಟ್ರಯಲ್ಸ್ ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅಡ್ಹಾಕ್ ಸಮಿತಿಯನ್ನು ವಿಸರ್ಜಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಮಾರ್ಚ್ 10ರಂದು ಐಒಎ ಆದೇಶ ಹೊರಡಿಸಿತ್ತು. ಹೊಸದಾಗಿ ಚುನಾಯಿತರಾದ ಸಂಜಯ್ ಸಿಂಗ್ ನೇತೃತ್ವದ ಡಬ್ಲ್ಯುಎಫ್ಐ ತನ್ನದೇ ಆದ ನಿಯಮಗಳನ್ನು ಉಲ್ಲಂಘಿಸಿದ ನಂತರ ಭೂಪೇಂದರ್ ಸಿಂಗ್ ಬಜ್ವಾ ಅವರ ಅಧ್ಯಕ್ಷತೆಯಲ್ಲಿ ತಾತ್ಕಾಲಿಕ ಸಮಿತಿಯನ್ನು ಡಿಸೆಂಬರ್ 23ರಂದು ರಚಿಸಲಾಗಿತ್ತು. ಮುಂಬರುವ ಏಶ್ಯನ್ ಚಾಂಪಿಯನ್ಶಿಪ್ ನ ಹಾಗೂ ಮುಂದಿನ ತಿಂಗಳು ಕಿರ್ಗಿಸ್ತಾನ್ ನಲ್ಲಿ ನಿಗದಿಯಾಗಿರುವ ಏಶ್ಯನ್ ಒಲಿಂಪಿಕ್ಸ್ ಕ್ವಾಲಿಫೈಯರ್ ಗೆ ತಂಡಗಳನ್ನು ಆಯ್ಕೆ ಮಾಡಲು ಅಡ್-ಹಾಕ್ ಸಮಿತಿ ಈ ತಿಂಗಳಾರಂಭದಲ್ಲಿ ಟ್ರಯಲ್ಸ್ ಆಯೋಜಿಸಿತ್ತು. ಈ ಹಿಂದೆ ಡಬ್ಲ್ಯುಎಫ್ಐ ವಿರುದ್ಧ ಪ್ರತಿಭಟನೆ ನಡೆಸಿದ ಹೊರತಾಗಿಯೂ ಪ್ರಮುಖ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಟ್ರಯಲ್ಸ್ ನಲ್ಲಿ ಭಾಗವಹಿಸಿದ್ದರು. ವಿನೇಶ್ 50 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್ ಕ್ವಾಲಿಫೈಯರ್ಗೆ ತನ್ನ ಸ್ಥಾನ ಪಡೆದಿದ್ದರು. ಟ್ರಯಲ್ಸ್ ಸುಗಮವಾಗಿ ಹಾಗೂ ಯಶಸ್ವಿಯಾಗಿ ಮುಕ್ತಾಯಗೊಂಡ ಕಾರಣ ಕ್ರೀಡೆಯ ಆಡಳಿತಾತ್ಮಕ ನಿಯಂತ್ರಣವನ್ನು ಈಗ ಸಂಪೂರ್ಣವಾಗಿ ಡಬ್ಲ್ಯುಎಫ್ಐಗೆ ವರ್ಗಾಯಿಸಲಾಗಿದೆ. ಲೈಂಗಿಕ ಕಿರುಕುಳ ಹಾಗೂ ನಿಯಮಗಳ ಅನುಸರಣೆಯಂತಹ ಇತರ ಸಮಸ್ಯೆಗಳನ್ನು ಪರಿಹರಿಸಲು ಸುರಕ್ಷತಾ ಸಮಿತಿ ಅಧಿಕಾರಿಯನ್ನು ನೇಮಿಸಲು ಡಬ್ಲ್ಯುಎಫ್ಐಗೆ ಐಒಎ ಸೂಚನೆ ನೀಡಿದೆ. ಸ್ಥಾಪಿತ ಕಾರ್ಯವಿಧಾನಗಳು ಹಾಗೂ ಮಾರ್ಗಸೂಚಿಗಳ ಅನುಗುಣವಾಗಿ ಅತ್ಲೀಟ್ ಗಳ ಆಯೋಗದ ಚುನಾವಣೆಗಳನ್ನು ಕಾಲಮಿತಿಯಲ್ಲಿ ನಡೆಸುವಂತೆ ಡಬ್ಲ್ಯುಎಫ್ಐಗೆ ನಿರ್ದೇಶಿಸಲಾಗಿದೆ.
'ಆರ್ಸಿಬಿಗೆ ಮರಳಿರುವುದು ಒಳ್ಳೆಯದು': ಬೆಂಗಳೂರಿಗೆ ಕಿಂಗ್ ಕೊಹ್ಲಿ ಗ್ರ್ಯಾಂಡ್ ಎಂಟ್ರಿ!
Virat Kohli joined RCB Ahead of IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಸತತ ಎರಡು ತಿಂಗಳ ವಿರಾಮದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಿದ್ದಾರೆ. 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಮಿತ್ತ ವಿರಾಟ್ ಕೊಹ್ಲಿ ಸೋಮವಾರ ಆರ್ಸಿಬಿ ಕ್ಯಾಂಪ್ಗೆ ಸೇರ್ಪಡೆಯಾಗಿದ್ದು, ಅಭ್ಯಾಸವನ್ನು ಶುರು ಮಾಡಿದ್ದಾರೆ. ಆರ್ಸಿಬಿ ಶೇರ್ ಮಾಡಿರುವ ವಿಡಿಯೋದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಬೆಂಗಳೂರು ತಂಡಕ್ಕೆ ಮರಳಿರುವುದು ಒಳ್ಳೆಯದು ಎಂದು ಹೇಳಿದ್ದಾರೆ.
ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಾ.20ರಿಂದ ನಾಲ್ಕು ದಿನಗಳವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯವಾಗಿ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದೇ ರೀತಿ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ. ಎಪ್ರಿಲ್ನಲ್ಲೂ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮುಂಬರುವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮುಂದಿನ ಒಂದೆರಡು ದಿನ ಕರಾವಳಿಯ ಪಣಂಬೂರು ಮತ್ತು ಒಳನಾಡಿನ ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದು ಹವಮಾನ ಇಲಾಖೆ ಹೇಳಿದೆ.
ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್ ಸಿ ಬಿ ಮಹಿಳಾ ತಂಡ: ವಿರಾಟ್ ಕೊಹ್ಲಿ ಸಹಿತ ಹಲವರಿಂದ ಅಭಿನಂದನಾ ಸಂದೇಶ
ಹೊಸದಿಲ್ಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳೆಯರ ಕ್ರಿಕೆಟ್ ತಂಡ ರವಿವಾರ ರಾತ್ರಿ ಮಹಿಳೆಯರ ಪ್ರೀಮಿಯರ್ ಲೀಗ್(WPL)ಫೈನಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಜಯ ಸಾಧಿಸಿ ಚೊಚ್ಚಲ ಪ್ರಶಸ್ತಿ ಎತ್ತಿಹಿಡಿದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಸಹಿತ ಆರ್ ಸಿ ಬಿ ಪುರುಷರ ತಂಡದ ಹಲವು ಆಟಗಾರರು ಸಾಮಾಜಿಕ ಮಾಧ್ಯಮದ ಮೂಲಕ ಅಭಿನಂದನಾ ಸಂದೇಶವನ್ನು ಕಳುಹಿಸಿದ್ದು, ಐತಿಹಾಸಿಕ ಗೆಲುವಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಭಾರತದ ಬ್ಯಾಟಿಂಗ್ ಲೆಜೆಂಡ್ ಹಾಗೂ ಆರ್ ಸಿ ಬಿ ಪುರುಷರ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್ ಸಿ ಬಿ ಮಹಿಳೆಯರ ತಂಡದ ಸಾಧನೆಯನ್ನು ಕೊಂಡಾಡಿದರು. ವೀಡಿಯೊ ಕಾಲ್ ಮೂಲಕ ಕೊಹ್ಲಿ ಆರ್ ಸಿ ಬಿ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ಇನ್ಸ್ಟಾಗ್ರಾಮ್ ನಲ್ಲಿ ತನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಮೋಘ ಸಾಧನೆ ಮಾಡಿರುವ ಆರ್ ಸಿ ಬಿಯ ಮಹಿಳಾ ತಂಡವನ್ನು ಹೊಗಳಿದರು. ಪಂದ್ಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರ್ ಸಿ ಬಿ ನಾಯಕಿ ಸ್ಮತಿ ಮಂಧಾನ ಅವರು ಕೊಹ್ಲಿ ಅವರು ತನ್ನೊಂದಿಗೆ ಮಾತನಾಡಿರುವ ವಿಚಾರವನ್ನು ಬಹಿರಂಗಪಡಿಸಿದರು. ಭಾರೀ ಶಬ್ಬದ ಕಾರಣ ವೀಡಿಯೊ ಕಾಲ್ ಮೂಲಕ ಕೊಹ್ಲಿ ಅವರು ಹೇಳಿದ್ದ ಒಂದು ಶಬ್ದವೂ ನನಗೆ ಕೇಳಿಸಲಿಲ್ಲ. ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತನಾಡುವೆ. ಅವರು ಖುಷಿಯಾಗಿದ್ದಂತೆ ಕಂಡುಬಂದರು. ಕಳೆದ ವರ್ಷ ಅವರು ನಮ್ಮೊಂದಿಗೆ ಮಾತನಾಡಿದ್ದರು. ಇದು ನನಗೆ ವೈಯಕ್ತಿಕವಾಗಿ ಹಾಗೂ ಇಡೀ ತಂಡಕ್ಕೆ ನೆರವಾಗಿತ್ತು. ಅವರು ಈ ಫ್ರಾಂಚೈಸಿಯ ಭಾಗವಾಗಿದ್ದಾರೆ. ಕಳೆದ 15 ವರ್ಷಗಳಿಂದ ಇದ್ದಾರೆ ಎಂದು ಮಂಧಾನ ಹೇಳಿದರು. ಮಹಿಳೆಯರ ತಂಡದ ಗೆಲುವಿಗೆ ಇನ್ಸ್ಟ್ರಾಗ್ರಾಮ್ ಮೂಲಕ ತನ್ನ ಖುಷಿಯನ್ನು ವ್ಯಕ್ತಪಡಿಸಿರುವ ಆರ್ ಸಿ ಬಿ ಪುರುಷರ ತಂಡದ ಹಾಲಿ ನಾಯಕ ಎಫ್ಡು ಪ್ಲೆಸಿಸ್, ಆರ್ ಸಿ ಬಿ ಫ್ರಾಂಚೈಸಿಯು ಒಗ್ಗಟ್ಟಿನಿಂದ ಆಡಿದೆ ಎಂದರು. 2022ರಿಂದ ಆರ್ ಸಿ ಬಿ ಪರ ಆಡುತ್ತಿರುವ ಸ್ಫೋಟಕ ಶೈಲಿಯ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಎಕ್ಸ್ ನಲ್ಲಿ ತನ್ನ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಈ ಗೆಲುವು ಆರ್ ಸಿ ಬಿಗೆ ಸೌಂದರ್ಯ ತಂದಿದೆ ಎಂದು ಬಣ್ಣಿಸಿದರು. 2011ರಿಂದ 2017ರ ತನಕ ಆರ್ ಸಿ ಬಿಯನ್ನು ಪ್ರತಿನಿಧಿಸಿರುವ ವೆಸ್ಟ್ಇಂಡೀಸ್ ನ ಲೆಜೆಂಡರಿ ಬ್ಯಾಟರ್ ಕ್ರಿಸ್ ಗೇಲ್ ಕೂಡ ಅಭಿನಂದನಾ ಸಂದೇಶಕ್ಕೆ ಧ್ವನಿಗೂಡಿಸಿದರು. ಆರ್ ಸಿ ಬಿಯ ಮಹಿಳಾ ತಂಡಕ್ಕೆ ತನ್ನ ಅಭಿನಂದನಾ ಸಂದೇಶ ಕಳುಹಿಸಿದ ಗೇಲ್, ಆರ್ ಸಿ ಬಿಯ ಪ್ರಸಿದ್ಧ ಘೋಷಣೆ, ಈ ಸಲ ಕಪ್ ನಮ್ದೇ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ. 2014ರಿಂದ 2021ರ ತನಕ ಆರ್ ಸಿ ಬಿ ತಂಡದ ಪರ ಆಡಿರುವ ಆರ್ ಸಿ ಬಿಯ ಮಾಜಿ ಆಟಗಾರ ಯಜುವೇಂದ್ರ ಚಹಾಲ್ ಕೂಡ ತನ್ನ ಸಂತೋಷವನ್ನು ಹಂಚಿಕೊಂಡಿದ್ದಾರೆ. ಆರ್ ಸಿ ಬಿಯ ಮಾಜಿ ಹಾಗೂ ಹಾಲಿ ಆಟಗಾರರ ನಡುವಿನ ಬಲವಾದ ಸಂಬಂಧ ಹಾಗೂ ಬೆಂಬಲವನ್ನು ಉಲ್ಲೇಖಿಸಿದರು. ಆರ್ ಸಿ ಬಿ ಅಮೋಘ ಆಲ್ರೌಂಡ್ ಪ್ರದರ್ಶನದ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಎಲ್ಲಿಸ್ ಪೆರ್ರಿ ಅಜೇಯ 35 ರನ್ ಗಳಿಸಿದರೆ, ಕನ್ನಡತಿ ಶ್ರೇಯಾಂಕಾ ಪಾಟೀಲ್(4-12) ಹಾಗೂ ಸೋಫಿ ಮೊಲಿನೆಕ್ಸ್(3-20) ಅತ್ಯುತ್ತಮ ಬೌಲಿಂಗ್ ಮೂಲಕ ಆರ್ ಸಿ ಬಿ ಗೆಲುವಿಗೆ ನೆರವಾದರು. ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಓವರ್ ತನಕ ಗೆಲುವಿಗಾಗಿ ಹೋರಾಟ ನೀಡಿದ್ದರೂ ಛಲ ಬಿಡದ ಆರ್ ಸಿ ಬಿ ಡಬ್ಲ್ಯುಪಿಎಲ್ ಹಾಗೂ ಐಪಿಎಲ್ ನಲ್ಲಿ ಇದೇ ಮೊದಲ ಬಾರಿ ಟಿ-20 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಇದರಿಂದಾಗಿ ಆರ್ ಸಿ ಬಿ ಫ್ರಾಂಚೈಸಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. VIRAT KOHLI ON VIDEO CALL...!!! - Congratulating all the RCB Players. #WPLFinal #RCBvDC #DCvRCB #ViratKohli #SmritiMandhana pic.twitter.com/1as7EYG6UK — King¹⁸ (@KohliXhunter18) March 17, 2024
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯ 14 ಚೆಕ್ಪೋಸ್ಟ್ಗಳಲ್ಲಿ ಕಟ್ಟೆಚ್ಚರ
ಉಡುಪಿ, ಮಾ.18: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿ ರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಒಟ್ಟು 14 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ಅಕ್ರಮಗಳ ತಡೆಗೆ ಕಟ್ಟೆಚ್ಚರ ವಹಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊಲ್ಲೂರು ದಳಿ, ಶಿರೂರು, ಹೊಸಂಗಡಿ, ಕುಂದಾಪುರ ಕ್ಷೇತ್ರದ ಸಾಬರ ಕಟ್ಟೆ, ಉಡುಪಿ ಕ್ಷೇತ್ರದ ಗುಡ್ಡೆಯಂಗಡಿ ಮಣಿಪುರ ಕ್ರಾಸ್, ಉದ್ಯಾವರ, ಕಾಪು ಕ್ಷೇತ್ರದ ಹೆಜಮಾಡಿ, ಫಲಿಮಾರು, ಕಾರ್ಕಳದ ಮಾಳ, ಮುಂಡ್ಕೂರು, ಸಚ್ಚರಿ ಪೇಟೆ, ನಾಡ್ಪಾಲು, ಸೋಮೇಶ್ವರ, ಮುಡಾರು, ಬಜಗೋಳಿ, ಸಾಣೂರು, ಹೊಸ್ಮಾರು ನಲ್ಲೂರು ಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ವ್ಯಾಪಾಕ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಗಡಿ ಪ್ರದೇಶಗಳಲ್ಲಿರುವ ಚೆಕ್ಪೋಸ್ಟ್ಗಳಲ್ಲಿ ಜಿಲ್ಲೆಗೆ ಪ್ರವೇಶಿಸುವ ಪ್ರತಿ ವಾಹನಗಳ ವಿವರ ದಾಖಲಿಸಿ ತಪಾಸಣೆ ನಡೆಸಲಾಗುತ್ತಿದೆ. ಶಿರೂರು ಚೆಕ್ಪೋಸ್ಟ್ನಲ್ಲಿ ಎಆರ್ಓ ಮಂಜುನಾಥ, ಬೈಂದೂರು ತಹಶೀಲ್ದಾರ್ ಪ್ರದೀಪ್ ಆರ್., ಕಂದಾಯ ನಿರೀಕ್ಷಕ ಮಂಜು, ಶಿರೂರು ಗ್ರಾಮ ಲೆಕ್ಕಾಧಿಕಾರಿ ವಿಜಯ್ ಕುಮಾರ್ ಪೊಲೀಸ್ ಸಿಬ್ಬಂದಿ ಹಾಜರಿದ್ದು ತಪಾಸಣೆ ಕಾರ್ಯದಲ್ಲಿ ನಿರತರಾಗಿರುವುದು ಕಂಡುಬಂದಿದೆ. ‘ಉಡುಪಿ ಜಿಲ್ಲೆಯಾದ್ಯಂತ 14 ಚೆಕ್ಪೋಸ್ಟ್ಗಳು ಈಗಾಗಲೇ ಕಾರ್ಯಾ ಚರಿಸುತ್ತಿದ್ದು, ದಿನದ 24 ಗಂಟೆಗಳ ಕಾಲವೂ ಇಲ್ಲಿ ತಪಾಸಣೆ ಕಾರ್ಯ ನಡೆಯುತ್ತಿರುತ್ತದೆ. ಪ್ರತಿ ಚೆಕ್ಪೋಸ್ಟ್ನಲ್ಲಿ ಮೂವರು ಕಂದಾಯ ಅಧಿಕಾರಿಗಳು ಮತ್ತು ಒಬ್ಬರು ಪೊಲೀಸ್ ಸಿಬ್ಬಂದಿ ಇರುತ್ತಾರೆ. ರ್ಯಾಂಡಮ್ ಆಗಿ ಎಲ್ಲ ವಾಹನಗಳನ್ನು ತಪಾಸಣೆ ಮಾಡಲಾಗುತ್ತದೆ. ಇದರಲ್ಲಿ ದಾಖಲೆ ಇಲ್ಲದ ನಗದು, ಅಕ್ರಮ ಮದ್ಯ ಸಾಗಾಟ ಕಂಡುಬಂದರೆ ಕ್ರಮ ಜರಗಿಸ ಲಾಗುತ್ತದೆ. ಈವರೆಗೆ ಜಿಲ್ಲೆಯಲ್ಲಿ ಯಾವುದೇ ದಾಖಲೆ ಇಲ್ಲದ ನಗದು ವಶಪಡಿಸಿಕೊಂಡಿಲ್ಲ’ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ. ಅರುಣ್ ತಿಳಿಸಿದ್ದಾರೆ. ಚುನಾವಣೆ ಕರ್ತವ್ಯಕ್ಕಾಗಿ ಉಡುಪಿ ಜಿಲ್ಲೆಯಲ್ಲಿ ಒಟ್ಟು ಆರು ಡಿವೈಎಸ್ಪಿ, 18 ಪೊಲೀಸ್ ನಿರೀಕ್ಷಕರು, 51 ಪೊಲೀಸ್ ಉಪನಿರೀಕ್ಷಕರು, 101 ಸಹಾಯಕ ಪೊಲೀಸ್ ಉಪನಿರೀಕ್ಷಕರು, 480 ಹೆಡ್ಕಾನ್ಸ್ಟೇಬಲ್ಗಳು, 622 ಪೊಲೀಸ್ ಕಾನ್ಸ್ಟೇಬಲ್ಗಳು, 588 ಹೋಮ್ಗಾರ್ಡ್ಗಳನ್ನು ನಿಯೋಜಿಸಲಾಗಿದೆ’ -ಡಾ.ಅರುಣ್ ಕೆ., ಉಡುಪಿ ಎಸ್ಪಿ
ಲೌಡ್ ಸ್ಪೀಕರ್ ವಿಚಾರಕ್ಕೆ ಅಂಗಡಿ ಮಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ, ಇಬ್ಬರಿಗೆ ಶೋಧ
ಬೆಂಗಳೂರು: ಮೊಬೈಲ್ ಅಂಗಡಿಯಲ್ಲಿ ಹಾಕಲಾಗಿದ್ದ ಸ್ಪೀಕರ್ ಶಬ್ದ ಜಾಸ್ತಿಯಾಯಿತು ಎನ್ನುವ ಕಾರಣಕ್ಕೆ ಅಂಗಡಿ ಮಾಲಕನ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಐವರು ಪ್ರಮುಖ ಆರೋಪಿಗಳ ಪೈಕಿ ಮೂವರನ್ನು ಹಲಸೂರು ಗೇಟ್ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ನಗರದ ಸಿದ್ದಣ್ಣ ಗಲ್ಲಿಯ ನಗರ್ತಪೇಟೆಯಲ್ಲಿ ರವಿವಾರ(ಮಾ.17) ಸಂಜೆ ಕೃಷ್ಣ ಟೆಲಿಕಾಂ ಅಂಗಡಿ ಮಾಲಕ ಮುಖೇಶ್ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಬಂಧಿತರನ್ನು ಸುಲೇಮಾನ್(25), ಶಾನವಾಝ್(25) ಮತ್ತು ರೋಹಿತ್(25) ಎಂದು ಗುರುತಿಸಲಾಗಿದೆ. ಉಳಿದ ಆರೋಪಿಗಳಾದ ದಾನಿಶ್ ಮತ್ತು ತರುಣ ಎಂಬುವರಿಗೆ ಶೋಧ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುಖೇಶ್ ನೀಡಿದ ದೂರಿನ ಮೇರೆಗೆ ಸುಲೇಮಾನ್, ಶಾನವಾಝ್, ರೋಹಿತ್, ಡ್ಯಾನಿಶ್, ತರುಣ ಹಾಗೂ ಇತರರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ 506, 504, 149, 307, 323 ಹಾಗೂ 324 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೂರಿನಲ್ಲೇನಿದೆ?: ಬೆಂಗಳೂರು ನಗರದ ಜುಮಾ ಮಸೀದಿ ರಸ್ತೆಯ ಸಿದ್ದಣ್ಣ ಗಲ್ಲಿಯಲ್ಲಿ ಟೆಲಿಕಾಂ ಅಂಗಡಿಯನ್ನು ಇಟ್ಟುಕೊಂಡು ನಾನು ಜೀವನ ಮಾಡುತ್ತಿದ್ದೇನೆ. ಮಾ.17ರಂದು ಸಂಜೆ 6.30ಕ್ಕೆ ನಾನು ಅಂಗಡಿಯಲ್ಲಿ ಇರುವಾಗ ಸುಲೇಮಾನ್, ಶಾನವಾಝ್, ರೋಹಿತ್, ಡ್ಯಾನಿಶ್, ತರುಣ್ ಹಾಗೂ ಇತರರು ನನ್ನ ಅಂಗಡಿಗೆ ಬಂದು ಏಕೆ ಲೌಡ್ ಸ್ಪೀಕರ್ ಜೋರಾಗಿ ಹಾಕಿರುವೆ, ಇದರಿಂದ ನಮಗೆ ತೊಂದರೆಯಾಗುತ್ತಿದೆ ಎಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ನನ್ನ ಮುಖಕ್ಕೆ ಗುದ್ದಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಮುಖೇಶ್ ತನ್ನ ದೂರಿನಲ್ಲಿ ಉಲೇಖಿಸಿದ್ದಾರೆ. ಇನ್ನು ಘಟನೆಯ ಸಿಸಿಟಿವಿ ದೃಶ್ಯಾವಳಿಯನ್ನು ಹಂಚಿಕೊಂಡಿರುವ ಬಿಜೆಪಿ ‘ಕರ್ನಾಟಕ ತಾಲಿಬಾನ್ ಆಗುತ್ತಿದೆ, ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಸಂಘ ಪರಿವಾರದ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ. ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿಗೀತೆಗಳನ್ನು ಹಾಕಿದ್ದೇ ಮತಾಂಧ ದುರುಳರು ಹಲ್ಲೆ ಮಾಡಲು ಕಾರಣ. ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಪಾ‘ಕೈ’ಸ್ತಾನ್ ಸರಕಾರ ಮತಾಂಧರನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಆರೋಪಿಸಿದೆ. ಆದರೆ, ಘಟನೆ ಮಾ.17ರ ಸಂಜೆ 6:30ರ ಸುಮಾರಿಗೆ ನಡೆದಿದ್ದು, ಅದೇ ದಿನ ರಾತ್ರಿ 10:30ಕ್ಕೆ ದೂರು ಸ್ವೀಕರಿಸಿ, ಮರುದಿನ ಮಾ.18ರ 10.30 ಗಂಟೆಗೆ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ ಎಂದು ಎಫ್ಐಆರ್ ವರದಿಯಲ್ಲಿ ದಾಖಲಾಗಿದೆ. ಆದರೆ, ಮಾ.18ರ 11:20ಕ್ಕೆ ಬಿಜೆಪಿಯು, ‘ಎಫ್ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದೆ. ಆದರೆ, ಬಿಜೆಪಿ ಟ್ವೀಟ್ ಮಾಡುವ ಹೊತ್ತಿಗಾಗಲೇ ಎಫ್ಐಆರ್ ದಾಖಲಿಸಿ, ನ್ಯಾಯಾಲಯಕ್ಕೂ ರವಾನಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ದೂರುದಾರ ನೀಡಿದ ದೂರಿನಲ್ಲಿಯೂ ಆಝಾನ್, ಹನುಮಾನ್ ಚಾಲಿಸಾದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಆದರೆ, ಲೋಕಸಭಾ ಚುನಾವಣಾ ಹೊತ್ತಿನಲ್ಲಿ ಅಶಾಂತಿ ಹಬ್ಬಿಸಲು ಬಿಜೆಪಿ ಘಟನೆಗೆ ಕೋಮು ಬಣ್ಣ ನೀಡಿ ತಿರುಚುತ್ತಿದೆ ಎಂದು ಆರೋಪಿಸಲಾಗಿದೆ. ಮುಖೇಶ್ ಮೇಲೆ ಗುಂಪು ಹಲ್ಲೆ ನಡೆಸುವ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮುಖೇಶ್ ಅಂಗಡಿಗೆ ಬಂದ ಯುವಕರ ಗುಂಪೊಂದು ವಾಗ್ವಾದದಲ್ಲಿ ತೊಡಗುವುದು ಕಂಡು ಬರುತ್ತದೆ. ಒಂದು ಹಂತದಲ್ಲಿ ಮುಖೇಶ್ ಹಾಗೂ ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಕೊನೆಗೆ ಗುಂಪಿನಲ್ಲಿದ್ದ ಯುವಕನೊಬ್ಬ ಮುಖೇಶ್ಗೆ ಹಲ್ಲೆ ನಡೆಸುತ್ತಾನೆ. ನಂತರ ಮತ್ತೋರ್ವ ಯುವಕನೂ ಸೇರಿ ಮುಖೇಶ್ ಮೇಲೆ ಹಲ್ಲೆ ನಡೆಸುವುದು ಕಂಡು ಬರುತ್ತದೆ. ಈ ವೇಳೆ ಅಂಗಡಿಯಿಂದ ಹೊರ ಬರುವ ಮುಖೇಶ್ ಯುವಕರ ಮೇಲೆ ಪ್ರತಿ ಹಲ್ಲೆ ನಡೆಸುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತೇಜಸ್ವಿ ಸೂರ್ಯ ಆಕ್ರೋಶ: ಇನ್ನು ಹಲ್ಲೆಗೊಳಗಾದ ಮುಖೇಶ್ನನ್ನು ಭೇಟಿ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಾಂತ್ವನ ಹೇಳಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ರವಿವಾರ ಸಂಜೆ ಮುಖೇಶ್ ತನ್ನ ವ್ಯಾಪಾರವನ್ನು ನಡೆಸುತ್ತಿದ್ದರು. ಅವರು ಪ್ರತಿದಿನ ಸಂಜೆ ಭಕ್ತಿಗೀತೆಗಳನ್ನು ಕೇಳುವ ಅಭ್ಯಾಸವನ್ನು ಹೊಂದಿದ್ದರು. ಅದರಂತೆ ರವಿವಾರವೂ ಸ್ಪೀಕರ್ನಲ್ಲಿ ಹಾಡುಗಳು ಹಾಕಿದ್ದಾರೆ. ಆದರೆ ಕೆಲವು ದುಷ್ಕರ್ಮಿಗಳು ಅವರ ಅಂಗಡಿಗೆ ಬಂದು ಅವರೊಂದಿಗೆ ಜಗಳವಾಡಿದ್ದಾರೆ. ಕೂಡಲೇ ಸ್ಪೀಕರ್ ಸ್ವಿಚ್ಆಫ್ ಮಾಡಿ ಹನುಮಾನ್ ಚಾಲೀಸಾ ನುಡಿಸುವುದನ್ನು ನಿಲ್ಲಿಸುವಂತೆ ಹೆದರಿಸಿದ್ದಾರೆ. ಅದಕ್ಕೆ ಮುಖೇಶ್ ನಿರಾಕರಿಸಿದಾಗ ಅವರನ್ನು ಹೊರಗೆಳೆದು ಆರೇಳು ದುಷ್ಕರ್ಮಿಗಳು ಥಳಿಸಿದ್ದಾರೆ. ಅವರಿಗೆ ಆಗಿರುವ ಗಾಯಗಳನ್ನು ನೋಡಿದರೆ ಅವರನ್ನು ಹೇಗೆ ಥಳಿಸಿದ್ದಾರೆ ಎಂಬುದು ತಿಳಿಯುತ್ತದೆ ಎಂದು ಹೇಳಿದ್ದಾರೆ. ತಕ್ಷಣ, ಮುಖೇಶ್ ಮತ್ತು ಅಕ್ಕಪಕ್ಕದ ಅಂಗಡಿಯವರು ಎಫ್ಐಆರ್ ದಾಖಲಿಸಲು ಹತ್ತಿರದ ಪೊಲೀಸ್ ಠಾಣೆಗೆ ಹೋದರೆ ಅಲ್ಲಿ ವಿವರವಾದ ಲಿಖಿತ ದೂರು ಸಲ್ಲಿಸಿದ ನಂತರವೂ ಸ್ಥಳೀಯ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ, ತಡವಾಗಿ ಎಫ್ಐಆರ್ ದಾಖಲು ಮಾಡಲಾಗಿದೆ. ಸಿಸಿಟಿವಿಯಲ್ಲಿ ಕಂಡುಬರುವ ಎಲ್ಲಾ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಬೆಂಗಳೂರು ನಗರ ಆಯುಕ್ತರು ನಿಷ್ಪಕ್ಷಪಾತ ಮತ್ತು ವೃತ್ತಿಪರ ರೀತಿಯಲ್ಲಿ ತನಿಖೆ ನಡೆಸುವಂತೆ ನಾವು ಒತ್ತಾಯಿಸುತ್ತೇವೆ’ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಪ್ರಧಾನಿ ಮೋದಿಗೆ 'ಮಹಾಪ್ರಭು' ಎಂದ ಪ್ರಕಾಶ್ ರೈ, '6000 ಕೋಟಿ ರೂ. ತಗೊಂಡು ಏನ್ಮಾಡಿದ್ರಿ?'
Prakash Raj about Electoral bond: ಮಂಗಳೂರಿನಲ್ಲಿ ನಟ ಪ್ರಕಾಶ್ ರೈ ಚುನಾವಣಾ ಬಾಂಡ್ ಹಗರಣದ ಬಗ್ಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಮಹಾಪ್ರಭು' ಎಂದು ಕರೆಯುತ್ತಾ, ಮನ್ ಕಿ ಬಾತ್ನಲ್ಲಿ ಬಾಂಡ್ ಹಗರಣದ ಬಗ್ಗೆ ಮಾತನಾಡುವಂತೆ ತಾಕೀತು ಮಾಡಿದರು. ಇ.ಡಿ ಮೂಲಕ ಕಂಪನಿಗಳನ್ನು ಹೆದರಿಸಿ, ಅವರಿಂದ ಹಣ ವಸೂಲಿ ಮಾಡಿರುವುದಾಗಿ ಆರೋಪಿಸಿದರು. ಒಂದು ರಾಜಕೀಯ ಪಕ್ಷಕ್ಕೆ 6000 ಕೋಟಿ ರೂಪಾಯಿ ಯಾವುದಕ್ಕೆ ಬೇಕು? ಪ್ರಜಾಪ್ರಭುತ್ವದ ಚುನಾವಣೆಯಲ್ಲಿ ಗೆಲ್ಲಲು ಸಾವಿರಾರು ಕೋಟಿ ರೂಪಾಯಿ ಬೇಕಾಗುತ್ತದೆಯೇ ಎಂದು ಪ್ರಶ್ನಿಸಿದರು. ಇದೇ ವೇಳೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ ಹಾಗೂ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದರು.
ಐಪಿಎಲ್ ಆರಂಭಕ್ಕೆ ಮೊದಲು ಆರ್ ಸಿ ಬಿ ಪಾಳಯಕ್ಕೆ ವಿರಾಟ್ ಕೊಹ್ಲಿ ಸೇರ್ಪಡೆ
ಹೊಸದಿಲ್ಲಿ: ಭಾರತದ ರನ್ ಯಂತ್ರ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ಆರ್ ಸಿ ಬಿಯ ಅನ್ಬಾಕ್ಸ್ ಕಾರ್ಯಕ್ರಮಕ್ಕೆ ಮೊದಲು ಬೆಂಗಳೂರಿಗೆ ಆಗಮಿಸಿದ್ದಾರೆ. ಭಾರತ ಹಾಗೂ ಆರ್ ಸಿ ಬಿಯ ಪ್ರಮುಖ ಆಟಗಾರನಾಗಿರುವ ಕೊಹ್ಲಿ ಐಪಿಎಲ್ ಆರಂಭವಾದಾಗಿನಿಂದ ಆರ್ ಸಿ ಬಿ ಫ್ರಾಂಚೈಸಿಯನ್ನು ಪ್ರತಿನಿಧಿಸುತ್ತಿದ್ದಾರೆ. 9 ವರ್ಷಗಳ ಕಾಲ ಆರ್ ಸಿ ಬಿ ತಂಡದ ನೇತೃತ್ವ ವಹಿಸಿದ್ದರು. ಆರ್ ಸಿ ಬಿ ಎಕ್ಸ್ನಲ್ಲಿ ಕೊಹ್ಲಿ ಆಗಮನವನ್ನು ಘೋಷಿಸಿದ್ದು, ಎಲ್ಲವೂ ವೇಗವಾಗಿ ನಡೆಯುತ್ತಿದೆ. ನಾವು ನಿಧಾನಗತಿಯಲ್ಲಿಲ್ಲ ಎಂದು ಬರೆದುಕೊಂಡಿದೆ. ರವಿವಾರ ರಾತ್ರಿ ಮುಂಬೈ ಏರ್ಪೋರ್ಟ್ ನಲ್ಲಿದ್ದ ಕೊಹ್ಲಿ ಐಪಿಎಲ್ 2024ರಲ್ಲಿ ಭಾಗವಹಿಸಲು ಆರ್ ಸಿ ಬಿಯನ್ನು ಸೇರಿಕೊಳ್ಳಲು ಬೆಂಗಳೂರು ವಿಮಾನ ಏರಿದ್ದರು. ಕೊಹ್ಲಿ ವೈಯಕ್ತಿಕ ಕಾರಣಕ್ಕೆ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡಿದ್ದರು. ಆ ಸರಣಿಯನ್ನು ಭಾರತವು 4-1 ಅಂತರದಿಂದ ಗೆದ್ದುಕೊಂಡಿತ್ತು. ಐಪಿಎಲ್-2024 ಮಾರ್ಚ್ 22ರಂದು ಆರಂಭವಾಗಲಿದೆ. ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂ ನಲ್ಲಿ ನಡೆಯುವ ಐಪಿಎಲ್ ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿ ಬಿ)ತಂಡದೊಂದಿಗೆ ಸೆಣಸಾಡಿದ್ದರು.
Liquor Policy Case : ಆಪ್ ನಾಯಕರಿಗೆ ಕವಿತಾ 100 ಕೋಟಿ ಲಂಚ ಕೊಟ್ಟಿದ್ದು ಹೌದು; ಇಡಿ ಮಾಹಿತಿ
Liquor Policy Case : ಕವಿತಾ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. The post Liquor Policy Case : ಆಪ್ ನಾಯಕರಿಗೆ ಕವಿತಾ 100 ಕೋಟಿ ಲಂಚ ಕೊಟ್ಟಿದ್ದು ಹೌದು; ಇಡಿ ಮಾಹಿತಿ first appeared on Vistara News .
ಬೆಂಗಳೂರು: 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದು ಕೋರಿ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯನ್ನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ಏಕಸದಸ್ಯ ಪೀಠ ರದ್ದುಪಡಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ರಾಜೇಶ್ ಕೆ.ರೈ ಅವರಿದ್ದ ನ್ಯಾಯಪೀಠ, ತೀರ್ಪನ್ನು ಕಾಯ್ದಿರಿಸಿದೆ. ಶೀಘ್ರದಲ್ಲೇ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು, ರಾಜ್ಯ ಪಠ್ಯಕ್ರಮ ಅಳವಡಿಸಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ. ಅಲ್ಲದೇ, ಪರೀಕ್ಷೆಗಳು ತಮಾಷೆಯಲ್ಲ. ಮಕ್ಕಳು ಹಲವು ದಿನಗಳಿಂದ ಸಿದ್ದತೆ ಮಾಡಿಕೊಂಡಿರುತ್ತಾರೆ. ಆದರೆ, ಪರೀಕ್ಷಾ ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ಗೊಂದಲ ಆಗುತ್ತಿದೆ. ರಾಜ್ಯ ಶಿಕ್ಷಣ ಇಲಾಖೆಗೆ ಆರ್ಟಿಐ ಕಾಯಿದೆಯಡಿ ಪರೀಕ್ಷೆಗಳನ್ನು ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಳೆದ ವರ್ಷವೂ ಆರ್ಟಿಐ ಕಾಯಿದೆಯಡಿ ಸುತ್ತೋಲೆ ಹೊರಡಿಸಿ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಶಿಕ್ಷಣ ಇಲಾಖೆ ಸಮವರ್ತಿ ಪಟ್ಟಿಗೆ ಸೇರಿದ್ದು, ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಅವಕಾಶವಿದೆ ಎಂದು ಕೋರ್ಟ್ ಮನವರಿಕೆ ಮಾಡಿಕೊಟ್ಟಿರು.ಅರ್ಜಿದಾರರ ಪರ ವಕೀಲರು ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಕ್ಕೆ ಮುಂದಾಗಿರುವುದು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಗೆ ತದ್ವಿರುದ್ಧವಾಗಿದೆ. ಈ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಕಾನೂನುಬಾಹಿರ'' ಎಂದು ವಿವರಿಸಿದ್ದರು. ವಾದ ಪ್ರತಿವಾದ ಆಲಿಸಿದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿದೆ.
State Govt: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ! ರಾಜ್ಯ ಸರ್ಕಾರದ ಹೊಸ ನಿರ್ಧಾರ
ಕಳೆದ ಸಾಲಿನಲ್ಲಿ ಮೇ 31ಕ್ಕೂ ಮುನ್ನ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಲೇಬರ್ ಕಾರ್ಡ್ (Labour Card) ಪಡೆಯುವ ಜೊತೆಗೆ ನೋಂದಣಿ ಮಾಡಿರಬೇಕು. ಅದಾದ ಬಳಿಕ ನೋಂದಣಿ ಮಾಡಿಸಿದರೆ ಅವರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಯೋಜನೆಗೆ ಅರ್ಹತೆ ಸಿಗಲಾರದು. ಸದ್ಯ ಈ ಎಲ್ಲ ತರನಾದ ವಿಚಾರಗಳ ಬಗ್ಗೆ ಸರಕಾರವು (State Govt) ಕೂಲಂಕುಷವಾಗಿ ಪೂರ್ವ ಪರಿಶೀಲನೆ ಮಾಡುತ್ತಿದೆ. The post State Govt: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ! ರಾಜ್ಯ ಸರ್ಕಾರದ ಹೊಸ ನಿರ್ಧಾರ appeared first on Karnataka Times .
‘ಲೋಕಸಭಾ ಚುನಾವಣೆ’ ಟಿಕೆಟ್ ಹಂಚಿಕೆ ಅಸಮಾಧಾನ: ಬಿಜೆಪಿ ತೊರೆಯಲು ಸಜ್ಜಾದ ರಾಜ್ಯದ ಹಿರಿಯ ನಾಯಕರು?
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಘೋಷಣೆಯಾದ ಬೆನ್ನಲ್ಲೆ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಬಹಿರಂಗ ಆಕ್ರೋಶ ಹೊರಹಾಕುತ್ತಿರುವ ಹಿರಿಯ ನಾಯಕರು, ಪಕ್ಷ ತೊರೆಯಲು ಸಜ್ಜಾಗುತ್ತಿರುವುದು ಕಂಡು ಬರುತ್ತಿದೆ. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿಗೆ ಕೈಕೊಟ್ಟು ವಿ.ಸೋಮಣ್ಣಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಲು ಮಾಜಿ ಸಿಎಂ ಯಡಿಯೂರಪ್ಪ ಕಾರಣ. ಅವರಿಂದಲೆ, ನನಗೆ ಮೋಸ, ಅನ್ಯಾಯ ಆಗಿರುವುದು ಎಂದು ಬಹಿರಂಗ ಅಸಮಾಧಾನ ಹೊರಹಾಕಿರುವ ಮಾಧುಸ್ವಾಮಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ತೆರೆಮರೆಯ ಕಸರತ್ತು ಆರಂಭವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮೂಲಕ ಮಾಧುಸ್ವಾಮಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಯತ್ನ ಪಡುತ್ತಿದ್ದಾರೆ ಎನ್ನಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆ.ಸಿ. ಮಾಧುಸ್ವಾಮಿ, ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬು ವಿರುದ್ಧ ಪರಾಭವಗೊಂಡಿದ್ದರು. ಅನಂತರ, ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಧುಸ್ವಾಮಿ ಬಯಸಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ವಿ.ಸೋಮಣ್ಣ ಅವರಿಗೆ ಮಣೆ ಹಾಕಿರುವುದು ಮಾಧುಸ್ವಾಮಿ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೆ, ತುಮಕೂರಿನಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದು ಬಹಿರಂಗವಾಗಿಯೆ ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ. ಅದೇ ರೀತಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆಗೆ ಬಿಜೆಪಿ ಟಿಕೆಟ್ ನೀಡಿರುವುದರಿಂದ, ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಉಮೇಶ್ ಕತ್ತಿ ಅವರ ಸಹೋದರ ರಮೇಶ್ ಕತ್ತಿಯನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೂಲಕ ರಮೇಶ್ ಕತ್ತಿಯನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೊಂದೆಡೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಥಳೀಯರ ವಿರೋಧ ಎದುರಿಸುತ್ತಿರುವ ಹಾಲಿ ಸಂಸದೆ ಶೋಭಾ ಕರಂದ್ಲಾಜೆಯನ್ನು ಕರೆ ತಂದು, ಬೆಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸಿರುವ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಹಾಲಿ ಸಂಸದ ಡಿ.ವಿ. ಸದಾನಂದಗೌಡ ಅಸಮಾಧಾನ ಹೊರಹಾಕಿದ್ದಾರೆ. ಇದೇ ರೀತಿ, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿಯೂ ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಅವರ ಬೆಂಬಲಿಗರು, ಹಿತೈಷೆಗಳು ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಹಾಲಿ ಸಂಸದ ಸಿದ್ದೇಶ್ವರ ತಮ್ಮ ಬದಲು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿರುವುದು ಸ್ಥಳೀಯ ಬಿಜೆಪಿ ನಾಯಕರಲ್ಲಿ ಅಸಮಾಧಾನ ಮನೆ ಮಾಡುವಂತೆ ಆಗಿದೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಯಾವುದೆ ಕಾರಣಕ್ಕೂ ದಾವಣಗೆರೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದು ಸಿದ್ದೇಶ್ವರ್ ವಿರುದ್ಧ ಕಿಡಿಗಾರಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿಯೂ ಹಾಲಿ ಸಂಸದ ಪ್ರತಾಪ್ ಸಿಂಹ ಬದಲು ರಾಜವಂಶಸ್ಥ ಯದುವೀರ್ಗೆ ಬಿಜೆಪಿ ಟಿಕೆಟ್ ನೀಡಿದೆ. ಅಲ್ಲಿಯೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಇನ್ನೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಕಣಕ್ಕಿಳಿಯುವುದಾಗಿ ಘೋಷಿಸುವ ಮೂಲಕ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ರಣಕಹಳೆ ಮೊಳಗಿಸಿದ್ದಾರೆ.
Virat kohli : ಕಿಂಗ್ ಇಸ್ ಬ್ಯಾಕ್, ಅಭ್ಯಾಸದ ವೇಳೆ ಅಬ್ಬರಿಸಿದ ಕೊಹ್ಲಿ
Virat kohli : ಕೊಹ್ಹಿ ಭಾನುವಾರ ಬೆಂಗಳೂರಿಗೆ ಬಂದು ಇಳಿದಿದ್ದರು. ಸೋಮವಾರ ಎಂದಿನಂತೆ ಅಭ್ಯಾಸ ನಡೆಸಿದರು. The post Virat kohli : ಕಿಂಗ್ ಇಸ್ ಬ್ಯಾಕ್, ಅಭ್ಯಾಸದ ವೇಳೆ ಅಬ್ಬರಿಸಿದ ಕೊಹ್ಲಿ first appeared on Vistara News .
Ballari News: ನೀತಿ ಸಂಹಿತೆ ಉಲ್ಲಂಘನೆ; 430.96 ಲೀ. ಮದ್ಯ, 5 ವಾಹನ ವಶ
Ballari News: ಲೋಕಸಭೆ ಸಾರ್ವತ್ರಿಕ ಚುನಾವಣೆ 2024 ರ ಅಂಗವಾಗಿ ಬಳ್ಳಾರಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ಕಳೆದ ಎರಡು ದಿನಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ. The post Ballari News: ನೀತಿ ಸಂಹಿತೆ ಉಲ್ಲಂಘನೆ; 430.96 ಲೀ. ಮದ್ಯ, 5 ವಾಹನ ವಶ first appeared on Vistara News .
ಉಪ್ಪಿನಂಗಡಿ: ಬಸ್ ನಿಲ್ದಾಣಕ್ಕೆ ಜಾಗ ಮಂಜೂರಾತಿಗೆ ಮನವಿ
ಉಪ್ಪಿನಂಗಡಿ: ಗ್ರಾಮ ಪಂಚಾಯತ್ ಅಧೀನದಲ್ಲಿರುವ ಉಪ್ಪಿನಂಗಡಿ ಬಸ್ ನಿಲ್ದಾಣ ತೀರಾ ಇಕ್ಕಟ್ಟಾಗಿದ್ದು, ಆದ್ದರಿಂದ ಉಪ್ಪಿನಂಗಡಿಯಲ್ಲಿ ಪೂರ್ಣ ಪ್ರಮಾಣದಲ್ಲಿ ವ್ಯವಸ್ಥಿತವಾಗಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಜಾಗ ಮಂಜೂ ರಾತಿ ಮಾಡುವಂತೆ ದ.ಕ. ಜಿಲ್ಲಾಧಿಕಾರಿಯವರಿಗೆ ಮನವಿ ನೀಡಲಾಗಿದೆ. ಉಪ್ಪಿನಂಗಡಿಯು ಮಂಗಳೂರು, ಬೆಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರು ಮುಂತಾದ ಪ್ರಮುಖ ನಗರಗಳಿಗೆ ನೇರ ಸಂಪರ್ಕ ಕಲ್ಪಿಸುವ ಪಟ್ಟಣವಾಗಿದ್ದು, ಇಲ್ಲಿ ವ್ಯವಸ್ಥಿತ ಬಸ್ ನಿಲ್ದಾಣದ ಕೊರತೆ ಇದೆ. ಆದ್ದರಿಂದ ಇಲ್ಲಿಗೆ ಸುಸಜ್ಜಿತ ಬಸ್ ನಿಲ್ದಾಣದ ಅಗತ್ಯ ಇದ್ದು, ಇದಕ್ಕೆ ಜಾಗ ಮಂಜೂರು ಮಾಡುವಂತೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಜಿ. ಕೃಷ್ಣ ರಾವ್ ಅರ್ತಿಲ ಮತ್ತು ಸಾಮಾಜಿಕ ಕಾರ್ಯಕರ್ತ ಅಶ್ರಫ್ ಬಸ್ತಿಕ್ಕಾರ್ ದ. ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ 2 ಕಡೆಯಲ್ಲಿ ಸೂಕ್ತವಾದ ಜಾಗ ಇದ್ದು, ಇದನ್ನು ಪರಿಶೀಲನೆ ನಡೆಸಿ ಮಂಜೂರಾತಿ ನೀಡಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ಮೀಸಲಿಡುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ಸ್ಥಳ ಪರಿಶೀಲನೆಗೆ ಸೂಚನೆ: ಮನವಿ ಸ್ವೀಕರಿಸಿ ಪೂರಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ ಅವರಿಗೆ ಸ್ಥಳ ಪರಿಶೀಲನೆ ನಡೆಸಿ, ವರದಿ ಒಪ್ಪಿಸುವಂತೆ ಆದೇಶ ನೀಡಿದರು.
Vijayanagara News: ಹೊಸಪೇಟೆಯಲ್ಲಿ ಆಡಿಯೊ ನಿರ್ಮಾಣ ಸಂಸ್ಥೆ, ಸಂಗೀತ ಶಾಲೆಗೆ ಡಿಸಿ ಚಾಲನೆ
Vijayanagara News: ಹೊಸಪೇಟೆ ನಗರದಲ್ಲಿ ಎಸ್ಎಫ್ಎಕ್ಸ್ ಚಾಪ್ ಹಾಗೂ ವಿವೇಕಶ್ರೇಯಾಲಾಪ ಎಂಬ ಆಡಿಯೋ ನಿರ್ಮಾಣ ಸಂಸ್ಥೆ ಹಾಗೂ ಸಂಗೀತ ಶಾಲೆಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಚಾಲನೆ ನೀಡಿದರು. The post Vijayanagara News: ಹೊಸಪೇಟೆಯಲ್ಲಿ ಆಡಿಯೊ ನಿರ್ಮಾಣ ಸಂಸ್ಥೆ, ಸಂಗೀತ ಶಾಲೆಗೆ ಡಿಸಿ ಚಾಲನೆ first appeared on Vistara News .
ಎರಡು ಕ್ಷೇತ್ರ ತೆಗೆದುಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಬೇಕಿತ್ತಾ?: ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ತೆಗೆದುಕೊಳ್ಳಲು ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಸ್ವತಂತ್ರವಾಗಿ ಸ್ಪರ್ಧಿಸಿದರೂ ಹಾಸನ ಹಾಗೂ ಮಂಡ್ಯದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಮವಾರ ನಗರದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಬಳಿ ನಾವೇನು 6-7 ಸ್ಥಾನಗಳನ್ನು ಕೇಳಿಲ್ಲ. ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ರಾಜ್ಯದ 18 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯವಿದೆ. ಅದನ್ನು ಬಳಸಿಕೊಳ್ಳುವಂತೆ ಬಿಜೆಪಿಗೆ ಹೇಳುತ್ತೇನೆ ಎಂದರು. ಬಿಜೆಪಿ ವಿರುದ್ಧ ಅಸಮಾಧಾನ?: ಬಿಜೆಪಿ ಹೈಕಮಾಂಡ್ ರಾಜ್ಯದ 20 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಾಗ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಪಕ್ಷದ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳು ಹಾಗೂ ಜೆಡಿಎಸ್ ಕೋರ್ ಕಮಿಟಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮನ್ನು, ನಮ್ಮ ಪಕ್ಷವನ್ನು ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ಬಿಜೆಪಿ ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಆರಂಭದಲ್ಲಿಯೆ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. ಶೇ.3 ರಿಂದ 4ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ. ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ನಾಯಕರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಕಿಡಿಗಾರಿದ್ದಾರೆ. ಪ್ರಧಾನಿ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ, ಅವರೇ ಮಾಡಿಕೊಂಡಿದ್ದಾರೆ. ಹೈದ್ರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಟ್ಟು ತೋಡಿಕೊಂದರು. ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿ ಅವರ ಬಗ್ಗೆ ಅಪಾರ ಗೌರವ ಇದೆ. ಆದರೆ, ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ತಮ್ಮ ಕಳವಳ ವ್ಯಕ್ತಪಡಿಸಿದರು. ಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ಹೇಳಿದ್ದೀರಿ ನೀವು. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್ ಗೆ ಬರುತ್ತವೆ ಎಂದು ನೀವು ಹೇಳಿದ್ದಿರಿ. ಆದರೆ, ಈಗ ನೋಡಿದರೆ ಬಿಜೆಪಿ 2 ಸೀಟಿಗೆ ಬಂದು ನಿಂತಿದೆ ಎಂದು ಚುನಾವಣಾ ಉಸ್ತುವಾರಿಗಳು ಕುಮಾರಸ್ವಾಮಿಯನ್ನು ಪ್ರಶ್ನಿಸಿದರು. ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರು ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು. ಇನ್ನೊಮ್ಮೆ ಅಮಿತ್ ಶಾ, ಜೆ.ಪಿ.ನಡ್ಡಾ ಜತೆ ಮಾತನಾಡುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಿದ ದೇವೇಗೌಡರು, ಇಲ್ಲವಾದರೆ ನಾನೆ ದಿಲ್ಲಿಗೆ ಹೋಗಿ ಬರುತ್ತೇನೆ ಎಂದರು. ಕೋಲಾರ ಕ್ಷೇತ್ರದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದು ಸಭೆಗೆ ತಿಳಿಸಿದ ಕುಮಾರಸ್ವಾಮಿ, ಯಾವುದೆ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆ ಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಲೀಲಾದೇವಿ ಆರ್.ಪ್ರಸಾದ್, ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಜಿ.ಕೆ.ವೆಂಕಟ ಶಿವಾರೆಡ್ಡಿ, ಬಿ.ಸುರೇಶ್ ಬಾಬು, ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಸ್ವರೂಪ್ ಪ್ರಕಾಶ್, ರಾಜೂಗೌಡ, ಬಿ.ಎಂ.ಫಾರೂಕ್, ಎಂ.ಟಿ.ಕೃಷ್ಣಪ್ಪ, ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಂಜೇಗೌಡ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
Shivamogga News: ಭಕ್ತಸಾಗರದ ಮಧ್ಯೆ ವಿಜೃಂಭಣೆಯಿಂದ ಜರುಗಿದ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ರಥೋತ್ಸವ
Shivamogga News: ಸೊರಬ ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿ ಮಹಾರಥೋತ್ಸವವು ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. The post Shivamogga News: ಭಕ್ತಸಾಗರದ ಮಧ್ಯೆ ವಿಜೃಂಭಣೆಯಿಂದ ಜರುಗಿದ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ರಥೋತ್ಸವ first appeared on Vistara News .
ಮಂಗಳೂರು| ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಬಿಜೈ ನವೋದಯ ಅಂಗನವಾಡಿ ಬಳಿಯ ನಿವಾಸಿ ಕಿಶನ್ (30), ಕದ್ರಿ ಮಲ್ಲಿಕಟ್ಟೆ ಜಾರ್ಜ್ ಮಾರ್ಟೀಸ್ ರಸ್ತೆಯ ನಿವಾಸಿ ಹಿತೇಶ್ (29) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇವರಿಂದ 155 ಗ್ರಾಂ ತೂಕದ ಸುಮಾರು 10 ಸಾವಿರ ರೂ. ಮೌಲ್ಯದ ಗಾಂಜಾ, ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ. ಪಿಎಸ್ಸೈ ಪ್ರತಿಭಾ ಅವರಿಗೆ ಬಂದ ಖಚಿತ ಮಾಹಿತಿಯ ಆಧರಿಸಿ ಪ್ರತಿಭಾ ಮತ್ತು ತಂಡ ದಾಳಿ ಮಾಡಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಾರ್ಯಾಚರಣೆಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸೋಮಶೇಖರ್ ಜೆ.ಸಿ, ಪಿಎಸ್ಸೈ ಪ್ರತಿಭಾ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು.
ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್; ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಆಗ್ರಹ
ಬೆಂಗಳೂರಿನ ನಗರತ್ಪೇಟೆಯ ಮೊಬೈಲ್ ಶಾಪ್ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿತ್ತು. The post ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್; ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಆಗ್ರಹ first appeared on Vistara News .
ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿರುವುದು ನಿಜ, ನಾಳೆ ನಿರ್ಧಾರ ಪ್ರಕಟಿಸುತ್ತೇನೆ: ಡಿ.ವಿ. ಸದಾನಂದಗೌಡ
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ ಹಾಲಿ ಸಂಸದ ಡಿ.ವಿ. ಸದಾನಂದಗೌಡ, ನಾಳೆ(ಮಾ.19) ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಸೋಮವಾರ ಡಾಲರ್ಸ್ ಕಾಲನಿಯಲ್ಲಿರುವ ತಮ್ಮ ನಿವಾಸದ ಬಳಿ ಅಭಿಮಾನಿಗಳು, ಹಿತೈಷಿಗಳು ಹಾಗೂ ಕುಟುಂಬ ಸದಸ್ಯರೊಂದಿಗೆ ತಮ್ಮ 72ನೆ ಜನ್ಮದಿನ ಆಚರಿಸಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಕೆಲವು ನಾಯಕರು ನನ್ನನ್ನು ಸಂಪರ್ಕಿಸಿರುವುದು ನಿಜ. ಆದರೆ, ವೈಯಕ್ತಿಕವಾಗಿ ನಾನು ಯಾವುದೆ ನಿರ್ಧಾರವನ್ನು ಈಗ ತೆಗೆದುಕೊಳ್ಳುವುದಿಲ್ಲ. ಕುಟುಂಬ ಸದಸ್ಯರ ಜತೆ ಚರ್ಚಿಸಿದ ಬಳಿಕ ನಾನು ಮುಂದಿನ ತೀರ್ಮಾನವನ್ನು ಪ್ರಕಟಿಸುತ್ತೇನೆ ಎಂದರು. ಬಿಜೆಪಿ ಪ್ರಮುಖ ಮುಖಂಡರೊಬ್ಬರು ನಿನ್ನೆ ನಮ್ಮ ಮನೆಗೆ ಬಂದು ಮಾತುಕತೆ ನಡೆಸಿದ್ದಾರೆ. ಅವರ ಜೊತೆ ನಡೆದ ಮಾತುಕತೆಯ ವಿವರವನ್ನು ನಾನು ಹೇಳುವುದಿಲ್ಲ. ಇವತ್ತೆ ಎಲ್ಲವನ್ನೂ ಹೇಳಿಬಿಟ್ಟರೆ ನಾಳೆ ಏನು ಉಳಿಯುವುದಿಲ್ಲ. ಆದುದರಿಂದ, ನಾಳೆ ಎಲ್ಲ ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ ಎಂದು ಸದಾನಂದಗೌಡ ತಿಳಿಸಿದರು. ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಸಂದರ್ಭದಲ್ಲೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬಂಡಾಯ ಸಾರಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಯಾರಿಗೆಲ್ಲ ಅನ್ಯಾಯ ಅಗಿದೆಯೋ, ಅವರೆಲ್ಲ ಸೇರಿ ಹೈಕಮಾಂಡ್ ಬಳಿ ಹೋಗೋಣ ಎಂದು ಈಶ್ವರಪ್ಪಗೆ ತಿಳಿಸಿದ್ದೆ. ಆದರೆ, ಅವರು ಈಗಾಗಲೆ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಅದರ ಬಗ್ಗೆ ನಾನೇನು ಹೇಳುವುದಿಲ್ಲ ಎಂದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡಲು ನಡೆಸಿದಂತಹ ಸಮೀಕ್ಷೆಯಲ್ಲಿ ಕೇವಲ ನನ್ನ ಹೆಸರು ಮಾತ್ರ ವರದಿಯಲ್ಲಿ ಬಂದಿತ್ತು. ನನಗೆ ಟಿಕೆಟ್ ಕೊಡುವುದಾಗಿ ಭರವಸೆ ನೀಡಿ, ಕೊನೆ ಕ್ಷಣದಲ್ಲಿ ನನ್ನ ರಕ್ಷಣೆಗೆ ಬಂದಿಲ್ಲ. ದಿಲ್ಲಿ ಹಾಗೂ ನಮ್ಮ ರಾಜ್ಯದಲ್ಲಿ ನಡೆದ ಕೆಲವು ವಿದ್ಯಾಮಾನಗಳು ನನ್ನ ಗಮನಕ್ಕೆ ಬಂದಿದೆ ಎಂದು ಸದಾನಂದಗೌಡ ತಿಳಿಸಿದರು. ರಾಜ್ಯದಲ್ಲಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಕೆಲವು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಲು ನಾಳೆ ಸುದ್ದಿಗೋಷ್ಠಿ ಕರೆಯುತ್ತೇನೆ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ, ತಿಳಿದೂ ತಿಳಿದು ಹೀಗೆ ಮಾಡಿರುವುದರಿಂದ ಬೇಸರವಾಗಿದೆ ಎಂದು ಸದಾನಂದಗೌಡ ಹೇಳಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಅನ್ನು ತಮ್ಮ ಬದಲು ಶೋಭಾ ಕರಂದ್ಲಾಜೆಗೆ ನೀಡಿರುವುದು ಸದಾನಂದಗೌಡ ಬೇಸರಕ್ಕೆ ಕಾರಣವಾಗಿದೆ. ಬಿಜೆಪಿಯಲ್ಲಿನ ಅಸಮಾಧಾನವನ್ನು ಬಳಸಿಕೊಳ್ಳಲು ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮುಖಾಂತರ, ಸದಾನಂದಗೌಡ ಅವರಿಗೆ ಕಾಂಗ್ರೆಸ್ ಸೇರ್ಪಡೆಗೆ ಆಹ್ವಾನ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಸದಾನಂದಗೌಡ ಕಾಂಗ್ರೆಸ್ ಸೇರ್ಪಡೆಗೆ ಸಹಮತ ವ್ಯಕ್ತಪಡಿಸಿದರೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸದಾನಂದಗೌಡರನ್ನು ಕಣಕ್ಕಿಳಿಸುವ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.