ಮೀನುಗಾರಿಕಾ ವಿವಿ ಆರಂಭಕ್ಕೆ ಪೂರಕ ಪ್ರಯತ್ನ: ಸಚಿವ ಮಂಕಾಳ ವೈದ್ಯ
ಮಂಗಳೂರು: ಮಂಗಳೂರಿನಲ್ಲಿರುವ ದೇಶದ ಪ್ರಥಮ ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿಸುವ ನಿಟ್ಟಿನಲ್ಲಿ ಪೂರಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಮೀನುಗಾರಿಕಾ, ಒಲನಾಡು ಸಾರಿಗೆ ಮತ್ತು ಬಂದರು ಸಚಿವ ಮಂಕಾಳ ಎಸ್. ವೈದ್ಯ ಹೇಳಿದ್ದಾರೆ. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ, ಮೀನುಗಾರಿಕೆ ಇಲಾಖೆ, ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ, ಹಳೇ ವಿದ್ಯಾರ್ಥಿಗಳ ಸಂಘ, ಯಶಸ್ವೀ ಕಡಲ ಉತ್ಪನ್ನಗಳ ಕಂಪನಿ ಹಾಗೂ ಪಿಲ್ಲೈ ಅಕ್ವಾಕಲ್ಚರ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಎಕ್ಕೂರಿನ ಮೀನುಗಾರಿಕೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ: 2024 ಮತ್ತು ಬಿಗ್ ಫಿಶ್: 2.0‘ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಂಗಳೂರಿನ ಮೀನುಗಾರಿಕಾ ಕಾಲೇಜು ವಿಶ್ವವಿದ್ಯಾನಿಲಯದ ಎಲ್ಲಾ ಅರ್ಹತೆಯನ್ನು ಹೊಂದಿದೆ. 65 ಎಕರೆ ಜಾಗ ವನ್ನೂ ಹೊಂದಿದೆ. ಬೇರೆ ರಾಜ್ಯಗಳಿಗೆ ನಮ್ಮ ಕಾಲೇಜು ಮಾದರಿಯಾಗಿದ್ದು, ಇಲ್ಲಿ ಕಲಿತವರು ತಮ್ಮ ರಾಜ್ಯಗಳಿಗೆ ತೆರಳಿ ಹೊಸ ಕಾಲೇಜು, ವಿಶ್ವವಿದ್ಯಾಲಯಗಳನ್ನು ರಚಿಸಲು ಸಾಧ್ಯವಾಗಿದ್ದರೂ ರಾಜ್ಯದಲ್ಲಿ ಈ ಪ್ರಯತ್ನದಲ್ಲಿ ನಾವು ಹಿಂದುಳಿ ದಿದ್ದೇವೆ. ಒಂದು ಕಾಲೇಜಿನಿಂದ ವಿಶ್ವವಿದ್ಯಾಲಯವನ್ನಾಗಿಸಲು ಸಾಧ್ಯವಿಲ್ಲ ಎಂಬ ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ಮಂಕಿಯಲ್ಲಿ ತರಬೇತಿ ಕೇಂದ್ರ, ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮೀನು ಮರಿ ಉತ್ಪಾದನಾ ಕೇಂದ್ರವನ್ನು ಮೇಲ್ದರ್ಜೆಗೇರಿಸುವುದು ಹಾಗೂ ಮೀನುಗಾರಿಕಾ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿ ಸುವ ಮೂಲಕ ನಾಲ್ಕು ಶಾಖೆಗಳನ್ನು ಆರಂಭಿಸಲು ಕ್ರಮ ವಹಿಸಲಾಗಿದೆ. ಮಂಕಿಯಲ್ಲಿ ತರಬೇತಿ ಕೇಂದ್ರ ಸ್ಥಾಪನೆಗೆ ಸಂಬಂಧಿಸಿ ಈಗಾಗಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ಅವರು ಹೇಳಿದರು. ಮೀನುಗಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ 1.50 ಲಕ್ಷ ಲೀಟರ್ ಡೀಸೆಲ್ ವಿತರಣೆಯನ್ನು 2 ಲಕ್ಷ ಲೀಟರ್ಗೆ ಏರಿಕೆ ಮಾಡಲಾಗಿದೆ. ಹಾಗಾಗಿ ಕಳೆದ ಸಾಲಿನ ಮೀನುಗಾರಿಕಾ ಅವಧಿಯಲ್ಲಿ ಡೀಸೆಲ್ ಬಂದಿಲ್ಲ ಎಂಬ ದೂರು ಮೂರು ಜಿಲ್ಲೆಗಳಿಂದಲೂ ಬಂದಿಲ್ಲ. ಈ ಸಬ್ಸಿಡಿಗಾಗಿ ಸರಕಾರ ೨೮೫ ಕೋಟಿರೂ. ವೆಚ್ಚ ಮಾಡುತ್ತಿದೆ ಎಂದು ಹೇಳಿದ ಸಚಿವರು, ಸೀಮೆಎಣ್ಣೆ ಸಮಸ್ಯೆ ಆಗದಂತೆಯೂ ಕ್ರಮ ವಹಿಸಲಾಗಿದೆ ಎಂದರು. ಮೀನುಗಾರ ಮಹಿಳೆಯರಿಗೆ 3 ಲಕ್ಷ ರೂ.ವರೆಗಿನ ಬಡ್ಡಿ ಸಾಲಕ್ಕೆ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಆಸ್ತಿ ಬೇಕೆನ್ನುವ ತಗಾ ದೆಯ ಕುರಿತು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಉಡುಪಿಯಲ್ಲಿ ಮಹಾಲಕ್ಷ್ಮಿ ಸೊಸೈಟಿ ಸಾಲ ಕೊಡಲು ಮುಂದೆ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಲ್ಲಿ ಹಿಂದಿನ ನಾಲ್ಕು ವರ್ಷಗಳ ಬಾಕಿ ಪರಿಹಾರವನ್ನು ಒದಗಿಸಲಾಗಿದೆ. ಬೋಟ್ ದುರಂತದ ಸಂದರ್ಭದಲ್ಲಿಯೂ ಪರಿಹಾರ ನೀಡಲಾಗುತ್ತಿದ್ದು, ಅವಘಡಕ್ಕೆ ತುತ್ತಾಗಿ ಪ್ರಾಣ ಕಳೆದುಕೊಂಡ ಮೀನುಗಾರರಿಗೆ ೨೪ ಗಂಟೆಯಲ್ಲಿ ೮ ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾ ಗಿದೆ. ಅವಘಡದಿಂದ ಅಂಗಾಂಗ ಕಳೆದುಕೊಂಡು ಮತ್ತೆ ಮೀನುಗಾರಿಕೆ ನಡೆಸಲಾಗದ ಮೀನುಗಾರರಿಗೆ ವೈದ್ಯಕೀಯ ವೆಚ್ಚ ಸಹಿತ ನಾಲ್ಕು ಲಕ್ಷ ರೂ. ಪರಿಹಾರ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ಬೈಂದೂರಿನಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಬೆಂಗಳೂರಿನ ಹೆಬ್ಬಾಳದ ಪಶು ಸಂಗೋಪನಾ ಇಲಾಖೆಯಿಂದ 3 ಎಕರೆ ಜಮೀನು ಪಡೆದು 50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ಹಾಗೂ 20 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಚಿವ ಮಂಕಾಳ ವೈದ್ಯ ವಿವರಿಸಿದರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದರು. ಶಾಸಕರಾದ ಡಾ.ಭರತ್ ಶೆಟ್ಟಿ ವೈ, ಐವನ್ ಡಿಸೋಜ, ಮೇಯರ್ ಸುಧೀರ್ ಶೆಟ್ಟಿ, ಸ್ಥಳೀ ಕಾರ್ಪೊರೇಟರ್ ಭರತ್ ಕುಮಾರ್, ಬೀದರ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ, ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಳ್ಳೇರ್, ಕೊಚ್ಚಿನ್ ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿವಿ ಕುಲಸಚಿವ ಡಾ.ದಿನೇಶ್ ಕೈಲ್ಲಿ, ಯಶಸ್ವಿ ಕಡಲ ಉತ್ಪನ್ನಗಳ ಕಂಪನಿ ಆಡಳಿತ ಪಾಲುದಾರ ಉದಯ ಸಾಲಿಯಾನ್, ಮಿನುಗಾರಿಕೆ ಮಹಾ ವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಮೇಶ್ ಎಂ.ಆರ್. ಮುಖ್ಯ ಅತಿಥಿಗಳಾಗಿದ್ದರು. ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಚ್.ಎನ್.ಆಂಜನೇಯಪ್ಪ ಸ್ವಾಗತಿಸಿದರು. ಪ್ರಾಧ್ಯಾಪಕ ಡಾ.ಶಿವಕುಮಾರ್ ಮಗದ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಳ ಸಮುದ್ರ ಮೀನುಗಾರಿಕೆ ರಜೆಯನ್ನು 60 ದಿನಗಳಿಂದ 90ಕ್ಕೆ ವಿಸ್ತರಣೆ, ಬೋಟಿನಲ್ಲಿ ಬಳಸಬೇಕಾದ ಇಂಜಿನ್ ಸಾಮರ್ಥ್ಯ, ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲಿಂಗ್ ನಿಷೇಧ ಸಹಿತ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ದೇಶಕ್ಕೆ ಏಕರೂಪ ಕಾನೂನಿನ ಅಗತ್ಯವಿದೆ. ಈ ವಿಷಯದಲ್ಲಿ ರಾಜ್ಯಕ್ಕೆ ಪ್ರತ್ಯೇಕ ಕಾನೂನು ಆದಾಗ ಸಮಸ್ಯೆಗಳನ್ನು ಸರಿಪಡಿಸಲು ಅಸಾಧ್ಯ ಎಂಬುದು ನನ್ನ ಬಲವಾದ ನಿಲುವಾಗಿದ್ದು, ರಾಜ್ಯಕ್ಕೆ ಸೀಮಿತವಾದ ನಿಯಮಗಳಿಗೆ ನನ್ನ ವಿರೋಧವಿದೆ. ಗುಜರಾತ್ ಹೊರತುಪಡಿಸಿ ಕರ್ನಾಟಕ 320 ಕಿ.ಮೀ. ಉದ್ದದ ಕಡಲನ್ನು ಹೊಂದಿರುವುದರಿಂದ ದೇಶದಲ್ಲಿ ಏಕರೂಪದ ಕಾನೂನು ಆದಾಗ ಮಾತ್ರವೇ ಮೀನುಗಾರರ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂದು ರಾಜ್ಯ ಮೀನುಗಾರಿಕೆ, ಒಳನಾಡು ಸಾರಿಗೆ ಮತ್ತು ಬಂದು ಸಚಿವ ಮಂಕಾಳ ಎಸ್.ವೈದ್ಯ ಪ್ರತಿಪಾದಿಸಿದ್ದಾರೆ.
ಶೂಟಿಂಗ್ನಲ್ಲಿ ಚಿನ್ನ ಗೆದ್ದ ಚೀನಾ | ಪದಕ ಬೇಟೆ ಆರಂಭ
ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚೀನಾವು ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದುಕೊಂಡಿದ್ದು, ಮೊದಲ ಚಿನ್ನ ಗೆದ್ದ ಸಾಧನೆ ಮಾಡಿದೆ. ಶೂಟಿಂಗ್ನ 10 ಮೀಟರ್ ಏರ್ ರೈಫಲ್ ಮಿಶ್ರ ತಂಡ ವಿಭಾಗದಲ್ಲಿ ಚೀನಾದ ಸ್ಪರ್ಧಿಗಳು ಈ ಸಾಧನೆ ಮಾಡಿದ್ದಾರೆ. ಚೀನಾದ ಹುವಾಂಗ್ ಯುಟಿಂಗ್ ಮತ್ತು ಶೆಂಗ್ ಲಿಹಾವೊ ಜೋಡಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದೆ. ಫೈನಲ್ನಲ್ಲಿ 16-12ರ ಅಂತರದಲ್ಲಿ ಚೀನಾದ ಜೋಡಿಯು ಕೊರಿಯಾ ವಿರುದ್ಧ ಜಯ ಸಾಧಿಸಿದೆ. ಈ ವಿಭಾಗದಲ್ಲಿ ಕೊರಿಯಾದ ಕೆಯುಮ್ ಜಿ-ಹೈಯಾನ್ ಮತ್ತು ಪಾರ್ಕ್ ಹಾ-ಜುನ್ ಜೋಡಿ ಬೆಳ್ಳಿ, ಕಝಕಿಸ್ತಾನದ ಅಲೆಕ್ಸಾಂಡ್ರಾ ಲೆ ಮತ್ತು ಇಸ್ಲಾಂ ಸತ್ಪಯೇವ್ ಜೋಡಿಯು ಕಂಚಿನ ಪದಕ ತಮ್ಮದಾಗಿಸಿಕೊಂಡಿದೆ.
ಬೆಳ್ತಂಗಡಿ: ಬೊಲೆರೊ ಢಿಕ್ಕಿ; ಬೈಕ್ ನಲ್ಲಿದ್ದ ಬಾಲಕಿ ಮೃತ್ಯು, ಚಾಲಕನಿಗೆ ಗಾಯ
ಬೆಳ್ತಂಗಡಿ, ಜು.27: ಬೊಲೆರೊ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತಂದೆಯ ಜೊತೆ ಹೋಗುತ್ತಿದ್ದ ಬಾಲಕಿ ಮೃತಪಟ್ಟು, ಬೈಕ್ ಚಾಲಕ ಗಾಯಗೊಂಡ ಘಟನೆ ಮುಂಡಾಜೆಯ ಸೀಟು ಬಳಿ ಶನಿವಾರ ಸಂಜೆ ಸಂಭವಿಸಿದೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಅವರ ಮಗಳು ಅನರ್ಘ್ಯ (9) ಉಜಿರೆಯಿಂದ ಮನೆಗೆ ಹೊರಟಿದ್ದರು. ಈ ವೇಳೆ ಬೊಲೆರೊ ಹಿಂದಿನಿಂದ ಢಿಕ್ಕಿ ಹೊಡೆದು ಬಳಿಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿತ್ತು. ಗಾಯಗೊಂಡಿದ್ದ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಅನರ್ಘ್ಯ ಮೃಪಟ್ಟಿರುವುದಾಗಿ ತಿಳಿದುಬಂದಿದೆ. ಅನರ್ಘ್ಯ ಉಜಿರೆ ಎಸ್ಡಿಎಂ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ. ಅಪಘಾತವಾದ ಬಳಿಕ ತಪ್ಪಿಸಿಕೊಂಡಿದ್ದ ಬೊಲೆರೊ ವಾಹನವನ್ನು ಸಾರ್ವಜನಿಕರ ಸಹಕಾರದಿಂದ ಪತ್ತೆ ಹಚ್ಚಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಿಳೆಯರ 10 ಮೀ ಪಿಸ್ತೂಲ್ ಸ್ಪರ್ಧೆ ; ಫೈನಲ್ ಪ್ರವೇಶಿಸಿದ ಮನು ಭಾಕರ್
ಪ್ಯಾರಿಸ್ : ಶೂಟರ್ ಮನು ಭಾಕರ್ ಒಲಿಂಪಿಕ್ಸ್ ನ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಫೈನಲ್ಗೆ ಅರ್ಹತೆ ಪಡೆದಿದ್ದಾರೆ. ಭಾಕರ್ ಒಟ್ಟು 580 ಅಂಕಗಳೊಂದಿಗೆ ಸ್ಪರ್ಧೆ ಮುಗಿಸಿದರು. ಇದಕ್ಕೂ ಮುನ್ನ ಸರಬ್ಜೋತ್ ಸಿಂಗ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರು ಕ್ರಮವಾಗಿ 9 ಮತ್ತು 18ನೇ ಸ್ಥಾನ ಪಡೆದು ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದರು. ಸರಬ್ಜೋತ್ ಫೈನಲ್ಗೆ ಅರ್ಹತೆ ಪಡೆಯುವ ಭರವಸೆ ಮೂಡಿಸಿದ್ದರು. ಆದರೆ ಅಂತಿಮ ಸ್ಥಾನವನ್ನು ಪಡೆದುಕೊಳ್ಳಲು ವಿಫಲರಾದರು. ಎರಡು ಭಾರತೀಯ ಜೋಡಿಗಳು 10 ಮೀಟರ್ ಏರ್ ರೈಫಲ್ ಮಿಶ್ರ ತಂಡ ಸ್ಪರ್ಧೆಯ ಫೈನಲ್ಗೆ ಪ್ರವೇಶಿಸಲು ವಿಫಲವಾದ ನಂತರ ಶೂಟರ್ ಮನು ಭಾಕರ್ ಒಲಿಂಪಿಕ್ಸ್ ನ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಫೈನಲ್ಗೆ ಅರ್ಹತೆ ಪಡೆದಿದ್ದಾರೆ.
ಬೆಂಗಳೂರಿನ ರಸ್ತೆ ಗುಂಡಿ ಗುರುತಿಸಲು ಮೊಬೈಲ್ ಆಪ್! ಹೊಸ ತಂತ್ರಜ್ಞಾನದ ಬಳಕೆ ಹೇಗೆ?
Raste Gundi Gamana Mobile App for Potholes: ಎಷ್ಟೇ ಬೆಳವಣಿಗೆಯಾದರೂ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಸಮಸ್ಯೆಗೆ ಪರಿಹಾರ ಮಾತ್ರ ಸಿಕ್ಕಿಲ್ಲ. ದಿಢೀರನೆ ಉದ್ಭವವಾಗುವ ಗುಂಡಿಗಳಿಂದಾಗಿ ವಾಹನ ಸವಾರರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದ ಘಟನೆಗಳು ಪ್ರತಿ ನಿತ್ಯ ನಡೆಯುತ್ತಲೇ ಇರುತ್ತವೆ. ಈಗ ರಸ್ತೆ ಗುಂಡಿಗಳ ಬಗ್ಗೆ ಅಧಿಕಾರಿಗಳನ್ನು ಎಚ್ಚರಿಸಲು ಮೊಬೈಲ್ ಆಪ್ ತಂತ್ರಜ್ಞಾನವೊಂದು ನಗರದಲ್ಲಿ ಅಸ್ತಿತ್ವಕ್ಕೆ ಬಂದಿದೆ.
HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ
HD Kumaraswamy: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸರ, ಆರೋಪ-ಪ್ರತ್ಯಾರೋಪ, ಟೀಕೆ, ವ್ಯಂಗ್ಯ ತಾರಕಕ್ಕೇರಿವೆ. ಅದರಲ್ಲೂ, ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ತೀರ್ಮಾನದ ಬಳಿಕ ಕುಮಾರಸ್ವಾಮಿ ಅವರು ಕೆರಳಿ ಕೆಂಡವಾಗಿದ್ದಾರೆ. ಇವರಿಬ್ಬರ ನಡುವಿನ ವಾಕ್ಸಮರದ ಝಲಕ್ ಇಲ್ಲಿದೆ. The post HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ first appeared on Vistara News .
Paris Olympics 2024: ಭಾರತೀಯ ಅಥ್ಲೀಟ್ಗಳ ಡ್ರೆಸ್ ಕೋಡ್ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ
Paris Olympics 2024: ಪ್ಯಾರಿಸ್ ಒಲಂಪಿಕ್ಸ್ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಭಾರತೀಯ ಅಥ್ಲೀಟ್ಗಳ ಡ್ರೆಸ್ಕೋಡ್ ಸಿದ್ಧಪಡಿಸಿದ್ದ ಡಿಸೈನರ್ ತರುಣ್ ತಹಿಲಿಯಾನಿಯವರ ವಿನ್ಯಾಸಕ್ಕೆ ಒಂದೆಡೆ ಮೆಚ್ಚುಗೆ ದೊರೆತರೆ, ಮತ್ತೊಂದೆಡೆ ಮಹಿಳೆಯೊಬ್ಬರು ಕಮೆಂಟ್ ಮೂಲಕ ತೀವ್ರವಾಗಿ ಟೀಕಿಸಿದ್ದಾರೆ. ಯಾಕಾಗಿ ಈ ಟೀಕೆ? ಡ್ರೆಸ್ಕೋಡ್ ಕಾನ್ಸೆಪ್ಟ್ ಏನಿತ್ತು? ಎಂಬುದರ ಕುರಿತಂತೆ ಇಲ್ಲಿದೆ ವರದಿ. The post Paris Olympics 2024: ಭಾರತೀಯ ಅಥ್ಲೀಟ್ಗಳ ಡ್ರೆಸ್ ಕೋಡ್ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ first appeared on Vistara News .
Paris Olympics: ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಫೈನಲ್ಗೇರಿದ ಮನು ಭಾಕರ್!
Manu Bhaker Reached Final in 10M Air Pistol: ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಅವರು ಪ್ರಸ್ತುತ ನಡೆಯುತ್ತಿರುವ 2024 ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಫೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಅಹರ್ತಾ ಸುತ್ತಿನಲ್ಲಿ ಮನು ಭಾಕರ್ ಅವರು ಮೂರನೇ ಸ್ಥಾನವನ್ನು ಅಲಂಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಶನಿವಾರ ನಡೆದಿದ್ದ ಕ್ವಾಲಿಫಿಕೇಷನ್ ಸುತ್ತಿನಲ್ಲಿ ಅವರು 580-27* ಅಂಕಗಳನ್ನು ಪಡೆದರು. ಆ ಮೂಲಕ ಅಗ್ರ ಐವರಲ್ಲಿ ಸ್ಥಾನ ಪಡೆದಿದ್ದಾರೆ.
ಎಡಪಂಥೀಯರು ಒಲಿಂಪಿಕ್ಸ್ ಹೈಜಾಕ್ ಮಾಡಿದ್ದಾರೆ ಎಂದ ಕಂಗನಾ ರಣಾವತ್
ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭವನ್ನು ಟೀಕಿಸಿರುವ ಬಾಲಿವುಡ್ ನಟಿ ಹಾಗೂ ಮಂಡಿ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ಅದು ಅತಿ ಲೈಂಗಿಕತೆ ಮತ್ತು ಧರ್ಮನಿಂದೆಯಿಂದ ಕೂಡಿತ್ತು, ಇದು ಎಡಪಂಥೀಯರು ಒಲಿಂಪಿಕ್ಸ್ ಅನ್ನು ಹೈಜಾಕ್ ಮಾಡಿರುವುದರ ಪರಿಣಾಮವಾಗಿದೆ ಎಂದು ಹೇಳಿದ್ದಾರೆ. ಸಮಾರಂಭದಲ್ಲಿ ಮಕ್ಕಳನ್ನು ಒಳಗೊಂಡಿದ್ದ ‘ದಿ ಲಾಸ್ಟ್ ಸಪರ್(ಯೇಸು ಕ್ರಿಸ್ತನ ಕೊನೆಯ ಭೋಜನ)’ ಅನ್ನು ಮರುರೂಪಿಸಿದ್ದ ಪ್ರದರ್ಶನವು ತೀವ್ರ ಟೀಕೆಗಳಿಗೆ ಗುರಿಯಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಪ್ರದರ್ಶನದ ಚಿತ್ರಗಳನ್ನು ಪೋಸ್ಟ್ ಮಾಡಿರುವ ಕಂಗನಾ, ‘ಅತಿ ಲೈಂಗಿಕತೆ ಮತ್ತು ಧರ್ಮನಿಂದೆಯಿಂದ ಕೂಡಿದ್ದ ದಿ ಲಾಸ್ಟ್ ಸಪರ್ನಲ್ಲಿ ಮಗುವೊಂದನ್ನು ಸೇರಿಸಿಕೊಂಡಿದ್ದಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್ ಟೀಕೆಗೆ ಗುರಿಯಾಗಿದೆ. ಪ್ರದರ್ಶನದಲ್ಲಿ ನೀಲಿ ಬಣ್ಣ ಬಳಿದುಕೊಂಡಿದ್ದ ಬೆತ್ತಲೆ ವ್ಯಕ್ತಿಯನ್ನು ಯೇಸು ಕ್ರಿಸ್ತ ಎಂದು ತೋರಿಸಲಾಗಿತ್ತು, ಅವರು ಕ್ರೈಸ್ತ ಧರ್ಮವನ್ನು ಅಪಹಾಸ್ಯ ಮಾಡಿದ್ದಾರೆ. ಎಡಪಂಥೀಯರು 2024ರ ಒಲಿಂಪಿಕ್ಸ್ನ್ನು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದಾರೆ. ನಾಚಿಕೆಗೇಡು’ ಎಂದು ಹೇಳಿದ್ದಾರೆ. ‘ಇದು ಫ್ರಾನ್ಸ್ ಒಲಿಂಪಿಕ್ಸ್ 2024ಕ್ಕೆ ಜಗತ್ತನ್ನು ಸ್ವಾಗತಿಸಿದ ರೀತಿ. ಅವರು ಯಾವ ಸಂದೇಶವನ್ನು ರವಾನಿಸಲು ಪ್ರಯತ್ನಿಸುತ್ತಿದ್ದಾರೆ? ಸೈತಾನನ ಜಗತ್ತಿಗೆ ಸ್ವಾಗತವೇ? ಇದೇ ಅವರ ಉದ್ದೇಶವೇ?’ ಎಂದು ಕಂಗನಾ ಇನ್ನೊಂದು ಪೋಸ್ಟ್ನಲ್ಲಿ ಪ್ರಶ್ನಿಸಿದ್ದಾರೆ. ಪ್ರದರ್ಶನಗಳ ಕೊಲಾಜ್ ಹಂಚಿಕೊಂಡಿರುವ ಅವರು, ‘ಒಲಿಂಪಿಕ್ಸ್ ಉದ್ಘಾಟನೆಯು ಸಲಿಂಗ ಕಾಮದ ಪ್ರಚಾರಕ್ಕಷ್ಟೇ ಸೀಮಿತವಾಗಿತ್ತು. ನಾನು ಸಲಿಂಗ ಕಾಮಕ್ಕೆ ವಿರುದ್ಧವಾಗಿಲ್ಲ, ಆದರೆ ಯಾವುದೇ ಲೈಂಗಿಕತೆಯೊಂದಿಗೆ ಒಲಿಂಪಿಕ್ಸ್ ಹೇಗೆ ಸಂಬಂಧಿಸಿದೆ ಎನ್ನುವುದು ನನಗೆ ಅರ್ಥವಾಗಿಲ್ಲ. ಮಾನವ ಪಾರಮ್ಯವನ್ನು ಸಂಭ್ರಮಿಸುವ ಜಾಗತಿಕ ಕಾರ್ಯಕ್ರಮದ ಮೇಲೆ ಲೈಂಗಿಕತೆಯ ಚರ್ಚೆಗಳ ಮೋಡ ಕವಿದಿದ್ದೇಕೆ? ಲೈಂಗಿಕತೆ ಏಕೆ ಖಾಸಗಿ ವಿಷಯವಾಗಿ ಉಳಿಯಬಾರದು? ಅದು ಏಕೆ ರಾಷ್ಟೀಯ ಗುರುತಾಗಬೇಕು? ಇದು ವಿಲಕ್ಷಣವಾಗಿದೆ ’ ಎಂದು ಕಂಗನಾ ತನ್ನ ಪೋಸ್ಟ್ನಲ್ಲಿ ಬರೆದಿದ್ದಾರೆ. ಕಂಗನಾರ ಅಭಿಪ್ರಾಯವನ್ನೇ ಪ್ರತಿಧ್ವನಿಸಿರುವ ಹಲವಾರು ನೆಟ್ಟಿಗರು ಉದ್ಘಾಟನಾ ಸಮಾರಂಭದಲ್ಲಿಯ ಪ್ರದರ್ಶನವು ಕೈಸ್ತರಿಗೆ ಅವಮಾನವಾಗಿತ್ತು ಎಂದು ಕಿಡಿ ಕಾರಿದ್ದಾರೆ. ಆದರೆ ಪ್ಯಾರಿಸ್ ಒಲಿಂಪಿಕ್ಸ್ ಸಂಘಟಕರಾಗಲೀ ಪ್ರದರ್ಶಕರಾಗಲೀ ಅದು ದಿ ಲಾಸ್ಟ್ ಸಪರ್ನ ಸನ್ನಿವೇಶವಾಗಿತ್ತು ಎನ್ನುವುದನ್ನು ದೃಢಪಡಿಸಿಲ್ಲ. ಈ ನಡುವೆ ಪ್ರದರ್ಶನವನ್ನು ‘ಕ್ರೈಸ್ತರಿಗೆ ಅತ್ಯಂತ ಅಗೌರವ’ ಎಂದು ಬಣ್ಣಿಸಿರುವ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರು,‘‘ಲೇಡಿ ಗಾಗಾರ ಪ್ರದರ್ಶನವು ಕೂಡ ಕುಪಿತ ನೆಟ್ಟಿಗರನ್ನು ಸಮಾಧಾನಿಸಲು ಸಾಧ್ಯವಾಗಲಿಲ್ಲ,ಅವರು ಇದನ್ನು ‘ಫ್ರೆಂಚ್ ಧ್ವಜದ ಮೇಲೆ ಮಲವಿಸರ್ಜನೆಗೆ ಸಮಾನ’ ಎಂದು ಕರೆದಿದ್ದಾರೆ ’’ ಎಂದು ಹೇಳಿದ್ದಾರೆ.
ಅಂಕೋಲ ಗುಡ್ಡ ಕುಸಿತ ಪ್ರಕರಣ| ಬಿಜೆಪಿ ರಾಜಕಾರಣ ಮಾಡುವುದನ್ನು ನಿಲ್ಲಿಸಲಿ: ಸಚಿವ ಮಾಂಕಾಳ ವೈದ್ಯ
ಮಂಗಳೂರು: ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿ ಐಆರ್ಬಿ (ಐಡಿಯಲ್ ರೋಡ್ ಬಿಲ್ಡರ್ಸ್) ಕಂಪನಿ ಮೇಲೆ ಕೇಸು ದಾಖಲಿಸಲಾಗಿದೆ. ಅರಣ್ಯ ಇಲಾಖೆಯಿಂದಲೂ ಕೇಸು ದಾಖಲಿಸಲಾಗಿದೆ. ಅವೈಜ್ಞಾನಿಕ ಕಾಮಗಾರಿ ಬಗ್ಗೆ ತನಿಖೆಗೆ ಸರಕಾರವನ್ನು ಒತ್ತಾಯಿಸಲಾಗಿದೆ. ಆ ಕಂಪನಿ ಮೂಲ ಬಿಜೆಪಿಯಾಗಿದ್ದು, ರಾಜಕಾರಣ ಮಾಡುವುದನ್ನು ನಿಲ್ಲಿಸಲಿ ಎಂದು ರಾಜ್ಯ ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಮತ್ತು ಬಂದರು ಖಾತೆ ಸಚಿವ ಮಾಂಕಾಳ ವೈದ್ಯ ಹೇಳಿದ್ದಾರೆ. ಮೀನುಗಾರಿಕಾ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಶನಿವಾರ ಮಂಗಳೂರಿಗೆ ಆಗಮಿಸಿದ್ದ ಸಚಿವರು ಸುದ್ದಿಗಾರರ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ. ಅಂಕೋಲಾದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತ ದುರಂತಕ್ಕೆ ಐಆರ್ಬಿ ಮತ್ತು ಕೇಂದ್ರ ಸರಕಾರ ನೇರ ಹೊಣೆ ಎಂದು ಆರೋಪಿಸಿದ ಅವರು, ಘಟನೆ ನಡೆದಾಗಿನಿಂದ ನಾನು ಹಾಗೂ ಶಾಸಕ ಸತೀಶ್ ಸೈಲ್ ಬೆಂಗಳೂರಿನ ಅಧಿವೇಶನವನ್ನು ಬಿಟ್ಟು ಅಲ್ಲೇ ಇದ್ದೆವು. ನಮ್ಮಿಂದ ಏನು ಮಾಡಲು ಸಾಧ್ಯವೋ ಅದನ್ನೆಲ್ಲ ಮಾಡಿದ್ದೇವೆ. ಕಳೆದ 11 ವರ್ಷದಿಂದ ಐಆರ್ಬಿ ಕಾಮಗಾರಿ ನಡೆಸುತ್ತಿದ್ದು, ಇನ್ನೂ ಹೆದ್ದಾರಿ ಕಾಮಗಾರಿ ಪೂರ್ತಿಗೊಳಿಸಲು ಸಾಧ್ಯವಾಗಿಲ್ಲ. ಅವರ ಅವೈಜ್ಞಾನಿಕ ಕಾಮಗಾರಿಯಿಂದ ಈ ದುರಂತ ಸಂಭವಿಸಿದೆ ಎಂದರು. ಅವರಲ್ಲಿ ಒಂದು ಹಿಟಾಚಿ ಕೂಡ ಇಲ್ಲ. ಅದನ್ನು ಕೂಡ ನಾವು ಬೇರೆ ಕಡೆಯಿಂದ ತರಿಸಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಕೇಂದ್ರ ತಂಡ ಇಂಥದ್ದೇ ಜಾಗದಲ್ಲಿ ಕುಸಿಯುತ್ತದೆ ಎಂದು ಹೇಳಿದ್ದರೂ ಏನೂ ಮಾಡಲಾಗಲಿಲ್ಲ. ಯಾರೂ ಯೋಚನೆ ಮಾಡದ ರೀತಿಯಲ್ಲಿ ಗುಡ್ಡ ಕುಸಿತವಾಗಿದೆ ಎಂದು ಅವರು ವಿಷಾದಿಸಿದರು. ಕೇರಳದ ಲಾರಿ ಹೊಳೆಯಲ್ಲಿ ಇರುವುದು ಗೊತ್ತಾಗಿದೆ. ಅದನ್ನು ನೋಡಲು ಸಾಧ್ಯವಾಗುತ್ತಿಲ್ಲ. ನೌಕಾಸೇನೆ, ಕೋಸ್ಟ್ಗಾರ್ಡ್ ಎಲ್ಲರೂ ಪ್ರಯತ್ನಿಸುತ್ತಿದ್ದಾರೆ. ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದರು. ಇಲ್ಲಿವರೆಗೆ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬ ನಿಖರ ಮಾಹಿತಿ ಯಾರಿಗೂ ಇಲ್ಲ. ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುವುದು ಸರಿಯಲ್ಲ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ನೀಡಲಾಗಿದೆ. ಮನೆ ಕಳೆದುಕೊಂಡವರಿಗೆ 1.25 ಲಕ್ಷ ರು. ನೆರವು ನೀಡಿದ್ದೇವೆ. ಮನೆ ಶುಚಿ ಮಾಡಲು 5 ಸಾವಿರ ರು. ನೀಡಲಾಗಿದೆ. ಮಳೆ ಕಡಿಮೆಯಾದರೆ ತ್ವರಿತ ಕಾರ್ಯಾಚರಣೆ ನಡೆಸಲು ಅನುಕೂಲವಾಗಲಿದೆ. ಗುಡ್ಡದಿಂದ ನೀರು ಬಂದು ನದಿ ತುಂಬಿ ಹರಿಯುತ್ತಿದೆ. ಹಾಗಾಗಿ ಏನೂ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು. ಮುಖ್ಯಮಂತ್ರಿ, ಕಂದಾಯ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾವು ರಾಜಕಾರಣ ಮಾಡುವುದಿಲ್ಲ, ಬಡವರಿಗೆ ಸಹಾಯ ಮಾಡುತ್ತೇವೆ. ಹಾಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬಗ್ಗೆ ಮಾತನಾಡಲು ಸಾಕಷ್ಟಿದೆ. ಅದೇ ಕ್ಷೇತ್ರದಲ್ಲಿ 15 ವರ್ಷ ಶಾಸಕರಾಗಿ, ಮಂತ್ರಿಗಳೂ ಆಗಿದ್ದವರು, ಅವರಿಗೆ ಎನ್ಎಚ್ಎಐ, ಐಆರ್ಬಿ ಯಾರಿಗೆ ಬರುತ್ತದೆ ಎನ್ನುವುದು ಗೊತ್ತಿಲ್ಲವೇ? ಬಿಜೆಪಿಯವರು ಯಾರು ಸಾಯುತ್ತಾರೆ ಎಂದು ನೋಡಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ ಎಂದು ಸಚಿವ ಮಾಂಕಾಳ ವೈದ್ಯ ಹೇಳಿದರು. ಸುರತ್ಕಲ್ ಸಮುದ್ರ ಮಧ್ಯೆ ಲಂಗರು ಹಾಕಿರುವ ಸರಕು ನೌಕೆಯಿಂದ ಯಾವುದೇ ರೀತಿಯ ಅಪಾಯ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಕೋಸ್ಟ್ ಗಾರ್ಡ್ ಪರಿಶೀಲನೆ ನಡೆಸುತ್ತಿದ್ದು, ಏನೂ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದೆ. ಈಗಾಗಲೇ ನೌಕೆಯಲ್ಲಿ ಕಾಣಿಸಿದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಈ ಕುರಿತು ನಿಗಾ ಇರಿಸಲಾಗಿದೆ ಎಂದರು.
ಎಡಪಂಥೀಯರಿಂದ ಪ್ಯಾರಿಸ್ ಒಲಿಂಪಿಕ್ಸ್ ಹೈಜಾಕ್: ಧರ್ಮ ನಿಂದನೆ ಆರೋಪ ಮಾಡಿದ ಕಂಗನಾ ರಾಣಾವತ್!
Kangana Ranaut On Paris Olympics Opening Ceremony: ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭದಲ್ಲಿ ಆಯೋಜನೆ ಮಾಡಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲಾ ಪ್ರದರ್ಶನಗಳು ಹಾಗೂ ನಾಟಕ ಪ್ರದರ್ಶನಗಳ ಬಗ್ಗೆ ಆಕ್ಷೇಪ ಹೊರ ಹಾಕಿರುವ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಾಣಾವತ್, ಎಡಪಂಥೀಯರು ಕ್ರೈಸ್ತ ಧರ್ಮ ಹಾಗೂ ಏಸು ಕ್ರಿಸ್ತನಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಲೈಂಗಿಕತೆಯನ್ನೇ ಪ್ರಧಾನವಾಗಿ ಬಿಂಬಿಸಿ ವಿಕೃತಿ ಮೆರೆದಿದ್ದಾರೆ ಎಂದೂ ಕಂಗನಾ ರಾಣಾವತ್ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಹೋಟೆಲ್ ಬೀಗ ಮುರಿದು ಒಳನುಗ್ಗಿದ, ₹20 ಇಟ್ಟು ಹೋದ: ತೆಲಂಗಾಣದಲ್ಲೊಬ್ಬ 'ಪ್ರಾಮಾಣಿಕ ಕಳ್ಳ'
Telangana Thief Leaves Money for Owners: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನೈತಿಕತೆಯುಳ್ಳ ಪ್ರಾಮಾಣಿಕ ಕಳ್ಳನೊಬ್ಬ ಕಂಡಿದ್ದಾನೆ. ಹೋಟೆಲ್ಗೆ ಕಳವು ಮಾಡಲು ಬೀಗ ಮುರಿದು ನುಗ್ಗಿದ ಆತ, ಕದಿಯಲು ಏನೂ ಸಿಗದೆ ಬೇಸರಗೊಂಡಿದ್ದಾನೆ. ಬಳಿಕ ಹೋಟೆಲ್ನ ಫ್ರಿಡ್ಜ್ನಿಂದ ಬಾಟಲ್ವೊಂದನ್ನು ತೆಗೆದುಕೊಂಡು ಅದರ ಹಣವನ್ನು ಮಾಲೀಕರ ಟೇಬಲ್ ಮೇಲೆ ಇಟ್ಟು ನಿರ್ಗಮಿಸಿದ್ದಾನೆ. ಆತನ ಪ್ರಾಮಾಣಿಕತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಅಂತರರಾಷ್ಟ್ರೀಯ ಹೂಡಿಕೆಗಳಿಗೆ ಪೂರಕವಾದ ನೀತಿಗಳನ್ನು ಭಾರತ ರಚಿಸಬೇಕು: ನೀತಿ ಆಯೋಗ ಸಭೆಯಲ್ಲಿ ಪ್ರಧಾನಿ ಮೋದಿ
ಹೊಸದಿಲ್ಲಿ: ಅಂತರರಾಷ್ಟ್ರೀಯ ಹೂಡಿಕೆಗಳಿಗೆ ಪೂರಕವಾದ ನೀತಿಗಳನ್ನು ಭಾರತ ರಚಿಸಬೇಕಿದೆ ಎಂದು ಇಂದು ನಡೆದ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. “ಈ ದಶಕವು ಬದಲಾವಣೆಗಳ, ತಂತ್ರಜ್ಞಾನದ ಮತ್ತು ಅವಕಾಶಗಳ ದಶಕವಾಗಿದೆ. ಭಾರತ ಈ ಅವಕಾಶಗಳನ್ನು ಸೆಳೆದುಕೊಳ್ಳಬೇಕು ಮತ್ತು ತನ್ನ ನೀತಿಗಳನ್ನು ಅಂತರರಾಷ್ಟ್ರೀಯ ಹೂಡಿಕೆಗಳಿಗೆ ಪೂರಕಗೊಳಿಸಬೇಕು. ಇದು ಭಾರತವನ್ನು ಪ್ರಗತಿಯತ್ತ ಸಾಗಿಸಲು ಇಡಬೇಕಾದ ಹೆಜ್ಜೆಯಾಗಿದೆ,” ಎಂದು ಪ್ರಧಾನಿ ಹೇಳಿದ್ದಾರೆಂದು ನೀತಿ ಆಯೋಗ ತನ್ನ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ. ಭಾರತವನ್ನು 2047 ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿಸುವ ವಿಕಸಿತ್ ಭಾರತ್ @2047, ಎಂಬ ದೃಷ್ಟಿಕೋನದ ವಿಷನ್ ಡಾಕ್ಯುಮೆಂಟ್ ಕುರಿತ ಚರ್ಚೆಗಳ ನೇತೃತ್ವವನ್ನು ಪ್ರಧಾನಿ ವಹಿಸಿದರು. ರಾಷ್ಟ್ರಪತಿ ಭವನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳು, ಕೇಂದ್ರ ಸಚಿವರು ಮತ್ತು ನೀತಿ ಆಯೋಗದ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ.
ಬೂತ್ ಗಳಲ್ಲಿ ರಾಜಕೀಯ ಮಾಡೋಣ, ಈಗ ಎಲ್ಲರೂ ಸೇರಿ ಬೆಂಗಳೂರು ಕಟ್ಟೋಣ: ವಿಪಕ್ಷಗಳಿಗೆ ಡಿಕೆಶಿ ಹೇಳಿದ್ದೇನು?
ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವಪಕ್ಷ ಶಾಸಕರು ಮತ್ತು ಜನಪ್ರತಿನಿಧಿಗಳ ಸಭೆಯನ್ನು ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್ ಅಶೋಕ, ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಬೆಂಗಳೂರಿನ ಅನೇಕ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಬೂತ್ ಮಟ್ಟದಲ್ಲಿ ರಾಜಕೀಯ ಮಾಡೋಣ, ಈಗ ಎಲ್ಲ ಪಕ್ಷದ ಮುಖಂಡರೂ ಸೇರಿ ಬೆಂಗಳೂರು ಕಟ್ಟೋಣ ಎಂದು ಮನವಿ ಮಾಡಿದರು.
ಯೇನೆಪೋಯ ಸಂಸ್ಥೆ ಉದ್ದೇಶಿತ ಗುರಿ ಸಾಧಿಸುವಲ್ಲಿ ಯಶಸ್ವಿಯಾಗಿದೆ: ಡಾ.ವಿಶ್ವಮೋಹನ್ ಕಟೋಚ್
ಕೊಣಾಜೆ: ಯೇನೆಪೋಯ ಶಿಕ್ಷಣ ಸಂಸ್ಥೆಯು ಕಳೆದ 25 ವರ್ಷಗಳಲ್ಲಿ ಉದ್ದೇಶಿತ ಗುರಿಗಳನ್ನು ಸಾಧಿಸುವಲ್ಲಿ ಯಶಸ್ವಿಯಾ ಗಿದೆ. ಅಲ್ಲದೆ ಶಿಕ್ಷಣದ ಪ್ರಮಾಣವನ್ನು ಗಣನೀಯವಾಗಿ ಉತ್ತಮಗೊಳಿಸಿದ್ದು, ಶೈಕ್ಷಣಿಕ ಉಪಕ್ರಮಗಳ ಮೂಲಕ ಬದಲಾವಣೆಯನ್ನು ತರುವಲ್ಲಿ ಯಶಸ್ಬಿಯಾಗಿದೆ. ಅತ್ಯುತ್ತಮ ವೈದ್ಯಕೀಯ ವ್ಯವಸ್ಥೆಗಳ ಸ್ಥಾಪಿಸುವ ಜೊತೆಗೆ ಹಲವು ಪ್ರಕಟಣೆಗಳನ್ನು ಬಿಡುಗಡೆ ಮಾಡಿದೆ, ಅದು ರಾಷ್ಟ್ರೀಯ ಆರೋಗ್ಯ ನೀತಿಯಲ್ಲೂ ಪ್ರಭಾವಿತವಾಗಿರುವುದು ಶ್ಲಾಘನೀಯ ಎಂದು ಐಸಿಎಂಆರ್ ನ ಮಾಜಿ ಮುಖ್ಯ ನಿರ್ದೇಶಕರಾದ ಡಾ.ವಿಶ್ವಮೋಹನ್ ಕಟೋಚ್ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯಲ್ಲಿರುವ ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಅಧೀನದ ಯೇನೆಪೋಯ ವೈದ್ಯಕೀಯ ಕಾಲೇಜು ಇದರ ಬೆಳ್ಳಿ ಹಬ್ಬದ ಸಂಭ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ವಿಶ್ವವಿದ್ಯಾಲಯದ ವೈದ್ಯಕೀಯ ವ್ಯವಸ್ಥೆಗಳು ಪರಿಸರದ ಅವಿಭಾಜ್ಯ ಭಾಗವಾಗಿ ಹೊರಹೊಮ್ಮಿದ್ದು, ಯುನಾನಿ, ನ್ಯಾಚುರೋಪತಿ, ಆಯುರ್ವೇದ ಔಷಧೀಯ ಪದ್ಧತಿ ಮಾನವತೆಯನ್ನು ಉತ್ತಮವಾಗಿ ಪಸರಿಸಲು ವಿಸ್ತರಿಸಲಾಗಿದೆ. ಪ್ರತಿಯೊಂದು ವ್ಯವಸ್ಥೆಯಲ್ಲಿಯೂ ನಿರ್ಧಾರಿತ ಯುಕ್ತಿಯ ಮಿತಿಗಳು ಇದ್ದರೂ, ಅಖಂಡ ವೈದ್ಯಕೀಯ ವ್ಯವಸ್ಥೆ ತತ್ವವು ಪ್ರಾಮುಖ್ಯತೆ ಪಡೆದುಕೊಂಡಿದೆ. ವಿಶ್ವವಿದ್ಯಾಲಯವು ಇವುಗಳನ್ನು ಅರಿತು, ಸುಧಾರಣೆಗಾಗಿ ಪ್ರಯತ್ನಿಸುತ್ತಿದೆ. ಮುಂದಿನ 25 ವರ್ಷಗಳಲ್ಲಿ ವಿಶ್ವವಿದ್ಯಾಲಯವು ತನ್ನ ಅತ್ಯಂತ ಶಕ್ತಿಯನ್ನು ಬಳಸಿಕೊಂಡು ವಿಭಿನ್ನವಾಗಿ ಚಿಂತನೆಯೊಂದಿಗೆ ಆರೋಗ್ಯಕರ ಭಾರತವನ್ನು ಮತ್ತು ಆರೋಗ್ಯಕರ ಜಗತ್ತನ್ನು ನಿರ್ಮಿಸಲು ಸಜ್ಜಾಗಿದೆ ಎಂದರು. ಐಸಿಎಂಆರ್ ನ ಮಾಜಿ ಮುಖ್ಯ ನಿರ್ದೇಶಕರಾದ ಪ್ರೊ.ನಿರ್ಮಲ್ ಕುಮಾರ್ ಗಂಗೂಲಿ ಮಾತನಾಡಿ, ದಕ್ಷಿಣ ಭಾರತದ ಎಲ್ಲೆಡೆಯೂ ಇಲ್ಲದಂತಹ ವೈದ್ಯಕೀಯ ಸೌಲಭ್ಯಗಳನ್ನು ಯೆನೆಪೋಯ ಒದಗಿಸುತ್ತಿದೆ. ದೈವಿಕ ಗುಣವು ದೇವರ ಆಶೀರ್ವಾದವಾಗಿದೆ. ಶಿಸ್ತಿನಿಂದ, ಪರಂಪರೆ ಹಾಗೂ ಭೂತಕಾಲವನ್ನು ಗೌರವಿಸುವುದು ಶ್ಲಾಘನೀಯ. ಇಂತಹ ಉಪ ಕ್ರಮಗಳಿಂದಾಗಿ ಸಂಸ್ಥೆ 25 ವರ್ಷಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಲು ಸಾಧ್ಯವಾಗಿದೆ. ಶಿಕ್ಷಕರನ್ನು ಮತ್ತು ಪೋಷಕರನ್ನು ಗೌರವಿಸುವುದು, ಸಮುದಾಯಕ್ಕೆ ಸೇವೆ ಸಲ್ಲಿಸುವುದು ಆರೋಗ್ಯ ʼಕ್ಷೇತ್ರಗಳ ಪ್ರಮುಖ ಉದ್ದೇಶವಾಗಿದ್ದು,. ಈ ವಿಶ್ವವಿದ್ಯಾಲಯವು ಆಧುನಿಕ ವಿಜ್ಞಾನದಲ್ಲಿ ಹೂಡಿಕೆ ಮಾಡಿ ಎಲ್ಲಾ ವರ್ಗದವರಿಗೂ ಸಮಾನ ರೀತಿಯ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಕಾರ್ಯ ಆರೋಗ್ಯಕರ ಸಮಾಜಕ್ಕೆ ಪೂರಕವಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಯೇನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯ ದ ಕುಲಾಧಿಪತಿ ಡಾ.ಯೆನೆಪೋಯ ಅಬ್ದುಲ್ಲಾ ಕುಂಞಿ ಅವರು, ಹಳೇಯ ವಿದ್ಯಾರ್ಥಿಗಳ ಸಾಧನೆಯೇ ಸಂಸ್ಥೆಯ ಹೆಮ್ಮೆಯಾಗಿದೆ. ವೈದ್ಯಕೀಯ ಆರೈಕೆ ಮತ್ತು ಸಂಶೋಧನಾ ವರದಿಗಳಿಂದಾಗಿ , ಯೆನೆಪೋಯ ವಿ.ವಿ.ಯು ಯಶಸ್ಸಿನ ಮೈಲಿಗಲ್ಲನ್ನು ಸ್ಥಾಪಿಸಿದೆ. ಈ ಮೂಲಕ ತಂದೆಯವರಾದ ಯೆನೆಪೋಯ ಮೊಯ್ದೀನ್ ಕುಂಞಿ ಅವರ ಉದ್ದೇಶಗಳು ಈಡೇರಿದೆ. ಸಮುದಾಯದೊಳಗೆ ಶೈಕ್ಷಣಿಕ ಕ್ರಾಂತಿ ಹಾಗೂ ಆರೋಗ್ಯ ಕ್ರಾಂತಿಯನ್ನು ಸಂಸ್ಥೆ ಸ್ಥಾಪಿಸಿದ್ದು, ಟ್ರಸ್ಟಿಗಳ ಸೇವೆ ಹಾಗೂ ನೌಕರರ ಬದ್ಧತೆಯು ಜಾಗತಿಕ ಮಟ್ಟದಲ್ಲಿ ಆಸ್ಪತ್ರೆಯನ್ನು ಗುರುತಿಸುವಂತೆಯೂ ಮಾಡಿದೆ. ಅಕಾಡೆಮಿಕ್ ಡೀನ್ ಅಶ್ವಿನಿ ದತ್ತ್ ಆರ್, ಕುಲಸಚಿವ ಡಾ.ಗಂಗಾಧರ ಸೋಮಯಾಜಿ, ಉಪಪ್ರಾಂಶುಪಾಲ ಡಾ.ಪ್ರಕಾಶ್ ಸಲ್ದಾನ, ಫ್ಯಾಕಲ್ಟಿ ಅಫ್ ಮೆಡಿಸಿನ್ ಡೀನ್ ಡಾ.ಆಭಯ್ ನಿರ್ಗುಡೆ ಮುಖ್ಯ ಅತಿಥಿಗಳಾಗಿದ್ದರು. ಯೇನೆಪೋಯ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್ .ಮೂಸಬ್ಬ ಅವರು ಸ್ವಾಗತಿಸಿದರು. ಉಪಪ್ರಾಂಶುಪಾಲ ಡಾ.ಪ್ರಕಾಶ್ ಸಲ್ದಾನ ವಂದಿಸಿದರು. ಕಾರ್ಯಕ್ರಮದಲ್ಲಿ ಕಳೆದ 25 ವರ್ಷಗಳಿಂದ ಸಂಸ್ಥೆಯಲ್ಲಿ ಸೇವೆ ನಡೆಸುವ, ನಡೆಸಿ ನಿವೃತ್ತರಾದ ಕುಲಪತಿ, ಉಪಕುಲಪತಿ ಹಾಗೂ ಸಾಧನೆಗೈದ ಹಳೇ ವೈದ್ಯರುಗಳನ್ನು ಅಭಿನಂದಿಸಲಾಯಿತು. ಬೆಳ್ಳಿಹಬ್ಬದ ಪ್ರಯುಕ್ತ ರಚಿಸಲಾದ ಸ್ಮರಣಿಕಾ ಪುಸ್ತಕದ ಬಿಡುಗಡೆಯನ್ನು ನಡೆಸಲಾಯಿತು. ಸರಕಾರಿ ಶಾಲೆಗೆ ಆಸರೆ ! ಇತ್ತೀಚೆಗೆ ಯೋಗ ಶಿಕ್ಷಕ ಕುಶಾಲಪ್ಪ ಗೌಡ ಅವರು ನಿರಂತರವಾಗಿ ಹಲವು ಗಂಟೆಗಳ ಕಾಲ ಯೋಗ ತರಬೇತಿಯನ್ನು ನೀಡಿ ವಿಶ್ವ ದಾಖಲೆ ಸಾಧಿಸಿದ ಕಾರ್ಯಕ್ರಮದಲ್ಲಿ ದಾನಿಗಳಿಂದ ಸಂಗ್ರಹಿಸಿದ ರೂ. 2,25,225 ನಗದು ಚೆಕ್ ಅನ್ನು ಸಂಸ್ಥೆಯ ಚೇರ್ ಮೆನ್ ವೈ.ಅಬ್ದುಲ್ಲಾ ಕುಂಞಿ ಇವರು ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಸರಕಾರಿ ಶಾಲೆಯ ಅಭಿವೃದ್ಧಿಗೆ ಮೊಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಸದಸ್ಯರಿಗೆ ವಿತರಿಸಿದರು. ಈ ವೇಳೆ ಕುಶಾಲಪ್ಪ ಗೌಡ ಮಾತನಾಡಿ, ಮೊಗ್ರು ಶಾಲೆಯ ಹಳೆಯ ವಿದ್ಯಾರ್ಥಿಯಾಗಿರುವ ತಾನು, ಅಲ್ಲಿನ ಸದ್ಯದ ಸ್ಥಿತಿಯನ್ನು ಅರಿತು ಶಾಲೆ ಅಭಿವೃದ್ಧಿ ಹಾಗೂ ಉಳಿಸುವ ಉದ್ದೇಶದೊಂದಿಗೆ ವಿಶ್ವ ದಾಖಲೆಯ ಯೋಗ ನಡೆಸಲು ತೀರ್ಮಾನಿಸಿದೆ. ಅದಕ್ಕಾಗಿ ಯೇನೆಪೋಯ ಸಂಸ್ಥೆ ಸಹಕಾರವನ್ನು ನೀಡಿದೆ. ಅದರಲ್ಲಿ ಸಂಗ್ರಹಿಸಿದ ಹಣದಿಂದ ಇದೀಗ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಮತ್ತು ಆಂಗ್ಲ ಮಾಧ್ಯಮವನ್ನು ಆರಂಭಿಸಿ ಮುಂಬರುವ ಶೈಕ್ಷಣಿಕ ವರ್ಷದಿಂದ ಹೆಚ್ಚಿನ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸುವ ಉದ್ದೇಶ ಹೊಂದಿದ್ದೇವೆ ಎಂದರು.
Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!
Physical Assault: ವರದಿಯ ಪ್ರಕಾರ, ಮೂರು ತಿಂಗಳ ಹಿಂದೆ ರೇವಾದ ಜಾವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾತ್ರಿ ತನ್ನ ಮೊಬೈಲ್ ಫೋನ್ ನಲ್ಲಿ ಪೋರ್ನ್ ವಿಡಿಯೊ ನೋಡಿದ್ದಾನೆ. ಬಳಿಕ ತನ್ನ ಪಕ್ಕದಲ್ಲಿ ಮಲಗಿದ್ದ ಸಹೋದರಿಯನ್ನು ಲೈಂಗಿಕವಾಗಿ ಶೋಷಿಸಿದ್ದಾನೆ. ಆಕೆ ತಂದೆಗೆ ಹೇಳುವುದಾಗಿ ಹೇಳಿದಾಗ ಕೊಲೆ ಮಾಡಿದ್ದ. The post Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ! first appeared on Vistara News .
ತೌಡುಗೋಳಿ ಮೊಬೈಲ್ ಟವರ್ ಬಳಿ ಪಕ್ಷಿಗಳ ನಿಗೂಢ ಸಾವು: ಗ್ರಾಮಸ್ಥರಲ್ಲಿ ಆತಂಕ
ಕೊಣಾಜೆ : ನರಿಂಗಾನ ಗ್ರಾಮದ ಮುಖ್ಯ ಜಂಕ್ಷನ್ ಬಳಿಯ ಮೊಬೈಲ್ ಟವರ್ ಬಳಿಯಲ್ಲಿ ಐದು ಕಾಗೆ, ಎರಡು ಗಿಡುಗ ಹಾಗೂ ಒಂದು ಕುಫುಲು ಪಕ್ಷಿ ಸಾವಿಗೀಡಾಗಿದ್ದು ಗ್ರಾಮಸ್ಥರಲ್ಲಿ ಸಂಶಯದ ಜೊತೆಗೆ ಆತಂಕ ಮೂಡಿಸಿದೆ. ಸಾವಿಗೀಡಾಗಿರುವ ಸ್ಥಳದಲ್ಲಿಯೇ ಟವರ್ ಇದ್ದು ಇತ್ತೀಚೆಗಷ್ಟೇ ನಿರ್ಮಿಸಲಾಗಿದ್ದು ಟವರ್ ನಿರ್ಮಾಣಕ್ಕೆ ಗ್ರಾಮದ ಕೆಲವು ಮಂದಿಯ ವಿರೋಧವಿದ್ದರೂ ಅಧಿಕಾರಿಗಳು ಹಕ್ಕಿಗಳು ತೆಂಗಿನಮರಕ್ಕೆ ಯಾವುದೇ ಟವರ್ ನಿಂದ ಹಾನಿಯಾಗದು ಎಂದು ತಿಳಿಸಿದ್ದರಿಂದ ನಿರ್ಮಿಸಲು ಪಂಚಾಯಿತಿ ಅವಕಾಶ ನೀಡಿತ್ತು. ಇದೀಗ ಹಕ್ಕಿಗಳ ಸಾವು ನಿಗೂಢವಾಗಿದೆ. ತೌಡುಗೋಳಿಯಲ್ಲಿ ಬೀದಿ ನಾಯಿ ಸಂಚಾರ ಹೆಚ್ಚಿದ್ದ ಕಾರಣ ಇತ್ತೀಚೆಗೆ ಬಾಲಕನೊಬ್ಬನ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾದಾಗ ಆಟೋ ಚಾಲಕರು ಅಟ್ಟಾಡಿಸಿಕೊಂಡು ಹೋಗಿದ್ದರು. ನಾಯಿಗಳ ಮಾರಣ ಹೋಮಕ್ಕಾಗಿ ಯಾರಾದರೂ ವಿಷ ಪದಾರ್ಥ ಬಳಸಿದ್ದು ಅದನ್ನು ಹಕ್ಕಿಗಳು ಸೇವಿಸಿ ಸಾವಿಗೀಡಾಗಿರಬಹುದೇ ಎಂಬ ಸಂದೇಹ ಇದೆ. ಟವರ್ ನ ಬಳಿಯ ಟ್ರಾನ್ಸ್ ಫಾರ್ಮರ್ ಮೆಟ್ಟಿಲಲ್ಲೂ ಕಾಗೆಯೊಂದು ಸತ್ತು ಬಿದ್ದಿದೆ. ಹಾಗೆಯೇ ಹತ್ತು ಇಪ್ಪತ್ತು ಮೀ. ದೂರದಲ್ಲಿಯೂ ಕಳೇಬರವಿದೆ. ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯತಿ ಪಿಡಿಒ, ಸ್ಥಳೀಯ ಮುಖಂಡರು ಭೇಟಿ ನೀಡಿ ಪಂಚಾಯಿತಿ ಅಧ್ಯಕ್ಷರಿಗೆ ಆ ಬಗ್ಗೆ ಮೌಖಿಕ ದೂರ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಪಂಚಾಯಿತಿ ಅಧ್ಯಕ್ಷ ನವಾಝ್ ನರಿಂಗಾನ ಹಕ್ಕಿಗಳು ಯಾವ ರೀತಿಯಲ್ಲಿ ಸಾವಿಗೀಡಾಗಿದೆ ಎಂಬುದನ್ನು ಹಕ್ಕಿಯ ಕಳೇಬರ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದ್ದು ಬಳಿಕ ಬಂದ ವರದಿಯಲ್ಲಿ ಉಲ್ಲೇಖಿತ ಫಲಿತಾಂಶದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
India vs Sri Lanka: 8ನೇ ಬಾರಿ ಏಷ್ಯಾಕಪ್ ಗೆಲ್ಲುವ ವಿಶ್ವಾಸದಲ್ಲಿ ಭಾರತ: ಫೈನಲ್ ಪಂದ್ಯದ ಸಮಯ, ವಿವರ
ಶನಿವಾರ ಪುರುಷರ ಭಾರತ ಮತ್ತು ಶ್ರೀಲಂಕಾ ಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದ್ದಾರೆ. ಭಾನುವಾರ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಕೂಡ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿವೆ. ಭಾರತ 8ನೇ ಬಾರಿ ಮಹಿಳಾ ಏಷ್ಯಾಕಪ್ ಗೆಲ್ಲಲು ಸಜ್ಜಾಗಿದ್ದರೆ, ಶ್ರೀಲಂಕಾ ಮೊದಲ ಬಾರಿ ಏಷ್ಯಾಕಪ್ ಗೆಲ್ಲುವ ವಿಶ್ವಾಸದಲ್ಲಿದೆ. ಏಷ್ಯಾಕಪ್ನಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದು,
ಮಂಗಳೂರು| ಮನಪಾ ವ್ಯಾಪ್ತಿಯಲ್ಲಿ ಟಿಡಿಆರ್ ದಂಧೆ ಆರೋಪ: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ರಿಗೆ ಬಹಿರಂಗ ಪತ್ರ
ಮಂಗಳೂರು, ಜು.27: ಮಂಗಳೂರು ನಗರ ಪಾಲಿಕೆಯ ಬಿಜೆಪಿ ಆಡಳಿತದಲ್ಲಿ ರಿಯಲ್ ಎಸ್ಟೇಟ್, ಬಿಲ್ಡರ್ ಲಾಬಿ ವಿಪರೀತವಾಗಿದ್ದು, ರಸ್ತೆ ನಿರ್ಮಾಣ, ಅಗಲೀಕರಣ, ಚರಂಡಿ, ಫುಟ್ ಪಾತ್ ಗಳಿಗೆ ಜಮೀನು ಸ್ವಾಧೀನಕ್ಕೆ ಬಳಕೆಯಾಗುತ್ತಿದ್ದ ಟಿಡಿಆರ್ ಯೋಜನೆ ಈ ಅವಧಿಯಲ್ಲಿ ಬಿಲ್ಡರ್, ರಿಯಲ್ ಎಸ್ಟೇಟ್ ಲಾಭಿಗಳ ಅನುಕೂಲಕ್ಕೆ ತಕ್ಕ ಹಾಗೆ ಬೇಕಾಬಿಟ್ಟಿ ಬಳಕೆಯಾಗುತ್ತಿದೆ ಎಂದು ಆರೋಪಿಸಿ ಡಿವೈಎಫ್ಐನ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳರವರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ಗೆ ಬಹಿರಂಗ ಪತ್ರ ಬರೆದಿದ್ದಾರೆ. ರಿಯಲ್ ಎಸ್ಟೇಟ್ ಲಾಬಿಗಾಗಿ ಹತ್ತಾರು ಎಕರೆ ನಿರುಪಯೋಗಿ ಜಮೀನನ್ನು ಹಲವು ನೆಪಗಳನ್ನು ಮುಂದಿಟ್ಟು ನಿಯಮ ಗಳನ್ನು ಕಡೆಗಣಿಸಿ ಟಿಡಿಆರ್ ಅಡಿ ಖರೀದಿಸಲಾಗುತ್ತಿದೆ. ಇದರಿಂದ ನಗರ ಮಧ್ಯದಲ್ಲಿ ಬಿಲ್ಡರ್ಗಳ ಬಹು ಮಹಡಿ ವಸತಿ ಸಂಕೀರ್ಣಗಳು ಟಿಡಿಆರ್ ಸಲ್ಲಿಸಿ ನಿಯಮಗಳ ಪರಿವೆಯೇ ಇಲ್ಲದೆ ಆಕಾಶದೆತ್ತರಕ್ಕೆ ಏರುತ್ತಿದ್ದರೆ, ನಗರ ಪಾಲಿಕೆಯ ಬೊಕ್ಕಸಕ್ಕೆ ನೂರಾರು ಕೋಟಿ ರೂ. ಆದಾಯ ನಷ್ಟವಾಗುತ್ತಿದೆ. ಪಾಲಿಕೆ ಪಾಪರ್ ಆಗುತ್ತಿದೆ. ಇತ್ತೀಚೆಗೆ ಬಿಜೆಪಿ ಮುಖಂಡ ಬಿಲ್ಡರ್ ಪಚ್ಚನಾಡಿ ಡಂಪಿಂಗ್ ಯಾರ್ಡ್ಗೆ ತಾಗಿಕೊಂಡ 10 ಎಕರೆ ನಿರುಪಯೋಗಿ ಜಮೀನು ಟಿಡಿಆರ್ನಡಿ ಖರೀದಿಗೆ ನಗರ ಪಾಲಿಕೆ (ನಿಯಮಗಳಲ್ಲಿ ಆ ರೀತಿ ಖರೀದಿಗೆ ಅವಕಾಶ ಇಲ್ಲ) ಒಪ್ಪಿಗೆ ಸೂಚಿಸಿದ್ದು, ನಿಯಮ ಬದ್ಧವಾಗಿರದ ಅದೇ ಕಡತ ವಿಲೇವಾರಿಗೆ ಸಹಿ ಹಾಕುವ ವಿಚಾರದಲ್ಲಿ ಪಿತೂರಿ ನಡೆದು ಮೂಡಾ ಕಮೀಷನರ್ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಈ ಮೂಲಕ ಟಿಡಿಆರ್ನ ದಂಧೆ ಪಡೆದುಕೊಂಡಿರುವ ಕರಾಳ ಸ್ವರೂಪವೂ ಬಯಲಾಗಿತ್ತು. ಇದೀಗ ಮತ್ತೊಂದು ಮೆಗಾ ಟಿಡಿಆರ್ ಡೀಲ್ಗೆ ಮಂಗಳೂರು ನಗರ ಪಾಲಿಕೆಯ ಬಿಜೆಪಿ ಆಡಳಿತ ಕೈ ಹಾಕಿದೆ. ನಗರದ ಹೊರ ವಲಯದಲ್ಲಿರುವ ಮರಕಡ ಗ್ರಾಮದ 9.15 ಎಕರೆ, ಪದವು ಗ್ರಾಮದ 3.45 ಎಕರೆ ಜಮೀನುಗಳನ್ನು ಟಿಡಿಆರ್ ಅಡಿ ಖರೀದಿಸಲು ನಗರ ಪಾಲಿಕೆ ಏಕಪಕ್ಷೀಯವಾಗಿ ತೀರ್ಮಾನಿಸಿದೆ. ಈ ಎರಡೂ ಜಮೀನು ನಗರದ ಅತಿ ಪ್ರಭಾವಿ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಸೇರಿರುವಂತದ್ದು. ವಸತಿ ಸಂಕೀರ್ಣ, ಅಪಾರ್ಟ್ ಮೆಂಟ್ ಮುಂತಾದ ಬಳಕೆಗೆ ತೀರಾ ನಿರುಪಯೋಗಿ ಜಮೀನು ಎಂದು ಗುರುತಿಸಲ್ಪಟ್ಟಂತಹದ್ದು. ಈ ಜಮೀನನ್ನು ಟಿಡಿಆರ್ ಅಡಿ ನಗರ ಪಾಲಿಕೆಯ ತಲೆಗೆ ಹಾಕಿ ಅಮೂಲ್ಯ ಮೌಲ್ಯದ ಟಿಡಿಆರ್ ಪಡೆಯಲು ಹಲವು ವರ್ಷಗಳಿಂದ ರಿಯಲ್ ಎಸ್ಟೇಟ್ ಲಾಬಿ ಪ್ರಯತ್ನಿಸುತ್ತಲೇ ಬಂದಿದೆ. (ಒಂದು ವೇಳೆ ಈ ಜಮೀನು ವಸತಿ ಸಂಕೀರ್ಣ, ಲೇ ಔಟ್ ಗಳಿಗೆ ಅನುಕೂಲಕರ ಆಗಿದ್ದಲ್ಲಿ ವರ್ಷಗಳ ಕಾಲ ಕಾದು ಬಡವರ ವಸತಿ ಯೋಜನೆಗಾಗಿ ಟಿಡಿಆರ್ ಅಡಿ ಬಿಟ್ಟುಕೊಡುವಂತಹ ಕರುಣಾಮಯಿ ಬಿಲ್ಡರ್ ಗಳು ಮಂಗಳೂರಿನಲ್ಲಂತೂ ನಾವು ಕಂಡಿಲ್ಲ) ಮೂರ್ನಾಲ್ಕು ವರ್ಷಗಳ ಹಿಂದೆ ಐಟಿ ಪಾರ್ಕ್ ನಿರ್ಮಾಣದ ಹೆಸರಿನಲ್ಲಿ ಇದೇ ನಿರುಪಯೋಗಿ ಜಮೀನು ಟಿಡಿಆರ್ ಅಡಿ ಖರೀದಿಸಲು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮೂಲಕ ಪ್ರಸ್ತಾಪ ನಗರ ಪಾಲಿಕೆ ಮುಂದೆ ತರಲಾಗಿತ್ತು. ಆಗ ನಗರದ ಜನಪರ ಸಂಘಟನೆಗಳು ಪ್ರಬಲ ವಿರೋಧ ವ್ಯಕ್ತ ಪಡಿಸಿದ್ದವು. ನಿಯಮಗಳ ಉಲ್ಲಂಘನೆಯನ್ನು ಎತ್ತಿತೋರಿಸಲಾಗಿತ್ತು. ವ್ಯಾಪಕ ಜನ ವಿರೋಧದಿಂದಾಗಿ ಸರಕಾರ ಆಗ ಈ ಜಮೀನು ಟಿಡಿಆರ್ ಅಡಿ ಖರೀದಿಸಲು ಒಪ್ಪಿಗೆ ಸೂಚಿಸಲಿಲ್ಲ. ಈಗ ಬಡವರಿಗೆ ವಸತಿ ಯೋಜನೆ ರೂಪಿಸಲು ಎಂಬ ಗುರಾಣಿಯನ್ನು ಮುಂದಿಟ್ಟು ಮತ್ತೆ ಅದೇ ಪಾಳು ಬಿದ್ದಿರುವ ನಿರುಪಯೋಗಿ ಜಮೀನನ್ನು ಟಿಡಿಆರ್ ಅಡಿ ಖರೀದಿಸಲು ನಗರ ಪಾಲಿಕೆ ತೀರ್ಮಾನಿಸಿದೆ. ನಗರದ ಮೇಯರ್ ಸುಧೀರ್ ಶೆಟ್ಟಿ ತೀರಾ ತುರ್ತಿನ ವಿಚಾರ ಎಂಬಂತೆ ಪೂರ್ವಾನ್ವಯ ಅನುಮತಿಯನ್ನು ನೀಡಿ ತರುವಾಯ ನಗರ ಪಾಲಿಕೆಯ ತಿಂಗಳ ಹಿಂದಿನ ಸಾಮಾನ್ಯ ಸಭೆಯಲ್ಲಿ ಅನುಮೋದನೆಗೆ ಮಂಡಿಸಿದ್ದರು. ಆ ಸಂದರ್ಭ ನಾಗರಿಕ ಸಂಘಟನೆಗಳು ಪ್ರಬಲ ವಿರೋಧ, ವಿಪಕ್ಷ ಕಾಂಗ್ರೆಸ್ನ ಹಲವು ಕಾರ್ಪೊರೇಟರ್ ಗಳು ಆಕ್ಷೇಪ ವ್ಯಕ್ತ ಪಡಿಸಲು ಮುಂದಾದ ಕಾರಣ ಮುಂದೂಡಲ್ಪಟ್ಟಿದ್ದ ಕಾರ್ಯಸೂಚಿ ಎರಡು ದಿನಗಳ ಹಿಂದೆ ನಡೆದ ಸಭೆಯಲ್ಲಿ ಅನುಮೋದನೆಗೊಂಡಿದೆ. ಖೇದದ ಸಂಗತಿ ಏನೆಂದರೆ, ವಿರೋಧ ಪಕ್ಷವಾದ ಕಾಂಗ್ರೆಸ್ ನ ಪಾಲಿಕೆಯ ಸದಸ್ಯರಲ್ಲಿ ಅಬ್ದುಲ್ ರವೂಫ್ ಹಾಗೂ ಅಬ್ದುಲ್ ಲತೀಫ್ ಹೊರತು ಪಡಿಸಿ ಮೌನ ಸಮ್ಮತಿ ಸೂಚಿಸಿದ್ದಾರೆ. ಆಕ್ಷೇಪ ದಾಖಲಿಸುವಾಗ ಕಾಂಗ್ರೆಸ್ ಕಾರ್ಪೊರೇಟರ್ ಅಬ್ದುಲ್ ರವೂಫ್ ಅವರು ಈ ಜಮೀನು ನಾಲಕ್ಕು ದಿಕ್ಕಿನಲ್ಲೂ ಇಳಿಜಾರು ಆಗಿರುವುದು, ವಸತಿ ಯೋಜನೆಗೆ ಇದು ಯೋಗ್ಯವಲ್ಲ ಎಂದು ಅಧಿಕಾರಿಗಳು ವರದಿ ಸಲ್ಲಿಸಿರುವುದನ್ನು ಪ್ರಸ್ತಾಪಿಸಿದರು. ಈ ಸಂದರ್ಭ ಅಬ್ದುಲ್ ಲತೀಫ್ ಹೊರತು ಪಡಿಸಿ ಯಾವ ಪಾಲಿಕೆ ಸದಸ್ಯರೂ ರವೂಫ್ ಬೆಂಬಲಕ್ಕೆ ನಿಲ್ಲಲಿಲ್ಲ ಎಂದು ಮುನೀರ್ ಕಾಟಿಪಳ್ಳ ಸಚಿವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳನ್ನು ತಮ್ಮ ಗಮನಕ್ಕೆ ತರಲು ಮಂಗಳೂರಿನ ಜನ ಸಾಮಾನ್ಯರ ಹಾಗೂ ಜಾಗೃತ ನಾಗರಿಕರ ಪರವಾಗಿ ಈ ಬಹಿರಂಗ ಪತ್ರವನ್ನು ತಮಗೆ ಬರೆದಿದ್ದೇವೆ. ತಾವು ವಿವಾದಿತ ಮರಕಡ ಟಿಡಿಆರ್ ಕಡತಕ್ಕೆ ಯಾವುದೇ ಕಾರಣಕ್ಕೂ ರಾಜ್ಯ ಸರಕಾರದಿಂದ ಅನುಮೋದನೆ ನೀಡಬಾರದು. ಸಚಿವರಾದ ತಮ್ಮ ಹೆಸರನ್ನೇ ಗುರಾಣಿಯಾಗಿಸಿ ಹಗರಣವನ್ನು ನ್ಯಾಯೀಕರಿಸುವ ಬಿಜೆಪಿ ನಗರ ಪಾಲಿಕೆಯ ಈ ಯತ್ನವನ್ನು ತಾವು ವಿಫಲಗೊಳಿಸಬೇಕು ಹಾಗೂ ತನಿಖೆಗೆ ಒಳಪಡಿಸಬೇಕು. ಮಂಗಳೂರು ಪಾಲಿಕೆಯಲ್ಲಿ ಟಿಡಿಆರ್ ಎಂಬುದು ದಂಧೆಯಾಗಿ ಪರಿವರ್ತನೆಗೊಂಡಿದೆ. ಮರಕಡ ಟಿಡಿಆರ್ ಫೈಲ್ ಮಾತ್ರ ಅಲ್ಲದೆ, ಪಚ್ಚನಾಡಿ ಟಿಡಿಆರ್ ಫೈಲ್ ಸಹ ನಿಯಮಗಳನ್ನು ಉಲ್ಲಂಘಿಸಿರುವುದು ಈಗಿನ ಮೂಡಾ ಆಯುಕ್ತರೇ ಗುರುತಿಸಿದ್ದಾರೆ. ಪಚ್ಚನಾಡಿ ಟಿಡಿಆರ್ ಫೈಲ್ ಈಗ ಬೆಂಗಳೂರಿನ ನಿಮ್ಮ ಕಚೇರಿಯಲ್ಲಿ ಪರಿಶೀಲನೆಯ ಹಂತದಲ್ಲಿದೆ ಎಂಬ ಮಾಹಿತಿ ಇದೆ. ಈ ಫೈಲ್ ಅನ್ನೂ ಸಚಿವರಾದ ತಾವು ತಿರಸ್ಕರಿಸಬೇಕು. ಒಟ್ಟಾರೆ ಬಿಜೆಪಿ ನಗರ ಪಾಲಿಕೆಯ ಬಿಜೆಪಿ ಆಡಳಿತದ ಅವಧಿಯ ಎಲ್ಲಾ ಟಿಡಿಆರ್ ಡೀಲ್ ಗಳನ್ನೂ ತಾವು ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ತಮ್ಮಲ್ಲಿ ಒತ್ತಾಯಿಸುತ್ತಿದ್ದೇವೆ. ಈ ಎಲ್ಲಾ ಹಗರಣ, ಡೀಲ್ಗಳ ವಿರುದ್ಧ ಈಗಾಗಲೆ ಜನಪರ ಸಂಘಟನೆಗಳು ಪರಸ್ಪರ ಸಮಾಲೋಚನೆಯಲ್ಲಿ ತೊಡಗಿದ್ದು, ಬೃಹತ್ ಪಾದಯಾತ್ರೆ, ಹೋರಾಟ ಸಂಘಟಿಸುವ ಕುರಿತು ಚರ್ಚಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಉತ್ಸಾಹಿ ಸಚಿವರಾದ ತಾವು ಮಂಗಳೂರಿನ ನಾಗರಿಕರೊಂದಿಗೆ, ನಾಗರಿಕ ಸಂಘಟನೆಗಳ ಜೊತೆ ನಿಲ್ಲುತ್ತೀರಿ ಎಂದು ಭಾವಿಸುತ್ತೇವೆ ಎಂದು ಮುನೀರ್ ಕಾಟಿಪಳ್ಳ ಪತ್ರದಲ್ಲಿ ವಿವರಿಸಿದ್ದಾರೆ. ಪ್ರಮುಖವಾಗಿ ನಿಮಗೆ ಪತ್ರ ಬರೆಯಲು ಕಾರಣವಾಗಿದ್ದು, ಬಿಜೆಪಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಡವರಿಗೆ ವಸತಿ ಯೋಜನೆಗೆ ಟಿಡಿಆರ್ ಅಡಿ ಖಾಸಗಿ ಜಮೀನು ಖರೀದಿಸುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ರವರು ಸೂಚಿಸಿದ್ದಾರೆ ಎಂದು ತಮ್ಮನ್ನು ಉಲ್ಲೇಖಿಸಿ ನಗರ ಪಾಲಿಕೆಯ ಆದಾಯಕ್ಕೆ ನೂರು ಕೋಟಿ ಕನ್ನ ಕೊರೆಯುವ ಹಗರಣವನ್ನು ನ್ಯಾಯೀಕರಿಸಲು ಯತ್ನಿಸಿದ್ದಾರೆ. ಅಬ್ದುಲ್ ರವೂಫ್ ಆಕ್ಷೇಪಕ್ಕೆ ಉತ್ತರಿಸುತ್ತಾ ಸಾಮಾನ್ಯ ಸಭೆಯಲ್ಲಿಯೇ ಇಡೀ ಟಿಡಿಆರ್ ಹಗರಣವನ್ನು ನಿಮ್ಮ ತಲೆಗೆ ಕಟ್ಟಲಾಗಿದೆ. ಆ ಮೂಲಕ ಆಕ್ಷೇಪ ಎತ್ತಿದ ಕಾಂಗ್ರೆಸ್ ಸದಸ್ಯರ ಬಾಯಿ ಮುಚ್ಚಿಸಲಾಗಿದೆ. ಇದೇ ಪಾಲಿಕೆಯ ಬಿಜೆಪಿ ಆಡಳಿತವು ಈ ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮಂಜೂರಾದ, ಇಡ್ಯಾ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಆರು ನೂರು ಮನೆಗಳಿರುವ ವಸತಿ ಯೋಜನೆಯನ್ನು ಈ ನಾಲ್ಕೂವರೆ ವರ್ಷಗಳ ದೀರ್ಘ ಅವಧಿಯಲ್ಲಿ ಪೂರ್ಣಗೊಳಿಸದೆ ಕಾಮಗಾರಿಯನ್ನು ಅರ್ಧದಲ್ಲೇ ಕೈಬಿಟ್ಟು ಬಡವರ ವಸತಿ ಯೋಜನೆಯ ಕುರಿತು ತನಗಿರುವ ತಾತ್ಸಾರ ನೀತಿಯನ್ನು ಅನಾವರಣಗೊಳಿಸಿದೆ. ಇಲ್ಲಿ ಬಲಾಢ್ಯ ರಿಯಲ್ ಎಸ್ಟೇಟ್ ಲಾಭಿಗಳಿಗೆ ಹತ್ತಾರು ಕೋಟಿ ಲಾಭ ಕೊಡಿಸುವ ಟಿಡಿಆರ್ ಡೀಲ್ ಕುದುರಿಸಲು ಬಡವರ ವಸತಿ ಯೋಜನೆ ಹಾಗೂ ನಗರಾಭಿವೃದ್ಧಿ ಸಚಿವರಾದ ತಮ್ಮ ಹೆಸರನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಮುನೀರ್ ಕಾಟಿಪಳ್ಳ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. (ಮುನೀರ್ ಕಾಟಿಪಳ್ಳ)
Paris Olympics: ಕೇವಲ ಆಹಾರ ಸಮಸ್ಯೆ ಮಾತ್ರವಲ್ಲದೇ ತಮಗೆ ಉಳಿದುಕೊಳ್ಳಲು ನೀಡಿರುವ ಕೋಣೆ ಬಹಳ ಇಕ್ಕಟ್ಟಿನಿಂದ ಕೂಡಿದ್ದು ಸರಿಯಾಗಿ ನಿದ್ರಿಸಲು ಕೂಡ ಆಗುತ್ತಿಲ್ಲ ಎಂದು ಬಾಕ್ಸರ್ ಅಮಿತ್ ಪಂಘಲ್ ಅಸಮಾಧಾನ ಹೊರಹಾಕಿದ್ದಾರೆ The post Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್ಗೆ ಆಹಾರ ಕೊರತೆ; ರೆಸ್ಟೋರೆಂಟ್ನಿಂದ ರೋಟಿ, ದಾಲ್ ತರಿಸಿದ ಬಾಕ್ಸರ್ first appeared on Vistara News .
Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು
Karnataka Rain : ಭಾರಿ ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿದ ಮನೆ ಯಜಮಾನ ಹೃದಯಾಘಾತದಿಂದ ಮೃತಪಟ್ಟರೆ, ಮತ್ತೊಂದು ಕಡೆ ಕಾಲು ಜಾರಿ ಬಿದ್ದ ವೃದ್ಧೆ ಕೊಚ್ಚಿ ಹೋಗಿದ್ದಾರೆ. The post Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು first appeared on Vistara News .
Rahul Gandhi: ನೀಟ್ನಲ್ಲಿ ‘ಎಷ್ಟು ವೋಟ್’ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್ ಗಾಂಧಿ; Video ವೈರಲ್
Rahul Gandhi: ರಾಹುಲ್ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. ಇದೇ ವೇಳೆ, ಪರೀಕ್ಷೆಯಲ್ಲಿ ಎಷ್ಟು ವೋಟ್ ಪಡೆದಿದ್ದೀರಿ ಎಂಬುದಾಗಿ ಬಾಯಿತಪ್ಪಿ ಕೇಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್ ಆಗಿದೆ. The post Rahul Gandhi: ನೀಟ್ನಲ್ಲಿ ‘ಎಷ್ಟು ವೋಟ್’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್ ಗಾಂಧಿ; Video ವೈರಲ್ first appeared on Vistara News .
ರಾಜ್ಯದಲ್ಲಿರುವ 40998 ಕೆರೆಗಳ ಪೈಕಿ 10988 ಒತ್ತುವರಿ!: ಬೆಂಗಳೂರಲ್ಲೆಷ್ಟು? ರಾಮನಗರದಲ್ಲೆಷ್ಟು?
ಒಂದು ಕಾಲದಲ್ಲಿ ಬೆಂಗಳೂರಿಲ್ಲಿದ್ದ ಹಸಿರು ಏನಾಯ್ತು? ಕಣ್ಣು ಹಾಯಿಸಿದಷ್ಟೂ ಉದ್ದಗಲಕ್ಕೆ ಹಬ್ಬಿದ್ದ ಕೆರೆಗಳು ಎಲ್ಲಿ ಹೋದವು? ಬೆಂಗಳೂರು ಮಾತ್ರವಲ್ಲ ಮಾನವನ ದುರಾಸೆಗೆ ರಾಜ್ಯದ 40998 ಕೆರೆಗಳ ಪೈಕಿ 10 ಸಾವಿರಕ್ಕೂ ಹೆಚ್ಚು ಕೆರೆಗಳು ಬಲಿಯಾಗಿವೆ. ರಾಜಧಾನಿ ಬೆಂಗಳೂರು, ಸಮೀಪದ ರಾಮನಗರ ಜಿಲ್ಲೆಗಳಲ್ಲಂತೂ ಕೇಳುವುದೇ ಬೇಡ. ಈ ಕೆರೆಗಳ ಒತ್ತುವರಿ ಅಂಕಿ ಅಂಶಗಳನ್ನು ತಯಾರಿಸಿರುವ ಸರ್ಕಾರ ಕಂದಾಯ ಇಲಾಖೆಯಡಿ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಿ ತೆರವಿಗೆ ಕ್ರಮ ಕೈಗೊಂಡಿದೆ.
Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ
Kannada New Movie: ಇಂಡಿಯನ್ ಫಿಲಂ ಹೌಸ್ನಿಂದ ಉತ್ತಮ ಕಥೆ ಮತ್ತು ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ. ಇದರ ಅನುಭವದಿಂದಲೇ ಈಗ ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರೊಫೆಸರ್, ಇಂಜಿನಿಯರ್ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರು, ತಂತ್ರಜ್ಘರಾಗಿ ಗುರುತಿಸಿಕೊಳ್ಳುತ್ತಿರುವುದು ವಿಶೇಷ. The post Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ first appeared on Vistara News .
ಅಮೆರಿಕದಿಂದ ಗಡಿಪಾರು ಆಗಲಿದ್ದಾರೆ ಲಕ್ಷಾಂತರ ಭಾರತೀಯರ ಮಕ್ಕಳು! ಕಾರಣ ಏನು?
Children Of Indian - American Immigrants Face Deportation: ಭಾರತದಿಂದ ಅಮೆರಿಕಗೆ ವಲಸೆ ಹೋದ ದಂಪತಿಗೆ ಅಮೆರಿಕದಲ್ಲೇ ಮಕ್ಕಳಾದರೆ ಅವರಿಗೆ ಅಮೆರಿಕ ಪೌರತ್ವ ಸಹಜವಾಗಿಯೇ ಸಿಗುತ್ತದೆ. ಒಂದು ವೇಳೆ ಪೋಷಕರಿಗೆ ಗ್ರೀನ್ ಕಾರ್ಡ್ ಸಿಕ್ಕರೆ ಮಕ್ಕಳಿಗೂ ಅನುಕೂಲ ಆಗುತ್ತದೆ. ಆದರೆ, ದಶಕಗಳ ಕಾಲ ಅಮೆರಿಕದಲ್ಲೇ ಇದ್ದರೂ ಎಷ್ಟೋ ಭಾರತೀಯರಿಗೆ ಗ್ರೀನ್ ಕಾರ್ಡ್ ಸಿಕ್ಕಿಲ್ಲ. ಹೀಗಾಗಿ, ಭಾರತದಲ್ಲಿ ಹುಟ್ಟಿ ಅಮೆರಿಕಗೆ ಹೆತ್ತವರ ಜೊತೆ ವಲಸೆ ಹೋದ ಮಕ್ಕಳು 21 ವರ್ಷ ಆದ ಕೂಡಲೇ ಅಮೆರಿಕ ತೊರೆಯಬೇಕಿದೆ!
Brand Bengaluru: ‘ಬ್ರ್ಯಾಂಡ್ ಬೆಂಗಳೂರು’ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್ಪ್ಲಾನ್; ಇಲ್ಲಿದೆ ಸಭೆಯ ವಿವರ
Brand Bengaluru: ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವತ್ಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ ಎಂಬುದಾಗಿ ಡಿ.ಕೆ.ಶಿವಕುಮಾರ್ ಹೇಳಿದರು. The post Brand Bengaluru: ‘ಬ್ರ್ಯಾಂಡ್ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್ಪ್ಲಾನ್; ಇಲ್ಲಿದೆ ಸಭೆಯ ವಿವರ first appeared on Vistara News .
Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !
Drone Prathap: , ತಾನು ಬಿಗ್ಬಾಸ್ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ. The post Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ ! first appeared on Vistara News .
Chandipura Virus: ಕಳೆದ ಒಂದು ತಿಂಗಳಲ್ಲಿ ಗುಜರಾತ್ನಲ್ಲಿ ಮಾರಣಾಂತಿಕ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್ನಿಂದ ಕನಿಷ್ಠ 48 ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ ಹೆಚ್ಚಿನವರ ಸಾವಿಗೆ ಚಾಂದಿಪುರ ವೈರಸ್ ಕಾರಣ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್ನಲ್ಲಿ ಜುಲೈ 26ರವರೆಗೆ ಒಟ್ಟು 127 ಎಇಎಸ್ (AES) ಪ್ರಕರಣಗಳು ವರದಿಯಾಗಿವೆ. The post Chandipura Virus: ಗುಜರಾತ್ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ first appeared on Vistara News .
Ricky Ponting : The post Ricky Ponting : ಡೆಲ್ಲಿ ಕ್ಯಾಪಿಟಲ್ಸ್ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್ ಜಿಂದಾಲ್ first appeared on Vistara News .
Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು
Karnataka Rain: ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿರುವುದು ಮಾತ್ರವಲ್ಲದೇ ಸಾವು-ನೋವಿಗೂ ಕಾರಣವಾಗಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿ ಚಾಲಕ ಪರದಾಡುವಂತಾಯಿತು. The post Karnataka Rain : ಭಾರಿ ಗಾಳಿ-ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೆ ಸಾವು first appeared on Vistara News .
ಪ್ಯಾರಿಸ್ ಒಲಿಂಪಿಕ್ಸ್: ಮುಂದಿನ ಹಂತಕ್ಕೆ ಅರ್ಹತೆ ಪಡೆದ ಭಾರತದ ಏಕೈಕ ರೋವರ್ ಬಲರಾಜ್ ಪನ್ವರ್
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತದ ಏಕೈಕ ರೋವರ್ ಬಲರಾಜ್ ಪನ್ವರ್ ಅವರು ಮೊದಲನೇ ಹೀಟ್ನಲ್ಲಿ ನಾಲ್ಕನೇ ಸ್ಥಾನ ಪಡೆದು ಇಂದು ಪುರುಷರ ಸಿಂಗಲ್ಸ್ ಸ್ಕಲ್ ಸ್ಪರ್ಧೆಯಲ್ಲಿ ಮುಂದಿನ ಹಂತ ತಲುಪಿದ್ದಾರೆ. ಇಪ್ಪತ್ತೈದು ವರ್ಷದ ಪನ್ವರ್ ಅವರು 7:07.11 ಸಮಯದಲ್ಲಿ ತಮ್ಮ ಗುರಿ ತಲುಪಿದ್ದರು. ನ್ಯೂಝಿಲೆಂಡ್ನ ಥಾಮಸ್ ಮೆಕಿಂಟೋಶ್ 6:55.92 ಸಮಯದಲ್ಲಿ ತಲುಪಿ ಮೊದಲ ಸ್ಥಾನ ಪಡೆದರೆ ನಂತರದ ಎರಡು ಸ್ಥಾನಗಳನ್ನು ಸ್ಟೆಫಾನೋಸ್ ನಟೌಸ್ಕೋಸ್ (7:01.79) ಮತ್ತು ಅಬ್ದೆಲ್ಖಾಲೆಕ್ ಎಲ್ಬನ್ನಾ 97:05.06) ಪಡೆದಿದ್ದಾರೆ. ಪನ್ವರ್ ಅವರಿಗೆ ಸೆಮಿಫೈನಲ್ಸ್ ಅಥವಾ ಫೈನಲ್ಸ್ಗೆ ಮುಂದುವರಿಯುವ ಎರಡನೇ ಅವಕಾಶವಿರಲಿದೆ. ಚೀನಾದಲ್ಲಿ 2022ರಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ಪನ್ವರ್, ಕೊರಿಯಾದಲ್ಲಿ ನಡೆದ ಏಷಿಯನ್ ಎಂಡ್ ಓಶಿಯಾನಿಕ್ ಒಲಿಂಪಿಕ್ ಕ್ವಾಲಿಫಿಕೇಶನ್ ರೆಗಟ್ಟಾದಲ್ಲಿ ಕಂಚಿನ ಪದಕ ಪಡೆದಿದ್ದರು.
PARIS 2024 OLYMPICS: ಶೂಟಿಂಗ್ನಲ್ಲಿ ಭಾರತಕ್ಕೆ ಮತ್ತೊಂದು ಸೋಲು
Paris Olympics 2024: ಸರಬ್ಜೋತ್ ಸಿಂಗ್(Sarabjot Singh) ನಾಲ್ಕನೇ ಸುತ್ತಿನಲ್ಲಿ 100ಕ್ಕೆ 100 ಅಂಕ ಗಳಿಸಿ ಮೂರನೇ ಸ್ಥಾನಕ್ಕೇರಿದ್ದರೂ ಕೂಡ ಆ ಬಳಿಕದ ಪ್ರಧಾನ 2 ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿ 9ನೇ ಸ್ಥಾನ ಪಡೆದು ಕೂದಲೆಳೆ ಅಂತರದಲ್ಲಿ ಫೈನಲ್ಗೆರುವ ಅರ್ಹತೆಯಿಂದ ವಂಚಿತರಾದರು. The post PARIS 2024 OLYMPICS: ಶೂಟಿಂಗ್ನಲ್ಲಿ ಭಾರತಕ್ಕೆ ಮತ್ತೊಂದು ಸೋಲು first appeared on Vistara News .
Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು
Road Accident: ಜಮ್ಮು-ಕಾಶ್ಮೀರದ ದಕ್ಸುಮ್ ಪ್ರದೇಶದಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ ಆರ್ಶುನ್ ಹಟ್ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. The post Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು first appeared on Vistara News .
Ashwini Puneeth Rajkumar: ಅಪ್ಪು ಕಪ್ ಸೀಸನ್ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ಕುಮಾರ್!
Ashwini Puneeth Rajkumar: ಸೀಸನ್ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್ ಸೀಸನ್ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ. The post Ashwini Puneeth Rajkumar: ಅಪ್ಪು ಕಪ್ ಸೀಸನ್ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ಕುಮಾರ್! first appeared on Vistara News .
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಉಗ್ರರ ಆರ್ಭಟ: ಓರ್ವ ಯೋಧ ಹುತಾತ್ಮ
ಬೆಂಗಳೂರು, ಜುಲೈ. 27: ಗಡಿನಾಡಿನ ಕುಪ್ವಾರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ನಿನ್ನೆಯಷ್ಟೇ ಕಾರ್ಗಿಲ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಅವರ ನೀಚ ಪ್ಲ್ಯಾನ್ಗಳು ಎಂದಿಗೂ
ಡಿಕೆಶಿ ಹೆಸರು ಡಿಕೆ ಶರೀಫ್ ಎಂದಾಗಲಿ!: ರಾಮನಗರ ಹೆಸರು ಬದಲಾವಣೆ ಬಗ್ಗೆ ಮುತಾಲಿಕ್ ಎಚ್ಚರಿಕೆ ಏನು?
ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರವಾಗಿ ಆಡತಾರೂಢ ಕಾಂಗ್ರೆಸ್ ವಿರುದ್ಧ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಇದೀಗ ಹಿಂದೂಪರ ಸಂಘಟನೆಗಳೂ ವಿರೋಧಿಸಿವೆ. ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯವ್ಯಾಪಿ ಹೋರಾಟ ನಡೆಸುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಹಿಂದೂದ್ರೋಹಿ ಕಾಂಗ್ರೆಸ್ ಗೆ ಸ್ವಾಭಿಮಾನ ಇದ್ದರೆ ಬೆಂಗಳೂರಿನಲ್ಲಿ ಬ್ರಿಟಿಷರ ಕಾಲದ ಹೆಸರುಗಳನ್ನು ಬದಲಿಸಲಿ ಎಂದಿದ್ದಾರೆ, ಜೊತೆಗೆ ಡಿಕೆ ಶಿವಕಮಾರ್ ತಮ್ಮ ಹೆಸರನ್ನು ಡಿಕೆ ಶರೀಫ್ ಎಂದು ಬದಲಿಸಲಿ ಎಂದು ವ್ಯಂಗ್ಯವಾಡಿದ್ದಾರೆ.
Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್ ಫಾಲೋ ಮಾಡಿ
Money Guide: ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡಲು ಕೆಲವೇ ದಿನ ಬಾಕಿ ಉಳಿದಿದೆ. ಜುಲೈ 31 ದಂಡ ರಹಿತವಾಗಿ ಐಟಿಆರ್ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈಗಲೇ ಫೈಲ್ ಮಾಡಿ. ಐಟಿಆರ್ ಫೈಲ್ ಮಾಡುವಾಗ ಗಮನಿಸಬೇಕಾದ ಕೆಲವು ಅಂಶಗಳ ಬಗ್ಗೆ ಮಾಹಿತಿ ಇಲ್ಲಿದೆ. The post Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್ ಫಾಲೋ ಮಾಡಿ first appeared on Vistara News .
ಮನೆ ಮುರುಕರು ಯಾರು ಎಂದು ರಾಜ್ಯದ ಜನತೆಗೆ ಗೊತ್ತಾಗಿದೆ: ಬಸವರಾಜ ಬೊಮ್ಮಾಯಿ
ಹಾವೇರಿ, ಜುಲೈ 27: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ, ಕಾಂಗ್ರೆಸ್ ನವರು ಮೊದಲು ಬಜೆಟ್ ಪೂರ್ಣ ಪಾಠ ಓದಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದ ಬಜೆಟ್ ನಲ್ಲಿ ಯಾವ್ಯಾವ ಇಲಾಖೆಗೆ ಎಷ್ಟು ದುಡ್ಡು ಬಂದಿದೆ ಎಂದು ಕಾಂಗ್ರೆಸ್ ನವರು ಮೊದಲು
ಆ. 15ರಿಂದ ಇಂದಿರಾ ಕ್ಯಾಂಟೀನ್ ಮೆನು ಬದಲು - ಯಾವ್ಯಾವ ದಿನ ಏನೇನು ಸಿಗಲಿದೆ ನೋಡಿ…!
ಇಂದಿರಾ ಕ್ಯಾಂಟೀನ್ ನಲ್ಲಿ ಆ. 15ರ ಸ್ವಾತಂತ್ರ್ಯೋತ್ಸವದಿಂದ ಹೊಸ ಮೆನು ಜಾರಿಗೆ ಬರಲಿದೆ. ಬೆಳಗ್ಗೆ ಉಪಾಹಾರಕ್ಕೆ ಇಡ್ಲಿ - ಸಾಂಬಾರ್ ಹಾಗೂ ಉದ್ದಿನ ವಡೆ ಪ್ರತಿದಿನವೂ ಇರಲಿದೆ. ಅದರ ಜೊತೆಯಾಗಿ, ಪ್ರತಿ ದಿನ ಒಂದೊಂದು ದಿನ ಒಂದೊಂದು ರೈಸ್ ಐಟಂ ಸಿಗಲಿದೆ. ಪಲಾವ್, ಬಿಸಿಬೇಳೆ ಬಾತ್, ಖಾರಾಬಾತ್, ಪೊಂಗಲ್ ಇನ್ನು ಮುಂತಾದ ಐಟಂಗಳು ಇರಲಿವೆ. ಐಟಂಗಳಿಗೆ ಅನುಗುಣವಾಗಿ ಚಟ್ನಿ, ಮೊಸರು ಬಜ್ಜಿ, ಖಾರಾಬೂಂದಿ ಇತ್ಯಾದಿಗಳು ಸಿಗಲಿವೆ. ಮಧ್ಯಾಹ್ನ ಊಟಕ್ಕೆ ಮುದ್ದೆ - ಸಾಂಬಾರ್, ಚಪಾತಿ - ಪಲ್ಯ ಇರಲಿದೆ.
Google Trends-'ಹಣೆಗೆ ಗುಂಡಿಟ್ಟು ಅನುಕಂಪ ತೋರಬೇಡಿ': ಇಸ್ರೇಲ್ ಪರ ಕಮಲಾ ಹ್ಯಾರಿಸ್ ನಿಲುವಿಗೆ ಆಕ್ರೋಶ!
Kamala Harris On Israel - Hamas War: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ಪ್ಯಾಲಸ್ತೀನ್ ವಿಚಾರದಲ್ಲಿ ತಮ್ಮ ದನಿ ಬದಲಿಸಿದ್ದಾರೆ. ಗಾಜಾ ಪಟ್ಟಿಯಲ್ಲಿನ ಜನತೆ ಪರ ಅನುಕಂಪ ಹಾಗೂ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಜೊತೆಯಲ್ಲೇ ಇಸ್ರೇಲ್ಗೆ ಶಸ್ತ್ರಾಸ್ತ್ರ ಹಾಗೂ ಹಣಕಾಸಿನ ನೆರವನ್ನೂ ಅಮೆರಿಕ ನೀಡುತ್ತಿದೆ. ಇದು ಪ್ಯಾಲಸ್ತೀನ್ ಪರ ಹೋರಾಟಗಾರರಿಗೆ ಸಿಟ್ಟು ತರಿಸಿದೆ. ಇಸ್ರೇಲ್ - ಹಮಾಸ್ ಯುದ್ಧದ ಕುರಿತಾಗಿ ನಿಮ್ಮ ಸ್ಪಷ್ಟ ನಿಲುವು ಏನು ಎಂದು ಆಗ್ರಹಿಸಿದ್ದಾರೆ.
ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ : ಡಿ.ಕೆ.ಶಿವಕುಮಾರ್ ತಿರುಗೇಟು
ಬೆಂಗಳೂರು : “ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಕುಮಾರಸ್ವಾಮಿ ಅವರು ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ವಾಗ್ದಾಳಿ ನಡೆಸಿದರು. “ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಅವರು ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು. ಇದು ನಮ್ಮ ಜಿಲ್ಲೆ. ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು” ಎಂದು ತಿಳಿಸಿದರು. “ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದ್ದು ಬೆಂಗಳೂರಿನಲ್ಲಿ, ರಾಮಕೃಷ್ಣ ಹೆಗಡೆ ಅವರು ಬಂದು ನಿಂತಿದ್ದು ಬೆಂಗಳೂರಿನಲ್ಲಿ. ಈ ಬೆಂಗಲೂರು ನಾಲ್ಕೈದು ಮುಖ್ಯಮಂತ್ರಿಗಳನ್ನು ಮಾಡಿದೆ. ನಮ್ಮ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಾಗ ಬೆಂಗಳೂರು ಹೆಸರು ಉಳಿಸಿಕೊಳ್ಳುವಂತೆ ನಾವು ಸಲಹೆ ನೀಡಿದ್ದೆವು. ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಪೂರ್ವಜರು ಕೊಟ್ಟಿರುವ ಈ ಹೆಸರನ್ನು ನಾವು ಯಾಕೆ ಕಳೆದುಕೊಳ್ಳಬೇಕು?” ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಹಣೆಯಲ್ಲಿ ಬರೆದಿಲ್ಲ, 2028ಕ್ಕೆ ಕಾಂಗ್ರೆಸ್ ಸರ್ಕಾರ: 2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು. ಗ್ರೇಟರ್ ಬೆಂಗಳೂರು ಎಲ್ಲಾ ಪಕ್ಷದವರ ಸಲಹೆ, ಅಭಿಪ್ರಾಯ ಸ್ವೀಕರಿಸುತ್ತೇವೆ: ಗ್ರೇಟರ್ ಬೆಂಗಳೂರು ವಿಧೇಯಕವನ್ನು ಬಾಕಿ ಇಡಲಾಗಿದೆ ಎಂದು ಕೇಳಿದಾಗ, “ಎಲ್ಲಾ ಪಕ್ಷದ ಶಾಸಕರು ಈ ವಿಚಾರವಾಗಿ ವಿಸ್ತೃತ ಚರ್ಚೆಯಾಗಬೇಕು ಎಂದು ತಿಳಿಸಿದರು. ಇದಕ್ಕೆ ನಾನು ಮುಕ್ತವಾಗಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಕೇಳಬೇಕು. ಇದರಲ್ಲಿ ಯಾವುದೇ ತಪ್ಪು ಆಗಬಾರದು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಗಮನದಲ್ಲಿಟ್ಟುಕೊಂಡು ಇದನ್ನು ಮಾಡಬೇಕು. ಬೆಂಗಳೂರಿಗೆ ಪರಿಣಾಮಕಾರಿ ಆಡಳಿತ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಇಂದು ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯನ್ನು ಸದ್ಯದಲ್ಲೇ ರಚಿಸಲಾಗುವುದು. ವಿರೋಧ ಪಕ್ಷಗಳ ಸಲಹೆ, ಅಭಿಪ್ರಾಯಗಳನ್ನು ನಾವು ಸ್ವೀಕರಿಸುತ್ತೇವೆ” ಎಂದು ತಿಳಿಸಿದರು.
ಹಾಲಿ ಕೋಚ್ ಗೌತಮ್ ಗಂಭೀರ್ಗೆ, ಮಾಜಿ ಕೋಚ್ ದ್ರಾವಿಡ್ ಕಿವಿ ಮಾತು
ಟೀಮ್ ಇಂಡಿಯಾ ಸದ್ಯ ಶ್ರೀಲಂಕಾ ಪ್ರವಾಸ ಆರಂಭಿಸಿದೆ. ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಕಾರ್ಯ ನಿರ್ವಹಿಸಲಿದ್ದಾರೆ. ಕೋಚ್ ಆಗಿ ಗೌತಿ ಅವರಿಗೆ ಇದು ಮೊದಲ ಪರೀಕ್ಷೆ. ಗೌತಮ್ ಗಂಭೀರ್ ಅವರಿಗೆ ಟಿ20 ವಿಶ್ವಕಪ್ ವಿಜೇತ ಕೋಚ್ ರಾಹುಲ್ ದ್ರಾವಿಡ್ ಅವರು ವಿಡಿಯೋ ಸಂದೇಶ್ ರವಾನಿಸಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಬಿಸಿಸಿಐ
DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್
DK Shivakumar: 2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು. The post DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್ first appeared on Vistara News .
ಜಮ್ಮು ಕಾಶ್ಮೀರ: ಭಯೋತ್ಪಾದಕರೊಂದಿಗೆ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಮೃತ್ಯು, ನಾಲ್ವರಿಗೆ ಗಾಯ
ಹೊಸದಿಲ್ಲಿ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಲ ವಲಯದಲ್ಲಿನ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ನಡೆಸಿದ ದಾಳಿಯಲ್ಲಿ ಮೇಜರ್ ದರ್ಜೆಯ ಓರ್ವ ಅಧಿಕಾರಿ ಸೇರಿದಂತೆ ಐವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಯೋಧರೊಬ್ಬರು ಶ್ರೀನಗರ ಸೇನಾ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಪಾಕಿಸ್ತಾನಿ ನುಸುಳುಕೋರ ಕೂಡಾ ಹತನಾಗಿದ್ದಾನೆ ಎಂದು ವರದಿಯಾಗಿದೆ. ಸೇನಾ ಮೂಲಗಳ ಪ್ರಕಾರ, ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳ ಸಿಬ್ಬಂದಿಗಳು ಹಾಗೂ ಉಗ್ರಗಾಮಿಗಳನ್ನು ಹೊಂದಿದ್ದ ಬಾರ್ಡರ್ ಆ್ಯಕ್ಷನ್ ಟೀಮ್ ತಂಡವು ಕಮಕರಿ ವಲಯದ ಮೇಲೆ ದಾಳಿ ನಡೆಸುವ ಪ್ರಯತ್ನ ನಡೆಸಿತು ಎಂದು ಹೇಳಲಾಗಿದೆ. ಆದರೆ, ಈ ಪ್ರಯತ್ನವನ್ನು ಜಾಗೃತ ಸ್ಥಿತಿಯಲ್ಲಿದ್ದ ಭಾರತದ ಸೇನಾ ತುಕಡಿಗಳು ವಿಫಲಗೊಳಿಸಿದವು. “ಬಾರ್ಡರ್ ಆ್ಯಕ್ಷನ್ ಟೀಮ್ ಕೃತ್ಯವನ್ನು ಜಾಗೃತ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ತುಕಡಿಗಳು ಕಮಕರಿ ವಲಯದಲ್ಲಿ ವಿಫಲಗೊಳಿಸಿದವು. ಈ ಸಂದರ್ಭದಲ್ಲಿ ಓರ್ವ ಪಾಕಿಸ್ತಾನಿ ನುಸುಳುಕೋರನನ್ನು ಹತ್ಯೆಗೈಯ್ಯಲಾಯಿತು” ಎಂದು ಸೇನಾ ಮೂಲಗಳು ತಿಳಿಸಿವೆ ಎಂದು TOI ಸುದ್ದಿ ಸಂಸ್ಥೆ ವರದಿ ಮಾಡಿದೆ. ಉತ್ತರ ಕಾಶ್ಮೀರ ಜಿಲ್ಲೆಯ ಟ್ರೆಹ್ಗಮ್ ವಲಯದಲ್ಲಿನ ಕಮಕಡಿ ಚೌಕಿ ಮೇಲೆ ಮೂವರು ನುಸುಳುಕೋರರು ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿದರು. ಅದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ತುಕಡಿಗಳೂ ಪ್ರತಿ ಗುಂಡಿನ ದಾಳಿ ನಡೆಸಿದ್ದು, ಹಲವು ಗಂಟೆಗಳ ಕಾಲ ಗುಂಡಿನ ಚಕಮಕಿ ಮುಂದುವರಿಯಿತು ಎಂದೂ ಮೂಲಗಳು ತಿಳಿಸಿವೆ. ಈ ಘಟನೆಯಲ್ಲಿ ಗಾಯಗೊಂಡಿರುವ ಸೇನಾ ಸಿಬ್ಬಂದಿಗಳನ್ನು ಸೇನಾ ನೆಲೆಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಪೈಕಿ ಓರ್ವ ಯೋಧನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲಾಲ್ ಕಟ್ ವಿವಾದ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ನಂತರ ಹಲಾಲ್ಆ ನಿಷೇಧ ಆಂದೋಲನವಾಗಿ ಮಾರ್ಪಟ್ಟಿತು. ಇದೀಗ ಮತ್ತೊಮ್ಮೆ ಈ ವಿವಾದ ತಲೆ ಎತ್ತುವ ಸಾಧ್ಯತೆ ಇದೆ. ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಈ ನಿಟ್ಟಿನಲ್ಲಿ ಸರ್ಕಾರದ ನಿಲುವಿನ ಬಗ್ಗೆಯೂ ಪ್ರಶ್ನೆ ಮಾಡಿದ್ದಾರೆ.
ಉಪ್ಪಿನಂಗಡಿ: ಬಾವಿಗೆ ಬಿದ್ದು ವೃದ್ಧೆ ಮೃತ್ಯು
ಉಪ್ಪಿನಂಗಡಿ: ವೃದ್ಧೆಯೋರ್ವರು ಆಕಸ್ಮಿಕವಾಗಿ ಆವರಣ ಗೋಡೆಯಿಲ್ಲದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ನೂಜಿ ಎಂಬಲ್ಲಿ ಶುಕ್ರವಾರ ನಡೆದಿದೆ. ಹೊನ್ನಮ್ಮ (65) ಮೃತ ವೃದ್ಧೆ. ಇವರು ಜು.26ರಂದು ಸಂಜೆ ಕಾಣೆಯಾಗಿದ್ದು, ಮನೆಯವರು ಇವರನ್ನು ಹುಡುಕಾಡಿದಾಗ ಇವರ ಮನೆಯ ಆವರಣ ಗೋಡೆಯಿಲ್ಲದ ಬಾವಿಯ ಬಳಿ ಇವರ ಕೊಡೆ ಪತ್ತೆಯಾಗಿತ್ತು. ಇವರ ಮೃತದೇಹ ಬಾವಿಯಲ್ಲಿ ತೇಲುತ್ತಿತ್ತು ಎಂದು ತಿಳಿದು ಬಂದಿದೆ. ಬಾವಿಯಲ್ಲಿ ನೀರು ಎಷ್ಟಾಗಿದೆ ಎಂಬ ಕುತೂಹಲದಿಂದ ಬಾವಿ ಕಡೆ ಹೋಗಿ ಇಣುಕುವ ಹವ್ಯಾಸ ಇವರಲ್ಲಿದ್ದು, ಅದೇ ಕುತೂಹಲದಿಂದ ನಿನ್ನೆಯೂ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಇವರು ಬಾವಿಗೆ ಇಣುಕಿ ನೋಡಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತದೇಹವನ್ನು ಅಡೆಕ್ಕಲ್ ಸಂತು ಹಾಗೂ ಸ್ಥಳೀಯ ಯುವಕರು ಬಂದು ಮೇಲೆತ್ತಿದ್ದಾರೆ. ಘಟನೆಯ ಬಗ್ಗೆ ಮೃತರ ಪುತ್ರ ಉಮೇಶ್ ಮುಗೇರ ಎಂಬವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಬ್ರಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರದ ಇತಿಹಾಸ ಅಳಿಸುವ ಕೆಲಸ : ನಿಖಿಲ್ ಕುಮಾರಸ್ವಾಮಿ
ರಾಮನಗರ : ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ ಅವರು, ರಾಮನಗರ ಎಂದಾಗ ರಾಮನ ಪಾದಸ್ಪರ್ಶದ ಪುಣ್ಯಕ್ಷೇತ್ರ ನೆನಪಾಗುತ್ತೆ. ಆದರೆ ಇದು ರಾಜಕೀಯ ಉದ್ದೇಶಕ್ಕೆ ಹೆಸರು ಬದಲಾವಣೆ ಮಾಡಲಾಗುತ್ತಿದೆ. ರಾಮನಗರ ಜಿಲ್ಲೆ ಸ್ಥಾಪನೆ ಆದಾಗ ಯಾರೂ ಕೂಡ ಇದಕ್ಕೆ ಚಕಾರ ಎತ್ತಲಿಲ್ಲ. ರಾಮನಗರ ಹೆಸರಿಗೆ ಯಾರೂ ವಿರೋಧ ಮಾಡಲಿಲ್ಲ ಎಂದು ಹೇಳಿದರು. ಇಂದು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ ಆಗುತ್ತಿದೆ. ಇದಕ್ಕೆ ರಾಮನಗರದ ಜಿಲ್ಲೆಯ ಜನತೆಯ ವಿರೋಧವಿದೆ. ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಆದರೆ ಸ್ಥಳೀಯ ಜನರಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ಕಂದಾಯ ದಾಖಲಾತಿ ಬದಲಾವಣೆ ಮಾಡಬೇಕು. ಸಾಕಷ್ಟು ಟೆಕ್ನಿಕಲ್ ಸಮಸ್ಯೆಗಳು ಎದುರಾಗುತ್ತವೆ. ಜನತೆ ನಿತ್ಯ ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗುತ್ತೆ. ಈ ಬಗ್ಗೆ ದೊಡ್ಡಮಟ್ಟದ ಹೋರಾಟಕ್ಕೆ ಚರ್ಚೆ ಮಾಡುತ್ತದ್ದೇವೆ. ನಾಳೆ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡುತ್ತೇವೆ. ಪಾದಯಾತ್ರೆಯ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.
ಬೆಂಗಳೂರು ಅಭಿವೃದ್ದಿ ಕುರಿತು ಜನಪ್ರತಿನಿಧಿಗಳ ಸಭೆ ನಡೆಸಿದ ಡಿ ಕೆ ಶಿವಕುಮಾರ್: ಚರ್ಚೆಯಾಗಿದ್ದೇನು?
ಬೆಂಗಳೂರು, ಜುಲೈ 27: ರಾಜಕೀಯವನ್ನು ಬೂತ್ ಮಟ್ಟದಲ್ಲಿ ಮಾಡೋಣ, ಈಗ ಎಲ್ಲಾ ಪಕ್ಷದ ನಾಯಕರು ಸೇರಿ ಬೆಂಗಳೂರನ್ನು ಕಟ್ಟೋಣ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಗರೀಕರ ಧ್ವನಿ- ಅದೇ ಸರ್ಕಾರದ ಧ್ವನಿ ಎಂಬ ಪರಿಕಲ್ಪನೆಯಡಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್
ಮುಡಿಪು: ಜು.29 ರಂದು ನವೋದಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
ಕೊಣಾಜೆ: ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ 2024-25 ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಗಣಿತ, ಭೌತಶಾಸ್ತ್ರ, ಕಂಪ್ಯೂಟರ್ ಸಯನ್ಸ್ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯಾ ವಿಷಯದಲ್ಲಿ ಎಂಎಸ್ಸಿ ಹಾಗೂ ಬಿ.ಇಡಿ ಅರ್ಹತೆಯೊಂದಿಗೆ ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಯೊಂದಿಗೆ ಜುಲೈ 29 ರಂದು ಮುಡಿಪು ನವೋದಯ ವಿದ್ಯಾಲಯದಲ್ಲಿ ನಡೆಯುವ ನೇರ ಸಂದರ್ಶನ ಪ್ರಕ್ರಿಯೆಯಲ್ಲಿ ಹಾಜರಾಗುವಂತೆ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಷಿನ ಮಾಹಿತಿಗಾಗಿ 08255261300 ಪೋನ್ ನಂಬರನ್ನು ಸಂಪರ್ಕಿಸಬಹುದಾಗಿದೆ.
Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ
Ghuspaithia Hindi movie: ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರʼ, ‘ನಾತಿಚರಾಮಿʼ, ‘ಪಡ್ಡೆಹುಲಿʼ, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ 45 ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ ಘುಸ್ಪೈಥಿಯಾ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿತು. The post Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ first appeared on Vistara News .
’ಅಯ್ಯೋ ಪಕ್ಷದ ಇಂದಿನ ಸ್ಥಿತಿಯೇ’ : ಲಿಂಬಾವಳಿ ಸಿಡಿಸಿದ ಬಾಂಬ್ಗೆ ವಿಜಯೇಂದ್ರ, ಅಶೋಕ್ ಫುಲ್ ಶಾಕ್
Aravind Limbavali Shocking Twitter Post : ಬಿಜೆಪಿಯ ಹಿರಿಯ ನಾಯಕ ಅರವಿಂದ ಲಿಂಬಾವಳಿ ಟ್ವಿಟ್ಟರ್ ನಲ್ಲಿ ಹಾಕಿರುವ ಬೇಸರದ ಪೋಸ್ಟಿಗೆ ಬಿಜೆಪಿ ರಾಜ್ಯ ಘಟಕದ ನಾಯಕರು ಶಾಕ್ ಆಗಿದ್ದಾರೆ. ಪಕ್ಷದ ನಾಯಕರು ಸದನದಲ್ಲಿ ಸಮರ್ಥರಿಲ್ಲ ಎನ್ನುವ ರೀತಿಯಲ್ಲಿ ವಿಶ್ಲೇಷಿಸಿರುವುದು ಇಬ್ಬರು ನಾಯಕರ ಮುಜುಗರಕ್ಕೆ ಕಾರಣವಾಗಿದೆ.
India vs Sri lanka: ಹೊಸ ಅಧ್ಯಾಯ ಆರಂಭಿಸಲು ಗಂಭೀರ್-ಸೂರ್ಯ ಸಜ್ಜು; ಹೇಗಿರಲಿದೆ ಪ್ಲೇಯಿಂಗ್ ಇಲೆವೆನ್
ಭಾರತ ಕ್ರಿಕೆಟ್ ತಂಡದಲ್ಲಿ ಹೊಸ ಅಧ್ಯಾಯಕ್ಕೆ ಇಂದು ನಾಂದಿ ಹಾಡಲು ಸೂರ್ಯಕುಮಾರ್ ಯಾದವ್ ಮತ್ತು ಗೌತಮ್ ಗಂಭೀರ್ ಸಜ್ಜಾಗಿದ್ದಾರೆ. ಭಾರತ ಇಂದು ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯವನ್ನಾಡಲಿದ್ದು, ಗೆಲುವಿನ ನಿರೀಕ್ಷೆಯಲ್ಲಿದೆ. ನಾಯಕನಾಗಿ ಸೂರ್ಯಕುಮಾರ್ ಯಾದವ್ ಮತ್ತು ಕೋಚ್ ಆಗಿ ಗೌತಮ್ ಗಂಭೀರ್ ಅವರಿಗೆ ಇದು ಮೊದಲ ಪಂದ್ಯವಾಗಿದ್ದು, ಗೆಲುವಿನ ಮೂಲಕ ಹೊಸ ಅಧ್ಯಾಯ ಆರಂಭಿಸಲು
MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್ ಸಮಾಲೋಚನೆ
MB Patil: ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಅನುಮಾನವಿಲ್ಲ. ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಅಂತಿಮಗೊಳಿಸಿಲ್ಲ. ಈ ಬಗ್ಗೆ ಮತ್ತಷ್ಟು ಸಮಾಲೋಚನಾ ಸಭೆಗಳನ್ನು ನಡೆಸುವ ಅಗತ್ಯವಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. The post MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್ ಸಮಾಲೋಚನೆ first appeared on Vistara News .
Mamata Banerjee: ಮೈಕ್ ಮ್ಯೂಟ್ ಮಾಡಿ ಅವಮಾನ ಆರೋಪ; ನೀತಿ ಆಯೋಗ ಸಭೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ
ನವದೆಹಲಿ, ಜುಲೈ. 27: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಯಿಂದ ಕೋಪಗೊಂಡ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಮೈಕ್ ಅನ್ನು ಮ್ಯೂಟ್ ಮಾಡಲಾಗಿದೆ. ಐದು ನಿಮಿಷಗಳಿಗಿಂತ ಹೆಚ್ಚು ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ ವಿರೋಧ ಪಕ್ಷದ
DCM DK Shivakumar: ನನ್ನನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿ.ಕೆ. ಶಿವಕುಮಾರ್
ಬೆಂಗಳೂರು, ಜುಲೈ 27: ನಮ್ಮನ್ನು ಸರ್ವನಾಶ ಮಾಡುವುದು ಹೆಚ್ ಡಿ ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಶಿವಕುಮಾರ್ ಅವರು ಮಾತನಾಡಿ, ಕುಮಾರಸ್ವಾಮಿ ಅವರು ನಮ್ಮನ್ನು
Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು
Kanwar Yatra: ಸಂಭಾವ್ಯ ಗಲಭೆಗಳನ್ನು ತಪ್ಪಿಸಲು ಉತ್ತರಾಖಂಡದ ಹರಿದ್ವಾರದ ಕನ್ವರ್ ಯಾತ್ರೆ ಮಾರ್ಗದಲ್ಲಿನ ಎರಡು ಮಸೀದಿಗಳು ಮತ್ತು ಮಝಾರ್ (ಸಮಾಧಿ)ಗಳ ಮುಂಭಾಗಗಳನ್ನು ಶುಕ್ರವಾರ ಬಿಳಿ ಬಟ್ಟೆಯ ದೊಡ್ಡ ಹಾಳೆಗಳಿಂದ ಮುಚ್ಚಲಾಗಿತ್ತು. ಆದಾಗ್ಯೂ ಆಕ್ಷೇಪಣೆಗಳ ನಂತರ ಸಂಜೆಯ ವೇಳೆಗೆ ಹಾಳೆಗಳನ್ನು ತೆಗೆದು ಹಾಕಲಾಯಿತು. ಜ್ವಾಲಾಪುರ ಪ್ರದೇಶದಲ್ಲಿರುವ ಮಸೀದಿಗಳು ಮತ್ತು ಮಝಾರ್ಗಳ ಮುಂದೆ ಬಿದಿರಿನ ಅಟ್ಟಣಿಗೆಗಳ ಮೇಲೆ ಹಾಳೆಗಳನ್ನು ನೇತು ಹಾಕಲಾಗಿತ್ತು. The post Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು first appeared on Vistara News .
ಮುಳುಗುವ ಭೀತಿಯಲ್ಲಿ ಕಂಪ್ಲಿಕೋಟೆ ಬಳಿ ಸೇತುವೆ; ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ
ಕಂಪ್ಲಿ: ಇಲ್ಲಿನ ಕೋಟೆ ಬಳಿಯ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದರಿಂದ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಭೇಟಿ ನೀಡಿ ಶುಕ್ರವಾರ ಪರಿಶೀಲಿಸಿದರು. ಕಂಪ್ಲಿ-ಕೋಟೆ ಪ್ರದೇಶ ಸೇರಿದಂತೆ ತಾಲೂಕಿನ ಸಣಾಪುರ, ಬೆಳಗೋಡು ಹಾಳ್, ಇಟಗಿ ನದಿ ಪಾತ್ರದಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಮತ್ತು ತಾಲೂಕು ಆಡಳಿತ ಕೈಗೊಂಡಿದೆ. ಅಲ್ಲದೆ ಈ ಕುರಿತಂತೆ ಪಟ್ಟಣ ಸೇರಿ ಗ್ರಾಮಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಮುಂಜಾಗ್ರತೆ ವಹಿಸಿದ್ದಾರೆ ಎಂದರು. ನದಿ ಪಕ್ಕದ ಗ್ರಾಮಗಳಲ್ಲಿ ಕೆಲ ಕುಟುಂಬಗಳನ್ನು ಗುರುತಿಸಿದ್ದು, ನೀರಿನ ಹರಿವು ಹೆಚ್ಚಾದರೆ ಸ್ಥಳಾಂತರಿಸಲು ಸಕಲ ಸಿದ್ಧತೆ ಮಾಡಲಾಗಿದೆ.
'ರೋಮಾಂಚನಕಾರಿ ಹುದ್ದೆಗೆ ಸ್ವಾಗತ'-ಗೌತಮ್ ಗಂಭೀರ್ಗೆ ದ್ರಾವಿಡ್ ವಿಶೇಷ ಸಂದೇಶ!
Rahul Dravid Special Message to Gautam Gambhir: ಶ್ರೀಲಂಕಾ ವಿರುದ್ಧ ಶನಿವಾರ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೂಲಕ ಭಾರತ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ಕಾರ್ಯವೈಖರಿ ಅಧಿಕೃತವಾಗಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡದ ಮಾಜಿ ಹೆಡ್ ಕೋಚ್ ರಾಹುಲ್ ದ್ರಾವಿಡ್, ನೂತನ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಹಾಗೂ ಹೊಸದಾಗಿ ನೇಮಕವಾಗಿರುವ ಭಾರತ ತಡದ ಟೀಮ್ ಮ್ಯಾನೇಜ್ಮೆಂಟ್ಗೆ ವಿಶೇಷ ಸಂದೇಶವನ್ನು ಬರೆದಿದ್ದಾರೆ.
KRS Dam: ಭರ್ಜರಿ ಮಳೆಯಿಂದ ಕೆಆರ್ಎಸ್ ಜಲಾಶಯ ಭರ್ತಿ: ಕಾವೇರಿ ನದಿಗೆ ಸಿದ್ದರಾಮಯ್ಯ ಬಾಗಿನ ಸಮರ್ಪಣೆ ಯಾವಾಗ?
ಮಂಡ್ಯ, ಜುಲೈ 27: ರಾಜ್ಯದಲ್ಲಿ ಭರ್ಜರಿ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೆಆರ್ ಎಸ್ ಅಣೆಕಟ್ಟು ಗರಿಷ್ಠ ಸಾಮರ್ಥ್ಯಕ್ಕೆ ಭರ್ತಿಯಾಗಿರುವುದರಿಂದ ಈ ಭಾಗದ ಜೀವನಾಡಿ ನದಿಗೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವುದು ವಾಡಿಕೆ. ಹೀಗಾಗಿ ಜುಲೈ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 11 ಗಂಟೆಗೆ ಬಾಗಿನವನ್ನ ಸಮರ್ಪಣೆ ಮಾಡಲಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ
Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು!
Govt School : ಶಾಲೆಗೆ ಬರುವ ಬಾಲಕಿಯರು ಎರಡು ಜಡೆ ಹಾಕಿಲ್ಲ ಎಂದು ಅತಿಥಿ ಶಿಕ್ಷಕರು ಮೂವರ ತಲೆಕೂದಲನ್ನೇ (Ramanagar News) ಕತ್ತರಿಸಿದ್ದಾರೆ. ಶಿಕ್ಷಕರ ಕಾರ್ಯಕ್ಕೆ ಪೋಷಕರು ಕಿಡಿಕಾರಿದ್ದಾರೆ. ಇಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. The post Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು! first appeared on Vistara News .
Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್ ಮುತಾಲಿಕ್ ಶಾಕಿಂಗ್ ಹೇಳಿಕೆ
Dog Meat: ಬೆಂಗಳೂರಿನಲ್ಲಿ ಶಂಕಿತ ನಾಯಿ ಮಾಂಸ ಮಾರಾಟ ಪ್ರಕರಣದ ಬಗ್ಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಹಿಂದೂಗಳೇ ರುಚಿ-ರುಚಿಯಾದ ಹಂದಿ, ನಾಯಿ, ನರಿ, ಬೆಕ್ಕಿನ ಮಾಂಸ ತಿನ್ನಿರಿ ಎಂದು ಹಿಂದೂಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು. The post Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್ ಮುತಾಲಿಕ್ ಶಾಕಿಂಗ್ ಹೇಳಿಕೆ first appeared on Vistara News .
ವೀಳ್ಯೆದೆಲೆಗೆ ಭಾರೀ ಬೇಡಿಕೆ: ಬೆಳೆಗಾರರಿಗೆ ಶುಕ್ರದೆಸೆ
ಹಗರಿಬೊಮ್ಮನಹಳ್ಳಿ ಪಟ್ಟಣದ ವೀಳ್ಯೆದೆಲೆ ಮಾರುಕಟ್ಟೆ ಅಖಂಡ ಬಳ್ಳಾರಿಯಲ್ಲೇ ದೊಡ್ಡ ಮಾರುಕಟ್ಟೆಯಾಗಿದೆ. ವೀಳ್ಯದೆಲೆಗೆ ಭಾರೀ ಬೇಡಿಕೆ ಬಂದಿದ್ದು ಬೆಳೆಗಾರರಿಗೆ ಶುಕ್ರದೆಸೆ ಶುರುವಾಗಿದೆ. ತಿಂಗಳ ಹಿಂದಷ್ಟೇ ಪ್ರತಿ ಪೆಂಡಿಗೆ (12ಸಾವಿರ ಎಲೆ) 3ಸಾವಿರ ರೂ.ಇದ್ದ ವೀಳ್ಯದೆಲೆ ಬೆಲೆ ಇದೀಗ ಮೂರುಪಟ್ಟು ಹೆಚ್ಚಾಗಿದೆ. ಇದೀಗ ಪ್ರತಿ ಪೆಂಡಿಗೆ 6 ರಿಂದ 9 ಸಾವಿರ ರೂ.ಗೆ ಖರೀದಿ ನಡೆದಿದೆ.
ನೀತಿ ಆಯೋಗದ ಸಭೆಯಿಂದ ಅರ್ಧದಲ್ಲೇ ಹೊರನಡೆದ ಮಮತಾ ಬ್ಯಾನರ್ಜಿ
ಹೊಸ ದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಹೊಸದಿಲ್ಲಿಯಲ್ಲಿ ಆಯೋಜನೆಗೊಂಡಿದ್ದ ನೀತಿ ಆಯೋಗದ 9ನೇ ಆಡಳಿತಾತ್ಮಕ ಮಂಡಳಿ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅರ್ಧದಲ್ಲೇ ಹೊರನಡೆದಿರುವ ಘಟನೆ ನಡೆದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನನಗೆ ಸಭೆಯಲ್ಲಿ ಕೇವಲ ಐದು ನಿಮಿಷ ಮಾತ್ರ ಮಾತನಾಡಲು ಅವಕಾಶ ನೀಡಲಾಯಿತು ಎಂದು ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, “ನಾನು ಕೇಂದ್ರ ಸರಕಾರವು ರಾಜ್ಯಗಳೊಂದಿಗೆ ತಾರತಮ್ಯ ಮಾಡಬಾರದು ಎಂದು ಹೇಳಿದೆ. ನನಗೆ ಕೇವಲ ಐದು ನಿಮಿಷಗಳ ಕಾಲ ಮಾತ್ರ ಮಾತನಾಡಲು ಅವಕಾಶ ನೀಡಿ, ನಂತರ ನಾನು ಮಾತನಾಡಲು ಬಯಸಿದರೂ ಮೈಕ್ ಅನ್ನು ನಿಶ್ಯಬ್ದಗೊಳಿಸಲಾಯಿತು. ನನಗೂ ಮುನ್ನ ಇತರರು 10-20 ನಿಮಿಷ ಮಾತನಾಡಿದ್ದರು” ಎಂದು ಆರೋಪಿಸಿದರು. “ವಿರೋಧ ಪಕ್ಷಗಳ ಪೈಕಿ ನಾನೊಬ್ಬಳು ಮಾತ್ರ ಸಭೆಯಲ್ಲಿ ಭಾಗವಹಿಸಿದ್ದೆ. ಹೀಗಿದ್ದೂ ನನಗೆ ಮಾತನಾಡಲು ಅವಕಾಶ ನೀಡಲಿಲ್ಲ. ಇದು ಅಪಮಾನಕಾರಿ” ಎಂದು ಅವರು ಕಿಡಿ ಕಾರಿದರು. ಹಲವು ವಿರೋಧ ಪಕ್ಷಗಳ ಸರಕಾರಗಳ ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಗೆ ಗೈರಾಗಿದ್ದರು. ಈ ಪೈಕಿ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ತಮ್ಮ ರಾಜ್ಯಗಳ ವಿರುದ್ಧ 2024-25ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಮಲತಾಯಿ ಧೋರಣೆ ಪ್ರದರ್ಶಿಸಿರುವುದರಿಂದ ನಾವು ನೀತಿ ಆಯೋಗದ ಸಭೆಗೆ ಹಾಜರಾಗುವುದಿಲ್ಲ ಎಂದು ಈ ಮುನ್ನವೇ ಪ್ರಕಟಿಸಿದ್ದರು. ಇವರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಆಮ್ ಆದ್ಮಿ ಪಕ್ಷದ ಆಡಳಿತವಿರುವ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ ನೀತಿ ಆಯೋಗದ ಸಭೆಗೆ ಗೈರಾಗಿದ್ದರು.
Paris Olympic: ರೋಯಿಂಗ್ನಲ್ಲಿ ಶುಭ ಸುದ್ದಿ; ಶೂಟಿಂಗ್ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ
Paris Olympic: 10 ಮೀ. ಏರ್ ರೈಫಲ್ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು. The post Paris Olympic: ರೋಯಿಂಗ್ನಲ್ಲಿ ಶುಭ ಸುದ್ದಿ; ಶೂಟಿಂಗ್ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ first appeared on Vistara News .
ನೀತಿ ಆಯೋಗದ ಸಭೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಗೈರು
ಪಾಟ್ನಾ: ಶನಿವಾರ ಹೊಸದಿಲ್ಲಿಯಲ್ಲಿ ನಡೆಯುವ ನೀತಿ ಆಯೋಗದ ಸಭೆಗೆ ಬಿಹಾರ ಮುಖ್ಯಮಂತ್ರಿ ಹಾಜರಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಬದಲಿಗೆ ಉಪ ಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಹಾಗೂ ವಿಜಯ್ ಕುಮಾರ್ ಸಿನ್ಹಾ ಬಿಹಾರ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಮಹತ್ವದ ಸಭೆಗೆ ನಿತೀಶ್ ಕುಮಾರ್ ಗೈರಾಗಲು ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಯು ವಕ್ತಾರ ನೀರಜ್ ಕುಮಾರ್, “ಮುಖ್ಯಮಂತ್ರಿಗಳು ಇದೇ ಪ್ರಥಮ ಬಾರಿಗೆ ನೀತಿ ಆಯೋಗದ ಸಭೆಗೆ ಗೈರಾಗುತ್ತಿಲ್ಲ. ಈ ಹಿಂದೆಯೂ ಗೈರಾಗಿದ್ದಾರೆ. ಆಗೆಲ್ಲ ಅಂದಿನ ಉಪ ಮುಖ್ಯಮಂತ್ರಿಗಳು ಬಿಹಾರವನ್ನು ಪ್ರತಿನಿಧಿಸಿದ್ದರು. ಈ ಬಾರಿ ಕೂಡಾ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಇಬ್ಬರು ಉಪ ಮುಖ್ಯಮಂತ್ರಿಗಳು ತೆರಳಿದ್ದಾರೆ” ಎಂದು ಸ್ಪಷ್ಟೀಕರಣ ನೀಡಿದ್ದಾರೆ.
Electric shock : ಜಮೀನು ಕೆಲಸಕ್ಕೆ ಹೊರಟಿದ್ದ ಯುವಕನೊಬ್ಬ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ವಿದ್ಯುತ್ ನಿಗಮದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. The post Electric shock : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದವನಿಗೆ ಕರೆಂಟ್ ಶಾಕ್; ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣ first appeared on Vistara News .
Finn Allen: ಫಿನ್ ಅಲೇನ್ ಆರ್ಭಟ: ಶತಕದ ಸೊಬಗು
ನ್ಯೂಜಿಲೆಂಡ್ ತಂಡದ ಯುವ ಆಟಗಾರ ಫಿನ್ ಅಲೆನ್ ಮೇಜರ್ ಲೀಗ್ ಕ್ರಿಕೆಟ್ (ಎಂಎಲ್ಸಿ) ಟೂರ್ನಿಯಲ್ಲಿ ಆರ್ಭಟ ನಡೆಸಿದ್ದಾರೆ. ಇವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಸ್ಯಾನ್ ಫ್ರಾನ್ಸಿಸ್ಕೋ ಯುನಿಸ್ಕೋ ಜಯ ಸಾಧಿಸಿದೆ. ಶುಕ್ರವಾರ ನಡೆದ ಟಿ20 ಪಂದ್ಯದಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಮೊದಲು ಬ್ಯಾಟಿಂಗ್ ಮಾಡಿ 6 ವಿಕೆಟ್ಗೆ 200 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಟೆಕ್ಸ್
ನೀತಿ ಆಯೋಗದ ಸಭೆಗೆ 7 ಸಿಎಂ ಗೈರು : ಸಭೆಯಲ್ಲಿ ಸಿಟ್ಟಿನಿಂದ ಅರ್ಧದಲ್ಲೇ ಎದ್ದು ಹೋದ ಮಮತಾ ಬ್ಯಾನರ್ಜಿ
Mamata Banerjee Walked Out Of Meeting : ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದರೂ, ಕೇಂದ್ರ ಸರ್ಕಾರ ತಾರತಮ್ಯ ತೋರುತ್ತಿದೆ. ಸಭೆಯಲ್ಲಿ ಭಾಗವಹಿಸಿದ್ದ ನನಗೆ ಅವಮಾನ ಮಾಡಲಾಯಿತು. ಇದನ್ನು ಪ್ರತಿಭಟಿಸಿ ನೀತಿ ಆಯೋಗದ ಸಭೆಯಿಂದ ಹೊರ ನಡೆದು ಬಂದಿದ್ದೇನೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Mamata Banerjee: ನವದೆಹಲಿಯಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊರ ನಡೆದಿದ್ದಾರೆ. ʼʼನನಗೆ ಕೇವಲ ಐದು ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಲಾಯಿತು. ಕೆಲವರು ನನ್ನ ಮುಂದೆ 10-20 ನಿಮಿಷಗಳ ಕಾಲ ಮಾತನಾಡಿದರು ಎಂದು ಮಮತಾ ಬ್ಯಾನರ್ಜಿ ಹೊರಬಂದ ನಂತರ ಆರೋಪಿಸಿದರು. The post Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ first appeared on Vistara News .
ವನ್ಯ ಜೀವಿ ವಿಭಾಗದ ಮಂಚೂಣಿ ಸಿಬ್ಬಂದಿಗೆ ವಿಶೇಷ ಭತ್ಯೆ : ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು : ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದ್ದಾರೆ. ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3500, ಅರಣ್ಯ ರಕ್ಷಕರಿಗೆ 2700 ಹಾಗೂ ಡಿ ದರ್ಜೆ ನೌಕರರಿಗೆ 2000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ. ರಾಜ್ಯದ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಇದರ ನಿಗ್ರಹಕ್ಕಾಗಿ ಆನೆ ಕಾರ್ಯಪಡೆ ರಚಿಸಲಾಗಿದ್ದು, ಇದರಲ್ಲಿ ಕಾರ್ಯ ನಿರ್ವಹಿಸುವ ಹೊರಗುತ್ತಿಗೆ ಸಿಬ್ಬಂದಿಯೂ ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಸಿಕ ಕರ್ತವ್ಯ ನಿರ್ವಹಿಸಿದ 6 ದಿನಗಳಿಗೆ 500 ರೂ. ಆಧಾರದಲ್ಲಿ ತಿಂಗಳಿಗೆ ಗರಿಷ್ಠ 2000 ರೂ. (ಷರತ್ತಿಗೆ ಒಳಪಟ್ಟು) ನೀಡಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ. ನರಸೀಪುರ, ಮಂಡ್ಯ, ಪಾಂಡವಪುರ, ನಾಗಮಂಗಲ ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಿರತೆ ಕಾರ್ಯಪಡೆ, ವನ್ಯ ಜೀವಿಗಳನ್ನು ಹಿಮ್ಮೆಟ್ಟಿಸುವ ಕ್ಷಿಪ್ರ ಸ್ಪಂದನಾ ಪಡೆ ಸಿಬ್ಬಂದಿ ಮತ್ತು ಅರಣ್ಯದೊಳಗಿರುವ ಕಳ್ಳಬೇಟೆ ಶಿಬಿರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರಿಗೂ ಇದು ಅನ್ವಯಿಸುತ್ತದೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ತಾವು ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ಮತ್ತು ಹೊರಗುತ್ತಿಗೆ ನೌಕರರು ಚಳಿ, ಮಳೆ, ಗಾಳಿ ಎನ್ನದೆ, ವನ್ಯಜೀವಿಗಳ ದಾಳಿಯ ಅಪಾಯದ ನಡುವೆಯೂ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವುದನ್ನು ಗಮನಿಸಿ, ಈ ವಿಶೇಷ ಭತ್ಯೆ ನೀಡಲು ತೀರ್ಮಾನಿಸಿದ್ದಾಗಿ ತಿಳಿಸಿದ್ದಾರೆ.
ಗುವಾಹಟಿ: ಮೂವರು ಹಮಾರ್ ವ್ಯಕ್ತಿಗಳನ್ನು ನಕಲಿ ಎನ್ಕೌಂಟರ್ನಲ್ಲಿ ಅಸ್ಸಾಂ ಪೊಲೀಸರು ಹತ್ಯೆಗೈದಿದ್ದಾರೆಂದು ಅವರ ಕುಟುಂಬಗಳು ಆರೋಪಿಸಿರುವ ಹಿನ್ನೆಲೆಯಲ್ಲಿ, ಅಂತಿಮ ಪೋಸ್ಟ್ ಮಾರ್ಟಂ ವರದಿ ಸಲ್ಲಿಕೆಯಾಗುವ ತನಕ ಅವರ ಮೃತದೇಹಗಳನ್ನು ಶವಾಗಾರದಲ್ಲಿರಿಸುವಂತೆ ಗುವಾಹಟಿ ಹೈಕೋರ್ಟ್ ಆದೇಶಿಸಿದೆ. ಕಚಾರ್ ಪೊಲೀಸರ ಕಸ್ಟಡಿಯಲ್ಲಿರುವಾಗ ಜುಲೈ 17ರಂದು ಮಣಿಪುರದ ಫೆರ್ಝ್ವಾಲ್ ಜಿಲ್ಲೆಯ ಸೆನ್ವೊನ್ ಗ್ರಾಮದ ಜೊಶುವಾ, ಅಸ್ಸಾಂನ ಕಚರ್ ಜಿಲ್ಲೆಯ ಕೆ ಬೆತೆಲ್ ಗ್ರಾಮದ ನಿವಾಸಿಗಳಾದ ಲಲ್ಲುಂಗವಿ ಹಮಾರ್ ಮತ್ತು ಲಾಲ್ಬೀಕ್ಕುಂಗ್ ಹಮಾರ್ ಅವರು ಮೃತಪಟ್ಟಿದ್ದರು. ಈ ಮೂವರೂ ತೀವ್ರಗಾಮಿಗಳು ಎಂದಿರುವ ಅಸ್ಸಾಂ ಪೊಲೀಸರು, ಅವರು ಇತರ ತೀವ್ರಗಾಮಿಗಳ ವಿರುದ್ಧದ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿಯಲ್ಲಿ ಮೃತಪಟ್ಟರು ಎಂದು ಹೇಳಿದ್ದಾರೆ. ಆದರೆ ಸಾವಿನ ಕಾರಣ ಕುರಿತು ಸಂಶಯ ವ್ಯಕ್ತಪಡಿಸಿ ಮೂವರ ಕುಟುಂಬಗಳು ಹೈಕೋರ್ಟ್ ಕದ ತಟ್ಟಿ ಪೋಸ್ಟ್ ಮಾರ್ಟಂ ಅನ್ನು ಅಸ್ಸಾಂ ಹೊರಗಿನ ವೈದ್ಯರು ನಡೆಸಬೇಕೆಂದು ಕೋರಿದ್ದರು. ಶುಕ್ರವಾರ ಅಸ್ಸಾಂ ಅಡ್ವಕೇಟ್ ಜನರಲ್ ದೇವಜಿತ್ ಸೈಕಿಯಾ ಅವರು ಸಿಲ್ಚಾರ್ ಮೆಡಿಕಲ್ ಕಾಲೇಜ್ ಎಂಡ್ ಹಾಸ್ಪಿಟಲ್ ನೀಡಿದ್ದ ಪೋಸ್ಟ್ ಮಾರ್ಟಂ ವರದಿಯನ್ನು ಹೈಕೋರ್ಟ್ ಪೀಠಕ್ಕೆ ಸೀಲ್ ಮಾಡಿದ ಕವರ್ನಲ್ಲಿ ಹಸ್ತಾಂತರಿಸಿದರು. ಆದರೆ ಇದರಲ್ಲಿ ಸಾವಿನ ಕಾರಣ ಕುರಿತ ಅಂತಿಮ ಅಭಿಪ್ರಾಯವಿಲ್ಲ , ವಿಧಿವಿಜ್ಞಾನ ನಿರ್ದೇಶನಾಲಯದಿಂದ ವರದಿ ಇನ್ನಷ್ಟೇ ಬರಬೇಕಿದೆ ಎಂದು ಹೈಕೋರ್ಟ್ ಹೇಳಿದೆ. ಮುಂದಿನ ವಿಚಾರಣೆ ಆಗಸ್ಟ್ 2ರಂದು ನಡೆಯುವ ಮೊದಲು ರಾಜ್ಯ ಸರ್ಕಾರ ಅಂತಿಮ ಪೋಸ್ಟ್ ಮಾರ್ಟಂ ವರದಿಯೊಂದಿಗೆ ತನ್ನ ಅಫಿಡವಿಟ್ ಸಲ್ಲಿಸಬೇಕೆಂದು ಸೂಚಿಸಿದೆ. ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಹಾಗೂ ಪೋಸ್ಟ್ ಮಾರ್ಟಂ ಅನ್ನು ನೆರೆಯ ಮಿಜೋರಾಂ ವೈದ್ಯರು ನಡೆಸಿದರೆ ಉತ್ತಮ ಎಂಬ ಅಭಿಪ್ರಾಯವನ್ನು ಅರ್ಜಿದಾರರ ಪರ ವಕೀಲ ಕಾಲಿನ್ ಗೊನ್ಸಾಲ್ವಿಸ್ ವ್ಯಕ್ತಪಡಿಸಿದರು. ಆದರೆ ಇದಕ್ಕೆ ಸರ್ಕಾರದ ವಕೀಲರು ಆಕ್ಷೇಪಿಸಿದರು. ಈ ಘಟನೆ ನಡೆದ ಕಚಾರ್ ಗ್ರಾಮವು ಮಣಿಪುರದ ಜಿರಿಬಮ್ ಜಿಲ್ಲೆಯ ಗಡಿ ಭಾಗದಲ್ಲಿದೆ. ಮೃತ ಮೂವರು ಸೇರಿದ ಹಮಾರ್ ಸಮುದಾಯವು ಕುಕಿ-ಝೋ ಪಂಗಡದ ಭಾಗವಾಗಿದೆ. ಅಂತಿಮ ಪೋಸ್ಟ್ ಮಾರ್ಟಂ ವರದಿಗಾಗಿ ಕಾಯಲಾಗುವುದು ಹಾಗೂ ನಂತರ ಶವಗಳನ್ನು ಶವಾಗಾರದಿಂದ ಹೊರತೆಗೆಯಲಾಗುವುದು ಎಂದು ನ್ಯಾಯಾಲಯ ಹೇಳಿದೆ. “ಅರ್ಜಿದಾರರು ಸಲ್ಲಿಸಿದ ವೀಡಿಯೋಗಳಲ್ಲಿ ಕೈಗಳನ್ನು ಕಟ್ಟಿ ಹಾಕಲಾಗಿದ್ದ ಮೂವರನ್ನು ಆಟೋರಿಕ್ಷಾವೊಂದರಲ್ಲಿ ಕಾಡಿನ ಪ್ರದೇಶಕ್ಕೆ ಕರೆದೊಯ್ಯುವುದು ಕಾಣಿಸುತ್ತದೆ. ನಂತರ ಮೂವರ ಮೃತದೇಹ ಪತ್ತೆಯಾಗಿದೆ. ಅಲ್ಲಿ ಕೆಲ ಬಂದೂಕಿನಿಂದ ಉಂಟಾದ ತೂತುಗಳು ಕಾಣಿಸಿವೆ. ಆದರೆ ಇಲ್ಲಿ ಗುಂಡಿನ ಚಕಮಕಿ ನಡೆದಿದೆಯೆಂಬುದು ಸಾಬೀತು ಪಡಿಸುವುದು ಕಷ್ಟ,” ಎಂದು ಅರ್ಜಿದಾರರ ವಕೀಲರು ಹೇಳಿದರಲ್ಲದೆ ವೀಡಿಯೋದಲ್ಲಿ ಮುಖ ಗುರುತಿಸಬಹುದಾದ ನಾಲ್ಕು ಪೊಲೀಸ್ ಅಧಿಕಾರಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
Tomato Price: ದಿಢೀರ್ ಕುಸಿದ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ತಳಮಳ
Tomato Price: ಒಂದು ವಾರದಿಂದ ಟೊಮೆಟೋ ಬಾಕ್ಸ್ ಬೆಲೆ ಸಾವಿರ ರೂಪಾಯಿ ಗಡಿ ದಾಟಿ ಟೊಮೆಟೊ ಬೆಳೆಗಾರನ (Tomato farmer) ಮುಖದಲ್ಲಿ ಮದಹಾಸ ಮೂಡಿಸಿತ್ತು. ಎರಡು ದಿನಗಳಿಂದ ದಿಢೀರನೇ ಕುಸಿತ ಕಂಡಿದ್ದು ಟೊಮೊಟೊ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. The post Tomato Price: ದಿಢೀರ್ ಕುಸಿದ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ತಳಮಳ first appeared on Vistara News .
ಕಾಪು: ಮೀಫ್ ವತಿಯಿಂದ ಜಿಲ್ಲಾ ಮಟ್ಟದ 3ನೇ ಮೊಂಟೆಸ್ಸರಿ ಶಿಕ್ಷಕರ ತರಬೇತಿ ಶಿಬಿರ
ಉಡುಪಿ: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವತಿಯಿಂದ ಉತ್ತರ ವಲಯ ಮೊಂಟೆಸ್ಸರಿ(KG) ಶಿಕ್ಷಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಶನಿವಾರ ಕಾಪುವಿನ ಕ್ರೆಸೆಂಟ್ ಅಂತರಾಷ್ಟ್ರೀಯ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕನ್ವೀನರ್ ಅನ್ವರ್ ಹುಸೈನ್ ಗೂಡಿನಬಳಿ ಅವರು ಸ್ವಾಗತಿಸಿದರು. ಕ್ರೆಸೆಂಟ್ ಅಂತರಾಷ್ಟ್ರೀಯ ಶಾಲೆಯ ಅಧ್ಯಕ್ಷ ಶಂಸುದ್ದೀನ್ ಸಾಹೇಬ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಪು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಬ್ದುಲ್ ಖಾದರ್ ಮಾತನಾಡಿ, ಮಕ್ಕಳಿಗೆ ಎಳೆಯ ಪ್ರಾಯದಿಂದಲೇ ಶಿಕ್ಷಣದ ಮಹತ್ವವನ್ನು ತಿಳಿಸಿ ಮುಂದೆ ಉತ್ತಮ ಪ್ರಜೆಗಳಾಗಿ, ದೇಶದ ಉನ್ನತ ನಾಗರಿಕರಾಗಿ ಜೀವಿಸಲು ಸಹಕಾರಿಯಾಗಬೇಕು ಎಂದು ಶಿಕ್ಷಕಿಯರಿಗೆ ಕಿವಿಮಾತು ನೀಡಿದರು. ಕಾಪು ಕ್ರೆಸೆಂಟ್ ಅಂತರಾಷ್ಟ್ರೀಯ ಶಾಲೆ ಪ್ರಾಯೋಜಿಸಿದ್ದ ಈ ತರಬೇತಿ ಕಾರ್ಯಗಾರದಲ್ಲಿ ಮಂಗಳೂರಿನ ಯೇನಪೋಯ ವಿದ್ಯಾಸಂಸ್ಥೆಯ ಅಕ್ಷರ ಹೌಸ್ ಆಫ್ ಚಿಲ್ಡ್ರನ್ ವಿಭಾಗದ ತರಬೇತುದಾರರು ತರಬೇತಿ ಕೈಗೊಂಡರು. ಕಾಪು, ಉಡುಪಿ, ಕುಂದಾಪುರ, ಕಾರ್ಕಳ, ಮಣಿಪಾಲ ತಾಲೂಕುಗಳ 14 ವಿದ್ಯಾಸಂಸ್ಥೆಗಳ ಒಟ್ಟು 71 ಶಿಕ್ಷಕರು ಭಾಗವಹಿಸಿದ್ದರು. ಮೀಫ್ ಒಕ್ಕೂಟದ ಅಧ್ಯಕ್ಷ ಮೂಸಬ್ಬ. ಪಿ.ಬ್ಯಾರಿ ಅವರು ಅಧ್ಯಕ್ಷೀಯ ಮಾತುಗಳನ್ನಾಡಿದರು. ಒಕ್ಕೂಟದ ಉತ್ತರ ವಲಯದ ಅಧ್ಯಕ್ಷ ಶಬಿಹ್ ಅಹ್ಮದ್ ಖಾಝಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯರಾದ ಅಡ್ವೊಕೇಟ್ ಉಮರ್ ಫಾರೂಕ್, ಫರ್ವೇಜ್ ಅಲಿ, ಯೆನೆಪೋಯ ವಿದ್ಯಾ ಸಂಸ್ಥೆಯ ಸಹ ನಿರ್ದೇಶಕ ಆಂಟನಿ ಜೋಸೆಫ್, ಕ್ರೆಸೆಂಟ್ ಶಾಲೆಯ ಆಡಳಿತ ಅಧಿಕಾರಿ ನವಾಬ್ ಹಸನ್ ಪ್ರಾಂಶುಪಾಲ ಅಕ್ಬರ್ ಅಲಿ, ಉಪ ಪ್ರಾಂಶುಪಾಲ ಗುರುದತ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಝರೀನ ಕಾರ್ಯಕ್ರಮ ನಿರೂಪಿಸಿದರು, ಅಸ್ಮ ಖಾಝಿ ವಂದಿಸಿದರು. Delete Edit
Mukesh Ambani: ಬಜೆಟ್ ದಿನ 9,200 ಕೋಟಿ ರೂ. ಕಳೆದುಕೊಂಡಿದ್ದ ಮುಕೇಶ್ ಅಂಬಾನಿ!
ಕೇಂದ್ರ ಬಜೆಟ್ ಮಂಡನೆಯಾದ ದಿನ ಷೇರು ಮಾರುಕಟ್ಟೆಯು ಸಣ್ಣ ಕುಸಿತದೊಂದಿಗೆ ಕ್ಲೋಸ್ ಆಗಿತ್ತು. ಆದರೆ ಇದು ವಹಿವಾಟಿನ ವೇಳೆ ಬಹುದೊಡ್ಡ ಪರಿಣಾಮವನ್ನು ಬೀರಿತ್ತು. ಕೆಲವು ಷೇರುಗಳು ತೀವ್ರವಾಗಿ ಕುಸಿದರೆ, ಇನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಕಂಡವು. ಇದು ಮುಕೇಶ್ ಅಂಬಾನಿ (Mukesh Ambani) ಸೇರಿದಂತೆ ದೇಶದ ದೊಡ್ಡ ಬಿಲಿಯನೇರ್ಗಳ ಸಂಪತ್ತಿನ ಮೇಲೆ ಭಾರೀ ಪರಿಣಾಮವನ್ನು ಬೀರಿತು. The post Mukesh Ambani: ಬಜೆಟ್ ದಿನ 9,200 ಕೋಟಿ ರೂ. ಕಳೆದುಕೊಂಡಿದ್ದ ಮುಕೇಶ್ ಅಂಬಾನಿ! first appeared on Vistara News .
ಬೆಂಗಳೂರು ಪಿಜಿ ಮರ್ಡರ್: ಗೆಳತಿಯ ಬಾಯ್ಫ್ರೆಂಡ್ನಿಂದಲೇ ಕೃತಿ ಕೊಲೆ! ಜಗಳ ಬಿಡಿಸಿದ್ದೇ ತಪ್ಪಾಯ್ತಾ?
Bengaluru PG Murder: ದೂರದ ಊರುಗಳಿಂದ, ಬೇರೆ ರಾಜ್ಯಗಳಿಂದ ಬಂದು ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಳ್ಳುವ ಬಹುತೇಕ ಯುವಕ, ಯುವತಿಯರು ಮೊದಲಿಗೆ ಪಿಜಿಗಳಲ್ಲಿ ನೆಲೆಸಿ ತಮ್ಮ ಔದ್ಯೋಗಿಕ ಜೀವನ ಆರಂಭಿಸುತ್ತಾರೆ. ಪಿಜಿಯಲ್ಲಿ ಏರ್ಪಡುವ ಸ್ನೇಹ, ಸಂಬಂಧಗಳು ಮಧುರವಾಗಿದ್ದರೆ ಎಲ್ಲರಿಗೂ ಒಳಿತು. ಆದರೆ, ಎಡವಟ್ಟಾದರೆ? ಇತ್ತೀಚೆಗೆ ಕೊಲೆಯಾದ ಬಿಹಾರ ಮೂಲದ ಕೃತಿ ಕುಮಾರಿ ವಿಚಾರದಲ್ಲೂ ಆಗಿದ್ದು ಅದೇ! ತನ್ನ ಗೆಳತಿಯನ್ನು ಆಕೆಯ ಬಾಯ್ ಫ್ರೆಂಡ್ನ ಕಾಟದಿಂದ ಮುಕ್ತಗೊಳಿಸಲು ಮುಂದಾದ ಯುವತಿ, ಆತನಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾಳೆ!
ರಾಜ್ಯದಲ್ಲಿ ಮಕ್ಕಳ ಕಳ್ಳತನ, ಮಾರಾಟ ಜಾಲ ಸಕ್ರಿಯ: 2 ವರ್ಷಗಳಲ್ಲಿ 37 ಪ್ರಕರಣ ದಾಖಲು!
ರಾಜ್ಯದಲ್ಲಿ ಮಕ್ಕಳ ಕಳ್ಳತನ ಮತ್ತು ಮಾರಾಟ ಜಾಲಗಳು ಸಕ್ರಿಯವಾಗಿದ್ದು ಪೊಲೀಸರು ಈ ಬಗ್ಗೆ ನಿಗಾ ವಹಿಸಿದ್ದಾರೆ. ಇತ್ತೀಚೆಗಷ್ಟೇ ತುಮಕೂರು ಜಿಲ್ಲೆಯಲ್ಲಿಇಂತಹ ಮಾರಾಟ ಜಾಲವನ್ನು ಭೇದಿಸಿದ್ದ ಪೊಲೀಸರು 7 ಆರೋಪಿಗಳನ್ನು ಬಂಧಿಸಿ 5 ಮಕ್ಕಳನ್ನು ರಕ್ಷಿಸಿದ್ದರು. ಗೃಹ ಇಲಾಖೆ ಅಂಕಿ ಅಂಶಗಳ ಪ್ರಕಾರ ಕಳೆದ 2 ವರ್ಷಗಳಲ್ಲಿ ಈ 37 ಮಕ್ಕಳ ಕಳ್ಳತನ ಮತ್ತು ಮಾರಾಟ ಪ್ರಕರಣಗಳು ದಾಖಲಾಗಿವೆ. ಈ ಖದೀಮರ ಜಾಲವು ಅವಿವಾಹಿತ ತಾಯಂದಿರನ್ನು ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸುತ್ತಿದೆ.
Mandya News : ಮಂಡ್ಯ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು (Karnataka Rain) , ಕಾವೇರಿ ನದಿ ಉಕ್ಕಿ (Cauvery River) ಹರಿಯುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇದರೊಟ್ಟಿಗೆ ಪ್ರವಾಸಿ ತಾಣಗಳಾದ ಮುತ್ತತ್ತಿ ಹಾಗೂ ನಿಮಿಷಾಂಬ ದೇಗುಲದ ಸ್ನಾನ ಘಟ್ಟಕ್ಕೆ ನಿಷೇಧ ಹೇರಲಾಗಿದೆ. ಜತೆಗೆ ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್ ಹಾಕಲಾಗಿದೆ. The post Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್ first appeared on Vistara News .
ಬೆಂಗಳೂರು | ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ : ಪುನೀತ್ ಕೆರೆಹಳ್ಳಿ ಬಂಧನ
ಬೆಂಗಳೂರು : ಮೆಜೆಸ್ಟಿಕ್ ನ ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವ್ಯಾಪಾರಿಯೊಬ್ಬರು ತೆಗೆದುಕೊಂಡು ಹೋಗುತ್ತಿದ್ದ ಕುರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ ಈ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಸಾಕ್ಷ್ಯಾಧಾರ ರಹಿತ ಆರೋಪ ಮಾಡಿರುವ ಘಟನೆ ಶುಕ್ರವಾರ ವರದಿಯಾಗಿತ್ತು. ಈ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ತಡರಾತ್ರಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ಬಂದ ಸುಮಾರು 50ಕ್ಕೂ ಹೆಚ್ಚು ಬಾಕ್ಸ್ ಗಳಲ್ಲಿ 4,500 ಕೆಜಿ ಮಾಂಸವಿತ್ತು. ಆದರೆ ಈ ಬಾಕ್ಸ್ ಗಳಲ್ಲಿ ಕುರಿಯ ಮಾಂಸದೊಂದಿಗೆ ನಾಯಿ ಮಾಂಸವನ್ನು ಮಿಶ್ರಣ ಮಾಡಲಾಗಿದೆ ಎಂದು ಆರೋಪಿಸಿದ್ದ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ಬಾಕ್ಸ್ ಗಳು ಹೊರಗೆ ಬರುತ್ತಿದ್ದಂತೆ ರೈಲ್ವೆ ನಿಲ್ದಾಣದಲ್ಲೇ ತಡೆದಿದ್ದರು. ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಪೊಲೀಸರ ವಶದಲ್ಲಿದ್ದಾಗ ಅಸ್ವಸ್ಥಗೊಂಡಿದ್ದ ಪುನೀತ್ ಕೆರೆಹಳ್ಳಿಯನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ವಿವಿ ಸಾಗರಕ್ಕೆ ಭದ್ರಾ ನೀರು ಹರಿಸುವ ನಿರೀಕ್ಷೆ; ಡಿಕೆಶಿಗೆ ಜಿಲ್ಲಾಉಸ್ತುವಾರಿ ಸಚಿವ ಡಿ.ಸುಧಾಕರ್ ಪತ್ರ
ಕಳೆದೆರಡು, ಮೂರು ವಾರಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳು, ಕೆರೆ ಕಟ್ಟೆಗಳು ಭರ್ತಿಯಾಗಿ ಹರಿಯುತ್ತಿದ್ದವು. ಆದರೆ, ವಿವಿ ಸಾಗರಕ್ಕೆ ಶೂನ್ಯ ಒಳಹರಿವು ಇತ್ತು. ಆರಂಭದಲ್ಲಿ ಭರವಸೆ ಹುಟ್ಟಿಸಿದ್ದ ಮುಂಗಾರು ನಂತರದ ದಿನಗಳಲ್ಲಿ ಕ್ಷೀಣಿಸಿದ್ದರಿಂದ ಈ ಬಾರಿ ಮಳೆಯೂ ಇಲ್ಲದೇ, ಜಲಾಶಯದಲ್ಲಿ ನೀರಿನ ಸಂಗ್ರಹವೂ ಹೆಚ್ಚಳವಾಗದೇ ಕೃಷಿ ಬದುಕನ್ನು ಸಂರಕ್ಷಿಸಿಕೊಳ್ಳುವುದು ಹೇಗೆ ಎನ್ನುವ ಸವಾಲು ರೈತರನ್ನು ಕಾಡುತ್ತಿತ್ತು. ಇದೀಗ ಭದ್ರಾ ಜಲಾಶಯದಿಂದ ವಿ ವಿ ಸಾಗರಕ್ಕೆ ನೀರು ಹರಿಸುವ ನಿರೀಕ್ಷೆ ಗರಿಗೆದರಿದೆ.
Bigg Boss Kannada: ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ಹೋಗ್ತಾರಾ? ನಟಿ ಹೇಳಿದ್ದೇನು?
Bigg Boss Kannada: ಬಿಗ್ಬಾಸ್ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ. The post Bigg Boss Kannada: ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ಹೋಗ್ತಾರಾ? ನಟಿ ಹೇಳಿದ್ದೇನು? first appeared on Vistara News .
ಮುಂಬೈ| ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ರಕ್ಷಣೆ, ಅವಶೇಷಗಳಡಿಯಲ್ಲಿ ಇನ್ನೂ ಮೂವರು ಸಿಲುಕಿಕೊಂಡಿರುವ ಶಂಕೆ
ಮುಂಬೈ: ಶನಿವಾರ ಮುಂಜಾನೆ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿರುವ ಘಟನೆ ನವಿ ಮುಂಬೈನ ಸಿಬಿಡಿ ಬೇಲಾಪುರ್ ನಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿರುವ ಇನ್ನೂ ಮೂವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಈ ಘಟನೆಯು ಇಂದು ಮುಂಜಾನೆ 4.10ಕ್ಕೆ ಶಹ್ಬಾಝ್ ಗ್ರಾಮದಲ್ಲಿ ನಡೆದಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿರುವ ನವಿ ಮುಂಬೈ ಮಹಾನಗರ ಪಾಲಿಕೆಯ ಆಯುಕ್ತ ಕೈಲಾಸ್ ಶಿಂದೆ, “ಇಂದು ಬೆಳಗ್ಗೆ ಹಲವು ವಸತಿ ಗೃಹಗಳು ಹಾಗೂ ಮೂರು ಮಳಿಗೆಗಳನ್ನು ಹೊಂದಿದ್ದ ನಾಲ್ಕು ಅಂತಸ್ತಿನ ಕಟ್ಟಡವು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ 13 ಮಕ್ಕಳು ಸೇರಿದಂತೆ 52 ನಿವಾಸಿಗಳನ್ನು ತೆರವುಗೊಳಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷನನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇನ್ನೂ ಮೂವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ. ಕುಸಿದು ಬಿದ್ದಿರುವ ಕಟ್ಟಡವನ್ನು ಕೇವಲ 10 ವರ್ಷಗಳ ಹಿಂದಷ್ಟೆ ನಿರ್ಮಿಸಲಾಗಿತ್ತು ಎಂದೂ ಅವರು ಹೇಳಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಮಹಾನಗರ ಪಾಲಿಕೆಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಇಬ್ಬರನ್ನು ರಕ್ಷಿಸಿದ್ದು, ಉಳಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಘಟನೆಯಲ್ಲಿ ರಕ್ಷಿಸಲಾಗಿರುವವರನ್ನು ಲಾಲ್ ಮುಹಮ್ಮದ್ (22) ಹಾಗೂ ರುಖ್ಸಾನಾ (21) ಎಂದು ಗುರುತಿಸಲಾಗಿದೆ. ಉಳಿದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಶ್ವಾಶನದಳವನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ. ಕಟ್ಟಡ ಕುಸಿತದ ಕಾರಣದ ಕುರಿತು ನವಿ ಮುಂಬೈ ಮಹಾನಗರ ಪಾಲಿಕೆ ವತಿಯಿಂದ ತನಿಖೆ ಕೈಗೊಳ್ಳಲಾಗುವುದು ಎಂದು ಆಯುಕ್ತ ಕೈಲಾಸ್ ಶಿಂದೆ ತಿಳಿಸಿದ್ದಾರೆ.
ಬೆಂಗಳೂರು | ಪಿ.ಜಿಗೆ ನುಗ್ಗಿ ಯುವತಿ ಹತ್ಯೆ ಪ್ರಕರಣ : ಮಧ್ಯಪ್ರದೇಶದಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು : ಕೋರಮಂಗಲದ ವಿ.ಆರ್.ಬಡಾವಣೆಯ ಮಹಿಳಾ ಪಿ.ಜಿ.ಯೊಳಗೆ ನುಗ್ಗಿ ಕೃತಿ ಕುಮಾರಿ (24) ಎಂಬ ಯುವತಿಯನ್ನು ಕತ್ತು ಕೊಯ್ದು ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಪರಾರಿಯಾಗಿದ್ದ ಆರೋಪಿಯನ್ನು ಕೋರಮಂಗಲ ಠಾಣೆ ಪೊಲೀಸರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮಧ್ಯಪ್ರದೇಶದ ಅಭಿಷೇಕ್ ಎಂದು ಗುರುತಿಸಲಾಗಿದೆ. ಪಿ.ಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡುತ್ತಿರುವ ದೃಶ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿ ಆಧರಿಸಿ ಆರೋಪಿಯ ಗುರುತು ಪತ್ತೆ ಹಚ್ಚಿದ್ದ ಪೊಲೀಸರು, ಮಧ್ಯಪ್ರದೇಶದ ಅಭಿಷೇಕ್ ಎಂಬಾತನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಚನ್ನಪಟ್ಟಣದಲ್ಲಿ ಮೂವರು ವಿದ್ಯಾರ್ಥಿನಿಯರ ಜಡೆಗಳನ್ನು ಕತ್ತರಿಸಿದ ಶಿಕ್ಷಕರು! ತರಗತಿಯಲ್ಲಿ ಹೆಣ್ಮಕ್ಕಳಿಕೆ ಅಪಮಾನ
ಶಾಲೆಯ ನಿಯಮದಂತೆ ಎರಡು ಜಡೆಗಳನ್ನು ಹಾಕಿಕೊಂಡು ಬಾರದೇ ಒಂದೇ ಜಡೆ ಹಾಕಿಕೊಂಡು ಬಂದಿದ್ದಕ್ಕೆ ಮೂವರು ವಿದ್ಯಾರ್ಥಿನಿಯರ ಜಡೆಗಳನ್ನು ಶಾಲೆಯ ಶಿಕ್ಷಕರೇ ಕತ್ತರಿಸಿರುವ ಆರೋಪ ಕೇಳಿಬಂದಿದೆ. ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿನ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಶಿಕ್ಷಕರ ಈ ಅಮಾನವೀಯ ವರ್ತನೆಯಿಂದ 8ನೇ ತರಗತಿಯಲ್ಲಿ ಓದುತ್ತಿರುವ ಆ ವಿದ್ಯಾರ್ಥಿನಿಯರು ತೀವ್ರ ಮುಜುಗರಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಪೋಷಕರು ಶಾಲೆಗೆ ಆಗಮಿಸಿ
ಕಾವೇರಿ ಭೋರ್ಗರೆದರೂ ಶಿಂಷಾದಲ್ಲಿ ನೀರಿಲ್ಲ...!
ಮಂಡ್ಯದ ಜೀವನದಿ ಎನಿಸಿಕೊಂಡಿರುವ ಶಿಂಷಾದಲ್ಲಿ ನೀರಿನ ಕೊರತೆ ಎದುರಾಗಿದೆ. ಶಿಂಷಾನದಿ ಪಾತ್ರದಲ್ಲಿಎದುರಾಗಿರುವ ಮಳೆ ಕೊರತೆ ಹಿನ್ನೆಲೆಯಲ್ಲಿನದಿ ಒಡಲು ಬರಿದಾಗಿದೆ. ಪರಿಣಾಮ ಜಲಚರಗಳು ಸೇರಿದಂತೆ ಪ್ರಮುಖ ಪಕ್ಷಿಧಾಮಗಳು, ಧಾರ್ಮಿಕ ಕ್ಷೇತ್ರಗಳು ನೀರಿನ ಕೊರತೆಯಿಂದ ಬಸವಳಿದಿದ್ದು, ಪ್ರಾಕೃತಿಕ ಅಸಮತೋಲನಕ್ಕೆ ಎಡೆ ಮಾಡಿಕೊಟ್ಟಿದೆ.
Bangalore Mysore Expressway: ಬೆಂಗಳೂರು- ಮೈಸೂರು ಹೈವೇಯಲ್ಲಿ ಓವರ್ಸ್ಪೀಡ್ ಹೋದರೆ ಬೀಳಲಿದೆ ಪೊಲೀಸ್ ಕೇಸ್!
Bangalore Mysore Expressway: ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಗಳನ್ನು ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ ಒಂದೇ ದಿನ 150ಕ್ಕೂ ಹೆಚ್ಚು ಅತಿ ವೇಗದ ಚಾಲನೆ ಕೇಸ್ಗಳು ಪತ್ತೆಯಾಗಿವೆ. ಇದರಿಂದ ಓವರ್ಸ್ಪೀಡ್ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಕೈಗೆತ್ತಿಕೊಂಡಿದ್ದು, ಆಗಸ್ಟ್ 1ರಿಂದ ಅದನ್ನು ಚಲಾಯಿಸಲಿದ್ದಾರೆ. The post Bangalore Mysore Expressway: ಬೆಂಗಳೂರು- ಮೈಸೂರು ಹೈವೇಯಲ್ಲಿ ಓವರ್ಸ್ಪೀಡ್ ಹೋದರೆ ಬೀಳಲಿದೆ ಪೊಲೀಸ್ ಕೇಸ್! first appeared on Vistara News .
ಚಿತ್ರೀಕರಣದ ವೇಳೆ ಕಾರು ಅಪಘಾತ: ಮಲಯಾಳಂ ನಟರಾದ ಅರ್ಜುನ್ ಅಶೋಕನ್, ಸಂಗೀತ್ ಪ್ರತಾಪ್ ಗೆ ಗಾಯ
ಕೊಚ್ಚಿ: ಬಂದರು ನಗರವಾದ ಕೊಚ್ಚಿಯಲ್ಲಿ ಸಾಹಸದ ದೃಶ್ಯಿವನ್ನು ಚಿತ್ರೀಕರಿಸುತ್ತಿದ್ದಾಗ ಕಾರು ಅಪಘಾತ ಸಂಭವಿಸಿದ್ದು, ಮಲಯಾಳಂ ನಟರಾದ ಅರ್ಜುನ್ ಅಶೋಕ್ ಹಾಗೂ ಸಂಗೀತ್ ಪ್ರತಾಪ್ ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಈ ಘಟನೆಯು ಇಂದು ಮುಂಜಾನೆ ಸುಮಾರು 1.30ರ ವೇಳೆಗೆ ಕೊಚ್ಚಿಯ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಇನ್ನೂ ಚಿತ್ರೀಕರಣದ ಹಂತದಲ್ಲಿರುವ ‘ಬ್ರೊಮಾನ್ಸ್’ ಎಂಬ ಶೀರ್ಷಿಕೆ ಹೊಂದಿರುವ ಚಲನಚಿತ್ರದ ಚಿತ್ರೀಕರಣದ ಸಂದರ್ಭ ನಟರು ಪ್ರಯಾಣಿಸುತ್ತಿದ್ದ ಕಾರು ಹೋಟೆಲ್ ಒಂದರ ಎದುರು ನಿಲ್ಲಿಸಿದ್ದ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದು ಉರುಳಿ ಬಿದ್ದಿತು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಅರ್ಜುನ್ ಅಶೋಕನ್, ಸಂಗೀತ್ ಪ್ರತಾಪ್ ಸೇರಿದಂತೆ ಮೂವರು ಹಾಗೂ ರಸ್ತೆ ಬದಿಯಲ್ಲಿ ನಿಂತಿದ್ದ ಫುಡ್ ಡೆಲಿವರಿ ಏಜೆಂಟ್ ಒಬ್ಬರಿಗೆ ಈ ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರ ಆರೋಗ್ಯ ಸ್ಥಿತಿಯೂ ಸ್ಥಿರವಾಗಿದೆ ಎಂದು ಹೇಳಲಾಗಿದೆ.
Terrorist Attack: ಕುಪ್ವಾರಾ ಎನ್ಕೌಂಟರ್ನಲ್ಲಿ ಓರ್ವ ಯೋಧ ಹುತಾತ್ಮ: ಪಾಕ್ ಉಗ್ರನನ್ನು ಹೊಡೆದುರುಳಿಸಿದ ಸೇನೆ
Terrorist Attack:ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಜುಲೈ 27ರಂದು ನಡೆದ ಎನ್ಕೌಂಟರ್ನಲ್ಲಿ ಗಾಯಗೊಂಡಿದ್ದ ಸೈನಿಕರ ಪೈಕಿ ಓರ್ವ ಮೃತಪಟ್ಟಿದ್ದಾರೆ. ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಉದ್ದಕ್ಕೂ ನಡೆದ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನ್ನು ಹೊಡೆದುರುಳಿಸಲಾಗಿದೆ. ʼʼಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬಾರ್ಡರ್ ಆ್ಯಕ್ಷನ್ ಟೀಮ್ (Border Action Team)ನ ಉಗ್ರನೊಬ್ಬ ಸಾವನ್ನಪ್ಪಿದ್ದಾನೆʼʼ ಎಂದು ಸೇನೆ ದೃಢಪಡಿಸಿದೆ. The post Terrorist Attack:ಕುಪ್ವಾರಾ ಎನ್ಕೌಂಟರ್ನಲ್ಲಿ ಓರ್ವ ಯೋಧ ಹುತಾತ್ಮ: ಪಾಕ್ ಉಗ್ರನನ್ನು ಹೊಡೆದುರುಳಿಸಿದ ಸೇನೆ first appeared on Vistara News .
ಹಾವೇರಿ: ಮನೆಯ ಮೇಲ್ಛಾವಣಿ ಕುಸಿತ ಪ್ರಕರಣ; ಗಾಯಗೊಂಡಿದ್ದ ವೃದ್ಧೆ ಮೃತ್ಯು
ಹಾವೇರಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಮನೆಯನ ಮೇಲ್ಛಾವಣಿ ಕುಸಿದ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಹರಕುಣಿ (60 ವರ್ಷ) ಮೃತ ಮಹಿಳೆ. ಜುಲೈ 19 ರಂದು ನಡೆದ ಘಟನೆಯಲ್ಲಿ ಮನೆ ಮಂದಿ ರಾತ್ರಿ ಮಲಗಿದ್ದ ವೇಳೆ ಮನೆಯ ಮೇಲ್ಛಾವಣಿ ಕುಸಿದು, ಅವರ ಮೈ ಮೇಲೆಯೇ ಅವಶೇಷಗಳು ಬಿದ್ದಿವೆ. ಇದರಿಂದ ತಾಯಿ, ಮಕ್ಕಳಿಬ್ಬರು ಮೃತಪಟ್ಟಿದ್ದರು. ಇದೀಗ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ.
Rashmika Mandanna: ದೇವರ ನಾಡು ಕೇರಳದಲ್ಲಿ ರಶ್ಮಿಕಾ ಬೋಲ್ಡ್ ಡಾನ್ಸ್; ನಟಿಯನ್ನು ನೋಡಲು ಮುಗಿಬಿದ್ದ ಫ್ಯಾನ್ಸ್!
Rashmika Mandanna: ಕರುನಾಗಪಲ್ಲಿಯಲ್ಲಿ ವೆಡ್ಸ್ ಇಂಡಿಯಾ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭಕ್ಕೆ ಗುರುವಾರ ಬೆಳಗ್ಗೆ 9 ಗಂಟೆಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ರಶ್ಮಿಕಾ ಆಗಮಿಸುತ್ತಿದ್ದಂತೆ, ಅವರನ್ನು ಬರಮಾಡಿಕೊಳ್ಳಲು ಸಾವಿರಾರು ಫ್ಯಾನ್ಸ್ ಒಂದೆಡೆ ಸೇರಿದ್ದರು. The post Rashmika Mandanna:ದೇವರ ನಾಡು ಕೇರಳದಲ್ಲಿ ರಶ್ಮಿಕಾ ಬೋಲ್ಡ್ ಡಾನ್ಸ್; ನಟಿಯನ್ನು ನೋಡಲು ಮುಗಿಬಿದ್ದ ಫ್ಯಾನ್ಸ್! first appeared on Vistara News .