ದ್ರಾವಿಡ ಭಾಷಾ ಅನುವಾದಕರ ಸಂಘದಿಂದ ಭಾಷಾಂತರ ಪ್ರಶಸ್ತಿಗೆ ಕೃತಿಗಳ ಆಹ್ವಾನ
ಬೆಂಗಳೂರು: ದ್ರಾವಿಡ ಭಾಷಾ ಅನುವಾದಕರ ಸಂಘ (DBTA) ಭಾಷಾಂತರ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ. ತಮಿಳು, ಮಲಯಾಳಂ, ತೆಲುಗು ಅಥವಾ ತುಳು ಭಾಷೆಗಳಿಂದ ಕನ್ನಡಕ್ಕೆ ಭಾಷಾಂತರ ಮಾಡಿರುವ ಕಾದಂಬರಿಗಳಿಗೆ ಈ ಪ್ರಶಸ್ತಿ ನೀಡಲಾಗುವುದು. ಕೃತಿಗಳು 2023 ಅಥವಾ 2024ರಲ್ಲಿ ಪ್ರಕಟವಾಗಿರಬೇಕು. ಅರ್ಜಿದಾರರು ಮೂಲ ಕೃತಿಯ ಒಂದು ಪ್ರತಿ ಹಾಗೂ ಭಾಷಾಂತರಿತ ಕನ್ನಡ ಆವೃತ್ತಿಯ ಮೂರು ಪ್ರತಿಗಳನ್ನು ಜೂನ್ 20ರ ಒಳಗಾಗಿ ಅಧ್ಯಕ್ಷರು, ಡಿಬಿಟಿಎ,ಶ್ರೀ ಭೈರವೇಶ್ವರ ನಿಲಯ,ಇಮ್ಮಡಿ ಹಳ್ಳಿ, ಮುಖ್ಯ ರಸ್ತೆ, ಹಗದೂರು, ವೈಟ್ಫೀಲ್ಡ್, ಬೆಂಗಳೂರು - 560066 ಎಂಬ ವಿಳಾಸಕ್ಕೆ ಕಳುಹಿಸಬಹುದು. ಈ ಪ್ರಶಸ್ತಿಯು ₹11,111 ನಗದು ಬಹುಮಾನವನ್ನು ಒಳಗೊಂಡಿದ್ದು, ಸೆಪ್ಟೆಂಬರ್ನಲ್ಲಿ ನಡೆಯಲಿರುವ ಸಂಘದ ನಾಲ್ಕನೇ ವಾರ್ಷಿಕ ಮಹಾಸಭೆಯ ವೇಳೆ ಪ್ರದಾನ ಮಾಡಲಾಗುವುದು ಎಂದು ಸಂಸ್ಥಾಪಕ ಅಧ್ಯಕ್ಷೆ ಡಾ. ಸುಷ್ಮಾ ಶಂಕರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಅಧ್ಯಕ್ಷರು: 9901041889 ಕಾರ್ಯದರ್ಶಿ: 9731561354.
ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸಲು ಕಾಂಗ್ರೆಸ್ನಿಂದ ಮೇ 20 ರಿಂದ 30ರವರೆಗೆ 'ಜೈ ಹಿಂದ್ ಸಭೆ'
ಹೊಸದಿಲ್ಲಿ : ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸಲು ಕಾಂಗ್ರೆಸ್ ಪಕ್ಷವು ಮೇ 20 ರಿಂದ ಮೇ 30ರವರೆಗೆ ಭಾರತದಾದ್ಯಂತ 'ಜೈ ಹಿಂದ್ ಸಭೆ'ಗಳನ್ನು ನಡೆಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ʼನಮ್ಮ ಸಶಸ್ತ್ರ ಪಡೆಗಳ ಅತ್ಯುನ್ನತ ಶೌರ್ಯ ಮತ್ತು ಯಶಸ್ಸಿಗೆ ನಮನ ಸಲ್ಲಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತದಾದ್ಯಂತ 'ಜೈ ಹಿಂದ್ ಸಭೆ'ಗಳನ್ನು ನಡೆಸಲಿದೆ. ಭದ್ರತಾ ಲೋಪಗಳು, ರಾಷ್ಟ್ರೀಯ ಭದ್ರತೆಯನ್ನು ಸರಕಾರ ನಿರ್ವಹಿಸುವ ರೀತಿ ಮತ್ತು ನಮ್ಮ ರಾಷ್ಟ್ರೀಯ ಭದ್ರತಾ ವಿಷಯಗಳಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ಸರಕಾರದ ಮೌನದ ಬಗ್ಗೆಯೂ ನಾವು ಪ್ರಶ್ನೆಗಳನ್ನು ಕೇಳಬೇಕುʼ ಎಂದು ಹೇಳಿದ್ದಾರೆ. ಮೇ 20 ರಿಂದ 30ರವರೆಗೆ ದಿಲ್ಲಿ, ಬಾರ್ಮರ್, ಶಿಮ್ಲಾ, ಹಲ್ದ್ವಾನಿ, ಪಾಟ್ನಾ, ಜಬಲ್ಪುರ್, ಪುಣೆ, ಗೋವಾ, ಬೆಂಗಳೂರು, ಕೊಚ್ಚಿ, ಗುವಾಹಟಿ, ಕೋಲ್ಕತ್ತಾ, ಹೈದರಾಬಾದ್, ಭುವನೇಶ್ವರ ಮತ್ತು ಪಠಾಣ್ಕೋಟ್ಗಳಲ್ಲಿ ಜೈ ಹಿಂದ್ ಸಭೆಗಳು ನಡೆಯಲಿದೆ. ಇದರಲ್ಲಿ ನಿವೃತ್ತ ಸೇನಾಧಿಕಾರಿಗಳು, ಪಕ್ಷದ ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿರುವ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳ ಬಗ್ಗೆ ಪ್ರಧಾನಿಯವರ ಮೌನವನ್ನು ಪ್ರಶ್ನಿಸಿದೆ.
ಲೋಕಸೇವಾ ಆಯೋಗದ ಕಾರ್ಯವಿಧಾನದ ತಿದ್ದುಪಡಿಗೆ ರಾಜ್ಯಪಾಲರ ಆಕ್ಷೇಪ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನಕ್ಕೆ ಸಂಬಂಧಿಸಿರುವ 1959ರ ವಿಧೇಯಕಕ್ಕೆ ತರಲು ಹೊರಟಿರುವ ತಿದ್ದುಪಡಿಯು ಸಂವಿಧಾನದ 320ನೇ ವಿಧಿಗೆ ವಿರುದ್ಧವಾಗಿದೆ ಮತ್ತು ಕೆಪಿಎಸ್ಸಿಯ ಸ್ವಾಯತ್ತೆಯನ್ನು ಮೊಟಕುಗೊಳಿಸುತ್ತದೆ ಎಂದು ರಾಜ್ಯಪಾಲರು ಅಭಿಪ್ರಾಯಿಸಿರುವುದು ಬಹಿರಂಗವಾಗಿದೆ. ವಿಶೇಷವೆಂದರೆ ಇದೇ ವಿಧೇಯಕಕ್ಕೆ ಹಿಂದಿನ ಬಿಜೆಪಿ ಸರಕಾರವು ತಿದ್ದುಪಡಿ ತರಲು ಹೊರಟಿತ್ತು. 2023ರ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಇದ್ದ ಕಾರಣಕ್ಕೆ ಈ ತಿದ್ದುಪಡಿ ವಿಧೇಯಕವನ್ನು ಈಗಿನ ಕಾಂಗ್ರೆಸ್ ಸರಕಾರವು ಮುಂದುವರಿಸಿದೆ. ಮತ್ತೊಂದು ವಿಶೇಷ ಸಂಗತಿ ಎಂದರೆ ಈ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿಯಿಂದ ಯಾವುದೇ ಅಭಿಪ್ರಾಯವನ್ನೂ ಪಡೆದಿರಲಿಲ್ಲ. ಬದಲಿಗೆ ಸರಕಾರವೇ ಗೌಪ್ಯವಾಗಿಟ್ಟಿತ್ತು. ಹೀಗಾಗಿ ಇಡೀ ತಿದ್ದುಪಡಿ ವಿಧೇಯಕದ ಬಗ್ಗೆ ಹಲವು ಅನುಮಾನಗಳನ್ನು ರಾಜ್ಯಪಾಲರು ವ್ಯಕ್ತಪಡಿಸಿರುವುದು ಗೊತ್ತಾಗಿದೆ. ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಅಭಿಪ್ರಾಯದ ಪ್ರತಿಯು he-file.inಗೆ ಲಭ್ಯವಾಗಿದೆ. ರಾಜ್ಯಪಾಲರ ಆತಂಕವೇನು?: ಈ ತಿದ್ದುಪಡಿ ವಿಧೇಯಕವನ್ನು ಗಮನಿಸಿದಂತೆ, ಸೆಕ್ಷನ್ 18 ರಾಜ್ಯ ಸರಕಾರವು ತನ್ನ ವ್ಯವಹಾರ ಮತ್ತು ಹೆಚ್ಚುವರಿ ಕಾರ್ಯಗಳ ನಡವಳಿಕೆಗಾಗಿ ನಿಯಮಗಳನ್ನು ರೂಪಿಸುವ ಉದ್ದೇಶಕ್ಕಾಗಿ ಆಯೋಗ ದೊಂದಿಗೆ ಸಮಾಲೋಚಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ತಿಳಿದು ಬಂದಿದೆ. ಲೋಕಸೇವಾ ಸೇವಾ ಆಯೋಗವು ವಿಧಿ 315ರ ಅಡಿಯಲ್ಲಿ ರಚಿಸಲಾದ ಸಾಂವಿಧಾನಿಕ ಪ್ರಾಧಿಕಾರವಾಗಿದೆ. ಲೋಕ ಸೇವಾ ಆಯೋಗದ ಕಾರ್ಯಗಳನ್ನು ಭಾರತದ ಸಂವಿಧಾನದ ವಿಧಿ 320 ರ ಅಡಿಯಲ್ಲಿ ನಿಯೋಜಿಸಲಾಗಿದೆ. ಇದರಲ್ಲಿ ನಾಗರಿಕ ಸೇವಕರ ನೇಮಕಾತಿ ವಿಧಾನ ಮತ್ತು ಇತರ ಸೇವಾ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಆಯೋಗದೊಂದಿಗೆ ಸಮಾಲೋಚಿಸಲು ಅವಕಾಶಗಳನ್ನು ಒದಗಿಸಿದೆ. ಈ ನಿಬಂಧನೆಯನ್ನು ಬಿಟ್ಟುಬಿಟ್ಟರೆ, ರಾಜ್ಯ ಸರಕಾರವು ಆಯೋಗ ದೊಂದಿಗೆ ಯಾವುದೇ ರೀತಿಯಲ್ಲಿ ಸಮಾಲೋಚಿಸದೆ ಈ ವಿಷಯದಲ್ಲಿ ನಿಯಮಗಳನ್ನು ರಚಿಸುವ ಅಧಿಕಾರವನ್ನು ಹೊಂದಿರುತ್ತದೆ. ‘ಪ್ರಸ್ತಾವಿತ ತಿದ್ದುಪಡಿಯು 320ನೇ ವಿಧಿಗೆ ವಿರುದ್ಧವಾಗಿದೆ ಮತ್ತು ಅದು ಆಯೋಗದ ಸ್ವಾಯತ್ತತೆಯನ್ನು ಮೊಟಕುಗೊಳಿಸುತ್ತದೆ ಎಂಬ ಆತಂಕ ನನಗಿದೆ’ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಿಸಿರುವುದು ಗೊತ್ತಾಗಿದೆ. ಹೀಗಾಗಿ ಪ್ರಸ್ತಾವಿತ ತಿದ್ದುಪಡಿಯು ಸಂವಿಧಾನದ 320ನೇ ವಿಧಿಗೆ ವಿರುದ್ಧವಾಗಿದೆಯೇ ಎಂದು ತಿಳಿದುಕೊಳ್ಳುವುದು ಅವಶ್ಯ. ಆದ್ದರಿಂದ ಈ ಬಗ್ಗೆ ಸ್ಪಷ್ಟೀಕರಣ ಮತ್ತು ಕಾನೂನು ಅಭಿಪ್ರಾಯದೊಂದಿಗೆ ಕಡತವನ್ನು ಮರು ಸಲ್ಲಿಸಬೇಕು ಎಂದು ರಾಜ್ಯಪಾಲರು ನಿರ್ದೇಶನ ನೀಡಿರುವುದು ತಿಳಿದು ಬಂದಿದೆ. ಕರ್ನಾಟಕ ಲೋಕಸೇವಾ ಆಯೋಗ (conduct of business and additional functions 1959- funcitions rules 1973) ನಿಯಮಗಳಿಗೆ ತಿದ್ದುಪಡಿ ಮಾಡಲು ಹಿಂದಿನ ಬಿಜೆಪಿ ಸರಕಾರವು ತೀರ್ಮಾನಿಸಿತ್ತು. ಈ ಸಂಬಂಧಿತ ಕಡತವನ್ನು 2022ರ ಆಗಸ್ಟ್ 19ರಂದು ಸಿಬ್ಬಂದಿ ಮತ್ತು ಅಡಳಿತ ಸುಧಾರಣೆ ಇಲಾಖೆಯು (ಕಡತ ಸಂಖ್ಯೆ; DPAR/181/SLA/2022- COMPUTER NUMBER 857064) ತೆರೆದಿತ್ತು. ಈ ತಿದ್ದುಪಡಿಗೆ ಸಚಿವ ಸಂಪುಟದ ಅನುಮೋದನೆ ಅಗತ್ಯವಿತ್ತು. ಹೀಗಾಗಿ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿಯೇ ಪರಿಶೀಲನಾ ಸಮಿತಿ ಮುಂದೆ ಈ ವಿಧೇಯಕವನ್ನು ಮಂಡಿಸಿತ್ತು. ಆದರೆ ಚುನಾವಣೆ ನೀತಿ ಸಂಹಿತೆ ಘೋಷಣೆಯಾದ ಕಾರಣಕ್ಕೆ ಈ ತಿದ್ದುಪಡಿ ವಿಧೇಯಕವು ನನೆಗುದಿಗೆ ಬಿದ್ದಿತ್ತು. ಕಡತವು ಸಂಬಂಧಿಸಿದ ಶಾಖೆಗೆ ಹಿಂದಿರುಗಿತ್ತು. ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಕೆಲವೇ ಕೆಲವು ತಿಂಗಳಲ್ಲಿ ಈ ತಿದ್ದುಪಡಿ ವಿಧೇಯಕವು ಮತ್ತೆ ಚಾಲ್ತಿಗೆ ಬಂದಿತು. ಇದೇ ಕಡತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆಗೆ ಮರು ಮಂಡಿಸಿತ್ತು ಎಂಬುದು ತಿಳಿದು ಬಂದಿದೆ. ಈ ಪ್ರಸ್ತಾವ ಉದ್ಭವವಾಗಿದ್ದಾದರೂ ಎಲ್ಲಿಂದ?: ಈ ತಿದ್ದುಪಡಿ ವಿಧೇಯಕವು ಕರ್ನಾಟಕ ಲೋಕಸೇವಾ ಆಯೋಗಕ್ಕೆ ನೇರವಾಗಿ ಸಂಬಂಧಿಸಿದೆ. ಆದರೆ ಸರಕಾರವು ಈ ಬಗ್ಗೆ ಕೆಪಿಎಸ್ಸಿಯಿಂದ ಯಾವುದೇ ಅಭಿಪ್ರಾಯ ಪಡೆದಿರಲಿಲ್ಲ ಮತ್ತು ಆಯೋಗದ ಅಧ್ಯಕ್ಷ, ಕಾರ್ಯದರ್ಶಿಯವರೊಂದಿಗೆ ಇಲಾಖೆಯು ಯಾವುದೇ ಸಭೆಯನ್ನೂ ನಡೆಸಿರಲಿಲ್ಲ. ಕೆಪಿಎಸ್ಸಿ ಕಾರ್ಯದರ್ಶಿ ಜತೆ ಚರ್ಚಿಸಲು ಸಭೆ ಏರ್ಪಡಿಸಲು ಡಿಪಿಎಆರ್ ಕಾರ್ಯದರ್ಶಿಯಾಗಿದ್ದ ಎಂ.ಕೆ.ಶ್ರೀಕರ್ ಅವರು ಸೂಚಿಸಿದ್ದರು. ಆದರೆ ಸಭೆ ನಡೆಸಿರಲಿಲ್ಲ. ಈ ತಿದ್ದುಪಡಿ ವಿಧೇಯಕದ ವಿಷಯವು ಗೌಪ್ಯವಾಗಿರಿಸಿತ್ತು ಎಂಬುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ. ಆಯೋಗದ ಹಾಲಿ ಕಾರ್ಯದರ್ಶಿ ಅವರೊಂದಿಗೆ ಈ ತಿದ್ದುಪಡಿ ವಿಧೇಯಕದ ಕುರಿತು ಡಿಪಿಎಆರ್ ಚರ್ಚಿಸಿದೆ. ಚರ್ಚಿಸಿದ ನಂತರ ಈ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಕೋರುವ ಕಡತವನ್ನು ಮತ್ತೇ ಮುಖ್ಯಮಂತ್ರಿಗೆ 2025ರ ಜನವರಿ 16ರಂದು ಮಂಡಿಸಿತ್ತು. ಕರಡು ವಿಧೇಯಕಕ್ಕೆ ಹೊಸದಾಗಿ ಹಲವು ಅಂಶಗಳನ್ನು ಸೇರಿಸಿತ್ತು. ಆಯೋಗದ ಕಾಯ್ದೆ ಸೆಕ್ಷನ್ 15ನ್ನು ಕೈ ಬಿಡಬೇಕು ಮತ್ತು ಸೆಕ್ಷನ್ 18ರಲ್ಲಿನ (ಇತರ ಸಂದರ್ಭಗಳಲ್ಲಿ ಕಾರ್ಯವಿಧಾನ) 18(1)ರಲ್ಲಿನ ಆಯೋಗದೊಂದಿಗೆ ಸಮಾಲೋಚಿಸಿ ಎಂಬ ಪದವನ್ನು ಕೈ ಬಿಡುವುದು ಮತ್ತು ಪ್ರಧಾನ ಕಾಯ್ದೆಯಿಂದ ಸೆಕ್ಷನ್ 18, ಸಬ್ ಸೆಕ್ಷನ್ (2)ನ್ನು ಕೈ ಬಿಡಲು ಈಗಿನ ಕಾಂಗ್ರೆಸ್ ಸರಕಾರವು ತೀರ್ಮಾನಿಸಿತ್ತು. ಈ ಅಂಶಗಳನ್ನು ತಿದ್ದುಪಡಿ ವಿಧೇಯಕದಲ್ಲಿ ಸೇರಿಸಿತ್ತು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು 2025ರ ಮಾರ್ಚ್ 3ರಂದು ಅನುಮೋದಿಸಿದ್ದರು. ಸಮಾಲೋಚನೆ ವಿವೇಚನೆಗೆ ಒಳಪಟ್ಟಿದೆಯೇ?: ರಾಜ್ಯಪಾಲರು ಕೋರಿದ್ದ ಸ್ಪಷ್ಟೀಕರಣ ಕುರಿತು ಸಹ ಅಧಿಕಾರಿಗಳೊಂದಿಗೆ ಚರ್ಚಿಸಿತ್ತು. ಮೂಲ ಕಾಯ್ದೆಯಲ್ಲಿ ಸೆಕ್ಷನ್ 18ನ್ನು ಕೈಬಿಡುವ ಸಂಬಂಧ ಹಲವು ಸುತ್ತಿನ ಸಭೆಗಳನ್ನೂ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಸರಕಾರವು ನಿಯಮಗಳನನ್ನು ರೂಪಿಸುವ ಹಂತದಲ್ಲಿ ಆಯೋಗದೊಂದಿಗೆ ಸಮಾಲೋಚಿಸುವುದು ಸರಕಾರದ ವಿವೇಚನೆಗೆ ಒಳಪಟ್ಟಿರುತ್ತದೆ ಎಂದು ಪರಿಭಾವಿಸದೇ, ಎಂಬ ಕುರಿತೂ ಚರ್ಚೆಯಾಗಿತ್ತು. ರಾಜ್ಯಪಾಲರು ವ್ಯಕ್ತಪಡಿಸಿದ್ದ ಆತಂಕವನ್ನು ನಿವಾರಿಸಿ ಕಡತದಲ್ಲಿ ವಿವರಣೆ ನೀಡಲಾಗಿತ್ತು. ಈ ತಿದ್ದುಪಡಿಗಳು ಭಾರತ ಸಂವಿಧಾನದ ಅನುಚ್ಛೇದ 320ಕ್ಕೆ ವಿರುದ್ಧವಾಗಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದಾದ ಮೇಲೂ ರಾಜ್ಯಪಾಲರು ಎರಡನೇ ಬಾರಿ ಕೆಲವೊಂದು ಸ್ಪಷ್ಟೀಕರಣ ಕೋರಿ ಕಡತವನ್ನು ಹಿಂದಿರುಗಿಸಿದ್ದರು ಎಂದು ತಿಳಿದು ಬಂದಿದೆ. ಈ ಕುರಿತಾದ ಕಡತವು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿದೆ.
ಮಂಗಳೂರು: ಸರ್ವೇ ಮೇಲ್ವಿಚಾರಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಮಂಗಳೂರು: ನಗರದಲ್ಲಿ ಸರ್ವೇ ಮೇಲ್ವಿಚಾರಕರೊಬ್ಬರ ಮನೆ, ಕಚೇರಿ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈ ನ 8ನೇ ಕ್ರಾಸ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಒಟ್ಟು 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಅವರು ತುಮಕೂರು ಮೂಲದವರು.
Gruha Lakshmi Scheme: ಮೂರು ತಿಂಗಳಾದರೂ ಬಂದಿಲ್ಲ ಗೃಹಲಕ್ಷ್ಮಿ ಹಣ: ಸಿಡಿದೆದ್ದ ಮಹಿಳೆಯರು
ಬೆಂಗಳೂರು, ಮೇ 15: 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಗಳನ್ನ ಘೋಚಿಸಿತ್ತು. ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆ ಪ್ರತಿ ಗೃಹಿಣಿಯರಿಗೆ 2000 ರೂಪಾಯಿ ಹಣವನ್ನ ಸರ್ಕಾರ ನೀಡುತ್ತಿದ್ದು, ಇದೀಗ ಬರೋಬ್ಬರಿ ಮೂರು ತಿಂಗಳ ಹಣ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಗೃಹಲಕ್ಷ್ಮೀಯರು ಗರಂ ಆಗಿದ್ದಾರೆ. ಗೃಹಲಕ್ಷ್ಮಿ
ಯಾದಗಿರಿಯ ಶಹಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ಕಲಬುರಗಿ: ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್ ಉಮಾಕಾಂತ ಹಳ್ಳೆಯವರ ಮನೆ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್.ಇನಾಂದಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ ಸ್ಪೆಕ್ಟರ್ ಗಳಾದ ಸಿದ್ದರಾಯ, ಸಂಗಮೇಶ, ಅರ್ಜುನಪ್ಪ, ಅಕ್ಕಮಹಾದೇವಿ, ಬಾಬಾ ಸಾಹೇಬ ಪಾಟೀಲ್ ತಂಡದಲ್ಲಿದ್ದರು.
IMD Weather Forecast: ಮೇ 20ರ ವರೆಗೂ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ಉಂಟಾದ ಕಾರಣ ಹಲವೆಡೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು
ರಾಜ್ಯಾದ್ಯಂತ ಏಳು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಏಳು ಸರಕಾರಿ ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 12, ಬೆಂಗಳೂರು ಗ್ರಾಮಾಂತರದಲ್ಲಿ 8, ತುಮಕೂರಿನಲ್ಲಿ 7, ಯಾದಗಿರಿಯಲ್ಲಿ 5, ಮಂಗಳೂರಿನಲ್ಲಿ 4 ಹಾಗೂ ವಿಜಯಪುರದಲ್ಲಿ 4 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ತುಮಕೂರಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಸರ್ವೇ ಮೇಲ್ವಿಚಾರಕ ಮಂಜುನಾಥ್, ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ, ಬೆಂಗಳೂರು ನಗರದ ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿ.ವಿ., ಕಾನೂನು ಮಾಪನಶಾಸ್ತ್ರದ ಇನ್ ಸ್ಪೆಕ್ಟರ್ ಎಚ್. ಆರ್. ನಟರಾಜ್, ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕು ಕಚೇರಿಯ ಎಸ್.ಡಿ.ಎ. ಅನಂತ್ ಕುಮಾರ್ ಹಾಗೂ ಯಾದಗಿರಿಯ ಶಹಾಪುರ ತಾಲೂಕಿನ ಉಮಾಕಾಂತ ಎಂಬವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮುಗಿಯಿತು ಅಮ್ಮನ ದಿವಸ , ಶುರುವಾಯ್ತು ಅವಳ ಮಾಮೂಲಿ ಕೆಲಸ!
ವೃತ್ತಿಯಲ್ಲಿ ಪ್ರಾಧ್ಯಾಪಕಿಯಾಗಿರುವ ಡಾ.ಸಹನಾ ಪ್ರಸಾದ್ ಅವರು ಲೇಖಕಿಯೂ ಆಗಿದ್ದು, ನೂರಾರು ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಈವರೆಗೂ 8,500 ಲೇಖನಗಳು ಪ್ರಕಟಗೊಂಡಿವೆ. ಇದೀಗ ಅವರು ಬರೆದಿರುವ ಅಮ್ಮನ ದಿನದ ಕುರಿತಾದ ವಿಶೇಷ ಲೇಖನ ಇಲ್ಲಿದೆ.
ಕಟ್ಟಿಕೊಂಡ ಎಲ್ಲರನ್ನೂ ಸಮನಾಗಿ ಕಂಡರೆ ಮುಸ್ಲಿಂ ಪುರುಷ ಹಲವು ಪತ್ನಿಯರನ್ನು ಹೊಂದಬಹುದು; ಕೋರ್ಟ್!
ಮುಸ್ಲಿಂ ವಿವಾಹ ಅಯ್ಕೆಯ ಕುರಿತು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪು, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತ ಚರ್ಚೆಗೆ ಮತ್ತೆ ನಾಂದಿ ಹಾಡಿದೆ. ಮುಸ್ಲಿಂ ಪುರುಷರು ತಮ್ಮೆಲ್ಲಾ ಪತ್ನಿಯರನ್ನು ಸಮಾನವಾಗಿ ನೋಡಿಕೊಂಡರೆ, ಬಹುಪತ್ನಿತ್ವಕ್ಕೆ ಅವಕಾಶ ಇದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪುರ್ಕಾನ್ ಎಂಬ ವ್ಯಕ್ತಿಯ ವಿರುದ್ಧ ಮಹಿಳೆಯೋರ್ವಳು ನೀಡಿದ್ದ ದೂರನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಮುಸ್ಲಿಂ ಪುರಷರು ಬಹುಪತ್ನಿತ್ವ ಪದ್ದತಿಯನ್ನು ಪಾಲಿಸಬಹುದು ಎಂದು ತೀರ್ಪು ನೀಡಿದೆ.
10 ಉಗ್ರರನ್ನು ಹೊಡೆದುರುಳಿಸಿದ ಅಸ್ಸಾಂ ರೈಫಲ್ಸ್; ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ
ಅಸ್ಸಾಂ ರೈಫಲ್ಸ್ ಮತ್ತು ಉಗ್ರರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ. ಚಾಂಡೆಲ್ ಜಿಲ್ಲೆಯಲ್ಲಿ ಮೇ 14 ರಂದು ನಡೆದ ಕಾರ್ಯಾಚರಣೆಯಲ್ಲಿ ಹತ್ತು ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ, ಇಂಡೋ-ಮ್ಯಾನ್ಮಾರ್ ಗಡಿಯ ಸಮೀಪವಿರುವ ನ್ಯೂ ಸಮ್ತಾಲ್ ಗ್ರಾಮದ ಬಳಿ ಅಸ್ಸಾಂ ರೈಫಲ್ಸ್ ಘಟಕವು ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಉಗ್ರರು ಗುಂಡಿನ ದಾಳಿ ನಡೆಸಿದಾಗ, ಸೈನಿಕರು ತಕ್ಷಣವೇ ಪ್ರತಿಕ್ರಿಯಿಸಿದರು. ಅಂತಿಮವಾಗಿ ಹತ್ತು ಉಗ್ರರನ್ನು ಮಟ್ಟ ಹಾಕುವಲ್ಲಿ ಯಶಸ್ವಿಯಾದರು. ಭಯೋತ್ಪಾದಕ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಾಕಿಸ್ತಾನಕ್ಕೆ ಸಂಬಂಧಿತ ಸರಕುಗಳ ಮಾರಾಟದ ಕುರಿತು ಸಿಸಿಪಿಎ ಅಮೆಜಾನ್, ಫಿಪ್ಕಾರ್ಟ್, ಉಬುಯಿಇಂಡಿಯಾ, ಎಟ್ಟಿ, ದಿ ಫ್ಲಾಗ್ ಕಂಪನಿಮಾರಾಟ ಮಾಡದಂತೆ ನೋಟಿಸ್ಗಳನ್ನು ಜಾರಿ ಮಾಡಿದೆ. ಆದರೂ ಮಾರಾಟ ಕಂಡುಬರುತ್ತಿರುವುದು ದೇಶದ ಆದೇಶದ ವಿರುದ್ಧ ಹಾಗೂ ಸಹಿಸಲಾಗುವುದಿಲ್ಲ. ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳು ಇಂತಹ ಎಲ್ಲಾ ವಸ್ತುಗಳನ್ನು ತಕ್ಷಣವೇ ತೆಗೆದುಹಾಕಬೇಕು ಮತ್ತು ರಾಷ್ಟ್ರೀಯ ಕಾನೂನನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಅಕೌಂಟ್ ಮಾಡಿ, ಮಾನಸಿಕ ಹಿಂಸೆಗೆ ಅಂಜಲು ಸಾಧ್ಯವೇ?
ವೃತ್ತಿಯಲ್ಲಿ ಪ್ರಾಧ್ಯಾಪಕಿಯಾಗಿರುವ ಡಾ.ಸಹನಾ ಪ್ರಸಾದ್ ಅವರು ಲೇಖಕಿಯೂ ಆಗಿದ್ದು, ನೂರಾರು ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಈವರೆಗೂ 8,500 ಲೇಖನಗಳು ಪ್ರಕಟಗೊಂಡಿವೆ. ಇದೀಗ ಅವರು ಬರೆದಿರುವ ಜಾಲತಾಣದಲ್ಲೊಂದು ಅಕೌಂಟ್ ತೆರೆದು... ಲೇಖನ ಇಲ್ಲಿದೆ ನೋಡಿ
ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ಜಿಲ್ಲಾ ವೆಸ್ಟ್ ನೂತನ ಸಮಿತಿ ಅಸ್ತಿತ್ವಕ್ಕೆ
ಮಂಗಳೂರು: ಮಂಜನಾಡಿ ಅಲ್ ಮದೀನ ಮಲಾಝ್ ಆಡಿಟೋರಿಯಂನಲ್ಲಿ ಜಿಲ್ಲಾಧ್ಯಕ್ಷ ಅಲೀ ಕುಂಞಿ ಹಾಜಿ ಪಾರೆಯವರ ಅಧ್ಯಕ್ಷತೆಯಲ್ಲಿ ನಡೆದ 2023-25 ಸಾಲಿನ ದ್ವೈವಾರ್ಷಿಕ ಮಹಾಸಭೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬೂ ಸುಫ್ಯಾನ್ ಇಬ್ರಾಹಿಂ ಮದನಿಯವರು ಸಭೆಯನ್ನು ಅಧಿಕೃತವಾಗಿ ಉದ್ಘಾಟಿಸಿದರು. ಸಮಿತಿ ಪುನರ್ರಚನೆಗೆ ರಾಜ್ಯ ಸಮಿತಿ ರಿಟೇನಿಂಗ್ ಆಫೀಸರಾಗಿ ಆಗಮಿಸಿದ ಎಸ್ ವೈ ಎಸ್ ರಾಜ್ಯಾಧ್ಯಕ್ಷ ಹಫೀಳ್ ಸಅದಿಯವರು ನಾಯಕತ್ವ ನೀಡಿದರು. ರಾಜ್ಯ, ಜಿಲ್ಲಾ ನಾಯಕರು ಹಾಗೂ ಝೋನ್ ಕೌನ್ಸಿಲ್ ಗಳು ಭಾಗವಹಿಸಿದ ಪ್ರಸ್ತುತ ಕಾರ್ಯಕ್ರಮದಲ್ಲಿ 2025-27 ನೇ ಸಾಲಿನ ನೂತನ ಸಾರಥಿಗಳನ್ನು ಆಯ್ಕೆಮಾಡಲಾಯಿತು. ಜಿಲ್ಲಾಧ್ಯಕ್ಷರಾಗಿ ಹನೀಫ್ ಹಾಜಿ ಬಜ್ಪೆ ,ಪ್ರಧಾನ ಕಾರ್ಯದರ್ಶಿಯಾಗಿ ಖತರ್ ರಹೀಮ್ ಸಅದಿ ಪುನರಾಯ್ಕೆಗೊಂಡಿದ್ದಾರೆ. ಕೋಶಾಧಿಕಾರಿಯಾಗಿ ಬಶೀರ್ ಹಾಜಿ ಕುಂಬ್ರ ಅವರನ್ನೆೊಳಗೊಂಡ 27 ಕಾರ್ಯಕಾರಿ ಸಮಿತಿ ಸದಸ್ಯರು ಆಯ್ಕೆಗೊಂಡಿದ್ದಾರೆ. ಮುಂದೆ ನಡೆಯುವ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆರಿಸಲಾಗುವುದೆಂದು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖತರ್ ರಹೀಮ್ ಸಅದಿ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ. ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ಜಿಲ್ಲಾ ವೆಸ್ಟ್ ನೂತನ ಸಮಿತಿ ಅಸ್ತಿತ್ವಕ್ಕೆ
IPL 2025 RCB: ಪಂದ್ಯಕ್ಕೂ ಮುನ್ನ ಆರ್ಸಿಬಿ ಗೂಡು ಸೇರಿದ ಮೂವರು ಸ್ಫೋಟಕ ಆಟಗಾರರು
IPL 2025 RCB: ಅರ್ಧಕ್ಕೆ ನಿಂತಿದ್ದ ಐಪಿಎಲ್ 2025 ಟೂರ್ನಿ ಮತ್ತೆ ಮೇ 17ರಿಂದ ಮುಂದುವರೆಯಲಿದೆ. ಹೊಸ ವೇಳಾಪಟ್ಟಿ ಪ್ರಕಾರ, ಮೊದಲ ಪಂದ್ಯ ಆರ್ಸಿಬಿ ಹಾಗೂ ಕೆಕೆಆರ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ವಿದೇಶಕ್ಕೆ ಮರಳಿದ್ದ ಬೆಂಗಳೂರು ತಂಡದ ಮೂವರು ಸ್ಪೋಟಕ ಆಟಗಾರರು ಪಂದ್ಯ ಆರಂಭಕ್ಕೂ ಮುನ್ನ ಮತ್ತೆ ವಾಪಾಸ್ ಆಗಿದ್ದಾರೆ. ಇದರಿಂದ ತಂಡಕ್ಕೆ
14 ದಿನಗಳಲ್ಲಿ 174 ಕೋಟಿ ಬಾಚಿದ ಅಜಯ್ ದೇವಗನ್ ಅವರ 'ರೈಡ್-2'
ಮುಂಬೈ: ಅಜಯ್ ದೇವಗನ್ ಅವರ ಕ್ರೈಮ್ಡ್ರಾಮಾ 'ರೈಡ್-2' ಚಿತ್ರದ ಗಳಿಕೆ ಎರಡನೇ ವಾರದಲ್ಲಿ ಸ್ವಲ್ಪಮಟ್ಟಿಗೆ ಕುಂಠಿತವಾಗಿದ್ದರೂ, ಬಾಕ್ಸ್ ಆಫೀಸ್ನಲ್ಲಿ ಪ್ರಾಬಲ್ಯ ಮೆರೆದಿದೆ. ಶಕ್ತಿಶಾಲಿ ಕನಾಥಕ ಮತ್ತು ಅಜಯ್ ದೇವಗನ್, ರಿತೀಶ್ ದೇಶಮುಖ್ ಮತ್ತು ವಾಣಿಕಪೂರ್ ಅವರ ಅತ್ಯುತ್ತಮ ನಟನೆಯ ಕಾರಣದಿಂದ ಯಾವುದೇ ಪ್ರಮುಖ ಸ್ಪರ್ಧಿಗಳಿಲ್ಲದೇ ಮುನ್ನುಗ್ಗುತ್ತಿದೆ. ಇದೀಗ ಜಾಗತಿಕವಾಗಿ 174 ಕೋಟಿ ರೂಪಾಯಿ ಆದಾಯ ಗಳಿಸಿರುವ 'ರೈಡ್ 2', ಸಲ್ಮಾನ್ ಖಾನ್ ಅವರ ಚಿತ್ರವನ್ನು ಹಿಂದಿಕ್ಕುವ ಸನಿಹಕ್ಕೆ ಬಂದಿದೆ. ರಾಜ್ ಕುಮಾರ್ ನಿರ್ದೇಶನದ 'ರೈಡ್ 2' ಆದಾಯ ತೆರಿಗೆ ಉಪ ಆಯುಕ್ತ ಅಮಯ್ ಪಟ್ನಾಯಕ್ ಅವರು ಶಕ್ತಿಶಾಲಿ ಮತ್ತು ಭ್ರಷ್ಟ ವೈರಿಯನ್ನು ಎದುರಿಸುವ ಕಥಾನಕವನ್ನು ಹೊಂದಿದೆ. ರಿತೀಶ್ ದೇಶಮುಖ್ ಈ ಪಾತ್ರವನ್ನು ನಿರ್ವಹಿಸಿದ್ದಾರೆ. 2018ರ ಸೂಪರ್ಹಿಟ್ ಚಿತ್ರ ರೈಡ್ ಸರಣಿಯ ಯಶಸ್ಸಿನ ಆಧಾರದಲ್ಲಿ ಅನುಕ್ರಮಣಿಕೆಯನ್ನು ಹೆಣೆಯಲಾಗಿದೆ. ಇಡೀ ಕಥಾನಕದ ಭಾವನಾತ್ಮಕ ಬೆನ್ನೆಲುಬಾಗಿ ವಾಣಿ ಕಪೂರ್ ಅಭಿನಯಿಸಿದ್ದಾರೆ. ಪಟ್ನಾಯಕ್ ಅವರ ಕಾರ್ಯಗಳಿಗೆ ಬೆಂಬಲ ನೀಡುವ ಪತ್ನಿಯಾಗಿ ಗಮನ ಸೆಳೆದಿದ್ದಾರೆ. ಹದಿನಾಲ್ಕನೇ ದಿನವಾದ ಬುಧವಾರ 'ರೈಡ್ 2' ಗಳಿಕೆ ಸ್ವಲ್ಪಮಟ್ಟಿಗೆ ಇಳಿದಿದ್ದರೂ, 3.35 ಕೋಟಿ ಸಂಗ್ರಹವಾಗಿದೆ ಎಂದು ಸ್ಕ್ಯಾನ್ಲಿಕ್ ಅಂದಾಜಿಸಿದೆ. ಈ ಮೂಲಕ ಭಾರತದಲ್ಲಿ ಚಿತ್ರದ ಒಟ್ಟು ಗಳಿಕೆ 133.45 ಕೋಟಿ ತಲುಪಿದೆ. ಈ ಮೊದಲಿನ ವಾರದ ದಿನಗಳ ಗಳಿಕೆಯಿಂದ ಇದು ಕಡಿಮೆಯಾದರೂ, ಚಿತ್ರಾಸಕ್ತರಲ್ಲಿ ನಿಯತ ಆಸಕ್ತಿಯನ್ನು ಉಳಿಸಿಕೊಂಡಿದೆ. ಚಿತ್ರಕ್ಕೆ ಸ್ಪರ್ಧೆ ನೀಡುವ ಯಾವ ಚಿತ್ರಗಳೂ ಸದ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇಲ್ಲದಿರುವುದರಿಂದ ನಗರಗಳಲ್ಲಿ ಪ್ರೇಕ್ಷಕರ ಬೆಂಬಲ ಮುಂದುವರಿಯಲಿದೆ. ಪ್ರೇಕ್ಷಕರ ಭರ್ತಿ ಪ್ರಮಾಣ ಮಾರ್ನಿಂಗ್ ಶೋದಲ್ಲಿ ಶೇಕಡ 4.99 ಇದ್ದರೆ, ಮಧ್ಯಾಹ್ನ, ಸಂಜೆ ಹಾಗೂ ರಾತ್ರಿ ಕ್ರಮವಾಗಿ ಶೇಕಡ 10.5, 10.58 ಹಾಗೂ 15.15ರಷ್ಟಿದೆ. ಭಾರತದಲ್ಲಿ ಉತ್ತಮ ಗಳಿಕೆ ಹೊಂದಿರುವ 'ರೈಡ್-2' ವಿದೇಶಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದೆ. 13ನೇ ದಿನವಾದ ಮಂಗಳವಾರ ಅಂತರರಾಷ್ಟ್ರೀಯ ಮಾರುಕಟ್ಟೆಯಿಂದ 10 ಲಕ್ಷ ರೂಪಾಯಿ ಗಳಿಕೆ ಕಂಡುಬಂದಿದ್ದು, ಒಟ್ಟು ಸಾಗರೋತ್ತರ ಗಳಿಕೆ 19.60 ಕೋಟಿ ತಲುಪಿದೆ. ವಿಶ್ವಮಟ್ಟದಲ್ಲಿ ಚಿತ್ರದ ಒಟ್ಟು ಗಳಿಕೆ 174.25 ಕೋಟ ಆಗಿದ್ದು, ಸಲ್ಮಾನ್ ಖಾನ್ ಅವರ ಸಿಕಂದರ್ ಚಿತ್ರ ಜಾಗತಿಕವಾಗಿ ಗಳಿಸಿದ 184.6 ಕೋಟಿಯ ಸನಿಹಕ್ಕೆ ಬಂದಿದೆ. ಮೂರನೇ ವಾರದಲ್ಲಿ ರೈಡ್2=-2 ಚಿತ್ರ ಸಿಕಂದರ್ ಚಿತ್ರದ ಗಳಿಕೆ ಹಿಂದಿಕ್ಕುತ್ತದೆಯೇ ಎಂದು ಚಿತ್ರಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.
ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಚಕಮಕಿಯಲ್ಲಿ 10 ಉಗ್ರರು ಹತ
ಚಂಡೇಲ್, ಮಣಿಪುರ: ಅಸ್ಸಾಂ ರೈಫಲ್ಸ್ ಜತೆಗಿನ ಗುಂಡಿನ ಕಾಳಗದಲ್ಲಿ ಕನಿಷ್ಠ 10 ಮಂದಿ ಉಗ್ರರು ಹತರಾಗಿದ್ದಾರೆ ಎಂದು ಭಾರತೀಯ ಸೇನೆ ಪ್ರಕಟಿಸಿದೆ. ಮಣಿಪುರದ ಚಂಡೇಲ್ ಜಿಲ್ಲೆಯಲ್ಲಿ ಬುಧವಾರ ಈ ಚಕಮಕಿ ನಡೆದಿದ್ದು, ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಉಗ್ರರರಿಂದ ವಶಪಡಿಸಿಕೊಳ್ಳಲಾಗಿದೆ. ಭಾರತ- ಮ್ಯಾನ್ಮಾರ್ ಗಡಿಗೆ ಹೊಂದಿಕೊಂಡಿರುವ ಚಂಡೇಲ್ ಜಿಲ್ಲೆಯ ಹೊಸ ಸಮ್ತಾಲ್ ಗ್ರಾಮದಲ್ಲಿ ಸಶಸ್ತ್ರ ಉಗ್ರರ ಚಲನ ವಲನಗಳಿವೆ ಎಂಬ ನಿಖರ ಗುಪ್ತಚರ ವರದಿಗಳನ್ನು ಆಧರಿಸಿ ಅಸ್ಸಾಂ ರೈಫಲ್ಸ್ ಘಟಕ ಈ ದಾಳಿ ನಡೆಸಿದೆ ಎಂದು ಸೇನೆಯ ಪೂರ್ವ ಕಮಾಂಡ್ ಎಕ್ಸ್ ಪೋಸ್ಟ್ ನಲ್ಲಿ ವಿವರಿಸಿದೆ. ಉಗ್ರಗಾಮಿಗಳು ಸೇನೆಯತ್ತ ಗುಂಡು ಹಾರಿಸಿದಾಗ, ಅಸ್ಸಾಂ ರೈಫಲ್ಸ್ ನಡೆಸಿದ ಪ್ರತಿದಾಳಿಯಲ್ಲಿ ಕನಿಷ್ಠ 10 ಮಂದಿ ಹತ್ಯೆಯಾಗಿದ್ದಾರೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆ ಸ್ಪಷ್ಟಪಡಿಸಿದೆ. ಉಗ್ರರನ್ನು ಗುರಿಮಾಡಿ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಯುತ್ತಿರುವ ಮಧ್ಯೆಯೇ ಈ ಘಟನೆ ವರದಿಯಾಗಿದೆ. ಕಳೆದ ವಾರ ಕನಿಷ್ಠ 13 ಮಂದಿ ಉಗ್ರರನ್ನು ಭದ್ರತಾ ಪಡೆ ಮತ್ತು ಮಣಿಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿತ್ತು.
ಬೆಂಗಳೂರಿನ ಬೀದಿಗಳಿಗೆ ಜಗಮಗಿಸುವ LED ಲೈಟು; ಜೂನ್ನಿಂದ ಕಾರ್ಯಾಚರಣೆ ಸ್ಟಾರ್ಟು
ಪಿಟಿಸಿ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಸರ್ವೆ ಕಾರ್ಯ ಕೈಗೊಂಡು ಇಂಧನ ಉಳಿತಾಯ, ಯೋಜನಾ ವೆಚ್ಚ, ಕಾರ್ಯಸಾಧ್ಯತೆ ಮತ್ತು ಆರ್ಥಿಕ ಮಾದರಿಯನ್ನು ಸಿದ್ಧಪಡಿಸಿ ವರದಿ ಸಲ್ಲಿಸಿತ್ತು. ಈ ವರದಿಯಂತೆ ಪ್ರಾದೇಶಿಕವಾಗಿ 7 ವಲಯಗಳನ್ನು 4 ಪ್ಯಾಕೇಜ್ಗಳಾಗಿ ವಿಂಗಡಿಸಿ ಕ್ರಿಯಾಯೋಜನೆ ಸಿದ್ಧಪಡಿಸಲಾಗಿತ್ತು. ಅದಕ್ಕೆ ಅನುಗುಣವಾಗಿ ಟೆಂಡರ್ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಮುಂದಿನ ಜೂನ್ ತಿಂಗಳಿಂದ ಎಲ್ಇಡಿ ಬೀದಿ ದೀಪಗಳ ಅಳವಡಿಕೆ ಕಾರ್ಯ ಶುರುವಾಗಲಿದೆ.
ಡಿಕೆಶಿ ತವರು ಜಿಲ್ಲೆ ರಾಮನಗರದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ: ಡಿ ಕೆ ಶಿವಕುಮಾರ್ ರಿಯಾಕ್ಷನ್
ರಾಮನಗರ, ಮೇ 15: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ತವರು ಜಿಲ್ಲೆಯಾದ ರಾಮನಗರ ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಮನಗರ ಜಿಲ್ಲೆ ಬಿಡದಿಯ
ಶಿವಮೊಗ್ಗ ಜಿಲ್ಲೆಯ ಜಲಾಶಯಗಳು ಮುಂಗಾರು ಮಳೆಗೆ ಸಜ್ಜಾಗುತ್ತಿವೆ. ಲಿಂಗನಮಕ್ಕಿ, ಭದ್ರಾ ಸೇರಿದಂತೆ ಪ್ರಮುಖ ಜಲಾಶಯಗಳ ಗೇಟ್ಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಭದ್ರಾ ಜಲಾಶಯದ ಎಡನಾಲೆಯಲ್ಲಿ ಸೋರಿಕೆ ತಡೆಗಟ್ಟಲು ಪ್ರಯತ್ನಿಸಲಾಗುತ್ತಿದೆ. ಜಲಾಶಯಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಅಧಿಕಾರಿಗಳು ಹೆಚ್ಚಿನ ಗಮನಹರಿಸುತ್ತಿದ್ದಾರೆ.
ಕೆನಡಾ ವಿದೇಶಾಂಗ ಸಚಿವೆಯಾಗಿ ಭಾರತೀಯ ಮೂಲದ ಅನಿತಾ ಆನಂದ್
ಕೆನಡಾದ ಹೊಸ ವಿದೇಶಾಂಗ ಸಚಿವೆಯಾಗಿ ಭಾರತ ಮೂಲದ ಅನಿತಾ ಆನಂದ್ ಎಂಬುವರು ನೇಮಕವಾಗಿದ್ದಾರೆ. ಈ ಮೂಲಕ ಕೆನಡಾದಲ್ಲಿ ಸಚಿವರಾದ ಮೊದಲ ಹಿಂದೂ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಇವರು ಭಾರತದ ತಮಿಳುನಾಡು ಮೂಲದವರು. ಇವರ ತಾಯಿ ತಮಿಳುನಾಡಿನವರು, ತಂದೆ ಪಂಜಾಬ್ ನವರು. ಈಗಾಗಲೇ ಕೆನಡಾದಲ್ಲಿರುವ ಖಲಿಸ್ತಾನಿಗಳಿಂದಾಗಿ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹಾಳಾಗಿದೆ. ಈಗ ಅನಿತಾ ಅವರು ಈ ಸಂಬಂಧವನ್ನು ಮತ್ತೆ ಸ್ವಾಸ್ಱ್ತ್ಯ ಸಂಬಂಧವನ್ನಾಗಿ ಬದಲಾಯಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
14 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ | ಪೊಲೀಸರ ನಿರ್ಲಕ್ಷ್ಯ ಆರೋಪ : ಕುಟುಂಬಸ್ಥರ ಆಕ್ರೋಶ
ರಾಮನಗರ : ಜಿಲ್ಲೆಯ ಬಿಡದಿಯ ಸಮೀಪದಲ್ಲಿರುವ ಭದ್ರಾಪುರ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದ ಸ್ಥಿತಿಯಲ್ಲಿ 14 ವರ್ಷದ ಬಾಲಕಿಯ ಮೃತದೇಹವೊಂದು ಅರೆ ನಗ್ನಾವಸ್ಥೆಯಲ್ಲಿ ಪತ್ತೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೇ 11ರಂದು ಘಟನೆ ನಡೆದಿದ್ದು, ಮೇ 13ರಂದು ಮೃತದೇಹ ಪತ್ತೆಯಾಗಿದೆ. ಬಾಲಕಿಯ ಬೆನ್ನು ಮೂಳೆ ಮುರಿದು ಕುತ್ತಿಗೆ ತಿರುಚಿ ಕೊಲೆಗೈಯ್ಯಲಾಗಿದೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಸ್ಥಳೀಯ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ನಾವು ಬೆಳಗ್ಗಿನ ವರೆಗೂ ಹುಡುಕಿದೆವು, ಆದ್ರೆ ನನ್ನ ಮಗಳು ಕಾಣಿಸಲಿಲ್ಲ : ಈ ನಡುವೆ ಮೃತಪಟ್ಟ ಬಾಲಕಿಯ ತಾಯಿಯ ರೋಧನೆ ಮುಗಿಲು ಮುಟ್ಟಿದೆ, ರವಿವಾರ ತಾಯಂದಿರ ದಿನದಂದು ನಾವು ಒಟ್ಟಿಗೆ ಕಾರ್ಯಕ್ರಮಕ್ಕೆ ಹೋಗಿದ್ದೆವು, ಆದರೆ ವಾಪಸ್ಸು ಬರುವಾಗ ನನ್ನ ತಮ್ಮನ ಮನೆಯ ಬೀದಿಯ ಬಳಿ ನನ್ನ ಮಗಳು ಆಟವಾಡಲು ಹೋದಳು. ನಾನು ನನ್ನ ಮನೆಗೆ ಹಿಂತಿರುಗಿ ನನ್ನ ಮತ್ತೊಬ್ಬ ಮಗಳು ಅವಳಿಗೂ ಮಾತು ಬರುವುದಿಲ್ಲ. ಅವಳಿಗೆ ಅಡುಗೆ ಮಾಡಿ ಕೊಟ್ಟೆ , ಅಷ್ಟೊತ್ತಿಗೆ ಎಂಟು ಗಂಟೆ ರಾತ್ರಿಯಾಗಿತ್ತು, ಮಗಳೂ ಇನ್ನೂ ಸಹ ಬಂದಿರಲಿಲ್ಲ. ನಂತರ ನನ್ನ ತಮ್ಮನ ಬಳಿ ಹೋಗಿ ಮಗಳು ಬಂದಿಲ್ಲ ಹುಡುಕೋಣ ನಡಿ ಎಂದೆ, ಬೀದಿ ಬೀದಿ ಹುಡುಕಿದ್ವಿ. ಹನ್ನೆರಡು ಗಂಟೆ ಆದ್ರೂ ಕೂಡ ಮಗಳು ಸಿಕ್ಕಿಲ್ಲ, ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟೆವು. ಆದ್ರೆ ಪೊಲೀಸ್ ನವ್ರು ಹುಡುಗಿ ಫೋಟೋ ತೆಗೆದುಕೊಂಡರು ನಂತರ ಅಮ್ಮ ಬೆಳಗ್ಗೆ ಬನ್ನಿ , ನಾವು ಕೂಡ ಬರ್ತೀವಿ, ರಾತ್ರಿನೇ ಪೊಲೀಸ್ ನವರನ್ನು ಕರಿಸ್ತೀನಿ ಅಂದ್ರು. ಆದ್ರೆ ಅವ್ರು ಕಳ್ಸಿಲ್ಲ, ಪೊಲೀಸ್ ನವರು ಬಂದಿಲ್ಲ. ಆದ್ರೆ ನಾವು ಬೆಳಗ್ಗಿನ ವರೆಗೂ ಹುಡುಕಿದೆವು. ಆದ್ರೆ ನನ್ನ ಮಗಳು ಕಾಣಿಸಲಿಲ್ಲ. ಬೆಳಗ್ಗೆ ಏಳು ಗಂಟೆ ಹೊತ್ತಿಗೆ ಯಾರೋ ಬಂದು ಯಾರೋ ಬಿದ್ದಿದ್ದಾರೆ ಅಮ್ಮ, ಬಂದು ನೋಡಿ ಅದು ನಿಮ್ಮ ಮಗಳಾ ಎಂದು ಅಂದರು. ಹೋಗಿ ನೋಡಿದರೆ ಅಲ್ಲಿ ನನ್ನ ಮಗಳೇ ಕಂಡಳು, ಸರಿಯಾಗಿ ತಲೆ ಬುರುಡೆಗೆ ಹೊಡೆದು ಕಾಲು ಮುರಿದು, ಜಲ್ಲಿ ಕಲ್ಲಿನ ಮೇಲೆ ಎಳೆದುಕೊಂಡು ಹೋಗಿದ್ದಾರೆ. ಆಕೆ ನೋವು ತಡೆದುಕೊಳ್ಳಲಾರದೆ ಎಲೆಗಳನ್ನು ಕಿತ್ತಿದ್ದಾಳೆ ಎಂದು ಮೃತ ಬಾಲಕಿಯ ತಾಯಿ ದುಃಖಿಸಿದರು. ಪೊಲೀಸ್ನವರು ಎಚ್ಚೆತ್ತುಕೊಂಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ : ಪೊಲೀಸ್ನವರು ನಮ್ಮ ದೂರು ತೆಗೆದುಕೊಂಡು ನಮ್ಮ ಜೊತೆ ರಾತ್ರಿಯೇ ಬಂದಿದ್ದರೆ, ಈ ರೀತಿಯ ಪರಿಸ್ಥಿತಿ ಆಗುತ್ತಿರಲಿಲ್ಲ, ನಮ್ಮ ಹುಡುಗಿ ನಮಗೆ ಸಿಗುತ್ತಿದ್ದಳು. ನಮ್ಮ ಜೊತೆಗೆ ಪೊಲೀಸ್ ನವರು ಬರಬೇಕಿತ್ತು, ಯಾಕ್ ಬಂದಿಲ್ಲ, ನಾವೇನು ನಿಮಗೆ ಅನ್ಯಾಯ ಮಾಡಿದ್ದೀವಾ, ನಾವು ಅತೀ ಬಡವರು, ನಮ್ಮ ಜೊತೆಗೆ ಪೊಲೀಸ್ನವರು ಬಂದಿದ್ದರೆ, ನಮ್ಮ ಹುಡುಗಿಯನ್ನು ಕರೆದುಕೊಂಡು ಬರುತ್ತಿದ್ದೆವು. ಆದ್ರೆ ನೀವು (ಪೊಲೀಸ್) ಬಂದಿಲ್ , ಪೊಲೀಸ್ ನವರು ಯಾಕೆ ನಮ್ಮನ್ನು ಬೆಳಗ್ಗೆ ಬನ್ನಿ ಎಂದು ವಾಪಾಸ್ ಕಳುಹಿಸಿದರು. ಬೆಳಗ್ಗೆ ಆಗೋ ಹೊತ್ತಿಗೆ ನಮ್ಮ ಹುಡುಗಿ ಮೃತದೇಹವಾಗಿ ಸಿಕ್ಕಿದ್ದಾಳೆ ಅದು ಚಿತ್ರ ಹಿಂಸೆ ಅನುಭವಿಸಿ, ಮೂಗಿ ಹುಡುಗಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲು ಮನಸ್ಸು ಹೇಗೆ ಬಂದಿದೆ . ಕೃತ್ಯ ಯಾರು ಮಾಡಿದ್ದಾರೆ ಎಂಬ ಗುರುತು ಸಿಗಬಾರದು ಎಂದು ಮೃತದೇಹವನ್ನು ತೊಳೆದು ಸುಟ್ಟಿದ್ದಾರೆ, ನಾವು ಬಡವರು ಅದರಲ್ಲೂ ಬಡ ಹೆಣ್ಣು ಮಕ್ಕಳು, ಈ ರೀತಿ ಪರಿಸ್ಥಿತಿ ಆದರೆ ನಮ್ಮ ಗತಿ ಏನು, ನಾವು ಎಲ್ಲಿಗೆ ಹೋಗಬೇಕು . ನಾವು ಕೂಲಿ ಮಾಡಿದರೆ ಮಾತ್ರ ಒಂದು ತುತ್ತು ಊಟ ಮಾಡುತ್ತೇವೆ. ಇಲ್ಲ ಎಂದರೆ ಹಸಿವು ಹೊಟ್ಟೆಯಲ್ಲಿಯೇ ಇರುತ್ತೀವಿ ನಮ್ಮಂತವರಿಗೆ ಈ ರೀತಿ ಆದ್ರೆ ಹೇಗೆ ನಾವು ಬದುಕುವುದು, ಕೂಲಿಗೆ ನಾವು ಒಬ್ಬರೇ ರಸ್ತೆಯಲ್ಲಿ ಹೋಗಬೇಕು ಅಂದರೆ ಭಯ ಆಗುತ್ತದೆ. ನಮಗೆ ಪೊಲೀಸ್ ನವರು ನ್ಯಾಯ ದೊರಕಿಸಿ ಕೊಡಬೇಕು, ಇಲ್ಲವೆಂದರೆ ನಾವು ಮೃತದೇಹ ಇಲ್ಲಿಂದ ತೆಗೆಯುವುದಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆಯಿಂದ ಹೆಣ್ಣು ಹೆತ್ತವರಿಗೆ ಸಂಕಟ ಆಗುತ್ತದೆ : ಯಾವುದೋ ಒಂದು ದೇಶದಲ್ಲಿ ಅಥವಾ ರಾಜ್ಯದಲ್ಲಿ ಈ ರೀತಿಯ ಘಟನೆ ನಡೆದರೆ ಇಡೀ ರಾಜ್ಯ ಎದ್ದೇಳುವ , ಜಾಗೃತಿಯಾಗುವ ಕೆಲಸ ಮಾಡುತ್ತದೆ. ಅಲ್ಲಲ್ಲಿ ಕ್ಯಾಂಡಲ್, ಸಾಮಾಜಿಕ ಜಾಲತಾಣದಲ್ಲಿ, ಟಿವಿ ಮಾಧ್ಯಮದಲ್ಲಿ ಘಟನೆಗೆ ಧರ್ಮ ಬಳಿಯುವ ಕೆಲಸ ನಡೆಯುತ್ತದೆ. ಆದರೆ ಇವತ್ತು ಬಡ ಕುಗ್ರಾಮದಲ್ಲಿ, ಅತಿ ಹೆಚ್ಚು ಹಕ್ಕಿ ಪಿಕ್ಕಿ ಜನಾಂಗ ಇರುವಂತಹ ಗ್ರಾಮದಲ್ಲಿ , ಅದರಲ್ಲು ಹೆಣ್ಣು ಮಗಳು, ವಿಶೇಷಚೇತನ ಹೆಣ್ಣು ಮಗಳಿಗೆ ಹೀಗಾಗಿರುವುದು ಹೆಣ್ಣು ಹೆತ್ತವರಿಗೆ ಸಂಕಟ ಆಗುತ್ತದೆ. ಉಳ್ಳವರಿಗೆ ಒಂದು ಕಾನೂನು ಬಡವರಿಗೆ ಒಂದು ಕಾನೂನಾ, ಘಟನೆ ನಡೆದು ನಾಲ್ಕು ದಿನವಾಗಿದೆ, ಉಳ್ಳವರಿಗೆ ಆದರೆ ಘಟನೆ ನಡೆದ ಒಂದೇ ಗಂಟೆಯಲ್ಲಿ ವಿಶೇಷ ತಂಡ ನೇಮಕವಾಗುತ್ತಿತ್ತು. ಆರೋಪಿಗಳನ್ನು ಬೆನ್ನಟ್ಟಿ ವಶಪಡಿಸಿಕೊಳ್ಳುತ್ತಿದ್ದರು ಎಂದು ರೈತ ಮತ್ತು ಕಾರ್ಮಿಕ ರಕ್ಷಣಾ ಇಲಾಖೆ ರಾಜ್ಯಾಧ್ಯಕ್ಷ ಮೇಲುಕೋಟೆ ಬೆಟ್ಟಸ್ವಾಮಿ ಗೌಡ ಆಕ್ರೋಶ ವ್ಯಕ್ತಪಡಿಸಿದರು . ಪ್ರತಿಭಟನೆ: ಅತ್ಯಾಚಾರ, ಕೊಲೆ ಖಂಡಿಸಿ ಬಾಲಕಿಯ ಪೋಷಕರು ಹಾಗೂ ಗ್ರಾಮಸ್ಥರು ರಾಮನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದು, ನಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ನ್ಯಾಯ ಸಿಗುವವರೆಗೂ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಪುತ್ಥಳಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ರಾಜ್ಯಕ್ಕೆ ದಕ್ಷ ಆಡಳಿತ ನೀಡಿದರು ಎಂಬುದನ್ನು ಮರೆಯಲು ಸಾಧ್ಯವಿಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿ ಗುಂಡೂರಾವ್ ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಸಿದ್ದಾರೆ. ಬುಧವಾರ ಇಲ್ಲಿನ ಮೆಜೆಸ್ಟಿಕ್ ಬಸ್ ಸ್ಟಾಂಡ್ ಬಳಿಯ ವೃತ್ತದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಆರ್ ಗುಂಡೂರಾವ್ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಇಂದಿರಾ ಗಾಂಧಿ, ಸಂಜಯ್ ಗಾಂಧಿ ಅವರಿಗೆ ಆಪ್ತರಾಗಿದ್ದ ಆರ್.ಗುಂಡೂರಾವ್ ಧೈರ್ಯದಿಂದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು. ವಿಶೇಷವಾಗಿ ಶಾಸಕರ ಒತ್ತಡಕ್ಕೆ ಮಣಿಯುತ್ತಿರಲಿಲ್ಲ. ವರ್ಗಾವಣೆ ದಂಧೆಗೆ ಕಡಿವಾಣ ಹಾಕುವಂತಹ ಕೆಲಸ ಮಾಡಿದರು. ಗುಂಡೂರಾವ್ ಅವರು ಜಾತಿ ನೋಡಲಿಲ್ಲ. ಜನಪರ ಕೆಲಸಗಳಿಗೆ ಸದಾ ಸ್ಪಂದಿಸುತ್ತಿದ್ದರು. ಸಂತೋಷದಿಂದ ಆರ್.ಗುಂಡೂರಾವ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದ್ದೇನೆ ಎಂದು ಅವರು ಹೇಳಿದರು. ಆರ್.ಗುಂಡೂರಾವ್ ಅವರ ಪುತ್ರ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅತ್ಯಂತ ಕಿರಿಯ ವಯಸ್ಸಿನಲ್ಲೇ ರಾಜ್ಯದ ಮುಖ್ಯಮಂತ್ರಿಯವರಾಗಿದ್ದ ನಮ್ಮ ತಂದೆಯವರು, 40 ವರ್ಷಗಳ ಹಿಂದೆಯೇ ಬೆಂಗಳೂರು ನಗರದ ಬೆಳವಣಿಗೆಯ ದೂರದೃಷ್ಟಿಯಿಟ್ಟುಕೊಂಡು ಮೆಜೆಸ್ಟಿಕ್ ನಂತಹ ಬಸ್ ಸ್ಟಾಂಡ್ ಅನ್ನು ಕಟ್ಟಿಸಿದರು. ಇಂದು ಅದೇ ಬಸ್ ಸ್ಟಾಂಡ್ನ ಆವರಣದಲ್ಲಿ ತಂದೆಯವರ ಪುತ್ಥಳಿ ಅನಾವರಣಗೊಂಡಿರುವುದು ಸಂತೋಷದ ಸಂಗತಿ ಎಂದರು. ರಾಜಕೀಯ ಬೆಳವಣಿಗೆಗಳ ನಡುವೆ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶ ಅವರಿಗೆ ದೊರೆಯಿತು. ಒಂದು ಸಾಮಾನ್ಯ ಬ್ರಾಹ್ಮಣ ಕುಟುಂಬದಿಂದ ಬಂದವರು ಮುಖ್ಯಂತ್ರಿಯಾಗುವುದು ಅಷ್ಟು ಸುಲುಭವಲ್ಲ. ದೇವರಾಜ್ ಅರಸ್ ಅವರ ಸಂಪುಟದಲ್ಲಿ ಸಚಿವರಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತವನ್ನು ನೀಡಿದ್ದಾರೆ. ಬೆಂಗಳೂರು ನಗರದ ಬೆಳವಣಿಗೆಗೆ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು. ರಾಜ್ಯದಲ್ಲಿ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳನ್ನು ನೀಡಿದರು ಎಂದು ಅವರು ಹೇಳಿದರು.
ಕಸಾಪಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ | ʼಮಹೇಶ್ ಜೋಶಿಯಿಂದ ಜಿಲ್ಲಾಧ್ಯಕ್ಷರ ಮನವೊಲಿಸುವ ಪ್ರಯತ್ನʼ
ಬೆಂಗಳೂರು : ʼಕನ್ನಡ ಸಾಹಿತ್ಯ ಪರಿಷತ್ಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದರೆ, ನನ್ನ ಅಧಿಕಾರದ ಜತೆಗೆ ನೀವೆಲ್ಲರೂ (ಜಿಲ್ಲಾಧ್ಯಕ್ಷರ) ಅಧಿಕಾರವನ್ನು ಕಳೆದುಕೊಳ್ಳಬೇಕಾಗುತ್ತದೆʼ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಜಿಲ್ಲಾಧ್ಯಕ್ಷರ ಮನವೊಲಿಸುವ ಪ್ರಯತ್ನ ಮಾಡಿರುವುದಾಗಿ ತಿಳಿದು ಬಂದಿದೆ. ತೀವ್ರ ವಿವಾದಗಳಿಗೆ ಕಾರಣವಾದ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯನ್ನು ಇದೇ ಮೊದಲ ಬಾರಿಗೆ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಕಸಾಪ ಅಧ್ಯಕ್ಷ ಡಾ.ಮಹೇಶ್ ಅಧ್ಯಕ್ಷತೆಯಲ್ಲಿ ನಗರದ ಚಾಮರಾಜಪೇಟೆಯಲ್ಲಿರುವ ಕಸಾಪ ಪಂಪ ಸಭಾಂಗಣದಲ್ಲಿ ಇತ್ತೀಚಿಗೆ ಅಗಲಿದ ಸಾಹಿತಿ ಹಾಗೂ ಗಣ್ಯರಿಗೆ ಮೌನಾಚರಣೆ ಮಾಡುವ ಮೂಲಕ ಸಭೆಯನ್ನು ಆರಂಭಿಸಲಾಯಿತು. ಸಭೆಯಲ್ಲಿ ಮಾ.21 ಹಾಗೂ ಎ.21ರಂದು ನಡೆದ ಕಾರ್ಯಕಾರಿ ಸಮಿತಿ ಸಭೆ ಹಾಗೂ 2023-24ನೇ ಸಾಲಿನ ವಾರ್ಷಿಕ ವರದಿ, ಸ್ಥಳೀಯ ಲೆಕ್ಕಪರಿಶೋಧಕರ ಪರಿಶೀಲನಾ ವರದಿಯನ್ನು ಅಂಗೀಕರಿಸಿರುವುದು. ಪ್ರಸ್ತುತ ವಿದ್ಯಮಾನದಲ್ಲಿ ಎದುರಿಸುತ್ತಿರುವ ಸವಾಲುಗಳ ಕುರಿತು ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಡಾ.ಪದ್ಮನಿ ನಾಗರಾಜು, ನೇ.ಭ ರಾಮಲಿಂಗಶೆಟ್ಟಿ, ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು. ಆಡಳಿತಾಧಿಕಾರಿ ನೇಮಕದ ಚರ್ಚೆ : ಕಸಾಪಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದರೆ, ಕಸಾಪಕ್ಕೆ ಕೆಟ್ಟ ಹೆಸರು ಬರುತ್ತದೆ. ಎಲ್ಲ ಆರೋಪಗಳಿಂದ ಮುಕ್ತನಾಗಲು ನಾನು ತಯಾರಾಗಿದ್ದೇನೆ. ನನ್ನ ಅಧಿಕಾರ ಹೋಗುವುದರ ಜತೆಗೆ ನಿಮ್ಮ ಅಧಿಕಾರವೂ ಹೋಗುತ್ತದೆ ಎಂದು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರು ಜಿಲ್ಲಾಧ್ಯಕ್ಷರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಅಧ್ಯಕ್ಷರ ಭಾಷಣಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿರುವುದಾಗಿ ತಿಳಿದು ಬಂದಿದೆ. ಮೇ 17ರಂದು ಮಂಡ್ಯದಲ್ಲಿ ಜಾಗೃತಿ ಸಮಾವೇಶ : ಪ್ರಜಾಪ್ರಭುತ್ವ ವಿರೋಧಿ ನೆಲೆಯಲ್ಲಿ ವರ್ತಿಸುತ್ತಿರುವ ಮಹೇಶ್ ಜೋಶಿ ನಡೆ ಹಾಗೂ ಬೈಲಾ ತಿದ್ದುಪಡಿಯನ್ನು ರದ್ದುಗೊಳಿಸುವುದು ಹಾಗೂ ಪ್ರಸ್ತಾವಿತ ಬೈಲಾವನ್ನು ತಡೆಹಿಡಿಯುವಂತೆ, ಕನ್ನಡ ನಾಡು ನುಡಿ ಜಾಗೃತಿ ಸಮಿತಿ ವತಿಯಿಂದ ಮೇ 17ರಂದು ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಾಗೃತಿ ಸಮಾವೇಶ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ. ಸಮಾವೇಶದಲ್ಲಿ ಕಸಾಪ ಅಧ್ಯಕ್ಷರನ್ನು ಅಮಾನತುಗೊಳಿಸಿ, ಆಡಳಿತಾಧಿಕಾರಿಯನ್ನು ನೇಮಿಸಬೇಕು ಸೇರಿದಂತೆ ಇತರ ಬೇಡಿಕೆಯ ಕುರಿತು ಒತ್ತಾಯಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ
ಹೆಬ್ಬಗೋಡಿ ಡಿಪೋ ತಲುಪಿದ 3 ಮೆಟ್ರೋ ಬೋಗಿ, ಹಳದಿ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭ ಯಾವಾಗ?
ನಮ್ಮ ಮೆಟ್ರೋದ ಹಳದಿ ಮಾರ್ಗಕ್ಕೆ ಪಶ್ಚಿಮ ಬಂಗಾಳದ ಟಿಟಾಗರ್ ಸಂಸ್ಥೆಯಿಂದ ಮೂರು ಹೊಸ ಬೋಗಿಗಳು ಬಂದಿದ್ದು, ವಾಣಿಜ್ಯ ಸಂಚಾರವು ಜೂನ್ ಅಂತ್ಯಕ್ಕೆ ಆರಂಭವಾಗುವ ನಿರೀಕ್ಷೆಯಿದೆ. ಆರಂಭದಲ್ಲಿ ಪ್ರತಿ 30 ನಿಮಿಷಕ್ಕೆ ಒಂದು ರೈಲು ಓಡಿಸಲಾಗುವುದು ಮತ್ತು ಐದು ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ ಇರಲಿದೆ. ಈ ಮಾರ್ಗವು ಸಿಲ್ಕ್ ಬೋರ್ಡ್, ಎಚ್ಎಸ್ಆರ್ ಲೇಔಟ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತೆರಳುವ ಐಟಿ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.
IPL 2025- ಡೆಲ್ಲಿ ಕ್ಯಾಪಿಟಲ್ಸ್ ಲೆಕ್ಕಾಚಾರ ಉಲ್ಟಾಪಲ್ಟಾ! ಈಗ ಬಾಂಗ್ಲಾ ವೇಗಿ ಮುಸ್ತಫಿಜುರ್ ರಹಮಾನ್ ಹೊಸ ವರಾತ!
ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಕ್ಗುರ್ಕ್ ಅವರ ಬದಲಿಗೆ ಬಾಂಗ್ಲಾದೇಶದ ವೇಗದ ಬೌಲರ್ ಮುಸ್ತಾಫಿಜುರ್ ರಹಮಾನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಇದೀಗ ಆಘಾತ ಎದುರಾಗಿದೆ. ಮುಸ್ತಾಫಿಸುರ್ ತಾನು ಯುಎಇ ವಿರುದ್ಧ ಬಾಂಗ್ಲಾ ಪರ ಆಡಲು ಉತ್ಸುಕನಾಗಿದ್ದೇನೆ ಎಂದು ಮಾಡಿರುವ ಟ್ವೀಟ್ ಎಲ್ಲಾ ಗೊಂದಲಗಳಿಗೆ ಕಾರಣ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಮುಸ್ತಾಫಿಜುರ್ ರನ್ನು ಆಟಗಾರನಾಗಿ ಆಯ್ಕೆ ಮಾಡಿದೆಯಾದರೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಅನುಮತಿ ನೀಡಿಲ್ಲ. ಹೀಗಾಗಿ ಅವರ ಲಭ್ಯತೆಯ ಬಗ್ಗೆ ಇನ್ನೂ ಖಚಿತತೆ ಇಲ್ಲ.
ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಸಚಿವನಿಗೆ ಎದುರಾಯ್ತು ಭಾರೀ ಸಂಕಷ್ಟ!
ಭಾರತೀಯರ ಹೆಮ್ಮೆ ಆಗಿರುವ ಹಾಗೂ ಕರ್ನಾಟಕದ ಸೊಸೆ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪ ಎದುರಿಸುತ್ತಿರುವ ಮಧ್ಯಪ್ರದೇಶ ಬಿಜೆಪಿ ಸಚಿವ ಕನ್ವರ್ ವಿಜಯ್ ಶಾ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಮಧ್ಯಪ್ರದೇಶದ ಹೈಕೋರ್ಟ್ ಮಹತ್ವದ ಆದೇಶವನ್ನು ಮಾಡಿದೆ. ವಿಜಯ್ ಶಾ ನೀಡಿದ್ದ ಹೇಳಿಕೆಯು ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕಳೆದ ಒಂದು ವಾರಕ್ಕೂ
ಸಮಾಜದ ಆಗುಹೋಗುಗಳ ಬಗ್ಗೆ ಅಧ್ಯಯನ ಅಗತ್ಯ: ಅಹ್ಮದ್ ಬಾಖವಿ
ಉಳ್ಳಾಲ: ದಿನಗಳು ಉರುಳಿದಂತೆ ಸಮಾಜ ಬದಲಾಗುತ್ತಾ ಇರುತ್ತದೆ. ಪ್ರಸಕ್ತ ಕಾಲ ಘಟ್ಟದಲ್ಲಿ ಅಭಿವೃದ್ಧಿ ಜಾಸ್ತಿ ಆಗುತ್ತಿದ್ದರೂ ಕೆಲವು ಪ್ರಮುಖ ವಿಚಾರಗಳಲ್ಲಿ ನಾವು ಹಿಂದುಳಿಯುತ್ತಿದ್ದೇವೆ ಎಂದು ಮಂಜನಾಡಿ ಮುದರ್ರಿಸ್ ಅಹ್ಮದ್ ಬಾಖವಿ ಹೇಳಿದರು. ಅವರು ಉಳ್ಳಾಲ ದರ್ಗಾ ದ 22 ಪಂಚವಾರ್ಷಿಕ ಉರೂಸ್ ಪ್ರಯುಕ್ತ ಬುಧವಾರ ದರ್ಗಾ ವಠಾರದಲ್ಲಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣ ಒಂದರಲ್ಲೇ ಅಭಿವೃದ್ಧಿ ಸಾಧ್ಯವಿಲ್ಲ. ಜೊತೆ ಗೆ ಸಮಾಜದ ಆಗುಹೋಗುಗಳ ಬಗ್ಗೆ ನಾವು ಅಧ್ಯಯನ ಮಾಡಬೇಕಾಗಿದೆ. ಇವು ಶಿಕ್ಷಣಕ ಪ್ರೇರಣೆ ನೀಡುತ್ತದೆ ಎಂದು ಹೇಳಿದರು. ಮುಹಮ್ಮದ್ ಫಾಝಿಲ್ ನೂರಾನಿ ಅಸ್ಸಖಾಫಿ, ರಹ್ಮತುಲ್ಲಾ ಸಖಾಫಿ ಎಳಮರಮ್ ಧಾರ್ಮಿಕ ಪ್ರವಚನ ನೀಡಿದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಝೀನತ್ ಭಕ್ಷ್ ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ, ಎಸ್.ಕೆ.ಎಮ್.ಎಮ್.ಎ.ಡಿ.ಕೆ. ಕೋಶಾಧಿಕಾರಿ ಅಬ್ದುಲ್ ಖಾದರ್, ಅಲೀ ಜುಮಾ ಮಸೀದಿ ಅಧ್ಯಕ್ಷ ಮುಹ್ ಯಿದ್ದೀನ್, ಖತೀಬ್ ಕಬೀರ್ ಸಅದಿ, ದರ್ಗಾ ಮಾಜಿ ಅಧ್ಯಕ್ಷ ಕಣಚೂರು ಮೋನು, ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಕಾರ್ಯದರ್ಶಿ ಮುಸ್ತಫಾ ಮದನಿನಗರ, ಇಸ್ಹಾಕ್, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಸದಸ್ಯ ಅಬ್ದುಲ್ ಖಾದರ್ ಕೋಡಿ, ಆಸೀಫ್ ಸುಂದರಿ ಬಾಗ್, ಅಬೂಬಕ್ಕರ್ ಹೈದರಲಿ ನಗರ, ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಇಮ್ತಿಯಾಝ್, ಕಣಚೂರು ಮೆಡಿಕಲ್ ಕಾಲೇಜು ನಿರ್ದೇಶಕ ಅಬ್ದುಲ್ ರಹ್ಮಾನ್, ಅರೆಬಿಕ್ ಕಾಲೇಜು ಪ್ರೊ. ಇಬ್ರಾಹಿಂ ಅಹ್ಸನಿ, ಉಪಾಧ್ಯಕ್ಷ ಅಶ್ರಫ್ ಹಾಜಿ,ತಂಝೀಲ್ ಯು.ಟಿ., ಆಝಾದ್ ಇಸ್ಮಾಯಿಲ್ , ಸಾಜಿದ್ ಉಳ್ಳಾಲ,ಕೇಂದ್ರ ಜುಮ್ಮಾ ಮಸೀದಿ ಖತೀಬ್ ಹಾಫಿಳ್ ಅಬ್ದುಲ್ ಮಜೀದ್ ಫಾಳಿಲಿ ಕಾಮಿಲ್ ಸಖಾಫಿ ,ಅಬ್ಬಾಸ್ ಮದನಿ ಮತ್ತಿತರರು ಉಪಸ್ಥಿತರಿದ್ದರು. ದರ್ಗಾ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು.
ಮಂಗಳೂರು| ಐಫೋನ್ ದೋಷಪೂರಿತ: ಗ್ರಾಹಕ ನ್ಯಾಯಾಲಯ ಮಹತ್ವದ ತೀರ್ಪು
ಮಂಗಳೂರು: ಆ್ಯಪಲ್ ಕಂಪೆನಿಯ ಐಫೋನ್ ಖರೀದಿ ಮಾಡಿದ ಒಂದೆರಡು ವರ್ಷದಲ್ಲೇ ಬಳಕೆ ಮಾಡಲು ಅಸಾಧ್ಯವಾಗುವಂತೆ ದೋಷ ಕಾಣಿಸಿದ್ದು ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ: ಮಂಗಳೂರು ಬಿಜೈ ನಿವಾಸಿ ಸಂಪತ್ ಕುಮಾರ್ ರವರು ಪ್ರತಿಷ್ಟಿತ ಎಲೆಕ್ಟ್ರಾನಿಕ್ಸ್ ಮಳಿಗೆಯಾದ ರಿಲಯನ್ಸ್ ಡಿಜಿಟಲ್ಸ್ ನಿಂದ ದುಬಾರಿ ಐಫೋನ್ ಖರೀದಿ ಮಾಡಿದ್ದರು. ಖರೀದಿ ಮಾಡಿದ ಕೆಲವು ಸಮಯದಲ್ಲೆ ಆ ಫೋನ್ ನಲ್ಲಿ ದೋಷ ಕಂಡು ಬಂದಿದ್ದು ಅದರ ಡಿಸ್ಪ್ಪ್ಲೇ ಹಾಳಾಗಿತ್ತು. ಎದುರುದಾರರಲ್ಲಿ ಹೋದಾಗ ಎದುರುದಾರರು ಸರ್ವಿಸ್ ಸೆಂಟರ್ಗೆ ಅದನ್ನು ಕೊಡಲು ಹೇಳಿದರು. ಅದರಂತೆ ಎರಡನೆ ಎದುರುದಾರರಾದ ಬಲ್ಮಠದ ಮಾಪಲ್ ಎಕ್ಸ್ ಎನ್ನುವ ಸರ್ವಿಸ್ ಸೆಂಟರ್ಗೆ ಅದನ್ನು ರಿಪೇರಿಗೆ ನೀಡಿದ್ದರು. ಆದರೆ ರಿಪೇರಿಗೆ ದೊಡ್ಡ ಮೊತ್ತವನ್ನು ಹೇಳಿದ ಎರಡನೆ ಎದುರುದಾರರು ಮೊಬೈಲ್ ಫೋನ್ ವಾರಂಟಿ ಕಾಲಮಿತಿಯೊಳಗೆ ಇಲ್ಲ, ಹಾಗಾಗಿ ಉಚಿತವಾಗಿ ರಿಪೇರಿ ಮಾಡಲು ಆಗುವುದಿಲ್ಲ ಎಂದರು. ಸ್ವಲ್ಪ ಕಾಲ ಅದನ್ನು ಇಟ್ಟುಕೊಂಡು ಇದು ಸರಿಪಡಿಸಲಾಗದ ದೋಷ ಎಂದು ಮೊಬೈಲ್ ಹಿಂದಿರುಗಿಸಿದರು. ದೂರುದಾರರು ಮೂರನೇ ಎದುರುದಾರರಿಗೆ ಅಂದರೆ ಆ್ಯಪಲ್ ಕಂಪೆನಿಗೆ ದೋಷಪೂರಿತ ಐಫೋನ್ ಬಗ್ಗೆ ಮೇಲಿಂದ ಮೇಲೆ ಈಮೇಲ್ ಗಳನ್ನು ಕಳಿಸಿದ್ದರೂ ಅದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರಲಿಲ್ಲ. ಹಾಗಾಗಿ ದೂರುದಾರರು ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆಗೆ ದೂರು ಸಲ್ಲಿಸಿದ್ದರು. ಆ್ಯಪಲ್ ಕಂಪೆನಿಯವರು ಹಾಜರಾಗಿ ಐಫೋನ್ ಖರೀದಿ ಮಾಡಿ ಒಂದು ವರ್ಷ ಕಳೆದುದರಿಂದ ಫೋನ್ ರಿಪೇರಿ ಸಾಧ್ಯವಿಲ್ಲ ಎಂದು ವಾದಿಸಿದ್ದರು. ದೂರುದಾರರ ಅಹವಾಲು ಮತ್ತು ಪ್ರತಿವಾದಿಗಳ ಪ್ರತಿರಕ್ಷೆಯನ್ನು ಪರಿಶೀಲಿಸಿ ಮಾನ್ಯ ಗ್ರಾಹಕ ನ್ಯಾಯಾಲಯ ದೂರನ್ನು ಮಾನ್ಯ ಮಾಡಿದೆ. ಮೂರೂ ಎದುರುದಾರರು ಒಟ್ಟಾಗಿ ಆ್ಯಪಲ್ ಐಫೋನ್ನ ಬಾಬ್ತು 81,800/- ಬಡ್ಡಿ ಸಮೇತ ದೂರುದಾರರಿಗೆ ಕೊಡಬೇಕೆಂದೂ ಮತ್ತು ದಾವೆ ಖರ್ಚು ಹಾಗೂ ಹತ್ತು ಸಾವಿರ ಪರಿಹಾರ ನೀಡಬೇಕೆಂದೂ ಗ್ರಾಹಕ ನ್ಯಾಯಾಲಯ ಆದೇಶಿಸಿದೆ. ದೂರುದಾರರ ಪರವಾಗಿ ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ವಾದಿಸಿದ್ದರು.
ಶ್ರಮ, ಛಲದಿಂದ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ: ಸ್ಪೀಕರ್ ಯು.ಟಿ. ಖಾದರ್
ಮಂಗಳೂರು, ಮೇ 14: ಶ್ರಮ ಮತ್ತು ಛಲದಿಂದ ಯಶಸ್ಸು ಸಾಧ್ಯ ಎಂದು ವಿಧಾನ ಸಭೆಯ ಸ್ಪೀಕರ್ ಯು. ಟಿ. ಖಾದರ್ ಹೇಳಿದ್ದಾರೆ. ಯುಪಿಎಸ್ಸಿ - ನಾಗರಿಕ ಸೇವಾ ಪರೀಕ್ಷೆಯಲ್ಲಿ 345 ರ್ಯಾಂಕ್ ಗಳಿಸಿದ ಶೌಕತ್ ಅಝೀಮ್ ಮತ್ತು 588ನೇ ರ್ಯಾಂಕ್ ಗಳಿಸಿರುವ ಅಬು ಸಾಲಿಯಾ ಖಾನ್ ಅವರಿಗೆ ಏಸ್ ಫೌಂಡೇಶನ್ ಆಶ್ರಯದಲ್ಲಿ ನಗರದ ಓಶಿಯನ್ ಪರ್ಲ್ ಹೋಟೆಲ್ ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಹೆತ್ತವರ ಶ್ರಮ, ಸಮುದಾಯ ಪ್ರೋತ್ಸಾಹ ಇದ್ದರೆ ಆ ಸಮದಾಯದ ಜನರು ಮುಂದುವರಿಯಲು ಸಾಧ್ಯ ಎನ್ನುವುದಕ್ಕೆ ಇಬ್ಬರು ಉದಾರಣೆಯಾಗಿದ್ದಾರೆ. ಇವರನ್ನು ರೂಪಿಸಿದ ಏಸ್ ಫೌಂಡೇಶನ್ ಗೂ ಅಭಿನಂದನೆಗಳು ಎಂದರು. ಇಬ್ಬರು ಅಧಿಕಾರಿಗಳ ಸಾಧನೆಯು ಸಮುದಾಯಕ್ಕೆ ಹೆಮ್ಮೆ ತಂದಿದೆ. ಉತ್ತಮ ಅಧಿಕಾರಿಗಳಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಮತ್ತು ಹಿಂದಿನ ಅಧಿಕಾರಿಗಳು ಹಾಕಿಕೊಟ್ಟ ಪರಂಪರೆಯನ್ನು ಮುಂದುವರಿಸಬೇಕು ಎಂದು ಕಿವಿ ಮಾತು ನುಡಿದರು. ಬೆಂಗಳೂರು ಬಿಎಂಟಿಸಿ (ಭದ್ರತೆ ಮತ್ತು ವಿಜಿಲೆನ್ಸ್) ನಿರ್ದೇಶಕ ಅಬ್ದುಲ್ ಅಹದ್ ಮಾತನಾಡಿ, ಈ ಇಬ್ಬರು ಮಾಡಿರುವ ಸಾಧನೆ ಅಮೋಘವಾದುದು. ಯುಪಿಎಸ್ಸಿಯಂತಹ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವಾಗ ಅಪಾರ ಧೈರ್ಯ, ಛಲ ಹಾಗೂ ತಾಳ್ಮೆ ಅಗತ್ಯ ಎಂದು ಹೇಳಿದರು. ಇವರಿಬ್ಬರ ಸಾಧನೆಯನ್ನು ಪ್ರಶಂಸಿಸುವ ವಾಗ ನಾವು ಯುಪಿಎಸ್ಸಿಯಂತಹ ಶ್ರೇಷ್ಠ ಸಂಸ್ಥೆಯನ್ನೂ, ಈ ದೇಶಕ್ಕೆ ಶ್ರೇಷ್ಠ ಸಂವಿಧಾನ ಕೊಟ್ಟ ಬಾಬಾ ಸಾಹೇಬ್ ಅಂಬೇಡ್ಕರ್ರನ್ನೂ ನೆನೆಯಬೇಕು. ಏಸ್ ಫೌಂಡೇಶನ್ನಂತಹ ಸಂಸ್ಥೆಗಳಿಗೆ ಎಲ್ಲರೂ ಪ್ರೋತ್ಸಾಹ ಹಾಗೂ ಸಹಕಾರ ನೀಡಬೇಕು ಎಂದು ಹೇಳಿದರು. ಯೆನೆಪೊಯ ಪರಿಗಣಿತ ವಿವಿ ಕುಲಪತಿ ಡಾ.ವೈ.ಅಬ್ದುಲ್ಲ ಕುಂಞಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಮುಖ್ಯ ಅತಿಥಿಯಾಗಿದ್ದರು. ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್, ಇಂಡಸ್ಟ್ರಿ ಅಧ್ಯಕ್ಷ ಎಸ್. ಎಂ.ರಶೀದ್ ಹಾಜಿ, ಜುಬೈಲ್ನ ಎಕ್ಸ್ಪರ್ಟೈಸ್ ಕಂಪೆನಿ ಉಪಾಧ್ಯಕ್ಷ ಶೇಖ್ ಕರ್ನಿರೆ, ಉದ್ಯಮಿಗಳಾದ ಸಿಎ ಅಬ್ದುಲ್ಲ ಮಾದುಮೂಲೆ, ಇಬ್ರಾಹೀಂ ಗಡಿಯಾರ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಏಸ್ ಫೌಂಡೇಶನ್ನ ಗೌರವಾಧ್ಯಕ್ಷ ಸಾದುದ್ದೀನ್ ಎಂ. ಸಾಲಿಹ್ ಅಧ್ಯಕ್ಷತೆ ವಹಿಸಿದ್ದರು. ಏಸ್ ಫೌಂಡೇಶನ್ ನಿರ್ದೇಶಕ ನಝೀರ್ ಅಹ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಇಮ್ತಿಯಾಝ್ ಖತೀಬ್ ಸ್ವಾಗತಿಸಿದರು. ಬದ್ರುದ್ದೀನ್ ಕಿರಾಅತ್ ಪಠಿಸಿದರು. ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.
ದಾವಣಗೆರೆ | ಬ್ಯಾಂಕ್ ನೌಕರನಿಂದ ಕೋಟ್ಯಂತರ ರೂ. ವಂಚನೆ; ಆರೋಪಿಯ ಬಂಧನ, 3 ಕೆ.ಜಿ.ಗೂ ಅಧಿಕ ಚಿನ್ನಾಭರಣ ವಶ
ದಾವಣಗೆರೆ : ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3.5 ಕೆ.ಜಿ. ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಆಭರಣಗಳನ್ನು ಅಡವಿಟ್ಟು ಕೋಟ್ಯಂತರ ರೂ. ಸಾಲ ಪಡೆದಿದ್ದ ಆರೋಪದಲ್ಲಿ ಬ್ಯಾಂಕ್ ನೌಕರ ಸಂಜಯ್ ಟಿ.ಪಿ. ಎಂಬಾತನನ್ನು ಕೆಟಿಜೆ ನಗರದ ಠಾಣಾ ಪೊಲೀಸರು ಬಂಧಿಸಿ ಆತನಿಂದ 3 ಕೆ.ಜಿ. ಗೂ ಅಧಿಕ ತೂಕದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ, ದೇವರಾಜು ಅರಸು ಬಡಾವಣೆಯಲ್ಲಿನ ಸಿಎಸ್ಬಿ ಬ್ಯಾಂಕಿನಲ್ಲಿ ಎಪ್ರಿಲ್ನಲ್ಲಿ ವಾರ್ಷಿಕ ಆಡಿಟ್ ಮಾಡುವ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಬ್ಯಾಂಕಿನ ಮ್ಯಾನೇಜರ್ ಶಿವಕುಮಾರ್ ನೀಡಿದ ದೂರು ಆಧರಿಸಿ ತನಿಖೆ ನಡೆಸಿದ ವೇಳೆ ಬ್ಯಾಂಕಿನ ಗೋಲ್ಡ್ ಲೋನ್ ವಿಭಾಗದ ಸಿಬ್ಬಂದಿ ಸಂಜಯ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಬಿಸಿಎ ಪದವೀಧರನಾದ ಸಂಜಯ್ ಮುತ್ತೂಟ್ ಫೈನಾನ್ಸ್ ಸೇರಿದಂತೆ ಇತರ ಖಾಸಗಿ ಫೈನಾನ್ಸ್ಗಳಲ್ಲಿ ಕಾರ್ಯನಿರ್ವಹಿಸಿದ್ದ. ಆದರೆ ಸಿಎಸ್ಬಿ ಬ್ಯಾಂಕಿನಲ್ಲಿ ಕೆಲಸಕ್ಕೆ ಸೇರಿದ 6 ತಿಂಗಳಲ್ಲಿಯೇ ಅಲ್ಲಿನ ಆಭರಣಗಳನ್ನು ಕದ್ದು, ನಕಲಿ ಆಭರಣಗಳನ್ನು ಇಟ್ಟು ಅದರ ಮೇಲೂ ಲೋನ್ ಪಡೆದಿದ್ದ. ಗೋಲ್ಡ್ ಲೋನ್ ವಿಭಾಗದಲ್ಲಿ ಈತನೇ ಮುಖ್ಯ ಸಿಬ್ಬಂದಿಯಾದ ಕಾರಣದಿಂದ ಬ್ಯಾಂಕಿನ ಆಡಳಿತ ಮಂಡಳಿಗೆ ಆತನ ಕೃತ್ಯದ ಬಗ್ಗೆ ತಿಳಿದಿಲ್ಲ. ಆದರೆ ಆಡಿಟ್ ಮಾಡುವಾಗ ಬಂಗಾರದಲ್ಲಿ ವ್ಯತ್ಯಾಸ ಕಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಿದರು. ಬ್ಯಾಂಕಿನ ಗ್ರಾಹಕರು ಅಡಮಾನ ಮಾಡಿದ ಸಾಲದ ಖಾತೆಗಳಲ್ಲಿನ ಒಟ್ಟು 1 ಕೋಟಿ 86 ಲಕ್ಷದ 22 ಸಾವಿರ ರೂ. ಬೆಲೆ ಬಾಳುವ 3,157.10 ಗ್ರಾಂ ಆಭರಣಗಳನ್ನು ಬ್ಯಾಂಕಿಗೆ ನಂಬಿಕೆ ದ್ರೋಹ ಮಾಡಿ ಕಳ್ಳತನ ಮಾಡಿಕೊಂಡು ಹೋಗಿರುವುದಲ್ಲದೇ ಬ್ಯಾಂಕಿನ ಗಮನಕ್ಕೆ ಬಾರದ ಹಾಗೇ ತನ್ನ ಸ್ನೇಹಿತರು, ಹಿತೈಷಿಗಳು, ಬಂಧುಗಳ ಹೆಸರಿನಲ್ಲಿ ನಕಲಿ ಬಂಗಾರದ ಆಭರಣಗಳನ್ನು ಅಡಮಾನ ಮಾಡಿ 2 ಕೋಟಿ ರೂ. ಗೂ ಅಧಿಕ ಸಾಲ ಮಂಜೂರು ಮಾಡಿಸಿ ಮೋಸ ಮಾಡಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಕಳವು ಮಾಡಿದ ಆಭರಣಗಳನ್ನು ನಗರದ ಫೆಡರಲ್ ಬ್ಯಾಂಕ್, ಫೆಡ್ ಬ್ಯಾಂಕ್ ಹಾಗೂ ಪಿ.ಬಿ.ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಫೈನಾನ್ಸ್ ಶಾಖೆಯಲ್ಲಿ ಅಡಮಾನ ಮಾಡಿ ಸಾಲ ಪಡೆದಿದ್ದ. ಇಷ್ಟು ಮೊತ್ತದ ಬಂಗಾರದ ಆಭರಣಗಳನ್ನು ಒಬ್ಬನೇ ವ್ಯಕ್ತಿ ಖಾಸಗಿ ಫೈನಾನ್ಸ್ಗಳಲ್ಲಿ ಅಡಮಾನ ಇಡಲು ಅವಕಾಶವಿಲ್ಲ. ಆದರೂ ಈ ಫೈನಾನ್ಸ್ ನವರು ನಿಯಮ ಮೀರಿರುವುದು ಕಂಡು ಬಂದಿದ್ದು, ಈ ಪ್ರಕರಣದಲ್ಲಿ ಅವರ ವಿರುದ್ಧವೂ ದೂರು ದಾಖಲಿಸಿ ತನಿಖೆ ನಡೆಸಲಾಗುವುದು ಎಂದರು. ಪ್ರಕರಣದ ತನಿಖೆಗೆ ಖಾಸಗಿ ಫೈನಾನ್ಸ್ನವರು ಸಹಕಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ತಿಜೋರಿಗಳನ್ನು ಒಡೆಯಲಾಗಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಕ್ರಮಕ್ಕೆ ಇಲಾಖೆ ಮುಂದಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿಗಳಾದ ವಿಜಯ್ ಕುಮಾರ್ ಸಂತೋಷ್,ಮಂಜುನಾಥ್, ಉಪಾಧೀಕ್ಷಕ ಶರಣ ಬಸವೇಶ್ವರ ಇತರರು ಉಪಸ್ಥಿತರಿದ್ದರು.
ಹೊಸದಿಲ್ಲಿ: 2023 ರಲ್ಲಿ ಮುಜಫರ್ ನಗರದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಪ್ರಕರಣದಲ್ಲಿ, ಸಂತ್ರಸ್ತ ಅಪ್ರಾಪ್ತ ಮುಸ್ಲಿಂ ಬಾಲಕನ ಶೈಕ್ಷಣಿಕ ವೆಚ್ಚವನ್ನು ಭರಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ವಿಚಾರಣೆಯ ಸಂದರ್ಭ, ಸಂತ್ರಸ್ತ ವಿದ್ಯಾರ್ಥಿಯ ಶಾಲಾ ಶಿಕ್ಷಣ ಮುಗಿಯುವವರೆಗೆ ಬೋಧನಾ ಶುಲ್ಕ, ಸಮವಸ್ತ್ರ, ಪುಸ್ತಕಗಳು ಮತ್ತು ಸಾರಿಗೆ ಶುಲ್ಕವನ್ನು ರಾಜ್ಯ ಸರಕಾರವು ಪಾವತಿಸಬೇಕು ಎಂದು ಪುನರುಚ್ಛರಿಸಿದೆ ಎಂದು livelaw.in ವರದಿ ಮಾಡಿದೆ. “ನಮ್ಮ ಹಿಂದಿನ ಆದೇಶಗಳಲ್ಲಿ ಸೂಚಿಸಿದಂತೆ, ಮಗುವಿನ ಶಾಲಾ ಶಿಕ್ಷಣ ಮುಗಿಯುವವರೆಗೆ ಬೋಧನಾ ಶುಲ್ಕ, ಸಮವಸ್ತ್ರದ ವೆಚ್ಚ, ಪುಸ್ತಕಗಳು ಇತ್ಯಾದಿಗಳನ್ನು ಮತ್ತು ಸಾರಿಗೆ ಶುಲ್ಕವನ್ನು ಪಾವತಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ ಎಂದು ನಾವು ಸ್ಪಷ್ಟಪಡಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದೆ. ಮುಜಫರ್ನಗರದಲ್ಲಿ ನಡೆದ ಕಪಾಳ ಮೋಕ್ಷ ಘಟನೆ ಮತ್ತು 2009ರ ಶಿಕ್ಷಣ ಹಕ್ಕು ಕಾಯ್ದೆ ಜಾರಿ ಸಂಬಂಧ ಕಾರ್ಯಕರ್ತ ತುಷಾರ್ ಗಾಂಧಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆಯ ವೇಳೆ ಸುಪ್ರೀಂಕೋರ್ಟ್ ಈ ಸೂಚನೆ ನೀಡಿದೆ. ಆಗಸ್ಟ್ 2023 ರಲ್ಲಿ, ಶಾಲಾ ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರು ಏಳು ವರ್ಷದ ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ಇತರ ವಿದ್ಯಾರ್ಥಿಗಳಿಗೆ ಸೂಚಿಸುತ್ತಿರುವ ವೀಡಿಯೊ ವೈರಲ್ ಆಗಿತ್ತು. ಘಟನೆಯ ಮೂರು ತಿಂಗಳ ನಂತರ, ಮಗುವನ್ನು ಮುಜಫರ್ನಗರದ ಮತ್ತೊಂದು ಖಾಸಗಿ ಶಾಲೆಗೆ ಸೇರಿಸಲಾಗುವುದು. ಮಗುವಿನ ಎಲ್ಲಾ ಶೈಕ್ಷಣಿಕ ವೆಚ್ಚಗಳನ್ನು ಸರಕಾರದ ಯೋಜನೆಯಡಿಯಲ್ಲಿ ಭರಿಸಲಾಗುವುದು ಎಂದು ರಾಜ್ಯ ಸರಕಾರವು ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ಇಂದಿನ ವಿಚಾರಣೆಯ ಸಂದರ್ಭದಲ್ಲಿ, ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಶದನ್ ಫರಾಸತ್, ಮಗುವಿನ ಕೊನೆಯ ಸೆಮಿಸ್ಟರ್ನ ಬೋಧನಾ ಶುಲ್ಕವನ್ನು ಪಾವತಿಸಲಾಗಿಲ್ಲ, ಸಮವಸ್ತ್ರದ ವೆಚ್ಚಗಳು ಇನ್ನೂ ಬಾಕಿ ಉಳಿದಿವೆ ಮತ್ತು ಸಾರಿಗೆ ವೆಚ್ಚವನ್ನು ಎರಡು ದಿನಗಳ ಹಿಂದೆಯಷ್ಟೇ ಮರುಪಾವತಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಗಮನಕ್ಕೆ ತಂದರು. ಕೃಷಿಕರಾಗಿರುವ ಕುಟುಂಬವು ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಘಟನೆಯ ಬಳಿಕ ನಿರಂತರ ಅವಮಾನವನ್ನು ಎದುರಿಸುತ್ತಿದ್ದಾರೆ. ಇದನ್ನು ಪರಿಗಣಿಸಿ ಮಗು ಅಥವಾ ಮಗುವಿನ ತಂದೆಯ ಮೂಲಕ ಪಾವತಿಗಳನ್ನು ಮಾಡುವ ಬದಲು ಶಾಲೆಗೆ ನೇರವಾಗಿ ಪಾವತಿ ಮಾಡುವಂತೆ ರಾಜ್ಯಕ್ಕೆ ನಿರ್ದೇಶನ ನೀಡಬೇಕೆಂದು ಫರಾಸತ್ ನ್ಯಾಯಾಲಯವನ್ನು ಕೋರಿದರು.
ದಸರಾ ಮೊದಲ ದಿನವೇ ಕಾವೇರಿ ಆರತಿ, ನದಿ ಮಧ್ಯ ನಿರ್ಮಾಣವಾಗಲಿದೆ ತೇಲುವ ಸೇತುವೆ
ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರದಲ್ಲಿ ದಸರಾದ ಮೊದಲ ದಿನದಂದು ಕಾವೇರಿ ಆರತಿ ಪ್ರಾರಂಭಿಸಲು ಕಾವೇರಿ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಗಂಗಾರತಿ ಮಾದರಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಕಾರ್ಯಕ್ರಮಕ್ಕೆ ಟಿಕೆಟ್ ವ್ಯವಸ್ಥೆ ಮಾಡುವ ಚಿಂತನೆ ಇದ್ದು, ಪ್ರತಿನಿತ್ಯ 8 ರಿಂದ 10 ಸಾವಿರ ಮಂದಿಗೆ ಅವಕಾಶ ಕಲ್ಪಿಸಲಾಗುತ್ತದೆ.
ಸಿಂಧೂ ನದಿ ನೀರಿಗಾಗಿ ಭಾರತಕ್ಕೆ ಪತ್ರ ಬರೆದ ಪಾಕ್ - ಮನವಿಯಲ್ಲೂ ಧಿಮಾಕು?
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಏ. 22ರಂದು ಉಗ್ರವಾದಿಗಳ ದಾಳಿ ನಡೆದ ನಂತರ, ಪಾಕಿಸ್ತಾನದ ಮೇಲೆ ಮುನಿದಿದ್ದ ಭಾರತ, ಸಿಂಧೂ ನದಿ ನೀರು ಒಪ್ಪಂದ ಅಮಾನತುಗೊಳಿಸಿತ್ತು. ಅದರಿಂದ ಪಾಕಿಸ್ತಾನದ ಸಿಂಧೂ ನದಿ ಬಯಲಿನಲ್ಲಿ ಜಲಕ್ಷಾಮ ಉಂಟಾಗಿದೆ. ಹಾಗಾಗಿ, ಅಲ್ಲಿನ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಸಯ್ಯದ್ ಅವರು ಭಾರತಕ್ಕೆ ಪತ್ರ ಬರೆದು ನೀರು ಬಿಡುಗಡೆ ಮಾಡುವಂತೆ ಕೋರಿದ್ದಾರೆ.
ನಿವೃತ್ತಿಯ ಹೊರತಾಗಿಯೂ ರೋಹಿತ್, ಕೊಹ್ಲಿಯ 'ಎ' ಪ್ಲಸ್ ಗುತ್ತಿಗೆ ಅಬಾಧಿತ
ಮುಂಬೈ : ಟೆಸ್ಟ್ ಮತ್ತು ಅಂತರ್ರಾಷ್ಟ್ರೀಯ ಟಿ20 ಪಂದ್ಯಗಳಿಂದ ನಿವೃತ್ತಿ ಹೊಂದಿರುವ ಹೊರತಾಗಿಯೂ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಎ ಪ್ಲಸ್ ಗುತ್ತಿಗೆಗಳನ್ನು ಉಳಿಸಿಕೊಂಡಿರುವುದನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ದೇವಜಿತ್ ಸೈಕಿಯ ಬುಧವಾರ ಖಚಿತಪಡಿಸಿದ್ದಾರೆ. 2024-25ರ ಸಾಲಿನ ಗುತ್ತಿಗೆಗಳಲ್ಲಿ, ಅತ್ಯುನ್ನತ ಎ ಪ್ಲಸ್ ದರ್ಜೆಯಲ್ಲಿ ರೋಹಿತ್, ಕೊಹ್ಲಿ, ಜಸ್ಪ್ರಿತ್ ಬುಮ್ರಾ ಮತ್ತು ರವೀಂದ್ರ ಜಡೇಜರನ್ನು ಉಳಿಸಿಕೊಳ್ಳಲಾಗಿದೆ. ‘‘ಅಂತರ್ರಾಷ್ಟ್ರೀಯ ಟಿ20 ಮತ್ತು ಟೆಸ್ಟ್ಗಳಿಂದ ನಿವೃತ್ತಿ ಹೊಂದಿದ ಹೊರತಾಗಿಯೂ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರ ಎ ಪ್ಲಸ್ ದರ್ಜೆಯ ಗುತ್ತಿಗೆಗಳು ಮುಂದುವರಿಯಲಿವೆ. ಅವರು ಈಗಲೂ ಭಾರತೀಯ ಕ್ರಿಕೆಟ್ ತಂಡದ ಭಾಗವಾಗಿದ್ದಾರೆ. ಅವರು ಎ ಪ್ಲಸ್ ದರ್ಜೆಯ ಗುತ್ತಿಗೆಯ ಎಲ್ಲಾ ಸೌಲಭ್ಯಗಳನ್ನು ಪಡೆಯಲಿದ್ದಾರೆ’’ ಎಂದು ಎಎನ್ಐ ಜೊತೆಗೆ ಮಾತನಾಡಿದ ಸೈಕಿಯ ಹೇಳಿದರು. ವಿರಾಟ್ ಕೊಹ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಮುನ್ನ, ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಕೋರಿದ್ದಾರೆ. ಅವರು 14 ವರ್ಷಗಳ ಕ್ರೀಡಾ ಜೀವನದ ಅವಧಿಯಲ್ಲಿ 123 ಪಂದ್ಯಗಳಿಂದ 46.85ರ ಸರಾಸರಿಯಲ್ಲಿ 9,230 ರನ್ಗಳನ್ನು ಗಳಿಸಿದ್ದಾರೆ. ಇದರಲ್ಲಿ 30 ಶತಕಗಳು ಮತ್ತು 31 ಅರ್ಧ ಶತಕಗಳಿವೆ. ಅವರ ಗರಿಷ್ಠ ಸ್ಕೋರ್ ಔಟಾಗದೆ 254. ರೋಹಿತ್ ಶರ್ಮಾ ಮೇ 7ರಂದು ಟೆಸ್ಟ್ ಕ್ರಿಕೆಟ್ಗೆ ವಿದಾಯ ಕೋರಿದ್ದಾರೆ. ಅವರು 11 ವರ್ಷಗಳ ತನ್ನ ಕ್ರೀಡಾ ಜೀವನದ ಅವಧಿಯಲ್ಲಿ 67 ಪಂದ್ಯಗಳಿಂದ 40.57ರ ಸರಾಸರಿಯಲ್ಲಿ 4,301 ರನ್ಗಳನ್ನು ಸಂಗ್ರಹಿಸಿದ್ದಾರೆ. ಅದರಲ್ಲಿ 12 ಶತಕಗಳು ಮತ್ತು 18 ಅರ್ಧ ಶತಕಗಳಿವೆ. ಅವರು 2019ರಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ತನ್ನ ಗರಿಷ್ಠ 212 ರನ್ಗಳನ್ನು ಬಾರಿಸಿದ್ದಾರೆ.
ನಾಳೆಯಿಂದ ಬಿಬಿಎಂಪಿ ಬದಲಿಗೆ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ಅಸ್ತಿತ್ವಕ್ಕೆ
ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ-2024 ನಾಳೆಯಿಂದ(ಮೇ 15) ಜಾರಿಯಾಗಲಿದೆ. ಇದರ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಸ್ಥಿತ್ವ ಕಳೆದುಕೊಳ್ಳಲಿದ್ದು, ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಸ್ತಿತ್ವಕ್ಕೆ ಬರಲಿದೆ. ಈ ಕುರಿತು ಬುಧವಾರದಂದು ರಾಜ್ಯ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯ ಅನ್ವಯ ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನು ವಿಸ್ತರಣೆ ಮಾಡಿಕೊಳ್ಳಲು ಅವಕಾಶ ಇದೆ. ಹಾಲಿ 709 ಚದರ ಕಿಲೋ ಮೀಟರ್ನಿಂದ 1 ಸಾವಿರ ಚದರ ಕಿ.ಮೀ ವ್ಯಾಪ್ತಿಗೆ ಬಿಜಿಎವನ್ನು ವಿಸ್ತರಣೆ ಮಾಡಲಾಗುತ್ತಿದೆ. ಈಗಿರುವ ಬಿಬಿಎಂಪಿಯನ್ನು ಜಿಬಿಎ ಹೆಸರಿನೊಂದಿಗೆ ಮೂರು ಪಾಲಿಕೆಗಳನ್ನಾಗಿ ಮಾಡುವ ಸಾಧ್ಯತೆ ಇದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆಯನ್ನಾಗಿ ಈ ಮೂರು ಪಾಲಿಕೆಗಳ ವ್ಯಾಪ್ತಿ ಗ್ರೇಟರ್ ಬೆಂಗಳೂರಿಗೆ ಬರುವುದರಿಂದ ಜಿಬಿಎಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ. ಮೂರು ಪಾಲಿಕೆಗಳಿಗೂ ಆಡಳಿತಾಧಿಕಾರಿ ಅಡಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿದ್ದು, ಬೆಂಗಳೂರು ಅಭಿವೃದ್ಧಿ ಸಚಿವರೇ ಉಪಾಧ್ಯಕ್ಷರಾಗಿರುತ್ತಾರೆ. ತಲಾ 125 ವಾರ್ಡ್ಗಳನ್ನು ಒಳಗೊಂಡ ಮೂರು ನಗರ ಪಾಲಿಕೆ ಜಿಬಿಎದಲ್ಲಿ ಇರಲಿದೆ. ಪ್ರತಿ ಪಾಲಿಕೆಗೂ ಗ್ರೇಟರ್ ಬೆಂಗಳೂರು ಪ್ರದೇಶದ ಗಡಿ ನಿಗದಿ ಮಾಡಲಾಗುತ್ತದೆ. ವಸತಿ ಕಟ್ಟಡಗಳಿಗೆ ಶೇ.50ರಷ್ಟು ಮತ್ತು ವಾಣಿಜ್ಯ ಕಟ್ಟಡಗಳಿಗೆ ಶೇ. 25ರಷ್ಟು ಆಸ್ತಿ ತೆರಿಗೆಯಲ್ಲಿ ಕಡಿತ ತರುವ ಸಾಧ್ಯತೆ ಎಂದು ವಿಶ್ಲೇಷಿಸಲಾಗಿದೆ.
ಉಪ್ಪಿನಂಗಡಿ| ಅರಫಾ ವಿದ್ಯಾಸಂಸ್ಥೆಯಲ್ಲಿ ಕ್ಯಾಂಬ್ರಿಜ್ ವಿಶ್ವವಿದ್ಯಾನಿಲಯದ ಪಠ್ಯಕ್ರಮ ಆರಂಭ
ಉಪ್ಪಿನಂಗಡಿ: ಇಲ್ಲಿನ ಹಳೇಗೇಟು ಬಳಿ ಕಳೆದ 23 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಅರಫಾ ವಿದ್ಯಾ ಸಂಸ್ಥೆಯಲ್ಲಿ ಈ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳಿಗೆ ಕ್ಯಾಂಬ್ರಿಜ್ ವಿಶ್ವವಿದ್ಯಾನಿಲಯದ ಸಿಲೆಬಸ್ (ಪಠ್ಯಕ್ರಮ) ಹಾಗೂ ಅರೇಬಿಕ್ ಶಿಕ್ಷಣವನ್ನು ಮದೀನ ವಿಶ್ವವಿದ್ಯಾನಿಲಯದ ಪಠ್ಯಕ್ರಮದಂತೆ ಅಂತರಾಷ್ಟ್ರೀಯ ಮಟ್ಟದ ಆಟಿಕೆ ಮತ್ತು ನೂತನ ಕ್ಲಾಸ್ ರೂಂ ಒಳಗೊಂಡಂತೆ ವಿವಿಧ ಶೈಕ್ಷಣಿಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಅರಫಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಶಫೀಕ್ ಅರಫಾ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಮಾತನಾಡಿದ ಅವರು, 23 ವರ್ಷದ ಹಿಂದೆ ಉಪ್ಪಿನಂಗಡಿ ಹಾಗೂ ಪರಿಸರದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶ ದೊಂದಿಗೆ ಸಿದ್ದಿಕ್ ಹಾಜಿ ಅರಫಾರವರ ಕನಸಿನಂತೆ ಸಂಸ್ಥೆ ಆರಂಭಗೊಂಡು ಎತ್ತರಕ್ಕೆ ಬೆಳೆದು ನಿಂತಿದ್ದು, ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಶವನ್ನು ಪಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ರಾಬಿಯಾ 602 ಅಂಕಗಳನ್ನು ಪಡೆದು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾಳೆ. ಶೇಕಡಾ 90ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶವನ್ನು ಸಂಸ್ಥೆಯು ಹೊಂದಿದೆ. ಇದೀಗ ಒನ್ನೆಸ್ ಸ್ಕೂಲ್ ಸಹಭಾಗಿತ್ವದಲ್ಲಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದು, ಸಂಸ್ಥೆಯಲ್ಲಿ ಅರೇಬಿಕ್ ಪಠ್ಯಕ್ರಮ ವನ್ನೂ ಅಳವಡಿಸಲಾಗಿದೆ. ವಿವಿಧ ಸಾಂಸ್ಕೃತಿಕ, ವಿಜ್ಞಾನ, ಕ್ರೀಡೆಗೆ ಮಕ್ಕಳನ್ನು ಪ್ರೇರೇಪಿಸುತ್ತಿದ್ದೇವೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ನಝೀರ್ ಮಠ, ಕೆ.ಎಂ. ನೌಶಾದ್, ಹಮೀದ್ ಭಾರತ್, ಶರೀಕ್ ಅರಫಾ ಉಪಸ್ಥಿತರಿದ್ದರು.
ಯಾದಗಿರಿ | ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಮಾವನಿಂದಲೇ ಅಳಿಯನ ಕೊಲೆ
ಯಾದಗಿರಿ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅಳಿಯನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಶಾಖಾಪುರ(ಎಸ್.ಕೆ) ಗ್ರಾಮದಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮಣ ಚಿಗರಿಹಾಳ (28) ಹಾಗೂ ಆರೋಪಿಯನ್ನು ಮಾವ ಮಾನಪ್ಪ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್, ಡಿವೈಎಸ್ಪಿ ಜಾವೀದ್ ಇನಾಮದಾರ್ ಪಿಎಸೈ ಅಮೋಜ್ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಾನಪ್ಪನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಕಸಾಪಕ್ಕೆ ನೈತಿಕ ಶಕ್ತಿ ತುಂಬಿದವರು : ಮಹೇಶ ಜೋಶಿ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ಗೆ ನೈತಿ ಶಕ್ತಿ ತುಂಬಿದವರು ಪ್ರೊ.ಜಿ.ಎಸ್. ಸಿದ್ದಲಿಂಗಯ್ಯ ಎಂದು ಕಸಾಪದ ಅಧ್ಯಕ್ಷ ಡಾ.ಮಹೇಶ್ ಜೋಶಿ ಬಣ್ಣಿಸಿದ್ದಾರೆ. ಬುಧವಾರ ನಗರದ ಚಾಮರಾಜಪೇಟೆಯಲ್ಲಿರುವ ಕಸಾಪದ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ಆಯೋಜಿಸಿದ್ದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿ.ಎಸ್.ಸಿದ್ದಲಿಂಗಯ್ಯ ಅವರು ಕಸಾಪದ ಅಧಿಕಾರವಹಿಸಿಕೊಂಡಾಗ ಸಂದಿಗ್ಧ ಸನ್ನಿವೇಶದಲ್ಲಿತ್ತು. ಮೊದಲ ಸಲ ಸರಕಾರದ ಆಡಳಿತಾಧಿಕಾರಿಗಳನ್ನು ಕಂಡ ಮೇಲೆ ಪರಿಷತ್ ಮೊದಲಿನಂತೆ ಮುಂದುವರಿಯುವುದೇ? ಎನ್ನುವ ಆತಂಕ ಎಲ್ಲರನ್ನೂ ಕಾಡುತ್ತಿತ್ತು ಎಂದರು. ಅಂತಹ ಸನ್ನಿವೇಶದಲ್ಲಿ ಅಧಿಕಾರ ಸ್ವೀಕರಿಸಿದ ಜಿ.ಎಸ್. ಸಿದ್ದಲಿಂಗಯ್ಯ ಅವರು ‘ನಾನು ಈ ಕ್ಷಣದವರೆಗೂ ಶುದ್ಧ ವ್ಯಕ್ತಿಯಾಗಿ ನಡೆದುಕೊಂಡು ಬಂದಿದ್ದೇನೆ. ಆ ದೇವರೇ ಬಂದರೂ ನನ್ನನ್ನು ಭ್ರಷ್ಟನನ್ನಾಗಿಸಲಾರ’ ಎಂಬ ಘೋಷಣೆ ಮಾಡಿದ್ದಲ್ಲದೆ, ಹಾಗೇ ನಡೆದು ಕೊಂಡರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಿಡುಮಾಮಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ನಾಟಕ ಅಕಾಡಮಿ ಅಧ್ಯಕ್ಷ ಕೆ.ವಿ.ನಾಗರಾಜ ಮೂರ್ತಿ, ಬರಹಗಾರ ಪ್ರೊ.ಕೆ.ಇ.ರಾಧಾಕೃಷ್ಣ, ಹಿರಿಯ ಸಾಹಿತಿ ಡಾ.ಗೊರು.ಚನ್ನಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗ ನೇ.ಭ.ರಾಮಲಿಂಗ ಶೆಟ್ಟಿ, ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು, ಗೌರವ ಕಾರ್ಯದರ್ಶಿ ಡಾ.ಪದ್ಮಿನಿ ನಾಗರಾಜು ಮತ್ತಿತರರು ಹಾಜರಿದ್ದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳ ಬಂಧನ, ಒಟ್ಟು ಬಂಧಿತರ ಸಂಖ್ಯೆ 11ಕ್ಕೆ ಏರಿಕೆ
ಮಂಗಳೂರು ಸಿಸಿಬಿ ಪೊಲೀಸರು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳಾದ ಅಜರುದ್ದೀನ್, ಅಬ್ದುಲ್ ಖಾದರ್ ಮತ್ತು ನೌಷದ್ನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ 11 ಜನರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಬಂಧಿತ ಆರೋಪಿಗಳ ಪೈಕಿ ಕೆಲವರ ವಿರುದ್ಧ ಈ ಹಿಂದೆ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ಕರ್ತವ್ಯದಲ್ಲಿರುವಾಗ ಯೋಧ ಮೃತಪಟ್ಟರೆ ‘ಯುದ್ಧದಲ್ಲಿ ಸಂಭವಿಸಿದ ಸಾವು’ ಎಂದು ಪರಿಗಣಿಸಲಾಗದು: ಬಿಹಾರ ಸರಕಾರ
ಪಾಟ್ನಾ: ಕರ್ತವ್ಯದಲ್ಲಿರುವಾಗ ಯೋಧ ಮೃತಪಟ್ಟರೆ, ಅದನ್ನು ‘ಯುದ್ಧದಲ್ಲಿ ಸಂಭವಿಸಿದ ಸಾವು’ ಎಂದು ಪರಿಗಣಿಸಲಾಗದು ಎಂದು ಬಿಹಾರ ಸರಕಾರ ಬುಧವಾರ ಸ್ಪಷ್ಟಪಡಿಸಿದೆ. ಸಿವಾನ್ ನಿವಾಸಿಯಾಗಿದ್ದ ರಾಮ್ ಬಾಬು ಸಿಂಗ್ ಜಮ್ಮು ಹಾಗೂ ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದರು. ಆದರೆ, ಅವರು ಗಡಿ ಭದ್ರತಾ ಪಡೆಯೊಂದಿಗೆ ಇರಲಿಲ್ಲ. ಆದುದರಿಂದ ಅವರ ಸಾವನ್ನು ‘ಯುದ್ಧದಿಂದ ಸಂಭವಿಸಿದ ಸಾವು’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅದು ಹೇಳಿದೆ. ಈ ಹಿಂದೆ ಮುಖ್ಯಮಂತ್ರಿ ಕಚೇರಿ ರಾಮ್ ಬಾಬು ಸಿಂಗ್ ಅವರನ್ನು ‘‘ಬಿಎಸ್ಎಫ್ ಯೋಧ’’ ಎಂದು ಕರೆದಿತ್ತು. ಅಲ್ಲದೆ, ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿತ್ತು. ಗಾಯಗಳಿಂದ ಕಳೆದ ವಾರ ಸಾವನ್ನಪ್ಪಿದ ರಾಮ್ ಬಾಬು ಸಿಂಗ್ ಅವರನ್ನು ‘ಹುತಾತ್ಮ’ ಎಂದು ಅದು ಕರೆದಿತ್ತು. ಹೆಸರು ಹೇಳಲಿಚ್ಛಿಸದ ಹಿರಿಯ ಅಧಿಕಾರಿಯೊಬ್ಬರು, ‘‘ನಾವು ನಿನ್ನೆ ರಾತ್ರಿ ಸೇನೆಯಿಂದ ಪತ್ರ ಸ್ವೀಕರಿಸಿದ್ದೇವೆ. ಅದರಲ್ಲಿ ರಾಮ್ ಬಾಬು ಸಿಂಗ್ ಸೇನೆಯಲ್ಲಿದ್ದ ಎಂದು ತಿಳಿಸಲಾಗಿದೆ. ಅಲ್ಲದೆ, ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದರಿಂದ ಅವರ ಸಾವನ್ನ ಯುದ್ಧದಿಂದ ಸಂಭವಿಸಿದ ಸಾವು ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಲಾಗಿದೆ’’ ಎಂದಿದ್ದಾರೆ. ರಾಮ್ ಬಾಬು ಸಿಂಗ್ ಅವರ ಮೃತದೇಹ ಬುಧವಾರ ಬೆಳಗ್ಗೆ ಪಾಟ್ನಾ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಅಲ್ಲಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಆದರೆ, ಹುತಾತ್ಮ ಯೋಧರಿಗೆ ನೀಡುವ ಗೌರವ ರಕ್ಷೆ ನೀಡಿಲ್ಲ. ವಿಮಾನ ನಿಲ್ದಾಣದಲ್ಲಿ ಪ್ರತಿಪಕ್ಷದ ನಾಯಕ ತೇಜಸ್ವಿ ಯಾದವ್ ಉಪಸ್ಥಿತರಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘‘ನಿನ್ನೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಕ್ಸ್ನ ಪೋಸ್ಟ್ನಲ್ಲಿ ರಾಮ್ ಬಾಬು ಸಿಂಗ್ ಬಿಎಸ್ಎಫ್ ಯೋಧ ಎಂದು ಹೇಳಿದ್ದರು. ಈಗ ಅವರು ಸೇನೆಯಲ್ಲಿದ್ದರು ಎಂದು ತಿಳಿದು ಬಂದಿದೆ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಅವರ ಈ ಗೊಂದಲ ವಿಷಾದಕರ. ಆದರೂ ಸಿಂಗ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಅವರು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ’’ ಎಂದಿದ್ದಾರೆ.
ಕೆಆರ್ಎಸ್ನಲ್ಲಿ ಶಾಶ್ವತವಾಗಿ ‘ಕಾವೇರಿ ಆರತಿ’ : ವಿ.ರಾಮ್ ಪ್ರಸಾತ್ ಮನೋಹರ್
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ ಕೆಆರ್ಎಸ್ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ-ಪ್ರವಾಸೋದ್ಯಮ ಕಾರ್ಯಕ್ರಮವಾಗಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಹಾಗೂ ಕಾವೇರಿ ಆರತಿ ಸಮಿತಿಯ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದರು. ಬುಧವಾರ ನಗರದಲ್ಲಿರುವ ಬೆಂಗಳೂರು ಜಲಮಂಡಳಿ ಕಚೇರಿಯ ಸಭಾಂಗಣದಲ್ಲಿ ಕಾವೇರಿ ಆರತಿ ಕುರಿತಂತೆ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಮೊದಲ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾವೇರಿ ಆರತಿಯನ್ನು ದಸರಾ ಮೊದಲ ದಿನ (ಅ.2) ಆರಂಭಿಸುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಂಘಟಿತವಾಗಿ ಕಾರ್ಯನಿರ್ವಹಿಸಲಿದ್ದೇವೆ. ಉಪ ಮುಖ್ಯಮಂತ್ರಿಯ ನಿರ್ದೇಶನದಂತೆ ದಸರಾ ಸಂದರ್ಭದಲ್ಲಿ ಪ್ರತಿನಿತ್ಯ ಮತ್ತು ನಂತರದ ದಿನಗಳಲ್ಲಿ ವಾರಕ್ಕೆ ಮೂರು ದಿನ ಶುಕ್ರವಾರ, ಶನಿವಾರ ಹಾಗೂ ರವಿವಾರ ಕಾವೇರಿ ಆರತಿ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಹೇಳಿದರು. ನಾಡಿಗೆ ಅನ್ನ, ನೀರು ನೀಡುವ ಕಾವೇರಿ ತಾಯಿ ಭಾವನಾತ್ಮಕ ವಿಚಾರ, ಇದರ ಜೊತೆಯಲ್ಲಿ ನಾಡಿನ ಸಾಂಸ್ಕೃತಿಕ, ಪ್ರವಾಸೋದ್ಯಮ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತದೆ. ಸ್ಥಳೀಯರಿಗೆ ಉದ್ಯೋಗಕ್ಕೂ ಅವಕಾಶ ಕಲ್ಪಿಸುವುದಕ್ಕೆ ಆದ್ಯತೆ ನೀಡಬೇಕಾಗಿದೆ. ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾವೇರಿ ಆರತಿಗೆ 92ಕೋಟಿ ರೂ. ವೆಚ್ಚ ಮಾಡಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಆರತಿಗೆ ಬರುವವರಿಗೆ ಮೂಲ ಸೌಕರ್ಯ, ರಸ್ತೆಗಳ ಅಭಿವೃದ್ಧಿ, ಲೇಸರ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದರು. ನದಿ ಮಧ್ಯೆ ತೇಲುವ ವೇದಿಕೆ: ಕಾವೇರಿ ಆರತಿಗೆ ಕೆಆರ್ಎಸ್ ಅಣೆಕಟ್ಟಿನ ಬೃಂದಾವನದಲ್ಲಿರುವ ಜಾಗದಲ್ಲಿ ನದಿ ಮಧ್ಯೆ ತೇಲುವ ಸೇತುವೆ ರಚಿಸುವ ನಿಟ್ಟಿನಲ್ಲಿ ವಾಸ್ತುಶಿಲ್ಪಿಗಳಿಗೆ ತಿಳಿಸಲಾಗಿದೆ. ಸುತ್ತಲೂ ಜನರು ಕುಳಿತು ನೋಡಲು ವಿವಿಧ ಅಂತಸ್ತಿನ ಗ್ಯಾಲರಿ ಸಿದ್ಧಪಡಿಸಲಾಗುವುದು. ಗ್ಯಾಲರಿ ಕೆಳಗೆ ಶೌಚಾಲಯ ಮತ್ತು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಜತೆಗೆ ಆಹಾರದ ವ್ಯವಸ್ಥೆಗೆ ಅಗತ್ಯವಿರುವ ಸ್ಟಾಲ್ಗಳನ್ನು ನಿರ್ಮಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಸಂಜೆ 6 ರಿಂದ 6.30ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ, 6.30 ರಿಂದ 7 ಗಂಟೆಯವರೆಗೆ ಕಾವೇರಿ ಆರತಿ, ಬಳಿಕ ದೊಡ್ಡ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ, ಸಂಗೀತ ಕಾರಂಜಿ, ಲೇಸರ್ ಪ್ರದರ್ಶನ, ಪಟಾಕಿ ಪ್ರದರ್ಶನಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಗಿದೆ. ಉಪ ಮುಖ್ಯಮಂತ್ರಿ ಜತೆ ಚರ್ಚಿಸಿ ಇದನ್ನು ಅಂತಿಮಗೊಳಿಸಲಾಗುವುದು ಎಂದು ರಾಮ್ ಪ್ರಸಾತ್ ಮನೋಹರ್ ಹೇಳಿದರು. ಸಾಂಸ್ಕೃತಿಕ ಕಾರ್ಯಕಮದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಇದರ ಜತೆಗೆ ಸ್ಥಳೀಯ ಗುಡಿ ಕೈಗಾರಿಕೆಗಳು, ಸಾವಯವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಹೊಟೇಲ್ ಉದ್ಯಮದ ಬೆಳವಣಿಗೆಗೂ ಯೋಜನೆ ರೂಪಿಸಲಾಗುತ್ತದೆ. ಒಟ್ಟಾರೆ ಕಾವೇರಿ ಆರತಿಯನ್ನು ಹೊಸ ಪ್ರಯೋಗವಾಗಿ ವಿಭಿನ್ನತೆ ಮತ್ತು ವಿಜೃಂಬಣೆಯಿಂದ ಜನಪರ ಕಾರ್ಯಕ್ರಮವಾಗಿ ರೂಪಿಸಲಾಗುವುದು ಎಂದು ಅವರು ತಿಳಿಸಿದರು. ಟಿಕೆಟಿಂಗ್ ವ್ಯವಸ್ಥೆ: ಕಾವೇರಿ ಆರತಿಯನ್ನು ಶಾಶ್ವತವಾಗಿ ಆಯೋಜಿಸುತ್ತಿರುವುದರಿಂದ ಸಾಕಷ್ಟು ವೆಚ್ಚ ಮಾಡಬೇಕಾಗುತ್ತದೆ. ಹೀಗಾಗಿ ಟಿಕೆಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಈ ಕುರಿತು ಉಪಮುಖ್ಯಮಂತ್ರಿ ಜತೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಇದರ ಜತೆಗೆ ಒಂದು ಪ್ರದೇಶದಲ್ಲಿ ಜನರು ಉಚಿತವಾಗಿಯೂ ಕಾವೇರಿ ಆರತಿ ವೀಕ್ಷಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದರು. ಕಾವೇರಿ ಆರತಿ ವೀಕ್ಷಿಸಲು ಯಾವುದೇ ಸಮಸ್ಯೆಯಾಗದಂತೆ ಪ್ರತಿ ದಿನ 8 ರಿಂದ 10 ಸಾವಿರ ಮಂದಿ ಕುಳಿತು ನೋಡಲು ವ್ಯವಸ್ಥೆ ಮಾಡಲಾಗುವುದು. ಆರಂಭಿಕವಾಗಿ ಮಹಾಕುಂಭ ಮೇಳದಲ್ಲಿ ಮಾಡಿದಂತೆ ಟೆಂಟ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಯೋಚಿಸಲಾಗಿದೆ. ಹಂತ ಹಂತವಾಗಿ ಗ್ಯಾಲರಿಯನ್ನು ವಿಸ್ತರಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಅವರು ಹೇಳಿದರು. ವಿಶೇಷ ಪ್ರವಾಸೋದ್ಯಮ ಪ್ಯಾಕೇಜ್: ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಕಾವೇರಿ ಆರತಿ ಕೇವಲ ಒಂದು ಕಾರ್ಯಕ್ರಮವಾಗಿ ಮಾತ್ರ ನಡೆಯುವುದಿಲ್ಲ. ಬದಲಾಗಿ ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿರಲಿದೆ. ಅದಕ್ಕಾಗಿ ಧಾರ್ಮಿಕ, ಸಾಂಸ್ಕೃತಿಕ, ಪರಿಸರ, ಅರಣ್ಯ ಮತ್ತಿತರ ಅಂಶಗಳನ್ನೊಳಗೊಂಡ ವಿಶೇಷ ಪ್ರವಾಸೋದ್ಯಮ ಪ್ಯಾಕೇಜ್ ರೂಪಿಸುವಂತೆ ಉಪಮಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ. ಈ ಕುರಿತು ಪ್ರವಾಸೋದ್ಯಮ ಇಲಾಖೆ ಜತೆ ಚರ್ಚಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮಂಡ್ಯ ಜಿಲ್ಲಾಧಿಕಾರಿ, ಕಾವೇರಿ ನೀರಾವರಿ ನಿಗಮ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಮಂದಿನ ಸಭೆಯನ್ನು ಮಂಡ್ಯದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.
ಕಲಬುರಗಿ | ಲೇಖಕಿ ಡಾ.ತಮಿಳು ಸೆಲ್ವಿಗೆ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ
ಕಲಬುರಗಿ: ಸಾಂಸ್ಕೃತಿಕ ಪ್ರತಿಷ್ಠಾನ, ಚೆನ್ನೈನ ಮದ್ರಾಸ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಹಿರಿಯ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥರಾಗಿರುವ ಕವಿ, ಡಾ.ತಮಿಳು ಸೆಲ್ವಿ ಅವರ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ ಪ್ರೊ.ಎಚ್.ಟಿ. ಪೋತೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2025ನೇ ಸಾಲಿನ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ‘ಅವರ ನಾನು ಅವಳಲ್ಲ ಅವನು’ ಅನುವಾದಿತ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಶ್ರೇಷ್ಠ ಅನುವಾದಕಿ ಪ್ರಶಸ್ತಿ ಸೇರಿದಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ತಮಿಳು ನಾಡಿನ ಶ್ರೇಷ್ಠ ಲೇಖಕಿ ಪ್ರಶಸ್ತಿಯೂ ಸೇರಿದಂತೆ ಅವರ ಅನೇಕ ಕೃತಿಗಳಿಗೆ ಪ್ರಶಸ್ತಿ ಗೌರವಗಳು ಸಂದಿವೆ. 2025 ಜೂ.5 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ವಡಿ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಪ್ರಶಸ್ತಿಯು 10,000 ರೂ. ನಗದು ಪ್ರಶಸ್ತಿ ಫಲಕ ಶಾಲು ಸನ್ಮಾನ ಹೊಂದಿರುತ್ತದೆ. ಪ್ರತಿಷ್ಠಾನದ ಅಧ್ಯಕ್ಷ ಡಾ.ವಸಂತ ನಾಶಿ, ಡಾ. ಸಂತೋಷಕುಮಾರ ಕಂಬಾರ, ಡಾ. ಹಣಮಂತ ಮೇಲಕೇರಿ ಸಭೆಯಲ್ಲಿ ಹಾಜರಿದರು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಶ್ರೀಶೈಲ ನಾಗರಾಳ ಮತ್ತು ಕಾರ್ಯದರ್ಶಿ ಡಾ. ಎಂ.ಬಿ. ಕಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ಜಂಟಿಯಾಗಿ ತಿಳಿಸಿದ್ದಾರೆ.
ರಾಷ್ಟ್ರೀಯ ಭದ್ರತೆಯ ಕುರಿತು ಸರಕಾರವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ: ದಿಲ್ಲಿ ಸಿಎಂ
ಹೊಸದಿಲ್ಲಿ: ಆಮ್ ಆದ್ಮಿ ಪಾರ್ಟಿ(ಆಪ್)ಯನ್ನು ಬುಧವಾರ ತರಾಟೆಗೆತ್ತಿಕೊಂಡ ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ರಾಷ್ಟ್ರೀಯ ಭದ್ರತೆಯ ಕುರಿತು ಸರಕಾರವನ್ನು ಅಥವಾ ಸಶಸ್ತ್ರ ಪಡೆಗಳನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದರು. ತಂದೆಯೋರ್ವ ತನ್ನ ದೇಶ,ತನ್ನ ಕುಟುಂಬ ಮತ್ತು 140 ಕೋಟಿ ಭಾರತೀಯರ ಬಗ್ಗೆ ಯೋಚಿಸಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದರು. ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗುಪ್ತಾ, ತುರ್ತು ಪರಿಸ್ಥಿತಿ ಎದುರಾದಾಗ ದೇಶದ ಹಿತಾಸಕ್ತಿಗಳಿಗೆ ಅನುಗುಣವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಮತ್ತು ಇಡೀ ದೇಶವೇ ಸಶಸ್ತ್ರ ಪಡೆಗಳೊಂದಿಗೆ ನಿಂತಿದೆ ಎಂದು ಹೇಳಿದರು. ಪಾಕಿಸ್ತಾನದ ಜೊತೆ ಭಾರತದ ಕದನ ವಿರಾಮ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವನ್ನು ಟೀಕಿಸುತ್ತಿರುವ ಆಪ್, ಈ ಬೆಳವಣಿಗೆಗೆ ಕಾರಣವೇನು ಎಂದು ಅಚ್ಚರಿ ವ್ಯಕ್ತಪಡಿಸಿತ್ತಲ್ಲದೆ, ಪಹಲ್ಗಾಮ್ ದಾಳಿಯಲ್ಲಿ ಮೃತರ ಕುಟುಂಬಗಳಿಗೆ ನಿಜವಾಗಿಯೂ ನ್ಯಾಯ ದೊರಕಿದೆಯೇ ಎಂದು ಪ್ರಶ್ನಿಸಿತ್ತು. ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತುಕೊಂಡು ಟವಿಯನ್ನು ನೋಡುತ್ತ ಯಾರೂ ಏನು ಬೇಕಾದರೂ ಹೇಳಬಹುದು. ತಂದೆಯೋರ್ವ ತನ್ನ ದೇಶ, ಕುಟುಂಬ ಮತ್ತು 140 ಕೋಟಿ ಭಾರತೀಯರ ಬಗ್ಗೆ ಯೋಚಿಸಬೇಕಾಗುತ್ತದೆ. ಕೇವಲ ಹೇಳಿಕೆಗಳನ್ನು ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಸರಕಾರವನ್ನು ಅಥವಾ ಸಶಸ್ತ್ರ ಪಡೆಗಳನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಗುಪ್ತಾ ಪ್ರತಿಪಾದಿಸಿದರು.
ಉತ್ತರ ಪ್ರದೇಶದಲ್ಲಿ 3,706 ಕೋಟಿ ರೂ.ಗಳ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ ಕೇಂದ್ರ ಸಂಪುಟದ ಅನುಮೋದನೆ
ಹೊಸದಿಲ್ಲಿ: ಕೇಂದ್ರ ಸಂಪುಟವು ಭಾರತದ ಆರನೇ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ ಬುಧವಾರ ಅನುಮೋದನೆಯನ್ನು ನೀಡಿದೆ. 3,706 ಕೋಟಿ ರೂ.ಗಳ ಈ ಯೋಜನೆಯನ್ನು ಎಚ್ಸಿಎಲ್ ಮತ್ತು ಫಾಕ್ಸ್ಕಾನ್ ನಡುವೆ ಜಂಟಿ ಉದ್ಯಮವಾಗಿ ಉತ್ತರ ಪ್ರದೇಶದ ಜೇವರ್ನಲ್ಲಿ ಸ್ಥಾಪಿಸಲಾಗುವುದು. ಸ್ಥಾವರವು 2017ರಿಂದ ಉತ್ಪಾದನೆಯನ್ನು ಆರಂಭಿಸಲಿದ್ದು,ಮೊಬೈಲ್ ಫೋನ್ಗಳು,ಲ್ಯಾಪ್ ಟಾಪ್ಗಳು,ಆಟೊಮೊಬೈಲ್ಗಳು ಮತ್ತು ಪರ್ಸನಲ್ ಕಂಪ್ಯೂಟರ್(ಪಿಸಿ)ಗಳಿಗಾಗಿ ಡಿಸ್ ಪ್ಲೇ ಡ್ರೈವರ್ ಚಿಪ್ ಗಳನ್ನು ತಯಾರಿಸಲಿದೆ. ಸ್ಥಾವರವನ್ನು ಮಾಸಿಕ 20,000ಗಳಷ್ಟು ವೇಫರ್ ಗಳಿಗಾಗಿ ವಿನ್ಯಾಸಗೊಳಿಸಲಾಗಿದ್ದು,ಇದು ಸೆಮಿಕಂಡಕ್ಟರ್ ನ ಇಂಟಿಗ್ರೇಟೆಡ್ ಸರ್ಕ್ಯೂಟ್ ಗಳ ಮುಖ್ಯಭಾಗವಾಗಿದೆ. ವಿನ್ಯಾಸದ ಮಾಸಿಕ ಉತ್ಪಾದನಾ ಸಾಮರ್ಥ್ಯವು 36 ಮಿಲಿಯನ್ ಯೂನಿಟ್ ಗಳಾಗಿವೆ ಐದು ಸೆಮಿಕಂಡಕ್ಟರ್ ಘಟಕಗಳು ಈಗಾಗಲೇ ನಿರ್ಮಾಣ ಹಂತದಲ್ಲಿವೆ. ಈಗ ಈ ಆರನೇ ಘಟಕದೊಂದಿಗೆ ವ್ಯೆಹಾತ್ಮಕವಾಗಿ ಮುಖ್ಯವಾಗಿರುವ ಸೆಮಿಕಂಡಕ್ಟರ್ ಉದ್ಯಮವನ್ನು ಅಭಿವೃದ್ಧಿಗೊಳಿಸುವ ನಿಟ್ಟನಲ್ಲಿ ಭಾರತವು ಮುಂದುವರಿಯುತ್ತಿದೆ ಎಂದು ಕೇಂದ್ರ ಸರಕಾರವು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಸೆಮಿಕಂಡಕ್ಟರ್ ಉದ್ಯಮವು ಈಗ ದೇಶಾದ್ಯಂತ ರೂಪುಗೊಳ್ಳುತ್ತಿದೆ, ದೇಶದ ಹಲವಾರು ರಾಜ್ಯಗಳಲ್ಲಿ ವಿಶ್ವದರ್ಜೆಯ ವಿನ್ಯಾಸ ಸೌಲಭ್ಯಗಳು ತಲೆಯೆತ್ತಿವೆ,ರಾಜ್ಯ ಸರಕಾರಗಳು ವಿನ್ಯಾಸ ಸಂಸ್ಥೆಗಳಿಗೆ ಹೆಚ್ಚಿನ ಬೆಂಬಲ ನೀಡುತ್ತಿವೆ ಎಂದೂ ಹೇಳಿಕೆಯು ತಿಳಿಸಿದೆ.
ಬೆಂಗಳೂರು: ಉದ್ದೇಶಿತ ತುಮಕೂರು-ಚಿತ್ರದುರ್ಗ-ದಾವಣಗೆರೆ ಬ್ರಾಡ್ ಗೇಜ್ ರೈಲ್ವೆ ಮಾರ್ಗದಲ್ಲಿ ತಿಮ್ಮರಾಜನಹಳ್ಳಿಯಿಂದ ತಾವರೆಕೆರೆಯ ವರೆಗೆ 498 ಕೋಟಿ ರೂ.ವೆಚ್ಚದ ಕಾಮಗಾರಿಗೆ ಒಪ್ಪಂದ ಏರ್ಪಟ್ಟಿದ್ದು, ಶಿರಾ ಸೇರಿದಂತೆ ನಾಲ್ಕು ಕಡೆಗಳಲ್ಲಿ ನಿಲ್ದಾಣಗಳು ನಿರ್ಮಾಣವಾಗಲಿವೆ ಎಂದು ರಾಜ್ಯ ಸರಕಾರದ ಹೊಸದಿಲ್ಲಿಯ ವಿಶೇಷ ಪ್ರತಿನಿಧಿ ಟಿ.ವಿ.ಜಯಚಂದ್ರ ಹೇಳಿದ್ದಾರೆ. ಬುಧವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಒಟ್ಟು 41 ಕಿ.ಮೀ. ಉದ್ದದ ಈ ಕಾಮಗಾರಿಗೆ ಫರೀದಾಬಾದ್ನ ಮೆಸರ್ಸ್ ಕೆ.ಆರ್.ಸಿ.ಆಲ್ಟಿಸ್ ಜಾಯಿಂಟ್ ವೆಂಚರ್ ಎಂಬ ಏಜೆನ್ಸಿಯೊಂದಿಗೆ ಒಪ್ಪಂದವಾಗಿದ್ದು, ಜೋಗಿಹಳ್ಳಿ, ಚಿಕ್ಕನಹಳ್ಳಿ, ಶಿರಾ ಮತ್ತು ತಾವರೆಕೆರೆಯಲ್ಲಿ ರೈಲ್ವೆ ನಿಲ್ದಾಣಗಳು ನಿರ್ಮಾಣವಾಗಲಿವೆ. ಒಟ್ಟು 11 ದೊಡ್ಡ ಸೇತುವೆಗಳು, 55 ಕಿರುಸೇತುವೆ-ಕಲ್ವರ್ಟ್ಗಳು, 35 ಓವರ್ ಬ್ರಿಜ್ ಹಾಗೂ 35 ಅಂಡರ್ ಬ್ರಿಜ್ಗಳು ಕಾಮಗಾರಿಯ ಭಾಗವಾಗಿರುತ್ತವೆ ಎಂದು ವಿವರಿಸಿದ್ದಾರೆ. ಈ ರೈಲು ಮಾರ್ಗವು ಶಿರಾ ಕ್ಷೇತ್ರದಲ್ಲಿ ಸೀಬಿಯಿಂದ ಆರಂಭವಾಗಿ ಧರ್ಮಪುರದ ಮೂಲಕ 41 ಕಿ.ಮೀ. ಉದ್ದಕ್ಕೆ ಹಾದುಹೋಗುತ್ತದೆ. ಇದರಿಂದ ಶಿರಾ ತಾಲೂಕಿನಲ್ಲಿ ಶೇಂಗಾ, ತೆಂಗಿನಕಾಯಿ, ಅಡಿಕೆ, ಹುಣಸೆ ಹಣ್ಣು, ತರಕಾರಿ ಮತ್ತು ದವಸ ಧಾನ್ಯಗಳನ್ನು ಬೆಳೆಯುವ ರೈತರಿಗೆ ಉತ್ಪನ್ನಗಳ ಸಾಗಣೆ ಹಾಗೂ ವ್ಯಾಪಾರ ವಹಿವಾಟಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಜೊತೆಗೆ, ಈ ಭಾಗದ ಜನಸಾಮಾನ್ಯರಿಗೆ ದಾವಣಗೆರೆ ಮತ್ತು ಬೆಂಗಳೂರಿಗೆ ಹೋಗುವುದು ಇನ್ನಷ್ಟು ಸುಲಭವಾಗುತ್ತದೆ ಎಂದು ಜಯಚಂದ್ರ ಹೇಳಿದ್ದಾರೆ. ಈ ಯೋಜನೆಗೆ ಸಂಬಂಧಿಸಿದಂತೆ ಮುಂದಿನ ಎರಡು ವಾರಗಳಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರೊಂದಿಗೆ ಶಿರಾದಲ್ಲಿ ತಾವು ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಶಿರಾ ಆಸುಪಾಸಿನಲ್ಲಿ ಈಗ ಐದು ರಾಷ್ಟ್ರೀಯ ಹೆದ್ದಾರಿಗಳಿದ್ದು, ಜೊತೆಗೆ ಈ ರೈಲ್ವೆ ಮಾರ್ಗವೂ ಬಳಕೆಗೆ ಸಿದ್ಧಗೊಂಡರೆ ಅತ್ಯುತ್ತಮ ಉತ್ತಮ ಸಂಪರ್ಕ ವ್ಯವಸ್ಥೆ ದೊರೆಯುತ್ತದೆ ಎಂದು ಹೇಳಿದ್ದಾರೆ.
9 ಫೆಲೆಸ್ತೀನಿಯನ್ ಬಂಧಿತರನ್ನು ಬಿಡುಗಡೆಗೊಳಿಸಿದ ಇಸ್ರೇಲ್
ಜೆರುಸಲೇಂ: ಅಕ್ಟೋಬರ್ 2023ರಿಂದ ಗಾಝಾದಲ್ಲಿ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ಸಂದರ್ಭ ಬಂಧಿಸಲ್ಪಟ್ಟಿದ್ದ 9 ಫೆಲೆಸ್ತೀನೀಯರನ್ನು ಇಸ್ರೇಲ್ ಅಧಿಕಾರಿಗಳು ಬುಧವಾರ ಬಿಡುಗಡೆಗೊಳಿಸಿದ್ದಾರೆ. ಕಳೆದ ಸುಮಾರು 18 ತಿಂಗಳಲ್ಲಿ ಆಕ್ರಮಿತ ಪಶ್ಚಿಮದಂಡೆ, ಪೂರ್ವ ಜೆರುಸಲೇಂ ಮತ್ತು ಇಸ್ರೇಲಿನೊಳಗೆ 10,700ಕ್ಕೂ ಅಧಿಕ ಫೆಲೆಸ್ತೀನೀಯರನ್ನು ಇಸ್ರೇಲ್ ಬಂಧಿಸಿದ್ದು ಗಾಝಾದಲ್ಲೇ ಎರಡು ಸಾವಿರಕ್ಕೂ ಅಧಿಕ ಫೆಲೆಸ್ತೀನೀಯರನ್ನು ಬಂಧಿಸಲಾಗಿದೆ ಎಂದು ವಫಾ ಸುದ್ದಿಸಂಸ್ಥೆ ವರದಿ ಮಾಡಿದೆ. ಆದರೆ, ಎಪ್ರಿಲ್ ಅಂತ್ಯದ ವೇಳೆಗೆ ಗಾಝಾ ಪಟ್ಟಿಯ ಸುಮಾರು 1,747 ಕೈದಿಗಳು ತನ್ನ ಜೈಲಿನಲ್ಲಿದ್ದರು ಎಂದು ಇಸ್ರೇಲ್ ನ ಜೈಲು ಪ್ರಾಧಿಕಾರ ಹೇಳಿದೆ. ಬಂಧನದಲ್ಲಿರುವ ಫೆಲೆಸ್ತೀನೀಯರ ವಿರುದ್ಧ ಚಿತ್ರಹಿಂಸೆ, ಆಹಾರ, ನೀರನ್ನು ನೀಡದ ಶಿಕ್ಷೆ, ವೈದ್ಯಕೀಯ ಚಿಕಿತ್ಸೆಯ ನಿರಾಕರಣೆ, ಏಕಾಂತ ಸೆರೆವಾಸ ಮತ್ತಿತರ ದೌರ್ಜನ್ಯ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಬಂಧನದಲ್ಲಿರುವ ಕೈದಿಗಳ ಸ್ಥಿತಿಗತಿಗಳ ಮೇಲ್ವಿಚಾರಣೆ ನಡೆಸುವ ಎರಡು ಸಂಸ್ಥೆಗಳು ಆರೋಪಿಸಿವೆ. 2023ರ ಅಕ್ಟೋಬರ್ ನಿಂದ ಇಸ್ರೇಲಿ ಜೈಲುಗಳಲ್ಲಿ ಕನಿಷ್ಠ 66 ಫೆಲೆಸ್ತೀನಿ ಕೈದಿಗಳು ಸಾವನ್ನಪ್ಪಿದ್ದು ಇವರಲ್ಲಿ 40 ಗಾಝಾ ಪಟ್ಟಿಯ ನಿವಾಸಿಗಳು ಎಂದು ಮೂಲಗಳು ಹೇಳಿವೆ.
ಗಾಝಾ | ಇಸ್ರೇಲ್ ದಾಳಿಯಲ್ಲಿ 22 ಮಕ್ಕಳ ಸಹಿತ 60 ಮೃತ್ಯು
ಗಾಝಾ: ಗಾಝಾದಾದ್ಯಂತ ಬುಧವಾರ ಬೆಳಿಗ್ಗೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಮಕ್ಕಳ ಸಹಿತ 60 ಮಂದಿ ಸಾವನ್ನಪ್ಪಿರುವುದಾಗಿ ಗಾಝಾದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಉತ್ತರ ಗಾಝಾದ ಜಬಾಲಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು 50 ಮಂದಿ ಹಾಗೂ ದಕ್ಷಿಣ ಗಾಝಾದ ಖಾನ್ ಯೂನಿಸ್ ನಗರದಲ್ಲಿ ಇತರ 10 ಮಂದಿ ಸಾವನ್ನಪ್ಪಿದ್ದಾರೆ. ಜಬಾಲಿಯಾದಲ್ಲಿ ಹಲವು ಕಟ್ಟಡಗಳು ಧ್ವಂಸಗೊಂಡಿದ್ದು ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲು ಇಸ್ರೇಲ್ ನ ವೈಮಾನಿಕ ದಾಳಿ ಅಡ್ಡಿಯಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ. ಈ ಮಧ್ಯೆ, ಜಬಾಲಿಯಾ ಹಾಗೂ ಸುತ್ತಮುತ್ತಲು ಹಮಾಸ್ ಗುಂಪಿನ ರಾಕೆಟ್ ಲಾಂಚರ್ ಸಹಿತ ಮೂಲಸೌಕರ್ಯಗಳು ಇರುವ ಮಾಹಿತಿ ದೊರಕಿದ್ದು ಈ ಪ್ರದೇಶದ ನಿವಾಸಿಗಳು ತಕ್ಷಣ ಸ್ಥಳಾಂತರಗೊಳ್ಳಬೇಕೆಂದು ಇಸ್ರೇಲ್ ಮಂಗಳವಾರ ತಡರಾತ್ರಿ ಎಚ್ಚರಿಕೆ ಸಂದೇಶ ರವಾನಿಸಿದೆ ಎಂದು ವರದಿಯಾಗಿದೆ
ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ್
ಬೆಂಗಳೂರು : ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ ತಿಳಿಸಿದ್ದಾರೆ. ಬುಧವಾರ ಕೆಇಆರ್ಸಿ ಮತ್ತು ಬೆಸ್ಕಾಂ ಸಹಯೋಗದಲ್ಲಿ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಗ್ರಾಹಕರ ಕುಂದು-ಕೊರತೆಗಳ ನಿವಾರಣಾ ವೇದಿಕೆಯ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಗ್ರಾಹಕರ ದೂರುಗಳ ನಿರ್ವಹಣೆಗೆ ಕಾರ್ಪೊರೇಟ್ ವ್ಯವಹಾರಗಳ ಮುಖ್ಯ ಪ್ರಧಾನ ವ್ಯವಸ್ಥಾಪಕರನ್ನು ನಿಯೋಜಿಸಲಾಗಿದೆ. ಗ್ರಾಹಕರ ಹಕ್ಕಿಗೆ ಒತ್ತು ನೀಡಿ, ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಸಿದ್ದಪಡಿಸಲು ಬೆಸ್ಕಾಂ ಮುಂದಾಗಿದೆ ಎಂದು ಅವರು ತಿಳಿಸಿದರು. ಕೆಇಆರ್ಸಿ ಆದೇಶದ ಸೂಚನೆ ಮೇರೆಗೆ ಗ್ರಾಹಕರ ಕುಂದು-ಕೊರತೆಗಳ ನಿವಾರಣಾ ವೇದಿಕೆಯನ್ನು ಸ್ಥಾಪಿಸಲಾಗಿದೆ. ಗ್ರಾಹಕರು ದೂರಿಗೆ ತ್ವರಿತವಾಗಿ ಸ್ಪಂದಿಸಿ, ಸೇವೆಯ ಗುಣಮಟ್ಟ ಹೆಚ್ಚಿಸಲು ಅಧಿಕಾರಿಗಳು ಮುಂದಾಗಬೇಕು. ಗ್ರಾಹಕರ ಕುಂದು-ಕೊರತೆಗಳ ನಿವಾರಣಾ ವೇದಿಕೆ (ಸಿಜಿಆರ್ಎಫ್)ಯ ಸ್ಪಷ್ಟ ನಿರ್ದೇಶನದಂತೆ ಗ್ರಾಹಕರು ದೂರುಗಳು ಬಂದಲ್ಲಿ ನಿಗದಿತ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕಿದೆ ಎಂದರು. ಜಿಲ್ಲಾ ಹಂತದ ವೇದಿಕೆಯಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್, ಇಇ ಹಾಗೂ ಸ್ವತಂತ್ರ ಸದಸ್ಯರು ಇರಲಿದ್ದಾರೆ. ಕಾರ್ಪೊರೇಟ್ ಕಚೇರಿಯ ಸಿಜಿಆರ್ಎಫ್ ವೇದಿಕೆಯಲ್ಲಿ ದೂರು ಇತ್ಯರ್ಥವಾಗದಿದ್ದರೆ ಕೆಇಆರ್ಸಿ ವಿದ್ಯುಚ್ಛಕ್ತಿ ಲೋಕಪಾಲರ (ಓಂಬುಡ್ಸ್ ಮನ್) ಬಳಿ ದೂರು ಸಲ್ಲಿಸಿ ನಿಗದಿತ ಕಾಲಮಿತಿಯೊಳಗೆ ಪರಿಹಾರ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕೆಇಆರ್ಸಿಯ ಅಧ್ಯಕ್ಷರೂ ಆದ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ದೂರಿನ ಇತ್ಯರ್ಥದ ಸಂದರ್ಭದಲ್ಲಿ ಗ್ರಾಹಕರಿಗೆ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ನ್ಯಾಯ ಒದಗಿಸಬೇಕು. ಮುಖ್ಯವಾಗಿ ಈ ಪ್ರಕ್ರಿಯೆ ತ್ವರಿತಗತಿಯಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾದರೆ ಕಾರ್ಯಾಗಾರ ಯಶಸ್ವಿಯಾದಂತೆ ಎಂದರು. ಕೆಇಆರ್ಸಿ ಸದಸ್ಯರಾದ (ಕಾನೂನು) ಎಚ್.ಕೆ.ಜಗದೀಶ್ ಮಾತನಾಡಿ, ವಿದ್ಯುಚ್ಛಕ್ತಿ ಅಧಿನಿಯಮ 2003ರ ಸೆಕ್ಷನ್ 42ರ 5 ಮತ್ತು 6ರಲ್ಲಿ ಗ್ರಾಹಕರ ದೂರುಗಳನ್ನು ಸ್ವೀಕರಿಸಿ ನ್ಯಾಯ ಒದಗಿಸಲು ವಿವರಿಸಲಾಗಿದೆ. ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆ ಮತ್ತು ವಿದ್ಯುಚ್ಛಕ್ತಿ ಲೋಕಪಾಲರನ್ನು ಅರೆನ್ಯಾಯಿಕ ವೇದಿಕೆಯಂತೆ ಪರಿಗಣಿಸಲಾಗಿದೆ. ವೇದಿಕೆಗಳ ಕಾರ್ಯವ್ಯಾಪ್ತಿಯನ್ನು ಸುಪ್ರಿಂಕೋರ್ಟ್ ಹಾಗೂ ಹೈಕೋರ್ಟ್ ಸ್ಪಷ್ಟಪಡಿಸಿದೆ ಎಂದರು. ಕಾರ್ಯಾಗಾರದಲ್ಲಿ ಕೆಇಆರ್ಸಿಯ ತಾಂತ್ರಿಕ ನಿರ್ದೇಶಕ ಶ್ರೀನಿವಾಸಪ್ಪ, ನಿವೃತ್ತ ನ್ಯಾಯಾಧೀಶ ಕೃಷ್ಣಯ್ಯ ಹಾಗೂ ಐಎಫ್ ಬಿದರಿ ಅವರು ಅಧಿಕಾರಿಗಳಿಗೆ ಗ್ರಾಹಕರ ಹಕ್ಕುಗಳ ಬಗ್ಗೆ ಇಲಾಖೆ ತಾಂತ್ರಿಕ ವಿಚಾರಗಳು ಹಾಗೂ ಸಾಮಾನ್ಯವಾಗಿ ಎದುರಾಗುತ್ತಿರುವ ದೂರುಗಳ ಬಗ್ಗೆ ವಿವರಿಸಿದರು. ಕೆಇಆರ್ಸಿ ಕಾರ್ಯದರ್ಶಿ ಸಿದ್ದೇಶ್ವರ್, ತಾಂತ್ರಿಕ ನಿರ್ದೇಶಕ ಎಚ್.ಜೆ.ರಮೇಶ್, ಹಣಕಾಸು ವಿಭಾಗದ ನಿರ್ದೇಶಕ ಮಹಾದೇವ, ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕ ಡಾ.ದಯಾನಂದ್, ಗ್ರಾಹಕ ಸಂಬಂಧ ಶಾಖೆಯ ಪ್ರಧಾನ ವ್ಯವಸ್ಥಾಪಕ ರಾಜೋಜಿ ರಾವ್, ನಿಗಮ ವ್ಯವಹಾರಗಳ ಮುಖ್ಯಪ್ರಧಾನ ವ್ಯವಸ್ಥಾಪಕಿ ಪುಷ್ಪಾ ಎಸ್.ಎ. ಉಪಸ್ಥಿತರಿದ್ದರು.
ಭಾರತದ ವಿರುದ್ಧದ ದಾಳಿಯನ್ನು ನವಾಜ್ ಷರೀಫ್ ವಿನ್ಯಾಸಗೊಳಿಸಿದ್ದರು:ಪಾಕಿಸ್ತಾನ ಸಚಿವೆಯ ಹೇಳಿಕೆ
ಇಸ್ಲಾಮಾಬಾದ್: ಭಾರತದ ವಿರುದ್ಧದ ಇತ್ತೀಚಿನ ದಾಳಿಯನ್ನು ಪಕ್ಷದ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ನೇರ ಮೇಲ್ವಿಚಾರಣೆಯಲ್ಲಿ ಪರಿಕಲ್ಪನೆ ಮಾಡಲಾಗಿದೆ ಮತ್ತು ವಿನ್ಯಾಸಗೊಳಿಸಲಾಗಿದೆ ಎಂದು ಆಡಳಿತರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್(ಪಿಎಂಎಲ್-ಎನ್) ಪಕ್ಷದ ಹಿರಿಯ ನಾಯಕರು ಪ್ರತಿಪಾದಿಸಿದ್ದಾರೆ. ಭಾರತದ ಇತ್ತೀಚಿನ ದಾಳಿಗಳಿಗೆ ಪ್ರತಿದಾಳಿಯನ್ನು ರೂಪಿಸುವಲ್ಲಿ ನವಾಜ್ ಷರೀಫ್ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತದ ವಿರುದ್ಧದ ಸಂಪೂರ್ಣ ಕಾರ್ಯಾಚರಣೆಯನ್ನು ಮಾಜಿ ಪ್ರಧಾನಿ ಮತ್ತು ಪಿಎಂಎಲ್-ಎನ್ ಮುಖ್ಯಸ್ಥ ನವಾಜ್ ಷರೀಫ್ ಮೇಲ್ವಿಚಾರಣೆಯಲ್ಲಿ ವಿನ್ಯಾಸಗೊಳಿಸಲಾಗಿದೆ. ಅವರೊಬ್ಬ `ಎ,ಬಿ,ಸಿ,ಡಿ ರೀತಿಯ ನಾಯಕರಲ್ಲ. ಅವರ ಕಾರ್ಯವೇ ಅವರ ಬಗ್ಗೆ ಹೇಳುತ್ತದೆ' ಎಂದು ಪಂಜಾಬ್ ಪ್ರಾಂತೀಯ ಸರಕಾರದ ಮಾಹಿತಿ ಸಚಿವೆ ಅಜ್ಮಾ ಬುಖಾರಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿರುವುದಾಗಿ ವರದಿಯಾಗಿದೆ.
ಜನಾಕ್ರೋಶವನ್ನು ಅಣಕಿಸಲು ಸರಕಾರದ ಸಂಭ್ರಮಾಚರಣೆ: ಆರ್.ಅಶೋಕ್ ಲೇವಡಿ
ಬೆಂಗಳೂರು : ‘ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯಾದ್ಯಂತ ಭುಗಿಲೆದ್ದಿರುವ ಜನಾಕ್ರೋಶವನ್ನ ಅಣಕಿಸುವ ರೀತಿಯಲ್ಲಿ ಸಂಭ್ರಮಾಚರಣೆ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಇಂದಿಲ್ಲಿ ಲೇವಡಿ ಮಾಡಿದ್ದಾರೆ. ಬುಧವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಯಾವ ಸಾಧನೆಗೆ ಈ ಎರಡು ವರ್ಷದ ಸಂಭ್ರಮ? ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ. ಸರಕಾರ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸಂಭ್ರಮಾಚರಣೆ ಮಾಡಲು ಹೊರಟಿದ್ದೀರಿ ಎಂಬ ಹಾಸ್ಯಾಸ್ಪದ, ನಾಚಿಕೆಗೇಡು ಸುದ್ದಿ ಕಣ್ಣಿಗೆ ಬಿತ್ತು. ನಿಮ್ಮ ಸರಕಾರದ 2 ವರ್ಷಗಳಲ್ಲಿ ಏನು ಸಾಧನೆ ಮಾಡಿದೆ ಎಂದು ಈ ಸಂಭ್ರಮಾಚರಣೆ ಮಾಡಲು ಹೊರಟಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ‘ಹಾಲು, ನೀರು, ಕರೆಂಟು, ಪೆಟ್ರೋಲು, ಡಿಸೇಲ್, ಆಸ್ತಿ ತೆರಿಗೆ, ಹೀಗೆ ಎಲ್ಲ ದಿನಬಳಕೆ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆ ಮಾಡಿ ಬಡವರು ಮಧ್ಯಮ ವರ್ಗದ ಜೇಬಿಗೆ ಕತ್ತರಿ ಹಾಕಿದ್ದಕ್ಕೆ ಈ ಸಂಭ್ರಮಾಚರಣೆನಾ?. ಪರಿಶಿಷ್ಟ ಸಮುದಾಯಗಳಿಗೆ ಸೇರಬೇಕಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನ ಲೂಟಿ ಹೊಡೆದಿರುವ ಖುಷಿಗೆ ಸಂಭ್ರಮಾಚರಣೆನಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ನಾಮಕಾವಸ್ತೆ ತನಿಖೆ ಮಾಡಿಸಿ ಬಿ-ರಿಪೋರ್ಟ್ ಹಾಕಿಸಿಕೊಂಡು ಕ್ಲೀನ್ಚೀಟ್ ಪಡೆದ ಸಾಧನೆಗೆ ಈ ಸಂಭ್ರಮಾಚರಣೆನಾ?. ಕಾಂಗ್ರೆಸ್ ಸರಕಾರದ ಕಿರುಕುಳ, ಕಮಿಷನ್ ದಾಹಕ್ಕೆ ಬಲಿಯಾದ ಪ್ರಾಮಾಣಿಕ ಅಧಿಕಾರಿಗಳು ಹಾಗು ಗುತ್ತಿಗೆದಾರರ ಸಾವನ್ನ ಸಂಭ್ರಮಿಸಲು ಸಂಭ್ರಮಾಚರಣೆನಾ?, ಕಳಪೆ ಔಷಧಿ ಪೂರೈಕೆಯಿಂದ 460ಕ್ಕೂ ಹೆಚ್ಚು ಬಾಣಂತಿಯರು ಆಸ್ಪತ್ರೆಯಲ್ಲೇ ತೀರಿಕೊಂಡರಲ್ಲ ಅದಕ್ಕೆ ಸಂಭ್ರಮಾಚರಣೆನಾ? ಎಂದು ಅವರು ಕೇಳಿದ್ದಾರೆ. 24 ತಿಂಗಳಲ್ಲಿ 1600ಕ್ಕು ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರಲ್ಲ ಅದಕ್ಕೆ ಸಂಭ್ರಮಾಚರಣೆನಾ?. ವಕ್ಫ್ ಮಂಡಳಿ ಹೆಸರಿನಲ್ಲಿ ಮಠ, ಮಂದಿರಗಳು, ರೈತರ ಜಮೀನು ಕಬಳಿಸಿದ ಸಾಧನೆಗೆ ಸಂಭ್ರಮಾಚರಣೆನಾ?. ಕೆಪಿಎಸ್ಸಿ ಪರೀಕ್ಷೆಯಲ್ಲಿ ಎಡವಟ್ಟುಗಳು ಮೇಲೆ ಎಡವಟ್ಟುಗಳು ಮಾಡಿ ಲಕ್ಷಾಂತರ ಯುವಕರ ಕನಸು ನುಚ್ಚು ನೂರು ಮಾಡಿ ಅವರ ಭವಿಷ್ಯ ಹಾಳು ಮಾಡಿದ್ದಕ್ಕೆ ಸಂಭ್ರಮಾಚರಣೆನಾ? ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕಾರಣದಿಂದ ನೇಹಾ ಕೊಲೆ ಪ್ರಕರಣದಿಂದ ಹಿಡಿದು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದವರೆಗೆ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ಹಿಂದೂಗಳ ಸರಣಿ ಕೊಲೆ ಬಗ್ಗೆ ಸಂಭ್ರಮಾಚರಣೆನಾ?. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಗಣೇಶನ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸಿದ್ದಕ್ಕೆ ಸಂಭ್ರಮಾಚರಣೆನಾ?. ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂದು ಹೇಳಿ ಪಾಕಿಸ್ತಾನದ ಟಿವಿಗಳಲ್ಲಿ ಮಿಂಚಿದ್ದಕ್ಕೆ ಈ ಸಂಭ್ರಮಾಚರಣೆನಾ? ಎಂದು ಅವರು ಆರೋಪಿಸಿದ್ದಾರೆ.
ಬೆಂಗಳೂರು | ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕೊಲೆ : ಇಬ್ಬರ ಬಂಧನ
ಬೆಂಗಳೂರು : ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಡಿ ಇಬ್ಬರು ಆರೋಪಿಗಳನ್ನು ಇಲ್ಲಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ವೀರಮಣಿ ಹಾಗೂ ಪವನ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮೇ.8 ರಂದು ದಾಸರಹಳ್ಳಿ ಮುಖ್ಯ ರಸ್ತೆಯ ಪಕ್ಕದ ಖಾಲಿ ನಿವೇಶನದಲ್ಲಿ ಮದ್ಯಪಾನ ಮಾಡುತ್ತಿದ್ದ ಆರೋಪಿಗಳು, ಜೊತೆಗಿದ್ದ ಅಜೀಜ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದರು. ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಅಜೀಜ್ ಮೂರು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಜೀಜ್ ಮತ್ತು ಆರೋಪಿಗಳು ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದರು. ಮೇ.8ರಂದು ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುವಾಗ ಮದ್ಯದ ಅಮಲಿನಲ್ಲಿ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಪವನ್ ಎಂಬಾತನ ಮೇಲೆ ಅಜೀಜ್ ಹಲ್ಲೆಗೈದಿದ್ದ. ಇದರಿಂದ ಸಿಟ್ಟಿಗೆದ್ದ ಪವನ್ ಹಾಗೂ ವೀರಮಣಿ, ಮರದ ತುಂಡುಗಳಿಂದ ಅಜೀಜ್ನ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅಜೀಜ್ನನ್ನು ಅಪಘಾತದಲ್ಲಿ ಗಾಯಗೊಂಡಿದ್ದಾನೆ ಎಂದು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೇ.9 ರಂದು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಿ ಸ್ಥಳಿಯರೊಬ್ಬರ ಮಾಹಿತಿ ಆಧರಿಸಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇತ್ತ ಆಸ್ಪತ್ರೆ ವೈದ್ಯರೂ ಸಹ ಅಪಘಾತದಿಂದ ಅಜೀಜ್ನ ಸಾವು ಸಂಭವಿಸಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಮೂರು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಅಜೀಜ್ ಸಾವನ್ನಪ್ಪಿದ್ದ. ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಹತ್ಯೆಯ ವಿಚಾರ ಬಯಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ ಎಂದು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಸಜೀತ್ ವಿ.ಜೆ ಮಾಹಿತಿ ನೀಡಿದ್ದಾರೆ.
Two Good News To Kittur Karnataka : ಹೆದ್ದಾರಿಯು ನವಲಗುಂದ ಪಟ್ಟಣದ ಮಧ್ಯ ಭಾಗದಿಂದ ಹಾದು ಹೋಗುವ ಕಾರಣ ಟ್ರಾಫಿಕ್ ಸಮಸ್ಯೆಗಳಿಂದಾಗಿ ಪಟ್ಟಣಿಗರು ರೋಸಿ ಹೋಗಿದ್ದರು. ನವಲಗುಂದ ಬೈಪಾಸ್ ನಿರ್ಮಾಣ ಸಂಬಂಧ ಈಗಾಗಲೇ ಡಿಪಿಆರ್ ಸಿದ್ಧಗೊಂಡಿದ್ದು, ರಾಜ್ಯ ಸರ್ಕಾರ ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳಿಗೆ ತ್ವರಿತ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.
ಹಮಾಸ್ ಸೋಲದೆ ಗಾಝಾದಲ್ಲಿ ಇಸ್ರೇಲ್ ಕಾರ್ಯಾಚರಣೆ ನಿಲ್ಲುವುದಿಲ್ಲ: ನೆತನ್ಯಾಹು
ಟೆಲ್ಅವೀವ್: ಇನ್ನಷ್ಟು ಒತ್ತೆಯಾಳುಗಳ ಬಿಡುಗಡೆಗೆ ಒಪ್ಪಂದ ಏರ್ಪಟ್ಟರೂ ಗಾಝಾದಲ್ಲಿ ಯುದ್ಧವನ್ನು ನಿಲಿಸುವ ಮಾತೇ ಇಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇಸ್ರೇಲಿ ಪಡೆಗಳು ಹೆಚ್ಚುವರಿ ಬಲ ಪ್ರಯೋಗಿಸಿ ಗಾಝಾವನ್ನು ಪ್ರವೇಶಿಸುವ ಮತ್ತು ಗಾಝಾ ಕಾರ್ಯಾಚರಣೆಯ ಉದ್ದೇಶವನ್ನು ಪೂರ್ಣಗೊಳಿಸುವ ಗುರಿಗೆ ಅತೀ ಸನಿಹದಲ್ಲಿವೆ. ಅಂದರೆ ಹಮಾಸ್ ಅನ್ನು ನಾಶಗೊಳಿಸುವುದು. ಯಾವುದೇ ಒಪ್ಪಂದ ಏರ್ಪಟ್ಟರೂ ಅದು ತಾತ್ಕಾಲಿಕವಾಗಲಿದೆ. ಹೆಚ್ಚು ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವುದಾಗಿ ಹಮಾಸ್ ಹೇಳಿದರೆ ನಾವು ಒತ್ತೆಯಾಳುಗಳನ್ನು ಸ್ವೀಕರಿಸುತ್ತೇವೆ. ಆದರೆ ಯುದ್ಧ ಅಂತ್ಯಗೊಳಿಸುವ ಮಾತೇ ಇಲ್ಲ. ನಿರ್ದಿಷ್ಟ ಅವಧಿಗೆ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಬಹುದು. ಆದರೆ ನಾವು ಕೊನೆಯ ತನಕ ಹೋಗುತ್ತೇವೆ' ಎಂದು ನೆತನ್ಯಾಹು ಹೇಳಿದ್ದಾರೆ.
ಫೇಸ್ಬುಕ್ ಪೋಸ್ಟ್ನಲ್ಲಿ ಪ್ರಧಾನಿ ಅವಹೇಳನ ಆರೋಪ: ಪುತ್ತೂರು ಪುಡಾ ಅಧ್ಯಕ್ಷರಿಂದ ಪ್ರತಿದೂರು
ಪುತ್ತೂರು: ಫೇಸ್ಬುಕ್ ಪೋಸ್ಟ್ನಲ್ಲಿ ಪ್ರಧಾನ ಮಂತ್ರಿಯನ್ನು ಅವಹೇಳನ ಮಾಡಿ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಪುತ್ತೂರು ನಗರಯೋಜನಾ ಪ್ರಾಧಿಕಾರ(ಪುಡಾ)ಅಧ್ಯಕ್ಷರ ವಿರುದ್ದ ದೂರು ನೀಡಿದ ಬೆನ್ನಲ್ಲೇ ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಅವರು ಪ್ರತಿದೂರು ನೀಡಿ ಫೇಸ್ ಬುಕ್ ಪೋಸ್ಟ್ನಲ್ಲಿ ಹಾಕಿರುವ ವಿಚಾರವನ್ನು ತಿರುಚಿ ಬಿಜೆಪಿಯವರು ಪ್ರಧಾನ ಮಂತ್ರಿ ಹಾಗೂ ತನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರತಿದೂರು ನೀಡಿರುವ ಅಮಳ ರಾಮಚಂದ್ರ ಅವರು ಮೇ. 13ರಂದು ನನ್ನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡ ಕೆಲವು ವ್ಯಂಗ್ಯಚಿತ್ರಗಳನ್ನು ತಿರುಚಿರುವುದಾಗಿ ದೂರಿದ್ದಾರೆ. ನನ್ನ ಮತ್ತು ದೇಶದ ಪ್ರಧಾನ ಮಂತ್ರಿಗಳ ಅವಹೇಳನ ಮಾಡಿದ ಪುತ್ತೂರು ಬಿ.ಜೆ.ಪಿ. ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಮತ್ತು ಪುತ್ತೂರು ಬಿ.ಜೆ.ಪಿ. ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಹಾಗೂ ಇತರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಕಾಂಗ್ರೆಸ್ ಸಮಾಜಿಕ ಜಾಲತಾಣದ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ ಜೊತೆಗಿದ್ದರು.
ಇಸ್ರೇಲ್ ನ ಗಾಝಾ ನೆರವು ಯೋಜನೆ ಸಿನಿಕತನದ ಪ್ರದರ್ಶನ: ವಿಶ್ವಸಂಸ್ಥೆ ತುರ್ತು ನೆರವು ಏಜೆನ್ಸಿ ಮುಖ್ಯಸ್ಥರ ಖಂಡನೆ
ವಿಶ್ವಸಂಸ್ಥೆ: ಗಾಝಾ ಪಟ್ಟಿಯಲ್ಲಿ ನೆರವು ವಿತರಣೆಗೆ ಇಸ್ರೇಲ್ ಮುಂದಿರಿಸಿದ ಯೋಜನೆ ಸಿನಿಕತದ ಪ್ರದರ್ಶನವಾಗಿದೆ. ಗಮನ ಬೇರೆಡೆ ಸೆಳೆಯುವ ಉದ್ದೇಶಪೂರ್ವಕ ನಡೆಯಾಗಿದ್ದು ಈ ಪ್ರದೇಶದಲ್ಲಿ ಇನ್ನಷ್ಟು ಹಿಂಸಾಚಾರ ಮತ್ತು ಸ್ಥಳಾಂತರಕ್ಕೆ ಪ್ರಚೋದನೆ ನೀಡುತ್ತದೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರ ಮತ್ತು ತುರ್ತು ನೆರವು ಸಂಯೋಜಕ ಏಜೆನ್ಸಿಯ(ಒಸಿಎಚ್ಎ) ಮುಖ್ಯಸ್ಥ ಟಾಮ್ ಫ್ಲೆಚರ್ ಖಂಡಿಸಿದ್ದಾರೆ. ಯುದ್ಧದಿಂದ ಜರ್ಝರಿತತೊಂಡ ಗಾಝಾ ಪಟ್ಟಿಗೆ ಕಳೆದ 10 ವಾರಗಳಿಂದಲೂ ಯಾವುದೇ ಆಹಾರ, ಔಷಧ, ನೀರು ಅಥವಾ ಟೆಂಟ್ಗಳು ಪೂರೈಕೆಯಾಗಿಲ್ಲ ಎಂದು ಫ್ಲೆಚರ್ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಮಾಹಿತಿ ನೀಡಿದರು. `ಯುದ್ಧದ ಹೊಡೆತದಿಂದ ಬದುಕುಳಿದ ನೂರಾರು ಜನರನ್ನು ನಾವು ರಕ್ಷಿಸಬಹುದು. ನಮ್ಮ ನೆರವು ನಾಗರಿಕರಿಗೆ ಸಿಗುತ್ತದೆ ಮತ್ತು ಹಮಾಸ್ ಗೆ ಹೋಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಮ್ಮಲ್ಲಿ ಕಠಿಣ ಕಾರ್ಯವಿಧಾನಗಳಿವೆ. ಆದರೆ ಇಸ್ರೇಲ್ ನಮಗೆ ಪ್ರವೇಶವನ್ನು ನಿರಾಕರಿಸುತ್ತದೆ. ನಾಗರಿಕರ ಜೀವ ರಕ್ಷಣೆಗಿಂತ ಹೆಚ್ಚಿನ ಆದ್ಯತೆಯನ್ನು ಗಾಝಾ ವಿಭಜನೆಗೆ ನೀಡುತ್ತಿದೆ' ಎಂದು ಫ್ಲೆಚರ್ ಹೇಳಿದ್ದಾರೆ. ಗಾಝಾ ಪಟ್ಟಿಗೆ ಮಾರ್ಚ್ 2ರಿಂದ ಯಾವುದೇ ನೆರವು ಪೂರೈಕೆಯಾಗಿಲ್ಲ. ಉಳಿದಿರುವ ಎಲ್ಲಾ ಒತ್ತೆಯಾಳುಗಳನ್ನೂ ಹಮಾಸ್ ಬಿಡುಗಡೆ ಮಾಡುವವರೆಗೆ ಗಾಝಾಗೆ ಸರಕು ಮತ್ತು ಸರಬರಾಜುಗಳನ್ನು ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ಗಾಝಾದಲ್ಲಿ ಆಹಾರ ದಾಸ್ತಾನು ಮುಗಿಯುತ್ತಿದೆ ಎಂದು ಕಳೆದ ತಿಂಗಳಾಂತ್ಯದಲ್ಲಿ ವಿಶ್ವಸಂಸ್ಥೆಯ ಆಹಾರ ಯೋಜನೆ ಹೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ `ಆಹಾರ ಮತ್ತು ಔಷಧಗಳನ್ನು ತಲುಪಿಸಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮೇಲೆ ಒತ್ತಡ ಹೇರುವುದಾಗಿ' ಹೇಳಿದ್ದರು. `ಇಸ್ರೇಲ್ ಪ್ರಸ್ತಾಪಿಸಿದ ನೆರವು ವಿತರಣಾ ಮಾದರಿಯನ್ನು ಚರ್ಚಿಸಲು ವಿಶ್ವಸಂಸ್ಥೆ ಪ್ರತಿನಿಧಿಗಳು ಇಸ್ರೇಲ್ ಅಧಿಕಾರಿಗಳನ್ನು ಹಲವು ಬಾರಿ ಭೇಟಿಯಾಗಿದ್ದು ವಿಶ್ವಸಂಸ್ಥೆ ಒಳಗೊಳ್ಳುವಿಕೆಗೆ ಅಗತ್ಯವಾದ ಕನಿಷ್ಠ ಷರತ್ತುಗಳನ್ನು ಒತ್ತಿ ಹೇಳಿದ್ದರು. ಇಸ್ರೇಲ್ ವಿನ್ಯಾಸಗೊಳಿಸಿದ ವಿತರಣಾ ವಿಧಾನವು ಉತ್ತರವಲ್ಲ. ಅದು ಮತ್ತಷ್ಟು ಸ್ಥಳಾಂತರಕ್ಕೆ ಒತ್ತಡ ಹೇರುತ್ತದೆ. ಸಾವಿರಾರು ಜನರನ್ನು ಹಾನಿಗೆ ಒಡ್ಡುತ್ತದೆ. ಗಾಝಾದ ಒಂದು ಭಾಗಕ್ಕೆ ಮಾತ್ರ ನೆರವನ್ನು ನಿರ್ಬಂಧಿಸುತ್ತದೆ. ರಾಜಕೀಯ ಮತ್ತು ಮಿಲಿಟರಿ ಉದ್ದೇಶದಿಂದ ಸಹಾಯವನ್ನು ಷರತ್ತುಬದ್ಧಗೊಳಿಸುತ್ತದೆ. ಹಸಿವನ್ನು ಚೌಕಾಶಿಯ ಕಾರ್ಡ್ ಆಗಿ ಬಳಸುತ್ತದೆ ' ಎಂದು ಫ್ಲೆಚರ್ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ತಿಳಿಸಿದ್ದಾರೆ.
ರಾಮನಗರ ಬಾಲಕಿಯ ಹತ್ಯೆ ಪ್ರಕರಣ | ಎಲ್ಲ ಆಯಾಮಗಳಲ್ಲೂ ತನಿಖೆ, ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮದು : ಡಿ.ಕೆ.ಶಿವಕುಮಾರ್
ಬೆಂಗಳೂರು : ರಾಮನಗರ ಜಿಲ್ಲೆಯ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಬುಧವಾರ ರಾಮನಗರ ಜಿಲ್ಲೆಯ ಭದ್ರಾಪುರದಲ್ಲಿರುವ ಸಂತ್ರಸ್ಥ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ತಿಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಪತ್ತೆಯಾಗಿದ್ದ ಬಾಲಕಿ ರೈಲು ಹಳಿ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕೊಲೆ ಸಾಕಷ್ಟು ಅನುಮಾನಸ್ಪದವಾಗಿದೆ. ಈ ಬಗ್ಗೆ ಕುಟುಂಬಸ್ಥರ ಬಳಿ ಮಾಹಿತಿ ಪಡೆದಿದ್ದು, ಎಲ್ಲ ಆಯಾಮಗಳಲ್ಲೂ ಸೂಕ್ತ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದರು. ಪ್ರಕರಣದಲ್ಲಿ ಕೆಲ ಸಾಕ್ಷ್ಯಗಳನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿದೆ. ಬಾಲಕಿ ತಾಯಿ ಮತ್ತು ಸಹೋದರಿ ಬಳಿ ಮಾತನಾಡಿದ್ದೇನೆ. ಅಂತ್ಯಸಂಸ್ಕಾರಕ್ಕೆ ಪರಿಹಾರ ಕೊಡುವ ಕೆಲಸ ಮಾಡಿದ್ದೇವೆ. ಈ ಪ್ರಕರಣದಲ್ಲಿ ಅತ್ಯಾಚಾರ ಆಗಿದೆಯಾ? ಇಲ್ಲವಾ? ಎಂಬುದು ಎಫ್ಎಸ್ಎಲ್ ವರದಿ ಬಂದ ಬಳಿಕ ಗೊತ್ತಾಗಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಘಟನೆ ನಡೆದಿರುವ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆಯಿದೆ, ಬೀದಿ ದೀಪಗಳ ವ್ಯವಸ್ಥೆಯಿಲ್ಲ ಎನ್ನುವ ಆರೋಪದ ಬಗ್ಗೆ ಪ್ರಶ್ನಿಸಿದಾಗ, ಈಗ ಈ ಪ್ರಕರಣದ ಜತೆಗೆ ಬೇರೆ ವಿಚಾರಗಳನ್ನು ಬೆರೆಸಲು ಹೋಗುವುದಿಲ್ಲ. ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಇದೇ ಸಂದರ್ಭದಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್, ರಾಮನಗರದ ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಎಸ್ಪಿ ಶ್ರೀನಿವಾಸಗೌಡ, ಕಾಂಗ್ರೆಸ್ ಮುಖಂಡ ಗಾಣಕಲ್ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.
ಜಲಾಲ್ ಮಸ್ತಾನ್ ಆಂಡ್ ನೇರ್ಚೆಗೆ ಚಾಲನೆ
ಮಂಗಳೂರು, ಮೇ 14: ನಗರದ ಬಂದರ್ನಲ್ಲಿರುವ ಅಶೈಖ್ ಅಸ್ಸೆಯ್ಯದ್ ಮುಹಮ್ಮದ್ ಮೌಲಾ ಜಲಾಲ್ ಮಸ್ತಾನ್ ಅಲ್ ಬುಖಾರಿ(ಖ.ಸಿ)ರವರ 99ನೇ ಆಂಡ್ ನೇರ್ಚೆಯನ್ನು ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಮಖಾಮ್ ಝಿಯಾರತ್ ಹಾಗೂ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಸ್ಜಿದ್ ಝೀನತ್ ಭಕ್ಷ್ ಖತೀಬ್ ಸೈಯ್ಯದ್ ಶಂಸುದ್ದೀನ್ ಬಾಸಿತ್ ಬಾಅಲವಿ ತಂಳ್ ಅಲ್ಅನ್ಸಾರಿ ಕುಕ್ಕಾಜೆ, ಸೈಯ್ಯದ್ ಅಲ್ಹಾದಿ ಯಹ್ಯಾ ತಂಳ್ ಸಾಲ್ಮರ, ಉಪಾಧ್ಯಕ್ಷ ಅಶ್ರಫ್ ಕೆ.ಇ, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್, ಸದಸ್ಯರಾದ ಅದ್ದು ಹಾಜಿ, ಸಮದ್ ಹಾಜಿ, ಮುಹಮ್ಮದ್ ಅಶ್ರಫ್ ಹಳೆಮನೆ, ಐ. ಮೊಯಿದಿನಬ್ಬ ಹಾಜಿ, ಮುಅಝ್ಝಿನರಾದ ಅಬ್ದುಲ್ ಹಮೀದ್ ಮುಸ್ಲಿಯಾರ್, ಅಶ್ರಫ್ ದಾರಿಮಿ, ಹಿಫ್ಲುಲ್ ಖುರಾನ್ ಉಸ್ತಾದರುಗಳಾದ ಜುನೈದ್ ಅಝ್ಹರಿ, ಅಝರುದ್ದೀನ್ ಅನ್ಸಾರಿ ಮತ್ತಿತರರು ಉಪಸ್ಥಿತರಿದ್ದರು.
ಕೋಲ್ಕತಾ | 2.66 ಕೋಟಿ ರೂ. ದರೋಡೆ: ಎಎಸ್ಐ ಬಂಧನ
ಕೋಲ್ಕತಾ: ಖಾಸಗಿ ಕಂಪೆನಿಯೊಂದರ ಇಬ್ಬರು ಉದ್ಯೋಗಿಗಳಿಂದ 2.66 ಕೋಟಿ ರೂ. ದರೋಡೆಗೈದ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪದಲ್ಲಿ ಕೋಲ್ಕತದ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ರನ್ನು ಬುಧವಾರ ಬಂಧಿಸಲಾಗಿದೆ. ಉದ್ಯೋಗಿಗಳು ಮೇ 5 ರಂದು ಬೆಳಗ್ಗೆ 11.45ರ ಸುಮಾರಿಗೆ ಕೋಲ್ಕತದ ಎಂಟಲ್ಲಿ ಎಂಬಲ್ಲಿ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ದರೋಡೆ ನಡೆದಿದೆ. ಖಾಸಗಿ ವಿದೇಶಿ ವಿನಿಮಯ ಕಂಪೆನಿಯೊಂದರ ಇಬ್ಬರು ಉದ್ಯೋಗಿಗಳು ಪಾರ್ಕ್ ಸರ್ಕಸ್ ಪ್ರದೇಶದಲ್ಲಿರುವ ಬ್ಯಾಂಕೊಂದರಲ್ಲಿ ಹಣ ಜಮಾಗೊಳಿಸಲು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ದರೋಡೆ ನಡೆದಿದೆ. ಇಬ್ಬರು ಅಪರಿಚಿತ ವ್ಯಕ್ತಿಗಳು ಕಮರ್ಡಂಗ ಸಮೀಪ ಕಾರನ್ನು ನಿಲ್ಲಿಸುವಂತೆ ಚಾಲಕನ ಮೇಲೆ ಒತ್ತಡ ಹೇರಿ ಕಾರಿನೊಳಗೆ ಬಂದರು. ಬಳಿಕ ಹಣದೊಂದಿಗೆ ಪರಾರಿಯಾದರು ಎಂದು ಉದ್ಯೋಗಿಗಳು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ‘‘ಇಡೀ ದರೋಡೆ ಯೋಜನೆಯನ್ನು ಎಎಸ್ಐ ರೂಪಿಸಿದ್ದರು. ನಾವು ಅವರನ್ನು ಬಂಧಿಸಿದ್ದೇವೆ’’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. ಎಎಸ್ಐ ಮತ್ತು ಕಂಪೆನಿಯ ಓರ್ವ ಸಿಬ್ಬಂದಿ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.
ಮೇ 16ರಂದು ಕರಾವಳಿಯ ‘ಲೈಟ್ಹೌಸ್’ ಚಿತ್ರ ತೆರೆಗೆ
ಉಡುಪಿ, ಮೇ 14: ಕರಾವಳಿಯ ನಿರ್ಮಾಪಕರು ಹಾಗೂ ನಿರ್ದೇಶಕರ ಮೂಲಕ, ಕರಾವಳಿಯ ಪ್ರತಿಭಾವಂತ ಕಲಾವಿದರೇ ಅಭಿನಯಿಸಿದ ಕನ್ನಡ ಚಲನಚಿತ್ರ ‘ಲೈಟ್ಹೌಸ್’ ಇದೇ ಮೇ 16ರಂದು ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ತಿಳಿಸಿದ್ದಾರೆ. ಉಡುಪಿ ಪ್ರೆಸ್ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕರಾವಳಿ ಭಾಗದ ಕಲೆ, ಸಂಸ್ಕೃತಿ, ಆಚಾರ-ವಿಚಾರಗಳೊಂದಿಗೆ ಇಡೀ ಕುಟುಂಬ ಸಮೇತ ವೀಕ್ಷಿಸಬಹುದಾದ ಚಿತ್ರವನ್ನು ನಿರ್ಮಿಸಲಾಗಿದೆ. ಇದರಲ್ಲಿ ಇಡೀ ಸಮಾಜಕ್ಕೆ ಉತ್ತಮವಾದ ಸಂದೇಶಗಳಿವೆ ಎಂದರು. ಕನ್ನಡ ಮಾಧ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ನೇತ್ರದಾನದ ಮಹತ್ವ, ಕರಾವಳಿಯ ಕಲೆ-ಸಂಸ್ಕೃತಿಯನ್ನು ಚಿತ್ರದಲ್ಲಿ ವಿಶೇಷವಾಗಿ ಚಿತ್ರೀಕರಿಸಲಾಗಿದೆ. ಚಿತ್ರದ ಚಿತ್ರೀಕರಣ ಉಡುಪಿ ಆಸುಪಾಸಿನಲ್ಲಿ ನಡೆದಿದೆ ಎಂದು ಸಂದೀಪ್ ಕಾಮತ್ ವಿವರಿಸಿದರು. ಚಿತ್ರದ ನಿರ್ಮಾಪಕ ದತ್ತಾತ್ರೇಯ ಪಾಟ್ಕರ್ ಬಂಟಕಲ್ಲು ಮಾತನಾಡಿ ಮೇ 16ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಹೆಸರಾಂತ ಕಲಾವಿದರಾದ ಶೋಭರಾಜ್ ಪಾವೂರು, ಮಾನಸಿ ಸುಧೀರ್, ಪ್ರಕಾಶ್ ತೂಮಿನಮಾಡು, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬರ್, ರಾಹುಲ್ ಅಮೀನ್, ಶೈಲಶ್ರೀ ಮುಲ್ಕಿ, ಶೀತಲ್ ನಾಯಕ್, ಅಚಲ್ ಬಂಗೇರ ಮುಂತಾದವರು ಪಾತ್ರ ನಿರ್ವಹಿಸಿದ್ದಾರೆ ಎಂದರು. ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ಚಿತ್ರಕ್ಕೆ ಕಾರ್ತಿಕ್ ಮುಲ್ಕಿ ಸಂಗೀತ ನಿರ್ದೇಶನವಿದೆ. ಛಾಯಾಗ್ರಹಣ ಹಾಗೂ ಸಂಕಲನದ ಜವಾಬ್ದಾರಿಯನ್ನು ಪ್ರಜ್ವಲ್ ಸುವರ್ಣ ನಿರ್ವಹಿಸಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪುಂಡಲೀಕ ಮರಾಠೆ ಬಂಟಕಲ್ಲು, ರೋಹನ್ ನಾಯಕ್ ಉಪಸ್ಥಿತರಿದ್ದರು.
ಕಾಪು: ಪೆರ್ನಾಲಿನಲ್ಲಿ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರ
ಉಡುಪಿ, ಮೇ 14: ಜಿಲ್ಲಾಡಳಿತ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಉಡುಪಿ, ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು ಹಾಗೂ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ - ಕೇರಳ ಇವರ ಸಂಯುಕ್ತ ಆಶ್ರಯದಲ್ಲಿ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರ ಪೆರ್ನಾಲಿನ ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ಪ್ರಾರಂಭಗೊಂಡಿದೆ. ಕಾಪು ತಾಲೂಕು ತಹಶೀಲ್ದಾರ್ ಪ್ರತಿಭಾ ಆರ್ ಅವರು ಗಿಡ ನೆಡುವ ಮೂಲಕ ಹಾಗೂ ಡೋಲು ಬಾರಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ಶಿಬಿರಕ್ಕೆ ಶುಭಕೋರಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪರಿಸರ ಶಿಕ್ಷಕಿ ದೀಪ್ತಿ ಪ್ರಾತ್ಯಕ್ಷಿಕೆ ಮೂಲಕ ಪರಿಸರ ಚಟುವಟಿಕೆ ವಿಷಯದ ಕುರಿತು ವಿವರವಾಗಿ ಮಾಹಿತಿ ನೀಡಿದರು. ಪರಿಸರ, ಅದರ ರಕ್ಷಣೆ ಕುರಿತಂತೆ ವಿವರಿಸಿದ ದೀಪ್ತಿ, ಮಕ್ಕಳಿಗೂ ಪರಿಸರದ ಕುರಿತಂತೆ ಕಾಳಜಿ ವಹಿಸುವಂತೆ ಪ್ರೇರೇಪಿಸಿದರಲ್ಲದೇ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು. ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ ಹಾಗೂ ಸಂಯೋಜಕರಾದ ಪುತ್ರನ್ ಹೆಬ್ರಿ, ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣಪ್ಪ ಬಂಬಿಲ, ದೀಪ್ತಿ ಉಪಸ್ಥಿತರಿದ್ದರು. ಶಿಬಿರಾರ್ಥಿಗಳ ಪ್ರತಿನಿಧಿಗಳಾಗಿ ಹರಿಣಾಕ್ಷಿ ಮತ್ತು ನಿಶಾಂತ್ ಇದ್ದರು. ಶಿಬಿರಾರ್ಥಿ ವಲ್ಮ ಅತಿಥಿಗಳನ್ನು ಸ್ವಾಗತಿಸಿದರೆ, ಸಮುದಾಯ ಕಾರ್ಯಕರ್ತ ರಾದ ಸುಪ್ರಿಯಾ ಎಸ್. ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿ ಕೃಷ್ಣಪ್ಪ ಬಂಬಿಲ ಹಾಗೂ ತಂಡ ಮಕ್ಕಳಿಗೆ ವಿವಿಧ ರೀತಿಯ ಚಟುವಟಿಕೆ, ಆಟಗಳ ಮೂಲಕ ವಿವಿಧ ವಿಷಯಗಳನ್ನು ಮನದಟ್ಟು ಮಾಡಿತು. ಮಕ್ಕಳಲ್ಲಿ ನಾಯಕತ್ವ ಮನೋಭಾವ ಬೆಳೆಸುವ ಹಲವು ಚಟುವಟಿಕೆಗಳನ್ನು ಕಲಿಸಲಾಯಿತು. ಮತ್ತೊಬ್ಬ ಸಂಪನ್ಮೂಲ ವ್ಯಕ್ತಿ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸಬಿತಾ ಗುಂಡ್ಮಿ, ಸಮುದಾಯದ ಪರಿಚಯವನ್ನು ಮಾಡಿಸುವ ಜೊತೆಗೆ ಸಮಸ್ಯೆಗಳು ಎದುರಾದಾಗ ಹೇಗೆ ಬಗೆಹರಿಸಿಕೊಳ್ಳಬೇಕೆಂದು ತಿಳಿಸಿದರು. ಉಮೇಶ್ ಮಕ್ಕಳಿಗೆ ಸುಲಭ ವಿಧಾನದಲ್ಲಿ ಚಿತ್ರ ಬಿಡಿಸುವುದನ್ನು ಹೇಳಿಕೊಟ್ಟರು. ಕೃಷ್ಣಪ್ಪ ಬಂಬಿಲ ಹಾಗೂ ತಂಡ ರಂಗ ತರಬೇತಿಯನ್ನು ನೀಡಿತು. ಹಾಡು, ಅಭಿನಯಗಳ ಮೂಲಕ ಮಕ್ಕಳಿಗೆ ನಟನೆಯ ವಿವಿಧ ಮುಖಗಳನ್ನು ಪರಿಚಯಿಸಲಾಯಿತು. ಶಿಬಿರ ಒಟ್ಟು ಐದು ದಿನಗಳ ಕಾಲ ನಡೆಯಲಿದೆ.
ಡ್ರೋನ್ ನಿಗ್ರಹ ವ್ಯವಸ್ಥೆ ‘ಭಾರ್ಗವಾಸ್ತ್ರ’ದ ಪ್ರಾಯೋಗಿಕ ಪರೀಕ್ಷೆ ಯಶಸ್ವಿ
ಹೊಸದಿಲ್ಲಿ: ಭಾರತದ ಸ್ವದೇಶಿ ನಿರ್ಮಿತ, ಕಡಿಮೆ ವೆಚ್ಚದ ಡ್ರೋನ್ ನಿಗ್ರಹ ವ್ಯವಸ್ಥೆ ‘ಭಾರ್ಗವಾಸ್ತ್ರ’ದ ಪ್ರಾಯೋಗಿಕ ಪರೀಕ್ಷೆಯನ್ನು ಮಂಗಳವಾರ ಒಡಿಶಾದ ಗೋಪಾಲ್ಪುರದಲ್ಲಿರುವ ಸೀವಾರ್ಡ್ ಫೈರಿಂಗ್ ರೇಂಜ್ ನಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ‘ಆಪರೇಶನ್ ಸಿಂಧೂರ’ ಕಾರ್ಯಾಚರಣೆಯ ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಸೋಲಾರ್ ಡಿಫೆನ್ಸ್ ಆ್ಯಂಡ್ ಏರೋಸ್ಪೇಸ್ ಲಿಮಿಟೆಡ್ (ಎಸ್ಡಿಎಎಲ್) ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿರುವ ಭಾರ್ಗವಾಸ್ತ್ರವು ಡ್ರೋನ್ ಸುರಿಮಳೆಯನ್ನು ಎದುರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ಡ್ರೋನ್ ನಿಗ್ರಹ ವ್ಯವಸ್ಥೆಯಲ್ಲಿ ಬಳಸಲಾಗಿರುವ ಮೈಕ್ರೋ ರಾಕೆಟ್ಗಳನ್ನು ಗೋಪಾಲಪುರದಲ್ಲಿ ಕಠಿಣ ಪರೀಕ್ಷೆಗೆ ಒಳಪಡಿಸಲಾಯಿತು. ಆರ್ಮಿ ಏರ್ ಡಿಫೆನ್ಸ್ (ಎಎಡಿ)ನ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ರಾಕೆಟ್ ಗೆ ಮೂರು ಪರೀಕ್ಷೆಗಳನ್ನು ನಡೆಸಲಾಯಿತು. ಎರಡು ಸೆಕೆಂಡ್ಗಳ ಅಂತರದಲ್ಲಿ ಎರಡು ರಾಕೆಟ್ಗಳನ್ನು ಸಾಲ್ವೊ ಸ್ಥಿತಿಯಲ್ಲಿ ಉಡಾಯಿಸುವ ಮೂಲಕ ಒಂದು ಪ್ರಯೋಗವನ್ನು ನಡೆಸಲಾಯಿತು. ಎಲ್ಲಾ ನಾಲ್ಕು ರಾಕೆಟ್ಗಳು ನಿರೀಕ್ಷೆಯಂತೆ ನಿರ್ವಹಣೆ ನೀಡಿವೆ ಮತ್ತು ಉಡಾವಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಗಳಿಸಿವೆ ಎಂದು ವರದಿಯೊಂದು ತಿಳಿಸಿದೆ.
ಐಶ್ವರ್ಯಾ ಗೌಡ ವಂಚನೆ: ಇ ಡಿ ಸಮನ್ಸ್ ರದ್ದು ಕೋರಿ ಶಾಸಕ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್ ಮೊರೆ
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ, ನಟಿ ಐಶ್ವರ್ಯಾ ಗೌಡ ಜೊತೆಗಿನ ಹಣಕಾಸು ವ್ಯವಹಾರದ ತನಿಖೆಗೆ ಇಡಿ ನೀಡಿದ ಸಮನ್ಸ್ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಐಶ್ವರ್ಯಾ ಗೌಡ 75 ಕೋಟಿ ರೂ. ಅಕ್ರಮ ವಹಿವಾಟು ನಡೆಸಿದ್ದು, ವಿನಯ್ ಕುಲಕರ್ಣಿ 24 ಕೋಟಿ ರೂ. ಸಾಲ ನೀಡಿದ್ದಾರೆಂದು ಇ.ಡಿ ಹೇಳಿದೆ. ನ್ಯಾಯಾಲಯವು ಇ.ಡಿ ವಾದವನ್ನು ಆಲಿಸಲು ನಿರ್ಧರಿಸಿದೆ.
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಾರು ಗ್ರಾಮದ ಅಝರುದ್ದೀನ್ ಯಾನೆ ಅಝರ್ ಯಾನೆ ಅಜ್ಜು (29), ಮೂಲತಃ ಉಡುಪಿ ಜಿಲ್ಲೆಯ ಬೆಳಪು ಗ್ರಾಮದ ಪ್ರಸಕ್ತ ಬಜ್ಪೆಯಲ್ಲಿ ವಾಸವಾಗಿರುವ ಅಬ್ದುಲ್ ಖಾದರ್ ಯಾನೆ ನೌಫಲ್ (24), ಮೂಲತಃ ಫರಂಗಿಪೇಟೆ ಕುಂಪನಮಜಲಿನ ಪ್ರಸಕ್ತ ಹಾಸನ ಜಿಲ್ಲೆ ಕೆ.ಆರ್.ಪುರಂ ನಿವಾಸಿ ನೌಷಾದ್ ಯಾನೆ ವಾಮಂಜೂರು ನೌಷಾದ್ (39) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳ ಪೈಕಿ ಅಝರುದ್ದೀನ್ ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿದೆ. ಈತನು ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅಬ್ದುಲ್ ಖಾದರ್ ಎಂಬಾತನು ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ವೇಳೆ ಆರೋಪಿಗಳಿಗೆ ಸಹಕರಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನೋರ್ವ ಆರೋಪಿ ನೌಷಾದ್ ಎಂಬಾತನು ಇತರ ಆರೋಪಿಗಳ ಜೊತೆ ಕೊಲೆಗೆ ಸಂಚು ರೂಪಿಸಿದ್ದ. ಈತನು ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡುಬಿದಿರೆ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ದರೋಡೆಗೆ ಸಂಚು ಸಹಿತ 6 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಪೈಕಿ ಅಝರುದ್ದೀನ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇತರ ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಕೊಲೆ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ | 621ನೇ ಹಝರತ್ ಖ್ವಾಜಾ ಬಂದಾ ನವಾಝ್ ಉರೂಸ್ ಆರಂಭ
ಕಲಬುರಗಿ : ನಗರದಲ್ಲಿ ಹಝರತ್ ಖ್ವಾಜಾ ಬಂದಾ ನವಾಝ್ ರಹ್ಮತುಲ್ಲಾಹಿ ಅಲೈಹಿ ಅವರ 621ನೇ ಉರುಸ್ ಇಂದಿನಿಂದ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಸಜ್ಜಾದಾ ನಶಿನ್ ಜನಾಬ್ ಹಾಫಿಜ್ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಅವರ ನೇತೃತ್ವದಲ್ಲಿ ಮೌಲಾನಾ ಅಬ್ದುಲ್ ರಶೀದ್ ಸಾಹೇಬ್ ವಿಶೇಷ ದುವಾ ಮಾಡಿದರು. ವಿಶೇಷ ನಮಾಜಿನ ನಂತರ, ಮೆಹ್ಫಿಲ್-ಎ-ಸಮಾ (ಆಧ್ಯಾತ್ಮಿಕ ಸಂಗೀತ ಸಮಾರಂಭ) ಆಯೋಜಿಸಲಾಗಿತ್ತು. ಇದರಲ್ಲಿ ದೇಶದ ವಿವಿಧ ಭಾಗಗಳಿಂದ ಬಂದ ಕವಾಲ್ದಾರರು ತಮ್ಮ ಧಾರ್ಮಿಕ ಕಲಾಮ್ಗಳನ್ನು ಹಾಡಿದರು. ಸಮಾರಂಭದ ನಂತರ, ಸಮ್ಮರ್ ಹೌಸ್ ನಲ್ಲಿ ಜನಾಬ್ ಹಾಫಿಜ್ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನಿ ಅವರು ಪವಿತ್ರ ಸಂದಲ್ ಮುಬಾರಕ್ ಅನ್ನು ತಮ್ಮ ತಲೆಯ ಮೇಲೆ ಇಟ್ಟುಕೊಂಡು ಜುಲೂಸ್ಗೆ ಚಾಲನೆ ನೀಡಿದರು. ಈ ಸಂದಲ್ ಜುಲೂಸ್ ಮೆಹಬೂಬ್ ಗುಲ್ಷನ್ನಿಂದ ಜಗತ್ ಸರ್ಕಲ್ ಮಾರ್ಗವಾಗಿ ಸೂಪರ್ ಮಾರ್ಕೆಟ್ ಕಡೆಗೆ ಸಾಗಿತು. ಬಂದಾನವಾಝ್ ಕುಟುಂಬದ ಸದಸ್ಯರೊಂದಿಗೆ, ಸಜ್ಜಾದಾಗಾನ್, ಮಶಾಯಿಖ್, ಗೌರವಾನ್ವಿತ ಉಲಮಾಗಳು (ಉಲಮಾ-ಎ-ಕರಮ್) ಮತ್ತು ಸಾವಿರಾರು ಭಕ್ತರು ಈ ಪವಿತ್ರ ಸಂದರ್ಭದಲ್ಲಿ ಭಕ್ತಿ ಭಾವದಿಂದ ಭಾಗವಹಿಸಿದರು.
ಕೇರಳ | ದೇಶ ವಿರೋಧಿ ಹೇಳಿಕೆ ಆರೋಪ; ಕಿರುತೆರೆ ನಟ ಅಖಿಲ್ ಮಾರಾರ್ ವಿರುದ್ಧ ಪ್ರಕರಣ ದಾಖಲು
ಕೊಲ್ಲಂ: ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ದೇಶ ವಿರೋಧಿ ಹೇಳಿಕೆ ನೀಡಿದ ಆರೋಪದಲ್ಲಿ ಮಲೆಯಾಳಂ ಕಿರುತೆರೆ ನಟ ಹಾಗೂ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಅಖಿಲ್ ಮಾರಾರ್ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)ಯ ಸೆಕ್ಷನ್ 152ರ ಅಡಿಯಲ್ಲಿ ಅಖಿಲ್ ಮಾರಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊಟ್ಟಾರಕ್ಕರ ಪೊಲೀಸ್ ಠಾಣೆಯ ಅಧಿಕಾರಿ ಬುಧವಾರ ತಿಳಿಸಿದ್ದಾರೆ. ಕೊಟ್ಟಾರಕರದ ಸ್ಥಳೀಯ ಬಿಜೆಪಿ ನಾಯಕ ಅನೀಶ್ ಕಿಝಕ್ಕೆಕ್ಕರ ಅವರು ಈ ದೂರು ದಾಖಲಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಅಖಿಲ್ ಮಾರಾರ್ ಅವರ ವೀಡಿಯೊ ದೇಶ ವಿರೋಧಿ ಹೇಳಿಕೆಯನ್ನು ಒಳಗೊಂಡಿದೆ ಎಂದು ದೂರಿನಲ್ಲಿ ಅವರು ಆರೋಪಿಸಿದ್ದಾರೆ. ನಾವು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದೇವೆ. ವೀಡಿಯೊ ಅಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾದಗಿರಿ | ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ : ಸಿಇಓ ಲವೀಶ್ ಒರಡಿಯಾ
ಯಾದಗಿರಿ : ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಯಪಾಡ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಕಾಮಗಾರಿಗಳು, ಸ್ವಚ್ಛ ಭಾರತ್ ಮಿಷನ್, ಕರ ವಸೂಲಿ ಸೇರಿದಂತೆ ಇನ್ನಿತರ ವಿಷಯಗಳು ಕುರಿತು ಅವರು ಮಾತನಾಡಿದರು. ನಂತರ ಕೂಸಿನ ಮನೆ, ಗ್ರಂಥಾಲಯಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳನ್ನು ವೀಕ್ಷಿಸಿದರು. ಯಂಪಾಡ ಮತ್ತು ಸುಭಾಷ್ ನಗರದಲ್ಲಿ ನಡೆಯುತ್ತಿರುವ ಹಳ್ಳ ಹೊಳೆತ್ತುವ ಕಾಮಗಾರಿ ವೀಕ್ಷಿಸಿ ಕೂಲಿಕಾರ ಸಮಸ್ಯೆಗಳು ಆಲಿಸಿದರು. ಕಂದಕೂರ ಗ್ರಾಮ ಪಂಚಾಯತಿಗೆ ತೆರಳಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಸ್ವಚ್ಛತೆ, ಮೂಲ ಸೌಕರ್ಯಗಳು ಸೇರಿದಂತೆ ಇನ್ನಿತರ ಸೌಲಭ್ಯಗಳ ಕುರಿತು ಪರಿಶೀಲಿಸಿದರು. ವೈದ್ಯಾಧಿಕಾರಿಗಳಿಗೆ ಮತ್ತು ಶುಶ್ರೂಕರಿಗೆ ಸಾರ್ವಜನಿಕರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಮತ್ತು ಅಂಬುಲೆನ್ಸ್ ಸೇವೆ ಬಗ್ಗೆ ವಿಚಾರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶ್ರೀಸಿ.ಬಿ.ದೇವರಮನಿ, ಗುರುಮಠಕಲ್ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ್ ಪಾಟೀಲ್, ತಾಲೂಕು ಸಹಾಯಕ ನಿರ್ದೇಶಕ ರಾಮಚಂದ್ರ ಬಸೂದೆ, ತಾಂತ್ರಿಕ ಸಂಯೋಜಕ ಮುಜಾಮಿಲ್, ತಾಂತ್ರಿಕ ಸಹಾಯಕರು, ಬಿಎಫ್ಟಿಗಳು, ಜಿಕೆಎಮ್ ಮತ್ತು ಕಾಯಕ ಬಂಧುಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಸಿಡಿಎಸ್, ಮೂರು ಶಸಸ್ತ್ರ ಪಡೆಗಳ ವರಿಷ್ಠರಿಂದ ‘ಆಪರೇಷನ್ ಸಿಂಧೂರ’ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ
ಹೊಸದಿಲ್ಲಿ: ‘ಆಪರೇಷನ್ ಸಿಂಧೂರ’ ಯೋಜನೆ ಹಾಗೂ ಕಾರ್ಯಗತಗೊಳಿಸುವಿಕೆ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಸೇನೆಯ ಪ್ರತಿಕ್ರಿಯೆ ಕುರಿತು ರಕ್ಷಣಾ ಸಿಬ್ಬಂದಿ ವರಿಷ್ಠ (ಸಿಡಿಎಸ್) ಹಾಗೂ ಮೂರು ಶಸಸ್ತ್ರ ಪಡೆಗಳ ವರಿಷ್ಠರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರ ಮಾಹಿತಿ ನೀಡಿದರು. ರಕ್ಷಣಾ ಸಿಬ್ಬಂದಿ ವರಿಷ್ಠ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಅವರೊಂದಿಗೆ ಸೇನಾ ಪಡೆ ಸಿಬ್ಬಂದಿ ವರಿಷ್ಠ ಜನರಲ್ ಉಪೇಂದ್ರ ದ್ವಿವೇದಿ, ವಾಯು ಪಡೆ ಸಿಬ್ಬಂದಿ ವರಿಷ್ಠ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್, ನೌಕಾ ಪಡೆ ಸಿಬ್ಬಂದಿ ವರಿಷ್ಠ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ರಾಷ್ಟ್ರಪತಿ ಅವರನ್ನು ಭೇಟಿಯಾದರು ಹಾಗೂ ಕಾರ್ಯಾಚರಣೆಯ ವಿವರಗಳನ್ನು ನೀಡಿದರು ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ. ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಸಂಘಟಿತ ದಾಳಿಯಾಗಿ ‘ಆಪರೇಷನ್ ಸಿಂಧೂರ’ವನ್ನು ಆರಂಭಿಸಲಾಗಿತ್ತು. ಈ ಕಾರ್ಯಾಚರಣೆ ಪಹಾಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಗೆ ನೇರ ಪ್ರತೀಕಾರವಾಗಿತ್ತು. ಗಡಿಯಾಚೆಗಿನ ಭಯೋತ್ಪಾದನೆಯನ್ನು ಸುಗಮಗೊಳಿಸಲು ಬಳಸುವ ಉಗ್ರ ನೆಲೆಗಳನ್ನು ನಾಶಗೊಳಿಸುವ ಉದ್ದೇಶವನ್ನು ಇದು ಹೊಂದಿತ್ತು. ಶಸಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಕ್ಷಣಾ ತಂತ್ರಗಾರಿಕೆ, ಕಾರ್ಯಾಚರಣೆಯ ಕಾರ್ಯಗತಗೊಳಿಸುವಿಕೆ ಹಾಗೂ ಕಾರ್ಯಾಚರಣೆಯ ಫಲಿತಾಂಶವನ್ನು ಪ್ರಶಂಸಿಸಿದ್ದಾರೆ. ಭಾರತೀಯ ಶಸಸ್ತ್ರ ಪಡೆಗಳ ವೃತ್ತಿಪರತೆ, ಧೈರ್ಯ ಹಾಗೂ ತ್ವರಿತ ಕ್ರಮಕ್ಕೆ ಅವರು ಆಳವಾದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘‘ಭಯೋತ್ಪಾದನೆ ವಿರುದ್ಧದ ಭಾರತದ ಪ್ರತಿಕ್ರಿಯೆಗೆ ಅದ್ಭುತ ಯಶಸ್ಸು ಸಿಗುವಂತೆ ಮಾಡಿದ ಶಸಸ್ತ್ರ ಪಡೆಗಳ ಶೌರ್ಯ ಹಾಗೂ ಸಮರ್ಪಣೆಯನ್ನು ರಾಷ್ಟ್ರಪತಿ ಶ್ಲಾಘಿಸಿದ್ದಾರೆ’’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ನ ಪೋಸ್ಟ್ನಲ್ಲಿ ರಾಷ್ಟ್ರಪತಿ ಭವನ ಹೇಳಿದೆ.
ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು
ಉಡುಪಿ, ಮೇ 14: ವಿದ್ಯುತ್ ತಂತಿ ಮೈಮೇಲೆ ಬಿದ್ದ ಪರಿಣಾಮ ಬೈಕಿನಲ್ಲಿ ಹೋಗುತ್ತಿದ್ದ ಸವಾರ ಮೃತಪಟ್ಟ ಘಟನೆ ಮೇ 13ರಂದು ರಾತ್ರಿ ಆಗುಂಬೆ ಸಮೀಪ ನಡೆದಿದೆ. ಮೃತರನ್ನು ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಎಂದು ಗುರುತಿಸಲಾಗಿದೆ. ಕೊಪ್ಪ ಸಮೀಪ ದಲ್ಲಿದ್ದ ಸೂರಾಲು ಮೇಳದ ಪ್ರದರ್ಶನ ಮಳೆಯಿಂದ ರದ್ಧಾದ ಕಾರಣ ರಂಜಿತ್ ತನ್ನ ಬೈಕಿನಲ್ಲಿ ಮನೆಗೆ ಹೊರಟಿದ್ದರು. ದಾರಿ ಮಧ್ಯೆ ಭಾರೀ ಗಾಳಿಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿ ಬೈಕಿನಲ್ಲಿ ಹೋಗುತ್ತಿದ್ದ ರಂಜಿತ್ ಮೈಮೇಲೆ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಹಿಂಬದಿ ಸವಾರ ಸ್ತ್ರೀ ಪಾತ್ರಧಾರಿ ವಿನೋದ್ ರಾಜ್ ಅಪಾಯದಿಂದ ಪಾರಾಗಿದ್ದಾರೆ.
ಹಿರಿಯಡ್ಕ, ಮೇ 14: ಮನೆಗೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮೇ 13ರಂದು ಮಧ್ಯಾಹ್ನ ವೇಳೆ ಬೆಳ್ಳಂಪಳ್ಳಿ ಎಂಬಲ್ಲಿ ನಡೆದಿದೆ. ಮಾಲತಿ ಎಂಬವರ ಮನೆಯ ಮುಂಭಾಗದ ಬಾಗಿಲಿನ ಚಿಲಕವನ್ನು ಮೀಟಿ ಒಳಗೆ ಪ್ರವೇಶಿಸಿದ ಕಳ್ಳರು, ಕಾಪಾಟಿನಲ್ಲಿದ್ದ 35,000ರೂ. ನಗದು ಹಾಗೂ 41ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿ ಕೊಂಡು ಹೋಗಿರುವು ದಾಗಿ ದೂರಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ | ಮಹಿಳೆಯರು ಕೂಡ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುವುದು ಅಗತ್ಯ : ಪ್ರಕಾಶ ಅಂಗಡಿ
ಯಾದಗಿರಿ : ಮಹಿಳೆಯರು ಸಹಕಾರ ಜ್ಞಾನಪಡೆದು ಸ್ವಾವಲಂಬಿಗಳಾಗಿ ಸಹಕಾರಿ ಕ್ಷೇತ್ರದ ಬಗ್ಗೆ ಹೆಚ್ಚು ಜ್ಞಾನ ಪಡೆಯುವ ಮೂಲಕ ಮಹಿಳೆಯರು ಕೂಡ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುವುದು ಅಗತ್ಯವಾಗಿದೆ. ಆ ಹಿನ್ನೆಲೆಯಲ್ಲಿ ಮಹಿಳೆಯರು ಕೂಡ ಸಹಕಾರಿಗಳಾಗಿ ಸ್ವಾವಲಂಬಿಗಳಾಗಿ, ಮಾದರಿ ವ್ಯಕ್ತಿಗಳಾಗಬೇಕು ಎಂದು ಯಾದಗಿರಿ ಜಿಲ್ಲಾ ಸಹಕಾರಿ ಒಕ್ಕೂಟದ ವೃತ್ತಿಪರ ನಿರ್ದೇಶಕ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು. ರಂಗಂಪೇಟೆಯ ಬಸವಪ್ರಭು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ, ಯಾದಗಿರಿ ಮತ್ತು ಶ್ರೀ ಅಕ್ಕಮಹಾದೇವಿ ಮಹಿಳಾ ಸಹಕಾರ ಸಂಘ ನಿ. ರಂಗಂಪೇಠ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳೆಯರಿಗೆ ಕ್ಲಸ್ಟರ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುರಪುರ ತಾಲೂಕು ಪಂಚಾಯತ್ ಕಾರ್ಯಕ್ರಮ ವ್ಯವಸ್ಥಾಪಕರಾದ ಸವಿತಾ ಪಾಲ್ಕಿ ರಾಷ್ಟ್ರಿಯ ಗ್ರಾಮಿಣ ಜೀವನೋಪಾಯ ಮಿಷನ್ ಮತ್ತು ಸ್ವಸಹಾಯ ಸಂಘಗಳ ಆದಾಯ ಉತ್ಪನಗಳ ಕಾರ್ಯಚಟುವಟಿಕೆಗಳ ಕುರಿತು ಮತ್ತು ಎನ್ ಆರ್ ಎಂ ಎಲ್ ವತಿಯಿಂದ ಸಾಲ ಸೌಲಭ್ಯಗಳ ಕುರಿತು ಉಪನ್ಯಾಸ ನೀಡಿದರು. ವೇದಿಕೆ ಮೇಲೆ ಜಿಲ್ಲಾ ಸಹಕಾರ ಶಿಕ್ಷಕರಾದ ಸುಜಾತ ಮಠ, ಅಕ್ಕಮಹಾದೇವಿ ಮಹಿಳಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೀಲಾಂಬಿಕೆ ಪಾಟೀಲ ನಿರ್ದೇಶಕರಾದ ಸುನೀತಾ ಪಾಟೀಲ್ ರೇಷ್ಮಾ ಬೇಗಂ, ನಫೀಸ ಬೇಗಂ, ಸುರಕ್ಷಾ ಸಂಘದ ಕಾರ್ಯದರ್ಶಿಗಳಾದ ಶ್ರೀ ಮೌನೇಶ ನಾಲವಾರ ವೇದಿಕೆ ಮೇಲಿದ್ದರು, ಕಾರ್ಯಕ್ರಮವನ್ನು ಸುಜಾತ ನಿರೂಪಿಸಿ ವಂದಿಸಿದರು ಶಿಲ್ಪಾ ಸಂಗಡಿಗರು ಪ್ರಾರ್ಥಿಸಿದರು.
ಅತ್ಯಂತ ದುರದೃಷ್ಟಕರ: ಕರ್ನಲ್ ಸೋಫಿಯಾ ಖುರೇಶಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಎನ್ಸಿಡಬ್ಲ್ಯುಖಂಡನೆ
ಹೊಸದಿಲ್ಲಿ: ಕರ್ನಲ್ ಸೋಫಿಯಾ ಖುರೇಶಿ ವಿರುದ್ಧದ ಅವಹೇಳನಕಾರಿ ಹೇಳಿಕೆಗಳನ್ನು ಬಲವಾಗಿ ಖಂಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ(ಎನ್ಸಿಡಬ್ಲ್ಯು)ವು, ಸಮವಸ್ತ್ರದಲ್ಲಿರುವ ಮಹಿಳೆಯರನ್ನು ಗೌರವಿಸುವಂತೆ ಕರೆ ನೀಡಿದೆ. ಆಯೋಗದ ಅಧ್ಯಕ್ಷೆ ವಿಜಯಾ ರಹತ್ಕರ್ ಅವರು ಯಾರನ್ನೂ ಹೆಸರಿಸದಿದ್ದರೂ,ಮಧ್ಯಪ್ರದೇಶದ ಸಚಿವ ವಿಜಯ ಶಾ ಅವರು ಖುರೇಶಿ ವಿರುದ್ಧ ಆಡಿದ್ದ ಮಾತುಗಳು ವ್ಯಾಪಕ ಆಕ್ರೋಶವನ್ನು ಸೃಷ್ಟಿಸಿದ ಬಳಿಕ ಅವರ ಹೇಳಿಕೆ ಹೊರಬಿದ್ದಿದೆ. ‘ಜವಾಬ್ದಾರಿಯುತ ಸ್ಥಾನಗಳಲ್ಲಿರುವ ಕೆಲವು ವ್ಯಕ್ತಿಗಳು ಮಹಿಳೆಯರ ಕುರಿತು ಇಂತಹ ಅವಹೇಳನಕಾರಿ ಮತ್ತು ಸ್ವೀಕಾರಾರ್ಹವಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ಅತ್ಯಂತ ದುರದೃಷ್ಟಕರ. ಇದು ನಮ್ಮ ಸಮಾಜದಲ್ಲಿಯ ಮಹಿಳೆಯರ ಘನತೆಗೆ ಧಕ್ಕೆಯುಂಟು ಮಾಡಿದ್ದು ಮಾತ್ರವಲ್ಲ,ದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಹೆಣ್ಣುಮಕ್ಕಳಿಗೆ ಮಾಡಿರುವ ಅವಮಾನವೂ ಆಗಿದೆ’ ಎಂದು ರಹತ್ಕರ್ ಎಕ್ಸ್ ಪೋಸ್ಟ್ನಲ್ಲಿ ಕಿಡಿಕಾರಿದ್ದಾರೆ. ‘ಪ್ರೀತಿಯ ಕರ್ನಲ್ ಸೋಫಿಯಾ ಖುರೇಶಿ ಈ ದೇಶದ ಹೆಮ್ಮೆಯ ಮಗಳಾಗಿದ್ದಾರೆ,ದೇಶವನ್ನು ಪ್ರೀತಿಸುವ ಎಲ್ಲ ಭಾರತೀಯರ ಸಹೋದರಿಯಾಗಿದ್ದಾರೆ. ಅವರು ಧೈರ್ಯ ಮತ್ತು ಸಮರ್ಪಣಾ ಭಾವದಿಂದ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ’ ಎಂದು ಹೇಳಿರುವ ರಹತ್ಕರ್,ಅವರಂತಹ ಧೀರ ಮಹಿಳೆಯರ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ ಮತ್ತು ಇಂತಹ ಅವಹೇಳನಕಾರಿ ಹೇಳಿಕೆಗಳನ್ನು ಬಲವಾಗಿ ಖಂಡಿಸಬೇಕು ಎಂದು ಹೇಳಿದ್ದಾರೆ. ವಿಜಯ ಶಾ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ವೀಡಿಯೊವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ‘ನಮ್ಮ ಸೋದರಿಯರ ಹಣೆಯ ಮೇಲಿನ ಸಿಂಧೂರವನ್ನು ಅಳಿಸಿದವರ ಸೋದರಿಯನ್ನೇ ಅವರಿಗೆ ತಕ್ಕ ಪಾಠವನ್ನು ಕಲಿಸಲು ನಾವು ಕಳುಹಿಸಿದ್ದೇವೆ’ ಎಂದು ಶಾ ತನ್ನ ಭಾಷಣದಲ್ಲಿ ಹೇಳಿದ್ದರು. ಬಳಿಕ ಅವರು ‘ನನ್ನ ಮಾತುಗಳು ಸಮಾಜ ಮತ್ತು ಧರ್ಮಕ್ಕೆ ನೋವನ್ನುಂಟು ಮಾಡಿದ್ದರೆ ಹತ್ತು ಸಲ ಕ್ಷಮೆ ಯಾಚಿಸಲು ನಾನು ಸಿದ್ಧನಿದ್ದೇನೆ ’ಎಂದು ಹೇಳಿದ್ದರು. ಹಲವಾರು ವಿಭಾಗಗಳಲ್ಲಿ ಹುಡುಗರಿಗಿಂತ ಹುಡುಗಿಯರೇ ಮೇಲುಗೈ ಸಾಧಿಸಿರುವ ಇತ್ತೀಚಿನ ಸಿಬಿಎಸ್ಇ ಫಲಿತಾಂಶಗಳನ್ನೂ ಉಲ್ಲೇಖಿಸಿರುವ ರಹತ್ಕರ್,ಮಹಿಳೆಯರ ಬಗ್ಗೆ ಗೌರವಯುತ ಮನೋಭಾವವನ್ನು ಬೆಳೆಸಿಕೊಳ್ಳುವುದು ಈಗ ಹಿಂದೆಂದಿಗಿಂತಲೂ ಹೆಚ್ಚು ಮುಖ್ಯವಾಗಿದೆ. ದೇಶವು ಪ್ರಗತಿಯತ್ತ ಸಾಗಲು ಮಹಿಳೆಯರು ಪ್ರತಿಯೊಂದೂ ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸುವುದು ಅಗತ್ಯವಾಗಿದೆ ಎಂದಿದ್ದಾರೆ. ಸಾರ್ವಜನಿಕ ಭಾಷಣಗಳಲ್ಲಿ ಘನತೆಯನ್ನು ಕಾಯ್ದುಕೊಳ್ಳುವಂತೆ ಕರೆ ನೀಡಿರುವ ಅವರು,ಮಹಿಳೆಯರ ಕುರಿತು ಗೌರವಯುತ ಭಾಷೆ ಮತ್ತು ಮನೋಭಾವವನ್ನು ರೂಢಿಸಿಕೊಳ್ಳುವಂತೆ ಪ್ರತಿಯೊಬ್ಬರನ್ನೂ ಆಗ್ರಹಿಸಿದ್ದಾರೆ. ಮಹಿಳೆಯರ ಭಾಗವಹಿಸುವಿಕೆ ಮತ್ತು ಕೊಡುಗೆಗಳನ್ನು ಕೀಳಂದಾಜಿಸುವುದು ಸ್ವೀಕಾರಾರ್ಹವಲ್ಲ ಮಾತ್ರವಲ್ಲ, ದೇಶದ ಅಭಿವೃದ್ಧಿಗೂ ಅಡ್ಡಿಯಾಗಿದೆ ಎಂದು ರಹತ್ಕರ್ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.
ಬೈಕ್ ಢಿಕ್ಕಿ: ಸೈಕಲ್ ಸವಾರ ಮೃತ್ಯು
ಶಂಕರನಾರಾಯಣ, ಮೇ 14: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ಮೇ 13ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಕೊರಗ(77) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪವನ್ ಸಣ್ಣಪುಟ್ಟ ಗಾಯಗೊಂಡಿ ದ್ದಾರೆ. ಅಂಪಾರು ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಬೈಕ್, ಮಣ್ಣು ರಸ್ತೆಯಲ್ಲಿ ಹೋಗುತ್ತಿದ್ದ ಸೈಕಲ್ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೈಕ್ ಹಾಗೂ ಸೈಕಲ್ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಕೊರಗ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ | ಅಮಾಯಕರ ಸಾವಿಗೆ ಕಾರಣವಾದ ಆಸ್ಪತ್ರೆ ವಿರುದ್ಧ ಕ್ರಮಕ್ಕೆ ನಮ್ಮ ಕರ್ನಾಟಕ ಸೇನೆ ಆಗ್ರಹ
ಯಾದಗಿರಿ : ನಗರದ ಡಾ.ಎಸ್.ಎಂ.ಬಿರಾದಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ಸಾವಿಗೆ ಸಂಬಂಧಿಸಿದಂತೆ ಎಫ್.ಐ.ಆರ್. ದಾಖಲಾಗಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 5 ಜನರ ವಿರುದ್ಧ ಎಫ್.ಐ.ಆರ್. ಆಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ ದೂರಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀದೇವಿ ಎನ್.ಕಟ್ಟಮನಿ ಮಾತನಾಡಿ, ಆಸ್ಪತ್ರೆಯಿಂದ ಈಗಾಗಲೇ ಇಂತಹ ಪ್ರಕರಣಗಳು ವರದಿಯಾಗುತ್ತಿದೆ. ಈ ಎಲ್ಲಾ ಘಟನೆಗಳಿಗೆ ಆಸ್ಪತ್ರೆ ವೈದ್ಯರು ಹಾಗೂ ಹೆಚ್ಚುವರಿ ಔಷಧ ನಿಯಂತ್ರಕರು ಸೇರಿದಂತೆ 5 ಜನರ ಮೇಲೆ ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಮಾರ್ಚ ತಿಂಗಳಲ್ಲಿಯೇ ಪ್ರಕರಣ ದಾಖಲಾಗಿದೆ. ಈಗಾಗಲೇ ಮಾನವಹಕ್ಕುಗಳ ಆಯೋಗ ಡಿಎಚ್ಓ ಕಚೇರಿಯವರು ಭೇಟಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಕೂಡಲೇ 10 ದಿನದಲ್ಲಿ ಆಸ್ಪತ್ರೆ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಆಸ್ಪತ್ರೆಗೆ ಮುಳ್ಳುಬೇಲಿ ಹಚ್ಚಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದರು.
ಕೇರಳ | ‘ಶವರ್ಮಾ ತಿಂದ ನಂತರ ಹಿಂದೂಗಳು ಮಾತ್ರ ಸಾಯುತ್ತಾರೆ’ : ಆರೆಸ್ಸೆಸ್ ನಿಯತಕಾಲಿಕೆಯ ಸಂಪಾದಕರ ದ್ವೇಷ ಭಾಷಣ
ತಿರುವನಂತರಪುರಂ : ‘ಶವರ್ಮಾ ತಿಂದ ನಂತರ ಹಿಂದೂಗಳು ಮಾತ್ರ ಸಾಯುತ್ತಾರೆ’ ಎಂದು ಕೇರಳದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಮುಖವಾಣಿ ಪತ್ರಿಕೆ ಕೇಸರಿಯ ಪ್ರಧಾನ ಸಂಪಾದಕ ಆರ್ಎನ್ ಮಧು ಹೇಳಿಕೆ ನೀಡಿದ್ದಾರೆ. ಅವರ ದ್ವೇಷ ಭಾಷಣಕ್ಕೆ ಕೇರಳದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮೇ 13 ರಂದು ಮಂಗಳವಾರ ಕೊಲ್ಲಂನಲ್ಲಿ ನಡೆದ ದೇವಾಲಯ ಕಾರ್ಯಕ್ರಮವೊಂದರಲ್ಲಿ ಮಾಡಿದ್ದ ದ್ವೇಷ ಭಾಷಣಕ್ಕೆ ಆಕ್ರೋಶ ವ್ಯಕ್ತವಾಗಿದೆ. ತಮ್ಮ ಭಾಷಣದಲ್ಲಿ, ಶವರ್ಮಾ ತಿಂದ ನಂತರ ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಯಾರೂ ಸಾಯುವುದಿಲ್ಲ. ಕೇವಲ ಹಿಂದೂಗಳು ಮಾತ್ರ ಶವರ್ಮಾ ತಿಂದ ನಂತರ ಸಾಯುತ್ತಿದ್ದಾರೆ”, ಎಂದು ಮಧು ಹೇಳಿದ್ದಾರೆ. ಹಿಂದೂಗಳ ಎಂದು ಹೇಳುವಾಗ, ಅವರು ಕೇರಳದಲ್ಲಿ ವಿಶೇಷ ಗುಂಪಾಗಿ ಪರಿಗಣಿಸಲಾದ ‘ವರ್ಮ’ ಜಾತಿಯನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದಾರೆ. “ನಾವು ‘ಶವ ವರ್ಮಾ’ ತಿನ್ನುತ್ತೇವೆ - ಅಂದರೆ ವರ್ಮಾ ಮೃತದೇಹಗಳನ್ನು ತಿನ್ನುತ್ತಾರೆ. ಅದಕ್ಕಾಗಿಯೇ ಇದನ್ನು ‘ಶವ ವರ್ಮಾ’ ಎಂದು ಕರೆಯಲಾಗುತ್ತದೆ,” ಎಂದು ಮಧು ಅವರು ಶವರ್ಮಾಕ್ಕೆ ಹೊಸ ವ್ಯಾಖ್ಯಾನ ನೀಡಿದ್ದಾರೆ. ‘ವರ್ಮಾ’ ಜಾತಿಯ ಹೆಸರನ್ನು ‘ಶವ’ ದೊಂದಿಗೆ ಜೋಡಿಸುವ ಮೂಲಕ ಶವ ವರ್ಮ ಎಂದು ಅವರು ವ್ಯಂಗ್ಯವಾಡಿದ್ದಾರೆ. “ಕೇರಳದಲ್ಲಿ ಶವರ್ಮಾ ಸೇವಿಸಿದ ನಂತರ ಅನೇಕ ಜನರು ಸಾವನ್ನಪ್ಪಿದ್ದಾರೆ. ಈ ಪಟ್ಟಿಯಲ್ಲಿ ಮುಹಮ್ಮದ್, ಆಯಿಷಾ ಅಥವಾ ಥಾಮಸ್ ಇಲ್ಲ - ವರ್ಮಾ ಮಾತ್ರ ಇರುವುದು”, ಎಂದು ಅವರು ದ್ವೇಷ ಭಾಷಣ ಮಾಡಿದ್ದಾರೆ. ಹೆಚ್ಚುತ್ತಿರುವ ಅರೇಬಿಯದ ಆಹಾರದ ಸಂಸ್ಕೃತಿಯ ಜನಪ್ರಿಯತೆಯನ್ನು ಟೀಕಿಸಿದ ಆರೆಸ್ಸೆಸ್ ನ ಮಧು, ಮಾಂಸಾಹಾರಿ ಭಕ್ಷ್ಯಗಳು ನಕಾರಾತ್ಮಕ ಸಾಂಸ್ಕೃತಿಕ ಪ್ರಭಾವವಾಗಿದೆ ಎಂದು ಆರೋಪಿಸಿದ್ದಾರೆ.. ಈಗ, ಜನರನ್ನು ತೃಪ್ತಿಪಡಿಸುವ ಆಹಾರವೆಂದರೆ ಅರೇಬಿಯನ್ ಆಹಾರ. ನಗರಗಳಲ್ಲಿ ಮಾತ್ರವಲ್ಲ, ಹಳ್ಳಿಗಳಲ್ಲಿಯೂ ಜನರು ತಡರಾತ್ರಿಯಲ್ಲಿ ಅದನ್ನು ತಿನ್ನಲು ಪ್ರಾರಂಭಿಸಿದ್ದಾರೆ. ನಾವು ಸಂಜೆ ಬೀದಿಗಳಲ್ಲಿ ನಡೆಯುವಾಗ, ನಮ್ಮ ಮೂಗಿನ ಹೊಳ್ಳೆಗಳು ಸುಟ್ಟ ಮಾಂಸದ ವಾಸನೆಯಿಂದ ತುಂಬಿರುತ್ತವೆ. ಆ ನಡಿಗೆಯು ಸ್ಮಶಾನದ ಮೂಲಕ ನಡೆಯುವಂತೆ ಭಾಸವಾಗುತ್ತದೆ ಎಂದು ಅವರು ಕಿಡಿ ಕಾರಿದ್ದಾರೆ. ಹಾಗಂತ ಜನರು ಮಾಂಸ ತಿನ್ನುವುದನ್ನು ತಪ್ಪಿಸಬೇಕೆಂದು ತಾನು ಒತ್ತಾಯಿಸುತ್ತಿಲ್ಲ ಎಂದು ಮಧು ಸಮಜಾಯಿಷಿ ನೀಡಿದ್ದಾರೆ ಕೇರಳ ಮೂಲದ ಜನಪ್ರಿಯ ರ್ಯಾಪರ್ ಮತ್ತು ಗೀತರಚನೆಕಾರ ವೇಡನ್ ಅವರ ಮೇಲೆ ಹರಿಹಾಯ್ದ ಮಧು, ವೇಡನ್ ಗೆ ಪ್ರಬಲ ಪ್ರಾಯೋಜಕರು ಬೆಂಬಲ ನೀಡುತ್ತಾರೆ ಎಂದು ಆರೋಪಿಸಿದ್ದಾರೆ. ಈ ಶಕ್ತಿಗಳು ರಾಷ್ಟ್ರದ ವಿಭಜನೆಯ ಕನಸು ಕಾಣುತ್ತಿವೆ ಎಂಬುದು ಸ್ಪಷ್ಟವಾಗಿದೆ. ವೇಡನ್ ಅವರ ಸಂಗೀತವು ಜಾತಿ ಆಧಾರಿತ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಸಿದ್ಧಾಂತವನ್ನು ಉತ್ತೇಜಿಸುತ್ತಿದೆ. ವೇಡನ್ ಅವರು ಯುವ ಪೀಳಿಗೆಯ ಮನಸ್ಸಿನಲ್ಲಿ ವಿಷವನ್ನು ತುಂಬುತ್ತಿದ್ದಾರೆ, ಎಂದು ಮಧು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೌಜನ್ಯ: thenewsminute.com
ಮಂಗಳೂರು: ಕರ್ನಾಟಕ ಬ್ಯಾಂಕಿನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನಿವೃತ್ತಿಯಾಗಿದ್ದ ನಂದಳಿಕೆ ಬಾಲಚಂದ್ರ ರಾವ್ (72) ಹೃದಯಾಘಾತದಿಂದ ಬುಧವಾರ ಮಂಗಳೂರಿನಲ್ಲಿ ನಿಧನರಾದರು. ಅವರು ಪತ್ನಿ, ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ. ಬಾಲಚಂದ್ರ ರಾವ್ ಕವಿ ಮುದ್ದಣನ ಹುಟ್ಟೂರಾದ ನಂದಳಿಕೆಯಲ್ಲಿ ಮುದ್ದಣ ಸ್ಮಾರಕ ಮಿತ್ರಮಂಡಲಿ ಸ್ಥಾಪನೆ ಮಾಡಿ ಅದರ ಮೂಲಕ ಕವಿಯನ್ನು ನೆನಪಿಸುವ ನೂರಾರು ಕಾರ್ಯಕ್ರಮಗಳನ್ನು, ಕೆಲಸಗಳನ್ನು ಮಾಡಿದ್ದರು. ಕವಿ ಮುದ್ದಣನ ಸಮಗ್ರ ಕಾವ್ಯ ಸಂಪುಟ ಬಿಡುಗಡೆ, ಮುದ್ದಣ ಮನೋರಮೆಯರ ಸಂಭಾಷಣೆಯ ಡಿವಿಡಿ, ಹುಟ್ಟೂರಿನಲ್ಲಿ ಮುದ್ದಣನ ನೆನಪಿನ ಗ್ರಂಥಾಲಯ, ಮುದ್ದಣ ಸ್ಮಾರಕ, ಮುದ್ದಣನ ಯಕ್ಷಗಾನ ಸಂಪುಟ ಗಳು, ಪ್ರತೀ ವರ್ಷ ಕವಿ ಮುದ್ದಣ ದಿನಾಚರಣೆ, ಸ್ಟಾಂಪ್ ಬಿಡುಗಡೆ, ಮುದ್ದಣನ ಹೆಸರಲ್ಲಿ ನೂರಾರು ಸಾಹಿತ್ಯಿಕ ಕಾರ್ಯಕ್ರಮಗಳು, ಮುದ್ದಣ ಸ್ಮಾರಕ ಪ್ರಶಸ್ತಿ ಪೀಠ ಸ್ಥಾಪನೆ, ಮಂಗಳೂರು ವಿವಿಯಲ್ಲಿ ಕವಿಯ ನೆನಪಿನ ಅಧ್ಯಯನ ಪೀಠಕ್ಕಾಗಿ ಶ್ರಮಿಸಿದ್ದರು. ಬಾಲಚಂದ್ರ ರಾವ್ ಕರ್ನಾಟಕ ಬ್ಯಾಂಕ್ನಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ನಂದಳಿಕೆ ಬಾಲಚಂದ್ರ ರಾವ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಮೇ 15ರಂದು ಗುರುವಾರ ಬೆಳಗ್ಗೆ ಗಂಟೆ 6 ರಿಂದ 9ರ ವರೆಗೆ ಬಿಜೈನಲ್ಲಿರುವ ಬಾಲಚಂದ್ರ ರಾಯರ ಸ್ವಗೃಹದಲ್ಲಿ ಇರಿಸಲಾಗುವುದು. ಬಳಿಕ ಪಾರ್ಥಿವ ಶರೀರವನ್ನು ಕಾರ್ಕಳ ತಾಲೂಕಿನ ನಂದಳಿಕೆಯ ಐಸಿರಿಗೆ ಕೊಂಡೊಯ್ಯಲಾಗುವುದು. ಅಲ್ಲಿ ಅಂತಿಮ ದರ್ಶನ ವ್ಯವಸ್ಥೆಯಾಗಿದೆ. ಬಳಿಕ ಅಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ನಂದಳಿಕೆ ಬಾಲಚಂದ್ರ ರಾವ್ ನಿಧನಕ್ಕೆ ಕಲ್ಕೂರ ಸಂತಾಪ ನಂದಳಿಕೆ ಬಾಲಚಂದ್ರ ರಾವ್ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಂತಾಪ ವ್ಯಕ್ತಪಡಿಸಿದ್ದಾರೆ. ನಂದಳಿಕೆಯ ಕವಿ ಮುದ್ದಣನ ಸಾಹಿತ್ಯ ವಿಶೇಷತೆಯನ್ನು ಜಾಹೀರುಪಡಿಸುವಲ್ಲಿ ದಿ.ನಂದಳಿಕೆ ಬಾಲ ಚಂದ್ರ ರಾಯರ ಶ್ರಮ ಶ್ಲಾಘನೀಯವಾದುದು ,ಸಾಹಿತ್ಯ ಸಂಘಟನೆಯಲ್ಲೂ ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ಅವರ ಸೇವೆ ನಿಜಕ್ಕೂ ಅನನ್ಯವಾಗಿತ್ತು. ಓರ್ವ ಸಂಘಟಕರಾಗಿ, ಸಾಹಿತ್ಯ ಸಾಂಸ್ಕೃತಿಕ ಪರಿಚಾರಕರಾಗಿ, ಸ್ನೇಹಜೀವಿಯಾಗಿದ್ದ ಬಾಲಚಂದ್ರ ರಾಯರ ಅಗಲಿಕೆ ನೋವನ್ನುಂಟು ಮಾಡಿದೆ ಎಂದು ಕಲ್ಕೂರ ಹೇಳಿದ್ದಾರೆ. ಬಾಲಚಂದ್ರ ರಾಯರಿಗೆ ಕಲ್ಕೂರ ಪ್ರತಿಷ್ಠಾನದಿಂದ ಜೀವಮಾನ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು ಎಂದು ಕಲ್ಕೂರ ತಿಳಿಸಿದ್ದಾರೆ.
ಜೇವರ್ಗಿ | ರೆಡ್ ಕ್ರಾಸ್ ಮಾನವೀಯತೆಯ ಸೇವೆ ಮಾಡುವ ಸಂಸ್ಥೆ: ಡಾ.ಸೂರ್ಯಕಾಂತ್ ಉಮಾಪುರೆ
ಕಲಬುರಗಿ : ರೆಡ್ ಕ್ರಾಸ್ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಅನಾಹುತಗಳಿಂದ ಜನರನ್ನು ರಕ್ಷಿಸುವ ಮತ್ತು ಅವರಿಗೆ ಯಾವುದೇ ತಾರತಮ್ಯವಿಲ್ಲದೆ ಮಾನವೀಯತೆಯ ಸೇವೆ ಮಾಡುವ ಸಂಸ್ಥೆ ಆಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಮಿತಿಯ ಸದಸ್ಯರಾದ ಡಾ.ಸೂರ್ಯಕಾಂತ್ ಉಮಾಪುರೆ ಹೇಳಿದರು. ಅವರು ಜೇವರ್ಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ಕ್ರಾಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ 'ಪ್ರಥಮ ಚಿಕಿತ್ಸೆ ಅರಿವು' ಕಾರ್ಯಕ್ರಮ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ನಾ ಒಂದು ದಿನದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಅಫಜಲಪೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥರು, ಸಹ ಪ್ರಾಧ್ಯಾಪಕರಾದ ಡಾ.ಸಂತೋಷ ಹುಗ್ಗಿ ಮಾತನಾಡಿದರು. ಪ್ರಾಂಶುಪಾಲರಾದ ಲಕ್ಷ್ಮಣ ಬೋಸ್ಲೆ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ.ಖುತೇಜಾ ನಸ್ರಿನ್ ಸ್ವಾಗತಿಸಿದರು. ರೋವರ್ಸ್ ಸ್ಕೌಟ್ಸ್ ಲೀಡರ್ ಡಾ.ರಾಮುಲು ಮತ್ತು ಗಣಿತಶಾಸ್ತ್ರದ ಪ್ರಾಧ್ಯಾಪಕರಾದ ಡಾ.ಶಿಲ್ಪಾ ಅತಿಥಿಗಳನ್ನು ಪರಿಚಯಿಸಿದರು. ರೇಂಜರ್ಸ್ ಲೀಡರ್ ಭಾಗ್ಯ ಶ್ರೀ ಠಾಕೂರ್ ವೇದಿಕೆ ಮೇಲಿದ್ದರು. ವಿದ್ಯಾರ್ಥಿನಿ ತೇಜಸ್ವಿನಿ ಪ್ರಾರ್ಥಿಸಿದರು. ಕನ್ನಡ ವಿಭಾಗದ ಅಧ್ಯಾಪಕ ಡಾ.ಮಲ್ಲಿಕಾರ್ಜುನ ಹೂಗಾರ ನಿರೂಪಿಸಿದರು. ಹಿಂದಿ ವಿಭಾಗದ ಅಧ್ಯಾಪಕ ಭಜರಂಗ ಮಾಳಿ ವಂದಿಸಿದರು.
ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ: ಮುಖ್ಯ ಲೆಕ್ಕಿಗ ಭಾಸ್ಕರ್ ಸೇರಿ ಇಬ್ಬರ ಬಂಧನ
ಬಂಟ್ವಾಳ: ತಾಲೂಕು ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೇಗೌಡ ಎಂಬವರ ವಿರುದ್ಧ ಪ್ರಕರಣ ದಾಖಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋ ನಿವೃತ್ತಿ ಹೊಂದಿದ್ದು, ಜೂನ್ 2024ರಂದು ಮರಣ ಹೊಂದಿದ್ದರು. ಅವರು ಪತ್ನಿ ಗಂಡನ ಮರಣ ಉಪದಾನದ ಬಗ್ಗೆ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಬಳಿ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರುವುದಿಲ್ಲ. ನಂತರ ಗಂಡನ ಮರಣ ಉಪದಾನವನ್ನು ಜಮೆ ಮಾಡಿಕೊಟ್ಟಿರುವ ಪ್ರತಿಫಲವಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ 5000 ರೂ. ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೇಗೌಡ 5000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಬುಧವಾರ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಖಜಾನೆಯ ಎಫ್.ಡಿ.ಎ ಬಸವೇಗೌಡ ತಲಾ 5000 ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪ್ರಭಾರ ಪೊಲೀಸ್ ಅಧೀಕ್ಷಕರ ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಅವರು ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆಯನ್ನು ಕೈಗೊಂಡಿರುತ್ತಾರೆ.
ಬೆಂಗಳೂರು | ಬ್ಯಾಂಕ್ ಖಾತೆಗಳ ದಾಖಲಾತಿಯನ್ನು ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ : 12 ಮಂದಿ ಬಂಧನ
ಬೆಂಗಳೂರು : ಹಣದಾಸೆಗಾಗಿ ಅಮಾಯಕರ ಬ್ಯಾಂಕ್ ಖಾತೆಗಳ ದಾಖಲಾತಿಗಳನ್ನು ಸೈಬರ್ ವಂಚಕರಿಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಜಾಲವನ್ನು ಬೇಧಿಸಿರುವ ಇಲ್ಲಿನ ಆಡುಗೋಡಿ ಠಾಣೆ ಪೊಲೀಸರು, 12 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ವಂಚನೆಗೊಳಗಾದ ಸುಮಿಯಾ ಬಾನು ಎಂಬುವರು ನೀಡಿದ ದೂರಿನನ್ವಯ ಹರ್ಷವರ್ಧನ್, ಸೋನು, ರಾಜಮಿಶ್ರಾ ಹಾಗೂ ಶೈಲೇಶ್ ಗೌತಮ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 400 ಸಿಮ್ ಕಾರ್ಡ್ಗಳು, 140 ಎಟಿಎಂ ಕಾರ್ಡ್ಗಳು, 17 ಚೆಕ್ಪುಸ್ತಕ, 27 ಮೊಬೈಲ್ ಫೋನ್, 22 ವಿವಿಧ ಬ್ಯಾಂಕ್ ಪಾಸ್ಬುಕ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳು ಒಂದು ಬ್ಯಾಂಕ್ ಖಾತೆಗೆ 20 ಸಾವಿರ ಕಮಿಷನ್ ಪಡೆದು ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದರು. ಈ ಪ್ರಕರಣದ ಸಂಬಂಧ ತನಿಖೆಯಲ್ಲಿ ಕೆಲವರು ತಪ್ಪೊಪ್ಪಿಕೊಂಡಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಆಡುಗೋಡಿ ಠಾಣಾ ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕಕ್ಕೆ ಹೊಸ 2 ರೈಲು ಮಾರ್ಗ ಘೋಷಿಸಿದ ವಿ ಸೋಮಣ್ಣ; 235 ಕಿಮೀ ದೂರ, 6 ಜಿಲ್ಲೆಗಳಿಗೆ ಅನುಕೂಲ! ಎಲ್ಲಿಂದ ಎಲ್ಲಿಗೆ?
ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಕರ್ನಾಟಕಕ್ಕೆ ಎರಡು ಹೊಸ ರೈಲು ಮಾರ್ಗಗಳನ್ನು ಘೋಷಿಸಿದ್ದಾರೆ. ಆಲಮಟ್ಟಿ-ಯಾದಗಿರಿ ಮತ್ತು ಭದ್ರಾವತಿ-ಚಿಕ್ಕಜಾಜೂರು ಮಾರ್ಗಗಳ ಸಮೀಕ್ಷೆಗೆ ಅನುಮೋದನೆ ನೀಡಲಾಗಿದ್ದು, ಇದರಿಂದಾಗಿ ಮಧ್ಯ ಹಾಗೂ ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಈ ಯೋಜನೆಗೆ 5.87 ಕೋಟಿ ರೂ. ಮೀಸಲಿಡಲಾಗಿದೆ, ಇದು ಸಂಪರ್ಕ ಸುಧಾರಣೆ ಮತ್ತು ಪ್ರಾದೇಶಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರುವುದು ಸರಿಯಲ್ಲ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಆಮೇಲೆ ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆಕ್ಷೇಪಿಸಿದ್ದಾರೆ. ಬುಧವಾರ ಇಲ್ಲಿನ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ ‘ಒಳಕೋವೆ’ ಕೃತಿ ಬಿಡುಗಡೆಗೊಳಿಸಿ, ಐದು ಮಂದಿ ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು, ಅದು ತೋರಿಕೆ ಇರಬಾರದು. ಇವತ್ತಿನ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರು, ಮಾತಾಡುವವರು ಬಹಳ ಮಂದಿ ಸಿಗ್ತಾರೆ. ಆದರೆ ಬದ್ಧತೆ ಇರುವವರು ಕಡಿಮೆ ಎಂದು ಸಿದ್ದರಾಮಯ್ಯ ಹೇಳಿದರು. ಇವತ್ತಿನ ವ್ಯವಸ್ಥೆ ಸುಧಾರಣೆಗೆ ವಿರುದ್ಧವಾದದ್ದು. ವ್ಯವಸ್ಥೆ ಜೊತೆ ರಾಜಿ ಮಾಡಿಕೊಂಡರೆ ಏನಾಗತ್ತೆ, ರಾಜಿ ಮಾಡಿಕೊಳ್ಳದಿದ್ದರೆ ಏನಾಗುತ್ತದೆ ಎನ್ನುವ ಅರಿವು ನನಗೆ ಇದೆ. ಈ ಅರಿವು ಎಲ್ಲರಿಗೂ ಇರಬೇಕು. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ, ವರ್ಗ ವ್ಯವಸ್ಥೆಗೆ ಚಲನೆ ಇದೆ. ಅದಕ್ಕೇ ಬುದ್ದ, ಬಸವ, ಅಂಬೇಡ್ಕರ್ ಎಷ್ಟು ಹೋರಾಡಿದರೂ ಜಾತಿ ಹೋಗಿಲ್ಲ. ಜಾತಿ ಎನ್ನುವುದು ಸಾಮಾಜಿಕ ವಾಸ್ತವ. ಸಾಮಾಜಿಕ ನ್ಯಾಯದ ಪರವಾದ ನಿಜವಾದ ಬದ್ಧತೆ ಇಟ್ಟುಕೊಂಡು ಕೆಲಸ ಮಾಡುವವರು ಹೆಚ್ಚೆಚ್ಚು ಬರಬೇಕು ಎಂದು ಅವರು ನುಡಿದರು. ಎಂ.ಎಸ್.ಮಣಿ ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆ ಉಳ್ಳವರು. ಇವರು ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಲೇಖಕಿಯರಾದ ಡಾ.ಶರೀಫಾ, ಡಾ.ನಳಿನಾಕ್ಷಿ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ನಾಗವೇಣಿ, ಹಿರಿಯ ಪತ್ರಕರ್ತ ಸಂಗಮ್ ದೇವ್ ಹಾಗೂ ಸಂಪಾದಕ ಶಿವಲಿಂಗಪ್ಪ ಸೇರಿ ಐದು ಮಂದಿ ಸಾಧಕರಿಗೆ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಹೆಸರಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಐವತ್ತು ವರ್ಷಗಳ ಕಾಲ ಪತ್ರಿಕಾ ವೃತ್ತಿಯ ಕುರಿತಾದ ನಾನಾ ಕ್ಷೇತ್ರಗಳಲ್ಲಿ ಶ್ರಮಿಸಿದ ಕೊಪ್ಪಳ ವಿವಿ ಕುಲಪತಿ ಪ್ರೊ ಬಿ.ಕೆ.ರವಿ ಪತ್ರಿಕಾ ವೃತ್ತಿಯ 50 ಸಂಭ್ರಮದ ಹಿನ್ನಲೆ ಜೀವಮಾನದ ಸಾಧನೆಗಾಗಿ ಸಿಎಂ ಸನ್ಮಾನಿಸಿದರು.
ಸಚಿವ ಪ್ರಿಯಾಂಕ್ ಖರ್ಗೆಗೆ ಒಮ್ಮೆ ಪಾಕಿಸ್ತಾನದ ವಾಯು ನೆಲೆಗಳಿಗೆ ಭೇಟಿ ಕೊಡಿ ಎಂದ ಬಿಜೆಪಿ ನಾಯಕ, ಯಾಕೆ ?
ದೇಶದ ಭದ್ರತೆಯ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ವಾಕ್ಸಮರ ಮುಂದುವರಿದಿದೆ. ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನಡುವೆ ವಾಕ್ಸಮರ ಮುಂದುವರಿದಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳು
ಎಎನ್ಎಫ್ ಮಾದರಿ ವಿಶೇಷ ಪಡೆ ರಚನೆಗೆ ಪ್ರಸ್ತಾವನೆ ಸಲ್ಲಿಕೆ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಮಾಜದ ಸೌಹಾರ್ದ ಕದಡುವ ಚಟುವಟಿಕೆಗಳಿಗೆ ಅಂಕುಶ ಹಾಕಲು, ನಕ್ಸಲ್ ನಿಗ್ರಹ ದಳ (ಎಎನ್ಎಫ್)ದ ಮಾದರಿಯಲ್ಲಿ ವಿಶೇಷ ಪಡೆ ರಚನೆ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಬಂದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಬುಧವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಎನ್ಎಫ್ ಮಾದರಿಯಲ್ಲಿ ವಿಶೇಷ ಪಡೆ ರಚನೆ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸರಕಾರಕ್ಕೆ ಕಳುಹಿಸಿದ್ದಾರೆ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಎರಡು-ಮೂರು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲದೇ, ಅಗತ್ಯ ಕಂಡು ಬಂದರೆ ರಾಜ್ಯದ ಇತರ ಜಿಲ್ಲೆಗಳಿಗೂ ಈ ವಿಶೇಷ ಪಡೆಯ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗುವುದು ಎಂದು ಹೇಳಿದರು. ಸಾಮಾಜಿಕ ಜಾಲತಾಣಗಳಲ್ಲಿ ದೇಶ ವಿರೋಧಿ ಹಾಗೂ ದ್ವೇಷದ ಪೋಸ್ಟ್ಗಳನ್ನು ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇವೆ. ಅಲ್ಲದೇ, ಅವಹೇಳನಕಾರಿ, ಕೋಮು ಭಾವನೆ ಕೆರಳಿಸುವ, ವೈಯಕ್ತಿಕ ತೇಜೋವಧೆ ಮಾಡುವಂತಹ ಪೋಸ್ಟ್ ಗಳಿಗೆ ಕಡಿವಾಣ ಹಾಕಬೇಕಿದೆ. ಈ ಸಂಬಂಧ ವಿಸ್ತೃತ ಕಾರ್ಯ ಯೋಜನೆ ರೂಪಿಸಲಾಗುತ್ತಿದೆ ಎಂದು ಪರಮೇಶ್ವರ್ ಹೇಳಿದರು. ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸುವ ಅಗತ್ಯವಿಲ್ಲ. ಬಿಜೆಪಿಯವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ರಾಜ್ಯಪಾಲರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಅವರು ತಿಳಿಸಿದರು. ಬಿಜೆಪಿ ಹಮ್ಮಿಕೊಂಡಿರುವ ತಿರಂಗಾ ಯಾತ್ರೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇಶದ ಭದ್ರತೆ ವಿಚಾರದಲ್ಲಿ ಆರಂಭದಿಂದಲೂ ನಾವು ರಾಜಕೀಯ ಬಣ್ಣ ಬಳಿಯಬೇಡಿ ಎಂದು ಹೇಳುತ್ತಿದ್ದೆವು. ಪ್ರತಿಯೊಬ್ಬ ಭಾರತೀಯನಿಗೂ ತನ್ನದೇ ಆದ ಆಲೋಚನೆಗಳು ಇರುತ್ತವೆ. ಆದರೆ, ದೇಶದ ರಕ್ಷಣೆಗೆ ಎಲ್ಲರೂ ಒಂದಾಗಿರಬೇಕು. ಕಾಂಗ್ರೆಸ್ ಪಕ್ಷ ಮುಂಚೂಣಿಯಲ್ಲಿದ್ದು ತಿರಂಗಾ ಯಾತ್ರೆ ಮಾಡಿತು. ನಾವು ಎಲ್ಲ ಪಕ್ಷದವರನ್ನೂ ಆಹ್ವಾನ ನೀಡಿದೆವು. ಬಿಜೆಪಿಯವರು ನಮಗಿಂತ ಮುಂಚೆ ತಿರಂಗಾ ಯಾತ್ರೆ ಮಾಡಿ, ನಮಗೆ ಆಹ್ವಾನ ಕೊಟ್ಟಿದ್ದರೆ ನಾವು ಸಹಕಾರ ನೀಡುತ್ತಿದ್ದೆವು ಎಂದು ಹೇಳಿದರು. ಜಾತಿ ಗಣತಿ ವರದಿಯಲ್ಲಿನ ಶಿಫಾರಸ್ಸುಗಳಿಗೆ ಸಂಬಂಧಿಸಿದಂತೆ ಸಚಿವರು ತಮ್ಮ ಅಭಿಪ್ರಾಯಗಳನ್ನು ಲಿಖಿತ ರೂಪದಲ್ಲಿ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಈಗಾಗಲೆ ಹಲವು ಸಚಿವರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದು, ಇನ್ನೂ ಕೆಲವರು ನೀಡುವುದು ಬಾಕಿಯಿದೆ. ಜಾತಿ ಗಣತಿ ವರದಿ ಕುರಿತು ಕೇವಲ ಸಚಿವ ಸಂಪುಟ ಸಭೆಯಲ್ಲಷ್ಟೇ ಚರ್ಚಿಸಿ, ತೀರ್ಮಾನ ಕೈಗೊಳ್ಳುವುದಲ್ಲ. ಈ ಬಗ್ಗೆ ಹೆಚ್ಚಿನ ಚರ್ಚೆಗಳು ನಡೆಯಬೇಕಿದೆ ಎಂದು ಪರಮೇಶ್ವರ್ ತಿಳಿಸಿದರು. ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಪರಿಶಿಷ್ಟ ಜಾತಿಗಳ ಸಮೀಕ್ಷೆ ತುಂಬಾ ಚೆನ್ನಾಗಿ ನಡೆಯುತ್ತಿದೆ. ಸರಕಾರ ಈಗ ನೀಡಿರುವ ಕಾಲಾವಕಾಶವನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಸಮಿತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದೇನೆ ಎಂದು ಅವರು ಹೇಳಿದರು.
ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ: ದ.ಕ. ಡಿಸಿ ಮುಲ್ಲೈ ಮುಗಿಲನ್
ಮಂಗಳೂರು: ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ ಎಂದು 2025ರ ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕರನ್ನು ಅಭಿನಂದಿಸುತ್ತಾ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕರೆ ನೀಡಿದ್ದಾರೆ. ಅವರು ಬುಧವಾರ ಡಿ.ಸಿ.ಬಂಗಲೆಯಲ್ಲಿ ಹಮ್ಮಿಕೊಂಡಿದ್ದ 2025ರ ಎಸ್ ಎಸ್ ಎಲ್ ಸಿ,ಪಿಯುಸಿ ಸಾಧಕರ ಸಮಾವೇಶ ವನ್ನು ದ್ದೇಶಿಸಿ ಮಾತನಾಡುತ್ತಿದ್ದರು. ಸಮಾಜದಲ್ಲಿ ಭವಿಷ್ಯದಲ್ಲಿ ನಮ್ಮಿಂದ ಎಷ್ಟು ಜನರಿಗೆ ಉಪಕಾರ ಆಗುತ್ತದೆ ಎನ್ನುವುದರ ಮೇಲೆ ನಮ್ಮ ಯಶಸ್ಸು ಅಡಗಿದೆ.ನಮ್ಮ ಮೇಲೆ ಮೊದಲು ನಮಗೆ ನಂಬಿಕೆ ಬೇಕು.ಪೊಷಕರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅವಕಾಶ ನೀಡಬೇಕು. ಮಕ್ಕಳ ಸಾಧನೆಯಲ್ಲಿ ಪೋಷಕರ,ಶಿಕ್ಷಕರ ಪಾತ್ರ ಅತ್ಯಂತ ಮಹತ್ವ ದ್ದಾಗಿದೆ. ವಿದ್ಯಾರ್ಥಿ ಗಳು ಕಲಿಕೆಯ ಉದ್ದೇಶ ತಿಳಿದುಕೊಳ್ಳುವುದು ಮುಖ್ಯ.ಕಲಿಕೆಗೆ ಆಸಕ್ತಿಯೂ ಮುಖ್ಯ. ನನ್ನ ಬಾಲ್ಯ ದಲ್ಲಿ ಡಿ.ಸಿ ಬಂಗಲೆ ಬಳಿ ಹೋಗುತ್ತಿದ್ದೆ. ಅಲ್ಲಿ ಇದ್ದ ಡಿ.ಸಿ ಹೆಸರು ಗಮನಿಸಿ ಆ ಜಾಗದಲ್ಲಿ ನನ್ನ ಹೆಸರು ಒಂದು ದಿನ ಕಾಣಬೇಕು ಎಂದು ಯೋಚಿಸುತ್ತಿದ್ದೆ. ಅದೇ ಚಿಂತನೆ ನಾನು ಜಿಲ್ಲಾಧಿಕಾರಿ ಯಾಗಲು ಒಂದು ಕಾರಣ ಎಂದರು. ಅದೇ ಕಾರಣಕ್ಕಾಗಿ ಡಿಸಿ ಬಂಗಲೆಯಲ್ಲಿ ಸಾಧಕರನ್ನು ಕರೆದು ಸನ್ಮಾನಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಮಾತನಾಡುತ್ತಾ, ನೀವು ಪರಿಶ್ರಮ ದಿಂದ ಉತ್ತಮ ಸ್ಥಾನ ಪಡೆದಿದ್ದೀರಿ ಅದನ್ನು ಕಾಯ್ದು ಕೊಳ್ಳುವುದು ಮುಖ್ಯ.ಭವಿಷ್ಯದ ಬಗ್ಗೆ ಚಿಂತನೆ ಮಾಡಿ ಕೊಂಡು ಮುಂದಿನ ಅಧ್ಯಯನ ವೃತ್ತಿಯನ್ನು ಆಯ್ಕೆ ಮಾಡಿ ಕೊಳ್ಳಬೇಕು ಎಂದು ಸಾಧಕರಿಗೆ ಕಿವಿ ಮಾತು ಹೇಳಿ ಶುಭ ಹಾರೈಸಿದರು.ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಮಾತನಾಡುತ್ತಾ, ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಮತ್ತು ಪಿಯುಸಿಯಲ್ಲಿ ಎರಡನೆ ಸ್ಥಾನ ಪಡೆಯಲು ಕಾರಣರಾದ ವಿದ್ಯಾರ್ಥಿ ಸಾಧಕರು, ಪೋಷಕ ರಿಗೆ ಜೊತೆಗೆ ಸಾಧಕರನ್ನು ಪ್ರೋತ್ಸಾಹಿ ಸುತ್ತಿರುವ ನಾಗರೀಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಸಾಧಕ ವಿದ್ಯಾರ್ಥಿ ಗಳು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ,ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ ಗೋಯಲ್, ಡಿಎಫ್ಒ ಆ್ಯಂಟೊನಿ ಮರಿಯಪ್ಪ ಮೊದಲಾದವರು ಶುಭ ಹಾರೈಸಿದರು. ಮಂಜುನಾಥ್ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ: ಕಾರು ಢಿಕ್ಕಿ; ಗಾಯಾಳು ವಿದ್ಯಾರ್ಥಿ ಮೃತ್ಯು
ಬಂಟ್ವಾಳ: ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಮೃತಪಟ್ಟ ವಿದ್ಯಾರ್ಥಿ. ಮಂಗಳವಾರ ಸಂಜೆ ಸುಮಾರು ಬಿ.ಸಿ.ರೋಡಿನಿಂದ ಮನೆ ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾ ಗಿತ್ತು. ಆದರೆ ಈತ ಚಿಕಿತ್ಸೆ ಗೆ ಸ್ಪಂದಿಸದೆ ಇಂದು ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯನಗರ | ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪಿಯು ಕಾಲೇಜುಗಳಲ್ಲಿ ಉಚಿತ ಪ್ರವೇಶಾತಿಗೆ ಅರ್ಜಿ ಅಹ್ವಾನ
ವಿಜಯನಗರ(ಹೊಸಪೇಟೆ) : ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಜಿಲ್ಲಾ ವ್ಯಾಪ್ತಿಯ ತಿಮ್ಮಲಾಪುರ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪಿಯು ಕಾಲೇಜು, ಹಲುವಾಗಲು ಅಟಲ್ ಬಿಹಾರಿ ವಾಜಿಪೇಯಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಕಂದಗಲ್ಲು ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ ಎಸೆಸೆಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯ ಅಧಿಕಾರಿ ತಿಳಿಸಿದ್ದಾರೆ. ವಸತಿ ಕಾಲೇಜಿನಲ್ಲಿ ಆಯ್ಕೆಯನ್ನು ಎಸೆಸೆಲ್ಸಿ ಮೆರಿಟ್ ಹಾಗೂ ಮೀಸಲಾತಿ ಅನ್ವಯ ಮಾಡಲಾಗುವುದು. ಕ್ರೈಸ್ಟ್ ವಸತಿ ಶಾಲೆಗಳಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಹಾಗೂ ಇತರ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಮೀಸಲಾತಿಯನ್ನು ಒಳಗೊಂಡಿದೆ. ಸ್ಥಳೀಯ ಜಿಲ್ಲಾ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಹಾಗೂ ಇತರೆ ಜಿಲ್ಲಾ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಸೀಟುಗಳನ್ನು ಕಾಯ್ದಿರಿಸಲಾಗಿದೆ. ಜಿಲ್ಲೆಯ ಮೂರು ವಸತಿ ವಿಜ್ಞಾನ ಪಿಯು ಕಾಲೇಜುಗಳಲ್ಲಿ ಸುಸಜ್ಜಿತ ಪ್ರಯೋಗಾಲಯ, ಉಚಿತ ಊಟ ಮತ್ತು ವಸತಿ, ಸಮವಸ್ತ್ರ, ಪಠ್ಯಪುಸ್ತಕಗಳು, ಲೇಖನ ಸಾಮಗ್ರಿಗಳು ಸೇರಿದಂತೆ ಸಿಇಟಿ ಹಾಗೂ ನೆಟ್ ಜೆಇಇ ಮತ್ತು ಇತರೆ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿ ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 20 ರಂದು ಕೊನೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಪ್ರವೇಶ ಬಯಸುವ ವಸತಿ ಕಾಲೇಜುಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಆಯಾ ವಸತಿ ಕಾಲೇಜುಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ | ಮೇ 29 ರಂದು ನಿವೃತ್ತ ಅಲ್ಪಸಂಖ್ಯಾತರ ನೌಕರರ ಸಂಘದಿಂದ ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ
ಕಲಬುರಗಿ : ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ಅಲ್ಪಸಂಖ್ಯಾತರ ನೌಕರರ ಸಂಘದ ವತಿಯಿಂದ ಮೇ 29 ರಂದು 2024-25ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಸೈಯ್ಯದ ನಜೀರೊದ್ದಿನ ಮುತವಲ್ಲಿ ತಿಳಿಸಿದ್ದಾರೆ. ಅಂದು 6 ಗಂಟೆಗೆ ನಗರದ ಕನ್ನಡ ಭವನದಲ್ಲಿನ ಸಭಾ ಭವನದಲ್ಲಿ ಅಯೋಜಿಸಲಾಗಿದ್ದು, ಸಿ.ಎ.ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ಪಾಸು ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಯುಪಿಎಸ್ಸಿಯಲ್ಲಿ ಉತ್ತೀರ್ಣರಾದ ಕಮಲಾಪೂರ ತಾಲ್ಲೂಕಿನ ಮೋಹನ ಪಾಟೀಲ್ ಕೂಡ ಸನ್ಮಾನಿಸಲಾಗುವುದು ಎಂದಿದ್ದಾರೆ. ಜಿಲ್ಲೆಯಲ್ಲಿ ಉರ್ದು ಭಾಷೆಯ ಉನ್ನತಿಗಾಗಿ, ವಿದ್ಯಾರ್ಥಿಗಳ ಪ್ರೋತ್ಸಾಹಕ್ಕಾಗಿ ಸರ್ಕಾರಿ ಉರ್ದು ಪ್ರೌಢ ಶಾಲೆಗಳಿಂದ ಶೇ.80 ಅಂಕ ಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತು ಸರಕಾರಿ ಅಲ್ಪಸಂಖ್ಯಾತರ ನೌಕರರ ಮಕ್ಕಳು ಹಿಫ್ಟ್ (ಖುರ್ ಆನ್ ಫಠಣ ಬಾಯಿಪಾಟ) ಮುಗಿಸಿರುವ ವಿದ್ಯಾರ್ಥಿಗಳಿಗೂ ಪ್ರೋತ್ಸಾಹಿಸಲಾಗುವುದೆಂದು ತಿಳಿಸಿದ್ದಾರೆ. ಜಿಲ್ಲೆಯ ಅಲ್ಪಸಂಖ್ಯಾತ ಸರಕಾರಿ ನೌಕರರ ಮಕ್ಕಳು ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕ ಪಡೆದು ಪಾಸಾದವರು ತಮ್ಮ ಅಂಕ ಪಟ್ಟಿ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಪಾಲಕರು ಸರ್ಕಾರಿ ನೌಕರರ ಇದ್ದ ಬಗ್ಗೆ ಮಾಹಿತಿ ಪತ್ರ ಇವುಗಳನ್ನು ಮೇ 25ರಂದು ಸಾಯಂಕಾಲ 5:00 ಗಂಟೆಯ ಒಳಗಾಗಿ ವಾಟ್ಸ್ ಅಪ್ ಮುಖಾಂತರ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು. ಸಂಘದ ಅಧ್ಯಕ್ಷ ಸೈಯ್ಯದ ನಜೀರೊದ್ದಿನ ಮುತವಲ್ಲಿ ಮೋ.ನಂ 9845478234, ಕಾರ್ಯದರ್ಶಿ ನವಾಬ ಖಾನ್ ಮೋ.ನಂ 9449933661 ಇವರನ್ನು ಸಂಪರ್ಕಿಸಬೇಕು ಎಂದು ಮುತವಲ್ಲಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.