ಇಸ್ರೇಲ್ ನ ಹೈಫಾ ತೈಲ ಸಂಸ್ಕರಣಾಗಾರ, ಟೆಲ್ ಅವೀವ್ ಸಮೀಪದ ಸಂವಹನ ಕೇಂದ್ರದ ಮೇಲೆ ದಾಳಿ: ಇರಾನ್
ಟೆಹ್ರಾನ್: ಇಸ್ರೇಲ್ ನಲ್ಲಿನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸಲಾಗಿದೆ ಎಂದು ಇರಾನ್ ಹೇಳಿದೆ. ಈ ಕುರಿತು ಇರಾನ್ ನ ಖತಮ್ ಅಲ್-ಅನ್ಬಿಯಾ ಸಶಸ್ತ್ರ ಪಡೆಗಳ ಪ್ರಧಾನ ಕಚೇರಿಯ ವಕ್ತಾರರು ಮಂಗಳವಾರ ಹೇಳಿದ್ದಾರೆ. ಉತ್ತರ ಇಸ್ರೇಲ್ ನ ಹೈಫಾದಲ್ಲಿರುವ ತೈಲ ಮತ್ತು ಅನಿಲ ಸಂಸ್ಕರಣಾಗಾರ ಹಾಗೂ ಇಂಧನ ಸಂಗ್ರಹ ಟ್ಯಾಂಕ್ ಗಳನ್ನು ಗುರಿಯಾಗಿಸಿ ಡ್ರೋನ್ ಗಳನ್ನು ಬಳಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಟೆಲ್ ಅವೀವ್ ಸಮೀಪದಲ್ಲಿರುವ ಉಪಗ್ರಹ ಸಂವಹನ ಕೇಂದ್ರವನ್ನೂ ಇರಾನ್ ಪಡೆಗಳು ನಾಶಪಡಿಸಿದ್ದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಇರಾನ್ ನ ತೈಲ ಡಿಪೋಗಳನ್ನು ಗುರಿಯಾಗಿಸಿಕೊಂಡಿದ್ದ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ. ಇರಾನ್ ನಡೆಸಿದ ದಾಳಿಗಳ ‘33ನೇ ಅಲೆ’ ಸಮಯದಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ. ಇದಲ್ಲದೆ, ಉತ್ತರ ಇರಾಕ್ ನ ಕುರ್ದಿಶ್ ಪ್ರದೇಶದ ಹರಿರ್ ನೆಲೆಯಲ್ಲಿರುವ ಅಮೆರಿಕ ಸೇನೆಯ ಪ್ರಧಾನ ಕಚೇರಿಯ ಮೇಲೂ ಇರಾನ್ ಐದು ಕ್ಷಿಪಣಿಗಳನ್ನು ಹಾರಿಸಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಅಮೆರಿಕ, ಇಸ್ರೇಲ್-ಇರಾನ್ ಯುದ್ಧ ವಿರೋಧಿಸಿ ಧರಣಿ
ಬೆಂಗಳೂರು, ಮಾ.10: ಅಮೆರಿಕ, ಇಸ್ರೇಲ್ ಇರಾನ್ ಮೇಲಿನ ಆಕ್ರಮಣಕಾರಿ ಯುದ್ಧ ವಿರೋಧಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಜನಪರ ಸಂಘಟನೆಗಳ ವತಿಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಶಾಂತಿಯುತ ಧರಣಿ ನಡೆಸಲಾಯಿತು. ಅಮೆರಿಕ, ಇಸ್ರೇಲ್ ಇರಾನ್ ಮೇಲಿನ ಕೂಡಲೇ ನಿಲ್ಲಿಸಬೇಕು. ಅಮಾಯಕ ಜೀವಗಳು ಉಳಿಯಲಿ, ಜಗತ್ತಿನಲ್ಲಿ ಸಂಕಟ ತಪ್ಪಲಿ, ಜಗತ್ತಿನಲ್ಲಿ ಶಾಂತಿಯನ್ನು ಮರು ಸ್ಥಾಪಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಭಾರತ ಸಾರ್ವಭೌಮ ದೇಶ ಯಾರದೇ ಒತ್ತಡಕ್ಕೆ ಪ್ರಧಾನಿ ನರೇಂದ್ರ ಮೋದಿ ಮಣಿಯಬಾರದು. ಇರಾನ್ ಮೇಲಿನ ಯುದ್ಧವನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕು ಎಂದು ಒತ್ತಾಯಿಸಬಾರದು. ಇದೇ ವೇಳೆ ಪ್ರತಿಭಟನಾನಿರತರು ಮೇಣದ ಬತ್ತಿ ಹಚ್ಚಿ, ಯುದ್ಧದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಹೋರಾಟಗಾರರಾದ ಪ್ರೊ.ನಗರಗೆರೆ ರಮೇಶ್, ಸಿರಿಮನೆ ನಾಗರಾಜ್, ನಾಗೇಶ್, ಹನುಮೇಗೌಡ, ಶರತ್, ರವಿ ಮತ್ತಿತರರು ಹಾಜರಿದ್ದರು.
ಇರಾನ್ ಶಾಲೆಯ ದಾಳಿಯಲ್ಲಿ ಅಮೆರಿಕದ ಪಾತ್ರವನ್ನು ಒಪ್ಪಿಕೊಂಡ ರಿಪಬ್ಲಿಕನ್ ಸೆನೆಟರ್
ವಾಷಿಂಗ್ಟನ್: ಫೆಬ್ರವರಿ 28ರಂದು ಇರಾನ್ ನ ಮಿನಾಬ್ ನಲ್ಲಿರುವ ಬಾಲಕಿಯರ ಶಾಲೆಯ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಅಮೆರಿಕದ ಪಾತ್ರವನ್ನು ರಿಪಬ್ಲಿಕನ್ ಸೆನೆಟರ್ ಜಾನ್ ಕೆನಡಿ ಒಪ್ಪಿಕೊಂಡಿದ್ದು ಇದೊಂದು ದೊಡ್ಡ ಪ್ರಮಾದ ಎಂದು ಹೇಳಿರುವುದಾಗಿ ವರದಿಯಾಗಿದೆ. ಇರಾನ್ ನ ಶಾಲೆಯ ಮೇಲಿನ ದಾಳಿಗೆ ಅಮೆರಿಕದ ಪಡೆಗಳು ಕಾರಣವೆಂದು ಅಮೆರಿಕದ ಮಿಲಿಟರಿ ತನಿಖಾಧಿಕಾರಿಗಳು ನಂಬಿದ್ದಾರೆ ಎಂದು ವರದಿಯಾಗಿತ್ತು. ʼಇದು ಭಯಾನಕವಾಗಿತ್ತು. ನಾವು ತಪ್ಪು ಮಾಡಿದೆವು. ರಶ್ಯದಂತಹ ಇತರ ರಾಷ್ಟ್ರಗಳು ಇಂತಹ ವಿಷಯಗಳನ್ನು ಉದ್ದೇಶಪೂರ್ವಕವಾಗಿ ಮಾಡುತ್ತವೆ. ನಾವೆಂದೂ ಅದನ್ನು ಉದ್ದೇಶಪೂರ್ವಕವಾಗಿ ಮಾಡುವುದಿಲ್ಲ. ರಕ್ಷಣಾ ಸಚಿವಾಲಯ ಇದನ್ನು ತನಿಖೆ ನಡೆಸುತ್ತಿದೆ. ಕ್ಷಮಿಸಿ, ಅದು ಸಂಭವಿಸಿದೆ. ಇದಕ್ಕಾಗಿ ನಾನು ವಿಷಾದಿಸುತ್ತೇನೆ. ಇದು ತಪ್ಪು' ಎಂದು ಕೆನಡಿ ಹೇಳಿದ್ದಾರೆ.
ಹೊಸಪೇಟೆ | ಡಾನ್ ಬಾಸ್ಕೋ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಹೊಸಪೇಟೆ : ಉದಾರವಾಗಿ ನೀಡಿ – ಮಹಿಳೆಯರಿಗೆ ಲಾಭ, ಸಮಾಜಕ್ಕೆ Give to Gain” ಎಂಬ ಆಶಯದೊಂದಿಗೆ ಡಾನ್ ಬಾಸ್ಕೋ ಸಂಸ್ಥೆ ಹಾಗೂ ತರುಣಿ ಮಹಿಳಾ ಅಭಿವೃದ್ದಿ ಸಂಸ್ಥೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳವಾರ ನಗರದ ಡಾನ್ ಬಾಸ್ಕೋ ಸಂಸ್ಥೆಯ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ತ್ರಿವೇಣಿ ಆರ್ ಪತ್ತಾರ್ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾನ್ ಬಾಸ್ಕೋ ಸಂಸ್ಥೆಯ ನಿರ್ದೇಶಕರಾದ ಫಾ.ರೋಶನ್ ವಹಿಸಿದ್ದರು. ಉದ್ಘಾಟನಾ ಭಾಷಣದಲ್ಲಿ ತ್ರಿವೇಣಿ ಆರ್ ಪತ್ತಾರ್ ಅವರು ಮಾತನಾಡಿ, ಮಹಿಳೆಯರು ಸಬಲೀಕರಣ ಹೊಂದಿ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕು ಎಂದರು. ಹೆಣ್ಣುಮಕ್ಕಳಿಗೂ ಸಮಾನ ಹಕ್ಕುಗಳಿದ್ದು ಅವರಿಗೆ ಉತ್ತಮ ಶಿಕ್ಷಣ ನೀಡುವುದು ಅತ್ಯಂತ ಅಗತ್ಯ ಎಂದು ತಿಳಿಸಿದರು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಚಟ್ಲ ವೆಂಕಟೇಶ್ ಮಾತನಾಡಿ, ಮಹಿಳೆಯರು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಬೆಳೆಯಲು ಹೆಚ್ಚಿನ ಅವಕಾಶಗಳನ್ನು ಒದಗಿಸಬೇಕು. ಉಳಿತಾಯದ ಮೂಲಕ ಕುಟುಂಬದ ಆರ್ಥಿಕ ಸ್ಥಿತಿಯನ್ನು ಬಲಪಡಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು. ಮುಖ್ಯ ಭಾಷಣಕಾರರಾದ ವಕೀಲರು ಹಾಗೂ ಸಮಾಜಸೇವಕಿ ಭಾಗ್ಯಲಕ್ಷ್ಮಿ ಭರದೆ ಮಾತನಾಡಿ, ಡಾನ್ ಬಾಸ್ಕೋ ಸಂಸ್ಥೆ ಕಳೆದ 30 ವರ್ಷಗಳಿಂದ ಮಹಿಳಾ ದಿನಾಚರಣೆ ಆಚರಿಸುತ್ತಾ ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಹೇಳಿದರು. ಸಮಾಜಸೇವಕಿ ರಶ್ಮಿ ರಾಜಶೇಖರ್ ಹಿಟ್ನಾಲ್ ಮಾತನಾಡಿ, ಇಂದಿನ ದಿನಗಳಲ್ಲಿ ಮಹಿಳೆಯರು ಆಟೋ ಚಾಲನೆಯಿಂದ ವಿಮಾನ ಚಾಲನೆವರೆಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ ಎಂದು ಹೇಳಿದರು. ಮಹಿಳೆಯರಿಗೆ ಶಿಕ್ಷಣ ಬಹುಮುಖ್ಯವಾಗಿದ್ದು ಮಕ್ಕಳಿಗೆ ಹಬ್ಬ-ಹರಿದಿನಗಳ ಮಹತ್ವ ತಿಳಿಸಬೇಕು ಎಂದು ಹೇಳಿದರು. ಸಮಾಜಸೇವಕಿ ರೂಪಾ ಲಾಡ್ ಮಾತನಾಡಿ, ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಸಮಾಜದಲ್ಲಿ ಹೊರಗೆ ಬರಲು ಅವಕಾಶ ಕಡಿಮೆ ಇತ್ತು. ಆದರೆ ಇಂದಿನ ದಿನಗಳಲ್ಲಿ ಮಹಿಳೆಯರು ತಮ್ಮ ಸಾಧನೆಯ ಮೂಲಕ ಉನ್ನತ ಸ್ಥಾನಗಳನ್ನು ಗಳಿಸುತ್ತಿದ್ದಾರೆ ಎಂದು ಹೇಳಿದರು. ವಿಜಯನಗರ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಕವಿತಾ ಈಶ್ವರ್ ಸಿಂಗ್ ಮಾತನಾಡಿ, ಮಹಿಳೆ ಆಬಲೆಯಲ್ಲ ಸಬಲೆ ಎಂದು ಹೇಳಿದರು. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮೊಬೈಲ್ ನೀಡುವುದು ತಪ್ಪು ಎಂದು ತಿಳಿಸಿ, ಮಕ್ಕಳ ಬೆಳವಣಿಗೆಯ ಬಗ್ಗೆ ಪೋಷಕರು ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ನಿರ್ದೇಶಕರಾದ ಫಾದರ್ ಫ್ರಾನ್ಸಿಸ್, ಡಾನ್ ಬಾಸ್ಕೋ ಐಸಿಐಸಿ ಶಾಲೆಯ ಪ್ರಿನ್ಸಿಪಲ್ ಫಾದರ್ ಸಜಿ ಜಾರ್ಜ್, ಸಂಸ್ಥೆಯ ಆಡಳಿತಾಧಿಕಾರಿ ಮೈಕಲ್ ಫಾದರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬಳ್ಳಾರಿ | ವಡ್ಡರಬಂಡೆ ಶಾದಿ ಮಹಲ್ ಕಾಮಗಾರಿ ಶೀಘ್ರ ಆರಂಭ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ : ವಡ್ಡರಬಂಡೆ ಪ್ರದೇಶದಲ್ಲಿ ಶಾದಿ ಮಹಲ್ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಮಂಗಳವಾರ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಸೈಯದ್ ನಾಸಿರ್ ಹುಸೇನ್ ಅವರ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್ ಅವರ ನೆರವಿನಿಂದ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣಕ್ಕೆ ಈಗಾಗಲೇ ತೀರ್ಮಾನಿಸಲಾಗಿದೆ. ಇದರಿಂದ ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ನಗರದ ಮುಸ್ಲಿಂ ಸಮುದಾಯದ ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂಬುದು ನಮ್ಮ ಆಶಯವಾಗಿತ್ತು. ಅದೇ ರೀತಿ ಈಗ ನಗರದ ಈದ್ಗಾ ಹಾಗೂ ಖಬರಸ್ತಾನದ ಸ್ವಚ್ಛತೆ, ರಕ್ಷಣೆ ಮತ್ತು ಹಸೀರೀಕರಣ ಕಾರ್ಯವನ್ನು ಯುವಕರು ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು. ಇದೇ ರೀತಿಯಲ್ಲಿ ನಗರದಲ್ಲಿನ ಜನವಸತಿ ಬಡಾವಣೆಗಳಲ್ಲೂ ಹಸೀರೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಭೂಮಿ ಪೂಜೆಯ ನಂತರ “ಯೂತ್ ರೆವಲ್ಯೂಷನ್” ತಂಡದ ಸದಸ್ಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಹುಮಾಯೂನ್ ಖಾನ್, ಪಾಲಿಕೆಯ ಸದಸ್ಯರಾದ ಎಂ.ಪ್ರಭಂಜನಕುಮಾರ್, ನಾಜು, ಆಸಿಫ್, ಕಾಂಗ್ರೆಸ್ ಮುಖಂಡರಾದ ಆಯಾಜ್ ಅಹ್ಮದ್, ದಾದಾಭಾಯ್, ಕಣೇಕಲ್ ಮೆಹಬೂಬಸಾಬ, ಹುಸೇನ್ ಪೀರಾ, ಯೂನುಸ್ ಭಾಯ್, ಮಹಮ್ಮದ್ ಭಾಯ್, ಉಸ್ಮಾನ್, ಅನ್ವರ್, ಅರ್ಷದ್, ಅತೀಕ್, ತೌಸೀಫ್, ಸಮೀರ್, ಅಫಾಕ್, ನೂರ್, ಫರಾಜ್, ತಬರೇಜ್ ಮತ್ತಿತರರು ಹಾಜರಿದ್ದರು.
ಇರಾನ್ ಪರಿಸ್ಥಿತಿ ತಿಳಿಗೊಳ್ಳುವವರೆಗೆ ಕೆಲವು ದೇಶಗಳ ಮೇಲಿನ ತೈಲ ನಿರ್ಬಂಧ ತೆರವು: ಟ್ರಂಪ್
ವಾಷಿಂಗ್ಟನ್: ಇರಾನ್ನೊಂದಿಗಿನ ಯುದ್ದ ಕೊನೆಗೊಳ್ಳುವ ತನಕ ಅಮೆರಿಕವು ಕೆಲವು ರಾಷ್ಟ್ರಗಳ ತೈಲ ಮಾರಾಟದ ಮೇಲಿನ ನಿಷೇಧವನ್ನು ತೆರವುಗೊಳಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಬೆಲೆಗಳನ್ನು ಕಡಿಮೆ ಮಾಡಲು ನಾವು ಕೆಲವು ತೈಲ ಸಂಬಂಧಿತ ನಿರ್ಬಂಧಗಳನ್ನು ಸಹ ಮನ್ನಾ ಮಾಡುತ್ತೇವೆ. ಕೆಲವು ದೇಶಗಳ ಮೇಲೆ ನಾವು ನಿರ್ಬಂಧ ಹೇರಿದ್ದೇವೆ. ಆದರೆ ಪರಿಸ್ಥಿತಿ ಸುಧಾರಿಸುವವರೆಗೆ ಈ ನಿರ್ಬಂಧವನ್ನು ತೆರವುಗೊಳಿಸುತ್ತೇವೆ. ಅಗತ್ಯ ಬಿದ್ದರೆ ಅಮೆರಿಕದ ನೌಕಾಪಡೆ ಮತ್ತು ಅದರ ಪಾಲುದಾರರು ಜಲಸಂಧಿಯ ಮೂಲಕ ಟ್ಯಾಂಕರ್ಗಳನ್ನು ಬೆಂಗಾವಲು ಮಾಡುತ್ತಾರೆ. ನಾವು ಇದನ್ನು ಮಾಡಿದರೆ ತೈಲ ಬೆಲೆಗಳು ಕಡಿಮೆಯಾಗುತ್ತದೆ ಎಂದು ನನಗೆ ತಿಳಿದಿದೆ. ಇರಾನ್ ಪರಮಾಣು ಕ್ಷಿಪಣಿ ಪಡೆಯಬಾರದು ಎಂಬ ಏಕೈಕ ಉದ್ದೇಶ ನಮ್ಮದಾಗಿದೆ. ದೀರ್ಘಾವಧಿಯಲ್ಲಿ ಇರಾನ್ ನ ಬೆದರಿಕೆಯಿಲ್ಲದೆ ತೈಲ ಸರಬರಾಜು ಸುರಕ್ಷಿತವಾಗಿರುತ್ತದೆ. ಈ ಬೆದರಿಕೆಯನ್ನು ಶಾಶ್ವತವಾಗಿ ಕೊನೆಗೊಳಿಸುತ್ತೇವೆ' ಎಂದು ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಟ್ರಂಪ್ ಹೇಳಿರುವುದಾಗಿ ವರದಿಯಾಗಿದೆ.
ವಿಜಯನಗರ | ಪ್ರವಾಸಿ ಮಾರ್ಗದರ್ಶಿಗಳು ಜಿಲ್ಲೆಯ ಸಂಸ್ಕೃತಿಯ ರಾಯಭಾರಿಗಳು: ಡಿಸಿ ಕವಿತಾ ಎಸ್. ಮನ್ನಿಕೇರಿ
ವಿಜಯನಗರ (ಹೊಸಪೇಟೆ): ಪ್ರವಾಸಿ ಮಾರ್ಗದರ್ಶಿಗಳು ಕೇವಲ ಮಾಹಿತಿ ನೀಡುವವರಲ್ಲ, ಅವರು ಜಿಲ್ಲೆಯ ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ರಾಯಭಾರಿಗಳಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 87 ಪ್ರವಾಸಿ ಮಾರ್ಗದರ್ಶಿಗಳಿಗೆ ಶೂ ಮತ್ತು ಜಾಕೆಟ್ಗಳನ್ನು ವಿತರಿಸಿ ಅವರು ಮಾತನಾಡಿದರು. ಇಂದು ವಿತರಿಸಲಾದ ಸಮವಸ್ತ್ರಗಳು ಕೇವಲ ಸೌಲಭ್ಯವಲ್ಲ, ಮಾರ್ಗದರ್ಶಿಗಳ ವೃತ್ತಿಪರತೆಯ ಗುರುತಾಗಿದೆ. ಸಮವಸ್ತ್ರ ಧರಿಸುವುದರಿಂದ ಪ್ರವಾಸಿಗರಲ್ಲಿ ವಿಶ್ವಾಸ ಮೂಡುತ್ತದೆ ಹಾಗೂ ಸುರಕ್ಷಿತ ಭಾವನೆ ಉಂಟಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಎಂದು ಅವರು ಸಲಹೆ ನೀಡಿದರು. ಪ್ರವಾಸೋದ್ಯಮ ಕ್ಷೇತ್ರ ದಿನೇ ದಿನೇ ಬೆಳೆಯುತ್ತಿದ್ದು, ಮಾರ್ಗದರ್ಶಿಗಳು ಕೇವಲ ಹಳೆಯ ಇತಿಹಾಸಕ್ಕೆ ಸೀಮಿತವಾಗದೆ ಜಿಲ್ಲೆಯ ಹೊಸ ಪ್ರವಾಸಿ ತಾಣಗಳ ಬಗ್ಗೆಯೂ ನಿಖರ ಮತ್ತು ಆಸಕ್ತಿದಾಯಕ ಮಾಹಿತಿಯನ್ನು ಹೊಂದಿರಬೇಕು. ಅವರ ಉತ್ತಮ ಮಾರ್ಗದರ್ಶನ ಹಾಗೂ ಜಿಲ್ಲೆಯ ಆತಿಥ್ಯದಿಂದ ಪ್ರಭಾವಿತರಾದ ಪ್ರವಾಸಿಗರು ಮತ್ತೆ ಭೇಟಿ ನೀಡುವಂತಾಗಬೇಕು. ಆಗ ಮಾತ್ರ ಜಿಲ್ಲೆಯ ಪ್ರವಾಸೋದ್ಯಮದ ನೈಜ ಅಭಿವೃದ್ಧಿ ಸಾಧ್ಯ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ ಸೇರಿದಂತೆ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟೆಂಪೊ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು
ಮಂಗಳೂರು, ಮಾ.10: ನಗರದ ಮರೋಳಿ ಟಿವಿಎಸ್ ಸರ್ವಿಸ್ ಸೆಂಟರ್ ಬಳಿ ಮಾ.9ರಂದು ದ್ವಿಚಕ್ರ ವಾಹನ - ಟೆಂಪೊ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಸಜೇಶ್ ಸದಾನಂದ ಪೂಜಾರಿ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಸಜೇಶ್ ಸದಾನಂದ ಪೂಜಾರಿಯವರು ತಿರುವು ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅದರ ಹಿಂದಿನಿಂದ ಟೆಂಪೋವೊಂದನ್ನು ಅದರ ಚಾಲಕನು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದು ಪರಾರಿಯಾದ ಎನ್ನಲಾಗಿದೆ. ಬೈಕ್ಗೆ ಟೆಂಪೊ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸಮೇತ ರಸ್ತೆಗೆ ಬಿದ್ದು ಸಜೇಶ್ ಸದಾನಂದ ಪೂಜಾರಿ ಅವರ ತಲೆಗೆ ತೀವ್ರ ಸ್ವರೂಪದ ಗಾಯವಾಗಿತ್ತು. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳು ಸಜೇಶ್ ಸದಾನಂದ ಪೂಜಾರಿ (27) ರವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಂಗಳೂರು ಟ್ರಾಫಿಕ್ ಸೌತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಪಿಎಲ್ 2026: ಮಾ.12ರಂದು ಮೊದಲ 20 ದಿನಗಳ ವೇಳಾಪಟ್ಟಿ ಪ್ರಕಟ
ಹೊಸದಿಲ್ಲಿ: ಮುಂಬರುವ 2026ರ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ 20 ದಿನಗಳ ವೇಳಾಪಟ್ಟಿಯನ್ನು ಮಾರ್ಚ್ 12ರಂದು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿದ್ದಾರೆ. 19ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 28ರಿಂದ ಮೇ 31ರ ತನಕ ನಡೆಯಲಿದೆ. ಈ ಹಿಂದೆ ಪಂದ್ಯಾವಳಿಯನ್ನು ಮಾರ್ಚ್ 26ರಿಂದ ಮೇ 30ರ ತನಕ ಆಯೋಜಿಸಲು ಯೋಜಿಸಲಾಗಿತ್ತು. ಇದೀಗ ದಿನಾಂಕದಲ್ಲಿ ಸ್ವಲ್ಪಮಟ್ಟಿನ ಬದಲಾವಣೆ ಮಾಡಲಾಗಿದೆ. ‘‘ನಾವು ಮಾರ್ಚ್ 12ರಂದು 2026ರ ಆವೃತ್ತಿಯ ಐಪಿಎಲ್ ವೇಳಾಪಟ್ಟಿಯನ್ನು ಪ್ರಕಟಿಸುವ ಯೋಜನೆ ಹಾಕಿಕೊಂಡಿದ್ದೆವು. ಇದೀಗ ನಾವು ಮೊದಲ 20 ದಿನಗಳ ಐಪಿಎಲ್ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಿದ್ದೇವೆ’’ ಎಂದು ಸೈಕಿಯಾ ಮಂಗಳವಾರ ಸುದ್ದಿಸಂಸ್ಥೆಗೆ ತಿಳಿಸಿದರು. ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕದೊಂದಿಗಿನ ಘರ್ಷಣೆಯನ್ನು ತಪ್ಪಿಸಲು ಉದ್ದೇಶಿಸಿರುವ ಬಿಸಿಸಿಐ, ಪಂದ್ಯಾವಳಿಯ ಉಳಿದ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲು ನಿರ್ಧರಿಸಿದೆ. ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲೇ ಐಪಿಎಲ್ ತಂಡಗಳು ಈಗಾಗಲೇ ಹೊಸ ಋತುವಿಗೆ ತಮ್ಮ ಸಿದ್ಧತೆಯನ್ನು ಆರಂಭಿಸಿವೆ. ಚೆನ್ನೈ ಸೂಪರ್ ಕಿಂಗ್ಸ್ ಮಾರ್ಚ್ 1ರಂದು ನವಲೂರ್ನ ಉನ್ನತ-ಪ್ರದರ್ಶನ ಕೇಂದ್ರದಲ್ಲಿ ತರಬೇತಿ ಆರಂಭಿಸಿದೆ. ನಾಯಕ ಋತುರಾಜ್ ಗಾಯಕ್ವಾಡ್ ಹಾಗೂ ಎಂ.ಎಸ್. ಧೋನಿ ಇದರಲ್ಲಿ ಭಾಗಿಯಾಗಿದ್ದಾರೆ. ಹಾಲಿ ಚಾಂಪಿಯನ್ RCB ಫೆ.10ರಂದು ನವಿ ಮುಂಬೈನ ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ಕಿರು ತರಬೇತಿ ಶಿಬಿರವನ್ನು ಆಯೋಜಿಸಿದೆ. ಇದೇ ವೇಳೆ, 2022ರ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮಿರಾಜ್ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ಎರಡು ಬಾರಿ ಅಭ್ಯಾಸ ನಡೆಸಿದೆ. ಪಂಜಾಬ್ ಕಿಂಗ್ಸ್ ತಂಡವು ಅಬುಧಾಬಿಯಲ್ಲಿ ಫೆಬ್ರವರಿಯಲ್ಲಿ ತರಬೇತಿ ನಡೆಸಿದೆ. ಇದೀಗ ಧರ್ಮಶಾಲಾದಲ್ಲಿ ಶಿಬಿರ ಆಯೋಜಿಸಿದೆ. ಸನ್ರೈಸರ್ಸ್ ಹೈದರಾಬಾದ್ ತಂಡ ದೇಶೀಯ ಅಟಗಾರರೊಂದಿಗೆ ಮಾರ್ಚ್ 1ರಂದು ತನ್ನ ಶಿಬಿರವನ್ನು ಆರಂಭಿಸಿದೆ. ಮುಂಬೈ ಇಂಡಿಯನ್ಸ್ ತಂಡ ಕೂಡ ತನ್ನ ತಯಾರಿ ಆರಂಭಿಸಿದೆ. ರಾಜಸ್ಥಾನ ರಾಯಲ್ಸ್ ತಂಡವು ಮಾ.15ರಂದು ಜೈಪುರದಲ್ಲಿ ತನ್ನ ತರಬೇತಿ ಶಿಬಿರ ಆರಂಭಿಸುವ ನಿರೀಕ್ಷೆ ಇದೆ. ಕೋಲ್ಕತಾ ತಂಡವು ಮಾ.18ರಂದು ತನ್ನ ಪೂರ್ವತಯಾರಿ ಶಿಬಿರ ಆರಂಭಿಸಲಿದೆ.
ಐಸಿಸಿ ನೀತಿ ಸಂಹಿತೆ ಉಲ್ಲಂಘನೆ: ಅರ್ಷದೀಪ್ ಸಿಂಗ್ ಗೆ ದಂಡ
ಹೊಸದಿಲ್ಲಿ: ಅಹ್ಮದಾಬಾದ್ ನಲ್ಲಿ ರವಿವಾರ ನಡೆದ ಐಸಿಸಿ ಪುರುಷರ ಟಿ-20 ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಅಂತರ್ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ನೀತಿ ಸಂಹಿತೆಯ ಲೆವೆಲ್-1ನ್ನು ಉಲ್ಲಂಘಿಸಿರುವ ಭಾರತದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಗೆ ಪಂದ್ಯದ ಶುಲ್ಕದಲ್ಲಿ ಶೇ.15ರಷ್ಟು ದಂಡ ವಿಧಿಸಲಾಗಿದೆ. ಅಂತರ್ರಾಷ್ಟ್ರೀಯ ಪಂದ್ಯದ ವೇಳೆ ಆಟಗಾರನ ಸನಿಹಕ್ಕೆ ಚೆಂಡನ್ನು( ಅಥವಾ ಇತರ ಯಾವುದೆ ಕ್ರಿಕೆಟ್ ಸಲಕರಣೆಯನ್ನು)ಅಸಮರ್ಪಕವಾಗಿ ಅಥವಾ ಅಪಾಯಕಾರಿ ರೀತಿಯಲ್ಲಿ ಎಸೆದಿರುವುದಕ್ಕೆ ಸಂಬಂಧಿಸಿದ ಆಟಗಾರರ ಹಾಗೂ ಆಟಗಾರರ ಸಹಾಯಕ ಸಿಬ್ಬಂದಿಯ ಐಸಿಸಿ ನೀತಿ ಸಂಹಿತೆ ಆರ್ಟಿಕಲ್ 2.9 ಅನ್ನು ಅರ್ಷದೀಪ್ ಸಿಂಗ್ ಉಲ್ಲಂಘಿಸಿರುವುದು ಕಂಡುಬಂದಿದೆ. ಅರ್ಷದೀಪ್ ಗೆ ದಂಡ ವಿಧಿಸಿದ್ದಲ್ಲದೆ, ಅವರ ಅಶಿಸ್ತಿನ ದಾಖಲೆಗೆ ಒಂದು ಡಿಮೆರಿಟ್ ಸೇರಿಸಲಾಗಿದೆ. ಇದು 24 ತಿಂಗಳ ಅವಧಿಯಲ್ಲಿನ ಮೊದಲ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ನ್ಯೂಝಿಲ್ಯಾಂಡ್ ತಂಡದ ಇನಿಂಗ್ಸ್ ನ 11ನೇ ಓವರ್ ನಲ್ಲಿ ಈ ಘಟನೆ ನಡೆದಿದೆ. ಅರ್ಷದೀಪ್ ಅವರು ಫೀಲ್ಡಿಂಗ್ ವೇಳೆ ಚೆಂಡನ್ನು ಸ್ಟ್ರೈಕ್ನಲ್ಲಿದ್ದ ಡ್ಯಾರಿಲ್ ಮಿಚೆಲ್ ಪ್ಯಾಡ್ಗೆ ಸಿಟ್ಟಿನಿಂದ ಜೋರಾಗಿ ಎಸೆದಿದ್ದರು. ಅರ್ಷದೀಪ್ ಅವರು ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ಪ್ರಸ್ತಾವಿಸಿದ ಶಿಕ್ಷೆಯನ್ನು ಸ್ವೀಕರಿಸಿದ್ದು, ಯಾವುದೇ ಅಧಿಕೃತ ವಿಚಾರಣೆ ಇರುವುದಿಲ್ಲ.
ಯಾದಗಿರಿ | ಯುಪಿಎಸ್ಸಿ ಸಾಧಕ ಸಂದೀಪ್ ಬಾಡದ್ಗೆ ಸನ್ಮಾನ
ಯಾದಗಿರಿ: ನಾಗರಿಕ ಸೇವಾ ಪರೀಕ್ಷೆಯಾದ UPSC ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ ಸಂದೀಪ್ ಬಡಾದ್ ಅವರನ್ನು ಬಿಜೆಪಿ ಹಿರಿಯ ಮುಖಂಡ ರಾಚನ್ನಗೌಡ ಮುದ್ನಾಳ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಚಣ್ಣಗೌಡ ಮುದ್ನಾಳ ಅವರು, ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಂದೀಪ್ ಬಾಡದ್ ಅಪಾರ ಪರಿಶ್ರಮದಿಂದ ಅಧ್ಯಯನ ಮಾಡಿದ್ದಾರೆ. ಅವರ ಸಾಧನೆಯಿಂದ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಇಂತಹ ಸಾಧಕರನ್ನು ನೋಡಿ ಜಿಲ್ಲೆಯ ಯುವಕರು ಪ್ರೇರಣೆ ಪಡೆದು ಮುಂದಕ್ಕೆ ಬರಬೇಕು ಎಂದು ಹೇಳಿದರು. ಯಾದಗಿರಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂದು ಹೇಳಲಾಗುತ್ತದೆ. ಆದರೆ ಸಂದೀಪ್ ಬಾಡದ್ ಅವರಂತಹ ಪ್ರತಿಭೆಗಳು ಆ ಮಾತು ತಪ್ಪು ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ಜಿಲ್ಲೆಯ ಯುವಕರಿಗೆ ಅವರು ಮಾದರಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಭೀಮಣ್ಣಗೌಡ ಕ್ಯಾತನಾಳ, ಡಾ.ಸುಪುತ್ರರೆಡ್ಡಿ, ವೆಂಕಟರಡ್ಡಿ ತಂಗಡಗಿ, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸುರಪುರ | ಕ್ಷೇತ್ರದ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಗಮನ ಸೆಳೆದ ಶಾಸಕ ರಾಜಾ ವೇಣುಗೋಪಾಲ ನಾಯಕ
ಸುರಪುರ: ಬಜೆಟ್ ಅಧಿವೇಶನದಲ್ಲಿ ಕ್ಷೇತ್ರದ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಪ್ರಶ್ನೆ ಕೇಳುವ ಮೂಲಕ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಅವರು ಮುಖ್ಯವಾಗಿ ಸುರಪುರ ವಿಧಾನಸಭಾ ಕ್ಷೇತ್ರದ ರಸ್ತೆಗಳ ಸಮಸ್ಯೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಚುಕ್ಕಿ ಗುರುತಿನ ಪ್ರಶ್ನೆ ಕೇಳಿದರು. ಅಂತರ ಜಿಲ್ಲಾ ಸಂಪರ್ಕ ರಸ್ತೆಗಳ ಸ್ಥಿತಿ ಹಾಗೂ ಅವುಗಳ ದುರಸ್ತಿ ಕಾರ್ಯದ ಕುರಿತು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಸಚಿವರು ಲಿಖಿತ ಉತ್ತರ ನೀಡಿ, ವಿವಿಧ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದ್ದು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕಿಲೋಮೀಟರ್ಗಳ ಅಂಕಿ–ಅಂಶಗಳೊಂದಿಗೆ ವಿವರ ನೀಡಿದ್ದಾರೆ. ಇದಲ್ಲದೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಕೂಡ ಪ್ರಶ್ನೆ ಕೇಳಿದ ಶಾಸಕರು, ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳ ಕೊರತೆ ಇರುವುದನ್ನು ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು ಈಗಿರುವ ಎರಡು ವಸತಿ ನಿಲಯಗಳ ಜೊತೆಗೆ ಹೊಸ ವಸತಿ ನಿಲಯ ಆರಂಭಿಸಲು ಸೂಕ್ತ ಪ್ರಸ್ತಾವನೆ ಸಲ್ಲಿಸಿದರೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂದಾಯ ಇಲಾಖೆಯ ವಿಷಯಕ್ಕೂ ಸಂಬಂಧಿಸಿ ಉಪನ್ಯಾಯಾಧಿಕಾರಿಗಳ ಕಚೇರಿಯ ಸಮಸ್ಯೆಗಳ ಕುರಿತು ಶಾಸಕರು ಗಮನ ಸೆಳೆದಿದ್ದಾರೆ. ಒಟ್ಟಾರೆಯಾಗಿ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಹಾಗೂ ಸಂಬಂಧಿತ ಸಚಿವರ ಗಮನ ಸೆಳೆಯಲು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ನಿರಂತರವಾಗಿ ಪ್ರಯತ್ನಿಸುತ್ತಿರುವುದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉಚ್ಚಿಲ: ಅಬ್ದುಲ್ ರಝಾಕ್ YSಗೆ 'ಪರ್ಸನಾಲಿಟಿ ಆಫ್ ದಿ ಈಯರ್-2026' ಪ್ರಶಸ್ತಿ ಪ್ರದಾನ
ಉಚ್ಚಿಲ: ತವಕ್ಕಲ್ ಓವರ್ಸಿಸ್ ಹಾಗು ತವಕ್ಕಲ್ ಮುಸ್ಲಿಮ್ ಯಂಗ್ ಮೆನ್ಸ್ ಅಸೋಸಿಯೇಷನ್ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಪ್ರತಿ ವರ್ಷ ರಮಝಾನ್ ಸಂದರ್ಭ ನೀಡಲಾಗುವ 'ಪರ್ಸನಾಲಿಟಿ ಆಫ್ ದಿ ಈಯರ್-2026 (ವರ್ಷದ ಶ್ರೇಷ್ಠ ವ್ಯಕ್ತಿ)' ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಉಚ್ಚಿಲದ ಅಬ್ದುಲ್ ರಝಾಕ್ YS ಅವರಿಗೆ ನೀಡಿ ಗೌರವಿಸಲಾಯಿತು. ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ನಿರಂತರ ಸೇವೆ, ಜನರ ಕಷ್ಟಕ್ಕೆ ತಕ್ಷಣ ಸ್ಪಂದನೆ ಮಾಡುವಂತ ವ್ಯಕ್ತಿತ್ವದ ವರಾಗಿರುವ ಅಬ್ದುಲ್ ರಝಾಕ್, ತವಕ್ಕಲ್ ಓವರ್ಸಿಸ್ ನ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ. ದುಬೈಯಲ್ಲಿ ಹಲವಾರು ವರ್ಷಗಳ ಕಾಲ 'ತವಕ್ಕಲ್ ಓವರ್ಸಿಸ್ ದುಬೈ'ನಲ್ಲಿ ಸೇವೆ ಸಲ್ಲಿಸಿ, ಬಳಿಕ ತಾಯಿನಾಡಿಗೆ ತೆರಳಿ, ಅಲ್ಲಿಯೂ ಸಮುದಾಯ ಹಾಗು ಸಾಮಾಜಿಕ ಸೇವೆಯಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡಿರುವ ಅಬ್ದುಲ್ ರಝಾಕ್ ಅವರ ಸೇವೆಯನ್ನು ಗುರುತಿಸಿ ಸೋಮವಾರ ಉಚ್ಚಿಲದ ತವಕ್ಕಲ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ 'ಪರ್ಸನಾಲಿಟಿ ಆಫ್ ದಿ ಈಯರ್-2026' ಪ್ರಶಸ್ತಿ ನೀಡಲಾಯಿತು. 'Personality of the Year ' ಪ್ರಶಸ್ತಿಯನ್ನು ಬೇರೆ ಬೇರೆ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧಕರಿಗೆ ನೀಡಲಾಗು ತ್ತಿದ್ದು, ಪ್ರಶಸ್ತಿ ಘೋಷಣೆಗೂ ಮೊದಲು ವಯಸ್ಸನ್ನು(ಪುರುಷ ಅಥವಾ ಮಹಿಳೆ) ಪರಿಗಣಿಸದೆ ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ನಾಮನಿರ್ದೇಶನ ಮಾಡಿ, ಬಳಿಕ ಸದಸ್ಯರ ಸಭೆಯಲ್ಲಿ ಮತದಾನದ ಮೂಲಕ ಆಯ್ಕೆ ಮಾಡಲಾಗು ತ್ತದೆ. ಪ್ರಶಸ್ತಿ ವಿಜೇತರಿಗೆ ಸನ್ಮಾನ ಜೊತೆಗೆ 25,000 ರೂ. ನಗದು ಬಹುಮಾನ ನೀಡಲಾಗುತ್ತದೆ. ಪ್ರಶಸ್ತಿ ಪ್ರದಾನದ ವೇಳೆ ಉಚ್ಚಿಲ ತವಕ್ಕಲ್ ಮುಸ್ಲಿಮ್ ಯಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷ ಹರ್ಷ್ ಇಬ್ರಾಹಿಂ, ಗೌರವಾಧ್ಯಕ್ಷ ಉಸ್ಮಾನ್ ಕಟ್ಟಿಂಗೇರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕುಚ್ಚಿಕಾಡ್, ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್, ಶಾಬಾನ್ ಮೊಯಿದಿನ್, ಕೋಶಾಧಿಕಾರಿ ಅಹ್ಮದ್ ಗುಲಾಮ್, ತವಕ್ಕಲ್ ಓವರ್ಸಿಸ್ ಗೌರವಾಧ್ಯಕ್ಷ ಮೊಹಮ್ಮದ್ ದಾವೂದ್, ಸದಸ್ಯ ಇಬ್ರಾಹಿಂ ದಾವೂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪಶ್ಚಿಮ ಏಶ್ಯ ಬಿಕ್ಕಟ್ಟು | ವಿಮಾನ ಪ್ರಯಾಣ ದರಕ್ಕೆ ಸರ್ಚಾರ್ಜ್ ವಿಧಿಸಲು ಏರ್ ಇಂಡಿಯಾ ನಿರ್ಧಾರ
ಹೊಸದಿಲ್ಲಿ: ಪಶ್ಚಿಮ ಏಶ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವೈಮಾನಿಕ ಇಂಧನ (ಎಟಿಎಫ್)ದ ದರದಲ್ಲಿ ಭಾರೀ ಏರಿಕೆಯಾಗಿರುವುದರಿಂದ ತನ್ನ ದೇಶಿಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಪ್ರಯಾಣದ ಮೇಲೆ ಇಂಧನ ಮೇಲ್ತೆರಿಗೆ (ಸರ್ಚಾರ್ಜ್)ಯನ್ನು ವಿಧಿಸುವುದಾಗಿ ಏರ್ ಇಂಡಿಯಾ ಮಂಗಳವಾರ ತಿಳಿಸಿದೆ. ಮಾರ್ಚ್ 2026ರ ಆರಂಭದಲ್ಲಿ ಪಶ್ಚಿಮ ಏಶ್ಯದಲ್ಲಿ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಜಂಟಿ ದಾಳಿ ಆರಂಭಿಸಿದ ಬಳಿಕ ತೈಲ ಪೂರೈಕೆಗೆ ಅಡಚಣೆಯಾಗುತ್ತಿದ್ದು, ತೈಲ ದರ ಭಾರೀ ಏರಿಕೆ ಕಂಡಿದೆ. ಪರಿಷ್ಕೃತ ಮೇಲ್ತೆರಿಗೆಯನ್ನು ತನ್ನ ವಿವಿಧ ವಿಮಾನಯಾನ ಮಾರ್ಗ ಜಾಲಗಳಿಗೆ ಮೂರು ಹಂತಗಳಲ್ಲಿ ಜಾರಿಗೆ ತರುವುದಾಗಿ ಏರ್ ಇಂಡಿಯಾ ತಿಳಿಸಿದೆ.
ವಾಷಿಂಗ್ಟನ್: ಸೌತ್ವೆಸ್ಟ್ ಏರ್ಲೈನ್ಸ್ನ ವಿಮಾನದಲ್ಲಿದ್ದ ಪ್ರಯಾಣಿಕನ ಫೋನ್ ನಲ್ಲಿ ಆಝಾನ್ ಅಲರಾಂ ಆಗಿದ್ದನ್ನು ‘ಬಾಂಬ್ ಬೆದರಿಕೆ’ ಎಂದು ತಪ್ಪಾಗಿ ಅರ್ಥೈಸಿದ ಪರಿಣಾಮ, ಆತನನ್ನು ವಿಮಾನದಿಂದ ಕೆಳಗಿಳಿಸಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಫ್ಲೋರಿಡಾಕ್ಕೆ ತೆರಳುತ್ತಿದ್ದ ವಿಮಾನವನ್ನು ಈ ಘಟನೆಯ ಬಳಿಕ ಜಾರ್ಜಿಯಾ ರಾಜ್ಯದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಯಿತು. ವಿಮಾನದಲ್ಲಿದ್ದ ಕೆಲ ಪ್ರಯಾಣಿಕರು ಆ ವ್ಯಕ್ತಿಯ ಫೋನ್ ಅಲರಾಂ ಅನ್ನು ತಪ್ಪಾಗಿ ಗ್ರಹಿಸಿ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡರು. ವಿಮಾನವನ್ನು ಭೂಸ್ಪರ್ಶ ಮಾಡಿಸಿದ ಬಳಿಕ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಯಾವುದೇ ರೀತಿಯ ಬೆದರಿಕೆ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಬಳಿಕ ಈ ಘಟನೆ ಸಂಪೂರ್ಣವಾಗಿ ‘ತಪ್ಪು ಗ್ರಹಿಕೆ’ಯಿಂದ ಸಂಭವಿಸಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. A passenger on a Southwest Airlines flight was removed after their call to prayer was mistaken for a bomb threat. Officials later called it a “misunderstanding” after the Florida-bound plane made an emergency landing in Georgia. pic.twitter.com/VdDqLM1GfU — Al Jazeera English (@AJEnglish) March 10, 2026
ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ ಹೊಟೇಲ್ ಗಳಿಗೆ LPG ಕೊರತೆಯ ಬಿಸಿ
ʼದೇಶಾದ್ಯಂತ ಹೊಟೇಲ್, ರೆಸ್ಟಾರೆಂಟ್ಗಳ ಮುಚ್ಚುವ ಸಾಧ್ಯತೆʼ: ಭಾರತೀಯ ಹೊಟೇಲ್ ಮಾಲಕರ ಸಂಘದ ಕಳವಳ
ಅಂಗಾಂಗ ಕಸಿ | 2025ರಲ್ಲಿ 217 ನೋಂದಾಯಿತ ಆಸ್ಪತ್ರೆಗಳು ಎನ್ಆರ್ಪಿಗೆ ದತ್ತಾಂಶ ವರದಿ ಮಾಡಲು ವಿಫಲ
ಹೊಸದಿಲ್ಲಿ: ಅಂಗಾಂಗ ಕಸಿ ಮಾಡುತ್ತಿರುವ ಒಟ್ಟು 804 ನೋಂದಾಯಿತ ಆಸ್ಪತ್ರೆಗಳಲ್ಲಿ 217 ಆಸ್ಪತ್ರೆಗಳು 2025ರಲ್ಲಿ ರಾಷ್ಟ್ರೀಯ ನೋಂದಣಿ ಪೋರ್ಟಲ್ (ಎನ್ಆರ್ಪಿ)ನಲ್ಲಿ ದತ್ತಾಂಶವನ್ನು ವರದಿ ಮಾಡಲು ವಿಫಲವಾಗಿವೆ. ಈ ಆಸ್ಪತ್ರೆಗಳ ವಿರುದ್ಧ ಆಯಾ ರಾಜ್ಯ ಸರಕಾರಗಳು ಕ್ರಮ ಕೈಗೊಳ್ಳಲಿವೆ ಎಂದು ಕೇಂದ್ರ ಆರೋಗ್ಯ ಖಾತೆಯ ಸಹಾಯಕ ಸಚಿವ ಪ್ರತಾಪ್ರಾವ್ ಜಾಧವ್ ರಾಜ್ಯಸಭೆಗೆ ಮಂಗಳವಾರ ತಿಳಿಸಿದ್ದಾರೆ. ಅಂಗಾಂಗ ಕಸಿ ನಡೆಸಲು ಆಸ್ಪತ್ರೆಗಳ ನೋಂದಣಿಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸೂಕ್ತ ಪ್ರಾಧಿಕಾರ ಮಾಡುತ್ತದೆ ಎಂದು ಜಾಧವ್ ಅವರು ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದರು. ಮಾನವ ಅಂಗಾಂಗ ಹಾಗೂ ಅಂಗಾಂಶ ಕಸಿ ಕಾಯ್ದೆ, 1984 ಹಾಗೂ ಅದರ ಅಡಿಯಲ್ಲಿ ರೂಪಿಸಲಾದ ನಿಯಮಗಳ ಪ್ರಕಾರ ಅಂತಹ ಆಸ್ಪತ್ರೆಗಳ ವಿರುದ್ಧ ನಿಯಂತ್ರಣ ಕ್ರಮಗಳನ್ನು ರಾಜ್ಯ ಸರಕಾರಗಳು ತೆಗೆದುಕೊಳ್ಳುತ್ತದೆ ಎಂದು ಜಾಧವ್ ಹೇಳಿದ್ದಾರೆ. ರಾಷ್ಟ್ರೀಯ ಅಂಗಾಂಗ ಹಾಗೂ ಅಂಗಾಂಶ ಕಸಿ ನೋಂದಣಿ ಪೋರ್ಟಲ್ 2015ರಿಂದ ಕಾರ್ಯನಿರ್ವಹಿಸುತ್ತಿದೆ. ರಾಷ್ಟ್ರೀಯ ಅಂಗಾಂಗ ಹಾಗೂ ಅಂಗಾಂಶ ಕಸಿ ಸಂಸ್ಥೆಯ ವೆಬ್ಸೈಟ್ ಮೂಲಕ ಆಸ್ಪತ್ರೆಗಳು ಹಾಗೂ ಸಂಸ್ಥೆಗಳು ಸೇರಿದಂತೆ ಅಧಿಕೃತ ಬಳಕೆದಾರರಿಗೆ ಇದು ಲಭ್ಯವಾಗುತ್ತದೆ. 2026 ಮಾರ್ಚ್ 3ರ ವರೆಗೆ ಆಸ್ಪತ್ರೆಗಳು ಹಾಗೂ ಕಸಿ ಕೇಂದ್ರಗಳು ರಾಷ್ಟ್ರೀಯ ಅಂಗಾಂಗ ಹಾಗೂ ಅಂಗಾಂಶ ಕಸಿ ಸಂಸ್ಥೆಯ ರಾಷ್ಟ್ರೀಯ ನೋಂದಣಿ ಪೋರ್ಟಲ್ ನಲ್ಲಿ ವರದಿ ಮಾಡಿದ ದತ್ತಾಂಶದ ಪ್ರಕಾರ ದೇಶದಲ್ಲಿ 89,839 ಜನರು ಪ್ರಮುಖ ಅಂಗಾಂಶ ಕೃಷಿಗಾಗಿ ಕಾಯುವವರ ಪಟ್ಟಿಯಲ್ಲಿ ಇದ್ದಾರೆ. 2025ರಲ್ಲಿ ದೇಶದಲ್ಲಿ 20,019 ಅಂಗಾಂಶ ಕಸಿ ಮಾಡಲಾಗಿದೆ ಎಂದು ಅವರು ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದರು.
ಗುರುಮಠಕಲ್ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದ ಬೃಹತ್ ಪ್ರತಿಭಟನೆ
ಗುರುಮಠಕಲ್: ನ್ಯಾಯಬದ್ಧ ಹಾಗೂ ಸಂವಿಧಾನಾತ್ಮಕ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲೂಕಿನ ಮಾದಿಗ ಸಮಾಜದ ವಿವಿಧ ಸಂಘಟನೆಗಳ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಚನ್ನಮಲ್ಲಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಾದಿಗ ಸಮುದಾಯದ ಮುಖಂಡರು ಮತ್ತು ಸದಸ್ಯರು ಸೇರಿ ಘೋಷಣೆಗಳೊಂದಿಗೆ ಜಾಥಾ ನಡೆಸಿದರು. ಬಳಿಕ ಬಸವೇಶ್ವರ ವೃತ್ತದ ಬಳಿ ರಸ್ತೆ ಹಾಗೂ ಹೈದರಾಬಾದ್ ಮುಖ್ಯ ರಸ್ತೆಯನ್ನು ಕೆಲಕಾಲ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕೆ. ಬಿ. ವಾಸು, ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ದೇವದಾಸ್ ಮಾತನಾಡಿ, ರಾಜ್ಯ ಸರ್ಕಾರ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ. ಆದರೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಮತ್ತು ಬಡ್ತಿ ಮೀಸಲಾತಿಯನ್ನು ಸರ್ಕಾರಿ ನೌಕರರಿಗೂ ಅನ್ವಯಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೂವತ್ತು ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದು, ಸರ್ಕಾರ ನಮ್ಮ ಸಮುದಾಯದ ಬೇಡಿಕೆಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು. ಒಳಮೀಸಲಾತಿ ಜಾರಿಗೆ ತರದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರುಗಳು ಆಶಾನ್ನ ಬುದ್ಧ ಪುರಸಭೆ ಮಾಜಿ ಸದಸ್ಯರು. ಭೀಮಶಪ್ಪ ಗುಡಸೆ ಪುರಸಭೆ ಮಾಜಿ ಅಧ್ಯಕ್ಷ ಹನುಮಂತು ಶನಿವಾರಮ್ ಅಶೋಕ್ ಶನಿವಾರಮ್ kdss ಅಧ್ಯಕ್ಷ. ರವಿ ಬುರನೋಳ್ ಮಾದಿಗ ದಂಡೋರ ತಾಲೂಕು ಅಧ್ಯಕ್ಷ. ಭೀಮಶಪ್ಪ ಕೆಳಮನಿ ಮಾಣಿಕ್ ಮುಕ್ಕಿಡಿ ಡಾ. ಕೃಷ್ಣ ಚೇಪೆಟ್ಲಾ ಕಿಷ್ಟಪ್ಪ ಸೈಪೋಳ ಮಲ್ಲಿಕಾರ್ಜುನ ಸೈದಪೋಳ ಕರಣಪ್ಪ ಎಂ ಟಿ ಪಲ್ಲಿ ನಾಗೇಶ್ ಚಂಡರಿಕಿ ಗುಂಡೆಸ ಗಜಾರಕೋಟ ಇನ್ನು ಅನೇಕ ಮಾದಿಗ ಸಮಾಜದ ಮುಖಂಡರು ಮತ್ತು ಹೋರಾಟಗಾರರು ಭಾಗಿಯಾಗಿದ್ದರು
LPG ಪೂರೈಕೆ, ವಿತರಣೆಗೆ ಕೇಂದ್ರ ಸರಕಾರದ ನಿಯಂತ್ರಣ; ಮನೆ,ವಾಹನಗಳಿಗೆ LPG ಪೂರೈಕೆ ಶೇ.100ರಷ್ಟು ಗ್ಯಾರಂಟಿ
ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಭುಗಿಲೆದ್ದ ಬಳಿಕ ಜಾಗತಿಕ ಮಟ್ಟದಲ್ಲಿ ತೈಲ ಹಾಗೂ ನೈಸರ್ಗಿಕ ಅನಿಲ ಸಾಗಾಟದಲ್ಲಿ ವ್ಯತ್ಯಯವುಂಟಾಗಿರುವ ಹಿನ್ನೆಲೆಯಲ್ಲಿ ಅವುಗಳ ಪೂರೈಕೆ ಹಾಗೂ ವಿತರಣೆಯನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಂಡಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ. ಆದ್ಯತಾ ವಲಯಗಳಿಗೆ ನೈಸರ್ಗಿಕ ಅನಿಲವು ಅಬಾಧಿತವಾಗಿ ದೊರೆಯುವುದನ್ನು ಖಾತರಿಪಡಿಸಲು ಅತ್ಯವಶ್ಯಕ ಸಾಮಾಗ್ರಿಗಳ ಕಾಯ್ದೆಯ ನಿಯಮಗಳನ್ನು ಬಳಸಿಕೊಂಡಿರುವುದಾಗಿ ಹೇಳಿದೆ. ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯವು ಈ ಬಗ್ಗೆ ಆದೇಶವೊಂದನ್ನು ಹೊರಡಿಸಿದ್ದು, ಹಾರ್ಮುಝ್ ಜಲಸಂಧಿಯ ಮೂಲಕ ಹಾದುಹೋಗುವ ದ್ರವೀಕೃತ ನೈಸರ್ಗಿಕ ಇಂಧನದ ಸಾಗಾಟದ ಮೇಲೆ ಪರಿಣಾಮವುಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ನೈಸರ್ಗಿಕ ಅನಿಲವನ್ನು ಮನೆ, ಆಸ್ಪತ್ರೆ ಮತ್ತಿತರ ಅತ್ಯವಶ್ಯಕ ವಲಯಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದೆ. ನೂತನ ರಾಷ್ಟ್ರೀಯ ನೈಸರ್ಗಿಕ ಅನಿಲ (ಪೂರೈಕೆ ನಿಯಂತ್ರಣ) ಆದೇಶ 2026ರ ಪ್ರಕಾರ ಮನೆಬಳಕೆಯ ಅಡುಗೆ ಅನಿಲ, ಸಾರಿಗೆಗೆ ಬಳಸಲಾಗುವ ಸಿಎನ್ಜಿ, ಎಲ್ಪಿಜಿ ಉತ್ಪಾದನೆ ಹಾಗೂ ಅತ್ಯಗತ್ಯ ಕೊಳವೆಮಾರ್ಗಗಳ ನಿರ್ವಹಣೆಗಾಗಿ ನೈಸರ್ಗಿಕ ಅನಿಲದ ಪೂರೈಕೆಗೆ ಆದ್ಯತೆ ನೀಡಲಾಗಿದೆ. ಈ ಆದ್ಯತಾ ವಲಯಗಳಿಗೆ ಅವುಗಳ ಅವಶ್ಯಕತೆಯ ಶೇ.100ರಷ್ಟು ಅಡುಗೆ ಅನಿಲವನ್ನು ಪೂರೈಕೆ ಮಾಡಲಾಗುತ್ತದೆ. ರಸಗೊಬ್ಬರ ಕಾರ್ಖಾನೆಗಳನ್ನು ದ್ವಿತೀಯ ಆದ್ಯತಾ ವಲಯವಾಗಿ ಪರಿಗಣಿಸಲಾಗಿದ್ದು, ಅವುಗಳಿಗೆ ಸರಾಸರಿ ಅಗತ್ಯದ ಶೇ.70ರಷ್ಟು ಅಡುಗೆ ಅನಿಲವನ್ನು ಪೂರೈಕೆ ಮಾಡಲಾಗುವುದು. ಕೈಗಾರಿಕಾ ವಲಯದ ಗ್ರಾಹಕರು ಸರಾಸರಿ ಅವಶ್ಯಕತೆಯ ಶೇ.80ರಷ್ಟು ಅಡುಗೆ ಅನಿಲವನ್ನು ಪಡೆಯಲಿದ್ದಾರೆ. ಈ ಆದ್ಯತಾ ವಲಯಗಳಿಗೆ ನೈಸರ್ಗಿಕ ಅನಿಲವು ನಿಯಮಿತ ಪೂರೈಕೆಯನ್ನು ಕಾಪಾಡಿಕೊಳ್ಳಲು, ಪೆಟ್ರೋಕೆಮಿಕಲ್ ಕಾರ್ಖಾನೆಗಳು ಹಾಗೂ ನಿರ್ದಿಷ್ಟ ವಿದ್ಯುತ್ ಸ್ಥಾವರಗಳು ಸೇರಿದಂತೆ ಕೆಳ ಆದ್ಯತಾ ವಲಯದ ಬಳಕೆದಾರರಿಗೆ ಪೂರೈಕೆಯಾಗುವ ನೈಸರ್ಗಿಕ ಅನಿಲವನ್ನು ತಿರುಗಿಸಲಾಗುವುದು.
ಬೆಂಗಳೂರಿನಲ್ಲಿ ಕಂಬಳ ಪ್ರದರ್ಶನಕ್ಕೆ ಹಸಿರು ನಿಶಾನೆ: ಪೇಟಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್
Supreme Court On Bengaluru Kambala- ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕ್ರೀಡೆ ನಡೆಸುವುದನ್ನು ಪ್ರಶ್ನಿಸಿ 'ಪೇಟಾ' ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಕರಾವಳಿಯ ಈ ಸಾಂಪ್ರದಾಯಿಕ ಸಂಸ್ಕೃತಿಯನ್ನು ರಾಜ್ಯದ ಇತರ ಭಾಗದ ಜನರಿಗೂ ಪರಿಚಯಿಸುವುದರಲ್ಲಿ ತಪ್ಪೇನಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಈ ತೀರ್ಪಿನಿಂದಾಗಿ ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಇದ್ದ ಕಾನೂನು ಅಡ್ಡಿ ಇದೀಗ ನಿವಾರಣೆಯಾದಂತಾಗಿದೆ. ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ಕಾಯಿದೆಯ ಮೂಲಕ ತಡೆಗಟ್ಟಬಹುದೇ ಹೊರತು, ಕ್ರೀಡೆಯನ್ನು ನಿರ್ದಿಷ್ಟ ಪ್ರದೇಶಕ್ಕೆ ಸೀಮಿತಗೊಳಿಸಲಾಗದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಅಡುಗೆ ಅನಿಲ ಪೂರೈಕೆಯಲ್ಲಿ ಅಡಚಣೆ: ಐಪಿಎಲ್ ಮೇಲೂ ಪರಿಣಾಮ!
ಮುಂಬೈ: ಇನ್ನೆರಡು ವಾರಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಗೊಳ್ಳಲಿದ್ದು, ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಗಳ ಪೂರೈಕೆಯಲ್ಲಿ ಆಗಿರುವ ಅಡಚಣೆಯು ದೊಡ್ಡ ಸವಾಲಾಗಿದೆ. ಅಡುಗೆ ಅನಿಲ ಸಿಲಿಂಡರ್ಗಳ ಅನುಪಸ್ಥಿತಿಯಲ್ಲಿ ರೆಸ್ಟೋರೆಂಟ್ ಗಳು, ಹೊಟೇಲ್ ಗಳು ಮತ್ತು ಆಹಾರ ಉದ್ಯಮಗಳು ಮುಚ್ಚುವುದರಿಂದ ಐಪಿಎಲ್ ನಡೆಸುವುದು ಕಷ್ಟಕರವಾಗುತ್ತದೆ. ಹಾಗಾಗಿ, ಈ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, ಅಗತ್ಯ ಬಿದ್ದರೆ ಪರ್ಯಾಯ ಕ್ರಮಗಳನ್ನು ಅನ್ವೇಷಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ. ಐಪಿಎಲ್ ಮಾರ್ಚ್ 28ರಂದು ಆರಂಭಗೊಳ್ಳಲು ನಿಗದಿಯಾಗಿದೆ. ಫೈನಲ್ ಪಂದ್ಯವು ಮೇ 31ರಂದು ನಡೆಯಲಿದೆ. ‘‘ಪರಿಸ್ಥಿತಿಯು ನಿರಂತರವಾಗಿ ಬದಲಾಗುತ್ತಿದೆ. ಮಾರ್ಚ್ 28ರ ವೇಳೆಗೆ ಪರಿಸ್ಥಿತಿಯು ನಿಯಂತ್ರಣಕ್ಕೆ ಬರಲಿದೆ ಎಂದು ನಾವು ಆಶಿಸುತ್ತೇವೆ. ಆದರೆ, ಇದು ಹೀಗೆಯೇ ಮುಂದುವರಿದರೆ ಬೇರೆ ಆಯ್ಕೆಗಳತ್ತ ನೋಡಬೇಕಾಗುತ್ತದೆ. ಯಾಕೆಂದರೆ ಇದು ತಂಡಗಳು ಮತ್ತು ಆಟಗಾರರ ಮೇಲೆ ಮಾತ್ರವಲ್ಲ, ಪ್ರೇಕ್ಷಕರ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ, ಈ ವಿಷಯದ ಮೇಲೆ ನಾವು ನಿಕಟ ಗಮನ ಇಟ್ಟಿದ್ದೇವೆ’’ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ‘ಸ್ಪೋರ್ಟ್ಸ್ ಸ್ಟಾರ್’ಗೆ ತಿಳಿಸಿದರು. ತಮ್ಮಲ್ಲಿ ಒಂದು ಅಥವಾ ಎರಡು ದಿನಗಳಿಗೆ ಮಾತ್ರ ಸಾಕಾಗುವಷ್ಟು ಅಡುಗೆ ಅನಿಲವಿದೆ ಎಂದು ಬೆಂಗಳೂರಿನಲ್ಲಿ ಹೊಟೇಲ್ ಮಾಲೀಕರ ಸಂಘ ಹೇಳಿದೆ. ಮುಂಬೈಯಲ್ಲಿ, ಅಡುಗೆ ಅನಿಲ ಕೊರತೆಯಿಂದಾಗಿ ಈಗಾಗಲೇ 20 ಶೇಕಡ ಹೊಟೇಲ್ ಗಳು ಮತ್ತು ರೆಸ್ಟೋರೆಂಟ್ ಗಳು ಮುಚ್ಚಿವೆ. ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಮೇಲೆ ನಡೆಸುತ್ತಿರುವ ಜಂಟಿ ದಾಳಿಯಿಂದಾಗಿ ಪಶ್ಚಿಮ ಏಶ್ಯದಿಂದ ಬರುವ ತೈಲ ನಿಂತುಹೋಗಿದೆ.
Hubballi | ವಿಶ್ವ ಶಾಂತಿಗಾಗಿ ತಕ್ಷಣವೇ ಯುದ್ಧ ನಿಲ್ಲಿಸಲು ಆಗ್ರಹ; ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರಿಂದ ಧರಣಿ
ಹುಬ್ಬಳ್ಳಿ : ಇರಾನ್ ಮತ್ತು ಜಗತ್ತಿನ ಇತರ ಭಾಗಗಳ ಮೇಲೆ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಭಾರತ ಸರಕಾರ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ಹುಬ್ಬಳ್ಳಿಯ ಡಾ. ಅಂಬೇಡ್ಕರ್ ವೃತ್ತದಲ್ಲಿ ಸಿಐಟಿಯು ನೇತೃತ್ವದಲ್ಲಿ ‘ವಿಶ್ವ ಶಾಂತಿಗಾಗಿ ಯುದ್ಧ ವಿರೋಧಿಸಿ’ ಕಾರ್ಮಿಕರ ಪ್ರದರ್ಶನ ನಡೆಯಿತು. ಈ ವೇಳೆ ಮಾತನಾಡಿದ ಸಿಐಟಿಯು ಅಖಿಲ ಭಾರತ ಕಾರ್ಯದರ್ಶಿ ಕೆ.ಎನ್.ಉಮೇಶ್, ಇರಾನ್ ಮೇಲಿನ ಯುಎಸ್-ಇಸ್ರೇಲ್ ಮಿಲಿಟರಿ ಆಕ್ರಮಣವನ್ನು ಬಲವಾಗಿ ಖಂಡಿಸಿದರು. ಜಾಗತಿಕವಾಗಿ ತೈಲೋತ್ಪನ್ನಗಳ ಮೇಲೆ ಅಧಿಪತ್ಯ ಸಾಧಿಸಲು ಸಲುವಾಗಿ ಅಮೆರಿಕ ಹೀನ ಕೃತ್ಯಕ್ಕೆ ಇಳಿದಿದ್ದು, ವೆನಿಝುವೆಲಾ, ಲಿಬಿಯಾ, ಇರಾನ್ ಮೇಲೆ ದಾಳಿ ನಡೆಸಿದೆ. ಇದರಿಂದ ಭಾರತದ ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸುವಂತಾಗಿದೆ. ಹೀಗಾಗಿ ಈ ಸಾಮ್ರಾಜ್ಯಶಾಹಿ ಯುದ್ಧವನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು. ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಮಾತನಾಡಿ, ಅಮೆರಿಕ ಏಕಪಕ್ಷೀಯ ಅಸಮಂಜಸ ಸುಂಕ ಯುದ್ಧದ ನಂತರ, ಈಗ ಇರಾನ್ ಮೇಲೆ ಏಕಪಕ್ಷೀಯ ಬಾಂಬ್ ದಾಳಿಯು ಇಡೀ ಮಧ್ಯಪ್ರಾಚ್ಯವನ್ನು ಯುದ್ಧದ ಸ್ಥಿತಿಗೆ ಮತ್ತು ಇಡೀ ಜಗತ್ತನ್ನು ಆರ್ಥಿಕ ಪ್ರಕ್ಷುಬ್ಧತೆಯ ಸ್ಥಿತಿಗೆ ತಳ್ಳಿದೆ. ನಾಗರಿಕ ಮೂಲಸೌಕರ್ಯ, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಮತ್ತು ನಗರ ಪ್ರದೇಶಗಳನ್ನು ಹೇಡಿತನದಿಂದ ಗುರಿಯಾಗಿಸಿಕೊಂಡಿರುವುದು ಜಿನೇವಾ ಸಮಾವೇಶಗಳು ಸೇರಿದಂತೆ ಅಂತರ್ರಾಷ್ಟ್ರೀಯ ಮಾನವೀಯ ಕಾನೂನನ್ನು ಉಲ್ಲಂಘಿಸುತ್ತದೆ. ಇರಾನ್ನ ಸರ್ವೋಚ್ಚ ನಾಯಕರಾಗಿದ್ದ ಆಯತುಲ್ಲಾ ಖಾಮಿನೈ ಮತ್ತು ಅನೇಕ ನಾಯಕರು ಕೊಲ್ಲಲ್ಪಟ್ಟಿದ್ದಾರೆ. ದಕ್ಷಿಣ ಇರಾನ್ನ ಮಿನಾಬ್ನಲ್ಲಿರುವ ಬಾಲಕಿಯರ ಶಾಲೆಯ ಮೇಲೆ ಗುರಿಯಾಗಿಟ್ಟುಕೊಂಡು ನಡೆಸಿದ ಬಾಂಬ್ ದಾಳಿಯಲ್ಲಿ 165 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ಇದು ಅಪರಾಧಿ ಆಡಳಿತಗಳ ಕ್ರೌರ್ಯ ಮತ್ತು ಅನಾಗರಿಕತೆಯ ವಿಸ್ತರಣೆಯನ್ನು ತೋರಿಸುತ್ತದೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡರಾದ ಮಹೇಶ ಪತ್ತಾರ, ಬಿ.ಐ.ಈಳಿಗೇರ, ತಿಲಕ ಗೌಡ, ಯಮುನಾ ಗಾಂವಕರ, ಗುರುಸಿದ್ದಪ್ಪ ಅಂಬಿಗೇರ, ಬಾಬಾಜಾನ ಮುಧೋಳ, ಚಿದಾನಂದ ಸವದತ್ತಿ, ಮಂಜುಳಾ ಪವಾರ, ಬಸೀರ ಮುಧೋಳ, ದೊಡ್ಡವ್ವ ಪೂಜಾರಿ, ಮಹೇಶ ಹುಲಗೋಡ, ಜಯಶ್ರೀ, ದೊಡ್ಡವ್ವ ಪೂಜಾರಿ, ಮಂಜುನಾಥ ಹುಜರಾತಿ, ಮಂಜುಳಾ ಪವಾರ ಹಾಗು ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು. ಎರಡು ವರ್ಷಗಳ ಹಿಂದೆ ಫೆಲೆಸ್ತೀನ್ ಜನರ ಮೇಲೆ ಇಸ್ರೇಲ್ ನಡೆಸಿದ ದಾಳಿಯಿಂದಾಗಿ 70 ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದು ಅಮೆರಿಕ ಮತ್ತು ಇಸ್ರೇಲ್ ಯುದ್ಧ ದಾಹಕ್ಕೆ ಉದಾಹರಣೆ ಆಗಿದೆ. ಸಮಾಜವಾದಿ ದೇಶಗಳ ಅನುಪಸ್ಥಿತಿಯಿಂದಾಗಿ ಅಮೆರಿಕನ್ ಸಾಮ್ರಾಜ್ಯಶಾಹಿ ಏಕಚಕ್ರಾಧಿಪತ್ಯದಿಂದಾಗಿ ಜಗತ್ತು ನಲುಗಿ ಹೋಗಿದೆ. ಇದರ ವಿರುದ್ಧ ಜಾಗತಿವಾಗಿ ಪ್ರತಿರೋಧ ಬೆಳೆದು ಬರಬೇಕು. ಸನತ್ ಕುಮಾರ್ ಬೆಳಗಲಿ, ಹಿರಿಯ ಪತ್ರಕರ್ತ
ಪಶ್ಚಿಮ ಏಶ್ಯ ಸಂಘರ್ಷದ ನಡುವೆ ಭಾರತದಿಂದ ಬಾಂಗ್ಲಾಕ್ಕೆ 5 ಸಾವಿರ ಟನ್ ಡೀಸೆಲ್ ಪೂರೈಕೆ
ಹೊಸದಿಲ್ಲಿ: ಪಶ್ಚಿಮ ಏಶ್ಯ ಸಂಘರ್ಷವು ಜಾಗತಿಕ ಇಂಧನ ಭದ್ರತೆಯ ಮೇಲೆ ಪರಿಣಾಮವನ್ನು ಬೀರಿರುವ ನಡುವೆಯೇ ಭಾರತವು ಅಸ್ಸಾಂನ ನುಮಾಲಿಗಢ ತೈಲ ಸಂಸ್ಕರಣಾಗಾರದಿಂದ ಕೊಳವೆಮಾರ್ಗವಾಗಿ ಬಾಂಗ್ಲಾದೇಶಕ್ಕೆ ಡೀಸೆಲ್ ಪೂರೈಕೆಯನ್ನು ಆರಂಭಿಸಿದೆ. ಕನಿಷ್ಠ 5 ಸಾವಿರ ಟನ್ ಡೀಸೆಲ್ ಕೊಳವೆಮಾರ್ಗದ ಮೂಲಕ ಗಡಿದಾಟಿ ಮಂಗಳವಾರ ಬಾಂಗ್ಲಾವನ್ನು ತಲುಪಲಿದೆಯೆಂದು ಬಾಂಗ್ಲಾದೇಶ ಪೆಟ್ರೋಲಿಯಂ ನಿಗಮದ ಅದ್ಯಕ್ಷ (ಬಿಪಿಸಿ) ಮುಹಮ್ಮದ್ ರೆಝಾನುರ್ ರಹ್ಮಾನ್ ತಿಳಿಸಿದ್ದಾರೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಜಂಟಿದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ತೈಲ ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ವ್ಯತ್ಯಯದಿಂದಾಗಿ ಬಾಂಗ್ಲಾವು ತೈಲದ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಈ ಡೀಸೆಲ್ ಪೂರೈಕೆಯು, ಉಭಯ ನೆರೆಹೊರೆಯ ದೇಶಗಳ ನಡುವೆ ಏರ್ಪಟ್ಟ ಬೃಹತ್ ವಾರ್ಷಿಕ ತೈಲ ಪೂರೈಕೆ ಒಪ್ಪಂದದ ಭಾಗವಾಗಿದೆ. ಈ ಡೀಸೆಲ್ ಅಸ್ಸಾಂನ ನುಮಾಲಿಗಡ ತೈಲಸಂಸ್ಕರಣಾಗಾರದಿಂದ ಬಾಂಗ್ಲಾದೇಶ- ಭಾರತ ಮಿತ್ರತ್ವ ಪೈಪ್ಲೈನ್ ಮೂಲಕ ಬಾಂಗ್ಲಾದೇಶದ ದಿನಾಜ್ಪುರವನ್ನು ತಲುಪಲಿದೆ. ಬಾಂಗ್ಲಾದೇಶ-ಭಾರತ ಮಿತ್ರತ್ವ ಪೈಪ್ಲೈನ್ ಅನ್ನು 2023ರ ಮಾರ್ಚ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಗಿನ ಬಾಂಗ್ಲಾ ಪ್ರಧಾನಿ ಹಸೀನಾ ಶೇಖ್ ಉದ್ಘಾಟಿಸಿದ್ದರು.
Ish Sodhi: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಆರಂಭವಾಗುವ ಮುನ್ನ ನ್ಯೂಜಿಲೆಂಡ್ ತಂಡದ ಪ್ರಮುಖ ಲೆಗ್-ಸ್ಪಿನ್ನರ್ ಇಶ್ ಸೋಧಿ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಪಂದ್ಯ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹೇಳುವ ಸಮಯದಲ್ಲಿ ಈ ಘಟನೆ ನಡೆದಿದೆ. ಇನ್ನೂ ನ್ಯೂಜಿಲೆಂಡ್
ಹೊಸಪೇಟೆ | ತಾಲೂಕು ಪಂಚಾಯತ್ ಕಟ್ಟಡದ ಮೇಲ್ಚಾವಣಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ
ವಿಜಯನಗರ / ಹೊಸಪೇಟೆ: ನಗರದ ತಾಲೂಕು ಪಂಚಾಯಿತಿ ಕಟ್ಟಡದ ಮೇಲ್ಚಾವಣಿಯಲ್ಲಿ ಮಂಗಳವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತಾಲೂಕು ದಂಡಾಧಿಕಾರಿ ಶ್ರುತಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಬಾಷಾ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋವಿಡ್-19 ಲಸಿಕೆಯ ಅಡ್ಡ ಪರಿಣಾಮಗಳಿಂದ ಬಾಧಿತರಾದವರಿಗೆ ಪರಿಹಾರ ನೀಡಬೇಕು: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ
ಹೊಸದಿಲ್ಲಿ: ಕೋವಿಡ್-19 ಲಸಿಕೆಯ ಅಡ್ಡಪರಿಣಾಮಗಳಿಂದ ಬಾಧಿತರಾದವರಿಗೆ ನ್ಯಾಯಯುತವಾದ ಪರಿಹಾರವನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ಮಂಗಳವಾರ ಕೇಂದ್ರ ಸರಕಾರಕ್ಕೆ ಆದೇಶಿಸಿದೆ. ಲೋಪರಾಹಿತ್ಯತೆಯ ಆಧಾರದಲ್ಲಿ ಈ ನೀತಿಯನ್ನು ಜಾರಿಗೆ ತರಬೇಕೆಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಆದೇಶದಲ್ಲಿ ತಿಳಿಸಿದೆ. ಈ ಕಾನೂನು ನಿಯಮದ ಪ್ರಕಾರ ಯಾರಿಂದಲೂ ಗಾಯಗಳು, ನಷ್ಟಗಳು ಅಥವಾ ಹಾನಿಗಳು ಯಾರಿಂದಲೇ ಆಗಿರಲಿ ಬಾಧಿತರಿಗೆ ಪರಿಹಾರ ದೊರೆಯಬೇಕಾಗಿದೆ ಎಂದು ವರದಿ ಹೇಳಿದೆ. ಕೋವಿಡ್19 ನಿರೋಧಕ ಲಸಿಕೆಯ ಅಡ್ಡ ಪರಿಣಾಮಗಳಿಂದಾಗಿ ತಮ್ಮ ಪುತ್ರಿಯರು ಸಾವನ್ನಪ್ಪಿದ್ದಾರೆಂದು ಆರೋಪಿಸಿ ದಂಪತಿಯೊಂದು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ತಮ್ಮ ಪುತ್ರಿಯರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಸ್ವತಂತ್ರ ತನಿಖಾ ಸಮಿತಿಯಿಂದ ನಡೆಸಬೇಕೆಂದು ದಂಪತಿ ಅರ್ಜಿಯಲ್ಲಿ ಕೋರಿದ್ದರು. ಮೃತರ ಶವಪರೀಕ್ಷೆ (ಅಟಾಪ್ಸಿ) ಮತ್ತು ತನಿಖೆಯ ವರದಿಗಳನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕೆಂದು ಅವರು ಆಗ್ರಹಿಸಿದ್ದರು. ತಮ್ಮ ಪುತ್ರಿಯರ ಸಾವಿಗಾಗಿ ತಮಗೆ ಸೂಕ್ತವಾದ ಆರ್ಥಿಕ ಪರಿಹಾರ ನೀಡಬೇಕೆಂದು ಪಾಲಕರು ಅರ್ಜಿಯಲ್ಲಿ ಕೋರಿದ್ದರು. ಲಸಿಕೆಗಳ ವ್ಯತಿರಿಕ್ತ ಅಡ್ಡಪರಿಣಾಮಗಳಿಂದ ಬಳಲುತ್ತಿರುವವರನ್ನು ತ್ವರಿತವಾಗಿ ಗುರುತಿಸಲು ಹಾಗೂ ಅವರಿಗೆ ಚಿಕಿತ್ಸೆ ನೀಡಲು ಮಾರ್ಗದರ್ಶಿಸೂತ್ರಗಳನ್ನು ರೂಪಿಸುವಂತೆ ಅರ್ಜಿಯಲ್ಲಿ ಆಗ್ರಹಿಸಲಾಗಿದೆ. ಪ್ರಕರಣದ ಆಲಿಕೆ ನಡೆಸಿದ ನ್ಯಾಯಪೀಠವು ಕೋವಿಡ್19 ಬಾಧಿತರಿಗೆ ಪರಿಹಾರ ನೀಡುವ ಯೋಜನೆಯಿಂದಾಗಿ, ಕೇಂದ್ರ ಸರಕಾರವು ಅದರ ಬಾಧ್ಯತೆಯನ್ನು ಒಪ್ಪಿಕೊಂಡಂತಾಗುತ್ತದೆ ಎಂದು ಪರಿಗಣಿಸಬಾರದು ಎಂದು ನ್ಯಾಯಪೀಠ ಕಿವಿಮಾತು ಹೇಳಿದೆ. ಆದಾಗ್ಯೂ, ಕೋವಿಡ್-19 ಲಸಿಕೆಗಳ ಅಡ್ಡಪರಿಣಾಮಗಳ ಪರಿಶೀಲನೆಗೆ ನೂತನ ತಜ್ಞರ ಸಮಿತಿಯನ್ನು ಸ್ಥಾಪಿಸುವ ಅಗತ್ಯವಿಲ್ಲವೆಂದು ನ್ಯಾಯಪೀಠ ತಿಳಿಸಿದೆ.
ನೇರ ನೇಮಕಾತಿಯಲ್ಲಿ ಒಬಿಸಿಗೆ 27 ಶೇ. ಮೀಸಲಾತಿ: ಲೋಕಸಭೆಗೆ ಮಾಹಿತಿ
ಹೊಸದಿಲ್ಲಿ: ಕೇಂದ್ರ ಸರಕಾರದ ಅಡಿಯಲ್ಲಿ ಬರುವ ಸಿವಿಲ್ ಹುದ್ದೆಗಳು ಮತ್ತು ಸೇವೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುವಾಗ ಸರಕಾರವು ಇತರ ಹಿಂದುಳಿದ ವರ್ಗ (ಒಬಿಸಿ)ಗಳಿಗೆ 27 ಶೇಕಡ ಮೀಸಲಾತಿ ನೀಡುವುದು ಎಂದು ಲೋಕಸಭೆಗೆ ಮಂಗಳವಾರ ತಿಳಿಸಲಾಯಿತು. ಮೀಸಲಾತಿ ನೀತಿಯನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಜಾರಿಗೊಳಿಸುತ್ತಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ಬಿ.ಎಲ್. ವರ್ಮಾ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು. ‘‘ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ 8-9-1993ರ ಕಚೇರಿ ತಿಳುವಳಿಕೆ ಪತ್ರ ಮತ್ತು ಕಾಲ ಕಾಲಕ್ಕೆ ಹೊರಡಿಸಲಾಗಿರುವ ಇತರ ಸೂಚನೆಗಳ ಆಧಾರದಲ್ಲಿ ಸರಕಾರವು ಮೀಸಲಾತಿ ನೀತಿಯೊಂದನ್ನು ಹೊಂದಿದೆ. ಇದರ ಪ್ರಕಾರ, ಸರಕಾರದ ಅಡಿಯಲ್ಲಿ ಬರುವ ಸಿವಿಲ್ ಹುದ್ದೆಗಳು ಮತ್ತು ಸೇವೆಗಳಿಗೆ ಸರಕಾರ ಮಾಡುವ ನೇರ ನೇಮಕಾತಿಗಳಲ್ಲಿ 27 ಶೇಕಡ ಹುದ್ದೆಗಳನ್ನು ಇತರ ಹಿಂದುಳಿದ ವರ್ಗಗಳಿಗೆ ಮೀಸಲಿಡಲಾಗುತ್ತದೆ’’ ಎಂದು ಸಚಿವರ ತನ್ನ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಕಲಬುರಗಿ | ಛಲ ಇದ್ದರೆ ಗುರಿ ಸಾಧನೆ ಸಾಧ್ಯ: ವಿಜಯಕುಮಾರ ಪಾಟೀಲ
ಕಲಬುರಗಿ: ಪ್ರತಿಯೊಬ್ಬರೂ ಯಶಸ್ವಿ ಜೀವನ ನಡೆಸಬೇಕಾದರೆ ಸಾಧಿಸುವ ಛಲ ಹೊಂದಿರಬೇಕು. ಅಂಥ ದೃಢಸಂಕಲ್ಪ ಇದ್ದಾಗ ಮಾತ್ರ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ವಿಜಯಕುಮಾರ ತೇಗಲತಿಪ್ಪಿ ಹೇಳಿದರು. ರಾಜ್ಯಮಟ್ಟದ ವಿಶ್ವ ಕನ್ನಡಿಗ ಪ್ರಶಸ್ತಿ ಪಡೆದ ಹಿನ್ನೆಲೆ ರಾಜೇಶ್ವರಿ ಸಾಹು ಅವರಿಗೆ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಆದರೆ ಅವಕಾಶಗಳ ಕೊರತೆಯಿಂದ ಅವರು ಹೊರಹೊಮ್ಮಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅವಕಾಶಗಳನ್ನು ಸ್ವತಃ ಸೃಷ್ಟಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವವರಲ್ಲಿ ರಾಜೇಶ್ವರಿ ಸಾಹು ಮುಂಚೂಣಿಯಲ್ಲಿದ್ದಾರೆ. ಅವರ ಸಾಮಾಜಿಕ ಕಳಕಳಿ, ವೃತ್ತಿ ಬದ್ಧತೆ ಹಾಗೂ ಸೇವಾ ಮನೋಭಾವದಿಂದ ರಾಜ್ಯದಾದ್ಯಂತ ಹೆಸರು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಸೇವೆ ದೇಶದಾದ್ಯಂತ ಪಸರಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಮಾಜಿ ಸದಸ್ಯ ಶರಣಗೌಡ ಪಾಟೀಲ್, ಪಂಚಾಯತ್ ರಾಜ್ ಇಲಾಖೆಯಲ್ಲಿ ಜನಪರ ಸೇವೆ ಸಲ್ಲಿಸುವ ಮೂಲಕ ರಾಜೇಶ್ವರಿ ಸಾಹು ಉತ್ತಮ ಆಡಳಿತಗಾರರಾಗಿ ಗುರುತಿಸಿಕೊಂಡಿದ್ದಾರೆ. ಚಿಕ್ಕ ಹಳ್ಳಿಯಲ್ಲಿ ಹುಟ್ಟಿ ಬೆಳೆದು ಪರಿಶ್ರಮದ ಮೂಲಕ ಸಾಧನೆ ಮಾಡಿರುವುದು ಪ್ರೇರಣಾದಾಯಕವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರೇಣುಕಾ ಡಾಂಗೆ ಮಾತನಾಡಿದರು. ಮುಖಂಡರಾದ ಸುಭಾಶ ಮುರುಡ, ಬಸವರಾಜ ಬಿರಬಿಟ್ಟೆ ಸೇರಿದಂತೆ ಹಲವರು ಭಾಗವಹಿಸಿದ್ದರು. ನಂತರ ರಾಜೇಶ್ವರಿ ಸಾಹು ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿದ ರಾಜೇಶ್ವರಿ ಸಾಹು ಮಾತನಾಡಿ, ಬಡತನದಲ್ಲಿದ್ದರೂ ಓದನ್ನು ನಿಲ್ಲಿಸದೆ ಪಿಎಸ್ಐ ಆಗಬೇಕೆಂಬ ಕನಸು ಕಂಡಿದ್ದೆ. ಆ ಕನಸು ನನಸಾಗದಿದ್ದರೂ ಛಲದಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಇದಕ್ಕೆ ಪಾಲಕರು ಹಾಗೂ ಹಿರಿಯರ ಪ್ರೋತ್ಸಾಹ ಕಾರಣವಾಗಿದೆ ಎಂದು ಸ್ಮರಿಸಿದರು. ಪ್ರಮುಖರಾದ ಶಿವರಾಜ ಅಂಡಗಿ, ಶರಣರಾಜ ಚಪ್ಪರಬಂದಿ, ಧರ್ಮಣ್ಣ ಎಚ್ ಧನ್ನಿ, ರಾಜೇಂದ್ರ ಮಾಡಬೂಳ ಇತರರಿದ್ದರು.
ಅನಿಲ ದರ ಏರಿಕೆ: ಕೇಂದ್ರದ ಅಸಮರ್ಥ ನಾಯಕತ್ವವೇ ಕಾರಣ: ಬಿ.ಕೆ.ಹರಿಪ್ರಸಾದ್
ಬೆಂಗಳೂರು : ‘ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯಿಂದ ಸಾಮಾನ್ಯ ಜನ, ರೈತರು, ಕಾರ್ಮಿಕರ ಕುಟುಂಬಗಳು ಭಾರೀ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ನೋವನ್ನು ಅರ್ಥಮಾಡಿಕೊಳ್ಳುವ ಬದಲು ತೆರಿಗೆಗಳ ಮೂಲಕ ಅವರ ಜೇಬಿಗೆ ಕೈಹಾಕುವ ನೀತಿಯನ್ನು ಕೇಂದ್ರ ಸರಕಾರ ತಕ್ಷಣವೇ ನಿಲ್ಲಿಸಬೇಕು. ಜನರ ಬದುಕನ್ನು ದುಬಾರಿಯ ಸಂಕಷ್ಟಕ್ಕೆ ತಳ್ಳುತ್ತಿರುವುದಕ್ಕೆ ಕೇಂದ್ರದ ಅಸಮರ್ಥ ನಾಯಕತ್ವವೇ ಕಾರಣ’ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ. ಮಂಗಳವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಪ್ರಧಾನಿ ಮೋದಿಯ ಸ್ವಯಂ ಘೋಷಿತ ಅಮೃತಕಾಲದಲ್ಲಿ ಕಪಲೋಕಲ್ಪಿತ ಗಟಾರ್ ಗ್ಯಾಸ್ ಕತೆಗಳು ಭಾರತವನ್ನು ಆಪತ್ತಿನ ಕಾಲಕ್ಕೆ ತಳ್ಳಿದೆ. ಸಾರ್ವಜನಿಕ ವೇದಿಕೆಯಲ್ಲಿ ವಿಜ್ಞಾನಿಗಳ ಎದುರೇ ಕಲ್ಪನೆಯನ್ನು ಮಾಡಲು ಸಾಧ್ಯವಾಗದ ಗಟಾರ್ ಗ್ಯಾಸ್ ಕತೆಗಳನ್ನು ಯಾವುದೇ ಲಜ್ಜೆ ಇಲ್ಲದೆ ಹೇಳಿ ಚಪ್ಪಾಳೆ ಗಿಟ್ಟಿಸಿಕೊಳ್ಳಬಹುದೇ ಹೊರತು, ಭಾರತದ ಗ್ಯಾಸ್ ಅನಿಲ ಸಮಸ್ಯೆಯನ್ನು ಪರಿಹರಿಸಲು ಪ್ರಧಾನಿಯಿಂದ ಸಾಧ್ಯವಿಲ್ಲ ಎಂಬುದಕ್ಕೆ ವರ್ತಮಾನದಲ್ಲಿ ಆಗುತ್ತಿರುವ ಗ್ಯಾಸ್ ಅಡುಗೆ ಅನಿಲ ಬಿಕ್ಕಟ್ಟೆ ಸಾಕ್ಷಿ ಎಂದು ಲೇವಡಿ ಮಾಡಿದ್ದಾರೆ. ‘ಮಧ್ಯಪ್ರಾಚ್ಯದಲ್ಲಿನ ಯುದ್ಧದ ಉದ್ವಿಗ್ನತೆಯು ಭಾರತದ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರಿದೆ, ಇದರಿಂದ ಎಲ್ಪಿಜಿ ಅನಿಲ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಮನೆ-ವಾಣಿಜ್ಯ ಬಳಕೆಯ ಸಿಲಿಂಡರ್ಗಳ ಬೆಲೆಗಳು ಹೆಚ್ಚಾಗಿದ್ದು, ಯುದ್ಧದ ವಾತಾವರಣವು ಆರ್ಥಿಕತೆಯ ಮೇಲೆ ಆತಂಕ ಮೂಡಿಸಿದೆ. ನಗರಗಳಲ್ಲಿ ಗ್ಯಾಸ್ ಸಿಲೆಂಡರ್ ಅಭಾವದಿಂದ ಹೋಟೆಲ್, ರೆಸ್ಟೋರೆಂಟ್ಗಳು ಬಂದ್ ಆಗುತ್ತಿದ್ದರೆ ಗ್ರಾಮೀಣ ಭಾಗದ ಜನರ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ. ‘ಮಧ್ಯಪ್ರಾಚ್ಯ ದೇಶಗಳ ಯುದ್ಧದ ಕುರಿತು ಪ್ರಧಾನಿಗಳ ಮೌನಕ್ಕೆ ದೇಶ ಭಾರಿ ಬೆಲೆ ತೆರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ‘ಭಾರತದ ಜನತೆಗೆ ಗ್ಯಾಸ್ ಮತ್ತು ಪೆಟ್ರೋಲ್ ಸಮಸ್ಯೆ ಬರದಂತೆ ಪರಿಹಾರ ಕಂಡುಹಿಡಿಯಿರಿ’ ಎಂದು ಭಾಷಣೆ ಬಿಗಿಯುತ್ತಿದ್ದ ಅಂದಿನ ಗುಜರಾತಿನ ಮುಖ್ಯಮಂತ್ರಿ, ಇಂದಿನ ಪ್ರಧಾನಿ ಮೋದಿ ಸರಕಾರ ಮೌನವಹಿಸಿರುವುದು ಯಾಕೆ?’ ಎಂದು ಅವರು ಪ್ರಶ್ನಿಸಿದ್ದಾರೆ. ಪ್ರಧಾನಿ @narendramodi ಯ ಸ್ವಯಂ ಘೋಷಿತ ಅಮೃತಕಾಲದಲ್ಲಿ ಕಪಲೋಕಲ್ಪಿತ ಗಟಾರ್ ಗ್ಯಾಸ್ ಕತೆಗಳು ಭಾರತವನ್ನು ಆಪತ್ತಿನ ಕಾಲಕ್ಕೆ ತಳ್ಳಿದೆ. ಸಾರ್ವಜನಿಕ ವೇದಿಕೆಯಲ್ಲಿ ವಿಜ್ಞಾನಿಗಳ ಎದುರೇ ಕಲ್ಪನೆಯನ್ನು ಕೂಡ ಮಾಡಲು ಸಾಧ್ಯವಾಗದ ಗಟಾರ್ ಗ್ಯಾಸ್ ಕತೆಗಳನ್ನು ಯಾವುದೇ ಲಜ್ಜೆ ಇಲ್ಲದೆ ಹೇಳಿ ಚಪ್ಪಾಳೆ ಗಿಟ್ಟಿಸಿಕೊಳ್ಳಬಹುದೇ ಹೊರತು, ಭಾರತದ… pic.twitter.com/K7hvygKJmJ — Hariprasad.B.K. (@HariprasadBK2) March 10, 2026
ಶಿಲ್ಲಾಂಗ್: ಮೇಘಾಲಯದ ಪಶ್ಚಿಮ ಗಾರೋ ಬೆಟ್ಟಗಳ ಜಿಲ್ಲೆಯಲ್ಲಿ ಗಾರೊ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (GHADC) ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ಸಂದರ್ಭ ಉಂಟಾದ ಉದ್ವಿಗ್ನತೆಯಲ್ಲಿ ಮಂಗಳವಾರ ಮುಂಜಾನೆ ಭದ್ರತಾ ಪಡೆಗಳು ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿಬಿನಾಂಗ್ ಪ್ರದೇಶದಲ್ಲಿ ಬುಡಕಟ್ಟು ಹಾಗೂ ಬುಡಕಟ್ಟು ಅಲ್ಲದ ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ್ದು, ಹಿಂಸಾತ್ಮಕ ಗುಂಪುಗಳನ್ನು ಚದುರಿಸಲು ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಪಶ್ಚಿಮ ಗಾರೋ ಬೆಟ್ಟಗಳ ಪೊಲೀಸ್ ವರಿಷ್ಠಾಧಿಕಾರಿ ಅಬ್ರಹಾಂ ಟಿ. ಸಂಗ್ಮಾ ತಿಳಿಸಿದ್ದಾರೆ. ‘ಮೃತಪಟ್ಟ ಇಬ್ಬರೂ ಚಿಬಿನಾಂಗ್ ನಿವಾಸಿಗಳೇ. GHADC ಚುನಾವಣೆಗೆ ಸಂಬಂಧಿಸಿ ಬುಡಕಟ್ಟು ಜನರು ಮತ್ತು ಬುಡಕಟ್ಟು ಅಲ್ಲದವರ ನಡುವೆ ಘರ್ಷಣೆ ನಡೆದಿದೆ. ಕಾನೂನುಬಾಹಿರವಾಗಿ ಸೇರಿದ್ದ ಗುಂಪನ್ನು ಚದುರಿಸುವ ವೇಳೆ ಗುಂಡು ಹಾರಿಸಲಾಗಿದೆ’ ಎಂದು ಅವರು ಹೇಳಿದರು. ಪ್ರದೇಶದಲ್ಲಿ ಪರಿಸ್ಥಿತಿ ಈಗ ನಿಯಂತ್ರಣದಲ್ಲಿ ಇದೆ ಎಂದು ಸಂಗ್ಮಾ ತಿಳಿಸಿದ್ದಾರೆ. ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಪಶ್ಚಿಮ ಗಾರೋ ಬೆಟ್ಟಗಳಾದ್ಯಂತ ಮಂಗಳವಾರ ಇಡೀ ದಿನ ಕರ್ಫ್ಯೂ ಜಾರಿಗೊಳಿಸಿದೆ. ಹೆಚ್ಚುವರಿ ಭದ್ರತಾ ಪಡೆಗಳನ್ನು ಕೋರಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಗುಂಪುಗಾರಿಕೆ, ಹಲ್ಲೆ ಮತ್ತು ತಪ್ಪು ಮಾಹಿತಿಯ ಪ್ರಸರಣದ ವರದಿಗಳ ಹಿನ್ನೆಲೆ ಮೇಘಾಲಯ ಸರ್ಕಾರ ಮಂಗಳವಾರದಿಂದ ಜಿಲ್ಲೆಯಲ್ಲಿ 48 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ. ಆದರೆ ಕರೆಗಳು ಮತ್ತು ಎಸ್ಎಂಎಸ್ ಸೇವೆಗಳು ಮುಂದುವರಿಯಲಿವೆ. ಉದ್ವಿಗ್ನತೆಯನ್ನು ಶಮನಗೊಳಿಸಲು ಉಪ ಆಯುಕ್ತ ವಿಭೋರ್ ಅಗರ್ವಾಲ್ ಅವರು ಮಂಗಳವಾರ ತುರಾದ ಸರ್ಕ್ಯೂಟ್ ಹೌಸ್ನಲ್ಲಿ ಚರ್ಚ್ ಮುಖಂಡರು, ಎನ್ಜಿಒ ಪ್ರತಿನಿಧಿಗಳು ಹಾಗೂ ಸ್ಥಳೀಯ ಅಭಿವೃದ್ಧಿ ಸಮಿತಿಗಳೊಂದಿಗೆ ಶಾಂತಿ ಸಮಿತಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಗಾರೊ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 16ರವರೆಗೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ನಾಮಪತ್ರ ಕೇಂದ್ರಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಎಪ್ರಿಲ್ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ತುರಾದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಫುಲ್ಬರಿಯ ಮಾಜಿ ಶಾಸಕ ಎಸ್ತಮುರ್ ಮೋಮಿನ್ ಅವರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿದ ಬಳಿಕ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಬುಡಕಟ್ಟು ಜನಾಂಗದವರಲ್ಲದವರು ಜಿಎಚ್ಎಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಅಥವಾ ಭಾಗವಹಿಸುವುದನ್ನು ತಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದರು. ಫೆಬ್ರವರಿ 17ರಂದು ಜಿಎಚ್ಎಡಿಸಿ ಕಾರ್ಯಕಾರಿ ಸಮಿತಿಯು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಮಾನ್ಯ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂಬ ನಿರ್ಣಯವನ್ನು ಅಂಗೀಕರಿಸಿತ್ತು.
ಪುಟಿನ್ ಗೆ ಟ್ರಂಪ್ ದೂರವಾಣಿ ಕರೆ; ಇರಾನ್ ಯುದ್ಧ ಶೀಘ್ರ ಕೊನೆಗೊಳಿಸುವ ಬಗ್ಗೆ ಪ್ರಸ್ತಾಪ
ಮಾಸ್ಕೋ: ಅಮೆರಿಕ ಅಧ್ಯಕ್ಷ ಟ್ರಂಪ್ ಸೋಮವಾರ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೆ ದೂರವಾಣಿ ಕರೆ ಮಾಡಿದ್ದು ಇರಾನ್ ನಲ್ಲಿ ಈಗ ನಡೆಯುತ್ತಿರುವ ಯುದ್ದವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವ ಉದ್ದೇಶದ ಹಲವು ಸಲಹೆಗಳನ್ನು ಹಂಚಿಕೊಂಡರು ಎಂದು ರಶ್ಯ ಅಧ್ಯಕ್ಷರ ಕಚೇರಿ ಹೇಳಿದೆ. ಜಾಗತಿಕ ತೈಲ ಮಾರುಕಟ್ಟೆ ಪರಿಸ್ಥಿತಿಯ ಸಂದರ್ಭದಲ್ಲಿ ಉಕ್ರೇನ್ ನ ಸಂಘರ್ಷ ಮತ್ತು ವೆನೆಝುವೆಲಾದ ಪರಿಸ್ಥಿತಿಯ ಬಗ್ಗೆಯೂ ಟ್ರಂಪ್ ಮತ್ತು ಪುಟಿನ್ ಚರ್ಚೆ ನಡೆಸಿದರು ಎಂದು ರಶ್ಯ ಅಧ್ಯಕ್ಷರ ವಿದೇಶಾಂಗ ನೀತಿ ಸಹಾಯಕ ಯೂರಿ ಉಶಕೋವ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಮಾತುಕತೆ ಉತ್ಪಾದಕ ಮತ್ತು ಪ್ರಾಮಾಣಿಕವಾಗಿತ್ತು. ಇರಾನ್ನೊಂದಿಗಿನ ಸಂಘರ್ಷದ ಸುತ್ತಮುತ್ತಲಿನ ಪರಿಸ್ಥಿತಿ, ಉಕ್ರೇನ್ ಶಾಂತಿ ಮಾತುಕತೆಯ ಬಗ್ಗೆ ಚರ್ಚೆ ನಡೆಸಲಾಗಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ದಕ್ಕೆ ತ್ವರಿತ ರಾಜಕೀಯ ಮತ್ತು ರಾಜತಾಂತ್ರಿಕ ಇತ್ಯರ್ಥಕ್ಕೆ ಪುಟಿನ್ ಕರೆ ನೀಡಿದರು ಎಂದು ಯೂರಿ ಉಶಕೋವ್ ಹೇಳಿದ್ದಾರೆ.
ಮಧ್ಯಪ್ರಾಚ್ಯ ಯುದ್ದದಲ್ಲಿ ಗೆದ್ದದ್ದು ರಶ್ಯ ಮಾತ್ರ: ಯುರೋಪಿಯನ್ ಯೂನಿಯನ್
ಬ್ರಸೆಲ್ಸ್: ಇಂಧನ ಬೆಲೆ ಗಗನಕ್ಕೇರಿರುವುದರಿಂದ ಮತ್ತು ಉಕ್ರೇನ್ ವಿರುದ್ದದ ಯುದ್ದದತ್ತ ಜಾಗತಿಕ ಗಮನ ಮಸುಕಾಗಿರುವುದರಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದಲ್ಲಿ ಇದುವರೆಗೆ ಗೆದ್ದಿರುವುದು ರಶ್ಯ ಮಾತ್ರ ಎಂದು ಯುರೋಪಿಯನ್ ಯೂನಿಯನ್(ಇಯು) ಸಮಿತಿ ಅಧ್ಯಕ್ಷ ಅಂಟೋನಿಯೊ ಕೋಸ್ಟ ಮಂಗಳವಾರ ಹೇಳಿದ್ದಾರೆ. ಬ್ರಸೆಲ್ಸ್ ನಲ್ಲಿ ಇಯು ರಾಯಭಾರಿಗಳ ಸಭೆಯಲ್ಲಿ ಮಾತನಾಡಿದ ಕೋಸ್ಟ ʼಇಂಧನ ಬೆಲೆ ಹೆಚ್ಚಿರುವುದು ಉಕ್ರೇನ್ ವಿರುದ್ದದ ಯುದ್ದಕ್ಕೆ ಹೊಸ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸಿಕೊಟ್ಟಿದೆ. ಮಧ್ಯಪ್ರಾಚ್ಯದಲ್ಲಿನ ಸಂಘರ್ಷವು ಪ್ರಾಮುಖ್ಯತೆ ಪಡೆದಿರುವುದರಿಂದ ಉಕ್ರೇನ್ ಯುದ್ದದತ್ತ ಗಮನ ಕಡಿಮೆಯಾಗಿದೆʼ ಎಂದ ಅವರು, ಈಗ ಅಮೆರಿಕದಿಂದ ಸವಾಲು ಎದುರಿಸುತ್ತಿರುವ ಅಂತಾರಾಷ್ಟ್ರೀಯ ನಿಯಮಗಳ ಆಧಾರಿತ ವ್ಯವಸ್ಥೆಯನ್ನು ರಕ್ಷಿಸುವ ಮತ್ತು ಮಧ್ಯಪ್ರಾಚ್ಯದ ಎಲ್ಲಾ ಪಕ್ಷಗಳು ಸಮಾಲೋಚನೆ ಪ್ರಕ್ರಿಯೆಗೆ ಮರಳುವ ಅಗತ್ಯವನ್ನು ಒತ್ತಿ ಹೇಳಿದರು. ʼಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳನ್ನು ಬಾಂಬ್ ಗಳ ಮೂಲಕ ಸಾಧಿಸಲಾಗದು. ಅಂತಾರಾಷ್ಟ್ರೀಯ ಕಾನೂನು ಮಾತ್ರ ಅವುಗಳನ್ನು ಎತ್ತಿಹಿಡಿಯುತ್ತದೆ. ನಾವು ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಪ್ಪಿಸಬೇಕು. ಅಂತಹ ಮಾರ್ಗವು ಮಧ್ಯಪ್ರಾಚ್ಯ, ಯುರೋಪ್ ಮತ್ತು ಅದರಾಚೆಗೆ ಬೆದರಿಕೆ ಹಾಕುತ್ತದೆ' ಎಂದು ಕೋಸ್ಟ ಹೇಳಿರುವುದಾಗಿ ವರದಿಯಾಗಿದೆ.
ರಾಜ್ಯದಲ್ಲಿ 6,70,560 ಕೋಟಿ ಬಂಡವಾಳ ಹೂಡಿಕೆ : ಎಂ.ಬಿ.ಪಾಟೀಲ್
ಬೆಂಗಳೂರು, ಮಾ.10: ರಾಜ್ಯದಲ್ಲಿ ಹಿಂದಿನ ಮೂರು ವರ್ಷಗಳಿಂದ 6,70,560 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. 2,47,571 ಉದ್ಯೋಗ ಸೃಜನೆಗಾಗಿ 117 ಹೂಡಿಕೆ ಒಪ್ಪಂದಗಳು ಆಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಂಗಳವಾರ ಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಡಂಬಡಿಕೆ ಮಾಡಿಕೊಂಡಿರುವ ಯೋಜನೆಗಳ ಪೈಕಿ ಒಟ್ಟು 57 ಯೋಜನೆಗಳು ರಾಜ್ಯ ಉನ್ನತಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಹಾಗೂ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಗಳಲ್ಲಿ ಅನುಮೋದನೆ ಪಡೆದಿರುತ್ತಾರೆ. ಇವುಗಳಿಂದ 79,907.94 ಕೋಟಿ ರೂ. ಬಂಡವಾಳ ಹೂಡಿಕೆ ಮತ್ತು 55,729 ಉದ್ಯೋಗ ಸೃಜನೆ ನಿರೀಕ್ಷಿಸಲಾಗಿದೆ ಎಂದರು. ಅನುಮೋದನೆಯಾಗಿರುವ 57 ಯೋಜನೆಗಳ ಪೈಕಿ 6 ಯೋಜನೆಗಳು ಅನುಷ್ಠಾನಗೊಂಡಿದ್ದು, ಇವುಗಳಿಂದ 6,900.14 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. 6,654 ಉದ್ಯೋಗ ಸೃಜನೆಯಾಗಿದೆ. ಬಾಕಿ ಯೋಜನೆಗಳು ಅನುಷ್ಠಾನದ ಹಂತದಲ್ಲಿರುತ್ತವೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
ಬಾಹುಬಲಿ ಮಹಾಮಸ್ತಕಾಭಿಷೇಕ ಪೂರ್ವ ಸಿದ್ಧತೆಗಾಗಿ ಸಮಿತಿ ರಚನೆಗೆ ಕ್ರಮ : ಪ್ರಿಯಾಂಕ್ ಖರ್ಗೆ
ಬೆಂಗಳೂರು, ಮಾ.10: ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಕಾರ್ಕಳದಲ್ಲಿ ಜರುಗಲಿರುವ ಬಾಹುಬಾಲಿಯ ಮಹಾಮಸ್ತಕಾಭಿಷೇಕ ಧಾರ್ಮಿಕ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಬಿಜೆಪಿನ ಸದಸ್ಯ ಸುನಿಲ್ ಕುಮಾರ್ ಗಮನ ಸೆಳೆದ ಸೂಚನೆಗೆ ಮುಖ್ಯಮಂತ್ರಿ ಪರವಾಗಿ ಉತ್ತರ ನೀಡಿದ ಅವರು, ಸರಕಾರವು ಈ ಪ್ರಮುಖ ಧಾರ್ಮಿಕ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸಮಿತಿಯನ್ನು ರಚಿಸಲಿದೆ. ಶಾಸಕರು ಹೇಳಿದಂತೆ ಮುಖ್ಯಮಂತ್ರಿ ಗಮನಕ್ಕೆ ತಂದು ಜಿಲ್ಲಾ ಮಟ್ಟದಲ್ಲಿ ಸಹಾಯಕ ಆಯುಕ್ತರ ನೇತೃತ್ವದಲ್ಲಿಯೇ ಸಮಿತಿಯನ್ನು ರಚಿಸಲು ಕ್ರಮವಹಿಸಲಾಗುವುದು ಎಂದರು. ಈಗಾಗಲೇ ಇದರ ಸಿದ್ಧತೆಗೆ ಅಂದಾಜು 7 ಕೋಟಿ ರೂಗಳ ಅನುದಾನ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಹನ್ನೆರಡು ವರ್ಷಗಳಿಗೆ ಒಮ್ಮೆ ಜರುಗುವ ಈ ಧಾರ್ಮಿಕ ಆಚರಣೆಯನ್ನು ಅಚ್ಚುಕಟ್ಟಾಗಿ ನಡೆಸಲು ಬೇಕಾಗುವ ಎಲ್ಲ ವ್ಯವಸ್ಥೆಯನ್ನು ಸರಕಾರ ಮಾಡಿಕೊಳ್ಳಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ವತಿಯಿಂದ ಮಹಿಳಾ ದಿನಾಚರಣೆ; ಸಾಧಕಿಯರಿಗೆ ಸನ್ಮಾನ
ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಮಹಿಳಾ ದಿನಾಚರಣೆ 2026 ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮ ಕೊಲ್ಯ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಮಾತನಾಡಿ, ಹಿಂದೆ ಅಡುಗೆ ಕೋಣೆಗೆ ಸೀಮಿತಳಾಗಿದ್ದ ಮಹಿಳೆಯರು ಪ್ರಸ್ತುತ ಅಂತರೀಕ್ಷಕ್ಕೆ ಏರುವ ಮೂಲಕ ಎಲ್ಲಾ ರಂಗದಲ್ಲೂ ಛಾಪು ಮೂಡಿಸಿದ್ದಾರೆ. ಮಹಿಳೆ ಸಕಾರಾತ್ಮಕವಾಗಿ ಇರುವ ಮನೆ ಬೆಳಗುತ್ತದೆ ಎಂದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಮೈಮೂನ ಎಂ.ಎ.ಹರೇಕಳ, ಚಂದ್ರಕಲಾ ಎಸ್, ಲಿಜಿ ನೊರೋನ್ಹ, ಸುಮಂಗಲಿ ರಾವ್, ವಜ್ರ ಗುಜರನ್ ಇವರನ್ನು ಸನ್ಮಾನಿಸಲಾಯಿತು. ಸಮರ್ಪಣಾ ಪರಿವಾರ್ ಮಹಿಳಾ ಘಟಕದ ಅಧ್ಯಕ್ಷೆ ಕುಸುಮಾ ಪ್ರಶಾಂತ್ ಉಡುಪ ಅಧ್ಯಕ್ಷತೆ ವಹಿಸಿದ್ದರು. ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಆರ್.ಶೆಟ್ಟಿ, ತೀಯಾ ಸಮಾಜದ ಅಧ್ಯಕ್ಷ ಜಯಂತ್ ಕೊಂಡಾಣ, ಲಯನ್ಸ್ ಕ್ಲಬ್ ಪೆರ್ಮನ್ನೂರು ವಲಯಾಧ್ಯಕ್ಷೆ ಜೆಸಿಂತಾ ಮೆಂಡೋನ್ಸ, ಛೋಟಾ ಮಂಗಳೂರು ಘಟಕಾಧ್ಯಕ್ಷೆ ಹರಿಣಾಕ್ಷಿ, ಮುಡಿಪು ವಿಶ್ವಕರ್ಮ ಸಂಘದ ಅಧ್ಯಕ್ಷ ಸುರೇಶ್ ಆಚಾರ್ಯ, ರೈಲ್ವೇ ಸಲಹಾ ಮಂಡಳಿ ಸದಸ್ಯೆ ಸುಷ್ಮಾ ಕೋಟ್ಯಾನ್, ಸರ್ವಜ್ಞಾ ಅಕಾಡೆಮಿ ಆಡಳಿತ ವ್ಯವಸ್ಥಾಪಕ ಸುರೇಶ್ ಎಂ.ಎಸ್, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ದಿನೇಶ್ ನಾಯಕ್, ಸಮಾಜ ಸೇವಕಿ ಗಾಯತ್ರಿ ಕಿಶೋರ್ ಕುತ್ತಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಲಿಲ್ಲಿ ಪಾಯ್ಸ್ ಮತ್ತಿತರರು ಉಪಸ್ಥಿತರಿದ್ದರು. ಸಮರ್ಪಣಾ ಪರಿವಾರ್ ಅಧ್ಯಕ್ಷ ಮೋಹನ್ ಶಿರ್ಲಾಲ್ ಸ್ವಾಗತಿಸಿದರು. ಶಿಕ್ಷಕರಾದ ಜಯಲಕ್ಷ್ಮಿ, ಚಂದ್ರಶೇಖರ ಹಾಗೂ ವಸಂತ ರೈ ಸನ್ಮಾನ ಪತ್ರ ವಾಚಿಸಿದರು. ವಸಂತ ಕೋಡಿ ವಂದಿಸಿದರು. ಜಗನ್ನಾಥ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.
ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ಕರ್ನಾಟಕ ಹೈಕೋರ್ಟ್ ತಡೆ; ಪರಿಣಾಮಗಳ ಬಗ್ಗೆ ಕೋರ್ಟ್ ಆತಂಕ
ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಇನ್ನು ಕಾಮಗಾರಿಯನ್ನ ಅರಣ್ಯ ಪ್ರದೇಶದಲ್ಲಿ ಕೈಗೊಳ್ಳುವುದಕ್ಕೆ ಹಾಗೂ ಯೋಜನೆಗಳ ಪರಿಣಾಮಗಳ ಬಗ್ಗೆ ಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಇನ್ನು ಕೋರ್ಟ್ ತಡೆಯು ಪರಿಸರವಾದಿಗಳ ಹೋರಾಟಕ್ಕೆ ಸಿಕ್ಕ ಜಯ ಎನ್ನಲಾಗಿದೆ. ಇನ್ನು ಯೋಜನೆ ಸ್ಥಗಿತಕ್ಕೆ ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ.
Bengaluru | ಅಡುಗೆ ಅನಿಲ್ ದರ ಏರಿಕೆಗೆ ಯುವ ಕಾಂಗ್ರೆಸ್ ಆಕ್ರೋಶ
ಬೆಂಗಳೂರು : ಕೇಂದ್ರ ಸರಕಾರ ಏಕಾಏಕಿ ಅಡುಗೆ ಅನಿಲ ದರ ಏರಿಕೆ ಮಾಡಿರುವುದನ್ನು ಖಂಡಿಸಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಮಂಗಳವಾರ ಇಲ್ಲಿನ ಆನಂದರಾವ್ ವೃತ್ತದ ಕಾಂಗ್ರೆಸ್ ಭವನದಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ನೇತೃತ್ವದಲ್ಲಿ ಜಮಾಯಿಸಿದ ಯುವ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ಮೋದಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಚ್.ಎಸ್.ಮಂಜುನಾಥ್ ಗೌಡ, ಕೇಂದ್ರ ಬಿಜೆಪಿ ಸರಕಾರ ಕಳೆದ 11ವರ್ಷಕ್ಕೂ ಹೆಚ್ಚು ಅವಧಿಯ ಆಡಳಿತದಲ್ಲಿ ಬೆಲೆ ಏರಿಕೆಯನ್ನು ಮಾಡಿರುವುದನ್ನ ಬಿಟ್ಟರೆ ಬೇರೆ ಏನು ಸಾಧನೆ ಮಾಡಿಲ್ಲ. ಅಡುಗೆ ಅನಿಲ ಬೆಲೆ ಏರಿಕೆಯಿಂದ ಬಡವರು, ಮಾಧ್ಯಮವರ್ಗದವರಿಗೆ ಬಹಳ ಸಂಕಷ್ಟವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಆಡಳಿತವಿದ್ದಾಗ 400 ರೂ., ಸಿಲಿಂಡರ್ ಬೆಲೆ ಇತ್ತು. ಇಂದಿನ ಬಿಜೆಪಿ ಕೇಂದ್ರ ಸರಕಾರದ ಆಡಳಿತದಲ್ಲಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ ಎಂದರು. ದೇಶದ ಆರ್ಥಿಕ ಪರಿಸ್ಥಿತಿ ಶೋಚನೀಯ, ಉದ್ಯೋಗ ಸೃಷ್ಟಿಯಿಲ್ಲ ನಿರುದ್ಯೋಗ ತಾಂಡವವಾಡುತ್ತಿದೆ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಭರವಸೆಯಾಗಿ ಉಳಿದಿದೆ. ವಿದೇಶದಿಂದ ಕಪ್ಪು ಹಣ ಒಂದು ನಯಾಪೈಸೆ ಬಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಒದಗಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಯು.ಟಿ.ಖಾದರ್
ಬೆಂಗಳೂರು : ಸದನದಲ್ಲಿ ಉತ್ತರಿಸುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸರಕಾರಕ್ಕೆ ಸೂಚನೆ ನೀಡಿದರು. ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಸಂದರ್ಭದಲ್ಲಿ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಲ್ಲಿ ಅರ್ಧಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರ ಸಿಗದ ಬಗ್ಗೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಅವರು ಆಕ್ಷೇಪ ಎತ್ತಿದ್ದನ್ನು ಸಮರ್ಥಿಸಿ ಯು.ಟಿ.ಖಾದರ್ ಮಾತನಾಡಿದರು. ನಿನ್ನೆ ಸಹ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ಉತ್ತರಗಳ ಸಂಖ್ಯೆ ಕಡಿಮೆ ಇತ್ತು. ಇಂದು ಸಹ ಅದೇ ಆಗಿದೆ. ಈ ರೀತಿ ಆಗುವುದು ಸರಿಯಲ್ಲ. ಸಚಿವರುಗಳು ತಮ್ಮ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಬೇಕು. ಸದನದಲ್ಲಿ ಶಾಸಕರು ಕೇಳುವ ಎಲ್ಲ ಪ್ರಶ್ನೆಗಳಿಗೆ ತಡ ಮಾಡದೆ ಉತ್ತರಗಳು ಸದನಕ್ಕೆ ಬರಬೇಕು. ಉತ್ತರಗಳು ಸಿದ್ದಪಡಿಸಿ ಕೊಡುವುದಕ್ಕೆ ಐಎಎಸ್-ಐಪಿಎಸ್ ಆಗಬೇಕಾ, ಸದನಕ್ಕೆ ಉತ್ತರ ಕೊಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು. ಸಭಾಧ್ಯಕ್ಷರ ಮಾತಿಗೆ ಸ್ಪಂದಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಸದನದಲ್ಲಿ ಶಾಸಕರು ಕೇಳುವ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಲೇಬೇಕು. ಉತ್ತರವನ್ನು ವಿಳಂಬ ಮಾಡದೇ ನೀಡುವಂತೆ ಎಲ್ಲ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಸದನಕ್ಕೆ ಉತ್ತರ ಕೊಡಲು ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಉಡುಪಿ| ಮಾ.11ರಿಂದ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳಿಂದ ಮುಷ್ಕರ
ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ
kirti Azad Vs Harbhajan Singh- ಐಸಿಸಿ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಕೋಚ್ ಗೌತಮ್ ಗಂಭೀರ್, ಐಸಿಸಿ ಅಧ್ಯಕ್ಷ ಜೈ ಶಾ ಸೇರಿದಂತ ಕೆಲವರು ಅಹ್ಮದಾಬಾದ್ ನ ಹನುಮಾನ್ ಮಂದಿರಕ್ಕೆ ಟ್ರೋಫಿ ಜೊತೆ ತೆರಳಿದ್ದು ತೀವ್ರ ಸಂಚಲನಕ್ಕೆ ಕಾರಣವಾಗಿದೆ. ದೇವಸ್ಥಾನಕ್ಕೆ ಮಾತ್ರ ತೆರಳಿರುವುದು ಯಾಕೆ? ಮಸೀದಿ, ಚರ್ಚ್, ಗುರುದ್ವಾರಗಳಿಗೆ ಏಕಿಲ್ಲ ಎಂಬ 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಕೀರ್ತಿ ಆಝಾದ್ ಅವರ ಪ್ರಶ್ನೆಗೆ, ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನು ಈ ವಿಚಾರದ ಬಗ್ಗೆ ಪತ್ರಕರ್ತರು ಕೆದಕಿದಾಗ ಇಶಾನ್ ಕಿಶನ್ ಅವರು, `ಏನಾದರೂ ಒಳ್ಳೆಯದಿದ್ದರೆ ಕೇಳಿ’ ಎಂದು ಉತ್ತರಿಸಿ ವಿವಾದದಿಂದ ದೂರ ಉಳಿಯಲು ಯತ್ನಿಸಿದ್ದಾರೆ.
ವಿಶ್ವಾಸ, ಪ್ರೀತಿ, ಗೌರವ ಇದ್ದಲ್ಲಿ ಸಮಸ್ಯೆ ಇಲ್ಲ: ಅಬ್ದುಲ್ ಅಝೀಝ್ ದಾರಿಮಿ
ಸಂತ ಅಲೋಶಿಯಸ್ ಕಾಲೇಜಿನಲ್ಲಿ ಸೌಹಾರ್ದ ಇಫ್ತಾರ್ ಕೂಟ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ, ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಮಾ.11ರಿಂದ 15ರ ತನಕ ಕರೆಕೊಟ್ಟಿದ್ದ ಬಂದ್ ಅನ್ನು ಹಿಂಪಡೆಯಲಾಗಿದೆ. ಮಂಗಳವಾರ ಆರೋಗ್ಯ ಸಚಿವರು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಬೇಡಿಕೆ ಈಡೇರಿಕೆಗೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಮಂಗಳೂರು| ಚಿನ್ನಾಭರಣ ಕಳವು ಪ್ರಕರಣ; 24 ಗಂಟೆಗಳ ಅವಧಿಯಲ್ಲಿ ಆರೋಪಿಯ ಪತ್ತೆ
ಮಂಗಳೂರು, ಮಾ.10: ಕಾವೂರು ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ಕಾರ್ಯಚರಣೆ ನಡೆಸಿ 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕಳವು ಮಾಡಿದ ಎಲ್ಲಾ ಸ್ವತ್ತುಗಳ ವಶಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ನಗರ ಪೊಲೀಸರ ಪ್ರಕಟನೆ ತಿಳಿಸಿದೆ. ಕಾವೂರು ಉಲ್ಲಾಸ್ ನಗರ ಮನೆಯೊಂದಕ್ಕೆ ಮಾ.7ರಂದು ಮದ್ಯಾಹ್ನ 12-00 ಗಂಟೆ ಅವಧಿಯಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲಿನ ಬೀಗ ಮುರಿದು ಕಳ್ಳರು ಒಳಪ್ರವೇಶಿಸಿ ಸುಮಾರು ರೂ 4,80,000 ಬೆಲೆಯ 39 ಗ್ರಾಂ ಚಿನ್ನಭಾರಣ, 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿರುವ ಬಗ್ಗೆ ಕಾವೂರು ಪೊಲೀಸರಿಗೆ ದೂರು ನೀಡಲಾಗಿದೆ. ಬಗ್ಗೆ ನೀಡಿದ ದೂರಿನಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸಜಿಪನಡು ದೇರಾಜೆಯ ಆರೋಪಿ ಅಶೋಕ್ (41) ಎಂಬಾತನನ್ನು ಕಳ್ಳತನ ನಡೆದ 24 ಗಂಟೆಯಲ್ಲಿ ಅಂದರೆ ಮಾ.8 ರಂದು ಬಂಧಿಸಿ ಆಪಾದಿತನಿಂದ ಕಳವು ಮಾಡಿರುವ ಎಲ್ಲಾ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಈ ಪತ್ತೆ ಕಾರ್ಯಚಾರಣೆಯಲ್ಲಿ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಎಂ. ಬೈಂದೂರು, ಪೊಲೀಸ್ ಉಪ-ನಿರೀಕ್ಷಕರಾದ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ದಿನೇಶ್, ಮಾಲತೇಶ್, ನಾಗರಾಜ್ ಹಾಗೂ ರಿಯಾಜ್ ರವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಬೇಡಿಕೆಗಳ ಈಡೇರಿಕೆ ಭರವಸೆ: ಮುಷ್ಕರ ಹಿಂಪಡೆದ ಸರಕಾರಿ ವೈದ್ಯರು
ಬೆಂಗಳೂರು : ರಾಜ್ಯ ಸರಕಾರವು ವೈದ್ಯರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವುದರಿಂದ ಮಾ.11ರಿಂದ ನಡೆಯಬೇಕಿದ್ದ ಸರಕಾರಿ ವೈದ್ಯರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಸರಕಾರಿ ವೈದ್ಯಾಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ ಎಂ.ಮೇಟಿ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು, ನೌಕರರು ಕರ್ತವ್ಯ ಬಹಿಷ್ಕರಿಸಿ ಮಾ.11ರಿಂದ ಮುಷ್ಕರ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ನಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಸರಕಾರವು ಸಕಾರತ್ಮಕವಾಗಿ ಪ್ರತಿಕ್ರಿಯಿಸಿದೆ. ಹೀಗಾಗಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದರು.
Budget Session 2026 | ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಐವನ್ ಡಿಸೋಜಾ ಆಗ್ರಹ
ಬೆಂಗಳೂರು : ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ಮಂಗಳವಾರ ವಿಧಾನ ಪರಿಷತ್ತಿನಲ್ಲಿ ‘2026-27ನೇ ಸಾಲಿನ ಆಯವ್ಯಯ ಅಂದಾಜುಗಳ’ ಕುರಿತಾಗಿ ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ಕರಾವಳಿಯ ಜನರು ಹೈಕೋರ್ಟ್ ವಿಚಾರಣೆಗಳಿಗಾಗಿ ಸುಮಾರು 350 ಕಿ.ಮೀ. ದೂರ ಇರುವ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ವಿಚಾರಣೆ ನಡೆಯುವ ಒಂದು ದಿನ ಮುಂಚಿತವಾಗಿ ಬರಬೇಕಾಗಿದೆ. ಸರಿಯಾದ ವಸತಿಯೂ ಇಲ್ಲದೆ, ವಕೀರನ್ನು ಭೇಟಿ ಮಾಡಿ ವಿಚಾರ ಮಾಡಲು ಸಮಯವೂ ದೊರೆಯುತ್ತಿಲ್ಲ. ಹೀಗಾಗಿ ಕರಾವಳಿ ಭಾಗಕ್ಕೆ ಒಂದು ಹೈಕೋರ್ಟ್ ವಿಭಾಗೀಯ ಪೀಠ ಬೇಕಾಗಿದೆ ಎಂದರು. ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಯಾದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಜನರಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಸರಕಾರ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಈಗಾಗಲೇ ಕಲಬುರಗಿ ಮತ್ತು ಧಾರವಾಡದಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಿ, ಅಲ್ಲಿನ ಜನರಿಗೆ ಅನುಕೂಲ ಮಾಡಲಾಗಿದೆ. ಕಾನೂನನ್ನು ಮನೆ ಬಾಗಿಲಿಗೆ ತಲುಪಿಸುವುದು ಸರಕಾರ ಉದ್ದೇಶವೂ ಆಗಿದ್ದು, ಅದರ ಭಾಗವಾಗಿ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಅವರು ಹೇಳಿದರು. ಇನ್ನು ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 200 ಕೋಟಿ ರೂ.ಗಳ ಅನುದಾನವನ್ನು ನೀಡಬೇಕು. ಇದರಿಂದ ನಗರದ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭವೃದ್ಧಿಯನ್ನು ಮಾಡಬೇಕು. ಹಾಗೆಯೇ ಕರಾವಳಿಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಸರಕಾರವು ಯೋಜನೆಗಳನ್ನು ಸಿದ್ದಪಡಿಸಿ ಅನುಷ್ಟಾನ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಳೆಯ ಮೊಬೈಲ್ ಗಳ ವಶ
ಮಂಗಳೂರು, ಮಾ.10: ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಹಳೆಯ ಮೊಬೈಲ್ಗಳನ್ನು ರೈಲ್ವೆ ರಕ್ಷಣಾ ದಳದವರು (ಆರ್ ಪಿ ಎಫ್) ಮಂಗಳೂರು ಜಂಕ್ಷನ್ ನಲ್ಲಿ ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಣ್ಗಾವಲು ತೀವ್ರಗೊಳಿಸಿರುವ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್ ಪಿ ಎಫ್ ರೈಲುಗಳ ಮೂಲಕ ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟದ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆ ಸುಮಾರು 10.05 ಲಕ್ಷ ರೂ. ಮೌಲ್ಯದ 201 ಹಳೆಯ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದೆ. ಮಾ.9 ರಂದು ಮುಂಜಾನೆ ಸುಮಾರು 3 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 3ರಲ್ಲಿ ಜಾಮ್ನನಗರ ಗರ - ತಿರುನಲ್ವೇಲಿ ಜಂಕ್ಷನ್ ಎಕ್ಸ್ಪ್ರೆಸ್ನಲ್ಲಿ ತಪಾಸಣೆ ನಡೆಸಲಾಯಿತು. ರೈಲಿನ ಜನರಲ್ ಕೋಚ್ ಅನ್ನು ಪರಿಶೀಲಿಸುವಾಗ ಮೇಲಿನ ಲಗೇಜ್ ರಾಕ್ನಲ್ಲಿ ಯಾರೂ ಇಲ್ಲದ ಮೂರು ಬ್ಯಾಗ್ ಗಳಿರುವುದು ಕಂಡು ಬಂತು. ಅನುಮಾನದ ಮೇಲೆ ಬ್ಯಾಗ್ಗಳನ್ನು ಪರೀಕ್ಷಿಸಿದಾಗ ವಿವಿಧ ಬ್ರ್ಯಾಂಡ್ಗಳ 201 ಹಳೆಯ ಮೊಬೈಲ್ ಫೋನ್ಗಳು ಪತ್ತೆಯಾಗಿವೆ. ಆರ್ಪಿ ಎಫ್ ಹೆಡ್ ಕಾನ್ಸ್ಟೇಬಲ್ ಸುಜೀಶ್ ಮತ್ತು ಕಾನ್ಸ್ಟೇಬಲ್ ರಾಮಕೃಷ್ಣ ಅವರು ತಪಾಸಣೆ ನಡೆಸಿದರು. ಇಬ್ಬರು ಶಂಕಿತ ವ್ಯಕ್ತಿಗಳು: ಕರ್ತವ್ಯದಲ್ಲಿದ್ದ ಸಿಬ್ಬಂದಿಯ ಬಾಡಿ-ವೋರ್ನ್ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿ ಸಿದಾಗ, ಬ್ಯಾಗ್ಗಳು ಪತ್ತೆಯಾದ ಸಮಯದಲ್ಲಿ ಕೋಚ್ನಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳಿರುವುದು ಕಂಡುಬಂದಿದೆ. ಶಂಕಿತರನ್ನು ಪತ್ತೆಹಚ್ಚಲು ಕ್ರೈಮ್ ಇಂಟೆಲಿಜೆನ್ಸ್ ಬ್ರಾಂಚ್ ಮತ್ತು ವಿಭಾಗೀಯ ಅಪರಾಧ ತಡೆ ಮತ್ತು ಪತ್ತೆ ದಳದ ಸಮನ್ವಯದೊಂದಿಗೆ ಪ್ರಯತ್ನಗಳು ನಡೆಯುತ್ತಿದೆ. ಮುಂದಿನ ತನಿಖೆಗಾಗಿ ಮತ್ತು ವಶಪಡಿಸಿಕೊಂಡ ವಸ್ತುಗಳ ಕುರಿತು ಸೂಕ್ತ ಕಾನೂನು ಕ್ರಮಕ್ಕಾಗಿ ರೈಲ್ವೆ ಪೊಲೀಸ್ ಗೆ ಹಸ್ತಾಂತರಿಸಲಾಗಿದೆ ಎಂದು ಆರ್ ಪಿ ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಕಳವು ಮಾಡಿದ ಮೊಬೈಲ್ಗಳು: ವಶಪಡಿಸಿಕೊಳ್ಳಲಾದ 201 ಮೊಬೈಲ್ ಗಳನ್ನು ಆರೋಪಿಗಳು ರೈಲ್ವೆ ಪ್ರಯಾಣಿಕರಿಂದ ಕಳವು ಮಾಡಿರುವ ಸಾಧ್ಯತೆ ಇದೆ. ಇವು ತುಂಬಾ ಹಳೆಯ ಮೊಬೈಲ್ಗಳಲ್ಲ. ಇವುಗಳನ್ನು ಮಾರಾಟ ಮಾಡಲು ಕೊಂಡೊಯ್ಯುತ್ತಿ ದ್ದರೆಂಬ ಸಂದೇಹವಿದೆ. ಈ ಬಗ್ಗೆ ತನಿಖೆ ನಡೆಯಲಿದೆ ಎಂದು ಆರ್ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಹೊಸದಿಲ್ಲಿ: ಸರಕಾರಿ ಇಲಾಖೆಗಳು ಅಥವಾ ಸಂಸ್ಥೆಗಳಲ್ಲಿ ಉದ್ಯೋಗ ನೀಡುವ ಮೂಲಕ ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯನ್ನು ಯಾಕೆ ರೂಪಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಪ್ರಶ್ನಿಸಿದೆ. ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಸರಕಾರಿ ಉದ್ಯೋಗ ನೀಡುವಲ್ಲಿ ಸಮಸ್ಯೆಗಳಿದ್ದರೆ, ರಾಜ್ಯ ಸರಕಾರಗಳು ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಜೀವನಾಧಾರ ಭತ್ಯೆ ನೀಡಲು ಒಂದು ನೀತಿಯನ್ನು ರೂಪಿಸಬಹುದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಹೇಳಿದೆ. ಆ್ಯಸಿಡ್ ದಾಳಿ ಸಂತ್ರಸ್ತೆ ಶಹೀನ್ ಮಲಿಕ್ ಸಲ್ಲಿಸದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ಪೀಠ ವಿಚಾರಣೆ ನಡೆಸಿತು. ಆ್ಯಸಿಡ್ ದಾಳಿ ಸಂತ್ರಸ್ತರ ಯೋಗಕ್ಷೇಮ, ಸೂಕ್ತ ಪುನರ್ವಸತಿ ಹಾಗೂ ಇತರ ಕ್ರಮಗಳಿಗಾಗಿ ರಾಜ್ಯಗಳು ಹಾಗೂ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಶಹೀನ್ ಮಲಿಕ್ ಅರ್ಜಿಯಲ್ಲಿ ಕೋರಿದ್ದರು.
ಉಪ್ಪಿನಂಗಡಿ:ಅಕ್ರಮ ಡಿಸೇಲ್ ದಾಸ್ತಾನು ಆರೋಪ; ಪ್ರಕರಣ ದಾಖಲು
ಉಪ್ಪಿನಂಗಡಿ: ಅಕ್ರಮವಾಗಿ ಡಿಸೇಲ್ ದಾಸ್ತಾನಿರಿಸಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ತಂಡ ಪತ್ತೆ ಮಾಡಿದ್ದು, ಸೊತ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುರಲ್ತಿಯಾರ್ ಎಂಬಲ್ಲಿ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ನಲ್ಲಿ ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ಗಳು ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 5 ಕ್ಯಾನ್ಗಳಲ್ಲಿ ಒಟ್ಟು 4,175 ಲೀಟರ್ನಷ್ಟು ಡೀಸೆಲ್ ಶೇಖರಿಸಿಟ್ಟಿರುವುದು ಪತ್ತೆಯಾಗಿದೆ. ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್ಗಳು ಹಗೂ ಸುಮಾರು ಕ್ಯಾನ್ಗಳು ಮತ್ತು ಇತರೆ ಸೊತ್ತುಗಳು ಪತ್ತೆಯಾಗಿದೆ. ಪತ್ತೆಯಾದ ಸೊತ್ತುಗಳ ಮೌಲ್ಯ 3,50,000 ರೂ. ಎಂದು ಅಂದಾಜಿಸಲಾಗಿದೆ. ಸೊತ್ತುಗಳನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿ ಜಗದೀಶ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದ.ಕ., ಉಡುಪಿ ಜಿಲ್ಲೆ ಹೊರಗೆ ಕಂಬಳ ವಿರೋಧಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಯಾಕೆ ಸೀಮಿತಗೊಳಿಸಬೇಕು ಎಂದು ಪ್ರಶ್ನಿಸಿದ ನ್ಯಾಯಾಲಯ
ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ; ಕೋರ್ಟ್ಗೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ ನಟಿ ರಮ್ಯಾ
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಅತ್ಯಾಚಾರ ಹಾಗೂ ಜೀವ ಬೆದರಿಕೆಯೊಡ್ಡಿದವರ ವಿರುದ್ಧ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ನಟಿ ರಮ್ಯಾ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ದಾಖಲಿಸಿದರು. ನಟಿ, ಮಾಜಿ ಸಂಸದೆ ರಮ್ಯಾ ದಾಖಲಿಸಿರುವ ಪ್ರಕರಣ ಕುರಿತು ಮಂಗಳವಾರ ನಗರದ 46ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರಾಜೀವ್ ಗೌಡ ಅವರು ವಿಚಾರಣೆ ನಡೆಸಿದರು. ಪ್ರಕರಣ ಸಂಬಂಧ ಸಾಕ್ಷ್ಯ ನುಡಿಯಲು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ನಟಿ ರಮ್ಯಾ ಕೋರ್ಟ್ಗೆ ಹಾಜರಾಗಿದ್ದರು. ಜತೆಗೆ ಪ್ರಕರಣದ 12 ಆರೋಪಿಗಳು ಸಹ ವಿಚಾರಣೆಗೆ ಹಾಜರಾಗಿದ್ದರು. ಆರೋಪಿಗಳು ಅತ್ಯಾಚಾರ ಮತ್ತು ಜೀವ ಬೆದರಿಕೆ ಒಡ್ಡಿರುವ ಹಿನ್ನೆಲೆಯಲ್ಲಿ ಇನ್-ಕ್ಯಾಮರಾ ಪ್ರೊಸಿಡಿಂಗ್ಸ್ (ಗೌಪ್ಯ ವಿಚಾರಣೆ) ನಡೆಸಲು ನ್ಯಾಯಾಧೀಶರು ನಿರ್ಧರಿಸಿದರು. ಅದರಂತೆ, ರಮ್ಯಾ ಹಾಗೂ ಆರೋಪಿಗಳು ಮತ್ತು ಅವರ ವಕೀಲರನ್ನು ಹೊರತುಪಡಿಸಿ ಉಳಿದವರನ್ನು ಕೋರ್ಟ್ನಿಂದ ಹೊರಗೆ ಕಳುಹಿಸಿ, ರಮ್ಯಾ ಅವರ ಸಾಕ್ಷ್ಯ ದಾಖಲಿಸಿಕೊಳ್ಳಲಾಯಿತು. ರಮ್ಯಾ ಅವರ ಹೇಳಿಕೆ ದಾಖಲಿಸಿಕೊಂಡ ನ್ಯಾಯಾಧೀಶರು, ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿತು. ಕೇಸ್ ಮುಂದುವರಿಸುತ್ತೇನೆ: ವಿಚಾರಣೆ ನಂತರ ಕೋರ್ಟ್ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ರಮ್ಯಾ, ಇಂದು ನನ್ನ ಸಾಕ್ಷ್ಯ ದಾಖಲಿಸಬೇಕಿತ್ತು. ಅದಕ್ಕಾಗಿ ಕೋರ್ಟ್ಗೆ ಹಾಜರಾಗಿ ಸಾಕ್ಷ್ಯ ದಾಖಲಿಸಿದೆ. ಆರೋಪಿಗಳನ್ನು ನೋಡಿದರೆ ಬೇಸರ ಆಗುತ್ತದೆ. ಹೆಣ್ಣು ಮಕ್ಕಳ ವಿಚಾರದಲ್ಲಿ ಎಲ್ಲರೂ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬೇಕು. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಬೆದರಿಕೆ ಹಾಕುವವರಿಗೆ ಭಯ ಬರಬೇಕು ಎಂಬ ಕಾರಣಕ್ಕೆ ದೂರು ದಾಖಲಿಸಿದೆ. ಇಂಥ ವಿಚಾರ ಸುಮ್ಮನೆ ಬಿಟ್ಟರೆ ಮುಂದೆ ಅದೇ ಚಾಳಿ ಮುಂದುವರಿಸುತ್ತಾರೆ. ಇಂಥ ಬೆಳವಣಿಗೆ ತಡೆಯಲು ನಾನು ಎಲ್ಲ ಹೆಣ್ಣು ಮಕ್ಕಳ ಪರವಾಗಿ ಕೇಸ್ ಮುಂದುವರಿಸುತ್ತೇನೆ ಎಂದರು. ಪ್ರಕರಣದ ಹಿನ್ನೆಲೆ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಮತ್ತು ಬೆದರಿಕೆ ಹಾಕಿದ ಆರೋಪ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ರಮ್ಯಾ 2025ರಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಬೆಂಗಳೂರಿನ ಸೈಬರ್ ಪೊಲೀಸರು 11 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆ ಎಲ್ಲ ಆರೋಪಿಗಳ ವಿರುದ್ಧ ಆರೋಪ ರಚಿಸಿದ್ದ ನ್ಯಾಯಾಲಯ, ಪ್ರಕರಣ ಕುರಿತು ಸಾಕ್ಷ್ಯ ದಾಖಲಿಸಲು ಸೂಚಿಸಿ ರಮ್ಯಾಗೆ ಸಮನ್ಸ್ ಜಾರಿ ಮಾಡಿತ್ತು. ಇದರಿಂದ, ರಮ್ಯಾ ಮಂಗಳವಾರ ಕೋರ್ಟ್ಗೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ್ದಾರೆ.
ಮಂಗಳೂರು ವಿವಿ ಫಲಿತಾಂಶ ಪ್ರಕಟ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ರ್ಯಾಂಕ್
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯವು 2025ನೇ ಸಾಲಿನಲ್ಲಿ ನಡೆಸಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಆಳ್ವಾಸ್ನ ವಿದ್ಯಾರ್ಥಿಗಳು ಒಟ್ಟು 15 ರ್ಯಾಂಕ್ಗಳಿಸಿ ಗಮನಾಹ೯ ಸಾಧನೆ ಮಾಡಿದ್ದಾರೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸ್ನಾತಕೋತ್ತರ ರ್ಯಾಂಕ್ : ಎಂಎ ಇಂಗ್ಲೀಷ್ ವಿಭಾಗದ ಪವಿತ್ರ ತೇಜ್, ಎಂಕಾಂ ಎಚ್ಆರ್ಡಿ ವಿಭಾಗದ ಹರ್ಷಿತಾ, ಆಹಾರ ವಿಜ್ಞಾನ ಹಾಗೂ ಪೋಷಣೆ ವಿಭಾಗದ ವಿಭಾಶ್ರೀ ಜಿಆರ್, ಸಾವಯವ ರಸಾಯನಶಾಸ್ತ್ರ ವಿಭಾಗದ ಪ್ರತೀಕ್ಷಾ, ರಸಾಯನಶಾಸ್ತ್ರ ವಿಭಾಗದ ಮೆಲಿಸಾ ವಿಡಿ, ಹಾಗೂ ಮನಶಾಸ್ತ್ರ ವಿಭಾಗದ ಸಾಮ್ನ ಜಾರ್ಜ ಪ್ರಥಮ ರ್ಯಾಂಕ್ನೊಂದಿಗೆ ಆರು ಪ್ರಥಮ ರ್ಯಾಂಕ್ಗಳು ಆಳ್ವಾಸ್ ಸ್ನಾತಕೋತ್ತರ ವಿದ್ಯಾರ್ಥಿಗಳು ಗಳಿಸಿದ್ದಾರೆ. ಪದವಿ ರ್ಯಾಂಕ್ಗಳು: ಬಿಎ ವಿಭಾಗದ ನಂದಿನಿ ಶೆಣೈ ನಾಲ್ಕನೇ ರ್ಯಾಂಕ್ ಗಳಿಸಿದರೆ, ಬಿಕಾಂ ವಿಭಾಗದಲ್ಲಿ ಪ್ರಜ್ಞಾ ನಾಲ್ಕನೇ ರ್ಯಾಂಕ್ ಹಾಗೂ ಸುರಕ್ಷಾ ಜೈನ್ ಆರನೇ ರ್ಯಾಂಕ್ ಹಾಗೂ ಶ್ರದ್ಧಾ ಮೀರಾ 8ನೇ ರ್ಯಾಂಕ್ ಗಳಿಸಿದ್ದಾರೆ. ಬಿಬಿಎ ವಿಭಾಗದಲ್ಲಿ ರಿತುನಂದ ಆರ್ ಏಳನೇ ರ್ಯಾಂಕ್ ಪಡೆದು ಒಟ್ಟು ಪದವಿ ವಿಭಾಗದಲ್ಲಿ ಒಟ್ಟು 5 ರ್ಯಾಂಕ್ಗಳು ಆಳ್ವಾಸ್ ಕಾಲೇಜಿಗೆ ಲಭಿಸಿದೆ. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ (ಬಿಎಡ್) ಮಾನಸ ಪ್ರಥಮ ರ್ಯಾಂಕ್ ಗಳಿಸಿದರೆ, ಕೆ ಶಿವಾನಿ ದ್ವಿತೀಯ ಹಾಗೂ ಪ್ರಧ್ವಿ ನಾಯಕ್ ಎಂಟನೇ ರ್ಯಾಂಕ್ ಗಳಿಸಿದ್ದಾರೆ. ಈ ವಿಭಾಗದಲ್ಲಿ ಒಟ್ಟು ಹತ್ತರ ಒಳಗೆ ಮೂರು ರ್ಯಾಂಕ್ಗಳು ಆಳ್ವಾಸ್ಗೆ ಲಭಿಸಿದೆ. ದೈಹಿಕ ಶಿಕ್ಷಣ ಕಾಲೇಜಿನ ಕಾಲೇಜಿನ ಚೈತ್ರಾ ಪಿ ಪ್ರಥಮ ರ್ಯಾಂಕ್ಗಳಿಸಿದ್ದಾರೆ. ಈ ಮೂಲಕ ಆಳ್ವಾಸ್ ವಿದ್ಯಾರ್ಥಿಗಳು ಒಟ್ಟು 8 ಪ್ರಥಮ ರ್ಯಾಂಕ್, 1 ದ್ವಿತೀಯ, 2 ಚತುರ್ಥ, 1 ಆರನೇ ರ್ಯಾಂಕ್, 1 ಏಳನೇ ರ್ಯಾಂಕ್, 2 ಎಂಟನೇ ರ್ಯಾಂಕ್ ಗಳಿಸಿ ಒಟ್ಟು 15 ರ್ಯಾಂಕ್ಗಳೊಂದಿಗೆ ಮಂಗಳೂರು ವಿವಿ ಕಾಲೇಜುಗಳಲ್ಲಿ ಅತೀ ಹೆಚ್ಚು ರ್ಯಾಂಕ್ ಗಳಿಸಿದ ಕಾಲೇಜುಗಳ ಪೈಕಿ ಅಗ್ರಸ್ಥಾನಿಯಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ರ್ಯಾಂಕ್ ಪಟ್ಟಿಯಲ್ಲಿ 2009ರಿಂದಲೂ ಮುಂಚೂಣಿಯಲ್ಲಿರುವ ಆಳ್ವಾಸ್ ಕಾಲೇಜು, ಇಲ್ಲಿಯವರೆಗೆ ಒಟ್ಟು 447 ರ್ಯಾಂಕ್ಗಳನ್ನು ಪಡೆದುಕೊಂಡಿದೆ ಎಂದು ತಿಳಿಸಿದರು. ರ್ಯಾಂಕ್ ಪುರಸ್ಕೃತರಿಗೆ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿನಂದಿಸಿದ್ದಾರೆ.
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರನ್ನು ತೆಗೆದು ಹಾಕುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮಂಗಳವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯಯುತ ಹಾಗೂ ಶಾಂತಿಯುತ ಚುನಾವಣೆಗಳನ್ನು ನಡೆಸುವುದು ತನ್ನ ಆದ್ಯತೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ರಾಜಕೀಯ ಪಕ್ಷಗಳು ಹಾಗೂ ಹಿರಿಯ ಆಡಳಿತಾಧಿಕಾರಿಗಳೊಂದಿಗೆ ಸರಣಿ ಸಭೆಗಳ ಬಳಿಕ ಇಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಜ್ಞಾನೇಶ್ ಕುಮಾರ್ ಅವರು, ಪಶ್ಚಿಮಬಂಗಾಳದ ಜನತೆ ಯಾವತ್ತೂ ಶಾಂತಿಯುತ ಹಾಗೂ ಎಲ್ಲರಿಗೂ ಪಾಲ್ಗೊಳ್ಳಲು ಅವಕಾಶ ಇರುವ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ್ದಾರೆ ಎಂದರು. ‘‘ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯಯುತ ಹಾಗೂ ಶಾಂತಿಯುತ ಚುನಾವಣೆಗಳನ್ನು ನಡೆಸುವುದು ನಮ್ಮ ಗುರಿ’’ ಎಂದು ಅವರು ತಿಳಿಸಿದರು. ಪ್ರತಿಯೊಬ್ಬ ಅರ್ಹ ಮತದಾರನೂ ಮತ ಚಲಾಯಿಸಲು ಮುಕ್ತ ಅವಕಾಶ ಹೊಂದಿರುತ್ತಾರೆ ಎಂದು ಅವರು ಒತ್ತಿ ಹೇಳಿದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಮಾತನಾಡಿದ ಜ್ಞಾನೇಶ್ ಕುಮಾರ್, ಸಾಂವಿಧಾನಿಕ ನಿಯಮಗಳಿಗೆ ಅನುಸಾರವಾಗಿ ದೇಶಾದ್ಯಂತ ಈ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದರು. ಎಲ್ಲಾ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಹೊಂದಿರುವುದನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಮತದಾನಕ್ಕೆ ಅರ್ಹರಲ್ಲದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಮಾತ್ರ ತಾರ್ಕಿಕ ವ್ಯತ್ಯಾಸ ನಿಯಮವನ್ನು ತರಲಾಗಿದೆ ಎಂಬ ಪ್ರತಿಪಾದನೆಯನ್ನು ತಿರಸ್ಕರಿಸಿದ ಜ್ಞಾನೇಶ್ ಕುಮಾರ್ ಅವರು, ಎಲ್ಲಾ 12 ರಾಜ್ಯಗಳಲ್ಲಿಯೂ ಅಂತಹ ತಾರ್ಕಿಕ ವ್ಯತ್ಯಾಸ ನಿಯಮಗಳನ್ನು ತರಲಾಗಿದೆ. ಇತರ ರಾಜ್ಯಗಳಲ್ಲಿ ಅನುಸರಿಸಿದ ಪ್ರಕ್ರಿಯೆಯನ್ನೇ ಪಶ್ಚಿಮ ಬಂಗಾಳದಲ್ಲಿ ಕೂಡ ಅನುಸರಿಸಲಾಗಿದೆ ಎಂದರು.
ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ
ಉಡುಪಿ, ಮಾ.10: ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಉಡುಪಿ ಜಿಲ್ಲೆಯ ಲಿಂಗಾನುಪಾತ ಪ್ರಮಾಣದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನಿಯಾಗಿದೆ. ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಹಲವಾರು ಮಂದಿ ಮಹಿಳಾ ಉಸ್ತುವಾರಿ ಸಚಿವರು, ಮಹಿಳಾ ಜಿಲ್ಲಾಧಿಕಾರಿ, ಸಂಸದರೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಹಾಗೂ ತಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಪ್ರಗತಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ಉಡುಪಿ ನಗರ ಬಿಜೆಪಿ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಮುಖ್ಯ ಅತಿಥಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಮಹಿಳೆಯರಾದ ಶಕುಂತಲಾ ಶೆಟ್ಟಿ(ಹೈನುಗಾರಿಕೆ), ವಿಮಲ (ಸಂಜೀವಿನಿ ಗ್ರೂಪ್), ಅನುಷಾ (ವಕೀಲರು), ಸುಶೀಲ ಸಾಲಿಯಾನ್(ಮಹಿಳಾ ಹೋಮ್ ಗಾರ್ಡ್), ಗೀತಾ ಕೃಷ್ಣರಾಜ್(ಆಟೋ ಚಾಲಕಿ), ಲಲಿತ(ಪೌರ ಕಾರ್ಮಿಕರು) ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ, ಸತೀಶ್ ಸಾಲ್ಯಾನ್ ಮಣಿಪಾಲ ಹಾಗೂ ಪರ್ಕಳದ ಮನೆ ಊಟ ಹೋಟೆಲ್ನ ಹಿರಿಯ ದಂಪತಿ ಗೋಪಾಲಕೃಷ್ಣ ಮತ್ತು ವಸಂತಿ ಅವರನ್ನು ಸನ್ಮಾನಿಸಲಾಯಿತು. ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಪಕ್ಷದ ಮುಖಂಡ ರಾದ ಕಿದಿಯೂರು ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಮಂಡಲದ ಅಧ್ಯಕ್ಷ ದಿನೇಶ್ ಅಮಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷ ಸಂಧ್ಯಾ ರಮೇಶ್, ನಗರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಾಂತಿ ಮನೋಜ್ ಮೊದಲಾದವರು ಉಪಸ್ಥಿತರಿದ್ದರು. ಸಂತೆಕಟ್ಟೆ ವಾತ್ಸಲ್ಯ ಕ್ಲಿನಿಕ್ನನ ಡಾ.ರಾಜಲಕ್ಷ್ಮಿ ಮಹಿಳೆಯರಿಗಾಗಿ ವಿಶೇಷ ಉಪಯುಕ್ತ ಆರೋಗ್ಯ ಮಾಹಿತಿ ನೀಡಿದರು. ಮಹಿಳಾ ಮೋರ್ಚಾದ ಅಧ್ಯಕ್ಷೆ ನೀತಾಪ್ರಭು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಬಳಿಕ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ವಿಶ್ವ ಮಹಿಳಾ ದಿನಾಚರಣೆ: ಆಶಾ ಕಾರ್ಯಕರ್ತೆಗೆ ಸನ್ಮಾನ
ಮಂಗಳೂರು, ಮಾ.10: ನಗರದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಮಾ.9ರಂದು ವಿಶ್ವ ಮಹಿಳಾ ದಿನನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ಸಹಾಯಕ ಪೊಲೀಸ್ ಕಮಿಷನರ್ ಗೀತಾ ಡಿ.ಕುಲಕರ್ಣಿ ಮಾತನಾಡಿ, ಇಂದಿನ ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದು. ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಂಚೂಣಿ ಆರೋಗ್ಯ ಹೀರೋ ಆಗಿರುವ ಆಶಾ ಕಾರ್ಯಕರ್ತೆಯನ್ನು ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಪ್ರಸಾದ್ ನೇತ್ರಾಲಯ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕಿ ರಶ್ಮಿ ಕೃಷ್ಣ ಪ್ರಸಾದ್, ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣ ಪ್ರಸಾದ್, ನಿರ್ದೇಶಕರುಗಳಾದ ಡಾ.ವಿಕ್ರಮ್ ಜೈನ್, ಡಾ.ಹರೀಶ್ ಶೆಟ್ಟಿ, ಡಾ.ಜೇಕಬ್, ಹಿರಿಯ ಸಲಹೆಗಾರರಾದ ಡಾ.ಶಿಬಿನ್, ಡಾ.ತೇಜಸ್ವಿನಿ ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.
ನೇತ್ರಜ್ಯೋತಿ ಕಾಲೇಜಿನಲ್ಲಿ ಅಂ.ರಾ.ಮಹಿಳಾ ದಿನಾಚರಣೆ
ಉಡುಪಿ, ಮಾ.10: ಉಡುಪಿಯ ನೇತ್ರಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಜಂಟಿ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸುಲತಾ ಭಂಡಾರಿ ಮಾತನಾಡಿ, ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ.ಕೃಷ್ಣಪ್ರಸಾದ್ ಕೂಡ್ಲು, ಮಹಿಳೆಯರು ಈಗ ಅಬಲೆ ಅಲ್ಲ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅವಳ ಸಾಧನೆ ಅಮೋಘವಾದುದು. ಪುರುಷರ ಏಳಿಗೆಯಲ್ಲಿ ಮಹಿಳೆಯ ಪಾತ್ರ ಯಾವತ್ತೂ ಇರುತ್ತದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು, ಪ್ರತಿ ದಿನವೂ ಮಹಿಳೆಯರಿಗೆ ಗೌರವ ನೀಡುವಂತಾಗಬೇಕು ಎಂದರು. ಕಾಲೇಜಿನ ಸಿಓಓ ಡಾ. ಗೌರಿ ಪ್ರಭು ಉಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಅಮೃತ ಕೃಷ್ಣಮೂರ್ತಿ, ಅರುಣಾಕಲಾ, ಅನಿತಾ ಬಾಳಿಗ, ಡಾ.ಕಾಂತಿ ಹರೀಶ್, ಡಾ.ಅರ್ಚನಾ ಎಂ.ವಿ., ಡಾ.ಶ್ರುತಿ ಬಲ್ಲಾಳ್ ಇವರನ್ನು ಸನ್ಮಾನಿಸಲಾಯಿತು. ಮಾಧವ ಪೂಜಾರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ, ವಿದ್ಯಾರ್ಥಿ ಚರಣರಾಜ್ ವಂದಿಸಿದರು.
ಕುಂದಾಪುರ, ಮಾ.10: ಗ್ರಾಮೀಣ ಪ್ರದೇಶದ ಹತ್ತಾರು ಗ್ರಾಮಗಳಿಗೆ ತುರ್ತು ಸಂದರ್ಭದಲ್ಲಿ ಸೇವೆ ದೊರಕಲು ಸಿದ್ದಾಪುರದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಬೇಕೆಂಬ ಹಲವು ವರ್ಷಗಳ ಬೇಡಿಕೆಗೆ ಇದೀಗ ಈಡೇರಿದೆ. ಹೊಸ ಅಗ್ನಿಶಾಮಕ ದಳ ಠಾಣೆ ನಿರ್ಮಾಣಕ್ಕಾಗಿ ಸಿದ್ದಾಪುರದಲ್ಲಿ ಒಂದು ಎಕರೆ ಜಾಗ ಮಂಜೂರುಗೊಳಿಸಿ, ಉಡುಪಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಜಿಲ್ಲೆಯ ಪ್ರಮುಖ ತಾಲೂಕು ಕೇಂದ್ರಗಳಾದ ಕುಂದಾಪುರ, ಬೈಂದೂರು, ಹೆಬ್ರಿ ತಾಲೂಕಿನ ಗ್ರಾಮಾಂತರ ಪ್ರದೇಶ ದಲ್ಲಿ ಅಗ್ನಿ ಅವಘಡಗಳು ಹೆಚ್ಚುತ್ತಿವೆ. ಕುಂದಾಪುರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಗ್ನಿ ಶಾಮಕ ಠಾಣೆ ನಿರ್ಮಿಸಬೇಕು. ಇದರಿಂದ ಈ ವ್ಯಾಪ್ತಿಯಲ್ಲಿ ಯಾವುದೇ ಆಕಸ್ಮಿಕ ಅವಘಡಗಳಾದಲ್ಲಿ ಶೀಘ್ರ ಸ್ಪಂದನೆ ಸಾಧ್ಯವಿದೆ ಎಂಬ ಕೂಗು ಹಲವು ವರ್ಷಗಳದ್ದಾಗಿತ್ತು. ಈ ಬಗ್ಗೆ ಮಂಗಳೂರು ವಲಯ ಪ್ರಾದೇಶಿಕ ಅಗ್ನಿ ಶಾಮಕ ಅಧಿಕಾರಿಗಳು 2024ರಲ್ಲಿ ಜಾಗಕ್ಕೆ ಬೇಡಿಕೆಯಿರಿಸಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತುತ ಸಿದ್ದಾಪುರ ಗ್ರಾಮದ ಸರ್ವೇ ನಂಬರ್ 244 ರಲ್ಲಿ 1 ಎಕರೆ ಜಮೀನನ್ನು ಅಗ್ನಿಶಾಮಕ ಠಾಣೆ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಹೆಸರಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 71 ರನ್ವಯ ಜಿಲ್ಲಾಧಿಕಾರಿಗಳು ಜಾಗ ಮಂಜೂರುಗೊಳಿಸಿದ್ದು ಶೀಘ್ರ ಠಾಣೆ ನಿರ್ಮಾಣ ವಾದಲ್ಲಿ ಈ ಭಾಗದ ಹತ್ತಾರು ಊರುಗಳಿಗೆ ಪ್ರಯೋಜನವಾಗಲಿದೆ. ಸಿದ್ದಾಪುರದಲ್ಲಿ ಠಾಣೆಯಾಗುವುದರಿಂದ ಅವಿಭಜಿತ ಕುಂದಾಪುರ ತಾಲೂಕು ಹಾಗೂ ಹೆಬ್ರಿ ತಾಲೂಕಿನ ಹಲವು ಗ್ರಾಮಗಳಿಗೆ ಅನುಕೂಲ. ಸಿದ್ದಾಪುರ, ಹೊಸಂಗಡಿ, ಬಾಳೆಬರೆ ಘಾಟಿ ಪ್ರದೇಶ, ಹಾಲಾಡಿ, ಅಮಾಸೆಬೈಲು, ಬೆಳ್ವೆ, ಗೋಳಿಯಂಗಡಿ ಭಾಗದಲ್ಲಿ ಏನಾದರೂ ಅವಘಡ ಗಳಾದರೆ 25-30 ಕಿ.ಮೀ. ಅಂತರವಿರುವ ಕುಂದಾಪುರ (ಕೋಣಿ) ಅಥವಾ ದೂರದ ಕಾರ್ಕಳದಿಂದ ಬರಬೇಕು. ಹಲವು ಗ್ರಾಮಗಳಿಗೆ ಅನುಕೂಲ: ಇಲ್ಲಿ ಅಗ್ನಿಶಾಮಕ ಠಾಣೆಯಾಗುವುದ ರಿಂದ ಬೆಳೆಯುತ್ತಿರುವ ಪೇಟೆಯಾದ ಸಿದ್ದಾಪುರ ಸಹಿತ ಹೊಸಂಗಡಿ, ಆಜ್ರಿ, ಹಳ್ಳಿಹೊಳೆ, ಕಮಲಶಿಲೆ, ಎಡಮೊಗ್ಗೆ, ಅಮಾಸೆಬೈಲು, ಗೋಳಿಯಂಗಡಿ, ಬೆಳ್ವೆ, ಉಳ್ಳೂರು 74, ಅಂಪಾರು, ಹಾಲಾಡಿ, ಶಂಕರನಾರಾಯಣ, ಮಡಾಮಕ್ಕಿ ಮೊದಲಾದ ಕಡೆಗಳಿಗೆ ಅನುಕೂಲ. ಈ ಭಾಗದಲ್ಲಿ ಗೇರು ಬೀಜ, ಹಂಚಿನ ಕಾರ್ಖಾನೆಗಳು, ಅಡಿಕೆ ಗೋದಾಮುಗಳು, ಆಯಿಲ್ ಮಿಲ್ಗಳು ಕಾರ್ಯಾಚರಿ ಸುತ್ತಿದೆ. ಕೆಲ ತಿಂಗಳ ಹಿಂದೆ ಸಿದ್ದಾಪುರದಲ್ಲಿನ ಎಣ್ಣೆ ಮಿಲ್ನಲ್ಲಿ ಬೆಂಕಿ ಆಕಸ್ಮಿಕ ಘಟನೆ ಸಂಭವಿಸಿ ಅಪಾರ ನಷ್ಟವಾಗಿತ್ತು. ಬಳಿಕ ಗ್ರಾಮೀಣ ಭಾಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಿಸಬೇಕೆಂಬ ಕೂಗು ಮುನ್ನೆಲೆಗೆ ಬಂದಿತ್ತು. ಈ ಕುರಿತು ’ವಾರ್ತಾಭಾರತಿ’ ಕೂಡ ವಿಶೇಷ ವರದಿ ಪ್ರಕಟಿಸಿತ್ತು. ಪ್ರಸ್ತುತ ಅಗ್ನಿಶಾಮಕ ಠಾಣೆಗೆ ಕಾಯ್ದಿರಿಸಿದ ಜಾಗವು ಸಿದ್ದಾಪುರ ಪೇಟೆಯಿಂದ 350-400 ಮೀಟರ್ ಅಂತರದಲ್ಲಿದೆ. ಇಲ್ಲಿ ತುರ್ತುಸೇವೆಗಳ ಅಗ್ನಿಶಾಮಕ ಠಾಣೆಯಾವುದರಿಂದ ಹತ್ತಾರು ಗ್ರಾಮಗಳಿಗೆ ಅನುಕೂಲ ವಾಗುತ್ತದೆ. ಅಲ್ಲದೆ ಕರಾವಳಿ-ಮಲೆನಾಡು ಸಂಪರ್ಕಕೊಂಡಿಯಾದ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಬಾಳೆಬರೆ ಘಾಟಿ ಇನ್ನೂ ಅನೇಕ ಕಡೆಗಳಿಗೆ ಅಗತ್ಯ ಸಂದರ್ಭದಲ್ಲಿ ಸೇವೆ ಸಿಗಲಿದೆ. ಶೀಘ್ರ ಠಾಣೆ ನಿರ್ಮಾಣ ಕಾರ್ಯವೂ ಸಂಬಂಧಿತ ಇಲಾಖೆಯಿಂದ ನಡೆಯಬೇಕು. - ಸುದರ್ಶನ್ ಶೆಟ್ಟಿ ಸಿದ್ದಾಪುರ, ಸಾಮಾಜಿಕ ಕಾರ್ಯಕರ್ತರು ಸಿದ್ಧಾಪುರದಲ್ಲಿ ಅಗ್ನಿಶಾಮಕ ದಳ ಠಾಣೆಗೆ ಜಾಗ ಮಂಜೂರಾಗಿದ್ದು, ಸರಕಾರದಿಂದ ಹಣ ಬಿಡುಗಡೆಯಾಗಿ ಟೆಂಡರ್ ಆಗಬೇಕಾಗಿದೆ. ಅದೇ ರೀತಿ ಮಣಿಪಾಲ, ಬ್ರಹ್ಮಾವರ, ಶಿರ್ವ, ಪಡುಬಿದ್ರೆ, ಹೆಬ್ರಿಗಳಲ್ಲಿಯೂ ಹೊಸ ಠಾಣೆ ಸ್ಥಾಪನೆಯಾಗಲಿದೆ. ಕಟ್ಟಡ ಕಾಮಗಾರಿ ಮುಗಿದ ಬಳಿಕ ಮುಂದಿನ ಹಂತದಲ್ಲಿ ಸಿಬ್ಬಂದಿ ಮತ್ತು ಮೂಲಸೌಕರ್ಯಗಳನ್ನು ಒದಗಿಸ ಲಾಗುತ್ತದೆ. ಈ ಮೂಲಕ ಜಿಲ್ಲೆಯಲ್ಲಿ ಈಗ ಇರುವ ಐದು ಸೇರಿದಂತೆ ಒಟ್ಟು 11 ಅಗ್ನಿಶಾಮಕ ದಳ ಠಾಣೆಗಳನ್ನು ಸ್ಥಾಪನೆಯಾಗಲಿದೆ’ -ವಿನಾಯಕ ಕಲ್ಗುಟ್ಕರ್, ಅಧಿಕಾರಿಗಳು, ಅಗ್ನಿಶಾಮಕ ಮತ್ತು ತುರ್ತು1 ಸೇವೆ ಇಲಾಖೆಯ ಅಧಿಕಾರಿ, ಉಡುಪಿ
ಮಹಿಳೆಯರಲ್ಲಿ ಮೂಳೆ ಸವೆತದ ಸಮಸ್ಯೆ ಹೆಚ್ಚಿರುತ್ತದೆಯೆ? ವೈದ್ಯರು ಹೇಳುವುದೇನು?
ಆರ್ತೊಪೆಡಿಕ್ ತಜ್ಞರಾದ ಡಾ ಭವಿಷ್ಯ ಹಂಡ ಅವರು ಮಹಿಳೆಯರಲ್ಲಿ ಸ್ವಾಭಾವಿಕವಾಗಿ ಮೂಳೆ ಸವೆತವಾಗಲು ಕಾರಣಗಳನ್ನು ವಿವರಿಸಿದ್ದಾರೆ. ವಯಸ್ಸಾಗುತ್ತಿದ್ದಂತೆಯೇ ಮೂಳೆಗಳ ಬಲವೂ ಸವೆಯುತ್ತದೆ. ಹೀಗೆ ಮೌನವಾಗಿ ಬರುವ ಆತಂಕಕ್ಕೆ ಮಹಿಳೆಯರು ಬೇಗನೇ ಎರವಾಗುತ್ತಿದ್ದಾರೆ. ನಾವು ಮಾಡುವ ಪ್ರತಿ ಚಲನೆಗೂ ಮೂಳೆಗಳ ಆರೋಗ್ಯ ಮುಖ್ಯವಾಗುತ್ತದೆ. ಒಟ್ಟು ಆರೋಗ್ಯಕ್ಕೆ ಮೂಳೆಗಳ ಆರೋಗ್ಯ ನಿರ್ಣಾಯಕವಾಗಿರುತ್ತದೆ. ಆದರೆ ಮಹಿಳೆಯರ ದೇಹದಲ್ಲಿನ ವಿವಿಧ ಬದಲಾವಣೆಗಳಿಂದಾಗಿ ಕಾಲ ಕ್ರಮೇಣ ಮೂಳೆ ಹೆಚ್ಚು ವೇಗವಾಗಿ ಸವೆಯುತ್ತದೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಆರ್ತೊಪೆಡಿಕ್ ತಜ್ಞರಾದ ಡಾ ಭವಿಷ್ಯ ಹಂಡ ಅವರು ಮಹಿಳೆಯರಲ್ಲಿ ಸ್ವಾಭಾವಿಕವಾಗಿ ಮೂಳೆ ಸವೆತವಾಗಲು ಕಾರಣಗಳನ್ನು ವಿವರಿಸಿದ್ದಾರೆ. ಅಲ್ಲದೆ, ಮೂಳೆ ಆರೋಗ್ಯವನ್ನು ರಕ್ಷಿಸಲು ಯಾವ ಹೆಜ್ಜೆಗಳನ್ನು ಇಡಬಹುದು ಎಂದು ತಿಳಿಸಿದ್ದಾರೆ. ಹಾರ್ಮೋನ್ ಬದಲಾವಣೆಗಳು ಮಹಿಳೆಯರು ಮೂಳೆ ಸವೆತದ ಹೆಚ್ಚಿನ ಅಪಾಯವನ್ನು ಎದುರಿಸಲು ಪ್ರಮುಖ ಕಾರಣವೆಂದರೆ ಋತುಬಂಧ ಸಮೀಪಿಸುತ್ತಿದ್ದಂತೆ ಈಸ್ಟ್ರೋಜೆನ್ ಮಟ್ಟದಲ್ಲಿನ ಕುಸಿತ. ಮೂಳೆಯ ಸಾಂದ್ರತೆಯನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ದೇಹದ ಸ್ವಾಭಾವಿಕ ಮೂಳೆ ರಚನೆ ಪ್ರಕ್ರಿಯೆಯಲ್ಲಿ ಈಸ್ಟ್ರೋಜೆನ್ ಪ್ರಮುಖ ಪಾತ್ರ ವಹಿಸುತ್ತದೆ. ಋತುಬಂಧದ ನಂತರದ ಅವಧಿಯು ಮೂಳೆ ಸಾಂದ್ರತೆಯು ಗಮನಾರ್ಹವಾಗಿ ಕಡಿಮೆಯಾಗುವ ನಿರ್ಣಾಯಕ ಅವಧಿಯಾಗಿರುತ್ತದೆ. ವಿಶೇಷವಾಗಿ ಮಹಿಳೆಯರಲ್ಲಿ ಮೂಳೆ ಮುರಿತದ ಅವಧಿಯಾಗಿರುತ್ತದೆ. ಪೌಷ್ಠಿಕಾಂಶದ ಅಂತರಗಳು ನೀವು ಏನು ತಿನ್ನುತ್ತೀರಿ ಎನ್ನುವುದು ಒಟ್ಟು ಆರೋಗ್ಯದ ಮೇಲೆ ಪ್ರಮುಖ ಪಾತ್ರ ವಹಿಸುತ್ತದೆ. ಪೌಷ್ಠಿಕಾಂಶದ ಅಂತರವು ಕಾಲಾನಂತರದಲ್ಲಿ ಮೂಳೆಯ ಬಲದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಮೂಳೆ ಆರೋಗ್ಯಕ್ಕೆ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಅತ್ಯಗತ್ಯ ಎಂದು ವ್ಯಾಪಕವಾಗಿ ಗುರುತಿಸಲಾಗಿದ್ದರೂ, ನಿಜವಾದ ಮೂಳೆಯ ಬಲವು ವಿಟಮಿನ್ D₃, ವಿಟಮಿನ್ K₂ ಮತ್ತು ಮೆಗ್ನೀಸಿಯಂನಂತಹ ಸೂಕ್ಷ್ಮ ಪೋಷಕಾಂಶಗಳ ವಿಶಾಲ ಜಾಲವನ್ನು ಅವಲಂಬಿಸಿದೆ. ಈ ಪೋಷಕಾಂಶಗಳು ಮೂಳೆಗಳ ಖನಿಜೀಕರಣಕ್ಕೆ ಬೆಂಬಲಿಸುವುದು, ಕ್ಯಾಲ್ಸಿಯಂ ಹೀರಿಕೊಳ್ಳುವುದನ್ನು ಸುಧಾರಿಸುವುದು ಮತ್ತು ಮೂಳೆಯ ರಚನೆಯನ್ನು ರಕ್ಷಿಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡುತ್ತವೆ. ಮೂರನೆಯದಾಗಿ ಜೀವನಶೈಲಿಯು ಮೂಳೆಯ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ದೈನಂದಿನ ಸ್ವಯಂ-ಆರೈಕೆ ಮುಖ್ಯವಾಗುತ್ತದೆ ಮತ್ತು ಸರಿಯಾದ ಜೀವನಶೈಲಿಯ ಆಯ್ಕೆಗಳು ದೀರ್ಘಕಾಲೀನ ಸಂಕೋಚನ-ವಿಕಸನಕ್ಕೆ ಕೊಡುಗೆ ನೀಡುತ್ತವೆ. ಈ ಕೆಳಗಿನ ಅಭ್ಯಾಸಗಳು ಮತ್ತು ನಿತ್ಯದ ಮಾದರಿಗಳು ಮೂಳೆ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು: • ಸಾಕಷ್ಟು ದೈಹಿಕ ಚಟುವಟಿಕೆ ಇಲ್ಲದಿರುವುದು ಅಥವಾ ದೀರ್ಘಕಾಲ ಕುಳಿತುಕೊಳ್ಳುವುದು • ನಡಿಗೆ, ನೃತ್ಯ ಅಥವಾ ಯೋಗ ತರಬೇತಿಯಂತಹ ತೂಕ ಏರಿಸುವ ವ್ಯಾಯಾಮಗಳ ಕೊರತೆ • ಧೂಮಪಾನ ಮತ್ತು ಅತಿಯಾದ ಮದ್ಯಪಾನ • ಒಟ್ಟು ಚಯಾಪಚಯ ಆರೋಗ್ಯದ ಮೇಲೆ ಪರಿಣಾಮ ಬೀರುವ ದೀರ್ಘಕಾಲೀನ ಒತ್ತಡ ಮೂಳೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರೆ ವೈವಿಧ್ಯಮಯ ಕ್ಯಾಲ್ಸಿಯಂ ಸಮೃದ್ಧ ಆಹಾರವನ್ನು ಸೇವಿಸಬೇಕು. ನಿತ್ಯವೂ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಸೂಕ್ತ ಪ್ರಮಾಣದಲ್ಲಿ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಒತ್ತಡ ನಿರ್ವಹಣೆಯನ್ನು ಅಭ್ಯಾಸ ಮಾಡಬೇಕು. ಕೃಪೆ: hindustantimes.com
ಬಾಷ್ ಕಂಪೆನಿಯ ನೂತನ ರೆಫ್ರಿಜನರೇಟರ್ಗಳ ಅನಾವರಣ
ಉಡುಪಿ, ಮಾ.10: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ಹರ್ಷ ಮಳಿಗೆಯಲ್ಲಿ ಹರ್ಷೋತ್ಸವದ ಪ್ರಯುಕ್ತ ಬಾಷ್ ಅಂತಾರಾಷ್ಟ್ರೀಯ ಕಂಪೆನಿಯ ಜರ್ಮನ್ ಉತ್ಪನ್ನ ನೂತನ ರೆಫ್ರಿಜನರೇಟರ್ಗಳ ಅನಾವರಣ ಕಾರ್ಯಕ್ರಮ ಮಂಗಳವಾರ ಜರಗಿತು. ನೂತನ ಬಾಷ್ ಉತ್ಪನ್ನಗಳನ್ನು ಅನಾವರಣಗೊಳಿಸಿದ ಡೈಜಿ ವರ್ಲ್ಡ್ ಮಿಡಿಯಾ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ, ಹರ್ಷ ಸಂಸ್ಥೆಯ ಬೆಳವಣಿಗೆ ಹಾಗೂ ಯಶಸ್ವಿ ಇಂದಿನ ಯುವಜನತೆಗೆ ರೋಲ್ ಮಾಡೆಲ್ ಆಗಿದೆ. ಯಾವುದೇ ಸಂಸ್ಥೆಯ ಯಶಸ್ವಿಯಲ್ಲಿ ಅಲ್ಲಿನ ಸಿಬ್ಬಂದಿಗಳ ಪಾತ್ರ ಬಹಳ ಮುಖ್ಯವಾಗಿದೆ. ಹರ್ಷ ಸಂಸ್ಥೆಯ ಕಸ್ಟಮರ್ ಕೇರ್ ತುಂಬಾ ಉತ್ತಮವಾಗಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಬಾಷ್ ನ್ಯಾಷನಲ್ ಚಾನೆಲ್ ಹೆಡ್ ರಾಬಿ ದೇವಸಿಯಾ, ಬಾಷ್ ಕ್ಲಸ್ಟರ್ ಮುಖ್ಯಸ್ಥ ಆದಿತ್ಯ, ಹರ್ಷ ಎಚ್ಆರ್ ನಿರ್ದೇಶಕ ಸುರೇಶ್ ಎಂ., ಕ್ಲಸ್ಟರ್ ಮೆನೇಜರ್ ರೋನ್ಸನ್ ಡಿಸೋಜ, ಸ್ಟೋರ್ ಮೆನೇಜರ್ ಅಭಿನ್ ಪೂಜಾರಿ ಉಪಸ್ಥಿತರಿದ್ದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.
ಜಿಸಿಸಿಯಲ್ಲಿ ವಾಸಿಸುವ 3.5 ಕೋಟಿ ವಿದೇಶಿಯರು ಎಲ್ಲಿಯವರು? ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯರು ಎಷ್ಟಿದ್ದಾರೆ?
ಆರು ಗಲ್ಫ್ ಸಹಕಾರ ಮಂಡಳಿ (GCC) ದೇಶಗಳಲ್ಲಿ ವಾಸಿಸುವ ಸುಮಾರು 6.2 ಕೋಟಿ ಜನರು ಈಗ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಆರ್ಥಿಕ ಅವಕಾಶಗಳಿಗೆ ಹೆಸರುವಾಸಿಯಾದ ಬಹರೈನ್, ಕುವೈತ್, ಒಮಾನ್, ಖತರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಪ್ರಪಂಚದಾದ್ಯಂತದ ಸುಮಾರು 3.5 ಕೋಟಿ ವಿದೇಶಿ ಕಾರ್ಮಿಕರಿಗೆ ನೆಲೆಯಾಗಿದ್ದು, ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ದಕ್ಷಿಣ ಏಷ್ಯಾದ ದೇಶಗಳಿಂದ ಕಾರ್ಮಿಕರ ಸಂಖ್ಯೆ ಇಲ್ಲಿ ಹೆಚ್ಚಿದೆ. ಸೌದಿ ಅರೇಬಿಯಾ ಮತ್ತು ಒಮಾನ್ ಹೊರತುಪಡಿಸಿ, ಉಳಿದ ನಾಲ್ಕು ಜಿಸಿಸಿ ದೇಶಗಳಲ್ಲಿ ವಾಸಿಸುವ ಜನರ ಜನಸಂಖ್ಯೆಯಲ್ಲಿ ವಿದೇಶಿ ಕಾರ್ಮಿಕರು ಹೆಚ್ಚಿನ ಪಾಲನ್ನು ಹೊಂದಿದ್ದಾರೆ. ► ವಿದೇಶಿ ಕಾರ್ಮಿಕರು ಎಲ್ಲಿಂದ ಬರುತ್ತಾರೆ? ಜಿಸಿಸಿ ದೇಶಗಳಲ್ಲಿನ ವಿದೇಶಿ ಕಾರ್ಮಿಕರ ಪೀಳಿಗೆಯು ಕಾರ್ಮಿಕಶಕ್ತಿಗೆ ಗಣನೀಯ ಕೊಡುಗೆ ನೀಡಿದೆ. ಇದರಲ್ಲಿ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ಮನೆ ಕೆಲಸದವರು, ಭದ್ರತಾ ಸಿಬ್ಬಂದಿ ಮತ್ತು ಕ್ಲೀನರ್ಗಳು ಸೇರಿದ್ದಾರೆ, ಇವರೆಲ್ಲರೂ ಗಲ್ಫ್ ರಾಷ್ಟ್ರಗಳು ಹೆಸರುವಾಸಿಯಾಗಿರುವ ಆಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸಲು ಪ್ರಮುಖ ಪಾತ್ರ ವಹಿಸಿದ್ದಾರೆ. ಇತರ ದೇಶಗಳ ರಾಷ್ಟ್ರೀಯತೆಗಳನ್ನು ಹೊಂದಿದ್ದರೂ ಲಕ್ಷಾಂತರ ಜನರು ಗಲ್ಫ್ ಅನ್ನು ತಮ್ಮ ಮನೆ ಎಂದು ಪರಿಗಣಿಸುತ್ತಾರೆ. ಹೆಚ್ಚುವರಿಯಾಗಿ, ಬ್ಯಾಂಕಿಂಗ್, ಹಣಕಾಸು, ತಂತ್ರಜ್ಞಾನ, ಇಂಜಿನಿಯರಿಂಗ್, ವಾಯುಯಾನ, ವೈದ್ಯಕೀಯ ಮತ್ತು ಮಾಧ್ಯಮದಂತಹ ಕೈಗಾರಿಕೆಗಳಲ್ಲಿ ಹೆಚ್ಚು ಕೌಶಲ್ಯಪೂರ್ಣ ವಿದೇಶಿ ಕಾರ್ಮಿಕರು ದೀರ್ಘ ಇತಿಹಾಸವನ್ನು ಹೊಂದಿದ್ದಾರೆ. ಯುಎಇ ಮೂಲದ ಡಿಜಿಟಲ್ ಮಾರ್ಕೆಟಿಂಗ್ ಏಜೆನ್ಸಿಯಾದ ಗ್ಲೋಬಲ್ ಮೀಡಿಯಾ ಇನ್ಸೈಟ್ ಪ್ರಕಾರ, ಆರು ಜಿಸಿಸಿ ದೇಶಗಳಲ್ಲಿ ವಾಸಿಸುವ ಅನ್ಯ ದೇಶದವರ ಸಂಖ್ಯೆ ಈ ರೀತಿ ಇದೆ. ಭಾರತ: 9.1 ಮಿಲಿಯನ್ ಬಾಂಗ್ಲಾದೇಶ: 5 ಮಿಲಿಯನ್ ಪಾಕಿಸ್ತಾನ: 4.9 ಮಿಲಿಯನ್ ಈಜಿಪ್ಟ್: 3.3 ಮಿಲಿಯನ್ ಫಿಲಿಪೈನ್ಸ್: 2.2 ಮಿಲಿಯನ್ ಯೆಮೆನ್: 2.2 ಮಿಲಿಯನ್ ಸುಡಾನ್: 1.1 ಮಿಲಿಯನ್ ನೇಪಾಳ: 1.2 ಮಿಲಿಯನ್ ಸಿರಿಯಾ: 694,000 ಶ್ರೀಲಂಕಾ: 650,000 ►ಸೌದಿ ಅರೇಬಿಯಾ ಸೌದಿ ಅರೇಬಿಯಾ ಆರು GCC ದೇಶಗಳಲ್ಲಿ ಅತಿ ದೊಡ್ಡದಾಗಿದ್ದು, ಸುಮಾರು 3.7 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ತೈಲ-ಸಮೃದ್ಧ ದೇಶವು ಸುಮಾರು 20.5 ಮಿಲಿಯನ್ ಸ್ಥಳೀಯ ಜನಸಂಖ್ಯೆಯನ್ನು ಮತ್ತು ಹೆಚ್ಚುವರಿಯಾಗಿ 16.4 ಮಿಲಿಯನ್ ವಿದೇಶಿ ನಿವಾಸಿಗಳನ್ನು ಹೊಂದಿದೆ. ಸೌದಿ ಅರೇಬಿಯಾದಲ್ಲಿ ವಾಸಿಸುವ ಇತರ ದೇಶದ ಜನರ ಸಂಖ್ಯೆ ಈ ರೀತಿ ಇದೆ: ಬಾಂಗ್ಲಾದೇಶ: 2,590,000 ಭಾರತ: 2,310,000 ಪಾಕಿಸ್ತಾನ: 2,230,000 ಯೆಮೆನ್: 2,210,000 ಈಜಿಪ್ಟ್: 1,800,000 ಸುಡಾನ್: 1,000,000 ►ಯುಎಇ ಜಿಸಿಸಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಎರಡನೇ ಅತಿದೊಡ್ಡ ಜನಸಂಖ್ಯೆಯನ್ನು ಹೊಂದಿದೆ. ಇಲ್ಲಿ ಸುಮಾರು 11.5 ಮಿಲಿಯನ್ ಜನರು ವಾಸಿಸುತ್ತಿದ್ದಾರೆ. ಇದು ರಾಜಧಾನಿ ಅಬುಧಾಬಿ, ದುಬೈ, ಶಾರ್ಜಾ, ಅಜ್ಮಾನ್, ಉಮ್ ಅಲ್ ಕುವೈನ್, ರಾಸ್ ಅಲ್ ಖೈಮಾ ಮತ್ತು ಫುಜೈರಾ ಸೇರಿದಂತೆ ಏಳು ಎಮಿರೇಟ್ಗಳನ್ನು ಒಳಗೊಂಡಿದೆ. ಜನಸಂಖ್ಯೆಯ ಸುಮಾರು 12 ಪ್ರತಿಶತ ಎಮಿರಾಟಿಗಳಾಗಿದ್ದು, ಸುಮಾರು 88 ಪ್ರತಿಶತ ವಿದೇಶಿಯರು ಇದ್ದಾರೆ. ಯುಎಇಯಲ್ಲಿ ವಾಸಿಸುವ ವಿದೇಶಿಯರು: ಭಾರತ: 4,360,000 ಪಾಕಿಸ್ತಾನ: 1,900,000 ಬಾಂಗ್ಲಾದೇಶ: 840,000 ಫಿಲಿಪೈನ್ಸ್: 780,000 ಇರಾನ್: 540,000 ಈಜಿಪ್ಟ್: 480,000 ►ಕುವೈತ್ 4.8 ಮಿಲಿಯನ್ ಜನಸಂಖ್ಯೆಯೊಂದಿಗೆ, ಕುವೈತ್ GCC ಯಲ್ಲಿ ಮೂರನೇ ಅತಿದೊಡ್ಡ ಜನಸಂಖ್ಯೆಯನ್ನು ಹೊಂದಿದೆ. ಇಲ್ಲಿ ಸರಿಸುಮಾರು 1.56 ಮಿಲಿಯನ್ ಕುವೈತ್ ನಾಗರಿಕರು ಮತ್ತು 3.3 ಮಿಲಿಯನ್ ವಿದೇಶಿ ಕಾರ್ಮಿಕರು ಇದ್ದಾರೆ ಕುವೈತ್ನಲ್ಲಿ ವಾಸಿಸುವ ಇತರ ದೇಶಗಳ ಜನರು: ಭಾರತ: 1,152,000 ಈಜಿಪ್ಟ್: 666,000 ಬಾಂಗ್ಲಾದೇಶ: 350,000 ಪಾಕಿಸ್ತಾನ: 339,000 ಫಿಲಿಪೈನ್ಸ್: 241,000 ನೇಪಾಳ: 101,000 ► ಒಮಾನ್ ಸರಿಸುಮಾರು 4.7 ಮಿಲಿಯನ್ ಜನರು ಒಮಾನ್ ನಲ್ಲಿದ್ದಾರೆ. ಒಮಾನ್ನ ನಾಗರಿಕರು ಜನಸಂಖ್ಯೆಯ ಸುಮಾರು 59 ಪ್ರತಿಶತದಷ್ಟಿದ್ದಾರೆ, ಉಳಿದ 2.05 ಮಿಲಿಯನ್ (ಅಥವಾ 41 ಪ್ರತಿಶತ) ವಿದೇಶಿ ಕಾರ್ಮಿಕರಾಗಿದ್ದಾರೆ. ► ಖತರ್ ಖತರ್ನಲ್ಲಿ ಸುಮಾರು 3.2 ಮಿಲಿಯನ್ ಜನಸಂಖ್ಯೆಯಿದ್ದು, 2.87 ಮಿಲಿಯನ್ ವಿದೇಶಿ ಕಾರ್ಮಿಕರಿದ್ದಾರೆ. ಖತರ್ ನಾಗರಿಕರು ಸುಮಾರು 330,000 ಆಗಿದ್ದು, ಇದು ಶೇಕಡಾ 12 ರಷ್ಟಿದೆ. ಖತರ್ನಲ್ಲಿ ವಾಸಿಸುವ ವಿದೇಶಿಯರು: ಭಾರತ: 700,000 ಬಾಂಗ್ಲಾದೇಶ: 400,000 ನೇಪಾಳ: 400,000 ಈಜಿಪ್ಟ್: 300,000 ಫಿಲಿಪೈನ್ಸ್: 236,000 ಪಾಕಿಸ್ತಾನ: 180,000 ►ಬಹರೈನ್ ಒಟ್ಟು 1.58 ಮಿಲಿಯನ್ ಜನಸಂಖ್ಯೆಯೊಂದಿಗೆ, ಬಹರೇನ್ ಜಿಸಿಸಿಯಲ್ಲಿ ಅತಿ ಕಡಿಮೆ ಜನಸಂಖ್ಯೆಯನ್ನು ಹೊಂದಿದೆ. ಬಹರೇನ್ ನಾಗರಿಕರು ಜನಸಂಖ್ಯೆಯ ಅರ್ಧಕ್ಕಿಂತ ಸ್ವಲ್ಪ ಕಡಿಮೆ ಇದ್ದಾರೆ. ಬಹರೈನ್ ನಲ್ಲಿ ವಾಸಿಸುವ ಇತರ ರಾಷ್ಟ್ರದ ಜನಸಂಖ್ಯೆ: ಭಾರತ: 350,000 ಬಾಂಗ್ಲಾದೇಶ: 110,000 ಪಾಕಿಸ್ತಾನ: 100,000 ಫಿಲಿಪೈನ್ಸ್: 60,000 ಈಜಿಪ್ಟ್: 22,000 ನೇಪಾಳ: 20,000 ►ಭಾರತೀಯರು ಗಲ್ಫ್ ಗೆ ಹೋಗುತ್ತಿರುವುದೇಕೆ? ಭಾರತ ಮತ್ತು ಗಲ್ಫ್ ಶತಮಾನಗಳಿಂದ ಪರಸ್ಪರ ವ್ಯಾಪಾರ ಮಾಡಿವೆ. ತೈಲದ ಆವಿಷ್ಕಾರವು ಎಲ್ಲವನ್ನೂ ಬದಲಾಯಿಸುವ ಬಹಳ ಹಿಂದೆಯೇ ವ್ಯವಹಾರವು ಹೆಚ್ಚಾಗಿ ಖರ್ಜೂರ, ಮುತ್ತುಗಳು ಮತ್ತು ಮೀನಿನಂತಹ ಉತ್ಪನ್ನಗಳನ್ನು ಆಧರಿಸಿತ್ತು. ಅರೆ-ನಿರ್ಮಿತ ಕಟ್ಟಡಗಳು ಅಥವಾ ಕಾರ್ಮಿಕ ಶಿಬಿರಗಳಂತಹ ಕಠಿಣ, ಇಕ್ಕಟ್ಟಾದ ಪರಿಸ್ಥಿತಿಗಳಲ್ಲಿ ವಾಸಿಸುತ್ತಿರುವ ಅನೇಕರು ಇನ್ನೂ ಗಲ್ಫ್ ದೇಶಗಳನ್ನು ಆಯ್ಕೆ ಮಾಡುತ್ತಾರೆ. ಏಕೆಂದರೆ ಕಾರ್ಯಪಡೆಗೆ ಹೆಚ್ಚಿನ ಬೇಡಿಕೆಯಿದೆ. ಸ್ವದೇಶಕ್ಕೆ ಹೋಲಿಸಿದರೆ ಗಳಿಕೆಯು ಗಮನಾರ್ಹವಾಗಿ ಹೆಚ್ಚಾಗಿರುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆಯ (ILO) ನಿಯಮಗಳ ಪ್ರಕಾರ, ವಿದೇಶಗಳಿಗೆ ತೆರಳುವ ಭಾರತೀಯ ಕಾರ್ಮಿಕರಿಗೆ ನ್ಯಾಯಯುತವಾಗಿ ವೇತನ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಕನಿಷ್ಠ ವೇತನವನ್ನು ನಿಗದಿಪಡಿಸಬೇಕು. ಗಲ್ಫ್ ರಾಷ್ಟ್ರಗಳು ಈ ವ್ಯವಸ್ಥೆಯಡಿಯಲ್ಲಿ ನಿರಂತರವಾಗಿ ಅತ್ಯಧಿಕ ವೇತನವನ್ನು ನೀಡುತ್ತವೆ. ಉದಾಹರಣೆಗೆ, ಕುವೈತ್ನಲ್ಲಿ, ಭಾರತೀಯ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಕೆಲಸದ ಪ್ರಕಾರವನ್ನು ಅವಲಂಬಿಸಿ 300 ರಿಂದ 1,050 ಡಾಲರ್ ರವರೆಗೆ ನಿಗದಿಪಡಿಸಲಾಗಿದೆ . ಇದಕ್ಕೆ ಹೋಲಿಸಿದರೆ, ಪೂರ್ವ ಏಷ್ಯಾದ ದೇಶಗಳಲ್ಲಿ ಕನಿಷ್ಠ ವೇತನವು ಕಡಿಮೆ ಇರುತ್ತದೆ. ಉದಾಹರಣೆಗೆ ಇಂಡೋನೇಷ್ಯಾದಲ್ಲಿ ಸುಮಾರು 324 ಡಾಲರ್ ಮತ್ತು ಮಲೇಷ್ಯಾದಲ್ಲಿ 415 ಡಾಲರ್ . ಭಾರತ ಮತ್ತು ಯುಎಇ ನಡುವಿನ ದ್ವಿಪಕ್ಷೀಯ ವ್ಯಾಪಾರ ಗಮನಾರ್ಹವಾಗಿ ಬೆಳೆದಿದೆ. 1970 ರ ದಶಕದಲ್ಲಿ, ವಾರ್ಷಿಕ ವ್ಯಾಪಾರ ಕೇವಲ 180 ಮಿಲಿಯನ್ ಅಮೆರಿಕನ್ ಡಾಲರ್ ಆಗಿತ್ತು. ಆದರೆ 2024-25 ರ ಹಣಕಾಸು ವರ್ಷದ ವೇಳೆಗೆ, ಇದು ದಾಖಲೆಯ ಗರಿಷ್ಠ 100.06 ಬಿಲಿಯನ್ ಅಮೆರಿಕನ್ ಡಾಲರ್ಗಳನ್ನು ತಲುಪಿತು. ಪ್ರಸ್ತುತ, ಯುಎಇ ಭಾರತದ ಮೂರನೇ ಅತಿದೊಡ್ಡ ವ್ಯಾಪಾರ ಪಾಲುದಾರ ಮತ್ತು ಅದರ ಎರಡನೇ ಅತಿದೊಡ್ಡ ರಫ್ತು ತಾಣವಾಗಿದ್ದು, 2024-25 ರಲ್ಲಿ ರಫ್ತುಗಳು 36.63 ಬಿಲಿಯನ್ ಅಮೆರಿಕನ್ ಡಾಲರ್ಗಳನ್ನು ತಲುಪಿವೆ. ಅದೇ ರೀತಿ, ಭಾರತವು ಯುಎಇಯ ಎರಡನೇ ಅತಿದೊಡ್ಡ ವ್ಯಾಪಾರ ಪಾಲುದಾರ ಆಗಿದೆ. ಅಬುಧಾಬಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಪ್ರಕಾರ, ಅನೇಕ ಭಾರತೀಯ ಕಂಪನಿಗಳು ಜಂಟಿ ಉದ್ಯಮಗಳಾಗಿ ಅಥವಾ ವಿಶೇಷ ಆರ್ಥಿಕ ವಲಯಗಳಲ್ಲಿ ಸಿಮೆಂಟ್, ಕಟ್ಟಡ ಸಾಮಗ್ರಿಗಳು, ಜವಳಿ, ಇಂಜಿನಿಯರಿಂಗ್ ಉತ್ಪನ್ನಗಳು, ಗ್ರಾಹಕ ಎಲೆಕ್ಟ್ರಾನಿಕ್ಸ್ ಉತ್ಪಾದಿಸುವ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿವೆ. ಹೆಚ್ಚುವರಿಯಾಗಿ, ಭಾರತೀಯ ಕಂಪನಿಗಳು ಯುಎಇಯ ಪ್ರವಾಸೋದ್ಯಮ, ಆತಿಥ್ಯ, ಅಡುಗೆ, ಆರೋಗ್ಯ ರಕ್ಷಣೆ, ಚಿಲ್ಲರೆ ವ್ಯಾಪಾರ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ. ಅವುಗಳಲ್ಲಿ ತಾಜ್ ಗ್ರೂಪ್, ಬಿಟ್ಸ್ ಪಿಲಾನಿ, ಜೀ ಎಂಟರ್ಟೈನ್ಮೆಂಟ್, ಅಶೋಕ್ ಲೇಲ್ಯಾಂಡ್, ಮಹೀಂದ್ರಾ ಮತ್ತು ಡಾಬರ್ನಂತಹ ಪ್ರಮುಖ ಕಂಪನಿಗಳೂ ಇವೆ. ಎಲ್ & ಟಿ, ಎಸ್ಎಸ್ಎಆರ್, ಪುಂಜ್ ಲಾಯ್ಡ್, ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ನಂತಹ ಪ್ರಮುಖ ಭಾರತೀಯ ಕಂಪನಿಗಳು ಯುಎಇಯಲ್ಲಿ ಗಮನಾರ್ಹ ಸಂಖ್ಯೆಯ ಒಪ್ಪಂದಗಳನ್ನು ಪಡೆದಿವೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಹಲವಾರು ಬ್ಯಾಂಕುಗಳು ಸಹ ದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ. ಕೃಪೆ: aljazeera.com
ಶರಾವತಿ ಜಲವಿದ್ಯುತ್ ಯೋಜನೆ ಪ್ರಶ್ನಿಸಿದ ಪಿಐಎಲ್; ಅರಣ್ಯ ಪ್ರದೇಶದಲ್ಲಿ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು : ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 10 ಸಾವಿರ ಕೋಟಿ ರೂ. ವೆಚ್ಚದ ಉದ್ದೇಶಿತ 'ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ' ಸಂಬಂಧ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸದಂತೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜಲವಿದ್ಯುತ್ ಯೋಜನೆಗೆ ರಾಜ್ಯ ವನ್ಯಜೀವಿ ಮಂಡಳಿ ನೀಡಿರುವ ಅನುಮೋದನೆ ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ನೀಡಿರುವ ತಾತ್ವಿಕ ಅನುಮೋದನೆ ಪ್ರಶ್ನಿಸಿ ಸಾಗರದ ಅಖಿಲೇಶ್ ಚಿಪ್ಲಿ, ಉಡುಪಿಯ ಡಾ. ರವೀಂದ್ರನಾಥ ಶಾನಭಾಗ್ ಹಾಗೂ ಶಿವಮೊಗ್ಗದ ಸಿ.ಬಿ. ಮನೋಹರ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ ಸಂಬಂಧ ಶರಾವತಿ ಕಣಿವೆಯ ಅಭಯಾರಣ್ಯ ಮತ್ತು ಅದರ ಪರಿಸರ ಸೂಕ್ಷ್ಮ ವಲಯದಲ್ಲಿ ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ. ಇದರಿಂದ, ಅರಣ್ಯ ಹಾಗೂ ವನ್ಯಜೀವಿಗಳ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರಲ್ಲದೆ, ಯೋಜನೆಯ ಕಾಮಗಾರಿಗೆ ತಡೆ ನೀಡಬೇಕು ಎಂದು ಕೋರಿದರು. ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್ ಅವರು, ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಇನ್ನೂ ದೊರೆತಿಲ್ಲ. ಯೋಜನೆ ಬಗೆಗಿನ ಆತಂಕಗಳ ಪರಿಶೀಲಿಸಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಮಧ್ಯಂತರ ತಡೆ ನೀಡದಂತೆ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಯೋಜನೆಯಿಂದ ಅರಣ್ಯ ಹಾಗೂ ಪರಿಸರದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಆತಂಕವಿದ್ದು, ಈ ಕುರಿತು ಪರಿಶೀಲನೆ ನಡೆಸಬೇಕಿದೆ. ಆದ್ದರಿಂದ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿತು. ಅರ್ಜಿದಾರರ ಮನವಿ ಏನು? ಉದ್ದೇಶಿತ ಯೋಜನೆಗೆ ಒಟ್ಟು 142.763 ಹೆಕ್ಟೇರ್ ಭೂಮಿಯ ಅಗತ್ಯವಿದ್ದು, ಅದರಲ್ಲಿ 102 ಹೆಕ್ಟೇರ್ ಪ್ರದೇಶವು ಭೌಗೋಳಿಕವಾಗಿ ಅಭಯಾರಣ್ಯದೊಳಗೆ ಮತ್ತು 39.715 ಹೆಕ್ಟೇರ್ ಪರಿಸರ ಸೂಕ್ಷ್ಮ ವಲಯದಲ್ಲಿ ಇದೆ. ಇಂತಹ ಬೃಹತ್ ಅಭಯಾರಣ್ಯ ಮತ್ತು ಪರಿಸರ ಸೂಕ್ಷ್ಮ ವಲಯದೊಳಗೆ ಜಲವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮೋದನೆ ನೀಡುವುದರಿಂದ ಬೃಹತ್ ಕಂಬಗಳನ್ನು ನೆಡುವುದು, ಕಂಬಗಳ ನಡುವೆ ಹೆಚ್ಚಿನ ವೋಲ್ಟೇಜ್ ತಂತಿಗಳನ್ನು ಎಳೆಯುವುದೂ ಸೇರಿದಂತೆ ಉತ್ಪಾದಿಸುವ ಜಲವಿದ್ಯುತ್ ರವಾನಿಸಲು ಪ್ರಸರಣ ಮಾರ್ಗಗಳ ನಿರ್ಮಾಣದಿಂದ ಅಮೂಲ್ಯ ವೃಕ್ಷ ಸಂಪತ್ತು ನಾಶವಾಗುವ ಜತೆಗೆ, ವನ್ಯಜೀವಿಗಳ ಆವಾಸಸ್ಥಾನಕ್ಕೆ ಧಕ್ಕೆಯಾಗಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ವನ್ಯಜೀವಿ ರಕ್ಷಣಾ ಕಾಯ್ದೆ–1972ರ ಸೆಕ್ಷನ್ 29ರ ಅಡಿಯಲ್ಲಿ ವಿಧಿಸಲಾದ ನಿರ್ಬಂಧವನ್ನು ಗಮನದಲ್ಲಿ ಇರಿಸಿಕೊಂಡು ಶರಾವತಿ ಕಣಿವೆಯ ಅಭಯಾರಣ್ಯ ಮತ್ತು ಅದರ ಪರಿಸರ ಸೂಕ್ಷ್ಮ ವಲಯದಲ್ಲಿ ಕೈಗೆತ್ತಿಕೊಳ್ಳಲಿರುವ ಉದ್ದೇಶಿತ ಯೋಜನೆಗೆ ಯಾವುದೇ ಅನುಮೋದನೆ ನೀಡದಂತೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಉಡುಪಿ, ಮಾ.10: ಎಲ್ಪಿಜಿ ದರ ಏರಿಕೆ ಮಾಡಿರುವ ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಉಡುಪಿ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬ್ರಹ್ಮಗಿರಿ ಸರ್ಕಲ್ಗೆ ಸಾಗಿದ ಮುಖಂಡರು ಹಾಗೂ ಕಾರ್ಯಕರ್ತರು, ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭ ಕಾಂಗ್ರೆಸ್ನ ಮಹಿಳಾ ಕಾರ್ಯಕರ್ತೆಯರು ರಸ್ತೆಯಲ್ಲೇ ಒಲೆ ಹಾಕಿ ಚಹಾ ತಯಾರಿಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬಡವರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಅನ್ಯಾಯ ಮಾಡುತ್ತಿದೆ. ನಮ್ಮ ದೇಶವು ಅಮೆರಿಕದ ಮುಂದೆ ಮಂಡಿಯೂರಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಬದುಕಿನ ಜೊತೆ ಚೆಲ್ಲಾಟವಾಡುವ ಕೇಂದ್ರ ಬಿಜೆಪಿ ಸರಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡೆಯುವೆಯೂ ಭಾರತದಲ್ಲಿ ಇಂಧನ ಕೊರತೆ ಇಲ್ಲ, ಆದ್ದರಿಂದ ನಮ್ಮ ಇಂಧನ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೆಂದ್ರ ಪೆಟ್ರೋಲಿಂ ಸಚಿವರು ಹೇಳಿದರು. ಆದರೆ ಕೇಂದ್ರ ಸರಕಾರವು ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು ಏಕಾ ಏಕಿ ಹೆಚ್ಚಳ ಮಾಡಿದೆ. ಇದು ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ ಎಂದು ದೂರಿದರು. ಇರಾಕ್ ಮೇಲೆ ನಡೆಯುತ್ತಿರುವ ದಾಳಿ ಬಗ್ಗೆ ವಿಶ್ವಗುರು ಎಂದು ಹೇಳುತ್ತಿರುವವರು ಒಂದೇ ಒಂದು ಮಾತುಗಳನ್ನು ಆಡುತ್ತಿಲ್ಲ. ಕೂಡಲೇ ಯುದ್ಧ ನಿಲ್ಲಬೇಕು ಮತ್ತು ದೇಶದಲ್ಲಿ ಬೆಲೆ ಏರಿಕೆಯನ್ನು ತಡೆಯಬೇಕು. ಆದರೆ ಬಿಜೆಪಿ ಇಂದು ಜನರ ಮಧ್ಯೆ ಧರ್ಮದ ಹೆಸರಿನಲ್ಲಿ ಒಡಕು ಮೂಡಿಸುವ ಕಾರ್ಯ ಮಾಡುತ್ತಿದೆ. ಈ ಮೂಲಕ ಮತ ಪಡೆದು ರಾಜ ಕೀಯ ಲಾಭ ಗಳಿಸುವ ಹುನ್ನಾರ ನಡೆಸುತ್ತಿದೆ ಎಂದು ಅವರು ಟೀಕಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ವೆರೋನಿಕಾ ಕರ್ನೆಲಿಯೋ, ಜ್ಯೋತಿ ಹೆಬ್ಬಾರ್, ಹರೀಶ್ ಕಿಣಿ, ಶಂಕರ್ ಕುಂದರ್, ಗೋಪಿನಾಥ್ ಭಟ್, ಭುಜಂಗ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ಶಬ್ಬಿರ್ ಅಹ್ಮದ್, ಕೀರ್ತಿ ಶೆಟ್ಟಿ, ಪ್ರಶಾಂತ ಜತ್ತನ್ನ, ಮಹಾಬಲ ಕುಂದರ್, ಕಿರಣ್ ಹೆಗ್ಡೆ, ಜಯ ಕುಮಾರ್, ಮಮತಾ ಶೆಟ್ಟಿ, ಸುಖಾನ್ಯ, ಮೀನಾಕ್ಷಿ ಮಾಧವ ಬನ್ನಂಜೆ, ಪ್ರಭಾ ಶೆಟ್ಟಿ, ರೋಶನ್ ಶೆಟ್ಟಿ, ಕಿಶೋರ್ ಕುಮಾರ್ ಎರ್ಮಾಳ್, ಗಣೇಶ್ ನೆರ್ಗಿ, ಸತೀಶ್ ಕೊಡವೂರು, ಫಾ,ವಿಲಿಯಂ ಮಾರ್ಟಿಸ್, ಸರ್ಪುದ್ದೀನ್ ಶೇಖ್, ಶಶಿಧರ ಶೆಟ್ಟಿ ಎಲ್ಲೂರು, ಶೇಖ್ ವಾಹಿದ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ
ಉಡುಪಿ, ಮಾ.10: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ ಎನ್.ಸಿ.ಡಿ, ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ಹಾಗೂ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಡಾ.ಆಮ್ನಾ ಹೆಗ್ಡೆ ಮಾತನಾಡಿ, ಈ ಹಿಂದೆ ಅಬಲೆಯೆಂದು ಕರೆಸಿಕೊಳ್ಳುತ್ತಿದ್ದ ಮಹಿಳೆ ಇಂದು ಸಬಲೆಯಾಗಿ, ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆ ಗಳನ್ನು ಚಿತ್ರರಂಗ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಷ್ಟೇ ಸರಿಸಮಾನರಾಗಿ ಪಡೆಯುತಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ಜನ್ ಡಾ.ಹೆಚ್ ಅಶೋಕ ಮಾತನಾಡಿ, ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗೌರವಿಸಲು ಹಾಗೂ ಲಿಂಗ ಸಮಾನತೆಗಾಗಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಉಷಾ ಹಾಗೂ ನಸಿರ್ಂಗ್ ಅಧಿಕಾರಿ ಅರುಣ ಮಹಿಳಾ ದಿನಾಚರಣೆಯ ಕುರಿತಂತೆ ಮತಾನಾಡಿದರು. ವೈದ್ಯಕೀಯ ತಜ್ಞರಾದ ಡಾ.ದಯಾಮಣಿ, ಡಾ. ದಿವ್ಯ, ಬ್ಲಡ್ ಬ್ಯಾಂಕ್ ಮೆಡಿಕಲ್ ಆಫೀಸರ್ ಡಾ. ವೀಣಾ ಕುಮಾರಿ, ಎಂ.ಸಿ.ಕೆ.ಎಸ್ ಫುಡ್ ಫಾರ್ ದಿಹಂಗ್ರೀ ಫೌಂಡೇಶನ್ನ ನಿಧಿ, ಆಸ್ಪತ್ರೆಯ ನಸಿರ್ಂಗ್ ಸೂಪರಿಂಟೆಂಡೆಂಟ್ ರತ್ನವತಿ ಮತ್ತಿತರರು ಉಪಸ್ಥಿತರಿದ್ದರು. ಎನ್ಸಿಡಿಯ ಜಿಲ್ಲಾ ಸಮಾಲೋಚಕಿ ಡಾ.ಅಂಜಲಿ ಹಾಗೂ ಆಪ್ತ ಸಮಾಲೋಚಕ ಮನು ಎಸ್. ಕಾರ್ಯಕ್ರಮ ನಿರೂಪಿಸಿದರು.
ಮಲ್ಪೆ, ಮಾ.10: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಒಂದು ವರ್ಷ ಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಡುತೋನ್ಸೆ ಗ್ರಾಮ ಹೂಡೆಯ ಮಹಮ್ಮದ್ ಅಕ್ರಂ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಆದರ್ಶ, ಮಹಾಲಕ್ಷ್ಮಿ ಮತ್ತು ಎಸ್ಸೈ ಹುಸೇನ್ ಸಾಬ್ ಮಾ.10ರಂದು ಹೂಡೆಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು ಮಾ.27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಪಘಾತ: ಗಾಯಾಳು ಬೈಕ್ ಸವಾರ ಮೃತ್ಯು
ಉಡುಪಿ, ಮಾ.10: ಸಂತೆಕಟ್ಟೆ ಲಕ್ಷ್ಮೀನಗರ ಎಂಬಲ್ಲಿ ವಾರದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಹೆರ್ಗದ ಶೆಟ್ಟಿಬೆಟ್ಟು ನಿವಾಸಿ ಮಹಮ್ಮದ್ ಝೈದ್(19) ಎಂದು ಗುರುತಿಸಲಾಗಿದೆ. ಸರಕಾರಿ ಬಸ್, ಬೈಕ್ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಝೈದ್ ಉಡುಪಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರು ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತರು ಓರ್ವ ಸಹೋದರ ಮತ್ತು ತಂದೆ ತಾಯಿಯನ್ನು ಅಗಲಿದ್ದಾರೆ.
ಆಟೋ ಎಲ್ಪಿಜಿ ದರ ಏರಿಕೆ ಖಂಡಿಸಿ ಧರಣಿ
ಉಡುಪಿ, ಮಾ.10: ಆಟೋ ರಿಕ್ಷಾಗಳಲ್ಲಿ ಬಳಸುವ ಎಲ್ಪಿಜಿ ಇಂಧನದ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಹಾಗೂ ದರ ಏರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (ಎಲ್ಡಿಟಿಯು) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಧರಣಿ ನಡೆಸಲಾಯಿತು. ಧರಣಿಯಲ್ಲಿ ಮಾತನಾಡಿದ ಎಸ್ಡಿಟಿಯು ರಾಜ್ಯ ಸಹ ಸಂಚಾಲಕ ಖಾದರ್ ಫರಂಗಿಪೇಟೆ, ಇತ್ತೀಚಿನ ದಿನಗಳಲ್ಲಿ ಆಟೋ ಎಲ್ಪಿಜಿ ದರವನ್ನು ಹೆಚ್ಚಿಸಿರುವುದು ಆಟೋ ಚಾಲಕರ ಬದುಕಿಗೆ ದೊಡ್ಡ ಹೊಡೆತವಾಗಿದ್ದು, ಬಹುತೇಕ ಆಟೋ ಚಾಲಕರು ದಿನನಿತ್ಯದ ಆದಾಯದ ಮೇಲೆ ಅವಲಂಬಿತರಾಗಿದೆ. ಇಂಧನದ ದರ ಏರಿಕೆಯಿಂದ ಕುಟುಂಬ ನಿರ್ವಹಣೆ, ವಾಹನದ ಬಾಡಿಗೆ, ಬ್ಯಾಂಕ್ ಸಾಲ ಹಾಗೂ ವಾಹನ ನಿರ್ವಹಣೆ ಮುಂತಾದ ಖರ್ಚುಗಳನ್ನು ಭರಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಎಸ್ಡಿಟಿಯು ರಾಜ್ಯ ನಾಯಕ ಶಾಹಿದ್ ಮಾತನಾಡಿದರು. ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಖಾದರ್ ಮಲ್ಲಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ಡಿಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ರಫೀಕ್ ಪೊಲಿಪು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನೀಫ್ ಕಂಡ್ಲೂರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು ಇಸ್ಮಾಯಿಲ್ ಉಸ್ತಾದ್ ಸ್ವಾಗತಿಸಿ, ನಿರೂಪಿಸಿದರು.
ಬೆಂಗಳೂರಿನಲ್ಲಿ ಉದ್ಯೋಗವಕಾಶ | ಕಾಯಿರ್ ಬೋರ್ಡ್ ನೇಮಕಾತಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ Coir Board ಇದೀಗ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕಾಯಿರ್ ಬೋರ್ಡ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಎಲೆಕ್ಟ್ರಿಷಿಯನ್ ಸೇರಿದಂತೆ 07 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ Coir Board ಇದೀಗ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಎಲೆಕ್ಟ್ರಿಷಿಯನ್ ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17 ಫೆಬ್ರವರಿ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಮಾರ್ಚ್ 2026 ಹುದ್ದೆಗಳ ವಿವರ ಒಟ್ಟು ಹುದ್ದೆಗಳ ಸಂಖ್ಯೆ- 07 ಉದ್ಯೋಗ ಸ್ಥಳ - ಬೆಂಗಳೂರು ಹುದ್ದೆಯ ಹೆಸರು- ಪ್ರಾಜೆಕ್ಟ್ ಅಸಿಸ್ಟೆಂಟ್, ಎಲೆಕ್ಟ್ರಿಷಿಯನ್ ವಿದ್ಯಾರ್ಹತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕೆಳಗಿನ ವಿದ್ಯಾರ್ಹತೆಗಳಲ್ಲಿ ಯಾವುದಾದರೂ ಒಂದನ್ನು ಪೂರ್ಣಗೊಳಿಸಿರಬೇಕು. • ಐಟಿಐ (ITI) • ಬಿಇ / ಬಿ.ಟೆಕ್ • ಎಂ.ಎಸ್ಸಿ • ಎಂಇ / ಎಂ.ಟೆಕ್ ಸಂಬಂಧಿತ ಕ್ಷೇತ್ರದಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ವಯೋಮಿತಿ ಕಾಯಿರ್ ಬೋರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷಗಳು ಆಗಿರಬೇಕು. ವಯೋಮಿತಿಗೆ ಸಂಬಂಧಿಸಿದ ಸಡಿಲಿಕೆಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವುದು ಉತ್ತಮ. ಅರ್ಜಿ ಶುಲ್ಕ ಈ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿಧಿಸಲಾಗುವುದಿಲ್ಲ. ಎಲ್ಲಾ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಮೂಲಕ ನಡೆಯುತ್ತದೆ. ಶಾರ್ಟ್ಲಿಸ್ಟಿಂಗ್: ಸಲ್ಲಿಸಿದ ಅರ್ಜಿಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸಂದರ್ಶನ: ಶಾರ್ಟ್ಲಿಸ್ಟ್ ಆದ ಅಭ್ಯರ್ಥಿಗಳನ್ನು ಅಂತಿಮವಾಗಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಸುವ ವಿಧಾನ • ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಬಹುದು. • ಮೊದಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: http://coirboard.gov.in/?page_id=129 • ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. • ನೀವು ಅರ್ಹರಾಗಿದ್ದರೆ https://forms.gle/S6B5q63aDJfRY44U6 ಲಿಂಕ್ ಮೇಲೆ ಕ್ಲಿಕ್ ಮಾಡಿ. • ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಅಗತ್ಯ ದಾಖಲೆಗಳು (Resume, ಶಿಕ್ಷಣ ಪ್ರಮಾಣಪತ್ರಗಳು) ಸಿದ್ಧವಾಗಿಟ್ಟುಕೊಳ್ಳಿ. • ಅಗತ್ಯವಿರುವ ಫೋಟೋ ಹಾಗೂ ಸಹಿಯನ್ನು ಅಪ್ಲೋಡ್ ಮಾಡಿ. • ಕೊನೆಗೆ ಅರ್ಜಿಯನ್ನು ಪರಿಶೀಲಿಸಿ ಸಬ್ಮಿಟ್ ಮಾಡಿ.
Budget Session 2026 | ಬೆಂಗಳೂರು ಪೊಲೀಸ್ ವ್ಯವಸ್ಥೆಯ ಪುನರ್ ರಚನೆಗೆ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆಯ ಹೆಚ್ಚಳ, ಸಂಚಾರ ದಟ್ಟಣೆ ಹಾಗೂ ಕಾನೂನು ಸುವ್ಯವಸ್ಥೆಯ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತಾಲಯವನ್ನು ಪುನರ್ ರಚಿಸುವ ಕುರಿತು ಸರಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಂಗಳವಾರ ವಿಧಾನ ಪರಿಷತ್ತಿನ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಡಾ. ಕೆ. ಗೋವಿಂದರಾಜ್ ಅವರು ನಿಯಮ-330ರಡಿ ಮಂಡಿಸಿದ್ದ ಸೂಚನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ನಿರ್ವಹಣೆಯನ್ನು ಒಬ್ಬ ಅಪರ ಪೊಲೀಸ್ ಆಯುಕ್ತರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು (ಕಾನೂನು ಸುವ್ಯವಸ್ಥೆ ಮತ್ತು ಸಂಚಾರ) ಹಾಗೂ 11 ಡಿಸಿಪಿಗಳು (ಕಾನೂನು ಸುವ್ಯವಸ್ಥೆ), 4 ಡಿಸಿಪಿಗಳು (ಸಂಚಾರ) ಮತ್ತು 2 ಡಿಸಿಪಿಗಳು (ಅಪರಾಧ) ಅವರ ಮೇಲ್ವಿಚಾರಣೆಯಲ್ಲಿ ನಿರ್ವಹಿಸಲಾಗುತ್ತಿದೆ ಎಂದರು. ನಗರದ ಬೆಳೆಯುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ, ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವುದು ಅತ್ಯಗತ್ಯ ಎಂಬ ಅಂಶವನ್ನು ಸರಕಾರ ಮನಗಂಡಿದೆ. ಈ ಸಂಬಂಧವಾಗಿ 2025ರ ಡಿ.24ರಂದು ಸಭೆ ನಡೆದು ಚರ್ಚಿಸಲಾಗಿದೆ. ಪೊಲೀಸ್ ಆಯುಕ್ತಾಲಯದ ಪುನರ್ರಚನೆಯ ಪ್ರಸ್ತಾವನೆಯು ಸದ್ಯ ಸರಕಾರದ ಪರಿಶೀಲನೆಯಲ್ಲಿದೆ. ನಗರದ ಭದ್ರತೆ ಮತ್ತು ಸುಗಮ ಸಂಚಾರಕ್ಕಾಗಿ ಸರಕಾರವು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಕಲಬುರಗಿ | ವಂದೇ ಮಾತರಂ ಕಡ್ಡಾಯಗೊಳಿಸುವ ಕೇಂದ್ರ ಮಾರ್ಗಸೂಚಿ ಹಿಂಪಡೆಯಲು ರಾಜ್ಯ ಸರಕಾರಕ್ಕೆ ಆಗ್ರಹ
ಕಲಬುರಗಿ: ಸರ್ಕಾರಿ ಕಾರ್ಯಕ್ರಮಗಳು ಹಾಗೂ ಶಾಲಾ ಸಭೆಗಳಲ್ಲಿ ರಾಷ್ಟ್ರಗೀತೆಯ ಜೊತೆಗೆ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ಕುರಿತು ಗೃಹ ವ್ಯವಹಾರಗಳ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳನ್ನು ಹಿಂಪಡೆಯಬೇಕು ಎಂದು ಗುಲ್ಬರ್ಗಾ ಜಂಟಿ ಕ್ರಿಯಾ ಸಮಿತಿ ಭಾರತ ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಸಮಿತಿಯ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಸಂವಿಧಾನದ ಭಾರತದ ಸಂವಿಧಾನದ ಕಲಂ 25 ಪ್ರಕಾರ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಇದೆ. ಆದರೆ ವಂದೇ ಮಾತರಂ ಗೀತೆಯ ಕೆಲವು ಚರಣಗಳಲ್ಲಿ ಭಾರತವನ್ನು ಮಾತೃಭೂಮಿಯ ರೂಪದಲ್ಲಿ ಹಾಗೂ ದುರ್ಗಾ, ಸರಸ್ವತಿ ಮತ್ತು ಲಕ್ಷ್ಮಿ ದೇವಿಯ ಅವತಾರವಾಗಿ ಚಿತ್ರಿಸುವ ಉಲ್ಲೇಖಗಳಿರುವುದರಿಂದ ಅದು ಎಲ್ಲ ಸಮುದಾಯಗಳಿಗೆ ಸಮಾನವಾಗಿ ಸ್ವೀಕಾರಾರ್ಹವಾಗಿಲ್ಲ ಎಂದು ಸಮಿತಿ ಅಭಿಪ್ರಾಯಪಟ್ಟಿದೆ. ಬಹುಧರ್ಮ, ಬಹುಸಾಂಸ್ಕೃತಿಕ ಹಾಗೂ ಜಾತ್ಯಾತೀತ ನೆಲೆಯನ್ನು ಹೊಂದಿರುವ ಭಾರತದಂತಹ ದೇಶದಲ್ಲಿ ಇಂತಹ ಕ್ರಮಗಳು ಕೆಲ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಬಹುದು ಎಂದು ಸಮಿತಿ ತಿಳಿಸಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 1937ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಈ ವಿಷಯವನ್ನು ಪರಿಗಣಿಸಿ, ಎಲ್ಲ ಸಮುದಾಯಗಳಿಗೂ ಸ್ವೀಕಾರಾರ್ಹವಾಗುವಂತೆ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಬಳಸುವಂತೆ ನಿರ್ಧರಿಸಿತ್ತು ಎಂದು ಸಮಿತಿ ಹೇಳಿದೆ. ಸರ್ಕಾರಿ ಕಾರ್ಯಕ್ರಮಗಳು ಮತ್ತು ಶಾಲಾ ಸಭೆಗಳಲ್ಲಿ ಇದನ್ನು ಕಡ್ಡಾಯಗೊಳಿಸುವ ಮೂಲಕ ನಾಗರಿಕರನ್ನು ತಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವಂತೆ ಒತ್ತಾಯಿಸುವಂತಾಗುತ್ತದೆ. ವಿಶೇಷವಾಗಿ ಶಾಲೆಗಳು ವಿದ್ಯಾರ್ಥಿಗಳಲ್ಲಿ ಏಕತೆ ಮತ್ತು ಸಹಬಾಳ್ವೆಯನ್ನು ಬೆಳೆಸುವ ತಾಣವಾಗಿದ್ದು, ಇಂತಹ ಕ್ರಮಗಳು ವಿಭಜನೆಯ ಭಾವನೆಯನ್ನು ಉಂಟುಮಾಡುವ ಅಪಾಯವಿದೆ ಎಂದು ಸಮಿತಿ ಎಚ್ಚರಿಸಿದೆ. ಇದೇ ವೇಳೆ ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಮಸೀದಿ ಎದುರು ಪ್ರಚೋದನಕಾರಿ ಘೋಷಣೆಗಳು ನಡೆದಿದ್ದು, ನಂತರ ಕೋಮು ಉದ್ರಿಕ್ತತೆ ಉಂಟಾಗಿದೆ ಎಂದು ಸಮಿತಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪರಿಸ್ಥಿತಿ ನಿಯಂತ್ರಣದಲ್ಲಿ ವಿಫಲವಾದ ಕಾರಣ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದೆ. ಹಾಗೆಯೇ ಬಸವಕಲ್ಯಾಣದಲ್ಲಿ ಇಬ್ಬರು ಮದರಸಾ ಶಿಕ್ಷಕರನ್ನು ತಡೆದು “ಜೈಶ್ರೀರಾಮ” ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ ಪ್ರಕರಣವನ್ನು ಸಮಿತಿ ಖಂಡಿಸಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲು ನಿರಪರಾಧಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಖಂಡನೀಯವಾಗಿದೆ ಎಂದು ಸಮಿತಿ ಹೇಳಿದೆ. ಬಸವಕಲ್ಯಾಣವು ಶರಣರು ಮತ್ತು ಸೂಫಿ ಸಂತರ ಭಾವೈಕ್ಯತೆಯ ತಾಣವಾಗಿದ್ದು, ಇಂತಹ ಘಟನೆಗಳು ಸಮಾಜದ ಸೌಹಾರ್ದತೆಗೆ ಧಕ್ಕೆ ತರುತ್ತವೆ ಎಂದು ಸಮಿತಿ ತಿಳಿಸಿದೆ. ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಬೇಕು ಹಾಗೂ ನಿರಪರಾಧಿಗಳನ್ನು ಬಿಡುಗಡೆ ಮಾಡಬೇಕು. ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗುಲ್ಬರ್ಗಾ ಜಂಟಿ ಕ್ರಿಯಾ ಸಮಿತಿ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕ ಅಫ್ಝಲ್ ಮೆಹಮೂದ್, ಸಮಿತಿಯ ಜಿಲ್ಲಾಧ್ಯಕ್ಷ ಅಬ್ದುಲ್ ಜಬ್ಬಾರ್ ಗೋಳಾ, ಹೋರಾಟಗಾರ್ತಿ ಕೆ.ನೀಲಾ, ಮಹೇಶ್ ಕುಮಾರ್ ರಾಠೋಡ್, ಕಲಬುರಗಿ ಅಭಿವೃದ್ಧಿಪರ ಸಮಿತಿಯ ಅಧ್ಯಕ್ಷ ಲೂಯಿಸ್ ಕೋರಿ, ಹೈದರ್ ಅಲಿ ಬಗ್ಬಾನ್, ಮಹೇಶ್ ಎಸ್. ಬಿ.,ಮೊಹಮ್ಮದ್ ಇಕ್ಬಾಲ್ ಸಾಬ್, ಸಯ್ಯದ್ ತೌಫಿಕ್, ಸದ್ದಾಮ್ ಹುಸೇನ್, ಸಾಜಿದ್ ಅಹ್ಮದ್, ರಿಜ್ವಾನ್ ಸಿದ್ದಿಕಿ, ಡಬ್ಲ್ಯೂಪಿಐ ಮುಖಂಡ ಮುಹಮ್ಮದ್ ಮುಬೀನ್ ಅಹಮದ್, ಶಾಹೀನ್, ನಿಸಾರ್ ಅಹಮದ್, ಮುಹಮ್ಮದ್ ನೂಹ್, ಸಂಧ್ಯಾರಾಜ್ ಸ್ಯಾಮ್ಯುಯೆಲ್, ಗುರುಮಿತ ಸಿಂಗ್ ಸಲುಜಾ, ಸೇರಿದಂತೆ ಹಲವರು ಇದ್ದರು.
ಉಡುಪಿಗೆ 29 ಆರೋಗ್ಯ ಕ್ಷೇಮ ಕಟ್ಟಡಕ್ಕೆ ಮಂಜೂರಾತಿ: ಸಂಸದ ಕೋಟ
ಉಡುಪಿ, ಮಾ.10: ಉಡುಪಿ ಜಿಲ್ಲೆಯಲ್ಲಿ ಆಯುಷ್ಮಾನ್ ಆರೋಗ್ಯ ಕ್ಷೇಮ ಯೋಜನೆಯಡಿ 29 ಆರೋಗ್ಯ ಕೇಂದ್ರ ಕಟ್ಟಡ ಮಂಜೂರಾಗಿದ್ದು, ಪ್ರತಿ ಕಟ್ಟಡದ ವೆಚ್ಚ 65 ಲಕ್ಷಕ್ಕೆ ಅನುಮೋದನೆ ನೀಡಲಾಗುತ್ತಿದೆ. ಈ ಪೈಕಿ ಉಡುಪಿ ವಿಧಾನ ಸಭಾ ಕ್ಷೇತ್ರದ ನಿಡಂಬಳ್ಳಿ, ಕಾರ್ಕಳದ ನಿಟ್ಟೆಯ ಕಾಮಗಾರಿ ಪೂರ್ಣಗೊಂಡಿದ್ದು, ಸದ್ಯದಲ್ಲೆ ಕಾರ್ಯಾರಂಭಿ ಸಲಿವೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕೇಂದ್ರಸರಕಾರದ 15ನೇ ಹಣಕಾಸಿನ ಯೋಜನೆಯಡಿ ಮಂಜೂರಾಗಿರುವ ಕಟ್ಟಡದ ಪೈಕಿ 17 ಉಪಕೇಂದ್ರ ಕಟ್ಟಡದ ಕೆಲಸ ಕಾರ್ಯಗಳು ಪ್ರಗತಿ ಯಲ್ಲಿದ್ದು, 3 ಉಪಕೇಂದ್ರ ಕಟ್ಟಡಗಳು ಈಗಾಗಲೇ ಕಾರ್ಯಾರಂಭ ಮಾಡಿವೆ. ಉಳಿದಂತೆ 7 ಉಪಕೇಂದ್ರಗಳ ಕಾಮಗಾರಿಯನ್ನು ಪ್ರಾರಂಭಿಸಲು ದಿನ ನಿಗದಿ ಪಡಿಸಲಾಗಿದೆ ಎಂದು ಸಂಸದ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕಟ್ಟಡದ ಅಭಿವೃದ್ಧಿಗೆ ಈಗಾಗಲೇ 34.50 ಕೋಟಿ ರೂ. ಹಣ ಮಂಜೂರಾತಿ ನೀಡಲಾಗಿದ್ದು, ಕಟ್ಟಡವನ್ನು ಜನವಸತಿ ಪ್ರದೇಶದಲ್ಲಿ ಮತ್ತು ಬಡವರು ವಾಸವಾಗಿರು ಸ್ಥಳ ಗುರುತಿಸಿ ನಿರ್ಮಿಸಲು ಕೇಂದ್ರ ಸರಕಾರ ಮಾನದಂಡವನ್ನು ಹೊರಡಿಸಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಅವು ಮುಕ್ತವಾಗಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಡಿಮೆನ್ಶಿಯಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ: ಡಾ.ಚಂದ್ರಶೇಖರ್
ಉಡುಪಿ: ಮಾನಸಿಕ ಆರೋಗ್ಯದ ಕುರಿತು ಕಾರ್ಯಾಗಾರ
ಕಲಬುರಗಿ | ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಡಿವೈಎಫ್ಐ ಬೆಂಬಲ
ಕಲಬುರಗಿ: ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ವೈದ್ಯರು ಮತ್ತು ಆರೋಗ್ಯ ಇಲಾಖೆಯ ನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಉದ್ದೇಶದಿಂದ ಬುಧವಾರದಿಂದ ಆರಂಭವಾಗಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಈ ಕುರಿತು ಸಂಘಟನೆಯ ರಾಜ್ಯಾಧ್ಯಕ್ಷೆ ಲವೀತ್ರ ವಸ್ತ್ರದ್ ಪತ್ರಿಕಾ ಪ್ರಕಟಣೆ ನೀಡಿ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಅಗತ್ಯ ಔಷಧಿಗಳನ್ನು ಸಮರ್ಪಕವಾಗಿ ಪೂರೈಸಬೇಕು ಎಂದು ಒತ್ತಾಯಿಸಿದರು. ಆರೋಗ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕೆಂಬ ಸರ್ಕಾರದ ಆದೇಶ ಇದ್ದರೂ, 1973ರಿಂದ ಇಂದಿನವರೆಗೆ ಅವುಗಳನ್ನು ಸಮರ್ಪಕವಾಗಿ ತಿದ್ದುಪಡಿ ಮಾಡಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಅಧಿಕಾರಿಗಳು ಮತ್ತು ನೌಕರರು ಮೌಖಿಕ ಹಾಗೂ ಲಿಖಿತ ಮನವಿಗಳನ್ನು ಸಲ್ಲಿಸಿದರೂ ಸರ್ಕಾರದಿಂದ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದರು. ಇದಲ್ಲದೆ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರಿಗೆ ಕಳೆದ ಐದು ವರ್ಷಗಳಿಂದ ಮುಂಬಡ್ತಿ ನೀಡಲಾಗಿಲ್ಲ. ಕೂಡಲೇ ಮುಂಬಡ್ತಿ ನೀಡಬೇಕು ಹಾಗೂ ಸೇವಾನಿರತ ವೈದ್ಯರು, ಅಧಿಕಾರಿಗಳು ಮತ್ತು ನೌಕರರಿಗೆ ಉನ್ನತ ಹಾಗೂ ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು. ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು, ಅರೆ ವೈದ್ಯಕೀಯ ಹಾಗೂ ಇತರೆ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ನೌಕರರು ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಸೇವಾ ಭದ್ರತೆ ಒದಗಿಸಿ, ಕಾಲಕಾಲಕ್ಕೆ ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಗಳನ್ನು ಹಲವು ವರ್ಷಗಳಿಂದ ಸರ್ಕಾರದ ಗಮನಕ್ಕೆ ತಂದಿದ್ದರೂ ನಿರ್ಲಕ್ಷ್ಯ ತೋರಿರುವುದು ಖಂಡನೀಯ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಮೋದ ಪಾಂಚಾಳ, ಸಲ್ಮಾನ್ ಖಾನ್, ಗಿಡ್ಡಮ್ಮ, ಶಾಂತಕುಮಾರ ಇದ್ದರು.
ಜೇವರ್ಗಿ | ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆರ್ಥಿಕ ಸಬಲೀಕರಣ : ಚಂದ್ರಿಕಾ ಪರಮೇಶ್ವರ
ಜೇವರ್ಗಿ: ರಾಜ್ಯದಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ದಿಟ್ಟ ಹೆಜ್ಜೆಯಾಗಿವೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಹೇಳಿದರು. ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ನಡೆದ ಕಾರ್ಯಕ್ರಮ ಹಾಗೂ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಬಡವರ ಪರ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ತಾಲ್ಲೂಕು ಸಮಿತಿ ಅಧ್ಯಕ್ಷ ಶೌಕತ್ ಅಲಿ ಆಲೂರ್ ಮಾತನಾಡಿ, ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗದೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸುತ್ತಿದ್ದಾರೆ ಎಂದರು. ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಧರ್ಮ ಸಿಂಗ್ ಅವರ ಆಶಯದಂತೆ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪುವಂತೆ 14 ಸದಸ್ಯರ ಸಮಿತಿ ರಚಿಸಲಾಗಿದ್ದು, ಈ ಸಮಿತಿ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ಮಾಹಿತಿ ನೀಡಿದರು. ಅನ್ನಭಾಗ್ಯ ಯೋಜನೆಯನ್ನು ಟೀಕಿಸುವವರ ವಿರುದ್ಧ ಪ್ರತಿಕ್ರಿಯಿಸಿದ ಅವರು, ಶ್ರೀಮಂತ ಉದ್ಯಮಿಗಳಿಗೆ ನೀಡುವ ರಿಯಾಯಿತಿಗಳ ಬಗ್ಗೆ ಏಕೆ ಪ್ರಶ್ನೆ ಕೇಳುವುದಿಲ್ಲ ಎಂದು ಪ್ರಶ್ನಿಸಿದರು. ಕಾರ್ಯಕ್ರಮದ ವೇಳೆ ಶಿಷ್ಟಾಚಾರ ಪಾಲಿಸದ ಹಾಗೂ ಸರಿಯಾದ ನಿರ್ವಹಣೆ ಮಾಡದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವಿರುದ್ಧ ಶೌಕತ್ ಅಲಿ ಆಲೂರ್ ಅಸಮಾಧಾನ ವ್ಯಕ್ತಪಡಿಸಿದರು. ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಗೈರಾಗಿದ್ದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಮಾರ್ಚ್ 16ರಂದು ನಡೆಯಲಿರುವ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಈ ಕುರಿತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು. ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ನಿರ್ಮಲಾ ಬರಗಾಲಿ, ಇಒ ರವಿಚಂದ್ರ ರೆಡ್ಡಿ, ಸಮಿತಿ ಸದಸ್ಯರಾದ ಅಂಜುಭಾಯಿ ರಾಠೋಡ್, ರಾಜು ಗುತ್ತೇದಾರ್, ರುಕುಮ್ ತೋಲಾ ಭಾಗವಾನ್, ನಾಗರಾಜ್ ವಿ.ಟಿ., ಬಸವರಾಜ್ ದೇವದುರ್ಗ ಆಂದೋಲಾ ಉಪಸ್ಥಿತರಿದ್ದರು. ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಯುವನಿಧಿ, ಕೆಕೆಆರ್ಟಿಸಿ ಹಾಗೂ ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ದೇಶವ್ಯಾಪಿ ವಿಮಾನ ರದ್ದತಿ ವಿವಾದದ ಬಳಿಕ ಇಂಡಿಗೋ ಸಿಇಒ ರಾಜೀನಾಮೆ
ಹೊಸದಿಲ್ಲಿ: ಕಳೆದ ಮೂರು ತಿಂಗಳ ಹಿಂದೆ ದೇಶವ್ಯಾಪಿ ವಿಮಾನ ಸೇವೆಗಳಲ್ಲಿ ಉಂಟಾದ ಅಡಚಣೆಗಳು ಮತ್ತು ವ್ಯಾಪಕ ವಿಮಾನ ರದ್ದತಿಯ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನಯಾನ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಎಲ್ಬರ್ಸ್ ಅವರು ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವಿಮಾನಯಾನ ಸಂಸ್ಥೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಇಂಡಿಗೋ ಸಂಸ್ಥೆಯ ಸಂಸ್ಥಾಪಕ ರಾಹುಲ್ ಭಾಟಿಯಾ ಅವರು ಮಧ್ಯಂತರವಾಗಿ ಸಂಸ್ಥೆಯ ನಿರ್ವಹಣಾ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಸ್ಟಾಕ್ ಎಕ್ಸ್ಚೇಂಜ್ಗಳಿಗೆ ಸಲ್ಲಿಸಲಾದ ರಾಜೀನಾಮೆ ಪತ್ರದ ಪ್ರತಿಯಲ್ಲಿ, ‘ನಮ್ಮ ನಡುವಿನ ಸಂಭಾಷಣೆಯ ಪ್ರಕಾರ, ವೈಯಕ್ತಿಕ ಕಾರಣಗಳಿಂದಾಗಿ ಇಂದಿನಿಂದ ಜಾರಿಗೆ ಬರುವಂತೆ ಇಂಡಿಗೋ ಸಿಇಒ ಹುದ್ದೆಗೆ ನನ್ನ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ನೋಟಿಸ್ ಅವಧಿಯನ್ನು ಮನ್ನಾ ಮಾಡುವಂತೆ ವಿನಂತಿಸುತ್ತೇನೆ’ ಎಂದು ಎಲ್ಬರ್ಸ್ ತಿಳಿಸಿದ್ದಾರೆ. ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಇಂಡಿಗೋ ಸಂಸ್ಥೆ 5,000 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿತ್ತು. ಇದರಿಂದ ಸುಮಾರು ಆರು ಲಕ್ಷ ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ದೇಶವ್ಯಾಪಿ ಇಂಡಿಗೋ ವಿಮಾನ ಸೇವೆಯಲ್ಲಿ ಉಂಟಾದ ಕಾರ್ಯಾಚರಣಾ ಅಡಚಣೆಗಳ ಕಾರಣ ವಿಮಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿತ್ತು.
Budget Session 2026 | ದೇವೇಗೌಡರ ಬಲವಂತದಿಂದಲೇ ಹಣಕಾಸು ಸಚಿವ ಸ್ಥಾನಕ್ಕೆ ಬಂದೆ : ಸಿದ್ದರಾಮಯ್ಯ
ಬೆಂಗಳೂರು : ಈ ಹಿಂದೆ ಎಚ್.ಡಿ.ದೇವೇಗೌಡ ಅವರ ಬಲವಂತದಿಂದಲೇ ಹಣಕಾಸು ಸಚಿವ ಸ್ಥಾನಕ್ಕೆ ಬಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, 100 ಕುರಿಗಳನ್ನು ಲೆಕ್ಕ ಹಾಕಲು ಬಾರದ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಹೇಗೆ ಮಂಡಿಸುತ್ತಾರೆ ಎಂದು ಆರಂಭದ ದಿನಗಳಲ್ಲಿ ಟೀಕೆ ಮಾಡಿದನ್ನು ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದಾರೆ. ದೇವೇಗೌಡ ಅವರು ಅವಕಾಶ ಕೊಟ್ಟಿದ್ದರಿಂದಾಗಿ ಇಂದು ಸಿದ್ದರಾಮಯ್ಯ 17 ಬಜೆಟ್ಗಳನ್ನು ಮಂಡಿಸಲು ಸಾಧ್ಯವಾಗಿದೆ ಎಂದರು. ತಪ್ಪು ಮಾಹಿತಿ ಹೋಗಬಾರದು ಎಂದು ಎದ್ದು ನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗ ಸಂಪುಟದಲ್ಲಿ ಖಾತೆಗಳ ಹಂಚಿಕೆ ಕುರಿತು ಕೋಲಾರದಲ್ಲಿರುವ ಆರ್.ಎಲ್.ಜಾಲಪ್ಪ ಅವರ ವೈದ್ಯಕೀಯ ಕಾಲೇಜಿನಲ್ಲಿ ಚರ್ಚೆಯಾಗುತ್ತಿತ್ತು. ದೇವೇಗೌಡರು, ಎಂ.ಪಿ. ಪ್ರಕಾಶ್, ಪಿ.ಜಿ.ಆರ್.ಸಿಂಧ್ಯಾ, ಆರ್.ಎಲ್.ಜಾಲಪ್ಪ ಮತ್ತು ನಾನು ಹಾಜರಿದ್ದೇವು. ನನಗೆ ಕಂದಾಯ ಇಲಾಖೆಯನ್ನು ನೀಡಬೇಕೆಂದು ಬೇಡಿಕೆ ಇತ್ತು. ಆದರೆ, ಆರ್.ಎಲ್.ಜಾಲಪ್ಪ ಆ ಖಾತೆ ನನಗೆ ಬೇಕು ಎಂದು ಪಟ್ಟು ಹಿಡಿದರು. ಆಗ ದೇವೇಗೌಡರು ನನಗೆ ಹಣಕಾಸು ಖಾತೆ ತೆಗೆದುಕೊಳ್ಳುವಂತೆ ಸಲಹೆ ನೀಡಿದರು. ನಾನು ಆರ್ಥಿಕ ತಜ್ಞನಲ್ಲ, ಅರ್ಥಶಾಸ್ತ್ರವನ್ನು ಓದಿಲ್ಲ. ಹೀಗಾಗಿ ಹಣಕಾಸು ಖಾತೆ ಬೇಡ ಎಂದು ಹೇಳಿದ್ದೆ. ಅದಕ್ಕೆ ಒಪ್ಪದ ದೇವೇಗೌಡರು ನನಗೆ ನಂಬಿಕಸ್ತರೇ ಬೇಕು. ನೀನೇ ಹಣಕಾಸು ಖಾತೆಯನ್ನು ನೋಡಿಕೊಳ್ಳಬೇಕು ಎಂದು ಬಲವಂತ ಮಾಡಿಕೊಟ್ಟರು ಎಂದು ಉಲ್ಲೇಖಿಸಿದರು. ಬಳಿಕ ಅಶೋಕ್ ಮಾತನಾಡಿ, ದೇವೇಗೌಡರು ಅವಕಾಶ ಕೊಟ್ಟಿದ್ದರಿಂದಾಗಿ ಇಂದು ನೀವು ಹೆಚ್ಚು ಬಜೆಟ್ ಮಂಡಿಸಿ ದಾಖಲೆ ಮಾಡಲು ಸಾಧ್ಯವಾಗಿದೆ. ಇದಕ್ಕಾಗಿ ನೀವು ದೇವೇಗೌಡರಿಗೆ ಧನ್ಯವಾದ ಹೇಳಬೇಕು ಎಂದರು.
ಕೊರಗ ಸಮುದಾಯದ ವ್ಯಕ್ತಿಯನ್ನು ಜೀತಕ್ಕೆ ಇಟ್ಟು ದೌರ್ಜನ್ಯ ಆರೋಪ: ಪ್ರಕರಣ ದಾಖಲು
ಹೆಮ್ಮಾಡಿಯಲ್ಲಿ ಅಮಾನವೀಯ ಘಟನೆ ಬೆಳಕಿಗೆ
ಕಲಬುರಗಿ | ಜಿಲ್ಲೆಯಾದ್ಯಂತ ʼಸಾಮಾಜಿಕ ಕ್ರೂಢಿಕರಣ ಆಂದೋಲನʼ : ಭಂವರ್ ಸಿಂಗ್ ಮೀನಾ
ಕಲಬುರಗಿ: ಕಲಬುರಗಿ ಜಿಲ್ಲಾ ಪಂಚಾಯತ್ ಹಾಗೂ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದೊಂದಿಗೆ ಜಿಲ್ಲೆಯ ವ್ಯಾಪ್ತಿಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಇದೇ ಮಾರ್ಚ್ 11ರಿಂದ 31 ರವರೆಗೆ ಸಾಮಾಜಿಕ ಕ್ರೂಢೀಕರಣ ಆಂದೋಲನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮೀಣ ಭಾಗದ ಪ್ರತಿ ಕುಟುಂಬದ ಒಬ್ಬ ಮಹಿಳೆ ಸ್ವ-ಸಹಾಯ ಗುಂಪುಗಳಲ್ಲಿ ಸೇರ್ಪಡೆಯಾಗುವುದು ಆಂದೋಲನದ ಮುಖ್ಯ ಉದ್ದೇಶವಾಗಿದ್ದು, ಜಿಲ್ಲೆಯಲ್ಲಿ ಪ್ರಸ್ತುತ ಸಾಲಿಗೆ ಹೊಸದಾಗಿ 87,696 ಕುಟುಂಬಗಳನ್ನು ಸಂಜೀವಿನಿ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ಸೇರ್ಪಡಿಸುವ ಗುರಿ ಹೊಂದಲಾಗಿದೆ. ಆದ್ದರಿಂದ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅನುಷ್ಠಾನವಾಗುತ್ತಿರುವ ಗೃಹಲಕ್ಷಿ ಯೋಜನೆ ಫಲಾನುಭವಿಗಳು, ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಹಿಳಾ ಕಾರ್ಮಿಕರು, (ವಿಬಿಜಿ ರಾಮ್-ಜಿ), ಪ್ರಧಾನ ಮಂತ್ರಿ ಆವಾಸ್ ಮಹಿಳಾ ಗ್ರಾಮೀಣ ಫಲಾನುಭವಿಗಳು (ಪಿಎಂಎವೈ-ಜಿ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ, ದುರ್ಬಲ ವರ್ಗದ ಮಹಿಳೆಯರು, ವಿಶೇಷ ಚೇತನರು, ಹಿರಿಯ ನಾಗರಿಕರು, ತೃತೀಯ ಲಿಂಗದವರು ಸೇರಿದಂತೆ, ಹೊಸ ಸ್ವ-ಸಹಾಯ ಸಂಘ ರಚಿಸಲು ಅವಕಾಶವಿದ್ದು. ಪ್ರತಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವ್ಯಾಪ್ತಿಯ ಎಂಬಿಕೆ,(ಪ್ರಧಾನ ಪುಸ್ತಕ ಬರಹಗಾರರು) ಎಲ್ಸಿಆರ್ಪಿ (ಸ್ಥಳಿಯ ಸಮುದಾಯ ಸಂಪನ್ಮೂಲ ವ್ಯಕ್ತಿ) ಗಳಿಗೆ ಸಂರ್ಪಕಿಸಲು ತಿಳಿಸಿದೆ. ಅದರಂತೆ ಈಗಾಗಲೇ ವಿವಿಧ ಇಲಾಖೆ, ಎನ್ಜಿಓ ರವರ ಮೂಲಕ ರಚಿಸಿದ ಸ್ವ-ಸಹಾಯ ಸಂಘಗಳು ಸೇರ್ಪಡೆಯಾಗಲು ಅವಕಾಶವಿದೆ. ಅದರಂತೆ ಯೋಜನೆಯಡಿ ನೀಡುವ ಸಮುದಾಯ ಬಂಡವಾಳ ನಿಧಿ, ಸುತ್ತುನಿಧಿ, ವಿಆರ್ಎಫ್ ನಿಧಿ, ಪಿಎಂಎಫ್ಎಂಇ ಮತ್ತು ಕೃಷಿ ಹಾಗೂ ಕೃಷಿಯೇತರ ಜೀವನೋಪಾಯ ಚಟುವಟಿಕೆಗಳ ಬಗ್ಗೆ ತರಬೇತಿ, ಮಾರ್ಗದರ್ಶನ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸೌಲಭ್ಯವನ್ನು ಪಡೆಯುವಲ್ಲಿ ಮೊದಲ ಆದ್ಯತೆ ಮೇಲೆ ಅವಕಾಶ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಆಸಿಡ್ ದಾಳಿ ಸಂತ್ರಸ್ತರ ಪುನರ್ವಸತಿ ಮತ್ತು ಪರಿಹಾರಕ್ಕೆ ಸರಕಾರ ಬದ್ಧ : ಜಿ.ಪರಮೇಶ್ವರ್
ಬೆಂಗಳೂರು : ಆಸಿಡ್ ದಾಳಿಯಂತಹ ಅಮಾನವೀಯ ಕೃತ್ಯಗಳ ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಮತ್ತು ಅವರ ಬದುಕನ್ನು ಮತ್ತೆ ಕಟ್ಟಿಕೊಡಲು ಕರ್ನಾಟಕ ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ನ ಮಾರ್ಗದರ್ಶನದಂತೆ ಸರಕಾರವು ಹಲವು ಪ್ರಮುಖ ಕ್ರಮಗಳನ್ನು ಕೈಗೊಂಡಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಮಂಗಳವಾರ ಪರಿಷತ್ತಿನ ಕಲಾಪದ ವೇಳೆ ಕಾಂಗ್ರೆಸ್ನ ಸದಸ್ಯ ಶಿವಕುಮಾರ್ ಕೆ. ಅವರ ಗಮನ ಸೆಳೆಯುವ ಸೂಚನೆಗೆ ಪ್ರತಿಕ್ರಿಯಿಸಿದ ಸಚಿವರು, ಸುಪ್ರೀಂ ಕೋರ್ಟ್ನ ಆದೇಶದಂತೆ, ರಾಜ್ಯ ಸರಕಾರವು ಸಂತ್ರಸ್ತರಿಗೆ ಆರ್ಥಿಕ ಪರಿಹಾರವನ್ನು ಘೋಷಿಸಿದೆ. ಘಟನೆಯ ತೀವ್ರತೆಯನ್ನು ಆಧರಿಸಿ ತಕ್ಷಣದ ನೆರವು ಮತ್ತು ಮುಂದಿನ ಚಿಕಿತ್ಸೆಗಾಗಿ ಅಗತ್ಯವಿರುವ ಪರಿಹಾರ ಮೊತ್ತವನ್ನು ಸಂತ್ರಸ್ತರ ಕುಟುಂಬಗಳಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದ ಯಾವುದೇ ಸರಕಾರಿ ಅಥವಾ ಸರಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ ಆಸಿಡ್ ದಾಳಿಯ ಸಂತ್ರಸ್ತರಿಗೆ ಸಂಪೂರ್ಣ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ನೀಡಬೇಕು ಎಂಬ ನಿಯಮ ಇದೆ. ಇದರಲ್ಲಿ ಶಸ್ತ್ರಚಿಕಿತ್ಸೆ, ಔಷಧಿಗಳು ಮತ್ತು ದೀರ್ಘಕಾಲೀನ ಪುನರ್ವಸತಿ ವೆಚ್ಚಗಳು ಸೇರಿವೆ ಎಂದು ಅವರು ತಿಳಿಸಿದರು. ಸುಪ್ರೀಂ ಕೋರ್ಟ್ನ ಇತ್ತೀಚಿನ ನಿರ್ದೇಶನದಂತೆ, ಸಂತ್ರಸ್ತರಿಗೆ ಸರಕಾರಿ ಅಥವಾ ಸರಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಕುರಿತು ಸರಕಾರವು ನೀತಿ ರೂಪಿಸುತ್ತಿದೆ. ಒಂದು ವೇಳೆ ಉದ್ಯೋಗ ನೀಡಲು ತಾಂತ್ರಿಕ ಅಡಚಣೆಗಳಿದ್ದರೆ, ಸಂತ್ರಸ್ತರಿಗೆ ಬದುಕನ್ನು ನಿರ್ವಹಿಸಲು ಸಹಾಯವಾಗುವಂತಹ ಮಾಸಿಕ ಗೌರವಧನ ಒದಗಿಸುವ ಕುರಿತಾದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದರು. ಇದೇ ವೇಳೆ ಕಾರ್ಮಿಕ ಇಲಾಖೆಯ ಸಚಿವ ಸಂತೋಷ್ ಲಾಡ್ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು. ಆಸಿಡ್ ಸಂತ್ರಸ್ತರಿಗೆ ಪಿಂಚಣಿ 50 ಸಾವಿರ ರೂ.ಗಳಿಗೆ ಹೆಚ್ಚಿಸಲು ಕ್ರಮ ಆಸಿಡ್ ಸಂತ್ರಸ್ತರಿಗೆ ತ್ವರಿತ ನ್ಯಾಯ ಒದಗಿಸುವ ದೃಷ್ಟಿಯಿಂದ, ಪ್ರಕರಣಗಳ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ಮತ್ತು ಅವರಿಗೆ ಉಚಿತ ಕಾನೂನು ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸಂತ್ರಸ್ತರಿಗೆ ಆರ್ಥಿಕ ಸಾಮಾಜಿಕ ಭದ್ರತೆಯ ಅಡಿಯಲ್ಲಿ ಮಾಸಿಕ ಪಿಂಚಣಿ ಸೌಲಭ್ಯವನ್ನೂ ನೀಡಲಾಗುತ್ತಿದೆ. ಪಿಂಚಣಿಯನ್ನು 50 ಸಾವಿರ ರೂ.ಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗುವುದು. -ಡಾ.ಜಿ.ಪರಮೇಶ್ವರ, ಗೃಹ ಸಚಿವ
ಕಲಬುರಗಿ | ಶಿಕ್ಷಕರು ಹೊಸ ವಿಷಯಗಳಿಗೆ ಅಪ್ಡೇಟ್ ಆಗಬೇಕು: ಪ್ರೊ.ಶಶಿಕಾಂತ್ ಉಡಿಕೇರಿ
ಕಲಬುರಗಿ: ಹೊಸ ವಿಷಯಗಳು ಮತ್ತು ತಂತ್ರಜ್ಞಾನಗಳಿಗೆ ಶಿಕ್ಷಕರು ಸದಾ ಅಪ್ಡೇಟ್ ಆಗಿರಬೇಕು. ಜ್ಞಾನ ಮತ್ತು ಕಲಿಕೆ ಯಾರೊಬ್ಬರ ಸ್ವತ್ತಲ್ಲ. ಬೋಧನೆಯಲ್ಲಿ ನಾವೀನ್ಯತೆ, ವೈಜ್ಞಾನಿಕ ಚಿಂತನೆ ಹಾಗೂ ಹೊಸ ವಿಧಾನಗಳನ್ನು ಅಳವಡಿಸಿಕೊಂಡು ಉತ್ಕೃಷ್ಟ ಜ್ಞಾನಶಕ್ತಿಯನ್ನು ಗಳಿಸಬೇಕು ಎಂದು ಪ್ರೊ. ಶಶಿಕಾಂತ್ ಉಡಿಕೇರಿ ಹೇಳಿದರು. ನಗರದ ಗುಲ್ಬರ್ಗ ವಿಶ್ವವಿದ್ಯಾಲಯದ ಮಂಥನ ಸಭಾಂಗಣದಲ್ಲಿ ರೂಸಾ/ಪಿಎಂ–ಉಷಾ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ, ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ರಿಲಯನ್ಸ್ ಫೌಂಡೇಶನ್ ಸ್ಕಿಲ್ಲಿಂಗ್ ಅಕಾಡೆಮಿ ಮತ್ತು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ (ಎಫ್ಡಿಪಿ) ‘ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾವೀನ ಬೋಧನಾ ತಂತ್ರಗಳು ಮತ್ತು ಪಠ್ಯಕ್ರಮ ಚೌಕಟ್ಟು’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉನ್ನತ ಶಿಕ್ಷಣ ಬೋಧನೆ ಮತ್ತು ಪಠ್ಯ ವಿಷಯಗಳಲ್ಲಿ ಪ್ರಾಯೋಗಿಕ ಜ್ಞಾನ ಅತ್ಯಗತ್ಯ. ತಂತ್ರಜ್ಞಾನ ಬಳಕೆಯೊಂದಿಗೆ ಪಠ್ಯ ವಿಷಯಗಳನ್ನು ಪರಿಣಾಮಕಾರಿಯಾಗಿ ಬೋಧಿಸುವ ಶಕ್ತಿಯನ್ನು ಶಿಕ್ಷಕರು ಹೊಂದಿರಬೇಕು. ವಿದ್ಯಾರ್ಥಿಗಳ ಜ್ಞಾನ ಮಟ್ಟವನ್ನು ಅರಿತು ಅವರಿಗೆ ಅಗತ್ಯಕ್ಕೆ ತಕ್ಕಂತೆ ಬೋಧನೆ ಮಾಡುವ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಕಲಾ ನಿಕಾಯದ ಡೀನ್ ಹಾಗೂ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಎಚ್.ಟಿ.ಪೋತೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಾಂಪ್ರದಾಯಿಕ ಕಲಿಕೆಯಿಗಿಂತ ನಾವೀನ್ಯತೆ ಮತ್ತು ಸೃಜನಶೀಲತೆಗೆ ಹೆಚ್ಚು ಒತ್ತು ನೀಡಬೇಕು. ವಿದ್ಯಾರ್ಥಿ ಕೇಂದ್ರಿತ ಬೋಧನೆಯ ಮೂಲಕ ಅವರನ್ನು ನೈಜ ಪ್ರಪಂಚದತ್ತ ಸೆಳೆಯಬೇಕು ಎಂದರು. ವೈಜ್ಞಾನಿಕ ಮನೋಭಾವನೆ ಮತ್ತು ಉದ್ಯೋಗಾರ್ಹ ಕೌಶಲ್ಯಗಳನ್ನು ಬೆಳೆಸುವ ಮೂಲಕ ವಿದ್ಯಾರ್ಥಿಗಳನ್ನು ಉನ್ನತ ಗುರಿ ಸಾಧನೆಗೆ ಸಿದ್ಧಗೊಳಿಸುವುದು ಶಿಕ್ಷಕರ ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳಿದರು. ಬೋಧನೆಯಲ್ಲಿ ತಂತ್ರಜ್ಞಾನ ಬಳಕೆ ಅಗತ್ಯವಾದರೂ, ಅದರಿಂದ ಸೃಜನಶೀಲತೆ ಕುಂಠಿತವಾಗಬಾರದು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸತ್ಯ, ನಿಖರತೆ ಹಾಗೂ ಆಧಾರಿತ ಗ್ರಂಥ–ಪುಸ್ತಕಗಳತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಮೌಲ್ಯಮಾಪನ ಕುಲಸಚಿವ ಪ್ರೊ. ಎನ್.ಜಿ. ಕಣ್ಣೂರು, ಅನ್ವಯಿಕ ವಿದ್ಯುನ್ಮಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಾರ್ಯಕ್ರಮ ಸಂಯೋಜಕ ಪ್ರೊ. ಆರ್. ಎಲ್ ರಾಯಭಾಗಕರ್ ಅತಿಥಿಗಣ್ಯರನ್ನು ಸ್ವಾಗತಿದರು. ಡಾ. ಮಂಜುರ ಅಹ್ಮದ್ ದಖ್ಖಾನಿ, ಡಾ. ಮಂಜುಳ ಬೋವಿ, ಡಾ. ಅನಿಲ್ ಕುಮಾರ್ ಹಾಲು, ಡಾ.ಸಾವಿತ್ರಿ ಹಾಗೂ ಡಾ.ಹನುಮಂತರಾಯ ರಾಂಪೂರೆ ಅನಿಸಿಕೆ ವ್ಯಕ್ತಪಡಿಸಿದರು. ರೂಸಾ-ಪಿಎಂ ಉಷಾ ನೋಡಲ್ ಅಧಿಕಾರಿ ಡಾ.ವಿದ್ಯಾಧರ ಎಸ್.ಮೇಲಕೇರಿ ಎರಡು ದಿನಗಳ ಕಾರ್ಯಕ್ರಮ ಮತ್ತು ಗೋಷ್ಠಿ ವರದಿ ಮಂಡಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಮ್ಯಾಜಿಕ್ ಬಸ್ ಇಂಡಿಯಾ ತರಬೇತಿ ಅಧಿಕಾರಿ ಜೋಶುವಾ ಡೇನಿಯಲ್, ಜೆಕಾರ್ತಿಕೇಯ ತರಬೇತಿ ಸಲಹಾ ಸಂಸ್ಥೆಯ ಸಿಇಓ ಡಾ. ಅಭಯ್ ಸರ್ದೇಶ್ಪಾಂಡೆ, ರಿಲಯನ್ಸ್ ಫೌಂಡೇಶನ್ ಸ್ಕಿಲ್ಲಿಂಗ್ ಅಕಾಡೆಮಿ ಸದಸ್ಯರಾದ ರೇಖಾ ಕುಮಾರಿ, ಜಾಬೆಜ್, ಪೌಜಿತ ಇದ್ದರು. ವಿವಿಧ ನಿಕಾಯಗಳ ಡೀನರು, ಸಿಂಡಿಕೇಟ್ ಸದಸ್ಯರು, ವಿದ್ಯಾ ವಿಷಯಕ ಪರಿಷತ್ ಸದಸ್ಯರು, ಸ್ನಾಕತೋತ್ತರ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಪದವಿ ಮಹಾವಿದ್ಯಾಲಯಗಳ ಅಧ್ಯಾಪಕರು ಭಾಗವಹಿಸಿದ್ದರು. ಸಂಗೀತ ವಿಭಾಗದ ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪನ್ಯಾಸಕ ಡಾ. ಎಂ. ಬಿ. ಕಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ದಿಲ್ಲಿಯಲ್ಲಿ ಡಿಸಿಎಂಗೆ ಸಿಹಿ ಸುದ್ದಿ ಸಿಕ್ಕಿರಬಹುದು : ಆರ್.ಅಶೋಕ್
ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹೊಸದಿಲ್ಲಿಯ ಭೇಟಿಯ ವೇಳೆ ಸಿಹಿ ಸುದ್ದಿ ಸಿಕ್ಕಿರಬಹುದು. ಅದಕ್ಕಾಗಿ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಅನ್ನು ಬೆಂಬಲಿಸುವ ಮಾತುಗಳನ್ನಾಡಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದರು. ಮಂಗಳವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪ್ರಸ್ತಾಪಿಸಿದ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೆ ಸಾಲಿನ ಬಜೆಟ್ ಖಾಲಿ ಚೊಂಬು ಎಂದು ಟೀಕಿಸಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಜೆಟ್ ಪ್ರತಿಯನ್ನು ಪೂರ್ತಿ ಓದಿದ ಬಳಿಕ ಅದಕ್ಕೆ ಪ್ರತಿಕ್ರಿಯಿಸುವುದು ಒಪ್ಪಬಹುದಾದ ವಿಷಯ. ಆದರೆ ಬಜೆಟ್ ಅನ್ನು ಅರ್ಧ ಭಾಗವೂ ಓದಿಲ್ಲ. ಆಗಲೇ ಬಿಜೆಪಿಯವರು ವಿಧಾನಸೌಧದ ವರೆಗೆ ಖಾಲಿ ಚೆಂಬು ಹಿಡಿದು ಪ್ರತಿಭಟಿಸಿದ್ದಾರೆ. ಇದು ಪೂರ್ವ ನಿಯೋಜಿತ ಅಲ್ಲವೇ ಎಂದು ಪ್ರಶ್ನಿಸಿದ್ದರು. ಬಜೆಟ್ ಓದುತ್ತಿರುವಾಗ ಅದರಲ್ಲಿ ಏನೂ ಇಲ್ಲ ಎಂದು ಗ್ರಹಿಸಿಕೊಂಡು ಆಗ ಮಾರುಕಟ್ಟೆಯಿಂದ ಚೊಂಬುಗಳನ್ನು ತರಿಸಿದರೆ ನಂಬಬಹುದಿತು. ಆದರೆ ಬಿಜೆಪಿಯವರು ಮೊದಲೇ ಪೂರ್ವ ನಿರ್ಧರಿತರಾಗಿ ಚೊಂಬು ತಂದಿದ್ದು, ಇದು ರಾಜಕೀಯ ಟೀಕೆಯಾಗಿದೆ. ಅಲ್ಲದೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಅನ್ನು ನಾವು ಖಾಲಿ ಡ್ರಮ್ ಎಂದು ಕರೆಯಬಹುದೇ ಎಂದು ಪ್ರಶ್ನಿಸಿದರು. ಆಗ ಮಧ್ಯಪ್ರವೇಶಿಸಿದ ಅರವಿಂದ ಬೆಲ್ಲದ್, ಹೊಸದಿಲ್ಲಿಗೆ ಹೋಗಿ ಬಂದಿರುವ ಡಿ.ಕೆ.ಶಿವಕುಮಾರ್ ಅವರಿಗೆ ಸಿಹಿ ಸುದ್ದಿ ಸಿಕ್ಕಿರಬಹುದು. ಅದಕ್ಕಾಗಿ ಈಗ ಸಿದ್ದರಾಮಯ್ಯ ಅವರ ಪರವಾಗಿ ಡಿ.ಕೆ.ಶಿವಕುಮಾರ್ ಮಾತನಾಡುತ್ತಿದ್ದಾರೆ ಎಂದು ಉಲ್ಲೇಖಿಸಿದರು.
ರಾಯಚೂರು | ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಸಬಲೀಕರಣಕ್ಕೆ ಸಾಕ್ಷಿ: ಡಾ.ನಂದಿತಾ
ರಾಯಚೂರು: ಈ ಹಿಂದೆ ಮನೆಗಷ್ಟೇ ಸೀಮಿತವಾಗಿದ್ದ ಮಹಿಳೆಯರು ಈಗ ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬಂದು ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಇದು ಮಹಿಳಾ ಸ್ವಾಭಿಮಾನ ಮತ್ತು ಸಬಲೀಕರಣಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ನಂದಿತಾ ಎಂ.ಎನ್. ಹೇಳಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ಸೋಮವಾರ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣ, ರಾಜಕೀಯ, ವಿಜ್ಞಾನ, ಸಂಸ್ಕೃತಿ ಹಾಗೂ ಕ್ರೀಡೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮದೇ ಆದ ಗುರುತು ಮೂಡಿಸಿದ್ದಾರೆ. ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ರಂಗೋಲಿ ಸ್ಪರ್ಧೆ ಮಹಿಳೆಯರ ಸಾಮರ್ಥ್ಯವನ್ನು ಪ್ರತಿಬಿಂಬಿಸುವಂತಿದೆ ಎಂದು ಹೇಳಿದರು. ಮಹಿಳಾ ದಿನಾಚರಣೆ ಹೆಣ್ಣುಮಕ್ಕಳ ಅಸ್ತಿತ್ವ ಮತ್ತು ಗುರಿ ಸಾಧನೆಯನ್ನು ಜಗತ್ತಿಗೆ ಪರಿಚಯಿಸುವ ಮಹತ್ವದ ದಿನವಾಗಿದೆ. ಇಡೀ ಮಾರ್ಚ್ ತಿಂಗಳಲ್ಲಿ ಮಹಿಳೆಯರ ಸಾಧನೆಗಳನ್ನು ಗುರುತಿಸುವ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ಮಹಿಳೆ ತಾಯಿ, ಸಹೋದರಿ, ಸ್ನೇಹಿತೆ, ಪತ್ನಿ ಹಾಗೂ ಮಗಳಾಗಿ ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಾಳೆ ಎಂದು ಹೇಳಿದರು. ಬಹುಬಣ್ಣದ ರಂಗೋಲಿ ಚಿತ್ತಾರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೃಷ್ಣ ಸಭಾಂಗಣದಲ್ಲಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಮಹಿಳಾ ಸಿಬ್ಬಂದಿ ಬಹುಬಣ್ಣದ ರಂಗೋಲಿ ಮೂಲಕ ಮಹಿಳಾ ಶಕ್ತಿಯನ್ನು ಪ್ರತಿಬಿಂಬಿಸಿದರು. ನಾಗರತ್ನ ಅವರ ರಂಗೋಲಿ ಭ್ರೂಣದ ಹಂತದಿಂದಲೇ ಹೆಣ್ಣುಮಕ್ಕಳ ಕಾಳಜಿ ವಹಿಸಿದರೆ ಮಹಿಳೆ ಸಮಾಜ ಹಾಗೂ ದೇಶಕ್ಕೆ ಮಹತ್ವದ ಕೊಡುಗೆ ನೀಡುವ ಸಾಧಕಿಯಾಗುತ್ತಾಳೆ ಎಂಬ ಸಂದೇಶ ನೀಡಿತು. ಸುವರ್ಣ ಅವರ ರಂಗೋಲಿ ಹೆಣ್ಣಿನ ಜೀವನದ ಕನಸುಗಳಿಗೆ ಬಣ್ಣ ತುಂಬುವ ಧೈರ್ಯ ಹಾಗೂ ಆತ್ಮವಿಶ್ವಾಸದ ಸಂಕೇತವಾಗಿ ಮೂಡಿಬಂದಿತು. ಶಾಲಿನಿ ಅವರ ರಂಗೋಲಿ ಮಹಿಳೆಯ ದೃಢ ವಿಶ್ವಾಸ, ಸಹನೆ, ಪ್ರಾಮಾಣಿಕತೆ, ಧೈರ್ಯ ಹಾಗೂ ಮಮತೆಯನ್ನು ಪ್ರಕೃತಿಯ ರೂಪದಲ್ಲಿ ತೋರಿಸುವ ಪ್ರಯತ್ನ ಮಾಡಿತು. ಗೀತಾ ಅವರ ರಂಗೋಲಿ ನಾರಿಶಕ್ತಿ ಸಮಾಜದ ಪ್ರಗತಿಗೆ ಮೂಲ ಎನ್ನುವ ಸಂದೇಶವನ್ನು ಗ್ರಾಮೀಣ ಸೊಗಡಿನಲ್ಲಿ ಚಿತ್ರಿಸಿತು. ಮೇಘನಾ ಅವರ ರಂಗೋಲಿ ಆರೋಗ್ಯಕರ ತಾಯಿ ಮತ್ತು ಆರೋಗ್ಯವಂತ ಮಗು ಸಮಾಜದ ಸಂಪತ್ತಾಗಿದ್ದು, ಹೆಣ್ಣುಮಗುವನ್ನು ಉಳಿಸಿ ಬೆಳಸಬೇಕು ಎಂಬ ಸಂದೇಶ ನೀಡಿತು. ಲಕ್ಷ್ಮಿ ಅವರ ರಂಗೋಲಿ ಆರೋಗ್ಯ ಸುರಕ್ಷತೆಯಿಂದ ಸುಂದರ ಬದುಕು ಸಾಧ್ಯ ಎನ್ನುವ ಸಂದೇಶವನ್ನು ಕೈಯಲ್ಲಿ ಹಣತೆ ಹಿಡಿದು ಹೆಜ್ಜೆ ಹಾಕುವ ದೃಶ್ಯದ ಮೂಲಕ ವ್ಯಕ್ತಪಡಿಸಿತು. ಈ ಸಂದರ್ಭದಲ್ಲಿ ತೀರ್ಪುಗಾರರಾದ ಡಾ.ಶೀಲಶ್ರೀ ಮಾತನಾಡಿ, ಯಾವುದೇ ರೇಖಾಚಿತ್ರ ಬಳಸದೆ ರಚಿಸಿದ ರಂಗೋಲಿಗಳನ್ನು ಅಂತಿಮ ಆಯ್ಕೆ ಮಾಡಲಾಗಿದ್ದು, ಬಹುಮಾನಗಳನ್ನು ಮುಂದಿನ ದಿನಗಳಲ್ಲಿ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು.
ಸಿಂಧನೂರು | ವೃದ್ಧೆ ಮೃತ್ಯು: ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಪ್ರತಿಭಟನೆ
ಸಿಂಧನೂರು: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಕುಟುಂಬಸ್ಥರು ಮೃತದೇಹವನ್ನು ರಸ್ತೆಯ ಮೇಲೆ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಂಗಮ್ಮ ಶಿವಪ್ಪ (80) ಮೃತಪಟ್ಟ ವೃದ್ಧೆ. ಕುಟುಂಬಸ್ಥರು ಮಧ್ಯಾಹ್ನ ಚಿಕಿತ್ಸೆಗಾಗಿ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ವೈದ್ಯೆ ಡಾ. ಕೊನಿಕಾ ಕಟ್ವಾ ಸರಿಯಾಗಿ ಚಿಕಿತ್ಸೆ ನೀಡಿಲ್ಲದ ಕಾರಣ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದರು. ಸಕಾಲಕ್ಕೆ ಆಕ್ಸಿಜನ್ ನೀಡದೆ ಹಾಗೂ ಸರಿಯಾದ ಚಿಕಿತ್ಸೆ ಕೊಡದೆ ನಿರ್ಲಕ್ಷ್ಯ ತೋರಲಾಗಿದೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆ ಎದುರಿನ ರಾಯಚೂರು ಮುಖ್ಯರಸ್ತೆಯಲ್ಲಿ ಇಟ್ಟು ರಸ್ತೆತಡೆ ನಡೆಸಿದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಕುಟುಂಬಸ್ಥರನ್ನು ಸಮಾಧಾನಪಡಿಸಲು ಹರಸಾಹಸ ಪಟ್ಟರು. ನಂತರ ಮನವೊಲಿಸಿ ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಯಿತು. ಕುಟುಂಬಸ್ಥರ ಆಕ್ರೋಶದಿಂದ ಆಸ್ಪತ್ರೆ ಎದುರು ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ವೈದ್ಯರು ನಿರ್ಲಕ್ಷ್ಯ ತೋರಿದ್ದು ಮಾತ್ರವಲ್ಲದೆ ಮೃತದೇಹದತ್ತ ಕೂಡ ಗಮನ ಹರಿಸಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದರು. ರಸ್ತೆತಡೆಯಿಂದ ಕೆಲ ಗಂಟೆಗಳ ಕಾಲ ಸಂಚಾರಕ್ಕೂ ತೊಂದರೆ ಉಂಟಾಯಿತು. ಸಂಧಾನ ಪ್ರಯತ್ನ ಘಟನೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಆರ್ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ ಸೇರಿದಂತೆ ರಾಜಕೀಯ ಮುಖಂಡರು ಹಾಗೂ ಪೊಲೀಸ್ ಅಧಿಕಾರಿಗಳು ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ಕರ್ತವ್ಯನಿರತ ವೈದ್ಯರೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಶಮನಗೊಳಿಸಲಾಯಿತು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಕೋನಿಕಾ ಕಾಟ್ವಾ, ವೃದ್ಧೆ ಆಸ್ಪತ್ರೆಗೆ ದಾಖಲಾದಾಗ ಅಗತ್ಯ ಚಿಕಿತ್ಸೆ ನೀಡಲಾಗಿದೆ. ದಾಖಲಾದ ಸಂದರ್ಭದಲ್ಲಿ ರೋಗಿಗೆ ಆಕ್ಸಿಜನ್ ಕೊರತೆ ಅಥವಾ ರಕ್ತದೊತ್ತಡ ಸಮಸ್ಯೆ ಕಂಡುಬಂದಿಲ್ಲ. ವಯೋಸಹಜ ಸಮಸ್ಯೆ ಹಾಗೂ ತುರ್ತು ಹೃದಯಾಘಾತದಿಂದ ವೃದ್ಧೆ ಮೃತಪಟ್ಟಿದ್ದಾರೆ. ಆ ಸಮಯದಲ್ಲಿ ತುರ್ತು ಚಿಕಿತ್ಸೆಗೆ ನಾಲ್ವರು ರೋಗಿಗಳು ಒಂದೇ ವೇಳೆ ದಾಖಲಾಗಿದ್ದರು. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಕ್ಷಮೆಯಾಚಿಸಿದ ಮುಖ್ಯ ವೈದ್ಯಾಧಿಕಾರಿ ಘಟನೆ ಕುರಿತು ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಡಾ.ಸುರೇಶ್ ಗೌಡ , ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದರೂ ತೀವ್ರ ಹೃದಯಾಘಾತದಿಂದ ವೃದ್ಧೆ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ವೇಳೆ ವೈದ್ಯರು ಯಾವುದೇ ನಿರ್ಲಕ್ಷ್ಯ ತೋರಿಲ್ಲ. ವೈದ್ಯರು ರೋಗಿಗಳ ಜೀವದ ಬಗ್ಗೆ ಸದಾ ಕಾಳಜಿ ವಹಿಸುತ್ತಾರೆ. ಈ ಘಟನೆಯ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡುತ್ತಾ ಕ್ಷಮೆಯಾಚಿಸಿದರು ಎಂದು ತಿಳಿಸಿದರು.
ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ಎಲ್ಲ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಂಗಳವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ನೀರು ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಫ್ಲಶಿಂಗ್ ಮತ್ತು ಆಳಗೊಳಿಸುವುದರೊಂದಿಗೆ ನೀರಿನ ಮೂಲಗಳನ್ನು ಹೆಚ್ಚಿಸಲಾಗುವುದು, ಅನಿವಾರ್ಯ ಸಂದರ್ಭಗಳಲ್ಲಿ ಕೊಳವೆಬಾವಿಗಳನ್ನು ಕೊರೆಯುವುದು ಅತ್ಯಗತ್ಯವೆಂದು ಕಂಡು ಬಂದಲ್ಲಿ, ಸಂಬಂಧಪಟ್ಟ ಭೂವಿಜ್ಞಾನಿಗಳ ವರದಿಯನುಸಾರ ಸೂಕ್ತ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕಾಮಗಾರಿಗಳನ್ನು ಕೈಗೊಳ್ಳಲು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯವು ಮೂಲತಃ ಶುಷ್ಕ ಪ್ರದೇಶವಾಗಿರುವುದರಿಂದ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಂಭವವಿರುತ್ತದೆ. ಈ ಸಮಸ್ಯೆಯನ್ನು ದೈನಂದಿನ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಲು ಕ್ರಮವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಆದುದರಿಂದ, ಗ್ರಾಮೀಣ ಪ್ರದೇಶದ ಜನರಿಗೆ ನೀರಿನ ಅಭಾವ ಎದುರಾದ್ದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲು ಈಗಾಗಲೆ ಹೊರಡಿಸಲಾಗಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಮಟ್ಟದಲ್ಲಿ ಪ್ರಾಥಮಿಕ ಹಂತವಾಗಿ ಎಲ್ಲ ಕುಡಿಯುವ ನೀರಿನ ಮೂಲಗಳ ಮಾದರಿಗಳನ್ನು, ಪ್ರತಿ ಗ್ರಾಮದಲ್ಲಿ ಕನಿಷ್ಠ 3 ನಳ ನೀರು ಸಂಪರ್ಕಗಳ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೂಡಲೇ ಕೈಗೊಂಡು ಮಾಹಿತಿಗಳನ್ನು ದಾಖಲಿಸಲು ಸೂಚಿಸಲಾಗಿದೆ. ಎಲ್ಲ ಕುಡಿಯುವ ನೀರಿನ ಮೇಲ್ಮಟ್ಟದ ಜಲಸಂಗ್ರಹಾರಗಳನ್ನು ಮಾರ್ಗಸೂಚಿಗಳ ಅನ್ವಯ ಶುಚಿಗೊಳಿಸಲು ಸೂಕ್ತ ಕ್ರಮವಹಿಸುವಂತೆಯೂ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ: ರಾಜ್ಯದಲ್ಲಿ ಈಗಾಗಲೆ 21 ಜಿಲ್ಲೆಗಳ 144 ತಾಲೂಕುಗಳ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುದೆ. ಇವುಗಳ ಪೈಕಿ 31 ಗ್ರಾಮಗಳಿಗೆ 96 ಟ್ಯಾಂಕರ್ಗಳ ಮುಖಾಂತರ ಹಾಗೂ 152 ಗ್ರಾಮಗಳಿಗೆ 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಇದೇ ಮಾರ್ಚ್ ನಲ್ಲಿ ಫ್ಲಷಿಂಗ್ ಹಾಗೂ ಆಳಗೊಳಿಸುವ ಮೂಲಕ 1053 ಕೊಳವೆ ಬಾವಿಗಳನ್ನು ದುರಸ್ತಿಗೊಳಿಸುವುದು ಹಾಗೂ ತುರ್ತು ಸಂದರ್ಭಗಳಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯುವುದು ಅವಶ್ಯಕವೆಂದು ನಿರೀಕ್ಷಿಸಲಾಗಿದ್ದು, ಆದ್ಯತೆಯ ಮೇರೆಗೆ ಕ್ರಮವಹಿಸಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ರಾಜ್ಯದ ಎಲ್ಲ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯಗಳ ಬರ ಪರಿಹಾರ ನಿಧಿ ಹಾಗೂ ಇಲಾಖೆಯ ಟಾಸ್ಕ್ ಫೋರ್ಸ್ ಅಡಿ ಸಂಯೋಜಿತಗೊಳಿಸಿ ಬಳಸಿಕೊಂಡು ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸಲು ಗ್ರಾಮ ಪಂಚಾಯತಿಗಳು, ತಾಲೂಕು ಪಂಚಾಯತಿಗಳು ಹಾಗೂ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ ಕೈಗೊಂಡು ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಯಾರಾಡಿದರೂ ಆಡದಿದ್ದರೂ ಗೆಲುವೊಂದೇ ಮಂತ್ರ; ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಬೆಂಚ್ ಸ್ಟ್ರೆಂಥ್ ಕಂಡೆಯಾ!
ICC T20 World Cup 2026- ಯಾವುದೇ ಒಂದು ವಿಶ್ವಶ್ರೇಷ್ಠ ತಂಡದ ದೀರ್ಘಕಾಲೀನ ಯಶಸ್ಸು ನಿರ್ಧಾರ ಆಗುವುದು ಆ ತಂಡದ ಬೆಂಚ್ ಸ್ಟ್ರೇಂಥ್ ಮೇಲೆ. 80ರ ದಶಕದಲ್ಲಿ ವೆಸ್ಟ್ ಇಂಡೀಸ್, 90ರ ದಶಕದಲ್ಲಿ ಆಸ್ಟ್ರೇಲಿಯಾ ತಂಡಗಳ ಪ್ರಾಬಲ್ಯಗಳ ಹಿಂದಿನ ಗುಟ್ಟೇ ಆ ತಂಡದ ಆಯ್ಕೆಗೆ ಲಭ್ಯರಿದ್ದ ಆಟಗಾರರ ದೊಡ್ಡ ದಂಡು. ಇದೀಗ ಭಾರತದ ಸತತ 2ನೇ ಬಾರಿ ಟಿ20 ವಿಶ್ವಕಪ್ ಗೆದ್ದಿರುವ ಭಾರತ ತಂಡದ ಆಟಗಾರರ ಬಗ್ಗೆಯೂ ಇದೇ ಚರ್ಚೆ ನಡೆಯುತ್ತಿದೆ.
'ಭೂಪಟದಲ್ಲೇ ಇಲ್ಲವಾಗದಂತೆ ಎಚ್ಚರವಹಿಸಿ, ಗೊಡ್ಡು ಬೆದರಿಕೆಗೆ ಜಗ್ಗುವುದಿಲ್ಲ' : ಟ್ರಂಪ್’ಗೆ ಇರಾನ್ ವಾರ್ನಿಂಗ್
Iran Vs Donal Trump : ಯುದ್ದ ಕೆಲವು ದಿನಗಳಲ್ಲಿ ಮುಗಿಯಬಹುದು ಎನ್ನುವ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಇರಾನ್ ತಿರುಗೇಟು ನೀಡಿದೆ. ಯುದ್ದ ಯಾವಾಗ ನಿಲ್ಲಬೇಕು ಎನ್ನುವುದನ್ನು ನಾವು ನಿರ್ಧರಿಸುವುದು. ನೀವೇ ಇಲ್ಲವಾಗದಂತೆ ಮೊದಲು ಎಚ್ಚರ ವಹಿಸಿ ಎನ್ನುವ ವಾರ್ನಿಂಗ್ ಅನ್ನು ಇರಾನ್ ಅಧಿಕಾರಿಯೊಬ್ಬರು ನೀಡಿದ್ದಾರೆ.
ಎಲ್ಪಿಜಿ ಬಿಕ್ಕಟ್ಟು ಪರಿಹಾರಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಸಂಸ್ಕರಣಾಗಾರಗಳಲ್ಲಿ ಎಲ್ಪಿಜಿ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಇನ್ನು ವಾಣಿಜ್ಯ ಪೂರೈಕೆಗಳ ಪರಿಶೀಲನೆಗೆ ಸಮಿತಿ ರಚನೆ ಮಾಡಲಾಗಿದೆ. ವಾಣಿಜ್ಯೇತರ ವಲಯಗಳಿಗೆ ಬೇಡಿಕೆ ಅನುಗುಣವಾಗಿ ಎಲ್ಪಿಜಿ ಪೂರೈಸಲು ತೀರ್ಮಾನಿಸಲಾಗಿದೆ. ಈ ಮೂಲಕ ಬಿಕ್ಕಟ್ಟು ಪರಿಹಾರವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.
'ಒನ್ ವರ್ಲ್ಡ್ ಒನ್ ಫ್ಯಾಮಿಲಿ' ಮಿಷನ್ ಸಲಹಾ ಮಂಡಳಿಗೆ ಭಾರತದ ನಾಲ್ವರು ಅಗ್ರಗಣ್ಯ ನಾಯಕರ ಸೇರ್ಪಡೆ
OWOF: ಮಾನವೀಯ ಸೇವಾ ಕ್ಷೇತ್ರದಲ್ಲಿ ದೇಶ-ವಿದೇಶಗಳಲ್ಲಿ ಗಮನ ಸೆಳೆದಿರುವ ಒನ್ ವರ್ಲ್ಡ್ ಒನ್ ಫ್ಯಾಮಿಲಿ (OWOF) ಮಿಷನ್ನ ಸಂಸ್ಥೆಗಳ ಸಲಹಾ ಮಂಡಳಿಗೆ ಭಾರತದ ಉದ್ಯಮ, ಹಣಕಾಸು ಹಾಗೂ ಆಡಳಿತ ವಲಯದ ನಾಲ್ವರು ಪ್ರಮುಖ ನಾಯಕರು ಸೇರ್ಪಡೆಯಾಗಿದ್ದಾರೆ. ಎಚ್ಡಿಎಫ್ಸಿ ಲಿಮಿಟೆಡ್ನ ಮಾಜಿ ಅಧ್ಯಕ್ಷ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ದೀಪಕ್ ಪರೇಖ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS)ನ ಮಾಜಿ
ಉಡುಪಿ: ಮಾ. 13ರಿಂದ ಮುರಾರಿ- ಕೆದ್ಲಾಯ ರಂಗೋತ್ಸವ
ಉಡುಪಿ, ಮಾ.10: ಉಡುಪಿಯ ಸಾಂಸ್ಕೃತಿಕ ವೇದಿಕೆ ರಥಬೀದಿ ಗೆಳೆಯರು ಆಶ್ರಯದಲ್ಲಿ ಪ್ರತಿವರ್ಷ ನಡೆಯುವ ಮುರಾರಿ- ಕೆದ್ಲಾಯ ರಂಗೋತ್ಸವ ಮಾರ್ಚ್ 13, 14 ಮತ್ತು 15ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ. ಮಾ.13ರ ಶುಕ್ರವಾರ ಸಂಜೆ 5:45ಕ್ಕೆ ರಂಗೋತ್ಸವವನ್ನು ಮೈಸೂರು ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮತ್ತು ಉಡುಪಿ ಎಂ.ಜಿ.ಎಂ.ಕಾಲೇಜು ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ನಂತರ ರಂಗಾಯಣ ಮೈಸೂರು ರೆಪರ್ಟರಿ ಕಲಾವಿದರಿಂದ ಅಂಬೇಡ್ಕರ್ ಕೊಲಾಜ್ (ರಚನೆ: ಕೋಟಿಗಾನಹಳ್ಳಿ ರಾಮಯ್ಯ, ನಿರ್ದೇಶನ:ಚಿದಂಬರರಾವ್ ಜಂಬೆ) ನಾಟಕ ಪ್ರದರ್ಶನ ಗೊಳ್ಳಲಿದೆ. ಮಾ.14ರ ಶನಿವಾರ ಸಂಜೆ 6:30ಕ್ಕೆ ಸಮುದಾಯ ಶಿವಮೊಗ್ಗ ಕಲಾವಿದರಿಂದ ನೀರೊಳಗಣ ಕಿಚ್ಚು (ರಂಗರೂಪ: ಡಾ.ಸಾಸ್ವೇಹಳ್ಳಿ ಸತೀಶ್, ಐ.ಕೆ. ಬೊಳುವಾರು, ನಿರ್ದೇಶನ: ಡಾ.ಸಾಸ್ವೇಹಳ್ಳಿ ಸತೀಶ್) ನಾಟಕ ಪ್ರದರ್ಶನಗೊಳ್ಳಲಿದೆ. ಮಾ.15ರ ರವಿವಾರ ಸಂಜೆ 6:30ಕ್ಕೆ ಸಮುದಾಯ ಬೆಂಗಳೂರು ಕಲಾ ವಿದರಿಂದ ‘ಭಗವಂತನ ಮರಣ’ (ಮಲಯಾಳಂ ಮೂಲ ಕತೆ: ಕೆ.ಆರ್. ಮೀರಾ, ಕನ್ನಡಕ್ಕೆ: ಕೆ.ಪ್ರಭಾಕರನ್, ರಂಗರೂಪ/ನಿರ್ದೇಶನ: ಡಾ.ಸ್ಯಾಮ್ ಕುಟ್ಟಿ ಪಟ್ಟಂಕರಿ) ನಾಟಕ ಪ್ರದರ್ಶನಗೊಳ್ಳಲಿದೆ ರಥಬೀದಿ ಗೆಳೆಯರು ಅಧ್ಯಕ್ಷ ಉದ್ಯಾವರ ನಾಗೇಶಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು
Iran-Israel-US War Upate: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ಬರೋಬ್ಬರಿ ಹನ್ನೊಂದು ದಿನ ಪೂರೈಸಿದ್ದು, ಇಂದು (ಮಾ.10) ಮಂಗಳವಾರ ಸಹ ಕ್ಷಿಪಣಿ ದಾಳಿಗಳು ಮುಂದುವರಿದಿವೆ. ಮತ್ತೊಂದೆಡೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಫ್ ಯುದ್ಧ ಮುಗಿದಿದೆ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಇರಾನ್ ಹಾರ್ಮುಜ್ ಜಲಸಂಧಿ ಮೇಲೆ ಹಿಡಿತ ಬಿಗಿಗೊಳಿಸುತ್ತಿದ್ದು, ಯುಎಸ್ ಎಚ್ಚರಿಕೆ ನೀಡಿದೆ. ದಾಳಿಯಿಂದಾಗಿ ಇರಾನ್ನ ಕೆಲವು ತೈಲ
Bidar | ಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ
ಬೀದರ್: ಧನ್ನೂರು ಪೊಲೀಸ್ ಠಾಣೆಯ ಪೊಲೀಸರು ಕಳ್ಳತನ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಐದು ಲಕ್ಷಕ್ಕೂ ಅಧಿಕ ಮೌಲ್ಯದ ಎರಡು ಕಾರುಗಳು ಹಾಗೂ ಕೇಬಲ್ ವೈರ್ ವಶಕ್ಕೆ ಪಡೆದಿದ್ದಾರೆ. ಧನ್ನೂರು ಪೊಲೀಸ್ ಠಾಣೆಯ ಪಿಎಸ್ಐ ರಾಜಕುಮಾರ್ ಜಾಮಗೊಂಡ ಅವರ ನೇತೃತ್ವದಲ್ಲಿ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒಳಗೊಂಡ ತಂಡವನ್ನು ರಚಿಸಿ, ಸಿಸಿಟಿವಿ ಕಂಟ್ರೋಲ್ ಕಮಾಂಡ್ ಸೆಂಟರ್ನ ಕ್ಯಾಮೆರಾ ದೃಶ್ಯಗಳು ಮತ್ತು ಬಾತ್ಮಿದಾರರಿಂದ ಪಡೆದ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು ಧನ್ನೂರು ಪೊಲೀಸ್ ಠಾಣೆಯ ಒಂದು ಪ್ರಕರಣ ಹಾಗೂ ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಎರಡು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಸುಮಾರು 5 ಲಕ್ಷ ರೂ. ಮೌಲ್ಯದ ಎರಡು ಕಾರುಗಳು, 35 ಸಾವಿರ ರೂ. ನಗದು ಹಾಗೂ ಸುಮಾರು 3 ಸಾವಿರ ರೂ. ಮೌಲ್ಯದ 90 ಅಡಿ ಕೇಬಲ್ ವೈರ್ ಜಪ್ತಿ ಮಾಡಲಾಗಿದೆ. ಈ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಹಾಗೂ ಪತ್ತೆ ಕಾರ್ಯವನ್ನು ಪೊಲೀಸರು ಮುಂದುವರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ LPG ಇಂಧನದ ಕೊರತೆಯಿಲ್ಲ : ಕೇಂದ್ರ ಸರಕಾರ ಸ್ಪಷ್ಟನೆ
“ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರಿಕೆ”

22 C