IND vs NZ: ಎರಡನೇ ಟಿ20ಐ ಪಂದ್ಯಕ್ಕೆ ಭಾರತ ತಂಡದಲ್ಲಿ ಎರಡು ಬದಲಾವಣೆ ಸಾಧ್ಯತೆ!
T20 World Cup 2026: ಟಿ20 ವಿಶ್ವಕಪ್ ಬಹಿಷ್ಕರಿಸಿದ ಬಾಂಗ್ಲಾದೇಶ
T20 World Cup Shock: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಸಿಸಿಐ ವಿರುದ್ಧ ತನ್ನ ನಿಲುವಿಗೆ ಅಂಟಿಕೊಂಡು, ಮುಂಬರುವ ಟಿ20 ವಿಶ್ವಕಪ್ನಿಂದ ತನ್ನ ತಂಡವನ್ನು ಹಿಂಪಡೆದಿದೆ. ಇದು ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್ನಿಂದ ಹೊರಬೀಳುವುದಕ್ಕೆ ಕಾರಣವಾಗಿದೆ. ಐಸಿಸಿ ನೀಡಿದ ಗಡುವಿನ ಬಳಿಕ ಢಾಕಾದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಇದರಿಂದಾಗಿ ಬಾಂಗ್ಲಾದೇಶದ ಸ್ಥಾನದಲ್ಲಿ ಸ್ಕಾಟ್ಲೆಂಡ್ ತಂಡಕ್ಕೆ ಟಿ20 ವಿಶ್ವಕಪ್ನಲ್ಲಿ ಆಡುವ ಅವಕಾಶ ದೊರೆತಿದೆ.
ಪಾಕಿಸ್ತಾನದ ಕರಾಚಿ ಶಾಪಿಂಗ್ ಮಾಲ್ನಲ್ಲಿ ಬೆಂಕಿ ದುರಂತ: ಸಾವಿನ ಸಂಖ್ಯೆ 55ಕ್ಕೆ ಏರಿಕೆ
ನೀರುಪಾಲಾಗಿದ್ದ ನಾಲ್ವರ ಶವ ಹುಡುಕಿ ಕೊಟ್ಟ ಮುಳುಗು ತಜ್ಞ: ಮಾತು ಉಳಿಸಿಕೊಂಡ ಈಶ್ವರ್ ಮಲ್ಪೆ
ಶಿವಮೊಗ್ಗದ ಭದ್ರಾವತಿ ಅರಬಿಳಚಿ ಕ್ಯಾಂಪ್ನಲ್ಲಿ ನೀರು ಪಾಲಾಗಿದ್ದ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಇದೀಗ ನಾಲ್ಕು ದಿನಗಳ ಶೋಧ ಕಾರ್ಯಾಚರಣೆ ಬಳಿಕ ಪತ್ತೆ ಆಗಿವೆ. ಶವ ಪತ್ತೆ ಮಾಡಿ ಇಲ್ಲಿಂದ ಹೋಗುತ್ತೇನೆ ಎಂದಿದ್ದ ಮುಳುಗು ತಜ್ಞ ಈಶ್ವರ್ ಮಲ್ಪೆ, ಇದೀಗ ಮೃತದೇಹಗಳನ್ನು ಮತ್ತೆ ಮಾಡುವ ಆ ಮೂಲಕ ತಮ್ಮ ಮಾತು ಉಳಿಸಿಕೊಂಡಿದ್ದಾರೆ. ದುಖಃದ ಸಂದರ್ಭದಲ್ಲಿ ಸದ್ಯ ಮೃತದೇಹಗಳು ಪತ್ತೆ ಆಗಿದ್ದು, ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ತಹಶೀಲ್ದಾರ್ರಿಂದ ಕಿರುಕುಳ ಆರೋಪ: ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್
ಹಾಸನ ಜಿಲ್ಲೆಯ ಬೇಲೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಚೇರಿ ಮುಂಭಾಗದಲ್ಲೇ ಮಾತ್ರೆ ಸೇವಿಸಿರುವ ತನ್ವೀರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ ಕೌಂಟುಬಿಕ ಕಲಹ ವಿಚಾರವಾಗಿ ವ್ಯಕ್ತಿಯೋರ್ವ ನ್ಯಾಯಾಲಯದಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 5ನೇ ಹೆಚ್ಚುವರಿ ಕೋರ್ಟ್ನಲ್ಲಿ ನಡೆದಿದೆ.
ಬಿಗ್ಬಾಸ್ ಗೆದ್ದ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಆಶೀರ್ವಾದ: ಚಿತ್ರಗಳ ನೋಡಿ
Bigg Boss Kannada 12: ಗಿಲ್ಲಿ ನಟ ಬಿಗ್ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿದ್ದು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭೇಟಿಯಾಗಿ ಅವರ ಆಶೀರ್ವಾದ ಸಹ ಪಡೆದಿದ್ದಾರೆ. ಗಿಲ್ಲಿ ನಟ, ಇಂದು (ಜನವರಿ 22) ವಿಧಾನಸೌಧಕ್ಕೆ ತೆರಳಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಬಿಗ್ಬಾಸ್ ಗೆದ್ದಿದ್ದಕ್ಕೆ ಗಿಲ್ಲಿಯನ್ನು ಸಿಎಂ ಅಭಿನಂಧಿಸಿದ್ದಾರೆ.
ಸುಕನ್ಯಾ ಸಮೃದ್ಧಿ ಯೋಜನೆಗೆ 11 ವರ್ಷ; ಈವರೆಗೆ ಶುರುವಾಗಿದ್ದು ನಾಲ್ಕೂವರೆ ಕೋಟಿ ಅಕೌಂಟ್; ಸ್ಕೀಮ್ ಲಾಭಗಳೇನು?
Sukanya Samriddhi Yojana completes 11 years on 2026 January 22nd: 10 ವರ್ಷದೊಳಗಿನ ವಯಸ್ಸಿನ ಹೆಣ್ಮಕ್ಕಳಿಗೆ ಮಾಡಿಸಲಾಗುವ ಸುಕನ್ಯಾ ಸಮೃದ್ಧಿ ಯೋಜನೆ ಆರಂಭಗೊಂಡು 11 ವರ್ಷ ಪೂರ್ಣಗೊಂಡಿದೆ. 2015ರ ಜನವರಿ 22ರಂದು ಶುರುವಾದ ಈ ಯೋಜನೆಯಲ್ಲಿ ಇಲ್ಲಿಯವರೆಗೆ 4.53 ಕೋಟಿ ಖಾತೆಗಳನ್ನು ತೆರೆಯಲಾಗಿದೆ. ಮೂರು ಲಕ್ಷ ಕೋಟಿ ರೂಗೂ ಅಧಿಕ ಹಣದ ಠೇವಣಿ ಈ ಸ್ಕೀಮ್ನ ಖಾತೆಗಳಲ್ಲಿವೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎನ್ಡಿಎ ಸೇರಿದರೆ ಕೇರಳಕ್ಕೆ ದೊಡ್ಡ ಅನುದಾನ ಸಿಗುತ್ತೆ ಎಂದು ಕೇಂದ್ರ ಸಚಿವ ಅಠಾವಳೆ
ಹಿಟ್ಮ್ಯಾನ್ ರೋಹಿತ್ ಶರ್ಮಾ ಇನ್ಮುಂದೆ ಡಾ. ರೋಹಿತ್ ಶರ್ಮಾ
Dr. Rohit Sharma: ಭಾರತ ತಂಡಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ರೋಹಿತ್ ಶರ್ಮಾ ಅವರಿಗೆ ಪುಣೆಯ ಅಜಿಂಕ್ಯ ಡಿವೈ ಪಾಟೀಲ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಸಂದಿದೆ. ಕ್ರಿಕೆಟ್ಗೆ ಅವರ ಅಸಾಧಾರಣ ಕೊಡುಗೆಗಳು, ನಾಯಕತ್ವದಲ್ಲಿ ಎರಡು ಐಸಿಸಿ ಟ್ರೋಫಿಗಳನ್ನು ಗೆದ್ದ ಸಾಧನೆ ಮತ್ತು ಅಂತರರಾಷ್ಟ್ರೀಯ ದಾಖಲೆಗಳಿಗಾಗಿ ಈ ಗೌರವ ನೀಡಲಾಗಿದೆ. ಇನ್ನು ಮುಂದೆ ರೋಹಿತ್ ಶರ್ಮಾ ಡಾ. ರೋಹಿತ್ ಶರ್ಮಾ ಎಂದು ಗುರುತಿಸಿಕೊಳ್ಳಲಿದ್ದಾರೆ.
Karnataka Govt Vs Governor: ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ: ಸಿಎಂ
ಲಕ್ಕುಂಡಿ: ಸಿಕ್ಕ ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಬಂಪರ್ ಗಿಫ್ಟ್,!
Lakkundi Gold Treasure: ಗದಗನ ಲಕ್ಕುಂಡಿಯಲ್ಲಿ ಸಿಕ್ಕ 470 ಗ್ರಾಂ ಬಂಗಾರದ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಸರ್ಕಾರ ಏನು ಸಹಾಯ ಮಾಡಲಿದೆ ಎನ್ನುವ ಬಗ್ಗೆ ಚರ್ಚೆಯಾಗಿತ್ತು. ಉದ್ಯೋಗ ಹಾಗೂ ಸೈಟ್ ನೀಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್ಕೆ ಪಾಟೀಲ್ ಭರವಸೆ ನೀಡಿದ್ದರು. ಅದರಂತೆ ಇದೀಗ ಅಂತಿಮವಾಗಿ ಗ್ರಾಮ ಪಂಚಾಯಿತಿ ಕಡೆಯಿಂದ ರಿತ್ತಿ ಕುಟುಂಬಕ್ಕೆ ಬಂಪರ್ ಗಿಫ್ಟ್ ಸಿಕ್ಕಿದೆ.
ಪ್ರೆಶರ್ ಕುಕ್ಕರ್ ಸ್ಫೋಟಗೊಳ್ಳುವ ಮೊದಲು ಈ ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಈ ಬಗ್ಗೆ ಇರಲಿ ಎಚ್ಚರ
ಈಗಂತೂ ಹೆಚ್ಚಿನವರು ಪ್ರೆಶರ್ ಕುಕ್ಕರ್ನಲ್ಲಿಯೇ ಪ್ರತಿಯೊಂದು ಅಡುಗೆಯನ್ನು ಮಾಡುತ್ತಾರೆ. ಹೀಗೆ ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡಂತಹ ಒಂದಷ್ಟು ಘಟನೆಗಳ ಸುದ್ದಿಗಳು ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಲೇ ಇರುತ್ತವೆ. ಹೀಗಿರುವಾಗ ಕುಕ್ಕರ್ ಸ್ಫೋಟಗೊಳ್ಳದಂತೆ ಯಾವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಮುಖ್ಯವಾಗಿ ಕುಕ್ಕರ್ ಸ್ಫೋಟಗೊಳ್ಳುವ ಮೊದಲು ಯಾವೆಲ್ಲಾ ಸೂಚನೆಗಳು ಕಾಣಿಸಿಕೊಳ್ಳುತ್ತವೆ ಎಂಬುದರ ಮಾಹಿತಿಯನ್ನು ತಪ್ಪದೆ ತಿಳಿದುಕೊಳ್ಳಿ.
ಬೆಂಗಳೂರಲ್ಲೂ ರಸ್ತೆಗಿಳಿದ ಡಬಲ್ ಡೆಕ್ಕರ್ ಬಸ್ಗಳು: ಟಿಕೆಟ್ ದರ, ಬುಕ್ಕಿಂಗ್ ಕುರಿತ ಮಾಹಿತಿ ಇಲ್ಲಿದೆ
ಬೆಂಗಳೂರಿನಲ್ಲಿ ಕೆಎಸ್ಟಿಡಿಸಿ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭಿಸಿದೆ. ನಗರದ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಈ ಐಷಾರಾಮಿ ಬಸ್ಗಳು ಉತ್ತಮ ಅವಕಾಶ ಒದಗಿಸಿದ್ದು, ಒಮ್ಮೆ ಟಿಕೆಟ್ ಪಡೆದು ದಿನವಿಡೀ ಪ್ರಯಾಣಿಸಬಹುದಾಗಿದೆ. ರವೀಂದ್ರ ಕಲಾಕ್ಷೇತ್ರದಿಂದ ಹೊರಟು ಹಲವು ಐತಿಹಾಸಿಕ ಸ್ಥಳಗಳನ್ನು ಹಾದುಹೋಗುವ ಈ ಬಸ್ನಲ್ಲಿ ಸಂಚರಿಸಲು ಬುಕಿಂಗ್ ಮಾಡೋದು ಹೇಗೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
Blackmail Case: ರಾಜ್ಯದ ಖ್ಯಾತ ಸ್ವಾಮೀಜಿಗೆ ಬ್ಲ್ಯಾಕ್ಮೇಲ್; 1 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದ ಮಹಿಳೆ ಅರೆಸ್ಟ್
ʻಅಮೃತ ಅಂಜನ್ʼ ಸಿನಿಮಾವನ್ನು ಟಾರ್ಗೆಟ್ ಮಾಡಲಾಗಿದ್ಯಾ? ಸುಧಾಕರ್ ಗೌಡ ಹೇಳಿದ್ದೇನು?
ಭಾರತದೊಂದಿಗೆ ಟ್ರೇಡ್ ಡೀಲ್; ಯೂರೋಪ್ ಸಂತಸ ಪಡುತ್ತಿರುವುದ್ಯಾಕೆ?
India EU trade deal: ಭಾರತ ಮತ್ತು ಯೂರೋಪಿಯನ್ ಒಕ್ಕೂಟದ ನಡುವಿನ ವ್ಯಾಪಾರ ಒಪ್ಪಂದವು ಎಲ್ಲಾ ಒಪ್ಪಂದಗಳ ರಾಜ ಎಂದು ಬಣ್ಣಿಸಲಾಗುತ್ತಿದೆ. ಇಯು ಕಮಿಷನ್ ಅಧ್ಯಕ್ಷೆ ಉರ್ಸುಲಾ ಅವರು ಈ ಒಪ್ಪಂದದಿಂದ 200 ಬಿಲಿಯನ್ ಜನರ ಮಾರುಕಟ್ಟೆ ಸೃಷ್ಟಿಯಾಗುತ್ತದೆ ಎಂದಿದ್ದಾರೆ. ಒಪ್ಪಂದಕ್ಕಾಗಿ ಮಾತುಕತೆಗಳು ಬಹುತೇಕ ಅಂತ್ಯಗೊಂಡಿದ್ದು, ಅಂತಿಮ ಹಂತದಲ್ಲಿದೆ ಎನ್ನಲಾಗುತ್ತಿದೆ.
ಅಧಿವೇಶನದಲ್ಲಿ ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ನನ್ನ ಸರ್ಕಾರ ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ಅಭಿವೃದ್ಧಿಯನ್ನು ಸರ್ಕಾರ ಎರಡು ಪಟ್ಟು ಹೆಚ್ಚಿಸಲು ಕಟಿಬದ್ಧವಾಗಿದೆ ಎಂದು ಎರಡು ಸಾಲಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು ಜೈಹಿಂದ್, ಜೈ ಕರ್ನಾಟಕ ಎಂದು ಹೇಳಿ ವಿಧಾನಸಭೆಯ ಸದನದಿಂದ ಹೊರನಡೆದರು. ಇದು ಸರ್ಕಾರದ ಆಕ್ರೋಶಕ್ಕೆ ಕಾರಣವಾಗಿದೆ.
ಅಯ್ಯೋ ವಿಧಿಯೇ! ಬುದ್ಧಿ ಮಾತು ಹೇಳಿದ್ದಕ್ಕೆ ಅನಾಯಾಸವಾಗಿ ಕೊಲೆಯಾದ ವ್ಯಕ್ತಿ
ಹುಬ್ಬಳ್ಳಿ ನಗರದ ಗೌಶಿಯಾ ಟೌನ್ನಲ್ಲಿ ಕಳೆದ ರಾತ್ರಿ ಭೀಕರ ಕೊಲೆ ನಡೆದಿದೆ. ಬುದ್ಧಿ ಮಾತು ಹೇಳಿದ್ದಕ್ಕೆ ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಸದ್ಯ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಮನೆಗೆ ಆಧಾರವಾಗಿದ್ದ ವ್ಯಕ್ತಿಯನ್ನ ಕಳೆದುಕೊಂಡ ಕುಟುಂಬ ಕಂಗಾಲಾಗಿದೆ.
ಸೇನಾ ವಾಹನ ಕಮರಿಗೆ ಉರುಳಿ ಹತ್ತು ಯೋದರು ಸಾವು
ಜಮ್ಮು, ಜ.22- ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೇನಾ ವಾಹನವೊಂದು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಹತ್ತು ಯೋಧರು ಸಾವನ್ನಪ್ಪಿದ್ದಾರೆ. ಭಾದೇವಾರ್-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಮೇಲ್ಭಾಗದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಗುಂಡು ನಿರೋಧಕ ಸೇನಾ ವಾಹನವು ಎತ್ತರದ ಪೋಸ್ಟ್ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ ಮತ್ತು ಪೊಲೀಸರ ಜಂಟಿ […] The post ಸೇನಾ ವಾಹನ ಕಮರಿಗೆ ಉರುಳಿ ಹತ್ತು ಯೋದರು ಸಾವು first appeared on Eesanje .
Video: ಜಮ್ಮು-ಕಾಶ್ಮೀರದ ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ, 10 ಸೈನಿಕರು ಸಾವು
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ್ದು, 10 ಮಂದಿ ಸೈನಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 9 ಮಂದಿ ಗಾಯಗೊಂಡಿದ್ದಾರೆ. ವಾಹನವು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಭದೇರ್ವಾ-ಚಂಬಾ ಅಂತಾರಾಜ್ಯ ರಸ್ತೆಯ ಖನ್ನಿ ಟಾಪ್ನಲ್ಲಿ ಈ ಅಪಘಾತ ಸಂಭವಿಸಿದೆ.
ಬಾಂಗ್ಲಾದೇಶ ಟಿ20 ವಿಶ್ವಕಪ್ನಿಂದ ಹಿಂದೆ ಸರಿದರೆ ಟೂರ್ನಿ ಬಹಿಷ್ಕರಿಸುತ್ತೇವೆ; ಪಾಕ್ ತಗಾದೆ
ರಾಜ್ಯಪಾಲರಿಗೆ ಅಪಮಾನ: ವಿಧಾನಸಭೆಯಲ್ಲಿ ಆಡಳಿತ –ವಿಪಕ್ಷಗಳ ನಡುವೆ ವಾಕ್ಸಮರ
ಬೆಂಗಳೂರು,ಜ.22- ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿ ನಿರ್ಗಮಿಸುವ ವೇಳೆ ರಾಜ್ಯಪಾಲರಿಗೆ ಅಪಮಾನ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಬಿಜೆಪಿ ಶಾಸಕರು ಆಗ್ರಹಿಸಿದರೆ, ರಾಷ್ಟ್ರಗೀತೆಗೆ ರಾಜ್ಯಪಾಲರು ಅಗೌರವ ತೋರಿದ್ದಾರೆ ಎಂದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸದಸ್ಯರು ವಿಧಾನಸಭೆಯಲ್ಲಿಂದು ಆರೋಪಿಸಿದರು. ಈ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಪದೇಪದೇ ಮಾತಿನ ಚಕಮಕಿ, ವಾಗ್ವಾದ, ಆರೋಪ-ಪ್ರತ್ಯಾರೋಪ ನಡೆದು ಸದನದಲ್ಲಿ ಕೆಲಕಾಲ ಗೊಂದಲ ನಿರ್ಮಾಣವಾಯಿತು. ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ […] The post ರಾಜ್ಯಪಾಲರಿಗೆ ಅಪಮಾನ: ವಿಧಾನಸಭೆಯಲ್ಲಿ ಆಡಳಿತ – ವಿಪಕ್ಷಗಳ ನಡುವೆ ವಾಕ್ಸಮರ first appeared on Eesanje .
ಗದ್ದಲದ, ಗೊಂದಲದ ನಡುವೆಯೇ ಭೀಮಣ್ಣ ಖಂಡ್ರೆ ಸೇರಿ ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ
ಬೆಂಗಳೂರು,ಜ.22- ರಾಜ್ಯದ ಮಾಜಿ ಸಚಿವರಾದ ಡಾ.ಭೀಮಣ್ಣ ಖಂಡ್ರೆ, ವಿಧಾನಸಭೆಯ ಮಾಜಿ ಸದಸ್ಯರಾದ ಕೆ.ಲಕ್ಕಣ್ಣ ಮತ್ತು ವಿಶ್ವ ವಿಖ್ಯಾತ ಪರಿಸರ ವಿಜ್ಞಾನಿ ಪ್ರೊ ಮಾಧವ ಗಾಡ್ಗೀಳ್ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಸಂತಾಪ ಸಲ್ಲಿಸಲಾಯಿತು.ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರಿಗೆ ಅಪಮಾನ ಮಾಡಲಾಗಿದೆ ಎಂದು ಬಿಜೆಪಿ ಸದಸ್ಯರು ಆಕ್ಷೇಪಿಸಿದರೆ, ರಾಜ್ಯಪಾಲರು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಆರೋಪಿಸಿ ಪರಸ್ಪರ ಮಾತನಾಡುವ ವೇಳೆ ಉಂಟಾದ ಗದ್ದಲದ, ಗೊಂದಲದ ನಡುವೆಯೇ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸಂತಾಪ ಸೂಚನಾ […] The post ಗದ್ದಲದ, ಗೊಂದಲದ ನಡುವೆಯೇ ಭೀಮಣ್ಣ ಖಂಡ್ರೆ ಸೇರಿ ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ first appeared on Eesanje .
Video: 70 ನೇ ವಯಸ್ಸಿನಲ್ಲಿ ಮೊದಲ ವ್ಲಾಗ್, ಈ ವೃದ್ಧನ ಪ್ರಯತ್ನಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ
ಮಕ್ಕಳಿಂದ ಹಿಡಿದು ವೃದ್ಧವರೆಗೂ ಮೊಬೈಲ್ ಕೈಯಲ್ಲಿಡು ಬ್ಲಾಗ್ ಮಾಡುವುದನ್ನು ನೀವು ನೋಡಿರುತ್ತೀರಿ. ಆದರೆ 70 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಮೊದಲ ಬಾರಿಗೆ ವ್ಲಾಗ್ ಮಾಡಿದ್ದಾರೆ. ಇವರ ಮೊದಲ ವಿಡಿಯೋ ವೈರಲ್ ಆಗಿದ್ದು, 72 ಗಂಟೆಗಳಲ್ಲಿ ಮಿಲಿಯನ್ಗಟ್ಟಲೇ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಈ ವಿಡಿಯೋದ ಮೂಲಕಕಲಿಕೆಗೆ ವಯಸ್ಸಿನ ಮಿತಿಯಿಲ್ಲ ಎಂದು ಸಾಭೀತು ಪಡಿಸಿದ್ದಾರೆ. ಕುರಿತಾದ ಸ್ಟೋರಿ ಇಲ್ಲಿದೆ.
ಜಮ್ಮು ಕಾಶ್ಮೀರದಲ್ಲಿ ವಾಹನ ಕಣಿವೆಗೆ ಉರುಳಿ 10 ಮಂದಿ ಸೈನಿಕರು ಹುತಾತ್ಮ
ಹೊತ್ತಿ ಉರಿದ ಶೋರೂಂ: 50 ದ್ವಿಚಕ್ರ ವಾಹನಗಳು ಸುಟ್ಟು ಕರಕಲು
ಬೆಂಗಳೂರು,ಜ.22-ದ್ವಿಚಕ್ರ ವಾಹನ ಶೋರೂಂ ಹಾಗೂ ಸರ್ವಿಸ್ ಸೆಂಟರ್ನಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ 50 ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಕೆ.ಆರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಟಿಸಿಪಾಳ್ಯ ಸಿಗ್ನಲ್ ಬಳಿ ದ್ವಿಚಕ್ರ ವಾಹನ ಶೋರೂಂ ಹಾಗೂ ಸರ್ವಿಸ್ ಸೆಂಟರ್ ಇದ್ದು ರಾತ್ರಿ 10.30 ರ ಸುಮಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಶೋರೂಂ ನಲ್ಲಿದ್ದ ಕೆಲಸಗಾರರು ಹೊರಗೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ನೋಡನೋಡುತ್ತಿದ್ದಂತೆ ಬೆಂಕಿ ಶೋರೂಂ ಹಾಗೂ ಸರ್ವಿಸ್ ಸೆಂಟರ್ ಪೂರ್ತಿ ಆವರಿಸಿಕೊಂಡಿದೆ. […] The post ಹೊತ್ತಿ ಉರಿದ ಶೋರೂಂ: 50 ದ್ವಿಚಕ್ರ ವಾಹನಗಳು ಸುಟ್ಟು ಕರಕಲು first appeared on Eesanje .
ತಮಿಳುನಾಡು ಚುನಾವಣೆ 2026: ದಳಪತಿ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ‘ವಿಷಲ್’ ಚಿಹ್ನೆ ಕೊಟ್ಟ ಚುನಾವಣಾ ಆಯೋಗ
ಚುನಾವಣಾ ಆಯೋಗವು ಗುರುವಾರ ನಟ ದಳಪತಿ ವಿಜಯ್(Thalapathy Vijay) ಅವರ ತಮಿಳಗ ವೆಟ್ರಿ ಕಳಗಂಗೆ ‘ವಿಷಲ್’ ಚಿಹ್ನೆಯನ್ನು ನೀಡಿದೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಚಿಹ್ನೆಯಾಗಿ ಇದನ್ನು ನೀಡಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಪಾರದರ್ಶಕತೆಯನ್ನು ಆಧರಿಸಿದ ಪ್ರಣಾಳಿಕೆಯನ್ನು ರೂಪಿಸಲು ಟಿವಿಕೆ ಮಂಗಳವಾರ ಚೆನ್ನೈನಲ್ಲಿ ತನ್ನ ಮೊದಲ ಚುನಾವಣಾ ಪ್ರಚಾರ ಸಮಿತಿ ಸಭೆಯನ್ನು ಕರೆದ ಕೇವಲ ಎರಡು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.
ತೊಗರಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ, ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ; ಕಲಬುರಗಿಯಲ್ಲಿ ರೈತರ ಪ್ರತಿಭಟನೆ
ಸಿನಿಪ್ರಿಯರಿಗೆ ಖುಷಿ ಸುದ್ದಿ; ಒಟಿಟಿಗೆ ಬರೋಕೆ ರೆಡಿ ಆಯ್ತು ‘ಧುರಂಧರ್’
'ಧುರಂಧರ್' ಚಿತ್ರಮಂದಿರಗಳಲ್ಲಿ ಉತ್ತಮ ಗಳಿಕೆ ಕಂಡ ನಂತರ, ಕೊನೆಗೂ ಜನವರಿ 30ರಂದು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ರಣವೀರ್ ಸಿಂಗ್ ಅಭಿನಯದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 1300 ಕೋಟಿಗೂ ಹೆಚ್ಚು ಗಳಿಸಿ ಇತಿಹಾಸ ನಿರ್ಮಿಸಿದೆ. ಮೊದಲಿಗೆ 30 ದಿನಗಳಲ್ಲಿ OTTಗೆ ಬರಬೇಕಿದ್ದರೂ, ಅದರ ಅಭೂತಪೂರ್ವ ಯಶಸ್ಸಿನ ಕಾರಣದಿಂದ ದಿನಾಂಕವನ್ನು ಮುಂದೂಡಲಾಯಿತು.
ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಮದ್ವೆ ಆಗಬೇಕಿದ್ದವನೇ ಹಂತಕ!
Dharwad Zakia Mulla Murder Case: ಧಾರವಾಡ ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿಯೊಂದರ ಬಳಿ ಪತ್ತೆಯಾಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಮದುವೆಯಾಗಬೇಕಿದ್ದವನೇ ಆಕೆಯೊಂದಿಗೆ ಸಂಜೆವರೆಗೂ ಸುತ್ತಾಡಿ ಬಳಿಕ ಆಕೆಯನ್ನು ಕೊಲೆ ಮಾಡಿದ್ದಾನೆ.
ಬೆಂಕಿಗೆ ಆಹುತಿಯಾದ ಓಲಾ ಸ್ಕೂಟರ್; ಮಗು ಮತ್ತು ತಂದೆ ಕೂದಲೆಳೆ ಅಂತರದಲ್ಲಿ ಪಾರು!
Ketu Transit 2026: ಜ. 25ರಂದು ಕೇತು ಸಂಚಾರ; ಈ ಮೂರು ರಾಶಿಯವರು ಜಾಗರೂಕರಾಗಿರಿ
2026ರ ಜನವರಿ 25ರಂದು ಕೇತು ಗ್ರಹವು ತನ್ನ ನಕ್ಷತ್ರಪುಂಜವನ್ನು ಬದಲಾಯಿಸಲಿದೆ. ಈ ಸಂಚಾರವು ಮಿಥುನ, ತುಲಾ ಮತ್ತು ಮೀನ ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಆರ್ಥಿಕ, ವೃತ್ತಿ ಮತ್ತು ಆರೋಗ್ಯದ ವಿಚಾರದಲ್ಲಿ ಈ ರಾಶಿಗಳವರು ಹೆಚ್ಚು ಜಾಗರೂಕರಾಗಿರಬೇಕು. ಅನಿರೀಕ್ಷಿತ ಸಮಸ್ಯೆಗಳಿಂದ ಪಾರಾಗಲು, ಮಾರ್ಚ್ 29ರವರೆಗೆ ಯಾವುದೇ ಪ್ರಮುಖ ನಿರ್ಧಾರಗಳನ್ನು ಮುಂದೂಡುವುದು ಉತ್ತಮ.
ದಾವೋಸ್ನಲ್ಲೂ ಕರ್ನಾಟಕ ರಾಜಕಾರಣದ್ದೇ ಚರ್ಚೆ: ಸಿಎಂ ಕುರ್ಚಿ ಫೈಟ್ನದ್ದೇ ಸದ್ದು
ದಾವೋಸ್ನಲ್ಲಿ ನಡೆಯುತ್ತಿರುವ ವರ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿರುವ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ಸಿಎಂ ಗಾದಿ ವಿಚಾರವಾಗಿ ಮಾತನಾಡಿ, ಹೈಕಮಾಂಡ್ ತನ್ನನ್ನು ನಿರಾಶೆಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 140 ಶಾಸಕರ ಬೆಂಬಲ ತನಗಿದೆ ಎಂದು ಹೇಳಿದ ಅವರು, ಇದು ಮಾಧ್ಯಮದಲ್ಲಿ ಚರ್ಚಿಸುವ ವಿಷಯವಲ್ಲ. ಪಕ್ಷದ ವರಿಷ್ಠರ ನಿರ್ಧಾರವೇ ಅಂತಿಮ ಎಂದಿದ್ದಾರೆ.

26 C