SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

Zomato: ಮತ್ತೊಂದು ಸುತ್ತು ಉದ್ಯೋಗ ಕಡಿತ ಘೋಷಣೆ ಮಾಡಿದ ಝೊಮ್ಯಾಟೊ

ಬೆಂಗಳೂರು, ಏಪ್ರಿಲ್ 01: ಸಿದ್ಧ ಆಹಾರಗಳನ್ನು ರೆಸ್ಟೋರೆಂಟ್‌ನಿಂದ ಗ್ರಾಹಕರಿಗೆ ತಲುಪಿಸುವ ಫುಡ್‌ ಡೆಲಿವರಿ ಅಪ್ಲಿಕೇಷನ್ ಝೊಮ್ಯಾಟೊ ಮತ್ತೊಂದು ಸುತ್ತಿನ ಉದ್ಯೋಗ ಕಡಿತದ ಘೋಷಣೆಯನ್ನು ಮಾಡಿದೆ. ಸುಮಾರು ಒಂದು ವರ್ಷದ ಹಿಂದೆ ನೇಮಕಗೊಂಡಿದ್ದ 600 ಜನರು ಉದ್ಯೋಗವನ್ನು ಕಳೆದುಕೊಳ್ಳಲಿದ್ದಾರೆ. ಇ-ಕಾಮರ್ಸ್ ಕ್ಷೇತ್ರದ ಬೇಡಿಕೆ ಹೆಚ್ಚುತ್ತಿರುವ ಹೊತ್ತಿನಲ್ಲಿಯೇ ಈ ಉದ್ಯೋಗ ಕಡಿತ ಅಚ್ಚರಿಗೆ ಕಾರಣವಾಗಿದೆ. ಒಂದು ವರ್ಷದ ಹಿಂದೆ ಝೊಮ್ಯಾಟೊ

ಒನ್ ಇ೦ಡಿಯ 1 Apr 2025 4:49 pm

Karnataka Government Jobs: ಸಿವಿಲ್ ಸೇವೆಗಳ ನೇಮಕಾತಿ ಹೊಸ ಅಧಿಸೂಚನೆಗೆ ತಡೆ

ಬೆಂಗಳೂರು, ಮಾರ್ಚ್‌ 30: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೂರಾರು ಹುದ್ದೆಗಳು ಖಾಲಿ ಇದೆ. ರಾಜ್ಯದಲ್ಲಿ 2.50 ಲಕ್ಷಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ನಡೆಯಬೇಕಿದೆ. ಆದರೆ ಕರ್ನಾಟಕದಲ್ಲಿ ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ನಿರಾಸೆ ಮೂಡಿಸುವ ಸುದ್ದಿಯೊಂದಿದೆ. ಕರ್ನಾಟಕ ಸರ್ಕಾರ ರಾಜ್ಯ ಸಿವಿಲ್ ಸೇವೆಗಳಲ್ಲಿನ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ. ಈ

ಒನ್ ಇ೦ಡಿಯ 30 Mar 2025 7:49 am

ನರೇಗಾ ಯೋಜನೆಯಡಿ ನೀಡುವ ಕೂಲಿ ಏಪ್ರಿಲ್‌ 1ರಿಂದ ಪರಿಷ್ಕರಣೆ

ಬೆಂಗಳೂರು, ಮಾರ್ಚ್‌ 30: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯನ್ನು 2025-26ನೇ ಸಾಲಿನ ಆರ್ಥಿಕ ವರ್ಷದಿಂದ ಏರಿಕೆ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಆದೇಶವನ್ನು ಹೊರಡಿಸಿದೆ. ಆದ್ದರಿಂದ ಏಪ್ರಿಲ್‌ 1ರಿಂದ ಜಾರಿಗೆ ಬರುವಂತೆ ನರೇಗಾ ಯೋಜನೆಯಡಿ ಕಾರ್ಮಿಕರು ಪಡೆಯುವ ಕೂಲಿ ಏರಿಕೆಯಾಗಲಿದೆ. ಗ್ರಾಮೀಣ ಭಾಗದ ಬಡ ಜನರಿಗೆ ನರೇಗಾ ಯೋಜನೆ ಅನುಕೂಲವಾಗಿದ್ದು, ಅವರ ಗ್ರಾಮದಲ್ಲಿಯೇ ಅವರಿಗೆ ಕೆಲಸ

ಒನ್ ಇ೦ಡಿಯ 30 Mar 2025 6:24 am

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ, ಏಪ್ರಿಲ್ 25ರ ತನಕ ಅರ್ಜಿ ಸಲ್ಲಿಕೆ ಮಾಡಿ

ದಾವಣಗೆರೆ, ಮಾರ್ಚ್‌ 29: ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 25 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಮತ್ತು ಇತರ ವಿವರಗಳು ಇಲ್ಲಿವೆ. ಮಹಿಳಾ ಮತ್ತು ಮಕ್ಕಳ

ಒನ್ ಇ೦ಡಿಯ 29 Mar 2025 8:09 am

KAS: ಕೆಎಎಸ್ ನೇಮಕಾತಿ, ಮುಖ್ಯ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು, ಮಾರ್ಚ್ 27: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿಯ ಮುಖ್ಯ ಪರೀಕ್ಷೆಯ ದಿನಾಂಕವನ್ನು ಘೋಷಣೆ ಮಾಡಿದೆ. ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಮುಖ್ಯ ಪರೀಕ್ಷೆಯನ್ನು ಮಾರ್ಚ್‌ 28, 29 ಮತ್ತು ಏಪ್ರಿಲ್ 1,

ಒನ್ ಇ೦ಡಿಯ 27 Mar 2025 2:43 pm

Infosys Layoffs: ಇನ್ಫೋಸಿಸ್‌ ಮೈಸೂರು ಕ್ಯಾಂಪಸ್‌ನಲ್ಲಿ ಮತ್ತೆ ಟ್ರೈನಿಗಳ ವಜಾ

ಮೈಸೂರು, ಮಾರ್ಚ್‌ 27: ಬೆಂಗಳೂರು ಮೂಲದ ಇನ್ಫೋಸಿಸ್‌ ಟ್ರೈನಿಗಳ ವಜಾ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದೆ. ಕಂಪನಿಯ ಮೈಸೂರು ಕ್ಯಾಂಪಸ್‌ನಿಂದ ಪುನಃ 35 ರಿಂದ 40 ಟ್ರೈನಿಗಳನ್ನು ವಜಾಗೊಳಿಸಲಾಗಿದೆ ಎಂದು ವರದಿಗಳು ಹೇಳಿವೆ. ಈ ಹಿಂದೆ ಫೆಬ್ರವರಿಯಲ್ಲಿ ಟ್ರೈನಿಗಳನ್ನು ವಜಾಗೊಳಿಸಿದಾಗ ಕಾರ್ಮಿಕ ನೀತಿಗಳ ಉಲ್ಲಂಘನೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ತನಕ ದೂರುಗಳು ಸಲ್ಲಿಕೆಯಾಗಿತ್ತು. ವಿವಿಧ ಮಾಧ್ಯಮಗಳ ವರದಿ

ಒನ್ ಇ೦ಡಿಯ 27 Mar 2025 10:57 am

Karnataka Government Jobs: ಸದ್ಯಕ್ಕೆ ಕರ್ನಾಟಕದಲ್ಲಿ ಸರ್ಕಾರಿ ಕೆಲಸ ಸಿಗಲ್ಲ

ಬೆಂಗಳೂರು, ಮಾರ್ಚ್‌ 26: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುವ ಅಭ್ಯರ್ಥಿಗಳಿಗೆ ನಿರಾಸೆ ಮೂಡಿಸುವ ಸುದ್ದಿಯೊಂದಿದೆ. ರಾಜ್ಯ ಸರ್ಕಾರದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳ ಹುದ್ದೆಗಳು 2,76,386. ಆದರೆ ಸರ್ಕಾರ ಸದ್ಯಕ್ಕೆ ಯಾವುದೇ ಇಲಾಖೆಯ ಹೊಸ ನೇಮಕಾತಿಯನ್ನು ಕೈಗೊಳ್ಳುವುದಿಲ್ಲ. ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿ ಯಾವಾಗ ಆರಂಭವಾಗಲಿದೆ ಎಂಬ ಬಗ್ಗೆ ಸರ್ಕಾರ ಖಚಿತ ಮಾಹಿತಿಯನ್ನೂ

ಒನ್ ಇ೦ಡಿಯ 26 Mar 2025 6:17 am

KPSC Exam Date: ಎಒ-ಎಒಒ 273 ಹುದ್ದೆಗಳ ನೇಮಕಾತಿ ಅಪ್ಡೇಟ್: ಪರೀಕ್ಷೆ ಯಾವಾಗ? ಹಾಲ್‌ಟಿಕೆಟ್..

ಬೆಂಗಳೂರು, ಮಾರ್ಚ್ 25: ಕರ್ನಾಟಕ ಸಂಬಂಧ ವಿವಿಧ ಸರ್ಕಾರಿ ಹುದ್ದೆಗಳ ಪರೀಕ್ಷಾ ಜವಾಬ್ದಾರಿ ಹೊತ್ತಿರುವ ಕರ್ನಾಟಕ ಲೋಕಸೇವಾ ಆಯೋಗ (KPSC) ಈವರ್ಷ, ಕೃಷಿ ಅಧಿಕಾರಿ (ಎಒ) ಮತ್ತು ಸಹಾಯಕ ಕೃಷಿ ಅಧಿಕಾರಿ (ಎಎಒ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿತ್ತು. ಈ ನೇಮಕಾತಿ ಪರೀಕ್ಷೆ, ಪ್ರವೇಶ ಪತ್ರ ಬಿಡುಗಡೆ, ಅಂಕಗಳು ಸೇರಿದಂತೆ

ಒನ್ ಇ೦ಡಿಯ 25 Mar 2025 4:22 pm

Karnataka Bank: ಕರ್ನಾಟಕ ಬ್ಯಾಂಕ್ ನೇಮಕಾತಿ, 75 ಹುದ್ದೆಗಳು

ಬೆಂಗಳೂರು, ಮಾರ್ಚ್‌ 25: ಬ್ಯಾಂಕ್ ಕೆಲಸದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಕರ್ನಾಟಕ ಮೂಲದ ಪ್ರಮುಖ ಬ್ಯಾಂಕ್ ಆದ ಕರ್ನಾಟಕ ಬ್ಯಾಂಕ್ ಒಟ್ಟು 75 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಫೀಸರ್ ಸ್ಕೇಲ್ ಗ್ರೇಡ್-1 ಹುದ್ದೆಗಳು ಇದಾಗಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳನ್ನು ಅರ್ಜಿಗಳನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. ಮಾಸಿಕ ವೇತನವನ್ನು ನಿಗದಿ ಮಾಡಲಾಗಿದೆ. ಕರ್ನಾಟಕಬ್ಯಾಂಕ್ ಚಾರ್ಟರ್ಡ್

ಒನ್ ಇ೦ಡಿಯ 25 Mar 2025 12:44 pm

ಶೇ 83ರಷ್ಟು ಇಂಜಿನಿಯರಿಂಗ್ ಪದವೀಧರರಿಗೆ ಕೆಲಸ ಸಿಕ್ಕಿಲ್ಲ!

ಬೆಂಗಳೂರು, ಮಾರ್ಚ್‌ 24: ಇಂಜಿನಿಯರಿಂಗ್ ಪದವೀಧರರು ಕೆಲಸ ಹುಡುಕಲು ಪರದಾಟ ನಡೆಸುತ್ತಿದ್ದಾರೆ. ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದು ಕಾಲೇಜುಗಳಿಂದ ಹೊರ ಬರುತ್ತಿದ್ದಾರೆ. ಆದರೆ ಕ್ಯಾಂಪಸ್ ಸಂದರ್ಶನದಲ್ಲಿ ಕೆಲವು ಮಂದಿಗೆ ಮಾತ್ರ ಅವಕಾಶ ಸಿಗುತ್ತದೆ. ಇಂಜಿನಿಯರಿಂಗ್ ಪದವೀಧರರು ಕೆಲಸಕ್ಕಾಗಿ ಹೇಗೆ ಶ್ರಮ ಪಡುತ್ತಿದ್ದಾರೆ? ಎಂದು ಸಮೀಕ್ಷೆಯೊಂದು ಹೇಳಿದೆ. ಅನ್‌ಸ್ಟಾಪ್ ಟ್ಯಾಲೆಂಟ್ ರಿಪೋರ್ಟ್‌ 2025 ಇಂಜಿನಿಯರಿಂಗ್ ಪದವೀಧರರ

ಒನ್ ಇ೦ಡಿಯ 24 Mar 2025 9:52 am

ಚಿತ್ರದುರ್ಗ: ಕೆಲಸ ಖಾಲಿ ಇದೆ, ಮಾಸಿಕ ವೇತನ 27,000 ರೂ.ಗಳು

ಚಿತ್ರದುರ್ಗ, ಮಾರ್ಚ್‌ 24: ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲಸ ಹುಡುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಅರ್ಜಿ ಸಲ್ಲಿಕೆ ಮಾಡಲು ಮಾರ್ಚ್ 27 ಕೊನೆಯ ದಿನವಾಗಿದೆ. ಈ ಹುದ್ದೆಗೆ ಮಾಸಿಕ ವೇತನ 27,100 ರೂ.ಗಳನ್ನು ನಿಗದಿಪಡಿಸಿದ್ದು, ಆಸಕ್ತರು ಅರ್ಜಿ

ಒನ್ ಇ೦ಡಿಯ 24 Mar 2025 6:57 am

ಕೊಪ್ಪಳ: ಮಾರ್ಚ್‌ 24ರಂದು ನೇರ ಸಂದರ್ಶನ, ಅಭ್ಯರ್ಥಿಗಳಿಗೆ ಸೂಚನೆಗಳು

ಕೊಪ್ಪಳ, ಮಾರ್ಚ್‌ 23: ಕೊಪ್ಪಳದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಮಾರ್ಚ್‌ 24ರ ಸೋಮವಾರ ಕೊಪ್ಪಳದಲ್ಲಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ವಿವಿಧ ಖಾಸಗಿ ಕಂಪನಿಗಳು ಪಾಲ್ಗೊಳ್ಳಲಿದ್ದು, 18 ರಿಂದ 29 ವರ್ಷ ವಯೋಮಿತಿಯ ಪಿಯುಸಿ ಅಥವಾ ತತ್ಸಮಾನ, ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ

ಒನ್ ಇ೦ಡಿಯ 23 Mar 2025 9:22 am

Layoffs: ಬೆಂಗಳೂರಿನ ಬೋಯಿಂಗ್ ಘಟಕದಿಂದ 180 ಉದ್ಯೋಗಿಗಳು ವಜಾ

ಬೆಂಗಳೂರು, ಮಾರ್ಚ್‌ 22: ಉದ್ಯಾನ ನಗರಿ ಬೆಂಗಳೂರಿನಲ್ಲಿ ವಿವಿಧ ಕಂಪನಿಗಳ ಉದ್ಯೋಗ ಕಡಿತ ಮುಂದುವರೆದಿದೆ. ದೇವನಹಳ್ಳಿಯಲ್ಲಿರುವ ಬೋಯಿಂಗ್‌ ಇಂಡಿಯಾ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿ ಸೆಂಟರ್‌ (ಬಿಐಇಟಿಸಿ)ಯ 180 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಈ ಬೆಳವಣಿಗೆ ಕುರಿತು ಡಾ. ಬ್ರೆಂಡನ್ ನೆಲ್ಸನ್ ಹಿರಿಯ ಉಪಾಧ್ಯಕ್ಷ ಅಧ್ಯಕ್ಷರು, ಬೋಯಿಂಗ್ ಗ್ಲೋಬಲ್ ಖಚಿತಪಡಿಸಿದ್ದಾರೆ. ಜಾಗತಿಕವಾಗಿ ಬೋಯಿಂಗ್ ಉದ್ಯೋಗ ಕಡಿತವನ್ನು ಮಾಡುತ್ತಿದೆ.

ಒನ್ ಇ೦ಡಿಯ 22 Mar 2025 11:53 am

KAS: ಕೆಎಎಸ್ ಮುಖ್ಯ ಪರೀಕ್ಷೆ ಮುಂದೂಡಿಕೆ ಮಾಡಿದ ಕೆಪಿಎಸ್‌ಸಿ

ಬೆಂಗಳೂರು, ಮಾರ್ಚ್‌ 22: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತೆ ಸುದ್ದಿಯಲ್ಲಿದೆ. ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕೆಪಿಎಸ್‌ಸಿ ನೇಮಕಾತಿ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು, ಮುಖ್ಯ ಪರೀಕ್ಷೆಯ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿತ್ತು. ಆದರೆ ಪರೀಕ್ಷೆಗೆ ಕೆಲವು ದಿನಗಳು ಇರುವಾಗಲೇ ಕರ್ನಾಟಕ ಲೋಕಸೇವಾ ಆಯೋಗ ಮುಖ್ಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ

ಒನ್ ಇ೦ಡಿಯ 22 Mar 2025 8:46 am

ಉತ್ತರ ಕನ್ನಡದಲ್ಲಿ ಕೆಲಸ ಖಾಲಿ ಇದೆ: ಮಾರ್ಚ್‌ 28ರ ತನಕ ಅರ್ಜಿ ಹಾಕಿ

ಕಾರವಾರ, ಮಾರ್ಚ್‌ 20: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಗುತ್ತಿಗೆ ಆಧಾರದ ಮೇಲೆ ಹುದ್ದೆಯ ಭರ್ತಿಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮಾರ್ಚ್‌ 28ರ ಸಂಜೆ 6 ಗಂಟೆಯ ಒಳಗೆ ಖುದ್ದಾಗಿ ಅಥವ ಅಂಚೆಯ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಉತ್ತರ ಕನ್ನಡಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬಲವರ್ಧನೆಗಾಗಿ

ಒನ್ ಇ೦ಡಿಯ 20 Mar 2025 3:25 pm

ಕಲಬುರಗಿ: ಬೃಹತ್ ಉದ್ಯೋಗ ಮೇಳ, ಹೆಸರು ನೋಂದಾಯಿಸಿ

ಕಲಬುರಗಿ, ಮಾರ್ಚ್‌ 18: ಕಲಬುರಗಿ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳವನ್ನು ಏಪ್ರಿಲ್ ಮೊದಲ ವಾರದಲ್ಲಿ ಜಿಲ್ಲೆಯಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ಉದ್ಯೋಗ ಮೇಳದಲ್ಲಿ 250ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳುತ್ತಿವೆ. ಉದ್ಯೋ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಒನ್ ಇ೦ಡಿಯ 18 Mar 2025 2:52 pm

Job Cut: ಬೆಂಗಳೂರಲ್ಲಿ ಕೆಲಸ ಕಳೆದುಕೊಂಡ 50,000 ಐಟಿ ಉದ್ಯೋಗಿಗಳು

ಬೆಂಗಳೂರು, ಮಾರ್ಚ್‌ 18: ಕರ್ನಾಟಕ ಸರ್ಕಾರ 1997ರಲ್ಲಿ ತನ್ನ ಮೊದಲ ಐಟಿ ನೀತಿಯನ್ನು ರೂಪಿಸಿತು. ಐಟಿ ಇಲಾಖೆಯನ್ನು ಸಹ ಪ್ರಾರಂಭಿಸಿತು. ರಾಜ್ಯದಲ್ಲಿ ಅದರಲ್ಲೂ ಬೆಂಗಳೂರು ನಗರದಲ್ಲಿ ಐಟಿ ಕ್ಷೇತ್ರ ಊಹೆಗೂ ನಿಲುಕದಂತೆ ಬೆಳವಣಿಗೆ ಕಂಡಿದೆ. ದೊಡ್ಡ ದೊಡ್ಡ ಕಂಪನಿಗಳು ನಗರದಲ್ಲಿ ಕಛೇರಿಯನ್ನು ಹೊಂದಿವೆ. ನಗರದಲ್ಲಿ ಲಕ್ಷಾಂತರ ಐಟಿ ಉದ್ಯೋಗಿಗಳಿದ್ದಾರೆ. ಐಟಿ ಕ್ಷೇತ್ರವೂ ಉದ್ಯೋಗ ನಷ್ಟವನ್ನು ಅನುಭವಿಸುತ್ತಿದ್ದು, ವೆಚ್ಚ

ಒನ್ ಇ೦ಡಿಯ 18 Mar 2025 11:07 am

Namma Metro: ಕನ್ನಡಿಗರ ಬೆಂಬಲಕ್ಕೆ ನಿಂತ ಡಿಕೆಶಿ, ಮೆಟ್ರೋ ನೇಮಕಾತಿ ಮಹತ್ವದ ಅಪ್‌ಡೇಟ್‌

ಬೆಂಗಳೂರು, ಮಾರ್ಚ್‌ 18: ಕನ್ನಡಿಗರ ಆಕ್ರೋಶ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೂಚನೆಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ (ಬಿಎಂಆರ್‌ಸಿಎಲ್) ಮಣಿದಿದೆ. 50 ಚಾಲಕ ಹುದ್ದೆಗಳ ನೇಮಕಾತಿಗೆ ಹೊರಡಿಸಿದ್ದ ಅಧಿಸೂಚನೆಯನ್ನು ವಾಪಸ್ ಪಡೆದಿದೆ. ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಹಳದಿ ಮಾರ್ಗ (ಆರ್‌. ವಿ. ರಸ್ತೆ-ಬೊಮ್ಮಸಂದ್ರ)ದಲ್ಲಿ ಮೆಟ್ರೋ ರೈಲುಗಳ ಸಂಚಾರ ಆರಂಭಿಸಲು 50 ಚಾಲಕ ಹುದ್ದೆಗಳ

ಒನ್ ಇ೦ಡಿಯ 18 Mar 2025 9:32 am

Namma Metro: ಚಾಲಕರ ನೇಮಕಾತಿ, ಕನ್ನಡಿಗೆ ಆಕ್ರೋಶಕ್ಕೆ ಮಣಿದ ಬಿಎಂಆರ್‌ಸಿಎಲ್‌

ಬೆಂಗಳೂರು, ಮಾರ್ಚ್‌ 17: ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಹಳದಿ ಮಾರ್ಗ (ಆರ್‌. ವಿ. ರಸ್ತೆ-ಬೊಮ್ಮಸಂದ್ರ)ದಲ್ಲಿ ಮೆಟ್ರೋ ರೈಲುಗಳ ವಾಣಿಜ್ಯ ಸಂಚಾರ ಆರಂಭಿಸಲು ತಯಾರಿ ನಡೆಸಿದೆ. ಇದಕ್ಕಾಗಿ 50 ಚಾಲಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿತ್ತು. ಆದರೆ ಇದರಲ್ಲಿನ ಕೆಲವು ನಿಯಮಗಳು ಈ ಹುದ್ದೆಗೆ ಕನ್ನಡಿಗರು ಅರ್ಜಿ ಹಾಕದಂತೆ ತಡೆದಿತ್ತು. ಕರ್ನಾಟಕದಲ್ಲಿ ಕನ್ನಡಿರನ್ನು ಬಿಟ್ಟು ಬೇರೆ ಭಾಷೆಯವರಿಗೆ ಉದ್ಯೋಗ

ಒನ್ ಇ೦ಡಿಯ 17 Mar 2025 3:52 pm

Job Alert: ಕರ್ನಾಟಕದ ನರ್ಸಿಂಗ್ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ: ಲಕ್ಷಗಟ್ಟಲೇ ಸ್ಯಾಲರಿ, ವೀಸಾ, ವಸತಿ ಸೌಲಭ್ಯ

ಬೆಂಗಳೂರು, ಮಾರ್ಚ್‌ 14: ಕರ್ನಾಟಕದಲ್ಲಿ ನರ್ಸಿಂಗ್ ಕೋರ್ಸ್ ಮಾಡಿದವರಿಗೆ ಬೆಲ್ಜಿಯಂನಲ್ಲಿ ಉದ್ಯೋಗ ಅವಕಾಶಗಳು ಸಿಗಲಿವೆ. ನರ್ಸಿಂಗ್ ವೃತ್ತಿಪರಿರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಯಾರೆಲ್ಲ ವಿದೇಶದಲ್ಲಿ ಉದ್ಯೋಗ ಬಯಸುತ್ತಿದ್ದೀರೋ ಅವರು ಕೂಡಲೇ ಅರ್ಜಿ ಹಾಕಬೇಕು. ಅರ್ಹರನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಉತ್ತಮ ವೇತನ ಜೊತೆಗೆ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ

ಒನ್ ಇ೦ಡಿಯ 14 Mar 2025 5:20 pm

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಮಹತ್ವ ಮಾಹಿತಿ ಇಲ್ಲಿದೆ

ಬೆಂಗಳೂರು, ಮಾರ್ಚ್ 14: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳನ್ನು ನೇಮಕ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ವಿಧಾನಸಭಾ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ ಇವರ ಪ್ರಶ್ನೆಗೆ

ಒನ್ ಇ೦ಡಿಯ 14 Mar 2025 12:20 pm

ದಾವಣಗೆರೆ: ಪೊಲೀಸ್ ಪಬ್ಲಿಕ್ ಶಾಲೆ, ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಮಾರ್ಚ್‌ 13: ದಾವಣಗೆರೆಯಲ್ಲಿ ಶಿಕ್ಷಕ ಹುದ್ದೆಯ ಕೆಲಸ ಹುಡುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ಕುರಿತು ಎಸ್ಪಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ. ಈ

ಒನ್ ಇ೦ಡಿಯ 13 Mar 2025 10:22 am

ದಾವಣಗೆರೆ: ಮಾರ್ಚ್‌ 15ರಂದು ಬೃಹತ್ ಉದ್ಯೋಗ ಮೇಳ, 5 ಸಾವಿರ ಹುದ್ದೆಗಳ ನೇಮಕಾತಿ

ದಾವಣಗೆರೆ, ಮಾರ್ಚ್‌ 12: ದಾವಣಗೆರೆ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಸಿದ್ಧವಾಗುತ್ತಿದೆ. ಮಾರ್ಚ್ 15ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, 50ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ. 5000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಮಾರ್ಚ್ 15ರಂದು ದಾವಣಗೆರೆ ನಗರದ

ಒನ್ ಇ೦ಡಿಯ 12 Mar 2025 9:35 am

ಪ್ರೌಢಶಾಲಾ ಶಿಕ್ಷಕರಿಗೆ ಕಾಲೇಜು ಉಪನ್ಯಾಸಕರಾಗಿ ಬಡ್ತಿ: ಗುಡ್‌ನ್ಯೂಸ್ ಕೊಟ್ಟ ಸಚಿವರು

ಬೆಂಗಳೂರು, ಮಾರ್ಚ್‌ 11: ಪ್ರೌಢಶಾಲಾ ಶಿಕ್ಷಕರಿಗೆ ಪ್ರೌಢ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜಿಗೆ ಉಪನ್ಯಾಸಕರಾಗಿ ಬಡ್ತಿ ನೀಡುವ ಕುರಿತು ವಿಧಾನ ಪರಿಷತ್ ಕಲಾಪದಲ್ಲಿ ಚರ್ಚೆ ನಡೆದಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ನೀಡಿದ್ದಾರೆ. ಉಪನ್ಯಾಸಕರಾಗಿ ಬಡ್ತಿ ನೀಡುವ ಪ್ರಕ್ರಿಯೆ ಯಾವಾಗ ಆರಂಭವಾಗಲಿದೆ? ಎಂದು ಮಾಹಿತಿ ನೀಡಿದ್ದಾರೆ. ವಿಧಾನ

ಒನ್ ಇ೦ಡಿಯ 11 Mar 2025 10:07 am

ದಾವಣಗೆರೆ: ಕೆಲಸ ಖಾಲಿ ಇದೆ, ವೇತನ 48,400 ರೂ.ಗಳು.

ದಾವಣಗೆರೆ, ಮಾರ್ಚ್‌ 11: ದಾವಣಗೆರೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ವಿಪತ್ತು ಪರಿಣಿತರ ಹುದ್ದೆಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 21 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 48,400 ರೂ.ಗಳು. ನಗರದ ಜಿಲ್ಲಾ ವಿಪತ್ತುನಿರ್ವಹಣಾ

ಒನ್ ಇ೦ಡಿಯ 11 Mar 2025 9:03 am

Bengaluru Coffee Board Recruitment: ಬೆಂಗಳೂರು ಕಾಫಿ ಬೋರ್ಡ್‌ನಲ್ಲಿ ಉದ್ಯೋಗಾವಕಾಶ

Bengaluru Coffee Board Recruitment: ಇತ್ತೀಚಿನ ದಿನಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಬೆಂಗಳೂರು ಕಾಫಿ ಬೋರ್ಡ್‌ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದ್ರೆ ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಆಯ್ಕೆ ಆದವರಿಗೆ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಬೆಂಗಳೂರು ಕಾಫಿ ಬೋರ್ಡ್‌

ಒನ್ ಇ೦ಡಿಯ 10 Mar 2025 3:31 pm

ಕೊಡಗು: ಕೆಲಸ ಖಾಲಿ ಇದೆ, ವೇತನ 27,100 ರೂ.ಗಳು.

ಮಡಿಕೇರಿ, ಮಾರ್ಚ್‌ 10: ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 27,100 ರೂ.ಗಳು. ಆಸಕ್ತರು, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 11ರ ಸಂಜೆ 5.30 ಕೊನೆಯ ದಿನವಾಗಿದೆ. ಕೊಡಗುಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರ

ಒನ್ ಇ೦ಡಿಯ 10 Mar 2025 8:51 am

ಕೊಪ್ಪಳ: ಕೆಲಸ ಖಾಲಿ ಇದೆ, ವೇತನ 9000 ರೂ.ಗಳು, ವಿವರ

ಕೊಪ್ಪಳ, ಮಾರ್ಚ್‌ 09: ಕೊಪ್ಪಳದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯನ್ನು ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9000 ರೂ.ಗಳ ಗೌರವಧನವನ್ನು ನೀಡಲಾಗುತ್ತಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 18 ಕೊನೆಯ ದಿನವಾಗಿದೆ. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ

ಒನ್ ಇ೦ಡಿಯ 9 Mar 2025 9:16 am

ಕರ್ನಾಟಕ ಬಜೆಟ್ 2025: ಉದ್ಯೋಗ ವಲಯಕ್ಕೆ ಸಿಕ್ಕ ಭರವಸೆಗಳು

ಬೆಂಗಳೂರು, ಮಾರ್ಚ್ 07: ಶುಕ್ರವಾರ ಕರ್ನಾಟಕದ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡಿಸಿದರು. 4,09,549 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಅವರು, ರಾಜ್ಯದಲ್ಲಿ ಉದ್ಯೋಗ, ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮಾ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ನಮ್ಮ

ಒನ್ ಇ೦ಡಿಯ 7 Mar 2025 1:50 pm

ಚಿತ್ರದುರ್ಗ: ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ, ವಿವರ

ಚಿತ್ರದುರ್ಗ, ಮಾರ್ಚ್‌ 07: ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 25 ಕೊನೆಯ ದಿನವಾಗಿದೆ. ಚಿತ್ರದುರ್ಗಜಿಲ್ಲೆಯ ಹೊಸದುರ್ಗ ತಾಲೂಕು ಶ್ರೀರಾಂಪುರ ಹೋಬಳಿ ಶ್ರೀರಾಂಪುರ ಹಾಗೂ ಕುರುಬರಹಳ್ಳಿ ಕಂದಾಯ ವೃತ್ತಕ್ಕೆ ಮತ್ತು ಕಸಬಾ

ಒನ್ ಇ೦ಡಿಯ 7 Mar 2025 9:16 am

EPFO Recruitment: ಭವಿಷ್ಯ ನಿಧಿ ಸಂಸ್ಥೆಯಲ್ಲಿ ಉದ್ಯೋಗಗಳು ಖಾಲಿ ಇವೆ, ಕೈತುಂಬ ವೇತನ: ವಿವರ ನೋಡಿ

ಬೆಂಗಳೂರು, ಮಾರ್ಚ್ 05: ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುವ ಅಭ್ಯರ್ಥಿಗಳಿಗೆ ಇಲ್ಲೊಂದು ಅತ್ಯುತ್ತಮ ಅವಕಾಶ ಇದೆ. ಉದ್ಯೋಗಾಕಾಂಕ್ಷಿಗಳನ್ನು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO) ಭರ್ಜರಿ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸುವಂತೆ ಅಧಿಸೂಚನೆ ಪ್ರಕಟಿಸಲಾಗಿದೆ. EPFO ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಒಟ್ಟು

ಒನ್ ಇ೦ಡಿಯ 5 Mar 2025 6:29 pm

ರಾಜ್ಯದಲ್ಲಿ ಬರೋಬ್ಬರಿ 2,500 ಅಂಗನವಾಡಿ ಹುದ್ದೆಗಳ ನೇಮಕ: ಅರ್ಜಿ ಸಲ್ಲಕೆ ವಿಧಾನ ಹಾಗೂ ಮಾಸಿಕ ವೇತನದ ಬಗ್ಗೆ ತಿಳಿಯಿರಿ

WCD Karnataka Recruitment 2025: ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಹಾಗಾದ್ರೆ ಅರ್ಜಿ ಸಲ್ಲಿಕೆ ಆರಂಭ ಯಾವಾಗ ಹಾಗೂ ಅಭ್ಯರ್ಥಿಗಳು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎನ್ನಯವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಒನ್ ಇ೦ಡಿಯ 5 Mar 2025 4:50 pm

ಮಾರ್ಚ್‌ 15ರಂದು ದಾವಣಗೆರೆಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ದಾವಣಗೆರೆ, ಮಾರ್ಚ್‌ 05: ದಾವಣಗೆರೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಮಾರ್ಚ್‌ 15ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಮಾರ್ಚ್ 15ರಂದು ಹದಡಿ ರಸ್ತೆಯಲ್ಲಿನ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 3

ಒನ್ ಇ೦ಡಿಯ 5 Mar 2025 11:13 am

ರಾಜ್ಯ ಸರ್ಕಾರದಲ್ಲಿ 2,76,386 ಲಕ್ಷ ಹುದ್ದೆಗಳು ಖಾಲಿ

Government Jobs: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ರಾಜ್ಯದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿವೆ. ಹಾಗಾದ್ರೆ ಯಾವ್ಯಾವ ಇಲಾಖೆಯಲ್ಲಿ ಎಷ್ಟು ಖಾಲಿ ಇವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಒಟ್ಟು 7,80,748

ಒನ್ ಇ೦ಡಿಯ 5 Mar 2025 9:12 am

ಬೀದರ್‌ನಲ್ಲಿ ಮಾರ್ಚ್‌ 5ರಂದು ಉದ್ಯೋಗ ಮೇಳ, ವಿವರಗಳು

ಬೀದರ್, ಮಾರ್ಚ್‌ 04: ಬೀದರ್ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಮಾರ್ಚ್‌ 5ರಂದು ಬೀದರ್‌ನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ವಿವಿಧ ಕಂಪನಿಗಳ ಸುಮಾರು 50 ಹುದ್ದೆಗಳಿಗೆ ನೇಮಕಾತಿಗಳು ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗತ್ಯ ದಾಖಲೆಗಳ ಜೊತೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು ಎಂದು ಕರೆ ನೀಡಲಾಗಿದೆ. ಬೀದರ್ ನಗರದ ನೌಬಾದ್‌ನ ಸರ್ಕಾರಿ

ಒನ್ ಇ೦ಡಿಯ 4 Mar 2025 2:05 pm

Ola Layoffs: ದಿಢೀರನೆ 1,000 ಉದ್ಯೋಗ ಕಡಿತಕ್ಕೆ ಮುಂದಾದ ಓಲಾ

ಬೆಂಗಳೂರು ಮೂಲದ ಓಲಾ ಎಲೆಕ್ಟ್ರಿಕ್ (Ola electric) ಮೊಬಿಲಿಟಿ ಕಂಪನಿಯು ಈ ತಿಂಗಳೊಳಗೆ ತನ್ನ ಎರಡನೇ ಸುತ್ತಿನ ಉದ್ಯೋಗ ಕಡಿತದಲ್ಲಿ 1,000ಕ್ಕೂ ಹೆಚ್ಚು ಉದ್ಯೋಗಿಗಳು ಮತ್ತು ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಲಿದೆ ಎಂದು ವರದಿಯಾಗಿದೆ. ಸಾಫ್ಟ್‌ಬ್ಯಾಂಕ್ ಗ್ರೂಪ್ ಕಾರ್ಪೊರೇಷನ್ ಬೆಂಬಲದಲ್ಲಿರುವ ಈ ಕಂಪನಿಯು ತನ್ನ ನಷ್ಟವನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದೆ. ಸಂಗ್ರಹಣೆ, ಪೂರೈಸುವಿಕೆ,

ಒನ್ ಇ೦ಡಿಯ 3 Mar 2025 6:48 pm

ಮಡಿಕೇರಿ: ಮಾರ್ಚ್ 8ರಂದು ಉದ್ಯೋಗ ಮೇಳ

ಮಡಿಕೇರಿ, ಮಾರ್ಚ್‌ 03: ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಮಾರ್ಚ್ 8ರಂದು ಮಡಿಕೇರಿಯಲ್ಲಿ ಆಯೋಜನೆ ಮಾಡಲಾಗಿದೆ. ಈ ಉದ್ಯೋಗ ಮೇಳದಲ್ಲಿ 18 ರಿಂದ 35 ವರ್ಷದ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್‌ನ ಡಿಡಿಯುಜಿಕೆವೈ ಯೋಜನೆಯಡಿಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದ್ದು, ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ

ಒನ್ ಇ೦ಡಿಯ 3 Mar 2025 10:49 am

JKSSB Recruitment: ನಿರುದ್ಯೋಗಿಗಳಿಗೆ ಭರ್ಜರಿ ಉದ್ಯೋಗವಕಾಶ, 292 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

JKSSB Recruitment 2025: ಕೋರಿಕೆ ಮತ್ತು ಕಾಶ್ಮೀರ ಸೇವಾ ಆಯ್ಕೆ ಮಂಡಳಿ (JKSSB) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ನಡೆಸುವುದಾಗಿ ತಿಳಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಇನ್ನೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೇ ಮಾರ್ಚ್‌ 08ರಿಂದ ಆರಂಭವಾಗಲಿದೆ ಎಂದು ಮಂಡಳಿಯು ಅಧಿಸೂಚನೆಯಲ್ಲಿ ಮಾಹಿತಿ ನೀಡಿದೆ. ಜೆಕೆಎಸ್‌ಎಸ್‌ಬಿ ಯಲ್ಲಿ

ಒನ್ ಇ೦ಡಿಯ 2 Mar 2025 6:02 pm