ಡೀಲ್ ಮಾಡ್ಕೊಂಡರೆ ಜೋಕೆ, ಪೊಲೀಸರಿಗೆ ಡಿಕೆ ಎಚ್ಚರಿಕೆ
ಹುಟ್ಟುಹಬ್ಬದ ಸಂಭ್ರಮದಲ್ಲೇ ದುರಂತ: ಮಸ್ಸೂರಿ ಹೋಂಸ್ಟೇಯಲ್ಲಿ ಮಹಿಳೆ ನಿಗೂಢ ಸಾವು, ತಿಂಗಳ ಬಳಿಕ ಟೆಕ್ಕಿ ಪತಿ ಅರೆಸ್ಟ್
ಮಸ್ಸೂರಿ ಹೋಂಸ್ಟೇನಲ್ಲಿ ಪತಿಯ ಹುಟ್ಟುಹಬ್ಬದ ಪ್ರವಾಸದ ವೇಳೆ 27 ವರ್ಷದ ಮಹಿಳೆಯ ನಿಗೂಢ ಸಾವು ದೊಡ್ಡ ತಿರುವು ಪಡೆದಿದೆ. ಘಟನೆ ನಡೆದು ಒಂದು ತಿಂಗಳ ಬಳಿಕ, ಸಾಫ್ಟ್ವೇರ್ ಎಂಜಿನಿಯರ್ ಪತಿಯನ್ನೇ ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ. ಕೋಣೆಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿದ್ದು, ಮದ್ಯಪಾನದ ನಂತರದ ಕಲಹ ಕೊಲೆಗೆ ಕಾರಣವೆಂದು ಶಂಕಿಸಲಾಗಿದೆ. ಈ ಪ್ರಕರಣ ಹೋಂಸ್ಟೇಗಳಲ್ಲಿ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಕಾಶ್ಮೀರ ಉಗ್ರರ ದಾಳಿ: ಹಿಜ್ಬುಲ್ ಭಯೋತ್ಪಾದಕ ಇಮ್ತಿಯಾಜ್ ವಿರುದ್ಧ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ
Live: ಹಿರಿಯ ಗಾಯಕಿ ಎಸ್. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
S Janaki Passes Away: ಹೃದಯಾಘಾತದಿಂದ ನಿನ್ನೆ ಮೃತಪಟ್ಟಿರುವ ಹಿರಿಯ ಗಾಯಕಿ ಎಸ್. ಜಾನಕಿ (88) ಅವರ ಅಂತಿಮ ದರ್ಶನಕ್ಕೆ ಮೈಸೂರಿನ ಮಹಾರಾಜ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಅವರ ಅಂತಿಮ ವಿಧಿ ವಿಧಾನಗಳು ಮೈಸೂರಿನಲ್ಲಿಯೇ ಇಂದು ನಡೆಯಲಿದ್ದು, ಮೊಮ್ಮಗಳು ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ. ಗಾನಕೋಗಿಲೆಯ ಅಂತಿಮ ದರ್ಶನದ ನೇರಪ್ರಸಾರ ಇಲ್ಲಿದೆ.
ನಾವು ಇನ್ನೂ ಸಹ ತುಂಬಾ ಕಲಿಯಬೇಕಿದೆ: ಶ್ರೇಯಸ್ ಅಯ್ಯರ್
India vs England: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಅತ್ಯಂತ ಹೀನಾಯ ಪ್ರದರ್ಶನ ನೀಡಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾದರೆ, ಉಳಿದ ನಾಲ್ಕು ಪಂದ್ಯಗಳಲ್ಲಿ ಭಾರತ ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಈ ಸೋಲಿನ ಬಳಿಕ ಶ್ರೇಯಸ್ ಅಯ್ಯರ್ ಹೇಳಿದ್ದೇನು?
Vastu Guide: ಒಂದೇ ಮನೆಯಲ್ಲಿ ಎರಡು ದೇವರ ಕೋಣೆ ಇರುವುದು ಅಶುಭವೇ? ಶಾಸ್ತ್ರಗಳು ಹೇಳುವುದೇನು?
ಹಿಂದೂ ಸಂಪ್ರದಾಯದಲ್ಲಿ ಪೂಜಾ ಕೊಠಡಿ ಅತ್ಯಂತ ಪವಿತ್ರ ಸ್ಥಳ. ವಾಸ್ತು ಪ್ರಕಾರ ನಿರ್ಮಿಸಿದ ದೇವರ ಮನೆ ಸಕಾರಾತ್ಮಕ ಶಕ್ತಿ ತರುತ್ತದೆ. ಆದರೆ, ಒಂದೇ ಮನೆಯಲ್ಲಿ ಎರಡು ಪೂಜಾ ಕೊಠಡಿಗಳನ್ನು ಸ್ಥಾಪಿಸಬಹುದೇ? ವಾಸ್ತು ಶಾಸ್ತ್ರದ ಪ್ರಕಾರ, ಇದು ಕುಟುಂಬದ ಐಕ್ಯತೆಗೆ ಉತ್ತಮವಲ್ಲ. ಪ್ರತ್ಯೇಕವಾಗಿ ವಾಸಿಸುವ ಎರಡು ಕುಟುಂಬಗಳಿದ್ದರೆ ಮಾತ್ರ ಎರಡು ಕೊಠಡಿಗಳಿಗೆ ಅವಕಾಶವಿದೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.
Bengaluru Air Quality: ರಾಜ್ಯದ ವಾಯು ಮಾಲಿನ್ಯದಲ್ಲಿ ಭಾರಿ ಸುಧಾರಣೆ! ನಿಮ್ಮ ಏರಿಯಾದ ಎಕ್ಯೂಐ ಎಷ್ಟಿದೆ ಗೊತ್ತಾ?
ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (AQI) ತೃಪ್ತಿದಾಯಕ ಮಟ್ಟದಲ್ಲಿದೆ. ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಮಾಲಿನ್ಯದ ಪ್ರಮಾಣ ಗಣನೀಯವಾಗಿ ತಗ್ಗಿದ್ದು, ಉಸಿರಾಡಲು ಯೋಗ್ಯವಾದ ವಾತಾವರಣವಿದೆ. ಬೆಂಗಳೂರು, ಮೈಸೂರು, ಮಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳ ಇಂದಿನ ಕಂಪ್ಲೀಟ್ AQI ವರದಿ ಇಲ್ಲಿದೆ.
ಮತ್ತೆ ದುರ್ಬಲಗೊಂಡ ಮುಂಗಾರು; ದಕ್ಷಿಣ ಕನ್ನಡ, ಉಡುಪಿ ಕೊಡಗಿಗೆ ಯೆಲ್ಲೋ ಅಲರ್ಟ್ ಘೋಷಣೆ
ಹಿರಿಯ ಗಾಯಕಿ ಎಸ್. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ
S Janaki Passes Away: ಮೈಸೂರಿನಲ್ಲಿ ತಮ್ಮ ಅಜ್ಜಿ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ನೋಡಿದ ನಂತರ, ಅವರ ಮೊಮ್ಮಗಳು ಅಪ್ಸರಾ ಮಾಧ್ಯಮಗಳೊಂದಿಗೆ ಭಾವುಕರಾಗಿ ಮಾತನಾಡಿದ್ದಾರೆ. ಇದು ತಮ್ಮ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟ ಎಂದು ಅಪ್ಸರಾ ಹೇಳಿದ್ದಾರೆ. ಕರ್ನಾಟಕದ ಜನತೆ ಅಜ್ಜಿಗೆ ಅಪಾರ ಪ್ರೀತಿ ತೋರಿದ್ದಾರೆ ಎಂಬುದನ್ನು ಈ ವೇಳೆ ಸ್ಮರಿಸಿದ್ದಾರೆ.
ಕೆನಡಾದ ಬೃಹತ್ ಬೀದಿ ಉತ್ಸವದಲ್ಲಿ ರಕ್ತಪಾತ: ಮನಬಂದಂತೆ ಗುಂಡು ಹಾರಿಸಿದ ದುಷ್ಕರ್ಮಿ, ಇಬ್ಬರು ಸಾವು, ಹಲವರಿಗೆ ಗಾಯ
ಕೆನಡಾದ ಟೊರೊಂಟೊದಲ್ಲಿ ನಡೆದ ಜನಪ್ರಿಯ 'ಸಾಲ್ಸಾ ಆನ್ ಸೇಂಟ್ ಕ್ಲೇರ್' ಬೀದಿ ಉತ್ಸವದಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ದುಷ್ಕರ್ಮಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಕೆನಡಾದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಸಾಮೂಹಿಕ ಗುಂಡಿನ ದಾಳಿಗಳ ಬಗ್ಗೆ ವ್ಯಾಪಕ ಆತಂಕ ವ್ಯಕ್ತವಾಗಿದೆ.
ಎಸ್. ಜಾನಕಿ ನಿಧನ: ಶಿವಣ್ಣ, ಜಗ್ಗೇಶ್, ತ್ರಿಶಾ ಸೇರಿ ಹಲವು ಸೆಲೆಬ್ರಿಟಿಗಳ ಸಂತಾಪ
ಖ್ಯಾತ ಗಾಯಕಿ ಎಸ್. ಜಾನಕಿ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಾನಕಿ ಅವರು ಮೈಸೂರಿನಲ್ಲಿ ಶನಿವಾರ (ಜುಲೈ 11) ನಿಧನರಾದರು. ಅವರ ಅಗಲಿಕೆಗೆ ಶಿವರಾಜ್ಕುಮಾರ್, ಜಗ್ಗೇಶ್, ತ್ರಿಶಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.
ಅಪರಾಧ ತನಿಖಾ ವ್ಯವಸ್ಥೆಗೂ ಆಧುನಿಕತೆಯ ಟಚ್: 32 ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆ
ಕರ್ನಾಟಕದ ಅಪರಾಧ ತನಿಖಾ ವ್ಯವಸ್ಥೆಯನ್ನು ಆಧುನೀಕರಿಸಲು 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆ ನೀಡಲಾಗಿದೆ. ಸಿಎಂ ಡಿ.ಕೆ. ಶಿವಕುಮಾರ್ ಇವುಗಳಿಗೆ ಹಸಿರು ನಿಶಾನೆ ತೋರಿದ್ದು, ಇವು ಅಪರಾಧ ಸ್ಥಳದಲ್ಲೇ ತ್ವರಿತವಾಗಿ ಸಾಕ್ಷ್ಯ ಸಂಗ್ರಹಿಸಲು ನೆರವಾಗಲಿವೆ. ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಘಟಕಗಳಿಗೆ ಈ 32 ಮೊಬೈಲ್ ಲ್ಯಾಬ್ಗಳನ್ನು ನಿಯೋಜಿಸಲಾಗುತ್ತಿದ್ದು, ಇದರಿಂದ ಫೊರೆನ್ಸಿಕ್ ಪ್ರಕರಣಗಳ ಬಾಕಿ ಪ್ರಮಾಣವನ್ನು ಕಡಿಮೆ ಮಾಡುವ ನಿರೀಕ್ಷೆಯಿದೆ.
1,605 ದಿನಗಳ ಬಳಿಕ ಅಗ್ರಸ್ಥಾನ ಕಳೆದುಕೊಂಡ ಭಾರತ!
India vs England: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಅತ್ಯಂತ ಹೀನಾಯ ಪ್ರದರ್ಶನ ನೀಡಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾದರೆ, ಉಳಿದ ನಾಲ್ಕು ಪಂದ್ಯಗಳಲ್ಲಿ ಭಾರತ ತಂಡ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಟೀಮ್ ಇಂಡಿಯಾ ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಕಳೆದುಕೊಂಡಿದ್ದಾರೆ.
ಇರಾನ್ನಿಂದ ಹಾರ್ಮುಜ್ ಜಲಸಂಧಿ ಬಂದ್, ಹಡಗಿನ ಮೇಲೆ ದಾಳಿ ಬೆನ್ನಲ್ಲೇ ಅಮೆರಿಕದಿಂದ ಭೀಕರ ಪ್ರತೀಕಾರ
ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿ, ಹಡಗಿನ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ಸೇನೆ ಭೀಕರ ಪ್ರತೀಕಾರದ ವಾಯುದಾಳಿಗಳನ್ನು ನಡೆಸಿದೆ. ಈ ಸಂಘರ್ಷದಿಂದ ಜಾಗತಿಕ ತೈಲ ಪೂರೈಕೆಗೆ ಧಕ್ಕೆ ಉಂಟಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಭೀತಿ ಎದುರಾಗಿದೆ. ಭಾರತದ ತೈಲ ಆಮದಿನ ಮೇಲೂ ಪರಿಣಾಮ ಬೀರಲಿದ್ದು, ವಿಶ್ವ ಸಮರ ಭೀತಿಯನ್ನು ಹುಟ್ಟುಹಾಕಿದೆ.
Monsoon 2026: ಕರ್ನಾಟಕದಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ರೆಡ್ ಅಲರ್ಟ್ ಮುಕ್ತಾಯಗೊಂಡು ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಮುಂದಿನ ಕೆಲವು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡಿನ ಕೆಲವೆಡೆ ಹಗುರ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ.
S Janaki Passes Away: ಮೈಸೂರಿನಲ್ಲಿ ನೆಲೆಸಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಕೊನೆಯ ದಿನಗಳ ಬಗ್ಗೆ ಕೇರ್ ಟೇಕರ್ ನವೀನ್ ಮಾಹಿತಿ ಹಂಚಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ ಅರಮನೆಯಂತಹ ಮನೆಯಿದ್ದರೂ ಅವರು ಮೈಸೂರನ್ನೇ ಆಯ್ದುಕೊಂಡಿದ್ದರು. ಜಾನಕಿಯವರಿಗೆ ಕಾಲಿನ ಇನ್ಫೆಕ್ಷನ್ ಆಗಿ ನೋವು ಆರಂಭವಾಗಿತ್ತು. ಹಾಸ್ಪಿಟಲ್ ಅಂದರೆ ಜಾನಕಮ್ಮ ಭಯ ಪಡುತ್ತಿದ್ದ ಕಾರಣ ಮನೆಗೇ ನರ್ಸ್ ಕರೆಸಿ ಚಿಕಿತ್ಸೆ ಕೊಡಿಸುತ್ತಿದ್ದೆವು. ಈ ನಡುವೆ ಪರಿಸ್ಥಿತಿ ತೀರಾ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದವರು ತಿಳಿಸಿದ್ದಾರೆ.
Hari Paraak Column: ಮೂರ್ ಮದ್ವೆ ಆಗೋಕೆ ಅಮೀರ್ ಆಗಿರಬೇಕು
Monsoon Health Tips: ಮಳೆಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿವೆ ಪ್ರಮುಖ ಸಲಹೆ
Horoscope Today: ಈ ರಾಶಿಯವರಿಗೆ ಇಂದು ಅತ್ಯಂತ ಶುಭ ದಿನ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 12, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಇಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಕೃಷ್ಣ ಪಕ್ಷದ ತ್ರಯೋದಶಿ. ರೋಹಿಣಿ ನಕ್ಷತ್ರ, ವೃದ್ಧಿ ಯೋಗದ ಈ ದಿನವು ಪ್ರದೋಷ, ಮಾಸ ಶಿವರಾತ್ರಿ ಮತ್ತು ಜಗದ್ಗುರು ವಿದ್ಯಾರಣ್ಯರ ಆರಾಧನೆಯ ವಿಶೇಷ ಪರ್ವ ದಿನವಾಗಿದೆ. ರವಿ ಮಿಥುನ ರಾಶಿಯಲ್ಲಿ ಮತ್ತು ಚಂದ್ರ ವೃಷಭ ರಾಶಿಯ ರೋಹಿಣಿ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ. ಉತ್ತಮ ಆಲೋಚನೆಗಳು ನಮ್ಮನ್ನು ಕೀರ್ತಿ ಪ್ರತಿಷ್ಠೆಗಳಿಗೆ ಕೊಂಡೊಯ್ಯುವ ಮಾರ್ಗವನ್ನು ತೆರೆಯಲಿವೆ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-07-2026)
ನಿತ್ಯ ನೀತಿ : ಗೆದ್ದಾಗ ನಾನು ಯಾರು ಎಂದು ತಿಳಿದರೆ, ಸೋತಾಗ ನಮವರು ಯಾರು ಎಂಬುದು ತಿಳಿಯುತ್ತದೆ. ಸೋಲು-ಗೆಲುವುಗಳೆರಡೂ ಇರಲಿ. ಪಂಚಾಂಗ : ಭಾನುವಾರ, 12-07-2026ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ನಿಜ ಜ್ಯೇಷ್ಠ / ಪಕ್ಷ: ಕೃಷ್ಣ / ತಿಥಿ: ತ್ರಯೋದಶಿ / ನಕ್ಷತ್ರ: ರೋಹಿಣಿ / ಯೋಗ: ವೃದ್ಧಿ / ಕರಣ: ಗರಜೆಸೂರ್ಯೋದಯ – ಬೆ.6.01ಸೂರ್ಯಾಸ್ತ – 06.51ರಾಹುಕಾಲ – 4.30-6.00ಯಮಗಂಡ ಕಾಲ – 12.00-1.30ಗುಳಿಕ ಕಾಲ […] The post ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-07-2026) first appeared on Eesanje .
Srivathsa Joshi Column: ದೇವರಾತರೆಂಬ ಪುರಾಣಪುರುಷರೆಂಬ ಬಂತಂತೆ ಆ ಹೆಸರು !
Mirley Chandrashekher Column: ವಿಶ್ರಾಂತ ಬದುಕಿನಲ್ಲಿ ಸುಖವಿದೆ, ಅದನ್ನು ಸವಿಯಿರಿ
Vinayaka M Bhat Column: ತನುಮನಗಳಿಂದ ದೇವರನ್ನು ಸೇವಿಸಿದರೆ ಸಾಲದೇ ?
Vishweshwar Bhat Column: ಗಡಿಗಳು: ಪ್ರಕೃತಿಯ ಸೃಷ್ಟಿಯಲ್ಲ, ಮನುಷ್ಯನ ಸ್ವಾರ್ಥದ ರೇಖೆಗಳು
ದಿನ ಭವಿಷ್ಯ, ಜುಲೈ 12, 2026: ಆರೋಗ್ಯದ ಕಡೆ ಗಮನ ಕೊಡಿ; ಅನಗತ್ಯ ಖರ್ಚು ತಪ್ಪಿಸದಿದ್ದರೆ ಸಂಕಷ್ಟ
ದಿನ ಭವಿಷ್ಯ: ಇಂದು ಈ ರಾಶಿಯವರು ಹಣದ ಮೂಲವನ್ನು ಹೇಳಬೇಕಾಗುವುದು
Horoscope Today July 12: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ನಿಜ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಚತುರ್ದಶೀ ತಿಥಿಯ ಸೋಮವಾರದಂದು ಆಯುಧದಿಂದ ಗಾಯ, ತಂದೆಯಿಂದ ತಿಳಿವಳಿಕೆ, ತ್ಯಾಗದಲ್ಲಿ ಶುದ್ಧ ಮನಸ್ಸು, ಆರೋಗ್ಯ ಹಾಳು, ಆದಾಯಕ್ಕೆ ಪರ್ಯಾಯ ವ್ಯವಸ್ಥೆ, ಸಹೋದರರ ಉಪೇಕ್ಷೆ, ಪ್ರಭಾವದ ಬಳಕೆ ಇವೆಲ್ಲ ಈ ದಿನದ ಭವಿಷ್ಯ.
ಅಮೆರಿಕದಲ್ಲಿ ಭಾರತೀಯ ಮೂಲದ ಗೂಗಲ್ ತಂತ್ರಜ್ಞಾನ ನಾಯಕಿ ಶೀತಲ್ ವೃಜಿಸಿಯನ್ ಗುಂಡಿಕ್ಕಿ ಕೊಲೆ: ಪತಿ ಬಂಧನ
IND vs ENG: ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಪ್ರವಾಸ ಅಂತ್ಯಗೊಳಿಸಿದ ಟೀಂ ಇಂಡಿಯಾ
Team India T20 series loss: ಐದು ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಹೀನಾಯ 4-0 ಅಂತರದಿಂದ ಸೋತಿದೆ. ಶ್ರೇಯಸ್ ಅಯ್ಯರ್ ನಾಯಕನಾಗಿ ಸತತ 6 ಪಂದ್ಯಗಳಲ್ಲಿ ಸೋತ ಬೇಡದ ದಾಖಲೆ ಮಾಡಿದ್ದಾರೆ. ಐರ್ಲೆಂಡ್ ಸರಣಿಯಲ್ಲೂ ಭಾರತ ಒಂದೂ ಪಂದ್ಯ ಗೆದ್ದಿರಲಿಲ್ಲ. ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ 257 ರನ್ ಗಳಿಸಿ, ಭಾರತವನ್ನು 201 ರನ್ಗಳಿಗೆ ಸೀಮಿತಗೊಳಿಸಿ 56 ರನ್ಗಳಿಂದ ಗೆದ್ದಿತು.
ಕುದುರೆ ವ್ಯಾಪಾರದ ಆರೋಪ; ಒಮರ್ ಅಬ್ದುಲ್ಲಾ ಸಾಕ್ಷಿ ನೀಡಲಿ ಅಥವಾ ಕ್ಷಮೆ ಯಾಚಿಸಲಿ ಎಂದ ಬಿಜೆಪಿ
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬಿಜೆಪಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಆಪರೇಷನ್ ಕಮಲದ ಆರೋಪಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಸತ್ ಶರ್ಮಾ ಅವರು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ಆರೋಪಗಳನ್ನು ಬೆಂಬಲಿಸಲು ಪುರಾವೆಗಳನ್ನು ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.
IND vs ENG: ಭರ್ಜರಿ ಶತಕದ ಮೂಲಕ ವಿರಾಟ್ ಕೊಹ್ಲಿ ದಾಖಲೆ ಮುರಿದ ಜೋಸ್ ಬಟ್ಲರ್!
ಜನರ ಮನೆ ಬಾಗಿಲಿಗೆ ಸರ್ಕಾರ ಕೊಂಡೊಯ್ಯಲು ಪ್ರಜಾಸೇವೆ ಇಲಾಖೆ: ಸಿಎಂ
15 ದಿನಗಳ ಹಿಂದಷ್ಟೇ ಮಂಗಳೂರಿನ ಮಂಗಳಾದೇವಿ ದರ್ಶನ ಪಡೆದಿದ್ದ ‘ಎಸ್ ಜಾನಕಮ್ಮ’: ಇಲ್ಲಿವೆ ಫೋಟೋಸ್
S Janaki Passes Away: ಗಾನ ಕೋಗಿಲೆ ಎಸ್. ಜಾನಕಿ ಅವರು 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 20 ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ಅವರ ಅಗಲಿಕೆಗೆ ಸಂಗೀತ ಲೋಕ ಕಂಬನಿ ಮಿಡಿದಿದೆ. ಕೇವಲ 15 ದಿನಗಳ ಹಿಂದೆ ಮಂಗಳೂರಿಗೆ ಭೇಟಿ ನೀಡಿದ್ದರು. ಫೋಟೋಸ್ ಇಲ್ಲಿವೆ ನೋಡಿ.
ಕ್ಯಾನ್ಸರ್ ಔಷಧಿ ಬೆಲೆ ಕಡಿಮೆಗೊಳಿಸಲು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ, ತೀರ್ಪಿಗಾಗಿ ಕಾಯುತ್ತಲೇ ಪ್ರಾಣ ಬಿಟ್ಟ ಮಹಿಳೆ!
ನ್ಯಾಯಾಂಗದ ವಿಳಂಬವು ಹೇಗೆ ಕೆಲವೊಮ್ಮೆ ಮಾನವನ ಜೀವಕ್ಕೆ ಮಾರಕವಾಗಬಹುದು ಎಂಬುದಕ್ಕೆ ಅತ್ಯಂತ ನೋವಿನ ಉದಾಹರಣೆಯೊಂದು ಬೆಳಕಿಗೆ ಬಂದಿದೆ. ಸ್ತನ ಕ್ಯಾನ್ಸರ್ ಅನ್ನು ಗುಣಪಡಿಸುವ ದುಬಾರಿ ಔಷಧಿಯ ಬೆಲೆಯನ್ನು ಕಡಿಮೆ ಮಾಡಲು ಮತ್ತು ಎಲ್ಲರಿಗೂ ಸಿಗುವಂತೆ ಮಾಡಲು ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ 57 ವರ್ಷದ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ಕೋರ್ಟ್ ತೀರ್ಪು ನೀಡುವ ಮೊದಲೇ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

22 C