ಕ್ಯಾನ್ಸರ್ಗೆ ಚಿಕಿತ್ಸೆ ನೀಡುವಲ್ಲಿ ಕ್ರಾಂತಿ ಉಂಟುಮಾಡಿದ ಭಾರತದ ಆಸ್ಪತ್ರೆ! 100% ಯಶಸ್ಸು
ವಿವಿಧ ಕ್ಯಾನ್ಸರ್ಗಳಿಗೆ ಚಿಕಿತ್ಸೆ ನೀಡಲು ಅನೇಕ ತಂತ್ರಜ್ಞಾನಗಳನ್ನು ಬಳಸಲಾಗುತ್ತದೆ. ಕ್ಯಾನ್ಸರ್ ಕೋಶಗಳನ್ನು ಹಾನಿಗೊಳಿಸಲು ವಿಕಿರಣ ಚಿಕಿತ್ಸೆಯನ್ನು ಬಳಸಲಾಗುತ್ತದೆ. ಇದೀಗ ದೇಶದ ಆಸ್ಪತ್ರೆಯೊಂದರಲ್ಲಿ ಕ್ಯಾನ್ಸರ್ಗೆ ಚಿಕಿತ್ಸೆ ನೀಡಿ ಯುವಕನ ಜೀವ ಕಾಪಾಡಿದ್ದಾರೆ.
Health Tips: ನಿಮ್ಮ ವಯಸ್ಸು 30 ವರ್ಷನಾ? ಮೊದಲು ಈ ಟೆಸ್ಟ್ ಮಾಡ್ಸಿ, ನಿಮಗೇ ಒಳ್ಳೆಯದು!
30 ವರ್ಷದ ಬಳಿಕ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹಾರ್ಮೋನುಗಳ ಅಸಮತೋಲನದಂತಹ ಅನೇಕ ದೀರ್ಘಕಾಲದ ಕಾಯಿಲೆಗಳು ಈ ವಯಸ್ಸಿನಲ್ಲಿಯೇ ಬೇರೂರಲು ಪ್ರಾರಂಭಿಸುತ್ತವೆ.
ವೈದ್ಯರು ಮತ್ತು ರೋಗಿಯ ನಡುವಿನ ಬಾಂಧವ್ಯ ಶಿಥಿಲವಾಗದಿರಲಿ
ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸುತ್ತಿರುವ ಈ ಕಾಲಘಟ್ಟದಲ್ಲಿ ವೈದ್ಯ ಮತ್ತು ರೋಗಿ ಸಂಬಂಧ ಮೊದಲಿನಂತೆ ಉಳಿದಿಲ್ಲ. ‘ವೈದ್ಯರೇ ದೇವರು’ ಎಂಬ ಮಾತು ಈಗ ಬಹುಶಃ ಎಲ್ಲ ವೈದ್ಯರಿಗೂ ಅನ್ವಯಿಸಲಾರದು. ಅದೇ ರೀತಿ, ಇಂದಿನ ರೋಗಿಗಳು ಕೂಡ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಿಲ್ಲಿಲ್ಲ. ತಮ್ಮ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತನ್ನ ತಪ್ಪು ಒಪ್ಪುಗಳನ್ನು ಪುನರ್ ವಿಮರ್ಶಿಸಿಕೊಂಡು ಸಾಧನೆ ಮಜಲುಗಳತ್ತ ಹಿನ್ನೋಟ ಬೀರಿ, ತನ್ನ ತನು-ಮನ-ಧನಗಳನ್ನು ತನ್ನ ವೃತ್ತಿಗೆ ಪುನಃ ಅರ್ಪಿಸಿಕೊಳ್ಳುವ ಸುದಿನ. ಜುಲೈ 1, 1882ರಂದು ಭಾರತ ಕಂಡ ಮಹಾನ್ ವೈದ್ಯ, ಪ್ರಾಮಾಣಿಕ ರಾಜಕಾರಣಿ ಅಪ್ರತಿಮ ದೇಶಸೇವಕ ಮತ್ತು ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಡಾ. ಬಿದನ್ ಚಂದ್ರ ರಾಯ್ ಜನ್ಮದಿನ. ಈ ಮಹಾನ್ ಚೇತನದ ನೆನಪಿನ ಕುರುಹಾಗಿ ದೇಶದಾದ್ಯಂತ ಜುಲೈ 1ರಂದು ವೈದ್ಯರ ದಿನ ಎಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಮಾರು 80 ವರ್ಷಗಳ ಕಾಲ ತುಂಬು ಜೀವನ ನಡೆಸಿದ ಡಾ. ಬಿ.ಸಿ. ರಾಯ್ ಜೀವನದುದ್ದಕ್ಕೂ ಸರಳ ಮತ್ತು ಉದಾತ್ತ ಜೀವನ ನಡೆಸಿ ಬಡವರ, ನೊಂದ ಜೀವಗಳ ಸಾಂತ್ವನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. Poor are my patients, god pays for them ಎಂಬಂತೆ ಯಾವತ್ತೂ ಬಡವರಿಗೆ ಉಚಿತ ಚಿಕಿತ್ಸೆ ನೀಡಿ ಮಾನವೀಯತೆಯನ್ನು ಜೀವನ ಪರ್ಯಂತ ಮೆರೆದರು. ಗಾಂಧೀಜಿಯವರ ಜೀವನ ಆದರ್ಶಗಳಿಂದ ಬಹಳಷ್ಟು ಪ್ರಭಾವಿತರಾಗಿದ್ದ ಅವರು ಬಡವರ ಉದ್ಧಾರಕ್ಕಾಗಿ ಸದಾ ಶ್ರಮಿಸುತ್ತಿದ್ದರು. ಬಡವರಿಗಾಗಿ ಬಂಗಾಳದ ಕೋಲ್ಕತಾದಲ್ಲಿ ಆಸ್ಪತ್ರೆಯನ್ನು ತೆರೆದರು. ಕೋಲ್ಕತಾದಲ್ಲಿ ಪ್ರಾಥಮಿಕ ವೈದ್ಯಕೀಯ ಶಿಕ್ಷಣದ ಬಳಿಕ ಇಂಗ್ಲೆಡ್ನಲ್ಲಿ ಉನ್ನತ ಶಿಕ್ಷಣ (MRCP, FRCS) ಪಡೆದ ಬಳಿಕ ತಾಯ್ನಾಡಿನ ಸೆಳೆತಕ್ಕೊಳಗಾಗಿ ಭಾರತಕ್ಕೆ ಹಿಂದಿರುಗಿದರು. ತಾವು ನಂಬಿದ ತತ್ವಾದರ್ಶ, ಧ್ಯೇಯಗಳನ್ನು ಬಲಿಗೊಡದೆ ವೈದ್ಯಕೀಯ ವೃತ್ತಿಯನ್ನು ಪ್ರಾಮಾಣಿವಾಗಿ ನಡೆಸಿ ಇತರರಿಗೂ ಆದರ್ಶಪ್ರಾಯರಾದರು. ಸ್ವಾತಂತ್ರ್ಯಾನಂತರದ ದಿನಗಳಲ್ಲಿ ಗಾಂಧೀಜಿಯವರ ಒತ್ತಾಯದಿಂದಾಗಿ ರಾಜಕೀಯ ಪ್ರವೇಶಿಸಿ 1948ರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದರು. ಮುಖ್ಯಮಂತ್ರಿಯಾದ ಬಳಿಕವೂ ಹಲವಾರು ಆಸ್ಪತ್ರೆಗಳನ್ನು ತೆರೆದು ಬಡವರಿಗೆ ಉಚಿತ ಚಿಕಿತ್ಸೆಯನ್ನು ನೀಡಿದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ತೆರೆದು ಉಚಿತ ಶಿಕ್ಷಣವನ್ನು ನೀಡಿಸಿದರು. ಹೀಗೆ ರಾಜಕೀಯ, ವೈದ್ಯಕೀಯ, ಶಿಕ್ಷಣ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಗಾಂಧೀಜಿ ಕಂಡ ರಾಮರಾಜ್ಯದ ಕನಸನ್ನು ನನಸಾಗಿಸಲು ಜೀವನ ಪರ್ಯಂತ ತಮ್ಮ ಬದುಕನ್ನು ಸವೆಸಿದರು. ಹೀಗೆ 80 ವರ್ಷಗಳ ತುಂಬು ಜೀವನ ನಡೆಸಿ 1962ರ ಜುಲೈ 1ರಂದು ನಿಧನರಾದರು. ಅವರ ಅಪ್ರತಿಮ ಸೇವೆಗಾಗಿ ಭಾರತ ಸರಕಾರ 1961ರಲ್ಲಿ ಭಾರತ ರತ್ನ ನೀಡಿ ಗೌರವಿಸಿತ್ತು. 1976ರಿಂದ ವೈದ್ಯಕೀಯ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ವೈದ್ಯರಿಗಾಗಿ ಬಿ.ಸಿ.ರಾಯ್ ಪ್ರಶಸ್ತಿಯನ್ನು ಆರಂಭಿಸಲಾಯಿತು. ಇದು ವೈದ್ಯಕೀಯ ಕ್ಷೇತ್ರದ ಪರಮೋಚ್ಚ ಪ್ರಶಸ್ತಿ ಎಂದರೂ ತಪ್ಪಲ್ಲ. ಇಂತಹ ಮಹಾನ್ ಚೇತನದ ನೆನಪಿಗಾಗಿ ದೇಶದ್ಯಾಂತ ಜುಲೈ 1ರಂದು ವೈದರ ದಿನ ಎಂದು ಆಚರಿಸಲಾಗುತ್ತದೆ. ಹಾಗೆಯೇ ದೇಶಾದ್ಯಂತ ವೈದ್ಯ ಬಂಧುಗಳು ತಮ್ಮ ವೃತ್ತಿ ಜೀವನ ಮಜಲುಗಳತ್ತ ದೃಷ್ಟಿ ಹಾಯಿಸಿಕೊಂಡು ತಪ್ಪನ್ನು ತಿದ್ದಿಕೊಂಡು ಆತ್ಮಾವಲೋಕನ ಮಾಡಿಕೊಂಡು ಮಾನವಕುಲದ ಸೇವೆಗೆ ತಮ್ಮನ್ನು ಮಗದೊಮ್ಮೆ ಸಮರ್ಪಿಸಿಕೊಳ್ಳುವ ದಿನವಾಗಿದೆ ಇಂದು. ಹಾಗೆಯೇ ದೇಹದ ಆರೋಗ್ಯದಲ್ಲಿ ಏರುಪೇರು ಆದಾಗ, ಜೀವನ್ಮರಣದ ನಡುವೆ ಬದುಕಲು ಹೆಣಗಾಡುತ್ತಿರುವಾಗ ಧೈರ್ಯ, ಆತ್ಮವಿಶ್ವಾಸ ತುಂಬಿ, ನೋವು ಶಮನಗೊಳಿಸಿ ಹೊಸ ಜೀವನಕ್ಕೆ ಅನುವು ಮಾಡಿ ಕೊಡುವ ತಮ್ಮ ನೆಚ್ಚಿನ ವೈದ್ಯರನ್ನು ಜನತೆ ನೆನಪಿಸಿಕೊಳ್ಳುವ ಮತ್ತು ಆದರಿಸುವ ದಿನವಿದು. ವ್ಯಾಪಾರಿ ಪ್ರವೃತ್ತಿಗೆ ಕಡಿವಾಣ ಅಗತ್ಯ ನಮಗೆ ಸ್ವಾತಂತ್ರ್ಯ ಲಭಿಸಿ ಹಲವು ದಶಕಗಳು ಕಳೆದಿವೆ. ಕಾಲ ಬದಲಾದಂತೆ ನಮ್ಮ ಜೀವನಶೈಲಿ, ಆದರ್ಶಗಳೂ ಬದಲಾಗಿವೆ. ವೈದ್ಯಕೀಯ ಕ್ಷೇತ್ರದಲ್ಲಿ ಅದ್ಭುತ ಕ್ರಾಂತಿಗಳು, ಆವಿಷ್ಕಾರಗಳು ನಡೆದಿವೆ. ಹೊಸ ಹೊಸ ರೋಗಗಳು ಮತ್ತು ಹೊಸ ಹೊಸ ಔಷಧಿಗಳೂ ಹುಟ್ಟಿಕೊಂಡಿವೆ. ಇನ್ನೊಂದೆಡೆ ರೋಗಿ ಮತ್ತು ವೈದ್ಯರ ನಡುವಿನ ಭಾವನಾತ್ಮಕ ಸಂಬಂಧ ಶಿಥಿಲವಾಗುತ್ತಿದೆ. ಇಂದು ವೈದ್ಯಕೀಯ ಕ್ಷೇತ್ರದಲ್ಲಿ ವ್ಯಾಪಾರಿ ಮನೋಭಾವ ಹೆಚ್ಚಾಗುತ್ತಿರುವುದು ವಿಷಾದನೀಯ. ವೈದ್ಯ ಶಿಕ್ಷಣ, ವೈದ್ಯಕೀಯ ವೃತ್ತಿ, ಸಂಶೋಧನೆಗಳೇ ಇರಲಿ ಎಲ್ಲ ಕಡೆಯೂ ಧನಬಲವೇ ವಿಜೃಂಭಿಸುತ್ತಿದೆ. ಪ್ರತಿಭೆ, ಪ್ರಾಮಾಣಿಕ ಪರಿಶ್ರಮಗಳಿಗೆ ಕಿಂಚಿತ್ತೂ ಬೆಲೆ ಸಿಗುತ್ತಿಲ್ಲ. ಇದು ಸುಂದರ, ಸ್ವಸ್ಥ ಸಮಾಜಕ್ಕೆ ಖಂಡಿತ ಮಾರಕ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಜನತೆ ಮತ್ತು ಸರಕಾರ ತ್ವರಿತಗತಿಯಲ್ಲಿ ಸ್ಪಂದಿಸಬೇಕು. ಅರ್ಹ ಪ್ರತಿಭಾವಂತರಿಗೆ ವೈದ್ಯಕೀಯ ಶಿಕ್ಷಣ ಅವಕಾಶ ದೊರೆತು, ಆರೋಗ್ಯ ಕ್ಷೇತ್ರದಲ್ಲೂ ಹೆಚ್ಚಿನ ಸಂಶೋಧನೆಗಳು ನಡೆಯಬೇಕು. ಹೊಸದಾಗಿ ಹುಟ್ಟಿಕೊಳ್ಳುತ್ತಿರುವ ರೋಗಗಳಿಗೂ ಮತ್ತು ತಲೆತಲಾಂತರಗಳಿಂದ ಬಾಧಿಸುತ್ತಿರುವ ರೋಗಗಳಿಗೂ ಕಡಿವಾಣ ಹಾಕಬೇಕು. ಔಷಧ, ಶುಶ್ರೂಷೆ ಮತ್ತು ಎಲ್ಲಾ ಪ್ರಾಥಮಿಕ ಆರೋಗ್ಯ ಸೌಲಭ್ಯಗಳು ಬಡವರ ಮನೆ ಬಾಗಿಲಿಗೆ ತಲುಪಬೇಕು. ಈ ನಿಟ್ಟಿನಲ್ಲಿ ನಿಸ್ವಾರ್ಥದಿಂದ, ಸೇವಾ ಮನೋಭಾವದಿಂದ ಹಗಲಿರುಳು ತಮ್ಮ ಜೀವನವನ್ನು ರೋಗಿಗಳ ಒಳಿತಿಗಾಗಿ ತೊಡಗಿಸಿಕೊಂಡು ವೈದ್ಯರನ್ನು ಗುರುತಿಸುವ ಕಾರ್ಯ ನಡೆಯಬೇಕು. ರೋಗಿಗಳಿಗೂ ಒಂದೆರಡು ಕಿವಿಮಾತು. ದಯವಿಟ್ಟು ತಾಳ್ಮೆ, ಸಂಯಮ ಕಳೆದುಕೊಳ್ಳಬೇಡಿ. ವೈದ್ಯರ ಮೇಲೆ ಪೂರ್ಣ ಭರವಸೆ ಇಡಿ. ಎಲ್ಲಾ ಸಮಸ್ಯೆಗಳನ್ನು ಮುಕ್ತವಾಗಿ ವೈದ್ಯರ ಬಳಿ ತೆರೆದಿಡಿ. ವೈದ್ಯರೂ ನಿಮ್ಮಂತೆಯೇ ಇರುವ ಇನ್ನೊಂದು ಜೀವ. ಅವರಿಗೆ ಆಸೆ, ಆಕಾಂಕ್ಷೆ, ವೈಯಕ್ತಿಕ ಸಮಸ್ಯೆ, ಭಾವನೆಗಳು ಇರುತ್ತವೆ. ಅವರ ಭಾವನೆಗಳಿಗೆ, ನೋವುಗಳಿಗೂ ರೋಗಿಗಳು ಸ್ಪಂದಿಸಬೇಕು. ಹಾಗಿದ್ದಲ್ಲಿ ಮಾತ್ರ ವೈದ್ಯ ರೋಗಿಗಳ ನಡುವೆ ಸುಮಧುರ ಬಾಂಧವ್ಯ ಬೆಳೆದು ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ. ಕೆಲವೊಮ್ಮೆ ರೋಗಿಗಳು ವೈದ್ಯರಿಗೆ ರೋಗದ ಬಗ್ಗೆ ಸಂಪೂರ್ಣ ಪರಾಮರ್ಶೆ ಮಾಡಲು ಕಾಲಾವಕಾಶ ನೀಡಬೇಕು. ದಿನ ಬೆಳಗಾಗುವು ದರೊಳಗೆ ಕಾಯಿಲೆ ವಾಸಿಯಾಗಬೇಕು ಎಂದು ವೈದ್ಯರ ಮೇಲೆ ಅನಗತ್ಯ ಒತ್ತಡ ಹಾಕಬೇಡಿ. ಅನಗತ್ಯ ಪ್ರಶ್ನೆ ಕೇಳಿ ಅಂತರ್ಜಾಲದ ಮಾಹಿತಿಯನ್ನು ವೈದ್ಯರ ಬಳಿ ತಿಳಿಸಿ, ತಮ್ಮ ಅಲ್ಪ ಸ್ವಲ್ಪ ಜ್ಞಾನದಿಂದ ವೈದ್ಯರ ದಾರಿ ಕೆಡಿಸಬೇಡಿ. ಪ್ರತಿಶತ ಮೂವತ್ತರಷ್ಟು ರೋಗ, ವೈದ್ಯರ ಮೇಲಿನ ನಂಬಿಕೆಯ ತಳಹದಿಯಲ್ಲೇ ಗುಣವಾಗುತ್ತದೆ. ದೇಹದ ರೋಗವನ್ನು ವೈದ್ಯರು ಗುಣಪಡಿಸಬಹುದು. ಆದರೆ ಸಂದೇಹ ರೋಗ ಗುಣಪಡಿಸುವುದು ವೈದ್ಯರಿಂದ ಅಸಾಧ್ಯ ಎನ್ನುವುದನ್ನು ಅರಿತುಕೊಂಡರೆ, ವೈದ್ಯರ ಕೆಲಸ ಸರಳ. ವೈದ್ಯರೂ ಆತ್ಮವಿಮರ್ಶೆ ಮಾಡಿಕೊಂಡು ತಮ್ಮ ವೃತ್ತಿ ಪಾಲಿಸಿದಲ್ಲಿ ಸುಂದರ ಸದೃಢ ಸಮಾಜ ನಿರ್ಮಾಣ ಸಾಧ್ಯ. ವೈದ್ಯರ ಆದರ್ಶಗಳು ಇತರರಿಗೆ ಮಾದರಿಗಳು ಮೊದಲೆಲ್ಲಾ ವೈದ್ಯ ವೃತ್ತಿಯನ್ನು ಪವಿತ್ರವಾದ ವೃತ್ತಿ ಎಂದು ಕರೆಯಲಾಗುತ್ತಿತ್ತು. ಕಾಲಕ್ರಮೇಣ ಬಹಳಷ್ಟು ಬದಲಾವಣೆಗಳಾದವು. ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಕಾಲಘಟ್ಟದಲ್ಲಿ ವೈದ್ಯಕೀಯ ವೃತ್ತಿಯಲ್ಲಿಯೂ ಬಹಳಷ್ಟು ಪರಿವರ್ತನೆಯಾಯಿತು. ಮೊದಲಿದ್ದ ವೈದ್ಯ- ರೋಗಿಯ ಸಂಬಂಧ ಈಗೀಗ ಮೊದಲಿನಂತೆ ಉಳಿದಿಲ್ಲ. ಎಲ್ಲವನ್ನೂ ಸಂಶಯದ ದೃಷ್ಟಿಯಿಂದ ನೋಡುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದರಲ್ಲಿ ರೋಗಿ ಮತ್ತು ವೈದ್ಯರ ತಪ್ಪೂ ಇದೆ. ಪ್ರತೀ ವೈದ್ಯ ಮತ್ತು ರೋಗಿ ತನ್ನ ಹೊಣೆಗಾರಿಕೆ, ವೃತ್ತಿ ಧರ್ಮ ಮತ್ತು ಇತಿಮಿತಿಯೊಳಗೆ ವ್ಯವಹರಿಸಿದಲ್ಲಿ ಈ ರೀತಿಯ ಸಂಘರ್ಷ ತಪ್ಪಿಸಬಹುದು. ಅದರಲ್ಲ್ಯೇ ಇಬ್ಬರ ಒಳಿತು ಮತ್ತು ಸಮಾಜದ ಒಳಿತೂ ಅಡಗಿದೆ. ಸಾವು ಸಮೀಪಿಸಿದಾಗ ವೈದ್ಯ ದೇವರಾಗಿಯೂ, ಚಿಕಿತ್ಸೆ ಆರಂಭಿಸಿದಾಗ ದೇವಮಾನವನಾಗಿಯೂ, ಚಿಕಿತ್ಸೆ ಫಲಿಸಿದಾಗ ಸಾಮಾನ್ಯ ಮನುಷ್ಯನಾಗಿಯೂ, ಶುಲ್ಕ ಕೇಳಿದಾಗ ಧನದಾಹಿ ಎಂದೂ, ಚಿಕಿತ್ಸೆ ಫಲಿಸದಾಗ ಕೊಲೆಗಡುಕ ಎಂದೂ ಜನರು ವೈದ್ಯರನ್ನೂ ಹಾಡಿ ಹೊಗಳುತ್ತಾರೆ ಮತ್ತು ತೆಗಳುತ್ತಾರೆ. ಆದರೆ ಈ ಎಲ್ಲಾ ಹೊಗಳಿಕೆಗೆ ಹಿಗ್ಗದೆ ತೆಗಳಿಕೆಗೆ ಕುಗ್ಗದೆ ಸಮಚಿತ್ತದಿಂದ ವರ್ತಿಸಿ ವೃತ್ತಿ ಧರ್ಮವನ್ನು ಪಾಲಿಸಿ ರೋಗಿಯು ಗುಣಮುಖವಾಗಲು ಪ್ರಾಮಾಣಿಕವಾಗಿ ಪ್ರಯತ್ನಿಸುವವನೇ ನಿಜವಾದ ವೈದ್ಯ. ಅಂತಹ ವೈದ್ಯ ದೇವರಾಗದಿದ್ದರೂ ಮನುಷ್ಯನಾಗುವುದಂತೂ ಖಂಡಿತ ಸತ್ಯ. ಈ ರೀತಿ ತನ್ನ ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳ ಸೇವೆ ಮಾಡುತ್ತಿರುವ ಸಾವಿರಾರು ವೈದ್ಯರು ನಮ್ಮ ಸಮಾಜದಲ್ಲಿ ಇದ್ದಾರೆ. ಅವರು ಹಾಕಿದ ಆದರ್ಶ ಮತ್ತು ತತ್ವಗಳು ಇತರರಿಗೆ ಮಾದರಿಯಾಗಲಿ. ವೈದ್ಯರ ದಿನದಂದು ನನ್ನೆಲ್ಲಾ ವೈದ್ಯ ಸಹೋದ್ಯೋಗಿ ಬಂಧುಗಳಿಗೆ ಶುಭಾಶಯ ಕೋರುತ್ತೇನೆ.
Iron Pan: ಕಬ್ಬಿಣದ ಕಡಾಯಿಯಲ್ಲಿ ಈ ಆಹಾರಗಳನ್ನು ತಯಾರಿಸಿ, ಹಲವು ರೋಗಕ್ಕೆ ಇದೇ ಮದ್ದು!
ಕೆಲವು ತರಕಾರಿಗಳನ್ನು ಕಬ್ಬಿಣದ ಕಡಾಯಿಯಲ್ಲಿ ಬೇಯಿಸಿದಾಗ ಸಂಜೀವಿನಿ ಗಿಡಮೂಲಿಕೆಯಂತೆ ಕಾರ್ಯನಿರ್ವಹಿಸುತ್ತವೆ. ಅವುಗಳ ರುಚಿ ಹೆಚ್ಚುವುದಲ್ಲದೆ, ಅವು ಆರೋಗ್ಯಕ್ಕೆ ರಾಮಬಾಣವೂ ಆಗುತ್ತವೆ!
ಗಂಡಸರು ಕೋಳಿ ಮಾಂಸ ಜಾಸ್ತಿ ತಿನ್ನಬಾರದಾ? ಇದು ನಾನ್ ವೆಜ್ ಪ್ರಿಯರು ಬೆಚ್ಚಿ ಬೀಳೋ ಸುದ್ದಿ!
ಕುರಿ ಮಾಂಸದ ಬೆಲೆ ಹೆಚ್ಚಾಗಿರುವುದರಿಂದ ಜನರು ಕೋಳಿಯನ್ನು ಹೆಚ್ಚು ಸೇವಿಸುತ್ತಾರೆ. ಇಂತಹ ಕೋಳಿ ಮಾಂಸವನ್ನು ಪುರುಷರು ಎಷ್ಟು ಸೇವಿಸಬೇಕು? ಸೇವಿಸುವುದು ಒಳ್ಳೆಯದೋ ಕೆಟ್ಟದ್ದೋ ಎಂಬುದನ್ನು ನೋಡೋಣ ಬನ್ನಿ.
How To Prevent Heart Attack? | ಯುವಕರನ್ನೇ ಏಕೆ ಕಾಡುತ್ತಿದೆ ಹೃದಯಾಘಾತ? ಇದನ್ನು ತಡೆಯುವುದು ಹೇಗೆ? | N18V
How To Prevent Heart Attack? | ಯುವಕರನ್ನೇ ಏಕೆ ಕಾಡುತ್ತಿದೆ ಹೃದಯಾಘಾತ? ಇದನ್ನು ತಡೆಯುವುದು ಹೇಗೆ? | N18V
ಮಾರಣಾಂತಿಕ ಸ್ತನ ಕ್ಯಾನ್ಸರ್ಗೆ ಸಿಕ್ಕೇ ಬಿಡ್ತು ಔಷಧಿ! ಮೂರೇ 3 ಡೋಸ್ ತಗೊಂಡ್ರೆ ಸಾಕು ಮಾರಕ ಕಾಯಿಲೆಯಿಂದ
ಬಯೋಟೆಕ್ ಕಂಪನಿ ಎನಿಕ್ಸಾ ಬಯೋಸೈನ್ಸ್ ಸ್ತನ ಕ್ಯಾನ್ಸರ್ ಚಿಕಿತ್ಸೆಗಾಗಿ ಹೊಸ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಈ ಲಸಿಕೆ ಗೆಡ್ಡೆಯ ರಚನೆಯ ಪರಿಣಾಮವನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗುತ್ತದೆ ಎಂದು ಕಂಪನಿ ಹೇಳಿದೆ.
ಮಳೆಗಾಲದಲ್ಲಿ ಬಾಯಿರುಚಿಗಾಗಿ ಈ ತರಕಾರಿ-ಮಾಂಸ ತಿಂತೀರಾ? ಹಾಗಾದ್ರೆ ಮೆದುಳಲ್ಲಿ ಹುಳು ಸೇರುತ್ತೆ ಹುಷಾರ್!
ಯಾವುದೇ ತರಕಾರಿಗಳನ್ನು, ವಿಶೇಷವಾಗಿ ನೆಲದಲ್ಲಿ ಬೆಳೆದ ತರಕಾರಿಗಳನ್ನು ಸರಿಯಾಗಿ ತೊಳೆಯದೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ 'ಮೆದುಳಿನಲ್ಲಿ ಹುಳುಗಳು' ಬರುವ ಸಾಧ್ಯತೆ ಇರುತ್ತದೆ.
Yoga Benefits: ಯೋಗದಿಂದ ದೂರ ರೋಗ! ಯೋಗಾಸನದಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
International Yoga Day 2025: ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಸಹಸ್ರಾರು ವರ್ಷಗಳ ಹಿಂದೆ ಯೋಗ ಹುಟ್ಟಿದ್ದು, ಭಾರತವೇ ಅದಕ್ಕೆ ತವರು. ಋಗ್ವೇದಗಳಲ್ಲಿ, ಪೌರಾಣಿಕ ಪುಸ್ತಕಗಳಲ್ಲೂ ಯೋಗದ ಉಲ್ಲೇಖವಿದೆ. ಯೋಗದ ಮೊದಲು ಗುರು ಶಿವ ಎಂದೇ ಹೇಳಲಾಗುತದೆ. ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯ ತರುವ ಕೆಲಸವನ್ನು ಯೋಗ ಮಾಡುತ್ತದೆ. ಹಾಗಾದರೆ ಅದರಿಂದ ಬೇರೆ ಏನೆಲ್ಲಾ ಪ್ರಯೋಜನಗಳಿವೆ? ತಿಳಿಯೋಣ ಬನ್ನಿ…
ಹಗಲು ಕೊಂಚ ನಿದ್ರಿಸಿದ್ರೆ ಹಾರ್ಟ್ ಅಟ್ಯಾಕ್ ತಡೆಯಬಹುದಂತೆ! ಹಾಗಾದ್ರೆ, ನೀವೂ ಸ್ವಲ್ಪ ನಿದ್ದೆ ಮಾಡಿ!
ಹೃದಯ ಕಾಯಿಲೆ ವಿಶ್ವಾದ್ಯಂತ ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಹಗಲಿನ ನಿದ್ರೆಯು ಹೃದಯದ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. 12-30 ನಿಮಿಷಗಳ ಸಣ್ಣ ನಿದ್ರೆ ಒತ್ತಡವನ್ನು ಕಡಿಮೆ ಮಾಡಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಮೂತ್ರಪಿಂಡದಲ್ಲಿ ಸದ್ದಿಲ್ಲದೇ ಬೆಳೆಯುತ್ತೆ ಯೂರಿಕ್ ಆಸಿಡ್ ಕಲ್ಲು! ಕಾರಣವೇನು? ಇದಕ್ಕೆ ಪರಿಹಾರವೇನು?
ಯೂರಿಕ್ ಆಸಿಡ್ ಕಲ್ಲುಗಳು ಎಲ್ಲಾ ಮೂತ್ರಪಿಂಡದ ಕಲ್ಲುಗಳ ಪೈಕಿ ಸುಮಾರು 8% - 10% ರಷ್ಟು ಕಾಣಿಸಿಕೊಳ್ಳುತ್ತವೆ. ಹಾಗಾದರೆ ಏನಿದು ಯೂರಿಕ್ ಆಸಿಡ್ ಕಲ್ಲುಗಳು? ಇದಕ್ಕೆ ಕಾರಣವೇನು? ಇದಕ್ಕೆ ಪರಿಹಾರಗಳೇನು?
ಪ್ರೋಟೀನ್ ಕೊರತೆ ನೀಗಿಸಲು ಭಾರತ ದೃಢ ಸಂಕಲ್ಪ: ಇಲ್ಲಿದೆ ನೋಡಿ ಈ ಕುರಿತು ಮಾಹಿತಿ
ಭಾರತದಲ್ಲಿ ಪ್ರೋಟೀನ್ ಉತ್ಪನ್ನ ಮಾರುಕಟ್ಟೆ 2030 ರ ವೇಳೆಗೆ $2 ಬಿಲಿಯನ್ಗಿಂತಲೂ ಹೆಚ್ಚಾಗುವ ನಿರೀಕ್ಷೆಯಿದೆ. ಅಮುಲ್ ಪ್ರೋಟೀನ್ ಕೊರತೆಯನ್ನು ಪರಿಹರಿಸಲು ಹಾಲೊಡಕು ಪುಡಿ ಮತ್ತು ಹೆಚ್ಚಿನ ಪ್ರೋಟೀನ್ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿದೆ.
ಬಾಯಿ ವಾಸನೆಯಿಂದ ಮುಜುಗರ ಆಗ್ತಿದ್ಯಾ? ಹಾಗಾದ್ರೆ, ಮನೆಯಲ್ಲೇ ತಯಾರಿಸಿ ಮೌತ್ ಫ್ರೆಶ್ನರ್!
ಬಾಯಿ ವಾಸನೆಯಿಂದ ಕಂಗೆಟ್ಟಿದ್ದೀರಾ? ಹಾಗಾದ್ರೆ ನೀವು ಮನೆಯಲ್ಲೇ ಸುಲಭವಾಗಿ ಮೌತ್ ಫ್ರೆಶ್ನರ್ ತಯಾರಿಸಿ, ಬಳಸಬಹುದು. ಇದು ವಿಶೇಷ ಮೌತ್ ಫ್ರೆಶ್ನರ್ ಆಗಿದ್ದು, ಉಸಿರಾಟವನ್ನು ತಾಜಾ ಆಗಿಸುತ್ತದೆ. ಬಾಯಿಯಲ್ಲಿರುವ ಬ್ಯಾಕ್ಟೀರಿಯಾ ತೆಗೆದು ಹಾಕುತ್ತದೆ. ಹಾಗಾದ್ರೆ ಇದನ್ನು ರೆಡಿ ಮಾಡೋದು ಹೇಗೆ? ಮಾಡೋದು