ಈ ಲಕ್ಷಣ ಕಂಡು ಬಂದ್ರೆ ನೆಗ್ಲೆಕ್ಟ್ ಮಾಡ್ಬೇಡಿ,ಇದು ಕೊಲೊನ್ ಕ್ಯಾನ್ಸರ್ನ ಲಕ್ಷಣ ಆಗಿರ್ಬಹುದು!
Colon Cancer: ಇತ್ತೀಚೆಗೆ ಹೆಚ್ಚಾಗಿ ಯುವ ಜನತೆಯನ್ನು ಕಾಡ್ತಿದೆ ಕೊಲೊನ್ ಕ್ಯಾನ್ಸರ್. ಇದಕ್ಕೆ ಕಾರಣವೇನು? ಇದರ ಲಕ್ಷಣ ಏನು ಗೊತ್ತಾ?
ಪ್ಯಾಕೇಜ್ಡ್ ಹಾಲನ್ನು ಬಿಸಿ ಮಾಡುವ ಅಗತ್ಯವಿದೆಯೆ?
ಸಾಂದರ್ಭಿಕ ಚಿತ್ರ | Photo Credit : freepik ಭಾರತೀಯ ಮನೆಗಳಲ್ಲಿ ಹಾಲು ಬಿಸಿ ಮಾಡುವುದು ದಿನಚರಿಯಾಗಿದೆ. ಅದು ಯಾವ ರೀತಿ ಬಂದರೂ ಬಿಸಿ ಮಾಡಿದ ನಂತರವೇ ಬಳಸಲಾಗುತ್ತದೆ. ಆದರೆ ಈ ದೈನಂದಿನ ಅಭ್ಯಾಸದ ಅಗತ್ಯವಿದೆಯೆ? ವೈರಲ್ ಆಗಿರುವ ಇನ್ಸ್ಟಾಗ್ರಾಂ ರೀಲ್ನಲ್ಲಿ ಮೂಳೆ ಶಸ್ತ್ರಚಿಕಿತ್ಸಕ ಡಾ ಮನನ್ ವೋರಾ ಈ ದೀರ್ಘಕಾಲದ ನಂಬಿಕೆಯನ್ನು ಪ್ರಶ್ನಿಸುತ್ತಾರೆ. View this post on Instagram A post shared by Dr. Manan Vora (@dr.mananvora) “ಪ್ಯಾಕ್ ಮಾಡಲಿರುವ ಹಾಲನ್ನು ಈಗಾಗಲೇ ಪಾಶ್ಚರೀಕರಿಸಲಾಗಿದೆ ಮತ್ತು ಹೆಚ್ಚಿನ ತಾಪಮಾನದಲ್ಲಿ ಸಂಸ್ಕರಿಸಲಾಗಿದೆ. ಅಲ್ಲಿ ಹಾನಿಕಾರಕ ಬ್ಯಾಕ್ಟೀರಿಯಗಳು ನಾಶವಾಗುತ್ತವೆ. ಇದನ್ನು ಸುರಕ್ಷತಾ ದೃಷ್ಟಿಕೋನದಿಂದ ಮನೆಯಲ್ಲಿ ಹೆಚ್ಚು ಕುದಿಸುವುದು ಅಗತ್ಯವಿಲ್ಲ. ಹೀಗೆ ಅಧಿಕ ಬಿಸಿಯಾಗುವುದು ರುಚಿ ಮತ್ತು ಪೋಷಣೆಯ ಮೇಲೂ ಪರಿಣಾಮ ಬೀರುತ್ತದೆ. ಸಾಮಾನ್ಯ ಬೆಚ್ಚಗಿನ ಸ್ಥಿತಿಗೆ ಬಿಸಿ ಮಾಡಿ ಅದನ್ನು ಚಹಾ ಮತ್ತು ಕಾಫಿಯಲ್ಲಿ ಬಳಸಬಹುದು” ಎಂದು ಅವರು ವಿವರಿಸಿದ್ದಾರೆ. ಪಾಶ್ಚರೀಕರಣ ಎಂದರೇನು? ಮನನ್ ವೋರಾ ವಿವರಿಸುವ ಪ್ರಕಾರ, “ಪಾಶ್ಚರೀಕರಣವು ಒಂದು ಶಾಖ-ಚಿಕಿತ್ಸಾ ಪ್ರಕ್ರಿಯೆಯಾಗಿದ್ದು, ಹಸಿ ಹಾಲಿನಲ್ಲಿ ನೈಸರ್ಗಿಕವಾಗಿ ಇರುವ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುವ ಮೂಲಕ ಹಾಲನ್ನು ಸೇವನೆಗೆ ಸುರಕ್ಷಿತವಾಗಿಸಲು ಬಳಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ, ತಣ್ಣಗಾದ ಹಸಿ ಹಾಲನ್ನು ನಿಗದಿತ ಅವಧಿಗೆ ನಿರ್ದಿಷ್ಟ ತಾಪಮಾನಕ್ಕೆ ತ್ವರಿತವಾಗಿ ಬಿಸಿ ಮಾಡಲಾಗುತ್ತದೆ ಮತ್ತು ನಂತರ ತ್ವರಿತವಾಗಿ ತಂಪಾಗಿಸಲಾಗುತ್ತದೆ. ಹೆಚ್ಚಿನ ಪ್ರಮಾಣಿತ ಹಾಲು ಸಂಸ್ಕರಣಾ ಘಟಕಗಳಲ್ಲಿ, ಹಾಲನ್ನು ಸುಮಾರು 72°C ಗೆ ಬಿಸಿ ಮಾಡಲಾಗುತ್ತದೆ ಮತ್ತು ಆ ತಾಪಮಾನದಲ್ಲಿ ಕನಿಷ್ಠ 15 ಸೆಕೆಂಡುಗಳ ಕಾಲ ಹಿಡಿದಿಟ್ಟುಕೊಳ್ಳಲಾಗುತ್ತದೆ ಮತ್ತು ನಂತರ ತಕ್ಷಣವೇ ಸುಮಾರು 4°C ಗೆ ತಂಪಾಗಿಸಲಾಗುತ್ತದೆ. ಈ ನಿಯಂತ್ರಿತ ತಾಪನವು ಹಾಲಿನ ಪೌಷ್ಟಿಕಾಂಶದ ಗುಣಮಟ್ಟ ಮತ್ತು ರುಚಿಯನ್ನು ಸಂರಕ್ಷಿಸುವುದರ ಜೊತೆಗೆ ರೋಗಕಾರಕ ಸೂಕ್ಷ್ಮಜೀವಿಗಳನ್ನು ನಾಶಮಾಡಲು ಸಾಕಾಗುತ್ತದೆ.” ಇಂದು ವ್ಯಾಪಕವಾಗಿ ಬಳಸಲಾಗುವ ಪಾಶ್ಚರೀಕರಣ ವಿಧಾನವೆಂದರೆ ಹೈ ಟೆಂಪರೇಚರ್ ಶಾರ್ಟ್ ಟೈಮ್ (ಎಚ್ಟಿಎಸ್ಟಿ) ಪಾಶ್ಚರೀಕರಣ. ಮತ್ತೊಂದು ಮುಂದುವರಿದ ವಿಧಾನವೆಂದರೆ ಅಲ್ಟ್ರಾ ಹೈ ಟೆಂಪರೇಚರ್ (ಯುಎಚ್ಟಿ) ಸಂಸ್ಕರಣೆ, ಇದನ್ನು ಅಸೆಪ್ಟಿಕ್ ಸಂಸ್ಕರಣೆ ಎಂದೂ ಕರೆಯುತ್ತಾರೆ. ಡೈರಿ ಉದ್ಯಮವು ಹೆಚ್ಚಾಗಿ ಹೊಸದಾಗಿ ಪಾಶ್ಚರೀಕರಿಸಿದ ಹಾಲಿನ ಶಾಖವನ್ನು ಮುಂದಿನ ಬ್ಯಾಚ್ ನ ತಣ್ಣನೆಯ ಹಸಿ ಹಾಲನ್ನು ಬಿಸಿಮಾಡಲು ಬಳಸುತ್ತದೆ. ಅದೇ ಸಮಯದಲ್ಲಿ, ಒಳಬರುವ ತಣ್ಣನೆಯ ಹಾಲು ಬಿಸಿಮಾಡಿದ ಪಾಶ್ಚರೀಕರಿಸಿದ ಹಾಲನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಈ ಶಾಖ-ವಿನಿಮಯ ವ್ಯವಸ್ಥೆಯು ಹೆಚ್ಚುವರಿ ತಾಪನ ಮತ್ತು ಶೈತ್ಯೀಕರಣದ ಅಗತ್ಯವನ್ನು ಕಡಿಮೆ ಮಾಡುತ್ತದೆ, ಇದು ಸಂಪೂರ್ಣ ಪ್ರಕ್ರಿಯೆಯನ್ನು ಹೆಚ್ಚು ಪರಿಣಾಮಕಾರಿ ಮತ್ತು ಸುಸ್ಥಿರವಾಗಿಸುತ್ತದೆ. ಪ್ಯಾಕ್ ಮಾಡಿದ ಹಾಲನ್ನು ಬಿಸಿ ಮಾಡುವ ಅಗತ್ಯವಿದೆಯೆ? ಪ್ಯಾಕ್ ಮಾಡಿದ ಹಾಲನ್ನು ಈಗಾಗಲೇ ಪ್ಯಾಶ್ಚರೀಕರಿಸಲಾಗಿದೆ. ಇದು ಹಾನಿಕರ ಬ್ಯಾಕ್ಟೀರಿಯಗಳನ್ನು ಕೊಂದಿರುತ್ತದೆ. ಹೀಗಾಗಿ ಹೆಚ್ಚುವರಿ ಕುದಿಸುವುದು ಸಾಮಾನ್ಯವಾಗಿ ಅನಗತ್ಯ. ಅಧಿಕ ಬಿಸಿಯಾಗುವುದು ಅಥವಾ ದೀರ್ಘಕಾಲ ಕುದಿಸುವುದರಿಂದ ಅದರ ಪೌಷ್ಠಿಕಾಂಶದ ಗುಣಮಟ್ಟ, ಮುಖ್ಯವಾಗಿ ಬಿ-ಕಾಂಪ್ಲೆಕ್ಸ್ ಜೀವಸತ್ವಗಳು ಮತ್ತು ಪ್ರೊಟೀನ್ಗಳು ಕಡಿಮೆಯಾಗಬಹುದು. ಆದರೆ ಸುರಕ್ಷತೆ ಮತ್ತು ರುಚಿ ಬೇಕೆಂದರೆ ಉಗುರುಬೆಚ್ಚಗಿನ ತಾಪಮಾನಕ್ಕೆ ಬಿಸಿ ಮಾಡಿದರೆ ಸಾಕಾಗುತ್ತದೆ. ಮುಖ್ಯವಾಗಿ ಸರಿಯಾಗಿ ಶೈತ್ಯೀಕರಣಗೊಳಿಸಬೇಕು ಮತ್ತು ಆರೋಗ್ಯಕರವಾಗಿ ನಿರ್ವಹಿಸಬೇಕು. ಕೃಪೆ: theweek.in
ಏಡ್ಸ್ ಗೆ ಸಿಕ್ತು ಔಷಧಿ, 2026 ರ ಅಂತ್ಯಕ್ಕೆ ಭಾರತಕ್ಕೂ ಪ್ರವೇಶ ನಿಕ್ಕಿ! ಸಾವಿಂದ ಪಾರು ಮಾಡೋ ಸಂಜೀವಿನಿ!
ಅಮೇರಿಕಾ ವಿಜ್ಞಾನಿಗಳು ಕಂಡುಹಿಡಿದ Lenacapavir ಚುಚ್ಚುಮದ್ದು 99% ಹೆಚ್ಐವಿ ಸೋಂಕಿನಿಂದ ರಕ್ಷಣೆ ನೀಡುತ್ತದೆ, WHO ಗ್ರೀನ್ ಸಿಗ್ನಲ್ ನೀಡಿದ್ದು 2026ರ ಅಂತ್ಯಕ್ಕೆ ಭಾರತದಲ್ಲಿ ಲಭ್ಯವಾಗಲಿದೆ.
ಕುಳಿತು ಕೆಲ್ಸ ಮಾಡಿ ಬೆನ್ನು-ಕತ್ತು ನೋವಾಗ್ತಿದ್ಯಾ? ಹಾಗಾದ್ರೆ ಕುಳಿತಲ್ಲೇ ಈ 10 ಟ್ರಿಕ್ಸ್ ಟ್ರೈ ಮಾಡಿ
Stretching Exercises: ನೀವು ಹೆಚ್ಚು ಸಮಯ ಕುಳಿತೇ ಇರುವವರಾದರೆ ನಿಮ್ಮ ಕುತ್ತಿಗೆ, ಭುಜ, ಹಿಂಭಾಗ, ಬೆನ್ನಿಗೆ ಸ್ಟ್ರೆಚಿಂಗ್ ವ್ಯಾಯಾಮಗಳನ್ನು ನೀಡಬೇಕಾಗುತ್ತದೆ.ಹೀಗಾಗಿ ನಿಮಗಾಗಿ ನಾವು ಕೆಲವೊಂದು ಸ್ಟ್ರೆಚಿಂಗ್ ವ್ಯಾಯಾಮಗಳು ತಿಳಿಸಿಕೊಡ್ತೇವೆ.
ಹಿಮೋಗ್ಲೋಬಿನ್ ಕೌಂಟ್ ಕಡಿಮೆ ಇದ್ದ ತಕ್ಷಣ ಆಹಾರದಲ್ಲಿ ಬದಲಾವಣೆ ಬೇಕೆ?
ಸಾಂದರ್ಭಿಕ ಚಿತ್ರ | Photo Credit : freepik ರಕ್ತ ಪರೀಕ್ಷೆಯಲ್ಲಿ ಕಬ್ಬಿಣದಂಶ ಕಡಿಮೆ ಇದೆ ಅಥವಾ ಹಿಮೋಗ್ಲೋಬಿನ್ ಕಡಿಮೆ ಎಂದಾಕ್ಷಣ ಬಹಳಷ್ಟು ಮಂದಿ ಪೂರಕ ಔಷಧಿಗಳನ್ನು ಸೇವಿಸುತ್ತಾರೆ ಅಥವಾ ಕಬ್ಬಿಣದಂಶ ಹೆಚ್ಚಾಗುವಂತೆ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳುತ್ತಾರೆ. ಆದರೆ ಇಂತಹ ಬದಲಾವಣೆ ಅಪಾಯಕಾರಿಯಾಗಿ ಪರಿಣಮಿಸಬಹುದು. ಆಧುನಿಕ ಇಂಟರ್ನೆಟ್ ಕಾಲದಲ್ಲಿ ಬಹಳಷ್ಟು ಮಂದಿ ಸ್ವಯಂ ವೈದ್ಯರಾಗಿ ಔಷಧಿಗಳನ್ನು ಸೇವಿಸುವುದಿದೆ. ವಿಟಮಿನ್ಗಳು ಅಥವಾ ಕಬ್ಬಿಣದಂಶಗಳು ಕಡಿಮೆ ಇದೆ ಎಂದು ರಕ್ತ ಪರೀಕ್ಷೆಯಲ್ಲಿ ತಿಳಿದ ತಕ್ಷಣ ಸ್ವಯಂ ವೈದ್ಯರಾಗಿಬಿಡುತ್ತಾರೆ. ಗೂಗಲ್ ಮಾಡಿ ತಕ್ಷಣ ಆಹಾರದಲ್ಲಿ ಬದಲಾವಣೆ ಮಾಡಿಬಿಡುತ್ತಾರೆ. ಆದರೆ ವೈದ್ಯರ ಸಲಹೆಯಿಲ್ಲದೆ ಆಹಾರದಲ್ಲಿ ಇಂತಹ ಬದಲಾವಣೆ ಮಾಡುವುದು ಅಥವಾ ಪೂರಕ ಔಷಧಿಗಳನ್ನು ಸೇವಿಸುವುದು ಅಪಾಯಕಾರಿ. ಕಬ್ಬಿಣದಂಶ ಕಡಿಮೆ ಎಂದರೇನು? ಹಿಮೋಗ್ಲೋಬಿನ್ ಪುರುಷರಲ್ಲಿ 13 ಮತ್ತು ಮಹಿಳೆಯರಲ್ಲಿ 11ರ ಆಸುಪಾಸಿನಲ್ಲಿದ್ದರೆ, ದೇಹದಲ್ಲಿ ಸೂಕ್ತ ಪ್ರಮಾಣದಲ್ಲಿ ಕಬ್ಬಿಣದಂಶವಿದೆ ಎಂದು ಪರಿಗಣಿಸಲಾಗುತ್ತದೆ. ಬಾರ್ಡರ್ಲೈನ್ ಎಂದರೆ 13/11ರ ಆಸುಪಾಸಿನಲ್ಲಿರಬೇಕಾಗುತ್ತದೆ. ಆದರೆ ಹಿಮೋಗ್ಲೋಬಿನ್ ಕೌಂಟ್ 6-5ರ ಸಮೀಪಕ್ಕೆ ಬಂದರೆ ಕಬ್ಬಿಣದಂಶ ಕಡಿಮೆಯಾಗಲು ಬೇರೆ ಕಾರಣಗಳಿವೆಯೇ ಎಂದು ಪರಿಶೀಲಿಸುವುದು ಅಗತ್ಯವಾಗಿರುತ್ತದೆ. ಆಹಾರಶೈಲಿಯಲ್ಲಿ ತಕ್ಷಣದ ಬದಲಾವಣೆ ಬೇಡ ರಕ್ತ ಪರೀಕ್ಷೆಯಲ್ಲಿ ಕಬ್ಬಿಣದಂಶ ಕಡಿಮೆ ಇದೆ ಅಥವಾ ಹಿಮೋಗ್ಲೋಬಿನ್ ಕಡಿಮೆ ಎಂದಾಕ್ಷಣ ಬಹಳಷ್ಟು ಮಂದಿ ಪೂರಕ ಔಷಧಿಗಳನ್ನು ಸೇವಿಸುತ್ತಾರೆ ಅಥವಾ ಕಬ್ಬಿಣದಂಶ ಹೆಚ್ಚಾಗುವಂತೆ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳುತ್ತಾರೆ. ಆದರೆ ಕಬ್ಬಿಣದಂಶ ಕಡಿಮೆಯಾಗಲು ಬೇಕಾದಷ್ಟು ಕಾರಣಗಳು ಇರಬಹುದು ಎನ್ನುತ್ತಾರೆ ವೈದ್ಯರು. ಮಾರಕ ಸೋಂಕುಗಳು, ಆಂತರಿಕ ರಕ್ರಸ್ರಾವ, ಋತುಚಕ್ರದಲ್ಲಿ ಅತಿಯಾದ ಸ್ರಾವ, ಗರ್ಭಧಾರಣೆ, ಸಿಲಿಯಾಕ್ ರೋಗ (ಹೊಟ್ಟೆ ಪೊಳ್ಳಿನ ರೋಗ), ಉರಿಯೂತದ ಕರುಳಿನ ರೋಗ ಅಥವಾ ಚಹಾ/ಕಾಫಿ ಅತಿಯಾಗಿ ಸೇವನೆಯಿಂದ (ಕಬ್ಬಿಣದಂಶ ಹೀರುವಿಕೆಯನ್ನು ತಡೆಯುತ್ತದೆ) ಕಬ್ಬಿಣದಂಶ ಕಡಿಮೆ ಇರುವ ಸಾಧ್ಯತೆಯೂ ಇರುತ್ತದೆ. ಬೆಂಗಳೂರಿನಲ್ಲಿ ವೈದ್ಯರಾಗಿರುವ ಚೈತನ್ಯ ಹೇಳುವ ಪ್ರಕಾರ, “ಹಿಮೋಗ್ಲೋಬಿನ್ ಬಾರ್ಡರ್ ಲೈನ್ಗಿಂತ ಕಡಿಮೆ ಇದ್ದರೆ ಆಹಾರದಲ್ಲಿ ಬದಲಾವಣೆಗೆ ಸೂಚಿಸುತ್ತೇವೆ. ಬಹಳ ಸುಸ್ತು, ತಲೆಸುತ್ತು ಅಥವಾ ತೀವ್ರ ಋತುಸ್ರಾವದ ಸಮಸ್ಯೆ ಇದ್ದಾಗ ಮಾತ್ರ ಚಿಹ್ನೆಗಳನ್ನು ಗಮನಿಸಿ ಕಬ್ಬಿಣದಂಶಕ್ಕೆ ಸಂಬಂಧಿಸಿದ ಔಷಧಿ ನೀಡಲಾಗುತ್ತದೆ.” ಕಬ್ಬಿಣದಂಶ ಅತಿಯಾದರೂ ಅಪಾಯ ಕೆಲವು ಪ್ರಕರಣಗಳಲ್ಲಿ ಕಬ್ಬಿಣದಂಶ ಅತಿಯಾದರೂ ಅಪಾಯ. ಹೊಟ್ಟೆಯುರಿ, ಮಲಬದ್ಧತೆ ಮತ್ತು ಕಬ್ಬಿಣದಂಶ ಅತಿಯಾಗಿ ಇರುವ ಹೀಮೋಕ್ರೊಮಟೊಸಿಸ್ನಂತಹ ರೋಗವೂ ಬರುವ ಸಾಧ್ಯತೆ ಇರುತ್ತದೆ. ಕಬ್ಬಿಣದಂಶ ಹೆಚ್ಚಿಸಬಹುದಾದ ಆಹಾರ ಹಿಮೋಗ್ಲೋಬಿನ್ ಕೊರತೆ ಇರುವ ಬಹಳಷ್ಟು ಮಂದಿಗೆ ಪಾಲಾಕ್, ಬೀಟ್ರೂಟ್, ಧಾನ್ಯಗಳು, ಬೀನ್ಸ್, ಕಡಲೆಗಳು, ಇಡೀಧಾನ್ಯಗಳು, ಮೊಟ್ಟೆಗಳು ಮತ್ತು ಲೀನ್ ಮೀಟ್ಗಳನ್ನು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ. ವಿಟಮಿನ್ ಸಿ ಇರುವ ಲಿಂಬೆ, ಕಿತ್ತಳೆ ಅಥವಾ ಟೊಮೆಟೊಗಳ ಜೊತೆಗೆ ಸೇವಿಸಿದರೆ ಹೀರಿಕೊಳ್ಳುವಿಕೆಗೆ ಅನುಕೂಲವಾಗಿಬಿಡುತ್ತದೆ. ಹೀಗಾಗಿ ಸ್ವಯಂ ವೈದ್ಯರಾಗುವ ಅಪಾಯ ತಂದುಕೊಳ್ಳದೆ ವೈದ್ಯರ ಸಲಹೆಯ ನಂತರ ಆಹಾರದಲ್ಲಿ ಬದಲಾವಣೆ ತಂದುಕೊಳ್ಳುವುದು ಒಳಿತು. ಕೃಪೆ: indianexpress.com
Drinks: ‘ಎಣ್ಣೆ’ ಹೊಡೆಯುವಾಗ ಇವನ್ನೆಲ್ಲಾ ತಿಂತೀರಾ? ಹಾಗಾದ್ರೆ ಹುಷಾರ್!
ಮದ್ಯಪಾನ, ಹೆಚ್ಚು ಉಪ್ಪು, ಹುರಿದ ಅಥವಾ ಸಿಹಿ ಆಹಾರವನ್ನು ಸೇವಿಸುವುದರಿಂದ ಯಕೃತ್ತು ಮತ್ತು ಜೀರ್ಣಕ್ರಿಯೆಗೆ ಹಾನಿಯಾಗುತ್ತದೆ. ಕಾಫಿ ಅಥವಾ ಶಕ್ತಿ ಪಾನೀಯಗಳು ನಿರ್ಜಲೀಕರಣವನ್ನು ಹೆಚ್ಚಿಸಬಹುದು. ಆದ್ದರಿಂದ ನೀವು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂದು ತಿಳಿದಿದ್ದರೆ, ನೀವು ಗಂಭೀರ ಕಾಯಿಲೆ ತಪ್ಪಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಈ ಸಿಂಪಲ್ ಟ್ರಿಕ್ ಬಳಸಿ ಮಕ್ಕಳನ್ನು ಚಳಿಯ ಭೂತದಿಂದ ದೂರವಿಡಿ! ರೋಗ ತಡೆಗಟ್ಟಲು ಈ ಉಪಾಯ ಪರಿಣಾಮಕಾರಿ
ಚಳಿಗಾಲದ ಆರಂಭದಲ್ಲೇ ಮಕ್ಕಳಲ್ಲಿ ಶೀತ–ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಲಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ.
Milk-Dates: ರಾತ್ರಿ ಮಲಗುವ ಮುನ್ನ ಹಾಲಿನೊಂದಿಗೆ ಇದನ್ನು ಹಾಕಿ ಕುಡಿಯಿರಿ, ಇಷ್ಟೆಲ್ಲಾ ಪ್ರಯೋಜನ ಪಡೆಯಿರಿ
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಚೈತನ್ಯಪೂರ್ಣವಾಗಿಡಲು ಸಹಾಯ ಮಾಡುವ ಒಣ ಹಣ್ಣುಗಳನ್ನು ನಾವು ಹೆಚ್ಚು ಸೇವಿಸಬೇಕು ಎಂದು ತಜ್ಞರು ಹೇಳುತ್ತಾರೆ. ಈ ಸೂಪರ್ಫುಡ್ಗಳಲ್ಲಿ ಖರ್ಜೂರವೂ ಒಂದು. ಚಳಿಗಾಲದಲ್ಲಿ ರಾತ್ರಿ ಹಾಲಿನೊಂದಿಗೆ ಬೆರೆಸಿದ ಒಣಗಿದ ಖರ್ಜೂರ ಸೇವಿಸುವುದರಿಂದ ಲೆಕ್ಕವಿಲ್ಲದಷ್ಟು ಪ್ರಯೋಜನಗಳಿವೆ.
ಬೀದಿನಾಯಿ ಕಡಿತದ ಕೇಸ್; ಆಸ್ಪತ್ರೆಗಳಿಗೇ ಎಚ್ಚರಿಕೆಯ ʼಚುಚ್ಚುಮದ್ದುʼ ನೀಡಿದ ಸರ್ಕಾರ! ಇನ್ಮೇಲೆʻ
ಕರ್ನಾಟಕ ಸರ್ಕಾರ KPME Act ತಿದ್ದುಪಡಿ ಮೂಲಕ ಹಾವು ಕಡಿತ ಮತ್ತು ಬೀದಿ ನಾಯಿ ಕಡಿತಕ್ಕೆ ಖಾಸಗಿ ಆಸ್ಪತ್ರೆಗಳಲ್ಲಿ ಮುಂಗಡ ಹಣವಿಲ್ಲದೆ ತಕ್ಷಣ ಚಿಕಿತ್ಸೆ ಒದಗಿಸಲು ಹೊಸ ನಿಯಮ ಜಾರಿಗೆ ತಂದಿದೆ.
New Medicine For Glowing | ಈ ಮಾತ್ರೆ ಸೇವನೆಯಿಂದ 150 ವರ್ಷ ಬದುಕೋದು ಪಕ್ಕಾ! | N18V | 4k
New Medicine For Glowing | ಈ ಮಾತ್ರೆ ಸೇವನೆಯಿಂದ 150 ವರ್ಷ ಬದುಕೋದು ಪಕ್ಕಾ! | N18V | 4k
ಕಂಬಳ ಓಟಗಾರರ ಫಿಟ್ನೆಸ್ ರಹಸ್ಯ ಗೊತ್ತೇ? ಇದು ಗದ್ದೆಗಿಳಿವ ಬಾಹುಬಲಿಗಳ ಮೈಕಟ್ಟಿಗೆ ಫಿದಾ ಆಗದವರುಂಟೇ?!
ಕಂಬಳದಲ್ಲಿ ರವಿಕುಮಾರ್, ನಿಶಾಂತ್ ಶೆಟ್ಟಿ, ಶ್ರೀನಿವಾಸ ಗೌಡ ತಮ್ಮ ನೈಸರ್ಗಿಕ ಶಕ್ತಿಯಿಂದ ದಾಖಲೆ ಸಾಧನೆ ಮಾಡಿದ್ದಾರೆ. ಈ ಋತುವಿನಲ್ಲಿ ಕೋಣಗಳು ಮತ್ತು ಓಟಗಾರರು ಮತ್ತಷ್ಟು ಮಿಂಚುತ್ತಿದ್ದಾರೆ.

26 C