ದೇವನಹಳ್ಳಿಯಲ್ಲಿ ಮತ್ತೆ ಭೂಸ್ವಾಧೀನದ ಬಿಸಿ: ಕುಂದಾಣ ಹೋಬಳಿಯಲ್ಲೂ ಟೌನ್ಶಿಪ್ಗೆ ಮುಂದಾದ ಕೆಎಚ್ಬಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಮತ್ತೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಕುಂದಾಣ ಹೋಬಳಿಯಲ್ಲಿ ಕೆಎಚ್ಬಿ 590 ಎಕರೆ ಕೃಷಿಭೂಮಿಯನ್ನು ಟೌನ್ಶಿಪ್ ಯೋಜನೆಗೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಶ್ಯಾನಪ್ಪನಹಳ್ಳಿ, ವಾಜರಹಳ್ಳಿ, ಬೀರಸಂದ್ರ, ವಿಶ್ವನಾಥಪುರ ಗ್ರಾಮಗಳ ಭೂಮಿ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ರೈತರು ಈ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೋರಾಟಗಾರರು ರೈತರಿಗೆ ಬೆಂಬಲ ಘೋಷಿಸಿದ್ದಾರೆ.
ಕರ್ನಾಟಕದಲ್ಲಿ ದ್ವೇಷ ಭಾಷಣ ವಿಧೇಯಕಕ್ಕೆ ಕ್ಯಾಬಿನೆಟ್ ಒಪ್ಪಿಗೆ ದೊರೆತಿದೆ. ಆದರೆ ರಾಜ್ಯಪಾಲರ ಅಂಕಿತ ಇನ್ನೂ ದೊರೆತಿಲ್ಲ. ಈ ನಡುವೆ, ಗೃಹ ಇಲಾಖೆಯು ಬಿಜೆಪಿ ಮುಖಂಡ ವಿಕಾಸ್ ಪುತ್ತೂರ್ ಅವರಿಗೆ ಈ ವಿಧೇಯಕದ ಅನ್ವಯ ಎಚ್ಚರಿಕೆ ನೋಟಿಸ್ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆಯಬೇಕಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ಮುನ್ನವೇ ಈ ನೋಟಿಸ್ ಜಾರಿಯಾಗಿದೆ. ಇದು ಹಲವರಲ್ಲಿ ಅಚ್ಚರಿ ಮೂಡಿಸಿದೆ.
ಹನೂರು | ಕಂಬಕ್ಕೆ ಕಟ್ಟಿ ಮಹಿಳೆಗೆ ಹಲ್ಲೆ: ಇಬ್ಬರ ಬಂಧನ
ಹನೂರು: ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಜಿ.ಆರ್.ನಗರ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹಲ್ಲೆಗೊಳಗಾದವರನ್ನು ಜಿ.ಆರ್.ನಗರ ಗ್ರಾಮದ ಕಣ್ಣಮ್ಮ ಎಂದು ಗುರುತಿಸಲಾಗಿದೆ. ಘಟನೆ ವಿವರ: ಹನೂರು ತಾಲೂಕಿನ ಜಿ.ಆರ್.ನಗರ ಗ್ರಾಮದಲ್ಲಿ ಕಣ್ಣಮ್ಮ ಎಂಬವರು ತನ್ನ ಜಮೀನಿನಲ್ಲಿ ಬೆಳೆದ ಹುರುಳಿಯನ್ನು ಸೆಲ್ವಿ ಎಂಬವರ ಜಾನುವಾರುಗಳು ಮೇಯ್ದು ನಾಶಪಡಿಸಿದ್ದಕ್ಕಾಗಿ ಕಣ್ಣಮ್ಮ ಮತ್ತು ಸೆಲ್ವಿ ಕುಟುಂಬದವರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಸೆಲ್ವಿ, ಮಂಜು ಮತ್ತು ಅಂಗಮುತ್ತು ಎಂಬವರು ಕಣ್ಣಮ್ಮನನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿರುವ ವೀಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮಾಪುರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಂಜು ಮತ್ತು ಅಂಗಮುತ್ತು ಎಂಬವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಮುತ್ತುರಾಜ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಸ್ಟ್ರೇಲಿಯನ್ ಓಪನ್: ಜಪಾನ್ ಆಟಗಾರ್ತಿ ನವೊಮಿ ಒಸಾಕಾ ನಿವೃತ್ತಿ
ಮೆಲ್ಬರ್ನ್, ಜ.24: ಗಾಯದ ಸಮಸ್ಯೆಯಿಂದಾಗಿ ಜಪಾನ್ ಆಟಗಾರ್ತಿ ನವೊಮಿ ಒಸಾಕಾ ಈಗ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ಮೂರನೇ ಸುತ್ತಿನ ಪಂದ್ಯದಿಂದ ಹೊರಗುಳಿದರು. ಪಂದ್ಯ ಆರಂಭವಾಗಲು ಕೆಲವೇ ಗಂಟೆಗಳಿರುವಾಗ ಸಾಮಾಜಿಕ ಮಾಧ್ಯಮದಲ್ಲಿ ಒಸಾಕಾ ಈ ಘೋಷಣೆ ಮಾಡಿದರು. ‘‘ಎರಡನೇ ಸುತ್ತಿನ ಪಂದ್ಯದ ನಂತರ ಕಾಣಿಸಿಕೊಂಡಿರುವ ಗಾಯದ ಸಮಸ್ಯೆಯಿಂದಾಗಿ ಮೂರನೇ ಸುತ್ತಿನ ಪಂದ್ಯದಿಂದ ಹಿಂದೆ ಸರಿಯುವ ಕಠಿಣ ನಿರ್ಧಾರಕ್ಕೆ ಬಂದಿರುವೆ. ನಾನು ಇನ್ನಷ್ಟು ಅಪಾಯವನ್ನು ತಂದುಕೊಳ್ಳಲು ಬಯಸುವುದಿಲ್ಲ’’ ಎಂದು ಒಸಾಕಾ ತನ್ನ ಇನ್ಸ್ಟಾಗ್ರಾಮ್ನಲ್ಲಿ ಬರೆದಿದ್ದಾರೆ. ಎರಡು ಬಾರಿಯ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಒಸಾಕಾ ಎರಡನೇ ಸುತ್ತಿನಲ್ಲಿ ರೊಮಾನಿಯಾದ ಸೊರಾನ ಸಿರ್ಸ್ಟಿಯಾರನ್ನು ಸೋಲಿಸಿದ್ದರು. ಜಪಾನ್ನ ಸ್ಟಾರ್ ಆಟಗಾರ್ತಿ ಮೂರನೇ ಸುತ್ತಿನಲ್ಲಿ ಆಸ್ಟ್ರೇಲಿಯದ ಮ್ಯಾಡಿಸನ್ ಇಂಗ್ಲಿಸ್ರನ್ನು ಎದುರಿಸಬೇಕಾಗಿತ್ತು. ಆದರೆ ಒಸಾಕಾ ಹಿಂದೆ ಸರಿದಿರುವ ಕಾರಣ ಇಂಗ್ಲಿಸ್ ಅವರು 2022ರ ನಂತರ ಅಸ್ಟ್ರೇಲಿಯನ್ ಓಪನ್ನ ಅಂತಿಮ-16ರ ಸುತ್ತಿಗೆ ತೇರ್ಗಡೆಯಾದ ಆಸ್ಟ್ರೇಲಿಯದ ಮೊದಲ ಆಟಗಾರ್ತಿಯಾಗಿದ್ದಾರೆ. 2022ರಲ್ಲಿ ಅಶ್ಲೆ ಬಾರ್ಟಿ ಈ ಸಾಧನೆ ಮಾಡಿದ್ದರು. ಇಂಗ್ಲಿಸ್ ಅವರು ಕ್ವಾರ್ಟರ್ ಫೈನಲ್ನಲ್ಲಿ ಸ್ಥಾನ ಗಿಟ್ಟಿಸಲು ಆರು ಬಾರಿಯ ಗ್ರ್ಯಾನ್ಸ್ಲಾಮ್ ಚಾಂಪಿಯನ್ ಇಗಾ ಸ್ವಿಯಾಟೆಕ್ರನ್ನು ಎದುರಿಸಲಿದ್ದಾರೆ. ಜೊಕೊವಿಕ್, ಸಿನ್ನರ್, ಮಿನೌರ್, ಅನಿಸಿಮೋವಾ ಪ್ರಿ-ಕ್ವಾರ್ಟರ್ ಫೈನಲ್ಗೆ ನೊವಾಕ್ ಜೊಕೊವಿಕ್, ಜನ್ನಿಕ್ ಸಿನ್ನರ್, ಅಲೆಕ್ಸ್ ಡಿ ಮಿನೌರ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪ್ರಿ-ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದ್ದಾರೆ. ವಿಪರೀತ ಉಷ್ಣಾಂಶದ ನಡುವೆ ಆಡಿದ ಜೊಕೊವಿಕ್ ಡಚ್ನ ಬೊಟಿಕ್ ವ್ಯಾನ್ ಡಿ ಅವರನ್ನು 6-3, 6-4, 7-6(4) ಸೆಟ್ಗಳ ಅಂತರದಿಂದ ಮಣಿಸಿ ನಾಲ್ಕನೇ ಸುತ್ತಿಗೆ ತಲುಪಿದರು. ಗ್ರ್ಯಾನ್ಸ್ಲಾಮ್ನಲ್ಲಿ 400 ಪಂದ್ಯ ಗೆದ್ದ ಮೊದಲ ಆಟಗಾರ ಜೊಕೊವಿಕ್ ಮೆಲ್ಬರ್ನ್ನಲ್ಲಿ 102ನೇ ಪಂದ್ಯವನ್ನು ಗೆದ್ದಿರುವ ಜೊಕೊವಿಕ್ ಆರು ಬಾರಿಯ ಚಾಂಪಿಯನ್ ರೋಜರ್ ಫೆಡರರ್ ದಾಖಲೆಯನ್ನು ಸರಿಗಟ್ಟಿದರು. ಗ್ರ್ಯಾನ್ಸ್ಲಾಮ್ ಟೂರ್ನಿಯಲ್ಲಿ 400 ಪಂದ್ಯಗಳನ್ನು ಗೆದ್ದಿರುವ ಮೊದಲ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಮುಂದಿನ ಸುತ್ತಿನಲ್ಲಿ 16ನೇ ಶ್ರೇಯಾಂಕದ ಜಾಕಬ್ ಮೆನ್ಸಿಕ್ರನ್ನು ಎದುರಿಸಲಿದ್ದಾರೆ. ಎರಡು ಬಾರಿಯ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಸಿನ್ನರ್ ಮೂರು ಗಂಟೆ, 45 ನಿಮಿಷಗಳ ಕಾಲ ನಡೆದ ಮೂರನೇ ಸುತ್ತಿನ ಪಂದ್ಯದಲ್ಲಿ ವಿಶ್ವದ ನಂ.85ನೇ ಆಟಗಾರ ಎಲಿಯೊಟ್ ಸ್ಪಿಝಿರ್ರಿ ಅವರನ್ನು 4-6, 6-3, 6-4, 6-4 ಸೆಟ್ಗಳ ಅಂತರದಿಂದ ಮಣಿಸಿದರು. ಮುಂದಿನ ಸುತ್ತಿನಲ್ಲಿ ಇಟಲಿ ಆಟಗಾರ ಲುಸಿಯಾನೊ ಡಾರ್ಡೆರಿ ಅವರನ್ನು ಎದುರಿಸಲಿದ್ದಾರೆ. ಮಿನೌರ್ ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ನ ಮೂರನೇ ಸುತ್ತಿನ ಪಂದ್ಯದಲ್ಲಿ ಅಮೆರಿಕದ ಫ್ರಾನ್ಸಿಸ್ ಟಿಯಫೊರನ್ನು 6-3, 6-4, 7-5 ಸೆಟ್ಗಳ ಅಂತರದಿಂದ ಮಣಿಸಿದರು. ಈ ಮೂಲಕ ಸತತ ಐದನೇ ವರ್ಷ ನಾಲ್ಕನೇ ಸುತ್ತಿಗೆ ತಲುಪಿದ್ದಾರೆ. ಆರನೇ ಶ್ರೇಯಾಂಕದ ಮಿನೌರ್ ವೃತ್ತಿಪರ ಟೆನಿಸ್ ಯುಗದಲ್ಲಿ ಸತತ ಐದನೇ ವರ್ಷ ಅಂತಿಮ-16ರ ಸುತ್ತು ತಲುಪಿದ ಆಸ್ಟ್ರೇಲಿಯದ ಎರಡನೇ ಆಟಗಾರನಾಗಿದ್ದಾರೆ. 1969-76ರಲ್ಲಿ ಜಾನ್ ನ್ಯೂಕಾಂಬ್ ಪಂದ್ಯಾವಳಿಯಲ್ಲಿ ಅಂತಿಮ-16ರ ಸುತ್ತನ್ನು ತಲುಪಿದ್ದರು. ಮೂರು ಬಾರಿಯ ಗ್ರ್ಯಾನ್ಸ್ಲಾಮ್ ಚಾಂಪಿಯನ್ ಸ್ಟ್ಯಾನ್ ವಾವ್ರಿಂಕ ಅಮೆರಿಕದ ಟೇಲರ್ ಫ್ರಿಟ್ಝ್ ವಿರುದ್ಧ ಸೋಲನುಭವಿಸಿ ಟೂರ್ನಿಯಿಂದ ನಿರ್ಗಮಿಸಿದರು. 1978ರ ನಂತರ ಪ್ರಸಕ್ತ ಟೂರ್ನಿಯಲ್ಲಿ ಮೂರನೇ ಸುತ್ತು ತಲುಪಿದ ಹಿರಿಯ ಆಟಗಾರನಾಗಿದ್ದ ವಾವ್ರಿಂಕ ವಿರುದ್ಧ ಟೇಲರ್ ಅವರು ಎರಡು ಗಂಟೆ, 46 ನಿಮಿಷಗಳ ಹೋರಾಟದಲ್ಲಿ 7-6(5), 2-6, 6-4, 6-4 ಸೆಟ್ಗಳ ಅಂತರದಿಂದ ಜಯಶಾಲಿಯಾದರು. ಮಹಿಳೆಯರ ಸಿಂಗಲ್ಸ್ನ ಮೂರನೇ ಸುತ್ತಿನ ಪಂದ್ಯದಲ್ಲಿ ಅನಿಸಿಮೋವಾ ಅವರು ತಮ್ಮದೇ ದೇಶದ ಪೇಟನ್ ಸ್ಟಿಯರ್ನ್ಸ್ ವಿರುದ್ಧ 6-1, 6-4 ನೇರ ಸೆಟ್ಗಳ ಅಂತರದಿಂದ ಜಯಶಾಲಿಯಾದರು. ನಾಲ್ಕನೇ ಶ್ರೇಯಾಂಕದ ಅನಿಸಿಮೋವಾ ಮೆಲ್ಬರ್ನ್ ಪಾರ್ಕ್ನಲ್ಲಿ 71 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದರು. 24ರ ವಯಸ್ಸಿನ ಅನಿಸಿಮೋವಾ ಮುಂದಿನ ಸುತ್ತಿನಲ್ಲಿ ಝೆಕ್ ಗಣರಾಜ್ಯದ ಲಿಂಡಾ ನೊಸ್ಕೊವಾ ಅಥವಾ ಚೀನಾದ ವಾಂಗ್ ಕ್ಸಿನ್ಯುರನ್ನು ಎದುರಿಸಲಿದ್ದಾರೆ. 2025ರಲ್ಲಿ ಯಶಸ್ವಿ ಪ್ರದರ್ಶನ ನೀಡಿದ್ದ ಅನಿಸಿಮೋವಾ ಅವರು ವಿಂಬಲ್ಡನ್ ಹಾಗೂ ಯು.ಎಸ್. ಓಪನ್ ಟೂರ್ನಿಯಲ್ಲಿ ಫೈನಲ್ಗೆ ತಲುಪಿದ್ದರು. ಯೂಕಿ ಭಾಂಬ್ರಿ, ಗೊರಾನ್ಸನ್ ಅಂತಿಮ-16ರ ಸುತ್ತಿಗೆ ಲಗ್ಗೆ ಭಾರತದ ಯೂಕಿ ಭಾಂಬ್ರಿ ಹಾಗೂ ಸ್ವೀಡನ್ನ ಆಂಡ್ರೆ ಗೊರಾನ್ಸನ್ ಆಸ್ಟ್ರೇಲಿಯನ್ ಓಪನ್ನ ಪುರುಷರ ಡಬಲ್ಸ್ ಸ್ಪರ್ಧಾವಳಿಯಲ್ಲಿ ಮೂರನೇ ಸುತ್ತು ತಲುಪಿದ್ದಾರೆ. ಭಾಂಬ್ರಿ ಹಾಗೂ ಗೊರಾನ್ಸನ್ ಮೆಕ್ಸಿಕೊದ ಸ್ಯಾಂಟಿಯಾಗೊ ಗೊಂಝಾಲೆಝ್ ಹಾಗೂ ಡಚ್ನ ಡೇವಿಡ್ ಪೆಲ್ರನ್ನು 4-6, 7-6(5),6-3 ಸೆಟ್ಗಳ ಅಂತರದಿಂದ ಮಣಿಸಿದರು. ಶನಿವಾರ ಮೆಲ್ಬರ್ನ್ ಪಾರ್ಕ್ನಲ್ಲಿ ಹೀಟ್ ರೂಲ್ ಜಾರಿಗೆ ಬಂದ ಕಾರಣ ಸುಮಾರು ನಾಲ್ಕು ಗಂಟೆ ಕಾಲ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಭಾಂಬ್ರಿ ಜೋಡಿ ಪ್ರಿ-ಕ್ವಾರ್ಟರ್ ಫೈನಲ್ನಲ್ಲಿ ಬ್ರೆಝಿಲ್ನ ಒರ್ಲಾಂಡೊ ಲುಝ್ ಹಾಗೂ ರಫೆಲ್ ಮಾಟೊಸ್ರನ್ನು ಎದುರಿಸಲಿದ್ದಾರೆ. 73 ನಿಮಿಷಗಳಲ್ಲಿ ಕೊನೆಗೊಂಡ ಇನ್ನೊಂದು ಪುರುಷರ ಡಬಲ್ಸ್ ವಿಭಾಗದ ಎರಡನೇ ಸುತ್ತಿನ ಪಂದ್ಯದಲ್ಲಿ ಶ್ರೀರಾಮ್ ಬಾಲಾಜಿ ಹಾಗೂ ಆಸ್ಟ್ರೀಯದ ನೀಲ್ ಒಬರ್ಲೀಟ್ನರ್ ನಾಲ್ಕನೇ ಶ್ರೇಯಾಂಕದ ಮಾರ್ಸೆಲೊ ಅರೆವಾಲೊ ಹಾಗೂ ಮ್ಯಾಟ್ ಪಾವಿಕ್ ವಿರುದ್ಧ 5-7, 1-6 ಸೆಟ್ಗಳ ಅಂತರದಿಂದ ಸೋತಿದ್ದಾರೆ.
ಹುಮನಾಬಾದ್ | ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಆರೋಪ: ಅಂಗನವಾಡಿ ಶಿಕ್ಷಕಿಯ ಅಮಾನತಿಗೆ ಆಗ್ರಹ
ಹುಮನಾಬಾದ್: ಬಸವಕಲ್ಯಾಣ ತಾಲೂಕಿನ ಹಾರಕೂಡ್ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಸಂಬಂಧಿಸಿದ ಅಂಗನವಾಡಿ ಶಿಕ್ಷಕಿಯನ್ನು ತಕ್ಷಣ ಅಮಾನತು ಮಾಡಬೇಕು ಎಂದು ಭೀಮ್ ಆರ್ಮಿ ಹಾಗೂ ದಲಿತ ಸೇನೆ ಕಾರ್ಯಕರ್ತರು ಶನಿವಾರ ಹುಮನಾಬಾದ್ನಲ್ಲಿ ಒತ್ತಾಯಿಸಿದರು. ಹಾರಕೂಡ್ ಗ್ರಾಮದ ಅಂಗನವಾಡಿ ಕೇಂದ್ರದ ಗೋಡೆಯ ಮೇಲೆ ವಿವಿಧ ಮಹಾಪುರುಷರ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಆದರೆ ಡಾ.ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಂಗನವಾಡಿಯ ಅಡುಗೆ ಕೋಣೆಯಲ್ಲಿ ಕೆಳಭಾಗದಲ್ಲಿ ಇಟ್ಟು ಅವಮಾನಿಸಲಾಗಿದೆ ಎಂದು ಆರೋಪಿಸಿದರು. ಈ ಕುರಿತು ಬಸವಕಲ್ಯಾಣ ತಾಲೂಕಿನ ದಲಿತ ಸೇನೆ ವತಿಯಿಂದ ಸಿಡಿಪಿಓ ಅವರಿಗೆ ದೂರು ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ತಕ್ಷಣ ಅಂಗನವಾಡಿ ಶಿಕ್ಷಕಿಯನ್ನು ಅಮಾನತು ಮಾಡಬೇಕು. ಇಲ್ಲದಿದ್ದರೆ ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು ಎಂದು ಭೀಮ್ ಆರ್ಮಿ ಮತ್ತು ದಲಿತ ಸೇನೆ ಮುಖಂಡರು ಎಚ್ಚರಿಕೆ ನೀಡಿದರು.
ನಾಳೆ ಮೂರನೇ ಟಿ-20: ಭಾರತಕ್ಕೆ ಸರಣಿ ಗೆಲುವಿನ ತವಕ
ಗುವಾಹಟಿ, ಜ.24: ಸರಣಿಯಲ್ಲಿ 2-0 ಮುನ್ನಡೆಯೊಂದಿಗೆ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಟೀಮ್ ಇಂಡಿಯಾ ರವಿವಾರ ಬರ್ಸಪಾರದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಟಿ-20 ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡವನ್ನು ಎದುರಿಸಲಿದ್ದು, ಸರಣಿ ಗೆಲುವಿನ ತವಕದಲ್ಲಿದೆ. ರಾಯ್ಪುರದಲ್ಲಿ ನಡೆದಿರುವ ಎರಡನೇ ಪಂದ್ಯದಲ್ಲಿ 209 ರನ್ ಗುರಿಯನ್ನು ಕೇವಲ 15.2 ಓವರ್ಗಳಲ್ಲಿ ಬೆನ್ನಟ್ಟಿರುವ ಸೂರ್ಯಕುಮಾರ್ ಬಳಗ ಸ್ಪಷ್ಟ ಸಂದೇಶ ರವಾನಿಸಿದೆ. ಸುಲಭ ಜಯ ಸಾಧಿಸಿರುವ ಭಾರತ ತಂಡವು ಮುಂಬರುವ ಟಿ-20 ವಿಶ್ವಕಪ್ ಟೂರ್ನಿಗೆ ಭರ್ಜರಿ ತಯಾರಿ ನಡೆಸಿದೆ. ಬ್ಯಾಟಿಂಗ್ಗೆ ಇಳಿಸಲ್ಪಟ್ಟಿದ್ದ ಕಿವೀಸ್ ಪಡೆ ಕಳಪೆ ಆರಂಭದಿಂದ ಚೇತರಿಸಿಕೊಂಡು 6 ವಿಕೆಟ್ಗಳ ನಷ್ಟಕ್ಕೆ 208 ರನ್ ಗಳಿಸಿತ್ತು. ರಚಿನ್ ರವೀಂದ್ರ(44 ರನ್)ಹಾಗೂ ನಾಯಕ ಸ್ಯಾಂಟ್ನರ್(ಔಟಾಗದೆ 47)ತಂಡ ಗೌರವಾರ್ಹ ಮೊತ್ತ ಗಳಿಸಲು ನೆರವಾಗಿದ್ದರು. ಭಾರತದ ನಾಯಕ ಸೂರ್ಯಕುಮಾರ್ ಔಟಾಗದೆ 82 ರನ್ ಗಳಿಸುವುದರೊಂದಿಗೆ 468 ದಿನಗಳ ನಂತರ ಮೊದಲ ಬಾರಿ ಟಿ-20 ಕ್ರಿಕೆಟ್ನಲ್ಲಿ ಅರ್ಧಶತಕ ಗಳಿಸಿದರು. ಸೂರ್ಯ ಸತತ 23 ಇನಿಂಗ್ಸ್ಗಳಲ್ಲಿ ಅರ್ಧಶತಕವನ್ನೇ ಗಳಿಸಿರಲಿಲ್ಲ. 2024ರ ಅಕ್ಟೋಬರ್ನಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಬಾರಿ ದೊಡ್ಡ ಸ್ಕೋರ್ ಗಳಿಸಿದ್ದರು. ಭಾರತದ ಪ್ರಮುಖ ಸ್ಪಿನ್ನರ್ ಕುಲದೀಪ ಯಾದವ್ ಮಧ್ಯಮ ಸರದಿಯಲ್ಲಿ ಕಿವೀಸ್ನ ಪ್ರಮುಖ ಬ್ಯಾಟರ್ಗಳನ್ನು ಔಟ್ ಮಾಡಿ ತನ್ನ ಶಕ್ತಿ ಪ್ರದರ್ಶಿಸಿದ್ದರು. 35 ರನ್ಗೆ ಎರಡು ವಿಕೆಟ್ಗಳನ್ನು ಪಡೆದಿದ್ದರು. ವಿಕೆಟ್ಕೀಪರ್ ಇಶಾನ್ ಕಿಶನ್ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದು, ಕಿವೀಸ್ ವಿರುದ್ಧ ವೇಗವಾಗಿ 50 ರನ್ ಗಳಿಸಿದ್ದರು. ಅಭಿಷೇಕ್ ಶರ್ಮಾ ದಾಖಲೆ(22 ಎಸೆತ)ಯನ್ನು ಮುರಿದಿದ್ದರು. ಭಾರತ ತಂಡವು 10 ಓವರ್ನೊಳಗೆ ಎರಡು ವಿಕೆಟ್ ಕಳೆದುಕೊಂಡ ನಂತರ ಮೊದಲ ಬಾರಿ 209 ರನ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದೆ. ಎರಡನೇ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಹಿರಿಯ ವೇಗಿ ಜಸ್ಪ್ರಿತ್ ಬುಮ್ರಾ ಗುವಾಹಟಿ ಪಂದ್ಯದಲ್ಲಿ ಆಡಲಿದ್ದಾರೆಯೆ ಎಂಬ ಕುತೂಹಲ ಎಲ್ಲರಲ್ಲಿದೆ. ಸರಣಿಯಲ್ಲಿ ಗೆಲ್ಲುವ ಉದ್ದೇಶದಿಂದ ಭಾರತವು ಆಡುವ 11ರ ಬಳಗವನ್ನು ಬಲಿಷ್ಠಗೊಳಿಸಲು ಬಯಸಿದೆ. ಬುಮ್ರಾ ಆಡುವ ಬಳಗಕ್ಕೆ ವಾಪಸಾಗುವ ಸಾಧ್ಯತೆಯಿದೆ. ಹರ್ಷಿತ್ ರಾಣಾ ಬದಲಿಗೆ ಬುಮ್ರಾ ಆಡಬಹುದು , ಟಿ-20 ಕ್ರಿಕೆಟ್ನಲ್ಲಿ ಹೆಡ್-ಟು-ಹೆಡ್ ದಾಖಲೆ ಟಿ-20 ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲ್ಯಾಂಡ್ ವಿರುದ್ಧ ಮೇಲುಗೈ ಸಾಧಿಸಿದೆ. ಉಭಯ ತಂಡಗಳು 27 ಪಂದ್ಯಗಳನ್ನು ಆಡಿದ್ದು, ಈ ಪೈಕಿ ಭಾರತವು 14 ಬಾರಿ ಜಯ ಸಾಧಿಸಿದೆ. ನ್ಯೂಝಿಲ್ಯಾಂಡ್ 10 ಬಾರಿ ಗೆದ್ದಿದೆ. ಮೂರು ಪಂದ್ಯಗಳು ಟೈನಲ್ಲಿ ಕೊನೆಗೊಂಡಿವೆ
ಹಾಸನ: ನಮ್ಮ ಪಕ್ಷದಲ್ಲೇ ಉಂಡು ಬೆಳೆದು ಟಿಕೆಟ್ ಪಡೆದು ಶಾಸಕರಾಗಿ, ನಂತರ ಹೆತ್ತ ತಾಯಿಗೆ ದ್ರೋಹ ಬಗೆದವರ ವಿರುದ್ದ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವ ಸಮಯ ಬಂದಿದೆ ಎಂದು ಜೆಡಿಎಸ್ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಅನೇಕ ನಾಯಕರು ಪ್ರಾದೇಶಿಕ ಪಕ್ಷಗಳನ್ನು ಕಟ್ಟಿದರೂ ಅವು ದೀರ್ಘಕಾಲ ಉಳಿಯಲಿಲ್ಲ. ಆದರೆ ದೇವೇಗೌಡರ ದೂರದೃಷ್ಟಿ, ಬದ್ಧತೆ, ಬಡವರ ಹಾಗೂ ಎಲ್ಲಾ ವರ್ಗದವರ ಆಶೀರ್ವಾದದಿಂದ ಜೆಡಿಎಸ್ ಪಕ್ಷ ಗಟ್ಟಿಯಾಗಿ ನೆಲೆನಿಂತು 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಯಾವುದೇ ಸ್ಪಷ್ಟ ಸಾಧನೆ ಮಾಡದೇ, ಸಾಧನೆ ಹೆಸರಿನಲ್ಲಿ ಸಮಾವೇಶಗಳನ್ನು ಆಯೋಜಿಸಿ ಕುಮಾರಸ್ವಾಮಿ ದೇವೇಗೌಡರ ಕುಟುಂಬದ ಹಾಗೂ ವಿರುದ್ಧ ಟೀಕೆಯಲ್ಲಿ ಕಾಲಹರಣ ಮಾಡುತ್ತಿದೆ. ಜಿಲ್ಲೆಯಲ್ಲಿ ಸ್ಥಳೀಯ ನಾಯಕರನ್ನು ಕಡೆಗಣಿಸಿ, ಬೇರೆ ಜಿಲ್ಲೆಯಿಂದ ಬಂದ ಸಚಿವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿರುವುದು ಕಾಂಗ್ರೆಸ್ನ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದರು. ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗಲಿದ್ದು, ಪಕ್ಷದ 3 ಅಧಿಕಾರ ಕಾರ್ಯಕರ್ತರಿಗೆ ಕೊಡಿಸುವ 1 ದೃಷ್ಟಿಯಿಂದ ಈ ಸಮಾವೇಶದ ಮೂಲಕ ಎಲ್ಲ ನಾಯಕರು ಶಪಥ ಮತ್ತು ಪ್ರತಿಜ್ಞೆ ಮಾಡಬೇಕು. ಈಗಿನಿಂದಲೇ ಚುನಾವಣಾ ಸಿದ್ಧತೆ ಆರಂಭಿಸಬೇಕಿದ್ದು, ಈಗಾಗಲೇ ಒಂದು ಸುತ್ತಿನ ಜಿಲ್ಲಾ ಪ್ರವಾಸ ಮುಗಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಮತ್ತೆ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು.
ಯಾದಗಿರಿ | ‘ವಿಬಿ-ಜಿ ರಾಮ್ ಜಿ’ ಹೆಸರು ಕೈ ಬಿಡಲು ಆಗ್ರಹ
‘ಮನರೇಗಾ ಉಳಿಸಿ’ ಆಂದೋಲನ, ಉಪವಾಸ ಸತ್ಯಾಗ್ರಹ
Donald Trump: ಕೆನಡಾ ವಿರುದ್ಧ ಡೊನಾಲ್ಡ್ ಟ್ರಂಪ್ ವಾಗ್ದಾಳಿ, ಶೇಕಡಾ 100 ರಷ್ಟು ತೆರಿಗೆ ವಿಧಿಸುವ ಸಾಧ್ಯತೆ
ಕೆನಡಾ ಮತ್ತು ಡೊನಾಲ್ಡ್ ಟ್ರಂಪ್ ಅವರ ಮಧ್ಯೆ ದೊಡ್ಡ ಮಟ್ಟದ ವಾಗ್ಯುದ್ಧ ನಡೆಯುತ್ತಾ ಇದ್ದು, ಎರಡೂ ದೇಶಗಳು ಪರಸ್ಪರ ಕೌಂಟರ್ ಕೊಡುತ್ತಿವೆ. ಒಂದೆಡೆ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರ ಬೆಂಬಲಿಸದ ಕಾರಣ ಕೆನಡಾ ವಿರುದ್ಧ ಕ್ರಮಕ್ಕೆ ಟ್ರಂಪ್ ಅವರು ಮುಂದಾಗಿದ್ದಾರೆ. ಈ ಸಮಯದಲ್ಲಿ ಚೀನಾ ಜೊತೆಗೆ ಕೆನಡಾ ಹೊಸ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ ಎಂಬುದು ಕೂಡ ಡೊನಾಲ್ಡ್
ಬೀದರ್ ನಲ್ಲಿ ಕಾಂಗ್ರೆಸ್ ಪಕ್ಷದಿಂದ ನರೇಗಾ ಬಚಾವ್ ಪ್ರತಿಭಟನೆ
ಬೀದರ್, ಜ.24: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಬದಲಾವಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಶಿವನಗರದಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ತದನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮಾತನಾಡಿ, ಮನರೇಗಾ ಯೋಜನೆಯಿಂದ ಗಾಂಧೀಜಿ ಹೆಸರನ್ನು ತೆಗೆದುಹಾಕಿರುವುದು ಸರಿಯಲ್ಲ. ಮನರೇಗಾ ಯೋಜನೆ ಬದಲಾವಣೆಯು ಬಡವರ ಹಾಗೂ ಒಕ್ಕೂಟ ವ್ಯವಸ್ಥೆಯ ವಿರುದ್ಧದ ಕ್ರಮವಾಗಿದೆ ಎಂದು ಆರೋಪಿಸಿದರು. ಮನರೇಗಾ ಯೋಜನೆ ಮರುಸ್ಥಾಪಿಸುವವರೆಗೆ ಹಾಗೂ ಬಡವರ ಹಕ್ಕುಗಳಿಗಾಗಿ ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರಿಯಲಿದೆ ಎಂದು ಅವರು ತಿಳಿಸಿದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಮಿತಿ ತಿಳಿಸಿದೆ. ಈ ಸಂದರ್ಭದಲ್ಲಿ ಸಚಿವ ರಹೀಂ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಂಕರ್ ದೊಡ್ಡಿ ಹಾಗೂ ಸಂಜಯ್ ಜಾಗಿರದಾರ್ ಇತರರು ಉಪಸ್ಥಿತರಿದ್ದರು.
ಐಪಿಎಲ್ ಮುನ್ನ ನೆಟ್ ಅಭ್ಯಾಸಕ್ಕೆ ಮರಳಿದ ಧೋನಿ
ರಾಂಚಿ, ಜ. 24: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಋತುವಿನ ಆರಂಭಕ್ಕೆ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ಸಿದ್ಧತೆಯನ್ನು ಆರಂಭಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸಂಪೂರ್ಣವಾಗಿ ಪ್ಯಾಡ್ ಕಟ್ಟಿಕೊಂಡು ಬ್ಯಾಟಿಂಗ್ ಮಾಡುವ ವೀಡಿಯೊವೊಂದನ್ನು ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (ಜೆಎಸ್ಸಿಎ) ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದೆ. 44 ವರ್ಷದ ಆಟಗಾರನ ವೀಡಿಯೊವನ್ನು ಹಾಕಿರುವ ಅಸೋಸಿಯೇಶನ್, ಧೋನಿ ನಮ್ಮ ಹೆಮ್ಮೆ ಎಂಬುದಾಗಿ ಬರೆದಿದೆ. ‘‘ನೋಡಿ, ಯಾರು ಬಂದಿದ್ದಾರೆ? ಜೆಎಸ್ಸಿಎಯ ಹೆಮ್ಮೆ: ಮಹೇಂದ್ರ ಸಿಂಗ್ ಧೋನಿ’’ ಎಂದು ಅದು ಹೇಳಿದೆ. ಭಾರತೀಯ ಕ್ರಿಕೆಟ್ ತಂಡ ಮತ್ತು ಜಾರ್ಖಂಡ್ ತಂಡದ ಮಾಜಿ ಬ್ಯಾಟರ್ ಸೌರಭ್ ತಿವಾರಿಯೊಂದಿಗೆ ಧೋನಿ ಲೋಕಾಭಿರಾಮವಾಗಿ ಹರಟುತ್ತಿರುವುದನ್ನೂ ವೀಡಿಯೊ ತೋರಿಸುತ್ತದೆ. ಧೋನಿ 2020ರಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ, ಐಪಿಎಲ್ನಲ್ಲಿ ಆಡುವುದನ್ನು ಮುಂದುವರಿಸಿದ್ದಾರೆ. ಈ ವರ್ಷ ಚೆನ್ನೈ ಸೂಪರ್ ಕಿಂಗ್ಸ್ನಲ್ಲಿ ಅವರ 17ನೇ ಋತುವಾಗಲಿದೆ.
ಟಿ20 ವಿಶ್ವಕಪ್ನಲ್ಲಿ ಪಾಕ್ ತಂಡ ಪಾಲ್ಗೊಳ್ಳುವಿಕೆ ಬಗ್ಗೆ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ: ಪಿಸಿಬಿ
ಲಾಹೋರ್, ಜ. 24: ಮುಂಬರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನಿ ಕ್ರಿಕೆಟ್ ತಂಡವು ಭಾಗವಹಿಸುವುದೇ ಇಲ್ಲವೇ ಎನ್ನುವುದಕ್ಕೆ ಸಂಬಂಧಿಸಿದ ಅಂತಿಮ ನಿರ್ಧಾರವನ್ನು ಪಾಕಿಸ್ತಾನ ಸರಕಾರವು ತೆಗೆದುಕೊಳ್ಳಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ಮುಹ್ಸಿನ್ ನಖ್ವಿ ಶನಿವಾರ ಹೇಳಿದ್ದಾರೆ. ಪಂದ್ಯಾವಳಿಯಿಂದ ಬಾಂಗ್ಲಾದೇಶ ಹೊರಬಿದ್ದ ಹಿನ್ನೆಲೆಯಲ್ಲಿ ಅದಕ್ಕೆ ಬೆಂಬಲ ಸೂಚಿಸಿ ತಾನು ಕೂಡ ಹಿಂದೆ ಸರಿಯಬೇಕೇ ಎಂಬ ಬಗ್ಗೆ ಪಾಕಿಸ್ತಾನ ಚಿಂತಿಸುತ್ತಿದೆ. ಲಾಹೋರ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಖ್ವಿ, ಈಗ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಶಹಬಾಝ್ ಶರೀಫ್ ಮರಳಿದ ಬಳಿಕ ಅವರ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಗುವುದು ಎಂದು ಹೇಳಿದರು. ‘‘ಟಿ20 ವಿಶ್ವಕಪ್ನಲ್ಲಿ ನಾವು ಆಡುತ್ತೇವೆಯೋ ಇಲ್ಲವೋ ಎನ್ನುವ ನಿರ್ಧಾರವನ್ನು ಸರಕಾರ ತೆಗೆದುಕೊಳ್ಳಲಿದೆ. ನಮ್ಮ ಪ್ರಧಾನಿ ಈಗ ದೇಶದ ಹೊರಗಿದ್ದಾರೆ. ಅವರು ಮರಳಿದಾಗ ನಾವು ಅವರಿಂದ ಸಲಹೆ ತೆಗೆದುಕೊಳ್ಳುತ್ತೇವೆ. ಸರಕಾರದ ನಿರ್ಧಾರವು ಅಂತಿಮವಾಗಿರುತ್ತದೆ. ಆಡುವುದು ಬೇಡ ಎಂದು ಅವರು ಹೇಳಿದರೆ ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯು ಇತರ ಯಾವುದೇ ತಂಡವನ್ನು ಆಹ್ವಾನಿಸಬಹುದು’’ ಎಂದು ನಖ್ವಿ ಹೇಳಿದರು. ಭದ್ರತಾ ಬೆದರಿಕೆ ಇದೆ ಎಂಬ ಕಾರಣ ನೀಡಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಭಾರತಕ್ಕೆ ಪ್ರಯಾಣಿಸಲು ಬಾಂಗ್ಲಾದೇಶ ನಿರಾಕರಿಸಿದ ಬಳಿಕ ಅದು ಕೂಟದಿಂದ ಹೊರಬಿದ್ದಿದೆ. ಐಸಿಸಿಯು ಅದರ ಸ್ಥಾನಕ್ಕೆ ಸ್ಕಾಟ್ಲ್ಯಾಂಡ್ ತಂಡವನ್ನು ಕರೆ ತಂದಿದೆ. ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಫೆಬ್ರವರಿ 7ರಂದು ಆರಂಭಗೊಳ್ಳಲಿದೆ. ಪಾಕಿಸ್ತಾನವು ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ.
ಎಸ್ಐಆರ್ ಆತಂಕದಿಂದ ಪಶ್ಚಿಮ ಬಂಗಾಳದಲ್ಲಿ 110 ಜನರು ಮೃತಪಟ್ಟಿದ್ದಾರೆ: ಮಮತಾ ಬ್ಯಾನರ್ಜಿ
ಕೋಲ್ಕತಾ,ಜ.24: ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಆತಂಕದಿಂದಾಗಿ 110ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಶುಕ್ರವಾರ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಮಮತಾ ಬ್ಯಾನರ್ಜಿ, ರಾಜ್ಯದಲ್ಲಿ ಪ್ರತಿ ದಿನ 3-4 ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಮತ್ತು ಕೇಂದ್ರ ಸರಕಾರ ಇದರ ಹೊಣೆಯನ್ನು ಹೊತ್ತುಕೊಳ್ಳಬೇಕು ಎಂದು ಹೇಳಿದರು. ಚುನಾವಣಾ ಆಯೋಗದ ವಿರುದ್ಧ ಪ್ರಕರಣವನ್ನೇಕೆ ದಾಖಲಿಸಬಾರದು ಎಂದು ಅವರು ಪ್ರಶ್ನಿಸಿದರು. ಚುನಾವಣಾ ಆಯೋಗವು ಎಸ್ಐಆರ್ ಪ್ರಕ್ರಿಯೆ ಮೂಲಕ ಮತದಾರರಿಗೆ ಕಿರುಕುಳ ನೀಡುತ್ತದೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಅಪಾಯದಲ್ಲಿ ಸಿಲುಕಿಸುತ್ತಿದೆ ಎಂದು ಮಮತಾ ಆರೋಪಿಸುತ್ತಲೇ ಬಂದಿದ್ದಾರೆ. ಇತ್ತೀಚಿನ ತಿಂಗಳುಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಹಲವಾರು ಬೂತ್ ಮಟ್ಟದ ಅಧಿಕಾರಿಗಳು ಎಸ್ಐಆರ್ ಕಾರ್ಯಭಾರದ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಥವಾ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಅಕ್ಟೋಬರ್ನಲ್ಲಿ ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಆತಂಕದಿಂದ 95ರ ವೃದ್ಧರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಅಂಡರ್-19 ಕ್ರಿಕೆಟ್ ವಿಶ್ವಕಪ್|ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್ ಗೆಲುವು
ಹರಾರೆ, ಜ.24: ಆರ್.ಎಸ್. ಅಂಬರೀಷ್(4-29) ಅಮೋಘ ಬೌಲಿಂಗ್ ಹಾಗೂ ನಾಯಕ ಆಯುಷ್ ಮ್ಹಾತ್ರೆ ಬಿರುಸಿನ ಅರ್ಧಶತಕದ(53 ರನ್,27 ಎಸೆತ, 2 ಬೌಂಡರಿ,6 ಸಿಕ್ಸರ್) ನೆರವಿನಿಂದ ಭಾರತ ಕ್ರಿಕೆಟ್ ತಂಡವು ಅಂಡರ್-19 ಕ್ರಿಕೆಟ್ ವಿಶ್ವಕಪ್ನಲ್ಲಿ ಶನಿವಾರ ಆಡಿದ ತನ್ನ ಕೊನೆಯ ಗ್ರೂಪ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ತಂಡವನ್ನು ಏಳು ವಿಕೆಟ್ಗಳ ಅಂತರದಿಂದ ಮಣಿಸಿತು. ಭಾರತ ತಂಡವು ‘ಬಿ’ ಗುಂಪಿನಲ್ಲಿ ಆಡಿರುವ ಎಲ್ಲ ಮೂರೂ ಪಂದ್ಯಗಳಲ್ಲಿ ಜಯ ದಾಖಲಿಸಿ ಅಜೇಯ ದಾಖಲೆಯೊಂದಿಗೆ ಅಗ್ರ ಸ್ಥಾನಕ್ಕೇರಿದೆ. ಮೊದಲು ಫೀಲ್ಡಿಂಗ್ ಆಯ್ದುಕೊಂಡಿರುವ ಭಾರತ ತಂಡವು ಪವರ್ಪ್ಲೇ ನಲ್ಲಿ ನ್ಯೂಝಿಲ್ಯಾಂಡ್ ತಂಡವನ್ನು ಕಾಡಲಾರಂಭಿಸಿತು. ಮಳೆಯಿಂದಾಗಿ ಪಂದ್ಯ ನಿಂತಾಗ ಕಿವೀಸ್ 17 ರನ್ಗೆ 3 ವಿಕೆಟ್ಗಳನ್ನು ಕಳೆದುಕೊಂಡಿತು. ಮತ್ತೆ ಪಂದ್ಯ ಆರಂಭವಾದಾಗ ಇನಿಂಗ್ಸನ್ನು 37 ಓವರ್ಗಳಿಗೆ ಕಡಿತಗೊಳಿಸಲಾಯಿತು. ಕಿವೀಸ್ 69 ರನ್ಗೆ 7 ವಿಕೆಟ್ ಕಳೆದುಕೊಂಡಿತು. ಆಗ ಕಾಲುಮ್ ಸ್ಯಾಮ್ಸನ್(ಔಟಾಗದೆ 37)ಹಾಗೂ ಸೆಲ್ವಿನ್ ಸಂಜಯ್(28 ರನ್)ಎಂಟನೇ ವಿಕೆಟ್ಗೆ 53 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಕಿವೀಸ್ 36.2 ಓವರ್ಗಳಲ್ಲಿ 135 ರನ್ಗೆ ಆಲೌಟಾಯಿತು. ಅಂಬರೀಶ್(4-29) ಹಾಗೂ ಹೆನಿಲ್ ಪಟೆಲ್(3-23) ಏಳು ವಿಕೆಟ್ಗಳನ್ನು ಹಂಚಿಕೊಂಡರು. ಗೆಲ್ಲಲು ಸುಲಭ ಸವಾಲು ಪಡೆದ ಭಾರತ ತಂಡವು ಎರಡನೇ ಓವರ್ನಲ್ಲಿ ಆರಂಭಿಕ ಆಟಗಾರ ಆ್ಯರೊನ್ ಜಾರ್ಜ್(7 ರನ್) ವಿಕೆಟನ್ನು ಕಳೆದುಕೊಂಡಿತು. ಮ್ಹಾತ್ರೆ ಹಾಗೂ ವೈಭವ್ ಸೂರ್ಯವಂಶಿ(40 ರನ್, 23 ಎಸೆತ, 2 ಬೌಂಡರಿ, 3 ಸಿಕ್ಸರ್) ಕೇವಲ 6.3 ಓವರ್ಗಳಲ್ಲಿ 76 ರನ್ ಕಲೆ ಹಾಕಿದರು. ಮ್ಹಾತ್ರೆ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ವೇದಾಂತ (ಔಟಾಗದೆ 17) ಗೆಲುವಿನ ರನ್ ದಾಖಲಿಸಿದರು. ಭಾರತವು ಉತ್ತಮ ರನ್ರೇಟ್ನೊಂದಿಗೆ ಸೂಪರ್ ಸಿಕ್ಸ್ ಹಂತ ಪ್ರವೇಶಿಸಿದೆ.
ಸುರಪುರ | ಬೈಕ್ ಕಳವು ಆರೋಪಿಯ ಬಂಧನ, 57 ಬೈಕ್ಗಳ ವಶ: ಎಸ್ಪಿ ಪೃಥ್ವಿ ಶಂಕರ್
ಸುರಪುರ, ಜ. 24: ಕಳವು ಮಾಡಲಾದ 57 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಬೈಕ್ ಕಳ್ಳತನ ಕುರಿತು ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ ಸುರಪುರ ಪೊಲೀಸರು, ಹುಣಸಗಿ ಪಟ್ಟಣದ ಜನತಾ ಕಾಲನಿಯ ನಿವಾಸಿ ಕಟ್ಟಿಮನಿ (36) ಎಂಬ ಆರೋಪಿಯನ್ನು ಬಂಧಿಸಿ 57 ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದರು. ಜ. 11ರಂದು ಸತ್ಯಂಪೇಟೆ ನಿವಾಸಿ ನಿಂಗಪ್ಪ ಮಕಾಶಿ ಎಂಬವರು ತನ್ನ ಬೈಕ್ ಕಳ್ಳತನದ ಕುರಿತು ಸುರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ಆರೋಪಿಯನ್ನು ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಬೈಕ್ ಕಳವು ಮಾಡಿರುವ ಕುರಿತು ಮಾಹಿತಿ ನೀಡಿದ್ದಾನೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿ ತನ್ನ ಇತರರೊಂದಿಗೆ ಸೇರಿ ಒಟ್ಟು 57 ಬೈಕುಗಳನ್ನು ಕಳ್ಳತನ ಮಾಡಿರುವ ಕುರಿತು ತಿಳಿಸಿದ ನಂತರ ಎಲ್ಲಾ ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತನೊಂದಿಗೆ ಇನ್ನೂ ಆರು ಜನ ಸಹಚರರಿದ್ದು ಅವರಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಈ ಆರೋಪಿಯು ಈ ಹಿಂದೆಯೂ ಕೂಡ ಬೇರೆ ಬೇರೆ ಕಡೆಗಳಲ್ಲಿ ಕಳ್ಳತನ ಮಾಡಿರುವ ಕುರಿತು ಮಾಹಿತಿ ತಿಳಿದು ಬಂದಿದೆ ಹೆಚ್ಚಿನ ವಿಚಾರಣೆಯನ್ನು ನಡೆಸಲಾಗುತ್ತಿದೆ ಎಂದು ಎಸ್ಪಿ ಹೇಳಿ ಹೇಳಿದರು. ಎಸ್ಪಿ ಪೃಥ್ವಿ ಶಂಕರ್ ಹಾಗೂ ಡಿವೈಎಸ್ಪಿ ಜಾವಿದ್ ಎನಂದರ್ ಮಾರ್ಗದರ್ಶನದಲ್ಲಿ ಸುರಪುರ ಠಾಣೆಯ ಪಿ ಐ ಉಮೇಶ ಎಂ ನೇತೃತ್ವದಲ್ಲಿ, ಪಿಎಸ್ಐ ಗಳಾದ ಸಿದ್ದಣ್ಣ ಯಡ್ರಾಮಿ, ಕೃಷ್ಣಾ ಸುಬೇದಾರ, ಹೆಚ್.ಸಿ ಗಳಾದ ಸಣ್ಣಕೆಪ್ಪ, ನಾಗರಾಜ, ಪಿಸಿ ಗಳಾದ ಮಲ್ಲಯ್ಯ, ಪ್ರಕಾಶ, ಹುಸೇನ್ ಭಾಷಾ, ಲಕ್ಷ್ಮಣ, ಜಗದೀಶ, ಹುಲಿಗೆಪ್ಪ,ಗೋವಿಂದ, ಆಂಜನೇಯ, ತಾಯಣ್ಣ, ಮಲಕಾರಿ ಹಾಗೂ ವಿಶೇಷವಾಗಿ ಯಾದಗಿರಿಯ ಬೆರಳಚ್ಚು ಘಟಕದ ಪಿಐ ರಮೇಶ ಕಾಂಬ್ಳೆ, ಜಿಲ್ಲಾ ಪೊಲೀಸ್ ಕಾರ್ಯಾಲಯದ ಎಆರ್ಎಸ್ಐ ಸುರೇಶ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು. ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಪೇದೆಗಳಾದ ಬಸವರಾಜ ಮುದಗಲ್, ಹುಲಿಗೆಪ್ಪ ಮತ್ತಿತರರು ಹಾಜರಿದ್ದರು.
Delhi | ಬಿಜೆಪಿಯ ಉನ್ನತ ನಾಯಕರಿಗೆ ಸಂಬಂಧಿಸಿದ ಕಾರುಗಳಿಗೆ ನಕಲಿ ರಾಜತಾಂತ್ರಿಕ ಫಲಕಗಳ ಬಳಕೆ: ಮಹಿಳೆ ಬಂಧನ
ಬ್ರಿಕ್ಸ್ನಲ್ಲಿ ಭಾರತದ ರಾಯಭಾರಿಯಾಗಿ ಭಾಗಿ: ವರದಿ
ಯಾದಗಿರಿ | ಸರಕಾರದ ವಿರುದ್ಧ ಮಾತನಾಡುವ ನೈತಿಕತೆ ಎಚ್ಡಿಕೆಗಿಲ್ಲ : ಡಾ.ಅಜಯ ಧರ್ಮಸಿಂಗ್
ಯಾದಗಿರಿ, ಜ.24: ರಾಜ್ಯ ಸರಕಾರದ ವಿರುದ್ಧ ಮಾತನಾಡುವ ಯಾವುದೇ ನೈತಿಕ ಹಕ್ಕು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಇಲ್ಲ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ ಧರ್ಮಸಿಂಗ್ ಟೀಕಿಸಿದ್ದಾರೆ. ನಗರದದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 12 ವರ್ಷಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ಸರಕಾರ ರೈತರ ಪರವಾಗಿ ಒಂದೇ ಒಂದು ಪರಿಣಾಮಕಾರಿ ಯೋಜನೆ ಜಾರಿಗೊಳಿಸಿಲ್ಲ. ಬದಲಾಗಿ ಹೋರಾಟ ನಡೆಸಿದ ರೈತರ ಮೇಲೆ ದಬ್ಬಾಳಿಕೆ ನಡೆಸಿದೆ. ಇಂತಹ ಸರಕಾರದ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಮೊದಲು ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಅನಂತರ ರಾಜ್ಯ ಸರ್ಕಾರದ ಬಗ್ಗೆ ಮಾತನಾಡಲಿ ಎಂದು ಟೀಕಿಸಿದರು. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ರೈತರ ಪರವಾಗಿ ಸ್ಪಷ್ಟ ನಿಲುವು ತೆಗೆದುಕೊಂಡಿದ್ದಾರೆ. ರೈತರ ಹಿತ ಕಾಯುವ ಪಕ್ಷ ಕಾಂಗ್ರೆಸ್ ಮಾತ್ರ ಎಂಬುದನ್ನು ಕುಮಾರಸ್ವಾಮಿ ಅರಿಯಬೇಕೆಂದರು. ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ನಡೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದ ಹಿತ ಕಾಯುವ ಬದಲು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ರಾಜ್ಯಪಾಲರು ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು. ರಾಜ್ಯಪಾಲರು ಸಚಿವ ಸಂಪುಟ ಅಂಗೀಕರಿಸಿದ ನಿರ್ಣಯದಂತೆ ಸಿದ್ಧಪಡಿಸಿದ್ದ ಭಾಷಣವನ್ನು ಓದಲು ನಿರಾಕರಿಸಿದ್ದು, ಕೊನೆಯಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಪಾಲ ಹುದ್ದೆ ದಯಪಾಲಿಸಿದ್ದರೆಂಬ ಕಾರಣಕ್ಕಾಗಿ ಅವರು ಅಧಿವೇಶನಕ್ಕೆ ಅವಮಾನ ಮಾಡುವ ಮೂಲಕ ಕೇಂದ್ರ ಸರಕಾರದ ಋಣ ತೀರಿಸಿದ್ದಾರೆ ಎಂದು ಆರೋಪಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಹೆಚ್ಚುವರಿಯಾಗಿ 1,000 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಂಡಳಿಗೆ ಒಟ್ಟು 6,000 ಕೋಟಿ ಅನುದಾನ ಲಭ್ಯವಾಗುವ ನಿರೀಕ್ಷೆ ಇದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದು ಮಂಡಳಿ ಅಧ್ಯಕ್ಷ ಡಾ. ಅಜಯಸಿಂಗ್ ಧರ್ಮಸಿಂಗ್ ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಭೀಮರಾಯ ಠಾಣಗುಂದಿ, ರಾಘವೇಂದ್ರ ಹಾಗಣಗೇರಾ ಇತರರು ಉಪಸ್ಥಿತರಿದ್ದರು.
ಒಡಿಶಾ| ಗಣರಾಜ್ಯೋತ್ಸವದಂದು ಮಾಂಸ, ಮೀನು, ಮೊಟ್ಟೆ ಮಾರಾಟ ನಿಷೇಧ!
ಭುವನೇಶ್ವರ, ಜ. 24: ಗಣರಾಜ್ಯೋತ್ಸವ ದಿನವಾದ ಸೋಮವಾರ ಮಾಂಸ, ಕೋಳಿ, ಮೀನು ಮತ್ತು ಮೊಟ್ಟೆ ಮಾರಾಟವನ್ನು ನಿಷೇಧಿಸಿ ಒಡಿಶಾದ ಕೊರಾಪುಟ್ ಜಿಲ್ಲಾಡಳಿತವು ಶನಿವಾರ ಆದೇಶ ಹೊರಡಿಸಿದೆ ಹಾಗೂ ‘‘ಗೌರವದ ದ್ಯೋತಕವಾಗಿ’’ ಆ ದಿನ ಸಸ್ಯಾಹಾರ ಸೇವಿಸುವಂತೆ ಜನರಿಗೆ ಸೂಚಿಸಿದೆ. ‘‘ರಾಷ್ಟ್ರೀಯ ಹಬ್ಬವನ್ನು ಏಕರೀತಿಯಲ್ಲಿ ಆಚರಿಸುವುದಕ್ಕಾಗಿ’’ ಜಿಲ್ಲಾಧಿಕಾರಿ ಮನೋಜ್ ಸತ್ಯಬಾನ್ ಮಹಾಜನ್ ಕ್ಷೇತ್ರಾಭಿವೃದ್ಧಿ ಅಧಿಕಾರಿಗಳು, ತಹಶೀಲ್ದಾರರು ಮತ್ತು ಕಾರ್ಯಕಾರಿ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕಳುಹಿಸಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನಿರ್ದೇಶನವು ಅಧಿಕಾರಿಗಳಿಗೆ ಸೂಚಿಸುತ್ತದೆ. ಕೊರಾಪುಟ್ ಜಿಲ್ಲಾಧಿಕಾರಿಯ ಈ ಆದೇಶವು ಸಂವಿಧಾನದ 14 ಮತ್ತು 15ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ವಕೀಲ ಸತ್ಯವಾದಿ ಮೊಹಾಪಾತ್ರ ಹೇಳುತ್ತಾರೆ. ಈ ವಿಧಿಗಳು ಧರ್ಮದ ಆಧಾರದಲ್ಲಿ ತಾರತಮ್ಯವನ್ನು ನಿಷೇಧಿಸುತ್ತವೆ ಮತ್ತು ಸಮಾನತೆಯನ್ನು ಖಾತರಿಪಡಿಸುತ್ತವೆ ಎಂದು ಅವರು ಹೇಳಿದ್ದಾರೆ. ‘‘ಗಣರಾಜ್ಯೋತ್ಸವವು ರಾಷ್ಟ್ರೀಯ ಹಬ್ಬವಾಗಿದೆ, ಅದು ಧಾರ್ಮಿಕ ಹಬ್ಬವಲ್ಲ’’ ಎಂದು ಹೇಳಿದ ಅವರು, ಸಾಂವಿಧಾನಿಕ ಮೌಲ್ಯಗಳ ಆಚರಣೆಯ ವೇಳೆ ಆಹಾರ ಆಯ್ಕೆಗಳನ್ನು ಜನರ ಮೇಲೆ ಯಾಕೆ ಹೇರಬೇಕು ಎಂದು ಪ್ರಶ್ನಿಸಿದರು.
ರಾಮಕುಂಜ: ತಂದೆ - ಮಗನ ನಡುವೆ ಜಗಳ; ಅಪ್ರಾಪ್ತ ವಯಸ್ಸಿನ ಮಗ ಮೃತ್ಯು, ತಂದೆಗೆ ಗಾಯ
ಕಡಬ: ತಂದೆ ಮತ್ತು ಅಪ್ರಾಪ್ತ ವಯಸ್ಸಿನ ಮಗನ ನಡುವಿನ ಜಗಳ ನಡೆದು ಮಗನ ಸಾವಿನಲ್ಲಿ ಅಂತ್ಯಗೊಂಡ ದಾರುಣ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ (60) ಮತ್ತು ಅವರ ಪುತ್ರ ಮೋಕ್ಷ (17) ನಡುವೆ ಶನಿವಾರ ಸಂಜೆ ಜಗಳವಾಗಿದ್ದು, ಈ ವೇಳೆ ಮೋಕ್ಷ ಗುಂಡೇಟು ತಗುಲಿ ಮೃತಪಟ್ಟಿದ್ದಾನೆ. ಮೂಲತಃ ಪುತ್ತೂರು ತಾಲೂಕಿನ ನಿಡ್ಪಳ್ಳಿ ಗ್ರಾಮದ ನುಳಿಯಾಳು ನಿವಾಸಿಯಾಗಿರುವ ವಸಂತ್ ರಿಗೆ ಪೆರ್ಲದ ಜಯಶ್ರೀ ಎಂಬವರೊಂದಿಗೆ ವಿವಾಹವಾಗಿತ್ತು. ಇವರಿಗೆ ಮೋಕ್ಷ ಏಕೈಕ ಪುತ್ರನಾಗಿದ್ದಾರೆ. ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಜಾಗ ಖರೀದಿಸಿದ್ದ ವಸಂತ್ ಇಲ್ಲೇ ವಾಸವಿದ್ದರು. ಕೆಲ ದಿನಗಳಿಂದ ಪತಿ ಮತ್ತು ಪತ್ನಿಯ ನಡುವೆ ಆಸ್ತಿ ವಿಚಾರವಾಗಿ ಜಗಳವಾಗಿದ್ದು, ಒಂದು ತಿಂಗಳ ಹಿಂದೆ ಪತ್ನಿ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ. ತಂದೆ ಮತ್ತು ಮಗ ಪಾದೆಯ ಮನೆಯಲ್ಲಿ ವಾಸವಿದ್ದು, ಶನಿವಾರ ಸಂಜೆ ಇವರೊಳಗೆ ಅದ್ಯಾವುದೋ ವಿಷಯಕ್ಕೆ ಜಗಳ ಉಂಟಾಗಿದೆ. ಈ ವೇಳೆ ತಂದೆ ವಸಂತ ಅಮೀನ್ರಿಗೆ ಚೂರಿ ಇರಿತದ ಗಂಭೀರ ಗಾಯಗಳಾಗಿವೆ. ಮಗ ಮೋಕ್ಷ ಮುಖಕ್ಕೆ ಗುಂಡೇಟು ತಗುಲಿ ಮೃತಪಟ್ಟಿದ್ದಾರೆ. ಈ ಮಧ್ಯೆ ತಂದೆಯೇ ಮಗನಿಗೆ ಗುಂಡಿಕ್ಕಿ ಸಾಯಿಸಿದ್ದಾರೆ ಎಂದು ಆರೋಪಿಸಿ ವಸಂತ್ ಅಮೀನ್ರ ಪತ್ನಿ ಜಯಶ್ರೀ ಪೊಲೀಸ್ ದೂರು ನೀಡಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಸಂತ ಅಮೀನ್ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಕಾರಣಕ್ಕಾಗಿ ಜಗಳ ನಡೆದಿದೆ ಎನ್ನುವುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ, ಉಪ್ಪಿನಂಗಡಿ ವೃತ್ತ ನಿರೀಕ್ಷಕರಾದ ನಾಗರಾಜ್, ಕಡಬ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಜಂಬೂರಾಜ್ ಮಹಾಜನ್, ಅಪರಾಧ ಸ್ಥಳ ತನಿಖಾಧಿಕಾರಿ ಅರ್ಪಿತಾ ಮತ್ತು ಕಾವ್ಯ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಂದೆಗೆ ಚೂರಿಯಿಂದ ಇರಿದು ಮಗ ಆತ್ಮಹತ್ಯೆ? ಕುಟುಂಬ ಕಲಹದ ಹಿನ್ನೆಲೆಯಲ್ಲಿ ಮೋಕ್ಷ ತನ್ನ ತಂದೆ ವಸಂತ ಅಮೀನ್ರ ಹೊಟ್ಟೆಗೆ ಚೂರಿಯಿಂದ ಇರಿದು ಬಳಿಕ ಮನೆಯಲ್ಲಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ ಎಂದು ಕಡಬ ಠಾಣಾ ಪೊಲೀಸರು ತನಿಖೆಯ ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಿದ್ದಾರೆ.
ರಾಜ್ಯಪಾಲರ ವರ್ತನೆಗಳಿಂದ ಘಾಸಿಯಾಗಿದೆ: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್
ಚೆನ್ನೈ, ಜ. 24: ದ್ರಾವಿಡ ಮಾದರಿಯ ಸರಕಾರದಿಂದಾಗಿ ತಮಿಳುನಾಡು ಇತರ ರಾಜ್ಯಗಳನ್ನು ಅಭಿವೃದ್ಧಿಯಲ್ಲಿ ಹಿಂದಿಕ್ಕಿದೆ ಎಂದು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ. ಅದೇ ವೇಳೆ, ರಾಜ್ಯ ವಿಧಾನಸಭಾ ಕಲಾಪಗಳಲ್ಲಿನ ರಾಜ್ಯಪಾಲರ ವರ್ತನೆ ಬಗ್ಗೆ ಖೇದ ವ್ಯಕ್ತಪಡಿಸಿದರು. ನಿರಂತರ ಜನಪರ ಯೋಜನೆಗಳ ಜಾರಿಯ ಮೂಲಕ ತಮಿಳುನಾಡು ತಲೆಯೆತ್ತಿ ನಿಂತಿದೆ ಎಂದು ರಾಜ್ಯ ವಿಧಾನಸಭೆಯಲ್ಲಿ ಮಾತನಾಡುತ್ತಾ ಸ್ಟಾಲಿನ್ ಹೇಳಿದರು. ‘‘ಇತರ ರಾಜ್ಯಗಳಿಗೆ ಹೋಲಿಸಿದರೆ ತಮಿಳುನಾಡು ಹೆಚ್ಚು ಅಭಿವೃದ್ಧಿ ಹೊಂದಿದೆ. ಇದಕ್ಕೆ ಕಾರಣ ನಮ್ಮ ಯೋಜನೆಗಳು. ನಮ್ಮ ಸರಕಾರದ ಮಟ್ಟಿಗೆ ಹೇಳುವುದಾದರೆ, ಒಂದು ಸಾಧನೆಯ ಬಳಿಕ ಅದಕ್ಕಿಂತ ದೊಡ್ಡ ಇನ್ನೊಂದು ಸಾಧನೆ ಬರುತ್ತದೆ. ಸಾಧನೆಯ ಮೇಲೆ ಸಾಧನೆ ಮಾಡುವುದು ದ್ರಾವಿ ಮಾದರಿ ಸರಕಾರದ ಲಕ್ಷಣವಾಗಿದೆ’’ ಎಂದು ಅವರು ನುಡಿದರು. ರಾಜ್ಯಪಾಲ ಆರ್.ಎನ್. ರವಿ ಮೇಲೆ ವಾಗ್ದಾಳಿ ನಡೆಸಿದ ಅವರು, ‘‘ರಾಜ್ಯಪಾಲರು ರಾಜ್ಯ ಸರಕಾರದ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಪದೇ ಪದೇ ಅದೇ ಕಾರಣವನ್ನು ಹೇಳಿ ವಿಧಾನಸಭೆಯಿಂದ ಹೊರನಡೆಯುತ್ತಾರೆ. ನಾನು ರಾಷ್ಟ್ರ ಮತ್ತು ರಾಷ್ಟ್ರಗೀತೆಗೆ ಅತ್ಯಂತ ಹೆಚ್ಚಿನ ಗೌರವ ಹೊಂದಿರುವವ. ದೇಶಭಕ್ತಿಯ ಬಗ್ಗೆ ನಮಗೆ ಯಾರೂ ಭಾಷಣ ಮಾಡುವ ಅಗತ್ಯವಿಲ್ಲ. ರಾಜ್ಯಪಾಲರ ವರ್ತನೆಗಳು ನೋವು ತರುತ್ತವೆ. ವಿಧಾನಸಭೆಯಲ್ಲಿ, ಆರಂಭದಲ್ಲಿ ತಮಿಳು ತಾಯಿ ವಳ್ತುವನ್ನು ಮತ್ತು ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಹಾಡುವುದು ಸಂಪ್ರದಾಯವಾಗಿದೆ’’ ಎಂದು ಕರುಣಾನಿಧಿ ಹೇಳಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ: ಒತ್ತಡ, ಆತಂಕದಲ್ಲಿ ಪ್ರಾಣ ಕಳೆದುಕೊಂಡವರೆಷ್ಟು?
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಉಂಟಾಗಿರುವ ಆತಂಕದಿಂದಾಗಿ ರಾಜ್ಯದಲ್ಲಿ 110ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಪ್ರತಿದಿನ ಮೂರರಿಂದ ನಾಲ್ಕು ಜನರು ಆತ್ಮಹತ್ಯೆಯಿಂದ ಸಾಯುತ್ತಿದ್ದಾರೆ. ಈ ಸಾವುಗಳಿಗೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರ ಹೊಣೆ ಹೊತ್ತುಕೊಳ್ಳಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇತ್ತೀಚಿನ ತಿಂಗಳುಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಹಲವಾರು ಬೂತ್ ಮಟ್ಟದ ಅಧಿಕಾರಿಗಳು (BLO) SIR ಪ್ರಕ್ರಿಯೆಯ ಸಮಯದಲ್ಲಿ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ಟೋಬರ್ನಲ್ಲಿ ನಡೆದ ಒಂದು ಪ್ರಕರಣದಲ್ಲಿ, 95 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮತದಾರರ ಪಟ್ಟಿಯಿಂದ ಹೊರಗಿಡಲಾಗುತ್ತದೆ ಎಂಬ ಆತಂಕದಿಂದಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಕುಟುಂಬ ಹೇಳಿತ್ತು. ನವೆಂಬರ್ನಲ್ಲಿ ಮಮತಾ ಬ್ಯಾನರ್ಜಿ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ “ಆತಂಕಕಾರಿ” ಮತ್ತು “ಅಪಾಯಕಾರಿ” ಹಂತವನ್ನು ತಲುಪಿದೆ ಎಂದು ಹೇಳಿದ್ದಾರೆ. ಈಗ ನಡೆಯುತ್ತಿರುವ ವಿಧಾನವು ಸರಿಯಾದ ಯೋಜನೆಯಿಂದ ಕೂಡಿಲ್ಲ. ಅದು ಗೊಂದಲಮಯವಾಗಿದ್ದು ನಾಗರಿಕರು ಮತ್ತು ಅಧಿಕಾರಿಗಳನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಅವರು ಉಲ್ಲೇಖಿಸಿದ್ದರು. ► ಏನಿದು SIR? ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಅಥವಾ SIR ಮತದಾರರ ಪಟ್ಟಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ನಡೆಸುವ ದೊಡ್ಡ ಪ್ರಮಾಣದ ಮನೆಮನೆ ತಪಾಸಣೆಯ ಪ್ರಕ್ರಿಯೆಯಾಗಿದೆ. ಚುನಾವಣಾ ಆಯೋಗದ ಪ್ರಕಾರ, ಈ ಕಾರ್ಯದ ಪ್ರಾಥಮಿಕ ಉದ್ದೇಶ ದೋಷರಹಿತ ಮತದಾರರ ಪಟ್ಟಿಯನ್ನು ತಯಾರಿಸುವುದು. ಅಂದರೆ ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನ ಹೆಸರು ಸರಿಯಾಗಿ ನಮೂದಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮತ್ತು ಯಾವುದೇ ಅನರ್ಹ ಅಥವಾ ನಕಲಿ ಹೆಸರುಗಳು ಇರದಂತೆ ನೋಡಿಕೊಳ್ಳುವುದು. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳನ್ನು (BLO) ನಿಯೋಜಿಸಲಾಗುತ್ತದೆ. ಇವರಿಗೆ ಕಟ್ಟುನಿಟ್ಟಾದ ಡೆಡ್ಲೈನ್ ನೀಡಲಾಗಿದ್ದು, ಅದನ್ನು ಪೂರೈಸಲಾಗದೆ ಭಾರೀ ಒತ್ತಡ ಅನುಭವಿಸುತ್ತಿದ್ದಾರೆ. ಕೆಲಸದ ಒತ್ತಡದಿಂದ BLOಗಳು ಸಾವಿಗೀಡಾಗಿರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿವೆ. ► BLOಗಳು ಯಾರು? BLOಗಳು ಸ್ಥಳೀಯ ಸರ್ಕಾರ ಅಥವಾ ಅರೆ ಸರ್ಕಾರಿ ನೌಕರರು. ಅವರು ಆ ಪ್ರದೇಶದ ಮತದಾರರನ್ನು ಚೆನ್ನಾಗಿ ಬಲ್ಲವರು. ಸಾಮಾನ್ಯವಾಗಿ ಅವರು ಅದೇ ಪ್ರದೇಶದಲ್ಲಿ ವಾಸಿಸುತ್ತಾರೆ. ಅವರ ಮುಖ್ಯ ಕರ್ತವ್ಯ ತಮ್ಮ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿಯನ್ನು ನವೀಕರಿಸುವುದಾಗಿದೆ. ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಸೆಕ್ಷನ್ 13ಬಿ(2) ಅಡಿಯಲ್ಲಿ, ಸರ್ಕಾರಿ ಶಾಲೆಗಳು, ಕಚೇರಿಗಳು ಮತ್ತು ಇತರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು BLOಗಳಾಗಿ ನಿಯೋಜಿಸಲಾಗುತ್ತದೆ. ► BLOಗಳ ಜವಾಬ್ದಾರಿ ಏನು? BLOಗಳು ಭಾರತದ ಚುನಾವಣಾ ಆಯೋಗದ ತಳಮಟ್ಟದ ಪ್ರತಿನಿಧಿಗಳಾಗಿದ್ದಾರೆ. ಅವರ ಜವಾಬ್ದಾರಿಗಳು ಇಂತಿವೆ: ನಿಖರವಾದ, ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಮತದಾರರ ವಿವರಗಳನ್ನು ದಾಖಲಿಸುವುದು, ಪರಿಶೀಲಿಸುವುದು ಮತ್ತು ನವೀಕರಿಸುವುದು ಮತದಾರರ ಹೆಸರು ಸೇರಿಸಲು, ಅಳಿಸಲು ಅಥವಾ ತಿದ್ದುಪಡಿ ಮಾಡಲು ಅಗತ್ಯ ಫಾರ್ಮ್ಗಳನ್ನು ಒದಗಿಸುವುದು ಅರ್ಹ ನಾಗರಿಕರು ಮತದಾರರಾಗಿ ನೋಂದಾಯಿಸಿಕೊಳ್ಳಲು ಮತ್ತು ಮತದಾರರ ಗುರುತಿನ ಚೀಟಿ ಪಡೆಯಲು ಸಹಾಯ ಮಾಡುವುದು ಭೌತಿಕ ಪರಿಶೀಲನೆ ನಡೆಸಿ ಚುನಾವಣಾ ನೋಂದಣಿ ಅಧಿಕಾರಿ (ERO)ಗೆ ವರದಿಗಳನ್ನು ಸಲ್ಲಿಸುವುದು ಪ್ರಕ್ರಿಯೆಯ ನಂತರ ತೆಗೆದುಹಾಕಬೇಕಾದ ಮೃತ, ಸ್ಥಳಾಂತರಗೊಂಡ ಅಥವಾ ನಕಲಿ ಮತದಾರರನ್ನು ಗುರುತಿಸಲು BLOಗಳು ಸ್ಥಳೀಯರು ಮತ್ತು ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸುತ್ತಾರೆ. ಇದರಿಂದ ಅವರ ಕೆಲಸ ಇನ್ನಷ್ಟು ಕಷ್ಟಕರವಾಗುತ್ತದೆ. ► ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಸುಪ್ರೀಂಕೋರ್ಟ್ ನಿರ್ದೇಶನ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸಲಾದ BLOಗಳ ಕೆಲಸದ ಒತ್ತಡ ಕಡಿಮೆಗೊಳಿಸಲು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿದೆ. ಕಳೆದ ಡಿಸೆಂಬರ್ನಲ್ಲಿ ನಿಗದಿತ ಅವಧಿಯಲ್ಲಿ ಮುಗಿಸಬೇಕಾದ SIR ಪ್ರಕ್ರಿಯೆಯಿಂದ BLOಗಳ ಮೇಲೆ ಕೆಲಸದ ಒತ್ತಡ ಹೆಚ್ಚಾಗಿದೆ ಎಂದು ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠ, BLOಗಳ ಕೆಲಸದ ಒತ್ತಡ ಕಡಿಮೆ ಮಾಡಲು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ನಿಟ್ಟಿನಲ್ಲಿ ರಾಜ್ಯಗಳು ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿತು. ►ಕೆಲಸದ ಒತ್ತಡದಿಂದ BLO ಆತ್ಮಹತ್ಯೆ/ಸಾವು ಪ್ರಕರಣಗಳು ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ 2025 ಡಿಸೆಂಬರ್ 28ರಂದು BLO ಶವವಾಗಿ ಪತ್ತೆಯಾಗಿದ್ದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸಂಬಂಧಿತ ಕೆಲಸದ ಒತ್ತಡವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿತ್ತು. 2025 ನವೆಂಬರ್ 15ರಂದು ಕೇರಳದ ಕಣ್ಣೂರು ಜಿಲ್ಲೆಯಲ್ಲಿ 41 ವರ್ಷದ ಅನೀಶ್ ಜಾರ್ಜ್ ಎಂಬ BLO ಆತ್ಮಹತ್ಯೆ ಮಾಡಿಕೊಂಡಿದ್ದರು. ಶಾಲಾ ಅಟೆಂಡೆಂಟ್ ಆಗಿದ್ದ ಅವರು SIR ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಅವರ ಸಾವಿನ ಹಿನ್ನೆಲೆಯಲ್ಲಿ ನವೆಂಬರ್ 17ರಂದು ಕೇರಳದ BLOಗಳು ಮುಷ್ಕರ ಹೂಡಿದ್ದರು. ಡಿಸೆಂಬರ್ನಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ SIR ಕೆಲಸದ ಒತ್ತಡದಿಂದ BLO ಸರ್ವೇಶ್ ಸಿಂಗ್ (46) ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹಾಯಕ ಶಿಕ್ಷಕರಾಗಿದ್ದ ಅವರು ಆತ್ಮಹತ್ಯೆಗೂ ಮುನ್ನ ದಾಖಲಿಸಿದ ವೀಡಿಯೊದಲ್ಲಿ ಕಳೆದ 20 ದಿನಗಳಿಂದ ನಿದ್ರೆ ಇಲ್ಲದೆ ಕೆಲಸ ಮಾಡುತ್ತಿದ್ದೇನೆ ಎಂದು ಕಣ್ಣೀರು ಹಾಕಿದ್ದರು. ಕಳೆದ ವರ್ಷ ನವೆಂಬರ್ ಕೊನೆಯ ವಾರದಲ್ಲಿ ರಾಜಸ್ಥಾನದ ಧೋಲ್ಪುರ್ನಲ್ಲಿ 42 ವರ್ಷದ ಅನುಜ್ ಗಾರ್ಗ್ ಎಂಬ BLO ಕುಸಿದು ಬಿದ್ದು ಸಾವನ್ನಪ್ಪಿದ್ದರು. ಉತ್ತರ ಪ್ರದೇಶದ ನೆಹರು ನಗರದಲ್ಲಿ BLO ಆಗಿದ್ದ 58 ವರ್ಷದ ಲಾಲ್ ಮೋಹನ್ ಸಿಂಗ್ ಎಂಬವರು SIR ಕೆಲಸದ ಒತ್ತಡದಿಂದ ಸಾವಿಗೀಡಾಗಿದ್ದರು. ನವೆಂಬರ್ 25ರಂದು ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸಹಾಯಕ ಶಿಕ್ಷಕರಾಗಿದ್ದ BLO ವಿಪಿನ್ ಯಾದವ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಧ್ಯಪ್ರದೇಶದ ರಾಯ್ಸೆನ್ ಮತ್ತು ದಾಮೋಹ್ ಜಿಲ್ಲೆಗಳಲ್ಲಿ SIR ಕಾರ್ಯದಲ್ಲಿ ತೊಡಗಿದ್ದ ಇಬ್ಬರು ಶಿಕ್ಷಕರು ಅನಾರೋಗ್ಯದಿಂದ ಸಾವಿಗೀಡಾಗಿದ್ದರು. 2026 ಜನವರಿ 13ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾಗಿದ್ದ ಧನಂಜಯ (50) ಎಂಬ BLO ಆತ್ಮಹತ್ಯೆಗೆ ಶರಣಾಗಿದ್ದರು. ► ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಹಲವಾರು ರಾಜ್ಯಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ವೇಳೆ BLOಗಳು ಮತ್ತು ಇತರ ಚುನಾವಣಾ ಅಧಿಕಾರಿಗಳ ಮೇಲೆ ಅಮಾನವೀಯ ಕೆಲಸದ ಹೊರೆ ಮತ್ತು ಬಲವಂತದ ಒತ್ತಡ ಹೇರಲಾಗಿದೆ. ಇದರ ಪರಿಣಾಮವಾಗಿ ಹಲವರು ಹೃದಯಾಘಾತದಿಂದ ಅಥವಾ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ ಎಂದು 2025 ನವೆಂಬರ್ 25ರಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಮುಂಬೈ ಮೂಲದ ವಕೀಲ ಹಿತೇಂದ್ರ ಡಿ. ಗಾಂಧಿ ಈ ದೂರು ಸಲ್ಲಿಸಿದ್ದರು. ಗುಜರಾತ್, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಕೇರಳ ಮತ್ತು ಇತರ ರಾಜ್ಯಗಳಲ್ಲಿ BLOಗಳ ಸಾವಿನ ಪ್ರಕರಣಗಳು ವರದಿಯಾಗುತ್ತಿವೆ. ಆರು ರಾಜ್ಯಗಳಲ್ಲಿ ಕನಿಷ್ಠ 15 BLOಗಳು 19 ದಿನಗಳಲ್ಲಿ ಸಾವಿಗೀಡಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ► BLO ಸಂಭಾವನೆ ದ್ವಿಗುಣ ಚುನಾವಣಾ ಆಯೋಗವು ಬೂತ್ ಮಟ್ಟದ ಅಧಿಕಾರಿಗಳ (BLO) ಸಂಭಾವನೆಯನ್ನು ದ್ವಿಗುಣಗೊಳಿಸಿದೆ. ಜೊತೆಗೆ ಮತದಾರರ ಪಟ್ಟಿಗಳ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ತೊಡಗಿರುವ BLO ಮೇಲ್ವಿಚಾರಕರ ಸಂಭಾವನೆಯನ್ನೂ ಹೆಚ್ಚಿಸಲಾಗಿದೆ. 2025 ಆಗಸ್ಟ್ 2ರಂದು ಚುನಾವಣಾ ಆಯೋಗ ಪ್ರಕಟಿಸಿದ ಅಧಿಸೂಚನೆಯ ಪ್ರಕಾರ, BLOಗಳ ವಾರ್ಷಿಕ ಸಂಭಾವನೆಯನ್ನು 6,000 ರೂ.ಗಳಿಂದ 12,000 ರೂ.ಗಳಿಗೆ ದ್ವಿಗುಣಗೊಳಿಸಲಾಗಿದೆ. ಹೆಚ್ಚುವರಿಯಾಗಿ, ಮತದಾರರ ಪಟ್ಟಿಗಳ ಪರಿಷ್ಕರಣೆಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು 1,000 ರೂ.ಗಳಿಂದ 2,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸುವ BLO ಮೇಲ್ವಿಚಾರಕರ ವಾರ್ಷಿಕ ಸಂಭಾವನೆಯನ್ನು 12,000 ರೂ.ಗಳಿಂದ 18,000 ರೂ.ಗಳಿಗೆ ಏರಿಸಲಾಗಿದೆ. ಇದೇ ಮೊದಲ ಬಾರಿಗೆ ಚುನಾವಣಾ ನೋಂದಣಿ ಅಧಿಕಾರಿಗಳು (EROಗಳು) ಮತ್ತು ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಿಗೆ (AEROಗಳು) ಗೌರವಧನ ನೀಡಲಾಗಿದೆ. ಅದರಂತೆ, EROಗಳಿಗೆ 30,000 ರೂ. ಮತ್ತು AEROಗಳಿಗೆ 25,000 ರೂ.ಗಳನ್ನು ನೀಡಲಾಗುತ್ತದೆ.
ಡೊನಾಲ್ಡ್ ಟ್ರಂಪ್ ವಿರುದ್ಧ ರೊಚ್ಚಿಗೆದ್ದ ಬ್ರೆಜಿಲ್ ಅಧ್ಯಕ್ಷ, ಮತ್ತೊಂದು ಕಿರಿಕ್ ಶುರು?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾಗೂ ಹಲವು ದೇಶಗಳ ನಾಯಕರ ನಡುವೆ ಕಿರಿಕ್ ಮುಂದುವರಿದೆ. ಒಂದಲ್ಲ... ಎರಡಲ್ಲ... ಈಗಾಗಲೇ ಹಲವು ದೇಶಗಳ ನಾಯಕರ ಜೊತೆಗೆ ಇದೇ ಟ್ರಂಪ್ ಅವರು ಕಿರಿಕ್ ಮಾಡಿಕೊಂಡಿದ್ದಾರೆ. ಹಾಗೇ ಹೆಚ್ಚಿನ ತೆರಿಗೆಯ ಎಚ್ಚರಿಕೆ ನಡುವೆ ಕೂಡ ಈಗ ಭಾರಿ ದೊಡ್ಡ ಚರ್ಚೆ ಶುರುವಾಗಿದೆ. ಅದರಲ್ಲೂ ಗಾಜಾ ಶಾಂತಿ ಮಂಡಳಿ ವಿಚಾರಕ್ಕೆ ಪದೇ,
ರಾಯಚೂರು ರಿಪೋಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ : ಕಥೆ, ಕವನಕ್ಕೆ ಅರ್ಜಿ ಆಹ್ವಾನ
ರಾಯಚೂರು: ಇಲ್ಲಿನ ರಾಯಚೂರು ರಿಪೋರ್ಟ್ರ್ಸ್ ಗಿಲ್ಡ್ ರಾಯಚೂರು ಬೆಳ್ಳಿ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಜಿಲ್ಲೆ ಹಾಗೂ ರಾಜ್ಯದ ಎಲ್ಲಾ ಪತ್ರಕರ್ತರಿಗಾಗಿ ಕಥೆ, ಕವನ, ಲೇಖನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಕಥೆ, ಕವನ, ಲೇಖನಗಳನ್ನ ಪ್ರತ್ಯೇಕ ಮೂರು ಪುಸ್ತಕಗಳಾಗಿ ಪ್ರಕಟಿಸಲು ನಿರ್ಧರಿಸಲಾಗಿದೆ.ಪತ್ರಕರ್ತರಿಗಾಗಿ ರಾಜ್ಯಮಟ್ಟದ ಕವನ ಹಾಗೂ ಕಥಾ ಸ್ಪರ್ಧೆ ಹಾಗೂ ರಾಯಚೂರು ಜಿಲ್ಲಾ ಪತ್ರಕರ್ತರಿಂದ ವೃತ್ತಿ ಅನುಭವದ ಲೇಖನಗಳ ಆಹ್ವಾನ ಮಾಡಲಾಗಿದೆ. ಕವನ, ಕಥೆ, ಲೇಖನಗಳನ್ನು ಕಳುಹಿಸಲು ಫೆ.25ರ, 2026 ಕೊನೆಯದಿನವಾಗಿದ್ದು, ಕಥಾ ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನವಾಗಿ 10,000 ರೂ, ದ್ವಿತೀಯ ಬಹುಮಾನ 7,000 ರೂ. ತೃತೀಯ ಬಹುಮಾನ 3,000 ರೂ. ಗಳ ನಿಗದಿಪಡಿಸಲಾಗಿದೆ. ಕವನ ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನ 5,000 ರೂ. ದ್ವಿತೀಯ ಬಹುಮಾನ 3000 ರೂ., ತೃತೀಯ ಬಹುಮಾನ 2,000 ರೂ. ನೀಡಲಾಗುತ್ತಿದೆ. ಕಥೆ, ಕವನ ಸ್ಪರ್ಧೆಗೆ ಹಾಗೂ ಆಹ್ವಾನಿತ ಲೇಖನಗಳಿಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ. ರಾಯಚೂರು ಜಿಲ್ಲಾ ಪತ್ರಕರ್ತರು 400 ಪದಗಳ ಮಿತಿಯಲ್ಲಿ ಲೇಖನ ಕಳುಹಿಸಬೇಕು, ಆಯ್ಕೆಯಾದ ಲೇಖನಗಳನ್ನು ಪುಸ್ತಕದಲ್ಲಿ ಪ್ರಕಟಿಸಲಾಗುವುದು. ಲೇಖನಗಳಿಗೆ ಯಾವುದೇ ಬಹುಮಾನಗಳು ಇರುವುದಿಲ್ಲ. ನಿಯಮಗಳು : ಸ್ಪರ್ಧೆಗೆ ಕಳುಹಿಸುವ ಕಥೆ, ಕವನ ಸ್ವರಚಿತವಾಗಿರಬೇಕು .ಯಾವುದೇ ಪುಸ್ತಕ, ಪತ್ರಿಕೆಗಳಲ್ಲಿ ಪ್ರಕಟವಾಗಿರಬಾರದು. ಕಥೆ 1500 ಗರಿಷ್ಠ ಪದಮಿತಿಯಲ್ಲಿರಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಪತ್ರಕರ್ತರಾಗಿರಬೇಕು. ಕಥೆ, ಕವನದ ಜೊತೆ ಕೆಲಸ ಮಾಡುವ ಸುದ್ದಿ ಸಂಸ್ಥೆ ನೀಡಿದ ಗುರುತಿನ ಚೀಟಿ/ಪತ್ರ ಅಥವಾ ಅಕ್ರಿಡಿಯೇಶನ್ ಚೀಟಿ ಕಡ್ಡಾಯವಾಗಿ ಲಗತ್ತಿಸಬೇಕು. ಒಬ್ಬ ಪತ್ರಕರ್ತ ಎರಡೂ ವಿಭಾಗದಲ್ಲಿ ಸ್ಪರ್ಧಿಸಬಹುದು ಒಂದು ಕಥೆ, ಒಂದು ಕವನ ಮಾತ್ರ ಕಳುಹಿಸಬೇಕು. ಲೇಖನ, ಕಥೆ, ಕವನವನ್ನು ನುಡಿ/ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ದಪಡಿಸಿ ಇ ಮೇಲ್ : rrgraichur@gmail.com ಗೆ ಕಳುಹಿಸಬೇಕು. ಪ್ರತ್ಯೇಕ ಹಾಳೆಯಲ್ಲಿ ಸ್ವ-ಪರಿಚಯ ಬರೆದು ಕಳುಹಿಸಬೇಕು. ಹೆಸರು, ವಿಳಾಸ, ಕಿರುಪರಿಚಯ, ಭಾವಚಿತ್ರ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ನಮೂದಿಸಿರಬೇಕು. ಕಥೆ, ಕವನ, ಲೇಖನಗಳ ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿರಲಿದೆ. ಹೆಚ್ಚಿನ ಮಾಹಿತಿಗಾಗಿ: ಮೊ.ಸಂ: 9964804206, 9739334156, 8971451949, 9902059734 ಸಂಪರ್ಕಿಸಬಹುದಾಗಿದೆ. ವೆಬ್ ಸೈಟ್: www.raichurreportersguild.com ಗೆ ಸಂಪರ್ಕಿಸಬಹುದು ಎಂದು ರಿಪೋಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ್ ಜಾಗಟಗಲ್ ಹಾಗೂ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೂಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವದುರ್ಗ | ನರೇಗಾ ಕಾಮಗಾರಿ ವೇಳೆ ಬೋರ್ಡ್ ಕುಸಿದು ಮಹಿಳೆಗೆ ಗಾಯ
ದೇವದುರ್ಗ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾಮಗಾರಿ ನಡೆಯುತ್ತಿದ್ದ ವೇಳೆ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಮಹಿಳೆಯೊಬ್ಬರಿಗೆ ಕಾಲು ಮುರಿದಿರುವ ಘಟನೆ ದೇವದುರ್ಗ ತಾಲ್ಲೂಕಿನ ಪಲಕನಮರಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಂದಲಿ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಅಮರಮ್ಮ ಚೌಡಪ್ಪ ಎಂದು ಗುರುತಿಸಲಾಗಿದೆ. ನರೇಗಾ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ, ಸ್ಥಳದಲ್ಲಿದ್ದ ಸಿಮೆಂಟ್ ಬೋರ್ಡ್ ಅಚಾನಕ್ವಾಗಿ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಅಮರಮ್ಮ ಅವರನ್ನು ತಕ್ಷಣವೇ ಸ್ಥಳೀಯರು ಹಟ್ಟಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ರಾಯಚೂರು ಓಪೆಕ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ತಾರತಮ್ಯ: ವಿಶ್ವಸಂಸ್ಥೆಯ ಸಮಿತಿ ಕಳವಳ
ಹೊಸದಿಲ್ಲಿ, ಜ. 24: ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿವಾರಣಾ ಸಮಿತಿ (ಸಿಇಆರ್ಡಿ) ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಪ್ರಕ್ರಿಯೆಯ ಸಂದರ್ಭ ಜನಾಂಗೀಯ ತಾರತಮ್ಯ, ಬಲವಂತದ ಒಕ್ಕಲೆಬ್ಬಿಸುವಿಕೆ, ದ್ವೇಷ ಭಾಷಣ ಹಾಗೂ ಕಾನೂನು ಜಾರಿ ಸಂಸ್ಥೆಗಳಿಂದ ಅತಿಯಾದ ಬಲ ಪ್ರಯೋಗವನ್ನು ಅದು ಉಲ್ಲೇಖಿಸಿದೆ. ಸಿಇಆರ್ಡಿ 2026 ಜನವರಿ 19ರಂದು ಜಿನೇವಾದಲ್ಲಿರುವ ವಿಶ್ವ ಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಗೆ ಬರೆದ ಪತ್ರದಲ್ಲಿ ಈ ವಿಚಾರ ತಿಳಿಸಿದೆ. 2025 ಮೇ 12ರಂದು ಕಳುಹಿಸಲಾದ ಈ ಹಿಂದಿನ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಭಾರತ ಸರಕಾರ ಒದಗಿಸಿದ ಮಾಹಿತಿಯ ಕೊರತೆಗೆ ವಿಷಾದಿಸುತ್ತೇವೆ ಎಂದು ಅದು ಹೇಳಿದೆ. ಹಿಂದಿನ ಪತ್ರದಲ್ಲಿ ಅಸ್ಸಾಂನಲ್ಲಿ ಸಮುದಾಯದ ಹಕ್ಕುಗಳ ಉಲ್ಲಂಘನೆ ಆರೋಪದ ಕುರಿತು ಸ್ಪಷ್ಟೀಕರಣ ಕೋರಲಾಗಿತ್ತು ಎಂದು ಮಖ್ತೂಬ್ ಮೀಡಿಯಾ ವರದಿ ಮಾಡಿದೆ. ಕಾರ್ಯವಿದಾನ, ಆಡಳಿತಾತ್ಮಕ ಸಮಸ್ಯೆಗಳು ಹಾಗೂ ದಾಖಲೆಗಳನ್ನು ಪಡೆಯುವಲ್ಲಿನ ತೊಂದರೆಗಳಿಂದಾಗಿದೆ ಅಂತಿಮ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಪಟ್ಟಿಯಿಂದ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಹೊರಗಿಡುವ ಬಗ್ಗೆ ಸಮಿತಿ ಕಳವಳ ವ್ಯಕ್ತಪಡಿಸಿದೆ. ‘‘ಮೂಲ ನಿವಾಸಿಗಳಲ್ಲದವರು’’ ಎಂಬ ಅವರ ವರ್ಗೀಕರಣ ತೀವ್ರ ಪರಿಣಾಮ ಬೀರುತ್ತದೆ. ಆ ಪದಕ್ಕೆ ಸ್ಪಷ್ಟ ವ್ಯಾಖ್ಯಾನವಿಲ್ಲ ಎಂದು ಸಮಿತಿ ಗಮನ ಸೆಳೆದಿದೆ. ಅದು ಕಟ್ಟುನಿಟ್ಟಿನ ಪರಿಶೀಲನಾ ಮಾನದಂಡಗಳು ಹಾಗೂ ತಮ್ಮ ಅನರ್ಹತೆಯನ್ನು ಪ್ರಶ್ನಿಸಲು ಸಂಶಯಾಸ್ಪದ ಮತದಾರರಿಗೆ ಅವಕಾಶ ನೀಡುವ ವಿದೇಶಿ ನ್ಯಾಯಮಂಡಳಿಯನ್ನು ಅಮಾನತಿನಲ್ಲಿರಿಸಿರುವ ಬಗ್ಗೆಯೂ ಕಳವಳ ವ್ಯಕ್ತಪಡಿಸಿದೆ. ಸಮರ್ಪಕ ವಸತಿ ಅಥವಾ ಪರಿಹಾರ ನೀಡದೆ ಹಲವು ಜಿಲ್ಲೆಗಳಲ್ಲಿ ವ್ಯವಸ್ಥಿತ ಬಲವಂತದ ಒಕ್ಕಲೆಬ್ಬಿಸುವಿಕೆ ವರದಿಗಳನ್ನು ಸಿಇಆರ್ಡಿ ಉಲ್ಲೇಖಿಸಿದೆ. ಈ ಬಲವಂತದ ಒಕ್ಕಲೆಬ್ಬಿಸುವಿಕೆ ಬಂಗಾಳಿ ಮಾತನಾಡುವ ಮುಸ್ಲಿಂ ಕುಟುಂಬಗಳ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿದೆ ಎಂದು ಅದು ಹೇಳಿದೆ. ವಿಶೇಷವಾಗಿ ಅಸ್ಸಾಂನಲ್ಲಿ 2024 ರಾಷ್ಟ್ರೀಯ ಚುನಾವಣೆ ಸಂದರ್ಭ ದ್ವೇಷ ಭಾಷಣ ಹಾಗೂ ಹಿಂಸಾಚಾರಕ್ಕೆ ಪ್ರಚೋದನೆ ನೀಡುವುದು ಹೆಚ್ಚಳವಾಗಿರುವ ಕುರಿತು ಅದು ಕಳವಳ ವ್ಯಕ್ತಪಡಿಸಿದೆ. ಇದರೊಂದಿಗೆ ಪೊಲೀಸರಿಂದ ಅತಿಯಾದ, ಮಾರಕ ಬಲ ಪ್ರಯೋಗ ಹಾಗೂ ನಾಗರಿಕರು, ಸಂಘಟಿತ ಗುಂಪುಗಳಿಂದ ಹಿಂಸಾತ್ಮಕ ದಾಳಿಯನ್ನು ಉಲ್ಲೇಖಿಸಿದೆ.
ಹಂಪನಕಟ್ಟೆ: ಅಕ್ಬರ್ ಕಾಂಪ್ಲೆಕ್ಸ್ನಲ್ಲಿ ಆಕಸ್ಮಿಕ ಬೆಂಕಿ; ಭಾರೀ ಪ್ರಮಾಣದಲ್ಲಿ ನಷ್ಟ
ಮಂಗಳೂರು: ನಗರದ ಹಂಪನಕಟ್ಟೆಯ ಅಕ್ಬರ್ ಕಾಂಪ್ಲೆಕ್ಸ್ನಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿ ತಳ ಅಂತಸ್ತಿನ ನಲ್ಲಿರುವ ಹಲವು ಅಂಗಡಿಗಳಿಗೆ ಹಾನಿಯಾಗಿದ್ದು, ಲಕ್ಷಾಂತರ ರೂ.ಗಳ ನಷ್ಟ ಸಂಭವಿಸಿದೆ. ಅಂಡರ್ ಗ್ರೌಂಡ್ನಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಟ್ಟೆ ಅಂಗಡಿಗೂ ಬೆಂಕಿಯಿಂದ ಹಾನಿ ಉಂಟಾಗಿದೆ. ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಂಗಡಿಗಳಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಬೆಂಕಿಯಿಂದಾಗಿ ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಪಕ್ಕದ ಲಾಡ್ಜ್ನಲ್ಲಿದ್ದವರು ಇಂದರಿಂದ ತೊಂದರೆ ಅನುಭವಿಸಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಕಾರ್ಯಾಚರಣೆ ಮುಂದುವರಿದಿದೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ ದೃಢಪಟ್ಟಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ರಾಯಚೂರು | ಆರ್ಟಿಪಿಎಸ್ನಲ್ಲಿ ಅಣುಸ್ಥಾವರ ಸ್ಥಾಪಿಸುವ ಪ್ರಕ್ರಿಯೆ ಕೈ ಬಿಡದಿದ್ದರೆ ತೀವ್ರ ಹೋರಾಟ : ಬಸವರಾಜ ಕಳಸ
ರಾಯಚೂರು: ಜಿಲ್ಲೆಯ ಶಾಖೋತ್ಪನ್ನ ಕೇಂದ್ರ ಪ್ರದೇಶದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಜನರ ಆರೋಗ್ಯ ಕಾಪಾಡುವ ಬದಲು “ಆರೋಗ್ಯ ಕೇಳಿದವರಿಗೆ ವಿಷ ಕೊಡಲು ಹೊರಟಿದೆ” ಎಂದು ನಾಗರೀಕ ವೇದಿಕೆಯ ಮುಖಂಡ ಬಸವರಾಜ ಕಳಸ ಆರೋಪಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್ಟಿಪಿಎಸ್ ಪ್ರದೇಶಕ್ಕೆ ಕೇಂದ್ರ ಅಣು ವಿದ್ಯುತ್ ನಿಗಮದ ಮೂವರು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ಆತಂಕಕಾರಿ ಬೆಳವಣಿಗೆ ಎಂದರು. ಅಣು ವಿದ್ಯುತ್ ಸ್ಥಾವರ ಸ್ಥಾಪನೆಯಾದರೆ ಭವಿಷ್ಯದ ಪೀಳಿಗೆಗೆ ಭವಿಷ್ಯವೇ ಇಲ್ಲದಂತಾಗುತ್ತದೆ. ವಿಕಿರಣದ ಪರಿಣಾಮದಿಂದ ಕ್ಯಾನ್ಸರ್ ಸೇರಿದಂತೆ ಶ್ವಾಸಕೋಶ ರೋಗಗಳು, ಇತರೆ ಗಂಭೀರ ಅನಾರೋಗ್ಯಗಳು ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಕೃಷಿ ವಲಯದ ಮೇಲೂ ದುಷ್ಪರಿಣಾಮ ಉಂಟಾಗಲಿದೆ ಎಂದು ಎಚ್ಚರಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಆರೋಗ್ಯ ವ್ಯವಸ್ಥೆ ಕುಸಿತಗೊಂಡಿದ್ದು, ಏಮ್ಸ್ ಆಸ್ಪತ್ರೆ ಸ್ಥಾಪನೆಗಾಗಿ ವರ್ಷಗಳಿಂದ ಹೋರಾಟ ನಡೆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಇಂತಹ ಸಂದರ್ಭದಲ್ಲಿ ಜನರ ಜೀವ ರಕ್ಷಿಸುವ ಬದಲು ಅಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗಿರುವುದು ಖಂಡನೀಯ. ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು. ಹೋರಾಟಗಾರ ಎಸ್. ಮಾರೆಪ್ಪ ಮಾತನಾಡಿ, ಅಣು ವಿದ್ಯುತ್ ಸ್ಥಾವರಗಳ ಅಪಾಯಗಳು ದೇಶದ ಜನರ ಮುಂದೆ ಸ್ಪಷ್ಟವಾಗಿವೆ. ಹೀರೋಷಿಮಾ–ನಾಗಾಸಾಕಿ ಘಟನೆಗಳೇ ವಿಕಿರಣದಿಂದ ಮಾನವ ಜೀವಕ್ಕೆ ಆಗುವ ಭೀಕರ ಪರಿಣಾಮಗಳ ಉದಾಹರಣೆಗಳಾಗಿವೆ. ಇಂತಹ ಅಪಾಯಗಳಿದ್ದರೂ ಸರ್ಕಾರ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಮುಂದಾಗಿರುವುದು ಗಂಭೀರ ಕಳವಳಕ್ಕೆ ಕಾರಣವಾಗಿದೆ ಎಂದು ಹೇಳಿದರು. ಯಾದಗಿರಿ ಜಿಲ್ಲೆಯ ಗೋಗಿ, ದರ್ಶನಾಪುರ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಯುರೇನಿಯಂ ಲಭ್ಯವಾಗಿರುವ ಹಿನ್ನೆಲೆ, ಅಪಾಯಕಾರಿ ಅಣು ಸ್ಥಾವರ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಜೀವಕ್ಕೆ ಅಪಾಯಕಾರಿಯಾದ ಕೈಗಾರಿಕೆಗಳು ರಾಯಚೂರು ಜಿಲ್ಲೆಗೆ ಮಾತ್ರ ಸೀಮಿತವಾಗುತ್ತಿವೆ ಎಂದು ಅವರು ಆರೋಪಿಸಿದರು. ಅಣು ವಿದ್ಯುತ್ ಸ್ಥಾವರ ಸ್ಥಾಪನೆಯಾದರೆ ಭವಿಷ್ಯದ ಪೀಳಿಗೆಯೇ ಅಪಾಯಕ್ಕೆ ಸಿಲುಕಲಿದೆ. ಹೀಗಾಗಿ ನಾಗರೀಕ ವೇದಿಕೆಯ ನೇತೃತ್ವದಲ್ಲಿ ಅಣು ಸ್ಥಾವರ ವಿರೋಧಿಸಿ ತೀವ್ರ ಹೋರಾಟ ರೂಪಿಸಲಾಗುವುದು ಎಂದು ಮಾರೆಪ್ಪ ಎಚ್ಚರಿಸಿದರು. ಈ ಸಂದರ್ಭದಲ್ಲಿ ಅಶೋಕಕುಮಾರ ಜೈನ್, ಜೈ ಭೀಮ, ಮಲ್ಲಪ್ಪ ದಿನ್ನಿ, ನರಸಿಂಹಲು, ವಿನಯಕುಮಾರ ಚಿತ್ರಗಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬಡವರನ್ನು ಆರ್ಥಿಕವಾಗಿ ಸಮೃದ್ಧಗೊಳಿಸುವುದೇ ಕಾಂಗ್ರೆಸ್ ಸರಕಾರದ ಗುರಿ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಚಿಂಚೋಳಿ : ದೇಶದಲ್ಲಿ ಬಡವರಿಗೆ ನೇರವಾಗಿ 1 ಲಕ್ಷ 20 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ತಲುಪಿಸುವ ಮೂಲಕ ಸಾಮಾನ್ಯ ಜನರ ಬದುಕನ್ನು ಹಸನು ಮಾಡಿದ ಏಕೈಕ ಸರ್ಕಾರ ಕಾಂಗ್ರೆಸ್ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು. ತಾಲ್ಲೂಕಿನ ಭಕ್ತಂಪಳ್ಳಿ ಗ್ರಾಮದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಆಶ್ರಯ ನಿವೇಶನಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಅಡಿಗಲ್ಲು ಸಮಾರಂಭವನ್ನು ನೆರವೇರಿಸಿ ಅವರು ಮಾತನಾಡಿದರು. ಗ್ರಾಮದಲ್ಲಿ 6 ಎಕರೆ ಭೂಮಿಯಲ್ಲಿ ಗುರುತಿಸಲಾದ 120 ನಿವೇಶನಗಳ ಹಕ್ಕು ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ. ಉಳಿದ 80 ನಿವೇಶನಗಳನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ತಿಳಿಸಿದರು. ಗ್ರಾಮದಲ್ಲಿ ಒಟ್ಟು ರೂ.1 ಕೋಟಿ 86 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ತೆಲಂಗಾಣ ಗಡಿಭಾಗದ ರಸ್ತೆ ನಿರ್ಮಾಣ, ಗ್ರಾಮದ ರುದ್ರಭೂಮಿ ಅಭಿವೃದ್ಧಿ ಹಾಗೂ ಮುಸ್ಲಿಂ ಸಮುದಾಯದ ಖಬರಸ್ತಾನ್ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ಯೋಜನೆಯಂತೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರತಿವರ್ಷ ರೂ.5,000 ಕೋಟಿ ಅನುದಾನ ನೀಡಲಾಗುತ್ತಿದೆ. ಸೇಡಂ ವಿಧಾನಸಭಾ ಕ್ಷೇತ್ರಕ್ಕೆ ಇದುವರೆಗೆ ರೂ.1,000 ಕೋಟಿ ಅನುದಾನ ಒದಗಿಸಲಾಗಿದೆ. ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳ ಮೂಲಕ ಹೆಣ್ಣುಮಕ್ಕಳಿಗೆ ಆರ್ಥಿಕ ಶಕ್ತಿ ಮತ್ತು ಸಾಮಾಜಿಕ ಗೌರವ ನೀಡಲಾಗಿದೆ ಎಂದು ಸಚಿವರು ಹೇಳಿದರು. ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸುವ ಮೂಲಕ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ಬಡವರ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿರುವ ಕೇಂದ್ರದ ಧೋರಣೆಯ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಡಾ. ಶರಣಪ್ರಕಾಶ್ ಪಾಟೀಲ್ ಕಿಡಿಕಾರಿದರು. ಮುಖಂಡರಾದ ಶಿವಶರಣ ರೆಡ್ಡಿ ಮತ್ತು ಲಕ್ಷ್ಮಣ ಅವಂಟಿ ಮಾತನಾಡಿ, ಸತತ ನಾಲ್ಕು ವರ್ಷಗಳ ಹೋರಾಟ ಹಾಗೂ ಶ್ರಮದ ಫಲವಾಗಿ ಗ್ರಾಮದ ನಿವೇಶನಗಳಿಗೆ ಜಾಗ ಮಂಜೂರಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅಶೋಕ ರೆಡ್ಡಿ, ಸಂತೋಷ ಗುತ್ತೇದಾರ್, ಸುದರ್ಶನ ರೆಡ್ಡಿ, ಅಕ್ಷಯ ಕೊರವಿ, ಸುರೇಶ ಭಂಟ, ರಾಜು ನಿಷ್ಠಿ, ಶರಣು ಮೋತಕಪಳ್ಳಿ, ನಸೀರ್ ಮದರಗಿ, ಸುರೇಶ, ಗ್ರಾ.ಪಂ. ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷೆ ಗಂಗಮ್ಮ, ಅನೀಲಕುಮಾರ ಜಮಾದಾರ, ಬಾಬು ಮಿಯ್ಯ, ಶ್ರೀನಿವಾಸ, ಅಜೀತ್ ಪಾಟೀಲ್, ಸಿದ್ದರಾಮ ನಿಷ್ಠಿ, ಅನಂದ ರೆಡ್ಡಿ, ಗೋಪಾಲ ರೆಡ್ಡಿ, ಲಿಂಗಶೆಟ್ಟಿ, ಸಂಗರೆಡ್ಡಿ, ರವಿ ನಾಟಿಕಾರ, ಮಲ್ಲಿಕಾರ್ಜುನ ಭೂಶೇಟ್ಟಿ, ಜಗನ್ನಾಥ ಇದಲಾಯಿ, ನಾಗೇಂದ್ರ, ಸುಭಾನ್ ರೆಡ್ಡಿ, ಜಗದೇವ ಸ್ವಾಮಿ, ಶರಣು ಕುಮಾರ, ಮಲ್ಲಿಕಾರ್ಜುನ ಪಟವಾರಿ, ಶಿವಕುಮಾರ ಸಜ್ಜನ್, ಕೃಷ್ಣರಾಜ, ನಾಗರಾಜ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪಶ್ಚಿಮ ಬಂಗಾಳ| ಇಬ್ಬರು ಯುವಕರ ಮೃತದೇಹ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ
ಕೋಲ್ಕತಾ, ಜ. 24: ಪಶ್ಚಿಮಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸ್ವರೂಪ್ನಗರ ಪ್ರದೇಶದಲ್ಲಿ ಇಬ್ಬರು ಯುವಕರ ಮೃತದೇಹ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ. ಮೃತಪಟ್ಟ ಯುವಕರನ್ನು ರಾಜ ಭದ್ರ (19) ಹಾಗೂ ರಕಿಬುಲ್ ಮಂಡಲ್ (20) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ಗೆಳೆಯರು. ದತ್ತಪಾರಾ ಪ್ರದೇಶದ ನಿವಾಸಿಗಳು ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ರಾಜಾ ಮತ್ತು ರಕೀಬುಲ್ ಸರಸ್ವತಿ ಪೂಜೆಗಾಗಿ ಶುಕ್ರವಾರ ಬೆಳಗ್ಗೆ ತಮ್ಮ ನಿವಾಸಗಳಿಂದ ಒಟ್ಟಿಗೆ ತೆರಳಿದ್ದರು ಎಂದು ಅವರು ಕುಟಂಬದ ಸದಸ್ಯರು ಹೇಳಿದ್ದಾರೆ. ಅಪರಾಹ್ನ ಇಬ್ಬರೂ ತಮ್ಮ ಕುಟುಂಬಗಳ ಜೊತೆಗೆ ಫೋನ್ನಲ್ಲಿ ಮಾತನಾಡಿದ್ದಾರೆ. ಆದರೆ, ಅಪರಾಹ್ನದ ನಂತರ ಕುಟುಂಬದ ಸದಸ್ಯರಿಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಸಂಜೆವರೆಗೆ ಇಬ್ಬರು ಯುವಕರೊಂದಿಗೆ ಫೋನ್ ಮೂಲಕ ಸಂಪರ್ಕಿಸಲು ಸಾಧ್ಯವಾಗದೇ ಇದ್ದಾಗ, ಕುಟುಂಬಗಳ ಸದಸ್ಯರು ಆತಂಕಗೊಂಡಿದ್ದಾರೆ. ರಾಜ ಭದ್ರನ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ರಕೀಬುಲ್ ಮಂಡಲ್ ಫೋನ್ ಕೇವಲ ರಿಂಗ್ ಆಗುತ್ತಿತ್ತು. ಶನಿವಾರ ಬೆಳಗ್ಗೆ ಅವರಿಬ್ಬರ ಮೃತದೇಹಗಳು ದತ್ತಪಾರದ ಮಾವಿನ ಮರವೊಂದರಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಸ್ಥಳೀಯರು ಗಮನಿಸಿದರು. ರಾಜಾ ಮತ್ತು ರಕೀಬುಲ್ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ಅವರ ಕುಟುಂಬಗಳು ಮಾಹಿತಿ ನೀಡಿದ ಬಳಿಕ ಹತ್ತಿರದ ಸ್ವರೂಪ್ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದರು. ತಮ್ಮ ಪುತ್ರರನ್ನು ಹತ್ಯೆಗೈದು ಮರಕ್ಕೆ ನೇಣು ಹಾಕಲಾಗಿದೆ ಎಂದು ರಾಜಾ ಹಾಗೂ ರಕಿಬುಲ್ ಅವರ ತಂದೆಯಂದಿರು ಆರೋಪಿಸಿದ್ದಾರೆ. ಅವರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದಾರೆ.
ಕಲಬುರಗಿ | ಪ್ರಯಾಣಿಕರ ಸುರಕ್ಷತೆ ನಮ್ಮ ಮೊದಲ ಆದ್ಯತೆ : ಅರುಣಕುಮಾರ ಪಾಟೀಲ
ಕಲಬುರಗಿ: ಬಸ್ ಚಾಲನೆ ಎನ್ನುವುದು ಕೇವಲ ವಾಹನವನ್ನು ಚಲಾಯಿಸುವುದಲ್ಲ, ಅದು ಜವಾಬ್ದಾರಿ, ಶಿಸ್ತು ಮತ್ತು ಮಾನವೀಯತೆಯ ಸೇವೆಯಾಗಿದೆ. ಪ್ರಯಾಣಿಕರ ಸುರ್ಷತೆಯೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಸ್ಥೆಯ ಪ್ರತಿಯೊಬ್ಬ ಸಿಬ್ಬಂದಿಯ ಧ್ಯೇಯ ಸಹ ಇದೇ ಆಗಿರಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಅರುಣಕುಮಾರ ಪಾಟೀಲ ತಿಳಿಸಿದರು. ಶನಿವಾರ ನಗರದ ಸೇಡಂ ರಸ್ತೆಯಲ್ಲಿರುವ ನಿಗಮದ ಈಶಾನ್ಯ ಭವನದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಆಯೋಜಿಸಿದ್ದ ಚಾಲಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೆ.ಕೆ.ಆರ್.ಟಿ.ಸಿ. ಎಂಬ ರಥವನ್ನು ಮುನ್ನಡೆಸುತ್ತಿರುವ ಎಲ್ಲಾ ಚಾಲಕರಿಗೆ ಚಾಲಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ ಅವರು, ಪ್ರತಿ ಚಾಲಕರ ಕೈಯಲ್ಲೂ ಅನೇಕ ಕುಟುಂಬಗಳ ಭರವಸೆ ಹಾಗೂ ಭದ್ರತೆ ಅಡಗಿದೆ. ಈ ಅರಿವಿನಿಂದಲೇ ಪ್ರತಿಯೊಬ್ಬರೂ ಹೊಣೆಗಾರಿಕೆಯಿಂದ ಬಸ್ ಚಾಲನೆ ಮಾಡಬೇಕು ಎಂದು ಹೇಳಿದರು. ಪ್ರತಿಯೊಬ್ಬ ಚಾಲಕರು ನಿಗದಿತ ವೇಗ ಮಿತಿ ಹಾಗೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮದ್ಯಪಾನ ಮತ್ತು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿರಬೇಕು. ರಸ್ತೆಗಳಲ್ಲಿ ಪಾದಚಾರಿಗಳು, ಸೈಕಲ್ ಸವಾರರು ಹಾಗೂ ಇತರೆ ರಸ್ತೆ ಬಳಕೆದಾರರ ಬಗ್ಗೆ ಗೌರವ ತೋರಿ, ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವ ಮೂಲಕ ಸುರಕ್ಷಿತ, ಶಿಸ್ತಿನ ಮತ್ತು ನಿಯಮಬದ್ಧ ಚಾಲನೆಗೆ ಮತ್ತೊಮ್ಮೆ ಬದ್ಧರಾಗಬೇಕೆಂದು ಅವರು ಕರೆ ನೀಡಿದರು. ಸಾಧಕರಿಗೆ ಸನ್ಮಾನ : ಈ ಸಂದರ್ಭದಲ್ಲಿ ಅಪಘಾತರಹಿತವಾಗಿ ಸೇವೆ ಸಲ್ಲಿಸಿದ, ಅತಿ ಹೆಚ್ಚು ಕೆ.ಎಂ.ಪಿ.ಎಲ್ ಸಾಧನೆ ಮಾಡಿದ ಚಾಲಕರು ಹಾಗೂ ಅತಿ ಹೆಚ್ಚು ಇ.ಪಿ.ಕೆ.ಎಂ (ಆದಾಯ) ಗಳಿಸಿದ ನಿರ್ವಾಹಕರು ಸೇರಿದಂತೆ ಒಟ್ಟು 159 ಜನ ಸಿಬ್ಬಂದಿಗಳನ್ನು ಗಣ್ಯರು ಸನ್ಮಾನಿಸಿ ಪ್ರಶಸ್ತಿ ಪತ್ರ ಹಾಗೂ ಪ್ರೋತ್ಸಾಹ ಧನ ವಿತರಿಸಿದರು. ಉತ್ತಮ ಚಾಲನಾ ಸೇವೆಗಾಗಿ ನಿಗಮದಿಂದ ನೀಡಲಾಗುವ ಹೆಚ್ಚುವರಿ ಆರ್ಥಿಕ ಸೌಲಭ್ಯಗಳು, ಪುರಸ್ಕಾರಗಳು ಹಾಗೂ ಪ್ರೋತ್ಸಾಹ ಧನಗಳ ಕುರಿತು ಸಹ ವಿವರಿಸಲಾಯಿತು. ಪ್ರೋತ್ಸಾಹ ಭತ್ಯೆ ಹೆಚ್ಚಳ : ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ ಮಾತನಾಡಿ, ಮುಖ್ಯಮಂತ್ರಿಗಳ ಸ್ವರ್ಣ ಪದಕಕ್ಕೆ ಅರ್ಹರಾಗುವ ಮತ್ತು ಪದಕ ಪಡೆದ ಚಾಲಕರಿಗೆ ನೀಡುವ ಮಾಸಿಕ ಪ್ರೋತ್ಸಾಹ ಭತ್ಯೆಯನ್ನು 500 ರೂ.ರಿಂದ 1,000 ರೂ. ಗೆ ಹಾಗೂ ಬೆಳ್ಳಿ ಪದಕಕ್ಕೆ ಅರ್ಹರಾಗುವ ಚಾಲಕರಿಗೆ ನೀಡುವ ಭತ್ಯೆಯನ್ನು 250 ರೂ.ರಿಂದ 500 ರೂ. ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಿಗಮದ ವಿವಿಧ ವಿಭಾಗಗಳ ಇಲಾಖಾ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ನಿಗಮದ ಮುಖ್ಯ ಸಂಚಾರ ಅಧಿಕಾರಿ ಸಂತೋಷಕುಮಾರ ಸ್ವಾಗತಿಸಿದರು. ಚಂದ್ರಕಾಂತ ಫುಲೆಕರ್ ವಂದಿಸಿದರು.
ಕಲಬುರಗಿಯಲ್ಲಿ ಶೇ.100ರಷ್ಟು ಫಲಿತಾಂಶ ಬರುವಂತೆ ಶ್ರಮ ವಹಿಸಿ : ಬಿ.ಫೌಝಿಯಾ ತರನ್ನುಮ್
ಪಿ.ಯು.ಸಿ ಪ್ರಾಂಶುಪಾಲರೊಂದಿಗೆ ಸಭೆ
ಕಲಬುರಗಿ | ವಿಬಿ ಜಿ ರಾಮ್ ಜಿ ಕಾಯ್ದೆ ರದ್ದುಪಡಿಸಿ, ಮನರೇಗಾ ಪುನರ್ ಸ್ಥಾಪನೆಗೆ ಆಗ್ರಹ
ಉದ್ಯೋಗ ಖಾತ್ರಿ ಕಾಯಕ ಜೀವಿಗಳ ಸಂಘಟನೆಯಿಂದ ಒತ್ತಾಯ
ವಿಜಯಪುರ | ಬೈಕ್-ಟಿಪ್ಪರ ಮಧ್ಯೆ ಅಪಘಾತ ಶಿಕ್ಷಕ ಸಾವು
ವಿಜಯಪುರ: ಬೈಕ್ ಹಾಗೂ ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಾದ ಶಿಕ್ಷಕರೊಬ್ಬರು ಮೃತಪಟ್ಟರುವ ಘಟನೆ ಶನಿವಾರ ನಗರದ ಇಟಗಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಇಟ್ಟಂಗಿಹಾಳದ ಶಿಕ್ಷಕ ವೆಂಕಟೇಶ ಕುಲಕರ್ಣಿ ಮೃತಪಟ್ಟವರು. ಟಿಪ್ಪರ್ ಚಾಲಕ ಅಸ್ಲಾಂ ಮುಲ್ಲಾ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ತನಿಖೆ ಮುಂದುವರಿದಿದೆ. ವಿಜಯಪುರ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ | ವಿಜ್ಞಾನ ಸಂವಹನ ಶಿಬಿರ : ಶಿಕ್ಷಕ ರವೀಂದ್ರ ರುದ್ರವಾಡಿಗೆ ಪ್ರಥಮ ಸ್ಥಾನ
ಕಲಬುರಗಿ: ಕರ್ನಾಟಕ ರಾಜ್ಯ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿಯು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಎರಡು ದಿನಗಳ ವಿಜ್ಞಾನ ಸಂವಹನ ಶಿಬಿರದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಂದಗೂರಿನ ಪ್ರಾಥಮಿಕ ಶಾಲಾ ಶಿಕ್ಷಕ ರವೀಂದ್ರ ರುದ್ರವಾಡಿ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ರವೀಂದ್ರ ರುದ್ರವಾಡಿಯವರು ವಿಜ್ಞಾನ ಲೇಖನ, ವಿಜ್ಞಾನ ಸಂವಹನ, ಶಿಕ್ಷಣ ಮತ್ತು ವೈಚಾರಿಕ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ನ್ಯಾಷನಲ್ ಬುಕ್ ಟ್ರಸ್ಟ್, ಕರ್ನಾಟಕ ಸಾಹಿತ್ಯ ಅಕಾಡೆಮಿ ಸೇರಿದಂತೆ ಹಲವಾರು ಪ್ರತಿಷ್ಠಿತ ಸಂಸ್ಥೆಗಳ ಪ್ರಕಟಣೆಗಳಲ್ಲಿ ಲೇಖಕರಾಗಿ ತಮ್ಮ ಕೊಡುಗೆ ನೀಡಿದ್ದಾರೆ. ಜಾಗತಿಕ ತಾಪಮಾನ ಹೆಚ್ಚಳ ವಿಷಯದ ಕುರಿತು ಆಯೋಜಿಸಿದ್ದ ಈ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 28 ವಿಜ್ಞಾನ ಲೇಖಕರು ಹಾಗೂ ಸಂವಹನಕಾರರು ಭಾಗವಹಿಸಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿಯ ಅಧ್ಯಕ್ಷ ಪ್ರೊ. ರಾಜಾಸಾಬ್ ಎ.ಎಸ್, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಶಿಬಿರದ ನಿರ್ದೇಶಕರಾದ ಡಾ. ವಸುಂದರಾ ಭೂಪತಿ, ಖ್ಯಾತ ವಿಜ್ಞಾನ ಲೇಖಕರಾದ ಟಿ.ಆರ್. ಅನಂತರಾಮು, ಚಳ್ಳಕೇರಿ ಯರ್ರಿಸ್ವಾಮಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಆರ್. ಸುನಂದಮ್ಮ, ದೂರದರ್ಶನ ಖ್ಯಾತಿಯ ಡಾ. ನಾ. ಸೋಮೇಶ್ವರ ಅವರು ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಿದರು. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪದ್ಮಭೂಷಣ ಪುರಸ್ಕೃತ ಖ್ಯಾತ ಮನೋವಿಜ್ಞಾನಿ ಡಾ. ಸಿ.ಆರ್. ಚಂದ್ರಶೇಖರ, ವಿಜ್ಞಾನಿ ನೇಮಿಚಂದ್ರ, ಹಿರಿಯ ವಿಜ್ಞಾನಿಗಳಾದ ಡಾ. ಕೆ.ಎನ್. ಗಣೇಶಯ್ಯ, ಡಾ. ನೂರ್ ಸಮದ್ ಅಬ್ಬಲಗೆರೆ, ಕೊಳ್ಳೆಗಾಲ ಶರ್ಮಾ, ಡಾ. ಎಚ್.ಆರ್. ಸ್ವಾಮಿ, ಖ್ಯಾತ ಲೇಖಕಿ ಎಂ.ಎಸ್. ಆಶಾದೇವಿ, ಗುರುರಾಜ ಎಸ್. ದಾವಣಗೆರೆ ಸೇರಿದಂತೆ ಹಲವಾರು ಹಿರಿಯ ವಿಜ್ಞಾನಿಗಳು ಮತ್ತು ವಿಜ್ಞಾನ ಲೇಖಕರು ಭಾಗವಹಿಸಿದ್ದರು. ಎರಡು ದಿನಗಳ ಕಾಲ ವಿಜ್ಞಾನ ಸಾಹಿತ್ಯ ರಚನೆ, ಸಂವಹನದ ಅಗತ್ಯತೆ, ಸಾಧ್ಯತೆಗಳು ಮತ್ತು ಅವಕಾಶಗಳ ಕುರಿತು ವ್ಯಾಪಕ ಚರ್ಚೆ ನಡೆಸಲಾಯಿತು ಎಂದು ಶಿಬಿರದ ನಿರ್ದೇಶಕರಾದ ಡಾ. ವಸುಂದರಾ ಭೂಪತಿ ತಿಳಿಸಿದರು. ಈ ಸ್ಪರ್ಧೆಯಲ್ಲಿ ಹೊಸಪೇಟೆಯ ವಿಜ್ಞಾನ ಲೇಖಕ ಡಾ. ರಾಜಾಭಕ್ಷಿ ದ್ವಿತೀಯ ಸ್ಥಾನ ಹಾಗೂ ಬೆಂಗಳೂರು ಮೂಲದ ವೈದ್ಯ ಲೇಖಕಿ ಡಾ. ಜ್ಯೋತಿ ಸಿದ್ದಮಲ್ಲಯ್ಯ ತೃತೀಯ ಸ್ಥಾನ ಪಡೆದರು. ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗಾಗಿ ಕಿರು ಪ್ರಬಂಧ ರಚನಾ ಸ್ಪರ್ಧೆಯನ್ನೂ ಆಯೋಜಿಸಲಾಗಿತ್ತು.
ಮೋದಿ ಭೇಟಿ ವೇಳೆ ಅಕ್ರಮ ಫ್ಲೆಕ್ಸ್ ಅಳವಡಿಕೆ| ಬಿಜೆಪಿ ನೇತೃತ್ವದ ತಿರುವನಂತಪುರ ನಗರ
ಪಾಲಿಕೆಯಿಂದ ಪಕ್ಷದ ಘಟಕಕ್ಕೆ 20 ಲಕ್ಷ ರೂ. ದಂಡ
ಬೆಂಗಳೂರು: ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯವನ್ನುದ್ದೇಶಿಸಿ ತಾವು ಮಾಡುವ ಭಾಷಣದಲ್ಲಿ ‘ಕೇಂದ್ರ ಸರಕಾರವನ್ನು ಟೀಕಿಸುವ ಅಂಶಗಳಿದ್ದರೆ ಆ ಭಾಷಣವನ್ನು ನಾನು ಓದುವುದಿಲ್ಲ’ ಎಂಬ ಸಂದೇಶವು ಲೋಕಭವನದಿಂದ ರಾಜ್ಯ ಸರಕಾರಕ್ಕೆ ಬಂದಿದೆ ಎಂದು ಗೊತ್ತಾಗಿದೆ. ಆ ಮೂಲಕ ರಾಜ್ಯದಲ್ಲಿನ ಕಾಂಗ್ರೆಸ್ ನೇತೃತ್ವದ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸನ್ನದ್ಧರಾಗಿದ್ದಾರೆ. ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ಸರಕಾರ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರವನ್ನು ಟೀಕಿಸುವ ಅಂಶಗಳಿವೆ ಎಂಬ ಕಾರಣಕ್ಕೆ ತಮ್ಮ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಸದನದಿಂದ ನಿರ್ಗಮಿಸಿದ್ದು ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಇದೀಗ ಜ.26 ರಂದು ಇಲ್ಲಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೇಂದ್ರ ಸರಕಾರವನ್ನು ಟೀಕಿಸುವ ಅಂಶಗಳಿದ್ದರೆ ಆ ಭಾಷಣವನ್ನು ಓದುವುದಿಲ್ಲ ಎಂಬ ಸಂದೇಶವನ್ನು ರಾಜ್ಯಪಾಲರು, ರಾಜ್ಯ ಸರಕಾರಕ್ಕೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯಪಾಲರು ಓದುವ ಭಾಷಣವನ್ನು ಸಾಮಾನ್ಯವಾಗಿ ರಾಜ್ಯ ಸರಕಾರವೇ ಸಿದ್ಧಪಡಿಸುತ್ತದೆ. ಆ ಭಾಷಣದಲ್ಲಿ ರಾಜ್ಯ ಸರಕಾರವು, ಕೇಂದ್ರ ಅನ್ಯಾಯಗಳನ್ನು ಪ್ರಸ್ತಾಪಿಸಿ, ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತಾಳಿದೆ ಎಂಬ ಅಂಶಗಳನ್ನು ಸೇರ್ಪಡೆ ಮಾಡಿದೆ ಎಂದು ಹೇಳಲಾಗಿದೆ. ಆ ಹಿನ್ನೆಲೆಯಲ್ಲಿ ಕೇಂದ್ರವನ್ನು ಗುರಿಯಾಗಿಸಿ ಟೀಕೆ ಮಾಡುವ ಅಂಶಗಳಿದ್ದರೂ ಆ ಭಾಷಣವನ್ನು ನಾನು ಓದುವುದಿಲ್ಲ. ನನ್ನದೇ ಆದ ಭಾಷಣವನ್ನು ಸಿದ್ಧಪಡಿಸಿ ಓದಬೇಕಾಗುತ್ತದೆ ಎಂಬ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ. ಇದು ರಾಜ್ಯ ಸರಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು. ಗಣರಾಜ್ಯೋತ್ಸವದಂದು ರಾಜ್ಯಪಾಲರು ಮಾಡುವ ಭಾಷಣದಲ್ಲಿ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯನ್ನು ಟೀಕಿಸುವ ಅಂಶವಿಲ್ಲವಾದರೂ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನುದಾನ ಹಂಚಿಕೆಯಲ್ಲಿ ಆಗಿರುವ ಅನ್ಯಾಯ, ತಾರತಮ್ಯದ ಅಂಶಗಳಿದ್ದು, ಕೇಂದ್ರ ಮಲತಾಯಿ ಧೋರಣೆಯ ಅಂಶಗಳನ್ನು ಭಾಷಣದಲ್ಲಿ ರಾಜ್ಯ ಸರಕಾರ ಸೇರ್ಪಡೆ ಮಾಡಿದೆ ಎಂದು ತಿಳಿದು ಬಂದಿದೆ.
ಕಲಬುರಗಿ | ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಾಶಸ್ತ್ಯ ನೀಡಿರುವುದು ಶ್ಲಾಘನೀಯ : ಸಿಪಿಐ ನಟರಾಜ್ ಲಾಡೆ
ಕಲಬುರಗಿ: ಕ್ರಿಕೆಟ್ ಕ್ಷೇತ್ರದಲ್ಲಿ ಸಾಮಾನ್ಯವಾಗಿ ಪುರುಷರಿಗೆ ಹೆಚ್ಚಿನ ಮನ್ನಣೆ ದೊರಕುತ್ತಿರುವ ಸಂದರ್ಭದಲ್ಲಿ, ಅತಿಥಿ ಉಪನ್ಯಾಸಕರ ಸಂಘವು ಮಹಿಳಾ ಕ್ರಿಕೆಟ್ ತಂಡಕ್ಕೆ ಸಮಾನ ಪ್ರಾಶಸ್ತ್ಯ ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಸಿಪಿಐ ನಟರಾಜ್ ಲಾಡೆ ಹೇಳಿದರು. ಸಂವಿಧಾನ ದಿನಾಚರಣೆಯ ಅಂಗವಾಗಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ವಿವಿಯ ದೈಹಿಕ ಶಿಕ್ಷಣ ವಿಭಾಗದ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ಪ್ರೀಮಿಯರ್ ಲೀಗ್–2026 ಪುರುಷ ಮತ್ತು ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟಾಸ್ ನೆರವೇರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಆಟಗಳು ಮತ್ತು ಕ್ರೀಡೆಗಳು ಅತ್ಯಂತ ಅವಶ್ಯಕವಾಗಿವೆ. ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಶೈಕ್ಷಣಿಕ ಸಾಧನೆ, ಸಾಮಾಜಿಕ ಕೌಶಲ್ಯ ಮತ್ತು ಸ್ವಮೌಲ್ಯ ಬಲಪಡಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದ ಫೊರೆನ್ಸಿಕ್ ಅಧಿಕಾರಿ ಡಾ. ದಿಲೀಪ್ ಕುಮಾರ್ ನವಲೆ, ಸಂವಿಧಾನ ಪ್ರೀಮಿಯರ್ ಲೀಗ್ ಆಯೋಜಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು. ವಿದ್ಯಾರ್ಥಿಗಳು ಗೆಲುವು–ಸೋಲುಗಳನ್ನು ಸಮಾನ ಮನೋಭಾವದಿಂದ ಸ್ವೀಕರಿಸಬೇಕು. ಇಂತಹ ಕ್ರೀಡಾ ಚಟುವಟಿಕೆಗಳು ವಿಶ್ವವಿದ್ಯಾಲಯದ ಆವರಣದಲ್ಲಿ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು. ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡ ಆಟಗಾರರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಆಡುವ ಅವಕಾಶ ಸಿಗಲಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಡಾ. ಎಂ.ಬಿ. ಕಟ್ಟಿ, ಅಧ್ಯಕ್ಷ ಡಾ. ಅರುಣಕುಮಾರ ಬಿ. ಕುರನೆ, ಪ್ರಧಾನ ಕಾರ್ಯದರ್ಶಿ ಡಾ. ಅಶೋಕ ದೊಡ್ಮನಿ, ಡಾ. ಹಣಮಂತ ಮೇಲಕೇರಿ, ಸುನೀಲ ಜಾಬಾದಿ, ಸಂತೋಷ ಕಂಬಾರ, ಪ್ರಕಾಶ್ ಸಂಗಮ, ಡಾ. ಮಾಧುರಿ ಬಿರಾದಾರ, ಡಾ. ಶಿವಶರಣಪ್ಪ ಕೊಡ್ಲಿ, ಡಾ. ರೂಕ್ಸನಾ, ಡಾ. ಶಂಭುಲಿಂಗ ನಾಡಿಗೇರಿ, ಡಾ. ಆನಂದ ಮೇಟಿ ಉಪಸ್ಥಿತರಿದ್ದರು. ನಿರ್ಣಾಯಕರಾಗಿ ಪುಟ್ಟರಾಜ ಮಡಿವಾಳ, ಅಜಯ ರಾಠೋಡ್, ಓಂಕಾರ ಮಡಿವಾಳ, ಗಣೇಶ ಮದರಿ, ಸಾವಿರಲಿಂಗ ಕಾರ್ಯನಿರ್ವಹಿಸಿದರು. ಅತಿಥಿ ಉಪನ್ಯಾಸಕರಾದ ಡಾ. ಪರಶುರಾಮ ಪಿ, ಡಾ. ಶೇಖರ ಸಲಗರ, ಡಾ. ಶಿವಾನಂದ ಕಡಗಂಚಿ, ಡಾ. ಮಿಲಿಂದ ಕಾಂಬಳೆ, ಡಾ. ತಾತ್ಯಾರಾವ, ಡಾ. ಮಂಜೂರ್ ಅಹ್ಮದ, ಡಾ. ಸಿದ್ಧಾರ್ಥ ಬಬಲಾದ, ಡಾ. ರಾಜಕುಮಾರ ಎಂ. ದಣ್ಣೂರ, ಡಾ. ಕವಿತಾ ನಾಗಶೆಟ್ಟಿ, ಡಾ. ಚಿಂತನ ರಾಠೋಡ್, ಡಾ. ರಾಜೇಶ್ವರಿ, ಡಾ. ಮಹಾಲಿಂಗಪ್ಪ ಮಂಗಳೂರು, ಅಭಯಕುಮಾರ ಪೋತೆ, ಡಾ. ಸಂದೀಪ ಹೋಲ್ಕರ್, ಡಾ. ನಂದಿನಿ, ಡಾ. ವಿಜಯಕುಮಾರ ಬೀಳಗೆ ಸೇರಿದಂತೆ ಹಲವರು ಭಾಗವಹಿಸಿದ್ದರು.
ಚುನಾವಣಾ ಆಯೋಗ ಮತಗಳ್ಳತನದ ಪಿತೂರಿಯಲ್ಲಿ ಪ್ರಮುಖ ಪಾಲುದಾರನಾಗಿದೆ: ರಾಹುಲ್ ಗಾಂಧಿ ವಾಗ್ದಾಳಿ
ಹೊಸದಿಲ್ಲಿ: ಗುಜರಾತ್ ನಲ್ಲಿ ನಡೆದಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯಲ್ಲಿ ಅತ್ಯಂತ ವ್ಯವಸ್ಥಿತ, ಸಂಘಟಿತ ಹಾಗೂ ವ್ಯೂಹಾತ್ಮಕ ಮತಗಳ್ಳತನ ಮಾಡಲಾಗಿದ್ದು, ಚುನಾವಣಾ ಆಯೋಗವು ಈ ಮತಗಳ್ಳತನದ ಪಿತೂರಿಯಲ್ಲಿ ಪ್ರಮುಖ ಪಾಲುದಾರನಾಗಿದೆ ಎಂದು ಶನಿವಾರ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಸಾಂವಿಧಾನಿಕ ‘ಒಬ್ಬ ವ್ಯಕ್ತಿ, ಒಂದು ಮತ’ ಹಕ್ಕನ್ನು ನಾಶಗೊಳಿಸುವ ಆಯುಧವನ್ನಾಗಿ ಮಾರ್ಪಡಿಸಲಾಗಿದೆ. ಯಾರು ಅಧಿಕಾರದಲ್ಲಿರಬೇಕು ಎಂಬುದನ್ನು ಜನರು ನಿರ್ಧರಿಸುವುದಲ್ಲ, ಬಿಜೆಪಿ ನಿರ್ಧರಿಸುವಂತಾಗಿದೆ” ಎಂದು ದೂರಿದ್ದಾರೆ. “ಎಲ್ಲೆಲ್ಲ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ನಡೆದಿದೆಯೋ, ಅಲ್ಲೆಲ್ಲ ಮತಗಳ್ಳತನ ನಡೆದಿದೆ. ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಗುಜರಾತ್ನಲ್ಲಿ ಏನು ನಡೆದಿದೆ ಎಂಬುದು ಆಡಳಿತಾತ್ಮಕ ಪ್ರಕ್ರಿಯೆಯಲ್ಲ; ಅದು ಅತ್ಯಂತ ವ್ಯವಸ್ಥಿತ, ಸಂಘಟಿತ ಹಾಗೂ ವ್ಯೂಹಾತ್ಮಕ ಮತಗಳ್ಳತನವಾಗಿದೆ” ಎಂದು ಅವರು ಹೇಳಿದ್ದಾರೆ. “ಅತ್ಯಂತ ಅಪಾಯಕಾರಿ ಸಂಗತಿಯೆಂದರೆ, ಒಂದೇ ಹೆಸರಿನಲ್ಲಿ ಸಾವಿರಾರು ಬಾರಿ ಆಕ್ಷೇಪಣೆಗಳನ್ನು ಸಲ್ಲಿಸಲಾಗಿದೆ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ನಿರ್ದಿಷ್ಟ ಸಮುದಾಯಗಳಿಂದ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಿರುವ ಮತಗಟ್ಟೆಗಳಿಂದ ಆಯ್ಕೆ ಮಾಡಿದಂತೆ ಮತಗಳನ್ನು ತೆಗೆದುಹಾಕಲಾಗಿದೆ. ಎಲ್ಲೆಲ್ಲ ದಯನೀಯವಾಗಿ ಸೋಲುವ ಅಂದಾಜು ಬಿಜೆಪಿಗಿದೆಯೋ, ಅಲ್ಲೆಲ್ಲ ಮತಗಳು ವ್ಯವಸ್ಥೆಯಿಂದ ನಾಪತ್ತೆಯಾಗುವಂತೆ ಮಾಡಲಾಗಿದೆ” ಎಂದು ಅವರು ಆಪಾದಿಸಿದ್ದಾರೆ. “ಈ ಸ್ವರೂಪ ಅಳಂದದಲ್ಲಿ ಕಂಡುಬಂದಿತ್ತು. ಇದೇ ಸಂಗತಿ ರಜೌರದಲ್ಲೂ ಆಗಿತ್ತು. ಈಗ ಅದೇ ನೀಲಿ ನಕ್ಷೆಯನ್ನು ಗುಜರಾತ್, ರಾಜಸ್ಥಾನ ಹಾಗೂ ಎಲ್ಲೆಲ್ಲ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ನಡೆಯುತ್ತಿದೆಯೋ, ಆ ಎಲ್ಲ ರಾಜ್ಯಗಳಲ್ಲಿ ಹೇರಲಾಗುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. “ಅತ್ಯಂತ ಗಂಭೀರ ಸಂಗತಿಯೆಂದರೆ, ಚುನಾವಣಾ ಆಯೋಗವು ಪ್ರಜಾತಂತ್ರದ ರಕ್ಷಕನಾಗಿ ಉಳಿದಿಲ್ಲ. ಬದಲಿಗೆ ಅದು ಮತಗಳ್ಳತನದ ಪಿತೂರಿಯಲ್ಲಿ ಪ್ರಮುಖ ಪಾಲುದಾರನಾಗಿದೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಸೇಡಂ | ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕರಿಂದ ಅಗೌರವ : ವಿಶೇಶ್ವರ ಹೆಗಡೆ ಕಾಗೇರಿ ಆರೋಪ
ಸೇಡಂ: ವಿಧಾನಸಭೆಯಲ್ಲಿ ರಾಜ್ಯಪಾಲರು ಭಾಷಣಕ್ಕೆ ವಿರಾಮ ನೀಡಿ ಹೊರ ಹೋಗುವ ವೇಳೆ ಕಾಂಗ್ರೆಸ್ ಸರ್ಕಾರದ ಶಾಸಕರು ಅಗೌರವ ತೋರಿರುವುದು ಅತ್ಯಂತ ಖಂಡನೀಯವಾಗಿದ್ದು, ಇದು ಕರ್ನಾಟಕ ರಾಜ್ಯಕ್ಕೆ ಕಳಂಕ ತರುವಂತಹ ಘಟನೆಯಾಗಿದೆ ಎಂದು ಸಂಸದ ವಿಶೇಶ್ವರ ಹೆಗಡೆ ಕಾಗೇರಿ ತೀವ್ರ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸದನದಿಂದ ಹೊರ ಹೋಗುವಾಗ ಕೆಲ ಕಾಂಗ್ರೆಸ್ ಶಾಸಕರು ಅವರ ಎದುರುಗಡೆ ತೆರಳಿ ಘೋಷಣೆಗಳನ್ನು ಕೂಗುತ್ತಾ ಹೊರ ಹೋಗಲು ಅಡ್ಡಿಪಡಿಸಿದ್ದು, ಕೆಲವರು ಗೂಂಡಾಗಳಂತೆ ವರ್ತಿಸಿರುವುದು ನಾಚಿಕೆಗೇಡಿತನದ ವಿಷಯವಾಗಿದೆ ಎಂದರು. ನಾನು ಕಳೆದ 30 ವರ್ಷಗಳಿಂದ ಸದನದ ಭಾಗವಾಗಿದ್ದೇನೆ. ಈ ರೀತಿಯ ಅಸಭ್ಯ ಹಾಗೂ ಅನಾಗರಿಕ ವರ್ತನೆ ಇದುವರೆಗೂ ಕಂಡಿಲ್ಲ. ಇದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವ ಘಟನೆ ಎಂದು ಕಾಗೇರಿ ಹೇಳಿದರು. ಈ ಘಟನೆಯ ಕುರಿತು ಕಾಂಗ್ರೆಸ್ ಶಾಸಕರು ಕೂಡಲೇ ರಾಜ್ಯಪಾಲರಿಗೆ ಕ್ಷಮೆಯಾಚನೆ ಮಾಡಬೇಕು. ಗೂಂಡಾಗಳಂತೆ ವರ್ತಿಸಿದ ಶಾಸಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಇನ್ನು ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ವಿಬಿ ಜಿ ರಾಮ್ ಜೀ ಬಿಲ್ ಯೋಜನೆ ಬಡವರ ಹಿತಕ್ಕಾಗಿ ರೂಪಿಸಲಾಗಿದೆ. ಈ ಯೋಜನೆ ಜಾರಿಯಾದರೆ ಹಣ ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ತಲುಪುತ್ತದೆ. ಇದರಿಂದ ಮಧ್ಯವರ್ತಿಗಳಿಗೆ ಅವಕಾಶ ಇರುವುದಿಲ್ಲ. ಈ ಕಾರಣದಿಂದಲೇ ಕಾಂಗ್ರೆಸ್ ಪಕ್ಷ ರಾಜಕೀಯ ಪ್ರೇರಿತವಾಗಿ ಮಹಾತ್ಮ ಗಾಂಧೀಜಿಯವರಿಗೆ ಅವಮಾನವಾಗಿದೆ ಎಂದು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕಾಗೇರಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ರಾಜಕುಮಾರ ಪಾಟೀಲ್, ಬಿಜೆಪಿ ಮಂಡಲ ಅಧ್ಯಕ್ಷ ಶರಣು ಮೆಡಿಕಲ್, ನಗರಾಧ್ಯಕ್ಷ ಸತೀಶ ಪಾಟೀಲ್, ಓಂಪ್ರಕಾಶ್ ಪಾಟೀಲ್, ದೇವೇಂದ್ರಪ್ಪ ಎಸ್. ಕೋಟಿರ್ಕಿ, ವೇಂಕಟೇಶ ಬೇಕರಿ, ಶ್ರೀಮಂತ ಅವಂಟಿ, ಶಿವಕುಮಾರ್ ಆರ್. ಪಾಗಾ, ರಾಘವೇಂದ್ರ ಮೆಕಾನಿಕ್, ಮಲ್ಲಿಕಾರ್ಜುನ ಭೂತಪೂರ, ಸಿದ್ದು ಸೌಕರ ತೂನುರ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ರಶ್ಯಾದಿಂದ ಭಾರತದ ತೈಲ ಆಮದು ಇಳಿಕೆ: ಅಮೆರಿಕದಿಂದ ಸುಂಕದ ಕಡಿತದ ಸುಳಿವು ನೀಡಿದ ಬೆಸೆಂಟ್
ಮುಂಬೈ: ಭಾರತವು ರಶ್ಯಾದಿಂದ ಆಮದು ಮಾಡಿಕೊಳ್ಳುತ್ತಿರುವ ತೈಲದಲ್ಲಿ ಗಮನಾರ್ಹ ಪ್ರಮಾಣದ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿಯಾಗಿ ವಿಧಿಸಿರುವ ಶೇ. 25ರಷ್ಟು ಸುಂಕವನ್ನು ಅಮೆರಿಕ ಹಿಂಪಡೆಯುವ ಸಾಧ್ಯತೆ ಇದೆ ಎಂಬ ಸುಳಿವನ್ನು ಅಮೆರಿಕ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ನೀಡಿದ್ದಾರೆ. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತವು ರಶ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವುದಕ್ಕೆ ಶೇ. 25ರಷ್ಟು ಹೆಚ್ಚುವರಿ ಸುಂಕ ಸೇರಿದಂತೆ ಒಟ್ಟು ಶೇ. 50ರಷ್ಟು ಸುಂಕ ವಿಧಿಸಿದ್ದರು. ಇದರ ಪರಿಣಾಮವಾಗಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂಬಂಧ ಬಿಗಡಾಯಿಸಿತ್ತು. ಈ ಕುರಿತು ವಿಶ್ವ ಆರ್ಥಿಕ ವೇದಿಕೆಯ ನೇಪಥ್ಯದಲ್ಲಿ ಪೊಲಿಟಿಕೊ ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿರುವ ಸ್ಕಾಟ್ ಬೆಸೆಂಟ್, “ರಶ್ಯಾ ತೈಲ ಸಂಸ್ಕರಣಾ ಘಟಕಗಳಿಂದ ಭಾರತ ಖರೀದಿಸುತ್ತಿದ್ದ ತೈಲದ ಪ್ರಮಾಣ ಇಳಿಕೆಯಾಗಿದೆ. ಸುಂಕಗಳು ಈಗಲೂ ಜಾರಿಯಲ್ಲಿದ್ದು, ರಶ್ಯಾ ತೈಲದ ಮೇಲಿನ ಶೇ. 25ರಷ್ಟು ಸುಂಕವೂ ಜಾರಿಯಲ್ಲಿದೆ. ಅದನ್ನು ತೆಗೆದು ಹಾಕಲು ಮಾರ್ಗವಿದೆ ಎಂಬುದು ನನ್ನ ಅನಿಸಿಕೆಯಾಗಿದೆ” ಎಂದು ಹೇಳಿದ್ದಾರೆ. ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಭಾರತದ ರಶ್ಯಾ ತೈಲ ಆಮದು ಕಳೆದ ಎರಡು ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿತ್ತು. ಅದಕ್ಕೆ ಪ್ರತಿಯಾಗಿ, ಒಪೆಕ್ ದೇಶಗಳಿಂದ ಭಾರತ ಆಮದು ಮಾಡಿಕೊಳ್ಳುತ್ತಿರುವ ತೈಲದ ಪ್ರಮಾಣ ಕಳೆದ 11 ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೇರಿತ್ತು ಎಂದು ಭಾರತದ ವ್ಯಾಪಾರವನ್ನು ಉಲ್ಲೇಖಿಸಿ Reuters ಸುದ್ದಿ ಸಂಸ್ಥೆ ವರದಿ ಮಾಡಿತ್ತು.
ಸೇಡಂ | ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು: ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವ
ಹೊಸ ವಿಶ್ವಸಂಸ್ಥೆ ರಚನೆಗೆ ಟ್ರಂಪ್ ಪ್ರಯತ್ನ: ಬ್ರೆಝಿಲ್ ಅಧ್ಯಕ್ಷ ಲೂಲಾ ಆರೋಪ
ಬ್ರಸೀಲಿಯಾ, ಜ.24: ಪ್ರಸ್ತಾವಿತ `ಶಾಂತಿ ಮಂಡಳಿ'ಯ ಮೂಲಕ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ವಿಶ್ವಸಂಸ್ಥೆಯನ್ನು ರಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬ್ರೆಝಿಲ್ ಅಧ್ಯಕ್ಷ ಲೂಯಿಜ್ ಇನಾಶಿಯೊ ಲೂಲಾ ಡ ಸಿಲ್ವ ಆರೋಪಿಸಿದ್ದಾರೆ. ವಿಶ್ವಸಂಸ್ಥೆಯನ್ನು ಬಲಪಡಿಸುವ ಬದಲು ಟ್ರಂಪ್ ತಾನೊಬ್ಬನೇ ಮಾಲಕನಾಗಿರುವ ಹೊಸ ವಿಶ್ವಸಂಸ್ಥೆ ರಚಿಸಲು ಪ್ರಸ್ತಾಪಿಸಿದ್ದಾರೆ. ಟ್ವಿಟರ್ ಮೂಲಕ ಇಡೀ ಜಗತ್ತನ್ನು ಆಳಲು ಟ್ರಂಪ್ ಬಯಸಿದ್ದಾರೆ. ಇದು ಗಮನಾರ್ಹವಾಗಿದೆ. ಪ್ರತೀ ದಿನ ಅವರು ಏನಾದರೂ ಹೇಳುತ್ತಾರೆ ಮತ್ತು ಅವರು ಏನು ಹೇಳಿದರು ಎಂಬ ಬಗ್ಗೆ ಪ್ರತೀ ದಿನ ಜಗತ್ತು ಮಾತನಾಡುತ್ತದೆ' ಎಂದು ಲೂಲಾ ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಜಾಗತಿಕ ವ್ಯವಹಾರಗಳಲ್ಲಿ `ಕಾಡಿನ ನ್ಯಾಯ'ದ ಬದಲು ಬಹುಪಕ್ಷೀಯತೆಯನ್ನು ಸಮರ್ಥಿಸಿಕೊಂಡ ಲೂಲಾ, ವಿಶ್ವಸಂಸ್ಥೆಯ ಚಾರ್ಟರ್(ಸನದು) ಅನ್ನು ಹರಿದು ಹಾಕಲಾಗುತ್ತಿದೆ ಎಂದು ಎಚ್ಚರಿಸಿದರು. ಇದಕ್ಕೂ ಮುನ್ನ ಲೂಲಾಗೆ ಕರೆ ಮಾಡಿದ್ದ ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಅಂತರಾಷ್ಟ್ರೀಯ ವ್ಯವಹಾರಗಳಲ್ಲಿ ವಿಶ್ವಸಂಸ್ಥೆಯ ಕೇಂದ್ರ ಪಾತ್ರವನ್ನು ರಕ್ಷಿಸುವ ಅಗತ್ಯವನ್ನು ಒತ್ತಿಹೇಳಿದರು ಎಂದು ವರದಿಯಾಗಿದೆ.
ಅಬ್ಬಬ್ಬಾ... ಏನು ಪ್ರೀತಿ! ಟಿ20 ವಿಶ್ವಕಪ್ ನಿಂದ ಬಾಂಗ್ಲಾವನ್ನು ಹೊರಹಾಕಿದ್ದಕ್ಕೆ ನಾವೂ ಆಡೋದು ಡೌಟ್ ಎಂದ ಪಾಕ್!
ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್ನಿಂದ ಹೊರಹಾಕಿದ್ದು ಅನ್ಯಾಯ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ. ಪಾಕಿಸ್ತಾನ ಸರ್ಕಾರವೇ ಟೂರ್ನಿಯಲ್ಲಿ ಭಾಗವಹಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಬಾಂಗ್ಲಾದೇಶಕ್ಕೆ ನ್ಯಾಯ ಸಿಗಬೇಕು ಎಂದು ಪಾಕಿಸ್ತಾನ ವಾದಿಸಿದೆ. ಐಸಿಸಿ ದ್ವಂದ್ವ ನೀತಿ ಅನುಸರಿಸಬಾರದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿದ್ದಾರೆ.
ಕಲಬುರಗಿ | ಪಾಸ್ ನವೀಕರಣ ಗೊಂದಲ ಬಗೆಹರಿಸಿ : ಹಣಮಂತ ಶೇರಿ ಒತ್ತಾಯ
ಕಲಬುರಗಿ: ವಿಕಲಚೇತನರ ಬಸ್ ಪಾಸ್ ನವೀಕರಣದ ವೇಳೆ ಬಸ್ ಪಾಸ್ ವಿತರಣೆ ಕೌಂಟರ್ಗಳಲ್ಲಿ ವಿನಾಕಾರಣವಾಗಿ ಸಂಬಂಧವಿಲ್ಲದ ದಾಖಲೆಗಳನ್ನು ಕೇಳಿ ವಿಕಲಚೇತನರನ್ನು ಸುಖಾಸುಮ್ಮನೆ ಓಡಾಡಿಸಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಹಣಮಂತ ಶೇರಿ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ನಿಯಮಗಳನ್ನು ಸರಳಗೊಳಿಸುವ ಬದಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸ್ಟ್ಯಾಂಪ್ ಪೇಪರ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್ ಸೇರಿದಂತೆ ಅನಗತ್ಯ ದಾಖಲೆಗಳನ್ನು ಕೇಳಿ ವಿಕಲಚೇತನರಿಗೆ ಪಾಸ್ ನೀಡುವಲ್ಲಿ ಸತಾಯಿಸಲಾಗುತ್ತಿದೆ ಎಂದು ದೂರಿದ್ದಾರೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಈಗಾಗಲೇ ಅಪ್ಲೋಡ್ ಮಾಡಿರುವ ದಾಖಲೆಗಳನ್ನೇ ನವೀಕರಣ ಸಂದರ್ಭದಲ್ಲಿ ಪರಿಗಣಿಸಬೇಕು. ಡಿಜಿಲಾಕರ್ ವ್ಯವಸ್ಥೆ ಮೂಲಕ ಆಧಾರ್ ಸಂಖ್ಯೆ ನಮೂದಿಸಿದರೆ ಅಗತ್ಯ ಮಾಹಿತಿಗಳು ತಕ್ಷಣ ಲಭ್ಯವಾಗುತ್ತವೆ. ಇಂತಹ ಸೌಲಭ್ಯಗಳಿದ್ದರೂ ವಿಕಲಚೇತನರನ್ನು ಅನಗತ್ಯವಾಗಿ ಕಚೇರಿಗಳ ಸುತ್ತ ಅಲೆದಾಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ವಿಭಾಗದ ಕೆಲ ಕೌಂಟರ್ಗಳಲ್ಲಿ ಅಗತ್ಯ ಮಾಹಿತಿಯ ಫಲಕಗಳನ್ನು ಪ್ರದರ್ಶಿಸಿಲ್ಲ. ಪ್ರಶ್ನಿಸಿದರೆ ಕೌಂಟರ್ ಸಿಬ್ಬಂದಿಯಿಂದ ಅಸಮಂಜಸ ಉತ್ತರಗಳು ಬರುತ್ತಿವೆ. ಅಲ್ಲದೆ, ಕೆಲ ನಿರ್ವಾಹಕರು ಸ್ಟ್ಯಾಂಪ್ ಪೇಪರ್ ಮತ್ತು ಝರಾಕ್ಸ್ ಅಂಗಡಿಗಳ ಮಾಲೀಕರೊಂದಿಗೆ ಕೈಜೋಡಿಸಿ ವಿಕಲಚೇತನರಿಂದ ಹಣ ವಸೂಲಿ ಮಾಡುವ ಆರೋಪವನ್ನೂ ಅವರು ಮಾಡಿದ್ದಾರೆ. ಸದ್ಯ ಎಐ ತಂತ್ರಜ್ಞಾನವನ್ನು ಬಳಸಿ ಅನರ್ಹರನ್ನು ಗುರುತಿಸಿ ನೈಜ ವಿಕಲಚೇತನರಿಗೆ ಮಾತ್ರ ಬಸ್ ಪಾಸ್ ನೀಡುವತ್ತ ನಿಗಮ ಗಮನ ಹರಿಸಬೇಕು. ಅರ್ಹ ವಿಕಲಚೇತನರಿಗೆ ಕಿರುಕುಳ ನೀಡುವ ಬದಲು ನಿಗಮ ತನ್ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಸಂಬಂಧ ನಾಲ್ಕು ದಿನಗಳೊಳಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದಿದ್ದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಚೇರಿ ಎದುರು ವಿಕಲಚೇತನರೊಂದಿಗೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಹಣಮಂತ ಶೇರಿ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು| ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಲೋಕಾರ್ಪಣೆ
ಮಂಗಳೂರು: ನಗರದ ಪಂಪ್ವೆಲ್ ಮಹಾವೀರ ವೃತ್ತದಲ್ಲಿ ಮಂಗಳೂರು ಜೈನ್ ಸೊಸೈಟಿ (ರಿ) ಇವರ ಮುಂದಾಳತ್ವ ದಲ್ಲಿ ಮರುಸ್ಥಾಪನೆಗೊಂಡ ಕಲಶವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಶನಿವಾರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾನವನ ಅಂತರಂಗ-ಬಹಿರಂಗ ಶುದ್ಧವಾಗಬೇಕು. ಮಂಗಳೂರಿಗೆ ಆಗಮಿಸುವ ಹಾಗೂ ತೆರಳುವವರಿಗೆ ವಿದಾಯ ಹಾಗೂ ಸ್ವಾಗತ ಕೋರುವ ಕಲಶವಾಗಿದೆ. ಎಲ್ಲರಿಗೂ ಶುಭವಾಗಲಿ ಎಂಬ ಆಶಯದಲ್ಲಿ ಈ ಪವಿತ್ರ ಕಲಶವನ್ನು ಸ್ಥಾಪಿಸಲಾಗಿದೆ ಎಂದರು. *ಸ್ವಾಭಿಮಾನದ ಸಂಕೇತ : ಯುಟಿ ಖಾದರ್ ನಾಮಫಲಕ ಅನಾವರಣಗೊಳಿಸಿದ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಈ ಕಲಶ ಕರಾವಳಿಯ ಸಂಸ್ಕೃತಿ ಪರಂಪರೆ, ಧಾರ್ಮಿಕತೆ, ಸ್ವಾಭಿಮಾನದ ಸಂಕೇತ. ಮಹಾವೀರರ ಅಹಿಂಸಾ ಪರಮೋಧರ್ಮದ ಸಂದೇಶವನ್ನು ಸಾರುವ ಕಲಶ ಇದಾಗಿದ್ದು, ಅವರ ಚಿಂತನಾ ವಾಕ್ಯಗಳನ್ನೂ ಫಲಕಗಳಲ್ಲಿ ಅಳವಡಿಸಬೇಕು. ಈ ಮೂಲಕ ಜನತೆ ಆತ್ಮಾವಲೋಕನ ನಡೆಸಲು ನಾಂದಿಯಾಗಬೇಕು ಎಂದರು. ದ.ಕ. ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಮಂಗಳೂರು 2.0 ಅಭಿವೃದ್ಧಿಗೆ ಈ ಕಲಶ ಕಲಶಪ್ರಾಯವಾಗಿದೆ. ‘ಮರಳಿ ಊರಿಗೆ’ ಕಲ್ಪನೆಯಡಿ ಸ್ವಂತ ಊರಿನಲ್ಲಿ ಉದ್ಯೋಗ ಕೈಗೊಳ್ಳುವವರಿಗೆ ಇದು ಪ್ರೇರಣೆಯಾಗಬೇಕು ಎಂದರು. ಬಿ.ಸಿ.ರೋಡ್-ಸುರತ್ಕಲ್ ಹೆದ್ದಾರಿಯ ಉನ್ನತೀಕರಣಕ್ಕೆ ಕಾರ್ಯಸಾಧ್ಯತಾ ವರದಿಗೆ ಕೇಂದ್ರ ಸೂಚಿಸಿದೆ. ಕುದುರೆಮುಖ ಕಾರ್ಖಾನೆಯಿಂದ ಬೈಕಂಪಾಡಿಗೆ ಹಾಗೂ ನಂತೂರಿನಿಂದ ಕೂಳೂರು ವರೆಗೆ ಎಲಿವೇಟೆಡ್ ರಸ್ತೆ ನಿರ್ಮಾಣವಾಗಬೇಕಾಗಿದೆ. ಸುರತ್ಕಲ್-ಬಿ.ಸಿ.ರೋಡ್ ಬೈಪಾಸ್ ರಸ್ತೆ ರಚನೆಯಾಗಬೇಕಾಗಿದ್ದು, ಇವಕ್ಕೆಲ್ಲ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿ ಜೊತೆ ಮಾತುಕತೆ ನಡೆಸಲು ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಅವರ ಸಾಥ್ ಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಮಂಗಳೂರಿಗೆ ಆಗಮಿಸುವವರಿಗೆ ಪಂಪ್ವೆಲ್ ಮಹಾವೀರ ವೃತ್ತದ ಕಲಶ ಗೌರವ ಸೂಚಕವಾಗಿದೆ. ಇಲ್ಲಿ ಉದ್ದಿಮೆ ನಡೆಸುವವರಿಗೂ ಯಶಸ್ಸು ಸಿಗಲಿ ಎಂದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ , ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಶುಭ ಹಾರೈಸಿದರು. ಮಂಗಳೂರು ಜೈನ್ ಸೊಸೈಟಿ ಅಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದರು. ಮನೋಜ್ ಕುಮಾರ್ ವಾಮಂಜೂರು ನಿರೂಪಿಸಿದರು.
ಪಾಕಿಸ್ತಾನ| ಮದುವೆ ಮನೆ ಮೇಲೆ ಆತ್ಮಾಹುತಿ ಬಾಂಬ್ ದಾಳಿ: 7 ಜನರು ಮೃತ್ಯು
ಪೇಷಾವರ, ಜ.24: ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತೂಂಕ್ವಾ ಪ್ರಾಂತದಲ್ಲಿ ಶುಕ್ರವಾರ ತಡರಾತ್ರಿ ವಿವಾಹ ಸಮಾರಂಭದ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದು ಇತರ 25 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಖುರೇಷಿ ಮೊರ್ ಪ್ರದೇಶದ ಶಾಂತಿ ಸಮಿತಿಯ ನಾಯಕ ನೂರ್ ಅಹ್ಮದ್ ಮೆಷುದ್ ಅವರ ನಿವಾಸದ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿರುವುದಾಗಿ ಎಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಮನೆಯಲ್ಲಿ ವಿವಾಹ ಸಮಾರಂಭ ನಡೆಯುತ್ತಿತ್ತು ಮತ್ತು ಅತಿಥಿಗಳು ನೃತ್ಯ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದ್ದು ಸಭಾಂಗಣದ ಛಾವಣಿ ಕುಸಿದು ಬಿದ್ದಿದ್ದು ಸ್ಫೋಟದ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕುಸಿದು ಬಿದ್ದ ಛಾವಣಿಯಡಿ ಹಲವರು ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಯಾವುದೇ ಗುಂಪು ಸ್ಫೋಟದ ಹೊಣೆ ವಹಿಸಿಕೊಂಡಿಲ್ಲ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಯನ್ನು ಉಲ್ಲೇಖಿಸಿ ವರದಿಯು ಹೇಳಿದೆ.
ಇರಾನಿನಲ್ಲಿ ಇತ್ತೀಚಿನ ಪ್ರತಿಭಟನೆಗಳ ಅಲೆಯ ಸಮಯದಲ್ಲಿ ಜನರು ಕೊಲ್ಲಲ್ಪಟ್ಟರು ಎಂದು ಇರಾನಿನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಪ್ರತಿನಿಧಿ ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಒಪ್ಪಿಕೊಂಡರು, ಆದರೆ ಪ್ರತಿಭಟನೆಯನ್ನು ಹತ್ತಿಕ್ಕಲು ಸರಕಾರ ಅನಗತ್ಯ ಮತ್ತು ಅಸಮಾನ ಬಲ ಪ್ರಯೋಗಿಸಿದೆ ಎಂಬ ಆರೋಪಗಳನ್ನು ನಿರಾಕರಿಸಿದ್ದಾರೆ. ಪ್ರತಿಭಟನೆಯ ಸಂದರ್ಭ ಸಾವಿರಾರು ಜನರು ಮೃತಪಟ್ಟಿದ್ದಾರೆ ಎಂಬ ವರದಿಯ ಹಿಂದೆ ವಿದೇಶಿ ಹಿತಾಸಕ್ತಿಗಳ ಕೈವಾಡವಿದೆ ಎಂದವರು ಆರೋಪಿಸಿದ್ದಾರೆ. ಇರಾನ್ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ, ಆದರೆ ಕೆಲವರಿಗೆ ಅದು ಇಷ್ಟವಿಲ್ಲ. ಸರಕಾರವು ಜನರ ಬೇಡಿಕೆಗಳನ್ನು ಗಮನಿಸಿದ್ದು ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ. ಆದರೆ ಕೆಲವು ವಿಷಯಗಳು ಇರಾನಿನ ಕೈಯಲ್ಲಿಲ್ಲ. ದೇಶವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ ಆರ್ಥಿಕ ಸಂಕಷ್ಟಗಳಿಗೆ ಕಾನೂನು ಬಾಹಿರ ಅಂತಾರಾಷ್ಟ್ರೀಯ ನಿರ್ಬಂಧಗಳು ಕಾರಣವಾಗಿವೆ. ವಿದೇಶಿ ಶಕ್ತಿಗಳು ಇರಾನಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತಮ್ಮ ಬೇಳೆ ಬೇಯಿಸಿಕೊಳ್ಳಲು ಬಳಸುತ್ತಿದ್ದಾರೆ. ಕೆಲವು ಜನರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದರೆ ಇತರರು ಈ ಅವಕಾಶವನ್ನು ತಮ್ಮ ಗುರಿ ಸಾಧಿಸಲು ಬಳಸಿಕೊಳ್ಳುತ್ತಿದ್ದಾರೆ' ಎಂದು ಇಲಾಹಿ ಹೇಳಿರುವುದಾಗಿ ವರದಿಯಾಗಿದೆ.
ಬಂಟ್ವಾಳ : ಇಲ್ಲಿನ ಕೆಳಗಿನ ಪೇಟೆ ನಿವಾಸಿ ಉದ್ಯಮಿ ಅಬ್ದುಲ್ ವಹಾಬ್ ಬಿ.ಎಚ್.ಬಿ (65) ಅವರು ಹೃದಯಾಘಾತ ದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಮಂಗಳೂರು ಸಂಚಾರಿ ಪೊಲೀಸ್ ನಿರೀಕ್ಷಕ ಅಮಾನುಲ್ಲಾ ಅವರು ಸಹೋದರರಾಗಿರುವ ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಒಂದು ದಾಳಿ ನಡೆದರೂ ಯುದ್ದ ಆರಂಭ: ಅಮೆರಿಕಾಗೆ ಇರಾನ್ ಎಚ್ಚರಿಕೆ
ಟೆಹ್ರಾನ್, ಜ.24: ಟೆಹ್ರಾನ್ ಕಡೆಗೆ ಅಮೆರಿಕಾದ ಯುದ್ದನೌಕೆಗಳ ದೊಡ್ಡ ಪಡೆ ಸಾಗುತ್ತಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿರುವ ಇರಾನಿನ ಹಿರಿಯ ಅಧಿಕಾರಿಯೊಬ್ಬರು `ದೇಶದ ಮೇಲೆ ನಡೆಯುವ ಒಂದೇ ಒಂದು ದಾಳಿಯನ್ನೂ ನಮ್ಮ ವಿರುದ್ದದ ಸಂಪೂರ್ಣ ಯುದ್ದವೆಂದು ಪರಿಗಣಿಸುವುದಾಗಿ' ಎಚ್ಚರಿಕೆ ನೀಡಿದ್ದಾರೆ. ಅಮೆರಿಕಾದ ಮಿಲಿಟರಿ ಜಮಾವಣೆಯನ್ನು ನೇರ ಬೆದರಿಕೆಯೆಂದು ಇರಾನ್ ಪರಿಗಣಿಸುತ್ತದೆ ಮತ್ತು ದಾಳಿಯ ವೇಳೆ ಪ್ರತೀಕಾರ ತೀರಿಸಲು ತನ್ನ ಬತ್ತಳಿಕೆಯಲ್ಲಿರುವ ಎಲ್ಲವನ್ನೂ ಬಳಸಲಾಗುವುದು. ಅಮೆರಿಕಾವು ಮಿಲಿಟರಿಯನ್ನು ಸಜ್ಜುಗೊಳಿಸಿರುವುದು ನಿಜವಾದ ಮುಖಾಮುಖಿಯ ಉದ್ದೇಶದಿಂದಲ್ಲ ಎಂದು ನಾವು ಭಾವಿಸುತ್ತೇವೆ. ಆದರೆ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ನಮ್ಮ ಮಿಲಿಟರಿ ಸಿದ್ಧವಾಗಿದೆ. ಇರಾನಿನಲ್ಲಿ ಎಲ್ಲವನ್ನೂ ಈಗ `ಹೈ ಅಲರ್ಟ್'ನಲ್ಲಿ ಇರಿಸಲಾಗಿದೆ' ಎಂದು ಅಧಿಕಾರಿಯ ಹೆಸರು ಉಲ್ಲೇಖಿಸದೆ `ರಾಯ್ಟರ್ಸ್' ವರದಿ ಮಾಡಿದೆ. ಈ ಬಾರಿ ನಾವು ಯಾವುದೇ ದಾಳಿಯನ್ನು - ಸೀಮಿತ, ಅನಿಯಮಿತ, ಸರ್ಜಿಕಲ್ ಅಥವಾ ಇನ್ನಿತರ ಯಾವುದಾದರೂ- ನಮ್ಮ ವಿರುದ್ದದ ಸಂಪೂರ್ಣ ದಾಳಿಯೆಂದು ಪರಿಗಣಿಸುತ್ತೇವೆ ಮತ್ತು ಇದಕ್ಕೆ ನಾವು ಸಾಧ್ಯವಾದಷ್ಟು ಕಠಿಣ ರೀತಿಯಲ್ಲಿ ಪ್ರತಿಕ್ರಿಯಿಸುತ್ತೇವೆ. ಅಮೆರಿಕನ್ನರು ಇರಾನಿನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಉಲ್ಲಂಘಿಸಿದರೆ ನಾವು ಪ್ರತಿಕ್ರಿಯಿಸುತ್ತೇವೆ' ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.
ಸದನದಲ್ಲಿ ಶಿಸ್ತು ರೂಪಿಸಲು ಕಾಲೇಜು ಕಲಿಸಿದ ಪಾಠ ನೆರವಾಗಿದೆ: ಯು.ಟಿ.ಖಾದರ್
ಬೆಂಗಳೂರು: ಕಾಲೇಜು ನಮಗೆ ಕಲಿಸಿದ್ದ ಶಿಸ್ತಿನ ಪಾಠವು ಸದನದಲ್ಲಿ ಶಿಸ್ತು ರೂಪಿಸುವುದಕ್ಕೆ ನೆರವಾಗಿದೆ ಎಂದು ವಿಧಾನಸಭೆಯ ಸ್ವೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ. ಇತ್ತೀಚೆಗೆ ನಗರದಲ್ಲಿ ಆಯೋಜಿಸಿದ್ದ ‘ಮೂಡಬಿದಿರೆ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳಾಗಿದ್ದಾಗ ನಾವು ಸಾಕಷ್ಟು ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಪ್ರಾಧ್ಯಾಪಕರು ನಮಗೆ ಪ್ರೋತ್ಸಾಹ ನೀಡುತ್ತಿದ್ದರು. ನಮ್ಮೆಲ್ಲ ತಪ್ಪುಗಳನ್ನು ತಿದ್ದಿ ಅಗತ್ಯವಿದ್ದಾಗ ನಮ್ಮ ಪೋಷಕರನ್ನೂ ಕರೆಸಿ ಬುದ್ದಿ ಹೇಳಿದ್ದರಿಂದಲೇ ಸಮಾಜದಲ್ಲಿ ಈ ಸಾಧನೆಯೊಂದಿಗೆ ಗುರುತಿಸುವಂತಾಗಿದೆ ಎಂದರು. ಮಹಾವೀರ ಕಾಲೇಜು ವಿದ್ಯಾರ್ಥಿಗಳಾಗಿದ್ದವರು ಇಂದು ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ. ಅತ್ಯುನ್ನತ ಹುದ್ದೆಗಳಲ್ಲಿದ್ದಾರೆ. ಅಂದು ಕಾಲೇಜು ನಮಗೆ ಕಲಿಸಿಕೊಟ್ಟ ಪಾಠ ಇಂದಿಗೂ ದಾರಿದೀವಿಗೆಯಾಗಿದ್ದು, ಸದಾ ನೆನಪಿನಲ್ಲಿ ಉಳಿಯುವಂತಹುದು. ಕಾಲೇಜು ವಿಧ್ಯಾರ್ಥಿಗಳಾಗಿದ್ದಾಗ ಹಲವು ಸಾಹಸಗಳನ್ನು ಮಾಡಿದ್ದೇವೆ. ವಸತಿ ನಿಲಯ, ತರಗತಿಗಳಲ್ಲೂ ಕೆಲವೊಮ್ಮೆ ಶಿಸ್ತು ಮೀರಿ ವರ್ತಿಸಿದ್ದೂ ಇದೆ. ಆ ಸಂದರ್ಭದಲ್ಲಿ ಪ್ರಾಂಶುಪಾಲರು, ಪ್ರಾಧ್ಯಾಪಕರು ನಮಗೆ ಬುದ್ಧಿ ಹೇಳಿ ಸರಿ ದಾರಿಗೆ ತಂದಿದ್ದಾರೆ ಎಂದು ಅವರು ಹೇಳಿದರು. ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಶಿಕ್ಷಣ ಬಡ ಮಕ್ಕಳ ಕೈಗೆಟುಕದ ಇಂದಿನ ದಿನಗಳಲ್ಲಿ ಮಹಾವೀರ ಕಾಲೇಜು ಈ ಭಾಗದ ನೂರಾರು ಬಡ ಮಕ್ಕಳ ಕಾಲೇಜು ಶಿಕ್ಷಣದ ಕನಸು ನನಸು ಮಾಡುತ್ತಿದೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ್ ಬಿ. ಸೇರಿದಂತೆ ಮತ್ತಿತರರು ಇದ್ದರು.
8th Pay Commission: ಜನವರಿ 25ಕ್ಕೆ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರ ಪ್ರತಿನಿಧಿಗಳ ಸಭೆ, ಬಿಗ್ ಅಪ್ಡೇಟ್
ನವದೆಹಲಿ: ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ಕಾತರದಿಂದ ಕಾಯುತ್ತಿರುವ 8ನೇ ವೇತನ ಆಯೋಗ (8th Pay Commission) ಜಾರಿ ಆಗಬೇಕಿದೆ. ಇದೀಗ ನೌಕರರಿಗೆ ಸಮಾಧಾನಕರ ಖುಷಿ ಸುದ್ದಿ ಹೊರ ಬಿದ್ದಿದೆ. ವೇತನ ಪರಿಷ್ಕರಣೆ, ಭತ್ಯೆ ಕುರಿತಂತೆ ನೌಕರರ ಬೇಡಿಕೆಗಳ ಸಾಮಾನ್ಯ ಕರಡು ರೂಪಿಸಲು ಕೇಂದ್ರದೊಂದಿಗೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಸಂಘಟನೆಗಳು ಫೆಬ್ರವರಿ 25 ರಂದು
ಯುವಕರಿಗೆ ಉದ್ಯೋಗಾವಕಾಶಕ್ಕಾಗಿ ವಿವಿಧ ದೇಶಗಳೊಂದಿಗೆ ವ್ಯಾಪಾರ ಒಪ್ಪಂದ: ಪ್ರಧಾನಿ ಮೋದಿ
ಹೊಸದಿಲ್ಲಿ, ಜ. 24: ದೇಶ ಮತ್ತು ವಿದೇಶಗಳಲ್ಲಿ ಇರುವ ಭಾರತೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದಕ್ಕಾಗಿ ಭಾರತವು ವಿವಿಧ ದೇಶಗಳೊಂದಿಗೆ ವ್ಯಾಪಾರ ಮತ್ತು ಮುಕ್ತ ಸಂಚಾರ ಒಪ್ಪಂದಗಳನ್ನು ಮಾಡಿಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಅವರು 18ನೇ ರೋಜ್ಗಾರ್ ಮೇಳದಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರು ದೇಶಾದ್ಯಂತದ 45 ಸ್ಥಳಗಳಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ 61,000ಕ್ಕೂ ಅಧಿಕ ಸರಕಾರಿ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಇಲೆಕ್ಟ್ರಾನಿಕ್ ಮಾದರಿಯಲ್ಲಿ ವಿತರಿಸಿದರು. ‘‘ಭಾರತವು ವಿವಿಧ ದೇಶಗಳೊಂದಿಗೆ ವ್ಯಾಪಾರ ಮತ್ತು ಮುಕ್ತ ಸಂಚಾರ ಒಪ್ಪಂದಗಳಿಗೆ ಸಹಿ ಹಾಕುತ್ತಿದೆ. ಈ ವ್ಯಾಪಾರ ಒಪ್ಪಂದಗಳು ದೇಶದ ಯುವಕರಿಗೆ ಹೊಸ ಅವಕಾಶಗಳನ್ನು ತರುತ್ತಿವೆ’’ ಎಂದು ಹೇಳಿದರು. ಜಗತ್ತಿನಲ್ಲೇ ಅತಿ ಹೆಚ್ಚು ಯುವಕರು ಭಾರತದಲ್ಲಿದ್ದಾರೆ ಎಂದು ಹೇಳಿದ ಮೋದಿ, ದೇಶದೊಳಗೆ ಮತ್ತು ವಿದೇಶಗಳಲ್ಲೂ ಇರುವ ಯುವಕರಿಗೆ ನೂತನ ಅವಕಾಶಗಳನ್ನು ಸೃಷ್ಟಿಸಲು ತನ್ನ ಸರಕಾರವು ಪ್ರಯತ್ನಗಳನ್ನು ಮಾಡುತ್ತಿದೆ ಎಂದರು. ನೇಮಕಾತಿ ಪತ್ರಗಳನ್ನು ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಲು ಸಿಕ್ಕಿದ ಆಹ್ವಾನ ಹಾಗೂ ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣಕ್ಕಾಗಿ ಕೆಲಸ ಮಾಡುವ ಪ್ರತಿಜ್ಞೆ ಎಂಬುದಾಗಿ ಪರಿಗಣಿಸುವಂತೆ ಈ ಪತ್ರಗಳನ್ನು ಪಡೆದವರನ್ನು ಪ್ರಧಾನಿ ಒತ್ತಾಯಿಸಿದರು. ಹಿಂದೆ ಸರಕಾರಿ ಕಚೇರಿಗಳಲ್ಲಿ ನೀವು ಅನುಭವಿಸಿದ ಸಮಸ್ಯೆಗಳನ್ನು ಜ್ಞಾಪಿಸಿಕೊಳ್ಳಿ ಹಾಗೂ ನಿಮ್ಮ ಅವಧಿಯಲ್ಲಿ ನಾಗರಿಕರು ಅಂಥ ಸಮಸ್ಯೆಗಳಿಗೆ ಒಳಗಾಗಲು ಬಿಡುವುದಿಲ್ಲ ಎಂಬ ನಿರ್ಧಾರವನ್ನು ತೆಗೆದುಕೊಳ್ಳಿ ಎಂದು ಅವರು ಯುವಕರಿಗೆ ಕರೆ ನೀಡಿದರು. ರೋಜ್ಗಾರ್ ಮೇಳಗಳು ಆರಂಭಗೊಂಡಂದಿನಿಂದ ಅವುಗಳ ಮೂಲಕ 11 ಲಕ್ಷಕ್ಕೂ ಅಧಿಕ ನೇಮಕಾತಿ ಪತ್ರಗಳನ್ನು ದೇಶಾದ್ಯಂತ ವಿತರಿಸಲಾಗಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಭಟ್ಕಳ: ಜೂಜಾಟ ನಡೆಸುತ್ತಿದ್ದ ಆರೋಪ; ಸೊತ್ತು ಸಹಿತ ಇಬ್ಬರ ಬಂಧನ
ಭಟ್ಕಳ: ಬೈಲೂರಿನಲ್ಲಿ ಇಸ್ಪೀಟ್ ಕಾರ್ಡ್ಗಳ ಮೂಲಕ ಜೂಜಾಟ ನಡೆಸಲಾಗುತ್ತಿದ್ದ ಸ್ಥಳಕ್ಕೆ ಮರ್ಡೇಶ್ವರ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿ, ಎರಡು ದ್ವಿಚಕ್ರ ವಾಹನಗಳು ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಬೈಲೂರು ರಸ್ತೆ ಬದಿಯಲ್ಲಿರುವ ಸಣ್ಣ ಅಂಗಡಿಯೊಂದರ ಬಳಿ ಅಕ್ರಮವಾಗಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮರ್ಡೇಶ್ವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಹನುಮಂತ ಬಡೇರ ಅವರ ನೇತೃತ್ವದ ತಂಡ ದಾಳಿ ನಡೆಸಿತು. ಈ ವೇಳೆ ದಿನೇಶ್ ಎರಿಯಾ ದಿವಾಡೀಗ, ಈಶ್ವರ ಮಂಜುನಾಥ ದಿವಾಡೀಗ, ಸುಬ್ರಾಯ ನಾಗಪ್ಪ ನಾಯ್ಕ್, ಪ್ರವೀಣ ರವಿ ನಾಯ್ಕ್ ಸೇರಿದಂತೆ ಇತರರು ಸ್ಪೀಡ್ ಕಾರ್ಡ್ಗಳ ಮೂಲಕ ಜೂಜಾಟದಲ್ಲಿ ತೊಡಗಿರುವುದು ಕಂಡುಬಂದಿತು. ಪೊಲೀಸರು ಸ್ಥಳದಲ್ಲೇ 6,020 ನಗದು ಹಣ ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು, ದಿನೇಶ್ ಮತ್ತು ಮಂಜುನಾಥ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಸುಬ್ರಾಯ, ಪ್ರವೀಣ ಹಾಗೂ ಮತ್ತೊಬ್ಬ ದ್ವಿಚಕ್ರ ವಾಹನದ ಚಾಲಕ ಪರಾರಿಯಾಗಲು ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಎಸ್ಸೈ ನೇಮಕಾತಿ ಹಗರಣ: ಮಾಜಿ ಎಡಿಜಿಪಿ ಅಮೃತ್ ಪಾಲ್ ಸಹಿತ ಇಬ್ಬರಿಗೆ ಸೇರಿದ 1.53 ಕೋಟಿ ರೂ. ಆಸ್ತಿ ಜಪ್ತಿ
ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಸಂಚಲನ ಸೃಷ್ಠಿಸಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಈಡಿ) ಶುಕ್ರವಾರ(ಜ.24) ಮಹತ್ವದ ಕ್ರಮ ಕೈಗೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪಿಎಸ್ಐ ಹಗರಣದ ಪ್ರಮುಖ ಆರೋಪಿ, ಮಾಜಿ ಎಡಿಜಿಪಿ ಅಮೃತ್ ಪಾಲ್ ಮತ್ತು ಹೆಡ್ ಕಾನ್ಸ್ಟೇಬಲ್ ಶ್ರೀಧರ್ ಎಚ್. ಅವರಿಗೆ ಸೇರಿದ 1.53 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಈಡಿ ಬೆಂಗಳೂರು ವಲಯ ಕಚೇರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 2021-22ನೇ ಸಾಲಿನಲ್ಲಿ ನಡೆದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದ ವ್ಯಾಪಕ ಅಕ್ರಮಗಳ ಕುರಿತು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮತ್ತು ಸಿಐಡಿ ದಾಖಲಿಸಿದ್ದ ಎಫ್ಐಆರ್ ಆಧರಿಸಿ ಈಡಿ ತನಿಖೆ ಆರಂಭಿಸಿತ್ತು. ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಒಎಂಆರ್ ಶೀಟ್ ತಿದ್ದುಪಡಿ, ಭ್ರಷ್ಟಾಚಾರ ಮತ್ತು ಪರೀಕ್ಷಾರ್ಥಿಗಳೊಂದಿಗೆ ಶಾಮೀಲಾಗಿರುವ ಗಂಭೀರ ಆರೋಪಗಳು ಕೇಳಿಬಂದಿದ್ದವು. ನೇಮಕಾತಿ ವಿಭಾಗದ ಅಂದಿನ ಎಡಿಜಿಪಿ ಅಮೃತ್ ಪಾಲ್ ಅವರು ಈ ಸಂಚಿನ ಕೇಂದ್ರಬಿಂದುವಾಗಿದ್ದರು ಎಂದು ಈಡಿ ತನಿಖೆ ದೃಢಪಡಿಸಿದೆ. ಒಎಂಆರ್ ಶೀಟ್ಗಳನ್ನು ಇರಿಸಲಾಗಿದ್ದ ಭದ್ರತಾ ಕೊಠಡಿಯ ಕೀಲಿ ಕೈಗಳನ್ನು ಅಮೃತ್ ಪಾಲ್ ಅವರು ಡಿವೈಎಸ್ಪಿ ಶಾಂತಕುಮಾರ್ ಗೆ ನೀಡಿದ್ದರು. ಇದರ ಮೂಲಕ ಶ್ರೀಧರ್ ಎಚ್. ಸೇರಿದಂತೆ ಇತರ ಆರೋಪಿಗಳು ಅರ್ಹತೆಯಿಲ್ಲದ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳನ್ನು ತಿದ್ದಿ ಅವರು ಆಯ್ಕೆಯಾಗುವಂತೆ ಮಾಡಿದ್ದರು ಎಂಬುದು ಪತ್ತೆಯಾಗಿದೆ. ಈ ಅಕ್ರಮಕ್ಕಾಗಿ ಪ್ರತಿ ಅಭ್ಯರ್ಥಿಯಿಂದ 30 ಲಕ್ಷದಿಂದ 70 ಲಕ್ಷದವರೆಗೆ ಲಂಚ ಪಡೆಯಲಾಗಿತ್ತು. ಹೀಗೆ ಸಂಗ್ರಹವಾದ ಕಪ್ಪು ಹಣವನ್ನು ಕೈಗಡ ರೂಪದಲ್ಲಿ ತೋರಿಸಿ ಮರೆಮಾಚಲಾಗಿತ್ತು. ಬಳಿಕ ಈ ಅಕ್ರಮ ಹಣವನ್ನು ವಸತಿ ಕಟ್ಟಡಗಳ ನಿರ್ಮಾಣಕ್ಕಾಗಿ ಬಳಸಲಾಗಿತ್ತು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಡಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯವು ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶಾಂತಿಯುತವಾಗಿ ನಡೆದ ʼಝಿಯಾರತ್ʼ
ಚಿಕ್ಕಮಗಳೂರು: ಜಿಲ್ಲೆಯ ಹಝರತ್ ದಾದಾ ಹಯಾತ್ ಮೀರ್ ಖಲಂದರ್ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಗುಹೆಯ ದ್ವಾರದಲ್ಲಿರುವ ಕಲಿಮಾ ತಯ್ಯಿಬಾದ ಝಿಯಾರತ್ ಕಾರ್ಯಕ್ರಮವನ್ನು ಶುಕ್ರವಾರ ಧಾರ್ಮಿಕ ಸಂಪ್ರದಾಯಗಳಿಗೆ ಅನುಗುಣವಾಗಿ ಹಾಗೂ ಕಾನೂನು ಮತ್ತು ಆಡಳಿತಕ್ಕೆ ಸಂಪೂರ್ಣ ಗೌರವ ನೀಡಿ ನಡೆಸಲಾಯಿತು ಎಂದು ಸೈಯದ್ ಬುಡೆನ್ ಶಾ ಖಾದ್ರಿ ವಂಶಸ್ಥರಾದ ಸೈಯದ್ ಫಕ್ರುದ್ದೀನ್ ಶಾ ಖಾದ್ರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಗುಹೆಯ ಬೆಳ್ಳಿ ಚಿಲ್ಲಾ ಬಾಗಿಲಿನಲ್ಲಿರುವ ಕಲಿಮಾ ತಯ್ಯಿಬಾದ ಝಿಯಾರತ್ ಧಾರ್ಮಿಕ ಆಚರಣೆ ಸಂದರ್ಭ ಗುಹೆ ಪ್ರವೇಶದ ಮೆಟ್ಟಿಲುಗಳ ಮೇಲ್ಭಾಗದಲ್ಲಿರುವ ಮತ್ತೊಂದು ಕಲಿಮಾ ತಯ್ಯಿಬಾ ಲಿಪಿ ಮಣ್ಣಿನಿಂದ ಮುಚ್ಚಲ್ಪಟ್ಟಿರುವುದು ಗಮನಕ್ಕೆ ಬಂದಿದ್ದು, ಈ ವಿಷಯದ ಪರಿಶೀಲನೆ ಹಾಗೂ ಅಗತ್ಯ ಕ್ರಮಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಅಧಿಕೃತವಾಗಿ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮದ ಸಂಪೂರ್ಣ ಪ್ರಕ್ರಿಯೆ ಶಾಂತಿಪೂರ್ಣವಾಗಿ ನಡೆದಿದ್ದು, ಸಾಮರಸ್ಯ ಮತ್ತು ಧಾರ್ಮಿಕ ಭಾವನೆಗಳ ಗೌರವ ಕಾಪಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಝಿಯಾರತ್ ಕಾರ್ಯಕ್ರಮದಲ್ಲಿ ಬಾಬಾ ಬುಡನ್ ವಂಶಸ್ಥರಾದ ಸೈಯದ್ ಇಕ್ಬಾಲ್ ಪಾಶಾ ಖಾದ್ರಿ, ಸೈಯದ್ ಜುನೈದ್ ಶಾ ಖಾದ್ರಿ ಹಾಗೂ ಸೈಯದ್ ಸಕ್ಲೈನ್ ಪಾಶಾ ಖಾದ್ರಿ (ತೌಖೀರ್), ಬಾಬಾ ಬುಡನ್ ದರ್ಗಾ ಹೆರಿಟೇಜ್ ಅಸೋಸಿಯೇಷನ್ ಸದಸ್ಯರಾದ ಜುನೈದ್ ಪಾಶಾ, ಜಮೀಲ್ ಖಾನ್, ಸಮೀರ್, ತನ್ವೀರ್ ಅಹ್ಮದ್, ಮಕ್ಸೂದ್ ರಜ್ವಿ ಹಾಗೂ ತೌಸೀಫ್, ಮುಖಂಡರಾದ ಮುಬಾರಕ್, ಅಜ್ನಾನ್, ಜೀಲಾನ್, ಗೌಸ್ ಮುನೀರ್ ಸೇರಿದಂತೆ ಅನೇಕ ನಾಯಕರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಾಜಸ್ಥಾನದ ಮೌಂಟ್ ಅಬುನಲ್ಲಿ ಮೈನಸ್ 7 ಡಿಗ್ರಿ ಉಷ್ಣತೆ ದಾಖಲು!
ಜೈಪುರ, ಜ. 24: ತೀವ್ರ ಶೀತ ಮಾರುತವು ಉತ್ತರ ಮತ್ತು ವಾಯುವ್ಯ ಭಾರತವನ್ನು ವ್ಯಾಪಿಸುತ್ತಿರುವಂತೆಯೇ, ರಾಜಸ್ಥಾನದ ಗಿರಿಧಾಮ ಮೌಂಟ್ ಅಬುನಲ್ಲಿ ಶನಿವಾರ ಅತ್ಯಂತ ಶೀತಲ ವಾತಾವರಣ ನೆಲೆಸಿದೆ. ಕಳೆದ ಕೆಲವು ದಿನಗಳಿಂದ ಉಷ್ಣತೆಯು ತೀವ್ರವಾಗಿ ಕುಸಿಯುತ್ತಿದ್ದು, ಹುಲ್ಲುಗಾವಲನ್ನು ಮಂಜಿನ ಹನಿಗಳು ಆವರಿಸಿವೆ ಹಾಗೂ ಕೆರೆಗಳಲ್ಲಿ ಮಂಜಿನ ದಟ್ಟ ಪದರಗಳು ಸೃಷ್ಟಿಯಾಗಿವೆ. ಸಾಮಾನ್ಯವಾಗಿ ಬಸಂತ ಪಂಚಮಿ ಬಳಿಕ ಚಳಿ ಕಡಿಮೆಯಾಗುತ್ತದೆ. ಆದರೆ, ಮೌಂಟ್ ಅಬುನಲ್ಲಿ ಈ ಬಾರಿ ವ್ಯತಿರಿಕ್ತ ಪರಿಸ್ಥಿತಿ ನೆಲೆಸಿದ್ದು, ಅಲ್ಲಿ ಥರಗುಟ್ವುವ ಚಳಿ ಎಲರನ್ನೂ ಕಾಡುತ್ತಿದೆ. ಮೌಂಟ್ ಅಬುನಲ್ಲಿ ಶುಕ್ರವಾರ ಉಷ್ಣತೆ ತೀವ್ರವಾಗಿ ಕುಸಿದಿದ್ದು, ಶನಿವಾರ ಈ ಚಳಿಗಾಲದ ಅತ್ಯಂತ ಶೀತಲ ವಾತಾವರಣವಾಗಿ ದಾಖಲಾಯಿತು. ಅಲ್ಲಿನ ಕನಿಷ್ಠ ಉಷ್ಣತೆ ಮೈನಸ್ 7 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ.
ಇದು ಕೇರಳ ಸ್ಪೆಷಲ್! ಸ್ವಪಕ್ಷಕ್ಕೇ ₹20 ಲಕ್ಷ ದಂಡ ವಿಧಿಸಿದ ಬಿಜೆಪಿ ಆಡಳಿತದ ಪಾಲಿಕೆ; ಕಾರಣ ಏನು?
ತಿರುವನಂತಪುರಂನಲ್ಲಿ ಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳ ವಿರುದ್ಧ ಬಿಜೆಪಿ ಆಡಳಿತದ ತಿರುವನಂತಪುರಂ ಮಹಾನಗರ ಪಾಲಿಕೆ ಕಠಿಣ ಕ್ರಮ ಕೈಗೊಂಡಿದೆ. ಹೈಕೋರ್ಟ್ ಆದೇಶ ಉಲ್ಲಂಘನೆ ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಡಿ ಬಿಜೆಪಿ ಜಿಲ್ಲಾ ಸಮಿತಿಗೆ 19.7 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ಪಾಲಿಕೆ ಕಾರ್ಯದರ್ಶಿಯ ದೂರಿನ ಮೇರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕರಮನ ಜಯನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸಿಬಿಎಸ್ಇ ಸಂಯೋಜಿತ ಶಾಲೆಗಳಲ್ಲಿ ಮಾನಸಿಕ ಸ್ವಾಸ್ಥ್ಯ, ವೃತ್ತಿಜೀವನ ಸಲಹೆಗಾರರ ನೇಮಕಾತಿ ಕಡ್ಡಾಯ
ಹೊಸದಿಲ್ಲಿ,ಜ.24: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಬಲಪಡಿಸುವ ಮತ್ತು ಅವರಿಗೆ ವೃತ್ತಿಜೀವನ ಮಾರ್ಗದರ್ಶನವನ್ನು ನೀಡುವ ನಿಟ್ಟಿನಲ್ಲಿ ಮಹತ್ವದ ನೀತಿ ಸುಧಾರಣೆಯನ್ನು ತಂದಿದೆ. ಎಲ್ಲ ಸಂಯೋಜಿತ ಶಾಲೆಗಳಲ್ಲಿ ಸಾಮಾಜಿಕ-ಭಾವನಾತ್ಮಕ ಮತ್ತು ವೃತ್ತಿಜೀವನ ಸಲಹೆಗಾರರ ನೇಮಕಾತಿಯನ್ನು ಅದು ಕಡ್ಡಾಯಗೊಳಿಸಿದೆ. ಇದಕ್ಕಾಗಿ ಮಂಡಳಿಯು ಸಿಬಿಎಸ್ಇ ಸಂಯೋಜನೆ ಉಪನಿಯಮಗಳ 2.4.12 ನಿಬಂಧನೆಯನ್ನು ತಿದ್ದುಪಡಿಗೊಳಿಸಿದೆ. ಕೋಟಾ ಮೂಲದ ವಕೀಲ ಸುಜೀತ್ ಸ್ವಾಮಿ ಮತ್ತು ಕೆಲವು ಮನೋವಿಜ್ಞಾನ ತಜ್ಞರು ಜುಲೈ 2025ರಲ್ಲಿ ರಾಜಸ್ಥಾನ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದರು. ಶೈಕ್ಷಣಿಕ ಒತ್ತಡ ಮತ್ತು ರಚನಾತ್ಮಕ ವೃತ್ತಿ ಮಾರ್ಗದರ್ಶನದ ಕೊರತೆ ಸೇರಿದಂತೆ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದ ಪಿಐಎಲ್, ಶಾಲೆಗಳಲ್ಲಿ ಅರ್ಹ ಸಲಹೆಗಾರರ ಕಡ್ಡಾಯ ನೇಮಕಾತಿ ಮತ್ತು ಏಕರೂಪ ಮಾನಸಿಕ ಆರೋಗ್ಯ ಬೆಂಬಲ ವ್ಯವಸ್ಥೆಗಾಗಿ ಕೋರಿತ್ತು. 2025ರ ಸೆಪ್ಟಂಬರ್ನಲ್ಲಿ ನಡೆದಿದ್ದ ವಿಚಾರಣೆ ಸಂದರ್ಭದಲ್ಲಿ ರಾಜಸ್ಥಾನ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳ ನೇತೃತ್ವದ ಪೀಠವು ಸಿಬಿಎಸ್ಇ, ರಾಜಸ್ಥಾನ ಪ್ರೌಢ ಶಿಕ್ಷಣ ಮಂಡಳಿ, ವಿಶ್ವವಿದ್ಯಾಲಯ ಧನಸಹಾಯ ಆಯೋಗ ಮತ್ತು ರಾಜ್ಯ ಸರಕಾರದಿಂದ ಉತ್ತರಗಳು ಮತ್ತು ಸಲಹೆಗಳನ್ನು ಕೋರಿತ್ತು. ನ್ಯಾಯಾಲಯಕ್ಕೆ ಸಲ್ಲಿಕೆಗಳನ್ನು ಪರಿಗಣಿಸಿದ ಬಳಿಕ ಸಿಬಿಎಸ್ಇ 2026ರ ಜ.19ರಂದು ಸುತ್ತೋಲೆಯ ಮೂಲಕ ಪ್ರಮುಖ ತಿದ್ದುಪಡಿಗಳನ್ನು ತಂದಿದೆ.
ಸಚಿವ ಮಂಕಾಳ ವೈದ್ಯ ಸುಳ್ಳು ಹೇಳುತ್ತಿದ್ದಾರೆ: ದಾಖಲೆ ಬಿಡುಗಡೆ ಮಾಡಿ ಬಿಜೆಪಿ ವಾಗ್ದಾಳಿ
ಭಟ್ಕಳ: ಸಿರಸಿ ಮಾರಿಕಾಂಬಾ ಜಾತ್ರೆಯ ಸಭೆಯಲ್ಲಿ ಸಚಿವ ಮಂಕಾಳ ವೈದ್ಯ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಹೊಸ ಬಸ್ಗಳು ಬಂದಿಲ್ಲ ಎಂದು ಹೇಳಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆರೋಪಿಸಿದ್ದಾರೆ. ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಸ್ಆರ್ಟಿಸಿ ಇಲಾಖೆಯಿಂದ ಪಡೆದ ಅಧಿಕೃತ ದಾಖಲೆಗಳನ್ನು ಬಿಡುಗಡೆ ಮಾಡಿ ತಮ್ಮ ಆರೋಪಕ್ಕೆ ಆಧಾರ ನೀಡಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಯಾವುದೇ ಹೊಸ ಬಸ್ ಬಂದಿಲ್ಲ ಎಂಬ ಸಚಿವರ ಹೇಳಿಕೆ ಯನ್ನು ಅವರು ಖಂಡಿಸಿದರು. “ಸಚಿವರು ಸಿರಸಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಕಳೆದ ಏಳು ವರ್ಷಗಳಲ್ಲಿ ಒಂದೂ ಹೊಸ ಬಸ್ ಬಂದಿಲ್ಲ ಎಂದು ಹೇಳಿದ್ದರು. ಆದರೆ ಕೆಎಸ್ಆರ್ಟಿಸಿ ದಾಖಲೆಗಳ ಪ್ರಕಾರ 2018–19ರಿಂದ 2022–23ರ ಅವಧಿಯಲ್ಲಿ, ಅಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿರಸಿ ವಿಭಾಗಕ್ಕೆ ಒಟ್ಟು 87 ಹೊಸ ಬಸ್ಗಳು ಮಂಜೂರಾಗಿವೆ. ಇದರಲ್ಲಿ ಸಿರಸಿ ಘಟಕವೊಂದಕ್ಕೇ 28 ಬಸ್ಗಳು ಸೇರಿವೆ” ಎಂದು ಮೂರ್ತಿ ವಿವರಿಸಿದರು. ಧಾರ್ಮಿಕ ಸಭೆಯಂತಹ ಪವಿತ್ರ ವೇದಿಕೆಯಲ್ಲಿ ರಾಜಕೀಯ ಬೆರೆಸಿ ಸುಳ್ಳು ಹೇಳಿರುವುದು ಖಂಡನೀಯ ಎಂದು ಟೀಕಿಸಿದ ಅವರು, “ಸಚಿವರು ತಾಯಿ ಮಾರಿಕಾಂಬೆಯ ಮುಂದೆ ಕ್ಷಮೆ ಯಾಚಿಸಬೇಕು” ಎಂದು ಆಗ್ರಹಿಸಿದರು. ಮಂಕಿ ಕ್ಷೇತ್ರದ ಚುನಾವಣಾ ಸೋಲಿನ ಹತಾಶೆಯಿಂದ ಸಚಿವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ ಅನಂತಪುರ, ಧಾರ್ಮಿಕ ಸಭೆಗಳಲ್ಲಿಯೂ ಬಿಜೆಪಿ ವಿರುದ್ಧ ರಾಜಕೀಯ ಟೀಕೆ ನಡೆಸುತ್ತಿರು ವುದು ಸರಿಯಲ್ಲ ಎಂದರು. ಬೆಡ್ತಿ–ವರದಾ ಲಿಂಕ್ ಯೋಜನೆ ಕುರಿತು ಸ್ವಾಮೀಜಿಗಳ ಮುಂದೆ ಒಂದು ಮಾತು, ಸಾರ್ವಜನಿಕ ಸಭೆಗಳಲ್ಲಿ ಮತ್ತೊಂದು ಮಾತು ಹೇಳುವ ಮೂಲಕ ಸಚಿವರು ದ್ವಂದ್ವ ನಿಲುವು ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು. ಕುಮಟಾ ಮತ್ತು ಭಟ್ಕಳ ಭಾಗದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದಾಗಿ ಘೋಷಿಸಿದ್ದ ಸಚಿವರು, ಈಗ ಸರ್ಕಾರಿ ಆಸ್ಪತ್ರೆ ನಿರ್ಮಾಣ ಬಿಟ್ಟು ತಮ್ಮ ಹೆಸರಿನಲ್ಲಿ ಆಸ್ಪತ್ರೆ ಕಟ್ಟಲು ಮುಂದಾಗಿರುವುದೇ ಎಂಬ ಪ್ರಶ್ನೆಯನ್ನೂ ಅವರು ಎತ್ತಿದರು. ಸಿರಸಿಯಲ್ಲಿ ಈ ಹಿಂದೆ ಮಂಜೂರಾಗಿದ್ದ 142 ಕೋಟಿ ರೂ. ಆಸ್ಪತ್ರೆ ಉಪಕರಣಗಳ ಯೋಜನೆಗೆ ನೀಡಲಾಗಿದ್ದ 30 ಕೋಟಿ ರೂ. ಅನುದಾನವನ್ನು ಇದೀಗ 5 ಕೋಟಿ ರೂ.ಗೆ ಇಳಿಸಲಾಗಿದೆ ಎಂದು ದೂರಿದರು. ಇದೇ ವೇಳೆ ಸಮುದ್ರದಲ್ಲಿನ ಪ್ಲಾಸ್ಟಿಕ್ ತ್ಯಾಜ್ಯ ತೆರವುಗೊಳಿಸುವ 850 ಕೋಟಿ ರೂ. ಮೊತ್ತದ ಯೋಜನೆಯ ಸ್ಥಿತಿ ಏನು? ಎಷ್ಟು ಪ್ಲಾಸ್ಟಿಕ್ ಸಂಗ್ರಹಿಸಲಾಗಿದೆ ಎಂಬ ಕುರಿತು ಸಚಿವರು ಸ್ಪಷ್ಟನೆ ನೀಡಲಿ ಎಂದು ಅವರು ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಮೇಶ್ ನಾಯ್ಕ ಕುಪ್ಪಳ್ಳಿ, ಗಣೇಶ್ ಹೆಗಡೆ ಯಲ್ಲಾಪುರ, ಮಂಜುನಾಥ್ ನಾಯ್ಕ ಮಾರಿಗುಡ್ಡಿ, ರಾಘವೇಂದ್ರ ನಾಯ್ಕ, ಶ್ರೀನಿವಾಸ ನಾಯ್ಕ ಇದ್ದರು.
ಜ. 26ರಿಂದ ಉಳ್ಳಾಲದಲ್ಲಿ ಬೃಹತ್ ಕಮ್ಯುನಿಟಿ ಫೆಸ್ಟ್; ಕ್ರೀಡಾ ಕೂಟ, ಉದ್ಯೋಗ ಮೇಳ, ರಕ್ತದಾನ ಶಿಬಿರ
ಮಂಗಳೂರು, ಜ.24: ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಶನ್(ಯುಇಎ) ವತಿಯಿಂದ ಉಳ್ಳಾಲದಲ್ಲಿ ಏಳು ದಿನಗಳ ಕಾಲ ಬೃಹತ್ ಕಮ್ಯುನಿಟಿ ಫೆಸ್ಟ್ -ಕ್ರೀಡಾ ಕೂಟ, ಉದ್ಯೋಗ ಮೇಳ, ರಕ್ತದಾನ ಶಿಬಿರ ಮತ್ತು ಆಹಾರ ಮೇಳ ನಡೆಯಲಿದೆ ಎಂದು ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಶನ್(ಯುಇಎ) ಕರ್ನಾಟಕ ರಾಜ್ಯಾಧ್ಯಕ್ಷ ಮುಹಮ್ಮದ್ ಸಿರಾಜುದ್ದೀನ್ ಎರ್ಮಾಳ್ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಳ್ಳಾಲದಲ್ಲಿ 7 ದಿನಗಳ ಕಾಲ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಹಾಗೂ ಕಾಸರಗೋಡು ಜಿಲ್ಲೆಗಳ ಪ್ರತಿಭಾನ್ವಿತ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು. ರಾಜ್ಯದ ಬಲಿಷ್ಠ ಆಟಗಾರರನ್ನೊಳಗೊಂಡ ವಿವಿಧ ತಂಡಗಳು ಲೀಗ್ ಮಾದರಿಯ ಪಂದ್ಯಾ ಕೂಟದಲ್ಲಿ ಪೈಪೋಟಿ ನಡೆಸಲಿದೆ. ಕಬಡ್ಡಿ, ವಾಲಿಬಾಲ್ ಮತ್ತು ಕ್ರಿಕೆಟ್ ಲೀಗ್ ಟೂರ್ನಿಯಲ್ಲಿ ಇರುತ್ತದೆ. ಉತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಮುಂದಿನ ದಿನಗಳಲ್ಲಿ ಉತ್ತಮ ತರಬೇತಿಗಾಗಿ ಯುಇಎ ಸಂಸ್ಥೆಯು ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದು ವಿವರಿಸಿದರು. ಜ.26ರಂದು ಸಂಜೆ 4 ಗಂಟೆಗೆ ಉಳ್ಳಾಲದಲ್ಲಿ ಎಲ್ಲ ಕ್ರೀಡಾಪಟುಗಳ ಪಥ ಸಂಚಲನ ಹಾಗೂ ಮೆರವಣಿಗೆಯೊಂದಿಗೆ ಆರಂಭಗೊಂಡು ಉಳ್ಳಾಲದ ಸೀ ಗ್ರೌಂಡ್ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ವಿವಿಧ ರಾಜಕೀಯ, ಸಾಮಾಜಿಕ ಕ್ಷೇತ್ರದ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿ ದ್ದಾರೆ. ಸ್ಪೀಕರ್ ಇಲೆವನ್ಸ್ ಹಾಗೂ ಕಮಿಷನರ್ ಇಲೆವೆನ್ಸ್ ತಂಡಗಳ ವಿರುದ್ಧ ಪ್ರದರ್ಶನ ಕ್ರಿಕೆಟ್ ಪಂದ್ಯಾಟ ನಡೆಯಲಿದೆ. ರಾಷ್ಟ್ರ ಮಟ್ಟದ ಆಟಗಾರರೇ ಪ್ರಮುಖ ಆಕರ್ಷಣೆ:ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಹಲವಾರು ಕ್ರೀಡಾಪಟುಗಳು ಭಾಗವಹಿಸಲಿದ್ದು, ಟೆನ್ನಿಸ್ ಕ್ರಿಕೆಟ್ನಲ್ಲಿ ದೇಶದಲ್ಲೇ ಅತ್ಯಂತ ಹೆಚ್ಚು ಅಭಿಮಾನಿ ಗಳನ್ನು ಹೊಂದಿರುವ ಉಸ್ಮಾನ್ ಪಟೇಲ್, ಸಲೀಂ ಮೈಟಿ ಸೇರಿದಂತೆ ವಿವಿಧ ಆಟಗಾರರು ವುಮುಖ ಆಕರ್ಷಣೆಯಾಗಲಿದ್ದಾರೆ. ಸೀ ಗ್ರೌಂಡ್ನಲ್ಲಿ ವಿಭಿನ್ನ ರೀತಿಯ ಏರ್ ಶೋ ಆಯೋಜನೆ ಮಾಡಲಾಗುವುದು. ಇದು ಪ್ರಮುಖ ಆಕರ್ಷಣೆಯಾಗಲಿದೆ ಎಂದು ಸಿರಾಜ್ ಎಂದು ಮುಹಮ್ಮದ್ ಸಿರಾಜುದ್ದೀನ್ ಮಾಹಿತಿ ನೀಡಿದರು. ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಷನ್ ರಾಜ್ಯಮಟ್ಟದ ಕ್ರೀಡಾ ಪ್ರತಿಭೆಗಳಿಗೆ ತರಬೇತಿ, ಅವರಿಗೆ ರಾಷ್ಟ್ರ ಮಟ್ಟದಲ್ಲಿ ಒದಗಿಸಲು ಶ್ರಮಿಸುವುದು, ಕ್ರೀಡೆಯನ್ನು ವೃತ್ತಿಯಾಗಿ ಪರಿಗಣಿಸಲು ಉತ್ತೇಜಿಸುವುದು, ಸಮುದಾಯದಲ್ಲಿ ಕ್ರೀಡಾಪರ ಒಲವು ಮೂಡಿಸುವುದು, ಕ್ರೀಡೆಯಲ್ಲಿ ಸಮುದಾಯದ ಸಬಲೀಕರಣ ಮತ್ತಿತರ ಉದ್ದೇಶಗಳನ್ನು ಹೊಂದಿದೆ ಎಂದರು. ಭಾರತೀಯ ಸೊಸೈಟಿ ಕಾಯ್ದೆಯಡಿ ನೋಂದಾಯಿತವಾದ ಈ ಸಂಸ್ಥೆ ಕರ್ನಾಟಕದಲ್ಲಿ ಕ್ರೀಡೆ ಮತ್ತು ಕ್ರೀಡಾಪಟು ಗಳನ್ನು ಬೆಳೆಸಲು ಶ್ರಮಿಸುತ್ತಿರುವುದಲ್ಲದೇ ಕ್ರೀಡಾ ಕ್ಷೇತ್ರದಲ್ಲಿ ಪ್ರಮುಖ ಧ್ವನಿಯಾಗಿ ಹೊರಹೊಮ್ಮಲು ಸಂಸ್ಥೆಯು ಕಾರ್ಯಾಚರಿಸುತ್ತಿದೆ. ಕ್ರೀಡಾಪಟುಗಳ ಜೀವನದಲ್ಲಿ ಕಾರ್ಯಬದ್ಧ ಒಕ್ಕೂಟವನ್ನು ನಿರ್ಮಿಸಿ ಬೆಳಸಿ, ಮುನ್ನಡೆಸುವ ಗುರಿ ಇಟ್ಟುಕೊಂಡಿರುವ ಯುಇಎ ಸಂಸ್ಥೆಯು ಕ್ರಿಕೆಟ್, ಫುಟ್ಬಾಲ್ , ವಾಲಿಬಾಲ್, ಕಬಡ್ಡಿ, ಶಟಲ್ ಬ್ಯಾಡ್ಮಿಂಟನ್, ಚೆಸ್, ಕ್ಯಾರಂ, ಟೇಬಲ್ ಟೆನ್ನಿಸ್, ಖೋ-ಖೋ, ತೋ ಬಾಲ್, ಕುಸ್ತಿ, ಕರಾಟೆ, ಜುಡೋ, ಓಟ, ಜಂಪಿಂಗ್, ತ್ರೋ ಹಾಗೂ ಸ್ಟೇಟಿಂಗ್ ಮುಂತಾದ ವಿವಿಧ ಕ್ರೀಡಾಪಟುಗಳ ಪುರೋಗತಿಗಾಗಿ ಶ್ರಮಿಸುತ್ತಿದೆ ಎಂದು ನುಡಿದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಹಜ್ಜಾಜ್, ಕೋಶಾಧಿಕಾರಿ ಸಿರಾಜ್ ಪುತ್ತೂರು, ಸಂಸ್ಥೆಯ ಪ್ರಮುಖರಾದ ಶರೀಫ್ ಸಾಲ್ಮರ, ಶರೀಫ್ ವಳಾಲು , ಗಫೂರ್ ಫರಂಗಿಪೇಟೆ, ಸಿದ್ದೀಕ್ ಉಳ್ಳಾಲ, ತಾಜುದ್ದೀನ್ ಸುಳ್ಯ, ರಮೀಜ್ ಪಡುಬಿದ್ರೆ, ಇರ್ಫಾನ್ ಮೂಡಬಿದ್ರೆ, ರಿಯಾಝ್ ಉಳ್ಳಾಲ,ಶಫೀಕ್ ವಳಾಲು ಉಪಸ್ಥಿತರಿದ್ದರು.
TTD: ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ: ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ ಸಿಸಿಬಿ
TTD: ತಿರುಪತಿ ಲಡ್ದು ಪ್ರಸಾದದಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ತನಿಖಾ ತಂಡ ಅಂತಿಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ನಲ್ಲೂರು ಎಸಿಬಿ ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಒಟ್ಟು 36 ಪ್ರಮುಖ ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಇವರಲ್ಲಿ ಕಲಬೆರಿಕೆ ತುಪ್ಪ ಪೂರೈಸಿದ
ಬಜೆಟ್ ಅಧಿವೇಶನ| ಜ.27ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರಕಾರ
ಹೊಸದಿಲ್ಲಿ,ಜ.24: ಸರಕಾರವು ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುನ್ನ ಶಾಸಕಾಂಗ ಮತ್ತು ಇತರ ಕಾರ್ಯಸೂಚಿಗಳನ್ನು ಚರ್ಚಿಸಲು ಜ.27ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ಜ.28ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಬೈಠಕ್ನ್ನು ಉದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಸಂಸತ್ತಿನ ಇತಿಹಾಸದಲ್ಲಿ ಅಪರೂಪದ ಸಂದರ್ಭದಲ್ಲಿ ಕೇಂದ್ರ ಮುಂಗಡಪತ್ರವನ್ನು ರವಿವಾರ ಆಗಿರುವ ಫೆ.1ರಂದು ಮಂಡಿಸಲಾಗುತ್ತಿದ್ದು, ಇದು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರ ಸತತ ಒಂಭತ್ತನೇ ಬಜೆಟ್ ಆಗಲಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಅವರು ಕರೆದಿರುವ ಸರ್ವಪಕ್ಷ ಸಭೆಯು ಜ.27ರಂದು ಪೂರ್ವಾಹ್ನ 11 ಗಂಟೆಗೆ ಸಂಸತ್ ಭವನದ ಸಂಯೋಜಿತ ಕಟ್ಟಡದ ಮುಖ್ಯ ಸಮಿತಿ ಕೊಠಡಿಯಲ್ಲಿ ನಡೆಯಲಿದೆ ಎಂದು ಸರಕಾರಿ ಮೂಲವು ತಿಳಿಸಿದೆ. ಬಜೆಟ್ ಅಧಿವೇಶನವು ಎ.2ರವರೆಗೆ ನಡೆಯಲಿದೆ. ಮೊದಲ ಹಂತವು ಫೆ.13ರಂದು ಅಂತ್ಯಗೊಳ್ಳಲಿದ್ದು, ಮಾ.9ರಂದು ಸಂಸತ್ತು ಮರು ಸಮಾವೇಶಗೊಳ್ಳಲಿದೆ. ಮನರೇಗಾದ ಬದಲಿಗೆ ತರಲಾಗಿರುವ ವಿಬಿ-ಜಿ ರಾಮ್ ಜಿ ಕಾಯ್ದೆಯ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಅಭಿಯಾನ ನಡೆಸುತ್ತಿರುವ ಸಮಯದಲ್ಲಿಯೇ ಅಧಿವೇಶನ ನಡೆಯಲಿದೆ. ಈ ನಡುವೆ ಆಡಳಿತಾರೂಢ ಬಿಜೆಪಿಯು ನೂತನ ಶಾಸನವು ಸುಧಾರಣಾ ವಾದಿಯಾಗಿದೆ ಮತ್ತು ಹಳೆಯ ಕಾನೂನಿನಲ್ಲಿಯ ಲೋಪದೋಷಗಳನ್ನು ನಿವಾರಿಸಲು ಅಗತ್ಯ ಎಂದು ಬಿಂಬಿಸಲು ಪ್ರತಿ-ಅಭಿಯಾನವನ್ನು ನಡೆಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕಗಳು ಜಾಗತಿಕ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲುಗೊಳಿಸಿರುವ ಸಮಯದಲ್ಲಿ ಕೇಂದ್ರ ಮುಂಗಡಪತ್ರ ಮಂಡನೆಯಾಗಲಿದೆ. ಆಂತರಿಕ ಸುತ್ತೋಲೆಯ ಪ್ರಕಾರ ಲೋಕಸಭೆಯು ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ಚರ್ಚೆಗಾಗಿ ಫೆ.2ರಿಂದ 4ರವರೆಗೆ ಮೂರು ದಿನಗಳನ್ನು ತಾತ್ಕಾಲಿಕವಾಗಿ ನಿಗದಿಗೊಳಿಸಿದೆ. ಜ.28 ಮತ್ತು ಫೆ.1ರಂದು ಶೂನ್ಯವೇಳೆ ಇರುವುದಿಲ್ಲ. ವಿಕಸಿತ ಭಾರತ ಶಿಕ್ಷಾ ಅಧಿಷ್ಠಾನ ಮಸೂದೆ- 2025; ಸೆಕ್ಯುರಿಟೀಸ್ ಮಾರುಕಟ್ಟೆ ಸಂಹಿತೆ-2025; ಮತ್ತು ಸಂವಿಧಾನ (129ನೇ ತಿದ್ದುಪಡಿ) ಮಸೂದೆ -2024 ಸೇರಿದಂತೆ ಒಂಭತ್ತು ಮಸೂದೆಗಳು ಲೋಕಸಭೆಯಲ್ಲಿ ಬಾಕಿಯಿವೆ. ಪ್ರಸ್ತುತ ಈ ಮಸೂದೆಗಳನ್ನು ಸಂಸದೀಯ ಸ್ಥಾಯಿ ಅಥವಾ ಆಯ್ಕೆ ಸಮಿತಿಗಳು ಪರಿಶೀಲಿಸುತ್ತಿವೆ.
ಸಿಟಿಬಸ್ ಟೈಮಿಂಗ್ಸ್ ವಿಚಾರದಲ್ಲಿ ಹಲ್ಲೆ: ಮೂವರು ವಶಕ್ಕೆ
ಉಡುಪಿ, ಜ.24: ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಜ.23ರಂದು ಬೆಳಗ್ಗೆ ಬಸ್ ಟೈಮಿಂಗ್ಸ್ ವಿಚಾರದಲ್ಲಿ ಪರಸ್ಪರ ಹಲ್ಲೆ ನಡೆಸುತ್ತಿದ್ದ ಚಾಲಕ ಹಾಗೂ ನಿರ್ವಾಹಕರನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ಸೀಮಾ ಬಸ್ ಚಾಲಕ ವಿಖ್ಯಾತ್ ಮತ್ತು ನಿರ್ವಾಹಕ ಶರಣ್ ಹಾಗೂ ತನ್ವೀರ್ ಬಸ್ ನಿರ್ವಾಹಕ ಹೇಮಂತ್ ಎಂದು ಗುರುತಿಸ ಲಾಗಿದೆ. ಇವರು ಬಸ್ಸಿನ ಟೈಮಿಂಗ್ ವಿಚಾರಕ್ಕೆ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದು, ದೂಡಾಡಿಕೊಂಡು ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಭಯದ ಮತ್ತು ಪ್ರಕ್ಷುಬ್ದ ವಾತಾವರಣ ಉಂಟು ಮಾಡಿದ್ದರೆಂದು ದೂರಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೈಮಿಂಗ್ಸ್ ವಿಚಾರ: ಖಾಸಗಿ ಬಸ್ ಚಾಲಕನಿಗೆ ಮಾರಣಾಂತಿಕ ಹಲ್ಲೆ ಉಡುಪಿ: ಬಸ್ ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕ ನೋರ್ವ, ಇನ್ನೊಂದು ಬಸ್ಸಿನ ಚಾಲಕನಿಗೆ ಸ್ಕೂ ಡ್ರೈವರ್ನಿಂದ ಚುಚ್ಚಿ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಜ.23ರಂದು ಸಂಜೆ 5ಗಂಟೆಗೆ ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಬಸ್ ಟೈಮಿಂಗ್ ವಿಚಾರದಲ್ಲಿ ಸೆಲೀನ ಬಸ್ ಚಾಲಕನಾದ ಸದ್ದಾಂ ಮತ್ತು ನವದುರ್ಗಾ ಬಸ್ ಚಾಲಕ ರಿಯಾಝ್ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಆಗ ಸದ್ದಾಂ ಅವಾಚ್ಯ ಶಬ್ದಗಳಿಂದ ಬೈದು ಸ್ಕೂ ಡ್ರೈವರ್ ನಿಂದ ರಿಯಾಜ್ ಅವರ ಎಡಕಣ್ಣಿನ ಮೇಲ್ಬಾಗಕ್ಕೆ ಚುಚ್ಚಿದನು ಎನ್ನಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡ ರಿಯಾಝ್ನನ್ನು ಹಿಂಬಾಲಿಸಿಕೊಂಡು ಹೋದ ಸದ್ದಾಂ, ಅಡ್ಡಗಟ್ಟಿ ಕೊಲ್ಲುವ ಉದ್ದೇಶದಿಂದ ಸ್ಕೂ ಡ್ರೈವರ್ನಿಂದ ಮತ್ತೆ ಚುಚ್ಚಿ ಮಾರಣಾಂತಿಕ ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿರುವುದಾಗಿ ದೂರಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ರಿಯಾಝ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uttar Pradesh | NEETನಲ್ಲಿ ಎರಡು ಬಾರಿ ಫೈಲ್: ಅಂಗವೈಕಲ್ಯ ಕೋಟಾದಡಿ ವೈದ್ಯಕೀಯ ಸೀಟಿಗಾಗಿ ಪಾದ ಕತ್ತರಿಸಿಕೊಂಡ ಯುವಕ!
ಲಕ್ನೋ, ಜ.24: ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಂಗವೈಕಲ್ಯ ಕೋಟಾದಡಿ ಪ್ರವೇಶ ಪಡೆಯುವ ಉದ್ದೇಶದಿಂದ ಉತ್ತರ ಪ್ರದೇಶದ ಯುವಕನೊಬ್ಬ ತನ್ನದೇ ಪಾದ ಕತ್ತರಿಸಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸುಮಾರು 20 ವರ್ಷದ ಸೂರಜ್ ಭಾಸ್ಕರ್, ರಾಷ್ಟ್ರೀಯ ಅರ್ಹತಾ–ಪ್ರವೇಶ ಪರೀಕ್ಷೆ (NEET)ಯಲ್ಲಿ ಎರಡು ಬಾರಿ ಅನುತ್ತೀರ್ಣನಾಗಿದ್ದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣದ ಕನಸನ್ನು ನನಸಾಗಿಸಿಕೊಳ್ಳಲು ಅಂಗವೈಕಲ್ಯ ಕೋಟಾದಡಿ ಪ್ರವೇಶ ಪಡೆಯುವ ಉದ್ದೇಶದಿಂದ ಆತ ದೈಹಿಕವಾಗಿ ಅಂಗವಿಕಲನಾಗುವ ಯೋಜನೆಯನ್ನು ರೂಪಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಘಟನೆ ಜೌನ್ಪುರ ಜಿಲ್ಲೆಯ ಖಲೀಲ್ಪುರ ಗ್ರಾಮದಲ್ಲಿ ನಡೆದಿದೆ. ಸೂರಜ್ ತನ್ನ ಪಾದವನ್ನು ಸ್ವಯಂ ಕತ್ತರಿಸಿಕೊಂಡು, ಅದನ್ನು “ಅಪರಿಚಿತರಿಂದ ನಡೆದ ಕ್ರಿಮಿನಲ್ ದಾಳಿ” ಎಂದು ಬಿಂಬಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ರವಿವಾರ (ಜನವರಿ 18, 2026) ಸೂರಜ್ ನ ಅಣ್ಣ ಆಕಾಶ್ ಭಾಸ್ಕರ್ ಪೊಲೀಸರಿಗೆ ದೂರು ನೀಡಿದ್ದು, ಹಿಂದಿನ ರಾತ್ರಿ ಅಪರಿಚಿತರು ಸೂರಜ್ ಮೇಲೆ ಹಲ್ಲೆ ನಡೆಸಿ, ಅವನ ಪಾದ ಕತ್ತರಿಸಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದ ಎನ್ನಲಾಗಿದೆ. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದರು. ನಂತರ ಪ್ರಕರಣವನ್ನು ನಗರ ವೃತ್ತಾಧಿಕಾರಿ ಗೋಲ್ಡಿ ಗುಪ್ತಾ ಅವರಿಗೆ ಹಸ್ತಾಂತರಿಸಲಾಯಿತು. ತನಿಖೆಯ ವೇಳೆ ಸೂರಜ್ ನೀಡಿದ ಹೇಳಿಕೆಗಳಲ್ಲಿ ಹಲವು ಅನುಮಾನಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸೂರಜ್ ನ ಮೊಬೈಲ್ ಫೋನ್ ಪರಿಶೀಲನೆ ನಡೆಸಲಾಗಿದ್ದು, ತನಿಖೆಯಲ್ಲಿ ಪತ್ತೆಯಾದ ಮಹಿಳೆಯನ್ನು ವಿಚಾರಿಸಿದ ಬಳಿಕ ಪೊಲೀಸರ ಅನುಮಾನಗಳು ಮತ್ತಷ್ಟು ಹೆಚ್ಚಾಯಿತು. ಇದಲ್ಲದೆ, ತನಿಖಾಧಿಕಾರಿಗಳು ಸೂರಜ್ಗೆ ಸೇರಿದ ಡೈರಿಯನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ “ನಾನು 2026ರಲ್ಲಿ ಎಂಬಿಬಿಎಸ್ ವೈದ್ಯನಾಗುತ್ತೇನೆ” ಎಂಬ ವಾಕ್ಯ ಬರೆದಿರುವುದು ಪತ್ತೆಯಾಗಿದೆ. ನೀಟ್ ಪರೀಕ್ಷೆಯಲ್ಲಿ ಎರಡು ಬಾರಿ ಉತ್ತೀರ್ಣರಾಗಲು ವಿಫಲವಾದ ಹಿನ್ನೆಲೆಯಲ್ಲಿ ಸೂರಜ್ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಅಂಗವೈಕಲ್ಯ ಕೋಟಾದಡಿ ವೈದ್ಯಕೀಯ ಕಾಲೇಜು ಪ್ರವೇಶ ಪಡೆಯಲು ಆತ ಉದ್ದೇಶಪೂರ್ವಕವಾಗಿ ತನ್ನ ಪಾದವನ್ನು ಕತ್ತರಿಸಿಕೊಂಡು, ಘಟನೆಯನ್ನು ಕ್ರಿಮಿನಲ್ ದಾಳಿ ಎಂದು ತೋರಿಸುವ ಯೋಜನೆಯನ್ನು ರೂಪಿಸಿದ್ದಾನೆ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬುಧವಾರ (ಜನವರಿ 21, 2026) ತನಿಖೆಯ ವಿವರಗಳನ್ನು ಹಂಚಿಕೊಂಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಆಯುಷ್ ಶ್ರೀವಾಸ್ತವ, “ಆರೋಪಿಯು ಸುಳ್ಳು ಕಥೆಯ ಮೂಲಕ ತನಿಖೆಯನ್ನು ದಾರಿ ತಪ್ಪಿಸಲು ಯತ್ನಿಸಿದ್ದಾನೆ. ಆದರೆ ನಿರಂತರ ವಿಚಾರಣೆ ಮತ್ತು ಲಭ್ಯವಿರುವ ಸಾಕ್ಷ್ಯಗಳ ಪರಿಶೀಲನೆಯ ವೇಳೆ ಅವನ ಹೇಳಿಕೆಗಳು ಒಂದಕ್ಕೊಂದು ತಾಳೆಯಾಗುತ್ತಿಲ್ಲ,” ಎಂದು ತಿಳಿಸಿದ್ದಾರೆ. ಸೂರಜ್ ವಿರುದ್ಧ ಕ್ರಿಮಿನಲ್ ಕಾನೂನಿನ ಯಾವ ಯಾವ ವಿಧಿಗಳನ್ನು ಅನ್ವಯಿಸಬಹುದು ಎಂಬ ಕುರಿತು ಪೊಲೀಸರು ಪ್ರಸ್ತುತ ಕಾನೂನು ಅಭಿಪ್ರಾಯ ಪಡೆಯುತ್ತಿದ್ದು, ಮುಂದಿನ ಕಾನೂನು ಕ್ರಮ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಸೂರಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಲೈನ್ ಬಜಾರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಸತೀಶ್ ಸಿಂಗ್ ಮಾಹಿತಿ ನೀಡಿದ್ದಾರೆ.
ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಭಾತೃತ್ವದ ದಿನಾಚರಣೆ
ಕಾರ್ಕಳ, ಜ.24: ‘ದಿವ್ಯ ಪರಮ ಪ್ರಸಾದದ ಮೂಲಕ ಸಮುದಾಯದ ನಿರ್ಮಾಣ’ ಎಂಬ ಈ ವರ್ಷದ ಕೇಂದ್ರ ವಿಷಯದೊಂದಿಗೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಇಂದು ಭಾತೃತ್ವದ ದಿನವನ್ನು ಭಕ್ತಿಪೂರ್ಣವಾಗಿ ಆಚರಿಸಲಾಯಿತು. ದಿವ್ಯ ಬಲಿಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಬಿಜೈ ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ಧರ್ಮಗುರು ವಂ.ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ, ಪ್ರಧಾನ ಧರ್ಮಗುರುಗಳಾಗಿ ನೆರವೇರಿಸಿದರು. ಅವರು ತಮ್ಮ ಸಂದೇಶದಲ್ಲಿ, ದಿವ್ಯ ಪರಮ ಪ್ರಸಾದ ಕ್ರೈಸ್ತ ಜೀವನದ ಮೂಲ ಮತ್ತು ಶಿಖರವಾ ಗಿದ್ದು, ಅದರ ಮೂಲಕ ಏಕತೆ, ಸೇವೆ ಮತ್ತು ಸಾರ್ವತ್ರಿಕ ಸಹೋದರತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿಶ್ವಾಸಿಗಳಿಗೆ ಕರೆ ನೀಡಿದರು. ಪವಿತ್ರ ಬಲಿಪೂಜೆಯಲ್ಲಿ ಸಂತ ಲಾರೆನ್ಸ್ ಬಸಿಲಿಕಾದ ಧರ್ಮಗುರು ವಂ.ಆಲ್ಟನ್ ಡಿಸೋಜ, ಸಹಾಯಕ ಧರ್ಮ ಗುರು ವಂ.ರಾಬಿನ್ ಸಂತುಮಾಯರ್, ಆಧ್ಯಾತ್ಮಿಕ ನಿರ್ದೇಶಕ ವಂ.ರೋಮನ್ ಹಾಗೂ ಇತರ ಧರ್ಮಗುರುಗಳು ಭಾಗವಹಿಸಿದ್ದರು. ಪವಿತ್ರ ಬಲಿಪೂಜೆಯ ನಂತರ ಭಕ್ತಿಭರಿತ ದಿವ್ಯ ಪರಮ ಪ್ರಸಾದದ ಮೆರವಣಿಗೆ ನಡೆಯಿತು. ಪವಿತ್ರ ಸಂಸ್ಕಾರವನ್ನು ದೇವಾಲಯದ ಆವರಣದಿಂದ ದೂಪದಕಟ್ಟೆ ವೃತ್ತದವರೆಗೆ ಮೆರವಣಿಗೆಯಲ್ಲಿ ಹೊತ್ತುಕೊಂಡು ಹೋಗಲಾಯಿತು. ವಂ.ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪವಿತ್ರ ಸಂಸ್ಕಾರದ ಆರಾಧನೆ ನಡೆಸಿ, ಉಪನ್ಯಾಸ ನೀಡಿ, ಬಳಿಕ ಸೇರಿದ್ದ ಎಲ್ಲ ವಿಶ್ವಾಸಿಗಳಿಗೆ ದಿವ್ಯ ಪರಮ ಪ್ರಸಾದದ ಆಶೀರ್ವಾದವನ್ನು ನೀಡಿದರು.
ಜೈಲಿನಲ್ಲಿ ಹೊಸ ನಿಯಮ ಜಾರಿಗೆ ಡಿಜಿಪಿ ಆದೇಶ: ದರ್ಶನ್ ಸೇರಿ ಕೈದಿಗಳ ಹೆಚ್ಚುವರಿ ಸವಲತ್ತುಗಳಿಗೆ ಬ್ರೇಕ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಇತ್ತೀಚೆಗೆ ಜೈಲಲ್ಲಿರುವ ಆರೋಪಿ ಪವಿತ್ರಾ ಗೌಡಗೆ ಮನೆ ಊಟದ ಸೌಲಭ್ಯಕ್ಕೆ ಕೋರ್ಟ್ ಬ್ರೇಕ್ ಹಾಕಿತ್ತು. ಇದೀಗ ಆರೋಪಿ, ನಟ ದರ್ಶನ್ ತೂಗುದೀಪಗೆ ಜೈಲಿನಲ್ಲಿ ನೀಡಿರುವ ಹೆಚ್ಚುವರಿ ಬೆಡ್ಶೀಟ್ ಸವಲತ್ತಿಗೂ ಕುತ್ತು ಬರುವ ಸಾಧ್ಯತೆ ಇದೆ. ಏಕೆಂದರೆ ರಾಜ್ಯದ ಎಲ್ಲ ಜೈಲಾಧಿಕಾರಿಗಳಿಗೆ ಕೈದಿಗಳಿಗೆ ನೀಡುವ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಿಸುವ ಬಗ್ಗೆ
ಕಾಮಗಾರಿ ನಿರ್ವಹಣೆಯಲ್ಲಿ ನಿಯಮ ಉಲ್ಲಂಘನೆ ಆರೋಪ: ಶಿರಾಡಿ ಗ್ರಾ.ಪಂ. ಸದಸ್ಯ ಪೌಲೋಸ್ ಅನರ್ಹ
ಉಪ್ಪಿನಂಗಡಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ನಿರ್ವಹಣೆಯಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಸಾಬೀತುಗೊಂಡ ಹಿನ್ನೆಲೆಯಲ್ಲಿ ಶಿರಾಡಿ ಗ್ರಾಮ ಪಂಚಾಯತ್ ಸದಸ್ಯ ಎಂ.ಕೆ.ಪೌಲೋಸ್ ಅವರನ್ನು ಸದಸ್ಯ ಸ್ಥಾನದಿಂದ ತೆಗೆದು ಹಾಕಿ ಮುಂದಿನ ಆರು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಪೀಠಾಧಿಕಾರಿ (ಗ್ರಾಮ ಪಂಚಾಯತ್) ಶಿವಕುಮಾರ ಅವರು ಆದೇಶ ಹೊರಡಿಸಿದ್ದಾರೆ. ಎಂ.ಕೆ.ಪೌಲೋಸ್ ಅವರು 2001-2002 ರಿಂದ 2020-2021ರವರೆಗೆ ನಿರಂತರವಾಗಿ ಶಿರಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಅವಧಿಯಲ್ಲಿ ಶಿರಾಡಿ ಗ್ರಾಮ ಪಂಚಾಯತ್ನ ಗುತ್ತಿಗೆ ಕೆಲಸವನ್ನು ಪತ್ನಿ ಮೇರಿ ಪೌಲೋಸ್ರವರಿಗೆ ಮಂಜೂರು ಮಾಡಿಸಿ ಲಾಭದಾಯಕ ಹುದ್ದೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಾಬು ಯು.ಜಿ. ಶಿರಾಡಿ ಎಂಬವರು 26.11.2021ರಂದು ಕರ್ನಾಟಕ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತರು ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ತಂಡ ರಚಿಸಿ, ಪಡೆದಿರುವ ತನಿಖಾ ವರದಿಯಲ್ಲಿ ಎಂ.ಕೆ.ಪೌಲೋಸ್ ಅವರು ತಮ್ಮ ಪತ್ನಿಯ ಹೆಸರಿನಲ್ಲಿ ಕಾಮಗಾರಿಗಳನ್ನು ನಿರ್ವಹಿಸಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಅವರ ಸದಸ್ವತ್ವ ರದ್ದತಿಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಾದೇಶಿಕ ಆಯುಕ್ತರ ವರದಿ; ಎಂ.ಕೆ.ಪೌಲೋಸ್ ಅವರ ಕುಟುಂಬ ಸದಸ್ಯರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸಿ, ನಿಯಮಗಳನ್ನು ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಕಲಂ 43(ಎ)ರಡಿ ಕ್ರಮ ಜರಗಿಸಲು ಪ್ರಾದೇಶಿಕ ಆಯುಕ್ತರು ಈ ಮುಂದಿನಂತೆ ವರದಿ ಸಲ್ಲಿಸಿದ್ದರು. ಎಂ.ಕೆ.ಪೌಲೋಸ್ ಅವರು ಶಿರಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಅವರ ಪತ್ನಿ ಮೇರಿಯವರು ಸಿವಿಲ್ ಗುತ್ತಿಗೆ ಲೈಸನ್ಸ್ ಹೊಂದಿರುತ್ತಾರೆ. ಇವರು ಶಿರಾಡಿ ಗ್ರಾಮ ಪಂಚಾಯತ್ನ ಕೆಲವೊಂದು ಕಾಮಗಾರಿಗಳನ್ನು ಗುತ್ತಿಗೆಗೆ ಪಡೆದು ನಿರ್ವಹಿಸಿರುವುದು ಗ್ರಾ.ಪಂ. ದಾಖಲೆಗಳಿಂದ ಕಂಡುಬಂದಿರುತ್ತದೆ. ಎಂ.ಕೆ.ಪೌಲೋಸ್ ಅವರು ಶಿರಾಡಿ ಗ್ರಾ.ಪಂ.ನಲ್ಲಿ 2007ರಿಂದ 2010ರ ತನಕ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರ ಪತ್ನಿ ಮೇರಿ ಅವರು 2007-08ನೇ ಸಾಲಿನಲ್ಲಿ 6 ಕಾಮಗಾರಿ, 2009-10ನೇ ಸಾಲಿನಲ್ಲಿ 5 ಕಾಮಗಾರಿ, 2010-11ನೇ ಸಾಲಿನಲ್ಲಿ 1 ಕಾಮಗಾರಿ ನಿರ್ವಹಿಸಿ 5,77,938 ರೂ.ಬಿಲ್ಲಿನ ಮೊತ್ತ ಪಡೆದುಕೊಂಡಿದ್ದಾರೆ. 2015ರಿಂದ 2020ನೇ ಸಾಲಿನ ತನಕ ಸದಸ್ಯರಾಗಿದ್ದ ಅವಧಿಯಲ್ಲಿ ಅವರ ಪತ್ನಿ ಮೇರಿ ಅವರು 2015-16ನೇ ಸಾಲಿನಲ್ಲಿ 3 ಕಾಮಗಾರಿ ಮತ್ತು 2018-19ನೇ ಸಾಲಿನಲ್ಲಿ 1 ಕಾಮಗಾರಿ, 2019-20ನೇ ಸಾಲಿನಲ್ಲಿ 5 ಕಾಮಗಾರಿ ಸೇರಿ ಒಟ್ಟು ರೂ.4,72,075 ಬಿಲ್ಲು ಪಡೆದುಕೊಂಡಿದ್ದಾರೆ. 2020-21ನೇ ಸಾಲಿನಲ್ಲಿ ಮೇರಿಯವರಿಗೆ ಗ್ರಾ.ಪಂ.ನ ಕಾಮಗಾರಿ ನಿರ್ವಹಿಸಲು ಲಿಖಿತ ಆದೇಶ ನೀಡಿರುವುದು ಕಂಡು ಬಂದಿರುವುದಿಲ್ಲ. ಆದರೆ 2020-21ರಲ್ಲಿ 14 ಮತ್ತು 15ನೇ ಹಣಕಾಸು ಅನುದಾನದ 8 ಕಾಮಗಾರಿ ನಿರ್ವಹಿಸಿದ್ದು ರೂ.10,93,464 ಬಿಲ್ಲುಗಳನ್ನು ಪಡೆದುಕೊಂಡಿರುವುದು ಕಂಡು ಬಂದಿದೆ. ಮೇರಿ ಪೌಲೋಸ್ ಅವರು ತಮ್ಮ ಪತಿ ಶಿರಾಡಿ ಗ್ರಾ.ಪಂ. ಸದಸ್ಯರಾಗಿರುತ್ತಾರೆ ಎಂದು ತಿಳಿದಿದ್ದರೂ ಸಹ ಇದೇ ಗ್ರಾಮ ಪಂಚಾಯತ್ನ ಕೆಲವು ಕಾಮಗಾರಿಗಳನ್ನು ಪಡೆದುಕೊಂಡು ಬಿಲ್ಲುಗಳನ್ನು ಪಡೆದುಕೊಂಡಿರುವುದು ನಿಯಮಬಾಹಿರವಾಗಿರುತ್ತದೆ. ಆದ್ದರಿಂದ ಸದರಿಯವರ ವಿರುದ್ಧ ಕ್ರಮ ಜರಗಿಲು ಶಿಫಾರಸ್ಸು ಮಾಡಿದ್ದರು. ನೋಟಿಸ್ ಸ್ವೀಕರಿಸಿದರೂ ಸಮಜಾಯಿಷಿ ಸಲ್ಲಿಸಿಲ್ಲ; ಪ್ರಾದೇಶಿಕ ಆಯುಕ್ತರು ಸಲ್ಲಿಸಿರುವ ವಿಚಾರಣಾ ವರದಿಯನ್ನು ಅಂಗೀಕರಿಸುವ ಪೂರ್ವದಲ್ಲಿ ಎಂ.ಕೆ.ಪೌಲೋಸ್ ಅವರಿಗೆ ಉತ್ತರಿಸಲು ಸಾಕಷ್ಟು ಕಾಲಾವಕಾಶ ನೀಡಿ, ಪ್ರಾದೇಶಿಕ ಆಯುಕ್ತರು ಸಲ್ಲಿಸಿರುವ ವಿಚಾರಣಾ ವರದಿಯೊಂದಿಗೆ 27-5-2025 ಮತ್ತು 25-0-2025ರಂದು ಕಾರಣ ಕೇಳುವ ನೋಟಿಸ್ಗಳನ್ನು ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಾರಿಗೊಳಿಸಲಾಗಿದೆ. ಸದ್ರಿ ಕಾರಣ ಕೇಳುವ ನೋಟೀಸನ್ನು ಎಂ.ಕೆ.ಪೌಲೋಸ್ ಅವರು 10.7.2025ರಂದು ಖುದ್ದಾಗಿ ಸ್ವೀಕರಿಸಿದ್ದರೂ ಲಿಖಿತ ಸಮಜಾಯಿಷಿಯನ್ನು ಸಲ್ಲಿಸಿರಲಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಂ.ಕೆ.ಪೌಲೋಸ್ ಅವರ ಪತ್ನಿ ಗುತ್ತಿಗೆದಾರರಾಗಿದ್ದು ಅವರಿಗೆ ಗ್ರಾಮ ಪಂಚಾಯತ್ಗೆ ಸಂಬಂಧಿಸಿದ 14 ಮತ್ತು 15ನೇ ಹಣಕಾಸು ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅನುಕೂಲ ಮಾಡಿಕೊಟ್ಟು ನಿಯಮ ಉಲ್ಲಂಘಿಸಿ ರುತ್ತಾರೆ. ಆದ್ದರಿಂದ ಎಂ.ಕೆ.ಪೌಲೋಸ್ ಅವರನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಪ್ರಕರಣ 43(ಎ) (1), (ವಿ)ರನ್ವಯ ಸದಸ್ಯತ್ವ ಸ್ಥಾನದಿಂದ ತೆಗೆದು ಹಾಕಿದೆ ಹಾಗೂ ಇದೇ ಅಧಿನಿಯಮದ 43(ಎ) (ಎ)ರನ್ವಯ ಯಾವುದೇ ಪಂಚಾಯತ್ಗೆ ಮುಂದಿನ ಆರು ವರ್ಷಗಳವರೆಗೆ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪೀಠಾಧಿಕಾರಿ( ಗ್ರಾಮ ಪಂಚಾಯತ್) ಶಿವಕುಮಾರ್ ಅವರು ಆದೇಶಿಸಿದ್ದಾರೆ.
ಕೈದಿಗಳಿಗೆ ಮನೆಯ ಆಹಾರ, ಹಾಸಿಗೆ-ಹೊದಿಕೆಗಳ ಸಂಪೂರ್ಣ ನಿಷೇಧ
ರಾಜ್ಯದ ಎಲ್ಲ ಕಾರಾಗೃಹಗಳಿಗೆ ಇಲಾಖೆಯಿಂದ ಮಹತ್ವದ ಸುತ್ತೋಲೆ
ಅಕ್ರಮ ಸ್ಪೋಟಕ ಬಳಸಿ ಬಂಡೆ ಸ್ಪೋಟ: ಪ್ರಕರಣ ದಾಖಲು
ಕಾರ್ಕಳ, ಜ.24: ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಪೋಟಕಗಳನ್ನು ಬಳಸಿ ಕಲ್ಲುಬಂಡೆಗಳನ್ನು ಒಡೆದಿರುವ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಚಂದ್ರ ಹಾಗೂ ಪವನ್ ಎಂಬವರು ಜ.21ರಂದು ಅಕ್ರಮವಾಗಿ ಸ್ಪೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಕುರಿತ ಮಾಹಿತಿ ಯಂತೆ ಕಾರ್ಕಳ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಂತರ ಸೀನ್ ಆಫ್ ಕ್ರೈಮ್ ಆಫೀಸರನ್ನು ಕರೆಸಿ, ಸ್ಥಳ ಪರಿಶೀಲನೆ ನಡೆಸಿದ್ದು, ಅವರು ನೀಡಿದ ವರದಿಯಲ್ಲಿ, ಬಂಡೆ ಒಡೆಯಲು ಸ್ಪೋಟಕಗಳನ್ನು ಬಳಸಿರುವುದು ತಿಳಿಸಲಾಗಿದೆ. ಅದರಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Hubballi | ಕಟೌಟ್ ಬಿದ್ದು ಮೂವರಿಗೆ ಗಾಯ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ
ಹುಬ್ಬಳ್ಳಿ: ವಸತಿ ಇಲಾಖೆ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿದ್ದ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಕಟೌಟ್ ಬಿದ್ದು, ಮೂರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ. ಘಟನೆಯಲ್ಲಿ ಬ್ಯಾಹಟ್ಟಿಯ ಶಂಕರ ಹಡಪದ (28), ಹುಬ್ಬಳ್ಳಿಯ ಶಾಂತಾ ಕ್ಯಾರಕಟ್ಟಿ ( 60) ಮತ್ತು ಧಾರವಾಡದ ಲಕ್ಷ್ಮಿನಗರದ ಮಂಜುನಾಥ (33) ಎಂಬವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಲಾಗಿದೆ. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಕಟೌಟ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಟೌಟ್ ಬಿದ್ದು ಮೂವರು ಜನ ಗಾಯಗೊಂಡಿದ್ದು, ನಗರದ ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸತಿ ರಹಿತರಿಗೆ ನೂತನ ಮನೆಗಳ ವಿತರಣೆ ಕಾರ್ಯಕ್ರಮದ ನಂತರ, ಸುಚಿರಾಯು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, ಗಾಯಾಳುಗಳು ಸಂಪೂರ್ಣ ಗುಣಮುಖರಾಗುವವರೆಗೆ ಸರಕಾರದಿಂದಲೇ ಉಚಿತವಾಗಿ ಅಗತ್ಯವಾದ ಚಿಕಿತ್ಸೆ, ಔಷಧಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವಸತಿ ಸಚಿವ ಝಮೀರ ಅಹ್ಮದ್ ಖಾನ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಪರಿಷತ್ ಮುಖ್ಯ ಸಚೇಕರಾದ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ ಉಪಸ್ಥಿತರಿದ್ದರು.
Palash Muchhal: ಸ್ಮೃತಿ ಮಂಧನಾ ಜೊತೆ ಸಂಬಂಧ ಮುರಿದುಕೊಂಡಿದ್ಧ ಪಲಾಶ್ ಮುಚ್ಚಾಲ್ ವಿರುದ್ಧ ಮತ್ತೊಂದು ದೂರು ದಾಖಲು
Palash Muchhal: ಇತ್ತೀಚೆಗಷ್ಟೇ ಟೀಮ್ ಇಂಡಿಯಾ ತಂಡದ ಉಪನಾಯಕಿ ಸ್ಮೃತಿ ಮಂಧಾನ ಹಾಗೂ ಪಲಾಶ್ ಮುಚ್ಚಲ್ ಅವರ ವಿವಾಹ ಕೊನೇ ಗಳಿಗೆಯಲ್ಲಿ ಮುರಿದುಬಿದ್ದಿತ್ತು. ಇದೀಗ ಪಲಾಶ್ ಮುಚ್ಚಾಲ್ ಅವರ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗಿದ್ದು, ಅವರ ವಿರುದ್ಧ ಸಾಂಗ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಗಾದ್ರೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಭಾರತ
ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್: ಕಾರಣವೇನು?
ಬೆಂಗಳೂರು: ನಾನು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯ ನೋಟಿಸ್ ಕೊಟ್ಟಿದ್ದೇನೆ. ಅವರು ಸಮರ್ಪಕ ಉತ್ತರ ಕೊಡದೇ ಇದ್ದಲ್ಲಿ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಮಾತನಾಡಿ, ಪದೇಪದೇ ಅವರು ಸಿಗಂದೂರು
ಕುಂದೇಶ್ವರ ಸಮ್ಮಾನ್, ಕಲಾಭೂಷಣ ಪ್ರಶಸ್ತಿ ಪ್ರದಾನ
ಕಾರ್ಕಳ, ಜ.25: ಹಿರ್ಗಾನದ ಕುಂದೇಶ್ವರ ಉತ್ಸವದಲ್ಲಿ ಯಕ್ಷಗಾನ ಭಾಗವತರಾದ ಕಾವ್ಯಶ್ರೀ ಅಜೇರು ಅವರಿಗೆ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಮತ್ತು ರಂಗಭೂಮಿ ಕಲಾವಿದ ಉಮೇಶ್ ಮಿಜಾರು ಅವರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀನಾರಾಯಣಗುರು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಉದಯ ಶೆಟ್ಟಿ ಮುನಿಯಾಲು ಮಾತನಾಡಿದರು. ಯಕ್ಷ ಕಲಾರಂಗದ ಅಧ್ಯಕ್ಷ ವಿಜಯ ಶೆಟ್ಟಿ, ನಿಟ್ಟೆ ಗ್ರಾಪಂ ಮಾಜಿ ಅಧ್ಯಕ್ಷ ನವೀನ್ ನಾಯಕ್, ಧರ್ಮದರ್ಶಿಗಳಾದ ಗಂಗಾ ಆರ್.ಭಟ್, ಪ್ರಧಾನ ಅರ್ಚಕರಾದ ಕೃಷ್ಣರಾಜೇಂದ್ರ ಭಟ್, ವೇದಮೂರ್ತಿ ರವೀಂದ್ರ ಭಟ್, ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ, ಸೃಷ್ಟಿ ಕಲಾವಿದ್ಯಾಲಯ ಸಂಸ್ಥಾಪಕ ಛಾಯಾಪತಿ ಕಂಚಿಬೈಲ್, ಉದ್ಯಮಿ ಸತೀಶ್ ಭಟ್ ಕುಂದೇಶ್ವರ, ಸಿರಿಯಣ್ಣ ಶೆಟ್ಟಿ, ಪಂಚಾಯತ್ ಅಧ್ಯಕ್ಷೆ ಸುನಿತಾ ಪೂಜಾರಿ, ಅರ್ಚಕರಾದ ಸುಧೀಂದ್ರ ಭಟ್, ಸುಜ್ಞೇಂದ್ರ ಭಟ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಂಜುನಾಥ ಪೂಜಾರಿ ಮುದ್ರಾಡಿ ಹಾಗೂ ದೇಗುಲ ದ್ವಾರಕ್ಕೆ ಹಿತ್ತಾಳೆ ಹೊದಿಕೆ ಸಮರ್ಪಿಸಿದ ರಮಾನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ರಂಗಿಣಿ ಉಪೇಂದ್ರ ರಾವ್ ಪ್ರಾರ್ಥಿಸಿದರು. ಕಾವ್ಯಶ್ರೀ ಅಜೇರು ಮತ್ತು ಲಕ್ಷ್ಮಿ ನಾರಾಯಣ ಹೊಳ್ಳ ದ್ವಂದ್ವ ಭಾಗವತಿಕೆಯಲ್ಲಿ ಕದ್ರಿ ಮಹಿಳಾ ಯಕ್ಷಕೂಟದವರಿಂದ ತಾಳಮದ್ದಲೆ ನಡೆಯಿತು. ರಂಜಿನಿ ಲಕ್ಷ್ಮೀನಾರಾಯಣ ದಾಕ್ಷಾಯಿಣಿ ಏಕಪಾತ್ರಾಭಿನಯ ಪ್ರದರ್ಶಿಸಿದರು. ನಮ್ಮ ಬೆದ್ರ ಕಲಾವಿದರಿಂದ ವೈರಲ್ ವೈಶಾಲಿ ತುಳು ನಾಟಕ ಪ್ರದರ್ಶನಗೊಂಡಿತು.
ಕಾಂಗ್ರೆಸ್ ನಂಬಿದ ಅಲ್ಪಸಂಖ್ಯಾತರಿಗೆ ಇಂದು ಬೀದಿಯೇ ಗತಿ: ಕೋಗಿಲು ಒತ್ತುವರಿ ತೆರವು ಉಲ್ಲೇಖಿಸಿ ಕುಮಾರಸ್ವಾಮಿ ಕಿಡಿ
ಹಾಸನದಲ್ಲಿ ನಡೆದ ಜೆಡಿಎಸ್ ಬೆಳ್ಳಿ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಕ್ಷಣೆ ನೀಡುತ್ತದೆ ಎಂದು ನಂಬಿ ಮತ ಹಾಕಿದ ಅಲ್ಪಸಂಖ್ಯಾತ ಸಮುದಾಯದವರ ಮನೆಗಳನ್ನು ಬೆಂಗಳೂರಿನಲ್ಲಿ ಚಳಿಗಾಲದ ನಡುವೆಯೇ ಒಡೆಯಲಾಗಿದೆ ಎಂದು ಅವರು ಆರೋಪಿಸಿದರು. ರಾಜ್ಯದಲ್ಲಿರುವುದು 'ಬ್ರೋಕರ್ ಸರ್ಕಾರ' ಎಂದು ಜರಿದ ಅವರು, ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರ ಮತ್ತು ಎಸ್ಐಟಿ ಕಾರ್ಯವೈಖರಿಯನ್ನು ಪ್ರಶ್ನಿಸಿದರು.
ಶಿಕ್ಷಣವಿದ್ದರೆ ಬದುಕಿನಲ್ಲಿ ಸೋಲಿಲ್ಲ: ಪ್ರೊ.ಪಿ.ಎಲ್.ಧರ್ಮ
ಮಂಗಳೂರು, ಜ.24: ಬಡವರ ಬದುಕಿಗೆ ಶಿಕ್ಷಣ ಆಶಾಕಿರಣವಾಗಿದೆ. ಎಷ್ಟೇ ಕಷ್ಟ ಇದ್ದರೂ, ಭಿಕ್ಷೆ ಬೇಡಿಯಾದರೂ ತಮ್ಮ ಮಕ್ಕಳಿಗೆ ಯೋಗ್ಯ ಶಿಕ್ಷಣ ಒದಗಿಸಬೇಕು. ಶಿಕ್ಷಣ ಇದ್ದರೆ ನಮಗೆ ಬದುಕಿನಲ್ಲಿ ಸೋಲು ಉಂಟಾಗದು ಎಂದು ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ. ಪ್ರೊ. ಪಿ.ಎಲ್. ಧರ್ಮ ಹೇಳಿದ್ದಾರೆ. ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶನಿವಾರ ನಡೆದ ಮಂಗಳೂರಿನ ಭಾರತ್ ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್(ರಿ)ನ ದಶಮಾನೋತ್ಸವ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮಲ್ಲಿ ನಂಬಿಕೆ, ಮೌಲ್ಯಗಳು ಕಡಿಮೆಯಾಗುತ್ತಿದೆ. ನಂಬಿಕೆ ಇಲ್ಲದ ವ್ಯವಸ್ಥೆಯಲ್ಲಿ ನಾವಿದ್ದೇವೆ. ಹೆತ್ತವರು ಮಕ್ಕಳಿಗೆ ಚಿಕ್ಕಂದಿನಲ್ಲೇ ಮೌಲ್ಯಗಳನ್ನು ಕಲಿಸಬೇಕು. ಮೌಲ್ಯಗಳು ಮನುಷ್ಯನ ಬದುಕಿನ ಪ್ರಮುಖ ಅಂಶವಾಗಬೇಕು ಎಂದರು. ಭಾರತ್ ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ಬಡವರಿಗೆ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದೆ. ಶಿಕ್ಷಣಕ್ಕೆ ನೆರವು ನೀಡುತ್ತಿದೆ. ಸರಕಾರ ಮಾಡಬೇಕಾದ ಕೆಲಸವನ್ನು ಸರಕಾರದ ರೀತಿಯಲ್ಲೆ ಅಧಿಕಾರವನ್ನು ಬಳಸಿಕೊಳ್ಳದೆ ಬಡವರಿಗೆ ಬದುಕು ಕಟ್ಟಿಕೊಡುತ್ತಿದ್ದಾರೆ. ಅವರ ಬದುಕನ್ನು ಬದಲಾಯಿಸುತ್ತಿದ್ದಾರೆ ಎಂದರು ನಮಗೆ ಯಾವುದೇ ಸವಾಲು ಕಷ್ಟ ಎದುರಾದರೂ ಮದ್ಯಪಾನ ಮತ್ತು ಡ್ರಗ್ಸ್ ಔಷಧವಾಗಬಾರದು. ಮಹಿಳೆಯರು ಶೋಷಣೆ ವಿರುದ್ಧ ನಿಲ್ಲಬೇಕು.ಮಕ್ಕಳನ್ನು ಮದ್ಯ, ಡ್ರಗ್ಸ್ , ದುಶ್ಚಟಕ್ಕೆ ಬಲಿಯಾಗದಂತೆ ಹೆತ್ತವರು ಎಚ್ಚರ ವಹಿಸಬೇಕು ಎಂದರು. ಬಿಎಸ್ಡಬ್ಲ್ಯುಟಿ ಅಧ್ಯಕ್ಷ ಎನ್.ಅಮೀನ್ ಪಕ್ಕಲಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ನಿವೃತ್ತ ಅಧೀಕ್ಷಕ ಹರೀಶ್ ಕುಮಾರ್ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಸಮಾಜ ಸೇವಕ ಕೆ.ಪಿ. ಕರೀಮ್ ಬಿಎಸ್ಡಬ್ಲ್ಯುಟಿ ಡಾಕ್ಯುಮೆಂಟರಿ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಉಡುಪಿಯ ಸಮಾಜ ಸೇವಕ ದಿನೇಶ್ ಪೈ ಅವರಿಗೆ ಬಿಎಸ್ಡಬ್ಲ್ಯುಟಿ ವರ್ಷದ ವ್ಯಕ್ತಿ -2015 ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಭಾರತ್ ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ನ ಹನ್ನೊಂದನೆ ವರ್ಷದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಮತ್ತು ಹೆತ್ತವರಿಗೆ ನಡೆಸಲಾದ ಕಾರ್ಯಾಗಾರದಲ್ಲಿ ಕಾರ್ಕಳದ ಕ್ರಿಯೇಟಿವ್ ಎಜುಕೇಷನಲ್ ಫೌಂಡೇಷನ್ನ ಸಹ ನಿರ್ದೇಶಕ ಅಶ್ವತ್ ಎಸ್.ಎಲ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಮಂಗಳೂರಿನ ಡಾ.ಪಿ.ದಯಾನಂದ ಪೈ-ಪಿ.ಸತೀಶ್ ಪೈ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಯ ಕರ ಭಂಡಾರಿ, ಸಮಾಜ ಸೇವಕರಾದ ಎನ್.ಶೀನ ಶೆಟ್ಟಿ, ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಅಶ್ವಿನಿ ಶೆಟ್ಟಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಅವಿನಾಶ್ ಕಾಮತ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಬೆಂಗಳೂರು: ಕರ್ನಾಟಕದ ದಕ್ಷಿಣ ಭಾಗದಲ್ಲಿ ನೂರಾರು ದೇವಾಲಯಗಳು, ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳು ನೆಲೆಗೊಂಡಿವೆ. ನಿತ್ಯ ಈ ಸುಕ್ಷೇತ್ರಗಳಿಗೆ ಅಪಾರ ಸಂಖ್ಯೆಯ ಭಕ್ತರು ತೆರಳುತ್ತಾರೆ. ರಾಜಧಾನಿ ಬೆಂಗಳೂರಿನಿಂದ ಕರಾವಳಿ, ಪಶ್ಚಿಮ ಘಟ್ಟಗಳ ಪ್ರಮುಖ ದೇವಸ್ಥಾನಗಳಿಗೆ ಹೋಗುವವರಿಗೆ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಖುಷಿ ಸುದ್ದಿ ನೀಡಿದೆ. ದಕ್ಷಿಣ ಕರ್ನಾಟಕದ ದೇವಾಲಯಗಳಿಗೆ ಪ್ರವಾಸ ಪ್ಯಾಕೇಜ್ ಘೋಷಿಸಿದೆ. ಅದರ ಟಿಕೆಟ್ ದರ, ಸಮಯ,
Ukraine Power: ಉಕ್ರೇನ್ ವಿರುದ್ಧ ಮತ್ತೆ ರಷ್ಯಾ ಸೇನೆಯ ಭೀಕರ ದಾಳಿ, ಕೋಟ್ಯಂತರ ಜನ ಕತ್ತಲೆಯಲ್ಲಿ
ರಷ್ಯಾ ತನ್ನ ಸೇನೆಯ ಸಹಾಯದಿಂದ ವೀಕೆಂಡ್ ದಾಳಿ ನಡೆಸಿ, ಉಕ್ರೇನ್ ನೆಲದಲ್ಲಿ ಮತ್ತಷ್ಟು ಕತ್ತಲೆ ಆವರಿಸುವಂತೆ ಮಾಡಿದೆ. ಶನಿವಾರ ದಿಢೀರ್ ರಷ್ಯಾ ಸೇನೆ ಉಕ್ರೇನ್ ದೇಶದ ಇಂಧನ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ರೀತಿ ದಾಳಿ ಮಾಡಿದೆ. ಹೀಗೆ ರಷ್ಯಾ ಸೇನೆಯಿಂದ ದಿಢೀರ್ ಎದುರಾಗಿರುವ ದಾಳಿಯನ್ನು ಕಂಡು ಸ್ವತಃ ಉಕ್ರೇನ್ ಜನರು ಓಡಿ ಹೋಗುವ ವಾತಾವರಣ ನಿರ್ಮಾಣ ಆಗಿತ್ತು.
ಉಡುಪಿ, ಜ.24: ಚುಟುಕು ಕವಿ ಹಾಗೂ ದಿನಕರ ದೇಸಾಯಿ ಪ್ರಶಸ್ತಿ ವಿಜೇತ ಉಪ್ಪುಂದ ಗಣೇಶ್ ವೈದ್ಯ(53) ಜ.23ರಂದು ಹೃದಯಾಘಾತ ದಿಂದ ಉಡುಪಿಯಲ್ಲಿ ನಿಧನರಾದರು. ಸಾಹಿತ್ಯ ಲೋಕದಲ್ಲಿ ತಮ್ಮ ವಿನೂತನ ಚುಟುಕು ಕವಿತೆಗಳ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದ ಗಣೇಶ್ ವೈದ್ಯ, ಹಲವು ಪುಸ್ತಕಗಳನ್ನು ಪ್ರಕಟಿಸಿದ್ದರು. ಸರಳ ಪದಗಳಲ್ಲಿ ಆಳವಾದ ಅರ್ಥ ಹೇಳುವ ಅವರ ಶೈಲಿ ಅಪಾರ ಜನಪ್ರಿಯತೆ ಪಡೆದಿತ್ತು. ಚೆಸ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಇವರು, ಅನೇಕ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಿ ಮಾರ್ಗ ದರ್ಶನ ನೀಡಿದ್ದರು. ದ್ವಾರಕ ಚೆಸ್ ಸ್ಕೂಲ್ನ ಸಂಸ್ಥಾಪಕರಾಗಿ, ಕುವೆಂಪು ಯೂನಿವರ್ಸಿಟಿಯ ಮಾಜಿ ಚೆಸ್ ಕೋಚ್ ಆಗಿಯೂ, ಜ್ಯೋತಿಷ್ಯ ಕ್ಷೇತ್ರದಲ್ಲಿಯೂ ತಮ್ಮದೇ ಆದ ಹೆಸರನ್ನು ಮಾಡಿದ್ದರು. ಇವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ-ಸಹೋದರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
‘ಕಲಾವಿದರನ್ನು ಬೆಳೆಸಿದರೆ ಮಾತ್ರ ರಂಗಭೂಮಿ ಉಳಿಯಲು ಸಾಧ್ಯ’
ಉಡುಪಿ, ಜ.24: ಇತರ ಕಲಾವಿದರಿಗಿಂತ ರಂಗಭೂಮಿ ಕಲಾವಿದರನ್ನು ತುಂಬಾ ಕೀಳಾಗಿ ಕಾಣಲಾಗುತ್ತಿದೆ. ಇಂದರಿಂದ ರಂಗಭೂಮಿ ಉಳಿಯಲು ಸಾಧ್ಯವಿಲ್ಲ. ಇದರ ಪರಿಣಾಮ ಇಂದು ರಂಗಭೂಮಿ ವ್ಯಾಪಾರ ಆಗುತ್ತಿದೆ. ಆದುದರಿಂದ ಕಲಾವಿದರನ್ನು ಬೆಳೆಸುವುದರ ಜೊತೆ ರಂಗಭೂಮಿಯನ್ನು ಉಳಿಸಬೇಕು ಎಂದು ರಂಗ ನಿರ್ದೇಶಕ ಎಸ್.ಎನ್.ಸೇತುರಾಂ ಹೇಳಿದ್ದಾರೆ. ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಶನಿವಾರ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಶನಿವಾರ ನಡೆದ ಸಂಸ್ಕೃತಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಶ್ರೀರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಿತ ಶಾರದಾ ಕೃಷ್ಣ ಪುರಸ್ಕಾರವನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು. ದೇವಸ್ಥಾನ ಸೇರಿದಂತೆ ಎಲ್ಲ ಮಂದಿರಗಳು ನಂಬಿಕೆಗಳ ತಾಣಗಳು. ಮನುಷ್ಯ ಬದುಕಲು ನಂಬಿಕೆ ಬಹಳ ಮುಖ್ಯ. ಈ ದೇಶ ಬದುಕಿರುವುದೇ ನಂಬಿಕೆಗಳ ಮೇಲೆ. ದೇವರು ಮಾತ್ರವಲ್ಲ ಎಲ್ಲವೂ ಭ್ರಮೆಯೇ ಆಗಿದೆ. ಪ್ರತಿಯೊಂದು ವ್ಯವಸ್ಥೆಗೂ ಅದರದೇ ಆದ ಭ್ರಮೆಯ ಅವಶ್ಯಕತೆ ಇದೆ. ಆ ಭ್ರಮೆನ್ನು ಸಾಮೂಹಿಕವಾಗಿ ಒಪ್ಪಿಕೊಂಡಾಗ ಮಾತ್ರ ಬದುಕು ನಡೆಯುತ್ತದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಮಾತನಾಡಿ, ನಮ್ಮ ಸಂಸ್ಕೃತಿಯ ಬಗ್ಗೆ ಯುವ ಜನತೆ ಆಸಕ್ತಿ ತೋರಿಸದೆ ಇರಲು ಹಲವು ಕಾರಣಗಳಿವೆ. ಆದರೆ ಅವರಿಗೆ ಸಂಸ್ಕೃತಿಯನ್ನು ಮುಟ್ಟಿಸುವ ಜವಾಬ್ದಾರಿ ನಮ್ಮ ಮೇಲಿದೆ. ಇದರಲ್ಲಿ ರಂಗಭೂಮಿ, ಜಾನಪದ, ನೃತ್ಯ ಮಹತ್ತರ ಪಾತ್ರ ವಹಿಸುತ್ತದೆ. ಆದುದರಿಂದ ಆ ಚಟುವಟಿಕೆಗಳನ್ನು ಹೆಚ್ಚು ಹೆಚ್ಚು ಮಾಡಬೇಕಾಗಿದೆ. ಯುವ ಜನತೆಯನ್ನು ವೃತ್ತಿ, ಶಿಕ್ಷಣದ ಜತೆಗೆ ಸಂಸ್ಕೃತಿಗೆ ಸಜ್ಜುಗೊಳಿಸುವ ಅಗತ್ಯ ಇದೆ. ಬಹು ಸಂಸ್ಕೃತಿಯ ಈ ದೇಶದಲ್ಲಿ ಎಲ್ಲವನ್ನೂ ಗೌರವಿಸಿ ಬೆಳೆಸಬೇಕು ಎಂದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ವಹಿಸಿದ್ದರು. ಉದ್ಯಮಿ ವಿಜಯ ನಾಥ್ ಹೆಗಡೆ ಅಭಿನಂದನಾ ಮಾತುಗಳನ್ನಾಡಿದರು. ಐಎಂಎ ಉಡುಪಿ ಕರಾವಳಿ ಮಾಜಿ ಅಧ್ಯಕ್ಷೆ ಡಾ.ರಾಜಲಕ್ಷ್ಮೀ, ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ವಿಶ್ವಸ್ಥ ವಿಘ್ನೇಶ್ವರ ಅಡಿಗ, ವಾಸುದೇವ ಅಡಿಗ ಉಪಸ್ಥಿತರಿದ್ದರು. ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ಸ್ವಾಗತಿಸಿದರು. ಶಾರದಾ ಕೃಷ್ಣ ಪುರಸ್ಕಾರ ಸಮಿತಿಯ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು. ಡಾ.ಭಾರ್ಗವಿ ಐತಾಳ್ ಕಾರ್ಯಕ್ರಮ ನಿರೂಪಿಸಿದರು.
ಕೊಲ್ಲೂರು, ಕುಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಮಾಸ್ಟರ್ ಪ್ಲ್ಯಾನ್ : ಸಚಿವ ರಾಮಲಿಂಗ ರೆಡ್ಡಿ
ಬೈಂದೂರು ಉತ್ಸವ ಉದ್ಘಾಟನಾ ಸಮಾರಂಭ
T20 ವಿಶ್ವಕಪ್ 2026 | ಬಾಂಗ್ಲಾದೇಶದ ಬದಲು ಸ್ಕಾಟ್ಲ್ಯಾಂಡ್ ತಂಡ ಸೇರ್ಪಡೆ: ಬಿಸಿಬಿಗೆ ಐಸಿಸಿಯ ಅಧಿಕೃತ ಮಾಹಿತಿ
ಹೊಸದಿಲ್ಲಿ: ಮುಂಬರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತಕ್ಕೆ ಪ್ರಯಾಣ ಬೆಳೆಸಲು ಬಾಂಗ್ಲಾದೇಶ ಕ್ರಿಕೆಟ್ ತಂಡ ನಿರಾಕರಿಸಿದ ಹಿನ್ನೆಲೆಯಲ್ಲಿ, ಅದರ ಸ್ಥಾನದಲ್ಲಿ ಸ್ಕಾಟ್ಲ್ಯಾಂಡ್ ತಂಡವನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಅಧಿಕೃತವಾಗಿ ಮಾಹಿತಿ ರವಾನಿಸಿದೆ. ಬಾಂಗ್ಲಾದೇಶದ ವೇಗಿ ಮುಸ್ತಫಿಝುರ್ ರಹ್ಮಾನ್ ಅವರನ್ನು ಐಪಿಎಲ್ ನಿಂದ ಕೈಬಿಟ್ಟ ಬಳಿಕ, ಭದ್ರತಾ ಕಳವಳವನ್ನು ಮುಂದಿಟ್ಟುಕೊಂಡು ಬಾಂಗ್ಲಾದೇಶ ಕ್ರಿಕೆಟ್ ತಂಡ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಪಟ್ಟು ಹಿಡಿದಿತ್ತು. ಶನಿವಾರ ದುಬೈನಲ್ಲಿ ಇದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಜಯ್ ಶಾ ಸೇರಿದಂತೆ ಹಿರಿಯ ಅಧಿಕಾರಿಗಳು, ಜಾಗತಿಕ ಕ್ರಿಕೆಟ್ ಸಂಸ್ಥೆಯಾದ ಐಸಿಸಿಯ ನಿರ್ಧಾರವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಅಮೀನುಲ್ ಇಸ್ಲಾಂ ಬುಲ್ಬುಲ್ ಅವರಿಗೆ ಇಮೇಲ್ ಮೂಲಕ ತಿಳಿಸಿರುವುದಾಗಿ ವರದಿಯಾಗಿದೆ. “ಅವರು ಭಾರತಕ್ಕೆ ಪ್ರಯಾಣಿಸಲು ಬಯಸುವರೇ ಎಂಬ ಕುರಿತು ನಿರ್ಧರಿಸಲು ಐಸಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ 24 ಗಂಟೆಗಳ ಗಡುವು ವಿಧಿಸಿತ್ತು. ಆದರೆ, ಅವರು ಅದಕ್ಕೆ ಪ್ರತಿಕ್ರಿಯಿಸದೇ ಹೋದ ಹಿನ್ನೆಲೆಯಲ್ಲಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಿಗೆ ಇಮೇಲ್ ರವಾನಿಸುವ ಮೂಲಕ ನಮ್ಮ ನಿರ್ಧಾರವನ್ನು ತಿಳಿಸಲಾಗಿದೆ” ಎಂದು ಹೆಸರೇಳಲು ಇಚ್ಛಿಸದ ಐಸಿಸಿ ಮೂಲವೊಂದು ತಿಳಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. “ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಐಸಿಸಿಗೆ ತಿಳಿಸುವುದಕ್ಕೂ ಮುನ್ನವೇ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಢಾಕಾದಲ್ಲಿ ಪತ್ರಿಕಾಗೋಷ್ಠಿ ನಡೆಸಿತು. ಇದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ನಿಮ್ಮ ಬದಲಿಗೆ ಬೇರೆ ತಂಡವನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಅವರಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ” ಎಂದೂ ಮೂಲಗಳು ತಿಳಿಸಿವೆ. ಐಸಿಸಿ ಪದೇಪದೇ ಭರವಸೆ ನೀಡಿದರೂ, ಬಾಂಗ್ಲಾದೇಶದ ಕ್ರೀಡಾ ಸಚಿವಾಲಯದ ಸಲಹೆಗಾರ ಆಸಿಫ್ ನಝ್ರುಲ್ ಅವರು ಭದ್ರತಾ ಕಳವಳವನ್ನು ಉಲ್ಲೇಖಿಸಿ, ಭಾರತಕ್ಕೆ ಪ್ರಯಾಣ ಬೆಳೆಸದಂತೆ ಬಾಂಗ್ಲಾದೇಶ ಕ್ರಿಕೆಟ್ ತಂಡಕ್ಕೆ ಸಲಹೆ ನೀಡಿದ್ದರು.
WPL 2026: ಆರ್ಸಿಬಿ-ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್, ಬೌಲಿಂಗ್ ಲೈನ್ ಅಪ್ ಹೇಗಿದೆ ತಿಳಿಯಿರಿ
WPL 2026 RCB Playing 11: ಡಬ್ಲ್ಯೂಪಿಎಲ್ 2026ರ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂದು (ಜನವರಿ 24) ಕಾದಾಡಲಿವೆ. ಹಾಗಾದ್ರೆ, ಪ್ಲೇಯಿಂಗ್ 11ನಲ್ಲಿ ಯಾರೆಲ್ಲಾ ಇರಲಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ವಡೋದರಾದ ಕೋಟಂಬಿಯ ಬಿಸಿಎ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲು
ವರ್ತೂರು ಜಾತ್ರೆ - ಬೆಂಗಳೂರಿನ ವೈಟ್ ಫೀಲ್ಡ್ ವ್ಯಾಪ್ತಿಯಲ್ಲಿ ಹಲವು ಮಾರ್ಗಗಳ ಬದಲಾವಣೆ - ಬದಲಿ ಮಾರ್ಗಗಳು ಯಾವುವು?
ವರ್ತೂರಿನಲ್ಲಿ ಶ್ರೀ ಚನ್ನರಾಯಸ್ವಾಮಿ ಜಾತ್ರೆ, ಉತ್ಸವಗಳು, ದೀಪೋತ್ಸವ, ಕರಗ ಮತ್ತು ಪಲ್ಲಕ್ಕಿ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ, ಜ. 25ರಿಂದ 27ರವರೆಗೆ ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ. ಜನರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ. ಲಘು ಮತ್ತು ಭಾರಿ ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹೆಸರು ಚಿರಸ್ಥಾಯಿಯಾಗಿ ಉಳಿಯಲು ರಾಜ್ಯದಲ್ಲಿರುವ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಮತ್ತು ಇತರೆ ಸ್ಥಳೀಯ ಸಂಸ್ಥೆಗಳ ಕಚೇರಿಗಳಿಗೆ ‘ರಾಷ್ಟ್ರಪಿತ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಚೇರಿ’ ಎಂದು ನಾಮಕರಣ ಮಾಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಮನವಿ ಮಾಡಿದ್ದಾರೆ. ಶನಿವಾರ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು, ‘ಮಹಾತ್ಮ ಗಾಂಧಿಯವರು ವಿಶ್ವಕಂಡು ಅರಿಯದ ವಿಶಿಷ್ಟ ಅಸ್ತ್ರಗಳಾದ ‘ಸತ್ಯಾಗ್ರಹ, ಅಹಿಂಸಾ ಚಳುವಳಿ’ ಮೂಲಕ ಸೂರ್ಯ ಮುಳುಗದ ಸಾಮ್ರಾಜ್ಯದ ಬ್ರಿಟಿಷರನ್ನು ಭಾರತದಿಂದ ತೊಲಗಿಸಿ ಭಾರತಾಂಬೆಯನ್ನು ಸ್ವತಂತ್ರಗೊಳಿಸಿದ ಸ್ವಾತಂತ್ರ್ಯ ಚಳುವಳಿಯ ಮಹಾನ್ ಸೇನಾನಿ’ ಎಂದು ಬಣ್ಣಿಸಿದ್ದಾರೆ. ‘ಗಾಂಧೀಜಿಯ ಹೋರಾಟ, ತ್ಯಾಗ, ಬಲಿದಾನ, ವೈಚಾರಿಕತೆಗಳನ್ನು ಗೌರವಯುತವಾಗಿ ಪರಿಗಣಿಸಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಸೃಷ್ಟಿಸುವ ಕಾರಣದಿಂದ ‘ಮನರೇಗಾ’ ಕಾಯ್ದೆ ಮಾಡಿ ನಿರುದ್ಯೋಗ-ಬಡತನ ಸಮಸ್ಯೆಗಳಿಗೆ ಪರಿಹಾರ ರೂಪಿಸಲು ಕಾಯ್ದೆ ಮಾಡಿ ಉದ್ಯೋಗ ಸೃಷ್ಟಿ ಮಾಡಲಾಗುತ್ತಿದೆ. ಇದು ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿಗೆ ಪೂರಕವಾಗಿದೆ’ ಎಂದು ಅವರು ತಿಳಿಸಿದ್ದಾರೆ. ಆದರೆ, 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿಯವರ ನೇತೃತ್ವದ ಸರಕಾರ ಈ ಯೋಜನೆಗೆ ಅನುದಾನ ನೀಡದೆ ಈ ಕಾರ್ಯಕ್ರಮ ನಿರೀಕ್ಷೆಯ ಮಟ್ಟ ಮುಟ್ಟುತ್ತಿಲ್ಲ. ಇತ್ತೀಚೆಗೆ ಸದರಿ ಕಾಯ್ದೆಗೆ ತಿದ್ದುಪಡಿಗಳನ್ನು ತಂದು, ಗಾಂಧಿಯವರ ಹೆಸರನ್ನು ಕಾಯ್ದೆಯಿಂದ ಕೈಬಿಟ್ಟು ‘ವಿಕಸಿತ ಭಾರತ ಜಿರಾಮ್ಜಿ’ ಎಂದು ಕಾಯ್ದೆ ಮಾಡಿ ಗಾಂಧಿಯವರಿಗೆ ಅಪಮಾನ ಮಾಡಿರುತ್ತಾರೆ ಎಂದು ಉಗ್ರಪ್ಪ ಆಕ್ಷೇಪಿಸಿದ್ದಾರೆ. ಅಲ್ಲದೆ, ಇದು ಸಂವಿಧಾನ ಅನುಚ್ಛೇದ 51ಎ ಇತರ ಪ್ರಕ್ರಿಯೆಗಳಿಗೆ ವಿರುದ್ಧವಾಗಿರುತ್ತದೆ. ಇದನ್ನು ಭಾರತದ ಯಾವೊಬ್ಬ ಪ್ರಜೆಯೂ ಸಹಿಸುವುದಿಲ್ಲ. ಇದು ಮಹಾತ್ಮ ಗಾಂಧಿ ಸಿದ್ಧಾಂತವನ್ನು ಅಳಿಸಿ, ನಾಥೋರಾಮ್ ಗೋಡ್ಸೆ ಸಿದ್ಧಾಂತಕ್ಕೆ ಮಹತ್ವ ನೀಡುವ ಬಿಜೆಪಿ ಮತ್ತು ಆರೆಸ್ಸೆಸ್ನ ಗುಪ್ತ ಕಾರ್ಯಸೂಚಿಯಾಗಿರುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ. ಗಾಂಧಿಯವರ ವಿಚಾರಧಾರೆಯಲ್ಲಿ ಪೂರ್ಣ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಪಕ್ಷದ ಸರಕಾರ ಸೂಕ್ತ ಉತ್ತರವನ್ನು ಮೋದಿ ಸರಕಾರ ಮತ್ತು ಗೋಡ್ಸೆವಾದಿಗಳಿಗೆ ನೀಡಬೇಕಾಗಿರುತ್ತದೆ. ಆದುದರಿಂದ ಜನಮಾನಸದಲ್ಲಿ ಸರ್ವಕಾಲಿಕವಾಗಿರುವ ಗಾಂಧಿ ವಿಚಾರಧಾರೆ ಉಳಿಸುವ ನಿಟ್ಟಿನಲ್ಲಿ ಗ್ರಾ.ಪಂ. ಮತ್ತು ಇತರೆ ಸ್ಥಳೀಯ ಸಂಸ್ಥೆಗಳು ಕಚೇರಿಗಳಿಗೆ ‘ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಚೇರಿ’ ಎಂದು ನಾಮಕರಣ ಮಾಡಬೇಕು ಎಂದು ಅವರು ಕೋರಿದ್ದಾರೆ.
ಅಬಕಾರಿ ಇಲಾಖೆಯ 2,500 ಕೋಟಿ ರೂ ಅಸ್ಸಾಂ, ಕೇರಳ ಚುನಾವಣೆಗೆ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ
ಬೆಂಗಳೂರು: ರಾಜ್ಯದ ಅಬಕಾರಿ ಇಲಾಖೆಯಲ್ಲಿ 2,500 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಿರುವ ವಿರೋಧ ಪಕ್ಷ ಬಿಜೆಪಿ, ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯಲ್ಲಿ ಆಗ್ರಹಿಸಿದೆ. ಅಬಕಾರಿ ಇಲಾಖೆಯಿಂದ ಲೂಟಿ ಮಾಡಿದ ಹಣವನ್ನು ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಅಸ್ಸಾಂ, ಕೇರಳ ಮತ್ತು ತಮಿಳುನಾಡಿಗೆ ರವಾನಿಸುತ್ತಿದೆ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಸಾಧ್ಯತೆ- ಬಿಜೆಪಿ ಶಾಸಕ ಸುಳಿವು?
ರಾಜ್ಯಪಾಲರ ಭಾಷಣ ವಿಚಾರವಾಗಿ ಬಿಜೆಪಿ ಶಾಸಕ ಸುರೇಶ್ ಗೌಡ ಕಾಂಗ್ರೆಸ್ ನಾಯಕರ ವರ್ತನೆಗೆ ಕಿಡಿಕಾರಿದ್ದಾರೆ. ಇದು ಮುಂದುವರಿದರೆ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಹೇರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಮ್ ಜಿ ಯೋಜನೆ ವಿರೋಧಿಸಿ ಅಧಿವೇಶನ ಕರೆದಿತ್ತು. ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ 5 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ನುಂಗಿ ನೀರು ಕುಡಿದಿದೆ ಎಂದು ಆರೋಪಿಸಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ ಎಂದು ಹೇಳಿದ್ದಾರೆ.
ಯಾದಗಿರಿ | ಮಕ್ಕಳ ಸಮಗ್ರ ಬೆಳವಣಿಗೆಗೆ ಪಾಠದ ಜೊತೆಗೆ ಕಲೆ, ಸಂಸ್ಕೃತಿ ಅಗತ್ಯ : ಮಲ್ಲೇಶ್ ನಾಯಕ್
ನೀಲಹಳ್ಳಿ ಗ್ರಾಮದಲ್ಲಿ ಬಾಲಮೇಳ ಕಾರ್ಯಕ್ರಮ
ಕಲಬುರಗಿ | ಶರಣಬಸವೇಶ್ವರ ವಿದ್ಯಾವರ್ಧಕ ಸಂಘಕ್ಕೆ ಬೆಸ್ಟ್ ಎಜುಕೇಶನ್ ಸೊಸೈಟಿ ಪ್ರಶಸ್ತಿ ಪ್ರದಾನ
ಕಲಬುರಗಿ: ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಶನಿವಾರ ನಡೆದ 27ನೇ ಐಎಸ್ಟಿಇ ರಾಜ್ಯ ಮಟ್ಟದ ಪ್ರಾಧ್ಯಾಪಕರ ಸಮಾವೇಶದಲ್ಲಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘಕ್ಕೆ ನೀಡಲಾಗುವ ಪ್ರತಿಷ್ಠಿತ ಐಎಸ್ಟಿಇ “ಬೆಸ್ಟ್ ಎಜುಕೇಶನ್ ಸೊಸೈಟಿ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಅವರಿಗೆ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ನ ರಾಷ್ಟ್ರೀಯ ಅಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಡಾ.ಅವ್ವಾಜಿ, ಈ ಪ್ರಶಸ್ತಿಯನ್ನು ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಲಿಂಗೈಕ್ಯ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರಿಗೆ ಅರ್ಪಿಸುವುದಾಗಿ ಹೇಳಿದರು. ಅವರು ಶಿಕ್ಷಣ ಸಂಸ್ಥೆಗಳ ಸರಪಳಿಯನ್ನು ಸ್ಥಾಪಿಸುವ ಮೂಲಕ ಮತ್ತು ಉತ್ತರ ಕರ್ನಾಟಕದ ಮೊದಲ ಖಾಸಗಿ ವಿಶ್ವವಿದ್ಯಾಲಯವಾದ ಶರಣಬಸವ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಮೂಲಕ ಈ ಪ್ರದೇಶದ ಜನರ ಶೈಕ್ಷಣಿಕ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ಸ್ಥಾಪಿಸುವ ಜವಾಬ್ದಾರಿಯನ್ನು ಸಹ ಅಪ್ಪಾಜಿಯವರು ವಹಿಸಿದ್ದರು. ನಂತರ ಇದನ್ನು ಗುಲಬರ್ಗಾ ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೇರಿಸಲಾಯಿತು. ಇದು ಮೊದಲ ಬಾರಿಗೆ ಉನ್ನತ ಶಿಕ್ಷಣದ ಮಾರ್ಗಗಳನ್ನು ಈ ಪ್ರದೇಶದ ಜನರ ಮನೆ ಬಾಗಿಲಿಗೆ ತಂದಿತು ಎಂದರು. ಈ ಪ್ರಶಸ್ತಿಯು ಡಾ.ಅಪ್ಪಾಜಿಯವರ ಜೀವಮಾನದ ಸಾಧನೆಯನ್ನು ಮತ್ತು ಅವರ ಕನಸನ್ನು ನನಸಾಗಿಸಲು ಸಹಾಯ ಮಾಡಿದ ಶಿಕ್ಷಣ ಸಂಸ್ಥೆಗಳ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಸಮರ್ಪಣೆ ಮತ್ತು ನಿಮ್ಮೆಲ್ಲರ ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಡಾ.ಅವ್ವಾಜಿ ಹೇಳಿದರು. ಐಎಸ್ಟಿಇ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ. ಸುರೇಶ್ ಡಿ. ಎಸ್. ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶವನ್ನು ಪ್ರಮುಖ ಶೈಕ್ಷಣಿಕ ಕೇಂದ್ರವನ್ನಾಗಿ ಪರಿವರ್ತಿಸಲು ಡಾ.ಅಪ್ಪಾಜಿ ಅವರು ಮಾಡಿದ ಅವಿಶ್ರಾಂತ ಪ್ರಯತ್ನಗಳಿಗಾಗಿ ಅವರಿಗೆ ಗೌರವ ಸಲ್ಲಿಸಿದರು ಮತ್ತು ಡಾ.ಅವ್ವಾಜಿಯವರು ಡಾ.ಅಪ್ಪಾಜಿಯವರ ಪರಂಪರೆಯನ್ನು ಮುಂದುವರೆಸುತ್ತಿದ್ದಾರೆಂದರು. ಈ ಸಂದರ್ಭದಲ್ಲಿ ಐಎಸ್ಟಿಇ ರಾಷ್ಟ್ರೀಯ ಅಧ್ಯಕ್ಷ ಡಾ. ಪ್ರತಾಪ್ಸಿನ್ಹ ಕಾಕಾಸಾಹೇಬ ದೇಸಾಯಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ ಸೇರಿದಂತೆ ಇತರ ಪ್ರಮುಖರು ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ ಸ್ವಾಗತಿಸಿದರು. ಪುಣೆಯ ಎಂಐಟಿಯ ಪ್ರೊ. ವೀರೇಂದ್ರ ವೀರಭದ್ರ ಶೆಟ್ಟಿ ಮತ್ತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಓರುಗಂಟಿ ಆಂಜನೇಯುಲು ವಿಶೇಷ ಉಪನ್ಯಾಸ ನೀಡಿದರು.
2026ರ ಐಪಿಎಲ್ ತಯಾರಿ ಶುರು ಮಾಡಿದ ಮಹೇಂದ್ರ ಸಿಂಗ್ ಧೋನಿ: ಅಭ್ಯಾಸದ ವಿಡಿಯೋ ವೈರಲ್! ಈ ಬಾರಿಯೂ ಕಣಕ್ಕೆ?
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಮಹೇಂದ್ರ ಸಿಂಗ್ ಧೋನಿ ಸಿಹಿ ಸುದ್ದಿ ನೀಡಿದ್ದಾರೆ. ಐಪಿಎಲ್ ಆರಂಭಕ್ಕೆ ಇನ್ನು ಎರಡು ತಿಂಗಳು ಬಾಕಿ ಇರುವ ಮುನ್ನ ಧೋನಿ ನೆಟ್ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಈ ಮೂಲಕ ಧೋನಿ, ಮುಂಬರುವ ಐಪಿಎಲ್ 2026ರ ಋತುವಿಗಾಗಿ ಸಜ್ಜಾಗುತ್ತಿದ್ದಾರೆ. ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಧೋನಿ ತಮ್ಮ ಬ್ಯಾಟಿಂಗ್ ಅಭ್ಯಾಸವನ್ನು ಅಧಿಕೃತವಾಗಿ ಆರಂಭಿಸಿದ್ದು, ಈ ವಿಡಿಯೋ ಈಗ ವೈರಲ್ ಆಗಿದೆ.
ದಂಡಪಾಳ್ಯ ಗ್ಯಾಂಗ್ನಿಂದ ಜೋಡಿ ಕೊಲೆ ಪ್ರಕರಣ| ಲೇಡಿ ಕಾನ್ಸ್ಟೆಬಲ್ ಲಲಿತಾ ಶ್ರಮ ಮಹತ್ತರವಾದುದು: ಕಮಿಷನರ್
ಮಂಗಳೂರು, 24: ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 27 ವರ್ಷ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್ನ ಆರೋಪಿಯನ್ನು ಬಂಧಿಸುವಲ್ಲಿ ಉರ್ವಾ ಠಾಣೆಯ ಪೊಲೀಸರ ತಂಡದಲ್ಲಿ ಲೇಡಿ ಕಾನ್ಸ್ಟೆಬಲ್ ಲಲಿತಾ ಶ್ರಮ ಮಹತ್ತರವಾದುದು ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಹೆಸರು, ವಿಳಾಸ ಬದಲಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಬಂಧನದ ಕುರಿತಂತೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ಆರೋಪಿ ಚಿಕ್ಕ ಹನುಮಂತಪ್ಪ ಹೆಸರು, ವಿಳಾಸ ಬದಲಾಯಿಸಿಕೊಂಡು ಆಂಧ್ರದಲ್ಲಿ ಬೇರೆ ಕುಟುಂಬ ಮಾಡಿಕೊಂಡು ಮಕ್ಕಳೊಂದಿಗೆ ನೆಲೆಸಿದ್ದ. ಜಿಲ್ಲೆಯಲ್ಲಿ ದೀರ್ಘಾವಧಿಯ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆ ಕಾರ್ಯಾಚರಣೆಯ ಅಭಿಯಾನದ ಸಂದರ್ಭ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಉರ್ವಾ ಠಾಣೆ ಪೊಲೀಸರು, ಅದರಲ್ಲೂ ಮುಖ್ಯವಾಗಿ ಮಹಿಳಾ ಕಾನ್ಸ್ಪೆಬಲ್ ಲಲಿತಾ ಅವರು ಕಷ್ಟಪಟ್ಟು ಮೂರ್ನಾಲ್ಕು ತಿಂಗಳು ಈ ಪ್ರಕರಣಕ್ಕೆ ಒತ್ತು ನೀಡಿ ಶ್ರಮಿಸಿದ್ದಾರೆ. ವಿವಿಧ ಠಾಣೆ, ಕೋರ್ಟ್,ಕಚೇರಿಗಳಿಗೆ ಗಳಿಗೆ ಭೇಟಿ ನೀಡುವ ಸಂದರ್ಭ ಕೋರ್ಟ್ ದಾಖಲೆಯೊಂದರಲ್ಲಿ ಈತ ಹೆಸರು ಬದಲಾಯಿಸಿಕೊಂಡಿರುವುದನ್ನು ಪತ್ತೆಹಚ್ಚಿದ್ದಾರೆ. ಬಳಿಕ ಊರಿನವ ರನ್ನು ಸಂಪರ್ಕಿಸಿ ತಂಡದೊಂದಿಗೆ ತೆರಳಿ ಉರ್ವಾ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದು. 1997ರಲ್ಲಿ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಲವಾರು ತನಿಖೆ ನಡೆದು ದಂಡುಪಾಳ್ಯದ ಕೃತ್ಯ ಎಂದು ಪತ್ತೆಯಾಗಿತ್ತು. ದಂಡುಪಾಳ್ಯ ಗ್ಯಾಂಗ್ನ ಸದಸ್ಯ, ಆರೋಪಿ ಚಿಕ್ಕಹನುಮಂತಪ್ಪ ಎಂಬಾತ ತಲೆಮರೆಸಿಕೊಂಡಿದ್ದ. ಇದೀಗ 27 ವರ್ಷಗಳ ನಂತರ ಉರ್ವಾ ಠಾಣೆಯ ಪೊಲೀಸರಿಂದ ಪತ್ತೆಹಚ್ಚಲ್ಪಟ್ಟು ಬಂಧಿತನಾಗಿರುವ ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ದಂಡುಪಾಳ್ಯ ಗ್ಯಾಂಗ್ ವಿರುದ್ಧ ಸಾಕಷ್ಟು ಪ್ರಕರಣಗಳು ದಾಖಲಾಗಿದ್ದು, ಬಂಧಿತ ಚಿಕ್ಕ ಹನುಮಂತಪ್ಪ ವಿರುದ್ಧವೂ ಎಂಟು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಇದೀಗ ಆತನ ಬಂಧನದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಎಲ್ಲಾ ಪೊಲೀಸ್ ಠಾಣೆಗಳಿಗೆ ಸಂಪರ್ಕ ಮಾಡಲಾಗಿದೆ. ಎಲ್ಲಾ ಪ್ರಕರಣಗಳಲ್ಲೂ ತನಿಖೆ ಯಾವ ಹಂತದಲ್ಲಿದೆ ಎಂದು ಪರಿಶೀಲಿಸಿ ಮತ್ತೆ ವಿಚಾರಣೆ ನಡೆಸಬಹುದಾಗಿದೆ. ದಂಡುಪಾಳ್ಯದ ವಿರುದ್ಧದ ಕೆಲ ಪ್ರಕರಣಗಳಲ್ಲಿ ಕೆಲ ಆರೋಪಿಗಳಿಗೆ ಖುಲಾಸೆ ಯಾಗಿದ್ದು, ಬಂಧಿತ ಆರೋಪಿ ಖುಲಾಸೆಗೊಂಡಿಲ್ಲ. ಏನಾದರೂ ತಪ್ಪುಗಳಿದ್ದಲ್ಲಿ ಅದನ್ನು ಸರಿಪಡಿಸಿಕೊಂಡು ವಿಚಾರಣೆ ಮುಂದುವರಿಸಲಾಗುವುದು. ಬಂಧಿತ ಆರೋಪಿ ಚಿಕ್ಕ ಹನುಮ 1997ರಲ್ಲಿ ಜೋಡಿ ಕೊಲೆ ಪ್ರಕರಣವಲ್ಲದೆ, 2000ದಲ್ಲಿಯೂ ವಿವಿಧ ಪ್ರಕರಣ ಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ದಂಡುಪಾಳ್ಯ ಗ್ಯಾಂಗ್ನ ಅಪರಾಧ ಕೃತ್ಯಗಳ ಬಗ್ಗೆ ವಿಚಾರಣೆ ನಡೆದಾಗ 8 ಪ್ರಕರಣಗಳಲ್ಲಿ ಶಿಕ್ಷೆಯಾಗಿತ್ತು. ಕೆಲವು ಪ್ರಕರಣಗಳು ದೃಢಗೊಂಡು ಜೀವಾವಧಿ ಶಿಕ್ಷೆಯೂ ಆಗಿದೆ. ಕೆಲವು ಪ್ರಕರಣಗಳಲ್ಲಿ ಮರು ತನಿಖೆಗೆ ಕಳುಹಿಸಿದಾಗ ಕೆಲವರು ಖುಲಾಸೆಗೊಂಡಿದ್ದಾರೆ. ಈತ ಯಾವುದೇ ರೀತಿಯ ವಿಚಾರಣೆಗೆ ಹಾಜರಾಗದ ಕಾರಣ ಮತ್ತೆ ಆರೋಪಿಯನ್ನು ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಗ್ಯಾಂಗ್ನಲ್ಲಿ ಉರ್ವಾ ಪ್ರಕರಣಕ್ಕೆ ಸಂಬಂಧಿಸಿ ದಂಡುಪಾಳ್ಯದ ಎಂಟು ಮಂದಿ ಭಾಗಿಯಾಗಿದ್ದು, ಆರು ಮಂದಿಯ ಬಂಧನವಾಗಿತ್ತು. ಇಬ್ಬರ ಮೇಲೆ ತಲೆಮರೆಸಿಕೊಂಡ ಆರೋಪ ಹೊರಿಸಲಾಗಿದ್ದು, ಇದೀಗ ಒಬ್ಬನನ್ನು ಬಂಧಿಸಲಾ ಗಿದೆ ಎಂದು ಕಮಿಷನರ್ ಸುಧೀರ್ ರೆಡ್ಡಿ ವಿವರ ನೀಡಿದರು. ಪ್ರಕರಣವನ್ನು ಬೇಧಿಸಿ, ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿರುವ ಉರ್ವಾ ಪೊಲೀಸ್ ಠಾಣೆಯ ತಂಡವನ್ನು ಪೊಲೀಸ್ ಆಯುಕ್ತರು ಈ ಸಂದರ್ಭ ಅಭಿನಂದಿಸಿದರು.

19 C