SENSEX
NIFTY
GOLD
USD/INR

Weather

20    C
... ...View News by News Source

ಭಟ್ಕಳ | ಮೀನುಗಾರಿಕೆ ವೇಳೆ ಕಾಲು ಜಾರಿ ಬಿದ್ದು ಮೀನುಗಾರ ಮೃತ್ಯು

ಭಟ್ಕಳ : ಮಾವಿನಕುರ್ವೆ ಬಂದರ್ ಸಮೀಪ ಗುರುವಾರ ಬೆಳಿಗ್ಗೆ ಮೀನುಗಾರನೊಬ್ಬ ಸಮುದ್ರಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಮೀನುಗಾರನನ್ನು ಶ್ರೀಧರ್ ಪರಮೇಶ್ವರ ಖಾರ್ವಿ ಎಂದು ಗುರುತಿಸಲಾಗಿದೆ. ಶ್ರೀಧರ್ ಅವರು ಮಾವಿನಕುರ್ವೆ ಬಂದರ್‌ನಿಂದ ಸುಮಾರು 15 ಕಿಲೋಮೀಟರ್ ದೂರದ ಸಮುದ್ರದೊಳಗೆ ಮೀನುಗಾರಿಕೆಗೆ ತೆರಳಿದ್ದರು. ಬಲೆ ಎಳೆಯುವ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದ ಅವರು ತೀವ್ರ ಗಾಯಗೊಂಡು ಪ್ರಾಣ ಕಳೆದುಕೊಂಡರು ಎಂದು ಮೂಲಗಳು ತಿಳಿಸಿವೆ. ಸಹ ಮೀನುಗಾರರು ಅವರನ್ನು ತಕ್ಷಣವೇ ತೀರಕ್ಕೆ ಕರೆತಂದು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯರು ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ವಾರ್ತಾ ಭಾರತಿ 14 Nov 2025 6:49 am

ಮತ್ತೆ ಸುದ್ದಿಯಲ್ಲಿರುವ ಕ್ಷಯ

ಇತ್ತೀಚೆಗೆ ಭಾರತ ನಕಲಿ ಔಷಧಿಗಳ ಕಾರಣಕ್ಕೆ ಸುದ್ದಿಯಾಗಿತ್ತು. ಈ ಔಷಧಿಗಳನ್ನು ಸೇವಿಸಿ ಮಕ್ಕಳು ಮೃತಪಟ್ಟಿದ್ದಲ್ಲದೆ, ನೂರಾರು ಮಕ್ಕಳು ಆಸ್ಪತ್ರೆಗೆ ದಾಖಲಾದರು. ಒಂದೆಡೆ ರೋಗಿಗಳು ಔಷಧಿಯ ಕೊರತೆಗಳಿಂದ ಸಾವನ್ನಪ್ಪುತ್ತಿದ್ದರೆ ಮತ್ತೊಂದೆಡೆ ನಕಲಿ ಔಷಧಿಗಳಿಂದ ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾರೆ. ಹೀಗೆ ನಕಲಿ ಔಷಧಿಗಳಿಗೆ ಬಲಿಯಾಗುವವರು ಬಡವರ್ಗಕ್ಕೆ ಸೇರಿದ ಜನರೇ ಆಗಿರುವುದು ಆಕಸ್ಮಿಕವಲ್ಲ. ನಕಲಿ ಔಷಧಿ ಕಂಪೆನಿಗಳು ಇಂತಹ ವರ್ಗವನ್ನು ಗುರಿಯಾಗಿಸಿಕೊಂಡೇ ಔಷಧಿಗಳನ್ನು ತಯಾರಿಸುತ್ತವೆ. ಇದೀಗ ದೇಶದಲ್ಲಿ ಹೆಚ್ಚಿರುವ ಕ್ಷಯ ರೋಗ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯು ವರದಿಯೊಂದನ್ನು ಬಿಡುಗಡೆ ಮಾಡಿದೆ. 2024ರಲ್ಲಿ ಭಾರತದಲ್ಲಿ ಅತ್ಯಧಿಕ ಕ್ಷಯ ರೋಗ ಪ್ರಕರಣಗಳು ವರದಿಯಾಗಿವೆೆ. ಇಂಡೋನೇಶ್ಯ, ಫಿಲಿಪ್ಪೀನ್ಸ್, ಚೀನಾ, ಪಾಕಿಸ್ತಾನಕ್ಕಿಂತ ಹೆಚ್ಚಿನ ಪ್ರಮಾಣದ ಕ್ಷಯ ರೋಗ ಪ್ರಕರಣಗಳು ಭಾರತದಲ್ಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಕ್ಷಯ ರೋಗ ವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಶ್ವಕ್ಕೆ ಹೋಲಿಸಿದರೆ, ಶೇ. 25ರಷ್ಟು ಕ್ಷಯ ಪ್ರಕರಣಗಳು ಭಾರತದಲ್ಲೇ ಇವೆ. ಈ ಜಗತ್ತು 2030ರಲ್ಲಿ ಕ್ಷಯರೋಗ ಮುಕ್ತವಾಗಬೇಕು ಎಂದು ಗುರಿ ಹಾಕಿಕೊಂಡಿದೆ. ಭಾರತವು ಎರಡು ವರ್ಷಗಳ ಹಿಂದೆ 2025ರಲ್ಲಿ ಕ್ಷಯ ಮುಕ್ತವಾಗುವ ಬಗ್ಗೆ ಹೇಳಿಕೊಂಡಿತ್ತು. ಆದರೆ ಭಾರತದ ಕನಸು ಈಡೇರಿಲ್ಲ. ಕ್ಷಯ ರೋಗ ಇಳಿಕೆಯಲ್ಲಿ ಭಾರತ ಸಾಧನೆ ಮಾಡಿದೆ ಎಂದು ಹೇಳಿಕೊಳ್ಳುತ್ತದೆಯಾದರೂ, ಇಂದಿಗೂ ಭಾರತ ವಿಶ್ವದಲ್ಲಿ ಕ್ಷಯ ರೋಗಕ್ಕಾಗಿ ಅಗ್ರಸ್ಥಾನದಲ್ಲಿರುವುದು ಹೆಮ್ಮೆ ಪಡುವ ವಿಷಯ ಖಂಡಿತಾ ಅಲ್ಲ. ಭಾರತ ಕ್ಷಯ ರೋಗಕ್ಕಾಗಿ ಗುರುತಿಸಲ್ಪಟ್ಟಿರುವುದು ಇಂದು ನಿನ್ನೆಯಲ್ಲ. 2022ನೇ ವರ್ಷದ ಅಂತ್ಯಕ್ಕೆ ಭಾರತದಲ್ಲಿ 24.2 ಲಕ್ಷ ಕ್ಷಯ ರೋಗಿಗಳನ್ನು ಗುರುತಿಸಲಾಗಿದೆ. 2021ಕ್ಕೆ ಹೋಲಿಸಿದರೆ ಇದು ಶೇ. 13ರಷ್ಟು ಹೆಚ್ಚಳ ಎಂದು ಸರಕಾರದ ದಾಖಲೆಗಳೇ ಹೇಳುತ್ತವೆ. ಜಗತ್ತಿನ ಒಟ್ಟು ಕ್ಷಯ ರೋಗಿಗಳಲ್ಲಿ ನಾಲ್ಕನೇ ಒಂದು ಭಾಗ ಭಾರತದಲ್ಲೇ ಇದ್ದಾರೆೆ ಎಂದು ಅಂಕಿಅಂಶಗಳು ಹೇಳುತ್ತವೆ. ಜಗತ್ತು ಕ್ಷಯ ಮುಕ್ತವಾಗಲು ಇಂದು ಭಾರತವೇ ಬಹುದೊಡ್ಡ ಅಡ್ಡಿ ಅನ್ನಿಸಿಕೊಂಡಿದೆ. ಕೊರೋನ ಸಂದರ್ಭದಲ್ಲಿ ಭಾರತವು ಲಸಿಕೆ ತಯಾರಿಕೆಯ ಮೂಲಕ ವಿಶ್ವದಲ್ಲಿ ಸುದ್ದಿ ಮಾಡಿತು. ಆದರೆ ಈ ಅವಧಿಯಲ್ಲಿ ಕ್ಷಯ ರೋಗಕ್ಕೆ ಮೀಸಲಾಗಿರುವ ದುಡ್ಡನ್ನು ಸರಕಾರ ಕೊರೋನ ಲಸಿಕೆಗಳಿಗೆ ವರ್ಗಾಯಿಸಿರುವುದು ಕ್ಷಯ ರೋಗ ಪ್ರಕರಣಗಳನ್ನು ಹೆಚ್ಚಿಸಿತು ಎನ್ನುವ ಅಭಿಪ್ರಾಯವಿದೆ. ಕೊರೋನೋತ್ತರ ದಿನಗಳಲ್ಲಿ ಭಾರತದ ಕ್ಷಯ ರೋಗಿಗಳು ತೀವ್ರ ಔಷಧ ಅಭಾವವನ್ನು ಎದುರಿಸಿದರು. ರೋಗಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಇವೆಲ್ಲವೂ ಭಾರತದಲ್ಲಿ ಕ್ಷಯರೋಗ ಪ್ರಕರಣಗಳನ್ನು ಹೆಚ್ಚಿಸುವಂತೆ ಮಾಡಿದವು. ಕ್ಷಯರೋಗವನ್ನು ಬರೇ ಒಂದು ರೋಗವಾಗಿಯಷ್ಟೇ ನೋಡುವಂತಿಲ್ಲ. ಅದು ಭಾರತದ ಒಟ್ಟು ಸಾಮಾಜಿಕ ಸ್ಥಿತಿಗತಿಗೆ ಹಿಡಿದ ಕನ್ನಡಿಯಾಗಿದೆ. ಕ್ಷಯರೋಗವು ಈ ದೇಶದ ಪೌಷ್ಟಿಕತೆಯೊಂದಿಗೆ ನೇರ ಸಂಬಂಧವನ್ನು ಹೊಂದಿದೆ. ದೇಶವು ಹಸಿವಿನ ಸೂಚ್ಯಂಕದಲ್ಲಿ ಅತ್ಯಂತ ಕಳಪೆ ಸಾಧನೆ ಮಾಡಿರುವುದು ಮತ್ತು ಕ್ಷಯರೋಗದಲ್ಲಿ ಅಗ್ರ ಸ್ಥಾನವನ್ನು ಹೊಂದಿರುವುದಕ್ಕೆ ಪರಸ್ಪರ ಸಂಬಂಧವಿದೆ. ಪೌಷ್ಟಿಕ ಆಹಾರದ ಕೊರತೆಯನ್ನು ಎದುರಿಸುವ, ಹಸಿವಿನಿಂದ ಕಂಗಾಲಾಗಿರುವ ಜನರ ಮೇಲೆ ಕ್ಷಯ ರೋಗಾಣು ಸುಲಭದಲ್ಲಿ ಎರಗುತ್ತವೆ. ಕ್ಷಯ ರೋಗಿಗಳನ್ನು ತಕ್ಷಣ ಗುರುತಿಸಿ ಅವರಿಗೆ ಔಷಧಿಗಳನ್ನು ನೀಡುವ ಹಾಗೂ ಪೌಷ್ಟಿಕ ಆಹಾರವನ್ನು ಒದಗಿಸುವ ಕೆಲಸ ಜೊತೆ ಜೊತೆಗೆ ನಡೆಯಬೇಕು. ಇಲ್ಲವಾದರೆ ರೋಗ ಶೀಘ್ರದಲ್ಲಿ ಗುಣವಾಗುವುದಿಲ್ಲ. ಒಬ್ಬನಲ್ಲಿ ಕ್ಷಯ ರೋಗ ಪತ್ತೆಯಾದರೆ ಅದು ಕೇವಲ ಒಂದೆರಡು ತಿಂಗಳಲ್ಲಿ ಗುಣವಾಗುವುದಿಲ್ಲ. ಕನಿಷ್ಠ ಆರೇಳು ತಿಂಗಳು ನಿರಂತರವಾಗಿ ಔಷಧಿಗಳನ್ನು ಪಡೆದುಕೊಳ್ಳಬೇಕು. ಒಂದೆರಡು ತಿಂಗಳು ಔಷಧಿಗಳನ್ನು ಪಡೆದು ಏಕಾಏಕಿ ನಿಲ್ಲಿಸಿದರೆ ಇನ್ನಷ್ಟು ಭೀಕರವಾಗಿ ಅದು ರೋಗಿಯ ಮೇಲೆ ಎರಗಬಹುದು. ಈ ಸುದೀರ್ಘ ಔಷಧಿ ಸೇವನೆ ಮತ್ತು ಪೌಷ್ಟಿಕ ಆಹಾರ ಸೇವನೆಗೆ ಯಾವುದೇ ಅಡ್ಡಿ ಎದುರಾಗಬಾರದು. ಆದರೆ ಭಾರತದಲ್ಲಿ ಕ್ಷಯಕ್ಕೆ ಅಗತ್ಯವಾಗಿರುವ ಲಿನೆರೊಲಿಡ್, ಕ್ಲೋಫಾಜಿಮೈನ್, ಸೈಕ್ಲೋಸೆರೈನ್ ಮೊದಲಾದ ಔಷಧಿಗಳ ಕೊರತೆಯಿದೆ ಎನ್ನುವ ಆರೋಪ ಬಹುಕಾಲದಿಂದ ಕೇಳಿ ಬರುತ್ತಿದೆ. ಭಾರತದಲ್ಲಿ ಅಧಿಕೃತವಾಗಿ ಗುರುತಿಸಲ್ಪಡದ ಕ್ಷಯರೋಗಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿದೆ. ಇವರು ಇತರರಿಗೂ ರೋಗವನ್ನು ಹರಡುತ್ತಾ ಹೋಗುವುದು ರೋಗವನ್ನು ತಡೆಯಲು ಬಹುದೊಡ್ಡ ಅಡ್ಡಿಯಾಗಿದೆ. ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆ, ಔಷಧಿಗಳನ್ನು ಸಕಾಲದಲ್ಲಿ ಪೂರೈಕೆ ಮಾಡದೇ ಇರುವುದು ಇವೆಲ್ಲವೂ ಕ್ಷಯರೋಗವನ್ನು ಎದುರಿಸಲು ಇರುವ ಸವಾಲುಗಳಾಗಿವೆ. ಕ್ಷಯ ರೋಗವು ಬಡವರ ಪಾಲಿನ ರೋಗವೆಂದು ಗುರುತಿಸಲ್ಪಟ್ಟಿದೆ. ಸರಕಾರ ಇವುಗಳನ್ನು ಮುಚ್ಚಿಡಲು ಪ್ರಯತ್ನಿಸಿದಷ್ಟೂ ಅದು ಹೆಚ್ಚುತ್ತಾ ಹೋಗುತ್ತದೆ. ದೇಶದಲ್ಲಿ ಹೆಚ್ಚುತ್ತಿರುವ ಬಡತನ, ಅಪೌಷ್ಟಿಕತೆಯನ್ನು ಒಪ್ಪಿಕೊಳ್ಳಲು ನಮ್ಮ ಸರಕಾರ ಈಗಲೂ ಸಿದ್ಧವಿಲ್ಲ. ಆದುದರಿಂದಲೇ ಅವುಗಳ ಜೊತೆಗೆ ತಳಕು ಹಾಕಿಕೊಂಡಿರುವ ಕ್ಷಯದಂತಹ ರೋಗಗಳನ್ನು ತಡೆಯಲು ಸರಕಾರ ವಿಫಲವಾಗುತ್ತಿದೆ. ಮಲಿನಗೊಂಡಿರುವ ನದಿಗಳ ನೀರನ್ನು ಬಳಸುವುದು, ವಾತಾವರಣ ದಿನದಿಂದ ದಿನಕ್ಕೆ ಕೆಡುತ್ತಿರುವುದು, ಕೊಳೆಗೇರಿಗಳಲ್ಲಿ ಹೆಚ್ಚಳ ಇವೆಲ್ಲವೂ ಕ್ಷಯ ರೋಗಕ್ಕೆ ಪೂರಕವಾಗಿವೆೆ. ಇವೆಲ್ಲದರ ವಿರುದ್ಧ ಸರಕಾರ ಪ್ರಾಮಾಣಿಕವಾಗಿ ಕ್ರಮ ಕೈಗೊಂಡಾಗ ಕ್ಷಯರೋಗವನ್ನು ತಡೆಯುವ ಯೋಗ್ಯತೆಯನ್ನು ಸರಕಾರ ತನ್ನದಾಗಿಸಿಕೊಳ್ಳುತ್ತದೆ. ಆರೋಗ್ಯವಂತ ಯುವಕರೇ ದೇಶದ ಭವಿಷ್ಯ. ಕ್ಷಯ ರೋಗ ಈ ದೇಶದ ಯುವಕರ ಮೇಲೆ ನೇರ ದಾಳಿಗಳನ್ನು ಮಾಡುತ್ತದೆ. ಅದು ಮಹಿಳೆಯರನ್ನು, ಮಕ್ಕಳನ್ನು ನಿಧಾನಕ್ಕೆ ಬಲಿ ತೆಗೆದುಕೊಳ್ಳುತ್ತದೆ. ಸರಕಾರ ಈ ನಿಟ್ಟಿನಲ್ಲಿ ಕುಸಿದು ನಿಂತಿರುವ ಆರೋಗ್ಯ ವಲಯವನ್ನು ಮೇಲೆತ್ತಲು ಹೆಚ್ಚು ಪ್ರಯತ್ನ ಪಡಬೇಕಾಗಿದೆ. ಕ್ಷಯ ರೋಗಕ್ಕಾಗಿ ಹೆಚ್ಚಿನ ಹಣವನ್ನು ಮೀಸಲಿಟ್ಟು, ಇದರ ವಿರುದ್ಧ ಹೋರಾಡಲು ಸ್ವಯಂಸೇವಕರ ಪಡೆಯನ್ನು ಕಟ್ಟುವ ಅಗತ್ಯವಿದೆ. ಹಾಗೆಯೇ ಕ್ಷಯ ರೋಗಿಗಳನ್ನು ಗುರುತಿಸಿ ಅವರಿಗೆ ನೆರವಾಗಲು ಸಮಾಜವನ್ನು ಜಾಗೃತಿಗೊಳಿಸುವ ಕೆಲಸವೂ ನಡೆಯಬೇಕು.

ವಾರ್ತಾ ಭಾರತಿ 14 Nov 2025 6:44 am

Happy Children's Day Wishes 2025: ಮಕ್ಕಳ ದಿನಾಚರಣೆ ಶುಭಾಶಯಗಳು 22+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ!

Happy Children's Day Wishes 2025: ನವೆಂಬರ್ 14 ಮಕ್ಕಳ ದಿನಾಚರಣೆಯ ಸಂಭ್ರಮಾಚರಣೆಯ ದಿನ. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನವೂ ಹೌದು. ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನವಾದ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನಾಗಿ ಪ್ರತಿ ವರ್ಷ ಆಚರಿಸಲಾಗುತ್ತದೆ. ಬಾಲ್ಯ ಎನ್ನುವುದು ಬಂಗಾರದ ದಿನಗಳು. ಕಲಿಯುವುದು - ನಲಿಯುವ ವಯಸ್ಸು. ಈ

ಒನ್ ಇ೦ಡಿಯ 14 Nov 2025 6:15 am

ಅಲ್ ಫಲಾಹ್ ವಿವಿ ಸಂಸ್ಥಾಪಕನ ಬಣ್ಣ ಬಯಲು, ₹7.5 ಕೋಟಿ ವಂಚನೆ ಕೇಸ್‌ನಲ್ಲಿ ಜೈಲು ಪಾಲಾಗಿದ್ದ ಸಿದ್ಧಿಕಿ!

ದಿಲ್ಲಿಯ ಕೆಂಪು ಕೋಟೆ ಕಾರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಆರೋಪಿಗಳು ಕೆಲಸ ಮಾಡುತ್ತಿದ್ದ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಸಂಸ್ಥಾಪಕ ಜಾವೇದ್ ಅಹ್ಮದ್ ಸಿದ್ಧಿಕಿ ಮೇಲೆ ತನಿಖಾ ಸಂಸ್ಥೆಗಳು ಕಣ್ಣಿಟ್ಟಿವೆ. ಸಿದ್ಧಿಕಿಯು ಈ ಹಿಂದೆ 7.5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದು, ಒಂಬತ್ತು ಕಂಪನಿಗಳ ಜಾಲವನ್ನು ಹೊಂದಿರುವ ವಿಷಯ ಬೆಳಕಿಗೆ ಬಂದಿದೆ. ವಿಶ್ವವಿದ್ಯಾಲಯದ ನಿಧಿಯ ಬಗ್ಗೆ ಜಾರಿ ನಿರ್ದೇಶನಾಲಯವೂ ಪ್ರತ್ಯೇಕ ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ವಿಜಯ ಕರ್ನಾಟಕ 14 Nov 2025 5:43 am

Bihar Assembly Election 2025 Live: ಬಿಹಾರ ಚುನಾವಣೆ ಫಲಿತಾಂಶ, ಇಲ್ಲಿದೆ ಕ್ಷಣ ಕ್ಷಣದ ಮಾಹಿತಿ

Bihar Assembly Election 2025 Live: ದೇಶದಲ್ಲಿ ಜನರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ನವೆಂಬರ್ 06 ಹಾಗೂ ನವೆಂಬರ್ 11ರಂದು ಎರಡು ಹಂತದಲ್ಲಿ ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಈ ಬಾರಿ ಬಿಹಾರದಲ್ಲಿ ದಾಖಲೆಯ ಮತದಾನವಾಗಿದ್ದು, ಯಾರು ಅಧಿಕಾರಕ್ಕೆ ಬರಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. ಎಲ್ಲಾ ಚುನಾವಣೋತ್ತರ

ಒನ್ ಇ೦ಡಿಯ 14 Nov 2025 5:02 am

ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ | ಬಾಗಲಕೋಟೆ ಜಿಲ್ಲೆಯ 3 ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ

ಬಾಗಲಕೋಟೆ : ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ, ಜಮಖಂಡಿ, ರಬಕವಿ–ಬನಹಟ್ಟಿ ತಾಲ್ಲೂಕುಗಳಲ್ಲಿ ನ.13ರ ರಾತ್ರಿಯಿಂದ ನ.16ರ ಬೆಳಿಗ್ಗೆ 8ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಸಂಗಪ್ಪ, ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಲಾಗುತ್ತಿದೆ. ಹೆಚ್ಚಿನ ಹಾನಿಯಾಗದಂತೆ ತಡೆಯಲು ಪ್ರತಿಭಟನೆ, ಮುಷ್ಕರ, ಗುಂಪು ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಏನಿದು ಘಟನೆ : ಬಾಗಲಕೋಟೆ  ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಸಮೀಪ ಇರುವ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ನಿಂತಿರುವ ಕಬ್ಬು ತುಂಬಿದ್ದ ಹಲವು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ಗುರುವಾರ ಸಂಜೆ ನಡೆದಿತ್ತು. ಕಬ್ಬು ಬೆಳೆಗೆ ಏಕ ದರ ನಿಗದಿಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದೆ. ತಾಳ್ಮೆ ಕಳೆದುಕೊಂಡ ಕೆಲವರು, ಕಬ್ಬು ತುಂಬಿದ ಟ್ರ್ಯಾಕ್ಟರ್‌ ನೆಲಕ್ಕೆ ಉರುಳಿಸಿ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಯು ನಾಳೆಯಿಂದ ಪ್ರಾರಂಭ ಮಾಡಬೇಕು ಎಂಬ ಉದ್ದೇಶದಿಂದ ಸುಮಾರು, 150 ಟ್ರ್ಯಾಕ್ಟರ್‌ ಕಬ್ಬು ತುಂಬಿಸಿ ಇಡಲಾಗಿದೆ. ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ಹಿಂದಿನ ಬಾಕಿ ಹಣ ನೀಡುವ ಬಗ್ಗೆ ಚಕಾರ ಎತ್ತಿಲ್ಲ. ಮುಧೋಳ ಪಟ್ಟಣದಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಭಾಗಿ ಆಗಿ ದರ ಘೋಷಣೆ ಮಾಡುವ ಜೊತೆಗೆ ಸಂಧಾನಕ್ಕೆ ಬರಲಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಆಗ ಸಾಲಾಗಿ ನಿಂತಿದ್ದ ಕಬ್ಬಿನ ಟ್ರಾಕ್ಟರ್‌ಗೆ ಕೆಲವರು ಬೆಂಕಿ ಹಚ್ಚಿದ್ದರು.

ವಾರ್ತಾ ಭಾರತಿ 14 Nov 2025 12:08 am

ಮನು ಇಡ್ಯಾ ತುಳುವಿನ ಯುಗ ಪ್ರವರ್ತಕ ನಾಟಕಕಾರ : ಯು.ಕೆ ಕುಮಾರನಾಥ

ಕೃತಿಗಳ ಬಿಡುಗಡೆ

ವಾರ್ತಾ ಭಾರತಿ 13 Nov 2025 11:56 pm

ಬೆಳಗಾವಿ | ಹತ್ತರಗಿ ಟೋಲ್ ನಾಕಾ ಬಳಿ ಕಲ್ಲುತೂರಾಟ ಪ್ರಕರಣ; ಆರು ಮಂದಿಯ ಬಂಧನ

ಬೆಳಗಾವಿ : ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ನಾಕಾ ಬಳಿ ನಡೆದ ರೈತರ ಪ್ರತಿಭಟನೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿ ಯಮಕನಮರಡಿ ಠಾಣೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಹೆಬ್ಬಾಳದ ಚನ್ನಗೌಡ ಸಸಾಲಟ್ಟಿ, ಪ್ರಶಾಂತ ಮುಗಳಿ, ವಿನಾಯಕ ಕೋಟಿವಾಲಿ, ಉಳ್ಳಾಗಡ್ಡಿ ಖಾನಾಪುರದ ಮಲ್ಲಪ್ಪ ಘಟಗಿ, ಕೇಸ್ತಿಯ ಶಿವಪ್ಪ ವಾಣಿ ಹಾಗೂ ಬಿದ್ರೆವಾಡಿಯ ಸೋಮನಾಥ ಹಿರೇಮಠ ಬಂಧಿತರಾದವರು. ಪ್ರತಿಭಟನೆಯ ಸಂದರ್ಭದಲ್ಲಿ ಕೆಲವರು ಪೊಲೀಸರ ಮೇಲೆ ಕಲ್ಲು ತೂರಿದ್ದು, ಸಾರಿಗೆ ಸಂಸ್ಥೆಯ ನಾಲ್ಕು ಬಸ್‌ಗಳು ಹಾಗೂ ಪೊಲೀಸ್ ಇಲಾಖೆಯ ಎರಡು ಬಸ್‌ಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ 12 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಮತ್ತು ಸಾಕ್ಷ್ಯಾಧಾರಗಳ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ವಿರುದ್ಧ ದೊಂಬಿ, ಗುಂಪುಗಲಭೆ ಹಾಗೂ ಮಾರಣಾಂತಿಕ ಹಲ್ಲೆ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ವಾರ್ತಾ ಭಾರತಿ 13 Nov 2025 11:55 pm

Belagavi | ಡಿಜಿಟಲ್ ಅರೆಸ್ಟ್; 33 ಆರೋಪಿಗಳ ಬಂಧನ

ಅಂತರ್‌ರಾಷ್ಟ್ರೀಯ ಮೋಸ ಜಾಲ ಬಯಲು

ವಾರ್ತಾ ಭಾರತಿ 13 Nov 2025 11:51 pm

ಬ್ರಹ್ಮಾವರ: ತಾಳೆಮರದಿಂದ ಬಿದ್ದು ವ್ಯಕ್ತಿ ಸಾವು

ಬ್ರಹ್ಮಾವರ: ತಾಳೆ ಹಣ್ಣು ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದ ಹಾರಾಡಿ ಗ್ರಾಮದ ಹೊನ್ನಾಳ ಕುಕ್ಕುಡೆಯ ಕೀರ್ತಿನಗರ ನಿವಾಸಿ ಉಮೇಶ (48) ಎಂಬವರು ಕುಕ್ಕುಡೆಯಲ್ಲಿ ತಾಳೆ ಮರ ಹತ್ತಿ ತಾಳೆ ಬೊಂಡ ಕೊಯ್ಯುವಾಗ ಆಯತಪ್ಪಿ ಕಾಲುಜಾರಿ ಸುಮಾರು 20 ಅಡಿ ಕೆಳಗೆ ಬಿದ್ದು, ಕುತ್ತಿಗೆ ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆ ನ.7ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಡೆದಿದ್ದು, ತಕ್ಷಣವೇ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ನ.13ರಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 13 Nov 2025 11:47 pm

Ukraine War: ಡಿಸೆಂಬರ್ ತಿಂಗಳಲ್ಲಿ ಭಾರತಕ್ಕೆ ಎಂಟ್ರಿ ಕೊಡಲಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್?

ಭಾರತ ಮತ್ತು ರಷ್ಯಾ ನಡುವಿನ ಸಂಬಂಧ ತುಂಬಾ ಗಟ್ಟಿಯಾಗಿದ್ದು, ಎರಡೂ ದೇಶಗಳ ಬಂಧನ ಇತರರ ಕಣ್ಣು ಕುಕ್ಕಿಸುತ್ತಿದೆ. ಇದೇ ಕಾರಣಕ್ಕೆ ಅಮೆರಿಕ ಕೂಡ ಭಾರತ ಮತ್ತು ರಷ್ಯಾ ನಡುವಿನ ಸಂಬಂಧ ಹಾಳು ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಿದೆ. ಇಷ್ಟೆಲ್ಲಾ ಒತ್ತಡದ ನಡುವೆ ಕೂಡ ಭಾರತ ಈಗ ರಷ್ಯಾ ಜೊತೆಗಿನ ತನ್ನ ಸಂಬಂಧ ಸೂಕ್ತವಾಗಿ ಕಾಪಾಡಿಕೊಂಡು ಬರುತ್ತಿದೆ.

ಒನ್ ಇ೦ಡಿಯ 13 Nov 2025 11:46 pm

ಸಿದ್ಧಾಪುರ: ವೃದ್ಧ ಆತ್ಮಹತ್ಯೆ

ಶಂಕರನಾರಾಯಣ: ಬಸವ ಕುಲಾಲ್ (66) ಎಂಬವರು ಇಂದು ಬೆಳಗ್ಗೆ ತಾನು ವಾಸವಾಗಿದ್ದ ಮನೆಯ ಎದುರಿನ ಕಡುಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

ವಾರ್ತಾ ಭಾರತಿ 13 Nov 2025 11:42 pm

ಮಲ್ಪೆ: ಕನ್ನಡ ರಾಜ್ಯೋತ್ಸವ ಆಚರಣೆ

ಮಲ್ಪೆ: ಮಲ್ಪೆ ಗಾಂಧಿ ಶತಾಬ್ಧಿ ಸರಕಾರಿ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವೇದಿಕೆಯ ಉಡುಪಿ ಜಿಲ್ಲಾ ಸಂಚಾಲಕ ಹಾಗೂ ಕಾರ್ಕಳ ಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕ ರಾಮಾಂಜಿ ಮಾತನಾಡಿದ, ಕನ್ನಡ ಭಾಷೆ, ಸಂಸ್ಕೃತಿ ಉಳಿಯಲು ಕನ್ನಡ ಶಾಲೆಗಳ ಜೀವಂತಿಕೆ ಅತೀ ಅಗತ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಭಾಷಾಭಿಮಾನ ಮೂಡಿಸಲು ಶಿಕ್ಷಕರು ಶ್ರಮಿಸಬೇಕು ಎಂದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರವಿರಾಜ್ ವಹಿಸಿದ್ದರು. ಹಳೆ ವಿದ್ಯಾರ್ಥಿ ಮಂಜುನಾಥ್ ಕೊಳ ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಲತಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರೇಮಾನಂದ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಗೌರವ ಶಿಕ್ಷಕಿ ಪೂರ್ಣಿಮಾ ವಂದಿಸಿದರು. ಬಳಿಕ ರಾಮಾಂಜಿ ಮಕ್ಕಳಿಗೆ ಕನ್ನಡದ ಹೆಸರಾಂತ ಕವಿಗಳ ಶಿಶು ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು.  

ವಾರ್ತಾ ಭಾರತಿ 13 Nov 2025 11:38 pm

ಮುಂಬೈ | ಹಲವು ವಾಹನಗಳಿಗೆ ಟ್ರಕ್ ಢಿಕ್ಕಿ : 8 ಮಂದಿ ಮೃತ್ಯು, ಹಲವರಿಗೆ ಗಾಯ

ಮುಂಬೈ, ನ.13: ಪುಣೆಯ ನವಲೆ ಸೇತುವೆಯ ಸಮೀಪ ಗುರುವಾರ ವೇಗವಾಗಿ ಬಂದ ಟ್ರಕ್‌ವೊಂದು ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. 20 ಜನರು ಗಾಯಗೊಂಡಿದ್ದಾರೆ.   ಈ ಘಟನೆ ಸಿನ್ಹಗಡ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿಯಲ್ಲಿರುವ ಸೆಲ್ಫಿ ಪಾಯಿಂಟ್ ಸಮೀಪ ಸಂಭವಿಸಿದೆ. ಅಪಘಾತದಲ್ಲಿ ಟ್ರಕ್ 8 ವಾಹನಗಳಿಗೆ ಢಿಕ್ಕಿಯಾಗಿದೆ. ಇದರಿಂದ 2 ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪುಣೆ ನಗರ ಪೊಲೀಸರು ತಿಳಿಸಿದ್ದಾರೆ. ‘‘ಅಪಘಾತದಲ್ಲಿ ಕನಿಷ್ಠ8 ಮಂದಿ ಮೃತಪಟ್ಟಿದ್ದಾರೆ  ಹಾಗೂ ಹಲವರು ಗಾಯಗೊಂಡಿದ್ದಾರೆ’’ ಎಂದು ಉಪ ಪೊಲೀಸ್ ಆಯುಕ್ತ ಸಂಭಾಜಿ ಕದಮ್ ದೃಢಪಡಿಸಿದ್ದಾರೆ.

ವಾರ್ತಾ ಭಾರತಿ 13 Nov 2025 11:36 pm

ಪಾಕಿಸ್ತಾನದ ಹೊಸ ವರಸೆ, ಇಸ್ಲಾಮಾಬಾದ್ ಬಾಂಬ್ ಸ್ಫೋಟಕ್ಕೆ ಅಫ್ಘಾನಿಸ್ತಾನ ಕಾರಣ ಅಂತೆ!

ಪಾಕಿಸ್ತಾನ ಅಂದ್ರೆ ಸುಳ್ಳು... ಪಾಕಿಸ್ತಾನ ಅಂದ್ರೆ ಬರೀ ಓಳು... ಪಾಕಿಸ್ತಾನ ಮಾಡುವ ಎಲ್ಲಾ ರೀತಿ ಎಡವಟ್ಟು ಜಗತ್ತಿನ ಮೂಲೆ ಮೂಲೆಯಲ್ಲೂ ಸದ್ದು ಮಾಡುತ್ತಲೇ ಇರುತ್ತದೆ. ಯಾಕಂದ್ರೆ ಪಾಕಿಸ್ತಾನ ಅಷ್ಟು ಕೆಟ್ಟ ಹೆಸರು ಪಡೆದಿದೆ. ಹೀಗಿದ್ದರೂ ತನ್ನ ವರಸೆ ಬದಲಾಯಿಸಿಕೊಳ್ಳದ ಈ ದೇಶ ಇದೀಗ ಮತ್ತೊಂದು ಕಿರಿಕ್ ತೆಗೆದು, ತನ್ನ ದೇಶದಲ್ಲಿ ತಾನೇ ಸಾಕಿದ ಉಗ್ರರು ನಡೆಸಿದ ದಾಳಿಗೆ

ಒನ್ ಇ೦ಡಿಯ 13 Nov 2025 11:33 pm

ಜುಬೈಲ್: ಎನ್‌ಆರ್‌ಐ ಬ್ರದರ್ಸ್ ಮುಕ್ಕ ಜಮಾಅತ್ ನ ವಾರ್ಷಿಕ ಮಹಾಸಭೆ

ಜುಬೈಲ್: ಎನ್‌ಆರ್‌ಐ ಬ್ರದರ್ಸ್ ಮುಕ್ಕ ಜಮಾಅತ್ ಸಂಸ್ಥೆಯ ವಾರ್ಷಿಕ ಮಹಾಸಭೆ ಜುಬೈಲ್‌ನ ʼMUSK 7ʼ ಇಸ್ತೀರಾದಲ್ಲಿ ಗುರುವಾರ ನಡೆಯಿತು. ಸಭೆಯ ಆರಂಭದಲ್ಲಿ ಮಾಸ್ಟರ್ ಮುಹಮ್ಮದ್ ತಲ್ಹಾ ಕಿರಾಅತ್ ಪಠಿಸಿದರು. ಕಲಂದರ್ ಬಾವ ಅತಿಥಿಗಳನ್ನು ಸ್ವಾಗತಿಸಿದರು. ಎನ್.ಆರ್.ಐ ಸಮಿತಿಯ ಅಧ್ಯಕ್ಷರಾದ ಸಾದಿಕ್ ಮೊಯ್ದಿನ್ ಮಹಾಸಭೆಯನ್ನು ಉದ್ಘಾಟಿಸಿದರು. ಕೋಶಾಧಿಕಾರಿ ಕೆ.ಎಂ. ಹಸನ್ ಕಳೆದ ವರ್ಷದ ಲೆಕ್ಕಪತ್ರವನ್ನು ಮಂಡಿಸಿದರು. ಸಭೆಯ ಮುಂದಿರುವ ಕಾರ್ಯ ವರದಿ, ಪೂರ್ಣಗೊಂಡ ಯೋಜನೆಗಳು, ಜಾರಿಗೆ ಬಂದ ಅಭಿವೃದ್ಧಿ ಕಾರ್ಯಗಳು ಹಾಗೂ ಮುಂದಿನ ವರ್ಷ ಕೈಗೊಳ್ಳಲಿರುವ ಯೋಜನೆಗಳ ವಿವರವನ್ನು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸಫ್ವಾನ್ ಮಂಡಿಸಿದರು. ಸದಸ್ಯರ ಸರ್ವಾನುಮತದೊಂದಿಗೆ ಈ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರುವುದಾಗಿ ತೀರ್ಮಾನಿಸಲಾಯಿತು. ಜಮಾಅತ್ ಅಧ್ಯಕ್ಷ ಕೆ.ಎಂ. ಹಸನ್ ಸಾಬ್ ಹಾಗೂ ದೀರ್ಘಕಾಲ ಸಮಿತಿಗೆ ಬೆಂಬಲ ನೀಡುತ್ತಾ, ಸಂಸ್ಥೆಯ ಬೆಳವಣಿಗೆಗೆ ಪ್ರಮುಖ ಕೊಡುಗೆ ನೀಡಿರುವ ಹಿರಿಯ ಸದಸ್ಯರಾದ ಶಮೀಮ್ ಮೊಯ್ದಿನ್ ಮತ್ತು ಇಮ್ತಿಯಾಝ್ ಶೇಖ್ ಅವರನ್ನು ಸಮಿತಿಯ ಪರವಾಗಿ ಗೌರವಿಸಲಾಯಿತು.  ಮುಝಫರ್ ಅಲಿ ಅವರ ನಿರೂಪಣೆಯಲ್ಲಿ ನಡೆದ “General Quiz” ಕಾರ್ಯಕ್ರಮ ಸಭೆಯ ಪ್ರಮುಖ ಆಕರ್ಷಣೆ ಆಗಿತ್ತು. ಎಂ. ಝೈನುದ್ದೀನ್ ಅವರು ‘ಎನ್.ಆರ್.ಐ ಬ್ರದರ್ಸ್ ಮುಕ್ಕ ಜಮಾಅತ್’ ಸ್ಥಾಪನೆಯಿಂದ ಇಂದಿನವರೆಗಿನ ಬೆಳವಣಿಗೆಯ ಪಯಣವನ್ನು ಸ್ಫೂರ್ತಿದಾಯಕವಾಗಿ ಮಂಡಿಸಿ, ಸಂಸ್ಥೆಯ ಸಾಧನೆಗಳನ್ನು ನೆನಪಿಸಿದರು. ಮಹಾಸಭೆಯಲ್ಲಿ ಜಮಾತ್ ನಿರ್ಮಿಸುತ್ತಿರುವ ಹೊಸ ವಾಣಿಜ್ಯ ಸಂಕೀರ್ಣಕ್ಕೆ ಆರ್ಥಿಕ ಸಹಾಯ ಮಾಡಲು ತೀರ್ಮಾನಿಸಿ, ಸದಸ್ಯರಿಂದಲೇ ಮೊದಲ ಹಂತದ ದೇಣಿಗೆಗಳನ್ನು ದಾಖಲಿಸಲಾಯಿತು. ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರು: ಕಲಂದರ್ ಬಾವ ಉಪಾಧ್ಯಕ್ಷರು: ಲುಕ್ಮನ್, ಮುಸ್ತಾಕ್ ಅಹ್ಮದ್ ಪ್ರಧಾನ ಕಾರ್ಯದರ್ಶಿ: ಎಂ. ಝೈನುದ್ದೀನ್ ಕೋಶಾಧಿಕಾರಿ: ಶಂಸುದ್ದೀನ್ ಬಾವ ಸಹ ಕಾರ್ಯದರ್ಶಿ: ರಿಝ್ವಾನ್ ಶಾಫಿ, ಅಝರುದ್ದೀನ್ ಕಾರ್ಯಕ್ರಮದ ನಿರೂಪಣೆಯನ್ನು ಕಲಂದರ್ ಬಾವ ಮತ್ತು ಸಫ್ವಾನ್ ಮುಕ್ಕ ಅವರು ನಿರ್ವಹಿಸಿದರು. ಎಂ. ಝೈನುದ್ದೀನ್ ಧನ್ಯವಾದ ಸಲ್ಲಿಸಿದರು.

ವಾರ್ತಾ ಭಾರತಿ 13 Nov 2025 11:30 pm

ಪತ್ರಕರ್ತ ವೆಂಕಟೇಶ ಸಂಪಗೆ ʼAIMA ಇಂಟರ್ನ್ಯಾಷನಲ್ ಪ್ರಶಸ್ತಿʼ ಪ್ರದಾನ

ಬೆಂಗಳೂರು : ಅಕ್ಷರನಾದ ಸಂಸ್ಥೆ ಕೊಡಮಾಡುವ ʼAIMA ಇಂಟರ್ನ್ಯಾಷನಲ್ ಪ್ರಶಸ್ತಿʼಯನ್ನು ಪತ್ರಕರ್ತ, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ ಎಸ್. ಸಂಪ ಅವರಿಗೆ ಹಿರಿಯ ಸಿನಿಮಾ ನಟ ಶಿವಕುಮಾರ್ ಆರಾಧ್ಯ ಅವರು ಬೆಂಗಳೂರಿನ ಟೆಲಿವಿಷನ್ ಕ್ಲಬ್‌ನಲ್ಲಿ ಇತ್ತೀಚೆಗೆ ಪ್ರದಾನ ಮಾಡಿದರು. ವೆಂಕಟೇಶ ಸಂಪ ಅವರು ಕಳೆದ 19 ವರ್ಷಗಳಿಂದ ಸಂಪದ ಸಾಲು ಪತ್ರಿಕೆ ನಡೆಸುತ್ತಿದ್ದು, ಅವರ ಲೇಖನಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಪ ಅವರು ಟಿವಿ, ರೇಡಿಯೋಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದು, ಸಿನಿಮಾ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಈ ಸಂದರ್ಭದಲ್ಲಿ ಡಾ.ಶ್ರುತಿ ಮಧುಸೂಧನ್, ತಾರಾ ಸಂತೋಷ್, ತೇಜು ಸುನಿಲ್, ಇತರರು ಹಾಜರಿದ್ದರು.

ವಾರ್ತಾ ಭಾರತಿ 13 Nov 2025 11:22 pm

ಫಾತಿಮಾ ಗುತ್ತಿಗಾರು

ಮಂಗಳೂರಿನ ಸುರಲ್ಪಾಡಿ ನಿವಾಸಿ ಫಾತಿಮಾ ಗುತ್ತಿಗಾರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ನಾಲ್ವರು ಪುತ್ರರ ಸಹಿತ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

ವಾರ್ತಾ ಭಾರತಿ 13 Nov 2025 11:21 pm

ಮಾಜಿ ಸಿಎಂ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಬಗ್ಗೆ ಮಹತ್ವದ ಆದೇಶ... BS Yediyurappa

ಕರ್ನಾಟಕ ರಾಜ್ಯದಲ್ಲೇ ದೊಡ್ಡ ಸದ್ದು ಮಾಡಿದ್ದ, ಹಾಗೂ ದೇಶಾದ್ಯಂತ ಸುದ್ದಿಯಾಗಿದ್ದ ಭಾರಿ ದೊಡ್ಡ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದೆ. ರಾಜ್ಯ ರಾಜಕಾರಣದಲ್ಲೇ ದೊಡ್ಡದಾದ ಹೆಸರು ಮಾಡಿದ್ದ ಮಾಜಿ ಸಿಎಂ ಬಗ್ಗೆ ಅಲ್ಲೋಲ, ಕಲ್ಲೋಲ ಸೃಷ್ಟಿ ಮಾಡುವ ಸುದ್ದಿಯೊಂದು ಹರಿದಾಡಿತ್ತು. ಕಳೆದ ಕೆಲ ವರ್ಷಗಳಿಂದ ಈ ಸುದ್ದಿ ಸಂಚಲನ ಕೂಡ ಸೃಷ್ಟಿ ಮಾಡುತ್ತಲೇ ಇದೆ. ಇಷ್ಟೆಲ್ಲಾ ಬೆಳವಣಿಗೆ

ಒನ್ ಇ೦ಡಿಯ 13 Nov 2025 11:19 pm

ಧರ್ಮಸ್ಥಳ ಪ್ರಕರಣ|ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ: ರಾಜ್ಯಪಾಲರಿಗೆ ದೂರು ನೀಡಿದ ಜಯಂತ್

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಬೆದರಿಕೆ ಹಾಕಿರುವುದಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ರಾಜ್ಯಪಾಲ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ?: ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ., ಮಂಜುನಾಥ ಗೌಡ, ಹಾಗೂ ಗುಣಪಾಲ ಸೇರಿ ನನಗೆ ಬೆದರಿಕೆ ಹಾಕಿದರು. ಬಳಿಕ ದೂರುದಾರ ಚಿನ್ನಯ್ಯನನ್ನು ಕರೆಸಿ ಆತನ ಮೂಲಕ ತನಗೆ ತೀವ್ರವಾಗಿ ಹಲ್ಲೆ ಮಾಡಿಸಿದರು. ಅದೇ ರೀತಿ ಚಿನ್ನಯ್ಯನ ಮೇಲೆ ಹಲ್ಲೆ ನಡೆಸಿ ನನಗೆ ಬೆದರಿಸಿ ಸುಳ್ಳು ಹೇಳಿಕೆ ಪಡೆಯುವ ಪ್ರಯತ್ನ ನಡೆಸಿದರು. ಸುಳ್ಳು ಹೇಳಿಕೆ ನೀಡುವಂತೆ ಒತ್ತಾಯಿಸಿದರು ಎಂದು ಜಯಂತ್ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಅದಕ್ಕೆ ಒಪ್ಪದಿದ್ದಾಗ ‘ದೊಡ್ಡವರ ವಿರುದ್ಧ ದೂರು ನೀಡುತ್ತಿಯಾ? ನಿನ್ನನ್ನು ಹಾಗೂ ನಿನ್ನೊಂದಿಗೆ ಇರುವವರನ್ನು ಜೈಲಿಗೆ ಹಾಕದೆ ಬಿಡುವುದಿಲ್ಲ’ ಎಂದು ಬೆದರಿಸಿದ್ದಾರೆ. ಅಧಿಕಾರಿಗಳ ಹಲ್ಲೆಯಿಂದ ಗಾಯಗೊಂಡ ನಾನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದಿದ್ದೇನೆ ಎಂದೂ ತಿಳಿಸಿದ್ದಾರೆ. ತನ್ನಿಂದ ಯಾವುದೇ ಹೇಳಿಕೆ ಪಡೆಯದೆ ಅವರಾಗಿಯೇ ಹೇಳಿಕೆಯನ್ನು ಟೈಪ್ ಮಾಡಿದ್ದಾರೆ. ಪ್ರತಿ ದಿನ ಎಸ್‌ಐಟಿ ಕಚೇರಿಗೆ ಕರೆಸಿ ಮಾನಸಿಕ, ದೈಹಿಕ ಹಿಂಸೆ ನೀಡಿದ್ದಾರೆ. ಸುಳ್ಳು ಸಾಕ್ಷಿ ಹೇಳಿವಂತೆ ಒತ್ತಾಯಿಸಿದ್ದಾರೆ. ಎಸ್‌ಐಟಿಯಿಂದ ತನಗೆ ಬೆದರಿಕೆ ಇದ್ದ ಕಾರಣ ನ್ಯಾಯಾಲಯದಿಂದ ತಾತ್ಕಾಲಿಕ ತಡೆ ಲಭಿಸಿದ ಬಳಿಕ ಇದೀಗ ದೂರು ನೀಡಿದ್ದೇನೆ ಎಂದು ತಿಳಿಸಿದ ಜಯಂತ್ ಟಿ., ತನ್ನ ಮೇಲೆ ದೌರ್ಜನ್ಯ ನಡೆಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.

ವಾರ್ತಾ ಭಾರತಿ 13 Nov 2025 11:08 pm

ಅತ್ಯಾಚಾರ ಪ್ರಕರಣ | ಪ್ರಾಸಿಕ್ಯೂಷನ್ ಸಾಕ್ಷಿಗಳ ನಡುವೆ ಹೊಂದಾಣಿಕೆ ಇಲ್ಲ; ಹೈಕೋರ್ಟ್‌ನಲ್ಲಿ ಪ್ರಜ್ವಲ್ ಪರ ವಕೀಲರ ವಾದ

ಬೆಂಗಳೂರು : ಮನೆ ಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಸಾಕ್ಷಿಗಳ ನಡುವೆ ಹೊಂದಾಣಿಕೆಯ ಕೊರತೆ ಇದ್ದು, ಇಡೀ ಪ್ರಕರಣಕ್ಕೆ ಭದ್ರ ಬುನಾದಿಯೇ ಇಲ್ಲದಿರುವ ಕಾರಣ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಯಲ್ಲಿ ಮುಂದುವರಿಸಬಾರದು ಎಂದು ಪ್ರಜ್ವಲ್ ಪರ ವಕೀಲರು ಹೈಕೋರ್ಟ್‌‌ಗೆ ಮನವಿ ಮಾಡಿದರು. ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು ಶಿಕ್ಷೆ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಹಾಗೂ ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಪ್ರಜ್ವಲ್‌ ಪರ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ವಾದ ಮಂಡಿಸಿ, ಹಾಲಿ ಪ್ರಕರಣದಲ್ಲಿ ಸಾಕ್ಷಿಗಳ ನಡುವೆ ಹೊಂದಾಣಿಕೆ ಇಲ್ಲ. ಇಡೀ ಪ್ರಕರಣಕ್ಕೆ ಭದ್ರ ಅಡಿಪಾಯವೇ ಇಲ್ಲದಿರುವುದರಿಂದ ಮೇಲ್ಮನವಿದಾರರನ್ನು ಕಸ್ಟಡಿಯಲ್ಲಿ ಮುಂದುವರಿಸಬಾರದು. ಇದು ಯಾವುದೇ ಆರೋಪ ಸಾಬೀತಾಗುವ ಪುರಾವೆಗಳಿಲ್ಲದ ಪ್ರಕರಣವಾಗಿದ್ದು, ಮಾಧ್ಯಮ ವಿಚಾರಣೆಗೆ ಒಳಪಟ್ಟಿದೆ. ವಿದ್ಯುನ್ಮಾನ, ವೈದ್ಯಕೀಯ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ಸಾಕ್ಷಿಯಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಓಪನ್ ಸೋರ್ಸ್‌ನಿಂದ ಪಡೆದ ಆಕ್ಷೇಪಿತ ವಿಡಿಯೊಗಳು ವಿಶ್ವಾಸಾರ್ಹವಾಗಿಲ್ಲ ಎಂದರು. ಆಪಾದಿತ ಕೃತ್ಯವು 3-4 ವರ್ಷಗಳ ಬಳಿಕ ವರದಿಯಾಗಿದ್ದು, ಸಂತ್ರಸ್ತೆ ಪೊಲೀಸರ ನಿಯಂತ್ರಣಕ್ಕೆ ಬಂದರೂ ಆಕೆಯ ದೂರು ದಾಖಲಿಸಿಕೊಳ್ಳುವಲ್ಲಿ ವಿಳಂಬವಾಗಿದೆ. ಘಟನೆ ನಡೆದಿದೆ ಎನ್ನಲಾದ ತೋಟದ ಮನೆ ಈಗ ಇಲ್ಲ. ಅದರ ಮಾಲೀಕತ್ವ ಪ್ರಕಾಶ್‌ ಎಂಬುವರ ಹೆಸರಿನಲ್ಲಿದೆ. ಇದಲ್ಲದೇ ತನಿಖಾಧಿಕಾರಿಗಳು ಸಂತ್ರಸ್ತೆಯ ಕರೆ ದಾಖಲೆ (ಸಿಡಿಆರ್‌) ಹಾಜರುಪಡಿಸಲು ವಿಫಲರಾಗಿದ್ದಾರೆ. ಘಟನೆ ನಡೆದಾಗ ಆಕೆ ಎಲ್ಲಿ ಇದ್ದರು ಎಂಬುದನ್ನು ಖಾತ್ರಿಪಡಿಸಲು ಸಿಡಿಆರ್‌ ಅಗತ್ಯವಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಸಂತ್ರಸ್ತೆಯನ್ನು 2024ರ ಮೇ 9 ರಂದು ತೋಟದ ಮನೆಗೆ ಕರೆದೊಯ್ಯಲಾಗಿದ್ದು, ಆ ಸಂದರ್ಭದಲ್ಲಿ ಕೃತ್ಯ ನಡೆದ ಮನೆ ಇರಲಿಲ್ಲ. ಅಂದು ಸಂತ್ರಸ್ತೆ ತೊಟ್ಟಿದ್ದ ಬಟ್ಟೆಗಳು ಸಿಕ್ಕಿಲ್ಲ. ತನಿಖಾಧಿಕಾರಿಗೆ ವರ್ಷಗಳ ಬಳಿಕ ತೋಟದ ಮನೆಗೆ ಹೋಗಿ ಕೃತ್ಯ ನಡೆದ ದಿನ ತೊಟ್ಟಿದ್ದ ಬಟ್ಟೆ ಜಪ್ತಿ ಮಾಡಬೇಕು ಎಂಬ ಯೋಚನೆ ಬಂದಿದ್ದು, ಅಂದು ತನಿಖಾಧಿಕಾರಿಯ ಜತೆ ಸಂತ್ರಸ್ತೆ ತೆರಳಿರಲಿಲ್ಲ. ಇದು ಪ್ರಶ್ನಾರ್ಹವಾದ ಜಪ್ತಿಯಾಗಿದ್ದು, ಇದಕ್ಕೆ ತನಿಖಾಧಿಕಾರಿಯಿಂದ ಯಾವುದೇ ವಿವರಣೆ ಇಲ್ಲ ಎಂದು ಆಕ್ಷೇಪಿಸಿದರು. ಆಗಸ್ಟ್‌ 1ರಂದು ಪ್ರಜ್ವಲ್‌ರನ್ನು ದೋಷಿ ಎಂದು ಘೋಷಿಸಲಾಗಿದ್ದು, ಆಗಸ್ಟ್‌ 2ರಂದು ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್‌ಗೆ ಜೀವನ ಪರ್ಯಂತ ಶಿಕ್ಷೆ ವಿಧಿಸುವುದಕ್ಕೂ ಮುನ್ನ ಅವರನ್ನು ಸಮರ್ಥಿಸಿಕೊಳ್ಳಲು ಸೂಕ್ತ ಕಾಲಾವಕಾಶ ನೀಡಲಾಗಿಲ್ಲ ಎಂದು ತಿಳಿಸಿದ ಸಿದ್ಧಾರ್ಥ್ ಲೂಥ್ರಾ ತಮ್ಮ ವಾದ ಪೂರ್ಣಗೊಳಿಸಿದರು. ವಾದ ಆಲಿಸಿದ ನ್ಯಾಯಪೀಠ, ಪ್ರಾಸಿಕ್ಯೂಷನ್‌ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಅವರ ವಾದ ಮಂಡನೆಗೆ ನವೆಂಬರ್‌ 25ರಂದು ದಿನ ನಿಗದಿಗೊಳಿಸಿತಲ್ಲದೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ವಾರ್ತಾ ಭಾರತಿ 13 Nov 2025 11:05 pm

ಸಂಸದ ಗೋವಿಂದ ಕಾರಜೋಳ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾ‍ಗಿರುವ ಗೋವಿಂದ ಕಾರಜೋಳ ಅವರ ಆಯ್ಕೆ ಅಸಿಂಧು ಕೋರಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿ ವಜಾಗೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಉಮೇದುವಾರಿಕೆ ಸಲ್ಲಿಸಿ ನಾಮಪತ್ರ ತಿರಸ್ಕೃತಗೊಂಡಿದ್ದ ವಿ.ಎಸ್. ಮಂಜುನಾಥ್ ಸಲ್ಲಿಸಿದ್ದ ಚುನಾವಣಾ ತಕಾರರು ಅರ್ಜಿಯನ್ನು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು ಹಾಜರಾಗಿ, ಪ್ರಜಾಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 109ರಲ್ಲಿ ಅವಕಾಶವಿರುವಂತೆ ಚುನಾವಣಾ ತಕರಾರು ಅರ್ಜಿಯನ್ನು ವಾಪಸ್ ಪಡೆದುಕೊಳ್ಳುತ್ತಿರುವುದಾಗಿ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿ ಹಿಂಪಡೆದುಕೊಳ್ಳುತ್ತಿರುವ ಬಗ್ಗೆ ಸ್ವತ: ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ಸಲ್ಲಿಸಿದ್ದರಿಂದ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ ಎಂದು ಆದೇಶಿಸಿತು.

ವಾರ್ತಾ ಭಾರತಿ 13 Nov 2025 10:58 pm

ಬಾಂಗ್ಲಾದೇಶ | ಫೆಬ್ರವರಿಯಲ್ಲಿ ಚುನಾವಣೆ ಜೊತೆಯಲ್ಲಿ ಜನಾಭಿಪ್ರಾಯ ಸಂಗ್ರಹ

ಢಾಕ, ನ.13: ಮುಂದಿನ ವರ್ಷದ ಫೆಬ್ರವರಿಯಲ್ಲಿ ದೇಶದಲ್ಲಿ ಚುನಾವಣೆಯ ಜೊತೆಗೆ ಜನಾಭಿಪ್ರಾಯ ಸಂಗ್ರಹ ನಡೆಸುವುದಾಗಿ ಬಾಂಗ್ಲಾದೇಶದ ಮಧ್ಯಂತರ ಸರಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಗುರುವಾರ ಘೋಷಿಸಿದ್ದಾರೆ. `ಎಲ್ಲಾ ವಿಷಯಗಳನ್ನು ಪರಿಶೀಲಿಸಿದ ಬಳಿಕ ನಾವು ಮುಂಬರುವ ರಾಷ್ಟ್ರೀಯ ಚುನಾವಣೆಯ ದಿನದಂದೇ ಜನಾಭಿಪ್ರಾಯ ಸಂಗ್ರಹಣೆ ನಡೆಸುವ ಬಗ್ಗೆ ನಿರ್ಧಾರ ಕೈಗೊಂಡಿದ್ದೇವೆ. ಇದು ಸುಧಾರಣೆಗಳ ಗುರಿಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗುವುದಿಲ್ಲ ಎಂದು ಯೂನುಸ್ ಹೇಳಿದ್ದಾರೆ. ಜನಾಭಿಪ್ರಾಯ ಸಂಗ್ರಹದ ವಿಷಯವು ಬಾಂಗ್ಲಾದೇಶದಲ್ಲಿ ರಾಜಕೀಯ ವಿವಾದದ ವಸ್ತುವಾಗಿದ್ದು ತೀವ್ರವಾದಿ ಪಕ್ಷ `ಜಮಾತೆ ಇಸ್ಲಾಮಿ ಬಾಂಗ್ಲಾದೇಶ' ಜನಾಭಿಪ್ರಾಯ ಸಂಗ್ರಹಕ್ಕೆ ಒತ್ತಾಯಿಸುತ್ತಿದ್ದರೆ ಪ್ರಮುಖ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ(ಬಿಎನ್‍ಪಿ) ವಿರೋಧಿಸುತ್ತಿದೆ.

ವಾರ್ತಾ ಭಾರತಿ 13 Nov 2025 10:50 pm

ಇರಾನ್‌ನ ಕ್ಷಿಪಣಿ ಕಾರ್ಯಕ್ರಮಗಳಿಗೆ ತಂತ್ರಜ್ಞಾನ ಪೂರೈಕೆ : ಭಾರತದ ಸಂಸ್ಥೆಗೆ ಅಮೆರಿಕ ನಿರ್ಬಂಧ

ವಾಷಿಂಗ್ಟನ್, ನ.13: ಇರಾನಿನ ಬ್ಯಾಲಿಸ್ಟಿಕ್ ಕ್ಷಿಪಣಿ ಮತ್ತು ಡ್ರೋನ್ ಕಾರ್ಯಕ್ರಮಗಳಿಗೆ ವಸ್ತುಗಳನ್ನು ಮತ್ತು ತಂತ್ರಜ್ಞಾನವನ್ನು ಪೂರೈಸಿರುವುದಕ್ಕೆ ಭಾರತ ಸೇರಿದಂತೆ 8 ರಾಷ್ಟ್ರಗಳ 32 ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಅಮೆರಿಕಾ ನಿರ್ಬಂಧ ಜಾರಿಗೊಳಿಸಿರುವುದಾಗಿ ವರದಿಯಾಗಿದೆ. ನಿರ್ಬಂಧಕ್ಕೆ ಗುರಿಯಾದವರಲ್ಲಿ ಚಂಡೀಗಢ ಮೂಲದ `ಫಾರ್ಮ್‍ಲೇನ್ ಪ್ರೈ. ಲಿ. ಸಂಸ್ಥೆಯೂ ಸೇರಿದೆ. ಸಂಸ್ಥೆಯ ನಿರ್ದೇಶಕ ಯುಎಇ ಮೂಲದ ಮಾರ್ಕೊ ಕ್ಲಿಂಗ್ ಅವರು ನಿರ್ಬಂಧಗಳ ದಾಖಲೆಯಲ್ಲಿ ಪಟ್ಟಿ ಮಾಡಲಾಗಿರುವ ಪ್ರಮುಖ ವ್ಯಕ್ತಿಯಾಗಿದ್ದಾರೆ ಎಂದು ಅಮೆರಿಕಾದ ಹಣಕಾಸು ಇಲಾಖೆ ಹೇಳಿದೆ. ಇರಾನಿನ ಕ್ಷಿಪಣಿ ಕಾರ್ಯಕ್ರಮಗಳಿಗೆ ಬಳಕೆಯಾಗುವ ವಸ್ತುಗಳನ್ನು ಭಾರತ ಮತ್ತು ಚೀನಾದಿಂದ ಸಂಗ್ರಹಿಸಿ ಇರಾನ್‍ಗೆ ತಲುಪಿಸುವಲ್ಲಿ ಮಾರ್ಕೊ ಕ್ಲಿಂಗ್ ಪಾತ್ರ ವಹಿಸಿದ್ದಾರೆ. ಅಧ್ಯಕ್ಷ ಟ್ರಂಪ್ ನಿರ್ದೇಶನದಡಿ ನಾವು ಪರಮಾಣು ಬೆದರಿಕೆಯನ್ನು ಕೊನೆಗೊಳಿಸಲು ಇರಾನಿನ ಮೇಲೆ ಗರಿಷ್ಠ ಒತ್ತಡ ಹೇರುತ್ತಿದ್ದೇವೆ ಎಂದು ಹೇಳಿಕೆ ತಿಳಿಸಿದೆ.

ವಾರ್ತಾ ಭಾರತಿ 13 Nov 2025 10:47 pm

ಅಮೆರಿಕಾ ಸರಕಾರದ ಕಾರ್ಯಸ್ಥಗಿತ ಕೊನೆಗೊಳಿಸುವ ಒಪ್ಪಂದಕ್ಕೆ ಟ್ರಂಪ್ ಸಹಿ

ವಾಷಿಂಗ್ಟನ್, ನ.13: ಅಮೆರಿಕಾದ ಇತಿಹಾಸದಲ್ಲೇ ಅತ್ಯಂತ ಸುದೀರ್ಘವಾದ (43 ದಿನಗಳು) ಸರಕಾರದ ಕಾರ್ಯಸ್ಥಗಿತವನ್ನು ಕೊನೆಗೊಳಿಸುವ ಒಪ್ಪಂದಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಸಹಿ ಹಾಕಿದ್ದಾರೆ. ಕಾಂಗ್ರೆಸ್ ಅಂಗೀಕರಿಸಿದ ಧನಸಹಾಯ ಮಸೂದೆಗೆ ಅಧ್ಯಕ್ಷರು ಸಹಿ ಹಾಕುವುದರೊಂದಿಗೆ ಸರಕಾರಕ್ಕೆ ಜನವರಿಯವರೆಗೆ ಧನಸಹಾಯ ದೊರಕಲಿದೆ. ಅಲ್ಲದೆ ಫೆಡರಲ್ ಏಜೆನ್ಸಿಗಳು ಕಾರ್ಯಾರಂಭ ಮಾಡಲಿದ್ದು ತಕ್ಷಣ ಕೆಲಸ ಆರಂಭಿಸಲು ಸಿದ್ಧರಾಗಿರುವಂತೆ ಬಹುತೇಕ ಫೆಡರಲ್ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಸ್ಥಗಿತಗೊಳಿಸಿದ ಸಮಯದಲ್ಲಿ ಸಂಭವಿಸಿದ ಎಲ್ಲಾ ವಜಾಗೊಳಿಸುವಿಕೆಯನ್ನು ರದ್ದುಗೊಳಿಸಲಾಗುತ್ತದೆ ಮತ್ತು ಜನವರಿವರೆಗೆ ಮತ್ತಷ್ಟು ವಜಾಗೊಳಿಸುವಿಕೆಯನ್ನು ತಡೆಯಲಾಗುತ್ತದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ವಾರ್ತಾ ಭಾರತಿ 13 Nov 2025 10:44 pm

ರಾಜ್ಯಾದ್ಯಂತ ನ.14ರಿಂದ 20ರವರೆಗೆ ʼಅಖಿಲ ಭಾರತ ಸಹಕಾರಿ ಸಪ್ತಾಹʼ : ಜಿ.ಟಿ.ದೇವೇಗೌಡ

ಬೆಂಗಳೂರು : ಸಹಕಾರ ಕ್ಷೇತ್ರದ ಬೆಳವಣಿಗೆ ಪ್ರತಿವರ್ಷ ನ.14ರಿಂದ 20ರ ವರೆಗೆ ‘ಅಖಿಲ ಭಾರತ ಸಹಕಾರಿ ಸಪ್ತಾಹ’ವನ್ನು ಆಚರಣೆ ಮಾಡಲಾಗುತ್ತಿದ್ದು ಪ್ರತಿಯೊಬ್ಬರು ಈ ಸಪ್ತಾಹವನ್ನು ಹಬ್ಬದಂತೆ ಆಚರಿಸೋಣ ಎಂದು ರಾಜ್ಯ ಸಹಕಾರಿ ಮಹಾಮಂಡಳ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಕರೆ ನೀಡಿದ್ದಾರೆ. ಗುರುವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು(ನ.14) 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಆಚರಣೆ ಕುರಿತ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ 72ನೇ ಅಖಿಲ ಸಹಕಾರಿ ಸಪ್ತಾಹ ರಾಜ್ಯಾದ್ಯಂತ ಏಳು ದಿನಗಳು ಕಾಲ ವಿವಿಧ ವಿಷಯಗಳ ಧ್ಯೇಯದೊಂದಿಗೆ ನಡೆಯಲಿದೆ, ನಾಳೆ(ನ.14) ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವುದು ಎಂಬ ಧ್ಯೇಯದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಸಹಕಾರ ಚಳವಳಿಯಲ್ಲಿ ಮುಖಂಡತ್ವ ವಹಿಸಿದ್ದ ದಿವಂಗತ ಬಿ.ಎಸ್.ವಿಶ್ವನಾಥ್ ಅವರ ಕಂಚಿನ ಪುತ್ಥಳಿಯನ್ನು ಸಹಕಾರ ಮಹಾಮಂಡಳದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಲಿದ್ದಾರೆ ಎಂದು ಜಿ.ಟಿ.ದೇವೇಗೌಡ ಹೇಳಿದರು. ನವೆಂಬರ್ 15ರಂದು ರಾಯಚೂರಿನಲ್ಲಿ ಸಂಶೋಧನೆ ಮತ್ತು ತರಬೇತಿಯಿಂದ ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ ಎಂಬ ವಿಷಯದೊಂದಿಗೆ, ನವೆಂಬರ್ 16ರಂದು ಮಂಗಳೂರಿನಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ಎಂಬ ವಿಷಯದೊಂದಿಗೆ, ನವೆಂಬರ್ 17ರಂದು ಹೊಸಪೇಟೆಯಲ್ಲಿ ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ ಎಂಬ ವಿಷಯದೊಂದಿಗೆ ಸಪ್ತಾಹ ನಡೆಯಲಿದೆ ಎಂದು ಜಿ.ಟಿ.ದೇವೇಗೌಡ ತಿಳಿಸಿದರು. ನವೆಂಬರ್ 18ರಂದು ಹಾವೇರಿಯಲ್ಲಿ ಸಹಕಾರಿ ಉದ್ಯಮಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ ಎಂಬ ವಿಷಯದೊಂದಿಗೆ, ನವೆಂಬರ್ 19ರಂದು ಕೊಪ್ಪಳದಲ್ಲಿ ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಪ್ಲಾಟ್ ಫಾರಂ, ಸಹಕಾರಿ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ ಎಂಬ ವಿಷಯದೊಂದಿಗೆ ಹಾಗೂ ನವೆಂಬರ್ 20ರಂದು ಚಾಮರಾಜನಗರದಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು ಎಂಬ ವಿಷಯದ ಕುರಿತ ಶೀರ್ಷಿಕೆಗಳಡಿ ಸಹಕಾರ ಸಪ್ತಾಹವನ್ನು ಆಚರಿಸಲಾಗುವುದು ಎಂದು ಜಿ.ಟಿ.ದೇವೇಗೌಡ ಮಾಹಿತಿ ನೀಡಿದರು. ಸಹಕಾರ ಚಳುವಳಿಯನ್ನು ಬಲಪಡಿಸಲು ಸಹಕಾರ ಸಂಸ್ಥೆಗಳಿಗೆ ಸರಕಾರ ಅಗತ್ಯ ಮಾರ್ಗದರ್ಶನ ನೀಡುತ್ತಿದೆ. ರೈತರ ಅಭಿವೃದ್ಧಿಗಾಗಿ ಈ ವರ್ಷ 36 ಲಕ್ಷ ರೈತರಿಗೆ 27 ಸಾವಿರ ಕೋಟಿ ರೂ.ಗಳ ಬೆಳೆ ಸಾಲದ ಗುರಿಯನ್ನು ಹೊಂದಿದೆ. ಸಹಕಾರ ಸಂಸ್ಥೆಗಳಲ್ಲಿ ಸದಸ್ಯರು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಅನುಷ್ಠಾನಗೊಳಿಸಿ, ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತಿದೆ. ಈಗಾಗಲೇ 41 ಲಕ್ಷ ಸದಸ್ಯರ ನೋಂದಣಿ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಜಿ.ಟಿ.ದೇವೇಗೌಡ ತಿಳಿಸಿದರು. ರಾಜ್ಯದ ಸಹಕಾರ ಚಳವಳಿಯ ಬೆಳವಣಿಗೆಯಲ್ಲಿ ಯುವಜನರು, ಮಹಿಳೆಯರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಹಾಗೂ ಸಹಕಾರ ಸಂಸ್ಥೆಗಳಲ್ಲಿ ದೊರೆಯುವ ಪ್ರಯೋಜನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಬೇಕು ಎಂದು ಜಿ.ಟಿ.ದೇವೇಗೌಡ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಎಸ್.ಟಿ.ಸೋಮಶೇಖರ್, ಕೆ.ಷಡಕ್ಷರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ‘ಇದು 72ನೇ ಸಹಕಾರ ಸಪ್ತಾಹವಾದ ಹಿನ್ನೆಲೆ, ರಾಜ್ಯದ ಸಹಕಾರ ಚಳವಳಿಯ ಬೆಳವಣಿಗೆಗೆ ಶ್ರಮಿಸಿದ 72 ಮಂದಿ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು’ -ಜಿ.ಟಿ.ದೇವೇಗೌಡ, ಶಾಸಕ ರಾಷ್ಟ್ರದಲ್ಲಿ 8.5 ಲಕ್ಷ, ರಾಜ್ಯದಲ್ಲಿ 47ಸಾವಿರ ಸಹಕಾರ ಸಂಸ್ಥೆಗಳು ಕ್ರಿಯಾಶೀಲ: ರಾಷ್ಟ್ರದಲ್ಲಿ 8.5 ಲಕ್ಷ ಸಹಕಾರ ಸಂಸ್ಥೆಗಳಿದ್ದು, 31 ಕೋಟಿ ಜನ ಸದಸ್ಯರಿದ್ದಾರೆ. ಕರ್ನಾಟಕದಲ್ಲಿ 47 ಸಾವಿರ ಸಹಕಾರ ಸಂಸ್ಥೆಗಳು ಕ್ರಿಯಾಶೀಲ ಸೇವೆಯಲ್ಲಿ ತೊಡಗಿಸಿಕೊಂಡಿವೆ. 2 ಕೋಟಿ 72 ಲಕ್ಷ ಜನ ಸದಸ್ಯರಿದ್ದಾರೆ. ಹೈನುಗಾರಿಕೆ, ಕೃಷಿಪತ್ತಿನ ಸಹಕಾರ ವ್ಯವಸ್ಥೆ, ಪಟ್ಟಣ ಸಹಕಾರ ಬ್ಯಾಂಕುಗಳು, ಕೃಷಿಯೇತರ ಪತ್ತಿನ ಸಹಕಾರ ಸಂಘಗಳು ಅತ್ಯುತ್ತಮ ಸೇವೆ ಸಲ್ಲಿಸುತ್ತಿವೆ. ಸಹಕಾರಿ ವಲಯ ರಾಷ್ಟ್ರದ ಬಡತನ ನಿವಾರಣೆ, ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ರಾಷ್ಟ್ರದ ಜಿಡಿಪಿ ಹೆಚ್ಚಳಕ್ಕೆ ಮಹತ್ವದ ಕೊಡುಗೆ ನೀಡುತ್ತಿದೆ. ಗ್ರಾಮೀಣ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದೆ. ಮಹಿಳಾ ಸ್ವಾವಲಂಬನೆಯಲ್ಲಿ ಮಹತ್ತರವಾದ ಪಾತ್ರವನ್ನು ಇಂದು ಸಹಕಾರ ವಲಯ ನಿರ್ವಹಿಸುತ್ತಿದೆ ಎಂದು ಜಿ.ಟಿ.ದೇವೇಗೌಡ ತಿಳಿಸಿದರು.

ವಾರ್ತಾ ಭಾರತಿ 13 Nov 2025 10:42 pm

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಬೇಟೆ; ಭದ್ರತಾ ಪಡೆ ಬಲೆಗೆ ಬಿದ್ದ ಇಬ್ಬರು ಹೈಬ್ರಿಡ್‌ ಟೆರರಿಸ್ಟ್‌ಗಳು!

ದೇಶದ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಅಮಿತ್‌ ಶಾ ಅವರು ಉನ್ನತ ಅಧಿಕಾರಿಗಳ ಜೊತೆ ಕೆಂಪುಕೋಟೆ ದಾಳಿ ಮತ್ತು ಜೈಶ್ ಸಂಘಟನೆ ಮಟ್ಟ ಹಾಕುವ ಬಗ್ಗೆ ಮಹತ್ವದ ಸಭೆ ನಡೆಸುತ್ತಿದ್ದರೆ, ಮತ್ತೊಂದು ಕಡೆ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಹೈಬ್ರಿಡ್ ಉಗ್ರರನ್ನು ಶಸ್ತ್ರಾಸ್ತ್ರಗಳ ಸಮೇತ ಬಂಧಿಸಲಾಗಿದೆ.

ವಿಜಯ ಕರ್ನಾಟಕ 13 Nov 2025 10:41 pm

ಮಂಗಳೂರಿನಲ್ಲಿ ಮಹಿಳೆಯ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ

ಮಂಗಳೂರು: ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 1,81,50,000ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರ ಮೊಬೈಲ್‌ಗೆ ಅ.24ರಂದು ಅಪರಿಚಿತ ಕರೆ ಮಾಡಿದ್ದು, ಮುಂಬೈನ ಕೊಲಾಲ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಆಕೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಿ ಕಮಿಷನ್ ತೆಗೆದುಕೊಂಡ ಆರೋಪವಿದೆ ಎಂದು ಹೇಳಿದರೆನ್ನಲಾಗಿದೆ. ಇದರಿಂದ ಭಯಭೀತರಾದ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಲೆಟರ್ ಬರೆಸಿಕೊಂಡು ವಾಟ್ಸ್‌ಆ್ಯಪ್ ನಂಬ್ರವೊಂದಕ್ಕೆ ಕಳುಹಿಸಿಕೊಡುವಂತೆ ತಿಳಿಸಿದ್ದಾರೆ. ವಿನೋದ್ ರಾಥೋಡ್ ಹಾಗೂ ರಾಜೇಶ್ ಮಿಶ್ರಾ ಎಂಬ ಅಪರಿಚಿತ ವ್ಯಕ್ತಿಗಳು ಪೊಲೀಸ್ ಅಕಾರಿಗಳೆಂದು ಪರಿಚಯಿಸಿ ವಾಟ್ಸಪ್ ವಿಡಿಯೋ ಕರೆ ಮಾಡಿ ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ತಿಳಿಸಿದ್ದಾರೆ. ಇದಾದ ಬಳಿಕ ನಮ್ಮಲ್ಲಿ ಹಣವನ್ನು ನೀಡಿದರೆ, ಪ್ರಕರಣ ಇತ್ಯರ್ಥವಾದ ಬಳಿಕ ವಾಪಾಸ್ ನೀಡುತ್ತೇವೆ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಅ.28ರಿಂದ ನ.11ರವರೆಗೆ ಹಂತಹಂತವಾಗಿ 1,81,50,000ರೂ. ಆರ್ಟಿಜಿಎಸ್ ಮೂಲಕ ಹಣ ವರ್ಗಾಯಿಸಿದ್ದಾರೆ. ವಂಚನೆಗೊಳಗಾದ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ವಾರ್ತಾ ಭಾರತಿ 13 Nov 2025 10:40 pm

ಬಿಹಾರ | ಮತ ಎಣಿಕೆ ಕೇಂದ್ರಕ್ಕೆ ಇವಿಎಂ ತುಂಬಿದ ಟ್ರಕ್ ರಹಸ್ಯ ಪ್ರವೇಶ : ಆರ್‌ಜೆಡಿ ಆರೋಪ

ಪಾಟ್ನಾ, ನ. 13: ಮತ ಎಣಿಕೆಗೆ ಮುನ್ನ ಇವಿಎಂಗಳನ್ನು ತುಂಬಿದ್ದ ಟ್ರಕ್ಕೊಂದು ಸಾಸಾರಾಮ್ ಮತ ಎಣಿಕೆ ಕೇಂದ್ರಕ್ಕೆ ರಹಸ್ಯವಾಗಿ ಪ್ರವೇಶಿದೆ ಎಂದು ಆರ್‌ಜೆಡಿ ಗುರುವಾರ ಆರೋಪಿಸಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಆರ್‌ಜೆಡಿ ಆಗ್ರಹಿಸಿದೆ. ಆರ್‌ಜೆಡಿ ಕಾರ್ಯಕರ್ತರು ಬುಧವಾರ ರಾತ್ರಿ ವಜ್ರ ಗೃಹ ಮತ ಎಣಿಕೆ ಸಂಕೀರ್ಣದ ಹೊರಗೆ ಸೇರಿದರು ಹಾಗೂ ಚುನಾವಣಾ ಅಧಿಕಾರಿಗಳು ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಸಾಸಾರಾಮ್ ಮತ ಎಣಿಕೆ ಕೇಂದ್ರದ ಆವರಣದಲ್ಲಿರುವ ಸಿಸಿಟಿವಿ ಕೆಮೆರಾಗಳನ್ನು ಅಪರಾಹ್ನ 2 ಗಂಟೆಗೆ ಸ್ವಿಚ್ ಆಫ್ ಮಾಡಲಾಯಿತು. ಇದು ಟ್ರಕ್ ಯಾವುದೇ ಅಧಿಕೃತತೆ ಹಾಗೂ ದಾಖಲೆಗಳಿಲ್ಲದೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿತು ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಆರ್‌ಜೆಡಿ, ಚುನಾವಣಾ ಆಯೋಗದ ಮೌನವನ್ನು ಪ್ರಶ್ನಿಸಿದೆ. ಮತದಾನ ಮುಗಿದ ನಂತರ ಇವಿಎಂಗಳನ್ನು ಏಕೆ ಸ್ಥಳಾಂತರಿಸಲಾಯಿತು ಎಂದು ಅದು ಕೇಳಿದೆ. ಅಲ್ಲದೆ, ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದೆ. ಈ ವಿಷಯವನ್ನು ಪಾರದರ್ಶಕವಾಗಿ ನಿರ್ವಹಿಸದೇ ಇದ್ದರೆ, ಜನಾದೇಶವನ್ನು ರಕ್ಷಿಸಲು ಬಿಹಾರದಾದ್ಯಂತ ಮತ ಎಣಿಕೆ ಕೇಂದ್ರಗಳ ಎದುರು ಬೆಂಬಲಿಗರನ್ನು ಸಂಘಟಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಆರ್‌ಜೆಡಿ ಎಚ್ಚರಿಸಿದೆ. ಈ ಆರೋಪವನ್ನು ರೋಹ್ತಾಸ್‌ನ ಜಿಲ್ಲಾಡಳಿತ ನಿರಾಕರಿಸಿದೆ. ಅದು ಖಾಲಿ ಪೆಟ್ಟಿಗೆ ಎಂದು ಜಿಲ್ಲಾಧಿಕಾರಿ ಉದಿತ್ ಸಿಂಗ್ ಹೇಳಿದ್ದಾರೆ.

ವಾರ್ತಾ ಭಾರತಿ 13 Nov 2025 10:37 pm

ದಿಲ್ಲಿ ಸ್ಫೋಟ ಪ್ರಕರಣ | ಸರ್ವ ಪಕ್ಷಗಳ ಸಭೆ ಕರೆಯುವಂತೆ ಕಾಂಗ್ರೆಸ್ ಆಗ್ರಹ

ಹೊಸದಿಲ್ಲಿ, ನ. 13: ದಿಲ್ಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದಷ್ಟು ಬೇಗ ಸರ್ವ ಪಕ್ಷಗಳ ಸಭೆ ಕರೆಯುವಂತೆ ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ. ದಿಲ್ಲಿ ಸ್ಫೋಟದ ಕುರಿತಂತೆ ಆಡಳಿತಾರೂಢ ಸರಕಾರಕ್ಕೆ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಕೇಳಿತು. ಅಲ್ಲದೆ, ಭೀಕರ ದಾಳಿಯ ಹಿನ್ನೆಲೆಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶವನ್ನು ಮುಂಚಿತವಾಗಿ ನಡೆಸುವಂತೆ ಕೂಡ ಅದು ಒತ್ತಾಯಿಸಿತು. ಇದರಿಂದ ದಿಲ್ಲಿ ಸ್ಫೋಟದ ಕುರಿತು ಚರ್ಚಿಸಲು ಸಾಧ್ಯವಾಗಬಹುದು ಎಂದು ಅದು ಹೇಳಿತು. ಪಕ್ಷದ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ನ ಹಿರಿಯ ನಾಯಕ ಪವನ್ ಖೇರಾ, ‘‘ರಾಷ್ಟ್ರ ರಾಜಧಾನಿಯಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಇಂತಹ ಪರಿಸ್ಥಿತಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈಗ ಪ್ರಧಾನಿ ಭೂತಾನ್‌ನಿಂದ ಹಿಂದಿರುಗಿದ್ದಾರೆ. ಯಾವುದೇ ರೀತಿಯ ವಿಳಂಬ ಮಾಡದೆ ಸರ್ವ ಪಕ್ಷಗಳ ಸಭೆ ನಡೆಸಬೇಕು. ಇದು ದೇಶದ ಭದ್ರತೆಗೆ ಸಂಬಂಧಿಸಿರುವುದರಿಂದ ಮುಖ್ಯವಾಗಿದೆ’’ ಎಂದು ಅವರು ಹೇಳಿದ್ದಾರೆ. ಡಿಸೆಂಬರ್ 1ರಂದು ಆರಂಭವಾಗಲಿರುವ ಮುಂಬರುವ ಚಳಿಗಾಲದ ಅಧಿವೇಶನವನ್ನು ಉಲ್ಲೇಖಿಸಿದ ಅವರು, ದಿಲ್ಲಿ ಸ್ಫೋಟ ಘಟನೆ ದೇಶದ ಭದ್ರತೆಗೆ ಗಂಭೀರ ಸವಾಲಾಗಿದೆ. ಆದ್ದರಿಂದ ಸಂಸತ್ತಿನ ಮುಂಬರುವ ಅಧಿವೇಶನವನ್ನು ಮುಂಚಿತವಾಗಿ ನಡೆಸುವಂತೆ ನಾವು ಆಗ್ರಹಿಸುತ್ತೇವೆ. ಇದನ್ನು ಸರಕಾರ ಎಷ್ಟು ಗಂಭೀರವಾಗಿ ತೆಗೆದುಕೊಂಡಿದೆ ಎಂಬುದು ನಮಗೆ ತಿಳಿದಿಲ್ಲ. ಪ್ರಧಾನಿ ಅವರು ಗಂಭೀರವಾಗಿ ಪರಿಗಣಿಸಿದ್ದರೆ, ಭೂತಾನ್‌ಗೆ ಭೇಟಿ ನೀಡುತ್ತಿರಲಿಲ್ಲ ಎಂದರು. ಈ ವಿಷಯದಲ್ಲಿ ಸರಕಾರ ದೃಢ ನಿಲುವು ತೆಗೆದುಕೊಳ್ಳಬೇಕು. ನಾವು ಸರಕಾರದ ಬೆಂಬಲಕ್ಕೆ ಇದ್ದೇವೆ ಎಂದು ಅವರು ಹೇಳಿದರು. ದಿಲ್ಲಿ ಕಾರು ಸ್ಫೋಟದ ಸುತ್ತ ಹಲವು ಪ್ರಶ್ನೆಗಳಿವೆ. ಈ ಸ್ಫೋಟ ಹೇಗೆ ಸಂಭವಿಸಿತು? ಯಾವ ಮಟ್ಟದಲ್ಲಿ ವೈಫಲ್ಯ ಸಂಭವಿಸಿದೆ ? ಈ ವೈಫಲ್ಯದ ಜವಾಬ್ದಾರಿಯನ್ನು ಯಾರು ಹೊತ್ತುಕೊಳ್ಳುತ್ತಾರೆ ? ಎಂದು ಖೇರಾ ಪ್ರಶ್ನಿಸಿದರು.

ವಾರ್ತಾ ಭಾರತಿ 13 Nov 2025 10:37 pm

ಕೃಷಿ ಲಾಭದಾಯಕವಾಗುವಂತೆ ಪರಿವರ್ತಿಸಲು ಕೃಷಿ ವಿವಿಗಳು ನೆರವಾಗಲಿ : ಎನ್.ಚಲುವರಾಯಸ್ವಾಮಿ

ಜಿಕೆವಿಕೆ ಆವರಣದಲ್ಲಿ‘ಕೃಷಿ ಮೇಳ-2025’

ವಾರ್ತಾ ಭಾರತಿ 13 Nov 2025 10:30 pm

ನಾಳೆ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ : ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್

ಹೊಸದಿಲ್ಲಿ,ನ.13: ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಮತಏಣಿಕೆ ಶುಕ್ರವಾರ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು-ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಅಧಿಕಾರವನ್ನು ಉಳಿಸಿಕೊಳ್ಳಲಿದೆಯೇ ಅಥವಾ ತೇಜಸ್ವಿ ಯಾದವ್ ಅವರ ಮಹಾಘಟಬಂಧನ ಮೈತ್ರಿಕೂಟವು ಅಧಿಕಾರದ ಗದ್ದುಗೆ ಹಿಡಿಯಲಿದೆಯೇ ಎಂಬುದು ತೀರ್ಮಾನವಾಗಲಿದೆ. ಪ್ರಶಾಂತ್ ಕಿಶೋರ್ ನೇತೃತ್ವದ ನೂತನ ಪಕ್ಷ ‘ಜನಸುರಾಜ್’ ತೃತೀಯ ಶಕ್ತಿಯಾಗಿ ಹೊರಹೊಮ್ಮಲಿದೆಯೇ ಎಂಬ ಪ್ರಶ್ನೆಗೂ ಈ ಚುನಾವಣೆಯಲ್ಲಿ ಉತ್ತರ ದೊರೆಯಲಿದೆ. ಬೆಳಗ್ಗೆ ಎಂಟು ಗಂಟೆಗೆ ಮತಏಣಿಕೆ ನಡೆಯಲಿದ್ದು, ಎಲ್ಲಾ 243 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಶುಕ್ರವಾರವೇ ಪ್ರಕಟವಾಗುವ ನಿರೀಕ್ಷೆಯಿದೆ ಮತ್ತು ಕಣದಲ್ಲಿರುವ 2,616 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 38 ಜಿಲ್ಲೆಗಳಲ್ಲಿರುವ ಎಲ್ಲಾ 46 ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಕೇಂದ್ರೀಯ ಸಶಸ್ತ್ರ ಪಡೆಗಳು ಹಾಗೂ ರಾಜ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ ಸಿಸಿಟಿವಿ ಕಣ್ಗಾವಲು ಮತ್ತು ಭದ್ರತಾ ವ್ಯವಸ್ಥೆಗಳನ್ನು ಕೂಡ ಕಲ್ಪಿಸಲಾಗಿದೆ. ಬಿಹಾರ ವಿಧಾನಸಭೆಗೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಶೇ.67ರಷ್ಟು ಮತದಾನವಾಗಿತ್ತು.

ವಾರ್ತಾ ಭಾರತಿ 13 Nov 2025 10:29 pm

ಸುರತ್ಕಲ್ | ಎಂಆರ್‌ಪಿಎಲ್ 4ನೇ ಹಂತದ ನಿರ್ವಸಿತರ 9 ವರ್ಷಗಳ ಹೋರಾಟಕ್ಕೆ ಜಯ; 436 ಮಂದಿಗೆ ಉದ್ಯೋಗ, ಪುನರ್ವಸತಿ ಬದಲು ನಗದು ಪರಿಹಾರ

ಸುರತ್ಕಲ್: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿ. (ಎಂಆರ್‌ಪಿಎಲ್) 4ನೇ ಹಂತದಿಂದ ಭೂ ನಿರ್ವಸಿತರಾಗುವ ಕುತ್ತೆತೂರು, ಪೆರ್ಮುದೆ, ಎಕ್ಕಾರು ಗ್ರಾಮದ ನಿರ್ವಸಿತರ ಕುಟುಂಬಗಳ ಸಭೆಯು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ., ಸಂಸದರು, ಶಾಸಕರು ಮತ್ತು ಎಂಆರ್‌ಪಿ ಎಲ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗುರುವಾರ ನಡೆಯಿತು. ಸಭೆಯಲ್ಲಿ ಸ್ಥಳೀಯರ ಬೇಡಿಕೆಗಳಾದ ನಿರ್ವಸಿತ ಕುಟುಂಬಗಳ ಒಟ್ಟು 436 ಮಂದಿಗೆ ಉದ್ಯೋಗಾವಕಾಶ, ಪುನರ್ವಸತಿ ಕಲ್ಪಿಸುವ ಬದಲು ನಗದು ಪರಿಹಾರ ನೀಡುವ ಬಗ್ಗೆ ತೀರ್ಮಾನಿಸಲಾಯಿತು. ಈ ಮೂಲಕ ಒಂಭತ್ತು ವರ್ಷಗಳ ನಿರ್ವಸಿತರ ಹೋರಾಟಕ್ಕೆ ಜಯ ದೊರೆತಿದೆ. ಜಿಲ್ಲಾಧಿಕಾರಿ ನೇತೃತ್ವದ ಆರ್ ಆಂಡ್ ಆರ್ ಸಮಿತಿಯ ಸದಸ್ಯ, ನಿರ್ವಸಿತ ಸಮಿತಿಯ ಗೌರವಾಧ್ಯಕ್ಷ ಜೆ.ಐ.ಡೋನಿ ಸುವಾರಿಸ್ ಮಾತನಾಡಿ, ಸಂತ್ರಸ್ತರಿಗೆ ಉದ್ಯೋಗ ಮತ್ತು ನಿರ್ವಸಿತರಿಗೆ ನಿವೇಶನವನ್ನು ವಿಳಂಬವಿಲ್ಲದೆ ಕೂಡಲೇ ನೀಡಬೇಕೆಂದು ಒತ್ತಾಯಿಸಿದರು. ಉದ್ಯೋಗದ ಕುರಿತಂತೆ ಈವರೆಗೆ ಯಾವುದೇ ಗಡುವನ್ನು ನಿಗದಿಪಡಿಸದ ಕಾರಣ ಸಭೆಯಲ್ಲಿ ನಿಗದಿಪಡಿಸುವಂತೆ ಸಮಿತಿಯ ಸಹ ಸದಸ್ಯರು ಒತ್ತಾಯಿಸಿದರು. ಈ ಬಗ್ಗೆ ಸಭೆಯಲ್ಲಿ ಹಾಜರಿದ್ದ ಎಂಆರ್‌ಪಿಎಲ್ ಅಧಿಕಾರಿಗಳು ಸಮಾಲೋಚನೆ ನಡೆಸಿ ಆರ್ ಆಂಡ್ ಆರ್ ಸಮಿತಿಯಿಂದ ಅನುಮೋದನೆಗೊಂಡ ಉದ್ಯೋಗಾಕಾಂಕ್ಷಿಗಳ ಪಟ್ಟಿಯನ್ನು ಎಂಆರ್‌ಪಿಎಲ್‌ಗೆ ಸಲ್ಲಿಸಿದ ದಿನಾಂಕದಿಂದ ಆರು ತಿಂಗಳೊಳಗಾಗಿ ಉದ್ಯೋಗ ನೀಡಬೇಕೆಂದು ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರುಗಳಾದ ಉಮಾನಾಥ ಎ. ಕೋಟ್ಯಾನ್, ಡಾ.ಭರತ್ ಶೆಟ್ಟಿ ವೈ. ಮತ್ತು ಜಿಲ್ಲಾಧಿಕಾರಿ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ವಂಶವೃಕ್ಷ ಮತ್ತು ನಿರಾಕ್ಷೇಪಣಾ ಪತ್ರವನ್ನು ತರಲು ಒತ್ತಾಯಿಸದೆ, ಅರ್ಜಿಯನ್ನು ಪಡೆದುಕೊಳ್ಳುವಂತೆ ಕೆಪಿಟಿ ಸಂಸ್ಥೆಯ ಪ್ರಾಂಶುಪಾಲರಿಗೆ ಸೂಚಿಸಿದರು. ನಗದು ಪರಿಹಾರ ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಹೊಸತಾಗಿ ಆರ್ ಆಂಡ್ ಆರ್ ಕಾಲನಿಯನ್ನು ರಚಿಸಬೇಕಾದರೆ ತುಂಬಾ ಸಮಯ ತಗಲುತ್ತದೆ. ಇದರಿಂದ ನಿರ್ವಸಿತರಿಗೆ ಉದ್ಯೋಗ ಮತ್ತಿತರ ಸವಲತ್ತುಗಳನ್ನು ನೀಡಲು ತುಂಬಾ ವಿಳಂಬವಾಗುತ್ತದೆ. ಹಾಗಾಗಿ ನಿರ್ವಸಿತರ ಮನವೊಲಿಸಿ ನಿವೇಶನಕ್ಕಾಗಿ ಬೇಡಿಕೆ ಸಲ್ಲಿಸದೆ ನಗದು ಪರಿಹಾರವನ್ನೇ ಆಯ್ದುಕೊಳ್ಳುವಂತೆ ಕೋರಿಕೊಂಡರು. ಉದ್ಯೋಗ ಮತ್ತಿತರ ಸವಲತ್ತುಗಳಿಗೆ ಸಂಬಂಧಿಸಿದಂತೆ ಎಲ್ಲ ಅರ್ಹ ನಿರ್ವಸಿತರು ಡಿಸೆಂಬರ್ 15ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಅವರು ಸೂಚಿಸಿದರು. ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ, ಕಾರ್ಯಪಾಲಕ ಅಭಿಯಂತರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಎಂಆರ್‌ಪಿಎಲ್ ಅಧಿಕಾರಿಗಳು, ಎಂಆರ್‌ಪಿಎಲ್ 4ನೇ ಹಂತದ ನಿರ್ವಸಿತರ ಸಮಿತಿಯ ಅಧ್ಯಕ್ಷ ಸುಧಾಕರ ಶೆಟ್ಟಿ ಕುತ್ತೆತ್ತೂರು, ಕಾರ್ಯದರ್ಶಿ ಕೇಶವ ಶೆಟ್ಟಿ ಕುತ್ತೆತ್ತೂರು, ಕೃಷ್ಣಮೂರ್ತಿ ಕುತ್ತೆತ್ತೂರು, ರೊನಾಲ್ಡ್ ಫೆರ್ನಾಂಡಿಸ್ ಪೆರ್ಮುದೆ, ಜಿ.ಕೆ.ಪೂವಪ್ಪಪೆರ್ಮುದೆ, ಮಾರ್ಕೋ ಡಿಸೋಜ ಪೆರ್ಮುದೆ, ಸಂದೇಶ್ ಪೂಜಾರಿ, ಲಲಿತಾ ಪೆರ್ಮುದೆ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 13 Nov 2025 10:25 pm

ರಾಷ್ಟ್ರೀಯ ಉದ್ಯಾನವನ, ಅಭಯಾರಣ್ಯಗಳಲ್ಲಿ ಗಣಿಗಾರಿಕೆ ನಿಷೇಧಿಸಿ ಸುಪ್ರೀಂಕೋರ್ಟ್ ಆದೇಶ

ಹೊಸದಿಲ್ಲಿ,ನ.14: ರಾಷ್ಟ್ರೀಯ ಉದ್ಯಾನವನಗಳು ಹಾಗೂ ವನ್ಯಜೀವಿ ಅಭಯಾರಣ್ಯಗಳಲ್ಲಿರುವ ಒಂದು ಕಿ.ಮೀ. ವ್ಯಾಪ್ತಿಯೊಳಗೆ ಗಣಿಗಾರಿಕೆಯನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಗುರುವಾರ ಆದೇಶ ಹೊರಡಿಸಿದೆ. ಗಣಿಗಾರಿಕೆಯಂತಹ ಚಟುವಟಿಕೆಗಳು ವನ್ಯಜೀವಿ ಸಂಕುಲಕ್ಕೆ ಅಪಾಯಕಾರಿಯಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯವು ಪ್ರತಿಪಾದಿಸಿದೆಯೆಂದು ‘ಲೈವ್ ಲಾ’ ಸುದ್ದಿಸಂಸ್ಥೆ ವರದಿ ಮಾಡಿದೆ. ಗೋವಾದಲ್ಲಿಯೂ ಗಣಿಗಾರಿಕೆಗೆ ಇದೇ ರೀತಿಯ ನಿರ್ಬಂಧಗಳನ್ನು ವಿಧಿಸಿದ ತನ್ನ ಎಪ್ರಿಲ್, 2023ರ ಆದೇಶವನ್ನು ಪುನರುಚ್ಚರಿಸಿದ ನ್ಯಾಯಾಲಯವು, ಈ ನಿರ್ದೇಶನವು ಇಡೀ ದೇಶಕ್ಕೆ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಿದೆ. ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶವನ್ನು ವನ್ಯಜೀವಿ ಅಭಯಾರಣ್ಯವೆಂದು ಅಧಿಸೂಚನೆ ಹೊರಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠವು ಈ ತೀರ್ಪನ್ನು ನೀಡಿದೆ. ಸಾರಂಡಾ ಅರಣ್ಯ ಪ್ರದೇಶವನ್ನು ವನ್ಯಜೀವಿ ಅಭಯಾರಣ್ಯವೆಂಬುದಾಗಿ ಅಧಿಸೂಚನೆ ಹೊರಡಿಸುವಂತೆ ನ್ಯಾಯಪೀಠವು ಜಾರ್ಖಂಡ್ ಸರಕಾರಕ್ಕೆ ಆದೇಶಿಸಿತು. ಅರಣ್ಯ ಹಕ್ಕುಗಳ ಕಾಯ್ದೆಗೆ ಅನುಗುಣವಾಗಿ ಈ ಪ್ರದೇಶದ ಆದಿವಾಸಿಗಳು ಹಾಗೂ ಅರಣ್ಯವಾಸಿ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಬೇಕೆಂದು ನ್ಯಾಯಾಲಯ ಪ್ರತಿಪಾದಿಸಿತು. ಈ ಪ್ರದೇಶದಲ್ಲಿರುವ ಎಲ್ಲಾ ಶಾಲೆಗಳು, ರೈಲು ಮಾರ್ಗಗಳು ಹಾಗೂ ಔಷಧಾಲಯಗಳನ್ನು ರಕ್ಷಿಸಬೇಕಾಗಿದೆಯೆಂದು ನ್ಯಾಯಪೀಠ ಹೇಳಿರುವುದಾಗಿ ‘ಲೈವ್ ಲಾ ’ ವರದಿ ತಿಳಿಸಿದೆ. 202 ಎಕರೆಗೂ ಅಧಿಕ ವಿಸ್ತೀರ್ಣದ ಸಾರಂಡಾ ಅರಣ್ಯವು ಈ ಮೊದಲು ಹಲವಾರು ಆದಿವಾಸಿ ಪಂಗಡಗಳಿಗೆ, ವೈವಿಧ್ಯಮಯ ಸಸ್ಯ ಹಾಗೂ ವನ್ಯಜೀವಿ ಸಂಕುಲಗಳ ಆವಾಸತಾಣವಾಗಿತ್ತು . 2 ಸಾವಿರ ದಶಲಕ್ಷ ಟನ್‌ಗೂ ಅಧಿಕ ಕಬ್ಬಿಣದ ಆದಿರಿನ ನಿಕ್ಷೇಪವನ್ನು ಹೊಂದಿರುವ ಈ ಅರಣ್ಯ ಪ್ರದೇಶವು , 1990ನೇ ಇಸವಿಯ ಆರಂಭದವರೆಗೂ ಪ್ರಮುಖ ಆನೆ ಕಾರಿಡಾರ್ ಕೂಡಾ ಆಗಿತ್ತು.

ವಾರ್ತಾ ಭಾರತಿ 13 Nov 2025 10:25 pm

ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿ ಕ್ಷಮೆ ಯಾಚಿಸಿದ ನಟ ಪ್ರಕಾಶ್ ರಾಜ್

ಹೈದರಾಬಾದ್: ಇಂತಹ ತಪ್ಪುಗಳನ್ನು ಪುನರಾವರ್ತಿಸುವುದಿಲ್ಲ ಎಂದು ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್ ಪರ ಪ್ರಚಾರಕ್ಕೆ ಸಂಬಂಧಿಸಿ ಬಹುಭಾಷಾ ನಟ ನಟ ಪ್ರಕಾಶ್ ರಾಜ್‌ ಕ್ಷಮೆಯಾಚಿಸಿದ್ದಾರೆ. ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ, ಹೈದರಾಬಾದ್ ನ ಸಿಐಡಿ ಕಚೇರಿಯಲ್ಲಿ ವಿಶೇಷ ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರಾಜ್, “ತಿಳಿದೋ, ತಿಳಿಯದೆಯೋ ನಾನು ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಪ್ರಚಾರದಲ್ಲಿ ಭಾಗಿಯಾಗಿದ್ದು, ಇದಕ್ಕಾಗಿ ಕ್ಷಮೆ ಯಾಚಿಸುತ್ತೇನೆ. ನಾನು ನನ್ನ ಎಲ್ಲಾ ದಾಖಲೆಗಳು, ಬ್ಯಾಂಕ್ ಸ್ಟೇಟ್ ಮೆಂಟ್ ಗಳು ಹಾಗೂ ಸೂಕ್ತ ವಿವರಗಳನ್ನು ವಿಶೇಷ ತನಿಖಾ ತಂಡಕ್ಕೆ ಸಲ್ಲಿಸಿದ್ದೇನೆ ಎಂದು ಹೇಳಿದರು. “ನನಗೂ ಬೆಟ್ಟಿಂಗ್ ಆ್ಯಪ್ ಹಗರಣಕ್ಕೂ ಯಾವುದೇ ಸಂಬಂಧವಿಲ್ಲ. ನಾನು 2016ರಲ್ಲಿ ಗೇಮಿಂಗ್ ಆ್ಯಪ್ ಒಂದನ್ನು ಪ್ರಚಾರ ಮಾಡಿದ್ದೆ. ಆದರೆ, ಆ ಬಳಿಕ ಅದು ಬೆಟ್ಟಿಂಗ್ ಆ್ಯಪ್ ಆಗಿ ರೂಪಾಂತರಗೊಂಡಿತ್ತು. ಅದರ ಸ್ವರೂಪವನ್ನು ಅರ್ಥ ಮಾಡಿಕೊಂಡ ನಂತರ, ನಾನು ಆ ಜಾಹೀರಾತಿನಿಂದ ಹಿಂದೆ ಸರಿದೆ ಹಾಗೂ ಗುತ್ತಿಗೆಯನ್ನು ವಜಾಗೊಳಿಸಿದೆ” ಎಂದು ಸ್ಪಷ್ಟಪಡಿಸಿದ್ದಾರೆ. “ಹಲವಾರು ಯುವಕರು ಹಣ ಕಳೆದುಕೊಳ್ಳುತ್ತಿದ್ದಾರೆ ಹಾಗೂ ಅವರ ಕುಟುಂಬಗಳು ಸಮಸ್ಯೆಯನ್ನು ಎದುರಿಸುತ್ತಿದೆ. ಕೇವಲ ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಮತ್ತು ಹಣ ಗಳಿಕೆ ಸಾಧ್ಯ. ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿಬಿಡಿ. ಇಂತಹ ತಪ್ಪನ್ನು ನಾನು ಪುನರಾವರ್ತಿಸುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ” ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಅಕ್ರಮ ಬೆಟ್ಟಿಂಗ್ ದಂಧೆಗಳನ್ನು ಮಟ್ಟ ಹಾಕಲು ಹಾಗೂ ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣಗಳ ಕುರಿತು ಆಳವಾದ ತನಿಖೆ ನಡೆಸಲು ತೆಲಂಗಾಣ ಸರಕಾರ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಬೆಟ್ಟಿಂಗ್ ಆ್ಯಪ್ ವೇದಿಕೆಗಳಲ್ಲಿ ಹಣ ಕಳೆದುಕೊಂಡ ಹಲವಾರು ಯುವಕರು ಅತಿರೇಕದ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬ ಪೊಲೀಸ್ ದೂರುಗಳ ಹಿನ್ನೆಲೆಯಲ್ಲಿ ಈ ಕುರಿತ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು

ವಾರ್ತಾ ಭಾರತಿ 13 Nov 2025 10:22 pm

Bengaluru | ವಿದ್ಯಾರ್ಥಿಗಳ ವಿದೇಶಿ ಪ್ರಯಾಣ ನಿಧಿ ದುರುಪಯೋಗ ಆರೋಪ: ಇಬ್ಬರು ಐಐಎಸ್‍ಸಿ ನೌಕರರು ಸಹಿತ ಮೂವರ ಬಂಧನ

ಬೆಂಗಳೂರು : ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕಾಗಿ ಮೀಸಲಾದ 1.94ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್‍ಸಿ) ಇಬ್ಬರು ಗುತ್ತಿಗೆ ನೌಕರರು ಸಹಿತ ಮೂವರನ್ನು ಇಲ್ಲಿನ ಸದಾಶಿವನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ವಿ.ಸೌಂದರ್ಯ(25) ಮತ್ತು ಆರ್.ದೀಪಿಕಾ(25) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಈ ಆರೋಪಿಗಳು ಐಐಎಸ್‍ಸಿ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಹಾಯಕ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು. ವಂಚನೆಗೆ ಸಹಾಯ ಮಾಡಿದ ಆರೋಪದ ಮೇಲೆ ಸಚಿನ್‍ರಾವ್(25) ಎಂಬಾತನನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಆರೋಪಿಗಳು ಜೂನ್ 2024 ಮತ್ತು ಅಕ್ಟೋಬರ್ 2025ರ ನಡುವೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ವಂಚಿಸಿದ್ದಾರೆ. ನಕಲಿ ಅನುಮೋದನೆ ಪತ್ರಗಳನ್ನು ಬಳಸಿ, ಅವರು ಅರ್ಹ ವಿದ್ಯಾರ್ಥಿಗಳ ಪ್ರಯಾಣ ಅನುದಾನದ ಮೊತ್ತವನ್ನು ಅವರ ಸಂಬಂಧಿಕರು ಮತ್ತು ನಿಕಟವರ್ತಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪ್ರಯಾಣ ಅನುದಾನವನ್ನು ಪಡೆಯುತ್ತಿರುವುದನ್ನು ಐಐಎಸ್‍ಸಿ ಅಧಿಕಾರಿಗಳು ಗಮನಿಸಿದಾಗ ವಂಚನೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿ ಅವರಿಂದ 80 ಲಕ್ಷ ರೂ. ಮೌಲ್ಯದ ಎರಡು ಆಸ್ತಿ ದಾಖಲೆಗಳು, 15 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು, 11 ಲಕ್ಷ ರೂ. ನಗದು ಮತ್ತು ಕಾರು ಸೇರಿದಂತೆ ಸುಮಾರು 1ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ವಶಪಡಿಸಿಕೊಂಡಿರುವುದಾಗಿ ಗೊತ್ತಾಗಿದೆ.

ವಾರ್ತಾ ಭಾರತಿ 13 Nov 2025 10:17 pm

ಸಿಬಿಎಸ್ಇ ಪಠ್ಯಕ್ರಮದ ಈ ತರಗತಿಯಿಂದಲೇ 'AI' ಪಠ್ಯಕ್ರಮ ಕಡ್ಡಾಯ

ಸಿಬಿಎಸ್ಇ 3ನೇ ತರಗತಿಯಿಂದಲೇ ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟೇಶನಲ್ ಥಿಂಕಿಂಗ್ ಕಲಿಕೆಯನ್ನು ಆರಂಭಿಸಲಿದೆ. 9 ಮತ್ತು 10ನೇ ತರಗತಿಗಳಲ್ಲಿ ಇವು ಕಡ್ಡಾಯವಾಗಲಿವೆ. 11 ಮತ್ತು 12ನೇ ತರಗತಿಗಳಲ್ಲಿ ಐಚ್ಛಿಕ ವಿಷಯಗಳಾಗಿ ಲಭ್ಯವಿರಲಿವೆ. ಈ ಹೊಸ ಪಠ್ಯಕ್ರಮವು ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನಗಳಿಗೆ ಸಿದ್ಧರಾಗಲು ಸಹಾಯ ಮಾಡಲಿದೆ. ರಾಷ್ಟ್ರದ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

ವಿಜಯ ಕರ್ನಾಟಕ 13 Nov 2025 10:03 pm

ದಿಲ್ಲಿ ಸ್ಫೋಟ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಸಂದೇಶ : ಅಸ್ಸಾಂನಲ್ಲಿ 15 ಮಂದಿ ಬಂಧನ

ಗುವಾಹಟಿ, ನ. 13: ದಿಲ್ಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಭವಿಸಿದ ಭೀಕರ ಬಾಂಬ್‌ಸ್ಫೋಟಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಲಾಗಿರುವ ‘‘ಅನುಚಿತ ಸಂದೇಶ’’ಗಳಿಗಾಗಿ ಅಸ್ಸಾಂನಲ್ಲಿ ಇನ್ನೂ ಒಂಭತ್ತು ಮಂದಿಯನ್ನು ಬಂಧಿಸಲಾಗಿದೆ. ‘‘ದಿಲ್ಲಿ ಸ್ಫೋಟಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಲಾಗಿರುವ ಅನುಚಿತ ಸಂದೇಶಗಳಿಗಾಗಿ ಅಸ್ಸಾಂನಲ್ಲಿ ಈವರೆಗೆ 15 ಮಂದಿಯನ್ನು ಬಂಧಿಸಲಾಗಿದೆ. ನಿನ್ನೆ ಆರು ಮಂದಿಯನ್ನು ಬಂಧಿಸಲಾಗಿತ್ತು. ಉಳಿದವರನ್ನು ಕಳೆದ ರಾತ್ರಿ ಬಂಧಿಸಲಾಗಿದೆ’’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಗುರುವಾರ ‘ಎಕ್ಸ್’ನಲ್ಲಿ ಬರೆದಿದ್ದಾರೆ. ಪೊಲೀಸರು ಸ್ವಯಂಪ್ರೇರಿತ ಮೊಕದ್ದಮೆಗಳನ್ನು ದಾಖಲಿಸಿಕೊಂಡು, ಬುಧವಾರ ರಾತ್ರಿ ಮತ್ತು ಗುರುವಾರ ಬೆಳಗ್ಗೆ ವಿವಿಧ ಜಿಲ್ಲೆಗಳಿಂದ ಜನರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ, ಸರಕಾರಿ ಶಾಲೆಯೊಂದರ ನಿವೃತ್ತ ಪ್ರಾಂಶುಪಾಲರನ್ನು ಕಚರ್ ಜಿಲ್ಲೆಯಲ್ಲಿ ಬಂಧಿಸಲಾಗಿತ್ತು. ಅವರಿಗೆ ನೋಟಿಸ್ ಕೊಟ್ಟು ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ಕಚರ್ ಪೊಲೀಸ್ ಸೂಪರಿಂಟೆಂಡೆಂಡ್ ಪಾರ್ಥ ಪ್ರತಿಮ್ ದಾಸ್ ಹೇಳಿದರು.

ವಾರ್ತಾ ಭಾರತಿ 13 Nov 2025 9:57 pm

Raichur | ಗೊರೆಬಾಳದಲ್ಲಿ ಬೀದಿ ನಾಯಿಗಳ ದಾಳಿಗೆ ಮೇಕೆ, ಕೋಳಿ ಬಲಿ

ಲಿಂಗಸುಗೂರು : ತಾಲೂಕಿನ ಗೊರೆಬಾಳ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ ಮೇಕೆ ಮತ್ತು ಕೋಳಿ ಬಲಿಯಾದ ಘಟನೆ ವರದಿಯಾಗಿದೆ. ಗ್ರಾಮದ ದುರುಗಪ್ಪ ಎಂಬುವವರ ಮೇಕೆಯ ಮೇಲೆ ಹಾಗೂ ರವಿ ಕುಮಾರ ಎಂಬ ವ್ಯಕ್ತಿಯ ಕೋಳಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಎರಡೂ ಸಾವನ್ನಪ್ಪಿವೆ. ಈ ದಾಳಿಯಿಂದ ಮೇಕೆ ಮಾಲಕನಿಗೆ ಸುಮಾರು 12,000 ರೂ. ಹಾಗೂ ಕೋಳಿ ಮಾಲಕನಿಗೆ 2,000 ರೂ. ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. ಗ್ರಾಮಸ್ಥರು ಸ್ಥಳೀಯ ಆಡಳಿತ ತಕ್ಷಣ ಕ್ರಮ ಕೈಗೊಂಡು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 13 Nov 2025 9:51 pm

‘ಡಾ.ಜಿ.ಪರಮೇಶ್ವರ್ ಅಪರೂಪದ ನಾಯಕ’; ವೈಯಕ್ತಿಕ ತೇಜೋವಧೆ ಹೇಯ ಕೃತ್ಯ : ಎಚ್. ಆಂಜನೇಯ

ಬೆಂಗಳೂರು : ‘ರಾಜ್ಯವನ್ನು ಆಳುವ ಎಲ್ಲ ಗುಣಲಕ್ಷಣ ಹೊಂದಿರುವ ಸಭ್ಯ, ಸರಳ ಸಜ್ಜನಿಕೆ ಪ್ರತಿರೂಪದ ಜನನಾಯಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಮಾನಸಿಕವಾಗಿ ಕುಗ್ಗಿಸುವ ರೀತಿ ವೈಯಕ್ತಿಕ ನಿಂದನೆ ಮಾಡಿರುವುದು ಬಿಜೆಪಿಯ ಕೆಟ್ಟ ನಡೆಯಾಗಿದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಟೀಕಿಸಿದ್ದಾರೆ. ಗುರುವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗೃಹ ಸಚಿವರಾಗಿ ಡಾ. ಪರಮೇಶ್ವರ್ ಅವರು ನಾಡಿನಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವಿವಾದಾತ್ಮಕ ಹೇಳಿಕೆಯಿಂದ ದೂರ ಇದ್ದಾರೆ. ಆಡಳಿತದಲ್ಲಿ ಲೋಪಗಳಿದ್ದರೇ ಟೀಕೆ ಮಾಡಲು ಅಡ್ಡಿಯಿಲ್ಲ. ಆದರೆ, ಅವರ ಕುಟುಂಬ, ವೈಯಕ್ತಿಕ ತೇಜೋವಧೆ ಹೇಯ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನ ಬಿಜೆಪಿ ಮುಖಂಡ ಸಂತೋಷ್‌ ಎಂಬಾತ ಪರಮೇಶ್ವರ್ ಕುಟುಂಬದ ವಿಷಯವನ್ನು ಮುಂದಿಟ್ಟುಕೊಂಡು ಟೀಕೆ ಮಾಡಿರುವುದು ಬೇಸರ ಮೂಡಿಸಿದೆ. ರಾಜಕೀಯ ಟೀಕೆ ಮಾಡಲು ಎಲ್ಲರಿಗೂ ಅಭಿವ್ಯಕ್ತಿ ಸ್ವತಂತ್ರ ಇದೆ. ಆದರೆ, ವೈಯಕ್ತಿಕವಾಗಿ ನಿಂದನೆ, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಸರಿಯಲ್ಲ ಎಂದು ಆಂಜನೇಯ ಆಕ್ಷೇಪಿಸಿದರು. ಹರಿಬಿಟ್ಟ ಆತನಿಗೆ ಬುದ್ಧಿಮಾತು ಹೇಳುವುದು ಬಿಟ್ಟು, ಬಿಜೆಪಿ ಸಮರ್ಥನೆಗೆ ಇಳಿದಿರುವುದು ಗಮನಿಸಿದರೆ ಇಂತಹ ಕೆಲಸಗಳಿಗೆ ಅವರು ತರಬೇತಿ ನೀಡುತ್ತಿದ್ದಾರೆಂಬ ಸಂಶಯ ಮೂಡುತ್ತದೆ. ಪರಮೇಶ್ವರ್ ವಿರುದ್ಧ ನಾಲಿಗೆ ಹರಿಬಿಟ್ಟ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟಕ್ಕೆ ನಾವು ಸಮಾಧಾನಗೊಳ್ಳುವುದಿಲ್ಲ. ಆತನನ್ನು ರಾಜ್ಯದಿಂದಲೇ ಗಡಿಪಾರು ಮಾಡಬೇಕು ಎಂದು ಅವರು ಆಗ್ರಹಿಸಿದರು. ಡಾ.ಪರಮೇಶ್ವರ್ ಹಾಗೂ ನಾನು ಇಬ್ಬರು ಹಿಂದೂಗಳೇ. ಹಿಂದೂಧರ್ಮದಲ್ಲಿ ಅಸ್ಪೃಶ್ಯತೆ, ಅಸಮಾನತೆ, ಮೌಢ್ಯಾಚರಣೆ, ಕಂದಾಚಾರದ ಸುಳಿಗೆ ಸಿಲುಕಿ ನೋವು ಉಣ್ಣುತ್ತಿದ್ದರೂ ನಾವು ಹಿಂದೂಗಳಾಗಿಯೇ ಇದ್ದೇವೆ. ರಾಜ್ಯದಲ್ಲಿ ನಮ್ಮ ಸಮುದಾಯವು ಹಿಂದೂಧರ್ಮದಲ್ಲಿಯೇ ಇದೆ. ಆದರೆ, ನಮ್ಮನ್ನು ಮನುಷ್ಯರನ್ನಾಗಿ ನೋಡುವ ಹೃದಯವಂತಿಕೆಯನ್ನೆ ಇವರು ಪ್ರದರ್ಶಿಸುತ್ತಿಲ್ಲ. ಇದಕ್ಕೆಲ್ಲ ಕಾರಣ ಬಿಜೆಪಿ ಕೆಟ್ಟ ಮನಸ್ಥಿತಿಯವರನ್ನು ಹುಟ್ಟುಹಾಕಿ, ಅವರನ್ನು ಸಮರ್ಥಿಸಿಕೊಳ್ಳುತ್ತಿರುವುದು ಎಂದು ಅವರು ಬೇಸರಿಸಿದರು. ಹಿಂದೂಧರ್ಮ ಪ್ರಚಾರ ಕಾರ್ಯ ಕೈಗೊಂಡು, ಅದರಲ್ಲಿನ ಲೋಪ, ಅಸಮಾನತೆ ಸರಿಪಡಿಸಲು ಮುಂದಾಗಬೇಕು. ಆದರೆ, ಇನ್ನಷ್ಟು ಲೋಪಗಳು ಆಗುವ ರೀತಿ ವರ್ತನೆಗಳು ಹೆಚ್ಚಾಗುತ್ತಿವೆ. ಇದೇ ಕಾರಣಕ್ಕೆ ಮನನೊಂದು ಅಂಬೇಡ್ಕರ್ ಹಿಂದೂಧರ್ಮ ತೊರೆದು, ಬೌದ್ಧಧರ್ಮಕ್ಕೆ ಸೇರ್ಪಡೆ ಆಗಿದ್ದು ಎಂಬ ಅರಿವು ಇರಬೇಕು ಎಂದು ಅವರು ಹೇಳಿದರು. ಎಷ್ಟೇ ಅಪಮಾನ, ಅವಮಾನ, ಅಸ್ಪೃಶ್ಯತೆ ಇದ್ದರೂ ನಾವುಗಳಂತೂ ಹಿಂದೂಗಳಾಗಿಯೇ ಇರುತ್ತೇವೆ. ಹಿಂದೂಧರ್ಮದಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕೆಂಬ ಬಯಸುತ್ತೇವೆ. ಎಲ್ಲರನ್ನು ಮನುಷ್ಯರ ರೀತಿ ಕಾಣಬೇಕೆಂಬ ಕಾರಣಕ್ಕೆ ಪದೇ ಪದೆ ಮಾತನಾಡುತ್ತೇವೆ. ಅದನ್ನೇ ತಿರುಚಿ ಮರು ಟೀಕೆ ಮಾಡಿದರೇ ಹೇಗೆ? ಎಂದು ಆಂಜನೇಯ ಪ್ರಶ್ನಿಸಿದರು. ಸರಕಾರದ ವೈಫಲ್ಯ, ಆಡಳಿತದಲ್ಲಿನ ಲೋಪಗಳು ಕಂಡುಬಂದರೇ ಟೀಕೆ ಮಾಡಲಿ. ಅದು ಆರೋಗ್ಯಕರವಾಗಿರಬೇಕು. ಮನಸ್ಸಿಗೆ ನೋವುಂಟು ಮಾಡಬಾರದು. ಅಸ್ಪೃಶ್ಯ ಸಮುದಾಯದಲ್ಲಿ ನಾಯಕರಾಗಿ ಹೊರಹೊಮ್ಮುವುದೇ ಕಷ್ಟಕರ. ಅಂತಹದ್ದರಲ್ಲಿ ಸಜ್ಜನ ರಾಜಕಾರಣಿ ಪರಮೇಶ್ವರ್‍ರ ಮನಸ್ಸಿಗೆ ಆಘಾತವಾಗುವ ರೀತಿ ಟೀಕೆ ಮಾಡಿರುವುದು ಅಮಾನವೀಯ ಎಂದು ಅವರು ವಾಗ್ದಾಳಿ ನಡೆಸಿದರು.

ವಾರ್ತಾ ಭಾರತಿ 13 Nov 2025 9:44 pm

ದೇಶದಲ್ಲಿ ಹಡಗು ನಿರ್ಮಾಣದ ಕ್ಲಸ್ಟರ್ ಅಭಿವೃದ್ಧಿ: ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ್

ಮಂಗಳೂರು: ಭಾರತದಲ್ಲಿ ಹಡಗು ನಿರ್ಮಾಣಗಳ ಕ್ಲಸ್ಟರ್ ಗಳನ್ನು ನಿರ್ಮಿಸುವ ಮೂಲಕ ಹಡಗು ನಿರ್ಮಾಣದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ನೌಕಯಾನ ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನಾವಾಲ್ ತಿಳಿಸಿದ್ದಾರೆ. ಎನ್‌ಎಂಪಿಎ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರುವಾರ ನಗರಕ್ಕೆ ಆಗಮಿಸಿದ ಸಚಿವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಚೀನಾ, ಕೊರಿಯಾ, ಜಪಾನ್‌ನಂತಹ ದೇಶಗಳು ಹಡಗು ತಯಾರಿಕೆಯಲ್ಲಿ ವಿಶ್ವದ ಅಗ್ರ ರಾಷ್ಟ್ರಗಳಾಗಿವೆ. ಮುಂದಿನ ದಿನಗಳಲ್ಲಿ ಭಾರತದ ಒಡಿಶಾ, ಗುಜರಾತ್, ತಮಿಳುನಾಡು ಹಡಗು ನಿರ್ಮಾಣದಲ್ಲಿ ಸ್ವಾಯತ್ತತೆ ಸಾಧಿಸಲು ಕ್ಲಸ್ಟರ್‌ಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವ ಸೋನಾವಾಲ್ ಹೇಳಿದರು. ನವಮಂಗಳೂರು ಬಂದರನ್ನಾಗಿ ಅಭಿವೃದ್ಧಿಪಡಿಸಿ, ನೌಕಾಯಾನದ ಪ್ರವಾಸೋದ್ಯಮ, ಕೈಗಾರಿಕಾ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಜೊತೆಗೆ ಆರ್ಥಿಕ ಸಂಪನ್ಮೂಲ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು. ಮಂಗಳೂರು ಬಂದರು ಸರಕು ನಿರ್ವಹಣೆಗೆ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ಸೋಲಾರ್ ಶಕ್ತಿ, ಇಂಧನ ಕ್ಷಮತೆ ಸೇರಿದಂತೆ ಗ್ರೀನ್ ಪೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ೫೦ ವರ್ಷಗಳಲ್ಲಿ ನವಮಂಗಳೂರು ಬಂದರು ಕರ್ನಾಟಕ ಸರಕಾರ ಹಾಗೂ ಕೇಂದ್ರ ಸರಕಾರ ಜಿಲ್ಲೆಯ ಜನತೆಯ ಸಹಕಾರದಿಂದ ಬೆಳೆದು ದೇಶಕ್ಕೆ ಕೊಡುಗೆ ನೀಡುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಎನ್‌ಎಂಪಿಎ ಅಧ್ಯಕ್ಷ ಡಾ.ಅಕ್ಕರಾಜು ವೆಂಕಟರಮಣ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 13 Nov 2025 9:38 pm

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು 8 ಅಂಶಗಳ ಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾ ನಿಗಾ ಸೇರಿದಂತೆ ಅರಣ್ಯ ಇಲಾಖೆಯಲ್ಲಿ ಎಂಟು ಅಂಶಗಳ ಯೋಜನೆ ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಸೂಚನೆ ನೀಡಿದ್ದಾರೆ. ಗುರುವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜತೆಗೂಡಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಲು ಸೂಚಿಸಿದ್ದು, ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಎಲ್ಲ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಬೇಕು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು, ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ಯಾಡ್‍ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಸೂಚನೆ ನೀಡಲಾಗಿದೆ ಎಂದರು. ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸುವುದು ಮತ್ತೆ ಯಾವ ಸ್ವರೂಪದ ಸಂಘರ್ಷ ಇದೇ ಎಂದು ಪಟ್ಟಿ ಮಾಡುವುದು. ಮಾನವ ಸಂಪನ್ಮೂಲದ ನಿರ್ವಹಣೆ ಸಂಘರ್ಷದ ತೀವ್ರತೆಯ ಆಧಾರದ ಮೇಲೆ ಅಧಿಕಾರಿ, ಸಿಬ್ಬಂದಿಯ ನಿಯೋಜನೆ. ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಮಾಡುವುದು ಹಾಗೂ ರಿಜಿಸ್ಟರ್ ನಿರ್ವಹಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಹಿರಿಯ ಅಧಿಕಾರಿಗಳು ನಿಯಮಿತವಾಗಿ ಅರಣ್ಯದಂಚಿನ, ಅದರಲ್ಲೂ ಮಾನವ ವನ್ಯ ಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ವಾಸ್ತವ್ಯ ಮಾಡಬೇಕು. ಸ್ಥಳೀಯರನ್ನು ತೊಡಗಿಸಿಕೊಳ್ಳುವುದು, ಅರಣ್ಯದಂಚಿನ ಗ್ರಾಮದ ಉತ್ಸಾಹಿ ಯುವಕರು ಮತ್ತು ಹಿರಿಯರನ್ನು ಗುರುತಿಸಿ ಅರಣ್ಯ ಮಿತ್ರ ಎಂದು ಪರಿಗಣಿಸಿ ಗಸ್ತು, ವನ್ಯಜೀವಿ, ಸೆರೆ, ಕಾರ್ಯಾಚರಣೆ ವೇಳೆ ಅವರ ಸೇವೆ ಬಳಸಿಕೊಳ್ಳಬೇಕು. ವನ್ಯಜೀವಿ ಸಂರಕ್ಷಣೆ ಕಾರ್ಯಾಚರಣೆಗೆ ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ ದಿನದ 24 ಗಂಟೆಯೂ ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ಮಾಡಲು ಹೇಳಲಾಗಿದೆ ಎಂದು ಅವರು ತಿಳಿಸಿದರು. ವನ್ಯಜೀವಿ ಸೆರೆ, ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸುವುದು. ತಾಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯುವುದು. ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಸಭೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷÀ ನರೇಂದ್ರ ಸ್ವಾಮಿ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಕರ್ನಾಟಕದಲ್ಲಿ ವನ್ಯಜೀವಿ ಸಂಖ್ಯೆ ► ಆನೆಗಳ ಸಂಖ್ಯೆ-6395 (ದೇಶದಲ್ಲಿಯೇ ಮೊದಲ ಸ್ಥಾನ) ► ಹುಲಿ ಸಂಖ್ಯೆ-563 (ದೇಶದಲ್ಲಿಯೇ ಎರಡನೆ ಸ್ಥಾನ) ► ಚಿರತೆ ಸಂಖ್ಯೆ-1879 (ದೇಶದಲ್ಲಿ ಮೂರನೆ ಸ್ಥಾನ) ಈ ಸಂಘರ್ಷ ಪ್ರಕೃತಿ ವಿಕೋಪದಂತೆ ಪರಿಗಣಿಸಿ: ಮಾನವ-ವನ್ಯಜೀವಿ ಸಂಘರ್ಷವನ್ನು ಪ್ರಕೃತಿ ವಿಕೋಪದ ರೀತಿ ಪರಿಗಣಿಸಲು ಮತ್ತು ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಸಹಯೋಗ ಒದಗಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಸಭೆಯಲ್ಲಿ ಪ್ರಸ್ತಾಪಿಸಿದ ಅವರು, ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗಿದ್ದು 2022-23ರಲ್ಲಿ 57 ಜನರು, 2023-24ರಲ್ಲಿ 65 ಮತ್ತು 2024-25ರಲ್ಲಿ 46 ಹಾಗೂ 2025-26ರಲ್ಲಿ ಇಲ್ಲಿಯವರೆಗೆ 32 ಜನರು ಮಾನವ-ವನ್ಯಜೀವಿ ಸಂಘರ್ಷದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು. ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕರ್ನಾಟಕಕ್ಕಿಂತ ವನ್ಯಜೀವಿಗಳ ಸಂಖ್ಯೆ ಕಡಿಮೆ ಇದ್ದರೂ ಜೀವಹಾನಿಯ ಸಂಖ್ಯೆ ಅಧಿಕವಾಗಿದೆ ಎಂದು ಸಭೆಗೆ ವಿವರಿಸಿದರು. ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ನಿವೃತ್ತ ಯೋಧರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಅರಣ್ಯ ಇಲಾಖೆಯಲ್ಲಿ ಪಶುವೈದ್ಯಕೀಯ ಇಲಾಖೆಯಿಂದ ನಿಯೋಜನೆಯ ಮೇಲೆ ಪಶುವೈದ್ಯರು ಕಾರ್ಯನಿರ್ವಹಿಸುತ್ತಿದ್ದು, ವನ್ಯಜೀವಿ ಪಶುವೈದ್ಯರ ಪ್ರತ್ಯೇಕ ಕೇಡರ್ ರೂಪಿಸುವ ಅಗತ್ಯ ಇದೆ ಎಂದು ಉಲ್ಲೇಖಿಸಿದರು.

ವಾರ್ತಾ ಭಾರತಿ 13 Nov 2025 9:31 pm

Ukraine War: ಉಕ್ರೇನ್ ಬೆನ್ನಿಗೆ ನಿಂತ ಯುರೋಪ್ ಒಕ್ಕೂಟ, ಭಾರಿ ದೊಡ್ಡ ಸಹಾಯ ಘೋಷಣೆ!

ರಷ್ಯಾ ಸೇನೆಯನ್ನ ಹೇಗಾದರು ಮಾಡಿ ಯುದ್ಧದಲ್ಲಿ ಸೋಲಿಸಬೇಕು ಎಂಬ ಒಂದೇ ಒಂದು ಹಠ ಮುಂದೆ ಇಟ್ಟುಕೊಂಡು ಹೊಸ ಮಾಸ್ಟರ್ ಪ್ಲಾನ್ ಮಾಡಿದೆ ಪಾಶ್ಚಿಮಾತ್ಯ ಒಕ್ಕೂಟ. ಯುರೋಪ್ ಸೇರಿದಂತೆ ಅಮೆರಿಕ ಹಾಗೂ ಮತ್ತಿತರರ ಸಹಾಯದ ಮೂಲಕ ಇದೀಗ ಹೇಗಾದರೂ ಮಾಡಿ ರಷ್ಯಾ ದೇಶವನ್ನು ಯುದ್ಧದಲ್ಲಿ ಸೋಲಿಸಬೇಕು ಅನ್ನೋ ಹಠ ಕೂಡ ಶುರುವಾಗಿದೆ. ಅದರಲ್ಲೂ ಹೀಗೆ ಹಠ ಮಾಡುತ್ತಿರುವ ದೇಶಗಳ

ಒನ್ ಇ೦ಡಿಯ 13 Nov 2025 9:26 pm

ಮಹಾರಾಷ್ಟ್ರ | ಆದಾಯ ಗಳಿಕೆಗೆ ಸರಕಾರಿ ಭೂಮಿಯ ಪರಭಾರೆ ಬಗ್ಗೆ ಕಳವಳ : ನಿವೃತ್ತ ನ್ಯಾಯಾಧೀಶರು, ಸಾಮಾಜಿಕ ಹೋರಾಟಗಾರರಿಂದ ಸಿಎಂಗೆ ಪತ್ರ

ಮುಂಬೈ,ನ.13: 127 ಮುಂಬಯಿಗರ ಗುಂಪೊಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರವೊಂದನ್ನು ಬರೆದು ಆದಾಯ ಗಳಿಕೆಗಾಗಿ ನಗರದಲ್ಲಿಯ ಸರಕಾರಿ ಭೂಮಿಯ ವಿವೇಚನಾರಹಿತ ಪರಭಾರೆಯ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ. ಪತ್ರಕ್ಕೆ ಸಹಿ ಹಾಕಿದವರಲ್ಲಿ ನಿವೃತ್ತ ಸರಕಾರಿ ಅಧಿಕಾರಿಗಳು,ಮಾಜಿ ನ್ಯಾಯಾಧೀಶರು, ನಿವೃತ್ತ ರಕ್ಷಣಾ ಸಿಬ್ಬಂದಿಗಳು,ಶಿಕ್ಷಣ ತಜ್ಞರು,ಪತ್ರಕರ್ತರು, ವಕೀಲರು ಮತ್ತು ಸಾಮಾಜಿಕ ಹೋರಾಟಗಾರರು ಸೇರಿದ್ದಾರೆ. ರೈಲ್ವೆ, ಮಿಲ್‌ಗಳು ಮತ್ತು ಬಂದರಿಗೆ ಸೇರಿದ ಜಮೀನು ಹಾಗೂ ಇತರ ಸರಕಾರಿ ಸ್ವಾಮ್ಯದ ಭೂಪ್ರದೇಶಗಳು ಸೇರಿದಂತೆ ಮುಂಬೈನಲ್ಲಿಯ ಸಾರ್ವಜನಿಕ ಭೂಮಿಯನ್ನು ‘ಆದಾಯ ಸೃಷ್ಟಿ’ಯ ಹೆಸರಿನಲ್ಲಿ ವಾಣಿಜ್ಯ ಮತ್ತು ಊಹಾತ್ಮಕ ಅಭಿವೃದ್ಧಿಗಳಿಗಾಗಿ ನೀಡಲಾಗುತ್ತಿದೆ ಎಂದು ಹೇಳಿರುವ ಪತ್ರವು, ಈ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಅಥವಾ ಉತ್ತರದಾಯಿತ್ವದ ಕೊರತೆಯಿದೆ ಎಂದು ಆರೋಪಿಸಿದೆ. ಮೇಲ್ಮೈ ಭೂಮಿಯನ್ನು ಅಭಿವೃದ್ಧಿಗಾಗಿ ಮುಕ್ತಗೊಳಿಸಲು ಹಳಿಗಳನ್ನು ಭೂಗತಕ್ಕೆ ಸ್ಥಳಾಂತರಿಸುವ ಸಲಹೆಗಳು ಸೇರಿದಂತೆ ರೈಲ್ವೆ ಭೂಮಿಯನ್ನು ಪುನರಾಭಿವೃದ್ಧಿಗೊಳಿಸುವ ಪ್ರಸ್ತಾವವು ಸಮರ್ಥನೀಯವಲ್ಲ. ಇತರ ಸಾರ್ವಜನಿಕ ಪ್ರಾಧಿಕಾರಗಳೂ ಆದಾಯ ಗಳಿಕೆಗಾಗಿ ಇಂತಹುದೇ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಹೇಳಿರುವ ಪತ್ರವು, ಇಂತಹ ಪುನರಾಭಿವೃದ್ಧಿಯಿಂದ ಯಾರಿಗೆ ಲಾಭ ಮತ್ತು ಇದಕ್ಕಾಗಿ ತೆರಬೇಕಾದ ಸಾಮಾಜಿಕ ಮತ್ತು ಪರಿಸರ ವೆಚ್ಚವೆಷ್ಟು ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದೆ.

ವಾರ್ತಾ ಭಾರತಿ 13 Nov 2025 9:23 pm

ʻಚೀಟಿ ವ್ಯವಹಾರ ಮಾಡಬೇಡಿʼ; ಸಾಲದ ಹೊರೆ ತಾಳಲಾರದೆ ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಸಾಲದ ಸುಳಿಗೆ ಸಿಲುಕಿದ್ದ ಉದ್ಯಮಿ ಹಾಗೂ ಬಿಜೆಪಿ ಕಾರ್ಯಕರ್ತರೊಬ್ಬರಾದ ಎಂ.ವೆಂಕಟೇಶ್ ಅವರು ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ತಮ್ಮ ಆರ್ಥಿಕ ಸಂಕಷ್ಟದ ಬಗ್ಗೆ ವಿಡಿಯೋ ರೆಕಾರ್ಡ್ ಮಾಡಿದ್ದು, ಚೀಟಿ ವ್ಯವಹಾರದ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ವೈಯಾಲಿಕಾವಲ್‌ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಜಯ ಕರ್ನಾಟಕ 13 Nov 2025 9:20 pm

ದಿಲ್ಲಿ ಸ್ಫೋಟ ಪ್ರಕರಣ | ರಸಗೊಬ್ಬರ ವ್ಯಾಪಾರಿ ಎನ್‌ಐಎ ವಶಕ್ಕೆ

ಚಂಡಿಗಢ, ನ. 13: ದಿಲ್ಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟಕ್ಕೆ ಬಳಸಲಾದ ಪ್ರಮುಖ ವಸ್ತುವಾದ ಅಮೋನಿಯಂ ನೈಟ್ರೇಟ್ ಪೂರೈಸಿದ ಆರೋಪದಲ್ಲಿ ನೂಹ್ ಜಿಲ್ಲೆಯ ಪಿನಗಾಂವ್‌ನ ರಸಗೊಬ್ಬ ಹಾಗೂ ಬೀಜ ಮಾರಾಟ ಮಾಡುವ ಅಂಗಡಿಯ ಮಾಲಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ವಶಕ್ಕೆ ತೆಗೆದುಕೊಂಡಿದೆ. ಶಂಕಿತನನ್ನು ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಪಿನಗಾಂವ್‌ನ ನಿವಾಸಿಯಾಗಿರುವ ಈತನನ್ನು ಡಬ್ಬು ಸಿಂಗ್ಲಾ ಎಂದು ಕರೆಯಲಾಗುತ್ತಿತ್ತು. ಈತನ ಅಂಗಡಿಯಿಂದ ಸುಮಾರು 300 ಕಿ.ಗ್ರಾಂ. ಅಮೋನಿಯಂ ನೈಟ್ರೇಟ್ ಖರೀದಿ ಬಗ್ಗೆ ಗುಪ್ತಚರ ಮಾಹಿತಿ ದೊರೆತಿದೆ. ಇದರ ಆಧಾರದಲ್ಲಿ ಎನ್‌ಐಎ ದಿನೇಶ್ ಕುಮಾರ್‌ನನ್ನು ಗುರುವಾರ ಬೆಳಗ್ಗೆ ಬಂಧಿಸಿದೆ. ಈತ ಎರಡು ವರ್ಷಗಳಿಂದ ರಸಗೊಬ್ಬರ ವ್ಯವಹಾರ ನಡೆಸುತ್ತಿದ್ದ. ಖರೀದಿದಾರರ ಗುರುತು ಪರಿಶೀಲಿಸದೆ ಲಾಭಕ್ಕಾಗಿ ರಾಸಾಯನಿಕಗಳನ್ನು ಪೂರೈಕೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ‘‘ದಿನೇಶ್ ಕುಮಾರ್‌ನನ್ನು ಗುರುವಾರ ಬೆಳಗ್ಗೆ ಬಂಧಿಸಲಾಗಿದೆ. ಆತನ ವಿಚಾರಣೆ ನಡೆಯುತ್ತಿದೆ’’ ಎಂದು ಎನ್‌ಐಎಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ದಿನೇಶ್ ಕುಮಾರ್‌ನ ಬಂಧನದ ಸುದ್ದಿ ಸ್ಥಳೀಯ ಗೊಬ್ಬರ ಹಾಗೂ ಬೀಜ ಮಾರಾಟಗಾರರಲ್ಲಿ ಆತಂಕ ಉಂಟು ಮಾಡಿತು. ಹಲವರು ತಮ್ಮ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಿದರು. ‘‘ನಮಗೆ ಭಯವಾಗಿದೆ; ತನಿಖಾ ಸಂಸ್ಥೆ ಪ್ರತಿಯೊಬ್ಬರನ್ನೂ ಪ್ರಶ್ನಿಸುತ್ತಿದೆ’’ ಎಂದು ಪಿನಗಾಂವ್ ಸಮೀಪದ ಹೆಸರು ಹೇಳಲಿಚ್ಛಿಸಿದ ಅಂಗಡಿ ಮಾಲಕರೋರ್ವರು ತಿಳಿಸಿದ್ದಾರೆ.

ವಾರ್ತಾ ಭಾರತಿ 13 Nov 2025 9:19 pm

2026ರ ಐಪಿಎಲ್ | ಕೆಕೆಆರ್ ಸಹಾಯಕ ಕೋಚ್ ಆಗಿ ಶೇನ್ ವಾಟ್ಸನ್ ನೇಮಕ

ಹೊಸದಿಲ್ಲಿ, ನ.13: ಆಸ್ಟ್ರೇಲಿಯದ ಮಾಜಿ ಆಲ್‌ರೌಂಡರ್ ಶೇನ್ ವಾಟ್ಸನ್‌ರನ್ನು ಮುಂಬರುವ 2026ರ ಆವೃತ್ತಿಯ ಐಪಿಎಲ್ ಟೂರ್ನಿಗೆ ತಮ್ಮ ತಂಡದ ಸಹಾಯಕ ಕೋಚ್ ಆಗಿ ನೇಮಿಸಲಾಗಿದೆ ಎಂದು ಕೋಲ್ಕತಾ ನೈಟ್ ರೈಡರ್ಸ್(ಕೆಕೆಆರ್)ಗುರುವಾರ ಪ್ರಕಟಿಸಿದೆ. ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಓರ್ವ ಯಶಸ್ವಿ ಕ್ರಿಕೆಟಿಗನಾಗಿದ್ದ ವಾಟ್ಸನ್ 59 ಟೆಸ್ಟ್, 190 ಏಕದಿನ ಹಾಗೂ 58 ಟಿ-20 ಪಂದ್ಯಗಳಲ್ಲಿ ಆಸ್ಟ್ರೇಲಿಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ 10,000ಕ್ಕೂ ಅಧಿಕ ಅಂತರ್‌ರಾಷ್ಟ್ರೀಯ ರನ್ ಗಳಿಸಿದ್ದಲ್ಲದೆ, 280 ವಿಕೆಟ್‌ಗಳನ್ನು ಪಡೆದಿದ್ದಾರೆ. 2007 ಹಾಗೂ 2015ರಲ್ಲಿ ಐಸಿಸಿ ವಿಶ್ವಕಪ್ ವಿಜೇತ ಆಸ್ಟ್ರೇಲಿಯದ ತಂಡದ ಪ್ರಮುಖ ಸದಸ್ಯರಾಗಿದ್ದರು. ತನ್ನ ವೃತ್ತಿ ಜೀವನದುದ್ದಕ್ಕೂ ಹಲವು ಪ್ರಶಸ್ತಿ ಗೆಲುವಿನ ಭಾಗವಾಗಿದ್ದರು. ‘‘ನಾನು ತರಬೇತುದಾರರ ಗುಂಪಿನೊಂದಿಗೆ ಕೆಲಸ ಮಾಡಲು ಉತ್ಸುಕನಾಗಿರುವೆ. ಕೋಲ್ಕತಾ ತಂಡ ಮತ್ತೊಂದು ಪ್ರಶಸ್ತಿ ಗೆಲ್ಲಲು ಆಟಗಾರರಿಗೆ ನೆರವಾಗುವೆ’’ಎಂದು ಫ್ರಾಂಚೈಸಿ ಬಿಡುಗಡೆಗೊಳಿಸಿರುವ ಹೇಳಿಕೆಯಲ್ಲಿ ವಾಟ್ಸನ್ ತಿಳಿಸಿದ್ದಾರೆ. ವಾಟ್ಸನ್ 2008ರಿಂದ 2020ರ ತನಕ 12 ವರ್ಷಗಳ ಕಾಲ ಐಪಿಎಲ್ ಟೂರ್ನಿಯಲ್ಲಿ ಆಡಿದ್ದು, 145 ಪಂದ್ಯಗಳನ್ನು ಆಡಿದ್ದಾರೆ. 4 ಶತಕಗಳನ್ನು ಗಳಿಸಿದ್ದು, ರಾಜಸ್ಥಾನ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್‌ಶಿಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆಸ್ಟ್ರೇಲಿಯದ ಮಾಜಿ ಉಪ ನಾಯಕ ವಾಟ್ಸನ್ ನಿವೃತ್ತಿಯ ನಂತರ ಕೋಚ್ ಹಾಗೂ ಸಲಹೆಗಾರನಾಗಿ ಜಾಗತಿಕ ಮಟ್ಟದ ಲೀಗ್‌ಗಳಲ್ಲಿ ಹಲವು ಫ್ರಾಂಚೈಸಿಗಳಲ್ಲಿ ಕೆಲಸ ಮಾಡಿದ್ದಾರೆ. ‘‘ಶೇನ್ ವಾಟ್ಸನ್‌ರನ್ನು ಕೆಕೆಆರ್ ಕುಟುಂಬಕ್ಕೆ ಸ್ವಾಗತಿಸಲು ನಮಗೆ ರೋಮಾಂಚನವಾಗುತ್ತಿದೆ. ಉನ್ನತ ಮಟ್ಟದಲ್ಲಿ ಆಟಗಾರ ಹಾಗೂ ಕೋಚ್ ಆಗಿ ಅವರ ಅನುಭವವು ನಮ್ಮ ತಂಡದ ತಯಾರಿಗೆ ಅಮೂಲ್ಯ ಕೊಡುಗೆ ನೀಡಬಹುದು. ಮೈದಾನದ ಹೊರಗೆ ಹಾಗೂ ಒಳಗೆ ಅವರ ಕೊಡುಗೆಗಳನ್ನು ನಾವು ಎದುರು ನೋಡುತ್ತಿದ್ದೇವೆ’’ಎಂದು ಕೆಕೆಆರ್ ಸಿಇಒ ವೆಂಕಿ ಮೈಸೂರು ಹೇಳಿದ್ದಾರೆ.

ವಾರ್ತಾ ಭಾರತಿ 13 Nov 2025 9:14 pm

Breaking: ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ಭೀಕರ ಅಪಘಾತ: 48 ವಾಹನ ಡಿಕ್ಕಿ, 8 ಜನ ಸಜೀವ ದಹನ

ನಿಯಂತ್ರಣ ತಪ್ಪಿ ಟ್ರಕ್‌ವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು-ಪುಣೆ ಹೆದ್ದಾರಿಯ ನವಲೆ ಸೇತುವೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 8 ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 6 ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ವಿಜಯ ಕರ್ನಾಟಕ 13 Nov 2025 9:12 pm

ಐಪಿಎಲ್ | ಮುಂಬೈ ಇಂಡಿಯನ್ಸ್‌ಗೆ ಶಾರ್ದುಲ್ ಠಾಕೂರ್ ಸೇರ್ಪಡೆ?

ಮುಂಬೈ, ನ.13: ತನ್ನ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿ ಈ ವರ್ಷದ ರಣಜಿ ಟ್ರೋಫಿ ಟೂರ್ನಿಯಲ್ಲಿ ಮುಂಬೈ ತಂಡದ ನಾಯಕತ್ವ ವಹಿಸಿದ್ದ ಶಾರ್ದುಲ್ ಠಾಕೂರ್ ಮುಂಬರುವ ಐಪಿಎಲ್‌ನಲ್ಲಿ ತಮ್ಮದೇ ರಾಜ್ಯದ ಪರ ಆಡುವ ಸಾಧ್ಯತೆಯಿದೆ. ಅರ್ಜುನ್ ತೆಂಡುಲ್ಕರ್ ಮುಂಬೈ ಬದಲಿಗೆ ಬೇರೊಂದು ತಂಡದ ಪಾಲಾಗುವ ನಿರೀಕ್ಷೆ ಇದೆ. 34ರ ವಯಸ್ಸಿನ ಬೌಲಿಂಗ್ ಆಲ್‌ರೌಂಡರ್ ಠಾಕೂರ್ ಭಾರತದ ಪರ 13 ಟೆಸ್ಟ್, 47 ಏಕದಿನ ಹಾಗೂ 25 ಟಿ-20 ಪಂದ್ಯಗಳನ್ನು ಆಡಿದ್ದು, 131 ಅಂತರ್‌ರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿದ್ದಾರೆ. ಸದ್ಯ ಭಾರತೀಯ ಕ್ರಿಕೆಟ್ ತಂಡದಿಂದ ಹೊರಗಿರುವ ಅವರು ಮುಂಬರುವ ಐಪಿಎಲ್ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಸಾಧ್ಯತೆಯಿದೆ. ಲಕ್ನೊ ಸೂಪರ್ ಜಯಂಟ್ಸ್ ತಂಡವು ಠಾಕೂರ್ ಹಾಗೂ ಎಡಗೈ ವೇಗಿ ಅರ್ಜುನ್ ತೆಂಡುಲ್ಕರ್‌ಗೆ ಸಂಬಂಧಿಸಿ ಮುಂಬೈ ಇಂಡಿಯನ್ಸ್ ಸಂಪರ್ಕದಲ್ಲಿದೆ. ತೆಂಡುಲ್ಕರ್ ವಿಚಾರದಲ್ಲಿ ಮಾತುಕತೆ ಅಂತಿಮವಾಗಿದ್ದು, ಈ ಬಾರಿ ಐಪಿಎಲ್‌ನಲ್ಲಿ ಬೇರೊಂದು ತಂಡದಲ್ಲಿ ಆಡಬಹುದು. ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಅರ್ಜುನ್ ತೆಂಡುಲ್ಕರ್ ಈ ತನಕ ಕೇವಲ 5 ಪಂದ್ಯಗಳನ್ನು ಆಡಿದ್ದು, 13 ರನ್ ಗಳಿಸಿದ್ದಾರೆ. 3 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಎರಡೂ ಬಾರಿಯ ಹರಾಜಿನಲ್ಲಿ ಮೂಲ ಬೆಲೆಗೆ ಮುಂಬೈ ಇಂಡಿಯನ್ಸ್ ಖರೀದಿಸಿತ್ತು. ಕಳೆದ ವರ್ಷ ಅರ್ಜುನ್ ಒಂದೂ ಪಂದ್ಯವನ್ನು ಆಡಿರಲಿಲ್ಲ.

ವಾರ್ತಾ ಭಾರತಿ 13 Nov 2025 9:10 pm

Bidar | ವಲಸೆ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕ್ರಮ ವಹಿಸಿ : ಡಿಸಿ ಶಿಲ್ಪಾ ಶರ್ಮಾ

ಬೀದರ್ : ಬೇರೆ ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬಾಲ್ಯವಿವಾಹ ತಡೆಗಟ್ಟುವ ಸಮನ್ವಯ ಮತ್ತು ಪರಿಶೀಲನೆ ಸಮಿತಿ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಬ್ಬು ಕಟಾವು ಮಾಡಲು ಬೇರೆ ರಾಜ್ಯಗಳಿಂದ ಮತ್ತು ಜಿಲ್ಲೆಗಳಿಂದ ಕಾರ್ಮಿಕರು ತಮ್ಮ ಕುಟುಂಬದೊಂದಿಗೆ ಜಿಲ್ಲೆಗೆ ಬರುತ್ತಾರೆ. ಅವರ ಜೊತೆಗೆ ಮಕ್ಕಳು ಕೂಡ ಬರುವುದರಿಂದ ಅವರು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಆದ ಕಾರಣ ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಹಕ್ಕುಗಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಹತ್ತಿರದ ಗ್ರಾಮ ಪಂಚಾಯತ್ ಹಾಗೂ ಸಕ್ಕರೆ ಕಾರ್ಖಾನೆ ಮಾಲಕರು ಸಹಯೋಗದೊಂದಿಗೆ ಶಿಕ್ಷಣ ಮತ್ತು ಮೂಲಭೂತ ಸೌಕರ್ಯ ಒದಗಿಸುವ ಕಾರ್ಯ ಮಾಡಬೇಕು ಎಂದರು. ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆ ತರುವ ಗುತ್ತಿಗೆದಾರರು ಮತ್ತು ವಲಸೆ ಕಾರ್ಮಿಕರು ಕಡ್ಡಾಯವಾಗಿ ನೊಂದಣಿ ಆಗಬೇಕು. ಇದರಿಂದಾಗಿ ವಲಸೆ ಬರುವ ಕಾರ್ಮಿಕರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಬಹುದು ಮತ್ತು ಅವರ ಮಕ್ಕಳು ಅಂಗನವಾಡಿ ಕೇಂದ್ರ ಮತ್ತು ಹತ್ತಿರ ಶಾಲೆಗಳಲ್ಲಿ ಶಿಕ್ಷಣ ನೀಡುವ ವ್ಯವಸ್ಥೆ ಮಾಡಲಾಗುವುದು ಹಾಗೂ ಮಹಿಳಾ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿರುವ ಕಾರ್ಖಾನೆಗಳಲ್ಲಿ ಮಕ್ಕಳ ಆರೈಕೆ ಕೇಂದ್ರ ಸ್ಥಾಪಿಸಬೇಕು ಎಂದು ತಿಳಿಸಿದರು. ಬೀದರ್‌ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಲು ಎಲ್ಲಾ ಇಲಾಖೆಗಳ ಸಹಭಾಗಿತ್ವ ಬಹಳ ಮುಖ್ಯವಾಗಿದೆ. ಇಲಾಖೆಯ ಅಧಿಕಾರಿಗಳು ಕೂಡ ಎಲ್ಲೆ ಬಾಲ್ಯವಿವಾಹ ಕಂಡು ಬಂದಲ್ಲಿ ತಕ್ಷಣ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ, ಬಾಲ್ಯವಿವಾಹ ತಡೆಗಟ್ಟುವ ಕಾರ್ಯಗಳು ಮಾಡಬೇಕು ಎಂದು ಅವರು ಹೇಳಿದರು. ಜಿಲ್ಲಾ, ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯತ್‌ ಮತ್ತು ಗ್ರಾಮ ಮಟ್ಟದ ಸರ್ಕಾರಿ ಕಚೇರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ 1098 ನಾಮ ಫಲಕ ಅಳವಡಿಕೆ ಕಡ್ಡಾಯವಾಗಿದ್ದು, ಈ ಬಗ್ಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ ಎಂ.ಎಸ್, ಮೈಸೂರಿನ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ (ಆರ್‌ಎಲ್‌ಎಚ್‌ಪಿ) ರಾಜ್ಯ ಸಂಚಾಲಕಿ ಹಾಗೂ ಕರ್ನಾಟಕ ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನದ ನಿರ್ದೇಶಕಿ ಸರಸ್ವತಿ, ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನದ ರಾಜ್ಯ ಸಂಯೋಜಕ ಸಂಪತ್ ಕಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ ಕೋಟೆಗೌಡರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸೀಮಪ್ಪಾ, ಮರಾಠವಾಡ ಗ್ರಾಮೀಣ ವಿಕಾಸ ಸಂಸ್ಥೆಯ ಯೋಜನಾ ವ್ಯವಸ್ಥಾಪಕ ಅಶ್ವಜಿತ್ ಜಾಧವ್ ಹಾಗೂ ಮೌಲ್ಯಮಾಪಕ ಅನುಪ್ ಮೋರೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 13 Nov 2025 9:08 pm

ಏಶ್ಯನ್ ಆರ್ಚರಿ ಚಾಂಪಿಯನ್‌ಶಿಪ್ | ವೈಯಕ್ತಿಕ, ಟೀಮ್ ವಿಭಾಗದಲ್ಲಿ ಸ್ವರ್ಣ ಗೆದ್ದ ಜ್ಯೋತಿ ಸುರೇಖಾ

ಹೊಸದಿಲ್ಲಿ, ನ.13: ಢಾಕಾದಲ್ಲಿ ಗುರುವಾರ ನಡೆದ ಏಶ್ಯನ್ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಕಾಂಪೌಂಡ್ ಬಿಲ್ಲುಗಾರರಾದ ವಿ.ಜ್ಯೋತಿ ಸುರೇಖಾ ಹಾಗೂ ಅಭಿಷೇಕ್ ವರ್ಮಾ ನೇತೃತ್ವದಲ್ಲಿ ಭಾರತ ತಂಡವು ಮೂರು ಚಿನ್ನ ಸಹಿತ ನಾಲ್ಕು ಪದಕಗಳನ್ನು ಬಾಚಿಕೊಂಡಿದೆ. ಜ್ಯೋತಿ ಅವರು ಮಹಿಳೆಯರ ವೈಯಕ್ತಿಕ ಹಾಗೂ ಟೀಮ್ ವಿಭಾಗದಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಅಭಿಷೇಕ್ ವರ್ಮಾ ಭಾರತ ತಂಡವು ಮಿಕ್ಸೆಡ್ ಟೀಮ್‌ನಲ್ಲಿ ಚಿನ್ನ ಹಾಗೂ ಪುರುಷರ ಟೀಮ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವಲ್ಲಿ ನೆರವಾದರು. ಸೆಮಿ ಫೈನಲ್‌ನಲ್ಲಿ ತೈಪೆಯ ಆಟಗಾರ್ತಿಯನ್ನು 149-143 ಅಂತರದಿಂದ ಮಣಿಸಿ ಪರಿಪೂರ್ಣ ಪ್ರದರ್ಶನ ನೀಡಿದ ಜ್ಯೋತಿ ಮಹಿಳೆಯರ ವಿಭಾಗದ ಫೈನಲ್‌ನಲ್ಲಿ ತಮ್ಮದೇ ದೇಶದ 17ರ ವಯಸ್ಸಿನ ಪ್ರತಿಕಾ ಪ್ರದೀಪ್‌ರನ್ನು 147-145 ಅಂತರದಿಂದ ಸೋಲಿಸಿದರು. ಇದಕ್ಕೂ ಮೊದಲು ಜ್ಯೋತಿ, ಪ್ರತಿಕಾ ಹಾಗೂ ದೀಪ್‌ಶಿಖಾ ಒಳಗೊಂಡ ಭಾರತ ತಂಡವು ಕೊರಿಯಾವನ್ನು 236-234 ಅಂತರದಿಂದ ರೋಚಕವಾಗಿ ಮಣಿಸಿ ಮಹಿಳೆಯರ ಪ್ರಶಸ್ತಿಯನ್ನು ಬಾಚಿಕೊಂಡಿತು. ಅಭಿಷೇಕ್ ವರ್ಮಾ ಅವರು ಪ್ರಥಮೇಶ್ ಹಾಗೂ ಸಾಹಿಲ್ ಜಾಧವ್ ಜೊತೆಗೂಡಿ ಪುರುಷರ ಟೀಮ್ ವಿಭಾಗದಲ್ಲಿ ಫೈನಲ್ ಪಂದ್ಯವನ್ನು ಆಡಿದ್ದು, ಕಝಕ್‌ಸ್ತಾನದ ಎದುರಾಳಿಯ ವಿರುದ್ಧ 229-230 ಅಂತರದಿಂದ ಸೋತಿದ್ದಾರೆ. ಅಭಿಷೇಕ್ ವರ್ಮಾ ಅವರು ಯುವ ಆಟಗಾರ್ತಿ ದೀಪ್‌ಶಿಖಾ ಅವರೊಂದಿಗೆ ಮಿಕ್ಸೆಡ್ ಟೀಮ್ ಫೈನಲ್‌ನಲ್ಲಿ ಆಡಿದ್ದು, ಆತಿಥೇಯ ಬಾಂಗ್ಲಾದೇಶ ತಂಡವನ್ನು 153-151 ಅಂತರದಿಂದ ಮಣಿಸಿ ಚಿನ್ನದ ಪದಕ ಗೆದ್ದಿದ್ದಾರೆ.

ವಾರ್ತಾ ಭಾರತಿ 13 Nov 2025 9:06 pm

ರಾಜ್ಯ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಮುಂದಾಗಿದೆ : ಶಿಕ್ಷಣ ತಜ್ಞ ನಿರಂಜನಾರಾಧ್ಯ ಟೀಕೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರವು ಸಂವಿಧಾನದ ಒಕ್ಕೂಟ ಆಶಯವನ್ನು ಎತ್ತಿ ಹಿಡಿಯಲು ರಾಜ್ಯ ಶಿಕ್ಷಣ ನೀತಿ(ಎಸ್‍ಇಪಿ) ರೂಪಿಸಿದ್ದರೂ, ಈ ನೀತಿಯ ಶಿಫಾರಸುಗಳನ್ನು ಜಾರಿ ಮಾಡದೇ, ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಮುಂದಾಗಿದೆ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ. ಟೀಕಿಸಿದ್ದಾರೆ. ಗುರುವಾರ ಪ್ರಕಟನೆ ಹೊರಡಿಸಿರುವ ಅವರು, ರಾಜ್ಯದಲ್ಲಿ ಸುಮಾರು 25,683 ಶಾಲೆಗಳನ್ನು 700 ಕೆಪಿಎಸ್ ಶಾಲೆಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣವನ್ನು ನಾಶ ಮಾಡಿ, ಖಾಸಗೀಕರಣವನ್ನು ಪೂರ್ಣವಾಗಿ ವಿಸ್ತರಿಸಲು ರೂಪಿಸಿರುವ ಕುತಂತ್ರದ ಯೋಜನೆ ಇದಾಗಿದೆ. ಇದು ರಾಜ್ಯ ಶಿಕ್ಷಣ ನೀತಿಯ ಶಿಫಾರಸ್ಸಿಗೆ ಸಂಪೂರ್ಣವಾಗಿ ವಿರುದ್ಧವಾಗಿದ್ದು, ಹಿಂಬಾಗಿಲಿನಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಒಳಸಂಚಿನ ಹುನ್ನಾರವಾಗಿದೆ ಎಂದಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯು ಶಾಲಾ ಸಂಕೀರ್ಣಗಳ ಮೂಲಕ ಪರಿಣಾಮಕಾರಿ ಸಂಪನ್ಮೂಲ ಬಳಕೆ ಮತ್ತು ಆಡಳಿತದ ನೆಪವೊಡ್ಡಿ ಲಕ್ಷಾಂತರ ಸರಕಾರಿ ಶಾಲೆಗಳನ್ನು ಹತ್ತು ವರ್ಷಗಳಿಂದ ಮುಚ್ಚುತ್ತಲೇ ಬಂದಿದೆ. ‘ನೆರೆಹೊರೆಯ ಶಾಲೆ’ಯಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲು ಹಲವಾರು ದಶಕಗಳಿಂದ ಸೋತಿರುವ ಸರಕಾರವು, ಗುಣಮಟ್ಟದ ಶಿಕ್ಷಣ ನೀಡುವ ಹೆಸರಿನಲ್ಲಿ ಶಾಲೆಗಳನ್ನು ವಿಲೀನಗೊಳಿಸುತ್ತಿರುವುದು ಕೇವಲ ನೆಪವಾಗಿದೆ ಎಂದು ಅವರು ಹೇಳಿದ್ದಾರೆ. ಸುಮಾರು 26 ಸಾವಿರ ಶಾಲೆಗಳನ್ನು ಹಂತಹಂತವಾಗಿ ಮುಚ್ಚುವುದರಿಂದ ಗ್ರಾಮೀಣ ಮಕ್ಕಳ ಶಿಕ್ಷಣದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ. ಅದರಲ್ಲೂ ದಲಿತರು, ಅಲ್ಪಸಂಖ್ಯಾತರು, ದುಡಿಯುವ ವರ್ಗದ ಹಿಂದುಳಿದ ಸಮುದಾಯಕ್ಕೆ ಸೇರಿದ ಮಕ್ಕಳು, ವಿಶೇಷವಾಗಿ ಎಲ್ಲ ವರ್ಗದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ವಾರ್ತಾ ಭಾರತಿ 13 Nov 2025 9:01 pm

ನಾಳೆ ಮೊದಲ ಟೆಸ್ಟ್ ಆರಂಭ | ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾಕ್ಕೆ ಭಾರತ ವಿರುದ್ಧ ಕಠಿಣ ಸವಾಲು

ಕೋಲ್ಕತಾ, ನ.13: ಐತಿಹಾಸಿಕ ಈಡನ್ ಗಾರ್ಡನ್ಸ್ ಸ್ಟೇಡಿಯಂಗೆ ಆರು ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್ ಮರಳುತ್ತಿದ್ದು, ಶುಕ್ರವಾರದಿಂದ ಆರಂಭವಾಗಲಿರುವ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾವು ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಭಾರತದಲ್ಲಿ ಈ ಹಿಂದೆ 7 ಟೆಸ್ಟ್ ಪಂದ್ಯಗಳನ್ನು ಆಡಿದ್ದ ಹರಿಣ ಪಡೆ ತೀವ್ರ ಸ್ಪರ್ಧೆಯೊಡ್ಡುವಲ್ಲಿ ವಿಫಲವಾಗಿದ್ದು, ಈ ಪೈಕಿ 6 ಟೆಸ್ಟ್ ಪಂದ್ಯಗಳನ್ನು ಸೋತಿದೆ. ಆಫ್ರಿಕಾ ತಂಡ ಈ ಬಾರಿ ತನ್ನ ಬೌಲಿಂಗ್ ವಿಭಾಗದಲ್ಲಿ ಹೊಸ ಮುಖಗಳೊಂದಿಗೆ ಆಗಮಿಸಿದ್ದು, ಈ ಹಿಂದಿನಂತೆ ಕೇಶವ ಮಹಾರಾಜ್ ಸ್ಪಿನ್ ಬೌಲಿಂಗ್ ನೇತೃತ್ವ ವಹಿಸಲಿದ್ದಾರೆ. ಎಸ್.ಮುತ್ತು ಸ್ವಾಮಿ 2019-20ರ ಪ್ರವಾಸದಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಕಳೆದ ವರ್ಷ ನ್ಯೂಝಿಲ್ಯಾಂಡ್ ತಂಡ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿತ್ತು. ಆಫ್ರಿಕಾ ತಂಡ ಕೂಡ ಕಿವೀಸ್ ಪಡೆಯನ್ನು ಸ್ಫೂರ್ತಿಯನ್ನಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ. ಇಂಗ್ಲೆಂಡ್ ವಿರುದ್ಧ 2-2ರಿಂದ ಡ್ರಾ ಹಾಗೂ ವೆಸ್ಟ್‌ಇಂಡೀಸ್ ವಿರುದ್ಧ 2-0 ಅಂತರದಿಂದ ಗೆದ್ದಿರುವ ಭಾರತ ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಕಳೆದ ತಿಂಗಳು ಪಾಕಿಸ್ತಾನದ ವಿರುದ್ಧ 1-1ರಿಂದ ಡ್ರಾ ಸಾಧಿಸಿತ್ತು. ಮೊದಲ ಟೆಸ್ಟ್ ಪಂದ್ಯದ ನಂತರ 2ನೇ ಟೆಸ್ಟ್ ಪಂದ್ಯವು ನ.22ರಿಂದ ಗುವಾಹಟಿಯಲ್ಲಿ ಆರಂಭವಾಗಲಿದೆ. ಒಂದು ತಿಂಗಳಿಗೂ ಅಧಿಕ ಸಮಯ ನಡೆಯಲಿರುವ ಉಭಯ ತಂಡಗಳ ನಡುವಿನ ಸರಣಿಯಲ್ಲಿ 2 ಟೆಸ್ಟ್, 3 ಏಕದಿನ ಹಾಗೂ 5 ಟಿ-20 ಪಂದ್ಯಗಳು ನಡೆಯಲಿವೆ. ಟೆಸ್ಟ್ ಸರಣಿ ಮುಗಿದ ನಂತರ ಏಕದಿನ ಪಂದ್ಯಗಳು ರಾಂಚಿ, ರಾಯ್ಪುರ ಹಾಗೂ ವಿಶಾಖಪಟ್ಟಣದಲ್ಲಿ ಕ್ರಮವಾಗಿ ನ.30, ಡಿ.3 ಹಾಗೂ ಡಿ.6ರಂದು ನಡೆಯಲಿದೆ. ಟ್ವೆಂಟಿ-20 ಸರಣಿಯು ಡಿ.9ರಿಂದ 19ರ ತನಕ ಕಟಕ್, ಮುಲ್ಲನ್‌ಪುರ, ಧರ್ಮಶಾಲಾ, ಲಕ್ನೊ ಹಾಗೂ ಅಹ್ಮದಾಬಾದ್‌ನಲ್ಲಿ ನಡೆಯುವುದು. ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಡ್ರಾಗೊಳಿಸಿದ್ದ ಭಾರತವು ಇತ್ತೀಚೆಗೆ ಸ್ವದೇಶದಲ್ಲಿ ನಡೆದಿದ್ದ ವೆಸ್ಟ್‌ಇಂಡೀಸ್ ವಿರುದ್ಧ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದ್ದು, ಸದ್ಯ ಭರ್ಜರಿ ಫಾರ್ಮ್‌ನಲ್ಲಿದೆ. ಶುಭಮನ್ ಗಿಲ್ ನಾಯಕತ್ವ, ರಿಷಭ್ ಪಂತ್ ಉಪ ನಾಯಕತ್ವದ ಭಾರತ ತಂಡವು ಹಾಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವಿನ್ನರ್ ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ಮುಂದುವರಿಸುವ ವಿಶ್ವಾಸದಲ್ಲಿದೆ. ಈಡನ್‌ಗಾರ್ಡನ್ಸ್ ಕ್ರೀಡಾಂಗಣವು 2019ರಲ್ಲಿ ಕೊನೆಯ ಬಾರಿ ಟೆಸ್ಟ್ ಪಂದ್ಯದ ಆತಿಥ್ಯವಹಿಸಿತ್ತು. ಆಗ ಬಾಂಗ್ಲಾದೇಶ ವಿರುದ್ಧ ಪಿಂಕ್ ಬಣ್ಣದ ಚೆಂಡಿನಲ್ಲಿ ಹಗಲು-ರಾತ್ರಿ ಪಂದ್ಯ ನಡೆದಿತ್ತು. ಆ ನಂತರ ಭಾರತೀಯ ಕ್ರಿಕೆಟ್‌ನಲ್ಲಿ ಪ್ರಮುಖ ಬದಲಾವಣೆಯಾಗಿದ್ದು, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಹೊಸ ತಲೆಮಾರಿನ ತಂಡವನ್ನು ಶುಭಮನ್ ಗಿಲ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಹವಾಮಾನ ವರದಿಯ ಪ್ರಕಾರ ನ.14ರಿಂದ 18ರ ತನಕ ಮಳೆಯಾಗುವ ಭೀತಿಯಿಲ್ಲ. ಉಷ್ಣಾಂಶವು ಬೆಳಗ್ಗೆ 18 ಡಿಗ್ರಿ ಸೆಲ್ಸಿಯಸ್ ಹಾಗೂ ಮಧ್ಯಾಹ್ನ 30 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೊದಲ ಮೂರು ದಿನ ಆಕಾಶ ಶುಭ್ರವಾಗಿರಲಿದೆ. ಪಂದ್ಯಕ್ಕೆ ಮಳೆ ಇಲ್ಲವೇ ಮಂದ ಬೆಳಕು ಅಡ್ಡಿಯಾಗುವ ಸಾಧ್ಯತೆ ಕಡಿಮೆ. ಹೀಗಾಗಿ ಅಭಿಮಾನಿಗಳು ಐದು ದಿನಗಳ ಕ್ರಿಕೆಟ್ ಪಂದ್ಯವನ್ನು ಆನಂದಿಸಬಹುದು. ಈಡನ್ ಗಾರ್ಡನ್ಸ್ ಪಿಚ್‌ನಲ್ಲಿ ಸಮಬಲದ ಸ್ಪರ್ಧೆ ನಡೆಯುವ ನಿರೀಕ್ಷೆ ಇದೆ. ಬೆಳಗ್ಗಿನ ಅವಧಿಯ ತೇವಾಂಶವು ವೇಗಿಗಳಿಗೆ ನೆರವಾಗಬಹುದು. ಜಸ್‌ಪ್ರಿತ್ ಬುಮ್ರಾ ಹಾಗೂ ಮುಹಮ್ಮದ್ ಸಿರಾಜ್‌ರಂತಹ ಬೌಲರ್‌ಗಳು ಸ್ವಿಂಗ್ ಪಡೆಯಬಹುದು. ಪಿಚ್ ಮೇಲೆ ಬಿಸಿಲಿನ ಕಿರಣ ಬಿದ್ದ ನಂತರ ಬ್ಯಾಟಿಂಗ್ ಸುಲಭವಾಗಲಿದೆ. 3ನೇ ಹಾಗೂ 4ನೇ ದಿನದಾಟದಲ್ಲಿ ಪಿಚ್ ತಿರುವು ಪಡೆಯಲಿದ್ದು, ಸ್ಪಿನ್ನರ್‌ಗಳಾದ ರವೀಂದ್ರ ಜಡೇಜ ಹಾಗೂ ವಾಶಿಂಗ್ಟನ್ ಸುಂದರ್ ಇದರ ಲಾಭ ಪಡೆಯುವ ನಿರೀಕ್ಷೆ ಇದೆ. ನಂ.1 ಟೆಸ್ಟ್ ವಿಕೆಟ್‌ಕೀಪರ್ ರಿಷಭ್ ಪಂತ್ ಇದೀಗ ಫಿಟ್ ಆಗಿದ್ದು, ಭಾರತವು ಧ್ರುವ ಜುರೆಲ್‌ರನ್ನು ಸ್ಪೆಷಲಿಸ್ಟ್ ಬ್ಯಾಟರ್ ಆಗಿ ಆಡುವ 11ರ ಬಳಗದಲ್ಲಿ ಉಳಿಸಿಕೊಳ್ಳಲು ನಿರ್ಧರಿಸಬಹುದು. ನಿತೀಶ್ ಕುಮಾರ್ ರೆಡ್ಡಿ ಅವರನ್ನು ಭಾರತ ‘ಎ’ ತಂಡದಲ್ಲಿ ಆಡಲು ಕಳುಹಿಸಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇರಲಾರದು. ರಾವಲ್ಪಿಂಡಿಯಲ್ಲಿ ಪಾಕಿಸ್ತಾನದ ವಿರುದ್ಧ ಗೆದ್ದಿರುವ ಟೆಸ್ಟ್ ತಂಡವನ್ನೇ ದಕ್ಷಿಣ ಆಫ್ರಿಕಾ ಕಣಕ್ಕಿಳಿಸಬಹುದು. ಮಾರ್ಕೊ ಜಾನ್ಸನ್ ಅವರು ವಿಯಾನ್ ಮುಲ್ದರ್ ಬದಲಿಗೆ ಆಡುವ 11ರ ಬಳಗ ಸೇರಬಹುದು. ನಾಯಕ ಟೆಂಬಾ ಬವುಮಾ ವಾಪಸಾಗಿದ್ದು, ಡೆವಾಲ್ಡ್ ಬ್ರೆವಿಸ್ ನಾಯಕನಿಗಾಗಿ ತನ್ನ ಸ್ಥಾನ ತೆರವುಗೊಳಿಸಬಹುದು. *ಭಾರತ: ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್(ನಾಯಕ), ರಿಷಭ್ ಪಂತ್(ವಿಕೆಟ್‌ಕೀಪರ್),ಧ್ರುವ ಜುರೆಲ್, ರವೀಂದ್ರ ಜಡೇಜ, ವಾಶಿಂಗ್ಟನ್ ಸುಂದರ್, ಮುಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಜಸ್‌ಪ್ರಿತ್ ಬುಮ್ರಾ. *ದಕ್ಷಿಣ ಆಫ್ರಿಕಾ: ಏಡೆನ್ ಮರ್ಕ್ರಮ್, ರಯಾನ್ ರಿಕೆಲ್ಟನ್, ಟ್ರಿಸ್ಟನ್ ಸ್ಟಬ್ಸ್, ಟೋನಿ ಡಿ ರೆರ್ಝಿ, ಟೆಂಬಾ ಬವುಮಾ(ನಾಯಕ), ಕೈಲ್ ವೆರ್ರೆನ್ನೆ(ವಿಕೆಟ್‌ಕೀಪರ್), ಮಾರ್ಕೊ ಜಾನ್ಸನ್, ಸೈಮನ್ ಹಾರ್ಮರ್, ಕೇಶವ ಮಹಾರಾಜ, ಎಸ್.ಮುತ್ತುಸ್ವಾಮಿ, ಕಾಗಿಸೊ ರಬಾಡ. ಅಂಕಿ-ಅಂಶ *ಗಿಲ್ ನಾಯಕನಾಗಿ 7 ಟೆಸ್ಟ್ ಪಂದ್ಯಗಳ ಪೈಕಿ ಒಮ್ಮೆ ಮಾತ್ರ ಟಾಸ್ ಗೆದ್ದಿದ್ದಾರೆ. ಭಾರತದಲ್ಲಿ ಈ ಹಿಂದೆ ಆಡಿರುವ 7 ಟೆಸ್ಟ್ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ತಂಡವು ಒಮ್ಮೆಯೂ ಟಾಸ್ ಗೆದ್ದಿಲ್ಲ. 4: ಟೆಸ್ಟ್ ಕ್ರಿಕೆಟ್‌ನಲ್ಲಿ 100 ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸಿದ ದಕ್ಷಿಣ ಆಫ್ರಿಕಾದ 5ನೇ ವಿಕೆಟ್‌ಕೀಪರ್ ಎನಿಸಿಕೊಳ್ಳಲು ಕೈಲ್ ವೆರ್ರೆನ್ನೆಗೆ ಐದು ಆಟಗಾರರನ್ನು ಔಟ್ ಮಾಡಬೇಕಾಗಿದೆ. *ಟೆಸ್ಟ್ ಕ್ರಿಕೆಟ್‌ನಲ್ಲಿ 300 ವಿಕೆಟ್ ಹಾಗೂ 4,000 ರನ್‌ನೊಂದಿಗೆ ಡಬಲ್ ಸಾಧನೆಗೈದ ವಿಶ್ವದ ನಾಲ್ಕನೇ ಆಟಗಾರನೆಂಬ ಕೀರ್ತಿಗೆ ಭಾಜನರಾಗಲು ರವೀಂದ್ರ ಜಡೇಜಗೆ ಕೇವಲ10 ರನ್ ಅಗತ್ಯವಿದೆ.

ವಾರ್ತಾ ಭಾರತಿ 13 Nov 2025 8:58 pm

ಜೆಡಿಎಸ್ ನಾಯಕರ ನಡೆಯಿಂದ ನೋವಾಗಿದೆ : ಜಿ.ಟಿ.ದೇವೇಗೌಡ

‘ಪಕ್ಷದ ಕಚೇರಿಗೆ ಹೋಗುವ ಅಗತ್ಯವಿಲ್ಲ, ಕ್ಷೇತ್ರದಲ್ಲೇ ಕೆಲಸ ಮಾಡುತ್ತೇನೆ’

ವಾರ್ತಾ ಭಾರತಿ 13 Nov 2025 8:54 pm

ಮಾಹಿತಿ ತಂತ್ರಜ್ಞಾನ ನೀತಿಗೆ ಸಂಪುಟ ಸಭೆ ಅನುಮೋದನೆ : ಎಚ್.ಕೆ.ಪಾಟೀಲ್

ಬೆಂಗಳೂರು : ‘ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ, 2025-2030’ ಅನ್ನು ಆರ್ಥಿಕ ಇಲಾಖೆಯು ಅನುಮತಿಸಿರುವಂತೆ 5 ವರ್ಷಗಳ ಅವಧಿಯಲ್ಲಿ 445.50 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೊಸ ನೀತಿಯು ಕೃತಕ ಬುದ್ದಿಮತ್ತೆ (ಎಐ), ಬ್ಲಾಕ್‍ಚೈನ್, ಕ್ವಾಂಟಮ್, ಕಂಪ್ಯೂಟಿಂಗ್, ಹಸಿರು ಐಟಿ ಮತ್ತು ಮುಂದುವರಿದ ಸೈಬರ್ ಭದ್ರತೆಯಂತಹ ಉದಯೋನ್ಮುಖ ತಂತ್ರಜ್ಞಾನಗಳನ್ನು ನಿರ್ಣಾಯಕವಾಗಿ ಉತ್ತೇಜಿಸುತ್ತದೆ ಎಂದು ಹೇಳಿದರು. ರಾಜ್ಯದಲ್ಲಿ ಈಗಾಗಲೇ ಪ್ರಬಲವಾದ ಐಟಿ ವಲಯದೊಂದಿಗೆ ಕೃತಕ ಬುದ್ದಿಮತ್ತೆ (ಎಐ)ಯನ್ನು ನಿರ್ವಿಘ್ನವಾಗಿ ಒಗ್ಗೂಡಿಸುವ ಗುರಿಯನ್ನು ಈ ನೀತಿ ಹೊಂದಿದ್ದು, ಕರ್ನಾಟಕವನ್ನು ಎಐ-ಸ್ಥಳೀಯ ತಾಣವನ್ನಾಗಿ ರೂಪಿಸುವ ಮೂಲಕ ಹೊಸ ಆರ್ಥಿಕ ಅವಕಾಶಗಳನ್ನು ಅನಾವರಣಗೊಳಿಸಿ, ನಾವೀನ್ಯತೆಗೆ ಉತ್ತೇಜನ ನೀಡುವುದರ ಜೊತೆಗೆ ಸಾರ್ವಜನಿಕ ಸೇವಾ ವಿತರಣೆಯನ್ನು ಸುಧಾರಿಸಲು ನೆರವಾಗಲಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. 2030ರ ವೇಳೆಗೆ ರಾಜ್ಯದ ಆರ್ಥಿಕತೆಗೆ ಐಟಿ ವಲಯದ ಕೊಡುಗೆಯನ್ನು ಹೆಚ್ಚಿಸುವ ಮತ್ತು ಸಾಫ್ಟ್‌ ವೇರ್ ರಫ್ತುಗಳನ್ನು ಗಣನೀಯವಾಗಿ ಹೆಚ್ಚಿಸುವ ದಿಟ್ಟ ಗುರಿಗಳೊಂದಿಗೆ, ಈ ನೀತಿಯು ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ತುಮಕೂರು, ಕಲಬುರಗಿ ಮತ್ತು ಶಿವಮೊಗ್ಗದಂತಹ ಉದಯೋನ್ಮುಖ ನಗರಗಳಲ್ಲಿ ಕ್ಲಸ್ಟರ್‍ಗಳನ್ನು ಪೋಷಿಸುವ ಮೂಲಕ ಸಮತೋಲಿತ ಬೆಳವಣಿಗೆಗೆ ಒತ್ತು ನೀಡುತ್ತದೆ ಎಂದು ಅವರು ವಿವರಿಸಿದರು. ಬಾಹ್ಯಾಕಾಶ ತಂತ್ರಜ್ಞಾನ ನೀತಿ : ಆರ್ಥಿಕ ಸಾಧ್ಯತೆಗಳು, ವೈಜ್ಞಾನಿಕ ಮನೋಭಾವವನ್ನು ಹೆಚ್ಚಿಸುವ ಕ್ಷೇತ್ರದ ಸಾಮರ್ಥ್ಯ ಮತ್ತು ವಲಯ ಎದುರಿಸುತ್ತಿರುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ‘ಕೌಶಲ್ಯ ಅಭಿವೃದ್ಧಿ ಉಪಕ್ರಮಗಳು, ಹೂಡಿಕೆ ಪ್ರೋತ್ಸಾಹಕಗಳು, ಮೂಲಸೌಕರ್ಯದ ಸೃಷ್ಟಿ, ನಾವೀನ್ಯತೆ ಮತ್ತು ಸೌಲಭ್ಯ, ಅಳವಡಿಸಿಕೊಳ್ಳುವಿಕೆ ಮತ್ತು ಅರಿವು’ ಈ ಕಾರ್ಯತಂತ್ರದ ಸ್ತಂಭಗಳನ್ನು ಹೊಂದಿರುವ ಕರ್ನಾಟಕ ಬಾಹ್ಯಾಕಾಶ ನೀತಿ 2025-30ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅವರು ಹೇಳಿದರು. ಸ್ಥಳೀಯ ಆರ್ಥಿಕ ವೇಗವರ್ಧನೆ ಕಾರ್ಯಕ್ರಮ(ಲೀಪ್) ಅಡಿಯಲ್ಲಿ ರಕ್ಷಣಾ ತಂತ್ರಜ್ಞಾನ ಮತ್ತು ಕೈಗಾರಿಕೆ 5.0ಗಾಗಿ ಧಾರ್ತಿ ಪ್ರತಿಷ್ಠಾನ, ಐಐಟಿ ಧಾರವಾಡ ಇವರಿಂದ ಶ್ರೇಷ್ಠತಾ ಕೇಂದ್ರಗಳನ್ನು 18 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಐದು ವರ್ಷಗಳ ಅವಧಿಯಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ. ಪ್ರಸಕ್ತ ಸಾಲಿನಲ್ಲಿ ಲೀಪ್ ಕಾರ್ಯಕ್ರಮಕ್ಕಾಗಿ 200 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಈ ಕಾರ್ಯಕ್ರಮಗಳಿಂದ ರಾಜ್ಯಾದ್ಯಂತ ಐದು ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ. ಮೈಸೂರು, ಮಂಗಳೂರು, ಉಡುಪಿ-ಮಣಿಪಾಲ್, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿಗಳಲ್ಲಿ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದರು. ಇನ್ಕ್ಯುಬೇಟರ್‍ಗಳು, ಆಕ್ಸಿಲರೇಟರ್‍ಗಳೂ, ಉತ್ಕೃಷ್ಟತಾ ಕೇಂದ್ರಗಳು ಮತ್ತು ಜಾಗತಿಕ ತಂತ್ರಜ್ಞಾನ ಕೇಂದ್ರಗಳನ್ನು (ಜಿಟಿಸಿ) ಸ್ಥಾಪಿಸಲು ಲೈಫ್ ಸೈಕಲ್ ವಿಧಾನ ಅನುಸರಿಸಲಾಗುವುದು. ಡೀಪ್ ಅಭಿವೃದ್ಧಿಗಾಗಿ 100 ಕೋಟಿ ರೂ. ಆವರ್ಥ ನಿಧಿ ಹಾಗೂ 300 ಕೋಟಿ ರೂ. ಗಳ ಫಂಡ್ ಆಫ್ ಫಂಡ್(ಎಫ್‍ಓಎಫ್) ಸ್ಥಾಪಿಸಲಾಗುವುದು. ಬೆಂಗಳೂರಿನಾಚೆಗಿನ ಪ್ರದೇಶದಲ್ಲಿ 6 ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಅವರು ಹೇಳಿದರು. ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಐಐಐಟಿ ಧಾರವಾಡದಲ್ಲಿರುವ ಕ್ವಾಂಟಮ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಕಂಪ್ಯೂಟಿಂಗ್‍ನಲ್ಲಿ ಉತ್ಕೃಷ್ಟತಾ ಕೇಂದ್ರವನ್ನು ಐದು ವರ್ಷಗಳ ಅವಧಿಯಲ್ಲಿ ಲೀಪ್ ಅಡಿಯಲ್ಲಿ 18 ಕೋಟಿ ರೂ.ಗಳ ಅನುದಾನದಲ್ಲಿ ಸ್ಥಾಪನೆ ಮತ್ತು ಐಐಐಟಿ ಧಾರವಾಡದ ರಿಸರ್ಚ್ ಪಾರ್ಕ್ ಫೌಂಡೇಶನ್ ಇವರನ್ನು ಉತ್ಕøಷ್ಟತಾ ಕೇಂದ್ರ ಸ್ಥಾಪನೆ ಹಾಗೂ ಅನುಷ್ಠಾನಕ್ಕಾಗಿ ಪಾಲುದಾರರನ್ನಾಗಿ ನಿಗದಿಪಡಿಸಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ವಾರ್ತಾ ಭಾರತಿ 13 Nov 2025 8:46 pm

‘ಮೇಕೆದಾಟು ಕೆಲಸ ಮುಂದುವರಿಸುತ್ತೇವೆ’; ಸುಪ್ರೀಂ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡು, ಪುದುಚೆರಿಗೂ ಸಂದ ಜಯ : ಡಿ.ಕೆ.ಶಿವಕುಮಾರ್

ಬೆಂಗಳೂರು : ಮೇಕೆದಾಟು ಯೋಜನೆ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಉಪಯೋಗವಾಗಲಿದೆ. ಕಷ್ಟ ಕಾಲದಲ್ಲಿ ಅವರ ಪಾಲಿನ ನೀರನ್ನು ಬಿಡಲು ಈ ಯೋಜನೆ ನೆರವಾಗಲಿದೆ. ಹೀಗಾಗಿ ಸುಪ್ರೀಂ ಕೋರ್ಟಿನ ತೀರ್ಪು ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡು, ಪುದುಚೆರಿಗೂ ಸಂದ ಜಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣ್ಣಿಸಿದರು. ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ನೀರಿನ ಬಳಕೆಗಾಗಿ ‘ನಮ್ಮ ನೀರು, ನಮ್ಮ ಹಕ್ಕು' ಎಂದು ಪಾದಯಾತ್ರೆ ಮಾಡಿದೆವು. ನಂತರ ರಾಜ್ಯದ ಜನ ನಮ್ಮ ಕೈಗೆ ಅಧಿಕಾರ ನೀಡಿದರು. ನಾವು ಅಧಿಕಾರಕ್ಕೆ ಬಂದ ನಂತರ ಕಾನೂನು ಹೋರಾಟ ಮಾಡಿದೆವು ಎಂದು ತಿಳಿಸಿದರು. ಈ ವೇಳೆ ವಿರೋಧ ಪಕ್ಷಗಳು ಅನೇಕ ವ್ಯಾಖ್ಯಾನ ಮಾಡಿದವು. ತಮಿಳುನಾಡಿನವರು ಈ ಯೋಜನೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣ ಬೇಗ ತೀರ್ಮಾನವಾಗಬೇಕು ಎಂದು ನಾವು ಕಾನೂನು ಒತ್ತಡ ಹಾಕಿದೆವು. ಅದರಂತೆ ಸುಪ್ರೀಂ ಕೋರ್ಟಿನ ವಿಶೇಷ ಪೀಠ ವಿಚಾರಣೆ ನಡೆಸಿ, ಇಂದು ತೀರ್ಪು ಪ್ರಕಟಿಸಿದೆ ಎಂದು ಶಿವಕುಮಾರ್ ತಿಳಿಸಿದರು. ಕಾನೂನು ಚೌಕಟ್ಟಿನಲ್ಲಿ ಅಗತ್ಯ ಇಲಾಖೆಗಳ ಅನುಮತಿ: ಈ ವಿಚಾರ ನ್ಯಾಯಾಲಯದಲ್ಲಿ ತೀರ್ಮಾನ ಮಾಡುವ ವಿಚಾರವಲ್ಲ. ಕರ್ನಾಟಕವು ತಮಿಳುನಾಡು ಪಾಲಿನ 177 ಟಿಎಂಸಿ ನೀರು ಬಿಡಲೇಬೇಕು ಎಂದು ನಿರ್ದೇಶನ ನೀಡಿ, ತಮಿಳುನಾಡಿನ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಸುಪ್ರೀಂ ಕೋರ್ಟಿನ ಮಾರ್ಗದರ್ಶನಕ್ಕೆ ನಾವು ಬದ್ಧರಾಗಿದ್ದೇವೆ. ಕರ್ನಾಟಕದ ನೆಲದಲ್ಲಿ ಅಣೆಕಟ್ಟು ನಿರ್ಮಿಸುವ ನಮ್ಮ ಯೋಜನೆಯನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು. ಈ ಯೋಜನೆ ಸಂಬಂಧ ಎಲ್ಲ ತೀರ್ಮಾನಗಳನ್ನು ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಹೀಗಾಗಿ ಈ ವಿಚಾರವಾಗಿ ಮತ್ತೆ ನ್ಯಾಯಾಲಯದ ಮುಂದೆ ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ. ಇನ್ನು ಕಾನೂನು ಚೌಕಟ್ಟಿನಲ್ಲಿ ಈ ಯೋಜನೆಗೆ ಅಗತ್ಯ ಇಲಾಖೆಗಳಿಂದ ಅನುಮತಿ ಪಡೆಯಲಾಗುವುದು ಎಂದು ಶಿವಕುಮಾರ್ ತಿಳಿಸಿದರು. ನಾವು ಈಗಾಗಲೇ ಮೇಕೆದಾಟು ಕಚೇರಿಯನ್ನು ಹಾರೋಬೆಲೆಯಲ್ಲಿ ಪ್ರಾರಂಭಿಸಿದ್ದೇವೆ. ಈ ಯೋಜನೆಗೆ ಅಗತ್ಯವಿರುವ ಅರಣ್ಯ ಭೂಮಿಗೆ ಪರ್ಯಾಯವಾಗಿ ಕಂದಾಯ ಭೂಮಿಯನ್ನು ನೀಡಲು ಸ್ಥಳ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು. ಈ ವರ್ಷ ತಮಿಳುನಾಡಿಗೆ 299 ಟಿಎಂಸಿ ನೀರು ಹರಿಸಲಾಗಿದೆ: ನಾವು ತಮಿಳುನಾಡಿಗೆ ಪ್ರತಿ ವರ್ಷ 177 ಟಿಎಂಸಿ ನೀರನ್ನು ಹರಿಸಬೇಕು. ಈ ವರ್ಷ ನ.13ರ ವೇಳೆಗೆ 148 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ ಈವರೆಗೆ ನಾವು 299 ಟಿಎಂಸಿ ನೀರು ಹರಿಸಿದ್ದೇವೆ. ಹೆಚ್ಚುವರಿ ನೀರು ಸಮುದ್ರ ಪಾಲಾಗಿದೆ. ತಮಿಳುನಾಡಿಗೂ ಬಳಸಿಕೊಳ್ಳಲು ಆಗಿಲ್ಲ. ನಾವು ಈ ಎಲ್ಲ ಮಾಹಿತಿಗಳನ್ನು ನ್ಯಾಯಾಲಯದ ಮುಂದೆ ಇಟ್ಟಿದ್ದೆವು. ಇದೇ ಕಾರಣಕ್ಕೆ ಕಳೆದ ವಾರ ನಾನು ದಿಲ್ಲಿಗೆ ಹೋಗಿ, ನಮ್ಮ ಕಾನೂನು ತಂಡದ ಜೊತೆ ಚರ್ಚೆ ಮಾಡಿ, ನಮ್ಮ ನಿಲುವು ಸ್ಪಷ್ಟಪಡಿಸಿದ್ದೆ ಎಂದು ಅವರು ಹೇಳಿದರು. ಸಂಸದರ ನಿಯೋಗ: ಸಂಸತ್ ಅಧಿವೇಶನ ಆರಂಭವಾದ ಬಳಿಕ ಕೇಂದ್ರ ಸರಕಾರದ ಮೇಲೆ ಒತ್ತಡ ತರಲು ಜಲ ಶಕ್ತಿ ಸಚಿವ ಹಾಗೂ ಪ್ರಧಾನಿ ಭೇಟಿಗೆ ರಾಜ್ಯದ ಸಂಸದರನ್ನು ಒಳಗೊಂಡ ನಿಯೋಗ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತೇನೆ. ನ್ಯಾಯಾಲಯದ ಈ ತೀರ್ಮಾನದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಎಲ್ಲರೂ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹೇಳಿದರು. ನ್ಯಾಯಾಲಯಗಳ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆಯಲಿದೆ. ಹೀಗಾಗಿ ನಾವು ಈ ಯೋಜನೆ ಮುಂದುವರಿಸಿಕೊಂಡು ಹೋಗುತ್ತೇವೆ. ಈ ಯೋಜನೆ ನಮ್ಮ ನೆಲದಲ್ಲಿ, ನಮ್ಮ ಹಣದಲ್ಲಿ ಮಾಡಲಾಗುತ್ತಿದೆ. ಯಾವಾಗಲೇ ನೀರಿನ ಕೊರತೆ ಉಂಟಾದರೂ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲಿತ ಅಣೆಕಟ್ಟು ನೆರವಾಗಲಿದೆ. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಂದ ಬರುವ ಜನರಿಗೂ ನೀರು ಒದಗಿಸಲಾಗುವುದು. ಈಗಲಾದರೂ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿಗೆ ಮನವಿ ಮಾಡುತ್ತೇನೆ. ನಾವೆಲ್ಲರೂ ಮಾನವೀಯತೆ ದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡೋಣ ಎಂದು ಅವರು ಕರೆ ನೀಡಿದರು. ಅರಣ್ಯ ಇಲಾಖೆ ಅನುಮತಿ ಅಗತ್ಯವಿದ್ದು, ಈ ಯೋಜನೆಯಲ್ಲಿ ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ, ಎಷ್ಟು ಗಿಡಗಳು ನಾಶವಾಗಲಿದೆ ಎಂದು ಲೆಕ್ಕ ಹಾಕಿಸಿದ್ದೇನೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಿ, ಹೆಚ್ಚಿನ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಆಮೂಲಕ ಬೆಂಗಳೂರಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ಶುಕ್ರವಾರ ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ:   ರಾಜ್ಯದ ನೀರಾವರಿ ಯೋಜನೆಗಳು, ನ್ಯಾಯಾಲಯಗಳ ತೀರ್ಪುಗಳು, ನಮ್ಮ ರಾಜ್ಯದ ಯೋಜನೆಗಳ ಸಮಸ್ಯೆಗಳ ಕುರಿತು ಅಧ್ಯಯನ ಮಾಡಿ, ನಾನು ನೀರಿನ ಹೆಜ್ಜೆ ಎಂಬ ಪುಸ್ತಕ ರಚಿಸಿದ್ದು, ನ.14ರಂದು ಸಂಜೆ ಈ ಪುಸ್ತಕ ಬಿಡುಗಡೆಯಾಗಲಿದೆ. ಈ ಪುಸ್ತಕ ಬಿಡುಗಡೆಗೆ ಮುನ್ನುಡಿಯಾಗಿ ಈ ಆದೇಶ ಬಂದಿದೆ. ನ.15ರಂದು ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದ್ದು, ಅದರಲ್ಲಿ ಭಾಗವಹಿಸಲು ದಿಲ್ಲಿಗೆ ಪ್ರಯಾಣ ಮಾಡುತ್ತಿದ್ದೇನೆ. ನಂತರ ಡಿ.1ರ ನಂತರ ಸಂಸತ್ ಅಧಿವೇಶನ ನಡೆಯಲಿದ್ದು, ನಮ್ಮ ಅಧಿವೇಶನ ಡಿ.8ರಿಂದ ಆರಂಭಿಸಲಾಗುವುದು. ಈ ಮಧ್ಯದಲ್ಲಿ ಸಂಸತ್ ಸದಸ್ಯರ ಬೆಂಬಲದೊಂದಿಗೆ ನಮ್ಮ ಮುಂದಿನ ಹೆಜ್ಜೆ ಇಡುತ್ತೇವೆ. -ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ

ವಾರ್ತಾ ಭಾರತಿ 13 Nov 2025 8:40 pm

ದಿಲ್ಲಿ ಸ್ಫೋಟದ ಮರುದಿನ ಕೋಲ್ಕತಾದ ಐಎಸ್‌ಐ ಹಾಸ್ಟೆಲ್‌ನಲ್ಲಿ ದ್ವೇಷದ ಬರಹಗಳು ಪ್ರತ್ಯಕ್ಷ : ವರದಿ

ಕೋಲ್ಕತಾ,ನ.13: ದಿಲ್ಲಿಯ ಕೆಂಪುಕೋಟೆ ಬಳಿ 13 ಜನರ ಪ್ರಾಣಹಾನಿಗೆ ಕಾರಣವಾದ ಕಾರು ಸ್ಫೋಟದ ಮರುದಿನವೇ ಕೋಲ್ಕತಾದ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್ (ಐಎಸ್‌ಐ) ಕ್ಯಾಂಪಸ್‌ನಲ್ಲಿ ‘ನಾಯಿಗಳು ಮತ್ತು ಮುಸ್ಲಿಮರು ಆವರಣವನ್ನು ಪ್ರವೇಶಿಸಬಾರದು’ ಎಂಬ ಮುಸ್ಲಿಮ್ ವಿರೋಧಿ ಗೀಚು ಬರಹಗಳು ಕಾಣಿಸಿಕೊಂಡಿದ್ದವು. ಮಂಗಳವಾರ,ನ.11ರಂದು ಹಾಸ್ಟೆಲ್‌ನಲ್ಲಿಯ ವಿದ್ಯಾರ್ಥಿಗಳಿಗೆ ಸಿ.ವಿ.ರಾಮನ್ ಸಭಾಂಗಣದ ಮುಖ್ಯ ದ್ವಾರದ ಎರಡೂ ಬದಿಗಳಲ್ಲಿ ಗೀಚು ಬರಹಗಳು ಕಂಡು ಬಂದಿದ್ದವು. ಹಾಸ್ಟೆಲ್‌ನ ಪ್ರವೇಶ ದ್ವಾರದ ಒಂದು ಬದಿಯಲ್ಲಿ ಕಪ್ಪು ಬಣ್ಣದಲ್ಲಿ ‘ನಾಯಿಗಳು ಆವರಣವನ್ನು ಪ್ರವೇಶಿಸಬಾರದು’ ಎಂದು ಬರೆಯಲಾಗಿದ್ದು,ಇದು ಕೆಲವು ವರ್ಷಗಳಿಂದಲೂ ಇದೆ. ಯಾರೋ ಕಿಡಿಗೇಡಿಗಳು ಇದರ ಮೇಲ್ಗಡೆ ಬಿಳಿಯ ಸೀಮೆಸುಣ್ಣದಿಂದ ‘ಮುಸ್ಲಿಮರು ಮತ್ತು’ ಎಂದು ಬರೆದಿದ್ದು, ಈಗ ಅದು ‘ಮುಸ್ಲಿಮರು ಮತ್ತು ನಾಯಿಗಳು ಆವರಣವನ್ನು ಪ್ರವೇಶಿಸಬಾರದು’ ಎಂದಾಗಿದೆ. ಇನ್ನೊಂದು ಬದಿಯಲ್ಲಿ ಈಗ ‘ಮುಸ್ಲಿಮರಿಗೆ ಅವಕಾಶವಿಲ್ಲ’ ಎಂದು ಬರೆಯಲಾಗಿದೆ. ಹಾಸ್ಟೆಲ್‌ನ ಎರಡನೇ ಮಹಡಿಯ ಮೂಲೆಯಲ್ಲಿರುವ ಕಸದ ಬುಟ್ಟಿಯ ಮೇಲೆ ‘ಇದು ಮುಸ್ಲಿಮರಿಗೆ ಏಕೈಕ ಸ್ಥಳ’ ಎಂದು ಬರೆಯಲಾಗಿದ್ದರೆ, ಹಾಸ್ಟೆಲ್‌ನ ಮೆಟ್ಟಿಲುಗಳ ರೇಲಿಂಗ್‌ನ್ನು ‘ನಾಯಿಗಳು ಮತ್ತು ಮುಸ್ಲಿಮರು ಬೇಡ’ ಎಂದು ಬರೆದು ವಿರೂಪಗೊಳಿಸಲಾಗಿದೆ. ನ.10ರಂದು ಸಂಜೆ 6:50ರ ಸುಮಾರಿಗೆ ದಿಲ್ಲಿಯ ಕೆಂಪುಕೋಟೆಯ ಬಳಿ ಕಾರೊಂದರಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಎಂಟು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದರು ಮತ್ತು ಹಲವರು ಗಾಯಗೊಂಡಿದ್ದರು. ಫರೀದಾಬಾದ್‌ನ ಅಲ್-ಫಲಾಹ್ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ, ದಕ್ಷಿಣ ಕಾಶ್ಮೀರದ ಪುಲ್ವಾಮಾ ನಿವಾಸಿ ಡಾ.ಉಮರ್ ಉನ್-ನಬಿ ಕಾರನ್ನು ಚಲಾಯಿಸುತ್ತಿದ್ದನ್ನು ಪ್ರಾಥಮಿಕ ವರದಿಗಳು ಸೂಚಿಸಿವೆ. ಇಂತಹ ಘಟನೆಗಳಲ್ಲಿ ಸಾಮಾನ್ಯವಾಗಿ ಕಂಡು ಬರುವಂತೆ ಸೋಮವಾರ ತಡರಾತ್ರಿಯವರೆಗೂ ವಿವರಗಳು ಅಸ್ಪಷ್ಟವಾಗಿದ್ದು, ಪರಸ್ಪರ ವಿರೋಧಾಭಾಸದ ವರದಿಗಳಿಗೆ ಕಾರಣವಾಗಿತ್ತು. ಐಎಸ್‌ಐ ಹಾಸ್ಟೆಲ್ ನಿವಾಸಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ 6:30 ಮತ್ತು 7:30ರ ನಡುವೆ ಮುಖ್ಯ ದ್ವಾರದ ಮೇಲೆ ಗೀಚು ಬರಹವನ್ನು ಬರೆಯಲಾಗಿದೆ. ಗೀಚುಬರಹದ ಚಿತ್ರಗಳನ್ನು ವಿವಿಧ ವಿಭಾಗಗಳು ಮತ್ತು ಬ್ಯಾಚ್‌ಗಳ ವಿದ್ಯಾರ್ಥಿಗಳು ಸದಸ್ಯರಾಗಿರುವ ಸಾಮಾನ್ಯ ವಾಟ್ಸ್‌ಆ್ಯಪ್ ಗುಂಪಿನಲ್ಲಿ ಪೋಸ್ಟ್ ಮಾಡಲಾಗಿತ್ತು.‘ಇದನ್ನು ಬರೆದವರು ಯಾರೇ ಆಗಿರಲಿ, ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸಬೇಕು’ ಎಂದು ಪೋಸ್ಟ್‌ನಲ್ಲಿ ಕೋರಲಾಗಿತ್ತು. ಆದರೆ ಯಾರೂ ಪ್ರತಿಕ್ರಿಯಿಸಲಿಲ್ಲ ಎಂದು ವಿದ್ಯಾರ್ಥಿಯೋರ್ವರು ತಿಳಿಸಿದರು. ಈ ದ್ವೇಷ ಬರಹಗಳ ಬಗ್ಗೆ ವಿದ್ಯಾರ್ಥಿ ಸಂಘವು ಆಡಳಿತಕ್ಕೆ ದೂರು ಸಲ್ಲಿಸಿದ್ದು, ಐಎಸ್‌ಐ ಕೋಲ್ಕತಾದ ನಿರ್ದೇಶಕ ಸಂಘಮಿತ್ರ ಬಂಡೋಪಾಧ್ಯಾಯ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗೀಚು ಬರಹವನ್ನು ಅಳಿಸಬೇಕೆಂದು ನಿರ್ದೇಶಕರು ಬಯಸಿದ್ದರಾದರೂ ವಿದ್ಯಾರ್ಥಿಗಳು ಅದಕ್ಕೆ ಅವಕಾಶ ನೀಡಿಲ್ಲ. ಈ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚುವಂತೆ ಅವರು ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 13 Nov 2025 8:32 pm

ಬೀದರ್ | ಡಿಸಿ ಜೊತೆ ರೈತರ ಸಭೆ ವಿಫಲ, ಪ್ರತಿ ಟನ್ ಕಬ್ಬಿಗೆ 3,100 ರೂ. ನಿಗದಿಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಬೀದರ್ : ಕಬ್ಬಿನ ಬೆಲೆ ನಿಗದಿಗೊಳಿಸಲು ರೈತರು ಜಿಲ್ಲಾಧಿಕಾರಿಗಳ ಜೊತೆಗೆ ಇಂದು ಮೂರನೇ ಸಭೆ ನಡೆದಿದೆ. ಆದರೆ, ಜಿಲ್ಲಾಧಿಕಾರಿಗಳು ಹೇಳಿದ ಕಬ್ಬಿನ ಬೆಲೆಯನ್ನು ಒಪ್ಪದ ರೈತರು ನಗರದ ಅಂಬೇಡ್ಕರ್ ವೃತ್ತದ ಮುಂದೆ ಪ್ರತಿಭಟನೆ ನಡೆಸಿದರು. ಕಬ್ಬಿನ ಬೆಲೆ ನಿಗದಿಗೊಳಿಸಲು ಇಂದು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಪ್ರತಿ ಟನ್ ಕಬ್ಬಿಗೆ 2,900 ರೂ. ಎಂದು ಹೇಳಿದ್ದಾರೆ. ಆದರೆ ನಮ್ಮ ಬೇಡಿಕೆ ಪ್ರತಿ ಟನ್ ಕಬ್ಬಿಗೆ 3,100 ರೂ. ಇದೆ. ಹಾಗಾಗಿ ಜಿಲ್ಲಾಧಿಕಾರಿಗಳು ನಿಗದಿಪಡಿಸಿದ ಬೆಲೆಯನ್ನು ನಾವು ಒಪ್ಪುವುದಿಲ್ಲ. ಆದ್ದರಿಂದ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ತಿಳಿಸಿದರು. ಬುಧವಾರ ಕಬ್ಬಿನ ಬೆಲೆ ನಿಗದಿಗೊಳಿಸಬೇಕು ಎಂದು ಒತ್ತಾಯಿಸಿ ಹುಮನಾಬಾದ್‌ ನಗರದಲ್ಲಿ ರೈತರಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳು ಕಬ್ಬಿನ ಬೆಲೆ ನಿಗದಿಗೊಳಿಸಲು ಇಂದು ರೈತರೊಂದಿಗೆ ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ರೈತರ ಬೇಡಿಕೆಯಂತೆ ಬೆಲೆ ನಿಗದಿಗೊಳಿಸದ ಕಾರಣ ರೈತರು ಪ್ರತಿಭಟನೆ ನಡೆಸಿದರು. ನಮ್ಮ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ 3,100 ರೂ. ಬೆಲೆ ನಿಗದಿಗೊಳಿಸಬೇಕು. ಇಲ್ಲದಿದ್ದರೆ ಕೆಲ ದಿನಗಳಲ್ಲಿ ನಗರದ ಪ್ರಮುಖ ರಸ್ತೆಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಲ್ಲಿಕಾರ್ಜುನ್ ಸ್ವಾಮಿ, ಸಿದ್ರಾಮಪ್ಪಾ ಆಣದೂರೆ, ಶ್ರೀಮಂತ್ ಬಿರಾದಾರ್, ದಯಾನಂದ್ ಸ್ವಾಮಿ, ಶಂಕರೆಪ್ಪಾ ಮರ್ಕಲ್, ಕೊಂಡಿಬಾ ಪಾಂಡ್ರೆ, ಶಿವರಾಜ್ ಪಾಟೀಲ್, ಬಾಬು ಹೊನ್ನಾ, ನಜೀರ್ ಅಹ್ಮದ್ ಚೊಂಡಿ, ಪ್ರಕಾಶ್ ಬಾವುಗೆ, ಶಾಂತಮ್ಮ ಮೂಲಗೆ, ಶಿವಲೀಲಾ ಹೋಳಸಮುದ್ರ, ವಿಜಯಕುಮಾರ ಬಾವುಗೆ, ವೀರಾರೆಡ್ಡಿ, ವಿಠಲರಾವ್, ನಾಗಶೆಟ್ಟಿ, ಭೀಮರಾವ್ ಹಾಗೂ ಖಮರ್ ಪಟೇಲ್ ಸೇರಿದಂತೆ ಅನೇಕ ರೈತ ನಾಯಕರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 13 Nov 2025 8:31 pm

ಕರ್ನಾಟಕದ 9 ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್‌ ಅಭಿವೃದ್ಧಿ; ಪಿಯೂಷ್‌ ಗೋಯಲ್‌ -ಎಚ್‌ಡಿ ಕುಮಾಸ್ವಾಮಿ ಮಾತುಕತೆ

ಕರ್ನಾಟಕದ 9 ಜಿಲ್ಲೆಗಳಲ್ಲಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆ ಜಾರಿಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಅವರೊಂದಿಗೆ ಚರ್ಚಿಸಿದರು. ಈ ಯೋಜನೆಯಿಂದ ರಾಜ್ಯದಾದ್ಯಂತ ಉದ್ಯೋಗ ಸೃಷ್ಟಿಯಾಗಲಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ, ಧಾರವಾಡ, ರಾಯಚೂರು, ಬೀದರ್‌ ಜಿಲ್ಲೆಗಳು ಇದರ ವ್ಯಾಪ್ತಿಗೆ ಬರಲಿವೆ. ಕೇಂದ್ರ ಸಚಿವರು ಯೋಜನೆಯ ಅನುಷ್ಠಾನಕ್ಕೆ ಆಸಕ್ತಿ ತೋರಿದ್ದಾರೆ.

ವಿಜಯ ಕರ್ನಾಟಕ 13 Nov 2025 8:30 pm

ಬೀದರ್ | ಪ್ರತಿ ಟನ್ ಕಬ್ಬಿಗೆ 2,900 ರೂ. ದರ ನಿಗದಿಪಡಿಸಿದ ಡಿಸಿ ಶಿಲ್ಪಾ ಶರ್ಮಾ

ಬೀದರ್ : ಕಬ್ಬು ದರ ನಿಗದಿ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ರೈತರೊಂದಿಗೆ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 2,900 ರೂ. ದರ ನಿಗದಿಪಡಿಸುವುದಾಗಿ ಡಿಸಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಸಭೆಯಲ್ಲಿ ಮಾತನಾಡಿದ ಅವರು, ರೈತರಿಗೂ ಹಾಗೂ ಕಾರ್ಖಾನೆಯವರಿಗೂ ಅನ್ಯಾಯವಾಗದಂತೆ 2,900 ರೂ. ದರ ನಿಗದಿಪಡಿಸುವುದಾಗಿ ಹಾಗೂ ಇದು ಕಳೆದ ವರ್ಷಕ್ಕಿಂತ 250 ರೂ. ಹೆಚ್ಚಿನ ದರವಾಗಿದೆ. ಕಳೆದ ವರ್ಷ ಪ್ರತಿ ಟನ್ ಕಬ್ಬಿಗೆ 2,650 ರೂ. ನೀಡಲಾಗುತ್ತಿತ್ತು. ಆದರೆ ಈ ವರ್ಷ 2,750 ರೂ. ರಾಜ್ಯ ಸರ್ಕಾರದಿಂದ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳಿಂದ 50 ರೂ. ಹೆಚ್ಚುವರಿಯಾಗಿ 2,850 ರೂ. ನೀಡುವ ಬಗ್ಗೆ ಚರ್ಚೆಯಾಗಿತ್ತು ಎಂದರು. ಆದರೆ ಜಿಲ್ಲೆಯ ಕಬ್ಬು ಬೆಳೆಗಾರರು ಬುಧವಾರ ಹುಮನಾಬಾದ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದವು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಇಂದು ಸಭೆ ನಡೆಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಎಲ್ಲ ರೈತ ಮುಖಂಡರ ಹಾಗೂ ಕಬ್ಬು ಬೆಳೆಗಾರ ಸಂಘಟನೆಗಳ ಹಾಗೂ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರ ಸಭೆ ಜರುಗಿತು. ಈ ವರ್ಷ ಅತಿವೃಷ್ಠಿಯಿಂದಾಗಿ ಬಹುತೇಕ ಬೆಳೆಗಳು ಕೈಕೊಟ್ಟಿದ್ದು, ಪ್ರತಿ ಟನ್‌ ಕಬ್ಬಿಗೆ 3,100 ರೂ. ದರ ನಿಗದಿಪಡಿಸುವಂತೆ ಸಭೆಯಲ್ಲಿ ರೈತ ಮುಖಂಡರು ಆಗ್ರಹಿಸಿದರು. ರೈತರು ಹಾಗೂ ಕಾರ್ಖಾನೆಗಳು ಇಬ್ಬರೂ ಉಳಿಯಬೇಕು, ಈ ನಿಟ್ಟಿನಲ್ಲಿ 2900 ರೂ. ದರ ನಿಗದಿಪಡಿಸಲಾಗುವುದು. ಕಳೆದ ವರ್ಷಕ್ಕಿಂತ 250 ರೂ. ಹೆಚ್ಚಿನ ದರ ರೈತರಿಗೆ ಲಭಿಸಲಿದೆ. ಅಲ್ಲದೇ 2,900 ರೂ. ಕಾರ್ಖಾನೆಗಳು ತಪ್ಪದೇ ಜಮೆ ಮಾಡುವಂತೆ ತಾವು ನೋಡಿಕೊಳ್ಳುತ್ತೇವೆ ಬೀದರ್‌ನಲ್ಲಿ 9.6 ರಿಕವರಿ ದರ ಇದ್ದು, ಹಾವೇರಿ ಜಿಲ್ಲೆಯಲ್ಲಿಯೂ ಸಹ ಸಮನಾಗಿದ್ದು, ಅಲ್ಲಿಯ ರೈತರು 2,900 ರೂ. ದರಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಶಿಲ್ಪಾ ಶರ್ಮಾ ಅವರು ತಿಳಿಸಿದರು. ಆದರೆ, ಇದನ್ನು ಒಪ್ಪದ ರೈತ ಮುಖಂಡರು 3,100 ರೂ. ದರ ನಿಗದಿಪಡಿಸುವಂತೆ ಕೋರಿದರು. ಜಿಲ್ಲಾಧಿಕಾರಿಗಳು 2,900 ರೂ. ನಿಗದಿಪಡಿಸುವುದಾಗಿ ತಮ್ಮ ನಿರ್ಧಾರವನ್ನು ತಿಳಿಸಿದಾಗ, ರೈತ ಮುಖಂಡರು ತಮ್ಮ ಹೋರಾಟ ಮುಂದುವರೆಸುವುದಾಗಿ ಹೇಳಿದರು. ಸಭೆಯಲ್ಲಿ ಆಹಾರ ನಾಗರೀಕ ಸರಬರಾಜು ಉಪನಿರ್ದೇಶಕ ಪ್ರವೀಣ್ ಬರಗಲ್ ಸೇರಿದಂತೆ ವಿವಿಧ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಎಂಡಿಗಳು, ಮಾಲಕರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 13 Nov 2025 8:28 pm

Raichur | ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಗಾರ

ಮಕ್ಕಳ ರಕ್ಷಣೆ, ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿ: ವೆಂಕಟೇಶ

ವಾರ್ತಾ ಭಾರತಿ 13 Nov 2025 8:24 pm

ಉಪ್ಪಿನಂಗಡಿ | ಬಾಲಕಿಯ ಸಾವಿನ ಬಗ್ಗೆ ಅನುಮಾನ: ಹೆತ್ತವರಿಂದ ಪೊಲೀಸರಿಗೆ ದೂರು

ಮಂಗಳೂರು: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೀಟ ನಾಶಕ ಸೇವಿಸಿ ಆಸ್ಪತ್ರೆ ಸೇರಿದ್ದ ಬಾಲಕಿಯೊಬ್ಬಳು ಆಸ್ಪತ್ರೆ ಸೇರಿದ್ದ ಶಾಲಾ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಆಕೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ. ಮೃತ ಬಾಲಕಿಗೆ ಕಡಬ ನಿವಾಸಿಯೊಬ್ಬನೊಂದಿಗೆ ಫೋನ್ ಸಂಪರ್ಕವಿತ್ತು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಕೆಯ ತಂದೆ ತಿಳಿಸಿದ್ದಾರೆ. ಸ್ಥಳೀಯ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಆಕೆ ನ. 4ರಂದು ತಲೆನೋವು ಎಂದು ಕಾರಣ ನೀಡಿ ಶಾಲೆಗೆ ಹೋಗದೆ ಮನೆಯಲ್ಲಿದ್ದಳು. ಮನೆಯಿಂದ ಹೆತ್ತವರು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಬಾಲಕಿ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಳು. ಕೂಲಿ ಕೆಲಸಕ್ಕೆ ಹೋಗಿದ್ದ ಆಕೆಯ ತಾಯಿ ಮನೆಗೆ ವಾಪಸ್ ಬಂದಾಗ ಮಗಳು ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಗೊತ್ತಾಗಿ ತಕ್ಷಣ ಆಕೆಯನ್ನು ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬಳಿಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಾಲಕಿ ನ.12 ರಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ. ಆಕೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಾರ್ತಾ ಭಾರತಿ 13 Nov 2025 8:19 pm

ರಾಯಚೂರು | ನ.15ರಂದು ಬೃಹತ್ ಆರೋಗ್ಯ ಶಿಬಿರ, ಕಾನೂನು ಸಾಕ್ಷರತಾ ಕಾರ್ಯಕ್ರಮ

ರಾಯಚೂರು : ದೇವದಾಸಿ ಪದ್ಧತಿ ನಿರ್ಮೂಲನೆ ವಿಷಯದ ಕುರಿತಂತೆ, ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ರಾಯಚೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ವಕೀಲರ ಸಂಘ, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ಆರೋಗ್ಯ ಶಿಬಿರ ಮತ್ತು ಕಾನೂನು ಸಾಕ್ಷರತಾ ಕಾರ್ಯಕ್ರಮವು ನ.15ರ ಬೆಳಿಗ್ಗೆ 9.30ಕ್ಕೆ ನಗರದ ಪಂಡಿತ ಶ್ರೀ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಪೋಷಕರು ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ರಾಯಚೂರು ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಎಂ.ಜಿ. ಶುಕುರೆ ಕಮಲ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರು ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಅನು ಸಿವರಾಮನ್ ಅವರು ಉಪಸ್ಥಿತಿ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಯಚೂರಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾರುತಿ ಬಾಗಡೆ, ಕರ್ನಾಟಕ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್, ಜಿಲ್ಲಾಧಿಕಾರಿ ನಿತೀಶ್ ಕೆ., ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹೆಚ್.ಶಶಿಧರ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರಾದ ಎಚ್.ಎ.ಸಾತ್ವಿಕ್, ವಕೀಲರ ಸಂಘದ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್, ಅಪರ ಜಿಲ್ಲಾಧಿಕಾರಿ ಶಿವಾನಂದ, ಕೆಎಸ್‌ಎಲ್‌ಎಸ್‌ಎದ ಉಪ ಕಾರ್ಯದರ್ಶಿ ಶ್ರೀಧರ ಎಂ ಅವರು ಉಪಸ್ಥಿತರಿರುವರು. ಗೋಷ್ಠಿಗಳು : ನ.15ರಂದು ಜಿಲ್ಲಾ ರಂಗಮಂದಿರದಲ್ಲಿ ನಡೆಯುವ ಬೃಹತ್ ಆರೋಗ್ಯ ಶಿಬಿರ ಮತ್ತು ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಬೆಳಗ್ಗೆ 11.45 ರಿಂದ ನಾಲ್ಕು ಗೋಷ್ಠಿಗಳು ನಡೆಯಲಿವೆ. ಬೆಳಿಗ್ಗೆ 11.45 ರಿಂದ ಮಧ್ಯಾಹ್ನ 12.15ರವರೆಗೆ ನಡೆಯಲಿರುವ 1ನೇ ಗೋಷ್ಠಿಯಲ್ಲಿ ‘ಕಾನೂನು ಜ್ಞಾನದ ಮಹತ್ವ’ ವಿಷಯದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ಉಪನ್ಯಾಸ ನೀಡುವರು. ಮಧ್ಯಾಹ್ನ 12.16 ರಿಂದ ಮಧ್ಯಾಹ್ನ 12.45ರವರೆಗೆ ನಡೆಯಲಿರುವ ಎರಡನೇ ಗೋಷ್ಠಿಯಲ್ಲಿ ‘ದೇವದಾಸಿ ಮಹಿಳೆಯರಿಗೆ ಸರ್ಕಾರದ ವಿವಿಧ ಸೌಲಭ್ಯಗಳು’ ವಿಷಯದ ಮೇಲೆ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 12.46 ರಿಂದ ಮಧ್ಯಾಹ್ನ 01.15ರವರೆಗೆ ನಡೆಯಲಿರುವ ಮೂರನೇ ಗೋಷ್ಠಿಯಲ್ಲಿ ‘ದೇವದಾಸಿ ಮಹಿಳೆಯರು ಮತ್ತು ಅವರ ಕುಟುಂಬದವರಿಗೆ ಸರ್ಕಾರದ ವಿವಿಧ ಯೋಜನೆಗಳು ಮತ್ತು ಅನುಕೂಲತೆಗಳು’ ವಿಷಯದ ಮೇಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ನವೀನ್ ಅವರು ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 1.16 ರಿಂದ ಮಧ್ಯಾಹ್ನ 1.45ರವರೆಗೆ ನಡೆಯಲಿರುವ ನಾಲ್ಕನೇ ಗೋಷ್ಠಿಯಲ್ಲಿ ‘ದೇವದಾಸಿ ಮಹಿಳೆಯರು ಮತ್ತು ಅವರ ಹೋರಾಟದ ಹಕ್ಕುಗಳು’ ವಿಷಯದ ಮೇಲೆ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೋಕ್ಷಮ್ಮ ಅವರು ಉಪನ್ಯಾಸ ನೀಡಲಿದ್ದಾರೆ.

ವಾರ್ತಾ ಭಾರತಿ 13 Nov 2025 8:14 pm

ರಾಯಚೂರು | ರಾಜ್ಯ ಸಾರಿಗೆ ವ್ಯವಸ್ಥೆ ದೇಶಕ್ಕೆ ಮಾದರಿ : ಅರುಣಕುಮಾರ ಪಾಟೀಲ್

ರಾಯಚೂರು : ಕರ್ನಾಟಕ ರಾಜ್ಯ ಸಾರಿಗೆ ವ್ಯವಸ್ಥೆ ದೇಶದಲ್ಲೇ ಮಾದರಿಯಾಗಿದೆ. ಅದರಲ್ಲೂ ನಮ್ಮ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಜನಸ್ನೇಹಿ ಸಾರಿಗೆ ವ್ಯವಸ್ಥೆ ಹೊಂದಿದ್ದಕ್ಕಾಗಿ ಹತ್ತು ಹಲವು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರಗಳು ಪಡೆದಿದೆ ಎಂದು ಕೆಕೆಆರ್‌ಟಿಸಿ ನೂತನ ಅಧ್ಯಕ್ಷ ಅರುಣಕುಮಾರ ಎಂ.ವೈ.ಪಾಟೀಲ್ ಅವರು ಹೇಳಿದರು. ನವೆಂಬರ್ 11ರ ಮಂಗಳವಾರ ನಗರದ ಕೇಂದ್ರ ಬಸ್ ನಿಲ್ದಾಣ ಸೇರಿದಂತೆಯೇ ಸಾರಿಗೆ ಇಲಾಖೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ಇನ್ನೂ ಉತ್ತಮ ಜನಸ್ನೇಹಿ ಸಾರಿಗೆ ವ್ಯವಸ್ಥೆ ಹೊಂದುವುದಕ್ಕಾಗಿ ಬೇಕಾದ ಸುಧಾರಣೆಗಳನ್ನು ತರಲು ನಮ್ಮ ಸರ್ಕಾರ ಸಿದ್ಧವಿದೆ. ನಮ್ಮ ಜನಪರ ಆಲೋಚನೆಗಳನ್ನು ಜಾರಿ ತರುವ ನಿಟ್ಟಿನಲ್ಲಿ ಮೊದಲ ಹಂತದ ಭೇಟಿ ಇದಾಗಿದ್ದು, ಹಂತಹಂತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಅವರು ಹೇಳಿದರು. ರಾಯಚೂರು ಕೇಂದ್ರ ಬಸ್ ನಿಲ್ದಾಣ, ಸಿಟಿ ಬಸ್ ನಿಲ್ದಾಣ ಕಾಮಗಾರಿ, ಗ್ರಾಮೀಣ ಬಸ್ ಘಟಕ-1, ರಾಯಚೂರು ಬಸ್ ಘಟಕ-2 ಹಾಗೂ ರಾಯಚೂರು ವಿಭಾಗೀಯ ಕಚೇರಿ ಸ್ಥಳಗಳಿಗೆ ಭೇಟಿ ಮಾಡಿ ಅಲ್ಲಿನ ಸಿಬ್ಬಂದಿಗಳ ಕಾರ್ಯ ವೈಖರಿಗಳನ್ನು ವೀಕ್ಷಿಸಿ ಅವರ ಉತ್ತಮ ರೀತಿಯ ಸ್ವಚ್ಛತೆ ಪರಿಶೀಲಿಸಿ ಹಾಗೂ ಸಿಬ್ಬಂದಿಗಳ ಸಮಸ್ಯೆಗಳನ್ನೂ ಆಲಿಸಿ ಅವರ ಐಕ್ಯತೆಯ ಕಾರ್ಯ ಮೆಚ್ಚುವಂಥದ್ದು ಎಂದು ಅಧ್ಯಕ್ಷರು ಪ್ರಶಂಸಿದರು. ಈ ವೇಳೆ ವಿದ್ಯಾರ್ಥಿಗಳ ಮತ್ತು ಹಿರಿಯ ನಾಗರಿಕರಿಂದ ಬಸ್ಸಿನ ಸಮಸ್ಯೆಗಳನ್ನು ಆಲಿಸಿದರು. ಸುಗಮ ಸಾರಿಗೆ ಸೇವೆಯ ನಡುವೆ ಕೆಲ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲು ಸಂಬಂಧಪಟ್ಟ ಹಾಗೂ ಘಟಕ ವ್ಯವಸ್ಥಾಪಕರು ಸರಿಪಡಿಸಬೇಕು ಎಂದು ಅವರು ಸೂಚನೆ ನೀಡಿದರು. ನಮ್ಮ ಕಡೆಯಿಂದ ಬೇಕಾದ ಸಹಾಯ, ಸೌಲಭ್ಯ, ಸಹಕಾರ ಪಡೆಯಲು ಮುಕ್ತವಾಗಿ ತಿಳಿಸಿದರೆ ಖಂಡಿತವಾಗಿ ಸಹಾಯ ಮಾಡುವುದಲ್ಲದೆ ಸುಗಮ ಸಾರಿಗೆ ಜನರ ಊರಿಗೆ ಎನ್ನುವ ಧೇಯವಾಕ್ಯವನ್ನು ಸಫಲಗೊಳಿಸುತ್ತೇವೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪ ಮುಖ್ಯಯಾಂತ್ರಿಕ ಅಭಿಯಂತರಾದ ರಾಜಗೋಪಾಲ ಪುರಾಣಿಕ, ರಾಯಚೂರು ವಿಭಾಗೀಯ ನಿಯಂತ್ರಣ ಅಧಿಕಾರಿಗಳಾದ ಚಂದ್ರಶೇಖರ ಎಂ.ಎಸ್, ವಿದ್ಯಾಸಾಗರ, ಮುದ್ದುಕೃಷ್ಣ, ವಿಜಯಕುಮಾರ ಮತ್ತು ಘಟಕ ವ್ಯವಸ್ಥಾಪಕರು ಮತ್ತು ಸಂಸ್ಥೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಇದ್ದರು.

ವಾರ್ತಾ ಭಾರತಿ 13 Nov 2025 8:11 pm

ಗ್ರೇಟರ್ ಬೆಂಗಳೂರು ಪ್ರಾಧಿಕಾರ | ಕಸ ಗುಡಿಸಲು 613 ಕೋಟಿ ರೂ.ವೆಚ್ಚದಲ್ಲಿ ಬಾಡಿಗೆ ಯಂತ್ರ : ಸಂಪುಟ ಅನುಮೋದನೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ ಯಾಂತ್ರಿಕ ಕಸಗುಡಿಸುವಿಕೆ ಯಂತ್ರಗಳನ್ನು ಬಾಡಿಗೆ ಆಧಾರದಲ್ಲಿ 84 ತಿಂಗಳ (7 ವರ್ಷ)ಅವಧಿಗೆ ಪಡೆಯಲು ಉದ್ದೇಶಿಸಿರುವ ಯೋಜನೆಯ 613.25 (ಜಿಎಸ್‍ಟಿ ಒಳಗೊಂಡಂತೆ) ಕೋಟಿ ರೂ.ಗಳ ಅಂದಾಜು ಮೊತ್ತಕ್ಕೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹವಾಮಾನದಲ್ಲಿನ ಗಣನೀಯ ಬದಲಾವಣೆಗಳು ಮತ್ತು ಬೆಂಗಳೂರು ನಗರದ ಅಗತ್ಯತೆಗಳನ್ನು ಆಧರಿಸಿ ಮುಂದಿನ 7 ವರ್ಷಗಳ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಈ ಪ್ರಸ್ತಾವನೆಯನ್ನು ಸಿದ್ದಪಡಿಸಿತ್ತು ಎಂದು ಹೇಳಿದರು. ಈ ಯೋಜನೆಯಿಂದ ಸಾರ್ವಜನಿಕ ಸಂಚಾರದ ಸುಧಾರಣೆಯಾಗಿ, ಬೆಂಗಳೂರಿನ ಸಾರ್ವಜನಿಕರ ಆರೋಗ್ಯ ಪರಿಸರ ಮತ್ತು ರಸ್ತೆ ಸ್ವಚ್ಛತೆ ಮತ್ತು ನಗರದ ವಾಯು ಗುಣಮಟ್ಟ ಸುಧಾರಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿ ಮತ್ತು ಅವಶ್ಯಕವೆಂದು ಪ್ರಸ್ತಾವನೆಯಲ್ಲಿ ಪ್ರಸ್ತಾಪಿಸಲಾಗಿತ್ತು ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ಲಾಪುರ ಏತ ನೀರಾವರಿ ಯೋಜನೆಯ ಬಾಕಿ ಕೆಲಸಗಳು ಹಾಗೂ ಪುನರುಜ್ಜೀವನ ಕಾಮಗಾರಿಗಳನ್ನು 21 ಕೋಟಿ ರೂ., ದದ್ದಲ್ ಗ್ರಾಮದ ಹತ್ತಿರ(ಗೌರಮ್ಮ ಬಂಡಿ) ಏತ ನೀರಾವರಿ ಯೋಜನೆಯ ಬಾಕಿ ಕೆಲಸಗಳು ಹಾಗೂ ಪುನರುಜ್ಜೀವನ ಕಾಮಗಾರಿಗಳನ್ನು 34 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು. ಮುಂದಿನ ಅಧಿವೇಶನದಲ್ಲಿ ಜಿ.ಬಿ.ಎ ತಿದ್ದುಪಡಿ: ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ವಿವಿಧ ಕಲಂಗಳಿಗೆ ತಿದ್ದುಪಡಿ ತರುವ ಉದ್ದೇಶಹೊಂದಿರುವ ಬೆಂಗಳೂರು ಆಡಳಿತ (ಎರಡನೆ ತಿದ್ದುಪಡಿ) ವಿಧೇಯಕ, 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು. ಸರಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಆರ್ಥಿಖ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರನ್ನು ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡುವ ಬಗ್ಗೆ ಹೆಚ್ಚಿನ ಸ್ಪಷ್ಟನೆಯನ್ನು ತರುವ ಉದ್ದೇಶದಿಂದ ಈ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು. ಬೆಳಗಾವಿಯಲ್ಲಿ ಸಿ.ಬಿ.ಜಿ ಘಟಕ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿದಿನ ಸಂಗ್ರಹವಾಗುವ 150 ಟನ್‍ಗಳಷ್ಟು ಹಸಿ ತ್ಯಾಜ್ಯವನ್ನು ಸಂಕುಚಿತ ಜೈವಿಕ ಅನಿಲ(ಸಿಬಿಜಿ) ಘಟಕದ ಮೂಲಕ ಸಂಸ್ಕರಿಸಲು ಭಾರತೀಯ ಅನಿಲ ಪ್ರಾಧಿಕಾರ(ಗೇಲ್) ಸಂಸ್ಥೆಗೆ ತುರುಮುರಿ ತ್ಯಾಜ್ಯ ನಿರ್ವಹಣೆ ಪ್ರದೇಶದಲ್ಲಿ 10 ಎಕರೆ ಜಾಗವನ್ನು 25 ವರ್ಷಗಳ ಅವಧಿಗೆ ನೀಡಲು ಅನುಮೋದನೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. ಕೋರ್ಟ್ ಮ್ಯಾನೇಜರ್‍ಗಳ ನೇಮಕಾತಿ: ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) (ಕೋರ್ಟ್ ಮ್ಯಾನೇಜರ್‍ಗಳ ವಿಲೀನಾತಿ) (ವಿಶೇಷ) ನಿಯಮಗಳು, 2025 ಮತ್ತು ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) ಕೋರ್ಟ್ ಮ್ಯಾನೇಜರ್ ಗಳ ನೇಮಕಾತಿ ಮತ್ತು ಸೇವಾ ಷರತ್ತುಗಳು (ವಿಶೇಷ) ನಿಯಮಗಳು, 2025ಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಅವರು ಹೇಳಿದರು. ಮೈಸೂರಿನಲ್ಲಿ ಶಾಸಕರ ಕಚೇರಿಗಳಿಗೆ ಪ್ರತ್ಯೇಕ ಕಟ್ಟಡ: ಮೈಸೂರು ನಗರದಲ್ಲಿ ಸರಕಾರಿ ಅತಿಥಿ ಗೃಹದ ನೌಕರರ ವಸತಿ ಗೃಹಗಳ ಆವರಣದಲ್ಲಿ ಶಾಸಕರ ಹಾಗೂ ಸಂಸದರ ಭವನವನ್ನು 15 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 250 ಹಾಸಿಗೆ ಸಾಮಥ್ರ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾರಂಭಕ್ಕೆ ಅಗತ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳನ್ನು 27.92 ಕೋಟಿ ರೂ. ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಹಾಗೂ ಆಸ್ಪತ್ರೆ ಕಟ್ಟಡದ ನೆಲ ಮತ್ತು ಮೊದಲನೆ ಮಹಡಿಗೆ ಅವಶ್ಯವಿರುವ ಸೇವೆಗಳನ್ನು 21 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು. ಇತರ ನಿರ್ಣಯಗಳು: ಬೆಂಗಳೂರಿನ ಶ್ರೀ ರಾಜರಾಜೇಶ್ವರಿ ಎಜುಕೇಷನ್ ಟ್ರಸ್ಟ್ ರವರಿಗೆ ಶೈಕ್ಷಣಿಕ ಉದ್ದೇಶಕ್ಕಾಗಿ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ ಚನ್ನಸಂದ್ರ ಗ್ರಾಮದ ಸರ್ವೆ ನಂಬರ್ 115ರಲ್ಲಿ 5 ಎಕರೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಿರುವ ಸರಕಾರಿ ಗೋಮಾಳ ಜಮೀನನ್ನು ಕೃಷಿಯೇತರ ಮಾರುಕಟ್ಟೆ ಮೌಲ್ಯದ ಶೇ.2.5ರಷ್ಟು ಮೌಲ್ಯ ಹಾಗೂ ಇನ್ನಿತರ ಶಾಸನ ಬದ್ಧ ಶುಲ್ಕ ವಿಧಿಸಿ 30 ವರ್ಷಗಳ ಅವಧಿಗೆ ಗುತ್ತಿಗೆ ಅವಧಿಯನ್ನು ನವೀಕರಿಸಲು ಒಪ್ಪಿಗೆ. ಮೊಳಕಾಲ್ಮುರು ಕಾಂಗ್ರೆಸ್ ಭವನಕ್ಕೆ ಜಮೀನು : ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸೊಲೇನಹಳ್ಳಿ ಗ್ರಾಮದಲ್ಲಿ 6 ಗುಂಟೆ ಜಮೀನನ್ನು ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ‘ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು’ ಇವರಿಗೆ ಮಾರ್ಗದರ್ಶಿ ಮೌಲ್ಯದ ಶೇ.5 ರಷ್ಟು ವೆಚ್ಚಕ್ಕೆ ಮಂಜೂರು ಮಾಡಲು ನಿರ್ಣಯ. ಮೇಲ್ದರ್ಜೆಗೆ: ಬೀದರ್ ಜಿಲ್ಲೆಯ ಭಾಲ್ಕಿ ಪುರಸಭೆಯನ್ನು ನಗರಸಭೆಯನ್ನಾಗಿ ಹಾಗೂ ಕಮಲಾನಗರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಡಿ.8 ರಿಂದ 19ರ ವರೆಗೆ ಬೆಳಗಾವಿಯಲ್ಲಿ ಅಧಿವೇಶನ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಡಿ.8ರಿಂದ 19ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸಚಿವ ಸಂಪುಟ ನಿರ್ಧರಿಸಿದೆ. ಹಿಂದಿನ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸುವ ಅಧಿಕಾರವನ್ನು ಸಚಿವ ಸಂಪುಟ ಮುಖ್ಯಮಂತ್ರಿಗೆ ನೀಡಿತ್ತು.

ವಾರ್ತಾ ಭಾರತಿ 13 Nov 2025 8:10 pm

Ballari | ನ.15 ರಂದು ಮೇಯರ್, ಉಪಮೇಯರ್, ಸ್ಥಾಯಿ ಸಮಿತಿ ಸ್ಥಾನಗಳಿಗೆ ಚುನಾವಣೆ

ಮಹಾನಗರ ಪಾಲಿಕೆ ಸುತ್ತ ನಿಷೇಧಾಜ್ಞೆ ಜಾರಿ : ಡಿಸಿ ನಾಗೇಂದ್ರ ಪ್ರಸಾದ್ ಕೆ.

ವಾರ್ತಾ ಭಾರತಿ 13 Nov 2025 8:07 pm

ದ.ಕ. ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಪುಷ್ಪರಾಜ್‌ಗೆ ಅಭಿನಂದನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಆಯ್ಕೆಯಾಗಿರುವ ವಾರ್ತಾ ಭಾರತಿಯ ಮಂಗಳೂರು ನಗರ ಕಚೇರಿಯ ಬ್ಯುರೋ ಚೀಫ್ ಪುಷ್ಪರಾಜ್ ಬಿ.ಎನ್ ಮತ್ತು ಕೆಯುಡಬ್ಲ್ಯುಜೆ ರಾಜ್ಯಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿರುವ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ನಗರದ ಓಷನ್ ಪರ್ಲ್ ಹೋಟೆಲ್‌ನಲ್ಲಿ ನ.11ರಂದು ನಡೆದ ಕಾರ್ಯಕ್ರಮದಲ್ಲಿ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥ ಡಾ.ಸದಾನಂದ ಪೆರ್ಲ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಉದ್ಯಮಿ ಪುಷ್ಪರಾಜ ಜೈನ್ , ಕದ್ರಿ ಪೊಲೀಸ್ ಠಾಣೆಯ ಎಸ್‌ಐ ಮನೋಹರ ಪ್ರಸಾದ್ ಹಾಗೂ ಹಿರಿಯ ಪತ್ರಕರ್ತ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.

ವಾರ್ತಾ ಭಾರತಿ 13 Nov 2025 8:06 pm

ದಿಲ್ಲಿ | ಕಾರು ಸ್ಫೋಟದ ಸ್ಥಳದ ಸಮೀಪ ಛಾವಣಿಯಲ್ಲಿ ತುಂಡಾದ ಕೈ ಪತ್ತೆ

ಹೊಸದಿಲ್ಲಿ,ನ.13: ರಾಷ್ಟ್ರರಾಜಧಾನಿಯಲ್ಲಿ ಸೋಮವಾರ ಭೀಕರ ಕಾರು ಸ್ಫೋಟ ನಡೆದ ಕೆಂಪುಕೋಟೆ ಬಳಿಯಿರುವ ಅಂಗಡಿಯೊಂದರ ಚಾವಣಿಯಲ್ಲಿ ಕತ್ತರಿಸಲ್ಪಟ್ಟ ಕೈಯೊಂದು ಗುರುವಾರ ಪತ್ತೆಯಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟ ನಡೆದ ಸ್ಥಳದಿಂದ ಕೆಲವೇ ಮೀಟರ್‌ಗಳಷ್ಟು ದೂರವಿರುವ ಜೈನ ದೇವಾಲಯದ ಹಿಂಭಾಗದಲ್ಲಿರುವ ಅಂಗಡಿಯೊಂದರ ಛಾವಣಿಯಲ್ಲಿ ತುಂಡಾದ ಕೈ ಪತ್ತೆಯಾಗಿದೆ. ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಇಡೀ ಪ್ರದೇಶವನ್ನು ಸುತ್ತುವರಿದರು ಹಾಗೂ ಕೈಯ ಅವಶೇಷವನ್ನು ಸಂಗ್ರಹಿಸಿದರು. ಸ್ಫೋಟದಲ್ಲಿ ಮೃತಪಟ್ಟವರ ಪೈಕಿ ಈ ಕೈ ಯಾರದ್ದೆಂಬುದನ್ನು ದೃಢಪಡಿಸಿಕೊಳ್ಳಲು ತುಂಡಾದ ಕೈಯನ್ನು ಅಪರಾಧ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ನವೆಂಬರ್ 10ರಂದು ಕೆಂಪುಕೋಟೆಯ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ 13 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು.

ವಾರ್ತಾ ಭಾರತಿ 13 Nov 2025 8:06 pm

ಪಂಜಾಬ್‌ನಲ್ಲಿ ಗ್ರೆನೇಡ್ ದಾಳಿ ಸಂಚನ್ನು ವಿಫಲಗೊಳಿಸಿದ ಲೂಧಿಯಾನ ಪೊಲೀಸರು : 10 ಮಂದಿ ಶಂಕಿತರ ಬಂಧನ

ಲುಧಿಯಾನ,ನ.13: ನಗರದ ಜನನಿಬಿಡ ಪ್ರದೇಶದಲ್ಲಿ ಗ್ರೆನೇಡ್ ದಾಳಿಯನ್ನು ನಡೆಸುವ ಮೂಲಕ ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಸಂಚನ್ನು ಪಂಜಾಬ್ ಪೊಲೀಸರು ವಿಫಲಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಲಾಗಿದೆ. ವಿಶ್ವಾಸನೀಯ ಬೇಹುಗಾರಿಕಾ ಮಾಹಿತಿಗಳ ಆಧಾರದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಆಕ್ಟೋಬರ್ 27ರಂದು ಎಫ್‌ಐಆರ್ ದಾಖಲಿಸಿದ್ದರು. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ಸೆಕ್ಷನ್ 112 ಹಾಗೂ ಸ್ಫೋಟಕಗಳ ಕಾಯ್ದೆಯ 3,4 ಮತ್ತು 5 ಸೆಕ್ಷನ್‌ಗಳಡಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ)ಯನ್ನು ಕೂಡಾ ಹೇರಲಾಗಿದ್ದು, ವಿದೇಶಿ ಮೂಲದ ಶಂಕಿತ ಆರೋಪಿಗಳಿಗೆ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆಯೆಂದು ಲೂಧಿಯಾನದ ಪೊಲೀಸ್ ಆಯುಕ್ತ ಸ್ವಪನ್ ಶರ್ಮಾ ತಿಳಿಸಿದ್ದಾರೆ. ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಶ್ರೀ ಮುಕ್ತಸರ್ ಸಾಹಿಬ್‌ನ ನಿವಾಸಿಗಳಾದ ಕುಲದೀಪ್‌ಸಿಂಗ್, ಶೇಖರ್ ಸಿಂಗ್ ಹಾಗೂ ಅಜಯ್ ಸಿಂಗ್ ಅವರನ್ನು ಪ್ರಮುಖ ಆರೋಪಿಗಳೆಂದು ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವುದನ್ನು ಖಾತರಿಪಡಿಸಲು ಡಿಸಿಪಿ (ತನಿಖಾ ವಿಭಾಗ) ಹಾಗೂ ಡಿಸಿಪಿ (ನಗರ) ನೇತೃತ್ವದಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐನ ನಿರ್ದೇಶನದಂತೆ ಕಾರ್ಯಾಚರಿಸುತ್ತಿದ್ದರೆಂದು ಪ್ರಾಥಮಿಕ ತನಿಖೆಗಳಿಂದ ತಿಳಿದು ಬಂದಿರುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರಲ್ಲಿ ಗಾಬರಿ ಹಾಗೂ ಭೀತಿಯನ್ನು ಸೃಷ್ಟಿಸುವುದಕ್ಕಾಗಿ ಗ್ರೆನೇಡ್ ದಾಳಿಯನ್ನು ನಡೆಸುವಂತೆ ಅವರಿಗೆ ಸೂಚಿಸಲಾಗಿದೆ. ಪಂಜಾಬ್‌ನಲ್ಲಿ ಗ್ರೆನೇಡ್ ದಾಳಿಯನ್ನು ನಡೆಸುವ ಸಂಚಿನ ರೂವಾರಿಗಳು ವಿದೇಶದಲ್ಲಿ ನೆಲೆಸಿದವರಾಗಿದ್ದು ಅವರನ್ನು ಅಜಯ್, ಜಸ್ ಬೆಹಬಾಲ್ ಹಾಗೂ ಪವನ್‌ದೀಪ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಪ್ರಸಕ್ತ ಮಲೇಶ್ಯದ ನಿವಾಸಿಗಳಾಗಿದ್ದು ಮೂಲತಃ ರಾಜಸ್ಥಾನದ ಗಂಗಾನಗರದವರಾಗಿದ್ದಾರೆ. ಈ ಮೂವರು ಆರೋಪಿಗಳು, ಈ ಹಿಂದೆ ಡ್ರಗ್ಸ್ ಕಳ್ಳಸಾಗಣೆಯಲ್ಲಿ ಶಾಮೀಲಾಗಿದ್ದ ಸ್ಥಳೀಯರಾದ ಅಮ್ರಿಕ್ ಸಿಂಗ್ ಹಾಗೂ ಪರಮಿಂದರ್ ಅವರೊಂದಿಗೆ ಸಂಪರ್ಕವನ್ನು ಇರಿಸಿಕೊಂಡಿದ್ದರು. ಪಂಜಾಬ್‌ನಲ್ಲಿ ಭಯೋತ್ಪಾದಕ ಕೃತ್ಯವನ್ನು ಎಸಗಲು ಹ್ಯಾಂಡ್‌ ಗ್ರೆನೇಡ್ ಪೂರೈಕೆಗೆ ನಿಯೋಜಿತವಾಗಿದ್ದ ಸ್ಥಳೀಯ ಜಾಲವನ್ನು ಕೂಡಾ ಪೊಲೀಸರು ಭೇದಿಸಿದ್ದಾರೆ. ಬಂಧಿತ ಆರೋಪಿಗಳ ಪೈಕಿ ಸುಖಜಿತ್ ಸಿಂಗ್ ಹಾಗೂ ಸುಖವೀಂದರ್‌ಸಿಂಗ್ ಇಬ್ಬರೂ ಪಂಜಾಬ್‌ನ ಫರೀದ್ ಕೋಟ್ ನಿವಾಸಿಗಳು. ಕರಣ್‌ವೀರ್ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಹಾಗೂ ಸಜನ್ ಕುಮಾರ್ ಮುಕ್ತಸರ ಸಾಹಿಬ್‌ನಲ್ಲಿ ವಾಸವಾಗಿದ್ದರು. ಆರೋಪಿಗಳಿಂದ ಚೀನಿ ನಿರ್ಮಿತ ಕೈಗ್ರೆನೇಡ್, ಕಪ್ಪು ಕಿಟ್ ಹಾಗೂ ಆರೋಪಿಗಳಿಂದ ಜೋಡಿ ಕೈಗವಸುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಾರ್ತಾ ಭಾರತಿ 13 Nov 2025 8:05 pm

ಬೈಂದೂರು: ವ್ಯಕ್ತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಬಿಜೂರು ಗ್ರಾಮದ ಕಂಚಿಕಾನ ನಿವಾಸಿ ಸುರೇಂದ್ರ (31) ಎಂಬವರು ಅ.27ರಂದು ಬೆಳಿಗ್ಗೆ 8 ಗಂಟೆಗೆ ಕೆಲಸದ ನಿಮಿತ್ತ ಕುಂದಾಪುರಕ್ಕೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 5 ಇಂಚು ಎತ್ತರ, ಕನ್ನಡ ಮಾತನಾಡಬಲ್ಲವರಾಗಿದ್ದು ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೋಲಿಸ್ ಠಾಣೆಯನ್ನು ಸಂಪರ್ಕಿಸುವಂತೆ ಬೈಂದೂರು ಪೋಲಿಸ್ ಠಾಣಾಧಿಕಾರಿಗಳು ತಿಳಿಸಿದ್ದಾರೆ.

ವಾರ್ತಾ ಭಾರತಿ 13 Nov 2025 7:58 pm

ಪಶ್ಚಿಮ ಬಂಗಾಳ | ಬಿಜೆಪಿಯಿಂದ ಗೆದ್ದು ಟಿಎಂಸಿಗೆ ಪಕ್ಷಾಂತರ : ಮುಕುಲ್ ರಾಯ್ ಶಾಸಕ ಸ್ಥಾನ ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: 2021ರಲ್ಲಿ ಬಿಜೆಪಿಯಿಂದ ಆಡಳಿತಾರೂಢ ಟಿಎಂಸಿಗೆ ಪಕ್ಷಾಂತರಗೊಂಡಿದ್ದ ಪಶ್ಚಿಮ ಬಂಗಾಳದ ಶಾಸಕ ಮುಕುಲ್ ರಾಯ್ ಅವರ ವಿಧಾನಸಭಾ ಸದಸ್ಯತ್ವವನ್ನು ನಾಲ್ಕು ವರ್ಷಗಳ ನಂತರ ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. 2020ರ ವಿಧಾನಸಭಾ ಚುನಾವಣೆಯಲ್ಲಿ ನದಿಯಾ ಜಿಲ್ಲೆಯ ಕೃಷ್ಣಾನಗರ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುಕುಲ್ ರಾಯ್, ಮೊದಲ ಬಾರಿಗೆ ಶಾಸಕರಾಗಿದ್ದರು. ಆದರೆ, ಚುನಾವಣೆ ನಡೆದ ಕೇವಲ ಒಂದೇ ತಿಂಗಳ ಅವಧಿಯಲ್ಲಿ ಅವರು ತಮ್ಮ ಮಾತೃ ಪಕ್ಷವಾದ ತೃಣಮೂಲ ಕಾಂಗ್ರೆಸ್‌ಗೆ ಮರಳಿದ್ದರು. ಈ ಕುರಿತು ತಮ್ಮ ನಿರ್ಧಾರ ಪ್ರಕಟಿಸಿದ್ದ ವಿಧಾನಸಭಾ ಸ್ಪೀಕರ್ ಬಿಮನ್ ರಾಯ್, ಮುಕುಲ್ ರಾಯ್ ಬಿಜೆಪಿ ಶಾಸಕ ಎಂದು ತೀರ್ಪಿತ್ತಿದ್ದರು. ಆದರೆ, ಅವರ ತೀರ್ಪನ್ನು ಕಲ್ಕತ್ತಾ ಹೈಕೋರ್ಟ್ ವಜಾಗೊಳಿಸಿದೆ. ಮುಕುಲ್ ರಾಯ್ ಅವರನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ತೃಣಮೂಲ ಕಾಂಗ್ರೆಸ್ ಸರಕಾರದ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಹುದ್ದೆಯನ್ನು ಸಾಂಪ್ರದಾಯಿಕವಾಗಿ ವಿರೋಧ ಪಕ್ಷ ಪಾಳಯದ ಸದಸ್ಯರೊಬ್ಬರು ಹೊಂದಿರುತ್ತಾರೆ. ಹೈಕೋರ್ಟ್ ತೀರ್ಪಿನ ಬಳಿಕ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭಾ ವಿಪಕ್ಷ ನಾಯಕ ಸುವೇಂದು ಅಧಿಕಾರಿ, “ಮುಕುಲ್ ರಾಯ್ ಬಿಜೆಪಿ ಶಾಸಕ ಎಂಬ ನಿರ್ಧಾರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಪರವಾಗಿ ಸ್ಪೀಕರ್ ಕೈಗೊಂಡಿದ್ದಾರೆ. ಈ ನಡೆಯು ಸಂವಿಧಾನಕ್ಕೆ ಸವಾಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದ ಮುಕುಲ್ ರಾಯ್, 2012ರಲ್ಲಿ ಡಾ. ಮನಮೋಹನ್ ಸಿಂಗ್ ಸಂಪುಟದಲ್ಲಿ ಸುಮಾರು ಆರು ತಿಂಗಳ ಕಾಲ ಕೇಂದ್ರ ರೈಲ್ವೆ ಸಚಿವರಾಗಿದ್ದರು. ಅಲ್ಲದೆ ಅವರು ತೃಣಮೂಲ ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭಾ ಸದಸ್ಯರೂ ಆಗಿದ್ದರು.

ವಾರ್ತಾ ಭಾರತಿ 13 Nov 2025 7:54 pm

Yadgiri | ಸುರಪುರದಲ್ಲಿ ಕಾರ್ಮಿಕರಿಗೆ ಸರಕಾರಿ ಸೌಲಭ್ಯಗಳ ಬಗ್ಗೆ ಜಾಗೃತಿ ಅಭಿಯಾನ

ಸುರಪುರ : ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ತಾಲೂಕು ಘಟಕದ ವತಿಯಿಂದ ನಗರದಲ್ಲಿ ಜಾಗೃತಿ ಅಭಿಯಾನ ನಡೆಯಿತು. ಈ ವೇಳೆ ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರನ್ನು ಭೇಟಿಯಾಗಿ, ಕಾರ್ಮಿಕ ಇಲಾಖೆಯಿಂದ ಸರ್ಕಾರ ನೀಡುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಸಂಘಟನೆಯ ತಾಲೂಕು ಅಧ್ಯಕ್ಷ ಚಂದ್ರು ಎಲಿಗಾರ ಮಾತನಾಡಿ, ಕಾರ್ಮಿಕ ಇಲಾಖೆಯು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಅನೇಕ ಕಾರ್ಮಿಕರು ತಮ್ಮ ಹೆಸರು ಇಲಾಖೆಯಲ್ಲಿ ನೋಂದಾಯಿಸದೇ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಈ ಕಾರಣಕ್ಕಾಗಿ ನಮ್ಮ ಸಂಘಟನೆಯು ಕಾರ್ಮಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಸರ್ಕಾರಿ ಸೌಲಭ್ಯಗಳು ಎಲ್ಲರಿಗೂ ತಲುಪುವಂತೆ ಶ್ರಮಿಸುತ್ತಿದೆ ಎಂದು ಹೇಳಿದರು. ಅಭಿಯಾನದ ಅಂಗವಾಗಿ ಸಂಘಟನೆಯ ಸದಸ್ಯರು ನಗರದಲ್ಲಿನ ವಿವಿಧ ಅಂಗಡಿಗಳು ಹಾಗೂ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ ಕಾರ್ಮಿಕರಿಗೆ ಬಿತ್ತಿ ಪತ್ರಗಳನ್ನು ಹಂಚಿದರು. ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ರವಿ ಚೌಹಾಣ್, ಮುಹಮ್ಮದ್ ಖಾಲಿದ್, ರಾಜು ಕಲಾಲ್, ಮಹಬೂಬ್ ಪೇಂಟರ್ ಸೇರಿದಂತೆ ಅನೇಕ ಜನ ಕಟ್ಟಡ ಕಾರ್ಮಿಕರು ಕೂಡ ಭಾಗವಹಿಸಿದ್ದರು.

ವಾರ್ತಾ ಭಾರತಿ 13 Nov 2025 7:54 pm

Bagalkote | ಮುಧೋಳದಲ್ಲಿ ರೈತರ ಆಕ್ರೋಶ; ಸಕ್ಕರೆ ಕಾರ್ಖಾನೆ ಬಳಿ ಕಬ್ಬು ತುಂಬಿದ್ದ ಹಲವು ಟ್ರ್ಯಾಕ್ಟರ್‌ಗಳಿಗೆ ಬೆಂಕಿ!

ಬಾಗಲಕೋಟೆ : ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಸಮೀಪ ಇರುವ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ನಿಂತಿರುವ ಕಬ್ಬು ತುಂಬಿದ್ದ ಹಲವು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ಗುರುವಾರ ಸಂಜೆ ನಡೆದಿರುವುದಾಗಿ ವರದಿಯಾಗಿದೆ. ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಯು ನಾಳೆಯಿಂದ ಪ್ರಾರಂಭ ಮಾಡಬೇಕು ಎಂಬ ಉದ್ದೇಶದಿಂದ ಸುಮಾರು, 150 ಟ್ರ್ಯಾಕ್ಟರ್‌ ಕಬ್ಬು ತುಂಬಿಸಿ ಇಡಲಾಗಿದೆ. ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ಹಿಂದಿನ ಬಾಕಿ ಹಣ ನೀಡುವ ಬಗ್ಗೆ ಚಕಾರ ಎತ್ತಿಲ್ಲ. ಮುಧೋಳ ಪಟ್ಟಣದಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಭಾಗಿ ಆಗಿ ದರ ಘೋಷಣೆ ಮಾಡುವ ಜೊತೆಗೆ ಸಂಧಾನಕ್ಕೆ ಬರಲಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಆಗ ಸಾಲಾಗಿ ನಿಂತಿದ್ದ ಕಬ್ಬಿನ ಟ್ರಾಕ್ಟರ್‌ಗೆ ಕೆಲವರು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಕಬ್ಬು ಬೆಳೆಗೆ ಏಕ ದರ ನಿಗದಿಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದೆ. ತಾಳ್ಮೆ ಕಳೆದುಕೊಂಡ ಕೆಲವರು, ಕಬ್ಬು ತುಂಬಿದ ಟ್ರ್ಯಾಕ್ಟರ್‌ ನೆಲಕ್ಕೆ ಉರುಳಿಸಿ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ಟನ್ ಗೆ 3,500 ರೂಗಳ ವರೆಗೆ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಇಂದು ಸಹ ಮುಧೋಳ ಬಂದ್ ಮಾಡಲಾಗಿತ್ತು. ವಿವಿಧ ಗ್ರಾಮಗಳಿಂದ ಟ್ರ್ಯಾಕ್ಟರ್‌ ಮೂಲಕ ರೈತರು ಆಗಮಿಸಿ, ಬೃಹತ್ ಪ್ರತಿಭಟನೆ ನಡೆಸಿದರು. ವ್ಯಾಪಾರಸ್ಥರು ಸಹ ಅಂಗಡಿ ಮುಗ್ಗಟ್ಟು ಬಂದ್ ಮಾಡಿ, ಬೆಂಬಲ ನೀಡಿದ್ದಾರೆ.

ವಾರ್ತಾ ಭಾರತಿ 13 Nov 2025 7:49 pm

ಏರ್ ಇಂಡಿಯಾ ವಿಮಾನ ದುರಂತ | ಯಾರ ಮೇಲೂ ಆರೋಪ ಹೊರಿಸುವ ಪ್ರಯತ್ನವಿಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ, ನ. 13: ಜೂನ್ 12ರಂದು ಅಹ್ಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದ ತನಿಖೆಯು ‘‘ಯಾರದೇ ವಿರುದ್ಧ ಆರೋಪವನ್ನು ಹೊರಿಸುವ ಪ್ರಯತ್ನವನ್ನು ಮಾಡುತ್ತಿಲ್ಲ’’ ಎಂದು ಕೇಂದ್ರ ಸರಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಹ್ಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನವು ನಿಲ್ದಾಣದ ಹೊರವಲಯದಲ್ಲಿ ವೈದ್ಯಕೀಯ ಕಾಲೇಜೊಂದರ ಹಾಸ್ಟೆಲ್‌ಗೆ ಅಪ್ಪಳಿಸಿ ಪತನಗೊಂಡಿತ್ತು. ದುರಂತದಲ್ಲಿ ವಿಮಾನದ ಒಳಗಿನ ಮತ್ತು ಹೊರಗಿನ 260 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಬ್ಬ ಪ್ರಯಾಣಿಕ ಪವಾಡ ಸದೃಶವೆಂಬಂತೆ ಬದುಕುಳಿದಿದ್ದಾರೆ. ಇಂಥ ತನಿಖೆಯ ಉದ್ದೇಶ ದುರಂತದ ಕಾರಣವನ್ನು ಪತ್ತೆಹಚ್ಚುವುದು ಮತ್ತು ಮುಂದೆ ಅಂಥ ತಪ್ಪುಗಳು ಸಂಭವಿಸದಂತೆ ತಡೆಯುವುದಾಗಿದೆಯೇ ಹೊರತು ವ್ಯಕ್ತಿಗಳ ಮೇಲೆ ಆರೋಪವನ್ನು ಹೊರಿಸುವುದು ಅಥವಾ ತಪ್ಪು ಯಾರು ಮಾಡಿದ್ದಾರೆಂದು ಹೇಳುವುದಲ್ಲ ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಯಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠವೂ ಹೇಳಿತು. ಅಂತರ್‌ರಾಷ್ಟ್ರೀಯ ನಾಗರಿಕ ವಾಯುಯಾನ ಮಾನದಂಡಗಳಂತೆ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸರಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ವಿಮಾನ ದುರಂತದಲ್ಲಿ ಮೃತಪಟ್ಟ ಕ್ಯಾಪ್ಟನ್ ಸುಮೀತ್ ಸಭರ್ವಾಲ್‌ರ ತಂದೆ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ತನಿಖೆಯು ವಿಮಾನ ಅಪಘಾತದ ಹೊಣೆಯನ್ನು ಪೈಲಟ್‌ಗಳ ಮೇಲೆ ಹೊರಿಸುವ ಸಾಧ್ಯತೆ ಇದೆ ಎಂದು ಆರೋಪಿಸಿರುವ ತಂದೆ, ಅಂತಾರಾಷ್ಟ್ರೀಯ ಪರಿಣತರನ್ನು ಒಳಗೊಂಡ ತಾಂತ್ರಿಕ ಸಮಿತಿಯೊಂದನ್ನು ತನಿಖೆಗೆ ನಿಯೋಜಿಸಬೇಕು ಎಂದು ಕೋರಿದ್ದರು. ಈ ಸಂಬಂಧ ನ್ಯಾಯಾಲಯವು ಕೇಂದ್ರ ಸರಕಾರಕ್ಕೆ ನೋಟಿಸ್ ನೀಡಿತ್ತು. ಕೇಂದ್ರ ಸರಕಾರವು ಈಗ ನೋಟಿಸ್‌ಗೆ ಈ ರೀತಿಯಾಗಿ ಉತ್ತರಿಸಿದೆ.

ವಾರ್ತಾ ಭಾರತಿ 13 Nov 2025 7:48 pm

ಛತ್ತೀಸ್‌ಗಢ ಮದ್ಯ ಹಗರಣ | ಈಡಿಯಿಂದ ಮಾಜಿ ಸಿಎಂ ಭೂಪೇಶ್ ಬಾಘೆಲ್ ಪುತ್ರನ ಆಸ್ತಿ ಮುಟ್ಟುಗೋಲು

ಹೊಸದಿಲ್ಲಿ, ನ. 13: ಛತ್ತೀಸ್‌ಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಅನುಷ್ಠಾನ ನಿರ್ದೇಶನಾಲಯವು ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೆಲ್‌ರ ಮಗ ಚೈತನ್ಯ ಬಾಘೆಲ್‌ಗೆ ಸೇರಿದ 61.20 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. 364 ವಾಸ್ತವ್ಯ ನಿವೇಶನಗಳು ಮತ್ತು ಕೃಷಿ ಭೂಮಿ ಸೇರಿದಂತೆ 59.96 ಕೋಟಿ ರೂ. ಮೌಲ್ಯದ ಸ್ಥಿರ ಸೊತ್ತುಗಳು ಮತ್ತು 1.24 ಕೋಟಿ ರೂ. ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಅನುಷ್ಠಾನ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ ಎಂದು ಹೇಳಿಕೆಯೊಂದರಲ್ಲಿ ತಿಳಿಸಿದೆ. ‘‘ಛತ್ತೀಸ್‌ಗಢ ಮದ್ಯ ಹಗರಣವು ರಾಜ್ಯದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟುಮಾಡಿದೆ ಮತ್ತು ಖಾಸಗಿ ವ್ಯಕ್ತಿಗಳ ತಿಜೋರಿಯನ್ನು ತುಂಬಿಸಿದೆ. ಈ ಹಗರಣದಲ್ಲಿ 2,500 ಕೋಟಿ ರೂ.ಗೂ ಅಧಿಕ ಹಣವನ್ನು ಖಾಸಗಿ ವ್ಯಕ್ತಿಗಳ ಪಾಲಾಗಿದೆ’’ ಎಂದು ಹೇಳಿಕೆ ತಿಳಿಸಿದೆ.

ವಾರ್ತಾ ಭಾರತಿ 13 Nov 2025 7:46 pm

ಬೆಳಗಾವಿಯಿಂದ ಅಮೆರಿಕ ಪ್ರಜೆಗಳ ಬ್ಯಾಂಕ್‌ ಖಾತೆ ಹ್ಯಾಕ್‌; ಕಾಲ್‌ ಸೆಂಟರ್‌ ಮೇಲೆ ದಾಳಿ, 33 ಜನ ಅರೆಸ್ಟ್!

ಬೆಳಗಾವಿಯಲ್ಲಿ ಅಮೆರಿಕದವರ ಮೊಬೈಲ್ ಹಾಗೂ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ವಂಚಿಸುತ್ತಿದ್ದ ಅನಧಿಕೃತ ಕಾಲ್ ಸೆಂಟರ್ ಮೇಲೆ ಸೈಬರ್ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿ, ವಂಚಕರನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 33 ಜನ ಹೊರರಾಜ್ಯದವರನ್ನು ಬಂಧಿಸಿಲಾಗಿದೆ. ಅವರ ಬಳಿ ಇದ್ದ ಲ್ಯಾಪ್‌ಟಾಪ್‌, ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ. ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಹಣ ದೋಚುತ್ತಿದ್ದ ಜಾಲವನ್ನು ಭೇದಿಸಲಾಗಿದೆ.

ವಿಜಯ ಕರ್ನಾಟಕ 13 Nov 2025 7:43 pm

ಯಾದಗಿರಿ | ಜಿಲ್ಲೆಯಲ್ಲಿ ಅಕ್ರಮ ಹೆಂಡದ ಹಾವಳಿ ಹೆಚ್ಚಳ : ಕ್ರಮಕ್ಕೆ ಕರವೇ ಅಧ್ಯಕ್ಷ ನಾಗಪ್ಪ ಬಿ. ಒತ್ತಾಯ

ಯಾದಗಿರಿ: ತಾಲ್ಲೂಕು ಹಾಗೂ ಜಿಲ್ಲೆಯಾದ್ಯಂತ ಅಕ್ರಮ ಹೆಂಡ ಮತ್ತು ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕನ್ನಡ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ನಾಗಪ್ಪ ಬಿ. ಹೊನಗೇರಾ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ನೆರೆಯ ತೆಲಂಗಾಣ ರಾಜ್ಯದಿಂದ ರಾಜಾರೋಷವಾಗಿ ಜಿಲ್ಲೆಯೊಳge ಸರಬರಾಜಾಗುತ್ತಿರುವ ಕೈ ಹೆಂಡದ ಹೆಸರಿನಲ್ಲಿ ಸಿಎಚ್‌ಪೌಡರ್ ನಿಂದ ತಯಾರಿಸಿದ ರಾಸಾಯನಿಕ ಯುಕ್ತ ಹೆಂಡವನ್ನು ಮಾರಾಟ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇಂತಹ ಅಪಾಯಕಾರಿ ಪುಡಿಯ ಹೆಂಡ ಕುಡಿದು ಅನೇಕ ಗ್ರಾಮೀಣ ರೈತ ಕೂಲಿ ಕಾರ್ಮಿಕರು ಅಪಾರ ನಷ್ಟ ಕಷ್ಟ ಅನುಭವಿಸುತ್ತಿದ್ದಾರೆ.ಗುರುಮಠಕಲ್ ತಾಲ್ಲೂಕಿನ ಜಿಲಾಲಪುರ ಗೇಟ್, ಕಡೇಚೂರು ಚೆಕ್ ಪೋಸ್ಟ್ ಸೇರಿದಂತೆ ನೆರೆಯು ಕೃಷ್ಣಾ ಸ್ಟೇಷನ್ ನಿಂದ ಜಿಲ್ಲೆಗೆ ಅಕ್ರಮ ಹೆಂಡವನ್ನು ತರುತ್ತಿದ್ದಾರೆ ಎಂದು ಹೇಳಿದ್ದಾರೆ. ಚೆಕ್ ಪೋಸ್ಟ್ ಗಳಲ್ಲಿ ಚೆಕ್ ಮಾಡುವುದನ್ನೇ ಮರೆತಿರುವ ಅಧಿಕಾರಿಗಳಿಂದಾಗಿ ರಾಜಾರೋಷವಾಗಿ ಹೆಂಡ ಜಿಲ್ಲೆಯಲ್ಲಿ ಹರಿದಾಡುತ್ತಿದೆ. ಎಲ್ಲೆಂದರಲ್ಲಿ ಗಂಡು ಹೆಣ್ಣೆಂಬ ಬೇದವಿಲ್ಲದೆ ಕುಡಿದು ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಘಟನೆಗಳು ಕಂಡುಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಈಗಾಗಲೇ ಡಿಸಿ ಅವರಿಗೆ ಲಿಖಿತ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ಅಕ್ರಮ ಮದ್ಯವೂ ಸಹ ಗ್ರಾಮೀಣ ಗೂಡಂಗಡಿ ಡಬ್ಬಾಗಳಲ್ಲಿಯೂ ಸಿಗುತ್ತಿದೆ. ಕೂಡಲೇ ಕ್ರಮ ಕೈಗೊಂಡು ಅಕ್ರಮ ಸಾಗಾಟ ತಡೆಯಬೇಕು ಬಡ ಕೃಷಿ ಕೂಲಿಕಾರರ ಬಾಳು ಹಾಳಾಗುವುದನ್ನು ತಡೆಯಬೇ., ಇಲ್ಲವಾದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಾರ್ತಾ ಭಾರತಿ 13 Nov 2025 7:39 pm

ಬೀದಿ ನಾಯಿಗಳ ದಾಳಿಯಲ್ಲಿ 10 ಜಿಂಕೆಗಳು ಸಾವು : ಹೊಸದಾಗಿ ಉದ್ಘಾಟಿಸಿದ್ದ ವನ್ಯಜೀವಿ ಧಾಮ ಮುಚ್ಚಿದ ಕೇರಳ ಸರಕಾರ

ತಿರುವನಂತಪುರಂ: ಇತ್ತೀಚೆಗೆ ಕೇರಳದ ತ್ರಿಶೂರ್‌ನಲ್ಲಿ ಉದ್ಘಾಟನೆಗೊಂಡಿದ್ದ ಪುತ್ತೂರು ವನ್ಯಜೀವಿಗಳ ಧಾಮದಲ್ಲಿ ಬೀದಿ ನಾಯಿಗಳ ದಾಳಿಗೆ 10 ಜಿಂಕೆಗಳ ಸಾವು ಸಂಭವಿಸಿದೆ. ಇದರ ಬೆನ್ನಲ್ಲೆ ವನ್ಯಜೀವಿಗಳ ಧಾಮವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಬೀದಿ ನಾಯಿಗಳು ಜಿಂಕೆಗಳ ಮೇಲೆ ದಾಳಿ ನಡೆಸಿದ್ದರಿಂದ ವನ್ಯಜೀವಿ ಧಾಮದ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಅಕ್ಟೋಬರ್ 28ರಂದು ವನ್ಯಜೀವಿ ಧಾಮವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸಿದ್ದರು. ಇದಾದ ಕೇವಲ ಒಂದು ತಿಂಗಳಲ್ಲಿ ಈ ಘಟನೆ ಸಂಭವಿಸಿದೆ. ಮೊದಲಿಗೆ ಪ್ರಾಣಿ ಆರೈಕೆ ಕೇಂದ್ರದ ಸಿಬ್ಬಂದಿಗಳು ಜಿಂಕೆಗಳ ಕಳೇಬರಗಳನ್ನು ಪತ್ತೆ ಹಚ್ಚಿದ್ದಾರೆ. ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಮುಖ್ಯ ಅರಣ್ಯ ಪಶು ವೈದ್ಯಾಧಿಕಾರಿ ಡಾ.ಅರುಣ್ ಝಚಾರಿಯ, ನಾಯಿಗಳು ವನ್ಯಜೀವಿ ಧಾಮಕ್ಕೆ ನುಸುಳಿ ಜಿಂಕೆಗಳನ್ನು ಅಟ್ಟಿಸಿಕೊಂಡು ಹೋಗಿರುವುದರಿಂದ ಅವು ಗಾಬರಿಯಿಂದ ಕಣ್ಮುಚ್ಚಿಕೊಂಡು ಓಡಿ ತಡೆಗೋಡೆಗಳಿಗೆ ಢಿಕ್ಕಿ ಹೊಡೆದಿವೆ ಎಂದು ಹೇಳಿದ್ದಾರೆ. ಘಟನೆ ಕುರಿತು ವಿಸ್ತೃತ ತನಿಖೆ ನಡೆಸಲು ಮುಖ್ಯ ವನ್ಯಜೀವಿ ವಾರ್ಡನ್, ಮುಖ್ಯ ಅರಣ್ಯ ಪಶು ವೈದ್ಯಾಧಿಕಾರಿ ಸೇರಿದಂತೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈ ಬಗ್ಗೆ ನಾಲ್ಕು ದಿನಗಳಲ್ಲಿ ಪ್ರಾಥಮಿಕ ವರದಿ ಸಲ್ಲಿಸಲಿದೆ. ಎರಡು ವಾರಗಳಲ್ಲಿ ಅಂತಿಮ ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ.

ವಾರ್ತಾ ಭಾರತಿ 13 Nov 2025 7:31 pm

Chikkamagaluru | ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು : ಕಾಲೇಜು ವಿದ್ಯಾರ್ಥಿಗಳ ಮೇಲೆ ಹೆಜ್ಜೇನುಗಳು ದಾಳಿ ನಡೆಸಿದ ಪರಿಣಾಮ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ನಗರದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹಾಸನ ನಗರದ ಆಸ್ಪತ್ರೆಗೆ ರವಾನಿಸಲಾಗಿದೆ. ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಮಧ್ಯಾಹ್ನ ವಿದ್ಯಾರ್ಥಿಗಳನ್ನು ಊಟಕ್ಕೆ ಬಿಟ್ಟ ವೇಳೆ ಜೇನುಗೂಡಿಗೆ ವಿದ್ಯಾರ್ಥಿಯೊರ್ವ ಕಲ್ಲು ಹೊಡೆದ ಪರಿಣಾಮ ಹೆಜ್ಜೇನು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ ಎಂದು ತಿಳಿದು ಬಂದಿದೆ. ಹೆಜ್ಜೇನು ದಾಳಿಯಿಂದ ಅಸ್ವಸ್ಥರಾದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಹೆಜ್ಜೇನು ದಾಳಿ ನಡೆಸಿವೆ ಎಂಬ ವಿಚಾರ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು ಆಸ್ಪತ್ರೆಗೆ ದೌಡಾಯಿಸಿದ್ದರು.

ವಾರ್ತಾ ಭಾರತಿ 13 Nov 2025 7:18 pm

Bengaluru Crimes: ಹಾರ್ನ್ ಮಾಡಿದ್ದಕ್ಕೆ ಸಿಟ್ಟು: ದಂಪತಿ, ಮಗುವಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಕಾರಿನಲ್ಲಿ ಯುವಕ ಪರಾರಿ

ಸಿಗ್ನಲ್‌ನಲ್ಲಿ ಹಾರ್ನ್ ಮಾಡಿದ್ದಕ್ಕೆ ಕೋಪಗೊಂಡ 23 ವರ್ಷದ ಕಾರು ಯುವಕನೊಬ್ಬ, ದಂಪತಿ ಮತ್ತು ಮಗು ಸಂಚರಿಸುತ್ತಿದ್ದ ಸ್ಕೂಟರ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬೆಂಗಳೂರಿನಎಂ.ಎಸ್. ರಾಮಯ್ಯ ಆಸ್ಪತ್ರೆ ಬಳಿ ನಡೆದಿತ್ತು. ಈ ಘಟನೆಯಲ್ಲಿ ಕುಟುಂಬ ಗಾಯಗೊಂಡಿದ್ದರು ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ವಿಜಯ ಕರ್ನಾಟಕ 13 Nov 2025 7:16 pm

ಕನಕಗಿರಿ | ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿಸುವ ಕೆಲಸ ಆಗಬೇಕು : ಹಝರತ್ ಹುಸೇನ್

ಕನಕಗಿರಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆ ಮನೆಗೂ ತಲುಪಿಸುವ ಕೆಲಸ ಆಗಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಝರತ್ ಹುಸೇನ್ ಅಧಿಕಾರಿಗಳಿಗೆ ತಿಳಿಸಿದರು. ಅವರು ತಾಲೂಕಿನ ಹುಲಿಹೈದರ್ ಗ್ರಾ.ಪಂ ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳ ಜೊತೆ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದರಿ ಯೋಜನೆಗಳಿಂದ ಆಗಿರುವ ಪ್ರಗತಿ ಹಾಗೂ ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳು ಸರ್ಕಾರದ 5 ಯೋಜನೆಗಳಿಂದ ಹೊರಗುಳಿಯಬಾರದೆಂಬ ಸದುದ್ದೇಶದಿಂದ ಅನುಷ್ಟಾನ ಸಮಿತಿಯ ʼನಡೆ ಗ್ರಾಮ ಪಂಚಾಯತಿ ಕಡೆʼ ಎಂಬ ಧ್ಯೇಯ ವ್ಯಾಖ್ಯಾನದಿಂದ ಕೂಡಿದ್ದು, ಸದರಿ ಯೋಜನೆಗಳ ಸಫಲತೆಯ ಬಗ್ಗೆ ಮಾತನಾಡಿ ಫಲಾನುಭವಿಗಳ ಜೊತೆ ಚರ್ಚಿಸಿದರು. ಅನ್ನಭಾಗ್ಯ ಯೋಜನೆಯಡಿ ವಿವಿಧ ಕಾರ್ಯಕ್ರಮದಡಿಯಲ್ಲಿ 75 ವರ್ಷ ಮೇಲ್ಪಟ್ಟ ನಿಸ್ಸಹಾಯಕ ಒಂಟಿ ಕುಟುಂಬಗಳಿಗೆ ಪಡಿತರವನ್ನು ಸಮಯಕ್ಕೆ ಸರಿಯಾಗಿ ಹಂಚಿಕೆ ಮಾಡುವಂತೆ ಹಾಗೂ ನ್ಯಾಯಬೆಲೆ ಅಂಗಡಿಯ ಮಾರಾಟಗಾರರಿಗೆ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಲಕ್ಷ್ಮೀ ಯೋಜನೆಯಡಿ ಕರಡೋಣಾ, ಹುಲಿಹೈದರ್, ಹಿರೇಖೇಡಾ ಗ್ರಾ.ಪಂ ವ್ಯಾಪ್ತಿಯಲ್ಲಿ ಸದರಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಸದರಿ ಯೋಜನೆಯ ವ್ಯಾಪ್ತಿಗೆ ಅವರನ್ನು ತಂದು ಶೇ.100 ರಷ್ಟು ಸಾಧನೆಯನ್ನು ಸಾಧಿಸಲು ಸೂಚಿಸಿದರು. ಈ ವೇಳೆ ತಾಲೂಕು ಪಂಚಾಯತ್ ಯೋಜನಾಧಿಕಾರಿ ಡಾ.ಹುಲುಗಪ್ಪ, ಹುಲಿಹೈದರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಶರಣಮ್ಮ ಕೆಲ್ಲೂರ್, ಉಪಾಧ್ಯಕ್ಷ ಜಗದೀಶ್ ಗದ್ದಿ, ಕರಡೋಣ ಗ್ರಾಮ ಪಂಚಾಯತ್ ಅಧ್ಯಕ್ಷ ಹಿರೇ ಹನುಮಂತಪ್ಪ, ತಾಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಜಗದೀಶ್ ರಾಥೋಡ್, ನೀಲಕಂಠ ಬಡಿಗೇರ್, ಜಗದೀಶ್ ಚನ್ನವೀರಪ್ಪ, ಕರಿಯಪ್ಪ ನಾಯಕ್, ಹನುಮಮ್ಮ ಪಾಟೀಲ್, ಗ್ಯಾನಪ್ಪ, ಭೀಮೇಶ್, ವಿರೇಶ್ ಮತ್ತು ಗ್ಯಾರಂಟಿ ಯೋಜನೆಗಳ ವಿವಿಧ ಇಲಾಖೆಯ ಅಧಿಕಾರಿಗಳು, ಹುಲಿಹೈದರ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ನಾಯಕ್, ಕರಡೋಣ ಮತ್ತು ಹಿರೇಖೇಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಮಲ್ಲಿಕಾರ್ಜುನ, ತಾಲೂಕ ಪಂಚಾಯತ್ ವಿಷಯ ನಿರ್ವಾಹಕರಾದ ಕೊಟ್ರಯ್ಯ ಸ್ವಾಮಿ, ಕೆ.ಪವನಕುಮಾರ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ವಾರ್ತಾ ಭಾರತಿ 13 Nov 2025 7:13 pm

ಬೈಂದೂರು ಪಟ್ಟಣ ಪಂಚಾಯತ್ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ ಸಲ್ಲಿಸಿದ ಶಾಸಕ ಗುರುರಾಜ್

ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್‌ಗೆ ಸಂಬಂಧಿಸಿದಂತೆ ಗ್ರಾಮೀಣ ಭಾಗದ ರೈತರಿಗೆ ಪಟ್ಟಣ ಪಂಚಾಯತ್ ನಿಯಮಗಳಿಂದ ಆಗುತ್ತಿರುವ ಸಂಕಷ್ಟಗಳ ಕುರಿತು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಮುಖರೊಂದಿಗೆ ಬೆಂಗಳೂರಿನಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ಪೌರಾಡಳಿತ ಸಚಿವ ರಹೀಮ್ ಖಾನ್ ಹಾಗೂ ಪೌರಾಡಳಿತ ಇಲಾಖೆಯ ಕಾರ್ಯದರ್ಶಿ ದೀಪ ಎಂ. ಚೋಳನ್ ಅವರನ್ನು ಭೇಟಿ ಮಾಡಿ ಸರಣಿ ಸಭೆಗಳನ್ನು ನಡೆಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದರು. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಪ್ರಸ್ತುತ ಇರುವ ಬೈಂದೂರು ಪಟ್ಟಣ ಪಂಚಾಯತ್ ಗ್ರಾಮೀಣ ಭಾಗವನ್ನು ಅದರ ವ್ಯಾಪ್ತಿಯಿಂದ ಕೈಬಿಟ್ಟು ಹೊಸದಾಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯನ್ನು ಮರುವಿಂಗಡಣೆ ಮಾಡಿ, ಬಫರ್ ಜೋನ್ ಮಿತಿಯನ್ನು ಕೈಬಿಟ್ಟು, ಆ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಅನ್ವಯಿಸುವ ನಿಯಮಗಳನ್ನು ಅಳವಡಿಸುವಂತೆ ಮನವಿ ಮಾಡಿದರು. ಈ ಮೂಲಕ ಅಕ್ರಮ ಸಕ್ರಮ, 94 ಸಿ ಮತ್ತು ಕುಮ್ಕಿ ಹಾಗೂ ವಸತಿ ಯೋಜನೆ ಸೇರಿದಂತೆ ಇತರೆ ಎಲ್ಲಾ ಸರಕಾರಿ ಯೋಜನೆಗಳ ಹಕ್ಕುಗಳನ್ನು ರೈತರಿಗೆ ನೀಡುವ ಮುಖೇನ ಗ್ರಾಮೀಣ ಬಡ ಜನರ ಹಿತ ಕಾಪಾಡಲು ಕ್ರಮ ವಹಿಸುವ ಬಗ್ಗೆ ಪತ್ರದ ಮೂಲಕ ಮನವಿ ಸಲ್ಲಿಸಿದರು. ಪಟ್ಟಣ ಪಂಚಾಯತ್‌ನಿಂದ ಪ್ರಸ್ತುತ ಜನರಿಗೆ ಆಗುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ, ಮೂಲ ಸೌಕರ್ಯ ಕೊರತೆಗಳ ಬಗ್ಗೆ ಮೌಖಿಕವಾಗಿ ಸಚಿವರುಗಳು ಹಾಗೂ ಪೌರಾಡಳಿತ ಇಲಾಖೆಯ ಕಾರ್ಯದರ್ಶಿಗಳ ಗಮನಕ್ಕೆ ತರುವ ಮೂಲಕ ವಿಸ್ತೃತವಾಗಿ ಚರ್ಚಿಸುವ ಮೂಲಕ ಈ ಕುರಿತು ಆದ್ಯತೆ ಮೇರೆಗೆ ಕ್ರಮ ವಹಿಸುವಂತೆ ಕೋರಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಹಾಗೂ ಕಾರ್ಯದರ್ಶಿಗಳು ಅತಿ ಶೀಘ್ರದಲ್ಲಿ ಈ ಕುರಿತಂತೆ ಆದ್ಯತೆ ಮೇರೆಗೆ ನಿಯಮಾನುಸಾರ ಕ್ರಮವಹಿಸಿ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ ಎಂದು ಶಾಸಕರ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 13 Nov 2025 7:12 pm

ಕೊಪ್ಪಳ | ಭಾಗ್ಯನಗರ ಪಟ್ಟಣ ಪಂಚಾಯತ್‌ನಿಂದ ಬೈಕ್ ರ‍್ಯಾಲಿ ಮೂಲಕ ಸ್ವಚ್ಛತಾ ಸಂದೇಶ

ಸ್ವಚ್ಛತೆ ಕೆಲಸವು ದೇವರ ಕೆಲಸ: ತುಕಾರಾಮಪ್ಪ

ವಾರ್ತಾ ಭಾರತಿ 13 Nov 2025 7:09 pm

ಮಧ್ಯಪ್ರಾಚ್ಯ ಮತ್ತೆ ಧಗಧಗ, ಇಸ್ರೇಲ್ &ಇತರ ದೇಶಗಳ ನಡುವೆ ಕಿರಿಕ್ ಶುರು?

ಮಧ್ಯಪ್ರಾಚ್ಯ ಅನ್ನೋದು ಕೊತಕೊತ ಕುದಿಯುವ ಕುಲುಮೆ ರೀತಿ ಆಗಿದ್ದು, ಪದೇ ಪದೇ ಇಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದೆ. ಅದರಲ್ಲೂ ಗಾಜಾ ಪಟ್ಟಿಯಲ್ಲಿ ಯುದ್ಧ ಶುರುವಾದ ನಂತರ ನರಕದ ರೀತಿ ವಾತಾವರಣ ನಿರ್ಮಾಣ ಆಗಿದೆ. ಇಂತಹ ಪರಿಸ್ಥಿತಿಯಲ್ಲೇ ದಿಢೀರ್ ಮತ್ತೊಂದು ವಿಚಾರ ಮಧ್ಯಪ್ರಾಚ್ಯ ಭಾಗದಲ್ಲಿ ಬೆಂಕಿಯನ್ನೇ ಹೊತ್ತಿಸಿಬಿಟ್ಟಿದೆ. ಹಾಗಾದ್ರೆ ಮತ್ತೊಂದು ಮಹಾಯುದ್ಧ ಶುರುವಾಗುತ್ತಾ? ಏನಿದು ಹೊಸ ಕಿರಿಕ್? ಅಂದಹಾಗೆ ವೆಸ್ಟ್‌ಬ್ಯಾಂಕ್

ಒನ್ ಇ೦ಡಿಯ 13 Nov 2025 7:08 pm

12,000 ಕೋಟಿ ರೂ.ಅಕ್ರಮ ಹಣ ವರ್ಗಾವಣೆ ಪ್ರಕರಣ : ಈಡಿಯಿಂದ ಜೆಪೀ ಇನ್ಫ್ರಾಟೆಕ್ ಎಂಡಿ ಮನೋಜ್ ಗೌರ್ ಬಂಧನ

ಹೊಸ ದಿಲ್ಲಿ: 12,000ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಪೀ ಇನ್ಫ್ರಾಟೆಕ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಗೌರ್ ಅನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ. ಮನೆ ಖರೀದಿದಾರರಿಂದ ಸಂಗ್ರಹಿಸಿದ ನಿಧಿಯ ವರ್ಗಾವಣೆ ಹಾಗೂ ದುರ್ಬಳಕೆಯಲ್ಲಿ ಮನೋಜ್ ಗೌರ್ ಭಾಗಿಯಾಗಿದ್ದಾರೆ ಎಂದು ತನಿಖಾಧಿಕಾರಿಗಳು ಆರೋಪಿಸಿದ ನಂತರ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಶಕ್ಕೆ ಪಡೆಯಲಾಗಿದೆ. ಜೆಪೀ ಸಮೂಹ ಅಂಗಸಂಸ್ಥೆಗಳಾದ ಜೆಪೀ ಇನ್ಫ್ರಾಟೆಕ್ ಲಿಮಿಟೆಡ್ ಹಾಗೂ ಜೈಪ್ರಕಾಶ್ ಅಸೋಸಿಯೇಟ್ಸ್ ಲಿಮಿಟೆಡ್ ಬೃಹತ್ ಪ್ರಮಾಣದ ಹಣಕಾಸು ಅವ್ಯವಹಾರದಲ್ಲಿ ಭಾಗಿಯಾಗಿವೆ ಎಂಬ ಆರೋಪಕ್ಕೆ ಈ ಪ್ರಕರಣ ಸಂಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆಯು ಪ್ರಮುಖವಾಗಿ ವಸತಿ ಯೋಜನೆಗಳಿಂದ ನಿಧಿಯನ್ನು ವರ್ಗಾಯಿಸಲಾಗಿದೆ ಎಂಬ ಆರೋಪದ ಕುರಿತು ಗಮನ ಕೇಂದ್ರೀಕರಿಸಲಿದೆ. ಈ ಅವ್ಯವಹಾರದಿಂದ ಜೆಪೀ ಇನ್ಫ್ರಾಟೆಕ್ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದ ಸಾವಿರಾರು ಮನೆ ಖರೀದಿದಾರರಿಗೆ ಸಮಸ್ಯೆಯಾಗಿತ್ತು. ಅವರಿಗೆ ಇದುವರೆಗೆ ತಮ್ಮ ಫ್ಲ್ಯಾಟ್ ಗಳ ಸ್ವಾಧೀನವನ್ನು ಪಡೆಯಲು ಸಾಧ್ಯವಾಗಿಲ್ಲ.

ವಾರ್ತಾ ಭಾರತಿ 13 Nov 2025 7:06 pm

ಬಾಗಲಕೋಟೆ ಮುಧೋಳ ರೈತರ ಆಕ್ರೋಶ: ಕಾರ್ಖಾನೆಗೆ ಹೊರಟಿದ್ದ 20 ಕ್ಕೂ ಅಧಿಕ ಕಬ್ಬಿನ ಟ್ರ್ಯಾಕ್ಟರ್‌ಗೆ ಬೆಂಕಿ!

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿದೆ. ತಮ್ಮ ಕಬ್ಬಿಗೆ ಸರಿಯಾದ ಬೆಲೆ ನೀಡಬೇಕೆಂದು ಒತ್ತಾಯಿಸಿ ರೈತರು ಬೀದಿಗಿಳಿದಿದ್ದಾರೆ. ಮಹಾಲಿಂಗಪುರ ಬಳಿ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ 20ಕ್ಕೂ ಹೆಚ್ಚು ಲಾರಿ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಗಡಿ ಮುಂಗಟ್ಟುಗಳೂ ಬಂದ್ ಆಗಿವೆ. ರೈತರು ಸಮೀರವಾಡಿ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದಾರೆ.

ವಿಜಯ ಕರ್ನಾಟಕ 13 Nov 2025 7:04 pm

ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರಿಗೆ ನೀತಿ ಆಯೋಗದಿಂದ ಪ್ರಶಂಸೆ

ಕಲಬುರಗಿ : ನೀತಿ ಆಯೋಗದಿಂದ ಗುರುತಿಸಲ್ಪಟ್ಟ ಜಿಲ್ಲೆಯ ಮಹತ್ವಕಾಂಕ್ಷೆಯ ತಾಲೂಕುಗಳಾದ ಅಫಜಲಪೂರ, ಶಹಾಬಾದ್‌ ಹಾಗೂ ಕಾಳಗಿ ಬ್ಲಾಕ್‌ಗಳಲ್ಲಿ ಸುಸ್ಥಿರ ಪ್ರಗತಿ ಸಾಧಿಸಲು ನವೀನ ಆಡಳಿತ ಮತ್ತು ಅಭಿವೃದ್ಧಿ ಉಪಕ್ರಮಗಳನ್ನು ಜಾರಿಗೊಳಿಸಿದ್ದಕ್ಕಾಗಿ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರಿಗೆ ನೀತಿ ಆಯೋಗವು ಪ್ರಶಂಸನೆ ವ್ಯಕ್ತಪಡಿಸಿದೆ. ಭಾರತ ಸರ್ಕಾರದ ರಾಜ್ಯಗಳಿಗೆ ನೀತಿ-ರಾಜ್ಯ ಬೆಂಬಲಿತ ಮಿಷನ್ ಅಡಿಯಲ್ಲಿ ಜಿಲ್ಲೆಯ ಬ್ಲಾಕ್‌ಗಳಲ್ಲಿ “ಸಮಗ್ರ ಶಿಕ್ಷಾ ಅಭಿಯಾನದ ಅಡಿಯಲ್ಲಿ ಉಪಕ್ರಮಗಳು” ಮತ್ತು “ಮಣ್ಣಿನ ಆರೋಗ್ಯವನ್ನು ಮರುಸ್ಥಾಪನೆ” ಹೀಗೆ ಎರಡು ವಲಯದಲ್ಲಿ ಜಿಲ್ಲೆಯ ಅಸಾಧಾರಣ ಅನುಷ್ಠಾನ ಸಾಧನ ಮತ್ತು ಉತ್ತಮ ಅಭ್ಯಾಸಗಳನ್ನು ಗುರುತಿಸಿ ನೀತಿ ಆಯೋಗವು ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರಿಗೆ ಪ್ರತ್ಯೇಕವಾಗಿ ಎರಡು ವಲಯದಲ್ಲಿನ ಸಾಧನೆಗೆ ನೀತಿ ಆಯೋಗದ ಸಿ.ಇ.ಓ ಅವರು ಮೆಚ್ಚುಗೆಯ ಪ್ರಮಾಣ ಪತ್ರಗಳನ್ನು ನೀಡಿದ್ದಾರೆ. ಶಿಕ್ಷಣ, ಕಲಿಕಾ ಫಲಿತಾಂಶಗಳು, ಡಿಜಿಟಲ್ ಕಲಿಕೆಯ ಪ್ರವೇಶ ಮತ್ತು ಸಮಗ್ರ ಶಾಲಾ ಅಭಿವೃದ್ಧಿಯನ್ನು ಬಲಪಡಿಸಲು ಕಲಬುರಗಿಯ ಪ್ರಯತ್ನ ಮತ್ತು ವಿನೂತನ ಉಪಕ್ರಮಗಳು ಅಳವಡಿಸಿಕೊಂಡಿದ್ದರಿಂದ “ಸಮಗ್ರ ಶಿಕ್ಷಾ ಅಭಿಯಾನದ” ಅಡಿಯಲ್ಲಿ ಮೆಚ್ಚಗೆಗೆ ಕಾರಣವಾಗಿದೆ. ಅದೇ ರೀತಿ ಕೃಷಿ ಮತ್ತು ಸಂಬಂಧಿತ ಸೇವೆಗಳನ್ನು ಸುಧಾರಿಸಿ ಸುಸ್ಥಿರ ಮಣ್ಣಿನ ನಿರ್ವಹಣೆ, ಕಾಲಮಿತಿಯಲ್ಲಿ ಅನ್ನದಾತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆ, ಸಾವಯವ ಕೃಷಿಗೆ ಪ್ರೋತ್ಸಾಹ ಮತ್ತು ಸುಧಾರಿತ ಕೃಷಿ ಉತ್ಪಾದಕತೆಗೆ ಜಿಲ್ಲೆಯ ಹೆಚ್ಚಿನ ಒತ್ತು ನೀಡಿದ್ದಕ್ಕಾಗಿ “ಮಣ್ಣಿನ ಆರೋಗ್ಯ ಪುನ:ಸ್ಥಾಪಿಸುವ” ವಿಭಾಗದಲ್ಲಿ ಜಿಲ್ಲೆ ಪ್ರಶಂಸನೆಗೆ ಒಳಗಾಗಿದೆ. ಇದು ಜಿಲ್ಲೆಯ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ, ನಾವೀನ್ಯತೆ-ಚಾಲಿತ ಆಡಳಿತಕ್ಕೆ ಜಿಲ್ಲೆಯ ಬದ್ಧತೆಯನ್ನು ಒತ್ತಿಹೇಳುತ್ತಿದೆ. ನೀತಿ ಫಾರ್ ಸ್ಟೇಟ್ಸ್-ಸ್ಟೇಟ್ ಸಪೋರ್ಟ್ ಮಿಷನ್ ಯೋಜನೆಯು ಭಾರತದ ಅಭಿವೃದ್ಧಿ ಗುರಿಗಳನ್ನು ವೇಗಗೊಳಿಸಲು ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ಜ್ಞಾನ ವಿನಿಮಯವನ್ನು ಉತ್ತೇಜಿಸುವ ಮೂಲಕ ಯಶಸ್ವಿ ಸ್ಥಳೀಯ ನಾವೀನ್ಯತೆಗಳನ್ನು ಗುರುತಿಸುವ ಮತ್ತು ಅಳೆಯುವ ಗುರಿಯನ್ನು ಹೊಂದಿದೆ. ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರ ನಾಯಕತ್ವ ಮತ್ತು ಅವರ ತಂಡದ ಸಮರ್ಪಿತ ಪ್ರಯತ್ನಗಳು ಮಹತ್ವಾಕಾಂಕ್ಷೆಯ ಜಿಲ್ಲೆಗಳು ಮತ್ತು ಬ್ಲಾಕ್‌ಗಳ ಕಾರ್ಯಕ್ರಮದ ಅಡಿಯಲ್ಲಿ ಪರಿವರ್ತನಾತ್ಮಕ ಮತ್ತು ಸುಸ್ಥಿರ ಅಭಿವೃದ್ಧಿಯತ್ತ ಶ್ರಮಿಸುತ್ತಿರುವ ಇತರ ಜಿಲ್ಲೆಗಳಿಗೆ ಸ್ಪೂರ್ತಿದಾಯಕವಾಗಿದೆ ಎಂದು ನೀತಿ ಆಯೋಗ ಪ್ರಶಂಸಿಸಿದೆ. ಶಿಕ್ಷಣ, ಆರೋಗ್ಯ, ಕೌಶಲ್ಯ, ಕೃಷಿ ಸೇರಿದಂತೆ ಜನರ ಜೀವನ ಮಟ್ಟದ ಸುಧಾರಣೆ ನಿಟ್ಟಿನಲ್ಲಿ ಮಹತ್ವಾಕಾಂಕ್ಷೆಯ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ತಾಲೂಕುಗಳಿಗೆ ಕಳೆದ ಆಗಸ್ಟ್-2024ರಲ್ಲಿ ನೀತಿ ಆಯೋಗವು ಡೆಲ್ಟಾ ರ‍್ಯಾಂಕ್-2024 ಘೋಷಿಸಿತ್ತು. ಅದರಲ್ಲಿ ದಕ್ಷಿಣ ಭಾರತ ವಲಯದಡಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕು ಎರಡನೇ ರ‍್ಯಾಂಕ್ ಪಡೆದಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಇದೇ ಜಿಲ್ಲಾಧಿಕಾರಿಗಳಿಗೆ 2023ರ ಲೋಕಸಭಾ ಚುನಾವಣೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸಿಸಿ, ಚುನಾವಣಾ ಆಯೋಗವು ರಾಷ್ಟ್ರಪತಿಗಳಿಂದ ಪ್ರಶಸ್ತಿ ನೀಡಿತ್ತು. ಇದೀಗ ಮತ್ತೊಂದು ಮೆಚ್ಚುಗೆ ಪಡೆಯುವ ಮೂಲಕ ಡಿ.ಸಿ ಅವರು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ವಾರ್ತಾ ಭಾರತಿ 13 Nov 2025 7:01 pm

ಇಎಸ್‌ಐ ನೌಕರರ ವೇತನ ಮಿತಿ ಹೆಚ್ಚಿಸಲು ಕೇಂದ್ರ ಸರಕಾರದಿಂದ ತಜ್ಞರ ಸಮಿತಿ ರಚನೆ: ಸಂಸದ ಕೋಟ

ಉಡುಪಿ: ನೌಕರರಿಗೆ ಇಎಸ್‌ಐ ಸೌಲಭ್ಯ ದೊರೆಯಲು ಇರುವ ಮಾಸಿಕ ವೇತನದ ಮಿತಿಯನ್ನು 21,000ರೂ.ಗಳಿಂದ 35,000ರೂ.ಗಳಿಗೆ ಹೆಚ್ಚಿಸಬೇಕೆಂಬ ತಮ್ಮ ಮನವಿಗೆ ಸ್ಪಂದಿಸಿರುವ ಕೇಂದ್ರ ಕಾರ್ಮಿಕ ಇಲಾಖೆ ವೇತನ ಮಿತಿ ಹೆಚ್ಚಳದ ಬಗ್ಗೆ ಪರಿಶೀಲಿಸಿ ವರದಿ ನೀಡಲು ತಜ್ಞರ ಸಮಿತಿಯೊಂದನ್ನು ರಚಿಸಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ನೌಕರರಿಗೆ ಆರೋಗ್ಯ ವಿಮೆಗೆ ಪೂರಕವಾಗಿ ಇಎಸ್‌ಐ ಸೌಲಭ್ಯ ದೊರೆಯುತಿದ್ದು, ಈ ಸೌಲಭ್ಯ ಪಡೆಯುತ್ತಿರುವ ಖಾಸಗಿ ವಲಯ ಮತ್ತು ಅರೆ ಸರಕಾರಿ ನೌಕರರ ವೇತನ ಕಾಲಕಾಲಕ್ಕೆ ಪರಿಷ್ಕರಣೆಯಾಗುತ್ತಿದ್ದರೂ, ಇಎಸ್‌ಐ ಸೌಲಭ್ಯ ಮಾಸಿಕ 21,000 ರೂ. ಒಳಗಿನ ವೇತನ ಪಡೆಯುವ ಸಿಬ್ಬಂದಿಗಳಿಗೆ ಮಾತ್ರ ಅನ್ವಯಿಸುತ್ತಿದೆ. ಅದಕ್ಕಿಂತ ಹೆಚ್ಚು ವೇತನ ಪಡೆಯುವವರು ಇಎಸ್‌ಐ ಸೌಲಭ್ಯದಿಂದ ವಂಚಿತರಾಗುತ್ತಿರುವುದರಿಂದ ಮಾಸಿಕ ವೇತನದ ಮಿತಿಯನ್ನು 35,000ರೂ.ಗೆ ಹೆಚ್ಚಿಸಬೇಕೆಂದು ಸಂಸದ ಕೋಟ, ಕೇಂದ್ರ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದ್ದರು. ಕೇಂದ್ರ ಇ.ಎಸ್.ಐ ಕಾರ್ಪೊರೇಷನ್ ಅಧ್ಯಕ್ಷರನ್ನೊಳಗೊಂಡು ವಿ.ವಿ ಗಿರಿ ರಾಷ್ಟ್ರೀಯ ಕಾರ್ಮಿಕ ನಿಗಮದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು, ಸಮಿತಿಯ ಶಿಫಾರಸುಗಳನ್ನು ನಿರೀಕ್ಷಿಸಿ ಇಎಸ್‌ಐ ವೇತನ ಹೆಚ್ಚಳದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಂದನಾ ಗುರ್ನಾನಿ ಅವರು ತಮಗೆ ಪತ್ರ ಮೂಲಕ ಮಾಹಿತಿ ನೀಡಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಮಿತಿಯು, ಕಾರ್ಮಿಕರ ಪರವಾಗಿ ಸಂಪೂರ್ಣವಾಗಿ ಸ್ಪಂದಿಸುವ ಭರವಸೆ ಇದೆ ಎಂದು ಉಡುಪಿ ಸಂಸದರ ಕಛೇರಿ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 13 Nov 2025 6:56 pm

ಕಲಬುರಗಿ | ಗೋದುತಾಯಿ ಕಾಲೇಜಿನಲ್ಲಿ ನಡೆದ ‘ಯುವ ಪ್ರತಿಭಾ ಸಂಭ್ರಮ’ಕ್ಕೆ ತೆರೆ

ಸರಕಾರಿ ಮಹಾವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ವಾರ್ತಾ ಭಾರತಿ 13 Nov 2025 6:53 pm