ಸುರಪುರ | ಈಜಲು ಹೋದ ಬಾಲಕ ನದಿಯಲ್ಲಿ ಮುಳುಗಿ ಮೃತ್ಯು
ಸುರಪುರ: ದೇವರ ಗಂಗಾ ಸ್ನಾನದ ಅಂಗವಾಗಿ ಕೃಷ್ಣಾ ನದಿಗೆ ತೆರಳಿದ್ದ ವೇಳೆ ಈಜಾಡಲು ಹೋಗಿ 17 ವರ್ಷದ ಬಾಲಕನೊರ್ವ ಮೃತಪಟ್ಟಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಪಟ್ಟಣದ ಗಡೆದುರ್ಗಮ್ಮ ದೇವಿಯ ಜಾತ್ರೆಯ ನಿಮಿತ್ತ ನೂರಾರು ಭಕ್ತರು ತಾಲೂಕಿನ ಶೆಳ್ಳಗಿ ಗ್ರಾಮದ ಸಮೀಪದ ಕೃಷ್ಣಾ ನದಿಗೆ ಗಂಗಾ ಸ್ನಾನಕ್ಕಾಗಿ ತೆರಳಿದ್ದರು. ಈ ವೇಳೆ ಯಾದಗಿರಿಯ ದುರ್ಗೇಶ್ (17) ಎಂಬ ಬಾಲಕ ತನ್ನ ಸ್ನೇಹಿತರೊಂದಿಗೆ ನದಿಯ ಮಧ್ಯಭಾಗಕ್ಕೆ ಈಜಾಡಲು ಹೋಗಿದ್ದಾನೆ. ಆ ಸಂದರ್ಭದಲ್ಲಿ ‘ಮೊಸಳೆ ಇದೆ’ ಎಂದು ಯಾರೋ ಕೂಗಿದ ಪರಿಣಾಮ ಭಯಗೊಂಡ ಬಾಲಕ ದಡದತ್ತ ಮರಳಲು ಯತ್ನಿಸುವಾಗ ಸುಳಿಗೆ ಸಿಲುಕಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಜಾತ್ರೆ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಯಾದಗಿರಿಯಿಂದ ಬಂದಿದ್ದ ಬಾಲಕ ಮೊದಲು ನೀರಿನಲ್ಲಿ ಕಾಣೆಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮಧ್ಯಾಹ್ನದವರೆಗೂ ಶೋಧ ಕಾರ್ಯ ನಡೆಸಿದರು. ಬಳಿಕ ಈಜು ತಜ್ಞ ಮೀನುಗಾರರು ಬಲೆ ಹಾಕಿ ಹುಡುಕಾಟ ನಡೆಸಿ, ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಬಾಲಕನ ಮೃತದೇಹವನ್ನು ಹೊರತೆಗೆದರು. ಘಟನೆ ಸ್ಥಳಕ್ಕೆ ಸುರಪುರ ಪೊಲೀಸ್ ಠಾಣೆಯ ಪಿ.ಐ ಉಮೇಶ್ ಎಂ. ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಅಗ್ನಿಶಾಮಕ ದಳದ ಎಎಫ್ಎಸ್ಓ ಸೋಮಶೇಖರ ವಣಕಿಹಾಳ ಸೇರಿದಂತೆ ಸಿಬ್ಬಂದಿಗಳಾದ ಶಿವಪ್ಪ, ಮೈನುದ್ದೀನ್, ವಿನೋದ್ ರೆಡ್ಡಿ, ಕೊಟ್ರೇಶ್, ಜಗದೀಶ್ ಮತ್ತು ರಾಕೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟ್ರಕ್ ನಿಂದ 400 ಕೋಟಿ ರೂ. ದರೋಡೆ ಪ್ರಕರಣ: ಆರೋಪವೇ ಸುಳ್ಳು ಎಂದ ಪೊಲೀಸರು!
ನಾಶಿಕ್: ಏಳು ಮಂದಿ ದುಷ್ಕರ್ಮಿಗಳು ತನ್ನನ್ನು ಅಪಹರಿಸಿ, ತನ್ನ ಮೇಲೆ ಹಲ್ಲೆ ನಡೆಸಿ, ನಗದನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ನಿಂದ 400 ಕೋಟಿ ರೂ. ಹಣವನ್ನು ದರೋಡೆ ಮಾಡಿದ್ದಾರೆ ಎಂದು ಟ್ರಕ್ ಚಾಲಕನೊಬ್ಬ ನೀಡಿದ್ದ ದೂರು ಸುಳ್ಳಾಗಿದ್ದು, ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸೋಮವಾರ ಮಹಾರಾಷ್ಟ್ರದ ನಾಶಿಕ್ ಗ್ರಾಮಾಂತರ ಪೊಲೀಸರು ವಿಸ್ತೃತ ತನಿಖೆಯ ನಂತರ ಸ್ಪಷ್ಟಪಡಿಸಿದ್ದಾರೆ. ಬಂಧಿತರಾಗಿದ್ದ ಎಲ್ಲ ಏಳು ಮಂದಿ ಆರೋಪಿಗಳನ್ನು ಇಗಟ್ಪುರಿ ನ್ಯಾಯಾಲಯ ಬಿಡುಗಡೆಗೊಳಿಸಿದ್ದು, ಸುಳ್ಳು ದೂರು ನೀಡಿದ ಆರೋಪದ ಮೇಲೆ ಟ್ರಕ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ. ಅಕ್ಟೋಬರ್ 22ರಂದು ಸದ್ಯ ಚಲಾವಣೆಯಿಂದ ಹಿಂಪಡೆಯಲಾಗಿರುವ 2000 ರೂ. ಮುಖಬೆಲೆಯ ನೋಟುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅನ್ನು ದಾರಿ ಮಧ್ಯೆ ತಡೆಹಿಡಿದ ಏಳು ಮಂದಿ ದುಷ್ಕರ್ಮಿಗಳು, ನನ್ನನ್ನು ಅಪಹರಿಸಿ, ನನ್ನ ಮೇಲೆ ಹಲ್ಲೆ ನಡೆಸಿ, ಟ್ರಕ್ ನಲ್ಲಿದ್ದ 400 ಕೋಟಿ ರೂ. ಮೊತ್ತವನ್ನು ದರೋಡೆ ಮಾಡಿದ್ದಾರೆ ಎಂದು ಸಂದೀಪ್ ಪಾಟೀಲ್ ಎಂಬ ಟ್ರಕ್ ಚಾಲಕ ನೀಡಿದ್ದ ದೂರನ್ನು ಆಧರಿಸಿ ತನಿಖೆ ಕೈಗೊಳ್ಳಲಾಗಿತ್ತು ಎಂದು ಘೋಟಿ ಪೊಲೀಸರು ತಿಳಿಸಿದ್ದಾರೆ. ನೆರೆಯ ರಾಜ್ಯವಾದ ಕರ್ನಾಟಕದ ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ನಲ್ಲಿ ನನ್ನ ಮೇಲೆ ಹಲ್ಲೆ ನಡೆಸಿದ್ದ ಏಳು ಮಂದಿ ದುಷ್ಕರ್ಮಿಗಳು, ಬಳಿಕ ಅಲ್ಲಿಂದ ಪರಾರಿಯಾಗಿದ್ದರು ಎಂದು ಸಂದೀಪ್ ಪಾಟೀಲ್ ದೂರು ನೀಡಿದ್ದ. ಇದರ ಬೆನ್ನಿಗೇ, ಕರ್ನಾಟಕ ರಾಜ್ಯ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಟ್ರಕ್ ನಲ್ಲಿ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹವಾಲಾ ಹಣವನ್ನು ಕೊಂಡೊಯ್ಯಲಾಗುತ್ತಿತ್ತು ಎಂದು ಸಂದೀಪ್ ಪಾಟೀಲ್ ದೂರು ನೀಡಿದ್ದ. ಅಲ್ಲದೆ, ಆತ ತಾನು ಅನುಭವಿಸಿದ ತೊಂದರೆಯನ್ನು ವಿವರಿಸಿ, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವೊಂದನ್ನು ಅಪ್ಲೋಡ್ ಕೂಡಾ ಮಾಡಿದ್ದ. ಈ ದೂರನ್ನು ಆಧರಿಸಿ ನಾವು ಏಳು ಮಂದಿಯನ್ನು ಬಂಧಿಸಿದ್ದೆವು. ಆದರೆ, ಸಂದೀಪ್ ಪಾಟೀಲ್ ಹೇಳಿದ ಕತೆ, ಮಾರ್ಗ, ಕರೆ ದಾಖಲೆಗಳು, ಸಮಯ ಎಲ್ಲದರಲ್ಲೂ ವ್ಯತ್ಯಯ ಕಂಡು ಬಂದಿತು” ಎಂದು ಅವರು ಹೇಳಿದ್ದಾರೆ. ಘೋಟಿ ಪೊಲೀಸರು ಬಂಧಿಸಿದ್ದ ಎಲ್ಲ ಏಳು ಮಂದಿ ಆರೋಪಿಗಳನ್ನು ಇಗಟ್ಪುರಿ ನ್ಯಾಯಾಲಯ ಬಿಡುಗಡೆಗೊಳಿಸಿದ್ದು, ಸುಳ್ಳು ದೂರಿಗೆ ಸಂಬಂಧಿಸಿದಂತೆ ನಾಶಿಕ್ ಗ್ರಾಮಾಂತರ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಬ್ಲ್ಯಾಕ್ಸ್ಪಾಟ್ಗಳಲ್ಲಿ ಫ್ಲೈಓವರ್: ಸಂಸದ ಕೋಟ
ರಾ.ಹೆದ್ದಾರಿ ಸರ್ವೀಸ್ ರಸ್ತೆ ಕಾಮಗಾರಿ ಪರಿಶೀಲನೆ
Yadgiri | ಕಾರ್ಮಿಕರು ಕೆಲಸದ ವೇಳೆ ಎಚ್ಚರಿಕೆ ಅಗತ್ಯ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
50 ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
Gold-Silver: ಬೆಳ್ಳಿ ಬೆಲೆ ಭಾರಿ ಕುಸಿತ, ಬಂಗಾರದ ದರವೂ ಜಾರುತ್ತಿದೆ: ಏರುತ್ತೆ ಅಂತ ತಗೊಂಡೋರು ಕಂಗಾಲು
ನವದೆಹಲಿ: ಭಾರತ ಮಾತ್ರವಲ್ಲದೇ, ಜಾಗತಿಕವಾಗಿ ಒಂದಷ್ಟು ಲಾಭವನ್ನೂ ನೀಡಿರುವ ಚಿನ್ನ ಮತ್ತು ಬೆಳ್ಳಿಯ ದರಗಳು ಸಾಕಷ್ಟು ಏರಿಳಿತದಿಂದ ಕೂಡಿವೆ. ಗರಿಷ್ಠ ಮಟ್ಟದಲ್ಲಿ ಹೆಚ್ಚಳ ಕಂಡಿದ್ದ ಈ ಎರಡೂ ಲೋಹಗಳು ಅಷ್ಟೇ ಗರಿಷ್ಠ ಪ್ರಮಾಣದಲ್ಲಿ ಇಳಿಕೆಯ ಹಾದಿ ಹಿಡಿದಿವೆ. ಕಡಿಮೆ ವಹೀವಾಟು ನಡೆಸುವ ಮೂಲಕ ಹೂಡಿಕೆದಾರರನ್ನು ಸಂಕಷ್ಟಕ್ಕೆ ನೂಕಿವೆ. ಆದ್ದರಿಂದ ಹೂಡಿಕೆ ಮಾಡುವ ಮುನ್ನ ಮಾರುಕಟ್ಟೆಯ ಗ್ರಾಫ್, ದರ
ಎಸ್ಐಆರ್ ವಿರುದ್ಧ ಜನಾಂದೋಲನ ಅತ್ಯಗತ್ಯ: ಡಾ. ವಾಸು ಎಚ್.ವಿ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ವಿಚಾರ ಸಂಕಿರಣ
ಟಿ-20 ವಿಶ್ವಕಪ್ : ಆಸ್ಟ್ರೇಲಿಯ ತಂಡಕ್ಕೆ ಸ್ಟೀವ್ ಸ್ಮಿತ್ ಸೇರ್ಪಡೆಗೆ ICC ಅನುಮತಿ
ಹೊಸದಿಲ್ಲಿ: ಆಸ್ಟ್ರೇಲಿಯ ಕ್ರಿಕೆಟ್ ತಂಡಕ್ಕೆ ವೇಗದ ಬೌಲರ್ ಜೋಶ್ ಹೇಝಲ್ವುಡ್ ಬದಲಿಗೆ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಸೇರ್ಪಡೆಗೆ ಐಸಿಸಿ ಪುರುಷರ ಟಿ-20 ವಿಶ್ವಕಪ್ನ ಈವೆಂಟ್ ಟೆಕ್ನಿಕಲ್ ಕಮಿಟಿ ಸೋಮವಾರ ಅನುಮೋದನೆ ನೀಡಿದೆ. ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಹೇಝಲ್ವುಡ್ ಕಳೆದ ತಿಂಗಳು ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದು, ಆ ಸಮಯದಲ್ಲಿ ಆಸ್ಟ್ರೇಲಿಯ ತಕ್ಷಣವೇ ಬದಲಿ ಆಟಗಾರರನ್ನು ನೇಮಿಸಿರಲಿಲ್ಲ. ಬಲಗೈ ಬ್ಯಾಟರ್ ಸ್ಮಿತ್ ಇತ್ತೀಚೆಗೆ ಶ್ರೀಲಂಕಾಕ್ಕೆ ಆಗಮಿಸಿದ ನಂತರ ರವಿವಾರ ಕ್ಯಾಂಡಿಯಲ್ಲಿ ತನ್ನ ತಂಡದೊಂದಿಗೆ ಅಭ್ಯಾಸ ನಡೆಸಿದರು. ಗಾಯದ ಸಮಸ್ಯೆಯ ಕಾರಣಕ್ಕೆ ಆಸ್ಟ್ರೇಲಿಯ ಆಡಿದ್ದ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಬದಲಿಗೆ ಸ್ಮಿತ್ ತಂಡವನ್ನು ಸೇರಿಕೊಂಡಿದ್ದರು. ಮಾರ್ಷ್ ರವಿವಾರ ಅಭ್ಯಾಸದಲ್ಲಿ ಭಾಗಿಯಾಗಿದ್ದು, ರನ್ನಿಂಗ್ ಹಾಗೂ ಫೀಲ್ಡಿಂಗ್ ಕಸರತ್ತಿನ ವೇಳೆ ಸಲೀಸಾಗಿ ಓಡುತ್ತಿರುವುದು ಕಂಡುಬಂದಿದೆ. ಝಿಂಬಾಬ್ವೆ ತಂಡದ ವಿರುದ್ಧ ಸೋತಿರುವ ಆಸ್ಟ್ರೇಲಿಯ ತಂಡವು ‘ಬಿ’ಗುಂಪಿನಲ್ಲಿ ಮೂರನೇ ಸ್ಥಾನದಲ್ಲಿದೆ. ಸೂಪರ್-8 ಹಂತಕ್ಕೇರುವ ಉತ್ತಮ ಅವಕಾಶಕ್ಕಾಗಿ ಉಳಿದಿರುವ ಎರಡೂ ಗ್ರೂಪ್ ಪಂದ್ಯಗಳಲ್ಲಿ ಗೆಲ್ಲುವ ಅವಶ್ಯಕತೆ ಇದೆ. ಪಂದ್ಯಕ್ಕಿಂತ ಮೊದಲು ತಂಡದಲ್ಲಿ ಯಾವುದೇ ಬದಲಾವಣೆ ಮಾಡಲು ಈವೆಂಟ್ ಟೆಕ್ನಿಕಲ್ ಕಮಿಟಿಯ ಅನುಮೋದನೆ ಅಗತ್ಯವಿದೆ ಎಂದು ಐಸಿಸಿ ಪಂದ್ಯಾವಳಿಯ ನಿಯಮಗಳು ಹೇಳುತ್ತವೆ. ಹೀಗಾಗಿ ಸ್ಮಿತ್ ಇದೀಗ ಆಸ್ಟ್ರೇಲಿಯದ 15 ಸದಸ್ಯರ ತಂಡಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದಾರೆ.
T20 ವಿಶ್ವಕಪ್ | ಯುಎಇ ವಿರುದ್ಧ ಅಫ್ಘಾನಿಸ್ತಾನಕ್ಕೆ ಜಯ; ಸೂಪರ್-8 ವಿಶ್ವಾಸ ಜೀವಂತ
ಅಝ್ಮತುಲ್ಲಾ ಉಮರ್ಝೈ ಆಲ್ರೌಂಡ್ ಆಟ
ಕಂದಾಯ ಅಧಿಕಾರಿಗಳ ಕತ೯ವ್ಯಕ್ಕೆ ಅಡ್ಡಿ ಆರೋಪ: ಹೋರಾಟಗಾರ ಅಲ್ಫೋನ್ಸ್ ಡಿಸೋಜಾ ಸೆರೆ
ಮೂಡುಬಿದಿರೆ: ಕಂದಾಯ ಅಧಿಕಾರಿಗಳ ಕತ೯ವ್ಯಕ್ಕೆ ಅಡ್ಡಿ, ವಿಷದ ಬಾಟಲಿ ಹಿಡಿದುಕೊಂಡು ಆತ್ಮಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತ, ಸ್ಟೆರ್ ಲೈಟ್ ಕಂಪನಿ ವಿರುದ್ಧದ ಹೋರಾಟಗಾರ, ರೈತ ಮುಖಂಡ ಅಲ್ಫೋನ್ಸ್ ಡಿಸೋಜ ಅವರನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಅಲ್ಫೋನ್ಸ್ ಡಿ'ಸೋಜ ಅವರು ಮನೆಯಲ್ಲಿ ಶನಿವಾರ ಗೈರುಹಾಜರಿದ್ದ ವೇಳೆ ಸ್ಟೆರ್ ಲೈಟ್ ಕಂಪನಿ ಸಿಬ್ಬಂದಿಗಳು ಪೊಲೀಸ್ ಭದ್ರತೆಯೊಂದಿಗೆ ಗದ್ದೆಗೆ ಪ್ರವೇಶಿಸಿ ಮರಗಳನ್ನು ಕಡಿದು, ಭತ್ತದ ಬೆಳೆ ಹಾನಿಗೊಳಿಸಿದ್ದಾರೆ ಎಂದು ಆರೋಪಿಸಿ ಕಂಪನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದರು. ಸೋಮವಾರ ಕಂದಾಯ ಅಧಿಕಾರಿಗಳು ಮತ್ತೆ ಸ್ಥಳಕ್ಕೆ ಭೇಟಿ ನೀಡಿದಾಗ ವಿಷದ ಬಾಟಲಿ ಹಿಡಿದುಕೊಂಡು ಆತ್ಮಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ ಪರಿಣಾಮ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ಬಂಧಿಸಿದ್ದಾರೆ. ಇದಕ್ಕೂ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅಲ್ಫೋನ್ಸ್ ಅವರು “ಬೆಳೆ ಕಟಾವು ಮಾಡಲು ಒಂದು ತಿಂಗಳ ಕಾಲಾವಕಾಶ ನೀಡಿರಿ” ಎಂದು ಮನವಿ ಮಾಡಿದರೂ ಸಹ ಕೇಳಿಸಿಕೊಳ್ಳಲಿಲ್ಲ ಬಿತ್ತನೆ ಬಿಡುವ ಹಂತದಲ್ಲಿದ್ದ ಫಲವತ್ತಾದ ಭತ್ತದ ಬೆಳೆ ನಾಶಪಡಿಸಲಾಗಿದೆ. ಈ ಬಗ್ಗೆ ತಾನು ಪೊಲೀಸರಿಗೆ ದೂರು ನೀಡಿ ಕೆಲಸ ತಾತ್ಕಾಲಿಕ ವಾಗಿ ನಿಲ್ಲಿಸುವಂತೆ ಸೂಚಿಸಿದ್ದರೂ, ತಮ್ಮ ಗೈರುಹಾಜರಿಯಲ್ಲಿ ಮತ್ತೆ ಕೆಲಸ ಆರಂಭಿಸಲಾಗಿದೆ ಎಂದು ದೂರಿ ದ್ದಾರೆ. ಯಾವುದೇ ಮುಂಚಿತ ನೋಟಿಸ್ ನೀಡದೇ, ಪರಿಹಾರ ಮೊತ್ತದ ಬಗ್ಗೆ ಮಾತುಕತೆ ನಡೆಸದೇ ಕ್ರಮ ಕೈಗೊಳ್ಳಲಾಗಿದೆ. ನಾನು ಅನಾರೋಗ್ಯದಿಂದ ಬಳಲುತ್ತಿದ್ದು, ಜೀವಕ್ಕೆ ಏನಾದರೂ ಆದಲ್ಲಿ ಅದಕ್ಕೆ ಸ್ಟೆರ್ ಲೈಟ್ ಕಂಪೆನಿಯೇ ನೇರ ಹೊಣೆ ಎಂದು ತಿಳಿಸಿದ್ದರು. ಈ ಕುರಿತು ಕಮಿಷನರ್ ಸುಧೀರ್ ರೆಡ್ಡಿ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದು, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಅವರು ಆಗ್ರಹಿಸಿದ್ದರು.
ಪಶ್ಚಿಮ ಬಂಗಾಳ SIR : ಅಧಿಕಾರ ದುರ್ಬಳಕೆ ಆರೋಪದಲ್ಲಿ ಏಳು ಚುನಾವಣಾ ಅಧಿಕಾರಿಗಳ ಅಮಾನತು
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಂದರ್ಭದಲ್ಲಿ ಗಂಭೀರ ದುರ್ನಡತೆ,ಕರ್ತವ್ಯಲೋಪ ಮತ್ತು ಶಾಸನಬದ್ಧ ಅಧಿಕಾರಗಳ ದುರುಪಯೋಗದ ಆರೋಪದಲ್ಲಿ ಚುನಾವಣಾ ಆಯೋಗವು ರಾಜ್ಯದ ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದೆ ಎಂದು ಸುದ್ದಿಸಂಸ್ಥೆಯು ಸೋಮವಾರ ವರದಿ ಮಾಡಿದೆ. ಅಮಾನತುಗೊಂಡವರು ರಾಜ್ಯ ಸರಕಾರಿ ನೌಕರರಾಗಿದ್ದು,ಚುನಾವಣಾ ಆಯೋಗಕ್ಕಾಗಿ ಸಹಾಯಕ ನೋಂದಣಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ಪರಿಷ್ಕರಣೆ ಸೇರಿದಂತೆ ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಲು ಅವರನ್ನು ನಿಯೋಜಿಸಿತ್ತು. ಈ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮವನ್ನು ಆರಂಭಿಸುವಂತೆ ಚುನಾವಣಾ ಆಯೋಗವು ಪ.ಬಂಗಾಳದ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿಯವರಿಗೆ ಸೂಚಿಸಿದೆ.
Yadgiri | ರಕ್ತದಾನ ಶಿಬಿರ ಕಾರ್ಯಕ್ರಮ
ದಾನಧರ್ಮ ಸಮಾಜಕ್ಕೆ ದಿಕ್ಕು ತೋರಿಸುವುದು : ಖಾಸಮಠ ಶ್ರೀ
ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆ: 25 ಲಕ್ಷ ಮಹಿಳೆಯರಿಗೆ ತಲಾ 10,000 ರೂ. ವರ್ಗಾಯಿಸಿದ ಬಿಹಾರ ಸಿಎಂ
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ವಯಂ ಉದ್ಯೋಗದ ಮೂಲಕ ಜೀವನೋಪಾಯ ಕಂಡುಕೊಳ್ಳುವುದನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆಯ ಭಾಗವಾಗಿ ಸೋಮವಾರ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳನ್ನು ವರ್ಗಾವಣೆಗೊಳಿಸಿದರು. ನೇರ ಲಾಭ ವರ್ಗಾವಣೆಯ ಒಟ್ಟು ಮೊತ್ತ 2,500 ಕೋಟಿ ರೂ.ಗಳಾಗಿವೆ. ಪ್ರಧಾನಿ ನರೇಂದ್ರ ಮೋದಿಯವರು ಸೆ.2025ರಲ್ಲಿ ಚಾಲನೆ ನೀಡಿದ್ದ ಯೋಜನೆಯಡಿ ಈ ಹಿಂದೆ 1.81 ಕೋಟಿ ಮಹಿಳೆಯರು ತಲಾ 10,000 ರೂ.ಗಳನ್ನು ಸ್ವೀಕರಿಸಿದ್ದಾರೆ. ಸಣ್ಣ ಉದ್ಯಮಗಳು,ವೃತ್ತಿ ತರಬೇತಿ ಮತ್ತು ಇತರ ಜೀವನೋಪಾಯ ಚಟುವಟಿಕೆಗಳಿಗೆ ಮೂಲಧನವನ್ನು ಒದಗಿಸುವ ಮೂಲಕ ಮಹಿಳೆಯರ ಸಬಲೀಕರಣ ಈ ಯೋಜನೆಯ ಉದ್ದೇಶವಾಗಿದೆ. ವ್ಯವಹಾರ ಸ್ಥಾಪನೆಗಾಗಿ ಈ ಮೂಲಧನವನ್ನು ಬಳಸಿ ಯಶಸ್ಸು ಸಾಧಿಸುವ ಆಯ್ದ ಫಲಾನುಭವಿಗಳು ಹೆಚ್ಚುವರಿಯಾಗಿ ಎರಡು ಲಕ್ಷ ರೂ.ಗಳ ಆರ್ಥಿಕ ನೆರವನ್ನು ಪಡೆಯಲು ಅರ್ಹರಾಗಬಹುದು ಎಂದು ಅಧಿಕಾರಿಗಳು ತಿಳಿಸಿದರು.
ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ
ಶಿರ್ವ: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ತಾಲೂಕು ಘಟಕದ ವತಿಯಿಂದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸನ್ಮಾನ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಜೇತ ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾ ಪೋಷಕರಿಗೆ ಅಭಿನಂದನಾ ಕಾರ್ಯಕ್ರಮ ಶನಿವಾರ ಕಟಪಾಡಿ ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ ವಸಿದ್ದರು. ಕಾರ್ಯಕ್ರಮವನ್ನು ಕಟಪಾಡಿ ಎಸ್ವಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸತ್ಯೇಂದ್ರ ಪೈ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಅಮೆಚೂರ್ ಅತ್ಲೇಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ಸಮಾಜ ಸೇವಕ ಯೋಗೀಶ್ ಶೆಟ್ಟಿ, ಕಟಪಾಡಿ ಗ್ರಾ.ಪಂ. ಅಧ್ಯಕ್ಷೆ ಪ್ರಭಾ ಬಿ.ಶೆಟ್ಟಿ, ಕಾಪು ತಾಲೂಕು ಕನ್ನಡ ಸಾತ್ಯ ಪರಿಷತ್ತು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ನಿವೃತ್ತರಾದ ದೈ.ಶಿ.ಶಿಕ್ಷಕ ಪ್ರವೀಣ್ ಕುಮಾರ್ ಕಡಿಯಾಳಿ, ಕಮಲಾ ಬಾ ಪ್ರೌಢ ಶಾಲಾ ದೈ.ಶಿ.ಶಿಕ್ಷಕ ಸುದರ್ಶನ್ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಉಡುಪಿ ವಲಯದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ವಿಜೇತ ಕ್ರೀಡಾ ಪಟುಗಳಿಗೆ ಹಾಗೂ ಕ್ರೀಡಾ ಪೋಷಕರಿಗೆ ಸನ್ಮಾನಿಸಲಾಯಿತು. ಕಾಪು ತಾಲೂಕು ಯುವಜನ ಸೇವಾ ಕ್ರೀಡಾ ಇಲಾಖೆ ಅಧಿಕಾರಿ ರಿತೇಶ್ ಶೆಟ್ಟಿ ಸೂಡ, ಎಸ್ವಿಎಸ್ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಜಯಲಕ್ಷ್ಮೀ ಶಾನುಭೋಗ್, ಗ್ರೇಡ್ 2 ಸಂಘದ ಜಯಲಕ್ಷ್ಮೀ, ಗ್ರೇಡ್ 1 ಸಂಘದ ಕಾರ್ಯದರ್ಶಿ ಪ್ರಸಾದ್ ಸುವರ್ಣ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರೀಕ್ಷಣಾಧಿಕಾರಿ ರವೀಂದ್ರ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಶಿವನಗೌಡ ಹಿರೇಗೌಡರ ವಂದಿಸಿದರು. ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Yadgiri | ಕೃಷಿ, ಗ್ರಾಮೀಣ ಕಾರ್ಮಿಕರ ಸಂಘದ 9ನೇ ರಾಜ್ಯ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ
ಶಹಾಪುರ: ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ 9ನೇ ರಾಜ್ಯ ಸಮ್ಮೇಳನದ ಸ್ವಾಗತ ಸಮಿತಿಯ ಸಭೆ ಫೆ.15ರಂದು ಶಹಾಪುರದ ಸರ್ಕಾರಿ ನೌಕರರ ಭವನದಲ್ಲಿ ನಡೆಯಿತು. ಸಭೆಗೆ ಚೆನ್ನಪ್ಪ ಆನೆಗುಂದಿ ಅಧ್ಯಕ್ಷತೆ ವಹಿಸಿದರು. ಸಭೆಯಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೋಸ್ಕೆರ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ಕೂಲಿಕಾರರ ವಿರೋಧಿ ನೀತಿಗಳಿಂದ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತು ಅವರು ವಿವರಿಸಿದರು. ಉದ್ಯೋಗ ಖಾತ್ರಿ ಯೋಜನೆಯನ್ನು ಪುನರ್ಸ್ಥಾಪಿಸಿ, ಜಿ ರಾಮ್ ಜಿ ಸ್ಕೀಂ ಕೈಬಿಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಮೂರು ವರ್ಷಕ್ಕೊಮ್ಮೆ ನಡೆಯುವ ರಾಜ್ಯ ಸಮ್ಮೇಳನಗಳ ಮಹತ್ವ, ಸಂಘಟನೆ ವಿಸ್ತರಣೆ ಹಾಗೂ ಕೃಷಿ ಕೂಲಿಕಾರರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಸಂಘ ಹೋರಾಟ ನಡೆಸುತ್ತಿರುವುದನ್ನು ಅವರು ತಿಳಿಸಿದರು. ಈ ವೇಳೆ 9ನೇ ರಾಜ್ಯಮಟ್ಟದ ಸಮ್ಮೇಳನದ ಸ್ವಾಗತ ಸಮಿತಿ ರಚಿಸಲಾಯಿತು. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಹಣಮೇಗೌಡ ಬಿರನಕಲ್, ಪ್ರಧಾನ ಕಾರ್ಯದರ್ಶಿಯಾಗಿ ದಾವಲ್ ಸಾಬ್ ನದಾಫ್, ಗೌರವಾಧ್ಯಕ್ಷರಾಗಿ ಗಿರಿಯಪ್ಪ ಗೌಡ ಬಾಣತಿಯಾಳ್, ಮಹಾಪೋಷಕರಾಗಿ ಚೆನ್ನಪ್ಪ ಆನೆಗುಂದಿ, ಉಪಾಧ್ಯಕ್ಷರಾಗಿ ಆರ್. ಚನ್ನಬಸ್ಸು ಹಾಗೂ ಖಜಾಂಚಿಯಾಗಿ ಅಯ್ಯಪ್ಪ ಅನಸೂರ್ ಅವರನ್ನು ಆಯ್ಕೆ ಮಾಡಲಾಯಿತು. ಸ್ವಾಗತ ಸಮಿತಿಯ ಸದಸ್ಯರಾಗಿ ಅವದಬಿನ್ ಅಮರ್ ಚಾವುಸ್, ಮುಸ್ತಫಾ ದರ್ಪನ್, ಬಸಲಿಂಗಮ್ಮ ನಾಟಕಕಾರ, ಈರಮ್ಮ ಹಯ್ಯಳಕರ್, ರಂಗಣ್ಣ ಹಯ್ಯಳಕರ್, ರಂಗಮ್ಮ ಕಟ್ಟಿಮನಿ, ಮಮ್ತಾಜ್ ಬೇಗಂ, ಮಾದೇವಪ್ಪ ಪ್ಯಾಪ್ಲಿ, ಮುದುಕಮ್ಮ ಪೂಜಾರಿ, ನಿಂಗಪ್ಪ ಕುರ್ಕುಂದ, ದೇವಪ್ಪ ಹಳ್ಳಿ, ಆಂಬ್ಲಯ್ಯ ಬೇವಿನಕಟ್ಟಿ, ಶಿವಪ್ಪ ಭಜಂತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಏಕಕಾಲಕ್ಕೆ ರಾಜ್ಯದ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ
ಬೆಂಗಳೂರು : ರಾಜ್ಯದ ಧಾರವಾಡ ಹೈಕೋರ್ಟ್ ಪೀಠ, ಹಾವೇರಿ, ಕೊಡಗು, ರಾಮನಗರ ಸೇರಿದಂತೆ ಹಲವು ನ್ಯಾಯಾಲಯಗಳಿಗೆ ಸೋಮವಾರ ಏಕಕಾಲಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ಕೆಲ ಕಾಲ ಕೋರ್ಟಿನ ಕಲಾಪಗಳನ್ನು ಮೊಟಕುಗೊಳಿಸಲಾಯಿತು. ಇಲ್ಲಿನ ಧಾರವಾಡ ಹೈಕೋರ್ಟ್ ಪೀಠಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಆಗಮಿಸಿದ ಗರಗ ಠಾಣೆ ಪೊಲೀಸರು, ಬಾಂಬ್ ನಿಷ್ಕ್ರೀಯ ದಳ, ಅಗ್ನಿಶಾಮಕ ದಳದ ಸಿಬ್ಬಂದಿ, ಹಾಜರಿದ್ದ ಕಕ್ಷಿದಾರರು, ವಕೀಲರನ್ನು ಹೊರ ಕಳುಹಿಸಿ ಪರಿಶೀಲನೆ ನಡೆಸಿದರು. ಘಟನೆ ಕುರಿತು ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿವೊಬ್ಬರು, ಇ-ಮೇಲ್ ಸಂದೇಶದಲ್ಲಿ ಮಧ್ಯಾಹ್ನ 1.15 ಗಂಟೆ ಸುಮಾರಿಗೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಲಾಗಿದೆ. ಜತೆಗೆ, ಎಫ್ಐಆರ್ ದಾಖಲು ಮಾಡಲಾಗಿದ್ದು ತನಿಖೆ ಕೈಗೊಳ್ಳಲಾಗುವುದು ಎಂದರು. ಇನ್ನೊಂದೆಡೆ, ಧಾರವಾಡದ ಜಿಲ್ಲಾ ಕೋರ್ಟ್ಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿ ಹಿನ್ನೆಲೆ ಅಲ್ಲಿಯೂ ವಕೀಲರು, ನ್ಯಾಯಾಧೀಶರು, ಹಾಗೂ ಕಕ್ಷಿದಾರರನ್ನು ಹೊರಗೆ ಕಳುಹಿಸಿ, ಪೊಲೀಸರು ತಪಾಸಣೆ ನಡೆಸಿದರು. ಇದೇ ಮಾದರಿಯಲ್ಲಿ ಸೋಮವಾರ ಕೊಡಗಿನ ಜಿಲ್ಲಾ ನ್ಯಾಯಾಲಯಕ್ಕೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯದ ಆವರಣವನ್ನು ಪರಿಶೀಲನೆ ನಡೆಸಿದರು. ಕೊಡಗಿನ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಇ–ಮೇಲ್ ಮೂಲಕ ಬೆದರಿಕೆ ಬಂದಿದ್ದು, ಇದರಿಂದ ನ್ಯಾಯಾಧೀಶರು ಹಾಗೂ ವಕೀಲರು ಭಯಭೀತರಾಗಿ ನ್ಯಾಯಾಲಯದಿಂದ ಹೊರಗೆ ಬಂದರು. ತಕ್ಷಣ ಬಾಂಬ್ ನಿಷ್ಕ್ರೀಯ ದಳ ಹಾಗೂ ಪೊಲೀಸರು ನ್ಯಾಯಾಲಯಕ್ಕೆ ಆಗಮಿಸಿ ತಪಾಸಣೆ ನಡೆಸಿದರು. ಕಲಾಪ ಸ್ಥಗಿತ: ಇತ್ತ ದಾವಣಗೆರೆ ಜಿಲ್ಲಾ ಕೋರ್ಟ್ಗೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಇ-ಮೇಲ್ ಬಂದ ಕಾರಣ ಕೋರ್ಟ್ ಕಲಾಪ ಸದ್ಯಕ್ಕೆ ಸ್ಥಗಿತಗೊಳಿಸಲಾಯಿತು. ಈ ಕುರಿತು ಪ್ರತಿಕ್ರಿಯಿಸಿದ ಸ್ಥಳೀಯ ಪೊಲೀಸರು, ನ್ಯಾಯಾಧೀಶರಿಗೆ ಬಂದ ಇ-ಮೇಲ್ ಸಂದೇಶದಲ್ಲಿ ನಿಮ್ಮ ನ್ಯಾಯಾಲಯದ ನ್ಯಾಯಾಧೀಶರ ಕೊಠಡಿಯಲ್ಲಿ 12 ಆರ್ಡಿಎಕ್ಸ್ ಐಇಡಿಗಳನ್ನು ಇರಿಸಲಾಗಿದೆ. ಅದು ಶೀಘ್ರದಲ್ಲೇ ಸ್ಪೋಟಗೊಳ್ಳಲಿದೆ ಎಂದು ತಿಳಿಸಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಕೋರ್ಟ್ ಬಳಿ ಬಡಾವಣೆ ಠಾಣೆಯ ಪೊಲೀಸರು ಜಮಾಯಿಸಿ, ಶ್ವಾನದಳದಿಂದ ತಪಾಸಣೆ ನಡೆಸಲಾಯಿತು. ಕೌಟುಂಬಿಕ ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ ಮೇಲ್ ಬಂದಿದೆ ಎಂದರು. ಮಂಡ್ಯ ನಗರದ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ವಕೀಲರು ಹಾಗೂ ಕಕ್ಷಿದಾರರು ಕೆಲ ಕಾಲ ನ್ಯಾಯಾಲಯದ ಹೊರಗೆ ಬಂದು ಕಲಾಪದಿಂದ ದೂರ ಉಳಿದರು. ಬಾಂಬ್ ಬೆದರಿಕೆಯಿಂದ ಸ್ಥಳದಲ್ಲಿದ್ದ ನೂರಾರು ವಕೀಲರು, ಕಕ್ಷಿದಾರರದಲ್ಲಿ ಆತಂಕ ಮನೆ ಮಾಡಿತ್ತು. ತಕ್ಷಣ ಮಾಹಿತಿ ತಿಳಿದ ಪೊಲೀಸರು, ಸ್ಥಳೀಯ ಶ್ವಾನದಳ, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಫ್ಯಾಕ್ಸ್ ಮೂಲಕ ಬಾಂಬ್ ಬೆದರಿಕೆ: ಹಾವೇರಿ ಜಿಲ್ಲಾ ಕೋರ್ಟ್ಗೂ ಫ್ಯಾಕ್ಸ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಕೂಡಲೇ ಸಿಬ್ಬಂದಿಯನ್ನು ಹೊರ ಕಳುಹಿಸಿದ ಪೊಲೀಸರು, ಪರಿಶೀಲನೆ ನಡೆಸಿದರು. ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರೀಯ ದಳ ತಂಡ ಆವರಣ, ಹಾಗೂ ಕೋರ್ಟ್ ಕಟ್ಟಡವನ್ನು ಪರಿಶೀಲನೆ ನಡೆಸಿದರು.
Yadgiri | ತಡೆಗೋಡೆ ಇಲ್ಲದ ರಾಜ್ಯ ಹೆದ್ದಾರಿ: ಉಮೇಶ್ ಮುದ್ನಾಳ್ ಆಕ್ರೋಶ
ಒಂದು ವಾರ ಗಡುವು: ಕ್ರಮ ಕೈಗೊಳ್ಳದಿದ್ದರೆ ರಸ್ತೆ ತಡೆದು ಪ್ರತಿಭಟನೆ ಎಚ್ಚರಿಕೆ
ಸಾಲಿಹಾತ್ ಶಿಕ್ಷಣ ಸಂಸ್ಥೆಯ ಫುಡ್ ಕೋರ್ಟ್ ಉದ್ಘಾಟನೆ
ಉಡುಪಿ, ಫೆ.16: ತೋನ್ಸೆ - ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಆಹಾರದ ವ್ಯವಸ್ಥೆ ನೀಡಲು ಹೊಸದಾಗಿ ನಿರ್ಮಿಸಿರುವ ಫುಡ್ ಕೋರ್ಟ್ನ ಉದ್ಘಾಟನೆ ಇತ್ತೀಚೆಗೆ ನಡೆಯಿತು. ನೂತನ ಕಟ್ಟಡವನ್ನು ಉದ್ಘಾಟಿಸಿದ ಜಮಾಆತೇ ಇಸ್ಲಾಮೀ ಹಿಂದ್ನ ರಾಷ್ಟ್ರೀಯ ಉಪಾಧ್ಯಕ್ಷ ಅಮೀನುಲ್ ಹಸನ್ ಮಾತನಾಡಿ, ಮಕ್ಕಳು ಹಸಿದಾಗ ಸೂಕ್ತ ಸಮಯದಲ್ಲಿ ಆಹಾರ ಒದಗಿಸಿದರೆ, ಪಾಠವನ್ನು ಸರಿಯಾಗಿ ಆಲಿಸುತ್ತಾರೆ. ಆಗ ಮಾತ್ರ ಶಿಕ್ಷಣ ಪರಿಪೂರ್ಣವಾಗುತ್ತದೆ ಎಂದು ಹೇಳಿದರು. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಇದ್ರಿಸ್ ಹೂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಶಿಕ್ಷಣ ಸಂಸ್ಥೆಯ ಹಿರಿಯ ಟ್ರಸ್ಟಿ ಮೌಲಾನ ಆದಂ ಸಾಹೇಬ್, ಖಜಾಂಚಿ ಜನಾಬ್ ಅಬ್ದುಲ್ ಕಾದರ್, ಜಮಾಆತೇ ಇಸ್ಲಾಮೀ ಹಿಂದ್ ಉಡುಪಿ ಜಿಲ್ಲಾ ಸಂಚಾಲಕ ಡಾ.ಅಬ್ದುಲ್ ಅಜೀಜ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಎಂ.ಎ.ಮೌಲಾ, ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಮುಂತಾದವರು ಉಪಸ್ಥಿತರಿದ್ದರು. ಶಾಲಾ ವಿಭಾಗದ ಅಕಾಡೆಮಿ ಮುಖ್ಯಸ್ಥ ಹಾಸಿಬ್ ತರಫ್ ದರ್ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟಿ ನಿಹಾಲ್ ಕಿದಿಯೂರ್ ವಂದಿಸಿದರು.
‘ಇಂಡಿಯಾ’ ಮೈತ್ರಿಕೂಟವನ್ನು ಮಮತಾ ಬ್ಯಾನರ್ಜಿ ಮುನ್ನಡೆಸಬೇಕು: ಮನಮೋಹನ್ ಸಿಂಗ್ರ ಮಾಜಿ ಸಲಹೆಗಾರ
ಹೊಸದಿಲ್ಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಪಕ್ಷ ಮೈತ್ರಿಕೂಟ ‘ಇಂಡಿಯಾ’ವನ್ನು ಮುನ್ನಡೆಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ ಬಾರು ಹೇಳಿದ್ದಾರೆ. ‘‘ಪ್ರಸಕ್ತ ಒಂದು ರಾಜಕೀಯ ಪಕ್ಷ ಮತ್ತು ಸರಕಾರವೊಂದರ ಮುಖ್ಯಸ್ಥರಾಗಿರುವ ಏಕೈಕ ಮಹಿಳೆಯಾಗಿರುವ ಮಮತಾ ಬ್ಯಾನರ್ಜಿ, ರಾಷ್ಟ್ರ ಮತ್ತು ಪ್ರಾದೇಶಿಕ ಮಟ್ಟಗಳಲ್ಲಿ ಹಾಲಿ ತಲೆಮಾರಿನ ನಾಯಕರಿಗಿಂತ ಭಿನ್ನವಾಗಿದ್ದಾರೆ’’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅವರು ‘‘ಸಂಪೂರ್ಣವಾಗಿ ಸ್ವಂತ ಪರಿಶ್ರಮದಿಂದ ರೂಪುಗೊಂಡಿರುವ ಮೊದಲ-ತಲೆಮಾರಿನ ನಾಯಕಿ’’ಯಾಗಿದ್ದಾರೆ ಎಂಬುದಾಗಿ ಬಣ್ಣಿಸಿರುವ ಸಂಜಯ ಬಾರು, ‘‘ಸೋನಿಯಾ ಗಾಂಧಿ-ಮನಮೋಹನ್ ಸಿಂಗ್ ಮಾದರಿಯನ್ನು ರಾಹುಲ್ ಗಾಂಧಿ-ಮಲ್ಲಿಕಾರ್ಜುನ ಖರ್ಗೆ ಮೂಲಕ ಪನರಾವರ್ತಿಸಿರುವುದರಿಂದ ಯಾವುದೇ ಪ್ರಯೋಜನವಾಗಿಲ್ಲ’’ ಎಂದು ಅವರು ‘ಟೆಲಿಗ್ರಾಫ್’ ಪತ್ರಿಕೆಯಲ್ಲಿ ಬರೆದ ಲೇಖನದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಲೇಖನವನ್ನು ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯೆ ಸಾಗರಿಕಾ ಘೋಷ್ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.
ಐದು ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ಐದು ಮಂದಿ ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೂಚಿತ ಸ್ಥಳಕ್ಕೆ ತಕ್ಷಣವೇ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಲಾವಣ್ಯ ಅವರನ್ನು ಮುಖ್ಯ ಆಡಳಿತಾಧಿಕಾರಿ ಬೆಂಗಳೂರಿನ ಸಂಜಯ್ ಗಾಂಧಿ ಟ್ರಾಮ ಮತ್ತು ಆಸ್ಥಿ ಚಿಕಿತ್ಸಾ ಸಂಸ್ಥೆ, ಪ್ರಮೋದ್ ಸಿ. ಅವರನ್ನು ಆಡಳಿತಾಧಿಕಾರಿ ಆಯುಕ್ತಾಲಯ ಬೆಂಗಳೂರಿನ ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳು ಇಲ್ಲಿಗೆ ನಿಯೋಜನೆ ಮಾಡಲಾಗಿದೆ. ಧಾರವಾಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ದೇವರಾಜ್ ಆರ್. ಅವರನ್ನು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ಹುದ್ದೆಗೆ, ಮೈಸೂರು ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಡಾ.ಎನ್.ವೆಂಕಟೇಸ್ ಅವರನ್ನು ಬೆಂಗಳೂರಿನ ಆರೋಗ್ಯ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ ಹಾಗೂ ಬೆಂಗಳೂರು ಆರೋಗ್ಯ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಮುಖ್ಯ ಆಡಳಿತಾಧಿಕಾರಿ ಜಿ.ಎಚ್.ನಾಗಹನುಮಯ್ಯ ಅವರನ್ನು ಮೈಸೂರು ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣ, ರಾಜಸ್ಥಾನದಿಂದ ಐವರ ಬಂಧನ
ಮುಂಬೈ: ಇಲ್ಲಿನ ಜುಹುವಿನಲ್ಲಿರುವ ಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಐದು ಸುತ್ತು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಶೂಟರ್ ಸೇರಿದಂತೆ 6 ಮಂದಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಶೂಟರ್ ದೀಪಕ್ ಶರ್ಮಾ ಹಾಗೂ ಇತರ ಐವರನ್ನು ಹರ್ಯಾಣ ಹಾಗೂ ರಾಜಸ್ಥಾನದಿಂದ ನಗರ ಪೊಲೀಸ್ನ ಸುಲಿಗೆ ವಿರೋಧಿ ಘಟಕ ರವಿವಾರ ರಾತ್ರಿ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಹು ಪ್ರದೇಶದಲ್ಲಿರುವ ಶೆಟ್ಟಿ ಅವರ 9 ಮಹಡಿಯ ಕಟ್ಟಡದ ಮೇಲೆ ಫೆಬ್ರವರಿ 1ರಂದು ಅಪರಾಹ್ನ 12.45ಕ್ಕೆ ಕನಿಷ್ಠ 5 ಸುತ್ತು ಗುಂಡು ಹಾರಿಸಲಾಗಿತ್ತು. ಇದರಿಂದ ಒಂದು ಗುಂಡು ಕಟ್ಟಡದ ಒಳಗಿನ ಜಿಮ್ನ ಗ್ಲಾಸ್ನಲ್ಲಿ ಸಿಲುಕಿಕೊಂಡಿತ್ತು. ಇತ್ತೀಚೆಗೆ ಬಂಧಿತರಾದ ಆರೋಪಿಗಳು ಸೇರಿದಂತೆ ಈ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು ಇದುವರೆಗೆ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Yadgiri | ಸೂರತ್–ಚೆನ್ನೈ ಎಕ್ಸ್ಪ್ರೆಸ್ ವೇ ಕಾಮಗಾರಿಯಿಂದ ತೊಂದರೆ; ತಕ್ಷಣ ಪರಿಹಾರಕ್ಕೆ ಡಾ.ಭೀಮಣ್ಣ ಮೇಟಿ ಆಗ್ರಹ
ಯಾದಗಿರಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸಲಾಗುತ್ತಿರುವ ಸೂರತ್–ಚೆನ್ನೈ ಎಕ್ಸ್ಪ್ರೆಸ್ ವೇ ರಸ್ತೆಯ ಕಾಮಗಾರಿಯಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಸಮಸ್ಯೆ ಪರಿಹರಿಸಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಆಗ್ರಹಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಎಕ್ಸ್ಪ್ರೆಸ್ ವೇ ರಸ್ತೆ ವಡಗೇರಾ ತಾಲ್ಲೂಕಿನ ಅನೇಕ ಗ್ರಾಮಗಳ ಮೂಲಕ ಹಾದು ಹೋಗುತ್ತಿದೆ. ಕಾಮಗಾರಿಯಿಂದಾಗಿ ಸಂಪರ್ಕ ರಸ್ತೆಗಳು ಹದಗೆಟ್ಟಿದ್ದು, ಅವುಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿದರು. ವಡಗೇರಾ ತಾಲ್ಲೂಕು ಕೇಂದ್ರವಾಗಿದ್ದು, ಪಟ್ಟಣದ ಸಮೀಪವೇ ಎಕ್ಸ್ಪ್ರೆಸ್ ವೇ ಹಾದು ಹೋಗುತ್ತಿದೆ. ಇಲ್ಲಿ ಮೇಲ್ಸೇತುವೆ ನಿರ್ಮಾಣ ಅಗತ್ಯವಾಗಿದೆ. ರಸ್ತೆ ನಿರ್ಮಾಣಕ್ಕಾಗಿ ಭಾರಿ ಪ್ರಮಾಣದಲ್ಲಿ ಭೂಮಿ ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ರೈತರು ತಮ್ಮ ಜಮೀನುಗಳಿಗೆ ತೆರಳಲು ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರಿಗೆ ತಕ್ಷಣ ಸಂಪರ್ಕ ರಸ್ತೆಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು. ಈ ಗಂಭೀರ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ವಿಳಂಬ ಮಾಡಿದಲ್ಲಿ ಪ್ರತಿ ಗ್ರಾಮದ ರೈತರೊಂದಿಗೆ ಸೇರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಎಐ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿ
ಬೆಂಗಳೂರು : ರಾಜ್ಯ ಸರಕಾರವು 2026-27ನೇ ಶೈಕ್ಷಣಿಕ ಸಾಲಿನ ಪ್ರಾರಂಭದಿಂದಲೇ ಸರಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜಾರಿ ಮಾಡಲಾಗುವುದು ಎಂದು ಆದೇಶಿಸಿದೆ. ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಶುಭಮಂಗಳ ಆರ್.ವಿ. ಆದೇಶ ಹೊರಡಿಸಿದ್ದು, 2.16 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ಹಾಜರಾತಿ ವ್ಯವಸ್ಥೆಯ ಮೊಬೈಲ್ ಅಪ್ಲಿಕೇಷನ್ ಅನ್ನು ಮೇ ತಿಂಗಳ ಒಳಗೆ ಅಭಿವೃದ್ಧಿಪಡಿಸಲಾಗುತ್ತದೆ. ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಪದವಿ ಪೂರ್ವ ವಿಭಾಗದ ನಿರ್ದೇಶಕರನ್ನು ಅನುಷ್ಠಾನಾಧಿಕಾರಿಗಳಾಗಿ ನೇಮಿಸಲಾಗುತ್ತದೆ ಎಂದಿದ್ದಾರೆ. ವಿದ್ಯಾರ್ಥಿಗಳ ಹಾಜರಾತಿಯನ್ನು ಎಲ್ಲಾ ರೀತಿಯ ಸಂದರ್ಭಗಳಲ್ಲಿ ಹಾಗೂ ಯಾವುದೇ ವಿದ್ಯಾರ್ಥಿಯ ಹಾಜರಾತಿಯು ತಪ್ಪದಂತೆ ಸೆರೆಹಿಡಿಯಲು ಅಪ್ಲಿಕೇಷನ್ ಅಭಿವೃದ್ಧಿಪಡಿಸಲಾಗುತ್ತದೆ. ವಿದ್ಯಾರ್ಥಿಗಳ ನೋಂದಣಿಯನ್ನು ಸ್ಯಾಟ್ ತಂತ್ರಾಂಶದೊಂದಿಗೆ ಕಡ್ಡಾಯವಾಗಿ ದೃಢೀಕರಣ ಮಾಡಬೇಕು. ಇದಕ್ಕೆ ಅವಶ್ಯಕವಿರುವ ದತ್ತಾಂಶವನ್ನು ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರು ಇ-ಆಡಳಿತ ಕೇಂದ್ರಕ್ಕೆ ಒದಗಿಸಬೇಕು ಎಂದು ಅವರು ಹೇಳಿದ್ದಾರೆ. ಹಾಜರಾತಿ ವಿವರಗಳು ತಂತ್ರಾಂಶದ ಮೂಲಕ ಸಾರ್ವಜನಿಕ ವೀಕ್ಷಣೆಗೆ ಲಭ್ಯಗೊಳಿಸಲಾಗುತ್ತದೆ. ಶಾಲಾ-ಕಾಲೇಜಿಗೆ ಗೈರುಹಾಜರಾಗುವ ವಿದ್ಯಾರ್ಥಿಗಳನ್ನು ಟ್ರ್ಯಾಕ್ ಮಾಡಲು ಹಾಗೂ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯದಂತೆ ತಂತ್ರಾಂಶದ ನೆರವಿನಿಂದ ಕ್ರಮವಹಿಸಲಾಗುತ್ತದೆ. ವಿವಿಧ ಪ್ರೋತ್ಸಾಹಕ ಯೋಜನೆಗಳಿಗೆ ಮಕ್ಕಳ ದಾಖಲಾತಿಯನ್ನು ಹೆಚ್ಚಾಗಿ ತೋರಿಸುವುದನ್ನು ಕಾನೂನು ಬಾಹಿರ ಕೃತ್ಯ ಎಂದು ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಫೆ.18: ಮಂಗಳೂರಿಗೆ ಸಿಐಎಸ್ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್
ಮಂಗಳೂರು : ಸಿಐಎಸ್ಎಫ್ ವತಿಯಿಂದ ಸಿಐಎಸ್ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್-2026 ಎಂಬ ಐತಿಹಾಸಿಕ ರಾಷ್ಟ್ರೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಫೆ.18ರಂದು ಮಂಗಳೂರಿಗೆ ಆಗಮಿಸಲಿದೆ. ವಂದೇ ಮಾತರಂ 150ನೇ ವಾರ್ಷಿಕೋತ್ಸವದ ಅಂಗವಾಗಿ ಸೈಕ್ಲೋಥಾನ್-2026 ಹಮ್ಮಿಕೊಳ್ಳಲಾಗಿದೆ. ಜ.28ರಂದು ಆರಂಭಗೊಂಡ ಸೈಕ್ಲೋಥಾನ್ ಫೆ,21ರಂದು ಕೊಚ್ಚಿಯಲ್ಲಿ ಸಮಾರೋಪಗೊಳ್ಳಲಿದೆ. ರಾಷ್ಟ್ರೀಯ ಏಕತೆ, ಕರಾವಳಿ ಭದ್ರತೆ ಹಾಗೂ ಕರಾವಳಿ ಪ್ರದೇಶಗಳ ಸದೃಢ ಮತ್ತು ಸತತ ಅಭಿವೃದ್ಧಿಯತ್ತ ಸಾಗಲು ಇದು ಪ್ರಯತ್ನಿಸಲಿದೆ. ವಷರ್ಪೂರ್ತಿ ನಡೆಯುವ ಈ ಜನಜಾಗೃತಿ ಕಾರ್ಯಕ್ರಮದಲ್ಲಿ ದೈಹಿಕ ಸಾಮರ್ಥ್ಯದ ಜೊತೆಗೆ ಸಾಮಾಜಿಕ ಜಾಗೃತಿ, ಪರಿಸರ ಸಂರಕ್ಷಣೆ ಹಾಗೂ ಭಾರತದ ವಿಶಾಲ ಕರಾವಳಿಯ ಸಮುದಾಯಗಳ ಸಕ್ರಿಯ ಭಾಗವಹಿಸುವಿಕೆಗೆ ಉತ್ತೇಜನ ನೀಡಲಾಗುತ್ತದೆ. ಇದರಲ್ಲಿ 65 ಮಹಿಳಾ ಸೈಕ್ಲಿಸ್ಟ್ಗಳ ಸಹಿತ 130 ಸಿಐಎಸ್ಎಫ್ ಸಿಬ್ಬಂದಿ ವರ್ಗ ಭಾಗವಹಿಸುತ್ತಿದೆ. ಈ ಸೈಕ್ಲೋಥಾನ್ ಭೇಟಿಯ ಸಂದರ್ಭ ಕರಾವಳಿ ಕೇಂದ್ರೀಕೃತ 52 ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾ ಗಿದೆ. ಮುಖ್ಯವಾಗಿ, ಕರಾವಳಿ ಭದ್ರತೆ, ಕೌಶಲಾಭಿವೃದ್ಧಿ, ಜೀವನೋಪಾಯವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗುತ್ತದೆ. ಫೆ.18ರಂದು ಸಂಜೆ 7ಕ್ಕೆ ಸೈಕ್ಲೋಥಾನ್ ತಂಡವನ್ನು ಪಣಂಬೂರು ಬೀಚ್ನಲ್ಲಿ ಸ್ವಾಗತಿಸಲಾಗುತ್ತದೆ. ಫೆ.19ರಂದು ಮಂಗಳೂರಿನಿಂದ ಸೈಕ್ಲೋಥಾನ್ ಮುಂದುವರೆಯಲಿದೆ ಎಂದು ಸಿಐಎಸ್ಎಫ್ ಎನ್ಎಂಪಿಎ ಘಟಕದ ಮುಖ್ಯಸ್ಥರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ: ಜೆಫ್ರಿ ಎಪ್ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಬಿಡುಗಡೆ ಮಾಡಲಾದ ದಾಖಲೆಗಳಿಂದ ಸಂತ್ರಸ್ತೆಯರಲ್ಲಿ ಭಾರತೀಯ ಬಾಲಕಿಯೋರ್ವಳಿದ್ದಳು ಎಂಬುದು ಬಹಿರಂಗಗೊಂಡಿದೆ. ಅಲ್ಲದೆ, ‘ಸಂತ್ರಸ್ತ ನಿಧಿ’ಯ ಮೂಲಕ ಪರಿಹಾರ ಒದಗಿಸಲು ಅಮೆರಿಕದ ಅಧಿಕಾರಿಗಳು ಆಕೆಯನ್ನು ಪತ್ತೆ ಹಚ್ಚಲು ಪ್ರಯತ್ನಿಸಿದ್ದರು ಎಂದು ವರದಿಯಾಗಿದೆ. 2020 ಜನವರಿ 13ರ ಇಮೇಲ್ ಭಾರತದಲ್ಲಿರುವ ಸಂತ್ರಸ್ತೆಯನ್ನು ಹುಡುಕುವ ಪ್ರಯತ್ನಗಳನ್ನು ಉಲ್ಲೇಖಿಸುತ್ತದೆ. ಆಕೆಯ ವಿಳಾಸ ಮತ್ತು ಸಂಪರ್ಕದ ವಿವರಗಳನ್ನು ಪಡೆಯಲು ಸಾಧ್ಯವಾದರೆ, ಭಾರತದಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯೊಂದಿಗೆ ಸಮನ್ವಯ ಸಾಧಿಸುವುದಾಗಿ ಅಧಿಕಾರಿಗಳಿಗೆ ಇಮೇಲ್ ಸೂಚಿಸಿದೆ. ಈ ಈಮೇಲ್ಗೆ ‘ಎಪ್ಸ್ಟೀನ್ ಸಂತ್ರಸ್ತರು’ ಎಂಬ ಶೀರ್ಷಿಕೆ ಇದೆ. ಇದರಲ್ಲಿ ಹಲವು ವಿಚಾರಗಳನ್ನು ಮರೆ ಮಾಚಲಾಗಿದೆ. ಪ್ರಮುಖ ವೈಯುಕ್ತಿಕ ವಿವರಗಳಿಗೆ ಕಪ್ಪು ಬಣ್ಣ ಹಚ್ಚಲಾಗಿದೆ. ‘The Pioneer’ ವರದಿ ಪ್ರಕಾರ ಈ ಈಮೇಲ್ನಲ್ಲಿ ಅಧಿಕಾರಿಗಳು ಪರಿಹಾರದ ಕಾರ್ಯವಿಧಾನಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅದು ನ್ಯೂಯಾರ್ಕ್ ಅಪರಾಧ ಸಂತ್ರಸ್ತರ ಪರಿಹಾರ ಯೋಜನೆಯನ್ನು ಉಲ್ಲೇಖಿಸಿದೆ. ಈ ಪ್ರಕ್ರಿಯೆಗಾಗಿ ಅರ್ಜಿಗಳನ್ನು ರವಾನಿಸಬೇಕೆಂದು ಅದು ಕೇಳಿದೆ. ಅಲ್ಲದೆ ಅಗತ್ಯದ ದಾಖಲೆಗಳನ್ನು ಎಫ್ಬಿಐಗೆ ಕಳುಹಿಸುವಂತೆ ಕೂಡ ಅದು ಹೇಳಿದೆ. ಅರ್ಹ ವ್ಯಕ್ತಿಗಳಿಗೆ ಸಂತ್ರಸ್ತರಿಗೆ ತುರ್ತು ಪರಿಹಾರದ ಅಡಿಯಲ್ಲಿ ಥೆರಪಿ ಸೆಷನ್ಸ್ಗಾಗಿ ಬೆಂಬಲ ನೀಡುವಂತೆ ಕೂಡ ಅದು ತಿಳಿಸಿದೆ. ಭಾರತೀಯ ಸಂತ್ರಸ್ತೆಯ ಬಗೆಗಿನ ಉಲ್ಲೇಖ ಒಂದು ವಿಭಾಗದಲ್ಲಿ ಕಂಡು ಬರುತ್ತದೆ. ಅದು ಹೀಗೆ ಹೇಳುತ್ತದೆ: ‘‘ಭಾರತದಲ್ಲಿರುವ ವ್ಯಕ್ತಿಗೆ ಸಂಬಂಧಿಸಿ. ನೀವು ಆಕೆಯ ವಿಳಾಸ ಹಾಗೂ ಸಂಪರ್ಕ ಮಾಹಿತಿಯನ್ನು ನನಗೆ ನೀಡಿದರೆ, ನಾನು ಅಲ್ಲಿನ ರಾಯಭಾರಿ ಕಚೇರಿಯಲ್ಲಿರುವ ನಮ್ಮ ಸಹೋದ್ಯೋಗಿಗಳೊಂದಿಗೆ ಸಮನ್ವಯ ಸಾಧಿಸುತ್ತೇನೆ. ನಿಮಗೇ ಯಾವುದಾದರೂ ಹೆಚ್ಚುವರಿ ಪ್ರಶ್ನೆಗಳಿದ್ದರೆ, ದಯವಿಟ್ಟು ಕರೆ ಮಾಡಿ’’ 2019 ಆಗಸ್ಟ್ನಲ್ಲಿ ಕಾರಾಗೃಹದಲ್ಲಿ ಜೆಫ್ರಿ ಎಪ್ಸ್ಟೀನ್ ಮೃತಪಟ್ಟ ತಿಂಗಳುಗಳ ಬಳಿಕ ಈ ಸಂವಹನ ನಡೆದಿದೆ.
ಚಿನ್ನದ ದರ 1 ಲಕ್ಷ ರೂ.ಗಿಂತ ಕೆಳಕ್ಕೆ ಇಳಿಯುತ್ತೆ! 'ರಷ್ಯಾ - ಅಮೆರಿಕ ಡೀಲ್' ಕಾರಣ ಕೊಟ್ಟ ಆರ್ಥಿಕ ತಜ್ಞರು; ಯಾವಾಗ?
ಚಿನ್ನಾಭರಣ ಖರೀದಿ ಮಾಡುವವರಿಗೆ ಸಂತಸದ ಸುದ್ದಿ. ಚಿನ್ನದ ಬೆಲೆಯು ಮುಂದಿನ ದಿನಗಳಲ್ಲಿ 1 ಲಕ್ಷಕ್ಕಿಂತ ಕಡಿಮೆಯಾಗಲಿದ ಎಂದು ತಜ್ಞರು ಅಂದಾಜಿಸಿದ್ದಾರೆ. ಇದಕ್ಕೆ ಸೂಕ್ತ ಕಾರಣವನ್ನೂ ನೀಡಿದ್ದು, ಬದ್ದವೈರಿಗಳಾಗಿದ್ದ ಅಮೆರಿಕ ಹಾಗೂ ರಷ್ಯಾ ನಡುವಿನ ಬಿರುಕು ತಗ್ಗಿ ವ್ಯಾಪಾರ ವಹಿವಾಟು ನಡೆಸಲು ಮುಂದಾಗಿವೆ. ಇದರಿಂದ ಚಿನ್ನದ ಬೆಲೆ 1 ಲಕ್ಷ ರೂಪಾಯಿಗಿಂತ ಕೆಳಗೆ ಬರುತ್ತೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.
Raichur | ಯರಗೇರಾದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಾಯ
ರಾಯಚೂರು: ತಾಲ್ಲೂಕಿನ ಯರಗೇರಾ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ಲಿಬರೇಶನ್ ಪಕ್ಷದ ಪದಾಧಿಕಾರಿಗಳು ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಅವರಿಗೆ ಮನವಿ ಸಲ್ಲಿಸಿದರು. ಯರಗೇರಾ ಹೋಬಳಿಯಲ್ಲಿ 20ಕ್ಕೂ ಹೆಚ್ಚು ಗ್ರಾಮಗಳಿದ್ದು, ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಗತ್ಯವಿದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರೋಗ್ಯ ಕೇಂದ್ರಗಳಿಲ್ಲ. ಸಮೀಪದ ಗುಂಜಹಳ್ಳಿ ಗ್ರಾಮದಲ್ಲಿ ಮಾತ್ರ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ, ಅಲ್ಲಿ ಸಹ ಅಧಿಕಾರಿಗಳು ನಿಯಮಿತವಾಗಿ ಲಭ್ಯರಾಗುತ್ತಿಲ್ಲ ಎಂದು ದೂರಿದರು. ಯರಗೇರಾ ಹೋಬಳಿಗೆ ಸೇರುವ ಪ್ರತಿಯೊಂದು ಗ್ರಾಮಕ್ಕೂ ಈ ಕೇಂದ್ರದಿಂದ ಅನುಕೂಲವಾಗುತ್ತದೆ. ವಿಶೇಷವಾಗಿ ಗರ್ಭಿಣಿಯರು ಹಾಗೂ ವೃದ್ಧರು ಆಸ್ಪತ್ರೆಗೆ ತೆರಳಲು ತೊಂದರೆ ಅನುಭವಿಸುತ್ತಿದ್ದಾರೆ. ಬಡಜನರು ಆರೋಗ್ಯ ಸೇವೆಗಳ ಕೊರತೆಯಿಂದ ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದರು. ಯರಗೇರಾ ಗ್ರಾಮದಲ್ಲಿ ಕೆಲ ಖಾಸಗಿ ಕ್ಲಿನಿಕ್ಗಳು ಇದ್ದು, ಹೆಚ್ಚಿನ ಶುಲ್ಕ ಪಡೆದು ಚಿಕಿತ್ಸೆ ನೀಡುತ್ತಿರುವುದಾಗಿ ಆರೋಪಿಸಿದರು. ಗ್ರಾಮದಲ್ಲೇ ರಾಷ್ಟ್ರೀಯ ಹೆದ್ದಾರಿ ಇರುವುದರಿಂದ ವಾಹನ ಸಂಚಾರ ಹೆಚ್ಚು. ಅಪಘಾತಗಳು ಸಂಭವಿಸಿದಾಗ ತುರ್ತು ಚಿಕಿತ್ಸೆ ಸಿಗುವುದಿಲ್ಲ. ಸರಿಯಾದ ಆಂಬುಲೆನ್ಸ್ ಸೌಲಭ್ಯವೂ ಇಲ್ಲದ ಕಾರಣ, ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಿಪಿಐಎಂಎಲ್ ಲಿಬರೇಶನ್ ಪಕ್ಷದ ಕಾರ್ಯಕರ್ತ ಅಜೀಜ್ ಜಹಾಗೀರದಾರ ಹಾಗೂ ತಾಲ್ಲೂಕು ಕಾರ್ಯದರ್ಶಿ ಜಿಲಾನಿ ಯರಗೇರಾ ಉಪಸ್ಥಿತರಿದ್ದರು.
ಫೆ.17: ತಣ್ಣೀರುಬಾವಿಯಲ್ಲಿ ರಾಸಾಯನಿಕ ಸೋರಿಕೆ ಅಣಕು ಪ್ರದರ್ಶನ
ಮಂಗಳೂರು, ಫೆ.16: ಅಪಾಯಕಾರಿ ರಾಸಾಯನಿಕ ಘಟಕಗಳಲ್ಲಿ ಅಪಘಾತಗಳ ನಿರ್ವಹಣೆ ಕುರಿತು ಅಣಕು ಪ್ರದರ್ಶನವು ಫೆ.17ರಂದು ತಣ್ಣೀರುಬಾವಿ ಐಎಂಸಿ ಘಟಕದಲ್ಲಿ ನಡೆಯಲಿದೆ. ಈ ಕುರಿತು ಪೂರ್ವಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ತೈಲ ಮತ್ತು ಅಪಾಯಕಾರಿ ರಾಸಾಯನಿಕ ಸಂಗ್ರಹಣಾ ಘಟಕಗಳಲ್ಲಿ ಅಪಘಾತಗಳ ನಿರ್ವಹಣೆಯನ್ನು ಬಲಗೊಳಿಸಿ ಸಂಬಂಧಿಸಿದ ಕೈಗಾರಿಕಾ ಘಟಕಗಳು, ವಿವಿಧ ಸರಕಾರಿ ಇಲಾಖೆಗಳು ಹಾಗೂ ವಿವಿಧ ಭಾಗೀದಾರಿ ಸಂಸ್ಥೆಗಳ ನಡುವೆ ಸಮನ್ವಯತೆಗೊಳಿಸಲು ಈ ಅಣಕು ಪ್ರದರ್ಶನವು ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು. ಸಭೆಯಲ್ಲಿ ಕಾರ್ಖಾನೆಗಳ ಉಪನಿರ್ದೇಶಕ ರಾಜೇಶ್ ಮಿಶ್ರಕೋಟಿ, ಎನ್ಡಿಆರ್ಎಫ್ ಮುಖ್ಯಸ್ಥ ಅಜಯ್, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ, ಫೆ.16: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮ ಚೋರಾಡಿ ನಿವಾಸಿ ರತಿ (37) ಎಂಬ ಮಹಿಳೆ ಜನವರಿ 31ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ದಪ್ಪ ಶರೀರ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ : ಬೈಂದೂರು ತಾಲೂಕು ಕಿರಿಮಂಜೇಶ್ವರದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (31) ಎಂಬ ಮಹಿಳೆ, ಫೆಬ್ರವರಿ 5ರಂದು ಅಪರಾಹ್ನ 3 ಗಂಟೆ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರೆಗೂ ವಾಪಾಸು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ. 5 ಅಡಿ 3 ಇಂಚು ಎತ್ತರ. ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ.100, ದೂ.ಸಂಖ್ಯೆ: 0820- 2526444 ಅನ್ನು ಸಂಪರ್ಕಿಸಬಹುದು ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸಿರವಾರ | ಎಸೆಸೆಲ್ಸಿ ಫಲಿತಾಂಶ ಹೆಚ್ಚಿಸಲು ಸಂಜೆ 6 ರಿಂದ ರಾತ್ರಿ 9 ಗಂಟೆಯವರೆಗೆ ವಿಶೇಷ ತರಗತಿ ಆರಂಭ
ಸಿರವಾರ: ಸತತವಾಗಿ ಎಸೆಸೆಲ್ಸಿ ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ವಿನೂತನ ಹೆಜ್ಜೆ ಇಟ್ಟಿದ್ದು, ಇಂದಿನಿಂದ 30 ದಿನಗಳ ಕಾಲ ಪ್ರತಿದಿನ ಸಂಜೆ 6ರಿಂದ 9 ಗಂಟೆಯವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಆರಂಭಿಸಲಾಗಿದೆ ಎಂದು ವಲಯ ಸಂಪನ್ಮೂಲ ಅಧಿಕಾರಿ ಮಹೇಶ್ ತಿಳಿಸಿದ್ದಾರೆ. ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಗೆ ಭೇಟಿ ನೀಡಿ ಮೊದಲ ದಿನದ ವಿಶೇಷ ತರಗತಿಯನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಆಧಾರಿತ ಪ್ರಶ್ನೋತ್ತರಗಳ ಮೇಲೆ ವಿಶೇಷ ಬೋಧನೆ ನೀಡಲಾಗುತ್ತದೆ. ಇದರಿಂದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೇರ್ಗಡೆಯಾಗುವ ಜೊತೆಗೆ ಶಾಲೆಯ ಒಟ್ಟು ಫಲಿತಾಂಶವೂ ಹೆಚ್ಚಳವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಉತ್ತಮ ಫಲಿತಾಂಶಕ್ಕಾಗಿ ಈ ಪ್ರಯತ್ನ ಕೈಗೊಂಡಿದ್ದು, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ನಿಯಮಿತವಾಗಿ ಅಭ್ಯಾಸ ಮಾಡಿ ಶೇ.100 ಫಲಿತಾಂಶ ತರುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ವೆಂಕಟೇಶ್, ಎಸ್ಡಿಎಂಸಿ ಅಧ್ಯಕ್ಷ ಮಹ್ಮದ್ ರಫೀ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಾನವ ಹಕ್ಕು ಉಲ್ಲಂಘನೆ: ಸಾರ್ವಜನಿಕರಿಂದ ದೂರು ಸ್ವೀಕಾರ
ಉಡುಪಿ, ಫೆ.16: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯನಿರ್ವಹಣಾ ಅಧ್ಯಕ್ಷರಾದ ಡಾ.ಟಿ. ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಫೆ.18 ಮತ್ತು 19ರಂದು ಜಿಲ್ಲೆಗೆ ಭೇಟಿ ನೀಡ ಲಿದ್ದು, ಆಯೋಗದ ಮುಂದೆ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ನಡೆಸುವ ಜೊತೆಗೆ ಮಾನವ ಹಕ್ಕು ಉಲ್ಲಂಘನೆಗಳಿಗೆ ಸಂಬಂಧಿಸಿದ ಹೊಸ ದೂರುಗಳನ್ನು ಸ್ವೀಕರಿಸಲಿದ್ದಾರೆ. ಫೆ.19ರಂದು ಅಪರಾಹ್ನ ಮಾನವ ಹಕ್ಕುಗಳ ಉಲ್ಲಂಘನೆಗಳಿಗೆ ಸಂಬಂಧಿ ಸಿದಂತೆ ಸಾರ್ವಜನಿಕರಿಂದ ಹೊಸ ದೂರುಗಳನ್ನು ಸ್ವೀಕರಿಸಲಿದ್ದಾರೆ. ಜಿಲ್ಲೆಯ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಅಂದು ಸಲ್ಲಿಸಬಹುದಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
55 ಕೋಟಿ ರೂ. ವೆಚ್ಚದಲ್ಲಿ ಕಂಡ್ಲೂರು ಸೇತುವೆ ಪುನರ್ ನಿರ್ಮಾಣ
ಕುಂದಾಪುರ, ಫೆ.13: ನಾಲ್ಕು ದಶಕಗಳ ಹಿಂದೆ ನಿರ್ಮಾಣಗೊಂಡು ಶಿಥಿಲ ಗೊಂಡಿರುವ ತಾಲೂಕಿನ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ 79.00ಕಿ.ಮೀ.ನಲ್ಲಿ ಬಳ್ಕೂರು- ಕಂಡ್ಲೂರು ಮಧ್ಯದಲ್ಲಿ ವರಾಹಿ ನದಿಗೆ ನಿರ್ಮಿಸಲಾಗಿರುವ ಸೇತುವೆಯನ್ನು 55 ಕೋಟಿ ರೂ.ವೆಚ್ಚದಲ್ಲಿ ಪುನರ್ ನಿರ್ಮಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಕುರಿತಂತೆ ಕುಂದಾಪುರ ಶಾಸಕ ಕಿರಣ್ಕುಮಾರ್ ಕೊಡ್ಗಿ ಅವರು ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದೀಗ ಉಡುಪಿ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಅತಿ ಹತ್ತಿರದ ಈ ಮಾರ್ಗದಲ್ಲಿ ಕಿ.ಮೀ 79.00ರಲ್ಲಿರುವ ಬಳ್ಕೂರು - ಕಂಡ್ಲೂರು ಮಧ್ಯದ ಸೇತುವೆಯ ಪುನರ್ ನಿರ್ಮಾಣಕ್ಕೆ ಸಚಿವರು ಮಂಜೂರಾತಿ ನೀಡಿದ್ದಾರೆ. 1972ರಲ್ಲಿ ನಿರ್ಮಾಣಗೊಂಡ ಈ ಸೇತುವೆ 10 ಅಂಕಣಗಳನ್ನು ಒಳಗೊಂಡಿದ್ದು ಒಟ್ಟು 312ಮೀ. ಉದ್ದವಿದೆ. ಈ ಸೇತುವೆ ಶಿಥಿಲಗೊಂಡಿರುವ ಕಾರಣ ಇದರ ಮೇಲೆ ಅಧಿಕ ಭಾರ ಹೊತ್ತ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಸೇತುವೆ ಕುಸಿಯುವ ಸಾಧ್ಯತೆಯೊಂದಿಗೆ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಳ್ಳುವ ಸಂಭವವೂ ಇತ್ತು. ಹೀಗಾಗಿ ಸೇತುವೆಯ ಮರುನಿರ್ಮಾಣಕ್ಕೆ ಅಂದಾಜು 40 ಕೋಟಿ ರೂ. ಅನುದಾನವನ್ನು ಮಂಜೂರು ಮಾಡುವಂತೆ ಕೊಡ್ಗಿ, ಸಚಿವ ಸತೀಶ್ ಜಾರಕಿಹೊಳೆ ಅವರಲ್ಲಿ ವಿನಂತಿಸಿದ್ದರು. ಶಾಸಕರ ಮನವಿಗೆ ಸಚಿವರು ಶೀಘ್ರವಾಗಿ ಸ್ಪಂದಿ ಸಿದ್ದು ಸೇತುವೆಯ ಮರು ನಿರ್ಮಾಣಕ್ಕೆ 55 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದಾರೆ. ಬಳ್ಕೂರು - ಕಂಡ್ಲೂರು ನಡುವಿನ ಸೇತುವೆಯ ಪುನರ್ನಿರ್ಮಾಣ ಮತ್ತು ಪುನಶ್ವೇತನ ಕಾಮಗಾರಿಗಳಿಗೆ ಅನುಮೋದನೆ ನೀಡಿರುವುದಕ್ಕೆ ಶಾಸಕ ಕಿರಣ್ಕುಮಾರ್ ಕೊಡ್ಗಿ ಪ್ರಕಟಣೆ ಮೂಲಕ ಹರ್ಷ ವ್ಯಕ್ತಪಡಿಸಿದ್ದು ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಜಡ್ಕಲ್: ಸ್ವಸ್ತಿಕ್ ಕುಟುಂಬಕ್ಕೆ ಕಲಾರಂಗದ 88ನೇ ಮನೆ ಹಸ್ತಾಂತರ
ಉಡುಪಿ, ಫೆ.16: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಪ್ರಥಮ ಪಿಯುಸಿ ವಿದ್ಯಾರ್ಥಿ ಸ್ವಸ್ತಿಕ್ ಎಸ್. ನಾಯ್ಕ್ ಇವರ ಬಡ ಕುಟುಂಬಕ್ಕೆ ಬೈಂದೂರು ತಾಲೂಕಿನ ಜಡ್ಕಲ್ ಬಳಿ ಸೆಲ್ಕೋಡ್ನಲ್ಲಿ ಶಿರ್ವದ ನಿವೃತ್ತ ಉಪನ್ಯಾಸಕಿ ಶಾರದಾ ಎಂ. ಇವರು ತಮ್ಮ ಪತಿ ಕೃಷ್ಣಮೂರ್ತಿ ಕೆ. ಇವರ ನೆನಪಿನಲ್ಲಿ ನಿರ್ಮಿಸಿದ ನೂತನ ಮನೆ ‘ಛಂದೋಗತಿ’ ಯನ್ನು ಶಾರದಾ ಅವರೇ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಶನಿವಾರ ಕುಟುಂಬಕ್ಕೆ ಹಸ್ತಾಂತರಿಸಿದರು. ಸೆಲ್ಕೋಡ್ನ ಶಂಕರನಾಯ್ಕ್ ಹಾಗೂ ಚಿಕ್ಕಮ್ಮ ದಂಪತಿ ಪುತ್ರ ಸ್ವಸ್ತಿಕ್, ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.97 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ. ಈತನ ಬಡ ಕುಟುಂಬಕ್ಕೆ ಯಕ್ಷಗಾನ ಕಲಾರಂಗ ದಾನಿಗಳಾದ ಉಪನ್ಯಾಸಕಿ ಶಾರದಾ ಅವರ ಮೂಲಕ ಸುಮಾರು ಏಳು ಲಕ್ಷ ರೂ.ವೆಚ್ಚದಲ್ಲಿ ಮನೆಯನ್ನು ನಿರ್ಮಿಸಿತ್ತು. ಮನೆಯನ್ನು ಶಂಕರ ನಾಯ್ಕ್ ಕುಟುಂಬಕ್ಕೆ ಹಸ್ತಾಂತರಿಸಿ ಮಾತನಾಡಿದ ಶಾರದಾ, ನನ್ನ ಪತಿ ಕೃಷ್ಣಮೂರ್ತಿ ಅವರ ಹಲವು ಆಸಕ್ತಿಗಳಲ್ಲಿ ಛಂದಸ್ಸಿನ ಕುರಿತ ಆಳವಾದ ಅಧ್ಯಯನವೂ ಒಂದು. ಅವರಿಗೆ ’ಛಂದೋಗತಿ’ ಎಂಬ ಪುಸ್ತಕ ವನ್ನು ಬರೆಯಬೇಕೆಂಬ ಕನಸಿತ್ತು. ಅದು ಈಡೇರಿರಲಿಲ್ಲ. ಹಾಗಾಗಿ ಅವರ ಸ್ಮತಿಯಲ್ಲಿ ನೀಡಿದ ಈ ಮನೆಗೆ ಅದೇ ಹೆಸರಿಟ್ಟಿದ್ದೇನೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ನ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಮಾತನಾಡಿದರು. ಕೃಷ್ಣಮೂರ್ತಿ ಅವರ ಶಿಷ್ಯ, ಸಹೋದ್ಯೋಗಿ ವಿಷ್ಣುಮೂರ್ತಿ ಪ್ರಭು ಗುರುಗಳ ಬಹುಭಾಷಾ ಪಾಂಡಿತ್ಯ ಮತ್ತು ವಿದ್ವತ್ನ್ನು ಪರಿಚಯಿಸಿದರು. ವೇದಿಕೆಯಲ್ಲಿ ಖ್ಯಾತ ವಕೀಲ ರಾಮಚಂದ್ರ ಅಡಿಗ, ಬಿ.ಹರೀಶ್ ತಂತ್ರಿ, ಶಾರದಾ ಎಂ. ಸಹೋದರ ಕೃಷ್ಣ ಭಟ್, ಪತ್ನಿ ಪರಮೇಶ್ವರೀ, ಸರೋಜ ಮುಂತಾದವರು ಉಪಸ್ಥಿತರಿದ್ದರು. ಕಲಾರಂಗದ ಯು.ವಿಶ್ವನಾಥ ಶೆಣೈ, ಭುವನಪ್ರಸಾದ ಹೆಗ್ಡೆ, ವಿಜಯ ಕುಮಾರ್ ಮುದ್ರಾಡಿ, ಅನಂತರಾಜ ಉಪಾಧ್ಯಾಯ, ಡಾ.ರಾಘವೇಂದ್ರ ರಾವ್ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.
2024 ರ ಆಂಧ್ರಪ್ರದೇಶ ಚುನಾವಣೆಯ ಮತಗಳ ಸಂಖ್ಯೆಯಲ್ಲಿ ಅಸಾಮಾನ್ಯ ಏರಿಕೆ; ʼಮೋಸʼ ಅಥವಾ ʼಪವಾಡʼ?
ಆರ್ಥಿಕ ತಜ್ಞ ಡಾ. ಪರಕಾಲ ಪ್ರಭಾಕರ್ ವಿಶ್ಲೇಷಣೆ - thewire.in
ವಿಜಯೇಂದ್ರ ಬಿಜೆಪಿ ಬಾಲ ಭವನದ ನಾಯಕ : ರಮೇಶ್ ಬಾಬು ವ್ಯಂಗ್ಯ
ಬೆಂಗಳೂರು : ರಾಜ್ಯ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರ ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಅವಲತ್ತುಕೊಂಡಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ. ಬಿಜೆಪಿ ಮತ್ತು ಆರೆಸ್ಸೆಸ್ಗೆ ತಮ್ಮ ಸಮರ್ಥನೆಗೆ ಇಂತಹ ಬಾಲಂಗೋಚಿ ನಾಯಕರ ಅವಶ್ಯಕತೆ ಬಂದಿರುವುದು ವ್ಯವಸ್ಥೆಯ ದೌರ್ಬಲ್ಯ ಎಂದು ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ. ಸೋಮವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ತಮ್ಮ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ಪದೇ ಪದೇ ದಿಲ್ಲಿ ದಂಡೆಯಾತ್ರೆ ಮಾಡುತ್ತಿರುವ ವಿಜಯೇಂದ್ರಗೆ, ಆರೆಸ್ಸೆಸ್ ಸಮರ್ಥಿಸುವ ಅನಿವಾರ್ಯತೆ ಸೃಷ್ಟಿ ಆಗಿರುವುದು ದೊಡ್ಡ ವಿಪರ್ಯಾಸ ಎಂದು ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ ಸೈದ್ಧಾಂತಿಕವಾಗಿ ಸಂಘ ಪರಿವಾರದ ಅಸ್ತಿತ್ವ, ನೋಂದಾವಣೆ ಕಾರ್ಯ ಮತ್ತು ಚಟುವಟಿಕೆಗಳನ್ನು ಪ್ರಶ್ನೆ ಮಾಡುತ್ತಿದ್ದಾರೆ. ಅವರು ಎತ್ತಿರುವ ಮೂಲಭೂತ ಪ್ರಶ್ನೆಗಳಿಗೆ ತಡ ಬಡಾಯಿಸಿರುವ ಆರೆಸ್ಸೆಸ್, ಸ್ವತಃ ಮೋಹನ್ ಭಾಗವತ್ ರವರನ್ನು ಬೆಂಗಳೂರಿಗೆ ಕರೆತಂದು ಆ ಪ್ರಶ್ನೆಗಳಿಗೆ ಉತ್ತರವನ್ನು ಹುಡುಕುವ ಪ್ರಯತ್ನವನ್ನು ಮಾಡಿದೆ ಎಂದು ಅವರು ತಿಳಿಸಿದ್ದಾರೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಅತ್ಯಂತ ಭ್ರಷ್ಟಾಚಾರದ ಆರೋಪವನ್ನು ಸ್ವಪಕ್ಷದಿಂದಲೇ ಎದುರಿಸಿ ಪಲಾಯನ ಗೈದಂತಹ ಕಳಂಕಿತ ನಾಯಕ ವಿಜಯೇಂದ್ರ, ಸಂಘ ಪರಿವಾರದ ಪ್ರತಿಪಾದನೆಗೆ ಅಥವಾ ಸಮರ್ಥನೆಗೆ ನಿಲ್ಲುವ ಮೂಲಕ ಸಂಘ ಪರಿವಾರದ ಮತ್ತೊಂದು ಮುಖವನ್ನು ಜನರ ಮುಂದೆ ತೆರೆದಿಟ್ಟಿದ್ದಾರೆ ಎಂದು ರಮೇಶ್ ಬಾಬು ಟೀಕಿಸಿದ್ದಾರೆ. ಈ ದೇಶದ ಕಾನೂನಿನ ಅನ್ವಯ ಯಾವುದೇ ಸಂಘ ಸಂಸ್ಥೆ ನೋಂದಾವಣೆ ಮಾಡಿಕೊಳ್ಳಬೇಕಾಗುತ್ತದೆ. ನೊಂದಾವಣೆ ಆಗದ ಸಂಘ ಸಂಸ್ಥೆಯ ಲೆಕ್ಕಪತ್ರಗಳನ್ನು ಅಥವಾ ಹಣಕಾಸು ವ್ಯವಹಾರಗಳನ್ನು ಅನುಮಾನದಿಂದ ನೋಡಲು ಅವಕಾಶವಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಪಯಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಏಕಾಂಗಿ ಪ್ರಯತ್ನದ ಮೂಲಕ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನವನ್ನು ತಂದು ಕೊಟ್ಟಿದ್ದಾರೆ. ಅದರ ಜೊತೆಗೆ ಆ ಭಾಗದಲ್ಲಿ ಕಾರ್ಮಿಕ ಆಸ್ಪತ್ರೆ, ವಿಶೇಷವಾಗಿ ರೈಲ್ವೆ ಸಂಪರ್ಕಗಳು, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗಗಳ ಅವಕಾಶ ಮುಂತಾದ ಸಾರ್ವಜನಿಕ ಕೆಲಸಗಳಿಗೆ ಬುನಾದಿ ಹಾಕಿ ಇತರ ನಾಯಕರಿಗೆ ಆದರ್ಶಪ್ರಾಯರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಖಾತೆಯ ಮುಖಾಂತರ ರಾಜ್ಯದ ಅಭಿವೃದ್ಧಿಗೆ ತಾವು ಮಾಡಿರುವ ಸಾಧನೆಯನ್ನು ವಿಧಾನಸಭೆಯ ಅಧಿವೇಶನದಲ್ಲಿ ಅಂಕಿ ಅಂಶಗಳ ಸಮೇತವಾಗಿ ತೆಗೆದಿಟ್ಟಿದ್ದಾರೆ. ತಮ್ಮ ತಂದೆ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರ ಸಹಿಯನ್ನು ನಕಲು ಮಾಡಿದ ಆರೋಪವನ್ನು ಹೊತ್ತಿರುವ ವಿಜಯೇಂದ್ರ ಇಂದಿಗೂ ಅದರ ಬಗ್ಗೆ ಸಾರ್ವಜನಿಕವಾಗಿ ಉತ್ತರವನ್ನು ನೀಡಿಲ್ಲ ಎಂದು ರಮೇಶ್ ಬಾಬು ಹೇಳಿದ್ದಾರೆ. ನೀರಾವರಿ ಇಲಾಖೆಯಲ್ಲಿ ಸುಮಾರು 20 ಸಾವಿರ ಕೋಟಿ ರೂಪಾಯಿಗಳ ಕಾಮಗಾರಿಗಳ ಅವ್ಯವಹಾರ ಕುರಿತು ಅವರದೇ ಪಕ್ಷದ ಶಾಸಕರು ಆರೋಪಗಳನ್ನು ಮಾಡಿದಾಗ ಮನೆ ಸೇರಿದ ವ್ಯಕ್ತಿ ಇದೇ ವಿಜಯೇಂದ್ರ. ವರ್ಗಾವಣೆ ದಂಧೆ ಮತ್ತು ಅಕ್ರಮ ಟೆಂಡರ್ ಗಳ ಆರೋಪವನ್ನು ಹೊತ್ತಿದ್ದರು. ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ವೈಯಕ್ತಿಕವಾಗಿ ಇವರ ಕುಟುಂಬ ಮಾಡಿರುವ ಆಸ್ತಿಯ ಕುರಿತು ಅವರದೇ ಪಕ್ಷದ ನಾಯಕ ಈಶ್ವರಪ್ಪ ಆರೋಪ ಮಾಡಿದ್ದಾರೆ. ಕೇವಲ ತಂದೆಯ ಹೆಸರಿನಲ್ಲಿ ರಾಜಕೀಯ ಆಶ್ರಯವನ್ನು ಪಡೆದಿರುವ ವಿಜಯೇಂದ್ರ, ಪ್ರಿಯಾಂಕ್ ಖರ್ಗೆ, ಅವರ ಕುಟುಂಬವನ್ನಾಗಲಿ ಅವರ ಸಿದ್ಧಾಂತವನ್ನಾಗಲಿ ಅಥವಾ ಅವರು ಈ ರಾಜ್ಯಕ್ಕೆ ಕೊಟ್ಟಿರುವ ಕೊಡುಗೆಗಳನ್ನಾಗಲಿ ಪ್ರಶ್ನಿಸುವ ಯಾವುದೇ ನೈತಿಕತೆಯನ್ನು ಉಳಿಸಿಕೊಂಡಿಲ್ಲ ಎಂದು ರಮೇಶ್ ಬಾಬು ಹೇಳಿದ್ದಾರೆ.
ರಾಯಚೂರು | ಶಾಸಕಿ ವಿರುದ್ಧ ಜೆಡಿಎಸ್ ಅತೃಪ್ತರ ಆಕ್ರೋಶ: ಭರವಸೆ ಈಡೇರಿಸದಿದ್ದರೆ ಸೋಲಿಸುವ ಎಚ್ಚರಿಕೆ
ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರು ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದು, ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ನಾಯಕರನ್ನು ಕಡೆಗಣಿಸಿ ಕಾರ್ಯಕರ್ತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂದು ದೇವದುರ್ಗ ಜೆಡಿಎಸ್ ತಾಲೂಕು ಅಧ್ಯಕ್ಷ ಬುಡ್ಡನಗೌಡ ಜಾಗಟಗಲ್ ಆರೋಪಿಸಿದರು. ಈ ಕುರಿತು ಪಕ್ಷದ ವರಿಷ್ಠರಿಗೆ ದೂರು ನೀಡಲಾಗಿದ್ದು, ಸಮಸ್ಯೆ ಸರಿಪಡಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಸೋಲಿಸಲಾಗುವುದು ಎಂದು ಎಚ್ಚರಿಸಿದರು. ನಗರದ ಅತ್ತನೂರು ಫಂಕ್ಷನ್ ಹಾಲ್ನಲ್ಲಿ ಸೋಮವಾರ ಜೆಡಿಎಸ್ ಅತೃಪ್ತ ಕಾರ್ಯಕರ್ತರ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವದುರ್ಗ ತಾಲೂಕಿನ ಅಭಿವೃದ್ಧಿಗೆ ದೇವೇಗೌಡರ ಕೊಡುಗೆ ಅಪಾರವಾಗಿದೆ. ಸಾಮಾನ್ಯಳಾದ ಕರೆಮ್ಮ ನಾಯಕ ಅವರನ್ನು ನಾಲ್ಕು ಬಾರಿ ಶಾಸಕರಾಗಿದ್ದ, ಮಾಜಿ ಸಚಿವ ಶಿವನಗೌಡ ನಾಯಕ ಅವರನ್ನು ಸೋಲಿಸುವಲ್ಲಿ ಪಕ್ಷದ ಕಾರ್ಯಕರ್ತರು ಮಹತ್ವದ ಪಾತ್ರ ವಹಿಸಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕರೆಮ್ಮ ಜಿ ನಾಯಕ್ ಗೆಲುವು ಸಾಧಿಸಲು ಎಲ್ಲರೂ ಶ್ರಮಿಸಿದ್ದೇವೆ ಎಂದರು. ಚುನಾವಣೆಯ ವೇಳೆ ಅಕ್ರಮ ಮರಳುಗಾರಿಕೆ, ಮಟ್ಕಾ, ಜೂಜಾಟ, ಇಸ್ಪೀಟ್ ತಡೆ, ಅರಕೇರಾ ತಾಲೂಕು ಕೇಂದ್ರ ರದ್ದು, ಟೇಲ್ಎಂಡ್ ರೈತರಿಗೆ ನೀರು ಸೇರಿದಂತೆ ಹಲವು ಮೂಲಭೂತ ಸೌಕರ್ಯ ಒದಗಿಸುವ ಭರವಸೆ ನೀಡಲಾಗಿತ್ತು. ತಮ್ಮ ಕುಟುಂಬದವರು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವೆಂದು ಪ್ರಮಾಣ ಮಾಡಲಾಗಿತ್ತು. ಆದರೆ, ಗೆಲುವಿನ ಬಳಿಕ ಭರವಸೆಗಳಿಗೆ ವಿರುದ್ಧವಾಗಿ ನಡೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಜೆಡಿಎಸ್ ನಾಯಕರನ್ನು ಬದಿಗೊತ್ತಿ ಬಿಜೆಪಿ ಕಾರ್ಯಕರ್ತರ ಪರ ಒಲವು ತೋರಲಾಗುತ್ತಿದೆ. ಹೊಂದಾಣಿಕೆ ರಾಜಕಾರಣದಿಂದ ಮತದಾರರು ನಿರಾಶರಾಗಿದ್ದಾರೆ. ಪಕ್ಷವನ್ನು ದುರ್ಬಲಗೊಳಿಸಲು ಅವಕಾಶ ನೀಡುವುದಿಲ್ಲ. ಪ್ರತಿಯೊಬ್ಬ ಕಾರ್ಯಕರ್ತರ ಮನೆಗೆ ಭೇಟಿ ನೀಡಿ ಪಕ್ಷವನ್ನು ಬಲಪಡಿಸುವ ಹೋರಾಟ ನಡೆಸಲಾಗುವುದು ಎಂದು ಹೇಳಿದರು. ಲ್ಯಾಂಡ್ ಆರ್ಮಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಕಮಿಷನ್ ವ್ಯವಸ್ಥೆ ನಡೆಯುತ್ತಿದೆ. ಕೆಲವು ಕಾಮಗಾರಿಗಳಲ್ಲಿ 47 ಶೇಕಡಾವರೆಗೆ ಕಮಿಷನ್ ಕಡಿತವಾಗುತ್ತಿದೆ. ಉಳಿದ ಹಣದಲ್ಲಿ ಕೆಲಸ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹಲವಾರು ಕಾಮಗಾರಿಗಳಿಗೆ ಪಾವತಿಗಳೂ ಆಗಿಲ್ಲ ಎಂದು ದೂರಿದರು. ಹೈದರಾಬಾದ್ ಕರ್ನಾಟಕ ಭಾಗದ ಹಿಂದುಳಿದ ತಾಲೂಕುಗಳಿಗೆ ವರ್ಷಕ್ಕೆ 100ರಿಂದ 150 ಕೋಟಿ ರೂ. ಅನುದಾನ ಬರುತ್ತಿದ್ದರೂ, ಅದರ ಸಮರ್ಪಕ ಬಳಕೆ ಆಗುತ್ತಿಲ್ಲ. ಅಭಿವೃದ್ಧಿ ನೆಲಮಟ್ಟದಲ್ಲಿ ಕಾಣಿಸುತ್ತಿಲ್ಲ ಎಂದು ಟೀಕಿಸಿದರು. ಸಭೆಯಲ್ಲಿ ಸಿದ್ದನಗೌಡ ಮೂಡಲಗುಂಡ, ಭೀಮಣ್ಣ ಗುಮೆದಾರ್, ಶಿವರಾಜ್ ಕೊತ್ತದೊಡ್ಡಿ, ರಂಗಣ್ಣ ಕೋಲ್ಕಾರ್, ಚೆನ್ನಪ್ಪ ಗೆಜ್ಜೆಬಾವಿ, ಶ್ರೀನಿವಾಸ ತಿಮ್ಮಾಪುರ, ದಾವೂದ್ ಆವುಂಟಿ, ಮಲ್ಲು ಕೊತ್ತದೊಡ್ಡಿ, ಶಿವರಾಜ್ ಮುಂಡರಗಿ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಕೃತಕ ಜಾಣ್ಮೆ, ಆನ್ಲೈನ್ ಸುರಕ್ಷತೆ : ಕರ್ನಾಟಕ, ಬ್ರಿಟನ್ ಸಹಯೋಗ ವೃದ್ಧಿ ಚರ್ಚೆ
ಬೆಂಗಳೂರು : ರಾಜ್ಯ ಹಾಗೂ ಇಂಗ್ಲೆಂಡ್ ನಡುವಣ ತಂತ್ರಜ್ಞಾನ ಬಾಂಧವ್ಯ ಬಲಪಡಿಸುವ ನಿಟ್ಟಿನಲ್ಲಿ, ರಾಜ್ಯ ಸರಕಾರದ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ನಗರದಲ್ಲಿ ಬ್ರಿಟನ್(ಯು.ಕೆ)ನ ಕೃತಕ ಬುದ್ಧಿಮತ್ತೆ(ಎಐ) ಮತ್ತು ಡಿಜಿಟಲ್ ಗವರ್ನಮೆಂಟ್ ಸಚಿವ ಕನಿಷ್ಕ ನಾರಾಯಣ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಉಭಯ ಸಚಿವರು ಕೃತಕ ಬುದ್ಧಿಮತ್ತೆ, ಆನ್ಲೈನ್ ಸುರಕ್ಷತೆ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಡೇಟಾ ಆಡಳಿತ, ಕೌಶಲ, ನವೋದ್ಯಮಗಳ ಸಬಲೀಕರಣ ಮತ್ತು ಸಾಗರದಾಚೆಗಿನ ನಾವೀನ್ಯತೆ ಪಾಲುದಾರಿಕೆಗಳ ಕುರಿತು ಚರ್ಚೆ ನಡೆಸಿದರು. ಯುವಜನರ ಹಿತ ರಕ್ಷಿಸಲು ಮತ್ತು ಕೃತಕ ಬುದ್ಧಿಮತ್ತೆಯು ಒಟ್ಟಾರೆಯಾಗಿ ಸಮಾಜಕ್ಕೆ ಪ್ರಯೋಜನ ನೀಡುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಆನ್ಲೈನ್ ಸುರಕ್ಷತಾ ಕ್ರಮಗಳ ಕುರಿತು ನಾವು ಸಮಾಲೋಚನೆ ನಡೆಸಿದ್ದೇವೆ. ಕರ್ನಾಟಕದ ಜೊತೆಗಿನ ಗಾಢವಾದ ಸಹಯೋಗವು ಜಾಗತಿಕವಾಗಿ ವಿಶ್ವಾಸಾರ್ಹ ಕೃತಕ ಬುದ್ಧಿಮತ್ತೆ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ನೆರವಾಗಲಿದೆ ಎಂದು ಕನಿಷ್ಕ ನಾರಾಯಣ್ ಹೇಳಿದರು. ಕೃತಕ ಜಾಣ್ಮೆ ಮತ್ತು ಡೀಪ್ ಟೆಕ್ ನಾವೀನ್ಯತೆಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವುದರ ವಿವರಗಳನ್ನು ಹಂಚಿಕೊಂಡ ಪ್ರಿಯಾಂಕ್ ಖರ್ಗೆ, ಕರ್ನಾಟಕವು ತನ್ನ ತಂತ್ರಜ್ಞಾನ ನಾಯಕತ್ವದ ಮುಂದಿನ ಹಂತವನ್ನು ಡೀಪ್ಟೆಕ್, ಅನ್ವಯಿತ ಸಂಶೋಧನೆ ಮತ್ತು ಭವಿಷ್ಯಕ್ಕೆ ಸಿದ್ಧವಾದ ನಾವೀನ್ಯತೆಯ ಸುತ್ತ ನಿರ್ಮಿಸುತ್ತಿದೆ. ಕಲಿಕೆ ವೇಗಗೊಳಿಸುವ, ಆಡಳಿತ ಬಲಪಡಿಸುವ ಮತ್ತು ನವೋದ್ಯಮಗಳನ್ನು ಸಬಲೀಕರಣಗೊಳಿಸುವ ನಾವೀನ್ಯತೆ ಆಧಾರಿತ ಅರ್ಥ ವ್ಯವಸ್ಥೆ ಅಭಿವೃದ್ಧಿಪಡಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.
ಕೆಆರ್ಐಡಿಎಲ್ ಕಾಮಗಾರಿಗಳ ಪ್ರಗತಿ ಪರಿಶೀಲನೆ | ಕಾಮಗಾರಿ ವಿಳಂಬವಾದಲ್ಲಿ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ
ಬೆಂಗಳೂರು : ರಾಜ್ಯ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆ(ಕೆ.ಆರ್.ಐ.ಡಿ.ಎಲ್)ಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪರಿಶೀಲಿಸಿದರು. ಸೋಮವಾರ ನಗರದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಗೆ ಬರುವ ಜಿಲ್ಲೆಗಳಿಂದ ಸಭೆಗೆ ಬಂದಿದ್ದ ಕೆ.ಆರ್.ಐ.ಡಿ.ಎಲ್ ಇಂಜಿನಿಯರ್ಗಳೊಂದಿಗೆ ಚರ್ಚಿಸಿದ ಅವರು, ಕಾಮಗಾರಿಗಳಲ್ಲಿ ಆಗುತ್ತಿರುವ ವಿಳಂಬ ಹಾಗೂ ಲೋಪಗಳನ್ನು ಗಂಭೀರವಾಗಿ ಪರಿಗಣಿಸಿ ತಮ್ಮ ಅತೃಪ್ತಿಯನ್ನು ವ್ಯಕ್ತಪಡಿಸಿದರಲ್ಲದೆ ಕೆ.ಆರ್.ಐ.ಡಿ.ಎಲ್ ಇಂಜಿನಿಯರ್ಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಗ್ರಾಮೀಣ ನೀರು ಸರಬರಾಜು ಇಲಾಖೆ ಮೂಲಕ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರದೇಶದ ವ್ಯಾಪ್ತಿಗೆ ಬರುವ ಜಿಲ್ಲೆಗಳಲ್ಲಿ ಸಾಮೂಹಿಕ ಶೌಚಾಲಯಗಳನ್ನು ನಿರ್ಮಾಣ ಮಾಡುವಲ್ಲಿ ಆಗಿರುವ ವಿಳಂಬದ ಬಗ್ಗೆ ಪ್ರಸ್ತಾವಿಸಿದ ಅವರು, ಮೇ ಮೊದಲ ವಾರದಲ್ಲಿ ಶೌಚಗೃಹಗಳನ್ನು ನಿರ್ಮಾಣ ಮಾಡಿ ಬಳಕೆಗೆ ಸಿದ್ಧಪಡಿಸದಿದ್ದಲ್ಲಿ ಸಂಬಂಧಿಸಿದ ಇಂಜಿನಿಯರ್ ಗಳನ್ನು ಅಮಾನತು ಮಾಡಲಾಗುವುದು ಎಂದು ಕಟ್ಟೆಚ್ಚರ ನೀಡಿದರು. ರಸ್ತೆ ಹಾಗೂ ಕಟ್ಟಡ ನಿರ್ಮಾಣದಲ್ಲಿ ಬದಲಾಗಿರುವ ತಾಂತ್ರಿಕ ನೈಪುಣ್ಯತೆಗಳನ್ನು ಬಳಸಿಕೊಂಡು ಪರಿಸರಸ್ನೇಹಿ ಸಾಮಗ್ರಿಗಳನ್ನು ಬಳಸಿಕೊಳ್ಳುವಲ್ಲಿ ಕೆ.ಆರ್.ಐ.ಡಿ.ಎಲ್ ಚಿಂತಿಸಬೇಕು ಎಂದು ತಿಳಿಸಿದ ಪ್ರಿಯಾಂಕ್ ಖರ್ಗೆ, ಅಗತ್ಯಬಿದ್ದಲ್ಲಿ ತಜ್ಞರ ಸಮಿತಿಯನ್ನು ರಚಿಸಿ ಮಾರ್ಗದರ್ಶನ ಪಡೆಯುವಂತೆ ಸೂಚಿಸಿದರು. ವೀಡಿಯೊ ಸಂವಾದದ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರದ ಕಾರ್ಯದರ್ಶಿ ಸಮೀರ್ ಶುಕ್ಲಾ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ನಳಿನ್ ಅತುಲ್ ಪಾಲ್ಗೊಂಡಿದ್ದರು. ಸಭೆಯಲ್ಲಿ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಎಂ.ಬಿ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.
X Down: ಇಂದು ವಿಶ್ವದಾದ್ಯಂತ 'ಎಕ್ಸ್' ಪ್ಲಾಟ್ಫಾರ್ಮ್ ಸೇವೆ ಸ್ಥಗಿತ!
ನವದೆಹಲಿ: ದೇಶ ಹಾಗೂ ವಿಶ್ವದಾದ್ಯಂತ ಕ್ಷಣ ಕ್ಷಣದ ಮಾಹಿತಿ ನೀಡುವ ಸಾಮಾಜಿಕ ಜಾಲತಾಣವಾದ ಎಕ್ಸ್ (ಈ ಹಿಂದೆ ಟ್ವಿಟ್ಟರ್) ಸೋಮವಾರ (ಫೆಬ್ರವರಿ 16) ದಿಢೀರ್ ಸ್ಥಗಿತವಾಯಿತು. ಇದರಿಂದ ಅಸಂಖ್ಯಾತ ಬಳಕೆದಾರರು ತೀವ್ರ ತೊಂದರೆ ಅನುಭವಿಸಿದರು. ಈ ಆಪ್ ಪ್ರವೇಶಿಸಲು, ಲಾಗಿನ್ ಆಗಲು, ಫೀಡ್ ಮಾಡಲು, ಪೋಸ್ಟ್ಗಳ ಪರಿಶೀಲನೆ ಸೇರಿದಂತೆ ಎಲ್ಲ ವಿಧದ ಸೇವೆ ಬಂದ್ ಆಗಿದ್ದರ ಬಗ್ಗೆ
ಅರಸ್ತಾಅರಸ್ತಾನ: ಅಲ್ಮುಬಾರಕ್-ಬದ್ರಿಯಾ ನಗರ ಸಂಪರ್ಕ ರಸ್ತೆ ಉದ್ಘಾಟನೆ
ಪಾವೂರು, ಫೆ.16: ಮಲಾರ್ ಅರಸ್ತಾನದ ಅಲ್ಮುಬಾರಕ್ ನಗರ ಮತ್ತು ಬದ್ರಿಯಾ ನಗರ ಸಂಪರ್ಕ ರಸ್ತೆಯನ್ನು ಸ್ಪೀಕರ್ ಯು.ಟಿ. ಖಾದರ್ ರವಿವಾರ ಉದ್ಘಾಟಿಸಿದರು. ಮರ್ಹೂಂ ಪಿ.ಎಂ. ಅಬ್ದುಲ್ ಖಾದರ್ (ಐ.ಎಸ್) ಅವರ ಪುತ್ರರು ತೋಟದ ಮಧ್ಯೆ ಇರುವ ಈ ಜಮೀನನ್ನು ದಾನ ವಾಗಿ ನೀಡಿದ ಬಳಿಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 25 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ನಿರ್ಮಿಸಲಾ ಗಿತ್ತು. ಆ ಮೂಲಕ ಅರಸ್ತಾನದ ಅಲ್ ಮುಬಾರಕ್ ನಗರ ಮತ್ತು ಬದ್ರಿಯಾ ನಗರದ ಸಂಪರ್ಕ ಸುಲಭವಾಗಿದೆ. ಈ ಸಂದರ್ಭ ದಾನಿಯ ಪುತ್ರ ಝಕರಿಯಾ ಪಿ.ಎಂ., ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು, ಪಾವೂರು ಗ್ರಾಪಂ ಮಾಜಿ ಅಧ್ಯಕ್ಷ ಅಬ್ದುಲ್ ಮಜೀದ್ ಸಾತ್ಕೊ, ಮಾಜಿ ಸದಸ್ಯರಾದ ಚೆನ್ನಮ್ಮ, ಪುಷ್ಪಾಭಂಡಾರಿ ಹಸನ್ ಎಂ.ಪಿ., ಚಕ್ಕರ್ ಮೋನು, ವಿವೇಕ್ ರೈ, ಅಲ್ ಮುಬಾರಕ್ ಜುಮ್ಮಾ ಮಸೀದಿಯ ಅಧ್ಯಕ್ಷ ಟಿ.ನಾಸಿರ್, ಸದಸ್ಯರಾದ ನೌಶಾದ್ ಎಂ.ಆರ್., ಉಬೈದ್ ಮಲಾರ್, ಮಸೀದಿಯ ಮಾಜಿ ಅಧ್ಯಕ್ಷ ಹಾಮದ್ ಅಲ್ತಾಫ್, ರಿಯಾಝ್ ಪೈಝಿ ಹೊಸಮನೆ, ಕಾಂಗ್ರೆಸ್ ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಹನೀಫ್ ಕೆ.ಎಂ.,ಯುವ ಕಾಂಗ್ರೆಸ್ ಅಧ್ಯಕ್ಷ ಇರ್ಫಾನ್ ಡಿ., ದಿನೇಶ್ ಕಿಲ್ಲೂರು ಮತ್ತಿತರರು ಉಪಸ್ಥಿತರಿದ್ದರು.
CBSE Class 12 Result: ನಿಮ್ಮ ಪರ್ಸೆಂಟೇಜ್ ಅನ್ನು ಸುಲಭವಾಗಿ ಲೆಕ್ಕಾಚಾರ ಮಾಡುವುದು ಹೇಗೆ? ಇಲ್ಲಿದೆ ಸರಳ ಸೂತ್ರ
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) 2026ರ ಮೇ ತಿಂಗಳಲ್ಲಿ 12ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳ ಉನ್ನತ ವ್ಯಾಸಂಗ ಹಾಗೂ ಭವಿಷ್ಯವನ್ನು ರೂಪಿಸುವಲ್ಲಿ 12ನೇ ತರಗತಿಯ ಅಂಕಗಳು ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತವೆ. ಫಲಿತಾಂಶ ಪ್ರಕಟವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ತಮ್ಮ ಗ್ರೇಡ್ (ಶ್ರೇಣಿ) ಮತ್ತು ಅಂಕಗಳು ಲಭ್ಯವಾಗಲಿವೆ. ಆದರೆ, ಒಟ್ಟಾರೆ ಫಲಿತಾಂಶವನ್ನು ನೋಡಿದಾಗ,
ಯಕ್ಷಗಾನ ಕಲಾರಂಗದ 88ನೆಯ ಮನೆ ಹಸ್ತಾಂತರ
ಬೈಂದೂರು: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಪ್ರಥಮ ಪಿಯುಸಿ ವಿದ್ಯಾರ್ಥಿ ಸ್ವಸ್ತಿಕ್ ಎಸ್.ನಾಯ್ಕ್ ಅವರಿಗೆ ಬೈಂದೂರು ತಾಲೂಕಿನ ಜಡ್ಕಲ್ ಬಳಿ ಸೆಲ್ಕೋಡ್ನಲ್ಲಿ ಶಿರ್ವದ ನಿವೃತ್ತ ಉಪನ್ಯಾಸಕಿ ಶಾರದಾ ಎಂ. ತಮ್ಮ ಪತಿ ಕೃಷ್ಣಮೂರ್ತಿ ಕೆ. ಸ್ಮರಣೆಯಲ್ಲಿ, 7ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಛಂದೋಗತಿ’ಯನ್ನು ಹಸ್ತಾಂತರಿಸಲಾಯಿತು. ಶಾರದಾ ಎಂ. ಜ್ಯೋತಿ ಬೆಳಗಿಸಿ ಮನೆಯನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಯಕ್ಷಗಾನ ಕಲಾರಂಗ ನನಗೊಂದು ವಿಸ್ಮಯವೇ ಆಗಿದೆ. ಅವರ ಸಾಮಾಜಿಕ-ಶೈಕ್ಷಣಿಕ-ಕಲಾ ಸಂಬಂಧಿ ಕಾರ್ಯಕ್ರಮಗಳ ವಿಶ್ವರೂಪ ಅನ್ಯ ಸಂಘಟನೆಗಳಿಂದ ಅಸಾಧ್ಯ. ಅವರ ಕ್ಲಪ್ತತೆ, ಪರಿಶ್ರಮ, ಪಾರದರ್ಶಕತೆ, ಬದ್ಧತೆ, ಅಚ್ಚುಕಟ್ಟುತನಕ್ಕೆ ಶರಣಾಗಿದ್ದೇನೆ ಎಂದರು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಮಾತನಾಡಿ, ಆಹಾರ, ಔಷಧ, ಶಿಕ್ಷಣ ವಿಕ್ರಯ ಮಾಡಬಾರದೆಂದು ನಮ್ಮ ಮೂಲ ಸಂಸ್ಕೃತಿಯಲ್ಲಿದೆ. ಈ ಮೂರೂ ವಿಧದ ದಾನಗಳು ಈ ಸಂಸ್ಥೆಯಿಂದ ಆಗುತ್ತಿವೆ ಎಂದರು. ಕೃಷ್ಣಮೂರ್ತಿ ಅವರ ಶಿಷ್ಯ ವಿಷ್ಣುಮೂರ್ತಿ ಪ್ರಭು, ತಮ್ಮ ಗುರುಗಳ ಬಹುಭಾಷಾ ಪಾಂಡಿತ್ಯ ಮತ್ತು ವಿದ್ವತ್ ಶ್ರೀಮಂತಿಕೆಯನ್ನು ಸಭೆಗೆ ಪರಿಚಯಿಸಿದರು. ವಕೀಲರಾದ ರಾಮಚಂದ್ರ ಅಡಿಗ, ಬಿ.ಹರೀಶ್ ತಂತ್ರಿ, ಕೃಷ್ಣ ಭಟ್ ಮತ್ತು ಪರಮೇಶ್ವರೀ, ಸರೋಜ, ಸುಬ್ರಹ್ಮಣ್ಯ ಭಟ್, ಜೆಸಿಂತಾ, ಮಧುಕರ ಪೂಜಾರಿ, ವಿಠ್ಠಲ ಪೂಜಾರಿ ಉಪಸ್ಥಿತರಿದ್ದರು. ಸಂಸ್ಥೆಯ ಸದಸ್ಯರಾದ ಯು.ವಿಶ್ವನಾಥ ಶೆಣೈ, ಭುವನಪ್ರಸಾದ ಹೆಗ್ಡೆ, ವಿಜಯ ಕುಮಾರ್ ಮುದ್ರಾಡಿ, ಅನಂತರಾಜ ಉಪಾಧ್ಯಾಯ, ಡಾ. ರಾಘವೇಂದ್ರ ರಾವ್, ಪ್ರಾಂಶುಪಾಲ ಅಮರೇಶ್ ಹೆಗಡೆ, ಪತ್ರಕರ್ತ ಪಳ್ಳಿ ಸುರೇಶ್ ಡಿ., ತಂಗಪ್ಪನ್, ಕಲಾವಿದ ಜಡ್ಕಲ್ ಗೋಪಾಲ ಭಾಗವಹಿಸಿದ್ದರು. ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ.ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.
ವಿಶ್ವದಾದ್ಯಂತ ಟ್ವಿಟರ್ ಸರ್ವರ್ ಡೌನ್
Twitter: ಎಲಾನ್ ಮಸ್ಕ್ ಮಾಲೀಕತ್ವದ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಟ್ವಿಟರ್ ಸರ್ವರ್ ಡೌನ್ ಆಗಿದ್ದು, ಬಳಕೆದಾರರು ಪರದಾಡುತ್ತಿದ್ದಾರೆ. ವೆಬ್ಸೈಟ್ ಹಾಗೂ ಮೊಬೈಲ್ ಆಪ್ ಎರಡೂ ಸರಿಯಾಗಿ ಲೋಡ್ ಆಗುತ್ತಿಲ್ಲ. ಅನೇಕ ಬಳಕೆದಾರರಿಗೆ ಕೇವಲ ಲೋಗೋ ಮಾತ್ರ ಕಾಣಿಸುತ್ತಿದ್ದು, ಕೆಲವರಿಗೆ Something went wrong. Try reloading. ಎಂಬ ಸಂದೇಶ
Raichur | ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಗಾರ
ರಾಯಚೂರು: ಪ್ರತಿಯೊಬ್ಬ ಭಾರತೀಯರೂ ತಮ್ಮ ಮೂಲಭೂತ ಹಕ್ಕುಗಳನ್ನು ಪಡೆಯುವುದು ಸಂವಿಧಾನದ ಆಶಯವಾಗಿದ್ದು, ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ಮುಟ್ಟಿಸುವ ಕಾರ್ಯವನ್ನು ಅರೆಕಾಲಿಕ ಕಾನೂನು ಸ್ವಯಂಸೇವಕರು ಸಮರ್ಪಕವಾಗಿ ನಿರ್ವಹಿಸಬೇಕು ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಮಹಾವರಕರ್ ಗುಲ್ಜರ್ ಲಾಲ್ ಅವರು ಹೇಳಿದರು. ಸೋಮವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಔಟ್ ಲಾಡ್ ಇಂಡಿಯಾ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಅರೆಕಾಲಿಕ ಕಾನೂನು ಸ್ವಯಂಸೇವಕರ ನಾಲ್ಕು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರು ಅನುಭವಿಸುತ್ತಿರುವ ಸ್ವಾತಂತ್ರ್ಯವು ದೇಶದ ಸಂವಿಧಾನ ನೀಡಿರುವ ಅದ್ಭುತ ಕೊಡುಗೆಯಾಗಿದೆ. ವ್ಯಕ್ತಿಗೆ ಸಿಗಬೇಕಾದ ಸೌಲಭ್ಯ, ಮಾಹಿತಿ ಮತ್ತು ಸೇವೆಗಳನ್ನು ಒದಗಿಸುವ ಜವಾಬ್ದಾರಿ ಸರ್ಕಾರದ ವಿವಿಧ ಇಲಾಖೆಗಳ ಮೇಲಿದೆ. ಆದಾಗ್ಯೂ, ಕಾನೂನು ಅರಿವಿನ ಕೊರತೆಯಿಂದ ಕೆಲವರಿಗೆ ಈ ಸೌಲಭ್ಯಗಳು ತಲುಪುತ್ತಿಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾನ್ಯ ಕಾನೂನು ಜ್ಞಾನ ತಲುಪಿಸಿ, ಅವರನ್ನು ತೊಂದರೆಗಳಿಂದ ಪಾರು ಮಾಡುವುದು ಸ್ವಯಂಸೇವಕರ ಪ್ರಮುಖ ಕರ್ತವ್ಯವಾಗಿದೆ. ಸಮಾಜ ಸೇವೆ ಮಾಡುವ ಮನೋಭಾವ ಹೊಂದಿರುವವರು ಮುಂದೆ ಬಂದಿರುವುದು ಶ್ಲಾಘನೀಯ ಎಂದು ಅವರು ಹೇಳಿದರು. ಇದಕ್ಕೂ ಮೊದಲು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ನ್ಯಾ. ಹೆಚ್.ಎ. ಸಾತ್ವಿಕ್ ಮಾತನಾಡಿ, ಸಾರ್ವಜನಿಕರಿಗೆ ಉಚಿತ ಕಾನೂನು ಸಲಹೆ ನೀಡುವುದು ಈ ತರಬೇತಿಯ ಉದ್ದೇಶವಾಗಿದೆ. ಜಾತಿ ಪ್ರಮಾಣಪತ್ರ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಅರಿವು ಇಲ್ಲದವರಿಗೆ ಸರಿಯಾದ ಮಾರ್ಗದರ್ಶನ ನೀಡುವುದು ಸ್ವಯಂಸೇವಕರ ಜವಾಬ್ದಾರಿಯಾಗಿದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುರೇಂದ್ರ ಬಾಬು ಮಾತನಾಡಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಅಗತ್ಯವಿರುವ ನೆರವನ್ನು ಆರೋಗ್ಯ ಇಲಾಖೆಯಿಂದ ಒದಗಿಸಲಾಗುವುದು. ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜಿಲ್ಲಾ ಮಟ್ಟದ ವೈದ್ಯರ ತನಕ ಕಾನೂನು ಅರಿವು ಮೂಡಿಸಲು ಪ್ರಯತ್ನಿಸಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಶ್ರೀಕಾಂತ್ ಎಸ್.ವಿ., ಔಟ್ ಲಾಡ್ ಇಂಡಿಯಾ ಸಂಸ್ಥೆಯ ವೆಂಕಟೇಶ ಎಚ್., ಜೋಮಿ ಜಾಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಕೀಲರಾದ ಮಾಲತಿ ಅವರು ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪ ಸ್ವಾಗತಿಸಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ವಂದಿಸಿದರು.
ನಗರ ಕುಟುಂಬ ಕಲ್ಯಾಣ ಕೇಂದ್ರ ಸ್ಥಗಿತ: ಪುನರಾರಂಭಿಸಲು ಆಗ್ರಹ
ಉಡುಪಿ, ಫೆ.16: ನಗರದ ಕುಕ್ಕಿಕಟ್ಟೆ ಡಯಾನ ಚಿತ್ರಮಂದಿರದ ಎದುರು, ಸುಮಾರು ಇಪ್ಪತ್ತು ವರ್ಷಗಳಿಂದ ಸೇವಾ ನಿರತವಾಗಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರವು ಸೇವೆಯನ್ನು ಸ್ಥಗಿತಗೊಳಿಸಿದ್ದು, ಬಾಗಿಲಿಗೆ ಬೀಗ ಜಡಿಯಲಾಗಿದೆ. ಪರಿಸರದ ಸುತ್ತಮುತ್ತಲಿನ ನಾಗರಿಕರು ಚಿಕಿತ್ಸೆ ಪಡೆಯಲು ಪರದಾಡ ಬೇಕಾದ ಪರಿಸ್ಥಿತಿ ಎದುರಾಗಿದೆ. ಶಿಶುಗಳಿಗೆ ಲಸಿಕೆ, ಚುಚ್ಚುಮದ್ದು ಹಾಗೂ ಗರ್ಭಿಣಿಯರಿಗೆ ತಪಾಸಣೆ, ಅಗತ್ಯ ಚಿಕಿತ್ಸೆಗಳು ಕ್ಲಪ್ತ ಸಮಯದಲ್ಲಿ ದೊರೆಯುತಿತ್ತು. ಅಲ್ಲದೆ ಜ್ವರಬಾಧೆ, ಶೀತ, ಕೆಮ್ಮು ಮೊದಲಾದ ವ್ಯಾಧಿಗಳಿಂದ ಬಳಲುವ ರೋಗಿಗಳು ಚಿಕಿತ್ಸೆ ಪಡೆಯಲು ಅವಕಾಶವಿತ್ತು. ಎದುರಾಗಿರುವ ಸಮಸ್ಯೆಯಿಂದ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಹಣತೆತ್ತು ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಬಡ ಕುಟುಂಬಗಳ ಶಿಶುಗಳಿಗೆ, ಗರ್ಭಿಣಿಯರಿಗೆ, ರೋಗಿಗಳಿಗೆ ಎದುರಾಗಿದೆ. ಸರಕಾರದ ಉಚಿತ ಚಿಕಿತ್ಸಾ ಸೇವೆಯನ್ನು ಪಡೆಯಲು, ನಾಗರೀಕ ಸಮಾಜವು ವಂಚಿತವಾಗದಂತೆ ತಡೆಯಬೇಕಾಗಿದ್ದು ಆಡಳಿತ ವ್ಯವಸ್ಥೆಗಳ ಕರ್ತವ್ಯವಾ ಗಿದೆ. ತಕ್ಷಣ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆಯು, ಕರ್ತವ್ಯ ನಿಲ್ಲಿಸಿರುವ ಕುಕ್ಕಿಕಟ್ಟೆಯ ನಗರ ಕುಟುಂಬ ಕಲ್ಯಾಣ ಕೇಂದ್ರವನ್ನು ಪುನಾರಂಭಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.
Raichur | ಗೃಹ ಆರೋಗ್ಯ ಯೋಜನೆಯ ಮಹತ್ವ ಅರಿಯೋಣ : ಡಾ.ಸುರೇಂದ್ರ ಬಾಬು ಸಲಹೆ
ಗೃಹ ಆರೋಗ್ಯ ಯೋಜನೆಯ ತರಬೇತಿ ಕಾರ್ಯಾಗಾರ
ರಿಫಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ವಿಶೇಷ ಸಭೆ
ಉಡುಪಿ, ಫೆ.16: ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಉಡುಪಿ ಘಟಕದ ವತಿಯಿಂದ ವಿಶೇಷ ಸಭೆ ಇಂದು ನಗರದ ಹಾಶ್ನಿ ಮಸೀದಿಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ರಾಷ್ಟ್ರೀಯ ಮುಖ್ಯಸ್ಥ ಹಾಗೂ ಇಸ್ಲಾಮಿಕ್ ಪಂಡಿತ ಎಸ್.ಅಮೀನುಲ್ ಹಸನ್, ಉದ್ಯಮ, ನೈತಿಕತೆ ಮತ್ತು ಸಮುದಾಯಾಭಿವೃದ್ಧಿ ಕುರಿತಾಗಿ ಮಾತನಾಡಿದರು. ವ್ಯವಹಾರದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅಗತ್ಯತೆಯನ್ನು ಒತ್ತಿ ಹೇಳಿದರು. ಸಸ್ಥಿರ ಅಭಿವೃದ್ಧಿ, ಆರ್ಥಿಕ ಸ್ವಾವಲಂಬನೆ ಹಾಗೂ ಯುವ ಉದ್ಯಮಿಗಳಿಗೆ ಮಾರ್ಗದರ್ಶನದ ಅಗತ್ಯತೆ ಕುರಿತು ಚರ್ಚೆ ನಡೆಯಿತು. ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಉಡುಪಿ ಘಟಕದ ಅಧ್ಯಕ್ಷ ಆಸೀಫ್ ಇಕ್ಬಾಲ್ ಉಪಸ್ಥಿತರಿದ್ದರು. ಸದಸ್ಯರಾದ ಇಸಾಕ್ ಕಿದಿಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಫೈಝ್ ಅಹಮದ್ ಕುರಾನ್ ಪಠಿಸಿದರು. ಝಹೀರ್ ಮಣಿಪಾಲ್ ಕಾರ್ಯಕ್ರಮ ನಿರೂಪಿಸಿದರು
ಕಾಂಗ್ರೆಸ್ ನಾಯಕತ್ವ ಅಸಹಾಯಕವಲ್ಲ, ಸಮಯ ಬಂದಾಗ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ : ಬಿ.ಕೆ.ಹರಿಪ್ರಸಾದ್
ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಅಸಹಾಯಕವಲ್ಲ, ಸಮಯ ಸಂದರ್ಭ ಬಂದಾಗ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ. ಜತೆಗೆ, ನಮ್ಮಲ್ಲಿ ಯಾವುದೇ ರೀತಿಯ ನಾಯಕತ್ವ ಗೊಂದಲ ಇಲ್ಲ ಎಂದು ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ತೀರ್ಮಾನಿಸಬೇಕು. ಯಾವುದೇ ವಾಹನ ಎರಡು ಟ್ರಾಕ್ಗಳಲ್ಲಿ ಹೋಗಲು ಆಗುವುದಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಎರಡು ಇಂಜಿನ್ಗಳೇ ಆಗಿವೆ. ಸರಕಾರದಲ್ಲಿ ಸಿದ್ದರಾಮಯ್ಯ ಮುಂದೆ ಇದ್ದರೆ ಪಕ್ಷದ ಅಧ್ಯಕ್ಷರು ಹಿಂದಿರುತ್ತಾರೆ. ಪಕ್ಷ ಬಂದಾಗ ಡಿಕೆ ಶಿವಕುಮಾರ್ ಮುಂದೆ ಬರುತ್ತಾರೆ ಎಂದರು.
ಮಂಗಳೂರು: ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ
ಮಂಗಳೂರು, ಫೆ.16: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಆದರೆ ತೀವ್ರ ತಪಾಸಣೆಯ ಬಳಿಕ ಇದೊಂದು ಹುಸಿ ಬೆದರಿಕೆ ಎಂದು ತಿಳಿದು ಬಂದಿದೆ. ಎಂದಿನಂತೆ ಸೋಮವಾರ ಕೋರ್ಟ್ ಕಲಾಪಗಳು ಆರಂಭವಾಗಿತ್ತು. ಮಧ್ಯಾಹ್ನದ ವೇಳೆ ಇ-ಮೇಲ್ ಬಂದಿರುವುದು ತಿಳಿಯಿತು ಎನ್ನಲಾಗಿದೆ. ಆರ್ಡಿಎಕ್ಸ್, ಐಇಡಿ ಸ್ಫೋಟಕಗಳನ್ನು ಬಳಸಿ ನ್ಯಾಯಾಲಯ ಸಂಕೀರ್ಣ ಕಟ್ಟಡವನ್ನು ಸ್ಫೋಟಗೊಳಿಸುವುದಾಗಿ ಇ-ಮೇಲ್ನಲ್ಲಿ ವ ಬೆದರಿಕೆ ಹಾಕಲಾಗಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಹಾಗೇ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳವು ತೀವ್ರ ತಪಾಸಣೆ ನಡೆಸಿತು. ಬಂದರು ಠಾಣೆಯ ಪೊಲೀಸರು ಕೂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆದರೆ ನ್ಯಾಯಾಲಯದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಹಾಗಾಗಿ ಇದೊಂದು ಹುಸಿ ಬೆದರಿಕೆ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪಗಳಿಗೆ ಕೆಲಕಾಲ ಹೊತ್ತು ಅಡ್ಡಿಯಾಯಿತು. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಜೇವರ್ಗಿ | ಫೆ.18 ರಂದು ಸೇವಾ ರತ್ನ ಪ್ರಶಸ್ತಿ ಪ್ರದಾನ : ದಾನಪ್ಪಗೌಡ ಹಳ್ಳಿಮನಿ
ಜೇವರ್ಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ತಾಲೂಕು ಘಟಕ ಜೇವರ್ಗಿ ವತಿಯಿಂದ ತಾಲೂಕು ಮಟ್ಟದ ಉತ್ತಮ ಸೇವಾ ರತ್ನ ಪ್ರಶಸ್ತಿ ಪ್ರದಾನ, ವಾರ್ಷಿಕ ಮಹಾಸಭೆ ಮತ್ತು ಕಾನೂನು ಕಾರ್ಯಗಾರ ಸಮಾರಂಭವನ್ನು ಫೆ.18ರಂದು ಧರ್ಮಸಿಂಗ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ದಾನಪ್ಪಗೌಡ ಹಳ್ಳಿಮನಿ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಸೇರಿದಂತೆ ಸುರೇಶ್, ಗಿರಿಗೌಡ, ಮಲ್ಲಿಕಾರ್ಜುನ್ ಬಳ್ಳಾರಿ, ಬಸವರಾಜು ಮತ್ತು ಇತರ ಗಣ್ಯರು ಆಗಮಿಸಲಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡಾ. ಶಿವಾನಂದ ಮಹಾಸ್ವಾಮಿಗಳು ವಹಿಸಲಿದ್ದಾರೆ. ಕೆಕೆಆರ್ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕ ಅಜಯ್ ಸಿಂಗ್, ಶಾಸಕ ಅಲ್ಲಂಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ಜಿ. ನಮೋಸಿ, ಚಂದ್ರಶೇಖರ್ ಪಾಟೀಲ್, ಶರಣಪ್ಪ ಮಟ್ಟೂರು, ದೊಡ್ಡಪ್ಪಗೌಡ ಪಾಟೀಲ, ಶಿವರಾಜ ಪಾಟೀಲ ರದ್ದೇವಾಡಗಿ ಮತ್ತು ರಾಜಶೇಖರ ಸಿರಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀಶೈಲ ಅರಳಗುಂಡಗಿ, ಭಾಗಣ್ಣ ಕೊನ್ನಳ್ಳಿ, ಶಿವಾನಂದ ದ್ಯಾಮಗೊಂಡ, ಶಂಬಣ್ಣ ಹೂಗಾರ, ಜಾನುಮಿಯಾ ಮದರಿ ಮತ್ತು ಅಚ್ಚುತಪ್ಪ ಒಡೆಯರ ಉಪಸ್ಥಿತರಿದ್ದರು.
ಆಸ್ತಿ ತೆರಿಗೆ ಬಾಕಿ: 98 ಸ್ವತ್ತುಗಳ ಹರಾಜು ಹಾಕಲು ಮುಂದಾದ ಬೆಂಗಳೂರಿನ ದಕ್ಷಿಣ ನಗರ ಪಾಲಿಕೆ!
ತೆರಿಗೆ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳನ್ನು ಹರಾಜು ಹಾಕಲು ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ ಮುಂದಾಗಿದೆ. ಹಲವು ಬಾರೀ ನೋಟಿಸ್ ನೀಡಿದರು ಆಸ್ತಿ ತೆರಿಗೆಯನ್ನು ಮಾಲೀಕರು ಪಾವತಿ ಮಾಡದ ಹಿನ್ನೆಲೆ ಈ ಕ್ರಮಕೈಗೊಳ್ಳಲಾಗಿದೆ. ಇನ್ನು ಹಾರಾಜಿಗೂ ಮುನ್ನ ತೆರಿಗೆ ಪಾವತಿಸಿದರೆ ಹರಾಜು ಪ್ರಕ್ರಿಯೆ ಕೈಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Kalaburagi | ಕ್ರೀಡೆ ದೈಹಿಕ ಸದೃಢತೆಯ ಸಂಕೇತ : ರವೀಂದ್ರನಾಥ ಬಾಳ್ಳಿ
ಜಿಲ್ಲಾ ಮಟ್ಟದ ತರಬೇತಿದಾರರ ಕ್ರೀಡಾಕೂಟಕ್ಕೆ ಚಾಲನೆ
Kalaburagi | ಬಂಜಾರಾ ಇತಿಹಾಸದ ಸಮಗ್ರ ಅಧ್ಯಯನ ಅಗತ್ಯ : ಡಾ.ಉಮೇಶ್ ಜಾಧವ
ಗುಲ್ಬರ್ಗಾ ವಿವಿ ಸಂತಶ್ರೀ ಸೇವಾಲಾಲ್ ಜಯಂತಿ ಆಚರಣೆ
ಬಾಗಲಕೋಟೆ ಕ್ಷೇತ್ರದ ಮರುಚುನಾವಣೆ : ಟಿಕೆಟ್ ಕಿತ್ತಾಟ, ಕೈಕಮಾಂಡ್ ಎಂಟ್ರಿ
ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಮರು ಚುನಾವಣೆ ನಡೆಯುತ್ತಿದೆ. ಕ್ಷೇತ್ರದ ಶಾಸಕ ದಿ.ಎಚ್.ವೈ.ಮೇಟಿಯವರ ಪುತ್ರರು, ಪುತ್ರಿಯರ ಮಧ್ಯೆ ಟಿಕೆಟ್ ಫೈಟ್ ಜೋರಾಗಿದೆ. ಟಿಕೆಟ್ ಕಿತ್ತಾಟ ನಿಯಂತ್ರಿಸಲು ಹೈಕಮಾಂಡ್ ಮಧ್ಯ ಪ್ರವೇಶಿಸಿದೆ. ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ಸಭೆ ನಡೆಸಿದ್ದಾರೆ. ಮನವೊಲಿಕೆ ಪ್ರಯತ್ನ ನಡೆದಿದೆ.
Kalaburagi | ಶಿವಯೋಗಕ್ಕೆ ಎಲ್ಲಾ ದಿನಗಳು ಶ್ರೇಷ್ಠ: ಡಾ.ಜಯಶ್ರೀ ದಂಡೆ
‘ಅರಿವಿನ ಮನೆ’ 888ನೇ ದತ್ತಿ ಕಾರ್ಯಕ್ರಮ
CBSE 10ನೇ ತರಗತಿ ವಿದ್ಯಾರ್ಥಿಗಳೇ ಗಮನಿಸಿ: ವಿಭಾಗವಾರು ಉತ್ತರ ಬರೆಯದಿದ್ದರೆ ಸಿಗುವುದಿಲ್ಲ ಅಂಕ
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) 2026ರ ಬೋರ್ಡ್ ಪರೀಕ್ಷೆ ಬರೆಯಲಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಾದ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ವಿಜ್ಞಾನ (Science) ಮತ್ತು ಸಮಾಜ ವಿಜ್ಞಾನ (Social Science) ವಿಷಯಗಳ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ವಿಭಾಗವಾರು (Section-wise) ಉತ್ತರಗಳನ್ನು ಬರೆಯಲೇಬೇಕು ಎಂದು ಮಂಡಳಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಬೇರೆ ಬೇರೆ ವಿಭಾಗಗಳ ಉತ್ತರಗಳನ್ನು
ವಾಡಿ | ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸಹಸ್ರ ದೀಪೋತ್ಸವ
ವಾಡಿ: ನಿಸ್ವಾರ್ಥ ಭಾವದಿಂದ ಸೇವೆಗೈದ ಭಕ್ತರಿಗೆ ಶಿವರಾತ್ರಿಯಂದು ಕೈಲಾಸವಾಸಿ ಶಿವನು ವಿಶೇಷವಾಗಿ ಅನುಗ್ರಹ ನೀಡುತ್ತಾನೆ ಎಂದು ರಾವೂರಿನ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಮಹಾ ಶಿವರಾತ್ರಿ ನಿಮಿತ್ತ ರವಿವಾರ ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಮ್ಮಿಕೊಂಡ ಸಹಸ್ರ ದೀಪೋತ್ಸವ ಹಾಗೂ ಮುಗುಳಕೋಡ ಶ್ರೀ ಯಲ್ಲಾಲಿಂಗ ಮಹಾರಾಜರ ಮಹಾ ಪುರಾಣ ಪ್ರವಚನ ಸಮಾರೋಪ ಸಮಾರಂಭದ ಸಾನಿದ್ಯವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೀರಶೈವ ಲಿಂಗಾಯತ ಸಮಾಜದ ಜಿಲ್ಲಾಧ್ಯಕ್ಷ ಶರಣು ಮೋದಿ ಮಾತನಾಡಿದರು. ಹಬ್ಬದ ಅಂಗವಾಗಿ ಪ್ರತಿಷ್ಠಾಪಿಸಲಾದ ಜ್ಯೋತಿರ್ಲಿಂಗಗಳ ದರ್ಶನ ಮಾಡಲು ಬಂದ ನೂರಾರು ಭಕ್ತರು ಶಿವಲಿಂಗ ಪೂಜೆ ನೆರವೇರಿಸುವ ಮೂಲಕ ಶಿವನಾಮಸ್ಮಣೆ ಮಾಡಿದರು. ಸಂಜೆ ಮಲ್ಲಿಕಾರ್ಜುನ ದೇವ ಸ್ಥಾನದ ಆವರಣದಲ್ಲಿ ಮಹಿಳೆಯರು ಬೆಳಗಿಸಿದ ಸಾಲು ಸಾಲು ದೀಪಗಳು, ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದ್ದ ದೇವಸ್ಥಾನದ ಶಿಖರ ಎಲ್ಲರ ಗಮನ ಸೆಳೆಯಿತು. ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಬಸವರಾಜ ಕೀರಣಗಿ, ಮಲ್ಲಿಕಾರ್ಜುನ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಶಾಂತಪ್ಪ ಶೆಳ್ಳಗಿ, ಕಾರ್ಯದರ್ಶಿ ಪರುತಪ್ಪ ಕರದಳ್ಳಿ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷಸದಾಶಿವ ಕಟ್ಟಿಮನಿ, ಕಾರ್ಯದರ್ಶಿ ಅಣ್ಣಾರಾವ ಪಸಾರೆ ಇತರ ಗಣ್ಯರು ಪಾಲ್ಗೊಂಡಿದ್ದರು. ಸಮಾಜದ ಖಜಾಂಚಿ ಕಾಶೀನಾಥ ಶಟಗಾರ ಸ್ವಾಗತಿಸಿದರು. ವೀರಣ್ಣಯಾರಿ ನಿರೂಪಿಸಿದರು. ಭೀಮಶಾ ಜಿರೊಳ್ಳಿ ವಂದಿಸಿದರು.
ಯಡ್ರಾಮಿ | ಸೇವಾಲಾಲ್ ಅವರು ಸಮುದಾಯಕ್ಕೆ ಆದರ್ಶ: ಶಾಸಕ ಡಾ.ಅಜಯ್ ಸಿಂಗ್
ಸಂತ ಸೇವಾಲಾಲ ಜಯಂತಿ ಆಚರಣೆ
ಭಾರತ-ಅಮೆರಿಕ ನುಡುವೆ ವ್ಯಾಪಾರ ಒಪ್ಪಂದ ರೈತರಿಗೆ ಮರಣ ಶಾಸನ : ಮುಖ್ಯಮಂತ್ರಿ ಚಂದ್ರು
ಬೆಂಗಳೂರು : ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದಾಗಿ ಪ್ರಧಾನಿ ಮೋದಿ ಭಾರತದ ಬಡ ರೈತರಿಗೆ ಮರಣ ಶಾಸನ ಬರೆದಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ಪರಂಪರೆಯಿಂದಲೂ ಕೃಷಿ ಕ್ಷೇತ್ರವನ್ನು ತನ್ನ ಆರ್ಥಿಕತೆಯ ಬೆನ್ನೆಲುಬಾಗಿ ಕಾಪಾಡಿಕೊಂಡು ಬಂದಿದೆ. ನಮ್ಮ ರೈತರು ಕೃಷಿ ಕ್ಷೇತ್ರದಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸಿದ್ದಾರೆ. ಕೋಟ್ಯಾಂತರ ಸಣ್ಣಸಣ್ಣ ಹಿಡುವಳಿದಾರರು ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು. 145 ಕೋಟಿ ಜನಸಂಖ್ಯೆಯಲ್ಲಿ 85-90 ಕೋಟಿ ರೈತರು ಯಾವುದೇ ಯಾಂತ್ರಿಕೃತ ವ್ಯವಸ್ಥೆಗಳಿಲ್ಲದೆ ಕೃಷಿ ಬದುಕಿನಲ್ಲಿ ತೊಡಗಿಕೊಂಡಿದ್ದಾರೆ. ಈ ವ್ಯಾಪಾರ ಒಪ್ಪಂದದಲ್ಲಿ ಯಾಂತ್ರಿಕೃತ ವ್ಯವಸ್ಥೆಯಿಂದ ಬೆಳೆದಿರುವ ಅಮೆರಿಕಾ ದೇಶದ ಲಕ್ಷಾಂತರ ಕೃಷಿ ಬೆಳೆಗಳನ್ನು ಭಾರತ ಶೂನ್ಯ ಅಥವಾ ಕಡಿಮೆ ಸುಂಕದ ರೂಪದಲ್ಲಿ ಮಾರುಕಟ್ಟೆ ಸೃಷ್ಟಿಸಲು ಹೊರಟಿರುವುದು ಆತಂಕಕಾರಿಯಾಗಿದೆ ಎಂದರು ಅವರು ತಿಳಿಸಿದರು. 45 ಲಕ್ಷ ಕೋಟಿ ರೂ.ಗು ಹೆಚ್ಚಿನ ಮೊತ್ತದ ಅಮೆರಿಕಾ ಕೃಷಿ ಬೆಳೆಗಳನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಬೇಕಿದೆ. ಇಲ್ಲಿನ ಕೃಷಿ ಬೆಳೆಗಳನ್ನು ಅಮೆರಿಕ ದೇಶಕ್ಕೆ ರಫ್ತು ಮಾಡಬೇಕಿದ್ದಲ್ಲಿ ಶೇ.18 ರಷ್ಟು ಸುಂಕ ವೆಚ್ಚವನ್ನು ತೆರಬೇಕಿದೆ. ಇದುವೇ ಭಾರತೀಯ ರೈತರುಗಳಿಗೆ ಮೋದಿ ನೀಡುತ್ತಿರುವ ಗಲ್ಲು ಶಿಕ್ಷೆ ಎಂದು ಮುಖ್ಯಮಂತ್ರಿ ಚಂದ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಸೀತರಾಮ್ ಗುಂಡಪ್ಪ, ಪದಾಧಿಕಾರಿಗಳಾದ ಲಕ್ಷ್ಮೀಕಾಂತ ರಾವ್, ರವಿಕುಮಾರ್, ಮಹದೇವಸ್ವಾಮಿ, ಜಗದೀಶ್ ಸದಂ, ಮೋಹನ್, ಮೃತ್ಯಂಜಯ್, ದಿನೇಶ್, ಪುಟ್ಟಣ್ಣ, ಗೌಡ, ಪುಷ್ಪಾ ಸೇರಿದಂತೆ ಹಲವರು ಭಾಗವಹಿಸಿದ್ದರು.
ಆರೋಗ್ಯ ಕವಚ ಆಂಬುಲೆನ್ಸ್ ಚಾಲಕರಿಗೆ ಗುಡ್ ನ್ಯೂಸ್: ವೇತನ, ಬೋನಸ್ ಬಗ್ಗೆ ಬಂದಿದೆ ಸರ್ಕಾರಿ ಆದೇಶ
ಬೆಂಗಳೂರು: ರಾಜ್ಯದಲ್ಲಿ 108 ಆಂಬ್ಯುಲೆನ್ಸ್ ಸೇವೆಯನ್ನು ಉತ್ತಮಗೊಳಿಸಲು, ಸೇವೆಯ ನಿಯಂತ್ರಣಕ್ಕಾಗಿ 'ಕಮಾಂಡ್ ಕಂಟ್ರೋಲ್' ಕೇಂದ್ರವನ್ನು ಆರೋಗ್ಯ ಇಲಾಖೆಗೆ ವ್ಯಾಪ್ತಿಗೆ ತಂದು 'ಆರೋಗ್ಯ ಕವಚ' ಬಲಪಡಿಸಲು ಸರ್ಕಾರ ಸಜ್ಜಾಗಿದೆ. ಇದರ ಬೆನ್ನಲ್ಲೆ ಆರೋಗ್ಯ ಕವಚ ಆಂಬುಲೆನ್ಸ್ ಚಾಲಕರ ವೇತನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದ ಪ್ರಕಾರ, 108-ಆರೋಗ್ಯ ಕವಚ ಸೇವೆಯ ಇ.ಎಂ.ಟಿ (EMT) ಮತ್ತು
Bengaluru | ಕಾರು ಹರಿದು 2 ವರ್ಷದ ಮಗು ಮೃತ್ಯು: ಸ್ಥಳೀಯರಿಂದ ರಸ್ತೆ ತಡೆ
ಬೆಂಗಳೂರು : ಕಾರು ಹರಿದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಇಲ್ಲಿನ ಮಹದೇವಪುರದ ಕಿತ್ತಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಇದಕ್ಕೆ ಆಮೆಗತಿಯ ರಸ್ತೆ ದುರಸ್ತಿ ಕಾಮಗಾರಿಯೇ ಕಾರಣವೆಂದು ಆರೋಪಿಸಿ ಸ್ಥಳೀಯರು ಕೆಲಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಮಗುವನ್ನು ತ್ರಿಶಾನ್(2) ಎಂದು ಗುರುತಿಸಲಾಗಿದ್ದು, ರವಿವಾರ ಶಿವರಾತ್ರಿ ಹಬ್ಬ ಹಿನ್ನೆಲೆ ಸಂಬಂಧಿಕರೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ಈ ಘಟನೆ ಸಂಭವಿಸಿದೆ. ಕೃತ್ಯವೆಸಗಿರುವ ಆರೋಪದಡಿ ಕಾರಿನ ಚಾಲಕ ಕೃಷ್ಣ ಮೋಹನ್ ಮೆನನ್ ಎಂಬಾತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಕೆ.ಆರ್.ಪುರಂ ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ತ್ರಿಶಾನ್ನೊಂದಿಗೆ ಸಂಬಂಧಿಕರು ಮಾರಗೊಂಡನಹಳ್ಳಿಯ ಶಿವ ದೇವಾಲಯಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಹಳೆಹಳ್ಳಿಯ ಕಾಶಪ್ಪ ಸರ್ಕಲ್ ಬಳಿ ಸಂಚಾರ ದಟ್ಟಣೆಯಲ್ಲಿ ನಿಂತಿದ್ದಾಗ ಹಿಂಬದಿಯಿಂದ ಬಂದ ಕಾರು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿದೆ. ಈ ವೇಳೆ ಆಯತಪ್ಪಿ ನೆಲಕ್ಕೆ ಬಿದ್ದ ಮಗುವಿನ ಮೇಲೆ ಕಾರು ಹರಿದಿದೆ. ಕೂಡಲೇ ಭಟ್ಟರಹಳ್ಳಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆಯಾದರೂ ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನೆಗೆ ಹದಗೆಟ್ಟ ರಸ್ತೆ, ಆಮೆಗತಿಯ ಕಾಮಗಾರಿಯೇ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಸೋಮವಾರ ಮಗುವಿನ ಫೋಟೋ ಹಿಡಿದು ಘಟನಾ ಸ್ಥಳದಲ್ಲಿ ಜಮಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸಾಕಷ್ಟು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದೇವೆ, ಕಳೆದ ಆರು ತಿಂಗಳಿನಿಂದಲೂ ಆಮೆಗತಿಯಲ್ಲಿ ದುರಸ್ತಿ ಕಾರ್ಯ ಮಾಡಲಾಗುತ್ತಿದೆ. ಇಲ್ಲಿ ಸಂಭವಿಸುತ್ತಿರುವ ಸಾವುನೋವುಗಳಿಗೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದರು.
ಚಿತ್ತಾಪುರ | ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗೆ ವಿಬಿ-ಜಿ ರಾಮ್ ಜಿ ದಿಕ್ಸೂಚಿ : ರಾಜಶೇಖರ
ಚಿತ್ತಾಪುರ : ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಗ್ರಾಮೀಣ ಭಾಗದ ಪ್ರತಿಯೊಬ್ಬ ವ್ಯಕ್ತಿಯ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ (VB-G RAM G) ಯೋಜನೆಯು ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗೆ ಹೊಸ ದಿಕ್ಸೂಚಿಯಾಗಲಿದೆ ಎಂದು ಅಭಿಯಾನದ ಮಂಡಲ ಸಂಯೋಜಕ ರಾಜಶೇಖರ ನಾಗಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಬಿಜೆಪಿ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾದ ವಿಶೇಷ ಜನಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೂತನ ಕಾಯ್ದೆಯಡಿ ವಾರ್ಷಿಕ ಉದ್ಯೋಗದ ಮಿತಿಯನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ಇದು ಗ್ರಾಮೀಣ ಕಾರ್ಮಿಕರಿಗೆ ದೊಡ್ಡ ಆಸರೆಯಾಗಲಿದೆ. ಅಷ್ಟೇ ಅಲ್ಲದೆ, ಕೃಷಿ ಹಂಗಾಮಿನ ಸಮಯದಲ್ಲಿ ರೈತರಿಗೆ ಕಾರ್ಮಿಕರ ಕೊರತೆಯಾಗದಂತೆ 'ಕೃಷಿ ಬಿಡುವು' ನೀಡುವ ವಿಶೇಷ ಸೌಲಭ್ಯವನ್ನು ಈ ಯೋಜನೆಯಲ್ಲಿ ಅಳವಡಿಸಲಾಗಿದೆ. ನೇರ ನಗದು ವರ್ಗಾವಣೆಯ (DBT) ಮೂಲಕ ಮಧ್ಯವರ್ತಿಗಳ ಹಾವಳಿಗೆ ಈ ಕಾಯ್ದೆ ಸಂಪೂರ್ಣವಾಗಿ ಬ್ರೇಕ್ ಹಾಕಿದೆ ಎಂದು ವಿವರಿಸಿದರು. ಕ್ಷೇತ್ರದ ಅಭಿಯಾನ ಉಸ್ತುವಾರಿ ಶಶಿಕಲಾ ಟೆಂಗಳಿ ಮತ್ತು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್ ಅವರು ಮಾತನಾಡಿದರು. ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೂರ್, ಪುರಸಭೆ ಮಾಜಿ ಅಧ್ಯಕ್ಷ ನಾಗರಾಜ ಭಂಕಲಗಿ, ಮುಖಂಡರಾದ ಮಲ್ಲಿನಾಥ ಇಂದೂರ, ಸುರೇಶ್ ರಾಠೋಡ್, ಚಂದ್ರಶೇಖರ ಅವಂಟಿ, ಶರಣಗೌಡ ಭೀಮನಳ್ಳಿ, ಮಹಿಳಾ ಘಟಕದ ಅಧ್ಯಕ್ಷೆ ನಾಗೂಬಾಯಿ ಜಿತೂರೆ ಸೇರಿದಂತೆ ಮಂಡಲದ ನೂರಾರು ಮುಖಂಡರು ಮತ್ತು ಕಾರ್ಯಕರ್ತರು ಇದ್ದರು. ಜಿಲ್ಲಾ ಉಪಾಧ್ಯಕ್ಷ ಶರಣು ಜ್ಯೋತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಕಾರ್ಯದರ್ಶಿಗಳಾದ ನಾಗರಾಜ ಹೂಗಾರ್ ಮತ್ತು ಮಲ್ಲಿಕಾರ್ಜುನ್ ಇಟಗಿ ಕಾರ್ಯಕ್ರಮ ನಿರೂಪಿಸಿದರು, ವಾಡಿ ನಗರ ಘಟಕದ ಅಧ್ಯಕ್ಷ ವೀರಣ್ಣ ಯಾರಿ ವಂದಿಸಿದರು.
Shahabad | ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತಿ ಆಚರಣೆ
ಶಹಾಬಾದ್ : ಲಂಬಾಣಿ ಸಮುದಾಯ ಸಾವಿರಾರು ವರ್ಷಗಳಿಂದ ನಗರ ಹಾಗೂ ಗ್ರಾಮೀಣ ಜೀವನದಿಂದ ದೂರವಿದ್ದು ಅರಣ್ಯ ವಾಸಿಗಳಾಗಿ ಜೀವನ ಸಾಗಿಸುತ್ತಿದ್ದರು. ಸಮಾಜದಲ್ಲಿದ್ದ ಅಜ್ಞಾನ ಅಂಧಕಾರವನ್ನು ದೂರ ಮಾಡಿ ಜ್ಞಾನ ಮಾರ್ಗ ತೋರಿದವರು ಸಂತ ಸೇವಾಲಾಲರು ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹೇಳಿದರು. ನಗರದ ರೈಲ್ವೆ ನಿಲ್ದಾಣದ ಬಳಿಯಲ್ಲಿ ಬಂಜಾರಾ ಸಮಾಜದ ವತಿಯಿಂದ ಆಯೋಜಿಸಲಾದ ಸಂತ ಸೇವಾಲಾಲ್ ಮಹಾರಾಜ ಅವರ 287ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಂಜಾರಾ ಸಮಾಜದ ಹಿರಿಯ ಮುಖಂಡರಾದ ಕಿಶನ್ ನಾಯಕ ಹಾಗೂ ಸೂರಜ್ ರಾಠೋಡ್ ಮಾತನಾಡಿ, ಸತ್ಯ, ಅಹಿಂಸೆ, ದಯೆ ಮತ್ತು ಕರುಣೆಯ ಮೌಲ್ಯಗಳನ್ನು ಪಾಲಿಸಿ ಧರ್ಮಾತೀತರಾಗಿ ಬದುಕಬೇಕೆಂದು ಕರೆ ನೀಡಿದರು. ಸಮಾಜದ ಮುಖಂಡ ಕಿರಣ್ ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣದ ಮಹತ್ವವನ್ನು ವಿವರಿಸಿ ಎಲ್ಲರೂ ಶಿಕ್ಷಣ ಪಡೆದು ಅಕ್ಷರಜ್ಞಾನವನ್ನು ಹೊಂದಿ ಸಮಾಜಕ್ಕೆ ದಾರಿದೀಪರಾಗಬೇಕು ಎಂದರು. ಕನಕಪ್ಪ ದಂಡಗುಲಕರ್ ಮಾತನಾಡಿದರು. ತಹಶೀಲ್ದಾರ್ ನೀಲಪ್ರಭಾ ಬಬಲಾದ ಅವರು ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ವೇದಿಕೆಯಲ್ಲಿ ಜಿಲ್ಲಾ ಕಾಡಾ ಅಧ್ಯಕ್ಷ ಡಾ. ಎಂ.ಎ. ರಶೀದ್, ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ, ಹಾಷಮ್ ಖಾನ್, ಉದ್ಯಮಿ ಅನವೀರ ಇಂಗಿನಶೆಟ್ಟಿ, ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಳಗೋಳಕರ್, ಕಿರಣ್ ಚವ್ಹಾಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪತ್ರಕರ್ತ ವಾಸುದೇವ ಚವ್ಹಾಣ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ರೈಲ್ವೆ ಎಎಸ್ಐ ಜಿ.ಎಸ್. ಕಾಕರವಾಲ, ನರಸಿಂಗ ರಾಠೋಡ್, ಗೋಪಾಲ್ ಪವಾರ್, ಆನಂದ್ ಚವ್ಹಾಣ, ತಾರಾಸಿಂಗ್ ರಾಠೋಡ್, ಚಂದ್ರಶೇಖರ್ ನಾಯಕ, ಮದನಲಾಲ್, ಚನ್ನವೀರ ನಾಯಕ, ಸತೀಶ್ ಚವ್ಹಾಣ, ಯೋಗೇಶ್ ಚವ್ಹಾಣ, ಮೋಹನ್ ರಾಠೋಡ್, ರಾಜು ಚವ್ಹಾಣ, ನಾಗಪ್ಪ ರಾಯಚೂರಕರ್, ಬಸವರಾಜ ಬಿರಾದಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಕಿರಣ್ ಚವ್ಹಾಣ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.
ಪಶ್ಚಿಮ ಬಂಗಾಳ ಚುನಾವಣೆಗಾಗಿ ‘ವಂದೇ ಮಾತರಂ’ ಕಡ್ಡಾಯ : ಬಿ.ಕೆ.ಹರಿಪ್ರಸಾದ್
ಬೆಂಗಳೂರು : ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆ ಕೇಂದ್ರ ಸರಕಾರ ವಂದೇ ಮಾತರಂ ಗೀತೆ ಕಡ್ಡಾಯಗೊಳಿಸಿದೆ ಎಂದು ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಂದೇ ಮಾತರಂ ಬೆಂಗಾಲ್ ಗೆ ಮಾತ್ರ ಸೀಮಿತವಾಗಿದೆ. ಆದರೆ, ಚುನಾವಣೆ ದೃಷ್ಟಿಕೋನದಿಂದಾಗಿ ಕೇಂದ್ರ ಸರಕಾರ ಇದನ್ನು ಕಡ್ಡಾಯಗೊಳಿಸಿದೆ. ವಾಸ್ತವ ನೋಡುವುದಾದರೆ ರಾಷ್ಟ್ರಗೀತೆಯಲ್ಲಿ ಎಲ್ಲವನ್ನು ಸೇರಿಸಿದ್ದಾರೆ. ಆದರೆ ವಂದೇ ಮಾತರಂ ರಾಷ್ಟ್ರಗೀತೆ ಎಂದು ಕರೆಯಲು ಸಾಧ್ಯವಿಲ್ಲ. ಹಾಗಾಗಿ ರಾಷ್ಟ್ರಗೀತೆಗೆ ಅಪಮಾನ ಮಾಡುವ ನಡೆ ಸರಿಯಿಲ್ಲ ಎಂದರು. ವಂದೇಮಾತರಂ ಆನಂದ್ ಮಠದ ಪ್ರಾರ್ಥನೆ. ಇದರಲ್ಲಿ ಏಳು ಕೋಟಿ ಜನರು ಎಂದು ಉಲ್ಲೇಖಿಸಲಾಗಿದೆ. ಆದರೆ ಜನಗಣಮನ ಇಡೀ ದೇಶಕ್ಕೆ ಅನ್ವಯವಾಗುತ್ತದೆ. ನಮ್ಮ ರಾಷ್ಟ್ರಗೀತೆಯಲ್ಲಿ ದ್ರಾವಿಡ, ಉತ್ಕಲ, ಕಾಶ್ಮೀರ ಎಂದೂ ಹೇಳಲಾಗಿದೆ. ವಂದೇ ಮಾತರಂನಲ್ಲಿ ತುಮಿ ದುರ್ಗೆ, ತುಮಿ ಮಾತಾ ಎನ್ನುವುದು ಇದೆ ಎಂದು ಅವರು ವಿವರಿಸಿದರು. ವಂದೇ ಮಾತರಂ ಹೇಳಿ ಬಳಿಕ ರಾಷ್ಟ್ರಗೀತೆಯನ್ನು ಕೆಳ ಹಂತಕ್ಕೆ ಇಳಿಸುವ ಪ್ರಯತ್ನ ಇದಾಗಿದೆ. ಅದು ಅಲ್ಲದೆ, ಆರೆಸ್ಸೆಸ್ನ ಗೋಳವಲ್ಕರ್ ಗೆ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಇತ್ತು. ಒಂದೇ ಒಂದು ದಿನವೂ ರಾಷ್ಟ್ರಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಈಗ ಕೇಂದ್ರ ಸರಕಾರ ವಂದೇ ಮಾತರಂ ಅನ್ನು ಎಲ್ಲ ಕಡೆ ಕಡ್ಡಾಯ ಮಾಡಿದ್ದಾರೆ. ಮೊದಲು ವಂದೇ ಮಾತರಂ ಬಳಿಕ ರಾಷ್ಟ್ರಗೀತ ಹಾಡುವುದು ರಾಷ್ಟ್ರಗೀತೆಗೆ ಅಪಮಾನ ಮಾಡಿದ ಹಾಗೆ ಎಂದು ಬಿ.ಕೆ.ಹರಿಪ್ರಸಾದ್ ಉಲ್ಲೇಖಿಸಿದರು. ನಾಯಕತ್ವ ಗೊಂದಲ ಇಲ್ಲ : ಕಾಂಗ್ರೆಸ್ ನಾಯಕತ್ವ ಅಸಹಾಯಕವಲ್ಲ, ಸಮಯ ಸಂದರ್ಭ ಬಂದಾಗ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ. ಜತೆಗೆ, ನಮ್ಮಲ್ಲಿ ಯಾವುದೇ ರೀತಿಯ ನಾಯಕತ್ವ ಗೊಂದಲ ಇಲ್ಲ. ಆದರೆ, ನಾಯಕತ್ವ ಬದಲಾವಣೆ ವಿಚಾರವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ತೀರ್ಮಾನಿಸಬೇಕು. ಯಾವುದೇ ವಾಹನ ಎರಡು ಟ್ರಾಕ್ಗಳಲ್ಲಿ ಹೋಗಲು ಆಗುವುದಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಎರಡು ಇಂಜಿನ್ಗಳೇ ಆಗಿವೆ. ಸರಕಾರದಲ್ಲಿ ಸಿದ್ದರಾಮಯ್ಯ ಮುಂದೆ ಇದ್ದರೆ ಪಕ್ಷದ ಅಧ್ಯಕ್ಷರು ಹಿಂದಿರುತ್ತಾರೆ. ಪಕ್ಷ ಬಂದಾಗ ಡಿಕೆ ಶಿವಕುಮಾರ್ ಮುಂದೆ ಬರುತ್ತಾರೆ ಎಂದರು.
ಶಹಾಬಾದ್ | ಸಂತ ಸೇವಾಲಾಲ್ ಚಿಂತನೆಗಳು ಸಮಾಜದ ಪರಿವರ್ತನೆಗೆ ಪೂರಕ : ನಿಂಗಣ್ಣ ಹುಳಗೋಳಕರ್
ಶಹಾಬಾದ್ : ಸಂತ ಸೇವಾಲಾಲ ಮಹಾರಾಜರ ತತ್ವಾದರ್ಶ, ಉದಾತ್ತ ಚಿಂತನೆಗಳು ಸಮಾಜದ ಪರಿವರ್ತನೆಗೆ ಪೂರಕವಾಗಿವೆ ಎಂದು ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಹೇಳಿದರು. ಅವರು ರವಿವಾರ ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿಯಿಂದ ಆಯೋಜಿಸಲಾದ ಸಂತ ಸೇವಾಲಾಲ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಜಾರಾ ಸಮಾಜ ಭವ್ಯ ಹಾಗೂ ಶ್ರೀಮಂತ ಸಂಸ್ಕೃತಿ ಹೊಂದಿದೆ. ವೈಭವಯುತ ಪರಂಪರೆ, ಸಂಸ್ಕೃತಿ ಉಳಿಸಿಕೊಂಡು ಬಂದಿದೆ. ಮುಂದೆಯೂ ಇದೇ ರೀತಿ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾದ ಅವಶ್ಯಕತೆಯಿದೆ. ಸಂತ ಸೇವಾಲಾಲರ ಜಯಂತಿಯ ಕೇವಲ ಕಾಟಾಚಾರಕ್ಕಾಗದೇ ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು. ಕನಕಪ್ಪ ದಂಡಗುಲಕರ ಮಾತನಾಡಿದರು. ಮುಖಂಡರಾದ ಅಣವೀರ ಇಂಗಿನಶೆಟ್ಟಿ, ಸಿದ್ರಾಮ ಕುಸಾಳೆ, ನಾರಾಯಣ ಕಂದಕೂರ, ಕಾಶಣ್ಣ ಚನ್ನೂರ, ಬಸವರಾಜ ಬಿರಾದಾರ, ಸಾಬಣ್ಣ ಬೆಳಗುಂಪಿ, ಯಲ್ಲಪ್ಪ ದಂಡಗುಲಕರ, ದೆವೆಂದ್ರಪ್ಪ ಯಲಗೊಡ, ಶಂಕರ ಬಗಾಡೆ, ರೇವಣಸಿದ್ದ ಮತ್ತಿಮಡು, ಮೊಹನ ಗಂಟ್ಲಿ, ಬೀಮಯ್ಯ ಗುತ್ತೆದಾರ, ಉಮೆಶ ನಿಂಬಾಳಕರ, ಅವಿನಾಶ ಸಾಳುಂಕೆ, ಕ್ರಷ್ಣ ಮಾನೆ, ಮೊಹನ ಹಳ್ಳಿ, ತಿಮ್ಮಯ್ಯ ಕಣಸುರ, ರಹಿಮಸಾಹೆಬ, ಸುರೇಂದ್ರ ಗೌಳಿ,ಮಾರುತಿ ಕೊರೆ, ಅನಿಲ ದತ್ತ, ಚಂದರ ರಾಠೊಡ, ಮಂಗಲ ನಾಯಕ ,ಸಂಜಯ ರಾಠೊಡ,, ರವಿ ಚವಾಣ, ಶ್ರೀನೀವಾಸ ದೇವಕರ, ನೀಲಗಂಗಮ್ಮ ಗಂಟ್ಲಿ, ನಂದಾ ಗುಡೂರ, ಪದ್ಮಾ ಕಟಕೆ, ಗೀತಾ ಪವಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ದೇವದಾಸ ಜಾಧವ ನಿರೂಪಿಸಿ, ಸ್ವಾಗತಿಸಿದರು. ದಿನೇಶ ಗೌಳಿ ವಂದಿಸಿದರು.
ಉಳ್ಳಾಲ: ಯು.ಟಿ. ಎಂ ಚಾರಿಟೇಬಲ್ ಟ್ರಸ್ಟ್ ಉಳ್ಳಾಲ ಇದರ ವತಿಯಿಂದ ವರ್ಷಂಪ್ರತಿಯಂತೆ ಈ ಬಾರಿಯೂ ಅರ್ಹ ಕುಟುಂಬಗಳಿಗೆ ಹಾಗೂ ಧರ್ಮಗುರುಗಳಿಗೆ ರಮಳಾನ್ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ಖಾಸಗಿ ಗೆಸ್ಟ್ ಹೌಸ್ ನಲ್ಲಿ ನಡೆಯಿತು. ಯುಟಿಎಂ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಫಾರೂಕ್ ಅಬ್ಬಾಸ್ ಉಳ್ಳಾಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮೊಯ್ದಿನ್ ಹಾಜಿ ಮೊಂಟೆಪದವು ಸ್ವಾಗತಿಸಿದರು. ಕೋಶಾಧಿಕಾರಿ ಅಬ್ದುಲ್ ಬಶೀರ್ ಶರಫಾತ್ ಹಾಗೂ ಟ್ರಸ್ಟಿನ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಫೆ.17: ಎಸ್ಸಿಡಿಸಿಸಿ ಬ್ಯಾಂಕ್ನಿಂದ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಚಾಲನೆ
ಮಂಗಳೂರು: ಬ್ಯಾಂಕಿಂಗ್ ಸೇವೆ ಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣ ವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿಕೊಂಡಿದೆ ಎಂದು ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ. ನಮ್ಮ ಬ್ಯಾಂಕಿನ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ಗಳಿಗೆ ಅಧಿಕೃತ ಚಾಲನಾ ಕಾರ್ಯಕ್ರಮ ಫೆಬ್ರವರಿ 17, ಮಂಗಳ ವಾರದಂದು ಮಧ್ಯಾಹ್ನ 12 ಗಂಟೆಗೆ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ ಎಂದವರು ತಿಳಿಸಿದ್ದಾರೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 16 ಸೆಪ್ಟೆಂಬರ್ 2025 ರಿಂದ ಐಎಂಪಿಎಸ್ (IMPS - Immediate Payment Service) ಸೇವೆಯನ್ನು ಆರಂಭಿಸಿದೆ.ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿ ಯಾಗಿ ನೀಡುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ಪರಿವರ್ತನೆಗೆ ಒಳಗಾಗಿದೆ, ಡಿಜಿಟಲ್ ಸೇವೆಗಳು ಸಾಂಪ್ರದಾಯಿಕ ಮಾದರಿಯನ್ನು ಬದಲಾಯಿಸಿವೆ. ಇಂದು, ಹೆಚ್ಚಿನ ಗ್ರಾಹಕರು ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಅಪ್ಲಿಕೇಶನ್ಗಳು ಮತ್ತು ತ್ವರಿತ ಪಾವತಿ ವ್ಯವಸ್ಥೆಗಳ ಮೂಲಕ ತಮ್ಮ ಖಾತೆಗಳಿಗೆ ಸುಗಮ ಪ್ರವೇಶವನ್ನು ನಿರೀಕ್ಷಿಸುತ್ತಾರೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿ ಕೊಂಡಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 16 ಸೆಪ್ಟೆಂಬರ್ 2025 ರಿಂದ ಐಎಂಪಿಎಸ್ (IMPS - Immediate Payment Service) ಸೇವೆಯನ್ನು ಆರಂಭಿಸಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ಇದು 24x7, ವಾರಾಂತ್ಯ ಮತ್ತು ಸಾರ್ವಜನಿಕ ರಜೆದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ. ಪರ್ಸ್ ನ್ ಟು ಅಕೌಂಟ್ (person to Account) ಮೂಲಕ ಖಾತೆ ಸಂಖ್ಯೆ ಮತ್ತು( IFSC )ಐಎಫ್ ಎಸ್ ಸಿ ಬಳಸಿ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು. ಈಗ ಡಿಜಿಟಲ್ ಭಾರತ ಪರಿಕಲ್ಪನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಮ್ಮ ಬ್ಯಾಂಕ್ ಅತ್ಯಂತ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಯುಪಿಐ (UPI Unified Payment Interface) ಸೇವೆಯನ್ನು 21ನೇ ಜನವರಿ -2026ರಂದು ಪ್ರಾರಂಭಿಸಿರುವುದು ನಮಗೆ ಅಪಾರ ಸಂತೋಷದ ವಿಷಯ ವಾಗಿದೆ. ಯುಪಿಐ ಸೇವೆಯ ಮೂಲಕ ನಮ್ಮ ಗ್ರಾಹಕರು ಸುಲಭವಾಗಿ ಹಾಗೂ ಸುರಕ್ಷಿತ ವಾಗಿ ಹಣ ವರ್ಗಾವಣೆ ಮಾಡಬಹುದು. ಗ್ರಾಹಕರು ಗೂಗಲ್ ಪೇ (Googl Pay), ಫೋನ್ ಪೇ (Phone Pay). ಭೀಮ್ (BHIM), ವಾಟ್ಸ್ಆಪ್ ಪೇ (WhatsApp Pay), ಪೇಟಿಎಂ (Paytm), ಫ್ರೀಚಾರ್ಜ್ (Freecharge) (Super Money) ಸುಲಭವಾಗಿ ವ್ಯವಹಾರಗಳನ್ನು ನಡೆಸಬಹುದು.ಈ ಸೇವೆಯ ಮೂಲಕ ಗ್ರಾಹಕರು ಬ್ಯಾಂಕ್ಗೆ ಭೇಟಿ ನೀಡುವ ಅವಶ್ಯಕತೆ ಇಲ್ಲದೆ. ಮನೆಯಲ್ಲಿಯೇ ಅಥವಾ ಎಲ್ಲಿಂದ ಬೇಕಾದರೂ 24x7 ಸಮಯದಲ್ಲಿ ಹಣ ವರ್ಗಾವಣೆ ಮಾಡಬಹುದು. ಇದು ವೇಗವಾದ, ಸುರಕ್ಷಿತ ಹಾಗೂ ಸುಲಭವಾದ ಡಿಜಿಟಲ್ ಪಾವತಿ ವಿಧಾನವಾಗಿದೆ. *ಯುಪಿಐ ಮೂಲಕ ಗ್ರಾಹಕರು ತಕ್ಷಣ ಹಣ ಕಳುಹಿಸಬಹುದು ಹಾಗೂ ಸ್ವೀಕರಿಸಬಹುದು *ಹಣ ಸ್ವೀಕರಿಸುವವರ ಯುಪಿಐ ಐಡಿಗೆ ನೇರವಾಗಿ ಹಣ ಕಳುಹಿಸಬಹುದು * ಕ್ಯೂಆರ್ (QR) ಕೋಡ್ ಸ್ಕ್ಯಾನ್ ಮಾಡಿ ಪಾವತಿ ಮಾಡಬಹುದು * ಆನ್ಲೈನ್ ಖರೀದಿ ಹಾಗೂ ಬಿಲ್ ಪಾವತಿ ಮಾಡಬಹುದು.ದೇಶದ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು + ಈ ಎಲ್ಲಾ, ವ್ಯವಹಾರಗಳು ಯುಪಿಐ ಪಿನ್ ಮತ್ತು ಎರಡು ಹಂತದ ಭದ್ರತಾ ವ್ಯವಸ್ಥೆಯಿಂದ ಸುರಕ್ಷಿತವಾಗಿರುತ್ತವೆ. ಯುಪಿಐ ಸೇವೆಯಿಂದ ಸಣ್ಣ ವ್ಯಾಪಾರಿಗಳು, ರೈತರು, ಅಂಗಡಿ ಮಾಲಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಎಲ್ಲರೂ ಪ್ರಯೋಜನ ಪಡೆಯಬಹುದು.ಒಬ್ಬ ಚಿಲ್ಲರೆ ವ್ಯಾಪಾರಿಯೂ ಈಗ QR ಕೋಡ್ ಮೂಲಕ ಡಿಜಿಟಲ್ ಪಾವತಿ ಸ್ವೀಕರಿಸಬಹುದು. ಇದು ನಮ್ಮ ಬ್ಯಾಂಕಿನ ಆರ್ಥಿಕತೆಯನ್ನು ಇನ್ನಷ್ಟು ಬಲಪಡಿಸುತ್ತದೆ. ಇದು ದಿನನಿತ್ಯದ ಸಣ್ಣ ಮೊತ್ತದ ಪಾವತಿಗಳಿಗೆ, ಇ-ಕಾಮರ್ಸ್ ವ್ಯವಹಾರಗಳಿಗೆ ಹಾಗೂ ವ್ಯಕ್ತಿಯಿಂದ ವ್ಯಕ್ತಿಗೆ ಹಣ ವರ್ಗಾವಣೆ ಮಾಡಲು ಅತ್ಯಂತ ಅನುಕೂಲಕರವಾಗಿದೆ. ನಮ್ಮ ಬ್ಯಾಂಕ್ ಸದಾ ಗ್ರಾಹಕರಿಗೆ ಅತ್ಯುತ್ತಮ ಹಾಗೂ ಆಧುನಿಕ ಸೇವೆಗಳನ್ನು ಒದಗಿಸಲು ಬದ್ಧವಾಗಿದೆ. ಯುಪಿಐ ಸೇವೆಯಿಂದ ನಮ್ಮ ಗ್ರಾಹಕರಿಗೆ ಮತಷ್ಟು ಸುಲಭ ಮತ್ತು ವೇಗವಾದ ಬ್ಯಾಂಕಿಂಗ್ ಅನುಭವ ಸಿಗಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಡಾ ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್ , ಶಶಿಕುಮಾರ್ ರೈ ಬಾಲ್ಯೊಟ್ಟು , ಎಸ್.ಬಿ.ಜಯರಾಮ್ ರೈ , ಸದಾಶಿವ ಉಳ್ಳಾಲ್, ಜೈರಾಜ್ ಬಿ.ರೈ, ಮೋನಪ್ಪ ಶೆಟ್ಟಿ ಎಕ್ಕಾರು,ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್.ಎನ್, ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಔರಾದ್ | ಆರೋಗ್ಯವಂತ ಸಮಾಜ ನಿರ್ಮಿಸಲು ಮುಂದಾಗಿ : ಅನಿತಾ ಬಿರಾದಾರ್
ಅಮರೇಶ್ವರ್ ಜಾತ್ರೆ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರ
ಕೆ ಆರ್ ಐ ಡಿ ಎಲ್ ಕಾಮಗಾರಿ ವಿಳಂಬವಾದಲ್ಲಿ ಕ್ರಮ: ಪ್ರಿಯಾಂಕ್ ಖರ್ಗೆ ಎಚ್ಚರಿಕೆ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ನಡೆಯುತ್ತಿರುವ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪರಿಶೀಲನೆ ನಡೆಸಿದರು. ಕಾಮಗಾರಿಗಳು ವಿಳಂಬ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು. ಕಾಮಗಾರಿ ವಿಳಂಬ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ಈ ಕುರಿತಾಗಿ ಅವರು ಏನೆಲ್ಲಾ ಸೂಚನೆಗಳನ್ನು ನೀಡಿದ್ದಾರೆ ಎಂಬ ಕುರಿತಾದ ಮತ್ತಷ್ಟು ಮಾಹಿತಿಗಳು ಇಲ್ಲಿವೆ ಓದಿ.
ಬೆಂಗಳೂರು : ಕಲ್ಯಾಣ ಕರ್ನಾಟಕವು ಶಿಕ್ಷಕರು, ಅಭಿವೃದ್ಧಿಯಿಂದ ಯಾಕೆ ವಂಚಿತವಾಗಿದೆ ?, ಮಕ್ಕಳಿಗೆ ಅನ್ಯಾಯ ಮಾಡುವುದೇಕೆ? ಎಂದು ಸ್ವತಃ ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಕಳೆದ ವರ್ಷ ಕಲಬುರಗಿಯಲ್ಲಿ ಈ ಪ್ರಶ್ನೆ ಎತ್ತಿದ್ದರು. ಕಲ್ಯಾಣ ಕರ್ನಾಟಕವು ಇಷ್ಟು ಹಿಂದುಳಿದಿರುವ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬೆಳಕು ಚೆಲ್ಲಲು ಸಾಧ್ಯವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದ್ದಾರೆ. ಸೋಮವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಆರೆಸ್ಸೆಸ್ ವಿರುದ್ಧ ದ್ವೇಷದಿಂದ, ಹತಾಶರಾಗಿ ಅಥವಾ ಬಾಲಿಶತನದಿಂದ ಹೇಳಿಕೆ ಕೊಟ್ಟಿದ್ದಾರೆ ಎಂದು ಟೀಕಿಸಿದರು. ಪ್ರಿಯಾಂಕ್ ಖರ್ಗೆ ಕಳೆದ ಎರಡೂವರೆ ವರ್ಷಗಳಲ್ಲಿ ತಾವು ಜವಾಬ್ದಾರಿ ಹೊತ್ತ ಇಲಾಖೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಮಾಹಿತಿ ಸಿಗುತ್ತಿಲ್ಲ. ಇಲಾಖೆ, ಇಲಾಖೆ ಸಾಧನೆ, ಸುಧಾರಣೆ ಕುರಿತು ಅವರು ಪತ್ರಿಕಾಗೋಷ್ಠಿ ನಡೆಸುವುದಿಲ್ಲ. ಆದರೆ, ಅವರು ರಾಷ್ಟ್ರ, ಅಂತರ್ರಾಷ್ಟ್ರೀಯ ಮಟ್ಟದ ವಿಚಾರಗಳನ್ನಷ್ಟೇ ಚರ್ಚಿಸುತ್ತಾರೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. 50 ವರ್ಷಗಳಿಂದ ಇಡೀ ಕಲಬುರಗಿ, ಕಲ್ಯಾಣ ಕರ್ನಾಟಕದ ಹಿಡಿತ ಅವರ ಕೈಯಲ್ಲಿದೆ. ಪ್ರಿಯಾಂಕ್ ಖರ್ಗೆ ಎರಡನೇ ಬಾರಿಗೆ ಸಚಿವರಾಗಿದ್ದಾರೆ. ಇಷ್ಟು ಸುದೀರ್ಘವಾಗಿ ರಾಜಕೀಯ ಅನುಭವ ಇರುವ ಮತ್ತು ಎಲ್ಲ ರಾಜಕೀಯ ಸ್ಥಾನಮಾನ ಅನುಭವಿಸಿದ ಕುಟುಂಬದವರಾಗಿದ್ದು, ಕಲಬುರಗಿ ಜಿಲ್ಲೆ ಅತ್ಯಂತ ಹಿಂದುಳಿದ ಜಿಲ್ಲೆಯಾಗಲು ಕಾರಣವೇನು? ಎಂದು ಅವರು ಪ್ರಶ್ನಿಸಿದರು. ಕಲಬುರಗಿ, ಕಲ್ಯಾಣ ಕರ್ನಾಟಕದಲ್ಲಿ ಎಸೆಸೆಲ್ಸಿ, ಪಿಯುಸಿ ಫಲಿತಾಂಶ ಯಾಕೆ ಅತಿ ಹೆಚ್ಚು ಹಿಂದುಳಿದಿದೆ. ಡಾ.ಗೋವಿಂದ ರಾವ್ ಸಮಿತಿಯು ಪ್ರಾದೇಶಿಕ ಅಸಮಾನತೆಯ ಬಗ್ಗೆ ಮತ್ತೊಂದು ವರದಿ ನೀಡಿದೆ. ರಾಜ್ಯದ 59 ಅತಿ ಹೆಚ್ಚು ಹಿಂದುಳಿದ ತಾಲೂಕುಗಳೆಲ್ಲವೂ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗದಲ್ಲೇ ಇವೆ ಎಂದು ತಿಳಿಸಲಾಗಿದೆ ಎಂದು ವಿಜಯೇಂದ್ರ ಹೇಳಿದರು. ಶಿವಮೊಗ್ಗದ ಬಗ್ಗೆಯೂ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. 50 ವರ್ಷದಲ್ಲಿ ಕಲ್ಯಾಣ ಕರ್ನಾಟಕ ಯಾವ ರೀತಿ ಅಭಿವೃದ್ಧಿ ಆಗಿದೆ? ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ ಎಷ್ಟು ಅಭಿವೃದ್ಧಿ ಆಗಿದೆ? ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಕಲಬುರಗಿ ಜಿಲ್ಲೆಗೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎಂಬ ಬಗ್ಗೆ ಚರ್ಚಿಸಲು ನಾನು ಸಿದ್ಧ ಎಂದು ಅವರು ಸವಾಲು ಹಾಕಿದರು. ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಿದರೆ ಅಧಿಕಾರಕ್ಕೆ ಬಂದು ಸಾರ್ಥಕ ಆಗಲಿದೆ. ಅಭಿವೃದ್ಧಿ ಮಾಡಿದರೆ, ಪಂಚ ಗ್ಯಾರಂಟಿಗಳು ಜನರನ್ನು ತಲುಪಿಸಿದ್ದರೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸುತ್ತಿದ್ದಿರಿ. ಚುನಾವಣೆ ನಡೆಸಲು ಧೈರ್ಯ ಇಲ್ಲದೆ ಪುಗ್ಸಟ್ಟೆ ಮಾತನಾಡುತ್ತೀರಾ ಎಂದು ವಿಜಯೇಂದ್ರ ಟೀಕಿಸಿದರು.
ಫೆ.17ರಂದು ಸಿ.ಎಸ್.ಷಡಾಕ್ಷರಿ ಅವರಿಗೆ ಬೀದರ್ನಲ್ಲಿ ಅಭಿನಂದನಾ ಸಮಾರಂಭ : ಸೋಮಶೇಖರ್ ಬಿರಾದಾರ್ ಚಿದ್ರಿ
ಬೀದರ್: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಫೆ.17ರಂದು ಸಾಯಂಕಾಲ 5:30 ಗಂಟೆಗೆ ನಗರದ ಮಸ್ತಿಫ್ ಸಿಲೆಕ್ಟ್ (ವೈಬ್) ಹೋಟಲ್ನಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್ ಬಿರಾದಾರ್ ಚಿದ್ರಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿ ಪ್ರಪ್ರಥಮ ಬಾರಿಗೆ ಬೀದರ್ ಜಿಲ್ಲೆಗೆ ಆಗಮಿಸುತ್ತಿರುವ ಷಡಾಕ್ಷರಿ ಅವರು ತಮ್ಮ ಅವಧಿಯಲ್ಲಿ ಸರ್ಕಾರಿ ನೌಕರರ ಪರ ಸುಮಾರು 25ರಿಂದ 39 ಆದೇಶಗಳನ್ನು ಸರ್ಕಾರದಿಂದ ಹೊರಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಮಹಿಳಾ ನೌಕರರ ಹಿತದೃಷ್ಟಿಯಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ಮಂಜೂರು ಮಾಡಿಸಿರುವುದನ್ನೂ ಉಲ್ಲೇಖಿಸಿದರು. ಫೆ.17ರಂದು ಮುಂಜಾನೆ 7:30ಕ್ಕೆ ನಗರಕ್ಕೆ ಆಗಮಿಸುವ ಅವರು, ರಸ್ತೆ ಮಾರ್ಗವಾಗಿ ಭಾಲ್ಕಿ ಕಚೇರಿಗೆ ಬೆಳಿಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದು, 10:30ಕ್ಕೆ ಹುಲಸೂರ್ ನೌಕರರ ಸಂಘದ ಕಚೇರಿ ಉದ್ಘಾಟಿಸಲಿದ್ದಾರೆ. ಬಳಿಕ ಸಾಯಂಕಾಲ 5 ಗಂಟೆಗೆ ಬೀದರ್ಗೆ ಆಗಮಿಸಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದೇವರು ದಿವ್ಯ ಸಾನಿಧ್ಯ ವಹಿಸಲಿದ್ದು, ಲೋಕಸಭಾ ಸದಸ್ಯ ಸಾಗರ್ ಖಂಡ್ರೆ ಉದ್ಘಾಟಿಸಲಿದ್ದಾರೆ. ಶಾಸಕ ಪ್ರಭು ಚವ್ಹಾಣ್ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ವಿವಿಧ ಇಲಾಖೆಗಳ ನಿರ್ದೇಶಕರು, ಸಂಘಗಳ ಅಧ್ಯಕ್ಷರು ಸೇರಿದಂತೆ ಸುಮಾರು 2 ಸಾವಿರಕ್ಕೂ ಹೆಚ್ಚು ನೌಕರರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ರಾಜ್ಯ ಪರಿಷತ್ ಸದಸ್ಯ ರಾಜಕುಮಾರ್ ಮಾಳಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ್ ತುಗಾವೆ, ಖಜಾಂಚಿ ದೇವಪ್ಪ ಚಂಬುಳೆ, ಕಾರ್ಯಾಧ್ಯಕ್ಷ ಶಿವರಾಜ್ ಕಪಲಾಪುರೆ, ಉಪಾಧ್ಯಕ್ಷ ಗೌತಮ್ ಚಿಂತಲಗೇರಾ, ಎಂ.ಎಸ್. ಸತ್ತಾರ್ ಹಾಗೂ ಗೌರವ ಸಲಹೆಗಾರ ದಿಲೀಪ್ ಡೋಂಗ್ರೆ ಉಪಸ್ಥಿತರಿದ್ದರು.
ಪುತ್ತೂರು| ಕಟ್ಟಡ ಕಾಮಗಾರಿಯಿಂದ ಧೂಳಿನ ಸಮಸ್ಯೆ: ರಸ್ತೆಯಲ್ಲಿ ಕುಳಿತು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಪುತ್ತೂರು: ಇಲ್ಲಿನ ಮಹಿಳಾ ಸರಕಾರಿ ಪದವಿ ಕಾಲೇಜಿನಲ್ಲಿ ಆರೋಗ್ಯ ಇಲಾಖೆಯ ಕಟ್ಟಡ ಕಾಮಗಾರಿಯಿಂದ ಬರುತ್ತಿರುವ ಧೂಳಿನ ಸಮಸ್ಯೆಯ ವಿರುದ್ಧ ವಿದ್ಯಾರ್ಥಿನಿಯರು ತರಗತಿ ತೊರೆದು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ ವಿದ್ಯಾಮಾನ ಸೋಮವಾರ ನಡೆದಿದೆ. ಕಾಲೇಜು ಸಂಪರ್ಕ ರಸ್ತೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಧರಣಿ ಕುಳಿತು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಘೋಷಣೆ ಕೂಗಿದರು. ನ್ಯಾಯ ಸಿಗದಿದ್ದರೆ ರಸ್ತೆ ಬಿಟ್ಟು ತೆರಳುವುದಿಲ್ಲ ಎಂದರು. ಸಮಸ್ಯೆಯ ಬಗ್ಗೆ ವಿದ್ಯಾರ್ಥಿನಿಯರಾದ ಚೈತನ್ಯ, ಭೂಮಿಕಾ, ಅರ್ಚನ ಮೊದಲಾದವರು ಮಾತನಾಡಿದರು. ವಿದ್ಯಾರ್ಥಿನಿಯರ ಬಳಿ ಶಾಸಕ ಅಶೋಕ್ ಕುಮಾರ್ ರೈ ಆಗಮಿಸಿದರು. ಈ ವೇಳೆ ನೀವು ಪ್ರತಿಭಟನೆ ಮಾಡು ವುದು ಸರಿ ಅಲ್ಲ, ನಿಮಗೆ ಹೊಸ ಕಟ್ಟಡಕ್ಕೆ ಅನುದಾನ ಕೊಡಿಸಿರುವುದು ನಾನೇ. ತರಗತಿಗೆ ಹೋಗಿ ಎಂದರು. ಸಮಸ್ಯೆಯನ್ನು ನನ್ನ ಗಮನಕ್ಕೆ ಏಕೆ ತಂದಿಲ್ಲ ಎಂದು ಪ್ರಾಂಶುಪಾಲರು, ಉಪನ್ಯಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಐವನ್ ಪ್ರಾನ್ಸಿಸ್ ಲೋಬೋ ಅವರು ಶಾಸಕರಿಗೆ ಧೂಳಿನಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ಸೇರಬೇಕಾದ ಪರಿಸ್ಥಿತಿ ಬಗ್ಗೆ ವಿವರಿಸಲು ಮುಂದಾದಾಗ ಶಾಸಕರು ಆಕ್ರೋಶ ವ್ಯಕ್ತಪಡಿಸಿದಲ್ಲದೇ ಅವರ ವಿರುದ್ಧ ಹರಿಹಾಯ್ದ ಘಟನೆ ನಡೆಯಿತು. ಮಹಿಳಾ ಕಾಲೇಜಿಗೆ ಇರುವ ಕಟ್ಟಡದ ಒಂದು ಭಾಗದಲ್ಲಿ ಆಸ್ಪತ್ರೆಗೆ ಸಂಬಂಧಿಸಿದಂತೆ ಡಯಾಲಿಸಿಸ್ ಸೆಂಟರ್ ಸ್ಥಾಪನೆಗೆ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಳೆದ ಕೆಲ ತಿಂಗಳಿನಿಂದ ಈ ಕೆಲಸ ಪ್ರಗತಿಯಲ್ಲಿದ್ದು ಕಾಮಗಾರಿಯಿಂದ ಧೂಳು ತರಗತಿ ಕೊಠಡಿಯೊಳಗೆ ಬರುತ್ತಿದ್ದು ಇದರಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ನಮಗೆ ಉಸಿರಾಟ ಸಮಸ್ಯೆ ಉಂಟಾಗಿದೆ ಎಂದು ಪ್ರತಿಭಟನ ನಿರತ ವಿದ್ಯಾರ್ಥಿನಿಯರು ಶಾಸಕರ ಗಮನಕ್ಕೆ ತಂದರು. ಈ ಬಗ್ಗೆ ನನ್ನ ಗಮನಕ್ಕೆ ನೀವು ತರಬೇಕಿತ್ತು, ಕಾಲೇಜಿನವರು ತಂದಿಲ್ಲ ಎಂದು ಶಾಸಕರು ಹೇಳಿದಾಗ ನಾವು ಮನವಿ ಕೊಟ್ಟಿದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸಿದರು. 2014ರಲ್ಲಿ ಕಾಲೇಜು ಪ್ರಾರಂಭವಾಗಿದ್ದು ವಿದ್ಯಾರ್ಥಿನಿಯರ ಸಂಖ್ಯೆ 500 ಕ್ಕಿಂತ ಹೆಚ್ಚು ಇದೆ. ಇನ್ನೂ ಸಹ ಕಾಲೇಜಿಗೆ ನೂತನ ಕಟ್ಟಡ ನಿರ್ಮಾಣವಾಗಿಲ್ಲ. ನೂತನ ಕಟ್ಟಡವು ಆಗುತ್ತದೆ ಎಂದು ಹನ್ನೆರಡು ವರ್ಷಗಳಿಂದ ಕಾಯುತ್ತಲೇ ಇದ್ದೇವೆ ಎಂದು ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಸಿದ ಶಾಸಕ ಅಶೋಕ್ ಕುಮಾರ್ ರೈ ಮುಂದಿನ 45 ದಿನಗಳಲ್ಲಿ ಹೊಸ ಕಟ್ಟಡ ಉದ್ಘಾಟನೆ ಆಗಲಿದೆ. ಈಗ ಇರುವ ಧೂಳಿನ ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದರು. ಹೊಸ ಕಟ್ಟಡ ಉದ್ಘಾಟನೆ ಆಗುವುದು ಸತ್ಯವೇ, ಹೇಳಿ ಸರ್ ಎಂದು ಶಾಸಕರನ್ನೇ ವಿದ್ಯಾರ್ಥಿನಿಯರು ಮರು ಪ್ರಶ್ನಿಸಿದ ಘಟನೆ ನಡೆಯಿತು. ವಿದ್ಯಾರ್ಥಿನಿಯರ ಆಗ್ರಹದ ಮೇರೆಗೆ ತರಗತಿ ಕೊಠಡಿ ವೀಕ್ಷಿಸಿದ ಶಾಸಕರು ಗುತ್ತಿಗೆದಾರರಿಗೆ ಧೂಳಿನ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸುತಿದ್ದ ನಡುವೆ ಶಾಸಕ ಅಶೋಕ್ ಕುಮಾರ್ ರೈ ಅವರು ಪ್ರಾಂಶುಪಾಲೆ ವೇದಶ್ರೀ ನಿಡ್ಯ ಅವರನ್ನು ಸಮಸ್ಯೆ ಬಂದಾಗ ನನ್ನ ಗಮನಕ್ಕೆ ತರಬೇಕು. ನೀವು ಇಲ್ಲಿ ಬಂದು ಸುಮ್ಮನೇ ಟೈಮ್ ವೇಸ್ಟ್ ಮಾಡುವುದು ಬೇಡ ಎಂದಾಗ ಗರಂ ಆದ ಪ್ರಾಂಶುಪಾಲೆಯು ನೀವು ನೋಡಿ ಮಾತನಾಡಬೇಕು. ಸುಮ್ಮನೆ ಹೇಳುವುದು ಬೇಡ. ಕಾಮಗಾರಿ ಆಗುವಾಗ ಧೂಳು ಬರುವುದು ಕಾಮನ್ ಸೆನ್ಸ್ ಎಂದರು. ಆರೋಪ-ಪ್ರತ್ಯಾರೋಪ ಪ್ರತಿಭಟನ ಸ್ಥಳ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ನಾಯಕರು ಆಗಮಿಸಿ ವಿದ್ಯಾರ್ಥಿನಿಯರ ಅಳಲು ಆಲಿಸಿದರು. ಸಂಜೀವ ಮಠಂದೂರು ಮಾತನಾಡಿ, ವಿದ್ಯಾರ್ಥಿನಿಯರು ಬೀದಿಯಲ್ಲಿ ಕುಳಿತುಕೊಳ್ಳಬೇಕಾದ ಸ್ಥಿತಿ ಪುತ್ತೂರಿನಲ್ಲಿ ಸೃಷ್ಟಿಯಾದದು ಇದೇ ಪ್ರಥಮ. ಐದು ಕೋಟಿ ದುಡ್ಡು ಬಂದು ಐದನೇ ವರ್ಷ ಸಮೀಪಿಸಿದರೂ ಕಟ್ಟಡ ಇನ್ನೂ ಆಗಿಲ್ಲ. ರಾಜ್ಯ ಸರಕಾರದ ನಿರ್ಲಕ್ಷದಿಂದ ಈ ಪರಿಸ್ಥಿತಿ ಬಂದಿದೆ. ಶಾಸಕರು ಈ ಬಗ್ಗೆ ಏಕೆ ಗಮನ ಹರಿಸಿಲ್ಲ ಎಂದರಲ್ಲದೆ ವಿದ್ಯಾರ್ಥಿನಿಯರ ಹೋರಾಟಕ್ಕೆ ನಾವು ಪೂರ್ಣ ಬೆಂಬಲ ನೀಡುತ್ತೇವೆ ಎಂದರು. ಇದಾದ ಕೆಲ ಹೊತ್ತಲ್ಲೇ ಆಗಮಿಸಿದ ಶಾಸಕ ಅಶೋಕ್ ರೈ, ಪ್ರತಿಭಟನೆಯ ಸ್ಥಳಕ್ಕೆ ಬಂದು ಭಾಷಣ ಮಾಡಿದವರು ಈ ಹಿಂದೆ ಶಾಸಕರಾಗಿದ್ದವರು. ಅವರಿಂದ ಕಟ್ಟಡ ನಿರ್ಮಾಣ ಏಕೆ ಸಾಧ್ಯವಾಗಲಿಲ್ಲ. ಅವರದ್ದೆ ಸರಕಾರ ಇರುವಾಗ ಒಂದು ರೂಪಾಯಿ ಏಕೆ ತರಲಾಗಲಿಲ್ಲ. ಅವರ ಕುಮ್ಮಕ್ಕಿನಿಂದಲೇ ಪ್ರತಿಭಟನೆ ನಡೆದಿದೆ ಎಂದು ಪ್ರತ್ಯುತ್ತರ ನೀಡಿದರು. ಮುಂದಿನ 45 ದಿನಗಳಲ್ಲಿ ಬೊಳುವಾರಿನ ಹೊಸ ಕಟ್ಟಡಕ್ಕೆ ಕಾಲೇಜು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು. ಧೂಳಿನ ಸಮಸ್ಯೆ ಪರಿಹರಿಸಲು ಗುತ್ತಿಗೆದಾರರಿಗೆ ಸೂಚನೆ ನೀಡುತ್ತೇನೆ ಎಂದು ಶಾಸಕರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ತಹಶೀಲ್ದಾರ್ ಕೂಡಲಗಿ, ಡಿವೈಎಸ್ಪಿ ಪ್ರಮೋದ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಕುತೂಹಲ ಮೂಡಿಸಿದ ನಿಖಿಲ್ ಕುಮಾರಸ್ವಾಮಿ ಮೈಸೂರು ಪ್ರವಾಸ; ಸಿಎಂ ಸಿದ್ದರಾಮಯ್ಯಗೆ ಸವಾಲು?
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ನಿಖಿಲ್ ಕುಮಾರಸ್ವಾಮಿ ಪಣ ತೊಟ್ಟಿದ್ದಾರೆ. ಫೆಬ್ರವರಿ 18 ರಿಂದ ಮೈಸೂರು ಜಿಲ್ಲೆಯಾದ್ಯಂತ ಸಂಚಾರ ಮಾಡಲಿದ್ದಾರೆ. ನಿಖಿಲ್ ಅವರ ಈ ಪ್ರವಾಸ ಸಿಎಂ ಸಿದ್ದರಾಮಯ್ಯನವರಿಗೆ ಸವಾಲಾಗಲಿದೆಯಾ ಎನ್ನುವುದು ಕುತೂಹಲ.
ಕಲಬುರಗಿಯನ್ನು ಸಿಲಿಕಾನ್ ಸಿಟಿ ಮಾಡಿದವರಂತೆ ಪ್ರಿಯಾಂಕ್ ಖರ್ಗೆ ಪೋಸು ಕೊಡುತ್ತಿದ್ದಾರೆ : ಸುನಿಲ್ ಕುಮಾರ್
ಬೆಂಗಳೂರು : ಕಲಬುರಗಿಯನ್ನು ಸಿಲಿಕಾನ್ ಸಿಟಿ ಮಾಡಿದವರಂತೆ ಸಚಿವ ಪ್ರಿಯಾಂಕ್ ಖರ್ಗೆ ಪೋಸು ಕೊಡುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಇವರು ಅಧಿಕಾರಕ್ಕೆ ಬಂದ ನಂತರ ಇಢೀ ಕಲಬುರಗಿ ವಿಭಾಗವೇ ಸುಡಾನ್ ದೇಶದ ರೀತಿ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ ಎಂದು ಶಾಸಕ ಸುನಿಲ್ ಕುಮಾರ್ ಟೀಕಿಸಿದ್ದಾರೆ. ಸೋಮವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಕಲಬುರಗಿ ರಿಪಬ್ಲಿಕ್’ನ ಈ ಸರ್ವಾಧಿಕಾರಿಯನ್ನು ಎರಡು ಬಾರಿ ಐಟಿ-ಬಿಟಿ ಸಚಿವನನ್ನಾಗಿ ಮಾಡಿದ್ದು, ಆಡುವ ಮಕ್ಕಳಿಗೆ ಮದುವೆ ಮಾಡಿದಂತಾಗಿದೆ. ‘ಮಾತಾಡುವವನೇ ಮಹಾಶೂರ’ ಎಂಬುದನ್ನು ಪ್ರಿಯಾಂಕ್ ಖರ್ಗೆ ಬದುಕಿನ ಧ್ಯೇಯವಾಗಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ. ಪ್ರಾದೇಶಿಕ ಅಸಮತೋಲನ ನಿವಾರಣೆಯ ಅಧ್ಯಯನಕ್ಕಾಗಿ ಸರಕಾರ ನೇಮಿಸಿದ್ದ ಪ್ರೊ.ಗೋವಿಂದರಾವ್ ಸಮಿತಿಯ ವರದಿಯ ಪ್ರಕಾರ, ಅಭಿವೃದ್ಧಿ ಮಾನದಂಡಗಳ ಆಧಾರದ ಮೇಲೆ ರಾಜ್ಯದಲ್ಲಿ ಎಂಟು ಜಿಲ್ಲೆಗಳನ್ನು ಅತ್ಯಂತ ಹಿಂದುಳಿದ ಎಂದು ಗುರುತಿಸಲಾಗಿದ್ದು, ಈ ಪೈಕಿ 6 ಜಿಲ್ಲೆಗಳು ಕಲಬುರಗಿ ವಿಭಾಗದಲ್ಲಿದೆ. ಕಲಬುರಗಿ ವಿಭಾಗದ 51 ತಾಲೂಕುಗಳಲ್ಲಿ 39 ಅತ್ಯಂತ ಹಿಂದುಳಿದ, 9 ಅತಿ ಹಿಂದುಳಿದ ತಾಲೂಕು ಎಂದು ಪರಿಗಣಿಸಲ್ಪಟ್ಟಿದೆ ಎಂದು ಅವರು ಹೇಳಿದ್ದಾರೆ. ತನ್ನ ತವರು ಜಿಲ್ಲೆಯನ್ನೆ ಅಭಿವೃದ್ಧಿಪಡಿಸಲು ಸಾಧ್ಯವಾಗದ ವ್ಯಕ್ತಿ, ಕೋಮುವಾದದ ಕಾರಣಕ್ಕೆ ಕರಾವಳಿಗೆ ಐಟಿ ಕಂಪನಿಗಳು ಬರುತ್ತಿಲ್ಲ ಎಂದು ಉಯಿಲಿಡುತ್ತಿದ್ದಾರೆ. ಆದರೆ ಕರಾವಳಿ ಜಿಲ್ಲೆಗಳು ಹಿಂದುಳಿದ ಜಿಲ್ಲೆಗಳಲ್ಲ, ಏಕೆಂದರೆ ಇಲ್ಲಿ ಖರ್ಗೆ ಕುಟುಂಬ ಪಾರುಪಥ್ಯ ಸ್ಥಾಪಿಸಿಲ್ಲ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ. ಹೀಗಾಗಿ ಪ್ರಿಯಾಂಕ್ ಖರ್ಗೆ ಅಭಿವೃದ್ಧಿ ವಿಚಾರವನ್ನು ಮಾತನಾಡುವುದಕ್ಕೆ ಮುನ್ನವೇ ಕರಾವಳಿಯಲ್ಲಿ ಎಂ.ಆರ್.ಪಿ.ಎಲ್, ವಿಮಾನ ನಿಲ್ದಾಣ, ಎಸ್.ಇ.ಝೆಡ್, ಬಂದರು, ಇನ್ಫೋಸಿಸ್, ಎಂ.ಸಿ.ಎಫ್, ಓಎನ್ಜಿಸಿ ಯಂಥ ಸಂಸ್ಥೆಗಳು ಬಂದಿವೆ. ತಲಾದಾಯದಲ್ಲಿ ಬೆಂಗಳೂರು ನಂತರದ ಸ್ಥಾನದಲ್ಲಿ ಕರಾವಳಿ ಜಿಲ್ಲೆಗಳಿವೆ ಎಂದು ಅವರು ಹೇಳಿದ್ದಾರೆ. ಸ್ವಾಮಿ ಪ್ರಿಯಾಂಕ್ ಖರ್ಗೆಯವರೇ, ನೀವು ಹಾಗೂ ನಿಮ್ಮ ಪಿತಾಶ್ರೀಯವರ ಎಪ್ಪತ್ತು ವರ್ಷಗಳ ಸರ್ವಾಧಿಕಾರದ ಫಲವಾಗಿ ಕಲಬುರಗಿ ವಿಭಾಗದ ಜಿಲ್ಲೆಗಳು ರಕ್ತಕಣ್ಣೀರು ಸುರಿಸುತ್ತಿವೆ. ತಲಾದಾಯ ಹಾಗೂ ಶಿಕ್ಷಣದಲ್ಲಿ ನಿಮ್ಮ ವಿಭಾಗ ರಾಜ್ಯದಲ್ಲೆ ಕನಿಷ್ಠ ಸ್ಥಾನದಲ್ಲಿದೆ. ಇದಕ್ಕೆ ನಿಮ್ಮ ಉತ್ಕೃಷ್ಟ ಆಡಳಿತವೇ ಕಾರಣವಲ್ಲವೇ ? ಎಂದು ಅವರು ಪ್ರಶ್ನಿಸಿದ್ದಾರೆ. ಸಂವಿಧಾನದ ಆಶೋತ್ತರಗಳನ್ನು ವೈಯಕ್ತಿಕ ಲಾಭಕ್ಕೆ ಬಳಸಿಕೊಂಡಿರುವ ನೀವು ‘ಈದಿ ಅಮಿನ್’ ಮಾದರಿಯಲ್ಲಿ ಕಲಬುರಗಿಯ ಜನತೆಯ ಜೀವ ಹೀರುವ ದೆವ್ವಗಳಾಗಿದ್ದೀರಿ. ಅದು ಸರಿ ನೀವು ಐಟಿ ಸಚಿವರಾದ ನಂತರ ಕಲಬುರಗಿ ವಿಭಾಗದಲ್ಲಿ ಆದ ಐಟಿ ಬೆಳವಣಿಗೆ, ವಿದೇಶಿ ಬಂಡವಾಳ ಹೂಡಿಕೆ, ಉತ್ಕೃಷ್ಟತಾ ಕೇಂದ್ರಗಳ ಬಗ್ಗೆ ಸ್ವಲ್ಪ ವಿವರಣೆ ನೀಡಬಹುದಲ್ಲ...? ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ. ಕಲ್ಬುರ್ಗಿ ರಿಪಬ್ಲಿಕ್ ನ ಈ ಸರ್ವಾಧಿಕಾರಿಯನ್ನು ಎರಡು ಬಾರಿ ಐಟಿ - ಬಿಟಿ ಸಚಿವನನ್ನಾಗಿ ಮಾಡಿದ್ದು, ಆಡುವ ಮಕ್ಕಳಿಗೆ ಮದುವೆ ಮಾಡಿದಂತಾಗಿದೆ. ಮಾತಾಡುವವನೇ ಮಹಾಶೂರ ಎಂಬುದನ್ನು ಬದುಕಿನ ಧ್ಯೇಯವಾಗಿಸಿಕೊಂಡಿರುವ ಸಚಿವ @PriyankKharge ಕಲಬುರ್ಗಿಯನ್ನು ಸಿಲಿಕಾನ್ ಸಿಟಿ ಮಾಡಿದವರಂತೆ ಪೋಸು ಕೊಡುತ್ತಿದ್ದಾರೆ. ಆದರೆ ವಾಸ್ತವದಲ್ಲಿ… — Sunil Kumar Karkala (@karkalasunil) February 16, 2026
ಸಮನ್ವಯ ಶಿಕ್ಷಕರ ಸಂಘ ಬಂಟ್ವಾಳ ಘಟಕ ವತಿಯಿಂದ ದ.ಕ, ಜಿಲ್ಲಾ ಮಟ್ಟದ ಕ್ರೀಡಾಕೂಟ
ಬಂಟ್ವಾಳ: ಸಮನ್ವಯ ಶಿಕ್ಷಕರ ಸಂಘ ಬಂಟ್ವಾಳ ತಾಲೂಕು ಘಟಕದ ವತಿಯಿಂದ ದ.ಕ ಜಿಲ್ಲಾ ಮಟ್ಟದ ಕ್ರೀಡಾಕೂಟ ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ರವಿವಾರ ನಡೆಯಿತು. ಕ್ರೀಡಾಕೂಟವನ್ನು ಕಾಡುಮಠ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಇಬ್ರಾಹಿಂ ಅವರು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಸಮನ್ವಯ ಶಿಕ್ಷಕರ ಸಂಘದ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಹಾರಿಸ್ ಬಾಂಬಿಲ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಮನ್ವಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಕ್ಬರ್ ಅಲಿ, ಮಂಗಳೂರು ಮತ್ತು ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ಬಿ.ಎಂ.ರಫೀಕ್, ಮೆಲ್ಕಾರ್ ಮಹಿಳಾ ಕಾಲೇಜು ಪ್ರಾಂಶುಪಾಲ ಅಬ್ದುಲ್ ಮಜೀದ್ ಎಸ್, ಸಂಯೋಜಕರಾದ ಹೈದರ್ ಪಡಂಗಡಿ ಭಾಗವಹಿಸಿದ್ದರು. ಅಬ್ದುಲ್ ರಝಾಕ್ ಅನಂತಾಡಿ, ಮನಾಝಿರ್, ಮುಹಮ್ಮದ್ ಶಾಹಿದ್, ನೂರುದ್ದೀನ್ ಜಿ.ಎಂ, ಶೇಕ್ ಆದಂ ಸಾಹೇಬ್, ಇಸ್ಮಾಯಿಲ್, ಹಮೀದ್ ಕೆ ಮಾಣಿ, ಲಿಯಾವುದ್ದೀನ್ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಈ ಬಾರಿ ಹಜ್ ಯಾತ್ರೆ ಕೈಗೊಳ್ಳಲಿರುವ ಪೂರ್ವಾಧ್ಯಕ್ಷ ಬಿ.ಎಂ ತುಂಬೆ ದಂಪತಿಗಳನ್ನು ಸನ್ಮಾನಿಸಲಾಯಿತು. ತಾಲೂಕು ಘಟಕದ ಕಾರ್ಯದರ್ಶಿ ತ್ವಾಹಿರ್ ಸ್ವಾಗತಿಸಿ, ಜಿಲ್ಲಾ ಕೋಶಾಧಿಕಾರಿ ಇಕ್ಬಾಲ್ ಉಚ್ಚಿಲ ವಂದಿಸಿದರು. ಉಪನ್ಯಾಸಕರಾದ ಸಮೀವುಲ್ಲಾ ವಗ್ಗ ಕಾರ್ಯಕ್ರಮ ನಿರೂಪಿಸಿದರು.
CBSE Class 10 Maths: ಸಂಪೂರ್ಣಪರೀಕ್ಷಾ ಮಾದರಿ ಮತ್ತು ಅಂಕಗಳ ಹಂಚಿಕೆಯ ಮಾರ್ಗದರ್ಶಿ ಇಲ್ಲಿದೆ
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) 2026ರ ಸಾಲಿನ 10ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಭರದ ಸಿದ್ಧತೆ ನಡೆಸುತ್ತಿದ್ದು, ವಿದ್ಯಾರ್ಥಿಗಳ ಪಾಲಿಗೆ ಅತ್ಯಂತ ನಿರ್ಣಾಯಕವಾಗಿರುವ ಗಣಿತ ಪರೀಕ್ಷೆಯು ಫೆಬ್ರವರಿ 17, 2026 ರಂದು ನಡೆಯಲಿದೆ. ಗಣಿತ ವಿಷಯವು ವಿದ್ಯಾರ್ಥಿಗಳ ಒಟ್ಟಾರೆ ಬೋರ್ಡ್ ಪರೀಕ್ಷೆಯ ಶೇಕಡಾವಾರು ಅಂಕಗಳನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ, ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಗಳಿಸಲು
ಸಿದ್ದರಾಮಯ್ಯ ಅವರನ್ನು ಅಂದು ನಾವು ಡಿಸಿಎಂ ಮಾಡದೆ ಹೋಗಿದ್ದರೆ ಇಂದು ಸಿಎಂ ಆಗ್ತಿದ್ರಾ? ನಿಖಿಲ್ ಕುಮಾರಸ್ವಾಮಿ ಪ್ರಶ್ನೆ
ರಾಜ್ಯದ ಸಿಎಂ ಆಗಿರುವ ಸಿದ್ದರಾಮಯ್ಯ ಅವರನ್ನು ಜೆಡಿಎಸ್ ಪಕ್ಷದಲ್ಲಿದ್ದಾಗ ನಾವು ಡಿಸಿಎಂ ಮಾಡದೆ ಹೋಗಿದ್ದರೆ ಇಂದು ಅವರು ಸಿಎಂ ಆಗುತ್ತಿದ್ದರಾ? ಎಂದು ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ಜೆಡಿಎಸ್ ನಿಂದ ಕೆಲವು ಮುಖಂಡರು ತೊರೆದು ಹೋಗುತ್ತಿರುವ ವಿಚಾರಕ್ಕೆ ಮಾತನಾಡಿದ ಅವರು, ಜನತಾದಳ ಪಕ್ಷದಲ್ಲಿ 50ಕ್ಕೂ ಹೆಚ್ಚು ಜನ ಗುರುತಿಸಿಕೊಂಡು ಬೆಳೆದಿದ್ದಾರೆ. ಕಾಂಗ್ರೆಸ್ ಸರ್ಕಾರದ 9 ಮಂದಿ ಸಚಿವರು ಜೆಡಿಎಸ್ ನಿಂದ ವಲಸೆ ಹೋದವರೇ ಎಂದು ಅಭಿಪ್ರಾಯಪಟ್ಟರು. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ.
Bidar | ಕಾರಂಜಾ ಜಲಾಶಯದ ಕಾಲುವೆಗೆ ಬಿದ್ದು ತಂದೆ-ಮಗ ಮೃತ್ಯು
ಬೀದರ್ : ಕಾಲುವೆಗೆ ಬಿದ್ದು ತಂದೆ-ಮಗ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಹತ್ತಿರವಿರುವ ಕಾರಂಜಾ ಜಲಾಶಯದ ಹತ್ತಿರ ಸೋಮವಾರ ನಡೆದಿದೆ. ಮೃತರನ್ನು ಹಳ್ಳಿಖೇಡ್ (ಬಿ) ಗ್ರಾಮದ ನಿವಾಸಿಗಳಾದ ವಿಶ್ವನಾಥ್ (ಇಸಪ್ಪ) ಹೊಸಮನಿ (53) ಮತ್ತು ಅಂಬರೀಶ್ ಹೊಸಮನಿ (23) ಎಂದು ಗುರುತಿಸಲಾಗಿದೆ. ಬೀದರ್ನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಅಂಬರೀಶ್ ಕೈಕಾಲು ತೊಳೆಯಲು ಕಾರಂಜಾ ಜಲಾಶಯದ ಕಾಲುವೆಗೆ ಇಳಿದಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮಗನನ್ನು ರಕ್ಷಿಸಲು ತಂದೆ ವಿಶ್ವನಾಥ್ ಕಾಲುವೆಗೆ ಇಳಿದಿದ್ದಾರೆ. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಧನ್ನೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ನವದೆಹಲಿ: ಬೇಸಿಗೆ ಶುರುವಾಗಿದ್ದು, ಸಾಲು ಸಾಲು ರಜೆಗಳು ಎದುರಾಗಲಿವೆ. ಈ ಸಂಬಂಧ ಭಾರತೀಯ ರೈಲ್ವೆಯು ಶೇಕಡಾ 33ರಷ್ಟು ಸಬ್ಸಿಡಿಯಡಿ ಟೂರ್ ಪ್ಯಾಕೇಜ್ ಘೋಷಿಸಿದೆ. ಇದನ್ನು ಮ್ಯಾಜಿಕಲ್ ರೈಲು ಸವಾರಿ ಅಂತಲೂ ಬಣ್ಣಿಸಲಾಗಿದೆ. ಸೌತ್ ಸ್ಟಾರ್ ರೈಲ್ ದೇಶದ ಮೊದಲ ಖಾಸಗಿ ಭಾರತ್ ಗೌರವ್ ಪ್ರವಾಸಿ ರೈಲು ಸೇವೆಯಡಿ ಒಟ್ಟು ಸುಮಾರು 13 ದಿನಗಳ ಪ್ರವಾಸ ಪರಿಚಯಿಸಿದೆ ಎಂದು
ತಮ್ಮ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ವಿರುದ್ಧ ನಟಿ ತ್ರಿಶಾ ಆಕ್ರೋಶ
ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ನಟಿ ತ್ರಿಶಾ ಕೃಷ್ಣನ್ ಅವರನ್ನು ಉಲ್ಲೇಖಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ತ್ರಿಶಾ ಆಕ್ರೋಶ ವ್ಯಕ್ತಪಡಿಸಿದ್ದು, ಸಾರ್ವಜನಿಕವಾಗಿ ಖಂಡಿಸಿದ್ದಾರೆ. ನಟ–ರಾಜಕಾರಣಿ ವಿಜಯ್ ಅವರ ರಾಜಕೀಯ ಉದ್ದೇಶಗಳನ್ನು ಟೀಕಿಸುವ ವೇಳೆ ನೈನಾರ್ ನಾಗೇಂದ್ರನ್, ತ್ರಿಶಾ ಅವರ ಹೆಸರನ್ನು ಉಲ್ಲೇಖಿಸಿ ನೀಡಿದ ಹೇಳಿಕೆ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಯಿತು. ಹೇಳಿಕೆಯ ಸ್ವರೂಪ ಹಾಗೂ ವಿಷಯಕ್ಕೆ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ತ್ರಿಶಾ ತಮ್ಮ ಕಾನೂನು ಸಲಹೆಗಾರರ ಮೂಲಕ ಅಧಿಕೃತ ಪ್ರತಿಕ್ರಿಯೆ ನೀಡಿದರು. ವಿಜಯ್ ಅವರ ರಾಜಕೀಯ ಅನುಭವದ ಕೊರತೆಯನ್ನು ಉಲ್ಲೇಖಿಸಿದ ನಾಗೇಂದ್ರನ್, ರಾಜಕೀಯದಲ್ಲಿ ಯಶಸ್ಸು ಸಾಧಿಸಲು ಮೊದಲು ಅನುಭವದ ಅಗತ್ಯವಿದೆ ಎಂದು ಹೇಳಿ, “ಮೊದಲು ನಟಿ ತ್ರಿಶಾ ಅವರ ಮನೆಯಿಂದ ಹೊರಬರಬೇಕು” ಎಂಬ ಹೇಳಿಕೆಯನ್ನು ನೀಡಿದ್ದರು ಎಂದು ವರದಿಯಾಗಿದೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ತ್ರಿಶಾ, ಸಾಮಾಜಿಕ ಜಾಲತಾಣ X ನಲ್ಲಿ “ಅಗೌರವವನ್ನು ಯಾವಾಗಲೂ ಖಂಡಿಸಬೇಕು” ಎಂಬ ಶೀರ್ಷಿಕೆಯೊಂದಿಗೆ ಹೇಳಿಕೆ ಪ್ರಕಟಿಸಿದರು. ಅವರ ಕಾನೂನು ಸಲಹೆಗಾರ ನಿತ್ಯೇಶ್ ನಟರಾಜ್ ಅವರು ನೈನಾರ್ ನಾಗೇಂದ್ರನ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಔಪಚಾರಿಕ ಹೇಳಿಕೆ ಬಿಡುಗಡೆ ಮಾಡಿದರು. “ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನದಲ್ಲಿರುವ ವ್ಯಕ್ತಿಯಿಂದ ಇಂತಹ ಅಸಹ್ಯಕರ ಹಾಗೂ ಅನುಚಿತ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ,” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಹೇಳಿಕೆಯಲ್ಲಿ ತ್ರಿಶಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಮತ್ತು ಹಾಗೆ ಮಾಡುವ ಉದ್ದೇಶವೂ ಇಲ್ಲ ಎಂಬುದನ್ನು ಪುನರುಚ್ಚರಿಸಲಾಗಿದೆ. ರಾಜಕೀಯ ವಿಚಾರಗಳಲ್ಲಿ ಅವರು ಸದಾ ತಟಸ್ಥ ನಿಲುವು ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಲಾಗಿದೆ. “ನನ್ನ ಕಕ್ಷಿದಾರರು ಕಲಾರಂಗದಿಂದ ಗುರುತಿಸಿಕೊಳ್ಳಲು ಬಯಸುತ್ತಾರೆ; ರಾಜಕೀಯ ಹೊಂದಾಣಿಕೆಗಳಿಂದಲ್ಲ. ವೈಯಕ್ತಿಕ ಜೀವನವನ್ನು ಸಾರ್ವಜನಿಕ ಚರ್ಚೆಗೆ ಎಳೆದುತರುವುದು ಸರಿಯಲ್ಲ. ಸಾರ್ವಜನಿಕ ಹುದ್ದೆ ಹೊಂದಿರುವವರು ಜವಾಬ್ದಾರಿ ಮತ್ತು ಸಮಚಿತ್ತತೆಯನ್ನು ಕಾಪಾಡಿಕೊಳ್ಳಬೇಕು,” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದಲ್ಲದೆ, “ತ್ರಿಶಾ ಅವರ ಹೆಸರನ್ನು ಅವರಿಗೆ ಸಂಬಂಧಿಸದ ವಿಷಯಗಳಲ್ಲಿ ಬಳಸಬಾರದು” ಎಂದು ಮನವಿ ಮಾಡಲಾಗಿದೆ. ನಾಗೇಂದ್ರನ್ ಹೇಳಿದ್ದೇನು? ವಿಜಯ್ ಅವರ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಗೆ ಏಕೈಕ ಸವಾಲಾಗಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ನೈನಾರ್ ನಾಗೇಂದ್ರನ್, ವಿಜಯ್ ಅವರ ಅನುಭವದ ಕೊರತೆಯನ್ನು ಉಲ್ಲೇಖಿಸಿ ವ್ಯಂಗ್ಯವಾಡಿದರು. “ಮಾಳಿಗೆಯ ಮೇಲೆ ಹತ್ತಲು ಸಾಧ್ಯವಾಗದ ನಟ ಸ್ವರ್ಗಕ್ಕೆ ಏರುವ ಕನಸು ಕಾಣುತ್ತಿದ್ದಾನೆ,” ಎಂದು ಟೀಕಿಸಿದ ಅವರು, “ಪಾಪ, ಅವರು ಸಂಪೂರ್ಣ ಅನನುಭವಿ. ಮೊದಲು ತನ್ನ ಮನೆಯಿಂದ ಹೊರಬರಬೇಕು. ಮೊದಲು ತ್ರಿಶಾ ಮನೆಯಿಂದ ಹೊರಗೆ ಬನ್ನಿ, ನಂತರ ಏನಾದರೂ ಆಗಬಹುದು,” ಎಂದು ವ್ಯಂಗ್ಯಾವಾಡಿದ್ದರು ವರದಿಯಾಗಿದೆ. ಈ ವೈಯುಕ್ತಿಕ ಹೇಳಿಕೆಗೆ ರಾಜಕೀಯ ನಾಯಕರಿಂದ ವ್ಯಾಪಕ ಟೀಕೆ ವ್ಯಕ್ತವಾಯಿತು.
ಮಾರ್ಚ್ನಲ್ಲಿ ಬಿ.ಆರ್.ಅಂಬೇಡ್ಕರ್ ಕುರಿತು 2ದಿನ ಅಂತರರಾಷ್ಟ್ರೀಯ ವಿಚಾರ ಸಂಕಿರಣ : ಸಚಿವ ಈಶ್ವರ್ ಖಂಡ್ರೆ
ಬೀದರ್ : ಬಿ.ಆರ್.ಅಂಬೇಡ್ಕರ್ ಅವರ 'ಭಾರತದ ಪ್ರಸ್ತುತ ಸವಾಲುಗಳು, ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಸಮಕಾಲಿನ ಪರಿಹಾರಗಳು' ಎಂಬ ವಿಷಯದ ಕುರಿತು ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೀದರ್ ನಗರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಸಮಾಜದ ವಿವಿಧ ಹಿರಿಯ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಸವ ಭೂಮಿಯಾದ ಬೀದರ ಜಿಲ್ಲೆಯಲ್ಲಿ ಅಂಬೇಡ್ಕರ್ ಕುರಿತ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ನಾಟಕ ಹಾಗೂ ವಿಚಾರಗೋಷ್ಠಿಗಳು ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಆದರ್ಶಗಳು ಸಮಸಮಾಜ ನಿರ್ಮಾಣಕ್ಕೆ ದಾರಿ ತೋರಿಸುತ್ತವೆ. ಅಂಬೇಡ್ಕರ್ ಅವರ ಚಿಂತನೆಗಳು ಎಲ್ಲ ಸಮುದಾಯಗಳಿಗೆ ಅನ್ವಯವಾಗುತ್ತವೆ. ಜಿಲ್ಲೆಯ ಎಲ್ಲಾ ವರ್ಗದ ಜನರು, ಮುಖಂಡರು ಹಾಗೂ ಯುವ ಸಮುದಾಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ವಿಚಾರ ಸಂಕಿರಣದಲ್ಲಿ ಆರು ಪ್ರಮುಖ ವಿಷಯಗಳ ಕುರಿತು ಗೋಷ್ಠಿಗಳು ನಡೆಯಲಿವೆ. ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಭವಿಷ್ಯದ ದಿಕ್ಕು, ಲಿಂಗ ಸಮಾನತೆ, ಅಸ್ಪೃಶ್ಯತೆಯ ನಿರ್ಮೂಲನೆ, ಭಾರತದ ಸಂವಿಧಾನದ ಮೌಲ್ಯಗಳು, ಸಾಮಾಜಿಕ ಮತ್ತು ಆರ್ಥಿಕ ನ್ಯಾಯ, ಜಾತಿ ವ್ಯವಸ್ಥೆಯ ಸವಾಲುಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ಸಚಿವರು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ. ಕರಾಳೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಪ್ರಧಾನಿ ಮೋದಿಯವರನ್ನು ಭೇಟಿಯಾದ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್
ಹೊಸದಿಲ್ಲಿ: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರು ಸೋಮವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ಸಾಮಾಜಿಕ, ಮಾನವೀಯ, ಶೈಕ್ಷಣಿಕ ಹಾಗೂ ಅಭಿವೃದ್ಧಿ ಸಂಬಂಧಿತ ಹಲವು ಪ್ರಮುಖ ವಿಷಯಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು. ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಅಂತರರಾಷ್ಟ್ರೀಯ ಬೆಳವಣಿಗೆಗಳ ಕುರಿತೂ ಅಭಿಪ್ರಾಯ ವಿನಿಮಯವಾಯಿತು ಎಂದು mediaoneonline.com ವರದಿ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್, “ಮಾನವೀಯತೆಯೊಂದಿಗೆ” ಎಂಬ ವಿಷಯದ ಅಡಿಯಲ್ಲಿ ಇತ್ತೀಚೆಗೆ ಕೈಗೊಂಡ ಕೇರಳ ಯಾತ್ರೆಯ ವೇಳೆ ಸಮಾಜದ ವಿವಿಧ ವರ್ಗಗಳಿಂದ ಹೊರಹೊಮ್ಮಿದ ಬೇಡಿಕೆಗಳು, ಕಳವಳಗಳು ಮತ್ತು ವಿನಂತಿಗಳನ್ನು ಪ್ರಧಾನ ಮಂತ್ರಿಯವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ. ಮುಂಬರುವ ಪವಿತ್ರ ರಮಝಾನ್ ಮಾಸದ ಸಂದೇಶವನ್ನೂ ಇದೇ ಸಂದರ್ಭದಲ್ಲಿ ಹಂಚಿಕೊಂಡಿರುವುದಾಗಿ ಅವರು ಉಲ್ಲೇಖಿಸಿದ್ದಾರೆ. ಸಭೆಯಲ್ಲಿ ಜಂಇಯ್ಯತುಲ್ ಉಲಮಾ ಹಾಗೂ ಮರ್ಕಝ್ ನೇತೃತ್ವದಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಕಲ್ಯಾಣ ಚಟುವಟಿಕೆಗಳ ಬಗ್ಗೆ ತಮಗೆ ಬಹಳ ನಿಕಟ ಅರಿವು ಇದೆ ಎಂದು ಪ್ರಧಾನಿ ಹೇಳಿದ್ದಾರೆ. ಇಂತಹ ಉಪಕ್ರಮಗಳು ಸಾಮಾಜಿಕ ಪ್ರಗತಿಗೆ ಮಹತ್ವದ ಕೊಡುಗೆ ನೀಡುವುದರ ಜೊತೆಗೆ ಜಾಗತಿಕ ಮಟ್ಟದಲ್ಲಿ ಭಾರತದ ಖ್ಯಾತಿಯನ್ನು ಹೆಚ್ಚಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಮಾಜದ ಎಲ್ಲಾ ವರ್ಗಗಳನ್ನು ಒಳಗೊಂಡ ಸಮಗ್ರ ಅಭಿವೃದ್ಧಿಯ ಅಗತ್ಯತೆ, ಆರ್ಥಿಕ ಬೆಳವಣಿಗೆಯೊಂದಿಗೆ ಮಾನವ ಅಭಿವೃದ್ಧಿ ಸೂಚ್ಯಂಕಗಳಿಗೆ ಆದ್ಯತೆ ನೀಡುವ ಮಹತ್ವ, ಜನಸಂಖ್ಯಾ ಅನುಪಾತ ಹಾಗೂ ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಸಂಪನ್ಮೂಲಗಳ ಸಮಾನ ಹಂಚಿಕೆಯ ಅಗತ್ಯತೆ ಕುರಿತೂ ಚರ್ಚೆ ನಡೆಯಿತು. ವಕ್ಫ್ ಹಾಗೂ ಎಸ್ಐಆರ್ ಗೆ ಸಂಬಂಧಿಸಿದ ಕಾಳಜಿಗಳು, ಐತಿಹಾಸಿಕ ಮಸೀದಿಗಳು ಮತ್ತು ಇಸ್ಲಾಮಿಕ್ ಪರಂಪರೆಯ ಸ್ಮಾರಕಗಳ ಸಂರಕ್ಷಣೆ, ಮೌಲಾನಾ ಆಝಾದ್ ರಾಷ್ಟ್ರೀಯ ಫೆಲೋಶಿಪ್ ಸೇರಿದಂತೆ ಅಲ್ಪಸಂಖ್ಯಾತರ ಶಿಕ್ಷಣ ಕಲ್ಯಾಣ ಯೋಜನೆಗಳ ಮರುಸ್ಥಾಪನೆ ಕುರಿತೂ ವಿಷಯ ಪ್ರಸ್ತಾಪಿಸಲಾಯಿತು. ಉತ್ತರ ಭಾರತದ ಮುಬಾರಕ್ಪುರ್ ಜಾಮಿಯಾ ಅಶ್ರಫಿಯ್ಯಾ ಸೇರಿದಂತೆ ಇಸ್ಲಾಮಿಕ್ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳು, ಬರೇಲಿ ಘಟನೆ ಸೇರಿದಂತೆ ಅಮಾಯಕರಿಗೆ ನ್ಯಾಯ ಒದಗಿಸುವುದು, ದಕ್ಷಿಣ ಭಾರತದ ಪ್ರಮುಖ ಯಾತ್ರಾ ಕೇಂದ್ರಗಳನ್ನು ಸಂಪರ್ಕಿಸುವ ರೈಲು ಸೇವೆಗಳ ಪ್ರಸ್ತಾಪ, ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಲಪ್ಪುರಂ ಕೇಂದ್ರದ ಅಭಿವೃದ್ಧಿ ಹಾಗೂ ದೇಶದ ಅಲ್ಪಸಂಖ್ಯಾತ ಸಮುದಾಯಗಳೊಂದಿಗೆ ಕೇಂದ್ರ ಸರ್ಕಾರ ನಿಕಟವಾಗಿ ತೊಡಗಿಸಿಕೊಳ್ಳುವ ಅಗತ್ಯತೆಯನ್ನು ಭೇಟಿಯ ವೇಳೆ ಉಲ್ಲೇಖಿಸಲಾಯಿತು. ಸಭೆಯಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ, ಎಸ್ ವೈ ಎಸ್ ಅಧ್ಯಕ್ಷ ಡಾ. ಮುಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ ಹಾಗೂ ಮರ್ಕಝ್ ನಾಲೆಜ್ ಸಿಟಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
Kalaburagi | ನದಿಯಲ್ಲಿ ಮುಳುಗಿ ಯುವಕ ಮೃತ್ಯು : ಮೂರು ದಿನಗಳ ಬಳಿಕ ಮೃತದೇಹ ಪತ್ತೆ
ಕಲಬುರಗಿ: ಸೇಡಂ ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಕಾಗಿಣಾ ನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹವು ಮೂರು ದಿನಗಳ ಬಳಿಕ ಸೋಮವಾರ ಪತ್ತೆಯಾಗಿದೆ. ಆಳಂದ ತಾಲ್ಲೂಕಿನ ಬೆಳಮಗಿ ಗ್ರಾಮದ ಶಿವಪ್ರಕಾಶ (26) ಶನಿವಾರ ನದಿಯಲ್ಲಿ ಮುಳುಗಿ ಕಾಣೆಯಾಗಿದ್ದನು. ಸತತ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಕೊನೆಗೂ ಶಿವಪ್ರಕಾಶನ ಮೃತದೇಹವನ್ನು ಪತ್ತೆಹಚ್ಚಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಳೆದ ಮೂರು ದಿನಗಳಿಂದ ಶೋಧ ಕಾರ್ಯ ನಡೆಸುತ್ತಿದ್ದರು. ಈ ಕುರಿತು ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಸಿಂಧುಗೊಂಡ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಗೆದ್ದಿದ್ದು 19 ಸಾವಿರ ಮತಗಳ ಅಂತರದಿಂದ! ಆಸ್ತಿ ಎಷ್ಟಿತ್ತು? ಮುಂದೇನು?
ಕಾಂಗ್ರೆಸ್ ನಾಯಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಅವರು ಚುನಾವಣೆ ಆಯೋಗಕ್ಕೆ ಆಸ್ತಿ ಸೇರಿದಂತೆ ಹಲವು ವಿವರ ತಪ್ಪಾಗಿ ನೀಡಿದ್ದಾರೆ ಎಂದು ಈ ಕ್ರಮಕೈಗೊಳ್ಳಲಾಗಿದೆ. ಸದ್ಯ ಸುಬ್ಬಾರೆಡ್ಡಿ ಆಸ್ತಿ ಎಷ್ಟಿತ್ತು? ಎಷ್ಟು ಅಂತರಗಳಿಂದ ಗೆಲುವು ಸಾಧಿಸಿದ್ದರು? ಬಿಜೆಪಿ ಅಭ್ಯರ್ಥಿಗಳಿಸಿದ ಮತಗಳೆಷ್ಟು? ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
ಸಾಣಾಪೂರ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಮೂವರಿಗೆ ಗಲ್ಲು ಶಿಕ್ಷೆ
ಹಂಪಿ ಬಳಿಯ ಸಮೀಪದ ಸಾಣಾಪುರದಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಗಂಗಾವತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು.
ಕೊಪ್ಪಳ | ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗಳಿಗೆ ಮರಣ ದಂಡನೆ ವಿಧಿಸಿದ ನ್ಯಾಯಾಲಯ
ಕೊಪ್ಪಳ : ಕಳೆದ ವರ್ಷ ಸಣಾಪುರ ಕಾಲುವೆ ದಂಡೆಯ ಬಳಿ ನಡೆದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ ಹಾಗೂ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಗಂಗಾವತಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯವು ಮೂರು ಜನ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ಮಲ್ಲೇಶ್ ( ಹಂದಿಮಲ್ಲ), ಸಾಯಿ (ಚೈತನ್ಯಸಾಯಿ) ಮತ್ತು ಶರಣಪ್ಪ ( ಶರಣು ಬಸವರಾಜ್) ಶಿಕ್ಷೆ ವಿಧಿಸಲ್ಪಟ ಅಪರಾಧಿಗಳು. ಘಟನೆಯ ಹಿನ್ನೆಲೆ : ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ, ಐವರು ಪ್ರವಾಸಿಗರ ತಂಡ ಸಣಾಪುರ ಕೆರೆ ಬಳಿ ತೆರಳಿದ್ದ ವೇಳೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಮೇರಿಕಾದ ಡೇನಿಯಲ್ ಸೇರಿದಂತೆ ಮೂವರು ಪ್ರವಾಸಿಗರನ್ನು ತುಂಗಭದ್ರಾ ಎಡದಂಡೆ ಕಾಲುವೆಗೆ ತಳ್ಳಲಾಗಿತ್ತು. ಹಲ್ಲೆಯ ಪರಿಣಾಮ ಒಡಿಶಾ ಮೂಲದ ಬಿಬಾಶ್ ಎಂಬ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಇದೇ ವೇಳೆ ಇಸ್ರೇಲ್ ಮೂಲದ ಮಹಿಳೆ ಹಾಗೂ ಸ್ಥಳೀಯ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಈ ಘಟನೆ ಆದ ಕೆಲವೇ ದಿನಗಳಲ್ಲಿ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ ಎದ್ದು ಕಾಣಿಸುತ್ತಿದೆ. ಅಲ್ಲದೆ, ರೋಗಿಗಳ ಶಸ್ತ್ರಚಿಕಿತ್ಸೆಯೂ ವಿಳಂಬ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವನ್ನು ಪ್ರಸ್ತಾಪ ಮಾಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಆರೋಗ್ಯ ಸಚಿವರನ್ನು ವಿದೇಶ ಪ್ರವಾಸಕ್ಕೆ ಕಳಿಸಿದರೆ ಪರಿಸ್ಥಿತಿ ಹೇಗಾಗಬಹುದು ಎಂದು ಪ್ರಶ್ನಿಸಿದರು. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ.
ಹೊಸದಿಲ್ಲಿ: ಸಾರ್ವಜನಿಕ ವಲಯದ ಬ್ಯಾಂಕುಗಳು 2020-21 ಮತ್ತು 2024-25ರ ನಡುವೆ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದ್ದಕ್ಕಾಗಿ ಗ್ರಾಹಕರಿಂದ 8,621.12 ಕೋಟಿ ರೂ.ದಂಡವನ್ನು ಸಂಗ್ರಹಿಸಿದ್ದು, ಉತ್ತರ ಪ್ರದೇಶ, ತಮಿಳುನಾಡು ಮತ್ತು ಮಹಾರಾಷ್ಟ್ರಗಳು ಪಟ್ಟಿಯ ಅಗ್ರಸ್ಥಾನಗಳಲ್ಲಿವೆ ಎಂದು ಸಂಸದೀಯ ಸಮಿತಿಯೊಂದರ ಮುಂದೆ ಮಂಡಿಸಲಾದ ಅಂಕಿಅಂಶಗಳು ತೋರಿಸಿವೆ ಎಂದು deccanherald.com ವರದಿ ಮಾಡಿದೆ. ಉಳಿತಾಯ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದವರಿಗೆ ದಂಡ ವಿಧಿಸುವುದನ್ನು ಕೈ ಬಿಡುವಂತೆ ಬ್ಯಾಂಕುಗಳಿಗೆ ಲೋಕಸಭೆಯ ಅರ್ಜಿಗಳ ಕುರಿತ ಸಮಿತಿಯು ಆಗ್ರಹಿಸಿದೆ. ಅತಿ ಹೆಚ್ಚು ದಂಡವನ್ನು ವಸೂಲಿ ಮಾಡಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ನಾಲ್ಕನೇ ಮತ್ತು ಬಿಹಾರ ಐದನೇ ಸ್ಥಾನಗಳಲ್ಲಿವೆ. ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಉತ್ತರ ಪ್ರದೇಶದಲ್ಲಿ ಸರಕಾರಿ ಬ್ಯಾಂಕುಗಳು ಐದು ವರ್ಷಗಳಲ್ಲಿ 1,233.97 ಕೋ.ರೂ.ಗಳ ದಂಡವನ್ನು ಸಂಗ್ರಹಿಸಿದ್ದರೆ,ನಂತರದ ಸ್ಥಾನಗಳಲ್ಲಿ ತಮಿಳುನಾಡು (1221.38 ಕೋಟಿ ರೂ.),ಮಹಾರಾಷ್ಟ್ರ (1,088.18 ಕೋಟಿ ರೂ.),ಕರ್ನಾಟಕ (529.20 ಕೋಟಿ ರೂ.) ಮತ್ತು ಬಿಹಾರ (464.53 ಕೋಟಿ ರೂ.) ರಾಜ್ಯಗಳಿವೆ. 2020-21 ಮತ್ತು 2023-24ರ ನಡುವೆ ದಂಡ ಸಂಗ್ರಹದಲ್ಲಿ ಏರಿಕೆಯಾಗಿದ್ದರೆ,2024-25ರಲ್ಲಿ ಕಡಿಮೆಯಾಗಿದೆ ಎಂದು ವಿಶ್ಲೇಷಣೆಯು ತೋರಿಸಿದೆ. ಎಸ್ಬಿಐ ಮಾರ್ಚ್ 2020ರಲ್ಲಿ ದಂಡ ವಿಧಿಸುವುದನ್ನು ಹಿಂದೆಗೆದುಕೊಂಡಿದ್ದರೂ,2020-21ರಲ್ಲಿ 1,148.71 ಕೋಟಿ ರೂ.ಗಳಷ್ಟಿದ್ದ ಸರಕಾರಿ ಬ್ಯಾಂಕುಗಳಿಂದ ವಾರ್ಷಿಕ ದಂಡ ಸಂಗ್ರಹ ಮುಂದಿನ ಮೂರು ಹಣಕಾಸು ವರ್ಷಗಳಲ್ಲಿ ಅನುಕ್ರಮವಾಗಿ 1415.65 ಕೋಟಿ ರೂ.,1785.90 ಕೋಟಿ ರೂ. ಮತ್ತು 2,225.10 ಕೋಟಿ ರೂ.ಗೆ ಏರಿಕೆಯಾಗಿತ್ತು,ಆದರೆ 2024-25ರಲ್ಲಿ 2.045.74 ಕೋಟಿ ರೂ.ಗೆ ಇಳಿದಿತ್ತು. 2024-25ರಲ್ಲಿ ಒಟ್ಟಾರೆ ದಂಡ ಸಂಗ್ರಹದಲ್ಲಿ ಕುಸಿತ ಕಂಡು ಬಂದಿದ್ದರೂ,2023-24ಕ್ಕೆ ಹೋಲಿಸಿದರೆ ಆರು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ 2024-25ರಲ್ಲಿ ದಂಡ ಸಂಗ್ರಹದಲ್ಲಿ ಏರಿಕೆ ಕಂಡು ಬಂದಿತ್ತು. ಉಳಿತಾಯ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದ ಗ್ರಾಹಕರಿಗೆ ದಂಡ ವಿಧಿಸುವುದನ್ನು ಕೈಬಿಡುವ ಕೆಲವು ಬ್ಯಾಂಕುಗಳ ನಿರ್ಧಾರ ಸಂಬಂಧಿಸಿದ ಎಲ್ಲರ ಅತ್ಯುತ್ತಮ ಹಿತಾಸಕ್ತಿಗೆ ಅನುಗುಣವಾಗಿದೆ ಎಂಬ ದೃಢವಾದ ಅಭಿಪ್ರಾಯವನ್ನು ತಾನು ಹೊಂದಿರುವುದಾಗಿ ಸಂಸದೀಯ ಸಮಿತಿಯು ಹೇಳಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಬ್ಯಾಂಕುಗಳು ಚಾಲ್ತಿ ಖಾತೆಗಳನ್ನು ಹೊಂದಿರುವ ಸಣ್ಣ ಉದ್ಯಮಿಗಳು,ಸ್ವಯಂ ಉದ್ಯೋಗಿಗಳು ಮತ್ತು ಸಣ್ಣ ವ್ಯಾಪಾರಿಗಳನ್ನು ಸಕಾರಾತ್ಮಕವಾಗಿ ನೋಡಬೇಕು,ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದ್ದಕ್ಕಾಗಿ ಪದೇಪದೇ ದಂಡಗಳನ್ನು ವಿಧಿಸುವ ಮೂಲಕ ಅವರಿಗೆ ತೊಂದರೆ ನೀಡಬಾರದು ಎಂದೂ ಸಮಿತಿಯು ಹೇಳಿದೆ.
BTS JK ಹಾಗೂ ಏಸ್ಪಾ ವಿಂಟರ್ ಡೇಟಿಂಗ್ ವದಂತಿಗೆ ಬ್ರೇಕ್ ಹಾಕಿದ ಹ್ಯೂಬ್ಲೋಟ್ ಫೋಟೋಶೂಟ್: ಹೇಗೆ ಗೊತ್ತಾ?
ಇತ್ತೀಚೆಗೆ BTS ತಂಡದ ಸದಸ್ಯ JK ಹಾಗೂ ಏಸ್ಪಾ ತಂಡದ ಸದಸ್ಯೆ ವಿಂಟರ್ ಡೇಟಿಂಗ್ ವದಂತಿಗಳು ಜೋರಾಗಿದ್ದು, ಇದಕ್ಕೆ ಪ್ರಮುಖ ಕಾರಣವಾಗಿ ಏಸ್ಪಾ ತಂಡದ ಕಾನ್ಸರ್ಟ್ ಸಮಯದಲ್ಲಿ ಈ JK ಜಪಾನ್ ಪ್ರವಾಸದಲ್ಲಿದ್ದದನ್ನು ತೋರಿಸಿದ್ದರು. ಆದರೆ, ಸದ್ಯ ಇದಕ್ಕೆಲ್ಲಾ ಬ್ರೇಕ್ ಬಿದ್ದಿದ್ದು, JK ಪ್ರವಾಸ ಮಾಡಿದ್ದು, ಏಸ್ಪಾ ಕಾನ್ಸರ್ಟ್ ನೋಡಲು ಅಲ್ಲ ಬದಲಿಗೆ ಹ್ಯೂಬ್ಲೋಟ್ ಫೋಟೋಶೂಟ್ ನಲಿ ಭಾಗವಹಿಸಲು ಎಂದು ಖಚಿತವಾಗಿದೆ.
ನಗರಗಳಲ್ಲಿ ಮೊಬೈಲ್ ಕ್ಯಾಂಟೀನ್ ಆರಂಭಿಸಲು ಉಚಿತ ಸಹಾಯಧನ; ಯಾರು ಅರ್ಜಿ ಸಲ್ಲಿಸಬಹುದು?
ಏನಿದು ರಾಜ್ಯ ಸರ್ಕಾರದ ‘ಆಹಾರ ವಾಹಿನಿ’ ಯೋಜನೆ?

23 C