SENSEX
NIFTY
GOLD
USD/INR

Weather

20    C
... ...View News by News Source

ಉಡುಪಿ | 77ನೇ ಗಣರಾಜ್ಯೋತ್ಸವ: ಸೇಂಟ್ ಮೇರೀಸ್ ಐಲ್ಯಾಂಡ್‌ನಲ್ಲಿ ಧ್ವಜಾರೋಹಣ

ಕರಾವಳಿ ಪ್ರವಾಸೋದ್ಯಮ ಭವಿಷ್ಯಕ್ಕೆ ಹೊಸ ಬಾಗಿಲು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ವಾರ್ತಾ ಭಾರತಿ 26 Jan 2026 9:58 am

ಕನ್ನಡದಲ್ಲಿ ಮರೆತೇ ಹೋದಂತಿದ್ದ ಅದ್ಭುತ ಕಲಾಪ್ರಕಾರ ಪುನರುಜ್ಜೀವನಗೊಳಿಸಿದ ಶತಾವಧಾನಿ ರಾ ಗಣೇಶ್: ಮಂಜುನಾಥ ಕೊಳ್ಳೇಗಾಲ ಬರಹ

ಕನ್ನಡದಲ್ಲಿ ಮರೆತೇ ಹೋದಂತಿದ್ದ ಅದ್ಭುತ ಕಲಾಪ್ರಕಾರ ಪುನರುಜ್ಜೀವನಗೊಳಿಸಿದ್ದು ಶತಾವಧಾನಿ ರಾ ಗಣೇಶ್ - ಮಂಜುನಾಥ ಕೊಳ್ಳೇಗಾಲ ಅವರ ಬರಹ ಇಲ್ಲಿದೆ. ನವರಸಗಳಲ್ಲದೆ ಮತ್ತೊಂದು ರಸವಿದೆಯೆಂದು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ - ಪಾಂಡಿತ್ಯ ರಸ. ಶುದ್ಧ ಕಲೆಯೊಂದರ ಬಹುಮುಖ್ಯ ಉದ್ದೇಶವೇ ರಸಾನ್ವೇಷಣೆ ಮತ್ತು ರಸನಿಷ್ಪತ್ತಿ ಎನ್ನುವುದಾದರೆ, ಅವಧಾನವೆಂಬ ಕಲೆಯ ಮಗ್ಗುಲು ಮಗ್ಗುಲನ್ನೂ ಈ ಪಾಂಡಿತ್ಯರಸದೃಷ್ಟಿಯಿಂದ ಶೋಧಿಸಿದವರು, ಈ ಕಲಾ

ಒನ್ ಇ೦ಡಿಯ 26 Jan 2026 9:52 am

77ನೇ ಗಣರಾಜ್ಯೋತ್ಸವ: ಬೀದರ್‌ನಲ್ಲಿ ಸಚಿವ ಈಶ್ವರ್ ಖಂಡ್ರೆ ಧ್ವಜಾರೋಹಣ

ಬೀದರ್: 77ನೇ ಗಣರಾಜ್ಯೋತ್ಸವದ ಅಂಗವಾಗಿ ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಎನ್‌ಸಿಸಿ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಸೇವಾ ದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಸುಮಾರು 13 ತುಕಡಿಗಳು ಶಿಸ್ತುಬದ್ಧ ಪರೇಡ್ ನಡೆಸಿ ಗೌರವ ವಂದನೆ ಸಲ್ಲಿಸಿದವು. ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕ ಶೈಲೆಂದ್ರ ಬೇಲ್ದಾಳೆ, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮೂಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಹಾಗೂ ಬುಡಾ ಅಧ್ಯಕ್ಷ ಬಸವರಾಜ್ ಜಾಬಶೇಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jan 2026 9:51 am

ಕರ್ನಾಟಕಕ್ಕೆ 8 ಪದ್ಮ ಪುರಸ್ಕಾರ; ಕನ್ನಡ ನಾಡಿನ ಹಿರಿಮೆ ಹೆಚ್ಚಿಸಿದ ಸಾಧಕರು ಎಂದ ಜೋಶಿ

Padma Award 2026 : ಪದ್ಮ ಪ್ರಶಸ್ತಿ ಪಡೆದ ಎಲ್ಲರಿಗೂ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಪ್ರಶಸ್ತಿ ಬಂದಿರುವುದಕ್ಕೆ ಸಂತಸ ವ್ಯಕ್ತ ಪಡಿಸಿರುವ ಸಚಿವ ಜೋಶಿ, ಎಲ್ಲರಿಗೂ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯ ಕರ್ನಾಟಕ 26 Jan 2026 9:42 am

Republic Day 2026 | ಮಾಣಿಕ್ ಷಾ ಮೈದಾನದಲ್ಲಿ ಪರೇಡ್ ಆರಂಭ

ಬೆಂಗಳೂರು: ನಗರದ ಮಾಣಿಕ್ ಷಾ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾದ ಭವ್ಯ ಪರೇಡ್‌ಗೆ ಅಧಿಕೃತವಾಗಿ ಚಾಲನೆ ದೊರೆಯಿತು. ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಪರೇಡ್‌ನಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್‌, ಗೃಹರಕ್ಷಕ ದಳ, ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಎನ್‌ಎಸ್ಎಸ್, ರೆಡ್ ಕ್ರಾಸ್ ಸೇರಿದಂತೆ 30ಕ್ಕೂ ಹೆಚ್ಚು ತಂಡಗಳು ಪರೇಡ್‌ನಲ್ಲಿ ಭಾಗವಹಿಸಿದ್ದವು. ಒಟ್ಟು 1,326 ಮಂದಿ ಈ ಪರೇಡ್‌ನಲ್ಲಿ ಭಾಗವಹಿಸಿದ್ದು, ಶಿಸ್ತಿನ ಪ್ರದರ್ಶನ  ನಡೆಯಿತು.

ವಾರ್ತಾ ಭಾರತಿ 26 Jan 2026 9:27 am

ಬೆಂಗಳೂರು ಅಭಿವೃದ್ಧಿಗೆ 2.50 ಲಕ್ಷ ಕೋಟಿ; ಎಲ್ಲಾ ನಗರಗಳಲ್ಲಿ ಸಂಚಾರಿ ಗ್ರಿಡ್: ಅಪ್‌ಡೇಟ್‌ ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು: ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಿಸಬೇಕು ಎಂಬ ಕಾರಣಕ್ಕೆ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 2.50 ಲಕ್ಷ ಕೋಟಿ ಹಣವನ್ನು ಐದು ವರ್ಷಗಳಲ್ಲಿ ವೆಚ್ಚ ಮಾಡಲಾಗುತ್ತಿದೆ ಎಂದರು. ದಾವೋಸ್

ಒನ್ ಇ೦ಡಿಯ 26 Jan 2026 9:23 am

ದಲಿತರಿಗೆ ಇದುವರೆಗೂ ಸಿಗದ ಭೂ ಒಡೆತನ, ದೂರು ಕೊಟ್ಟರೂ ಸಿಕ್ಕಿಲ್ಲ ನ್ಯಾಯ

ತೀರ್ಥಹಳ್ಳಿಯಲ್ಲಿ ದಲಿತರಿಗೆ ಮಂಜೂರಾದ 265 ಎಕರೆ ಭೂಮಿಗೆ ದಾಖಲೆ ಸಿಕ್ಕಿಲ್ಲ. ಭೂಮಿ ಪಡೆದ ಹಿರಿಯರು ಮೃತರಾಗಿದ್ದು, ವಾರಸುದಾರರಿಗೆ ಹಕ್ಕು ದೊರೆತಿಲ್ಲ. ಭೂಮಿ ಬಲಾಢ್ಯರ ಪಾಲಾಗಿದೆ. ದೂರು ನೀಡಿದರೂ ನ್ಯಾಯ ಸಿಕ್ಕಿಲ್ಲ. ಪಿಟಿಸಿಎಲ್‌ ನಿಯಮ ಮೀರಿ ಭೂಮಿ ಪರಭಾರೆ ನಡೆದಿದೆ. ಸುಮಾರು 3 ಸಾವಿರ ದಲಿತ ಕುಟುಂಬಗಳಿದ್ದು, 459 ಎಕರೆ ಹಂಚಿಕೆಯಾಗಿದೆ. ಕಾನೂನು ಬಾಹಿರವಾಗಿ ಭೂಮಿ ಕಬಳಿಕೆಯಾಗಿದೆ. ದೂರು ನೀಡಿದರೂ ಅತಿಕ್ರಮಣದಾರರಿಗೆ ರಕ್ಷಣೆ ಸಿಗುತ್ತಿದೆ.

ವಿಜಯ ಕರ್ನಾಟಕ 26 Jan 2026 9:12 am

ಸೂರಿಕುಮೇರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ: ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ ಭಾಗಶಃ ಹಾನಿ ಉಂಟಾಗಿದ್ದು, ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 26 Jan 2026 9:04 am

ಮಂಗಳೂರಿನಲ್ಲಿ ಹವಾಮಾನ ಬದಲಾವಣೆಯಿಂದ ವೈರಲ್‌ ಜ್ವರ ಹೆಚ್ಚಳಕ್ಕೆ ಜನ ಕಂಗಾಲು: ಕಾಮಲೆ ರೋಗ ಪ್ರಮಾಣದಲ್ಲೂ ಏರಿಕೆಗೆ ಕಾರಣವೇನು?

ಮಂಗಳೂರಿನಲ್ಲಿ ಹವಾಮಾನ ಬದಲಾವಣೆಯಿಂದಾಗಿ ಜನರ ಆರೋಗ್ಯದಲ್ಲಿ ಏರುಪೇರು ಕಂಡುಬರುತ್ತಿದೆ. ನಗರದಲ್ಲಿ ಜ್ವರ ಹೆಚ್ಚಾಗುತ್ತಿದ್ದರೆ, ಗ್ರಾಮೀಣ ಭಾಗದಲ್ಲಿ ಕಾಮಾಲೆ ರೋಗದ ಪ್ರಮಾಣ ಏರಿಕೆಯಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಕೂಡ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕಲುಷಿತ ನೀರಿನಿಂದ ಕಾಮಾಲೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವೈದ್ಯರು ಮುನ್ನೆಚ್ಚರಿಕೆ ವಹಿಸಲು ಸೂಚಿಸಿದ್ದಾರೆ.

ವಿಜಯ ಕರ್ನಾಟಕ 26 Jan 2026 9:00 am

ಜೆಡಿಎಸ್ ವಿಸರ್ಜನಾ ಸಮಾವೇಶ?

ಜಾತ್ಯತೀತ ಜನತಾದಳ 25ನೇ ವರ್ಷದ ಅಂಗವಾಗಿ ಹಾಸನದಲ್ಲಿ ಶನಿವಾರ ನಡೆದ ‘ಜನತಾ ಸಮಾವೇಶ’ವು ಜೆಡಿಎಸ್‌ನ ಮರು ನಿರ್ಮಾಣಕ್ಕೆ ಪೀಠಿಕೆಯಾಗಬಹುದು ಎಂದು ಭಾವಿಸಿದ ‘ಹಾಸನದ ಜನತೆ’ಗೆ ನಿರಾಸೆಯಾಗಿದೆ. ಕಾಂಗ್ರೆಸ್-ಬಿಜೆಪಿ ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ಕರ್ನಾಟಕದ ಹಿತಾಸಕ್ತಿಯನ್ನು ಜೆಡಿಎಸ್ ಎತ್ತಿ ಹಿಡಿಯಬಹುದು ಎನ್ನುವ ನಿರೀಕ್ಷೆ ಎಂದೋ ಹುಸಿಯಾಗಿತ್ತು. ಜೆಡಿಎಸ್ ಹಲವು ಬಾರಿ ನೆಲಕಚ್ಚಿ ಮತ್ತೆ ಮೇಲೆದ್ದು ನಿಂತ ಉದಾಹರಣೆಗಳಿವೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ದಿನದಿಂದ ಎದುರಾಗುತ್ತಿರುವ ಹಿನ್ನಡೆಯ ಕಾರಣದಿಂದ ಈ ಸಮಾವೇಶ ಜೆಡಿಎಸ್‌ನ ಆತ್ಮವಿಮರ್ಶೆಗೆ ವೇದಿಕೆಯಾಗಬಹುದು ಮತ್ತು ಇನ್ನೊಮ್ಮೆ ಮತ್ತೆ ನಿಲ್ಲುವುದಕ್ಕೆ ಈ ಸಮಾವೇಶ ಒಂದು ನಿಮಿತ್ತವಾಗಬಹುದೋ ಎಂಬ ಸಣ್ಣ ಆಸೆಯೂ ನಂದಿ ಹೋಗಿದೆ. ಎಡಬಲದಲ್ಲಿ ಕುಮಾರಸ್ವಾಮಿ-ರೇವಣ್ಣ ಅವರನ್ನು ಕುಳ್ಳಿರಿಸಿಕೊಂಡು ಮೈಕ್ ಮುಂದೆ ವೀರಾವೇಶದಿಂದ ಅಬ್ಬರಿಸುವ ದೇವೇಗೌಡರ ಪ್ರಯತ್ನ ಸಂಪೂರ್ಣ ವಿಫಲವಾಗಿದೆ. ಅದು ಅವಸಾನದ ಅಂಚಿಗೆ ಬಂದು ನಿಂತಿರುವ ಜೆಡಿಎಸ್ ಪಕ್ಷದ ಏದುಸಿರಿನಂತಿತ್ತು. ದೇವೇಗೌಡರನ್ನು ಮುಂದಿಟ್ಟು ಕಾರ್ಯಕರ್ತರೆಡೆಗೆ ಬಾಣ ಬಿಡುವ ಕುಮಾರಸ್ವಾಮಿಯವರ ಪ್ರಯತ್ನ ಕೂಡ ವಿಫಲವಾಗಿದೆ ಮಾತ್ರವಲ್ಲ, ದೇವೇಗೌಡರ ಭಾಷಣದಿಂದಾಗಿ ಪಕ್ಷದ ಅಳಿದುಳಿತ ವರ್ಚಸ್ಸಿಗೂ ಧಕ್ಕೆಯಾಗಿದೆ. ಸಮಾವೇಶದಲ್ಲಿ ರಾಜ್ಯ ಜೆಡಿಎಸ್‌ಗೆ ಹೊಸ ನಾಯಕತ್ವದ ಘೋಷಣೆಯ ಬಗ್ಗೆ ನಿರೀಕ್ಷೆಗಳಿದ್ದವು. ಕುಮಾರಸ್ವಾಮಿಯವರು ಹೊಸದಿಲ್ಲಿಗೆ ಸೀಮಿತರಾಗಿದ್ದಾರೆ. ರೇವಣ್ಣ ಮೈತುಂಬಾ ಕಳಂಕವನ್ನು ಅಂಟಿಸಿಕೊಂಡು ಮನೆಯಲ್ಲಿ ಕುಳಿತಿದ್ದಾರೆ. ದೇವೇಗೌಡರ ಓರ್ವ ಮೊಮ್ಮಗ ಜೈಲಲ್ಲಿದ್ದಾನೆ. ಇನ್ನೋರ್ವ ಮೊಮ್ಮಗ ಅಪ್ರಬುದ್ಧತನದ ಮೂಲಕವೇ ಮೂಲೆಸೇರಿದ್ದಾನೆ. ಹೊಸ ನಾಯಕನೊಬ್ಬನ ತುರ್ತು ಅಗತ್ಯ ಜೆಡಿಎಸ್‌ಗಿತ್ತು. ಆದರೆ ಸಮಾವೇಶದಲ್ಲಿ ಮತ್ತೆ ರಾಜ್ಯ ರಾಜಕೀಯಕ್ಕೆ ಮರಳುವ ಸೂಚನೆಯನ್ನು ಕುಮಾರಸ್ವಾಮಿಯವರು ನೀಡಿದ್ದಾರೆ. 2028ಕ್ಕೆ ಕುಮಾರಸ್ವಾಮಿಯವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುವುದು ಗುರಿ ಎಂದು ಅವರ ಪುತ್ರ ನಿಖಿಲ್ ಸಮಾವೇಶದಲ್ಲಿ ಘೋಷಣೆ ಮಾಡಿದ್ದಾರೆ. ಆದರೆ ಈ ಸರಣಿ ಸೋಲಿನ ಸರದಾರನ ಮಾತನ್ನು ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಜೆಡಿಎಸ್ ಕುರಿತಂತೆ ಭರವಸೆಯನ್ನು ಮೂಡಿಸುವ ಯಾವ ಮಾತುಗಳು ಸಭೆಯಲ್ಲಿ ವ್ಯಕ್ತವಾಗಲ್ಲಿಲ್ಲ. ಅದೇ ತಂದೆ ಮತ್ತು ಮಕ್ಕಳ ಮುಖ ನೋಡಿ ಕಾರ್ಯಕರ್ತರು ನಿರಾಸೆಯಿಂದ ಮರಳಿದ್ದಾರೆ. ಈಗಾಗಲೇ ಜೆಡಿಎಸ್‌ನೊಳಗೆ ಜಾತ್ಯತೀತತೆಯ ಮೌಲ್ಯಕ್ಕೆ ಬದ್ಧರಾಗಿರುವ ಕಾರ್ಯಕರ್ತರು ಬೇರೆ ದಾರಿಯೇ ಇಲ್ಲದೆ ಕಾಂಗ್ರೆಸ್ ಕಡೆಗೆ ಮುಖ ಮಾಡಿದ್ದರೆ, ಇನ್ನೊಂದು ಗುಂಪು ಬಿಜೆಪಿಯ ಕಡೆಗೆ ಮುಖ ಮಾಡಿ ನಿಂತಿದೆ. ಒಂದು ರೀತಿಯಲ್ಲಿ ಜೆಡಿಎಸ್ ಅನಧಿಕೃತವಾಗಿ ಬಿಜೆಪಿಯೊಂದಿಗೆ ವಿಲೀನವಾಗಿದೆ. ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಸಮಾವೇಶದಲ್ಲಿ ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡ ರೇವಣ್ಣ ಮತ್ತು ಅವರ ಪುತ್ರರನ್ನು ದೇವೇಗೌಡರು ಯಾವ ಲಜ್ಜೆಯೂ ಇಲ್ಲದೆ ಸಮರ್ಥಿಸಿಕೊಂಡರು. ಈ ಹಿಂದೆ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರನ್ನು ದೇವೇಗೌಡರ ನಿವಾಸದಲ್ಲೇ ಬಂಧಿಸಲಾಗಿತ್ತು. ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ಹಗರಣದಲ್ಲಿ ಬಂಧನಕ್ಕೊಳಗಾಗುವ ಭಯದಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾಗ ‘ತಕ್ಷಣ ಪೊಲೀಸರಿಗೆ ಶರಣಾಗು’ ಎಂದು ದೇವೇಗೌಡರೇ ಪತ್ರ ಬರೆದು ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು. ರೇವಣ್ಣ ಮತ್ತು ಅವರ ಪುತ್ರನ ಅಶ್ಲೀಲ ಸಿಡಿಗಳು ಬಹಿರಂಗವಾದಾಗ, ಜೆಡಿಎಸ್ ಮುಖಂಡ ಕುಮಾರಸ್ವಾಮಿಯವರು ‘‘ನನಗೂ ರೇವಣ್ಣ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ. ಅನಗತ್ಯವಾಗಿ ದೇವೇಗೌಡರ ಹೆಸರನ್ನು ಇದರಲ್ಲಿ ಎಳೆಯಬೇಡಿ’’ ಎಂದು ಅಬ್ಬರಿಸಿದ್ದರು. ಇಂದು ರಾಜ್ಯದಲ್ಲಿ ಜೆಡಿಎಸ್‌ಗೆ ಮುಂದಡಿಯಿಡುವುದಕ್ಕೆ ಅತಿದೊಡ್ಡ ತಡೆಯೇ ರೇವಣ್ಣ ಮತ್ತು ಅವರ ಪುತ್ರ ಎಸಗಿದ ‘ಲೈಂಗಿಕ ಹಗರಣ’ವಾಗಿದೆ. ರಾಜ್ಯದಲ್ಲಿ ಜೆಡಿಎಸ್ ಅನ್ನು ಹೊಸದಾಗಿ ಕಟ್ಟುವ ಉದ್ದೇಶವಿದ್ದಿದ್ದರೆ ದೇವೇಗೌಡರು ಮತ್ತು ಕುಮಾರಸ್ವಾಮಿ ಸ್ಪಷ್ಟವಾಗಿ ರೇವಣ್ಣ ಮತ್ತು ಪ್ರಜ್ವಲ್ ಗೌಡರಿಂದ ಅಂತರ ಕಾಪಾಡಿಕೊಳ್ಳಬೇಕಾಗಿತ್ತು. ಯಾವ ಕಾರಣಕ್ಕೂ ರೇವಣ್ಣ ಅವರಿಗೆ ವೇದಿಕೆಯಲ್ಲಿ ಅವಕಾಶವನ್ನು ನೀಡಬಾರದಿತ್ತು. ‘ತಪ್ಪು ಮಾಡಿದ್ದರೆ ಅವರಿಗೆ ಕಠಿಣ ಶಿಕ್ಷೆಯಾಗಲಿ’ ಎಂದು ದೇವೇಗೌಡರು ವೇದಿಕೆಯಲ್ಲೇ ಘೋಷಿಸಬೇಕಾಗಿತ್ತು. ಅಂತಹ ನಿಷ್ಠುರತೆಯನ್ನು ದೇವೇಗೌಡಪ್ರದರ್ಶಿಸಿದ್ದರೆ ಜೆಡಿಎಸ್ ಕಳೆದುಕೊಂಡ ಗೌರವವನ್ನು ಮತ್ತೆ ಪಡೆದುಕೊಳ್ಳುತ್ತಿತ್ತು. ಆದರೆ ದೇವೇಗೌಡರು ತನ್ನ ಪುತ್ರ ರೇವಣ್ಣರನ್ನು ಬಗಲಲ್ಲಿ ಕುಳ್ಳಿರಿಸಿಕೊಂಡು ಸಮರ್ಥಿಸಿಕೊಂಡರು. ಲೈಂಗಿಕ ಹಗರಣದಲ್ಲಿ ಅವರನ್ನು ಬಂಧಿಸಿದ ಪೊಲೀಸರನ್ನೇ ಟೀಕಿಸುವ ಮಟ್ಟಕ್ಕೆ ಇಳಿದರು. ರೇವಣ್ಣ ಅವರನ್ನು ಯಾವುದೋ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿರುವುದಲ್ಲ. ಅದಾಗಲೇ ಸಾರ್ವಜನಿಕವಾಗಿ ಬಹಿರಂಗವಾದ ಅಶ್ಲೀಲ ಸಿಡಿ ಪ್ರಕರಣಕ್ಕೆ ಮತ್ತು ಮಹಿಳೆಯ ಅಪಹರಣಕ್ಕೆ ಸಂಬಂಧಿಸಿ ಅವರನ್ನು ಪೊಲೀಸರು ದೇವೇಗೌಡರ ನಿವಾಸದಿಂದ ವಶಕ್ಕೆ ತೆಗೆದುಕೊಂಡಿದ್ದರು. ನಿಜಕ್ಕೂ ಪೊಲೀಸರು ದುರುದ್ದೇಶಪೂರ್ವಕವಾಗಿ ಆ ಬಂಧನವನ್ನು ಮಾಡಿದ್ದರೆ ಅದರ ವಿರುದ್ಧ ಆಗಲೇ ಮಾತನಾಡುವ ಅವಕಾಶ ದೇವೇಗೌಡ ಮತ್ತು ಕುಮಾರಸ್ವಾಮಿಯವರಿಗಿತ್ತು. ದೇವೇಗೌಡರು ಅಂದು ಯಾವ ಹೇಳಿಕೆಯನ್ನೂ ನೀಡದೆ, ‘ಅನಾರೋಗ್ಯದ ಹೆಸರಿನಲ್ಲಿ’ ಮೌನವಾಗಿದ್ದರು. ಇದೀಗ ‘ರೇವಣ್ಣ’ನಿಗೆ ಅನ್ಯಾಯವಾಗಿದೆ ಎಂಬ ರೀತಿಯಲ್ಲಿ ಜನತಾ ಸಮಾವೇಶದಲ್ಲಿ ಅಬ್ಬರಿಸಿದ್ದಾರೆ. ಹಾಗಾದರೆ ರೇವಣ್ಣ ಮತ್ತು ಪ್ರಜ್ವಲ್ ಅವರಿಂದ ಅನ್ಯಾಯಕ್ಕೊಳಗಾಗಿರುವ ಮಹಿಳೆಯರ ಕುರಿತಂತೆ ದೇವೇಗೌಡರು ಏನು ಹೇಳುತ್ತಾರೆ? ಜನತಾ ಸಮಾವೇಶದಲ್ಲಿ ರೇವಣ್ಣ ಮತ್ತು ಪ್ರಜ್ವಲ್ ಅವರ ಬಂಧನವನ್ನು ನಾಡಿಗಾದ, ಜೆಡಿಎಸ್‌ನ ಕಾರ್ಯಕರ್ತರಿಗಾದ ಅನ್ಯಾಯ ಎಂಬಂತೆ ದೇವೇಗೌಡರು ಮಾತನಾಡಿದರು. ನಿಜಕ್ಕೂ ರೇವಣ್ಣ ಮತ್ತು ಪ್ರಜ್ವಲ್ ಅವರ ಲೈಂಗಿಕ ಹಗರಣದಿಂದ ಜೆಡಿಎಸ್‌ಗೆ ಭಾರೀ ಅನ್ಯಾಯವಾಗಿದೆ. ನಾಡಿಗೆ ಅದರಿಂದ ಅವಮಾನವಾಗಿದೆ. ಕಾರ್ಯಕರ್ತರು ಕಟ್ಟಿ ಬೆಳೆಸಿದ ಪಕ್ಷದ ಮರ್ಯಾದೆಯನ್ನು ಈ ನಾಯಕರು ತಮ್ಮ ತೆವಲಿಗಾಗಿ ಕಳೆದರು. ಜನತಾ ಸಮಾವೇಶದಲ್ಲಿ ತನ್ನ ಪುತ್ರರಿಂದ ಪಕ್ಷಕ್ಕಾದ ಧಕ್ಕೆಗಾಗಿ ದೇವೇಗೌಡರು ಮೊದಲು ಕಾರ್ಯಕರ್ತರಲ್ಲಿ ಕ್ಷಮೆಯಾಚಿಸಬೇಕಾಗಿತ್ತು. ಆದರೆ ಅದಕ್ಕೆ ಬದಲಾಗಿ ಮಕ್ಕಳನ್ನು ಸಮರ್ಥಿಸಿಕೊಳ್ಳುವ ಮೂಲಕ ಕಾರ್ಯಕರ್ತರನ್ನು ಅವಮಾನಿಸಿದರು. ಉಳಿದಂತೆ ಕುಮಾರಸ್ವಾಮಿಯವರು ಮತ್ತೆ ರಾಜ್ಯ ರಾಜಕೀಯಕ್ಕೆ ಮರಳುವ ಇಂಗಿತವನ್ನು ಸಮಾವೇಶದಲ್ಲಿ ವ್ಯಕ್ತಪಡಿಸಿದ್ದಾರೆ. ಅವರು ರಾಜ್ಯಕ್ಕೆ ಪೂರ್ಣ ಪ್ರಮಾಣದಲ್ಲಿ ಮರಳುವ ಹೊತ್ತಿಗೆ ಇಲ್ಲಿ ಜೆಡಿಎಸ್ ಉಳಿದಿರುವುದಿಲ್ಲ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸೇರಿದಂತೆ, ಕುಮಾರಸ್ವಾಮಿಯವರು ಜೆಡಿಎಸ್ ತೊರೆದು ಅಧಿಕೃತವಾಗಿ ಬಿಜೆಪಿಯಿಂದ ಮುಖ್ಯಮಂತ್ರಿಯಾಗಲು ಸಾಧ್ಯವೇ ಎಂದು ಪ್ರಯತ್ನಿಸಬಹುದಾಗಿದೆ. ಆದರೆ ಅದಕ್ಕೆ ಬಿಜೆಪಿಯೊಳಗಿರುವ ನಾಯಕರು ಅವಕಾಶ ಮಾಡಿಕೊಡುವುದು ಅತ್ಯಗತ್ಯವಾಗಿದೆ.

ವಾರ್ತಾ ಭಾರತಿ 26 Jan 2026 8:56 am

Inderjit Singh Bindra Passes Away: ಬಿಸಿಸಿಐ ಮಾಜಿ ಅಧ್ಯಕ್ಷ ಇಂದರ್ಜಿತ್ ಸಿಂಗ್ ಬಿಂದ್ರಾ ನಿಧನ

Inderjit Singh Bindra Passes Away: ಬಿಸಿಸಿಐನ ಮಾಜಿ ಅಧ್ಯಕ್ಷ ಮತ್ತು ಅನುಭವಿ ಕ್ರಿಕೆಟ್ ಆಡಳಿತಗಾರ ಇಂದರ್ಜಿತ್ ಸಿಂಗ್ ಬಿಂದ್ರಾ (84) ಭಾನುವಾರ (ಜನವರಿ 25) ಸಂಜೆ ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು. ದಶಕಗಳ ಕಾಲ ಭಾರತೀಯ ಕ್ರಿಕೆಟ್ ಆಡಳಿತದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದ ಬಿಂದ್ರಾ, ಮಧ್ಯಾಹ್ನದ ಆರಂಭದಲ್ಲಿ ಅವರ ಆರೋಗ್ಯ ಹದಗೆಟ್ಟ ನಂತರ ಸಂಜೆ 6:30ರ ಸುಮಾರಿಗೆ

ಒನ್ ಇ೦ಡಿಯ 26 Jan 2026 8:46 am

Bangladesh ಹಿಂಸಾಚಾರ: ಕಾರು ಮೆಕ್ಯಾನಿಕ್ ಸಜೀವ ದಹನ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಆಶ್ವಾಸನೆ ನೀಡುತ್ತಿರುವ ನಡುವೆಯೇ, ಕಾರು ಮೆಕ್ಯಾನಿಕ್ ಒಬ್ಬರನ್ನು ಬೆಂಕಿ ಹಚ್ಚಿ ಸಾಯಿಸಿರುವ ಭೀಕರ ಘಟನೆ ವರದಿಯಾಗಿದೆ. ನರ್ಸಿಂಗ್ಡಿ ಜಿಲ್ಲೆಯಲ್ಲಿ ವರ್ಕ್‌ಶಾಪ್ ನಡೆಸುತ್ತಿದ್ದ 23 ವರ್ಷದ ಕಾರು ಮೆಕ್ಯಾನಿಕ್ ಚಂಚಲ್ ಚಂದ್ರ ಭೂಮಿಕ್, ತಮ್ಮ ವರ್ಕ್‌ಶಾಪ್‌ನಲ್ಲೇ ನಿದ್ರಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೆಲಸ ಮುಗಿಸಿದ ಬಳಿಕ ಚಂಚಲ್ ಸಾಮಾನ್ಯವಾಗಿ ವರ್ಕ್‌ಶಾಪ್‌ನ ಒಳಗೆಯೇ ನಿದ್ರಿಸುತ್ತಿದ್ದರು. ಇದು ಯೋಜಿತ ಹತ್ಯೆ ಎಂದು ಆರೋಪಿಸಿರುವ ಸ್ಥಳೀಯರು, ವರ್ಕ್‌ಶಾಪ್‌ನ ಬಾಗಿಲುಗಳಿಗೆ ಹೊರಗಿನಿಂದ ಬೀಗ ಹಾಕಲಾಗಿದ್ದ ಕಾರಣ, ನೆರವಿಗಾಗಿ ಚಂಚಲ್ ಮೊರೆ ಇಟ್ಟರೂ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ವಾರ್ತಾ ಭಾರತಿ 26 Jan 2026 8:41 am

GBA ಚುನಾವಣೆಗೆ ತಯಾರಿ ಹೊತ್ತಲ್ಲೇ ಅಪಸ್ವರ; ಮಹಿಳೆಯರಿಗೆ ಶೇ.50 ಮೀಸಲಾತಿ ಸಿಗದ ಬಗ್ಗೆ ಆಕ್ಷೇಪ

ಸುಪ್ರೀಂ ಕೋರ್ಟ್ ಆದೇಶದಂತೆ ಜಿಬಿಎ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಮಹಿಳಾ ಮೀಸಲಾತಿ ಹಂಚಿಕೆಯಲ್ಲಿ ಶೇ.50ರಷ್ಟು ಗುರಿ ತಲುಪಿಲ್ಲ. 369 ವಾರ್ಡ್‌ಗಳಲ್ಲಿ ಕೇವಲ 176 ವಾರ್ಡ್‌ಗಳಿಗೆ ಮಾತ್ರ ಮಹಿಳಾ ಮೀಸಲಾತಿ ನೀಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ಪ್ರಾಧಿಕಾರಕ್ಕೆ ಸುಮಾರು 700 ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಆ ಮೂಲಕ ಜಿಬಿಎ ಚುನಾವಣೆಗೆ ತಯಾರಿ ನಡೆಸುವ ಹೊತ್ತಲ್ಲೇ ಈ ಅಪಸ್ವರ ಎದ್ದಿದೆ.

ವಿಜಯ ಕರ್ನಾಟಕ 26 Jan 2026 8:41 am

ಅಕ್ರಮಕ್ಕೆ ಗಡಿ ಹೆದ್ದಾರಿಗಳೇ ರಹದಾರಿ; ಬೆಳಗಾವಿ ಪೊಲೀಸರಿಗೆ ಸವಾಲಾದ ಹೈಟೆಕ್ ಕಳ್ಳಾಟ

ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಅಕ್ರಮ ಸಾಗಾಟದ ಕೇಂದ್ರಗಳಾಗಿವೆ. ಮದ್ಯ, ಹವಾಲಾ ಹಣ, ಚಿನ್ನದ ಅಕ್ರಮ ಸಾಗಾಟ ಹೆಚ್ಚಾಗಿದೆ. ತನಿಖಾ ಸಂಸ್ಥೆಗಳು ಹೈಟೆಕ್ ತಂತ್ರಜ್ಞಾನ ಬಳಸುತ್ತಿದ್ದರೂ, ಚೆಕ್‌ಪೋಸ್ಟ್‌ಗಳಲ್ಲಿ ಆಧುನಿಕ ಸ್ಕ್ಯಾನರ್‌ಗಳ ಕೊರತೆ ಇದೆ. ನೆರೆ ರಾಜ್ಯಗಳ ಪೊಲೀಸರ ಸಹಕಾರದ ಕೊರತೆ ಕರ್ನಾಟಕ ಪೊಲೀಸರಿಗೆ ಸವಾಲಾಗಿದೆ. ಇತ್ತೀಚೆಗೆ ನಡೆದ 400 ಕೋಟಿ ರೂ. ದರೋಡೆ ಪ್ರಕರಣವು ಈ ಅಕ್ರಮಗಳ ಗಂಭೀರತೆಯನ್ನು ಎತ್ತಿ ತೋರಿಸಿದೆ.

ವಿಜಯ ಕರ್ನಾಟಕ 26 Jan 2026 8:31 am

ಕಾಫಿ ಎಸ್ಟೇಟ್ ಗೆ ಬರುವ ಹೊರ ಕಾರ್ಮಿಕರ ಮೇಲೆ ತೀವ್ರ ನಿಗಾ, ಆಧಾರ್ ಪರಿಶೀಲನೆ

ಹಾಸನ ಜಿಲ್ಲೆಯ ಬೇಲೂರು-ಸಕಲೇಶಪುರ ತಾಲೂಕಿನಲ್ಲಿಅಕ್ರಮ ವಲಸಿಗರಿಂದ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ತೋಟದ ಕಾರ್ಮಿಕರ ಆಧಾರ್‌ ಕಾರ್ಡ್‌ ತಪಾಸಣೆಗೆ ಪೊಲೀಸ್‌ ಇಲಾಖೆ ಮುಂದಾಗಿದೆ. ತೋಟದ ಮಾಲೀಕರಿಗೆ ಆಧಾರ್‌ ಸಹಿತ ಕಾರ್ಮಿಕರನ್ನು ಹಾಜರುಪಡಿಸುವಂತೆ ನೋಟಿಸ್‌ ನೀಡಲಾಗಿದೆ. ಕಾನೂನು ಬಾಹಿರ ಚಟುವಟಿಕೆ ತಡೆಗೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಕ್ರಮ ಚಟುವಟಿಕೆ, ದಾಂಧಲೆ, ಕಳ್ಳತನ, ಬೆದರಿಕೆ ಪ್ರಕರಣಗಳು ವರದಿಯಾಗಿವೆ.

ವಿಜಯ ಕರ್ನಾಟಕ 26 Jan 2026 8:18 am

ಗಣರಾಜ್ಯೋತ್ಸವ ಸಂಭ್ರಮದ ಹೊತ್ತಲ್ಲೇ ರಾಜಸ್ಥಾನದಲ್ಲಿ ಭಾರಿ ಸ್ಫೋಟಕ ಪತ್ತೆ; ಒಬ್ಬ ಅರೆಸ್ಟ್

ದೆಹಲಿಯಲ್ಲಿಗಣರಾಜ್ಯೋತ್ಸವ ಆಚರಣೆಗೂ ಮುನ್ನ ರಾಜಸ್ಥಾನದಲ್ಲಿ ಭಾರಿ ಸ್ಫೋಟಕಗಳು ಪತ್ತೆಯಾಗಿವೆ. 10,000 ಕೆಜಿ ಸ್ಫೋಟಕಗಳನ್ನು ರಾಜಸ್ಥಾನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮೂರು ಕ್ರಿಮಿನಲ್‌ ಕೇಸ್‌ ಹೊಂದಿದ್ದ ಸುಲೈಮಾನ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ದಾಳಿ ವೇಳೆ ಘಟನಾ ಸ್ಥಳದಲ್ಲಿದ್ದ ಎನ್ನಲಾಗಿದೆ. ಅಕ್ರಮ ಗಣಿಗಾರಿಕೆ ನಡೆಸುವವರಿಗೆ ಸರಬರಾಜು ಮಾಡಲಾಗುತ್ತಿತ್ತು ಎಂದು ಆತ ಹೇಳಿದ್ದು, ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ವಿಜಯ ಕರ್ನಾಟಕ 26 Jan 2026 7:58 am

ಅತಿವೇಗದ ಫಿಫ್ಟಿ: ಭಾರತ ಟಿ20 ತಂಡದ ದಾಖಲೆಯ ಕಿರೀಟಕ್ಕೆ ಮತ್ತೊಂದು ಗರಿ!

ಗುವಾಹತಿ: ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದೆ. ಕೇವಲ 10 ಓವರ್‌ಗಳಲ್ಲೇ 155 ರನ್ ಚೇಸ್ ಮಾಡಿದ ಭಾರತೀಯ ಬ್ಯಾಟ್ಸ್ಮನ್‌ಗಳು, ಕೇವಲ 3.1 ಓವರ್‌ಗಳಲ್ಲಿ 50 ರನ್ ಪೂರೈಸುವ ಮೂಲಕ ಹೊಸ ದಾಖಲೆ ನಿರ್ಮಿಸಿದರು. ಇದು ಟಿ20 ವಿಶ್ವಕಪ್‌ಗೆ ಪೂರ್ವಭಾವಿಯಾಗಿ ಭಾರತದ ಟಿ20 ತಂಡದ ಬ್ಯಾಟಿಂಗ್ ಬಲವನ್ನು ಮತ್ತೊಮ್ಮೆ ಸಾಬೀತುಪಡಿಸಿತು. ಕಳೆದ ಐದು ವರ್ಷಗಳಲ್ಲಿ ದಾಖಲಾಗಿದ್ದ ಅನೇಕ ಸ್ಫೋಟಕ ಆರಂಭದ ದಾಖಲೆಗಳನ್ನು ರವಿವಾರ ಭಾರತೀಯ ಬ್ಯಾಟ್ಸ್ಮನ್‌ಗಳು ಅಳಿಸಿಹಾಕಿದರು. ಎದುರಾಳಿ ತಂಡ ನೀಡಿದ ಗುರಿಯನ್ನು ಕೇವಲ 10 ಓವರ್‌ಗಳಲ್ಲೇ ತಲುಪಿದ ಭಾರತ, ಎಂಟು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ, ಐದು ಪಂದ್ಯಗಳ ಸರಣಿಯಲ್ಲಿ 3-0 ಅಜೇಯ ಮುನ್ನಡೆಯೊಂದಿಗೆ ಸರಣಿಯನ್ನು ಕೈವಶ ಮಾಡಿಕೊಂಡಿತು. ಇದರಲ್ಲೂ ಅಭಿಷೇಕ್ ಶರ್ಮಾ ಅವರ ನಿರ್ಭೀತ ಬ್ಯಾಟಿಂಗ್ ಹೊಸ ಯುಗದ ಟಿ20 ಮನಸ್ಥಿತಿಗೆ ಕನ್ನಡಿ ಹಿಡಿದಂತಿತ್ತು. ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದು, ಇದು ಭಾರತದ ಟಿ20 ಇತಿಹಾಸದಲ್ಲಿನ ಎರಡನೇ ವೇಗದ ಅರ್ಧಶತಕವಾಗಿದೆ. ಅವರು 20 ಎಸೆತಗಳಲ್ಲಿ 68 ರನ್ ಗಳಿಸಿ ಅಜೇಯರಾಗಿ ಉಳಿದರು. ಇವರಿಗೆ ನಾಯಕ ಸೂರ್ಯಕುಮಾರ್ ಯಾದವ್ ಉತ್ತಮ ಸಾಥ್ ನೀಡಿದರು. ಸೂರ್ಯಕುಮಾರ್ 26 ಎಸೆತಗಳಲ್ಲಿ 57 ರನ್ ಚಚ್ಚಿ ಪಂದ್ಯವನ್ನು ಸಂಪೂರ್ಣ ಏಕಪಕ್ಷೀಯಗೊಳಿಸಿದರು. ಈ ಇಬ್ಬರು ಮುರಿಯದ ಮೂರನೇ ವಿಕೆಟ್‌ಗೆ ಕೇವಲ 40 ಎಸೆತಗಳಲ್ಲಿ 102 ರನ್‌ಗಳ ಭರ್ಜರಿ ಜೊತೆಯಾಟ ನಡೆಸಿದರು. ಈ ಹಿಂದೆ ಭಾರತ ತಂಡವು 2023ರಲ್ಲಿ ಬಾಂಗ್ಲಾದೇಶ ವಿರುದ್ಧ 3.4 ಓವರ್‌ಗಳಲ್ಲಿ 50 ರನ್ ಗಳಿಸಿದ್ದು, ಅದು ತಂಡದ ವೇಗದ ಆರಂಭದ ದಾಖಲೆಯಾಗಿತ್ತು. ಅಲ್ಲದೆ ಸ್ಕಾಟ್ಲೆಂಡ್, ಆಸ್ಟ್ರೇಲಿಯಾ, ನೇಪಾಳ, ಜಿಂಬಾಬ್ವೆ ಹಾಗೂ ಇಂಗ್ಲೆಂಡ್ ವಿರುದ್ಧವೂ 3.5 ಓವರ್‌ಗಳಲ್ಲಿ 50 ರನ್ ಗಳಿಸಿತ್ತು. ಆದರೆ ಗುವಾಹತಿಯ ವೇಗ ಮಾತ್ರ ಎಲ್ಲ ದಾಖಲೆಗಳನ್ನು ಅಳಿಸಿಹಾಕಿತು.  

ವಾರ್ತಾ ಭಾರತಿ 26 Jan 2026 7:56 am

ಇರಾನ್ ಸಂಘರ್ಷ: ಹಲವು ವಿಮಾನ ರದ್ದುಪಡಿಸಿದ ಇಂಡಿಗೊ, ಪಥ ಬದಲಿಸಿದ ಏರ್‌ ಇಂಡಿಯಾ

ಹೊಸದಿಲ್ಲಿ: ಇರಾನ್ ನಲ್ಲಿ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಭಾರತದ ಪ್ರಮುಖ ವಿಮಾನಯಾನ ಸಂಸ್ಥೆಯಾದ ಇಂಡಿಗೊ ಬಿಲಿಸಿ, ಅಲ್ಮತಿ, ತಾಷ್ಕೆಂಟ್ ಹಾಗೂ ಬಕು ಪ್ರದೇಶಗಳಿಗೆ ತೆರಳುವ ವಿಮಾನಗಳ ಸಂಚಾರವನ್ನು ಈ ತಿಂಗಳ 28ರವರೆಗೆ ರದ್ದುಪಡಿಸಿದೆ. ಏರ್ಇಂಡಿಯಾ ವಿಮಾನಗಳು ಪಥ ಬದಲಿಸಿದ್ದು, ಉತ್ತರ ಅಮೆರಿಕಗೆ ತೆರಳುವ ವಿಮಾನಗಳು ಇರಾನ್ನ ಸಫೆರ್ ಪೂರ್ವ ಭಾಗದ ಮೂಲಕ ಸಂಚರಿಸುತ್ತಿದೆ. ಪೂರ್ವ ಕರಾವಳಿಯಲ್ಲಿ ಹಿಮಗಾಳಿ ಪರಿಸ್ಥಿತಿ ಸುಧಾರಿಸುವ ವರೆಗೆ ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಏರ್ಇಂಡಿಯಾ ಸ್ಪಷ್ಟಪಡಿಸಿದೆ. ಇರಾನ್ ನಲ್ಲಿ ಹಾಲಿ ಇರುವ ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಜನವರಿ 26, 27 ಮತ್ತು 28ರಂದು ಬಿಲಿಸಿ, ಅಲ್ಮತಿ, ತಾಷ್ಕೆಂಟ್ ಹಾಗೂ ಬಕು ಪಟ್ಟಣಕ್ಕೆ ತೆರಳಬೇಕಿದ್ದ ಹಾಗೂ ಆ ಪಟ್ಟಣಗಳಿಂದ ಭಾರತಕ್ಕೆ ಬರಬೇಕಿದ್ದ ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ಇಂಡಿಗೊ ಪ್ರಕಟಿಸಿದೆ. ಯೂರೋಪಿಯನ್ ಯೂನಿಯನ್ ವಿಮಾನಯಾನ ಸುರಕ್ಷಾ ಏಜೆನ್ಸಿಯ ಸಲಹೆಯಂತೆ ಜನವರಿ 16ರಿಂದಲೇ ಏರ್ಇಂಡಿಯಾ ವಿಮಾನಗಳು ಇರಾನ್ ಮೂಲಕ ಹಾದುಹೋಗುವುದನ್ನು ಸ್ಥಗಿತಗೊಳಿಸಲಾಗಿತ್ತು. ಹಾಲಿ ಇರುವ ಪರಿಸ್ಥಿತಿ ಮತ್ತು ಅಮೆರಿಕದ ಮಿಲಿಟರಿ ಕ್ರಮಗಳ ಸಾಧ್ಯತೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಮೆರಿಕದ ಸಂಭಾವ್ಯ ದಾಳಿಯ ಹಿನ್ನೆಲೆಯಲ್ಲಿ ಇರಾನಿಯ ವಾಯುರಕ್ಷಣಾ ಪಡೆಗಳು ಕಟ್ಟೆಚ್ಚರ ವಹಿಸಿದ್ದು, ಇರಾನಿಯ ವಾಯುಪ್ರದೇಶದಲ್ಲಿ ಹಾರುವ ವಿಮಾನಗಳನ್ನು ತಪ್ಪಾಗಿ ಗುರುತಿಸುವ ಸಧ್ಯತೆ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.

ವಾರ್ತಾ ಭಾರತಿ 26 Jan 2026 7:53 am

Karnataka Weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ - ಚಳಿ: ಐಎಂಡಿ ರಿಪೋರ್ಟ್

Karnataka Weather: ಕರ್ನಾಟಕದ ವಿವಿಧ ಭಾಗದಲ್ಲಿ ಚಳಿ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ರಾಜ್ಯದ ಯಾವ ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಿದೆ ಹಾಗೂ ಎಲ್ಲೆಲ್ಲಿ ಮಳೆ ಇದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1.6-3C ಕಡಿಮೆ ಆಗಿದ್ದು. ದಕ್ಷಿಣ

ಒನ್ ಇ೦ಡಿಯ 26 Jan 2026 7:12 am

Gold Price: ಚಿನ್ನದ ಬೆಲೆ 2026ರಲ್ಲಿ ಇನ್ನಷ್ಟು ಏರಿಕೆ ಆಗುತ್ತಾ? ಹೂಡಿಕೆದಾರರ ಕುತೂಹಲ ಕೆರಳಿಸಿದ ಬಾಬಾ ವಂಗಾ ಭವಿಷ್ಯ

ನವದೆಹಲಿ: ದೇಶದಲ್ಲಿ ದಶಕಗಳಿಂದಲೂ ಚಿನ್ನವು (Gold Price) ಆರ್ಥಿಕ ಭದ್ರತೆ ಒದಗಿಸಬಲ್ಲ ಶಕ್ತಿಯಾಗಿದೆ. ಜಗತ್ತಿನಲ್ಲಿ ಎಲ್ಲಿಯಾದರೂ ಅನಿಶ್ಚಿತತೆ ಉಂಟಾದಾದರೆ ಹೂಡಿಕೆದಾರರು ಸಾಮಾನ್ಯವಾಗಿ ಚಿನ್ನ ಮೇಲೆ ಹೂಡಿಕೆಗೆ ಮುಂದಾಗುತ್ತಾರೆ. ಅದು ಎಂತಹ ಸಂದರ್ಭದಲ್ಲೂ ಸುರಕ್ಷಿತವಾಗಿರುತ್ತದೆ, ಮೌಲ್ಯ ಕಳೆದುಕೊಳ್ಳುವುದಿಲ್ಲ ಎಂಬ ನಂಬಿಕೆ. ಸದ್ಯ ಈಗಲೇ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಹೊಸ ಗರಿಷ್ಠ ಮಟ್ಟ ತಲುಪುತ್ತಿದ್ದಂತೆ

ಒನ್ ಇ೦ಡಿಯ 26 Jan 2026 7:00 am

ಗರ್ಭಕಂಠ ಕ್ಯಾನ್ಸರ್‌ಗೆ ಲಸಿಕೆ ಲಭ್ಯ; ಮೈಸೂರಿನ 27 ಸಾವಿರ ಹೆಣ್ಣು ಮಕ್ಕಳಿಗೆ ಚುಚ್ಚುಮದ್ದು

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಎಚ್‌ಪಿವಿ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ. ಮೈಸೂರು ಜಿಲ್ಲೆಯ 9-14 ವರ್ಷದ ಸುಮಾರು 27 ಸಾವಿರ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುವುದು. 15 ವರ್ಷ ಮೇಲ್ಪಟ್ಟವರಿಗೆ 3 ಡೋಸ್‌, ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ 6-12 ತಿಂಗಳ ಅಂತರದಲ್ಲಿ 2 ಡೋಸ್‌ ನೀಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದರಿಂದಾಗಿ 51 ಕೋಟಿಗೂ ಹೆಚ್ಚು ಲಾಭ ಎಂದು ಹೇಳಲಾಗಿದೆ.

ವಿಜಯ ಕರ್ನಾಟಕ 26 Jan 2026 6:36 am

ಲಾಲ್‌ಬಾಗ್‌ಫಲಪುಷ್ಪ ಪ್ರದರ್ಶನಕ್ಕೆ ಇಂದೇ ತೆರೆ; ಭಾನುವಾರ ಒಂದೇ ದಿನ 1.14 ಲಕ್ಷ ಮಂದಿ ಭೇಟಿ

ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನಕ್ಕೆ ಸೋಮವಾರ ತೆರೆಬೀಳಲಿದೆ. ಈ ಹಿನ್ನೆಲೆ ಭಾನುವಾರ ಲಕ್ಷಕ್ಕೂ ಹೆಚ್ಚು ಜನರು ತೇಜಸ್ವಿ ವಿಸ್ಮಯವನ್ನು ಕಣ್ತುಂಬಿಕೊಂಡರು. ಅಲ್ಲದೇ ಭಾನುವಾರ ಹುಲ್ಲುಹಾಸಿನ ಪ್ರದೇಶದಲ್ಲಿ ಅಣ್ಣನ ನೆನಪು ನಾಟಕ ಪ್ರದರ್ಶನವಿದ್ದ ಕಾರಣ ಹೆಚ್ಚು ಜನರು ಆಗಮಿಸಿದ್ದರು. ಭದ್ರತಾ ಸಿಬ್ಬಂದಿ ಜನರನ್ನು ನಿಭಾಯಿಸಲು ಹರಸಾಹಸ ಪಟ್ಟರು. ಇನ್ನು ಜನವರಿ15 ರಿಂದ 25ರವರೆ1.81ಕೋಟಿ ಹಣ ಸಂಗ್ರಹವಾಗಿದೆ ಎಂದು ತೋಟಗಾರಿಕಾ ಇಲಾಖೆ ಹೇಳಿದೆ.

ವಿಜಯ ಕರ್ನಾಟಕ 26 Jan 2026 6:05 am

ಬಜೆಟ್ 2026: ಕೇಂದ್ರದ ಕಾಯಕಲ್ಪ ನಿರೀಕ್ಷೆಯಲ್ಲಿ ರಾಜ್ಯದ 9 ರೈಲ್ವೇ ಯೋಜನೆಗಳು: ಭೂಸ್ವಾಧೀನದ ಪೂರ್ಣ ವೆಚ್ಚ ಭರಿಸಲು ರಾಜ್ಯ ಸರಕಾರ ರೆಡಿ

ರಾಜ್ಯದ ರೈಲ್ವೆ ಯೋಜನೆಗಳು ನಿರೀಕ್ಷಿತ ಪ್ರಗತಿ ಕಾಣುತ್ತಿಲ್ಲ. ಕೇಂದ್ರದ ಯೋಜನೆಗೆ ರಾಜ್ಯ ಸರಕಾರವೂ ಪಾಲು ಭರಿಸುವ ಒಂಬತ್ತು ಮಹತ್ವಾಕಾಂಕ್ಷಿ ಯೋಜನೆಗಳು ಇನ್ನೂ ಸಾಕಾರಗೊಂಡಿಲ್ಲ. ಭೂಸ್ವಾಧೀನ ಬಾಕಿ ಇದೆ. ವೆಚ್ಚ ಏರಿಕೆಯಾಗುತ್ತಿದೆ. 2026-27ರ ಕೇಂದ್ರ ಬಜೆಟ್‌ನಲ್ಲಿ ಈ ಯೋಜನೆಗಳಿಗೆ ಒತ್ತು ಸಿಗುವ ನಿರೀಕ್ಷೆ ಇದೆ.

ವಿಜಯ ಕರ್ನಾಟಕ 26 Jan 2026 5:41 am

ಪ್ರತಿ ಮತವೂ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸುತ್ತದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಪ್ರತಿ ಮತವೂ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸುತ್ತದೆ. ಹೀಗಾಗಿ ಮತದಾರರು ತಮ್ಮ ಮತದಾನದ ಹಕ್ಕನ್ನು ಮುಕ್ತವಾಗಿ ಮತ್ತು ನ್ಯಾಯಯುತವಾಗಿ, ಯಾವುದೇ ಭಯ, ಒತ್ತಡ ಅಥವಾ ಪ್ರಚೋದನೆಯಿಲ್ಲದೆ ಚಲಾಯಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ. ರವಿವಾರ ಇಲ್ಲಿನ ಪುರಭವನದಲ್ಲಿ ಭಾರತ ಚುನಾವಣಾ ಆಯೋಗವು ಆಯೋಜಿಸಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ-2026’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಪ್ರಜಾಪ್ರಭುತ್ವವು ಸಂವಿಧಾನದ ಆದರ್ಶಗಳು ಮತ್ತು ಚುನಾವಣೆಯಲ್ಲಿ ಪ್ರತಿಯೊಬ್ಬರು ಸಕ್ರಿಯ ಭಾಗವಹಿಸುವಿಕೆಯನ್ನು ಆಧರಿಸಿದೆ. ‘ಒಂದು ಮತ-ಒಂದು ಧ್ವನಿ-ಒಂದು ಜವಾಬ್ದಾರಿ’ ಇದು ಪ್ರಜಾಪ್ರಭುತ್ವದ ಆತ್ಮ ಎಂದರು. ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಮತದಾನದ ಹಕ್ಕನ್ನು ನೀಡುವ ಮೂಲಕ, ಭಾರತೀಯ ಸಂವಿಧಾನವು ಆಡಳಿತದ ಸರ್ವೋಚ್ಚ ಅಧಿಕಾರವು ಜನರೊಂದಿಗೆ ಇರುತ್ತದೆ ಎಂದು ಖಚಿತಪಡಿಸಿದೆ. ಮತದಾನವು ಕಾನೂನುಬದ್ಧ ಹಕ್ಕು ಮಾತ್ರವಲ್ಲದೆ ಪ್ರಜಾಪ್ರಭುತ್ವದ ಕಡೆಗೆ ನಾಗರಿಕರ ಸಾಂವಿಧಾನಿಕ ಜವಾಬ್ದಾರಿಯೂ ಆಗಿದೆ. ಭಾರತದ ಪ್ರಜಾಪ್ರಭುತ್ವವು ಅದರ ಸಮಗ್ರತೆ ಮತ್ತು ಎಲ್ಲರನ್ನೂ ಒಳಗೊಳ್ಳುವಿಕೆಯಿಂದಾಗಿ ಜಗತ್ತಿನಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಈ ಪ್ರಜಾಪ್ರಭುತ್ವದ ಅಡಿಪಾಯವು ನ್ಯಾಯಯುತ, ಮುಕ್ತ ಮತ್ತು ಪಾರದರ್ಶಕ ಚುನಾವಣಾ ಪ್ರಕ್ರಿಯೆಯಲ್ಲಿದೆ. ಇದಕ್ಕಾಗಿ ಪ್ರತಿಯೊಬ್ಬ ಮತದಾರರ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು. ರಾಷ್ಟ್ರೀಯ ಮತದಾರರ ದಿನವು ನಾವೆಲ್ಲರೂ ಪ್ರತಿಜ್ಞೆ ಮಾಡಲು ಪ್ರೇರೇಪಿಸುತ್ತದೆ. ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ನಾವು ಮತ ಚಲಾಯಿಸಿ ಮತ್ತು ಇತರರು ಅದೇ ರೀತಿ ಮಾಡಲು ಪ್ರೋತ್ಸಾಹಿಸಬೇಕು. ರಾಷ್ಟ್ರದ ಕಡೆಗೆ ನಮ್ಮ ನಾಗರಿಕ ಜವಾಬ್ದಾರಿಗಳನ್ನು ನಿಷ್ಟೆಯಿಂದ ನಿರ್ವಹಿಸುವ ಪ್ರತಿಜ್ಞೆ ಮಾಡಬೇಕು ಎಂದು ಅವರು ಹೇಳಿದರು. ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾತನಾಡಿ, ಇಂದು ರಾಜ್ಯಾದ್ಯಂತ 16ನೇ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮತದಾರರು ಬಹುಮುಖ್ಯ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು. ಭಾರತ ಚುನಾವಣಾ ಆಯೋಗವು ಸುಗಮ ಮತದಾನಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ. ಪ್ರತಿ ವರ್ಷ ಜನವರಿ 1, ಎಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1 ಯುವ ಮತದಾರರು, ಮಹಿಳೆಯರು, ವಿಶೇಷ ಚೇತನರು ಇತರೆ ಅವಕಾಶ ವಂಚಿತರಿಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. ಇದೇ ವೇಳೆ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇನ್ನಿತರೆ ಚುನಾವಣೆ ವಿಷಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದವರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಸೇರಿದಂತೆ ಮತ್ತಿತರರು ಇದ್ದರು. ಮತದಾನ ಪ್ರತಿಜ್ಞಾ ವಿಧಿ ಸ್ವೀಕಾರ: ‘ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸಭಾಂಗಣದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು/ ಸಿಬ್ಬಂದಿಗಳು, ವಿದ್ಯಾರ್ಥಿಗಳು ಸೇರಿದಂತೆ 1,000ಕ್ಕೂ ಹೆಚ್ಚು ಜನ ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ವಾರ್ತಾ ಭಾರತಿ 26 Jan 2026 12:36 am

2022ರ ಮೀಸಲಾತಿ ಕಾಯ್ದೆಯನ್ನು ಶೆಡ್ಯೂಲ್ 9ಕ್ಕೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ ಮಾಡಿರುವ 2022ರ ಮೀಸಲಾತಿ ಕಾಯ್ದೆಯನ್ನು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸಿ ಎಂದು ‘ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ’ಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2022ರ ಮೀಸಲಾತಿ ಕಾಯ್ದೆಯನ್ನು ಭಾರತದ ಸಂವಿಧಾನದ 9 ನೇ ಶೆಡ್ಯೂಲ್‍ಗೆ ಸೇರಿಸಲು ಮತ್ತು ಅನುಚ್ಛೇದ 15 ಮತ್ತು 16ಕ್ಕೆ ಮೀಸಲಾತಿ ಹೆಚ್ಚಿಸಲು ತಿದ್ದುಪಡಿ ತರಲು ಕೇಂದ್ರ ಸರಕಾರದ ಮೇಲೆ ಒತ್ತಡ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಬಂದಾಗೆಲ್ಲ ಕೆಲ ಜಾತಿಗಳನ್ನು ಎಸ್ಟಿಗೆ ಸೇರಿಸುವ ಭರವಸೆ ನೀಡಿ ಜನರನ್ನು ದಿಕ್ಕು ತಪ್ಪಿಸಿದರು. ಇದರಿಂದ ಸಾಕಷ್ಟು ಜನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಇದ್ದಕ್ಕೆ ಬಿಜೆಪಿ ಸರಕಾರ ಹಾಗೂ ಬಿಜೆಪಿ ನಾಯಕರೇ ಕಾರಣ ಎಂದರು. ಮುಂದಿನ ಬಾರಿ ಸುಮಾರು 4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಆದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿರುವ ಹಣವನ್ನು ಬೇರೆ ಕಾರ್ಯಗಳಿಗೆ ಬಳಸಬಾರದು ಎಂಬ ಕಾನೂನು ಇದ್ದರೂ ಬಳಕೆಯಾಗುತ್ತಿದೆ. ಇದನ್ನು ತಪ್ಪಿಸಬೇಕು. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಎಚ್.ಡಿ. ಕುಮಾರಸ್ವಾಮಿ, ಹಾಗೂ ಆಗ ಮುಖ್ಯಮಂತ್ರಿ ಆಗಿದ್ದ ಬಸವರಾಜ್ ಬೊಮ್ಮಾಯಿ ಮತ್ತಿತರರು ಕೇಂದ್ರದ ಮೇಲೆ ಒತ್ಗಡ ತಂದು ಕರ್ನಾಟಕದ ತಳ ಸಮುದಾಯಗಳ ಹಿತ ಕಾಯಬೇಕು ಎಂದು ಒತ್ತಾಯಿಸಿದರು. ತಮಿಳುನಾಡಿನಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲಾಗಿದೆ. ಸಂವಿಧಾನದಲ್ಲಿ ಎಲ್ಲೂ ಆರ್ಥಿಕ ಮೀಸಲಾತಿಯ ಬಗ್ಗೆ ಡಾ.ಅಂಬೇಡ್ಕರ್ ಉಲ್ಲೇಖಿಸಿಲ್ಲ. ಆದರೆ ಇಷ್ಟು ವರ್ಷಗಳಾದರೂ ಸಂವಿಧಾನವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದವರ ಹೆಸರಿನಲ್ಲಿ ಮೇಲ್ವರ್ಗದವರಿಗೆ ಮೀಸಲಾತಿ ಘೋಷಣೆ ಮಾಡಿದೆ. ಆರ್ಥಿಕವಾಗಿ ಹಿಂದುಳಿದವರ ಮೇಲ್ವರ್ಗದ ಸಮುದಾಯದ ಮಕ್ಕಳು ವಿದ್ಯಾರ್ಥಿ ವೇತನ ಪಡೆಯಲು 8.5 ಲಕ್ಷ ರೂ. ಆದಾಯ ಮಿತಿ ಇದೆ. ಆದರೆ ತಲ ತಲಾಂತರದಿಂದ ಶೋಷಣೆ ಅನುಭವಿಸುತ್ತ ಬಂದಿರುವ ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳು ವಿದ್ಯಾರ್ಥಿ ವೇತನ ಪಡೆಯಲು ಆದಾಯ ಮಿತಿ 2.5ಲಕ್ಷ ರೂ.ನಿಗಧಿಪಡಿಸಲಾಗಿದೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಹಿಂದೆ ಬಿಜೆಪಿ ಸರಕಾರ ಇದ್ದಾಗಲೇ ಹೋರಾಟ ನಡೆಸಿದ ಫಲವಾಗಿ ಪರಿಶಿಷ್ಟ ಪಂಗಡಕ್ಕೆ ಶೇ.3ರ ಬದಲು ಶೇ.7ರಷ್ಟು ಮೀಸಲಾತಿ ಹಾಗೂ ಪರಿಶಿಷ್ಟ ಜಾತಿಗೆ ಶೇ.15, ಇತರೆ ಹಿಂದುಳಿದ ವರ್ಗಗಳಿಗೆ ಶೇ.32 ಮೀಸಲಾತಿ ಜಾರಿಗೊಳಿಸಲಾಗಿತ್ತು. ಆದರೆ ಅದನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದವು. ಇದರಿಂದಾಗಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆ ಕಾಯ್ದೆಯನ್ನು ಅನೂರ್ಜಿತಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಕೂಡ ಈ ಕಾಯ್ದೆಗೆ ತಡೆಯಾಜ್ಞೆ ನೀಡಿದೆ. ಇದರ ಪರಿಣಾಮ ಬಿಜೆಪಿ ಸರಕಾರ ಜಾರಿಗೆ ತಂದ ಮೀಸಲಾತಿ ಹೆಚ್ಚಳ ರದ್ದಾಗಿದೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಕಾಯ್ದೆ 2022ನ್ನು ಶೆಡ್ಯೂಲ್ 9ಕ್ಕೆ ಸೇರಿಸಲು ನಿರ್ಣಯ ಕೈಗೊಂಡಿರುವುದು ಸ್ವಾಗತಾರ್ಹ. ಆದರೆ ಒಂದು ತಿಂಗಳಾದರೂ ಕೇಂದ್ರ ಸರಕಾರ ಅದನ್ನು ಶೆಡ್ಯೂಲ್ 9ಕ್ಕೆ ಸೇರಿಸದಿರುವುದು ವಿಪರ್ಯಾಸ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಇದರಿಂದ ತಳ ಸಮುದಾಯದ ಬಡ ಜನರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ. ಈಗಾಗಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರು ಹಾಗೂ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳಿಗೆ ಸೂಕ್ತ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಕಾರ್ಯಾಧ್ಯಕ್ಷ ಎಂ.ನರಸಿಂಹಯ್ಯ, ಖಜಾಂಚಿ ಈ.ರಾಜಪ್ಪ, ಉಪಾಧ್ಯಕ್ಷ ರಾಜಣ್ಣ ಟಿ.ಚಿತ್ರದುರ್ಗ, ರೇವತಿ ಭೀಮಪುತ್ರಿ, ಪ್ರಧಾನ ಕಾರ್ಯದರ್ಶಿಗಳಾದ ಸಣ್ಣ ನಾಯಕ್, ರಮೇಶ್ ಹಿರೇಜಂಬೂರು, ನಾಗರಾಜ ಗಾಣದ ಹುಣಸೆ, ನಿವೃತ್ತ ಅಧಿಕಾರಿ ಕೆಂಪರಾಮಯ್ಯ, ಕೆಪಿಸಿಸಿ ಎಸ್‍ಟಿ ಸೆಲ್ ಅಧ್ಯಕ್ಷ ವಿಜಯ ನಾಯಕ್, ವಾಲ್ಮೀಕಿ ನಾಯಕ ಮಹಾಸಭಾ ಮಹಿಳಾ ಅಧ್ಯಕ್ಷೆ ಜಯಶ್ರೀ ಗುಡ್ಡೆಕಾಯಿ, ಗುಲ್ಬರ್ಗಾ ವಿವಿ ನಿವೃತ್ತ ಉಪಕುಲಪತಿ ಶ್ರೀರಾಮುಲು, ಚಿತ್ರದುರ್ಗ ಜಿಲ್ಲಾಧ್ಯಕ್ಷ ಬಸವರಾಜ್ ನಾಯಕ್, ಕಾರ್ಯದರ್ಶಿ ತುಳಸಿರಾಮ್ ಟಿ.ಆರ್., ಸಂಘಟನಾ ಕಾರ್ಯದರ್ಶಿ ಕೆ.ವಿ.ನಾಗೇಂದ್ರ, ರವಿಚಂದ್ರ ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jan 2026 12:27 am

ಗ್ರೀಕ್ ಬಳಿ ವಲಸಿಗರ ದೋಣಿ ಮುಳುಗಿ ಮಹಿಳೆ, ಬಾಲಕ ಮೃತ್ಯು

ಅಥೆನ್ಸ್, ಜ.25: ಸುಮಾರು 50 ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಗ್ರೀಕ್ ಕರಾವಳಿಯ ಬಳಿ ಮುಳುಗಿ, ಓರ್ವ ಮಹಿಳೆ ಮತ್ತು ಬಾಲಕ ಸಾವನ್ನಪ್ಪಿದ್ದು, ದೋಣಿಯಲ್ಲಿದ್ದ ಇತರ ಮೂವರು ನಾಪತ್ತೆಯಾಗಿದ್ದಾರೆ ಎಂದು ಕರಾವಳಿ ಕಾವಲು ಪಡೆ ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ. ಉತ್ತರ ಏಜಿಯನ್ ಸಮುದ್ರದ ಇಕ್ರಿಯಾ ದ್ವೀಪದ ಬಳಿ ಈ ದುರಂತ ಸಂಭವಿಸಿದ್ದು, 50 ವಲಸಿಗರನ್ನು ರಕ್ಷಿಸಲಾಗಿದೆ. ಮಹಿಳೆ ಮತ್ತು ಬಾಲಕನ ಮೃತದೇಹಗಳು ಪತ್ತೆಯಾಗಿವೆ. ಪ್ರಾಥಮಿಕ ಮಾಹಿತಿಯಂತೆ ಕನಿಷ್ಠ ಮೂವರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಬಲವಾಗಿ ಬೀಸುತ್ತಿರುವ ಗಾಳಿ ಕಾರ್ಯಾಚರಣೆಗೆ ತೊಡಕಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ವಾರ್ತಾ ಭಾರತಿ 26 Jan 2026 12:24 am

ರಾಹುಲ್ ಗಾಂಧಿ ಎಲ್ಲಿಯೂ ದೇಶಕ್ಕೆ ನೋವು ಮಾಡಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋಗಿ ಭಾರತಕ್ಕೆ ನೋವು ಮಾಡುವುದಿಲ್ಲ. ಸುಳ್ಳು ಸುದ್ದಿಗಳನ್ನು ಪರಿಗಣಿಸಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ಬಳಿಕ ರವಿವಾರ ನಗರದ ಕುಮಾರಕೃಪದ ಸರಕಾರಿ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ವಿಚಾರವಾಗಿ ರಾಹುಲ್ ಗಾಂಧಿ ಅವರ ಹೇಳಿಕೆ ರಾಜಕೀಯ ತರಬೇಡಿ. ಹೃದಯ ಶ್ರೀಮಂತಿಕೆಯಿಂದ ಆಲೋಚಿಸಿ. ನಾವೆಲ್ಲರೂ ಈ ಪ್ರಗತಿಯನ್ನು ಸಂಭ್ರಮಿಸೋಣ, ಬೇರೆಯವರ ತಪ್ಪನ್ನು ಹುಡುಕುವುದು ಬೇಡ. ವಿದೇಶಕ್ಕೆ ಹೋಗಿ ನಾವು ಭಾರತಕ್ಕೆ ನೋವು ಮಾಡುವುದಿಲ್ಲ. ರಾಹುಲ್ ಗಾಂಧಿ ಅವರು ಕೂಡ ಈ ರೀತಿ ಮಾಡಿಲ್ಲ. ರಾಹುಲ್ ಗಾಂಧಿ ಅವರು ನಮ್ಮ ಆಂತರಿಕ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಪ್ರವಾಸದ ಬಗ್ಗೆ ಬಿಜೆಪಿ ನಾಯಕರು ಟೀಕೆ ಮಾಡಿದ್ದ ಬಗ್ಗೆ ಕೇಳಿದಾಗ, ನಾನು ಬಿಜೆಪಿ ನಾಯಕರ ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ. ನಾನು ಭಾರತ ಹಾಗೂ ಕರ್ನಾಟಕ ರಾಜ್ಯಕ್ಕೆ ಮಾತ್ರ ಉತ್ತರ ನೀಡುತ್ತೇನೆ. ಭಾರತವನ್ನು ಬೆಂಗಳೂರು ಮೂಲಕ ನೋಡಲಾಗುತ್ತಿದೆ. ಕರ್ನಾಟಕ ಭಾರತಕ್ಕೆ ಹೆಮ್ಮೆ ತರುತ್ತಿದೆ ಎಂದು ನಾನು ಈ ಹಿಂದೆಯೂ ಹೇಳಿದ್ದೆ, ವಿದೇಶದಲ್ಲೂ ಹೇಳಿದ್ದೇನೆ, ಈಗಲೂ ಹೇಳುತ್ತಿದ್ದೇನೆ. ಕ್ಯಾಲಿಫೆÇೀರ್ನಿಯಾದಲ್ಲಿ 13 ಲಕ್ಷ ಇಂಜಿನಿಯರಿಂಗ್ ವೃತ್ತಿ ಪರರಿದ್ದಾರೆ, ಬೆಂಗಳೂರಿನಲ್ಲಿ 25 ಲಕ್ಷ ಇಂಜಿನಿಯರಿಂಗ್ ವೃತ್ತಿಪರರಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದರು. ಅದೇ ರೀರಿ, ಕರ್ನಾಟಕ 13,900 ವೈದ್ಯರನ್ನು ಪ್ರತಿ ವರ್ಷ ತಯಾರು ಮಾಡುತ್ತಿದ್ದಾರೆ. ದೇಶದ ಇತರೆ ಯಾವುದೇ ರಾಜ್ಯಕ್ಕೂ ಈ ರೀತಿ ಸಾಮರ್ಥ್ಯವಿಲ್ಲ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ 1 ಲಕ್ಷ ವೈದ್ಯಕೀಯ ವೃತ್ತಿಪರರು ತಯಾರಾಗುತ್ತಿದ್ದಾರೆ ಎಂದ ಅವರು, ನಾನು ಕರ್ನಾಟಕ ರಾಜ್ಯವನ್ನು ಇತರೆ ಯಾವುದೇ ರಾಜ್ಯದೊಂದಿಗೆ ಹೋಲಿಕೆ ಮಾಡುತ್ತಿಲ್ಲ. ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ. ಬೆಂಗಳೂರಿನ ಬಗ್ಗೆ ಅಟಲ್ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ ಅವರು ಏನು ಹೇಳಿದ್ದಾರೆ? ಅವರು ಬೇರೆ ರಾಜ್ಯಗಳ ನಗರಕ್ಕೆ ಹೋಗಿ, ಆ ನಗರವನ್ನು ಜಾಗತಿಕ ನಗರ ಎಂದು ಕರೆದಿಲ್ಲ, ಬೆಂಗಳೂರನ್ನು ಜಾಗತಿಕ ನಗರ ಎಂದು ಬಣ್ಣಿಸಿದ್ದಾರೆ ಎಂದು ತಿಳಿಸಿದರು. ಬೆಂಗಳೂರು ಸಂಚಾರ ದಟ್ಟಣೆ 2ನೆ ಸ್ಥಾನಲ್ಲಿದೆ ಎಂದು ಕೇಳಿದಾಗ, ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಿಸಬೇಕು ಎಂಬ ಕಾರಣಕ್ಕೆ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 2.50 ಲಕ್ಷ ಕೋಟಿ ಹಣವನ್ನು ಐದು ವರ್ಷಗಳಲ್ಲಿ ವೆಚ್ಚ ಮಾಡಲಾಗುತ್ತಿದೆ. ಅದಕ್ಕಾಗಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ನಿರ್ಮಿಸಲಾಗುತ್ತಿದೆ. ಇದರ ಜೊತೆಗೆ ಟನಲ್ ರಸ್ತೆಗಳು, 123 ಕಿ.ಮೀ ಎಲಿವೇಟೆಡ್ ಕಾರಿಡಾರ್ ಗಳು, 300 ಕಿ.ಮೀ ಉದ್ದದ ಬಫರ್ ರೋಡ್ ಗಳನ್ನು ನಿರ್ಮಿಸಲಾಗುತ್ತಿದೆ.

ವಾರ್ತಾ ಭಾರತಿ 26 Jan 2026 12:14 am

ಟಾಟಾ ಸ್ಟೀಲ್ ಮಾಸ್ಟರ್ಸ್: ಗುಕೇಶ್, ಎರಿಗೈಸಿಗೆ ಸೋಲು

ಪ್ರಜ್ಞಾನಂದಗೆ ಡ್ರಾ

ವಾರ್ತಾ ಭಾರತಿ 26 Jan 2026 12:13 am

ಪಮೇಲಾ ಕೊಂಟಿ U17 ಮಹಿಳಾ ಫುಟ್ಬಾಲ್ ತಂಡದ ಪ್ರಧಾನ ಕೋಚ್

ಹೊಸದಿಲ್ಲಿ, ಜ. 25: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್‌ಎಫ್) ಭಾರತೀಯ ಅಂಡರ್–17 ಮಹಿಳಾ ರಾಷ್ಟ್ರೀಯ ತಂಡದ ಪ್ರಧಾನ ಕೋಚ್ ಆಗಿ ಇಟಲಿಯ ಪಮೇಲಾ ಕೊಂಟಿ ಅವರನ್ನು ನೇಮಿಸಿದೆ. 43 ವರ್ಷದ ಪಮೇಲಾ ಆಂಧ್ರಪ್ರದೇಶದ ಅನಂತಪುರದಲ್ಲಿರುವ ಮಹಿಳಾ ತರಬೇತಿ ಶಿಬಿರವನ್ನು ಸೇರಿಕೊಂಡಿದ್ದಾರೆ. ಈ ತರಬೇತಿ ಶಿಬಿರದಲ್ಲಿ ಹದಿನೇಳು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆಟಗಾರ್ತಿಯರು ಎಎಫ್‌ಸಿ ಅಂಡರ್–17 ಮಹಿಳಾ ಏಷ್ಯನ್ ಕಪ್ ಪಂದ್ಯಾವಳಿಗಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಈ ಪಂದ್ಯಾವಳಿ ಚೀನಾದಲ್ಲಿ ಏಪ್ರಿಲ್ 30ರಿಂದ ಮೇ 17ರವರೆಗೆ ನಡೆಯಲಿದೆ. ಕೊಂಟಿಯ ಜೊತೆಗೆ ಸಹಾಯಕ ಕೋಚ್ ಆಗಿ ಅವರ ಸಹೋದರ ವಿನ್ಸೆನ್ಜೊ ಕೊಂಟಿ ತಂಡಕ್ಕೆ ಬರಲಿದ್ದಾರೆ. ಇನ್ನೋರ್ವ ಸಹಾಯಕ ಕೋಚ್ ನಿವೇತಾ ರಾಮದಾಸ್ ತಮ್ಮ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಎಸ್ಎಎಎಫ್‌ಎಫ್ ಅಂಡರ್–19 ಮಹಿಳಾ ಚಾಂಪಿಯನ್‌ಶಿಪ್ 2026 ಕೊಂಟಿಯ ಮೊದಲ ಅಧಿಕೃತ ಪಂದ್ಯಾವಳಿಯಾಗಿರಲಿದೆ. ಈ ಪಂದ್ಯಾವಳಿ ನೇಪಾಳದ ಪೋಖರಾದಲ್ಲಿ ಜನವರಿ 31ರಿಂದ ಫೆಬ್ರವರಿ 7ರವರೆಗೆ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಭಾರತವು ತನ್ನ ಅಂಡರ್–17 ತಂಡವನ್ನು ಆಡಿಸಲಿದೆ. ಇಟಲಿಯ ಅಂತರರಾಷ್ಟ್ರೀಯ ಫುಟ್ಬಾಲ್ ತಂಡದಲ್ಲಿ ಮಿಡ್‌ಫೀಲ್ಡರ್ ಆಗಿ ಆಡಿರುವ ಕೊಂಟಿ ತಮ್ಮೊಂದಿಗೆ ಅಪಾರ ಅನುಭವವನ್ನು ತರಲಿದ್ದಾರೆ.

ವಾರ್ತಾ ಭಾರತಿ 26 Jan 2026 12:07 am

ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಡಯಾಲಿಸಿಸ್ ಘಟಕ ಉದ್ಘಾಟನೆ

ಕುಕನೂರು, ಜ.25: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಅಳವಡಿಸಲಾದ ಉಚಿತ ಡಯಾಲಿಸಿಸ್ ಕೇಂದ್ರವನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರು ಭಾನುವಾರ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳು ಡಯಾಲಿಸಿಸ್ ಚಿಕಿತ್ಸೆಗೆ ದೂರದ ಊರುಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ರಾಜ್ಯ ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 42 ಕೋಟಿ ರೂ. ವೆಚ್ಚದಲ್ಲಿ ಎರಡು ಡಯಾಲಿಸಿಸ್ ಯಂತ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಳವಡಿಸಲಾಗಿದ್ದು, ರೋಗಿಗಳು ಸ್ಥಳದಲ್ಲೇ ಉಚಿತವಾಗಿ ಚಿಕಿತ್ಸೆ ಪಡೆಯಲು ಅವಕಾಶ ದೊರೆತಿದೆ. ಅಗತ್ಯವಿರುವವರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಸಮಸ್ಯೆಗಳು ಸಹಜವಾಗಿದ್ದರೂ ವೈದ್ಯಾಧಿಕಾರಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಆರೋಗ್ಯ ಇಲಾಖೆಯ ಯೋಜನೆಗಳು ಜನರಿಗೆ ತಲುಪಲು ಸಾಧ್ಯ. ಗ್ರಾಮೀಣ ಜನತೆಯ ಸೇವೆಗೆ ವೈದ್ಯರು ಹೆಚ್ಚಿನ ಗಮನ ನೀಡಬೇಕು ಎಂದು ಅವರು ಹೇಳಿದರು. ಪಟ್ಟಣಕ್ಕೆ 100 ಹಾಸಿಗೆಯ ಸಾರ್ವಜನಿಕ ಆಸ್ಪತ್ರೆ ಮಂಜೂರಾಗಿದ್ದು, ಇದಕ್ಕಾಗಿ 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸಂಬಂಧಪಟ್ಟ ಸಮಿತಿಯ ಶಿಫಾರಸ್ಸಿನ ಮೇರೆಗೆ ಜಮೀನು ಗುರುತಿಸಿ ಏಪ್ರಿಲ್ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. ಸುಸಜ್ಜಿತ ಕಟ್ಟಡ, ಅತ್ಯಾಧುನಿಕ ಉಪಕರಣಗಳು ಹಾಗೂ ನುರಿತ ಸಿಬ್ಬಂದಿಯೊಂದಿಗೆ ಆಸ್ಪತ್ರೆ ಶೀಘ್ರದಲ್ಲೇ ಜನಸೇವೆಗೆ ಲಭ್ಯವಾಗಲಿದೆ ಎಂದು ತಿಳಿಸಿದರು. ಇದೇ ವೇಳೆ ಕುಕನೂರು ಭಾಗದಲ್ಲಿ ತಾಲೂಕು ಆಡಳಿತ ಸೌಧದ ಅಗತ್ಯವಿದ್ದು, ಇದಕ್ಕೆ ಅಡ್ಡಿಯಾಗಿದ್ದ ಕಾನೂನು ತೊಡಕುಗಳು ಶೀಘ್ರದಲ್ಲೇ ನಿವಾರಣೆಯಾಗಲಿವೆ. ಮುಂದಿನ ಮೂರು ತಿಂಗಳೊಳಗೆ ತಾಲೂಕು ಆಡಳಿತ ಸೌಧ ಹಾಗೂ ತಾಲೂಕು ಕ್ರೀಡಾಂಗಣದ ಕಟ್ಟಡ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು. ಹಿಂದಿನ ಸರ್ಕಾರ ಹಲವು ಯೋಜನೆಗಳಿಗೆ ಅನುಮೋದನೆ ನೀಡಿದರೂ ಹಣ ಬಿಡುಗಡೆ ಮಾಡದೇ ಇರುವುದು ಹಾಗೂ 7ನೇ ವೇತನ ಆಯೋಗದ ಜಾರಿಯಲ್ಲಿ ವಿಳಂಬವಾದುದು ಹೊಸ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಯಾಗಿತ್ತು. ಆದರೂ ಪ್ರಸ್ತುತ ಸರ್ಕಾರ ಬಾಕಿ ಉಳಿದಿದ್ದ 12 ಸಾವಿರ ಕೋಟಿ ರೂ.ಗಳಲ್ಲಿ 6 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳು ವೇಗ ಪಡೆಯಲಿವೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರಾಮಕೃಷ್ಣ ರೆಡ್ಡಿ ಮಾತನಾಡಿ, ಸೋಮವಾರದಿಂದ ಎರಡು ಡಯಾಲಿಸಿಸ್ ಯಂತ್ರಗಳು ಕಾರ್ಯಾರಂಭ ಮಾಡಲಿದ್ದು, ಈಗಾಗಲೇ ತಾಲೂಕಿನಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಆರು ಜನರನ್ನು ಗುರುತಿಸಲಾಗಿದೆ. ಪ್ರತಿದಿನ ಆರು ಜನರಿಗೆ ಉಚಿತ ಡಯಾಲಿಸಿಸ್ ಚಿಕಿತ್ಸೆ ನೀಡಲಾಗುವುದು. ಅಗತ್ಯ ತಂತ್ರಜ್ಞರು, ನರ್ಸ್‌ಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಈ ಸೌಲಭ್ಯ ಜನರಿಗೆ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಹಸಿಲ್ದಾರ ಬಸವರಾಜ ಬೆಣ್ಣೆ ಶಿರೂರು, ತಾ.ಪಂ.ಇ.ಓ ಸಂತೋಷ್ ಬಿರಾದರ ಪಾಟೀಲ, ಪ್ರಮುಖರಾದ ಎಂಕಣ್ಣ ಯರಾಶಿ, ಕಾಸಿಂಸಾಬ್ ತಳಕಲ್, ಹನುಮಂತಗೌಡ ಚಂಡೂರ, ಕರಿಬಸಪ್ಪ ನಿಡಗುಂದಿ, ಸತ್ಯನಾರಾಯಣಪ್ಪ ಹರಪನಹಳ್ಳಿ, ಹಂಪಯ್ಯ ಹಿರೇಮಠ, ಸಂಗಮೇಶ ಗುತ್ತಿ, ವೈದ್ಯರಾದ ಡಾ. ಶಿವನಗೌಡ ದಾನರೆಡ್ಡಿ, ಡಾ. ಪ್ರಿಯಾಂಕಾ ಕಂಪ್ಲಿ, ಡಾ. ಮಮತಾ ಇಲಕಲ್, ಡಾ. ಮಂಜುನಾಥ ಹೊಕಳದ್, ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jan 2026 12:02 am

Greenland Future: ಗ್ರೀನ್‌ಲ್ಯಾಂಡ್ ಭವಿಷ್ಯದ ವಿಚಾರದಲ್ಲಿ ಯುರೋಪ್ ಒಕ್ಕೂಟದ ಒಗ್ಗಟ್ಟು, ಮುಂದಿನ ನಿರ್ಧಾರ ಏನು?

ಯುರೋಪ್ ಒಕ್ಕೂಟ ಇದೀಗ ಅದೊಂದು ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಲು ಸಜ್ಜಾಗಿದೆ. ಒಂದು ಕಡೆ ಅಮೆರಿಕ ಹೇಳುವ ಎಲ್ಲಾ ವಿಚಾರಕ್ಕೂ ಸರಿ, ಸರಿ ಎನ್ನುತ್ತಾ ಬಂದಿದ್ದ ಯುರೋಪ್‌ನಲ್ಲಿ ಇದೀಗ ಇಲ್ಲ &ಬೇಡ ಎನ್ನುವ ಧೈರ್ಯ ಮೂಡಲು ಕಾರಣ ಆಗಿರುವುದೇ ಗ್ರೀನ್‌ಲ್ಯಾಂಡ್ ವಿಚಾರ. ಏಕೆಂದರೆ ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಅಮೆರಿಕ ಕೈಗೊಳ್ಳುತ್ತಿರುವ ನಿರ್ಧಾರಗಳು ಸಹಜವಾಗಿ ಇಡೀ ಯುರೋಪ್ ಒಕ್ಕೂಟಕ್ಕೆ

ಒನ್ ಇ೦ಡಿಯ 25 Jan 2026 11:55 pm

ಹುಣಸಗಿ | ಅಕ್ರಮ ಚಟುವಟಿಕೆ ತಡೆಗೆ ಗ್ರಾಮೀಣ ಪ್ರದೇಶಗಳಲ್ಲಿ ಡ್ರೋಣ್ ಕಣ್ಗಾವಲು ಆರಂಭ

ಹುಣಸಗಿ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳನ್ನು ಪತ್ತೆಹಚ್ಚುವ ಹಾಗೂ ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆ ಡ್ರೋಣ್ ಕ್ಯಾಮೆರಾ ಮೂಲಕ ಕಣ್ಗಾವಲು ಆರಂಭಿಸಿದೆ. ಹುಣಸಗಿ ಠಾಣೆಯ ಸಿಪಿಐ ರವಿಕುಮಾರ್ ಅವರ ನೇತೃತ್ವದಲ್ಲಿ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಲಕುಂಟೆ, ತೀರ್ಥಲ ಹುಲಿಕೇರಿ ಗುಡ್ಡ, ರಾಜವಾಳಗುಡ್ಡ, ಕಕ್ಕೇರಾ (ಅಂಬಾನಗರ) ಸೇರಿದಂತೆ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಡ್ರೋಣ್ ಕ್ಯಾಮೆರಾಗಳನ್ನು ಹಾರಿಸಲಾಯಿತು. ಗ್ರಾಮಗಳಲ್ಲಿ ನಡೆಯುವ ಇಸ್ಪೀಟ್, ಜೂಜಾಟ, ಮಟ್ಕಾ ಬರೆಯುವುದು, ಕೋಳಿ ಪಂಜಾ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ಪತ್ತೆಹಚ್ಚಿ ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಸಾರ್ವಜನಿಕರು ಯಾವುದೇ ಅಕ್ರಮ ಚಟುವಟಿಕೆಗಳಿಗೆ ಮುಂದಾಗದಂತೆ ಎಚ್ಚರಿಕೆ ನೀಡುವ ಸಂದೇಶವನ್ನೂ ಪೊಲೀಸ್ ಇಲಾಖೆ ರವಾನಿಸಿದೆ. ಈ ಕುರಿತು ಮಾಹಿತಿ ನೀಡಿದ ಸಿಪಿಐ ರವಿಕುಮಾರ್, ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯಬಾರದು ಹಾಗೂ ಸಾರ್ವಜನಿಕರು ಇಂತಹ ಕೃತ್ಯಗಳಿಗೆ ಬೆಂಬಲ ನೀಡಬಾರದು ಎಂಬ ಉದ್ದೇಶದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದಂತೆ ಡ್ರೋಣ್ ಕ್ಯಾಮೆರಾ ಕಣ್ಗಾವಲು ಆರಂಭಿಸಲಾಗಿದೆ ಎಂದು ತಿಳಿಸಿದರು. ಈ ಕಾರ್ಯಾಚರಣೆಯಲ್ಲಿ ಕೊಡೇಕಲ್ ಪೊಲೀಸ್ ಠಾಣೆಯ ಪಿಎಸ್‌ಐ ರಾಜಶೇಖರ ರಾಥೋಡ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು. ಡ್ರೋಣ್ ಕಣ್ಗಾವಲಿನಲ್ಲಿ ಯಾವುದೇ ಅಕ್ರಮ ಚಟುವಟಿಕೆ ಪತ್ತೆಯಾಗಿದೆಯೇ ಎಂಬ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ವಾರ್ತಾ ಭಾರತಿ 25 Jan 2026 11:51 pm

ಪದ್ಮ ಪ್ರಶಸ್ತಿಗಳಲ್ಲಿ ರಾಜಕೀಯ ವಿಭಿನ್ನ ಸಿದ್ಧಾಂತಗಳಿಗೆ ಕೇಂದ್ರದ ಗೌರವ; ಕೇರಳದ ಮೇಲೆ 'ವಿಶೇಷ' ಗಮನ

5 ಪದ್ಮವಿಭೂಷಣ ಪ್ರಶಸ್ತಿಗಳ ಪೈಕಿ ಮೂರು ಕೇರಳಕ್ಕೆ!

ವಾರ್ತಾ ಭಾರತಿ 25 Jan 2026 11:50 pm

Davanagere | ಹಿಮೋಫಿಲಿಯಾ ರೋಗಿಗಳ ಆಶಾಕಿರಣ ​ಡಾ. ಸುರೇಶ್ ಹನಗವಾಡಿ ಅವರಿಗೆ ಪದ್ಮಶ್ರೀ ಪ್ರಶಸ್ತಿ

​ದಾವಣಗೆರೆ/ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿನ ಅಪಾರ ಸೇವೆಗಾಗಿ ಜಿಲ್ಲೆಯ ಖ್ಯಾತ ವೈದ್ಯ ಡಾ. ಸುರೇಶ್ ಹನಗವಾಡಿ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.  ​ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ಸಂಸ್ಥಾಪಕರಾದ ಡಾ. ಸುರೇಶ್ ಹನಗವಾಡಿ ಅವರು ಕಳೆದ ಮೂರು ದಶಕಗಳಿಂದ ರಕ್ತ ಹೆಪ್ಪುಗಟ್ಟದ ಕಾಯಿಲೆ (ಹಿಮೋಫಿಲಿಯಾ) ಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ​ಇವರು ಸ್ಥಾಪಿಸಿದ ಚಿಕಿತ್ಸಾ ಕೇಂದ್ರವು ಇಂದು ದಕ್ಷಿಣ ಭಾರತದ ಪ್ರಮುಖ ಕೇಂದ್ರಗಳಲ್ಲಿ ಒಂದಾಗಿದ್ದು, ಸಾವಿರಾರು ಜನರಿಗೆ ಉಚಿತ ಹಾಗೂ ರಿಯಾಯಿತಿ ದರದಲ್ಲಿ ಜೀವ ಉಳಿಸುವ 'ಫ್ಯಾಕ್ಟರ್' ಚಿಕಿತ್ಸೆ ನೀಡಲಾಗುತ್ತಿದೆ. ​ವೈದ್ಯಕೀಯ ಸೇವೆಯ ಜೊತೆಗೆ ಸಾಹಿತ್ಯ ಮತ್ತು ಸಂಶೋಧನೆಯಲ್ಲೂ ತೊಡಗಿಸಿಕೊಂಡಿರುವ ಇವರಿಗೆ ಈಗಾಗಲೇ 'ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ' ಸಂದಿದೆ. ಈಗ ಪದ್ಮಶ್ರೀ ಗೌರವದ ಮೂಲಕ ಅವರ ಸೇವೆಗೆ ರಾಷ್ಟ್ರಮಟ್ಟದ ಮನ್ನಣೆ ದೊರೆತಿದೆ. ದಿವಂಗತ ಲೋಹಿತಮ್ಮ, ದಿವಂಗತ ಸಿ. ಹನುಮಂತಪ್ಪ ಅವರ ಪುತ್ರರಾದ ಡಾ. ಸುರೇಶ್ ಹನಗವಾಡಿ ಅವರು, ಬಳ್ಳಾರಿಯ ಸೇಂಟ್ ಜಾನ್ಸ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ, ವಾರ್ಡ್ಲಾ ಕಾಂಪೋಸಿಟ್ ಜೂನಿಯರ್ ಕಾಲೇಜಿನಲ್ಲಿ ಪಿಯುಸಿ , 1982-88 ದಾವಣಗೆರೆಯಲ್ಲಿ ಜೆಜೆಎಂ ವೈದ್ಯಕೀಯ ಕಾಲೇಜು ಎಂಬಿಬಿಎಸ್. ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (1990-1993) ಸ್ನಾತಕೋತ್ತರ (ರೋಗಶಾಸ್ತ್ರ) ಪದವಿ ಪಡೆದಿದ್ದಾರೆ.

ವಾರ್ತಾ ಭಾರತಿ 25 Jan 2026 11:49 pm

ರೈಲು ನಿಲ್ದಾಣದಲ್ಲೇ ಆಫೀಸ್ ಕೆಲಸ: ದೇಶದ ಮೊದಲ 'ಡಿಜಿಟಲ್ ಲೌಂಜ್' ಆರಂಭ, ಏನಿದು?

ನವದೆಹಲಿ: ಕೇಂದ್ರ ಸರ್ಕಾರವು ಅಮೃತ್ ರೈಲ್ವೆ ಸ್ಟೇಷನ್ ಯೋಜನೆಯಡಿ ದೇಶದ ಹಲವಾರು ರೈಲು ನಿಲ್ದಾಣಗಳನ್ನು ಅಭಿವೃದ್ಧಿ ಮಾಡಿತ್ತು. ಇದೀಗ ಮುಂದುವರಿದು ರೈಲು ನಿಲ್ದಾಣದಲ್ಲಿ 'ಭಾರತದ ಮೊದಲ ಡಿಜಿಟಲ್ ಲೌಂಜ್ ಮತ್ತು ಕೋ-ವರ್ಕಿಂಗ್ ಸ್ಪೇಸ್' ಅನ್ನು ಆರಂಭಿಸಲಾಗಿದೆ. ವೃತ್ತಿಪರ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಆರಂಭಿಸಲಾಗಿದೆ. ಏನಿದು? ಇದರ ಬಳಕೆ, ಉದ್ದೇಶ ಮತ್ತು ವಿಶೇಷತೆಗಳು ಏನೆಂದು ಇಲ್ಲಿ ತಿಳಿಯಿರಿ. ಮುಂಬೈ ಸೆಂಟ್ರಲ್

ಒನ್ ಇ೦ಡಿಯ 25 Jan 2026 11:47 pm

ವಿಜಯನಗರ | ಸದೃಢ ದೇಶ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದು : ಡಿ.ಪಿ.ಕುಮಾರಸ್ವಾಮಿ

ವಿಜಯನಗರ (ಹೊಸಪೇಟೆ): ಭಾರತವು ಸಂವಿಧಾನಬದ್ಧ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ದೇಶವಾಗಿದ್ದು, ಮತದಾನದ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪಿ.ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜವಾಬ್ದಾರಿಯುತ ಪ್ರಜೆಗಳಾದ ಯುವಕರು ಮತ್ತು ವಿದ್ಯಾರ್ಥಿಗಳೇ ದೇಶದ ಭವಿಷ್ಯ ಎಂದು ಹೇಳಿದರು. ಯುವಜನರು ಸಂವಿಧಾನ ಹಾಗೂ ದೇಶದ ಆಡಳಿತ ವ್ಯವಸ್ಥೆಯ ಕುರಿತು ಸಮಗ್ರ ಅರಿವು ಹೊಂದಿರಬೇಕು. ಚುನಾವಣೆಯಲ್ಲಿ ಹಣ, ಆಸೆ-ಆಮಿಷಗಳಿಗೆ ಒಳಗಾಗಿ ಮತ ಮಾರಿಕೊಳ್ಳುವುದು ಭ್ರಷ್ಟಾಚಾರಕ್ಕೆ ಸಮಾನವಾಗಿದ್ದು, ಇಂತಹ ನಡೆ ದೇಶದ ಪ್ರಗತಿಗೆ ಮಾರಕವಾಗಿದೆ ಎಂದು ಎಚ್ಚರಿಸಿದರು. ಪ್ರತಿಯೊಬ್ಬ ನಾಗರಿಕನು ಸಂವಿಧಾನದ ಪ್ರಸ್ತಾವನೆ, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ತಿಳಿದುಕೊಳ್ಳಬೇಕು. ಭ್ರಷ್ಟಾಚಾರ ಮುಕ್ತ ರಾಷ್ಟ್ರ ನಿರ್ಮಾಣ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಬೇಕಾದರೆ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, 2011ರಿಂದ ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದ್ದು, ಈ ಬಾರಿ ‘ನನ್ನ ಭಾರತ, ನನ್ನ ಮತ’ ಎಂಬ ಘೋಷವಾಕ್ಯದಡಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಯುವಕ-ಯುವತಿಯು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ನೆರೆ ರಾಷ್ಟ್ರಗಳಿಗಿಂತ ಭಾರತದಲ್ಲಿ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದು, ಅದರ ರಕ್ಷಣೆಗೆ ಯುವ ಸಮೂಹ ಸಕ್ರಿಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಪ್ರಶಾಂತ್ ನಾಗಲಾಪುರ ಅವರು ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು. ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ಬೂತ್ ಮಟ್ಟದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಬಿಎಲ್‌ಒಗಳು ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮೊಹ್ಮದ್ ಅಲಿ ಅಕ್ರಮ್ ಷಾ, ಉಪವಿಭಾಗಾಧಿಕಾರಿ ವಿವೇಕಾನಂದ, ಪೌರಾಯುಕ್ತ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 25 Jan 2026 11:46 pm

ಪ್ರಬುದ್ದ ಸಮಾಜ ನಿರ್ಮಾಣಕ್ಕಾಗಿ ಆರೆಸ್ಸೆಸ್‌ನಿಂದ ದೂರವಿರಿ : ಯುವಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಕಲಬುರಗಿ: ಪ್ರಬುದ್ಧ ಸಮಾಜ ನಿರ್ಮಾಣವಾಗಬೇಕಾದರೆ ಸಂವಿಧಾನಕ್ಕೆ ಗೌರವ ನೀಡದ ಆರೆಸ್ಸೆಸ್‌ ಹಾಗೂ ಮನುವಾದಿ ಸಿದ್ಧಾಂತಗಳಿಂದ ಯುವಕರು ದೂರವಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕರೆ ನೀಡಿದರು. ನಗರದ ಘಾಟ್ಗೆ ಲೇಔಟ್‌ನಲ್ಲಿ ನಿರ್ಮಾಣಗೊಂಡ ಪ್ರಬುದ್ಧ ಬುದ್ಧ ವಿಹಾರ ಉದ್ಘಾಟಿಸಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಕೊನೆಯ ಭಾಷಣದಲ್ಲಿ ನೀಡಿದ ಸಂದೇಶಗಳನ್ನು ಅಕ್ಷರಶಃ ಪಾಲಿಸಿದಾಗ ಮಾತ್ರ ಪ್ರಬುದ್ಧ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೇಳಿದರು. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರು ತಮ್ಮ ವೈಯಕ್ತಿಕ ಬದುಕಿನಲ್ಲಿ ಸೌಲಭ್ಯಗಳನ್ನು ಅನುಭವಿಸುತ್ತಿದ್ದಾರೆ. ಆದರೆ ಬಡವರು, ಹಿಂದುಳಿದವರು ಹಾಗೂ ಆದಿವಾಸಿಗಳ ಮಕ್ಕಳು ಮಾತ್ರ ಇಂತಹ ರಾಜಕೀಯದ ಹೊರೆ ಹೊರುತ್ತಿದ್ದಾರೆ ಎಂದು ಹೇಳಿದರು. ಆರೆಸ್ಸೆಸ್‌ ಸಿದ್ದಾಂತ ಚೆನ್ನಾಗಿದ್ದರೆ, ಬಿಜೆಪಿ ಆರೆಸ್ಸೆಸ್‌ ನಾಯಕರ‌‌ ಮಕ್ಕಳು ಯಾಕೆ ಗೋಮೂತ್ರ ಕುಡಿಯಲ್ಲ? ಇದು‌ ಯಾವ ನ್ಯಾಯ. ಇಂತಹ ಒಳಸಂಚುಗಳನ್ನು ನೀವು ಅರ್ಥ ಮಾಡಿಕೊಳ್ಳಬೇಕು. ನಾನು ಇಂತಹ ಸಿದ್ದಾಂತಗಳನ್ನು ಧೈರ್ಯವಾಗಿ ಎದುರಿಸಿದ್ದೇನೆ ಹಾಗೂ ಪ್ರಶ್ನಿಸಿದ್ದೇನೆ. ಹಾಗಾಗಿ ನನಗೆ ದಿನಕ್ಕೆ ಕನಿಷ್ಠ 300 ಬೆದರಿಕೆ ಕರೆಗಳು ಬಂದಿವೆ. ಹಾಗೆ ನನಗೆ ಬೆದರಿಕೆ ಹಾಕಿದ ವ್ಯಕ್ತಿ ಈಗಲೂ ಜೈಲಿನಲ್ಲಿ ಇದ್ದಾನೆ. ಅವನ‌ ಪರವಾಗಿ ಒಬ್ಬ ವಕೀಲರನ್ನು ಕೂಡಾ ಆರೆಸ್ಸೆಸ್‌ ನೇಮಿಸಿಲ್ಲ. ಆತನ ತಾಯಿ ನನಗೆ ಕರೆ ಮಾಡಿ, ತಮ್ಮ ಮಗ ಯಾಕೆ ಹಾಗೆ ಮಾಡಿದನೋ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ ಎಂದು ಖರ್ಗೆ ಹೇಳಿದರು. ಆರೆಸ್ಸೆಸ್‌ ಪಥಸಂಚಲನ ಸಂಬಂಧ ನಡೆದ ಕಾನೂನು ಪ್ರಕ್ರಿಯೆಯನ್ನು ನೆನಪಿಸಿಕೊಂಡ ಖರ್ಗೆ, ಸಂವಿಧಾನ ಹಾಗೂ ಕಾನೂನಿನ ಶಕ್ತಿಯಿಂದಲೇ ಎಲ್ಲರೂ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಇದು ಸಂವಿಧಾನದ ಮಹತ್ವವನ್ನು ತೋರಿಸುತ್ತದೆ ಎಂದು ಹೇಳಿದರು. ಬೌದ್ಧ ಧರ್ಮದಲ್ಲಿ ಸಮಾನತೆ, ಗೌರವ ಮತ್ತು ಸ್ವಾಭಿಮಾನಕ್ಕೆ ಮಹತ್ವವಿದೆ. ಇದನ್ನು ಅರಿತು ಡಾ.ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದರು. ಅವರೊಂದಿಗೆ ಲಕ್ಷಾಂತರ ಜನರು ಈ ಧರ್ಮವನ್ನು ಅಳವಡಿಸಿಕೊಂಡರು ಎಂದು ಹೇಳಿದರು. ನಮಗೆ ಸಂವಿಧಾನವೇ ಪ್ರಧಾನ. ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವಗಳು ಸಂವಿಧಾನದಲ್ಲಿ ಅಡಕವಾಗಿವೆ. ಸಂವಿಧಾನ ಇಲ್ಲದಿದ್ದರೆ ನಾವು ಇಂದು ಸ್ವತಂತ್ರವಾಗಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಬಾಬಾಸಾಹೇಬರ ಬರಹಗಳು ಇಂದಿಗೂ ಪ್ರಸ್ತುತವಾಗಿವೆ. ಪ್ರಬುದ್ಧ ಭಾರತ ನಿರ್ಮಾಣಕ್ಕೆ ಅವರ ವಿಚಾರಗಳು ಅನಿವಾರ್ಯವಾಗಿವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ವಿವಿಧ ಪ್ರದೇಶಗಳಲ್ಲಿ ಪ್ರಬುದ್ಧ ಬುದ್ಧ ವಿಹಾರಗಳನ್ನು ನಿರ್ಮಿಸಿ ಬುದ್ಧ–ಬಸವ–ಅಂಬೇಡ್ಕರ್ ವಿಚಾರಧಾರೆಯನ್ನು ಜನರಲ್ಲಿ ಬಿತ್ತರಿಸಬೇಕೆಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಬೌದ್ಧ ಧರ್ಮಗುರುಗಳು ಧಮ್ಮ ಸಂದೇಶ ನೀಡಿದರು. ವೇದಿಕೆಯಲ್ಲಿ ಬೌದ್ಧ ಧರ್ಮಗುರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 25 Jan 2026 11:41 pm

ಬಿಜೆಪಿ ಮುಖಂಡನಿಗೆ ದ್ವೇಷ ಭಾಷಣ ಮಸೂದೆಯಡಿ ಪೊಲೀಸರು ನೋಟಿಸ್ ನೀಡಿದ್ದು ತಪ್ಪು: ಡಾ.ಜಿ. ಪರಮೇಶ್ವರ್

ಬೆಂಗಳೂರು: ಜಾರಿಯ ಹಂತದಲ್ಲಿರುವಾಗಲೇ ದ್ವೇಷ ಭಾಷಣ ಮಸೂದೆಯ ಅಡಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರುಗೆ ಪೊಲೀಸರು ನೋಟಿಸ್ ನೀಡಿದ್ದು ತಪ್ಪು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್ ನೀಡಿರುವ ವಿಚಾರವಾಗಿ ಮಾಹಿತಿ ತರಿಸಿಕೊಳ್ಳುತ್ತೇನೆ. ಇನ್ನೊಂದೆಡೆ, ಈ ಮಸೂದೆಗೆ ರಾಜ್ಯಪಾಲರು ಸಹಿ ಹಾಕಿಲ್ಲ. ಇದು ಕಾನೂನಾಗದ ಕಾರಣ ಈ ಮಸೂದೆಯ ಅಡಿ ನೋಟಿಸ್ ನೀಡಿದ್ದು ತಪ್ಪು. ಪೊಲೀಸರು ಯಾಕೆ ಈ ರೀತಿ ಮಾಡಿದ್ದಾರೆ ಎನ್ನುವುದನ್ನು ಪರಿಶೀಲನೆ ನಡೆಸಬೇಕು ಎಂದು ಉಲ್ಲೇಖಿಸಿದರು.

ವಾರ್ತಾ ಭಾರತಿ 25 Jan 2026 11:39 pm

ಕರ್ನಾಟಕಕ್ಕೆ 217 ರನ್ ಸೋಲುಣಿಸಿದ ಮಧ್ಯಪ್ರದೇಶ

ರಣಜಿ ಎಲಿಟ್ ‘ಬಿ’ ಗುಂಪಿನ ಪಂದ್ಯ

ವಾರ್ತಾ ಭಾರತಿ 25 Jan 2026 11:39 pm

Bangladesh ಅನುಪಸ್ಥಿತಿ ಕ್ರಿಕೆಟ್‌ ನ ದುಃಖದ ಕ್ಷಣ: ಆಟಗಾರರ ಸಂಘ

ಮುಂಬೈ, ಜ. 25: ಮುಂದಿನ ತಿಂಗಳು ನಡೆಯಲಿರುವ ಟ್ವೆಂಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡದ ಅನುಪಸ್ಥಿತಿಯು ಕ್ರಿಕೆಟ್‌ನ ದುಃಖದ ಗಳಿಗೆಯಾಗಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟಿಗರ ಅಸೋಸಿಯೇಶನ್ ರವಿವಾರ ಹೇಳಿದೆ. ಈ ವಿದ್ಯಮಾನವು ಕ್ರೀಡೆಯನ್ನು ವಿಭಜಿಸುವ ಬಗ್ಗೆ ಯೋಚಿಸದೆ ಒಗ್ಗೂಡಿಸುವುದರತ್ತ ಕೆಲಸ ಮಾಡುವುದಕ್ಕೆ ಸಂಬಂಧಪಟ್ಟವರಿಗೆ ಕರೆಗಂಟೆಯಾಗಬೇಕು ಎಂದು ಅದು ಹೇಳಿದೆ. ಭಾರತ ಮತ್ತು ಬಾಂಗ್ಲಾದೇಶಗಳ ನಡುವಿನ ರಾಜಕೀಯ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಭದ್ರತಾ ಕಾರಣಗಳಿಗಾಗಿ ಪಂದ್ಯಾವಳಿಯಲ್ಲಿ ಆಡಲು ಭಾರತಕ್ಕೆ ಪ್ರಯಾಣಿಸಲು ಬಾಂಗ್ಲಾದೇಶ ನಿರಾಕರಿಸಿದೆ. ತನ್ನ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಬೇಕು ಎಂಬುದಾಗಿ ಅದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯನ್ನು ಕೋರಿತ್ತು. ಆದರೆ, ಈ ಕೋರಿಕೆಯನ್ನು ಐಸಿಸಿ ತಿರಸ್ಕರಿಸಿದೆ ಹಾಗೂ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಸ್ಥಾನದಲ್ಲಿ ಆಡಲು ಸ್ಕಾಟ್ಲ್ಯಾಂಡ್‌ಗೆ ಆಹ್ವಾನ ನೀಡಿದೆ. ‘‘ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಬಂದಿರುವುದು ಹಾಗೂ ಕ್ರಿಕೆಟ್‌ನ ಜಾಗತಿಕ ಕೂಟದಲ್ಲಿ ಉನ್ನತ ಕ್ರಿಕೆಟ್ ದೇಶವೊಂದರ ಅನುಪಸ್ಥಿತಿಯು ನಮ್ಮ ಕ್ರೀಡೆ ಹಾಗೂ ಬಾಂಗ್ಲಾದೇಶದ ಆಟಗಾರರು ಮತ್ತು ಅಭಿಮಾನಿಗಳಿಗೆ ದುಃಖದ ಗಳಿಗೆಯಾಗಿದೆ. ಇದರ ಬಗ್ಗೆ ಗಂಭೀರವಾಗಿ ಯೋಚಿಸಬೇಕಾಗಿದೆ’’ ಎಂದು ವಿಶ್ವ ಕ್ರಿಕೆಟಿಗರ ಅಸೋಸಿಯೇಶನ್ (ಡಬ್ಲ್ಯುಸಿಎ)ನ ಮುಖ್ಯ ಕಾರ್ಯನಿರ್ವಾಹಕ ಟಾಮ್ ಮೊಫತ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. ಮೂರನೇ ಶ್ರೇಯಾಂಕದ ಅಮೆರಿಕದ ಕೋಕೊ ಗೌಫ್ ಮಹಿಳೆಯರ ಸಿಂಗಲ್ಸ್ ಕ್ವಾರ್ಟರ್‌ಫೈನಲ್‌ಗೆ ತೇರ್ಗಡೆಯಾಗಿದ್ದಾರೆ. ಅವರು ಝೆಕ್‌ನ ಕರೊಲಿನಾ ಮುಚೋವರನ್ನು 6–1, 3–6, 6–3 ಸೆಟ್‌ಗಳಿಂದ ಮಣಿಸಿದರು. ಎರಡು ಬಾರಿಯ ಗ್ರ್ಯಾನ್ಸ್‌ಲ್ಯಾಮ್ ಚಾಂಪಿಯನ್, 21 ವರ್ಷದ ಗೌಫ್ ಆಸ್ಟ್ರೇಲಿಯನ್ ಓಪನ್‌ನಲ್ಲಿ ಸೆಮಿಫೈನಲ್‌ಗಿಂತ ಮುಂದೆ ಹೋಗಿಲ್ಲ.

ವಾರ್ತಾ ಭಾರತಿ 25 Jan 2026 11:35 pm

Australian Open | ಸಬಲೆಂಕ, ಜೊವಿಚ್, ಅಲ್ಕರಾಝ್ ಕ್ವಾರ್ಟರ್‌ ಫೈನಲ್‌ ಗೆ

ಮೆಲ್ಬರ್ನ್, ಜ. 25: ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ರವಿವಾರ ಮಹಿಳಾ ಸಿಂಗಲ್ಸ್‌ನಲ್ಲಿ ಬೆಲಾರಸ್‌ನ ಅರೈನಾ ಸಬಲೆಂಕ ಕೆನಡಾದ ವಿಕ್ಟೋರಿಯಾ ಎಂಬೊಕೊರನ್ನು ಸೋಲಿಸಿ ಸತತ ನಾಲ್ಕನೇ ಬಾರಿ ಕ್ವಾರ್ಟರ್‌ಫೈನಲ್ ತಲುಪಿದರು. ಪುರುಷರ ಸಿಂಗಲ್ಸ್‌ನಲ್ಲಿ ಸ್ಪೇನ್‌ನ ಕಾರ್ಲೋಸ್ ಅಲ್ಕರಾಝ್ ಕ್ವಾರ್ಟರ್‌ಫೈನಲ್‌ಗೆ ತೇರ್ಗಡೆಯಾದರು. ಎರಡು ಬಾರಿಯ ಚಾಂಪಿಯನ್ ಸಬಲೆಂಕ ತಮ್ಮ ಎದುರಾಳಿಯನ್ನು 6–1, 7–6(1) ಸೆಟ್‌ಗಳಿಂದ ಸೋಲಿಸಿದರು. ರಾಡ್ ಲೇವರ್ ಅರೀನಾದಲ್ಲಿ ನಡೆದ ಪಂದ್ಯದಲ್ಲಿ ಸಬಲೆಂಕ ಮೊದಲ ಸೆಟ್ ಅನ್ನು 31 ನಿಮಿಷಗಳಲ್ಲಿ ಗೆದ್ದರು. ಆದರೆ, ಎರಡನೇ ಸೆಟ್‌ನಲ್ಲಿ 17ನೇ ಶ್ರೇಯಾಂಕದ ವಿಕ್ಟೋರಿಯಾ ತೀವ್ರ ಪ್ರತಿಹೋರಾಟ ನೀಡಿದರೂ 4–1ರ ಮುನ್ನಡೆಯನ್ನು ಕಳೆದುಕೊಂಡರು. ಸಬಲೆಂಕ ಕ್ವಾರ್ಟರ್‌ಫೈನಲ್‌ನಲ್ಲಿ ಅಮೆರಿಕದ ಇವಾ ಜೊವಿಚ್ ಅವರನ್ನು ಎದುರಿಸಲಿದ್ದಾರೆ. ರವಿವಾರ ನಡೆದ ಇನ್ನೊಂದು ಪ್ರೀ–ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಇವಾ ಜೊವಿಚ್ ಕಝಖಿಸ್ತಾನದ ಯೂಲಿಯಾ ಪುಟಿನ್ಟ್ಸೇವಾರನ್ನು 6–0, 6–1 ಸೆಟ್‌ಗಳಿಂದ ಸೋಲಿಸಿದರು. ಜಾನ್ ಕೇನ್ ಅರೀನಾದಲ್ಲಿ ನಡೆದ ಈ ಪಂದ್ಯ ಕೇವಲ 53 ನಿಮಿಷಗಳಲ್ಲಿ ಮುಗಿಯಿತು. ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವದ ನಂಬರ್ ವನ್ ಆಟಗಾರ ಕಾರ್ಲೋಸ್ ಅಲ್ಕರಾಝ್ ಸತತ ಮೂರನೇ ಬಾರಿ ಆಸ್ಟ್ರೇಲಿಯನ್ ಓಪನ್ ಕ್ವಾರ್ಟರ್‌ಫೈನಲ್ ತಲುಪಿದರು. ರಾಡ್ ಲೇವರ್ ಅರೀನಾದಲ್ಲಿ ನಡೆದ ಪ್ರೀ–ಕ್ವಾರ್ಟರ್‌ಫೈನಲ್‌ನಲ್ಲಿ ಅವರು ಅಮೆರಿಕದ ಟಾಮಿ ಪಾಲ್ ಅವರನ್ನು 7–6(6), 6–4, 7–5 ಸೆಟ್‌ಗಳಿಂದ ಸೋಲಿಸಿದರು. ಮೊದಲ ಸೆಟ್ ಟೈಬ್ರೇಕ್ ಹಂತದಲ್ಲಿದ್ದಾಗ ಪ್ರೇಕ್ಷಕರಲ್ಲಿ ಒಬ್ಬ ಹಿರಿಯ ಮಹಿಳೆ ಅಸ್ವಸ್ಥರಾದ ಕಾರಣ 14 ನಿಮಿಷಗಳ ಕಾಲ ಪಂದ್ಯ ಸ್ಥಗಿತಗೊಂಡಿತು. ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಿದ ನಂತರ ಅವರನ್ನು ಮೈದಾನದಿಂದ ಹೊರಕ್ಕೆ ಕರೆದೊಯ್ಯಲಾಯಿತು. ► ಆಡದೇ ಕ್ವಾರ್ಟರ್‌ಫೈನಲ್ ತಲುಪಿದ ಜೊಕೊವಿಕ್! ಪುರುಷರ ಸಿಂಗಲ್ಸ್‌ನಲ್ಲಿ 10 ಬಾರಿಯ ಚಾಂಪಿಯನ್ ಸರ್ಬಿಯಾದ ನೊವಾಕ್ ಜೊಕೊವಿಕ್ ಆಡದೇ ನೇರವಾಗಿ ಕ್ವಾರ್ಟರ್‌ಫೈನಲ್‌ಗೆ ತಲುಪಿದರು. ಅವರ ಎದುರಾಳಿಯಾಗಿದ್ದ ಝೆಕ್‌ನ ಜಾಕೂಬ್ ಮೆನ್ಸಿಕ್ ಹೊಟ್ಟೆ ಗಾಯದ ಕಾರಣ ಪಂದ್ಯದಿಂದ ಹಿಂದೆ ಸರಿದಿದ್ದರು. ಹೀಗಾಗಿ, ಜೊಕೊವಿಕ್ ಕ್ವಾರ್ಟರ್‌ಫೈನಲ್‌ನಲ್ಲಿ ಇಟಲಿಯ ಐದನೇ ಶ್ರೇಯಾಂಕದ ಲೊರೆನ್ಜೊ ಮುಸೆಟ್ಟಿ ಅಥವಾ ಅಮೆರಿಕದ ಒಂಭತ್ತನೇ ಶ್ರೇಯಾಂಕದ ಟೇಲರ್ ಫ್ರಿಟ್ಜ್ ಅವರನ್ನು ಎದುರಿಸಲಿದ್ದಾರೆ. ಪಾಕ್ T20 ವಿಶ್ವಕಪ್ ತಂಡ ಪ್ರಕಟ: ಆದರೆ, ಭಾಗವಹಿಸುವುದು ಖಚಿತವಿಲ್ಲ ಎಂದ ಪಿಸಿಬಿ!(w) ಲಾಹೋರ್, ಜ. 25: ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಆಯ್ಕೆ ಸಮಿತಿಯು ರವಿವಾರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಆಡುವ ತನ್ನ 15 ಆಟಗಾರರ ತಂಡವನ್ನು ಘೋಷಿಸಿದೆ. ಆದರೆ, ಪಂದ್ಯಾವಳಿಯಲ್ಲಿ ಭಾಗವಹಿಸುವುದು ಖಚಿತವಲ್ಲ ಎಂದು ಹೇಳಿದೆ. ಬಾಂಗ್ಲಾದೇಶದ ಸ್ಥಾನಕ್ಕೆ ಸ್ಕಾಟ್ಲ್ಯಾಂಡ್ ತಂಡವನ್ನು ಐಸಿಸಿ ಆಹ್ವಾನಿಸಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನವೂ ವಿಶ್ವಕಪ್‌ನಿಂದ ಹಿಂದೆ ಸರಿಯಬಹುದು ಎಂಬ ಎಚ್ಚರಿಕೆಯನ್ನು ಪಿಸಿಬಿ ಅಧ್ಯಕ್ಷ ಮುಹ್ಸಿನ್ ನಖ್ವಿ ಕೆಲ ದಿನಗಳ ಹಿಂದೆ ನೀಡಿದ್ದರು. ಲಾಹೋರಿನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಿಸಿಬಿಯ ಹೈಪರ್ಫಾರ್ಮನ್ಸ್ ನಿರ್ದೇಶಕ ಆಕಿಬ್ ಜಾವೇದ್ ಮತ್ತು ಪ್ರಧಾನ ಕೋಚ್ ಮೈಕಲ್ ಜೇಮ್ಸ್ ಹೆಸನ್ ತಂಡವನ್ನು ಪ್ರಕಟಿಸಿದರು. ಆದರೆ, ಭಾಗವಹಿಸುವುದರ ಕುರಿತು ಅಂತಿಮ ನಿರ್ಧಾರ ಸರ್ಕಾರದ ಕೈಯಲ್ಲಿದೆ ಎಂದು ಜಾವೇದ್ ಸ್ಪಷ್ಟಪಡಿಸಿದರು. ► ತಂಡದಲ್ಲಿ ಏನೂ ಅಚ್ಚರಿಯಿಲ್ಲ ಟೀಂ: ಸಲ್ಮಾನ್ ಅಲಿ ಅಘ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಅಝಮ್, ಫಾಹೀಮ್ ಅಶ್ರಫ್, ಫಖರ್ ಝಮಾನ್, ಖ್ವಾಜಾ ಮುಹಮ್ಮದ್ ನಫಾಯ್ (ವಿಕೆಟ್‌ಕೀಪರ್), ಮುಹಮ್ಮದ್ ನವಾಝ್, ಮುಹಮ್ಮದ್ ಸಲ್ಮಾನ್ ಮಿರ್ಝಾ, ನಸೀಮ್ ಶಾ, ಸಾಹಿಬ್ಝಾದಾ ಫರ್ಹಾನ್ (ವಿಕೆಟ್‌ಕೀಪರ್), ಸಯೀಮ್ ಅಯೂಬ್, ಶಹೀನ್ ಶಾ ಅಫ್ರಿದಿ, ಶದಬ್ ಖಾನ್, ಉಸ್ಮಾನ್ ಖಾನ್ (ವಿಕೆಟ್‌ಕೀಪರ್) ಮತ್ತು ಉಸ್ಮಾನ್ ತಾರಿಖ್.

ವಾರ್ತಾ ಭಾರತಿ 25 Jan 2026 11:33 pm

Iran And USA: ಇರಾನ್ ವಿರುದ್ಧ ಅಮೆರಿಕ ಸೇನಾ ಕಾರ್ಯಾಚರಣೆ ಆತಂಕ, ಬಂಕರ್ ಸೇರಿದ ಇರಾನ್ ಸರ್ವಾಧಿಕಾರಿ?

ಅಮೆರಿಕ ಮತ್ತು ಇರಾನ್ ನಡುವೆ ಇದೀಗ ಘೋರ ಯುದ್ಧ ನಡೆಯುವ ಎಲ್ಲಾ ಲಕ್ಷಣ ಗೋಚರಿಸಿದೆ. ಈ ಪೈಕಿ ಡೊನಾಲ್ಡ್ ಟ್ರಂಪ್ ಯಾವಾಗ ನೇರವಾಗಿ ಇರಾನ್ ಕಡೆಗೆ ಅಮೆರಿಕದ ಬೃಹತ್ ಸೇನೆಯನ್ನ ಹಾಗೂ ಸೇನಾ ಹಡಗನ್ನು ನುಗ್ಗಿಸಲು ಅನುಮತಿ ನೀಡಿದರೋ, ಆ ನಂತರ ಪರಿಸ್ಥಿತಿ ಮತ್ತೊಂದು ತಿರುವು ಪಡೆಯುತ್ತಿದೆ. ಇಷ್ಟೆಲ್ಲಾ ನಡೆಯುವಾಗಲೇ ಮತ್ತೊಂದು ಕಡೆ ಇರಾನ್ ನೆಲದಲ್ಲಿ ತಲ್ಲಣವೇ

ಒನ್ ಇ೦ಡಿಯ 25 Jan 2026 11:29 pm

ಕಲಬುರಗಿಯಲ್ಲಿ ಫೆ.21ರಿಂದ 28ರವರೆಗೆ ರಾಷ್ಟ್ರೀಯ ನಾಟಕೋತ್ಸವ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ,ಜ.25: ಕಲಬುರಗಿಯನ್ನು ರಾಜ್ಯದ ಸೃಜನಶೀಲ ನಗರವನ್ನಾಗಿ ರೂಪಿಸುವ ಗುರಿಯೊಂದಿಗೆ ಕಲಬುರಗಿಯಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ಬೆಂಗಳೂರಿನ ರಂಗಶಂಕರ ಸಹಯೋಗದಲ್ಲಿ ಫೆಬ್ರವರಿ 21ರಿಂದ 28ರವರೆಗೆ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಕಲಬುರಗಿಯ ಸಮಸ್ತ ಕಲಾಭಿಮಾನಿಗಳು ಈ ನಾಟಕೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ನಾಟಕೋತ್ಸವ-26ರ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ ರಂಗ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಬೆಂಗಳೂರಿನ ಪ್ರಸಿದ್ಧ ರಂಗಶಂಕರ ಸಹಭಾಗಿತ್ವದಲ್ಲಿ ಮುಂದಿನ ಐದು ವರ್ಷಗಳ ಕಾಲ ನಿರಂತರ ನಾಟಕೋತ್ಸವ ಆಯೋಜಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು. ನಾಟಕೋತ್ಸವದಲ್ಲಿ ನಗರದ ಎಸ್.ಎಂ ಪಂಡಿತ್ ರಂಗಮಂದಿರದಲ್ಲಿ ಕನ್ನಡದ ಪ್ರಸಿದ್ಧ ನಾಟಕಗಳು ಸೇರಿದಂತೆ ವಿವಿಧ ರಾಜ್ಯಗಳ ಬೇರೆ ಭಾಷೆಯ ನಾಟಕಗಳನ್ನು, ಕಲಬುರಗಿ ರಂಗಾಯಣದಲ್ಲಿ ವಿಶೇಷವಾಗಿ ಮಕ್ಕಳಿಗಾಗಿ ನಾಟಕಗಳು ಮತ್ತು ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ರಂಗಭೂಮಿ ಕುರಿತಂತೆ ಹೆಸರಾಂತ ರಂಗಕರ್ಮಿಗಳೊಂದಿಗೆ ಪ್ರತಿದಿನ ವಿವಿಧ ವಿಷಯಗಳ ಕುರಿತು ಸಂವಾದಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಕಲಬುರಗಿಯನ್ನು ಕರ್ನಾಟಕದ ಒಂದು ಕ್ರಿಯಾಶೀಲ ಸಾಂಸ್ಕೃತಿಕ ಹೆಗ್ಗುರುತನ್ನಾಗಿ ರೂಪಿಸುವ ಆಶಯವನ್ನು ‘ಕಲಬುರಗಿ ನಾಟಕೋತ್ಸವ’ ಹೊಂದಿದೆ. ಇದು ಕೇವಲ ತನ್ನ ಐತಿಹಾಸಿಕ ಪರಂಪರೆಗೆ ಮಾತ್ರವಲ್ಲದೆ, ನಿರಂತರವಾಗಿ ವಿಕಸನಗೊಳ್ಳುತ್ತಿರುವ ಜೀವಂತ ಕಲಾ ಕ್ಷೇತ್ರಕ್ಕೂ ಹೆಸರುವಾಸಿಯಾಗಬೇಕು ಎಂಬುದು ಈ ನಾಟಕೋತ್ಸವದ ಪರಿಕಲ್ಪನೆಯಾಗಿದೆ. ಇಲ್ಲಿನ ಸಾಂಸ್ಕೃತಿಕ ಅನನ್ಯತೆಗೆ ರಾಷ್ಟ್ರೀಯ ಮಟ್ಟದ ಮಾನ್ಯತೆ ತಂದುಕೊಡುವ ಮೂಲಕ ಹಾಗೂ ರಂಗಭೂಮಿ, ಸಂಗೀತ ಮತ್ತು ಪೂರಕ ಕಲೆಗಳ ಮೂಲಕ ಪ್ರವಾಸೋದ್ಯಮದ ಆಕರ್ಷಣೆಗಳನ್ನು ವೈವಿಧ್ಯಗೊಳಿಸುವ ಮೂಲಕ, ಸಾಂಸ್ಕೃತಿಕ ಆಸಕ್ತರು ಭೇಟಿ ನೀಡಲೇಬೇಕಾದ ತಾಣವಾಗಿ ಕಲಬುರಗಿಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್ಸಿ ಜಗದೇವ ಗುತ್ತೇದಾರ್, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಡಿಸಿಎಫ್ ಸುಮಿತ್ ಪಾಟೀಲ್, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಹರವಾಳ, ಕುಡಾ ಅಧ್ಯಕ್ಷ ಮಝಹರ್ ಖಾನ್ ಆಲಂ ಸೇರಿದಂತೆ ಹಲವರು ಇದ್ದರು. ನಾಟಕ ಪ್ರದರ್ಶನಗಳು : ಎಸ್.ಎಮ್. ಪಂಡಿತ್ ರಂಗಮಂದಿರದಲ್ಲಿ ಪ್ರತಿದಿನ ಸಂಜೆ 7:00ಗಂಟೆಗೆ ದೇಶದ ವಿವಿಧ ಭಾಗಗಳ ಶ್ರೇಷ್ಠ ನಾಟಕಗಳು ಪ್ರದರ್ಶನಗೊಳ್ಳಲಿವೆ. ಫೆ.21ರಂದು ಸ್ಪಂದನ ಬೆಂಗಳೂರು ತಂಡದ ಬಿ.ಜಯಶ್ರೀ ನಿರ್ದೇಶನದ ‘ಕರಿಮಾಯಿ’, ಫೆ.22ರಂದು ಮುಂಬೈ ಅರಣ್ಯ ಥಿಯೇಟರ್ ತಂಡದ ಅಜಿತೇಶ್ ಗುಪ್ತಾ ನಿರ್ದೇಶನದ ‘ಜೋ ಡೂಬಾ ಸೋ ಪಾರ್’, ಫೆ.23ರಂದು ಕಲಾಗಂಗೋತ್ರಿ ಬೆಂಗಳೂರು ತಂಡದ ಬಿ.ವಿ.ರಾಜಾರಾಂ ನಿರ್ದೇಶನದ ‘ಮುಖ್ಯಮಂತ್ರಿ’, ಫೆ.24ರಂದು ಡಿ ಫಾರ್ ಡ್ರಾಮಾ ತಂಡದ ಮುಂಬೈ ಸುಮೀತ್ ವ್ಯಾಸ್ ನಿರ್ದೇಶನದ ‘ಪುರಾನಾ ಚಾವಲ್’ ಫೆ.25ರಂದು ಸಂಚಯ ಬೆಂಗಳೂರು ತಂಡದ ಗಣೇಶ್ ಮಂದಾರ್ತಿ ಅವರ ‘ಕಾಮರೂಪಿಗಳು’ ಫೆ.26ರಂದು ಪಪೆಟ್ ಪ್ರದರ್ಶನ ನವದೆಹಲಿ ತಂಡದ ಅನುರೂಪ ರಾಯ್ ನಿರ್ದೇಶನದ ‘ಎಬೌಟ್ ರಾಮ್’, ಫೆ.27ರಂದು ರಂಗಾಯಣ, ಕಲಬುರಗಿ ತಂಡದ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ ‘ಕಾಲಚಕ್ರ’, ಫೆ.28ರಂದು ಜಂಗಮ ಕಲೆಕ್ಟಿವ್ ತಂಡದ ಲಕ್ಷ್ಮಣ.ಕೆ.ಪಿ ನಿರ್ದೇಶನದ ‘ಬಾಬ್ ಮಾರ್ಲೆ ಪ್ರಮ್ ಕೋಡಿಹಳ್ಳಿ’ ನಾಟಕಗಳು ಪ್ರದರ್ಶನಗೊಳ್ಳಲಿದೆ. ಮಕ್ಕಳಿಗಾಗಿ ನಾಟಕ ಪ್ರದರ್ಶನ: ಶಾಲಾ ಮಕ್ಕಳಿಗಾಗಿ ವಿಶೇಷ ನಾಟಕ ಪ್ರದರ್ಶನಗಳನ್ನು ಏರ್ಪಡಿಸಲಾಗಿದ್ದು, ಕಲಬುರಗಿಯ ಕರ್ನಾಟಕ ರಂಗಾಯಣದಲ್ಲಿ ಬೆಳಿಗ್ಗೆ 11:00 ಗಂಟೆಯಿಂದ ನಡೆಯಲಿದೆ. ಫೆ.22 ಮತ್ತು 23ರಂದು ರಂಗ ಶಂಕರದ ‘ಸರ್ಕಲ್ ಆಫ್ ಲೈಫ್’, ಫೆ.24 ಮತ್ತು 25ರಂದು ಮುಂಬೈನ ರೆಡ್ ಎಂಟರ್ಟೈನ್ಮೆಂಟ್‌ನ ‘ಜಾಬ್ ಲೆಸ್ ಜಾಬ್’. ಫೆ.26 ಮತ್ತು 27ರಂದು ರಂಗ ಶಂಕರದ ‘ಚಿಪ್ಪಿ, ದಿ ಚಿಕ್ಕಲಿ’. ನಾಟಕಗಳ ಪ್ರದರ್ಶನ ನಡೆಯಲಿದೆ. ನಾಟಕ ಸಂವಾದಗಳು: ಜಿಲ್ಲಾ ಕಸಾಪ ಸಭಾಂಗಣದಲ್ಲಿ ಪ್ರತಿದಿನ ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 3:00ರವರೆಗೆ ನಾಟಕ ಸಂವಾದಗಳು ನಡೆಯಲಿದೆ. ಫೆ.22ರಂದು ಬಿ. ಜಯಶ್ರೀಯವರಿಂದ ಕರ್ನಾಟಕದ ಕಂಪನಿ ನಾಟಕಗಳು, ಫೆ. 23ರಂದು ಎಚ್. ಕೆ. ಶ್ವೇತಾರಾಣಿಯವರಿಂದ ರಂಗಾಭಿನಯದ ಸೂಕ್ಷ್ಮತೆಗಳು, ಫೆ. 24ರಂದು ಕೃಷ್ಣಮೂರ್ತಿ ಹನೂರುರವರಿಂದ ನಾಟಕ ಮತ್ತು ಜಾನಪದ ಕಲೆಗಳು, ಫೆ.25ರಂದು ನಟರಾಜ್ ಹೊನ್ನವಳ್ಳಿರವರಿಂದ ನಿರ್ದೇಶನದ ಟಿಪ್ಪಣಿಗಳು, ಫೆ. 26ರಂದು ಜೆ. ಶ್ರೀನಿವಾಸಮೂರ್ತಿರವರಿಂದ ಭಾರತದ ಅಭಿಜಾತ ರಂಗಭೂಮಿ, ಫೆ. 27ರಂದು ಲಕ್ಷ್ಮಣ ಕೆ.ಪಿ.ಯವರಿಂದ ರಂಗ ಪಠ್ಯವನ್ನು ತಯಾರಿಸಿಕೊಳ್ಳುವುದು ಎಂಬ ವಿಷಯಗಳ ಬಗ್ಗೆ ನಾಟಕ ಸಂವಾದಗಳು ನಡೆಯಲಿದೆ.

ವಾರ್ತಾ ಭಾರತಿ 25 Jan 2026 11:25 pm

ರಾಮನಗರ ಜಿಲ್ಲಾಧಿಕಾರಿ ನನ್ನ ಫೋನ್ ಕರೆ ಸ್ವೀಕರಿಸಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿ ನನ್ನ ಮೊಬೈಲ್ ಕರೆಯನ್ನೇ ಸ್ವೀಕರಿಸಿಲ್ಲ. ನನ್ನ ಮೊಬೈಲ್ ಸಂಖ್ಯೆ ನೋಡಿದ ಕೂಡಲೇ ತೆಗೆಯುವುದೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ರವಿವಾರ ಇಲ್ಲಿನ ಭೈರಮಂಗಲ ಮತ್ತು ಕಂಚುಗಾನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಮನಗರ ಅಧಿಕಾರಿಗಳಿಗೆ ನಾನು ಎಚ್ಚರಿಕೆ ಕೊಡುತ್ತಿದ್ದು, ಯಾರೋ ಒತ್ತಡ ಹೇರಿದರೂ ತಪ್ಪು ಮಾಡಬೇಡಿ. ನಿವೃತ್ತರಾದರೂ ನೀವು ತಪ್ಪಿಸಿಕೊಳ್ಳಲು ಆಗಲ್ಲ. ಈ ಸರಕಾರ ಶಾಸಕರು, ಸಚಿವರ ಒತ್ತಡಕ್ಕೆ ಜನರಿಗೆ ದ್ರೋಹ ಬಗೆಯಬೇಡಿ ಎಂದು ಹೇಳಿದರು. ಬಿಡದಿ ಸುತ್ತಮುತ್ತಲಿನ ಫಲವತ್ತಾದ ಕೃಷಿ ಭೂಮಿಯನ್ನು ರಾಜ್ಯ ಸರಕಾರ ಅಕ್ರಮವಾಗಿ ಸ್ವಾಧೀನ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ. ಒಂದು ಇಂಚು ಭೂಮಿ ಸ್ವಾಧೀನಕ್ಕೂ ಅವಕಾಶ ನೀಡುವುದಿಲ್ಲ ಎಂದ ಅವರು, ನನ್ನ ಸಹೋದರಿಯರ ಈ ಭೂಮಿಯನ್ನು ಉಳಿಸಿಕೊಡುವ ಭಾರ ನನ್ನದು. ಒಂದು ಇಂಚು ಭೂಮಿಯನ್ನು ಬಿಡುವುದು ಬೇಡ. ಅದು ಹೇಗೆ ಸ್ವಾಧೀನ ಮಾಡಿಕೊಳ್ಳುತ್ತಾರೋ ನೋಡೋಣ ಎಂದು ರಾಜ್ಯ ಸರಕಾರಕ್ಕೆ ಸವಾಲು ಹಾಕಿದರು. ನೀವು ಯಾರೂ ಹೆದರಬೇಕಿಲ್ಲ, ನಿಮ್ಮ ಜತೆ ನಾನಿದ್ದೇನೆ. ಅದೇನೆ ಬಂದರೂ ಹೆದರಿಸೋಣ. ಸರಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಜನರು ಶಾಶ್ವತ. ಸರಕಾರಗಳು ಜನಾಭಿಪ್ರಾಯಕ್ಕೆ ಮಣಿಯಬೇಕು. ಇಲ್ಲವಾದರೆ ಹೇಗೆ ಬುದ್ಧಿ ಕಲಿಸಬೇಕು ಎಂಬುದು ಜನರಿಗೆ ಗೊತ್ತಿದೆ. ಇನ್ನೊಂದೆಡೆ, ಕೆಲವರು ಸ್ವಾಧೀನದ ಪರವಾಗಿದ್ದಾರೆ ಎನ್ನುವ ಮಾತು ಕೇಳಿದೆ. ಅದು ಒಳ್ಳೆಯದಲ್ಲ. ಸರಕಾರ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಈ ಫಲವತ್ತಾದ ಭೂಮಿಯನ್ನು ಅಗ್ಗದ ಬೆಲೆಗೆ ಹೊಡೆದುಕೊಳ್ಳಲು ಹೊರಟಿದೆ. ಕೆಲವರು ಈಗಾಗಲೇ ಬೇನಾಮಿಗಳ ಹೆಸರಿನಲ್ಲಿ ಲ್ಯಾಂಡ್ ಬ್ಯಾಂಕ್ ಮಾಡಿಕೊಂಡು ದರೋಡೆ ಮಾಡಲು ಹೊರಟಿದ್ದಾರೆ. ಅವರು ಜನರಿಗೆ, ಸರಕಾರಕ್ಕೆ ಮೋಸ, ವಂಚನೆ ಮಾಡುತ್ತಿದ್ದಾರೆ. ಇಂತಹವರನ್ನು ಬೀದಿಯಲ್ಲಿ ನಿಲ್ಲಿಸುವ ದಿನಗಳು ದೂರವಿಲ್ಲ ಕುಮಾರಸ್ವಾಮಿ ಹೇಳಿದರು.

ವಾರ್ತಾ ಭಾರತಿ 25 Jan 2026 11:22 pm

ಫೆ. 1ರಂದು ಮಾತುಕತೆ ಮುಂದುವರಿಸಲು ಉಕ್ರೇನ್, ರಶ್ಯ, ಅಮೆರಿಕ ಒಪ್ಪಿಗೆ

ಅಬುಧಾಬಿ, ಜ.25: ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆಯುವ ನೇರ ಮಾತುಕತೆಯ ಎರಡನೇ ಸುತ್ತನ್ನು ಫೆಬ್ರವರಿ 1ರಂದು ಮುಂದುವರಿಸಲು ಉಕ್ರೇನ್ ಮತ್ತು ರಶ್ಯ ಒಪ್ಪಿಕೊಂಡಿವೆ. ‘ಯುಎಇಯಲ್ಲಿ ತ್ರಿಪಕ್ಷೀಯ ಮಾತುಕತೆ ಫೆಬ್ರವರಿ 1ರಂದು ಮುಂದುವರಿಯಲಿದೆ. ಎಲ್ಲರನ್ನೂ ಒಟ್ಟುಗೂಡಿಸುವುದು ದೊಡ್ಡ ಹೆಜ್ಜೆಯೆಂದು ಭಾವಿಸುತ್ತೇನೆ. ಇದು ಒಂದು ತೀರ್ಮಾನಕ್ಕೆ ಬರಲು ಅಗತ್ಯವಿರುವ ವಿವರಗಳನ್ನು ನಿರೂಪಿಸುವಲ್ಲಿ ಸಾಕಷ್ಟು ಪ್ರಗತಿ ಸಾಧಿಸಿರುವುದಕ್ಕೆ ದೃಢೀಕರಣವಾಗಿದೆ’ ಎಂದು ಅಮೆರಿಕಾದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸುಮಾರು ನಾಲ್ಕು ವರ್ಷಗಳಿಂದ ಮುಂದುವರಿದಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಮುಂದಿರಿಸಿರುವ ಯೋಜನೆಯ ಬಗ್ಗೆ ರಶ್ಯ ಮತ್ತು ಉಕ್ರೇನ್ ಪ್ರತಿನಿಧಿಗಳು ಅಬುಧಾಬಿಯಲ್ಲಿ ಎರಡು ದಿನಗಳ ಕಾಲ ಮಾತುಕತೆ ನಡೆಸಿದ್ದಾರೆ. ಬಹಳಷ್ಟು ವಿಷಯಗಳನ್ನು ಚರ್ಚಿಸಲಾಗಿದೆ ಮತ್ತು ಮಾತುಕತೆ ರಚನಾತ್ಮಕವಾಗಿತ್ತು ಎಂಬುದೇ ಮುಖ್ಯವಾಗಿದೆ. ಯುದ್ಧವನ್ನು ಕೊನೆಗೊಳಿಸುವ ಸಂಭವನೀಯ ಮಾನದಂಡಗಳ ಕುರಿತು ಚರ್ಚೆ ಕೇಂದ್ರೀಕೃತವಾಗಿತ್ತು ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಎರಡೂ ಕಡೆಯ ಉನ್ನತ ಮಿಲಿಟರಿ ಅಧಿಕಾರಿಗಳನ್ನು ಒಳಗೊಂಡಿದ್ದ ಸಭೆ ರಚನಾತ್ಮಕ ಮತ್ತು ಸಕಾರಾತ್ಮಕ ವಾತಾವರಣದಲ್ಲಿ ನಡೆಯಿತು. ಮಾತುಕತೆಗಳು ಅಮೆರಿಕಾ ಪ್ರಸ್ತಾವಿತ ಶಾಂತಿ ಚೌಕಟ್ಟಿನ ಮಹತ್ವದ ಅಂಶಗಳು ಮತ್ತು ವಿಶ್ವಾಸ ನಿರ್ಮಾಣ ಕ್ರಮಗಳ ಮೇಲೆ ಕೇಂದ್ರೀಕೃತವಾಗಿದ್ದವು ಎಂದು ಯುಎಇ ಸರ್ಕಾರದ ವಕ್ತಾರರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ರಶ್ಯದ ಪಡೆಗಳು ಮುನ್ನಡೆ ಸಾಧಿಸಿರುವ ಉಕ್ರೇನ್ ನ ಪೂರ್ವ ಡೊನ್ಬಾಸ್ ಪ್ರಾಂತದ ಭವಿಷ್ಯದ ವಿಷಯವು ವಿವಾದ ಬಗೆಹರಿಸುವಲ್ಲಿ ಪ್ರಮುಖ ಸಮಸ್ಯೆಯಾಗಿದೆ. ಉಕ್ರೇನ್ ಪಡೆ ಈ ಪ್ರದೇಶದಿಂದ ಹಿಂದೆ ಸರಿಯಬೇಕು ಎಂದು ರಶ್ಯ ಪಟ್ಟುಹಿಡಿದಿದ್ದರೆ, ತನ್ನ ಭೂಪ್ರದೇಶವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಉಕ್ರೇನ್ ಸ್ಪಷ್ಟಪಡಿಸಿದೆ.

ವಾರ್ತಾ ಭಾರತಿ 25 Jan 2026 11:12 pm

ʼಬಸ್ ಕಂಡಕ್ಟರ್ TO ಪದ್ಮಶ್ರೀʼ: ಪುಸ್ತಕ ಪ್ರೀತಿಯ ಅಂಕೆ ಗೌಡರಿಗೆ ಪದ್ಮಶ್ರೀ ಗೌರವ

ಬೆಂಗಳೂರು: ಬಸ್ ಕಂಡಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿ, ತಮ್ಮ ಸಂಬಳದ ಬಹುಪಾಲನ್ನು ಪುಸ್ತಕಗಳ ಖರೀದಿಗೆ ಮೀಸಲಿಟ್ಟು, ನಂತರ ಪಾಂಡವಪುರದ ಸಕ್ಕರೆ ಕಾರ್ಖಾನೆಯಲ್ಲಿ ಸಮಯಪಾಲಕರಾಗಿ ಸೇವೆ ಸಲ್ಲಿಸಿದ ಹರಳಹಳ್ಳಿ ಗ್ರಾಮದ ಅವರಿಗೆ 2026ರ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಗ್ರಂಥ ಪಾಲಕತ್ವ ಮತ್ತು ಪುಸ್ತಕ ಸಂಗ್ರಹಣೆಯ ಕ್ಷೇತ್ರದಲ್ಲಿ ಜೀವಮಾನದ ಸೇವೆ ಸಲ್ಲಿಸಿದ ಅಂಕೆ ಗೌಡ ಅವರಿಗೆ ಈಗ 75 ವರ್ಷ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಅಂಕೆ ಗೌಡರು ನಡೆಸುತ್ತಿರುವ ‘ಪುಸ್ತಕ ಮನೆ’ (ಪುಸ್ತಕಗಳ ಮನೆ) ದೇಶದ ಅತಿದೊಡ್ಡ ವೈಯಕ್ತಿಕ ಗ್ರಂಥಾಲಯಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇಲ್ಲಿ 20 ಲಕ್ಷಕ್ಕೂ ಅಧಿಕ ಪುಸ್ತಕಗಳ ಸಂಗ್ರಹವಿದ್ದು, ಓದುಗರಿಗೆ ಉಚಿತ ಪ್ರವೇಶ ನೀಡಲಾಗುತ್ತಿದೆ. ಪುಸ್ತಕ ಮೇಲ್ವಿಚಾರಣೆ ಹಾಗೂ ಗ್ರಂಥಪಾಲಕರಾದ ಅಂಕೆ ಗೌಡರು ಪುಸ್ತಕಗಳ ಮೇಲೆ ಪುಸ್ತಕ ಕೂಡಿಟ್ಟು ಪುಸ್ತಕ ಮನೆ ಕಟ್ಟಿದರು. ಬಸ್ ಕಂಡಕ್ಟರ್ ಆಗಿದ್ದ ದಿನಗಳಿಂದ ಹಿಡಿದು ಪಾಂಡವಪುರದ ಸಕ್ಕರೆ ಕಾರ್ಖಾನೆಯಲ್ಲಿ ಸಮಯಪಾಲಕರಾಗಿ ಕೆಲಸ ಮಾಡುವ ವರೆಗೆ ಪುಸ್ತಕಗಳನ್ನು ಖರೀದಿಸಲು ತಮ್ಮ ಸಂಬಳದ ಪ್ರಮುಖ ಭಾಗವನ್ನು ಮೀಸಲಿಟ್ಟ ಅವರು, ಗ್ರಂಥಾಲಯದ ವಿಸ್ತರಣೆಯ ಸಲುವಾಗಿ ಮೈಸೂರಿನಲ್ಲಿದ್ದ ತಮ್ಮ ನಿವೇಶನವನ್ನು ಮಾರಾಟ ಮಾಡಿದ್ದಾರೆ. ಪುಸ್ತಕವೇ ತಮ್ಮ ಸರ್ವಸ್ವ ಎಂದು ಭಾವಿಸಿದ್ದ ಅವರು ನಿವೃತ್ತಿ ಹಣವನ್ನೂ ಪುಸ್ತಕ ಸಂಗ್ರಹಕ್ಕೆ ಹೂಡಿಕೆ ಮಾಡಿದ್ದಾರೆ. ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮದಲ್ಲಿ ಜನಿಸಿದ ಅಂಕೆ ಗೌಡರು, ಸಂಜೆ ಕಾಲೇಜಿನ ಮೂಲಕ ಉನ್ನತ ಶಿಕ್ಷಣ ಪಡೆದು ಬಿ.ಎ. ಪದವಿ ಪಡೆದರು. ನಂತರ ಕನ್ನಡದಲ್ಲಿ ಎಂ.ಎ. ಪದವಿ ಪಡೆದರು. ಅವರು 20ನೇ ವಯಸ್ಸಿನಲ್ಲಿ ಆರಂಭಿಸಿದ ಪುಸ್ತಕ ಸಂಗ್ರಹ ಇಂದು 20 ಲಕ್ಷ ಸಂಪುಟಗಳನ್ನು ಮೀರಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಂಶೋಧಕರಿಗೆ ವಿಶ್ವಾಸಾರ್ಹ ಶೈಕ್ಷಣಿಕ ಹಾಗೂ ಸಾಹಿತ್ಯಿಕ ಸಂಪನ್ಮೂಲಗಳಾಗಿ ಕಾರ್ಯನಿರ್ವಹಿಸುತ್ತಿದೆ. ಜೊತೆಗೆ, ಸ್ಥಳೀಯ ಸಮುದಾಯದಲ್ಲಿ ಓದುವ ಹವ್ಯಾಸ ಮತ್ತು ಸಾಹಿತ್ಯಿಕ ಜಾಗೃತಿಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಗ್ರಂಥಾಲಯದ ಸಂಗ್ರಹದಲ್ಲಿ ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ, ಮತ್ತು ತತ್ವಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳ ಪುಸ್ತಕಗಳಿವೆ. ಅಲ್ಲದೆ, 1832ರ ಹಿಂದಿನ ಅಪರೂಪದ ಐತಿಹಾಸಿಕ ಹಸ್ತಪ್ರತಿಗಳು, ಬಹು ಭಾಷೆಗಳ 5,000ಕ್ಕೂ ಅಧಿಕ ನಿಘಂಟುಗಳು, ಹಾಗೂ ಸುಮಾರು ಐದು ಲಕ್ಷ ಅಪರೂಪದ ವಿದೇಶಿ ಪುಸ್ತಕಗಳು ಅಂಕೆ ಗೌಡರ ಬಳಿ ಲಭ್ಯವಿವೆ. ಇದಲ್ಲದೆ, ಗ್ರಂಥಾಲಯದಲ್ಲಿ 20ಕ್ಕೂ ಹೆಚ್ಚು ಭಾರತೀಯ ಮತ್ತು ವಿದೇಶಿ ಭಾಷೆಗಳ ಪುಸ್ತಕಗಳು, 35,000 ಅಂತರರಾಷ್ಟ್ರೀಯ ನಿಯತಕಾಲಿಕೆಗಳು, 2,500 ಕನ್ನಡ ನಿಯತಕಾಲಿಕೆಗಳು, ಮಹಾತ್ಮ ಗಾಂಧಿಯವರ ಕುರಿತು 2,500 ಬರಹಗಳು, ಭಗವದ್ಗೀತೆಯ ಕುರಿತು 2,500 ಪುಸ್ತಕಗಳು, ಜೊತೆಗೆ ಬೈಬಲ್ ಸೇರಿದಂತೆ 100ಕ್ಕೂ ಹೆಚ್ಚು ಧಾರ್ಮಿಕ ಗ್ರಂಥಗಳು ಸಂಗ್ರಹಗಳಲ್ಲಿವೆ. ಉದ್ಯೋಗದಿಂದ ಲಭಿಸುವ ಆದಾಯ ಸೀಮಿತವಾಗಿದ್ದರೂ, ವೈಯಕ್ತಿಕ ಬೇಡಿಕೆಗಳನ್ನು ತ್ಯಾಗ ಮಾಡಿ, ಸಾರ್ವಜನಿಕ ಪ್ರಯೋಜನಕ್ಕಾಗಿ ಪುಸ್ತಕಗಳನ್ನು ಸಂಪಾದಿಸುವುದು ಮತ್ತು ಸಂರಕ್ಷಿಸುವುದಕ್ಕೆ ತಮ್ಮ ಆದಾಯದ ಬಹುಪಾಲು ಹಣವನ್ನು ಅವರು ಹೂಡಿಕೆ ಮಾಡಿದ್ದಾರೆ. ಅಂಕೆ ಗೌಡರು ಇದುವರೆಗೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. 2016ರಲ್ಲಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ (ಅತಿದೊಡ್ಡ ವೈಯಕ್ತಿಕ ಪುಸ್ತಕ ಸಂಗ್ರಹ), 2014ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2011ರಲ್ಲಿ ಆಳ್ವಾಸ್ ನುಡಿಸಿರಿ ಪ್ರಶಸ್ತಿ, ಹಾಗೂ 2009ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಿಕಾ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಅವರಿಗೆ ಸಂದಿವೆ.

ವಾರ್ತಾ ಭಾರತಿ 25 Jan 2026 11:09 pm

ರಫಾ ಗಡಿದಾಟು ತೆರೆಯಲು ಇಸ್ರೇಲ್‌ ಗೆ ಅಮೆರಿಕ ಆಗ್ರಹ

ಕದನ ವಿರಾಮದ ಮುಂದಿನ ಹಂತಕ್ಕೆ ಪ್ರವೇಶಿಸಲು ಆಗ್ರಹ

ವಾರ್ತಾ ಭಾರತಿ 25 Jan 2026 11:05 pm

ವಿವಾದಿತ ಗಡಿಯಲ್ಲಿ ಬುದ್ಧನ ಪ್ರತಿಮೆ ಸ್ಥಾಪಿಸಿದ ಥೈಲ್ಯಾಂಡ್: ಕಂಬೋಡಿಯಾ ಆಕ್ಷೇಪ

ಬ್ಯಾಂಕಾಕ್, ಜ.25: ಕಂಬೋಡಿಯಾದೊಂದಿಗಿನ ವಿವಾದಿತ ಗಡಿ ಪ್ರದೇಶದಲ್ಲಿ ಥೈಲ್ಯಾಂಡ್ ಬುದ್ಧನ ಪ್ರತಿಮೆಯನ್ನು ಸ್ಥಾಪಿಸಿದ್ದು, ಇದಕ್ಕೆ ಕಂಬೋಡಿಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸ್ಥಳೀಯರಲ್ಲಿ ಧಾರ್ಮಿಕ ಭಾವನೆ ಮತ್ತು ನೈತಿಕತೆಯನ್ನು ಹೆಚ್ಚಿಸುವ ಕ್ರಮವಾಗಿ ಬುದ್ಧನ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ಥೈಲ್ಯಾಂಡ್ ಸೇನೆ ಹೇಳಿದೆ. ವಿವಾದಿತ ಪ್ರದೇಶವನ್ನು ಥೈಲ್ಯಾಂಡ್ ‘ಆನ್ ಮಾ’ ಎಂದು ಹೆಸರಿಸಿದ್ದರೆ, ಕಂಬೋಡಿಯಾ ‘ಆನ್ ಸೆಸ್’ ಎಂದು ಕರೆಯುತ್ತದೆ. ಎರಡೂ ದೇಶಗಳ ನಡುವೆ ದೀರ್ಘಕಾಲದ ಪ್ರಾದೇಶಿಕ ವಿವಾದದ ಕೇಂದ್ರವಾಗಿರುವ ಈ ಸ್ಥಳದಿಂದ ಕಳೆದ ತಿಂಗಳು ಥೈಲ್ಯಾಂಡ್ ಪಡೆ ವಿಷ್ಣುವಿನ ಪ್ರತಿಮೆಯನ್ನು ತೆರವುಗೊಳಿಸಿದ್ದು, ಇದನ್ನು ಕಂಬೋಡಿಯಾ ಟೀಕಿಸಿತ್ತು. ಥೈಲ್ಯಾಂಡ್ ಮತ್ತು ಕಂಬೋಡಿಯಾ ಎರಡೂ ಪ್ರಧಾನವಾಗಿ ಬೌದ್ಧ ರಾಷ್ಟ್ರಗಳಾಗಿವೆ.

ವಾರ್ತಾ ಭಾರತಿ 25 Jan 2026 10:55 pm

IPL 2026- ಈ ಬಾರಿ ಧೋನಿ ಯಾವ ನಂಬರ್ ನಲ್ಲಿ ಬ್ಯಾಟಿಂಗ್?: 9ರಲ್ಲಂತೂ ಡೌಟು; ಹೀಗಿದೆ ಹಳೇ ಮಿತ್ರ ಬಿಟ್ಟುಕೊಟ್ಟ ಗುಟ್ಟು

R Ashwin On MS Dhoni- ಐಪಿಎಲ್ 2026ರ ಸೀಸನ್ ಗೆ ಇನ್ನೂ 2 ತಿಂಗಳು ಬಾಕಿ ಉಳಿದಿರುವಾಗಲೇ ಮಹೇಂದ್ರ ಸಿಂಗ್ ಧೋನಿ ಅವರು ಅಭ್ಯಾಸ ಆರಂಭಿಸಿದ್ದಾರೆ. ರಾಂಚಿಯಲ್ಲಿ ತರಬೇತಿ ನಡೆಸುತ್ತಿರುವ ಧೋನಿ ಅವರ ವಿಡಿಯೋಗಳು ವೈರಲ್ ಆಗಿವೆ. ಹೀಗಾಗಿ ಈ ಬಾರಿ ಅವರಿಂದ ಅಭಿಮಾನಿಗಳಿಗೆ ಬಹಳ ದೊಡ್ಡ ನಿರೀಕ್ಷೆ ಇದೆ. ಅವರ ಮಾಜಿ ಸಹೋದ್ಯೋಗಿ ರವಿಚಂದ್ರನ್ ಅಶ್ವಿನ್ ಅವರ ಪ್ರಕಾರ ಧೋನಿ ಅವರು ಈ ಬಾರಿ ಡೆತ್ ಓವರ್‌ಗಳ ಬದಲಿಗೆ ಪವರ್‌ಪ್ಲೇನಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ.

ವಿಜಯ ಕರ್ನಾಟಕ 25 Jan 2026 10:54 pm

ಮಂಗಳೂರಿನ ಲಿಶಾ ಡಿ.ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್

ಮಂಗಳೂರು: ಎನ್‌ಸಿಸಿ ಕೆಡೆಟ್ ಮಂಗಳೂರಿನ ಲಿಶಾ ಡಿ.ಸುವರ್ಣರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನೀಡುವ ಅತ್ಯುನ್ನತ ಪ್ರಶಂಸಾ ಗೌರವ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್ ಲಭಿಸಿದೆ. ಜ.24ರಂದು ಹೊಸದಿಲ್ಲಿಯ ಆರ್‌ಡಿಸಿ 2026 ಕ್ಯಾಂಪಸ್‌ನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಿಶಾರಿಗೆ ಅತ್ಯುನ್ನತ ಪ್ರಶಸ್ತಿ ಪ್ರದಾನ ಮಾಡಿದರು. ದೇಶದ 6 ಮಂದಿ ಎನ್‌ಸಿಸಿ ಕೆಡೆಟ್‌ಗಳಿಗೆ ಈ ಬಾರಿ ಪ್ರಶಸ್ತಿ ನೀಡಲಾಗಿದ್ದು, ಈ ಪೈಕಿ ಲಿಶಾ ಅವರು ನೇವಿ ಪರ ಭಾರತದಲ್ಲಿ ಈ ಗೌರವ ಪಡೆದ ಏಕೈಕ ಎನ್‌ಸಿಸಿ ಕೆಡೆಟ್ ಆಗಿದ್ದಾರೆ. ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನಲ್ಲಿ ಅಸಾಧಾರಣ ನಾಯಕತ್ವ, ಧೈರ್ಯ, ಕರ್ತವ್ಯ ನಿಷ್ಠೆ ಅಥವಾ ಎನ್‌ಸಿಸಿ ಗೆ ನೀಡಿದ ಗಮನಾರ್ಹ ಕೊಡುಗೆಗಳಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸಾಮಾನ್ಯವಾಗಿ ಗಣರಾಜ್ಯೋತ್ಸವ ಶಿಬಿರದಂತಹ ಕಾರ್ಯಕ್ರಮಗಳಲ್ಲಿ ಈ ವರೆಗೆ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್ ಗೌರವವು ಉತ್ತರ ಭಾರತದ ಎನ್‌ಸಿಸಿ ಕೆಡೆಟ್‌ಗಳೇ ಆಯ್ಕೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನ ಕೆಡೆಟ್‌ಗೆ ಈ ಗೌರವ ಲಭಿಸಿರುವುದು ವಿಶೇಷ. ಮಂಗಳೂರು ಕೂಳೂರು ನಿವಾಸಿ ದೇಜಪ್ಪ ಬಂಗೇರ ಹಾಗೂ ಮಲ್ಲಿಕಾ ದಂಪತಿ ಪುತ್ರಿಯಾಗಿರುವ ಇವರು ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಕಳೆದ ವರ್ಷ ಇವರು ಆರ್‌ಡಿಸಿಯಲ್ಲಿ ಭಾಗವಹಿಸಿದ್ದರು. ಕೆಡೆಟ್ ಲಿಶಾ ಡಿ ಎಸ್ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದಿಂದ ಅತ್ಯುತ್ತಮ ಕೆಡೆಟ್ ಆಗಿ ಆರ್‌ಡಿಸಿ ಯನ್ನು ಪೂರ್ಣಗೊಳಿಸಿದ ದೇಶದ ಟಾಪ್ 5 ರಲ್ಲಿ ಒಬ್ಬರಾಗಿದ್ದರು. ಲಿಶಾ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರಿಂದ ಆಲ್ ಇಂಡಿಯಾ ಬೆಸ್ಟ್ ಫ್ಲಾಗ್ ಏರಿಯಾ ಬ್ರೀಫರ್ ಪ್ರಶಸ್ತಿಯನ್ನು ಜಯಿಸಿದ್ದರು.ಡಿಜಿ ಎನ್‌ಸಿಸಿಯಿಂದ ರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾದ ಸಾಂಸ್ಕೃತಿಕ, ಡ್ರಿಲ್, ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಫೈರಿಂಗ್ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ವಾರ್ತಾ ಭಾರತಿ 25 Jan 2026 10:53 pm

ಔರಾದ್ | ಶಿವಕುಮಾರ್ ಬಂಬುಳಗೆ ರಾಜ್ಯ ಮಟ್ಟದ ಅತ್ಯುತ್ತಮ ಮತಗಟ್ಟೆ ಅಧಿಕಾರಿ ಪ್ರಶಸ್ತಿ

ಔರಾದ್ : ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಶಿಕ್ಷಕ ಶಿವಕುಮಾರ್ ಬಂಬುಳಗೆ ಅವರಿಗೆ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಮತಗಟ್ಟೆ ಅಧಿಕಾರಿ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಪುಟ್ಟಣ್ಣ ಚಟ್ಟಿ ಟೌನ್ ಹಾಲ್ ನಲ್ಲಿ ರವಿವಾರ ನಡೆದ ರಾಜ್ಯಮಟ್ಟದ 16ನೇ ರಾಷ್ಟ್ರೀಯ ಮತರಾರರ ದಿನಾಚರಣೆಯಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬುಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ವಾರ್ತಾ ಭಾರತಿ 25 Jan 2026 10:52 pm

Chhattisgarh: ಮತಾಂತರ; ಎರಡು ಕುಟುಂಬಗಳ ಸದಸ್ಯರಿಗೆ ಥಳಿತ

ರಾಯಪುರ, ಜ. 25: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಎರಡು ಕುಟುಂಬಗಳಿಗೆ ಥಳಿಸಿ, ಹಳ್ಳಿ ತೊರೆಯುವಂತೆ ಸೂಚಿಸಿದ ಘಟನೆ ಛತ್ತೀಸ್ಗಢದ ದಕ್ಷಿಣ ಬಸ್ತಾರ್‌ ನ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ. ನಾರಾಯಣಪುರ ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ. ದೂರದಲ್ಲಿರುವ ಇಕ್ನಾರ್ ಗ್ರಾಮದಲ್ಲಿ ದಶಕಗಳಿಂದ ಆರೋಗ್ಯ ಸೇವೆ, ಶಿಕ್ಷಣ ಹಾಗೂ ರಸ್ತೆಗಳಂತಹ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಇಕ್ನಾರ್ ಗ್ರಾಮದಲ್ಲಿ ಒಟ್ಟು 18 ಕುಟುಂಬಗಳಿವೆ. ಅವುಗಳಲ್ಲಿ ಎರಡು ಕುಟುಂಬಗಳು ಐದು ವರ್ಷಗಳ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿವೆ. ಮತಾಂತರಗೊಂಡ ಕುಟುಂಬಗಳು ಸಾಂಪ್ರದಾಯಿಕ ಪದ್ಧತಿ ಹಾಗೂ ಧಾರ್ಮಿಕ ಆಚರಣೆಗಳನ್ನು ವಿರೋಧಿಸುತ್ತಿವೆ ಎಂದು ಗ್ರಾಮಸ್ಥರು ಪ್ರತಿಪಾದಿಸಿದ್ದಾರೆ. ಮತಾಂತರದ ವಿಷಯವನ್ನು ಸೌಹಾರ್ದಯುತವಾಗಿ ಪರಿಹರಿಸಲು ಕೆಲವು ಸ್ಥಳೀಯರು ಈ ಕುಟುಂಬಗಳೊಂದಿಗೆ ಚರ್ಚಿಸಲು ಪ್ರಯತ್ನಿಸಿದಾಗ ಉದ್ವಿಗ್ನತೆ ಉಂಟಾಗಿದೆ. ಅವರು ತಮಗೆ ಥಳಿಸಿದರು, ತಮ್ಮ ವಸ್ತುಗಳನ್ನು ಮನೆಯಿಂದ ಹೊರಗೆಸೆದರು. ಸಂಗ್ರಹಿಸಿಟ್ಟಿದ್ದ ಪಡಿತರ ಹಾಗೂ ಪ್ರಮುಖ ದಾಖಲೆಗಳಿಗೆ ಬೆಂಕಿ ಹಚ್ಚಿದರು ಎಂದು ಮತಾಂತರಗೊಂಡ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ‘‘ನಾವು ಪ್ರಾರ್ಥನೆಗೆ ಹಾಜರಾಗುತ್ತಿದ್ದುದರಿಂದ ಮತಾಂತರದ ಬಗ್ಗೆ ಗ್ರಾಮಸ್ಥರು ನಮ್ಮ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ನಮ್ಮ ಮನೆಗಳಿಗೆ ಹಾನಿ ಮಾಡಲಾಗಿದೆ. ಗ್ರಾಮ ತ್ಯಜಿಸುವಂತೆ ಸೂಚಿಸಲಾಗಿದೆ. ಗಾಯಗೊಂಡ ಸದಸ್ಯರು ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗ್ರಾಮಸ್ಥರು ತಮ್ಮ ನಂಬಿಕೆಯನ್ನು ಅನುಸರಿಸುತ್ತಿದ್ದಾರೆ. ಅದೇ ರೀತಿ ಅವರು ನಮ್ಮ ಕ್ರೈಸ್ತ ಧರ್ಮದ ನಂಬಿಕೆಯನ್ನು ಅನುಸರಿಸಲು ಕೂಡ ಅವಕಾಶ ನೀಡಬೇಕು’’ ಎಂದು ಸಂತ್ರಸ್ತರೊಬ್ಬರು ಹೇಳಿದ್ದಾರೆ.

ವಾರ್ತಾ ಭಾರತಿ 25 Jan 2026 10:50 pm

ಪಠ್ಯಪುಸ್ತಕಗಳಿಂದ ಮೊಘಲರನ್ನು ತೆಗೆಯುವುದು ಅರ್ಥಹೀನ, ಇತಿಹಾಸ ನಿರಂತರವಾಗಿರಬೇಕು: ಇತಿಹಾಸಕಾರ್ತಿ ರೊಮಿಲಾ ಥಾಪರ್

ಕೋಝಿಕ್ಕೋಡ್ (ಕೇರಳ), ಜ.25: ಇತಿಹಾಸವು ನಿರಂತರ ಪ್ರಕ್ರಿಯೆಯಾಗಿದ್ದು, ಅದನ್ನು ತುಣುಕುಗಳಲ್ಲಿ ಕಲಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಖ್ಯಾತ ಇತಿಹಾಸಕಾರ್ತಿ ರೊಮಿಲಾ ಥಾಪರ್, ಪಠ್ಯಪುಸ್ತಕಗಳಿಂದ ಮೊಘಲರಂತಹ ಇಡೀ ರಾಜವಂಶಗಳನ್ನು ತೆಗೆದುಹಾಕುವ ಪರಿಪಾಠವು ಅರ್ಥಹೀನವಾಗಿದೆ ಎಂದಿದ್ದಾರೆ. ಇಲ್ಲಿ ನಡೆದ ಕೇರಳ ಸಾಹಿತ್ಯೋತ್ಸವದಲ್ಲಿ ಶನಿವಾರ ಆನ್‌ಲೈನ್‌ನಲ್ಲಿ ಮಾತನಾಡಿದ ಥಾಪರ್, ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚೆಚ್ಚಾಗಿ ಹರಡುತ್ತಿರುವ ಜನಪ್ರಿಯ ಇತಿಹಾಸದಿಂದ ಹಿಡಿದು ಸ್ತ್ರೀವಾದಿ ಇತಿಹಾಸದ ಪ್ರಾಮುಖ್ಯ ಮತ್ತು ಅಸ್ತಿತ್ವದಲ್ಲಿರುವ ಜ್ಞಾನವನ್ನು ಪ್ರಶ್ನಿಸುವಲ್ಲಿ ಶಿಕ್ಷಣದ ಕೇಂದ್ರ ಪಾತ್ರದವರೆಗೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದರು. ‘ಇಂದು ನಡೆಯುತ್ತಿರುವ ಬೆಳವಣಿಗೆಗಳು — ಉದಾಹರಣೆಗೆ ಪಠ್ಯಕ್ರಮದಿಂದ ಇತಿಹಾಸದ ದೊಡ್ಡ ಭಾಗಗಳನ್ನು ತೆಗೆದುಹಾಕುತ್ತಿರುವುದು ಅಥವಾ ನಾವು ಅವುಗಳ ಅಧ್ಯಯನ ಮಾಡುವ ಅಗತ್ಯವಿಲ್ಲ ಎಂದು ಹೇಳುತ್ತಿರುವುದು — ಇವೆಲ್ಲ ಅರ್ಥಹೀನವಾಗಿವೆ. ಇತಿಹಾಸವು ನಿರಂತರ ಪ್ರಕ್ರಿಯೆಯಾಗಿದೆ. ಅದು ಜನರು ಮತ್ತು ಸಂಸ್ಕೃತಿಗಳ, ನಡೆನುಡಿಗಳ ಮತ್ತು ಚಿಂತನೆಯ ವಿಕಸನವಾಗಿದೆ’ ಎಂದು ಹೇಳಿದರು. ‘ಮಹಿಳಾ ಬರವಣಿಗೆ ಇತಿಹಾಸ: ಮೂರು ತಲೆಮಾರುಗಳು’ ವಿಚಾರಗೋಷ್ಠಿಯಲ್ಲಿ ಮಾತನಾಡುತ್ತಿದ್ದ 25ಕ್ಕೂ ಅಧಿಕ ವಿದ್ವತ್ಪೂರ್ಣ ಪುಸ್ತಕಗಳನ್ನು ರಚಿಸಿರುವ ಥಾಪರ್, ‘ಸರಿ, ಈ ರಾಜವಂಶವನ್ನು ತೆಗೆದುಹಾಕೋಣ, ಮೊಘಲರನ್ನು ತೆಗೆಯೋಣ ಎಂದು ಹೇಳುವುದರಿಂದ ಇತಿಹಾಸದ ನಿರಂತರತೆಯನ್ನು ಮುರಿಯಲಾಗುವುದಿಲ್ಲ. ಅದು ಇತಿಹಾಸವನ್ನು ತುಂಡರಿಸುತ್ತದೆ ಮತ್ತು ಅದಕ್ಕೆ ಯಾವುದೇ ಅರ್ಥವಿಲ್ಲ’ ಎಂದು ಹೇಳಿದರು. ಎನ್‌ಸಿಇಆರ್‌ಟಿ 2025–26ನೇ ಶೈಕ್ಷಣಿಕ ವರ್ಷದಿಗಾಗಿ ತನ್ನ ಏಳನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಪರಿಷ್ಕರಿಸಿದ್ದು, ದಿಲ್ಲಿಯ ಸುಲ್ತಾನರು ಮತ್ತು ಮೊಘಲರ ಕುರಿತ ಅಧ್ಯಾಯಗಳನ್ನು ತೆಗೆದುಹಾಕಿದೆ ಎಂದು ಹೇಳಲಾಗಿದೆ. ಎನ್‌ಸಿಇಆರ್‌ಟಿ ಈಗ ಮೌರ್ಯರು, ಶುಂಗರು, ಶಾತವಾಹನರಂತಹ ಪ್ರಾಚೀನ ಭಾರತೀಯ ರಾಜವಂಶಗಳ ಜೊತೆಗೆ ವಿವಿಧ ಧಾರ್ಮಿಕ ಪರಂಪರೆಗಳ ಸಾಂಸ್ಕೃತಿಕ ಆಚರಣೆಗಳು ಮತ್ತು ಪವಿತ್ರ ಸ್ಥಳಗಳ ಮೇಲೆ ಕೇಂದ್ರೀಕರಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ‘ಜನಪ್ರಿಯ ಇತಿಹಾಸ’ದ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ 93ರ ಹರೆಯದ ಥಾಪರ್, ಅದು ಮಾಹಿತಿಪೂರ್ಣ ಪಾಂಡಿತ್ಯ ಮತ್ತು ವೈಯಕ್ತಿಕ ಅಭಿಪ್ರಾಯದ ನಡುವಿನ ರೇಖೆಯನ್ನು ಮಸುಕುಗೊಳಿಸುತ್ತಿದೆ ಎಂದರು. ಭೂತಕಾಲದ ಘಟನೆಗಳ ಕುರಿತು ನಿಖರವಾದ ವಿವರಣೆಗಳನ್ನು ತಿಳಿದುಕೊಳ್ಳಲು ವೃತ್ತಿಪರ ಇತಿಹಾಸಕಾರರ ಹೇಳಿಕೆಗಳನ್ನು ಅವಲಂಬಿಸುವಂತೆ ಅವರು ಜನರನ್ನು ಆಗ್ರಹಿಸಿದರು. ಇಂದು ಜನಪ್ರಿಯ ಇತಿಹಾಸ ಮತ್ತು ವೃತ್ತಿಪರ ಇತಿಹಾಸಕಾರರ ಬರವಣಿಗೆಯ ನಡುವೆ ವ್ಯತ್ಯಾಸವಿದೆ. ಈ ವ್ಯತ್ಯಾಸವನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಯಾವುದೇ ಐತಿಹಾಸಿಕ ಹೇಳಿಕೆಯನ್ನು ಉಲ್ಲೇಖಿಸುವಾಗ ಅದರ ಮೂಲ ವೃತ್ತಿಪರ ಇತಿಹಾಸಕಾರರ ಬರವಣಿಗೆಯೇ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾದ ಅಭಿಪ್ರಾಯವೇ ಎನ್ನುವುದನ್ನು ತಿಳಿದಿರಬೇಕು ಎಂದು ಥಾಪರ್ ವಿವರಿಸಿದರು. ಇತಿಹಾಸಕಾರ್ತಿಯಾಗಿ ತನ್ನ ಸ್ವಂತ ಪಯಣದ ಕುರಿತು ಮಾತನಾಡಿದ ಅವರು, ತನ್ನ ವೃತ್ತಿಜೀವನದುದ್ದಕ್ಕೂ ಮಹಿಳೆಯ ದೃಷ್ಟಿಕೋನದಿಂದ ತಾನು ಪ್ರಜ್ಞಾಪೂರ್ವಕವಾಗಿ ಇತಿಹಾಸವನ್ನು ಬರೆದಿಲ್ಲದಿರಬಹುದು, ಆದರೆ ಸಾಧ್ಯವಾದಲ್ಲೆಲ್ಲ ಸ್ತ್ರೀವಾದಿ ಒಳನೋಟಗಳನ್ನು ಬಿಂಬಿಸಲು ನಿರಂತರವಾಗಿ ಯತ್ನಿಸಿದ್ದೇನೆ ಎಂದರು.

ವಾರ್ತಾ ಭಾರತಿ 25 Jan 2026 10:44 pm

ಔರಾದ್ | ನಾಗಮಾರಪಳ್ಳಿ ಗ್ರಾಮ ಆಡಳಿತ ಅಧಿಕಾರಿ ಅನ್ವರ್ ಜಕಾತಿಗೆ ರಾಜ್ಯಮಟ್ಟದ ಅತ್ಯುತ್ತಮ ಮತಗಟ್ಟೆ ಮೇಲ್ವಿಚಾರಕ ಪ್ರಶಸ್ತಿ

ಔರಾದ್: ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಅನ್ವರ್ ಜಕಾತಿ ಅವರಿಗೆ 2025–26ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಮತಗಟ್ಟೆ ಮೇಲ್ವಿಚಾರಕ ಪ್ರಶಸ್ತಿ ಲಭಿಸಿದೆ. ಬೆಂಗಳೂರು ನಗರದ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್‌ನಲ್ಲಿ ರವಿವಾರ ಆಯೋಜಿಸಲಾದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ. ಅನ್ಬುಕುಮಾರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅನ್ವರ ಜಕಾತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ವಾರ್ತಾ ಭಾರತಿ 25 Jan 2026 10:43 pm

Gaza Peace: ಗಾಜಾ ಭವಿಷ್ಯದ ಬಗ್ಗೆ ಇಸ್ರೇಲ್ ಮತ್ತು ಮಿತ್ರರ ಜೊತೆಗೆ ಅಮೆರಿಕ ಮಹತ್ವದ ಚರ್ಚೆ

ಗಾಜಾ ಪಟ್ಟಿಯಲ್ಲಿ ಭೀಕರ ಕದನ ನಡೆದು, ಇಡೀ ಗಾಜಾ ಪಟ್ಟಿಯೇ ಹಾಳಾಗಿ ಹೋಗಿದೆ. ಹಮಾಸ್ ಮಾಡಿದ ಕೃತ್ಯಕ್ಕೆ ಇಸ್ರೇಲ್ ನುಗ್ಗಿ ಬಂದು ಯುದ್ಧ ಮಾಡಿ, ಇಡೀ ಗಾಜಾ ಪಟ್ಟಿಯನ್ನೇ ಧ್ವಂಸ ಮಾಡಿ ಹಾಕಿದೆ ಎಂದು ಪಾಶ್ಚಿಮಾತ್ಯ ದೇಶಗಳು ಹೇಳುತ್ತಿವೆ. ಆದರೆ ಇಸ್ರೇಲ್ ಮಾಡಿದ್ದು ತಪ್ಪು ಎಂದು ಅತ್ತ ಪಾಶ್ಚಿಮಾತ್ಯ ದೇಶಗಳ ಎದುರಾಳಿ ದೇಶಗಳು ಆರೋಪ ಮಾಡುತ್ತಿವೆ. ಅದೆಲ್ಲಾ

ಒನ್ ಇ೦ಡಿಯ 25 Jan 2026 10:31 pm

ರಾಯಚೂರು | ಕೋಟ್ಯಾಂತರ ರೂ. ಖರ್ಚಾದರೂ ಕುಡಿಯುವ ನೀರಿನ ಯೋಜನೆ ಅಪೂರ್ಣ: ಭೀಮರಾಯಸ್ವಾಮಿ ಆರೋಪ

ರಾಯಚೂರು: ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಕೋಟಿ ಕೋಟಿ ರೂ. ಅನುದಾನ ಮಂಜೂರಾಗಿದ್ದರೂ ಕುಡಿಯುವ ನೀರಿನ ಯೋಜನೆ ಇದುವರೆಗೂ ಪೂರ್ಣಗೊಂಡಿಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಉದ್ದೇಶಪೂರ್ವಕವಾಗಿ ಯೋಜನೆ ಜಾರಿಯಾಗದಂತೆ ತಡೆಯುತ್ತಿದ್ದಾರೆ ಎಂದು ಅತ್ತನೂರು ಕುಡಿಯುವ ನೀರು ಹೋರಾಟ ಸಮಿತಿಯ ಅಧ್ಯಕ್ಷ ಭೀಮರಾಯಸ್ವಾಮಿ ಆರೋಪಿಸಿದರು. ಅವರು ಮಂಗಳವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 2009–10ನೇ ಸಾಲಿನಲ್ಲಿ ರಾಜೀವ್ ಗಾಂಧಿ ಮಿಷನ್ ಯೋಜನೆಯಡಿ ಗ್ರಾಮಕ್ಕೆ 9 ಕೋಟಿ 53 ಲಕ್ಷ ರೂ. ಅನುದಾನ ಮಂಜೂರಾಗಿತ್ತು. 11 ತಿಂಗಳೊಳಗೆ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಮಧ್ಯದಲ್ಲೇ ಸ್ಥಗಿತಗೊಂಡಿತು ಎಂದು ಹೇಳಿದರು. ಯೋಜನೆ ಮಂಜೂರಾದ ಎಂಟು ವರ್ಷಗಳ ನಂತರ 2018ರಲ್ಲಿ ಮಾತ್ರ ಕೆರೆ ಜಾಗ ನೋಂದಣಿ ನಡೆದಿದ್ದು, ತಜ್ಞರ ಸಮಿತಿ ಸ್ಥಳ ಪರಿಶೀಲನೆ ನಡೆಸಿ ಸ್ಥಳ ಬದಲಾವಣೆ ಮಾಡಿದ ಬಳಿಕ 2020ರಲ್ಲಿ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿತು. ಮರು ಟೆಂಡರ್ ಕರೆಯದೇ ಜಿಲ್ಲಾ ಪಂಚಾಯತ್ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರಿಂದ ಯೋಜನೆ ಮುಂದುವರಿಯಲಿಲ್ಲ ಎಂದು ದೂರಿದರು. ಅದೇ ಕುಡಿಯುವ ನೀರಿನ ಯೋಜನೆಗೆ ಜಲ ಜೀವನ ಮಿಷನ್ ಯೋಜನೆಯಡಿ ಮತ್ತೆ 1 ಕೋಟಿ 30 ಲಕ್ಷ ರೂ. ಅನುದಾನ ಮಂಜೂರಾದರೂ, ಗ್ರಾಮಸ್ಥರಿಗೆ ಇನ್ನೂ ಕುಡಿಯುವ ನೀರು ದೊರಕಿಲ್ಲ. ಗ್ರಾಮಕ್ಕೆ ಸೇರಿದ 17 ಎಕರೆ 17 ಗುಂಟೆ ಕೆರೆ ಜಾಗದಲ್ಲಿ ಕಾಮಗಾರಿ ನಡೆಯದೇ ಇರುವುದರಿಂದ ಅಕ್ರಮ ಮರಳು ದಂಧೆ ಆರಂಭವಾಗಿದೆ. ಇದನ್ನು ತಡೆಯಲು ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಕ್ಷೇತ್ರದ ಶಾಸಕರು, ಅಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ, ಗ್ರಾಮಸ್ಥರು ರಸ್ತೆಯಲ್ಲೇ ನೀರು ಹೊತ್ತುಕೊಂಡು ಹೋಗುವ ಸ್ಥಿತಿ ಇದ್ದರೂ ಯಾರಿಗೂ ಕರುಣೆ ಕಾಣಿಸುತ್ತಿಲ್ಲ. ಗ್ರಾಮದಲ್ಲಿ ನೀರಿನ ಬವಣೆ ತೀವ್ರವಾಗಿದೆ ಎಂದು ಹೇಳಿದರು. ಕುಡಿಯುವ ನೀರಿನ ಅಕ್ರಮಗಳ ಕುರಿತು ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರು ಸದನದಲ್ಲಿ ಪ್ರಶ್ನೆ ಎತ್ತಿದ್ದು,  ಗ್ರಾಮೀಣಾಭಿವೃದ್ಧಿ ಸಚಿವರು 2025ರ ಡಿಸೆಂಬರ್ ವೇಳೆಗೆ ಜಲ ಜೀವನ ಮಿಷನ್ ಕಾಮಗಾರಿ ಪೂರ್ಣಗೊಳಿಸಿ ಮನೆಮನೆಗೆ ನೀರು ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಅವಧಿ ಮುಗಿದರೂ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಹಾಗೂ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಇಲಾಖಾ ಸಚಿವರಿಗೆ ತಪ್ಪು ಮಾಹಿತಿ ನೀಡಿ ದಾರಿತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಉಸ್ತುವಾರಿ ಸಚಿವರು ಯೋಜನೆಯನ್ನು ತನಿಖೆಗೆ ಒಳಪಡಿಸಿ, ಯೋಜನೆ ಜಾರಿಗೆ ಅಡ್ಡಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಬೇಸಿಗೆ ಆರಂಭಕ್ಕೂ ಮುನ್ನ ನೀರಿನ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಸಮಿತಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಹನುಂತ್ರಾಯ ಗಚ್ಚಿನಮನೆ, ಬಸವಂತ ಪಾಟೀಲ್ (ವಕೀಲ), ಬಸವರಾಜ ನಾಯಕ (ಅತ್ತನೂರು), ಶಿವುಪುತ್ರ ನಾಯಕ, ಹಮೀದ ಪಾಷಾ, ಇರ್ಫಾನ್ ಅತ್ತನೂರು, ಅಮರೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 25 Jan 2026 10:15 pm

ಶಿವಮೊಗ್ಗದ ದುರ್ಗಿಗುಡಿ ಬಳಿಯ ವಿವಾದಿತ ಜಾಗ ಸ್ವಾಧೀನಕ್ಕೆ ಪಾಲಿಕೆಗೆ ಹೈಕೋರ್ಟ್‌ ಆದೇಶ! 65 ವರ್ಷದ ಕೇಸ್‌ಗೆ ತೀರ್ಪು

ಶಿವಮೊಗ್ಗದ ದುರ್ಗಿಗುಡಿ ಪ್ರದೇಶದ ವಿವಾದಿತ ಜಾಗವನ್ನು ಮಹಾನಗರ ಪಾಲಿಕೆ ವಶಕ್ಕೆ ಪಡೆಯಲು ಹೈಕೋರ್ಟ್ ಆದೇಶಿಸಿದೆ. ಅರ್ಜಿದಾರರು ಹಾಗೂ ಅವರ ಉತ್ತರಾಧಿಕಾರಿಗಳು ಈ ಜಾಗದ ಬಗ್ಗೆ ಯಾವುದೇ ನ್ಯಾಯಾಲಯದಲ್ಲಿ ವ್ಯಾಜ್ಯ ಹೂಡುವಂತಿಲ್ಲ. 1959 ರಿಂದಲೂ ಈ ಜಾಗದ ಕುರಿತು ವ್ಯಾಜ್ಯ ನಡೆಯುತ್ತಿತ್ತು. ನ್ಯಾಯಾಲಯದ ಆದೇಶದಂತೆ ಪಾಲಿಕೆಗೆ ಜಾಗದ ಪ್ರಯೋಜನ ಪಡೆಯಲು ಅವಕಾಶ ನೀಡಲಾಗಿಲ್ಲ. ಅರ್ಜಿದಾರರು ಮಹಾನಗರ ಪಾಲಿಕೆ ಮುಂದೆ ತಮ್ಮ ಹಕ್ಕು ಒಪ್ಪಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.

ವಿಜಯ ಕರ್ನಾಟಕ 25 Jan 2026 10:14 pm

Tamil Nadu | ಚುನಾವಣೆಯಲ್ಲ, ಪ್ರಜಾಪ್ರಭುತ್ವಕ್ಕಾಗಿ ಯುದ್ಧ: CBI ತನಿಖೆ ನಡುವೆ ಗುಡುಗಿದ ನಟ ವಿಜಯ್

ಮಾಮಲ್ಲಾಪುರಂ (ತಮಿಳುನಾಡು), ಜ.25: ಸಿಬಿಐ ವಿಚಾರಣೆ ಮತ್ತು ತನ್ನ ಮುಂಬರುವ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಎದುರಾಗಿರುವ ಅಡೆತಡೆಗಳ ನಡುವೆಯೇ ಖ್ಯಾತ ತಮಿಳು ನಟ-ರಾಜಕಾರಣಿ ಹಾಗೂ ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರು ತಾನು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ, ಯಾರ ಎದುರೂ ತಲೆಬಾಗುವುದಿಲ್ಲ ಎಂದು ರವಿವಾರ ಇಲ್ಲಿ ಹೇಳಿದ್ದಾರೆ. ತನ್ಮೂಲಕ ತಮ್ಮ ರಾಜಕೀಯ ವಿರೋಧಿಗಳಿಗೆ ಖಡಕ್ ಸಂದೇಶವೊಂದನ್ನು ರವಾನಿಸಿದ್ದಾರೆ. ಮಾಮಲ್ಲಾಪುರಂನಲ್ಲಿ ಪಕ್ಷದ ಕಾರ್ಯತಂತ್ರ ಸಭೆಯಲ್ಲಿ 3,000ಕ್ಕೂ ಅಧಿಕ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ವಿಜಯ್, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿ, ‘ಇದು ಕೇವಲ ಚುನಾವಣೆಯಲ್ಲ, ಬದಲಾಗಿ ಪ್ರಜಾಪ್ರಭುತ್ವ ಯುದ್ಧವಾಗಿದೆ. ಈ ಯುದ್ಧವನ್ನು ಗೆಲ್ಲಲು ನೀವೇ ನನ್ನ ಕಮಾಂಡೋಗಳು’ ಎಂದು ಹೇಳಿದರು. ಡಿಎಂಕೆ ಮತ್ತು ಮುಖ್ಯ ಪ್ರತಿಪಕ್ಷ ಎಐಎಡಿಎಂಕೆ ವಿರುದ್ಧ ದಾಳಿ ನಡೆಸಿದ ವಿಜಯ್, ತಮ್ಮ ಪಕ್ಷದ ಹೆಸರಿನಲ್ಲಿ ‘ಅಣ್ಣಾ’ ಇರುವವರು ಸೇರಿದಂತೆ ಇಂದು ರಾಜಕೀಯದಲ್ಲಿರುವವರು ಅಣ್ಣಾದುರೈ ಅವರನ್ನು ಮರೆತಿದ್ದಾರೆ ಎಂದು ಟೀಕಿಸಿದರು. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದುರೈ ಅವರು ದ್ರಾವಿಡ ರಾಜಕೀಯದ ಪ್ರಮುಖ ಸಿದ್ಧಾಂತಕಾರರಾಗಿದ್ದರು. ಅಧಿಕಾರದಲ್ಲಿರುವ ಪಕ್ಷಗಳಿಗೆ ಮತಗಟ್ಟೆಗಳು ಬೋಗಸ್ ಮತಗಳನ್ನು ಚಲಾಯಿಸುವ ಕೇಂದ್ರಗಳಾಗಿವೆ ಎಂದ ವಿಜಯ್, ಪ್ರತಿಯೊಂದೂ ಮತವನ್ನು ರಕ್ಷಿಸಿ, ಪ್ರತಿಯೊಬ್ಬರನ್ನೂ ಭೇಟಿಯಾಗಿ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. ‘ದುಷ್ಟಶಕ್ತಿ (ಡಿಎಂಕೆ)’ ಮತ್ತು ‘ಭ್ರಷ್ಟಶಕ್ತಿ (ಎಐಎಡಿಎಂಕೆ)’ಯನ್ನು ಎದುರಿಸುವ ಧೈರ್ಯ ಟಿವಿಕೆಗೆ ಮಾತ್ರ ಇದೆ ಎಂದು ಹೇಳಿದರು. ಮುಂಬರುವ ಚುನಾವಣೆಗೆ ಮುನ್ನ ಬೆಂಬಲವನ್ನು ಕ್ರೋಡೀಕರಿಸಲು ಟಿವಿಕೆ ಜ.26ರಿಂದ ರಾಜ್ಯವ್ಯಾಪಿ ಅಭಿಯಾನವನ್ನು ಆರಂಭಿಸಲಿದೆ ಎಂದು ಪಕ್ಷದ ನಾಯಕರು ತಿಳಿಸಿದರು. ಟಿವಿಕೆ ಈವರೆಗೂ ಯಾವುದೇ ಪಕ್ಷದೊಂದಿಗೆ ಮೈತ್ರಿಯನ್ನು ಪ್ರಕಟಿಸಿಲ್ಲ. ‘ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೇ ನಾವು ಏಕಾಂಗಿಯಾಗಿ ಚುನಾವಣೆಯನ್ನು ಗೆಲ್ಲುತ್ತೇವೆ’ ಎಂದು ವಿಜಯ್ ಹೇಳಿದರು. ಕಳೆದ ವರ್ಷದ ಸೆಪ್ಟೆಂಬರ್‌ ನಲ್ಲಿ ಕರೂರಿನಲ್ಲಿ ವಿಜಯ್ ರ್ಯಾಲಿ ಸಂದರ್ಭ ಸಂಭವಿಸಿದ್ದ ಕಾಲ್ತುಳಿತದಲ್ಲಿ 41 ಜನರು ಮೃತಪಟ್ಟಿದ್ದರು. ಈ ಸಂಬಂಧ ಅವರನ್ನು ತನಿಖೆಗೊಳಪಡಿಸಿರುವ ಸಿಬಿಐ ದಿಲ್ಲಿಯಲ್ಲಿ ಎರಡು ಸಲ ಅವರ ವಿಚಾರಣೆ ನಡೆಸಿದೆ. ಅವರ ‘ಜನ ನಾಯಗನ್’ ಚಿತ್ರವು ಅದರ ಬಿಡುಗಡೆಗೆ ಸೆನ್ಸಾರ್ ಮಂಡಳಿಯು ತಡೆಯೊಡ್ಡಿದ ಬಳಿಕ ಸುದ್ದಿಯಲ್ಲಿದೆ. ಬಿಡುಗಡೆಗೆ ಅಡೆತಡೆಗಳ ನಿವಾರಣೆಯನ್ನು ಕೋರಿ ಅವರು ನ್ಯಾಯಾಲಯಗಳ ಮೊರೆ ಹೋಗಿದ್ದಾರೆ.

ವಾರ್ತಾ ಭಾರತಿ 25 Jan 2026 10:13 pm

20 ವರ್ಷಗಳ ಹಿಂದಿನ ಮಾನನಷ್ಟ ಪ್ರಕರಣ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಖುಲಾಸೆ

ಹೊಸದಿಲ್ಲಿ, ಜ.25: ದಿಲ್ಲಿಯ ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಅವರು ದಾಖಲಿಸಿದ್ದ 20 ವರ್ಷಗಳಷ್ಟು ಹಳೆಯ ಮಾನನಷ್ಟ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಇಲ್ಲಿಯ ಸಾಕೇತ್ ನ್ಯಾಯಾಲಯವು ಶನಿವಾರ ಖುಲಾಸೆಗೊಳಿಸಿದೆ. ಎಪ್ರಿಲ್ 2006ರಲ್ಲಿ ಟಿವಿ ಕಾರ್ಯಕ್ರಮವೊಂದರಲ್ಲಿ ಪಾಟ್ಕರ್ ತಮ್ಮ ವಿರುದ್ಧ ಅವಮಾನಕಾರಿ ಹೇಳಿಕೆಗಳನ್ನು ನೀಡಿದ್ದರು ಎನ್ನುವುದನ್ನು ಸಾಬೀತುಗೊಳಿಸುವಲ್ಲಿ ಸಕ್ಸೇನಾ ವಿಫಲಗೊಂಡಿದ್ದಾರೆ ಎಂದು ನ್ಯಾ. ರಾಘವ್ ಶರ್ಮಾ ತೀರ್ಪಿನಲ್ಲಿ ಹೇಳಿದ್ದಾರೆ. ಆಗ ಅಹಮದಾಬಾದ್‌ನ ಎನ್‌ಜಿಒ ‘ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್’ನ ಮುಖ್ಯಸ್ಥರಾಗಿದ್ದ ಸಕ್ಸೇನಾ ಈ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು. ಟಿವಿ ಕಾರ್ಯಕ್ರಮವೊಂದರಲ್ಲಿ ಪಾಟ್ಕರ್ ಎನ್‌ಜಿಒ ಸಿವಿಲ್ ಗುತ್ತಿಗೆಗಳನ್ನು ಪಡೆಯುತ್ತಿರುವ ಬಗ್ಗೆ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದ ಸಕ್ಸೇನಾ, ಅವುಗಳನ್ನು ತಿರಸ್ಕರಿಸಿದ್ದರು. ಟಿವಿ ಕಾರ್ಯಕ್ರಮದಲ್ಲಿ ಪಾಟ್ಕರ್ ಖುದ್ದಾಗಿ ಭಾಗವಹಿಸಿರಲಿಲ್ಲ ಮತ್ತು ಅವರ ಹಿಂದೆ ರೆಕಾರ್ಡ್ ಆಗಿದ್ದ ವೀಡಿಯೊ ಕ್ಲಿಪ್‌ನ್ನು ಮಾತ್ರ ತೋರಿಸಲಾಗಿತ್ತು ಎನ್ನುವುದನ್ನು ನ್ಯಾಯಾಲಯವು ಗಮನಿಸಿದೆ. ಆಡಿಯೊ-ವೀಡಿಯೊವನ್ನು ರೆಕಾರ್ಡ್ ಮಾಡಿದ್ದ ವರದಿಗಾರನನ್ನು ಅಥವಾ ಆರೋಪಿಯು ವಿವಾದಿತ ಹೇಳಿಕೆಗಳನ್ನು ನೀಡಿದ್ದನ್ನು ನೋಡಿದ್ದ ಯಾವುದೇ ವ್ಯಕ್ತಿಯನ್ನು ಸಾಕ್ಷಿಯಾಗಿ ವಿಚಾರಣೆಗೆ ಒಳಪಡಿಸಿಲ್ಲ ಎನ್ನುವುದನ್ನು ಗಮನಿಸುವುದು ಮುಖ್ಯವಾಗಿದೆ. ಕಾರ್ಯಕ್ರಮದಲ್ಲಿ ಪ್ರಸಾರವಾಗಿದ್ದ ವೀಡಿಯೊ ಪಾಟ್ಕರ್ ಅವರ ಸಂದರ್ಶನದ ಅಥವಾ ಅವರು ನಡೆಸಿದ್ದ ಸುದ್ದಿಗೋಷ್ಠಿಯ ಭಾಗವಾಗಿದ್ದಂತೆ ಕಂಡು ಬರುತ್ತದೆ. ನ್ಯಾಯಾಲಯದಲ್ಲಿ ಏನನ್ನಾದರೂ ಸಾಬೀತುಪಡಿಸಲು ಸುದ್ದಿಗೋಷ್ಠಿಯ ಸಂಪೂರ್ಣ ವೀಡಿಯೊ ಮತ್ತು ಆಡಿಯೊವನ್ನು ಸಲ್ಲಿಸುವುದು ಅತ್ಯಗತ್ಯವಾಗಿದೆ ಎಂದು ನ್ಯಾಯಾಧೀಶರು ಹೇಳಿದರು. ಸಕ್ಸೇನಾ ಮೂಲ ವೀಡಿಯೊ ದೃಶ್ಯಾವಳಿಯನ್ನು ಅಥವಾ ಆರೋಪಿತ ಮಾನಹಾನಿಕರ ಹೇಳಿಕೆಗಳನ್ನು ರೆಕಾರ್ಡ್ ಮಾಡಿದ್ದ ಸಾಧನವನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲು ವಿಫಲಗೊಂಡಿದ್ದಾರೆ. ಹೀಗಾಗಿ ಅವರು ಮಾಡಿರುವ ಆರೋಪಗಳು ಸಾಬೀತಾಗಿಲ್ಲ ಎಂದೂ ನ್ಯಾ. ಶರ್ಮಾ ಹೇಳಿದರು.

ವಾರ್ತಾ ಭಾರತಿ 25 Jan 2026 10:11 pm

ಕಾಜೂರು ದರ್ಗಾ ಶರೀಫ್ ಉರೂಸ್ ಸಂಭ್ರಮ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕಾಜೂರು ದರ್ಗಾಕ್ಕೆ ನಾನಾ ಜಿಲ್ಲೆಗಳ ಜತೆಗೆ ಹೊರ ರಾಜ್ಯಗಳಿಂದಲೂ ಸರ್ವ ಧರ್ಮದ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತರ ಅನುಕೂಲದ ದೃಷ್ಟಿಯಿಂದ ದರ್ಗಾದ ಆಡಳಿತ ಮಂಡಳಿಯ ಬೇಡಿಕೆಯಂತೆ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ ಸಂಬಂಧಪಟ್ಟ ಸಚಿವರ ಜತೆ ಮಾತುಕತೆ ನಡೆಸಿ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ರವಿವಾರ ಕಾಜೂರು ದರ್ಗಾ ಶರೀಫ್ ಇದರ ಉರೂಸ್ ಸಂಭ್ರಮಕ್ಕೆ ಭೇಟಿ ನೀಡಿ ಮಾತನಾಡಿದರು. ದರ್ಗಾದ ಶಿಕ್ಷಣ ಸಂಸ್ಥೆಗೆ ಬಸ್ಸನ್ನು ಒದಗಿಸಲು ಕಂಪೆನಿಗಳ ಸಿಎಸ್‌ ಆರ್ ಅನುದಾನ ಒದಗಿಸಲು ಮನವಿ ಸಲ್ಲಿ ಸಿದ್ದು, ಅದರ ಕುರಿತು ಕೂಡ ಸಂಬಂಧಪಟ್ಟ ಕಂಪೆನಿಗಳ ಜತೆ ಮಾತುಕತೆ ನಡೆಸಿ ಅವಕಾಶವಿದ್ದರೆ ಅನುಕೂಲ ಒದಗಿಸಲು ಕ್ರಮಕೈಗೊಳ್ಳುತ್ತೇನೆ. ಕಾಜೂರು ದರ್ಗಾವು ಜಿಲ್ಲೆಯ ಗಡಿ ಭಾಗದಲ್ಲಿ ಪಶ್ಚಿಮ ಘಟ್ಟದ ತಪ್ಪಲಿನ ಸುಂದರ ಪರಿಸರದಲ್ಲಿದ್ದು, ಬಹಳ ಪವಿತ್ರ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿದೆ ಎಂದರು. ಸಚಿವರು ಗಣ್ಯರ ಸಮ್ಮುಖದಲ್ಲಿ ಚಾದರ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾ ಸಮಿತಿಯ ವತಿಯಿಂದ ಸಚಿವರನ್ನು , ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್, ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್ ಅವರನ್ನು ಗೌರವಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಆರ್.ತಿಮ್ಮಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್, ಪ್ರಮುಖರಾದ ಅಬ್ದುಲ್ ಕರೀಂ ಗೇರುಕಟ್ಟೆ, ಅಬ್ಬೋನು ಮದ್ದಡ್ಕ, ಯು.ಕೆ ಮುಹಮ್ಮದ್ ಹನೀಫ್ ಉಜಿರೆ, ಇಸುಬು ಇಳಂತಿಲ, ಸಮದ್ ಕುಂಡಡ್ಕ, ದಾಸಪ್ಪ ಗೌಡ ಕಾಂಜಾನು, ಸುರೇಂದ್ರ ಕೊಲ್ಲಿ, ಶಾಹುಲ್ ಹಮೀದ್, ಚಂದ್ರಶೇಖರ, ಕೃಷ್ಣಪ್ಪ ಪೂಜಾರಿ, ಕೆ.ಯು. ಮುಹಮ್ಮದ್, ಬಿ.ಎಂ ಹಮೀದ್ ಹಾಜಿ ಉಜಿರೆ, ಎಚ್.ಮುಹಮ್ಮದ್ ವೇಣೂರು, ಕೆ.ಎಂ.ಮುಸ್ತಫಾ ಸುಳ್ಯ, ಲಕ್ಷ್ಮಣ ಗೌಡ, ಪ್ರವೀಣ್ ಫರ್ನಾಂಡೀಸ್ ಮೊದಲಾದವರು ಸಚಿವರ ಜತೆಗಿದ್ದರು. ಸಮಿತಿ ಅಧ್ಯಕ್ಷ ಕೆ.ಯು.ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಜೆ.ಎಚ್.ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿ ಡಿ.ವೈ.ಉಮರ್, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ, ಜತೆ ಕಾರ್ಯದರ್ಶಿ ಅಶ್ರಫ್ ಕಿಲ್ಲೂರು, ಹಿರಿಯ ಸದಸ್ಯರಾದ ಅಬೂಬಕ್ಕರ್ ಮಲ್ಲಿಗೆಮನೆ, ಬದ್ರುದ್ದೀನ್ ಕಾಜೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪತ್ರಕರ್ತ ಅಶ್ರಫ್ ಆಲಿ ಕುಂಞಿ ಸ್ವಾಗತಿಸಿದರು.    

ವಾರ್ತಾ ಭಾರತಿ 25 Jan 2026 10:09 pm

Assam SIR: ಮಿಯಾಗಳಿಗೆ ಮಾತ್ರ ನೋಟಿಸ್ ನೀಡಲಾಗುತ್ತಿದೆ, ಹಿಂದುಗಳಿಗಲ್ಲ: ಸಿಎಂ ಹಿಮಂತ ಬಿಸ್ವ ಶರ್ಮಾ

ಗುವಾಹಟಿ, ಜ.25: ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯಡಿ ಮಿಯಾಗಳಿಗೆ ಮಾತ್ರ ನೋಟಿಸ್‌ಗಳನ್ನು ನೀಡಲಾಗುತ್ತಿದೆ, ಹಿಂದುಗಳು ಅಥವಾ ಅಸ್ಸಾಮಿ ಮುಸ್ಲಿಮರಿಗೆ ಅಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ, ‘ವಿಶೇಷ ಪರಿಷ್ಕರಣೆ ಕುರಿತು ಯಾವುದೇ ವಿವಾದವಿಲ್ಲ. ಯಾವ ಹಿಂದು ನೋಟಿಸ್ ಪಡೆದಿದ್ದಾನೆ? ಯಾವ ಅಸ್ಸಾಮಿ ಮುಸ್ಲಿಂ ನೋಟಿಸ್ ಪಡೆದಿದ್ದಾನೆ? ಮಿಯಾಗಳು ಮತ್ತು ಅಂತಹ ಜನರಿಗೆ ನೋಟಿಸ್ ನೀಡಲಾಗಿದೆ. ಇಲ್ಲದಿದ್ದರೆ ಅವರು ನಮ್ಮ ತಲೆಯ ಮೇಲೆ ಹತ್ತಿ ಕುಳಿತುಕೊಳ್ಳುತ್ತಾರೆ’ ಎಂದು ಹೇಳಿದರು. ‘ಮಿಯಾ’ ಎನ್ನುವುದು ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಉದ್ದೇಶಿಸಿ ಬಳಸುವ ಅವಹೇಳನಕಾರಿ ಪದವಾಗಿದೆ. ಅಸ್ಸಾಮಿನ ಆಡಳಿತಾರೂಢ ಪಕ್ಷ ಬಿಜೆಪಿ ಈ ಸಮುದಾಯಕ್ಕೆ ‘ನುಸುಳುಕೋರರು’ ಎಂಬ ಹಣೆಪಟ್ಟಿ ಕಟ್ಟಿದ್ದು, ಅವರು ಸ್ಥಳೀಯ ಜನರ ಸಂಪನ್ಮೂಲಗಳು, ಉದ್ಯೋಗಗಳು ಮತ್ತು ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದೆ. ತನ್ನ ಆಡಳಿತದಲ್ಲಿ ಮಿಯಾಗಳು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂಬ ತನ್ನ ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿದ ಶರ್ಮಾ, ‘ಇಲ್ಲಿ ಮುಚ್ಚಿಡುವಂಥದ್ದೇನೂ ಇಲ್ಲ. ನಾವು ಅವರಿಗೆ ತೊಂದರೆ ನೀಡುತ್ತಿದ್ದೇವೆ. ವಿಶೇಷ ಪರಿಷ್ಕರಣೆಯಡಿ ಅವರಿಗೆ ನೋಟಿಸ್‌ಗಳನ್ನು ನೀಡುತ್ತಿರುವುದು ಅವರನ್ನು ಒತ್ತಡದಲ್ಲಿರಿಸಲು ಒಂದು ಮಾರ್ಗವಾಗಿದೆ’ ಎಂದು ಹೇಳಿದರು. ‘ಯಾವುದೋ ಹಂತದಲ್ಲಿ ಅಸ್ಸಾಮಿನ ಜನರು ತಮ್ಮನ್ನು ವಿರೋಧಿಸುತ್ತಿದ್ದಾರೆ ಎನ್ನುವುದನ್ನು ಅವರು ಅರ್ಥಮಾಡಿಕೊಳ್ಳಬೇಕು. ಇಲ್ಲದಿದ್ದರೆ ಅವರು ಮುಕ್ತವಾಗಿ ಮುನ್ನಡೆಯುತ್ತಾರೆ. ಇದಕ್ಕಾಗಿಯೇ ಕೆಲವರಿಗೆ ತೆರವು ಕಾರ್ಯಾಚರಣೆಗಾಗಿ, ಕೆಲವರಿಗೆ ಗಡಿ ಪೊಲೀಸರಿಂದ ನೋಟಿಸ್‌ಗಳು ಬರುತ್ತವೆ. ನಾವು ಕೊಂಚ ಕಿಡಿಗೇಡಿತನವನ್ನು, ಅದೂ ಕಾನೂನಿನ ವ್ಯಾಪ್ತಿಯಲ್ಲಿ ಮಾಡುತ್ತೇವೆ. ನಾವು ಬಡವರು ಮತ್ತು ಶೋಷಿತರ ಜೊತೆಯಲ್ಲಿದ್ದೇವೆ, ಆದರೆ ನಮ್ಮ ಸಮುದಾಯವನ್ನು ನಾಶಗೊಳಿಸಲು ಬಯಸುವವರ ಜೊತೆಯಲ್ಲಲ್ಲ’ ಎಂದರು. ಅಸ್ಸಾಂನಲ್ಲಿ ವಿಶೇಷ ಪರಿಷ್ಕರಣೆಯಡಿ ಮನೆ-ಮನೆ ಪರಿಶೀಲನೆಯ ಬಳಿಕ 10 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಅಳಿಸಲು ಗುರುತಿಸಲಾಗಿದೆ ಎಂದು ಚುನಾವಣಾ ಆಯೋಗವು ಡಿ.27ರಂದು ತಿಳಿಸಿತ್ತು. ಅಂತಿಮ ಪಟ್ಟಿಯು ಫೆ.10ರಂದು ಪ್ರಕಟಗೊಳ್ಳಲಿದೆ. 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್ಐಆರ್) ಬದಲಾಗಿ ಅಸ್ಸಾಂನಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯನ್ನು ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯು ಎಸ್ಐಆರ್‌ನಂತೆ ದಾಖಲೆಗಳ ಪರಿಶೀಲನೆಯನ್ನು ಒಳಗೊಂಡಿಲ್ಲ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಮಾರ್ಚ್–ಎಪ್ರಿಲ್‌ನಲ್ಲಿ ನಡೆಯುವ ನಿರೀಕ್ಷೆಯಿದೆ. ವಿಶೇಷ ಪರಿಷ್ಕರಣೆಯ ಮೂಲಕ ಬಿಜೆಪಿಯು ಹೆಚ್ಚಿನ ಸಂಖ್ಯೆಯ ನೈಜ ಮತದಾರರ ಹೆಸರುಗಳನ್ನು ಅಳಿಸಲು ಹುನ್ನಾರ ನಡೆಸಿದೆ ಎಂದು ಹಲವಾರು ಪ್ರತಿಪಕ್ಷಗಳು ಆರೋಪಿಸಿದ್ದು, ಪೊಲೀಸ್ ದೂರುಗಳನ್ನೂ ದಾಖಲಿಸಿವೆ.

ವಾರ್ತಾ ಭಾರತಿ 25 Jan 2026 10:05 pm

ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಸಿನಿಮಾಗಳ ಕಡೆಗಣನೆ: ಡಾ. ರಾಜೇಂದ್ರ ಸಿಂಗ್ ಬಾಬು ಆರೋಪ

ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸುಲಾಗುತ್ತಿದೆ ಎಂದು ಖ್ಯಾತ ಚಲನ‌ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ್ರಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿ ಮತ್ತು ಸಹಾಯಧನ ನೆರವನ್ನು ತುಳು ಚಿತ್ರಗಳಿಗೆ ವಿಸ್ತರಿಸಿದೆ. ಪ್ರತಿ ವರ್ಷ ಒಂದು ಪ್ರಾದೇಶಿಕ ಭಾಷಾ ಚಿತ್ರಕ್ಕೆ ಪ್ರಶಸ್ತಿ ನೀಡುತ್ತದೆ. ತ್ರೈಮಾಸಿಕ ಪ್ರಶಸ್ತಿಗಳನ್ನು ಪಡೆಯುವ ಈ ಚಿತ್ರಗಳು ಸ್ವರ್ದಿಸಿವೆ. 16ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಎರಡನೆ ಮತ್ತು ಮೂರನೇ ಪ್ರಶಸ್ತಿಗಳನ್ನು ತುಳು ಚಿತ್ರಗಳು ಪಡೆದಿದ್ದವು. ಇಂದು ಈ ಬಾರಿ 17ನೇ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಯಾವುದೇ ತುಳು ಚಿತ್ರವನ್ನು ಪರಿಗಣಿಸಿಲ್ಲ ಎಂದವರು ತಿಳಿಸಿದ್ದಾರೆ. ನಾನು ತುಳುವಿನಲ್ಲಿ ನಿರ್ದೇಶಿಸಿದ ಬಿದ್೯ದ ಕಂಬುಲ' ಚಿತ್ರವನ್ನು ಸ್ವರ್ಧೆಗಾಗಿ ಕಳುಹಿಸಿದೆ. ತುಳುನಾಡಿನ ವಿಶಿಷ್ಟ ಜಾನಪದ ಕ್ರೀಡೆಯಾಗಿರುವ ಕಂಬಳದ ಹಿನ್ನಲೆ ಕಥೆಯಿದು. ಸುಮಾರು 700 ವರ್ಷಗಳ ಇತಿಹಾಸ ಇರುವ ಕಂಬಳ ತುಳುನಾಡಿನ ಸಾಂಸ್ಕೃತಿಕ ಕ್ರೀಡೆ, ಮಾನ್ಯ ಮುಖ್ಯಮಂತ್ರಿಗಳು ಈ ಸಾರಿಯ ಬಜೆಟ್‌ನಲ್ಲಿ ಕಂಬಳ ಕ್ರೀಡೆಗೆ ವಿಶೇಷ ಅನುದಾನ ಮತ್ತು ಪ್ರೊತ್ಸಾಹ ನೀಡುತ್ತೇನೆ ಎಂದು ಘೋಶಿಸಿದ್ದರು. ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಈ ಚಿತ್ರ ವನ್ನು ತಿರಸ್ಕರಿಸುವ ಮೂಲಕ ತುಳುನಾಡು ಮತ್ತು ತುಳುನಾಡು ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಗಳಿಗೆ ಬೆಂಬಲಿ ಸದೆ ಪರಿಗಣಿಸದೆ ಇರುವುದರ ಮೂಲಕ ಸಂಬಂಧ ಪಟ್ಟವರು ತುಳು ಚಿತ್ರರಂಗದ ಮೇಲೆ ಕಡೆಗಣಿಸುವ ವ್ಯವಸ್ತೆಯನ್ನು ಸೃಷ್ಟಿಸಿದ್ದಾರೆ. 17ನೇ ಚಿತ್ರೋತ್ಸವದಲ್ಲಿ ಮಲೆಯಾಳಂನ 6 ಚಿತ್ರಗಳು ಮತ್ತು ಮಾರಾಠಿಯ 4 ಚಿತ್ರಗಳಿಗೆ ಮನ್ನಣೆ ಹಾಕುವ ಮೂಲಕ ಕನ್ನಡ ನಾಡಿನಲ್ಲಿಯೆ ನಾವು ಅನಾಥರಾಗಿರುವುದು ದುರಂತವೆ ಸರಿ ಎಂದವರು ತಿಳಿಸಿದ್ದಾರೆ. ತುಳು ಭಾಷೆಯನ್ನು ರಾಜ್ಯದ ಎರಡನೆ ಆಡಳಿತ ಭಾಷೆಯಾಗಿ ಪರಿಗಣಿಸಬೆಕಾಗಿದೆ ಅದನ್ನು ಪರಿಚ್ಚೆದಕ್ಕೆ ಸೇರಿಸಬೇಕು ಎನ್ನುವ ಒತ್ತಾಯ. ಒತ್ತಡಗಳು ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ತುಳು ಚಿತ್ರಗಳನ್ನು 17ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಸ್ವರ್ಧಾಮಾನಕ್ಕೆ ಆಯ್ಕೆ ನೀಡದೆ ಇರುವುದು ಅನ್ಯಾಯ ಮಾಡಿದಂತಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಸೂಕ್ತ ಆದೇಶ ನೀಡಿ, ತುಳು ಚಿತ್ರರಂಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ನಿರ್ದೇಶಕ ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 25 Jan 2026 9:49 pm

IND Vs NZ T20 | ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ ಸರಣಿ ಜಯ

ಗುವಾಹಟಿ: ಬರ್ಸಪಾರದ ಎಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಝಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಕೈ ವಶಪಡಿಸಿಕೊಂಡಿದೆ.

ವಾರ್ತಾ ಭಾರತಿ 25 Jan 2026 9:44 pm

ಶುಭಾ ವೆಂಕಟೇಶ ಅಯ್ಯಂಗಾರ್ ರಿಗೆ ಪದ್ಮಶ್ರೀ ಪ್ರಶಸ್ತಿ

ಶುಭಾ ವೆಂಕಟೇಶ ಅಯ್ಯಂಗಾರ್ ಅವರು ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯದ (ಎನ್‍ಎಎಲ್) ಮೆಟೀರಿಯಲ್ ಸೈನ್ಸಸ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಪ್ರಸಿದ್ಧ ವಿಜ್ಞಾನಿಯಾಗಿದ್ದಾರೆ. ಸುಮಾರು 40 ವರ್ಷಗಳ ಕಾಲ ಎನ್‍ಎಎಲ್‍ನಲ್ಲಿ ಸಂಶೋಧಕಿಯಾಗಿ ಕಾರ್ಯನಿರ್ವಹಿಸಿರುವ ಅವರು, ವಿಮಾನ ನಿಲ್ದಾಣಗಳಲ್ಲಿ ಬಳಸುವ ರನ್‍ವೇ ಗೋಚರತೆ ಅಳೆಯುವ ಉಪಕರಣವಾದ ‘ಟ್ರಾನ್ಸ್‍ಮಿಸೋಮೀಟರ್' ಅನ್ನು ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಶುಭಾ ಅಯ್ಯಂಗಾರ್ ತಂಡ ಅಭಿವೃದ್ಧಿಪಡಿಸಿದ ಈ ಉಪಕರಣಗಳನ್ನು ಲಕ್ನೋ, ದೆಹಲಿ ಮತ್ತು ಕೋಲ್ಕತ್ತಾ ವಿಮಾನ ನಿಲ್ದಾಣಗಳಲ್ಲಿ ಅಳವಡಿಸಲಾಗಿದೆ.

ವಾರ್ತಾ ಭಾರತಿ 25 Jan 2026 9:42 pm

ಕಾಂಗ್ರೆಸ್‌ ಶಾಸಕ ಬಸವರಾಜ ರಾಯರಡ್ಡಿ ಮೇಲೆ ಕಲ್ಲೆಸೆತ! ಕೊಪ್ಪಳದ ಅನ್ನದಾನೇಶ್ವರ ಮಠದ ಆವರಣದಲ್ಲಿ ಘಟನೆ

ಕೊಪ್ಪಳ ಜಿಲ್ಲೆಯ ಕೂಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ ಬಸವರಾಜ ರಾಯರಡ್ಡಿ ಅವರ ಮೇಲೆ ಕಲ್ಲೆಸೆದ ಘಟನೆ ನಡೆದಿದೆ. ಕಾರ್ಯಕ್ರಮದ ವೇಳೆ, ಅರೆಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಕಲ್ಲೆಸೆದಿದ್ದು, ಈ ಹಿಂದೆ ಇದೇ ರೀತಿ ಘಟನೆ ನಡೆದಿದ್ದಾಗಿ ತಿಳಿದುಬಂದಿದೆ. ಶಾಸಕರು ನಂತರ ತಮ್ಮ ಭಾಷಣ ಮುಂದುವರೆಸಿದರು.

ವಿಜಯ ಕರ್ನಾಟಕ 25 Jan 2026 9:41 pm

IND Vs NZ- ಅಭಿಷೇಕ್ ಶರ್ಮಾ ಬಿರುಗಾಳಿ ಅರ್ಧಶತಕಕ್ಕೆ ನಡುಗಿದ ಕಿವೀಸ್; ಗುರು ಯುವರಾಜ್ ಸಿಂಗ್ ದಾಖಲೆ ಜಸ್ಟ್ ಮಿಸ್!

ಭಾನುವಾರ ಗುವಾಹಟಿಯಲ್ಲಿ ನಡೆದ ದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಗಳನ್ನು ಕಳೆದುಕೊಂಡು 153 ರನ್ ಗಳಿಸಿತ್ತು. ಈ ಮೊತ್ತವನ್ನು ಲೆಕ್ಕಕ್ಕಿಲ್ಲದಂತೆ ಬೆನ್ನಟ್ಟಿದ ಭಾರತ ತಂಡ ಇನ್ನೂ 60 ಎಸೆತಗಳನ್ನು ಬಾಕಿ ಉಳಿದಿರುವಂತೆ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರು ಭಾರತದ ಪರವಾಗಿ 2ನೇ ಅತಿ ವೇಗದ ಅರ್ಧಶತಕ ಹೊಡೆದದ್ದು ವಿಶೇಷವಾಗಿತ್ತು. ಅವರ ಮೆಂಟರ್ ಆಗಿರುವ ಯುವರಾಜ್ ಸಿಂಗ್ ಅವರು ಕೇವಲ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿರುವುದು ಭಾರತದ ಪರವಾಗಿ ದಾಖಲಾಗಿರುವ ಅತ್ಯಂತ ವೇಗದ ಅರ್ಧಶತಕವಾಗಿದೆ. ಈ ದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಳ್ಳಲು ಅಭಿಷೇಕ್ ಶರ್ಮಾ ಅವರು ಕೇವಲ 2 ಎಸೆತಗಳಲ್ಲಿ ವಂಚಿತರಾದರು. ಅವರು 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ವಿಜಯ ಕರ್ನಾಟಕ 25 Jan 2026 9:41 pm

ಸಮಸ್ತ ನೂರನೇ ವರ್ಷದ ಸಂಭ್ರಮ: ಕಾಸರಗೋಡಿನ ಕುಣಿಯದಲ್ಲಿ ಭರದ ಸಿದ್ಧತೆ

ಕುಣಿಯ (ಕಾಸರಗೋಡು): ಸಮಸ್ತ ಕೇರಳ ಜಮೀಯ್ಯತುಲ್ ಉಲಮಾದ ನೂರನೇ ವರ್ಷದ ಸಂಭ್ರಮದ ಪ್ರಯುಕ್ತ ಆಯೋಜಿಸಲಾಗಿರುವ ಬೃಹತ್ ಅಂತರಾಷ್ಟ್ರೀಯ ಮಹಾಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಕುಣಿಯದಲ್ಲಿ ನಿರ್ಮಿಸಲಾಗಿರುವ 'ವರಕ್ಕಲ್ ಮುಲ್ಲಕ್ಕೋಯ ತಂಙಳ್ ನಗರ'ದಲ್ಲಿ ಫೆ. 4 ರಿಂದ 8 ರವರೆಗೆ ನಡೆಯಲಿದೆ. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ಕೇರಳ, ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳು, ಲಕ್ಷದ್ವೀಪ ಹಾಗೂ ವಿದೇಶಗಳಿಂದ ಗಣ್ಯರು, ನಾಯಕರು ಮತ್ತು ಲಕ್ಷಾಂತರ ಕಾರ್ಯಕರ್ತರು ಆಗಮಿಸಲಿದ್ದಾರೆ. ಜಾಗತಿಕ ಎಕ್ಸ್ಪೋ ಮತ್ತು ಮಹಿಳೆಯರಿಗೆ ಅವಕಾಶ:- ಸಮ್ಮೇಳನದ ಅಂಗವಾಗಿ ಏರ್ಪಡಿಸಲಾಗಿರುವ 'ಗ್ಲೋಬಲ್ ಎಕ್ಸ್ಪೋ' ಜ.30ರ ಸಂಜೆ ಉದ್ಘಾಟನೆಗೊಳ್ಳಲಿದೆ. ಎಕ್ಸ್ಪೋ ವೀಕ್ಷಣೆಗಾಗಿ ಆನ್ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ವಿಶೇಷವೆಂದರೆ, ಜನವರಿ 31 ಮತ್ತು ಫೆಬ್ರವರಿ 1 ರಂದು ಮಹಿಳೆಯರಿಗೆ ಮಾತ್ರ ಎಕ್ಸ್ಪೋ ವೀಕ್ಷಿಸಲು ಅವಕಾಶ ನೀಡಲಾಗಿದ್ದು, ಆ ದಿನಗಳಲ್ಲಿ ಸಂಪೂರ್ಣ ಪೆವಿಲಿಯನ್ ಮಹಿಳಾ ಸ್ವಯಂಸೇವಕರ ನಿಯಂತ್ರಣದಲ್ಲಿರಲಿದೆ. ಫೆಬ್ರವರಿ 2 ರಿಂದ 8 ರವರೆಗೆ ಪುರುಷರಿಗೆ ಪ್ರವೇಶವಿರುತ್ತದೆ. 100 ಧ್ವಜಗಳ ಮೆರವಣಿಗೆ:- ಈಜಿಪ್ಟ್ ಸೇರಿದಂತೆ ವಿವಿಧ ದೇಶಗಳು ಮತ್ತು ಭಾರತದ ವಿವಿಧ ರಾಜ್ಯಗಳಿಂದ ತರಲಾದ 100 ಧ್ವಜಗಳು ಫೆಬ್ರವರಿ 4 ರಂದು ಕುಣಿಯ ತಲುಪಲಿವೆ. ಕೋಝಿಕೋಡ್ ನ ವರಕ್ಕಲ್ ನಲ್ಲಿರುವ ಶಂಸುಲ್ ಉಲಮಾ ಇ.ಕೆ. ಅಬೂಬಕ್ಕರ್ ಮುಸ್ಲಿಯಾರ್ ಅವರ ಮಖಾಮಿನಿಂದ ದ ತರಲಾಗುವ ಈ ಧ್ವಜಗಳನ್ನು ತಳಂಗರೆಯ ಮಲಿಕ್ ಇಬ್ನು ದೀನಾರ್ ಮಖಾಮಿಗೆ ತಲುಪಿಸಿ, ಅಲ್ಲಿಂದ ಭವ್ಯ ಮೆರವಣಿಗೆಯ ಮೂಲಕ ಸಮ್ಮೇಳನ ನಗರಿಗೆ ತರಲಾಗುವುದು. ಧ್ವಜಾರೋಹಣದೊಂದಿಗೆ ಕ್ಯಾಂಪ್ ಸೆಷನ್ಗಳಿಗೆ ಚಾಲನೆ ಸಿಗಲಿದೆ. ಬೃಹತ್ ಪ್ರತಿನಿಧಿ ಶಿಬಿರ:- * ಆನ್ಲೈನ್ ಮೂಲಕ ಆಯ್ಕೆಯಾದ 33,313 ಪ್ರತಿನಿಧಿಗಳು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. * ಫೆಬ್ರವರಿ 4 ರಿಂದ 6ರವರೆಗೆ 10,000 ಪ್ರತಿನಿಧಿಗಳಿಗೆ 'ದಾಈ' ಶಿಬಿರ. * ಫೆಬ್ರವರಿ 6 ರಿಂದ 8ರವರೆಗೆ 23,313 ಪ್ರತಿನಿಧಿಗಳನ್ನೊಳಗೊಂಡ ಜನರಲ್ ಕ್ಯಾಂಪ್. ವಿವಿಧ ವಿಷಯಗಳ ಕುರಿತು ಪ್ರಮುಖ ವಿದ್ವಾಂಸರು ತರಗತಿಗಳನ್ನು ನಡೆಸಿಕೊಡಲಿದ್ದಾರೆ. ಇದರೊಂದಿಗೆ ಸಮ್ಮೇಳನ ನಗರಿಯ ಹಾಲ್ಗಳಲ್ಲಿ ಅಂತರಾಷ್ಟ್ರೀಯ ಸೆಮಿನಾರ್ ಗಳು ನಡೆಯಲಿವೆ. ಸುಸಜ್ಜಿತ ವ್ಯವಸ್ಥೆ ಮತ್ತು ಭದ್ರತೆ:- ಆರೋಗ್ಯ ಸೇವೆ: ಸಮ್ಮೇಳನ ನಗರಿಯಲ್ಲಿ 30 ಹಾಸಿಗೆಗಳ ತಾತ್ಕಾಲಿಕ ಚಿಕಿತ್ಸಾ ಕೇಂದ್ರ, ವೈದ್ಯರು ಮತ್ತು ಸಿಬ್ಬಂದಿ ಲಭ್ಯವಿರುತ್ತಾರೆ. ತುರ್ತು ಚಿಕಿತ್ಸೆಗಾಗಿ 20 ಅಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಅಗ್ನಿಶಾಮಕ ದಳ: ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಮೊಕ್ಕಾಂ ಹೂಡಲಿವೆ. ಊಟೋಪಚಾರ: ಶಿಬಿರದ ಪ್ರತಿನಿಧಿಗಳಿಗೆ ನುರಿತ ತಜ್ಞರ ಮೇಲ್ವಿಚಾರಣೆಯಲ್ಲಿ ಸಿದ್ಧಪಡಿಸಿದ ಆಹಾರ ಮತ್ತು ಕುಡಿಯುವ ನೀರನ್ನು ಪೂರೈಸಲಾಗುವುದು. ಸ್ವಯಂಸೇವಕರು: ಸುಗಮ ಸಂಚಾರ ಮತ್ತು ಜನದಟ್ಟಣೆ ನಿಯಂತ್ರಿಸಲು 3,313 'ವಿಖಾಯ' ಸ್ವಯಂಸೇವಕರು ಹಾಗೂ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಸಮಸ್ತದ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಹಾಗೂ ಸ್ಥಳೀಯ ಸ್ವಾಗತ ಸಮಿತಿಯವರು ಹಗಲಿರುಳು ಸಿದ್ಧತೆಯಲ್ಲಿ ತೊಡಗಿದ್ದಾರೆ. ವಿಶೇಷವೆಂದರೆ, ಜಾತಿ-ಮತ ಮತ್ತು ರಾಜಕೀಯ ಭೇದವಿಲ್ಲದೆ ಕುಣಿಯದ ಸುತ್ತಮುತ್ತಲಿನ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಿದ್ದಾರೆ. ವರದಿ : ಯೂಸುಫ್ ಮುಂಡೋಲೆ

ವಾರ್ತಾ ಭಾರತಿ 25 Jan 2026 9:39 pm

ರಾಜ್ಯದ ಪ್ರತಿ ನಗರದಲ್ಲಿ ಸಂಚಾರ ಗ್ರಿಡ್ ರೂಪಿಸಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಭವಿಷ್ಯದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲ ನಗರಗಳಲ್ಲೂ ಸಂಚಾರ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ಬಳಿಕ ರವಿವಾರ ನಗರದ ಕುಮಾರಕೃಪಾ ಬಳಿಯಲ್ಲಿನ ತಮ್ಮ ಸರಕಾರಿ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ 2-3ನೆ ಹಂತದ ನಗರಗಳ ಬಗ್ಗೆಯೂ ಹಲವು ಕಂಪೆನಿಗಳು ಆಸಕ್ತಿ ಹೊಂದಿದ್ದು, ಈ ನಗರಗಳು ಪ್ರಕಾಶಮಾನವಾಗಿ, ಯುವ ಪ್ರತಿಭೆಗಳನ್ನು ಹೊಂದಿರಬೇಕು ಎಂದು ಚರ್ಚೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಎಲ್ಲ ನಗರ ಪ್ರದೇಶಗಳಿಗೆ ಸಂಚಾರ ಯೋಜನೆ ರೂಪಿಸಬೇಕು. ಮುಂದಿನ 25 ವರ್ಷಕ್ಕೆ ಅಗತ್ಯವಿರುವ ಸಂಚಾರಿ ಮಾರ್ಗದ ಯೋಜನೆ ರೂಪಿಸಬೇಕು. ವರ್ತುಲ ರಸ್ತೆಗಳಿಗೆ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ಉಲ್ಲೇಖಿಸಿದರು. ಸಮಯವೇ ಹಣ, ಯಾರೂ ಸಹ ಸಮಯ ವ್ಯರ್ಥ ಮಾಡಿಕೊಳ್ಳಲು ಬಯಸುವುದಿಲ್ಲ. ಹೀಗಾಗಿ ನಾವು ಈಗಿನಿಂದಲೇ ಯೋಜನೆ ರೂಪಿಸಬೇಕಿದೆ. ಈ ಬಗ್ಗೆ ನಾನು, ನಗರಾಭಿವೃದ್ಧಿ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ಪೌರಾಡಳಿತ ಸಚಿವರು ಸಭೆ ಸೇರಿ, ನಗರ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದೂ ಅವರು ತಿಳಿಸಿದರು. ಮುಂದಿನ 25 ವರ್ಷಗಳಲ್ಲಿ ಕರ್ನಾಟಕದ ಜನಸಂಖ್ಯೆಯಲ್ಲಿ ಸುಮಾರು 70% ನಗರ ಪ್ರದೇಶಕ್ಕೆ ವರ್ಗಾವಣೆಯಾಗುವ ಲೆಕ್ಕಾಚಾರ ಅವರದ್ದಾಗಿದೆ. ನಮ್ಮ ಪ್ರಗತಿ ನೋಡಿ ಅವರು ಈ ಲೆಕ್ಕಾಚಾರ ಮಾಡಿದ್ದಾರೆ. ಇದಕ್ಕೆ ಯಾವ ತಯಾರಿ ನಡೆಸಿದ್ದೀರಿ ಎಂದು ಕೇಳಿದರು. ಹೀಗಾಗಿ ನಾವು ಸಮಯ ವ್ಯರ್ಥ ಮಾಡದೇ ಇಡೀ ರಾಜ್ಯದಲ್ಲಿ ಸಂಚಾರ ಗ್ರಿಡ್ ರೂಪಿಸಬೇಕು ಎಂದು ತೀರ್ಮಾನಿಸಿದ್ದೇವೆ. ಎಲ್ಲಿ ರಸ್ತೆ ಬರುತ್ತದೆ, ರಸ್ತೆ ಅಗಲೀಕರಣ ಎಷ್ಟಿರಬೇಕು ಎಂಬುದರ ಬಗ್ಗೆ ಕಾನೂನಾತ್ಮಕವಾಗಿ ಚರ್ಚೆ ಮಾಡಿ ಹೊಸ ತೀರ್ಮಾನ ಮಾಡಬೇಕಿದೆ. ಬೆಂಗಳೂರಿನಲ್ಲಿ ಪೆರಿಫೆರಲ್ ರಿಂಗ್ ರಸ್ತೆಗೆ ಅಧಿಸೂಚನೆ ಹೊರಡಿಸಿ ನಂತರ ಅದನ್ನು ಕಾರ್ಯರೂಪಕ್ಕೆ ತರಲು ತಡವಾಗಿದೆ. ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದರು. ಹೂಡಿಕೆ ಬಗ್ಗೆ ಚರ್ಚೆ: ದಾವೋಸ್ ಕಾರ್ಯಕ್ರಮದಲ್ಲಿ ಡಾಟಾ ಸೆಂಟರ್, ಗ್ಲೋಬಲ್ ಕೇಪಬಲ್ ಸೆಂಟರ್, ಆಹಾರ ಮತ್ತು ಪಾನೀಯ, ಏವಿಯೇಷನ್, ನವೀಕೃತ ಇಂಧನ, ಇವಿ, ಅಡ್ವಾನ್ಸ್ ಮ್ಯಾನ್ಯುಫ್ಯಾಕ್ಚರ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 45ಕ್ಕೂ ಹೆಚ್ಚು ಕಂಪೆನಿಗಳ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಾಗಿದೆ. ನಮ್ಮಲ್ಲಿ ಲಭ್ಯವಿರುವ ನೀರು, ವಿದ್ಯುತ್ ಪ್ರಮಾಣ ಸೇರಿದಂತೆ ಎಲ್ಲಾ ಅಗತ್ಯ ಮಾಹಿತಿಗಳನ್ನು ಕಂಪೆನಿಗಳು ಪಡೆದಿವೆ. ಹೊರ ದೇಶಗಳಲ್ಲಿ ಉದ್ಯಮ ಮಾಡುತ್ತಿರುವ ಅನಿವಾಸಿ ಭಾರತೀಯರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ವಿವರಿಸಿದರು. ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 11 ಲಕ್ಷ ಕೋಟಿಯಷ್ಟು ಬಂಡವಾಳ ಹೂಡಿಕೆ ಪ್ರಸ್ತಾವನೆ ಬಂದಿದ್ದು, ಇದರಲ್ಲಿ ಶೇ.50 ನಷ್ಟು ಹೂಡಿಕೆ ಕಾರ್ಯಗತಗೊಳ್ಳುತ್ತಿದೆ. ಹೀಗಾಗಿ ದಾವೋಸ್ ನಲ್ಲಿ ಒಪ್ಪಂದಕ್ಕೆ ಸಹಿ ಹಾಕದೇ, ಇಲ್ಲೇ ಸಹಿ ಹಾಕಲು ತೀರ್ಮಾನಿಸಿದ್ದೇವೆ ಎಂದು ಅವರು ಹೇಳಿದರು. ಬಿಡದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎಐ ಸಿಟಿಗೆ ಅನೇಕರು ಉತ್ಸುಕರಾಗಿದ್ದಾರೆ. ಈ ಯೋಜನೆಗೆ ಅನೇಕರು ವಿರೋಧ ವ್ಯಕ್ತಪಡಿಸುತ್ತಿರಬಹುದು. ಕೆಲವರು ಕೆಲವು ರೈತರಿಂದ ಇದಕ್ಕೆ ವಿರೋಧವಿದೆ ಎನ್ನುವಂತೆ ಮಾಡುತ್ತಿದ್ದಾರೆ. ಅವರಿಗೆ ಒಂದು ಮಾತು ಹೇಳುತ್ತೇನೆ. ರೈತರು ತಾವಾಗಿಯೇ ಜಮೀನು ಬಿಟ್ಟುಕೊಡುವಾಗ ಈ ಅಭಿವೃದ್ಧಿಯನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಬೆಂಗಳೂರು ಬಿಜಿನೆಸ್ ಕಾರಿಡಾರ್ ಯೋಜನೆಯ ಭೂಸಂತ್ರಸ್ತ ರೈತರಿಗೆ ನಾವು ನೀಡಿರುವ ಪರಿಹಾರದ ಅವಕಾಶವನ್ನು ದೇಶದ ಇತರೆ ಯಾವುದೇ ಭಾಗದಲ್ಲಿ ನೀಡಲು ಸಾಧ್ಯವಾಗಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಿಡಿಎ ಅಧ್ಯಕ್ಷ ಎನ್.ಎ.ಹಾರೀಸ್ ಸೇರಿದಂತೆ ಪ್ರಮುಖರಿದ್ದರು. ಕಾನೂನು ಪಾಲನೆ, ಶಿಸ್ತಿನ ಬಗ್ಗೆ ಪ್ರಜ್ಞೆ: ‘ಇಡೀ ದಾವೋಸ್ ನಮ್ಮ ಸದಾಶಿವನಗರ, ಅರಮನೆ ಮೈದಾನದಷ್ಟು ವ್ಯಾಪ್ತಿಯಲ್ಲಿರಬಹುದು. ಅಷ್ಟು ಸಣ್ಣ ಪ್ರದೇಶದಲ್ಲಿ ಎಲ್ಲ ಪ್ರಮುಖ ನಾಯಕರು ರಸ್ತೆ ಮಾರ್ಗದಲ್ಲೇ ಸಂಚಾರ ಮಾಡಿದರು. ನಾನು ಜ್ಯೂರಿಚ್ ಕಡೆ 200 ಕಿ.ಮೀ ಪ್ರಯಾಣ ಮಾಡುವಾಗ ಸುಮಾರು 30-40 ಟನಲ್ ರಸ್ತೆಗಳಿವೆ. 60 ವರ್ಷಗಳ ಹಿಂದೆಯೇ ಟನಲ್ ರಸ್ತೆ ನಿರ್ಮಿಸಿದ್ದಾರೆ. ಅಲ್ಲಿ ಶಿಸ್ತು, ಸಂಚಾರ ಪ್ರಜ್ಞೆ, ಕಾನೂನು ಪಾಲನೆ ಬಗ್ಗೆ ಗಮನಿಸಿದೆ. ಈ ಪ್ರವಾಸ ರಾಜ್ಯಕ್ಕೆ ಇದೊಂದು ಫಲಪ್ರದಾಯಕ ಕಾರ್ಯಕ್ರಮವಾಗಿತ್ತು. ನಮ್ಮಲ್ಲಿ ಬಂಡವಾಳ ಆಕರ್ಷಿಸಿ, ಯುವಕರಿಗೆ ಉದ್ಯೋಗ ಸೃಷ್ಟಿಸಲು ಉತ್ತಮ ವೇದಿಕೆಯಾಗಿತ್ತು. ನಮ್ಮ ಜನರು ಕಾನೂನಿಗೆ ಗೌರವ ನೀಡುವ ಪ್ರಜ್ಞೆ ಮೂಡಿಸಬೇಕು. ಅಲ್ಲಿ ಯಾವುದೇ ವಾಹನ ಬೇರೆ ವಾಹನವನ್ನು ಓವರ್ ಟೇಕ್ ಮಾಡುತ್ತಿರಲಿಲ್ಲ. ಶಿಸ್ತಿನ ವಿಚಾರದಲ್ಲಿ ನಾವು ಅರಿವು ಮೂಡಿಸಬೇಕಿದೆ’ ಎಂದು ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ಜಾಗತಿಕ ನಾಯಕರು, ಉದ್ಯಮಿಗಳ ಭೇಟಿ: ‘ನಾನು ಈ ಕಾರ್ಯಕ್ರಮದ ವೇಳೆ ವಿಶ್ವ ಬ್ಯಾಂಕಿನ ಮುಖ್ಯಸ್ಥರಾದ ಅಜಯ್ ಬಂಗಾ, ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್ ರೂಟ್ ಅವರನ್ನು ಭೇಟಿ ಮಾಡಿದ್ದೆ. ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್, ಪ್ರಹ್ಲಾದ್ ಜೋಷಿ, ರಾಮ್ ಮೋಹನ್ ನಾಯ್ಡು ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ವಿಜಲೆರ್ಂಡ್ ಭಾರತೀಯ ರಾಯಭಾರಿ ಮಾರ್ಡು ಕುಮಾರ್ ಅವರು ನಮ್ಮ ಕರ್ನಾಟಕ ಪೆವಿಲಿಯನ್‍ಗೆ ಬಂದು ಚರ್ಚೆ ಮಾಡಿದರು. ಸೌದಿ ಅರೆಬಿಯಾ ಆರ್ಥಿಕ ಸಚಿವರನ್ನು ಭೇಟಿ ಮಾಡಲಾಯಿತು. ವಿದೇಶಿ ನೇರ ಬಂಡವಾಳ ಹೂಡಿಕೆ ಮೂಲಕ ಅನೇಕರು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಅಮೆರಿಕದ ಕಂಪೆಗಳು ಕೂಡ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ವಾರ್ತಾ ಭಾರತಿ 25 Jan 2026 9:25 pm

ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಗೆದ್ದ ಹಣ ನೀಡದೆ ಬೆದರಿಕೆ ಪ್ರಕರಣ: ಐದು ಮಂದಿ ಆರೋಪಿಗಳ ಬಂಧನ

ಕೋಟ, ಜ.25: ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಗೆದ್ದ 15ಲಕ್ಷ ರೂ. ಹಣ ನೀಡದೆ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿಯ ರೂಪೇಶ್(23), ಮನೋಜ್(25), ಕೊಳ್ಕೆಬೈಲುವಿನ ಸೃಜನ್ ಶೆಟ್ಟಿ(28), ಪಡುಮುಂಡುವಿನ ರಾಘವೇಂದ್ರ (37), ಶಿರಿಯಾರ ಕುಶಲ(38) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಲ್ಲಾಡಿಯ ಸಂದೇಶ್ ಕುಲಾಲ್ ಎಂಬವರಿಗೆ ಸುಮಾರು ಒಂದು ವರ್ಷದ ಹಿಂದೆ ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಶಿರಿಯಾರ ನಿವಾಸಿ ಪ್ರದೀಪ್ ಎಂಬಾತನ ಪರಿಚಯವಾಗಿತ್ತು. ಸಂದೇಶ್ ಕುಲಾಲ್, ಪ್ರದೀಪ್ ಸೂಚನೆಯಂತೆ ರೂಪೇಶ್, ಮನೋಜ್, ಧೀರಜ್, ಹರೀಶ, ವಿದೇಶ್ ಹಾಗೂ ಇತರೆ ವ್ಯಕ್ತಿಗಳ ಮೊಬೈಲ್ ನಂಬರ್‌ಗಳಿಗೆ ಆನ್‌ಲೈನ್ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಸಂದೇಶ್ ಕುಲಾಲ್ ಬೆಟ್ಟಿಂಗ್‌ನಲ್ಲಿ ಸುಮಾರು 15 ಲಕ್ಷ ರೂ. ಹಣವನ್ನು ಗೆದ್ದಿದ್ದು ಈ ಹಣವನ್ನು ಇವರು ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ. ಒಂದು ತಿಂಗಳ ಹಿಂದೆ ಶಿರಿಯಾರದಲ್ಲಿ ಪ್ರದೀಪ್‌ನನ್ನು ಭೇಟಿ ಮಾಡಿ ಗೆದ್ದ 15ಲಕ್ಷ ರೂ. ಹಣ ನೀಡುವಂತೆ ಕೇಳಿದ್ದು, ಆಗ ಪ್ರದೀಪ್, ಆತನ ತಂಡವರು ಹಣವನ್ನು ನೀಡಲು ನಿರಾಕರಿಸಿ ಜೀವ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಾರ್ತಾ ಭಾರತಿ 25 Jan 2026 9:08 pm

ನಿರಾಶ್ರಿತರ ಕಲ್ಯಾಣಕ್ಕಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ ಎಸ್.ಜಿ. ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ

ಬೆಂಗಳೂರು: ಇಲ್ಲಿನ ಆರ್.ಟಿ.ನಗರದ ನಿವಾಸಿಯಾದ ಡಾ.ಎಸ್.ಜಿ. ಸುಶೀಲಮ್ಮ ಅವರಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಲಭಿಸಿದ್ದು, ಮಹಿಳಾ ಸಬಲೀಕರಣ, ಶಿಶು ಸಂರಕ್ಷಣೆ, ಬಡವರ ಹಾಗೂ ನಿರಾಶ್ರಿತರ ಕಲ್ಯಾಣಕ್ಕಾಗಿ ದಶಕಗಳ ಕಾಲ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ಕೇಂದ್ರ ಸರಕಾರ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. 1939ರ ಮೇ 24ರಂದು ನಗರದಲ್ಲಿ ಜನಿಸಿದ ಡಾ. ಎಸ್.ಜಿ. ಸುಶೀಲಮ್ಮ ಅವರು 1959ರಿಂದ 1967ರವರೆಗೆ ಕಾರ್ಖಾನೆಯೊಂದರಲ್ಲಿ 15 ವರ್ಷ ಸೇವೆ ಸಲ್ಲಿಸಿದರು. 1963ರಲ್ಲಿ ವೃತ್ತಿ ಜೀವನಕ್ಕೆ ರಾಜೀನಾಮೆ ನೀಡಿ ಸಂಪೂರ್ಣವಾಗಿ ಸಮಾಜಸೇವೆಗೆ ತಮ್ಮ ಜೀವನವನ್ನು ಸಮರ್ಪಿಸಿದರು. ಅವರು 1974ರಿಂದ 1978ರವರೆಗೆ ಭುವನೇಶ್ವರಿ ಮಹಿಳಾ ಮಂಡಳಿಯಲ್ಲಿ ವಾರ್ಡನ್ ಆಗಿ ಕಾರ್ಯನಿರ್ವಹಿಸಿದ್ದಾರೆ. 1975ರಲ್ಲಿ ಹೆಬ್ಬಾಳದ ಸಮೀಪದ ಚೋಳನಾಯಕನಹಳ್ಳಿಯಲ್ಲಿ ಬಡವರು, ಅನಾಥರು, ನಿರಾಶ್ರಿತ ಮಕ್ಕಳು ಮತ್ತು ಮಹಿಳೆಯರ ಸೇವೆಗಾಗಿ ಸುಮಂಗಲಿ ಸೇವಾ ಆಶ್ರಮವನ್ನು ಸ್ಥಾಪಿಸಿದರು. 1976ರಲ್ಲಿ ಬಸವಾನಂದ ನರ್ಸರಿ, 1979ರಲ್ಲಿ ಸುಮಂಗಲಿ ಯುವತಿ ಮಂಡಳಿ ಹಾಗೂ 1985ರಲ್ಲಿ ಚೋಳನಾಯಕನಹಳ್ಳಿಯಲ್ಲಿ ಬಸವಾನಂದ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸಿ ಶಿಕ್ಷಣ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಿದರು. ಪ್ರಾರಂಭದಿಂದ ಸುಮಂಗಲಿ ಸೇವಾಶ್ರಮದ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿರುವ ಎಸ್.ಜಿ.ಸುಶೀಲಮ್ಮ 1987ರಲ್ಲಿ ಬೆಂಗಳೂರು ಉತ್ತರ ತಾಲ್ಲೂಕಿನ ಮಹಿಳಾ ಮಂಡಲದ ಒಕ್ಕೂಟದ ಅಧ್ಯಕ್ಷರಾಗಿ ಮತ್ತು ಜಾಲಹಳ್ಳಿಯ ಸಮೂಹ ಸಾಮಾಜಿಕ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ, 1989ರಲ್ಲಿ ಬೆಂಗಳೂರು ನಗರ ಜಿಲ್ಲಾ ಮಹಿಳಾ ಮಹಾಮಂಡಲದ ಸಂಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 1990ರಲ್ಲಿ ದೊಡ್ಡಬಳ್ಳಾಪುರದ ಸದ್ಗುರು ಅಮರಜ್ಯೋತಿ ವಿಶ್ವಕುಂಡಲ ಯೋಗ ಆಶ್ರಮದ ಅಧ್ಯಕ್ಷರಾಗಿ ಮತ್ತು ಬೆಂಗಳೂರು ನಗರ ಜಿಲ್ಲೆಯ ಬಹೋಪಯೋಗಿ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ಅನೇಕ ಸಂಘ-ಸಂಸ್ಥೆಗಳಿಗೆ ಪದಾಧಿಕಾರಿಗಳಾಗಿ, ಸಲಹೆಗಾರರಾಗಿ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಡಾ. ಸುಶೀಲಮ್ಮ ಅವರು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಮಹಿಳಾ ಒಕ್ಕೂಟಗಳ ರಚನೆ, ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮಗಳು ಹಾಗೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಇವರ ಸೇವಾ ಕಾರ್ಯಗಳಿಂದ ಸಾವಿರಾರು ಮಹಿಳೆಯರು ಮತ್ತು ಮಕ್ಕಳು ಹೊಸ ಬದುಕಿನ ದಾರಿಯನ್ನು ಕಂಡಿದ್ದಾರೆ.

ವಾರ್ತಾ ಭಾರತಿ 25 Jan 2026 9:03 pm

ಭಾರತ ಮಾತೆಯ ದೈವಿಕ ರೂಪಕ್ಕೆ ವಂದೇ ಮಾತರಂ ಗೀತೆಯಿಂದ ದೇಶಭಕ್ತಿಯ ಸಿಂಚನ; ರಾಷ್ಟ್ರಪತಿ ದ್ರೌಪದಿ ಮುರ್ಮು

ಭಾರತದ ಸ್ವಾತಂತ್ರ್ಯ ಸಂಗ್ರಾಮ ಮತ್ತು ಆ ನಂತರದ ದೇಶ ರಚನೆಯಲ್ಲಿ ವಂದೇ ಮಾತರಂ ಗೀತೆ ನಿರ್ವಹಿಸಿರುವ ಮಹತ್ವದ ಪಾತ್ರವನ್ನು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಮರಿಸಿದ್ದಾರೆ. ಭಾರತದ 77ನೇ ಗಣರಾಜ್ಯೋತ್ಸವ ಮುನ್ನಾದಿನ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ದ್ರೌಪದಿ ಮುರ್ಮು ಅವರು ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಶ್ರೌರ್ಯವನ್ನು ಕೊಂಡಾಡಿದರು. ಇದೇ ವೇಳೆ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ರಾಷ್ಟ್ರಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಇಲ್ಲಿದೆ ಮಾಹಿತಿ.

ವಿಜಯ ಕರ್ನಾಟಕ 25 Jan 2026 9:03 pm

ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಯಡಿ ಮಂಗಳೂರಿಗೆ 200 ಕೋಟಿ ರೂ. ಅನುದಾನ: ಸಚಿವ ಭೈರತಿ ಸುರೇಶ್

ಮಹಾಕಾಳಿಪಡ್ಪು ಅಂಡರ್ ಪಾಸ್ ಉದ್ಘಾಟನೆ

ವಾರ್ತಾ ಭಾರತಿ 25 Jan 2026 8:56 pm

ಬೆಳಗಾವಿಯ ಪ್ರಭಾಕರ್ ಕೋರೆ ಅವರಿಗೆ ಪದ್ಮಶ್ರೀ ಗರಿ

ಬೆಂಗಳೂರು: ‘ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ’(ಕೆಎಲ್‍ಇ)ಯ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಅವರ ಅನುಪಮ ಸೇವೆಯನ್ನು ಗುರುತಿಸಿ ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಯನ್ನು ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಮೂಲದ ಪ್ರಭಾಕರ ಕೋರೆ ಅವರು, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅದ್ವಿತೀಯ ಸೇವೆಯನ್ನು ಗುರುತಿಸಿ ಪ್ರತಿಷ್ಟಿಯ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಪ್ರೇಮಿಯಾಗಿರುವ ಕೋರೆ ಅವರ ದೂರದೃಷ್ಟಿ ಹಾಗೂ ನಾಯಕತ್ವ ಗುಣಗಳೇ ಅವರನ್ನು ಇಷ್ಟೊಂದು ಎತ್ತರಕ್ಕೆ ಬೆಳೆಸಿವೆ ಎಂದು ಅವರ ಆಪ್ತರ ಅನಿಸಿಕೆಯಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿನ ಕೋರೆ ಅವರ ಸೇವೆ ಪರಿಗಣಿಸಿ ಅಮೆರಿಕದ ಪ್ರತಿಷ್ಠಿತ ಥಾಮಸ್ ಜಾಫರ್‍ಸನ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿದೆ. ಪ್ರಭಾಕರ ಕೋರೆ ಈ ಗೌರವ ಪಡೆದ ಮೊದಲ ಕನ್ನಡಿಗ. ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಹಲವು ಪ್ರಶಸ್ತಿಗಳೂ ಅವರನ್ನು ಅರಸಿ ಬಂದಿವೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಸರಕಾರ ಗೌರವಿಸಿದೆ. 2008ರಲ್ಲಿ ಕರ್ನಾಟಕ ವಿಶ್ವ ವಿದ್ಯಾನಿಲಯ ಹಾಗೂ 2013ರಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾನಿಲಯಗಳು ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿವೆ. ಇದೀಗ ಪದ್ಮಶ್ರೀ ಪ್ರಶಸ್ತಿಯೂ ಬಂದಿದೆ. 1947ರ ಆಗಸ್ಟ್‌ 1ರಂದು ಜನಿಸಿದ ಅವರು, ಬಿ.ಕಾಂ ಪದವೀಧರ. ಮೂರು ಅವಧಿಗೆ (1990-1996, 2008-2014, 2014-2020) ರಾಜ್ಯಸಭಾ ಸದಸ್ಯರಾಗಿ ಅವರು ಕೆಲಸ ಮಾಡಿದ್ದಾರೆ. 2001ರಿಂದ 2007ರವರೆಗೆ ವಿಧಾನ ಪರಿಷತ್‌ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ವಾರ್ತಾ ಭಾರತಿ 25 Jan 2026 8:51 pm

ಕೃತಕ ಬುದ್ದಿಮತ್ತೆಯಿಂದ ಸೃಷ್ಠಿಶೀಲ ಮನಸ್ಸುಗಳು ನಾಶ: ಟಿ.ಎನ್.ಸೀತಾರಾಂ ಆತಂಕ

ಉಡುಪಿ: ಕೃತಕ ಬುದ್ದಿಮತ್ತೆ ಎಂಬುದು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮೂಡಿಸುತ್ತಿದೆ. ಆದರೆ ಅದು ಸಾಹಿತ್ಯ, ಸಂಸ್ಕೃತಿಗಳ ಕ್ಷೇತ್ರಕ್ಕೆ ಕಾಲಿಟ್ಟರೆ ಸೃಷ್ಠಿಶೀಲ ಮನಸ್ಸುಗಳು ನಾಶವಾಗಿ ದೊಡ್ಡ ಅಪಾಯ ಉಂಟು ಮಾಡುವ ಸಾಧ್ಯತೆ ಇದೆ. ಅದರ ಬಗ್ಗೆ ಎಚ್ಚರ ವಹಿಸಬೇಕಾಗಿದೆ ಎಂದು ಸಾಹಿತಿ, ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ಆತಂಕ ವ್ಯಕ್ತಪಡಿಸಿದ್ದಾರೆ. ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಸಂಸ್ಕೃತಿ ಉತ್ಸವದ ಎರಡನೆ ದಿನವಾದ ರವಿವಾರ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರವನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು. ಕೃತಕ ಬುದ್ಧಿಮತ್ತೆಯ ಅನುಕೂಲಗಳನ್ನು ನಾವು ಸ್ವಾಗತಿಸಬೇಕು ಮತ್ತು ಯಾವುದೇ ಕಾರಣಕ್ಕೂ ನಿರಾಕರಿಸಬಾ ರದು. ಕೃತಕ ಬುದ್ದಿಮತ್ತೆಗೆ ಎಷ್ಟೇ ಬುದ್ದಿ ಇರಬಹುದು. ಆದರೆ ಹೃದಯ ಕಣ್ಣೀರು ಅರ್ಥ ಮಾಡಲು ಅದಕ್ಕೆ ಸಾಧ್ಯ ಇಲ್ಲ. ಆದುದರಿಂದ ಮುಂದೆ ಇದರ ಜೊತೆ ಪ್ರತಿ ಹಂತದಲ್ಲೂ ಯುದ್ಧ ಮಾಡುವ ಸ್ಥಿತಿ ಬರಲಿದೆ ಎಂದರು. ಕೃತಕ ಬುದ್ದಿಮತ್ತೆಯ ಪರಿಣಾಮವಾಗಿ ಲಕ್ಷಾಂತರ ಮಂದಿ ಕೆಲಸ ಕಳೆದು ಕೊಳ್ಳಲಿದ್ದಾರೆ. ಈ ಜಗತ್ತಿನಲ್ಲಿ ನಿರು ದ್ಯೋಗ ಸಂಖ್ಯೆ ಕೋಟಿಗೆ ತಂದು ಇಡುವ ಸ್ಥಿತಿಯನ್ನು ಕೃತಕ ಬುದ್ದಿಮತ್ತೆ ಸೃಷ್ಠಿಸುತ್ತದೆ. ಈ ಸವಾಲನ್ನು ನಾವು ಸ್ವೀಕರಿಸ ಬೇಕು. ಇಲ್ಲದಿದ್ದರೆ ಇಲ್ಲಿ ಮನುಷ್ಯರು ಉಳಿಯುವುದಿಲ್ಲ ಎಂದು ಅವರು ತಿಳಿಸಿದರು. ಅಧ್ಯಕ್ಷತೆಯನ್ನು ಉಡುಪಿ ಹಿರಿಯ ವಿದ್ವಾಂಸ ನಾಡೋಜ ಪ್ರೊ.ಕೆ.ಪಿ.ರಾವ್ ವಹಿಸಿದ್ದರು. ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅಭಿನಂದನಾ ಮಾತುಗಳನ್ನಾಡಿದರು. ಲೇಖಕ ಜೋಗಿ, ಕಾರ್ಕಳ ಯಕ್ಷ ರಂಗಾಯಣ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ್, ಪಂಚಮಿ ಟ್ರಸ್ಟ್‌ನ ಸಂಸ್ಥಾಪಕ ಡಾ.ಎಂ.ಹರಿಶ್ಚಂದ್ರ ಮುಖ್ಯ ಅತಿಥಿಗಳಾಗಿದ್ದರು. ಉದ್ಯಮಿ ಸುಗುಣ ಸುವರ್ಣ, ಕಲಾ ಪೋಷಕ ಭುವನಪ್ರಸಾದ್ ಹೆಗ್ಡೆ, ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್ ಉಪಸ್ಥಿತರಿದ್ದರು. ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅಸ್ಟ್ರೋ ಮೋಹನ್ ಸ್ವಾಗತಿಸಿದರು. ಪುರಸ್ಕಾರ ಸಮಿತಿಯ ಸಂಯೋಜಕ ಜನಾರ್ದನ ಕೊಡವೂರು ವಂದಿಸಿದರು. ವಿದ್ಯಾ ಶ್ಯಾಮಸುಂದರ್ ಸನ್ಮಾನ ಪತ್ರ ವಾಚಿಸಿದರು. ಪೂರ್ಣಿಮಾ ಜನಾರ್ದನ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಯಕ್ಷ ರಂಗಾಯಣ ರೆಪರ್ಟರಿ ಕಲಾವಿದರಿಂದ ಗುಲಾಮನ ಸ್ವಾತಂತ್ರ್ಯ ಯಾತ್ರೆ ನಾಟಕ ಪ್ರದರ್ಶನಗೊಂಡಿತು. ಗುರು ಲಂಕೇಶರನ್ನು ನೆನಪಿಸಿದ ಸೀತಾರಾಮ್! ಇದೇ ದಿನ ನನ್ನ ಗುರು ಪಿ.ಲಂಕೇಶ್ ತೀರಿಹೋಗಿರುವುದು. ಇಂದಿಗೆ 25ವರ್ಷಗಳಾಗಿವೆ. ಲಂಕೇಶ್ ಅವರು ನನ್ನನು ಮನುಷ್ಯರನ್ನಾಗಿ ಮಾಡಿದರು. ಅವರ ನಾಟಕಗಳಲ್ಲಿ ನಾನು ಮುಖ್ಯ ಪಾತ್ರ ವಹಿಸುತ್ತಿದ್ದೆ. ಅವರ ಪಲ್ಲವಿ ಸಿನೆಮಾ ದಲ್ಲಿ ನನಗೆ ನಾಯಕನಾಗಿ ನಟಿಸುವ ಅವಕಾಶ ಮಾಡಿಕೊಟ್ಟರು. ಅವರ ದೃಷ್ಠಿಕೋನ ಸಾಮಾನ್ಯರನ್ನು ಗುರುತಿ ಸುವುದು. ಇದು ನನ್ನ ಬದುಕಿನ ಬಹಳ ದೊಡ್ಡ ಪಾಠ ಮತ್ತು ದೀಪ ಎಂದು ಭಾವಿಸುತ್ತೇನೆ. ಆದುದರಿಂದ ನನ್ನ ಸಾಧನೆಗೆ ದೊರೆತ ಈ ಪ್ರಶಸ್ತಿಯಲ್ಲಿ ಮುಖ್ಯ ಪಾಲು ಲಂಕೇಶ್ ಅವರಿಗೆ ಸಲ್ಲಬೇಕು ಎಂದು ಟಿ.ಎನ್.ಸೀತಾರಾಂ ತಿಳಿಸಿದರು.

ವಾರ್ತಾ ಭಾರತಿ 25 Jan 2026 8:50 pm

ಬಿಡದಿ ಟೌನ್‌ಶಿಪ್ ಭೂಸ್ವಾಧೀನ: ರೈತರ ಪರ ನಿಂತ ಎಚ್‌ಡಿ ಕುಮಾರಸ್ವಾಮಿ - ಹೊಸ ದರಕ್ಕೆ ಆಗ್ರಹ; ಎಕರೆಗೆ ಎಷ್ಟು?

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರೈತರ ಭೂಮಿ ಉಳಿಸಲು ಬದ್ಧತೆ ತೋರಿದ್ದಾರೆ. ಭೂಸ್ವಾಧೀನವಾದರೆ ಎಕರೆಗೆ 13 ಕೋಟಿ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜಮೀನಿಗೂ ಪರಿಹಾರ ಪಡೆಯುವುದಿಲ್ಲ ಎಂದಿದ್ದಾರೆ. 2028ಕ್ಕೆ ಜನತಾ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಚರ್ಚೆಗೆ ಆಹ್ವಾನ ನೀಡಿದ್ದಾರೆ.

ವಿಜಯ ಕರ್ನಾಟಕ 25 Jan 2026 8:49 pm

ಶಿಥಿಲಾವಸ್ಥೆಯಲ್ಲಿ ದುಬಲಗುಂಡಿ ಸರಕಾರಿ ಉರ್ದು ಶಾಲಾ ಕಟ್ಟಡ

ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಆತಂಕ: ತಕ್ಷಣ ಕ್ರಮಕ್ಕೆ ಪೋಷಕರ ಒತ್ತಾಯ

ವಾರ್ತಾ ಭಾರತಿ 25 Jan 2026 8:48 pm

ದೇವದುರ್ಗ | ಕುಡುಕರ ಅಡ್ಡೆಯಾದ ಎಪಿಎಂಸಿ ಕಲ್ಯಾಣ ಮಂಟಪ

ಕೋಟಿ ರೂ. ವೆಚ್ಚದ ಕಟ್ಟಡ ನಿರ್ವಹಣೆಯಿಲ್ಲದೆ ಶಿಥಿಲ: ಅಧಿಕಾರಿಗಳು ಮೌನ

ವಾರ್ತಾ ಭಾರತಿ 25 Jan 2026 8:39 pm

ಸಮಾಜದ ಏಳಿಗೆಗೆ ಸವಿತಾ ಮಹರ್ಷಿ ಮಾರ್ಗದರ್ಶನ ಅತೀ ಅಗತ್ಯ: ಎಂ.ಎ.ಗಫೂರ್

ಉಡುಪಿ, ಜ.25: ಸವಿತಾ ಸಮಾಜವು ತಮ್ಮ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ಸೃಜನಶೀಲತೆಯನ್ನು ಹೊಂದುವ ಮೂಲಕ ಸಮಾಜಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದು, ವೃತ್ತಿಯ ಮೂಲ ಪುರುಷರಾದ ಸವಿತಾ ಮಹರ್ಷಿ ಅವರ ಮಾರ್ಗದರ್ಶನ ಸಮಾಜದ ಏಳಿಗೆಗೆ ಅತೀ ಅಗತ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದ್ದಾರೆ. ಉಡುಪಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸವಿತಾ ಸಮಾಜದ ಸಹಯೋಗದಲ್ಲಿ ರವಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯವನ್ನು ಉದ್ಘಾಟಿಸಿ, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಅವರು ಮಾತನಾಡುತಿದ್ದರು. ಸಮಾಜವನ್ನು ಸನ್ಮಾರ್ಗದಲ್ಲಿ ನಡೆಯುವಂತ ಸಂದೇಶವನ್ನು ನೀಡಿದ ಮಹನೀಯರು ಜಯಂತಿ ಕಾರ್ಯಕ್ರಮವನ್ನು ಸರಕಾರ ಆಚರಿಸಿಕೊಂಡು ಬಂದಿದ್ದು,ಸವಿತಾ ಸಮಾಜದ ಏಳಿಗೆಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಮುಂದಿನ ದಿನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಮಕ್ಕಳು ಶಿಕ್ಷಣವನ್ನು ಪಡೆವುದ ರೊಂದಿಗೆ ಶೈಕ್ಷಣಿಕವಾಗಿ ಆರ್ಥಿಕವಾಗಿ ಸಮಾಜವು ಇನ್ನಷ್ಟು ಅಭಿವೃದ್ಧಿ ಹೊಂದುವಂತಾಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಜಿಪಂ ಮುಖ್ಯ ಯೋಜನಾಧಿಕಾರಿ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಸವಿತಾ ಮಹರ್ಷಿ ಗಳು ಜೀವನ ನಿರ್ವಹಣೆಗಾಗಿ ಅನೇಕ ತತ್ವಗಳನ್ನು ಕೊಡುಗೆಯಾಗಿ ನೀಡಿದ್ದು, ಪ್ರಸ್ತುತ ಬದುಕಿನಲ್ಲಿ ಅವುಗಳ ಪಾಲನೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ರಾಜು ಸಿ.ಭಂಡಾರಿ ಕಿನ್ನಿಮುಲ್ಕಿ, ಸವಿತಾ ಮಹರ್ಷಿಗಳ ತತ್ವ ಆದರ್ಶ ಗಳ ಪಾಲನೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿನಿತ್ಯದ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಹೇಳಿದರು. ಸಮುದಾಯದ ಹಿರಿಯರಾದ ಗೋವಿಂದ ಭಂಡಾರಿ ಬನ್ನಂಜೆ, ಸವಿತಾ ಮಹರ್ಷಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಶೇಖರ ಸಾಲಿಯಾನ್ ಆದಿಉಡುಪಿ ಅವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿ ದರು. ಮಹೇಶ್ ಕಾರ್ಯಕ್ರಮ ನಿರೂಪಿಸಿ, ಶೇಖರ್ ಸಾಲಿಯಾನ್ ವಂದಿಸಿದರು.

ವಾರ್ತಾ ಭಾರತಿ 25 Jan 2026 8:37 pm

KSRTC: ಬಸ್‌ಗಳ ಲೈವ್ ಲೋಕೇಶನ್ ಇನ್ಮುಂದೆ ನಿಮ್ಮ ಮೊಬೈಲ್‌ನಲ್ಲಿ, ವಿಟಿಎಂಎಸ್ ವ್ಯವಸ್ಥೆ ಶೀಘ್ರವೇ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವ್ಯಾಪ್ತಿಯಲ್ಲಿ 8,000 ಕ್ಕೂ ಅಧಿಕ ಬಸ್‌ಗಳು ನಿತ್ಯ ಲಕ್ಷಾಂತರ ಕಿಲೋ ಮೀಟರ್ ಸಂಚರಿಸಿ ಸಾರ್ವಜನಿಕರಿಗೆ ದಕ್ಷ ಸೇವೆ ನೀಡುತ್ತಿವೆ. ಇವುಗಳ ಮೇಲ್ವಿಚಾರಣೆಗೆ ಮತ್ತು ಪ್ರಯಾಣಿಕರಿಗೆ ಅನುಕೂಲ ಒದಗಿಸುವ ಉದ್ದೇಶದಿಂದ ಬಹುನಿರೀಕ್ಷಿತ ವಾಹನ ಟ್ರ್ಯಾಕಿಂಗ್ ಮತ್ತು ಮಾನಿಟರಿಂಗ್ ಸಿಸ್ಟಮ್ (VTMS) ಸಾರಿಗೆ ಇಲಾಖೆ ಜಾರಿಗೆ ತರಲು ಮುಂದಾಗಿದೆ. ಈ

ಒನ್ ಇ೦ಡಿಯ 25 Jan 2026 8:37 pm

ಮತದಾರರಿಂದ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯ: ಉಡುಪಿ ಡಿಸಿ ಸ್ವರೂಪ

ಉಡುಪಿ, ಜ.25: ಭಾರತವು ಒಂದು ಪ್ರಜಾಪ್ರಭುತ್ವ ದೇಶವಾಗಿದ್ದು ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಕ್ಕು ಮತ್ತು ಕರ್ತವ್ಯ. 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿಕೆಯಿಂದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಿ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ. ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತ ಆಶ್ರಯ ದಲ್ಲಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ರವಿವಾರ ನಡೆದ 16 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ದೇಶದ ಚುನಾವಣಾ ಆಯೋಗ ಸ್ಥಾಪನೆಯಾದ ಸಂಸ್ಕರಣಾರ್ಥವಾಗಿ 2011ರಿಂದ ಪ್ರತಿ ವರ್ಷ ಜನವರಿ 25ನ್ನು ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪಾರದರ್ಶಕ ಮತದಾನ ಪ್ರಕ್ರಿಯೆಗಾಗಿ ಚುನಾವಣಾ ಆಯೋಗವು ನಾಗರಿಕ ಸ್ನೇಹಿ ತಂತ್ರಜ್ಞಾನಗಳನ್ನು ಪರಿಚಯಿಸಿದೆ. ಮತದಾನವು ಐಚ್ಛಿಕವಾಗಿದ್ದು, ಹೆಚ್ಚು ಜನರು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಾಗರಿಕರು ತಮ್ಮ ಆಸೆ ಆಕಾಂಕ್ಷೆಗಳನ್ನು ಪೂರೈಸುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಮತದಾನ ನಮಗೆ ನೀಡುತ್ತಿದ್ದು ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸ್ವಾತಂತ್ರ್ಯ ಸೇನಾನಿಗಳ ಬಲಿದಾನ ದಿಂದ ದೇಶವು ಗುಲಾಮ ಗಿರಿಯಿಂದ ಮುಕ್ತವಾಯಿತು. ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವವನ್ನು ಸಂವಿಧಾನದ ಮೂಲಕ ಪಡೆದುಕೊಂಡು ಮತದಾನದ ಅಧಿಕಾರವನ್ನು ಗಳಿಸಿದ್ದೇವೆ. 18 ವರ್ಷ ಮೀರಿದ ಎಲ್ಲಾ ವಯಸ್ಕರು ಪಕ್ಷಪಾತವಿಲ್ಲದೇ ಮತ ನೀಡಬಹುದು. ಯಾವುದೇ ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸ ಬೇಕು. ಜನ ಪ್ರತಿನಿಧಿಗಳು ಜವಾಬ್ದಾರಿಯಿಂದ ಕೆಲಸ ಮಾಡಲು ನಾವು ಜವಾಬ್ದಾರಿಯುತವಾಗಿ ಮತ ಚಲಾಯಿಸ ಬೇಕು. ನಮ್ಮ ಅಮೂಲ್ಯ ಮತವನ್ನು ಮಾರಾಟ ಮಾಡಬಾರದು ಎಂದರು. ನಿವೃತ್ತ ಸರಕಾರಿ ಅಭಿಯೋಜಕ ರಾಜು ಪೂಜಾರಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶಿವಪ್ರಸಾದ್ ಶೆಟ್ಟಿ ಎಸ್‌ಐಆರ್ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಯುವ ಮತದಾರ ರಿಗೆ ಎಪಿಕ್ ಕಾರ್ಡುಗಳನ್ನು ವಿತರಿಸಲಾಯಿತು. ಮತದಾನ ನಿಮಿತ್ತ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಉತ್ತಮವಾಗಿ ಕಾರ್ಯನಿರ್ವಹಿಸಿದ 5 ಜನ ಬಿಎಲ್‌ಓಗಳನ್ನು ಹಾಗೂ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯವನ್ನು ನಿರ್ವಹಿಸಿದ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಕೆ.ಎಸ್.ಜ್ಯೋತಿಶ್ರೀ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿದರು. ಗಂಗಾಧರ್ ಕೆ. ನಿರೂಪಿಸಿ, ವಂದಿಸಿದರು.

ವಾರ್ತಾ ಭಾರತಿ 25 Jan 2026 8:35 pm

BBL 15- ಲೀಗ್ ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸಿದ ಪರ್ತ್ ಸ್ಕಾಚರ್ಸ್; CSK- MI ಜಂಟಿ ದಾಖಲೆ ನುಚ್ಚುನೂರು!

Perth Scorchers Vs Sydney Sixers- ಬಿಗ್ ಬ್ಯಾಷ್ ಲೀಗ್ ನಲ್ಲಿ ಪರ್ತ್ ಸ್ಕಾಚರ್ಸ್ ತಂಡವು ಸಿಡ್ನಿ ಸಿಕ್ಸರ್ಸ್ ತಂಡದ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸುವುದರೊಂದಿಗೆ 6ನೇ ಬಾರಿ ಪ್ರಶಸ್ತಿ ಗೆದ್ದಿದೆ. ಇದು ಲೀಗ್ ಕ್ರಿಕೆಟ್ ನಲ್ಲಿ ಹೊಸ ದಾಖಲೆಯಾಗಿದೆ. ಈ ವರೆಗೂ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಮತ್ತು ಟ್ರಿನಿಬಾಗೊ ನೈಟ್ ರೈಡರ್ಸ್ ತಂಡಗಳ ಜೊತೆಗೆ ಪರ್ತ್ ಸ್ಕಾಚರ್ಸ್ 5 ಬಾರಿ ಪ್ರಶಸ್ತಿ ಗೆದ್ದಿದ್ದು ಈ ಗೌರವವನ್ನು ಹಂಚಿಕೊಂಡಿದ್ದರು.

ವಿಜಯ ಕರ್ನಾಟಕ 25 Jan 2026 8:34 pm

ಕರ್ನಾಟಕಕ್ಕೆ 8 ಪದ್ಮ ಗೌರವ; ಶತಾವಧಾನಿ ಆರ್. ಗಣೇಶ್ ರಿಗೆ ಪದ್ಮಭೂಷಣ

ಬೆಂಗಳೂರು: 2026ರ ಪದ್ಮ ಪ್ರಶಸ್ತಿಗಳು ಪ್ರಕಟವಾಗಿದ್ದು, ಈ ಬಾರಿ ಪದ್ಮ ಪ್ರಶಸ್ತಿಗಳಿಗೆ ಕರ್ನಾಟಕದಿಂದ ಎಂಟು ಮಂದಿ ಸಾಧಕರು ಆಯ್ಕೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಅಪೂರ್ವ ಸಾಧನೆ ಸಲ್ಲಿಸಿರುವ ಶತಾವಧಾನಿ ಆರ್. ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಏಳು ಮಂದಿ ಕರ್ನಾಟಕದ ಸಾಧಕರು ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸಾಮಾಜಿಕ ಸೇವೆಗಾಗಿ ಮಂಡ್ಯದ ಪುಸ್ತಕ ಮನೆಯ ಅಂಕೆ ಗೌಡ, ಸಾಮಾಜಿಕ ಸೇವೆಗಾಗಿ ಎಸ್.ಜಿ. ಸುಶೀಲಮ್ಮ, ಸಾಹಿತ್ಯ ಕ್ಷೇತ್ರದಲ್ಲಿ ಶಶಿ ಶೇಖರ್ ವೆಂಪತಿ, ವೈದ್ಯಕೀಯ ವಿಭಾಗದಲ್ಲಿ ಡಾ. ಸುರೇಶ್ ಹಂಗನವಾಡಿ, ವ್ಯಾಪಾರ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಟಿ.ಟಿ. ಜಗನ್ನಾಥನ್, ವಿಜ್ಞಾನ ಮತ್ತು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಶುಭಾ ವೆಂಕಟೇಶ ಅಯ್ಯಂಗಾರ್, ಹಾಗೂ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಭಾಕರ್ ಬಸವಪ್ರಭು ಕೋರೆ ಅವರಿಗೆ ಪದ್ಮಶ್ರೀ ಗೌರವ ನೀಡಲಾಗಿದೆ. ಶತಾವಧಾನಿ ಗಣೇಶ್ ಅವರ ಪರಿಚಯ ಇಲ್ಲಿದೆ... ಬಹುಭಾಷಾ ಪಂಡಿತರಾದ ಶತಾವಧಾನಿ ಆರ್.ಗಣೇಶ ಅವರಿಗೆ ಕಲಾ ಕ್ಷೇತ್ರದಲ್ಲಿ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯು ಸಂದಿದೆ. ಬಹುಭಾಷಾ ಪಂಡಿತರಾದ ಶತಾವಧಾನಿ ಗಣೇಶ ಅವರು 1962ರಲ್ಲಿ ಕೋಲಾರದಲ್ಲಿ ಜನಿಸಿದರು. ಅವರ ತಂದೆ ಆರ್.ಶಂಕರನಾರಾಯಣ ಅಯ್ಯರ್ ಹಾಗೂ ತಾಯಿ ಅಲಮೇಲಮ್ಮ. ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಹಾಗೂ ಗೌರಿಬಿದನೂರಿನಲ್ಲಿ ಪ್ರೌಢ ಶಿಕ್ಷಣವನ್ನು ಪಡೆದರು. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದ ಅವರು, ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವಿ ಪಡೆದಿದ್ದಾರೆ. ಮೈಸೂರ್ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ‘ಕನ್ನಡದಲ್ಲಿ ಅವಧಾನ ಕಲೆ’ ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಸಂಸ್ಕೃತ, ಕನ್ನಡ, ತೆಲುಗು ಹೀಗೆ 8 ಭಾಷೆಗಳಲ್ಲಿ ಅವಧಾನವನ್ನು ಪ್ರಸ್ತುತಪಡಿಸಿದ್ದಾರೆ. ‘ಚಿತ್ರಕಾವ್ಯ' ಗಣೇಶ್ ಅವರ ವಿಶೇಷತೆಯಾಗಿದ್ದು, ಅಮೆರಿಕ ಮತ್ತು ಯೂರೋಪ್ ದೇಶಗಳಿಗೆ ಭೇಟಿ ನೀಡಿ ಈ ಕುರಿತು ಪ್ರದರ್ಶನ ನೀಡಿದ್ದಾರೆ. ಈ ಕಲೆಯ ಕುರಿತು ಶತಾವಧಾನ ಶಾರದೆ ಹಾಗೂ ಶತಾವಧಾನ ಶ್ರೀವಿದ್ಯೆ ಎರಡು ಕೃತಿಗಳನ್ನು ರಚಿಸಿದ್ದಾರೆ. ಕಾವ್ಯಮೀಮಾಂಸೆ, ಛಂದಶ್ಯಾಸ್ತ್ರ, ವೇದಾಂತ, ಉಪನಿಷತ್, ಧರ್ಮಶಾಸ್ತ್ರ, ಇತಿಹಾಸ, ಸಂಸ್ಕೃತಿ, ಕಲೆ, ಭಾರತೀಯ ತತ್ವಶಾಸ್ತ್ರ, ವ್ಯಾಕರಣ, ಅಲಂಕಾರ ಶಾಸ್ತ್ರ ವಿಷಯಗಳಲ್ಲಿ ಪರಿಣಿತರಾಗಿರುವ ಗಣೇಶ್ ಅವರು, ಸಂಸ್ಕೃತದಲ್ಲಿ 12ಕ್ಕೂ ಹೆಚ್ಚಿನ ನಾಟಕಗಳನ್ನೂ, 16 ಕಾವ್ಯಗಳನ್ನೂ, ಕನ್ನಡದಲ್ಲಿ 8 ಕಾವ್ಯಗಳನ್ನು, 3 ಕಾದಂಬರಿಗಳನ್ನು ಬರೆದಿದ್ದಾರೆ. 6 ಕೃತಿಗಳನ್ನು ಅನುವಾದ ಮಾಡಿದ್ದಾರೆ. ಗಣೇಶ ಅವರು ತಮ್ಮ ಮೊದಲ ಶತಾವಧಾನವನ್ನು 1991ರ ಡಿ.15ರಂದು ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ಪ್ರದರ್ಶಿಸಿದರು. 2012ರ ನವೆಂಬರ್ 30ರಿಂದ ಡಿಸೆಂಬರ್ 2 ರವರೆಗೆ ಅವರು ಕನ್ನಡದಲ್ಲಿ ಮೊದಲ ಶತಾವಧಾನವನ್ನು ಸಂಪೂರ್ಣವಾಗಿ ಪ್ರದರ್ಶಿಸಿದರು. 2014ರ ಫೆ.16 ರಂದು ಬೆಂಗಳೂರಿನಲ್ಲಿ ಅವರು ತಮ್ಮ 1000ನೇ ಅವಧಾನವನ್ನು ಪ್ರದರ್ಶಿಸಿದ್ದಾರೆ.

ವಾರ್ತಾ ಭಾರತಿ 25 Jan 2026 8:30 pm

17 ಸ್ಥಾನ ಪಡೆದಿರುವ ಜೆಡಿಎಸ್ ಹೇಗೆ ಅಧಿಕಾರಕ್ಕೆ ಬರುತ್ತಾರೆ: ಸಿ.ಎಂ ಸಿದ್ದರಾಮಯ್ಯ

17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್‌ ಎಕನಾಮಿಕ್ ಫೋರಂನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ನಮ್ಮಲ್ಲಿ ಕೌಶಲ್ಯವಿರುವ ಮಾನವ ಸಂಪನ್ಮೂಲದ ಲಭ್ಯತೆಯಿದೆ. ಇದಕ್ಕೆ

ಒನ್ ಇ೦ಡಿಯ 25 Jan 2026 8:30 pm

ಕಲಬುರಗಿ | ಎಂ.ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ಕಲಬುರಗಿ: ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ, ಮೂಲತಃ ಮೈಸೂರು ಜಿಲ್ಲೆಯವರಾಗಿರುವ ಮತ್ತು ಸದ್ಯ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಡಿ.ಐ.ಜಿ. ಪುಟ್ಟಮಾದಯ್ಯ ಎಂ. ಸೇರಿದಂತೆ ಐವರಿಗೆ ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ 2026ನೇ ಸಾಲಿನ ಪೊಲೀಸ್ ಉತ್ಕೃಷ್ಟ ಸೇವಾ ಪದಕವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಅಸಾಧಾರಣ ಧೈರ್ಯ, ವಿಶಿಷ್ಟ ಹಾಗೂ ನಿಷ್ಠಾವಂತ ಸೇವೆ, ದೀರ್ಘಕಾಲದ ಶ್ರೇಷ್ಠ ಕಾರ್ಯನಿರ್ವಹಣೆ ಹಾಗೂ ಸಾರ್ವಜನಿಕ ಸೇವೆಗೆ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ ಪುಟ್ಟಮಾದಯ್ಯ ಎಂ ಅವರಿಗೆ ಈ ರಾಷ್ಟ್ರಪತಿ ಪೊಲೀಸ್ ಪದಕ ಪ್ರದಾನ ಮಾಡಲಾಗಿದೆ. ಈ ಪ್ರಶಸ್ತಿ ರಾಷ್ಟ್ರಪತಿಯವರಿಂದ ನೀಡಲಾಗುವ ಪೊಲೀಸ್ ಸೇವೆಯ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ. ಪುಟ್ಟಮಾದಯ್ಯ ಎಂ. ಅವರು ಈ ಹಿಂದೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಯಾಗಿ ಸೇವೆ ಸಲ್ಲಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ನಿಯಂತ್ರಣದಲ್ಲಿ ಹಾಗೂ ಸಾರ್ವಜನಿಕ ಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ತಮ್ಮ ಸೇವಾ ಅವಧಿಯಲ್ಲಿ ಹಲವು ಸವಾಲಿನ ಪ್ರಕರಣಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಪೊಲೀಸ್ ಇಲಾಖೆಯಲ್ಲಿ ಶಿಸ್ತು, ಕಾರ್ಯಕ್ಷಮತೆ, ಮಾನವೀಯ ನಿಲುವು ಮತ್ತು ಜನಪರ ಸೇವೆಯಿಂದ ಗುರುತಿಸಿಕೊಂಡಿರುವ ಅವರು, ಪ್ರಸ್ತುತ ಡಿ.ಐ.ಜಿ. ಹುದ್ದೆಯಲ್ಲಿ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದು, ಹೊಸ ತಲೆಮಾರಿನ ಪೊಲೀಸ್ ಅಧಿಕಾರಿಗಳಿಗೆ ಶಿಸ್ತು, ಸೇವಾಭಾವನೆ ಹಾಗೂ ವೃತ್ತಿಪರ ನೈಪುಣ್ಯ ಬೆಳೆಸುವಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ. ರಾಷ್ಟ್ರಪತಿ ಪದಕ ಘೋಷಣೆಯ ಸುದ್ದಿ ತಿಳಿಯುತ್ತಿದ್ದಂತೆ ಗಣ್ಯರು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು, ಸಿಬ್ಬಂದಿ, ಕುಟುಂಬದವರು ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಇದು ತಮ್ಮ ಮುಂದಿನ ಸೇವೆಗೆ ಮತ್ತಷ್ಟು ಪ್ರೇರಣೆಯಾಗಿದೆ ಎಂದು ಡಿ.ಐ.ಜಿ. ಪುಟ್ಟಮಾದಯ್ಯ ಎಂ ಸಂತಸ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 25 Jan 2026 8:29 pm

ಕಲಬುರಗಿ | ಸಾಧಕರಿಗೆ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ಪ್ರದಾನ

ಕಲಬುರಗಿ : ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಅವರ 163ನೇ ಜಯಂತಿ ನಿಮಿತ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಸಾಧಕರಿಗೆ ನಗರದ ಕನ್ನಡ ಭವನದಲ್ಲಿ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯುವ ಸಾಧಕರಾದ ಸಂಗೀತ ಎಂ ಪಡಶೆಟ್ಟಿ, ಅಕ್ಷಯ್ ಯಂಕಪ್ಪ ಡ್ಯಾನ್ಸರ್, ವಿಜಯಕುಮಾರ, ಶ್ರೇಯ ಪಾಟೀಲ್, ಅನನ್ಯ, ಡಿ.ಎಸ್.ಪ್ರಜ್ವಲ್ ಅವರಿಗೆ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಕಾಂಗ್ರೆಸ್ ಮುಖಂಡ ನೀಲಕಂಠಾವ್ ಮೂಲಗೆ, ಸುರೇಶ್ ಮಾಲಿಕ್, ಮನ್ನೂರ್ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರೂಕ್ ಮನ್ನೂರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧೂಳಪ್ಪ ದೊಡ್ಡಮನಿ, ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಚಿನ್ ಪರತಾಹಬಾದ, ಡಾ. ರಾಜಶೇಖರ್ ಮಾಂಗ್, ಮಹಮದ್ ಇಬ್ರಾಹಿಂ ಕಪನೂರ್, ವಿಜಯಕುಮಾರ ಕಟ್ಟಿಮನಿ, ಜೈ ಭೀಮ ಹುಡುಗಿ, ಗಿರೀಶ ಬೋರೆ, ಕಲ್ಯಾಣರಾವ ತೋನಸಳ್ಳಿ, ಮಂಜುನಾಥ್ ನಾಲವಾರಕರ್, ಸತೀಶ್ ಫರಹತಾಬಾದ, ಸುರೇಶ ಹನಗುಡಿ, ಅಣವೀರ ಪಾಟೀಲ, ಅಕ್ಷಯ್, ಗುಂಡು ಸಿಂಗ್, ಶಿವು ಯಾದವ, ಅಂಕುಶ್ ಬಿಲ್ಲವ್, ಶ್ರೀಮಂತ ಚೌದರಿ ಇದ್ದರು.

ವಾರ್ತಾ ಭಾರತಿ 25 Jan 2026 8:24 pm

ರಾಷ್ಟ್ರೀಯ ಮತದಾರರ ದಿನಾಚರಣೆ: ಕಲಬುರಗಿಯಲ್ಲಿ ಮತದಾರ ಜಾಗೃತಿಗಾಗಿ ಸೈಕಲ್ ಜಾಥಾ

ಕಲಬುರಗಿ: ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರವಿವಾರ ಕಲಬುರಗಿ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಈ ಸೈಕಲ್ ಜಾಥಾಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ನಗರದ ಜಗತ್ ವೃತ್ತದಲ್ಲಿ ಚಾಲನೆ ನೀಡಿದರು. ಸ್ವತಃ ಸೈಕಲ್ ತುಳಿಯುವ ಮೂಲಕ ಯುವಕರಿಗೆ ಮತದಾನದ ಮಹತ್ವದ ಬಗ್ಗೆ ಸಂದೇಶ ನೀಡಿದರು. ಜಗತ್ ವೃತ್ತದಿಂದ ಆರಂಭಗೊಂಡ ಜಾಥಾ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಸಾಗಿತು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಕೂಡ ಸೈಕಲ್ ತುಳಿದು ಜಾಥಾದಲ್ಲಿ ಭಾಗವಹಿಸಿ ಮತದಾರರ ಜಾಗೃತಿಗೆ ಬೆಂಬಲ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ತಹಶೀಲ್ದಾರ್ ಆನಂದಶೀಲ, ತಾಲೂಕು ಪಂಚಾಯತ್ ಇ.ಒಗಳಾದ ಸೈಯದ್ ಪಟೇಲ್, ಮಾನಪ್ಪ ಕಟ್ಟಿಮನಿ, ಕ್ರೀಡಾ ಇಲಾಖೆಯ ಸಂಜಯ ಬಾಣದ, ಪ್ರವೀಣ ಪುಣೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಯುವಕರು ಹಾಗೂ ಸೈಕ್ಲಿಸ್ಟ್‌ಗಳು ಉತ್ಸಾಹದಿಂದ ಭಾಗವಹಿಸಿದ್ದರು.

ವಾರ್ತಾ ಭಾರತಿ 25 Jan 2026 8:22 pm

2026ರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ | ಯಾರಿಗೆ ಸಿಕ್ಕಿತು ʼಗೌರವʼ?; ಇಲ್ಲಿದೆ ಸಂಪೂರ್ಣ ವಿವರ

ಹೊಸದಿಲ್ಲಿ, ಜ.25: ರಾಷ್ಟ್ರದ ಅತ್ಯುನ್ನತ ನಾಗರಿಕ ಗೌರವಗಳಲ್ಲೊಂದಾದ ಪದ್ಮ ಪ್ರಶಸ್ತಿಗಳ 2026ನೇ ಸಾಲಿನ ಪುರಸ್ಕೃತರ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾಹಿತ್ಯ–ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರಿಗೆ ಈ ಗೌರವ ನೀಡಲಾಗಿದೆ. ಪದ್ಮ ಪ್ರಶಸ್ತಿಗಳನ್ನು ಪ್ರತಿವರ್ಷ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ಪ್ರದಾನ ಮಾಡಲಾಗುತ್ತದೆ. ಈ ಬಾರಿ ಹಲವು ಗಣ್ಯರಿಗೆ ಮರಣೋತ್ತರವಾಗಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. 2026ರ ಪದ್ಮ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ ಹೀಗಿದೆ: ►ಪದ್ಮವಿಭೂಷಣ 1. ಧರ್ಮೇಂದ್ರ ಸಿಂಗ್ ಡಿಯೋಲ್ (ಮರಣೋತ್ತರ) 2. ಕೆ.ಟಿ. ಥಾಮಸ್ 3. ಎನ್. ರಾಜಮ್ 4. ಪಿ. ನಾರಾಯಣನ್ 5. ವಿ.ಎಸ್. ಅಚ್ಯುತಾನಂದನ್ (ಮರಣೋತ್ತರ) ►ಪದ್ಮಭೂಷಣ 1. ಅಲ್ಕಾ ಯಾಗ್ನಿಕ್ 2. ಭಗತ್ ಸಿಂಗ್ ಕೋಶ್ಯಾರಿ 3. ಕಳ್ಳಿಪಟ್ಟಿ ರಾಮಸಾಮಿ ಪಳನಿಸ್ವಾಮಿ 4. ಮಮ್ಮುಟ್ಟಿ 5. ನೋರಿ ದತ್ತಾತ್ರೇಯುಡು 6. ಪಿಯೂಷ್ ಪಾಂಡೆ (ಮರಣೋತ್ತರ) 7. ಎಸ್.ಕೆ.ಎಂ. ಮೈಲಾನಂದನ್ 8. ಶತಾವಧಾನಿ ಆರ್. ಗಣೇಶ್ 9. ಶಿಬು ಸೊರೆನ್ (ಮರಣೋತ್ತರ) 10. ಉದಯ್ ಕೋಟಕ್ 11. ವಿ.ಕೆ. ಮಲ್ಹೋತ್ರಾ (ಮರಣೋತ್ತರ) 12. ವೆಲ್ಲಪ್ಪಳ್ಳಿ ನಟೇಶನ್ 13. ವಿಜಯ್ ಅಮೃತರಾಜ್ ► ಪದ್ಮಶ್ರೀ 1. ಎ.ಇ. ಮುತ್ತುನಾಯಗಂ 2. ಅನಿಲ್ ಕುಮಾರ್ ರಸ್ತೋಗಿ 3. ಅಂಕೇಗೌಡ ಎಂ. 4. ಆರ್ಮಿಡಾ ಫೆರ್ನಾಂಡಿಸ್ 5. ಅರವಿಂದ್ ವೈದ್ಯ 6. ಅಶೋಕ್ ಖಾಡೆ 7. ಅಶೋಕ್ ಕುಮಾರ್ ಸಿಂಗ್ 8. ಅಶೋಕ್ ಕುಮಾರ್ ಹಲ್ದಾರ್ 9. ಬಲದೇವ್ ಸಿಂಗ್ 10. ಭಗವಾಂದಾಸ್ ರೈಕ್ವಾರ್ 11. ಭರತ್ ಸಿಂಗ್ ಭಾರತಿ 12. ಭಿಕ್ಲ್ಯಾ ಲಡಾಕ್ಯ ಧಿಂಡಾ 13. ಬಿಶ್ವ ಬಂಧು (ಮರಣೋತ್ತರ) 14. ಬ್ರಿಜ್ ಲಾಲ್ ಭಟ್ 15. ಬುದ್ಧ ರಶ್ಮಿ ಮಣಿ 16. ಬುಧ್ರಿ ತತಿ 17. ಚಂದ್ರಮೌಳಿ ಗಡ್ಡಮನುಗು 18. ಚರಣ್ ಹೆಂಬ್ರಾಮ್ 19. ಚಿರಂಜಿ ಲಾಲ್ ಯಾದವ್ 20. ದೀಪಿಕಾ ರೆಡ್ಡಿ 21. ಧಾರ್ಮಿಕ್ಲಾಲ್ ಚುನಿಲಾಲ್ ಪಾಂಡ್ಯ 22. ಗದ್ದೆ ಬಾಬು ರಾಜೇಂದ್ರ ಪ್ರಸಾದ್ 23. ಗಫ್ರುದ್ದೀನ್ ಮೇವಾಟಿ ಜೋಗಿ 24. ಗಂಭೀರ್ ಸಿಂಗ್ ಯೋನ್ಜೋನ್ 25. ಗರಿಮೆಲ್ಲ ಬಾಲಕೃಷ್ಣ ಪ್ರಸಾದ್ (ಮರಣೋತ್ತರ) 26. ಗಾಯತ್ರಿ ಬಾಲಸುಬ್ರಮಣಿಯನ್ ಮತ್ತು ರಂಜನಿ ಬಾಲಸುಬ್ರಮಣಿಯನ್ (ಜೋಡಿ) 27. ಗೋಪಾಲ್ ಜಿ. ತ್ರಿವೇದಿ 28. ಗುಡೂರು ವೆಂಕಟ್ ರಾವ್ 29. ಎಚ್.ವಿ. ಹಂಡೆ 30. ಹಾಲಿ ವಾರ್ 31. ಹರಿ ಮಾಧಬ್ ಮುಖೋಪಾಧ್ಯಾಯ (ಮರಣೋತ್ತರ) 32. ಹರಿಚರಣ್ ಸೈಕಿಯಾ 33. ಹರ್ಮನ್ಪ್ರೀತ್ ಕೌರ್ ಭುಲ್ಲರ್ 34. ಇಂದರ್‌ಜಿತ್ ಸಿಂಗ್ ಸಿಧು 35. ಜನಾರ್ದನ್ ಬಾಪುರಾವ್ ಬೋಥೆ 36. ಜೋಗೇಶ್ ದೇವುರಿ 37. ಜುಜರ್ ವಾಸಿ 38. ಜ್ಯೋತಿಶ್ ದೇಬನಾಥ್ 39. ಕೆ. ಪಜನಿವೇಲ್ 40. ಕೆ. ರಾಮಸಾಮಿ 41. ಕೆ. ವಿಜಯ್ ಕುಮಾರ್ 42. ಕಬೀಂದ್ರ ಪುರಕಾಯಸ್ಥ (ಮರಣೋತ್ತರ) 43. ಕೈಲಾಶ್ ಚಂದ್ರ ಪಂತ್ 44. ಕಲಾಮಂಡಲಂ ವಿಮಲಾ ಮೆನನ್ 45. ಕೇವಲ್ ಕ್ರಿಶನ್ ಥಕ್ರಾಲ್ 46. ಖೇಮ್ ರಾಜ್ ಸುಂಡ್ರಿಯಾಲ್ 47. ಕೊಲ್ಲಕಲ್ ದೇವಕಿ ಅಮ್ಮ ಜಿ 48. ಕೃಷ್ಣಮೂರ್ತಿ ಬಾಲಸುಬ್ರಮಣಿಯನ್ 49. ಕುಮಾರ್ ಬೋಸ್ 50. ಕುಮಾರಸ್ವಾಮಿ ತಂಗರಾಜ್ 51. ಲಾರ್ಸ್–ಕ್ರಿಶ್ಚಿಯನ್ ಕೋಚ್ 52. ಲಿಯುಡ್ಮಿಲಾ ವಿಕ್ಟೋರೊವ್ನಾ ಖೋಖ್ಲೋವಾ 53. ಮಾಧವನ್ ರಂಗನಾಥನ್ 54. ಮಾಗಂಟಿ ಮುರಳಿ ಮೋಹನ್ 55. ಮಹೇಂದ್ರ ಕುಮಾರ್ ಮಿಶ್ರಾ 56. ಮಹೇಂದ್ರ ನಾಥ್ ರಾಯ್ 57. ಮಾಮಿದಾಳ ಜಗದೇಶ್ ಕುಮಾರ್ 58. ಮಂಗಳಾ ಕಪೂರ್ 59. ಮೀರ್ ಹಾಜಿಭಾಯಿ ಕಾಸಂಭಾಯ್ 60. ಮೋಹನ್ ನಗರ 61. ನಾರಾಯಣ ವ್ಯಾಸ್ 62. ನರೇಶ್ ಚಂದ್ರ ದೇವ್ ವರ್ಮ 63. ನೀಲೇಶ್ ವಿನೋದಚಂದ್ರ ಮಂಡ್ಲೇವಾಲ 64. ನೂರುದ್ದೀನ್ ಅಹಮದ್ 65. ಒತುವಾರ್ ತಿರುತ್ತಣಿ ಸ್ವಾಮಿನಾಥನ್ 66. ಪದ್ಮಾ ಗುರ್ಮೆಟ್ 67. ಪಾಲ್ಕೊಂಡ ವಿಜಯ್ ಆನಂದ್ ರೆಡ್ಡಿ 68. ಪೋಖಿಲ ಲೆಕ್ತೇಪಿ 69. ಪ್ರಭಾಕರ ಬಸವಪ್ರಭು ಕೋರೆ 70. ಪ್ರತೀಕ್ ಶರ್ಮಾ 71. ಪ್ರವೀಣ್ ಕುಮಾರ್ 72. ಪ್ರೇಮ್ ಲಾಲ್ ಗೌತಮ್ 73. ಪ್ರೊಸೆನ್‌ಜಿತ್ ಚಟರ್ಜಿ 74. ಪುನ್ನಿಮೂರ್ತಿ ನಟೇಶನ್ 75. ಆರ್. ಕೃಷ್ಣನ್ (ಮರಣೋತ್ತರ) 76. ಆರ್.ವಿ.ಎಸ್. ಮಣಿ 77. ರಬಿಲಾಲ್ ತುಡು 78. ರಘುಪತ್ ಸಿಂಗ್ (ಮರಣೋತ್ತರ) 79. ರಘುವೀರ್ ತುಕಾರಾಂ ಖೇಡ್ಕರ್ 80. ರಾಜಸ್ತಪತಿ ಕಾಳಿಯಪ್ಪ ಗೌಂಡರ್ 81. ರಾಜೇಂದ್ರ ಪ್ರಸಾದ್ 82. ರಾಮ ರೆಡ್ಡಿ ಮಾಮಿಡಿ (ಮರಣೋತ್ತರ) 83. ರಾಮಮೂರ್ತಿ ಶ್ರೀಧರ್ 84. ರಾಮಚಂದ್ರ ಗೋಡ್ಬೋಲೆ ಮತ್ತು ಶ್ರೀಮತಿ ಸುನೀತಾ ಗೋಡ್ಬೋಲೆ (ಜೋಡಿ) 85. ರತಿಲಾಲ್ ಬೋರಿಸಾಗರ್ 86. ರೋಹಿತ್ ಶರ್ಮಾ 87. ಎಸ್.ಜಿ. ಸುಶೀಲಮ್ಮ 88. ಸಂಗ್ಯುಸಾಂಗ್ ಎಸ್. ಪೊಂಗೆನರ್ 89. ಸಂತ ನಿರಂಜನ್ ದಾಸ್ 90. ಶರತ್ ಕುಮಾರ್ ಪಾತ್ರ 91. ಸರೋಜ್ ಮಂಡಲ್ 92. ಸತೀಶ್ ಶಾ (ಮರಣೋತ್ತರ) 93. ಸತ್ಯನಾರಾಯಣ ನುವಾಲ್ 94. ಸವಿತಾ ಪುನಿಯಾ 95. ಶಾಫಿ ಶೌಕ್ 96. ಶಶಿ ಶೇಖರ್ ವೆಂಪಾಟಿ 97. ಶ್ರೀರಂಗ್ ದೇವಬ ಲಾಡ್ 98. ಶುಭಾ ವೆಂಕಟೇಶ ಅಯ್ಯಂಗಾರ್ 99. ಶ್ಯಾಮ್ ಸುಂದರ್ 100. ಸಿಮಾಂಚಲ್ ಪಾತ್ರೋ 101. ಶಿವಶಂಕರಿ 102. ಸುರೇಶ ಹನಗವಾಡಿ 103. ಸ್ವಾಮಿ ಬ್ರಹ್ಮದೇವ್ ಜಿ ಮಹಾರಾಜ್ 104. ಟಿ.ಟಿ. ಜಗನ್ನಾಥನ್ (ಮರಣೋತ್ತರ) 105. ತಗಾ ರಾಮ್ ಭಿಲ್ 106. ತರುಣ್ ಭಟ್ಟಾಚಾರ್ಯ 107. ಟೆಕಿ ಗುಬಿನ್ 108. ತಿರುವಾರೂರ್ ಭಕ್ತವತ್ಸಲಂ 109. ತೃಪ್ತಿ ಮುಖರ್ಜಿ 110. ವೀಜಿನಾಥನ್ ಕಾಮಕೋಟಿ 111. ವೆಂಪಾಟಿ ಕುಟುಂಬ ಶಾಸ್ತ್ರಿ 112. ವ್ಲಾಡಿಮರ್ ಮೆಸ್ಟ್ವಿರಿಶ್ವಿಲಿ (ಮರಣೋತ್ತರ) 113. ಯುಮ್ನಮ್ ಜತ್ರಾ ಸಿಂಗ್ (ಮರಣೋತ್ತರ)

ವಾರ್ತಾ ಭಾರತಿ 25 Jan 2026 8:20 pm

ಉಡುಪಿ| ಕಲ್ಸಂಕ ಜಂಕ್ಷನ್ ಬಳಿ ಭೀಕರ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತ್ಯು

ಉಡುಪಿ, ಜ.25: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಣಿಪಾಲದ ಅವಿನಾಶ್ (19) ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬಿದ್ದಿದ್ದು, ಈ ವೇಳೆ ಲಾರಿಯ ಚಕ್ರವು ಸವಾರದ ತಲೆಯ ಮೇಲೆ ಹರಿಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವಾರ್ತಾ ಭಾರತಿ 25 Jan 2026 8:20 pm