Kalaburagi | ಎನ್ನೆಸ್ಸೆಸ್ ಶಿಬಿರದಿಂದ ನಾಯಕತ್ವ ಗುಣ ಬೆಳವಣಿಗೆ : ಡಾ.ಸುರೇಶಕುಮಾರ
ಕಲಬುರಗಿ : ಎನ್ನೆಸ್ಸೆಸ್ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆ, ನಾಯಕತ್ವ ಗುಣಗಳು, ಶಿಸ್ತು ಮತ್ತು ವ್ಯಕ್ವಿತ್ವ ವಿಕಸನವನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಶರಣಬಸವೇಶ್ವರ ಕಲಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಸುರೇಶಕುಮಾರ ನಂದಗಾಂವ ಹೇಳಿದರು. ಶರಣಬಸವೇಶ್ವರ ಕಲಾ ಪದವಿ ಮಹಾವಿದ್ಯಾಲಯ ಮತ್ತು ಗುಲಬರ್ಗಾ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಮಂಗಳವಾದಿಂದ ಒಂದು ವಾರ ನಡೆಯುವ 2025-26ನೇ ಶೈಕ್ಷಣಿಕ ಸಾಲಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ನನಗಾಗಿ ಅಲ್ಲ ನಿಮಗಾಗಿ’ ಎಂಬುವುದು ಶಿಬಿರದ ಮುಖ್ಯ ಧ್ಯೇಯವಾಗಿದೆ. ಈ ಯೋಜನೆ ಮಹಾತ್ಮ ಗಾಂಧಿಜಿಯವರ ಕನಸ್ಸಿನ ಕೂಸು. ಸ್ವಚ್ಛತೆ, ಆರೋಗ್ಯ ಜಾಗೃತಿ, ಪರಿಸರ ಸಂರಕ್ಷಣೆ ಬಗ್ಗೆ ತಿಳಿಯುವುದು. ಗ್ರಾಮೀಣ ಜೀವನವನ್ನು ಅರಿತುಕೊಳ್ಳುವಿರಿ. ಶಿಬಿರದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಉಪಯೋಗ ಪಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶಿಬಿರವನ್ನು ಸಂಸ್ಥೆಯ ಕು.ಪರಮೇಶ್ವರಿ ಪ್ರಭುರಾಜ ಅಪ್ಪ ಉದ್ಘಾಟಿಸಿದರು. ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶರಣಗೌಡ ಪಾಟೀಲ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅನಿಲ್ ಭರಣಿ ಮಾತನಾಡಿದರು. ಮಹಾವಿದ್ಯಾಲಯದ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ.ವಿಜಯಲಕ್ಷ್ಮಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರೆ, ಕು. ಸುವರ್ಣ ನಿರೂಪಿಸಿದರು. ಪ್ರಾಧ್ಯಾಪಕ ಡಾ. ಲಕ್ಷ್ಮಿಪುತ್ರ ವಂದಿಸಿದರು. ಸಹ ಸಂಯೊಜಕರಾದ ಪ್ರೊ.ಅನಿತಾ ಗೊಬ್ಬುರ್, ಡಾ. ಮಿಲಿಂದಕುಮಾರ ಸುಳ್ಳದ್, ಪ್ರಾಧ್ಯಾಪಕರಾದ ಡಾ.ಆರತಿ, ಡಾ.ಪಿಂಕ್ಯಾಯಿನಿ ಮತ್ತು ಶಿಬಿರಾರ್ಥಿಗಳು ಇದ್ದರು.
Kalaburagi | ಅಂಬೇಡ್ಕರ್ ಶೋಷಿತರಿಗೆ ಬೆಳಕಾದ ಮಹಾನ್ ದಾರ್ಶನಿಕ : ಡಾ.ಶ್ರೀಮಂತ ಹೋಳಕರ
ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅಪ್ಪಟ ದೇಶಭಕ್ತರಾಗಿದ್ದು, ಸ್ವಾತಂತ್ರ್ಯ ಹೋರಾಟದ ಜೊತೆಗೆ ಶೋಷಿತ ಜನಾಂಗದ ಹಕ್ಕುಗಳಿಗಾಗಿ ಹೋರಾಡಿ ಅವರ ಬಾಳಿಗೆ ಬೆಳಕಾದ ಮಹಾನ್ ನಾಯಕರು ಎಂದು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಪ್ರಾಧ್ಯಾಪಕ ಡಾ. ಶ್ರೀಮಂತ ಬಿ. ಹೋಳಕರ ಹೇಳಿದರು. ಕುಸನೂರ ರಸ್ತೆಯ ಜಿಡಿಎ ಕಾಲೋನಿಯ ಉಜ್ವಲ ಹೌಸಿಂಗ್ ಸೊಸೈಟಿ ಹಾಗೂ ಬುದ್ಧ–ಬಸವ ಡಾ. ಬಿ.ಆರ್. ಅಂಬೇಡ್ಕರ್ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಡಾ. ಅಂಬೇಡ್ಕರ್ ಪುಸ್ತಕ ಪ್ರೇಮಿಯಾಗಿದ್ದು, ಅವರ ಮನೆಯ ಗ್ರಂಥಾಲಯದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಪುಸ್ತಕಗಳಿದ್ದವು. ಜಗತ್ತಿನ ಮಹಾನ್ ಚಿಂತಕರು, ತತ್ವಜ್ಞಾನಿಗಳ ಕೃತಿಗಳನ್ನು ಅಧ್ಯಯನ ಮಾಡುವ ಮೂಲಕ ಅವರು ವಿಶ್ವಜ್ಞಾನಿಯಾಗಿ ಗುರುತಿಸಿಕೊಂಡರು ಎಂದು ಹೇಳಿದರು. ಸಮಾಜದಲ್ಲಿದ್ದ ಜಾತೀಯತೆ, ಅಸಮಾನತೆ ಮತ್ತು ಅನ್ಯಾಯದ ವಿರುದ್ಧ ಬಾಲ್ಯದಿಂದಲೇ ಹೋರಾಡಿದ ಅಂಬೇಡ್ಕರ್, ಶಿಕ್ಷಣವೇ ಸಮಾನತೆಗೆ ದಾರಿ ಎಂದು ನಂಬಿ, ಶ್ರೇಷ್ಠ ಸಂವಿಧಾನ ರಚನೆ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಅವಕಾಶಗಳನ್ನು ಒದಗಿಸಿದರು ಎಂದರು. ಇಂತಹ ದಾರ್ಶನಿಕರ ತತ್ವ–ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗೆ ಅರ್ಥ ಸಿಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಎಸ್ ಮಾತನಾಡಿ, ಡಾ. ಅಂಬೇಡ್ಕರ್ ಮಹಾನ್ ಮಾನವತಾವಾದಿಯಾಗಿದ್ದು, ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣಕ್ಕಾಗಿ ಸಂವಿಧಾನ ರೂಪಿಸಿದರು. ದುರ್ಬಲರು, ಶೋಷಿತರು, ಹಿಂದುಳಿದವರು, ಕಾರ್ಮಿಕರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಕೆಲಸ ಮಾಡಿ ಅವರನ್ನು ಮುಖ್ಯವಾಹಿನಿಗೆ ತಂದರು ಎಂದು ಹೇಳಿದರು. ಮಹಿಳೆಯರಿಗೆ ಶಿಕ್ಷಣ, ಮತದಾನ ಹಕ್ಕು ಹಾಗೂ ವಿವಿಧ ಸೌಲಭ್ಯಗಳನ್ನು ನೀಡುವ ಮೂಲಕ ಸಮಾಜದಲ್ಲಿ ಸಮಾನತೆ ತರಲು ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಬಾಬಾಸಾಹೇಬರ ಋಣವನ್ನು ದೇಶದ ಯಾರೂ ತೀರಿಸಲು ಸಾಧ್ಯವಿಲ್ಲ; ಅವರ ಚಿಂತನೆಗಳನ್ನು ಮರೆತರೆ ಅದು ಅವರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿದರು. ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಅನುರಾಧ ಜಗದೇವ ಮೋತಿ, ಧಮ್ಮಮಿತ್ರ ನಾಗೇಂದ್ರ ಕಟ್ಟಿಮನಿ, ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ.ರಾಜೇಂದ್ರ ಬಾಲ್ಕೆ, ಅಹಿಂದ ರಾಜ್ಯಾಧ್ಯಕ್ಷ ಸಾಯಿಬಣ್ಣ ಜಮಾದಾರ, ಉಪನ್ಯಾಸಕ ನಿಜಲಿಂಗ ದೊಡ್ಡಮನಿ, ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಸಂಘದ ಉಪಾಧ್ಯಕ್ಷ ಸಂಜೀವಕುಮಾರ್ ಹೊಡಲ್, ಕಾರ್ಯದರ್ಶಿ ಪ್ರದೀಪ್ ಎಸ್.ಗುಂಡಗುರ್ತಿ, ಖಜಾಂಚಿ ಸಂತೋಷ ಕಾಂಬ್ಳೆ, ಅರ್ಜುನ ಉಪಳಾಂವಕರ, ಈರಣ್ಣ ಜಮಾದಾರ, ಸಂಜೀವಕುಮಾರ ಮರತರ್ಕರ್, ಸುಪ್ರೀಯಾ, ಅನೀತಾ ಸಕ್ಪಾಲ, ಅಂಬಿಕಾ ಹೋಳಕರ, ಬಡಾವಣೆಯ ನಾಗರೀಕರು, ಮಹಿಳೆಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿವಕುಮಾರ್ ಮೋತಿ ಸ್ವಾಗತಿಸಿದರು. ವಿಜಯಕುಮಾರ್ ಕಾಂಬ್ಳೆ ಕಾರ್ಯಕ್ರಮ ನಿರ್ವಹಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ನಾಗೇಂದ್ರ ನಂದ ವಂದಿಸಿದರು.
ಕಾಳಗಿ | ಅಕ್ರಮ ಸವಳು ಗಣಿಗಾರಿಕೆ ವಿರೋಧಿಸಿ ಪ್ರತಿಭಟನೆ
ಕಾಳಗಿ: ತಾಲೂಕಿನ ಕಂಚನಾಳ ಗ್ರಾಮದ ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಸವಳು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಸಂಬಂಧಿತ ಗಣಿ ಮಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕಂಚನಾಳ ಗ್ರಾಮದ ಸರಕಾರಿ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡು ಹಲವು ಎಕರೆ ಪ್ರದೇಶದಲ್ಲಿ 40 ರಿಂದ 50 ಅಡಿ ಆಳಕ್ಕೆ ಅಗೆದು ಬಿಳಿ ಸವಳು ಮಣ್ಣನ್ನು ಅಕ್ರಮವಾಗಿ ಹೊರತೆಗೆದು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ತಾಲೂಕಿನಾದ್ಯಂತ ಸವಳು ಗಣಿಗಾರಿಕೆ ನಡೆಸಲು ಒಂದು ಎಕರೆ ಭೂಮಿಗೆ ಮಾತ್ರ ಲೀಸ್ ಪಡೆದಿದ್ದರೂ, ಅದರ ಸುತ್ತಲೂ 4-5 ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂದು ದೂರಿದರು. ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011ರ ಕಲಂ (7) ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾಳಗಿ ತಾಲೂಕಿನಾದ್ಯಂತ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಸಚಿನ್ ಚವ್ಹಾಣ, ಮೊಶಿನ್ ಪಟೇಲ್, ಸಚಿನ್ ಸಿ. ರಾಠೋಡ್, ಸೀತಾರಾಮ್ ಪವಾರ್, ಗೇನಾ ಬಾಯಿ, ಶಾಂತಾ ಬಾಯಿ, ತುಕರಾಮ್, ಪಾಶಾಮಿಯ್ಯಾ, ಪ್ರದೀಪ್, ಗುರು, ದಿನೇಶ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
Koppal | ಬಿಸಿಲಿನ ತೀವ್ರತೆ ಹೆಚ್ಚಳ: ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಸಲಹೆಗಳು
ಕೊಪ್ಪಳ: ಜಿಲ್ಲೆಯಾದ್ಯಂತ ಬಿಸಿಲಿನ ಪ್ರಖರತೆ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ಧರು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಲಹೆ ನೀಡಿದೆ. ಬೇಸಿಗೆ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಪ್ರಮುಖ ಕ್ರಮಗಳನ್ನು ಅನುಸರಿಸುವುದು ಅಗತ್ಯವಾಗಿದ್ದು, ಸಾರ್ವಜನಿಕರಿಗೆ ಕೆಳಗಿನ ಸಲಹೆಗಳನ್ನು ನೀಡಲಾಗಿದೆ. ನೀರಿನ ಸೇವನೆ : ಬಾಯಾರಿಕೆ ಇಲ್ಲದಿದ್ದರೂ ದಿನವಿಡೀ ಸಾಕಷ್ಟು ನೀರು ಕುಡಿಯಬೇಕು. ದೇಹದಲ್ಲಿ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು. ತಂಪು ಪಾನೀಯಗಳ ಸೇವನೆ : ನಿಂಬೆ ನೀರು, ಮಜ್ಜಿಗೆ, ಎಳೆನೀರು ಹಾಗೂ ಮನೆಯಲ್ಲಿ ತಯಾರಿಸಿದ ತಂಪು ಪಾನೀಯಗಳನ್ನು ಹೆಚ್ಚು ಸೇವಿಸುವುದು ಉತ್ತಮ. ಆಹಾರ ಕ್ರಮ : ಸೌತೆಕಾಯಿ, ಕಲ್ಲಂಗಡಿ, ಕಿತ್ತಳೆ ಹಾಗೂ ದ್ರಾಕ್ಷಿಯಂತಹ ನೀರಿನ ಅಂಶ ಹೆಚ್ಚಿರುವ ಹಣ್ಣು-ತರಕಾರಿಗಳನ್ನು ಸೇವಿಸಬೇಕು. ಬಟ್ಟೆ ಧರಿಸುವುದು : ಹಗುರವಾದ, ತಿಳಿ ಬಣ್ಣದ ಹಾಗೂ ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸುವುದು ಸೂಕ್ತ. ಹೊರಗೆ ಹೋಗುವಾಗ ಜಾಗ್ರತೆ : ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿಗೆ ಹೋಗುವುದನ್ನು ತಪ್ಪಿಸಿ. ಹೊರಹೋಗಲೇಬೇಕಾದರೆ ಛತ್ರಿ, ಟೋಪಿ, ಕಪ್ಪು ಕನ್ನಡಕ ಹಾಗೂ ಚಪ್ಪಲಿಗಳನ್ನು ಬಳಸಬೇಕು. ಪ್ರಥಮ ಚಿಕಿತ್ಸೆ : ಬಿಸಿಲಿನಿಂದ ಯಾರಾದರೂ ಪ್ರಜ್ಞೆ ತಪ್ಪಿದರೆ ತಕ್ಷಣ ಅವರನ್ನು ತಂಪಾದ ಸ್ಥಳಕ್ಕೆ ಕರೆದೊಯ್ದು, ಒದ್ದೆ ಬಟ್ಟೆಯಿಂದ ದೇಹ ಒರೆಸಿ ವೈದ್ಯರನ್ನು ಸಂಪರ್ಕಿಸಬೇಕು. ಸಭೆ-ಸಮಾರಂಭ : ಹೊರಾಂಗಣ ಕಾರ್ಯಕ್ರಮಗಳನ್ನು ಬೆಳಗ್ಗೆ ಅಥವಾ ಸಂಜೆ ವೇಳೆಗೆ ಆಯೋಜಿಸಿ, ಜನರಿಗೆ ನೆರಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪ್ರಾಣಿಗಳ ಆರೈಕೆ : ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. ವಾಹನಗಳಲ್ಲಿ ಜಾಗ್ರತೆ : ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಒಬ್ಬರೇ ಬಿಟ್ಟು ಹೋಗಬಾರದು. ತಪ್ಪಿಸಬೇಕಾದವು : ಆಲ್ಕೋಹಾಲ್, ಅತಿಯಾದ ಚಹಾ, ಕಾಫಿ ಹಾಗೂ ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಸೇವಿಸುವುದನ್ನು ತಪ್ಪಿಸಬೇಕು. ಮಕ್ಕಳ ಸುರಕ್ಷತೆ : ಕೆರೆ, ಬಾವಿ ಹಾಗೂ ಕಾಲುವೆಗಳ ಹತ್ತಿರ ಮಕ್ಕಳು ಹೋಗದಂತೆ ವಿಶೇಷ ನಿಗಾ ವಹಿಸಬೇಕು. ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಪ್ರಕಟಣೆಯಲ್ಲಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.
ಕಂಪ್ಲಿಯಲ್ಲಿ ಗಾಂಧಾರಿ ವಿದ್ಯೆ ತರಬೇತಿ ಶಿಬಿರ : ಮಕ್ಕಳ ಅದ್ಭುತ ಪ್ರತಿಭೆ ನೋಡಿ ಜನರು ಬೆರಗು
ಕಂಪ್ಲಿ :ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಾವು ಒಂದು ಹೆಜ್ಜೆ ಕೂಡ ಮುಂದಿಡಲು ಪರದಾಡುತ್ತೇವೆ. ಆದರೆ ಇಲ್ಲೊಂದೆಡೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಓದುವುದು, ಬರೆಯುವುದು, ಬಣ್ಣಗಳನ್ನು ಗುರುತಿಸುವುದು, ಚಿತ್ರಗಳಿಗೆ ಬಣ್ಣ ಹಚ್ಚುವುದು, ನೋಟಿನ ಮುಖಬೆಲೆ ಹೇಳುವುದು, ಸೈಕಲ್ ಓಡಿಸುವುದು... ಇಂತಹ ಅಚ್ಚರಿಯ ಸಾಧನೆಗಳನ್ನು ಮಾಡುತ್ತಿರುವ ಮಕ್ಕಳು ಇದೀಗ ಕಂಪ್ಲಿಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಮಹಾಭಾರತದ ಗಾಂಧಾರಿ ಕಣ್ಣಿಗೆ ಬಟ್ಟೆ
Koppal | ಕಚೇರಿಗೆ ತಡವಾಗಿ ಬಂದರೆ ಕ್ರಮ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ಕಟ್ಟುನಿಟ್ಟಿನ ಎಚ್ಚರಿಕೆ
ಕೊಪ್ಪಳ : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಶಿಸ್ತಿನಿಂದ ಹಾಗೂ ಸಮಯ ಪ್ರಜ್ಞೆಯೊಂದಿಗೆ ಕೆಲಸ ಮಾಡಬೇಕು. ಅಶಿಸ್ತು ಮುಂದುವರೆದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಎಚ್ಚರಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಅವರು ಮಾತನಾಡಿದರು. ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗಬೇಕು. “ನೀವೇ ತಡವಾಗಿ ಬಂದು ಸಿಬ್ಬಂದಿಗೆ ಹೇಗೆ ಪಾಠ ಹೇಳುತ್ತೀರಿ?” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲಾಮಟ್ಟದ ಅಧಿಕಾರಿಗಳಾಗಿ ಜವಾಬ್ದಾರಿತನದಿಂದ ನಡೆದುಕೊಳ್ಳಬೇಕು ಎಂದು ಹೇಳಿದರು. ಸಭೆಯಲ್ಲಿ ಇಲಾಖಾವಾರು ಹಾಜರಾತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಅರ್ಧಗಂಟೆಗೂ ಹೆಚ್ಚು ಕಾಲ ಶಿಸ್ತಿನ ಪಾಠ ಮಾಡಿದರು. ಬಿಸಿಲಿನ ತೀವ್ರತೆ ಹಿನ್ನೆಲೆಯಲ್ಲಿ ಸರ್ಕಾರವು ಏಪ್ರಿಲ್–ಮೇ ತಿಂಗಳಲ್ಲಿ ಕಚೇರಿ ಸಮಯವನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ನಿಗದಿಪಡಿಸಿದರೂ, ಕೆಲವು ಕಚೇರಿಗಳಲ್ಲಿ ಅಧಿಕಾರಿಗಳು ಸಮಯಕ್ಕೆ ಬಾರದಿರುವ ಬಗ್ಗೆ ಬಂದ ವರದಿಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಹಿನ್ನೆಲೆ ಏಪ್ರಿಲ್ 21ರಂದು ಕೆಲ ಕಚೇರಿಗಳಿಗೆ ಆಕಸ್ಮಿಕ ಭೇಟಿ ನೀಡಿದಾಗ, ಬೆಳಗ್ಗೆ 10 ಗಂಟೆಯಾದರೂ ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಗೈರಾಗಿರುವುದು ಕಂಡುಬಂದಿದೆ ಎಂದು ಹೇಳಿದರು. ವಾರಂವಾರ ಆಕಸ್ಮಿಕ ಪರಿಶೀಲನೆ : ಇನ್ಮುಂದೆ ಅಧಿಕಾರಿಗಳ ತಂಡ ರಚಿಸಿ ವಾರಕ್ಕೊಮ್ಮೆ ಕಚೇರಿಗಳಿಗೆ ಆಕಸ್ಮಿಕ ಭೇಟಿ ನೀಡಲಾಗುತ್ತದೆ. ಗೈರಾಗಿರುವವರ ವಿರುದ್ಧ ಮೇಲಾಧಿಕಾರಿಗಳಿಗೆ ವರದಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಕಚೇರಿಗೆ ತಡವಾಗಿ ಬರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡಲಾಗುವುದು ಎಂದರು. ಚಲನವಲನ ವಹಿ ಕಡ್ಡಾಯ : ಎಲ್ಲಾ ಕಚೇರಿಗಳಲ್ಲೂ ಅಧಿಕಾರಿಗಳು ಮತ್ತು ಸಿಬ್ಬಂದಿಯ ಚಲನವಲನ ತಿಳಿಯಲು ‘ಚಲನವಲನ ವಹಿ’ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ವೈದ್ಯರ ಮೇಲೆ ಸಾಕಷ್ಟು ದೂರು : ಜಿಲ್ಲೆಯಲ್ಲಿ ವೈದ್ಯಾಧಿಕಾರಿಗಳು ಮತ್ತು ವೈದ್ಯರ ವಿರುದ್ಧ ಸಾಕಷ್ಟು ದೂರುಗಳು ಬರುತ್ತಿದ್ದು, ಇನ್ನು ಮುಂದೆ ಇಂತಹ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದರು. ಶುಚಿತ್ವಕ್ಕೆ ಒತ್ತು : ಕೆಲ ಕಚೇರಿಗಳಲ್ಲಿ ಅಶುಚಿತ್ವ, ಅನಿಯಂತ್ರಿತ ಪೋಸ್ಟರ್ ಅಂಟಿಸುವುದು ಕಂಡುಬಂದ ಹಿನ್ನೆಲೆಯಲ್ಲಿ ಶಿಸ್ತು ಪಾಲಿಸಬೇಕು. ಪ್ರತಿ ತಿಂಗಳು ಕಚೇರಿಯಲ್ಲಿ ಶುಚಿತ್ವ ಅಭಿಯಾನ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದೇಶಕರಾದ ಮಂಜುನಾಥ ಗುಂಡೂರು, ಜಂಟಿ ಕೃಷಿ ನಿರ್ದೇಶಕರಾದ ಜಿ.ಡಿ.ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಅಜ್ಜಪ್ಪ ಸೋಗಲದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಟಿ.ಲಿಂಗರಾಜು, ಪಶು ಇಲಾಖೆ ಉಪನಿರ್ದೇಶಕರಾದ ಡಾ. ಪಿ.ಎಂ.ಮಲ್ಲಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Yadgiri | ಮುಸ್ಲಿಂ ನಾಯಕರ ವಿರುದ್ಧ ಕ್ರಮ ದುರುದ್ದೇಶಪೂರ್ವಕ: ಖಾಸಿಂಸಾಬ್ ಗಡ್ಡೆಸೂಗೂರು ಆರೋಪ
ಯಾದಗಿರಿ: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಮುಸ್ಲಿಂ ನಾಯಕರ ವಿರುದ್ಧ ದುರುದ್ದೇಶಪೂರ್ವಕವಾಗಿ ಕ್ರಮ ಕೈಗೊಂಡು ಪಕ್ಷದಿಂದ ಹೊರಹಾಕಲಾಗುತ್ತಿದೆ. ಫಲಿತಾಂಶ ಬರುವ ಮುನ್ನವೇ ಇಂತಹ ಕ್ರಮ ಸರಿಯಲ್ಲ ಎಂದು ಟೆಂಟ್ ಆಂಡ್ ಡೆಕೋರೇಟರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಹಾಗೂ ಮುಸ್ಲಿಂ ಸಮುದಾಯದ ಮುಖಂಡ ಖಾಸಿಂಸಾಬ್ ಗಡ್ಡೆಸೂಗೂರು ಆರೋಪಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಆಧಾರವಾಗಿ ಕ್ರಮ ಕೈಗೊಳ್ಳಬೇಕಾದರೆ ಮೊದಲು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೂ ಕ್ರಮ ಜರುಗಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ಹೇಳಿಕೆ ನೀಡಿರುವ ರಣದೀಪ್ ಸುರ್ಜೇವಾಲಾ ಅವರು ಡಿ.ಕೆ.ಶಿವಕುಮಾರ ಅವರಿಗೆ ಬೆಂಬಲ ನೀಡುತ್ತಿದ್ದಾರೆ. ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ರಾಹುಲ್ ಗಾಂಧಿ ಸೂಚನೆ ಮೀರಿ ಅಂಬಾನಿ ಮದುವೆಗೆ ಹಾಜರಾಗಿರುವ ಡಿ.ಕೆ.ಶಿವಕುಮಾರ ಮತ್ತು ಅವರ ಸಹೋದರ ಸುರೇಶ್ ಅವರ ಮೇಲೂ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. 2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಇಕ್ಬಾಲ್ ಅಹ್ಮದ್ ಹಾಗೂ 2013ರಲ್ಲಿ ಜಿ. ಪರಮೇಶ್ವರ ಅವರನ್ನು ಸೋಲಿಸಲು ಸಿದ್ದರಾಮಯ್ಯ ಕಾರಣರಾಗಿದ್ದರು. ಆ ಸಂದರ್ಭದಲ್ಲಿ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು. ಇದೇ ರೀತಿ ರಾಜ್ಯ ಸರ್ಕಾರದ ಜಾತಿ ಗಣತಿ ವಿರುದ್ಧ ಹೇಳಿಕೆ ನೀಡಿದ್ದ ದಿ. ಶಾಮನೂರು ಶಿವಶಂಕರಪ್ಪ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಬೆಂಬಲಿಸಲು ಹೇಳಿದ್ದ ಘಟನೆಗಳಲ್ಲೂ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಅವರು ಪ್ರಶ್ನಿಸಿದರು. ಸಂಘದ ರಾಜ್ಯ ನಿರ್ದೇಶಕ ರವಿ ಮುದ್ನಾಳ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
TCS ನಾಸಿಕ್ ಪ್ರಕರಣ | ಎಫ್ಐಆರ್ ಗಳು ಮತ್ತು ಸಾರ್ವಜನಿಕ ನಿರೂಪಣೆ ನಡುವಿನ ವ್ಯತ್ಯಾಸ ಬಯಲಿಗೆಳೆದ APCR ತನಿಖಾ ವರದಿ
ಮುಂಬೈ, ಎ.21: ನಾಸಿಕ್ ನ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (TCS) ಘಟಕದಲ್ಲಿ ನಡೆದಿದೆ ಎನ್ನಲಾದ ದುರ್ವರ್ತನೆ ಮತ್ತು ಧಾರ್ಮಿಕ ದಬ್ಬಾಳಿಕೆ ಪ್ರಕರಣದಲ್ಲಿ, ದಾಖಲಿತ ಸಾಕ್ಷ್ಯಾಧಾರಗಳು ಮತ್ತು ಸಾರ್ವಜನಿಕವಾಗಿ ಪ್ರಸಾರವಾಗುತ್ತಿರುವ ನಿರೂಪಣೆ ನಡುವಿನ ವ್ಯತ್ಯಾಸಗಳನ್ನು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ಮಹಾರಾಷ್ಟ್ರ ಘಟಕ ನಡೆಸಿದ ತನಿಖೆ ಬಹಿರಂಗಗೊಳಿಸಿದೆ. ಕ್ಷೇತ್ರ ಭೇಟಿ, ಎಫ್ಐಆರ್ ಗಳು, ನ್ಯಾಯಾಲಯದ ದಾಖಲೆಗಳು, ಮಾಧ್ಯಮ ವರದಿಗಳ ಪರಿಶೀಲನೆ ಹಾಗೂ ಸಂಬಂಧಿತ ವ್ಯಕ್ತಿಗಳೊಂದಿಗೆ ಸಂವಹನಗಳ ಬಳಿಕ, APCR ಸತ್ಯಶೋಧನಾ ತಂಡವು ಸಾರ್ವಜನಿಕವಾಗಿ ಕೇಳಿಬಂದಿರುವ ಆರೋಪಗಳ ಕುರಿತು ಇನ್ನೂ ತನಿಖೆ ನಡೆಯುತ್ತಿದ್ದು, ಈ ಹಂತದಲ್ಲಿ ಅವುಗಳಿಗೆ ನಿರ್ಣಾಯಕ ಸಾಕ್ಷ್ಯಾಧಾರಗಳಿಲ್ಲ ಎಂಬ ತೀರ್ಮಾನಕ್ಕೆ ಬಂದಿದೆ. ಕೆಲವು ದೂರುಗಳು ಧಾರ್ಮಿಕವಾಗಿ ಸೂಕ್ಷ್ಮವೆಂದು ಪರಿಗಣಿಸಲಾದ ಹೇಳಿಕೆಗಳನ್ನು ಉಲ್ಲೇಖಿಸಿದ್ದರೂ, ತನಿಖಾಧಿಕಾರಿಗಳು ಧಾರ್ಮಿಕ ಮತಾಂತರದ ಯಾವುದೇ ಸಂಘಟಿತ ಪ್ರಯತ್ನಗಳನ್ನು ಸಾಬೀತುಪಡಿಸಿಲ್ಲ. ಪ್ರತಿಯೊಂದು ಆರೋಪವನ್ನೂ ಪ್ರತ್ಯೇಕವಾಗಿ ಪರಿಶೀಲಿಸಲಾಗುತ್ತಿದೆ. ಪರಿಶೀಲಿತ ವಿಷಯಗಳು ಮತ್ತು ‘ಕಾರ್ಪೊರೇಟ್ ಜಿಹಾದ್’, ‘ಲವ್ ಜಿಹಾದ್’ ಎಂಬ ಪದಗಳನ್ನು ಯಾವುದೇ ಆಧಾರವಿಲ್ಲದೆ ಬಳಸುತ್ತಿರುವ ಸಾರ್ವಜನಿಕ ಚರ್ಚೆಗಳ ನಡುವೆ ಯಾವುದೇ ಸಂಬಂಧವಿಲ್ಲ ಎಂಬುದನ್ನು ತನಿಖೆ ಸೂಚಿಸಿದೆ. ಕೆಲಸದ ಸ್ಥಳದಲ್ಲಿನ ಕುಂದುಕೊರತೆ ನಿವಾರಣಾ ವ್ಯವಸ್ಥೆ ಕುರಿತು ಭಿನ್ನಾಭಿಪ್ರಾಯಗಳು ಹೊರಬಿದ್ದಿವೆ. ದೂರುದಾರರು ಪ್ರತಿಕೂಲ ವಾತಾವರಣ ಹಾಗೂ ದೂರುಗಳಿಗೆ ಪರಿಣಾಮಕಾರಿ ಪರಿಹಾರ ಸಿಗಲಿಲ್ಲವೆಂದು ಆರೋಪಿಸಿದ್ದರೆ, ಕಂಪನಿ ಪೋಲಿಸ್ ಕ್ರಮಕ್ಕೆ ಮುನ್ನ ಅಧಿಕೃತ ಮಾರ್ಗಗಳ ಮೂಲಕ ಯಾವುದೇ ಔಪಚಾರಿಕ ದೂರುಗಳು ದಾಖಲಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದೆ. ವರದಿಯು ನಿದಾ ಖಾನ್ ಅವರ ಮಾಧ್ಯಮ ಚಿತ್ರಣಗಳನ್ನು ಪ್ರಶ್ನಿಸಿದ್ದು, ಪ್ರಕರಣದಲ್ಲಿ ಅವರ ಪಾತ್ರ ಮತ್ತು ಹುದ್ದೆ ಕುರಿತು ವರದಿಗಳು ಹಾಗೂ ಕಂಪನಿಯ ಸ್ಪಷ್ಟೀಕರಣಗಳ ನಡುವಿನ ವ್ಯತ್ಯಾಸಗಳನ್ನು ಎತ್ತಿಹಿಡಿದಿದೆ. ಕೆಲವು ಮಾಧ್ಯಮಗಳು, ವಿಶೇಷವಾಗಿ ಬಲಪಂಥೀಯ ಒಲವು ಹೊಂದಿರುವವು, ನಿದಾ ಖಾನ್ ಅವರನ್ನು ‘ಮಾನವ ಸಂಪನ್ಮೂಲ ವ್ಯವಸ್ಥಾಪಕಿ’ ಹಾಗೂ ‘ಪ್ರಕರಣದ ಹಿಂದಿನ ರೂವಾರಿ’ ಎಂದು ಬಿಂಬಿಸಿವೆ. ಆದರೆ, ಕಂಪನಿಯ ಪ್ರಕಾರ, ನಿದಾ ಖಾನ್ ಯಾವುದೇ ಅಧಿಕಾರಪೂರ್ಣ ಹುದ್ದೆಯನ್ನು ಹೊಂದಿರಲಿಲ್ಲ. ರಝಾ ಮೆಮನ್ ಸೇರಿದಂತೆ ಆರೋಪಿಗಳ ಕುಟುಂಬ ಸದಸ್ಯರು ತಮ್ಮವರು ಯಾವುದೇ ತಪ್ಪು ಮಾಡಿಲ್ಲವೆಂದು ಹೇಳಿದ್ದಾರೆ. ವೈಯಕ್ತಿಕ ವಿವಾದಗಳು ಕ್ರಿಮಿನಲ್ ಆರೋಪಗಳಾಗಿ ವಿಸ್ತರಿಸಿರಬಹುದು ಎಂಬುದಾಗಿ ಅವರು ಅಭಿಪ್ರಾಯಪಟ್ಟಿದ್ದಾರೆ. ದಾನಿಷ್ ಶೇಖ್ ವಿರುದ್ಧ ಒಂಭತ್ತು ಎಫ್ಐಆರ್ ಗಳು ದಾಖಲಾಗಿದ್ದು, ಆರೋಪಿಗಳ ಪರ ವಕೀಲ ಬಾಬಾ ಸೈಯದ್ ದೂರುಗಳ ಸಮಯಕ್ರಮ (ಟೈಮ್ಲೈನ್) ಬಗ್ಗೆ ಪ್ರಶ್ನಿಸಿದ್ದಾರೆ. ಪ್ರಕರಣವು ವೈಯಕ್ತಿಕ ವಿವಾದವಾಗಿ ಆರಂಭಗೊಂಡು ಬಳಿಕ ಹಲವು ಪ್ರಕರಣಗಳಾಗಿ ವಿಸ್ತರಿಸಿದೆ ಎಂದು ಅವರು ಹೇಳಿದ್ದಾರೆ. ಕಲಂ 376ರಡಿ ಅತ್ಯಾಚಾರದ ಆರೋಪದೊಂದಿಗೆ ಮಹಿಳಾ ಉದ್ಯೋಗಿಯೋರ್ವರು ನೀಡಿದ ದೂರಿನಿಂದ ಪ್ರಕರಣ ಆರಂಭವಾಗಿದೆ. ಆರೋಪಿಯಾದ ದಾನಿಷ್ ತನ್ನ ಕಾಲೇಜು ಸ್ನೇಹಿತನಾಗಿದ್ದು, ಟಿಸಿಎಸ್ ನಲ್ಲಿ ಉದ್ಯೋಗ ಪಡೆಯಲು ನೆರವಾಗಿದ್ದ ಮತ್ತು ಬಳಿಕ ಇಬ್ಬರ ನಡುವೆ ಸಂಬಂಧ ಬೆಳೆದಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ನಂತರ ಅವರ ಸಂಬಂಧ ಹದಗೆಟ್ಟಿತು. ಮಾ.26ರಂದು ಮೊದಲ ಎಫ್ಐಆರ್ ದಾಖಲಾಗಿದ್ದು, ಬಳಿಕ ಒಂದೆರಡು ದಿನಗಳಲ್ಲಿ ಇನ್ನಷ್ಟು ಎಫ್ಐಆರ್ ಗಳು ದಾಖಲಾಗಿವೆ. ಇದು ತನಿಖೆಯ ವೇಗ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಸೈಯದ್ ಹೇಳಿದ್ದಾರೆ.
ಯಾದಗಿರಿಯಲ್ಲಿ ಬಿರುಗಾಳಿ ಮಳೆ ಅಬ್ಬರ | ಪಪ್ಪಾಯಿ ಬೆಳೆ ಹಾನಿ : ರೈತರಿಗೆ ಸಂಕಷ್ಟ
ಯಾದಗಿರಿ: ಜಿಲ್ಲೆಯಾದ್ಯಂತ ರವಿವಾರ ರಾತ್ರಿ ಸುರಿದ ಬಿರುಗಾಳಿ ಮಳೆಯ ಅಬ್ಬರಕ್ಕೆ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿ ಪಪ್ಪಾಯಿ ಬೆಳೆ ಭಾರೀ ಹಾನಿಗೊಳಗಾಗಿದೆ. ಶ್ರಮಪಟ್ಟು ಬೆಳೆದ ಬೆಳೆ ಕೈಗೆ ಬಾರದೇ ನೆಲಸಮವಾದ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಂದಳ್ಳಿ ಗ್ರಾಮದ ಸರ್ವೆ ನಂ. 53ರಲ್ಲಿ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಪಪ್ಪಾಯಿ ತೋಟಕ್ಕೆ ಪ್ರಕೃತಿ ವೈಪರೀತ್ಯ ಭಾರೀ ಹೊಡೆತ ನೀಡಿದೆ. ಹಣ್ಣು ತರುವ ಹಂತಕ್ಕೆ ಬಂದಿದ್ದ ಗಿಡಗಳು ಗಾಳಿಯ ತೀವ್ರತೆಗೆ ತುತ್ತಾಗಿ ನೆಲಕುಸಿದು ಹಾಳಾಗಿದ್ದು, ʼಕೈಗೆ ಬಂದ ತುತ್ತು ಬಾಯಿಗೆ ಬರದಂತಾಯಿತುʼ ಎಂಬಂತ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳೆಗಾಗಿ ಸಾಲ ಮಾಡಿಕೊಂಡಿದ್ದ ರೈತರು ಈಗ ಮತ್ತಷ್ಟು ಆರ್ಥಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಮಾರುಕಟ್ಟೆಯಲ್ಲಿ ಪಪ್ಪಾಯಿಗೆ ಸಮರ್ಪಕ ಬೆಲೆ ಸಿಗದ ಹಿನ್ನೆಲೆ ಈಗಾಗಲೇ ಸಂಕಷ್ಟದಲ್ಲಿದ್ದ ರೈತರಿಗೆ ಈ ನಷ್ಟ ದೊಡ್ಡ ಹೊರೆ ತಂದೊಡ್ಡಿದೆ. ತಕ್ಷಣ ಪರಿಹಾರ ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಸಂಬಂಧಪಟ್ಟ ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿ ಅಂದಾಜು ಮಾಡಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ. ಸರ್ಕಾರ ಸ್ಪಂದಿಸದಿದ್ದರೆ ಯಾದಗಿರಿ–ಸೇಡಂ ಮುಖ್ಯ ರಸ್ತೆಯಲ್ಲಿ ಪಪ್ಪಾಯಿ ಹಣ್ಣುಗಳನ್ನು ಚೆಲ್ಲಿ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಪ್ರಕೃತಿಯ ಅಬ್ಬರಕ್ಕೆ ಮತ್ತೆ ಬಲಿಯಾದ ರೈತರ ಸಂಕಷ್ಟಕ್ಕೆ ಸರ್ಕಾರ ಯಾವ ಮಟ್ಟಿಗೆ ಸ್ಪಂದಿಸುತ್ತದೆ ಎಂಬುದು ಕಾದು ನೋಡಬೇಕಿದೆ. ಗಾಳಿ ಮಳೆಯಿಂದ ಹಾನಿಗೊಳಗಾದ ಪಪ್ಪಾಯಿ ಬೆಳೆ ಪರಿಶೀಲನೆಗಾಗಿ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ನ್ಯಾಯಸಮ್ಮತ ಪರಿಹಾರ ನೀಡಬೇಕು. – ಉಮೇಶ್ ಮುದ್ನಾಳ ಸಾಲ ಮಾಡಿ ಎರಡು ಎಕರೆ ಜಮೀನಿನಲ್ಲಿ ಪಪ್ಪಾಯಿ ಬೆಳೆ ಬೆಳೆದಿದ್ದೇವೆ. ಬಿರುಗಾಳಿ ಮಳೆಯಿಂದ ಸುಮಾರು ಅರ್ಧದಷ್ಟು ಬೆಳೆ ಹಾನಿಯಾಗಿದೆ. ಈಗ ನಾವು ಸಂಕಷ್ಟದಲ್ಲಿದ್ದೇವೆ. ಸರ್ಕಾರವು ತಕ್ಷಣ ಸೂಕ್ತ ಪರಿಹಾರ ನೀಡಬೇಕು. – ಗೋವಿಂದ, ರೈತ
Yadgiri | ಜಗದ್ಗುರು ಆದಿ ಶಂಕರಾಚಾರ್ಯರ ಕೊಡುಗೆ ಅಪಾರ: ಶಾಸಕ ಚೆನ್ನಾರೆಡ್ಡಿ ಪಾಟೀಲ್
ಶಂಕರಾಚಾರ್ಯರ ಜಯಂತಿ ಆಚರಣೆ
ಬೆಂಗಳೂರು ವಾರ್ಡ್ ಮರುವಿಂಗಡಣೆ; ಕುಮಾರಸ್ವಾಮಿಗೆ ಅರಿವಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು : ‘ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ವಿಪಕ್ಷದ ಶಾಸಕರು, ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಪಾಲಿಕೆಗಳು ಹಾಗೂ ವಾರ್ಡ್ಗಳ ಮರುವಿಂಗಡಣೆ ಮಾಡಲಾಗಿದೆ. ಆದರೆ ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿಗೆ ಅರಿವಿಲ್ಲ. ಬೇಕಿದ್ದರೇ ಅವರ ಪಕ್ಷದ ಶಾಸಕರನ್ನೇ ಕೇಳಿ ತಿಳಿದುಕೊಳ್ಳಲಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮಂಗಳವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದ ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿಧೇಯಕ ಸಮರ್ಥಿಸಿಕೊಳ್ಳುವ ಭರದಲ್ಲಿ ಕುಮಾರಸ್ವಾಮಿ, ಬೆಂಗಳೂರು ಪಾಲಿಕೆಗಳ ವಾರ್ಡ್ ಮರುವಿಂಗಡಣೆ ಬಗ್ಗೆ ಯಾರೊಂದಿಗೂ ಚರ್ಚೆ ನಡೆಸಿಲ್ಲ ಎಂದು ಮಾಡಿರುವ ಆರೋಪ ಮಾಡಿದ್ದಾರೆ. ಆದರೆ, ಬೆಂಗಳೂರು ವಾರ್ಡ್ಗಳ ಮರುವಿಂಗಡಣೆ ವೇಳೆ ಎಲ್ಲ ಪಕ್ಷದ ಶಾಸಕರನ್ನು ಒಳಗೊಂಡ ಸಮಿತಿ ರಚಿಸಲಾಗಿತ್ತು. ಅವರ ಪಕ್ಷದ ಶಾಸಕರು ಸಮಿತಿಯ ಭಾಗವಾಗಿದ್ದರು. ಜೆಡಿಎಸ್-ಬಿಜೆಪಿ ಶಾಸಕರ ಜತೆ ಚರ್ಚೆ ಮಾಡಿ, ಅವರೆಲ್ಲರ ಅಭಿಪ್ರಾಯ ಪಡೆದ ನಂತರವೇ ಅಂತಿಮ ತೀರ್ಮಾನ ಮಾಡಲಾಗಿದೆ ಎಂದು ವಿವರಣೆ ನೀಡಿದರು. ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು. ನನಗೂ ಸಣ್ಣ ಅನುಭವವಿದೆ. ಈ ಅನುಭವದ ಮೇಲೆ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷದ ಶಾಸಕರು, ನಾಯಕರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬುದು ನನಗೂ ಗೊತ್ತಿದೆ. ನಾನು ಅವರ ಶಾಸಕರ ಜತೆ ಎಷ್ಟು ಗಂಟೆಗಳ ಕಾಲ ಚರ್ಚೆ ಮಾಡಿದ್ದೇನೆ, ಎಷ್ಟು ಗಂಟೆಗಳ ಕಾಲ ಸಾರ್ವಜನಿಕರೊಂದಿಗೆ ಸಂವಾದ ಮಾಡಲಾಗಿದೆ ಎಂದು ಎಚ್ಡಿಕೆ ತಿಳಿದುಕೊಂಡು ಮಾತನಾಡುವುದು ಸೂಕ್ತ ಎಂದು ಅವರು ಛೇಡಿಸಿದರು.
ಉಪಚುನಾವಣಾ ಫಲಿತಾಂಶದ ನಂತರ ಮುಸ್ಲಿಂ ನಾಯಕರ ಅಮಾನತು ಆದೇಶ ವಾಪಸ್ : ಸಚಿವ ಸತೀಶ್ ಜಾರಕಿಹೊಳಿ
ಮೈಸೂರು : ಅಬ್ದುಲ್ ಜಬ್ಬಾರ್ ಸೇರಿದಂತೆ ಅಲ್ಪಸಂಖ್ಯಾತ ನಾಯಕರ ಮೇಲಿನ ಕ್ರಮ ಮುಸ್ಲಿಂ ಮತಗಳ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ ದಾವಣಗೆರೆ ಉಪಚುನಾವಣಾ ಫಲಿತಾಂಶದ ನಂತರ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ ಆಗಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಸ್ಲಿಂ ನಾಯಕರ ಮೇಲಿನ ಕ್ರಮ ಪಕ್ಷಕ್ಕೆ ಹಿನ್ನಡೆಯಾಗಬಹುದು. ಹಾಗಾಗಿ ನಾವೆಲ್ಲ ಮಧ್ಯಸ್ಥಿಕೆ ವಹಿಸಿದ್ದೇವೆ. ಈ ಹಿಂದೆ ಅಮಾನತು ಆಗಿದ್ದವರು ಮರಳಿ ಪಕ್ಷಕ್ಕೆ ಬಂದಿದ್ದಾರೆ. ಜಬ್ಬಾರ್ ಕೂಡ ಮರಳಬಹುದು, ಸದ್ಯ ಅವರನ್ನು ಹೊರತುಪಡಿಸಿ ಬೇರೆ ಯಾರ ಮೇಲೂ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದರು. ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿದಿಯೋ ಇಲ್ಲವೊ ಗೊತ್ತಿಲ್ಲ. ಉಪಚುನಾಣಾ ಫಲಿತಾಂಶದ ನಂತರ ಇದರ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು. ಎಸ್.ಡಿ.ಪಿ.ಐ ಗೆ ಕಾಂಗ್ರೆಸ್ ಮುಖಂಡರು ಗಳಿಂದಲೇ ಹಣಕಾಸು ನೆರವು ನೀಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. ಮಾಜಿ ಸಚಿವ ರಾಜಣ್ಣ ಅವರ ಹೇಳಿಕೆ ಅವರ ವೈಯಕ್ತಿಕ. ರಾಜಕಾರಣದಲ್ಲಿ ಯಾವಾಗಲೂ ನಿಷ್ಠುರವಾಗಿ ಇರಲು ಆಗಲ್ಲ. ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಂದಿನಷ್ಟೇ ಕಠಿಣವಾಗಿದ್ದಾರೆ ಎಂದು ಹೇಳಿದರು.
Raichur | ಕಲಬೆರಕೆ ಹೆಂಡ ಮಾರಾಟ : ಆರೋಪಿ ಬಂಧನ
ರಾಯಚೂರು: ಕಲಬೆರಕೆ ಹೆಂಡವನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ನಾಗರಾಜ (45) ಎಂದು ಗುರುತಿಸಲಾಗಿದೆ. ನೆರೆಯ ತೆಲಂಗಾಣ ರಾಜ್ಯದ ಈರ್ಚೇಡ್ ಗ್ರಾಮದಿಂದ ಅರಸಿಕೇರಾ ಮಾರ್ಗವಾಗಿ ರಾಯಚೂರಿಗೆ ಟಿವಿಎಸ್ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ನಾಗರಾಜನನ್ನು ಬಂಧಿಸಿದರು. ದಾಳಿಯ ವೇಳೆ ಒಂದು ಲೀಟರ್ ಸಿ.ಎಚ್ ಪೌಡರ್ನ 51 ಪಾಕೆಟ್ಗಳನ್ನು ಜಪ್ತಿ ಮಾಡಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಕಲಂ 275, 286, 123 ಹಾಗೂ ಕೆ.ಇ ಕಾಯ್ದೆಯ 32, 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
Bidar | ವಿಶ್ವಗುರು ಬಸವಣ್ಣನವರ ಸಂದೇಶಗಳು ಇಂದಿಗೂ ಪ್ರಸ್ತುತ : ಗಣಪತಿ ಸಕ್ರೆಪನೋರ್
ಬೀದರ್ : ಸಮಾನತೆ, ಮಾನವೀಯತೆ ಹಾಗೂ ಶ್ರಮದ ಮಹತ್ವ ಸಾರಿದ 12ನೇ ಶತಮಾನದ ಮಹಾನ್ ಸಮಾಜ ಸುಧಾರಕ ವಿಶ್ವಗುರು ಬಸವಣ್ಣನವರ ಸಂದೇಶಗಳು ಇಂದಿನ ಸಮಾಜದಲ್ಲಿಯೂ ಅತ್ಯಂತ ಪ್ರಸ್ತುತವಾಗಿವೆ ಎಂದು ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣಪತಿ ಸಕ್ರೆಪನೋರ್ ತಿಳಿಸಿದರು. ನಗರದ ಅಂಬಿಗರ ಚೌಡಯ್ಯ ಸೇನೆಯ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಜಾತಿಯತೆ, ಅಸಮಾನತೆ, ಅಂಧಶ್ರದ್ಧೆ, ಶೋಷಣೆಗಳ ವಿರುದ್ಧ ಹೋರಾಡಿದ ಬಸವಣ್ಣನವರು ಸಮಾನತೆಯ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶನ ನೀಡಿದ್ದಾರೆ ಎಂದರು. ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸುನೀಲ್ ಭಾವಿಕಟ್ಟಿ ಅವರು ಮಾತನಾಡಿ, ಕಾಯಕವೇ ಕೈಲಾಸ ಎಂಬ ಬಸವಣ್ಣನವರ ಮಹತ್ವದ ಸಂದೇಶವು ಶ್ರಮಕ್ಕೆ ಗೌರವ ನೀಡುವ ಸಂಸ್ಕೃತಿಯನ್ನು ಬೆಳೆಸಿತು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಪರಿಶ್ರಮದಿಂದ ಬದುಕಬೇಕು. ಶ್ರಮವನ್ನು ಪವಿತ್ರವೆಂದು ಪರಿಗಣಿಸಬೇಕು ಎಂಬುದನ್ನು ಬಸವಣ್ಣನವರು ತಮ್ಮ ವಚನಗಳ ಮೂಲಕ ತಿಳಿಸಿದರು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತ ಎಂ.ಪಿ.ಮುದಾಳೆ, ಬಾಬುರಾವ್ ಕುಂಬಾರ್, ಸಂತೋಷ್ ಹೊನ್ನಡಿ, ಶರಣಬಸವ ಕೆ. ಹಾಗೂ ಚಂದ್ರಕಾಂತ್ ಹಳ್ಳಿಖೇಡಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Basavakalyan | ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ
ಬಸವಕಲ್ಯಾಣ : ಡಾ.ಅಂಬೇಡ್ಕರ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚಿಗೆ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ನಗರದ ಬಸವ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ದಿ.ನರಸಿಂಗರಾವ್ ಕಾಂಬಳೆ ಅವರ ಜನ್ಮದಿನಾಚರಣೆ ನಿಮಿತ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅತ್ತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಅವಟಿ ಶೇ.92.17, ಭೂಮಿಕಾ 91.50, ಅನುರಾಧಾ 87.33, ಆದಿತ್ಯ ಗಾಯಕವಾಡ್ ಶೇ.82.83, ಸೃಷ್ಠಿ ಶೇ. 79.83, ನಿಕಿತಾ ಸಿಂಗೆ ಶೇ. 77.50 ವಿದ್ಯಾರ್ಥಿಗಳಿಗೆ ಭಾರತೀಯ ದಲಿತ ಪ್ಯಾಂಥರ್ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅರ್ಬನ್ ಯುಥ್ ಕ್ಲಬ್ನ ಅಧ್ಯಕ್ಷ ರವೀಂದ್ರ ಗಾಯಕವಾಡ್ ಅವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ.ಜೈಶೇನ್ ಪ್ರಸಾದ್, ಉಪನ್ಯಾಸಕರಾದ ಶ್ರೀಧರ್ ಛಲವಾದಿ, ಶೇಖ್ ಸೈಫಾನ್, ವಿಜಯಕುಮಾರ್ ರಾಯಪಳ್ಳೆ, ಸತೀಷ್ ಕಾಂಬಳೆ, ವಿಲಾಸ್ ಜಾಧವ್, ಶ್ರೀನಿವಾಸ್ ಫುಲೆ, ಶಿಲ್ಪಾ ಕಾಲೇಬಾಗ್, ದೀಪಕ್ ಮೋರೆ, ಭಾಗ್ಯವಂತ್ ದಾದೆ, ಬಸವರಾಜ್, ದೇವಿಂದ್ರ ಗಜರೆ, ಜೈಭೀಮ್ ಕೋಲೆ, ವಿದ್ಯಾರ್ಥಿಗಳಾದ ವಿನಿತ್, ಸಿದ್ಧಾರ್ಥ ಹಾಗೂ ಭಾಸ್ಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನರೇಂದ್ರ ಮೋದಿ ಅವರಂತ ಗೆಳೆಯನ ಅಗತ್ಯ ಇಲ್ಲ; ಪ್ರಧಾನಿ ದೋಸ್ತಿ ಆಫರ್ ತಿರಸ್ಕರಿಸಿದ ಅಖಿಲೇಶ್ ಯಾದವ್!
ನನಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಂತ ಗೆಳೆಯ ರಾಜಕಾರಣದಲ್ಲೂ ಬೇಡ, ವೈಯಕ್ತಿಕ ಜೀವನದಲ್ಲೂ ಬೇಡ ಇದು ಸಮಾಜವಾದಿ ಮಖ್ಯಸ್ಥ ಮತ್ತು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಸ್ಪಷ್ಟನುಡಿ. ಪ್ರಧಾನಿ ಮೋದಿ ಅವರಂತ ಗೆಳೆಯ ಬೇಡವೇ ಬೇಡ ಎಂಬ ಅವರ ಹೇಳಿಕೆಗೆ ಕಾರಣವೇನು? ಎಸ್ಪಿ ಮುಖ್ಯಸ್ಥ ಮೋದಿ ಅವರ ಗೆಳೆತನ ತಿರಸ್ಕರಿಸುವಂತದ್ದು ಏನಾಗಿದೆ? ಅಖಿಲೇಶ್ ಹೇಳುವಂತೆ ಲೋಕಸಭೆ ಕಲಾಪದಲ್ಲಿ ಅವರ ಮೈಕ್ ಬಂದ್ ಮಾಡಲಾಗಿತ್ತಾ? ಇಲ್ಲಿದೆ ಮಾಹಿತಿ.
Bidar | ಡಾಕುಳಗಿ ಗ್ರಾಮದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ
ಬೀದರ್: ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಮುಂಜಾನೆಯಿಂದ ಬಿಸಿಲು ತೀವ್ರವಾಗಿದ್ದರೂ, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಗುಡುಗು ಸಹಿತ ಮಳೆ ಆರಂಭವಾಯಿತು. ಹುಮನಾಬಾದ್ ತಾಲೂಕಿನ ಹಳ್ಳಿಖೇಡ್, ಹಿಲಾಲಪುರ್, ಭಾಲ್ಕಿ ಹಾಗೂ ಬಸವಕಲ್ಯಾಣ ಸೇರಿದಂತೆ ಹಲವೆಡೆ ಮಳೆಯಾಗಿದೆ. ಡಾಕುಳಗಿ ಗ್ರಾಮ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಸುಮಾರು 4 ಗಂಟೆ ವೇಳೆಗೆ ಬಿರುಗಾಳಿ ಸಹಿತ ಮೋಡ ಕವಿದು, ನಂತರ ಆಲಿಕಲ್ಲು ಮಳೆ ಆರಂಭವಾಯಿತು. ಸುಮಾರು ಒಂದು ಗಂಟೆ ಕಾಲ ಸುರಿದ ಮಳೆಯಿಂದ ರಸ್ತೆ ಮತ್ತು ಚರಂಡಿಗಳು ನೀರಿನಿಂದ ತುಂಬಿಕೊಂಡವು. ಈ ಅಕಾಲಿಕ ಮಳೆಯಿಂದ ಜನಜೀವನದಲ್ಲಿ ಕೆಲ ಮಟ್ಟಿನ ವ್ಯತ್ಯಯ ಉಂಟಾದರೂ, ಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ತಂಪಿನ ಅನುಭವ ದೊರೆಯಿತು.
ರೊಸಾರಿಯೊ ಪ್ರೀಮಿಯರ್ ಲೀಗ್ (RPL) - ಸೀಸನ್ 2 ಗೆದ್ದ ರೊಸಾರಿಯೊ ಸೂಪರ್ ಕಿಂಗ್ಸ್ ತಂಡ
ಮಂಗಳೂರು: ರವಿವಾರ ರೊಸಾರಿಯೊ ಶಾಲಾ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗ್ಲೋರಿ ಹಂಟರ್ಸ್ ರೊಸಾರಿಯೊ ತಂಡವನ್ನು ಸೋಲಿಸುವ ಮೂಲಕ ರೊಸಾರಿಯೊ ಸೂಪರ್ ಕಿಂಗ್ಸ್ ತಂಡವು ರೊಸಾರಿಯೊ ಪ್ರೀಮಿಯರ್ ಲೀಗ್ (RPL) - ಸೀಸನ್ 2 ರ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಉತ್ತಮ ಶಿಸ್ತಿನಿಂದ, ಪಂದ್ಯಾವಳಿಯ ಅಜೇಯ ತಂಡವಾದ ರೊಸಾರಿಯೊ ಸೂಪರ್ ಕಿಂಗ್ಸ್, ನಿಕಟ ಪೈಪೋಟಿಯ ಫೈನಲ್ನಲ್ಲಿ ತಮ್ಮ ಎದುರಾಳಿಗಳನ್ನು ಮೀರಿಸಿ ಟ್ರೋಫಿಯನ್ನು ಎತ್ತಿಹಿಡಿಯಿತು. ವಿಜೇತರಿಗೆ ಚಾಂಪಿಯನ್ಶಿಪ್ ಟ್ರೋಫಿಯೊಂದಿಗೆ ರೂ. 25,000 ನಗದು ಬಹುಮಾನವನ್ನು ನೀಡಲಾಯಿತು. ರನ್ನರ್ ಅಪ್ ಗ್ಲೋರಿ ಹಂಟರ್ಸ್ ರೊಸಾರಿಯೊ ತಂಡವು ರೂ. 10,000 ಮತ್ತು ಟ್ರೋಫಿಯನ್ನು ಪಡೆಯಿತು. ರೊಸಾರಿಯೊ ಸೂಪರ್ ಕಿಂಗ್ಸ್ ತಂಡದ ಜಾಕ್ಸನ್ ಫರ್ಟಾಡೊ ಅವರು ಫೈನಲ್ನ ಪಂದ್ಯಶ್ರೇಷ್ಠ ಪ್ರಶಸ್ತಿ ಮತ್ತು ಪಂದ್ಯಾವಳಿಯಾದ್ಯಂತ ಸ್ಥಿರ ಪ್ರದರ್ಶನಕ್ಕಾಗಿ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದರು. ರೊಸಾರಿಯೊ ಟೈಟಾನ್ಸ್ನ ಲ್ಯಾನ್ವಿನ್ ಮೊಂತೆರೊ ಅವರನ್ನು ಸರಣಿಯ ಅತ್ಯುತ್ತಮ ಬ್ಯಾಟ್ಸ್ಮನ್ ಎಂದು ಹೆಸರಿಸಲಾಯಿತು ಹಾಗೂ ಗ್ಲೋರಿ ಹಂಟರ್ಸ್ ರೊಸಾರಿಯೊದ ಸೆಬಾಸ್ಟಿಯನ್ ಅವರನ್ನು ಸರಣಿಯ ಅತ್ಯುತ್ತಮ ಬೌಲರ್ ಎಂದು ಘೋಷಿಸಲಾಯಿತು. ICYM ರೊಸಾರಿಯೋ ಆಯೋಜಿಸಿದ್ದ ಈ ಪಂದ್ಯಾವಳಿಯಲ್ಲಿ ರೊಸಾರಿಯೋ ಟೈಟಾನ್ಸ್, ಸ್ಟ್ರೈಕ್ ಫೋರ್ಸ್ ರೊಸಾರಿಯೋ ಮತ್ತು ರಾಯಲ್ ಚಾಲೆಂಜರ್ಸ್ ರೊಸಾರಿಯೋ ಸೇರಿದಂತೆ ತಂಡಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಂಡುಬಂದಿತು. ಪಂದ್ಯಾವಳಿಯನ್ನು ರೂಪದರ್ಶಿ ಮತ್ತು ನಟಿ ವೆನ್ಸಿಟಾ ಡಯಾಸ್, ಎಮ್ಸಿ ಮತ್ತು ನಟ ವಿಜೆ ಡಿಕ್ಸನ್, ನಿರ್ದೇಶಕ ರಂಜಿತ್ ಬಜಾಲ್ ಮತ್ತು 90 ಮಿಲಿ ತುಳು ಚಲನಚಿತ್ರ ತಂಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ರೊಸಾರಿಯೋ ಕ್ರಿಕೆಟ್ ಫ್ರೆಂಡ್ಸ್ನ ಹೊಸ ಲೋಗೋವನ್ನು ಸಹ ಅನಾವರಣಗೊಳಿಸಲಾಯಿತು. ರೊಜಾರಿಯೊ ಕ್ಯಾಥೆಡ್ರಲ್ ನ ಧರ್ಮಗುರುಗಳಾದ ಫಾ. ವಲೇರಿಯನ್ ಡಿಸೋಜಾ, ರೊಸಾರಿಯೋ ಸೂಪರ್ ಕಿಂಗ್ಸ್ನ ಆಸ್ಟನ್ ಫೆರ್ನಾಂಡಿಸ್ ಮತ್ತು ವಿಜಯ್ ಫೆರ್ನಾಂಡಿಸ್ ಅವರಿಗೆ ವಿಜೇತರ ಟ್ರೋಫಿಯನ್ನು ಮತ್ತು ಗ್ಲೋರಿ ಹಂಟರ್ಸ್ ರೊಸಾರಿಯೋನ ನೆಲ್ಸನ್ ಡಿಸೋಜಾ ಮತ್ತು ವಿನ್ಸೆಂಟ್ ಡಿಸೋಜಾ ಅವರಿಗೆ ರನ್ನರ್ಸ್ ಅಪ್ ಟ್ರೋಫಿಯನ್ನು ಪ್ರದಾನ ಮಾಡಿದರು. ಫಾ. ಜೈಸನ್ ಲೋಬೊ,ರೊಸಾರಿಯೊ ಕ್ಯಾಥೆಡ್ರಲ್ ಚರ್ಚ್ ನ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಿರಿಲ್ ರೊಸಾರಿಯೊ; ಕಾರ್ಯದರ್ಶಿ ಐಡಾ ಫುರ್ಟಾಡೊ ಮತ್ತು ಐವನ್ ಪಿಂಟೊ ಉಪಸ್ಥಿತರಿದ್ದರು.
'ನಮ್ಮ ನಂಬಿಕೆಗೆ ದ್ರೋಹ ಮಾಡಿರುವ ಮೋಸಗಾರ ಇವನು' - 'ಚೀಟರ್ ಮಲ್ಲು' ಬಗ್ಗೆ ದಿನಕರ್ ತೂಗುದೀಪ ಸ್ಫೋಟಕ ಪೋಸ್ಟ್!
ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಬಗ್ಗೆ 'ಚೀಟರ್ ಮಲ್ಲು.. ಫ್ರಾಡ್.. ಮಹಾ ಮೋಸಗಾರ.. ನಂಬಿಕೆ ದ್ರೋಹಿ..' ಅಂತೆಲ್ಲಾ ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ದಿನಕರ್ ತೂಗುದೀಪ ಜರಿದಿದ್ದಾರೆ. ''ಮಲ್ಲಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಮ್ಮ ಹೆಸರು ಹೇಳಿಕೊಂಡು ಲಾಭ ಮಾಡಲು ಬಂದರೆ ಯಾಮಾರಬೇಡಿ. ಈತನನ್ನ ನಂಬಿ ಮೋಸಹೋಗಬೇಡಿ'' ಎಂದು ಮಲ್ಲಿಕಾರ್ಜುನ್ ಬಗ್ಗೆ ದಿನಕರ್ ತೂಗುದೀಪ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ಇಡಿ ದಾಳಿಯಲ್ಲಿ 37 ಲಕ್ಷ ಸಿಕ್ಕಿಲ್ಲ, 2 ಮೊಬೈಲ್ ತೆಗೆದುಕೊಂಡು ಹೋಗಿದ್ದಾರೆ: ಮುಹಮ್ಮದ್ ನಲಪಾಡ್ ಸ್ಪಷ್ಟನೆ
ಇಡಿ ದಾಳಿಯಲ್ಲಿ 37 ಲಕ್ಷ ಹಣ ಸಿಕ್ಕಿಲ್ಲ. ಕೇವಲ 2 ಮೊಬೈಲ್ ತೆಗೆದುಕೊಂಡು ಹೋಗಿದ್ದಾರೆ ಎಂದು ಮುಹಮ್ಮದ್ ನಲಪಾಡ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಕಾನೂನು ಪ್ರಕಾರ ಹೋರಾಟ ಮಾಡುತ್ತೇನೆ ಎಂದರು. ನಾನೇನು ಶ್ರೀಕಿ ಜೊತೆಗೆ ಸ್ನೇಹ ಇಲ್ಲ ಎಂದು ಹೇಳಿಲ್ಲ, ಆ ವ್ಯಕ್ತಿ ಏನಾದ್ರೂ ತಪ್ಪು ಮಾಡಿದರೆ ಅದಕ್ಕೆ ನಾನು ಹೊಣೆ ಅಲ್ಲ ಎಂದರು. ಇಡಿ ವಿಚಾರಣೆಗೆ ನಾನು ಸಹಕಾರ ನೀಡುತ್ತೇನೆ ಆದರೆ ಸುಳ್ಳು ಆರೋಪಗಳು ಸರಿಯಲ್ಲ ಎಂದರು.
ಪೊಲೀಸ್ v/s ಪೊಲೀಸ್: ಡಿಸಿಆರ್ಇ ಇನ್ಸ್ಪೆಕ್ಟರ್ಗೆ ಮೇಲಧಿಕಾರಿಗಳ ಕಿರುಕುಳ, ವರದಿ ನೀಡಲು ಪರಮೇಶ್ವರ್ ಸೂಚನೆ
ಡಿಸಿಆರ್ಇ ಇನ್ಸ್ಪೆಕ್ಟರ್ಗೆ ಮೇಲಧಿಕಾರಿಗಳ ಕಿರುಕುಳದ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸೂಚನೆ ನೀಡಿದ್ದಾರೆ. ಅಲ್ಲದೆ, ಇದೇ ಸಂದರ್ಭದಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ವಿರುದ್ಧ ಡಿಜಿಪಿಐ ಪತ್ರ ಬರೆದಿರುವ ವಿಚಾರವಾಗಿಯೂ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಈ ಎರಡು ಪ್ರಕರಣ ರಾಜ್ಯದ ಗಮನ ಸೆಳೆದಿತ್ತು. ಇನ್ನು ಇದೇ ಸಂದರ್ಭದಲ್ಲಿ ಎನ್ ಎ ಹ್ಯಾರಿಸ್ ನಿವಾಸದ ಮೇಲೆ ಇಡಿ ದಾಳಿಗೆ ಸಂಬಂಧಿಸಿದಂತೆಯೂ ಗೃಹ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
IPL 2026: ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು ಬೀಗುತ್ತಿರುವ ಮುಂಬೈ ಇಂಡಿಯನ್ಸ್ ಗೆ ಸುಲಭವಿದೆಯೇ ಪ್ಲೇ ಆಫ್ ಹಾದಿ?
Mumbai Indians Play Off Chances- ಐಪಿಎಲ್ 2026ರಲ್ಲಿ ಗುಜರಾತ್ ವಿರುದ್ಧದ 99 ರನ್ಗಳ ಜಯದೊಂದಿಗೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ರೇಸ್ಗೆ ಮರಳಿದೆ. ಪ್ರಸ್ತುತ 4 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಮುಂಬೈ, ನೆಟ್ ರನ್ ರೇಟ್ ಅನ್ನು ಸುಧಾರಿಸಿಕೊಂಡಿದೆ. ಸುರಕ್ಷಿತವಾಗಿ ಪ್ಲೇಆಫ್ ತಲುಪಲು ತಂಡವು ಉಳಿದ 8 ಪಂದ್ಯಗಳಲ್ಲಿ ಕನಿಷ್ಠ 6 ಪಂದ್ಯಗಳನ್ನು ಗೆದ್ದು 16 ಅಂಕ ಗಳಿಸಬೇಕಿದೆ. ರೋಹಿತ್ ಶರ್ಮಾ ಅವರ ಗಾಯದ ಸಮಸ್ಯೆ ಮತ್ತು ಆರ್ಸಿಬಿ, ರಾಜಸ್ಥಾನ್ನಂತಹ ಬಲಿಷ್ಠ ತಂಡಗಳ ಸವಾಲು ಎದುರಿಸಬೇಕಿದ್ದು, ಹಾರ್ದಿಕ್ ಪಾಂಡ್ಯ ನಾಯಕತ್ವಕ್ಕೆ ಈ ಹಾದಿ ಅಗ್ನಿಪರೀಕ್ಷೆಯಾಗಿದೆ.
ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ಪತ್ರ ವಿಚಾರ: ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡುತ್ತಾರೆ: ಜಿ.ಪರಮೇಶ್ವರ್
ಬೆಂಗಳೂರು :ಕಾಂಗ್ರೆಸ್ ಪಕ್ಷ ರಾಜ್ಯದ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು ಖಂಡಿಸಿ ಕರ್ನಾಟಕ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಬರೆದಿರುವ ಪತ್ರಕ್ಕೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕೂಟದ ಪತ್ರ ಸಂಬಂಧ ಸತ್ಯಾಸತ್ಯತೆಯನ್ನು ಪರಿಶೀಲನೆ ಮಾಡುತ್ತಾರೆ. ಈ ಬಗ್ಗೆ ರಾಹುಲ್ ಗಾಂಧಿ ಅವರು ಸೂಚನೆ ನೀಡುತ್ತಾರೆ. ನಾವು ಯಾವತ್ತು ಕೂಡ ಚುನಾವಣೆಗಳಲ್ಲಿ ಸ್ಪರ್ಧಿಸಲು ಮುಸ್ಲಿಮ್ ಸಮುದಾಯದವರಿಗೆ ಆದ್ಯತೆ ನೀಡಿದ್ದೇವೆ ಎಂದು ಹೇಳಿದರು. ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಮೃತಪಟ್ಟ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿ ಇದೆ. ಇದನ್ನು ಬೇರೆ ರೀತಿ ಅರ್ಥೈಸಿಕೊಳ್ಳಲಾಗಿದೆ. ದಾವಣಗೆರೆಯಲ್ಲಿ ಮತದಾರರು ಜಾಸ್ತಿ ಇದ್ದೇವೆ ಎಂದು ಟಿಕೆಟ್ ಕೇಳಿದ್ದಾರೆ. ಆದರೆ, ಅದು ಕೂಡ ತಪ್ಪಲ್ಲ. ಕಾರಣಾಂತರಗಳಿಂದ ಶಾಮನೂರು ಶಿವಶಂಕರಪ್ಪ ಅವರ ಮನೆಯವರಿಗೆ ಟಿಕೆಟ್ ಕೊಟ್ಟಿರುವುದನ್ನು ಬೇರೆ ರೀತಿ ಅರ್ಥೈಸಿಕೊಳ್ಳುವುದು ಸರಿಯಲ್ಲ. ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಸೇರಿದಂತೆ ನಾವೆಲ್ಲ ಸರಿಪಡಿಸುತ್ತೇವೆ ಎಂದು ತಿಳಿಸಿದರು.
ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ಕಾಲೇಜಿನ ಘಟಿಕೋತ್ಸವ ಅದ್ಧೂರಿಯಿಂದ ಜರುಗಿತು. ಒಟ್ಟು 579 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಇತ್ತೀಚಿನ ಪ್ರತಿಭಟನೆ, ಸಂಘರ್ಷಗಳಿಗೆ ಕಾರಣವೇನು?
ಮಣಿಪುರವನ್ನು ಮತ್ತೊಮ್ಮೆ ಹೊಸ ಪ್ರತಿಭಟನೆಗಳು, ಹಿಂಸಾಚಾರಗಳು ನಲುಗಿಸಿವೆ. ಟ್ರೋಂಗ್ಲಾವೊಬಿ ಘಟನೆಯನ್ನು ಖಂಡಿಸಿ ಸೋಮವಾರ ರಾತ್ರಿ ಇಂಫಾಲ್ನ ಕೀಶಾಮ್ಥಾಂಗ್ ಪ್ರದೇಶದಲ್ಲಿ ಪ್ರತಿಭಟನೆಗಳು ನಡೆದಿವೆ. ಎಪ್ರಿಲ್ 7 ರಂದು ಮೊಯಿರಾಂಗ್ನ ಟ್ರೋಂಗ್ಲಾವೊಬಿ ಅವಾಂಗ್ ಲೈಕೈನಲ್ಲಿ ನಡೆದ ಬಾಂಬ್ ದಾಳಿಯಿಂದ ಪ್ರತಿಭಟನೆಗಳು ಭುಗಿಲೆದ್ದವು. ಶಂಕಿತ ಉಗ್ರಗಾಮಿಗಳು ಮನೆಯೊಂದಕ್ಕೆ ಸ್ಫೋಟಕ ಎಸೆದಿದ್ದರು. ಇದರಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮಕ್ಕಳ ತಾಯಿಗೆ ಗಾಯಗಳಾಗಿವೆ. ಈ ಘಟನೆಯು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಮಣಿಪುರ ಹೈಕೋರ್ಟ್ ಆದೇಶದ ನಂತರ ಮೈತೈ ಮತ್ತು ಕುಕಿ ಸಮುದಾಯಗಳ ನಡುವೆ ಮಾರಕ ಜನಾಂಗೀಯ ಹಿಂಸಾಚಾರದ ನಂತರ ಮೇ 2023 ರಿಂದ ಮಣಿಪುರ ಉದ್ವಿಗ್ನವಾಗಿದೆ. ಮೂರು ವರ್ಷಗಳ ಕಾಲ ಅಶಾಂತಿಯ ನಂತರ 2025 ರಲ್ಲಿ ಹಿಂಸಾಚಾರದ ವರದಿಗಳು ಕಡಿಮೆಯಾಗಿದ್ದರೂ, ರಾಜ್ಯದಲ್ಲಿ ಶಾಂತಿ ಇನ್ನೂ ನೆಲೆಸಿಲ್ಲ. ಈಗ ರದ್ದುಗೊಳಿಸಲಾದ ಮೇ 2023 ರ ಮಣಿಪುರ ಹೈಕೋರ್ಟ್ ಆದೇಶವು ಮೈತಿ ಸಮುದಾಯಕ್ಕೆ ಸಂರಕ್ಷಿತ ಪ್ರದೇಶಗಳಲ್ಲಿ ಭೂ ಮಾಲೀಕತ್ವ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಕೋಟಾ ಸೇರಿದಂತೆ ಕೆಲವು ಪ್ರಯೋಜನಗಳನ್ನು ನೀಡಿತ್ತು. ಮಣಿಪುರದಲ್ಲಿ ಇತ್ತೀಚಿನ ಉದ್ವಿಗ್ನತೆಗೆ ಕಾರಣವೇನು? ಎಪ್ರಿಲ್ 7 ರ ಮುಂಜಾನೆ ಮನೆಯ ಮೇಲೆ ನಡೆದ ಶಂಕಿತ ರಾಕೆಟ್ ದಾಳಿಯಲ್ಲಿ ಐದು ವರ್ಷದ ಬಾಲಕ ಮತ್ತು ಅವನ ಆರು ತಿಂಗಳ ಸಹೋದರಿ ಸಾವಿಗೀಡಾಗಿದ್ದರು. ಆ ದಿನದ ನಂತರ, ಪ್ರತಿಭಟನಾಕಾರರ ಗುಂಪೊಂದು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಶಿಬಿರಕ್ಕೆ ನುಗ್ಗಿ, ಅದನ್ನು ಧ್ವಂಸ ಮಾಡಿ, ವಾಹನಗಳಿಗೆ ಬೆಂಕಿ ಹಚ್ಚಿತು. ನಂತರ ಭದ್ರತಾ ಪಡೆಗಳು ಗುಂಡು ಹಾರಿಸಿದವು ಇದರಲ್ಲಿ ಮೂವರು ಸಾವಿಗೀಡಾದರು. ಇನ್ನೂ ಎರಡು ಡಜನ್ಗೂ ಹೆಚ್ಚು ಜನರು ಗಾಯಗೊಂಡರು. ಇಲ್ಲಿನ ಉದ್ವಿಗ್ನತೆ ಭದ್ರತಾ ನಿರ್ಬಂಧಕ್ಕೆ ಕಾರಣವಾದ ಕಾರಣ ಮಣಿಪುರದ ಕೆಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಯಿತು. ಕೆಲವೆಡೆ ಕರ್ಫ್ಯೂ ವಿಧಿಸಲಾಯಿತು. ಇತ್ತೀಚಿನ ಬೆಳವಣಿಗೆಯಲ್ಲಿ, ಶಂಕಿತ ಉಗ್ರಗಾಮಿಗಳ ದಾಳಿಯಿಂದ ಇಬ್ಬರು ಮಕ್ಕಳು ಸಾವು ಮತ್ತು ಹಲವಾರು ನಾಗರಿಕರ ಸಾವನ್ನು ಪ್ರತಿಭಟಿಸಲು ವಿವಿಧ ಸಂಘಟನೆಗಳು ಕರೆ ನೀಡಿದ್ದ ಎರಡು ಬಂದ್ಗಳು ಸೋಮವಾರ ಮಣಿಪುರದ ಹಲವಾರು ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರಿತು. ಎಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯ ಟ್ರೋಂಗ್ಲಾಬಿಯಲ್ಲಿ ನಡೆದ ಬಾಂಬ್ ದಾಳಿಯನ್ನು ಪ್ರತಿಭಟಿಸಿ ಮಹಿಳಾ ಸಂಘಟನೆ ಮೀರಾ ಪೈಬಿಸ್ ರವಿವಾರದಿಂದ ಐದು ದಿನಗಳ ಬಂದ್ಗೆ ಕರೆ ನೀಡಿದೆ. ಎಪ್ರಿಲ್ 18 ರಂದು ಇಂಫಾಲ್ನಿಂದ ಉಖ್ರುಲ್ಗೆ ಹೋಗುತ್ತಿದ್ದ ನಾಗರಿಕ ವಾಹನಗಳ ಬೆಂಗಾವಲು ಪಡೆಯ ಮೇಲೆ ಶಂಕಿತ ಉಗ್ರರು ಗುಂಡು ಹಾರಿಸಿದ ನಂತರ ನಿವೃತ್ತ ಸೇನಾಧಿಕಾರಿ ಮತ್ತು ಇನ್ನೊಬ್ಬ ವ್ಯಕ್ತಿಯ ಸಾವನ್ನು ಖಂಡಿಸಿ ಯುನೈಟೆಡ್ ನಾಗಾ ಕೌನ್ಸಿಲ್ ಸೋಮವಾರದಿಂದ ಮೂರು ದಿನಗಳ ಸಂಪೂರ್ಣ ಬಂದ್ಗೆ ಕರೆ ನೀಡಿದೆ. ಮೈತೈ ಸಮುದಾಯದ ನೆಲೆಯಾಗಿರುವ ಐದು ಕಣಿವೆ ಜಿಲ್ಲೆಗಳು ಮತ್ತು ಉಖ್ರುಲ್ ಮತ್ತು ಸೇನಾಪತಿ ಜಿಲ್ಲೆಗಳ ನಾಗಾ ಜನವಸತಿ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ಮಾರುಕಟ್ಟೆಗಳು ಮುಚ್ಚಲ್ಪಟ್ಟಿವೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ. ರಾಜ್ಯ ರಾಜಧಾನಿಯ ಉರಿಪೋಕ್ ಮತ್ತು ನಾಗರಂ ಪ್ರದೇಶ ಸೇರಿದಂತೆ ಇಂಫಾಲ್ ಕಣಿವೆಯ ವಿವಿಧ ಭಾಗಗಳಲ್ಲಿ ಹತ್ಯೆಗಳನ್ನು ವಿರೋಧಿಸಿ ಪ್ರತಿಭಟನೆಗಳು ನಡೆದವು. ಏತನ್ಮಧ್ಯೆ, ಇಂಫಾಲ್ನ ತಂಗ್ಮೈಬಂದ್ ಪ್ರದೇಶದಲ್ಲಿ ಶನಿವಾರ ನಡೆದ ಪಂಜಿನ ಮೆರವಣಿಗೆ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ನಡೆದ ನಂತರ ಮೂವರು ಮಹಿಳಾ ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಸೇರಿದಂತೆ ಆರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಲಾಠಿ ಚಾರ್ಜ್, ಅಶ್ರುವಾಯು ಶೆಲ್ಗಳು, ಅಣಕು ಬಾಂಬ್ಗಳು, ರಬ್ಬರ್ ಗುಂಡುಗಳು ಮತ್ತು ಲೈವ್ ಗುಂಡುಗಳನ್ನು ಹಾರಿಸಿದವು. ಆದರೆ ಪ್ರತಿಭಟನಾಕಾರರು ಕಲ್ಲುಗಳನ್ನು ಎಸೆದು ಸ್ಲಿಂಗ್ಶಾಟ್ಗಳನ್ನು ಹಾರಿಸುವ ಮೂಲಕ ಪ್ರತಿದಾಳಿ ನಡೆಸಿದರು. ಸಿಆರ್ಪಿಎಫ್ನ ಮೂವರು ಸಿಬ್ಬಂದಿ ರಿತಿಕಾ ಕುಮಾರಿ, ಸಂತೋಷ್ ಕುಮಾರಿ ಮತ್ತು ಸಂಸಿತಾ ಇಂದ್ರಾ ಸೇರಿದಂತೆ ಕನಿಷ್ಠ ಆರು ಜನರು ಗಾಯಗೊಂಡಿದ್ದು ಅವರಿಗೆ ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಮಣಿಪುರದಲ್ಲಿ ಮೇ 2023 ರಿಂದ ಶುರುವಾದ ಹಿಂಸಾಚಾರದಲ್ಲಿ ಕನಿಷ್ಠ 260 ಮಂದಿ ಸಾವಿಗೀಡಾಗಿದ್ದು ಸುಮಾರು 60,000 ಜನರನ್ನು ಸ್ಥಳಾಂತರಗೊಂಡಿದ್ದಾರೆ. ಇದು ಮೊದಲು ಮೈತೈ ಮತ್ತು ಕುಕಿ ಸಮುದಾಯಗಳ ನಡುವೆ ಪ್ರಾರಂಭವಾಯಿತು. ಅಂದಿನಿಂದ ಬಹುತೇಕ ಎಲ್ಲಾ ಗುಂಪುಗಳನ್ನು ಒಳಗೊಂಡಿತ್ತು. ಕಳೆದ ಎರಡು ವಾರಗಳಲ್ಲಿ, ಮೂರು ಪ್ರಮುಖ ಸಮುದಾಯಗಳಾದ ಮೈತೈ, ಕುಕಿ-ಝೋ ಮತ್ತು ನಾಗಾ ಹೊಸ ಹಿಂಸಾಚಾರ, ಪ್ರತಿಭಟನೆಗಳು ಮತ್ತು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸುತ್ತಿವೆ. ಈ ಬದಲಾವಣೆಯು ಪರಿಸ್ಥಿತಿಯನ್ನು ಹೆಚ್ಚು ಅಸ್ಥಿರಗೊಳಿಸಿದೆ ಮತ್ತು ನಿಯಂತ್ರಿಸಲು ಕಷ್ಟಕರವಾಗಿಸಿದೆ. ಮೇ 2023 ರಿಂದ, ಸಂಘರ್ಷವು ಮುಖ್ಯವಾಗಿ ಇಂಫಾಲ್ ಕಣಿವೆಯಲ್ಲಿ ಮೈತೈಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳಲ್ಲಿ ಕುಕಿ-ಝೋ ಗುಂಪುಗಳನ್ನು ಒಳಗೊಂಡಿತ್ತು. ಹೆಚ್ಚಾಗಿ ಉತ್ತರ ಜಿಲ್ಲೆಗಳಲ್ಲಿ ನೆಲೆಸಿರುವ ನಾಗಾ ಸಮುದಾಯಗಳು ಹೆಚ್ಚಾಗಿ ತಟಸ್ಥವಾಗಿದ್ದವು. ಬಂದ್ನಿಂದ ಜನಜೀವನ ಸ್ತಬ್ಧ: ಐದು ದಿನಗಳ ಸಂಪೂರ್ಣ ಬಂದ್ನಿಂದ ಕಣಿವೆ ಜಿಲ್ಲೆಗಳಲ್ಲಿ ಸಾಮಾನ್ಯ ಜನಜೀವನ ಸ್ತಬ್ಧಗೊಂಡಿದೆ. ಎಪ್ರಿಲ್ 19 ರಂದು ಪ್ರಾರಂಭವಾದ ಈ ಬಂದ್ಗೆ ಮೀರಾ ಪೈಬಿಸ್, ಹಲವಾರು ನಾಗರಿಕ ಸಮಾಜ ಸಂಸ್ಥೆಗಳು ಸಾಮೂಹಿಕ ನೇತೃತ್ವ ವಹಿಸಿದ್ದಾರೆ. ಮಾರುಕಟ್ಟೆಗಳು, ಶಾಲೆಗಳು, ಸರ್ಕಾರಿ ಕಚೇರಿಗಳು ಮತ್ತು ಸಾರಿಗೆ ಸೇವೆಗಳು ಮೊದಲ ದಿನ ಮುಚ್ಚಿದ್ದವು. ಕೆಲವು ಪ್ರದೇಶಗಳಲ್ಲಿ ಅಗತ್ಯ ಸೇವೆಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದವು. ದಾಳಿಗೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು ಮತ್ತು ಸಂತ್ರಸ್ತರಿಗೆ ತ್ವರಿತ ನ್ಯಾಯ ಒದಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಐದು ದಿನಗಳ ಸಂಪೂರ್ಣ ಬಂದ್ ರಾಜಧಾನಿ ಇಂಫಾಲ್ ಸೇರಿದಂತೆ ಮಣಿಪುರದ ಕಣಿವೆ ಜಿಲ್ಲೆಗಳನ್ನು ಬಾಧಿಸಿವೆ. ಎಪ್ರಿಲ್ 19 ರಂದು ಮಣಿಪುರದಲ್ಲಿ 5 ದಿನಗಳ ಸಂಪೂರ್ಣ ಬಂದ್ ಆರಂಭವಾಯಿತು, ಕಣಿವೆ ಜಿಲ್ಲೆಗಳು ಸ್ಥಗಿತಗೊಂಡವು. ಮೀರಾ ಪೈಬಿಸ್ ಸೇರಿದಂತೆ ನಾಗರಿಕ ಸಮಾಜ ಗುಂಪುಗಳು ಆಯೋಜಿಸಿರುವ ಈ ಪ್ರತಿಭಟನೆಯು ಬಿಷ್ಣುಪುರದಲ್ಲಿ ಸಂಭವಿಸಿದ ಸ್ಫೋಟದ ನಂತರ ಉದ್ಭವಿಸಿದೆ, ಇದು ದೈನಂದಿನ ಜೀವನಕ್ಕೆ ಭಾರಿ ಅಡ್ಡಿ ಉಂಟುಮಾಡಿದೆ. ಕಟ್ಟುನಿಟ್ಟಿನ ಹಾಜರಾತಿ ಆದೇಶಗಳನ್ನು ಹೊರಡಿಸಿದ ಸರ್ಕಾರ: ಮಣಿಪುರ ಸರ್ಕಾರವು ನೌಕರರು ಕಚೇರಿಗಳಿಗೆ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು ಗೈರುಹಾಜರಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ರಾಜ್ಯವು ಪ್ರಮುಖ ಪ್ರದೇಶಗಳಲ್ಲಿ ನಿರಂತರ ಬಂದ್ ಎದುರಿಸುತ್ತಿರುವಾಗ ಈ ಆದೇಶ ಬಂದಿದೆ. ಇತ್ತೀಚಿನ ಘಟನೆಗಳಿಗೆ ಸಂಬಂಧಿಸಿದಂತೆ ನ್ಯಾಯ ಮತ್ತು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಅದೇ ವೇಳೆ ನಾಗರಿಕ ಸಮಾಜ ಗುಂಪುಗಳಿಂದ ವ್ಯಾಪಕ ಭಾಗವಹಿಸುವಿಕೆ ಕಂಡುಬಂದಿದೆ. ಇದರ ಪರಿಣಾಮವು ಎಲ್ಲಾ ಕ್ಷೇತ್ರಗಳಲ್ಲಿ ಗೋಚರಿಸುತ್ತಿದೆ. ಹಾಜರಾತಿ ಕಡಿಮೆ ಇರುವುದರಿಂದ ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳು ಮುಚ್ಚಲ್ಪಟ್ಟಿವೆ. ದೈನಂದಿನ ಕಾರ್ಯಚಟುವಟಿಕೆಗಳು ಅಸ್ತವ್ಯಸ್ತಗೊಂಡಿವೆ, ಕೆಲವು ಪ್ರದೇಶಗಳಲ್ಲಿ ಸೀಮಿತ ಅಗತ್ಯ ಸೇವೆಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಪ್ರತಿಭಟನೆಗಳ ಬಗ್ಗೆ ಪೊಲೀಸ್ ಎಚ್ಚರಿಕೆ: ಸಮಾಜ ವಿರೋಧಿ ಅಂಶಗಳು ಪ್ರತಿಭಟನೆಗಳ ಲಾಭ ಪಡೆಯಲು ಪ್ರಯತ್ನಿಸುತ್ತಿವೆ ಎಂದು ಪೊಲೀಸರು ಎಚ್ಚರಿಸಿದ್ದಾರೆ. ಕೆಲವು ಗುಂಪುಗಳು ಪ್ರತಿಭಟನೆಗಳನ್ನು ಹೈಜಾಕ್ ಮಾಡಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು ಉಲ್ಬಣಗೊಳ್ಳುವುದನ್ನು ತಡೆಯಲು ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬೇಡಿಕೆಗಳು ಮತ್ತು ಮುಂದಿನ ಕ್ರಮಗಳೇನು?: ಬಿಷ್ಣುಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐದು ವರ್ಷದ ಬಾಲಕ ಮತ್ತು ಐದು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ ನಂತರ ಪ್ರತಿಭಟನೆಗಳು ಭುಗಿಲೆದ್ದವು. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಬೆಟ್ಟದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕುಕಿ ಉಗ್ರಗಾಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಕರೆ ನೀಡಿದ್ದಾರೆ. ಎಪ್ರಿಲ್ 23 ರವರೆಗೆ ಬಂದ್ ಮುಂದುವರಿಯಲಿದೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಆಂದೋಲನ ತೀವ್ರಗೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ. ಕೃಪೆ: hindustantimes.com
ಮಂಚಿ-ಕೊಳ್ನಾಡು ಗೌಸಿಯಾ ಎಸೋಸಿಯೇಶನ್ ವತಿಯಿಂದ ಅಂತರ್ ರಾಜ್ಯ ಮಟ್ಟದ ದಫ್ ಸ್ಪರ್ಧೆ
ಬಂಟ್ವಾಳ: ಮಂಚಿ-ಕೊಳ್ನಾಡು ಗೌಸಿಯಾ ಎಸೋಸಿಯೇಶನ್ ಇದರ ಆಶ್ರಯದಲ್ಲಿ ಅಂತರ್ ರಾಜ್ಯ ಮಟ್ಟದ ದಫ್ ಸ್ಪರ್ಧೆ ಹಾಗೂ ಸನ್ಮಾನ ಕಾರ್ಯಕ್ರಮವು ಇಲ್ಲಿನ ಮರ್ಹೂಂ ಸುರಿಬೈಲು ಉಸ್ತಾದ್ ವೇದಿಕೆಯಲ್ಲಿ ಇತ್ತೀಚೆಗೆ ನಡೆಯಿತು. ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಕಾರ್ಯಕ್ರಮ ಉದ್ಘಾಟಿಸಿದರು. ಸಯ್ಯಿದ್ ಹುಸೈನ್ ಬಾ-ಅಲವಿ ತಂಙಳ್ ಕುಕ್ಕಾಜೆ ದುವಾ ನೆರವೇರಿಸಿದರು. ಮಂಚಿ ಮುಹಮ್ಮದಿಯಾ ಜುಮಾ ಮಸೀದಿಯ ಇಬ್ರಾಹಿಂ ಮದನಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ ರಮಾನಾಥ ರೈ, ಸಾಲೆತ್ತೂರು ನಿತ್ಯಾಧರ್ ಚರ್ಚ್ ಧರ್ಮಗುರು ರೆ. ಫಾ. ಮನೋಜ್ ಫುರ್ಟಾಡೋ, ಅಸ್ಗರ್ ಅಲಿ ಮದನಿ, ಮುಹಮ್ಮದ್ ಅಲಿ ಸಖಾಫಿ ಅಶ್-ಅರಿಯ್ಯ, ಅಬೂಬಕ್ಕರ್ ಲತೀಫ್ ಎಣ್ಮೂರು, ಶಮ್ಮಾಸ್ ಅಶ್ಶಾಫೀ ಮರಕ್ಕಿಣಿ, ಅಬ್ದುಲ್ ಖಾದರ್ ದಾರಿಮಿ ಕೊಡಂಗಾಯಿ, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ಕೆಡಿಪಿ ಸದಸ್ಯ ಹಾಜಿ ಎ.ಬಿ.ಅಬ್ದುಲ್ಲ, ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್, ಬಂಟ್ವಾಳ ಪುರಸಭಾ ನಿಕಟಪೂರ್ವ ಉಪಾಧ್ಯಕ್ಷ ಮೂನಿಶ್ ಅಲಿ, ಇರಾ ಗ್ರಾ.ಪಂ. ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಬಂಟ್ವಾಳ ಎಸ್.ವಿ.ಎಸ್. ಕಾಲೇಜು ಪ್ರಾಂಶುಪಾಲ ಎಂ.ಡಿ.ಮಂಚಿ, ದಫ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಲತೀಫ್ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿ ಪಿ.ಎಂ ಅಶ್ರಫ್ ಪಾಣೆಮಂಗಳೂರು, ಬೋಳಂತೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಚಂದ್ರಶೇಖರ್ ರೈ ಬೋಳಂತೂರು, ಕೊಳ್ನಾಡು ಗ್ರಾ.ಪಂ.ಮಾಜಿ ಸದಸ್ಯ ಅಬೂಬಕ್ಕರ್ ಸಿ.ಎಚ್, ಸಜಿಪಮೂಡ ಗ್ರಾ.ಪಂ.ಸದಸ್ಯ ಕರೀಂ ಬೊಳ್ಳಾಯಿ, ಉದ್ಯಮಿಗಳಾದ ಆನಿಯಾ ದರ್ಬಾರ್ ಹಂಝ ಬಸ್ತಿಕೋಡಿ, ಚೊಯಿಸ್ ಗೋಲ್ಡ್ ಅಶ್ರಫ್ ನಾಡಾಜೆ, ಶಿಯಾನ್, ಶರೀಫ್ ತಲಕ್ಕಿ, ಅಬ್ದುಲ್ ರಹಿಮಾನ್ ನಿರ್ಬೈಲು, ಪ್ರಮುಖರಾದ ನಾರಾಯಣ ಶೆಟ್ಟಿ ಕುಲ್ಯಾರು, ನಾರಾಯಣ ಭಟ್ ನೂಜಿಬೈಲು, ನಾರಾಯಣ ಭಟ್ ಕಯ್ಯೂರು, ರಾಮ್ ಪ್ರಸಾದ್ ರೈ ತಿರುವಾಜೆ, ನ್ಯಾಯವಾದಿ ಮೋಹನ್ ಗುಂಟೂರು ಮೊದಲಾದವರು ಭಾಗವಹಿಸಿದ್ದರು. ನಿಸಾರ್ ಮಂಚಿ, ಎಂ.ಎಚ್.ಫ್ಯಾಮಿಲಿ, ದಾವೂದ್ ಕೈಯೂರ್, ರಫೀಕ್ ಸರೀತ್ ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಿದರು. ಗೌಸಿಯಾ ಎಸೋಸಿಯೇಶನ್ ಅಧ್ಯಕ್ಷ ಅಬೂಬಕ್ಕರ್ ಕೈಯೂರು, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೂಸಾ, ದಫ್ ಸ್ಪರ್ಧೆ ಸ್ವಾಗತ ಸಮಿತಿ ಅಧ್ಯಕ್ಷ ಮುಹಮ್ಮದ್ ಶರೀಫ್ ಹಾಜಿ ಮಂಚಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮಂಚಿ ಮೊದಲಾದವರು ಉಪಸ್ಥಿತರಿದ್ದರು. ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಮಂಗಳೂರು ವಿವಿ ಡಾಕ್ಟರೇಟ್ ಪದವಿ ಪುರಸ್ಕೃತ ಅಕ್ಷರ ಸಂತ ಡಾ ಹರೇಕಳ ಹಾಜಬ್ಬ ಹಾಗೂ ಸಂಘಟಕ ಲತೀಫ್ ಮಾರಿಪಳ್ಳ ಅವರನ್ನು ಸನ್ಮಾನಿಸಲಾಯಿತು ಮಹಮ್ಮದ್ ಇಕ್ಬಾಲ್ ಮಂಚಿ ಸ್ವಾಗತಿಸಿ, ಮುಹಮ್ಮದ್ ಮಂಚಿ ಪ್ರಸ್ತಾವನೆಗೈದರು. ಅಬೂಬಕ್ಕರ್ ಕೈಯೂರ್ ವಂದಿಸಿದರು. ನೌಫಲ್ ಕುಡ್ತಮುಗೇರು ಕಾರ್ಯಕ್ರಮ ನಿರೂಪಿಸಿದರು. ತಾಜುಲ್ ಹುದಾ ರೆಂಜಾಡಿ ತಂಡಕ್ಕೆ ದಫ್ ಪ್ರಶಸ್ತಿ ದಫ್ ಸ್ಪರ್ಧಾ ಕಾರ್ಯಕ್ರಮದಲ್ಲಿ ದೇರಳಕಟ್ಟೆ, ಬೆಳ್ಮ-ರೆಂಜಾಡಿಯ ತಾಜುಲ್ ಹುದಾ ದಫ್ ತಂಡ ಪ್ರಥಮ, ಕಟಪಾಡಿ-ಮಣಿಪುರದ ಖಲಂದರ್ ಷಾ ದಫ್ ತಂಡ ದ್ವಿತೀಯ, ಕನ್ನಂಗಾರ್ ಇಶಾ-ಅತಿಸ್ಸುನ್ನ ದಫ್ ತಂಡ ತೃತೀಯ ಹಾಗೂ ಉಳ್ಳಾಲ-ಅಕ್ಕರೆಕರೆ ಅಲ್-ಜಝೀರಾ ದಫ್ ತಂಡ ಚತುರ್ಥ ಸ್ಥಾನವನ್ನು ತಮ್ಮದಾಗಿಸಿಕೊಂಡಿತು. ತಾಜುಲ್ ಹುದಾ ದಫ್ ತಂಡದ ಆಸಿಫ್ ಸಾಲ್ಮರ ನೇತೃತ್ವದ ಹಾಡುಗಾರರು ಹಾಡುಗಾರಿಕೆ ಪ್ರಶಸ್ತಿ ಪಡೆದುಕೊಂಡರು.
ರೈತರೇ ಗಮನಿಸಿ; ‘ಫ್ರೂಟ್ಸ್’ ತಂತ್ರಾಂಶದಲ್ಲಿ ಇ-ಕೆವೈಸಿ, ಡಿಜಿಟಲ್ ಸಮ್ಮತಿ ಕಡ್ಡಾಯ
ಬೆಂಗಳೂರು : ರಾಜ್ಯದ ರೈತರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ‘ಫ್ರೂಟ್ಸ್' ತಂತ್ರಾಂಶದಲ್ಲಿ ನೋಂದಾಯಿತರಾಗಿರುವ ಎಲ್ಲ ರೈತರು ಇ-ಕೆವೈಸಿ ಮಾಡಿಸುವುದು ಹಾಗೂ ಡಿಜಿಟಲ್ ಸಹಮತಿ (Digital Consent) ನೀಡುವುದನ್ನು ಸರಕಾರ ಕಡ್ಡಾಯಗೊಳಿಸಿದೆ. ಭಾರತ ಸರಕಾರದ ‘ಡಿಜಿಟಲ್ ಅಗ್ರಿ ಮಿಷನ್' ಅಡಿಯಲ್ಲಿ ರಾಜ್ಯ ರೈತ ನೋಂದಣಿ ಸ್ಥಾಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಎಲ್ಲ ಇಲಾಖೆಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. ಕೇಂದ್ರ ಸರಕಾರದ ಮಾನದಂಡಗಳಂತೆ ರಾಜ್ಯದ ಎಲ್ಲ ಭೂ ಹಿಡುವಳಿದಾರ ರೈತರ ವಿವರಗಳನ್ನು ಒಳಗೊಂಡ ಡಿಜಿಟಲ್ ವ್ಯವಸ್ಥೆಯನ್ನು ಬಲಪಡಿಸುವುದು ಯೋಜನೆಯ ಗುರಿಯಾಗಿದೆ. ಈ ಯೋಜನೆಗಾಗಿ ಕರ್ನಾಟಕ ರಾಜ್ಯವು ವಿಶೇಷ ಕೇಂದ್ರ ನೆರವು ಕೋರಿ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಿದೆ. ಫ್ರ್ರೂಟ್ಸ್ ತಂತ್ರಾಂಶದಲ್ಲಿ ಈಗಾಗಲೇ 1 ಕೋಟಿಗೂ ಹೆಚ್ಚು ರೈತರು ಭೂ ಹಿಡುವಳಿ ವಿವರಗಳೊಂದಿಗೆ ನೋಂದಾಯಿಸಿಕೊಂಡಿದ್ದು, ಅವರಲ್ಲಿ ಸುಮಾರು 71ಲಕ್ಷಕ್ಕೂ ಹೆಚ್ಚು ರೈತರು ಭೂ ಹಿಡುವಳಿಗಳನ್ನು ಹೊಂದಿದ್ದಾರೆ. ಈಗ ಇವರೆಲ್ಲರೂ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಫ್ರೂಟ್ಸ್ ತಂತ್ರಾಂಶದ ವ್ಯಾಪ್ತಿಗೆ ಬರುವ ಕಂದಾಯ, ಕೃಷಿ, ತೋಟಗಾರಿಕೆ, ರೇಶ್ಮೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಸಹಕಾರ ಇಲಾಖೆಗಳ ಲಾಗಿನ್ ಮೂಲಕ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಇದುವರೆಗೂ ಪಿಎಂ-ಕಿಸಾನ್ ಯೋಜನೆಯ ಸುಮಾರು 4ಲಕ್ಷ ಫಲಾನುಭವಿಗಳ ಇ-ಕೆವೈಸಿ ಇನ್ನೂ ಬಾಕಿ ಇದ್ದು, ಅವರೆಲ್ಲರ ಕೆವೈಸಿಯನ್ನು ಪೂರ್ಣಗೊಳಿಸುವ ಸಲುವಾಗಿ, ರೈತರಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ನಿಗದಿತ ಗುರಿಯನ್ನು ತಲುಪಲು ಎಲ್ಲ ಜಿಲ್ಲಾ ಮತ್ತು ಇಲಾಖಾ ಮಟ್ಟದ ಅಧಿಕಾರಿಗಳಿಗೆ ಶಾಲಿನಿ ರಜನೀಶ್ ನಿರ್ದೇಶನ ನೀಡಿದ್ದಾರೆ.
ಕಲಬುರಗಿಯಲ್ಲಿ ಮಳೆ: ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪಿನ ಅನುಭವ
ಕಲಬುರಗಿ: ಬಿಸಿಲ ಬೇಗೆಯಿಂದ ನರಳುತ್ತಿದ್ದ ಕಲಬುರಗಿಯಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಮಳೆ ಭೂಮಿಗೆ ತಂಪೆರೆದಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಸಂಜೆ ವೇಳೆಗೆ ಗಾಳಿ ಸಹಿತ ಮಳೆ ಆರಂಭವಾಯಿತು. ಮಳೆಯ ಪರಿಣಾಮವಾಗಿ ಪ್ರಮುಖ ರಸ್ತೆಗಳಲ್ಲೂ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಜನರು ಮಳೆಯಿಂದ ತೊಂದರೆ ಅನುಭವಿಸಿದರು. ಕೆಲವೆಡೆ ವಿದ್ಯುತ್ ವ್ಯತ್ಯಯವೂ ಉಂಟಾಗಿ ನಿವಾಸಿಗಳಿಗೆ ಅಸೌಕರ್ಯ ಕಂಡುಬಂತು. ಆದರೂ ಕಳೆದ ಕೆಲವು ದಿನಗಳಿಂದ ಮುಂದುವರಿದ ಭಾರೀ ಉಷ್ಣತೆಯಿಂದ ಬಳಲುತ್ತಿದ್ದ ಜನರಿಗೆ ಈ ಮಳೆ ತಂಪಿನ ಅನುಭವ ನೀಡಿತು. ರೈತರು ಕೂಡ ಈ ಮಳೆಯಿಂದ ಬೆಳೆಗಳಿಗೆ ಅನುಕೂಲವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳಲ್ಲೂ ಸಂಜೆ ವೇಳೆ ಮೋಡ ಕವಿದ ವಾತಾವರಣ ಮತ್ತು ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇರುವುದಾಗಿ ತಿಳಿಸಿದೆ.
ಪೊಲೀಸ್ ಅಧಿಕಾರಿಗಳ ಪತ್ರ, ಕಿರುಕುಳ ಆರೋಪ ವಿಚಾರ: ವರದಿ ನೀಡಲು ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ಮಂಗಳೂರು ನಗರ ಪೊಲೀಸ್ ಆಯುಕ್ತರ ವಿರುದ್ಧ ಡಿಜಿಪಿಗೆ ಎಸ್ಪಿ ಪತ್ರ ಹಾಗೂ ಡಿಸಿಆರ್ಇ ಇನ್ಸ್ಪೆಕ್ಟರ್ ಗೆ ಮೇಲ್ಜಾತಿ ಅಧಿಕಾರಿಗಳ ಕಿರುಕುಳ ಆರೋಪ ಸಂಬಂಧ ಕುರಿತು ವರದಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳ ಆರೋಪ ಕುರಿತು ಮಾಧ್ಯಮಗಳಲ್ಲಿ ವರದಿ ಗಮನಿಸಿದ್ದೇನೆ. ಡಿಸಿಆರ್ಇ ಇನ್ಸ್ಪೆಕ್ಟರ್ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಎಸ್ಪಿ ಎಸ್.ಎಸ್.ಕಾಶಿ ಪತ್ರ ಬರೆದಿದ್ದಾರೆ. ಈ ಎರಡು ಪ್ರಕರಣಗಳ ಕುರಿತು ಡಿಜಿಪಿಯವರನ್ನು ವರದಿ ಕೇಳಿದ್ದೇನೆ. ವರದಿ ಬಳಿಕ ಸತ್ಯಾಸತ್ಯತೆಯನ್ನು ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಸಕರಾದ ಎನ್.ಎ.ಹಾರಿಸ್ ಅವರ ಮಕ್ಕಳ ನಿವಾಸಗಳ ಮೇಲೆ ದಾಳಿ ನಡೆಸಿರುವ ಒಳ ವಿಚಾರಗಳು ನಮಗೆ ತಿಳಿದಿಲ್ಲ. ಯಾವ ವಿಚಾರಕ್ಕೆ ದಾಳಿ ನಡೆಸಿದ್ದಾರೆ, ಏನೆಲ್ಲ ಸಿಕ್ಕಿದೆ ಎಂಬುದನ್ನು ಈಡಿ ಅಧಿಕಾರಿಗಳು ಮಾಹಿತಿ ನೀಡಬೇಕು. ಸಾಮಾನ್ಯವಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡುತ್ತಾರೆ. ಅಲ್ಲಿಯವರೆಗೂ ಕಾಯಬೇಕು. ಇದರ ನಡುವೆ ನಾವು ಹೇಳಿಕೆಗಳನ್ನು ಕೊಟ್ಟರೆ ಅಪ್ರಸ್ತುತ ಆಗುತ್ತದೆ ಎಂದರು. ಬಿಟ್ ಕಾಯಿನ್ ಹಗರಣದ ಕುರಿತಂತೆ ರಾಜ್ಯದಲ್ಲಿ ಎಸ್ಐಟಿ ರಚನೆ ಮಾಡಲಾಗಿತ್ತು. ತನಿಖೆ ಕೊನೆ ಹಂತದಲ್ಲಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವ್ಯಾಪ್ರಿ ಹೊಂದಿದೆ. ಅನೇಕ ವಿಚಾರಗಳಲ್ಲಿ ಮಾಹಿತಿಯನ್ನು ಕಲೆ ಹಾಕಿ ಅಂತಿಮ ವರದಿ ಕೊಡಬೇಕು. ಅಂತಿಮ ಹಂತದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಗತ್ಯ ಮಾಹಿತಿ ಸಿಗುವವರೆಗೂ ತನಿಖೆ ನಡೆಸುತ್ತಾರೆ. ಆದರೆ, ಮಧ್ಯಂತರ ಚಾರ್ಜ್ಶೀಟ್ ಸಲ್ಲಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
Hosapete | 13 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ
ಹೊಸಪೇಟೆ / ವಿಜಯನಗರ: ಅಖಿಲ ಭಾರತ ರಾಜ್ಯ ಸರ್ಕಾರಿ ಪಿಂಚಣಿದಾರರ ಫೆಡರೇಶನ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಸದಸ್ಯರು ಹೊಸಪೇಟೆಯ ತಹಶೀಲ್ದಾರರ ಮುಖಾಂತರ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು. ಪಿಂಚಣಿದಾರರ ಹಿತಾಸಕ್ತಿಗಾಗಿ ಒಟ್ಟು 13 ಪ್ರಮುಖ ಬೇಡಿಕೆಗಳನ್ನು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ. ಮುಖ್ಯವಾಗಿ ಹಣಕಾಸು ಮಸೂದೆ (ಮಾನ್ಯತಾ ಕಾಯಿದೆ) 2025 ರದ್ದುಪಡಿಸುವುದು ಹಾಗೂ ಹೊಸ ಪಿಂಚಣಿ ಯೋಜನೆ (NPS) ರದ್ದು ಮಾಡಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರುಸ್ಥಾಪಿಸುವಂತೆ ಆಗ್ರಹಿಸಲಾಗಿದೆ. ಇದರ ಜೊತೆಗೆ ಎಲ್ಲಾ ರಾಜ್ಯಗಳಲ್ಲಿ ತುಟ್ಟಿಭತ್ತೆ (ಡಿಎ) ಯನ್ನು ಕೇಂದ್ರ ಪಿಂಚಣಿದಾರರ ಮಟ್ಟಕ್ಕೆ ಏರಿಸುವುದು, 31 ಡಿಸೆಂಬರ್ 2025ರೊಳಗೆ ನಿವೃತ್ತರಾದವರಿಗೆ ಎಂಟನೇ ವೇತನ ಆಯೋಗದ ಸೌಲಭ್ಯ ವಿಸ್ತರಿಸುವುದು, ಪಿಂಚಣಿ ಕಮ್ಯುಟೇಶನ್ ಕಡಿತಾವಧಿಯನ್ನು 11 ವರ್ಷಗಳಿಗೆ ಸೀಮಿತಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮಂಡಿಸಲಾಗಿದೆ. ಕೋವಿಡ್-19 ಅವಧಿಯ 18 ತಿಂಗಳ ಡಿಎ ಬಾಕಿಯನ್ನು ಬಡ್ಡಿಯೊಂದಿಗೆ ಪಾವತಿಸುವುದು, ನ್ಯಾಯಾಲಯ ತೀರ್ಪುಗಳನ್ನು ಎಲ್ಲಾ ನೌಕರರಿಗೆ ಅನ್ವಯಿಸುವುದು, ರೈಲು, ವಿಮಾನ, ವೋಲ್ವೋ ಹಾಗೂ ಎಸಿ ಬಸ್ಗಳಲ್ಲಿ ಪ್ರಯಾಣ ರಿಯಾಯಿತಿಗಳನ್ನು ಮರುಸ್ಥಾಪಿಸುವುದು, ಪಿಂಚಣಿದಾರರಿಗೆ ಸಮಗ್ರ ಆರೋಗ್ಯ ವಿಮೆ ನೀಡುವಂತೆ ಕೂಡ ಮನವಿ ಮಾಡಲಾಗಿದೆ. ವಯಸ್ಸಿನ ಆಧಾರದ ಮೇಲೆ ಪಿಂಚಣಿಯಲ್ಲಿ ಹಂತ ಹಂತವಾಗಿ ಹೆಚ್ಚಳ ನೀಡುವಂತೆ, 65 ವರ್ಷಗಳ ನಂತರ 10%ರಿಂದ 95 ವರ್ಷಗಳ ನಂತರ ಶೇ.100ರವರೆಗೆ ಹೆಚ್ಚಳ ನೀಡಬೇಕು ಎಂದು ಸೂಚಿಸಲಾಗಿದೆ. ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸುವುದು ಹಾಗೂ ಹೊಸ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸುವಂತೆ ಕೂಡ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಮರಡಿ ಜಂಬಯ್ಯ ನಾಯಕ, ಅಧ್ಯಕ್ಷ ಬಿಸಾಟಿ ತಾಯಪ್ಪ ನಾಯಕ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಪತ್ತಾರ್ ಸೇರಿದಂತೆ ಹನುಮಂತಪ್ಪ ಗೌಳಿ, ಪಿ.ಲೀಲಾ, ನೀಲಂ ಹಾಗೂ ಇತರರು ಉಪಸ್ಥಿತರಿದ್ದರು. ಪಿಂಚಣಿದಾರರ ಜೀವನಮಟ್ಟ ಸುಧಾರಣೆಗೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಆಗ್ರಹಿಸಿದರು.
ಮಾಣಿಪ್ಪಾಡಿ ಕನ್ಸ್ಟ್ರಕ್ಷನ್ ಮಾಲಕ ಎ.ಆರ್.ಎಸ್. ಮಾಣಿಪ್ಪಾಡಿ ನಿಧನ
ಮಂಗಳೂರು: ಮಾಣಿಪ್ಪಾಡಿ ಕನ್ಸ್ಟ್ರಕ್ಷನ್ನ ಮಾಲಕ, ಹಿರಿಯ ಇಂಜಿಜಿನಿಯರ್ ಹಾಗೂ ಗುತ್ತಿಗೆದಾರರಾಗಿದ್ದ ಎ.ಆರ್.ಎಸ್. ಮಾಣಿಪ್ಪಾಡಿ (89) ಎ.19ರಂದು ನಿಧನ ಹೊಂದಿದರು. ಪತ್ನಿ ಹಾಗೂ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ಶಾನವಾಝ್ ಮಾಣಿಪ್ಪಾಡಿ ಮತ್ತು ಉದ್ಯಮಿ ಜಹೀರ್ ಶಾ ಮಾಣಿಪ್ಪಾಡಿ ಅವರನ್ನು ಮೃತರು ಅಗಲಿದ್ದಾರೆ. ಕಣ್ಣೂರು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಲವು ವರ್ಷಗಳ ಕಾಲ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಅವರು ಮಂಗಳೂರು ಹಾರ್ಬರ್ ಪ್ರಾಜೆಕ್ಟ್ ಹಾಗೂ ಮಂಗಳೂರು ವಿಮಾನ ನಿಲ್ದಾಣ ನಿರ್ಮಾಣ ಕಾರ್ಯದಲ್ಲಿ ಸೇವೆ ಒದಗಿಸಿದ್ದರು. ದ.ಕ.ಕಂಟ್ರಾಕ್ಟರ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಮತ್ತು 18 ವರ್ಷಗಳ ಕಾಲ ಕಾರ್ಯದರ್ಶಿಯಾಗಿದ್ದರು. ಸಮಾಜ ಸೇವಕರೂ ಆಗಿದ್ದ ಮಾಣಿಪ್ಪಾಡಿ ಹಲವು ಸಂಘ ಸಂಸ್ಥೆಗಳಿಗೆ ನೆರವು ನೀಡುತ್ತಾ, ಯುವಕರಿಗೆ ಮಾರ್ಗದರ್ಶಿಯಾಗಿದ್ದರು.
ರಾಹುಲ್ ಗಾಂಧಿ ಕೈಲಾಗಲ್ಲ, INDI ಬ್ಲಾಕ್ ಮುನ್ನಡೆಸಲು ಪ್ರಿಯಾಂಕಾ ಗಾಂಧಿಯೇ ಬೇಕು; ತೇಜ್ ಪ್ರತಾಪ್ ಯಾದವ್ ಪಟ್ಟು
ಬಿಹಾರ ರಾಜಕಾರಣದಲ್ಲಿ ತೇಜು ಭಯ್ಯಾ ಎಂದೇ ಚಿರಪರಿಚಿತರಾಗಿರುವ ತೇಜ್ ಪ್ರತಾಪ್ ಯಾದವ್, ಆರ್ಜೆಡಿಯಿಂದ ಹೊರಹಾಕಿದ ಬಳಿಕ ತಮ್ಮದೇ ಆದ ಜನಶಕ್ತಿ ಜನತಾ ದಳ ಪಕ್ಷ ಸ್ಥಾಪಿಸಿದ್ದಾರೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿರುವ ತೇಜ್ ಪ್ರತಾಪ್ ಯಾದವ್, ಅವರಿಂದ ಪ್ರತಿಪಕ್ಷಗಳ ಇಂಡಿ ಮೈತ್ರಿಕೂಟವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಇಂಡಿ ಬ್ಲಾಕ್ ನಾಯಕತ್ವ ವರ್ಗಾಯಿಸುವಂತೆ ತೇಜ್ ಪ್ರತಾಪ್ ಒತ್ತಾಯಿಸಿದ್ದಾರೆ. ಇಲ್ಲಿದೆ ಮಾಹಿತಿ.
► ಗುಂಡ್ಲುಪೇಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ
ಮಹಿಳಾ ಮೀಸಲಾತಿಗೆ ಬೆಂಬಲ; ಡಿಲಿಮಿಟೇಷನ್ ಗೆ ವಿರೋಧ:ಸಿಎಂ ಸಿದ್ದರಾಮಯ್ಯ ಸಷ್ಟನೆ
[…] The post ಮಹಿಳಾ ಮೀಸಲಾತಿಗೆ ಬೆಂಬಲ; ಡಿಲಿಮಿಟೇಷನ್ ಗೆ ವಿರೋಧ:ಸಿಎಂ ಸಿದ್ದರಾಮಯ್ಯ ಸಷ್ಟನೆ first appeared on Vistara News .
ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
[…] The post ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ first appeared on Vistara News .
Ballari | ನಿಡುಗುರ್ತಿಯಲ್ಲಿ ವಿಶೇಷ ಮಹಿಳಾ ಗ್ರಾಮಸಭೆ
ಮಹಿಳಾ ಹಕ್ಕುಗಳ ಅರಿವು, ದೌರ್ಜನ್ಯ ತಡೆ ಕುರಿತು ಜಾಗೃತಿ
ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ
[…] The post ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ first appeared on Vistara News .
ಅಫಜಲಪುರ | ವಕೀಲರ ಸಂಘದ ಅಧ್ಯಕ್ಷರಾಗಿ ಅರ್ಜುನ ಕೇರೂರ ಆಯ್ಕೆ
ಅಫಜಲಪುರ: ತಾಲೂಕು ವಕೀಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಅರ್ಜುನ್ ಕೇರೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಿ.ಎಸ್.ಹಿರೇಮಠ ಘೋಷಣೆ ಮಾಡಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಆದರೆ ಒಂದು ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಅರ್ಜುನ್ ಕೇರೂರ ಅವಿರೋಧವಾಗಿ ಆಯ್ಕೆಗೊಂಡರು. ಘೋಷಣೆ ಆಗುತ್ತಿದಂತೆ ನೂತನ ಅಧ್ಯಕ್ಷರಿಗೆ ಶಾಲು ಹೊದಿಸಿ, ಸಿಹಿ ತಿನ್ನಿಸಿ ಶುಭ ಹಾರೈಸಿದರು. ಬಳಿಕ ಮಾತನಾಡಿದ ಅರ್ಜುನ್ ಕೇರೂರ ಮಾತನಾಡಿ, ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಮತ್ತು ಯುವಕರು ಒಂದಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕೆ ಎಲ್ಲರಿಗೂ ಚಿರಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ವಕೀಲರ ಸಂರಕ್ಷಣೆ ಮತ್ತು ಸಂಘದ ಬೆಳವಣಿಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ವಕೀಲರಾದ ಕೆ.ಜಿ.ಪೂಜಾರಿ, ವಾಸೀಮ್ ಜಾಗಿರದಾರ, ನಾಗೇಶ್ ಕೊಳ್ಳಿ, ಎಸ್.ಜಿ.ಹುಲ್ಲೂರ, ಮಂಜುನಾಥ್ ಕೊಳ್ಳಿ, ಬಿ.ಎಚ್.ದಾನಮಗುಡಿ, ಎಸ್.ಟಿ.ರಾಠೋಡ, ಎಸ್.ಜೆ.ಗುತ್ತೇದಾರ, ರಾಜೇಂದ್ರ ಸರ್ದಾರ್, ಎಂ.ಕೆ.ಪಟೇಲ್, ಅನೀತಾ ದೊಡ್ಮನಿ, ಪಿ.ಬಿ.ಪಾಟೀಲ್, ಅನೀಲ ಜಮಾದಾರ, ದತ್ತು ಪೂಜಾರಿ, ಎಂ.ಎಂ.ಸುತಾರ, ಸಂತೋಷ ಸುಜುಳೆ, ಡಿ.ಎಸ್.ಕುಂಬಾರ, ಗುರುದೇವ ಪೂಜಾರಿ, ಗೊಲ್ಲಾಳ್ ಪೂಜಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Chittapur | ಸಮಾಜ ಸೇವೆಯಿಂದಲೇ ಜೀವನ ಸಾರ್ಥಕ : ನಾಗಯ್ಯಸ್ವಾಮಿ ಹಿರೇಮಠ
ಶಂಕರಾಚಾರ್ಯರ ಜಯಂತಿ ಆಚರಣೆ
ಉಪ ಚುನಾವಣೆ ಫಲಿತಾಂಶ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್! ಸತೀಶ ಜಾರಕಿಹೊಳಿ ಸುಳಿವು
ಉಪ ಚುನಾವಣೆ ಫಲಿತಾಂಶ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ ಆಗಬಹುದು ಎಂದು ಸತೀಶ ಜಾರಕಿಹೊಳಿ ಸುಳಿವು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಬ್ದುಲ್ ಜಬ್ಬಾರ್ ಸೇರಿ ಹಲವು ಅಲ್ಪಸಂಖ್ಯಾತ ನಾಯಕರ ಮೇಲಿನ ಕ್ರಮವು ಮುಸ್ಲಿಂ ಮತಗಳ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ನಾವು ಮಧ್ಯಸ್ಥಿಕೆ ವಹಿಸಿದ್ದೇವೆ ಎಂದು ಜಾರಕಿಹೊಳಿ ಹೇಳಿದ್ದಾರೆ.
ದಲಿತರಿಗೆ ಒಳ ಮೀಸಲಾತಿ: ಏ.24ರಂದು ವಿಶೇಷ ಸಂಪುಟ ಸಭೆ
[…] The post ದಲಿತರಿಗೆ ಒಳ ಮೀಸಲಾತಿ: ಏ.24ರಂದು ವಿಶೇಷ ಸಂಪುಟ ಸಭೆ first appeared on Vistara News .
Kalaburagi | ಪುಸ್ತಕ ಆಯ್ಕೆ ಸಮಿತಿಗೆ ಪ್ರೊ.ಅರುಣ್ ಜೋಳದಕೂಡ್ಲಿಗಿ ನೇಮಕ
ಕಲಬುರಗಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪುಸ್ತಕ ಅಯ್ಕೆ ಸಮಿತಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ಅಂಕಣಕಾರ ಪ್ರೊ.ಅರುಣ್ ಜೋಳದಕೂಡ್ಲಿಗಿ ಅವರನ್ನು ನೇಮಕ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆದೇಶ ಹೊರಡಿಸಿದೆ. ಜಾನಪದ ತಜ್ಞರಾಗಿರುವ ಅರುಣ್ ಜೋಳದಕೂಡ್ಲಿಗಿ ಅವರು ಹಲವು ಕೃತಿಗಳನ್ನು ರಚಿಸಿದ್ದು, ಕಲಬುರಗಿ ಕಂದಾಯ ವಿಭಾಗದಿಂದ ಸದಸ್ಯ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಈ ನೂತನ ಸಮಿತಿಯ ಕಾಲಾವಧಿಯು ಎರಡು ವರ್ಷ ಅಥವಾ ಮುಂದಿನ ಸಮಿತಿ ಅಸ್ತಿತ್ವಕ್ಕೆ ಬರುವ ತನಕ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Yadgiri | ಸಿಇಟಿ-2026 ಪರೀಕ್ಷೆ : ನಿಷೇಧಾಜ್ಞೆ ಜಾರಿ
ಯಾದಗಿರಿ: ಜಿಲ್ಲೆಯಲ್ಲಿ 2026ರ ಎ.23 ಮತ್ತು 24ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2026 ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಆದೇಶ ಹೊರಡಿಸಿದ್ದಾರೆ. ದಂಡ ಪ್ರಕ್ರಿಯೆ ಸಂಹಿತೆ (ಬಿಎನ್ಎಸ್ಎಸ್) 2023ರ ಕಲಂ 163 ಅನ್ವಯ ಈ ಆದೇಶ ಜಾರಿಯಾಗಿದ್ದು, ಉಕ್ತ ದಿನಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಯಾದಗಿರಿ ತಾಲೂಕಿನ ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಸುಸೂತ್ರವಾಗಿ ನಡೆಯುವ ಉದ್ದೇಶದಿಂದ ಪ್ರತಿಯೊಂದು ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಎಸ್ಟಿಡಿ, ಮೊಬೈಲ್ ಸೇವೆಗಳು, ಪೇಜರ್, ಜೆರಾಕ್ಸ್, ಟೈಪಿಂಗ್ ಸೆಂಟರ್, ಪುಸ್ತಕ ಮಳಿಗೆಗಳು ಸೇರಿದಂತೆ ಯಾವುದೇ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ನಿಗದಿಪಡಿಸಿದ ಅಧಿಕಾರಿಗಳು ಮತ್ತು ಶಿಕ್ಷಕರನ್ನು ಹೊರತುಪಡಿಸಿ ಇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಅದೇ ರೀತಿ 200 ಮೀಟರ್ ವ್ಯಾಪ್ತಿಯಲ್ಲಿ ಮಾರಕಾಸ್ತ್ರಗಳನ್ನು ಹೊತ್ತು ಸಂಚರಿಸುವುದಕ್ಕೂ ನಿಷೇಧ ವಿಧಿಸಲಾಗಿದೆ. ಆದರೆ ಮದುವೆ, ಶವ ಸಂಸ್ಕಾರ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಜವಾರ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರವು ಬಾಲಾಜಿ ಕಲ್ಯಾಣ ಮಂಟಪಕ್ಕೆ ಹೊಂದಿಕೊಂಡಿರುವ ಹಿನ್ನೆಲೆ, ಉಕ್ತ ದಿನಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಯಾವುದೇ ಸಭೆ, ಸಮಾರಂಭ ಹಾಗೂ ಧ್ವನಿವರ್ಧಕ ಬಳಕೆಗೂ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಕ್ಸಿಜನ್ ದುರಂತದ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಸರಕಾರಿ ಉದ್ಯೋಗ ನೀಡಿ ನುಡಿದಂತೆ ನಡೆದಿದ್ದೇವೆ : ಡಿ.ಕೆ.ಶಿವಕುಮಾರ್
► 10 ದಿನದಲ್ಲಿ ಮೇಕೆದಾಟು ಡಿಪಿಆರ್ ಕೇಂದ್ರಕ್ಕೆ ಸಲ್ಲಿಕೆ► ಗುಂಡ್ಲುಪೇಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ
Govt Job: ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ, ನೇಮಕಾತಿ ಪತ್ರ ವಿತರಣೆ
ಚಾಮರಾಜನಗರ: ಕೋವಿಡ್ 19 ಸಂದರ್ಭದಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ನೀಡಿದ್ದ ಮಹತ್ವದ ಭರವಸೆಯೊಂದನ್ನು ಸರ್ಕಾರ ಇಂದು ಈಡೇರಿಸಿದೆ. ಗುಂಡ್ಲುಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು. ಕೋವಿಡ್-19 ಎರಡನೇ ಅಲೆಯ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಸಂಭವಿಸಿದ ದುರಂತ
“ಗ್ರೇಟರ್ ಇಸ್ರೇಲ್” ಸಾಕಾರಕ್ಕೆ ನೆತನ್ಯಾಹು ಬಿಗ್ ಪ್ಲಾನ್: ಮಧ್ಯ ಪ್ರಾಚ್ಯದಲ್ಲಿ ಶಾಂತಿಗಿಲ್ಲ ನೆಲೆ
[…] The post “ಗ್ರೇಟರ್ ಇಸ್ರೇಲ್” ಸಾಕಾರಕ್ಕೆ ನೆತನ್ಯಾಹು ಬಿಗ್ ಪ್ಲಾನ್: ಮಧ್ಯ ಪ್ರಾಚ್ಯದಲ್ಲಿ ಶಾಂತಿಗಿಲ್ಲ ನೆಲೆ first appeared on Vistara News .
ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ಹತ್ತಿಕುಣಿ ಜಲಾಶಯದ ನಾಲೆಗಳ ಆಧುನಿಕರಣ ಕಾಮಗಾರಿ ಕುರಿತು ಜಿಲ್ಲಾ ಕಾಂಗ್ರೆಸ್ನ ಕೆಲ ಸ್ಥಳೀಯ ಮುಖಂಡರು ಸತ್ಯಾಸತ್ಯತೆ ತಿಳಿದುಕೊಂಡು ಹೇಳಿಕೆ ನೀಡುವುದು ಒಳಿತು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಷಚಂದ್ರ ಕಟಕಟಿ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಈ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಕಾಂಗ್ರೆಸ್ ಮುಖಂಡರು ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣ ಎಂದು ಹೇಳಿಕೆ ನೀಡುತ್ತಿರುವುದು ಜಿಲ್ಲೆಯ ಜನರನ್ನು ದಾರಿ ತಪ್ಪಿಸುವಂತಿದೆ ಎಂದು ಆರೋಪಿಸಿದರು. ಹತ್ತಿಕುಣಿ ಜಲಾಶಯ ವ್ಯಾಪ್ತಿಯ ರೈತರ ಬಹುದಿನಗಳ ಬೇಡಿಕೆಯ ಮೇರೆಗೆ ಶಾಸಕ ಶರಣಗೌಡ ಕಂದಕೂರ ಅವರು ಕೇಂದ್ರ ಜಲಶಕ್ತಿ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದು, ಅದರ ಆಧಾರದಲ್ಲಿ ಕೇಂದ್ರ ಸರ್ಕಾರದಿಂದ 72 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಈ ಮಹತ್ವದ ಕಾರ್ಯಕ್ಕೆ ಇವರಿಬ್ಬರೇ ಪ್ರಮುಖ ಕಾರಣರಾಗಿದ್ದಾರೆ ಎಂದು ಕಟಕಟಿ ಹೇಳಿದರು. ಕೇಂದ್ರದಿಂದ ಅನುದಾನ ಮಂಜೂರಾದ ಬಳಿಕ ಅದನ್ನು ಜಾರಿಗೆ ತರುವುದು ರಾಜ್ಯ ಸರ್ಕಾರದ ಕರ್ತವ್ಯ. ಅದರಂತೆ ಹತ್ತಿಕುಣಿ ಜಲಾಶಯದ ನಾಲೆಗಳ ಆಧುನಿಕರಣಕ್ಕೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕಾರ್ಯದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ ಅವರ ಪಾತ್ರವನ್ನು ಎಲ್ಲರೂ ಒಪ್ಪುತ್ತಾರೆ. ಆದರೆ ಈ ಕಾಮಗಾರಿಗೆ ಸಂಬಂಧವಿಲ್ಲದ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಕೆಲವರು ಉಲ್ಲೇಖಿಸುತ್ತಿರುವುದು ಸರಿಯಲ್ಲ ಎಂದು ಪ್ರಶ್ನಿಸಿದರು. ಗುರುಮಠಕಲ್ ಕ್ಷೇತ್ರದ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳಿಂದ ಸಮರ್ಪಕ ಅನುದಾನ ನೀಡಲಾಗಿಲ್ಲ. ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಬೊರ್ವೆಲ್ ಕಾಮಗಾರಿಗಳ ಬಿಲ್ಗಳೂ ಪಾವತಿಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸತ್ಯವನ್ನು ಮರೆಮಾಚಿ ಸುಳ್ಳು ಪ್ರಚಾರ ಮಾಡುವುದು ತಪ್ಪು ಎಂದು ಅವರು ಆರೋಪಿಸಿ, ತಪ್ಪು ಮಾಹಿತಿ ಹರಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಜ್ಞಾನವು ಒಂದು ಕಿವಿಯಿಂದ ಒಳಹೋಗಿ ಮತ್ತೊಂದು ಕಿವಿಯಿಂದ ಹೊರಗೆ ಹೋಗಿರುವಂತಿದೆ ಎಂದು ವ್ಯಂಗ್ಯವಾಡಿದ ಅಖಿಲೇಶ್ ಯಾದವ್
ಗೆಲುವಿನ ಗೆರೆ ದಾಟುವ ಮುನ್ನವೇ ಸಂಭ್ರಮಿಸಬಾರದು ಎಂಬುದಕ್ಕೆ ಅಮೆರಿಕದ ಡೆಲಾವರ್ ಮ್ಯಾರಥಾನ್ ಸ್ಪರ್ಧೆಯ ಕ್ಷಣಗಳು ಸಾಕ್ಷಿಯಾಗಿದೆ. ಅಂತಿಮ ಹಂತದಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ಓಟಗಾರನೊಬ್ಬ ವೇಗ ತಗ್ಗಿಸಿ ಸಂಭ್ರಮಿಸುತ್ತಿದ್ದಾಗ, ಮಿಂಚಿನ ವೇಗದಲ್ಲಿ ಆತನನ್ನು ದಾಟಿದ ಸಹಸ್ಪರ್ಧಿ ಅಂತಿಮ ಸೆಕೆಂಡಿನಲ್ಲಿ ಜಯ ಕಸಿದುಕೊಂಡಿದ್ದಾನೆ. ಎರಡನೇ ಸ್ಥಾನಿ ತನ್ನ ಮೂರ್ಖತನಕ್ಕಾಗಿ ನಿರಾಸೆಗೊಂಡಿದ್ದಾನೆ. ಇದರ ವಿಡಿಯೋ ಇದೀಗ ವೈರಲ್ ಆಗಿದೆ. ಕ್ರೀಡೆಯಲ್ಲಿ ಅಂತಿಮ ಕ್ಷಣದವರೆಗಿನ ಏಕಾಗ್ರತೆ ಇಕಬೇಕು ಮತ್ತು ಸಹಸ್ಪರ್ಧಿಯನ್ನು ಕಡಿಮೆ ಅಂದಾಜಿಸಬಾರದು ಎಂಬ ದೊಡ್ಡ ಪಾಠವನ್ನು ಕಲಿಸಿದೆ.
ಜೆಡಿಎಸ್ ಗೆ ಮರಳುತ್ತೀರಾ?; ಸಚಿವ ಜಮೀರ್ ಅಹಮದ್ ಕೊಟ್ಟ ಉತ್ತರ ಏನು?
[…] The post ಜೆಡಿಎಸ್ ಗೆ ಮರಳುತ್ತೀರಾ?; ಸಚಿವ ಜಮೀರ್ ಅಹಮದ್ ಕೊಟ್ಟ ಉತ್ತರ ಏನು? first appeared on Vistara News .
ಮನೆ ನೆನಪಾಗಲಿಲ್ವಾ?, ಮೊದಲು ಹೋಗಿ ಹೇರ್ ಕಟ್ ಮಾಡಿಸ್ಕೋ; ಸಿರಾಜ್-ಬುಮ್ರಾ ತಮಾಷೆಯ ಸಂಭಾಷಣೆ ಭಾರಿ ವೈರಲ್
IPL 2026: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೋಮವಾರ (ಏಪ್ರಿಲ್ 20) ರಾತ್ರಿ ನಡೆದ ರೋಚಕ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 99 ರನ್ಗಳಿಂದ ಭರ್ಜರಿ ಜಯ ಸಾಧಿಸಿತು. ಪಂದ್ಯದ ನಂತರ, ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್ ಬುಮ್ರಾ ನಡುವೆ ನಡೆದ ತಮಾಷೆ ಸಂಭಾಷಣೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್
ಬೇಸಿಗೆಯಲ್ಲೂ ಸಣ್ಣ ನೀರಾವರಿ ಕೆರೆಗಳಲ್ಲಿ ಸಮೃದ್ದ ನೀರು ಸಂಗ್ರಹ: ಸಚಿವ ಎನ್ ಎಸ್ ಭೋಸರಾಜು
[…] The post ಬೇಸಿಗೆಯಲ್ಲೂ ಸಣ್ಣ ನೀರಾವರಿ ಕೆರೆಗಳಲ್ಲಿ ಸಮೃದ್ದ ನೀರು ಸಂಗ್ರಹ: ಸಚಿವ ಎನ್ ಎಸ್ ಭೋಸರಾಜು first appeared on Vistara News .
ಕೇರಳದ ಸಾಂಸ್ಕೃತಿಕ ಉತ್ಸವ 'ತ್ರಿಶೂರ್ ಪೂರಂ' ಸಂಭ್ರಮಕ್ಕೆ ಸಿದ್ಧತೆಗಳು ನಡೆಯುತ್ತಿದ್ದಾಗಲೇ ಭೀಕರ ದುರಂತವೊಂದು ಸಂಭವಿಸಿದೆ. ಮಂಗಳವಾರ ತ್ರಿಶೂರ್ ಜಿಲ್ಲೆಯ ಮುಂಡತಿಕೋಡ್ ಪ್ರದೇಶದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪಟಾಕಿ ತಯಾರಿಕಾ ಶೆಡ್ವೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ಘಟನೆಯು ತ್ರಿಶೂರ್ ಪೂರಂ ಹಬ್ಬದ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ನಡೆದಿದ್ದು,
Kanakagiri | ಜ್ಞಾನವೇ ಮುಕ್ತಿಯ ಮಾರ್ಗ : ಕನಕಪ್ಪ ನಾಯಕ
ಶಂಕರಾಚಾರ್ಯರ ಜಯಂತಿ ಆಚರಣೆ
Kalaburagi | ವಿಜಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಗೆ ಅಕ್ಕಮಹಾದೇವಿ ಮಹಿಳಾ ವಿವಿಯಿಂದ ಚಿನ್ನದ ಪದಕ
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧೀನದಲ್ಲಿರುವ ನಗರದ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಹೇಝಲ್ ಠಕ್ಕರ್ ಅವರು 2024–25ನೇ ಸಾಲಿನ ಬಿ.ಎ. 6ನೇ ಸೆಮಿಸ್ಟರ್ನಲ್ಲಿ ಮನೋವಿಜ್ಞಾನ ವಿಷಯದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ನೀಡುವ ಡಾ. ಪಿ. ಎಸ್. ಹಲ್ಯಾಳ ಅವರ ಹೆಸರಿನ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ವಿಜಯಪುರದಲ್ಲಿ ಮಂಗಳವಾರ ನಡೆದ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರಚಂದ ಗೇಹ್ಲೋಟ್ ಅವರು ಹೇಝಲ್ ಠಕ್ಕರ್ ಅವರಿಗೆ ಚಿನ್ನದ ಪದಕ ಪ್ರದಾನ ಮಾಡಿ ಗೌರವಿಸಿದರು. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಉಪಾಧ್ಯಕ್ಷ ರಾಜಾ ಭೀ. ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳ್ಳಿ, ಜಂಟಿ ಕಾರ್ಯದರ್ಶಿ ಡಾ. ಕೈಲಾಸ ಪಾಟೀಲ್, ಸಂಚಾಲಕರಾದ ನಾಗಣ್ಣ ಘಂಟಿ, ಅರುಣಕುಮಾರ ಪಾಟೀಲ್, ಅನಿಲಕುಮಾರ ಮರಗೋಳ ಸೇರಿದಂತೆ ಮಂಡಳಿಯ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಇದಲ್ಲದೆ, ಕಾಲೇಜಿನ ಪ್ರಾಚಾರ್ಯ ಡಾ. ರಾಜೇಂದ್ರ ಕೊಂಡಾ, ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಛಾಯಾ ಪಾಟೀಲ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿನಿಯ ಸಾಧನೆಯನ್ನು ಕೊಂಡಾಡಿದ್ದಾರೆ.
ಮೋಸ್ಟ್ ವಾಂಟೆಂಡ್ ಬ್ಯಾಂಕ್ ವಂಚಕನನ್ನು US ಉಪಾಧ್ಯಕ್ಷರಿಗೆ ಪರಿಚಯಿಸಿದ ಪಾಕ್ : ಮುಂದುವರಿದ ನರಿಬುದ್ದಿ
Norwegian Bank Fraudster Umar Farooq Zahoor : ಬ್ಯಾಂಕ್’ಗೆ ಕೋಟ್ಯಾಂತರ ರೂಪಾಯಿಯನ್ನು ವಂಚಿಸಿದ ಆರೋಪವನ್ನು ಹೊಂದಿರುವ ಉದ್ಯಮಿಯೊಬ್ಬನನ್ನು, ಪಾಕಿಸ್ತಾನ ಸರ್ಕಾರ, ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್’ಗೆ ಪಾಕಿಸ್ತಾನ ಪರಿಚಯಿಸಿದ್ದ ವಿದ್ಯಮಾನವೊಂದು ತಡವಾಗಿ ಬೆಳಕಿಗೆ ಬಂದಿದೆ. ದುಬೈನಲ್ಲಿ ನೆಲೆಸಿರುವ ಈ ಉದ್ಯಮಿಗೆ, ಪಾಕಿಸ್ತಾನ ಪ್ರಶಸ್ತಿ ಘೋಷಿಸಲು ಸಿದ್ದತೆಯನ್ನು ಮಾಡಿಕೊಂಡಿದೆ.
ಗುಜರಾತ್ ನಲ್ಲಿ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ
[…] The post ಗುಜರಾತ್ ನಲ್ಲಿ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ first appeared on Vistara News .
Kalaburagi | ಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ: ನೋಂದಣಿಗೆ ಸೂಚನೆ
ಕಲಬುರಗಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆಆರ್ಎಫ್) ಅರ್ಹತಾ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು 2026ರ ಎ.24 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಗೆ ಸಂಪರ್ಕಿಸಬೇಕೆಂದು ಕುಲಸಚಿವ ಪ್ರೊ. ನವೀನ ಕುಮಾರ್ ಎಸ್.ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಡಿಯಾ ಮೈತ್ರಿಕೂಟವನ್ನು ಪ್ರಿಯಾಂಕಾ ಮುನ್ನಡೆಸಬಹುದು ಹೊರತು ರಾಹುಲ್ ಗಾಂಧಿಗೆ ಸಾಧ್ಯವಿಲ್ಲ: ತೇಜ್ ಪ್ರತಾಪ್ ಯಾದವ್
ಪಾಟ್ನಾ: ಇಂಡಿಯಾ ಮೈತ್ರಿಕೂಟವನ್ನು ಪ್ರಿಯಾಂಕಾ ಗಾಂಧಿ ಮುನ್ನಡೆಸಬಲ್ಲರು ಎಂದು ಮಂಗಳವಾರ ಬಹಿರಂಗವಾಗಿ ಹೇಳಿರುವ ಜನಶಕ್ತಿ ಜನತಾ ದಳ ಸಂಸ್ಥಾಪಕ ತೇಜ್ ಪ್ರತಾಪ್ ಯಾದವ್, ಇದೇ ವೇಳೆ ಅವರ ಸಹೋದರ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿಯನ್ನೂ ನಡೆಸಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೇಜ್ ಪ್ರತಾಪ್ ಯಾದವ್, “ಪ್ರಿಯಾಂಕಾ ಗಾಂಧಿ ಮಾತ್ರ ಇಂಡಿಯಾ ಮೈತ್ರಿಕೂಟವನ್ನು ಮುನ್ನಡೆಸಬಲ್ಲರು. ಅವರು ಇಂದಿರಾ ಗಾಂಧಿಯಂತಿದ್ದಾರೆ. ಆದರೆ, ರಾಹುಲ್ ಗಾಂಧಿಗೆ ಇಂಡಿಯಾ ಮೈತ್ರಿಕೂಟವನ್ನು ಮುನ್ನಡೆಸಲು ಸಾಧ್ಯವಿಲ್ಲ” ಎಂದು ಹೇಳಿದರು. “ಕೇವಲ ಪ್ರಿಯಾಂಕಾ ಗಾಂಧಿಯಿಂದ ಮಾತ್ರ ಇಂಡಿಯಾ ಮೈತ್ರಿಕೂಟವನ್ನು ಮುನ್ನಡೆಸಲು ಸಾಧ್ಯ. ರಾಹುಲ್ ಗಾಂಧಿ ಯಾತ್ರೆಗೆ ಹೋಗುವುದು, ಬುಲೆಟ್ ಮೇಲೆ ಕೂರುವುದರಿಂದಷ್ಟೇ ಇಂಡಿಯಾ ಮೈತ್ರಿಕೂಟವನ್ನು ಮುನ್ನೆಸಲು ಸಾಧ್ಯವಿಲ್ಲ. ನಿತೀಶ್ ಕುಮಾರ್ ಮೈತ್ರಿಕೂಟವನ್ನು ತೊರೆದರು. ಬೇರೆ ಯಾರೋ ಮುಖ್ಯಮಂತ್ರಿಯಾದರು. ಅವರ ಉದ್ದೇಶವಾದರೂ ಏನು?” ಎಂದು ಅವರು ಪ್ರಶ್ನಿಸಿದರು. ಸಂಯುಕ್ತ ಜನತಾ ದಳ ಮುಖ್ಯಸ್ಥರಾದ ನಿತೀಶ್ ಕುಮಾರ್ ಅವರು ಬಿಹಾರ ರಾಜ್ಯ ರಾಜಕಾರಣದಿಂದ ನಿರ್ಗಮಿಸಿದ ಬಳಿಕ, “ನಿತೀಶ್ ಕುಮಾರ್ ಅವರು ರಾಜಿಯಾಗಿದ್ದಾರೆ” ಎಂಬ ರಾಹುಲ್ ಗಾಂಧಿಯ ಆರೋಪದ ಬೆನ್ನಿಗೇ ತೇಜ್ ಪ್ರತಾಪ್ ಯಾದವ್ ರಿಂದ ಈ ಹೇಳಿಕೆ ಹೊರ ಬಿದ್ದಿದೆ. “ಸದ್ಯ ರಾಹುಲ್ ಗಾಂಧಿಯವರು ನಿತೀಶ್ ಕುಮಾರ್ ಕುರಿತು ಮಾತನಾಡುತ್ತಿದ್ದಾರೆ. ಅವರು ತಮ್ಮದೇ ಹುದ್ದೆಯನ್ನು ತೊರೆದರು ಹಾಗೂ ಬೇರೊಬ್ಬರು ಮುಖ್ಯಮಂತ್ರಿಯಾದರು. ಅವರು ಬೇರೆ ರಾಜ್ಯದವರಾಗಿದ್ದರೂ, ಬಿಹಾರ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಯಾಕೆ ಅಷ್ಟೊಂದು ದುರಾಸೆ ಹೊಂದಿದ್ದಾರೆ?” ಎಂದು ಅವರು ಪ್ರಶ್ನಿಸಿದರು. ರಾಹುಲ್ ಗಾಂಧಿ ಕುರಿತ ತೇಜ್ ಪ್ರತಾಪ್ ಯಾದವ್ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ಉದಿತ್ ರಾಜ್, “ತೇಜ್ ಪ್ರತಾಪ್ ಯಾದವ್ ಹೇಳಿಕೆ ಅಪ್ರಬುದ್ಧವಾಗಿದ್ದು, ಅವರು ಬಾಯಿಗೆ ಬಂದಿದ್ದು ಬಡಬಡಿಸುವ ಬದಲು ತಮ್ಮ ಕೆಲಸದತ್ತ ಗಮನ ಹರಿಸಬೇಕು” ಎಂದು ತಾಕೀತು ಮಾಡಿದ್ದಾರೆ.
Aland | ಕಿಣ್ಣಿಸುಲ್ತಾನ ಬಸವೇಶ್ವರ ಜಾತ್ರೆ : ಅದ್ಧೂರಿ ರಥೋತ್ಸವ
ಆಳಂದ: ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ ಬಸವೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ ಬಳಿಕ ರಥೋತ್ಸವ ಅದ್ಧೂರಿಯಾಗಿ ನಡೆಯಿತು. ಗ್ರಾಮದ ಶಾಂತಲಿಂಗೇಶ್ವರ ಹಿರೇಮಠದ ಶ್ರೀ ಶಿವಶಾಂತಲಿoಗ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಸೋಮವಾರ ಬೆಳಗಿನ ಜಾವ ಪಲ್ಲಕ್ಕಿ ಮೆರವಣಿಗೆ ಬಳಿಕ ಅಗ್ನಿ ಪ್ರವೇಶ ಮಧ್ಯಾಹ್ನ ಬಸವೇಶ್ವರ ದೇವಾಲಯದಲ್ಲಿ ನಡೆದ ವೇಳೆ ಅನೇಕ ತಾಯಂದಿರು, ಭಕ್ತಾದಿಗಳ ಪಾಲ್ಗೊಂಡು ತೋಟಿಲು ಕಾರ್ಯಕ್ರಮದ ವಿಧಿ ವಿಧಾನವ ನಡೆಸಿಕೊಟ್ಟರು. ಬಳಿಕ ಸಂಜೆ ಕಡಗಚಿ ಮಠದ ಶ್ರೀ ವೀರಭದ್ರ ಶಿವಾಚಾರ್ಯರು ಮತ್ತು ಗ್ರಾಮದ ಶಿವಶಾಂತಲಿಂಗ ಶಿವಾಚಾರ್ಯರ ಸಮ್ಮುಖದಲ್ಲಿ ನಡೆದ ರಥೋತ್ಸವದಲ್ಲಿ ಗ್ರಾಮ ಸೇರಿದಂತೆ ನೆರೆಹೊರೆಯ ನೂರಾರು ಭಕ್ತಾದಿಗಳು ಭಾಗವಹಿಸಿದ್ದರು. ಈ ಮುನ್ನದಿನ ನಂದಿಕೋಲ ಮೆರವಣಿಗೆ ಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ಕಮೀಟಿ ಅಧ್ಯಕ್ಷ ಶಂಕರಯ್ಯಾ ಸ್ವಾಮಿ, ಶಿವಾನಂದ ದೇಸಾಯಿ, ಮಾಣಿಕ ಕಾಸರ, ಬಸವರಾಜ ಹಂಗರಗೆ ಬಸವಂತರಾಯ ಧೂಳೆ, ಶಿವಂಕರ ಮುನ್ನೊಳ್ಳಿ ಸರ್ವ ಭಕ್ತಾಧಿಕಾರಿಗಳ ನೇತೃತ್ವದಲ್ಲಿ ಅದ್ಧೂರಿಯಾಗಿ ನಡೆಯಿತು. ಮಂಗಳವಾರ ಮಧ್ಯಾಹ್ನ 4 ಗಂಟೆಗೆ ಜಂಗಿ ಫೈಲ್ವಾನರ ಕುಸ್ತಿ ಹಾಗೂ ವಿಜೇತರಿಗೆ ನಗದು ಬಹುಮಾನ ವಿತರಣೆ ನಡೆಯಿತು. ರಾತ್ರಿ ಆಡಮುಟ ಮಾವ ಎಡವಟು ಅಳಿಯ ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು. ಜಾತ್ರೆಯ ಮದ್ದು ಸುಡಲು ಭಕ್ತ ಸೇವೆಯನ್ನು ಸಿದ್ಧರಾಮ ಅಮೃತ ದೇಸಾಯಿ ಕೈಗೊಂಡರೆ, ಎರಡು ದಿನಗಳ ಆಗಮಿಸುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಗ್ರಾಮದ ಕೆಎಸ್ಆರ್ಟಿಸಿ ಸಿಬ್ಬಂದಿಗಳು ಕೈಗೊಂಡಿದ್ದರು. ಕುಸ್ತಿ ಪಟುಗಳಿಗೆ ಬಹುಮಾನ ಗ್ರಾಮದ ರೈತ ಬಳಗದಿಂದ ಹಾಗೂ ರಥಕ್ಕೆ ಪುಷ್ಪಾಲಂಕಾರವನ್ನು ಶ್ರೀಶೈಲ ಎಸ್. ದಮ್ಮುರೆ, ಬಸವ ಮೂರ್ತಿ ಕಾಣಿಕೆಯನ್ನು ಗುರುಲಿಂಗಪ್ಪಾ ಕೆ. ಮುಲಗೆ ಕೈಗೊಂಡರು ಅಲ್ಲದೆ, ಜಾತ್ರಾ ವಾಲ್ಪೋಸ್ಟ್ರ ಸೇವೆಯನ್ನು ಮಲ್ಲಿಕಾರ್ಜುನ ಕೊರಳ್ಳಿ, ಹರಕೆಯನ್ನು ಶಾಂತಪ್ಪ ಧೂಳೆ ಸೇರಿದಂತೆ ಇಡೀ ಗ್ರಾಮಸ್ಥರು ಹಾಗೂ ದೇವಸ್ಥಾನ ಕಮೀಟಿ ಸರ್ವರು ಕೂಡಿ ಜಾತ್ರಾ ಉತ್ಸವ ಯಶಸ್ವಿಗೆ ಶ್ರಮಿಸಿ ಭಕ್ತಿಯನ್ನು ಸಮರ್ಪಿಸಿದರು.
SSLC Exam Result 2026: ಫಲಿತಾಂಶ ಸಂಭಾವ್ಯ ದಿನಾಂಕ; ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಸದ್ಯ ಸಂಭಾವ್ಯ ದಿನಾಂಕ ಏಪ್ರಿಲ್ 24 ಆಗಿದೆ. ತೃತೀಯ ಭಾಷೆ ಗ್ರೇಡ್ ಅಥವಾ ಅಂಕ ಎಂಬ ವಿಚಾರದಲ್ಲಿ ಸರ್ಕಾರ, ಹೈಕೋರ್ಟ್ ನಿಲುವುಗಳು ಭಿನ್ನವಾಗಿದ್ದು, ಇದು ಫಲಿತಾಂಶವನ್ನು ಒಂದೆರಡು ದಿನಗಳ ಮಟ್ಟಿಗೆ ಮುಂದಕ್ಕೆ ತಳ್ಳುವ ಸಾಧ್ಯತೆ ಇದೆ. ಒಂದೇ ವೇಳೆ ಸರ್ಕಾರ ಹೈಕೋರ್ಟ್ ಆದೇಶ ಪ್ರಶ್ನೆ ಮಾಡದೆ ಪಾಲಿಸಿದರೆ ನಿಗದಿತ ದಿನಾಂಕಕ್ಕೆ ಫಲಿತಾಂಶ ಹೊರ ಬೀಳಲಿದೆ.
ಕಲಬುರಗಿ ಸರಕಾರಿ ಕಿವುಡ ಮಕ್ಕಳ ಶಾಲೆಯಲ್ಲಿ ಪ್ರವೇಶಾತಿ ಪ್ರಾರಂಭ
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಡಿಯಲ್ಲಿ ಕಲಬುರಗಿಯ ಸರ್ಕಾರಿ ಕಿವುಡ ಮಕ್ಕಳ ಶಾಲೆಯಲ್ಲಿ 1 ರಿಂದ 8ನೇ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಕಲಬುರಗಿಯ ಸರ್ಕಾರಿ ಕಿವುಡ ಮಕ್ಕಳ ಶಾಲೆಯ ಅಧೀಕ್ಷಕರು ತಿಳಿಸಿದ್ದಾರೆ. ಈ ಶಾಲೆಯಲ್ಲಿ 6 ರಿಂದ 14 ವರ್ಷದೊಳಗಿನ ಶ್ರವಣದೋಷವುಳ್ಳ ಬಾಲಕರು ಪ್ರವೇಶಾತಿ ಪಡೆಯಬಹುದಾಗಿದೆ. ಪ್ರವೇಶ ಪಡೆದ ಬಾಲಕರಿಗೆ ಶಿಕ್ಷಣ, ಕಂಪ್ಯೂಟರ್, ಇತ್ಯಾದಿ ತರಬೇತಿ ಜೊತೆಗೆ ಮಕ್ಕಳಿಗೆ ಉಚಿತ ವಸತಿ, ಊಟ ಮತ್ತು ಸಮವಸ್ತ್ರ ಒದಗಿಸಲಾಗುತ್ತದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ಸಂತೋಷ-9741953333, ಮಹಾಂತೇಶ-743234892 ಹಾಗೂ ವೈಶಾಲಿ-9611364257 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಇರಾನ್ ಜೊತೆಗಿನ ಶಾಂತಿ ಮಾತುಕತೆಯಲ್ಲಿ ಅಮೆರಿಕವು ಪಾಕಿಸ್ತಾನಕ್ಕೆ ಏಕಿಷ್ಟು ಮಹತ್ವ ನೀಡುತ್ತಿದೆ ಎಂಬುದು ಜಗತ್ತಿಗೆ ಈಗಲೂ ಅರ್ಥವಾಗದ ಸಂಗತಿಯಾಗಿದೆ. ಈಗಾಗಲೇ ಅಮೆರಿಕ ಮತ್ತು ಇರಾನ್ ನಡುವೆ ಮೊದಲ ಸುತ್ತಿನ ಇಸ್ಲಾಮಾಬಾದ್ ಟಾಕ್ಸ್ ಪೂರ್ಣಗೊಂಡಿದ್ದು, ಎರಡನೇ ಸುತ್ತಿನ ಮಾತುಕತೆಗೂ ಈ ಎರಡೂ ರಾಷ್ಟ್ರಗಳು ಪಾಕಿಸ್ತಾನವನ್ನು ಆಯ್ದುಕೊಂಡಿವೆ. ಈ ಮಧ್ಯೆ ಈ ಬಾರಿಯ ಮಾತುಕತೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಭಾಗವಹಿಸಲಿದ್ದು, ನೇರವಾಗಿ ಇಸ್ಲಾಮಾಬಾದ್ ಪ್ರವಾಸ ಅಥವಾ ವರ್ಚುವಲ್ ಹಾಜರಿ ಮೂಲಕ ಮಾತುಕತೆಯ ಭಾಗವಾಗಲಿದ್ದಾರೆ ಎಂದು ಅಮೆರಿಕನ್ ಮಾಧ್ಯಮಗಳು ತಿಳಿಸಿವೆ.
ಯಾರ್ಯಾರು ಪಕ್ಷದ ವಿರುದ್ದ ಕೆಲಸ ಮಾಡಿದ್ದಾರೆ ಅಂತವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಕೆಲವು ವ್ಯಕ್ತಿಗಳ ಬೆಂಬಲಿಗರು ಪದಾಧಿಕಾರಿಗಳು ದಾವಣೆಗೆರೆಯಲ್ಲಿ ಪ್ರಚಾರಕ್ಕೆ ಬರಲಿಲ್ಲ. ಅವರ ವಿರುದ್ದ ಕೂಡ ಕ್ರಮ ಆಗಬೇಕು ಎಂದು ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರು ಅಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಟಿಕೆಟ್ ಕೊಡದೆ ಇದ್ದಿದ್ದನ್ನು ಒಂದು ಸಮುದಾಯಕ್ಕೆ ಆದ ಅನ್ಯಾಯ ಎಂದು ಬಿಂಬಿಸುವುದು ಸರಿಯಲ್ಲ. ಯಾವ ನಾಯಕ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋದರೂ ಪಕ್ಷಕ್ಕೆ ಏನು ನಷ್ಟವಿಲ್ಲ ಎಂದು ಕಿಡಿಕಾರಿದ್ದಾರೆ.
ಇರಾನ್ ಸಂಘರ್ಷದಿಂದ ಇತಿಹಾಸದಲ್ಲಿಯೇ ದೊಡ್ಡ ಭಾರೀ ಇಂಧನ ಬಿಕ್ಕಟ್ಟು: ಐಇಎ ಎಚ್ಚರಿಕೆ
ಪ್ಯಾರಿಸ್: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ನಡೆಯುತ್ತಿರುವ ಸಂಘರ್ಷವು ಜಗತ್ತಿನ ಮಟ್ಟದಲ್ಲಿ ದೊಡ್ಡ ಇಂಧನ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ಅಂತರರಾಷ್ಟ್ರೀಯ ಇಂಧನ ಸಂಸ್ಥೆ (ಐಇಎ) ಮುಖ್ಯಸ್ಥ ಫಾತಿಹ್ ಬಿರೋಲ್ ತಿಳಿಸಿದ್ದಾರೆ. ಫ್ರಾನ್ಸ್ ಇಂಟರ್ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಅವರು, “ಇದು ಇತಿಹಾಸದಲ್ಲಿಯೇ ಅತಿದೊಡ್ಡ ಬಿಕ್ಕಟ್ಟು ಆಗಬಹುದು. ಈಗಾಗಲೇ ಪೆಟ್ರೋಲ್ ಮತ್ತು ಅನಿಲದ ಕೊರತೆ ಸಮಸ್ಯೆಗಳಿವೆ. ಅದಕ್ಕೆ ರಷ್ಯಾ ಸಂಬಂಧಿತ ಸಮಸ್ಯೆಗಳು ಸೇರಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ” ಎಂದು ಹೇಳಿದ್ದಾರೆ. ಪಶ್ಚಿಮ ಏಷ್ಯಾದ ಯುದ್ಧದ ಪರಿಣಾಮವಾಗಿ ಜಾಗತಿಕ ಇಂಧನ ಸಾಗಣೆಗೆ ಅಡಚಣೆ ಉಂಟಾಗಿದೆ. ಹಾರ್ಮುಝ್ ಜಲಸಂಧಿಯಲ್ಲಿ ಸಮುದ್ರದಲ್ಲಿನ ಸರಕು ಸಾಗಣೆಗೆ ತೊಂದರೆಯಾಗಿದೆ. ಜಗತ್ತಿನ ತೈಲ ಮತ್ತು ಎಲ್ಎನ್ಜಿ ಸಾಗಣೆಯ ದೊಡ್ಡ ಭಾಗ ಇದೇ ಮಾರ್ಗದ ಮೂಲಕ ನಡೆಯುತ್ತದೆ ಎಂದು ಅವರು ಹೇಳಿದ್ದಾರೆ. ಇದರ ಜೊತೆಗೆ, ರಷ್ಯಾ–ಉಕ್ರೇನ್ ಯುದ್ಧದಿಂದ ಯುರೋಪ್ಗೆ ರಷ್ಯಾದ ಅನಿಲ ಸರಬರಾಜು ಕಡಿಮೆಯಾಗಿರುವುದರಿಂದ ಇಂಧನ ಮಾರುಕಟ್ಟೆ ಮೇಲೆ ಹೆಚ್ಚುವರಿ ಒತ್ತಡ ಉಂಟಾಗಿದೆ. ಈ ತಿಂಗಳ ಆರಂಭದಲ್ಲೇ ಬಿರೋಲ್ ಅವರು ಪ್ರಸ್ತುತ ಪರಿಸ್ಥಿತಿಯನ್ನು 1973, 1979 ಮತ್ತು 2022ರ ಇಂಧನ ಬಿಕ್ಕಟ್ಟುಗಳಿಗಿಂತಲೂ ಗಂಭೀರ ಎಂದು ಹೇಳಿದ್ದಾರೆ. ಮಾರ್ಚ್ನಲ್ಲಿ, ತೈಲ ಬೆಲೆ ಏರಿಕೆಯನ್ನು ನಿಯಂತ್ರಿಸಲು ಐಇಎ ಸದಸ್ಯ ರಾಷ್ಟ್ರಗಳು ತಮ್ಮ ದಾಸ್ತಾನುಗಳಿಂದ 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆ ಮಾಡಲು ಒಪ್ಪಿಕೊಂಡಿವೆ. ಈ ಬೆಳವಣಿಗೆಗಳಿಂದ ಜಾಗತಿಕ ಇಂಧನ ಪೂರೈಕೆ, ಬೆಲೆ ಹಾಗೂ ಆರ್ಥಿಕ ಸ್ಥಿತಿಗೆ ದೊಡ್ಡ ಸವಾಲು ಎದುರಾಗುವ ಸಾಧ್ಯತೆ ಇದೆ.
ಏಪ್ರಿಲ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 21) ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ.
ಎ.25, 26 |ಸೂರಿಕುಮೇರು: ನವೀಕೃತ ಬದ್ರಿಯಾ ಜುಮಾ ಮಸ್ಜಿದ್ ಉದ್ಘಾಟನೆ
ಬಂಟ್ವಾಳ : ಸೂರಿಕುಮೇರು ನವೀಕೃತ ಬದ್ರಿಯಾ ಜುಮಾ ಮಸೀದಿಯ ಉದ್ಘಾಟನೆ ಸಮಾರಂಭ ಮತ್ತು ಸ್ವಲಾತ್ ವಾರ್ಷಿಕ ಕಾರ್ಯಕ್ರಮವು ಎ.25 ಮತ್ತು 26 ರಂದು ನಡೆಯಲಿದೆ, ಎ.15ರಂದು ಮಗ್ರಿಬ್ ಬಳಿಕ ಹಂಝ ಮಿಸ್ಬಾಹಿ ಓಟ್ಟಪದವು ಧಾರ್ಮಿಕ ಪ್ರವಚನ ನೀಡುವರು. ಎ.26ರಂದು ಮಗ್ರಿಬ್ ಬಳಿಕ ನವೀಕೃತ ಮಸೀದಿ ಉದ್ಘಾಟನೆ ಮತ್ತು ಸ್ವಲಾತ್ ವಾರ್ಷಿಕ ಕಾರ್ಯಕ್ರಮ ನಡೆಯಲಿದ್ದು, ಸೈಯದ್ ಇಬ್ರಾಹೀಂ ಬಾದುಷಾ ತಂಙಳ್ ಬುಖಾರಿ ಅಲ್-ಅಝ್ಹರಿ ಆನೆಕಲ್ ನೇತೃತ್ವ ನೀಡುವರು, ಉಡುಪಿ-ಚಿಕ್ಕಮಗಳೂರು, ಹಾಸನ ಮತ್ತು ದ.ಕ ಜಿಲ್ಲೆಯ ವಿವಿಧ ಮೊಹಲ್ಲಾಗಳ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್, ರಾಜ್ಯ ಮಾಹಿತಿ ಆಯೋಗದ ಅಧ್ಯಕ್ಷ ಬದ್ರುದ್ದೀನ್ ಮಾಣಿ ಭಾಗವಹಿಸುವರು. ಸೂರಿಕುಮೇರು ಮಸೀದಿ ಎಸ್.ಎ.ಇಸ್ಮಾಯೀಲ್ ಅಧ್ಯಕ್ಷತೆ ವಹಿಸಲಿದ್ದು, ಖತೀಬ್ ಕಲಂದರ್ ಶಾಫಿ ಮದನಿ ಉದ್ಘಾಟಿಸುವರು ಎಂದು ಮಸೀದಿ ಪ್ರಧಾನ ಕಾರ್ಯದರ್ಶಿ ಅಮೀರುದ್ದೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಆಯುರ್ವೇದದ ಬಗ್ಗೆ ಪರ-ವಿರೋಧ ಚರ್ಚೆಗೆ ಕಾರಣವಾದ ಮಲಯಾಳಂ ಸಿನಿಮಾ
ಆಯುರ್ವೇದ ವೈದ್ಯರ ಸಮೂಹವು ಸಾಂಪ್ರದಾಯಿಕ ಭಾರತೀಯ ವೈದ್ಯಕೀಯ ಪದ್ಧತಿ ವಿರುದ್ಧ ಅಪಪ್ರಚಾರದ ಭಾಗವಾಗಿ ಸಿನಿಮಾ ತಯಾರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಮಲಯಾಳಂ ಭಾಷೆಯ ಬ್ಲಾಕ್ ಬಸ್ಟರ್ ಸಿನಿಮಾ ‘Vaazha 2: Biopic of a Billion Bros’ನಲ್ಲಿ ಒಂದು ಪಾತ್ರದ ಚಿತ್ರಣವು ಆಯುರ್ವೇದ ಔಷಧಿಗಳ ದುಷ್ಪರಿಣಾಮಗಳ ಕುರಿತು ಮತ್ತೆ ಚರ್ಚೆಯನ್ನು ಹುಟ್ಟುಹಾಕಿದೆ. ಈ ಚಿತ್ರದ ಪಾತ್ರವೊಂದು ‘ಅರಿಷ್ಠಂ’ ಎಂಬ ಹುದುಗಿಸಿದ ಗಿಡಮೂಲಿಕೆ ಕಷಾಯದ ಮಿತಿ ಮೀರಿದ ಸೇವನೆಯ ನಂತರ ಲಿವರ್ ಸಿರೋಸಿಸ್ನಿಂದ ಸಾವನ್ನಪ್ಪುತ್ತದೆ. ನಟ ಬಿಜುಕ್ಕುಟ್ಟನ್ ನಟಿಸಿದ ಈ ಸಿನಿಮಾದ ಪಾತ್ರ ದೀರ್ಘಕಾಲದವರೆಗೆ ಕಷಾಯವನ್ನು ಸೇವಿಸಿ ಸಾವನ್ನಪ್ಪಿರುವುದನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಇದೀಗ ಆಯುರ್ವೇದ ವೈದ್ಯರ ಸಮೂಹವು ಸಾಂಪ್ರದಾಯಿಕ ಭಾರತೀಯ ವೈದ್ಯಕೀಯ ಪದ್ಧತಿ ವಿರುದ್ಧ ಅಪಪ್ರಚಾರದ ಭಾಗ ಈ ಸಿನಿಮಾ ಎಂದು ಹೇಳಿದ್ದಾರೆ. ಆಯುರ್ವೇದ ವೈದ್ಯಕೀಯ ಸಂಘದ (AMAI) ಕೆಲವು ಕಾರ್ಯಕರ್ತರು ಇತ್ತೀಚೆಗೆ ಈ ಸಿನಿಮಾದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. “ಸಿನಿಮಾದಲ್ಲಿ ಕಷಾಯ ಸೇವಿಸಿ ಸಾವನ್ನಪ್ಪುವ ಪಾತ್ರದ ನಿರ್ವಹಣೆಯನ್ನು ಮತ್ತು ಅಪಪ್ರಚಾರವನ್ನು ತೆಗೆದು ಹಾಕಬೇಕು” ಎಂದು ಸಂಘ ಹೇಳಿದೆ. ಆದರೆ AMAIನ ಕೇರಳ ರಾಜ್ಯದ ಅಧ್ಯಕ್ಷ ವಿಷ್ಣು ನಂಬೂದಿರಿ ಸೋಮವಾರ ಈ ನಿಟ್ಟಿನಲ್ಲಿ ಇನ್ನೂ ಅಧಿಕೃತವಾಗಿ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದ್ದಾರೆ. Dear Friends, please help this message reach the makers of the malayalam movie Vazha 2. It is long, but very important.A recent malayalam movie, called Vazha 2 portrayed a character who keeps consuming ayurvedic medicine -(arishtam, a herbal liquor, with 10-15% alcohol, which… pic.twitter.com/9kbBKm6w9b — TheLiverDoc™ (@theliverdoc) April 18, 2026 ಎಕ್ಸ್ ನಲ್ಲಿ ʼಲಿವರ್ ಡಾಕ್ʼ ಎಂದೇ ಪ್ರಸಿದ್ಧರಾಗಿರುವ ಡಾ. ಸಿರಿಯಾಕ್ ಅಬಿ ಫಿಲಿಪ್ಸ್ ಈ ಬಗ್ಗೆ ಎಕ್ಸ್ ನಲ್ಲಿ ದೀರ್ಘವಾದ ಪೋಸ್ಟ್ ಒಂದು ಹಾಕಿದ್ದು ಪರ-ವಿರೋಧ ಚರ್ಚೆಗೆ ಕಾರಣರಾಗಿದ್ದಾರೆ. ಆದರೆ ವಿಷ್ಣು ನಂಬೂದಿರಿ ಪ್ರಕಾರ, “ಸಿನಿಮಾದಲ್ಲಿ ತೋರಿಸಲಾಗಿರುವ ಪಾತ್ರವು ದೀರ್ಘಕಾಲ ವೈದ್ಯರ ರೋಗಪರಿಶೀಲನೆಯ ಚೀಟಿಯಿಲ್ಲದೇ ಅರಿಷ್ಠಂ ಸೇವಿಸಿರುವ ಕಾರಣದಿಂದ ಸಾವನ್ನಪ್ಪಿದ್ದಾರೆ. ಇದು ಜನರ ನಡುವೆ ವೈದ್ಯರ ಸೂಚನೆಯ ವಿನಃ ಅರಿಷ್ಠಂ ಸೇವಿಸಬಾರದು ಎನ್ನುವ ಮಾಹಿತಿಯನ್ನೂ ಕೊಡುತ್ತದೆ!” ಅವರ ಪ್ರಕಾರ, ಆಯುರ್ವೇದ ಔಷಧಿಗಳನ್ನು ಎಷ್ಟು ದೀರ್ಘಕಾಲ ಸೇವಿಸುತ್ತೀರಿ ಮತ್ತು ಎಷ್ಟು ಸೇವಿಸುವಿರಿ ಎನ್ನುವುದೂ ಮುಖ್ಯವಾಗುತ್ತದೆ. ಆದರೆ ಸಿನಿಮಾವನ್ನು ಬಳಸಿ ಆಯುರ್ವೇದ ವಿರೋಧಿಗಳು ಆಯುರ್ವೇದದ ವಿರುದ್ಧ “ನಕಾರಾತ್ಮಕ ಪ್ರಚಾರ” ಮಾಡುತ್ತಿದ್ದಾರೆ. ವೈದ್ಯಕೀಯ ಕಂಪನಿಗಳ ಏಕಸ್ವಾಮ್ಯದ ಪ್ರಯತ್ನದಿಂದ ಇಂತಹ ಅಪಪ್ರಚಾರ ನಡೆಯುತ್ತದೆ ಎಂದು ಅವರು ಹೇಳಿದ್ದಾರೆ. ಚಿತ್ರದ ನಿರ್ದೇಶಕ ಸವಿನ್ ಎಸ್ ಎ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಅಗತ್ಯವಿದ್ದರೆ ನಿರ್ಮಾಪಕರು ಪ್ರತಿಕ್ರಿಯಿಸುತ್ತಾರೆ ಎಂದು ಹೇಳಿದ್ದಾರೆ. “ವಾಝಾ ಬಯೋಪಿಕ್ ಆಫ್ ಎ ಬಿಲಿಯನ್ ಬಾಯ್ಸ್’ ಚಿತ್ರದ ಮುಂದುವರಿದ ಭಾಗವಾಗಿರುವ ಸಿನಿಮಾ ಎಪ್ರಿಲ್ 2ರಂದು ಬಿಡುಗಡೆಯಾದಂದಿನಿಂದ ವಿಶ್ವಾದ್ಯಂತ 200 ಕೋಟಿ ರೂಳಗೂ ಮಿಗಿಲಾಗಿ ಲಾಭ ಗಳಿಸಿದೆ. ಈ ನಡುವೆ ಸಾಮಾಜಿಕ ಮಾಧ್ಯಮಗಳ ಮೂಲಕ ಆಯುರ್ವೇದ ಔಷಧಿಗಳ ಪರಿಣಾಮವನ್ನು ಸದಾ ಪ್ರಶ್ನಿಸುತ್ತಿರುವ ಸಿರಿಯಾಕ್ ಅಬ್ಬಿ ಫಿಲಿಪ್ಸ್ ಅವರು ಸಿನಿಮಾವನ್ನು ಬೆಂಬಲಿಸಿದ್ದಾರೆ. ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಅವರು ಹಾಕಿರುವ ಪೋಸ್ಟ್ನಲ್ಲಿ ನಿರ್ಮಾಪಕರಿಗೆ ಸಂಪೂರ್ಣ ಮತ್ತು ಅತ್ಯುನ್ನತ ಮಟ್ಟದ ಶೈಕ್ಷಣಿಕ ಪರಿಣತಿಯಿದೆ ಎಂದು ಬೆಂಬಲ ಸೂಚಿಸಿದ್ದಾರೆ. “ಇತ್ತೀಚೆಗಿನ ಮಲಯಾಳಂ ಸಿನಿಮಾವಾದ “ವಾಝಾ 2 ಆಯುರ್ವೇದ ಔಷಧವನ್ನು ಸೇವಿಸುತ್ತಲೇ ಇರುವ ಪಾತ್ರವನ್ನು ಚಿತ್ರಿಸಿದೆ. (ಅರಿಷ್ಟ, ಗಿಡಮೂಲಿಕೆ ಮದ್ಯ, ಶೇ 10-15 ಆಲ್ಕೋಹಾಲ್. ಆಯುರ್ವೇದ ವೈದ್ಯರು ಕುರುಡಾಗಿ ಅರಿಷ್ಟದಲ್ಲಿ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವುದಾಗಿ ಹೇಳುತ್ತಾರೆ) ಗಂಭೀರ ಮಾರಕ ಯಕೃತ್ತಿನ ಕಾಯಿಲೆಯಿಂದ ಪಾತ್ರ ಮರಣ ಹೊಂದುವಲ್ಲಿ ಸಿನಿಮಾ ಕೊನೆಗೊಳ್ಳುತ್ತದೆ. ಸಿನಿಮಾ ಮಾಡಿದ ಜನರು ಬುದ್ಧಿವಂತರು ಮತ್ತು ಉತ್ತಮ ಮಾಹಿತಿ ಹೊಂದಿದ್ದಾರೆ. ದಶಕಗಳಿಂದ ಆಯುರ್ವೇದ ಸಮುದಾಐವು ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ ಗಿಡಮೂಲಿಕೆ ಔಷಧ ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಹೇಳುತ್ತಿದೆ. ಆದರೆ ಔಷಧಿಗಳಲ್ಲಿ ವಿಷಮಯ ಸಸ್ಯಶಾಸ್ತ್ರ ಮತ್ತು ಆಲ್ಕೋಹಾಲ್ ಹೆಚ್ಚಿರುತ್ತದೆ. ಅದು ಯಕೃತ್ತಿಗೆ ಅತ್ಯಂತ ವಿಷಕಾರಿಯಾಗಬಹುದು. ಹೀಗಾಗಿ ಲಿವರ್ ಕಸಿ ಅಥವಾ ಸಾವು ಸಂಭವಿಸಬಹುದು. ಸಮಂಜಸವಾದ ಪುರಾವೆಗಳಿಲ್ಲದೆ ಇದನ್ನು ನೀಡಲಾಗುತ್ತಿದೆ. ಸಿನಿಮಾ ಈ ವಿಚಾರವನ್ನು ಸಾರ್ವಜನಿಕರ ಗಮನಕ್ಕೆ ತರುತ್ತಿದೆ” ಎಂದು ಅವರು ಬರೆದಿದ್ದಾರೆ. ಫಿಲಿಪ್ ಅವರು, “ಆಯುರ್ವೇದ ಗಿಡಮೂಲಿಕೆಗಳು, ಶಾಸ್ತ್ರೀಯ ಸೂತ್ರೀಕರಣಗಳು, ಸ್ವಾಮ್ಯದ ಗಿಡಮೂಲಿಕೆಗಳು ಮತ್ತು ಸಾಂಪ್ರದಾಯಿವಾಗಿ ತಯಾರಿಸಿರುವುದಾಗಿ ಹೇಳಲಾಗುತ್ತಿದೆ. ಆದರೆ ಅವು ಆಲ್ಕೋಹಾಲ್, ಯಕೃತ್ತಿಗೆ ವಿಷವಾಗಿರುವ ಸಸ್ಯಶಾಸ್ತ್ರ, ಭಾರ ಲೋಹಗಳು ಮತ್ತು ಅಂಗಗಳಿಗೆ ಹಾನಿ ಮಾಡುವ ಕಲಬೆರಕೆಗಳನ್ನು ಹೊಂದಿವೆ” ಎಂದು ತೋರಿಸಲು ಅನೇಕ ಅಧ್ಯಯನಗಳನ್ನು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಜೋಡಿಸಿದ್ದಾರೆ.
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (RTE) ಅಡಿಯಲ್ಲಿ 9 ಮತ್ತು 10ನೇ ತರಗತಿಗೂ ಶಾಲೆಯಲ್ಲಿ ಉಚಿತ ಶಿಕ್ಷಣ ಮುಂದುವರಿಸಲು ಅವಕಾಶ ನೀಡಲಾಗುವುದು ಎಂದು ರಾಜ್ಯ ಸರ್ಕಾರ 2026-27ನೇ ಸಾಲಿನ ಬಜೆಟ್ನಲ್ಲಿ ಭರ್ಜರಿಯಾಗಿ ಘೋಷಿಸಿತ್ತು. ಆದರೆ, ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದರೂ ಈ ಕುರಿತು ಸರ್ಕಾರದಿಂದ ಇದುವರೆಗೆ ಯಾವುದೇ ಅಧಿಕೃತ
CSKಗೆ ದೊಡ್ಡ ಆಘಾತ; ಭರ್ಜರಿ ಫಾರ್ಮ್ ನಲ್ಲಿರುವ ಆಯುಷ್ ಮ್ಹಾತ್ರೆಗೆ ಗಾಯ; ಈಗ ಸೀಸನ್ ನಿಂದಲೇ ಔಟ್!
Ayush Mhatre Injury- ಎಂ.ಎಸ್. ಧೋನಿ ಅಲಭ್ಯತೆಯ ತಲೆಬಿಸಿಯಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇದೀಗ ಮತ್ತೊಂದು ಹೊಡೆತ. ಭರ್ಜರಿ ಫಾರ್ಮ್ನಲ್ಲಿದ್ದ ಭರವಸೆಯ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ಅವರು ಸ್ನಾಯು ಸೆಳೆತದ (Hamstring Injury) ಕಾರಣ ಐಪಿಎಲ್ 2026ರಿಂದ ಹೊರಬಿದ್ದಿದ್ದಾರೆ. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ಅವರಿಗೆ 8-12 ವಾರಗಳ ವಿಶ್ರಾಂತಿ ಸೂಚಿಸಲಾಗಿದೆ. ಈ ಸೀಸನ್ನ 6 ಪಂದ್ಯಗಳಲ್ಲಿ 201 ರನ್ ಗಳಿಸಿ ತಂಡದ ಬೆನ್ನೆಲುಬಾಗಿದ್ದ ಮ್ಹಾತ್ರೆ ಅಲಭ್ಯತೆ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.
ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್, ಬಂಟ್ವಾಳ ಇದರ ಸಹಯೋಗದಲ್ಲಿ ಮೇ 12ರಂದು ಪಾಣೆಮಂಗಳೂರು ಸಮೀಪದ ಎಸ್.ಎಸ್. ಹಾಲ್ ನಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಬಿ.ಸಿ.ರೋಡಿನ ಡಾ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್. ಸಮ್ಮೇಳನದ ರೂಪುರೇಷೆ ಹಾಗೂ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಮಾತನಾಡಿ, ಸಮ್ಮೇಳನದ ಯಶಸ್ಸಿಗೆ ಸರ್ವರ ಸಹಕಾರ ಕೋರಿದರು. ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಂಚಾಲಕ ಪಿ.ಎ.ರಹೀಂ, ಕೋಶಾಧಿಕಾರಿ ಮುಹಮ್ಮದ್ ಸಾಗರ್, ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಂ.ಅಶ್ರಫ್ ಪಾಣೆಮಂಗಳೂರು, ಕೋಶಾಧಿಕಾರಿ ಆನಿಯಾ ದರ್ಬಾರ್ ಹಂಝ ಬಸ್ತಿಕೋಡಿ ಮತ್ತಿತರರು ಭಾಗವಹಿಸಿದ್ದರು. ಬ್ಯಾರಿ ಪ್ರಮುಖರಾದ ಯೂಸುಫ್ ಕರಂದಾಡಿ, ಮೂನಿಷ್ ಅಲಿ ಬಂಟ್ವಾಳ, ಹನೀಫ್ ಬಗ್ಗುಮೂಲೆ, ಅಬ್ದುಲ್ ಮಜೀದ್ ಕಡೆಗೋಳಿ, ಮುಹಮ್ಮದ್ ನಂದಾವರ, ಇಬ್ರಾಹೀಂ ಕೈಲಾರ್, ಅಬೂಬಕರ್ ಅಮ್ಮುಂಜೆ, ಚಿಕ್ ಖಲೀಲ್ ಬಂಟ್ವಾಳ, ಪಿ.ಮುಹಮ್ಮದ್ ಪಾಣೆಮಂಗಳೂರು, ಅಲ್ತಾಫ್ ಡೈಮಂಡ್, ಉಮರ್ ಮಂಚಿ, ಮುಹಮ್ಮದ್ ಸುರಿಬೈಲು, ಯು.ಮುಸ್ತಫಾ ಆಲಡ್ಕ, ಹನೀಫ್ ನಂದರಬೆಟ್ಟು ಮೊದಲಾದವರು ವಿವಿಧ ಸಲಹೆಗಳನ್ನು ನೀಡಿದರು. ಬ್ಯಾರಿ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬ್ಯಾರಿ ಸಾಹಿತ್ಯ ಅಕಾಡಮಿ ಸದಸ್ಯ ಅಬೂಬಕರ್ ಅನಿಲಕಟ್ಟೆ ವಂದಿಸಿದರು.
ಸ್ಥಿರವಾಗಿ ನಿಂತ ಚಿನ್ನ, ಕುಸಿದ ಬೆಳ್ಳಿ; ಇಂದಿನ ದರವೆಷ್ಟು?
ಮಂಗಳವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಶಾಂತಿ ಮಾತುಕತೆಯ ಆಶಾವಾದದ ನಡುವೆ ಚಿನ್ನದ ಬೆಲೆಗಳು ಅಲ್ಪ ಮಟ್ಟಿಗೆ ಏರಿದ್ದವು. ಆದರೆ ಶುಕ್ರವಾರ ಮಾರುಕಟ್ಟೆ ಮುಚ್ಚುವ ಕ್ಷಣದಲ್ಲಿ ಚಿನ್ನದ ಬೆಲೆಗಳು ಸ್ವಲ್ಪ ಕುಸಿದಿದ್ದವು. ನಂತರ ಶನಿವಾರ ಅಲ್ಪ ಮಟ್ಟಿಗೆ ಏರಿಕೆ ಕಂಡಿವೆ. ಸೋಮವಾರ ಮಾರುಕಟ್ಟೆ ದುರ್ಬಲವಾಗಿ ಪ್ರಾರಂಭವಾಯಿತು. ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕದನ ವಿರಾಮದ ಆಶಾವಾದ ಕಡಿಮೆಯಾಗಿದೆ. ಹೀಗಾಗಿ ಡಾಲರ್ ಸೂಚ್ಯಂಕ ಬಲಗೊಂಡಿದೆ. ಅಮೆರಿಕನ್ ಡಾಲರ್ ಬಲವಾಗಿ ಪ್ರಾರಂಭವಾದ ಕಾರಣ ಚಿನ್ನ-ಬೆಳ್ಳಿಯ ಬೆಲೆ ಕುಸಿದಿವೆ. ಆದರೆ ಇದೀಗ ಮಂಗಳವಾರ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಆದರೆ ಬೆಳ್ಳಿಯ ಬೆಲೆಯಲ್ಲಿ ಮಾತ್ರ ಕುಸಿತ ಕಂಡು ಬಂದಿದೆ. ಇಂದಿನ ಚಿನ್ನದ ದರ ಹೇಗಿದೆ? ಎಪ್ರಿಲ್ 21ರಂದು ಮಂಗಳವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಸೋಮವಾರ ಸಂಜೆಯ ಬೆಲೆಗೆ ಹೋಲಿಸಿದರೆ ಹತ್ತು ಗ್ರಾಂಗೆ 1,55,290 ರೂ. ಗೆ ಸ್ಥಿರವಾಗಿ ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಹತ್ತು ಗ್ರಾಂಗೆ 1,42,350 ರೂ. ಮತ್ತು 18 ಕ್ಯಾರೆಟ್ ಚಿನ್ನವು ಹತ್ತು ಗ್ರಾಂಗೆ 1,16,470 ರೂ. ಗೆ ಸ್ಥಿರವಾಗಿದೆ. ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ? ಎಪ್ರಿಲ್ 21ರಂದು ಮಂಗಳವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,529 ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,235 ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,647 ರೂ. ಬೆಲೆಗೆ ಸ್ಥಿರವಾಗಿ ನಿಂತಿದೆ. ಬೆಳ್ಳಿಯ ದರದಲ್ಲಿ ಕುಸಿತ ಮಾರ್ಚ್ ಆರಂಭದಲ್ಲಿ ಹೆಚ್ಚು ಏರಿಳಿತ ಕಾಣದೆ ಸ್ಥಿರವಾಗಿದ್ದ ಬೆಳ್ಳಿಯ ದರ, ಮಾರ್ಚ್ 09ರ ನಂತರ ಸ್ವಲ್ಪ ಕುಸಿತದ ಹಾದಿಯಲ್ಲಿತ್ತು. ಎಪ್ರಿಲ್ ಆರಂಭದಲ್ಲಿ 2,50,000 ರೂ. ಗೆ ಬಂದು ತಲುಪಿದ ನಂತರ ಕಳೆದ ವಾರಾಂತ್ಯದಲ್ಲಿ ಪ್ರತಿ ಕೆಜಿಗೆ 2,60,000 ರೂ.ಗೆ ಸ್ಥಿರವಾಗಿ ನಿಂತಿತ್ತು. ಕಳೆದ ಶನಿವಾರ ಪ್ರತಿ ಗ್ರಾಂಗೆ 10 ರೂ. ಏರಿಕೆಯಾಗಿ ಪ್ರತಿ ಕೆಜಿಗೆ 2,75,000 ಕ್ಕೆ ಬಂದು ತಲುಪಿದೆ. ಸೋಮವಾರವೂ ಅದೇ ದರದಲ್ಲಿ ಸ್ಥಿರವಾಗಿದೆ. ಇದೀಗ ಮಂಗಳವಾರ ಪ್ರತಿ ಗ್ರಾಂಗೆ 10 ರೂ. ಕುಸಿದ ಬೆಳ್ಳಿಯ ಬೆಲೆ ಮತ್ತೆ ಪ್ರತಿ ಕೆಜಿಗೆ 2,65,000 ಕ್ಕೆ ಬಂದು ತಲುಪಿದೆ. ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ? ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,544 ರೂ., 22 ಕ್ಯಾರೆಟ್ ಚಿನ್ನದ ದರ 14,250 ರೂ. ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,529 ರೂ., 22 ಕ್ಯಾರೆಟ್ ಚಿನ್ನದ ದರ 14,235 ರೂ ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,534 ರೂ., 22 ಕ್ಯಾರೆಟ್ ಚಿನ್ನದ ದರ 14,240 ರೂ. ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,600 ರೂ., 22 ಕ್ಯಾರೆಟ್ ಚಿನ್ನದ ದರ 14,300 ರೂ. ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,529 ರೂ., 22 ಕ್ಯಾರೆಟ್ ಚಿನ್ನದ ದರ 14,235 ರೂ. ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,529 ರೂ., 22 ಕ್ಯಾರೆಟ್ ಚಿನ್ನದ ದರ 14,235 ರೂ. ಜೈಪುರ: 24 ಕ್ಯಾರೆಟ್ ಚಿನ್ನದ ದರ 15,544 ರೂ., 22 ಕ್ಯಾರೆಟ್ ಚಿನ್ನದ ದರ 14,250 ರೂ. ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,544 ರೂ., 22 ಕ್ಯಾರೆಟ್ ಚಿನ್ನದ ದರ 14,250 ರೂ. ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,544 ರೂ., 22 ಕ್ಯಾರೆಟ್ ಚಿನ್ನದ ದರ 14,250 ರೂ.
ನೀರಿನ ಸದ್ಬಳಕೆ ಬಗ್ಗೆ ಜಾಗೃತಿ : ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ 'ಜಲ ಸಂಭ್ರಮ' ಹಬ್ಬಕ್ಕೆ ಚಾಲನೆ
ನೀರಿನ ಸಂರಕ್ಷಣೆ, ಮರುಬಳಕೆ ಮತ್ತು ಸದ್ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರಥಿ ಕಮ್ಯುನಿಕೇಶನ್ ಹಾಗೂ ಬೆಂಗಳೂರು ಜಲಮಂಡಳಿ ಜಂಟಿಯಾಗಿ ಆಯೋಜಿಸಿರುವ 'ಜಲ ಸಂಭ್ರಮ - ವಾಟರ್ ಹಬ್ಬ' ಇಂದಿನಿಂದ ಏಪ್ರಿಲ್ 23 ರವರೆಗೆ ನಗರದ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ನಡೆಯಲಿದೆ.
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿ.ಕೆ.ಶಿವಕುಮಾರ್
ತಮಿಳುನಾಡು, ಎ.20: ''ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ. ಇದನ್ನು ಅರಿತೇ ಪನ್ನೀರ್ ಸೆಲ್ವಂ ಅವರು ಡಿಎಂಕೆ ಸೇರಿದ್ದಾರೆ'' ಎಂದು ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೆಲ್ಲಕುಮಾರ್ ಪರ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಸೋಮವಾರ ರಾತ್ರಿ ರೋಡ್ ಶೋ ನಡೆಸಿ, ಪ್ರಚಾರ ಭಾಷಣ ಮಾಡಿದರು. “ಅಣ್ಣಾಮಲೈಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ. ಇನ್ನು ಅಣ್ಣಾ ಡಿಎಂಕೆಯನ್ನು ಅವರು ಬಿಡುತ್ತಾರೆಯೇ? ಬಿಹಾರದಲ್ಲಿ ನಿತೀಶ್ ಕುಮಾರ್ ಅವರನ್ನು ಬಲಿ ಪಡೆದು ಬಿಜೆಪಿಯವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಪಕ್ಷ ಕಾಂಗ್ರೆಸ್. ಈ ದೇಶದ ಉಸಿರಿನಲ್ಲಿ ಕಾಂಗ್ರೆಸ್ ಪಕ್ಷವಿದೆ, ಅಭಿವೃದ್ದಿ ಸೇರಿದಂತೆ ಪ್ರತಿಯೊಂದು ವಿಚಾರದಲ್ಲೂ ಕಾಂಗ್ರೆಸ್ ಪಕ್ಷ ತನ್ನ ತ್ಯಾಗ ಬಲಿದಾನದಿಂದ ಈ ದೇಶವನ್ನು ತಳಮಟ್ಟದಿಂದ ಕಟ್ಟಿದೆ” ಎಂದರು. *ದಕ್ಷಿಣ ಭಾರತದ ಅಸ್ಮಿತೆ ಉಳಿಸುವ ತುರ್ತು ನಮ್ಮ ಮುಂದಿದೆ “ತಮಿಳು, ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಅನೇಕ ವೈವಿಧ್ಯ ದಕ್ಷಿಣ ಭಾರತ ಹೊಂದಿದೆ. ನಮ್ಮ ದಕ್ಷಿಣ ಭಾರತದ ಅಸ್ಮಿತೆ ಉಳಿಸುವ ತುರ್ತು ಈ ದೇಶದಲ್ಲಿ ನಮ್ಮ ಮುಂದೆ ಎದುರಾಗಿದೆ. ಇದಕ್ಕಾಗಿ ನೀವು ಡಿಎಂಕೆ, ಕಾಂಗ್ರೆಸ್, ಮಿತ್ರಪಕ್ಷಗಳಿಗೆ ಜನ ಆಶೀರ್ವಾದ ಮಾಡಬೇಕು” ಎಂದರು. “ನಮ್ಮ ಪಾಲಿನ ತೆರಿಗೆ ಹಣವನ್ನು ಲೂಟಿ ಮಾಡಲಾಗುತ್ತಿದೆ. ಇದಕ್ಕೆ ನ್ಯಾಯ ಒದಗಿಸಬೇಕು. ಇಡೀ ದೇಶ ನಮ್ಮ ಕಡೆ ನೋಡುತ್ತಿದೆ. ನಾವು ನ್ಯಾಯ, ಸತ್ಯದ ಪರವಾಗಿದ್ದೇವೆ ಎಂದು ಇಡೀ ದೇಶಕ್ಕೆ ಸಂದೇಶ ನೀಡಬೇಕು. ತಮಿಳುನಾಡಿನ ಅಸ್ತಿತ್ವ, ಸ್ವಾತಂತ್ರ್ಯ ನಿಮ್ಮ ಅಸ್ಮಿತೆಯನ್ನು ಉಳಿಸಲು ಸ್ಟಾಲಿನ್ ಬಿಜೆಪಿ ಹಾಗೂ ಮೋದಿಯವರ ವಿರುದ್ಧ 20 ಮಿತ್ರ ಪಕ್ಷಗಳನ್ನು ಕಟ್ಟಿಕೊಂಡು ಹೋರಾಡುತ್ತಿದ್ದಾರೆ”ಎಂದರು. *ಸ್ಟಾಲಿನ್ ನೇತೃತ್ವದಲ್ಲಿ ಮತ್ತೊಮ್ಮೆ ಡಿಎಂಕೆ ಮೈತ್ರಿಕೂಟ ಅಧಿಕಾರಕ್ಕೆ “ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರು ಎಲ್ಲರೂ ನಮ್ಮ ಬದುಕಿಗೆ ಶಕ್ತಿಯಾಗಿ ನಿಂತ ಡಿಎಂಕೆ, ಕಾಂಗ್ರೆಸ್ ಮೈತ್ರಿಕೂಟಕ್ಕೆ ಮತ ಚಲಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ಬರಲಿದೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. “ತಮಿಳುನಾಡಿನಲ್ಲಿ ಅನೇಕ ಜನಕಲ್ಯಾಣ ಯೋಜನೆಗಳನ್ನು ಈ ಹಿಂದೆ ಜಾರಿಗೆ ತರಲಾಗಿತ್ತು. ಅದರಂತೆ ನಾವು ಸಹ ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಕ್ರಾಂತಿ ಮಾಡಿದ್ದೇವೆ. ಮಹಿಳೆಯರಿಗೆ ಉಚಿತ ಬಸ್, ತಿಂಗಳಿಗೆ ಎರಡು ಸಾವಿರ ರೂ., ಯುವಕರಿಗೆ ಪ್ರೋತ್ಸಾಹಧನ, ಉಚಿತ ವಿದ್ಯುತ್ ನೀಡುತ್ತಿದ್ದೇವೆ. 1.36 ಕೋಟಿ ಮಹಿಳೆಯರಿಗೆ ತಮಿಳುನಾಡಿನಲ್ಲಿ ಡಿಎಂಕೆ ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಎರಡು ಸಾವಿರ ರೂ. ನೀಡಲಾಗುವುದು” ಎಂದರು. “ಕಾಂಗ್ರೆಸ್, ಡಿಎಂಕೆ ಪಕ್ಷ ಜನರ ಸ್ವಾಭಿಮಾನ ಉಳಿಸಲು ಬದ್ಧವಾಗಿವೆ. ಅತಿ ಹೆಚ್ಚು ತೆರಿಗೆ ನೀಡುವ ನಮ್ಮನ್ನು ಕಡೆಗಣಿಸಲಾಗಿದೆ. ಲೋಕಸಭಾ ಕ್ಷೇತ್ರಗಳನ್ನು ಕಡಿಮೆ ಮಾಡುವ ಹುನ್ನಾರ ಮಾಡಲಾಗುತ್ತಿದೆ. ಈ ಸಂಚಿನ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಜನರೂ ಸಹ ಇದಕ್ಕೆ ಕೈ ಜೋಡಿಸಬೇಕು” ಎಂದರು. “ಹಿಂದೂ ಧರ್ಮದಲ್ಲಿ ಕೃಷ್ಣನಿಗೆ ಮಹತ್ವದ ಸ್ಥಾನವಿದೆ. ಕೃಷ್ಣ ಎಲ್ಲಾ ರಂಗದಲ್ಲೂ ಚಾಣಾಕ್ಷ. ಇಂತಹ ಕೃಷ್ಣನ ಹೆಸರನ್ನು ಹೊಂದಿರುವ ಕ್ಷೇತ್ರ ಕಾಂಗ್ರೆಸ್ ಪಕ್ಷದ ಪಾಲಿಗೆ ವರವಿದ್ದಂತೆ. ದೇವರು ಕೊಟ್ಟ ಅವಕಾಶವನ್ನು ಬಳಸಿಕೊಳ್ಳಬೇಕು” ಎಂದರು. ಪಕ್ಷದ ಹಿರಿಯ ಕಾರ್ಯಕರ್ತ ಚೆಲ್ಲಕುಮಾರ್ ಸಂಸದರಾಗಿ ನಿಮ್ಮ ಸೇವೆ ಮಾಡಿದ್ದವರು. ಈಗ ಶಾಸಕರಾಗಿ ನಿಮ್ಮ ಸೇವೆಗೆ ಅವಕಾಶ ಕೇಳುತ್ತಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಈ ಸ್ಥಾನವನ್ನು ಚೆಲ್ಲಕುಮಾರ್ ಸ್ಪರ್ಧಿಸಲು ಅವಕಾಶ ನೀಡಿದ್ದಕ್ಕೆ ಕೋಟಿ ಕೋಟಿ ವಂದನೆಗಳನ್ನು ತಿಳಿಸುತ್ತೇನೆ. ಇಂತಹ ಅನುಭವಿ, ದಕ್ಷ ಅಭ್ಯರ್ಥಿ ಬೇರೆ ಯಾವುದೇ ಪಕ್ಷದಿಂದಲೂ ಸಿಗಲು ಸಾಧ್ಯವಿಲ್ಲ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನಿಮ್ಮ ಮಡಿಲಿಗೆ ಹಾಕಿದ್ದಾರೆ”ಎಂದು ಹೇಳಿದರು. ಸಿನೆಮಾ ಡೈಲಾಗ್ ತೆರೆ ಮೇಲೆ ನೋಡಲು ಚೆಂದ “ಕೆಲವರು ಸಿನೆಮಾ ಡೈಲಾಗ್ ಹೊಡೆದು ಎಂಜಿಆರ್ ರೀತಿ ಗೆಲ್ಲಬಹುದು ಎಂದು ಭಾವಿಸಿದ್ದಾರೆ. ಸಿನೆಮಾ ಡೈಲಾಗ್ ತೆರೆ ಮೇಲೆ ನೋಡಲು ಚೆಂದ. ವಾಸ್ತವದಲ್ಲಿ ಅವು ಕಾರ್ಯಗತವಾಗುವುದಿಲ್ಲ. ಜನರ ಬದುಕಿಗೆ ಬದಲಾವಣೆ ತರಲು ಜನಪರ ಕಾರ್ಯಕ್ರಮ ತರುವ ಸರ್ಕಾರ ಬರಬೇಕು” ಎಂದು ಡಿಕೆಶಿ ಹೇಳಿದರು.
ಕೇಂದ್ರದ ದಾಳಿಗಳು ಕಾಂಗ್ರೆಸ್ ನಾಯಕರ ಮೇಲೆಯೇ: ಸಿಎಂ ಸಿದ್ದರಾಮಯ್ಯ ಆರೋಪ
ಚಾಮರಾಜನಗರ ಏಪ್ರಿಲ್ -21: ಚಾಮರಾಜನಗರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಕ್ರಮಗಳು ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡಿವೆ ಎಂದು ಆರೋಪಿಸಿ, ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಆಡಳಿತಾತ್ಮಕ ವಿಷಯಗಳ ಕುರಿತು ಸ್ಪಷ್ಟನೆ ನೀಡಿದರು. ಶಾಸಕ ಹ್ಯಾರೀಸ್ ಅವರ ಪುತ್ರ ನಲಪಾಡ್ ಅವರ ಮನೆ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚಿಗೆ ನೀಡುತ್ತಿರುವ ಹೇಳಿಕೆಗಳು ವಿವಾದಕ್ಕೆ ಗುರಿಯಾಗುತ್ತಿವೆ. ಗುಜರಾತಿಗಳು ಅನಕ್ಷರಸ್ಥರು ಎಂದು ಹೇಳಿ ವಿವಾದಕ್ಕೆ ಸಿಲುಕಿದ್ದ ಸಿನಿಯರ್ ಖರ್ಗೆ, ಈಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದು ಮತ್ತೊಂದು ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಟೆರರಿಸ್ಟ್ ಪ್ರಧಾನಿ ಮೋದಿ ಅವರೊಂದಿಗೆ ಎಐಎಡಿಎಂಕೆ ಕೈಜೋಡಿಸಿರುವುದು ನಿಜಕ್ಕೂ ವಿಷಾದನೀಯ ಎಂದು ಹೇಳಿದರು. ಇಲ್ಲಿದೆ ಹೆಚ್ಚಿನ ಮಾಹಿತಿ.
Haryana | ನಕಲಿ ʼಮೌಂಜೆರೊʼ ಚುಚ್ಚುಮದ್ದುಗಳ ತಯಾರಿಕೆ ಬಯಲಿಗೆ; ಇಬ್ಬರ ಬಂಧನ
ಗುರುಗ್ರಾಮ(ಹರ್ಯಾಣ): ನಕಲಿ ಮೌಂಜೆರೊ (ಟಿರ್ಝೆಪೆಟೈಡ್) ಚುಚ್ಚುಮದ್ದುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಇಲ್ಲಿ ಭೇದಿಸಿರುವ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಗುರುಗ್ರಾಮದ ಸೆಕ್ಟರ್ 62ರಲ್ಲಿಯ ವಸತಿ ಸಂಕೀರ್ಣವೊಂದರ ಫ್ಲ್ಯಾಟ್ನಲ್ಲಿ ಈ ನಕಲಿ ತಯಾರಿಕೆ ಘಟಕವು ಕಾರ್ಯ ನಿರ್ವಹಿಸುತ್ತಿತು. ಸೋಮವಾರ ಅಲ್ಲಿಗೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಮುಖ್ಯ ಆರೋಪಿ ಗುರುಗ್ರಾಮ ನಿವಾಸಿ ಅವಿ ಶರ್ಮಾ ಮತ್ತು ಡೆಲಿವರಿ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಉತ್ತರ ಪ್ರದೇಶದ ಮುಝಮಿಲ್ ಎನ್ನುವವರನ್ನು ಬಂಧಿಸಿದ್ದಾರೆ ಎಂದು ಔಷಧಿ ನಿಯಂತ್ರಣಾಧಿಕಾರಿ ಅಮನದೀಪ್ ಚೌಹಾಣ ತಿಳಿಸಿದರು. ಆರೋಪಿಗಳು ಚೀನಾದಿಂದ ಕಚ್ಚಾ ಔಷಧಿಗಳನ್ನು ಆಮದು ಮಾಡಿಕೊಂಡು ನಕಲಿ ಮೌಂಜೆರೊ ಚುಚ್ಚುಮದ್ದುಗಳನ್ನು ತಯಾರಿಸುತ್ತಿದ್ದರು. ಬಿ2ಬಿ ಪೋರ್ಟಲ್ ಇಂಡಿಯಾ ಮಾರ್ಟ್ ಮೂಲಕ ಈ ಅಕ್ರಮ ಚುಚ್ಚುಮದ್ದುಗಳನ್ನು ಪೂರೈಸುತ್ತಿದ್ದರು ಎಂದರು. ಮೌಂಜೆರೊ ಟೈಪ್ 2 ಮಧುಮೇಹ ರೋಗಿಗಳಿಗೆ ವಾರಕ್ಕೊಮ್ಮೆ ನೀಡುವ ಇಂಜೆಕ್ಷನ್ ಆಗಿದ್ದು,ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಗಮನಾರ್ಹವಾಗಿ ನಿಯಂತ್ರಿಸುತ್ತದೆ ಮತ್ತು ಶರೀರದ ತೂಕವನ್ನು ಇಳಿಸಿಕೊಳ್ಳಲು ನೆರವಾಗುತ್ತದೆ. ಸೋಮವಾರ ದಾಳಿ ತಂಡವು ಡಿಎಲ್ಎಫ್ ಫೇಸ್ 4ರಲ್ಲಿ ವಾಹನವೊಂದರಿಂದ 70 ಲಕ್ಷ ರೂ.ಮೌಲ್ಯದ ಚುಚ್ಚುಮದ್ದುಗಳನ್ನು ವಶಪಡಿಸಿಕೊಂಡಿತ್ತು. ತನಿಖೆಯ ಭಾಗವಾಗಿ ಸೆಕ್ಟರ್ 62ರಲ್ಲಿಯ ಫ್ಲ್ಯಾಟ್ ಮೇಲೆ ದಾಳಿ ನಡೆಸಿತ್ತು. ಇಲ್ಲಿ ಕಚ್ಚಾ ಔಷಧಿಗಳಿಗೆ ನೀರು ಬೆರೆಸಿ ಚುಚ್ಚುಮದ್ದುಗಳನ್ನು ತಯಾರಿಸಲಾಗುತ್ತಿತ್ತು. ನಂತರ ಎಲ್ಲ ಪ್ಯಾಕೇಜಿಂಗ್,ಬಾರ್ಕೋಡಿಂಗ್ ಅಂಟಿಸುವಿಕೆ ಮತ್ತು ಲೇಬಲಿಂಗ್ನ್ನು ಅದೇ ಫ್ಲ್ಯಾಟ್ನಲ್ಲಿ ಮಾಡಲಾಗುತ್ತಿತ್ತು. ತಂಡವು ಪ್ಯಾಕೇಜಿಂಗ್ ಯಂತ್ರಗಳನ್ನು ಸಹ ವಶ ಪಡಿಸಿಕೊಂಡಿದೆ ಎಂದು ಚೌಹಾಣ ತಿಳಿಸಿದರು. ಮುಝಮಿಲ್ನನ್ನು ಮೊದಲು ಬಂಧಿಸಿದ ತಂಡವು,ಆತ ನೀಡಿದ ಮಾಹಿತಿ ಮೇರೆಗೆ ನಂತರ ಅವಿ ಶರ್ಮಾನನ್ನು ವಶಕ್ಕೆ ತೆಗೆದುಕೊಂಡಿತ್ತು. ನಕಲಿ ಚುಚ್ಚುಮದ್ದಿನ ಕುರಿತು ದೇಶಾದ್ಯಂತ ಎಚ್ಚರಿಕೆಯನ್ನು ನೀಡಲಾಗಿದೆ. ನಕಲಿ ಚುಚ್ಚುಮದ್ದುಗಳನ್ನು ಎಲ್ಲಿಗೆ ಪೂರೈಸಲಾಗುತ್ತಿತ್ತು ಮತ್ತು ಈ ಜಾಲದಲ್ಲಿ ಎಷ್ಟು ಜನರು ಭಾಗಿಯಾಗಿದ್ದಾರೆ ಎನ್ನುವುದನ್ನು ಕಂಡುಕೊಳ್ಳಲು ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಚೌಹಾಣ ತಿಳಿಸಿದರು. ಪ್ರಸ್ತುತ ಮಾರುಕಟ್ಟೆಯಲ್ಲಿ ಈ ಔಷಧಿಗಿರುವ ಹೆಚ್ಚಿನ ಬೇಡಿಕೆಯ ಲಾಭ ಪಡೆದುಕೊಳ್ಳಲು ನಕಲಿ ಇಂಜೆಕ್ಷನ್ಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಔಷಧಿ ವ್ಯಾಪಾರಿಯೋರ್ವರು ತಿಳಿಸಿದರು.
Monsoon Rain 2026: ಏಪ್ರಿಲ್ ಸೇರಿ ಜೂನ್-ಸೆಪ್ಟಂಬರ್ ಅವಧಿಯಲ್ಲಿ ಮುಂಗಾರು ಮಳೆ ಕೊರತೆ: ಬರಗಾಲದ ಎಚ್ಚರಿಕೆ
ನವದೆಹಲಿ: ದೇಶದಲ್ಲಿ ಎರಡು ವರ್ಷಗಳಲ್ಲಿ ನಿರೀಕ್ಷೆಯಂತೆ ಉತ್ತಮ ಮುಂಗಾರು ಮಳೆ ದಾಖಲಾದ ಬೆನ್ನಲ್ಲೇ ಈ ವರ್ಷ 2026ರ ಮುಂಗಾರು ಅವಧಿಯಲ್ಲಿ (ಜೂನ್-ಸೆಪ್ಟಂಬರ್) ಮಳೆ ಕೊರತೆ ಆಗಲಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ದೇಶದಲ್ಲಿ ಇದೇ ಏಪ್ರಿಲ್ ತಿಂಗಳಲ್ಲೇ ಶೇ.08ರಷ್ಟು ಮಳೆ ಕೊರತೆ ಉಂಟಾಗಲಿದೆ. ಇದು ಭವಿಷ್ಯದಲ್ಲಿ ಮಳೆಯ ಅಭಾವ ಎದುರಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಫೆಸಿಪಿಕ್
ಒಡಿಶಾ ಮತದಾರರ ಪಟ್ಟಿಯಿಂದ 9.8 ಲಕ್ಷ ಹೆಸರುಗಳು ಡಿಲೀಟ್ : ಮರುಪರಿಶೀಲನೆಗೆ ಚುನಾವಣಾ ಆಯೋಗ ಆದೇಶ
ಒಡಿಶಾದಲ್ಲಿ ಸುಮಾರು 9.8 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟಿರುವುದು ದೊಡ್ಡ ವಿವಾದಕ್ಕೆ ಆಸ್ಪದವಾಗಿದೆ. ವಿಶೇಷ ಪರಿಷ್ಕರಣೆಗೂ ಮುನ್ನ ನಡೆದ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಈ ಹೆಸರುಗಳನ್ನು ತೆಗೆದುಹಾಕಲಾಗಿದ್ದರೂ, ಇದರಲ್ಲಿ ಅರ್ಹ ಮತದಾರರ ಹೆಸರುಗಳೂ ಸೇರಿವೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿವೆ.
ಮುಸ್ಲಿಂ ದಂಪತಿಯ ಗುರುತು ಪ್ರಶ್ನಿಸಿ ಕಿರುಕುಳ ನೀಡಿದ ವ್ಯಕ್ತಿಯನ್ನು ಎದುರಿಸಿದ ಮಹಿಳೆ; ಆರೋಪಿಯ ಬಂಧನ
ʼಗುರುತು ಕೇಳಬೇಡಿʼ ಎಂದ ಮಹಿಳೆಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ
ಕಾಂಗ್ರೆಸ್, ಇಂಡಿಯಾ ಕೂಟದ ವಿರುದ್ಧ ಹೋರಾಟ: ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ
ಬೆಂಗಳೂರು : ಮಹಿಳಾ ವಿರೋಧಿಯಾಗಿರುವ ಕಾಂಗ್ರೆಸ್ ಮತ್ತು ಇಂಡಿಯಾ ಕೂಟದ ವಿರುದ್ಧ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಎ.25ರಂದು ಆಕ್ರೋಶ ಯಾತ್ರೆ ಮತ್ತು ಸಭೆಗಳನ್ನು ಏರ್ಪಡಿಸಲಾಗುವುದು ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ.ಮಂಜುಳಾ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.27ರಿಂದ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಬಿಜೆಪಿಯ 300 ಸಂಘಟನಾತ್ಮಕ ಮಂಡಲಗಳಲ್ಲಿ ಹೋರಾಟವೂ ನಡೆಯಲಿದೆ. ಬಳಿಕ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬೃಹತ್ ರ್ಯಾಲಿಯನ್ನು ಸಂಘಟಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದರು. ಇಂದಿನಿಂದ ಕೇಂದ್ರ ಸಚಿವರು, ಸಂಸದರು ವಿಭಾಗ ಕೇಂದ್ರಗಳಲ್ಲಿ ಸುದ್ದಿಗೋಷ್ಠಿಗಳನ್ನು ನಡೆಸಲಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರಿನಲ್ಲಿ ಸಂಸದ ಬ್ರಿಜೇಶ್ ಚೌಟ ಸುದ್ದಿಗೋಷ್ಠಿ ನಡೆಸಿದ್ದಾರೆ. ನಾಳೆ ಮತ್ತು ನಾಡಿದ್ದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್- ಬೆಳಗಾವಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿಯಲ್ಲಿ, ಕೇಂದ್ರ ಸಚಿವ ಸೋಮಣ್ಣ 23ರಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಮತ್ತು ಅವರ ಮಿತ್ರಪಕ್ಷಗಳ ಮಹಿಳಾ ವಿರೋಧಿ ನೀತಿಯ ಕುರಿತು ತಿಳಿಸಲಿದ್ದಾರೆ ಎಂದು ಹೇಳಿದರು. ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮಾತ್ರ ಮಹಿಳೆಯರು ಎಂದು ಕಾಂಗ್ರೆಸ್ ಭಾವಿಸಿದಂತಿದೆ. ಸಾಮಾನ್ಯ ಮಹಿಳೆಯರಿಗೆ ಸಿಗುವ ಅವಕಾಶಗಳನ್ನು ಅದು ಕಿತ್ತುಕೊಂಡಿದೆ ಎಂದು ಆಕ್ಷೇಪಿಸಿದರು.
‘ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿರಬಹುದು!’: ರಾಜಕೀಯ ಸಂಚಲನ ಮೂಡಿಸಿದ ಕೆ.ಎನ್. ರಾಜಣ್ಣ ಹೇಳಿಕೆ
ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ. ಅಲ್ಲದೆ, ಈ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದೇನೆ ಎಂದೂ ತಿಳಿಸಿದ್ದಾರೆ. ಆಪ್ತರ ವಿರುದ್ಧ ಸರಣಿ ಕ್ರಮ ಕೈಗೊಂಡರೂ ಸಿದ್ದರಾಮಯ್ಯ ಮೌನದ ಬಗ್ಗೆ ಕೆ ಎನ್ ರಾಜಣ್ಣ ಪ್ರತಿಕ್ರಿಯೆ ನೀಡುತ್ತಾ ಈ ವಿಚಾರ ಹಂಚಿಕೊಂಡಿದ್ದಾರೆ. ಈ ಕುರಿತಾಗಿ ಅವರು ಏನು ಹೇಳಿದ್ದಾರೆ ಎಂಬುವುದರ ಬಗ್ಗೆ ಮತ್ತಷ್ಟು ವಿವರ ಇಲ್ಲಿದೆ.
ಮೈಸೂರಿನ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
ಮೈಸೂರು,ಎ.21: ಮುಖ್ಯಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ ಮೈಸೂರಿನ ತಮ್ಮನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪ್ರವಾಸಕ್ಕೂ ತೆರಳಯವ ಮುನ್ನ ನಗರದ ಟಿ.ಕೆ.ಲೇಔಟ್ ನಲ್ಲಿರುವ ತಮ್ಮ ನಿವಾಸದ ಬಳಿ ಜಮಾಯಿಸಿದ್ದ ಸಾರ್ವಜನಿಕರ ಕುಂದು ಕೊರತೆ ಅರ್ಜಿಗಳನ್ನು ಸ್ವೀಕರಿಸಿ ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ನೀಡಿದರು. ದೂರದ ಊರುಗಳಿಂದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ಆಗಿಮಿಸಿದ್ದ ಸಾರ್ವಜನಿಕರಿಗೆ ನಿರಾಸೆಯುಂಟು ಮಾಡದೆ ಎಲ್ಲರ ಅರ್ಜಿಗಳನ್ನು ಸ್ವೀಕರಿಸಿದರು. ನಿಮ್ಮ ಅಹವಾಲನ್ನು ಗಮನಿಸಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಶ್ರೀಕೃಷ್ಣನ ಮುಂದೆ ಚಿಕನ್ ಖಾದ್ಯ: ಪೋಸ್ಟರ್ ವಿವಾದದ ಬಳಿಕ ಕ್ಷಮೆಯಾಚಿಸಿದ ಕೇರಳದ ರೆಸ್ಟೋರೆಂಟ್
ಕೇರಳದ ರೆಸ್ಟೋರೆಂಟ್ವೊಂದು ವಿಷು ಹಬ್ಬದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿದ ಪೋಸ್ಟರ್ ವಿವಾದ ಸೃಷ್ಟಿಸಿದೆ. ಶ್ರೀಕೃಷ್ಣನ ಫೋಟೋವನ್ನು ಚಿಕನ್ ಖಾದ್ಯದೊಂದಿಗೆ ತೋರಿಸಿರುವ ಪೋಸ್ಟರ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂಬ ಆರೋಪದ ಮೇಲೆ ಕೇರಳದ ಚೆರ್ತಲಾದಲ್ಲಿ ರೆಸ್ಟೋರೆಂಟ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಸೋಷಿಯಲ್ ಮೀಡಿಯಾ ಟ್ರೆಂಡ್ಗಳು ಕೆಲವೊಮ್ಮೆ ಅಂದುಕೊಳ್ಳದ ರೀತಿಯಲ್ಲಿ ವಿವಾದಕ್ಕೆ ಸಿಲುಕುತ್ತವೆ. ಇದಕ್ಕೆ
ಬೆಳಗಾವಿ: ಭೀಕರ ರಸ್ತೆ ಅಪಘಾತ; ಇಬ್ಬರು ಮೃತ್ಯು
ಬೆಳಗಾವಿ: ನಗರದ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನ ಚಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಕ್ಕಪೇಟೆ ನಿವಾಸಿ ವಾಸೀಮ್ (28) ಹಾಗೂ ಮುಬಾರಕ್ (22) ಎಂದು ಗುರುತಿಸಲಾಗಿದೆ. ಶಿಕಾರಿಪುರ ತಾಲೂಕಿನ ಮುಗಳಿಕೊಪ್ಪ ಗ್ರಾಮದ ಬಸವರಾಜ ಹಂಚಿನಮನಿ (37) ಎಂಬವರು ಗಾಯಗೊಂಡ ಚಾಲಕರಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಕೊಲ್ಲಾಪುರದಿಂದ ಶಿವಮೊಗ್ಗ ಜಿಲ್ಲೆಯ ಸೊರಬಕ್ಕೆ ಕೋಳಿಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನವು ಬೆಳಗಿನ ಜಾವ ಬೆಳಗಾವಿ ಹೊರವಲಯದಲ್ಲಿ ಸಂಚರಿಸುತ್ತಿದ್ದಾಗ ಚಾಲಕನಿಗೆ ನಿದ್ರೆಯ ಮಂಪರು ಆವರಿಸಿದ್ದರಿಂದ ನಿಯಂತ್ರಣ ತಪ್ಪಿ, ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ರಕ್ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಗೂಡ್ಸ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಪಕ್ಕದಲ್ಲಿ ಕುಳಿತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದ ನೂರಾರು ಕೋಳಿಗಳು ಕೂಡ ಸಾವನ್ನಪ್ಪಿವೆ. ಗಾಯಾಳು ಚಾಲಕನನ್ನು ಹಾಗೂ ಮೃತದೇಹಗಳನ್ನು ತಕ್ಷಣವೇ ಬೆಳಗಾವಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್ಐ ಅವಿನಾಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನೋಟಿಸ್ ನೀಡಿ ಬಳಿಕ ಕ್ರಮ ಕೈಗೊಳ್ಳಬೇಕಿತ್ತು: ನಸೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ಝಮೀರ್ ಅಹ್ಮದ್ ಪ್ರತಿಕ್ರಿಯೆ
ಬೆಂಗಳೂರು, ಏ.21: ಮುಸ್ಲಿಂ ಗುರುಗಳು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಝಮೀರ್ ಅಹಮದ್ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಪತ್ರವನ್ನು ನೋಡಿದ್ದೇನೆ.15–16 ಜನ ಗುರುಗಳು ರಾಹುಲ್ ಗಾಂಧಿಗೆ ಪತ್ರ ಬರೆದಿರುವುದನ್ನು ಗಮನಿಸಿದ್ದೇನೆ. ಮುಖ್ಯಮಂತ್ರಿ, ಡಿಸಿಎಂ ಹಾಗೂ ಮಲ್ಲಿಕಾರ್ಜುನ ಖರ್ಗೆಗೂ ಪತ್ರ ಬರೆದಿದ್ದಾರೆ. ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅವರ ಅಭಿಪ್ರಾಯವನ್ನು ತಿಳಿಯಬೇಕಾದರೆ ಅವರನ್ನೇ ಕೇಳಬೇಕು; ನಾನು ಹೇಳಲು ಸಾಧ್ಯವಿಲ್ಲ” ಎಂದರು. “ಪತ್ರ ಬರೆದವರು ಗುರುಗಳೇ ಆಗಿರುವುದರಿಂದ ಈ ಪ್ರಶ್ನೆಯನ್ನು ಅವರನ್ನೇ ಕೇಳಬೇಕು. ಯಾವ ಕಾರಣಕ್ಕೆ ಪತ್ರ ಬರೆದಿದ್ದಾರೆ ಎನ್ನುವುದನ್ನು ಅವರಿಂದಲೇ ತಿಳಿದುಕೊಳ್ಳಬೇಕು. ಯಾವುದೇ ತಾರತಮ್ಯವಾಗಿಲ್ಲ; ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗಲಾಗುತ್ತಿದೆ” ಎಂದು ಹೇಳಿದರು. “ಒಬ್ಬೊಬ್ಬರು ಒಬ್ಬೊಬ್ಬರ ಪರ ಮಾತನಾಡುತ್ತಾರೆ. ಒಬ್ಬರು ನನ್ನ ಪರ ಮಾತನಾಡಿದರೆ, ಇನ್ನೊಬ್ಬರು ಮತ್ತೊಬ್ಬರ ಪರ ಮಾತನಾಡುತ್ತಾರೆ. ಅದನ್ನೆಲ್ಲ ಪರಿಗಣಿಸುವ ಅಗತ್ಯವಿಲ್ಲ. ಜಬ್ಬಾರ್ ವಿಚಾರವಾಗಿರಲಿ, ನಸೀರ್ ಅಹಮದ್ ವಿಚಾರವಾಗಿರಲಿ ಎಲ್ಲರಿಗೂ ತಮ್ಮದೇ ಅಭಿಪ್ರಾಯಗಳಿವೆ” ಎಂದು ಹೇಳಿದರು. ನಸೀರ್ ಅಹಮದ್ ವಿಚಾರವಾಗಿ ಮಾತನಾಡಿದ ಅವರು, “ನಸೀರ್ ಅಹಮದ್ ಅತ್ಯಂತ ಹಿರಿಯ ನಾಯಕರು. ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದರೆ ಅದಕ್ಕೆ ಒಂದು ಪ್ರಕ್ರಿಯೆ ಇದೆ. ಮೊದಲಿಗೆ ನೋಟಿಸ್ ನೀಡಿ, ಅವರಿಂದ ಉತ್ತರ ಪಡೆದು ನಂತರ ಕ್ರಮ ಕೈಗೊಳ್ಳಬೇಕಾಗಿತ್ತು ಎಂಬ ಅಭಿಪ್ರಾಯ ಇದೆ” ಎಂದರು. ಅವರು ಪಕ್ಷ ವಿರೋಧಿ ಕೆಲಸ ಮಾಡಿದ್ರೆ, ಅವರನ್ನು ತೆಗೆದಿದ್ದು ತಪ್ಪು ಅಂತ ನಾನು ಹೇಳಲ್ಲ. ಪಕ್ಷ ಏನಾದ್ರೂ ತೀರ್ಮಾನ ಮಾಡಿದ್ರೆ ಯೋಚನೆ ಮಾಡಿ ಮಾಡಿರುತ್ತೆ ಒಂದು ನೋಟಿಸ್ ಕೊಟ್ಟು ಅವರ ರಿಪ್ಲೈ ಪಡೆದು ಆನಂತರ ತೀರ್ಮಾನ ತೆಗೆದು ಕೊಳ್ಳಬೇಕಾಗಿತ್ತು. ಇದು ಸತೀಶ್ ಜಾರಕಿಹೊಳಿ ಅವರ ಅಭಿಪ್ರಾಯವಾಗಿದ್ದು, ಹಲವರ ಅಭಿಪ್ರಾಯವೂ ಇದೇ ಆಗಿದೆ” ಎಂದು ಹೇಳಿದರು. ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧದ ಕ್ರಮವನ್ನು ಹಿಂತೆಗೆದುಕೊಳ್ಳಬೇಕು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ನಿಯಮದ ಪ್ರಕಾರ ಕ್ರಮ ಕೈಗೊಳ್ಳಬೇಕು. ಅಡಾಗುಡಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯ ಇರಲಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ” ಎಂದರು. ಪತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂಬ ಉಲ್ಲೇಖದ ಕುರಿತು ಮಾತನಾಡಿದ ಅವರು, “ರಾಜಕೀಯ ಹಾಗೂ ಧಾರ್ಮಿಕ ಗುರುಗಳು ಅಸಮಾಧಾನಗೊಂಡಿರುವುದು ನಿಜ. ನಾವು ಮಾತನಾಡಿ ಎಲ್ಲವನ್ನೂ ಸರಿಪಡಿಸುತ್ತೇವೆ. ಯಾರು ಪತ್ರ ಬರೆದಿದ್ದಾರೆ ಅವರಿಗೆ ತಾನೇ ಕೇಳಬೇಕು” ಎಂದು ಹೇಳಿದರು.
ಭಾರತ ಈಗ ‘ವಿಶ್ವಗುರು’ಅಲ್ಲ, ಆ ಪದ ಬಳಸಬೇಡಿ: ಮುರಳಿ ಮನೋಹರ ಜೋಶಿ ಪ್ರತಿಪಾದನೆ
[…] The post ಭಾರತ ಈಗ ‘ವಿಶ್ವಗುರು’ ಅಲ್ಲ, ಆ ಪದ ಬಳಸಬೇಡಿ: ಮುರಳಿ ಮನೋಹರ ಜೋಶಿ ಪ್ರತಿಪಾದನೆ first appeared on Vistara News .
ಬೆಂಗಳೂರು ಸುತ್ತ ಮತ್ತೊಂದು ರಿಂಗ್ ರಸ್ತೆ ನಿರ್ಮಿಸುವ ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. 2007 ರಲ್ಲಿ ಪ್ರಸ್ತಾಪಿಸಿದ್ದ ಇಂಟರ್ಮೀಡಿಯೇಟ್ ರಿಂಗ್ ರೋಡ್ ಯೋಜನೆಗೆ ಮತ್ತೆ ಜೀವಬಂದಿದೆ. 210 ಕಿ ಮೀ ಉದ್ದದ ಈ ಕಾರಿಡಾರ್ ಇದಾಗಿದ್ದು, ಬೆಂಗಳೂರು ಸುತ್ತಲ 12 ಉಪನಗರಗಳನ್ನು ಸಂಪರ್ಕಿಸಲಿದೆ. ಯಾವೆಲ್ಲಾ ನಗರಗಳು? ಭೂಸ್ವಾಧೀನ ಹೇಗೆ? ಈ ಬಗ್ಗೆ ವಿವರ ಇಲ್ಲಿದೆ.
ನಾನು ಜೆಡಿಎಸ್ ಸೇರ್ಪಡೆ ಸುಳ್ಳು ಸುದ್ದಿ, ಸಿದ್ದರಾಮಯ್ಯ ಮಾತನಾಡಿದ್ರೆ ಬೇರೆ ತರ ಸೌಂಡ್ ಆಗುತ್ತೆ: ಜಮೀರ್ ಅಹ್ಮದ್ ಖಾನ್
ನಾನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂಬುವುದು ಸುಳ್ಳು ಸುದ್ದಿಯಾಗಿದೆ. ಕಾಂಗ್ರೆಸ್ ಪಕ್ಷ ನನಗೆ ಎಲ್ಲ ರೀತಿಯ ಸ್ಥಾನಮಾನ ನೀಡಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಯಾರಾದರೂ ಪಕ್ಷದ ವಿರೋಧಿ ಚಟುವಟಿಕೆ ಮಾಡಿದ್ರೆ ಅವರ ಬಗ್ಗೆ ದಾಖಲೆ ನೀಡಲಿ ಎಂದು ಸವಾಲು ಹಾಕಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಮೌನದ ಕುರಿತಾದ ಪ್ರಶ್ನೆಗೆ, ಸಿದ್ದರಾಮಯ್ಯ ಮಾತನಾಡಿದ್ರೆ ಬೇರೆ ತರ ಸೌಂಡ್ ಆಗುತ್ತೆ ಎಂದು ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದರು.
ಭಾರತಕ್ಕೆ ಬೇಕಾಗಿರುವ ಲಷ್ಕರ್-ಎ-ತೈಬಾ ಸಂಘಟನೆಯ ಅತ್ಯಂತ ಅಪಾಯಕಾರಿ ಉಗ್ರ ಹಬೀಬುಲ್ಲಾ ಅಲಿಯಾಸ್ ಸೈಫುಲ್ಲಾ ಸಾಜಿದ್ ಜಟ್ ಈಗ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಇರುವುದು ಪತ್ತೆಯಾಗಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿ ಸೇರಿದಂತೆ ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಈತನ ನೇರ ಕೈವಾಡವಿರುವುದು ಗುಪ್ತಚರ ಮಾಹಿತಿ ಹಾಗೂ ವಿಧಿವಿಜ್ಞಾನ ಪುರಾವೆಗಳಿಂದ ದೃಢಪಟ್ಟಿದೆ ಎಂದು ವರದಿಯಾಗಿದೆ. ಪಹಲ್ಗಾಮ್

35 C