SENSEX
NIFTY
GOLD
USD/INR

Weather

26    C
... ...View News by News Source

Bangalore Mysore Expressway: ಬೆಂಗಳೂರು- ಮೈಸೂರು ಹೈವೇಯಲ್ಲಿ ಓವರ್‌ಸ್ಪೀಡ್‌ ಹೋದರೆ ಬೀಳಲಿದೆ ಪೊಲೀಸ್‌ ಕೇಸ್!‌

Bangalore Mysore Expressway: ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಗಳನ್ನು ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ ಒಂದೇ ದಿನ‌ 150ಕ್ಕೂ ಹೆಚ್ಚು ಅತಿ ವೇಗದ ಚಾಲನೆ ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಓವರ್‌ಸ್ಪೀಡ್‌ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಕೈಗೆತ್ತಿಕೊಂಡಿದ್ದು, ಆಗಸ್ಟ್‌ 1ರಿಂದ ಅದನ್ನು ಚಲಾಯಿಸಲಿದ್ದಾರೆ. The post Bangalore Mysore Expressway: ಬೆಂಗಳೂರು- ಮೈಸೂರು ಹೈವೇಯಲ್ಲಿ ಓವರ್‌ಸ್ಪೀಡ್‌ ಹೋದರೆ ಬೀಳಲಿದೆ ಪೊಲೀಸ್‌ ಕೇಸ್!‌ first appeared on Vistara News .

ವಿಸ್ತಾರ ನ್ಯೂಸ್ 27 Jul 2024 12:23 pm

ಚಿತ್ರೀಕರಣದ ವೇಳೆ ಕಾರು ಅಪಘಾತ: ಮಲಯಾಳಂ ನಟರಾದ ಅರ್ಜುನ್ ಅಶೋಕನ್, ಸಂಗೀತ್ ಪ್ರತಾಪ್ ಗೆ ಗಾಯ

ಕೊಚ್ಚಿ: ಬಂದರು ನಗರವಾದ ಕೊಚ್ಚಿಯಲ್ಲಿ ಸಾಹಸದ ದೃಶ್ಯಿವನ್ನು ಚಿತ್ರೀಕರಿಸುತ್ತಿದ್ದಾಗ ಕಾರು ಅಪಘಾತ ಸಂಭವಿಸಿದ್ದು, ಮಲಯಾಳಂ ನಟರಾದ ಅರ್ಜುನ್ ಅಶೋಕ್ ಹಾಗೂ ಸಂಗೀತ್ ಪ್ರತಾಪ್ ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಈ ಘಟನೆಯು ಇಂದು ಮುಂಜಾನೆ ಸುಮಾರು 1.30ರ ವೇಳೆಗೆ ಕೊಚ್ಚಿಯ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಇನ್ನೂ ಚಿತ್ರೀಕರಣದ ಹಂತದಲ್ಲಿರುವ ‘ಬ್ರೊಮಾನ್ಸ್’ ಎಂಬ ಶೀರ್ಷಿಕೆ ಹೊಂದಿರುವ ಚಲನಚಿತ್ರದ ಚಿತ್ರೀಕರಣದ ಸಂದರ್ಭ ನಟರು ಪ್ರಯಾಣಿಸುತ್ತಿದ್ದ ಕಾರು ಹೋಟೆಲ್ ಒಂದರ ಎದುರು ನಿಲ್ಲಿಸಿದ್ದ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದು ಉರುಳಿ ಬಿದ್ದಿತು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಅರ್ಜುನ್ ಅಶೋಕನ್, ಸಂಗೀತ್ ಪ್ರತಾಪ್ ಸೇರಿದಂತೆ ಮೂವರು ಹಾಗೂ ರಸ್ತೆ ಬದಿಯಲ್ಲಿ ನಿಂತಿದ್ದ ಫುಡ್ ಡೆಲಿವರಿ ಏಜೆಂಟ್ ಒಬ್ಬರಿಗೆ ಈ ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರ ಆರೋಗ್ಯ ಸ್ಥಿತಿಯೂ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ವಾರ್ತಾ ಭಾರತಿ 27 Jul 2024 12:21 pm

Terrorist Attack: ಕುಪ್ವಾರಾ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮ: ಪಾಕ್‌ ಉಗ್ರನನ್ನು ಹೊಡೆದುರುಳಿಸಿದ ಸೇನೆ

Terrorist Attack:ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಜುಲೈ 27ರಂದು ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದ ಸೈನಿಕರ ಪೈಕಿ ಓರ್ವ ಮೃತಪಟ್ಟಿದ್ದಾರೆ. ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಉದ್ದಕ್ಕೂ ನಡೆದ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನ್ನು ಹೊಡೆದುರುಳಿಸಲಾಗಿದೆ. ʼʼಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬಾರ್ಡರ್ ಆ್ಯಕ್ಷನ್‌ ಟೀಮ್‌ (Border Action Team)ನ ಉಗ್ರನೊಬ್ಬ ಸಾವನ್ನಪ್ಪಿದ್ದಾನೆʼʼ ಎಂದು ಸೇನೆ ದೃಢಪಡಿಸಿದೆ. The post Terrorist Attack:ಕುಪ್ವಾರಾ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮ: ಪಾಕ್‌ ಉಗ್ರನನ್ನು ಹೊಡೆದುರುಳಿಸಿದ ಸೇನೆ first appeared on Vistara News .

ವಿಸ್ತಾರ ನ್ಯೂಸ್ 27 Jul 2024 12:21 pm

ಹಾವೇರಿ: ಮನೆಯ ಮೇಲ್ಛಾವಣಿ ಕುಸಿತ ಪ್ರಕರಣ; ಗಾಯಗೊಂಡಿದ್ದ ವೃದ್ಧೆ ಮೃತ್ಯು

ಹಾವೇರಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಮನೆಯನ ಮೇಲ್ಛಾವಣಿ ಕುಸಿದ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಹರಕುಣಿ (60 ವರ್ಷ) ಮೃತ ಮಹಿಳೆ. ಜುಲೈ 19 ರಂದು ನಡೆದ ಘಟನೆಯಲ್ಲಿ ಮನೆ ಮಂದಿ ರಾತ್ರಿ ಮಲಗಿದ್ದ ವೇಳೆ ಮನೆಯ ಮೇಲ್ಛಾವಣಿ ಕುಸಿದು, ಅವರ ಮೈ ಮೇಲೆಯೇ ಅವಶೇಷಗಳು ಬಿದ್ದಿವೆ. ಇದರಿಂದ  ತಾಯಿ, ಮಕ್ಕಳಿಬ್ಬರು‌ ಮೃತಪಟ್ಟಿದ್ದರು. ಇದೀಗ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ.

ವಾರ್ತಾ ಭಾರತಿ 27 Jul 2024 12:16 pm

Rashmika Mandanna: ದೇವರ ನಾಡು ಕೇರಳದಲ್ಲಿ ರಶ್ಮಿಕಾ ಬೋಲ್ಡ್‌ ಡಾನ್ಸ್; ನಟಿಯನ್ನು ನೋಡಲು ಮುಗಿಬಿದ್ದ ಫ್ಯಾನ್ಸ್!

Rashmika Mandanna: ಕರುನಾಗಪಲ್ಲಿಯಲ್ಲಿ ವೆಡ್ಸ್ ಇಂಡಿಯಾ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭಕ್ಕೆ ಗುರುವಾರ ಬೆಳಗ್ಗೆ 9 ಗಂಟೆಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ರಶ್ಮಿಕಾ ಆಗಮಿಸುತ್ತಿದ್ದಂತೆ, ಅವರನ್ನು ಬರಮಾಡಿಕೊಳ್ಳಲು ಸಾವಿರಾರು ಫ್ಯಾನ್ಸ್‌ ಒಂದೆಡೆ ಸೇರಿದ್ದರು. The post Rashmika Mandanna:ದೇವರ ನಾಡು ಕೇರಳದಲ್ಲಿ ರಶ್ಮಿಕಾ ಬೋಲ್ಡ್‌ ಡಾನ್ಸ್; ನಟಿಯನ್ನು ನೋಡಲು ಮುಗಿಬಿದ್ದ ಫ್ಯಾನ್ಸ್! first appeared on Vistara News .

ವಿಸ್ತಾರ ನ್ಯೂಸ್ 27 Jul 2024 12:12 pm

Paris Olympics: ಶುಭಾರಂಭದ ನಿರೀಕ್ಷೆಯಲ್ಲಿ ಪುರುಷರ ಹಾಕಿ ತಂಡ; ಕಿವೀಸ್​ ಎದುರಾಳಿ

Paris Olympics: ಈ ಬಾರಿಯ 16 ಸದಸ್ಯರ ತಂಡದಲ್ಲಿ 11 ಮಂದಿ ಆಟಗಾರರು ಟೋಕಿಯೊ ಒಲಿಂಪಿಕ್ಸ್​ ಆಡಿದ ಆಟಗಾರರಾಗಿದ್ದಾರೆ. ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರಿಗೆ ಇದು ಕೊನೆಯ ಒಲಿಂಪಿಕ್ಸ್​ ಕೂಟವಾಗಿದೆ. ಈಗಾಗಲೇ ಅವರು ತಮ್ಮ ನಿವೃತ್ತಿಯನ್ನು ಕೂಡ ಘೋಷಿಸಿದ್ದಾರೆ. The post Paris Olympics: ಶುಭಾರಂಭದ ನಿರೀಕ್ಷೆಯಲ್ಲಿ ಪುರುಷರ ಹಾಕಿ ತಂಡ; ಕಿವೀಸ್​ ಎದುರಾಳಿ first appeared on Vistara News .

ವಿಸ್ತಾರ ನ್ಯೂಸ್ 27 Jul 2024 12:10 pm

IND vs SL: ವೇಗಿ ಬಿನುರ ಫೆರ್ನಾಂಡೊ ಔಟ್‌, ಮೊದಲನೇ ಟಿ20ಐಗೂ ಮುನ್ನ ಶ್ರೀಲಂಕಕ್ಕೆ ಆಘಾತ!

Binura Fernando ruled out of 1st T20I: ಭಾರತ ವಿರುದ್ದದ ಟಿ20 ಸರಣಿ ಆರಂಭಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಗಾಯಾಳುಗಳ ಸಮಸ್ಯೆ ಎದುರಾಗಿದೆ. ಶ್ರೀಲಂಕಾ ತಂಡದ ಮಧ್ಯಮ ವೇಗಿ ಬಿನುರ ಫೆರ್ನಾಂಡೊ ಅವರು ಎದೆಯ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅವರು ಶನಿವಾರ ನಡೆಯುವ ಮೊದಲನೇ ಟಿ20 ಪಂದ್ಯದಿಂದ ಹೊರ ಬಿದ್ದಿದ್ದಾರೆ. ಆ ಮೂಲಕ ಶ್ರೀಲಂಕಾ ತಂಡದಲ್ಲಿ ಮೂರನೇ ಆಟಗಾರ ಗಾಯಕ್ಕೆ ತುತ್ತಾದಂತಾಗಿದೆ. ಇದಕ್ಕೂ ಮುನ್ನ ದುಷ್ಮಾಂತ ಚಮೀರಾ ಮತ್ತು ನುವಾನ್‌ ತುಷಾರ ಅವರು ಟಿ20 ಸರಣಿಯಿಂದ ಹೊರ ನಡೆದಿದ್ದರು.

ವಿಜಯ ಕರ್ನಾಟಕ 27 Jul 2024 11:53 am

ಹಾವೇರಿ: ತಹಶೀಲ್ದಾರ್ ಕಚೇರಿಯ ಮೇಲ್ಛಾವಣಿ ಸೋರಿಕೆ; ಕೊಡೆ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ

ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಹಶೀಲ್ದಾರ್ ಕಚೇರಿಯ ಮೇಲ್ಛಾವಣಿ ಸೋರಿಕೆಯಾಗುತ್ತಿದ್ದು, ಕಚೇರಿ ಸಿಬ್ಬಂದಿ ಮಳೆಯ ನೀರಿನಿಂದ ರಕ್ಷಣೆಗೆ ಛತ್ರಿ ಹಿಡಿದು ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿಯುಂಟಾಗಿದೆ. 2 ನೇ ಮಹಡಿಯಿಂದ ನೆಲ ಮಹಡಿವರೆಗೂ ಕಟ್ಟಡ ಸೋರಿಕೆಯಾಗುತ್ತಿದ್ದು, ಮಹತ್ವ ದಾಖಲೆಗಳು ಹಾಗೂ ಕಂಪ್ಯೂಟರ್ ಗಳ ರಕ್ಷಣೆಗೆ ಕಚೇರಿ ಸಿಬ್ಬಂದಿ ಹರಸಾಹಸಪಡಬೇಕಾಗಿದೆ. ಕಳಪೆ ಕಾಮಗಾರಿ, ಅವೈಜ್ಞಾನಿಕ ಸೋಲಾರ್ ಪ್ಯಾನಲ್ ಅಳವಡಿಸಿದ ಹಿನ್ನೆಲೆ ಕಟ್ಟಡ ಸೋರಿಕೆಯಾಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಕಚೇರಿ ಸಿಬ್ಬಂದಿ ಛತ್ರಿ ಹಿಡಿದು ಕೆಲಸ ಮಾಡುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಳೆದ 15 ವರ್ಷಗಳಿಂದ ಕಟ್ಟಡ ಸೋರುತ್ತಿದ್ದು, ಕಳೆದ ವರ್ಷ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ ನೀಡಿ ಮೇಲ್ಚಾವಣಿಗೆ ಶೆಡ್ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಜಿಲ್ಲಾಡಳಿತ ಕೆಲಭಾಗಕ್ಕೆ ಮಾತ್ರ ಶೆಡ್ ಹಾಕಿ ಇನ್ನೂ ಕೆಲಭಾಗವನ್ನು ಹಾಗೇ ಬಿಟ್ಟಿದ್ದರಿಂದ ಕಚೇರಿಯಲ್ಲಿನ ಅಗತ್ಯ ದಾಖಲೆಗಳು ಮಳೆ ನೀರು ಪಾಲಾಗುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ವಾರ್ತಾ ಭಾರತಿ 27 Jul 2024 11:52 am

ಬೆಂಗಳೂರಲ್ಲಿದ್ದೇ ಸುಳ್ಳು ಹೇಳಿ ಮುಡಾ ಸೈಟ್ ತಗೊಂಡವರು ವಾಪಸ್ ಕೊಟ್ಟು ಮಾತಾಡ್ಲಿ; ರಾಜಣ್ಣ ಹೇಳಿದ್ದು ಯಾರನ್ನು!

ಮುಡಾ ಮತ್ತು ವಾಲ್ಮೀಕಿ ನಿಗಮ ಹಗರಣದ ವಿಚಾರವಾಗಿ ವಿಪಕ್ಷಗಳು ಮಾಡಿರುವ ಆರೋಪಗಳಿಗೆ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಸಿದ್ದರಾಮಯ್ಯ ಅವರ ಕ್ಲೀನ್ ಇಮೇಜ್ ಗೆ ಮಸಿ ಬಳಿಯುವ ಪ್ರಯತ್ನವಾಗಿದೆ. ಜೊತೆಗೆ ಈ ಮೂಲಕ ಅಹಿಂದ ವರ್ಗದ ವಿರುದ್ಧ ನಡೆಸುತ್ತಿರುವ ಪಿತೂರಿಯಾಗಿದೆ ಎಂದರು. ಇನ್ನು ಬೆಂಗಳೂರಿನಲ್ಲಿದ್ದುಕೊಂಡೇ ಕೆಲವರ ಮಂಡ್ಯ, ಶ್ರೀರಂಗಪಟ್ಟ, ಮೈಸೂರಿನಲ್ಲಿ ಇದ್ದೇವೆಂದು ಹೇಳಿ ಮುಡಾ ಸೈಟ್ ತೆಗೆದುಕೊಂಡಿದ್ದಾರೆ. ಅಂಥವರು ವಾಪಸ್ ನೀಡಿ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ.

ವಿಜಯ ಕರ್ನಾಟಕ 27 Jul 2024 11:52 am

ನಿವೃತ್ತಿಯ ಕಾಲ

ಸಾಧ್ಯವಾದಷ್ಟು ಕಾಲ ಅಗ್ರಸ್ಥಾನದಲ್ಲಿರುವ ಸಿಂಡ್ರೋಮ್‌ನಿಂದ ಶಕ್ತಿಶಾಲಿ ಮತ್ತು ಯಶಸ್ವಿ ಮಹಿಳೆಯರು ಹೊರತಾಗಿಲ್ಲವಾದರೂ, ಇದು ಪುರುಷರಲ್ಲಿಯೇ ಹೆಚ್ಚು ಕಾಣಿಸುವ ಪ್ರವೃತ್ತಿಯಾಗಿದೆ. ಆದರೆ ಉಬೈದ್ ಸಿದ್ದೀಕಿ ಒಂದು ಅಪವಾದ. ರಾಜಕೀಯ, ಕ್ರೀಡೆ, ಉದ್ಯಮ, ನಾಗರಿಕ ಸಮಾಜ ಮತ್ತು ಶೈಕ್ಷಣಿಕ ಜಗತ್ತಿನಲ್ಲಿ ಅಸಂಖ್ಯಾತ ಭಾರತೀಯ ಪುರುಷರು ಪ್ರಸ್ತುತ ಅಮೆರಿಕನ್ ಅಧ್ಯಕ್ಷರು ಬಯಸಿದಂತೆಯೇ ಅಧಿಕಾರದಲ್ಲಿದ್ದಾರೆ ಮತ್ತು ಮುಂದುವರಿಯಲು ಬಯಸುತ್ತಾರೆ. ದೂರದೃಷ್ಟಿಯದ್ದಲ್ಲದ ಮತ್ತು ಸ್ವಯಂಕೇಂದ್ರಿತವಾದ ಅಂಥ ನಡವಳಿಕೆಯ ಹಾನಿಕಾರಕ ಪರಿಣಾಮದ ಹೊರೆಯನ್ನು ಅವರ ಹೆಚ್ಚು ಪ್ರತಿಭಾನ್ವಿತ ಕಿರಿಯ ಸಹೋದ್ಯೋಗಿಗಳು ಮತ್ತು ಒಟ್ಟಾರೆಯಾಗಿ ಈ ಸಮಾಜವೇ ಹೊರಬೇಕಾಗುತ್ತದೆ.

ವಾರ್ತಾ ಭಾರತಿ 27 Jul 2024 11:51 am

land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

land slide: ಹಾಸನದ ಸಕಲೇಶಪುರ (Sakaleshpur) ತಾಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಗುಡ್ಡದ ಮಣ್ಣು ಕುಸಿದಿದೆ. ಹೀಗಾಗಿ ಇಂದಿನಿಂದ ಜು.29ರವರೆಗೆ ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌, ಬೆಂಗಳೂರು -ಮುರುಡೇಶ್ವರ ಎಕ್ಸ್‌ಪ್ರೆಸ್‌, ಬೆಂಗಳೂರು-ಕಾರಾವರ ಎಕ್ಸ್‌ಪ್ರೆಸ್‌ ರೈಲುಗಳು ಸೇರಿದಂತೆ ಹಲವು ರೈಲುಗಳ ಓಡಾಟ ರದ್ದಾಗಿದೆ. The post land slide : ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು first appeared on Vistara News .

ವಿಸ್ತಾರ ನ್ಯೂಸ್ 27 Jul 2024 11:47 am

ಹರಿದ್ವಾರದಲ್ಲಿ ಕನ್ವರ್‌ ಯಾತ್ರೆಯ ಮಾರ್ಗದ ಮಸೀದಿಗಳು, ಮಝರ್‌ಗೆ ಬಿಳಿ ಶೀಟ್‌ ಅಳವಡಿಕೆ

ಲಕ್ನೋ: ಕನ್ವರ್‌ ಯಾತ್ರೆಯ ಮಾರ್ಗದಲ್ಲಿ ಹರಿದ್ವಾರದಲ್ಲಿರುವ ಎರಡು ಮಸೀದಿಗಳು ಮತ್ತು ಒಂದು ಮಝರ್‌ ಅನ್ನು ದೊಡ್ಡ ಬಿಳಿ ಶೀಟ್‌ಗಳನ್ನು ಬಳಸಿ ಮರೆಮಾಡಲಾಗಿರುವುದು ಶುಕ್ರವಾರ ಬೆಳಿಗ್ಗೆ ಕಂಡು ಬಂದಿದೆ. ಸಂಜೆಯೊಳಗೆ ಜಿಲ್ಲಾಡಳಿತ ಶೀಟ್‌ಗಳನ್ನು ತೆರವುಗೊಳಿಸಿದ್ದು, ಹೀಗೆ ಮಸೀದಿಗಳನ್ನು ಮರೆಮಾಡಲಾಗಿರುವುದು ತಪ್ಪು ಎಂದು ಪೊಲೀಸ್‌ ಇಲಾಖೆ ಹೇಳಿದೆ. ಈ ರೀತಿ ಶೀಟ್‌ಗಳನ್ನು ಹಾಕಲು ಯಾವುದೇ ಆದೇಶ ನೀಡಲಾಗಿರಲಿಲ್ಲ ಎಂದು ಆಡಳಿತ ಹೇಳಿದರೆ, ಹರಿದ್ವಾರ ಜಿಲ್ಲಾ ಉಸ್ತುವಾರಿ ಸಚಿವ ಸತ್ಪಾಲ್‌ ಮಹಾರಾಜ್‌ ಮಾತನಾಡಿ, ಯಾವುದೇ ಅಶಾಂತಿಯ ಘಟನೆಯನ್ನು ತಡೆಯಲು ಹಾಗೂ ಕನ್ವರ್‌ ಯಾತ್ರೆ ಸುಗಮವಾಗಿ ನಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಯಾವುದೇ ಕಟ್ಟಡ ನಿರ್ಮಾಣವಾಗುವಾಗ ಇದೇ ರೀತಿ ಮುಚ್ಚಲಾಗುತ್ತದೆ, ನಾವು ಹಾಗೆಯೇ ಮಾಡಿದ್ದೇವೆ, ಪ್ರತಿಕ್ರಿಯೆ ಹೇಗಿರಲಿದೆ ನೋಡೋಣ, ಎಂದಿದ್ದಾರೆ. ಹರಿದ್ವಾರದಲ್ಲಿರುವ ಕನ್ವರ್‌ ಯಾತ್ರೆಯ ಮಾರ್ಗವಾದ ಜ್ವಾಲಾಪುರ್‌ ಪ್ರದೇಶದಲ್ಲಿ ಈ ಎರಡು ಮಸೀದಿಗಳು ಮತ್ತು ಮಝರ್‌ ಇವೆ. ಈ ರೀತಿ ಇವುಗಳನ್ನು ಯಾತ್ರೆ ಸಂದರ್ಭ ಶೀಟ್‌ ಹಾಕಿ ಮರೆಮಾಡಲಾಗಿದ್ದು ಇದೇ ಪ್ರಥಮ ಬಾರಿ. ಪೊಲೀಸ್‌ ಇಲಾಖೆ ಅಥವಾ ಜಿಲ್ಲಾಡಳಿತ ಈ ರೀತಿ ಶೀಟ್‌ ಹಾಕಲು ಯಾವುದೇ ಆದೇಶ ನೀಡಿರಲಿಲ್ಲ ಎಂದು ಹರಿದ್ವಾರ ಎಸ್‌ಪಿ ಸ್ವತಂತ್ರ ಸಿಂಗ್‌ ಹೇಳಿದ್ದಾರೆ.

ವಾರ್ತಾ ಭಾರತಿ 27 Jul 2024 11:47 am

ನುಡಿದಂತೆ ನಡೆದ 'ಬಿಗ್ ಬಾಸ್' ಡ್ರೋನ್ ಪ್ರತಾಪ್; ಒಂದಾದ ಮೇಲೊಂದು ಮಹತ್ಕಾರ್ಯ ಮಾಡ್ತಿರುವ 'ಬಿಗ್ ಬಾಸ್' ಸ್ಪರ್ಧಿ!

BBK 10 Drone Prathap News: ‘ಬಿಗ್ ಬಾಸ್ ಕನ್ನಡ ಸೀಸನ್ 10’ ಸ್ಪರ್ಧಿ ಡ್ರೋನ್ ಪ್ರತಾಪ್ ಅವರು ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುವೆ ಎಂದಿದ್ದರು. ಅಷ್ಟೇ ಅಲ್ಲದೆ ಒಂದು ಮಹದುದ್ದೇಶವನ್ನು ಹಂಚಿಕೊಂಡಿದ್ದರು. ಈಗ ಆ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಅವರೇ ವಿಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಡ್ರೋನ್ ಪ್ರತಾಪ್ ಅವರು ಒಂದು ಸಂದೇಶವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಲೇಖನದಲ್ಲಿದೆ. ಸಂಕ್ಷಿಪ್ತ ಲೇಖನ ಓದಿ.

ವಿಜಯ ಕರ್ನಾಟಕ 27 Jul 2024 11:41 am

ರಾಮನಗರ ಹೆಸರು ಬದಲಾವಣೆ : ’ರಾಮನೆಂದರೆ ಹಗೆ, ರಿಯಲ್ ಎಸ್ಟೇಟ್ ಹಿತಾಶಕ್ತಿ ಕಾಪಾಡುವ ತಂತ್ರ’

Ramanagara Name Change : ರಿಯಲ್ ಎಸ್ಟೇಟ್ ಹಿತಾಶಕ್ತಿಯನ್ನು ಮುಂದಿಟ್ಟುಕೊಂಡು ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲಾಗಿದೆ. ಕಾಂಗ್ರೆಸ್ ನವರಿಗೆ ರಾಮನೆಂದರೆ ಹಗೆ, ಹಾಗಾಗಿ, ಹೆಸರು ಬದಲಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ವಿಜಯ ಕರ್ನಾಟಕ 27 Jul 2024 11:39 am

Mettur Dam: 100 ಅಡಿ ಭರ್ತಿಯಾದ ಮೆಟ್ಟೂರು ಜಲಾಶಯ; ಒಳಹರಿವು ಎಷ್ಟಿದೆ?

ಕರ್ನಾಟಕದಲ್ಲಿ ಮತ್ತೆ ಮಳೆ ಹೆಚ್ಚಾಗಿದ್ದು ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ರಾಜ್ಯದ ಪ್ರಮುಖ ನದಿಗಳು ಅಪಾಯಮಟ್ಟವನ್ನು ಮೀರಿ ಹರಿಯುತ್ತಿವೆ. ರಾಜ್ಯದ ಕಾವೇರಿ ನದಿ ಪಾತ್ರದ ಜಲಾಶಯಗಳು ಭರ್ತಿಯಾಗಿದ್ದು, ತಮಿಳುನಾಡಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಮೆಟ್ಟೂರು ಜಲಾಶಯದ ಒಳಹರಿವು ದಿನೇ ದಿನೇ ಹೆಚ್ಚಾಗುತ್ತಿದ್ದು ಭಾರಿ ಪ್ರಮಾಣದಲ್ಲಿ ನೀರು ಸಂಗ್ರವಾಗುತ್ತಿದೆ. ಜುಲೈ 16 ರಂದು ಕೇವಲ 45

ಒನ್ ಇ೦ಡಿಯ 27 Jul 2024 11:35 am

Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ

Paris Olympics: ಪುರುಷರ ಸಿಂಗಲ್ಸ್‌ನಲ್ಲಿ ಅನುಭವಿ ಆಟಗಾರ, 41 ವರ್ಷದ ಶರತ್ ಕಮಲ್ ಅವರು ತಮ್ಮ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ವಿರುದ್ಧ ಆಡಲಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ, ಗುಜರಾತ್‌ನ 31 ವರ್ಷದ ಹರ್ಮಿತ್ ದೇಸಾಯಿ ಜೋರ್ಡಾನ್‌ನ ಝೈದ್ ಅಬೊ ಯಮನ್ ವಿರುದ್ಧ ಸೆಣಸಲಿದ್ದಾರೆ. The post Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ first appeared on Vistara News .

ವಿಸ್ತಾರ ನ್ಯೂಸ್ 27 Jul 2024 11:29 am

Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Viral Video: ಸಾಮಾನ್ಯವಾಗಿ ರಸ್ತೆ ಅಪಘಾತವಾದಾಗ ಅಕ್ಕಪಕ್ಕ ಇದ್ದವರು ನೆರವಿಗೆ ಧಾವಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತ್ ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡು ಹೋಗುತ್ತಿದ್ದಾನೆ! ಅಲ್ಲದೆ ಆತ ಕೈಯಲ್ಲಿ ದುಬಾರಿ ಐಫೋನ್‌ ಹಿಡಿದುಕೊಂಡಿದ್ದಾನೆ. ಸದ್ಯ ಆತನ ವರ್ತನೆಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ. ವೈರಲ್‌ ವಿಡಿಯೊ ನೀವೂ ನೋಡಿ. The post Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು first appeared on Vistara News .

ವಿಸ್ತಾರ ನ್ಯೂಸ್ 27 Jul 2024 11:28 am

Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

Ajith Kumar: ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದಲ್ಲ ಎರಡು ಸಿನಿಮಾ ಬರುತ್ತದೆ. ಇತ್ತೀಚೆಗೆ ಇಬ್ಬರೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನುವ ಗುಸುಗುಸು ಶುರುವಾಗಿತ್ತು.. ಈ ಬಗ್ಗೆ ನಟ ಅಜಿತ್ ಮ್ಯಾನೇಜರ್ ಸುರೇಶ್ ಚಂದ್ರ ಪ್ರತಿಕ್ರಿಯಿಸಿದ್ದಾರೆ. The post Ajith Kumar:ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು? first appeared on Vistara News .

ವಿಸ್ತಾರ ನ್ಯೂಸ್ 27 Jul 2024 11:27 am

ಹರಿಹರ: ನೆರೆ ನೀರಿನಿಂದ ಜಲಾವೃತವಾದ ಸ್ಮಶಾನ; ಗುಡ್ಡದ ಮೇಲೆ ಅಂತ್ಯಕ್ರಿಯೆ ನಡೆಸಿದ ಗ್ರಾಮಸ್ಥರು

ದಾವಣಗೆರೆ:  ಸ್ಮಶಾನ ಜಲಾವೃತವಾಗಿರುವುರಿಂದ ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ಪರದಾಡಬೇಕಾದ ಪರಿಸ್ಥಿತಿಯುಂಟಾಗಿದ್ದು, ನದಿ ಉಕ್ಕಿ ಹರಿಯುತ್ತಿರುವ ನಡುವೆಯೇ ಜನರು ನದಿ ದಾಟಿ ಅಂತ್ಯಕ್ರಿಯೆ ನಡೆಸಿರುವ ಘಟನೆ ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ನಡೆದಿರುವ ಬಗ್ಗೆ ಶನಿವಾರ ವರದಿಯಾಗಿದೆ. ಗ್ರಾಮದ ಮಂಜಪ್ಪ ನಿಧನರಾಗಿದ್ದರು. ದುರಾದೃಷ್ಟಾವಶಾತ್ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಬೇಕಾದ ಸ್ಮಶಾನ‌ ನೆರೆ ನೀರಿನಿಂದ ಜಲಾವೃತವಾಗಿದ್ದ ಕಾರಣ ನದಿ ದಾಟಿ ಗುಡ್ಡದ ಮೇಲೆ ಅಂತ್ಯ ಕ್ರಿಯೆ ನಡೆಸಬೇಕಾಯಿತು. ಮಲೆನಾಡ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಯೂ ತುಂಬಿ ಹರಿಯುತ್ತಿದೆ, ಇದೇ ನದಿಯಿಂದ ಬಂದ ಹಿನ್ನೀರಿನಿಂದ ಸ್ಮಶಾನ ಜಲಾವೃತವಾಗಿದೆ. ಸರ್ಕಾರವು ಈ ಬಗ್ಗೆ ಗಮನ ಹರಿಸಿ ಸ್ಮಶಾನ ಭೂಮಿಯನ್ನು ಕೂಡಲೇ ಒದಗಿಸಬೇಕೆಂದು ಗ್ರಾಮದ ದಲಿತ ಮುಖಂಡರು ಆಗ್ರಹಿಸಿದ್ದಾರೆ. ಈ ಹಿಂದೆ ಸ್ಮಶಾನದ ವಿಷಯವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ,ಎಷ್ಟೋ ಬಾರಿ ಮನವಿ ಮಾಡಿದರು ಸ್ಪಂದಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಶೀಘ್ರವೇ ಕ್ರಮ ತೆಗೆದುಕೊಳ್ಳುವಂತೆ ಗ್ರಾಮದ ಹಿರಿಯರು ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ.

ವಾರ್ತಾ ಭಾರತಿ 27 Jul 2024 11:26 am

ಕೇಂದ್ರ ಬಜೆಟ್ ದೇಶದ ವಿರುದ್ಧದ ಪ್ರತೀಕಾರ: ಕೇಂದ್ರ ಸರಕಾರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

ಚೆನ್ನೈ: 2024-25ನೇ ಸಾಲಿನ ಕೇಂದ್ರ ಬಜೆಟ್ ದೇಶದ ವಿರುದ್ಧ ಬಿಜೆಪಿ ತೆಗೆದುಕೊಂಡಿರುವ ಪ್ರತೀಕಾರವಾಗಿದ್ದು, ಅದು ತಪ್ಪಿನ ಮೇಲೆ ತಪ್ಪು ಮಾಡುತ್ತಲೇ ಇರುವುದರಿಂದ ಭವಿಷ್ಯದಲ್ಲಿ ಇನ್ನೂ ಹೆಚ್ಚು ಚುನಾವಣಾ ಪರಾಭವಗಳನ್ನು ಎದುರಿಸಲಿದೆ ಎಂದು ಶನಿವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಎಚ್ಚರಿಕೆ ನೀಡಿದ್ದಾರೆ. ಇಂದು (ಶನಿವಾರ) ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಆಯೋಜನೆಗೊಂಡಿರುವ ನೀತಿ ಆಯೋಗದ ಸಭೆಯನ್ನು ತಾನೇಕೆ ಬಹಿಷ್ಕರಿಸಿದ್ದೇನೆ ಎಂಬುದನ್ನು ವಿವರಿಸಿದ ಸ್ಟಾಲಿನ್, ಬಜೆಟ್ ನಲ್ಲಿ ತಮಿಳುನಾಡಿನ ವಿರುದ್ಧ ತೋರಿದ ತಾರತಮ್ಯ ಧೋರಣೆಗಾಗಿ ಜನತಾ ನ್ಯಾಯಾಲಯದಲ್ಲಿ ನ್ಯಾಯ ಕೋರಲು ನಾನು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದು ಅನಿವಾರ್ಯವಾಯಿತು ಎಂದು ತಿಳಿಸಿದ್ದಾರೆ. ಸುಮಾರು ರೂ. 37,000 ಕೋಟಿ ನೆರೆ ಪರಿಹಾರ ಹಾಗೂ ಚೆನ್ನೈ ಮೆಟ್ರೊ ರೈಲಿನ ಎರಡನೆ ಹಂತಕ್ಕೆ ನೆರವು ನೀಡಬೇಕು ಎಂಬ ರಾಜ್ಯ ಸರಕಾರದ ಮನವಿಯನ್ನು ಬಜೆಟ್ ನಲ್ಲಿ ಪರಿಗಣಿಸಲಾಗಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿಯು ರಾಜಕೀಯ ಪ್ರೇರಿತವಾಗಿ ಸರಕಾರವನ್ನು ನಡೆಸುತ್ತಿದೆ ಎಂದೂ ಅವರು ದೂರಿದ್ದಾರೆ. “ಇದು ಕೇವಲ ತಮಿಳುನಾಡಿನ ವಿರುದ್ಧ ಪ್ರತೀಕಾರ ತೆಗೆದುಕೊಂಡಿರುವ ಬಜೆಟ್ ಅಲ್ಲ, ಬದಲಿಗೆ ಇಡೀ ಭಾರತದ ವಿರುದ್ಧ ಪ್ರತೀಕಾರ ತೆಗೆದುಕೊಂಡಿರುವ ಬಜೆಟ್ ಆಗಿದೆ! ಅಧಿಕಾರದಲ್ಲಿ ಉಳಿಯಲು ಇದು ಬಿಜೆಪಿಯ ಸರಕಾರ ರಕ್ಷಿಸಿಕೊಳ್ಳುವ ಬಜೆಟ್ ಆಗಿದೆ. ತಮಿಳುನಾಡಿನ ಜನರ ಧ್ವನಿಯಾಗಿ, ವಾಸ್ತವವಾಗಿ ಇಡೀ ದೇಶದ ಧ್ವನಿಯಾಗಿ ನಾನು ನಿಮಗೆ (ಬಿಜೆಪಿ) ಒಂದು ಮಾತು ಹೇಳಲು ಬಯಸುತ್ತೇನೆ – ನೀವು ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ. ನೀವು ಇನ್ನೂ ಹೆಚ್ಚೆಚ್ಚು ಪರಾಭವಗಳನ್ನು ಅನುಭವಿಸಲಿದ್ದೀರಿ. ಭಾರತದ ಸಂಸತ್ತಿನ ಉಭಯ ಸದನಗಳು ಹೇಗೆ ನಿಮ್ಮ ವಿರುದ್ಧ ಮುಗಿ ಬಿದ್ದಿವೆ, ಅದೇ ರೀತಿಯಲ್ಲಿ ಜನ ಕೂಡಾ ನಿಮ್ಮ ವಿರುದ್ಧ ಆಕ್ರೋಶಗೊಂಡಿದ್ದಾರೆ. ಬಿಜೆಪಿ ಇದಕ್ಕೆ ಉತ್ತರಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 27 Jul 2024 11:18 am

ಚೀನಾ... ಪ್ಲೀಸ್ ಮೇಕ್ ಇನ್ ಇಂಡಿಯಾ!

ಈಗ ಭಾರತವು ಜಾಗತಿಕ ಮಾರುಕಟ್ಟೆಯಲ್ಲಿ ಪ್ರಸ್ತುತವೆನ್ನಿಸಿಕೊಂಡು ಉಳಿಯಲು, ಒಂದು ನಿರ್ಣಯಕ್ಕೆ ಬರುವುದು ಅನಿವಾರ್ಯ ಆಗಿಬಿಟ್ಟಿದೆ. ಇರುವ ಆಯ್ಕೆಗಳು ಎರಡು. ಒಂದೋ ಚೀನಾದ ಸರಬರಾಜು ಸರಪಳಿಯ ಭಾಗವಾಗುವುದು; ಇಲ್ಲವೇ ಭಾರತದಲ್ಲಿ ಹೂಡಿಕೆಗೆ ಚೀನಾವನ್ನು ಆಹ್ವಾನಿಸುವುದು. ಭಾರತದ ಆರ್ಥಿಕ ಸಲಹೆಗಾರರು ಇದರಲ್ಲಿ ಎರಡನೇ ಆಯ್ಕೆ ನಮಗೆ ಸೂಕ್ತ ಎಂದು ಸರಕಾರಕ್ಕೆ ಸೂಚಿಸಿದ್ದಾರೆ.

ವಾರ್ತಾ ಭಾರತಿ 27 Jul 2024 11:13 am

ಭಾರೀ ಮಳೆಗೆ ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿತ; ಟ್ರಾಫಿಕ್ ಜಾಮ್

ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಚಾರ್ಮಾಡಿ ಘಾಟಿಯ ಹತ್ತನೆಯ ತಿರುವಿನ ಸಮೀಪನ ಉಂಟಾದ ಗುಡ್ಡ ಕುಸಿತದಿಂದಾಗಿ  ನೂರಾರು ಸಂಖ್ಯೆಯಲ್ಲಿ ವಾಹನಗಳು ಅಲ್ಲಲ್ಲಿ ಗಂಟೆಗಟ್ಟಲೆ ಕಾಯಬೇಕಾದ  ಪರಿಸ್ಥಿತಿಯುಂಟಾಗಿತ್ತು. ರಾತ್ರಿ ವೇಳೆ ಭೂ ಕುಸಿತವಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಮಣ್ಣು ಹಾಗೂ ಕಲ್ಲುಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಭೂ ಕುಸಿತದಿಂದಾಗಿ ಕೆಲ ಗಂಟೆಗಳ ಕಾಲ ಘಾಟಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಯುಂಟಾಯಿತು. ನೂರಾರು ವಾಹನಗಳು ಘಾಟಿಯಲ್ಲಿ ಹಾಗೂ ಕೊಟ್ಟಿಗೆ ಹಾರದಲ್ಲಿ ಕಾಯಬೇಕಾಯಿತು.

ವಾರ್ತಾ ಭಾರತಿ 27 Jul 2024 11:08 am

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

UGCET 2024 ; ಮೊದಲೇ ಸುತ್ತಿನ ಸೀಟು ಹಂಚಿಕೆ ಚಟುವಟಿಕೆ ಶುರುವಾಗಿದ್ದು, ಯುಜಿಸಿಇಟಿ- 2024ರ ಆಪ್ಶನ್ ಎಂಟ್ರಿ ಮಾಡಲು 7 ದಿನಗಳ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ. The post UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ! first appeared on Vistara News .

ವಿಸ್ತಾರ ನ್ಯೂಸ್ 27 Jul 2024 11:01 am

ಬೆಂಗಳೂರು ಪಿಜಿಯಲ್ಲಿ ಯುವತಿಯನ್ನು ಕೊಂದಿದ್ದವ ಮಧ್ಯಪ್ರದೇಶದಲ್ಲಿ ಅರೆಸ್ಟ್

ಕೋರಮಂಗಲದ ವೆಂಕಟಶಿವಾರೆಡ್ಡಿ ಲೇಔಟ್ ನಲ್ಲಿರುವ ಭಾರ್ಗವಿ ಪೇಯಿಂಗ್ ಗೆಸ್ಟ್ ಫಾರ್ ಲೇಡೀಸ್ (ಪಿಜಿ) ನಲ್ಲಿ ಜು. 23ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಜು. 23ರಂದು ರಾತ್ರಿ ಪಿಜಿಗೆ ನುಗ್ಗಿ ಕೃತಿ ಕುಮಾರಿ ಎಂಬಾಕೆಯನ್ನು ಹತ್ಯೆಗೈದಿದ್ದ ಅಭಿಷೇಕ್ ಎಂಬಾತನನ್ನು ಮಧ್ಯಪ್ರದೇಶ ಭೋಪಾಲ್ ನಿಂದ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿದೆ. ಪ್ರಕರಣದ ತನಿಖೆಗಿಳಿದಿದ್ದ ಪೊಲೀಸರ ತಂಡವೊಂದು ಭೋಪಾಲ್ ಗೆ ತೆರಳಿದ್ದು ಅಲ್ಲಿಂದಲೇ ಆತನನ್ನು ಬಂಧಿಸಿ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿಜಯ ಕರ್ನಾಟಕ 27 Jul 2024 10:55 am

ಕಲಬುರಗಿ: ಸಿಮೆಂಟ್ ಕಂಪನಿಯ ಕಾರ್ಮಿಕನ ಸಂಶಯಾಸ್ಪದ ಸಾವು; ಕೊಲೆ ಶಂಕೆ

ಕಲಬುರಗಿ: ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ ಕಾರ್ಮಿಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೃತ ದೇಹ‌ ಕಂಪನಿ ಹತ್ತಿರದ ಪ್ರಗತಿ ಕಾಲೊನಿಯ ಬಳಿ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ನಡೆದಿರುವ ಕುರಿತು ಸಂಶಯ ವ್ಯಕ್ತಪಡಿಸಿದ್ದಾರೆ. ಚಿತ್ತಾಪುರ ಪಟ್ಟಣದ ನಾಸರಜಂಗ್ ಬಡಾವಣೆಯ ನಿವಾಸಿ ಶರೀಫ್ ನಿಝಾಮುದ್ದೀನ್ (22) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಪಟ್ಟಣದ ಹೊರ ವಲಯದ ದಿಗ್ಗಾಂವ ಸಂಪರ್ಕಿಸುವ ರಸ್ತೆ ಬಳಿ ಶರೀಫ್ ನ ಮೃತದೇಹ ಪತ್ತೆಯಾಗಿದೆ. ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಶರೀಫ್‌, ಗುರುವಾರ ಮಧ್ಯಾಹ್ನ 2 ಗಂಟೆಗೆ ಮನೆಯಿಂದ ಹೋದವರು ರಾತ್ರಿ 9 ಗಂಟೆಯಾದರೂ ಮರಳಿ ಬಾರದಿದ್ದಾಗ ಕುಟುಂಬದವರು ಹುಡುಕಾಟ ಪ್ರಾರಂಭಿಸಿದ್ದಾರೆ. ರಾತ್ರಿ 11 ಗಂಟೆಗೆ ಕೆಸಿಎಲ್ ಕಂಪನಿ ಹತ್ತಿರದ ಪ್ರಗತಿ ಕಾಲೊನಿಯ ಪಕ್ಕದಲ್ಲಿ ಶರೀಫ್ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್‌ಐ ಶ್ರೀಶೈಲ್ ಅಂಬಾಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಶರೀಫ್ ನ ತಂದೆ ನಿಝಾಮುದ್ದೀನ್ ಅವರು ತನ್ನ ಮಗನ ಸಾವಿನ ಬಗ್ಗೆ ಸಂಶಯ ಇದೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  ಚಿತ್ತಾಪುರ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ವಾರ್ತಾ ಭಾರತಿ 27 Jul 2024 10:55 am

Government Employee: OPS ಹೋರಾಟ, ಸರ್ಕಾರಿ ನೌಕರರ ಮುಂದಿನ ನಡೆ ಏನು?

ಬೆಂಗಳೂರು, ಜುಲೈ 27: ರಾಷ್ಟ್ರೀಯ ಪಿಂಚಣಿ ಯೋಜನೆ (ಹೊಸ ಪಿಂಚಣಿ) ರದ್ದುಪಡಿಸಿ ಹಳೇ ಪಿಂಚಣೆ ಯೋಜನೆ ಮರು ಜಾರಿಗೊಳಿಸಬೇಕು ಎಂಬುದು ಕರ್ನಾಟಕದ ಸರ್ಕಾರಿ ನೌಕರರ ಬೇಡಿಕೆಯಾಗಿದೆ. ಈ ಕುರಿತು ಆದೇಶ ಹೊರಡಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ವೃಂದ ಸಂಘಗಳ ಪದಾಧಿಕಾರಿಗಳ ಸಭೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.

ಒನ್ ಇ೦ಡಿಯ 27 Jul 2024 10:49 am

ಕೇಂದ್ರ ಬಜೆಟ್: ವಿಕಸಿತ ಭಾರತದ ಹಸಿ ಸುಳ್ಳುಗಳು

ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರಕಾರದ ಬಜೆಟ್‌ಗಳಿಂದ ಭಾರತದ ಜನಸಾಮಾನ್ಯರಿಗೆ ಕವಡೆ ಕಿಮ್ಮತ್ತಿನಷ್ಟು ಅನುಕೂಲವಾಗಿಲ್ಲ. ಆದರೆ ಅದಾನಿ-ಅಂಬಾನಿಯಂತಹ ಕಾರ್ಪೊರೇಟ್ ಕುಳಗಳ ಆದಾಯ ನೂರಾರು ಪಟ್ಟು ಹೆಚ್ಚಾಗಿದೆ. ನಿರ್ಮಲಾ ಸೀತಾರಾಮನ್ ಅವರ ಕಾರ್ಪೊರೇಟ್ ಹಿತ ಕಾಪಾಡುವ ಬಜೆಟ್‌ಗಳು ಹೀಗೆ ಮುಂದುವರಿದರೆ ಮಧ್ಯಮವರ್ಗವೇ ಇಲ್ಲದಂತಾಗುತ್ತದೆ. ಇನ್ನೊಂದೆಡೆ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದವರ ಸಂಖ್ಯೆ ಹೆಚ್ಚುತ್ತದೆ ವಿಕಸಿತ ಭಾರತದ ಹೆಸರಲ್ಲಿ.

ವಾರ್ತಾ ಭಾರತಿ 27 Jul 2024 10:47 am

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Actor Darshan: ವಿಜಯಲಕ್ಷ್ಮಿ ಆಪ್ತೆ ಹಾಗೂ ನಿರ್ಮಾಪಕಿ ಲತಾ ಜೈಪ್ರಕಾಶ್ ಕೂಡ ದರ್ಶನ್ ಅವರ ಬಗ್ಗೆ ಮಾತನಾಡಿದ್ದು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ಪ್ರತೀ ಬಾರಿ ಆಷಾಢದಲ್ಲಿ ದೇವಸ್ಥಾನಕ್ಕೆ ಬರುತ್ತಿದ್ದವರು ಈ ಬಾರಿ ಬಂದಿಲ್ಲ. ದೇವಸ್ಥಾನದಲ್ಲಿ ಪ್ರತೀ ಆಷಾಢದಲ್ಲೂ ಅತ್ತಿಗೆ ನನಗೆ ಸಿಗುತ್ತಿದ್ದರು.ನನಗೆ ಸುಮಾರು ಹತ್ತು ವರ್ಷದಿಂದಲೂ ವಿಜಯಲಕ್ಷ್ಮಿ ಅತ್ತಿಗೆ ಪರಿಚಯವಿದೆ. ದರ್ಶನ್ ಅಣ್ಣ 'ಅಂಬರೀಶ್' ಸಿನಿಮಾ ಮೂಲಕ ಪರಿಚಯವಾಗಿ ನನ್ನ ತಮ್ಮನಿಗೂ ಕ್ಲೋಸ್ ಆಗಿದ್ದರು. ಅತ್ತಿಗೆನೇ ಅಣ್ಣನಿಗೆ ಬಲ ಆಗಿದ್ದಾರೆʼʼಎಂದರು. The post Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್! first appeared on Vistara News .

ವಿಸ್ತಾರ ನ್ಯೂಸ್ 27 Jul 2024 10:47 am

Karnataka Rains: ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಜುಲೈ 27: ದೇಶದ ಹಲವೆಡೆ ಅತಿ ಹೆಚ್ಚು ಮಳೆಯಾಗುತ್ತಿದೆ. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಒನ್ ಇ೦ಡಿಯ 27 Jul 2024 10:45 am

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

Paris Olympics: ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಬಂದಿದ್ದ ಇರಾಕ್‌ ಪುರುಷರ ತಂಡದ ಜೂಡೊಪಟು ಸಜ್ಜದ್‌ ಸೆಹೆನ್ (Sajjad Sehen) ಡೋಪಿಂಗ್‌ ಪರೀಕ್ಷೆಯಲ್ಲಿ ಸಿಕ್ಕಿ ಬಿದಿದ್ದು ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ The post Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು first appeared on Vistara News .

ವಿಸ್ತಾರ ನ್ಯೂಸ್ 27 Jul 2024 10:43 am

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Illicit Relationship: ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು. The post Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ first appeared on Vistara News .

ವಿಸ್ತಾರ ನ್ಯೂಸ್ 27 Jul 2024 10:33 am

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 27) ಏರಿಕೆಯಾಗಿದೆ. ಬಜೆಟ್‌ ಮಂಡನೆಯ ಬಳಿಕ ಸತತವಾಗಿ ಇಳಿದಿದ್ದ ದರ ಮೊದಲ ಬಾರಿ ಏರಿಕೆಯಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 27 ದುಬಾರಿಯಾಗಿದೆ. The post Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ first appeared on Vistara News .

ವಿಸ್ತಾರ ನ್ಯೂಸ್ 27 Jul 2024 10:33 am

ಬೆಳ್ತಂಗಡಿ: ಮಾಲಾಡಿಯಲ್ಲಿ ಭಾರೀ ಬಿರುಗಾಳಿ; ವ್ಯಾಪಕ ಹಾನಿ

ಬೆಳ್ತಂಗಡಿ: ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ. ಮಾಲಾಡಿಯ ಶಾಂತಿಧಾಮ ಆಶ್ರಮಕ್ಕೆ ಸಂಪೂರ್ಣವಾಗಿ ಹಾನಿಯಾಗಿದ್ದು, ಗಾಳಿಯ ಅಬ್ಬರಕ್ಕೆ ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ನೆಲ ಕಚ್ವಿದೆ. ಅದೃಷ್ಟವಶಾತ್ ಆಶ್ರಮದಲ್ಲಿ ಇದ್ದವರು ಅಪಾಯದಿಂದ ಪಾರಗಿದ್ದಾರೆ. ಲಭ್ಯ ಮಾಹಿತಿಯಂತೆ ಮಾಲಾಡಿ,ಸೋಣಂದೂರಿನಲ್ಲಿ ಭಾರೀ ಗಾಳಿಗೆ ಸುಮಾರು 11ಮನೆಗಳಿಗೆ ತೀವ್ರ ತರದ ಹಾನಿಗಳಾಗಿದೆ. ಭಾರೀ ಗಾತ್ರದ ಮರಗಳು ನೆಲಕ್ಕೆ ಉರುಳಿವೆ. ಈ ಪರಿಸರದಲ್ಲಿ ಕೃಷಿಗೆ ವ್ಯಾಪಕ ಹಾನಿಯಾಗಿದ್ದು, ಅಡಿಕೆ ಮರಗಳು ಮುರಿದು ಬಿದ್ದಿವೆ. ಕೃಷಿ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿಗಳು ತಿಳಿದು ಬರಬೇಕಾಗಿದೆ. ಒಂದೇ ಗ್ರಾಮಪಂಚಾಯತು ವ್ಯಾಪ್ತಿಯಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಕೋಟ್ಯಂತರ ರೂ. ಹಾನಿ ಸಂಭವಿಸಿದೆ. ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಹಾನಿಗೀಡಾದ ಪ್ರದೇಶಗಳಲ್ಲಿ ತುರ್ತು ನೆರವು ಕಾರ್ಯಾಚರಣೆ ನಡೆಸಲಾಗಿದ್ದು ಮರಗಳನ್ನು ತೆರವು ಗೊಳಿಸಲಾಗಿದೆ. ಹಾನಿಗೆ ಈಡಾದ ಪ್ರದೇಶಗಳಿಗೆ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್,ಮಾಜಿ ಅಧ್ಯಕ್ಷ ಬೇಬಿ ಸುವರ್ಣ, ಅಭಿವೃದ್ಧಿ ಅಧಿಕಾರಿ ರಾಜಶೇಖರ ರೈ, ಕಾರ್ಯದರ್ಶಿ ಗುಣಕರ ಹೆಗ್ಡೆ, ಗ್ರಾ.ಪಂ‌ ಸದಸ್ಯ ಉಮೇಶ್ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಾರ್ತಾ ಭಾರತಿ 27 Jul 2024 10:15 am

ಬೆಳ್ತಂಗಡಿ: ಗಾಳಿ ಮಳೆಯ ಅಬ್ಬರಕ್ಕೆ ನಲುಗಿದ ನೆರಿಯ

ಬೆಳ್ತಂಗಡಿ:  ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರಿಸಿದ್ದು ವ್ಯಾಪಕ ಹಾನಿಗೆ ಕಾರಣವಾಗಿದೆ. ಮಾಲಾಡಿಯ ಶಾಂತಿಧಾಮ ಆಶ್ರಮಕ್ಕೆ ಸಂಪೂರ್ಣವಾಗಿ ಹಾನಿಯಾಗಿದ್ದು, ಗಾಳಿಯ ಅಬ್ಬರಕ್ಕೆ ಕಟ್ಟಡದ ಮೇಲ್ಛಾವಣಿ ಸಂಪೂರ್ಣವಾಗಿ ನೆಲ ಕಚ್ವಿದೆ. ಅದೃಷ್ಟವಶಾತ್ ಆಶ್ರಮದಲ್ಲಿ ಇದ್ದವರು ಅಪಾಯದಿಂದ ಪಾರಗಿದ್ದಾರೆ. ಲಭ್ಯ ಮಾಹಿತಿಯಂತೆ ಮಾಲಾಡಿ, ಸೋಣಂದೂರಿನಲ್ಲಿ ಭಾರೀ ಗಾಳಿಗೆ ಸುಮಾರು 11ಮನೆಗಳಿಗೆ ತೀವ್ರ ತರದ ಹಾನಿಗಳಾಗಿವೆ. ಭಾರೀ ಗಾತ್ರದ ಮರಗಳು ನೆಲಕ್ಕೆ ಉರುಳಿವೆ. ಈ ಪರಿಸರದಲ್ಲಿ ಕೃಷಿಗೆ ವ್ಯಾಪಕ ಹಾನಿಯಾಗಿದ್ದು, ಅಡಿಕೆ ಮರಗಳು ಮುರಿದು ಬಿದ್ದಿವೆ. ಕೃಷಿ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿಗಳು ತಿಳಿದು ಬರಬೇಕಾಗಿದೆ. ಒಂದೇ ಗ್ರಾಮಪಂಚಾಯತು ವ್ಯಾಪ್ತಿಯಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಕೋಟ್ಯತರ ರೂ. ಹಾನಿ ಸಂಭವಿಸಿದೆ. ಹಾನಿಗೀಡಾದ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಾರ್ತಾ ಭಾರತಿ 27 Jul 2024 10:15 am

ಬೈಸ್‌ ರೂಪದಲ್ಲಿ 42 ರನ್‌ ಬಿಟ್ಟುಕೊಟ್ಟು 147 ವರ್ಷಗಳ ಅನಗತ್ಯ ದಾಖಲೆ ಮುರಿದ ಕ್ಲೈವ್‌ ಮದಾಂಡೆ!

Clive Madande breaks 147 Years Old Record: ಜಿಂಬಾಬ್ವೆ ಕ್ರಿಕೆಟ್‌ ತಂಡದ ವಿಕೆಟ್‌ ಕೀಪರ್‌ ಕ್ಲೈವ್‌ ಮದಾಂಡೆ 147 ವರ್ಷಗಳ ಹಳಯೆ ಅನಗತ್ಯ ದಾಖಲೆಯನ್ನು ಮುರಿದಿದ್ದಾರೆ. ಐರ್ಲೆಂಡ್‌ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಸ್ಟಂಪ್ಟ್‌ ಹಿಂದೆ ಬರೋಬ್ಬರು 42 ರನ್‌ಗಳನ್ನು ಎದುರಾಳಿ ತಂಡಕ್ಕೆ ಬೈಸ್‌ ರೂಪದಲ್ಲಿ ನೀಡಿದ್ದಾರೆ. ಜಿಂಬಾಬ್ವೆ ನೀಡಿದ 59 ಹೆಚ್ಚುವರಿ ರನ್‌ಗಳಲ್ಲಿ ಮದಾಂಡೆ 42 ರನ್‌ ನೀಡಿದ್ದಾರೆ. ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಒಬ್ಬ ವಿಕೆಟ್‌ ಕೀಪರ್‌ ನೀಡಿರುವ ಅತ್ಯಂತ ಹೆಚ್ಚು ಬೈಸ್‌ ಇದಾಗಿದೆ.

ವಿಜಯ ಕರ್ನಾಟಕ 27 Jul 2024 10:15 am

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Actor Darshan: ಇದೀಗ ಕಾಳಿ ಉಪಾಸಕಿ ಚಂದಾ ಪಾಂಡೇ ಅಮ್ಮಾಜಿ ಅವರು ದರ್ಶನ್​ಗೆ ಈ ಸಂಕಷ್ಟ ಎದುರಾಗಲು ಅವರ ತಲೆ ಗೂದಲಿನಿಂದ ಹಿಡಿದು ಹಲವು ಕಾರಣಗಳಿವೆ ಎಂದಿದ್ದು, ಅವುಗಳ ಬಗ್ಗೆ ಮಾಹಿತಿ ಮಾಧ್ಯಮವೊಂದಕ್ಕೆ ನೀಡಿದ್ದಾರೆ. ಕಾಳಿ ಉಪಾಸಕಿ ಚಂದಾ ಪಾಂಡೆ 'ನಾನು 2018ರಲ್ಲಿ ದರ್ಶನ್ ಗೆ ಎಚ್ಚರಿಕೆ ನೀಡಿದ್ದೆ' ಎಂದಿದ್ದಾರೆ. The post Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ! first appeared on Vistara News .

ವಿಸ್ತಾರ ನ್ಯೂಸ್ 27 Jul 2024 10:13 am

ಅನಧಿಕೃತ ಜಾಹೀರಾತು ತೆರವು ವಿಫಲ: ಬಿಬಿಎಂಪಿ, ಸರ್ಕಾರಕ್ಕೆ ಹೈಕೋರ್ಟ್ ಕ್ಲಾಸ್‌

ಬೆಂಗಳೂರು, ಜುಲೈ 27: ಬೆಂಗಳೂರು ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳಿಗೆ ಕಡಿವಾಣ ಹಾಕುವಲ್ಲಿ ಮತ್ತು ನ್ಯಾಯಾಲಯದ ಆದೇಶಗಳನ್ನು ಪಾಲಿಸುವಲ್ಲಿ ವಿಫಲವಾಗಿರುವ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ನಗರದಲ್ಲಿ ಅನಧಿಕೃತ ಜಾಹೀರಾತು ಫಲಕ, ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ಗಳ ಹಾವಳಿ ತಡೆಯಲು ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಕೋರಿ

ಒನ್ ಇ೦ಡಿಯ 27 Jul 2024 10:11 am

ಸಂಪಾದಕೀಯ | ಭಾರತದಲ್ಲಿ ಮಲ ಹೊರುವ ವ್ಯವಸ್ಥೆ ಇಲ್ಲವಾಗಿಸುವುದು ಯಾಕೆ ಅಸಾಧ್ಯ?

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

ವಾರ್ತಾ ಭಾರತಿ 27 Jul 2024 10:01 am

ಬೆಳ್ಳಂಬೆಳಗ್ಗೆ ನವಿ ಮುಂಬೈನ ಶಹಬಾಜ್ ಗ್ರಾಮದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಅಪ್‌ಡೇಟ್ ಇಲ್ಲಿದೆ

ಮುಂಬೈ, ಜುಲೈ. 27: ಶನಿವಾರ ಬೆಳಗ್ಗೆ ನವಿ ಮುಂಬೈನ ಶಹಬಾಜ್ ಗ್ರಾಮದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವಿ

ಒನ್ ಇ೦ಡಿಯ 27 Jul 2024 9:52 am

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Encounter in Kupwara: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಕುಮ್ಕಾರಿ ಪ್ರದೇಶದಲ್ಲಿ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್‌ಕೌಂಟರ್ ಪ್ರಾರಂಭವಾಯಿತು. ಈ ವೇಳೆ ಸೈನಿಕರು ಗಾಯಗೊಂಡರು. ಇದು ಮೂರು ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್. The post Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ first appeared on Vistara News .

ವಿಸ್ತಾರ ನ್ಯೂಸ್ 27 Jul 2024 9:46 am

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Champions Trophy 2025: ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. The post Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ first appeared on Vistara News .

ವಿಸ್ತಾರ ನ್ಯೂಸ್ 27 Jul 2024 9:43 am

ʼದೊಡ್ಡ ವಿಕೆಟ್ ಪತನ’; ಎರಡು ತಿಂಗಳು ಮಾತ್ರ ರಾಜ್ಯದಲ್ಲಿ ಸಿದ್ದರಾಮಯ್ಯ ಅಧಿಕಾರ: ಅಚ್ಚರಿ ಹೇಳಿಕೆ ನೀಡಿದ ಬಿ.ವೈ ವಿಜಯೇಂದ್ರ

ಬೆಂಗಳೂರು, ಜುಲೈ 27: 2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬಂದು ಒರೋಬ್ಬರು ಒಂದು ವರ್ಷ ಪೂರೈಸಿದ್ರು ಸಹ ಸರ್ಕಾರದ ಪತನದ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ವಿಪಕ್ಷಗಳು ಕಾಂಗ್ರೆಸ್‌ ನಲ್ಲಿ ಅಸಮಾಧಾನವೇ ಸರ್ಕಾರ ಪತನಕ್ಕೆ ಕಾರಣವಾಗಲಿದೆ ಎಂದು ಸ್ಟೋಟಕ ಹೇಳಿಕೆಯನ್ನ ನೀಡುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ

ಒನ್ ಇ೦ಡಿಯ 27 Jul 2024 9:41 am

ರಬ್ಬರ್ ಬೆಳೆ ಉತ್ತೇಜನಕ್ಕೆ 320 ಕೋಟಿ ರೂ ಅನುದಾನ: ಈಶಾನ್ಯಕ್ಕೆ ವರ, ಕೇರಳಕ್ಕೆ ಶಾಪ

ದೇಶೀಯ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಬ್ಬರ್‌ ಬೆಲೆ ಏರುಗತಿಯಲ್ಲಿದೆ. ಪ್ರಸ್ತುತ ಪ್ರತಿ ಕೆಜಿ ರಬ್ಬರ್‌ ಗೆ 212 ರೂ.ಬೆಲೆ ಇದ್ದರೂ ಇದು ಶಾಶ್ವತವಲ್ಲ. ಹಲವು ವರ್ಷಗಳ ಬಳಿಕ ರಬ್ಬರ್‌ ಬೆಲೆ 200 ದಾಟಿದೆ. ಕೆಲವೆಡೆ ವ್ಯಾಪಾರಿಗಳು 215 ರೂ.ವರೆಗೆ ಹಣ ನೀಡಿ ರಬ್ಬರ್‌ ಶೀಟ್‌ ಸಂಗ್ರಹಿಸುತ್ತಿದ್ದಾರೆ. ಎಡೆ ಬಿಡದ ಮಳೆ ಹಿನ್ನೆಲೆಯಲ್ಲಿಸಂಪೂರ್ಣವಾಗಿ ಟ್ಯಾಪಿಂಗ್‌ ಪ್ರಾರಂಭಿಸದ ಕಾರಣ, ಸರಕುಗಳ ಲಭ್ಯತೆ ಕಡಿಮೆಯಾಗಿದೆ.

ವಿಜಯ ಕರ್ನಾಟಕ 27 Jul 2024 9:36 am

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Murder in PG: ಮೊನ್ನೆಯೇ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು, ಅಲ್ಲಿನ ಭೋಪಾಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. The post Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ first appeared on Vistara News .

ವಿಸ್ತಾರ ನ್ಯೂಸ್ 27 Jul 2024 9:35 am

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Kaveri Aarti: ನಾಡಿನ ಪುಣ್ಯನದಿ ಕಾವೇರಮ್ಮನಿಗೆ ಕಾವೇರಿ ಆರತಿ ಮಾಡುವ ಯೋಜನೆ ಬಗ್ಗೆ ಸರ್ಕಾರದಿಂದ ಚಿಂತನೆ ನಡೆದಿದ್ದು, ಕಾವೇರಿ ಆರತಿಗಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದ ಸಮಿತಿ ರಚಿಸಿದೆ. The post Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ first appeared on Vistara News .

ವಿಸ್ತಾರ ನ್ಯೂಸ್ 27 Jul 2024 9:22 am

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Malaika Arora: ಈವೆಂಟ್‌ನಲ್ಲಿ ಜೋಡಿಯ ಹಲವಾರು ವೀಡಿಯೊಗಳು ಮತ್ತು ಚಿತ್ರಗಳು ಸಾಮಾಜಿಕ ವೈರಲ್‌ ಆಗಿವೆ. ಆದರೆ ಇಬ್ಬರೂ ಒಂದೇ ಈವೆಂಟ್‌ನಲ್ಲಿ ಭಾಗಿಯಾಗಿದ್ದರೂ ಈಗ ಪರಸ್ಪರ ದೂರ ಆಗಿದ್ದಾರೆ.ಇಬ್ಬರೂ ಒಂದೇ ವೇದಿಕೆ ಏರಿದ್ದಾರೆ. ಆದರೆ, ಒಬ್ಬರಿಗೊಬ್ಬರು ನಿರ್ಲಕ್ಷಿಸಿದ್ದಾರೆ. ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಂಡಿಲ್ಲ. The post Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ? first appeared on Vistara News .

ವಿಸ್ತಾರ ನ್ಯೂಸ್ 27 Jul 2024 9:21 am

IND vs SL: ರೋಹಿತ್‌ ಶರ್ಮಾ ಕ್ಯಾಪ್ಟನ್‌ ಅಲ್ಲ, ಲೀಡರ್‌ ಎಂದ ಸೂರ್ಯಕುಮಾರ್‌ ಯಾದವ್‌!

Suryakumar Yadav on Rohit Sharma's Captanicy: ಶ್ರೀಲಂಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್‌ ಯಾದವ್ ಅವರು, ರೋಹಿತ್‌ ಶರ್ಮಾ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಗುಣಗಾಣ ಮಾಡಿದ್ದಾರೆ. ಇವರ ನಾಯಕತ್ವದಿಂದ ನನಗೆ ಸಾಕಷ್ಟು ಸ್ಪೂರ್ತಿ ಸಿಕ್ಕಿದೆ ಎಂದು ಹೇಳಿದ ಅವರು, ತಂಡದಲ್ಲಿ ರೋಹಿತ್‌ ಶರ್ಮಾ ಅವರು ನಾಯಕನಾಗಿ ವರ್ತಿಸುತ್ತಿರಲಿಲ್ಲ, ಇದರ ಬದಲು ಅವರು ಒಬ್ಬ ಲೀಡರ್ ಆಗಿ ಮೈದಾನ ಮತ್ತು ಮೈದಾನದ ಹೊರಗೆ ಕಾಣಿಸುತ್ತಾರೆ ಎಂದು ಹೇಳಿದ್ದಾರೆ.

ವಿಜಯ ಕರ್ನಾಟಕ 27 Jul 2024 9:12 am

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Narendra Modi: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ. The post Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ first appeared on Vistara News .

ವಿಸ್ತಾರ ನ್ಯೂಸ್ 27 Jul 2024 9:09 am

ಭೂಕುಸಿತ ತಡೆಯುವಲ್ಲಿ ಮಾನವನೇಕೆ ಸೋತ?: ಮಣ್ಣಿನ ಗುಣ ಅರಿಯದೆ ಕಾಮಗಾರಿ ಏಕೆ ಅಪಾಯಕಾರಿ?

ಹಕ್ಕಿಯಂತೆ ಹಾರಬಲ್ಲ, ಮೀನಿನಂತೆ ಈಜಬಲ್ಲ ಮಾನವ ಭೂಮಿಯಲ್ಲಿ ಮಾನವನಂತೆ ಬದುಕಲು ಕಲಿತಿಲ್ಲ ಎಂಬ ಮಾತುಗಳನ್ನು ತಲೆತಲಾಂತರಗಳಿಂದ ಹೇಳುತ್ತಲೇ ಬಂದಿರುವ ಮಾತು. ಈ ಮಾತು ಹಳೆಯದಾಯಿತೇ ಹೊರತು ಮಾನವ ಮಾತ್ರ ಬದಲಾಗಿಯೇ ಇಲ್ಲ. ಬದಲಾಗಿ ಭೂಮಿಯಲ್ಲಿ ಮತ್ತಷ್ಟು ಅವಾಂತರಗಳನ್ನು ಮಾಡಿದ ಪರಿಣಾಮವೇ ಇದೀಗ ಸಮಸ್ಯೆ ಬೃಹದಾಕಾರವಾಗಿ ಬೆಳೆದು ನಿಂತಿದೆ. 2018ರಲ್ಲಿ ಕೇರಳ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ಆದ ಪ್ರಕೃತಿ ವಿಕೋಪಗಳು ಬಹುದೊಡ್ಡ ಪಾಠವಾಗಬೇಕಿತ್ತು. ಆದರೆ ಈವರೆಗೂ ಎಚ್ಚೆತ್ತುಕೊಂಡಿಲ್ಲ. ಮಾನವನೆಲ್ಲಿ ಸೋತ? ಭೂವಿಜ್ಞಾನಿಗಳು ಹೀಗೆ ಹೇಳಿದ್ದಾರೆ.

ವಿಜಯ ಕರ್ನಾಟಕ 27 Jul 2024 9:03 am

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Actor Rajinikanth: ಸೌಂದರ್ಯಾ ಅವರು ತಮ್ಮ ಇನ್‌ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ, ರಜನಿಕಾಂತ್ ಮೊಮ್ಮಗನೊಂದಿಗೆ ಕುಳಿತು ತರಗತಿಗೆ ಕರೆದುಕೊಂಡು ಹೋಗುತ್ತಿರುವುದು ನೋಡಬಹುದು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಟನನ್ನು ನೋಡಿ ಅಚ್ಚರಿಗೊಂಡಿದ್ದಾರೆ. ನಟ ಮೊಮ್ಮಗನನ್ನು ಶಾಲೆಗೆ ಬಿಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನು ಅವರ ಮಗಳು ಸೌಂದರ್ಯಾ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. The post Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌! first appeared on Vistara News .

ವಿಸ್ತಾರ ನ್ಯೂಸ್ 27 Jul 2024 9:02 am

ನಾಸಾ ಜತೆ ಜಂಟಿ ಮಿಷನ್: ಬಾಹ್ಯಾಕಾಶ ಯಾನಕ್ಕೆ ಇಸ್ರೋ ಗಗನಯಾತ್ರಿ

ಹೊಸದಿಲ್ಲಿ: ನಾಸಾ ಜತೆಗಿನ ಸಹಯೋಗದಲ್ಲಿ ಇಸ್ರೋ ಗಗನಯಾತ್ರಿಯೊಬ್ಬರು ಸದ್ಯದಲ್ಲೇ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ಐಎಸ್ಎಸ್)ಗೆ ಯಾನ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಬಾಹ್ಯಾಕಾಶ ಖಾತೆ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಲೋಕಸಭೆಯಲ್ಲಿ ಬುಧವಾರ ನೀಡಿದ ಲಿಖಿತ ಉತ್ತರದಲ್ಲಿ ಸಚಿವರು ಈ ಅಂಶವನ್ನು ಬಹಿರಂಗಪಡಿಸಿದ್ದಾರೆ. ಇದು ಇಸ್ರೋ, ನಾಸಾ ಮತ್ತು ನಾಸಾ ಗುರುತಿಸಿದ ಖಾಸಗಿ ಸಂಸ್ಥೆ ಆ್ಯಕ್ಸಿಯಾಮ್ ಸ್ಪೇಸ್ ಸಹಭಾಗಿತ್ವದ ಪ್ರಯತ್ನವಾಗಿದ್ದು, ಐಎಸ್ಎಸ್ ಗೆ ತೆರಳುವ ಜಂಟಿ ಮಿಷನ್ ಗೆ ಸಂಬಂಧಿಸಿದಂತೆ ಇಸ್ರೋ, ಆ್ಯಕ್ಸಿಯಾಮ್ ಜತೆ ಒಪ್ಪಂದ ಮಾಡಿಕೊಂಡಿದೆ ಎಂದು ಅವರು ವಿವರಿಸಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಸುಗತಾ ರಾಯ್ ಅವರು ಆ್ಯಕ್ಸಿಯಾಮ್-4ಮಿಷನ್ ಬಾಹ್ಯಾಕಾಶ ಯಾನ ಮತ್ತು ಗಗನಯಾನ ಮಿಷನ್ ಬಗ್ಗೆ ಸ್ಪಷ್ಟನೆ ಕೇಳಿದ್ದರು. ಐಎಸ್ಎಸ್ಗೆ ನಾಲ್ಕನೇ ಬಾಹ್ಯಾಕಾಶ ಯಾನಿಯನ್ನು ಕಳುಹಿಸುವ ಸಂಬಂಧ ಆ್ಯಕ್ಸಿಯಾಮ್ ಸ್ಪೇಸ್ ಜತೆಗೆ ಒಪ್ಪಂದ ಮಾಡಿಕೊಂಡಿರುವುದಾಗಿ ನಾಸಾ ಪ್ರಕಟಿಸಿದೆ. ಈ ಮಿಷನ್ 2024ರ ಆಗಸ್ಟ್ ನಲ್ಲಿ ಫ್ಲೋರಿಡಾದ ಕೆನಡಿ ಸ್ಪೇಸ್ ಸೆಂಟರ್ ನಿಂದ ಆರಂಭವಾಗಲಿದೆ ಎಂದು ನಾಸಾ ಹೇಳಿದೆ. ಗಗನಯಾನ ಮಿಷನ್ ಗೆ ತರಬೇತಿ ಪಡೆದಿರುವ ಭಾರತೀಯ ವಾಯು ಪಡೆಯ ನಾಲ್ವರು ಪೈಲಟ್ ಗಳ ಪೈಕಿ ಒಬ್ಬರು ಈ ಯಾನ ಕೈಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಇಸ್ರೋ ರಚಿಸಿದ ಬಾಹ್ಯಾಕಾಶ ಯಾನಿ ಆಯ್ಕೆ ಸಮಿತಿ, ಐಎಎಫ್ ಪರೀಕ್ಷಿತ ಪೈಲಟ್ ಗಳಿಂದ ನಾಲ್ಕು ಮಂದಿಯನ್ನು ಆಯ್ಕೆ ಮಾಡಿತ್ತು. ಎಲ್ಲ ನಾಲ್ಕು ಮಂದಿಗೂ ಕೋವಿಡ್-19 ಸಾಂಕ್ರಾಮಿಕದ ವೇಳೆ ರಷ್ಯಾದ ಮೂಲ ಮಾಡ್ಯೂಲ್ ನಲ್ಲಿ ತರಬೇತಿ ನೀಡಲಾಗಿತ್ತು.

ವಾರ್ತಾ ಭಾರತಿ 27 Jul 2024 9:01 am

ಯತೀಂದ್ರ ಸಿದ್ದರಾಮಯ್ಯ, ಸಚಿವ ಜಮೀರ್‌ಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು, ಜುಲೈ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಬೇರೆ-ಬೇರೆ ಪ್ರಕರದಲ್ಲಿ ನ್ಯಾಯಾಲಯ ರಿಲೀಫ್‌ ನೀಡಿದೆ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಮತ್ತೊಂದೆಡೆ ಕೋರ್ಟ್ ಸಚಿವ ಜಮೀರ್‌ ಅಹ್ಮದ್ ಖಾನ್ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ. ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ

ಒನ್ ಇ೦ಡಿಯ 27 Jul 2024 9:01 am

Paris Olympics 2024: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಕ್ರೀಡಾ ಸ್ಫರ್ಧೆಗಳು; ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ

Paris Olympics 2024: ಇಂದು ನಡೆಯುವ 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಮತ್ತು ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಕಣಕ್ಕಿಳಿಯಲಿದ್ದಾರೆ. The post Paris Olympics 2024: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಕ್ರೀಡಾ ಸ್ಫರ್ಧೆಗಳು; ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ first appeared on Vistara News .

ವಿಸ್ತಾರ ನ್ಯೂಸ್ 27 Jul 2024 9:00 am

Students Night: ವಿದ್ಯಾರ್ಥಿಗಳು ಕುಡಿದು ಕುಪ್ಪಳಿಸಲು ʼಸ್ಟೂಡೆಂಟ್ಸ್‌ ನೈಟ್‌ʼ ಆಯೋಜಿಸಿದ ಬಾರ್‌ ಮಾಲಿಕ! ಕಾರ್ಯಕ್ರಮ ರದ್ದು

Students Night: ʼಸ್ಟೂಡೆಂಟ್ಸ್ ವೆಡ್‌ನೆಸ್‌ಡೇ ನೈಟ್ʼ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಮುಕ್ತ ಆಹ್ವಾನವನ್ನು ನಗರದ ದೇರೆಬೈಲ್ ಕೊಂಚಾಡಿಯಲ್ಲಿರುವ ಲಿಕ್ಕರ್‌ ಲಾಂಜ್‌ ಎಂಬ ಬಾರ್‌ ನೀಡಿತ್ತು. ಈ ಬಾರ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಅಬಕಾರಿ ಇಲಾಖೆ ಲಿಕ್ಕರ್ ಲಾಂಜ್ ವಿರುದ್ಧ ಎಫ್ಐಆರ್ ದಾಖಲಿಸಿದೆ. The post Students Night: ವಿದ್ಯಾರ್ಥಿಗಳು ಕುಡಿದು ಕುಪ್ಪಳಿಸಲು ʼಸ್ಟೂಡೆಂಟ್ಸ್‌ ನೈಟ್‌ʼ ಆಯೋಜಿಸಿದ ಬಾರ್‌ ಮಾಲಿಕ! ಕಾರ್ಯಕ್ರಮ ರದ್ದು first appeared on Vistara News .

ವಿಸ್ತಾರ ನ್ಯೂಸ್ 27 Jul 2024 9:00 am

ಒಲಿಂಪಿಕ್ಸ್: ಮೊದಲ ದಿನ ಭಾರತಕ್ಕೆ ಹಲವು ಸ್ಪರ್ಧೆ

ಹೊಸದಿಲ್ಲಿ: ಪ್ಯಾರೀಸ್ ಒಲಿಂಪಿಕ್ಸ್ ನ ಮೊದಲ ದಿನವಾದ ಶನಿವಾರ ರೋವರ್ ಬಾಲರಾಜ್ ಪನ್ವರ್ ಮತ್ತು ಶೂಟರ್ ಗಳು ಭಾರತೀಯ ಸ್ಪರ್ಧೆಯ ಮುಂಚೂಣಿಯಲ್ಲಿರುತ್ತಾರೆ. ಭಾರತದ ಪುರುಷರ ಹಾಕಿ ತಂಡ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ. ಬ್ಯಾಡ್ಮಿಂಟನ್, ಟೆನಿಸ್ ಮತ್ತು ಟೇಬಲ್ ಟೆನಿಸ್ ಸ್ಪರ್ಧೆಗಳಲ್ಲೂ ಭಾರತೀಯ ಕ್ರೀಡಾಪಟುಗಳು ಶನಿವಾರ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಾಲರಾಜ್ ಪನ್ವರ್, ಪುರುಷರ ಸಿಂಗಲ್ ಸ್ಕಲ್ಸ್ ನಲ್ಲಿ ಭಾಗವಹಿಸುವರು. ಇದೇ ವೇಳೆ 10 ಮೀಟರ್ ಏರ್ ರೈಫಲ್ ಮಿಶ್ರ ತಂಡದ ಅರ್ಹತಾ ಸುತ್ತಿನಲ್ಲಿ ಭಾರತದ ಸಂದೀಪ್ ಸಿಂಗ್/ಇಳವೇನಿಲ್ ವೆಲೇರಿಯನ್, ಅರ್ಜುನ್ ಬಬುತಾ/ರಮಿತಾ ಜಿಂದಾನ್ ಸೆಣೆಸುವರು. ಮಧ್ಯಾಹ್ನ 2 ಗಂಟೆಗೆ ಅರ್ಜುನ್ ಸಿಂಗ್ ಚೀಮಾ ಮತ್ತು ಸರ್ಬಜೋತ್ ಸಿಂಗ್ 10 ಮೀಟರ್ ಏರ್ ಪಿಸ್ತೂಲ್ ಪುರುಷರ ಅರ್ಹತಾ ಸುತ್ತಿನಲ್ಲಿ ಭಾಗವಹಿಸುವರು. 10 ಮೀಟರ್ ಏರ್ ರೈಫಲ್ ತಂಡ ಫೈನಲ್ಸ್ ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ಭಾರತೀಯ ತಂಡ ಅರ್ಹತೆ ಪಡೆದಲ್ಲಿ ಇದರಲ್ಲಿ ಭಾಗವಹಿಸಲಿದೆ. ಟೆನಿಸ್ ಪಟುಗಳಾದ ರೋಹನ್ ಬೋಪಣ್ಣ/ಎನ್.ಶ್ರೀರಾಮ್ ಬಾಲಾಜಿ ಜೋಡಿ ಪುರುಷರ ಡಬಲ್ಸ್ ನ ಮೊದಲ ಸುತ್ತಿನಲ್ಲಿ ಫ್ರಾನ್ಸ್ ನ ಎಡ್ವರ್ಡ್ ರೋಜರ್-ವೆಸೆಲಿನ್ ಜೋಡಿಯನ್ನು ಮಧ್ಯಾಹ್ನ 3.30ಕ್ಕೆ ಎದುರಿಸಲಿದೆ. ಸಂಜೆ 4ಕ್ಕೆ ಮನು ಭಾಕೆರ್ ಮತ್ತು ರಿದಂ ಸಂಗ್ವಾನ್ 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಅರ್ಹತಾ ಸುತ್ತಿನಲ್ಲಿ ಪಾಲ್ಗೊಳ್ಳುವರು. ರಾತ್ರಿ 7.10ಕ್ಕೆ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಲಕ್ಷ್ಯ ಸೇನ್ ಅವರು ಗ್ವಾಟೆಮಾಲಾದ ಕೆವಿನ್ ಕಾರ್ಡನ ಅವರನ್ನು ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಎದುರಿಸಲಿದ್ದಾರೆ. ಟೇಬಲ್ ಟೆನಿಸ್ ನಲ್ಲಿ ಹರ್ಮೀತ್ ದೇಸಾಯಿ ಅವರು ಪುರುಷರ ಸಿಂಗಲ್ಸ್ ಪ್ರಾಥಮಿಕ ಸುತ್ತಿನಲ್ಲಿ ಜೋರ್ಡನ್ ನ ಝಿಯಾದ್ ಅಬೋ ಯೆಮನ್ ಅವರನ್ನು ಎದುರಿಸಲಿದ್ದಾರೆ. ರಾತ್ರಿ 8ಕ್ಕೆ ಸಾತ್ವಿಕ್ ಸಾಯಿರಾಜ್ ರಂಕಾರೆಡ್ಡಿ/ಚಿರಾಗ್ ಶೆಟ್ಟಿ ಜೋಡಿ ಫ್ರಾನ್ಸ್ ನ ಲೂಕಸ್ ಕೋರ್ವೀ/ರೊನಾನ್ ಲಾಬರ್ ಜೋಡಿಯನ್ನು ಪುರುಷರ ಡಬಲ್ಸ್ ತಂಡ ಸ್ಪರ್ಧೆಯಲ್ಲಿ ಎದುರಿಸಲಿದೆ. ರಾತ್ರಿ 9 ಗಂಟೆಗೆ ಭಾರತದ ಪುರುಷರ ತಂಡ ಹಾಕಿ ಸ್ಪರ್ಧೆಯ ಬಿ ಗುಂಪಿನಲ್ಲಿ ನ್ಯೂಜಿಲೆಂಡ್ ಜತೆ ಸೆಣೆಸಲಿದೆ. ರಾತ್ರಿ 11.50ಕ್ಕೆ ಅಶ್ವಿನಿ ಪೊನ್ನಪ್ಪ/ತನಿಶಾ ಕ್ರಾಸ್ಟೊ ಜೋಡಿ ಕೊರಿಯಾದ ಕಿಮ್ ಸೊ ಯಂಗ್ ಮತ್ತು ಕಾಂಗ್ ಹೀ ಯಂಗ್ ವಿರುದ್ಧ ಮಹಿಳೆಯರ ಡಬಲ್ಸ್ ನಲ್ಲಿ ಸೆಣೆಸಲಿದೆ. ಬಾಕ್ಸಿಂಗ್ ನಲ್ಲಿ ಮಧ್ಯರಾತ್ರಿ ಮಹಿಳೆಯರ 54 ಕೆಜಿ ವಿಭಾಗದಲ್ಲಿ ಪ್ರೀತಿ ಪವಾರ್ ಅವರು ವಿಯೇಟ್ನಂನ ಥಿ ಕಿಂಗ್ ಅನ್ವೊ ವಿರುದ್ಧ ಸೆಣೆಸುವರು.

ವಾರ್ತಾ ಭಾರತಿ 27 Jul 2024 8:36 am

Building Collapsed: 3 ಅಂತಸ್ತಿನ ಕಟ್ಟಡ ಕುಸಿತ; ಅವಶೇಷದ ಅಡಿಯಲ್ಲಿ ಹಲವರು ಸಿಕ್ಕಿ ಬಿದ್ದಿರುವ ಶಂಕೆ

Building Collapsed: ನವಿಮುಂಬೈಯ ಶಹಬಾಜ್‌ನಲ್ಲಿ ಇಂದು ಬೆಳಿಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವೀ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. The post Building Collapsed: 3 ಅಂತಸ್ತಿನ ಕಟ್ಟಡ ಕುಸಿತ; ಅವಶೇಷದ ಅಡಿಯಲ್ಲಿ ಹಲವರು ಸಿಕ್ಕಿ ಬಿದ್ದಿರುವ ಶಂಕೆ first appeared on Vistara News .

ವಿಸ್ತಾರ ನ್ಯೂಸ್ 27 Jul 2024 8:31 am

Karnataka Dam Water Level: ಮಳೆ ಆರ್ಭಟಕ್ಕೆ ತುಂಗಭದ್ರಾ ಡ್ಯಾಂ ಭರ್ತಿ; ರಾಜ್ಯ 14 ಡ್ಯಾಂಗಳ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವ

ಬೆಂಗಳೂರು, ಜುಲೈ 27: ಕರ್ನಾಟಕ ಎಲ್ಲೆಡೆ ಮಳೆರಾಯನ ಆರ್ಭಟ ಹೆಚ್ಚಳವಾಗಿದ್ದು, ಜಲಾಶಯಗಳಿಗೆ ನಿರಂತರವಾಗಿ ಒಳಹರಿವು ಹೆಚ್ಚಾಗುತ್ತಿದೆ. ಕಳೆದ ಬಾರಿಗಿಂತ ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಮಳೆ ಚೆನ್ನಾಗಿ ಆಗುತ್ತಿದೆ. ಇದರಿಂದ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದ್ದು, ಪ್ರವಾಹದ ಭೀತಿ ಎದುರಾಗಿದೆ. ಕರ್ನಾಟಕದ ಕೆಲವು ಜಲಾಶಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತುಂಗಭದ್ರಾ, ಕೆಆರ್​​ಎಸ್​, ಹಾರಂಗಿ,

ಒನ್ ಇ೦ಡಿಯ 27 Jul 2024 8:18 am

Uttara Kannada Landslide: ಶಿರೂರು ಗುಡ್ಡಕುಸಿತ; ಅರ್ಜುನ್‌ ಶೋಧಕ್ಕೆ ಸಿಎಂ ಸಿದ್ದರಾಮಯ್ಯಗೆ ಪಿಣರಾಯಿ ಮೊರೆ

Uttara kannada landslide: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್‌ ಪತ್ತೆಗೆ ಹೆಚ್ಚಿನ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ರಕ್ಷಣಾ ಸಚಿವರಿಗೆ ಕೇರಳ‌ ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ. ದಕ್ಷಿಣ ಮತ್ತು ಪೂರ್ವ ನೌಕಾ ಕಮಾಂಡ್‌ಗಳಿಂದ ಹೆಚ್ಚಿನ ಮುಳುಗು ತಜ್ಞರನ್ನು ನೇಮಿಸಲು, ರಿಮೋಟ್ ಚಾಲಿತ ವಾಹನಗಳು, ಆಧುನಿಕ ಉಪಕರಣಗಳನ್ನು ಶೋಧ ಕಾರ್ಯಕ್ಕೆ ನೀಡಲು ಅವರು ಮನವಿ ಮಾಡಿದ್ದಾರೆ. The post Uttara Kannada Landslide: ಶಿರೂರು ಗುಡ್ಡಕುಸಿತ; ಅರ್ಜುನ್‌ ಶೋಧಕ್ಕೆ ಸಿಎಂ ಸಿದ್ದರಾಮಯ್ಯಗೆ ಪಿಣರಾಯಿ ಮೊರೆ first appeared on Vistara News .

ವಿಸ್ತಾರ ನ್ಯೂಸ್ 27 Jul 2024 8:15 am

ಕೈಕೊಟ್ಟ ಪ್ರೂಟ್‌ ತಂತ್ರಾಂಶ; ಬೆಳೆ ವಿಮೆ ಪಾವತಿಯ ಗಡುವು ವಿಸ್ತರಿಸಲು ರೈತರ ಒತ್ತಾಯ

ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಅಡಕೆ, ಶುಂಠಿ, ಕಾಳುಮೆಣಸು, ಮಾವು ಬೆಳೆ ಹವಾಮಾನ ಆಧರಿತ ವಿಮೆ ಪಡೆಯಲು ಅರ್ಹವಾಗಿವೆ. ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರ ನಿರ್ವಹಣೆಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಮಳೆಮಾಪನ, ಹವಾಮಾನ ಕೇಂದ್ರದಲ್ಲಿ ಗುರುತಾದ ಪ್ರಾಕೃತಿಕ ವೈಪರೀತ್ಯ ಗುರುತಿಸಿ ರೈತರಿಗೆ ಬೆಳೆ ವಿಮೆ ಪಾವತಿಸಲಾಗುತ್ತದೆ. ​​​ಈ ನಡುವೆ ಹವಾಮಾನ ಆಧರಿತ ಬೆಳೆ ವಿಮೆ ಪಾವತಿಯ ಜುಲೈ 31 ಕೊನೇ ದಿನವನ್ನು ವಿಸ್ತರಿಸುವ ಅನಿವಾರ‍್ಯತೆ ಇದೆ.

ವಿಜಯ ಕರ್ನಾಟಕ 27 Jul 2024 8:04 am

'ರಾಜ್ಯ ಯುವ ಕಾಂಗ್ರೆಸ್‌ಗೆ ಚುನಾವಣೆ ನಡೆಸಲು ತೀರ್ಮಾನ'

ಬೆಂಗಳೂರು, ಜುಲೈ27: ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿಳಿಸಿದರು. ಜುಲೈ 24ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದ ಕಾರಣ ಈ ವಿಚಾರದ ಬಗ್ಗೆ ಮಾಧ್ಯಮಗೋಷ್ಠಿ ಮಾಡಿರಲಿಲ್ಲ.

ಒನ್ ಇ೦ಡಿಯ 27 Jul 2024 7:56 am

Pet Dog: ಅಪಾರ್ಟ್‌ಮೆಂಟ್‌ಗಳಲ್ಲಿ ನಾಯಿಗಳಿಗೆ ಮುಕ್ತ ಸ್ವಾತಂತ್ರ್ಯ! ಬಿಬಿಎಂಪಿ ಹೊಸ ಗೈಡ್‌‌ಲೈನ್ಸ್!!

Pet Dog: ವಸತಿ ಕಲ್ಯಾಣ ಸಂಘಗಳು ಹೌಸಿಂಗ್ ಸೊಸೈಟಿಗಳ ಒಳಗೆ ಯಾವುದೇ ರೀತಿಯ ಸಾಕುಪ್ರಾಣಿಗಳನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ. ಜತೆಗೆ ಇನ್ನುಮುಂದೆ ಕೋಲುಗಳಿಂದ ನಾಯಿಗಳನ್ನು ಓಡಿಸುವುದು ಕಾನೂನುಬಾಹಿರ ಚಟುವಟಿಕೆ ಎಂದು ಪರಿಗಣಿಸಲಾಗುವುದು ಎಂದು ಹೇಳಿದೆ. ಜತೆಗೆ ಬಿಬಿಎಂಪಿ ಪ್ರಾಣಿಗಳಿಗೆ ಆಹಾರ ನೀಡುವಾಗ ಪಾಲಿಸಬೇಕಾದ ಮಾರ್ಗಸೂಚಿಯನ್ನೂ ಪ್ರಕಟಿಸಿದೆ. ಅದೇನು ಎನ್ನುವ ವಿವರ ಇಲ್ಲಿದೆ. The post Pet Dog: ಅಪಾರ್ಟ್‌ಮೆಂಟ್‌ಗಳಲ್ಲಿ ನಾಯಿಗಳಿಗೆ ಮುಕ್ತ ಸ್ವಾತಂತ್ರ್ಯ! ಬಿಬಿಎಂಪಿ ಹೊಸ ಗೈಡ್‌‌ಲೈನ್ಸ್!! first appeared on Vistara News .

ವಿಸ್ತಾರ ನ್ಯೂಸ್ 27 Jul 2024 7:54 am

ಭಾರತ ಹಿಂದೂರಾಷ್ಟ್ರವಾಗಬೇಕಾದರೆ ಹಿಂದೂ ಮಹಿಳೆಯರು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕು!

ಭೋಪಾಲ್: ಭಾರತ ಹಿಂದೂಸ್ತಾನವಾಗಬೇಕಾದರೆ, ಎಲ್ಲ ಹಿಂದೂ ಹೆಣ್ಣುಮಕ್ಕಳು ಕನಿಷ್ಠ ನಾಲ್ಕು ಮಂದಿ ಪುತ್ರರನ್ನು ಪಡೆಯಬೇಕು ಎಂದು ಸ್ವಾಮೀಜಿಯೊಬ್ಬರು ಪ್ರಚೋದನಾಕಾರಿ ಭಾಷಣದಲ್ಲಿ ಕರೆ ನೀಡುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ನಡೆಯುತ್ತಿರುವ ಶ್ರೀಮದ್ ಭಾಗವತ ಕಥಾದಲ್ಲಿ ಪ್ರವಚನ ನೀಡಿದ ಪಂಚಯತಿ ನಿರಾಂಜನಿ ಅಖಾಡಾದ ಮಹಾಮಂಡಲೇಶ್ವರ ಸ್ವಾಮಿ ಪ್ರೇಮಾನಂದ ಮಹಾರಾಜ್, ಭಾರತವನ್ನು ಹಿಂದೂಸ್ತಾನವಾಗಿ ಪರಿವರ್ತಿಸಬೇಕಾದರೆ ಕನಿಷ್ಠ ನಾಲ್ಕು ಪುತ್ರರಿಗೆ ಪ್ರತಿಯೊಬ್ಬ ಹಿಂದೂ ಮಹಿಳೆ ಜನ್ಮ ನೀಡಬೇಕು ಎಂದು ಸೂಚಿಸಿದರು. ಭಾಗವತ ಪುರಾಣ ಕೂಡಾ ಒಬ್ಬ ವ್ಯಕ್ತಿ 60 ಸಾವಿರ ಮಕ್ಕಳನ್ನು ಹೊಂದಿದ್ದ ಬಗ್ಗೆ ತಿಳಿಸುತ್ತದೆ. ಆದರೆ ಇಂದು ಹಲವು ಮಂದಿ ಒಬ್ಬರು ಅಥವಾ ಇಬ್ಬರು ಮಕ್ಕಳನ್ನು ಹೊಂದಿರುತ್ತಾರೆ. ಭಾರತವನ್ನು ಹಿಂದೂಸ್ತಾನವಾಗಿ ಪರಿವರ್ತಿಸಬೇಕಾದರೆ, ಪ್ರತಿ ಕುಟುಂಬ ಕನಿಷ್ಠ ನಾಲ್ಕು ಪುತ್ರರನ್ನು ಹೊಂದಬೇಕು ಎಂದು ಐದನೇ ದಿನದ ಪ್ರವಚನದಲ್ಲಿ ಸ್ವಾಮಿ ಪ್ರೇಮಾನಂದ ಮಹಾರಾಜ್ ಕರೆ ನೀಡಿದರು. ನಮ್ಮ ಉತ್ತರ ಪ್ರದೇಶ ಹೊರಟುಹೋಗಿದೆ. ರಾಜ್ಯದ 17 ಜಿಲ್ಲೆಗಳು ಹಿಂದೂ ಧರ್ಮದ್ದಾಗಿ ಉಳಿದಿಲ್ಲ. ಬಂಗಾಳದ ಅರ್ಧ ಹೋಗಿದೆ. ಅಸ್ಸಾಂನಲ್ಲಿ ಪಾಸ್ಪೋರ್ಟ್ ಇಲ್ಲದ 5 ಲಕ್ಷ ಮಂದಿ ಇದ್ದಾರೆ. ಅವರು (ಅಲ್ಪಸಂಖ್ಯಾತ ಹೆಣ್ಣುಮಕ್ಕಳು) 8-10 ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. ಆದರೆ ನಮ್ಮ ಹಿಂದೂ ಮಾತೆಯರು ಮತ್ತು ಸಹೋದರಿಯರು ತಮ್ಮ ಸೌಂದರ್ಯ ಕಾಪಾಡಿಕೊಳ್ಳಲು ಗಮನ ಹರಿಸುತ್ತಿದ್ದಾರೆ ಎಂದು ಅಧಿಕ ಸಂಖ್ಯೆಯಲ್ಲಿ ಮಹಿಳೆಯರು ಇದ್ದ ಸಮಾವೇಶದಲ್ಲಿ ವಿಶ್ಲೇಷಿಸಿದರು. 25 ವರ್ಷ ಹಿಂದೆ ಅಲ್ಪಸಂಖ್ಯಾತರ ಸಂಖ್ಯೆ ಕೇವಲ 2 ಕೋಟಿ ಇತ್ತು. ಬಳಿಕ 9 ಕೋಟಿ ಆಯಿತು. ಇದೀಗ 38 ಕೋಟಿ ಇದ್ದಾರೆ. ಭಾರತ ಇಂಡೋನೇಷ್ಯಾವಾಗುವ ದಿನ ಬಹಳ ದೂರ ಇಲ್ಲ ಎಂದು ಎಚ್ಚರಿಸಿದರು.

ವಾರ್ತಾ ಭಾರತಿ 27 Jul 2024 7:48 am

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಗೆ ಮತ್ತೆ ಆತಂಕ

ಮಡಿಕೇರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ ಆರ್ಭಟಿಸುತ್ತಿದ್ದಾನೆ. ಮಳೆಯ ಅಬ್ಬರಕ್ಕೆ ಇಡೀ ಜಿಲ್ಲೆ ತತ್ತರಿಸಿದ್ದು, ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ಸಾಲು ಸಾಲು ಮರಗಳು ನೆಲಕ್ಕುರುಳಿದ ಪರಿಣಾಮ ಹಲವು ರಸ್ತೆಗಳು ಬಂದ್‌ ಆಗಿವೆ. ಮಡಿಕೇರಿ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಸೋಮವಾರಪೇಟೆ, ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆಯಿಂದ ಭೂಕುಸಿತ, ಸಂಪರ್ಕ, ಮನೆಗಳಿಗೆ ಹಾನಿಯಂತಹ ಅವಾಂತರಗಳು ಘಟಿಸಿವೆ. ಸೋಮವಾರಪೇಟೆ ತಾಲೂಕಿನಲ್ಲಿ ದಾಖಲೆಯ ಮಳೆಯಾಗಿದೆ.

ವಿಜಯ ಕರ್ನಾಟಕ 27 Jul 2024 7:32 am

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Family Drama Film Review: ಕನ್ನಡಕ್ಕೆ ಇದೊಂದು ವಿಶಿಷ್ಟ ರೀತಿಯಾ ಸಿನಿಮಾ. ಚಿತ್ರದಲ್ಲಿ ಕಾಮಿಡಿ ಇದೆ, ಸಸ್ಪೆನ್ಸ್ ಇದೆ, ಹೊಸತಂಡದ ಹೊಸತನ ಹೊಸದಾಗಿಯೇ ಇದೆ. ಚಿತ್ರ ಎಲ್ಲವರ್ಗದಲ್ಲೂ ಅಚ್ಚುಕಟ್ಟಾಗಿ ರೂಪುಗೊಂಡಿದೆ, ಪ್ರೇಕ್ಷಕರ ಮನರಂಜಿಸುತ್ತದೆ. ವೇಗ ಹೆಚ್ಚಿಸಿ ಮೊದಲಾರ್ಧದ ಡ್ರಾಮಾಗೆ ಕೊಂಚ ಕತ್ತರಿ ಹಾಕಬಹುದಿತ್ತು ಅನಿಸುತ್ತದೆ. ಸೆಮಿ ಸೆಮಿ ಹಾಡು ಸಿಕ್ಕಾಬಟ್ಟೆ ಇಷ್ಟ ಆಗುತ್ತದೆ. The post Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ first appeared on Vistara News .

ವಿಸ್ತಾರ ನ್ಯೂಸ್ 27 Jul 2024 7:22 am

Puneeth Kerehalli Arrest:‌ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು, ಜುಲೈ 27: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ ಮಟನ್​ ಮಾಂಸದ ಬಾಕ್ಸ್​ಗಳನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದು, ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಅವರನ್ನ ಪೊಲೀಸರು

ಒನ್ ಇ೦ಡಿಯ 27 Jul 2024 7:05 am

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

ರಾಜಮಾರ್ಗ ಅಂಕಣ: ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು. The post ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್ first appeared on Vistara News .

ವಿಸ್ತಾರ ನ್ಯೂಸ್ 27 Jul 2024 6:58 am

ನನಸಾಗದ ಹೈಟೆಕ್‌ ಆರೋಗ್ಯ ಸೇವೆ; 155 ರೂ. ಅನುದಾನ ಘೋಷಣೆಯಾಗಿ ವರ್ಷ ಕಳೆದರೂ ಇಲ್ಲ ಸುಧಾರಣೆ!

ಕಳೆದ ವರ್ಷದ ಬಜೆಟ್ ಮಂಡಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿ ಆರೋಗ್ಯ ಸೇವೆಗಳನ್ನು ಉನ್ನತೀಕರಣಗೊಳಿಸುವ ಬಗ್ಗೆ ಮಾತನಾಡಿದ್ದರು. ಹೈಟೆಕ್ ಆಸ್ಪತ್ರೆ ನಿರ್ಮಾಣ, ಸಿಬ್ಬಂದಿ ನೇಮಕ, ಸಲಕರಣೆ ಖರೀದಿ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್‌, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಸೌಲಭ್ಯ ಸುಧಾರಣೆಗೆ ಅನುದಾನ ನೀಡುವುದಾಗಿ ಹೇಳಿದ್ದರು. ಅದಕ್ಕಾಗಿ 155 ಕೋಟಿ ರೂ. ಬಿಡುಗಡೆ ಮಾಡುವುದಾಗಿಯೂ ಹೇಳಿದ್ದರು. ಆದರೆ, ಅನುದಾನ ಬಿಡುಗಡೆಯಾಗದಿದ್ದರಿಂದ ಈ ಎಲ್ಲಾ ಸೇವೆಗಳ ಉನ್ನತೀಕರಣಕ್ಕೆ ಹಿನ್ನಡೆಯಾಗಿದೆ.

ವಿಜಯ ಕರ್ನಾಟಕ 27 Jul 2024 6:50 am

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

ಬಹುತೇಕ ಕೆಲಸಗಳಿಗೆ ದಾಖಲೆಯಾಗಿ ಬಳಸಲ್ಪಡುವ ಭಾರತೀಯ ನಾಗರಿಕರ ಗುರುತಿನ ಪುರಾವೆಯಾಗಿರುವ ಆಧಾರ್ ಕಾರ್ಡ್ ನಲ್ಲಿ (Aadhaar Update) ವಿಳಾಸ ಬದಲಾವಣೆಗೆ ಇನ್ನು ಮುಂದೆ ವಿದ್ಯುತ್, ನೀರು, ದೂರವಾಣಿ ಬಿಲ್ ಗಳನ್ನು ಬಳಸಬಹುದು. ಆದರೆ ಇದಕ್ಕೆ ಕೆಲವು ನಿಯಮಗಳಿವೆ. ಅದು ಏನು, ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. The post Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು? first appeared on Vistara News .

ವಿಸ್ತಾರ ನ್ಯೂಸ್ 27 Jul 2024 6:45 am

ಹೌದು ಮುಡಾ ಸೈಟ್ ನನಗೂ ಕೊಟ್ಟವ್ರೆ : ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ನವದೆಹಲಿ, ಜುಲೈ 27: ರಾಜ್ಯ ರಾಜಕೀಯದಲ್ಲಿ ಮೂಡಾ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದ್ದು, ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಸ್ಥರ ಹೆಸರು ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮೂಡಾ ಪ್ರಕರಣದಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮೂಡಾದಲ್ಲಿ ಸೈಟ್ ಪಡೆದಿರುವ ಕುರಿತು ಮೈತ್ರಿ ನಾಯಕರು ಹೆಸರುಗಳನ್ನ ಬಿಡುಗಡೆ

ಒನ್ ಇ೦ಡಿಯ 27 Jul 2024 6:14 am

ಇಷ್ಟು ದಿನ ಏನು ಮಾಡಿದ್ದೀರಿ? ಅಕ್ರಮ ಜಾಹಿರಾತು ತಡೆಯದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ಹಾವಳಿ ಹೆಚ್ಚಾಗಿದೆ. ಎಲ್ಲಾ ಕಡೆ ಫ್ಲೆಕ್ಸ್‌ಗಳೇ ರಾರಾಜಿಸುತ್ತವೆ. ಇದು ನಗರದ ಸೌಂದರ್ಯವನ್ನು ಹಾಳು ಮಾಡುತ್ತಿದೆ. ಜೊತೆಗೆ ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ. ಈ ಬಗ್ಗೆ ಕಳಕಳಿ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಬಿಬಿಎಂಪಿ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್‌ ಖಾರವಾಗಿ ಪ್ರಶ್ನಿಸಿದೆ.

ವಿಜಯ ಕರ್ನಾಟಕ 27 Jul 2024 5:53 am

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

Shravan 2024: ಶ್ರಾವಣ ಮಾಸದಲ್ಲಿ (Shravan Month 2024) ಹೆಚ್ಚಾಗಿ ದೇವರ ಭಕ್ತಿ, ಪ್ರಾರ್ಥನೆಯಲ್ಲಿ ತೊಡಗುವುದರಿಂದ ಆಹಾರ ನಿಯಮಗಳನ್ನು ಕಠಿಣವಾಗಿ ಅನುಸರಿಸಲಾಗುತ್ತದೆ. ಉಪವಾಸ ಇರುವವರು ಈ ಸಂದರ್ಭದಲ್ಲಿ ಆಹಾರದ ಮಾರ್ಗಸೂಚಿಗಳನ್ನು ಅನುಸರಿಸಿ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆಧ್ಯಾತ್ಮಿಕ ಗಮನವನ್ನು ಕೇಂದ್ರೀಕರಿಸಬಹುದು. The post Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು? first appeared on Vistara News .

ವಿಸ್ತಾರ ನ್ಯೂಸ್ 27 Jul 2024 5:30 am

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. The post Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ first appeared on Vistara News .

ವಿಸ್ತಾರ ನ್ಯೂಸ್ 27 Jul 2024 5:30 am

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Remedies For Fatty Liver: ಫ್ಯಾಟಿ ಲಿವರ್‌ ಅತ್ಯಂತ ವ್ಯಾಪಕವಾಗಿ ಕಾಣುತ್ತಿರುವ ಸಮಸ್ಯೆ. ದೇಹದ ಎಲ್ಲಾ ಅಂಗಗಳೂ ಮುಖ್ಯವಾದವುಗಳೇ ಹೌದಾದರೂ, ಪಿತ್ತಜನಕಾಂಗದ ಸಮಸ್ಯೆ ಇತರೆಲ್ಲ ಅಂಗಗಳಿಗೆ ಭಿನ್ನವಾದ ಸಮಸ್ಯೆಗಳನ್ನು ತಂದೊಡ್ಡಬಲ್ಲದು. ಇದಕ್ಕೆ ಕಾರಣಗಳೇನು, ಲಕ್ಷಣಗಳೇನು ಮತ್ತು ನೈಸರ್ಗಿಕವಾದ ಪರಿಹಾರ ಹೇಗೆ ಎಂಬಂಥ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. The post Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ! first appeared on Vistara News .

ವಿಸ್ತಾರ ನ್ಯೂಸ್ 27 Jul 2024 5:30 am

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. The post Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ first appeared on Vistara News .

ವಿಸ್ತಾರ ನ್ಯೂಸ್ 27 Jul 2024 5:00 am

ಆರ್‌ಸಿಬಿ ಸ್ಟಾರ್‌ ವಿರಾಟ್‌ ಕೊಹ್ಲಿಯ ವಿಕೆಟ್‌ ನನ್ನ ನೆಚ್ಚಿನದು ಎಂದ ಜಸ್‌ಪ್ರೀತ್‌ ಬುಮ್ರಾ!

Jasprit Bumrah picks his Favourite wicket: ತಮ್ಮ ಸುದೀರ್ಘ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಹಲವು ಘಟಾನುಘಟಿ ಬ್ಯಾಟ್ಸ್‌ಮನ್‌ಗಳನ್ನು ಔಟ್‌ ಮಾಡಿರುವ ಭಾರತ ತಂಡದ ಸ್ಟಾರ್‌ ವೇಗಿ ಜಸ್‌ಪ್ರೀತ್ ಬುಮ್ರಾ, ತಾವು ಔಟ್‌ ಮಾಡಿದ ತನ್ನ ನೆಚ್ಚಿನ ವಿಕೆಟ್‌ ಯಾವುದೆಂದು ಬಹಿರಂಗಪಡಿಸಿದ್ದಾರೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿಯನ್ನು ಔಟ್‌ ಮಾಡಿದ್ದು ತಮ್ಮ ನೆಚ್ಚಿನ ವಿಕೆಟ್‌ ಎಂದು ಹೇಳಿದ್ದಾರೆ. ಟಿ20 ವಿಶ್ವಕಪ್‌ ಬಳಿಕ ಜಸ್‌ಪ್ರೀತ್ ಬುಮ್ರಾ ವರ್ಕ್‌ಲೋಡ್‌ ಮ್ಯಾನೇಜ್‌ಮೆಂಟ್‌ ಕಾರಣ ಶ್ರೀಲಂಕಾ ಪ್ರವಾಸದಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ.

ವಿಜಯ ಕರ್ನಾಟಕ 27 Jul 2024 12:30 am

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Paris Olympics 2024 : ಆರು ಕಿಲೋಮೀಟರ್ ಮೆರವಣಿಗೆ ಆಸ್ಟರ್ಲಿಟ್ಜ್ ಸೇತುವೆಯಿಂದ ಪ್ರಾರಂಭವಾಯಿತು ಮತ್ತು 85 ದೋಣಿಗಳು 205 ರಾಷ್ಟ್ರಗಳ 6800 ಕ್ಕೂ ಹೆಚ್ಚು ಕ್ರೀಡಾಪಟುಗಳು ಮತ್ತು ಒಂದು ನಿರಾಶ್ರಿತರ ಒಲಿಂಪಿಕ್ ತಂಡವನ್ನು ಸಾಗಿಸಿದವು. ಮಳೆಯ ಬೆದರಿಕೆ ಹೊರತಾಗಿಯೂ ಫ್ರೆಂಚ್ ರಾಜಧಾನಿಯ ಐತಿಹಾಸಿಕ ಸ್ಮಾರಕಗಳನ್ನು ದಾಟಿ ಸೀನ್ ನದಿಯಲ್ಲಿ ಮಹತ್ವಾಕಾಂಕ್ಷೆಯ ಪ್ರದರ್ಶನ ನಡೆಯಿತು. The post Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ first appeared on Vistara News .

ವಿಸ್ತಾರ ನ್ಯೂಸ್ 27 Jul 2024 12:15 am

ಭದ್ರತಾ ಪಡೆಗಳ ಕಣ್ಗಾವಲಿನಲ್ಲಿ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭ

ಪ್ಯಾರಿಸ್ : ಬೆಳಕಿನ ನಗರಿ ಪ್ಯಾರಿಸ್‌ನಲ್ಲಿ ಬಹುನಿರೀಕ್ಷಿತ 33ನೇ ಆವೃತ್ತಿಯ ಒಲಿಂಪಿಕ್ಸ್ ಕ್ರೀಡಾಕೂಟವು ಶುಕ್ರವಾರ ಭದ್ರತಾ ಪಡೆಗಳ ಕಣ್ಗಾವಲಿನಲ್ಲಿ ಆರಂಭವಾಯಿತು. ಕಾರ್ಯಕ್ರಮ ಆರಂಭವಾಗುವ ಮೊದಲೇ ಸೀನ್ ನದಿಯ ದಡದಲ್ಲಿ ವಿಶೇಷವಾಗಿ ನಿರ್ಮಿಸಲಾಗಿರುವ ಸ್ಟ್ಯಾಂಡ್‌ಗಳಲ್ಲಿ ಪ್ರೇಕ್ಷಕರು ಜಮಾಯಿಸಿದರು.   PHOTO : PTI ಅತಿ ವೇಗದ ರೈಲು ಜಾಲದ ಮೇಲೆ ವಿಧ್ವಂಸಕ ದಾಳಿಯು ಫ್ರಾನ್ಸ್‌ನಾದ್ಯಂತ ಪ್ರಯಾಣದ ಗೊಂದಲಕ್ಕೆ ಕಾರಣವಾದ ಗಂಟೆಗಳ ನಂತರ ಒಲಿಂಪಿಕ್ಸ್‌ಗೆ ಚಾಲನೆ ನೀಡುವ ಭವ್ಯ ಉದ್ಘಾಟನಾ ಸಮಾರಂಭವನ್ನು ವೀಕ್ಷಿಸಲು ಜನ ಸಮೂಹವು ಶುಕ್ರವಾರ ಪ್ಯಾರಿಸ್‌ನ ಸೀನ್ ನದಿಯ ಉದ್ದಕ್ಕೂ ಮಳೆಯನ್ನು ಲೆಕ್ಕಿಸದೇ ಜಮಾಯಿಸಿತು. ಇದೇ ಮೊದಲ ಬಾರಿ ವಿನೂತನವಾಗಿ ಮುಖ್ಯ ಅತ್ಲೆಟಿಕ್ಸ್ ಕ್ರೀಡಾಂಗಣದ ಹೊರಗೆ ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದ್ದು, ಪರೇಡ್ ಆಫ್ ನೇಶನ್ಸ್‌ನೊಂದಿಗೆ ಅದ್ದೂರಿ ಸಮಾರಂಭ ಆರಂಭವಾಯಿತು. ಸೀನ್ ನದಿಯಲ್ಲಿ ಬೋಟ್‌ಗಳಲ್ಲಿ ಅತ್ಲೀಟ್‌ಗಳ ಪರೇಡ್ ನಡೆಸಲಾಯಿತು. ಗ್ರೀಸ್ ಕ್ರೀಡಾಳುಗಳನ್ನು ಒಳಗೊಂಡಿರುವ ಬೋಟ್ ಮೊದಲಿಗೆ ತನ್ನ ಪಯಣ ಆರಂಭಿಸಿತು. ನಿರಾಶ್ರಿತ ಒಲಿಂಪಿಕ್ಸ್ ಟೀಮ್, ದಕ್ಷಿಣ ಆಫ್ರಿಕಾ, ಜರ್ಮನಿ ಅತ್ಲೀಟ್‌ಗಳಿರುವ ಬೋಟ್ ಮೆರವಣಿಗೆ ನಡೆಸಿದವು. ಬೋಟ್‌ಪರೇಡ್ ಪೂರ್ವ ಆಸ್ಟರ್ಲಿಟ್ಝ್ ಸೇತುವೆಯಿಂದ ಆರಂಭಗೊಂಡು ಪಶ್ಚಿಮದ ಐಪೆಲ್ ಟವರ್‌ನಲ್ಲಿ ಕೊನೆಗೊಳ್ಳಲಿದೆ. ಮೊದಲ ಸುತ್ತಿನ ಪರೇಡ್ ಆಫ್ ನೇಶನ್ಸ್ ನಂತರ ಜಾಗತಿಕ ಸೂಪರ್‌ಸ್ಟಾರ್ ಲೇಡಿ ಗಾಗಾ ವೇದಿಕೆ ಏರಿ ಹಾಡಲಾರಂಭಿಸಿದರು. ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಪ್ಯಾರಿಸ್‌ನಲ್ಲಿ ಸುಮಾರು 45 ಸಾವಿರ ಪೊಲೀಸರು ಹಾಗೂ ಸಾವಿರಾರು ಸೈನಿಕರನ್ನು ಭಾರೀ ಭದ್ರತಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಪೊಲೀಸರು ನದಿಯುದ್ದಕ್ಕೂ ಭದ್ರತಾ ವಲಯವನ್ನು ರಚಿಸಿದ್ದಾರೆ.

ವಾರ್ತಾ ಭಾರತಿ 27 Jul 2024 12:03 am

ಆನ್‌ಲೈನ್ ಪಾವತಿಗಳನ್ನು ಯಾಕೆ ಸ್ವೀಕರಿಸುತ್ತಿಲ್ಲ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಇಡೀ ಜಗತ್ತು ಡಿಜಿಟಲೀಕರಣ ಆಗಿರುವಾಗ, ನೀವು ಮಾತ್ರ ಆನ್‌ಲೈನ್ ಪಾವತಿಗಳನ್ನು ಯಾಕೆ ಸ್ವೀಕರಿಸುತ್ತಿಲ್ಲ’ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ವಿದ್ಯುತ್ ಸರಬರಾಜು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಿ ಹಾಗೂ ಪ್ರೀಪೆಡ್ ಮೀಟರ್ ಕೊಡಲು ನಿರಾಕರಿಸಿ ಬೆಸ್ಕಾಂ ಹೊಸಕೋಟೆ ವೃತ್ತದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ 2024ರ ಮೇ 8ರಂದು ಹೊರಡಿಸಿದ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಹೊಸಕೋಟೆ ನಿವಾಸಿ ಸೀತಾಲಕ್ಷ್ಮೀ ಎಂಬವರು ಸಲ್ಲಿಸಿದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಆನ್‌ಲೈನ್ ಪಾವತಿಗಳನ್ನು ಯಾಕೆ ಸ್ವೀಕರಿಸುತ್ತಿಲ್ಲ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿ ವಿಚಾರಣೆಯನ್ನು ಆಗಸ್ಟ್ 9ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲ ಶ್ರೀಧರ ಪ್ರಭು ವಾದ ಮಂಡಿಸಿದರು.

ವಾರ್ತಾ ಭಾರತಿ 27 Jul 2024 12:02 am

ಕೊಲೆಯಾದ ರೌಡಿಯ ಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

ಮಹಾರಾಷ್ಟ್ರದಲ್ಲಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ ಬಂಧಿಸಿದ್ದಾರೆ. ಇನ್ನಿಬ್ಬರನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಬೆಳಗಿನ ಜಾವ ಮುಂಬೈನ ವೊರ್ಲಿಯಲ್ಲಿರುವ ಸಾಫ್ಟ್‌ ಟಚ್‌ ಸ್ಪಾದಲ್ಲಿ 48 ವರ್ಷದ ಗುರು ವಾಘ್ಮರೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. The post ಕೊಲೆಯಾದ ರೌಡಿಯ ಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ first appeared on Vistara News .

ವಿಸ್ತಾರ ನ್ಯೂಸ್ 26 Jul 2024 11:58 pm

ಚಾರ್ಮಾಡಿ ಘಾಟ್ | ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

ಚಿಕ್ಕಮಗಳೂರು : ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಹತ್ತನೇ ತಿರುವಿನಲ್ಲಿ ಗಾಳಿ ಮಳೆಯ ಆರ್ಭಟಕ್ಕೆ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದು, ಸ್ವಲ್ಪ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿದಿರುವುದಾಗಿ ವರದಿಯಾಗಿದೆ. ಮುಂಜಾಗೃತ ಕ್ರಮವಾಗಿ ಬಣಕಲ್‌ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಇದರಿಂದ ಕೊಟ್ಟಿಗೆಹಾರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಮಳೆ ಇದೇ ರೀತಿ ಮುಂದುವರೆದಲ್ಲಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿಯುವ ಆಂತಕ‌ ಎದುರಾಗಿದೆ.

ವಾರ್ತಾ ಭಾರತಿ 26 Jul 2024 11:49 pm

ಚಿಕ್ಕಮಗಳೂರು | ಭಾರೀ ಮಳೆ, ಬಿರುಗಾಳಿಗೆ ಮಲೆನಾಡಿನ ಜನ ತತ್ತರ : ಮನೆಗಳಿಗೆ ಹಾನಿ, ತೋಟ, ಗದ್ದೆಗಳು ಜಲಾವೃತ

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ, ಬಿರುಗಾಳಿಯ ಅಬ್ಬರ ಮತ್ತಷ್ಟು ಜೋರಾಗಿದ್ದು, ಧಾರಾಕಾರ ಮಳೆ ಹಾಗೂ ಭಾರೀ ಶಬ್ಧದೊಂದಿಗೆ ಬೀಸುತ್ತಿರುವ ಬಿರುಗಾಳಿಗೆ ಮಲೆನಾಡು ಭಾಗದಲ್ಲಿ ಶುಕ್ರವಾರ ಜನಜೀವನವೇ ಅಸ್ತವ್ಯಸ್ತಗೊಂಡಿದೆ. ಮಳೆ, ಗಾಳಿ ಹೊಡೆತಕ್ಕೆ ಮನೆಗಳು, ಮರಗಳು, ವಿದ್ಯುತ್ ಕಂಬಗಳು ತರಗೆಲೆಗಳಂತೆ ಧರಾಶಾಹಿಯಾಗುತ್ತಿರುವುದು ಒಂದೆಡೆಯಾದರೇ, ಪ್ರಮುಖ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಹೊಲ, ಗದ್ದೆ, ಕಾಫಿ, ಅಡಿಕೆ ತೋಟಗಳು, ಶುಂಠಿ ಬೆಳೆ ಜಲಾವೃತಗೊಂಡಿದ್ದು, ಮಲೆನಾಡಿನ ಬಹುತೇಕ ಗ್ರಾಮಗಳು ವಿದ್ಯುತ್ ಕಡಿತದಿಂದಾಗಿ ಕತ್ತಲೆಯಲ್ಲಿ ಮುಳುಗಿವೆ. ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೆ ಮಲೆನಾಡು ಭಾಗದ ತಾಲೂಕುಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯೊಂದಿಗೆ ಬಿರುಗಾಳಿ ಅಬ್ಬರ ಜೋರಾಗಿತ್ತು. ಭಾರೀ ಮಳೆ ಗಾಳಿಯಿಂದಾಗಿ ಅಲ್ಲಲ್ಲಿ ಭಾರೀ ಗಾತ್ರದ ಮರಗಳು ಧರೆಗುರುಳಿ ರಸ್ತೆ ಸಂಚಾರಕ್ಕೆ ತೊಂದರೆಯಾಗಿರುವುದಲ್ಲದೇ ವಾಹನಗಳ ಮರ ಬಿದ್ದು ಜಖಂಗೊಂಡ ಘಟನೆಗಳು ವರದಿಯಾಗಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು ನದಿಪಾತ್ರದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ, ಕೃಷಿ ಬೆಳೆಗಳಿಗೆ ಹಾನಿಯಾಗಿದೆ. ಮಲೆನಾಡು ಭಾಗದ ಶೃಂಗೇರಿ, ಕೊಪ್ಪ, ನರಸಿಂಹರಾಜಪುರ, ಬಾಳೆಹೊನ್ನೂರು, ಮೂಡಿಗೆರೆ, ಕಳಸ, ಹೊರನಾಡು, ಕೊಟ್ಟಿಗೆಹಾರ, ಚಾರ್ಮಾಡಿಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಶೃಂಗೇರಿ ವ್ಯಾಪ್ತಿಯಲ್ಲಿ ಹರಿಯುವ ತುಂಗಾನದಿ ನೀರಿನ ಮಟ್ಟ ಏರಿಕೆಯಾಗಿದ್ದು, ನದಿ ತೀರದ ಪ್ಯಾರಲರ್ ರಸ್ತೆವರೆಗೂ ನದಿನೀರು ಬಂದಿದೆ. ನದಿಪಾತ್ರದ ಅಡಿಕೆ ತೋಟ ಸೇರಿದಂತೆ ತಗ್ಗು ಪ್ರದೇಶವನ್ನು ತುಂಗಾ ನದಿ ನೀರು ಆವರಿಸಿದೆ. ಪಟ್ಟಣದ ಗಾಂಧಿಮೈದಾನ ಜಲಾವೃತಗೊಂಡಿದೆ. ಭದ್ರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಜಮೀನುಗಳಿಗೆ ನೀರು ನುಗ್ಗಿದೆ. ಅಲ್ಲದೇ ಹೆಬ್ಬಾಳೆ ಸೇತುವೆ ಶುಕ್ರವಾರವೂ ಮುಳುಗಡೆಯಾಗಿದ್ದು, ಕಳಸ-ಹೊರನಾಡು ಸಂಪರ್ಕ ಕಡಿತಗೊಂಡಿದೆ. ಕಡೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಗವನಹಳ್ಳಿ ಸಮೀಪ ಶುಕ್ರವಾರ ಬೆಳಗ್ಗೆ ಮರವೊಂದು ದಿಢೀರ್ ರಸ್ತೆ ಉರುಳಿ ಬಿದ್ದ ಪರಿಣಾಮ ರಸ್ತೆಯಲ್ಲಿದ್ದ ಒಂದು ಆಟೊ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರೆ, ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ. ಕಾರಿನ ಮೇಲೆ ಬಿದ್ದು ಕಾರುಗಳ ಜಖಂಗೊಂಡಿವೆ. ಆಟೊ ಮತ್ತು ಕಾರಿನಲ್ಲಿದ್ದವರು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳೀಯರು ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕೊಪ್ಪ ತಾಲೂಕು ಬಸರಿಕಟ್ಟೆ ಗ್ರಾಮದಲ್ಲಿ ದೇವಾಲಯದ ತಡಗೋಡೆ ಕುಸಿದು ದೇವಾಲಯ ಮಣ್ಣಿನಲ್ಲಿ ಮುಚ್ಚಿಹೋಗಿದೆ. ಗ್ರಾಮದ ಕೊಡಮಣಿ ತಾಯಿ ದೇವಾಲಯ ನೆಲಸಮಗೊಂಡಿದ್ದು, ಮತ್ತೊಂದು ದೇವಾಲಯದ ಬಳಿಯೂ ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಕೊಪ್ಪ ತಾಲೂಕಿನಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ತಾಲೂಕಿನ ಕುದುರೆಗುಂಡಿ ಗ್ರಾಮದಲ್ಲಿ ಕಾನೂರಿನಿಂದ ಕಟ್ಟಿಮನೆ ಗ್ರಾಮಕ್ಕೆ ತೆರಳುವ ರಸ್ತೆ ನದಿ ನೀರಿನಿಂದ ಮುಳುಗಡೆಯಾಗಿದ್ದು, ಜನ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ವಾರ್ತಾ ಭಾರತಿ 26 Jul 2024 11:40 pm

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಯಲ್ಲಿ ನ್ಯಾಯ ಸಿಗುತ್ತಿಲ್ಲ : ಸಚಿವ ಮಹದೇವಪ್ಪ ನಿವಾಸಕ್ಕೆ ಪರಿಶಿಷ್ಟ ಜಾತಿಗಳ ಒಕ್ಕೂಟದ ಮುಖಂಡರ ಮುತ್ತಿಗೆ

ಬೆಂಗಳೂರು : ಪಿಟಿಸಿಎಲ್ ಕಾಯಿದೆ ತಿದ್ದುಪಡಿಯಲ್ಲಿ ಸೇರಿಸಿರುವ ಸೆಕ್ಷನ್5(1)ಡಿ ತೆಗೆಯಬೇಕು. ಎಸ್ಸಿಪಿ-ಟಿಎಸ್‍ಪಿ ಮೀಸಲು ಹಣ ಅನ್ಯ ಯೋಜನೆಗಳಿಗೆ ಬಳಸಬಾರದು, ಬಳಕೆ ಮಾಡಿರುವ ಹಣ ವಾಪಸ್ ತರಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ನಿವಾಸಕ್ಕೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಮುಖಂಡರು ಹಾಗೂ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ನಗರದ ಕ್ರ್ರೆಸೆಂಟ್ ರಸ್ತೆಯಲ್ಲಿರುವ ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ನೂರಾರು ಕಾರ್ಯಕರ್ತರು, ವಿದ್ಯಾರ್ಥಿಗಳಿಗೆ ನೀಡುವ ಪ್ರೊತ್ಸಾಹ ಧನ ಮುಂದುವರೆಸಬೇಕು ಮತ್ತು ಪೌರ ಕಾರ್ಮಿಕರನ್ನು ಖಾಯಂ ಮಾಡಬೇಕು, ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು. ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಪಿಟಿಸಿಎಲ್ ಕಾಯಿದೆಯ ಹೊಸ ತಿದ್ದುಪಡಿಯಿಂದ ನ್ಯಾಯ ಸಿಕ್ಕಿಲ್ಲವಾದ್ದರಿಂದ ಕೂಡಲೆ ಪಿಟಿಸಿಎಲ್ ಕಾಯಿದೆ ಮತ್ತು ಸಂವಿಧಾನ ಆಶಯದ ವಿರುದ್ಧವಾಗಿ ಆದೇಶ ಮಾಡಿರುವ ನೆಕ್ಕಂಟಿ ರಾಮಲಕ್ಷ್ಮಿ ಈ ಪ್ರಕರಣವನ್ನು ಸುಪ್ರೀಂಕೋರ್ಟ್‍ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿ, ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಲಾಕ ಬಸವರಾಜ ಕೌತಾಳ್ ಮಾತನಾಡಿ, ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಮೀಸಲಿಟ್ಟ ಅನುದಾನವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಬಾರದು. ಈಗಾಗಲೆ ಅನ್ಯಯೋಜನೆಗಳಿಗೆ ಬಳಕೆ ಮಾಡಿರುವ ಹಣವನ್ನು ವಾಪಸ್ಸು ಮಾಡಬೇಕು. ಮೀಸಲು ಹಣ ದುರ್ಬಳಕೆ ಮಾಡುತ್ತಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಈ ವೇಳೆ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮತಿ ಪದಾಧಿಕಾರಿ ಕರಿಯಪ್ಪ ಗುಡಿಮನಿ, ವಕೀಲ ನರಸಿಂಹಮೂರ್ತಿ, ಒಕ್ಕೂಟದ ಪದಾಧಿಕಾರಿಗಳಾದ ಮಂಜುನಾಥ್ ಮರಾಠ, ವೆಂಕಟೇಶ್, ನಿಂಗರಾಜು, ವೇಣುಗೋಪಾಲ ಮೌರ್ಯ, ರಾಮಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jul 2024 11:39 pm

ರಾಹುಲ್‌ಗೆ ಕೊಕ್‌? ಮೆಗಾ ಆಕ್ಷನ್‌ಗೂ ಮುನ್ನ ಎಲ್‌ಎಸ್‌ಜಿ ಉಳಿಸಿಕೊಳ್ಳುವ ಆಟಗಾರ ಸಂಭಾವ್ಯ ಪಟ್ಟಿ

LSG's Players for IPL 2025: ಇಂಡಿಯನ್ ಪ್ರೀಮಿಯರ್‌ ಲೀಗ್ ಅಖಾಡದಲ್ಲಿರುವ ಹೊಸ ತಂಡಗಳ ಪೈಕಿ ಲಖನೌ ಸೂಪರ್‌ ಜಯಂಟ್ಸ್‌ ಒಂದಾಗಿದೆ. 2022ರಲ್ಲಿ ಐಪಿಎಲ್‌ ಅಭಿಯಾನ ಆರಂಭಿಸಿದ ಎಲ್‌ಎಸ್‌ಜಿ ಮೊದಲ ಎರಡು ಪ್ರಯತ್ನಗಳಲ್ಲಿ ಪ್ಲೇ ಆಫ್ಸ್‌ ತಲುಪಿದ ಸಾಧನೆ ಮಾಡಿತು. ಆದರೆ, ಕೆಎಲ್‌ ರಾಹುಲ್ ಸಾರಥ್ಯದ ಸೂಪರ್‌ ಜಯಂಟ್ಸ್‌ ತಂಡ ಐಪಿಎಲ್ 2024 ಟೂರ್ನಿಯಲ್ಲಿ ನೀಡಿದ ಪ್ರದರ್ಶನ ಫ್ರಾಂಚೈಸಿ ಮಾಲೀಕರಿಗೆ ಅಸಮಾಧಾನ ತಂದಿರುವುದು ಸ್ಪಷ್ಟವಾಗಿದೆ. ಹೀಗಾಗಿ ಮೆಗಾ ಆಕ್ಷನ್‌ಗೂ ಮುನ್ನ ಎಲ್‌ಎಸ್‌ಜಿ ಯಾರನ್ನೆಲ್ಲಾ ಬಿಡುಗಡೆ ಮಾಡಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ವಿಜಯ ಕರ್ನಾಟಕ 26 Jul 2024 11:37 pm

ಸಯ್ಯದ್ ಆಲವಿ ತಂಙಳ್ ನಿಧನ

ಉಳ್ಳಾಲ: ಸಯ್ಯದ್ ಆಲವಿ ತಂಙಳ್ (79) ಅವರು ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ಬೆಳರಿಂಗೆಯಲ್ಲಿ ನಡೆದಿದೆ. ಕಿನ್ಯ ಸುನ್ನೀ ಸೆಂಟರ್ ಎಸ್ ವೈ ಎಸ್ ಕಚೇರಿಯಲ್ಲಿ ನಡೆದ ಕೂರ ತಂಙಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಸಯ್ಯದ್ ಆಲವಿ ತಂಙಳ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಧಾರ್ಮಿಕ ಗುರುಗಳಾಗಿದ್ದ ಅವರು ಹೊಸನಗರ, ಬಾಳೆಹೊನ್ನೂರು, ಚಿಕ್ಕಮಗಳೂರು ಸಹಿತ ವಿವಿಧೆಡೆ ಖತೀಬ್ ರಾಗಿ ಸೇವೆ ಸಲ್ಲಿಸಿದ್ದರು. ಕಿನ್ಯ ಬುಖಾರಿ ಜುಮಾ ಮಸೀದಿಯ ಗೌರವ ಅಧ್ಯಕ್ಷರಾಗಿದ್ದ ಅವರು, ಕರ್ನಾಟಕ ಮುಸ್ಲಿಂ ಜಮಾಅತ್ ಸಹಿತ ಹಲವು ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದರು.

ವಾರ್ತಾ ಭಾರತಿ 26 Jul 2024 11:30 pm

ಕುರಿ ಮಾಂಸ ರವಾನಿಸುತ್ತಿದ್ದ ವ್ಯಾಪಾರಿಯನ್ನು ಅಡ್ಡಗಟ್ಟಿ ನಾಯಿ ಮಾಂಸ ಎಂದ ಪುನೀತ್ ಕೆರೆಹಳ್ಳಿ

ಬೆಂಗಳೂರು : ಮೆಜೆಸ್ಟಿಕ್ ನ ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವ್ಯಾಪಾರಿಯೊಬ್ಬರು ತೆಗೆದುಕೊಂಡು ಹೋಗುತ್ತಿದ್ದ ಕುರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ ಈ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಪುನೀತ್ ಕೆರೆಹಳ್ಳಿ‌ ಸಾಕ್ಷ್ಯಾಧಾರ ರಹಿತ ಆರೋಪ ಮಾಡಿರುವ ಘಟನೆ ಶುಕ್ರವಾರ ವರದಿಯಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ವ್ಯಾಪಾರಿ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್‌ ಕಾಲ್‌ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ವ್ಯಾಪಾರ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್‌ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ವ್ಯಾಪಾರ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇನ್ನು ಜೈಪುರದಿಂದ ಬಂದ ಮಾಂಸದ ಬಗ್ಗೆ ಪುನೀತ್ ಕೆರೆಹಳ್ಳಿ ಮಾಡಿದ ಆರೋಪದ ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಗಳು ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ, ಪರಿಶೀಲನೆ ಮಾಡಿದ್ದಾರೆ. ಗುಣಮಟ್ಟ ಹಾಗೂ ಮಾಂಸ ದೃಢೀಕರಣಕ್ಕಾಗಿ ಸ್ಯಾಂಪಲ್ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಮಾತನಾಡಿದ ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಸಂಗ್ರಹಿಸಿದ್ದೇವೆ. ವಿವಿಧ ಭಾಗಗಳಿಂದ ಮಾಂಸದ ಮಾದರಿ ಪಡೆದಿದ್ದೇವೆ. ಇದನ್ನು ಲ್ಯಾಬ್ ಗೆ ರವಾನಿಸಿ ಪರೀಕ್ಷಿಸಲಾಗುತ್ತದೆ. ಇದರ ವರದಿ ಬರುವುದಕ್ಕೆ 14 ದಿನಗಳ ಕಾಲಾವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಪರೀಕ್ಷೆಯಲ್ಲಿ ತಿಳಿಯುತ್ತದೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೆ ವ್ಯಾಪಾರಿಯ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

ವಾರ್ತಾ ಭಾರತಿ 26 Jul 2024 11:23 pm

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Vijay Mallya: ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ. The post Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ first appeared on Vistara News .

ವಿಸ್ತಾರ ನ್ಯೂಸ್ 26 Jul 2024 11:16 pm

ಎಡಕುಮೇರಿ ಬಳಿ ಹಳಿ ಮೇಲೆ ಭೂಕುಸಿತ, ಮಂಗಳೂರು-ಬೆಂಗಳೂರು ಕೆಲವು ರೈಲು ರದ್ದು, ಹಲವು ಮಾರ್ಗ ಬದಲಾವಣೆ

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆಯ ಕಡಗರಹಳ್ಳಿ ಎಂಬಲ್ಲಿ ಶುಕ್ರವಾರ ಸಂಜೆ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ದೋಣಿಗಲ್‌ನ ಎಡಕುಮೇರಿ-ಕಡಗರಹಳ್ಳಿ ನಡುವೆ ಹಳಿಯ ಮೇಲೆ ಮಣ್ಣು ಕುಸಿದು ಬಿದ್ದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಾರವಾರ - ಮಂಗಳೂರು - ಬೆಂಗಳೂರು ನಡುವಿನ ಕೆಲವು ರೈಲುಗಳು ರದ್ದಾಗಿದ್ದರೆ, ಇನ್ನು ಕೆಲವು ಬೇರೆ ಮಾರ್ಗದಲ್ಲಿ ಸಂಚರಿಸಲಿವೆ.

ವಿಜಯ ಕರ್ನಾಟಕ 26 Jul 2024 11:12 pm

ಕಿದ್ವಾಯಿಯಲ್ಲಿ ಉಚಿತವಾಗಿ ಅಲೋಜಿಕ್ ಚಿಕಿತ್ಸೆ ಪಡೆಯಬಹುದು : ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ಪ್ರಧಾನಮಂತ್ರಿ ಪರಿಹಾರ ನಿಧಿ (ಪಿಎಂಆರ್‌ಎಫ್), ಮುಖ್ಯಮಂತ್ರಿಗಳ ಪರಿಹಾರ ನಿಧಿ (ಸಿಎಂಆರ್‌ಎಫ್), ಎಸ್‍ಸಿಪಿ/ ಟಿಎಸ್‍ಪಿ ಯೋಜನೆ ಮತ್ತು ಸಿಜಿಎಚ್‍ಎಸ್ ಯೋಜನೆಗಳ ಮೂಲಕ ಕಿದ್ವಾಯಿ ಬಿಎಂಟಿ ಕೇಂದ್ರದಲ್ಲಿ ಅಲೋಜಿಕ್ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಜೀವನೋಪಾಯ ಹಾಗೂ ಕೌಶಲ್ಯಭಿವೃದ್ದಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ನಗರದಲ್ಲಿರುವ ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು, ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದ ಬಿಎಂಟಿ ರೋಗಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಅವರು ರೋಗದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ತಿಳಿಸಿದರು. ಕಾಂಡಕೋಶ ಕಸಿಗಳು ಮುಖ್ಯವಾಗಿ ಎರಡು ವಿಧಗಳಿವೆ. ಆಟೋಲೋಗಸ್ (ರೋಗಿಯ ಸ್ವಂತ ಕಾಂಡಕೋಶಗಳನ್ನು ಬಳಸಲಾಗುತ್ತದೆ) ಮತ್ತು ಅಲೋಜೆನಿಕ್ (ಸ್ವೀಕೃತದಾರರಿಗೆ ನೀಡಿದ ದಾನಿ ಕಾಂಡಕೋಶಗಳು). ಸಾಮಾನ್ಯವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಆಟೋಲೋಗಸ್ ಕಸಿ ವೆಚ್ಚವು 7ರಿಂದ 15 ಲಕ್ಷ ರೂ.ಗಳವರೆಗೆ ಇರುತ್ತದೆ. ಮತ್ತು ಅಲೋಜೆನಿಕ್ ಬಿಎಂಟಿಗಳು ಸುಮಾರು 15-30 ಲಕ್ಷ ರೂ. ಇರುತ್ತದೆ. ರಾಜ್ಯದ ಕ್ಯಾನ್ಸರ್ ರೋಗಿಗಳಿಗೆ ಅನುಕೂಲವಾಗಲು ಹಾಗೂ ಬಡ ರೋಗಿಗಳಿಗೆ ಅಸ್ಥಿಮಜ್ಜೆ ಕಸಿ ಸೇವೆ ಲಭ್ಯವಾಗಿದ್ದು, ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು. ಹಲವು ಪ್ರಖ್ಯಾತಿಗೆ ಪಾತ್ರವಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಮತ್ತೊಂದು ಸಾಧನೆ ಮಾಡಿದೆ. 14-ವರ್ಷದ ರೋಗಿಯೊಬ್ಬರಿಗೆ ಮೊದಲ ಪೀಡಿಯಾಟ್ರಿಕ್ ಮ್ಯಾಚಡ್ ಸಿಬ್ಲಿಂಗ್ ಡೋನರ್ ಅಲೋಜೆನಿಕ್ ಬೋನ್ ಮ್ಯಾರೊ ಟ್ರಾನ್ಸ್ ಪ್ಲಾಂಟ್ (ಬಿಎಂಟಿ) (ಅಸ್ತಿಮಜ್ಜೆ ಕಸಿ) ಚಿಕಿತ್ಸೆಯನ್ನು ಯಶಸ್ವಿಗೊಳಿಸುವ ಮೂಲಕ ರಾಜ್ಯ ಕಿದ್ವಾಯಿ ಆಸ್ಪತ್ರೆ ಹೊಸ ಮೈಲಿಗಲ್ಲು ಸೃಷ್ಟಿಸಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆ ನಿರ್ದೇಶಕ ಡಾ.ವಿ.ಲೋಕೇಶ್, ವೈದ್ಯಕೀಯ ಅಧೀಕ್ಷಕ ಡಾ.ನವೀನ್.ಟಿ ಮತ್ತು ಡಾ.ಪ್ರಭಾ ಶೇಷಾಚಾರ್, ಆರ್‌ಎಂಒ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 26 Jul 2024 11:04 pm

ಚೀನಾಕ್ಕೆ ಅಪ್ಪಳಿಸಿದ ಗೆಮಿ ಚಂಡಮಾರುತ | 3 ಲಕ್ಷ ಮಂದಿಯ ಸ್ಥಳಾಂತರ; ವ್ಯಾಪಕ ನಾಶ-ನಷ್ಟ

ಬೀಜಿಂಗ್ : ಚೀನಾಕ್ಕೆ ಶುಕ್ರವಾರ ಅಪ್ಪಳಿಸಿದ ಗೆಮಿ ಚಂಡಮಾರುತದಿಂದ ಪೂರ್ವ ಚೀನಾದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಚಂಡಮಾರುತ ಗುರುವಾರ ರಾತ್ರಿ ವೇಳೆ ಪೂರ್ವ ಚೀನಾದ ಫುಜಿಯಾನ್ ಪ್ರಾಂತ ತಲುಪಿದೆ. ಸುಂಟರಗಾಳಿ ಮತ್ತು ಮಳೆಯಿಂದಾಗಿ ಫುಜಿಯಾನ್ ಪ್ರಾಂತದಲ್ಲೇ 2,90,000ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಿದ್ದು, ಕೆಲವು ನಗರಗಳಲ್ಲಿ ಸಾರ್ವಜನಿಕ ಸಾರಿಗೆ, ಕಚೇರಿಗಳು, ಶಾಲೆಗಳು ಮತ್ತು ಮಾರುಕಟ್ಟೆಗಳನ್ನು ಮುಚ್ಚಲಾಗಿದೆ. ನೆರೆಯ ಝೆಜಿಯಾಂಗ್ ಪ್ರಾಂತದಲ್ಲಿ ರಸ್ತೆಗಳಲ್ಲಿ ನೆರೆನೀರು ಹರಿಯುತ್ತಿದ್ದು ಹಲವು ಮರಗಳು ರಸ್ತೆಗಳ ಮೇಲೆ ಉರುಳಿಬಿದ್ದು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ವೆನ್‌ಝೋವ್ ನಗರದಲ್ಲಿ ಸುಮಾರು 7 ಸಾವಿರ ಜನರನ್ನು ಸ್ಥಳಾಂತರಿಸಲಾಗಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಯಾಂಗ್‌ಕ್ಸಿ ಮತ್ತು ಹೆನಾನ್ ಪ್ರಾಂತದಲ್ಲೂ ಧಾರಾಕಾರ ಮಳೆಯಾಗಿದೆ ಎಂದು ಸಿಸಿಟಿವಿ ವರದಿ ಮಾಡಿದೆ. ಗ್ವಾಂಗ್‌ಡಾಂಗ್ ಪ್ರಾಂತದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಕೆಲವು ಪ್ರಯಾಣಿಕರ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಇದುವರೆಗೆ ಯಾವುದೇ ಸಾವು-ನೋವಿನ ವರದಿಯಾಗಿಲ್ಲ ಎಂದು ಚೀನಾದ ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ವಾರ್ತಾ ಭಾರತಿ 26 Jul 2024 10:58 pm

ಆಕ್ಸ್‌ ಫರ್ಡ್ ವಿವಿ ಕುಲಪತಿ ಚುನಾವಣೆಗೆ ಇಮ್ರಾನ್ ಸ್ಪರ್ಧೆ : ವರದಿ

ಇಸ್ಲಾಮಾಬಾದ್ : ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ಖಾನ್ ಅವರು ಬ್ರಿಟನ್‌ನ ಆಕ್ಸ್‌ ಫರ್ಡ್ ವಿವಿ ಕುಲಪತಿ ಹುದ್ದೆಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಅವರ ನಿಕಟವರ್ತಿಗಳು ಮತ್ತು ಮಾಧ್ಯಮಗಳು ವರದಿ ಮಾಡಿವೆ. ಆಕ್ಸ್‌ ಫರ್ಡ್ ನ ಕೆಬ್ಲೆ ಕಾಲೇಜಿನಲ್ಲಿ ಇಮ್ರಾನ್‌ಖಾನ್ 1972ರಲ್ಲಿ ರಾಜಕೀಯ ಮತ್ತು ಅರ್ಥಶಾಸ್ತ್ರದ ವಿದ್ಯಾರ್ಥಿಯಾಗಿದ್ದರು. ಜೊತೆಗೆ ಆಕ್ಸ್‌ ಫರ್ಡ್ ವಿವಿಯ ಕ್ರಿಕೆಟ್ ತಂಡದ ನಾಯಕನಾಗಿದ್ದರು. 2005ರಿಂದ 2014ರವರೆಗೆ ಅವರು ಬ್ರಾಡ್‌ಫೋರ್ಡ್ ವಿವಿಯ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು. ಇದೇ ಪ್ರಥಮ ಬಾರಿಗೆ ಆಕ್ಸ್‌ ಫರ್ಡ್ ವಿವಿಯ ಕುಲಪತಿ ಚುನಾವಣೆ ಆನ್‌ಲೈನ್‌ಲ್ಲಿ ನಡೆಯುತ್ತಿದೆ. ಇಮ್ರಾನ್ ಆನ್‌ಲೈನ್‌ನಲ್ಲೇ ನಾಮಪತ್ರ ಸಲ್ಲಿಸಿ ಸ್ಪರ್ಧಿಸಲಿದ್ದಾರೆ ಎಂದು ಬ್ರಿಟನ್‌ನ `ದಿ ಟೆಲಿಗ್ರಾಫ್' ವರದಿ ಮಾಡಿದೆ.

ವಾರ್ತಾ ಭಾರತಿ 26 Jul 2024 10:56 pm