SENSEX
NIFTY
GOLD
USD/INR

Weather

32    C
...

Noida | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ: ಕಾರ್ಮಿಕರಿಗೆ ರಾಹುಲ್ ಗಾಂಧಿ ಬೆಂಬಲ

ನೋಯ್ಡಾ: ಕನಿಷ್ಠ ವೇತನ ಆಗ್ರಹಿಸಿ ನೋಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ದೇಶಾದ್ಯಂತದ ಕಾರ್ಮಿಕರು ಎದುರಿಸುತ್ತಿರುವ ಆರ್ಥಿಕ ಒತ್ತಡವನ್ನು ಈ ಪ್ರತಿಭಟನೆ ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ. ಕಾರ್ಮಿಕರ ಆತಂಕಗಳನ್ನು ತುಂಬಾ ಸಮಯದಿಂದ ನಿರ್ಲಕ್ಷಿಸುತ್ತಾ ಬರಲಾಗಿದೆ. ಈಗ ನೋಯ್ಡಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಕಾರ್ಮಿಕರ ಅಂತಿಮ ಕೂಗಿನಂತೆ ಕೇಳಿ ಬರುತ್ತಿದೆ ಎಂದು ಅವರು ಹೇಳಿದ್ದಾರೆ. ಕಾರ್ಮಿಕರು ತಿಂಗಳಿಗೆ ಸುಮಾರು 12,000 ವೇತನ ಪಡೆಯುತ್ತಾರೆ. ಅದರಲ್ಲಿ 4,000ದಿಂದ 7,000ದ ವರೆಗೆ ಮನೆ ಬಾಡಿಗೆಗೆ ವೆಚ್ಚ ಮಾಡುತ್ತಾರೆ. ವಾರ್ಷಿಕ ವೇತನ ಹೆಚ್ಚಳ ಸಾಕಾಗುವುದಿಲ್ಲ. ಯಾಕೆಂದರೆ, ವಸತಿ ವೆಚ್ಚವು ವೇತನ ಏರಿಕೆಗಿಂತ ಹೆಚ್ಚು ಏರುತ್ತಿದೆ ಎಂದು ಅವರು ಗಮನ ಸೆಳೆದರು. ದರ ಏರಿಕೆ ಹಾಗೂ ಸ್ಥಗಿತ ಆದಾಯ ಕಾರ್ಮಿಕರ ಹಣಕಾಸು ಒತ್ತಡ ತೀವ್ರಗೊಳ್ಳಲು ಪ್ರಮುಖ ಕಾರಣವಾಗಿದೆ. ಇದು ಅವರನ್ನು ಸಾಲಕ್ಕೆ ದೂಡುತ್ತಿದೆ ಎಂದು ರಾಹುಲ್ ಗಾಂಧಿ ಗಮನ ಸೆಳೆದರು. ಇದು ಅಭಿವೃದ್ಧಿ ಹೊಂದುತ್ತಿರುವ ಅಥವಾ ಅಭಿವೃದ್ಧಿ ಹೊಂದಿದ ಭಾರತದ ಪ್ರತಿಪಾದನೆ ಹಿಂದಿರುವ ವಾಸ್ತವತೆ ಎಂದು ಅವರು ವಿವರಿಸಿದರು. ಅವರು ಹೆಚ್ಚುತ್ತಿರುವ ಇಂಧನ ಬೆಲೆ ಹಾಗೂ ಜಾಗತಿಕ ಸರಬರಾಜು ಸರಪಳಿ ವ್ಯತ್ಯಯಗಳು ಸೇರಿದಂತೆ ವಿಶಾಲ ಆರ್ಥಿಕ ಪರಿಸ್ಥಿತಿಗಳನ್ನು ಟೀಕಿಸಿದರು. ಇದು ಸಾಮಾನ್ಯ ನಾಗರಿಕರಿಗೆ ಇನ್ನಷ್ಟು ಹೊರೆ ಉಂಟು ಮಾಡಿದೆ ಎಂದು ಹೇಳಿದರು.

ವಾರ್ತಾ ಭಾರತಿ 14 Apr 2026 9:30 pm

ಮಂಗಳೂರು: ಸಮುದಾಯ ಜಾಗೃತಿ ಅಭಿಯಾನ ಉದ್ಘಾಟನೆ

ಮಂಗಳೂರು, ಎ.14:ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ವತಿಯಿಂದ ಎ.22ರಂದು ನಗರದ ಪುರಭವನದಲ್ಲಿ ನಡೆಯಲಿರುವ ಜಿಲ್ಲೆಯ 600ಕ್ಕೂ ಹೆಚ್ಚು ಮೊಹಲ್ಲಾದ ಲೀಡರ್ಸ್ ಮೀಟ್‌ನ ಸಭೆ ಮತ್ತು ಎ.14ರಿಂದ ಜೂ.30ರವರೆಗೆ ಖೈರು ಉಮ್ಮ ಎಂಬ ಶೀರ್ಷಿಕೆಯಡಿ ಸುನ್ನಿ ಮ್ಯಾನೇಜ್ಮೆಂಟ್ ಎಸೋಸಿಯೇಶನ್ ರಾಜ್ಯ ಮತ್ತು ಅಧೀನ ಘಟಕಗಳ ವತಿಯಿಂದ ನಡೆಯಲಿರುವ ಸಮುದಾಯ ಜಾಗೃತಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಪಡೀಲ್ ಇಲ್ಮ್ ಸೆಂಟರಿನಲ್ಲಿ ನಡೆಯಿತು. ಪುಂಡೂರು ಇಬ್ರಾಹಿಂ ಸಖಾಫಿ ದುಆಗೈದರು. ಎಸ್‌ಜೆಎಂ ರಾಜ್ಯಾಧ್ಯಕ್ಷ ಜೆಪ್ಪುಅಬ್ದುಲ್ ರಹ್ಮಾನ್ ಮದನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಸ್‌ಎಂಎ ರಾಜ್ಯ ಉಪಾಧ್ಯಕ್ಷ ಹಮೀದ್ ಹಾಜಿ ಕೊಡುಂಗಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಭೆಯಲ್ಲಿ ಸಮುದಾಯ ಜಾಗೃತಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಮತ್ತು ಮೇ 8ರಂದು ಎಸ್‌ಎಂಎ ಹಮ್ಮಿಕೊಂಡ ಮದ್ರಸ ಡೇ ಎಂಬ ವಿಶೇಷ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಲೀಡರ್ಸ್ ಮೀಟ್‌ನ ನಿರ್ವಹಣಾ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಹಮೀದ್ ಹಾಜಿ ಕೊಡುಂಗಾಯಿ, ಮುಖ್ಯ ಸಂಚಾಲಕರಾಗಿ ಇಬ್ರಾಹೀಂ ನಈಮಿ ಹಾಗೂ ಸದಸ್ಯರಾಗಿ ಅಬ್ಬಾಸ್ ಸೆರ್ಕಳ, ಅನ್ಸಾರ್ ಕೃಷ್ಣಾಪುರ, ಎಂಬಿ. ಮುಹಮ್ಮದ್ ಸ್ವಾದಿಕ್ ಮಲೆಬೆಟ್ಟು, ಇಸ್ಮಾಯೀಲ್ ವೇಣೂರು, ಆಲಿಕುಂಞಿ ಮೋಂಟುಗೋಳಿ, ರಝಾಕ್ ಹಾಜಿ ಮುಕ್ಕ, ಅಬೂಬಕರ್ ಹಂದಾನಿ, ಯಾಕೂಬ್ ಲತ್ವೀಫಿ, ಹಮೀದ್ ಸಅದಿ ಮೂರುಗೋಳಿ, ಅಕ್ಬರ್ ಅಲಿ ಮದನಿ, ಇಬ್ರಾಹಿಮ್ ಸಖಾಫಿ ಕಬಕ, ನವಾಝ್ ಸಖಾಫಿ ಉಳ್ಳಾಲ, ರಫೀಕ್ ಝುಹ್ರಿ, ಹನೀಫ್ ಸಅದಿ, ರಝಾಕ್ ಸಖಾಫಿ ಕೊಳಕೆ, ಫಾರೂಕ್ ಶೇಡಿಗುರಿ, ನೌಫಲ್ ಅಹ್ಸನಿ ಪಕ್ಷಿಕೆರೆ ಆಯ್ಕೆಯಾದರು. ಇಬ್ರಾಹಿಂ ನಯೀಮಿ ವಂದಿಸಿದರು.

ವಾರ್ತಾ ಭಾರತಿ 14 Apr 2026 9:29 pm

ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಸುಮಾರು 6 ಲಕ್ಷ ಸರ್ಕಾರಿ ನೌಕರರ ಆರೋಗ್ಯ ಸುಧಾರಿಸುವ ಹಾಗೂ ಉತ್ತಮ ಜೀವನಶೈಲಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಸಭೆಗಳು, ಸಮಾರಂಭಗಳು ಹಾಗೂ ಕ್ಯಾಂಟೀನ್‌ಗಳಲ್ಲಿ ಸಿರಿಧಾನ್ಯ ಆಧಾರಿತ ತಿಂಡಿಗಳು, ಕಡಿಮೆ ಸಕ್ಕರೆ ಇರುವ ಆಹಾರ ಹಾಗೂ ಆರೋಗ್ಯಕರ ಪಾನೀಯಗಳನ್ನು ಮಾತ್ರ

ಒನ್ ಇ೦ಡಿಯ 14 Apr 2026 9:26 pm

ಸುಹಾಸಂನ ಅಧ್ಯಕ್ಷೆಯಾಗಿ ಸಂಧ್ಯಾ ಶೆಣೈ ಆಯ್ಕೆ

ಉಡುಪಿ, ಎ.14: ಖ್ಯಾತ ಲೇಖಕಿ, ಹಾಸ್ಯ ಬರಹಗಾರ್ತಿ ಉಡುಪಿಯ ಸಂಧ್ಯಾ ಶೆಣೈ ಅವರನ್ನು ಉಡುಪಿಯ ಸಾಹಿತ್ಯಿತ ಸಂಘಟನೆ ‘ಸುಹಾಸಂ’ನ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಮುರಳೀಧರ ಕೆ. ಅವರು ಸಂಘಟನೆಯ ನೂತನ ಪ್ರಧಾನ ಕಾರ್ಯದರ್ಶಿ ಯಾಗಿರುತ್ತಾರೆ. ಉಳಿದ ಪದಾಧಿಕಾರಿಗಳ ವಿವರ ಹೀಗಿದೆ. ಸುಹಾಸಂ ಸ್ಥಾಪಕಾಧ್ಯಕ್ಷರು:ಶ್ರೀನಿವಾಸ್ ರಾವ್, ಪೋಷಕಾಧ್ಯಕ್ಷರು: ಶಾಂತರಾಜ್ ಐತಾಳ್, ಗೌರವಾಧ್ಯಕ್ಷರು: ಕು.ಗೋಪಾಲ ಭಟ್, ಉಪಾಧ್ಯಕ್ಷರು: ಭುವನಪ್ರಸಾದ್ ಹೆಗ್ಡೆ, ಕೃಷ್ಣಮೂರ್ತಿ ರಾವ್, ಶ್ರೀನಿವಾಸ್ ಉಪಾಧ್ಯಾಯ. ಪ್ರಧಾನ ಕಾರ್ಯದರ್ಶಿ:ಮುರಳೀಧರ ಕೆ., ಕಾರ್ಯದರ್ಶಿ: ದಿನೇಶ ಉಪ್ಪೂರು, ಜೊತೆ ಕಾರ್ಯದರ್ಶಿ: ನಾರಾಯಣ ಮಡಿ, ಖಜಾಂಚಿ: ಕೆ. ಸದಾಶಿವ ರಾವ್, ರಾಜೇಶ್ ಪಣಿಯಾಡಿ, ಸಂಚಾಲಕಿ: ಶಿಲ್ಪಾ ಜೋಷಿ, ಸಹ ಸಂಚಾಲಕರು: ವಿವೇಕಾನಂದ ಪಾಂಗಣಾಯ. ಗೌರವ ಸಲಹೆಗಾರರು:ವಿಶ್ವನಾಥ್ ಶೆಣೈ, ಸಿ.ಎಸ್.ರಾವ್, ಮುರಳೀಧರ ಉಪಾಧ್ಯಾಯ, ಜಯಕರ ಶೆಟ್ಟಿ ಇಂದ್ರಾಳಿ, ಮುರಳಿ ಕಡೇಕಾರ್, ಗಣನಾಥ್ ಎಕ್ಕಾರ್, ಎಂ.ಎಲ್.ಸಾಮಗ, ಪ್ರಭಾಕರ ಭಂಡಾರಿ, ಜನಾರ್ದನ್ ಕೊಡವೂರು, ವಿಘ್ನೇಶ್ವರ ಅಡಿಗ, ನಾಗರಾಜ ಹೆಬ್ಬಾರ್, ಸುಗುಣ ಸುವರ್ಣ, ಗಂಗಾಧರ ಕಿದಿಯೂರು, ಡಾ.ಮಹಾಬಲೇಶ್ವರ ರಾವ್, ಡಾ.ಅಮ್ಮುಂಜೆ ಅರವಿಂದ ನಾಯಕ್, ಡಾ.ಸುರೇಶ್ ಶೆಣೈ, ರವಿರಾಜ್ ಹೆಚ್.ಪಿ., ರಾಮ್ ಭಟ್ ಸಜಂಗದ್ದೆ. ಕಾರ್ಯಕಾರಿ ಸಮಿತಿ ಸದಸ್ಯರು: ವಿದ್ಯಾ ಸರಸ್ವತಿ, ರಾಘವೇಂದ್ರ ನಾಯಕ್, ಹಫೀಜ್ ರೆಹಮಾನ್, ಪೂರ್ಣಿಮಾ ಜನಾರ್ದನ, ಸರೋಜ ಆಚಾರ್ಯ, ಮುರಳೀಧರ ಹಾಲಂಬಿ, ಸಿದ್ದಬಸಯ್ಯ ಚಿಕ್ಕಮಠ, ರಾಮಚಂದ್ರ ರಾವ್, ರಾಘವೇಂದ್ರ ಕರ್ವಾಲು, ಉಮಾಶಂಕರಿ, ವಾಸಂತಿ ಅಂಬಲ್ಪಾಡಿ, ಅನಿತಾ ಸಿಕ್ವೇರ, ರಂಜಿನಿ ವಸಂತ, ನರಸಿಂಹಮೂರ್ತಿ, ಶಶಿಕಾಂತ್ ಶೆಟ್ಟಿ, ಹಯವದನ ಉಪಾಧ್ಯಾಯ, ಎಂ.ಎಸ್.ಭಟ್.

ವಾರ್ತಾ ಭಾರತಿ 14 Apr 2026 9:16 pm

ಕನ್ನಡದಲ್ಲಿ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಎ.14: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ ಮೇ 3ರಂದು ಡಾ.ಬಿ.ಭಾಸ್ಕರಾನಂದ ಕುಮಾರ್ ಸರ್ವಾಧ್ಯಕ್ಷತೆ ಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉಡುಪಿ ತಾಲೂಕು ಮಟ್ಟದ ಸರಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳಲ್ಲಿ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಿಭಾಗದಲ್ಲಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲು ನಿರ್ಧರಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳಿಗಾಗಿ ಕಸಾಪ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಅವರನ್ನು (ಮೊ.:9880811036) ಸಂಪರ್ಕಿಸುವಂತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ವಾರ್ತಾ ಭಾರತಿ 14 Apr 2026 9:14 pm

ಪ್ರಧಾನಿ ಮೋದಿಗೆ ಟ್ರಂಪ್‌ ದೂರವಾಣಿ ಕರೆ; 40 ನಿಮಿಷ ಮಾತುಕತೆ

ಹೊಸದಿಲ್ಲಿ: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ಹಿನ್ನೆಲೆಯಲ್ಲಿ ಹಾಗೂ ಇಸ್ಲಾಮಾಬಾದ್‌ ನಲ್ಲಿ ಸುಮಾರು 21 ಗಂಟೆಗಳ ಕಾಲ ನಡೆದ ಮಾತುಕತೆಗಳು ಯಾವುದೇ ಒಪ್ಪಂದವಿಲ್ಲದೆ ಅಂತ್ಯಗೊಂಡ ಬಳಿಕ, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಸುಮಾರು 40 ನಿಮಿಷಗಳ ಕಾಲ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಳಿಕ ಇಬ್ಬರು ನಾಯಕರ ನಡುವಿನ ಮೊದಲ ಸಂಭಾಷಣೆ ಇದಾಗಿದೆ. ಮಾತುಕತೆಯ ವಿವರಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ, “ನನ್ನ ಸ್ನೇಹಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಕರೆ ಸ್ವೀಕರಿಸಿದೆ. ವಿವಿಧ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಸಹಕಾರದಲ್ಲಿ ಸಾಧಿಸಿರುವ ಮಹತ್ವದ ಪ್ರಗತಿಯ ಕುರಿತು ಮಾತನಾಡಿದ್ದೇವೆ. ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ” ಎಂದು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯನ್ನೂ ಈ ವೇಳೆ ಇಬ್ಬರು ನಾಯಕರು ಚರ್ಚಿಸಿದ್ದು, ಹಾರ್ಮುಝ್ ಜಲಸಂಧಿಯನ್ನು ಮುಕ್ತ ಹಾಗೂ ಸುರಕ್ಷಿತವಾಗಿರಿಸುವ ಅಗತ್ಯವನ್ನು ಒತ್ತಿಹೇಳಲಾಗಿದೆ ಎಂದು ಮೋದಿ ಹೇಳಿದ್ದಾರೆ. ಮಧ್ಯಪ್ರಾಚ್ಯದ ರಾಜಕೀಯ ಉದ್ವಿಗ್ನತೆ ಉನ್ನತ ಮಟ್ಟದಲ್ಲಿರುವ ಸಂದರ್ಭದಲ್ಲಿ ಈ ಮಾತುಕತೆ ನಡೆದಿದ್ದು, ಎರಡೂ ದೇಶಗಳು ಅಲ್ಲಿನ ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸುತ್ತಿವೆ. ಈ ನಡುವೆ, ಭಾರತಕ್ಕೆ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಭಾರತ–ಅಮೆರಿಕ ಸಂಬಂಧಗಳು ಬಲಿಷ್ಠ ನೆಲೆಯಲ್ಲಿವೆ ಎಂದು ಹೇಳಿದ್ದಾರೆ. “ಮುಂದಿನ ಕೆಲವು ದಿನಗಳು ಮತ್ತು ವಾರಗಳಲ್ಲಿ ಇಂಧನ ಸೇರಿದಂತೆ ಹಲವು ಪ್ರಮುಖ ಒಪ್ಪಂದಗಳು ನಡೆಯುವ ನಿರೀಕ್ಷೆಯಿದೆ. ಆರ್ಥಿಕ ಸಹಕಾರ ಮತ್ತಷ್ಟು ಗಾಢವಾಗಬಹುದು” ಎಂದು ಅವರು ತಿಳಿಸಿದ್ದಾರೆ. ಮಾತುಕತೆಯ ಕುರಿತು ವಿವರ ನೀಡಿದ ಗೋರ್, “ನಾವೆಲ್ಲರೂ ನಿಮ್ಮನ್ನು ಪ್ರೀತಿಸುತ್ತೇವೆ ಎಂದು ನಿಮಗೆ ತಿಳಿಸಬೇಕೆಂದು ನಾನು ಬಯಸುತ್ತೇನೆ” ಎಂದು ಟ್ರಂಪ್ ಮೋದಿಗೆ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇನ್ನೊಂದೆಡೆ, ದುರ್ಬಲವಾದ ಕದನ ವಿರಾಮದ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಪ್ರಧಾನಿ ಮೋದಿ ಮತ್ತು ಟ್ರಂಪ್ ಈ ಹಿಂದೆ ಫೆಬ್ರವರಿ 2ರಂದು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಪ್ರಗತಿಯನ್ನು ಪರಿಶೀಲಿಸಲು ಹಾಗೂ ಮಾರ್ಚ್ 24ರಂದು ಪ್ರಾದೇಶಿಕ ಪರಿಸ್ಥಿತಿಗಳ ಕುರಿತು ಚರ್ಚಿಸಲು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಮಂಗಳವಾರದ ಸಂಭಾಷಣೆಯ ಸಂಪೂರ್ಣ ವಿವರಗಳನ್ನು ತಕ್ಷಣ ಬಹಿರಂಗಪಡಿಸದಿದ್ದರೂ, ಸುಮಾರು 40 ನಿಮಿಷಗಳ ಅವಧಿಯ ಈ ಮಾತುಕತೆ ಇಬ್ಬರು ನಾಯಕರ ನಡುವೆ ಮಹತ್ವದ ವಿಚಾರ ವಿನಿಮಯ ನಡೆದಿರುವುದನ್ನು ಸೂಚಿಸುತ್ತದೆ.

ವಾರ್ತಾ ಭಾರತಿ 14 Apr 2026 9:13 pm

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವಿಜಯನಗರ : ಜಿಲ್ಲೆಯ ಹಂಪಿಯಲ್ಲಿರುವ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಕ್ರಿಯಾಶಕ್ತಿ ಕಟ್ಟಡದ ಸಿಂಡಿಕೇಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅವರು ಮಾತನಾಡುತ್ತಾ, ಆಧುನಿಕ ಭಾರತದ ನಿರ್ಮಾಣದಲ್ಲಿ ಅಂಬೇಡ್ಕರ್ ಅವರ ಚಿಂತನೆಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಸಮಾಜದ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಅವರ ತತ್ವಗಳು ದಿಕ್ಕು ತೋರಿಸುತ್ತಿದ್ದು, ಅವುಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಅಂಬೇಡ್ಕರ್ ಅವರನ್ನು ಕೇವಲ ಹಕ್ಕುಗಳ ಹೋರಾಟಗಾರರಾಗಿ ಮಾತ್ರವಲ್ಲ, ಸಮಗ್ರ ಸಮಾಜದ ಮಾರ್ಗದರ್ಶಕರಾಗಿ ಗುರುತಿಸಬೇಕು ಎಂದು ಅಭಿಪ್ರಾಯಪಟ್ಟರು. ಕುಲಸಚಿವ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಅವರು ಮಾತನಾಡಿ, ಸಂವಿಧಾನದಲ್ಲಿ ಅಂಬೇಡ್ಕರ್ ಅವರು ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದ ಮೌಲ್ಯಗಳನ್ನು ಪ್ರತಿಷ್ಠಾಪಿಸಿದ್ದಾರೆ. ಮಹಿಳಾ ಹಕ್ಕುಗಳ ಸ್ಥಾಪನೆಗೂ ಅವರ ಕೊಡುಗೆ ಮಹತ್ವದ್ದಾಗಿದೆ. ಅವರ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ವಿಶ್ವವಿದ್ಯಾಲಯದ ಅಧಿಕಾರಿಗಳು, ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 14 Apr 2026 9:06 pm

ದ್ವಿತೀಯ ಪಿಯುಸಿ ಫಲಿತಾಂಶ: ರಿಶಾ ಫಾತಿಮಾಗೆ ವಿಜ್ಞಾನ ವಿಭಾಗದಲ್ಲಿ 580 ಅಂಕ

ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಿಯಲ್‌ಬೈಲ್‌ನಲ್ಲಿರುವ ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರಿಶಾ ಫಾತಿಮಾ ವಿಜ್ಞಾನ ವಿಭಾಗದಲ್ಲಿ 580 (96.66ಶೇ.) ಅಂಕಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಮೊಹಮ್ಮದ್‌ ರಫೀಕ್‌ ಮತ್ತು ರಹಿಯಾನತ್‌ ಅವರ ಪುತ್ರಿ.

ವಾರ್ತಾ ಭಾರತಿ 14 Apr 2026 9:04 pm

ಲೆಬನಾನ್‍ನ ಪ್ರಮುಖ ನಗರವನ್ನು ಸುತ್ತುವರಿದ ಇಸ್ರೇಲಿ ಪಡೆ: ವರದಿ

ಜೆರುಸಲೇಂ: ಕಳೆದ ವಾರದಲ್ಲಿ 100ಕ್ಕೂ ಹೆಚ್ಚು ಹಿಜ್ಬುಲ್ಲಾ ಹೋರಾಟಗಾರರನ್ನು ಹತ್ಯೆಗೈದ ಬಳಿಕ ತನ್ನ ಪಡೆಗಳು ದಕ್ಷಿಣ ಲೆಬನಾನ್‍ನ ಪ್ರಮುಖ ಪಟ್ಟಣವನ್ನು ಸುತ್ತುವರಿದಿವೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. 98ನೆ ಬೆಟಾಲಿಯನ್‍ನ ಪಡೆಗಳು ಆಯಕಟ್ಟಿನ ನಗರ ಬಿಂಟ್ ಜಬೆಲಿಯನ್ನು ಸುತ್ತುವರಿದಿದ್ದು ಅದರ ಮೇಲಿನ ದಾಳಿಯನ್ನು ತೀವ್ರಗೊಳಿಸಿದೆ. ಈ ನಗರದ ಸುತ್ತಮುತ್ತ ಕಳೆದ ಒಂದು ವಾರದಿಂದ ನಡೆದ ಸಂಘರ್ಷದಲ್ಲಿ ಇಸ್ರೇಲಿ ಪಡೆಗಳು 100ಕ್ಕೂ ಹೆಚ್ಚು ಹಿಜ್ಬುಲ್ಲಾ ಹೋರಾಟಗಾರರನ್ನು ಹತ್ಯೆಗೈದಿವೆ' ಎಂದು ಇಸ್ರೇಲಿ ಮಿಲಿಟರಿ ವಕ್ತಾರರು ಹೇಳಿದ್ದಾರೆ. ನಗರದ ಪ್ರವೇಶ ದ್ವಾರದಲ್ಲಿ ಇಸ್ರೇಲಿ ಪಡೆಗಳಿಂದ ತೀವ್ರ ಫಿರಂಗಿ ದಾಳಿ ಮುಂದುವರಿದಿರುವುದಾಗಿ ಲೆಬನಾನ್‍ನ ಸರ್ಕಾರಿ ಸ್ವಾಮ್ಯದ `ನ್ಯಾಷನಲ್ ನ್ಯೂಸ್ ಏಜೆನ್ಸಿ' ವರದಿ ಮಾಡಿದೆ. ಈ ಮಧ್ಯೆ, ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು `ಹಿಜ್ಬುಲ್ಲಾದ ಬೆದರಿಕೆಯನ್ನು ಇಸ್ರೇಲಿ ಪಡೆಗಳು ನಿವಾರಿಸಿವೆ. ಆದರೆ ಇನ್ನೂ ಬಹಳ ಕೆಲಸವನ್ನು ಮಾಡಬೇಕಿದೆ ಮತ್ತು ನಾವದನ್ನು ಮಾಡುತ್ತಿದ್ದೇವೆ' ಎಂದು ಹೇಳಿರುವುದಾಗಿ ವರದಿಯಾಗಿದೆ.

ವಾರ್ತಾ ಭಾರತಿ 14 Apr 2026 9:02 pm

ಹೊಸಪೇಟೆಯಲ್ಲಿ ಅಂಬೇಡ್ಕರ್, ಜಗಜೀವನ ರಾಮ್ ಜಯಂತಿ ಸಂಭ್ರಮ

ಶಿಕ್ಷಣವೇ ಯಶಸ್ಸಿನ ಕೀಲಿ ಕೈ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ವಾರ್ತಾ ಭಾರತಿ 14 Apr 2026 9:01 pm

ತುಂಗಭದ್ರಾ ಜಲಾಶಯ ಗೇಟ್ ಕಾಮಗಾರಿ ಬಹುತೇಕ ಪೂರ್ಣ: ಮೇ 2ನೇ ವಾರಕ್ಕೆ ಸಂಪೂರ್ಣ ಮುಕ್ತಾಯ ಸಾಧ್ಯತೆ

ವಿಜಯನಗರ : ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದಲ್ಲಿ ಗೇಟ್ ಅಳವಡಿಕೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕೇವಲ ಒಂದು ಗೇಟ್‌ನಲ್ಲಿ ಮಾತ್ರ ಎರಕ್ಷನ್ ಕೆಲಸ ಬಾಕಿಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಲಾಶಯದ ಗೇಟ್‌ಗಳ ಸ್ಥಿತಿಯನ್ನು ಮುಖ್ಯ ಇಂಜಿನಿಯರ್ ಕನ್ನಯ್ಯ ನಾಯ್ಡು ಪರಿಶೀಲಿಸಿ ನಂತರ ವೈಕುಂಠ ವಸತಿ ಗೃಹದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈಗಾಗಲೇ ಎಲ್ಲಾ ಗೇಟ್‌ಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದ್ದು ಯಾವುದೇ ತಾಂತ್ರಿಕ ದೋಷಗಳು ಕಂಡುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಚೈನ್ ಲಿಂಕ್ ಅಳವಡಿಕೆ ಕುರಿತು ಮಾತನಾಡಿದ ಅವರು, ಒಂದು ಗೇಟ್‌ಗೆ ಮಾತ್ರ ಪೂರ್ಣವಾಗಿ ಚೈನ್ ಲಿಂಕ್ ಅಳವಡಿಸಲಾಗಿದೆ. ಉಳಿದ ಗೇಟ್‌ಗಳಿಗೆ ಅಳವಡಿಸಲು ಗುತ್ತಿಗೆದಾರರು ಮುಂದೆ ಬರದ ಕಾರಣ ತಮಿಳುನಾಡಿನ ಖಾಸಗಿ ಕಂಪನಿಯೊಂದಿಗೆ ಕೆಲಸ ಆರಂಭಿಸಲಾಗಿದೆ. ಈ ಕಾರ್ಯವೂ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ಈ ಮಹತ್ವದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕರ್ನಾಟಕ ಹಾಗೂ ಆಂಧ್ರಪ್ರದೇಶ ಸರ್ಕಾರಗಳ ಸಹಕಾರದಿಂದ ಕೆಲಸ ವೇಗವಾಗಿ ನಡೆಯುತ್ತಿದೆ ಎಂದು ಅವರು ಕೃತಜ್ಞತೆ ವ್ಯಕ್ತಪಡಿಸಿದರು. ಕಾಮಗಾರಿ ಪೂರ್ಣಗೊಂಡ ಬಳಿಕ ರೈತರಿಗೆ ಎರಡು ಬೆಳೆಗಳಿಗೆ ನೀರು ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದರು. ಮೇ ತಿಂಗಳ ಎರಡನೇ ವಾರದೊಳಗೆ ಸಂಪೂರ್ಣ ಕಾಮಗಾರಿ ಮುಗಿಯುವ ವಿಶ್ವಾಸವಿದೆ ಎಂದು ಅಧಿಕಾರಿಗಳು ತಿಳಿಸಿದರು.

ವಾರ್ತಾ ಭಾರತಿ 14 Apr 2026 8:58 pm

RCB: ಬೆಂಗಳೂರಿನಲ್ಲಿ ಎಲ್‌ಎಸ್‌ಜಿ ವಿರುದ್ಧದ ಪಂದ್ಯದಲ್ಲಿ ಆಡ್ತಾರಾ ವಿರಾಟ್‌ ಕೊಹ್ಲಿ?, ಇಲ್ಲಿದೆ ಮಾಹಿತಿ

Virat Kohli: ಮುಂಬೈನ ವಾಂಖೆಡೆಯಲ್ಲಿ ಏಪ್ರಿಲ್‌ 12ರಂದು ನಡೆದ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸಿತ್ತು. ಈ ವೇಳೆ ಗಾಯಗೊಂಡಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಅವರು ಫೀಲ್ಡಿಂಗ್‌ಗೆ ಬಾರದೆ ಹೊರಗುಳಿದಿದ್ದರು. ಆದ್ದರಿಂದ ಮುಂದಿನ ಪಂದ್ಯದಲ್ಲಿ ಎಲ್‌ಎಸ್‌ಜಿ ವಿರುದ್ಧ ಅವರು ಆಡುವುದು ಅನುಮಾನ ಎನ್ನುವ ಸುದ್ದಿ ಹಬ್ಬಿದ್ದವು.

ಒನ್ ಇ೦ಡಿಯ 14 Apr 2026 8:43 pm

ಸಿಎಂ ಹುದ್ದೆಗಾಗಿ ಖರ್ಗೆ ಮನೆಯಲ್ಲಿ ಡಿಕೆ ಶಿವಕುಮಾರ್ ಗಲಾಟೆ ಮಾಡಿದ್ರಾ? ಏನಿದು ಆರ್.ಅಶೋಕ ವ್ಯಂಗ್ಯ

R Ashoka on KPCC : ರಾಜ್ಯ ಕಾಂಗ್ರೆಸ್ಸಿನಲ್ಲಿ ಮತ್ತು ಸರ್ಕಾರದಲ್ಲಿ ಹೊಂದಾಣಿಕೆ ಎನ್ನುವುದೇ ಇಲ್ಲ. ಇಷ್ಟೊತ್ತಿಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಬೇಕಿತ್ತು. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ಅವರ ಮಾತಿಗೆ ಬೆಲೆ ಅನ್ನೋದೇ ಇಲ್ಲ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರ ನಿವಾಸಕ್ಕೆ ಹೋಗಿ, ಗಲಾಟೆ ಮಾಡಿದ್ದಾರೆ ಎಂದು ವಿಪಕ್ಷದ ನಾಯಕ ಆರ್.ಅಶೋಕ ಲೇವಡಿ ಮಾಡಿದ್ದಾರೆ.

ವಿಜಯ ಕರ್ನಾಟಕ 14 Apr 2026 8:29 pm

ತಮಿಳುನಾಡು ವಿಧಾನಸಭಾ ಚುನಾವಣೆ | ಮಹಿಳೆಯರಿಗೆ ತಿಂಗಳಿಗೆ 2,000 ರೂ., 3 ಎಲ್‌ಪಿಜಿ ಉಚಿತ: ಬಿಜೆಪಿ ಚುನಾವಣಾ ಪ್ರಣಾಳಿಕೆ

ಚೆನ್ನೈ: ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಮಂಗಳವಾರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮನೆಗಳ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು ರೂ. 2,000 ನೆರವು ಮತ್ತು ಪ್ರತಿ ಮನೆಗೆ ಒಂದು ಬಾರಿ ರೂ. 10,000 ನೀಡುವುದಾಗಿ ಪಕ್ಷವು ಭರವಸೆ ನೀಡಿದೆ. ಅದೂ ಅಲ್ಲದೆ, ವರ್ಷದಲ್ಲಿ ಮೂರು ಹಬ್ಬಗಳ ಸಂದರ್ಭದಲ್ಲಿ- ಪೊಂಗಾಲ್, ತಮಿಳು ಪುತ್ತಾಂಡು ಮತ್ತು ದೀಪಾವಳಿ- ಮೂರು ಎಲ್‌ಪಿಜಿ ತುಂಬಿದ ಸಿಲಿಂಡರ್‌ಗಳನ್ನು ಉಚಿತವಾಗಿ ಕೊಡಲಾಗುವುದು ಎಂದು ಬಿಜೆಪಿಯ ಪ್ರಣಾಳಿಕೆ ಆಶ್ವಾಸನೆ ನೀಡಿದೆ. ಮುರುಗನ್ ದೇವರ ಸ್ಮರಣೆಗಾಗಿ ‘ತೈಪೂಸಮ್’ ಜಾತ್ರೆಯನ್ನು ರಾಜ್ಯ ಹಬ್ಬ ಎಂಬುದಾಗಿ ಘೋಷಿಸಲಾಗುವುದು ಎಂಬ ಭರವಸೆಯನ್ನೂ ಬಿಜೆಪಿ ನೀಡಿದೆ. ತಿರುಪರಂಕುಂಡ್ರಮ್ ಬೆಟ್ಟದ ತುದಿಯಲ್ಲಿ ಕಾರ್ತಿಕ ದೀಪವನ್ನು ಹಚ್ಚುವ ಸಂಪ್ರದಾಯವನ್ನು ಪುನರಾರಂಭಿಸಲಾಗುವುದು ಹಾಗೂ ಮುಂದಿನ ವರ್ಷಗಳಲ್ಲಿ ಅದನ್ನು ರಕ್ಷಿಸಿಕೊಂಡು ಹೋಗಲಾಗುವುದು ಎಂಬುದಾಗಿಯೂ ಅದು ಹೇಳಿದೆ. ತಮಿಳುನಾಡು ರೈಲ್ವೇ ಜಾಲವನ್ನು ಆಮೂಲಾಗ್ರ ಬದಲಾವಣೆಗೆ ಒಳಪಡಿಸಲಾಗುವುದು ಎಂದು ಹೇಳಿರುವ ಪ್ರಣಾಳಿಕೆ, ನ್ಯಾಯೋಚಿತ ದರದಲ್ಲಿ ಭೂಸ್ವಾಧೀನ ಮಾಡಲಾಗುವುದು ಎಂದಿದೆ. ಹೈಸ್ಪೀಡ್ ರೈಲು ಕಾರಿಡಾರ್‌ಗಳಂಥ ಯೋಜನೆಗಳ ಮೂಲಕ ರೈಲು ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ಹೇಳಿದೆ. ಬಿಜೆಪಿಯು ಎಐಎಡಿಎಮ್‌ಕೆಯೊಂದಿಗೆ ಮೈತ್ರಿ ಏರ್ಪಡಿಸಿಕೊಂಡಿದ್ದು, ರಾಜ ವಿಧಾನಸಭಾ ಚುನಾವಣೆಯಲ್ಲಿ 27 ಸ್ಥಾನಗಳಿಂದ ಸ್ಪರ್ಧಿಸಲಿದೆ.

ವಾರ್ತಾ ಭಾರತಿ 14 Apr 2026 8:26 pm

ಚತ್ತೀಸ್‌ಗಢ | ವಿದ್ಯುತ್ ಸ್ಥಾವರದ ಬಾಯ್ಲರ್ ಸ್ಪೋಟ: 9 ಮಂದಿ ಸಾವು

ರಾಯಪುರ: ಚತ್ತೀಸ್‌ಗಢದ ಶಕ್ತಿ ಜಿಲ್ಲೆಯ ಸಿಂಘಿತಾರಿ ಗ್ರಾಮದಲ್ಲಿರುವ ವೇದಾಂತ ವಿದ್ಯುತ್ ಸ್ಥಾವರದ ಪ್ರಮುಖ ಬಾಯ್ಲರ್ ಮಂಗಳವಾರ ಸ್ಫೋಟಗೊಂಡ ಪರಿಣಾಮ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 15 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಫೋಟ ಸಂಭವಿಸಿದ ಕೂಡಲೇ ಕಾರ್ಮಿಕರು ಸುರಕ್ಷಿತ ಸ್ಥಳಕ್ಕೆ ಧಾವಿಸಲು ಪ್ರಯತ್ನಿಸಿರುವುದರಿಂದ ಕಾಲ್ತುಳಿತದ ಸನ್ನಿವೇಶ ನಿರ್ಮಾಣವಾಯಿತು. ಇದರಿಂದ ಸುಮಾರು 30ರಿಂದ 40 ಮಂದಿ ಗಂಭೀರ ಗಾಯಗೊಂಡರು. ಹಲವರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಸ್ಫೋಟಕ್ಕೆ ನಿಖರ ಕಾರಣ ಏನು ಎಂಬ ಬಗ್ಗೆ ಅಧಿಕಾರಿಗಳು ಇನ್ನಷ್ಟೇ ದೃಢಪಡಿಸಬೇಕಿದೆ. ‘‘ಶಕ್ತಿ ಜಿಲ್ಲೆಯ ಸಿಂಘಿ ತರೈ ಪ್ರದೇಶದಲ್ಲಿರುವ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 15 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡರವನ್ನು ರಾಯಗಡದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ’’ ಎಂದು ಶಕ್ತಿ ಜಿಲ್ಲಾ ಎಸ್‌ಪಿ ಪ್ರಫುಲ್ ಠಾಕೂರ್ ತಿಳಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ತುರ್ತು ಪ್ರತಿಕ್ರಿಯೆ ತಂಡಗಳು ಹಾಗೂ ಸ್ಥಳೀಯಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದರು. ಪ್ರಾಥಮಿಕ ಮಾಹಿತಿ ಪ್ರಕಾರ ಈ ಘಟನೆ ಅಪರಾಹ್ನ 2 ಗಂಟೆಗೆ ಸಂಭವಿಸಿದೆ. ಸ್ಪೋಟ ಸಂಭವಿಸಿದ ಸಂದರ್ಭ ಎಲ್ಲಾ ಕಾರ್ಮಿಕರು ಘಟಕದ ಒಳಗಡೆ ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಸಂಭವಿಸಿದ ಸ್ಫೋಟ ಈ ಪ್ರದೇಶದಲ್ಲಿ ಆಂತಕದ ವಾತಾವರಣವನ್ನು ನಿರ್ಮಾಣ ಮಾಡಿತು. ಆದರೆ, ಘಟನೆ ನಡೆದ ಬಳಿಕ ಕೂಡಲೇ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 14 Apr 2026 8:23 pm

Raichur | ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಶಾಸಕ ಡಾ.ಶಿವರಾಜ ಎಸ್.ಪಾಟೀಲ್

ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ

ವಾರ್ತಾ ಭಾರತಿ 14 Apr 2026 8:22 pm

Madhya Pradesh | ಅಪಘಾತದಲ್ಲಿ ಪತ್ರಕರ್ತ ಮೃತ್ಯು; ಆ್ಯಂಬುಲೆನ್ಸ್ ವಿಳಂಬವೇ ಸಾವಿಗೆ ಕಾರಣ ಎಂದ ಕುಟುಂಬ

ಭೋಪಾಲ: ಮಧ್ಯಪ್ರದೇಶದಲ್ಲಿ ಸಂಭವಿಸಿದ ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಪತ್ರಕರ್ತರೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲು ಆ್ಯಂಬುಲೆನ್ಸ್ ಸೂಕ್ತ ಸಮಯದಲ್ಲಿ ಆಗಮಿಸದೇ ಇರುವುದು ಸಾವಿಗೆ ಕಾರಣ ಎಂದು ಅವರ ಕುಟುಂಬದ ಆರೋಪಿಸಿದೆ. ‘ಸ್ವರ್ಣ ಮಂಗಳಂ’ ಮಾಸಿಕ ಪತ್ರಿಕೆಯ ಸಂಪಾದಕಾರದ ದೀಪಕ್ ಸೋನಿ ಅವರು ಶುಕ್ರವಾರ ರಾಯ್‌ಸನ್‌ನಲ್ಲಿ ನಡೆದ ಕೃಷಿ ಮೇಳದಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಕುಟುಂಬದ ಪ್ರಕಾರ, ಅಪಘಾತ ಸಂಭವಿಸಿದ ಬಳಿಕ ಸೋನಿ ಅವರನ್ನು ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಅವರ ಸ್ಥಿತಿ ಗಂಭೀರವಾಗಿದ್ದರೂ ಸುಮಾರು ಎರಡು ಮೂರು ಗಂಟೆಗಳ ಕಾಲ ಆ್ಯಂಬುಲೆನ್ಸ್ ಆಗಮಿಸಲಿಲ್ಲ. ಸಮಯ ಕಳೆಯುತ್ತಿದ್ದಂತೆ ಯಾವುದೇ ಆಯ್ಕೆಗಳು ಇಲ್ಲದಿರುವುದರಿಂದ ಸೋನಿ ಅವರನ್ನು ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ಭೋಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಅವರು ಚಿಕಿತ್ಸೆಯ ವೇಳೆ ಮೃತಪಟ್ಟರು ಎಂದು ಕುಟುಂಬ ಹೇಳಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಮುಖ್ಯಮಂತ್ರಿ ಮೋಹನ್ ಯಾದವ್ ಸೇರಿದಂತೆ ಹಿರಿಯ ರಾಜಕೀಯ ನಾಯಕರು ಪಾಲ್ಗೊಂಡಿದ್ದ ಕೃಷಿ ಮೇಳಕ್ಕೆ ಸಂಬಂಧಿಸಿದ ‘‘ವಿಐಪಿ ಕರ್ತವ್ಯ’’ಕ್ಕೆ ಜಿಲ್ಲಾಸ್ಪತ್ರೆಯಲ್ಲಿದ್ದ ಆ್ಯಂಬಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು ಎಂದು ಸೋನಿ ಕುಟುಂಬ ಆರೋಪಿಸಿದೆ. ಆ್ಯಂಬುಲೆನ್ಸ್‌ಗಳು ವಿಐಪಿ ವ್ಯವಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದವು. ತತ್‌ಕ್ಷಣ ಪರ್ಯಾಯ ವ್ಯವಸ್ಥೆ ಮಾಡಲು ಸಾಧ್ಯವಾಗಲಿಲ್ಲ ಎಂದು ಸಿವಿಲ್ ಸರ್ಜನ್ ಯಶ್ಪಾಲ್ ಬಲಿಯಾನ್ ಅವರು ದೂರವಾಣಿ ಮಾತುಕತೆಯ ಸಂದರ್ಭ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಪತ್ರಕರ್ತರು ಹಾಗೂ ನಾಗರಿಕರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ರಾಯ್‌ಸನ್‌ನ ಪತ್ರಕರ್ತರ ಸಂಘಟನೆಯ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಇದೇ ರೀತಿಯ ಮನವಿಯನ್ನು ಕೇಂದ್ರ ಸಚಿವ ಶಿವರಾಜ್ ಸಿಂಗ್ ಅವರಿಗೆ ಕೂಡ ಸಲ್ಲಿಸಲಾಗಿದ್ದು, ಘಟನೆಗೆ ಕಾರಣರಾದವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ವಾರ್ತಾ ಭಾರತಿ 14 Apr 2026 8:21 pm

Raichur | ಅಂಬೇಡ್ಕರ್ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕಿ ಕರೆಮ್ಮ ಜಿ.ನಾಯಕ್

ರಾಯಚೂರು: ಭಾರತದ ಪ್ರತಿ ಪ್ರಜೆಯೂ ಬಾಬಾ ಸಾಹೇಬರ ಕೊಡುಗೆಗಳನ್ನು ಸ್ಮರಿಸಿ ಗೌರವಿಸುವ ಮೂಲಕ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ಶಾಸಕಿ ಕರೆಮ್ಮ ಜಿ.ನಾಯಕ್ ಹೇಳಿದರು. ದೇವದುರ್ಗ ತಾಲೂಕು ಆಡಳಿತ, ತಾಲೂಕು ಪಂಚಾಯತ್‌, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಅನುಭವಿಸಿದ ಕಷ್ಟಗಳ ಪರಿಣಾಮವಾಗಿ ಇಂದು ನಾವು ಸುಖಕರ ಜೀವನ ನಡೆಸಲು ಸಾಧ್ಯವಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರ ಭವಿಷ್ಯ ಬಂಗಾರವಾಗುತ್ತದೆ ಎಂದು ಅವರು ತಿಳಿಸಿದರು. ಅಂಬೇಡ್ಕರ್ ಅವರ ಬದುಕು, ಜೀವನಶೈಲಿ ಹಾಗೂ ಕೊಡುಗೆಗಳು ಎಲ್ಲರಿಗೂ ಸ್ಫೂರ್ತಿಯಾಗಿವೆ. ಅವರ ಕೊಡುಗೆಗಳಿಂದಲೇ ದೇಶದಲ್ಲಿ ಸಮಾನತೆ, ಹಕ್ಕು ಮತ್ತು ಕರ್ತವ್ಯಗಳ ಅರಿವು ಸಾಧ್ಯವಾಗಿದೆ ಎಂದು ಹೇಳಿದರು. ಅಸ್ಪೃಶ್ಯತೆ ಎಂಬುದು ಜಾತಿ ಆಧಾರಿತ ತಾರತಮ್ಯವಾಗಿದ್ದು, ಇದು ಮಾನವ ಹಕ್ಕುಗಳ ಉಲ್ಲಂಘನೆ. ಭಾರತೀಯ ಸಂವಿಧಾನದ ಅನುಚ್ಛೇದ 17ರ ಅಡಿಯಲ್ಲಿ ಇದು ಕಾನೂನುಬಾಹಿರವಾಗಿದೆ ಎಂದು ಅವರು ವಿವರಿಸಿದರು. ತಮ್ಮ ಬಾಲ್ಯ ಅನುಭವವನ್ನು ಹಂಚಿಕೊಂಡ ಶಾಸಕಿ ಕರೆಮ್ಮ ಅವರು, ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಂಡು ಯುವಕರು ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಗಳನ್ನು ನಿರ್ಮೂಲನೆ ಮಾಡುವಲ್ಲಿ ಮುಂದಾಗಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ತಹಶಿಲ್ದಾರ ನಾಗಮ್ಮ ಕಟ್ಡಿಮನಿ,ಸಾನಿದ್ಯ ನಾಗರತ್ನ ಬನ್ತೇಜಿ ಲುಂಬಿನಿ‌ ಬುದ್ದ ಬೆಂಗಳೂರು, ಶರಣಗೌಡ ಮದರಕಲ್,ಆದನಗೌಡ ಬುಂಕಲದೊಡ್ಡಿ,ಲಕ್ಷ್ಮಣ‌ಜ್ಯೋತಿ,ಹನುಮಂತ್ರಾಯ ಶಾಖೆ,ಬಸವರಾಜ ಹಟ್ಟಿ,ಸಮಾಜಕಲ್ಯಾಣ ಅಧಿಕಾರಿ ರಾಜಕುಮಾರ,ಪಿ.ಐ.ಮಂಜುನಾಥ, ಸಿ.ಪಿ.ಐ ಗುಂಡುರಾವ್,ಪುರಸಭೆ ಮುಖ್ಯಾಧಿಕಾರಿ ಹಂಪಯ್ಯ,ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ಶಿವರಾಜ ಪೂಜಾರಿ ಮತ್ತಿತರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 14 Apr 2026 8:18 pm

Mumbai | ಸಂಗೀತ ಕಾರ್ಯಕ್ರಮದಲ್ಲಿ ಅತಿಯಾದ ಮಾದಕ ದ್ರವ್ಯ ಸೇವನೆ ಶಂಕೆ: ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

ಮುಂಬೈ: ಮುಂಬೈಯಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಅತಿಯಾದ ಮಾದಕ ದ್ರವ್ಯ ಸೇವಿಸಿದ ಪರಿಣಾಮ ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗೊರೆಗಾಂವ್‌ನ ನೆಸ್ಕೋ ಸೆಂಟರ್‌ನಲ್ಲಿ ಎಪ್ರಿಲ್ 11ರ ರಾತ್ರಿ ನಡೆದ ಸಂಗೀತ ಕಾರ್ಯಕ್ರಮದ ಸಂದರ್ಭ ಈ ಘಟನೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 4,000 ಜನರು 2,000 ರೂ. ಪ್ರವೇಶ ಶುಲ್ಕ ಪಾವತಿಸಿ ಪಾಲ್ಗೊಂಡಿದ್ದರು. ಪಾಲ್ಗೊಂಡವರಲ್ಲಿ ಕೆಲವರು ಮಾದಕ ದ್ರವ್ಯ ಸೇವಿಸಿದ್ದಾರೆ ಎಂದು ಹೇಳಲಾಗಿದೆ. ಅವರು ನಿಷೇಧಿತ ಎಂಡಿಎಂಎ ಸೇವಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರಾತ್ರಿ ಸುಮಾರು 12 ಗಂಟೆಗೆ ಮೂವರು ವಿದ್ಯಾರ್ಥಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಲ್ಲಿ 24 ವರ್ಷದ ಯುವತಿ ಹಾಗೂ 28 ವರ್ಷದ ಯುವಕ ಮೃತಪಟ್ಟಿದ್ದಾರೆ. 25 ವರ್ಷದ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಮುಂಬೈ ಪೊಲೀಸ್ ಮೂಲದ ಪ್ರಕಾರ, ಸಾವನ್ನಪ್ಪಿದ ವಿದ್ಯಾರ್ಥಿಗಳಲ್ಲಿ ಓರ್ವ ಕಾರ್ಯಕ್ರಮಕ್ಕೆ ಹೋಗುವಾಗ ರಿಕ್ಷಾದೊಳಗೇ ಮಾತ್ರೆ ಸೇವಿಸಿದ್ದಾನೆ. ಅನಂತರ ಆತ ಕಾರ್ಯಕ್ರಮದಲ್ಲಿ ಎರಡನೇ ಮಾತ್ರೆ ಸೇವಿಸಿದ. ಇದರಿಂದ ಆತನ ದೇಹದಲ್ಲಿ ಮಾದಕ ದ್ರವ್ಯದ ಪ್ರಮಾಣ ಹೆಚ್ಚಾಯಿತು. ಅಧಿಕ ಪ್ರಮಾಣದಲ್ಲಿ ಮಾದಕ ದ್ರವ್ಯ ಸೇವಿಸಿರುವುದು ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಾತ್ರೆಗಳನ್ನು ಪೂರೈಸಿದ ವ್ಯಕ್ತಿ ಕೂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಆತನನ್ನು ಬಂಧಿಸಲಾಗಿದೆ. ಆತನಿಂದ 6ರಿಂದ 7 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂಬೈಯ ಹೊರಗಿನಿಂದ ಈ ಮಾದಕ ದ್ರವ್ಯಗಳನ್ನು ತರಲಾಗಿದೆ ಎಂದು ತನಿಖೆ ಬಹಿರಂಗಪಡಿಸಿದೆ. ಬಂಧಿತರಲ್ಲಿ ಕಾರ್ಯಕ್ರಮದ ಸಂಘಟಕರಾದ ವಿಹಾನ್ ಆಲಿಯಾಸ್ ಆಕಾಶ್ ಸಾಮಲ್, ನೆಸ್ಕೊ ಕಾರ್ಯಕ್ರಮ ಸಂಘಟನೆ ಹಾಗೂ ನಿರ್ವಹಣೆಯ ಸನ್ನಿ ವಿನೋದ್ ಜೈನ್, ಆಂತರಿಕ ಭದ್ರತಾ ತಂಡದ ಸದಸ್ಯ ಬಾಲಕೃಷ್ಣ ಬಲರಾಮ್ ಹಾಗೂ ಇತರ ಇಬ್ಬರು ವಿದ್ಯಾರ್ಥಿಗಳು ಸೇರಿದ್ದಾರೆ. ‘‘ಪರಿಸ್ಥಿತಿಯ ಗಂಭೀರತೆ ಬಗ್ಗೆ ನಮಗೆ ಅರಿವಿದೆ. ನಾವು ಸಂಬಂಧಿತ ಅಧಿಕಾರಿಗಳಿಗೆ ತನಿಖೆಯಲ್ಲಿ ಸಂಪೂರ್ಣ ಸಹಕಾರ ನೀಡಲಿದ್ದೇವೆ. ಸತ್ಯ ಆದಷ್ಟು ಬೇಗ ಹೊರಬರಲು ಸಂಬಂಧಿತ ಎಲ್ಲಾ ಮಾಹಿತಿ ಹಾಗೂ ನೆರವವನ್ನು ಒದಗಿಸಲಾಗುವುದು’’ ಎಂದು ನೆಸ್ಕೊ ಸೆಂಟರ್‌ನ ವಕ್ತಾರನ ಹೇಳಿಕೆ ತಿಳಿಸಿದೆ.

ವಾರ್ತಾ ಭಾರತಿ 14 Apr 2026 8:17 pm

ರಾಯಚೂರು | ದ್ವಿತೀಯ ಪಿಯುಸಿ ಫಲಿತಾಂಶ : ಪೂರ್ಣಿಮಾ ಪದವಿ ಪೂರ್ವ (ವೇದಾಂತ ) ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ರಾಯಚೂರು : 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ನಗರದ ಪೂರ್ಣಿಮಾ ಪದವಿ ಪೂರ್ವ ಕಾಲೇಜಿನ (ವೇದಾಂತ ) ವಿದ್ಯಾರ್ಥಿಗಳು ಅಮೋಘ ಸಾಧನೆಯನ್ನು ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕೃತಿಕಾ ಬೊಹಾರಾ ಶೇ.98.83 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದು, ದೀಪ್ತಿ ಕಿಲಿಕಿಲೆ ಶೇ.98.67 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ತೃತೀಯ ಸ್ಥಾನ ಹಾಗೂ ಕಾಲೇಜಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದು. ಹಿತೇನ್ ಜೈನ್ ಶೇ.98 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ತೃತೀಯ ಸ್ಥಾನವನ್ನು ಪಡೆದಿದ್ದು, 109 ವಿದ್ಯಾರ್ಥಿಗಳಲ್ಲಿ 58 ಡಿಸ್ಟಿಂಕ್ಷನ್ ಪಡೆದರೆ, 51 ವಿದ್ಯಾರ್ಥಿಗಳು ಪ್ರಥಮಸ್ಥಾನವನ್ನು ಪಡೆದಿದ್ದು , ವಿಶೇಷವಾಗಿ ಸಂಖ್ಯಾಶಾಸ್ತ್ರದಲ್ಲಿ 100 ಕ್ಕೆ 100 ಅಂಕಗಳನ್ನು 26 ವಿದ್ಯಾರ್ಥಿಗಳು, ಲೆಕ್ಕಶಾಸ್ತ್ರದಲ್ಲಿ 24, ವ್ಯವಹಾರ ಅಧ್ಯಯನದಲ್ಲಿ 10, ಅರ್ಥಶಾಸ್ತ್ರ 02 ವಿದ್ಯಾರ್ಥಿಗಳು ಪಡೆಯುವ ಮೂಲಕ ವಾಣಿಜ್ಯ ವಿಭಾಗದಲ್ಲಿ ಪೂರ್ಣಿಮಾ ಕಾಲೇಜು ಮತ್ತೊಮ್ಮೆ ಪ್ರಾಬಲ್ಯ ಮರೆದಿದೆ. ವಿಜ್ಞಾನ ವಿಭಾಗದಲ್ಲಿ ಶಬರೀಶ್ ಬಿ. ಶೇ.95.83 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದು, ವಿ.ಪಲ್ಲವಿ ಶೇ.95.17 ಪಡೆಯುವ ಮೂಲಕ ದ್ವಿತೀಯ ಸ್ಥಾನವನ್ನು, ಹೆಚ್.ರಚಿತ್ ಶೇ.95 ರಷ್ಟು ಅಂಕವನ್ನು ಪಡೆಯುವ  ಮೂಲಕ ತೃತೀಯ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ. ವಿಜ್ಞಾನ ವಿಭಾಗದ 202 ವಿದ್ಯಾರ್ಥಿಗಳಲ್ಲಿ 65 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದರೆ ,137 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು ಪಡೆದಿದ್ದು ವಿಜ್ಞಾನ ವಿಭಾಗದಲ್ಲಿ ಒಟ್ಟಾರೆ ಶೇ.99.50 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಗಣಿತಶಾಸ್ತ್ರದಲ್ಲಿ 2 ವಿದ್ಯಾರ್ಥಿಗಳು , ಗಣಕಶಾಸ್ತ್ರದಲ್ಲಿ 2 , ಭೌತಶಾಸ್ತ್ರ 1 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ. ಇನ್ನು ಕಲಾ ವಿಭಾಗದಲ್ಲಿ ಗ್ರಾಮೀಣ ಪ್ರತಿಭೆಗಳಾದ ಅಂಕಿತಾ ಹಾಗೂ ಶೋಭಾ ವಿದ್ಯಾರ್ಥಿನಿಯರು ಶೇ.92.33 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನವನ್ನು ಅಲಂಕರಿಸಿದ್ದು , ದ್ವಿತೀಯ ಸ್ಥಾನವನ್ನು ಅಮೃತಾ ಬಸವರಾಜ್ ಶೇ.92 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನವನ್ನು, ಯಂಕಮ್ಮ ಜಾಲಡದಿನ್ನಿ ಶೇ.89.33 ಅಂಕಗಳನ್ನು ಪಡೆಯುವ ಮೂಲಕ ತೃತೀಯ ಸ್ಥಾನವನ್ನು ಪಡೆದಿದ್ದು‌, ಕಲಾ ವಿಭಾಗದಲ್ಲಿ 11 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದರೆ , 33 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ. ಈ ಅತ್ಯುತ್ತಮ ಸಾಧನೆಗೆ ಕಾಲೇಜಿನ ಉಪನ್ಯಾಸಕರು ಮತ್ತು ಆಡಳಿತಾಧಿಕಾರಿಗಳಾದ ರಾಕೇಶ್ ರಾಜಲಬಂಡಿಯವರು ಶುಭಾಶಯ ಕೋರಿದ್ದಾರೆ.

ವಾರ್ತಾ ಭಾರತಿ 14 Apr 2026 8:14 pm

ಕುಮಾರಣ್ಣ ಮುಂದಿನ CM ಎಂದವರಿಗೆ ನಯವಾಗಿ ಬುದ್ಧಿಮಾತು ಹೇಳಿದ ಎಚ್‌ಡಿ ಕುಮಾರಸ್ವಾಮಿ; ರಾಜ್ಯ ಸರ್ಕಾರಕ್ಕೊಂದು ಸಂದೇಶ

ಕಾರ್ಯಕ್ರಮದಲ್ಲಿ ಕುಮಾರಣ್ಣ ಮುಂದಿನ ಸಿಎಂ ಎಂಬ ಜೆಡಿಎಸ್‌ ಮುಖಂಡರು ಅಭಿಮಾನಿಗಳ ಘೋಷಣೆಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಅಂಬೇಡ್ಕರ್ ಕಾರ್ಯಕ್ರಮದಲ್ಲಿ ನನ್ನ ವೈಭವೀಕರಣ ಬೇಡ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಮಾತ್ರವಲ್ಲದೇ, ವಾರಕ್ಕೆ 2 ದಿನ ಕರ್ನಾಟಕದಲ್ಲಿ ಇರುತ್ತೇನೆ ರಾಜ್ಯ ಸರ್ಕಾರದ ವಿರುದ್ಧ ದನಿ ಎತ್ತುವೆ ಎಂದು ಕಾಂಗ್ರೆಸ್‌ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ವಿಜಯ ಕರ್ನಾಟಕ 14 Apr 2026 8:07 pm

ಬಿಕ್ಲು ಶಿವ ಕೊಲೆ ಪ್ರಕರಣ; ಜಾಮೀನು ರದ್ದು ಕೋರಿದ ಅರ್ಜಿ ಸಂಬಂಧ ಬೈರತಿ ಬಸವರಾಜ್‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದು ಕೋರಿರುವ ಅರ್ಜಿ ಸಂಬಂಧ ಐದನೇ ಆರೋಪಿ ಬೈರತಿ ಬಸವರಾಜ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಕೆ.ಆರ್.ಪುರ ಶಾಸಕ ಬೈರತಿ ಬಸವರಾಜ್‌ಗೆ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2026ರ ಮಾರ್ಚ್‌ 12ರಂದು ಹೊರಡಿಸಿರುವ ಆದೇಶ ರದ್ದು ಕೋರಿ ಸಿಐಡಿ ತನಿಖಾಧಿಕಾರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ರಾಜ್ಯ ಹೆಚ್ಚುವರಿ ಸರಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿ ಬೈರತಿ ಬಸವರಾಜ್‌ಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು. ಪ್ರಕರಣ ಸಂಬಂಧ ಅರ್ಜಿದಾರರನ್ನು ಈಗಾಗಲೇ ಪೊಲೀಸ್ ವಶದಲ್ಲಿಟ್ಟುಕೊಂಡು ನಡೆಸಿರುವ ವಿಚಾರಣೆ ಪೂರ್ಣಗೊಂಡಿದ್ದು, ಮತ್ತೆ ಪೊಲೀಸ್ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಬೇಕಾದ ಅಗತ್ಯವಿಲ್ಲ ಎಂಬ ಅಂಶ ಸಿಐಡಿ ತನಿಖಾಧಿಕಾರಿಗಳು ಸಲ್ಲಿಸಿರುವ ರಿಮ್ಯಾಂಡ್ ಅರ್ಜಿಯಿಂದ ತಿಳಿಯಲಿದೆ. ಆದ್ದರಿಂದ, ಅರ್ಜಿದಾರರಿಗೆ ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾರ್ಚ್‌ 12ರಂದು ಹೊರಡಿಸಿದ್ದ ಆದೇಶದಲ್ಲಿ ತಿಳಿಸಿತ್ತು.

ವಾರ್ತಾ ಭಾರತಿ 14 Apr 2026 8:07 pm

ರಾಯಚೂರಿನಲ್ಲಿ 38 ಅಂಬೇಡ್ಕರ್ ಅಭಿಮಾನಿಗಳಿಗೆ ‘ಭೀಮಾ ಮಾಲೆ’ ಧಾರಣೆ

ರಾಯಚೂರು: ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಹುಜನ ಸಂಘರ್ಷ ಸಮಿತಿಯ ನೇತೃತ್ವದಲ್ಲಿ 38 ಅಂಬೇಡ್ಕರ್ ಅಭಿಮಾನಿಗಳು ‘ಭೀಮಾ ಮಾಲೆ’ ಧರಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಭಾಗವಹಿಸಿದವರು ಮದ್ಯಪಾನ ಮಾಡದಿರುವುದು, ಸುಳ್ಳು ಹೇಳದಿರುವುದು, ವೈಭಿಚಾರ, ಪ್ರಾಣಹಿಂಸೆ, ಕಳ್ಳತನ ಮಾಡದಿರುವುದು ಸೇರಿದಂತೆ ಸಂವಿಧಾನದ ಆಶಯಗಳು ಹಾಗೂ ಬಹುತ್ವ ಭಾರತದ ಸಂರಕ್ಷಣೆ ಕುರಿತಾಗಿ 11 ಪ್ರತಿಜ್ಞೆಗಳನ್ನು ಸ್ವೀಕರಿಸಿದರು. ಬಹುಜನ ಸಂಘರ್ಷ ಸಮಿತಿಯ ಸಂಚಾಲಕ ಶರಣಪ್ಪ ಬಲ್ಲಟಗಿ ಮಾತನಾಡಿ, ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆಮನೆಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಕಳೆದ ಮೂರು ವರ್ಷಗಳಿಂದ ನಡೆಸಲಾಗುತ್ತಿದೆ ಎಂದು ಹೇಳಿದರು. ಈ ವರ್ಷ 38 ಜನರು ಭೀಮಾ ಮಾಲೆ ಧರಿಸಿದ್ದು, ಮುಂದಿನ 15 ದಿನಗಳ ಕಾಲ ಅವರು ಬಿಳಿ ಅಂಗಿ, ನೀಲಿ ಲುಂಗಿ ಮತ್ತು ನೀಲಿ ಟವೆಲ್ ಧರಿಸಿ ಅಂಬೇಡ್ಕರ್ ಅವರ ಬರಹಗಳು ಹಾಗೂ ಭಾಷಣಗಳನ್ನು ಅಧ್ಯಯನ ಮಾಡಿ ಜನರಿಗೆ ತಿಳಿಸುವ ಕಾರ್ಯ ಮಾಡಲಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದ ಸಮಾರೋಪ ಹಾಗೂ ಮಾಲೆ ವಿಸರ್ಜನೆ ಬುದ್ಧ ಪೂರ್ಣಿಮೆಯ ದಿನ ಮಸ್ಕಿಯ ಐತಿಹಾಸಿಕ ಅಶೋಕ ಶಿಲಾಶಾಸನದ ಬಳಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಹೋರಾಟಗಾರ ಹಾಗೂ ಭೀಮ ಮಾಲಾಧಾರಿ ಎಂ.ಆರ್ ಭೇರಿ, ಸೋಮಣ್ಣ ನಾಯಕ, ರಮೇಶ ಬಲ್ಲಟಗಿ, ರಮೇಶ ಮರಾಠ, ಯಮನಪ್ಪ ಪನ್ನೂರು, ಸಂಪತ್ ರಾಜ್, ಮರಿಸ್ವಾಮಿ ಅಮರಾವತಿ, ವೆಂಕನಗೌಡ, ಮಾರೆಪ್ಪ ಹರವಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 14 Apr 2026 8:06 pm

Gurumitkal | ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಗುರುಮಠಕಲ್: ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಸಡಗರ ಮತ್ತು ಭಕ್ತಿಯಿಂದ ಆಚರಿಸಲಾಯಿತು. ತಾಲ್ಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಂಡು ಮಹನೀಯರಿಗೆ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗಳಿಗೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಮರ್ಪಿಸಿದರು. ಈ ವೇಳೆ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶಗಳನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಚನ್ನಮಲ್ಲಪ್ಪ ಗಂಟಿ, ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ್, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ್ ಪಾಟೀಲ್, ಪೊಲೀಸ್ ಇನ್ಸ್‌ಪೆಕ್ಟರ್ ಈರಣ್ಣ ದೊಡ್ಡಮನಿ ಸೇರಿದಂತೆ ಕೆ. ದೇವದಾಸ್, ಸಂತೋಷ್ ನಿರಟಿ, ಲಾಲಪ್ಪ ತಲಾರಿ, ಈರಪ್ಪ ಪ್ಯಾಟಿ, ಮಾಣಿಕ ಹಾಗೂ ಇತರರು ಉಪಸ್ಥಿತರಿದ್ದರು. ಅದೇ ವೇಳೆ, ಪಟ್ಟಣದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿಯೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿಯನ್ನು ಶಿಸ್ತುಬದ್ಧವಾಗಿ ಆಚರಿಸಲಾಯಿತು. ಅಧಿಕಾರಿಗಳು ಮಾತನಾಡಿ, ಅಂಬೇಡ್ಕರ್ ನೀಡಿದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೆ ಹಕ್ಕು ಮತ್ತು ಗೌರವ ನೀಡಿದೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅವಶ್ಯಕತೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ವಾರ್ತಾ ಭಾರತಿ 14 Apr 2026 8:03 pm

Virat Kohli: ಘನತೆಗೆ ತಕ್ಕ ಆಟ ಇಲ್ಲ; ವಿರಾಟ್ ಕೊಹ್ಲಿ ಬದಲಿಗೆ ಬೆಥೆಲ್ ಆಡಿಸುವ ಸೂಚನೆ ನೀಡಿದ್ರಾ ಭಾರತದ ಮಾಜಿ ಕ್ರಿಕೆಟಿಗ?

Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್‌ನಲ್ಲಿ ಸುಮಾರು 60ರ ಸರಾಸರಿ ಮತ್ತು 163ರ ಸ್ಟ್ರೈಕ್ ರೇಟ್‌ನಲ್ಲಿ 179 ರನ್ ಗಳಿಸಿದ್ದಾರೆ. ಆದರೂ ಸಹ, ಅವರ ನಿಧಾನಗತಿಯ ಬ್ಯಾಟಿಂಗ್‌ ಪ್ರದರ್ಶನದ ಬಗ್ಗೆ ಕೆಲವರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹಿಂದೆ ಕೆಕೆಆರ್ ಪರ ಆಡಿದ್ದ ಭಾರತದ ಮಾಜಿ ಕ್ರಿಕೆಟಿಗ ಆಕಾಶ್

ಒನ್ ಇ೦ಡಿಯ 14 Apr 2026 8:00 pm

ಶಹಾಪುರ | ತಾಲೂಕಾಡಳಿತದಿಂದ ಅಂಬೇಡ್ಕರ್ ಜಯಂತಿ ಆಚರಣೆ

ಶಹಾಪುರ: ತಾಲೂಕಾಡಳಿತದ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ನಗರದ ನಗರಸಭೆ ಆವರಣದಲ್ಲಿ ಸೋಮವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದ ಕಲಬುರಗಿಯ ಕವಿ ಹಾಗೂ ಸಾಹಿತಿ ಡಾ.ಪಿ.ನಂದಕುಮಾರ ಅವರು, ಶೋಷಿತ ಸಮುದಾಯದ ಹಳ್ಳಿಯಲ್ಲಿ ಜನಿಸಿದ ಡಾ.ಅಂಬೇಡ್ಕರ್ ಅನೇಕ ಅವಮಾನಗಳನ್ನು ಮೀರಿ ಅಸಂಖ್ಯಾತ ಪದವಿಗಳನ್ನು ಪಡೆದು ಭಾರತದ ಸಂವಿಧಾನದ ರೂಪಕರ್ತರಾಗಿ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ ಎಂದು ಹೇಳಿದರು. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರು ಮಂತ್ರಗಳನ್ನು ಅಳವಡಿಸಿಕೊಂಡು ಜಾಗೃತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ತಿಳಿಸಿದರು. ತಹಶೀಲ್ದಾರ್ ಸಿದ್ದಾರೂಡ ಬನ್ನಿಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಜಯಂತೋತ್ಸವ ಸಮಿತಿ ಅಧ್ಯಕ್ಷ ರಾಜು ಅಣಬಿ ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಿದ್ದಣ್ಣ ಆರಬೊಳ ಅವರು ಜ್ಯೋತಿ ಬೆಳಗಿಸಿದರು. ಖಜಾನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಮೋನಪ್ಪ ಶಿರವಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಶರಬೈ, ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ಸಿಪಿಐ ಶರಣಗೌಡ ನ್ಯಾಮಣನವರ್, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಬಾಲರಾಜ ಕೋರವಾರ, ಪಿ.ಐ. ಎಸ್.ಎಂ. ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯಿತು. ಮೆರವಣಿಗೆಗೆ ಚಾಲನೆ : ನಗರದ ಬುದ್ದನಗರದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಿದ್ದಣ್ಣ ಆರಬೊಳ ಟ್ರಾಕ್ಟರ್ ಚಾಲನೆ ಮಾಡುವ ಮೂಲಕ ಮೆರವಣಿಗೆ ಆರಂಭಿಸಿದರು. ಈ ವೇಳೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ಪಿ.ಐ. ಎಸ್.ಎಂ. ಪಾಟೀಲ್, ದಲಿತ ಮುಖಂಡ ನೀಲಕಂಠ ಬಡಿಗೇರ, ರಾಜು ಅಣಬಿ, ಭೀಮರಾಯ ತಳವಾರ ಸೇರಿದಂತೆ ಹಲವರು ಭಾಗವಹಿಸಿದರು.

ವಾರ್ತಾ ಭಾರತಿ 14 Apr 2026 8:00 pm

IPL 2026- ವಾಂಖೆಡೆಯಲ್ಲಿ ಗಾಯಗೊಂಡಿದ್ದ RCB ಸ್ಟಾರ್ ವಿರಾಟ್ ಕೊಹ್ಲಿ ಚಿನ್ನಸ್ವಾಮಿಯಲ್ಲಿ ಲಖನೌ ವಿರುದ್ಧ ಆಡ್ತಾರಾ?

Virat Kohli Injury- ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಾದದ ನೋವಿನಿಂದಾಗಿ ಫೀಲ್ಡಿಂಗ್ ಮಾಡದ ವಿರಾಟ್ ಕೊಹ್ಲಿ ಅವರು, ಏಪ್ರಿಲ್ 15 ರಂದು ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಅವರು ಅಭ್ಯಾಸ ಸೆಶನ್‌ನಲ್ಲಿ ಅತ್ಯಂತ ಸಕ್ರಿಯವಾಗಿ ಮತ್ತು ಲವಲವಿಕೆಯಿಂದ ಪಾಲ್ಗೊಂಡಿರುವುದು ಅಭಿಮಾನಿಗಳಲ್ಲಿ ಆಶಾವಾದ ಮೂಡಿಸಿದೆ. ಈ ಬಗ್ಗೆ ಮ್ಯಾನೇಜ್‌ಮೆಂಟ್ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ ತಾಲೀಮಿನ ವೇಳೆ ಅವರ ಲವಲವಿಕೆ ಗಮನಿಸಿದ ಬಳಿಕ ಅವರು ಆಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವಿಜಯ ಕರ್ನಾಟಕ 14 Apr 2026 7:59 pm

Yadgir | ಡಾ.ಅಂಬೇಡ್ಕರ್‌ ವ್ಯಕ್ತಿಯಲ್ಲ, ಜ್ಞಾನದ ಶಕ್ತಿ: ಭೀಮಾಶಂಕರ ದೊಡ್ಮನಿ

ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ವ್ಯಕ್ತಿಯಲ್ಲ, ಜ್ಞಾನದ ಶಕ್ತಿ ಮತ್ತು ದೇಶದ ಜನರ ಆರಾಧ್ಯ ದೈವ ಎಂದು ಭಾರತಾಂಬೆ ಸಂಸ್ಥೆಯ ಮುಖ್ಯಸ್ಥ ಭೀಮಾಶಂಕರ ದೊಡ್ಮನಿ ಅಭಿಪ್ರಾಯಪಟ್ಟರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಗರಸಭೆ ಹಾಗೂ ಭಾರತಾಂಬೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರ ಚಿಂತನೆಗಳನ್ನು ಗಂಭೀರವಾಗಿ ಅರ್ಥಮಾಡಿಕೊಳ್ಳಬೇಕು. ಅವರು ಬರೆದಿರುವ ಗ್ರಂಥಗಳು ಅಪಾರವಾಗಿದ್ದು, ಜೀವನಪೂರ್ತಿ ಓದಿದರೂ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಅವರು ಒಂದು ಸಮುದಾಯಕ್ಕೆ ಸೀಮಿತವಲ್ಲದೆ, ಎಲ್ಲರ ಹಿತಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು. ನಿರಾಶ್ರಿತರ ಕೇಂದ್ರದ ವ್ಯವಸ್ಥಾಪಕ ಬೀರಲಿಂಗಪ್ಪ ಕಿಲ್ಲನಕೇರಾ ಮಾತನಾಡಿ, ಅಂಬೇಡ್ಕರ್ ಅವರನ್ನು ಮರೆತರೆ ಸಮಾಜದ ಪ್ರಗತಿ ಸಾಧ್ಯವಿಲ್ಲ. ಅವರ ಜಯಂತಿ ಆಚರಣೆಯ ಉದ್ದೇಶವೇ ಯುವಪೀಳಿಗೆಗೆ ಅವರ ತತ್ವ ಆದರ್ಶಗಳನ್ನು ಪರಿಚಯಿಸಿ, ರಾಷ್ಟ್ರಪ್ರಜ್ಞೆ ಹಾಗೂ ಸಮಾಜಪ್ರಜ್ಞೆಯನ್ನು ಬೆಳೆಸುವುದಾಗಿದೆ ಎಂದರು. ಜಾತಿ ತಾರತಮ್ಯ ನಿವಾರಣೆಗೆ ಕಾನೂನುಗಳಿದ್ದರೂ, ಮನಸ್ಸಿನ ಬದಲಾವಣೆ ಅತ್ಯಂತ ಮುಖ್ಯ. ದಲಿತರು, ಶೂದ್ರರು ಮತ್ತು ಮಹಿಳೆಯರ ಪರವಾಗಿ ಧ್ವನಿ ಎತ್ತಿದ ಮಹಾನ್ ವ್ಯಕ್ತಿಗಳು ಅನೇಕ ಸಂಕಷ್ಟಗಳನ್ನು ಎದುರಿಸಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೇರ್ ಟೇಕರಗಳಾದ ದೇವಮ್ಮ, ಕೃಷ್ಣ, ಸಿದ್ರಾಮ್, ಅಮೃತ ನಿರಾಶ್ರಿತರಾದ ಪಟೇಲ್ ಸಾಬ್, ಬಾಲಪ್ಪ, ಮುನ್ನಾ, ಭುವನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 14 Apr 2026 7:57 pm

Virat Kohli: ವಿರಾಟ್ ಕೊಹ್ಲಿಗೆ ಕನ್ನಡ ಬರಲ್ಲ - ನಾರ್ಥಿಗಳು ಯಾಕೆ ಕಲಿಯಬೇಕು: ತುಳು ಬೆಂಬಲಿತರ ಪ್ರಶ್ನೆ, ಕನ್ನಡಿಗರ ಆಕ್ರೋಶ

Virat Kohli: ಇಷ್ಟು ವರ್ಷಗಳ ಕಾಲ ಆರ್‌ಸಿಬಿ ಜೊತೆ ಇದ್ದ ವಿರಾಟ್ ಕೊಹ್ಲಿ ಕನ್ನಡ ಕಲಿಯಲಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಮಾಡಲಾಗಿರುವ ಪೋಸ್ಟ್‌ವೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಕನ್ನಡಪರ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ಮಾಡಲಾಗಿರುವ ಈ ಪೋಸ್ಟ್‌ಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಳು ಭಾಷೆಗೆ ಬೆಂಬಲ ನೀಡುವ ಸೋಷಿಯಲ್ ಮೀಡಿಯಾ ಪುಟದಿಂದ ಈ ಪೋಸ್ಟ್‌ ಮಾಡಲಾಗಿದೆ. ಕನ್ನಡ -

ಒನ್ ಇ೦ಡಿಯ 14 Apr 2026 7:56 pm

ಅಂಬೇಡ್ಕರ್ ಸಮಾನತೆ ಕನಸು ನನಸಾಗಿಸಲು ಎಲ್ಲರೂ ಬದ್ಧರಾಗಬೇಕು : ಸಚಿವ ಶರಣಬಸಪ್ಪ ದರ್ಶನಾಪುರ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ವಾರ್ತಾ ಭಾರತಿ 14 Apr 2026 7:53 pm

ವಾಹನ ಅಡ್ಡವಿಟ್ಟು ಸಂಚಾರಕ್ಕೆ ಅಡ್ಡಿ ಆರೋಪ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಎ.14: ಕಾವೂರಿನಿಂದ ನಗರಕ್ಕೆ ಬರುವ ರಸ್ತೆಯಲ್ಲಿ ಅಂದರೆ ನಗರದ ಕುಂಟಿಕಾನ ಫ್ಲೈಓವರ್ ಬಳಿ ವಾಹನವನ್ನು ಅಡ್ಡಗಟ್ಟಿ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಇಬ್ಬರು ದ್ವಿಚಕ್ರ ವಾಹನ ಸವಾರರ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕುಂಜತ್ತಬೈಲ್ ನಿವಾಸಿ ತನ್ಸೀರ್ (25) ಮತ್ತು ಗದಗ ಜಿಲ್ಲೆ ನರಗುಂದ ತಂಡಾಪುರ ಓಣಿಲೆ ಚಂದ್ರಶೇಖರ್ (55) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ ವಿಚಾರದಲ್ಲಿ ಈ ಇಬ್ಬರ ನಡುವೆ ಗಲಾಟೆಯಾಗಿತ್ತು. ಪರಿಣಾಮ ಇಬ್ಬರೂ ರಸ್ತೆಗೆ ತಮ್ಮ ವಾಹನಗಳನ್ನು ಅಡ್ಡವಾಗಿರಿಸಿ, ಪರಸ್ಪರ ಬೈದಾಡುತ್ತಾ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಸ್ಥಳಕ್ಕೆ ಹೊಯ್ಸಳ ಪೊಲೀಸರು ಆಗಮಿಸಿ ಇಬ್ಬರನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 14 Apr 2026 7:48 pm

Kalaburagi | ಮಾನವ ಘನತೆ ಎತ್ತಿ ಹಿಡಿದ ಡಾ.‌ಬಿ.ಆರ್.ಅಂಬೇಡ್ಕರ್ : ಡಾ.ಶಿವರಂಜನ ಸತ್ಯಂಪೇಟೆ

ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಲ್ಲ. ಬದಲಾಗಿ ಮಾನವೀಯತೆ, ಸಮಾನತೆ ಮತ್ತು ಮಾನವ ಘನತೆಯನ್ನು ಎತ್ತಿ ಹಿಡಿದ ಮಹಾನ್ ನೇತಾರ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಡಾ.ಶಿವರಂಜನ ಸತ್ಯಂಪೇಟೆ ಅಭಿಪ್ರಾಯಪಟ್ಟರು. ನೂತನ ವಿದ್ಯಾಲಯ ಸಂಸ್ಥೆಯ ಎನ್ ವಿ ಕಲಾ ಶ್ರೀ ಕನ್ಹಯ್ಯಲಾಲ್ ಮಾಲು ವಿಜ್ಞಾನ ಹಾಗೂ ಡಾ.ಪಾಂಡುರಂಗರಾವ ಪತ್ಕಿ ವಾಣಿಜ್ಯ ಮಹಾವಿದ್ಯಾಲಯದ ಐ.ಕ್ಯೂಎ.ಸಿ. ಹಾಗೂ ಎನ್.ಎಸ್. ಎಸ್. ಘಟಕದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಸಾಮಾಜಿಕ ಸಮಾನತೆ, ಭ್ರಾತೃತ್ವ, ಶಿಕ್ಷಣ, ಸ್ವಾವಲಂಬನೆ, ಮಹಿಳಾ ಹಕ್ಕುಗಳ ಪರ ಹೋರಾಡಿದ ಬಾಬಾಸಾಹೇಬರು ಮಾನವೀಯತೆಯ ಮಹಾಸಾಗರ ಆಗಿದ್ದರು ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿ‌ನ ಪ್ರಾಚಾರ್ಯ ಡಾ. ದಯಾನಂದ ಶಾಸ್ತ್ರೀ ಮಾತನಾಡಿ, ಅಂಬೇಡ್ಕರ್ ಅವರು ಸಮಾಜದ ಉನ್ನತಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟವರು. ಅವರ ಜೀವನಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಉಪ ಪ್ರಾಚಾರ್ಯ ಡಾ.‌ಗುರುಮಧ್ವಾಚಾರ್ಯ ನವಲಿ, ಕಾಲೇಜಿನ ಉದ್ಯೋಗಿಗಳ ಸಂಘದ ಕಾರ್ಯದರ್ಶಿ ಭಾರತಿ ಎಸ್.ಆರ್. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಡಾ.‌ಮಹೇಶಕುಮಾರ ಈ ಬಡಿಗೇರ ಪರಿಚಯಿಸಿದರು. ಡಾ. ಮಲ್ಲಿನಾಥ ತಳವಾರ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ರಾಘು ನಿರೂಪಿಸಿ ವಂದಿಸಿದರು.

ವಾರ್ತಾ ಭಾರತಿ 14 Apr 2026 7:46 pm

ಮಹಿಳಾ ಮೀಸಲಾತಿ ಕಾಯ್ದೆ ಅನುಷ್ಠಾನವನ್ನು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ವಿರೋಧಿಸುತ್ತಿರುವುದೇಕೇ?

2029ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ನಾರಿ ಶಕ್ತಿ ವಂದನ ಅಧಿನಿಯಮ (ಮಹಿಳಾ ಮೀಸಲಾತಿ ಕಾಯ್ದೆ 2023) ಕಾರ್ಯಗತಗೊಳಿಸಲ ಅಗತ್ಯವಾದ ಸಾಂವಿಧಾನಿಕ ತಿದ್ದುಪಡಿಯನ್ನು ತ್ವರಿತಗೊಳಿಸುವ ಕೇಂದ್ರದ ಪ್ರಯತ್ನವು ಗಮನಾರ್ಹ ರಾಜಕೀಯ ಅಡಚಣೆಯನ್ನು ಎದುರಿಸುತ್ತಿದೆ. ಈ ಅಡಚಣೆಗೆ ಕಾರಣ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಬೆಂಬಲದ ಕೊರತೆ. 2027 ರ ಜನಗಣತಿಯ ನಂತರದ ಕ್ಷೇತ್ರ ಮರುವಿಂಗಡಣೆಗೆಸಂಬಂಧಿಸಿದ ಪ್ರಸ್ತುತ ಸಮಯದ ಬದಲು, 2029 ರ ಮೊದಲು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿಯನ್ನು ಅನುಮತಿಸುವ ತಿದ್ದುಪಡಿಗಳನ್ನು ಪರಿಚಯಿಸಲು ಎಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಮೂರು ದಿನಗಳ ಅಧಿವೇಶನವನ್ನು ಕರೆಯಲಾಗಿದೆ. ಮಸೂದೆಯ ಪ್ರತಿಯನ್ನು ಮಂಗಳವಾರ ಸಂಸದರೊಂದಿಗೆ ಹಂಚಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಪಕ್ಷಗಳು ಈ ಕ್ರಮವನ್ನು ಬೆಂಬಲಿಸುವಂತೆ ಒತ್ತಾಯಿಸಿದ್ದಾರೆ. ಪೂರ್ಣ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ವಿಪ್ ಜಾರಿ ಮಾಡಿದೆ. ಆದರೆ ಸಂಸತ್ತಿನಲ್ಲಿನ ಅಂಕಗಣಿತವು ವಿರೋಧ ಪಕ್ಷದ ಬೆಂಬಲವನ್ನು ಅನಿವಾರ್ಯವಾಗಿಸುತ್ತದೆ. ಸಂಖ್ಯೆಗಳು ಮುಖ್ಯ: ಲೋಕಸಭೆಯಲ್ಲಿ, ಎನ್‌ಡಿಎ 293 ಸ್ಥಾನಗಳನ್ನು ಹೊಂದಿದೆ, ಆದರೆ ವಿರೋಧ ಪಕ್ಷದ ಬಳಿ 240 ಮತ್ತು ಇತರರು 12 ಸ್ಥಾನಗಳನ್ನು ಹೊಂದಿದ್ದಾರೆ. ಸಾಂವಿಧಾನಿಕ ತಿದ್ದುಪಡಿಗೆ ಹಾಜರಿರುವ ಮತ್ತು ಮತದಾನ ಮಾಡುವ ಸದಸ್ಯರ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ, ಅಂದರೆ ಎಲ್ಲಾ ಸದಸ್ಯರು ಭಾಗವಹಿಸಿದರೆ ಕನಿಷ್ಠ 364 ಮತಗಳು ಬೇಕಾಗುತ್ತವೆ. ಇದು ವಿರೋಧ ಪಕ್ಷದ ಬೆಂಬಲವಿಲ್ಲದೆ ಸರ್ಕಾರವು ಅಗತ್ಯವಿರುವ ಬೆಂಬಲ ತಲುಪಲು ಸಾಧ್ಯವಾಗದಂತೆ ಮಾಡುತ್ತದೆ. ಲೋಕಸಭೆ ಮತ್ತು ರಾಜ್ಯಸಭೆಯ ಎರಡೂ ಸದನಗಳ ಸಂಯೋಜಿತ ಬಲವನ್ನು ಪರಿಗಣಿಸುವಾಗಲೂ ಇದೇ ರೀತಿಯ ಅಂತರವಿದೆ. ಅಲ್ಲಿ ಎನ್‌ಡಿಎ ಸ್ವತಂತ್ರವಾಗಿ ಸಂವಿಧಾನವನ್ನು ತಿದ್ದುಪಡಿ ಮಾಡಲು ಅಗತ್ಯವಿರುವ ಸೂಪರ್ ಬಹುಮತವನ್ನು ಹೊಂದಿಲ್ಲ. ಇದು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ಮೇಲೆ ನೇರವಾಗಿ ಗಮನ ಸೆಳೆಯುತ್ತದೆ. ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಯನ್ನು ತಡೆಯುವ ಬಗ್ಗೆ ಎಚ್ಚರದಿಂದಿದ್ದರೂ, ಪ್ರಸ್ತಾವಿತ ತಿದ್ದುಪಡಿಗಳ ಸಮಯ ಮತ್ತು ಉದ್ದೇಶದ ಬಗ್ಗೆ ಅವರು ಗಣನೀಯ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದಿಂದ ವಿರೋಧ: ಕಾಂಗ್ರೆಸ್ ಮುಖ್ಯಸ್ಥ ಮತ್ತು ಮೇಲ್ಮನೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಹಠಾತ್ ಆತುರವನ್ನು ಪ್ರಶ್ನಿಸಿದ್ದಾರೆ. ನಡೆಯುತ್ತಿರುವ ಚುನಾವಣೆಗಳ ಮಧ್ಯೆ ಈ ಕ್ರಮವು ರಾಜಕೀಯ ಲಾಭಕ್ಕಾಗಿ ನಡೆಸಲ್ಪಟ್ಟಿದೆ ಎಂದು ಆರೋಪಿಸಿದ್ದಾರೆ. ಅವರು ವಿಶಾಲವಾದ ಸಮಾಲೋಚನೆಗಳನ್ನು ಕೋರಿದ್ದು ಅಂಥಾ ಸಾಂವಿಧಾನಿಕ ಬದಲಾವಣೆಗಳು ಎಲ್ಲಾ ಪಾಲುದಾರರನ್ನು ಒಳಗೊಂಡಿರಬೇಕು ಎಂದು ಹೇಳಿದ್ದಾರೆ. ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡುವಿನ ಸಂಪರ್ಕವು ಒಂದು ಪ್ರಮುಖ ಅಂಶವಾಗಿದೆ. ಮಹಿಳಾ ಸಬಲೀಕರಣಕ್ಕಿಂತ ಕ್ಷೇತ್ರ ಮರುವಿಂಗಡಣೆ ಪ್ರಮುಖ ವಿಷಯ ಎಂದ ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ, ಪ್ರಸ್ತಾವಿತ ಪ್ರಕ್ರಿಯೆಯನ್ನು ಅತ್ಯಂತ ಅಪಾಯಕಾರಿ ಮತ್ತು ಸಂವಿಧಾನದ ಮೇಲಿನ ದಾಳಿ ಎಂದು ಕರೆದಿದ್ದಾರೆ. ಜನಸಂಖ್ಯೆಯ ಆಧಾರದ ಮೇಲೆ ಯಾವುದೇ ಸೀಟು ಪುನರ್ವಿತರಣೆಯು ಉತ್ತರ ರಾಜ್ಯಗಳಿಗೆ ಅಸಮಾನವಾಗಿ ಪ್ರಯೋಜನವನ್ನು ನೀಡುತ್ತದೆ ಮತ್ತು ದಕ್ಷಿಣ ಮತ್ತು ಈಶಾನ್ಯ ಪ್ರದೇಶಗಳಿಗೆ ಅನನುಕೂಲಕರವಾಗಿರುತ್ತದೆ ಎಂದು ವಿರೋಧ ಪಕ್ಷಗಳು ಭಯಪಡುತ್ತವೆ. ಈ ಕಳವಳಗಳನ್ನು ಪ್ರತಿಧ್ವನಿಸುತ್ತಾ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಈ ಕ್ಷೇತ್ರ ಮರುವಿಂಗಡಣೆ ವಿಷಯವು ದಕ್ಷಿಣ ಭಾರತಕ್ಕೆ ತುಂಬಾ ಹಾನಿಕಾರಕವಾಗಿದೆ. ಪ್ರಸ್ತುತ ವ್ಯವಸ್ಥೆಯಲ್ಲಿ ನಾವು ಯಾವುದೇ ಬದಲಾವಣೆಯನ್ನು ಬಯಸುವುದಿಲ್ಲ.ಯಾವುದೇ ರಾಜ್ಯವು ಬಳಲುವುದನ್ನು ನಾವು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಲೋಕಸಭಾ ಸ್ಥಾನಗಳಲ್ಲಿ ಶೇ.50 ರಷ್ಟು ಏರಿಕೆಯಾಗುವ ಸಾಧ್ಯತೆ: ಸರ್ಕಾರವು ಲೋಕಸಭಾ ಸ್ಥಾನಗಳನ್ನು ಶೇ.50 ರಷ್ಟು ಹೆಚ್ಚಿಸುವ ಬಗ್ಗೆಯೂ ಯೋಚಿಸುತ್ತಿದೆ ಎಂದು ವರದಿಯಾಗಿದೆ. ಇದು ವಿರೋಧ ಪಕ್ಷದ ಪ್ರತಿರೋಧವನ್ನು ತೀವ್ರಗೊಳಿಸಿದೆ. ಕ್ಷೇತ್ರ ಮರುವಿಂಗಡಣೆ ಮತ್ತು ಪ್ರಾತಿನಿಧ್ಯದ ಬಗ್ಗೆ ಸ್ಪಷ್ಟತೆ ಇಲ್ಲದೆ, ತಿದ್ದುಪಡಿಯ ಬಗ್ಗೆ ಅರ್ಥಪೂರ್ಣ ಚರ್ಚೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕರು ವಾದಿಸುತ್ತಾರೆ. ಅದೇ ಸಮಯದಲ್ಲಿ, ವಿರೋಧ ಪಕ್ಷಗಳು ಮೀಸಲಾತಿ ಚೌಕಟ್ಟಿನೊಳಗೆ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಪ-ಕೋಟಾಗಳಿಗಾಗಿ ಒತ್ತಾಯಿಸಬಹುದು. ಅಧಿವೇಶನಕ್ಕೆ ಮುಂಚಿತವಾಗಿ ಇಂಡಿಯಾ ಬ್ಲಾಕ್ ಸಭೆಯನ್ನು ನಿಗದಿಪಡಿಸಲಾಗಿರುವುದರಿಂದ, ವಿರೋಧ ಪಕ್ಷದ ಅಂತಿಮ ನಿಲುವು ನಿರ್ಣಾಯಕವಾಗಿರುತ್ತದೆ. ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850 ಕ್ಕೆ ಹೆಚ್ಚಿಸಲು ಮೋದಿ ಸರ್ಕಾರ ಪ್ರಸ್ತಾಪ: ಮಹಿಳಾ ಮೀಸಲಾತಿ ಮಸೂದೆಯನ್ನು ಮುಂದಿಟ್ಟುಕೊಂಡು, ಕೇಂದ್ರ ಸರ್ಕಾರವು ಲೋಕಸಭೆಯಲ್ಲಿನ ಸ್ಥಾನಗಳ ಸಂಖ್ಯೆಯನ್ನು 543 ರಿಂದ 850 ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ ಎಂದು ನ್ಯೂಸ್ 18 ವರದಿ ಮಾಡಿದೆ. ಈ ವಿಸ್ತರಣೆಯು ನಾರಿ ಶಕ್ತಿ ವಂದನ್ ಅಧಿನಿಯಮ್ (ಮಹಿಳಾ ಮೀಸಲಾತಿ ಕಾಯ್ದೆ) ಅನುಷ್ಠಾನವನ್ನು ತ್ವರಿತಗೊಳಿಸುವ ಯೋಜನೆಯ ಭಾಗವಾಗಿದೆ, ಇದು ಸದನದ ಸರಿಸುಮಾರು ಮೂರನೇ ಒಂದು ಭಾಗ ಅಥವಾ 273 ಸ್ಥಾನಗಳನ್ನು ಮಹಿಳಾ ಶಾಸಕರಿಗೆ ಮೀಸಲಿಡುವುದನ್ನು ಖಚಿತಪಡಿಸುತ್ತದೆ. ನಾರಿ ಶಕ್ತಿ ವಂದನ ಅಧಿನಿಯಮ ಎಂದರೇನು?: ನಾರಿ ಶಕ್ತಿ ವಂದನ ಅಧಿನಿಯಮ (ಅಧಿಕೃತವಾಗಿ ಸಂವಿಧಾನ [106 ನೇ ತಿದ್ದುಪಡಿ] ಕಾಯ್ದೆ, 2023) ಅನ್ನು ಸಂಸತ್ತು 2023 ಸೆಪ್ಟೆಂಬರ್ ನಲ್ಲಿ ಅಂಗೀಕರಿಸಿತು. ಇದನ್ನು ಸೆಪ್ಟೆಂಬರ್ 19, 2023 ರಂದು ಲೋಕಸಭೆಯಲ್ಲಿ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಯಿತು. 2023 ಸೆಪ್ಟೆಂಬರ್ 20ರಂದು ಇದರ ಪರವಾಗಿ 454 ಮತಗಳು ಮತ್ತು ವಿರುದ್ಧವಾಗಿ 2 ಮತಗಳು ಸಿಕ್ಕಿದ್ದು ಕಾಯ್ದೆಯನ್ನು ಅಂಗೀಕರಿಸಲಾಯಿತು. ರಾಜ್ಯಸಭೆಯು 2023 ಸೆಪ್ಟೆಂಬರ್ 21ರಂದು 214 ಮತಗಳೊಂದಿಗೆ ಇದನ್ನು ಸರ್ವಾನುಮತದಿಂದ ಅಂಗೀಕರಿಸಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2023 ಸೆಪ್ಟೆಂಬರ್ 28 ರಂದು ಇದನ್ನು ಕಾನೂನಾಗಿ ಸಹಿ ಮಾಡಿದರು. ► ನಿಬಂಧನೆಗಳು 33% ಮೀಸಲಾತಿ: ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ದೆಹಲಿ ವಿಧಾನಸಭೆಯಲ್ಲಿ ಮಹಿಳೆಯರಿಗೆ ಎಲ್ಲಾ ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಮೀಸಲಿಡಲಾಗಿದೆ. ಅನುಷ್ಠಾನದ ಸ್ಥಿತಿ: 2023 ರಲ್ಲಿ ಅಂಗೀಕರಿಸಲ್ಪಟ್ಟಾಗ, ಮೂಲ ಕಾಯ್ದೆ ಜಾರಿಗೆ ಬರುವ ಮೊದಲು ಹೊಸ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆಯ ಅಗತ್ಯವಿತ್ತು. ► ಮಸೂದೆ ಜಾರಿಗೆ ಆತುರ ಯಾಕೆ? ಹೊಸ ಜನಗಣತಿ ಮತ್ತು ನಂತರದ ಕ್ಷೇತ್ರ ವಿಂಗಡಣೆಯ ಅವಶ್ಯಕತೆಯಿಂದ ಮೀಸಲಾತಿಯನ್ನು ಬೇರ್ಪಡಿಸಲು ಸರ್ಕಾರ ಪ್ರಸ್ತಾಪಿಸಿದೆ. ಮೂಲತಃ, 2023 ರಲ್ಲಿ ಜಾರಿಗೆ ತರಲಾದ ಕಾನೂನು ಮುಂದಿನ ಜನಗಣತಿಯ ನಂತರವೇ ಜಾರಿಗೆ ಬರುತ್ತಿತ್ತು, ಇದು 2034 ಕ್ಕೆ ಜಾರಿಯಾಗುವುದನ್ನು ಸಂಭಾವ್ಯವಾಗಿ ತಳ್ಳುತ್ತದೆ. ವಿಳಂಬವಾದ 2021 ಜನಗಣತಿಯ ಫಲಿತಾಂಶಗಳಿಗಾಗಿ ಕಾಯುವ ಬದಲು 2011 ರ ಜನಗಣತಿ ಡೇಟಾವನ್ನು ಬಳಸಲು ಸರ್ಕಾರ ಯೋಜಿಸಿದೆ, ಇದು 2029 ರ ಸಾರ್ವತ್ರಿಕ ಚುನಾವಣೆಗಳ ವೇಳೆಗೆ ಅನುಷ್ಠಾನಕ್ಕೆ ಅನುವು ಮಾಡಿಕೊಡುತ್ತದೆ. ►ಮೋದಿ ಸರ್ಕಾರ ಮಹಿಳೆಯರಿಗೆ ಮೀಸಲಾತಿ ನೀಡಲು ಹೇಗೆ ಯೋಜಿಸಿದೆ ? ಸ್ಥಾನಗಳ ವಿಸ್ತರಣೆ: ಒಟ್ಟು ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು (543) ಹೆಚ್ಚಿಸುವುದು ಇಲ್ಲಿ ಪ್ರಮುಖ ಉದ್ದೇಶ. ಇವುಗಳಲ್ಲಿ 273 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು. ಈ ವಿಸ್ತರಣೆಯು ಪ್ರಸ್ತುತ ಸದಸ್ಯರಿಗೆ ಅಸ್ತಿತ್ವದಲ್ಲಿರುವ ಸ್ಥಾನಗಳ ಸಂಖ್ಯೆಯನ್ನು ಕಡಿಮೆ ಮಾಡದೆಯೇ ಮಹಿಳಾ ಕೋಟಾಕ್ಕೆ ಅವಕಾಶ ನೀಡುತ್ತದೆ. ಪರಿಶಿಷ್ಟ ಜಾತಿಗಳ ಸ್ಥಾನಗಳು 84 ರಿಂದ 126/136 ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಸ್ಥಾನಗಳು 47 ರಿಂದ 70 ಕ್ಕೆ ಏರುವ ನಿರೀಕ್ಷೆಯಿದೆ ಎಂದು ವರದಿಗಳು ಹೇಳುತ್ತವೆ. ಕ್ಷೇತ್ರ ಮರುವಿಂಗಡಣೆ : ಹೊಸ ಜನಸಂಖ್ಯಾ ಅಂಕಿಅಂಶಗಳಿಗಾಗಿ ಕಾಯುವ ಬದಲು 2011 ರ ಜನಗಣತಿಯ ದತ್ತಾಂಶವನ್ನು ಆಧರಿಸಿ ಕ್ಷೇತ್ರ ಗಡಿಗಳನ್ನು ಮರುರೂಪಿಸಲು 2026 ರ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಪರಿಚಯಿಸಲು ಸರ್ಕಾರ ಯೋಜಿಸಿದೆ. ಪ್ರಸ್ತಾವಿತ ಪ್ರಕ್ರಿಯೆಯು ಕೇರಳ ಮತ್ತು ತಮಿಳುನಾಡಿನಂತಹ ದಕ್ಷಿಣ ರಾಜ್ಯಗಳ ರಾಜಕೀಯ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ. ಅನುಪಾತದ ಆಧಾರದ ಮೇಲೆ ಸ್ಥಾನಗಳನ್ನು ಹೆಚ್ಚಿಸುವ ಮೂಲಕ, ಸರ್ಕಾರವು ಅಸ್ತಿತ್ವದಲ್ಲಿರುವ ಅಧಿಕಾರದ ಸಮತೋಲನವನ್ನು ಕಾಪಾಡಿಕೊಳ್ಳಲು ಮತ್ತು ಉತ್ತರದ ರಾಜ್ಯಗಳು ಅಸಮಾನ ಪ್ರಭಾವವನ್ನು ಪಡೆಯುವುದನ್ನು ತಡೆಯಲು ಉದ್ದೇಶಿಸಿದೆ. ಶಾಸಕಾಂಗ ಮಾರ್ಗ : ಈ ಕ್ರಮಕ್ಕೆ ಸಂಸತ್ತಿನ ಎರಡೂ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿರುವ ಎರಡು ಪ್ರಮುಖ ಸಾಂವಿಧಾನಿಕ ತಿದ್ದುಪಡಿಗಳು ಬೇಕಾಗುತ್ತವೆ. ►ಪ್ರಧಾನಿ ಮೋದಿ ಖರ್ಗೆ ಅವರಲ್ಲಿ ಹೇಳಿದ್ದು ಏನು? ವಿಜ್ಞಾನ ಭವನದಲ್ಲಿ ಸೋಮವಾರ ನಡೆದ ರಾಷ್ಟ್ರೀಯ 'ನಾರಿ ಶಕ್ತಿ ವಂದನ ಸಮ್ಮೇಳನ'ದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಕ್ರಮವನ್ನು 21 ನೇ ಶತಮಾನದ ಪ್ರಮುಖ ನಿರ್ಧಾರಗಳಲ್ಲಿ ಒಂದು ಎಂದು ಶ್ಲಾಘಿಸಿದರು. ಅಂಬೇಡ್ಕರ್ ಜಯಂತಿಯಂದು ಸಂಸತ್ತಿನ ಸಂಕೀರ್ಣದಲ್ಲಿರುವ ಪ್ರೇರಣಾ ಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲು ಸಂಸತ್ತಿನಲ್ಲಿ ಮಂಡಿಸಲಿರುವ ತಿದ್ದುಪಡಿ ಮಸೂದೆಗೆ ಬೆಂಬಲ ನೀಡಬೇಕೆಂದು ಒತ್ತಾಯಿಸಿದರು. ಮಹಿಳಾ ಕಲ್ಯಾಣವನ್ನು ಗುರಿಯಾಗಿರಿಸಿಕೊಂಡು ಕ್ರಮಗಳನ್ನು ಬೆಂಬಲಿಸುವುದನ್ನು ಪಕ್ಷಗಳಾದ್ಯಂತ ಹಂಚಿಕೆಯ ಜವಾಬ್ದಾರಿಯಾಗಿ ನೋಡಬೇಕು ಎಂದು ಅವರು ಒತ್ತಿ ಹೇಳಿದರು. ಮಹಿಳೆಯರ ಹಿತಾಸಕ್ತಿಗಾಗಿ ಮಸೂದೆಯನ್ನು ತರಲಾಗುತ್ತಿದೆ ಎಂದು ಪ್ರಧಾನಿ ಮೋದಿ ಖರ್ಗೆ ಅವರಲ್ಲಿ ಹೇಳಿದ್ದು ಸಾಮೂಹಿಕ ಬೆಂಬಲಕ್ಕಾಗಿ ಕರೆ ನೀಡಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ನಿಲುವು ತೆಗೆದುಕೊಳ್ಳುವ ಮೊದಲು ಕಾಂಗ್ರೆಸ್ ಆಂತರಿಕವಾಗಿ ಪ್ರಸ್ತಾವನೆಯನ್ನು ಚರ್ಚಿಸುತ್ತದೆ.ಈ ವಿಷಯದ ಬಗ್ಗೆ ಸೂಕ್ತ ಚರ್ಚೆಯ ನಂತರ ಪಕ್ಷವು ತನ್ನ ನಿಲುವನ್ನು ತಿಳಿಸುತ್ತದೆ ಎಂದು ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ವಾರ್ತಾ ಭಾರತಿ 14 Apr 2026 7:44 pm

Aland | ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಜಾರಿಗೆ ತರುವುದು ಅಗತ್ಯ: ಶಾಸಕ ಬಿ.ಆರ್.ಪಾಟೀಲ್‌

ಆಳಂದ: ತಾಲೂಕು ಆಡಳಿತ ಸೌಧದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ್.ಪಾಟೀಲ್‌ ಅವರು ಮಾತನಾಡಿ, ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಗಳನ್ನು ನೈಜ ಜೀವನದಲ್ಲಿ ಈಡೇರಿಸಲು ಸಮಾಜ ಸಂಕಲ್ಪದಿಂದ ಮುಂದೆ ಬರಬೇಕು ಎಂದು ಹೇಳಿದರು. ಅವರು ಮುಂದುವರೆದು, ಸಂಪೂರ್ಣ ನ್ಯಾಯ ಸಾಧನೆ ಅಂಬೇಡ್ಕರ್ ಅವರ ಮಹತ್ತರ ಕನಸಾಗಿದ್ದು, ಅದನ್ನು ನನಸಾಗಿಸಲು ಸಮಾನತೆ, ನ್ಯಾಯ ಮತ್ತು ಸೌಹಾರ್ದತೆಯನ್ನು ಸಮಾಜದಲ್ಲಿ ಬೆಳೆಸಬೇಕು. ಮೂಲಭೂತ ಬದಲಾವಣೆಗಳಿಲ್ಲದೆ ಸಮಾನ ಅವಕಾಶಗಳು ಸಾಧ್ಯವಿಲ್ಲ. ದೇಶದಲ್ಲಿ ಸಂಪತ್ತಿನ ಸಮನ್ವಯ ಹಾಗೂ ವಿಕೇಂದ್ರೀಕರಣ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ತಮ್ಮ ಹಕ್ಕುಗಳಿಗಾಗಿ ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿ. ರಂಗಸ್ವಾಮಿ ಶೆಟ್ಟಿ ಹಾಗೂ ಉಪನ್ಯಾಸಕ ಜಿತೇಂದ್ರ ತಳವಾರ ಅವರು ಮಾತನಾಡಿ, ಅಂಬೇಡ್ಕರ್ ಅವರ ಜೀವನ ಸಂದೇಶ, ಶಿಕ್ಷಣದ ಮಹತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಶಾಸಕರು ಸನ್ಮಾನಿಸಿದರು. ವೇದಿಕೆಯಲ್ಲಿ ತಹಸೀಲ್ದಾರ ಅಣ್ಣಾರಾವ್ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ, ಸಮಾಜ ಕಲ್ಯಾಣಾಧಿಕಾರಿ ವಿಜಲಕ್ಷ್ಮಿ ಹೋಳ್ಕರ್, ಜಿಪಂ ಮಾಜಿ ಸದಸ್ಯ ಸಿದ್ಧರಾಮ ಪ್ಯಾಟಿ, ಹಿರಿಯ ಮುಖಂಡ ದಯಾನಂದ ಶೇರಿಕಾರ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಸುರೇಂದ್ರನಾಥ ಹೊನ್ನಪ್ಪಗೊಳ, ಜಿಪಂ ಎಇಇ ಸಂಗಮೇಶ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನಾಗರಿಕ ಮುಖಂಡರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇಸಿಒ ಶ್ರೀಮಂತ ಪಾಟೀಲ ನಿರೂಪಿಸಿದರು. ಇಒ ಮಾನಪ್ಪ ಕಟ್ಟಿಮನಿ ಸ್ವಾಗತಿಸಿದರು.

ವಾರ್ತಾ ಭಾರತಿ 14 Apr 2026 7:44 pm

ಬುಧವಾರ ಶುಭವಾರ ಆಗಲಿದೆಯಾ? ಷೇರು ಮಾರುಕಟ್ಟೆ ಏರಿಕೆ ಕಾಣುವ ಭರವಸೆಯಲ್ಲಿ ಹೂಡಿಕೆದಾರ

ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ಅನಿಶ್ಚಿತತೆ ಹಾದಿ ಹಿಡಿದಿರುವ ಭಾರತೀಯ ಷೇರು ಮಾರುಕಟ್ಟೆ, ಏರಿಳಿತದ ತೂಗುಯ್ಯಾಲೆ ಆಡುತ್ತಿದೆ. ಬಹುತೇಕ ಕುಸಿತದ ಹಾದಿಯಲ್ಲೇ ಇರುವ ಮಾರುಕಟ್ಟೆ, ಕೆಲವೊಮ್ಮೆ ಮಾತ್ರ ಏರಿಕೆಯತ್ತ ಮುಖ ಮಾಡುತ್ತಿದೆ. ಆದರೀಗ ಅಮೆರಿಕ ಮತ್ತು ಇರಾನ್‌ ನಡುವೆ ಕದನ ವಿರಾಮ ಒಪ್ಪಂದ ಮಾತುಕತೆಗಳು ನಡೆಯುತ್ತಿರುವುದರಿಂದ, ನಾಳೆ ಅಂದರೆ ಬುಧವಾರ (ಏ. 15) ಭಾರತೀಯ ಷೇರು ಮಾರುಕಟ್ಟೆ ಯಾವ ರೀತಿ ವರ್ತಿಸಲಿದೆ ಎಂಬುದರ ಬಗ್ಗೆ ಹೂಡಿಕೆದಾರರು ಚರ್ಚಿಸುತ್ತಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ.

ವಿಜಯ ಕರ್ನಾಟಕ 14 Apr 2026 7:40 pm

Aland | ನರೋಣಾದಲ್ಲಿ ಡಾ.ಅಂಬೇಡ್ಕರ್ 135ನೇ ಜಯಂತಿ ಆಚರಣೆ

ಆಳಂದ: ತಾಲೂಕಿನ ನರೋಣ ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಭಕ್ತಿ-ಭಾವದಿಂದ ಆಚರಿಸಲಾಯಿತು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ನರೋಣ ಗ್ರಾಮದ ಸಂಯುಕ್ತ ಆಶ್ರಯದಲ್ಲಿ ಜೈ ಭೀಮ್ ನಗರದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಚಾಲಕ ಶಿವಪುತ್ರ ಬೀರಾಗಿ, ನರೋಣ ಪೊಲೀಸ್ ಠಾಣೆಯ ಪಿಎಸ್‌ಸಿ ಸಿದ್ದರಾಮ ನಿಂಬರಗಿ ಹಾಗೂ ಆರೋಗ್ಯ ಇಲಾಖೆಯ ಶಕ್ತಿ ಪ್ರಸಾದ್ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ನೀಲಿ ಧ್ವಜಾರೋಹಣವನ್ನು ಗ್ರಾಮದ ಹಿರಿಯರಾದ ಶ್ರೀಮಂತರು ನೆರವೇರಿಸಿದರೆ, ಪಂಚಶೀಲ ಧ್ವಜಾರೋಹಣವನ್ನು ದಿಲೀಪ್ ಕಡ್ಡಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬುದ್ಧ ವಂದನೆಯನ್ನು ಶಕ್ತಿ ಬಾಚನಹಳ್ಳಿ ಹಾಗೂ ವಿಜಯಕುಮಾರ್ ಮೇಲಕೇರಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೈಲಾಸ ದೆಕುನ್, ಸೂರ್ಯಕಾಂತ್ ಹಾದಿಮನಿ, ವಿಜಯಕುಮಾರ್ ಹಾದಿಮನಿ, ಶೇಖರ್ ಕೋರೆ, ಶ್ರೀಕಾಂತ್ ಕೋರೆ, ಅಭಿಷೇಕ್ ಕೋರೆ, ರಂಜಿತ್ ರಾಗಿ, ಚಂದ್ರಕಾಂತ್ ಹಾದಿಮನಿ ಸೇರಿದಂತೆ ಜೈ ಭೀಮ್ ನಗರದ ಹಿರಿಯರು, ಮಹಿಳೆಯರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮಂಜುನಾಥ್ ಕೋರೆ ನಿರೂಪಿಸಿದರು. ಚಂದ್ರಕಾoತ್ ಕೋರೆ ಸ್ವಾಗತಿಸಿದರು. ಕೈಲಾಸ ರಾಗಿ ವಂದಿಸಿದರು.

ವಾರ್ತಾ ಭಾರತಿ 14 Apr 2026 7:39 pm

Aland | ಡಾ.ಅಂಬೇಡ್ಕರ್ ಕೊಡುಗೆ ಅಪಾರ : ಸಿಒ ಪನಶೆಟ್ಟಿ

ಆಳಂದ : ದೇಶಕ್ಕೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಕೊಡುಗೆ ಅಪಾರವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಅವರು ಇಂದಿಲ್ಲಿ ಹೇಳಿದರು. ಪಟ್ಟಣದ ಪುರಸಭೆ ಆವರಣದಲ್ಲಿ ಪುರಸಭೆಯಿಂದ ಹಾಗೂ ಮುಂಭಾಗದಲ್ಲಿ ನೀಲಿ ಧ್ವಜ ವೃತ್ತದಲ್ಲಿ ಪೌರ ಕಾರ್ಮಿಕರು ಹಮ್ಮಿಕೊಂಡ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪುರಸಭೆ ನಿಕಟಪೂರ್ವ ಸದಸ್ಯ ಶಿವುಪುತ್ರ ನಡಗೇರಿ, ಎಇಇ ಜಗದೀಶ,ಪೌರನೌಕರರ ಸಂಘದ ಅಧ್ಯಕ್ಷ ಸಿದ್ರಾಮ ಬಟಗೇರಿ, ಗೌರವ ಅಧ್ಯಕ್ಷ ಶಿವರಾಯ ಸರಸಂಬಿ, ಮುಖಂಡ ಜೀವರಾಜ ದೇವನೂರ, ಆರ್‌ಐ ಹರಿಷ ಗೋವಿನ, ಎಸ್‌ಐ ಲಕ್ಷ್ಮಣ ತಳವಾರ,ಆನಂದ, ಶಿವರಾಯ ಮಂಗಲಗಿ, ಶಫಿ ರೋತೆ, ಚೋಟು, ಚಿದಾನಂದ, ಮಲ್ಲು ಲಂಗೋಟೆ, ಮೌಲಾ ಖಂಡುವಾಲೆ, ಗುತ್ತಿಗೆದಾರ ಸಿದ್ಧರಾಮ ದೇಸಾಯಿ ಸೇರಿದಂತೆ ಪೌರ ಕಾರ್ಮಿಕರು ಮತ್ತು ನೌಕರರು ಮಹಿಳಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಆರಂಭದಲ್ಲಿ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಪಟಾಕಿ ಸಿಡಿಸಿ ಸಿಹಿ ಹಂಚಲಾಯಿತು. ಪುರಸಭೆ ಆವರಣದಲ್ಲೂ ಡಾ. ಬಾಬಾಸಾಹೇಬರ ಭಾವಚಿತ್ರಕ್ಕೆ ಪೂಜೆ ನೆರವೇರಿಸಲಾಯಿತು.

ವಾರ್ತಾ ಭಾರತಿ 14 Apr 2026 7:37 pm

Aland | ಅಂಬೇಡ್ಕರ್ ವಿಚಾರಧಾರೆ ವಿಶ್ವಕ್ಕೆ ಮಾದರಿ: ಪ್ರೊ.ಅನಷುಮನ್ ಬೆಹರಾ

ಆಳಂದ: ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ, ಸಿದ್ಧಾಂತ, ಪ್ರಜಾಪ್ರಭುತ್ವದ ಕಲ್ಪನೆ, ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೈದರಾಬಾದ್ ವಿಶ್ವವಿದ್ಯಾಲಯದ ರಾಜಕೀಯ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಅನಷುಮನ್ ಬೆಹರಾ ಅಭಿಪ್ರಾಯಪಟ್ಟರು. ತಾಲೂಕಿನ ಕಡಗಂಚಿ ಬಳಿಯ ಸಿಯುಕೆಯಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರು ದೇಶದ ಭವಿಷ್ಯದ ಬಗ್ಗೆ ವಿಶಾಲ ದೃಷ್ಟಿಕೋನ ಹೊಂದಿದ್ದು, ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ಹಕ್ಕುಗಳನ್ನು ಒದಗಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು. ಜಾತಿ ತಾರತಮ್ಯ ನಿರ್ಮೂಲನೆ, ಸಂವಿಧಾನ ರಚನೆ ಹಾಗೂ ಚುನಾವಣಾ ಸುಧಾರಣೆಗಳ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ಅವರ ಚಿಂತನೆಗಳು ನಮ್ಮೆಲ್ಲರಿಗೂ ಸದಾ ಪ್ರೇರಣೆಯಾಗಿದ್ದು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಮಾತನಾಡಿ, ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ಪ್ರಜಾಪ್ರಭುತ್ವದ ನಾಲ್ಕು ಆಧಾರಸ್ತಂಭಗಳನ್ನು ನೀಡಿದರು. ಅನೇಕ ಮಹನೀಯರ ತ್ಯಾಗದ ಫಲವಾಗಿ ನಮ್ಮ ದೇಶ ಇಂದು ಸುಭದ್ರವಾಗಿದೆ. ನೆರೆ ರಾಷ್ಟ್ರಗಳ ಪ್ರಜಾಪ್ರಭುತ್ವದೊಂದಿಗೆ ಹೋಲಿಸಿದರೆ ಭಾರತದ ಪ್ರಜಾಪ್ರಭುತ್ವ ಅತ್ಯಂತ ಶ್ರೇಷ್ಠವಾಗಿದ್ದು, ಅದಕ್ಕೆ ಅಂಬೇಡ್ಕರ್ ಅವರ ಸಂವಿಧಾನವೇ ಕಾರಣವಾಗಿದೆ ಎಂದು ಹೇಳಿದರು. ಪ್ರಭಾರಿ ಕುಲಸಚಿವ ಪ್ರೊ. ಚೆನ್ನವೀರ ಆರ್. ಎಂ ಅವರು ಮಾತನಾಡಿದರು. ಕಾರ್ಯಕ್ರಮ ಸಂಯೋಜಕರಾದ ಪ್ರೊ.ದೇವರಾಜಪ್ಪ ಎಸ್. ಅವರು ಸ್ವಾಗತಿಸಿದರು. ಪ್ರೊ.ಅಂಗಡಿ, ಪ್ರೊ. ಪಾಂಡುರಂಗ, ಡಾ.ಭರತ್, ಡಾ.ರಾಜಶ್ರೀ, ಡಾ.ಒಯಿನಂ, ಡಾ.ಬಾಬು, ಡಾ.ಅಲೋಕ್, ಪ್ರಕಾಶ ಭಾಲಕಿ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನ್‌ಗಳು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಅಶ್ವಿನಿ ರಾಷ್ಟ್ರಗೀತೆ ಹಾಡಿದರು. ಡಾ.ಜೈಪಾಲ್ ರಾಠೋಡ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಾರ್ತಾ ಭಾರತಿ 14 Apr 2026 7:34 pm

Kalaburagi | ಅಂಬೇಡ್ಕರ್ ಚಿಂತನೆ ಅರ್ಥೈಸಿಕೊಂಡರೆ ಮಾತ್ರ ನಿಜವಾದ ಭಾರತ ನಿರ್ಮಾಣ: ಪ್ರೊ. ಶಶಿಕಾಂತ ಎಸ್. ಉಡಿಕೇರಿ

ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಇಡೀ ಜಗತ್ತು ಆಚರಿಸುತ್ತಿರುವ ಸಂದರ್ಭದಲ್ಲಿ, ಅವರ ನೈಜ ಕನಸಿನ ಭಾರತ ನಿರ್ಮಿಸಲು ಅವರ ಜೀವನ ಮತ್ತು ಚಿಂತನೆಗಳನ್ನು ಆಳವಾಗಿ ಅರ್ಥೈಸಿಕೊಳ್ಳಬೇಕು ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಅಭಿಪ್ರಾಯಪಟ್ಟರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಮೀಸಲಾತಿ ಮೂಲಕ ಶಿಕ್ಷಣ, ಉದ್ಯೋಗ ಹಾಗೂ ಅವಕಾಶಗಳು ದೊರೆತಿದ್ದರೂ, ಸಮಾಜದಲ್ಲಿ ಬದಲಾವಣೆಗೆ ಪ್ರಶ್ನಿಸುವ ಮನೋಭಾವ ಅಗತ್ಯವಾಗಿದೆ. ಆತ್ಮಸಾಕ್ಷಿಯಿಂದ ಅಂಬೇಡ್ಕರ್ ಅವರ ಚಿಂತನೆಗಳನ್ನು ಬೋಧಿಸಿ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಭಾರತೀಯ ಸಂವಿಧಾನದ ಆಶಯವೇ ಪ್ರಜಾಪ್ರಭುತ್ವ ಯಶಸ್ಸಿಗೆ ಕಾರಣವಾಗಿದೆ. ವಿಶ್ವದ ರಾಷ್ಟ್ರಗಳು ಅಂಬೇಡ್ಕರ್ ಅವರ ಕೊಡುಗೆಗಳನ್ನು ಗೌರವಿಸುತ್ತಿದ್ದು, ಅವರ ಅಪಾರ ಜ್ಞಾನವನ್ನು ಪ್ರಶಂಸಿಸುತ್ತಿವೆ. ಅವರು ಅನುಭವಿಸಿದ ನೋವಿನ ಫಲವಾಗಿ ನಾವು ಇಂದು ಸೌಕರ್ಯಗಳನ್ನು ಅನುಭವಿಸುತ್ತಿದ್ದೇವೆ ಎಂದು ಹೇಳಿದರು. ಬೆಂಗಳೂರು ಮುಕ್ತಿ ಒಕ್ಕೂಟದ ಸಂಚಾಲಕಿ ಬೃಂದಾ ಅಡಿಗೆ ಮುಖ್ಯ ಅತಿಥಿಯಾಗಿ ಮಾತನಾಡಿ, “ಡಾ. ಬಿ.ಆರ್. ಅಂಬೇಡ್ಕರ್: ಪ್ರಜಾಪ್ರಭುತ್ವ ಮತ್ತು ಬಿನ್ನಾಭಿಪ್ರಾಯದ ಪ್ರತೀಕ” ವಿಷಯ ಕುರಿತು ಉಪನ್ಯಾಸ ನೀಡಿ, ಸಂವಿಧಾನವು ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ನೀಡಿದೆ. ಶಿಕ್ಷಣ ಎಂದರೆ ಕೇವಲ ಪದವಿ ಅಲ್ಲ, ಜ್ಞಾನ ಮತ್ತು ವಿವೇಚನೆಯ ಮೂಲಕ ಅನ್ಯಾಯವನ್ನು ಪ್ರಶ್ನಿಸುವ ಶಕ್ತಿ ಎಂದು ಹೇಳಿದರು. ಯುವಜನತೆ ಅಂಬೇಡ್ಕರ್ ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಂಡು ನಾಗರಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ‘ಒನ್ ಮ್ಯಾನ್ ಒನ್ ವೋಟ್’ ಹಕ್ಕಿನ ಮೌಲ್ಯವನ್ನು ಅರಿತು, ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಸಾಧಿಸುವತ್ತ ಪ್ರಯತ್ನಿಸಬೇಕು ಎಂದು ಅವರು ಕರೆ ನೀಡಿದರು. ಸಂವಿಧಾನ ಜಾರಿಗೆ ಬಂದು 76 ವರ್ಷಗಳಾದರೂ, ಶೋಷಿತರು ಹಾಗೂ ದುರ್ಬಲ ವರ್ಗಗಳಿಗೆ ಸಂಪೂರ್ಣ ಸಮಾನತೆ ಇನ್ನೂ ಸಿಕ್ಕಿಲ್ಲ. ಸಮಾನತೆ ಎಂದರೆ ಕೇವಲ ಆರ್ಥಿಕ ಸ್ಥಿತಿಗತಿ ಅಲ್ಲ, ಸಮಾಜದಲ್ಲಿ ಸಮಾನ ಅವಕಾಶಗಳ ಲಭ್ಯತೆ ಎಂದು ಅಭಿಪ್ರಾಯಪಟ್ಟರು. ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನ ಸಂಸ್ಥೆ ನಿರ್ದೇಶಕ ಪ್ರೊ. ಚಂದ್ರಕಾoತ ಯಾತನೂರ್ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ವಿದ್ಯಾವಿಷಯಕ ಪರಿಷತ್ ಸದಸ್ಯೆ ಡಾ.ಪ್ರತಿಮಾ ಮಠದ್, ಮೌಲ್ಯಮಾಪನ ಕುಲಸಚಿವ ಡಾ.ನಿಂಗಣ್ಣ ಕಣ್ಣೂರ, ಹಣಕಾಸು ಅಧಿಕಾರಿ ಜಯಾಂಬಿಕ, ಕುಲಸಚಿವ ಪ್ರೊ. ರಮೇಶ ಲಂಡನ್ಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ ಪ್ರೊ. ಶ್ರೀರಾಮುಲು, ವಿವಿಧ ನಿಕಾಯಗಳ ಡೀನರು, ಸಿಂಡಿಕೇಟ್ ಸದಸ್ಯರು, ವಿದ್ಯಾ ವಿಷೇಯಕ ಪರಿಷತ್ ಸದಸ್ಯರು, ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರು. ಪ್ರಾಧ್ಯಾಪಕರು, ನಿವೃತ್ತ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ನಗರದ ನಾಗರೀಕರು ಭಾಗವಹಿಸಿದ್ದರು. ಸಂಗೀತ ವಿಭಾಗದ ಅತಿಥಿ ಉಪನ್ಯಾಸಕರು ನಾಡಗೀತೆ ಹಾಡಿದರು. ಸಿದ್ಧಾರ್ಥ ಚಿಮ್ಮಯಿ ಇದ್ಲಾಯಿ ಡಾ. ಬಿ. ಆರ್. ಅಂಬೇಡ್ಕರ್ ಗೀತೆ ಪ್ರಸ್ತುತಪಡಿಸಿದರು. ಡಾ. ಅಮಿತಾ ರಾಣಿ ಅತಿಥಿ ಪರಿಚಯಿಸಿದರು. ಡಾ. ಕಾಶಿನಾಥ ನೂಲಕರ್ ನಿರೂಪಿಸಿದರು. ಶಾಂತಪ್ಪ ಹೆಬಳಿ ವಂದಿಸಿದರು.

ವಾರ್ತಾ ಭಾರತಿ 14 Apr 2026 7:29 pm

ಸೇಡಂನಲ್ಲಿ ಅಂಬೇಡ್ಕರ್ ಜಯಂತಿ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲರಿಂದ ಮಾಲಾರ್ಪಣೆ

ಸೇಡಂ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಸೇಡಂ ಪಟ್ಟಣದಲ್ಲಿ ಅಂಬೇಡ್ಕರ್ ಮೂರ್ತಿಗೆ ಗೌರವಪೂರ್ವಕವಾಗಿ ಮಾಲಾರ್ಪಣೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ಅಂಬೇಡ್ಕರ್ ಅವರ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆ ತರುವಲ್ಲಿ ಬಾಬಾ ಸಾಹೇಬರ ಅವಿರತ ಶ್ರಮದಿಂದಲೇ ದೇಶದಲ್ಲಿ ಸಾಂವಿಧಾನಿಕ ಸಮಾನತೆ ಸ್ಥಾಪನೆ ಸಾಧ್ಯವಾಯಿತು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಬಸವರಾಜ ಪಾಟೀಲ್ ಉಡಗಿ, ಶಿವಶರಣ ರೆಡ್ಡಿ ಪಾಟೀಲ್, ವಿಶ್ವನಾಥ್ ಪಾಟೀಲ್ ಬೊಮ್ಮನಹಳ್ಳಿ, ಕಾಂಗ್ರೆಸ್ ಮುಖಂಡ ಜೈ ಭೀಮ್ ಉಡಗಿ, ಸಿಪಿಐ ಮುಖಂಡ ಮಹಾದೇವ ದಿಡಿಮನಿ, ಅಂಬೇಡ್ಕರ್ ಜಯಂತಿ ಸಮಿತಿ ಅಧ್ಯಕ್ಷ ಗೌತಮ್ ಹಳ್ಳಿ, ವಿಲಾಸ್ ಗೌತಮ್ ನೀಡಗುಂದಾ, ಮಾರುತಿ ಹುಳಗೋಳಕರ, ಬಸವರಾಜ ಕಾಳಗಿ, ಸಿದ್ದು ಡೋಣುರ, ಶ್ರೀಕಾಂತ್ ಜಾಪನೂರ ಸೇರಿದಂತೆ ಅನೇಕ ಮುಖಂಡರು, ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 14 Apr 2026 7:24 pm

ತುಮಕೂರು ಶಿರಾ ಬಳಿ KSRTC ಬಸ್‌ - ಲಾರಿ ನಡುವೆ ಭೀಕರ ಅಪಘಾತ; ಹಲವು ಸಾವು ನೋವು

ತುಮಕೂರಿನ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಭೀಕರ ಅಪಘಾತಕ್ಕೂಡಾಗಿದೆ. ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ ಪೈಕಿ ಇಬ್ಬರು ಮೃತಪಟ್ಟಿದ್ದು, 10 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ.

ವಿಜಯ ಕರ್ನಾಟಕ 14 Apr 2026 7:22 pm

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾಪಂಗೆ ಕೇಂದ್ರ ತಂಡ ಭೇಟಿ

ಶಿರ್ವ, ಎ.14: ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ ಇಡೀ ರಾಜ್ಯದಿಂದ ರಾಷ್ಟ್ರದ ಇತರ ಐದು ಪಂಚಾಯತ್‌ಗಳೊಂದಿಗೆ ನಾಮ ನಿರ್ದೇಶನಗೊಂಡ ಬೆಳ್ಳೆ ಗ್ರಾಮ ಪಂಚಾಯತ್‌ಗೆ ಕೇಂದ್ರ ಸರಕಾರದ ತಂಡ ಭೇಟಿ ನೀಡಿದೆ. ಬೆಳ್ಳೆ ಗ್ರಾಮ ಪಂಚಾಯತ್ 2024-25ನೇ ಸಾಲಿನಲ್ಲಿ ಸಮುದಾಯದ ಸಹಭಾಗಿತ್ವದೊಂದಿಗೆ ಸ್ವಂತ ಸಂಪನ್ಮೂಲವನ್ನು ಉತ್ತಮ ರೀತಿಯಲ್ಲಿ ಸಂಗ್ರಹಿಸಿ ಬಳಕೆ ಮಾಡಿರುವ ಬಗ್ಗೆ ಧನಂಜಯ್ ಚಾವ್ಲಾ ಮತ್ತು ಉಪೇಂದ್ರ ನೇತೃತ್ವದ ಕೇಂದ್ರ ಸರಕಾರದ ತಂಡ ಭೇಟಿ ನೀಡಿ ಪರಿಶೀಲಿಸಿತು. ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಸಿಪಿಒ ಉದಯಕುಮಾರ್ ಶೆಟ್ಟಿ, ಕಾಪು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜೇಮ್ಸ್ ಡಿ,ಸಿಲ್ವ, ಅನಿಲ್ ಶೆಟ್ಟಿ, ತಾಪಂ ಅಧಿಕಾರಿ ಗಳಾದ ರಜನಿ, ಚಂದ್ರಕಲಾ, ಪಿಡಿಒ ಆಶಾಲತಾ, ರಾಜೇಶ್ ಶೆಣೈ, ತಿಲಕ್ ರಾಜ್, ಶಶಿಧರ ಆಚಾರ್ಯ, ಮಹೇಶ್ ಶಂಕರ್, ಗ್ರಾಪಂ ಆಡಳಿತಾಧಿಕಾರಿ ನಿಧೀಶ್ ಹೊಳ್ಳ, ಗ್ರಾಪಂ ನಿಕಟಪೂರ್ವ ಅಧ್ಯಕ್ಷೆ ದಿವ್ಯಾ ಆಚಾರ್ಯ, ಮಾಜಿ ಉಪಾಧ್ಯಕ್ಷ ಶಶಿಧರ ವಾಗ್ಲೆ, ಉಡುಪಿ ತಾಪಂ ಮಾಜಿ ಅಧ್ಯಕ್ಷ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ಗ್ರಾಪಂ ಮಾಜಿ ಸದಸ್ಯರು, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಅಧಿಕಾರಿ ಗಳು, ಆಶಾ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂಧಿವರ್ಗ, ಗ್ರಂಥಾಲಯ ಮತ್ತು ಎಸ್‌ಎಲ್‌ಆರ್‌ಎಂ ಸಿಬ್ಬಂದಿ, ಸಂಜೀನಿ ಒಕ್ಕೂಟದ ಪ್ರಮುಖರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 14 Apr 2026 7:20 pm

ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 14) ಲೀಟರ್‌ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ.

ಒನ್ ಇ೦ಡಿಯ 14 Apr 2026 7:12 pm

ಲೋಕಸಭಾ ಕ್ಷೇತ್ರಗಳನ್ನ 543 ರಿಂದ 850ಕ್ಕೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಸಿದ್ಧತೆ; ವಿಶೇಷ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ

ಕೇಂದ್ರ ಸರ್ಕಾರವು ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳಕ್ಕೆ ಮುಂದಾಗಿದೆ. ಮಹಿಳಾ ಮೀಸಲಾತಿ ಕಾಯ್ದೆ ಜಾರಿ ಹಾಗೂ ಮರು ವಿಂಗಡಣೆಗೂ ವೇದಿಕೆ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಅಧಿವೇಶನ ಕರೆದು ತಿದ್ದುಪಡಿ ಮಸೂದೆ ಮಂಡನೆಗೆ ತಯಾರಿ ನಡೆಸಿದೆ. ಇತ್ತ ವಿಪಕ್ಷಗಳ ಮಸೂದೆ ವಿರೋಧಿಸಲು ಸಭೆ ನಡೆಸಿದ್ದು, ಹಲವು ಆಕ್ಷೇಪಣೆಗಳನ್ನು ಮುಂದಿಟ್ಟಿವೆ.

ವಿಜಯ ಕರ್ನಾಟಕ 14 Apr 2026 7:08 pm

ಕೆಕೆಆರ್ ಗಾಗಿ ಪಾಕ್ ಸೂಪರ್ ಲೀಗ್ ತೊರೆದ ಜಿಂಬಾಬ್ವೆಯ ಬ್ಲೆಸ್ಸಿಂಗ್ ಮುಝರಬಾನಿಗೆ 2 ವರ್ಷ ನಿಷೇಧ; ಪಿಸಿಬಿ ಹೇಳಿದ್ದೇನು?

Blessing Muzarabani Vs PSL- ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ ಐಪಿಎಲ್ ಆಡುವ ಸಲುವಾಗಿ ಪಿಎಸ್ಎಲ್ (PSL) ತೊರೆದ ಹಿನ್ನೆಲೆಯಲ್ಲಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇದೀಗ ಅವರ ಮೇಲೆ 2 ವರ್ಷಗಳ ನಿಷೇಧ ಹೇರಿದೆ. ಕೆಕೆಆರ್ ತಂಡವು ಬಾಂಗ್ಲಾದ ಮಧ್ಯಮ ವೇಗಿ ಮುಸ್ತಫಿಝುರ್ ರೆಹ್ಮಾನ್ ಅವರ ಬದಲಿಗೆ ಮುಝರಬಾನಿ ಅವರನ್ನು ಸೇರಿಸಿಕೊಂಡಿತ್ತು. ಆದರೆ ಮುಝರಬಾನಿ ಅವರು ಇಸ್ಲಾಮಾಬಾದ್ ಯುನೈಟೆಡ್ ಜೊತೆಗಿನ ಒಪ್ಪಂದ ಮುರಿದ ಕಾರಣ ಪಿಸಿಬಿ ಈ ಕಠಿಣ ಕ್ರಮ ಕೈಗೊಂಡಿದೆ. ಲೀಗ್‌ನ ಸಮಗ್ರತೆ ಮತ್ತು ವೃತ್ತಿಪರತೆಯನ್ನು ಕಾಪಾಡಲು ಈ ನಿರ್ಧಾರ ಅಗತ್ಯ ಎಂದು ಪಿಸಿಬಿ ತಿಳಿಸಿದ್ದು, ಪರೋಕ್ಷವಾಗಿ ಐಪಿಎಲ್ ಪ್ರಾಬಲ್ಯದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ವಿಜಯ ಕರ್ನಾಟಕ 14 Apr 2026 7:04 pm

ಛತ್ತೀಸ್‌ಗಢ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸ್ಫೋಟ: 9 ಜನ ಸಾವು, 40ಕ್ಕೂ ಹೆಚ್ಚು ಜನ ಗಾಯ

Chhattisgarh Power Plant: ಛತ್ತೀಸ್‌ಗಢ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದ್ದು 9 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿರುವುದು ವರದಿಯಾಗಿದೆ. ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಸಿಂಗಿತರೈ ಎನ್ನುವ ಹಳ್ಳಿಯಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ಕಾರ್ಮಿಕರು

ಒನ್ ಇ೦ಡಿಯ 14 Apr 2026 6:56 pm

Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮಂಗಳವಾರ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಸುಮಾರು ಎರಡು ದಶಕಗಳ ಕಾಲ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಬೆನ್ನಲ್ಲೇ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡ ಹಾಗೂ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್

ಒನ್ ಇ೦ಡಿಯ 14 Apr 2026 6:51 pm

ಹುಲ್ಲುಕಡ್ಡಿಗೂ ಮಹತ್ವವಿದೆ! ಇಲ್ಲಿ ಯಾರೂ ಮೇಲಲ್ಲ, ಕೀಳಲ್ಲ : ಕಾಂಗ್ರೆಸ್ ಕಾರ್ಯಕರ್ತರಿಗೆ ಮಹತ್ವದ ಸಂದೇಶ ಕೊಟ್ಟ ಡಿಕೆಶಿ

ಮಹಾತ್ಮ ಗಾಂಧಿ ಅವರನ್ನು ಈ ದೇಶದ ಮಹಾತ್ಮ ಎಂದು ಕರೆಯುತ್ತೇವೆ. ಅನೇಕ ಕಡೆ ಇವರ ಪ್ರತಿಮೆಗಳನ್ನು ನೋಡಿದ್ದೇವೆ. ಜೊತೆಗೆ ದೇವರ ಪ್ರತಿಮೆಗಳನ್ನೂ ನೋಡಿದ್ದೇವೆ. ಅದೇ ರೀತಿ ಅಂಬೇಡ್ಕರ್‌ ಅವರನ್ನು ದೇವರ ರೂಪದಲ್ಲಿಟ್ಟು ಅನೇಕ ಕಡೆ ಮೂರ್ತಿಗಳನ್ನು ಸ್ಥಾಪಿಸಲಾಗಿದೆ. ಅಂಬೇಡ್ಕರ್‌ ಅವರು ಎಡ, ಬಲ, ಲಂಬಾಣಿ, ಕೊರಮ, ಕೊರಚ ಸಮುದಾಯದವರ ಆಸ್ತಿಯಲ್ಲ. ಇವರು ಇಡೀ ದೇಶದ ಸರ್ವ ಜನಾಂಗದ ಆಸ್ತಿ. ಎಲ್ಲಾ ವರ್ಗದ ಜನರಿಗೆ ದನಿ ಕೊಟ್ಟ ಧೀಮಂತರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಮತ್ತಷ್ಟು ವಿವರ ಇಲ್ಲಿದೆ.

ವಿಜಯ ಕರ್ನಾಟಕ 14 Apr 2026 6:51 pm

ರಾಜ್ಯದಲ್ಲಿ ವಾರಕ್ಕೆರಡು ದಿನ ಇರುತ್ತೇನೆ, ಈ ಕೆಟ್ಟ ಸರ್ಕಾರದ ವಿರುದ್ಧ ದನಿ ಎತ್ತುತ್ತೇನೆ: ಎಚ್‌ಡಿಕೆ ಎಚ್ಚರಿಕೆ

ಮೊದಲಿನಿಂದಲೂ ಕಾಂಗ್ರೆಸ್ ಪಕ್ಷ ಗೊಂದಲದ ಗೂಡಾಗಿದೆ ಎಂದ ಸಚಿವ ಕುಮಾರಸ್ವಾಮಿ ಅವರು; ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ನಂತರ ಇದು ದೊಡ್ಡ ಪ್ರಮಾಣದಲ್ಲಿ ಗೋಚರವಾಗುತ್ತಿದೆ ಎಂದು ಹೇಳಿದರು. ಆದರೆ ಅವರ ಪಕ್ಷದ ಬಗ್ಗೆ ನಾನು ಏನನ್ನು ಹೇಳಲು ಬರುವುದಿಲ್ಲ. ಇದ್ದರು ಆಂತರಿಕವಾಗಿ ಅವರಿಗೆ ಸಂಬಂಧಪಟ್ಟ ವಿಚಾರ. ಒಂದು ಮಾತನ್ನು ನಾನು ಹೇಳಬಲ್ಲೆ, ಇವರ ಆಂತರಿಕ ಕಚ್ಚಾಟದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಹಳಿತಪ್ಪಿದೆ ಎಂದರು. ಯಾವ ಸಮಾಜವನ್ನು ಅತಿಯಾಗಿ ಓಲೈಕೆ ಮಾಡುತ್ತಿದ್ದರೋ ಈಗ ಅದೇ ಸಮಾಜದ ನಾಯಕರ ಮೇಲೆ ಗದಾ ಪ್ರಹಾರ ಮಾಡುತ್ತಿದ್ದಾರೆ ಎಂದರು.

ವಿಜಯ ಕರ್ನಾಟಕ 14 Apr 2026 6:50 pm

ಆಶಾ ಭೋಸ್ಲೆ ಮೊಮ್ಮಗಳು ಜನೈಗೆ ಸಾಂತ್ವನ ಹೇಳಿದ ಕ್ರಿಕೆಟಿಗ ಮೊಹಮ್ಮದ್ ಸಿರಾಜ್; ವಿಡಿಯೋ ವೈರಲ್

Mohammed Siraj: ಭಾರತೀಯ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆಯನ್ನು ಸೋಮವಾರ ಮುಂಬೈನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಗಾಯಕಿಯ ಅಂತಿಮ ದರ್ಶನ ಪಡೆಯಲು ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಕೂಡ ಸೇರಿದ್ದರು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಅದರಲ್ಲಿ ಸಿರಾಜ್ ಅವರು ಆಶಾ ಭೋಸ್ಲೆ ಅವರ ಮೊಮ್ಮಗಳು

ಒನ್ ಇ೦ಡಿಯ 14 Apr 2026 6:45 pm

ಅಂಬೇಡ್ಕರ್ ಚುನಾವಣೆಯಲ್ಲಿ ಸೋಲಿಗೆ ವಿ.ಡಿ.ಸಾರ್ವರ್ಕರ್, ಕಮ್ಯುನಿಸ್ಟ್ ಪಕ್ಷ ಕಾರಣ: ಇತಿಹಾಸ ಕೆದಕಿದ ಸಿದ್ದರಾಮಯ್ಯ

ಸಂವಿಧಾನದದಿಂದ ಸಾಮಾಜಿಕ ನ್ಯಾಯದ ರಥವನ್ನು ಮುಂದಕ್ಕೆ ಕೊಂಡೊಯ್ಯಬೇಕೆ ಹೊರತು ಹಿಂದಕ್ಕೆ ಎಳೆಯಬಾರದು. ಶಿಕ್ಷಣ, ಸಂಘಟನೆ ಮತ್ತು ಹೋರಾಟಗಳಿಂದ ಸಂವಿಧಾನದ ನೀಡಿದ ನ್ಯಾಯಬದ್ಧ ಹಕ್ಕುಗಳನ್ನು ಪಡೆಯಲು ಸಾಧ್ಯ. ಶಿಕ್ಷಣದಿಂದ ಎಲ್ಲ ಸಂಕೋಲೆಗಳಿಂದ ಬಿಡುಗಡೆಗೊಳ್ಳಲು ಸಾಧ್ಯವಿದೆ. ಸಮಾಜದಲ್ಲಿನ ಜಡತ್ವವನ್ನು ಬಲಪಡಿಸುವ ಕೆಲಸದಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ತೊಡಗಿವೆ. ಕರ್ಮಸಿದ್ಧಾಂತವನ್ನು ವಿರೋಧಿಸಿದ ಅಂಬೇಡ್ಕರ್ ರವರು ಶಿಕ್ಷಣದಲ್ಲಿ ಮಾನವೀಯತೆ, ವೈಚಾರಿಕತೆ, ವೈಜ್ಞಾನಿಕತೆಯ ಮಹತ್ವವನ್ನು ತಿಳಿಸಿದ್ದರು. ಅಂಬೇಡ್ಕರ್ ರವರ ಸಿದ್ದಾಂತಗಳಂತೆ ನಡೆದು, ಅವರ ಕನಸಿನ ಭಾರತವನ್ನು ಕಟ್ಟಲು ಎಲ್ಲರೂ ಶ್ರಮಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ವಿಜಯ ಕರ್ನಾಟಕ 14 Apr 2026 6:40 pm

ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶಗಳು ಇತ್ತೀಚೆಗಷ್ಟೇ ಪ್ರಕಟವಾಗಿವೆ. ಈ ಬೆನ್ನಲ್ಲೇ, ಮೊದಲ ಪ್ರಯತ್ನದಲ್ಲಿ ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವ ಸದುದ್ದೇಶದಿಂದ ಕರ್ನಾಟಕದ ಸರ್ಕಾರಿ ಪದವಿಪೂರ್ವ ಕಾಲೇಜುಗಳು ತಕ್ಷಣವೇ ಕಾರ್ಯಪ್ರವೃತ್ತವಾಗಿ ಪರಿಹಾರ ತರಗತಿಗಳನ್ನು ಆರಂಭಿಸಿವೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ವಿಶೇಷವಾಗಿ ಮಂಗಳೂರು ಸೇರಿದಂತೆ

ಒನ್ ಇ೦ಡಿಯ 14 Apr 2026 6:25 pm

ಅಂಬೇಡ್ಕರ್ ದಮನಿತರ ಪಾಲಿನ ಬಿಡುಗಡೆಯ ಬೆಳಕು: ಡಾ.ಜಯಪ್ರಕಾಶ್ ಶೆಟ್ಟಿ

ಹಿರಿಯಡಕ, ಎ.14: ಈ ನೆಲದ ತಳ ಸಮುದಾಯಗಳ ಪರವಾದ ಎಲ್ಲ ಜೀವಪರ ದನಿಗಳನ್ನು ಕೂಡಿಕೊಂಡು ತನ್ನ ಓದು, ವಿವೇಕ, ಕರುಣೆಯ ಜೀವದ್ರವವನ್ನು ಬಳಸಿ ಈ ನೆಲದ ಸಾಮಾನ್ಯರ ಬದುಕಿನ ಕತ್ತಲೆಗೆ ಬೆಳಕಾಗುವ ಅಪೂರ್ವ ಸಂವಿಧಾನವನ್ನು ಕೊಟ್ಟ ಮಹಾಮಾನವತಾವಾದಿ ಅಂಬೇಡ್ಕರ್ ಅವರ ಜನ್ಮದಿನ ದಮನಿತರ ಪಾಲಿನ ಬಿಡುಗಡೆಯ ದಿನವೂ ಹೌದು ಎಂದು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಹೇಳಿದ್ದಾರೆ. ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಮಹಾಮಾನವತಾವಾದಿ ಭೀಮರಾವ್ ಅಂಬೇಡ್ಕರ್ ಅವರ 135ನೇ ಜನ್ಮದಿನದ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು. ಈ ಸಂದರ್ಭದಲ್ಲಿ ಸೊರಬ ಸರಕಾರಿ ಪದವಿಪೂರ್ವ ಕಾಲೇಜಿನ ಗಿರಿಜಮ್ಮ, ಹೊನ್ನಾಳಿ, ವಿಜಯ ಪದವಿಪೂರ್ವ ಕಾಲೇಜಿನ ವಸಂತ್, ಅರುಣ್ ಹಾಗೂ ಇತರರ ಜೊತೆ ಕಾಲೇಜಿನ ಬೋಧಕ ಮತ್ತು ಬೋಧಕೇತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಈರಬಸು ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಸಿತೀಕ್ಷಾ ವಂದಿಸಿದರು. ಆಂಗ್ಲ ವಿಭಾಗದ ಮುಖ್ಯಸ್ಥೆ ನಿಶ್ಚಿತ ಎಸ್ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 14 Apr 2026 6:18 pm

ಬಿಹಾರ ಹೊಸ ಸರ್ಕಾರಕ್ಕೆ ಮಾರ್ಗದರ್ಶನ; ಸಾಮ್ರಾಟ್‌ ಚೌಧರಿ ಹೆಗಲ ಮೇಲೆ ಕೈಯಿಟ್ಟ ನಿತೀಶ್‌ ಕುಮಾರ್‌! ಅದೃಶ್ಯ ಅಸ್ತಿತ್ವದ ಸಂದೇಶ

ರಾಜಕಾರಣದಲ್ಲಿ ಯಾವುದನ್ನೂ ಏಕಾಏಕಿ ಬಿಟ್ಟುಕೊಡುವ ಪ್ರಶ್ನೆಯೇ ಬರುವುದಿಲ್ಲ. ಯಾರೇ ಆಗಲಿ ಉನ್ನತ ಹುದ್ದೆ ತ್ಯಜಿಸಬೇಕಾದರೆ ಅದರ ಬದಲಾಗಿ ತಮಗೆ ಏನು ಲಾಭ ಸಿಗಲಿದೆ ಎಂಬುದನ್ನು ಯೋಚಿಸಿಯೇ ಇರುತ್ತಾರೆ. ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿತೀಶ್‌ ಕುಮಾರ್‌ ಕೂಡ ಇದಕ್ಕೆ ಹೊರತಲ್ಲ. ನೂತನ ಸಿಎಂ ಸಾಮ್ರಾಟ್‌ ಚೌಧರಿ ಅವರಿಗೆ ಅಭಿನಂದನೆ ಸಲ್ಲಿಸಿರುವ ನಿತೀಶ್‌ ಕುಮಾರ್‌, ಹೊಸ ಸರ್ಕಾರಕ್ಕೆ ತಮ್ಮ ಮಾರ್ಗದರ್ಶನ ಇರಲಿದೆ ಎಂದಿದ್ದಾರೆ. ಅಂದರೆ ಬಿಹಾರದಿಂದ ಅದೃಶ್ಯವಾಗುವುದಿಲ್ಲ ಎಂಬ ಸಂದೇಶವನ್ನು ಅವರು ಕಳುಹಿಸಿದ್ದಾರೆ.

ವಿಜಯ ಕರ್ನಾಟಕ 14 Apr 2026 5:55 pm

Chamarajanagar | ಟಿಪ್ಪರ್–ಕಾರು ನಡುವೆ ಭೀಕರ ಅಪಘಾತ; ಮೂವರು ಮೃತ್ಯು

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮಹಿಳೆಯರಿಬ್ಬರು ಸಾವನ್ನಪ್ಪಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಚಾಮರಾಜನಗರ ತಾಲ್ಲೂಕಿನ ಕ್ರಷರ್ ನಿಂದ ಹೊರಟ ಟಿಪ್ಪರ್‌ವೊಂದು ಕೇರಳ ಕಡೆಗೆ ತೆರಳುವಾಗ ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರದ ಬಳಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ಮುಖಾಮುಖಿ ಢುಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರುವ ಸ್ಥಳದಲ್ಲೇ ಸಾವನ್ನಪ್ಪಿದರು. ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮತ್ತು ಮಗುವೊಂದು ತೀವ್ರತರವಾಗಿ ಗಾಯಗೊಂಡಿದ್ದರು, ಇವರನ್ನು ಆಂಬುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರಗೆ ಚಿಕಿತ್ಸೆಗಾಗಿ ಸಾಗಿಸಲಾಗಿತ್ತು. ಕೇರಳ ಮೂಲದ ಆಯೇಷಾ ನೂರಿ (41) ಮತ್ತು ನುಹಾ (18) ಸ್ಥಳದಲ್ಲೇ ಮತಪಟ್ಟರು. ನಹಿಯಾನ್ ಎಂಬ 9 ವರ್ಷದ ಬಾಲಕ ಮತ್ತು ಚಾಲಕ ಮಹಮ್ಮದ್ ಅಝೀರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಮಹಮ್ಮದ್ ಅಝೀರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ನಹಿಯಾನ್ ಮಗುವಿಗೆ ಚಿಕಿತ್ಸೆ ಮುಂದುವರೆದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ರಸ್ತೆ ಅಪಘಾತ ನಡೆಸಿದ ಟಿಪ್ಪರ್ ಚಾಲಕರ ತಲೆ ಮರೆಸಿಕೊಂಡಿದ್ದು, ಟಿಪ್ಪರ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಟಿಪ್ಪರ್ ಹಾವಳಿಯನ್ನು ತಡೆಗಟ್ಟುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ವಾರ್ತಾ ಭಾರತಿ 14 Apr 2026 5:42 pm

ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು

ಮಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಹಲವು ಅಚ್ಚರಿಯ ಹಾಗೂ ಸ್ಫೂರ್ತಿದಾಯಕ ಸಾಧನೆಗಳು ಬೆಳಕಿಗೆ ಬಂದಿವೆ. ಈ ಪೈಕಿ ಮಂಗಳೂರು ಮೂಲದ 57 ವರ್ಷದ ಮೋಹನ್ ರಾಜ್ ಅವರ ಸಾಧನೆ ಎಲ್ಲರ ಗಮನ ಸೆಳೆದಿದೆ. ಈ ವರ್ಷ ಪರೀಕ್ಷೆ ಬರೆದ ಇತರ ಸಾಮಾನ್ಯ ವಿದ್ಯಾರ್ಥಿಗಳಂತೆ ಇವರು ಕೇವಲ ಒಬ್ಬ ಅಭ್ಯರ್ಥಿಯಾಗಿರಲಿಲ್ಲ. ಬದಲಾಗಿ, ಬರೋಬ್ಬರಿ

ಒನ್ ಇ೦ಡಿಯ 14 Apr 2026 5:40 pm

ಬಿಹಾರದ ಸಿಎಂ ಪಟ್ಟಕ್ಕೆ ಬಿಜೆಪಿಯ ಗಟ್ಟಿಗ ಸಾಮ್ರಾಟ್ ಚೌಧರಿ! ನಿತೀಶ್ ಕುಮಾರ್ ನೀಲಿಕಂಗಳ ಹುಡುಗ ಯಾರೆಂದು ಬಲ್ಲಿರಾ?

Samrat Choudhary New CM Of Bihar- ಬಿಹಾರದ ರಾಜಕೀಯದಲ್ಲಿ ದೊಡ್ಡ ಬದಲಾವಣೆ! ಹಿರಿಯ ನಾಯಕ ನಿತೀಶ್ ಕುಮಾರ್ ಅವರು ತೆರವುಗೊಳಿಸಲಿರುವ ಸಿಎಂ ಪಟ್ಟೆಕ್ಕೆ ಬಿಜೆಪಿಯ ಸಾಮ್ರಾಟ್ ಚೌಧರಿ ಇದೀಗ ಏರಲಿದ್ದಾರೆ. ಒಬಿಸಿ ಸಮುದಾಯದ ಪ್ರಬಲ ನಾಯಕರಾದ ಇವರು, ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವರು. ಬಿಜೆಪಿಯಲ್ಲಿದ್ದರೂ ನಿತೀಶ್ ಕುಮಾರ್ ಅವರ ನೀಲಿಕಂಗಳ ಹುಡುಗ ಎಂದೇ ಖ್ಯಾತಿ. ನಿತೀಶ್ ಜೊತೆಯಲ್ಲಿ ಡಿಸಿಎಂ ಆಗಿ ಕಾರ್ಯನಿರ್ವಹಿಸಿರುವ ಅನುಭವ ಇರುವ ಅವರು ಇದೀಗ ಸಿಎಂ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ವಿಜಯ ಕರ್ನಾಟಕ 14 Apr 2026 5:40 pm

ಕಾಂಗ್ರೆಸ್ ಕಿತ್ತಾಟದ ನಡುವೆ ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ ಫಲಿತಾಂಶದ ಭವಿಷ್ಯ ನುಡಿದ ವಿಜಯೇಂದ್ರ!

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ಭಿನ್ನಮತೀಯ ಚಟುವಟಿಕೆಗಳು ತೀವ್ರಗೊಂಡಿವೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆಲ್ಲುತ್ತಾರಾ ಇಲ್ಲವೋ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯ ಕರ್ನಾಟಕ 14 Apr 2026 5:32 pm

ಇಸ್ರೇಲ್ ಜೊತೆಗಿನ ರಕ್ಷಣಾ ಒಪ್ಪಂದದ ಸ್ವಯಂ ನವೀಕರಣ ಸ್ಥಗಿತ: ಇಟಲಿ ಪ್ರಧಾನಿ

ವೆರೋನಾ, ಎ.14: ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ ಜೊತೆಗಿನ ರಕ್ಷಣಾ ಒಪ್ಪಂದದ ಸ್ವಯಂಚಾಲಿತ ನವೀಕರಣವನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ. ವೆರೋನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ ಜೊತೆಗಿನ ರಕ್ಷಣಾ ಒಪ್ಪಂದದ ಸ್ವಯಂ ನವೀಕರಣವನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ” ಎಂದು ತಿಳಿಸಿದ್ದಾರೆ. ಈ ಕುರಿತು ಇಟಾಲಿಯನ್ ಸುದ್ದಿ ಸಂಸ್ಥೆ ‘ಅನ್ಸಾ’ ವರದಿ ಮಾಡಿದೆ. ಇಟಲಿ–ಇಸ್ರೇಲ್ ನಡುವಿನ ಈ ರಕ್ಷಣಾ ಸಹಕಾರ ಒಪ್ಪಂದವು ಮಿಲಿಟರಿ ಶಸ್ತ್ರಾಸ್ತ್ರಗಳ ವಿನಿಮಯ ಹಾಗೂ ರಕ್ಷಣಾ ತಂತ್ರಜ್ಞಾನ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಒಳಗೊಂಡಿದೆ.

ವಾರ್ತಾ ಭಾರತಿ 14 Apr 2026 5:31 pm

Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ

Government Employees: ಕರ್ನಾಟಕದಲ್ಲಿ ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಸಂಬಂಧ ಮಾರ್ಗಸೂಚಿಗಳನ್ನು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆಡಳಿತಾತ್ಮಕ ಸುಧಾರಣೆ ಮತ್ತು ನೌಕರರ ಹಿತರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮಗಳನ್ನು ರೂಪಿಸಲಾಗಿದೆ. ಪ್ರಸಕ್ತ ಸಾಲಿನ ವರ್ಗಾವಣೆ ಪ್ರಕ್ರಿಯೆಯುಏಪ್ರಿಲ್ 13, 2026ರಿಂದಲೇ ಅಧಿಕೃತವಾಗಿ ಆರಂಭವಾಗಿದೆ. ವರ್ಗಾವಣೆ ಬಯಸುವ ಅರ್ಹ ನೌಕರರು ಅರ್ಜಿ ಸಲ್ಲಿಕೆ ಮಾಡಲಿಮೇ 31,

ಒನ್ ಇ೦ಡಿಯ 14 Apr 2026 5:31 pm

ಸಿಎಂ ಸ್ಥಾನದಿಂದ ನಿತೀಶ್‌ ಕುಮಾರ್‌ನ ಕೆಳಗಿಳಿಸುತ್ತೇನೆ - ಕೇಸರಿ ಪೇಟ ಶಪಥ ಮಾಡಿದ್ದ ಸಾಮ್ರಾಟ್‌ ಚೌಧರಿ! ಆಗಿದ್ದೇ ಬೇರೆ

ಬಿಹಾರದ ನೂತನ ಸಿಎಂ ಸಾಮ್ರಾಟ್‌ ಚೌಧರಿಯವರು ನಿತೀಶ್‌ ಕುಮಾರ್‌ ಅವರನ್ನ ಕೆಳಗಿಳಿಸಿಯೇ ತೀರುತ್ತೇನೆ ಎಂದು ದೊಡ್ಡ ಶಪಥ ಮಾಡಿದ್ದರು. ರಾಜಕೀಯ ಬದಲಾವಣೆಗಳಲ್ಲಿ ಆ ಶಪಥವನ್ನು ಕೆಲ ವರ್ಷಗಳ ಹಿಂದೆ ಕೈಬಿಟ್ಟಿದ್ದರು. ಸದ್ಯ ಬಿಜೆಪಿ ನೂತನ ಸಿಎಂ ಆಗಿ ಚೌಧರಿ ಆಯ್ಕೆಯಾಗಿದ್ದು, ಸದ್ಯ ಅವರು ಶಪಥ ಬಿಟ್ಟಿದ್ದರು ನಿತೀಶ್‌ ಕುಮಾರ್‌ ಅವರ ಸ್ಥಾನಕ್ಕೇರಿದ್ದಾರೆ. ಈ ಹಿನ್ನೆಲೆ ಹಳೆಯ ಘಟನೆಗಳು ಮುನ್ನೆಲೆಗೆ ಬಂದಿವೆ.

ವಿಜಯ ಕರ್ನಾಟಕ 14 Apr 2026 5:13 pm

“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಬುದ್ದನ ಪ್ರೇರಣೆ, ಬಸವಣ್ಣನ ಸಮಾನತೆ ಎರಡನ್ನೂ ಒಳಗೊಂಡಿರುವ ವ್ಯಕ್ತಿಯಾಗಿದ್ದರು. ಅವರು ಭಾರತಕ್ಕೆ ಸಮಾನತೆ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟವರು. ಅಂಬೇಡ್ಕರ್ ಸಂವಿಧಾನದ ಸಮಿತಿಯಲ್ಲಿ ಇಲ್ಲದಿದ್ದರೆ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಸಂವಿಧಾನ ಆಗುತ್ತಿರಲಿಲ್ಲ ಎಲ್ಲರ ಒಪ್ಪಿಗೆಯೂ ಸಿಗುತ್ತಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಒನ್ ಇ೦ಡಿಯ 14 Apr 2026 4:53 pm

ನನ್ನ ಕಣ್ಣು ನೋಡಲು ಮೋದಿಗೆ ಧೈರ್ಯವಿಲ್ಲ : ಪ್ರಧಾನಿ ವಿರುದ್ದ ರಾಹುಲ್ ಗಾಂಧಿ ’ಐ ಕಾಂಟ್ಯಾಕ್ಟ್’ ವ್ಯಂಗ್ಯ

Rahul Gandhi In West Bengal : ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನು ಮಾರಿದ್ದಾರೆ, ಅವರು ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಿಲ್ಲ ಎಂದು ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. ಬಂಗಾಳದ ಮುರ್ಷಿದಾಬಾದ್’ನಲ್ಲಿ ರಾಹುಲ್ ಗಾಂಧಿ ಚುನಾವಣಾ ಸಭೆಯಲ್ಲಿ ಮಾತನಾಡುತ್ತಿದ್ದರು. ಇತ್ತೀಚೆಗೆ, ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಹುಲ್ ಮತ್ತು ಮೋದಿ ಮುಖಾಮುಖಿಯಾಗಿದ್ದರು.

ವಿಜಯ ಕರ್ನಾಟಕ 14 Apr 2026 4:50 pm

ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2 (ಪೂರಕ ಪರೀಕ್ಷೆ) ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ಪ್ರಕಟಿಸಿದೆ. ಪರೀಕ್ಷೆ-2ರ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಈ ಹಿಂದೆ ನಿಗದಿಯಾಗಿದ್ದ ಪರೀಕ್ಷಾ ದಿನಾಂಕಗಳನ್ನು ಮರುನಿಗದಿಗೊಳಿಸಲಾಗಿದೆ. ಹೊಸ ವೇಳಾಪಟ್ಟಿಯ ಪ್ರಕಾರ ಏಪ್ರಿಲ್ 30, 2026 ರಿಂದ ಪರೀಕ್ಷೆಗಳು ಶುರುವಾಗಲಿವೆ. ಯಾರಿಗೆ

ಒನ್ ಇ೦ಡಿಯ 14 Apr 2026 4:47 pm

Praful Hinge: ಒಂದೇ ರಾತ್ರಿಯಲ್ಲಿ ಚೇಂಜ್‌ ಆಯ್ತು ಪ್ರಫುಲ್‌ ಲಕ್‌, 3 ಲಕ್ಷ ದಾಟಿದ ಇನ್‌ಸ್ಟಾಗ್ರಾಂ ಫಾಲೋವರ್ಸ್

Praful Hinge: ಐಪಿಎಲ್‌ 2026ರಲ್ಲಿ ಹೊಸ ಸಂಚಲ ಸೃಷ್ಟಿಸಿದ ಪ್ರಫುಲ್ ಹಿಂಗೆ ಅವರು ಸೋಮವಾರ ಅಂದರೆ ಏಪ್ರಿಲ್ 13ರ ರಾತ್ರಿಯವರೆಗೆ ಯಾರೆಂಬುದು ಯಾರಿಗೂ ತಿಳಿದಿರಲಿಲ್ಲ. ಸನ್‌ ರೈಸರ್ಸ್ ಹೈದರಾಬಾದ್ ಪರ ಪಾದಾರ್ಪಣೆ ಪಂದ್ಯದಲ್ಲೇ ರಾಜಸ್ಥಾನ್ ರಾಯಲ್ಸ್‌ ತಂಡದ ಪ್ರಮುಖ ನಾಲ್ಕು ವಿಕೆಟ್‌ಗಳನ್ನ ಕಬಳಿಸಿದರು. ಇದರ ಬೆನ್ನಲ್ಲೇ ಅವರಿಗೆ ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಇದೀಗ

ಒನ್ ಇ೦ಡಿಯ 14 Apr 2026 4:43 pm

ಪಶ್ಚಿಮ ಏಶ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು: ವಿಶ್ವಸಂಸ್ಥೆ ವರದಿ

ಹೊಸದಿಲ್ಲಿ, ಎ.14: ಪಶ್ಚಿಮ ಏಶ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಆರ್ಥಿಕ ಅಭಿವೃದ್ಧಿ ಪ್ರಗತಿಗೆ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮದ (UNDP) ಹೊಸ ವರದಿಯು ಎಚ್ಚರಿಕೆ ನೀಡಿದೆ. ತನ್ನ ‘ಮಧ್ಯಪ್ರಾಚ್ಯದಲ್ಲಿ ಮಿಲಿಟರಿ ಬಿಕ್ಕಟ್ಟು ಉಲ್ಬಣ: ಏಶ್ಯಾ ಮತ್ತು ಪೆಸಿಫಿಕ್‌ ನಲ್ಲಿ ಮಾನವ ಅಭಿವೃದ್ಧಿ ಪರಿಣಾಮಗಳು’ ವರದಿಯಲ್ಲಿ UNDP, ಸಂಘರ್ಷವು ಏಶ್ಯಾ ಮತ್ತು ಪೆಸಿಫಿಕ್‌ ನಾದ್ಯಂತ ಮಾನವ ಅಭಿವೃದ್ಧಿಗೆ ಹೆಚ್ಚಿನ ಹಿನ್ನಡೆಯನ್ನುಂಟು ಮಾಡುತ್ತಿದೆ ಎಂದು ಹೇಳಿದೆ. ಇಂಧನ, ಸರಕು ಸಾಗಣೆ ಮತ್ತು ಕಚ್ಚಾವಸ್ತುಗಳ ವೆಚ್ಚಗಳಲ್ಲಿ ಹೆಚ್ಚಳದಿಂದಾಗಿ ಕುಟುಂಬಗಳ ಖರೀದಿ ಶಕ್ತಿ ಕಡಿಮೆಯಾಗುತ್ತಿದೆ. ಆಹಾರ ಅಭದ್ರತೆ ಹೆಚ್ಚುತ್ತಿದೆ. ಜನರ ಖರ್ಚುವೆಚ್ಚಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಜೀವನೋಪಾಯಗಳು ದುರ್ಬಲಗೊಳ್ಳುತ್ತಿವೆ ಎಂದು ವರದಿಯು ತಿಳಿಸಿದೆ. ಮಂಗಳವಾರ ಬಿಡುಗಡೆಯಾದ ವರದಿಯ ಪ್ರಕಾರ ಜಾಗತಿಕವಾಗಿ 88 ಲಕ್ಷ ಜನರು ಬಡತನದ ಕೂಪಕ್ಕೆ ತಳ್ಳಲ್ಪಡಬಹುದು. ಪಶ್ಚಿಮ ಏಶ್ಯಾ ಸಂಘರ್ಷದ ಉಲ್ಬಣದಿಂದಾಗಿ ಏಶ್ಯಾ-ಪೆಸಿಫಿಕ್ ಪ್ರದೇಶವು 299 ಬಿಲಿಯನ್ ಡಾಲರ್‌ ಗಳ ನಷ್ಟವನ್ನು ಎದುರಿಸಲಿದೆ ಎಂದೂ ಎಚ್ಚರಿಕೆ ನೀಡಿದೆ. ಸಂಘರ್ಷದ ಪರಿಣಾಮವಾಗಿ ವಿಶ್ವಾದ್ಯಂತ ಬಡತನಕ್ಕೆ ತಳ್ಳಲ್ಪಡುವವರ ಸಂಖ್ಯೆ ಸುಮಾರು 88 ಲಕ್ಷಕ್ಕೆ ಏರಲಿದ್ದು, ದಕ್ಷಿಣ ಏಶ್ಯಾದಲ್ಲಿ ಅತ್ಯಂತ ಹೆಚ್ಚು ಅಂದರೆ 80 ಲಕ್ಷಕ್ಕೂ ಅಧಿಕ ಜನರು ಬಡತನದ ಸುಳಿಯಲ್ಲಿ ಸಿಲುಕಲಿದ್ದಾರೆ. ವರದಿಯ ಅಂದಾಜಿನಂತೆ ಸಂಘರ್ಷದ ಬಳಿಕ ಭಾರತದಲ್ಲಿ ಬಡತನದ ಪ್ರಮಾಣವು ಈಗಿನ ಶೇ.23.9ರಿಂದ ಶೇ.24.2ಕ್ಕೆ ಏರಲಿದೆ. ಇದರಿಂದ ಬಡತನದಲ್ಲಿ ಬದುಕುವವರ ಸಂಖ್ಯೆ 35,15,69,000ರಿಂದ 35,40,33,698ಕ್ಕೆ ಹೆಚ್ಚಬಹುದು ಎಂದು ವರದಿಯು ತಿಳಿಸಿದೆ. ಭಾರತವು ತನ್ನ ತೈಲ ಅಗತ್ಯದ ಶೇ.90ಕ್ಕೂ ಹೆಚ್ಚು ಭಾಗವನ್ನು ಆಮದು ಮಾಡಿಕೊಳ್ಳುತ್ತದೆ. ಈ ಪೈಕಿ ಶೇ.40ರಷ್ಟು ಕಚ್ಚಾ ತೈಲ ಮತ್ತು ಶೇ.90ರಷ್ಟು ಎಲ್‌ಪಿಜಿ ಪಶ್ಚಿಮ ಏಶ್ಯಾದಿಂದಲೇ ಬರುತ್ತದೆ ಎಂದು ವರದಿ ಹೇಳಿದೆ. ಭಾರತದ ಶೇ.45ಕ್ಕೂ ಅಧಿಕ ರಸಗೊಬ್ಬರ ಆಮದುಗಳನ್ನು ಪಶ್ಚಿಮ ಏಶ್ಯಾ ದೇಶಗಳು ಪೂರೈಸುತ್ತವೆ. ಶೇ.85ರಷ್ಟು ದೇಶೀಯ ಯೂರಿಯಾ ಉತ್ಪಾದನೆ ಆಮದಿತ ದ್ರವೀಕೃತ ನೈಸರ್ಗಿಕ ಅನಿಲವನ್ನು ಅವಲಂಬಿಸಿದೆ. ಇವುಗಳ ಪೂರೈಕೆಯಲ್ಲಿ ವ್ಯತ್ಯಯ ಮತ್ತು ಬೆಲೆ ಏರಿಕೆ ದೇಶದ ಕೃಷಿ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರುತ್ತದೆ. ವಿಶೇಷವಾಗಿ ಜೂನ್‌ ನಲ್ಲಿ ಆರಂಭವಾಗುವ ಮುಂಗಾರು ಹಂಗಾಮಿನ ಮೇಲೆ ಇದು ಹೆಚ್ಚಿನ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ವರದಿಯು ತಿಳಿಸಿದೆ. ಈ ಸಂಘರ್ಷದಿಂದಾಗಿ ಭಾರತದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ 0.03ರಿಂದ 0.12 ವರ್ಷಗಳ ನಷ್ಟ ಉಂಟಾಗಬಹುದು ಎಂದು ವರದಿ ಹೇಳಿದೆ. ಅಕ್ಟೋಬರ್ 2024ರ ಅಂಕಿಅಂಶಗಳ ಪ್ರಕಾರ ಸುಮಾರು 93.7 ಲಕ್ಷ ಭಾರತೀಯರು ಕೊಲ್ಲಿ ದೇಶಗಳಲ್ಲಿ ವಾಸವಾಗಿದ್ದಾರೆ. ಭಾರತಕ್ಕೆ ವಿದೇಶಗಳಿಂದ ಬರುವ ಹಣದಲ್ಲಿ ಸುಮಾರು ಶೇ.38ರಿಂದ ಶೇ.40ರಷ್ಟು ಈ ದೇಶಗಳಿಂದಲೇ ಬರುತ್ತದೆ. ಅಲ್ಲಿನ ಆರ್ಥಿಕ ಕುಸಿತವು ಭಾರತದಲ್ಲಿನ ಅನೇಕ ಕುಟುಂಬಗಳ ಆದಾಯಕ್ಕೆ ಹೊಡೆತ ನೀಡಲಿದೆ ಎಂದು ವರದಿಯು ತಿಳಿಸಿದೆ. ಈ ಸಂಘರ್ಷವು ಎಂಎಸ್‌ಎಂಇ ಕ್ಷೇತ್ರವನ್ನೂ ಕಾಡಲಿದೆ. ಹೋಟೆಲ್ ಉದ್ಯಮ, ಆಹಾರ ಸಂಸ್ಕರಣೆ, ನಿರ್ಮಾಣ ಸಾಮಗ್ರಿಗಳು, ಉಕ್ಕು ಆಧಾರಿತ ತಯಾರಿಕೆ ಹಾಗೂ ಹರಳುಗಳು ಮತ್ತು ವಜ್ರಗಳ ಉದ್ಯಮಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಬಹುದು ಎಂದು ವರದಿ ಹೇಳಿದೆ. ಹೊರ್ಮುಝ್ ಜಲಸಂಧಿಯಲ್ಲಿ ಅಡಚಣೆಗಳ ಹಿನ್ನೆಲೆಯಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಿಂದ ವೈದ್ಯಕೀಯ ಸಾಧನಗಳ ವೆಚ್ಚ ಸುಮಾರು ಶೇ.50ರಷ್ಟು ಏರಿಕೆಯಾಗಬಹುದು. ಈಗಾಗಲೇ ಔಷಧಿಗಳ ಸಗಟು ಬೆಲೆಗಳಲ್ಲಿ ಶೇ.10ರಿಂದ ಶೇ.15ರಷ್ಟು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ವಾರ್ತಾ ಭಾರತಿ 14 Apr 2026 4:40 pm

Vachanananda Sri: ವಚನಾನಂದ ಶ್ರೀ ಪದಚ್ಯುತಿ: ವಿದ್ಯಾರ್ಥಿಗಳಿಂದ ಮಸಾಜ್ ಆರೋಪ, ನೀವು ತಿಳಿಯಬೇಕಾದ 5 ಅಂಶಗಳು

Vachanananda Sri: ವಚನಾನಂದ ಶ್ರೀಗಳನ್ನು ಮಠದಿಂದ ಪದಚ್ಯುತಿಗೊಳಿಸಲಾಗಿದೆ. ದಾವಣಗೆರೆಯ ಹರಿಹರದಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಯನ್ನು ಮಠದ ಮುಖಂಡರು ಪದಚ್ಯುತಿಗೊಳಿಸಿರುವುದಾಗಿ ಗುರುಪೀಠದ ಟ್ರಸ್ಟ್‌ ಮಾಹಿತಿ ನೀಡಿದೆ. ಈ ಪದಚ್ಯುತಿ ಹಾಗೂ ನಂತರದ ಬೆಳವಣಿಗೆಯು ಪರ - ವಿರೋಧ ಸೇರಿದಂತೆ ಗಂಭೀರ ಚರ್ಚೆಗಳಿಗೆ ಕಾರಣವಾಗಿದೆ. ಸೋಮವಾರ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ ಪೈಕಿ 13 ಜನರು

ಒನ್ ಇ೦ಡಿಯ 14 Apr 2026 4:37 pm

Delhi | ಕೊಲೆ ಆರೋಪಿಯ ಮನೆಯ ಭಾಗಶಃ ಧ್ವಂಸದ ಬಳಿಕ ಹೈಕೋರ್ಟ್‌ ನಿಂದ ತಡೆ

ಹೊಸದಿಲ್ಲಿ, ಎ.14: ದಿಲ್ಲಿಯ ಉತ್ತಮ್ ನಗರದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ನಡೆದ ತರುಣ್ ಭುಟೋಲಿಯಾ (26) ಕೊಲೆ ಪ್ರಕರಣದ ಪ್ರಮುಖ ಆರೋಪಿಯ ನಿರ್ಮಾಣ ಹಂತದ ಮನೆಯನ್ನು ಸೋಮವಾರ ದಿಲ್ಲಿ ಮಹಾನಗರ ಪಾಲಿಕೆ (MCD) ಭಾಗಶಃ ಧ್ವಂಸಗೊಳಿಸಿದ ಬಳಿಕ ದಿಲ್ಲಿ ಉಚ್ಚ ನ್ಯಾಯಾಲಯವು ಮುಂದಿನ ಕಾರ್ಯಾಚರಣೆಗೆ 10 ದಿನಗಳ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಎಂಸಿಡಿ ಅನಧಿಕೃತ ನಿರ್ಮಾಣದ ಕಾರಣ ನೀಡಿ ಭಾರೀ ಪೊಲೀಸ್ ಬಂದೋಬಸ್ತ್‌ ನೊಂದಿಗೆ ಬಹುಮಹಡಿ ಕಟ್ಟಡದ ಧ್ವಂಸ ಕಾರ್ಯಾಚರಣೆಗೆ ಇಳಿದಿತ್ತು. ನ್ಯಾ. ಅಮಿತ್ ಬನ್ಸಾಲ್ ಅವರು ನೆಲಸಮ ಆದೇಶದ ವಿರುದ್ಧ ದಿಲ್ಲಿ ಮಹಾನಗರ ಪಾಲಿಕೆ ಮೇಲ್ಮನವಿ ನ್ಯಾಯಮಂಡಳಿಯನ್ನು ಸಂಪರ್ಕಿಸಲು ಆರೋಪಿಯ ಕುಟುಂಬಕ್ಕೆ ಒಂದು ವಾರದ ಕಾಲಾವಕಾಶ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ.5ರಿಂದ ತಿಹಾರ ಜೈಲಿನಲ್ಲಿ ಇರುವ ಆರೋಪಿ ಇಸ್ಮಾಯಿಲ್ ಅವರ ಪುತ್ರಿ ಶೆಹನಾಝ್‌ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ತನ್ನ ಕುಟುಂಬಕ್ಕೆ ಯಾವುದೇ ಪೂರ್ವ ಸೂಚನೆ ನೀಡದೆ ನೆಲಸಮ ಕಾರ್ಯಾಚರಣೆ ನಡೆಸಲಾಗುತ್ತಿದೆ; ಈ ಕ್ರಮ ದಂಡನಾತ್ಮಕ ಸ್ವರೂಪದ್ದಾಗಿದೆ ಎಂದು ಅವರು ವಾದಿಸಿದರು. ಶೆಹನಾಝ್‌ ಅರ್ಜಿಗೆ ಉತ್ತರಿಸುವಂತೆ ಹೈಕೋರ್ಟ್ ಎಂಸಿಡಿಗೆ ನಿರ್ದೇಶನ ನೀಡಿದೆ. ಮಾ.4ರಂದು ಹೋಳಿ ಸಂಭ್ರಮಾಚರಣೆ ಸಂದರ್ಭ ಕಟ್ಟಡವೊಂದರ ಮೂರನೇ ಮಹಡಿಯಿಂದ 11 ವರ್ಷದ ಬಾಲಕಿಯೊಬ್ಬಳು ಎಸೆದ ನೀರು ತುಂಬಿದ ಬಲೂನು ಆಕಸ್ಮಿಕವಾಗಿ ಕೆಳಗೆ ನಿಂತಿದ್ದ ಮುಸ್ಲಿಂ ಮಹಿಳೆಯ ಮೇಲೆ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ವಿಭಿನ್ನ ಧಾರ್ಮಿಕ ಸಮುದಾಯಗಳಿಗೆ ಸೇರಿದ ಎರಡು ನೆರೆಕರೆ ಕುಟುಂಬಗಳ ನಡುವಿನ ವಾಗ್ವಾದ ಘರ್ಷಣೆಗೆ ತಿರುಗಿ ಭುಟೋಲಿಯಾನನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿತ್ತು. ಈ ಘಟನೆಯು ಪ್ರದೇಶದಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿದ್ದು, ಸ್ಥಳೀಯ ನಿವಾಸಿಗಳ ಪ್ರತಿಭಟನೆ ಸಂದರ್ಭ ಹಲವಾರು ವಾಹನಗಳಿಗೆ ಹಾನಿಯುಂಟಾಗಿತ್ತು; ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಮಾ.8ರಂದು ಅಧಿಕಾರಿಗಳು ಅಕ್ರಮ ನಿರ್ಮಾಣದ ಕಾರಣ ನೀಡಿ ಪ್ರಕರಣದ ಇನ್ನೋರ್ವ ಆರೋಪಿ ಉಮರ್‌ ದೀನ್ ಎಂಬಾತನ ಮನೆಯ ಭಾಗಗಳನ್ನು ನೆಲಸಮಗೊಳಿಸಿದ್ದರು. ಇದರ ಬೆನ್ನಲ್ಲೇ ದಿಲ್ಲಿ ಹೈಕೋರ್ಟ್ ಘರ್ಷಣೆಯಲ್ಲಿ ಭಾಗಿಯಾಗಿದ್ದವರ ಆಸ್ತಿಗಳ ನೆಲಸಮಕ್ಕೆ ಒಂದು ವಾರದ ತಡೆಯಾಜ್ಞೆ ನೀಡಿತ್ತು. ಪ್ರತ್ಯೇಕವಾಗಿ ಮಾ.14ರಂದು ಎಂಸಿಡಿ ಪ್ರದೇಶದಲ್ಲಿನ 70 ಅಂಗಡಿಗಳನ್ನು ನೆಲಸಮಗೊಳಿಸಿತ್ತು. ದಂಡನಾತ್ಮಕ ಕ್ರಮವಾಗಿ ಆರೋಪಿಗಳ ಆಸ್ತಿಗಳನ್ನು ನೆಲಸಮಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಆದಾಗ್ಯೂ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಈ ಕ್ರಮ ಮಾಮೂಲಾಗಿದೆ. ನ.24ರಂದು ಸರ್ವೋಚ್ಚ ನ್ಯಾಯಾಲಯವು ಅಪರಾಧ ಪ್ರಕರಣಗಳ ಆರೋಪಿಗಳ ಆಸ್ತಿಗಳನ್ನು ನೆಲಸಮಗೊಳಿಸುವುದು ಕಾನೂನುಬಾಹಿರ ಎಂದು ಎತ್ತಿ ಹಿಡಿದಿತ್ತು.

ವಾರ್ತಾ ಭಾರತಿ 14 Apr 2026 4:29 pm

ಕಾರ್ಮಿಕರ ಪ್ರತಿಭಟನೆಗೆ ಮಣಿದು ವೇತನ ಹೆಚ್ಚಿಸಿದ ಉತ್ತರಪ್ರದೇಶ ಸರ್ಕಾರ; ನೋಯ್ಡಾದಲ್ಲಿ ಪ್ರತಿಭಟನೆ, ಹಿಂಸಾಚಾರ, ಬಂಧನ ಇಲ್ಲಿಯವರೆಗೆ ಏನೇನಾಯ್ತು?

ನೋಯ್ಡಾದಲ್ಲಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸೋಮವಾರ (ಎ.13) ಕಾರ್ಖಾನೆ ನೌಕರರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿ ವ್ಯಾಪಕ ಹಾನಿಯುಂಟು ಮಾಡಿದ್ದಾರೆ. ಪ್ರದೇಶದ ವಿವಿಧ ಕೈಗಾರಿಕಾ ಘಟಕಗಳ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಕ್ಟರ್ 62 ಸೇರಿದಂತೆ ಅನೇಕ ಸ್ಥಳಗಳಲ್ಲಿ ಜಮಾಯಿಸಿದ್ದರು. ಕೆಲವು ಪ್ರತಿಭಟನಾಕಾರರು ಕಲ್ಲು ತೂರಾಟ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಘರ್ಷಣೆ ಉಂಟಾಯಿತು. ನೆರೆಯ ಗ್ರೇಟರ್ ನೋಯ್ಡಾದಿಂದಲೂ ಕಾರ್ಖಾನೆ ಕಾರ್ಮಿಕರ ಪ್ರತಿಭಟನೆಯ ಘಟನೆಗಳು ವರದಿಯಾಗಿವೆ. ಮುಖ್ಯವಾಗಿ ಗುತ್ತಿಗೆ ಕಾರ್ಮಿಕರ ನೇತೃತ್ವದ ಈ ಪ್ರತಿಭಟನೆಗಳಲ್ಲಿ ಸಾಮಾನ್ಯ ಬೇಡಿಕೆಯೆಂದರೆ, ನಿಯಮಿತ ಉದ್ಯೋಗಿಗಳಂತೆಯೇ ಉತ್ತಮ ಕೆಲಸದ ಪರಿಸ್ಥಿತಿಗಳು, ಹೆಚ್ಚಿನ ಕನಿಷ್ಠ ವೇತನ, ಉತ್ತಮ ಓವರ್‌ ಟೈಮ್ ಪಾವತಿಗಳು ಮತ್ತು ಬಾಕಿ ಪಾವತಿ. ►ನೋಯ್ಡಾ ಪ್ರತಿಭಟನೆಗಳನ್ನು ರಾತ್ರೋರಾತ್ರಿ ಹೇಗೆ ಯೋಜಿಸಲಾಯಿತು? ಸೋಮವಾರ ನೋಯ್ಡಾದಲ್ಲಿ ವೇತನಕ್ಕಾಗಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ವಾಟ್ಸಾಪ್ ಗುಂಪುಗಳಲ್ಲಿ ರಾತ್ರಿಯಿಡೀ ಯೋಜಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ತನಿಖೆಯ ಪ್ರಕಾರ, ರವಿವಾರ ತಡರಾತ್ರಿ ಪ್ರತಿಭಟನಾಕಾರರನ್ನು QR ಕೋಡ್‌ ಗಳ ಮೂಲಕ ವಾಟ್ಸಾಪ್ ಗುಂಪುಗಳಿಗೆ ಸೇರಿಸಲಾಯಿತು. ವಿವಿಧ ಕಾರ್ಮಿಕ ಸಂಘಗಳ ಮೂಲಕ ಸಂದೇಶಗಳನ್ನು ಕಳುಹಿಸಲಾಯಿತು. ಅಧಿಕಾರಿಗಳು ಸಂದೇಶ ವೇದಿಕೆಯಲ್ಲಿ ವಿವಿಧ ಹೆಸರುಗಳನ್ನು ಹೊಂದಿರುವ ಹಲವಾರು ಗುಂಪುಗಳನ್ನು ಕಂಡುಕೊಂಡಿದ್ದಾರೆ. ಅವುಗಳಲ್ಲಿ ಒಂದು ಗುಂಪಿನ ಹೆಸರು 'Workers' Movement' ಎಂದಿತ್ತು. ಪ್ರತಿಭಟನೆಗಳನ್ನು ತೀವ್ರಗೊಳಿಸಲು ಗುಂಪುಗಳಲ್ಲಿ ಪ್ರಚೋದನಕಾರಿ ವಿಷಯ ಮತ್ತು ಸಂದೇಶಗಳನ್ನು ಪ್ರಸಾರ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹರಿಯಾಣ ಸರ್ಕಾರದ ಕನಿಷ್ಠ ವೇತನವನ್ನು ಹೆಚ್ಚಿಸುವ ನಿರ್ಧಾರದಿಂದ ಪ್ರಚೋದಿಸಲ್ಪಟ್ಟ ಪ್ರತಿಭಟನೆಗಳು ತ್ವರಿತವಾಗಿ ಹಿಂಸಾಚಾರಕ್ಕೆ ತಿರುಗಿತು. 40,000ಕ್ಕೂ ಹೆಚ್ಚು ಕಾರ್ಖಾನೆ ಕಾರ್ಮಿಕರು ಭದ್ರತಾ ಅಧಿಕಾರಿಗಳ ವಿರುದ್ಧ ಮುಖಾಮುಖಿಯಾದರು. ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಂಡುಬಂದಿತು, ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಯಿತು. ಕನಿಷ್ಠ ವೇತನವನ್ನು ಹೆಚ್ಚಿಸುವ ಹರಿಯಾಣ ಸರ್ಕಾರದ ನಿರ್ಧಾರದಿಂದ ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದವು. ಪ್ರತಿಭಟನಾಕಾರರು ವಾಹನಗಳು ಮತ್ತು ಆಸ್ತಿಗಳಿಗೆ ಬೆಂಕಿ ಹಚ್ಚಿದರು. ನೋಯ್ಡಾದ ಹಂತ-2 ಮತ್ತು ಸೆಕ್ಟರ್ 63ರಲ್ಲಿ ಪೊಲೀಸರೊಂದಿಗೆ ನಡೆದ ವಾಗ್ವಾದದ ವೇಳೆ ಪ್ರತಿಭಟನಾಕಾರರು ಕಲ್ಲು ತೂರಾಟ ಮಾಡಿದ್ದೇ ಹಿಂಸಾಚಾರಕ್ಕೆ ಕಾರಣವಾಯಿತು. ಪ್ರತಿಭಟನೆಗಳು ಮಂಗಳವಾರವೂ ಮುಂದುವರೆದವು. ನೋಯ್ಡಾದ ಸೆಕ್ಟರ್ 80ರಲ್ಲಿ ಕಾರ್ಖಾನೆ ಕಾರ್ಮಿಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ►ಹೊರಗಿನವರು ಭಾಗಿಯಾಗಿದ್ದಾರೆ, ಪಾಕಿಸ್ತಾನದ ಸಂಪರ್ಕದ ಬಗ್ಗೆ ತನಿಖೆ ಕಾರ್ಮಿಕರು ಶಾಂತಿಯುತವಾಗಿ ಚದುರಿದ ನಂತರ ಕೆಲವು ಹೊರಗಿನವರು ನೋಯ್ಡಾದಲ್ಲಿ ಅಶಾಂತಿಯನ್ನು ಪ್ರಚೋದಿಸಲು ಪ್ರಯತ್ನಿಸಿದರು ಎಂದು ಪೊಲೀಸರು ಹೇಳಿದ್ದಾರೆ. ಕಾರ್ಮಿಕರು ಶಾಂತಿಯುತವಾಗಿ ಚದುರಿದ ನಂತರ, ಜಿಲ್ಲೆಯ ಹೊರಗಿನಿಂದ ಒಂದು ಗುಂಪು ನೆರೆಯ ಜಿಲ್ಲೆಗಳ ಗಡಿ ಪ್ರದೇಶಗಳಿಗೆ ಆಗಮಿಸಿತು. ಅವರು ಸಂಘರ್ಷ ಉಂಟುಮಾಡಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದರು. ನಾವು ಈ ಗುಂಪಿನ ಕೆಲವು ಸದಸ್ಯರನ್ನು ವಶಕ್ಕೆ ಪಡೆದಿದ್ದೇವೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಉಳಿದ ವ್ಯಕ್ತಿಗಳನ್ನು ಗುರುತಿಸುತ್ತಿದ್ದೇವೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತೆ ಲಕ್ಷ್ಮಿ ಸಿಂಗ್ ಹೇಳಿದ್ದಾರೆ. ನೋಯ್ಡಾ ಗಲಭೆಯಲ್ಲಿ ಪಾಕಿಸ್ತಾನದ ಸಂಪರ್ಕದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ಕಾರ್ಮಿಕ ಸಚಿವ ಅನಿಲ್ ರಾಜ್‌ ಭರ್ ಹೇಳಿದ್ದಾರೆ. ಈ ಪ್ರದೇಶದಲ್ಲಿ ಇತ್ತೀಚೆಗೆ ಭಯೋತ್ಪಾದನಾ ಸಂಬಂಧಿ ಬಂಧನಗಳು ನಡೆದಿವೆ. ಪ್ರತಿಭಟನೆಯನ್ನು ಯೋಜಿತ ಪಿತೂರಿ ಎಂದು ಕರೆದ ಸಚಿವರು, ರಾಜ್ಯದ ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಅಡ್ಡಿಪಡಿಸುವ ಉದ್ದೇಶದಿಂದ ಈ ಘಟನೆ ನಡೆದಿರುವಂತೆ ತೋರುತ್ತಿದೆ ಎಂದರು. ಇತ್ತೀಚಿನ ದಿನಗಳಲ್ಲಿ, ಮೀರತ್ ಮತ್ತು ನೋಯ್ಡಾದಿಂದ ನಾಲ್ವರು ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದ್ದು, ಅವರು ಪಾಕಿಸ್ತಾನದಲ್ಲಿ ನೆಲೆಸಿರುವ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ರಾಜ್ಯದಲ್ಲಿ ಅಸ್ಥಿರತೆಯನ್ನು ಸೃಷ್ಟಿಸುವ ಪಿತೂರಿಯ ಸಾಧ್ಯತೆ ಬಲಗೊಳ್ಳುತ್ತಿದೆ. ಏಜೆನ್ಸಿಗಳು ಇಡೀ ವಿಷಯವನ್ನು ಗಂಭೀರವಾಗಿ ತನಿಖೆ ಮಾಡುತ್ತಿವೆ ಎಂದಿದ್ದಾರೆ. ಮುಜಫರ್‌ನಗರದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾರ್ಯಕ್ರಮವನ್ನು ಅಡ್ಡಿಪಡಿಸುವ ಗುರಿಯೂ ಇದಾಗಿರಬಹುದು. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಅಸ್ಥಿರತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಸಚಿವರು ಆರೋಪಿಸಿದ್ದಾರೆ. ಜನರು ಯಾವುದೇ ದಾರಿತಪ್ಪಿಸುವ ಮಾಹಿತಿ ಅಥವಾ ಪ್ರಚೋದನೆಗೆ ಬಲಿಯಾಗಬಾರದು. ಶಾಂತಿ ಕಾಪಾಡಿಕೊಳ್ಳಬೇಕು. ಅವ್ಯವಸ್ಥೆ ಮತ್ತು ಆಕ್ರಮಣಕಾರಿ ಪ್ರತಿಭಟನೆಗಳು ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಸರ್ಕಾರ ಕಾರ್ಮಿಕರ ಪ್ರತಿಯೊಂದು ಕಳವಳವನ್ನು ಆಲಿಸಲು ಸಿದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ. ►ಉತ್ತರ ಪ್ರದೇಶದಲ್ಲಿ ಶೇ. 21 ರಷ್ಟು ವೇತನ ಹೆಚ್ಚಳ ಹಿಂಸಾತ್ಮಕ ಪ್ರತಿಭಟನೆಗಳ ಒಂದು ದಿನದ ನಂತರ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಕೌಶಲ್ಯರಹಿತ, ಅರೆ ಕೌಶಲ್ಯಪೂರ್ಣ ಮತ್ತು ಕೌಶಲ್ಯಪೂರ್ಣ ಕೆಲಸಗಾರರಿಗೆ ಕನಿಷ್ಠ ವೇತನದಲ್ಲಿ ಮಧ್ಯಂತರ ಹೆಚ್ಚಳವನ್ನು ಘೋಷಿಸಿತು. ಆದರೆ ಕನಿಷ್ಠ ವೇತನವನ್ನು ತಿಂಗಳಿಗೆ 20,000 ರೂ. ಗೆ ಹೆಚ್ಚಿಸಲಾಗಿದೆ ಎಂಬ ಹೇಳಿಕೆಯನ್ನು ಅದು ತಿರಸ್ಕರಿಸಿತು. ಮಧ್ಯಂತರ ಕ್ರಮದ ಭಾಗವಾಗಿ, ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ನಲ್ಲಿ ಸರ್ಕಾರ ನಿಗದಿಪಡಿಸಿದ ದರಗಳು ಕೌಶಲ್ಯರಹಿತ ಕೆಲಸಗಾರರಿಗೆ 13,690 ರೂ.ಗೆ, ಅರೆ ಕೌಶಲ್ಯಪೂರ್ಣ ಕೆಲಸಗಾರರಿಗೆ 15,059 ರೂ.ಗೆ ಮತ್ತು ಕೌಶಲ್ಯಪೂರ್ಣ ಕೆಲಸಗಾರರಿಗೆ 16,868 ರೂ.ಗೆ ಏರಿವೆ. ಇದು ಎ. 1ರಿಂದ ಜಾರಿಗೆ ಬರುತ್ತದೆ. ರಾಜ್ಯ ಸರ್ಕಾರದ ಪ್ರಕಾರ, ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಕನಿಷ್ಠ ವೇತನವನ್ನು ಪರಿಷ್ಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ►350ಕ್ಕೂ ಹೆಚ್ಚು ಜನರ ಬಂಧನ ನೋಯ್ಡಾ ಕಾರ್ಮಿಕರ ಪ್ರತಿಭಟನೆಯು ಕಲ್ಲು ತೂರಾಟ ಮತ್ತು ವಿಧ್ವಂಸಕ ಕೃತ್ಯಗಳೊಂದಿಗೆ ಹಿಂಸಾತ್ಮಕವಾಗಿ ಮಾರ್ಪಟ್ಟ ಒಂದು ದಿನದ ನಂತರ, ಪೊಲೀಸರು ನೋಯ್ಡಾ ವಲಯದಲ್ಲಿ 350ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಮಿಕರು ಮತ್ತು ಕೈಗಾರಿಕೆಗಳ ನಡುವಿನ ವಿವಾದವನ್ನು ಪರಿಹರಿಸಲು ಯುಪಿ ಕಾರ್ಮಿಕ ಇಲಾಖೆಯು ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಎಲ್ಲಾ ಪಾಲುದಾರರೊಂದಿಗೆ ಚರ್ಚೆಗಳನ್ನು ನಡೆಸಿತು. ಅದರ ನಂತರ ಉತ್ತರ ಪ್ರದೇಶ ಸರ್ಕಾರವು ಎಲ್ಲಾ ವರ್ಗಗಳ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಹೆಚ್ಚಿಸಿತು. ಕಳೆದ ಎರಡು ದಿನಗಳಿಂದ ಹಲವಾರು ವಾಟ್ಸಾಪ್ ಗುಂಪುಗಳಲ್ಲಿ QR ಕೋಡ್‌ ಗಳನ್ನು ಬಳಸಿಕೊಂಡು ಕಾರ್ಮಿಕರನ್ನು ಸೇರಿಸಲಾಗಿದೆ, ಇದು ಸಂಘಟಿತ ನೆಟ್‌ವರ್ಕ್‌ನ ಸಂಭಾವ್ಯ ಪಾತ್ರವನ್ನು ಸೂಚಿಸುತ್ತದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವ ಕೆಲವರನ್ನು ಗುರುತಿಸಿ ಬಂಧಿಸಲಾಗಿದೆ. ಸರಿಯಾದ ಸಮಯದಲ್ಲಿ ಹೆಚ್ಚಿನ ಬಂಧನಗಳನ್ನು ಖಚಿತಪಡಿಸಲಾಗುತ್ತದೆ. ಅವರ ಹಣಕಾಸಿನ ಮೂಲಗಳನ್ನು ಸಹ ತನಿಖೆ ಮಾಡಲಾಗುತ್ತದೆ. ಅವರು ರಾಜ್ಯ ಅಥವಾ ದೇಶದ ಹೊರಗಿನಿಂದ ಹಣಕಾಸಿನ ನೆರವು ಪಡೆದಿದ್ದಾರೆ ಎಂದು ಕಂಡುಬಂದರೆ, ಆ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತೆ ಲಕ್ಷ್ಮಿ ಸಿಂಗ್ ತಿಳಿಸಿದ್ದಾರೆ. ನವೆಂಬರ್ 2025ರಲ್ಲಿ ಕಾರ್ಮಿಕ ಸಂಹಿತೆಗಳ ಅನುಷ್ಠಾನದ ನಂತರ ಕಾರ್ಮಿಕರು ವೇತನ ಹೆಚ್ಚಳವನ್ನು ನಿರೀಕ್ಷಿಸುತ್ತಿದ್ದರು ಎಂದು ಹಲವಾರು ಕಾರ್ಮಿಕ ಸಂಘಗಳ ಮೂಲಗಳು ತಿಳಿಸಿವೆ. ಆದಾಗ್ಯೂ, ವೇತನ ಪರಿಷ್ಕರಣೆಗಳು ನಿರೀಕ್ಷೆಯಂತೆ ಆಗಲಿಲ್ಲ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಆರಂಭ, ಅಡುಗೆ ಅನಿಲದ ಕೊರತೆ ಮತ್ತು ಕೆಲವು ವಲಯಗಳಲ್ಲಿ ಉಂಟಾದ ಸಂಕಷ್ಟವು ಹತಾಶೆಯನ್ನು ಹೆಚ್ಚಿಸಿದೆ. ಕಳೆದ ವರ್ಷ ನವೆಂಬರ್ 21ರಂದು ಜಾರಿಗೆ ಬಂದ ವೇತನ, ಸಾಮಾಜಿಕ ಭದ್ರತೆ, ಕೈಗಾರಿಕಾ ಸಂಬಂಧಗಳು ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಕುರಿತ ಸಂಹಿತೆಗಳು ಉದ್ಯೋಗದಾತರಿಗೆ ನಿಯಮಗಳು ಮತ್ತು ಅನುಸರಣೆ ಮಾನದಂಡಗಳನ್ನು ಸರಾಗಗೊಳಿಸುವ ಉದ್ದೇಶ ಹೊಂದಿವೆ. ಜೊತೆಗೆ ವೇತನ ರಚನೆ ಮತ್ತು ಕಾರ್ಮಿಕರ ಸಾಮಾಜಿಕ ಭದ್ರತಾ ರಕ್ಷಣೆಯಲ್ಲಿ ಏಕರೂಪತೆಯನ್ನು ಖಚಿತಪಡಿಸುತ್ತವೆ. ಕಳೆದ ಒಂದು ತಿಂಗಳಿಂದ ಇಂಧನ ಬಿಕ್ಕಟ್ಟು ಉಲ್ಬಣಗೊಂಡಿರುವುದರಿಂದ, ಎಲ್‌ಪಿಜಿ ಕೊರತೆಯಿಂದಾಗಿ ಹೆಚ್ಚಿನ ಜೀವನ ವೆಚ್ಚದ ಹೊರೆಯನ್ನು ಎದುರಿಸುತ್ತಿರುವ ಕೆಲವು ವಲಸೆ ಕಾರ್ಮಿಕರು ತಾತ್ಕಾಲಿಕವಾಗಿ ತಮ್ಮ ಊರುಗಳಿಗೆ ಮರಳಲು ನಿರ್ಧರಿಸಿದ್ದಾರೆ. ►ಸಿಎಂ ಆದಿತ್ಯನಾಥ್ ಹೇಳಿದ್ದೇನು? ಸೋಮವಾರದ ಹಿಂಸಾಚಾರಕ್ಕೂ ಮುನ್ನ ಕಾರ್ಖಾನೆಗಳ ಹೊರಗೆ ಗುತ್ತಿಗೆ ಕಾರ್ಮಿಕರು ಎರಡು ದಿನಗಳ ಕಾಲ ಧರಣಿ ನಡೆಸಿದರು. ಇದರ ನಂತರ ಉತ್ತರ ಪ್ರದೇಶ ಸರ್ಕಾರವು ಶನಿವಾರ (ಎ. 11) ಕಡ್ಡಾಯ ಡಬಲ್ ಓವರ್‌ಟೈಮ್ ವೇತನ ಮತ್ತು ಸಕಾಲಿಕ ವೇತನ ಸೇರಿದಂತೆ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಕ್ರಮಗಳನ್ನು ಘೋಷಿಸಿತು. ಪೊಲೀಸರ ಪ್ರಕಾರ, ಸೋಮವಾರ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವೇನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹಿಂಸಾಚಾರದಲ್ಲಿ ಭಾಗಿಯಾಗಿರುವ ಪ್ರಚೋದನಕಾರಿ ಅಂಶಗಳು ಮತ್ತು ಹೊರಗಿನ ಕೈವಾಡಗಳು ಪತ್ತೆಯಾಗಿವೆ. ಅವರ ಗುರುತುಗಳು ದೃಢಪಟ್ಟ ನಂತರ ದೃಢವಾದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ ಹೇಳಿದ್ದಾರೆ. ಪ್ರತಿಭಟನಾ ನಿರತ ಕಾರ್ಮಿಕರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸುತ್ತಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಶಾಂತಿಯನ್ನು ಪ್ರಚೋದಿಸುವವರ ಬಗ್ಗೆ ಎಚ್ಚರದಿಂದಿರಿ ಎಂದು ಕೇಳಿಕೊಂಡರು. ರಾಜ್ಯವು ಅಭಿವೃದ್ಧಿ ಮತ್ತು ಶಾಂತಿಯತ್ತ ಸಾಗುತ್ತಿರುವಾಗ, ಕೆಲವರು ಅಶಾಂತಿಯನ್ನು ಹರಡಲು ಪಿತೂರಿ ನಡೆಸುತ್ತಿದ್ದಾರೆ. ಕೈಗಾರಿಕಾ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುವವರ ಬಗ್ಗೆ ಜಾಗರೂಕರಾಗಿರಿ ಮತ್ತು ಅವರನ್ನು ಯಶಸ್ವಿಯಾಗಲು ಬಿಡಬೇಡಿ. ಕಾರ್ಮಿಕರೊಂದಿಗೆ ನೇರ ಸಂವಾದವನ್ನು ಕಾಪಾಡಿಕೊಳ್ಳಲು ನಾನು ಎಲ್ಲಾ ಉದ್ಯಮಿಗಳಿಗೆ ಮನವಿ ಮಾಡುತ್ತೇನೆ. ನಮ್ಮ ಸರ್ಕಾರ ಕಾರ್ಮಿಕರೊಂದಿಗೆ ನಿಲ್ಲುತ್ತದೆ, ಇದು ನ್ಯಾಯಯುತ ವೇತನವನ್ನು ಖಚಿತಪಡಿಸುತ್ತದೆ ಎಂದು ಆದಿತ್ಯನಾಥ್ ಹೇಳಿದರು. ಆನಂತರ ಕಾರ್ಮಿಕರು ಮತ್ತು ಕೈಗಾರಿಕೆಗಳ ನಡುವಿನ ವಿವಾದವನ್ನು ಪರಿಹರಿಸಲು ರಾಜ್ಯ ಕಾರ್ಮಿಕ ಇಲಾಖೆಯಿಂದ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಯಿತು. “ನನ್ನ ವೇತನ ಕೇವಲ 320 ರೂ. ಹೆಚ್ಚಾಗಿದೆ. ಅವರು ನಮ್ಮನ್ನು ರಾತ್ರಿ ಹೊತ್ತು ಕೆಲಸ ಮಾಡಲು ಒತ್ತಾಯಿಸುತ್ತಾರೆ. ನಾವು ಅಸ್ವಸ್ಥರಾಗಿದ್ದರೆ, ಮುಂದಿನ ಬಾರಿ ಬರಬೇಡಿ ಎಂದು ಹೇಳುತ್ತಾರೆ. ನಾವು ರವಿವಾರ ಕೆಲಸ ಮಾಡಲು ನಿರಾಕರಿಸಿದರೆ, ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಸುತ್ತಾರೆ,” ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ ಗಾರ್ಮೆಂಟ್ ಕೆಲಸಗಾರ 18 ವರ್ಷದ ಸುರೇಂದ್ರ ಕಶ್ಯಪ್ ಹೇಳಿದ್ದಾರೆ. ಹೆಚ್ಚುವರಿ ಕೆಲಸದ ಸಮಯ ಮತ್ತು ಕಡಿಮೆ ವೇತನವು ಅವರನ್ನು ಅಸಹಾಯಕರನ್ನಾಗಿ ಮಾಡಿದೆ ಎಂದು ಕಾರ್ಮಿಕರು ಹೇಳುತ್ತಾರೆ. ನಾನು 13,500 ರೂ. ಸಂಪಾದಿಸುತ್ತೇನೆ. ನನ್ನ ಕೈಯಲ್ಲಿ ಏನೂ ಉಳಿಯುವುದಿಲ್ಲ. ಮನೆಗೆ ಹಣ ಕಳುಹಿಸಲು ಸಾಧ್ಯವಾಗುವುದಿಲ್ಲ. ಕೋಣೆಗೆ 5,000 ರೂ. ಬಾಡಿಗೆ, ಪಡಿತರಕ್ಕೆ 4,000 ರೂ. ಖರ್ಚು ಮಾಡುತ್ತೇನೆ. ಈ ಆದಾಯದಿಂದ ಎಲ್ಲವನ್ನೂ ಹೇಗೆ ನಿರ್ವಹಿಸಬೇಕು? ನನ್ನ ಮಕ್ಕಳನ್ನು ಶಾಲೆಗೆ ಹೇಗೆ ಕಳುಹಿಸಬೇಕು? ಎಂದು ಬಟ್ಟೆ ತಯಾರಿಸುವ ಕಂಪನಿಯಲ್ಲಿ ಕೆಲಸ ಮಾಡುವ 25 ವರ್ಷದ ರಾಹುಲ್ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಪ್ರತಿಭಟನೆಗಳಿಗೆ ಮುಂಚಿತವಾಗಿ, ಮುಖ್ಯಮಂತ್ರಿ ಆದಿತ್ಯನಾಥ್ ರವಿವಾರ ರಾತ್ರಿ ಲಕ್ನೋದಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯ ನಂತರ ಹೇಳಿಕೆ ನೀಡಿದ್ದರು. ಅದರಲ್ಲಿ ದೇಶದಲ್ಲಿ ನಕ್ಸಲಿಸಂ ಬಹುತೇಕ ಮುಗಿದಿದೆ, ಆದರೆ ಅದನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳು ದೊಡ್ಡ ಪಿತೂರಿಯ ಭಾಗವಾಗಿರಬಹುದು ಎಂದು ಹೇಳಿದ್ದಾರೆ. ಇತ್ತೀಚಿನ ಕೆಲವು ಪ್ರತಿಭಟನೆಗಳಲ್ಲಿ ದಾರಿತಪ್ಪಿಸುವ ಮತ್ತು ವಿಚ್ಛಿದ್ರಕಾರಕ ಅಂಶಗಳು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 14 Apr 2026 4:28 pm

ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು ನಗರದಲ್ಲಿ ಆಸ್ತಿ ದಾಖಲೆಗಳ ಸರಳೀಕರಣದ ಹೆಸರಿನಲ್ಲಿ ಘೋಷಿಸಲಾದ ಎ-ಖಾತಾ ಪರಿವರ್ತನೆ ಯೋಜನೆ, ಈಗ ಸಾರ್ವಜನಿಕರ ನಿರೀಕ್ಷೆಗಳಿಗೆ ವಿರುದ್ಧವಾಗಿ ಸಂಕೀರ್ಣತೆ ಮತ್ತು ವಿಳಂಬದ ಸಂಕೇತವಾಗಿ ಪರಿಣಮಿಸಿದೆ. ಲಕ್ಷಾಂತರ ಬಿ-ಖಾತಾ ಆಸ್ತಿಗಳಿಗೆ ಕಾನೂನು ಮಾನ್ಯತೆ ನೀಡಬೇಕಿದ್ದ ಈ ಮಹತ್ವಾಕಾಂಕ್ಷಿ ಯೋಜನೆ, ಕಾರ್ಯಗತಗೊಳಿಸುವ ಹಂತದಲ್ಲಿ ತೀವ್ರ ಕುಂಠಿತಗೊಂಡಿದ್ದು, ಸರ್ಕಾರದ ಆಡಳಿತ ಸಾಮರ್ಥ್ಯ ಮತ್ತು ಪಾರದರ್ಶಕತೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದೆ. ಸಾರ್ವಜನಿಕರು

ಒನ್ ಇ೦ಡಿಯ 14 Apr 2026 4:24 pm

IPL 2026- ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಜಟಾಪಟಿಗೆ RCB ಸಜ್ಜು; ಹೇಗಿದೆ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್?

RCB Vs LSG Match Preview- 10 ದಿನಗಳ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಐಪಿಎಲ್ ಪಂದ್ಯಕ್ಕೆ ಸಜ್ಜಾಗಿದೆ. ಏಪ್ರಿಲ್ 15ರ ಬುಧವಾರದಂದು ಇಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ತಂಡ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ವಿರುದ್ಧ ಗೆದ್ದು ಆತ್ಮವಿಶ್ವಾಸದಲ್ಲಿರುವ ರಜತ್ ಪಾಟೀದಾರ್ ನೇತೃತ್ವದ ಆರ್‌ಸಿಬಿಗೆ ಅಸ್ಥಿರ ಪ್ರದರ್ಶನ ನೀಡುತ್ತಿರುವ ಲಖನೌ ಸಾಟಿಯಾಗಬಲ್ಲುದೇ ಎಂಬುದೇ ಕುತೂಹಲದ ಸಂಗತಿಯಾಗಿದೆ. ಚಿನ್ನಸ್ವಾಮಿ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಪೂರಕವಾಗಿದೆ. ಟಾಸ್ ಗೆದ್ದವರು ಇಬ್ಬನಿಯ ಕಾರಣದಿಂದ ಮೊದಲು ಫೀಲ್ಡಿಂಗ್ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

ವಿಜಯ ಕರ್ನಾಟಕ 14 Apr 2026 4:23 pm

Kalaburagi | ಗುರುತಿನ ಚೀಟಿ ಪಡೆಯಲು ಬೀದಿ ಬದಿ ವ್ಯಾಪಾರಿಗಳಿಗೆ ಸೂಚನೆ

ಕಲಬುರಗಿ: ಡೇ-ನಲ್ಮ್ ಯೋಜನೆಯಡಿ ನಗರದಲ್ಲಿ ನೋಂದಾಯಿಸಿಕೊಂಡು ವ್ಯಾಪಾರ ನಡೆಸುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಈಗಾಗಲೇ ತಾತ್ಕಾಲಿಕ ಪ್ರಮಾಣಪತ್ರ ಹಾಗೂ ಗುರುತಿನ ಚೀಟಿಗಳನ್ನು ನೀಡಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಅವಿನಾಶ್ ಶಿಂಧೆ ತಿಳಿಸಿದ್ದಾರೆ. ಈ ವ್ಯಾಪಾರಿಗಳಿಗೆ ಡಿಜಿಟಲ್ ಜಿಯೋ ಟ್ಯಾಗ್ ಹೊಂದಿದ ಪ್ರಮಾಣಪತ್ರ ಮತ್ತು ಗುರುತಿನ ಚೀಟಿಗಳನ್ನು ಪಡೆಯುವಂತೆ ಹಲವು ಬಾರಿ ಫೋನ್ ಮೂಲಕ ಹಾಗೂ ಪತ್ರಿಕಾ ಪ್ರಕಟಣೆಗಳ ಮೂಲಕ ತಿಳಿಸಿದ್ದರೂ, ಇನ್ನೂ ಕೆಲವು ವ್ಯಾಪಾರಿಗಳು ಅವನ್ನು ಪಡೆದುಕೊಳ್ಳದೇ ಇರುವುದಾಗಿ ಅವರು ತಿಳಿಸಿದ್ದಾರೆ. ನಿಗದಿತ ಸ್ಥಳಗಳಲ್ಲಿ ನಿಯಮಾನುಸಾರವಾಗಿ ವ್ಯಾಪಾರ ನಡೆಸಲು ಹಾಗೂ ಅನಾವಶ್ಯಕ ತೊಂದರೆಗಳನ್ನು ತಪ್ಪಿಸಲು ಸಂಬಂಧಪಟ್ಟ ಬೀದಿ ವ್ಯಾಪಾರಿಗಳು ಮಹಾನಗರ ಪಾಲಿಕೆ ಕಚೇರಿಯ ಡೇ-ನಲ್ಮ್ ಶಾಖೆ (ಕೋಣೆ ಸಂಖ್ಯೆ: 47) ಸಂಪರ್ಕಿಸಿ, ನಿಗದಿತ ಶುಲ್ಕ ಪಾವತಿಸಿ ತಮ್ಮ ಗುರುತಿನ ಚೀಟಿ ಮತ್ತು ಪ್ರಮಾಣಪತ್ರವನ್ನು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ. ಡೇ-ನಲ್ಮ್ ಸಿಬ್ಬಂದಿ ಹಾಗೂ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಸಹಕಾರದಿಂದ ಈ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿಕೊಳ್ಳುವಂತೆ ಸೂಚಿಸಲಾಗಿದೆ.

ವಾರ್ತಾ ಭಾರತಿ 14 Apr 2026 4:22 pm

Kalaburagi | ಮನೆಗೆ ನುಗ್ಗಿ 4.67 ಲಕ್ಷ ರೂ. ಮೌಲ್ಯದ ಚಿನ್ನ, ನಗದು ಕಳ್ಳತನ

ಕಲಬುರಗಿ: ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಹಾಗೂ ನಗದು ಕಳ್ಳತನವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿರುವ ನಗರದ ಶಹಾಬಾದ್ ರಸ್ತೆಯ ಸಮೀಪದ ಹೋನ್ನಳ್ಳಿ ಲೇಔಟ್ ನಿವಾಸಿಯಾದ ಅಕ್ಷಯ ಪೂಜಾರಿ ಅವರ ಮನೆಯಲ್ಲಿ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಎ.9ರಂದು ರಾತ್ರಿ ತಮ್ಮ ತಾಯಿ ಕವಿತಾ ಹಾಗೂ ಬಂಧುಗಳೊಂದಿಗೆ ಸ್ವಗ್ರಾಮ ಮುಚ್ಚಖೇಡಕ್ಕೆ ಮದುವೆ ಸಂಬಂಧಿತ ಕಾರ್ಯಕ್ರಮಕ್ಕಾಗಿ ತೆರಳಿದ್ದೆವು. ಎ. 11ರಂದು ಸಂಜೆ ಮನೆಗೆ ಮರಳಿ ಬಂದಾಗ ಮನೆಯ ಬಾಗಿಲಿನ ಕೊಂಡಿ ಮುರಿದಿರುವುದು ಕಂಡುಬಂದಿದೆ. ಘಟನೆಯಿಂದ ಆತಂಕಗೊಂಡ ಅವರು ಒಳಗೆ ಹೋಗಿ ಪರಿಶೀಲಿಸಿದಾಗ ಅಲಮಾರಿಯ ಕೀಲಿ ಮುರಿದು, ಒಳಗಿದ್ದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಹಣ ಮಾಡಲಾಗಿದೆ ಎಂದು ಅಕ್ಷಯ್ ದೂರಿನಲ್ಲಿ ತಿಳಿಸಿದ್ದಾರೆ. ಕಳ್ಳರು ಮನೆಯಲ್ಲಿದ್ದ ಸುಮಾರು 20 ಗ್ರಾಂ ಚಿನ್ನದ ಉಂಗುರಗಳು, 10 ಗ್ರಾಂ ಚಿನ್ನದ ಕಿವಿಯೋಲೆಗಳು, 5 ಗ್ರಾಂ ತಾಳಿ ಹಾಗೂ ಗುಂಡುಗಳು, 50 ಗ್ರಾಂ ಬೆಳ್ಳಿ ಖಡಗಾ, 20 ಗ್ರಾಂ ಬೆಳ್ಳಿ ಬ್ರಾಸ್ಲೆಟ್ ಮತ್ತು 1,60,000 ರೂ. ನಗದು ಸೇರಿ ಒಟ್ಟು 4,67,000 ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 14 Apr 2026 4:19 pm

ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ: ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪಾಟ್ನಾದಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಬಿಜೆಪಿ ಶಾಸಕರು ಬಹುಮತದಿಂದ ಚೌಧರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದರು. ಈ ನಿರ್ಧಾರದಿಂದ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಚೌಧರಿ ಅವರು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕು ಮಂಡಿಸುವ ನಿರೀಕ್ಷೆಯಿದೆ. ಹೊಸ ಸರ್ಕಾರದ ರಚನೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಮುಂದಿನ ದಿನಗಳಲ್ಲಿ ವೇಗ ಪಡೆಯುವ ಸಾಧ್ಯತೆ ಇದೆ.

ವಾರ್ತಾ ಭಾರತಿ 14 Apr 2026 4:17 pm

Kalaburagi | ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ ಬಿತ್ತಿದ ಡಾ.ಅಂಬೇಡ್ಕರ್ : ಸುರೇಶಕುಮಾರ ನಂದಗಾಂವ್‌

ಕಲಬುರಗಿ : ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಸಂವಿಧಾನ ರಚನೆಗೆ ಸೀಮಿತವಾಗಿರದೆ, ಸಮಾಜದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಬಿತ್ತಿದ ಮಹಾನ್‌ನಾಯಕರು ಎಂದು ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಸುರೇಶಕುಮಾರ ನಂದಗಾಂವ್‌ ಹೇಳಿದರು. ಮಹಾವಿದ್ಯಾಲಯದಲ್ಲಿ ಮಂಗಳವಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆಯಲ್ಲಿ ಮಾತನಾಡಿದರು. ಅಂಬೇಡ್ಕರ್ ಅವರು ಶಿಕ್ಷಣವನ್ನು ಶಕ್ತಿಯ ಮೂಲವೆಂದು ಪರಿಗಣಿಸಿ, ಶಿಕ್ಷಣ ಪಡೆದುಕೊಳ್ಳಿ, ಸಂಘಟಿತರಾಗಿ ಹೋರಾಡಿ ಎಂಬ ಸಂದೇಶವನ್ನು ನೀಡಿದರು. ಅಂಬೇಡ್ಕರ್ ಅವರ ಕನಸಿನ ಭಾರತ ಎಂದರೆ ಸಮಾನತೆ ಮತ್ತು ನ್ಯಾಯ ಹೊಂದಿರುವ ದೇಶವಾಗಿತ್ತು. ಪ್ರತಿಯೊಬ್ಬರು ಅವರ ತತ್ವಗಳನ್ನು ಅನುಸರಿಸಿ, ಸಮಾಜದಲ್ಲಿ ಉತ್ತಮ ನಾಗರಿಕರಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 14 Apr 2026 4:16 pm

ಅಂಬೇಡ್ಕರ್ ಅವರು ಸಮಾನತೆ, ನ್ಯಾಯದ ಮೌಲ್ಯಗಳನ್ನು ಸಂವಿಧಾನದಲ್ಲಿ ಅಚ್ಚಳಿಯದಂತೆ ಮೂಡಿಸಿದರು : ಸಚಿವ ಈಶ್ವರ್ ಖಂಡ್ರೆ

ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಮೆರವಣಿಗೆಗೆ ಚಾಲನೆ

ವಾರ್ತಾ ಭಾರತಿ 14 Apr 2026 4:12 pm

ಗದಗದಲ್ಲಿ ಬಿರುಬಿಸಿಲಿನ ಅಟ್ಟಹಾಸ- 41.5 ಡಿಗ್ರಿ ಸೆಲ್ಸಿಯಸ್‌ ದಾಖಲಾದ ಗರಿಷ್ಠ ತಾಪಮಾನ; ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧ್ಯತೆ

ಗದಗ ಜಿಲ್ಲೆಯಲ್ಲಿ ಇತ್ತೀಚಿನ ವರ್ಷದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಈ ವರ್ಷದ ಬೇಸಿಗೆಯಲ್ಲಿ ಏಪ್ರಿಪ್‌ ತಿಂಗಳಿನಲ್ಲಿ ಕಡುಬಿಸಿಲಿನ ಅಟ್ಟಹಾಸ ಜೋರಾಗಿದೆ. ಈವರ್ಷ 41.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ 42 ರಿಂದ 43.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಸರಕಾರಿ ಕಚೇರಿಗಳ ಸಮಯವನ್ನು ಬದಲಾವಣೆ ಎಂಬ ಒತ್ತಾಯವೂ ಕೇಳಿ ಬರುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ..

ವಿಜಯ ಕರ್ನಾಟಕ 14 Apr 2026 4:12 pm

ನನ್ನದೇನೂ ತಕರಾರಿಲ್ಲ; ಸಿದ್ದರಾಮಯ್ಯ ಹೇಳಿಕೆಯಿಂದ ದೆಹಲಿಗೆ ಹೋದವರು ಹ್ಯಾಪಿ, ಸಚಿವರಾಗಿಯೇ ಮರಳುವ ಭರವಸೆ ಯಾರಿಗಿದೆ?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೆ ಸಚಿವ ಸಂಪುಟ ಪುನರ್‌ ರಚನೆ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷದ 38ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ದೆಹಲಿಗೆ ದೌಡಾಯಿಸಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್‌ ವರಿಷ್ಠರನ್ನು ಭೇಟಿ ಮಾಡಲು ಸಜ್ಜಾಗಿರುವ ಈ ಶಾಸಕರು, ಸಂಪುಟ ಪುನರಚನೆಗೆ ಪಟ್ಟು ಹಿಡಿದಿದ್ದಾರೆ. ಆದರೆ ದೆಹಲಿಗೆ ಹೋದವರಿಗೆಲ್ಲಾ ಸಚಿವ ಸ್ಥಾನ ಸಿಗಲಿದೆ ಎಂಬುದು ತಮಾಷೆಯ ಮಾತೇ ಸರಿ. ಆದಾಗ್ಯೂ, ಸಚಿವ ಸಂಪುಟ ಪುನರಚನೆಗೆ ತಮ್ಮ ಅಭ್ಯಂತರವಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮ

ವಿಜಯ ಕರ್ನಾಟಕ 14 Apr 2026 4:05 pm

ಹೊಸಪೇಟೆ ಅಂಚೆ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವಿಜಯನಗರ/ಹೊಸಪೇಟೆ : ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಅಖಿಲ ಭಾರತ ಅಂಚೆ ನೌಕರರ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಸಾರ್ಥಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ಮಲ್ಲನಾಯಕ್ ವಹಿಸಿಕೊಂಡಿದ್ದು, ರಾಜ್ಯ ಉಪಾಧ್ಯಕ್ಷ ಜಗದೀಶ್ ಚಲವಾದಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನಗಳನ್ನು ಸಲ್ಲಿಸಲಾಯಿತು. ನೆಹರು ಕಾಲೋನಿ ಅಂಚೆಪಾಲಕರಾದ ವಿ.ಎಸ್. ಕೃಷ್ಣ ಮಾತನಾಡಿ, ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತವಲ್ಲದೆ, ಸಂವಿಧಾನದ ಮೂಲಕ ಪ್ರತಿಯೊಬ್ಬ ಭಾರತೀಯನಿಗೂ ಸಮಾನ ಹಕ್ಕುಗಳನ್ನು ನೀಡಿದ ಮಹಾನ್ ನಾಯಕ ಎಂದು ಹೇಳಿದರು. ಮೀಸಲಾತಿಯ ಸೌಲಭ್ಯ ಪಡೆಯುತ್ತಿರುವ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಗೌರವಿಸಬೇಕು ಎಂದು ಅಭಿಪ್ರಾಯಪಟ್ಟರು. ರಾಜ್ಯ ಉಪಾಧ್ಯಕ್ಷ ಜಗದೀಶ್ ಚಲವಾದಿ ಮಾತನಾಡಿ, ಅಂಬೇಡ್ಕರ್ ಅವರ ಜ್ಞಾನ ಮತ್ತು ಚಿಂತನೆಗಳು ಭಾರತದಲ್ಲಷ್ಟೇ ಅಲ್ಲದೆ ವಿಶ್ವದಾದ್ಯಂತ ಗೌರವ ಪಡೆಯುತ್ತಿವೆ. ಅವರ ಜನ್ಮದಿನವನ್ನು ‘ಜ್ಞಾನ ದಿನ’ವಾಗಿ ಆಚರಿಸುವುದು ಅವರ ಮಹತ್ವವನ್ನು ತೋರಿಸುತ್ತದೆ ಎಂದರು. ಮನೋರಂಜನ ಕೂಟದ ಕಾರ್ಯದರ್ಶಿ ಬಾವಿಕಟ್ಟಿ ಸಿದ್ದಪ್ಪ ಮಾತನಾಡಿ, ಅಂಬೇಡ್ಕರ್ ಅವರ ವಿಚಾರಧಾರೆಗಳು ಯುವಜನತೆಗೆ ದಾರಿದೀಪವಾಗಿದ್ದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಗುರಿ ಸಾಧಿಸಬೇಕು ಎಂದು ಕರೆ ನೀಡಿದರು. ಬಡಿಗಿ ಎರ್ರಿಸ್ವಾಮಿ ವಂದನಾರ್ಪಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅಂಚೆ ಕಚೇರಿ ಸಿಬ್ಬಂದಿ, ಪಂಪಪತಿ, ವಡ್ಡಿನ ಚಂದ್ರಶೇಖರ, ಪುಂಡಲೀಕ ಭಜಂತ್ರಿ, ಬಸವ್ವ ಬ್ಯಾಗರ್, ಭವಾನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂತ್ಯದಲ್ಲಿ ಸಿಬ್ಬಂದಿಗಳು ಪರಸ್ಪರ ಸಿಹಿ ಹಂಚಿಕೊಂಡು ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು.

ವಾರ್ತಾ ಭಾರತಿ 14 Apr 2026 4:03 pm

ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ

ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವು ಹಲವು ಆಸಕ್ತಿದಾಯಕ ಹಾಗೂ ಗಮನಾರ್ಹ ಶೈಕ್ಷಣಿಕ ಅಂಶಗಳನ್ನು ಹೊರಹಾಕಿದೆ. ಇಂಗ್ಲಿಷ್ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಲ್ಲಿ ಶೇಕಡಾ 90.63 ರಷ್ಟು ಮಂದಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಆದರೆ, ಈ ವರ್ಷ ಕನ್ನಡ ಮಾಧ್ಯಮದಲ್ಲಿ ಕೇವಲ 76.41% ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಆದಾಗ್ಯೂ, ಈ ಅಂತರದ ನಡುವೆಯೂ ಕನ್ನಡ ಮಾಧ್ಯಮದ

ಒನ್ ಇ೦ಡಿಯ 14 Apr 2026 4:03 pm

ಕೊಟ್ಟೂರು ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟನೆ

ಕೊಟ್ಟೂರು (ವಿಜಯನಗರ): ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಪಿಪಿಪಿ ಯೋಜನೆಯಡಿ ನಿರ್ಮಾಣಗೊಂಡ ಡಯಾಲಿಸಿಸ್ ಕೇಂದ್ರವನ್ನು ಶಾಸಕರಾದ ನೇಮರಾಜ್ ನಾಯ್ಕ ಭಾನುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಧುಮೇಹ ಹಾಗೂ ಮೂತ್ರಪಿಂಡ ಸಮಸ್ಯೆ ಹೊಂದಿರುವ ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆ ಅತ್ಯವಶ್ಯಕವಾಗಿದ್ದು, ಖಾಸಗಿ ಆಸ್ಪತ್ರೆಗಳು ಅಥವಾ ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯುವುದು ಬಡ ರೋಗಿಗಳಿಗೆ ದುಬಾರಿಯಾಗುತ್ತದೆ. ತಾಲೂಕು ಆಸ್ಪತ್ರೆಯಲ್ಲೇ ಈ ಸೌಲಭ್ಯ ಲಭ್ಯವಾಗುವುದರಿಂದ ರೋಗಿಗಳ ಸಮಯ ಮತ್ತು ಹಣ ಎರಡೂ ಉಳಿಯಲಿದೆ ಎಂದು ಹೇಳಿದರು. ಯಾವುದೇ ಕಾರಣಕ್ಕೂ ಚಿಕಿತ್ಸೆ ಸ್ಥಗಿತಗೊಳಿಸಬಾರದು ಎಂದು ಸಂಬಂಧಿತ ಏಜೆನ್ಸಿಗೆ ಸೂಚಿಸಿದರು. ಈ ಡಯಾಲಿಸಿಸ್ ಕೇಂದ್ರ ಆರಂಭದಲ್ಲಿ ವಿಳಂಬವಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಬಳಿಕ ಅಧಿಕಾರಿಗಳು ಮತ್ತು ಏಜೆನ್ಸಿ ಶೀಘ್ರದಲ್ಲೇ ಸೇವೆ ಆರಂಭಿಸುವ ಭರವಸೆ ನೀಡಿದ್ದರು. ಡಯಾಲಿಸಿಸ್ ಏಜೆನ್ಸಿ ಪ್ರತಿನಿಧಿ ರವಿಕುಮಾರ್ ಮಾತನಾಡಿ, ಸೋಮವಾರದಿಂದಲೇ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ದೊರೆಯಲಿದೆ. ಚಿಕಿತ್ಸೆ ನೀಡುವ ಮೊದಲು ರಕ್ತ ಪರೀಕ್ಷೆ ನಡೆಸಬೇಕಾಗಿದ್ದು, ಒಂದು ವಾರ ಮುಂಚಿತವಾಗಿ ರಕ್ತ ಮಾದರಿ ಪಡೆದು ಚಿಕಿತ್ಸೆ ಆರಂಭಿಸಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಬದ್ಯನಾಯ್ಕ, ಸುಧಾಕರ ಪಾಟೀಲ್ ಸೇರಿದಂತೆ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಸಕರಾದ ನೇಮರಾಜ್ ನಾಯ್ಕ ಅವರನ್ನು ಸನ್ಮಾನಿಸಲಾಯಿತು.

ವಾರ್ತಾ ಭಾರತಿ 14 Apr 2026 4:00 pm

ಸಂಡೂರಿನಲ್ಲಿ ಅಂಬೇಡ್ಕರ್, ಜಗಜೀವನ್ ರಾಮ್ ಜಯಂತಿ ವಿಜೃಂಭಣೆಯಿಂದ ಆಚರಣೆ

ಸಂಡೂರು/ಬಳ್ಳಾರಿ ಜಿಲ್ಲೆ: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಂಡೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಹಾಗೂ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕು ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮತ್ತು ಜಗಜೀವನ್ ರಾಮ್ ಅವರ ಭಾವಚಿತ್ರಗಳನ್ನು ಬೆಳ್ಳಿರಥದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ತಾಲೂಕು ಕಚೇರಿಯಿಂದ ವಿಜಯ ಸರ್ಕಲ್ ಮಾರ್ಗವಾಗಿ ಒಂದನೇ ವಾರ್ಡ್ ಮೂಲಕ ಭವ್ಯ ಮೆರವಣಿಗೆ ನಡೆಯಿತು. ನಂತರ ವೇದಿಕೆ ಕಾರ್ಯಕ್ರಮ ನಡೆಯಿತು. ನಾಡಗೀತೆ ಹಾಗೂ ರೈತಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಎಂ. ಅನಿಲ್ ಕುಮಾರ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಮಡಗಿನಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ, ಸಮಾಜ ಕಲ್ಯಾಣ ಅಧಿಕಾರಿ ವೆಂಕಟೇಶ್, ಸಿಡಿಪಿಓ ನಾಗರಾಜ್, ಪಶುಸಂಗೋಪನೆ ಇಲಾಖೆ ಡಾ. ವಲಿಬಾಷಾ, ವೃತ್ತ ನಿರೀಕ್ಷಕ ಮಹೇಶ್ ಗೌಡ, ಪುರಸಭೆ ಮುಖ್ಯಾಧಿಕಾರಿ ವಿನಯ್ ಕುಮಾರ್ ಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮಿನರಲ್ಸ್ ಕಾರ್ಪೊರೇಷನ್ ಉಪಾಧ್ಯಕ್ಷ ಲಕ್ಷ್ಮಣ ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ಅವರ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು. ಅಂಧಶ್ರದ್ಧೆಗಳನ್ನು ತೊರೆದು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಕರೆ ನೀಡಿದರು. ಅಕ್ಷಯ್ ಲಾಡ್ ಮಾತನಾಡಿ, ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ ಮಹಾನ್ ವ್ಯಕ್ತಿ ಎಂದು ಕೊಂಡಾಡಿದರು. ಬುದ್ಧ–ಬಸವ–ಅಂಬೇಡ್ಕರ್ ತತ್ವಗಳನ್ನು ಮುಂದಿನ ಪೀಳಿಗೆಗೆ ಸಾರುವುದು ನಮ್ಮ ಕರ್ತವ್ಯ ಎಂದರು. ಇದೇ ವೇಳೆ ಅಕ್ಷಯ್ ಲಾಡ್ ಹಾಗೂ ಲಕ್ಷ್ಮಣ ಅವರನ್ನು ಸನ್ಮಾನಿಸಲಾಯಿತು. ದತ್ತಿ ಉಪನ್ಯಾಸ ನೀಡಿದ ಡಾ. ಹೊನ್ನಪ್ಪನವರ್ ಅವರು, ಅಂಬೇಡ್ಕರ್ ಅವರ ಹೋರಾಟಗಳಿಂದಲೇ ಸಮಾನತೆ ಸಾಧ್ಯವಾಗಿದೆ ಎಂದು ಹೇಳಿ, ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಹತ್ವವನ್ನು ವಿವರಿಸಿದರು. ಸಂವಿಧಾನದ ಅರಿವು ಮೂಡಿಸುವ ಅಗತ್ಯವಿದೆ ಎಂದರು. ಶ್ರೀ ಪ್ರಣವಾನಂದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ ಕಾರ್ಯಕ್ರಮಕ್ಕೆ ಮೆರಗು ನೀಡಿತು. ಬಿ.ಆರ್.ಸಿ ಶರಣಬಸಪ್ಪ ಕರಿಶೆಟ್ಟಿ, ತಾಲೂಕು ನೌಕರ ಸಂಘದ ಅಧ್ಯಕ್ಷ ಸಿದ್ದಣ್ಣ ಯಾಳವಾರ, ಸಹಾಯಕ ನಿರ್ದೇಶಕ ಶ್ರೀಧರ್ ಮೂರ್ತಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದರು. ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಸಮಾನತೆಯ ಸಂದೇಶಗಳನ್ನು ಸಾರಿದ ಈ ಕಾರ್ಯಕ್ರಮ ಸಂಡೂರಿನಲ್ಲಿ ಅರ್ಥಪೂರ್ಣವಾಗಿ ನೆರವೇರಿತು.

ವಾರ್ತಾ ಭಾರತಿ 14 Apr 2026 3:57 pm

Nashik TCS Case: ಹಿಂದೂ ಯುವತಿಯ ರಂಜಾನ್ ಉಪವಾಸದಿಂದ ಬಯಲಾಯ್ತು ಒತ್ತಾಯದ ಮತಾಂತರ ಜಾಲ: ಪೊಲೀಸ್ ರಹಸ್ಯ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ಮಹಾರಾಷ್ಟ್ರದ ನಾಸಿಕ್‌ನ ಟಿಸಿಎಸ್‌ ಕಂಪನಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ, ಕಾನ್ಸ್‌ಸ್ಟೇಬಲ್‌ಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿ, ಉದ್ಯೋಗಿಗಳಿಗೆ ಆಗುತ್ತಿದ್ದ ಲೈಂಗಿಕ ಕಿರುಕುಳ, ಮತಾಂತರದ ಜಾಲವನ್ನು ಪತ್ತೆಹಚ್ಚಿ, 8 ಮಂದಿಯ ಬಂಧನ ಹಾಗೂ 9 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಲು ಕಾರಣರಾಗಿದ್ದಾರೆ.

ವಿಜಯ ಕರ್ನಾಟಕ 14 Apr 2026 3:56 pm

ನೋಯ್ಡಾದಲ್ಲಿ ರೈತರ ರಣಕಹಳೆ: ಕೇಂದ್ರ ಸರ್ಕಾರದ 'ವಿಕಸಿತ್ ಭಾರತ್' ಮಾದರಿಯನ್ನು ಟೀಕಿಸಿದ ರಾಹುಲ್ ಗಾಂಧಿ

ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಮತ್ತು ಆ ಸಂದರ್ಭದಲ್ಲಿ ನಡೆದ ಲಾಠಿ ಪ್ರಹಾರದ ಕುರಿತು ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಘಟನೆಯನ್ನು ವಿಕಸಿತ ಭಾರತದ ಕಠೋರ ವಾಸ್ತವ ಎಂದು ಅವರು ಬಣ್ಣಿಸಿದ್ದಾರೆ.

ವಿಜಯ ಕರ್ನಾಟಕ 14 Apr 2026 3:53 pm

Sandur | ಹುಲಿಕುಂಟೆ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ : ನವಜೋಡಿಗಳ ಉಪಸ್ಥಿತಿ

ಸಂಡೂರು/ಬಳ್ಳಾರಿ ಜಿಲ್ಲೆ: ಜಿಲ್ಲೆಯ ಸಂಡೂರು ತಾಲೂಕಿನ 73 ಹುಲಿಕುಂಟೆ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಗ್ರಾಮದ ಪ್ರಮುಖರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ನವವಿವಾಹಿತ ಜೋಡಿಗಳ ಉಪಸ್ಥಿತಿ ವಿಶೇಷ ಆಕರ್ಷಣೆಯಾಗಿತ್ತು. ಹೊಸದಾಗಿ ವಿವಾಹವಾದ ಜೋಡಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಂಬೇಡ್ಕರ್ ಅವರ ಆದರ್ಶಗಳಿಗೆ ಗೌರವ ಸಲ್ಲಿಸಿದರು. ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ಈ ವೇಳೆ ಕರಿಯಪ್ಪ ಮರಿಸ್ವಾಮಿ, ದುರ್ಗೇಶ್, ಶಿಕ್ಷಕರಾದ ಆಂಜಿನಪ್ಪ ಸೇರಿದಂತೆ ಗ್ರಾಮ ಮುಖಂಡರು ಭಾಗವಹಿಸಿ, ಅಂಬೇಡ್ಕರ್ ಅವರ ಚಿಂತನೆಗಳು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಗ್ರಾಮದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಅಂಬೇಡ್ಕರ್ ಅವರ ಸಮಾನತೆ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯದ ಸಂದೇಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ವಕ್ತಾರರು ಕರೆ ನೀಡಿದರು.

ವಾರ್ತಾ ಭಾರತಿ 14 Apr 2026 3:53 pm

ಕೂಡ್ಲಿಗಿಯಲ್ಲಿ ಗುಡುಗು-ಸಿಡಿಲು ಮಳೆ : ಬೆಳೆ ಹಾನಿ, ಎತ್ತು ಸಾವು

ವಿಜಯನಗರ , ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಮಂಗಳವಾರ ಗುಡುಗು, ಸಿಡಿಲು ಹಾಗೂ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗಿದೆ. ಮಳೆಯೊಂದಿಗೆ ಬಂದ ಭಾರಿ ಗಾಳಿಯಿಂದ ಅಮರದೇವರಗುಡ್ಡ, ಗೊಲ್ಕರಹಟ್ಟಿ, ಬಣವಿಕಲ್ಲು, ಅಗ್ರಹಾರ ಸೇರಿದಂತೆ ಹಲವು ಗ್ರಾಮಗಳಲ್ಲಿ ರೈತರು ಬೆಳೆದ ತೋಟಗಾರಿಕೆ ಬೆಳೆಗಳಿಗೆ ಭಾರಿ ಹಾನಿಯಾಗಿದೆ. ಪಪ್ಪಾಯಿ, ಅಡಿಕೆ ಸೇರಿದಂತೆ ಹಲವು ಬೆಳೆಗಳು ನೆಲಕ್ಕುರುಳಿ ರೈತರಿಗೆ ನಷ್ಟ ಉಂಟಾಗಿದೆ. ಇನ್ನೊಂದೆಡೆ, ಗುಣಸಾಗರ ಹೋಬಳಿಯ ಮೊರಬನಹಳ್ಳಿ ಗ್ರಾಮದ ಈರಣ್ಣ ಅವರಿಗೆ ಸೇರಿದ ಎತ್ತು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದೆ. ಈ ಘಟನೆ ರೈತ ಕುಟುಂಬದಲ್ಲಿ ದುಃಖ ಮೂಡಿಸಿದೆ. ಸ್ಥಳೀಯ ರೈತರು ಸರ್ಕಾರದಿಂದ ತಕ್ಷಣ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲೂ ಮಳೆ, ಗಾಳಿ ಹಾಗೂ ಸಿಡಿಲಿನ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ವಾರ್ತಾ ಭಾರತಿ 14 Apr 2026 3:49 pm

ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ

ಮೈಸೂರು: ಮುಂಬೈ ಮತ್ತು ಬೆಂಗಳೂರು ಮಧ್ಯೆ ವಂದೇ ಭಾರತ್ ಸ್ಲೀಪರ್ ರೈಲು ಕಾರ್ಯಾಚರಣೆ ನಡೆಸಲು ಭಾರತೀಯ ರೈಲ್ವೆ ಇಲಾಖೆ ಅನುಮತಿ ನೀಡಿದ್ದೇ ತಡ ಈ ಬಗ್ಗೆ ಕರ್ನಾಟಕದಲ್ಲಿ ವ್ಯಾಪಕ ಚರ್ಚೆಗಳು ಆಗುತ್ತಿವೆ. ಇದೀಗ ಸಾಂಸ್ಕೃತಿಕ ಮತ್ತು ಅರಮನೆ ನಗರಿ ಮೈಸೂರಿನಿಂದ ಓಡಿಸುವಂತೆ ಮೈಸೂರು ರಾಜವಂಶಸ್ಥ ಮತ್ತು ಬಿಜೆಪಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಗ್ರಹಿಸಿದ್ದಾರೆ.

ಒನ್ ಇ೦ಡಿಯ 14 Apr 2026 3:48 pm

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಹೊಸದಿಲ್ಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು. ಇದರಿಂದ ರಾಜ್ಯದಲ್ಲಿ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಖ್ಯಮಂತ್ರಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಜೆಡಿ(ಯು) ನೇತೃತ್ವದ ಸರ್ಕಾರವನ್ನು ಮುನ್ನಡೆಸುತ್ತಿದ್ದ ಅವರು, ಸಂಪುಟ ಸಭೆಯ ನಂತರ ರಾಜೀನಾಮೆ ಸಲ್ಲಿಸಿದರು. ಕಳೆದ ವಾರ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ನಿತೀಶ್ ಕುಮಾರ್, ಈ ಮೂಲಕ ಸುಮಾರು ಎರಡು ದಶಕಗಳ ತಮ್ಮ ಆಡಳಿತಾವಧಿಗೆ ತೆರೆ ಎಳೆದಿದ್ದಾರೆ. 243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ 89 ಶಾಸಕರನ್ನು ಹೊಂದಿರುವ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿದೆ. ಇದೀಗ ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದು, ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಇದು ರಾಜ್ಯದಲ್ಲಿ ಬಿಜೆಪಿಗೆ ಮೊದಲ ಸಿಎಂ ಸ್ಥಾನವಾಗಲಿದೆ. ಹೊಸ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭವು ಎ. 15ರಂದು ಲೋಕಭವನದಲ್ಲಿ ನಡೆಯುವ ನಿರೀಕ್ಷೆಯಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆ ಇದೆ. ಸಂಪುಟ ಸಭೆಗೆ ಮುನ್ನ ಜೆಡಿ(ಯು) ಹಿರಿಯ ನಾಯಕರು ಸಂಜಯ್ ಝಾ, ರಾಜೀವ್ ರಂಜನ್ ಸಿಂಗ್ (ಲಾಲನ್ ಸಿಂಗ್) ಹಾಗೂ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ನಿತೀಶ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ನಿತೀಶ್ ಕುಮಾರ್ ಅವರು ಎ. 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ವಾರ್ತಾ ಭಾರತಿ 14 Apr 2026 3:48 pm

Sandur | ನಿಡುಗುರ್ತಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸಂಡೂರು/ಬಳ್ಳಾರಿ: ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಹಲಗೆ ಬಾರಿಸುವ ಮೂಲಕ ಹಬ್ಬದ ವಾತಾವರಣ ನಿರ್ಮಿಸಲಾಯಿತು. ಊರಿನ ಮುಂಭಾಗದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪ್ರತಿಷ್ಠಾಪಿಸಿ, ಗ್ರಾಮಸ್ಥರೆಲ್ಲರೂ ಒಂದಾಗಿ ಸೇರಿ ಪೂಜೆ ಸಲ್ಲಿಸಿದರು. ಬಳಿಕ ಸಿಹಿ ಹಂಚುವ ಮೂಲಕ ಜಯಂತಿಯನ್ನು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಮೀಸೆ ದುರ್ಗಪ್ಪ, ನೀಲ್ ಕುಮಾರ್, ರಮೇಶ್, ಕೆಂಚಪ್ಪ ಸೇರಿದಂತೆ ಇತರರು ಸಕ್ರಿಯವಾಗಿ ಭಾಗವಹಿಸಿದರು. ಕಾರ್ಯಕ್ರಮದ ವೇಳೆ ಅಂಬೇಡ್ಕರ್ ಅವರ ಸಮಾನತೆ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯದ ಸಂದೇಶಗಳನ್ನು ಸ್ಮರಿಸಿ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಕರೆ ನೀಡಲಾಯಿತು.

ವಾರ್ತಾ ಭಾರತಿ 14 Apr 2026 3:44 pm