ಇಂದು ಕೈ ಹೈಕಮಾಂಡ್ ನಾಯಕ ಭೇಟಿಯಾಗಲಿರುವ ಡಿ ಕೆ ಶಿವಕುಮಾರ್; ಕನಕಪುರ ಬಂಡೆಗೆ ಸಿಗುತ್ತಾ ಕುರ್ಚಿ ಅಭಯ?
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರ ರಾಜ್ಯದಲ್ಲಿ ಭರ್ಜರಿಯಾಗಿ ಚರ್ಚೆಯಾಗುತ್ತಿರುವ ನಡುವೆ, ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ದೆಹಲಿಯತ್ತ ಮುಖ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಬಾರೀ ಸಂಕ್ರಾಂತಿಗೆ ಕೈ ಪಾಳಯದಲ್ಲಿ ಕ್ರಾಂತಿಯಾಗಲಿದೆ ಎಂಬೆಲ್ಲ ಚರ್ಚೆಗಳು ಹುಟ್ಟಿಕೊಂಡಿತ್ತು. ಅಲ್ಲದೇ ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಎಲ್ಲಾ ಗೊಂದಲಕ್ಕೆ ಬ್ರೇಕ್ ಹಾಕಲು
ʻಪುರುಷರು ಗರ್ಭಧರಿಸಲು ಸಾಧ್ಯವೇʼ; ಅಮೆರಿಕ ಸೆನೆಟರ್ ಪ್ರಶ್ನೆಗೆ ಭಾರತೀಯ ಮೂಲದ ವೈದ್ಯೆ ನೀಡಿದ ಉತ್ತರ ಈಗ ವೈರಲ್!
ಅಮೆರಿಕದ ಸೆನೆಟ್ ಸಮಿತಿಯ ವಿಚಾರಣೆಯ ವೇಳೆ ಗರ್ಭಪಾತದ ಮಾತ್ರೆಗಳ ಸುರಕ್ಷತೆಯ ಕುರಿತು ಚರ್ಚೆ ನಡೆಯುತ್ತಿದ್ದಾಗ, ಭಾರತೀಯ ಮೂಲದ ವೈದ್ಯೆ ಡಾ. ನಿಶಾ ವರ್ಮಾ ಮತ್ತು ರಿಪಬ್ಲಿಕನ್ ಸೆನೆಟರ್ ಜೋಶ್ ಹಾಲೆ ನಡುವೆ ಪುರುಷರು ಗರ್ಭಧರಿಸಲು ಸಾಧ್ಯವೇ? ಎಂಬ ವಿಚಾರದ ಬಗ್ಗೆ ನಡೆದ ಚರ್ಚೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ
ಕಾರನ್ನು ಮಾರ್ಪಡಿಸಿ ಬೆಂಕಿ ಚಿಮ್ಮಿಸುತ್ತಾ ರಸ್ತೆಯಲ್ಲಿ ಪುಂಡಾಟ; ಇಂಜಿನಿಯರಿಂಗ್ ವಿದ್ಯಾರ್ಥಿಗೆ ಬಿತ್ತು ಭಾರೀ ದಂಡ
ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ, ಮಾರ್ಪಡಿಸಿದ ಕಾರಿನಲ್ಲಿ ಬೆಂಕಿ ಚಿಮ್ಮಿಸುತ್ತಾ ಪುಂಡಾಟ ಮೆರೆದ ಕೇರಳದ ಇಂಜಿನಿಯರಿಂಗ್ ವಿದ್ಯಾರ್ಥಿಗೆ 1.1 ಲಕ್ಷ ರೂ. ದಂಡ ವಿಧಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿಗಾಗಿ ಕಾರನ್ನು ಅಕ್ರಮ ಮಾರ್ಪಾಡು ಮಾಡಿದ್ದ. ಸಂಚಾರ ಪೊಲೀಸರ ಗಮನಕ್ಕೆ ಬಂದು ಭಾರೀ ದಂಡಕ್ಕೆ ಗುರಿಯಾಯಿತು. ಕಾನೂನುಬಾಹಿರ ಚಟುವಟಿಕೆಗಳ ಅಪಾಯವನ್ನು ಈ ಘಟನೆ ಎತ್ತಿ ತೋರಿಸುತ್ತದೆ.
ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಜ.16ರ 10 ಗಂಟೆಗೆ ಮತ ಎಣಿಕೆ
ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (Brihanmumbai Municipal Corporation) ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಜನವರಿ 16ರ ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ಪಾಲಿಕೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯು ಈ ಬಾರಿ ಹಲವು ಕಾರಣಗಳಿಗೆ ಕುತೂಹಲ ಮೂಡಿಸಿದೆ. ದೇಶದ ಅತ್ಯಂತ ಶ್ರೀಮಂತ ಪಾಲಿಕೆ ಎನ್ನುವ ಖ್ಯಾತಿಯನ್ನು ಬೃಹನ್ಮುಂಬೈ
ಡೊನಾಲ್ಡ್ ಟ್ರಂಪ್ಗೆ ತಮ್ಮ ನೊಬೆಲ್ ಶಾಂತಿ ಪದಕವನ್ನು ಕೊಟ್ಟ ವೆನೆಜುವೆಲಾ ನಾಯಕಿ ಮಚಾಡೊ! ಹೇಳಿದ್ದೇನು?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರನ್ನು ಶ್ವೇತಭವನದಲ್ಲಿ ಗುರುವಾರ ಭೇಟಿಯಾದರು. ಈ ಸಂದರ್ಭದಲ್ಲಿ ಮಚಾಡೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಟ್ರಂಪ್ಗೆ ಕೊಟ್ಟಿದ್ದಾರೆ. ಈ ವೇಳೆ ಅವರು ಹೇಳಿದ್ದೇನು, ಇದರ ಉದ್ದೇಶವೇನು ಎಂಭ ಮಾಹಿತಿ ಇಲ್ಲಿದೆ.
ಬ್ಲೂ ಫ್ಲ್ಯಾಗ್ ಬೀಚ್: ನಿಮ್ಮ ಮನೆಯ ಒಳಹೊಕ್ಕಲು ನೀವೇ ಟೋಲ್ ಕಟ್ಟಿ: ರಾಜಾರಾಂ ತಲ್ಲೂರು ಬರಹ
ಕರಾವಳಿಯ ಅಭಿವೃದ್ಧಿ ಹೇಗೆ, ಎಷ್ಟು ಎಂದು ಕರಾವಳಿಯವರಲ್ಲಿ ಕೇಳದೇ, ಬೆಂಗಳೂರಿನಲ್ಲಿ ಕುಳಿತವರು ನಿರ್ಧಾರ ಮಾಡುತ್ತಿದ್ದಾರೆ. - ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬಹರ ಇಲ್ಲಿದೆ. ಮೂವತ್ತು ವರ್ಷ ಹಿಂದೆ ಮಂಗಳೂರಿನಿಂದ ಕಾರವಾರದ ತನಕ ಇಡಿಯ ಕರಾವಳಿಯಲ್ಲಿ ಸಮುದ್ರ ತೀರಕ್ಕೆ ಹೋಗುವುದಕ್ಕೆ, ಅಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಮಾಡುವುದಕ್ಕೆ, ಅಥವಾ ವಿಹರಿಸುವುದಕ್ಕೆ, ವಸತಿ ನಿರ್ಮಾಣಕ್ಕೆ ಯಾರಾದರೂ ಅಡ್ಡಿ ಮಾಡಿದ್ದಿದೆಯೆ?
ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆ ವಿಳಂಬವಾಗುತ್ತಿರುವುದರ ನಡುವೆ ತಮಿಳುನಾಡಿನ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಯು ಚುರುಕು ಪಡೆದುಕೊಂಡಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಇನ್ನೂ ಜಾಗ ಅಂತಿಮವಾಗಿಲ್ಲ. ಈ ರೀತಿ ಇರುವಾಗಲೇ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಗ್ರೀನ್ಫೀಲ್ಡ್ ಯೋಜನೆ ಜಾರಿಗೆ ಮಹತ್ವದ ಹೆಜ್ಜೆಯನ್ನು ಇರಿಸಿದೆ. ವಿಮಾನ ನಿಲ್ದಾಣಗಳ
ಕೆಐಎನಲ್ಲಿ ಪ್ರಯಾಣಿಕರ ಸಂಚಾರ ಶೇ.8ರಷ್ಟು ಬೆಳವಣಿಗೆ; ಒಂದೇ ವರ್ಷದಲ್ಲಿ 43.82 ಲಕ್ಷ ಜನ ಓಡಾಟ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2025ರ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರದಲ್ಲಿ ದಾಖಲೆ ನಿರ್ಮಿಸಿದ್ದು, ಶೇ.8ರಷ್ಟು ಬೆಳವಣಿಗೆ ಸಾಧಿಸಿದೆ. ದೇಶೀಯ ವಿಮಾನಗಳ ಕಾರ್ಯಾಚರಣೆಯಲ್ಲಿ ಮೂರನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಏರಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರ ದಟ್ಟಣೆಯೂ ಶೇ.28.7ರಷ್ಟು ಹೆಚ್ಚಿದೆ. ಸರಕು ಸಾಗಣೆಯಲ್ಲೂ ಶೇ.5ರಷ್ಟು ಏರಿಕೆಯಾಗಿದ್ದು, ಒಟ್ಟಾರೆ ವಿಮಾನ ನಿಲ್ದಾಣವು ಮಹತ್ವದ ಬೆಳವಣಿಗೆಯನ್ನು ದಾಖಲಿಸಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಚಳಿ ಮತ್ತೆ ಹೆಚ್ಚಳ, ಹೇಗಿದೆ ಜ.16ರ ಹವಾಮಾನ
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಚಳಿ ಪ್ರಮಾಣವು ತುಸು ಇಳಿಕೆ ಕಂಡಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿತ್ತು. ರಾಜ್ಯದಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಜನವರಿ 16ರಂದು ಸಹ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಜನವರಿ 16
ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಮುಹೂರ್ತ ಫಿಕ್ಸ್; ಎಂದಿನಿಂದ ಆರಂಭ, ಎಷ್ಟು ದಿನ ಇರಲಿದೆ?
ವಿಜಯನಗರದ ಗತವೈಭವ ಸಾರುವ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಈಗಾಗಲೇ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿವೆ. ಫೆಬ್ರವರಿ 13, 14, 15 ರಂದು ನಡೆಯುವ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು. ಈ ಬಾರಿ ಐದು ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಡ್ರೋನ್ ಶೋ, ಗಾಳಿಪಟ ಉತ್ಸವ ಸೇರಿ ಹಲವು ವಿಶೇಷತೆಗಳು ಇರಲಿವೆ. ಸಾರ್ವಜನಿಕರಿಗೆ ಉತ್ತಮ ಸಾರಿಗೆ ಮತ್ತು ಮೂಲ ಸೌಕರ್ಯ ಒದಗಿಸಲಾಗುವುದು.
ನಿವೇಶನ ರಹಿತರಿಗೆ ಸಂಕ್ರಾಂತಿ ಸಿಹಿ: ದಕ್ಷಿಣ ಕನ್ನಡದ ಪುತ್ತೂರು ತಾಲೂಕಿಗೆ ಬಂಪರ್ ಅವಕಾಶ, ಏನದು ಗೊತ್ತೆ?
ಪುತ್ತೂರು ತಾಲೂಕಿನ ನಿವೇಶನ ರಹಿತರಿಗೆ ಸಿಹಿ ಸುದ್ದಿ. ಈಗ ತಮ್ಮ ಗ್ರಾಪಂ ವ್ಯಾಪ್ತಿಯಲ್ಲಷ್ಟೇ ಅಲ್ಲದೆ ತಾಲೂಕಿನ ಯಾವುದೇ ಗ್ರಾಪಂ ಅಥವಾ ನಗರ ಪ್ರದೇಶದಲ್ಲಿ ನಿವೇಶನಕ್ಕೆ ಅರ್ಜಿ ಸಲ್ಲಿಸಬಹುದು. ರಾಜೀವ್ ಗಾಂಧಿ ವಸತಿ ನಿಗಮ ಈ ಹೊಸ ಆದೇಶ ಹೊರಡಿಸಿದೆ. ಇದರಿಂದ ಸಾವಿರಾರು ವಸತಿ ರಹಿತರಿಗೆ ಅನುಕೂಲವಾಗಲಿದೆ. ಶಾಸಕ ಅಶೋಕ್ ರೈ ಅವರ ಪ್ರಯತ್ನ ಫಲಿಸಿದೆ. ಈ ಆದೇಶದಿಂದ ನಿವೇಶನ ಹಂಚಿಕೆ ಪ್ರಕ್ರಿಯೆ ಸುಗಮವಾಗಲಿದೆ.
ಇರಾನ್ನಲ್ಲಿ ಜೆನ್ ಜೀ ನಾರಿ ಶಕ್ತಿ; ಮಹಿಳೆಯರಿಗೇಕೆ ಅಯತೊಲ್ಲಾ ಖಮೇನಿ ಆಡಳಿತದ ಮೇಲೆ ಸಿಟ್ಟು, ಮುಂದೇನಾಗುತ್ತೆ?
ಇರಾನ್ನಲ್ಲಿ ನಾಗರಿಕರ ಪ್ರತಿಭಟನೆ ಭುಗಿಲೆದ್ದಿದೆ. ಹಲವು ದೇಶಗಳಲ್ಲಿಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿರುವ ಜೆನ್ ಜೀ ಪೀಳಿಗೆ ಸರಕಾರಗಳನ್ನೇ ಬುಡಮೇಲು ಮಾಡಿದೆ. ಇರಾನ್ನಲ್ಲೂಅದರ ಸೂಚನೆ ಕಾಣುತ್ತಿದೆ. ಮುಖ್ಯವಾಗಿ ಜೆನ್ ಜೀ ಯುವತಿಯರ ಪಡೆ ಖಮೇನಿ ಆಡಳಿತದ ವಿರುದ್ಧ ತೊಡೆ ತಟ್ಟಿ ನಾನಾ ವಿಧಗಳಲ್ಲಿಪ್ರತಿಭಟಿಸುತ್ತಿರುವುದು ಜಗತ್ತಿನ ಗಮನ ಸೆಳೆದಿದೆ.
ಕೆಎಎಸ್ ರಿಸಲ್ಟ್ ಯಾವಾಗ? 9 ತಿಂಗಳಾದರೂ ಫಲಿತಾಂಶ ಪ್ರಕಟಿಸದ ಕೆಪಿಎಸ್ಸಿ, ಅಭ್ಯರ್ಥಿಗಳ ತ್ರಿಶಂಕು ಸ್ಥಿತಿ
ಕೆಪಿಎಸ್ಸಿ 384 ಕೆಎಎಸ್ ಹುದ್ದೆಗಳ ಮುಖ್ಯ ಪರೀಕ್ಷೆ ನಡೆಸಿ 9 ತಿಂಗಳಾದರೂ ಫಲಿತಾಂಶ ಪ್ರಕಟಿಸಿಲ್ಲ. ಅತ್ಯಾಧುನಿಕ ತಂತ್ರಜ್ಞಾನ ಬಳಸಿದರೂ ಪ್ರಕ್ರಿಯೆ ವಿಳಂಬವಾಗುತ್ತಿರುವುದು ಅಭ್ಯರ್ಥಿಗಳಲ್ಲಿ ಬೇಸರ ಮೂಡಿಸಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲೂ ಆದ ಪ್ರಮಾದಗಳಿಂದ ನೇಮಕಾತಿ ಪ್ರಕ್ರಿಯೆ ಎರಡು ವರ್ಷ ಕಳೆದರೂ ಅಂತಿಮ ಹಂತ ತಲುಪಿಲ್ಲ.
ತೇರದಾಳದ 80 ವರ್ಷದ ಚಂದ್ರವ್ವ ನೀಲಜಗಿ, ಆಸ್ತಿಗಾಗಿ ಸಂಬಂಧಿಕರಿಂದಲೇ ಕೊಲೆಯಾದ ದುರಂತ. ದೇವಸ್ಥಾನಕ್ಕೆ 10 ಎಕರೆ ಜಮೀನು ದಾನ ಮಾಡಲು ಮುಂದಾಗಿದ್ದ ವೃದ್ಧೆಯನ್ನು, ಆಸ್ತಿ ಲಪಟಾಯಿಸಲು ಸಂಚು ರೂಪಿಸಿ ಕೊಂದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಮಹಾದಾನಿ ಚಂದ್ರವ್ವ 18 ಲಕ್ಷ ರೂ. ಬೆಳ್ಳಿ ಕವಚವನ್ನೂ ದೇವಸ್ಥಾನಕ್ಕೆ ನೀಡಿದ್ದರು.
ಇರಾನ್ ವಾಯು ಪ್ರದೇಶ ಮತ್ತೆ ಮುಕ್ತ, ಭಾರತದ ವಿಮಾನ ಪ್ರಯಾಣಿಕರಿಗೆ ಭರ್ಜರಿ ಸುದ್ದಿ!
ಇರಾನ್ ಮತ್ತು ಅಮೆರಿಕ ನಡುವೆ ಜಟಾಪಟಿ ನಡೆಯುತ್ತಿರುವ ಸಮಯದಲ್ಲೇ ಯುದ್ಧದ ಆತಂಕವೂ ಆವರಿಸಿತ್ತು. ಇಡೀ ಮಧ್ಯಪ್ರಾಚ್ಯ ಭಯದಲ್ಲಿ ನಲುಗಿ, ಮುಂದೆ ಏನಾಗುತ್ತೋ? ಎಂಬ ಚಿಂತೆಯಲ್ಲಿ ಮುಳುಗಿ ಹೋಗಿತ್ತು. ಇರಾನ್ ದೇಶದಲ್ಲಿ ಅಲ್ಲಿನ ಆಡಳಿತದ ವಿರುದ್ಧ ಜನರು ರೊಚ್ಚಿಗೆದ್ದು ಘೋರ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಮಯದಲ್ಲಿ ಸಾವಿರಾರು ಜನರು ಹಿಂಸಾಚಾರಕ್ಕೆ ಬಲಿಯಾಗಿದ್ದು ಜಗತ್ತಿನಾದ್ಯಂತ ಸದ್ದು ಮಾಡಿತ್ತು. ಈ ಎಲ್ಲಾ
Madikeri | ಕೊಲೆ ಮಾಡಿ ಮೃತದೇಹವನ್ನು ಸುಟ್ಟು ಹಾಕಿದ ಪ್ರಕರಣ : 8 ಆರೋಪಿಗಳ ಬಂಧನ
ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ಹೊಸ್ಕೇರಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತ ದೇಹವನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ್ಕೇರಿ ನಿವಾಸಿ ದೇವಯ್ಯ ಎಂಬುವವರ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಬುರೋ ಎಂಬುವವರನ್ನು ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಮೃತ ದೇಹವನ್ನು ಸುಟ್ಟು ಹಾಕಿರುವ ಕುರಿತು ಜ.13 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೊಸ್ಕೇರಿ ನಿವಾಸಿಗಳಾದ ಪ್ರಶಾಂತ್ ಮುದಿ (27), ದೇವಯ್ಯ ಎಂ.ಎಸ್ (71), ಭಾರತಿ ಎಂ.ಡಿ (57), ಶ್ರೀಕಾಂತ್ ಮುದಿ (25), ಸುಧನ್ ಮುದಿ (50), ಲಕ್ಷ್ಮೀ ಮುದಿ (37), ತನುಶ್ರೀ (20) ಹಾಗೂ ಬಸಂತಿ ಮುದಿ (49) ಬಂಧಿತ ಆರೋಪಿಗಳಾಗಿದ್ದಾರೆ. ಜ.11 ರಂದು ರಾತ್ರಿ ಬುರೋ ಹಾಗೂ ಅವರ ಪುತ್ರ ಪ್ರಶಾಂತ್ ಮುದಿ ಮದ್ಯಪಾನ ಮಾಡಿ ಕ್ಷುಲಕ ಕಾರಣಕ್ಕೆ ಜಗಳವಾಡಿದ್ದರು. ಈ ಸಂದರ್ಭ ಪ್ರಶಾಂತ್ ಮುದಿ ದೊಣ್ಣೆಯಿಂದ ಹಲ್ಲೆ ಮಾಡಿದ್ದರಿಂದ ಬುರೋ ಮೃತಪಟ್ಟಿದ್ದರು. ಬುರೋನ ಮೃತ ದೇಹವನ್ನು ಸುಟ್ಟು ಹಾಕಿ ಸಾಕ್ಷ್ಯ ನಾಶ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಮಡಿಕೇರಿ ಉಪವಿಭಾಗದ ಡಿವೈಎಸ್ಪಿ ಸೂರಜ್.ಪಿ.ಎ, ಮಡಿಕೇರಿ ಗ್ರಾಮಾಂತರ ಠಾಣೆಯ ಪಿಐ ಚಂದ್ರಶೇಖರ್ ಹೆಚ್.ವಿ, ಪಿಎಸ್ಐ ಜವರೇಗೌಡ, ಗ್ರಾಮಾಂತರ ಠಾಣೆ ಹಾಗೂ ಅಪರಾಧ ಪತ್ತೆ ಸಿಬ್ಬಂದಿಗಳು, ಅಪರಾಧ ಕೃತ್ಯ ಪರಿಶೀಲನಾ ತಜ್ಞರ ತಂಡ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ದಕ್ಷ ಕಾರ್ಯಾಚರಣೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಶಾಲಾ ಮಕ್ಕಳ ಶೂ ವಿತರಣೆಗೆ 6 ಕೋಟಿ ರೂ. ಬಿಡುಗಡೆ
ಬೆಂಗಳೂರು : ಸರಕಾರಿ ಶಾಲೆಯ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ವಿದ್ಯಾ ವಿಕಾಸ ಯೋಜನೆಯಡಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯನ್ನು ಖಚಿತಪಡಿಸಿಕೊಂಡು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಗತ್ಯ ಅನುದಾನ ವಿತರಣೆ ಮಾಡಬೇಕು. ಪ್ರತಿ ವಿದ್ಯಾರ್ಥಿಗೂ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ನೀಡಬೇಕು. ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಮೂವರು ಸದಸ್ಯರು, ಮುಖ್ಯ ಶಿಕ್ಷಕರ ಸಮಿತಿ ಮೂರು ತಿಂಗಳ ಒಳಗೆ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. 1ರಿಂದ 5ನೇ ತರಗತಿಯ ಪ್ರತಿ ವಿದ್ಯಾರ್ಥಿಗೆ 265 ರೂ. 6ರಿಂದ 8ನೇ ವಿದ್ಯಾರ್ಥಿಗಳಿಗೆ 295 ರೂ. ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ 325 ರೂ. ನಿಗದಿ ಮಾಡಲಾಗಿದೆ. ಶೂ ಮತ್ತು ಸಾಕ್ಸ್ ಗಳ ಗುಣಮಟ್ಟ ಪರಿಶೀಲಿಸಲು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಸಮಿತಿ ರಚಿಸಬೇಕು. ಹಿಂದೆ ಕಳಪೆ ಗುಣಮಟ್ಟದ ಶೂ ವಿತರಿಸಿರುವ ದೂರುಗಳಿದ್ದರೆ ಮುಖ್ಯಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಉಪ ನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಲಾಗಿದೆ.
Vijay Hazare Trophy- ಕರ್ನಾಟಕವನ್ನು ಮಕಾಡೆ ಮಲಗಿಸಿದ ಅಮನ್ ಮೊಖಾಡೆ!; ಸತತ 2ನೇ ಬಾರಿ ಫೈನಲ್ ಗೇರಿದ ವಿದರ್ಭ
Vidarbha Beat Karnataka In VHT- ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ತಂಡದ ಅಭಿಯಾನ ಅಂತ್ಯಗೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ವಿದರ್ಭ ತಂಡ ಕರ್ನಾಟಕವನ್ನು 6 ವಿಕೆಟ್ಗಳಿಂದ ಸೋಲಿಸುವ ಮೂಲಕ ಸತತ 2ನೇ ಬಾರಿ ಫೈನಲ್ ಗೇರಿ ನಿಂತಿದೆ. ಅಮನ್ ಮೋಖಾಡೆ ಅವರ ಅಮೋಘ 138 ರನ್ಗಳ ಅದ್ಭುತ ಇನ್ನಿಂಗ್ಸ್ ಮತ್ತು ಕರ್ನಾಟಕ ಮೂಲದವರೇ ಆದ ಆರ್ ಸಮರ್ಥ್ ಅವರ ಅರ್ಧಶತಕ ಕರ್ನಾಟಕದ ಫೈನಲ್ ಆಸೆಗೆ ತಣ್ಣೀರೆರಚಿತು.
Bengaluru | ಬೆಂಕಿ ಅವಘಡ: ಹೊತ್ತಿ ಉರಿದ 15 ಶೆಡ್ಗಳು
ಬೆಂಗಳೂರು : ಕಸಕ್ಕೆ ಬೆಂಕಿ ಹೊತ್ತಿಕೊಂಡು ಪಕ್ಕದಲ್ಲೇ ಸಂಗ್ರಹವಾಗಿದ್ದ ಗುಜರಿ ವಸ್ತುಗಳಿಗೂ ತಾಗಿದ ಕಿಡಿ 15 ಶೆಡ್ಗಳಿಗೂ ಹರಡಿ ಹೊತ್ತಿ ಉರಿದ ಘಟನೆ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಎಳೇನಹಳ್ಳಿಯಲ್ಲಿರುವ ಕಸದ ಡಂಪಿಂಗ್ ಯಾರ್ಡ್ನಲ್ಲಿ ಗುರುವಾರ ನಡೆದಿದೆ. ಗುರುವಾರ ಬೆಳಗಿನ ಜಾವ 3.15ರ ಸುಮಾರಿನಲ್ಲಿ ಕಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕಿಡಿ ಪಕ್ಕದಲ್ಲೇ ಸಂಗ್ರಹಿಸಿಡಲಾಗಿದ ಗುಜರಿ ವಸ್ತುಗಳಿಗೂ ತಾಗಿ ಬೆಂಕಿಯ ತೀವ್ರತೆ ಹೆಚ್ಚಾಗಿ ಪಕ್ಕದ 15 ಶೆಡ್ಗಳು ಹರಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸುದ್ದಿ ತಿಳಿದು ಅಗ್ನಿ ಶಾಮಕ ಸಿಬ್ಬಂದಿ ನಾಲ್ಕು ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಸುಮಾರು 3 ಗಂಟೆಗಳಿಗೂ ಹೆಚ್ಚು ಕಾಲ ಹರಸಾಹಸದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿಯಿಂದಾಗಿ 15 ಶೆಡ್ಗಳು ಸುಟ್ಟು ಹೋಗಿವೆ. ಅದೃಷ್ಟವಶಾತ್ ಶೆಡ್ಗಳಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಈ ಶೆಡ್ನಲ್ಲಿ ವಾಸವಾಗಿರುವವರು ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೇಗೂರು ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೂರು ತಿಂಗಳ ಹಿಂದೆ ಇದೇ ಜಾಗದಲ್ಲಿ ಬೆಂಕಿ ಅವಘಡ ಸಂಭವಿಸಿ 50 ಗುಡಿಸಲುಗಳು ಭಸ್ಮಗೊಂಡಿದ್ದವು. ಹಾಗಾಗಿ ಗುಡಿಸಲಿನಲ್ಲಿದ್ದ ನಿವಾಸಿಗಳು ಬೇರೆಡೆ ನೆಲೆಸಿದ್ದಾರೆ. ಸದ್ಯ, ಮತ್ತೆ ಈ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಸಂಬಂಧ ಬೇಗೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು : ವರ್ಷದ ಮೊದಲನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ರಾಜ್ಯಾದ್ಯಂತ ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು. ಬೆಳಗ್ಗೆಯಿಂದಲೇ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಸಹಿತ ಇನ್ನಿತರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಸಂಕ್ರಾಂತಿ ಸಂದರ್ಭದಲ್ಲೇ ಸೂರ್ಯ ಧನುರ್ ರಾಶಿಯಿಂದ ಮಕರ ರಾಶಿ ಪ್ರವೇಶ ಹಿನ್ನೆಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಸಂಕ್ರಾಂತಿ ಹಬ್ಬದಲ್ಲಿ ‘ಎಳ್ಳು-ಬೆಲ್ಲ ತಿಂದು ಒಳ್ಳೆಯ ಮಾತನಾಡೋಣ’ ಎಂದು ಜನರು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು. ಬೆಂಗಳೂರಿನ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಾಲಯದಲ್ಲೂ ಗುರುವಾರ ಸಂಜೆ 5.02ರ ಸುಮಾರಿಗೆ ಸೂರ್ಯ ಕಿರಣಗಳು ಗಂಗಾಧರೇಶ್ವರ ಸ್ವಾಮಿ ಶಿವಲಿಂಗದ ಮೇಲೆ ಬಿದ್ದದ್ದನ್ನು ಕಣ್ತುಂಬಿಕೊಳ್ಳಲು ದೇವಾಲಯದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಎರಡು ನಿಮಿಷಗಳ ಕಾಲ ಸೂರ್ಯ ರಶ್ಮಿ ಗಂಗಾಧರೇಶ್ವರ ಸ್ವಾಮಿಯನ್ನು ಸ್ಪರ್ಶಿಸಲಿದೆ. ಗ್ರಾಮೀಣ ಭಾಗದಲ್ಲಿ ರೈತರ ಹಬ್ಬ ಸಂಕ್ರಾಂತಿಯನ್ನು ಸಂಭ್ರಮದಿಂದ ಆಚರಿಸಿದರು. ವರ್ಷವಿಡೀ ದುಡಿದ ಜಾನುವಾರುಗಳನ್ನು ಶೃಂಗರಿಸಿ ಯಾವುದೇ ರೋಗ-ರುಜಿನಗಳು ಬಾರದಿರಲಿ ಎಂದು ಕಿಚ್ಚು ಹಾಯಿಸಿದರು. ಕಷ್ಟಪಟ್ಟು ಬೆಳೆದ ದವಸ-ಧಾನ್ಯ ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ಸಿಲಿಕಾನ್ ಸಿಟಿಯಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಪೊಂಗಲ್ ತಯಾರಿಸಿ ಸಂಕ್ರಾಂತಿ ಸಂಭ್ರಮ: ಜಯನಗರ ಕ್ಷೇತ್ರದ ರಾಗಿಗುಡ್ಡ ಪ್ರದೇಶದಲ್ಲಿ ಬಿಜೆಪಿ ನಾಯಕರು ಪೊಂಗಲ್ ತಯಾರಿಸುವ ಮೂಲಕ ಸಂಕ್ರಾಂತಿ ಆಚರಿಸಿದರು. ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿಸೂರ್ಯ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಪೊಂಗಲ್ ತಯಾರಿಸುವ ಮೂಲಕ ಸಂಭ್ರಮಾಚರಣೆ ಮಾಡಿದರು.
Bengaluru | ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ: ಜ್ಯುವೆಲ್ಲರಿ ಅಂಗಡಿ ಮಾಲಕ ಮೃತ್ಯು
ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಜ್ಯುವೆಲ್ಲರಿ ಅಂಗಡಿ ಮಾಲಕ ಮೃತಪಟ್ಟಿರುವ ಘಟನೆ ಇಲ್ಲಿನ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ವರದಿಯಾಗಿದೆ. ನಗರತ್ಪೇಟೆ ನಿವಾಸಿ ಪಾರಸ್ಮಲ್ ಪಿ. ಜೈನ್(70) ಮೃತಪಟ್ಟ ಜ್ಯುವೆಲ್ಲರಿ ಅಂಗಡಿ ಮಾಲಕ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಪಾರಸ್ಮಲ್ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ನೃಪತುಂಗ ರಸ್ತೆಯ ಕೆ.ಆರ್.ಸರ್ಕಲ್ ಸಮೀಪದ ಬಸ್ ನಿಲ್ದಾಣದ ಬಳಿ ಅತೀ ವೇಗವಾಗಿ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದಿಂದ ಬಿದ್ದ ಪಾರಸ್ಮಲ್ ಅವರು ಗಂಭೀರ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಈ ಸುದ್ದಿ ತಿಳಿದು ಹಲಸೂರು ಗೇಟ್ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Dharwad | ವಿದ್ಯಾರ್ಥಿ ಕೊಲೆ ಪ್ರಕರಣ; ಮೂವರು ಬಾಲಕರು ವಶಕ್ಕೆ : ಎಸ್ಪಿ ಗುಂಜನ್ ಆರ್ಯ
ಧಾರವಾಡ : ಪಟ್ಟಣದ ಬಸ್ ನಿಲ್ದಾಣ ಬಳಿಯ ಟಿಎಪಿಎಂಎಸ್ ಸೊಸೈಟಿ ಮೈದಾನದಲ್ಲಿ ಬುಧವಾರ ನಡೆದ ವಿದ್ಯಾರ್ಥಿ ನಿಂಗರಾಜ ಮಲ್ಲಿಕಾರ್ಜುನ ಅವಾರಿ (16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗುರುವಾರ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ಮೂವರು ಬಾಲಕರನ್ನು ವಶಕ್ಕೆ ಪಡೆದಿದ್ದು, ಉಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಕೊಲೆಗೆ ಹಳೇ ದ್ವೇಷ ಹಾಗೂ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳವೇ ಕಾರಣವಾಗಿದೆ. ಇದನ್ನೇ ದೊಡ್ಡದು ಮಾಡಿ ಕೃತ್ಯ ಎಸಗಿದ್ದಾರೆ. ಇದರಲ್ಲಿ ಓರ್ವನಿಗೆ ಗಾಯವೂ ಆಗಿವೆ. ಕೊಲೆಯಾದ ಹುಡುಗ ಮತ್ತು ಕೊಲೆ ಮಾಡಿದ ಎ1 ಆರೋಪಿ ಒಂದೇ ಶಾಲೆಯಲ್ಲಿ ಕಲಿಯುತ್ತಿದ್ದವರು. ಇವರ ಫೋನ್ಗಳನ್ನು ವಶಕ್ಕೆ ಪಡೆದುಕೊಂಡಿದ್ದು, ರೀಲ್ಸ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಎಸ್ಪಿ ಗುಂಜನ್ ಆರ್ಯ ಮಾಹಿತಿ ನೀಡಿದರು. ಕುಂದಗೋಳದಲ್ಲಿ ಅಂತ್ಯ ಸಂಸ್ಕಾರ: ಬುಧವಾರ ಹತ್ಯೆಗೀಡಾಗಿದ್ದ ವಿದ್ಯಾರ್ಥಿ ನಿಂಗರಾಜ ಮಲ್ಲಿಕಾರ್ಜುನ ಅವಾರಿಯ ಮರಣೋತ್ತರ ಪರೀಕ್ಷೆಯನ್ನು ಹುಬ್ಬಳ್ಳಿಯ ಕಿಮ್ಸ್ನಲ್ಲಿ ನಡೆಸಿ, ಪೋಷಕರಿಗೆ ಗುರುವಾರ ಹಸ್ತಾಂತರಿಸಲಾಯಿತು. ಬಳಿಕ ಕುಂದಗೋಳ ಪಟ್ಟಣದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ನಿನ್ನೆ ನಮ್ಮ ಮಗ ಶಾಲೆಗೆ ಹೋದವನು ಮರಳಿ ಬರಲಿಲ್ಲ. ಸಂಜೆ 5 ಗಂಟೆಗೆ ನಮ್ಮ ಮಗ ಇನ್ನೂ ಮನೆಗೆ ಬಂದಿಲ್ಲ ಎಂದು ಶಾಲೆಗೆ ಫೋನ್ ಮಾಡಿ ವಿಚಾರಿಸಿದಾಗ, ಶಾಲೆ ಬಿಟ್ಟಿದೆ, ಆತ ಹೋಗಿದ್ದಾನೆ ಎಂದು ಶಿಕ್ಷಕರು ತಿಳಿಸಿದ್ದರು. ಬಳಿಕ ನಾನು ಶಾಲೆಯ ಬಳಿ ಹುಡುಕಾಡುತ್ತಿದ್ದೆ, ಅಷ್ಟರಲ್ಲಿ ಶಿಕ್ಷಕರು ನನಗೆ ಫೋನ್ ಮಾಡಿ ಸೊಸೈಟಿ ಮೈದಾನದ ಬಳಿ ಬರುವಂತೆ ಹೇಳಿದರು.ಅಲ್ಲಿ ಹೋಗಿ ನೋಡಿದರೆ ನನ್ನ ಮಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಆತ ಯಾರ ಜೊತೆಗೂ ಜಗಳವಾಡುತ್ತಿರಲಿಲ್ಲ. ನಾಲ್ಕರಿಂದ ಐದು ಜನರು ಸೇರಿ ಮಗನನ್ನು ಕೊಲೆ ಮಾಡಿದ್ದಾರೆ -ಮಲ್ಲಿಕಾರ್ಜುನ ಅವಾರಿ, ಮೃತ ವಿದ್ಯಾರ್ಥಿ ತಂದೆ
ಜ. 18 ರಂದು ಜೋಕಟ್ಟೆಯಲ್ಲಿ ಸಮಸ್ತ ಸಮ್ಮೇಳನ
ಮಂಗಳೂರು, ಜ.15: ಮಂಗಳೂರು ವೆಸ್ಟ್ ರೇಂಜ್ ಜಂಹಿಯ್ಯತುಲ್ ಮುಅಲ್ಲಿಮೀನ್ ಹಾಗೂ ಸಮಸ್ತ ಮದರಸ ಮ್ಯಾನೇಜ್ಮೆಂಟ್ ಇದರ ಜಂಟಿ ಆಶ್ರಯದಲ್ಲಿ, ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಜೋಕಟ್ಟೆ ಹೊಸ ಮಸೀದಿ ವಠಾರದಲ್ಲಿ 2026 ಜನವರಿ 18 ರಂದು (ಆದಿತ್ಯವಾರ) ಮಗ್ರಿಬ್ ನಮಾಜ್ ನಂತರ ಸಮಸ್ತ ಸಮ್ಮೇಳನ ನಡೆಯಲಿದೆ. ಈ ಪ್ರಯುಕ್ತ, ಅದೇ ದಿನ ಅಸರ್ ನಮಾಜ್ ನಂತರ ಜೋಕಟ್ಟೆ ಹಳೆಯ ಮಸೀದಿಯಿಂದ ಈದ್ಗಾ ಮಸೀದಿ ತನಕ ದಫ್, ಸ್ಕೌಟ್, ಫ್ಲವರ್ ಶೋ ಮುಂತಾದ ಕಾರ್ಯಕ್ರಮಗಳೊಂದಿಗೆ ಸಮಸ್ತ ಸಂದೇಶ ಜಾಥಾ ನಡೆಯಲಿದೆ. ಮಗ್ರಿಬ್ ನಮಾಜ್ ನಂತರ ನಡೆಯಲಿರುವ ಸಮಸ್ತ ಸಮ್ಮೇಳನವು ವೈಟ್ ಸ್ಟೋನ್ ಮಾಲಕ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಎಂ. ಶರೀಫ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಕೇರಳದ ಅಬ್ದುಲ್ ಗಫೂರ್ ಮೌಲವಿ ಮುಖ್ಯ ಭಾಷಣ ನೀಡಲಿದ್ದು, ಮಂಗಳೂರು ವೆಸ್ಟ್ ರೇಂಜ್ ಜಂಹಿಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಫಝಲ್ ರಹ್ಮಾನ್ ನಿಝಾಮಿ ಅಲ್ ಫಾರೂಕಿ ಪಾಸ್ತಾವಿಕ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸೌದಿ ಅರೇಬಿಯಾದ ಅಲ್ ಮುಝಯಿನ್ ಕಂಪನಿ ಮಾಲಕರಾದ ಹಾಜಿ ಬಿ.ಎಂ. ಝಕರಿಯಾ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಳೆಯ ಮಸೀದಿ ಖತೀಬ್ ಯೂಸುಫ್ ಮಿಸ್ಬಾಹಿ, ಮುದರ್ರಿಸ್ ಅಬ್ದುರಹ್ಮಾನ್ ದಾರಿಮಿ, ದಕ್ಷಿಣ ಕನ್ನಡ ಜಿಲ್ಲಾ ಜಂಹಿಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಶಂಸುದ್ದೀನ್ ದಾರಿಮಿ, ಈದ್ಗಾ ಮಸೀದಿ ಖತೀಬ್ ಮುಹಮ್ಮದ್ ಶರೀಫ್ ಹನೀಫಿ, ಸಮಸ್ತ ವಿದ್ಯಾಭ್ಯಾಸ ಬೋರ್ಡ್ ಮುಫತ್ತಿಶ್ ಹನೀಫ್ ಮುಸ್ಲಿಯಾರ್, ಮುದರ್ರಿಬ್ ತಾಜುದ್ದೀನ್ ರಹ್ಮಾನಿ, ಸಮಸ್ತ ಮದರಸ ಮ್ಯಾನೇಜ್ಮೆಂಟ್ ದ.ಕ. ಜಿಲ್ಲಾ ಅಧ್ಯಕ್ಷ ಎಂ.ಎಚ್. ಮೊಯಿದಿನಬ್ಬ, ಹಳೆಯ ಮಸೀದಿ ಅಧ್ಯಕ್ಷ ಅಬ್ದುಲ್ ರಶೀದ್ ಕೊಪ್ಪ, ಒ.ಎಂ. ಅಬ್ದುಲ್ ಕಾದರ್, ಅಂಜುಮನ್ ವಿದ್ಯಾ ಸಂಸ್ಥೆ ಅಧ್ಯಕ್ಷ ಹಾಜಿ ಸುಲೈಮಾನ್ ಬೊಟ್ಟು, ಜೋಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಉಮರುಲ್ ಫಾರೂಕ್, ಮಂಗಳೂರು ಮಹಾನಗರ ಪಾಲಿಕೆಯ ನಿಕಟ ಪೂರ್ವ ಸದಸ್ಯ ಹಾಗೂ ಕಾರ್ಪೊರೇಟರ್ ಜನಾಬ್ ಮುನೀಬ್ ಬೆಂಗರೆ, ಮಂಗಳೂರು ವೆಸ್ಟ್ ರೇಂಜ್ ಮ್ಯಾನೇಜ್ಮೆಂಟ್ ಅಧ್ಯಕ್ಷ ಬಿಲಾಲ್ ಮೊಯಿದಿನ್ ಬೆಂಗರೆ, ತಣ್ಣೀರುಬಾವಿ ಮಸೀದಿ ಅಧ್ಯಕ್ಷ ಅಬ್ದುಲ್ ರಾಝಿಕ್, ಬೆಂಗರೆದೋಟ ಮಸೀದಿ ಅಧ್ಯಕ್ಷ ಅಬ್ದುಲ್ ರೌಫ್, ಕಳವಾರು ಜುಮಾ ಮಸೀದಿ ಅಧ್ಯಕ್ಷ ಬಿ. ಆದಂ, ಕೆ.ಕೆ. ಅಬ್ದುಲ್ ಕಾದರ್ (ಜೋಕಟ್ಟೆ), ಮಂಗಳೂರು ವೆಸ್ಟ್ ರೇಂಜ್ ಜಂಹಿಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಹಲೀಮ್ ಆರ್ಶದಿ ಸೇರಿದಂತೆ ಅನೇಕ ಉಲಮಾ, ಉಮರಾ ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 7:00ಕ್ಕೆ ವಲಿಯುಲ್ಲಾಹಿ ಶೇಕಾಜಿ ಮಖಾಂ ಝಿಯಾರತ್, 7:30ಕ್ಕೆ ವಲಿಯುಲ್ಲಾಹಿ ಸೀವಾ ಇಮಾಮ್ ಮಖಾಂ ಝಿಯಾರತ್, 8:30ಕ್ಕೆ ಹೊಸ ಮಸೀದಿ ವಠಾರದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಎಂ. ಶರೀಫ್ ಹಾಜಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದು ಸ್ವಾಗತ ಸಮಿತಿ ಸಂಚಾಲಕ ಪಿ.ಎಂ. ಅಬ್ದುಲ್ಲಾಹಿ ನಈಮಿ ಅಲ್ ಮುರ್ಷಿದಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್: ಓರ್ವ ಆರೋಪಿ ಬಂಧನ
ಮಂಗಳೂರು, ಜ.15: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಹಾಕಿ ವೈರಲ್ ಮಾಡಿದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಬ್ಬನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಧರ್ಮಪಾಲ್ ಶೆಟ್ಟಿ(70) ಬಂಧಿತ ಆರೋಪಿ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ರಾವ್ ಎಂಡ್ ರಾವ್ ಸರ್ಕಲ್ ಬಳಿ ಅನಧಿಕೃತ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿದ್ದಾರೆ. ಇಲ್ಲಿ ಅಕ್ರಮ ವ್ಯವಹಾರವೂ ನಡೆಯುತ್ತಿದೆ. ಈ ಬಗ್ಗೆ ಮಾಹಿತಿಯನ್ನು ಸಂಬಂಧ ಪಟ್ಟವರಿಗೆ ತಲುಪಿಸಬೇಕು ಎಂದು ರವೀಂದ್ರ ಎಂಬ ವ್ಯಕ್ತಿ ವಾಟ್ಸಪ್ ಪೋಸ್ಟ್ ಹಾಕಿದ್ದ. ಇದು ವೈರಲ್ ಆಗಿತ್ತು.
ಇರಾನ್ ಮೇಲಿನ ದಾಳಿಗೆ ತೆರಬೇಕಾದೀತು ಭಾರೀ ಬೆಲೆ; ಮಧ್ಯಪ್ರಾಚ್ಯ ಮತ್ತೆ ರಣಾಂಗಣವಾದರೆ ಗತಿ ಏನು?
ಇರಾನ್ ಆಂತರಿಕ ಬಿಕ್ಕಟ್ಟು ಜಾಗತಿಕ ಸಮಸ್ಯೆಯಾಗಿ ಪರಿವರ್ತನೆಗೊಂಡಿದ್ದು, ಅಮೆರಿಕದ ಮಧ್ಯಪ್ರವೇಶದ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪೂರಕವೆಂಬಂತೆ ಅಮೆರಿಕ ಈಗಾಗಲೇ ಮಧ್ಯಪ್ರಾಚ್ಯದತ್ತ ತನ್ನ ನೌಕಾಸೇನೆಯ ಯುದ್ಧವಾಹಕ ನೌಕೆಯ ಗುಂಪೊಂದನ್ನು ರವಾನಿಸಿದೆ. ಆದರೆ ಇರಾನ್ ಮೇಲೆ ಅಮೆರಿಕ ದಂಡೆತ್ತಿ ಬರುವುದು ಅಷ್ಟು ಸುಲಭವೇ? ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಒಂದು ವೇಳೆ ಅಮೆರಿಕವು ಇರಾನ್ ಮೇಲೆ ದಾಳಿ ಮಾಡಿದ್ದೇ ಆದಲ್ಲಿ, ಮಧ್ಯಪ್ರಾಚ್ಯದಲ್ಲಿ ಏನೆಲ್ಲಾ ಭೀಕರ ಪರಿಣಾಮಗಳು ಎದುರಾಗಲಿವೆ? ಈ ಕುರಿತು ಇಲ್ಲಿದೆ ಗಿರೀಶ್ ಲಿಂಗಣ್ಣ ಅವರ ವಿಸ್ತೃತ ಲೇಖನ.
ಎರ್ನಾಕುಲಂ: ಖ್ಯಾತ ಮಲಯಾಳಂ ನಟ ದಿಲೀಪ್ ವಿರುದ್ಧದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಪರ ವಕೀಲೆ ಟಿ.ಬಿ. ಮಿನಿ ಅವರು, ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ. ವರ್ಗೀಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ದೂರು ಸಲ್ಲಿಸಿದ್ದಾರೆ. ನಟಿ ಮೇಲಿನ ದಾಳಿ ಪ್ರಕರಣವನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಹಾಗೂ ನ್ಯಾಯಾಲಯದಲ್ಲೇ ನಿದ್ದೆ ಮಾಡುತ್ತಿದ್ದರು ಎಂಬ ಹಾಸ್ಯಾಸ್ಪದ ಟಿಪ್ಪಣಿಗಳನ್ನು ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಮಿನಿ ಅವರ ಬಗ್ಗೆ ಮಾಡಿದ ಬಳಿಕ, ಹನಿ ವರ್ಗೀಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಿನಿ ಅರ್ಜಿ ಸಲ್ಲಿಸಿದ್ದಾರೆ. ಈ ಹೇಳಿಕೆಗಳನ್ನು ಸುಳ್ಳು ಮತ್ತು ಮಾನಹಾನಿಕಾರಿಯೆಂದು ಕರೆದಿರುವ ಮಿನಿ, ಪ್ರಕರಣದಲ್ಲಿ 8ನೇ ಆರೋಪಿಯಾಗಿರುವ ನಟ ದಿಲೀಪ್ ಗೆ ಹನಿ ವರ್ಗೀಸ್ ಅನಗತ್ಯವಾಗಿ ಒಲವು ತೋರಿದ್ದಾರೆ ಎಂದು ಆರೋಪಿಸಿದ್ದಾರೆ. ಡಿಸೆಂಬರ್ 2025ರಲ್ಲಿ ನೀಡಿದ ತೀರ್ಪಿನಲ್ಲಿ ಹನಿ ವರ್ಗೀಸ್ ಅವರು ದಿಲೀಪ್ ಮತ್ತು ಇತರ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ್ದು, ಆರು ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿದ್ದರು. ಈ ತೀರ್ಪು ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಆದರೆ ಮಿನಿ ನ್ಯಾಯಾಧೀಶರ ವಿರುದ್ಧ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡಿರಲಿಲ್ಲ. ತೀರ್ಪು ನಿರಾಶಾದಾಯಕವಾಗಿದೆ ಎಂದು ಮಾತ್ರ ಹೇಳಿದ್ದರು. ಫೆಬ್ರವರಿ 4ರಂದು ಹೈಕೋರ್ಟ್ ಆರು ಅಪರಾಧಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. ಈ ಮಧ್ಯೆ ಮಿನಿ ಇದೀಗ ನ್ಯಾಯಾಧೀಶರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅರ್ಜಿಯಲ್ಲಿ ಮತ್ತಷ್ಟು ಉಲ್ಲೇಖಿಸಿರುವಂತೆ, ವಿಚಾರಣೆಯ ಆರಂಭಿಕ ಹಂತದಿಂದಲೇ ಹನಿ ವರ್ಗೀಸ್ ಅವರು ಸಂತ್ರಸ್ತೆಯ ವಿರುದ್ಧ ಅವಮಾನಕಾರಿ ಹೇಳಿಕೆಗಳನ್ನು ನೀಡಿದ್ದರು ಮತ್ತು ಪ್ರಾಸಿಕ್ಯೂಷನ್ ವಿರುದ್ಧ ಅಸಭ್ಯವಾಗಿ ವರ್ತಿಸಿದ್ದರು. ಇದರ ಪರಿಣಾಮವಾಗಿ ಇಬ್ಬರು ವಿಶೇಷ ಸಾರ್ವಜನಿಕ ಅಭಿಯೋಜಕರು ರಾಜೀನಾಮೆ ನೀಡುವಂತಾಯಿತು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಹನಿ ವರ್ಗೀಸ್ ಅವರು ದಿಲೀಪ್ ಅವರಿಗೆ ತೋರಿದ ಅನಗತ್ಯ ಒಲವು ನ್ಯಾಯಾಂಗ ವ್ಯವಸ್ಥೆಯ ಗೌರವಕ್ಕೆ ಧಕ್ಕೆ ತಂದಿದೆ ಎಂದು ಮಿನಿ ಆರೋಪಿಸಿದ್ದಾರೆ. ಸಂತ್ರಸ್ತೆ ಹಾಗೂ ಪ್ರಾಸಿಕ್ಯೂಷನ್ ಸಾಕ್ಷಿಗಳ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಹನಿ ವರ್ಗೀಸ್ ಅವರ ನಿಯಮಿತ ಅಭ್ಯಾಸವಾಗಿತ್ತು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅನೇಕ ಸಂದರ್ಭಗಳಲ್ಲಿ ಇಂತಹ ವರ್ತನೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳಿಗೆ ವಿರುದ್ಧವಾಗಿದೆ ಎಂದು ವಿಶೇಷ ಸಾರ್ವಜನಿಕ ಅಭಿಯೋಜಕರು ನ್ಯಾಯಾಧೀಶರಿಗೆ ನೆನಪಿಸಬೇಕಾದ ಪರಿಸ್ಥಿತಿ ಉಂಟಾಯಿತು ಎಂದು ಹೇಳಲಾಗಿದೆ. ಸೆಷನ್ಸ್ ನ್ಯಾಯಾಲಯದ ವಶದಲ್ಲಿದ್ದ ನಿರ್ಣಾಯಕ ಸಾಕ್ಷ್ಯವಾದ ಮೆಮೊರಿ ಕಾರ್ಡ್ ಅನ್ನು ಕಾನೂನುಬಾಹಿರವಾಗಿ ತಿರುಚಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಜುಲೈ 2021ರಲ್ಲಿ ಮೆಮೊರಿ ಕಾರ್ಡ್ ಹನಿ ವರ್ಗೀಸ್ ಅವರ ಪೀಠದ ಕಸ್ಟಡಿಯಲ್ಲಿದ್ದ ವೇಳೆ ಸುಮಾರು ಅರ್ಧ ಗಂಟೆಗಳ ಕಾಲ ಅದನ್ನು ಅಕ್ರಮವಾಗಿ ಬಳಸಲಾಗಿದೆ ಎಂದು ಮಿನಿ ಉಲ್ಲೇಖಿಸಿದ್ದಾರೆ. ಖಾಸಗಿತನ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತೆ ಹೈಕೋರ್ಟ್ ಮೆಟ್ಟಿಲೇರಿದಾಗ, ಹೈಕೋರ್ಟ್ ಹನಿ ವರ್ಗೀಸ್ ಅವರಿಗೆ ತನಿಖೆ ನಡೆಸುವಂತೆ ಸೂಚಿಸಿತ್ತು. ಆದರೆ ನ್ಯಾಯಾಧೀಶರು ಹೈಕೋರ್ಟ್ ನಿರ್ದೇಶನಗಳನ್ನು ಉಲ್ಲಂಘಿಸಿ ಕೇವಲ ಔಪಚಾರಿಕ ತನಿಖೆ ನಡೆಸಿದ್ದಾರೆ ಎಂದು ಮಿನಿ ಆರೋಪಿಸಿದ್ದಾರೆ. “ಸುಳ್ಳು ಆರೋಪಗಳ ಮೂಲಕ ತೆರೆದ ನ್ಯಾಯಾಲಯದಲ್ಲೇ ವಕೀಲರ ಮಾನಹಾನಿ ನಡೆದಲ್ಲಿ ಸಂಬಂಧಿತ ನ್ಯಾಯಾಧೀಶರ ವಿರುದ್ಧ ಹೈಕೋರ್ಟ್ ಕ್ರಮ ಕೈಗೊಳ್ಳಬಹುದು” ಎಂದು ಉಲ್ಲೇಖಿಸಿ, ಹನಿ ವರ್ಗೀಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಿನಿ ಮನವಿ ಮಾಡಿದ್ದಾರೆ.
BCB Sacks Najmul Islam- ಮುಸ್ತಫಿಝುರ್ ರಹಮಾನ್ ಅವರನ್ನು ಐಪಿಎಲ್ ನಿಂದ ಹೊರಹಾಕಿದ ಮತ್ತು ಟಿ20 ವಿಶ್ವಕಪ್ ವಿಚಾರದಲ್ಲಿ ಭಾರತವನ್ನು ವಿರೋಧಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅವರನ್ನು ಬಿಸಿಬಿಯು ಪದಚ್ಯುತಿಗೊಳಿಸಿದೆ. ಒಂದು ವೇಳೆ ಬಾಂಗ್ಲಾದೇಶ ಟಿ20 ವಿಶ್ವಕಪ್ ಆಡಲು ಭಾರತಕ್ಕೆ ಹೋಗದೇ ಇದ್ದಲ್ಲ ಆಟಗಾರರಿಗೆ ಯಾವುದೇ ಪರಿಹಾರ ಸಿಗುವುದಿಲ್ಲ ಎಂಬ ಅವರ ಹೇಳಿಕೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಇದನ್ನು ವಿರೋಧಿಸಿ ಆಟಗಾರರು BPL ಮತ್ತು DPL ಪಂದ್ಯಗಳನ್ನು ಬಹಿಷ್ಕರಿಸಿದ ಬಳಿಕ ಬಿಸಿಬಿ ಈ ನಿರ್ಧಾರ ತೆಗೆದುಕೊಂಡಿದೆ.
ಮಾನ್ವಿ | ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಮೃತ್ಯು
ಮಾನ್ವಿ : ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ಮೃತಪಟ್ಟಿದ್ದಾರೆ ಘಟನೆ ಗುರುವಾರ ಸಂಭವಿಸಿದೆ. ಮೃತ ಯುವಕನನ್ನು ಮಾನ್ವಿ ಪಟ್ಟಣದ ವಂಶಿ ರೆಡ್ಡಿ ಸುರೇಂದ್ರ ರೆಡ್ಡಿ ರಾಜಲದಿನ್ನಿ (18) ಎಂದು ಗುರುತಿಸಲಾಗಿದೆ. ಯುವಕ ವಂಶಿ ರೆಡ್ಡಿ ಸ್ನಾನಕ್ಕಾಗಿ ನೀರಿಗೆ ಇಳಿದಾಗ ಮುಳುಗಿ ಮೃತಪಟ್ಟಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಯುವಕನ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಲಕ್ಕುಂಡಿ ನಿಧಿ ಪ್ರಕರಣ; ನಿಧಿ ಸಿಕ್ಕರೆ ಏನು ಮಾಡಬೇಕು? ಕಾನೂನು ಏನು ಹೇಳುತ್ತದೆ?
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವ ವೇಳೆ ಚಿನ್ನದ ಆಭರಣಗಳು ಪತ್ತೆಯಾಗಿವೆ. ನಿಧಿ ಪತ್ತೆಯಾದ ವಿಷಯವನ್ನು ಕುಟುಂಬಸ್ಥರು ತಕ್ಷಣ ಪೊಲೀಸರಿಗೆ ತಿಳಿಸಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಮಣ್ಣಿನಡಿಯಲ್ಲಿ ಹೂತಿದ್ದ ತಾಮ್ರದ ಪುಟ್ಟ ಬಿಂದಿಗೆಯಲ್ಲಿ ಉಂಗುರ, ಕಿವಿಯೋಲೆ, ನಾಗಮುದ್ರೆಗಳು, ನಾಗಮಣಿ ಉಂಗುರ, ಕೈಕಡಗ, ಕಂಠಹಾರ, ಸರ, ದೊಡ್ಡ ಹಾರ, ಬಂಗಾರದ ಗುಂಡುಗಳು, ಬಳೆ, ಕಾಲ್ಗೆಜ್ಜೆ, ಬಿಲ್ಲೆಗಳು, ವಜ್ರ ಖಚಿತ ಉಂಗುರ ಸೇರಿದಂತೆ ಅನೇಕ ಆಭರಣಗಳು ಸಿಕ್ಕಿವೆ. ನಿಧಿ ಸಿಕ್ಕ ವಿಷಯವನ್ನು ಕೂಡಲೇ ಪೊಲೀಸರಿಗೆ ತಿಳಿಸಿ ಪ್ರಾಮಾಣಿಕತೆ ಮೆರೆದಿರುವ ರಿತ್ತಿ ಕುಟುಂಬದ ನಡೆ ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿನ್ನಾಭರಣಗಳನ್ನು ಪುರಾತತ್ವ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದು, ಇವು ವಿಜಯನಗರ ಸಾಮ್ರಾಜ್ಯ ಕಾಲಘಟ್ಟಕ್ಕೆ ಸೇರಿರಬಹುದೆಂದು ಊಹಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ. ಪತ್ತೆಯಾದ ಚಿನ್ನದ ಬಗ್ಗೆ ಎಎಸ್ಐ ಹೇಳಿದ್ದೇನು? ಲಕ್ಕುಂಡಿ ಗ್ರಾಮದಲ್ಲಿ ಆಭರಣಗಳು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ವೃತ್ತದ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ರಮೇಶ್ ಮೂಲಿಮನಿ, “ಇದು ಖಜಾನೆ ಅಲ್ಲ. ಪತ್ತೆಯಾದ ಅನೇಕ ಆಭರಣಗಳು ಮುರಿದ ಸ್ಥಿತಿಯಲ್ಲಿವೆ. ಅವು ಮನೆಯ ಅಡುಗೆ ಪ್ರದೇಶದಲ್ಲಿ ಕಂಡುಬಂದಿವೆ. ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರು ಖಜಾನೆಯನ್ನು ಸಂಗ್ರಹಿಸಿರಲಿಲ್ಲ. ಬದಲಾಗಿ ಅಡುಗೆಮನೆಯ ಒಲೆಯ ಬಳಿ ಆಭರಣಗಳನ್ನು ಹೂತು ಮರೆಮಾಡುವ ಪದ್ಧತಿ ಇತ್ತು. ಈಗ ಕಂಡುಬಂದಿರುವುದೂ ಅದೇ ರೀತಿಯದಾಗಿರಬಹುದು. ಆಭರಣಗಳು ಎಷ್ಟು ಹಳೆಯವು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ನಾಣ್ಯಗಳು ಪತ್ತೆಯಾಗಿದ್ದರೆ ಅವು ಯಾವ ಕಾಲಘಟ್ಟಕ್ಕೆ ಸೇರಿದವು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿತ್ತು” ಎಂದು ತಿಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಹಾರ, ಬಳೆ, ಕಿವಿಯೋಲೆಗಳು ಸೇರಿದಂತೆ ವಿವಿಧ ರೀತಿಯ ಆಭರಣಗಳನ್ನು ಒಳಗೊಂಡ ಸುಮಾರು 470 ಗ್ರಾಂ ಚಿನ್ನವನ್ನು ಸರ್ಕಾರ ವಶಕ್ಕೆ ಪಡೆದಿದೆ. ಕಾನೂನು ಸಚಿವರು ಹೇಳಿದ್ದೇನು? ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ್, “ಭೂಮಿಯ ಒಳಗೆ ಯಾವುದೇ ಮೌಲ್ಯಯುತ ವಸ್ತುಗಳು ಸಿಕ್ಕರೆ ಅವು ಸರ್ಕಾರದ ಆಸ್ತಿಯಾಗುತ್ತವೆ. ಲಕ್ಕುಂಡಿಯಲ್ಲಿ ಪತ್ತೆಯಾದ ಆಭರಣಗಳನ್ನು ಜಿಲ್ಲಾಡಳಿತ ಖಜಾನೆಯಲ್ಲಿ ಇರಿಸಲಾಗಿದೆ. ಇವು ಜಾಗದ ಮಾಲೀಕರಿಗೆ ಸೇರಿದ್ದಾವೆಯೇ ಅಥವಾ ರಾಷ್ಟ್ರಕೂಟ, ಚಾಲುಕ್ಯರ ಕಾಲಘಟ್ಟಕ್ಕೆ ಸೇರಿದವೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ” ಎಂದು ಹೇಳಿದ್ದಾರೆ. ನಿಧಿ ಸಿಕ್ಕರೆ ಏನು ಮಾಡಬೇಕು? ಕಾನೂನು ಏನು ಹೇಳುತ್ತದೆ? ಕಾನೂನು ಸಚಿವರು ಹೇಳಿದಂತೆ, ಭೂಮಿಯೊಳಗೆ ಯಾವುದೇ ನಿಧಿ ಸಿಕ್ಕರೂ ಅದು ಸರ್ಕಾರದ ಸ್ವತ್ತಾಗುತ್ತದೆ. ಇಂಥ ವಸ್ತುಗಳ ಮಾಲೀಕತ್ವದ ಬಗ್ಗೆ ಭಾರತದಲ್ಲಿ ಸ್ಪಷ್ಟವಾದ ಕಾನೂನು ವ್ಯವಸ್ಥೆಯಿದೆ. ವಸಾಹತುಶಾಹಿ ಯುಗದ 1878ರ ‘ಇಂಡಿಯನ್ ಟ್ರೆಷರ್ ಟ್ರೋವ್ ಆಕ್ಟ್’ನಲ್ಲಿ ರೂಪಿಸಲಾದ ನಿಯಮಗಳನ್ನು ಇಂದಿಗೂ ಪಾಲಿಸಲಾಗುತ್ತಿದೆ. ಈ ಕಾಯ್ದೆಯ ಪ್ರಕಾರ, ಹತ್ತು ರೂಪಾಯಿಗಿಂತ ಹೆಚ್ಚು ಮೌಲ್ಯದ ವಸ್ತುಗಳು ಭೂಮಿಯೊಳಗೆ ಪತ್ತೆಯಾದರೆ ಅವು ಯಾರ ವೈಯಕ್ತಿಕ ಸ್ವತ್ತಾಗಿರುವುದಿಲ್ಲ. ಪತ್ತೆಯಾದ ವಿಷಯವನ್ನು ತಕ್ಷಣವೇ ಜಿಲ್ಲಾಧಿಕಾರಿಗೆ ತಿಳಿಸಬೇಕು. ನಿಧಿ ಸಿಕ್ಕ ಸ್ಥಳ ಹಾಗೂ ಅದರ ವಿವರಗಳನ್ನು ಲಿಖಿತ ರೂಪದಲ್ಲಿ ನೀಡಿಸಿ ಜಿಲ್ಲಾಧಿಕಾರಿಯ ಸುಪರ್ದಿಗೆ ಒಪ್ಪಿಸಬೇಕು. ಜಿಲ್ಲಾಧಿಕಾರಿ ನಿಧಿಯ ಮಾಲೀಕರ ಬಗ್ಗೆ ವಿಚಾರಣೆ ನಡೆಸಲು ಆದೇಶ ನೀಡುತ್ತಾರೆ. ನಿಧಿಯ ಕುರಿತು ಜಿಲ್ಲಾಧಿಕಾರಿ ಅಧಿಸೂಚನೆ ಪ್ರಕಟಿಸುತ್ತಾರೆ. ಅಧಿಸೂಚನೆ ಪ್ರಕಟವಾದ ದಿನಾಂಕದಿಂದ ನಾಲ್ಕು ತಿಂಗಳಿಗಿಂತ ಮೊದಲು ಅಥವಾ ಆರು ತಿಂಗಳಿಗಿಂತ ನಂತರವಲ್ಲದ ದಿನದೊಳಗೆ ಹಕ್ಕುದಾರರು ವೈಯಕ್ತಿಕವಾಗಿ ಅಥವಾ ಏಜೆಂಟ್ ಮೂಲಕ ಜಿಲ್ಲಾಧಿಕಾರಿ ಮುಂದೆ ಹಾಜರಾಗಬೇಕು. ಸೆಕ್ಷನ್ 5ರ ಅಡಿಯಲ್ಲಿ ಹೊರಡಿಸಲಾದ ಅಧಿಸೂಚನೆಯ ಪ್ರಕಾರ ಹಾಜರಾಗದಿದ್ದರೆ, ಆ ವ್ಯಕ್ತಿ ಹಕ್ಕು ಕಳೆದುಕೊಳ್ಳುತ್ತಾನೆ. ನಿಧಿಗೆ ಸಂಬಂಧಿಸಿದಂತೆ ಇಬ್ಬರು ಅಥವಾ ಹೆಚ್ಚಿನವರು ಮಾಲೀಕತ್ವದ ಹಕ್ಕು ಮಂಡಿಸಿದರೆ, ಸಿವಿಲ್ ನ್ಯಾಯಾಲಯದ ತೀರ್ಪು ಬರುವವರೆಗೆ ನಿಧಿಯನ್ನು ಸಂರಕ್ಷಿಸುವ ಜವಾಬ್ದಾರಿ ಜಿಲ್ಲಾಧಿಕಾರಿಯದ್ದಾಗಿರುತ್ತದೆ. ಮಾಲೀಕರನ್ನು ಗುರುತಿಸಲು ಸಾಧ್ಯವಾಗದಿದ್ದರೆ ಅಥವಾ ನಿಧಿಗೆ ಹೆಚ್ಚಿನ ಐತಿಹಾಸಿಕ ಮೌಲ್ಯವಿದ್ದರೆ, ಸರ್ಕಾರ ಅದನ್ನು ಸ್ವಾಧೀನಪಡಿಸಿಕೊಳ್ಳಬಹುದು. ನಿಧಿ ಸಿಕ್ಕ ವಿಷಯವನ್ನು ವರದಿ ಮಾಡದೇ ಮರೆಮಾಡುವುದು ಅಥವಾ ಮಾರಾಟ ಮಾಡುವುದು ಅಪರಾಧವಾಗಿದ್ದು, ಜೈಲು ಶಿಕ್ಷೆ ಅಥವಾ ದಂಡ ವಿಧಿಸಲಾಗುತ್ತದೆ. 100 ವರ್ಷಕ್ಕಿಂತ ಹಳೆಯ ವಸ್ತುಗಳನ್ನು ‘ಪ್ರಾಚೀನ ವಸ್ತುಗಳು ಮತ್ತು ಕಲಾನಿಧಿಗಳ ಕಾಯ್ದೆ–1972’ ಅಡಿಯಲ್ಲಿ ನಿಯಂತ್ರಿಸಲಾಗುತ್ತದೆ. ಈ ಕಾಯ್ದೆಯ ಉದ್ದೇಶ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪುರಾತತ್ವ ಮಹತ್ವದ ವಸ್ತುಗಳನ್ನು ಸಂರಕ್ಷಿಸುವುದಾಗಿದೆ. ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಚಾಲನೆ ಜನವರಿ 10ರಂದು ಲಕ್ಕುಂಡಿಯಲ್ಲಿ ಪ್ರಾಚೀನ ಆಭರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಜನವರಿ 16ರಿಂದ ಈ ಸ್ಥಳದಲ್ಲಿ ಉತ್ಖನನ ಆರಂಭಿಸಲು ನಿರ್ಧರಿಸಿದೆ. ಜೊತೆಗೆ ಮುಕ್ತ ವಸ್ತುಸಂಗ್ರಹಾಲಯ ಸ್ಥಾಪಿಸಲು ಖಾಸಗಿ ಮಾಲೀಕರಿಂದ ಮೂರು ಎಕರೆ ಭೂಮಿಯನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ. ಗದಗದ ಲಕ್ಕುಂಡಿ ಪರಂಪರೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಮಂಗಳವಾರ ರಾತ್ರಿ ಪುರಾತತ್ವ ಅಧಿಕಾರಿಗಳಾದ ಆರ್. ಶೇಜೇಶ್ವರ್ ಮತ್ತು ರಮೇಶ್ ಮೂಲಿಮನಿ ಅವರಿಗೆ ಆಭರಣಗಳ ಫೋಟೋಗಳು ಮತ್ತು ವೀಡಿಯೊಗಳನ್ನು ಹಸ್ತಾಂತರಿಸಿದ್ದಾರೆ. “ಈ ಮೊದಲು ಆಭರಣಗಳ ತೂಕವನ್ನು ಮಾತ್ರ ದಾಖಲಿಸಲಾಗಿತ್ತು. ನಂತರ ಎಲ್ಲಾ ವಸ್ತುಗಳ ಉದ್ದ ಮತ್ತು ಅಗಲವನ್ನು ಫೋಟೋಗಳು ಹಾಗೂ ವೀಡಿಯೊಗಳೊಂದಿಗೆ ದಾಖಲಿಸಲಾಗಿದೆ. ಪುರಾತತ್ವ ಇಲಾಖೆಯ ವರದಿ ಬಂದ ಬಳಿಕ ಜಿಲ್ಲಾಡಳಿತ ಅಧಿಸೂಚನೆ ಹೊರಡಿಸುತ್ತದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರ ನಡುವೆ, ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ ಎನ್. ಪುಷ್ಪಾ ಅವರು, ಉತ್ಖನನ ಸ್ಥಳದ ಪಕ್ಕದಲ್ಲಿರುವ ಮೂರು ಎಕರೆ ಭೂಮಿಯನ್ನು 1.6 ಕೋಟಿ ರೂ. ವೆಚ್ಚದಲ್ಲಿ ಖರೀದಿಸುವ ಪ್ರಸ್ತಾವನೆಯನ್ನು ಸರ್ಕಾರ ಅನುಮೋದಿಸಿದೆ ಎಂದು ಹೇಳಿದ್ದಾರೆ. ನವೆಂಬರ್ 2024ರಲ್ಲಿ ಪತ್ತೆಯಾದ 1,300ಕ್ಕೂ ಹೆಚ್ಚು ಪ್ರಾಚೀನ ವಸ್ತುಗಳನ್ನು ಸಂರಕ್ಷಿಸಲು ಈ ಮುಕ್ತ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುತ್ತಿದೆ. ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ಉತ್ಖನನ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ ಅನುಮತಿ ನೀಡಿದ್ದು, ಹಿರಿಯ ಪುರಾತತ್ವಶಾಸ್ತ್ರಜ್ಞ ಟಿ.ಎಂ. ಕೇಶವ್ ಅವರನ್ನು ನಿರ್ದೇಶಕರಾಗಿ ಮತ್ತು ಆರ್. ಶೇಜೇಶ್ವರ್ ಅವರನ್ನು ಸಹ-ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
West Bengal | S I R ವಿಚಾರಣೆ; ಬಿಡಿಒ ಕಚೇರಿಗಳಿಗೆ ಗುಂಪು ದಾಳಿ, ಇನ್ಸ್ಪೆಕ್ಟರ್ ಗೆ ಗಂಭೀರ ಗಾಯ
ಕೋಲ್ಕತಾ, ಜ.15: ಉತ್ತರ ದಿನಾಜ್ಪುರದ ಚಕುಲಿಯಾ ಪ್ರದೇಶದಲ್ಲಿ ಗುರುವಾರ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆ (ಎಸ್ಐಆರ್) ವಿಚಾರಣೆಗಳ ಸಂದರ್ಭದಲ್ಲಿ ಟಿಎಂಸಿ ಬೆಂಬಲಿತರೆನ್ನಲಾದ ಪ್ರತಿಭಟನಾಕಾರರು ಪೊಲೀಸರ ಮೇಲೆ ಇಟ್ಟಿಗೆಗಳನ್ನು ತೂರಿದ್ದಾರೆ. ಈ ವೇಳೆ ಸ್ಥಳೀಯ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಪ್ರತಿಭಟನಾಕಾರರು ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾದಲ್ಲಿ ಬಿಡಿಒ ಕಚೇರಿಯನ್ನು ಧ್ವಂಸಗೊಳಿಸಿದ್ದರು. ಎರಡೂ ಘಟನೆಗಳಲ್ಲಿ ಆಡಳಿತಾರೂಢ ಟಿಎಂಸಿ ಬೆಂಬಲಿತ ಪ್ರತಿಭಟನಾಕಾರರು ಭಾಗಿಯಾಗಿದ್ದಾರೆ ಎಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಸಿಪಿಎಂ ಆರೋಪಿಸಿವೆ. ಹಿಂಸಾಚಾರದ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಚುನಾವಣಾ ಆಯೋಗವು, ಚಕುಲಿಯಾ ಘಟನೆಯ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯ ಚುನಾವಣಾಧಿಕಾರಿಗಳಿಂದ ವಿವರವಾದ ವರದಿಯನ್ನು ಕೇಳಿದೆ. ಪ್ರದೇಶದಲ್ಲಿ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಉತ್ತರ ದಿನಾಜ್ಪುರ ಜಿಲ್ಲಾಧಿಕಾರಿಗೆ ಆಯೋಗ ನಿರ್ದೇಶನ ನೀಡಿದೆ. ಎಸ್ಐಆರ್ ವಿಚಾರಣೆಗಳಿಗೆ ಹಾಜರಾಗುವಂತೆ ಸೂಚಿಸಲಾಗಿದ್ದ ಜನಸಾಮಾನ್ಯರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪದ ವಿರುದ್ಧ ಪ್ರತಿಭಟಿಸಲು ಗುರುವಾರ ಚಕುಲಿಯಾದ ಕಹಾಟಾ ಪ್ರದೇಶದ ನಿವಾಸಿಗಳು ಬಿಡಿಒ ಕಚೇರಿ ಬಳಿಯ ರಾಜ್ಯ ಹೆದ್ದಾರಿಯನ್ನು ನಿರ್ಬಂಧಿಸಿದ್ದರು. ನಿರ್ಬಂಧ ತೆರವುಗೊಳಿಸಲು ಸ್ಥಳಕ್ಕೆ ಧಾವಿಸಿದ ಪೊಲೀಸರ ಮೇಲೆ ಗುಂಪು ಇಟ್ಟಿಗೆಗಳನ್ನು ತೂರಿದೆ. ಗುಂಪು ಬಿಡಿಒ ಕಚೇರಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿದ್ದು, ಅಲ್ಲಿದ್ದ ಪೀಠೋಪಕರಣಗಳು ಹಾಗೂ ಎಸ್ಐಆರ್ ಸಂಬಂಧಿತ ದಾಖಲೆಗಳಿಗೆ ಹಾನಿಯಾಗಿದೆ. ಪರಿಸ್ಥಿತಿ ನಿಯಂತ್ರಣ ಮೀರಿದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಪಡೆಗಳನ್ನು ಸ್ಥಳಕ್ಕೆ ಕರೆಸಲಾಗಿತ್ತು. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಪ್ರಯೋಗಿಸಿದರು. ಚಕುಲಿಯಾ ಘಟನೆ ರಾಜ್ಯದಲ್ಲಿ ಎಸ್ಐಆರ್ ವಿರುದ್ಧ ನಡೆದ ಅತ್ಯಂತ ಕೆಟ್ಟ ಪ್ರತಿಭಟನೆಗಳಲ್ಲಿ ಒಂದಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಹಿಂಸಾಚಾರದಲ್ಲಿ ಆಡಳಿತ ಪಕ್ಷವು ನೇರವಾಗಿ ಭಾಗವಹಿಸಿದ್ದೇ ಎಂಬುದು ಇನ್ನೂ ದೃಢಪಟ್ಟಿಲ್ಲ.
Google Trends: ಹೊಸ ಅಳಿಯನಿಗೆ ಸಂಕ್ರಾಂತಿ ದಿನ 158 ಬಗೆಯ ಖಾದ್ಯ ಉಣಬಡಿಸಿದ ಹೆಣ್ಣಿನ ಮನೆಯವರು!
ಆಂಧ್ರಪ್ರದೇಶದ ತೆನಾಲಿ ನಗರದಲ್ಲಿ, ಮೊದಲ ಸಂಕ್ರಾಂತಿಗೆ ಅಳಿಯನಿಗಾಗಿ ಕುಟುಂಬವೊಂದು 158 ಬಗೆಯ ಖಾದ್ಯಗಳನ್ನು ತಯಾರಿಸಿ ಗಮನ ಸೆಳೆದಿದೆ. ಇದು ಆಂಧ್ರದ ಸಂಪ್ರದಾಯದಂತೆ ಅಳಿಯನಿಗೆ ರಾಜಮರ್ಯಾದೆ ನೀಡುವ ಸಂಭ್ರಮ. ಸಿಹಿ, ತಿಂಡಿ, ಸಸ್ಯಾಹಾರಿ, ಮಾಂಸಾಹಾರಿ ಖಾದ್ಯಗಳ ವೈವಿಧ್ಯತೆ ಎಲ್ಲರನ್ನೂ ಬೆರಗುಗೊಳಿಸಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಿಟ್ಟೆ: ವಿನಯ ಹೆಗ್ಡೆಗೆ ಹುಟ್ಟೂರ ನುಡಿ ನಮನ ಕಾರ್ಯಕ್ರಮ
ಕಾರ್ಕಳ: ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಿಧನರಾದ ವಿನಯ ಹೆಗ್ಡೆ ಅವರಿಗೆ ನುಡಿನಮನ ಕಾರ್ಯಕ್ರಮ ಬುಧವಾರ ನಡೆಯಿತು. ನಿಟ್ಟೆ ಗ್ರಾಮದಲ್ಲಿ ಶೈಕ್ಷಣಿಕ, ವೈದ್ಯಕೀಯ ಹಾಗೂ ಔದ್ಯೋಗಿಕ ಕ್ರಾಂತಿ ನಡೆಸಿ ನಿಟ್ಟೆ ಗ್ರಾಮದ ಹೆಸರನ್ನು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ವಿನಯ ಹೆಗ್ಡೆಯವರ ಸಾಧನೆಗಳನ್ನು ನಿಟ್ಟೆ ಕೆಮ್ಮಣ್ಣು ದುರ್ಗಾ ಪರಮೇಶ್ವರಿ ದೇವಸ್ಥಾನದ ಅರ್ಚಕ ಪ್ರಸನ್ನ ಆಚಾರ್ಯ, ಕಾರ್ಕಳ ಜ್ಞಾನ ಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಧಾಕರ ಶೆಟ್ಟಿ, ನಿಟ್ಟೆ ವಿದ್ಯಾಸಂಸ್ಥೆಯ ಹಿರಿಯ ಅಧಿಕಾರಿ ಯೋಗೀಶ್ ಹೆಗ್ಡೆ, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಮುನಿಯಾಲು ಉದಯ ಕುಮಾರ್ ಶೆಟ್ಟಿ ಸ್ಮರಿಸಿ ವಿನಯ ಹೆಗ್ಡೆಯವರು ಗ್ರಾಮದ ಜನತೆಯ ಆಶ್ರಯದಾತರಾ ಗಿದ್ದರು ಎಂದು ನುಡಿನಮನ ಸಲ್ಲಿಸಿದರು. ವಿನಯ ಹೆಗ್ಡೆ ಅವರ ಪುತ್ರ ವಿಶಾಲ ಹೆಗ್ಡೆ ಅವರು ಮಾತನಾಡಿ ನಿಟ್ಟೆ ಗ್ರಾಮಸ್ಥರೊಂದಿಗೆ ತನ್ನ ತಂದೆಗೆ ಇದ್ದ ಪ್ರೀತಿ ಮತ್ತು ಅಭಿಮಾನಗಳ ಪ್ರತೀಕವಾಗಿ ನಿಟ್ಟೆಯ ಗ್ರಾಮಸ್ಥರು ಸೇರಿ ಸಲ್ಲಿಸಿದ ನುಡಿನಮನ ವಿನಯ ಹೆಗ್ಡೆಯವರ ಆತ್ಮಕ್ಕೆ ತೃಪ್ತಿ ನೀಡಲಿದೆ ಎಂದರು. ವಿನಯ ಹೆಗ್ಡೆಯವರ ಮೊಮ್ಮಗ ವಿರೇನ್ ಉಪಸ್ಥಿತರಿದ್ದರು. ನಿಟ್ಟೆ ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ವಿನಯ ಹೆಗ್ಡೆಯವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಅರವಿಂದ ಕುಮಾರ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
‘ಜನನಾಯಗನ್’ ಸೆನ್ಸಾರ್ ಪ್ರಮಾಣಪತ್ರ ವಿವಾದ | ಹೈಕೋರ್ಟ್ ಮೆಟ್ಟಲೇರುವಂತೆ ನಿರ್ಮಾಪಕರಿಗೆ ಸುಪ್ರೀಂಕೋರ್ಟ್ ಸೂಚನೆ
ಹೊಸದಿಲ್ಲಿ, ಜ.15: ನಟ–ರಾಜಕಾರಣಿ ವಿಜಯ್ ಅಭಿನಯದ ಜನನಾಯಗನ್ ಚಿತ್ರಕ್ಕೆ ಪ್ರಮಾಣಪತ್ರ ನೀಡಿಕೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ನ ವಿಭಾಗೀಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕರು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ. ಜನನಾಯಗನ್ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ಪಡೆಯುವಲ್ಲಿ ನಿರ್ಮಾಪಕರು ವಿಫಲರಾದ ಹಿನ್ನೆಲೆಯಲ್ಲಿ, ಜನವರಿ 9ರಂದು ತೆರೆಕಾಣಬೇಕಿದ್ದ ಚಿತ್ರದ ಬಿಡುಗಡೆ ಮುಂದೂಡಲಾಗಿದೆ. ಚಿತ್ರವನ್ನು ಪುನರ್ಪರಿಶೀಲನಾ ಸಮಿತಿಗೆ ಕಳುಹಿಸುವ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ) ಅಧ್ಯಕ್ಷರ ಆದೇಶವನ್ನು ನಿರ್ಮಾಪಕರು ಪ್ರಶ್ನಿಸಿಲ್ಲವೆಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಂಕರ್ ದತ್ತಾ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ. ಆದಾಗ್ಯೂ, ಈ ವಿಷಯದಲ್ಲಿ ಮದ್ರಾಸ್ ಹೈಕೋರ್ಟ್ನ ವಿಭಾಗೀಯ ಪೀಠವನ್ನು ಸಮೀಪಿಸಬಹುದೆಂದು ಸರ್ವೋಚ್ಚ ನ್ಯಾಯಾಲಯವು ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆ.ವಿ. ಪ್ರೊಡಕ್ಷನ್ಸ್ ಗೆ ತಿಳಿಸಿದೆ. ಪೊಂಗಲ್ ಹಬ್ಬ (ಮಕರ ಸಂಕ್ರಾಂತಿ)ದ ಸಂದರ್ಭ ಜನನಾಯಗನ್ ಬಿಡುಗಡೆಗೊಳ್ಳಬೇಕಿದ್ದರೂ ಆದೇಶ ನೀಡಿಕೆಯಲ್ಲಿ ವಿಳಂಬವಾಗಿರುವ ಕುರಿತು ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ದತ್ತಾ ಅವರು, “ಅರ್ಜಿಯನ್ನು ಸಲ್ಲಿಸಿದ ಒಂದೆರಡು ದಿನಗಳಲ್ಲೇ ವಿಚಾರಣೆ ಇತ್ಯರ್ಥವಾಗುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದು ಎಲ್ಲಾ ಪ್ರಕರಣಗಳಿಗೂ ಅನ್ವಯವಾಗಬೇಕು” ಎಂದು ಹೇಳಿದರು. ಈ ಅರ್ಜಿಯು ಜನವರಿ 6ರಂದು ಸಲ್ಲಿಕೆಯಾಗಿದ್ದು, ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಾಗ ಸಿಬಿಎಫ್ಸಿ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಹೊಂದಿದೆ ಎಂದರು. ಜನನಾಯಗನ್ ಚಿತ್ರದ ಸೆನ್ಸಾರ್ ಪ್ರಮಾಣಪತ್ರ ವಿವಾದಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ನ ವಿಭಾಗೀಯ ಪೀಠವು ಜನವರಿ 20ರಂದು ತೀರ್ಪು ನೀಡಲು ಪ್ರಯತ್ನಿಸಬೇಕೆಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ. ರಾಜಕೀಯದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ವಿಜಯ್ ನಿರ್ಧರಿಸಿರುವುದರಿಂದ, ಜನನಾಯಗನ್ ಅವರು ನಟಿಸಿರುವ ಕೊನೆಯ ಚಿತ್ರವಾಗಲಿದೆ. ಈ ಚಿತ್ರವನ್ನು 2026ರ ಜನವರಿ 9ರಂದು ಬಿಡುಗಡೆಗೊಳಿಸಲು ನಿರ್ಮಾಪಕರು ನಿರ್ಧರಿಸಿದ್ದರು.
ಉಡುಪಿ: ಬೈಕ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಉಡುಪಿ, ಜ.15: ಮಣಿಪಾಲ ಕಾಯಿನ್ ಸರ್ಕಲ್ ಬಳಿ ನಿಲ್ಲಿಸಿದ್ದ ಸ್ಕೂಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಕಿರಣ್ ಬಿ.ಎನ್.(32) ಹಾಗೂ ಶಿವಮೊಗ್ಗ ದುರನಮಲ್ಲಿ ನಿವಾಸಿ ಯೋಗೇಶ ನಾಯ್ಕ ಎನ್. (22) ಬಂಧಿತ ಆರೋಪಿಗಳು. 2025ರ ಆ.30ರಂದು ನಿಲ್ಲಿಸಿದ್ದ ಹೆರ್ಗಾ ಗ್ರಾಮದ ಪ್ರದೀಪ್ ಸಾಲ್ಯಾನ್ ಎಂಬವರ 30,000 ರೂ. ಮೌಲ್ಯದ ಸ್ಕೂಟರ್ನ್ನು ಕಳ್ಳರು ಕಳವು ಮಾಡಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಡಿವೈಎಸ್ಪಿ ಪ್ರಭು ಡಿ.ಟಿ. ಮಾರ್ಗದರ್ಶನದಲ್ಲಿ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ ಮಹೇಶ ಪ್ರಸಾದ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಅನಿಲ್ ಬಿ.ಎಂ., ಅಕ್ಷಯ ಕುಮಾರಿ ಎಸ್.ಎನ್., ಸಿಬ್ಬಂದಿಗಳಾದ ವಿಶ್ವಜಿತ್, ಚೇತನ್, ಅಜ್ಮಲ್, ರವಿರಾಜ್, ಮಂಜುನಾಥ ಅವರನ್ನು ಒಳಗೊಂಡ ತಂಡವು ಜ.7ರಂದು ಆರೋಪಿ ಗಳನ್ನು ಬಂಧಿಸಿ, ಸ್ಕೂಟರ್ ವಶಪಡಿಸಿಕೊಂಡಿದೆ. ಆರೋಪಿ ಕಿರಣ್ ಬಿ.ಎನ್. ವಿರುದ್ದ ಈ ಹಿಂದೆಯೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಸವೇಶ್ವರ ವೃತ್ತದ ಅಭಿವೃದ್ಧಿಗೆ ಬದ್ಧ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಕಲಬುರಗಿ (ಸೇಡಂ) : ಬಹು ದಿನಗಳ ಬೇಡಿಕೆ ಹಾಗೂ ನಗರ ಸೌಂದರ್ಯಕ್ಕೆ ಪುಷ್ಠಿ ನೀಡುವಂತಹ ಬಸವೇಶ್ವರ ವೃತ್ತದ ಅಭಿವೃದ್ಧಿಗೆ ಬದ್ಧವಾಗಿದ್ದೇನೆ. ಬೇಕಾದ ಕ್ರಮಗಳನ್ನು ಅನುಸರಿಸಿ ದುರಸ್ತಿ ಕೈಗೊಂಡು ಬಸವೇಶ್ವರ ವೃತ್ತವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು. ಸೇಡಂ ಪಟ್ಟಣ್ಣದ ಬಸವೇಶ್ವರ ವೃತ್ತಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ವಾಸ್ತು ತಜ್ಞ ಬಸರಾಜಪ್ಪ ಖಂಡೇರಾವ್ ಅವರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಸೇಡಂ ಪಟ್ಟಣದ ಹೃದಯ ಭಾಗದಲ್ಲಿ ಸ್ಥಾಪಿತವಾಗಿರುವ ಅಣ್ಣ ಬಸವಣ್ಣ ಅವರ ಅಶ್ವಾರೂಢ ಮೂರ್ತಿ ಹಾಗೂ ಅದರ ಸುತ್ತಲಿನ ಸ್ಥಳದ ಸೌಂದರ್ಯ ಹೆಚ್ಚಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು. ತಜ್ಞ ಖಂಡೇರಾವ್ ಅವರೊಟ್ಟಿಗೆ ಚರ್ಚಿಸಿದಂತೆ ಫ್ಲೋರಿಂಗ್, ಹಿಂಭಾಗ ಗೋಡೆ ಹಾಗೂ ಬಸವೇಶ್ವರ ಮೂರ್ತಿ ಸ್ಥಳದ ಸುತ್ತಲಿನ ಗ್ರ್ಯಾನೇಟ್ ದುರಸ್ತಿ ಕೈಗೊಳ್ಳಬೇಕಾಗಿದೆ ಎಂದರು. ಈ ವೇಳೆ ಮುಖಂಡರಾದ ಬಸವರಾಜ ಪಾಟೀಲ ಊಡಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಶ್ವನಾಥ ಪಾಟೀಲ ಬೊಮ್ಮನಹಳ್ಳಿ, ಕೃಷಿ ಸಮಾಜದ ಅಧ್ಯಕ್ಷ ಬಸವರಾಜ ರೇವಗೊಂಡ, ಪುರಸಭೆ ಮಾಜಿ ಅಧ್ಯಕ್ಷ ವೀರೇಂದ್ರ ರುದ್ನೂರು, ಶಿವರುದ್ರ ಕೊಳಕುರು, ಸತೀಶ್ ಪೂಜಾರಿ, ಸಂತೋಷ ತಳವಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸೇಡಂ ಪಟ್ಟಣದ ಬಸವೇಶ್ವರ ವೃತ್ತ ಸೇರಿದಂತೆ ಅಂಬಿಗ ಚೌಡಯ್ಯ, ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಳದ ಅಭಿವೃದ್ಧಿಯನ್ನು ಕೈಗೊಳ್ಳುವ ಕುರಿತು ವಾಸ್ತು ತಜ್ಞರೊಟ್ಟಿಗೆ ಚರ್ಚಿಸಿದ್ದೇನೆ. ಬರುವ ದಿನಗಳಲ್ಲಿ ಬೇಕಾದ ಅನುದಾನ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಂಡು ಈ ಮೂರು ಸ್ಥಳಗಳ ಅಭಿವೃದ್ಧಿಪಡಿಸಲಾಗುವುದು. - ಡಾ.ಶರಣಪ್ರಕಾಶ್ ಪಾಟೀಲ್ (ಸಚಿವ)
ವಿಶೇಷ ಕಾರ್ಯಾಚರಣೆ: ಖನಿಜ ಸಾಗಾಟದ 163 ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ
ಉಡುಪಿ, ಜ.15: ಉಡುಪಿ ಜಿಲ್ಲೆಯಲ್ಲಿ ಜ.14ರಂದು ಕಲ್ಲು ಮಣ್ಣು ಜಲ್ಲಿ ಮರಳುಗಳನ್ನು ಸಾಗಿಸುವ ವಾಹನಗಳ ಜಾಗೃತಿ ಮೂಡಿಸುವ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 832 ವಾಹನಗಳನ್ನು ಪರಿಶೀಲಿಸಲಾಗಿದ್ದು, 182 ವಾಹನಗಳಿಗೆ ನೋಟಿಸ್ಗಳನ್ನು ನೀಡಲಾಗಿದೆ. ಅಧಿಕ ಭಾರ ಹಾಗೂ ಇತರೆ ಅಪರಾಧಗಳಿ ಗಾಗಿ 66 ವಾಹನಗಳ ಮೇಲೆ ಸ್ಥಳದಲ್ಲಿ ದಂಡ ಹಾಕಿ 22,500ರೂ. ಹಣ ವಸೂಲಿ ಮಾಡಲಾಗಿದೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಒಂದು ವಾಹನದ ಮೇಲೆ ಪ್ರಕರಣ ದಾಖಲು ಮಾಡಲಾ ಗಿದ್ದು, 27 ವಾಹನಗಳನ್ನು ಗಣಿ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ(ಜ.8ರಿಂದ ಜ.14ರವರೆಗೆ) ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಸುವ ಕುರಿತು ಮಾಹಿತಿ ನೀಡುವ ನಿಟ್ಟಿನಲ್ಲಿ ಕರಪತ್ರ ಹಂಚುವ ಮೂಲಕ ಮಾಹಿತಿಯನ್ನು ನೀಡಲಾಗುತ್ತಿದೆ. ಈ ವೇಳೆ ಒಟ್ಟು 1240 ಕರಪತ್ರಗಳನ್ನು ಹಂಚಲಾಗಿದ್ದು, ಈಗಾಗಲೇ 163 ವಾಹನಗಳಿಗೆ ಸ್ಪೀಡ್ ಗವರ್ನರ್ನ್ನು ಅಳವಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆಲೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ
ಕುಂದಾಪುರ, ಜ.15: ಗಂಗೊಳ್ಳಿ ಪೊಲೀಸ್ ಠಾಣೆ ಹಾಗೂ ಆಲೂರು ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಲೂರಿನ ಶ್ರೀಮೂಕಾಂಬಿಕಾ ಸಭಾಭವನದಲ್ಲಿ ನಡೆಯಿತು. ಗಂಗೊಳ್ಳಿ ಠಾಣಾಧಿಕಾರಿ ಪವನ್ ನಾಯಕ್ ಮಾತನಾಡಿ, ಯಾವುದೇ ಉದ್ಯಮ, ವಹಿವಾಟಿನಲ್ಲಿ ಕಾನೂನು ಪಾಲನೆ ಅತ್ಯಗತ್ಯ. ವಾಹನ ಸಂಚಾರದಲ್ಲೂ ಅಗತ್ಯ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಪ್ರಮುಖವಾಗಿ ಗ್ರಾಮೀಣ ಭಾಗದ ಒಳ ರಸ್ತೆಗಳಲ್ಲಿ ಸಂಚರಿಸುವಾಗ ವಾಹನಗಳ ವೇಗ ಕಡಿಮೆ ಮಾಡಬೇಕು ಎಂದವರು ತಿಳಿಸಿದರು. ಎಸ್ಐ ಸುದರ್ಶನ್ ಮಾತನಾಡಿದರು. ಇದೇ ವೇಳೆ ಟಿಪ್ಪರ್, ಲಾರಿಗಳ ಅಕ್ರಮ, ವೇಗ ಹಾಗೂ ನಿರ್ಲಕ್ಷ್ಯತನದ ಸಂಚಾರದಿಂದಾಗಿ ಅಪಘಾತಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆಲೂರು ಹಾಗೂ ಹರ್ಕೂರು ಗ್ರಾಮದ ಎಲ್ಲ ಕಲ್ಲು, ಮಣ್ಣು ಜಲ್ಲಿ, ಮರಳು ಇತ್ಯಾದಿ ಸರಕು ಸಾಗಾಟದ ಲಾರಿ ಮಾಲಕರು, ಚಾಲಕರು, ಕಲ್ಲು ಕೋರೆಗಳ ಮಾಲಕರು, ಇತರೆ ವಾಹನಗಳ ಚಾಲಕ- ಮಾಲಕರೊಂದಿಗೆ ಕಾನೂನು ಮಾಹಿತಿಯನ್ನು ನೀಡಲಾಯಿತು. ಆಲೂರು ಗ್ರಾಪಂ ಅಧ್ಯಕ್ಷ ರಾಜೇಶ್ ಎನ್.ದೇವಾಡಿಗ, ಸದಸ್ಯರಾದ ರವಿ ಶೆಟ್ಟಿ, ಆಲೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ, ಲಾರಿ ಮಾಲಕರು, ಚಾಲಕರು, ಉದ್ಯಮಿಗಳು, ಇತರೆ ವಾಹನ ಚಾಲಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ಜೇವರ್ಗಿ | ಸಿದ್ಧರಾಮೇಶ್ವರರ ತತ್ವಾದರ್ಶ ಪಾಲಿಸಿ : ರವಿಚಂದ್ರ ಗುತ್ತೇದಾರ
ಜೇವರ್ಗಿ : ಶಿವಯೋಗಿ ಸಿದ್ದರಾಮೇಶ್ವರರ ಕಾಯಕ ತತ್ವಗಳು ಮತ್ತು ಆದರ್ಶಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ, ಅವು ಇಡೀ ಸಮಾಜಕ್ಕೆ ದಾರಿದೀಪವಾಗಿವೆ. ಪ್ರತಿಯೊಬ್ಬರೂ ಅವರ ಜೀವನ ಸಂದೇಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಭೋವಿ ಸಮಾಜದ ಮುಖಂಡ ರವಿಚಂದ್ರ ಗುತ್ತೇದಾರ್ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧದ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಶಿವಯೋಗಿ ಸಿದ್ದರಾಮೇಶ್ವರ ಜಯಂತಿ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ತಾಪಂ ಇಒ ರವಿಚಂದ್ರರೆಡ್ಡಿ, ಎಪಿಎಂಸಿ ಕಾರ್ಯದರ್ಶಿ ಸುಮಂಗಲಾದೇವಿ ಹೂಗಾರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ ಸಂಗನ್, ಪಶು ಇಲಾಖೆಯ ಸಹಾಯಕ ನಿರ್ದೇಶಕಿ ಡಾ.ಶೋಭಾ ಸಜ್ಜನ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಗುರುಶಾಂತಯ್ಯ ಗದ್ದಗಿಮಠ, ಸಂತೋಷ ಯಚಿ, ಸುರೇಖಾ ನಡಗೇರಿ, ಸಿದ್ದಣ್ಣ ಹುಲಕಲ್, ಭೀಮಾಶಂಕರ ಯಲಗೋಡ, ಶರಣು ಗುತ್ತೇದಾರ, ಮಲ್ಲಿಕಾರ್ಜುನ ದಂಡೂಲ್ಕರ್, ಸಾಯಬಣ್ಣ ಗುತ್ತೇದಾರ, ಭಗವಂತ್ರಾಯ ಬೆಣ್ಣೂರ, ಮೈಲಾರಿ ಗುಡೂರ, ಗಿರೀಶ್ ತುಂಬಗಿ, ರಾಜು ತಳವಾರ, ಸಂತೊಷ ಪೂಜಾರಿ ಗುಡೂರ, ಭೀಮರಾಯ ಖಾದ್ಯಾಪೂರ, ಸಾಯಬಣ್ಣ ಕಲ್ಯಾಣಕರ್, ಸಂತೋಷ ಸಂಗನ, ಬಾಪುಗೌಡ ಪಾಟೀಲ, ಗಂಗಾಧರ, ಮಕ್ಬೂಲ್ ಪಟೇಲ, ದಶರಥ ಇದ್ದರು.
PAK, IRAN ಸೇರಿದಂತೆ 75 ದೇಶಗಳಿಗೆ ವಲಸೆ ವೀಸಾ ಪ್ರಕ್ರಿಯೆ ಸ್ಥಗಿತ: ಅಮೆರಿಕ ಸೂಚನೆ
ವಾಷಿಂಗ್ಟನ್, ಜ.15: ಸಾರ್ವಜನಿಕ ಕಲ್ಯಾಣ ಪ್ರಯೋಜನಗಳ ಮೇಲೆ ಅವಲಂಬಿತವಾಗಿರುವ ಜನರಿಗೆ ಪ್ರವೇಶವನ್ನು ನಿರ್ಬಂಧಿಸುವ ನವೀಕೃತ ಪ್ರಯತ್ನದ ಭಾಗವಾಗಿ ಅಮೆರಿಕಾದ ವಿದೇಶಾಂಗ ಇಲಾಖೆಯು 75 ದೇಶಗಳ ಅರ್ಜಿದಾರರಿಗೆ ವಲಸೆ ವೀಸಾ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಸೂಚಿಸಿದೆ. ಕಾನ್ಸುಲರ್ ಕಚೇರಿಗಳಿಗೆ ರವಾನಿಸಿರುವ ಮೆಮೋ ಪ್ರಕಾರ, ಇಲಾಖೆ ತನ್ನ ಸ್ಕ್ರೀನಿಂಗ್ ಮತ್ತು ಪುನರ್ಪರಿಶೀಲನಾ ಕಾರ್ಯವಿಧಾನಗಳನ್ನು ಮರುಮೌಲ್ಯಮಾಪನ ಮಾಡುವ ಅವಧಿಯಲ್ಲಿ, ಅಸ್ತಿತ್ವದಲ್ಲಿರುವ ವಲಸೆ ಕಾನೂನುಗಳ ಅಡಿಯಲ್ಲಿ ವೀಸಾಗಳನ್ನು ನಿರಾಕರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕ್ರಮ ಜನವರಿ 21ರಿಂದ ಜಾರಿಗೆ ಬರಲಿದ್ದು, ಅನಿರ್ದಿಷ್ಟಾವಧಿಗೆ ಜಾರಿಯಲ್ಲಿರುತ್ತದೆ. ಪಾಕಿಸ್ತಾನ, ರಷ್ಯಾ, ಇರಾನ್, ಸೊಮಾಲಿಯಾ, ಅಫ್ಘಾನಿಸ್ತಾನ, ಬ್ರೆಜಿಲ್, ಇರಾಕ್, ಈಜಿಪ್ಟ್ ಸೇರಿದಂತೆ ಹಲವು ದೇಶಗಳು ಈ ಪಟ್ಟಿಯಲ್ಲಿ ಸೇರಿವೆ.
ಉಕ್ರೇನ್ ಶಾಂತಿ ಒಪ್ಪಂದ ಸ್ಥಗಿತಕ್ಕೆ ಝೆಲೆನ್ ಸ್ಕಿ ಕಾರಣ: ಅಮೆರಿಕ ಅಧ್ಯಕ್ಷ ಟ್ರಂಪ್
ವಾಷಿಂಗ್ಟನ್, ಜ.15: ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸುವ ಉದ್ದೇಶದ ಶಾಂತಿ ಯೋಜನೆ ಸ್ಥಗಿತಗೊಂಡಿರುವುದಕ್ಕೆ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿಯೇ ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಸಾವಿರಾರು ಜನರ ಸಾವಿಗೆ ಕಾರಣವಾದ ಸುಮಾರು ನಾಲ್ಕು ವರ್ಷಗಳ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಝೆಲೆನ್ಸ್ಕಿಯೇ ಮುಖ್ಯ ಅಡ್ಡಿಯಾಗಿದ್ದಾರೆ ಎಂದು ಶ್ವೇತಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಟ್ರಂಪ್ ಹೇಳಿದ್ದಾರೆ. ಒಪ್ಪಂದಕ್ಕೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸಿದ್ಧರಾಗಿದ್ದಾರೆ ಎಂದೂ ಅವರು ಹೇಳಿದ್ದಾರೆ. ಒಪ್ಪಂದಕ್ಕೆ ಯಾರು ಅಡ್ಡಿಯಾಗಿದ್ದಾರೆ ಎಂಬ ಪ್ರಶ್ನೆಗೆ ‘ಝೆಲೆನ್ಸ್ಕಿ, ಒಪ್ಪಂದದ ಹಾದಿಯಲ್ಲಿ ಮುಂದುವರಿಯಲು ಅಧ್ಯಕ್ಷ ಝೆಲೆನ್ಸ್ಕಿಯನ್ನು ಸಿದ್ಧಪಡಿಸಬೇಕಿದೆ’ ಎಂದು ಟ್ರಂಪ್ ಉತ್ತರಿಸಿದರು. ಗುಪ್ತಚರ ಮಾಹಿತಿ ಹಂಚಿಕೆಯ ಮೂಲಕ ಉಕ್ರೇನ್ ಗೆ ಭದ್ರತಾ ಖಾತರಿ ಒದಗಿಸುವ ಅಮೆರಿಕ ಪ್ರಸ್ತಾಪವನ್ನು ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ, ‘ನಾವು ಏನಾದರೂ ಮಾಡಲು ಸಾಧ್ಯವಾದರೆ ಸಹಾಯ ಮಾಡುತ್ತೇವೆ. ಯುದ್ಧದಲ್ಲಿ ಅವರು ತಿಂಗಳಿಗೆ ಸುಮಾರು 30,000 ಯೋಧರನ್ನು ಕಳೆದುಕೊಳ್ಳುತ್ತಿದ್ದಾರೆ’ ಎಂದು ಉತ್ತರಿಸಿದ್ದಾರೆ.
Gazaದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಹೆಚ್ಚಳ: ಅಧ್ಯಯನ ವರದಿಯಲ್ಲಿ ಉಲ್ಲೇಖ
ಇಸ್ರೇಲ್ ದಾಳಿಯಿಂದ ಆರೋಗ್ಯ ವ್ಯವಸ್ಥೆಗಳಿಗೆ ಹಾನಿ
‘ಎಡೆದೊರೆನಾಡು ರಾಯಚೂರು ಜಿಲ್ಲಾ ಉತ್ಸವ’ ಫೆ.6ಕ್ಕೆ ಮುಂದೂಡಿಕೆ : ಹೆಚ್ಚುವರಿ ಜಿಲ್ಲಾಧಿಕಾರಿ ಆದೇಶ
ರಾಯಚೂರು: ಜಿಲ್ಲೆಯಲ್ಲಿ ಜ. 29ರಿಂದ ಮೂರು ದಿನಗಳ ಕಾಲ ನಡೆಯಬೇಕಿದ್ದ ‘ಎಡೆದೊರೆನಾಡು ರಾಯಚೂರು ಜಿಲ್ಲಾ ಉತ್ಸವ’ವನ್ನು ಇದೀಗ ಫೆಬ್ರವರಿ 6, 7 ಮತ್ತು 8ಕ್ಕೆ ಮುಂದೂಡಲಾಗಿದೆ. ಜಿಲ್ಲಾಧಿಕಾರಿ ನಿತಿಶ್ ಕೆ. ಅವರ ನಿರ್ದೇಶನದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ. ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಸುಮಾರು 24 ವರ್ಷಗಳ ಸುದೀರ್ಘ ವಿರಾಮದ ನಂತರ ರಾಯಚೂರು ಜಿಲ್ಲಾ ಉತ್ಸವವನ್ನು ಜ. 29, 30 ಮತ್ತು 31ರಂದು ಆಚರಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಉತ್ಸವದ ಯಶಸ್ವಿಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ 22 ಉಪ ಸಮಿತಿಗಳನ್ನು ರಚಿಸಲಾಗಿದ್ದು, ಪೂರ್ವ ಸಿದ್ಧತಾ ಸಭೆಗಳೂ ಪೂರ್ಣಗೊಂಡಿವೆ. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ವೇದಿಕೆ ನಿರ್ಮಾಣ ಸೇರಿದಂತೆ ಬಹುತೇಕ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದವು. ಆದರೆ, ಈಗ ಅನಿವಾರ್ಯ ಕಾರಣಗಳಿಂದಾಗಿ ಉತ್ಸವದ ದಿನಾಂಕವನ್ನು ಫೆಬ್ರವರಿಗೆ ಮುಂದೂಡಲಾಗಿದ್ದು, ಜಿಲ್ಲಾಡಳಿತದ ಈ ಹಠಾತ್ ನಿರ್ಧಾರಕ್ಕೆ ನಿಖರ ಕಾರಣಗಳು ಇನ್ನು ತಿಳಿದುಬಂದಿಲ್ಲ.
ಮಾನ್ವಿ | ಜ.18ರಂದು ಉಚಿತ ಸಾಮೂಹಿಕ ವಿವಾಹ : ಯು.ಟಿ. ಖಾದರ್ ಸಹಿತ ಹಲವು ಸಚಿವರ ಆಗಮನ
ಮಾನ್ವಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (APMC) ಪಕ್ಕದ ಬಯಲು ಜಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಮುಸ್ಲಿಂ ಸಮುದಾಯದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಸಿದ್ಧತೆಗಳನ್ನು ಶಾಸಕ ಹಂಪಯ್ಯನಾಯಕ ಹಾಗೂ ಕಾಂಗ್ರೆಸ್ ಯುವ ಮುಖಂಡ ರವಿ ಬೋಸರಾಜು ಅವರು ಮಂಗಳವಾರ ಪರಿಶೀಲಿಸಿದರು. ಪ್ರಥಮ ದರ್ಜೆ ಗುತ್ತಿಗೆದಾರರಾದ ಸೈಯದ್ ಅಕ್ಬರ್ ಪಾಷಾ ಹುಸೇನಿ ಅವರ ನೇತೃತ್ವದಲ್ಲಿ ಈ ವಿವಾಹ ಮಹೋತ್ಸವ ಜರುಗಲಿದೆ. ಸಿದ್ಧತೆ ಪರಿಶೀಲಿಸಿದ ನಂತರ ಮಾತನಾಡಿದ ರವಿ ಬೋಸರಾಜು, ಜ.18 ರಂದು ನಡೆಯಲಿರುವ ಈ ಸಂಭ್ರಮದ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಚ್ಚುಕಟ್ಟಾದ ವ್ಯವಸ್ಥೆ ಕೈಗೊಳ್ಳಲು ಸಂಘಟಕರಿಗೆ ಮತ್ತು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಪಿಐ ಸೋಮಶೇಖರ್, ಎಸ್. ಕೆಂಚರೆಡ್ಡಿ, ಸೈಯದ್ ಅಕ್ಬರ್ ಪಾಷಾ ಹುಸೇನಿ, ಕಾಂಗ್ರೆಸ್ ಮುಖಂಡರಾದ ಖಾಲಿದ್ ಖಾದ್ರಿ, ಅಮ್ಜದ್ ಸೇಠ್, ರಾಜಾ ಸುಭಾಶ್ಚಂದ್ರನಾಯಕ, ಚಂದ್ರಶೇಖರ್ ಕುರುಡಿ, ಆರ್. ಗುರುನಾಥ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಶೀರೂರು ಪರ್ಯಾಯ: ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ
ಉಡುಪಿ, ಜ.15: ಶೀರೂರು ಪರ್ಯಾಯದ ಪ್ರಯುಕ್ತ ಇದೇ ಮೊದಲ ಬಾರಿ ಕೈಗೊಂಡ ಉಡುಪಿ ನಗರ ವಿದ್ಯುತ್ ದೀಪಾಲಂಕಾರವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರು ಇಂದು ಸಂಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಆಡಳಿತಾಧಿಕಾರಿಯೂ ಆಗಿರುವ ಸ್ವರೂಪ ಟಿ.ಕೆ.,ಮೊದಲ ಬಾರಿಗೆ ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ವಿಶಿಷ್ಟವಾಗಿ ಸಿಂಗಾರಗೊಂಡ ನಗರ, ಪರ್ಯಾಯದ ಸಿದ್ಧತೆಗಳು ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದು ಸಂತೋಷ ಉಂಟು ಮಾಡುತ್ತಿದೆ ಎಂದರು. ನಗರದ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ, ಪರ್ಯಾಯ ಕಾರ್ಯಕ್ರಮಕ್ಕೆ ಹೆಚ್ವಿನ ಮೆರುಗು ನೀಡಲು ಈ ಬಾರಿ ವಿಶೇಷ ವಿದ್ಯುದ್ದೀಪಾಲಂಕಾರದ ವ್ಯವಸ್ಥೆಯನ್ನು ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಮಾಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ವಿದ್ಯುದ್ದೀಪಾಲಂಕಾರ ವ್ಯವಸ್ಥೆ ಮಾಡಿದ ಕೃಷ್ಣ ಕುಲಾಲ್ ಅವರನ್ನು ಶಾಸಕರು ಅಭಿನಂದಿಸಿದರು. ಶೀರೂರು ಪರ್ಯಾಯಕ್ಕೆ ಉಡುಪಿ ನಗರ ಮದುವಣಗಿತ್ತಿಯಂತೆ ಸಿಂಗಾರ ಗೊಂಡಿದೆ. ಇದರ ಮೆರುಗು ಹೆಚ್ಚಿಸಲು ಈ ಬಾರಿ ಉಡುಪಿ ನಗರಸಭೆ ಅನುದಾನದೊಂದಿಗೆ 50ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಕೆನರಾಬ್ಯಾಂಕ್ನ ಜಿ.ಎಂ. ಗಂಗಾಧರ್, ನಗರಸಭೆ ಆಯುಕ್ತ ಮಹಾಂತೇಶ್, ನಗರಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ರಜನಿ ಹೆಬ್ಬಾರ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಮಹಿಳಾ ಘಟಕದ ಪದ್ಮಲತಾ, ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್, ವಿಷ್ಣುಮೂರ್ತಿ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ | ಸಿದ್ಧರಾಮೇಶ್ವರರ ತತ್ವಗಳು ಅಳವಡಿಸಿಕೊಳ್ಳಿ : ಮರಲಿಂಗ ಹೊನಗುಂಟಿಕರ್
ಕಲಬುರಗಿ : ಸೊನ್ನಲಗಿಯ ಕರ್ಮಯೋಗಿ ಸಿದ್ಧರಾಮೇಶ್ವರರ ವಚನಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ತತ್ವ ಸಿದ್ಧಾಂತಗಳು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮರಲಿಂಗ ಹೊನಗುಂಟಿಕರ್ ಅಭಿಪ್ರಾಯಪಟ್ಟರು. ನಿಗಮದ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಿದ್ದ ಕರ್ಮಯೋಗಿ ಸಿದ್ಧರಾಮೇಶ್ವರರ ಅವರ ಜಯಂತಿ ನಿಮಿತ್ತ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈ ವೇಳೆ ತಾಲೂಕು ಅಭಿವೃದ್ಧಿ ಅಧಿಕಾರಿಗಳಾದ ಸತೀಶ್ ಕುಮಾರ, ಲಗಮಣ್ಣ ಸಿಬ್ಬಂದಿಗಳಾದ ಸಂಜೀವಕುಮಾರ, ಮಹೇಶ ಗುತ್ತೇದಾರ, ಸುನೀಲ, ದೇವೇಂದ್ರ ದೋತ್ರೆ, ಚನ್ನಬಸಪ್ಪ, ಸುನೀಲ್ ಪ್ರತಾಪೆ, ವಿವೇಕ ನಂದಿ, ರಂಗಪ್ಪ, ಹೊನ್ನಪ್ಪ, ರಮೇಶ, ರಾಮಣ್ಣ ಭಂಡಾರಿ, ವಿದ್ಯಾನಂದ ವಡೆಯರ ದಾನಮ್ಮ ಸೇರಿದಂತೆ ಇತರರರು ಇದ್ದರು.
Exit Poll BMC Election 2026: ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಎನ್ಡಿಎ ವಿಕ್ಟರಿ, ಗೆಲ್ಲವು ಸೀಟುಗಳೆಷ್ಟು?
ನವದೆಹಲಿ: ಮಹಾರಾಷ್ಟ್ರದ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿ ಒಟ್ಟು 28 ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯಿತು. ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಆಕ್ಸಿಸ್ ಮೈ ಇಂಡಿಯಾದ ನಿರ್ಗಮನ ಸಮೀಕ್ಷೆ (BMC Axis My India Exit Poll 2026) ಪ್ರಕಟಿಸಿತು. ಅದರ ಪ್ರಕಾರ, ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಸಾಧಿಸಲಿದೆ. ಉದ್ಧವ್ ಠಾಕ್ರೆ
Haseena Themali Contribution To TMM 2026- ಓಟಗಾರ್ತಿ ಹಸೀನಾ ಥೆಮಾಲಿ ಅವರು ಟಾಟಾ ಮುಂಬೈ ಮ್ಯಾರಥಾನ್ನಲ್ಲಿ ಮೊದಲ ಬಾರಿಗೆ ₹5,01,001 ನಿಧಿ ಸಂಗ್ರಹಿಸಿದ್ದಾರೆ. 95 ದಾನಿಗಳ ನೆರವಿನಿಂದ ಕರ್ನಾಟಕದಲ್ಲಿ ಪ್ಯಾಲಿಯೇಟಿವ್ ಕೇರ್ ಸೇವೆಗಳ ಬಲವರ್ಧನೆಗೆ ಇದು ಕೊಡುಗೆ ನೀಡಿದೆ. ಅಂತಿಮ ಹಂತದ ಕ್ಯಾನ್ಸರ್ ರೋಗಿಗಳಿಗೆ ಉಚಿತ ಸೇವೆ ಒದಗಿಸುವ ತಪಸ್ಯಾ ಫೌಂಡೇಶನ್ ಪರವಾಗಿ ಈ ನಿಧಿ ಸಂಗ್ರಹ ನಡೆದಿದೆ. ಸಂಗ್ರಹಿಸಿದ ಹಣ ಮಂಗಳೂರಿನಲ್ಲಿ ವಿಶ್ವಮಟ್ಟದ ಪ್ಯಾಲಿಯೇಟಿವ್ ಕೇರ್ ಕೇಂದ್ರ ನಿರ್ಮಾಣಕ್ಕೆ ಬಳಕೆಯಾಗಲಿದೆ.
ಮಣಿಕರ್ಣಿಕಾ ಘಾಟ್ ನ ಪುನರಾಭಿವೃದ್ಧಿ: ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
ಹೊಸದಿಲ್ಲಿ, ಜ.15: ಇಲ್ಲಿಯ ಮಣಿಕರ್ಣಿಕಾ ಘಾಟ್ ನ ಪುನರಾಭಿವೃದ್ಧಿ ಕುರಿತು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆತ್ತಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ತಮ್ಮ ಸ್ವಂತ ನಾಮಫಲಕವನ್ನು ಹಾಕಿಕೊಳ್ಳಲು ಪ್ರತಿಯೊಂದೂ ಐತಿಹಾಸಿಕ ಪರಂಪರೆಯನ್ನು ಅಳಿಸಲು ಅವರು ಬಯಸಿದ್ದಾರೆ ಎಂದು ಆರೋಪಿಸಿದ್ದಾರೆ. ಗುಪ್ತರ ಯುಗದ್ದೆಂದು ಉಲ್ಲೇಖಿಸಲಾಗಿರುವ ಮತ್ತು ನಂತರ ಲೋಕಮಾತಾ ಅಹಿಲ್ಯಾಬಾಯಿ ಹೋಳ್ಕರ್ ಅವರಿಂದ ನವೀಕರಿಸಲ್ಪಟ್ಟಿದ್ದ ಅಪರೂಪದ ಪ್ರಾಚೀನ ಸ್ಮಾರಕ ಮಣಿಕರ್ಣಿಕಾ ಘಾಟ್ನ್ನು ಪುನರಾಭಿವೃದ್ಧಿಯ ನೆಪದಲ್ಲಿ ನೆಲಸಮಗೊಳಿಸಿದ ಅಪರಾಧವನ್ನು ನೀವು ಎಸಗಿದ್ದೀರಿ ಎಂದು ಖರ್ಗೆ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ. ಸುಂದರೀಕರಣ ಮತ್ತು ವಾಣಿಜ್ಯೀಕರಣದ ಹೆಸರಿನಲ್ಲಿ ವಾರಣಾಸಿಯಲ್ಲಿನ ಶತಮಾನಗಳಷ್ಟು ಹಳೆಯದಾದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ನೆಲಸಮಗೊಳಿಸಲು ಮೋದಿ ಬುಲ್ಡೋಜರ್ಗಳಿಗೆ ಆದೇಶಿಸಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ‘ಮೋದಿಜಿ… ನೀವು ಪ್ರತಿಯೊಂದೂ ಐತಿಹಾಸಿಕ ಪರಂಪರೆಯನ್ನು ಅಳಿಸಿ ನಿಮ್ಮ ಹೆಸರನ್ನು ಹಾಕಿಕೊಳ್ಳಲು ಬಯಸಿದ್ದೀರಿ’ ಎಂದು ಅವರು ಕುಟುಕಿದ್ದಾರೆ. ಮಣಿಕರ್ಣಿಕಾ ಘಾಟ್ ನ ಪುನರಾಭಿವೃದ್ಧಿಯಡಿ ನಡೆದ ನೆಲಸಮ ಕಾರ್ಯಾಚರಣೆಯನ್ನು ವಿರೋಧಿಸಿರುವ ಪ್ರತಿಭಟನಾಕಾರರು, ಶತಮಾನಗಳಷ್ಟು ಹಳೆಯದಾದ ಅಹಿಲ್ಯಾಬಾಯಿ ಹೋಳ್ಕರ್ ಪ್ರತಿಮೆಗೆ ಹಾನಿಯಾಗಿದೆ ಎಂದು ಆರೋಪಿಸಿದ್ದಾರೆ. ಕಾರಿಡಾರ್ ನಿರ್ಮಾಣದ ಹೆಸರಿನಲ್ಲಿ ಹಲವಾರು ಸಣ್ಣ ಮತ್ತು ದೊಡ್ಡ ದೇವಸ್ಥಾನಗಳು ಹಾಗೂ ಆರಾಧನಾ ಸ್ಥಳಗಳನ್ನು ಕೆಡವಲಾಗಿದೆ. ಈಗ ಪ್ರಾಚೀನ ಘಾಟ್ಗಳ ಸರದಿಯಾಗಿದೆ ಎಂದು ಖರ್ಗೆ ಹೇಳಿದ್ದಾರೆ. ವಿಶ್ವದ ಅತ್ಯಂತ ಪ್ರಾಚೀನ ನಗರವಾಗಿರುವ ಕಾಶಿ ಇಡೀ ಜಗತ್ತನ್ನೇ ಆಕರ್ಷಿಸುತ್ತಿರುವ ಆಧ್ಯಾತ್ಮಿಕತೆ, ಸಂಸ್ಕೃತಿ ಮತ್ತು ಇತಿಹಾಸದ ಸಂಗಮವಾಗಿದೆ ಎಂದು ಅವರು ಹೇಳಿದ್ದಾರೆ. ‘ನಿಮ್ಮ ಉದ್ಯಮ ಸಹವರ್ತಿಗಳಿಗೆ ಲಾಭ ಮಾಡಿಕೊಡುವುದೇ ಇವೆಲ್ಲದರ ಹಿಂದಿನ ಉದ್ದೇಶವೇ? ನೀವು ನೀರು, ಅರಣ್ಯಗಳು ಮತ್ತು ಪರ್ವತಗಳನ್ನು ಅವರಿಗೆ ಒಪ್ಪಿಸಿದ್ದೀರಿ. ಈಗ ನಮ್ಮ ಸಾಂಸ್ಕೃತಿಕ ಪರಂಪರೆಯ ಸರದಿ ಬಂದಿದೆ’ ಎಂದು ಖರ್ಗೆ ಹೇಳಿದ್ದಾರೆ. ‘ಪರಂಪರೆಯನ್ನು ರಕ್ಷಿಸಿಕೊಂಡೇ ನವೀಕರಣ, ಸ್ವಚ್ಛತೆ ಮತ್ತು ಸುಂದರೀಕರಣ ಸಾಧ್ಯವಿಲ್ಲವೇ ಎಂಬುದು ಈ ದೇಶದ ಜನರ ಪ್ರಶ್ನೆಯಾಗಿದೆ. ನಿಮ್ಮ ಸರ್ಕಾರವು ಯಾರೊಂದಿಗೂ ಸಮಾಲೋಚಿಸದೆ ಮಹಾತ್ಮಾ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾನ್ ಭಾರತೀಯ ವ್ಯಕ್ತಿಗಳ ಪ್ರತಿಮೆಗಳನ್ನು ಸಂಸತ್ ಸಂಕೀರ್ಣದಿಂದ ತೆಗೆದು ಒಂದು ಮೂಲೆಯಲ್ಲಿ ಇರಿಸಿದ್ದನ್ನು ಇಡೀ ದೇಶ ಮರೆತಿಲ್ಲ. ಜಲಿಯನ್ ವಾಲಾ ಬಾಗ್ ನಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಇದೇ ನವೀಕರಣದ ಹೆಸರಿನಲ್ಲಿ ಗೋಡೆಗಳಿಂದ ಅಳಿಸಿಹಾಕಲಾಗಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ. ಬುಲ್ಡೋಜರ್ ಗಳಿಗೆ ಬಲಿಯಾದ ಮಣಿಕರ್ಣಿಕಾ ಘಾಟ್ ನಲ್ಲಿನ ಶತಮಾನಗಳಷ್ಟು ಹಳೆಯ ಪ್ರತಿಮೆಗಳನ್ನೇಕೆ ನಾಶಗೊಳಿಸಲಾಗಿದೆ? ಅವುಗಳನ್ನು ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಬಹುದಿತ್ತಲ್ಲವೇ? ‘ಗಂಗಾಮಾತೆ ನನ್ನನ್ನು ಕರೆದಿದ್ದಾಳೆ’ ಎಂದು ನೀವು ಹೇಳಿಕೊಂಡಿದ್ದೀರಿ. ಇಂದು ನೀವು ಗಂಗಾಮಾತೆಯನ್ನೇ ಮರೆತಿದ್ದೀರಿ. ವಾರಣಾಸಿಯ ಘಾಟ್ಗಳು ಈ ನಗರದ ಗುರುತು. ಈ ಘಾಟ್ಗಳನ್ನು ಜನರು ಪ್ರವೇಶಿಸದಂತೆ ಮಾಡಲು ನೀವು ಬಯಸಿದ್ದೀರಾ?’ ಎಂದು ಖರ್ಗೆ ಪ್ರಶ್ನಿಸಿದ್ದಾರೆ. ಪ್ರತಿವರ್ಷ ಲಕ್ಷಾಂತರ ಜನರು ಮೋಕ್ಷವನ್ನು ಪಡೆಯಲು ತಮ್ಮ ಜೀವನದ ಕೊನೆಯ ಹಂತಗಳಲ್ಲಿ ಕಾಶಿಗೆ ಬರುತ್ತಾರೆ. ಈ ಭಕ್ತರ ನಂಬಿಕೆಗಳಿಗೆ ದ್ರೋಹವೆಸಗುವುದೇ ನಿಮ್ಮ ಉದ್ದೇಶವೇ? ಎಂದು ಖರ್ಗೆ ಮೋದಿಯವರನ್ನು ಕುಟುಕಿದ್ದಾರೆ.
ಕಾಮನ್ವೆಲ್ತ್ ಸ್ಪೀಕರ್ಗಳು, ಸಭಾಧ್ಯಕ್ಷರ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ; ಸ್ಪೀಕರ್ ಯುಟಿ ಖಾದರ್ ಭಾಗಿ
ಹೊಸದಿಲ್ಲಿ: ದಿಲ್ಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ್ ಸದನದ ಸೆಂಟ್ರಲ್ ಹಾಲ್ ನಲ್ಲಿ ಕಾಮನ್ ವೆಲ್ತ್ ಸ್ಪೀಕರ್ ಗಳು ಮತ್ತು ಸಭಾಧ್ಯಕ್ಷರ 28ನೇ ಸಮ್ಮೇಳನ ನಡೆಯಿತು. ಸಮ್ಮೇಳನದಲ್ಲಿ ಕರ್ನಾಟಕದ ಸ್ಪೀಕರ್ ಯುಟಿ ಖಾದರ್ ಭಾಗವಹಿಸಿದರು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸ್ಪೀಕರ್ ಪಾತ್ರ ವಿಶಿಷ್ಟವಾಗಿದೆ. ಸ್ಪೀಕರ್ ಗೆ ಹೆಚ್ಚು ಮಾತನಾಡಲು ಅವಕಾಶವಿಲ್ಲ, ಆದರೆ ಅವರ ಜವಾಬ್ದಾರಿ ಇತರರ ಮಾತು ಗಳನ್ನು ಕೇಳುವುದು ಮತ್ತು ಪ್ರತಿಯೊಬ್ಬರೂ ಅವಕಾಶ ಪಡೆಯುವಂತೆ ನೋಡಿಕೊಳ್ಳುವುದು ಎಂದು ಹೇಳಿದರು. ತಾಳ್ಮೆಯು ಸ್ಪೀಕರ್ ಗಳ ಅತ್ಯಂತ ಸಾಮಾನ್ಯ ಲಕ್ಷಣವಾಗಿದೆ. ಗದ್ದಲ ಮಾಡುವ ಮತ್ತು ಅತಿಯಾದ ಉತ್ಸಾಹ ಭರಿತ ಸದಸ್ಯರನ್ನು ಕೂಡ ಅವರು ನಗುನಗುತ್ತಾ ನಿರ್ವಹಿಸುತ್ತಾರೆ ಎಂದು ಪ್ರಧಾನಿ ಹೇಳಿದರು. ಸ್ವಾತಂತ್ರ್ಯದ ನಂತರ 75 ವರ್ಷಗಳ ಕಾಲ ಈ ಕಟ್ಟಡವು ಭಾರತದ ಸಂಸತ್ತಾಗಿ ಕಾರ್ಯನಿರ್ವಹಿಸಿತ್ತು. ಇಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹಲವಾರು ನಿರ್ಣಾಯಕ ನಿರ್ಧಾರಗಳು ಮತ್ತು ಚರ್ಚೆಗಳು ನಡೆದವು ಎಂದು ಪ್ರಧಾನಿ ಹೇಳಿದರು. ಭಾರತವು ಈಗ ಈ ಐತಿಹಾಸಿಕ ಸ್ಥಳವನ್ನು ಸಂವಿಧಾನ್ ಸದನ ಎಂದು ಹೆಸರಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅರ್ಪಿಸಿದೆ ಎಂದು ಮೋದಿ ಹೇಳಿದರು. ಇತ್ತೀಚೆಗೆ ಭಾರತವು ತನ್ನ ಸಂವಿಧಾನದ ಅನುಷ್ಠಾನದ 75 ವರ್ಷಗಳನ್ನು ಆಚರಿಸಿದೆ. ಸಂವಿಧಾನ್ ಸದನದಲ್ಲಿ ಎಲ್ಲಾ ಗಣ್ಯ ಅತಿಥಿಗಳ ಉಪಸ್ಥಿತಿಯು ಭಾರತದ ಪ್ರಜಾಪ್ರಭುತ್ವಕ್ಕೆ ಬಹಳ ವಿಶೇಷವಾದ ಕ್ಷಣವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತದಲ್ಲಿ ಕಾಮನ್ವೆಲ್ತ್ ಸ್ಪೀಕರ್ಗಳು ಮತ್ತು ಸಭಾಧ್ಯಕ್ಷರ ಸಮ್ಮೇಳನ ನಡೆಯುತ್ತಿರುವುದು ಇದು ನಾಲ್ಕನೇ ಬಾರಿಯಾಗಿದೆ. ಸಂಸದೀಯ ಪ್ರಜಾಪ್ರಭುತ್ವದ ಪರಿಣಾಮಕಾರಿ ಅನುಷ್ಠಾನ ಈ ಸಮ್ಮೇಳನದ ಪ್ರಮುಖ ವಿಷಯ ಎಂದು ಪ್ರಧಾನಿ ಮೋದಿ ಹೇಳಿದರು.
Kerala | ಸಾಯ್ ಹಾಸ್ಟೆಲ್ ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಕೊಲ್ಲಂ, ಜ.15: ಇಲ್ಲಿಯ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್ ನಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೋಝಿಕೋಡ್ನ ಸಾಂಡ್ರಾ (17) ಮತ್ತು ತಿರುವನಂತಪುರ ನಿವಾಸಿ ವೈಷ್ಣವಿ (15) ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ಐದು ಗಂಟೆಯ ಸುಮಾರಿಗೆ ಈ ದುರಂತ ಬೆಳಕಿಗೆ ಬಂದಿದೆ. ಬಾಲಕಿಯರು ತರಬೇತಿಗೆ ಹಾಜರಾಗಿರಲಿಲ್ಲ. ಹೀಗಾಗಿ ಪರಿಶೀಲಿಸಲು ಅಧಿಕಾರಿಗಳು ಅವರ ಕೊಠಡಿಗೆ ತೆರಳಿದ್ದರು. ಪದೇಪದೇ ಕರೆದರೂ ಯಾವುದೇ ಪ್ರತಿಕ್ರಿಯೆ ದೊರೆಯದ ಕಾರಣ ಸಿಬ್ಬಂದಿಗಳು ಬಲಪ್ರಯೋಗದಿಂದ ಬಾಗಿಲು ತೆರೆದು ಒಳಪ್ರವೇಶಿಸಿ ನೋಡಿದಾಗ, ಬಾಲಕಿಯರ ಮೃತದೇಹಗಳು ಸೀಲಿಂಗ್ ಫ್ಯಾನ್ ಗಳಿಂದ ನೇತಾಡುತ್ತಿದ್ದವು. ಜೊತೆಯಲ್ಲಿ ತರಬೇತಿ ಪಡೆಯುತ್ತಿದ್ದ ಇತರ ವಿದ್ಯಾರ್ಥಿನಿಯರು, ಇಬ್ಬರೂ ಬಾಲಕಿಯರು ತಡರಾತ್ರಿ ಒಟ್ಟಿಗಿದ್ದನ್ನು ನೋಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಾವುಗಳ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಚೀಟಿ ಪತ್ತೆಯಾಗಿಲ್ಲ. ಸಾವುಗಳಿಗೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. 12ನೇ ತರಗತಿಯಲ್ಲಿ ಓದುತ್ತಿದ್ದ ಸಾಂಡ್ರಾ ಅಥ್ಲೆಟಿಕ್ಸ್ ನಲ್ಲಿ ತರಬೇತಿ ಪಡೆಯುತ್ತಿದ್ದರೆ, ಕಬಡ್ಡಿ ಆಟಗಾರ್ತಿ ವೈಷ್ಣವಿ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಸಾಮಾನ್ಯವಾಗಿ ಬೇರೆ ಕೊಠಡಿಯಲ್ಲಿ ಉಳಿಯುತ್ತಿದ್ದ ವೈಷ್ಣವಿ, ಬುಧವಾರ ರಾತ್ರಿ ಸಾಂಡ್ರಾಳ ಕೊಠಡಿಯಲ್ಲಿ ತಂಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗಳ ಬಳಿಕ ಪೊಲೀಸರು ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಿದ್ದಾರೆ.
Bengaluru | ದ್ವಿಚಕ್ರ ವಾಹನದಿಂದ ಬಿದ್ದು ಆರು ವರ್ಷದ ಬಾಲಕಿ ಮೃತ್ಯು
ಬೆಂಗಳೂರು 5: ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಆರು ವರ್ಷದ ಬಾಲಕಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ವಿಜಯನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ ಲೇಔಟ್ ನಿವಾಸಿ ಪರಮೇಶ್ವರ್ ಎಂಬುವರ ಪುತ್ರಿ ಹಾರಿಕಾ(6) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಪರಮೇಶ್ವರ್ ಅವರು ಬುಧವಾರ(ಜ.14) ಸಂಜೆ 6 ಗಂಟೆ ಸುಮಾರಿನಲ್ಲಿ ಮಗಳು ಹಾರಿಕಾಳನ್ನು ದ್ವಿಚಕ್ರ ವಾಹನದ ಹಿಂಬದಿ ಕೂರಿಸಿಕೊಂಡು ವೆಸ್ಟ್ ಆಫ್ ಕಾರ್ಡ್ ರಸ್ತೆಯ ಶಿವನಹಳ್ಳಿ ಡೌನ್ ರ್ಯಾಂಪ್ ಬಳಿ ಹೋಗುತ್ತಿದ್ದಾಗ ಬ್ರೇಕ್ ಹಾಕಿದ್ದಾರೆ. ಆ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬಾಲಕಿ ಗಂಭೀರ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದರಾದರೂ ರಾತ್ರಿ 9 ಗಂಟೆ ಸುಮಾರಿನಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ವಿಜಯನಗರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ | EDಯಿಂದ 21.45 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಹೊಸದಿಲ್ಲಿ, ಜ.15: ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED)ವು 21.45 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳಿಗೆ ಮುಟ್ಟುಗೋಲು ಹಾಕಿರುವುದಾಗಿ ರವಿವಾರ ವರದಿಯಾಗಿದೆ. 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಈ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ. ಅಕ್ರಮ ಬೆಟ್ಟಿಂಗ್ ದಂಧೆ ಹಾಗೂ ಅದಕ್ಕೆ ಸಂಬಂಧಿಸಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಹರಡಿರುವ ಅಕ್ರಮ ಹಣವರ್ಗಾವಣೆ ಚಟುವಟಿಕೆಗಳನ್ನು ಮಟ್ಟಹಾಕುವ ಪ್ರಯತ್ನಗಳ ಭಾಗವಾಗಿ ಜಾರಿ ನಿರ್ದೇಶನಾಲಯ ಈ ಕ್ರಮ ಕೈಗೊಂಡಿದೆ. ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಇತರ ಪ್ರಾಂತಗಳಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಬೆಟ್ಟಿಂಗ್ ಜಾಲಕ್ಕೆ ಸಂಬಂಧಿಸಿದಂತೆ ಈ ತನಿಖೆ ನಡೆಯುತ್ತಿದೆ. ಮಹಾದೇವ ಬೆಟ್ಟಿಂಗ್ ಸಂಸ್ಥೆ ಪ್ರವರ್ತಕರು, ಸಮಿತಿಯ ನಿರ್ವಾಹಕರು ಹಾಗೂ ಏಜೆಂಟರ ಸಂಕೀರ್ಣ ಜಾಲದ ಮೂಲಕ ಕಾರ್ಯಾಚರಿಸುತ್ತಿತ್ತು. ಡಿಜಿಟಲ್ ಪ್ಲಾಟ್ಫಾರಂಗಳನ್ನು ಬಳಸಿಕೊಂಡು ಅಕ್ರಮ ಬೆಟ್ಟಿಂಗ್ ದಂಧೆಯನ್ನು ನಡೆಸುತ್ತಿದ್ದುದಾಗಿ ಜಾರಿ ನಿರ್ದೇಶನಾಲಯದ ತನಿಖೆಯಿಂದ ತಿಳಿದುಬಂದಿದೆ. ಬೋಗಸ್ ಕಂಪನಿಗಳು, ಬೇನಾಮಿ ಖಾತೆಗಳು ಹಾಗೂ ಅಕ್ರಮ ಹಣಕಾಸು ವರ್ಗಾವಣೆ ಸೇರಿದಂತೆ ವಿವಿಧ ವಿಧಾನಗಳ ಮೂಲಕ ನಿಧಿಗಳನ್ನು ಸಂಗ್ರಹಿಸುತ್ತಿತ್ತೆನ್ನಲಾಗಿದೆ. ಬೆಟ್ಟಿಂಗ್ ದಂಧೆಯಿಂದ ಲಭಿಸಿದ ಲಾಭಾಂಶದ ಪೈಕಿ ಶೇ.70ರಿಂದ ಶೇ.75ರಷ್ಟು ಹಣವು ಸ್ಕೀಮ್ನ ಮುಖ್ಯ ಪ್ರವರ್ತಕರಿಗೆ ಸೇರಿದ್ದು, ಉಳಿದ ಹಣವನ್ನು ಏಜೆಂಟರಿಗೆ ವಿತರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮುಟ್ಟುಗೋಲು ಹಾಕಿದ ಆಸ್ತಿಗಳು ಬೆಟ್ಟಿಂಗ್ ಕಾರ್ಯಾಚರಣೆಗಳನ್ನು ನಿರ್ವಹಿಸುವ, ಖಾತೆಗಳನ್ನು ನಿಭಾಯಿಸುವ ಹಾಗೂ ಡಿಜಿಟಲ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಮಹಾದೇವ ಪ್ಲಾಟ್ಫಾರಂ ಅನ್ನು ಪ್ರಚಾರ ಮಾಡುತ್ತಿದ್ದವರಿಗೆ ಸೇರಿದವುಗಳಾಗಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.
ರಾಜಸ್ಥಾನ ರಾಜಧಾನಿಗೆ ಹರಿದುಬಂದ ವಿಶ್ವವಿಖ್ಯಾತ ಸಾಹಿತಿ–ಕಲಾವಿದರ ದಂಡು
Bangladesh ಕ್ರಿಕೆಟ್ ಬಿಕ್ಕಟ್ಟು: ನಿರ್ದೇಶಕ ಎಂ. ನಝ್ಮುಲ್ ಇಸ್ಲಾಂರನ್ನು ವಜಾಗೊಳಿಸಿದ ಬಿಸಿಬಿ
ಬಾಂಗ್ಲಾ ಕ್ರಿಕೆಟಿಗರು ದೇಶೀಯ ಕ್ರಿಕೆಟ್ ಬಹಿಷ್ಕಾರದ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕ್ರಮ
Maharashtra ಸ್ಥಳೀಯ ಸಂಸ್ಥೆ ಚುನಾವಣೆ | ಅಕ್ರಮಗಳು ನಡೆದಿವೆ; ಇದು ಪ್ರಜಾಪ್ರಭುತ್ವದ ಹತ್ಯೆ: ಉದ್ಧವ್ ಠಾಕ್ರೆ ಆರೋಪ
ಮುಂಬೈ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಕ್ರಮಗಳು ನಡೆದಿದ್ದು, ಇದು ಪ್ರಜಾಪ್ರಭುತ್ವದ ಹತ್ಯೆಗೆ ಮಾಡಿದ ಪ್ರಯತ್ನವಾಗಿದೆ ಎಂದು ಗುರುವಾರ ಶಿವಸೇನೆ (ಉದ್ಧವ್ ಬಣ)ದ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ. ನಗರ ಪಾಲಿಕೆಗಳ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ. ಗುರುವಾರ ಮುಂಬೈ ಸೇರಿದಂತೆ ಮಹಾರಾಷ್ಟ್ರ ರಾಜ್ಯದ 29 ನಗರ ಪಾಲಿಕೆಗಳ ಚುನಾವಣೆಗೆ ಮತದಾನ ನಡೆಯಿತು. ಸುದ್ದಿಗಾರರೊಂದಿಗೆ ಮಾತನಾಡಿದ ಉದ್ಧವ್ ಠಾಕ್ರೆ, ಚುನಾವಣಾ ಆಯೋಗವು ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗ ಹಾಗೂ ಸರಕಾರ ಪರಸ್ಪರ ಕೈಜೋಡಿಸಿವೆ ಎಂದು ಆರೋಪಿಸಿದ ಅವರು, ರಾಜ್ಯ ಮುಖ್ಯ ಚುನಾವಣಾ ಆಯುಕ್ತ ದಿನೇಶ್ ವಾಘ್ಮರೆಯನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.
ಉಡುಪಿ ರೈಲು ನಿಲ್ದಾಣದಲ್ಲಿ 2.4 ಕೋಟಿ ವೆಚ್ಚದ ಸೌಲಭ್ಯಗಳ ಲೋಕಾರ್ಪಣೆ; 2 ರೈಲು ವಿಸ್ತರಣೆ ಭರವಸೆ ನೀಡಿದ ಸಂಸದ ಕೋಟ
ಉಡುಪಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಬಹುದಿನದ ಬೇಡಿಕೆ ಈಡೇರಿದೆ. ಸುಮಾರು 2.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಹೊಸ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ನಿಲ್ದಾಣಕ್ಕೆ ಹೊಸ ಮೆರುಗನ್ನು ನೀಡಲಾಗಿದೆ. ಕರಾವಳಿ ಜಿಲ್ಲೆಗಳ ರೈಲು ನಿಲ್ದಾಣಗಳ ಮೇಲ್ದರ್ಜೆಗೇರಿಸಲು 100 ಕೋಟಿ ರೂ.ಗಳ ಕಾಮಗಾರಿಗೆ ಅನುಮೋದನೆ ದೊರೆತಿದೆ. ಮುಂದಿನ ದಿನಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ.
ಕುಷ್ಟಗಿ | ಹಿರಿಯ ನಾಗರಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ
ಕುಷ್ಟಗಿ : ಗ್ರಾಮದ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ಹನುಮಸಾಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು. ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ಆಯುಷ್ ಇಲಾಖೆ ಹಾಗೂ ಕಲಿಕೆ–ಟಾಟಾ ಟ್ರಸ್ಟ್ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಈ ಶಿಬಿರಕ್ಕೆ ಹಿರಿಯ ನಾಗರಿಕರಿಂದ ಉತ್ತಮ ಸ್ಪಂದನೆ ದೊರೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಮೂಲಿಮನಿ ಉದ್ಘಾಟಿಸಿದರು. ಆಯುಷ್ ಇಲಾಖೆ ಆರೋಗ್ಯಾಧಿಕಾರಿ (ಕುಷ್ಟಗಿ) ಡಾ. ವಿಜಯಲಕ್ಷ್ಮಿ, ಹನುಮಸಾಗರದ ವೈದ್ಯಾಧಿಕಾರಿ ಡಾ.ದೀಪಿಕಾ, ಆಯುಷ್ ಫಾರ್ಮಸಿ ಅಧಿಕಾರಿ ಸುಧಾಕರ್ (ಕುಷ್ಟಗಿ), ಐಸಿಟಿಸಿ ಕೌನ್ಸಿಲರ್ ಚನ್ನಬಸಪ್ಪ ಹನುಮನಾಳ, ಐಸಿಟಿಸಿ ಲ್ಯಾಬ್ ಟೆಕ್ನಿಷಿಯನ್ ಎ.ಎಸ್. ಅಂತರಗಂಗಿ, ಸಿಎಚ್ಒ ಬೀರಪ್ಪ, ಗ್ರಾಮ ಪಂಚಾಯಿತಿ ಗ್ರಂಥಾಲಯದ ಗ್ರಂಥಪಾಲಕಿ ದುರ್ಗಮ್ಮ ಹಿರೇಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ವಿಜಯಲಕ್ಷ್ಮಿ ಅವರು, ಹಿರಿಯ ನಾಗರಿಕರು ಪ್ರತಿಮಾಸ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ. ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಂಡು ಸಮಯಕ್ಕೆ ಸರಿಯಾಗಿ ಊಟ, ಔಷಧ ಸೇವನೆ ಮಾಡಬೇಕು. ಸಕ್ಕರೆ ಕಾಯಿಲೆ, ರಕ್ತದೊತ್ತಡ, ಮೊಣಕಾಲು–ಕುತ್ತಿಗೆ ನೋವು, ಅಸಿಡಿಟಿ, ನಿದ್ರಾಭಂಗ ಹಾಗೂ ಏಕಾಂಗಿತನದಂತಹ ಸಮಸ್ಯೆಗಳಿಂದ ದೂರವಿರಲು ಕಲಿಕೆ–ಟಾಟಾ ಟ್ರಸ್ಟ್ ನೀಡಿರುವ ಉಪಕರಣಗಳನ್ನು ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಉದ್ಘಾಟನಾ ಭಾಷಣದಲ್ಲಿ ನಿಂಗಪ್ಪ ಮೂಲಿಮನಿ ಅವರು, ಹಿರಿಯರು ನವಣೆ, ಸಾವಕ್ಕಿ ಮೊದಲಾದ ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಚಹಾ ಸೇವನೆ ಕಡಿಮೆ ಮಾಡಿ, ಕೆಟ್ಟ ಅಭ್ಯಾಸಗಳನ್ನು ತ್ಯಜಿಸಬೇಕು. ಹಿರಿಯ ನಾಗರಿಕರ ಕೇಂದ್ರಕ್ಕೆ ಬಂದು ಹೆಚ್ಚು ಸಮಯವನ್ನು ಉಪಯುಕ್ತವಾಗಿ ಕಳೆಯಬೇಕು. ಕಲಿಕೆ–ಟಾಟಾ ಟ್ರಸ್ಟ್ ಈಗಾಗಲೇ ನೀಡಿರುವ ಆರೋಗ್ಯ ಉಪಕರಣಗಳು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಲಭ್ಯವಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ವೈದ್ಯಾಧಿಕಾರಿ ಡಾ. ದೀಪಿಕಾ ಅವರು ಮಾತನಾಡಿ, ಆರೋಗ್ಯ ಇಲಾಖೆ ಪ್ರತಿ ತಿಂಗಳು ಹಿರಿಯರಿಗಾಗಿ ಬಿಪಿ ಹಾಗೂ ಶುಗರ್ ತಪಾಸಣೆ ನಡೆಸುತ್ತಿದೆ. ಅಗತ್ಯ ಔಷಧಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಹಿರಿಯರು ಸಮಯಕ್ಕೆ ಸರಿಯಾಗಿ ತಪಾಸಣೆ ಹಾಗೂ ಔಷಧ ಸೇವನೆ ಮಾಡಬೇಕು ಎಂದು ಮನವಿ ಮಾಡಿದರು. ಐಸಿಟಿಸಿ ಕೌನ್ಸಿಲರ್ ಚನ್ನಬಸಪ್ಪ ಹನುಮನಾಳ ಅವರು ಅಸ್ತಮಾ, ಶ್ವಾಸಕೋಶ ಸಂಬಂಧಿ ರೋಗಗಳು, ಟಿಬಿ ಹಾಗೂ ಎಚ್ಐವಿ ಕುರಿತು ಮುಂಜಾಗ್ರತೆ ವಹಿಸುವಂತೆ ತಿಳಿಸಿದರು. ಕಲಿಕೆ–ಟಾಟಾ ಟ್ರಸ್ಟ್ ಸಂಯೋಜಕ ಸಿದ್ದಲಿಂಗ ರೆಡ್ಡಿ ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಿದ್ದಲಿಂಗ ರೆಡ್ಡಿ ವಹಿಸಿದ್ದರು. ಈ ಶಿಬಿರದಲ್ಲಿ ಸುಮಾರು 150ಕ್ಕೂ ಹೆಚ್ಚು ಹಿರಿಯ ನಾಗರಿಕರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಕೊಂಡರು.
ಹೊಸದಿಲ್ಲಿ: ತನಗೆ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಅತ್ಯಾಚಾರ ಅಪರಾಧಿ ಕುಲ್ದೀಪ್ ಸಿಂಗ್ ಸೆಂಗರ್ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿ, ಮತ್ತಷ್ಟು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ದಾಖಲಿಸಲು ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ ಗುರುವಾರ ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಿಜೆಪಿಯ ಮಾಜಿ ನಾಯಕ ಕುಲ್ದೀಪ್ ಸಿಂಗ್ ಸೆಂಗರ್ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಅರ್ಜಿಯೊಂದನ್ನು ಸಲ್ಲಿಸಿರುವ ಸಂತ್ರಸ್ತೆ, ಇತ್ತೀಚಿನ ಬೆಳವಣಿಗೆಗಳು ಹಾಗೂ ನನಗೆ ಮತ್ತು ನನ್ನ ಕುಟುಂಬಕ್ಕೆ ಇರುವ ಬೆದರಿಕೆಯನ್ನು ತೋರಿಸಲು ನ್ಯಾಯಾಲಯದ ಮುಂದೆ ವಾಸ್ತವಾಂಶಗಳು ಮತ್ತು ದಾಖಲೆಗಳನ್ನು ಮಂಡಿಸಲು ಬಯಸಿದ್ದೇನೆ ಎಂದು ತಿಳಿಸಿದ್ದಾರೆ. ನನ್ನ ಜನ್ಮದಿನಾಂಕಕ್ಕೆ ಸಂಬಂಧಿಸಿ, ಉನ್ನಾಂವ್ ನಗರದಲ್ಲಿನ ನಾನು ವ್ಯಾಸಂಗ ಮಾಡುತ್ತಿದ್ದ ಶಾಲೆಯ ಇಬ್ಬರು ಅಧಿಕಾರಿಗಳ ಸಾಕ್ಷ್ಯವನ್ನು ದಾಖಲಿಸಿಕೊಳ್ಳುವಂತೆ ಸೂಚನೆ ನೀಡಬೇಕು ಎಂದು ಈ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸೆಂಗರ್ ತನಿಖೆಯ ಮೇಲೆ ಪ್ರಭಾವ ಬೀರಿದ್ದು, ಇದೀಗ ಮೇಲ್ಮನವಿಯೂ ಆಧರಿಸಿರುವ ನನ್ನ ವಯಸ್ಸಿಗೆ ಸಂಬಂಧಿಸಿದ ತಿದ್ದುಪಡಿ ಮಾಡಲಾದ ಹಾಗೂ ಸುಳ್ಳು ದಾಖಲೆಗಳನ್ನು ತನಿಖೆಯ ವೇಳೆ ಬಳಸಿಕೊಳ್ಳಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಕುಲ್ದೀಪ್ ಸಿಂಗ್ ಸೆಂಗರ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಅಂತಿಮ ಹಂತದಲ್ಲಿದೆ ಎಂಬುದನ್ನು ಗಮನಕ್ಕೆ ತೆಗೆದುಕೊಂಡ ನ್ಯಾ. ಪ್ರತಿಭಾ ಎಂ. ಸಿಂಗ್ ಮತ್ತು ನ್ಯಾ. ಮಧು ಜೈನ್ ಅವರನ್ನು ಒಳಗೊಂಡ ನ್ಯಾಯಪೀಠ, ಸಂತ್ರಸ್ತೆಯ ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಪಟ್ಟಿ ಮಾಡಿದೆ.
ಲಡಾಖ್ ನಲ್ಲಿ ಖಾಮಿನೈ ಪರ ರ್ಯಾಲಿ: ಕಾರ್ಗಿಲ್ ನ ಲಾಲ್ ಚೌಕ್ ನಲ್ಲಿ ನೂರಾರು ಮಂದಿ ಜಮಾವಣೆ
ಹೊಸದಿಲ್ಲಿ: ಇರಾನ್ ನಲ್ಲಿ ಉಂಟಾಗಿರುವ ಆಂತರಿಕ ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ, ಅದರ ಸರ್ವೋಚ್ಚ ನಾಯಕ ಖಾಮಿನೈ ಪರ ಬೆಂಬಲ ವ್ಯಕ್ತಪಡಿಸಲು ಇಮಾಮ್ ಖೊಮೇನಿ ಸ್ಮಾರಕ ಟ್ರಸ್ಟ್ ಕಾರ್ಗಿಲ್ನಲ್ಲಿ ರ್ಯಾಲಿಯೊಂದನ್ನು ಆಯೋಜಿಸಲಾಗಿತ್ತು ಎಂದು Times of India ವರದಿ ಮಾಡಿದೆ. ಇರಾನ್ ನ ಆಂತರಿಕ ಬೆಳವಣಿಗೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಹಿನ್ನೆಲೆ, ಅದರ ಸರ್ವೋಚ್ಚ ನಾಯಕ ಅಯತುಲ್ಲಾ ಸೈಯದ್ ಅಲಿ ಖಾಮಿನೈ ಪರ ಕಾರ್ಗಿಲ್ನ ವಿವಿಧ ಸ್ಥಳಗಳಲ್ಲಿ ರ್ಯಾಲಿಗಳನ್ನು ನಡೆಸಲಾಯಿತು. ಝೈನಾಬಿಯಾ ಚೌಕ್ನಿಂದ ಪ್ರಾರಂಭಗೊಂಡ ಮೆರವಣಿಗೆ ಘಾತಿಮಾ ಚೌಕ್ ಹಾಗೂ ಇಸ್ನಾ ಅಶಾರಿಯಾ ಚೌಕ್ ಮೂಲಕ ಸಾಗಿತು. ಮತ್ತೊಂದು ಮೆರವಣಿಗೆ ಜಾಮಿಯಾ ಮಸೀದಿಯಿಂದ ಆರಂಭಗೊಂಡು ಲಾಲ್ ಚೌಕ್ ಹಾಗೂ ಖೊಮೇನಿ ಚೌಕ್ ಮೂಲಕ ಹಾದು ಹೋಯಿತು. ಈ ಎಲ್ಲ ಮೆರವಣಿಗೆಗಳು ಮುಖ್ಯ ಸಭೆ ಆಯೋಜಿಸಲಾಗಿದ್ದ ಕಾರ್ಗಿಲ್ನ ಹಳೆಯ ಟ್ಯಾಕ್ಸಿ ಸ್ಟ್ಯಾಂಡ್ ಬಳಿ ನೆರೆದವು. ಈ ರ್ಯಾಲಿಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಜನರು ಖಾಮಿನೈ ಅವರ ಬ್ಯಾನರ್ ಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಿರುವುದು ಕಂಡು ಬಂದಿದೆ. ಇರಾನ್ ನಲ್ಲಿ ಮುಂದುವರಿದಿರುವ ಆಂತರಿಕ ಪ್ರಕ್ಷುಬ್ಧತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ನಡುವೆಯೇ ಈ ರ್ಯಾಲಿ ನಡೆದಿದೆ. ಈ ನಡುವೆ, ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಹಾಗೂ ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿರುವ ಇರಾನ್, ಅಮೆರಿಕ ಇರಾನ್ನಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ, ದೇಶದ ಆಂತರಿಕ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುತ್ತಿದೆ ಮತ್ತು ಇರಾನ್ ಮೇಲೆ ಸೇನಾ ಕಾರ್ಯಾಚರಣೆ ನಡೆಸುವ ಬೆದರಿಕೆ ಒಡ್ಡುತ್ತಿದೆ ಎಂದು ಆರೋಪಿಸಿರುವ ಅಧಿಕೃತ ಪತ್ರವನ್ನು ಬುಧವಾರ ಹಂಚಿಕೊಂಡಿದೆ.
ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ನಿಂದ ‘ನರೇಗ ಬಜಾವ್ ಸಂಗ್ರಾಮ್’ ಆಂದೋಲನ
ಮಂಗಳೂರು, ಜ.15: ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಬಚಾವ್ ಸಂಗ್ರಾಮ್ ಪೂರ್ವಭಾವಿ ಸಭೆ ಗುರುವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಬಡ ಕಾರ್ಮಿಕರು ಹಾಗೂ ಪಂಚಾಯತ್ಗಳ ಅಭಿವೃದ್ಧಿಗೆ ಪೂರಕವಾಗಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಕೇಂದ್ರ ಬಿಜೆಪಿ ಸರಕಾರ ಬದಲಿಸಿರುವುದನ್ನು ಖಂಡಿಸಿ ಮತ್ತು ಕಾಯ್ದೆ ಮರುಜಾರಿಗೆ ಆಗ್ರಹಿಸಿ ಎಐಸಿಸಿ ಯ ಸೂಚನೆ ಮೇರೆಗೆ ಹಾಗೂ ಕೆಪಿಸಿಸಿಯ ನಿರ್ದೇಶನದ ಮೇರೆಗೆ ‘ನರೇಗ ಬಜಾವ್ ಸಂಗ್ರಾಮ್’ ಆಂದೋಲನವನ್ನು ದ.ಕ. ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ತಿಳಿಸಿದರು. ವಿ.ಬಿ.ಜಿ.ರಾಮ್ ಜಿ ಯೋಜನೆಯ ಹೆಸರು ಬದಲಿಸುವುದು ಮಾತ್ರವಲ್ಲ ಜನರ ಜೀವನೋಪಾಯ ಹಾಗೂ ಪಂಚಾಯತ್ಗಳ ಅಧಿಕಾರವನ್ನು ಕೇಂದ್ರ ಸರಕಾರ ಕಸಿದುಕೊಂಡಿದೆ. ಇದು ದೇಶದ ಗ್ರಾಮೀಣ ಕಾರ್ಮಿಕರ ಪಾಲಿನ ಮರಣ ಶಾಸನವಾಗಿದೆ ಎಂದು ಹೇಳಿದರು. *ಸುಳ್ಯದಿಂದ ಮೂಲ್ಕಿ ತನಕ ಪಾದಯಾತ್ರೆ: ಜ.31ರ ಒಳಗಾಗಿ ಪ್ರತಿ ವಿಧಾನಸಭಾ ವ್ಯಾಪ್ತಿಗಳಲ್ಲಿ ‘ಮನರೇಗಾ ಬಜಾವ್ ಸಂಗ್ರಾಮ್’ ಪಾದಯಾತ್ರೆ ಆಯೋಜಿಸುವುದು, ಜ.21ರಂದು ಕುದ್ಮುಲ್ ರಂಗರಾವ್ ಪುರಭವನದ ಬಳಿ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹ, ಫೆ.9, 10 ಮತ್ತು 11ರಂದು ಸುಳ್ಯದಿಂದ ಮುಲ್ಕಿವರೆಗೆ ಮೂರು ದಿನಗಳ ಕಾಲ ಪಾದಯಾತ್ರೆ ನಡೆಸುವುದು, ಇತ್ತೀಚಿಗೆ ಕೆಪಿಸಿಸಿ ಸಭೆಯಲ್ಲಿ ನಡೆದ ಎಲ್ಲ ಕಾರ್ಯಕ್ರಮ ಮತ್ತು ಸೂಚನೆಗಳನ್ನು ಸುಸೂತ್ರವಾಗಿ ಅನುಷ್ಠಾನ ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಲಾ ಶೆಟ್ಟಿ, ಸುಳ್ಯ ವಿಧಾನಸಭಾ ಅಭ್ಯರ್ಥಿ ಜಿ.ಕೃಷ್ಣಪ್ಪ, ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷರು, ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಬ್ಲಾಕ್ ಉಸ್ತುವಾರಿಗಳು ಉಪಸ್ಥಿತರಿದ್ದರು.
ಯಾದಗಿರಿ | ʼಕನ್ನಡ ಪಯಶ್ವಿನಿ ಅಚೀವ್ಮೆಂಟ್ ಪ್ರಶಸ್ತಿʼಗೆ ಲಕ್ಷ್ಮೀ ಎಸ್ ಆಯ್ಕೆ
ಯಾದಗಿರಿ : ಅಂತರರಾಜ್ಯ ಮಟ್ಟದ ಪ್ರತಿಷ್ಠಿತ ಕನ್ನಡ ಪಯಶ್ವಿನಿ ಅಚೀವ್ಮೆಂಟ್ ಪ್ರಶಸ್ತಿಗೆ ಯಾದಗಿರಿ ಮೂಲದ ಲಕ್ಷ್ಮೀ ಎಸ್. ಅವರು ಆಯ್ಕೆಯಾಗಿದ್ದಾರೆ. ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಮಹತ್ವದ ಮತ್ತು ನಿರಂತರ ಸೇವೆಯನ್ನು ಪರಿಗಣಿಸಿ ಈ ಗೌರವ ಪ್ರದಾನ ಮಾಡಲಾಗುತ್ತಿದೆ. ಜ.18ರಂದು ಕಾಸರಗೋಡು ಜಿಲ್ಲೆಯ ನುಳ್ಳಿಪಾಡಿಯಲ್ಲಿರುವ ಕನ್ನಡ ಭವನದಲ್ಲಿ ಆಯೋಜಿಸಲಾಗಿರುವ ‘ಕನ್ನಡ ಭವನ ರಜತ ಸಂಭ್ರಮ- ನಾಡು, ನುಡಿ ಹಬ್ಬ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಲಕ್ಷ್ಮೀ ಎಸ್. ಅವರಿಗೆ ಅಂತರರಾಜ್ಯ ಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದಕ್ಕೆ ದಲಿತ ಸಂಘರ್ಷ ಸಮಿತಿ, ಯಾದಗಿರಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇಕರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಯಾದಗಿರಿ | ಸಂಗಮೇಶ್ವರ, ಬಲಭೀಮೇಶ್ವರ ಜಾತ್ರೆ ನಿಮಿತ್ತ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶ
ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಶ್ರೀ ಸಂಗಮೇಶ್ವರ ಮತ್ತು ಬಲಭೀಮೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಆದೇಶ ಹೊರಡಿಸಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರ ಚಲಾಯಿಸಿರುವ ಜಿಲ್ಲಾಧಿಕಾರಿಗಳು, 2026ರ ಜನವರಿ 15ರ ಬೆಳಿಗ್ಗೆ 6 ಗಂಟೆಯಿಂದ ಜನವರಿ 16ರ ಸಂಜೆ 6 ಗಂಟೆಯವರೆಗೆ ಶಹಾಪುರ ನಗರದ ಎಲ್ಲಾ ವೈನ್ಶಾಪ್, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಸಗಟು ಹಾಗೂ ಚಿಲ್ಲರೆ ಮದ್ಯ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಈ ಅವಧಿಯಲ್ಲಿ ಮದ್ಯ ಮಾರಾಟ ಅಥವಾ ಸಾಗಾಟ ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Belagavi | ವಾಲ್ಮೀಕಿ ಭವನ ನಿರ್ಮಾಣ ವಿಚಾರಕ್ಕೆ ಗ್ರಾಮದಲ್ಲಿ ಘರ್ಷಣೆ: ಕಲ್ಲು ತೂರಾಟ, ಹಲ್ಲೆ
ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ. ಭವನ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ, ಒಂದು ಸಮುದಾಯದ ಜನರು ಗುಂಪಾಗಿ ಬಂದು ಇನ್ನೊಂದು ಸಮುದಾಯದ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಕೇಳಿ ಬಂದಿದೆ. ಸದಾಶಿವ ಭಜಂತ್ರಿ ಎಂಬುವವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದ್ದು, ಕಲ್ಲು, ಕಟ್ಟಿಗೆಗಳಿಂದ ಹೊಡೆದು ಬಾಗಿಲು ಮುರಿದು ಮನೆಯೊಳಗೆ ನುಗ್ಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮನೆ ಮಾಳಿಗೆ ಹಾಗೂ ವಸ್ತುಗಳು ಸಂಪೂರ್ಣವಾಗಿ ಧ್ವಂಸಗೊಂಡಿವೆ ಎನ್ನಲಾಗಿದೆ. ಘಟನೆಯ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿವೆ. ಮಹಿಳೆಯರನ್ನು ಲೆಕ್ಕಿಸದೆ ಪುರುಷರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಘರ್ಷಣೆಯಲ್ಲಿ ಎರಡು ಸಮುದಾಯಗಳ ಕೆಲವರಿಗೆ ಗಾಯಗಳಾಗಿವೆ. ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕಾಗಿ ಜಾಗ ಸರ್ವೇಗೆ ಬಂದಿದ್ದ ವೇಳೆ, ಎಸ್ಸಿ ಸಮುದಾಯದ ಮನೆಯ ಬಳಿ ಭವನ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದೇ ಗಲಾಟೆಗೆ ಕಾರಣ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಗುಂಪು ಮನೆಯ ಮೇಲೆ ಕಲ್ಲು ತೂರಾಟ ನಡೆಸಿದೆ ಎಂಬ ಆರೋಪ ಇದೆ. ಘಟನೆ ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ. ಈ ಸಂಬಂಧ ಶೋಭಾ ಭಜಂತ್ರಿ ಅವರು ಓರ್ವ ಮಹಿಳೆ ಸೇರಿದಂತೆ 17 ಜನರ ವಿರುದ್ಧ ದೂರು ದಾಖಲಿಸಿದ್ದು, ಆರೋಪಿಗಳು ಅಕ್ರಮವಾಗಿ ಮನೆ ಪ್ರವೇಶಿಸಿ ನಾಲ್ವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಾಲ್ಮೀಕಿ ಸಮುದಾಯದ ಲಕ್ಷ್ಮೀ ತಳವಾರ ಅವರು ಆರು ಜನರ ವಿರುದ್ಧ ದೂರು ನೀಡಿದ್ದು, ವಾಲ್ಮೀಕಿ ಮೂರ್ತಿ ಹಾಗೂ ಸುತ್ತಮುತ್ತಲಿನ ಜಾಗ ಸ್ವಚ್ಛಗೊಳಿಸುವ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
U19 World Cup- ಹೆನಿಲ್ ಪಟೇಲ್ ದಾಳಿಗೆ ನಲುಗಿದ ಅಮೆರಿಕ; ಬೌಲಿಂಗ್ ನಲ್ಲಿ ಆಪತ್ಬಾಂಧವನಾದ ವೈಭವ್ ಸೂರ್ಯವಂಶಿ!
India U19 Vs USA U19- ಐಸಿಸಿ ಅಂಡರ್ 19 ಏಕದಿನ ವಿಶ್ವಕಪ್ ನಲ್ಲಿ ಆಯುಷ್ ಮ್ಹಾತ್ರೆ ನೇತೃತ್ವದ ಭಾರತ ತಂಡ ಶುಭಾರಂಭ ಮಾಡಿದೆ. ಬಿ ಬಣದಲ್ಲಿರುವ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಸುಲಭವಾಗಿ ಸೋಲಿಸಿದೆ. ಹೆನಿಲ್ ಪಟೇಲ್ ಅವರ ಅದ್ಭುತ ಬೌಲಿಂಗ್ ನಿಂದ ಅಮೆರಿಕ 107 ರನ್ ಗಳಿಗೆ ಆಲೌಟ್ ಆಯಿತು. ಅಭಿಜ್ಞಾನ್ ಕುಂಡು ಅವರ ಅಜೇಯ 42 ರನ್ ಗಳಿಂದ ಭಾರತ ತಂಡ 6 ವಿಕೆಟ್ ಗಳಿಂದ ಸುಲಭ ಗೆಲುವು ಸಾಧಿಸಿತು.
ದಕ್ಷಿಣ ಕನ್ನಡದ ಸರಕಾರಿ ಶಾಲೆಗಳಿಗೆ ಇಸ್ರೇಲ್ನಿಂದ ಸ್ಮಾರ್ಟ್ ಬೋರ್ಡ್ಗಳ ಕೊಡುಗೆ
ಮಂಗಳೂರು, ಜ.15: ಇಸ್ರೇಲ್ ಸರ್ಕಾರದ ‘ಮಾಶಾವ್’ (ಅಖಏಅ್ಖ) ಕಾರ್ಯಕ್ರಮದಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸ್ಮಾರ್ಟ್ ಬೋರ್ಡ್ಗಳನ್ನು ವಿತರಿಸಲಾಗುತ್ತದೆ. ಅನಂತಾಡಿಯ ದ.ಕ.ಜಿ.ಪಂ. ಶಾಲೆಯಲ್ಲಿ ಗುರುವಾರ ಜರುಗಿದ ವಿಶೇಷ ಕಾರ್ಯಕ್ರಮದಲ್ಲಿ ಇಸ್ರೇಲ್ ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್ಮನ್ ಸ್ಮಾರ್ಟ್ ಬೋರ್ಡ್ಗಳನ್ನು ಲೋಕಾರ್ಪಣೆ ಮಾಡಿದರು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ವಿಶೇಷ ಆಸಕ್ತಿ ಹಾಗೂ ಸತತ ಪ್ರಯತ್ನದ ಫಲವಾಗಿ ಇಸ್ರೇಲ್ ಸರಕಾರದ ಈ ಸೌಲಭ್ಯ ದೊರೆಯುವಂತಾಗಿದೆ. ಸಂಸದರಾಗಿ ಅಧಿಕಾರ ಸ್ವೀಕರಿಸಿದ ಆರಂಭಿಕ ದಿನಗಳಲ್ಲೇ ಬ್ರಿಜೇಶ್ ಚೌಟ ಅವರು ಇಸ್ರೇಲ್ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕ ಸಾಧಿಸಿದ್ದರು. ಕೃಷಿ ಹಾಗೂ ಶಿಕ್ಷಣದಲ್ಲಿ ವಿಶ್ವ ಮಟ್ಟದ ತಂತ್ರಜ್ಞಾನ ಹೊಂದಿರುವ ಇಸ್ರೇಲ್ನ ಸಹಕಾರವನ್ನು ಜಿಲ್ಲೆಗೆ ತರುವ ಅವರ ಪ್ರಯತ್ನದ ಮೊದಲ ಭಾಗವಾಗಿ ಈ ಯೋಜನೆ ಅನುಷ್ಠಾನಗೊಂಡಿದೆ. ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಬಳಿಕ ಬಳಿಕ ಮಾತನಾಡಿದ ಇಸ್ರೇಲ್ ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್ಮನ್ ಅವರು ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ಕೈಜೋಡಿಸುತ್ತಿರುವುದು ಸಂತಸದ ವಿಷಯ. ಈ ಸ್ಮಾರ್ಟ್ ಬೋರ್ಡ್ಗಳ ಮೂಲಕ ಡಿಜಿಟಲ್ ಶಿಕ್ಷಣಕ್ಕೆ ಹೊಸ ವೇಗ ಸಿಗಲಿದೆ. ವ್ಯಾಪಾರ ಹಾಗೂ ಸಾಂಸ್ಕೃತಿಕವಾಗಿಯೂ ಇಸ್ರೇಲ್ ಮತ್ತು ದಕ್ಷಿಣ ಕನ್ನಡದ ನಡುವಿನ ಸಂಬಂಧ ಮುಂದಿನ ದಿನಗಳಲ್ಲಿ ಇನ್ನಷ್ಟು ವೃದ್ಧಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆ ಬಳಿಕ ಮಾತನಾಡಿದ ಸಂಸದ ಚೌಟ, ಭಾರತ ಮತ್ತು ಇಸ್ರೇಲ್ ರಾಷ್ಟ್ರಗಳ ನಡುವೆ ಸುದೀರ್ಘವಾದ ಸ್ನೇಹ ಸಂಬಂಧವಿದೆ. ವಿಶೇಷವಾಗಿ ಕೃಷಿ ಮತ್ತು ರಕ್ಷಣಾ ಕ್ಷೇತ್ರದಲ್ಲಿ ನಾವು ಉತ್ತಮ ಸಹಯೋಗ ಹೊಂದಿದ್ದೇವೆ. ನಾನು ಸಂಸದನಾಗಿ ಅಧಿಕಾರ ವಹಿಸಿಕೊಂಡ ಆರಂಭದ ದಿನಗಳಲ್ಲೇ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಈ ಜಾಗತಿಕ ಸಹಯೋಗವನ್ನು ಸ್ಥಳೀಯ ಮಟ್ಟಕ್ಕೆ ತರಬೇಕು ಎಂಬ ಗುರಿ ಹೊಂದಿದ್ದೆ. ಕೃಷಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಇಸ್ರೇಲ್ನ ಅತ್ಯಾಧುನಿಕ ತಂತ್ರಜ್ಞಾನವನ್ನು ನಮ್ಮ ಜಿಲ್ಲೆಗೆ ಪರಿಚಯಿಸುವ ನಿಟ್ಟಿನಲ್ಲಿ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಅದರ ಮೊದಲ ಹೆಜ್ಜೆಯಾಗಿ ಇಂದು ಇಸ್ರೇಲ್ ಸರ್ಕಾರದ ಕಾರ್ಯಕ್ರಮದ ಮೂಲಕ ಜಿಲ್ಲೆಯ ನಾಲ್ಕು ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಹಸ್ತಾಂತರಿಸಿದ್ದೇವೆ. ಶಿಕ್ಷಣದಲ್ಲಿ ತಂತ್ರಜ್ಞಾನದ ಅಳವಡಿಕೆಯು ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಜಾಗತಿಕ ಮಟ್ಟಕ್ಕೆ ಏರಿಸಲಿದೆ ಎಂದು ಹೇಳಿದರು. ಈ ಮಹತ್ವದ ಸಹಕಾರಕ್ಕಾಗಿ ಭಾರತದ ಇಸ್ರೇಲ್ ರಾಯಭಾರಿ ರೆವೆನ್ ಅಜರ್ ಮತ್ತು ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್ಮನ್ ಅವರಿಗೆ ಜಿಲ್ಲೆಯ ಸಮಸ್ತ ಜನರ ಪರವಾಗಿ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮುಂದಿನ ದಿನಗಳಲ್ಲಿ ವ್ಯಾಪಾರ-ವಹಿವಾಟು, ಕೃಷಿ ಕ್ಷೇತ್ರ ಸೇರಿದಂತೆ ಇಸ್ರೇಲ್ ಮಾದರಿಯ ನೂತನ ತಂತ್ರಜ್ಞಾನ ಗಳನ್ನು ಜಿಲ್ಲೆಗೆ ತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿಯಲಿದೆ ಎಂದರು. ಈ ಯೋಜನೆಯಡಿ ಒಟ್ಟು ನಾಲ್ಕು ಶಾಲೆಗಳಿಗೆ ತಲಾ 3.5 ಲಕ್ಷ ರೂ. ಅನುದಾನದಲ್ಲಿ ಸ್ಮಾರ್ಟ್ ಬೋರ್ಡ್ ನೀಡಲಾ ಗುತ್ತಿದೆ. ಅನಂತಾಡಿ ಬಂಟ್ರಿಂಜದ ದ.ಕ.ಜಿ.ಪಂ. ಪ್ರಾಥಮಿಕ ಶಾಲೆ, ವಿಟ್ಲದ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಮಣ್ಣಗುಡ್ಡೆಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ಗಳನ್ನು ಒದಗಿಸಲಾಗಿದೆ. ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಅನಂತಾಡಿಯ ದ.ಕ.ಜಿ.ಪಂ. ಶಾಲೆ ಮುಖ್ಯೋಪಾಧ್ಯಾಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಕಾರಿನ ಸೈಲೆನ್ಸರ್ ಮಾರ್ಪಡಿಸಿ ರಸ್ತೆಯಲ್ಲಿ ಜನರಿಗೆ ಕಿರಿಕಿರಿ; 1.1 ಲಕ್ಷ ರೂ. ದಂಡ ವಿಧಿಸಿದ ಬೆಂಗಳೂರು ಪೊಲೀಸ್!
ಬೆಂಗಳೂರಿನಲ್ಲಿ ಕಾರಿನ ಸೈಲೆನ್ಸರ್ ಅಕ್ರಮವಾಗಿ ಮಾರ್ಪಡಿಸಿ, ಬೆಂಕಿ ಚಿಮ್ಮಿಸುತ್ತಾ, ವಿಪರೀತ ಶಬ್ದ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗೆ 1.11 ಲಕ್ಷ ರೂ. ದಂಡ ವಿಧಿಸಲಾಗಿದೆ. ಕಾರಿನ ಬೆಲೆಗಿಂತ ಹೆಚ್ಚಿನ ದಂಡ ವಿಧಿಸಿ, ಕಾನೂನು ಉಲ್ಲಂಘನೆಗೆ ಬೆಂಗಳೂರು ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಇದು ಇತರರಿಗೆ ಎಚ್ಚರಿಕೆಯಾಗಲಿದೆ.
ಯಾದಗಿರಿ | ಜ.17, 18 ರಂದು ದಲಿತ ಸಂಘರ್ಷ ಸಮಿತಿ ವಿಭಾಗೀಯ ಮಟ್ಟದ ಅಧ್ಯಯನ ಶಿಬಿರ : ಮಾಳಪ್ಪ ಕಿರದಳ್ಳಿ
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಲಬುರಗಿ ವಿಭಾಗದ ವತಿಯಿಂದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿರುವ ಬುದ್ಧ ವಿಹಾರದಲ್ಲಿ ಜ.17 ಮತ್ತು 18ರಂದು ಎರಡು ದಿನಗಳ ಕಾಲ ಅಧ್ಯಯನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಅವರ ನೇತೃತ್ವದಲ್ಲಿ ಈ ವಿಭಾಗೀಯ ಮಟ್ಟದ ಶಿಬಿರ ಜರುಗಲಿದೆ. ಇದರಲ್ಲಿ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಎರಡು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ನಾಡಿನ ಅನೇಕ ಪ್ರಖ್ಯಾತ ಚಿಂತಕರು ಮತ್ತು ಸೈದ್ಧಾಂತಿಕ ಹಿರಿಯರು ಪಾಲ್ಗೊಂಡು ವಿವಿಧ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಸಂಘಟನೆಯನ್ನು ಬಲಪಡಿಸುವ ಮತ್ತು ಅಂಬೇಡ್ಕರ್ ವಾದದ ಆಳವಾದ ಅಧ್ಯಯನ ಮಾಡುವ ನಿಟ್ಟಿನಲ್ಲಿ ಈ ಶಿಬಿರ ಮಹತ್ವದ್ದಾಗಿದೆ ಎಂದು ಅವರು ವಿವರಿಸಿದರು. ಯಾದಗಿರಿ ಜಿಲ್ಲೆಯ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಎಲ್ಲಾ ತಾಲೂಕುಗಳ ಸಂಚಾಲಕರು ಮತ್ತು ಸದಸ್ಯರು ಕಡ್ಡಾಯವಾಗಿ ಈ ಅಧ್ಯಯನ ಶಿಬಿರದಲ್ಲಿ ಭಾಗವಹಿಸಬೇಕು ಎಂದು ಮಾಳಪ್ಪ ಕಿರದಳ್ಳಿ ಮನವಿ ಮಾಡಿಕೊಂಡಿದ್ದಾರೆ.
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಆರೋಪ; ರಾಜೀವ್ ಗೌಡಗೆ ಕೆಪಿಸಿಸಿ ನೋಟಿಸ್
ಬೆಂಗಳೂರು : ‘ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ಅವರಿಗೆ ಒಂದು ವಾರದಲ್ಲಿ ಘಟನೆ ಸಂಬಂಧ ಸೂಕ್ತ ಸಮಜಾಷಿ ನೀಡಬೇಕು. ಇಲ್ಲವಾದರೆ ಈ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿ, ಕೆಪಿಸಿಸಿ ವತಿಯಿಂದ ನೋಟಿಸ್ ನೀಡಲಾಗಿದೆ. ಗುರುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ನೋಟಿಸ್ ನೀಡಿದ್ದು, ಶಿಡ್ಲಘಟ್ಟ ವ್ಯಾಪ್ತಿಯಲ್ಲಿ ಖಾಸಗಿ ಕಾರ್ಯಕ್ರಮದ ಸಭೆಯೊಂದಕ್ಕೆ ಸಂಬಂಧಪಟ್ಟಂತೆ ತಾವುಗಳು ಬ್ಯಾನರ್ಗಳನ್ನು ನಗರಸಭೆ ವ್ಯಾಪ್ತಿಯಲ್ಲಿ ಹಾಕಿರುವುದರ ಬಗ್ಗೆ ಸದರಿ ನಗರಸಭೆ ಪೌರಾಯುಕ್ತರೊಂದಿಗೆ ದೂರವಾಣಿ ಸಂಭಾಷಣೆ ನೆಡೆಸುವಾಗ ವ್ಯಕ್ತಿಗತ ನಿಂದನೆ ಮಾಡಿ, ಕೆಟ್ಟ ಪದಗಳನ್ನು ಉಪಯೋಗಿಸಿ ನಿಂದನೆ ಮಾಡಿರುವ ವಿಷಯಗಳು ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ’ ಎಂದು ಉಲ್ಲೇಖಿಸಿದ್ದಾರೆ. ‘ತಮ್ಮ ಈ ವರ್ತನೆ ಹಾಗೂ ತಾವು ಸದರಿ ನಗರಸಭೆ ಪೌರಾಯುಕ್ತರೊಂದಿಗೆ ಆಡಿರುವ ಮಾತುಗಳಿಂದ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತದೆ. ಅಲ್ಲದೆ, ತಾವುಗಳು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತೀರಿ ಎಂದು ತಿಳಿದು ಕಾರಣ ಕೇಳಿ ನೋಟೀಸು ನೀಡುತ್ತಿದ್ದು, ಒಂದು ವಾರದ ಒಳಗಾಗಿ ಈ ಬಗ್ಗೆ ಸೂಕ್ತ ಉತ್ತರ ನೀಡಬೇಕು’ ಎಂದು ಚಂದ್ರಶೇಖರ್ ಸೂಚನೆ ನೀಡಿದ್ದಾರೆ.
ಸನಾತನ ಧರ್ಮದ ಬಗ್ಗೆ ಪ್ರಚಾರ ನಿಲ್ಲಿಸುತ್ತೇನೆ: ಹರ್ಷ ರಿಚಾರಿಯಾ
ಮಹಾಕುಂಭ ಮೇಳದ ವೇಳೆ ವೈರಲ್ ಆಗಿದ್ದ ಮಾಡೆಲ್
'ಈ ಸಲ ಬುಲೆಟ್ ಮಿಸ್ ಆಗಲ್ಲ……' - ಟ್ರಂಪ್ ಗೆ ನೇರವಾಗಿ ಬೆದರಿಕೆ ಹಾಕಿದ ಇರಾನ್! ಏನು ಈ ಮಾತಿನ ಅರ್ಥ?
ಇರಾನ್ ಸರ್ಕಾರಿ ಟಿವಿ ಚಾನೆಲ್ನಲ್ಲಿ ಪ್ರಸಾರವಾದ ವಿಡಿಯೋವೊಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಬೆದರಿಕೆ ಹಾಕಿದೆ. 2024ರ ಚುನಾವಣಾ ರ್ಯಾಲಿಯಲ್ಲಿ ಟ್ರಂಪ್ಗೆ ಗುಂಡು ತಗುಲಿದ ಘಟನೆಯ ವಿಡಿಯೋವನ್ನು ತೋರಿಸಿ, ಈ ಬಾರಿ ಗುಂಡು ಗುರಿಯನ್ನು ತಪ್ಪಲ್ಲ ಎಂದು ಹೇಳಿದೆ. ಅಮೆರಿಕ ಇರಾನ್ ಮೇಲೆ ಮಿಲಿಟರಿ ದಾಳಿ ನಡೆಸುವ ಚಿಂತನೆಯಲ್ಲಿರುವಾಗ ಈ ಬೆದರಿಕೆ ಬಂದಿದೆ. ಇರಾನ್ನ ಆಂತರಿಕ ಗಲಭೆಯನ್ನು ನೆಪವೊಡ್ಡಿ ದಾಳಿ ನಡೆಸಲು ಅಮೆರಿಕ ಯೋಚಿಸುತ್ತಿದೆ ಎಂದು ಇರಾನ್ ಆರೋಪಿಸಿದೆ.
ಕಾರಣವೇನು ಗೊತ್ತೆ?
ಸರಕಾರ, ಖಾಸಗಿಯಿಂದ ಬಲಿಷ್ಠ ಶಿಕ್ಷಣ ವ್ಯವಸ್ಥೆ ಕಟ್ಟಲು ಸಾಧ್ಯ: ಡಾ.ಮೋಹನ್ ಆಳ್ವ
ಕುಷ್ಮಾ ಉಡುಪಿ ಜಿಲ್ಲಾ ಸಮಿತಿ ಉದ್ಘಾಟನೆ-ಪದಾಧಿಕಾರಿಗಳ ಪದಗ್ರಹಣ
ಸೈನೈಡ್ ಮಲ್ಲಿಕಾ: ಅಮಾಯಕ ಮುಖದ ಹಿಂದೆ ಅಡಗಿದ್ದ ಸರಣಿ ಹಂತಕಿ ಕೆಂಪಮ್ಮ
ಮಲ್ಲಿಕಾ… ಈಕೆ ಸಾಮಾನ್ಯಳಲ್ಲ. ಮೌನವಾಗಿಯೇ ಎಲ್ಲವನ್ನೂ ನಿರೀಕ್ಷಿಸಿ, ಬೇಟೆಯಾಡುವ ಹಂತಕಿ. ‘ಸೈನೈಡ್ ಮಲ್ಲಿಕಾ’ ಎಂದೇ ಕುಖ್ಯಾತಿ ಪಡೆದಿರುವ ಕರ್ನಾಟಕದ ಈಕೆ, ಭಾರತದ ಮೊದಲ ಸರಣಿ ಹಂತಕಿ ಎಂದು ಹೇಳಲಾಗುತ್ತಿದೆ. ತನ್ನನ್ನು ನಂಬಿದವರನ್ನೇ ಸಂಚಿನಿಂದ ಕೊಲ್ಲುತ್ತಿದ್ದ ಈಕೆಯ ನಿಜವಾದ ಹೆಸರು ಕೆ.ಡಿ. ಕೆಂಪಮ್ಮ. ಧರ್ಮನಿಷ್ಠೆಯ, ಪಾಪಭೀತಿಯ, ಅಮಾಯಕ ಮಹಿಳೆಯಂತೆ ಕಾಣುತ್ತಿದ್ದ ಈಕೆ, ಕುತಂತ್ರದಿಂದ ಬಲೆಗೆ ಬೀಳಿಸಿ, ನಿಧಾನವಾಗಿ ಸಂಚು ರೂಪಿಸಿ, ಬಹಳ ಚುರುಕಾಗಿ ಸೈನೈಡ್ ನೀಡಿ ಹತ್ಯೆ ಮಾಡುತ್ತಿದ್ದಳು. 20 ವರ್ಷಗಳ ಹಿಂದೆ ಬೆಂಗಳೂರು ಪೊಲೀಸರು ಕೆ.ಡಿ. ಕೆಂಪಮ್ಮ ಅಲಿಯಾಸ್ ಮಲ್ಲಿಕಾಳನ್ನು ಬಂಧಿಸಿದ್ದರು. ಹಲವು ಮಹಿಳೆಯರಿಗೆ ಸೈನೈಡ್ ನೀಡಿ ಹತ್ಯೆ ಮಾಡಿ ಅವರ ಆಭರಣಗಳನ್ನು ದೋಚಿರುವುದಾಗಿ ಈಕೆ ಒಪ್ಪಿಕೊಂಡಿದ್ದಳು ಎಂದು ತನಿಖಾ ಅಧಿಕಾರಿಗಳು ಹೇಳಿದ್ದರು. ಆಕೆಯ ಈ ಬಹಿರಂಗಪಡಿಸುವಿಕೆ ನಗರದಾದ್ಯಂತ ಸಂಚಲನ ಮೂಡಿಸಿತ್ತು. ಆಗ 43 ವರ್ಷದ ಕೆಂಪಮ್ಮ, ಸಂಕಷ್ಟದಲ್ಲಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು, ದೇವರಲ್ಲಿ ನಂಬಿಕೆ ಇರುವ ಮಹಾಭಕ್ತೆಯಂತೆ ವರ್ತಿಸುವ ಮೂಲಕ ಮಹಿಳೆಯರ ವಿಶ್ವಾಸವನ್ನು ಗಳಿಸುತ್ತಿದ್ದಳು. ಹೀಗೆ ವಿಶ್ವಾಸ ಗೆದ್ದ ನಂತರ ಆಕೆ ಕೊಲೆಗಳನ್ನು ಮಾಡುತ್ತಿದ್ದಳು. 2007ರ ಡಿಸೆಂಬರ್ 31ರಂದು ಆಕೆಯನ್ನು ಬಂಧಿಸುವ ಹೊತ್ತಿಗೆ, ಕೆಂಪಮ್ಮ 1999ರಿಂದ ಕನಿಷ್ಠ ಆರು ಮಹಿಳೆಯರನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಳು. ಮೂರು ತಿಂಗಳೊಳಗೆ ಐವರು ಮಹಿಳೆಯರನ್ನು ಕೊಲೆ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಕೆಂಪಮ್ಮನೆಂಬ ಹಂತಕಿ ತನಿಖಾಧಿಕಾರಿಗಳ ಪ್ರಕಾರ, ಕೆಂಪಮ್ಮ ಕೊಲೆಗೆ ಪಕ್ಕಾ ಲೆಕ್ಕಾಚಾರದ ಮಾದರಿಯನ್ನು ಅನುಸರಿಸುತ್ತಿದ್ದಳು. ಬೆಂಗಳೂರಿನ ಸುತ್ತಮುತ್ತಲಿನ ದೇವಾಲಯಗಳಿಗೆ ಆಕೆ ಆಗಾಗ್ಗೆ ಭೇಟಿ ನೀಡುತ್ತಿದ್ದಳು. ಧಾರ್ಮಿಕ ಆಚರಣೆಗಳಲ್ಲಿ ಪಾರಂಗತಳಾದ ಕಟ್ಟಾ ಭಕ್ತೆಯಂತೆ ನಟಿಸುತ್ತಿದ್ದಳು. ತೊಂದರೆಗೊಳಗಾದ ಮಹಿಳೆಯರನ್ನು ಸೂಕ್ಷ್ಮವಾಗಿ ಗಮನಿಸಿ ಮಾತು ಆರಂಭಿಸುತ್ತಿದ್ದಳು. ಅವರ ವೈಯಕ್ತಿಕ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸುತ್ತಿದ್ದಳು. ಸಹಾನುಭೂತಿ ತೋರಿ ಆಪ್ತಮಿತ್ರಳಂತೆ ವರ್ತಿಸುತ್ತಿದ್ದಳು. ಹೀಗೆ ಮಹಿಳೆಯರ ವಿಶ್ವಾಸವನ್ನು ಗಳಿಸಿದ ಬಳಿಕ, ಕೆಂಪಮ್ಮ ಅವರಿಗೆ ವಿಶೇಷ ಆಚರಣೆಗಳನ್ನು ಮಾಡುವಂತೆ ಸೂಚಿಸುತ್ತಿದ್ದಳು. ಮಕ್ಕಳಿಲ್ಲದಿರುವುದು, ಆರ್ಥಿಕ ತೊಂದರೆಗಳು ಅಥವಾ ಕೌಟುಂಬಿಕ ಕಲಹದಂತಹ ಸಮಸ್ಯೆಗಳಿಗೆ ಪರಿಹಾರವಾಗಿ ಮಂಡಲ ಪೂಜೆ ಅಥವಾ ಇತರ ಪೂಜೆಗಳನ್ನು ಮಾಡುವಂತೆ ಸಲಹೆ ನೀಡುತ್ತಿದ್ದಳು. ನಗರದ ಹೊರವಲಯದಲ್ಲಿರುವ ದೇವಾಲಯಗಳಲ್ಲಿ—ಅಂದರೆ ಸಂತ್ರಸ್ತರ ಮನೆಯಿಂದ ದೂರದ ಸ್ಥಳಗಳಲ್ಲಿ—ಆಚರಣೆಗಳನ್ನು ನಡೆಸಬೇಕೆಂದು ಆಕೆ ಒತ್ತಾಯಿಸುತ್ತಿದ್ದಳು. ಈ ರೀತಿ ದೂರ ಕರೆದುಕೊಂಡು ಬಂದು ಏಕಾಂತ ಸ್ಥಳಗಳಲ್ಲಿ ಕೆಂಪಮ್ಮ ಸೈನೈಡ್ ನೀಡುತ್ತಿದ್ದಳು. ಕೆಲವೊಮ್ಮೆ ನೀರಿನಲ್ಲಿ ಬೆರೆಸಿ ‘ಪವಿತ್ರ ನೀರು’ ಎಂದು ಕುಡಿಸುತ್ತಿದ್ದಳು. ಕೆಲವೊಮ್ಮೆ ಆಹಾರದಲ್ಲಿ ವಿಷ ಬೆರೆಸುತ್ತಿದ್ದಳು. ಕೆಲವು ಸಂದರ್ಭಗಳಲ್ಲಿ ಮೂಗನ್ನು ಬಲವಂತವಾಗಿ ಹಿಡಿದು ವಿಷಪೂರಿತ ದ್ರವವನ್ನು ಕುಡಿಯುವಂತೆ ಮಾಡುತ್ತಿದ್ದಳು. ಕೆಲವೊಮ್ಮೆ ಸಂತ್ರಸ್ತರು ನಿದ್ರಿಸುವವರೆಗೆ ಅಥವಾ ಪ್ರಾರ್ಥಿಸುವವರೆಗೆ ಕಾಯುತ್ತಿದ್ದಳು. ಅಲ್ಲೊಂದು ಕೊಲೆ ಸಂಭವಿಸುತ್ತಿತ್ತು. ಬಲಿಪಶು ಕುಸಿದು ಬಿದ್ದ ನಂತರ, ಕೆಂಪಮ್ಮ ಶಾಂತವಾಗಿ ಆಭರಣಗಳು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿ ಕಣ್ಮರೆಯಾಗುತ್ತಿದ್ದಳು. ಬಂಧಿಸಿದ್ದು ಹೇಗೆ? ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಆಭರಣಗಳು ಮತ್ತು ಮೊಬೈಲ್ ಫೋನ್ಗಳನ್ನು ಅನುಮಾನಾಸ್ಪದ ರೀತಿಯಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಸುಳಿವು ದೊರೆತ ನಂತರ ಕಲಾಸಿಪಾಳ್ಯಂ ಪೊಲೀಸರು ಕೆಂಪಮ್ಮನನ್ನು ಬಂಧಿಸಿದರು. ವಿಚಾರಣೆಗೆ ಒಳಪಡಿಸಿದಾಗ ಸರಣಿ ಹತ್ಯೆಗಳು ಬೆಳಕಿಗೆ ಬಂದವು. ಮಲ್ಲಿಕಾ ಎಂದು ತನ್ನ ಹೆಸರು ಹೇಳಿದ್ದ ಕೆಂಪಮ್ಮ, ತನಿಖಾಧಿಕಾರಿಗಳ ಮುಂದೆ ತಾನು ಮಾಡಿದ ಅಪರಾಧಗಳ ಮಾಹಿತಿಯನ್ನು ಒಂದೊಂದಾಗಿ ಬಿಚ್ಚಿಟ್ಟಳು. ಆಕೆ ಒಬ್ಬಂಟಿಯಾಗಿ ಆರು ಮಹಿಳೆಯರನ್ನು ಸೈನೈಡ್ ಬಳಸಿ ಕೊಲೆ ಮಾಡಿ, ಆಭರಣಗಳು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿದ್ದಳು ಎಂದು ಆಗಿನ ನಗರ ಪೊಲೀಸ್ ಆಯುಕ್ತ ಎನ್. ಅಚ್ಯುತ ರಾವ್ ಹೇಳಿದ್ದಾರೆ. ಆಕೆ ಅತ್ಯಂತ ಜಾಣತನದಿಂದ ಈ ಕೃತ್ಯಗಳನ್ನು ಮಾಡುತ್ತಿದ್ದಳು. ಹೆಚ್ಚಾಗಿ ದೇವಸ್ಥಾನಗಳಿಗೆ ಭೇಟಿ ನೀಡುವ, ನೊಂದುಕೊಂಡಿರುವ, ದುಃಖದಲ್ಲಿರುವ ಶ್ರೀಮಂತ ಮಹಿಳೆಯರೇ ಆಕೆಯ ಟಾರ್ಗೆಟ್ ಆಗಿದ್ದರು. ವಿಚಾರಣೆಯ ಸಮಯದಲ್ಲಿ ಕೆಂಪಮ್ಮ ಅಪರಾಧಗಳನ್ನು ಒಪ್ಪಿಕೊಂಡ ಪರಿಣಾಮ, ಈ ಹಿಂದೆ ನಿಗೂಢ ಸಾವುಗಳೆಂದು ದಾಖಲಾಗಿದ್ದ ಹಲವಾರು ಪ್ರಕರಣಗಳನ್ನು ಪೊಲೀಸರು ಮತ್ತೆ ತೆರೆಯಬೇಕಾಯಿತು. ಕೊಲೆ ಪ್ರಕರಣಗಳಲ್ಲೊಂದು ತಮಿಳುನಾಡಿನಲ್ಲಿ ನಡೆದಿದ್ದರೆ, ಇನ್ನು ಕೆಲವು ಬೆಂಗಳೂರು ಮತ್ತು ಸುತ್ತಮುತ್ತ ನಡೆದಿವೆ. ಕೆಂಪಮ್ಮ ತಪ್ಪೊಪ್ಪಿಕೊಂಡ ಕೊಲೆಗಳಲ್ಲಿ ಮೂರನ್ನು ನಿಗೂಢ ಸಾವುಗಳು, ಎರಡನ್ನು ಅಸ್ವಾಭಾವಿಕ ಸಾವುಗಳು ಎಂದು ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಹಲವಾರು ಪ್ರಕರಣಗಳಲ್ಲಿ ಮಹಿಳೆಯರು ದೇವಾಲಯದ ಆವರಣದೊಳಗೆ ಸಾವನ್ನಪ್ಪಿದ್ದರು. ಆದರೆ ಅಲ್ಲಿ ಕೊಲೆ ಕೃತ್ಯದ ಯಾವುದೇ ಲಕ್ಷಣಗಳು ಕಾಣಿಸಿರಲಿಲ್ಲ. ಇದರಿಂದಾಗಿ ಆ ಸಮಯದಲ್ಲಿ ತನಿಖಾಧಿಕಾರಿಗಳು ಅಪರಾಧ ನಡೆದಿದೆ ಎಂದು ಶಂಕಿಸುವುದು ಕಷ್ಟವಾಗಿತ್ತು. ಆ ವರ್ಷದ ಅಕ್ಟೋಬರ್ ಮತ್ತು ಡಿಸೆಂಬರ್ ನಡುವೆ ಬೆಂಗಳೂರಿನಲ್ಲಿ ಐದು ಮಹಿಳೆಯರನ್ನು ಮಲ್ಲಿಕಾ ಕೊಲೆ ಮಾಡಿದ್ದಾಳೆ. ಆಕೆಯ ಕೊನೆಯ ಬಲಿಪಶು 30 ವರ್ಷದ ಮಹಿಳೆ. ಗಂಡು ಮಗು ಇಲ್ಲದ ಕಾರಣ ಆಕೆ ಬೇಸರಗೊಂಡಿದ್ದಳು. ಆಕೆ ನಿದ್ದೆ ಮಾಡುತ್ತಿದ್ದಾಗ ಕೆಂಪಮ್ಮ ಆಕೆಯನ್ನು ಹತ್ಯೆ ಮಾಡಿದ್ದಳು. ಪ್ರತಿ ಕೊಲೆಯೂ ಪರಿಚಿತ ಮಾದರಿಯಲ್ಲೇ ನಡೆದಿತ್ತು ಎಂದು ಪೊಲೀಸರು ಹೇಳಿದ್ದಾರೆ. ಯಾರು ಈಕೆ? ಕೆಂಪಮ್ಮ ಕಗ್ಗಲಿಪುರ ನಿವಾಸಿಯಾಗಿದ್ದು, ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದಳು. ಈಕೆ ನಿಮ್ಹಾನ್ಸ್ನಲ್ಲಿ ದರ್ಜಿಯಾಗಿ ಕೆಲಸ ಮಾಡುತ್ತಿದ್ದ ದೇವರಾಜ್ ಎಂಬಾತನನ್ನು ಮದುವೆಯಾಗಿದ್ದಳು. ಆದರೆ 1998ರಲ್ಲಿ ವ್ಯವಹಾರದಲ್ಲಿ ಭಾರಿ ನಷ್ಟ ಸಂಭವಿಸಿತು. ಪತಿ ಕೈಬಿಟ್ಟ. ಕೆಂಪಮ್ಮನ ಬದುಕು ತೀವ್ರ ತಿರುವು ಪಡೆದುಕೊಂಡಿತು. ಆಕೆಯನ್ನು ಮನೆಯಿಂದ ಹೊರಹಾಕಲಾಯಿತು. ನಂತರ ಕೆಂಪಮ್ಮ ಈ ಕೃತ್ಯಗಳಲ್ಲಿ ತೊಡಗಿಸಿಕೊಂಡಳು ಎಂದು ಪೊಲೀಸರು ಹೇಳಿದ್ದಾರೆ. 1999ರ ಅಕ್ಟೋಬರ್ 19ರಂದು ಹೊಸಕೋಟೆಯಲ್ಲಿ 30ರ ಹರೆಯದ ಮಮತಾ ರಾಜನ್ ಅವರನ್ನು ಕೊಲ್ಲುವ ಮೂಲಕ ಕೆಂಪಮ್ಮ ‘ಕಿಲ್ಲರ್ ಕೆಂಪಮ್ಮ’ ಆಗಿಬಿಟ್ಟಳು. ಮಮತಾ ಪ್ರಾರ್ಥನೆ ಮಾಡುತ್ತಿದ್ದಾಗ ಕೆಂಪಮ್ಮ ಆಕೆಯನ್ನು ಕೊಂದಿದ್ದಳು. 2007ರಲ್ಲಿ ಕೆಂಪಮ್ಮ ಹೆಚ್ಚಿನ ಕೊಲೆಗಳನ್ನು ಮಾಡಿದ್ದಾಳೆ. ಜೀವಾವಧಿ ಶಿಕ್ಷೆ 2007ರಲ್ಲಿ ಬಂಧನದ ನಂತರ, ಕೆಂಪಮ್ಮ ವಿವಿಧ ನ್ಯಾಯಾಲಯಗಳಲ್ಲಿ ಅನೇಕ ವಿಚಾರಣೆಗಳನ್ನು ಎದುರಿಸಿದರು. ಲಾಭಕ್ಕಾಗಿ ಐವರು ಮಹಿಳೆಯರನ್ನು ಕೊಲೆ ಮಾಡಿದ್ದಕ್ಕಾಗಿ ತ್ವರಿತ ನ್ಯಾಯಾಲಯವು ಆಕೆಗೆ ಮರಣದಂಡನೆ ವಿಧಿಸಿತು. 2010ರಲ್ಲಿ ಕುಣಿಗಲ್ ತಾಲ್ಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಮುನಿಯಮ್ಮ ಅವರ ಕೊಲೆಗೆ ತುಮಕೂರು ನ್ಯಾಯಾಲಯವು ಮರಣದಂಡನೆ ವಿಧಿಸಿತು. 2012ರಲ್ಲಿ ಬೆಂಗಳೂರು ಗ್ರಾಮಾಂತರ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಘಾಟಿ ಸುಬ್ರಹ್ಮಣ್ಯದಲ್ಲಿ ಕೆ. ನಾಗಲಕ್ಷ್ಮಿ ಅವರ ಕೊಲೆ ಪ್ರಕರಣದಲ್ಲಿ ಕೆಂಪಮ್ಮಗೆ ಮರಣದಂಡನೆ ವಿಧಿಸಿತು. ಈ ಪ್ರಕರಣದಲ್ಲಿ ಕೆಂಪಮ್ಮ ಆಭರಣ ದೋಚುವ ಮುನ್ನ ಸೈನೈಡ್ ಮತ್ತು ವಿದ್ಯುತ್ ತಂತಿಯನ್ನು ಬಳಸಿದ್ದಳು. ದೊಡ್ಡಬಳ್ಳಾಪುರದ ದೇವಸ್ಥಾನದಲ್ಲಿ ಶವವಾಗಿ ಪತ್ತೆಯಾದ ಗೃಹಿಣಿ ನಾಗವೇಣಿ ಅವರ ಕೊಲೆ ಪ್ರಕರಣದಲ್ಲೂ ಸೆಷನ್ಸ್ ನ್ಯಾಯಾಲಯವು ಕೆಂಪಮ್ಮಗೆ ಮರಣದಂಡನೆ ವಿಧಿಸಿತು. ನಾಗವೇಣಿಗೆ ಮಕ್ಕಳಿರಲಿಲ್ಲ. ಇದಕ್ಕಾಗಿ ಎಲ್ಲಾ ಆಭರಣಗಳನ್ನು ಧರಿಸಿ ವಿಶೇಷ ಪೂಜೆಗಳನ್ನು ಮಾಡುವಂತೆ ಕೆಂಪಮ್ಮ ಹೇಳಿದ್ದಳು. ಹೈಕೋರ್ಟ್ ಹಸ್ತಕ್ಷೇಪ ಮತ್ತು ಮರುವಿಚಾರಣೆಗಳು ಕೆಲವು ಪ್ರಕರಣಗಳಲ್ಲಿ ಕರ್ನಾಟಕ ಹೈಕೋರ್ಟ್ ಮಧ್ಯಪ್ರವೇಶಿಸಿತು. ಒಂದು ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರ ಕ್ರಾಸ್ ಎಕ್ಸಾಮಿನೇಷನ್ ದಾಖಲಿಸಲು ಹಾಗೂ ನಿಗದಿತ ಅವಧಿಯೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಲು ನಿರ್ದೇಶಿಸಿ, ಪ್ರಕರಣವನ್ನು ಮತ್ತೆ ಸೆಷನ್ಸ್ ನ್ಯಾಯಾಲಯಕ್ಕೆ ಹಿಂತಿರುಗಿಸಿತು. ಇತರ ಕೆಲವು ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯಗಳು ಕೆಂಪಮ್ಮಗೆ ಜೀವಾವಧಿ ಶಿಕ್ಷೆ ವಿಧಿಸಿವೆ. ಮದ್ದೂರು ತಾಲ್ಲೂಕಿನಲ್ಲಿ 50 ವರ್ಷದ ಪಿಳ್ಳಮ್ಮ ಅವರ ಹತ್ಯೆ ಪ್ರಕರಣದಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿತು. ಕೆಂಪಮ್ಮಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಯಿತು. ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಅವರ ಪಕ್ಕದ ಸೆಲ್ ನಲ್ಲಿ ಕೆಂಪಮ್ಮಳನ್ನು ಇರಿಸಲಾಗಿದೆ ಎಂಬ ವರದಿಗಳು ಹೊರಬಂದಾಗ ಈಕೆ ಮತ್ತೆ ಸುದ್ದಿಯಾದಳು. ಭದ್ರತಾ ಕಾರಣಗಳಿಂದ ಜೈಲು ಅಧಿಕಾರಿಗಳು ಕೆಂಪಮ್ಮಳನ್ನು ದೇಶದ ಅತ್ಯಂತ ಹಳೆಯ ಜೈಲುಗಳಲ್ಲಿ ಒಂದಾದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಿದರು. ಕೈದಿಗೆ ಪೂರ್ವ ಸೂಚನೆ ನೀಡದೆ ಈ ಕ್ರಮವನ್ನು ಸದ್ದಿಲ್ಲದೆ ಕೈಗೊಳ್ಳಲಾಗಿದೆ ಎಂದು ಜೈಲು ಮೂಲಗಳು ತಿಳಿಸಿವೆ. ಕೊಲೆ ಮಾಡಲು ಕೆಂಪಮ್ಮ ಸೈನೈಡ್ ಜತೆಗೆ ನಂಬಿಕೆಯನ್ನು ಆಯುಧವಾಗಿಸಿಕೊಂಡಳು. ದೇವಾಲಯವನ್ನು ಸಂಚು ರೂಪಿಸುವ ಮತ್ತು ಕೊಲೆ ಮಾಡುವ ಸ್ಥಳವಾಗಿ ಬಳಸಿಕೊಂಡಳು. ಪವಿತ್ರ ನೀರು ಎಂದು ವಿಷ ಕುಡಿಸಿದಳು. ಪರಮ ಭಕ್ತೆಯಂತೆ ನಟಿಸಿ, ಇನ್ನೊಬ್ಬರ ನೋವಿಗೆ ಪರಿಹಾರ ಸೂಚಿಸುತ್ತಾ ಅಮಾಯಕ ಮಹಿಳೆಯರನ್ನು ಕೊಂದು, ಆಭರಣ ದೋಚುವ ದುಷ್ಕೃತ್ಯಗಳಲ್ಲಿ ತೊಡಗಿಸಿಕೊಂಡಳು. ಕೆಂಪಮ್ಮ ‘ಸೈನೈಡ್ ಮಲ್ಲಿಕಾ’ ಆಗಿ ಸರಣಿ ಹತ್ಯೆಗಳನ್ನು ನಡೆಸಿದ ಭಯಾನಕ ಕಥೆ ಇದು.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೆಸರಿನಲ್ಲಿ ನಕಲಿ ಖಾತೆ
ಉಡುಪಿ, ಜ.15: ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಹಾಗೂ ವಾಟ್ಯ್ಸಾಪ್ಗಳಲ್ಲಿ ತನ್ನ ಫೋಟೋ ಹಾಗೂ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆಗಳನ್ನು ಸೃಷ್ಟಿಸುವ ಮೂಲಕ, ಬೇರೆ ಬೇರೆ ಕಾರಣಗಳನ್ನು ನೀಡಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ತನ್ನ ಗಮನಕ್ಕೆ ಬಂದಿರುವುದಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಬೇರೆ ಬೇರೆ ಕಾರಣಗಳಿಗೆ ಹಣ ವರ್ಗಾಯಿಸುವಂತೆ ಸಂದೇಶಗಳನ್ನು ರವಾನಿಸುತ್ತಿರುವುದು ಗೊತ್ತಾಗಿದೆ. ಈ ಬಗ್ಗೆ ಈಗಾಗಲೇ ಕಾನೂನು ಕ್ರಮಕೈಗೊಳ್ಳುವಂತೆ ಉಡುಪಿಯ ಸೆನ್ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿದೆ. ಅದಾಗ್ಯೂ ಇಂತಹ ಪ್ರಕರಣ ಪುನರಾವರ್ತನೆಯಾಗುತ್ತಿರುವುದರಿಂದ ಫೇಸ್ಬುಕ್ ಹಾಗೂ ವಾಟ್ಯ್ಸಾಪ್ಗಳಲ್ಲಿ ನನ್ನ ಫೋಟೋ ಹಾಗೂ ಹೆಸರನ್ನು ಬಳಸಿ ಹಣ ವರ್ಗಾವಣೆಗೆ ಅಥವಾ ಇನ್ನಿತರೆ ಬೇಡಿಕೆಗಳ ಸಂದೇಶಗಳು ಸ್ವೀಕೃತ ವಾದಲ್ಲಿ, ಅಂತಹ ಸಂದೇಶಗಳಿಗೆ ಸ್ಪಂದಿಸದೆ, ಸಂದೇಶ ಸ್ವೀಕೃತವಾದ ತಕ್ಷಣ ಸೆನ್ ಪೊಲೀಸ್ ಠಾಣೆಗೆ ದೂರು ನೀಡುವಂತೆ ಎಲ್ಲಾ ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಸ್ವರೂಪ ಟಿ.ಕೆ. ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಆಳಂದ–ಕಲಬುರಗಿ ಮಧ್ಯೆ ಬಸ್ ಸಂಚಾರಕ್ಕೆ ಚಾಲನೆ
ಆಳಂದ: ಆಳಂದ–ಕಲಬುರಗಿ ಮಧ್ಯೆ ಹೊಸ ಬಸ್ ಸಂಚಾರಕ್ಕೆ ಶಾಸಕ, ನೀತಿ ಆಯೋಗದ ರಾಜ್ಯ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರು ಗುರುವಾರ ಚಾಲನೆ ನೀಡಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸ್ಥಳೀಯ ಘಟಕಕ್ಕೆ ಬಿಡುಗಡೆಯಾದ ಎರಡು ಹೊಸ ಬಸ್ಗಳಿಗೆ ಶಾಸಕರು ಪೂಜೆ ಸಲ್ಲಿಸಿ, ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ಕೊಟ್ಟರು. ಬಳಿಕ ಮಾತನಾಡಿದ ಅವರು, ಜಿಲ್ಲಾ ಕೇಂದ್ರ ಕಲಬುರಗಿಗೆ ಸಂಚರಿಸುವ ಸಾರ್ವಜನಿಕರು ಮತ್ತು ವ್ಯಾಪಾರಿಗಳ ಬೇಡಿಕೆಯನ್ನು ಮನಗಂಡು ಹೊಸ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಘಟಕಾಧಿಕಾರಿ ಯೋಗಿನಾಥ ಸರಸಂಬಿ ಅವರು ಬಸ್ ಸಂಚಾರ, ವೇಳಾಪಟ್ಟಿ ಹಾಗೂ ಸೇವಾ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಂಚಗ್ಯಾರoಟಿ ಅಧ್ಯಕ್ಷ ಶಿವುಪುತ್ರ ಪಾಟೀಲ, ಮುಖಂಡ ಮಲ್ಲಪ್ಪ ಹತ್ತರಕಿ, ಘಟಕದ ಮೇಲ್ವಿಚಾರಕ ಮುಹಮ್ಮದ್ ಖಾನ್, ವೈದ್ಯಕುಮಾರ ತೇಲ್ಕರ್, ಮಶಾಕ್ ಪಟೇಲ್, ಮುಹಮ್ಮದ್ ಯಾಸೀನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇರಾನ್ ಬೆದರಿಸಲು ಮಧ್ಯಪ್ರಾಚ್ಯಕ್ಕೆ ಯುದ್ಧವಾಹಕ ನೌಕೆ ರವಾನಿಸಿದ ಅಮರಿಕ; ಸಾಗರದ ಅಲೆಗಳಲ್ಲಿ ಸಂಚಲನ!
ಇರಾನ್ನ ಆಂತರಿಕ ಬಿಕ್ಕಟ್ಟಿನಲ್ಲಿ ಮಧ್ಯಪ್ರವೇಶ ಮಾಡುವುದಾಗಿ ಹೇಳುತ್ತಲೇ ಇರುವ ಅಮೆರಿಕ, ತನ್ನ ಮಾತಿಗೆ ಪೂರಕವಾಗಿ ಮಧ್ಯಪ್ರಾಚ್ಯದತ್ತ ತನ್ನ ಯುದ್ಧವಾಹಕ ನೌಕೆಯ ಗುಂಪೊಂದನ್ನು ರವಾನೆ ಮಾಡಿದೆ. ಅಮೆರಿಕ ಈ ನಡೆಯನ್ನು ಇರಾನ್ ಮೇಲೆ ಒತ್ತಡ ಹೇರುವ ತಂತ್ರ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಯುದ್ಧವಾಹಕ ನೌಕೆಗಳನ್ನು ದಕ್ಷಿಣ ಚೀನಾ ಸಮುದ್ರದಿಂದ ಮಧ್ಯಪ್ರಾಚ್ಯಕ್ಕೆ ಸ್ಥಳಾಂತರಿಸಲಾಗಿದೆ. ಅಮೆರಿಕದ ಈ ನಡೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇದನ್ನು ಇರಾನ್ ಬೆದರಿಸುವ ತಂತ್ರ ಎಂದು ಕರೆದರೆ, ಮತ್ತೆ ಕೆಲವರು ಇದು ಬಿಕ್ಕಟ್ಟನನ್ನು ಮತ್ತಷ್ಟು ಉಲ್ಬಣಗೊಳಿಸಲಿದೆ ಎಂದು ಟೀಕಿಸಿದ್ದಾರೆ.
ಕಾಳಗಿ | ಅಣವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಕಾಳಗಿ : ಇಲ್ಲಿನ ಶ್ರೀ ಅಣವೀರಭದ್ರೇಶ್ವರ ಹಾಗೂ ಭದ್ರಕಾಳಿ ಕಲ್ಯಾಣ ಮಹೋತ್ಸವವು ಬುಧವಾರ ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆ 6 ಗಂಟೆಯಿಂದ 10.30 ರವರೆಗೆ ಸಾವಿರಾರು ಭಕ್ತರ ಸಾನ್ನಿಧ್ಯದಲ್ಲಿ ಮಹಾರುದ್ರಾಭಿಷೇಕ ಜರುಗಿತು. ಬಳಿಕ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಅನಂತರ ಶಿವಾನುಭವ ಚಿಂತನೆ ಹಾಗೂ ಧರ್ಮಸಭೆ ಜರುಗಿದ್ದು, ಸಂಜೆ 5.30ಕ್ಕೆ ಕಲ್ಯಾಣ ಮಹೋತ್ಸವ ಅತ್ಯಂತ ವೈಭವದಿಂದ ನೆರವೇರಿತು. ಕರ್ನಾಟಕದ ವಿವಿಧ ಜಿಲ್ಲೆಗಳೊಂದಿಗೆ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಪ.ಬ್ರ. ರೇವಣಸಿದ್ಧ ಶಿವಾಚಾರ್ಯರು ಶ್ರೀನಿವಾಸ ಸರಡಗಿ, ನೀಲಕಂಠ ದೇವರು, ರಾಮಲಿಂಗ ರೆಡ್ಡಿ ದೇಶಮುಖ, ಶರಣಬಸಪ್ಪ ಮಮಶೆಟ್ಟಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಅಣ್ಣಾರಾವ ಪೆದ್ದಿ, ವೀರಣ್ಣ ಗಂಗಾಣಿ, ಡಾ.ಅನೀಲ ರಟಕಲ್, ನೀಲಕಂಠ ರಾವ್ ಪಾಟೀಲ್, ಸೋಮಣ್ಣ ಕುರಕೋಟಿ, ಮಹೇಶ ಪೆದ್ದಿ, ರಾಜಶೇಖರ ಗುಡುದಾ, ಅರ್ಚಕರಾದ ಗೌರಿಶಂಕರ ತೆಂಗಿನಮಠ, ರೇವಣಸಿದ್ಧಪ್ಪ ಕುರುಕೋಟಿ, ಸಂತೋಷ್ ಚಿದರಿ, ಜಗದೇವಪ್ಪ ಮಹಾಗಾಂವ, ಚಿಕ್ಕವೀರಪ್ಪ ಮಾಮಾ, ಮಲ್ಲಿಕಾರ್ಜುನ್ ಕುರಕೋಟಿ, ಮಗಳಪ್ಪ ಸರ್ ಚಿದರಿ, ನಾಗಣ್ಣ ಗಡ್ಡಿ, ರವಿ ಬಳಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಭಜಂತ್ರಿ ವೃಂದದಿಂದ ಕಾರ್ಯಕ್ರಮಕ್ಕೆ ಮೆರುಗು ನೀಡಲಾಯಿತು. ರಟಕಲ್ ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದರು. ಇನ್ನೂ ಅನೇಕ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಉಡುಪಿ: ಚೂರ್ಣೋತ್ಸವದೊಂದಿಗೆ ಸಂಪನ್ನಗೊಂಡ ಸಪ್ತೋತ್ಸವ
ಉಡುಪಿ, ಜ.15: ಉಡುಪಿ ಶ್ರೀಕೃಷ್ಣ ಮಠದ ವಾರ್ಷಿಕ ಜಾತ್ರೋತ್ಸವ ಎಂದೇ ಕರೆಯಲಾಗುವ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕಳೆದೊಂದು ವಾರದಿಂದ ನಡೆದ ಸಪ್ತೋತ್ಸವ, ಇಂದು ಹಗಲಿನ ರಥೋತ್ಸವ ‘ಚೂರ್ಣೋತ್ಸವ’ದೊಂದಿಗೆ ಸಂಪನ್ನಗೊಂಡಿತು. ದ್ವೈತಮತ, ಮಧ್ವ ಸಿದ್ಧಾಂತದ ಪ್ರತಿಪಾದಕರಾದ ಶ್ರೀಮಧ್ವಾಚಾರ್ಯರು ಸುಮಾರು 800 ವರ್ಷಗಳ ಹಿಂದೆ ಮಕರ ಸಂಕ್ರಮಣದ ದಿನದಂದೇ ಉಡುಪಿಯಲ್ಲಿ ಶ್ರೀಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಿದರೆಂಬ ಪ್ರತೀತಿ ಇರುವ ಹಿನ್ನೆಲೆ ಯಲ್ಲಿ ಪ್ರತಿ ವರ್ಷ ಇಲ್ಲಿ ಒಂದು ವಾರ ಕಾಲ ಸಪ್ತೋತ್ಸವವನ್ನು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯ (ಜ.14) ದಿನದಂದು ರಾತ್ರಿ ಮೂರು ತೇರುಗಳ ಉತ್ಸವ ನಡೆದು ಮರುದಿನ ಹಗಲು ರಥೋತ್ಸವದೊಂದಿಗೆ ಇದು ಮುಕ್ತಾಯಗೊಳ್ಳುತ್ತದೆ. ಪರ್ಯಾಯ ಪುತ್ತಿಗೆ ಮಠದ ಶ್ರೀಗಳೊಂದಿಗೆ ಮಠದ ಕಿರಿಯ ಯತಿಗಳಾದ ಶ್ರೀಸುಶ್ರೀಂದ್ರತೀರ್ಥರು, ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥರು ಹಾಗೂ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು ಇಂದಿನ ಚೂರ್ಣೋತ್ಸವ ದಲ್ಲಿ ಪಾಲ್ಗೊಂಡರು. ಪೂಜೆಯ ಬಳಿಕ ಶ್ರೀಕೃಷ್ಣ-ಮುಖ್ಯಪ್ರಾಣ ಮೂರ್ತಿಗಳನ್ನು ಚಿನ್ನದ ಪಲಕ್ಕಿ ಯಲ್ಲಿ ತಂದು ಸ್ವಾಗತ ಗೋಪುರದ ಎದುರು ನಿಲ್ಲಿಸಲಾದ ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಸ್ವಾಮೀಜಿಗಳು ರಥವನ್ನೇರಿ ಮಂಗಳಾರತಿ ಬೆಳಗಿದ ಬಳಿಕ ರಥವನ್ನು ರಥಬೀದಿಗೆ ಒಂದು ಸುತ್ತು ಪ್ರದಕ್ಷಿಣೆ ತರಲಾಯಿತು. ಈ ವೇಳೆ ಶ್ರೀಗಳು ರಥದಿಂದಲೇ ನೆರೆದ ಭಕ್ತರತ್ತ ಪ್ರಸಾದ, ಹಣ್ಣುಹಂಪಲು ಹಾಗೂ ನಾಣ್ಯಗಳನ್ನು ಎಸೆಯುತ್ತಾರೆ. ಉತ್ಸವದ ಬಳಿಕ ಶ್ರೀಕೃಷ್ಣ-ಮುಖ್ಯಪ್ರಾಣ ಮೂರ್ತಿಗಳನ್ನು ಮಠದ ವಸಂತ ಮಂಟಪಕ್ಕೆ ತಂದು ಪೂಜಿಸಿ ದೇವರಿಗೆ ಸಮರ್ಪಿತ ಓಕುಳಿಯನ್ನು ಎಲ್ಲಾ ಯತಿಗಳೊಂದಿಗೆ ಭಕ್ತರು ಹಚ್ಚಿಕೊಂಡು ಮಧ್ವ ಸರೋವರದಲ್ಲಿ ಅವಭೃತ ಸ್ನಾನ ಮಾಡಿದರು. ನೂರಾರು ಮಂದಿ ಭಕ್ತರು ಇದರಲ್ಲಿ ಪಾಲ್ಗೊಂಡರು. ಬಳಿಕ ಅನ್ನಸಂತಪರ್ಣೆಗಾಗಿ ಸಿದ್ಧಪಡಿಸಲಾದ ಅನ್ನದ ರಾಶಿಗೆ ಪಲ್ಲಪೂಜೆ ನಡೆಯಿತು. ಸಾವಿರಾರು ಮಂದಿ ಇಂದಿನ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು. ಉರುಳು ಸೇವೆ: ಈ ಬಾರಿ ಕೃಷ್ಣನ ಭಕ್ತರು ಬ್ರಹ್ಮ ರಥೋತ್ಸವದ ಸಂದರ್ಭದಲ್ಲಿ ರಥಬೀದಿಯಲ್ಲಿ ಉರುಳು ಸೇವೆ ಮಾಡಿದರು. ಸಂಜೆ ರಾಜಾಂಗಣದಲ್ಲಿ ಪುತ್ತಿಗೆ ಪರ್ಯಾಯದ ಮಂಗಳೋತ್ಸವದೊಂದಿಗೆ ಪುತ್ತಿಗೆ ಶ್ರೀಗೆ ತುಲಾಭಾರ ಸಹಿತ ಗುರುವಂದನಾ ಕಾರ್ಯಕ್ರಮ ನಡೆಯಿತು. ಶುಕ್ರವಾರ ಏಳು ರಥಗಳ ಉತ್ಸ: ಪುತ್ತಿಗೆ ಶ್ರೀ ಎರಡು ವರ್ಷಗಳ ಕಾಲ ಶ್ರೀಕೃಷ್ಣನಿಗೆ ನಡೆಸಿದ ವಿಶ್ವ ಗೀತಾ ಪರ್ಯಾ ಯದ ಮಂಗಳೋತ್ಸವ ಪ್ರಯುಕ್ತ ನಾಳೆ ಅಪರೂಪದ ಏಳು ರಥಗಳ ಉತ್ಸವ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ.
ಕಲಬುರಗಿ | ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ
ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಹಾಗೂ ಭಾರತೀಯ ರೈಲ್ವೆ, ಬ್ಯಾಂಕಿಂಗ್ ಮತ್ತು ಎಲ್.ಐ.ಸಿ (LIC) ವಲಯಗಳ ಖಾಸಗೀಕರಣವನ್ನು ಕೈಬಿಡಬೇಕು ಎಂದು ಆಗ್ರಹಿಸಿ ಶಹಬಾದ್ ತಾಲೂಕಿನ ಹೊನಗುಂಟಾ ಗ್ರಾಮದಲ್ಲಿ ಬೃಹತ್ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಗ್ರಾಮದಲ್ಲಿ ಸಂಕ್ರಮಣದ ಹಬ್ಬದ ಸಂದರ್ಭದಲ್ಲಿಯೂ ಜನರಿಂದ ಸಹಿ ಪಡೆದು ಹೋರಾಟಕ್ಕೆ ಬೆಂಬಲಿಸಲು ಮನವಿ ಮಾಡಿಕೊಳ್ಳಲಾಯಿತು. ಸಹಿ ಸಂಗ್ರಹ ಅಭಿಯಾನದಲ್ಲಿ AIDYOನ ಜಿಲ್ಲಾಧ್ಯಕ್ಷರಾದ ಜಗನ್ನಾಥ್, ಸ್ಥಳೀಯ ಅಧ್ಯಕ್ಷರಾದ ರಘು ಪವಾರ್, ಕಾರ್ಯದರ್ಶಿ ರಮೇಶ್ ದೇವಕರ್, ದೇವರಾಜ್ ಮಿರಲಕರ, ಕಿರಣ್ ಮಾನೆ, ತೇಜಸ್ವಿನಿ ಆರ್ ಇಬ್ರಾಹಿಂಪುರ್, ತೇಜಸ್ ಆರ್ ಇಬ್ರಾಹಿಂಪುರ್, ಶ್ರೀಶೈಲ್, ವಿಠ್ಠಲ್ ರಾಠೋಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
2025ರಲ್ಲಿ ದ್ವೇಷ ಭಾಷಣಗಳಲ್ಲಿ ಏರಿಕೆ; ಧಾರ್ಮಿಕ ಅಲ್ಪಸಂಖ್ಯಾತರೇ ಟಾರ್ಗೆಟ್!
2025ರಲ್ಲಿ ಭಾರತದಾದ್ಯಂತ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು ಒಟ್ಟು 1,318 ದ್ವೇಷ ಭಾಷಣದ ಘಟನೆಗಳು ದಾಖಲಾಗಿವೆ. ಇಂಡಿಯಾ ಹೇಟ್ ಲ್ಯಾಬ್ (IHL) ವರದಿಯ ಪ್ರಕಾರ, ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ ಘಟನೆಗಳು ನಡೆದಿವೆ. 2024ಕ್ಕೆ ಹೋಲಿಸಿದರೆ ದ್ವೇಷ ಭಾಷಣದಲ್ಲಿ 13% ಹೆಚ್ಚಳವಾಗಿದ್ದು, 2023ಕ್ಕೆ ಹೋಲಿಸಿದರೆ 97% ಹೆಚ್ಚಳವಾಗಿದೆ. ‘ಸೆಂಟರ್ ಫಾರ್ ದಿ ಸ್ಟಡಿ ಆಫ್ ಆರ್ಗನೈಸ್ಡ್ ಹೇಟ್’ (CSOH) ಅಧೀನದಲ್ಲಿರುವ IHL, 2025ರಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದಾಖಲಾಗಿದ ದ್ವೇಷ ಭಾಷಣ ಘಟನೆಗಳ ಸಂಖ್ಯೆ 2024ರಲ್ಲಿ ದಾಖಲಾಗಿದ್ದ 1,165 ಪ್ರಕರಣಗಳನ್ನು ಮೀರಿಸಿದೆ ಎಂದು ಹೇಳಿದೆ. ಕಳೆದ ವರ್ಷ ರಾಜಕೀಯ ನಾಯಕರು ಮತ್ತು ಹಿಂದುತ್ವ ಸಂಘಟನೆಗಳ ಸದಸ್ಯರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ವಿಶ್ವಾಸದ್ರೋಹಿ, ದೇಶವಿರೋಧಿ, ಅಪಾಯಕಾರಿ ಅಥವಾ ಬೆದರಿಕೆ ಹುಟ್ಟಿಸುವವರಂತೆ ಚಿತ್ರಿಸುವ ಮೂಲಕ ಭಯ ಹುಟ್ಟಿಸುವ ನಿರೂಪಣೆಗಳನ್ನು ಬಳಸಿದ್ದಾರೆ ಎಂದು IHL ಗಮನಿಸಿದೆ. ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗ ದಳದಂತಹ ಭಾರತೀಯ ಜನತಾ ಪಕ್ಷ (ಬಿಜೆಪಿ) ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಅಂಗಸಂಸ್ಥೆಗಳು ವೈಯಕ್ತಿಕ ದ್ವೇಷ ಭಾಷಣ ಘಟನೆಗಳಲ್ಲಿ ಹೆಚ್ಚಿನ ಪಾಲು ವಹಿಸಿವೆ. ಅಂತರರಾಷ್ಟ್ರೀಯ ಹಿಂದೂ ಪರಿಷತ್, ಸಕಲ್ ಹಿಂದೂ ಸಮಾಜದಂತಹ ಇತರ ಬಲಪಂಥೀಯ ಗುಂಪುಗಳೂ ಈ ಪಟ್ಟಿಯಲ್ಲಿ ಸೇರಿವೆ. ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿದ ದ್ವೇಷ ಭಾಷಣ ಇಂಡಿಯಾ ಹೇಟ್ ಲ್ಯಾಬ್ ವರದಿ ಪ್ರಕಾರ, 2025ರಲ್ಲಿ 1,318 ದ್ವೇಷ ಭಾಷಣದ ಪ್ರಕರಣಗಳು ದಾಖಲಾಗಿವೆ. ಈ ಭಾಷಣಗಳು ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿವೆ. ಇದರಲ್ಲಿ 1,289 ಘಟನೆಗಳು ಅಥವಾ ಶೇಕಡಾ 98ರಷ್ಟು ದ್ವೇಷ ಭಾಷಣಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ. ಇದೇ ವೇಳೆ ಕ್ರಿಶ್ಚಿಯನ್ ಸಮುದಾಯದ ವಿರುದ್ಧದ ದ್ವೇಷ ಭಾಷಣಗಳ ಸಂಖ್ಯೆ ಹಿಂದಿನ ಅವಧಿಗೆ ಹೋಲಿಸಿದರೆ ಶೇ. 41ರಷ್ಟು ಹೆಚ್ಚಾಗಿದ್ದು, 162 ಪ್ರಕರಣಗಳು ದಾಖಲಾಗಿವೆ. ಈ ಅಂಕಿಅಂಶಗಳು ಸೂಚಿಸುವಂತೆ, ಅನೇಕ ಕಾರ್ಯಕ್ರಮಗಳು ಮತ್ತು ಕೂಟಗಳು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಬ್ಬರನ್ನೂ ಗುರಿಯಾಗಿಸಿಕೊಂಡ ದ್ವೇಷ ಭಾಷಣಗಳನ್ನು ಒಳಗೊಂಡಿವೆ. ಹಿಂಸಾಚಾರಕ್ಕೆ ನೇರ ಕರೆ ನೀಡಿರುವ ದ್ವೇಷ ಭಾಷಣ ಘಟನೆಗಳೂ ಇಲ್ಲಿ ದಾಖಲಾಗಿವೆ. 308 ಭಾಷಣಗಳು, ಅಂದರೆ ದಾಖಲಾದ ಎಲ್ಲಾ ದ್ವೇಷ ಭಾಷಣ ಘಟನೆಗಳಲ್ಲಿ 23 ಪ್ರತಿಶತ, ಹಿಂಸಾಚಾರಕ್ಕೆ ಕರೆ ನೀಡಿವೆ. 120 ದ್ವೇಷ ಭಾಷಣಗಳು ಅಲ್ಪಸಂಖ್ಯಾತ ಸಮುದಾಯಗಳನ್ನು—ಮುಖ್ಯವಾಗಿ ಮುಸ್ಲಿಮರನ್ನು—ಸಾಮಾಜಿಕ ಅಥವಾ ಆರ್ಥಿಕವಾಗಿ ಬಹಿಷ್ಕರಿಸುವಂತೆ ಕರೆ ನೀಡಿವೆ. 136 ಭಾಷಣಗಳು ಆಯುಧಗಳನ್ನು ಹಿಡಿಯುವಂತೆ ನೇರ ಕರೆಗಳನ್ನು ಒಳಗೊಂಡಿವೆ. 276 ಭಾಷಣಗಳಲ್ಲಿ ಮಸೀದಿಗಳು, ದೇವಾಲಯಗಳು ಮತ್ತು ಚರ್ಚ್ಗಳು ಸೇರಿದಂತೆ ಪೂಜಾ ಸ್ಥಳಗಳನ್ನು ಕೆಡವುವ ಅಥವಾ ನಾಶಮಾಡುವ ಕರೆಗಳು ಸೇರಿವೆ. 141 ಭಾಷಣಗಳಲ್ಲಿ ಮಾನವೀಯತೆಯನ್ನು ಅವಮಾನಿಸುವ ಭಾಷೆ ಕಂಡುಬಂದಿದೆ. 69 ದ್ವೇಷ ಭಾಷಣ ಘಟನೆಗಳು ನಿರ್ದಿಷ್ಟವಾಗಿ ಭಾರತದಲ್ಲಿ ವಾಸಿಸುವ ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರನ್ನು ಗುರಿಯಾಗಿಸಿಕೊಂಡಿವೆ. ಯಾವ ರಾಜ್ಯದಲ್ಲಿ ಹೆಚ್ಚು? ಉತ್ತರ ಪ್ರದೇಶ (266), ಮಹಾರಾಷ್ಟ್ರ (193), ಮಧ್ಯಪ್ರದೇಶ (172), ಉತ್ತರಾಖಂಡ (155) ಮತ್ತು ದೆಹಲಿ (76) ಅತಿ ಹೆಚ್ಚು ದ್ವೇಷ ಭಾಷಣ ಘಟನೆಗಳನ್ನು ದಾಖಲಿಸಿವೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ, ಬಿಜೆಪಿ ಜತೆ ಸಮ್ಮಿಶ್ರ ಸರ್ಕಾರ ಹಾಗೂ ಬಿಜೆಪಿ ಆಡಳಿತವಿರುವ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 1,164 ದ್ವೇಷ ಭಾಷಣ ಘಟನೆಗಳು (88%) ದಾಖಲಾಗಿವೆ. ಇದು 2024ರಲ್ಲಿ ದಾಖಲಾದ 931 ಘಟನೆಗಳಿಗಿಂತ 25% ಹೆಚ್ಚಳವನ್ನು ತೋರಿಸುತ್ತದೆ. ವಿರೋಧ ಪಕ್ಷಗಳ ಆಡಳಿತವಿರುವ ಏಳು ರಾಜ್ಯಗಳಲ್ಲಿ 2025ರಲ್ಲಿ 154 ದ್ವೇಷ ಭಾಷಣ ಘಟನೆಗಳು ದಾಖಲಾಗಿವೆ. 2024ರಲ್ಲಿ ಈ ರಾಜ್ಯಗಳಲ್ಲಿ 234 ಘಟನೆಗಳು ದಾಖಲಾಗಿದ್ದವು. ಅತೀ ಹೆಚ್ಚು ದ್ವೇಷ ಭಾಷಣಗಳು ನಡೆದ ತಿಂಗಳು ಏಪ್ರಿಲ್. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ರಾಮನವಮಿ ಮೆರವಣಿಗೆಗಳು ಮತ್ತು ದ್ವೇಷ ರ್ಯಾಲಿಗಳ ಆಯೋಜನೆಯು ಏಪ್ರಿಲ್ ತಿಂಗಳಲ್ಲಿ ದ್ವೇಷ ಭಾಷಣ ಘಟನೆಗಳು ಏರಿಕೆಯಾಗಲು ಕಾರಣವಾಗಿದೆ. ಈ ತಿಂಗಳಲ್ಲಿ 158 ದ್ವೇಷ ಭಾಷಣ ಘಟನೆಗಳು ವರದಿಯಾಗಿವೆ. ದ್ವೇಷ ಭಾಷಣಗಳಲ್ಲಿ ಉತ್ತರ ಪ್ರದೇಶಕ್ಕೆ ಅಗ್ರಸ್ಥಾನ 69 ದ್ವೇಷ ಭಾಷಣ ಘಟನೆಗಳು ರೋಹಿಂಗ್ಯಾ ನಿರಾಶ್ರಿತರನ್ನು ಗುರಿಯಾಗಿಸಿಕೊಂಡಿದ್ದು, 192 ಭಾಷಣಗಳು “ಬಾಂಗ್ಲಾದೇಶದ ಒಳನುಸುಳುವವರು” ಎಂಬ ಟೀಕೆಯನ್ನು ಒಳಗೊಂಡಿವೆ. ಇಂಡಿಯಾ ಹೇಟ್ ಲ್ಯಾಬ್ ವಿಶ್ಲೇಷಿಸಿದ 21 ರಾಜ್ಯಗಳಲ್ಲಿ ಉತ್ತರ ಪ್ರದೇಶವು ಅತಿ ಹೆಚ್ಚು ದ್ವೇಷ ಭಾಷಣ ಘಟನೆಗಳನ್ನು ದಾಖಲಿಸಿದೆ. ಇಲ್ಲಿ 266 ಘಟನೆಗಳು ದಾಖಲಾಗಿದ್ದು, ಇದು ಒಟ್ಟು ದ್ವೇಷ ಭಾಷಣಗಳ 20% ರಷ್ಟಾಗಿದೆ. ಇದು 2024ರಲ್ಲಿ ದಾಖಲಾದ 242 ಘಟನೆಗಳಿಂದ ಸುಮಾರು 10% ಹೆಚ್ಚಳ ಹಾಗೂ 2023ರಲ್ಲಿ ದಾಖಲಾಗಿದ್ದ 104 ಘಟನೆಗಳಿಂದ 156% ಹೆಚ್ಚಳವನ್ನು ತೋರಿಸುತ್ತದೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ ಇದ್ದು, ಇಲ್ಲಿ 193 ಘಟನೆಗಳು ದಾಖಲಾಗಿವೆ. ದ್ವೇಷ ಭಾಷಣ ಘಟನೆಗಳು ಅತಿ ಹೆಚ್ಚು ಸಂಭವಿಸಿದ ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇರವಾಗಿ ಅಥವಾ ಒಕ್ಕೂಟದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಗಮನಾರ್ಹ. ಇದರಲ್ಲಿ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶವೂ ಸೇರಿದ್ದು, ಅಲ್ಲಿ ವಿಧಾನಸಭಾ ಚುನಾವಣೆಯ ನಂತರ ಫೆಬ್ರವರಿ 2025ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಆಡಳಿತವಿರುವ ಕರ್ನಾಟಕವು 40 ದ್ವೇಷ ಭಾಷಣ ಘಟನೆಗಳೊಂದಿಗೆ ಮೊದಲ ಹತ್ತು ರಾಜ್ಯಗಳಲ್ಲಿ ಸ್ಥಾನ ಪಡೆದ ಏಕೈಕ ಬಿಜೆಪಿಯೇತರ ಸರ್ಕಾರದ ರಾಜ್ಯವಾಗಿದೆ. 2025ರಲ್ಲಿ 656 ದ್ವೇಷ ಭಾಷಣಗಳು ಪಿತೂರಿ ಆಧಾರಿತವಾಗಿವೆ. ಇಂಥ ಭಾಷಣಗಳಲ್ಲಿ “ಲವ್ ಜಿಹಾದ್”, “ಲ್ಯಾಂಡ್ ಜಿಹಾದ್”, “ಜನಸಂಖ್ಯಾ ಜಿಹಾದ್”, “ಥೂಕ್ (ಉಗುಳು) ಜಿಹಾದ್”, “ಶಿಕ್ಷಣ ಜಿಹಾದ್”, “ಡ್ರಗ್ ಜಿಹಾದ್” ಮತ್ತು “ವೋಟ್ ಜಿಹಾದ್” ಮೊದಲಾದ ಕಾಲ್ಪನಿಕ ಪಿತೂರಿ ಪದಗಳನ್ನು ಬಳಸಲಾಗಿದೆ. ಅತಿ ಹೆಚ್ಚು ದ್ವೇಷ ಭಾಷಣ ಮಾಡಿದವರು: ಧಾಮಿ ಸಂಘಟನೆಗಳಲ್ಲಿ, ವಿಎಚ್ಪಿ ಮತ್ತು ಬಜರಂಗ ದಳ ದ್ವೇಷ ಭಾಷಣ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಿವೆ. ಈ ಸಂಘಟನೆಗಳು 289 ಸಭೆಗಳನ್ನು ನೇರವಾಗಿ ಪ್ರಾಯೋಜಿಸಿದ್ದು, ಇದು ಎಲ್ಲಾ ದಾಖಲಿತ ಘಟನೆಗಳಲ್ಲಿ 22% ರಷ್ಟಾಗಿದೆ. ಆದಾಗ್ಯೂ, 2025ರಲ್ಲಿ ಅತಿ ಹೆಚ್ಚು ದ್ವೇಷ ಭಾಷಣಗಳನ್ನು ಮಾಡಿದ ಪ್ರಮುಖ ವ್ಯಕ್ತಿಗಳಲ್ಲಿ ಹಿರಿಯ ಬಿಜೆಪಿ ನಾಯಕರು ಸೇರಿದಂತೆ ಹಲವು ದ್ವೇಷ ಭಾಷಣಕಾರರು ಸೇರಿದ್ದಾರೆ. ದೆಹಲಿ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೆಚ್ಚಿನ ಸಂಖ್ಯೆಯಲ್ಲಿ ಭಾಷಣಗಳನ್ನು ಮಾಡಿದ್ದಾರೆ. ತಮ್ಮ ಭಾಷಣಗಳಲ್ಲಿ ಅವರು ನಿಯಮಿತವಾಗಿ “ಲವ್ ಜಿಹಾದ್”, “ಲ್ಯಾಂಡ್ ಜಿಹಾದ್” ಮತ್ತು “ಥೂಕ್ ಜಿಹಾದ್” ಸೇರಿದಂತೆ ಮುಸ್ಲಿಂ ವಿರೋಧಿ ಪಿತೂರಿ ಸಿದ್ಧಾಂತಗಳನ್ನು ಪ್ರಚಾರ ಮಾಡಿದ್ದಾರೆ. ಎರಡನೇ ಸ್ಥಾನದಲ್ಲಿ ಅಖಿಲ ಭಾರತ ಹಿಂದೂ ಪರಿಷತ್, ರಾಷ್ಟ್ರೀಯ ಬಜರಂಗ ದಳದ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಇದ್ದಾರೆ. ಅವರು 2025ರಲ್ಲಿ 46 ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಇದು 2024ರಲ್ಲಿ 31 ಮತ್ತು 2023ರಲ್ಲಿ 32 ಆಗಿತ್ತು. ವಿಶ್ವ ಹಿಂದೂ ಪರಿಷತ್ನ ಮಾಜಿ ನಾಯಕ ತೊಗಾಡಿಯಾ ಈ ಹಿಂದೆ ಪ್ರಧಾನಿ ಮೋದಿ ಹಾಗೂ ಸಂಘ ಪರಿವಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದರು. ಚುನಾವಣೆಗಳಿಗೆ ಸಂಬಂಧಿಸಿದಂತೆ, ಭಾರತದಲ್ಲಿ ಹೆಚ್ಚಿನ ಪ್ರಮಾಣದ ಚುನಾವಣಾ ದ್ವೇಷ ಭಾಷಣವು ಪ್ರಮುಖ ರಾಜ್ಯ ಅಥವಾ ಸಾರ್ವತ್ರಿಕ ಚುನಾವಣೆಗಳ ಸುತ್ತ ಕೇಂದ್ರೀಕೃತವಾಗಿರುತ್ತದೆ. ಸ್ಥಳೀಯ ಚುನಾವಣಾ ಸ್ಪರ್ಧೆಗಳ ಸಮಯದಲ್ಲಿ ಇದು ಕಡಿಮೆಯಾಗುತ್ತದೆ ಎಂದು IHL ಹೇಳಿದೆ. ಸಾಮಾಜಿಕ ಮಾಧ್ಯಮದ ಪಾತ್ರ 2025ರಲ್ಲಿ ದಾಖಲಾಗಿರುವ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡ 1,318 ದ್ವೇಷ ಭಾಷಣ ಘಟನೆಗಳಲ್ಲಿ, 1,278 ಘಟನೆಗಳ ಮೂಲ ಸಾಮಾಜಿಕ ಮಾಧ್ಯಮ ವೇದಿಕೆಗಳಾಗಿವೆ. ಅಲ್ಲಿ ಅವುಗಳನ್ನು ಮೊದಲು ಬಲಪಂಥೀಯ ಸಂಘಟನೆಗಳು ಅಥವಾ ನಾಯಕರು ಹಂಚಿಕೊಂಡಿದ್ದಾರೆ ಅಥವಾ ನೇರ ಪ್ರಸಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಹೆಚ್ಚು ವೀಡಿಯೋಗಳು ಅಪ್ಲೋಡ್ ಆಗಿರುವುದು ಫೇಸ್ಬುಕ್ನಲ್ಲಿ. ಫೇಸ್ಬುಕ್ನಲ್ಲಿ 942 ವೀಡಿಯೋಗಳು, ಯೂಟ್ಯೂಬ್ನಲ್ಲಿ 246, ಇನ್ಸ್ಟಾಗ್ರಾಮ್ನಲ್ಲಿ 67 ಮತ್ತು ಎಕ್ಸ್ನಲ್ಲಿ 23 ವೀಡಿಯೋಗಳು ಶೇರ್ ಆಗಿವೆ. ಇದು ದ್ವೇಷ ಭಾಷಣದ ಏರಿಕೆಯಲ್ಲಿ ಸಾಮಾಜಿಕ ಮಾಧ್ಯಮದ ಪ್ರಮುಖ ಪಾತ್ರವನ್ನು ಸ್ಪಷ್ಟಪಡಿಸುತ್ತದೆ.
UGCET 2026: ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗೆ ಕೆಇಎ ಅರ್ಜಿ ಆಹ್ವಾನ, ಈ ದಾಖಲೆಗಳು ಬೇಕು
ಬೆಂಗಳೂರು: ಇಂಜಿನಿಯರಿಂಗ್, ಪಶು ಸಂಗೋಪನೆ, ಕೃಷಿ ವಿಜ್ಞಾನ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (UGCET 2025) ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಬಾರಿ 'ಅಪ್ಲಿಕೇಷನ್ ಜೊತೆಗೆ ವೇರಿಫಿಕೇಷನ್ ಮಾದರಿ' ಇರುವ ಕಾರಣ ಪ್ರಮಾಣಪತ್ರ, ಷರತ್ತು ಹಾಗೂ ಇತರ ಸಂಕ್ಷಿಪ್ತ ಮಾಹಿತಿ ಒಳಗೊಂಡ '
ಮಂಗಳೂರು| ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ: ಬಿ.ಕೆ ಇಮ್ತಿಯಾಝ್
ವಂಚನೆಗೆ ಒಳಗಾದ ಸಂತ್ರಸ್ತರಿಂದ ಪ್ರತಿಭಟನೆ
Explainer- ಟಿ20 ಕ್ರಿಕೆಟ್ ನಲ್ಲಿ ಹೊಸ ನಿಯಮ! ಏನಿವು`DB' ಮತ್ತು `DF'? `ಇಂಪ್ಯಾಕ್ಟ್ ಪ್ಲೇಯರ್' ಗಿಂತ ಹೇಗೆ ಭಿನ್ನ?
Big Bash League 2026-27 New Rules- ಆಸ್ಟ್ರೇಲಿಯಾ ಜನಪ್ರಿಯ ಟಿ20 ಕ್ರಿಕೆಟ್ ಲೀಗ್ ಆಗಿರುವ ಬಿಗ್ ಬ್ಯಾಷ್ ಲೀಗ್ 2026-27ರ ಆವೃತ್ತಿಯಿಂದ 'ಡಿಸಿಗ್ನೇಟೆಡ್ ಬ್ಯಾಟರ್' ಮತ್ತು 'ಡಿಸಿಗ್ನೇಟೆಡ್ ಫೀಲ್ಡರ್' ಎಂಬ ಹೊಸ ನಿಯಮಗಳನ್ನು ಪರಿಚಯಿಸಲಾಗುತ್ತಿದೆ. ಈ ನಿಯಮಗಳು ಟಿ20 ಕ್ರಿಕೆಟ್ನಲ್ಲಿ ಹೊಸ ತಂತ್ರಗಾರಿಕೆಗಳಿಗೆ ದಾರಿ ಮಾಡಿಕೊಡಲಿವೆ ಎಂದು ನಿರೀಕ್ಷಿಸಲಾಗಿದೆ. ಏನಿದು ಹೊಸ ನಿಯಮ? ಇದು ಇಂಡಿಯನ್ ಪ್ರೀಮಿಯರ್ ಲೀಗನ್ ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕಿಂತ ಹೇಗೆ ಭಿನ್ನ? ಇಲ್ಲಿದೆ ಈ ಬಗ್ಗೆ ವಿಶ್ಲೇಷಣೆ.
ಬೆಲೆ ಬೆಂಬಲ ಯೋಜನೆಯಡಿ ‘ಕಡಲೆ’ ಖರೀದಿ; ಪ್ರಧಾನಿ ಹಾಗೂ ಕೇಂದ್ರ ಕೃಷಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು : ರಾಜ್ಯದ ಲಕ್ಷಾಂತರ ಕಡಲೆ ಬೆಳೆಗಾರರು ಸಂಕಷ್ಟದಲ್ಲಿದ್ದು, ತಕ್ಷಣ ಮಧ್ಯಪ್ರವೇಶ ಮಾಡಿ ಕಡಲೆಯನ್ನು ಬೆಲೆ ಬೆಂಬಲ ಯೋಜನೆ(ಪಿಎಸ್ಎಸ್)ಯಡಿ ಖರೀದಿಗೆ ಅನುಮೋದನೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ. ಕಡಲೆ ಕರ್ನಾಟಕದ ಪ್ರಮುಖ ದ್ವಿದಳ ಧಾನ್ಯ ಬೆಳೆಗಳಲ್ಲಿ ಒಂದಾಗಿದ್ದು, 9.24 ಲಕ್ಷ ಹೆಕ್ಟೇರ್ನಲ್ಲಿ 6.27 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಮಾಡಲಾಗುತ್ತಿದೆ. ಇದು ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ, ದಾವಣಗೆರೆ ಮತ್ತು ಚಿಕ್ಕಮಗಳೂರು ಮುಂತಾದ ಪ್ರದೇಶಗಳ ರೈತರನ್ನು ಪೋಷಿಸುತ್ತದೆ. ಅನೇಕ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆದಾಯದ ಏಕೈಕ ಮೂಲವಾಗಿದೆ ಎಂದು ಸಿದ್ದರಾಮಯ್ಯ ಗಮನ ಸೆಳೆದಿದ್ದಾರೆ. 2026-27ರ ರಬಿ ಮಾರುಕಟ್ಟೆ ಋತುವಿನಲ್ಲಿ ಭಾರತ ಸರಕಾರವು ಕಡಲೆಗೆ ಕ್ವಿಂಟಾಲ್ಗೆ 5,875 ರೂ. ಕನಿಷ್ಠ ಬೆಂಬಲ ಬೆಲೆ(ಎಂ.ಎಸ್.ಪಿ) ಘೋಷಿಸಿದ್ದರೂ, ಕರ್ನಾಟಕದ ಪ್ರಮುಖ ಎಪಿಎಂಸಿಗಳಲ್ಲಿ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಎಂ.ಎಸ್.ಪಿ ಗಿಂತ ಗಮನಾರ್ಹವಾಗಿ ಕಡಿಮೆಯಾಗಿದ್ದು, ಪ್ರತಿ ಕ್ವಿಂಟಾಲ್ಗೆ 4,260 ರೂ.ಗಳಿಂದ 5,813 ರೂ.ವರೆಗೆ ಇದೆ ಎಂದು ಅವರು ತಿಳಿಸಿದ್ದಾರೆ. ಹಲವಾರು ಮಾರುಕಟ್ಟೆಗಳಲ್ಲಿ, ರೈತರಿಗೆ ಕನಿಷ್ಠ ಬೆಂಬಲ ಬೆಲೆಗಿಂತ 800–1,200 ರೂ. ಕಡಿಮೆ ಬೆಲೆಗೆ ಮಾರಾಟ ಮಾಡಲು ಒತ್ತಾಯಿಸಲಾಗುತ್ತಿದೆ. ಜನವರಿ ಮತ್ತು ಮಾರ್ಚ್ ನಡುವೆ ಕೊಯ್ಲು ತೀವ್ರಗೊಳ್ಳುತ್ತಿದ್ದಂತೆ, ಮತ್ತಷ್ಟು ಬೆಲೆ ಕುಸಿತವಾಗುವ ಆತಂಕವಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಕನಿಷ್ಠ ಬೆಂಬಲ ಬೆಲೆಯ ಸೌಲಭ್ಯ ಸಿಗದಿದ್ದರೆ, ರೈತರ ನಂಬಿಕೆ ಕ್ಷೀಣಿಸುತ್ತದೆ. ಉತ್ಪಾದನಾ ವೆಚ್ಚಗಳು, ಸಾಲ ಬಾಧ್ಯತೆಗಳು ಮತ್ತು ಮನೆಯ ಅಗತ್ಯಗಳ ಹೊರೆಯೂ ಅನೇಕ ಬೆಳೆಗಾರರನ್ನು ಸಂಕಷ್ಟದ ಮಾರಾಟಕ್ಕೆ ತಳ್ಳುತ್ತದೆ. ಇಂತಹ ಸಂದರ್ಭದಲ್ಲಿ ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಕಡಲೆ ಖರೀದಿಗೆ ಭಾರತ ಸರಕಾರವು ತಕ್ಷಣವೇ ಅನುಮೋದನೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಅಲ್ಲದೇ, ನಾಫೆಡ್ ಮತ್ತು ಎನ್.ಸಿ.ಸಿ.ಎಫ್ ನಂತಹ ಕೇಂದ್ರ ನೋಡಲ್ ಏಜೆನ್ಸಿಗಳು ಕರ್ನಾಟಕದಲ್ಲಿ ಖರೀದಿ ಕೇಂದ್ರಗಳನ್ನು ವಿಳಂಬವಿಲ್ಲದೆ ಕಾರ್ಯಗತಗೊಳಿಸಲು ನಿರ್ದೇಶಿಸಬೇಕು ಎಂದು ಒತ್ತಾಯಿಸಿರುವ ಮುಖ್ಯಮಂತ್ರಿ, ಈ ಸಂಬಂಧ ತ್ವರಿತ ಕ್ರಮ ಕೈಗೊಳ್ಳದಿದ್ದರೆ ರೈತರ ನಷ್ಟ ಪ್ರತಿ ದಿನ ಹೆಚ್ಚುತ್ತಾ ಹೋಗುತ್ತದೆ ಮತ್ತು ಎಂ.ಎಸ್.ಪಿಯ ಉದ್ದೇಶವೆ ದುರ್ಬಲವಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯ ಸರಕಾರವು ಬೆಲೆ ಬೆಂಬಲ ಯೋಜನೆಯ ಚೌಕಟ್ಟಿನಡಿಯಲ್ಲಿ ತನ್ನ ಜವಾಬ್ದಾರಿಗಳನ್ನು ಹೊರಲು ಸಂಪೂರ್ಣವಾಗಿ ಸಿದ್ಧವಾಗಿದೆ. ಈಗಾಗಲೆ ಅಗತ್ಯ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ರಾಜ್ಯ ಸಂಸ್ಥೆಗಳನ್ನು ಗೊತ್ತುಪಡಿಸಲಾಗಿದೆ. ಬೆಲೆ ಬೆಂಬಲ ಯೋಜನೆಯ ಮಾರ್ಗಸೂಚಿಗಳ ಪ್ರಕಾರ ಎಲ್ಲ ಕಾರ್ಯಗಳನ್ನು ಒದಗಿಸಿದೆ ಮತ್ತು ಖರೀದಿ ಲಾಜಿಸ್ಟಿಕ್ಸ್, ರೈತರ ನೋಂದಣಿ, ಗೋದಾಮು, ಸಾರಿಗೆ ಮತ್ತು ರಾಜ್ಯ ಸುಂಕಗಳ ವಿನಾಯಿತಿಯನ್ನು ಸುಗಮಗೊಳಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಸುಗಮ ಮತ್ತು ಪಾರದರ್ಶಕ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕವು ಕೇಂದ್ರ ಸಂಸ್ಥೆಗಳೊಂದಿಗೆ ಸಂಪೂರ್ಣವಾಗಿ ಸಹಕರಿಸಲು ಸಿದ್ಧವಾಗಿದೆ. ಎಂ.ಎಸ್.ಪಿಯಲ್ಲಿ ಸಂಗ್ರಹಣೆ ಕೇವಲ ಆಡಳಿತಾತ್ಮಕ ವ್ಯಾಯಾಮವಲ್ಲ, ಇದು ತನ್ನ ರೈತರ ಘನತೆಗೆ ರಾಷ್ಟ್ರದ ಬದ್ಧತೆಯ ದೃಢೀಕರಣವಾಗಿದೆ. ಈಗ ಖರೀದಿ ಕೇಂದ್ರಗಳನ್ನು ತೆರೆಯುವುದರಿಂದ ರಾಜ್ಯ ಮತ್ತು ಕೇಂದ್ರವು ಸಂಕಷ್ಟದ ಸಮಯದಲ್ಲಿ ಒಟ್ಟಾಗಿ ನಿಲ್ಲುತ್ತದೆ ಎಂಬ ಬಲವಾದ ಭರವಸೆಯ ಸಂದೇಶವನ್ನು ಗ್ರಾಮೀಣ ಭಾರತಕ್ಕೆ ಕಳುಹಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆದುದರಿಂದ, ನೀವು ತಕ್ಷಣ ಮಧ್ಯಪ್ರವೇಶಿಸಿ, ಕಡಲೆ ಬೇಳೆಗೆ ಕನಿಷ್ಠ ಬೆಂಬಲ ಬೆಲೆ ಖರೀದಿಗೆ ಅನುಮೋದನೆ ನೀಡಬೇಕು ಮತ್ತು ಕರ್ನಾಟಕದಾದ್ಯಂತ ಖರೀದಿ ಕೇಂದ್ರಗಳು ಸಾಧ್ಯವಾದಷ್ಟು ಬೇಗ ಕಾರ್ಯರೂಪಕ್ಕೆ ಬರುವಂತೆ ನೋಡಿಕೊಳ್ಳಬೇಕು. ಇಂತಹ ಸಕಾಲಿಕ ಕ್ರಮವು ರೈತರನ್ನು ಮಾರಾಟ ಸಂಕಷ್ಟದಿಂದ ರಕ್ಷಿಸುತ್ತದೆ, ಮಾರುಕಟ್ಟೆಗಳನ್ನು ಸ್ಥಿರಗೊಳಿಸುತ್ತದೆ ಮತ್ತು ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಲಬುರಗಿ | ಸದೃಢ ಸಮಾಜ ನಿರ್ಮಿಸುವಲ್ಲಿ ಮಹಿಳಾ ಬರಹಗಾರರ ಪಾತ್ರ ಪ್ರಮುಖ : ರೋಷನಿ ಗೌಡ
ಸಂಕ್ರಾಂತಿ ಕಾವ್ಯ ಸಂಭ್ರಮ
ಮುಂದುವರಿದ ನಕ್ಸಲರ ಶರಣಾಗತಿ ಪರ್ವ, ಸಂಕ್ರಾಂತಿಯಂದೇ ಛತ್ತೀಸ್ಗಢದಲ್ಲಿ ಶರಣಾದ 52 ಮಾವೋವಾದಿಗಳು
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ 52 ಜನ ಮಾವೋವಾದಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಇವರಲ್ಲಿ 49 ಜನರ ತಲೆಗೆ ಒಟ್ಟು 1.41 ಕೋಟಿ ರೂ. ಬಹುಮಾನವಿತ್ತು. ಡಿವಿಷನಲ್ ಕಮಿಟಿ ಸದಸ್ಯ ಲಖು ಕರಮ್ ಸೇರಿದಂತೆ ಮೂವರು ಪ್ರಮುಖ ನಾಯಕರ ತಲೆಗೆ ತಲಾ 8 ಲಕ್ಷ ರೂ. ಬಹುಮಾನವಿತ್ತು. ಸರ್ಕಾರದ 'ಪೂನಾ ಮರ್ಗೆಮ್' ಪುನರ್ವಸತಿ ನೀತಿಗೆ ಆಕರ್ಷಿತರಾಗಿ ಇವರು ಶಸ್ತ್ರತ್ಯಾಗ ಮಾಡಿದ್ದಾರೆ.
‘ಬಳ್ಳಾರಿ ಪಾದಯಾತ್ರೆ’ ಆರಂಭಕ್ಕೂ ಮುನ್ನವೇ ತೆರೆ ಬಿದ್ದಿದೆ : ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು : ಪಾದಯಾತ್ರೆ ಮಾಡಬೇಕೆಂದರೆ ಒಟ್ಟಿಗೆ ಹೆಜ್ಜೆ ಹಾಕುವ ಕಾಲುಗಳು ಬೇಕು. ಆದರೆ, ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಕಾಲೆಳೆಯುವವರೆ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ?. ಕಾಲೆಳೆದುಕೊಳ್ಳುವ ಆಟದಲ್ಲಿ ‘ಬಳ್ಳಾರಿ ಪಾದಯಾತ್ರೆ’ ಪ್ರಹಸನದ ಪ್ರದರ್ಶನ ಆರಂಭಕ್ಕೂ ಮುನ್ನವೇ ತೆರೆ ಬಿದ್ದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವ್ಯಂಗ್ಯವಾಡಿದ್ದಾರೆ. ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ, ಗೋಲಿಬಾರ್ ಖಂಡಿಸಿ ಬಿಜೆಪಿ ಪಾದಯಾತ್ರೆ ನಡೆಸುವುದಾಗಿ ಘೋಷಿಸಿ, ನಂತರ ಪ್ರತಿಭಟನೆಗೆ ಸೀಮಿತಗೊಳಿಸಿರುವ ನಡೆಯನ್ನು ಟೀಕಿಸಿ ಗುರುವಾರ ಈ ಸಂಬಂಧ ಎಕ್ಸ್ ನಲ್ಲಿ ಅವರು ಪೋಸ್ಟ್ ಹಾಕಿದ್ದಾರೆ. ಪಾದಯಾತ್ರೆಯನ್ನು ಮುನ್ನಡೆಸುವ ನಾಯಕತ್ವವಿಲ್ಲ, ಯಾರಾದರೂ ನಾಯಕರಾಗಿಬಿಡುವ ಅಸೂಯೆ, ಬಣ ಜಗಳದಲ್ಲಿ ಒಟ್ಟಿಗೆ ಹೆಜ್ಜೆ ಹಾಕುವಲ್ಲಿ ಇಲ್ಲದ ಒಮ್ಮತ, ಇದೆಲ್ಲಕ್ಕೂ ಮಿಗಿಲಾಗಿ ಪಾದಯಾತ್ರೆಗೆ ವ್ಯಕ್ತವಾಗದ ಜನ ಬೆಂಬಲ, ಇದೆಲ್ಲವನ್ನೂ ಅರಿತ ಬಿಜೆಪಿಯವರ ಪಾದಗಳು ಜಗನ್ನಾಥ ಭವನದಿಂದ ಹೊರಗೆ ಹೊರಡದೆ ನಿಂತಿವೆ ಎಂದು ಅವರು ಲೇವಡಿ ಮಾಡಿದ್ದಾರೆ. ಬಿಜೆಪಿಯ ಪಾದಯಾತ್ರೆ ರಾಜಕೀಯ ಜಿದ್ದಿಗಾಗಿಯೆ ಹೊರತು, ಜನ ಕೇಂದ್ರಿತ ವಿಷಯಗಳಿಗಾಗಿ ಅಲ್ಲ, ಹೀಗಿರುವಾಗ ಯಾತ್ರೆಗೆ ಜನ ಬೆಂಬಲ ಸಿಗುವುದು ಕನಸಿನ ಮಾತು. ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಜನ ಬೆಂಬಲದೊಂದಿಗೆ ಮಾಡಿದ್ದ ಚಾರಿತ್ರಿಕ ಬಳ್ಳಾರಿ ಪಾದಯಾತ್ರೆಯು, ಜನ ಬಿಜೆಪಿಯನ್ನು ಕಿತ್ತೆಸೆಯುವಂತೆ ಮಾಡಿತ್ತು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮೇಕೆದಾಟು ಪಾದಯಾತ್ರೆಯನ್ನು ಜನ ಹಿತಕ್ಕಾಗಿ ಮಾಡಿದ್ದೆವು, ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕಕ್ಕೆ ಯಶಸ್ಸು ದೊರಕಿದೆ. ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಪಾದಯಾತ್ರೆ ನಡೆಸಿದ್ದೆವು, ಅದರ ಪರಿಣಾಮ, ಯಶಸ್ಸನ್ನು ನಾಡು ಕಂಡಿದೆ. ಕಾಂಗ್ರೆಸ್ ನಡೆಸಿದ ಎಲ್ಲ ಪಾದಯಾತ್ರೆಗಳಿಗೆ ಅಪಾರ ಜನಬೆಂಬಲ ವ್ಯಕ್ತವಾಗಿದೆ, ನಾವು ಎತ್ತಿಕೊಂಡ ವಿಷಯಗಳಿಗೆ ಯಶಸ್ಸೂ ದೊರಕಿದೆ ಎಂದು ಅವರು ಹೇಳಿದ್ದಾರೆ. ಏಕೆಂದರೆ ನಾವು ಪಾದಯಾತ್ರೆಗಳನ್ನು ಜನರಿಗಾಗಿ ನಡೆಸಿದ್ದೇವೆ ಹೊರತು ರಾಜಕೀಯ ಮೇಲಾಟಕ್ಕಾಗಿ ಅಲ್ಲ. ರಾಜ್ಯ ಬಿಜೆಪಿ ಎಂದಿಗೂ ಕಾಂಗ್ರೆಸ್ಸಿನಂತೆ ಪಾದಯಾತ್ರೆ ಮಾಡಲು ಸಾಧ್ಯವಿಲ್ಲ, ಏಕೆಂದರೆ ಅವರಿಗೆ ಕಾಂಗ್ರೆಸ್ಸಿನಂತೆ ಜನಪರ ಚಿಂತನೆಗಳಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಪಾದಯಾತ್ರೆ ಮಾಡಬೇಕೆಂದರೆ ಒಟ್ಟಿಗೆ ಹೆಜ್ಜೆ ಹಾಕುವ ಕಾಲುಗಳು ಬೇಕು, ಆದರೆ ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಕಾಲೆಳೆಯುವವರೇ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ! ಕಾಲೆಳೆದುಕೊಳ್ಳುವ ಆಟದಲ್ಲಿ ಬಳ್ಳಾರಿ ಪಾದಯಾತ್ರೆ ಪ್ರಹಸನದ ಪ್ರದರ್ಶನ ಆರಂಭಕ್ಕೂ ಮುನ್ನವೇ ತೆರೆ ಬಿದ್ದಿದೆ. ಪಾದಯಾತ್ರೆಯನ್ನು ಮುನ್ನಡೆಸುವ ನಾಯಕತ್ವವಿಲ್ಲ,… — Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 15, 2026
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ರಾಜ್ಯ ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹೀಗೆ ಮುಂದುವರಿದರೆ ಜನರು ಈ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಈಗ ಸದ್ಯಕ್ಕೆ ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಮಂಗಳೂರು: ಉಳಾಯಿಬೆಟ್ಟುವಿನ ಕೃಷಿಕರು ಹಾಗೂ ವ್ಯಾಪಾರಿ ಹಾಜಿ ಕೆ ಮುಹಮ್ಮದ್ (95) ಗುರುವಾರ ಬೆಳಗ್ಗೆ ನಿಧನರಾದರು. ಉಳಾಯಿಬೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಯೂಸುಫ್ ಉಳಾಯಿಬೆಟ್ಟು ಸೇರಿದಂತೆ 11 ಮಕ್ಕಳನ್ನು , ಮೊಮ್ಮಕ್ಕಳನ್ನು ಅಗಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಮೃತರ ಮನೆಗೆ ಭೇಟಿ ನೀಡಿದ್ದಾರೆ.
ಕಲಬುರಗಿ | ಗ್ರಾಮೀಣ ಬಾಸ್ಕೆಟ್ ಬಾಲ್ ಲೀಗ್ ಉದ್ಘಾಟನೆ
ಕಲಬುರಗಿ: ಇಲ್ಲಿನ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಅಸೋಸಿಯೇಷನ್ ಹಾಗೂ ಕಲಬುರಗಿ ಜಿಲ್ಲಾ ಬಾಸ್ಕೆಟ್ಬಾಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಗ್ರಾಮೀಣ ಬಾಸ್ಕೆಟ್ಬಾಲ್ ಲೀಗ್ ಟೂರ್ನಿಗೆ ಚಾಲನೆ ನೀಡಲಾಯಿತು. ಪಂದ್ಯಾಟಗಳ ಉದ್ಘಾಟನೆಯನ್ನು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಲ್ಲಮ ಪ್ರಭು ಪಾಟೀಲ್ ಹಾಗೂ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಡಾ.ರಾಜಕುಮಾರ್, ಡಾ.ಶಂಕರ್ ಸೂರೆ, ಮಲ್ಲಿಕಾರ್ಜುನ ಉದ್ನೂರ್, ಚಂದ್ರಕಾಂತ್ ಶಿರೋಳಿ, ಬಾಸ್ಕೆಟ್ಬಾಲ್ ತರಬೇತುದಾರರಾದ ಪ್ರವೀಣ್ ಕುಮಾರ್ ಪುಣೆ, ಕುವೆಂಪು ಬಾಸ್ಕೆಟ್ಬಾಲ್ ಕ್ಲಬ್ ಅಧ್ಯಕ್ಷರಾದ ಮಹೇಶ್ ಪವಾರ್, ಭಗವಾನ್ ಬಾಸ್ಕೆಟ್ಬಾಲ್ ಕ್ಲಬ್ ಅಧ್ಯಕ್ಷರಾದ ಭರತ್ ಭೂಷಣ್, ಗುಲ್ಬರ್ಗಾ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿಗಳಾದ ಡಾ.ಪ್ರತಾಪ್ ಸಿಂಗ್ ತಿವಾರಿ, ಅಕ್ಕಮಹಾದೇವಿ ಬಾಸ್ಕೆಟ್ಬಾಲ್ ಕ್ಲಬ್ ಅಧ್ಯಕ್ಷರಾದ ವಿಕಾಸ್ ಭಾಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಗ್ರಾಮೀಣ ಲೀಗ್ ಪಂದ್ಯಾಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಕ್ಕಮಹಾದೇವಿ ಬಾಸ್ಕೆಟ್ಬಾಲ್ ಕ್ಲಬ್, ಭಗವಾನ್ ಬಾಸ್ಕೆಟ್ಬಾಲ್ ಕ್ಲಬ್, ವೈಸಿಬಿಸಿ ಬಳ್ಳಾರಿ, ಬಳ್ಳಾರಿಯ ನಂದಿ ಬಾಸ್ಕೆಟ್ಬಾಲ್ ಕ್ಲಬ್, ಮಾದನ ಹಿಪ್ಪರ್ಗದ ವಿವೇಕ್ ಆನಂದ್ ಭಾಸ್ಕರ್ ಬಾಸ್ಕೆಟ್ಬಾಲ್ ಕ್ಲಬ್, ಬೀದರ್ ನ ಎ.ಬಿ.ಸಿ ಬಾಸ್ಕೆಟ್ಬಾಲ್ ಕ್ಲಬ್, ಕಲಬುರಗಿಯ ಕುವೆಂಪು ಬಾಸ್ಕೆಟ್ಬಾಲ್ ಕ್ಲಬ್, ಹಮನಾಬಾದ್ ನ ಮಾಣಿಕ್ ಪ್ರಭು ಬಾಸ್ಕೆಟ್ಬಾಲ್ ಕ್ಲಬ್ ಭಾಗವಹಿಸಿದ್ದವು.

19 C