ರ್ಯಾವಣಕಿ ಸರಕಾರಿ ಪ್ರೌಢಶಾಲೆಗೆ ಭದ್ರತೆಯ ಕೊರತೆ!
ಕಾಂಪೌಂಡ್ ರಹಿತ ಶಾಲೆ, ಕರಡಿ ದಾಳಿಯ ಭೀತಿ
ಕುಂಟುತ್ತ ತೆವಳುತ್ತ ಸಾಗಿದೆ ಗದಗ-ವಾಡಿ ರೈಲ್ವೆ ಯೋಜನೆ ಕಾಮಗಾರಿ
ಲಿಂಗಸಗೂರು : ಗದಗ-ವಾಡಿ ರೈಲ್ವೆ ಯೋಜನೆಯೂ ಬ್ರಿಷರ ಕಾಲದಲ್ಲಿಯೇ ರೂಪುಗೊಂಡಿತ್ತು. 1910ರಲ್ಲಿ ನಿಜಾಮರ ಸರಕಾರ ಪ್ರಸ್ತಾವ ಸಲ್ಲಿಸಿತ್ತು. 1910ರಲ್ಲಿ ಸಿ.ಟಿ.ವಾಕ್ಲರ್ ಸಮೀಕ್ಷೆ ಕಾರ್ಯ ಕೈಗೊಂಡಿದ್ದರು. 257 ಕಿ.ಮೀ. ರೈಲ್ವೆ ಯೋಜನೆಗೆ 1.87 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜು ಪತ್ರಿಕೆ ತಯಾರಿಸಿ 1911ರಲ್ಲಿ ಸರಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಕಲಬುರಗಿ ಭಾಗದಲ್ಲಿನ ಕಾರ್ಖಾನೆಗಳಿಂದ ಸಿಮೆಂಟ್ ಹಾಗೂ ರೈತರು ಬೆಳೆದ ಭತ್ತ, ತೊಗರಿಯನ್ನು ವಾಡಿ ಮೂಲಕ ಗದಗ, ಹುಬ್ಬಳ್ಳಿ ನಗರಗಳಿಗೆ ಸಾಗಿಸಲು ಗದಗ-ವಾಡಿ ರೈಲ್ವೆ ಯೋಜನೆ ಸಿದ್ದಪಡಿಸಲಾಗಿತ್ತು. ಸ್ವಾತಂತ್ರ್ಯ ನಂತರದಲ್ಲಿ ರೈಲ್ವೆ ಸಚಿವರಾಗಿದ್ದ ಲಾಲ್ ಬಹೂದ್ದೂರ್ ಶಾಸ್ತ್ರಿ ಅಡಿಗಲ್ಲು ಹಾಕಿದ್ದರು. ಅಂದಿನಿಂದ ಇಂದಿನವರೆಗೂ ಈ ಕಾಮಗಾರಿ ಕುಂಟುತ್ತ, ತೆವಳುತ್ತ ಸಾಗಿದೆ. 115 ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದಿರುವುದು ನಮ್ಮ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆ ಎಷ್ಟಿದೆ ಎಂಬುದನ್ನು ಸಾರಿ ಹೇಳುತ್ತದೆ ಎನ್ನುತ್ತಾರೆ ಜನರು. 1997ರಲ್ಲಿ ಕಾಮಗಾರಿಗೆ ಮರುಜೀವ: 1910ರಲ್ಲಿ ರೂಪಗೊಂಡ ಈ ರೈಲ್ವೆ ಯೋಜನೆ ಸ್ವಾತಂತ್ರ್ಯ ನಂತರದಲ್ಲಿ ಲಾಲ್ ಬಹೂದ್ದೂರ್ ಶಾಸ್ತ್ರಿಯವರು ರೈಲ್ವೆ ಸಚಿವರಾಗಿದ್ದಾಗ ಅಡಿಗಲ್ಲು ಹಾಕಿದ್ದರು. ತದನಂತರ ಪ್ರಗತಿ ಕಾಣಲಿಲ್ಲ. 1997ರಲ್ಲಿ ಕೇಂದ್ರ ಸರಕಾರದ ರಾಜ್ಯ ಪ್ರತಿನಿಧಿಯಾಗಿದ್ದ ಬಸವರಾಜ ರಾಯರೆಡ್ಡಿಯವರು ಅಂದಿನ ರೈಲ್ವೆ ಸಚಿವರಾಗಿದ್ದ ರಾಮವಿಲಾಸ ಪಾಸ್ವಾನ್ರವರ ಗಮನಕ್ಕೆ ತಂದು ಗದಗ-ವಾಡಿ ರೈಲ್ವೆ ಯೋಜನೆಗೆ ಮರುಜೀವ ನೀಡಿದರು. ಮಲ್ಲಿಕಾರ್ಜುನ ಖರ್ಗೆಯವರು ಅದನ್ನು ಕಾರ್ಯರೂಪಕ್ಕೆ ತಂದರು. ಗದಗ-ವಾಡಿ ರೈಲು ಮಾರ್ಗವು ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿದ್ದು, ಗದಗದಿಂದ ವಾಡಿವರೆಗೆ ಸುಮಾರು 257 ಕಿ.ಮೀ. ಉದ್ದದ ಹೊಸ ರೈಲ್ವೆ ಮಾರ್ಗ ನಿರ್ಮಾಣವಾಗುತ್ತಿದೆ. ಇದು ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ. ಈ ಮಾರ್ಗದಲ್ಲಿ ಒಟ್ಟು 31 ರೈಲ್ವೆ ನಿಲ್ದಾಣಗಳು ಬರುತ್ತವೆ. ಈ ಯೋಜನೆಯಿಂದ ಕುಷ್ಟಗಿ, ಯಲಬುರಗಿ ಭಾಗಗಳಲ್ಲಿ ಪ್ರಯಾಣಿಕರ ರೈಲು ಸಂಚಾರ ಆರಂಭವಾಗಿದೆ ಮತ್ತು 2026ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳುವ ಗುರಿ ಹೊಂದಲಾಗಿದೆ. ಇದು ಲಿಂಗಸುಗೂರು, ಶಹಾಪುರ ಮುಂತಾದ ಪಟ್ಟಣಗಳನ್ನು ಸಂಪರ್ಕಿಸುತ್ತದೆ. ಲಿಂಗಸುಗೂರು ಭಾಗದಲ್ಲಿ ಆರಂಭವಾಗದ ಕಾಮಗಾರಿ: ಗದಗ-ವಾಡಿ ರೈಲ್ವೆ ಮಾರ್ಗದ ಕಾಮಗಾರಿ ಆರಂಭಗೊಂಡಿದ್ದು, ಕುಷ್ಟಗಿ ಯಲಬುರ್ಗಾ ಭಾಗದಲ್ಲಿ 60 ಕಿ.ಮೀ. ಮಾರ್ಗವು ಸೇವೆಗೆ ಸಿದ್ಧವಾದರೆ, ವಾಡಿ ಶಹಾಪುರ 45 ಕಿ.ಮೀ. ಮಾರ್ಗ ಸೇವೆಗೆ ಸಿದ್ಧವಾಗಿದೆ. ಆದರೆ, ಮಧ್ಯ ಭಾಗದಲ್ಲಿರುವ ಲಿಂಗಸುಗೂರು ಕಾಮಗಾರಿ ಆರಂಭವಾಗದೆ ತೆವಳುತ್ತ ಸಾಗಿದೆ. ರಾಜ್ಯದವರೇ ರೈಲ್ವೆ ಸಚಿವರಾಗಿದ್ದರೂ ಕಾಮಗಾರಿ ವೇಗ ಪಡೆದುಕೊಳ್ಳುತ್ತಿಲ್ಲ ಎಂದು ಸ್ಥಳೀಯ ರೈಲ್ವೆ ಪ್ರಯಾಣಿಕರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಕಾಮಗಾರಿ ವೆಚ್ಚ 1911ರಲ್ಲಿ ಕಾಮಗಾರಿ ಅಂದಾಜು ಮೊತ್ತ 1.87 ಕೋಟಿ ರೂ. ಮಾತ್ರ ಇತ್ತು. 1998ರಲ್ಲಿ ಈ ಕಾಮಗಾರಿ ಮೊತ್ತ 457.72 ಕೋಟಿ, ನಂತರದಲ್ಲಿ 900 ಕೋಟಿ, ಈಗ ಪ್ರಸ್ತುತವಾಗಿ 1992 ಕೋಟಿ ರೂ.ಗಳಷ್ಟಾಗಿದೆ. 1911ರಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರೆ ಕೇವಲ 1.87 ಕೋಟಿ ರೂಪಾಯಿಯಲ್ಲಿ ಮುಗಿಯುತ್ತಿತ್ತು. ಇಂದು ಅದರ ವೆಚ್ಚ 100 ಪಟ್ಟು ಹೆಚ್ಚಾಗಿದೆ. ರಾಜ್ಯದವರೇ ರೈಲ್ವೆ ಮಂತ್ರಿಗಳಾದರೂ ಕಾಮಗಾರಿ ವಿಳಂಬ ರಾಜ್ಯದ ಜನಪ್ರತಿನಿಧಿಗಳಾದ ಜಾಫರ್ ಶರೀಫ್, ಮಲ್ಲಿಕಾರ್ಜುನ ಖರ್ಗೆ, ಸುರೇಶ ಅಂಗಡಿ, ಸದಾನಂದಗೌಡ, ಈ ಪ್ರಸ್ತುತವಾಗಿ ವಿ.ಸೋಮಣ್ಣನವರು ಕೇಂದ್ರ ರೈಲ್ವೆ ಸಚಿವರಾಗಿದ್ದರೂ ಗದಗ-ವಾಡಿ ರೈಲ್ವೆ ಯೋಜನೆ ಕಾಮಗಾರಿ ವಿಳಂಬವಾಗಿದೆ. ಈಗಲಾದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಪ್ರಸ್ತುತ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕೆಂಬುವುದು ಲಿಂಗಸುಗೂರು ಜನತೆಯ ಒತ್ತಾಯವಾಗಿದೆ. 1910ರಲ್ಲಿ ಸರ್ವೇ ಮಾಡಿದ್ದರೂ ಪೂರ್ಣಗೊಳ್ಳಲು 115 ವರ್ಷಗಳು ಬೇಕಾಯಿತೆ. ವರ್ಷಕ್ಕೆ ಕೇವಲ 2 ಕಿ.ಮೀ. ಕಾಮಗಾರಿ ಮಾಡಿದ್ದರೆ ಈ ವೇಳೆಗಾಗಲೇ ಲಿಂಗಸುಗೂರು ಜನತೆ ರೈಲ್ವೆಯಲ್ಲಿ ಪ್ರಯಾಣಿಸುತ್ತಿದ್ದರು. ಜನಪ್ರತಿನಿಧಿಗಳಿಗೆ ಕಲ್ಯಾಣ ಕರ್ನಾಟಕ ಎಂದರೆ ಮಲತಾಯಿ ಧೋರಣೆಯಿದೆ. ಗದಗ-ವಾಡಿ ರೈಲ್ವೆ ಪೂರ್ಣಗೊಂಡರೆ ಲಿಂಗಸುಗೂರು ಜಿಲ್ಲಾ ಕೇಂದ್ರವಾಗುತ್ತದೆ. ಈ ಬಜೆಟ್ನಲ್ಲಿ ಅನುದಾನ ಬಿಡುಗಡೆ ಮಾಡಿ 2026ರೊಳಗಾಗಿ ಲಿಂಗಸುಗೂರು ಜನತೆ ರೈಲ್ವೆ ಪ್ರಯಾಣ ದೊರಕುವಂತೆ ಮಾಡಬೇಕು. ಮಹಾಂತೇಶ ಸುಕುಂದ, ವರ್ತಕರು ಲಿಂಗಸುಗೂರು
ಸಾಹಿತ್ಯ ಲೋಕದ ಕಣ್ಮಣಿ ಶಂಕರರಾವ ಉಬಾಳೆ
ಕಲ್ಯಾಣನಾಡಿನ ಮಣ್ಣಿನ ಪ್ರತಿ ಕಣವೂ ಅರಿವು-ಆಚಾರದೊಂದಿಗೆ ಸಂಸ್ಕಾರದ ಪ್ರಭೆ ಹೊಂದಿದೆ. ಕೃಷ್ಣೆಯ ನೆಲದಲ್ಲಿದ್ದುಕೊಂಡು ಸದ್ದಿಲ್ಲದೆ ಸಾಹಿತ್ಯದೇವಿಯ ಆರಾಧಕರಾಗಿ ಅನುದಿನ ಪೂಜೆಗೈಯುತ್ತಿರುವ ದೇವದುರ್ಗದ ಶಂಕರರಾವ ಉಭಾಳೆಯವರು ನಾಡಿನ ಖ್ಯಾತ ಕವಿ-ಕಥೆಗಾರ-ಸಂಶೋಧಕರಾಗಿ ಮನೆ ಮಾತಾದವರು. ದೇವದುರ್ಗದ ಶಂಕರರಾವ್ ಉಬಾಳೆ, ನಾರಾಯಣರಾವ್ ಉಬಾಳೆ ಮತ್ತು ಅಂಬಿಕಾಬಾಯಿ ದಂಪತಿಯ ಮಗನಾಗಿ ಮಧ್ಯಮ ವರ್ಗದ ನೋವು-ನಲಿವಿನೊಂದಿಗೆ ಬೆಳೆದವರು. ಚಿಕ್ಕಪ್ಪ ಅಂಬುಜಿ ರಾವ್ ನೀಡುವ ಚಂದಮಾಮ, ಬಾಲಮಿತ್ರದಿಂದ ಪುಸ್ತಕ ಪ್ರೀತಿ ರೂಢಿಸಿಕೊಂಡರು. ಇಂದು ರಾಜ್ಯಾದ್ಯಂತ ಖ್ಯಾತ ಕವಿ, ಕಥೆಗಾರನಾಗಿ ಪ್ರತಿಷ್ಠಿತ ಪತ್ರಿಕೆಗಳ ಪ್ರಶಸ್ತಿಗಳನ್ನು ಪಡೆದು ಹೆಸರಾಂತ ಸಾಹಿತಿ ಎನಿಸಿಕೊಂಡಿದ್ದಾರೆ. ಉಭಾಳೆಯವರು ದೇವದುರ್ಗ ತಾಲೂಕಿನಲ್ಲಿ ಪ್ರಾಥಮಿಕ, ಪ್ರೌಢ, ಕಾಲೇಜು ಶಿಕ್ಷಣ ಪಡೆದು, ಪದವಿ ಶಿಕ್ಷಣ ದೇವದುರ್ಗ ಮತ್ತು ರಾಯಚೂರು ಎಲ್ವಿಡಿ ಕಾಲೇಜಿನಲ್ಲಿ ಅಪೇಕ್ಷಿಸಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತದನಂತರ ಎಂಫಿಲ್ ಸಂಶೋಧನಾ ಪದವಿ ಪಡೆದು ಸಾಹಿತ್ಯ ಸಾಧನೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಆರಂಭಿಸಿದ್ದಾರೆ. ಇವರ ಸಾಹಿತ್ಯ, ಬದುಕು, ಬರಹ ಕುರಿತಂತೆ ರಾಯಚೂರು ವಿಶ್ವವಿದ್ಯಾಲಯ, ಗುಲ್ಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ, ಕನ್ನಡ ವಿಶ್ವವಿದ್ಯಾಲಯ, ಹಂಪಿಗಳಲ್ಲಿ ಅನೇಕ ಸಂಶೋಧನಾ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. 2004ರ ಕರ್ನಾಟಕ-ಕೇರಳ ಐದನೇ ಸಾಹಿತ್ಯ ಸಮ್ಮೇಳನವು ಕಾಸರಗೋಡಿನಲ್ಲಿ ನಡೆದಾಗ ಇವರ ‘ನೀರಿಗೆ ಪಾಚಿ ವೈರಿ’ ಕಥಾಸಂಕಲನ ಶ್ರೇಷ್ಠ ಕೃತಿಯಾಗಿ ಪ್ರಶಸ್ತಿ ಪಡೆದದ್ದು ಇತಿಹಾಸ. ಹಾಗೆಯೇ ಕಳೆ ಕಥಾಸಂಕಲನ 2016ರ ಬೆಳಗಾವಿ ಕನಕ ಪ್ರಶಸ್ತಿ ಪಡೆದಿದೆ. ಹೀಗೆ ಸುಮಾರು 20 ಕಥೆಗಳು, ಕಾವ್ಯಗಳು ರಾಜ್ಯ ಪ್ರಶಸ್ತಿ ಹಾಗೂ ಅಂತರರಾಜ್ಯ ಪ್ರಶಸ್ತಿ ಪಡೆದದ್ದು ಶಂಕರರಾವ ಅವರ ಸಾಹಿತ್ಯದ ಹೆಗ್ಗಳಿಕೆ ಎನ್ನಬಹುದು. ತಾಲೂಕು ಜಿಲ್ಲಾ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಾವ್ಯವಾಚನ ಉಪನ್ಯಾಸಗೋಷ್ಠಿಯಲ್ಲಿ ಪ್ರಬಂಧ ಮಂಡನೆಗೈದು ಅತ್ಯುತ್ತಮ ಉಪನ್ಯಾಸಕರೆಂದು ಹೆಸರಾಗಿದ್ದಾರೆ. ಬದುಕಿನ ನೋವನೆಲ್ಲ ನುಂಗಿ, ಪತ್ನಿ ವಿಯೋಗದ ನಡುವೆ ಮಕ್ಕಳಿಗೆ ಆದರ್ಶ ಅಪ್ಪನಾಗಿದ್ದಾರೆ. ಉಭಾಳೆಯವರು ಪದವೀಧರರಾದ ಮೇಲೆ ಉದ್ಯೋಗ ಸಿಗದಿದ್ದಾಗ ನಿರುದ್ಯೋಗಿಯಾಗಿ ಕೂತು ಕಾಲ ಕಳೆಯದೆ ಸಣ್ಣ ಪುಟ್ಟ ಕೆಲಸಗಳನ್ನು ಮಾಡುತ್ತಾ ಅಮ್ಮನ ಕನಸುಗಳಿಗೆ ಜೊತೆಯಾಗಿ ನಿಂತು ಸಕಾರಗೊಳಿಸಿದರು. ಶಂಕರರಾವ ಅವರು 1996ರಲ್ಲಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ನ ಅಧ್ಯಕ್ಷರಾಗಿದ್ದರು. 1997ರಲ್ಲಿ ದೇವದರ್ಗ ತಾಲೂಕಿನ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿದ್ದರು. 1992ರಿಂದ ಇಲ್ಲಿಯವರೆಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಪರಿಷ್ಯತ್ ಘಟಕಗಳಲ್ಲಿ ಸಮಿತಿ ಸದಸ್ಯರಾಗಿ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಗೌರವ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 2006ರಲ್ಲಿ ಜನಪದ ಸಾಹಿತ್ಯ ಪರಿಷತ್ ದೇವದರ್ಗ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ (ಕನಕಪುರ ಮತ್ತು ರಾಯಚೂರು ) ಕವಿಗೊಷ್ಠಿಯಲ್ಲಿ ಕವಿತೆ ವಾಚಿಸಿದ್ದಾರೆ. 9ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಹಾಗೂ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದಾರೆ. ಶಂಕರರಾವ್ ಉಭಾಳೆ ಅವರಿಗೆ ಸಂದ ಕಾವ್ಯ ಪ್ರಶಸ್ತಿಗಳು: 2001ರಲ್ಲಿ ‘‘ಯುದ್ಧ’’ ಕವಿತೆಗೆ ಮುಂಬೈನ ಅಕ್ಷಯ ಮಾಸ ಪತ್ರಿಕೆ ಕಾವ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, 2002-03ರಲ್ಲಿ ಬೆಂಗಳೂರಿನ ಕಲಾ ಸಾಹಿತ್ಯ ವೇದಿಕೆ ಆಯೋಜಿಸಿದ್ದ ರಾಜ್ಯಮಟ್ಟದ ಕಾವ್ಯ ಸ್ಪರ್ಧೆಯಲ್ಲಿ ‘‘ರಾಜ್ಯೋತ್ಸವ’’ ಕವನಕ್ಕೆ ಪ್ರಥಮ ಬಹುಮಾನ, 2002ರಲ್ಲಿ ಕಲಾ ವೇದಿಕೆ ಗಂಗಾವತಿ ಆಯೋಜಿಸಿದ್ದ ವಿಭಾಗ ಮಟ್ಟದ ಕಾವ್ಯ ಸ್ಪರ್ಧೆಯಲ್ಲಿ ‘ವಿಶ್ವಸುಂದರಿ ಸ್ಪರ್ಧೆ’ ಎಂಬ ಕವನಕ್ಕೆ ದ್ವಿತೀಯ ಬಹುಮಾನ, 2004ರಲ್ಲಿ ಮಂಗಳ ಕಲಾ ಸಾಹಿತ್ಯ ವೇದಿಕೆ ಹೊಸಪೇಟೆ ಇವರಿಂದ ‘ಉತ್ತಮ ಕಾವ್ಯ’ ಪ್ರಶಸ್ತಿ ಲಭಿಸಿದೆ. 1993ರಲ್ಲಿ ಚಂಪಾ ಹನಿಗವನ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ‘‘ಸ್ವತಂತ್ರ್ಯ’’ ಹನಿಗವನಕ್ಕೆ ಪ್ರಶಸ್ತಿ, 1999ರಲ್ಲಿ ಸುದ್ದಿಮೂಲ ಪತ್ರಿಕೆ ಆಯೋಜಿಸಿದ್ದ ವಲಯ ಮಟ್ಟದ ಕಾವ್ಯ ಸ್ಪರ್ಧೆಯಲ್ಲಿ ಕವಿತೆಗೆ ಪ್ರಥಮ ಬಹುಮಾನ, 2006-07ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ತತ್ವಪದ ಸಾಹಿತ್ಯ ಕುರಿತ ಪ್ರಬಂಧಕ್ಕೆ ಉತ್ತಮ ಸಂಶೋಧನಾ ಪ್ರಶಸ್ತಿ, ಮುಂಬೈಯ ಕುಲಾಲ ಸಂಘದ ಅಮೂಲ್ಯ ಪತ್ರಿಕೆಯ ಬೆಳ್ಳಿ ಹಬ್ಬದಲ್ಲಿ ‘‘ಆನೆ ಬಂದ ದಿನ’’ ಕಥೆಗೆ ಪ್ರಥಮ ಬಹುಮಾನ ಲಭಿಸಿದೆ. 2003ರಲ್ಲಿ ರಾಜ್ಯ ಮಟ್ಟದ ಕಥಾ ಸ್ಫರ್ಧೆೆಯಲ್ಲಿ ‘ನೀರಿಗೆ ಪಾಚಿ ವೈರಿ’ ಕಥೆಗೆ ಚಂಪಾ ಪ್ರಶಸ್ತಿ ಮತ್ತು ಮೊದಲ ಬಹುಮಾನ, 2007ರಲ್ಲಿ ಶಕ್ತಿ ದಿನ ಪತ್ರಿಕೆ ಆಯೋಜಿಸಿದ್ದ ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ ‘‘ತೆರಣಿಯ ಹುಳು’’ ಕಥೆಗೆ ತೃತೀಯ ಬಹುಮಾನ, 2008-09ರಲ್ಲಿ ಮುಂಬೆಳಕು ಕರ್ನಾಟಕ ಸಂಘ ಮುಂಬೈ ಇವರು ನಡೆಸಿದ ಕಥಾ ಸ್ಪರ್ಧೆಯಲ್ಲಿ ‘‘ಅರಿಯಲಾಗದ ಘನ’’ ಕಥೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. 2010ರಲ್ಲಿ ಕರವೇ ನಲ್ನುಡಿ ಪತ್ರಿಕೆಯ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ‘‘ನಂಜಾದ ನಾಯಿ ಹಾಲು’’ ಕಥೆಗೆ ತೃತೀಯ ಬಹುಮಾನ ಪಡೆದಿದ್ದಾರೆ.
ʼಟಾಕ್ಸಿಕ್ʼ, ʼಪರಾಶಕ್ತಿʼ ಮತ್ತು ʼಜನನಾಯಗನ್ʼ: ಬಿರುಗಾಳಿಯನ್ನು ಎದುರಿಸುತ್ತಿರುವ ದಕ್ಷಿಣದ ಚಿತ್ರಗಳು!
ಕಾನೂನು ಸವಾಲುಗಳು, ರಾಜಕೀಯ ವಿರೋಧ ಮತ್ತು ಅನೈತಿಕ ಪೊಲೀಸ್ ಗಿರಿಯನ್ನು ಎದುರಿಸುತ್ತಿರುವ ದಕ್ಷಿಣದ ಸಿನಿಮಾಗಳು ಬಿರುಗಾಳಿಗೆ ಧೂಳೀಪಟವಾಗುತ್ತವೆಯೇ ಅಥವಾ ತಡೆದು ನಿಲ್ಲುತ್ತವೆಯೇ ಎಂದು ಕಾದು ನೋಡಬೇಕಿದೆ. ಬ್ಲಾಕ್ಬಸ್ಟರ್ ರಿಲೀಸ್ಗಳೆಂದು ಕಾಯಲಾಗಿದ್ದ ಮೂರು ದಕ್ಷಿಣದ ಸಿನಿಮಾಗಳು ಇದೀಗ ವಿವಾದದ ಕೇಂದ್ರವಾಗಿವೆ. ಅವುಗಳಲ್ಲಿ ಎರಡು ಇನ್ನೂ ಚಿತ್ರಮಂದಿರಕ್ಕೆ ಬರಬೇಕಿದ್ದರೆ, ಒಂದು ಈಗಾಗಲೇ ಬಿಡುಗಡೆಯಾಗಿದೆ. ವಿಜಯ್ನ ‘ಜನನಾಯಗನ್’ ಮತ್ತು ಯಶ್ ನಾಯಕತ್ವದ ‘ಟಾಕ್ಸಿಕ್’ ಇನ್ನೂ ಬಿಡುಗಡೆಯಾಗಬೇಕಿದೆ. ಶಿವಕಾರ್ತಿಕೇಯನ್ರ ‘ಪರಾಶಕ್ತಿ’ ಬಿಡುಗಡೆಯಾದ ನಂತರ ವಿವಾದಕ್ಕೆ ಸಿಲುಕಿದೆ. ಸೆನ್ಸಾರ್ ಮಂಡಳಿಯ ಹೋರಾಟದಿಂದ ಆರಂಭಿಸಿ ರಾಜಕೀಯ ಆರೋಪ ಪ್ರತ್ಯಾರೋಪಗಳವರೆಗೆ ಮತ್ತು ಅಶ್ಲೀಲತೆಯ ದೂರು ಸಲ್ಲಿಕೆವರೆಗೆ ಬಿರುಗಾಳಿಯೇ ಬೀಸುತ್ತಿದೆ. ದಕ್ಷಿಣದ ಸಿನಿಮಾಗಳು ರಾಜಕೀಯ ಮತ್ತು ಸಾರ್ವಜನಿಕ ನೈತಿಕತೆಯ ನಡುವೆ ಸಿಲುಕಿ ಒದ್ದಾಡುತ್ತಿವೆ ಎನ್ನಬಹುದು. ► ಜನನಾಯಗನ್: ಸೆನ್ಸಾರ್ ಮಂಡಳಿ ಜೊತೆಗೆ ಹೋರಾಟ ದಳಪತಿ ವಿಜಯ್ ಅವರ ಸಿನಿಮಾ ಜನವರಿ 9ರಂದು ಬಿಡುಗಡೆಯಾಗಬೇಕಿತ್ತು. ನಟ ವಿಜಯ್ ತಮ್ಮ ಪಕ್ಷ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮೂಲಕ ಪೂರ್ಣ ಪ್ರಮಾಣದಲ್ಲಿ ರಾಜಕೀಯ ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಕೊನೆಯ ಸಿನಿಮಾವೆನ್ನುವ ಖ್ಯಾತಿ ಗಳಿಸಿತ್ತು. ಆದರೆ ಸಿನಿಮಾ ಕಾನೂನು ಹೋರಾಟದ ನಡುವೆ ಇಂದಿಗೂ ಬಿಡುಗಡೆ ಭಾಗ್ಯ ಪಡೆದಿಲ್ಲ. ಭಾರತದಲ್ಲಿ ಸಿನಿಮಾಗೆ ಪ್ರಮಾಣಪತ್ರ ನೀಡುವ ಸೆನ್ಸಾರ್ ಮಂಡಳಿ (ಸಿಬಿಎಫ್ಸಿ) ಸಿನಿಮಾದಲ್ಲಿರುವ ವಿಷಯಗಳಿಗೆ ಸಂಬಂಧಿಸಿ ಕಳವಳ ವ್ಯಕ್ತಪಡಿಸಿತ್ತು. ಹೀಗಾಗಿ ಡಿಸೆಂಬರ್ 6ರಂದು ಮದ್ರಾಸ್ ಹೈಕೋರ್ಟ್ ಮಧ್ಯಪ್ರವೇಶಿಸಿತ್ತು. ಸಿನಿಮಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂಬ ಸೆನ್ಸಾರ್ ಮಂಡಳಿಯ ಸದಸ್ಯರ ಆಂತರಿಕ ದೂರಿನ ಹಿನ್ನೆಲೆಯಲ್ಲಿ ಸಿನಿಮಾಗೆ ಪ್ರಮಾಣಪತ್ರ ನೀಡಿರಲಿಲ್ಲ ಎಂದು ನ್ಯಾಯಾಲಯದ ವಿಚಾರಣೆ ಸಮಯದಲ್ಲಿ ತಿಳಿದುಬಂದಿತ್ತು. ನ್ಯಾಯಮೂರ್ತಿ ಪಿಟಿ ಆಶಾ ಸಿನಿಮಾಗೆ ಯು/ಎ ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ಆದೇಶಿಸಿದರು. ಸಿಬಿಎಫ್ಸಿ ಸುಪ್ರೀಂಕೋರ್ಟ್ಗೆ ತುರ್ತು ಮೇಲ್ಮನವಿ ಸಲ್ಲಿಸಿ ಜನವರಿ 21ರವರೆಗೆ ಸಿನಿಮಾ ಬಿಡುಗಡೆಯನ್ನು ತಡೆಹಿಡಿಯಿತು. ಜನವರಿ 21ರಂದು ಸಿನಿಮಾದ ಮುಂದಿನ ವಿಚಾರಣೆಯಿದೆ. ಆದರೆ, ಜನವರಿ 15 ಅಥವಾ ನಂತರ ಪ್ರಕರಣ ವಿಚಾರಣೆಯಾಗುವ ಸಾಧ್ಯತೆಯಿದೆ. ಜನನಾಯಗನ್ ನಿರ್ಮಾಪಕರು ಸಮಯದ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಚುನಾವಣಾ ಆಯೋಗ ನೀತಿ ಸಂಹಿತೆ ಘೋಷಿಸಿದಲ್ಲಿ ಸಿನಿಮಾ 2026ರ ಅಂತ್ಯದವರೆಗೆ ಬಿಡುಗಡೆಯಾಗಲು ಸಾಧ್ಯವೇ ಇಲ್ಲ. ► ಪರಾಶಕ್ತಿ: ರಾಜಕೀಯ ಸಂದೇಶ ಮತ್ತು ಸಂವೇದನೆ ಸುಧಾ ಕೊಂಗಾರ ನಿರ್ದೇಶಿಸಿರುವ ಶಿವಕಾರ್ತಿಕೇಯನ್ ಅವರ ‘ಪರಾಶಕ್ತಿ’ ಸಿನಿಮಾದಲ್ಲಿ 1965ರಲ್ಲಿ ತಮಿಳುನಾಡಿನಲ್ಲಿ ನಡೆದಿದ್ದ ಹಿಂದಿ ವಿರೋಧಿ ಪ್ರತಿಭಟನೆಗಳನ್ನು ತೋರಿಸಲಾಗಿದೆ. ಈ ವಿಷಯ ತಮಿಳುನಾಡಿನ ರಾಜಕೀಯ ಪ್ರಜ್ಞೆಯಲ್ಲಿ ಆಳವಾಗಿ ಬೇರೂರಿದೆ. ಸಿನಿಮಾವು 1965ರಲ್ಲಿ ತಮಿಳುನಾಡಿನಲ್ಲಿ ನಡೆದಿದ್ದ ಹಿಂದಿ ವಿರೋಧಿ ಪ್ರತಿಭಟನೆಗಳನ್ನು ಆಧರಿಸಿದೆ. “ತಮಿಳು ಸಿನಿಮಾ ‘ಪರಾಶಕ್ತಿ’ಯಲ್ಲಿ ಐತಿಹಾಸಿಕ ಸಂಗತಿಗಳನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಕೆ ಕಾಮರಾಜ್ ಸೇರಿದಂತೆ ಕಾಂಗ್ರೆಸ್ ನಾಯಕರ ಕುರಿತು ಮಾನಹಾನಿಕರ ಚಿತ್ರಣ ನೀಡಲಾಗಿದೆ. ಕಟ್ಟುಕಥೆಯನ್ನು ಬಿತ್ತರಿಸಲಾಗಿದೆ. ಅಂತಹ ದೃಶ್ಯಗಳನ್ನು ತೆಗೆದುಹಾಕಬೇಕು. ಚಲನಚಿತ್ರ ನಿರ್ಮಾಪಕರು ಸಾರ್ವಜನಿಕ ಕ್ಷಮೆಯಾಚಿಸಬೇಕು ಎಂದು ತಮಿಳುನಾಡು ಯುವ ಕಾಂಗ್ರೆಸ್ ಆರೋಪಿಸಿದೆ. ಸಿನಿಮಾವನ್ನು ನಿಷೇಧಿಸುವಂತೆ ತಮಿಳು ಸರ್ಕಾರವನ್ನು ಆಗ್ರಹಿಸಿದೆ. ಒಂದು ವೇಳೆ, ಚಿತ್ರತಂಡ ತಮ್ಮ ಬೇಡಿಕೆಗಳನ್ನು ಪರಿಗಣಿಸದಿದ್ದರೆ, ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಪಕ್ಷವು ಎಚ್ಚರಿಸಿದೆ. ಈ ವಿವಾದವು ತಮಿಳುನಾಡಿನಲ್ಲಿ ಐತಿಹಾಸಿಕ ರಾಜಕೀಯ ಸಿನಿಮಾಗಳು ಎಂತಹ ತೂಗುಗತ್ತಿಯ ಮೇಲೆ ನಡೆಯುತ್ತಿವೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಭಾಸ್ಕರ್ ಹೇಳುವ ಪ್ರಕಾರ 1965ರಲ್ಲಿ ಫೆಬ್ರವರಿ 12ರಂದು ಇಂದಿರಾ ಗಾಂಧಿ ಕೊಯಮತ್ತೂರಿಗೆ ಭೇಟಿಯೇ ನೀಡಿರಲಿಲ್ಲ. ಆದರೆ ಸಿನಿಮಾದಲ್ಲಿ ಇಂದಿರಾ ಗಾಂಧಿ ಎದುರಲ್ಲಿಯೇ ರೈಲನ್ನು ಹೊತ್ತಿ ಉರಿಸುವ ದೃಶ್ಯಗಳಿವೆ. “ಸಿನಿಮಾದಲ್ಲಿ ಇಂದಿರಾ ಗಾಂಧಿ ಎದುರೇ ರೈಲಿಗೆ ಕೊಳ್ಳಿ ಇಡಲಾಗುತ್ತದೆ ಮತ್ತು ಇಂದಿರಾ ಗಾಂಧಿ ಹಿಂದಿ ಹೇರಿಕೆಯನ್ನು ಒಪ್ಪಿಕೊಂಡಿದ್ದಾರೆ ಎಂದು ತೋರಿಸಲಾಗಿದೆ. ಇಂತಹ ಘಟನೆಗಳು ಇತಿಹಾಸದಲ್ಲಿ ನಡೆದೇ ಇಲ್ಲ” ಎಂದು ಭಾಸ್ಕರ್ ಹೇಳಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪೊಲ್ಲಾಚಿಯಲ್ಲಿ 200 ತಮಿಳಿಗರನ್ನು ಗುಂಡಿಕ್ಕಿ ಕೊಲ್ಲುವುದನ್ನು ತೋರಿಸಲಾಗಿದೆ. ಅಂತಹ ಘಟನೆಗಳೇ ನಡೆದಿಲ್ಲ. ಹೀಗಾಗಿ ಸಿನಿಮಾದಲ್ಲಿ ಉದ್ದೇಶಪೂರ್ವಕವಾಗಿ ಇತಿಹಾಸವನ್ನು ತಿರುಚಲಾಗಿದೆ ಮತ್ತು ಅದನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಂತಹ ಸನ್ನಿವೇಶಗಳನ್ನು ತೆಗೆದು ಹಾಕಿ ಪರಾಶಕ್ತಿ ತಂಡ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಅವರು ಕೇಳಿಕೊಂಡಿದ್ದಾರೆ. ► ʼಟಾಕ್ಸಿಕ್ʼ: ಅಶ್ಲೀಲತೆಯ ದೂರುಗಳು ಯಶ್ ಅವರ ʼಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನಪ್ಸ್ʼ ಸಿನಿಮಾವನ್ನು ಗೀತು ಮೋಹನ್ದಾಸ್ ನಿರ್ದೇಶಿಸಿದ್ದಾರೆ. ಜನವರಿ 8ರಂದು ಯಶ್ ಜನ್ಮದಿನದಂದು ಬಿಡುಗಡೆಯಾದ ತನ್ನ ಮೊದಲ ಟೀಸರ್ನಿಂದಲೇ ಸಿನಿಮಾ ವಿವಾದ ಸೃಷ್ಟಿಸಿದೆ. ಆಮ್ ಆದ್ಮಿ ಪಕ್ಷದ ಮಹಿಳಾ ಶಾಖೆ ಸಿನಿಮಾದ ವಿರುದ್ಧ ಕರ್ನಾಟಕದ ರಾಜ್ಯ ಮಹಿಳಾ ಆಯೋಗಕ್ಕೆ (ಕೆಎಸ್ಸಿಡಬ್ಲ್ಯು) ದೂರು ನೀಡಿದೆ. ಸಿನಿಮಾದಲ್ಲಿ “ಅಶ್ಲೀಲ ಮತ್ತು ಪ್ರೌಢ ದೃಶ್ಯಗಳು” ಇದ್ದು, ಅವುಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದು ಹಾಕಬೇಕು ಎಂದು ಶಾಖೆ ಒತ್ತಾಯಿಸಿದೆ. 2 ನಿಮಿಷ 31 ಸೆಕೆಂಡುಗಳಿರುವ ವಿಡಿಯೋ ಗೋವಾದ ಸ್ಮಶಾನದಲ್ಲಿ ನಡೆಯುವ ಒಂದು ಸನ್ನಿವೇಶವನ್ನು ತೋರಿಸುತ್ತದೆ. “ಈ ಟೀಸರ್ನಲ್ಲಿರುವ ಅಶ್ಲೀಲ ಹಾಗೂ ಪ್ರೌಢ ದೃಶ್ಯಗಳು ಮಹಿಳೆಯರು ಹಾಗೂ ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ. ಯಾವುದೇ ವಯಸ್ಸಿನ ಮಿತಿ ಅಥವಾ ಮುನ್ನೆಚ್ಚರಿಕೆ ಇಲ್ಲದೇ ಸಾರ್ವಜನಿಕವಾಗಿ ಬಿಡುಗಡೆಯಾಗಿರುವ ಈ ದೃಶ್ಯಗಳು ಮಹಿಳೆಯರ ಘನತೆಗೆ ಕುಂದು ತರುವಂತಿದ್ದು, ಕನ್ನಡದ ಐತಿಹಾಸಿಕ ಸಾಂಸ್ಕೃತಿಕ ಜಗತ್ತಿಗೆ ಮಾಡುತ್ತಿರುವ ತೀವ್ರ ಅಪಮಾನವಾಗಿದೆ” ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. ರಾಜ್ಯ ಮಹಿಳಾ ಆಯೋಗದ ಅಧಿಕಾರಿಗಳು ಕೇಂದ್ರ ಸೆನ್ಸಾರ್ ಮಂಡಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡಿದ ಬೆನ್ನಲ್ಲೇ, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಸಿಬಿಎಫ್ಸಿಗೆ ದೂರು ನೀಡಿದ್ದಾರೆ. “ಟಾಕ್ಸಿಕ್ ಟೀಸರ್ನಲ್ಲಿ ಅಶ್ಲೀಲ ದೃಶ್ಯಗಳಿವೆ. ಅವು ಅಪ್ರಾಪ್ತ ವಯಸ್ಕರ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಹೀಗಾಗಿ ‘ಟಾಕ್ಸಿಕ್’ ಸಿನಿಮಾಗೆ ಪ್ರಮಾಣ ಪತ್ರ ನೀಡಬಾರದು” ಎಂದು ದಿನೇಶ್ ಕಲ್ಲಹಳ್ಳಿ ಅವರು ಸಿಬಿಎಫ್ಸಿಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ. ಸಿಬಿಎಫ್ಸಿ ಅಧ್ಯಕ್ಷೆ ಪ್ರಸೂನ್ ಜೋಶಿ ಅವರಿಗೆ ಸಲ್ಲಿಸಲಾದ ದೂರಿನ ದಾಖಲೆಯ ಪ್ರಕಾರ, ಟಾಕ್ಸಿಕ್ ಟೀಸರ್ 'ಅತ್ಯಂತ ಹೆಚ್ಚು ಅಶ್ಲೀಲವಾಗಿದ್ದು, ಲೈಂಗಿಕವಾಗಿ ಪ್ರೌಢ ಮತ್ತು ಅಸಭ್ಯ ಸ್ವಭಾವದ ದೃಶ್ಯಗಳನ್ನು ಹೊಂದಿದೆ ಎಂದು ಕಲ್ಲಹಳ್ಳಿ ಹೇಳಿದ್ದಾರೆ. ಅವರ ದೂರಿನನ್ವಯ ಅಂತಹ ವಿಷಯವನ್ನು ಸಂವಿಧಾನದ 19(1)(a) ವಿಧಿಯ ಅಡಿಯಲ್ಲಿ ರಕ್ಷಿಸಲಾಗಿಲ್ಲ ಮತ್ತು 19(2) ವಿಧಿಯ ಅಡಿಯಲ್ಲಿ ಅನುಮತಿಸಲಾದ ಮಿತಿಗಳಿಂದ ಹೊರಗಿದೆ. ದೂರಿನಲ್ಲಿ 1952ರ ಸಿನಿಮಾಟೊಗ್ರಾಫ್ ಕಾಯ್ದೆ, ಸಿಬಿಎಫ್ಸಿ ಮಾರ್ಗಸೂಚಿಗಳು ಮತ್ತು 2023ರ ಭಾರತೀಯ ನ್ಯಾಯ ಸಂಹಿತಾ ನಿಬಂಧನೆಗಳನ್ನು ಉಲ್ಲೇಖಿಸಲಾಗಿದೆ. ಟ್ರೇಲರ್ಗಳು ಮತ್ತು ಪ್ರಚಾರ ಸಾಮಗ್ರಿಗಳು ಕೂಡ ಕಟ್ಟುನಿಟ್ಟಾದ ಪ್ರಮಾಣೀಕರಣ ಮಾನದಂಡಗಳಿಗೆ ಒಳಪಟ್ಟಿರುತ್ತವೆ. ಹೀಗಾಗಿ ಟ್ರೇಲರ್ ಅನ್ನು ಪರಿಶೀಲಿಸಲು, ಅದರ ಪ್ರಸರಣ/ ವ್ಯಾಪ್ತಿಯನ್ನು ನಿರ್ಬಂಧಿಸಲು ಮತ್ತು ತಯಾರಕರ ವಿರುದ್ಧ ಕ್ರಮ ಕೈಗೊಳ್ಳಲು ದೂರುದಾರರು ಸಿಬಿಎಫ್ಸಿಯನ್ನು ಒತ್ತಾಯಿಸಿದ್ದಾರೆ. ತ್ವರಿತ ಕ್ರಮ ಕೈಗೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಬೆದರಿಕೆ ಹಾಕಿದ್ದಾರೆ. ಟೀಕಾಕಾರರು ‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ವಿರುದ್ಧವೂ ಬೊಟ್ಟು ಮಾಡಿದ್ದಾರೆ. ಸ್ತ್ರೀವಾದಿ ಚಿಂತನೆಗಳುಳ್ಳ ಗೀತು ಮೋಹನ್ದಾಸ್ ಹೇಗೆ ಮಹಿಳೆಯರನ್ನು ಅಶ್ಲೀಲವಾಗಿ ತೋರಿಸುವ ಟೀಸರ್ ಬಿಡುಗಡೆಗೆ ಒಪ್ಪಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ ಗೀತು ಮೋಹನ್ದಾಸ್ ತಮ್ಮ ಸೃಷ್ಟಿಯನ್ನು ಸಮರ್ಥಿಸಿಕೊಂಡಿದ್ದಾರೆ. ಟಾಕ್ಸಿಕ್ ವಿವಾದವು ಮುಖ್ಯವಾಹಿನಿ ಭಾರತೀಯ ಸಿನಿಮಾದಲ್ಲಿ ಎಷ್ಟರ ಮಟ್ಟಿಗೆ ವಿಷಯಗಳನ್ನು ಒಪ್ಪಿಕೊಳ್ಳಲಾಗುತ್ತದೆ ಎನ್ನುವ ಚರ್ಚೆಗೆ ಕಾರಣವಾಗಿದೆ. ಸಿನಿಮಾ ಸ್ವತಃ ವಯಸ್ಕರಿಗೆ ಮಾತ್ರ ಇರುವ ಕಾಲ್ಪನಿಕ ಚಿತ್ರವೆಂದು ಹೇಳಿಕೊಂಡರೂ ಎಲ್ಲ ವಯಸ್ಕರಿಗೂ ಲಭ್ಯವಿರುವ ಸಾರ್ವಜನಿಕ ವೇದಿಕೆಗಳಲ್ಲಿ ಅಶ್ಲೀಲತೆ ಹರಡುವುದು ಸರಿಯಲ್ಲ ಎಂದು ವಾದಿಸಲಾಗಿದೆ. ► ದಕ್ಷಿಣದ ಸಿನಿಮಾಗಳು ಮತ್ತು ರಾಜಕೀಯ ಈ ಮೂರು ವಿವಾದಗಳು ಜೊತೆ ಜೊತೆಗೆ ಬಂದಿರುವುದನ್ನು ಕಂಡಾಗ ಸರ್ಕಾರ, ಸಂಘಟನೆಗಳು ಮತ್ತು ರಾಜಕೀಯ ಪಡೆಗಳ ಜೊತೆಗಿನ ದಕ್ಷಿಣದ ಸಿನಿಮಾಗಳ ಸಂಘರ್ಷದ ಅಧ್ಯಾಯಗಳನ್ನು ವಿವರಿಸುತ್ತದೆ. ಹಾಗೆ ನೋಡಿದರೆ ದಕ್ಷಿಣದಲ್ಲಿ ಸಿನಿಮಾ ಮತ್ತು ರಾಜಕೀಯ ಜೊತೆಗೇ ಹೆಜ್ಜೆ ಹಾಕಿವೆ. ಕಾನೂನು ಸವಾಲುಗಳು, ರಾಜಕೀಯ ವಿರೋಧ ಮತ್ತು ಅನೈತಿಕ ಪೊಲೀಸ್ಗಿರಿಯನ್ನು ಸಿನಿಮಾಗಳು ಎದುರಿಸುತ್ತಿರುವ ಸಂದರ್ಭದಲ್ಲಿ ದಕ್ಷಿಣದ ಸಿನಿಮಾಗಳಿಗೆ ಅವಕಾಶ ಕಿರಿದಾಗುತ್ತಿರುವುದನ್ನು ಸಾಕಾರಗೊಳಿಸಿದೆ. ಈ ಸಿನಿಮಾಗಳು ಬಿರುಗಾಳಿಗೆ ಧೂಳೀಪಟವಾಗುತ್ತವೆಯೇ ಅಥವಾ ತಡೆದು ನಿಲ್ಲುತ್ತವೆಯೇ ಎಂದು ಕಾದು ನೋಡಬೇಕಿದೆ. ಕೃಪೆ: ಇಂಡಿಯಾ ಟುಡೆ
ಇರಾನ್ನಲ್ಲಿ ಖಮೇನಿ ಸರ್ಕಾರದ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡಿವೆ. 21 ದಿನಗಳಿಂದ ನಡೆಯುತ್ತಿರುವ ಈ ಪ್ರತಿಭಟನೆಗಳಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಬಂಧಿತರಾಗಿದ್ದಾರೆ. ಇನ್ನು, ಈ ನಡುವೆ ಪ್ರತಿಭಟನಾಕಾರನೊಬ್ಬನನ್ನು ಗಲ್ಲಿಗೇರಿಸಲಾಗುವುದು ಎಂಬ ಸುದ್ದಿ ಹರಡಿದ ಮೇಲೆ ಟ್ರಂಪ್ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಇರಾನ್ ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ಉದ್ದೇಶವಿಲ್ಲ ಸ್ಪಷ್ಟಪಡಿಸಿದೆ. ಇತ್ತ ಟ್ರಂಪ್ ಇರಾನ್ ನ ಆಪ್ತ ಮೂಲಗಳು ಪ್ರತಿಭಟನಾಕಾರರ ಹತ್ಯೆಗಳನ್ನು ನಿಲ್ಲಿಸಿದೆ ಎಂದು ಭರವಸೆ ನೀಡಿವೆ ಆದಾಗ್ಯೂ, ಬೆಳವಣಿಗೆಯನ್ನು ಗಮನಿಸುತ್ತಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಕಠಿಣ ಕ್ರಮಗಳ ಎಚ್ಚರಿಕೆ ನೀಡಿದ್ದಾರೆ.
ಕರಾವಳಿ ಕರ್ನಾಟಕದ 11 ಬೀಚ್ಗಳನ್ನು ಬ್ಲೂಫ್ಲ್ಯಾಗ್ ಪ್ರಮಾಣೀಕರಣಕ್ಕಾಗಿ ಪ್ರವಾಸೋದ್ಯಮ ಇಲಾಖೆ ಗುರುತಿಸಿದೆ. 2029ರ ವೇಳೆಗೆ ದೇಶೀಯ ಪ್ರವಾಸಿಗರ ಸಂಖ್ಯೆಯನ್ನು 50 ಕೋಟಿಗೆ ಹೆಚ್ಚಿಸುವ ಗುರಿಯೊಂದಿಗೆ, ಕರಾವಳಿ ಜಿಲ್ಲೆಗಳಿಗೆ 718 ಕೋಟಿ ರೂ. ಹೂಡಿಕೆ ಒಳಗೊಂಡ 45 ಯೋಜನೆಗಳನ್ನು ಮಂಜೂರು ಮಾಡಲಾಗಿದೆ. ಇದು ವೆಡ್ಡಿಂಗ್ ಡೆಸ್ಟಿನೇಶನ್, ರೆಸಾರ್ಟ್ಗಳು ಮತ್ತು ಬೀಚ್ಫ್ರಂಟ್ ಆತಿಥ್ಯಕ್ಕೆ ಅವಕಾಶ ನೀಡಲಿದೆ.
ಹೊನ್ನಾವರ: ಶರಾವತಿ ಸೇತುವೆ ಮೇಲೆ ಟ್ಯಾಂಕರ್- ಬೈಕ್ ಢಿಕ್ಕಿ; ಸವಾರ ಮೃತ್ಯು
ಹೊನ್ನಾವರ: ಶರಾವತಿ ನದಿಯ ಮೇಲಿನ ರಾಷ್ಟ್ರೀಯ ಹೆದ್ದಾರಿ ಸೇತುವೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗುಂಡಬಾಳ ಮುಟ್ಟದ ನಿವಾಸಿ ಜಾನ್ ಲೂಯಿಸ್ (61) ಎಂದು ಗುರುತಿಸಲಾಗಿದೆ. ಮೀನು ವ್ಯಾಪಾರಿಯಾಗಿದ್ದ ಅವರು, ನಿತ್ಯದಂತೆ ಕಾಸರಕೋಡ್ಗೆ ತೆರಳಿ ಮೀನು ಖರೀದಿಸಿ ಹೊನ್ನಾವರಕ್ಕೆ ಮರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅಪಘಾತದ ವಿವರ: ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಮಂಗಳೂರು ಭಾಗದಿಂದ ಗುಲಬರ್ಗಾ ಕಡೆಗೆ ಗ್ಯಾಸ್ ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಅನ್ನು ಓವರ್ಟೇಕ್ ಮಾಡಲು ಜಾನ್ ಲೂಯಿಸ್ ಯತ್ನಿಸಿದ್ದರು. ಈ ವೇಳೆ ಎದುರು ದಿಕ್ಕಿನಿಂದ ಕಾರೊಂದು ಬರುತ್ತಿದ್ದುದರಿಂದ ಅವರು ಬೈಕ್ ಅನ್ನು ಎಡಬದಿಗೆ ತಿರುಗಿಸಿದರು. ನಿಯಂತ್ರಣ ತಪ್ಪಿದ ಬೈಕ್ ಸವಾರನ ಕಾಲು ಟ್ಯಾಂಕರ್ ಹಿಂಭಾಗದ ಚಕ್ರಕ್ಕೆ ಸಿಲುಕಿದ್ದು, ಟ್ಯಾಂಕರ್ ಚಕ್ರ ಅವರ ಮೇಲೆ ಹರಿದು ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ. ಶರಾವತಿ ಸೇತುವೆಯಲ್ಲಿ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. 2025 ಜನವರಿ ತಿಂಗಳ ಆರಂಭದಲ್ಲೇ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದರು. ಸಾರ್ವಜನಿಕರ ಒತ್ತಾಯದ ಮೇರೆಗೆ ಅಳವಡಿಸಲಾಗಿದ್ದ ರಸ್ತೆ ದೀಪಗಳು ಹಾಗೂ ಡಿವೈಡರ್ಗಳು ಭಾರೀ ವಾಹನಗಳ ಢಿಕ್ಕಿಯಿಂದ ಹಾನಿಗೊಂಡಿದ್ದು, ಸಂಬಂಧಿಸಿದ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಸ್ಥಳೀಯರು ಹಲವಾರು ವರ್ಷಗಳಿಂದ ಹಳೆಯ ಶರಾವತಿ ಸೇತುವೆಯನ್ನು ಲಘು ವಾಹನಗಳಿಗೆ ಮುಕ್ತಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ, ಮತ್ತು ಹೊಸ ಸೇತುವೆಯ ಮೇಲಿನ ಒತ್ತಡ ಕಡಿಮೆ ಮಾಡದಿದ್ದರೆ ಇಂತಹ ಅಪಘಾತಗಳನ್ನು ತಡೆಯಲು ಸಾಧ್ಯವಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯ.
ರಾಜ್ಯದ ಜನತೆಗೆ ಮಹತ್ವದ ಮಾಹಿತಿ! ಗಿಲೆನ್-ಬಾರಿ ಸಿಂಡ್ರೋಮ್ (GBS) ಚಿಕಿತ್ಸೆಯನ್ನು ಈಗ 'ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ' ಯೋಜನೆಯಡಿ ಸೇರಿಸಲಾಗಿದೆ. ಈ ಮಹತ್ವದ ನಿರ್ಧಾರದಿಂದಾಗಿ, ಲಕ್ಷಾಂತರ ರೂಪಾಯಿ ವೆಚ್ಚವಾಗುವ ಈ ಚಿಕಿತ್ಸೆ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸುಲಭವಾಗಿ ಲಭ್ಯವಾಗಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿಯೂ, ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಆಕರ್ಷಕ ರಿಯಾಯಿತಿಯಲ್ಲೂ ಈ ಚಿಕಿತ್ಸೆ ದೊರೆಯಲಿದೆ. ಈ ಯೋಜನೆಗಾಗಿ ಸರ್ಕಾರ 10 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮೀಸಲಿಟ್ಟಿದ್ದು, ಇದು ರಾಜ್ಯದ ಜನಸಾಮಾನ್ಯರ ಆರೋಗ್ಯ ಭಾಗ್ಯಕ್ಕೆ ದೊಡ್ಡ ಭರವಸೆಯಾಗಿದೆ.
Iran: ಇಂಟರ್ನೆಟ್ ಬಂದ್ ಮಾಡಿದ ಸರ್ಕಾರ, ಬ್ಲೂಟೂತ್ ಬಳಸುತ್ತಿರುವ ಹೋರಾಟಗಾರರು!
ಇರಾನ್ ನೆಲದಲ್ಲಿ ಪ್ರತಿಭಟನೆ ಕ್ಷಣಕ್ಷಣಕ್ಕೂ ಭೀಕರ ಸ್ವರೂಪ ಪಡೆಯುತ್ತಿದ್ದು, ನೇರವಾಗಿ ಹೋರಾಟ ಮಾಡುವವರ ಹತ್ಯೆ ಆಗುತ್ತಿದೆ ಎಂಬ ಆರೋಪಗಳ ನಡುವೆ ಹೊಸ ತಲ್ಲಣ ಎದ್ದಿದೆ. ಇರಾನ್ ನೆಲ ಈಗ ಧಗಧಗ ಎನ್ನುತ್ತಿದ್ದು, ಮನೆಯಲ್ಲಿ ಇದ್ದವರು ಕೂಡ ಸುರಕ್ಷಿತವಲ್ಲ ಎಂಬ ವಾತಾವರಣ ಇದೀಗ ನಿರ್ಮಾಣ ಆಗಿದೆ. ಹೀಗಿದ್ದಾಗ ಇಂಟರ್ನೆಟ್ ಬಂದ್ ಮಾಡಿದ ಸರ್ಕಾರ ಹೇಗಾದರೂ ಮಾಡಿ ಪರಿಸ್ಥಿತಿ ಹಿಡಿತಕ್ಕೆ
Jana Nayagan: ನಟ, ರಾಜಕಾರಣಿ ವಿಜಯ್ ಸಿನಿಮಾ \ಜನ ನಾಯಗನ್\ಗೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆ
ನವದೆಹಲಿ: ನಟ, ರಾಜಕಾರಣಿ ವಿಜಯ್ ಅವರು ನಟಿಸಿರುವ ಜನ ನಾಯಗನ್ ಚಿತ್ರಕ್ಕೆ ಮತ್ತೆ ಹಿನ್ನಡೆ ಆಗಿದೆ. ನಟ ವಿಜಯ್ ಅವರು ಜನ ನಾಯಗನ್ ತಮ್ಮ ಕೊನೆಯ ಸಿನಿಮಾ ಎಂದು ಹೇಳಿಕೊಂಡಿದ್ದಾರೆ. ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ವಿಜಯ್ ಅವರು ಈ ಸಿನಿಮಾಗೆ ಸಂಬಂಧಿಸಿದಂತೆ ಸೆನ್ಸಾರ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದೀಗ ಜನ ನಾಯಗನ್ ಸಿನಿಮಾದ ಸೆನ್ಸಾರ್ ಸಂಬಂಧಿತ ವಿವಾದದಲ್ಲಿ ಮಧ್ಯಪ್ರವೇಶಿಸಲು
ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ: ಕುತೂಹಲಕಾರಿ ಟ್ವೀಟ್ ಬಗ್ಗೆ ಸ್ಪಷ್ಟನೆ ನೀಡಿದ್ದ ಡಿಕೆಶಿ
ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದರು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದರು. ಇದಕ್ಕೆ ಪೂರಕ ಎಂಬಂತೆ ಡಿಕೆ ಸುರೇಶ್ ಕೂಡಾ ಟ್ವೀಟ್ ಮಾಡಿದ್ದಾರೆ. ಡಿಕೆ ಬ್ರದರ್ಸ್ ಇಬ್ಬರ ಟ್ವೀಟ್ ರಾಜ್ಯ ರಾಜಕೀಯದಲ್ಲಿ ನಾನಾ ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟಿದೆ. ಆದರೆ ಈ ಬಗ್ಗೆ ಸ್ವತಃ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಭಾರತದ ವೈವಿಧ್ಯತೆಯೇ ಪ್ರಜಾಪ್ರಭುತ್ವದ ಶಕ್ತಿ: ಕಾಮನ್ವೆಲ್ತ್ ಸಮ್ಮೇಳನದಲ್ಲಿ ಪ್ರಧಾನಿ ಮೋದಿ
ಭಾರತಕ್ಕೆ ತನ್ನ ವೈವಿಧ್ಯತೆಯೇ ಶಕ್ತಿ. ಅದನ್ನು ಪ್ರಜಾಪ್ರಭುತ್ವದ ಶಕ್ತಿಯಾಗಿ ರೂಪಿಸಿಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಜಾಪ್ರಭುತ್ವ ಸಂಸ್ಥೆಗಳು ಅಭಿವೃದ್ಧಿಗೆ ಸ್ಥಿರತೆ, ವೇಗ ಮತ್ತು ವ್ಯಾಪ್ತಿಯನ್ನು ನೀಡುತ್ತವೆ ಎಂಬುದನ್ನು ಭಾರತ ಜಗತ್ತಿಗೆ ತೋರಿಸಿದೆ. ಜಾಗತಿಕ ದಕ್ಷಿಣದ ಕಳವಳಗಳನ್ನು ಭಾರತ ಎತ್ತಿ ತೋರಿಸುತ್ತಿದ್ದು, ಜಿ20 ಅಧ್ಯಕ್ಷತೆಯಲ್ಲೂ ಅದರ ಆದ್ಯತೆಗಳನ್ನು ಕೇಂದ್ರದಲ್ಲಿರಿಸಿತ್ತು.
ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಶುಭ ಸುದ್ದಿ. ಮಂಗಳೂರು ಬೈಪಾಸ್, ಸುರತ್ಕಲ್-ಬಿ.ಸಿ.ರೋಡ್ ಅಪ್ಗ್ರೇಡ್ ಹಾಗೂ ಎನ್ಎಚ್ 66ರಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಡಿಪಿಆರ್ಗಳಿಗೆ ಅನುಮೋದನೆ ದೊರೆತಿದೆ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು ಈ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಮೋದಿ, ನಿತಿನ್ ಗಡ್ಕರಿ ಮತ್ತು ಎನ್ಎಚ್ಎಐಗೆ ಧನ್ಯವಾದ ತಿಳಿಸಿದ್ದಾರೆ.
ವಿಧವೆ ಸೊಸೆ ಮಾವನ ಆಸ್ತಿಯಿಂದ ಜೀವನಾಂಶ ಪಡೆಯಲು ಅರ್ಹಳು: ಮನುಸ್ಮೃತಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ತೀರ್ಪು
ಹೊಸದಿಲ್ಲಿ: ವಿಧವೆಯಾದ ಹಿಂದೂ ಸೊಸೆಯು ತನ್ನ ಮಾವನ ಆಸ್ತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿದ್ದಾಳೆ ಎಂದು ಮನುಸ್ಮೃತಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಪತಿ ಮಾವನ ಜೀವಿತಾವಧಿಯಲ್ಲಿ ಮೃತಪಟ್ಟಿದ್ದಾರೆಯೇ ಅಥವಾ ನಂತರ ಮೃತಪಟ್ಟಿದ್ದಾರೆಯೇ ಎಂಬುದನ್ನು ಲೆಕ್ಕಿಸದೆ ಈ ಹಕ್ಕು ಅನ್ವಯಿಸುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿಥಲ್ ಮತ್ತು ಎಸ್.ವಿ.ಎನ್.ಭಟ್ಟಿ ಅವರ ಪೀಠವು, ಇಂತಹ ಹಕ್ಕು ವಿಧವೆಯಾದ ಹಿಂದೂ ಸೊಸೆಗೆ ಕೇವಲ ಕಾನೂನು ಕಾಯ್ದೆಯಡಿ ಮಾತ್ರವಲ್ಲದೆ ಸಂವಿಧಾನದಡಿ ಹಾಗೂ ಪ್ರಾಚೀನ ಮನಸ್ಮೃತಿಯಲ್ಲೂ ಅಡಕವಾಗಿದೆ ಎಂದು ತಿಳಿಸಿದೆ. ಡಾ.ಮಹೇಂದ್ರ ಪ್ರಸಾದ್ ಅವರ ವಿಧವೆ ಸೊಸೆ ಗೀತಾ ಶರ್ಮಾ ಅವರು ಜೀವನಾಂಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸುವಂತೆ ಹೈಕೋರ್ಟ್ ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ಅವರ ಸಂಬಂಧಿಕರಾದ ಕಾಂಚನಾ ರೈ ಮತ್ತು ಉಮಾ ದೇವಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.
ʻಅಮೆರಿಕನ್ ಕಂಪನಿಗಳನ್ನು ಆಕ್ರಮಿಸಿಕೊಳ್ಳೋದನ್ನ ಭಾರತೀಯರು ನಿಲ್ಲಿಸಿʼ; H-1B ವೀಸಾ ಜಾರಿ ನಂತರ ಹೆಚ್ಚಿದ ಕಿಚ್ಚು
ಅಮೆರಿಕದ ಪ್ರಜೆಗಳ ಉದ್ಯೋಗ ರಕ್ಷಣೆಗಾಗಿ ಜಾರಿ ಮಾಡಿರುವ H-1B ವೀಸಾ ಕ್ರಮದಿಂದಾಗಿ ಸದ್ಯ ಅಮೆರಿಕದಲ್ಲಿ ಭಾರತೀಯರ ಮೇಲಿನ ದ್ವೇಷ ಕಿಚ್ಚು ಹೆಚ್ಚಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ನಿಂದನೆಗಳು, ಜನಾಂಗೀಯ ಮಾತುಗಳು ಕೇಳಿಬರುತ್ತಿದೆ. ಇದಕ್ಕೆ ಪೂರಕವಾಗಿ 'ಮೂನ್ಶಾಟ್' ಸಂಸ್ಥೆ ಬಿಡುಗಡೆ ಮಾಡಿರುವ ಅಂಕಿಅಂಶವೇ ಸಾಕ್ಷಿಯಾಗಿದೆ. ಭಾರತೀಯರ ಮೇಲೆ ಮಾತ್ರವಲ್ಲದೇ ಅವರನ್ನು ಉದ್ಯೋಗಿಗಳಾಗಿ ನೇಮಕ ಮಾಡಿಕೊಳ್ಳುವ ಸಂಸ್ಥೆಗಳ ವಿರುದ್ಧ ಆಕ್ರೋಶ ಹೆಚ್ಚಾಗಿದೆ.
ಮಕರ ಸಂಕ್ರಾಂತಿ ಸಂಭ್ರಮ: ದೇವಸ್ಥಾನಗಳಲ್ಲಿ ಎಳ್ಳು - ಬೆಲ್ಲ: ಸರ್ಕಾರದಿಂದ ಆದೇಶ
ಕರ್ನಾಟಕ ಸರ್ಕಾರವು ಮಕರ ಸಂಕ್ರಾಂತಿ ಹಬ್ಬದಂದು ಸಿಹಿಸುದ್ದಿಯೊಂದನ್ನು ನೀಡಿದೆ. ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಜನವರಿ 15ರ ಗುರುವಾರ ಮಕರ ಸಂಕ್ರಾಂತಿ ಹಬ್ಬದ ದಿನದಂದು ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದಂತೆ ಎಲ್ಲಾ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಎಳ್ಳು - ಬೆಲ್ಲ ವಿತರಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಸಾರಿಗೆ
ಯುಐ ಗ್ರೀನ್ ಮೆಟ್ರಿಕ್ ನಲ್ಲಿ ಮಂಗಳೂರು ವಿವಿಗೆ ಭಾರತದ ಅತ್ಯಂತ ಸುಸ್ಥಿತ ವಿಶ್ವವಿದ್ಯಾನಿಲಯವಾಗಿ 3ನೇ ಸ್ಥಾನ
ಮಂಗಳೂರು, ಜ.15: ಇಂಡೋನೇಷ್ಯಾ ವಿಶ್ವವಿದ್ಯಾನಿಲಯ ಬಿಡುಗಡೆ ಮಾಡಿದ ಯುಐ ಗ್ರೀನ್ ಮೆಟ್ರಿಕ್ ವರ್ಲ್ಡ್ ಯುನಿವರ್ಸಿಟಿ ಶ್ರೇಯಾಂಕಗಳ ಪ್ರಕಾರ, ಮಂಗಳೂರು ವಿಶ್ವವಿದ್ಯಾನಿಲಯವು 2025ರಲ್ಲಿ ಭಾರತದ 3ನೇ ಅತ್ಯಂತ ಸುಸ್ಥಿರ ವಿಶ್ವವಿದ್ಯಾನಿಲಯ ಸ್ಥಾನ ಪಡೆದಿದೆ. ವಿಶ್ವದಲ್ಲಿ 127ನೇ ಸ್ಥಾನದಲ್ಲಿದೆ. ಗ್ರೀನ್ ಮೆಟ್ರಿಕ್ ಶ್ರೇಯಾಂಕವು ಹಸಿರು ಕ್ಯಾಂಪಸ್ ಮತ್ತು ಪರಿಸರ ಸುಸ್ಥಿರತೆಯನ್ನು ಆಧರಿಸಿದೆ. ಪರಿಸರಕ್ಕೆ ವಿಶ್ವವಿದ್ಯಾನಿಲಯದ ಬದ್ಧತೆ ಮತ್ತು ಸುಸ್ಥಿರತೆಯ ಕಡೆಗೆ ಏಳು ಉಪಕ್ರಮಗಳನ್ನು ಆಧರಿಸಿ ಈ ಶ್ರೇಯಾಂಕವನ್ನು ನೀಡಲಾಗುತ್ತದೆ. ಭಾರತದ 100 ವಿಶ್ವವಿದ್ಯಾನಿಲಯಗಳು ವಿಶ್ವಾದ್ಯಂತ 105 ದೇಶಗಳಲ್ಲಿ 1745 ಸಂಸ್ಥೆಗಳು ಈ ಶ್ರೇಯಾಂಕದಲ್ಲಿ ಭಾಗವಹಿಸಿದ್ದವು. ಮಂಗಳೂರು ವಿಶ್ವವಿದ್ಯಾನಿಲಯವು ವ್ಯವಸ್ಥೆ ಮತ್ತು ಮೂಲಸೌಕರ್ಯದಲ್ಲಿ ದೇಶದಲ್ಲಿ ಒಂದನೇ ಸ್ಥಾನದಲ್ಲಿದೆ. ಇಂಧನ ಮತ್ತು ಹವಾಮಾನ ಬದಲಾವಣೆಯಲ್ಲಿ ದೇಶದಲ್ಲಿ 4ನೇ ಸ್ಥಾನದಲ್ಲಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ದೇಶದಲ್ಲಿ 6ನೇ ಸ್ಥಾನದಲ್ಲಿದೆ. ನೀರಿನ ವ್ಯವಸ್ಥೆಗಾಗಿ 6ನೇ ಸ್ಥಾನ ಶಿಕ್ಷಣ ಮತ್ತು ಸಂಶೋಧನೆಗಾಗಿ ದೇಶದಲ್ಲಿ 10ನೇ ಹಾಗೂ ಸಾರಿಗೆ ವ್ಯವಸ್ಥೆಗಾಗಿ ದೇಶದಲ್ಲಿ 11ನೇ ಸ್ಥಾನದಲ್ಲಿದೆ. ವಿಶ್ವವಿದ್ಯಾನಿಲಯದ ಈ ಸಾಧನೆಗಾಗಿ ಎಲ್ಲಾ ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸುವುದಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
1962ರ ಯುದ್ಧದ ವೇಳೆ 600 ಕೆಜಿ ಚಿನ್ನ, 3 ಖಾಸಗಿ ವಿಮಾನಗಳನ್ನೇ ದೇಶಕ್ಕೆ ದಾನ ನೀಡಿದ್ದ 'ಮಹಾರಾಣಿ' ನಿಧನ
1962ರ ಭಾರತ-ಚೀನಾ ಯುದ್ಧದ ಸಮಯದಲ್ಲಿ ದೇಶದ ರಕ್ಷಣೆಗಾಗಿ 600 ಕೆಜಿ ಚಿನ್ನ ಹಾಗೂ ಖಾಸಗಿ ವಿಮಾನಗಳನ್ನು ದಾನವಾಗಿ ನೀಡಿದ್ದ ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ (93) ನಿಧನರಾಗಿದ್ದಾರೆ. ಬಿಹಾರದ ದರ್ಭಾಂಗದಲ್ಲಿರುವ ಕಲ್ಯಾಣಿ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಬನಾರಸ್ ಹಿಂದೂ ವಿವಿ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡಿದ್ದರು. ಪತಿಯ ನಿಧನದ ನಂತರ 64 ವರ್ಷಗಳ ಕಾಲ ಸರಳ ಜೀವನ ನಡೆಸಿದ್ದ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ವಾಯುಗಡಿ ಮುಚ್ಚಿದ ಇರಾನ್, ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ
ಇರಾನ್ ಮತ್ತು ಅಮೆರಿಕ ನಡುವೆ ತಿಕ್ಕಾಟ ಜೋರಾಗಿದ್ದು, ಯಾವುದೇ ಕ್ಷಣದಲ್ಲಿ ಎರಡೂ ದೇಶಗಳ ನಡುವೆ ಯುದ್ಧ ಆರಂಭ ಆಗುವ ಭೀತಿ ಆವರಿಸಿದೆ. ಇದೇ ಕಾರಣಕ್ಕೆ ಇರಾನ್ ಈಗಾಗಲೇ ವಾಯು ಗಡಿ ಬಂದ್ ಮಾಡಿದ್ದು, ಇದರ ಪರಿಣಾಮ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಭಾರತ ಸೇರಿದಂತೆ ನೂರಾರು ರಾಷ್ಟ್ರಗಳು ಅಂತಾರಾಷ್ಟ್ರೀಯ ವಿಮಾನ ಸೇವೆಗೆ ಇದೇ ಇರಾನ್ ವಾಯು
ಅಮೆರಿಕ ಅಧ್ಯಕ್ಷ ಟ್ರಂಪ್ ಅವರ 'ಅಮೆರಿಕ ಫಸ್ಟ್' ನೀತಿಯ ಪರಿಣಾಮ ಭಾರತೀಯರ ಮೇಲೆ ಬಿದ್ದಿರುವ ಹಿನ್ನೆಲೆಯಲ್ಲಿ, ಅಮೆರಿಕ ಹಾಸ್ಯನಟನೊಬ್ಬ ಬೆಂಗಳೂರಿನಲ್ಲಿ ಟ್ರಂಪ್ ವೇಷ ಧರಿಸಿ H-1B ವೀಸಾಗಳನ್ನು ಮಾರಾಟ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ಟ್ರಂಪ್ ಅವರಂತೆ ನಟಿಸಿ, ವೀಸಾಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಹಾಸ್ಯನಟನ ದೃಶ್ಯಗಳು ಜನರನ್ನು ಸೆಳೆದಿದ್ದು, ಲಕ್ಷಾಂತರ ವೀಕ್ಷಣೆ ಪಡೆದಿದೆ.
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ | ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರೇ ನಾಪತ್ತೆ!
ಚುನಾವಣಾ ಆಯೋಗದ ವಿರುದ್ಧ ಆಕ್ರೋಶ
ಆರಿಕ್ಕಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ: ಶಾಸಕ ಅಶ್ರಫ್ ಸಹಿತ 15ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ
ಪ್ರತಿಭಟನಾಕಾರರ ಚಪ್ಪರ ತೆರವು, ಟೋಲ್ ಸಂಗ್ರಹ ಪುನಾರಂಭ
Madhya Pradesh| ಖಾಸಗಿ ಶಾಲೆಯನ್ನು ಅನಧಿಕೃತ ಮದರಸಾ ಎಂದು ಸುಳ್ಳು ಪ್ರಚಾರ: ಸ್ಥಳೀಯ ಆಡಳಿತದಿಂದ ಧ್ವಂಸ
ಭೋಪಾಲ್: ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನರ್ಸರಿಯಿಂದ 8ನೇ ತರಗತಿಯವರೆಗಿನ ಮಕ್ಕಳಿಗೆ ಶಿಕ್ಷಣ ನೀಡಲು ನಿರ್ಮಿಸುತ್ತಿದ್ದ ಖಾಸಗಿ ಶಾಲೆಯನ್ನು ಅನಧಿಕೃತ ಮದರಸಾ ಎಂದು ಸುಳ್ಳು ಪ್ರಚಾರ ಮಾಡಿದ್ದು ಅದರ ಭಾಗಶಃ ಧ್ವಂಸಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ indianexpress.com ವರದಿ ಮಾಡಿದೆ. ಸ್ಥಳೀಯ ನಿವಾಸಿ ಅಬ್ದುಲ್ ನಯೀಮ್ ಎಂಬವರು ಸಾಲವಾಗಿ ಪಡೆದ ಹಣ ಹಾಗೂ ಕುಟುಂಬದ ಉಳಿತಾಯ ಸೇರಿ ಸುಮಾರು 20 ಲಕ್ಷ ವೆಚ್ಚದಲ್ಲಿ ಶಾಲೆಯನ್ನು ನಿರ್ಮಿಸುತ್ತಿದ್ದರು. ಆದರೆ ಸ್ಥಳೀಯ ಆಡಳಿತದ ಆದೇಶದ ಮೇರೆಗೆ ಜನವರಿ 13ರ ಸಂಜೆ ಗೋಡೆಗಳು ಮತ್ತು ಮುಂಭಾಗದ ಶೆಡ್ ಅನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಲಾಗಿದೆ. ಧಾಬಾ ಗ್ರಾಮ ಮತ್ತು ಸುತ್ತಮುತ್ತಲಿನ ಬುಡಕಟ್ಟು ಹಳ್ಳಿಗಳ ಮಕ್ಕಳಿಗಾಗಿ ನರ್ಸರಿಯಿಂದ 8ನೇ ತರಗತಿಯವರೆಗೆ ಶಾಲೆಯನ್ನು ನಿರ್ಮಿಸುವ ಕನಸನ್ನು ಕಂಡಿದ್ದ ನಯೀಮ್, ಶಾಲೆಯನ್ನು ನಿರ್ಮಿಸುತ್ತಿದ್ದರು. ಅಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಮೈಲುಗಳಷ್ಟು ದೂರ ನಡೆಯಬೇಕಾದ ಪರಿಸ್ಥಿತಿಯಿತ್ತು. ಅವರು ವಾಣಿಜ್ಯ ಭೂಮಿಯ ಬಳಕೆ ಬದಲಾವಣೆ (ಕಮರ್ಷಿಯಲ್ ಲ್ಯಾಂಡ್ ಡೈವರ್ಷನ್) ಅನುಮತಿ ಪಡೆದು, ಪಂಚಾಯತ್ನಿಂದ ಎನ್ಒಸಿ ಪಡೆದಿದ್ದರು. ಇದಲ್ಲದೆ ಡಿಸೆಂಬರ್ 30ರಂದು ಶಾಲಾ ಶಿಕ್ಷಣ ಇಲಾಖೆಗೆ ಅಧಿಕೃತವಾಗಿ ಅರ್ಜಿ ಸಲ್ಲಿಸಿ ಅಗತ್ಯವಿರುವ ಎಲ್ಲಾ ಭೂ ದಾಖಲೆಗಳನ್ನು ಕೂಡ ಸಲ್ಲಿಸಿದ್ದರು. ನಮ್ಮ ಗ್ರಾಮ ಅಭಿವೃದ್ಧಿಯಾಗಬೇಕು ಮತ್ತು ಕೆಲವು ಮಕ್ಕಳಾದರೂ ಓದಲು ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ನನ್ನ ಖಾಸಗಿ ಜಮೀನಿನಲ್ಲಿ ಶಾಲೆಯನ್ನು ನಿರ್ಮಿಸಲು ನಾನು ನಿರ್ಧರಿಸಿದ್ದೆ. ಆದರೆ ಇಲ್ಲಿ ನಾವು ತಪ್ಪು ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ಹಿರಿಯ ಅಧಿಕಾರಿಗಳು ಆರೋಪಿಸಿದರು,” ಎಂದು ನಯೀಮ್ ಹೇಳಿದ್ದಾರೆ. ಶಾಲಾ ಕಟ್ಟಡದ ನಿರ್ಮಾಣ ಕಾರ್ಯ ನಡೆಯುತ್ತಿದ್ದಾಗ ಧ್ವಂಸಕ್ಕೆ ಮೂರು ದಿನ ಮುಂಚಿತವಾಗಿ ಆ ಪ್ರದೇಶದಲ್ಲಿ ಮದರಸಾ ನಿರ್ಮಾಣವಾಗುತ್ತಿದೆ ಎಂಬ ವದಂತಿಗಳು ಹರಿದಾಡಿದವು. ಇದು ಕೇವಲ ಮೂರು ಮುಸ್ಲಿಂ ಕುಟುಂಬಗಳಿರುವ ಗ್ರಾಮ. ಕಟ್ಟಡವೇ ಪೂರ್ಣವಾಗಿರಲಿಲ್ಲ. ಇಲ್ಲಿ ಮದರಸಾ ಕಾರ್ಯನಿರ್ವಹಿಸುವುದು ಹೇಗೆ ಸಾಧ್ಯ? ತರಗತಿಗಳೇ ಇರಲಿಲ್ಲ, ವಿದ್ಯಾರ್ಥಿಗಳೂ ಇರಲಿಲ್ಲ, ಎಂದು ನಯೀಮ್ ಹೇಳಿದ್ದಾರೆ. ಜನವರಿ 11ರಂದು, ಅನುಮತಿ ಇಲ್ಲದಿರುವುದನ್ನು ಉಲ್ಲೇಖಿಸಿ, ಗ್ರಾಮ ಪಂಚಾಯತ್ ನಯೀಮ್ ಅವರಿಗೆ ಕಟ್ಟಡವನ್ನು ಕೆಡವುವಂತೆ ನೋಟಿಸ್ ನೀಡಿದೆ. ಅದಕ್ಕೆ ಅಧಿಕೃತವಾಗಿ ಉತ್ತರ ನೀಡಲು ಅವರು ಪಂಚಾಯತ್ ಕಚೇರಿಗೆ ಹೋದಾಗ ಅವರ ಅರ್ಜಿಯನ್ನು ಸ್ವೀಕರಿಸಲು ಅಧಿಕಾರಿಗಳು ನಿರಾಕರಿಸಿ ಮತ್ತೆ ಬರುವಂತೆ ಸೂಚಿಸಿದ್ದಾರೆ. ಜನವರಿ 13ರಂದು ನಯೀಮ್ ಮತ್ತು ಕೆಲವು ಗ್ರಾಮಸ್ಥರು ಜಿಲ್ಲಾಧಿಕಾರಿಯನ್ನು ಭೇಟಿಯಾಗಲು ಜಿಲ್ಲಾ ಕಚೇರಿಗೆ ತೆರಳಿದ್ದರು. ಆದರೆ ಅಧಿಕಾರಿಗಳು ಪೊಲೀಸ್ ಬಂದೋ ಬಸ್ತ್ನಲ್ಲಿ ಶಾಲಾ ಕಟ್ಟಡದ ಒಂದು ಭಾಗ ಮತ್ತು ಮುಂಭಾಗದ ಶೆಡ್ ನೆಲಸಮಗೊಳಿಸಿದ್ದಾರೆ. ಅತಿಕ್ರಮಣ ಮತ್ತು ನಿಯಮ ಉಲ್ಲಂಘನೆ ಆರೋಪಿಸಿ ಗ್ರಾಮ ಪಂಚಾಯತ್ ದೂರು ದಾಖಲಿಸಿದ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಪರಿಶೀಲನೆಯ ವೇಳೆ ಕಟ್ಟಡದ ಒಂದು ಭಾಗವನ್ನು ಅತಿಕ್ರಮಣ ಮಾಡಿ ನಿರ್ಮಿಸಿರುವುದು ಕಂಡು ಬಂದಿದೆ. ಆದ್ದರಿಂದ ಆ ಭಾಗವನ್ನು ತೆರವುಗೊಳಿಸಲಾಗಿದೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅಜಿತ್ ಮರಾವಿ ಹೇಳಿದ್ದಾರೆ. ನಯೀಮ್ ಇದನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ನನ್ನ ಬಳಿ ಪಂಚಾಯತ್ ನೀಡಿರುವ ಎನ್ಒಸಿ ಇತ್ತು. ನಾನು ಶಾಲೆಯ ಅನುಮೋದನೆಗಾಗಿ ಅರ್ಜಿ ಸಲ್ಲಿಸಿದ್ದೆ. ಕಾಗದಪತ್ರಗಳಲ್ಲಿ ಯಾವುದೇ ಲೋಪವಿದ್ದರೆ ದಂಡವನ್ನು ಪಾವತಿಸಲು ನಾನು ಸಿದ್ಧನಿದ್ದೆ ಎಂದು ಹೇಳಿದ್ದಾರೆ.
ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ: ಕೈ ಮುಖಂಡ ರಾಜೀವ್ ಗೌಡಗೆ ಬುದ್ದಿವಾದ ಹೇಳ್ತೇನೆ ಎಂದ ಕೆ ಎಚ್ ಮುನಿಯಪ್ಪ
ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣದ ಕುರಿತಾಗಿ ಸಚಿವ ಕೆ ಎಚ್ ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರಾದ ರಾಜೀವ್ ಗೌಡ ಎಂಬುವವರು ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಹಾಕಿದ್ದರು. ಇಂತಹ ಘಟನೆಗಳು ನಡೆಯಬಾರದು. ರಾಜೀವ್ ಗೌಡಗೆ ನಾನು ಕರೆದು ಬುದ್ದಿವಾದ ಹೇಳುತ್ತೇನೆ ಎಂದು ಅವರು ತಿಳಿಸಿದರು. ಬ್ಯಾನರ್ ವಿಚಾರವಾಗಿ ಶಿಡ್ಲಘಟ್ಟ ಪೌರಾಯುಕ್ತೆಗೆ ರಾಜೀವ್ ಗೌಡ ಧಮ್ಕಿ ಹಾಕಿದ್ದರು. ಈ ಆಡಿಯೋ ವೈರಲ್ ಆಗಿತ್ತು. ವ್ಯಾಪಕ ಟೀಕೆಗೆ ಗುರಿಯಾಗಿತ್ತು.
Exclusive: ಲಕ್ಕುಂಡಿ: ನಿಧಿ ನೀಡಿದ ಕುಟುಂಬಕ್ಕೆ ಸರ್ಕಾರದಿಂದ ನಿವೇಶನ ಸೇರಿ ಭರ್ಜರಿ ಆಫರ್: ಎಚ್.ಕೆ ಪಾಟೀಲ್
ಗದಗ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಗಂಗವ್ವ ರಿತ್ತಿ ಹಾಗೂ ಪುತ್ರ ಪ್ರಜ್ವಲ್ ರಿತ್ತಿ ಅವರನ್ನು ವಿಶೇಷವಾಗಿ ಸನ್ಮಾನ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಅಲ್ಲದೇ ಈ ಭಾಗದಲ್ಲಿ ಇನ್ನಷ್ಟು ಪುರಾತತ್ವ ವಸ್ತುಗಳು ಸಿಗುವ ನಿರೀಕ್ಷೆ ಇರುವುದರಿಂದ ಪುರಾತತ್ವ ಇಲಾಖೆಯು ವಿಶೇಷ ಕಾರ್ಯಾಚರಣೆಗೆ ಮುಂದಾಗುತ್ತಿದೆ. ಈ ಕುಟುಂಬಕ್ಕೆ ಉದ್ಯೋಗ,
Udupi Paryaya : ಅನ್ನಬ್ರಹ್ಮ ಕ್ಷೇತ್ರಕ್ಕೆ ಬನ್ನಿ, ಸರ್ವಜ್ಞ ಪೀಠವನ್ನೇರಲಿರುವ ಶೀರೂರು ಶ್ರೀಗಳ ಸಂದರ್ಶನ
Shiroor Seer Paryaya : ಕೃಷ್ಣನನಾಡು ಉಡುಪಿಯಲ್ಲಿ ಪರ್ಯಾಯ ಮಹೋತ್ಸವದ ಸಂಭ್ರಮ. ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ವೇದವರ್ಥನ ತೀರ್ಥ ಸ್ವಾಮೀಜಿಗಳು ಸರ್ವಜ್ಞ ಪೀಠವನ್ನೇರಲಿದ್ದಾರೆ. ಶ್ರೀಗಳು, ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿದ್ದ ಸಂದರ್ಭದಲ್ಲಿ ವಿಜಯ ಕರ್ನಾಟಕಕ್ಕೆ ನೀಡಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ.
ಕೆನಡಾ ಇತಿಹಾಸದಲ್ಲೇ ಬೃಹತ್ ದರೋಡೆ ಪ್ರಕರಣ: ಮುಖ್ಯ ಆರೋಪಿಯನ್ನು ಗಡೀಪಾರು ಮಾಡುವಂತೆ ಭಾರತಕ್ಕೆ ಮನವಿ
ಟೊರಾಂಟೊ: ಕೆನಡಾ ಇತಿಹಾಸದಲ್ಲೇ ಬೃಹತ್ ದರೋಡೆ ಪ್ರಕರಣ ಎಂದು ಹೇಳಲಾಗಿರುವ 20 ದಶಲಕ್ಷ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಸಿಮ್ರಾನ್ ಪ್ರೀತ್ ಪನೇಶರ್ ನನ್ನು ದೇಶದಿಂದ ಗಡೀಪಾರು ಮಾಡುವಂತೆ ಕೆನಡಾ ಪೊಲೀಸರು ಅಧಿಕೃತ ಮನವಿ ಸಲ್ಲಿಸಿದ್ದಾರೆ. ಎಪ್ರಿಲ್ 2023ರಲ್ಲಿ ಟೊರಾಂಟೊ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದ ಚಿನ್ನದ ದರೋಡೆ ಪ್ರಕರಣದಲ್ಲಿ ಬ್ರಾಂಪ್ಟನ್ ನಿವಾಸಿ ಹಾಗೂ ಏರ್ ಕೆನಡಾದ ಮಾಜಿ ಉದ್ಯೋಗಿಯಾದ 33 ವರ್ಷದ ಸಿಮ್ರಾನ್ ಪ್ರೀತ್ ಪನೇಸರ್ ಮುಖ್ಯ ಆರೋಪಿಯಾಗಿದ್ದಾನೆ. .9999 ಪರಿಶುದ್ಧತೆಯ ಸುಮಾರು 400 ಕೆಜಿ ಚಿನ್ನದ ತುಂಡುಗಳು ಹಾಗೂ 2.5 ದಶಲಕ್ಷ ಡಾಲರ್ ವಿದೇಶಿ ನಗದನ್ನು ಒಳಗೊಂಡಿದ್ದ ಭಾರಿ ಮೊತ್ತದ ಸರಕನ್ನು ಸ್ಥಳಾಂತರಿಸುವಲ್ಲಿ ಪನೇಸರ್ ನಿರ್ಣಾಯಕ ಪಾತ್ರ ವಹಿಸಿದ್ದಾನೆ ಎಂದು ಕೆನಡಾ ಪೊಲೀಸರು ಆರೋಪಿಸಿದ್ದಾರೆ. ಈ ದರೋಡೆಯ ನಂತರ ಪನೇಸರ್ ಭಾರತಕ್ಕೆ ಪರಾರಿಯಾಗಿದ್ದಾನೆ ಎಂದು ಕೆನಡಾ ಪೊಲೀಸರು ಶಂಕಿಸಿದ್ದು, ಕೆನಡಾದ್ಯಂತ ಬಂಧನ ವಾರೆಂಟ್ ಹಾಗೂ ಗಡೀಪಾರು ಮನವಿಯನ್ನು ಕೆನಡಾ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಸ್ವಿಝರ್ ಲೆಂಡ್ ನ ಝೂರಿಚ್ ನಿಂದ ಟೊರಾಂಟೊ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಾರಿ ಮೌಲ್ಯದ ಚಿನ್ನದ ಸರಕನ್ನು ವಿಮಾನ ನಿಲ್ದಾಣದ ಸುರಕ್ಷಿತ ದಾಸ್ತಾನು ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಮರು ದಿನ ಈ ಸರಕು ನಾಪತ್ತೆಯಾಗಿದೆ ಎಂದು ವರದಿಯಾಗಿತ್ತು. ಈ ಕಾರ್ಯಾಚರಣೆಗೆ ‘ಪ್ರಾಜೆಕ್ಟ್ 24ಕೆ’ ಎಂಬ ಗೋಪ್ಯ ನಾಮವಿಡಲಾಗಿತ್ತು. ಈ ದರೋಡೆಗೆ ದೊಡ್ಡ ಮಟ್ಟದಲ್ಲಿ ಸಮನ್ವಯ ಸಾಧಿಸಲಾಗಿದ್ದು, ಒಳಗಿನವರು ಹಾಗೂ ಹೊರಗಿನವರಿಬ್ಬರೂ ಈ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದಿನವರೆಗೆ ಹತ್ತು ಮಂದಿಯ ವಿರುದ್ಧ 21 ಕೌಂಟ್ ದೋಷಾರೋಪಗಳನ್ನು ಹೊರಿಸಲಾಗಿದೆ.
ಚಾಮರಾಜನಗರ | ನಾಡಿಗೆ ಬಂದ ಕಾಡಾನೆ: ಮಾರಿಗುಡಿ ಬೀದಿಯಲ್ಲಿ ರಂಪಾಟ
ಚಾಮರಾಜನಗರ : ಗುಂಡ್ಲುಪೇಟೆ ಪಟ್ಟಣದ ಮಾರಿಗುಡಿ ಬೀದಿಗೆ ಬುಧವಾರ ತಡರಾತ್ರಿ ಕಾಡಾನೆ ಒಂದು ನುಗ್ಗಿ ರಂಪಾಟ ನಡೆಸಿದೆ. ಮನೆ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಾಡಾನೆ ಜಖಂಗೊಳಿಸಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪುರಸಭೆ 5ನೇ ವಾರ್ಡ್ನ ಮಾರಿಗುಡಿ ಬೀದಿಯಲ್ಲಿ ಅಚಾನಕ್ ಕಾಣಿಸಿಕೊಂಡ ಕಾಡಾನೆಯನ್ನು ಕಂಡು ನಾಯಿಗಳು ಬೊಗಳಿವೆ. ಇದರಿಂದ ಗಾಬರಿಗೊಂಡ ಕಾಡಾನೆ ಎದುರಿಗೆ ಸಿಕ್ಕ ವಾಹನಗಳನ್ನು ಎತ್ತಿ ಬಿಸಾಡಿದೆ ಎಂದು ತಿಳಿದು ಬಂದಿದೆ. ಗುರುವಾರ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದ್ದು, ಆ ಸಮಯದಲ್ಲಿ ಸಾರ್ವಜನಿಕರ ಓಡಾಟ ಇರಲಿಲ್ಲ. ಹೀಗಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಕಾಡಾನೆ ಪಟ್ಟಣದ ಸಮೀಪದ ನಿರ್ಜನ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಅನುಮಾನವಿದೆ ಎಂದು ಪುರಸಭಾ ಮಾಜಿ ಅಧ್ಯಕ್ಷ ಕಿರಣಗೌಡ ಆತಂಕ ವ್ಯಕ್ತಪಡಿಸಿದ್ದಾರೆ. ಕಾಡಾನೆಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಕಾಡಿಗೆ ಹಿಂತಿರುಗಿಸುವಂತೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಸಮಾಜದಲ್ಲಿನ ಆತಂಕ, ಒತ್ತಿಟ್ಟ ನೋವು, ವ್ಯವಸ್ಥೆಯ ಕ್ರೌರ್ಯ, ಜಾತಿ ಮತ ಪಂಥಗಳ ಮೇಲಾಟ, ಹೆಣ್ಣಿನ ಅಸಹಾಯಕತೆ, ಆತಂಕಗಳನ್ನು ಮಹಾದೇವ ಬಸರಕೋಡ ಗಂಭೀರವಾಗಿ ಅರ್ಥೈಸಿಕೊಳ್ಳಲು ಪ್ರಯತ್ನಿಸುತ್ತ ಅದಕ್ಕೆ ತಕ್ಕುದಾದ ಅಭಿವ್ಯಕ್ತಿಯನ್ನು ತಮ್ಮ ಕಾವ್ಯದಲ್ಲಿ ಹೊಸ ರೀತಿಯಲ್ಲಿ ಕಂಡುಕೊಳ್ಳುವುದನ್ನು ಅವರ ‘ಬತ್ತುವುದಿಲ್ಲ ಜೀವದೊಲವು’ ಸಾಕ್ಷೀಕರಿಸುತ್ತದೆ. ಜೀವನ ಪ್ರೀತಿ ಮತ್ತು ತಾತ್ವಿಕ ನೆಲೆಗಳನ್ನು ಅತ್ಯಂತ ನಿಖರವಾಗಿ ನಿರೂಪಿಸುವ ಕೃತಿ ಇದಾಗಿದೆ ಎನ್ನುವುದು ಅತಿಶಯೋಕ್ತಿಯೇನಲ್ಲ. ಎಲ್ಲ ಅಡೆತಡೆಗಳನ್ನು ದಾಟಿ ಮನಸ್ಸನ್ನು ಚಲನಶೀಲವಾಗಿರಿಸಲು ಕನಸುಗಳ ಆಸರೆ ಬೇಕು, ಸಾಮಾಜಿಕವಾಗಿ ಎದುರಾಗುವ ಅಮಾನವೀಯ ಸವಾಲುಗಳ ನಡುವೆಯೂ ಜೀವ ಪ್ರೀತಿಯನ್ನು ಉಳಿಸಿಕೊಳ್ಳುವ ಉಮೇದು ಇರಬೇಕು ಎನ್ನುವ ಆಶಾವಾದದ ಹಿನ್ನೆಲೆಯಲ್ಲಿ ಇಲ್ಲಿನ ‘ಮುಸುಕು ಸರಿಸೋಣ’, ‘ಕಾಯುತ್ತಲಿರುವೆ’, ‘ಬದುಕನರಳಿಸು ಬೆಂಕಿಯೇ’ ಎನ್ನುವ ಹಲವು ಕವನಗಳು ಅಂತರಂಗದ ಜೀವತಂತುಗಳನ್ನು ಮೀಟುತ್ತವೆ. ಸಿದ್ಧ ಮಾದರಿಯ ಪಡಿಯಚ್ಚಿಗೆ ಹೊರತಾಗಿ ಪ್ರಯೋಗಶೀಲವಾಗಿ ‘ಅಶ್ವಮೇಧದ ಕುದುರೆಗೆ ಲಗಾಮು’, ‘ಸಣ್ಣತನ’, ‘ಕ್ಷಮೆ ಇರಲಿ’ ಕವನಗಳು ನಾವಿನ್ಯತೆಗಾಗಿ ತುಡಿಯುವಿಕೆಗೆ ಉತ್ತಮ ನಿದರ್ಶನವಾಗಿವೆ. ಬೆಳಕು ನೀಡುವ ಸೂರ್ಯ, ಬೆಳದಿಂಗಳ ಕಾಂತಿ ಕೊಡುವ ಚಂದ್ರ, ಮುಳ್ಳಿನ ನಡುವೆಯೇ ಅರಳುವ ಗುಲಾಬಿ ಚಿತ್ರಗಳನ್ನು ಕಟ್ಟಿಕೊಡುತ್ತ ಸವಾಲುಗಳ ನಡುವೆಯೂ ಬದುಕು ನೀಡಿದ್ದನ್ನು ಬಾಚಿಕೊಳ್ಳುವ ಛಲಗಾರಿಕೆ ರೂಢಿಸಿಕೊಳ್ಳುವಂತೆ ಒತ್ತಾಯಿಸುತ್ತವೆ. ಯಾವುದೇ ಬಗೆಯ ಅತಿರೇಕವಿಲ್ಲದೆ ಸಂಯಮದಿಂದ ವಾಸ್ತವತೆಯನ್ನು ಮನಗಾಣಿಸಿಕೊಡಲು ಇಲ್ಲಿಯ ಕವನಗಳು ಸಮರ್ಥವಾಗಿವೆ. ಇರುವ ಇರುಳ ಕೇಡನು ಕಳೆದು ಅರಿವಿನ ದೀಪ ಮುಡಿಸುತ ಒಳಬೆಳಕು ತೋರಿದವರು ನಮ್ಮ ನೆಲದ ಶರಣರು.. ಶರಣ ಸಂಸ್ಕೃತಿಯಲ್ಲಿನ ವೈಯಕ್ತಿಕ ಮತ್ತು ಸಾಮಾಜಿಕ ಮೌಲ್ಯಗಳ ಸಹಚರ್ಯವನ್ನು ಎತ್ತಿ ತೋರಿಸುವಲ್ಲಿ ಈ ರೀತಿಯ ಇನ್ನು ಕೆಲವು ಕವಿತೆಗಳು ಈ ಕಾಲಘಟ್ಟಕ್ಕೆ ಹೆಚ್ಚು ಪ್ರಸ್ತುತವೆನಿಸುತ್ತದೆ. ಬಂಡಾಯಕ್ಕೆ ಸೀಮಿತವೆನಿಸದ, ಆದರೂ ಅದರ ತಿರುಳುಗಳನ್ನು ಸೌಮ್ಯವಾಗಿ ಪ್ರತಿಧ್ವನಿಸುತ್ತವೆ. ವಸ್ತು ಸತ್ಯವನ್ನು ಮೀರಿದ ಕಾವ್ಯ ಸತ್ಯವನ್ನು ಕಾಣಿಸುವಲ್ಲಿ ಕೆಲವು ಕವಿತೆಗಳು ಯಶಸ್ವಿಯಾಗಿವೆ. ಕವಿ ಮಹಾದೇವ ಬಸರಕೋಡರ ಪ್ರೌಢವಾದ ಚಿಂತನೆ ಹಾಗೂ ತಾತ್ವಿಕ ಜಿಜ್ಞಾಸೆ ಓದುಗರ ಮಾತ್ರವಲ್ಲದೆ ವಿಮರ್ಶಕರ ಮನಸ್ಸನ್ನು ಸೆಳೆದುಕೊಳ್ಳುವಲ್ಲಿ, ಬದುಕಿನ ಭರವಸೆಯನ್ನು ಕಳೆದುಕೊಳ್ಳದೆ ಮಾನವೀಯತೆಯನ್ನು ಧ್ಯಾನಿಸುವಲ್ಲಿ ‘ಬತ್ತುವುದಿಲ್ಲ ಜೀವದೊಲವು’ ಸಫಲವಾಗಿದೆ ಎನ್ನಬಹುದು.
ಲಿಂಗಸುಗೂರು: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿಳಂಬ; ಕೆಕೆಆರ್ಟಿಸಿ ಬಸ್ ಜಪ್ತಿ
ರಾಯಚೂರು, ಜ.15: ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನ ಕುಟುಂಬಕ್ಕೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದರೂ, ಅದನ್ನು ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕೆಕೆಆರ್ಟಿಸಿ ಬಸ್ಸನ್ನು ಪಟ್ಟಣದ ಬಸ್ ನಿಲ್ದಾಣದಲ್ಲಿ ಕೋರ್ಟ್ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. ಮಸ್ಕಿ ತಾಲೂಕಿನ ಪಾಂಡುರಂಗ ಕ್ಯಾಂಪ್ ಸಮೀಪ 2001ರಲ್ಲಿ ಯಾದಗಿರಿ ಘಟಕಕ್ಕೆ ಸೇರಿದ ಸರ್ಕಾರಿ ಬಸ್ ಒಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಉಮೇಶ್ ಎಂಬವರು ಸಾವಿಗೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬದವರು ಪರಿಹಾರಕ್ಕಾಗಿ ಲಿಂಗಸುಗೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ದಾವೆಯನ್ನು ವಿಚಾರಿಸಿದ ಜೆಎಂಎಫ್ಸಿ ಹಿರಿಯ ಸಿವಿಲ್ ನ್ಯಾಯಾಧೀಶರು, ರೂ.66,99,675 ಪರಿಹಾರ ಮೊತ್ತ, ರೂ.8,37,450 ಬಡ್ಡಿ ಹಾಗೂ ರೂ.7,525 ಇತರೆ ವೆಚ್ಚ ಸೇರಿ ಒಟ್ಟು ರೂ.75,44,650ನ್ನು ನೀಡುವಂತೆ ಆದೇಶಿಸಿದ್ದರು. ಆದರೆ ಕೆಕೆಆರ್ಟಿಸಿ ಪರಿಹಾರ ಪಾವತಿಯಲ್ಲಿ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ಬಸ್ ಜಪ್ತಿ ವಾರಂಟ್ ಹೊರಡಿಸಿತ್ತು. ಅದರಂತೆ ಕೋರ್ಟ್ ಬೇಲಿಫ್ಗಳಾದ ಶಾಂತಪ್ಪ ಹಾಗೂ ಮಾನಪ್ಪ.ಬಿ ಅವರು ಲಿಂಗಸುಗೂರು ಬಸ್ ನಿಲ್ದಾಣಕ್ಕೆ ತೆರಳಿ ಯಾದಗಿರಿ ಘಟಕಕ್ಕೆ ಸೇರಿದ (ಕೆಎ 33 ಎಫ್ 0637) ಬಸ್ಸನ್ನು ವಶಪಡಿಸಿಕೊಂಡು ಲಿಂಗಸುಗೂರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಈ ವೇಳೆ ವಕೀಲರಾದ ಎಚ್. ವೀರಭದ್ರಪ್ಪ, ಶಿವಕುಮಾರ ಎಸ್., ಮಲ್ಲಿಕಾರ್ಜುನ ಗೋನಾಳ ಹಾಗೂ ರತ್ನಾಬಾಯಿ ಉಪಸ್ಥಿತರಿದ್ದರು.
ಕೇರಳದ ಹಾಸ್ಟೆಲ್ನಲ್ಲಿ 2 ಅಪ್ರಾಪ್ತ ಕ್ರೀಡಾಪಟುಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಪ್ರಕರಣ ದಾಖಲು
ಕೊಲ್ಲಂನ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್ನಲ್ಲಿ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 17 ವರ್ಷದ ಸ್ಯಾಂಡ್ರಾ ಮತ್ತು 15 ವರ್ಷದ ವೈಷ್ಣವಿ ಮೃತಪಟ್ಟಿದ್ದಾರೆ. ಗುರುವಾರ ಮುಂಜಾನೆ ಈ ದುರಂತ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ಲಭಿಸಲಿದೆ.
ಸಂಕ್ರಾಂತಿ ನಂತರ ಕುಸಿದ ಚಿನ್ನ; ಮುಂದುವರಿದ ಬೆಳ್ಳಿ ಬೆಲೆ ಏರಿಕೆ
ಮುಂಬರುವ ಮದುವೆಯ ಸೀಸನ್ಗೆ ಮೊದಲು ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಇಂದಿನ ದರದ ವಿವರ ಇಲ್ಲಿದೆ. ಜನವರಿ 9ರಿಂದ ಸತತವಾಗಿ ಏರು ಹಾದಿಯಲ್ಲಿದ್ದ ಚಿನ್ನ ಕೊನೆಗೂ ಸಂಕ್ರಾಂತಿಯ ನಂತರ ಅಲ್ಪ ಮಟ್ಟಿಗೆ ಕುಸಿದಿದೆ. ಆದರೆ ಬೆಳ್ಳಿಯ ನಾಗಾಲೋಟ ಮುಂದುವರಿದಿದೆ. ಗುರುವಾರ ಒಂದು ಗ್ರಾಂ ಶುದ್ಧ ಚಿನ್ನದ ಬೆಲೆ 14,254 ರೂ. ನಿಂದ 14,318 ರೂ. ಗೆ ಇಳಿದಿದೆ. ಒಂದು ಗ್ರಾಂ ಆಭರಣ ಚಿನ್ನದ ಬೆಲೆ 13,165 ರೂ. ನಿಂದ 13,125 ರೂ.ಗೆ ಇಳಿದಿದೆ. ಆದರೆ ಬೆಳ್ಳಿಯ ಬೆಲೆ ಒಂದು ಗ್ರಾಂಗೆ 3 ರೂ.ನಿಂದ 5 ರೂ. ವರೆಗೆ ಏರಿಕೆ ಕಂಡಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಒಂದು ಗ್ರಾಂಗೆ 292 ರೂ .ನಿಂದ 295 ರೂ. ಗೆ ಅಲ್ಪಮಟ್ಟಿಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 310 ರೂ. ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯದ ಏರಿಳಿತ ಮತ್ತು ಹೂಡಿಕೆದಾರರ ನಡೆ ಚಿನ್ನದ ದರದ ಮೇಲೆ ಪರಿಣಾಮ ಬೀರಿದೆ. ಮಂಗಳೂರಿನಲ್ಲಿ ಇಂದಿನ ಚಿನ್ನದ ದರವೆಷ್ಟು? ಗುರುವಾರ ಜನವರಿ 15ರಂದು ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಅಲ್ಪ ಮಟ್ಟಿಗೆ ಕುಸಿತ ಕಂಡಿದೆ. ಬೆಳಗಿನ ವಹಿವಾಟಿನಲ್ಲಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 14,318 (-82) ರೂ. ಗೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 13,125 (-75) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 10,739 (-61) ರೂ. ಬೆಲೆಗೆ ತಲುಪಿದೆ. ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ? ಗುರುವಾರ ಬೆಳಗ್ಗಿನ ಚಿನ್ನದ ವಹಿವಾಟಿನ ಪ್ರಕಾರ ಬೆಂಗಳೂರಿನಲ್ಲಿ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 1,44,010 ರೂ. ಕುಸಿದಿದೆ. 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 1,32,010 ರೂ. ಗೆ ಇಳಿದಿದೆ. ಬೆಳ್ಳಿಯ ಬೆಲೆ 1 ಕೆಜಿಗೆ 2,57,900 ರೂ.ಗೆ ಏರಿದೆ. ಕರ್ನಾಟಕದಲ್ಲಿ ಒಂದು ಗ್ರಾಂ ಚಿನ್ನದ ದರ ಬೆಳಗಿನ ವಹಿವಾಟಿನಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ದರ 14,401 ರೂ. ಇದ್ದರೆ, 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ 13,201 ರೂ. ಹಾಗೂ 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ 10,801 ರೂ. ಆಗಿದೆ. ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ 1 ಗ್ರಾಂನ ಬೆಲೆ ಚೆನ್ನೈ 13,2 ರೂ. ಹೈದರಾಬಾದ್ 13,201 ರೂ. ಕೇರಳ 13,201 ರೂ. ಪುಣೆ 13,201 ರೂ. ವಡೋದರ 13,206 ರೂ. ಅಹಮದಾಬಾದ್ 13,206 ರೂ. ದಿಲ್ಲಿ 13,140 ರೂ ಕೋಲ್ಕತಾ 13,125 ರೂ ಜೈಪುರ್ 13,140 ರೂ ಲಕ್ನೋ 13,140 ರೂ ಭುವನೇಶ್ವರ್ 13,125 ರೂ
ಮಹೀಂದ್ರಾ ಎಸ್ಯುವಿಗಳಿಗೆ ಮುಗಿಬಿದ್ದ ಜನ, ಕೇವಲ 4 ಗಂಟೆಯಲ್ಲಿ ₹20,500 ಕೋಟಿ ಮೌಲ್ಯದ ಬುಕ್ಕಿಂಗ್!
ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ತನ್ನ ನೂತನ ಎಸ್ಯುವಿಗಳಾದ ಎಕ್ಸ್ಯುವಿ 7ಎಕ್ಸ್ಒ ಮತ್ತು ಎಲೆಕ್ಟ್ರಿಕ್ ಮಾದರಿಯ ಎಕ್ಸ್ಇವಿ 9ಎಸ್ ಗಾಗಿ ಬುಕ್ಕಿಂಗ್ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ದಾಖಲೆ ಬರೆದಿದೆ. ಜನವರಿ 14 ರಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಒಟ್ಟು 93,689 ಕಾರುಗಳು ಬುಕ್ ಆಗಿದ್ದು, ಇದರ ಮೌಲ್ಯ 20,500 ಕೋಟಿ ರೂಪಾಯಿ ದಾಟಿದೆ. ಎಕ್ಸ್ಯುವಿ 7ಎಕ್ಸ್ಒ ವಿತರಣೆ ಈಗಾಗಲೇ ಆರಂಭವಾಗಿದ್ದರೆ, ಎಕ್ಸ್ಇವಿ 9ಎಸ್ ವಿತರಣೆ ಜನವರಿ 26ರಂದು ಪ್ರಾರಂಭವಾಗಲಿದೆ.
ಕುಂಬಳೆ ಟೋಲ್ ಗೇಟ್ ಪ್ರಕರಣ: 500 ಮಂದಿಯ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು
ಕಾಸರಗೋಡು:ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಗೇಟ್ನಲ್ಲಿ ಬುಧವಾರ ರಾತ್ರಿ ನಡೆದ ಘಟನೆಯ ಸಂಬಂಧ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಸೇರಿದಂತೆ ಸುಮಾರು 500 ಮಂದಿ ವಿರುದ್ಧ ಕುಂಬಳೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಟೋಲ್ ವಿರುದ್ಧ ಸತ್ಯಾಗ್ರಹ ನಡೆಸುತ್ತಿದ್ದ ಕ್ರಿಯಾ ಸಮಿತಿ ಸದಸ್ಯರು ಹಾಗೂ ಕಂಡರೆ ಗುರುತಿಸಬಹುದಾದ ಸುಮಾರು 500 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದೇ ವೇಳೆ ಕುಂಬಳೆಯಲ್ಲಿ ಕಣಿಪುರ ಜಾತ್ರೋತ್ಸವ ನಡೆಯುತ್ತಿದ್ದು, ಭಾರೀ ಸಂಖ್ಯೆಯಲ್ಲಿ ಜನಸಾಗರ ಸೇರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಟೋಲ್ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಾಸಕರಿಗೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂಘರ್ಷದ ಸಾಧ್ಯತೆಯನ್ನು ಮನಗಂಡು ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಹಿಂತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಬುಧವಾರ ರಾತ್ರಿ ಕುಂಬಳೆ ಪೇಟೆಯಿಂದ ಆರಂಭವಾದ ಎಡಪಂಥೀಯ ಸಂಘಟನೆಗಳ ಪ್ರತಿಭಟನೆ ಬೆಂಬಲ ಮೆರವಣಿಗೆ ಟೋಲ್ ಪ್ಲಾಝಾ ತಲುಪಿದ ನಂತರ ಟೋಲ್ ಬೂತ್ ಮೇಲೆ ಆಕ್ರಮಣ ನಡೆದಿದೆ. ಈ ವೇಳೆ ಟೋಲ್ ಬೂತ್ ಕಚೇರಿಯ ಕಿಟಕಿಗಳು, ಕ್ಯಾಮೆರಾ ಸೇರಿದಂತೆ ಹಲವು ಉಪಕರಣಗಳನ್ನು ಒಡೆದುಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆ; ಕೊನೆಗೂ ಸ್ಮಾರ್ಟ್ ಆಗದ ಸಿಟಿಗಳು?
ರಾಜ್ಯದ ಏಳು ಸ್ಮಾರ್ಟ್ ಸಿಟಿಗಳಿಗೆ ಒಟ್ಟಾರೆ ಸುಮಾರು ರೂ. 7,000 ಕೋಟಿ ವೆಚ್ಚ ನಿರ್ಧರಿಸಲಾಗಿದ್ದು, ಪ್ರತೀ ನಗರಕ್ಕೆ ಐದು ವರ್ಷಗಳಲ್ಲಿ ರೂ. 1,000 ಕೋಟಿ ಅನುದಾನ ನೀಡುವ ಗುರಿ ಇಡಲಾಗಿತ್ತು. ವರದಿಗಳ ಪ್ರಕಾರ ರಾಜ್ಯದ ಈ ಏಳು ನಗರಗಳಲ್ಲಿ ಒಟ್ಟು 889 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಸರಕಾರದ ಪ್ರಕಾರ ಇದರಲ್ಲಿ 590 ಕಾಮಗಾರಿಗಳು ಪೂರ್ಣಗೊಂಡಿವೆ ಎನ್ನಲಾಗಿದೆ. ಇದುವರೆಗೆ ರೂ. 5,068 ಕೋಟಿ ವೆಚ್ಚವಾಗಿದ್ದು, ಉಳಿದ 295 ಕಾಮಗಾರಿಗಳು ಇನ್ನೂ ಪ್ರಾರಂಭವಾಗಿಲ್ಲ ಅಥವಾ ಪ್ರಗತಿಯಲ್ಲೇ ಇವೆ. ಅಂದರೆ ಸ್ಮಾರ್ಟ್ ಸಿಟಿ ಯೋಜನೆ ಆರಂಭವಾಗಿ ಹೆಚ್ಚು ಕಡಿಮೆ ಹತ್ತು ವರ್ಷ ಕಳೆದರೂ ಒಟ್ಟಾರೆ ಪ್ರಗತಿ ಶೇ.26ರಷ್ಟೇ ಎನ್ನುವುದು ಗ್ರೌಂಡ್ ರಿಪೋರ್ಟ್ಗಳಿಂದ ಸ್ಪಷ್ಟವಾಗುತ್ತದೆ. ನಗರಗಳ ಅಭಿವೃದ್ಧಿ ಯೊಂದಿಗೆ ಜನರ ಜೀವನದ ಗುಣಮಟ್ಟವನ್ನು ಸುಧಾರಿಸುವುದು, ತಂತ್ರಜ್ಞಾನದ ಸಹಾಯದಿಂದ ನಾಗರಿಕರಿಗೆ ಉತ್ತಮ ಜೀವನಮಟ್ಟ ಒದಗಿಸುವುದು ಮತ್ತು ಆರ್ಥಿಕ ಬೆಳವಣಿಗೆಗೆ ವೇಗ ನೀಡುವುದು ಎಂಬ ಘೋಷಣೆಯೊಂದಿಗೆ ಕೇಂದ್ರ ಸರಕಾರವು 2015ರ ಜೂನ್ 25ರಂದು ‘ಸ್ಮಾರ್ಟ್ ಸಿಟಿ ಮಿಷನ್’ ಅನ್ನು ಜಾರಿಗೆ ತಂದಿತ್ತು. ದೇಶದಾದ್ಯಂತ ವೇಗವಾಗಿ ನಗರೀಕರಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೂಲಸೌಕರ್ಯಗಳ ಕೊರತೆ, ಸಂಚಾರ ಸಮಸ್ಯೆ, ಪರಿಸರ ಹಾನಿ, ಅಸಮರ್ಪಕ ಸೇವೆಗಳು ಮತ್ತು ಆಡಳಿತಾತ್ಮಕ ಅಸಮರ್ಥತೆಯನ್ನು ನಿವಾರಿಸುವ ಉದ್ದೇಶದಿಂದ 100 ನಗರಗಳನ್ನು ಸ್ಮಾರ್ಟ್ ಸಿಟಿಗಳಾಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಈ ಯೋಜನೆ ಹೊಂದಿತ್ತು. ಜನವರಿ 2016ರಿಂದ ಜೂನ್ 2018ರವರೆಗೆ ನಾಲ್ಕು ಹಂತಗಳಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯಮಟ್ಟದ ಅಂಕಗಳ ಆಧಾರದ ಮೇಲೆ ನಗರಗಳನ್ನು ಆಯ್ಕೆ ಮಾಡಿ, ನಂತರ ರಾಷ್ಟ್ರೀಯ ಮಟ್ಟದ ಸ್ಪರ್ಧೆಯ ಮೂಲಕ ಸ್ಮಾರ್ಟ್ ಸಿಟಿ ಪ್ರಸ್ತಾವಗಳನ್ನು ಮೌಲ್ಯಮಾಪನ ಮಾಡಿ ಅಂತಿಮವಾಗಿ 100 ನಗರಗಳನ್ನು ಘೋಷಿಸಲಾಗಿತ್ತು. ಈ ಪ್ರಕ್ರಿಯೆಯಲ್ಲಿ ಕರ್ನಾಟಕದಿಂದ ಬೆಂಗಳೂರು, ಮಂಗಳೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ತುಮಕೂರು, ಶಿವಮೊಗ್ಗ ಸೇರಿದಂತೆ ಏಳು ನಗರಗಳು ಸ್ಮಾರ್ಟ್ ಸಿಟಿ ಪಟ್ಟಿಗೆ ಸೇರಿವೆ. ಸ್ಮಾರ್ಟ್ ಸಿಟಿ ಮಿಷನ್, 2015ರಲ್ಲಿ ನಗರಜೀವನವನ್ನು ತಂತ್ರಜ್ಞಾನ ಸಹಾಯಿತ ಪರಿಹಾರಗಳು ಮತ್ತು ಮೂಲಭೂತ ಸೌಕರ್ಯಗಳ ಮೂಲಕ ಪರಿವರ್ತಿಸಲು ಪ್ರಾರಂಭಿಸಲಾಗಿತ್ತು. ಈಗ ಹಲವಾರು ಸಮಯಮಿತಿ ವಿಸ್ತರಣೆಗಳ ನಂತರ ಮೂಲ ಯೋಜನೆಯನ್ನು ಬಹುತೇಕ ಪೂರ್ಣಗೊಳಿಸಿದರೂ ತತ್ಕಾಲೀನವಾಗಿ ಪ್ರಗತಿಯಲ್ಲಿರುವ ಕೆಲಸವನ್ನು ಮುಗಿಸಲು ಮಾರ್ಚ್ 31, 2025ರವರೆಗೆ ವಿಸ್ತರಿಸಲಾಗಿದೆ. ದಾಖಲೆಗಳ ಪ್ರಕಾರ, ಸುಮಾರು 8,064 ಮಾನ್ಯಗೊಂಡ ಯೋಜನೆಗಳಲ್ಲಿ 100 ಸ್ಮಾರ್ಟ್ ಸಿಟಿಗಳಲ್ಲಿ ಜುಲೈ 2025ರ ತನಕ ಸುಮಾರು ರೂ. 1.53 ಲಕ್ಷ ಕೋಟಿ ಮೌಲ್ಯದ 7,636ಕ್ಕೂ ಹೆಚ್ಚು ಯೋಜನೆಗಳು ಪೂರ್ಣಗೊಂಡಿದ್ದು, ಉಳಿದ ಯೋಜನೆಗಳು ಪ್ರಗತಿಯಲ್ಲಿ ಇವೆ ಎನ್ನಲಾಗಿದೆ. ಸ್ವತಂತ್ರ ತಂತ್ರಜ್ಞರ ಪರಿಶೀಲನೆ ಪ್ರಕಾರ, ಡಿಸೆಂಬರ್ 2025 ಆರಂಭದ ವೇಳೆಗೆ ರೂ. 1.55 ಲಕ್ಷ ಕೋಟಿ ಮೌಲ್ಯದ 7,741 ಯೋಜನೆಗಳು ಪೂರ್ಣಗೊಂಡಿದ್ದು, 323 ಯೋಜನೆಗಳು ಇನ್ನೂ ಪ್ರಗತಿಯಲ್ಲಿ ಇವೆ ಎನ್ನುವ ಮಾಹಿತಿ ಇದೆ. ವರದಿಗಳ ಪ್ರಕಾರ ಕೇವಲ ಸುಮಾರು 18 ನಗರಗಳು ತಮ್ಮ ಎಲ್ಲಾ ಸ್ಮಾರ್ಟ್ ಸಿಟಿ ಯೋಜನೆಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿವೆ ಎನ್ನಲಾಗಿದೆ. ಅಂದರೆ ಬಹುತೇಕ ನಗರಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಯೋಜನಾ ಚಟುವಟಿಕೆಗಳು ಬಾಕಿ ಇವೆ ಅನ್ನುವುದಂತೂ ಸತ್ಯ. ಸ್ಮಾರ್ಟ್ ಸಿಟಿ ಮಿಷನ್ನ ಮೂಲ ಉದ್ದೇಶವೆಂದರೆ ನಗರಗಳಲ್ಲಿ ಸ್ಥಿರ ವಿದ್ಯುತ್ ಸರಬರಾಜು, ಸಮರ್ಪಕ ಕುಡಿಯುವ ನೀರು, ಪರಿಣಾಮಕಾರಿ ಒಳಚರಂಡಿ ವ್ಯವಸ್ಥೆ, ಉತ್ತಮ ಆರೋಗ್ಯ ಮತ್ತು ಶಿಕ್ಷಣ ಸೇವೆಗಳು, ಸುರಕ್ಷಿತ ಹಾಗೂ ಸುಗಮ ಸಾರ್ವಜನಿಕ ಸಾರಿಗೆ, ಘನತ್ಯಾಜ್ಯ ನಿರ್ವಹಣೆ, ಬಡವರಿಗೆ ಕೈಗೆಟುಕುವ ವಸತಿ, ಡಿಜಿಟಲ್ ಸಂಪರ್ಕ, ಇ-ಆಡಳಿತ, ನಾಗರಿಕರ ಪಾಲ್ಗೊಳ್ಳುವಿಕೆ, ಪರಿಸರ ಸಂರಕ್ಷಣೆ ಮತ್ತು ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ವಿಶೇಷ ಭದ್ರತೆ ಒದಗಿಸುವುದಾಗಿದೆ. ಸ್ಮಾರ್ಟ್ ಸಿಟಿ ಮಿಷನ್ನ ಅಧಿಕೃತ ವೆಬ್ಸೈಟ್ ಪ್ರಕಾರ ದೇಶಾದ್ಯಂತ ಒಟ್ಟು 5,929 ಯೋಜನೆಗಳಿಗೆ ರೂ. 1,78,492 ಕೋಟಿ ಮೌಲ್ಯದ ಟೆಂಡರ್ ನೀಡಲಾಗಿದ್ದು, ರೂ. 1,46,466 ಕೋಟಿ ಮೌಲ್ಯದ 5,245 ಯೋಜನೆಗಳಿಗೆ ವರ್ಕ್ ಆರ್ಡರ್ ನೀಡಲಾಗಿದೆ ಎನ್ನಲಾಗಿದೆ. ಇದರಲ್ಲಿ ರೂ. 45,264 ಕೋಟಿ ವೆಚ್ಚದ 2,673 ಯೋಜನೆಗಳು ಪೂರ್ಣಗೊಂಡಿವೆ ಎಂದು ದಾಖಲೆಗಳು ಹೇಳುತ್ತವೆ. 2017ರಿಂದ 2023ರ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮಾನ ಪಾಲಿನಲ್ಲಿ ಅನುದಾನ ನೀಡುವ ವ್ಯವಸ್ಥೆ ಮಾಡಿಕೊಂಡಿದ್ದು, ಅಂಕಿ-ಅಂಶಗಳ ಮಟ್ಟದಲ್ಲಿ ಯೋಜನೆ ಮಹತ್ವದ ಸಾಧನೆ ಮಾಡಿದಂತೆ ಕಾಣುತ್ತದೆ. ವಾಸ್ತವದಲ್ಲಿ ಪರಿಸ್ಥಿತಿ ಆಗಿಲ್ಲ. ಕರ್ನಾಟಕದ ನೆಲಮಟ್ಟದ ವಾಸ್ತವ ಸ್ಥಿತಿ ಈ ಅಂಕಿ-ಅಂಶಗಳಿಗೆ ಸಂಪೂರ್ಣ ಭಿನ್ನವಾದ ಚಿತ್ರವನ್ನು ನೀಡುತ್ತದೆ. ರಾಜ್ಯದ ಏಳು ಸ್ಮಾರ್ಟ್ ಸಿಟಿಗಳಿಗೆ ಒಟ್ಟಾರೆ ಸುಮಾರು ರೂ. 7,000 ಕೋಟಿ ವೆಚ್ಚ ನಿರ್ಧರಿಸಲಾಗಿದ್ದು, ಪ್ರತೀ ನಗರಕ್ಕೆ ಐದು ವರ್ಷಗಳಲ್ಲಿ ರೂ. 1,000 ಕೋಟಿ ಅನುದಾನ ನೀಡುವ ಗುರಿ ಇಡಲಾಗಿತ್ತು. ವರದಿಗಳ ಪ್ರಕಾರ ರಾಜ್ಯದ ಈ ಏಳು ನಗರಗಳಲ್ಲಿ ಒಟ್ಟು 889 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಸರಕಾರದ ಪ್ರಕಾರ ಇದರಲ್ಲಿ 590 ಕಾಮಗಾರಿಗಳು ಪೂರ್ಣಗೊಂಡಿವೆ ಎನ್ನಲಾಗಿದೆ. ಇದುವರೆಗೆ ರೂ. 5,068 ಕೋಟಿ ವೆಚ್ಚವಾಗಿದ್ದು, ಉಳಿದ 295 ಕಾಮಗಾರಿಗಳು ಇನ್ನೂ ಪ್ರಾರಂಭವಾಗಿಲ್ಲ ಅಥವಾ ಪ್ರಗತಿಯಲ್ಲೇ ಇವೆ. ಅಂದರೆ ಸ್ಮಾರ್ಟ್ ಸಿಟಿ ಯೋಜನೆ ಆರಂಭವಾಗಿ ಹೆಚ್ಚು ಕಡಿಮೆ ಹತ್ತು ವರ್ಷ ಕಳೆದರೂ ಒಟ್ಟಾರೆ ಪ್ರಗತಿ ಶೇ.26ರಷ್ಟೇ ಎನ್ನುವುದು ಗ್ರೌಂಡ್ ರಿಪೋರ್ಟ್ಗಳಿಂದ ಸ್ಪಷ್ಟವಾಗುತ್ತದೆ. ಐದು ವರ್ಷದ ಕಾಲಮಿತಿಯ ಯೋಜನೆ ಈಗ ಹತ್ತನೇ ವರ್ಷಕ್ಕೂ ಕಾಲಿಟ್ಟರೂ ಕರ್ನಾಟಕದಲ್ಲಿ ಅರ್ಧದಷ್ಟು ಕಾಮಗಾರಿಗಳು ಪೂರ್ಣಗೊಳ್ಳದಿರುವುದು ಯೋಜನೆಯ ಅನುಷ್ಠಾನದ ಮೇಲಿನ ಗಂಭೀರ ಪ್ರಶ್ನೆಗಳನ್ನು ಎಬ್ಬಿಸುತ್ತಿದೆ ಎನ್ನಬಹುದು. ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪ್ರಮುಖ ಸ್ಥಾನ ಪಡೆದಿದ್ದರೂ, ಇಲ್ಲಿನ ಕಾಮಗಾರಿಗಳ ವೇಗ ಮತ್ತು ಗುಣಮಟ್ಟದ ಬಗ್ಗೆ ವ್ಯಾಪಕ ಅಸಮಾಧಾನವಿದೆ. ಲಭ್ಯವಿರುವ ದಾಖಲೆಗಳನ್ನು ಆಧರಿಸಿ ಹೇಳುವುದಾದರೆ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು ರೂ. 3,000 ಕೋಟಿ ಮೌಲ್ಯದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ತಾಂತ್ರಿಕ ತೊಡಕುಗಳಿಂದ ವಿಳಂಬವಾಗಿದ್ದ ಯೋಜನೆಗೆ ಈಗ ವೇಗ ಸಿಕ್ಕಿದೆ. ರೂ. 1,499 ಕೋಟಿ ಮೌಲ್ಯದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ರೂ. 1,407 ಕೋಟಿ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದು ಕಾರ್ಯಾದೇಶ ನೀಡಲಾಗಿದೆ ಎಂದು ಅಂದಿನ ಸರಕಾರ ಹೇಳಿತ್ತು. ಆದರೂ ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಇದುವರೆಗೆ 100 ಕೋಟಿ ರೂ. ಮೌಲ್ಯದ ಕಾಮಗಾರಿಯನ್ನೂ ಸರಿಯಾಗಿ ಸಂಪೂರ್ಣಗೊಳಿಸಿಲ್ಲ ಎನ್ನುವ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಅನೇಕ ಯೋಜನೆಗಳು ಡಿಪಿಆರ್ ಮತ್ತು ಟೆಂಡರ್ ಹಂತದಲ್ಲೇ ಅಂಟಿಕೊಂಡಿದ್ದು, ವಿಳಂಬದಿಂದ ಯೋಜನಾ ವೆಚ್ಚ ಹೆಚ್ಚಾಗುತ್ತಿದೆ ಎಂಬುದು ಮತ್ತೊಂದು ಸಮಸ್ಯೆಯಾಗಿದೆ. ಇತರ ನಗರಗಳಲ್ಲಿಯೂ ಸ್ಥಿತಿ ಬಹುತೇಕ ಒಂದೇ ರೀತಿಯಾಗಿದೆ. ತುಮಕೂರಿನಲ್ಲಿ 35 ವಾರ್ಡ್ಗಳ ಪೈಕಿ ಕೇವಲ ಹತ್ತು ವಾರ್ಡ್ ಗಳಲ್ಲಿ ಮಾತ್ರ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿದ್ದು, ಹಲವೆಡೆ ಕಳಪೆ ಕಾಮಗಾರಿಯ ಆರೋಪಗಳಿವೆ. ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿದ ರಸ್ತೆಗಳು ಶಿಥಿಲಾವಸ್ಥೆಗೆ ತಲುಪಿದ್ದು, ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಏಳು ಬಾರಿ ಪ್ರತಿಭಟನೆಗಳು ನಡೆದಿವೆ. ಹುಬ್ಬಳ್ಳಿ-ಧಾರವಾಡದಲ್ಲಿ ರಸ್ತೆ, ಕೆರೆ ಮತ್ತು ಉದ್ಯಾನವನಗಳ ಕಾಮಗಾರಿಗಳ ಗುಣಮಟ್ಟದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ ಎನ್ನುವ ಮಾಹಿತಿ ಇದೆ. ದಾವಣಗೆರೆಯಲ್ಲಿ ಮಹಾನಗರ ಪಾಲಿಕೆ ಮಾಹಿತಿಯಂತೆ 204 ಕಿಲೋಮೀಟರ್ ಮಣ್ಣಿನ ರಸ್ತೆಗಳಿದ್ದು, ಈಗಾಗಲೇ ನಿರ್ಮಿಸಲಾದ ರಸ್ತೆಗಳೂ ಕಳಪೆ ಎನ್ನುವ ಆರೋಪಗಳಿಗೆ ಗುರಿಯಾಗಿವೆ. ಮಂಗಳೂರಿನಲ್ಲಿ ಕೆಲ ವೃತ್ತಗಳು, ರಥಬೀದಿ ಹಾಗೂ ಕ್ಲಾಕ್ ಟವರ್ ಅಭಿವೃದ್ಧಿ ಹೊರತುಪಡಿಸಿ ರಸ್ತೆ, ಉದ್ಯಾನವನ, ಒಳಚರಂಡಿ ಸೇರಿದಂತೆ ಬಹುತೇಕ ಮೂಲಸೌಕರ್ಯ ಕಾಮಗಾರಿಗಳು ಇನ್ನೂ ಬಾಕಿ ಉಳಿದಿವೆ ಎನ್ನಲಾಗಿದೆ. ಬೆಳಗಾವಿಯಲ್ಲಿ ಡಿಜಿಟಲ್ ಲೈಬ್ರರಿ, ಸ್ಮಾರ್ಟ್ ಕ್ಲಾಸ್ಗಳು ಸೇರಿದಂತೆ ಕೆಲ ಯೋಜನೆಗಳು ಜಾರಿಯಾಗಿದ್ದರೂ, ಜನರಿಗೆ ಸ್ಮಾರ್ಟ್ ಸಿಟಿ ಯೋಜನೆಗಳ ಬಗ್ಗೆ ಸ್ಪಷ್ಟತೆ ಇಲ್ಲ ಎನ್ನುವುದು ಸಾರ್ವಜನಿಕ ಅಭಿಪ್ರಾಯವಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯ ಹೆಸರಿನಲ್ಲಿ ರಸ್ತೆ, ಒಳಚರಂಡಿ, ಕೆರೆ, ಉದ್ಯಾನವನ, ಪುರಾತನ ಸ್ಥಳಗಳ ಅಭಿವೃದ್ಧಿಗೆ ಭಾರೀ ಅನುದಾನ ಮೀಸಲಿಡಲಾಗಿದ್ದರೂ, ಬಹುತೇಕ ನಗರಗಳಲ್ಲಿ ಈ ಯೋಜನೆ ಕಾಂಕ್ರಿಟೀಕರಣಕ್ಕೆ ಮಾತ್ರ ಸೀಮಿತವಾಗಿದೆ ಎಂಬ ಟೀಕೆ ವ್ಯಾಪಕವಾಗಿದೆ. ಹಸಿರೀಕರಣ, ವಾಹನ ಪಾರ್ಕಿಂಗ್, ಸಂಚಾರ ವ್ಯವಸ್ಥೆ ಸುಧಾರಣೆ, ಕುಡಿಯುವ ನೀರು, ಡಿಜಿಟಲ್ ಸೇವೆಗಳು ಮತ್ತು ಪರಿಸರ ಸ್ನೇಹಿ ಕಾಮಗಾರಿಗಳು ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿವೆ. ಸಣ್ಣ ಮಳೆಯಲ್ಲೇ ರಸ್ತೆಗಳು ಮತ್ತು ಫುಟ್ಪಾತ್ಗಳು ಹಾಳಾಗುತ್ತಿರುವುದು ‘ಸ್ಮಾರ್ಟ್’ ಅಭಿವೃದ್ಧಿಯ ಗುಣಮಟ್ಟವನ್ನು ಪ್ರಶ್ನಿಸುವಂತಾಗಿದೆ. ಹುಬ್ಬಳ್ಳಿಯಲ್ಲಿ ಮಹಾತ್ಮಾಗಾಂಧಿ ಉದ್ಯಾನವನದಲ್ಲಿ ರೂ. 4.50 ಕೋಟಿ ವೆಚ್ಚದಲ್ಲಿ ಪುನಾರಂಭಿಸಿದ ಪುಟಾಣಿ ರೈಲು ವ್ಯವಸ್ಥೆ ಉದ್ಘಾಟನೆ ದಿನವೇ ಬಣ್ಣ ಕಳಚಿದ ಘಟನೆಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. 100 ಅಡಿ ರಸ್ತೆಯ ಡಾಂಬರು ಕೇವಲ ಒಂದು ವರ್ಷದಲ್ಲೇ ಕಿತ್ತುಬಂದಿರುವ ಉದಾಹರಣೆಗಳು ‘ಸ್ಮಾರ್ಟ್ ಭ್ರಷ್ಟಾಚಾರ’ ಎಂಬ ಪದವನ್ನು ಜನಸಾಮಾನ್ಯರ ನಡುವೆ ಹರಡಿವೆ ಎನ್ನಬಹುದು. ಸಾರ್ವಜನಿಕರ ಅಭಿಪ್ರಾಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಹೆಸರಿನಲ್ಲಿ ಪ್ರತ್ಯೇಕ ಕಟ್ಟಡಗಳು, ಸಿಬ್ಬಂದಿ ನಿಯೋಜನೆ ಮತ್ತು ರಿಯಲ್ ಎಸ್ಟೇಟ್ ಬೆಳವಣಿಗೆಗೆ ದಾರಿ ಮಾಡಿಕೊಡಲಾಗಿದೆ. ಸಹಜವಾಗಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೊಸ ಹೆಸರಿಟ್ಟು ಹೆಚ್ಚಿನ ಹಣ ವ್ಯಯಿಸಲಾಗುತ್ತಿದೆ ಎಂಬ ಆರೋಪವೂ ಸಾರ್ವಜನಿಕರಿಂದ ಅಲ್ಲಲ್ಲಿ ಕೇಳಿಬರುತ್ತಿದೆ. ಕಾಮಗಾರಿಗಳಿಂದ ನಿತ್ಯ ಸಂಚಾರಕ್ಕೆ ಉಂಟಾಗುತ್ತಿರುವ ತೊಂದರೆ, ಅವೈಜ್ಞಾನಿಕ ಯೋಜನೆಗಳು ಮತ್ತು ಅತಿಯಾದ ವಿಳಂಬದಿಂದ ಜನಸಾಮಾನ್ಯರಲ್ಲಿ ಅಸಮಾಧಾನ ಹೆಚ್ಚಾಗಿದೆ. ಈ ಎಲ್ಲ ಟೀಕೆಗಳ ನಡುವೆಯೇ ಸರಕಾರವು ರಾಜ್ಯದ 275 ನಗರ ಸ್ಥಳೀಯ ಸಂಸ್ಥೆಗಳಿಗೆ ಅನ್ವಯವಾಗುವಂತೆ ಏಕರೂಪದ ಕಟ್ಟಡ ಬೈಲಾ ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದು, ಪರಿಸರ ಸ್ನೇಹಿ ನಿರ್ಮಾಣ, ಅಗ್ನಿ ಸುರಕ್ಷತೆ, ಎತ್ತರದ ಕಟ್ಟಡಗಳಿಗೆ ಮಾನದಂಡ, ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಸೇರಿದಂತೆ ಹಲವು ಅಂಶಗಳನ್ನು ಹೊಸ ಬೈಲಾದಲ್ಲಿ ಸೇರಿಸಲಾಗಿದೆ ಎನ್ನುವ ಹೇಳಿಕೆ ನೀಡಿತ್ತು. ಸ್ಮಾರ್ಟ್ ಸಿಟಿ ಯೋಜನೆಯ ಬಾಕಿ ಕಾಮಗಾರಿಗಳನ್ನು ಕರ್ನಾಟಕದಲ್ಲಿ 2023ರ ಜೂನ್ ಒಳಗೆ ಪೂರ್ಣಗೊಳಿಸುವ ಗುರಿ ಇಡಲಾಗಿದೆ ಎಂದು ಸರಕಾರ ಹೇಳಿತ್ತು. ಆದರೆ ಅದು ಜಾರಿಗೆ ಬಂದಿಲ್ಲ. ಒಟ್ಟಾರೆ ಸ್ಮಾರ್ಟ್ ಸಿಟಿ ಮಿಷನ್ ಒಂದು ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಯೋಜನೆಯಾಗಿದ್ದರೂ, ಕರ್ನಾಟಕದಲ್ಲಿ ಅದರ ಅನುಷ್ಠಾನವು ಘೋಷಣೆ ಮತ್ತು ವಾಸ್ತವದ ನಡುವಿನ ಅಂತರವನ್ನು ಸ್ಪಷ್ಟವಾಗಿ ತೋರಿಸುತ್ತಿದೆ. ಅಂಕಿ-ಅಂಶಗಳಲ್ಲಿ ಸ್ಮಾರ್ಟ್ ಆಗಿರುವ ನಗರಗಳು ನಾಗರಿಕರ ದಿನನಿತ್ಯದ ಬದುಕಿನಲ್ಲಿ ಎಷ್ಟು ಸುಧಾರಣೆ ತಂದಿವೆ ಎಂಬ ಪ್ರಶ್ನೆಗೆ ಇನ್ನೂ ತೃಪ್ತಿಕರ ಉತ್ತರ ಸಿಕ್ಕಿಲ್ಲ. ‘ಸ್ಮಾರ್ಟ್’ ಎಂಬ ಪದ ಕೇವಲ ಕಾಗದದ ಮೇಲೆ ಉಳಿಯದೆ, ಜನರ ಅನುಭವದಲ್ಲಿ ಕಾಣಿಸಿಕೊಳ್ಳಬೇಕೆಂದರೆ ಯೋಜನೆಯ ದಿಕ್ಕು, ಕಾರ್ಯವೈಖರಿ, ಗುಣಮಟ್ಟ ಮತ್ತು ಪಾರದರ್ಶಕತೆಯನ್ನು ಸರಕಾರ ಗಂಭೀರವಾಗಿ ಮರುಪರಿಶೀಲಿಸಬೇಕಾದ ಅಗತ್ಯ ಈಗ ಅನಿವಾರ್ಯವಾಗಿದೆ.
BELTHANGADY | ಕೆರೆಯಲ್ಲಿ ಬಾಲಕನ ಮೃತದೇಹ ಪತ್ತೆ ಪ್ರಕರಣ: ಸುಮಂತ್ ತಲೆಗೆ 3 ಪೆಟ್ಟು ಬಿದ್ದಿರುವುದು ಪತ್ತೆ ?
ವಿವಿಧ ಆಯಾಮಗಳಲ್ಲಿ ಪೊಲೀಸ್ ತನಿಖೆ ಚುರುಕು
ಹೈದರಾಬಾದ್ ರಣಜಿ ತಂಡದ ನಾಯಕನಾಗಿ ಮುಹಮ್ಮದ್ ಸಿರಾಜ್ ನೇಮಕ
ಹೈದರಾಬಾದ್: ರಣಜಿ ಟ್ರೋಫಿಯ ಉಳಿದ ಪಂದ್ಯಗಳಿಗೆ ಭಾರತ ತಂಡದ ವೇಗಿ ಮುಹಮ್ಮದ್ ಸಿರಾಜ್ ಅವರನ್ನು ಹೈದರಾಬಾದ್ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಹೈದರಾಬಾದ್ ತಂಡದ ಅಗ್ರಕ್ರಮಾಂಕದ ಬ್ಯಾಟರ್ ಜಿ. ರಾಹುಲ್ ಸಿಂಗ್ ಅವರನ್ನು ಉಪ ನಾಯಕನನ್ನಾಗಿ ನೇಮಿಸಲಾಗಿದೆ. ಜನವರಿ 22 ಹಾಗೂ ಜನವರಿ 29ರಂದು ಕ್ರಮವಾಗಿ ಮುಂಬೈ ಹಾಗೂ ಛತ್ತೀಸ್ ಗಢ ತಂಡಗಳೆದುರು ನಡೆಯಲಿರುವ ಎರಡು ಪಂದ್ಯಗಳಲ್ಲಿ ಹೈದರಾಬಾದ್ ತಂಡ ಎದುರಾಗಲಿದೆ. ಮುಹಮ್ಮದ್ ಸಿರಾಜ್ ಸದ್ಯ ನ್ಯೂಝಿಲೆಂಡ್ ತಂಡದೆದುರು ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಆಡುತ್ತಿದ್ದಾರೆ. ವಡೋದರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಎರಡು ವಿಕೆಟ್ ಗಳನ್ನು ಪಡೆದಿದ್ದ ಮುಹಮ್ಮದ್ ಸಿರಾಜ್, ರಾಜ್ ಕೋಟ್ ನಲ್ಲಿ ನಡೆದ ಪಂದ್ಯದಲ್ಲಿ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ರಣಜಿ ಟ್ರೋಫಿಯ ಡಿ ಗುಂಪಿನಲ್ಲಿ 13 ಅಂಕಗಳೊಂದಿಗೆ ಹೈದರಾಬಾದ್ ತಂಡ ನಾಲ್ಕನೆಯ ಸ್ಥಾನದಲ್ಲಿದೆ.
Gold Rate Jan 15: ಸಂಕ್ರಾಂತಿ ಸಂಭ್ರಮ - ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ
ಸಂಕ್ರಾಂತಿಯ ಸಂಭ್ರಮದ ಬೆನ್ನಲ್ಲೇ ಚಿನ್ನ ಪ್ರಿಯರಿಗೆ ಭರ್ಜರಿ ಗುಡ್ನ್ಯೂಸ್ ಸಿಕ್ಕಿದೆ. ಚಿನ್ನದ 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಮಾತ್ರ ಭಾರೀ ಹೆಚ್ಚಳವಾಗಿದೆ. ಚಿನ್ನದ ಬೆಲೆಯು ಕಳೆದ ಒಂದು ವಾರದಿಂದಲೂ ನಿರಂತರವಾಗಿ ಹೆಚ್ಚಳವಾಗುತ್ತಿತ್ತು. ಆದರೆ ಇದೀಗ ಸಂಕ್ರಾಂತಿ ಸಂಭ್ರಮದ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯು
ಪ್ರತಿಭಟನೆ ಮುಂದುವರಿದ ಹಿನ್ನೆಲೆ ವಾಯುಪ್ರದೇಶವನ್ನು ಮುಚ್ಚಿದ ಇರಾನ್
“ಪ್ರಯಾಣ ವಿಳಂಬಕ್ಕೆ ಕಾರಣವಾಗಬಹುದು”: ಪ್ರಯಾಣಿಕರಿಗೆ ಏರ್ ಇಂಡಿಯಾ, ಇಂಡಿಗೋ ಸಲಹೆ
ಅಕ್ರಮವಾಸಿಗಳೆಂದು ಅನುಮಾನಿಸಿ ದಾಳಿ ನಡೆಸಿದರೆ ಕಾನೂನು: ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ
'ಅಕ್ರಮವಾಗಿ ವಾಸಿಸುವರ ವಿರುದ್ಧವೂ ಕಾನೂನು ಕ್ರಮ'
ಫೆಬ್ರವರಿ ಮೊದಲ ವಾರದಲ್ಲಿ ಅಧಿಕಾರಾವಧಿ ಅಂತ್ಯ
ಕೊಡಗಿನ 101 ಗ್ರಾಪಂಗಳಿಗೆ ನಡೆಯಬೇಕಿದೆ ಚುನಾವಣೆ
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ರೂಪಿಸಿದೆ. ಶಿಕ್ಷಣ, ವಸತಿ, ಕೃಷಿ ಹಾಗೂ ಸ್ವಯಂ ಉದ್ಯಮಗಳಿಗೆ ಉತ್ತೇಜನ ನೀಡುವ ಈ ಯೋಜನೆಗಳು, ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಬಜೆಟ್ ಹಂಚಿಕೆಯನ್ನು ಕಡ್ಡಾಯಗೊಳಿಸಿವೆ. 2025ರ ಒಳ ಮೀಸಲಾತಿ ಮಸೂದೆ ಜಾರಿಗೆ ಬರಲಿದ್ದು, ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು.
ರಷ್ಯಾ-ಉಕರೇನ್ ನಡುವಿನ 4ವರ್ಷಗಳ ಸುಧೀರ್ಘ ಯುದ್ದವನ್ನು ಕೊನೆಗೊಳಿಸಲು ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಉಕ್ರೇನ್ ಶಾಂತಿ ಒಪ್ಪಂದ ಮಾತುಕತೆಗಳು ಇನ್ನೂ ಯಾವುದೇ ನಿರ್ಣಾಯಕ ಘಟ್ಟ ತಲುಪದೆ ಸ್ಥಗಿತಗೊಂಡಿದ್ದು, ಈ ಬೆನ್ನಲ್ಲೆ, ಅಮೆರಿಕಾ ಅಧ್ಯಕ್ಷ ಟ್ರಂಪ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್ ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸಲು ಅಧ್ಯಕ್ಷ ಪುಟಿನ್ ಸಿದ್ಧರಿದ್ದಾರೆ. ಆದರೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಶಾಂತಿ ಒಪ್ಪಂದಕ್ಕೆ ಹಿಂಜರಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೆ, ಝೆಲೆನ್ಸ್ಕಿ ನಿರ್ಧಾರಕ್ಕೆ ಬರಲು ಕಷ್ಟಪಡುತ್ತಿರಬಹುದು ಎಂದು ಟ್ರಂಪ್ ತಿಳಿಸಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಇಂಧನ ವಲಯಕ್ಕೆ ಈ ಬಾರಿ ಬಂಪರ್ ಅನುದಾನದ ನಿರೀಕ್ಷೆ; ಷೇರುಗಳ ಮೇಲೆ ಹೂಡಿಕೆದಾರರ ಕಣ್ಣು!
ಮುಂಬರುವ ಕೇಂದ್ರ ಬಜೆಟ್ನಲ್ಲಿ ಇಂಧನ ವಲಯವು ಕ್ರಾಂತಿಕಾರಿ ಬದಲಾವಣೆಗಳಿಗಿಂತ, ಸ್ಥಿರತೆ ಮತ್ತು ದೀರ್ಘಾವಧಿಯ ಸುಧಾರಣೆಗಳನ್ನು ನಿರೀಕ್ಷಿಸುತ್ತಿದೆ. 'ಪಿಎಂ ಸೂರ್ಯ ಘರ್' ಸೋಲಾರ್ ಯೋಜನೆ, ಹಸಿರು ಇಂಧನ ಕಾರಿಡಾರ್ ಮತ್ತು ಬ್ಯಾಟರಿ ಸಂಗ್ರಹಣಾ ವ್ಯವಸ್ಥೆಗಳಿಗೆ ಹೆಚ್ಚಿನ ಉತ್ತೇಜನ ಸಿಗುವ ಸಾಧ್ಯತೆಯಿದೆ. ಉದ್ಯಮ ವಲಯವು ತೆರಿಗೆ ಸುಧಾರಣೆ ಮತ್ತು ಜಿಎಸ್ಟಿ ಕಡಿತಕ್ಕೆ ಬೇಡಿಕೆ ಇಟ್ಟಿದೆ. ವಿದ್ಯುತ್ ವಲಯಕ್ಕೆ ಸುಮಾರು 45,000-60,000 ಕೋಟಿ ರೂ. ಅನುದಾನ ಹಂಚಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ. ಷೇರು ಮಾರುಕಟ್ಟೆಯಲ್ಲಿ ತಕ್ಷಣದ ಏರಿಕೆ ಕಂಡುಬರದಿದ್ದರೂ, ಆರ್ಇಸಿ, ಪಿಎಫ್ಸಿ ಮತ್ತು ಗ್ರೀನ್ ಎನರ್ಜಿ ಕಂಪನಿಗಳಿಗೆ ಇದು ದೀರ್ಘಾವಧಿಯಲ್ಲಿ ಲಾಭದಾಯಕವಾಗಲಿದೆ.
ರಾಜ್ಯದಲ್ಲಿ ಮಲಿನಗೊಂಡಿವೆ 12 ನದಿಗಳು: ಅರ್ಕಾವತಿ, ನೇತ್ರಾವತಿ ಜೊತೆಗೆ ಮತ್ಯಾವುದು?
ಹಸಿರು ನ್ಯಾಯಮಂಡಳಿಯ ರಾಷ್ಟ್ರೀಯ ಆದೇಶದಂತೆ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯದಲ್ಲಿ ಗುರುತಿಸಿರುವ 17 ನದಿಗಳು ಕಲುಷಿತಗೊಳ್ಳುವುದನ್ನು ತಡೆಗಟ್ಟಲು ಸೂಚಿಸಿದ್ದು, ಸರ್ಕಾರವು ಮಂಡಳಿ ವತಿಯಿಂದ ಅನುಷ್ಠಾನಗೊಳಿಸಲು 24 ನಗರ/ಪಟ್ಟಣಗಳಿಗೆ ರೂ. 535.56 ಕೋಟಿಗಳ ಅಂದಾಜು ಮೊತ್ತದಲ್ಲಿ ಒಳಚರಂಡಿ ಯೋಜನೆಯನ್ನು/ಐ
RAICHURU | ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ
ರಾಯಚೂರು: ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಗುರುವಾರ ಮುಂಜಾನೆ ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ವಾಮೀಜಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ತಿಂಥಣಿಯ ಕನಕ ಗುರು ಪೀಠದಲ್ಲೇ ಹಾಲುಮತದ ಪದ್ಧತಿಯಂತೆ ಸ್ವಾಮೀಜಿಯ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮಠದ ಮೂಲಗಳು ತಿಳಿಸಿವೆ.
ಚಿನ್ನದ ದರದಲ್ಲಿ ಇಂದು ದಿಢೀರ್ ಇಳಿಕೆಯಾಗಿದೆ. ಆದರೆ ಇದು ತಾತ್ಕಾಲಿಕ ಬೆಳವಣಿಗೆಯಾಗಿದ್ದು, ಜಾಗತಿಕವಾಗಿ ಕೆಲವು ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಹಿನ್ನೆಲೆ ಮತ್ತೆ ಹೆಚ್ಚಳ ಆಗುವ ಸಾಧ್ಯತೆ ಇದೆ. ಬೆಳ್ಳಿ ಬೆಲೆ ಮಾತ್ರ 3 ಲಕ್ಷದ ಗಡಿಗೆ ತಲುಪಿದೆ.
Maharashtra| ಬಿಎಂಸಿ ಸೇರಿ 29 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿರುಸಿನ ಮತದಾನ
ಮುಂಬೈ: ಮಹಾರಾಷ್ಟ್ರದಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಸೇರಿ ಒಟ್ಟು 29 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿರುಸಿನ ಮತದಾನ ನಡೆಯುತ್ತಿದೆ. ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ 893 ವಾರ್ಡ್ಗಳ ಒಟ್ಟು 2,869 ಸ್ಥಾನಗಳಿಗೆ ಬೆಳಿಗ್ಗೆ 7.30ರಿಂದ ಮತದಾನ ನಡೆಯುತ್ತಿದೆ. ಈ ಬಹುತೇಕ ಮಹಾನಗರ ಪಾಲಿಕೆಗಳ ಅವಧಿ 2020 ರಿಂದ 2023ರ ನಡುವೆ ಕೊನೆಗೊಂಡಿತ್ತು. 74,400 ಕೋಟಿಗಿಂತ ಹೆಚ್ಚಿನ ವಾರ್ಷಿಕ ಬಜೆಟ್ ಹೊಂದಿರುವ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ದೇಶದ ಶ್ರೀಮಂತ ಮಹಾನಗರ ಪಾಲಿಕೆಯಾಗಿದೆ. 2022ರಲ್ಲಿ ಶಿವಸೇನೆ ವಿಭಜನೆಯಾದ ನಂತರ ನಡೆಯುತ್ತಿರುವ ಮೊದಲ ಬಿಎಂಸಿ ಚುನಾವಣೆ ಇದಾಗಿದೆ. ಚುನಾವಣೆಗೆ ಮುನ್ನ ನಡೆದ ಮಹತ್ವದ ರಾಜಕೀಯ ತಿರುವುಗಳಲ್ಲಿ, ಶಿವಸೇನೆ (ಯುಬಿಟಿ) ಮತ್ತು ಎಂಎನ್ಎಸ್ ಮುಖ್ಯಸ್ಥರಾಗಿರುವ ಉದ್ಧವ್ ಮತ್ತು ರಾಜ್ ಠಾಕ್ರೆ ಎರಡು ದಶಕಗಳ ನಂತರ ಒಂದಾಗಿದ್ದಾರೆ. ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ನ 227 ಸ್ಥಾನಗಳಿಗೆ 1,700 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಚುನಾವಣೆಯ ಹಿನ್ನೆಲೆ ಮುಂಬೈನಾದ್ಯಂತ 25,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ತನ್ನದೇ ಜನರನ್ನು ಕೊಲ್ಲಲ್ಲು ಖಮೇನಿ ಭೀಕರ ಪ್ಲಾನ್; ಯಾತ್ರಿಕರ ಸೋಗಿನಲ್ಲಿ ಇರಾನ್ಗೆ ಬಂತು ಶಿಯಾ ಮಿಲಿಟರಿ ಪಡೆ
ಇರಾನ್ನಲ್ಲಿ ಪ್ರತಿಭಟನೆ ಉದ್ವಗ್ನತೆಗೆ ತಿರುಗಿದೆ. ಇಲ್ಲಿನ ಸ್ಥಳೀಯ ಭದ್ರತಾ ಪಡೆಗಳು ತನ್ನದೇ ಜನರ ಮೇಲೆ ಗುಂಡಿಕ್ಕಿ ಕೊಲ್ಲಲ್ಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆ ಅರಬ್ ಭಾಷಿಕ ಇರಾಕಿ ಶಿಯಾ ಮಿಲಿಟರಿ ಪಡೆಯನ್ನು ಯಾತ್ರಿಕರ ಸೋಗಿನಲ್ಲಿ ಕರೆಸಿಕೊಳ್ಳಲಾಗಿದ್ದು, ಜನರ ಪ್ರತಿಭಟನಾಕಾರರ ಹತ್ಯೆಗೆ ಸಂಚು ರೂಪಿಸಲಾಗಿದೆ. ಅಯತೊಲ್ಲಾ ಖಮೇನಿ ಆಡಳಿತದ ವಿರುದ್ಧ ಭುಗಿಲೆದ್ದಿರುವ ಬೃಹತ್ ಜನಪರ ಪ್ರತಿಭಟನೆಯನ್ನು ಹತ್ತಿಕ್ಕಲು ಇರಾನ್ ಸರ್ಕಾರ ಅತ್ಯಂತ ಅಪಾಯಕಾರಿ ಹಾದಿ ಹಿಡಿದಿದೆ ಎನ್ನಲಾಗುತ್ತಿದೆ.
10 ನಿಮಿಷ ಡೆಲಿವರಿ ಭೂತಕ್ಕೆ ಬ್ರೇಕ್: ಹೊಸ ಆತಂಕದಲ್ಲಿ ಗಿಗ್ ಕಾರ್ಮಿಕರು
ಹತ್ತೇ ನಿಮಿಷದಲ್ಲಿ ಡೆಲಿವರಿ ಎನ್ನುವ ಭೂತಕ್ಕೆ ಬ್ರೇಕ್ ಬಿದ್ದಿದ್ದು. ಸ್ವಿಗ್ಗಿ, ಜೆಪ್ಟೋ ಹಾಗೂ ಬ್ಲಿಂಕಿಟ್ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರು ಇದೀಗ ನಿರಾಳರಾಗಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಅವರಿಗೆ ಹೊಸದೊಂದು ಆತಂಕ ಶುರುವಾಗಿದೆ. ಕೇಂದ್ರ ಸರ್ಕಾರದ ಮಧ್ಯಪ್ರವೇಶದಿಂದಾಗಿ ಗಿಗ್ಕಾರ್ಮಿಕರು ತುಸು ನಿಟ್ಟುಸಿರುವ ಬಿಡುವಂತೆ ಆಗಿದೆ. ಆದರೆ ಇದೇ ಸಂದರ್ಭದಲ್ಲಿ ಅವರಿಗೆ ಉದ್ಯೋಗದಲ್ಲಿ ಮತ್ತೊಂದು
KOLARA | ಪ್ರಿಯಕರನಿಂದ ಯುವತಿಯ ಬರ್ಬರ ಹತ್ಯೆ
ಆರೋಪಿಯನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ನ್ಯಾಮತಿ: ಆಕಸ್ಮಿಕ ಬೆಂಕಿಗೆ 14 ಎಕರೆ ಅಡಕೆ ತೋಟ ಭಸ್ಮ
ನ್ಯಾಮತಿ ತಾಲೂಕಿನ ಮುಸ್ಸೇನಾಳು ಗ್ರಾಮದಲ್ಲಿ ರೈತರ ಅಡಕೆ ತೋಟಗಳಿಗೆ ಬೆಂಕಿ ಬಿದ್ದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಕೆ ಮರಗಳು, ತೇಗದ ಮರಗಳು, ಡ್ರಿಪ್ ಪೈಪ್ಗಳು ಸುಟ್ಟು ಹೋಗಿವೆ. ಧರ್ಮಿಬಾಯಿ ರಾಮನಾಯ್ಕರ, ರಾಮನಾಯ್ಕ ಪೀರಾರಯನಾಯ್ಕರ, ಹಾಲಿಬಾಯಿ ರಾಜೇಶನಾಯ್ಕರ, ಗೋಪಾಲನಾಯ್ಕ ಶೇಖರನಾಯ್ಕರ ಅವರ ತೋಟಗಳು ಹಾನಿಗೊಳಗಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ಹೆಚ್ಚಿನ ಹಾನಿ ತಪ್ಪಿದೆ.
ತಮ್ಮನ್ನು ತಾವು ಶಾಂತಿಅಧ್ಯಕ್ಷನಾಗಿ ಬಿಂಬಿಸಿಕೊಳ್ಳುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಮೊದಲ ಅಧಿಕಾರಾವಧಿಯಲ್ಲಿ ಆದೇಶಿಸಿದ ಮಿಲಿಟರಿ ದಾಳಿಗಳಷ್ಟೇ, ಕೇವಲ ಒಂದು ವರ್ಷದಲ್ಲಿ 573 ವೈಮಾನಿಕ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದ್ದಾರೆ. ಇನ್ನು, ತಮ್ಮ ಮಿತ್ರರಾಷ್ಟ್ರಗಳೊಂದಿಗೆ ಸೇರಿ ನಡೆಸಿದ ದಾಳಿಗಳು 600ಕ್ಕೂ ಅಧಿಕವಾಗಿದ್ದು, 1ವರ್ಷದ ದತ್ತಾಂಶಕ್ಕೆ ಹೋಲಿಸಿದರೆ ಇದು ಜೋ ಬೈಡೆನ್ ಅವರ 4 ವರ್ಷದ ಅವಧಿಗಿಂತ ಹೆಚ್ಚಾಗಿದೆ. ಯೆಮನ್ನ ಹುತಿಗಳ ವಿರುದ್ಧ ಶೇ.80ರಷ್ಟು ದಾಳಿಗಳು ಕೇಂದ್ರೀಕೃತವಾಗಿದ್ದು, ಟ್ರಂಪ್ ತಾವು ಜಗತ್ತಿನ ಮುಂದೆ ಇಡಲು ಪ್ರಯತ್ನಿಸುವ ಚಿತ್ರಣಕ್ಕೆ ತದ್ವಿರುದ್ದವಾಗಿ ಯಾವೆಲ್ಲಾ ದೇಶಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತು ಟ್ರಂಪ್ ಹೇಳೋದೇನು ನೋಡೋಣ ಬನ್ನಿ...
ಸೆಗಣಿ, ಗೋಮೂತ್ರದ ಮಧ್ಯೆ ಭಾರತದ ಶಿಕ್ಷಣ ವ್ಯವಸ್ಥೆ
ಈ ದೇಶದಲ್ಲಿ ದಲಿತರು ದೇವಸ್ಥಾನ ಪ್ರವೇಶ ಮಾಡುತ್ತಾರೆ ಎಂಬ ಆತಂಕದಿಂದ ವರ್ಷಗಟ್ಟಲೆ ದೇವಸ್ಥಾನಗಳಿಗೇ ಬೀಗ ಹಾಕಿದ ಉದಾಹರಣೆಗಳಿವೆ. ಶಾಲೆ ಕಾಲೇಜುಗಳಲ್ಲಿ ದಲಿತರು, ದುರ್ಬಲ ವರ್ಗದ ಜನರು ಕಾಲಿಡುತ್ತಾರೆ ಎನ್ನುವ ಕಾರಣಕ್ಕಾಗಿಯೇ ಹಂತಹಂತವಾಗಿ ಸರಕಾರಿ ಶಾಲೆಗಳನ್ನೇ ಮುಚ್ಚಿಸುವ ಸಂಚುಗಳು ನಡೆಯುತ್ತಿವೆ. ಸರಕಾರಿ ಶಾಲೆಗಳು ದುರ್ಬಲ, ಕೆಳಜಾತಿಯ ಜನರ ಶಿಕ್ಷಣದ ಹಕ್ಕುಗಳನ್ನು ಪೂರೈಸುತ್ತಿರುವುದು ಹಲವರಿಗೆ ಸಹಿಸುವ ವಿಷಯವಲ್ಲ. ಇದೇ ಕಾರಣಕ್ಕೆ ದಲಿತರ, ಅಲ್ಪಸಂಖ್ಯಾತರ ಸ್ಕಾಲರ್ಶಿಪ್ಗಳಿಗೂ ಸರಕಾರ ಹಂತಹಂತವಾಗಿ ಕತ್ತರಿ ಹಾಕುತ್ತಾ ಬರುತ್ತಿದೆ. ಒಂದು ಕಾಲದಲ್ಲಿ, ಮುಸ್ಲಿಮರು ವಿದ್ಯಾವಂತರಾಗಬೇಕು, ಮುಖ್ಯವಾಹಿನಿಗೆ ಬರಬೇಕು ಎನ್ನುವ ಕೂಗು ಪ್ರಗತಿಪರ ವಲಯದಿಂದ ಕೇಳಿ ಬರುತ್ತಿತ್ತು. ನರೇಂದ್ರ ಮೋದಿಯವರೇ ಒಮ್ಮೆ ಜೋರ್ಡಾನ್ ದೊರೆ ಅತಿಥಿಯಾಗಿ ಭಾಗವಹಿಸಿದ ಸಮಾವೇಶವೊಂದರಲ್ಲಿ ‘ಮುಸ್ಲಿಮರು ಒಂದು ಕೈಯಲ್ಲಿ ಕುರ್ಆನ್ ಮತ್ತೊಂದು ಕೈಯಲ್ಲಿ ಕಂಪ್ಯೂಟರ್ನ್ನು ಹೊಂದಿರಬೇಕು’ ಎಂದು ಕರೆ ನೀಡಿದ್ದರು. ಇದೀಗ ನೋಡಿದರೆ, ಮುಸ್ಲಿಮರು ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾವಂತರಾಗುವುದನ್ನು, ಕಾಲೇಜುಗಳಿಗೆ ಅಡಿಯಿಡುವುದನ್ನು ಗಮನಿಸಿ ಶಾಲಾ ಕಾಲೇಜುಗಳನ್ನೇ ಮುಚ್ಚಿ ಸುವಂತಹ ಕೃತ್ಯಗಳಿಗೆ ಸರಕಾರವೇ ಮುಂದಾಗುತ್ತಿದೆ. ಮಹಿಳೆಯರು ವಿದ್ಯಾವಂತರಾಗಬೇಕು, ಮುಸ್ಲಿಮ್ ತರುಣಿಯರು ಶಿಕ್ಷಣ ಪಡೆಯಬೇಕು ಎಂದು ಘೋಷಿಸಿದ ಸರಕಾರವೇ, ಬಳಿಕ ಹಿಜಾಬ್ನ ನೆಪ ಮುಂದಿಟ್ಟು ಆಕೆಯನ್ನು ಶಾಲೆ ಪ್ರವೇಶಿಸದಂತೆ ತಡೆಯಿತು. ಮುಸ್ಲಿಮ್ ವಿದ್ಯಾರ್ಥಿನಿಯರು ಶಾಲೆ ಕಾಲೇಜುಗಳಲ್ಲಿ ಸಾಧಿಸುತ್ತಿರುವ ಸಾಧನೆಗಳನ್ನು ನೋಡಿದ ಸಂಘಪರಿವಾರ ಮತ್ತು ಸರಕಾರ ಜಂಟಿಯಾಗಿ ‘ಹಿಜಾಬ್ ವಿವಾದ’ವನ್ನು ಪ್ರಾಯೋಜಿಸಿತು. ಬಟ್ಟೆಯನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿನಿಯರಿಗೆ ಬಹಿಷ್ಕಾರವನ್ನು ಹಾಕಿತು. ಮುಸ್ಲಿಮ್ ಸಮುದಾಯದ ವಿದ್ಯಾರ್ಥಿಗಳು ಅತ್ಯುನ್ನತ ಶಿಕ್ಷಣ ಪಡೆದು ಯುಪಿಎಸ್ಸಿಯಲ್ಲಿ ಅತಿ ಹೆಚ್ಚು ಮಂದಿ ಉತ್ತೀರ್ಣಗೊಂಡಾಗ ಅದಕ್ಕಾಗಿ ಸಂತೋಷ ಪಡದೆ, ‘ಯುಪಿಎಸ್ಸಿ ಜಿಹಾದ್’ ಎಂದು ಸಂಘಪರಿವಾರ ಮೈಪರಚಿಕೊಳ್ಳತೊಡಗಿತು. ‘ಎದೆ ಸೀಳಿದರೆ ನಾಲ್ಕು ಅಕ್ಷರವಿಲ್ಲ’ ‘ಪಂಕ್ಚರ್ ಹಾಕುವವರು’ ಎಂದು ಸಾರ್ವಜನಿಕವಾಗಿ ನಿಂದನೆಗೊಳಗಾದ ಸಮುದಾಯ ಅಕ್ಷರ ಕಲಿತಾಕ್ಷಣ, ಅದನ್ನೇ ‘ಅಪರಾಧ’ವಾಗಿ ಬಿಂಬಿಸುವ ಪ್ರಯತ್ನ ನಡೆಯಿತು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದರೂ, ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಯುಪಿಎಸ್ಸಿಯಂತಹ ಪರೀಕ್ಷೆಯಲ್ಲಿ ದುರ್ಬಲ ಸಮುದಾಯ ಸಾಧನೆ ಹೆಮ್ಮೆಯ ವಿಷಯವಾಗಬೇಕು. ಆದರೆ ಅದಕ್ಕಾಗಿ ಅಸೂಯೆ ಪಡುತ್ತಾ ಮುಸ್ಲಿಮರಿಗೆ ಶಿಕ್ಷಣವನ್ನೇ ನಿರಾಕರಿಸುವ ಮಾತುಗಳನ್ನು ಕೆಲವರು ಆಡುತ್ತಿದ್ದಾರೆ. ದಕ್ಷಿಣ ಭಾರತದ ರಾಜ್ಯದಲ್ಲಿ ಸರಕಾರಿ ವೈದ್ಯಕೀಯ ಕಾಲೇಜುಗಳಿಗಾಗಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಜಮ್ಮುವಿನಲ್ಲಿ ಶ್ರೀಮಾತಾ ವೈಷೋದೇವಿ ನಾರಾಯಣ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮಾನ್ಯತೆಯನ್ನು ನೆಪಗಳನ್ನು ತೆಗೆದು ರದ್ದುಗೊಳಿಸಿದಾಗ ಅದನ್ನು ಸಂಘಪರಿವಾರ ಕಾರ್ಯಕರ್ತರು ಸಂಭ್ರಮಿಸಿ ಸ್ವಾಗತಿಸಿದರು. ಸಾರ್ವಜನಿಕವಾಗಿ ಸಿಹಿ ಹಂಚಿದರು. 2016ರಲ್ಲಿ ಈ ಆಸ್ಪತ್ರೆ ಉದ್ಘಾಟನೆ ಮಾಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಜಮ್ಮು ಮತ್ತು ಕಾಶ್ಮೀರದ ಯುವ ಸಮುದಾಯಕ್ಕೆ ಶಿಕ್ಷಣದ ಹೆಬ್ಬಾಗಿಲು ತೆರೆಯಿತು ಎಂಬರ್ಥದಲ್ಲಿ ಮಾತನಾಡಿದ್ದರು. ಆಸ್ಪತ್ರೆಯಲ್ಲಿನ ಸೌಲಭ್ಯಗಳ ಬಗ್ಗೆ ಪ್ರಶಂಸಿಸುತ್ತಾ ಅದನ್ನು ಕೇಂದ್ರ ಸರಕಾರದ ಸಾಧನೆಯೆಂಬಂತೆ ಕೊಚ್ಚಿಕೊಂಡಿದ್ದರು. ಆದರೆ ಇತ್ತೀಚೆಗೆ ಏಕಾಏಕಿ ಕಾಲೇಜಿನ ಅನುಮತಿಯನ್ನು ನಿರಾಕರಿಸಲಾಯಿತು. ಕಾರಣವಿಷ್ಟೆ. ಕಳೆದ ಬಾರಿಯ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಾಲೇಜಿನಲ್ಲಿ ಪ್ರವೇಶ ಪಡೆದ 50 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಅಲ್ಪಸಂಖ್ಯಾತರು ಅಥವಾ ಮುಸ್ಲಿಮರು. ಇದು ಜಮ್ಮುವಿನ ಸಂಘಪರಿವಾರದ ಕೆಂಗಣ್ಣಿಗೆ ಕಾರಣವಾಯಿತು. ನೀಟ್ ಪರೀಕ್ಷೆಯೆನ್ನುವುದು ಧರ್ಮಾಧಾರಿತವಲ್ಲ. ಅದು ಅರ್ಹತೆಯನ್ನು ಆಧರಿಸಿಕೊಂಡಿದೆ. ದೇಶಾದ್ಯಂತ ನೀಟ್ ಪರೀಕ್ಷೆಯ ಮೂಲಕವೇ ವಿದ್ಯಾರ್ಥಿಗಳ ಆಯ್ಕೆ ನಡೆಯುತ್ತದೆ. ಹೀಗಿದ್ದರೂ, 44 ಅರ್ಹ ಮುಸ್ಲಿಮ್ ವಿದ್ಯಾರ್ಥಿಗಳ ಕಾಲೇಜು ಸೇರ್ಪಡೆಯನ್ನು ಸ್ಥಳೀಯ ಸಂಘಪರಿವಾರ ವಿರೋಧಿಸಿತು. ಹಾಗಾದರೆ ಸಂಘಪರಿವಾರ ಏನನ್ನು ನಿರೀಕ್ಷಿಸುತ್ತದೆ? ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಹೊರಗಿಟ್ಟು ಕಳಪೆ ಸಾಧನೆ ಮಾಡಿದವರನ್ನು ವೈದ್ಯಕೀಯ ಕಾಲೇಜಿಗೆ ಸೇರ್ಪಡೆ ಮಾಡಬೇಕೆ? ಸರಕಾರಕ್ಕೆ ಈ ಪ್ರತಿಭಟನೆ ನುಂಗಲಾರದ ತುತ್ತಾಯಿತು. ಅಂತಿಮವಾಗಿ ಸೂಕ್ತ ಸಿಬ್ಬಂದಿಯಿಲ್ಲ ಎಂಬ ನೆಪವನ್ನು ಮುಂದಿಟ್ಟುಕೊಂಡು ವೈದ್ಯಕೀಯ ಕೋರ್ಸ್ನ್ನೇ ರದ್ದುಗೊಳಿಸಿತು. ದ್ವೇಷ ಗೆದ್ದಿತು, ಶಿಕ್ಷಣ ಸೋತಿತು. ಅಲ್ಲಿ ಅವಕಾಶ ಪಡೆದ 44 ಮುಸ್ಲಿಮ್ ವಿದ್ಯಾರ್ಥಿಗಳ ಜೊತೆಗೆ ಇತರ ಹಿಂದೂ ಮತ್ತು ಸಿಖ್ ವಿದ್ಯಾರ್ಥಿಗಳೂ ಆ ಕಾಲೇಜಿನಲ್ಲಿ ಕಲಿಯುವ ಅವಕಾಶದಿಂದ ವಂಚಿತರಾದರು. ‘ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ. ಅದು ದಕ್ಷಿಣ ಭಾರತೀಯರ ಅವಕಾಶಗಳನ್ನು ಕಿತ್ತುಕೊಳ್ಳುತ್ತಿದೆ’ ಎಂಬ ದಕ್ಷಿಣ ರಾಜ್ಯಗಳ ಆಗ್ರಹವನ್ನು ಈ ಮೂಲಕ ಕೇಂದ್ರ ಸರಕಾರವೇ ಸಮರ್ಥಿಸಿದಂತಾಗಿದೆ. ಧರ್ಮದ ಹೆಸರು ಹೇಳಿ ನೀಟ್ ಪರೀಕ್ಷೆಯ ಅರ್ಹ ವಿದ್ಯಾರ್ಥಿಗಳನ್ನು ವೈದ್ಯಕೀಯ ಕಾಲೇಜಿನಿಂದ ಹೊರಗಿಡಬಹುದಾದರೆ, ಪ್ರಾದೇಶಿಕತೆಯ ಹೆಸರಿನಲ್ಲಿ ನೀಟ್ನ್ನು ಯಾಕೆ ತಿರಸ್ಕರಿಸಬಾರದು? ಎನ್ನುವ ಪ್ರಶ್ನೆಗೆ ಬಲ ಬಂದಿದೆ. ಒಂದೆಡೆ ವೈದ್ಯಕೀಯ ಕಾಲೇಜುಗಳನ್ನು ಮುಚ್ಚಿಸುತ್ತಾ ಇನ್ನೊಂದೆಡೆ ಸೆಗಣಿಯಿಂದ, ಪಂಚಗವ್ಯದಿಂದ ಕ್ಯಾನ್ಸರ್ಗಳಿಗೆ ಔಷಧಿ ಹುಡುಕಲು ಸರಕಾರ ಕೋಟಿ ಗಟ್ಟಲೆ ಹಣ ಸುರಿಯುವ ಮೂಲಕ ಸುದ್ದಿಯಲ್ಲಿದೆ. ನಾನಾಜಿ ದೇಶ್ಮುಖ್ ಪಶುವೈದ್ಯಕೀಯ ವಿಜ್ಞಾನ ವಿವಿಯಲ್ಲಿ ಹಸುವಿನ ಸೆಗಣಿ, ಮೂತ್ರ ಬಳಸಿ ಕ್ಯಾನ್ಸರ್ಗೆ ಔಷಧಿ ಹುಡುಕಲು ಮೂರೂವರೆ ಕೋಟಿ ರೂಪಾಯಿ ವ್ಯಯ ಮಾಡಿತ್ತು. ಆದರೆ ಫಲಿತಾಂಶ ಮಾತ್ರ ಶೂನ್ಯ. ಇದೀಗ ಮಂಜೂರಾದ ಹಣದಲ್ಲಿ 2 ಕೋಟಿ ರೂಪಾಯಿ ಅವ್ಯವಹಾರವಾಗಿರುವುದು ಬಹಿರಂಗವಾಗಿದೆ. ಇದೇ ಸಂದರ್ಭದಲ್ಲಿ ವಿಶ್ವದ ಟಾಪ್ 100 ರ್ಯಾಂಕಿಂಗ್ ಪಟ್ಟಿಯಲ್ಲಿ ಈ ಬಾರಿಯೂ ಭಾರತದ ವಿಶ್ವವಿದ್ಯಾನಿಲಯಗಳ ಹೆಸರಿಲ್ಲ. ಭಾರತದ ವಿಶ್ವವಿದ್ಯಾನಿಲಯಗಳು ಇಂದು ಮೌಢ್ಯಗಳಿಗೆ, ಜಾತಿ ರಾಜಕೀಯಗಳಿಗಾಗಿಯಷ್ಟೇ ಸುದ್ದಿಯಾಗುತ್ತಿವೆ. ವಿದೇಶಗಳ ವಿದ್ಯಾರ್ಥಿಗಳನ್ನು ನಮ್ಮ ವಿಶ್ವವಿದ್ಯಾನಿಲಯಗಳು ಆಕರ್ಷಿಸುವುದಿರಲಿ, ಭಾರತದ ವಿದ್ಯಾರ್ಥಿಗಳ ವಲಸೆಗಳು ಹೆಚ್ಚುತ್ತಿವೆ. ಈಗಾಗಲೇ ಗಮನಾರ್ಹ ಸಾಧನೆಗಳನ್ನು ಮಾಡಿರುವ ಕೆಲವು ವಿಶ್ವವಿದ್ಯಾನಿಲಯಗಳು ಆರೆಸ್ಸೆಸ್ ಹಸ್ತಕ್ಷೇಪದಿಂದಾಗಿ ಹಿನ್ನಡೆ ಅನುಭವಿಸುತ್ತಿವೆ. ದಲಿತರನ್ನು, ಮಹಿಳೆಯರನ್ನು, ಅಲ್ಪಸಂಖ್ಯಾತರನ್ನು ವ್ಯವಸ್ಥಿತವಾಗಿ ಹೊರಗಿಟ್ಟು, ಆಧುನಿಕ, ವೈಜ್ಞಾನಿಕ, ವೈಚಾರಿಕ ದೃಷ್ಟಿಕೋನಗಳ ಜಾಗದಲ್ಲಿ ಸೆಗಣಿ, ಗೋಮೂತ್ರ ಕೇಂದ್ರಿತ ಶಿಕ್ಷಣ ವ್ಯವಸ್ಥೆಯು ಭಾರತದ ಭವಿಷ್ಯವನ್ನು ಇನ್ನಷ್ಟು ನಿರಾಶದಾಯಕವಾಗಿಸಿದೆ. ಸೆಗಣಿ, ಗೋಮೂತ್ರದಲ್ಲಿ ಒದ್ದಾಡುತ್ತಿರುವ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಮೇಲೆತ್ತುವ ಬಗ್ಗೆ ಸರಕಾರ ಇನ್ನಾದರೂ ಯೋಚಿಸದಿದ್ದರೆ, ಭಾರತ ಮತ್ತೆ ಸ್ವಾತಂತ್ರ್ಯಪೂರ್ವದ ಅಂಧಕಾರದತ್ತ ಸಾಗುವುದರಲ್ಲಿ ಅನುಮಾನವಿಲ್ಲ.
ನಮಗ್ಯಾಕೆ ಬೇಕಯ್ಯ.. ಈ ಮಾರ್ಗದ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಎಂದ ಕನ್ನಡಿಗರು, ಹೊಸ ರೈಲು ಬೇಡ ಅಭಿಯಾನ
ನವದೆಹಲಿ: ಕೇಂದ್ರ ಸರ್ಕಾರವು 9 ರಾಜ್ಯಗಳಿಗೆ ಹೊಸ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಪರಿಚಯಿಸಿದೆ. ದೇಶದಾದ್ಯಂತ ಹೊಸ ಅಮೃತ್ ಭಾರತ್ ರೈಲು ಪ್ರಾರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ. ಇದರಲ್ಲಿ ಒಂದು ಕರ್ನಾಟಕಕ್ಕೆ ಸಂಬಂಧಿಸಿದ ರೈಲು ಸಹ ಇದೆ. ಆದರೆ, ಕರ್ನಾಟಕಕ್ಕೆ - ಕನ್ನಡಿಗರಿಗೆ ಈ ಹೊಸ ಅಮೃತ್ ಭಾರತ್ ಎಕ್ಸ್ಪ್ರೆಸ್
ಟಿ20 ವಿಶ್ವಕಪ್ನಿಂದ ಬಾಂಗ್ಲಾ ಹಿಂದೆ ಸರಿದರೆ ಆಟಗಾರರಿಗೇ ನಷ್ಟ: ಬಿಸಿಬಿ ಎಚ್ಚರಿಕೆ
ಢಾಕಾ:ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶ ತಂಡದ ಭಾಗವಹಿಸುವಿಕೆ ಕುರಿತು ಅನಿಶ್ಚಿತತೆ ಮುಂದುವರಿದಿರುವ ನಡುವೆಯೇ, ಟೂರ್ನಿಯಿಂದ ಬಾಂಗ್ಲಾ ತಂಡ ಹಿಂದೆ ಸರಿದರೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (ಬಿಸಿಬಿ) ಯಾವುದೇ ನಷ್ಟವಾಗುವುದಿಲ್ಲ; ನಷ್ಟವಾಗುವುದು ಆಟಗಾರರಿಗೆ ಮಾತ್ರ ಎಂದು ಬಿಸಿಬಿ ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಹುಸೈನ್ ಎಚ್ಚರಿಕೆ ನೀಡಿದ್ದಾರೆ. “ವಿಶ್ವಕಪ್ನಲ್ಲಿ ಬಾಂಗ್ಲಾ ತಂಡ ಭಾಗವಹಿಸದಿದ್ದರೆ ಬಿಸಿಬಿಗೆ ಯಾವುದೇ ನಷ್ಟವಿಲ್ಲ. ನಷ್ಟವಾಗುವುದು ಆಟಗಾರರಿಗೆ,” ಎಂದು ನಜ್ಮುಲ್ ಹುಸೈನ್ ಹೇಳಿದ್ದಾಗಿ ಕ್ರಿಕ್ಬುಝ್ ವರದಿ ಮಾಡಿದೆ. “2027ರವರೆಗೂ ನಮ್ಮ ಆದಾಯಕ್ಕೆ ಯಾವುದೇ ತೊಂದರೆ ಇಲ್ಲ. ಏಕೆಂದರೆ 2022ರ ಐಸಿಸಿ ಹಣಕಾಸು ಸಭೆಯಲ್ಲೇ ಇದನ್ನು ನಿರ್ಧರಿಸಲಾಗಿದೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಭವಿಷ್ಯದ ವಿಶ್ವಕಪ್ಗಳು, ದ್ವಿಪಕ್ಷೀಯ ಸರಣಿಗಳು ಅಥವಾ ಇತರ ಅಂತರರಾಷ್ಟ್ರೀಯ ಟೂರ್ನಿಗಳ ವಿಚಾರದಲ್ಲಿ ಮಾತ್ರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. “ಉದಾಹರಣೆಗೆ, ಎಫ್ಟಿಪಿ ಅಡಿಯಲ್ಲಿ ಇತರ ತಂಡಗಳು ನಮ್ಮ ದೇಶಕ್ಕೆ ಬರಲಿವೆಯೇ ಎಂಬುದು ಪ್ರಮುಖ ಪ್ರಶ್ನೆ. ಆದರೆ ವಿಶ್ವಕಪ್ನಿಂದ ಬಿಸಿಬಿಗೆ ಯಾವುದೇ ನಷ್ಟವಾಗುವುದಿಲ್ಲ,” ಎಂದು ವಿವರಿಸಿದರು. ಪಂದ್ಯದ ಸಂಭಾವನೆ ಹಾಗೂ ಸಾಧನೆ ಆಧಾರಿತ ಬೋನಸ್ಗಳನ್ನು ನೇರವಾಗಿ ಆಟಗಾರರಿಗೇ ನೀಡಲಾಗುತ್ತದೆ. ಇದರಿಂದ ಮಂಡಳಿಗೆ ಲಾಭ ಅಥವಾ ನಷ್ಟವಾಗುವುದಿಲ್ಲ. “ಆಟಗಾರರು ಪಂದ್ಯಗಳಲ್ಲಿ ಭಾಗವಹಿಸಿದರೆ ಪ್ರತಿಪಂದ್ಯಕ್ಕೂ ಶುಲ್ಕ ಪಡೆಯುತ್ತಾರೆ. ಪಂದ್ಯಶ್ರೇಷ್ಠ ಪ್ರಶಸ್ತಿ ಅಥವಾ ವಿಶೇಷ ಸಾಧನೆ ಮಾಡಿದರೆ, ಐಸಿಸಿ ನಿಯಮಾವಳಿಯಂತೆ ಅವರಿಗೆ ಹಣ ಲಭಿಸುತ್ತದೆ,” ಎಂದು ನಜ್ಮುಲ್ ಹುಸೈನ್ ತಿಳಿಸಿದರು. “ಹಣವನ್ನು ನೇರವಾಗಿ ಆಟಗಾರರು ಪಡೆಯುತ್ತಾರೆ. ಅದಕ್ಕೆ ಮಂಡಳಿಗೆ ಯಾವುದೇ ಸಂಬಂಧವಿಲ್ಲ. ವಿಶ್ವಕಪ್ನಲ್ಲಿ ಬಾಂಗ್ಲಾ ಆಟಗಾರರು ಆಡಿದರೂ, ಆಡದಿದ್ದರೂ ಬಿಸಿಬಿಗೆ ಲಾಭವೂ ಇಲ್ಲ; ನಷ್ಟವೂ ಇಲ್ಲ,” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ಗೆ ಮರಳಲು ಮುಂದಾದ ಬಿಜೆಪಿ ಮುಖಂಡನ ಮನೆ ಮೇಲೆ ಎಸಿಬಿ ದಾಳಿ
ಜೈಪುರ: ಕಾಂಗ್ರೆಸ್ ಪಕ್ಷಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡೇ ದಿನಗಳಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ಬ್ಯೂರೊ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಆರೋಪಿಸಿದ್ದಾರೆ. ಮಂಗಳವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮಾಳವೀಯ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅವರಿಗೆ ಸೇರಿದ ಮೂರು ಆಸ್ತಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಅಶೋಕ್ ಗೆಹ್ಲೋಟ್ ಸಂಪುಟದಲ್ಲಿ ಸಚಿವರಾಗಿದ್ದ ಹಾಗೂ ಬುಡಕಟ್ಟು ಪ್ರದೇಶವಾದ ಬನ್ಸ್ವಾರಾದಿಂದ ಸಂಸದರಾಗಿದ್ದ ಮಾಳವೀಯ ಅವರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಖಜೀಂದರ್ ಸಿಂಗ್ ರಾಂಡ್ವಾ, ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಹಾಗೂ ವಿರೋಧ ಪಕ್ಷದ ನಾಯಕ ಟಿಕಾರಾಂ ಜುಲ್ಲಿ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಎಸಿಬಿ ದಾಳಿಯ ಕುರಿತು ಪ್ರತಿಕ್ರಿಯಿಸಲು ಮಾಳವೀಯ ಅವರು ನಿರಾಕರಿಸಿದ್ದಾರೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಈ ಬೆಳವಣಿಗೆಯನ್ನು ದೃಢಪಡಿಸಿ, ಇದು ಪ್ರಜಾಪ್ರಭುತ್ವಕ್ಕೆ ಅವಮಾನ ಎಂದು ಖಂಡಿಸಿದ್ದಾರೆ. ರಾಜಕೀಯ ದುರುದ್ದೇಶಕ್ಕಾಗಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಇನ್ನೊಂದೆಡೆ, ಎಸಿಬಿ ಅಧಿಕಾರಿಗಳು ಕೂಡ ಈ ವಿಷಯದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಬಿಜೆಪಿ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲದ ಕಾರಣ ಕಾಂಗ್ರೆಸ್ಗೆ ಮರಳುವುದಾಗಿ ಮಾಳವೀಯ ಅವರು ಇತ್ತೀಚೆಗೆ ಘೋಷಿಸಿದ್ದರು.
ವಾಲ್ಮೀಕಿ ನಿಗಮ ಅಕ್ರಮ, CBI ಬಂಧನ ಭೀತಿಯಲ್ಲಿದ್ದ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತನಿಖಾಧಿಕಾರಿ ಮುಂದೆ ಹಾಜರಾಗುವುದು, ಸಹಿ ಮಾಡುವುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.
ಕಾಫಿ ಬೆಳೆಗೆ ವರುಣಾಘಾತ; ಕೋಟ್ಯಂತರ ರೂ ನಷ್ಟ, ಬೆಳೆಗಾರರಿಗೆ ಸಂ'ಕಷ್ಟ'
ಅಕಾಲಿಕ ಮಳೆಯಿಂದಾಗಿ ಹಾಸನ ಜಿಲ್ಲೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಕಾಫಿ ಬೆಳೆ ನಾಶವಾಗಿದೆ. ಸಕಲೇಶಪುರ, ಮೂಡಿಗೆರೆ, ಕೊಡಗು ಭಾಗಗಳಲ್ಲಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಫಿ ಬೆಳೆಗೂ ವಿಮೆ ಸೌಲಭ್ಯ ಕಲ್ಪಿಸುವಂತೆ ಬೆಳೆಗಾರರು ಒತ್ತಾಯಿಸಿದ್ದಾರೆ.
Iran Conflict: ಹೇಗಿದ್ದರೆ ಹಾಗೆ, ಯಾವ ವಾಹನ ಸಿಕ್ಕರೆ ಅದರಲ್ಲಿ ತಕ್ಷಣ ಇರಾನ್ ಬಿಟ್ಟು ಹೊರಡಿ: ಭಾರತ ಸರ್ಕಾರ ಸೂಚನೆ
ಇರಾನ್: ಇರಾನ್ನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಭಾರತೀಯ ರಾಯಭಾರಿ ಕಚೇರಿಯು ಅಲ್ಲಿನ ಭಾರತೀಯ ಪ್ರಜೆಗಳಿಗೆ ತುರ್ತು ಸಂದೇಶವನ್ನು ನೀಡಿದೆ. ಇರಾನ್ನಲ್ಲಿ ಪ್ರತಿಭಟನೆಗಳು ತೀವ್ರ ಹಿಂಸಾಸ್ವರೂಪ ಪಡೆದುಕೊಂಡಿದೆ. ಅಲ್ಲದೇ ಇರಾನ್ನ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ಮಾಡುವ ಭೀತಿಯೂ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ತುರ್ತು ಸಂದೇಶವನ್ನು ಹಂಚಿಕೊಂಡಿದೆ. ಪ್ರಸ್ತುತ ಇರಾನ್ನಲ್ಲಿರುವ
ಮಕರ ಸಂಕ್ರಾಂತಿ ಹಿನ್ನೆಲೆ : ಗಾಜುಲೇಪಿತ ಗಾಳಿಪಟದ ದಾರದಿಂದ ಕತ್ತು ಸೀಳಲ್ಪಟ್ಟು ಮೂವರು ಮೃತ್ಯು
ವಾರಾಣಾಸಿ: ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಗಾಳಿಪಟ ಹಾರಿಸಲು ನಿಷೇಧಿತ ಹಾಗೂ ತೀಕ್ಷ್ಣವಾದ ಗಾಜುಲೇಪಿತ ದಾರವನ್ನು ಬಳಸಿದ ಪರಿಣಾಮ ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ದುರಂತಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಉತ್ತರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ದಾರದಿಂದ ಕತ್ತು ಸೀಳಲ್ಪಟ್ಟು ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸಂಕ್ರಾಂತಿ ಹಬ್ಬದ ವೇಳೆ ಗಾಳಿಪಟ ಹಾರಾಟದಿಂದ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಬ್ಬದ ಸಮಯದಲ್ಲಿ ಸಂಚಾರವೂ ಹೆಚ್ಚಾಗಿರುವುದರಿಂದ ರಸ್ತೆ ಹಾಗೂ ಸೇತುವೆಗಳ ಮೇಲೆ ಅಡ್ಡವಾಗಿ ತೂಗುವ ಗಾಳಿಪಟದ ದಾರ ದ್ವಿಚಕ್ರ ವಾಹನ ಸವಾರರಿಗೆ ಮಾರಕವಾಗಿ ಪರಿಣಮಿಸುತ್ತಿದೆ. ಗಾಳಿಪಟದ ದಾರ ಕುತ್ತಿಗೆಗೆ ಸುತ್ತಿಕೊಂಡು ಕತ್ತು ಸೀಳುವಂತಹ ದುರಂತಗಳು ಸಂಭವಿಸುತ್ತಿವೆ. ಉತ್ತರಪ್ರದೇಶದಲ್ಲಿ 28 ವರ್ಷದ ಸಮೀರ್ ಹಂಶಿ ಶಾಲಾ ಕ್ಯಾಂಪಸ್ ಸಮೀಪ ಇಂತಹ ದುರಂತದಲ್ಲಿ ಮೃತಪಟ್ಟಿದ್ದಾರೆ. ಕೇರಕತ್ ಪಟ್ಟಣದ ನಿವಾಸಿಯಾಗಿದ್ದ ಅವರು ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆಗೆ ಸುತ್ತಿಕೊಂಡು ಗಂಭೀರ ಗಾಯಗೊಂಡರು. ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಜೌನಪುರ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಇಂತಹ ಎರಡು ಸಾವುಗಳು ವರದಿಯಾಗಿವೆ. ಡಿಸೆಂಬರ್ 11ರಂದು ಶಾಲಾ ಶಿಕ್ಷಕ ಸಂದೀಪ್ ತ್ರಿಪಾಠಿ (45) ಗಾಜುಲೇಪಿತ ದಾರದಿಂದ ಕತ್ತು ಸೀಳಲ್ಪಟ್ಟು ಮೃತಪಟ್ಟಿದ್ದರು. ಬುಧವಾರ ಉತ್ತರಪ್ರದೇಶದ ಲಕೀಂಪುರ ಜಿಲ್ಲೆಯಲ್ಲಿ ವಲಸೆ ಕಾರ್ಮಿಕ ಅವಧೀಶ್ ಕುಮಾರ್ (38) ಮೃತಪಟ್ಟಿದ್ದಾರೆ. ಅವರು ತೆಲಂಗಾಣದಿಂದ ಕೃಷಿ ಕೆಲಸಕ್ಕಾಗಿ ಆಗಮಿಸಿದ್ದರು. ಅಲ್ಲದೆ, ಉತ್ತರ ಕರ್ನಾಟಕದ ಬೀದರ್ ಜಿಲ್ಲೆಯ ಬಂಬುಳಗಿ ಗ್ರಾಮದಲ್ಲಿ ಸಂಜೀವ ಕುಮಾರ್ (48) ಎಂಬವರು ಕೂಡ ಇದೇ ರೀತಿಯ ದುರಂತದಲ್ಲಿ ಜೀವ ಕಳೆದುಕೊಂಡಿದ್ದಾರೆ.
980 ಗ್ರಾ.ಪಂಗಳಲ್ಲಿ PDO ಹುದ್ದೆ ಖಾಲಿ; ನಿಂತಲ್ಲೇ ನಿಂತ ವಿವಿಧ ಯೋಜನೆಗಳ ಕೆಲಸ, ಜನ ಸಾಮಾನ್ಯರಿಗೆ ಸಮಸ್ಯೆ
ರಾಜ್ಯದ 980 ಪಿಡಿಒ ಕೊರತೆಯಿಂದಾಗಿ ಗ್ರಾಮೀಣ ಜನರಿಗೆ ಕುಡಿಯುವ ನೀರು, ರಸ್ತೆ, ನೈರ್ಮಲ್ಯ, ಪಿಂಚಣಿ ಸೇರಿದಂತೆ ವಿವಿಧ ಯೋಜನೆಗಳ ಸೇವೆ ತಲುಪಿಸಲು ಹಿನ್ನಡೆಯಾಗುತ್ತಿದೆ. ಪ್ರಭಾರಿಗಳ ಮೇಲಿನ ಒತ್ತಡ ಮತ್ತು ಕೆಲ ಪಿಡಿಒಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿರುವುದರಿಂದ ಕೆಲಸಗಳು ವಿಳಂಬವಾಗುತ್ತಿವೆ. ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಪಿಡಿಒಗಳ ನೇಮಕಕ್ಕೆ ಸರ್ಕಾರ ಆದ್ಯತೆ ನೀಡಬೇಕಿದೆ.
Donald Trump: ಡೊನಾಲ್ಡ್ ಟ್ರಂಪ್ ದುಬಾರಿ ಸುಂಕಕ್ಕೆ ಸದ್ಯಕ್ಕಿಲ್ಲ ಬ್ರೇಕ್: ಯುಎಸ್ ಕೋರ್ಟ್ ಹೇಳಿದ್ದೇನು
ಅಮೆರಿಕ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವೂ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ವಿಧಿಸಿರುವ ದುಬಾರಿ ಸುಂಕಕ್ಕೆ ಸಂಬಂಧಿಸಿದಂತೆ ಬ್ರೇಕ್ ಬೀಳುವ ನಿರೀಕ್ಷೆಯಲ್ಲಿದ್ದವರಿಗೆ ತಾತ್ಕಾಲಿಕ ಹಿನ್ನಡೆ ಆಗಿದೆ. ವಿವಿಧ ದೇಶಗಳ ಮೇಲೆ ವಿಪರೀತವಾಗಿ ವಿಧಿಸಿರುವ ಆಮದು ಮತ್ತು ಉತ್ಪನ್ನಗಳ ಮೇಲಿನ ಸುಂಕದ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕಾದ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆದಿದ್ದು, ಈ ವಿಚಾರಣೆಯನ್ನು ಮುಂದೂಡಲಾಗಿದೆ.
ಜಲಮಂಡಳಿಯ 6ನೇ ಹಂತದ ಕಾವೇರಿ ಯೋಜನೆಗೆ ಮೀನಮೇಷ! ಬೆಂಗಳೂರು ಹೊರವಲಯಕ್ಕೆ ನೀರು ಸಿಗೋದ್ಯಾವಾಗ?
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಕಾವೇರಿ 6ನೇ ಹಂತದ ಯೋಜನೆಗೆ 9 ತಿಂಗಳ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿದೆ. 6939 ಕೋಟಿ ರೂ. ವೆಚ್ಚದ ಈ ಯೋಜನೆಯಿಂದ ಕೆಆರ್ಎಸ್ನಿಂದ 6 ಟಿಎಂಸಿ ನೀರು ತರಲು ಉದ್ದೇಶಿಸಲಾಗಿದೆ. ಸರಕಾರದ ವಿಳಂಬದಿಂದಾಗಿ ಭವಿಷ್ಯದಲ್ಲಿ ನೀರಿನ ಕೊರತೆ ಎದುರಾಗುವ ಆತಂಕವಿದೆ. ಯೋಜನೆಗೆ ಅನುಮೋದನೆ ದೊರೆತರೆ ಕಾಮಗಾರಿ ಆರಂಭವಾಗಲಿದೆ.
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಖಂಡಿಸಿ, ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಜನವರಿ 17ರಂದು ಬೃಹತ್ ಸಮಾವೇಶ ನಡೆಸಲಿವೆ. ಬಳಿಕ, ಬೆಂಗಳೂರಿನತ್ತ ಪಾದಯಾತ್ರೆ ಆರಂಭವಾಗಲಿದ್ದು, ಹಲವು ನಾಯಕರು ಭಾಗವಹಿಸಲಿದ್ದಾರೆ. ಗಲಭೆಯಲ್ಲಿ ಭಾಗಿಯಾದವರ ಬಂಧನಕ್ಕೆ ಒತ್ತಾಯಿಸಲಾಗಿದೆ. ಈ ಪಾದಯಾತ್ರೆ ಫೆಬ್ರವರಿ ಐದರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತ್ಯಗೊಳ್ಳಲಿದೆ ಎನ್ನಲಾಗುತ್ತಿದೆ.
Karnataka Weather: ಕರ್ನಾಟಕದಲ್ಲಿ ಚಳಿ ಇಳಿಕೆ, ಈಶಾನ್ಯ ಮುಂಗಾರು ಮಳೆ ಬಗ್ಗೆ ಐಎಂಡಿ ವರದಿ
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಚಳಿ ಪ್ರಮಾಣ ಇಳಿಕೆಯಾಗಿದ್ದು, ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿದಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಆಗಿದೆ. ರಾಜ್ಯದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿದೆಯಾದರೂ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳಲ್ಲಿ
ದೇಶದಲ್ಲಿ 70% ವಾಹನಗಳಲ್ಲಿ ನಿಯಮ ಉಲ್ಲಂಘನೆ, ಕರ್ನಾಟಕದಲ್ಲೇ ಗರಿಷ್ಠ: ನೋಂದಣಿ ರದ್ದಾಗುತ್ತೆ ಎಚ್ಚರ!
ಕೊಟ್ಟ ಗಡುವಿನೊಳಗೆ ವಾಹನಗಳ ಅಗತ್ಯ ದಾಖಲೆ, ಕಾನೂನು ಪ್ರಕಾರ ಬೇಕಾಗಿರುವ ಸರ್ಟಿಫಿಕೇಟ್ ಗಳನ್ನು ಮಾಡಿಸದಿದ್ದರೆ, ತಕ್ಷಣವೇ ವಾಹನದ ನೋಂದಣಿ ರದ್ದಾಗಲಿದೆ. ಯಾವೆಲ್ಲಾ ದಾಖಲೆ ಅಗತ್ಯ, ಕರ್ನಾಟಕದ ಅಂಕಿಅಂಶ ಏನಿದೆ ಎಂಬ ವಿವರ ಇಲ್ಲಿದೆ.
ಹುಳಿಮಾವು ಠಾಣೆ ಪೊಲೀಸರು ದೇಶಾದ್ಯಂತ ಸಾವಿರ ಕೋಟಿ ರೂ.ಗೂ ಅಧಿಕ ಹಣ ದೋಚಿದ್ದ ಸೈಬರ್ ವಂಚಕರ ಜಾಲವನ್ನು ಭೇದಿಸಿದ್ದಾರೆ. ತಾಯಿ-ಮಗ ಸೇರಿ 12 ಮಂದಿಯನ್ನು ಬಂಧಿಸಲಾಗಿದ್ದು, 240 ಕೋಟಿ ರೂ.ಗಳನ್ನು ಫ್ರೀಜ್ ಮಾಡಿಸಲಾಗಿದೆ. ದುಬೈನಲ್ಲಿರುವ ಪ್ರಮುಖ ಸೂತ್ರಧಾರ ಪ್ರೇಮ್ ತನೇಜಾ ಬಂಧನಕ್ಕೆ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಈ ಜಾಲವು ಕ್ರಿಪ್ಟೊ ಕರೆನ್ಸಿ ಮೂಲಕ ಹಣ ವರ್ಗಾವಣೆ ಮಾಡುತ್ತಿತ್ತು.
IRCTC: ರೈಲು ಟಿಕೆಟ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಉಚಿತ ದಿನಾಂಕ ಬದಲಾವಣೆ ನಿಯಮ ಜಾರಿ
ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯು ಟಿಕೆಟ್ ಬುಕಿಂಗ್ ಬಳಿಕ ದಿನಾಂಕ ಬದಲಾವಣೆಯ ಮಹತ್ವದ ನಿಯಮವು ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ, ಐಆರ್ಸಿಟಿಸಿ (IRCTC) ಮೂಲಕ ಆನ್ಲೈನ್ನಲ್ಲಿ ಬುಕ್ ಮಾಡಿದ ಕನ್ಫರ್ಮ್ ಇ-ಟಿಕೆಟ್ಗಳನ್ನು ಉಚಿತವಾಗಿ ರಿಸ್ಕೆಡ್ಯೂಲ್ (ಪ್ರಯಾಣದ ದಿನಾಂಕ ಬದಲಾಯಿಸುವುದು) ಮಾಡಲು ಅವಕಾಶ ನೀಡುವ ಈ ನಿಯಮವನ್ನು ಇದೇ ತಿಂಗಳಿನಿಂದಲೇ ಜಾರಿಗೆ ತರಲಾಗಿದೆ. ರೈಲು ಪ್ರಯಾಣಿಕರು ಸಾಮಾನ್ಯವಾಗಿ
ವಿಜಯಪುರ ಮೆಡಿಕಲ್ ಕಾಲೇಜು ಹೋರಾಟಗಾರರ ಬಿಡುಗಡೆ : ಭವ್ಯ ಸ್ವಾಗತ
ವಿಜಯಪುರ : ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಪ್ರತಿಭಟಿಸಿ, ಬಂಧನಕ್ಕೊಳಗಾಗಿದ್ದ ಆರು ಹೋರಾಟಗಾರರನ್ನು ಬುಧವಾರ ಸಂಜೆ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಳಿಸಲಾಗಿದೆ. ಹೋರಾಟಗಾರರಾದ ಸಂಗನಬಸವೇಶ್ವರ ಸ್ವಾಮೀಜಿ, ಬಿ.ಭಗವಾನರೆಡ್ಡಿ, ಸಿದ್ರಾಮ ಹಳ್ಳೂರ, ಅರವಿಂದ ಕುಲಕರ್ಣಿ, ಭೋಗೇಶ ಸೊಲ್ಲಾಪೂರ, ಅನೀಲ ಹೊಸಮನಿ ಅವರು ಕಾರಾಗೃಹದಿಂದ ಹೊರ ಬರುತ್ತಿದ್ದಂತೆ ಹೋರಾಟಗಾರರು, ಕುಟುಂಬ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಿಹಿ ತಿನಿಸಿ, ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದರು. ಜೈಲಿನಿಂದ ಬಿಡುಗಡೆಗೊಂಡ ಹೋರಾಟಗಾರ ಹಾಗೂ ಹಿರಿಯ ಪತ್ರಕರ್ತ ಅನೀಲ ಹೊಸಮನಿ ಮಾತನಾಡಿ, ಇದು ಜನರ ಗೆಲುವು, ಈ ಹೋರಾಟದ ಫಲವಾಗಿ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪಿಸುವ ನಿರ್ಧಾರ ಕೈ ಬಿಟ್ಟಿದೆ. ಕೊನೆಗೂ ಸರಕಾರ ಮೆಡಿಕಲ್ ಕಾಲೇಜ್ ಸ್ಥಾಪಿಸುವ ನಿರ್ಧಾರ ಪ್ರಕಟಿಸಿರುವುದು ಸಂತೋಷ ತರಿಸಿದೆ. ಜೈಲಿನಲ್ಲಿ ಸಚಿವ ಶಿವಾನಂದ ಪಾಟೀಲರು ಭೇಟಿಯಾಗಿ ಮುಂದಿನ ಬಜೆಟ್ನಲ್ಲಿ ಮೆಡಿಕಲ್ ಕಾಲೇಜ್ ಘೋಷಣೆ ಮಾಡುವ ಭರವಸೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲರು ಸಹ ಈ ವಿಷಯವಾಗಿ ಸ್ಪಂದಿಸಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ನಿಟ್ಟಿನಲ್ಲಿ ಶ್ರಮಿಸುವುದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ಇದು ಜನರ ಗೆಲುವು ಎಂದು ಹೇಳಿದರು. ಮುಖಂಡರಾದ ಶ್ರೀನಾಥ್ ಪೂಜಾರಿ, ಮಲ್ಲಿಕಾರ್ಜುನ ಯಂಡಿಗೇರಿ, ಎಂ.ಸಿ.ಮುಲ್ಲಾ, ಅಕ್ರಂ ಮಾಶ್ಯಾಳಕರ, ಎಚ್.ಟಿ. ಭರತಕುಮಾರ, ಎಚ್.ಟಿ.ಮಲ್ಲಿಕಾರ್ಜುನ, ಸುರೇಶ ಬಿಜಾಪೂರ, ಸುರೇಖಾ ರಜಪೂತ ಮೊದಲಾದವರು ಸ್ವಾಗತಿಸಿದರು. ಬಳಿಕ ಜೈಲಿನಿಂದ ಬಿಡುಗಡೆಯಾದ ಹೋರಾಟಗಾರರನ್ನು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕರೆ ತರಲಾಯಿತು. ಪ್ರಮುಖ ದಾರಿಯಲ್ಲಿ ಸಾಗಿದ ಮೆರವಣಿಗೆ ಹೋರಾಟ ಸ್ಥಳವಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕೊನೆಗೊಂಡಿತು.
Dharwad | ಚಾಕುವಿನಿಂದ ಇರಿದು ಬಾಲಕನ ಹತ್ಯೆ
ಧಾರವಾಡ : ಚಾಕುವಿನಿಂದ ಇರಿದು ಬಾಲಕನನ್ನು ಹತ್ಯೆಗೈದಿರುವ ಘಟನೆ ಕುಂದಗೋಳ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಇರುವ ಸೂಸೈಟಿ ಮೈದಾನದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತ ಬಾಲಕನನ್ನು ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಮಲ್ಲಿಕಾರ್ಜುನ ಅವಾರಿ (16) ಎಂದು ತಿಳಿದು ಬಂದಿದೆ. ಕೃತ್ಯ ಎಸಗಿರುವವರು ಯಾರು ಮತ್ತು ಯಾಕೆ ಎಂಬುದನ್ನ ಪೊಲೀಸರು ತನಿಖೆಯನ್ನು ಮಾಡುತ್ತಿದ್ದು, ಆ ಪ್ರದೇಶದ ಸಿ.ಸಿ ಟಿವಿ ದೃಶ್ಯಗಳ ಪರಿಶೀಲನೆ ಮಾಡುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ಗೆ ರವಾನಿಸಲಾಗಿದ್ದು, ಡಿವೈಎಸ್ಪಿ ವಿನೋದ ಮುಕ್ತಿದಾರ, ಪೊಲೀಸ್ ಇನ್ಸ್ಪೆಕ್ಟರ್ ಸಮೀರ್ ಮುಲ್ಲಾ, ಪಿಎಸ್ಐ ಇಮ್ರಾನ್ ಪಠಾಣ ಸ್ಥಳ ಪರಿಶೀಲನೆ ಮಾಡಿದ್ದಾರೆ.
‘ಇದು ನನ್ನ ಮೊದಲ ದುಡಿಮೆಯ ಹಣ’ - 100 ರೂ. ನೋಟಿನ ಮೇಲಿನ ಬರಹ ಹೃದಯವನ್ನೇ ತಟ್ಟಿತು! ಯಾರಿಗೆ ಸೇರಿದ್ದು ಆ ನೋಟು?
ಬೆಂಗಳೂರಿನ ರಾಘವೇಂದ್ರ ಸಿಂತ್ರೆ ಅವರು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡ ಘಟನೆ ಗಮನ ಸೆಳೆದಿದೆ. 2013ರ ತಮ್ಮ ಮೊದಲ ಗ್ಲಾಸ್ ಪೇಂಟಿಂಗ್ ಆದಾಯದ 100 ರೂಪಾಯಿ ನೋಟು ಇದೀಗ ಅವರ ಕೈ ಸೇರಿದೆ. ಈ ನೋಟು ಹತ್ತಾರು ಜನರ ಕೈ ಬದಲಾಯಿಸಿ ಬಂದಿದ್ದು, ಅದರ ಹಿಂದಿನ ವ್ಯಕ್ತಿಯನ್ನು ಪತ್ತೆ ಹಚ್ಚಿ, ಆ ನೋಟನ್ನು ಅವರಿಗೆ ಹಿಂದಿರುಗಿಸಲು ರಾಘವೇಂದ್ರ ನಿರ್ಧರಿಸಿದ್ದಾರೆ.
ಎಐ ತಂತ್ರಜ್ಞಾನದಿಂದ ರೈತರ ಭವಿಷ್ಯ ಉಜ್ವಲ: ಬಸವರಾಜ ಹೊರಟ್ಟಿ
ಬೆಂಗಳೂರು : ದೇಶದ ಬೆನ್ನೆಲುಬಾದ ನಮ್ಮ ರೈತರು ಹಿಂದಿಗಿಂತ ಈಗ ಸುಧಾರಣೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ಹೊಸ ತಂತ್ರಜ್ಞಾನ ರೈತರಿಗೆ ವರದಾನವಾಗಲಿ, ಎಐ ರೈತರ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್.ಹೊರಟ್ಟಿ ತಿಳಿಸಿದ್ದಾರೆ. ಬುಧವಾರ ವಿಧಾನೌಧದಲ್ಲಿ ಹಮ್ಮಿಕೊಂಡಿದ್ದ ರವಿಶಂಕರ್ ಬರೆದಿರುವ ‘ಫಾರ್ಮಾಸಿ ಕ್ಷೇತ್ರದ ಕಾರ್ಯ ನಿರ್ವಹಣಾ ವ್ಯವಸ್ಥೆ ಹಾಗೂ ಎಐ ಮತ್ತು ಕ್ವಾಂಟಮ್ ಸಂಯೋಜನೆ ಮತ್ತು ಅದರ ಸ್ಪರ್ಧಾತ್ಮಕ ಲಾಭಗಳ’ ಕುರಿತ ಪುಸ್ತಕಗಳಗನ್ನು ಬಿಡುಗಡೆ ಮಾತನಾಡಿದ ಅವರು, ರೈತರ ಕುರಿತು ರಾಜ್ಯದ ಜನತೆಗೆ ಮಾಹಿತಿಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ‘ಫಾರ್ಮಾಸಿ ಕ್ಷೇತ್ರದ ಕಾರ್ಯನಿರ್ವಹಣಾ ವ್ಯವಸ್ಥೆ ಹಾಗೂ ಎಐ ಮತ್ತು ಕ್ವಾಂಟಮ್ ಸಂಯೋಜನೆ ಮತ್ತು ಅದರ ಸ್ಪರ್ಧಾತ್ಮಕ ಲಾಭಗಳ ಕುರಿತ ಪುಸ್ತಕಗಳ’ ಬಿಡುಗಡೆ ಮಾಡಲಾಗಿದೆ ಎಂದರು. ನಮ್ಮಲ್ಲಿ ಕೂಲಿ ಕಾರ್ಮಿಕರು ಲಭ್ಯವಿಲ್ಲದ ಈ ಕಾಲದಲ್ಲಿ ರೈತರಿಗೆ ಈ ಹೊಸ ತಂತ್ರಜ್ಞಾನದಿಂದ ಅನುಕೂಲವಾಗಲಿದೆ. ಆ ಮೂಲಕ ನಮ್ಮ ರೈತರಿಗೆ ಅತ್ಯಾಧುನಿಕ ತಾಂತ್ರಿಕತೆ ಅನುಕೂಲ ಕಲ್ಪಿಸಲಿದೆ ಎಂದು ಬಸವರಾಜ ಹೊರಟ್ಟಿ ಹೇಳಿದರು. ಲೇಖಕ ಡಾ.ರವಿಶಂಕರ್ ಮಾತನಾಡಿ, ‘ಎಐ-ಚಾಲಿತ ಫಾರ್ಮಾ ಅನುವಂಶದಿಂದ ಮಾರುಕಟ್ಟೆಗೆ’ ಎಂಬ ಪುಸ್ತಕವು ಕೃತಕ ಬುದ್ಧಿಮತ್ತೆ ಔಷಧಶಾಸ್ತ್ರ, ಮೌಲ್ಯ ಸರಪಳಿಯನ್ನು ಹೇಗೆ ಪುನರ್ಗಟ್ಟುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನೀಡುತ್ತದೆ ಎಂದರು. ಲಕ್ಷ್ಯ ಗುರುತಿಸುವಿಕೆ ಮತ್ತು ಸೃಜನಾತ್ಮಕ ರಸಾಯನಶಾಸ್ತ್ರದಿಂದ ಪ್ರಿಕ್ಲಿನಿಕಲ್ ಮತ್ತು ಕ್ಲಿನಿಕಲ್ ಅಭಿವೃದ್ಧಿ, ಉತ್ಪಾದನೆ, ಸರಬರಾಜು ಸರಪಳಿ ಮತ್ತು ವಾಣಿಜ್ಯ ಕಾರ್ಯಗತಗೊಳಿಸುವಿಕೆ ಕುರಿತು ಏಳು ಭಾಗಗಳು ಮತ್ತು 24 ಅಧ್ಯಾಯಗಳಲ್ಲಿ ರಚಿಸಲಾಗಿದೆ. ಡೇಟಾ ಮೂಲಾಧಾರಗಳು, ಫೌಂಡೇಷನ್ ಮಾದರಿಗಳು, ಮಲ್ಟಿಮೋಡಲ್ ಮತ್ತು ಏಜೆಂಟಿಕ್ ಎಐ, ನಿಯಂತ್ರಣಶಾಸ್ತ್ರ, ನೈತಿಕತೆ ಮತ್ತು ಹೊಸ ಕಾರ್ಯನಿರ್ವಹಣಾ ಮಾದರಿಗಳನ್ನು ಒಟ್ಟಾರೆಯಾಗಿ ಫಾರ್ಮಾಸಿ ಕ್ಷೇತ್ರದ ‘ಎಐ ಕಾರ್ಯನಿರ್ವಹಣಾ ವ್ಯವಸ್ಥೆ’ಯಲ್ಲಿ ವಿವರಿಸಲಾಗಿದೆ ಎಂದು ಹೇಳಿದರು.
ವಿಧಾನಮಂಡಲದ ಸಂಪ್ರದಾಯ ಭಗ್ನಗೊಳಿಸಲು ಹೊರಟಿರುವ ಸರಕಾರ : ಸುನಿಲ್ ಕುಮಾರ್
ಬೆಂಗಳೂರು : ರಾಜ್ಯ ಸರಕಾರ ತನ್ನ ಒಳಜಗಳ ಹಾಗೂ ಹೈಕಮಾಂಡ್ ಮೆಚ್ಚಿಸುವುದಕ್ಕೆ ಕರ್ನಾಟಕದ ವಿಧಾನಮಂಡಲ ಸಂಸದೀಯ ಇತಿಹಾಸ ಹಾಗೂ ಸಂಪ್ರದಾಯವನ್ನು ಭಗ್ನಗೊಳಿಸಲು ಹೊರಟಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಟೀಕಿಸಿದ್ದಾರೆ. ಬುಧವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾಮಾನ್ಯವಾಗಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಬಳಿಕ ಕನಿಷ್ಠ ಹತ್ತು ದಿನಗಳ ಕಾಲ ಕಲಾಪ ನಡೆಸಲಾಗುತ್ತಿತ್ತು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಶಾಸಕರು ಕ್ಷೇತ್ರ ಹಾಗೂ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡುವುದು ಹಾಗೂ ಅದಕ್ಕೆ ಮುಖ್ಯಮಂತ್ರಿ ಸದನದಲ್ಲೆ ಉತ್ತರ ಕೊಡುವುದು ವಾಡಿಕೆ ಹಾಗೂ ಸದನದ ರೀತಿ ಎಂದು ಹೇಳಿದ್ದಾರೆ. ಆದರೆ, ‘ವಿಬಿ: ಜಿ ರಾಮ್ ಜಿ’ ವಿಧೇಯಕದ ಬಗ್ಗೆ ಚರ್ಚೆ ನಡೆಸಲು ವಿಶೇಷ ಅಧಿವೇಶನ ಕರೆಯುವ ನೆಪದಲ್ಲಿ ಜಂಟಿ ಅಧಿವೇಶನವನ್ನು ಸೀಮಿತಗೊಳಿಸಲಾಗಿದೆ. ಒಳಜಗಳಗಳಿಂದ ಹೈರಾಣಾಗಿರುವ ಅಧಿವೇಶನವನ್ನೂ ನಡೆಸದಷ್ಟು ಹತಾಷ ಹಾಗೂ ದುರ್ಬಲತೆಗೆ ಸರಕಾರ ಸಿಕ್ಕಿದ್ದು ನಾಡಿನ ದುರಂತ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ತರಾತುರಿಯಲ್ಲಿ ಜಂಟಿ ಅಧಿವೇಶನ ಕರೆಯುವ ಅನಿವಾರ್ಯತೆ ಏನಿತ್ತು ? ಸದನವನ್ನಾದರೂ ವ್ಯವಸ್ಥಿತವಾಗಿ ನಡೆಸುವುದು ನಿಮ್ಮ ಕರ್ತವ್ಯವಲ್ಲವೇ ? ಎಂದು ಪ್ರಶ್ನಿಸಿರುವ ಸುನಿಲ್ ಕುಮಾರ್, ವಿಬಿ: ಜಿ ರಾಮ್ ಜಿ ವಿಧೇಯಕದ ಬಗ್ಗೆ ಯಾವುದೇ ವೇದಿಕೆಯಲ್ಲಿ ಬೇಕಾದರೂ ಚರ್ಚೆ ನಡೆಸುವುದಕ್ಕೆ ಬಿಜೆಪಿ ಸಿದ್ದ. ಆದರೆ ಈ ಕಾಯ್ದೆ ವಿರುದ್ಧ ತುರ್ತಾಗಿ ನಿರ್ಣಯ ಅಂಗೀಕರಿಸಿಕೊಂಡು ರಾಜಕೀಯ ಹೋರಾಟ ಮಾಡಬೇಕೆಂಬುದೆ ಸರಕಾರದ ಉದ್ದೇಶವಾಗಿದೆ ಎಂದು ದೂರಿದ್ದಾರೆ. ಶಾಸನ ಸಭೆಯ ರೀತಿ-ರಿವಾಜುಗಳು ಕಾಂಗ್ರೆಸ್ ಹೈಕಮಾಂಡ್ ಆಶಯಕ್ಕೆ ತಕ್ಕಂತೆ ನಡೆಸುವುದು ಸರಿ ಅಲ್ಲ. ಅಧಿವೇಶನದ ಅವಧಿಯನ್ನು ವಿಸ್ತರಿಸುವ ಜತೆಗೆ ನಾಡಿನ ಜ್ವಲಂತ ವಿಚಾರಗಳ ಚರ್ಚೆಗೆ ಅವಕಾಶ ನೀಡಬೇಕೆಂದು ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.
ರಘುನಾಥ ಚ.ಹ.ಗೆ ‘ಕುವೆಂಪು ಚಿರಂತನ’, ಇಂದೂಧರ ಹೊನ್ನಾಪುರ ‘ಕುವೆಂಪು ಅನಿಕೇತನ’ ಪ್ರಶಸ್ತಿ
ಬೆಂಗಳೂರು : ಕನ್ನಡ ಸಂಘರ್ಷ ಸಮಿತಿ 2026ನೇ ಸಾಲಿಗೆ ನೀಡುವ ‘ಕುವೆಂಪು ಚಿರಂತನ’ ಪ್ರಶಸ್ತಿಗೆ ಪತ್ರಕರ್ತ ರಘುನಾಥ ಚ.ಹ. ಹಾಗೂ ‘ಕುವೆಂಪು ಅನಿಕೇತನ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ ಹಾಗೂ ‘ಕುವೆಂಪು ಯುವಕವಿ’ ಪ್ರಶಸ್ತಿಗೆ ಯುವ ಕವಯತ್ರಿ ಸಂಘಮಿತ್ರೆ ನಾಗರಘಟ್ಟ ಆಯ್ಕೆಯಾಗಿದ್ದಾರೆ. ಬುಧವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಮಿತಿ ಅಧ್ಯಕ್ಷ ಎ.ಎಸ್.ನಾಗರಾಜಸ್ವಾಮಿ, ಕುವೆಂಪು ಚಿರಂತನ ಪ್ರಶಸ್ತಿಯು ನಗದು ಪುರಸ್ಕಾರ 10ಸಾವಿರ ರೂ., ಕುವೆಂಪು ಅನಿಕೇತನ ಪ್ರಶಸ್ತಿಯು 5 ಸಾವಿರ ರೂ., ಯುವಕವಿ ಪ್ರಶಸ್ತಿಯು 2ಸಾವಿರ ರೂ. ನಗದನ್ನು ಹೊಂದಿದ್ದು, ಪುರಸ್ಕಾರದ ಜೊತೆಗೆ ಪ್ರಶಸ್ತಿ ಫಲಕ ಹಾಗೂ ಅಭಿನಂದನಾ ಪತ್ರ ಒಳಗೊಂಡಿದೆ ಎಂದು ತಿಳಿಸಿದ್ದಾರೆ. ಜ.18ರ ಬೆಳಗ್ಗೆ 10 ಗಂಟೆಗೆ ನಗರದ ಚಾಮರಾಜಪೇಟೆ, ಕಸಾಪದ ಕುವೆಂಪು ಸಭಾಂಗಣದಲ್ಲಿ ಸಮಿತಿ ಆಯೋಜಿಸಿರುವ ಕುವೆಂಪು ಹಾಗೂ ಬೇಂದ್ರೆ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಅಧ್ಯಕ್ಷತೆಯನ್ನು ಕನ್ನಡ ಹೋರಾಟಗಾರ ರಾಮಣ್ಣ ಎಚ್.ಕೋಡಿಹೊಸಹಳ್ಳಿ ವಹಿಸಲಿದ್ದು, ಪ್ರಾಧ್ಯಾಪಕ ಡಾ.ಕಾ.ವೆಂ.ಶ್ರೀನಿವಾಸಮೂರ್ತಿ ಉಪನ್ಯಾಸ ನೀಡಲಿದ್ದು, ವೈಚಾರಿಕ ಕೃತಿ ಆಯ್ಕೆ ಕುರಿತು ಕನ್ನಡ ಸಾಹಿತ್ಯ ವಿಮರ್ಶಕ ಎಚ್.ದಂಡಪ್ಪ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
Kolar | ಬಸ್-ಬೈಕ್ ಢಿಕ್ಕಿ: ಇಬ್ಬರ ಮೃತ್ಯು
ಕೋಲಾರ : ಶ್ರೀನಿವಾಸಪುರ ತಾಲೂಕಿನ ಕೂಸ್ಸಂದ್ರ ಕ್ರಾಸ್ ಬಳಿ ಚಿಂತಾಮಣಿ ಡಿಪೋದ ಕೆಎಸ್ಸಾರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವುದು ವರದಿಯಾಗಿದೆ. ಮೃತ ಬೈಕ್ ಸವಾರರನ್ನು ನಾಗರಾಜ್ (26), ಚಂದ್ರಶೇಖರ್ (24) ಎಂದು ಗುರುತಿಸಲಾಗಿದ್ದು, ಶ್ರೀನಿವಾಸ್(26) ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನ ಸವಾರರು ಗುಲ್ಲು ಕುಂಟೆಯಿಂದ ಗಂಗನಗಾರಿಪಲ್ಲಿಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಾಹನ ಹಿಂಬದಿಯಿಂದ ಗುದ್ದಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್, ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Chikmagalur | ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಬಾಳೆಹೊನ್ನೂರು ಮಾಗುಂಡಿಯ ಎಂ.ಖಾಸಿಂ ಶಿಕ್ಷೆಗೆ ಒಳಗಾದ ಆರೋಪಿ. ಈತ ಭದ್ರಾ ಸೈಟ್ ಹೆಮ್ಮಕ್ಕಿ ಗ್ರಾಮದ ಅಂಗಡಿ ಮಳಿಗೆಯಲ್ಲಿ ಆರೇಳು ವರ್ಷಗಳಿಂದ ಗುಜರಿ ವ್ಯಾಪಾರ ಮಾಡಿಕೊಂಡಿದ್ದ. ಈತ ತನ್ನ ಅಂಗಡಿಗೆ ಸಮಯ ಕಳೆಯಲೆಂದು ಬರುತ್ತಿದ್ದ 15 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಾಲಕನ ತಾಯಿ ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಳಸ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್ಸೈ ಚಂದ್ರಶೇಖರ್, ಮಹಿಳಾ ಕಾನ್ಸ್ಟೇಬಲ್ ಮೇನಕಾ, ಸಿಬ್ಬಂದಿ ಎ.ಬಿ.ಪರಮೇಶ, ಶಿವಕುಮಾರ್ ಮತ್ತು ಗಿರೀಶ್ ಅವರನ್ನು ಒಳಗೊಂಡ ತಂಡವು ತನಿಖೆ ನಡೆಸಿ ಸಾಕ್ಷ್ಯ ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ರಾಘವೇಂದ್ರ ಕುಲಕರ್ಣಿ ಅವರು ಆರೋಪಿ ಎಂ.ಖಾಸಿಂ ವಿರುದ್ಧ ಆರೋಪಗಳು ಸಾಬೀತಾದ್ದರಿಂದ 20 ವರ್ಷಗಳ ಕಠಿಣ ಶಿಕ್ಷೆ, 25 ಸಾವಿರ ರೂ. ದಂಡ, ಭಾರತೀಯ ನ್ಯಾಯ ಸಂಹಿತೆ ಕಲಂ 351(2) ರಡಿಯಲ್ಲಿ 1 ವರ್ಷ ಕಠಿಣ ಶಿಕ್ಷೆ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಪೊಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಬಿ.ಭರತ್ ಕುಮಾರ್ ಅವರು ವಾದ ಮಂಡಿಸಿದ್ದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಾರ್ವಜನಿಕ ಭಾಷಣಗಳಲ್ಲಿ ಶಿಸ್ತು ಮತ್ತು ಬಲದ ಬಗ್ಗೆ ಮಾತನಾಡಿದರೂ, ಪ್ರಯಾಣದ ವೇಳೆ ತಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುತ್ತಾರೆ. ಆರೋಗ್ಯ ಕಾರ್ಯದರ್ಶಿ ರಾಬರ್ಟ್ ಎಫ್. ಕೆನಡಿ ಜೂನಿಯರ್ ಅವರ ಪ್ರಕಾರ, ಟ್ರಂಪ್ ಪ್ರಯಾಣದಲ್ಲಿ ಪರಿಚಿತ ಫಾಸ್ಟ್ ಫುಡ್ಗಳನ್ನು ಆರಿಸಿಕೊಳ್ಳುತ್ತಾರೆ. ಆದರೂ, ಅವರ ಸ್ಥಿತಿಸ್ಥಾಪಕತ್ವ ಮತ್ತು ಶಕ್ತಿಯ ಮಟ್ಟವನ್ನು ಕೆನಡಿ ಶ್ಲಾಘಿಸಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಪತ್ರಿಕೆ ಓದು ಕಡ್ಡಾಯಗೊಳಿಸಲು ಸೂಕ್ತ ಕ್ರಮ : ಕೆ.ವಿ.ಪ್ರಭಾಕರ್
ಬೆಂಗಳೂರು : ಶಾಲಾ ಕಾಲೇಜುಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಓದುವುದು ಮತ್ತು ನೋಟೀಸ್ ಬೋರ್ಡ್ನಲ್ಲಿ ಹಾಕುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸರಕಾರದಿಂದ ಆದೇಶ ಹೊರಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಎಚ್.ಬಿ.ಮದನಗೌಡ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ಈ ಹಿಂದೆ ಶಾಲಾ ಕಾಲೇಜಿನಲ್ಲಿ ಪತ್ರಿಕೆಗಳನ್ನು ಓದುವ ಅಭ್ಯಾಸ ಇದ್ದಂತೆ ಈಗಲೂ ಮುಂದುವರಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಕಾರ್ಯದರ್ಶಿಗಳಿಗೆ ಮನವಿ ಮಾಡಲಾಗುವುದು ಎಂದರು. ಉತ್ತರ ಪ್ರದೇಶ ಸರಕಾರವು, ಆ ರಾಜ್ಯದ ಸರಕಾರಿ ಶಾಲೆಗಳಲ್ಲಿ ಪತ್ರಿಕೆ ಓದಿಸುವ ಮತ್ತು ನೋಟೀಸ್ ಬೋರ್ಡ್ನಲ್ಲಿ ಹಾಕುವುದನ್ನು ಕಡ್ಡಾಯ ಮಾಡಿರುವಂತೆ ರಾಜ್ಯದಲ್ಲಿಯೂ ಮಾಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮನವಿ ಮಾಡಿತ್ತು. ಪಠ್ಯ ಪುಸ್ತಕದಲ್ಲಿ ಪತ್ರಿಕೆಗಳ ವಿಷಯವನ್ನು ಸೇರಿಸುವ ಮೂಲಕ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಜ್ಞಾನದ ಹಸಿವನ್ನು ಹೆಚ್ಚಿಸುವ ಸಾಧ್ಯತೆಗಳಿವೆ. ಈ ಬಗ್ಗೆ ತಜ್ಞರ ಜೊತೆಗೆ ಅಧ್ಯಯನ ಮಾಡಿ, ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿಲಾಗಿದೆ.
America And Iran: ಆಂತರಿಕ ಹಿಂಸಾಚಾರ ನಡುವೆ ಅಮೆರಿಕ ದಾಳಿ ಭೀತಿ, ಇರಾನ್ ಸೇನೆಗೆ ನಡುಕ
ಇರಾನ್ ನೆಲದಲ್ಲಿ ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದ್ದು, ಭಾರಿ ದೊಡ್ಡ ಮಟ್ಟದಲ್ಲಿ ಹೋರಾಟಗಳು ನಡೆಯುತ್ತಿವೆ. ಪ್ರತಿಭಟನೆ ಕೈಮೀರಿ ಹೋಗಿರುವ ಕಾರಣಕ್ಕೆ ಕಠಿಣ ಮಾರ್ಗಗಳನ್ನು ಅನುಸರಿಸುತ್ತಾ ಇದೀಗ ಹಿಂಸೆಗೆ ತಡೆ ಹಾಕಲು ಮುಂದಾಗಿದೆ ಇರಾನ್ ಸರ್ಕಾರ. ಇಂತಹ ಸಮಯದಲ್ಲೇ ಅಮೆರಿಕದ ಕಡೆಯಿಂದ ಕೂಡ ದಾಳಿಯ ಭೀತಿ ಎದುರಾಗಿದೆ. ಹೀಗಿದ್ದಾಗಲೇ ಇರಾನ್ ಸೇನೆ ಅಲರ್ಟ್ ಆಗಿದ್ದು, ಈ ಹೊತ್ತಲ್ಲಿ ದಿಢೀರ್ ಹೊರಗಿನಿಂದ
Dharwad : ಕೇಂದ್ರ ಕಾರಾಗೃಹದಲ್ಲಿ ಕೈದಿ ಆತ್ಮಹತ್ಯೆ
ಧಾರವಾಡ : ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಈಶ್ವರಪ್ಪ ಪೂಜಾರ (46) ಆತ್ಮಹತ್ಯೆ ಮಾಡಿಕೊಂಡ ಕೈದಿ. ಈಶ್ವರಪ್ಪ ವರದಕ್ಷಿಣೆ ಕಿರುಕುಳ ಹಾಗೂ ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿ ಧಾರವಾಡ ಕೇಂದ್ರ ಕಾರಾಗೃಹ ಸೇರಿದ್ದ ಎಂದು ತಿಳಿದುಬಂದಿದೆ. ಕಾರಾಗೃಹದ ಆವರಣದಲ್ಲಿರುವ ಕೆಲಸ ಮಾಡುವ ಕಟ್ಟಡದೊಳಗೆ ಈಶ್ವರಪ್ಪನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಜೈಲು ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನಾ ಸ್ಥಳಕ್ಕೆ ಧಾರವಾಡ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಮಹಜರು ನಡೆಸಿದ್ದಾರೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಉಕ್ರೇನ್ಗೆ ಭರ್ಜರಿ ಸಾಲ, 90 ಬಿಲಿಯನ್ ಯುರೋ ಕೊಡಲು ಯುರೋಪಿಯನ್ ಒಕ್ಕೂಟ ಒಪ್ಪಿಗೆ!
ಉಕ್ರೇನ್ ಇದೀಗ ರಷ್ಯಾ ಜೊತೆಗಿನ ಯುದ್ಧದಲ್ಲಿ ಭಾರಿ ಒದ್ದಾಡುತ್ತಾ ಇದ್ದು, ಕೈಯಲ್ಲಿ ಕಾಸು ಇಲ್ಲ ಎಂಬ ಕಾರಣಕ್ಕೆ ನರಳುತ್ತಿದೆ. ಒಂದು ಕಡೆ ರಷ್ಯಾ ಸೇನೆ ಉಕ್ರೇನ್ನ ಭಾಗಶಃ ಪ್ರದೇಶಗಳನ್ನು ತನ್ನ ವಶಕ್ಕೆ ಪಡೆದಿದ್ದು, ಇನ್ನೊಂದು ಕಡೆ ಯುದ್ಧ ಮಾಡಲು ಸರಿಯಾದ ಅಸ್ತ್ರಗಳು ಇಲ್ಲದೆ ನರಳುತ್ತಿರುವ ಉಕ್ರೇನ್ ಸೈನಿಕರು ಪ್ರಾಣ ಬಿಡುತ್ತಿದ್ದಾರೆ. ಇದೇ ಸಮಯದಲ್ಲಿ ಉಕ್ರೇನ್ ಜನರಿಗೆ ಸರಿಯಾಗಿ
ಬಸವಣ್ಣ ಅವರ ಹೆಸರಿನಲ್ಲಿ ಹೊಸ ಉದ್ಯಾನ ನಿರ್ಮಾಣ : ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರಿ ಉದ್ಯಾನ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬುಧವಾರ ತೋಟಗಾರಿಕೆ ಇಲಾಖೆಯ ವತಿಯಿಂದ ನಗರದ ಲಾಲ್ಬಾಗ್ನಲ್ಲಿ ಆಯೋಜಿಸಿದ ತೇಜಸ್ವಿ ವಿಸ್ಮಯ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು-ಬರಹ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರು ಉದ್ಯಾನ ನಗರಿ ಎಂದು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದಿದೆ. ಹೀಗಾಗಿ ಈ ಉದ್ಯಾನಗಳ ನಿರ್ಮಾಣಕ್ಕೆ ಜಿಬಿಎ, ಪಾಲಿಕೆ ವತಿಯಿಂದ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದೇನೆ. ನಾನು ನಗರದ ಪಾರ್ಕ್ಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ನೋಡಿ, ಜನರ ಅಭಿಪ್ರಾಯ ಪಡೆದು ಅನೇಕ ಅಭಿವೃದ್ಧಿ ಕೆಲಸ ಕೈಗೊಳ್ಳಲು ಸೂಚಿಸಿದ್ದೇನೆ. ನಮ್ಮ ರಾಜ್ಯದಿಂದ ಹೊರ ದೇಶಗಳಿಗೆ ಪ್ರತಿ ವಾರ 17 ವಿಮಾನದಷ್ಟು ಹೂ, ತರಕಾರಿ ರಫ್ತಾಗುತ್ತಿದೆ. ಅಂತರ್ರಾಷ್ಟ್ರೀಯ ಮಟ್ಟದ ಹೂ, ತರಕಾರಿ ಮಾರುಕಟ್ಟೆ ನಿರ್ಮಿಸಲು ಮುಂದಾಗಿದ್ದೇವೆ ಎಂದು ಅವರು ತಿಳಿಸಿದರು. ಮೆಟ್ರೋ ಹಾಗೂ ಸುರಂಗದಿಂದ ಲಾಲ್ಬಾಗ್ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ. ನಾಗರೀಕರ ಸೌಲಭ್ಯಕ್ಕೆ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಬೆಂಗಳೂರು ನಗರದ ಜನಸಂಖ್ಯೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಇಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಬೇಕಾಗಿದೆ. ಎಲ್ಲಾ ಪಾರ್ಕ್ ಹಾಗೂ ಕೆರೆ ಉಳಿಸುವುದು ನಮ್ಮ ಕರ್ತವ್ಯ. ಅದಕ್ಕೆ ಅಗತ್ಯ ಕ್ರಮವನ್ನು ನಮ್ಮ ಸರಕಾರ ಕೈಗೊಳ್ಳುತ್ತಿದೆ ಎಂದು ಶಿವಕುಮಾರ್ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ವಿರುದ್ಧದ ಅವಾಚ್ಯ ಶಬ್ಧ ಬಳಸಿರುವ ಬಗ್ಗೆ ಮಾತನಾಡಿ, ‘ಲಾಲ್ಬಾಗ್ ಪವಿತ್ರವಾದ ಜಾಗ, ಇಲ್ಲಿ ಅಂತಹ ವಿಚಾರ ಚರ್ಚೆ ಬೇಡ. ಯಾರೂ ಕಾನೂನಿಗಿಂತ ದೊಡ್ಡವರಲ್ಲ. ತಪ್ಪು ಮಾಡಿದವರು ಕ್ಷಮೆ ಕೇಳಬೇಕು ಎಂದು ಸೂಚಿಸುತ್ತೇನೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುಳ್ಳು ಸುದ್ದಿ ಹರಡಿದ ಆರೋಪ; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಎಫ್ಐಆರ್
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಎಂಎಲ್ಸಿ ಜಗದೇವ ಗುತ್ತೇದಾರ್ ಅವರು ನೀಡಿರುವ ದೂರಿನ ಮೇರೆಗೆ ಪೊಲೀಸರು ಶಕುಂತಲಾ ನಟರಾಜ್ ಹಾಗೂ ಬಿಜೆಪಿ ಕರ್ನಾಟಕ ಫೇಸ್ಬುಕ್ ಹಾಗೂ ಎಕ್ಸ್ ಖಾತೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಧಾರರಹಿತ ಸುಳ್ಳು ಆರೋಪ ಮಾಡಲಾಗಿದೆ. ಯಾದಗಿರಿ ಕ್ರೀಡಾಂಗಣ ಸರಿಪಡಿಸಿ ಎಂದು ಕೇಳಿಕೊಂಡಿದ್ದಕ್ಕೆ ರಾಷ್ಟ್ರ ಮಟ್ಟದ ಕ್ರೀಡಾಪಟುವಿನ ಮೇಲೆ ಕೇಸ್ ಹಾಕಿಸಿದ ಮಹಾನುಭಾವ ಪ್ರಿಯಾಂಕ್ ಖರ್ಗೆ ಎಂದು ಬರೆದು ಸಚಿವರ ವಿರುದ್ಧ ದ್ವೇಷ ಪ್ರಚೋದಿಸಿದ್ದಾರೆ. ಇದಲ್ಲದೆ ನಿಂದನಾತ್ಮಕ ಪದ ಬಳಕೆ ಮಾಡಿದ್ದಾರೆ ಎಂದು ಜಗದೇವ್ ಗುತ್ತೇದಾರ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಂತರ್ರಾಷ್ಟ್ರೀಯ ವಾಣಿಜ್ಯ ಮೇಳ ‘ಉತ್ಪಾದನೋತರ ಕೃಷಿ-2026’ ವ್ಯವಸ್ಥಿತ ಆಯೋಜನೆಗೆ ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.6 ರಿಂದ 8ರವರೆಗೆ ನಡೆಯುವ ಅಂತರ್ ರಾಷ್ಟ್ರೀಯ ವಾಣಿಜ್ಯ ಮೇಳ ‘ಉತ್ಪಾದನೋತರ ಕೃಷಿ-2026’ ಮೇಳದಲ್ಲಿ ಯಾವುದೆ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಂತರ್ರಾಷ್ಟ್ರೀಯ ಸಿರಿಧಾನ್ಯ ಮೇಳದ ಪೂರ್ವ ಭಾವಿ ಸಿದ್ದತೆ ಸಭೆ ನಡೆಸಿದ ಸಚಿವರು ಹಲವು ಸಲಹೆ ಸೂಚನೆಗಳನ್ನು ನೀಡಿದರು. ಮೇಳದ ಉದ್ಘಾಟನೆ, ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ, ಕೇಂದ್ರ ಸರಕಾರದ ಹಲವು ಸಚಿವರು ಹಾಗೂ ರಾಜ್ಯದ ಸಚಿವರು ಪಾಲ್ಗೊಳ್ಳಲಿದ್ದು, ಶಿಷ್ಟಾಚಾರದಲ್ಲಿ ಯಾವುದೇ ಲೋಪ ಉಂಟಾಗದಂತೆ ಗಮನಹರಿಸಲು ಚಲುವರಾಯಸ್ವಾಮಿ ಸೂಚಿಸಿದರು. ಈ ಭಾರಿಯ ಮೇಳ ವಿಶೇಷವಾಗಿರುವಂತೆ ಸೂಚನೆ ನೀಡಿದ ಸಚಿವರು, 121 ಮಂದಿ ರೈತರಿಗೆ ಕೃಷಿ ಪಂಡಿತ ಪ್ರಶಸ್ತಿ ಕೊಡುವುದರ ಜೊತೆಗೆ ಮೇಳಕ್ಕೆ ಮುಂಚಿತವಾಗಿ ಅಗ್ರಿ ರನ್, ಮರೆತುಹೋದ ಖಾದ್ಯಗಳ ಪರಿಚಯ ಹಾಗೂ ಬೆಂಗಳೂರಿನ ಆಯ್ದ ಕಾಲೇಜುಗಳಲ್ಲಿ ಸಿರಿಧಾನ್ಯದಿಂದ ತಯಾರಿಸುವ ಖಾದ್ಯಗಳ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಸಿರಿಧಾನ್ಯ ಬಳಕೆ ಹಾಗೂ ಉತ್ಪಾದನೆ ಉತ್ತೆಜಿಸುವ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ದೇಶ ವಿದೇಶದ ವಿಜ್ಞಾನಿಗಳು, ತಜ್ಞರು, ಗಣ್ಯರು ಇದರಲ್ಲಿ ಪಾಲ್ಗೊಳ್ಳುವುದರಿಂದ ಎಲ್ಲ ಕಾರ್ಯಕ್ರಮಗಳು ಗುಣಾತ್ಮಕವಾಗಿ ಹಾಗೂ ರಚನಾತ್ಮಕವಾಗಿರಲಿ, ರೈತ ಸ್ನೇಹಿ, ಗ್ರಾಹಕ ಸ್ನೇಹಿ ವಾತಾವರಣ ಸೃಷ್ಟಿ ಮಾಡಿ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಿ ಎಂದು ಚಲುವರಾಯಸ್ವಾಮಿ ನಿರ್ದೇಶನ ನೀಡಿದರು. ಸಿರಿಧಾನ್ಯಗಳ ಕೃಷಿ, ಅದರ ಉತ್ಪನ್ನಗಳ ಮೌಲ್ಯ ವರ್ಧನೆ, ವಿಭಿನ್ನ ಖಾದ್ಯ ತಯಾರಿಕೆ ಬಗ್ಗೆ ರೈತರಿಗೆ, ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ದೊರೆಯುವಂತೆ ಮಾಡಿ ಪ್ರಾತ್ಯಕ್ಷಿಕೆ, ವಿಚಾರ ಸಂಕಿರಣಗಳನ್ನು ಏರ್ಪಡಿಸಿ ಎಂದು ಅವರು ಸೂಚಿಸಿದರು. ಮೇಳದ ಯಶಸ್ವಿ ಸಂಘಟನೆಗೆ ರಚಿಸಿಲಾಗಿರುವ ಉಪ ಸಮಿತಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ, ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಬೇರೆ ಜಿಲ್ಲೆಗಳಲ್ಲಿಯೂ ಪ್ರಚಾರ ಕೈಗೊಳ್ಳಬೇಕು, ಗ್ರಾಮಿಣ ರೈತರಿಗೆ ಇದರಲ್ಲಿ ಭಾಗವಹಿಸಲು ಸೂಕ್ತ ವ್ಯವಸ್ಥೆ ಮಾಡಿ, ಸೌಲಭ್ಯ ಕಲ್ಪಿಸಬೇಕು ಎಂದು ಚಲುವರಾಯಸ್ವಾಮಿ ಹೇಳಿದರು. ಕೃಷಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್ ಸಹ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಕೃಷಿ ಆಯುಕ್ತ ವೈ.ಎಸ್.ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಯು.ಪಿ.ಸಿಂಗ್, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಸೆಕಂಡರಿ ಅಗ್ರಿಕಲ್ಚರಲ್ ನಿರ್ದೇಶಕ ವೆಂಕಟರಮಣ ರೆಡ್ಡಿ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು
ಚೆನ್ನೈನಲ್ಲಿ ಸ್ವಚ್ಛತಾ ಕಾರ್ಯಕರ್ತೆ ಪದ್ಮ ಅವರು 45 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಅನ್ನು ರಸ್ತೆಯಲ್ಲಿ ಪತ್ತೆ ಮಾಡಿದರು. ಅವರು ಅದನ್ನು ಪ್ರಾಮಾಣಿಕವಾಗಿ ಪೊಲೀಸರಿಗೆ ಒಪ್ಪಿಸಿದರು. ಈ ಚಿನ್ನಾಭರಣಗಳು ನಂಗನಲ್ಲೂರು ನಿವಾಸಿ ರಮೇಶ್ ಅವರಿಗೆ ಸೇರಿದ್ದವು. ಪದ್ಮ ಅವರ ಪ್ರಾಮಾಣಿಕತೆಯನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ₹1 ಲಕ್ಷ ಬಹುಮಾನ ನೀಡಿ ಸನ್ಮಾನಿಸಿದರು. ಇದು ಜನವರಿ 13, 2026 ರಂದು ಪ್ರಕಟವಾಯಿತು.
West Bengal | ಇಬ್ಬರು ನರ್ಸ್ ಗಳಿಗೆ ನಿಫಾ ವೈರಸ್ ಪಾಸಿಟಿವ್
ಕೋಲ್ಕತಾ, ಜ. 14: ಪಶ್ಚಿಮ ಬಂಗಾಳದಿಂದ ಕಳುಹಿಸಲಾದ ಬರಾಸತ್ ಆಸ್ಪತ್ರೆಯ ಇಬ್ಬರು ನರ್ಸ್ ಗಳ ಮಾದರಿಗಳಲ್ಲಿ ನಿಫಾ ವೈರಸ್ ಇರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯ ವರದಿ ದೃಢಪಡಿಸಿದೆ. ಇದಕ್ಕೂ ಮುನ್ನ ಈ ಇಬ್ಬರು ನರ್ಸ್ ಗಳ ಮಾದರಿಗಳು ನಿಫಾ ವೈರಸ್ ಪಾಸಿಟಿವ್ ಆಗಿವೆ ಎಂಬುದು ಏಮ್ಸ್ ಕಲ್ಯಾಣಿಯ ವರದಿಯಲ್ಲಿ ತಿಳಿದುಬಂದಿತ್ತು. ನಂತರ ಮರುದೃಢೀಕರಣಕ್ಕಾಗಿ ಅವರ ಮಾದರಿಗಳನ್ನು ಪುಣೆಗೆ ಕಳುಹಿಸಲಾಗಿತ್ತು. ಪ್ರಸ್ತುತ ಇಬ್ಬರು ನರ್ಸ್ಗಳು ತಾವು ಕೆಲಸ ಮಾಡುತ್ತಿರುವ ಬರಾಸತ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಇಬ್ಬರು ನರ್ಸ್ ಗಳ ನಿಕಟ ಸಂಪರ್ಕಕ್ಕೆ ಬಂದ 120ಕ್ಕೂ ಅಧಿಕ ಜನರನ್ನು ಆರೋಗ್ಯ ಇಲಾಖೆ ಗುರುತಿಸಿದೆ. ನಿಫಾ ವೈರಸ್ ಪಾಸಿಟಿವ್ ದೃಢಪಟ್ಟ ಇಬ್ಬರು ನರ್ಸ್ ಗಳಲ್ಲಿ ಒಬ್ಬರು ಮಹಿಳೆ ಹಾಗೂ ಮತ್ತೊಬ್ಬರು ಪುರುಷರು. ನಿಕಟ ಸಂಪರ್ಕಕ್ಕೆ ಬಂದವರ ಪತ್ತೆ ಕಾರ್ಯ ಮುಂದುವರಿದಿದೆ. ನರ್ಸ್ಗಳ ಕುಟುಂಬ ಸದಸ್ಯರು ಹಾಗೂ ಆರೋಗ್ಯ ಸೇವಾ ಕಾರ್ಯಕರ್ತರು ಸೇರಿದಂತೆ ಇದುವರೆಗೆ ಸಂಪರ್ಕಕ್ಕೆ ಬಂದ 120 ಮಂದಿಯನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ಇಬ್ಬರು ವೈದ್ಯರು ಸೇರಿದಂತೆ ಕತ್ವಾದ 10 ಮಂದಿ ಹಾಗೂ 8 ವೈದ್ಯರು ಸೇರಿದಂತೆ ಬರ್ದ್ವಾನದ 38 ಮಂದಿಯನ್ನು ಮನೆಯಲ್ಲೇ ಐಸೋಲೇಷನ್ ನಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Bengaluru | ದಂಪತಿಗೆ ಚಾಕು ತೋರಿಸಿ 1 ಲಕ್ಷ ರೂ.ಸುಲಿಗೆ; ಮೂವರ ಬಂಧನ
ಬೆಂಗಳೂರು : ಆಟೋರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ದಂಪತಿ ಅಡ್ಡಗಟ್ಟಿ ಚಾಕು ತೋರಿಸಿ, ಬೆದರಿಸಿ ಅವರ ಬಳಿಯಿದ್ದ 1 ಲಕ್ಷ ರೂ.ನಗದು ಹಾಗೂ ಚಿನ್ನದುಂಗುರ ದೋಚಿ ಪರಾರಿಯಾಗಿದ್ದ ಪ್ರಕರಣದಡಿ ಮೂವರು ಆರೋಪಿಗಳನ್ನು ಇಲ್ಲಿನ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯ ವಲಗೇರಹಳ್ಳಿ ನಿವಾಸಿ ಸಿದ್ದಗಂಗಯ್ಯ ಎಂಬುವರು ನೀಡಿದ ದೂರಿನನ್ವಯ ಆರೋಪಿಗಳಾದ ಸುರೇಶ್, ಶಶಿಕುಮಾರ್ ಹಾಗೂ ಅಖಿಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿ.22ರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮಗಳ ಮನೆಗೆ ಆಟೋದಲ್ಲಿ ಹೋಗುವಾಗ ಮಾರ್ಗ ಮಧ್ಯೆ ಮೂವರು ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಬಂದು ಅಡ್ಡಗಟ್ಟಿದ್ದರು. ಚಾಕು ತೋರಿಸಿ ಹಣ ನೀಡುವಂತೆ ಬೆದರಿಸಿದ್ದರು. ಈ ವೇಳೆ, ದೂರುದಾರರ ಪತ್ನಿ ವ್ಯಾನಿಟಿ ಬ್ಯಾಗ್ನಲ್ಲಿದ್ದ 1 ಲಕ್ಷ ರೂ. ನಗದು ಹಾಗೂ ಎರಡೂವರೆ ಗ್ರಾಂ ಚಿನ್ನದುಂಗುರವನ್ನು ಸುಲಿಗೆ ಮಾಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳ ವಿರುದ್ಧ ಹಿಂದೆಯೇ ಕೊಲೆ, ದರೋಡೆ, ಹಲ್ಲೆ, ಕಳ್ಳತನ, ಸುಲಿಗೆ ಹಾಗೂ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದ ಆರೋಪದಡಿ ಹಲವು ಪ್ರಕರಣಗಳು ದಾಖಲಾಗಿವೆ. ಬಂಧಿತರ ಪೈಕಿ ಅಖಿಲ್, ಅಪರಾಧ ಕೃತ್ಯವೆಸಗುವಾಗ ಅಪ್ರಾಪ್ತನಾಗಿದ್ದರಿಂದ ಬಾಲಮಂದಿರದ ಸುಪರ್ದಿಗೆ ಪೊಲೀಸರು ಒಪ್ಪಿಸಿದ್ದರು. ಅಲ್ಲಿಂದ ಬಿಡುಗಡೆಗೊಂಡ ಬಳಿಕ ಇನ್ನಿತರ ಆರೋಪಿಗಳೊಂದಿಗೆ ಸೇರಿಕೊಂಡು ಮತ್ತೆ ಅಪರಾಧ ಕೃತ್ಯ ಎಸಗುವ ಪ್ರವೃತ್ತಿ ಮುಂದುವರೆಸಿದ್ದ ಎನ್ನಲಾಗಿದೆ. ಸದ್ಯ, ಈ ಮೂವರು ಆರೋಪಿಗಳು ಕೆಂಗೇರಿ, ಮಾದನಾಯಕನಹಳ್ಳಿ, ಪೀಣ್ಯ, ನಂದಿನಿ ಲೇಔಟ್, ಹಲಸೂರು, ಬ್ಯಾಡರಹಳ್ಳಿ ಹಾಗೂ ಕಾಮಾಕ್ಷಿಪಾಳ್ಯ ಸೇರಿದಂತೆ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಸುಲಿಗೆ ಹಾಗೂ ಕಳ್ಳತನ ಮಾಡಿದ್ದ 10 ಲಕ್ಷ ರೂ. ಮೌಲ್ಯದ ಎರಡು ಆಟೋ, ಮೂರು ದ್ವಿಚಕ್ರ ವಾಹನ, ಬೆಳ್ಳಿಯ ಸರ, ಕಡಗಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
Strike: ಸಾರಿಗೆ ಮುಷ್ಕರ ಎಚ್ಚರಿಕೆ ನೀಡಿದ ಬಿಜೆಪಿ: ₹224 ಕೋಟಿ ಪಾವತಿಸಿದ್ದೇವೆ ಎಂದ ರಾಮಲಿಂಗಾ ರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ನೌಕರರ 38 ತಿಂಗಳ ಹಿಂಬಾಕಿ ವೇತನ ನೀಡಬೇಕಿದೆ. ಶಕ್ತಿ ಯೋಜನೆ ಜಾರಿ ಬಳಿಕವು ಸಾರಿಗೆ ಇಲಾಖೆ ಲಾಭದಲ್ಲಿದ್ದಿದ್ದೇ ಆದಲ್ಲಿ ನಿವೃತ್ತ ನೌಕರರ ಬಾಕಿ ಹಣವನ್ನು ನೀಡುತ್ತಿಲ್ಲವೇಕೆ?. ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಮಾಡುವ ಪರಿಸ್ಥಿತಿದೆ ಇದೆ ಎಂದು ಬಿಜೆಪಿ ಪ್ರಸ್ತಾಪಿಸಿದೆ. ಇದಕ್ಕೆ ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಕ್ರಿಯಿಸಿ

27 C