ನವೆಂಬರ್ನಲ್ಲಿ ಆರ್.ಅಶೋಕ್, ವಿಜಯೇಂದ್ರರನ್ನು ಕೆಳಗಿಳಿಸುತ್ತಾರೆ : ಎಂ.ಲಕ್ಷ್ಮಣ್
ಮೈಸೂರು : ಕ್ರಾಂತಿ ಭ್ರಾಂತಿ ಎಲ್ಲಾ ಬಿಜೆಪಿಯಲ್ಲಿ ನಡೆಯುವುದು. ನವೆಂಬರ್ ಕೊನೆಯಲ್ಲಿ ಅಥವಾ ಡಿಸೆಂಬರ್ನಲ್ಲಿ ಆರ್.ಅಶೋಕ್ ಮತ್ತು ಬಿ.ವೈ.ವಿಜಯೇಂದ್ರ ಅವರನ್ನೇ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದರು. ನಗರದಲ್ಲಿ ಬುಧವಾರ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಏನೂ ಇಲ್ಲ. ಬಿಜೆಪಿ ಪಕ್ಷದಲ್ಲೇ ಕ್ರಾಂತಿಯಾಗಲಿದೆ. ಬಿಹಾರ ಚುನಾವಣೆ ನಂತರ ಕೆಲವು ಬದಲಾವಣೆ ಮಾಡುವುದಾಗಿ ಅಮಿತ್ ಶಾ ಅವರೇ ಹೇಳಿದ್ದಾರೆ. ಹಾಗಾಗಿ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನೇ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಐದು ವರ್ಷ ಆಡಳಿತ ನಡೆಸಿ ಎಂದು ಜನ ನಮಗೆ ಅಧಿಕಾರ ನೀಡಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉತ್ತಮ ಅಡಳಿತ ನಡೆಸುತ್ತಿದ್ದೇವೆ. 2028ಕ್ಕೂ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರಲಿದೆ. ಹಾಗಾಗಿ ನವೆಂಬರ್ ನಲ್ಲಿ ಯಾವುದೇ ಕ್ರಾಂತಿ ಇಲ್ಲ. ಕ್ರಾಂತಿ ಭ್ರಾಂತಿ ಎಲ್ಲಾ ಬಿಜೆಪಿಯಲ್ಲೇ ನಡೆಯಲಿದೆ ಎಂದರು. ಮತಗಳ್ಳತನದ ಮೂಲಕ ನರೇಂದ್ರ ಮೋದಿ ಮೂರನೇ ಬಾರಿ ಅಧಿಕಾರಕ್ಕೆ ಬಂದಿದ್ದಾರೆ. ಇವರ ಮತಗಳ್ಳತನದ ಬಗ್ಗೆ ರಾಹುಕ್ ಗಾಂಧಿ ಸಾಕ್ಷಿ ಸಮೇತ ದಾಖಲೆ ಬಿಡುಗಡೆ ಮಾಡಿದ್ದಾರೆ. ಇದು ದೇಶದ ಜನರಿಗೆ ಸ್ಪಷ್ಟವಾಗಿ ತಿಳಿಯುತ್ತಿದೆ ಎಂದು ಹೇಳಿದರು.
ಇದು ನನ್ನ ಹಳೇ ಫೊಟೋ: ಹರಿಯಾಣದಲ್ಲಿ ‘ಮತಕಳ್ಳತನ’ ಆರೋಪದ ಬಳಿಕ ಬ್ರೆಝಿಲ್ನ ಮಾಡೆಲ್ ಪ್ರತಿಕ್ರಿಯೆ!
This is my old photo: Brazilian model reacts after 'vote rigging' allegations in Haryana!
ಸಂಪುಟದಿಂದ ಝಮೀರ್ ಅಹ್ಮದ್ರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ದೂರು
ಬೆಂಗಳೂರು : ರಾಜ್ಯದ ರೈತರಿಂದ ಮೆಕ್ಕೆಜೋಳ ಖರೀದಿಸಿ ಹಣ ಕೊಡದೆ ವಂಚಿಸಿರುವ ತೆಲಂಗಾಣ ರಾಜ್ಯದ ವ್ಯಕ್ತಿಗಳ ಪರವಾಗಿ ನಿಂತಿರುವ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ದೂರು ಸಲ್ಲಿಸಿದೆ. ಜೆಡಿಎಸ್ ರಾಜ್ಯ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಎಸ್.ಪಿ. ಎಂಬವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ಬರೆದಿರುವ ಪತ್ರದಲ್ಲಿ, ರಾಜ್ಯದ ರೈತರ ಪರವಾಗಿ ನಿಂತು ಅವರಿಗೆ ನ್ಯಾಯ ಒದಗಿಸಬೇಕಾದ ಸಚಿವರು, ತೆಲಂಗಾಣ ರಾಜ್ಯದ ತಮ್ಮ ಸಂಬಂಧಿ ಅಕ್ಬರ್ ಬಿನ್ ತಬರ್ ಎಂಬವರ ಪರವಾಗಿ ನಿಂತು, ಹಣ ವಂಚನೆಗೆ ಸಂಬಂಧಿಸಿದ ದೂರಿನ ಕುರಿತು ಸಹಾಯ ಮಾಡುವಂತೆ ಪೊಲೀಸ್ ಅಧಿಕಾರಿಗೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸರಕಾರಿ ವಾಹನವನ್ನು ಅಕ್ಬರ್ ಬಿನ್ ತಬರ್ ಅವರ ಸ್ವಂತ ಉಪಯೋಗಕ್ಕೆ ನೀಡಿರುವುದು ಕಂಡು ಬಂದಿದೆ. ಸದನದಲ್ಲಿಯೂ ಈ ವಿಚಾರ ಪ್ರಸ್ತಾವವಾಗಿ, ಸ್ವತಃ ಮುಖ್ಯಮಂತ್ರಿ ಆ ವಾಹನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸೇರಿದ್ದು, ವಾಸ್ತವಾಂಶ ಪರಿಶೀಲಿಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ಇಲಾಖೆಯ ಮುಖ್ಯಸ್ಥರಿಗೆ ಸೂಚಿಸುವುದಾಗಿ ತಿಳಿಸಿದ್ದರು. ಆದರೆ, ಈ ವಿಚಾರವಾಗಿ ಇಲ್ಲಿಯವರೆಗೆ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಪ್ರದೀಪ್ ಕುಮಾರ್ ಗಮನ ಸೆಳೆದಿದ್ದಾರೆ.
ನ.7ಕ್ಕೆ ಬ್ರಾಹ್ಮಣ ಸಮುದಾಯದ ವಿವಿಧ ಯೋಜನೆಗಳಿಗೆ ಚಾಲನೆ
ಬೆಂಗಳೂರು : ರಾಜ್ಯ ಸರಕಾರದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಹಾಗೂ ಉದ್ಯಮಶೀಲತೆ ವೃದ್ದಿಸುವಂತೆ ಮಾಡಲು ಬ್ರಾಹ್ಮಣ ಸಮುದಾಯದ ಸದಸ್ಯರಿಗೆ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ, ಚಾಣಕ್ಯ ಆಡಳಿತ ತರಬೇತಿ ಸೇರಿದಂತೆ ಹಲವು ಯೋಜನೆಗಳಿಗೆ ನ.7ರಂದು ಚಾಲನೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಹೇಳಿದ್ದಾರೆ. ಬುಧವಾರ ನಗರದ ನೃಪತುಂಗ ರಸ್ತೆಯ ಮಿಥಿಕ್ ಸೊಸೈಟಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನ.7ರಂದು ಶೇಷಾದ್ರಿ ರಸ್ತೆಯ ಬಬ್ಬೂರುಕಮ್ಮೆ ಸೇವಾ ಸಮಿತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿವತಿಯಿಂದ ಆಚಾರ್ಯತ್ರಯರ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿದೆ. ಅಂದು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ, ಚಾಣಕ್ಯ ಆಡಳಿತ ತರಬೇತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮವನ್ನು ಕಂದಾಯ ಸಚಿವ ಕೃಷ್ಣಭೈರೇಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಹಿಸಲಿದ್ದಾರೆ. ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕರಾದ ವಿಶ್ವಾಸ ವೈದ್ಯ, ಯು.ಬಿ.ವೆಂಕಟೇಶ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್, ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರರ್ ಕುಮಾರ್ ಕಟಾರಿಯಾ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸನ್ಮಾನಿತರು: ಸಾಹಿತಿ, ಅನುವಾದಕಾರ ಬಿ.ಎಸ್.ಜಯಪ್ರಕಾಶ್ ನಾರಾಯಣ್, ಬಿ.ವಿ.ಆಚಾರ್ಯ, ಡಾ.ಎನ್.ಅನಂತರಾಮನ್, ಡಾ.ಶ್ರೀನಾಥ್, ಆರ್.ವಿ.ಜಾಗೀರ್ ದಾರ್, ಕ್ಯಾಪ್ಟನ್ ಗೋಪಿನಾಥ್, ವಿದ್ವಾನ್ ಬಿ.ಕೆ.ಅನಂತರಾವ್, ರಘುತ್ತೋಮ್ ಕೊಪ್ಪರ್ ವಿವಿಧ ಕ್ಷೇತ್ರ ಸಾಧಕರನ್ನು ಸನ್ಮಾನಿಸಲಾಗುತ್ತಿದೆ ಎಂದರು. ಬ್ರಾಹ್ಮಣ ಸಮುದಾಯದಲ್ಲಿ ಉದ್ಯಮಶೀಲತೆ ವೃದ್ಧಿಸುವಂತೆ ಪ್ರಸಕ್ತ ಸಾಲಿನಿಂದ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ.ಈಗಾಗಲೇ 1 ಸಾವಿರಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದು, 400 ಮಂದಿಯನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದ್ದು, ನ.7ರಂದು ನೇರ ಸಾಲ ನೀಡಲಾಗುವುದು.ಅದೇ ರೀತಿ, ಐಎಎಸ್, ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಸಮುದಾಯದ 100 ಅಭ್ಯರ್ಥಿಗಳಿಗೆ ತಲಾ 1 ಲಕ್ಷ ರೂಪಾಯಿ ಸಹಾಯ ಧನ ಸಹ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕಿ ದೀಪಾಶ್ರೀ, ನಿರ್ದೇಶಕರಾದ ಗುರುರಾಜ ವಾದಿರಾಜ ಬಳಗಾನೂರ, ಪಿ.ಶ್ರೀನಿವಾಸ ಮೂರ್ತಿ, ವೆಂಕೋಬ ರಾವ್, ಡಾ.ಜಗದೀಶ್ ಡಿ.ಆರ್, ಪಿ.ಎಂ.ಮಾಲತೇಶ್ ಸೇರಿದಂತೆ ಪ್ರಮುಖರಿದ್ದರು.
ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸಲು ಗ್ಯಾರಂಟಿ ಯೋಜನೆಗಳು ಸಹಕಾರಿ: ಡಾ.ಶಾಲಿನಿ ರಜನೀಶ್
ಬೆಂಗಳೂರು : ವಿಶ್ವ ಸಂಸ್ಥೆಯು ಗೊತ್ತು ಮಾಡಿರುವ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ. ಬುಧವಾರ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ವಿತ್ತೀಯ ಕಾರ್ಯನೀತಿ ಸಂಸ್ಥೆಯು ಆಯೋಜಿಸಿದ್ದ ‘ಸರಕಾರಿ ಗ್ಯಾರೆಂಟಿ ಯೋಜನೆಗಳ ಸಂಶೋಧನಾ ಫಲಿತಾಂಶಗಳ’ ಸಾರ್ವಜನಿಕ ಪ್ರಸರಣ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಡತನ ನಿರ್ಮೂಲನೆ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಮೊದಲನೆಯದಾಗಿದ್ದು, ಕರ್ನಾಟಕ ದೇಶದಲ್ಲಿಯೇ ಅತ್ಯಂತ ಹೆಚ್ಚಿನ ತಲಾದಾಯ ಹೊಂದಿರುವ ರಾಜ್ಯವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಇದು ಸಾಧ್ಯವಾಗಿದೆ. ಹಸಿವು ಮುಕ್ತ, ಪೌಷ್ಟಿಕ ಆಹಾರವೂ ಸುಸ್ಥಿರ ಅಭಿವೃದ್ಧಿಯ ಗುರಿಯಾಗಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಪೌಷ್ಟಿಕತೆ ಮಟ್ಟ ಸುಧಾರಿಸಿದೆ. ಯುವನಿಧಿ ಮೂಲಕ ಗುಣಮಟ್ಟದ ಶಿಕ್ಷಣವನ್ನು ಅರ್ಥಪೂರ್ಣವಾಗಿದೆ. ಕೌಶಲ್ಯ ತರಬೇತಿ ಹಾಗೂ ಹಣಕಾಸಿನ ನೆರವು ಒದಗಿಸುವ ಮೂಲಕ ಶೇ.100ರಷ್ಟು ಉದ್ಯೋಗವನ್ನು ಖಾತ್ರಿ ಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಯಲ್ಲಿ ಲಿಂಗ ಸಮಾನತೆಯೂ ಒಂದಾಗಿದೆ. ಸರಕಾರ ಮಹಿಳಾ ಆಧಾರಿತ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿರುವ ಕಾರಣ ಎರಡು ವರ್ಷಗಳಲ್ಲಿ ಮಹಿಳಾ ಸಹಭಾಗಿತ್ವ ಶೇ.37ಗೆ ಏರಿಕೆಯಾಗಿದೆ. ಮಹಿಳೆಯರಿಗೆ ಹೊಣೆಗಾರಿಕೆ ಹಾಗೂ ಸಂಪನ್ಮೂಲಗಳನ್ನು ಒದಗಿಸಿದರೆ ಇಡೀ ಕುಟುಂಬ ಹಾಗೂ ಸಮಾಜವನ್ನು ನಿಭಾಯಿಸುತ್ತಾರೆ ಎನ್ನುವುದನ್ನು ಇದು ರುಜುವಾತು ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟರು. ಚೆನ್ನೈನ ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾದ ಡಾ. ಸೌಮ್ಯ ಸ್ವಾಮಿನಾಥನ್ ಮಾತನಾಡಿ, ಗ್ಯಾರಂಟಿ ಯೋಜನೆಗಳು ಜನರನ್ನು ಸೋಮಾರಿಗಳಾಗಿ ಮಾಡುತ್ತದೆ ಎಂಬುದು ಸುಳ್ಳು. ಈ ಯೋಜನೆಗಳಿಂದ ಬರುತ್ತಿರುವ ಹಣವನ್ನು ಜನರು ಮಕ್ಕಳ ವಿದ್ಯಾಭ್ಯಾಸಕ್ಕೆ, ಆರೋಗ್ಯ ಕಾಪಾಡಿಕೊಳ್ಳಲು, ಮನೆಯ ಅಗತ್ಯ ವಸ್ತುಗಳನ್ನು ಖರೀದಿಸಲು ಬಳಸುತ್ತಿರುವುದು ಸಮೀಕ್ಷೆಯಿಂದ ಸಾಭೀತಾಗಿದೆ. ಅನ್ನ ಭಾಗ್ಯವು ಬಡಜನರ ಹಸಿವನ್ನು ನಿವಾರಿಸಿದೆ. ಯುವನಿಧಿ ಯೋಜನೆಯು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಜೊತೆಗೆ ಉದ್ಯೋಗವನ್ನು ಹುಡುಕಲು ನೆರವಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ಮತ್ತು ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ ಕುಮಾರ್ ಸಿಂಗ್, ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಉಪಾಧ್ಯಕ್ಷ ಮೆಹರೂಜ್ ಖಾನ್, ದಿನೇಶ್ ಗೂಳಿಗೌಡ ಮತ್ತಿತರರು ಇದ್ದರು. ಸಮೀಕ್ಷೆಯಲ್ಲಿ ಕಂಡುಬಂದ ಪ್ರಮುಖ ಅಂಶಗಳು: ಕಾರ್ಯಕ್ರಮದಲ್ಲಿ ಸಮೀಕ್ಷೆಯ ವರದಿಗಳನ್ನು ಬಿಡುಗಡೆ ಮಾಡಲಾಯಿತು. ಕಿಂಗ್ಸ್ ಕಾಲೇಜ್ ಲಂಡನ್ ಅವರು ಮಾಡಿರುವ ಸಮೀಕ್ಷೆಯ ಪ್ರಕಾರ ಗೃಹಲಕ್ಷ್ಮೀ ಯೋಜನೆಯ ಶೇ.99.8ರಷ್ಟು ಫಲಾನುಭವಿಗಳು ತಮಗೆ ಸರಕಾರ ನೀಡುತ್ತಿರುವ ಮಾಸಿಕ 2000 ರೂ. ನಗದು ಸಂಪೂರ್ಣವಾಗಿ ಬರುತ್ತಿದೆ ಎಂದಿದ್ದಾರೆ. ಶೇ.78ರಷ್ಟು ಫಲಾನುಭವಿಗಳು ಹಣ ಒಂದು ಅಥವಾ ಅದಕ್ಕಿಂತ ಹೆಚ್ಚು ತಿಂಗಳಷ್ಟು ವಿಳಂಬವಾಗಿ ಬರುತ್ತಿದೆ ಎಂದಿದ್ದಾರೆ. ಹಾಗೆಯೇ ಶೇ.99ರಷ್ಟು ಫಲಾನುಭವಿಗಳು ತಮಗೆ ಬರುವ ಹಣವನ್ನು ಖರ್ಚು ಮಾಡುವ ಅಧಿಕಾರ ತಮಗೇ ಇದೆ ಎಂದಿದ್ದಾರೆ. ಗೃಹಲಕ್ಷ್ಮಿ ಹಣವನ್ನು ಹೆಚ್ಚಿನ ಫಲಾನುಭವಿಗಳು ಆಹಾರ(ಶೇ.78), ಕುಟುಂಬ ನಿರ್ವಹಣೆ ವೆಚ್ಚಗಳು(ಶೇ.54), ಔಷಧಿಗಳು(ಶೇ.48) ಹಾಗೂ ಮಕ್ಕಳ ಶಿಕ್ಷಣ ವೆಚ್ಚಗಳಿಗೆ(ಶೇ.28) ಬಳಸುತ್ತಿರುವುದು ಕಂಡುಬಂದಿದೆ. ಫಲಾನುಭವಿ ಮಹಿಳೆಯರಲ್ಲಿ ಯೋಜನೆ ಜಾರಿಯ ನಂತರ ಬ್ಯಾಂಕ್ ಖಾತೆ ಹೊಂದಿದವರ ಸಂಖ್ಯೆ ಶೇ.8ರಷ್ಟು ಜಾಸ್ತಿಯಾಗಿದೆ. ಹಾಗೆಯೇ, ತಮ್ಮ ಬ್ಯಾಂಕ್ ಖಾತೆಯನ್ನು ತಾವೇ ನಿರ್ವಹಿಸುತ್ತಿರುವವರ ಸಂಖ್ಯೆ ಶೇ.15ರಷ್ಟು ಹೆಚ್ಚಳವಾಗಿದೆ. ಅನ್ನಭಾಗ್ಯ ಯೋಜನೆ: ಇಂದಿರಾ ಕಿಟ್ ನೀಡುವ ಸರಕಾರದ ಇತ್ತೀಚಿನ ನಿರ್ಧಾರ ಸೂಕ್ತ ಎಂದಿದ್ದಾರೆ. ಗೃಹ ಜ್ಯೋತಿ ಯೋಜನೆ: ಶೇ.89ರಷ್ಟು ಫಲಾನುಭವಿಗಳು ಯೋಜನೆಯಿಂದಾಗಿ ವಿದ್ಯುತ್ ಬಿಲ್ ಗಾಗಿ ಪಾವತಿಸುತ್ತಿದ್ದ ಹಣ ಉಳಿತಾಯವಾಗುತ್ತಿದೆ ಎಂದಿದ್ದಾರೆ. ಶೇ.94ರಷ್ಟು ಫಲಾನುಭವಿಗಳು ಉಳಿತಾಯದ ಹಣವನ್ನು ಕುಟುಂಬ ನಿರ್ವಹಣೆ ವೆಚ್ಚಕ್ಕಾಗಿ ಬಳಸುತ್ತಿರುವುದಾಗಿ ತಿಳಿಸಿದ್ದಾರೆ. ಶಕ್ತಿ ಯೋಜನೆ: ಶಕ್ತಿ ಉಚಿತ ಬಸ್ ಸೇವೆ ಯೋಜನೆಯಿಂದಾಗಿ ಶೇ.43.1ರಷ್ಟು ಮಹಿಳೆಯರಿಗೆ ಹಣದ ಉಳಿತಾಯ ಸಾಧ್ಯವಾಗಿದೆ. ಹೀಗೆ ಉಳಿದ ಹಣವನ್ನು ಮುಖ್ಯವಾಗಿ ಕುಟುಂಬ ನಿರ್ವಹಣೆ ವೆಚ್ಚ ಹಾಗೂ ಮಕ್ಕಳಿಗಾಗಿ ಬಳಸುತ್ತಿದ್ದಾರೆ. ಶೇ.92.9ರಷ್ಟು ಮಹಿಳೆಯರು ಪ್ರಯಾಣಕ್ಕಾಗಿ ಕುಟುಂಬದ ಮೇಲಿನ ಅವಲಂಬನೆಯ ತಗ್ಗಿದೆ. ಶೇ.10.5ರಷ್ಟು ಮಹಿಳೆಯರು ಶಕ್ತಿ ಯೋಜನೆ ಜಾರಿಯಾದ ನಂತರ ಉದ್ಯೋಗಕ್ಕೆ ತೆರಳುತ್ತಿರುವುದಾಗಿ ಹೇಳಿದ್ದಾರೆ. ಅಜೀಂ ಪ್ರೇಮ್ ಜಿ ವಿಶ್ವ ವಿದ್ಯಾಲಯದ ಅಧ್ಯಯನದ ಪ್ರಕಾರ ಗ್ಯಾರಂಟಿ ಯೋಜನೆ ಜಾರಿಗೊಂಡ ಮೇಲೆ ಮಹಿಳಾ ಪ್ರಯಾಣಿಕರ ಸಂಖ್ಯೆ ಎರಡೂವರೆ ಪಟ್ಟು ಹೆಚ್ಚಾಗಿದೆ. ಮಹಿಳೆಯರು ಹಾಗೂ ಪುರುಷ ಪ್ರಯಾಣಿಕರ ಅನುಪಾತವು 60:40 ರಷ್ಟಿದೆ. ಇದು ಮಹಿಳೆಯರಿಗೆ ಸಾರ್ವಜನಿಕ ಸಂಚಾರದ ಲಭ್ಯತೆ ಹೆಚ್ಚಾಗಿರುವುದುನ್ನು ಸೂಚಿಸುತ್ತದೆ.
ಹೆಣ್ಣಾನೆ ʼಸುಭದ್ರೆʼ ಮಾಲೀಕತ್ವ ವಿವಾದ; ಆಕ್ಷೇಪಣೆ ಸಲ್ಲಿಸಲು ಶ್ರೀಕೃಷ್ಣ ಮಠಕ್ಕೆ ಕೊನೇ ಅವಕಾಶ ನೀಡಿದ ಹೈಕೋರ್ಟ್
ಬೆಂಗಳೂರು: 'ಸುಭದ್ರೆ' ಹೆಸರಿನ ಹೆಣ್ಣಾನೆಯ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆ ಹೊನ್ನಾಳ್ಳಿಯ ಚನ್ನಬಸಪ್ಪಸ್ವಾಮಿ ಹಿರೇಕಲ್ಮಠ ಸಂಸ್ಥಾನ ಹಾಗೂ ಉಡುಪಿ ಶ್ರೀಕೃಷ್ಣ ಮಠದ ನಡುವಿನ ವಿವಾದ ಕುರಿತ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಶ್ರೀಕೃಷ್ಣ ಮಠಕ್ಕೆ ಹೈಕೋರ್ಟ್ ಕೊನೆಯ ಅವಕಾಶ ನೀಡಿದೆ. ಹೆಣ್ಣಾನೆ ಸುಭದ್ರೆಯನ್ನು ಶ್ರೀಕೃಷ್ಣಮಠಕ್ಕೆ ಸ್ಥಳಾಂತರಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) 2025ರ ಸೆಪ್ಟಂಬರ್ 10ಕ್ಕೆ ಹೊರಡಿಸಿರುವ ಆದೇಶ ಪ್ರಶ್ನಿಸಿ ಹಿರೇಕಲ್ಮಠ ಸಂಸ್ಥಾನದ ಪ್ರತಿನಿಧಿ ಎಂ.ಪಿ.ಎಂ. ಚನ್ನಬಸಯ್ಯ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಹೆಣ್ಣಾನೆ ಸುಭದ್ರೆಯ ಆರೈಕೈಯನ್ನು ಸುದೀರ್ಘ 26 ವರ್ಷಗಳ ಕಾಲ ಮಾಡಲಾಗಿದೆ. ಗಾಯಗಳು ಮಾಸದ ಕಾರಣ ಸುಭದ್ರೆಯನ್ನು ಮೊದಲು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿತ್ತು. ಅಲ್ಲಿಂದ ಹಿರೇಕಲ್ಮಠ ಸಂಸ್ಥಾನದ ಸುಪರ್ದಿಗೆ ನೀಡಲಾಯಿತು. ಈ ಮಧ್ಯೆ, ಸುಭದ್ರೆಯನ್ನು ಶ್ರೀಕೃಷ್ಣ ಮಠಕ್ಕೆ ಹಸ್ತಾಂತರಿಸುವಂತೆ ಪಿಸಿಸಿಎಫ್ ಆದೇಶ ಮಾಡಿದ್ದಾರೆ. ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶದಂತೆ 6 ಪಶು ವೈದ್ಯ ತಜ್ಞರ ತಂಡ ಸುಭದ್ರೆಯ ಆರೋಗ್ಯ ತಪಾಸಣೆ ನಡೆಸಿದ್ದು, ಹೆಣ್ಣಾನೆ ಆರೋಗ್ಯವಾಗಿದೆಯೆಂದು ವರದಿಯಲ್ಲಿ ಹೇಳಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಶ್ರೀಕೃಷ್ಣ ಮಠದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶಬೇಕು ಕೋರಿದ ಹಿನ್ನೆಯಲ್ಲಿ, ಆಕ್ಷೇಪಣೆ ಸಲ್ಲಿಸಲು ಕೊನೆಯ ಅವಕಾಶ ನೀಡುತ್ತಿರುವುದಾಗಿ ತಿಳಿಸಿದ ನ್ಯಾಯಪೀಠ, ನವೆಂಬರ್ 27ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು. ಇದೇ ವೇಳೆ, ಸುಭದ್ರೆಯನ್ನು ಆತುರವಾಗಿ ಸ್ಥಳಾಂತರ ಮಾಡದಂತೆ ಸೆಪ್ಟೆಂಬರ್ 23ರಂದು ನೀಡಿದ್ದ ಮಧ್ಯಂತರ ಆದೇಶವನ್ನು ಅರ್ಜಿಯ ಮುಂದಿನ ವಿಚಾರಣೆಯ ವರೆಗೆ ವಿಸ್ತರಿಸಿತು. ಪ್ರಕರಣವೇನು? ಹೆಣ್ಣಾನೆ ಸುಭದ್ರೆಯನ್ನು 1993ರಿಂದ 2019ರವರೆಗೆ ಉಡುಪಿ ಶ್ರೀಕೃಷ್ಣಮಠ ಆರೈಕೆ ಮಾಡುತ್ತಿತ್ತು. ನಂತರ ಅದನ್ನು ಹಿರೇಕಲ್ಮಠ ಸಂಸ್ಥಾನಕ್ಕೆ ಸ್ಥಳಾಂತರಿಸಲಾಗಿತ್ತು. ಅಲ್ಲದೇ ಹಿರೇಕಲ್ಮಠಕ್ಕೆ ಸುಭದ್ರೆಯ ಮಾಲೀಕತ್ವ ಪ್ರಮಾಣಪತ್ರ ಸಹ ನೀಡಲಾಗಿತ್ತು. ಆದರೆ, ಸುಭದ್ರೆಯನ್ನು ಉಡುಪಿ ಶ್ರೀಕೃಷ್ಣ ಮಠಕ್ಕೆ ಹಸ್ತಾಂತರಿಸಬೇಕು ಎಂದು 2025ರ ಸೆಪ್ಟೆಂಬರ್ 10ರಂದು ಆದೇಶ ಹೊರಡಿಸಿದ್ದ ಪಿಸಿಸಿಎಫ್, ಹಿರೇಕಲ್ಮಠಕ್ಕೆ ನೀಡಲಾಗಿದ್ದ ಸುಭದ್ರೆಯ ಮಾಲಿಕತ್ವದ ಪ್ರಮಾಣಪತ್ರವನ್ನೂ ರದ್ದುಪಡಿಸಿದ್ದರು. ಇದನ್ನು ಪ್ರಶ್ನಿಸಿ ಹಿರೇಕಲ್ಮಠ ಸಂಸ್ಥಾನ ಹೈಕೋರ್ಟ್ ಮೆಟ್ಟಿಲೇರಿದೆ.
ಆಪರೇಷನ್ ಸಿಂದೂರ್ ನಡೆದು ಆರು ತಿಂಗಳ ನಂತರ, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ದಾಳಿಗಳನ್ನು ನಡೆಸಲು ಸಿದ್ಧತೆ ನಡೆಸಿವೆ. ಸೆಪ್ಟೆಂಬರ್ನಿಂದ ನುಸುಳುವಿಕೆ ಮತ್ತು ಗಡಿ ದಾಟುವ ಚಟುವಟಿಕೆಗಳು ಹೆಚ್ಚಾಗಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಉಗ್ರರಿಗೆ ಸಹಾಯ ಮಾಡುತ್ತಿವೆ. ಭಾರತೀಯ ಸೇನೆ ಎಚ್ಚರಿಕೆಯಲ್ಲಿದೆ. ಚಳಿಗಾಲದಲ್ಲಿ ಉಗ್ರರ ದಾಳಿ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಹೊಸದಾಗಿ ಅಳವಡಿಸಲಾಗಿರುವ 5 ಜಾಮರ್ಗಳಿಂದ ಕೊಡಿಯಾಲಬೈಲ್ನಲ್ಲಿರುವ ಜಿಲ್ಲಾ ಕೋರ್ಟ್ ಸಂಕೀರ್ಣದ ಕಲಾಪಗಳಿಗೆ ಅಡ್ಡಿಯಾಗುತ್ತಿದೆ ಎಂಬ ಆಕ್ಷೇಪ ಹಿನ್ನೆಲೆಯಲ್ಲಿ, ಕಾರಾಗೃಹ ಹಾಗೂ ನ್ಯಾಯಾಲಯದ ಆವರಣದಲ್ಲಿನ ಮೊಬೈಲ್ ಸಿಗ್ನಲ್ ಸಾಮರ್ಥ್ಯ ಕುರಿತ ತಾಂತ್ರಿಕ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್ಗಳನ್ನು ತಕ್ಷಣವೇ ತೆರವುಗೊಳಿಸಲು ಗೃಹ ಇಲಾಖೆ, ಜೈಲು ಅಧೀಕ್ಷಕರು ಸೇರಿ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಮಂಗಳೂರು ವಕೀಲರ ಸಂಘ ಮತ್ತದರ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀಧರ ಹೊಸಮನೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿ, ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಇತ್ತೀಚೆಗೆ ಮೊಬೈಲ್ ಜಾಮರ್ಗಳನ್ನು ಅಳವಡಿಸಲಾಗಿದ್ದು, ಇದರಿಂದ, ಸುತ್ತ ಒಂದೂವರೆಯಿಂದ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿದೆ. ಕಾರಾಗೃಹದ ಒಂದು ಕಿ.ಮೀ. ಪರಿಧಿಯೊಳಗೆ ನ್ಯಾಯಾಲಯ ಸಂಕೀರ್ಣ ಹಾಗೂ ಮಂಗಳೂರು ವಕೀಲರ ಸಂಘದ ಕಚೇರಿ ಇದೆ. ಜಾಮರ್ಗಳ ಅಳವಡಿಕೆಯಿಂದ ಕೋರ್ಟ್ ಹಾಗೂ ಸಂಘದ ಕಾರ್ಯಚಟುವಟಿಕೆಗೆ ಸಮಸ್ಯೆ ಉಂಟಾಗುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಜಾಮರ್ಗಳು ಕಾರಾಗೃಹದ ಆವರಣದೊಳಗಷ್ಟೇ ಕಾರ್ಯನಿರ್ವಹಿಸಿದರೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸುತ್ತಮುತ್ತಲ ಪ್ರದೇಶದಲ್ಲೂ ಸಮಸ್ಯೆ ಎದುರಾಗಿದೆ. ಜಾಮರ್ಗಳಿಂದಾಗಿ ವಕೀಲರು, ನ್ಯಾಯಾಧೀಶರು ಹಾಗೂ ಕಕ್ಷಿದಾರರು ಕಷ್ಟ ಅನುಭವಿಸುತ್ತಿದ್ದಾರೆ. ಮೊಬೈಲ್ ನೆಟ್ವರ್ಕ್ ಹಾಗೂ ಸರ್ವರ್ ಸಮಸ್ಯೆಯಿಂದ ಸಂಪರ್ಕಗಳು ಕಡಿತಗೊಂಡು ಪರದಾಡುವಂತಾಗಿದೆ. ಜಾಮರ್ಗಳಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು. ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಒಂದು ವಾರ ಕಾಲಾವಕಾಶ ನೀಡಿತಲ್ಲದೆ, ಕಾರಾಗೃಹದ ಆವರಣದೊಳಗಿನ ವಿವಿಧ ಸ್ಥಳಗಳಲ್ಲಿ ಹಾಗೂ ಕಾರಾಗೃಹದಿಂದ ಕೋರ್ಟ್ವರೆಗೆ ಮತ್ತು ನ್ಯಾಯಾಲಯದ ವಿವಿಧ ಸ್ಥಳಗಳಲ್ಲಿ ಮೊಬೈಲ್ ಸಿಗ್ನಲ್ ಸಾಮರ್ಥ್ಯ ಎಷ್ಟಿದೆ ಎಂಬುದನ್ನು ಖಚಿತಪಡಿಸುವ ತಾಂತ್ರಿಕ ವರದಿ ಸಲ್ಲಿಸಬೇಕು. ಜಾಮರ್ಗಳಿಂದ ಬರುವ ಜಾಮಿಂಗ್ ಸಿಗ್ನಲ್ಗಳು ನ್ಯಾಯಾಲಯದಲ್ಲಿ ಮೊಬೈಲ್ ಸಿಗ್ನಲ್ಗಳ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುತ್ತವೆಯೇ ಎಂಬ ಬಗ್ಗೆಯೂ ವರದಿಯಲ್ಲಿ ವಿವರಿಸಿರಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ನವೆಂಬರ್ 18ಕ್ಕೆ ಮುಂದೂಡಿತು.
ರಾಷ್ಟ್ರಮಟ್ಟದ ಹ್ಯಾಕೋತ್ಸವ ಸ್ಪರ್ಧೆ: ಮೈಸೂರಿನ ಜೆಎಸ್ಎಸ್ಗೆ ಪ್ರಶಸ್ತಿ
ಉಡುಪಿ: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಆಯೋಜಿಸಲಾದ ರಾಷ್ಟ್ರ ಮಟ್ಟದ 30ಗಂಟೆಗಳ ಹ್ಯಾಕಥಾನ್-ಹ್ಯಾಕೋತ್ಸವ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್ಎಸ್ ಜ್ಞಾನ ಮತ್ತು ತಾಂತ್ರಿಕ ವಿದ್ಯಾಲಯದ ಕೋಡ್ ಫೋರ್ಜ್ ತಂಡವು 35000ರೂ. ನಗದು ಬಹುಮಾನದೊಂದಿಗೆ ಪ್ರಥಮ ಸ್ಥಾನ ಹಾಗೂ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಅಬ್ರಕೋಡ್ ಅಬ್ರ ತಂಡವು 25000ರೂ. ನಗದು ಬಹುಮಾನದೊಂದಿಗೆ ದ್ವಿತೀಯ ಸ್ಥಾನ ಗೆದ್ದುಕೊಂಡಿತು. ಮೈಸೂರಿನ ಶ್ರೀಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿ ನಿಂದ ಟೆಕ್4ಗುಡ್ ತಂಡ, ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಮತ್ತು ಜೆಎಸ್ಎಸ್ಟಿ ವಿಶ್ವ ವಿದ್ಯಾಲಯದಿಂದ ನ್ಯೂರಾಟ್ರಾನ್ ತಂಡ, ಬೆಂಗಳೂರಿನ ದಯಾನಂದ ಸಾಗರ್ ಇಂಜಿನಿಯರಿಂಗ್ ಕಾಲೇಜಿನ ಸೇಪಿಯಂಟ್ ಸ್ಕಾಲರ್ಸ್ ತಂಡ, ಮೂಡಬಿದ್ರಿಯ ಆಳ್ವಾಸ್ ಇಂಜಿನಿಯ ರಿಂಗ್ ಕಾಲೇಜಿನ ಫುಲ್ಸ್ಟ್ಯಾಕ್ ಆಲ್ಕೆಮಿಸ್ಟ್ ತಂಡಗಳಿಗೆ ನವೀನ ವಿನ್ಯಾಸಗಳು ಎಂಬ ವರ್ಗದಲ್ಲಿ ಪ್ರಶಸ್ತಿಯನ್ನು ನೀಡಲಾಯಿತು. ನ.4ರಂದು ಸಂಸ್ಥೆಯ ಆವರಣದಲ್ಲಿ ನಡೆದ ಸಮಾರೋಪ ಸಮಾರಂಭ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಬೆಂಗಳೂರಿನ ನಿಯೋಕ್ರಡ್ನ ತಂತ್ರಜ್ಞಾನ ವಿಭಾಗದ ಉಪಾಧ್ಯಕ್ಷ ಶಂಕರ್ ನಟೇಶ್ ಮೂರ್ತಿ ಮಾತನಾಡಿದರು. ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಅಧ್ಯಕ್ಷತೆ ವಸಿದ್ದರು. ಸೋದೆ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಕೃಷ್ಣ ಎಸ್.ಐತಾಳ್ ಮತ್ತು ಡೀನ್ ಡಾ.ನಾಗರಾಜ್ ಭಟ್ ಮತ್ತು ಕಾರ್ಯಕ್ರಮದ ವಿದ್ಯಾರ್ಥಿ ಸಂಯೋಜಕ ಸುಮೇದ್ ನಾವಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭ: ರಾಷ್ಟ್ರಮಟ್ಟದ 30 ಗಂಟೆಗಳ ಹ್ಯಾಕಥಾನ್ ಹ್ಯಾಕೋತ್ಸವವನ್ನು ನ.3ರಂದು ಫೆರ್ನಾಂಡಿಸ್ ಗ್ರೂಪ್ನ ಸಂಸ್ಥಾಪಕ ವಿಲ್ಸನ್ ಫೆರ್ನಾಂಡಿಸ್ ಉದ್ಘಾಟಿಸಿದರು. ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಡೀನ್ ಡಾ. ನಾಗರಾಜ್ ಭಟ್, ಕಾರ್ಯಕ್ರಮದ ಸಂಯೋಜಕ ಚಂದ್ರಶೇಖರ ರಾವ್ ಕುತ್ಯಾರ್ ಉಪಸ್ಥಿತರಿದ್ದರು. ದೇಶದ ವಿಧ ಕಾಲೇಜುಗಳಿಂದ ಸುಮಾರು 400 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿ ನೀಡುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್ ) ರಾಜ್ಯ ಸರಕಾರದ ಮುಂದೆ ಬುಧವಾರ ಪ್ರಸ್ತಾವ ಮುಂದಿಟ್ಟಿದೆ. ಪಥಸಂಚನಲಕ್ಕೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ಕಲಬುರಗಿ ಪೀಠದ ಸಲಹೆಯಂತೆ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿ ಬುಧವಾರ ಸಂಜೆ ಶಾಂತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಆರೆಸ್ಸೆಸ್ ಸಂಘಟನೆಯ ಪರ ವಕೀಲರು ಈ ಪ್ರಸ್ತಾವ ಮಂಡಿಸಿದ್ದು, ಇದೀಗ ಸರಕಾರ ಅನುಮತಿ ನೀಡುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ. ಶಾಂತಿಸಭೆಯಲ್ಲಿ ಕೈಗೊಂಡ ತೀರ್ಮಾನದ ಬಗ್ಗೆ ಸರಕಾರ ನ.7ರಂದು ಹೈಕೋರ್ಟ್ ಗೆ ವರದಿ ಸಲ್ಲಿಸಲಿದೆ. ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಜಿಲ್ಲಾಡಳಿತದ ಅಧಿಕಾರಿಗಳು, ಮೂಲ ರಿಟ್ ಅರ್ಜಿದಾರ ಆರೆಸ್ಸೆಸ್ ಕಲಬುರಗಿ ಜಿಲ್ಲಾ ಸಮನ್ವಯಕಾರ ಅಶೋಕ್ ಪಾಟೀಲ್, ಹಿರಿಯ ವಕೀಲ ಅರುಣ್ ಶ್ಯಾಮ್, ಕಡ್ಲೂರ್ ಸತ್ಯನಾರಾಯಣಾಚಾರ್ಯ ಮತ್ತಿತರರು ಭಾಗವಹಿಸಿದ್ದರು. ಆರೆಸ್ಸೆಸ್ ಪ್ರಸ್ತಾವ : ಉದ್ದೇಶಿತ ಆರೆಸ್ಸೆಸ್ ಪಥಸಂಚಲನವನ್ನು ನ.13 ಅಥವಾ ನ.16ರಂದು ನಡೆಸಲು ಅನುಮತಿ ನೀಡಬೇಕು. ಅಂದು ಬೇರೆ ಯಾವುದೇ ಸಂಘಟನೆಗಳಿಗೆ ಅನುಮತಿ ನೀಡಬಾರದು. ಬೇರೆ ಸಂಘಟನೆಗಳು ಅನುಮತಿ ಕೋರಿದ್ದರೆ ಅವುಗಳಿಗೆ ಬೇರೊಂದು ದಿನ ನಿಗದಿಪಡಿಸಬೇಕು. ಚಿತ್ತಾಪುರ ತಾಲೂಕಿನ 850 ಗಣವೇಷಧಾರಿಗಳು ಮಾತ್ರ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಬೇರೆ ತಾಲೂಕು ಹಾಗೂ ಜಿಲ್ಲೆಗಳಿಂದ ಕಾರ್ಯಕರ್ತರು ಪಥಸಂಚಲನದಲ್ಲಿ ಭಾಗವಹಿಸಲು ಆಸಕ್ತಿ ತೋರುತ್ತಿದ್ದರೂ ಅದಕ್ಕೆ ಅವಕಾಶ ನೀಡುತ್ತಿಲ್ಲ. ಸಂಜೆ 3 ರಿಂದ 6:30ರವರೆಗೆ ಸುಮಾರು 3.1 ಕಿ.ಮೀ. ಪಥಸಂಚಲನ ನಡೆಯಲಿದೆ. ಆದ್ದರಿಂದ, ಪಥಸಂಚಲನಕ್ಕೆ ಅನುಮತಿ ನೀಡಬೇಕು ಎಂದು ಆರೆಸ್ಸೆಸ್ ಪ್ರಸ್ತಾವ ಸಲ್ಲಿಸಿದೆ. ಪಥಸಂಚಲನವನ್ನು ಸುಸೂತ್ರವಾಗಿ ನಡೆಸಲು ಸರಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಆರೆಸ್ಸೆಸ್ ತಿಳಿಸಿದೆ.
ಕಬ್ಬಿಗೆ ಸೂಕ್ತ ದರ ನಿಗದಿ ಮಾಡುವುದು ಕೇಂದ್ರ ಸರಕಾರ : ಸಿಎಂ ಸಿದ್ದರಾಮಯ್ಯ
ಕೋಲಾರ : ಕಬ್ಬಿಗೆ ಸೂಕ್ತ ದರ ನಿಗದಿ ಮಾಡುವುದು ಕೇಂದ್ರ ಸರಕಾರವೇ ಹೊರತು ರಾಜ್ಯ ಸರಕಾರ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಎಸ್.ಎನ್.ಸಿಟಿಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ ಪುತ್ರಿ ಆರಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ, ಬಾಗಲಕೋಟೆಯಲ್ಲಿ ಕಬ್ಬು ದರ ನಿಗದಿಗೆ ರೈತರ ಹೋರಾಟ ಮಾಡುತ್ತಿದ್ದು, ಬೆಲೆ ಏರಿಕೆಯ ಅಧಿಕಾರ ಇರುವುದು ಕೇಂದ್ರ ಸರಕಾರಕ್ಕೆ ಮಾತ್ರ. ಮಹಾರಾಷ್ಟ್ರದಲ್ಲಿ ಬೆಲೆ ಜಾಸ್ತಿ ಕೊಡುತ್ತಿದ್ದಾರೆ, ಅದಕ್ಕೆ ಸಮನಾಗಿ ರಾಜ್ಯದಲ್ಲೂ ನೀಡುವ ಬೇಡಿಕೆಯಿದೆ. ಈ ಬಗ್ಗೆ ಸಚಿವರಾದ ಸತೀಶ್ ಜಾರಕಿಹೊಳಿ, ಶಿವಾನಂದ ಪಾಟಿಲ್, ತಿಮ್ಮಾಪುರ, ಎಂ.ಬಿ.ಪಾಟೀಲ್ ಅವರಿಗೆ ರೈತರೊಂದಿಗೆ ಮಾತನಾಡಲು ಹೇಳಿದ್ದೇನೆ ಎಂದರು. ಕೋಲಾರ ಜಿಲ್ಲೆಗೆ ಎತ್ತಿನಹೊಳೆ ಯೋಜನೆ ಜಾರಿಯ ವಿಚಾರ ಕುರಿತು ಮಾತನಾಡಿದ ಸಿಎಂ, 2 ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ ಮಾಡಲು ಪ್ರಯತ್ನ ಮಾಡುತ್ತೇವೆ. ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ನೀಡುವ ವಿಚಾರದ ಬಗ್ಗೆ ಸಚಿವ ಸಂಪುಟ ವಿಸ್ತರಣೆ ವೇಳೆಯಲ್ಲಿ ಅವಕಾಶ ಸಿಗಲಿದೆ ಎಂದರು. ಕೋಲಾರ - ಬೆಂಗಳೂರು ರೈಲ್ವೆ ಯೋಜನೆಗೆ ಭೂಮಿ ನೀಡುವ ವಿಚಾರ : ರೈಲ್ವೆ ಯೋಜನೆ ಜಾರಿಗೊಳಿಸಿ ಅದರ ಲಾಭ ಪಡೆಯುವುದು ಕೇಂದ್ರ ಸರಕಾರ. ಕೇಂದ್ರಸರಕಾರಕ್ಕೆ ರಾಜ್ಯದಿಂದ 4.50 ಲಕ್ಷ ಕೋಟಿ ರೂ. ತೆರಿಗೆ ಕೊಡುತ್ತೇವೆ. ಆದರೆ 1 ರೂ.ನಲ್ಲಿ ನಮಗೆ ವಾಪಾಸ್ ಬರುತ್ತಿರುವುದು 14 ರಿಂದ 15 ಪೈಸೆ ಅಷ್ಟೆ. 85 ಪೈಸೆ ತೆರಿಗೆ ದುಡ್ಡು ಅವರೇ ಇಟ್ಟುಕೊಳ್ಳುತ್ತಿದ್ದಾರೆ ಎಂದು ಸಿಎಂ ತಿಳಿಸಿದರು. ಶ್ರೀನಿವಾಸಪುರ ಕ್ಷೇತ್ರಕ್ಕೆ ಅನುದಾನ ತಾರತಮ್ಯ ಅಂತ ಶಾಸಕ ವೆಂಕಟಶಿವಾರೆಡ್ಡಿ ಕೋರ್ಟ್ ಮೊರೆ ಹೋಗಿರುವ ವಿಚಾರಕ್ಕೆ ಸಿಎಂ ಪ್ರತಿಕ್ರಿಯೆ ನೀಡಿ, ಸಮ್ಮಿಶ್ರ ಸರಕಾರದಲ್ಲಿ ಸಿಎಂ ಇದ್ದಾಗ ಎಷ್ಟು ಕೋಟಿ ರೂ.ಅನುದಾನ ಕೊಟ್ಟಿದ್ದರು?. ರಮೇಶ್ ಕುಮಾರ್ ಶಾಸಕರಾಗಿದ್ದಾಗ ಎಷ್ಟು ಅನುದಾನ ನೀಡಿದ್ದರು. ಕೇಂದ್ರ ಸರಕಾರ ಈಗ ಆಂಧ್ರ ಹಾಗು ಬಿಹಾರಕ್ಕೆ ವಿಶೇಷ ಅನುದಾನ ನೀಡಿದ್ದಾರೆ. ಆದರೆ ನಮಗೆ ಯಾಕೆ ನೀಡಲಿಲ್ಲ, ಇದು ತಾರತಮ್ಯ ಅಲ್ವಾ? ಎಂದು ಪ್ರಶ್ನಿಸಿದರು. ‘ಕಬ್ಬು ಬೆಳೆಗೆ ದರ ನಿಗದಿ ಸಂಪುಟ ಸಭೆಯಲ್ಲಿ ಚರ್ಚೆ’ ಕಬ್ಬ ಬೆಳೆಗೆ ದರ ನಿಗದಿ ಮಾಡುವ ವಿಚಾರ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದೆ. ಇದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ನ.6ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಸಕ್ಕರೆ ಸಚಿವರು ಸೇರಿದಂತೆ ಆ ಭಾಗದ ಸಚಿವರು ಕೂಡ ಚರ್ಚೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ನಿರ್ಧಾರ ಕೈಗೊಂಡರೂ ಕೇಂದ್ರ ಸರಕಾರವೇ ಕಬ್ಬಿನ ದರ ನಿಗದಿಪಡಿಸಬೇಕಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಬುಧವಾರ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಹೈದರಾಬಾದ್, ನ.5: “ಕಾಂಗ್ರೆಸ್ ಇದ್ದರೆ ಮಾತ್ರ ಮುಸ್ಲಿಮರು ಇದ್ದಾರೆ... ಕಾಂಗ್ರೆಸ್ ಇಲ್ಲದಿದ್ದರೆ ನೀವು ಏನೂ ಅಲ್ಲ” ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಜುಬಿಲಿ ಹಿಲ್ಸ್ ವಿಧಾನಸಭಾ ಉಪಚುನಾವಣೆಯ ಮುನ್ನ ನಡೆದ ಮುಸ್ಲಿಂ ಮತದಾರರ ಸಭೆಯಲ್ಲಿ ರೇವಂತ್ ರೆಡ್ಡಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಮುಸ್ಲಿಂ ಸಮುದಾಯದ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಬಿಜೆಪಿ, ಬಿಆರ್ಎಸ್ ಹಾಗೂ ವಿಎಚ್ಪಿ ಪಕ್ಷಗಳು ಈ ಹೇಳಿಕೆಯನ್ನು ಖಂಡಿಸಿದೆ. “ಕೋಮುವಾದಿ ರಾಜಕಾರಣದ ನವ ರೂಪ” ಎಂದು ಟೀಕಿಸಿವೆ. ತಮ್ಮ ಭಾಷಣದಲ್ಲಿ ಸಿಎಂ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ಸರ್ಕಾರ ಕೈಗೊಂಡ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಮುಸ್ಲಿಮರಿಗೆ ಸಹಕಾರಿಯಾಗಿದೆ. ಹಿಂದಿನ ಬಿಆರ್ಎಸ್ ಸರ್ಕಾರವು ಮುಸ್ಲಿಂ ಸಮುದಾಯದ ಹಿತಾಸಕ್ತಿಯನ್ನು ನಿರ್ಲಕ್ಷಿಸಿದೆ ಎಂದು ಟೀಕಿಸಿದರು. ಆದರೆ ರೇವಂತ್ ರೆಡ್ಡಿ ಅವರ “ಕಾಂಗ್ರೆಸ್ ಇಲ್ಲದೆ ಮುಸ್ಲಿಮರು ಏನೂ ಅಲ್ಲ” ಎಂಬ ಹೇಳಿಕೆ ಬಿಜೆಪಿ ನಾಯಕರ ಟೀಕೆಗೆ ಗುರಿಯಾಗಿದೆ. “ದಶಕಗಳಿಂದ ಕಾಂಗ್ರೆಸ್ ಸಮುದಾಯದ ವಿಭಜನೆಯ ರಾಜಕಾರಣ ನಡೆಸುತ್ತಿದೆ. ಈಗ ಸಿಎಂ ರೇವಂತ್ ರೆಡ್ಡಿಯವರ ಮಾತು ಅದಕ್ಕೆ ಸಾಕ್ಷಿ. ಜುಬಿಲಿ ಹಿಲ್ಸ್ನ ಮತದಾರರು ನವೆಂಬರ್ 11ರಂದು ಮತದಾನದ ಮೂಲಕ ಉತ್ತರ ನೀಡಲಿದ್ದಾರೆ” ಎಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್. ರಾಮಚಂದರ್ ರಾವ್ ಹೇಳಿದರು. ಬಿಜೆಪಿ ವಕ್ತಾರ ವಿನೋದ್ ಬನ್ಸಾಲ್, “ಮುಖ್ಯಮಂತ್ರಿ ಮತಗಳಿಗಾಗಿ ಮುಸ್ಲಿಮರನ್ನು ಹೆದರಿಸುತ್ತಿದ್ದಾರೆ. ಕಾಂಗ್ರೆಸ್ ಯಾವಾಗಲೂ ಮುಸ್ಲಿಂ ಸಮುದಾಯವನ್ನು ಮತಬ್ಯಾಂಕ್ ಆಗಿ ಬಳಸಿಕೊಂಡಿದೆ, ಆದರೆ ಅವರ ಅಭಿವೃದ್ಧಿಗೆ ಯಾವುದೇ ಪ್ರಯತ್ನ ಮಾಡಿಲ್ಲ” ಎಂದು ಆರೋಪಿಸಿದರು. ವಿಎಚ್ಪಿ ನಾಯಕರು ಈ ಹೇಳಿಕೆಯನ್ನು “ಅಲ್ಪಸಂಖ್ಯಾತರಲ್ಲಿ ಭಯ ಹುಟ್ಟಿಸುವ ರಾಜಕೀಯದ ತಂತ್ರ” ಎಂದು ಟೀಕಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಬಿಆರ್ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ. ರಾಮರಾವ್, “ಕಾಂಗ್ರೆಸ್ ಹುಟ್ಟುವ ಮುನ್ನ ಮುಸ್ಲಿಮರು ಇದ್ದರು. ನಾಳೆ ಕಾಂಗ್ರೆಸ್ ಕಣ್ಮರೆಯಾದರೂ ಮುಸ್ಲಿಮರು ಉಳಿಯುತ್ತಾರೆ. ಕಾಂಗ್ರೆಸ್ ನಾಯಕರು ಈ ಭ್ರಮೆಯಿಂದ ಹೊರಬರಬೇಕು” ಎಂದು ವ್ಯಂಗ್ಯವಾಡಿದ್ದಾರೆ. ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 1.3 ಲಕ್ಷ ಮುಸ್ಲಿಂ ಮತದಾರರಿದ್ದು, ಈ ಉಪಚುನಾವಣೆಯನ್ನು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಹೋರಾಟವೆಂದು ಪರಿಗಣಿಸಿದೆ. ಬಿಆರ್ಎಸ್ ನ ಮೃತ ಶಾಸಕ ಮಾಗಂಟಿ ಗೋಪಿನಾಥ್ ಅವರ ಪತ್ನಿ ಮಾಗಂಟಿ ಸುನಿತಾ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಬಿಜೆಪಿ ತನ್ನ ಹಿಂದಿನ ಅಭ್ಯರ್ಥಿ ಲಂಕಲ ದೀಪಕ್ ರೆಡ್ಡಿ ಅವರನ್ನು ಮತ್ತೆ ಕಣಕ್ಕಿಳಿಸಿದೆ. ಉಪಚುನಾವಣೆಯು ನ. 11 ರಂದು ನಡೆಯಲಿದೆ.
ಬೆಂಗಳೂರು | 150ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಬಂಧನ: 23.64 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಬೆಂಗಳೂರು : ಸುಮಾರು 150ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೊಬ್ಬನನ್ನು ಇಲ್ಲಿನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿ 23.64 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮೂಲತಃ ಮೈಸೂರಿನ ನಿವಾಸಿ ಸೈಯದ್ ಅಸ್ಲಂ ಯಾನೆ ಅಸ್ಲಂ(40) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬೇರೆ ಬೇರೆ ವಿಭಾಗದ ಪೊಲೀಸ್ ಠಾಣೆಗಳಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೈಯದ್ ಅಸ್ಲಂನನ್ನು ಪತ್ತೆ ಹಚ್ಚಲು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ವಿ.ಜೆ.ಸಜೀತ್ ಅವರು ಪೊಲೀಸರ ವಿಶೇಷ ತಂಡಗಳನ್ನು ರಚಿಸಿದ್ದರು. ಅದರಂತೆ ಈ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಿ ಮಾಹಿತಿಗಳನ್ನು ಕಲೆಹಾಕಿ, ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದ ಮೇಲೆ ಈಗಾಗಲೇ ಬೆಂಗಳೂರು ನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ಮಂಡ್ಯ, ಶಿವಮೊಗ್ಗ, ದಾವಣಗೆರೆ, ನಂಜನಗೂಡು, ಕನಕಪುರ ಸೇರಿದಂತೆ ಇನ್ನೂ ಹಲವೆಡೆ ರಾತ್ರಿ ವೇಳೆ ಮನೆಗಳ್ಳತನ ಮಾಡಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರ ಬಂದಿರುವ ಆರೋಪಿ ಸೈಯದ್ ಅಸ್ಲಂ ಎಂಬುವನನ್ನು ಬಂಧಿಸಿವೆ. ಆರೋಪಿಯನ್ನು ಸುದೀರ್ಘ ವಿಚಾರಣೆ ಒಳಪಡಿಸಿ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ 22.80 ಲಕ್ಷ ರೂ. ಬೆಲೆ ಬಾಳುವ 120 ಗ್ರಾಂ ಚಿನ್ನಾಭರಣಗಳು, 4 ಕೆ.ಜಿ. 292 ಗ್ರಾಂ ಬೆಳ್ಳಿ ವಸ್ತುಗಳು, 2 ಮೊಬೈಲ್, 3 ಕೈಗಡಿಯಾರ ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಬಂಧನದಿಂದ ವಿದ್ಯಾರಣ್ಯಪುರ 2, ಬಾಗಲಗುಂಟೆ 1 ಹಾಗೂ ಸೋಲದೇವನಹಳ್ಳಿಯ 3 ಪ್ರಕರಣಗಳು ಪತ್ತೆಯಾಗಿವೆ ಎಂದು ವಿದ್ಯಾರಣ್ಯಪುರ ಠಾಣೆ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ಪ್ರಕರಣಗಳು, ಮೈಸೂರಿನ ಮಂಡಿ, ಹುಬ್ಬಳ್ಳಿಯ ವಿದ್ಯಾನಗರ, ಹೊಸಕೋಟೆ, ದಾವಣಗೆರೆಯ ಹೊನ್ನಾಳ್ಳಿ, ರಾಣೆಬೆನ್ನೂರು, ಬಾಣವಾರ, ಶಿಗ್ಗಾಂವ್ ಠಾಣೆಗಳಲ್ಲಿ ತಲಾ 1, ಶಿವಮೊಗ್ಗದ 29 ವಿವಿಧ ಪೊಲೀಸ್ ಠಾಣೆಗಳಲ್ಲಿ, ಕೆ.ಆರ್.ನಗರ, ಸಾಲಿಗ್ರಾಮ ತಲಾ 1, ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ 3, ಕಡೂರು ಪೊಲೀಸ್ ಠಾಣೆಯಲ್ಲಿ 4, ಚಿಕ್ಕಮಗಳೂರು 2 ಪ್ರಕರಣಗಳು ಸೇರಿದಂತೆ ಒಟ್ಟು 150ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈ ಆರೋಪಿಯು ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಾಗರ | ಬಾಲಕಿಯ ಗರ್ಭಪಾತ ಮಾಡಿದ ಆರೋಪ; ಸರಕಾರಿ ವೈದ್ಯೆ ಸೇರಿ 9 ಮಂದಿಯ ವಿರುದ್ಧ ಪ್ರಕರಣ ದಾಖಲು
ಸಾಗರ : ಬಾಲಕಿಯ ಗರ್ಭಪಾತ ಮತ್ತು ಪೊಕ್ಸೊ ಪ್ರಕರಣವನ್ನು ಗಮನಕ್ಕೆ ತರದ ಸರಕಾರಿ ವೈದ್ಯೆ ಸೇರಿದಂತೆ 9 ಜನರ ವಿರುದ್ಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಬೆನಕ ಪ್ರಸಾದ್, ಸರಕಾರಿ ಪ್ರಸೂತಿ ತಜ್ಞೆ ಡಾ.ಪ್ರತಿಮಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಯ ಗರ್ಭಪಾತ ಮಾಡಿದ್ದಲ್ಲದೆ ಪೊಕ್ಸೊ ಪ್ರಕರಣವನ್ನು ಪೊಲೀಸರ ಗಮನಕ್ಕೆ ತಾರದ ಹಿನ್ನೆಲೆಯಲ್ಲಿ ಆರೋಪಿಯನ್ನಾಗಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದರು. ಬಾಲಕಿಯ ಗರ್ಭಪಾತ ಪ್ರಕರಣದಲ್ಲಿ ಮಧ್ಯವರ್ತಿಗಳಾಗಿದ್ದ ಕುಮಾರ್, ದೂಗೂರು ಪರಮೇಶ್ವರ್ ಅವರ ಮೇಲೂ ದೂರು ದಾಖಲಿಸಲಾಗಿದೆ. ಅಲ್ಲದೇ, ಚಾಂದಿನಿ ಆಸ್ಪತ್ರೆಯ ವೈದ್ಯರೊಬ್ಬರ ಮೇಲೂ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿದ್ದು, ಇದುವರೆಗೂ ವೈದ್ಯರು, ಮಧ್ಯವರ್ತಿಗಳನ್ನು ಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಕೃತ್ಯ ನಡೆದ ಖಾಸಗಿ ಆಸ್ಪತ್ರೆಯ ಪಾತ್ರ ಎಷ್ಟಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ನಂತರವಷ್ಟೇ ಆ ಖಾಸಗಿ ಆಸ್ಪತ್ರೆ ಮೇಲೆ ದೂರು ದಾಖಲಿಸುವುದರ ಬಗ್ಗೆ ಕ್ರಮವಹಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸಾಗರದ ಅಣಲೆಕೊಪ್ಪದ ವಿದ್ಯಾರ್ಥಿಯನ್ನು ಬಂಧಿಸಿ, ನ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕೋರಲಾಗಿದೆ. ಈತ ಅಪ್ರಾಪ್ತ ಅಲ್ಲ. ಆರೋಪಿ ಜತೆಗೆ ಆರೋಪಿಯ ತಂದೆ-ತಾಯಿ ಸೇರಿದಂತೆ ಬಾಲಕಿಯ ತಂದೆ-ತಾಯಿ ಮೇಲೂ ಪೊಕ್ಸೊ ಪ್ರಕರಣ ದಾಖಲಿಸಲಾಗಿದೆ. ಇದೇ ಪ್ರಕರಣದಲ್ಲಿ ಇನ್ನೂ ಹಲವರು ಇರುವ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ಭಾರತ ‘ಎ’ ತಂಡಕ್ಕೆ ತಿಲಕ್ ವರ್ಮಾ ನಾಯಕ
ಹೊಸದಿಲ್ಲಿ, ನ.5: ದಕ್ಷಿಣ ಆಫ್ರಿಕಾ ‘ಎ’ ತಂಡದ ವಿರುದ್ಧ ರಾಜ್ಕೋಟ್ನಲ್ಲಿ ನ.13ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ‘ಎ’ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಸ್ಥಾನ ಪಡೆದಿಲ್ಲ. ತಿಲಕ್ ವರ್ಮಾ ಭಾರತದ ‘ಎ’ ತಂಡದ ನಾಯಕನಾಗಿದ್ದು, ಋತುರಾಜ್ ಗಾಯಕ್ವಾಡ್ ಉಪ ನಾಯಕನಾಗಿದ್ದಾರೆ. ತಿಲಕ್ ಹಾಗೂ ಗಾಯಕ್ವಾಡ್ ಜೊತೆಗೆ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್ ಹಾಗೂ ಇಶಾನ್ ಕಿಶನ್ ತಂಡದಲ್ಲಿರುವ ಪ್ರಮುಖ ಬ್ಯಾಟರ್ಗಳಾಗಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಹರ್ಷಿತ್ ರಾಣಾ,ಪ್ರಸಿದ್ಧ ಕೃಷ್ಣ ಹಾಗೂ ಅರ್ಷದೀಪ ಸಿಂಗ್ ಅವರಿದ್ದಾರೆ. *ಏಕದಿನ ಸರಣಿಗೆ ಭಾರತ ‘ಎ’ ತಂಡ: ತಿಲಕ್ ವರ್ಮಾ(ನಾಯಕ), ಋತುರಾಜ್ ಗಾಯಕ್ವಾಡ್(ಉಪ ನಾಯಕ), ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಇಶಾನ್ ಕಿಶನ್(ವಿಕೆಟ್ ಕೀಪರ್), ಆಯುಷ್ ಬದೋನಿ, ನಿಶಾಂತ ಸಿಂಧು, ವಿಪ್ರಜ್ ನಿಗಮ್, ಮಾನವ್ ಸುಥರ್, ಹರ್ಷಿತ್ ರಾಣಾ, ಅರ್ಷದೀಪ ಸಿಂಗ್, ಪ್ರಸಿದ್ಧ ಕೃಷ್ಣ, ಖಲೀಲ್ ಅಹ್ಮದ್, ಪ್ರಭ್ಸಿಮ್ರನ್ ಸಿಂಗ್(ವಿಕೆಟ್ ಕೀಪರ್).
ಆರ್ಸಿಬಿ ಫ್ರಾಂಚೈಸಿ ಮಾರಾಟಕ್ಕಿದೆ!
ಮಾರ್ಚ್ 2026ರೊಳಗೆ ಹೊಸ ಮಾಲೀಕರ ಸಾಧ್ಯತೆ; ಶೇರು ಮಾರುಕಟ್ಟೆಗೆ ಅಧಿಕೃತ ಮಾಹಿತಿ
ವಾರದ ಅಂತರದಲ್ಲಿ ನಡೆಯಲಿವೆ ಮಲ್ಲೇಶ್ವರ, ಬಸವನಗುಡಿ ಕಡಲೆಕಾಯಿ ಪರಿಷೆ: ದಿನಾಂಕ ಯಾವುದು? ಗಮನಿಸಬೇಕಾದ ಅಂಶವೇನು?
ಪ್ರತಿ ವರ್ಷದಂತೆ, ಬೆಂಗಳೂರಿನಲ್ಲಿ ಈ ಬಾರಿಯೂ ಎರಡು ಕಡಲೆಕಾಯಿ ಪರಿಷೆಗಳು ಒಂದರ ಹಿಂದೊಂದರಂತೆ ನಡೆಯಲಿವೆ. ಮೊದಲನೆಯದಾಗಿ, ನ. 8ರಿಂದ 10ರವರೆಗೆ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ನಡೆದರೆ, ನ. 17ರಿಂದ 21ರವರೆಗೆ ಐತಿಹಾಸಿಕವಾದ ಬಸವನಗುಡಿ ಕಡಲೆಕಾಯಿ ಪರಿಷೆ ನಡೆಯಲಿದೆ. ಇವುಗಳಲ್ಲಿ ಯಾವ ಪರಿಷೆ ಇದೇ ಮೊದಲ ಬಾರಿಗೆ 5 ದಿನಗಳವರೆಗೆ ನಡೆಯಲಿದೆ, ಈ ಬಾರಿಯ ಕಡಲೆ ಪರಿಷೆಗಳಿಗಾಗಿ ಸರ್ಕಾರ ನೀಡಿರುವ ವಿಶೇಷವಾದ ಮಾರ್ಗಸೂಚಿಯೊಂದಿದ್ದು ಅದು ಏನು ಎಂಬುದರ ಮಾಹಿತಿ ಇಲ್ಲಿದೆ.
ಬಿಹಾರ ಚುನಾವಣೆಗೆ ಮುನ್ನ ಮುಂಗೇರ್ನಲ್ಲಿ ಜನ ಸುರಾಜ್ ಅಭ್ಯರ್ಥಿ ಬಿಜೆಪಿ ಸೇರ್ಪಡೆ
ಪಾಟ್ನಾ (ಪಿಟಿಐ): ಬಿಹಾರದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಮುಂಗೇರ್ ಕ್ಷೇತ್ರದ ಜನ ಸುರಾಜ್ ಪಕ್ಷದ ಅಭ್ಯರ್ಥಿ ಸಂಜಯ್ ಸಿಂಗ್ ಬುಧವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಿಹಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಜಯ್ ಸಿಂಗ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ಬಿಹಾರವು ಅಭಿವೃದ್ಧಿಯ ದಾರಿಯಲ್ಲಿ ವೇಗವಾಗಿ ಸಾಗುತ್ತಿದೆ. ಎನ್ಡಿಎ ಆಡಳಿತದಲ್ಲಿ ರಾಜ್ಯ ಇನ್ನಷ್ಟು ಪ್ರಗತಿ ಸಾಧಿಸಲಿದೆ ಎಂಬ ವಿಶ್ವಾಸ ನನ್ನಲ್ಲಿದೆ,” ಎಂದು ಹೇಳಿದರು. ಎನ್ಡಿಎ ಮೈತ್ರಿ ಮುಂಬರುವ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವನ್ನು ಸಿಂಗ್ ವ್ಯಕ್ತಪಡಿಸಿದರು.
ಉಪ್ಪಿನಂಗಡಿ | ರಾಶಿದ್ ಜೌಹರಿಗೆ ಹಾರೂನಿ ಬಿರುದು
ಅಜ್ಮೀರ್ ನಲ್ಲಿ ನಡೆದ ಸಮಾರಂಭದಲ್ಲಿ ಎರಡನೇ ರ್ಯಾಂಕ್ ಪ್ರದಾನ
ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು: ಡಾ.ಗಣೇಶ್ ನಾಯಕ್
ಉಡುಪಿ: ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದ ಮೇಲಿನ ಅಭಿರುಚಿ ವಿದ್ಯಾರ್ಥಿಗಳಿಗೆ ಇದ್ದರೆ ಮಾತ್ರ ನಮ್ಮ ನಾಡಿನ ಭಾಷೆ ಉಳಿಯಲು ಸಾಧ್ಯ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಕೇವಲ ಸಂಘ, ಸಂಸ್ಥೆಗಳ ಕಾರ್ಯ ಎಂದು ಭಾಸದೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಸಮಾಜ ಕಾರ್ಯ ಉಪನ್ಯಾಸಕ ಮತ್ತು ಬರಹಗಾರ ಡಾ.ಗಣೇಶ್ ಪ್ರಸಾದ್ ನಾಯಕ್ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಮತ್ತು ಡಾ.ಜಿ.ಶಂಕರ್ ಸರಕಾರಿ ಮಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ’ಕನ್ನಡ ಡಿಂಡಿಮ’ ಪ್ರಯುಕ್ತ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಮತ್ತು ಯುವ ಪ್ರತಿಭೆಗಳಿಗೆ ನನ್ನ ನೆಚ್ಚಿನ ಸಾಹಿತಿ, ಆಶುಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಮಾತನಾಡಿ, ಡಾ.ಶಿವರಾಮ ಕಾರಂತರು ಮತ್ತು ಅವರ ಚಿಂತನೆಗಳು ಉಡುಪಿ, ದಕ್ಷಿಣ ಕನ್ನಡಕ್ಕೆ ಮಾತ್ರ ಸೀಮಿತವಾಗಬಾರದು. ಕಾರಂತರು ಕನ್ನಡದ ಆಸ್ತಿ, ರಾಜ್ಯದ ಉದ್ದಗಲಕ್ಕೂ ಅವರ ಚಿಂತನೆಗಳು ತಲುಪಬೇಕಾಗಿದೆ ಎಂಬ ತಿಳಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಸೋಜನ್ ಕೆ.ಜಿ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ.ಶ್ರೀಮತಿ ಅಡಿಗ ಮತ್ತು ಡಾ.ಶಿವರಾಮ ಕಾರಂತ ಟ್ರಸ್ಟ್ ಸದಸ್ಯರಾದ ಜಿ.ಎಂ.ಶರೀಫ್ ಹೂಡೆ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನ ಸ್ವಾಗತಿಸಿದರು. ಕನ್ನಡ ಭಾಗದ ಪ್ರಾಧ್ಯಪಕ ಡಾ.ಪ್ರಸನ್ನ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟ್ ಸದಸ್ಯ ಸತೀಶ್ ಕೊಡವೂರು ವಂದಿಸಿದರು.
‘ರಾಜ್ಯದಲ್ಲಿ ಹೂಡಿಕೆ’ ಭಾರತ್ ಫೋರ್ಜ್ ಜತೆ ಸಚಿವ ಎಂ.ಬಿ.ಪಾಟೀಲ್ ಮಾತುಕತೆ
ಬೆಂಗಳೂರು : ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಭಾರತ್ ಫೋರ್ಜ್ ಕಂಪನಿಯ ಉಪಾಧ್ಯಕ್ಷ ಮತ್ತು ಜಂಟಿ ವ್ಯವಸ್ಥಾಪಕ ನಿರ್ದೇಶಕ ಅಮಿತ್ ಕಲ್ಯಾಣಿ ಅವರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಭೇಟಿಯಾಗಿ, ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅಮಿತ್ ಕಲ್ಯಾಣಿ ಅವರು, ತಮ್ಮ ಕಂಪನಿಯ ಸದ್ಯದ ಕಾರ್ಯ ಚಟುವಟಿಕೆಗಳು, ಮುಂದಿನ ಕಾರ್ಯತಂತ್ರಗಳು, ಉತ್ಪಾದನಾ ಸಾಮಥ್ರ್ಯ ಹೆಚ್ಚಳ ಮತ್ತು ಘಟಕಗಳ ವಿಸ್ತರಣೆ, ಅಮೆರಿಕನ್ ಆ್ಯಕ್ಸೆಲ್ ಅಂಡ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯ ಸ್ವಾಧೀನ ಮುಂತಾದವುಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಭಾರತ್ ಫೋರ್ಜ್ ಕಂಪನಿಯು ಫೋಜಿರ್ಂಗ್ ಮತ್ತು ಪ್ರಿಸಿಷನ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಪ್ರಪಂಚದ ಬೃಹತ್ ಕಂಪನಿಗಳಲ್ಲಿ ಒಂದಾಗಿದೆ. ಸಚಿವರು, ಕಲ್ಯಾಣಿ ಅವರಿಗೆ ರಾಜ್ಯದ ಹೊಸ ಕೈಗಾರಿಕಾ ನೀತಿ, ಇಲ್ಲಿನ ಉದ್ಯಮ ಪರಿಸರ, ಪ್ರೋತ್ಸಾಹನಾ ಭತ್ತೆಗಳು ಮುಂತಾದವುಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿ, ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅಮಿತ್ ಕಲ್ಯಾಣಿ ಅವರು ಹೆಸರಾಂತ ಉದ್ಯಮಿಯಾಗಿದ್ದ ಬಾಬಾ ಕಲ್ಯಾಣಿ ಅವರ ಪುತ್ರರಾಗಿದ್ದಾರೆ. ರಾಜ್ಯ ಸರಕಾರದ ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮುಂತಾದವರಿದ್ದರು.
2026ರ ತಮಿಳುನಾಡು ವಿಧಾನಸಭೆ ಚುನಾವಣೆ; ಟಿವಿಕೆ ಮತ್ತು ಡಿಎಂಕೆ ನಡುವೆ ಮಾತ್ರ ಸಮರ ಎಂದ ನಟ ವಿಜಯ್
ನಟ-ರಾಜಕಾರಣಿ ವಿಜಯ್ ಅವರು 2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ತಮ್ಮ ಟಿವಿಕೆ ಮತ್ತು ಆಡಳಿತಾರೂಢ ಡಿಎಂಕೆ ನಡುವಿನ ನೇರ ಹಣಾಹಣಿ ಎಂದು ಘೋಷಿಸಿದ್ದಾರೆ. ಪಕ್ಷದ ಮಹಾಸಭೆಯಲ್ಲಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದ್ದು, ಕರೂರು ದುರಂತದ ಕುರಿತು ಸರ್ಕಾರದ ತನಿಖಾ ಕ್ರಮವನ್ನು ಅವರು ತೀವ್ರವಾಗಿ ಟೀಕಿಸಿದ್ದಾರೆ. ಎಲ್ಲಾ ಅಡೆತಡೆಗಳನ್ನು ಮೀರಿ 2026ರಲ್ಲಿ ಗೆಲುವು ನಮ್ಮದೇ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರ ಉಕ್ರೇನ್ ನಗರ ಪ್ರವೇಶಿಸಿದ ರಶ್ಯ ಪಡೆಗಳು: ವರದಿ
ಮಾಸ್ಕೋ, ನ.5: ಉತ್ತರ ಉಕ್ರೇನ್ ನ ಆಯಕಟ್ಟಿನ ಪೊಕ್ರೋವ್ಸ್ಕ್ ನಗರದೊಳಗೆ ರಶ್ಯದ ಪಡೆಗಳು ಪ್ರವೇಶಿಸಿದ್ದು ನಗರದೊಳಗಿದ್ದ ಉಕ್ರೇನ್ ನ ಪಡೆಗಳು ಹಿಮ್ಮೆಟ್ಟಿವೆ ಎಂದು ರಶ್ಯ ಬುಧವಾರ ಹೇಳಿದೆ. ಅತ್ಯಂತ ಆಯಕಟ್ಟಿನ ಮತ್ತು ಕಾರ್ಯತಂತ್ರದ ದೃಷ್ಟಿಯಿಂದ ಅತೀ ಪ್ರಮುಖ ನಗರವಾದ ಪೊಕ್ರೋವ್ಸ್ಕ್ನಲ್ಲಿ ತನ್ನ ಪಡೆಗಳಿಗೆ ಕಷ್ಟದ ಪರಿಸ್ಥಿತಿ ಎದುರಾಗಿದೆ ಎಂದು ಉಕ್ರೇನ್ ದೃಢಪಡಿಸಿದೆ. ಆದರೆ ತನ್ನ ಪಡೆ ನಗರದಿಂದ ಹಿಂದೆ ಸರಿಯುತ್ತಿಲ್ಲ ಎಂದು ಪ್ರತಿಪಾದಿಸಿದೆ. ಪೂರ್ವ ಉಕ್ರೇನ್ನ ಡೊನ್ಬಾಸ್ ಪ್ರಾಂತಕ್ಕೆ ಪ್ರವೇಶ ದ್ವಾರ ಎನಿಸಿರುವ ಈ ನಗರವನ್ನು ವಶಕ್ಕೆ ಪಡೆಯಲು ರಶ್ಯ ಸುಮಾರು ಒಂದು ವರ್ಷದಿಂದ ನಿರಂತರ ಪ್ರಯತ್ನ ಮುಂದುವರಿಸಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣಕ್ಕೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ 2024-25 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ ಕೋರ್ಸ್ಗಳಿಗೆ ರೂ.50,000 - ರೂ.5,00,000ದವರೆಗೆ ನೀಡಲಾಗುತ್ತದೆ. ನಿಗಮದ ಅರಿವು(ರಿನ್ಯೂವಲ್) ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ kmdconline.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ 12% ರಷ್ಟು ಆನ್ಲೈನ್ ಮುಖಾಂತರ ಮಾತ್ರ ಪಾವತಿಸಬೇಕಾಗಿರುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರೆ ದಾಖಲಾತಿಗಳನ್ನು ನಗರದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8277799990 ಮತ್ತು ನಿಗಮದ ವೆಬ್ಸೈಟ್ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.
ಮೆಕ್ಸಿಕೋ ಅಧ್ಯಕ್ಷೆಯನ್ನು ಚುಂಬಿಸಲು ಯತ್ನಿಸಿದ ವ್ಯಕ್ತಿ: ವೀಡಿಯೊ ವೈರಲ್
ಮೆಕ್ಸಿಕೋ ಸಿಟಿ, ನ.5: ಮೆಕ್ಸಿಕೋ ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೆಕ್ಸಿಕೋದ ಅಧ್ಯಕ್ಷೆ ಕ್ಲಾಡಿಯಾ ಶೀನ್ಬಾಮ್ ಅವರನ್ನು ವ್ಯಕ್ತಿಯೊಬ್ಬ ತಬ್ಬಿಕೊಳ್ಳಲು ಮತ್ತು ಚುಂಬಿಸಲು ಪ್ರಯತ್ನಿಸಿದ ಘಟನೆ ಮಂಗಳವಾರ ವರದಿಯಾಗಿದ್ದು ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮೆಕ್ಸಿಕೋ ನಗರದಲ್ಲಿ ಅಧ್ಯಕ್ಷೆ ಬೆಂಬಲಿಗರು ಮತ್ತು ಸ್ಥಳೀಯರನ್ನು ಭೇಟಿಯಾಗಿ ಮಾತನಾಡುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಅವರ ಭುಜದ ಮೇಲೆ ಕೈ ಇರಿಸಿ ಅವರನ್ನು ತಬ್ಬಿಕೊಂಡು ಚುಂಬಿಸಲು ಪ್ರಯತ್ನಿಸಿದ್ದಾನೆ. ಆಗ ಅಧ್ಯಕ್ಷೆ ಪ್ರಸಂಗಾವಧಾನತೆ ತೋರಿ ಆ ವ್ಯಕ್ತಿಯಿಂದ ದೂರ ಸರಿಯಲು ಪ್ರಯತ್ನಿಸಿದ್ದು ಅವರ ಭದ್ರತಾ ತಂಡ ಆತನನ್ನು ಪಕ್ಕಕ್ಕೆ ಎಳೆದಿದೆ. ಈ ವೀಡಿಯೊ ವೈರಲ್ ಆಗಿದ್ದು ಅಧ್ಯಕ್ಷರ ಭದ್ರತಾ ಲೋಪದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.
ಬೀದರ್ | ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
ಬೀದರ್ : ಡಿಜಿಟಲ್ ಖಾತೆ ಮಾಡಲು ಲಂಚ ಪಡೆಯುವಾಗ ಪಿಡಿಒ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಔರಾದ್ ತಾಲೂಕಿನ ಧೂಪತಮಹಾಗಾಂವ್ ಪಂಚಾಯತಿಯಲ್ಲಿ ನಡೆದಿದೆ. ಔರಾದ್ ತಾಲೂಕಿನ ಧೂಪತಮಹಾಗಾಂವ್ ಪಂಚಾಯತ್ ಪಿಡಿಒ ಅನಿತಾ ರಾಠೋಡ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಅನಿತಾ ರಾಠೋಡ್ ತಮ್ಮ ಪತಿಯ ಮೂಲಕ ರಾಜಕುಮಾರ್ ಪಾಟೀಲ್ ಎಂಬುವವರ ಡಿಜಿಟಲ್ ಖಾತೆ ಮಾಡಲು 14 ಸಾವಿರ ರೂ. ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 12 ಸಾವಿರ ರೂ. ಗೆ ಲಂಚ ನಿಗದಿ ಮಾಡಿದ್ದರು ಎನ್ನಲಾಗಿದೆ. ಆರೋಪಿ ಪಿಡಿಒ ಅನಿತಾ ಹಾಗೂ ಅವರ ಪತಿ ದಯಾನಂದ್ ರಾಠೋಡ್ ಅವರನ್ನು ವಿಚಾರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಭಾರತೀಯ ಯಾತ್ರಾರ್ಥಿಗಳನ್ನು ಗಡಿಯಲ್ಲಿ ತಡೆದ ಕ್ರಮ ಸಮರ್ಥಿಸಿಕೊಂಡ ಪಾಕಿಸ್ತಾನ
ಇಸ್ಲಾಮಾಬಾದ್, ನ.5: ನಂಕಾನಾ ಸಾಹಿಬ್ ನಲ್ಲಿ ಗುರುನಾನಕ್ ದೇವ್ ಅವರ ಜನ್ಮ ವಾರ್ಷಿಕೋತ್ಸವದ ಆಚರಣೆಗೆ ಹಾಜರಾಗಲು ಮಾನ್ಯ ವೀಸಾಗಳನ್ನು ಹೊಂದಿದ್ದರೂ 300ಕ್ಕೂ ಹೆಚ್ಚು ಹಿಂದು ಮತ್ತು ಸಿಖ್ ಯಾತ್ರಾರ್ಥಿಗಳಿಗೆ ಗಡಿಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಸರಕಾರ, ಭದ್ರತೆಯ ಕಾರಣಕ್ಕಾಗಿ ಈ ಕ್ರಮ ಕೈಗೊಂಡಿರುವುದಾಗಿ ಸಮರ್ಥಿಸಿಕೊಂಡಿದೆ. `ವ್ಯಕ್ತಿಗಳು ಸೂಕ್ತ ದಾಖಲೆಯನ್ನು ತೋರಿಸಲು ವಿಫಲವಾಗಿದ್ದಾರೆ ಮತ್ತು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶವನ್ನು ಮನವರಿಕೆ ಮಾಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಯಾತ್ರಾರ್ಥಿಗಳನ್ನು ಗಡಿಭಾಗದಲ್ಲಿ ತಡೆಯಲಾಗಿದೆ' ಎಂದು ಹಿರಿಯ ವಲಸೆ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್ಎನ್-ನ್ಯೂಸ್ 18 ವರದಿ ಮಾಡಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸುಮಾರು 1,800 ಭಾರತೀಯ ಸಿಖ್ ಯಾತ್ರಾರ್ಥಿಗಳಿಗೆ ವಾಘಾ ಗಡಿ ದಾಟಲು ಪಾಕಿಸ್ತಾನ ಅವಕಾಶ ಒದಗಿಸಿದ್ದರೂ 304 ಹಿಂದು ಮತ್ತು ಸಿಖ್ ಯಾತ್ರಾರ್ಥಿಗಳನ್ನು ವಾಘಾ ಗಡಿಯಿಂದಲೇ ವಾಪಾಸು ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಇದು ಧಾರ್ಮಿಕ ದೇಗುಲಗಳಿಗೆ ಭೇಟಿ ನೀಡುವ 1974ರ ದ್ವಿಪಕ್ಷೀಯ ಶಿಷ್ಟಾಚಾರದ ನಿಯಮಕ್ಕೆ ವಿರುದ್ಧವಾಗಿದೆ ಎಂದು ಭಾರತ ಖಂಡಿಸಿದೆ.
ಇಂದಿರಾ ಹೆಗ್ಗಡೆ ಕ್ಷೇತ್ರ ಕಾರ್ಯ ದಾಖಲೀಕರಣ ತುಳುವಿಗೆ ಮಾರ್ಗದರ್ಶಿ ಕೃತಿ: ಡಾ. ಆಶಾಲತಾ ಸುವರ್ಣ
‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಪುಸ್ತಕ ಬಿಡುಗಡೆ
ಬೆಂಗಳೂರು | ಇಪಿಎಫ್ಒ ನೌಕರರ ಕೋ-ಆಪರೇಟಿವ್ ಸೊಸೈಟಿಯ ಹಣ ದುರ್ಬಳಕೆ ಆರೋಪ: ಇಬ್ಬರ ಬಂಧನ
ಬೆಂಗಳೂರು : ಇಪಿಎಫ್ಒ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಹಣ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಲ್ಲಿನ ಕಬ್ಬನ್ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೊಸೈಟಿಯ ಸಿಇಒ ಗೋಪಿನಾಥ್ ಹಾಗೂ ಸಿಬ್ಬಂದಿ ಲಕ್ಷ್ಮೀ ಜಗದೀಶ್ ಎಂಬುವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಪ್ರಕರಣದ ವಿವರ : ಇಪಿಎಫ್ಒ ಕಚೇರಿಯಲ್ಲಿ ಉದ್ಯೋಗಿಗಳೇ ಸೇರಿ 61 ವರ್ಷಗಳ ಹಿಂದೆ ಇಪಿಎಫ್ಒ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ರಚಿಸಿಕೊಂಡಿದ್ದರು. ಇಪಿಎಫ್ಒ ನೌಕರರಿಗೆ ಮಾತ್ರವೇ ಸೊಸೈಟಿಯಲ್ಲಿ ಹೂಡಿಕೆಗೆ ಅವಕಾಶ ನೀಡಲಾಗಿತ್ತು. ನೂರಾರು ಜನ ನೌಕರರು ತಮ್ಮ ಉಳಿತಾಯದ ಹಣವನ್ನು ಸೊಸೈಟಿಯಲ್ಲಿ ಹೂಡಿಕೆ ಮಾಡಿದ್ದರು. ಆ ಹಣವನ್ನು ಅವಶ್ಯಕತೆ ಇರುವ ನೌಕರರಿಗೆ ಸಾಲದ ರೂಪದಲ್ಲಿ ನೀಡುತ್ತಿದ್ದ ಸೊಸೈಟಿ, ಹೂಡಿಕೆ ಮಾಡಿದ್ದವರ ಖಾತೆಗಳಿಗೆ ಪ್ರತಿ ತಿಂಗಳು ಬಡ್ಡಿಯ ಹಣವನ್ನೂ ಸಂದಾಯ ಮಾಡುತ್ತಿತ್ತು. ಆದರೆ, 3 ತಿಂಗಳಿನಿಂದ ಬಡ್ಡಿಯ ಹಣ ಖಾತೆಗೆ ಸಂದಾಯವಾಗದಿದ್ದಾಗ ಹೂಡಿಕೆದಾರರು ತೆರಳಿ ಸೊಸೈಟಿಯ ಖಾತೆಯನ್ನು ಪರಿಶೀಲಿಸಿದ್ದರು. ಆಗ ಕೇವಲ 3 ಕೋಟಿ ರೂ. ಮಾತ್ರವೇ ಸಾಲ ನೀಡಲಾಗಿದ್ದು, ಉಳಿದ ಹಣ ಸೊಸೈಟಿಯ ಖಾತೆ ಖಾಲಿಯಾಗಿರುವುದು ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಹೂಡಿಕೆಯ ಹಣವನ್ನು ಸೊಸೈಟಿಯ ಖಾತೆಯಿಂದ ಅನಧಿಕೃತವಾಗಿ ಇತರ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಹೂಡಿಕೆದಾರರು ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊಸೈಟಿಯ ಸಿಇಒ ಗೋಪಿನಾಥ್, ಸಿಬ್ಬಂದಿಗಳಾದ ಲಕ್ಷ್ಮೀ ಜಗದೀಶ್, ಲಿಂಗೇಗೌಡ ಹಾಗೂ ರಮಾನುಜ ಅವರ ಮನೆಗಳ ಮೇಲೆ ಕಬ್ಬನ್ಪಾರ್ಕ್ ಠಾಣೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸೊಸೈಟಿಯಲ್ಲಿ 300ಕ್ಕೂ ಅಧಿಕ ಠೇವಣಿದಾರರು ಹೂಡಿಕೆ ಮಾಡಿದ್ದ ಸುಮಾರು 70 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದ್ದು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದುಕೊಂಡು ಆರ್.ಆರ್.ನಗರ, ಜೆ.ಪಿ.ನಗರ, ಅಂಜನಾಪುರದಲ್ಲಿರುವ ಆರೋಪಿತರ ನಿವಾಸಗಳು, ರಿಚ್ಮಂಡ್ ಸರ್ಕಲ್ನಲ್ಲಿರುವ ಸೊಸೈಟಿಯಲ್ಲಿ ತಪಾಸಣೆ ನಡೆಸಲಾಗಿದೆ. ದಾಳಿ ವೇಳೆ ಚಿನ್ನಾಭರಣ, ನಗದು ಮತ್ತು ಹೂಡಿಕೆಗೆ ಸಂಬಂಧಿಸಿದ ಕೆಲ ದಾಖಲೆಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊಸೈಟಿಯ ಸಿಇಒ ಹಾಗೂ ಲೆಕ್ಕಾಧಿಕಾರಿಯನ್ನು ಬಂಧಿಸಲಾಗಿದೆ ಹಾಗೂ ಆರೋಪಿಗಳಿಗೆ ಸಂಬಂಧಿಸಿದ ನಾಲ್ಕು ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪರಿಶೀಲನೆ ಸಂದರ್ಭದಲ್ಲಿ ಪತ್ತೆಯಾದ ಆರೋಪಿಗಳ ಆರ್ಥಿಕ ಸ್ಥಿತಿಗತಿ, ಆಸ್ತಿ ವಿವರಗಳು ಹಾಗೂ ಅವರ ಆದಾಯವನ್ನು ಪರಿಶೀಲಿಸಿದಾಗ ಒಂದಕ್ಕೊಂದು ಹೊಂದಾಣಿಕೆಯಾಗುತ್ತಿಲ್ಲ. ಆರೋಪಿತರು ಹೊಂದಿರುವ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ವಶಪಡಿಸಿಕೊಂಡು ಪರಿಶೀಲನೆ ಮಾಡಲಾಗುತ್ತಿದೆ’ -ಅಕ್ಷಯ್ ಎಂ. ಹಕೇ, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ
ಪಶ್ಚಿಮಘಟ್ಟದಲ್ಲಿ ಕಾರ್ಯಗತವಾದ ಯೋಜನೆಗಳ ಪರಾಮರ್ಶೆಗೆ ಈಶ್ವರ್ ಖಂಡ್ರೆ ಸೂಚನೆ
‘ಶರಾವತಿ ಅರಣ್ಯ ಬಿಡುಗಡೆ ಪ್ರಸ್ತಾವನೆ: ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಸಲ್ಲಿಸಲು ಸಮ್ಮತಿ’
ಏಷ್ಯನ್ ಅರಬಿಕ್ ಡಿಬೇಟ್: ದಾರುಲ್ ಹುದಾ ಇಸ್ಲಾಮಿಕ್ ವಿವಿ ಚಾಂಪಿಯನ್
ಮಸ್ಕತ್(ಒಮಾನ್): ಖತರ್ ಡಿಬೇಟ್ನ ಅಧೀನ ಮತ್ತು ಒಮಾನ್ ಸಂಸ್ಕೃತಿ, ಕ್ರೀಡೆ ಹಾಗೂ ಯುವ ಸಚಿವಾಲಯದ ಸಹಯೋಗದೊಂದಿಗೆ ಅ.28ರಿಂದ ನ.1ರವರೆಗೆ ಒಮಾನಿನ ಮಸ್ಕತ್ನಲ್ಲಿ ನಡೆದ ಏಷ್ಯನ್ ಅರಬಿಕ್ ಮೂರನೇ ಡಿಬೇಟ್ನಲ್ಲಿ ಭಾರತದ ಪ್ರತಿನಿಧಿಗಳಾಗಿ ಭಾಗವಹಿಸಿದ್ದ ಮಲಪ್ಪುರಂ ಜಿಲ್ಲೆಯ ಚೆಮ್ಮಾಡ್ನ ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾನಿಲಯ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಏಷ್ಯಾದ 18 ರಾಷ್ಟ್ರಗಳಿಂದ ಸುಮಾರು 40 ಶೈಕ್ಷಣಿಕ ಸಂಸ್ಥೆಗಳು ಮತ್ತು 145ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ದಾರುಲ್ ಹುದಾ ತಂಡವು ವಿವಿಧ ರಾಷ್ಟ್ರಗಳ ಪ್ರಮುಖ ವಿಶ್ವವಿದ್ಯಾಲಯಗಳ ವಿರುದ್ಧ ಉತ್ಕೃಷ್ಟ ವಾದದ ಅಂತಿಮ ಹಂತದಲ್ಲಿ ಇಂಡೋನೇಶಿಯಾ ವಿರುದ್ಧ ಜಯ ಸಾಧಿಸಿತು. ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾನಿಲಯದ ಈ ಸಾಧನೆಯು ಭಾರತದ ಯುವ ಪೀಳಿಗೆಯ ಅರಬಿ ಭಾಷಾ ಪ್ರಾವೀಣ್ಯತೆ, ಚಿಂತನಾ ಸಾಮರ್ಥ್ಯ ಮತ್ತು ಸಂವಾದದ ಸಂಸ್ಕಾರವನ್ನು ವಿಶ್ವದ ವೇದಿಕೆಯಲ್ಲಿ ಪ್ರತಿಬಿಂಬಿಸಿದೆ ಎಂದು ಪ್ರಕಟನೆ ತಿಳಿಸಿದೆ.
ನೆಹರೂ ಈಗಲೂ ವಿಶ್ವದಾದ್ಯಂತ ನಾಯಕರಿಗೆ ಸ್ಫೂರ್ತಿ, ಆದರೆ ಬಿಜೆಪಿ ನಿಂದಿಸುತ್ತಿದೆ: ಪ್ರಿಯಾಂಕಾ ಗಾಂಧಿ
ಮಮ್ದಾನಿಯವರ ವಿಜಯೋತ್ಸವದ ಭಾಷಣ ಉಲ್ಲೇಖ
ಬಲವಂತದ ಮತಾಂತರ ಆರೋಪ: ಎಫ್ಐಆರ್ ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್
ಉತ್ತರ ಪ್ರದೇಶ ಸರಕಾರಕ್ಕೆ 75 ಸಾವಿರ ರೂ. ದಂಡ
ಮಲ್ಪೆ: ಉಮೀದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ
ಮಲ್ಪೆ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನಿರ್ದೇಶನದಂತೆ ಉಮೀದ್(UWMEED) ಪೋರ್ಟಲ್ ಹಾಗೂ ಅದರಲ್ಲಿ ವಕ್ಫ್ ಆಸ್ತಿಗಳನ್ನು ಅಪ್ಲೋಡ್ ಮಾಡುವ ಬಗ್ಗೆ ವಕ್ಫ್ ಸಂಸ್ಥೆಗಳಿಗೆ ಮಾಹಿತಿ ಕಾರ್ಯಗಾರವನ್ನು ಬುಧವಾರ ಮಲ್ಪೆ ಜಾಮಿಯಾ ಮಸೀದಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಸದಸ್ಯರುಗಳಾದ ಅನ್ವರ್ ಬಾಷಾ ಸಾಹೇಬ್, ರಿಯಾಝ್ ಖಾನ್ ಸಾಹೇಬ್ ಹಾಗೂ ಖಾಲಿದ್ ಅಹ್ಮದ್ ಸಾಹೇಬ್, ಉಮೀದ್ ಪೋರ್ಟಲ್ ನಲ್ಲಿ ವಕ್ಫ್ ಆಸ್ತಿಗಳನ್ನು ಯಾಕಾಗಿ ನಂದಣಿ ಮಾಡಬೇಕು ಮತ್ತು ಇದರಿಂದ ಮುಂದಿನ ಪ್ರಯೋಜನಗಳು ಏನು ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ಈ ನಿಟ್ಟಿನಲ್ಲಿ ಎಲ್ಲರೂ ಒಂದಾಗಿ ಈ ಬಗ್ಗೆ ಕೆಲಸ ಮಾಡುವಂತೆ ಅವರು ಮನವಿ ಮಾಡಿದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್, ಮಲ್ಪೆ ಜಾಮಿಯಾ ಮಸೀದಿ ಅಧ್ಯಕ್ಷ ಯಾಹ್ಯಾ ನಕ್ವಾ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮೊಹಮ್ಮದ್ ಮೌಲಾ, ಮಾಜಿ ಅಧ್ಯಕ್ಷ ಎಂ.ಪಿ.ಮೊಯಿದಿನಬ್ಬ, ನಮ್ಮ ನಾಡ ಒಕ್ಕೂಟದ ಮುಸ್ತಾಕ್ ಬೆಳ್ವೆ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಸರ್ಫುದ್ದೀನ್, ರಹಮತುಲ್ಲಾ ಹೂಡೆ, ಮುಸ್ಲಿಂ ಮುಖಂಡರುಗಳು ಹಾಗೂ ಜಿಲ್ಲಾ ವಕ್ಫ್ ಅಧಿಕಾರಿ ಹಾಜರಿದ್ದರು. ಸಭೆಯಲ್ಲಿ ಸಂಸ್ಥೆಗಳ ಅಧ್ಯಕ್ಷರುಗಳು ಕಾರ್ಯದರ್ಶಿಗಳು ಸದಸ್ಯರು ಪಾಲ್ಗೊಂಡರು.
ಮಂಗಳೂರು | ಮಾದಕ ವಸ್ತು ಮಾರಾಟ ಪ್ರಕರಣ: ಆರೋಪಿ ಸೆರೆ
ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ನಗರದ ಕುಂಟಿಕಾನ ನಿವಾಸಿ ಶಬರೀಶ್ ಯಾನೆ ಶಬರಿ (24) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ನಗರದ ಬೋಳೂರಿನಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಬರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಮಂಗಳವಾರ ಅಪರಾಹ್ನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ತಾನು ಎಂಡಿಎಂಎ ಅನ್ನು ನಗರದ ಕದ್ರಿ ಕಂಬಳದ ನಿವಾಸಿ ಅಮಾನ್ ಎಂಬಾತನಿಂದ ಪಡೆದುಕೊಂಡಿರುವ ಬಗ್ಗೆ ತಿಳಿಸಿದ್ದಾನೆ. ಆರೋಪಿಯಿಂದ ಎಂಡಿಎಂಎ ಇದರ 4.42 ಗ್ರಾಂನ 5 ಪ್ಯಾಕೆಟ್ಗಳು, 1 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಮುಂಬೈ: ಪರೀಕ್ಷಾರ್ಥ ಸಂಚಾರದ ಸಂದರ್ಭ ವಾಲಿದ ಮೋನೋ ರೈಲು!
ಮುಂಬೈ, ನ. 5: ಮುಂಬೈಯ ವಡಾಲಾ ಡಿಪೋದಲ್ಲಿ ಬುಧವಾರ ಬೆಳಗ್ಗೆ ಪರೀಕ್ಷಾರ್ಥ ಸಂಚಾರ ಸಮಯದಲ್ಲಿ ಮೋನೋ ರೈಲೊಂದು ವಾಲಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ‘‘ಸಣ್ಣ ಘಟನೆ’’ ಎಂದು ಹೇಳಿರುವ ಮೋನೋ ರೈಲನ್ನು ನಿರ್ವಹಿಸುತ್ತಿರುವ ಮಹಾ ಮುಂಬೈ ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ (ಎಂಎಂಎಂಒಪಿಎಲ್), ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿಸಿದೆ. ಘಟನೆ ಸಂದರ್ಭ ರೈಲಿನಲ್ಲಿ ಸಿಬ್ಬಂದಿಗಳನ್ನು ಹೊರತುಪಡಿಸಿ ಯಾರೂ ಇರಲಿಲ್ಲ ಎಂದು ಅದು ಹೇಳಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾದ ಫೋಟೊ ಹಾಗೂ ವೀಡಿಯೊಗಳಲ್ಲಿ ಮೋನೋ ರೈಲು ತುಸ ವಾಲಿರುವುದು ಕಂಡು ಬಂದಿದೆ. ಈ ಘಟನೆ ಬೆಳಗ್ಗೆ 9 ಗಂಟೆಗೆ ವರದಿಯಾಗಿದೆ. ಮೋನೋ ರೈಲಿನಿಂದ ಇಬ್ಬರು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಬೂಟಾ ಸಿಂಗ್ ವಿರುದ್ಧ ‘ಜಾತಿವಾದಿ’ ಹೇಳಿಕೆ: ಪಂಜಾಬ್ ಕಾಂಗ್ರೆಸ್ ವರಿಷ್ಠನ ವಿರುದ್ಧ ಎಫ್ಐಆರ್ ದಾಖಲು
ಚಂಡಿಗಢ, ನ. 5: ಕೇಂದ್ರದ ಮಾಜಿ ಸಚಿವ ದಿವಂಗತ ಬೂಟಾ ಸಿಂಗ್ ವಿರುದ್ಧ ಮಾನಹಾನಿಕರ ಹಾಗೂ ಜಾತಿವಾದಿ ಹೇಳಿಕೆ ನೀಡಿದ ಪಂಜಾಬ್ ಕಾಂಗ್ರೆಸ್ ವರಿಷ್ಠ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಲುಧಿಯಾನದ ಸಂಸದ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ವಿರುದ್ಧ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ತತೆ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196ರ ಅಡಿಯಲ್ಲಿ ಮಂಗಳವಾರ ಎಫ್ಐಆರ್ ದಾಖಲಿಸಲಾಗಿದೆ. ಬೂಟಾ ಸಿಂಗ್ ಅವರ ಪುತ್ರ ಸರಬ್ಜೋತ್ ಸಿಂಗ್ ಸಿಧು ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಕಪುರ್ತಲಾ ಜಿಲ್ಲೆಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಜಾತಿವಾದಿ ಹಾಗೂ ಮಾನಹಾನಿಕರ ಹೇಳಿಕೆ ನೀಡಿದ್ದ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ವಿರುದ್ಧ ಸರಬ್ಜೋತ್ ಸಿಂಗ್ ಸಿಧು ಅವರು ಕಪುರ್ತಲಾ ದ ಹಿರಿಯ ಪೊಲೀಸ್ ಅಧೀಕ್ಷರನ್ನು ಭೇಟಿಯಾಗಿದ್ದರು. ನವೆಂಬರ್ 11ರಂದು ನಡೆಯಲಿರುವ ತರನ್ ತರನ್ ವಿಧಾನ ಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುವ ಸಂದರ್ಭ ಬೂಟಾ ಸಿಂಗ್ ವಿರುದ್ಧ ಜಾತಿವಾದಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ವಾರಿಂಗ್ ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಪಂಜಾಬ್ ನ ಕಾಂಗ್ರೆಸ್ ಮುಖ್ಯಸ್ಥರಾಗಿರುವ ಅವರಿಂದರ್ ಸಿಂಗ್ ರಾಜ ವಾರಿಂಗ್ ಸೋಮವಾರ ನಿಶ್ಯರ್ಥ ಕ್ಷಮೆ ಕೋರಿದ್ದಾರೆ ಹಾಗೂ ಪಕ್ಷದ ಹಿರಿಯ ನಾಯಕರಾಗಿದ್ದ ಬೂಟಾ ಸಿಂಗ್ ತಂದೆಯಂತೆ ಇದ್ದರು ಎಂದು ಹೇಳಿದ್ದಾರೆ.
ಮಂಗೋಲಿಯಾದ ಉಲಾನ್ಬಟೋರ್ನಲ್ಲಿ ಸಿಲುಕಿದ್ದ 228 ಪ್ರಯಾಣಿಕರನ್ನು ದಿಲ್ಲಿಗೆ ಕರೆ ತಂದ ಏರ್ ಇಂಡಿಯಾ ವಿಮಾನ
ಹೊಸದಿಲ್ಲಿ, ನ. 5: ಮಂಗೋಲಿಯಾದ ರಾಜಧಾನಿ ಉಲಾನ್ಬಟೋರ್ನಲ್ಲಿ ಸಿಲುಕಿದ್ದ 228 ಪ್ರಯಾಣಿಕರನ್ನು ಏರ್ ಇಂಡಿಯಾ ವಿಮಾನ ಬುಧವಾರ ಬೆಳಗ್ಗೆ ದಿಲ್ಲಿಗೆ ಕರೆದುಕೊಂಡು ಬಂದಿದೆ. ಸ್ಯಾನ್ಫ್ರಾನ್ಸಿಸ್ಕೊ - ದಿಲ್ಲಿ ವಿಮಾನವನ್ನು ತಾಂತ್ರಿಕ ದೋಷದಿಂದ ಸೋಮವಾರ ಉಲಾನ್ಬಟೋರ್ಗೆ ಪಥ ಬದಲಾಯಿಸಿದ ಬಳಿಕ ಪ್ರಯಾಣಿಕರು ಉಲಾನ್ಬಟೋರ್ನಲ್ಲಿ ಸಿಲುಕಿಕೊಂಡಿದ್ದರು. ಉಲಾನ್ಬಟೋರ್ನಿಂದ ಪ್ರಯಾಣಿಕರನ್ನು ಕರೆದುಕೊಂಡು ಬಂದ ಏರ್ ಇಂಡಿಯಾ ಬದಲಿ ವಿಮಾನ ದಿಲ್ಲಿಯಲ್ಲಿ ಬುಧವಾರ ಬೆಳಗ್ಗೆ 8.24 ಗಂಟೆಗೆ ಬಂದಿಳಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೋಯಿಂಗ್ 787 ಡ್ರೀಮ್ಲೈನರ್ ನಿರ್ವಹಿಸುತ್ತಿರುವ ಬದಲಿ ವಿಮಾನ ಎಐ 183 ಉಲಾನ್ಬಟೋರ್ನಿಂದ ಮಂಗಳವಾರ ಅಪರಾಹ್ನ ಟೇಕ್ ಆಫ್ ಆಗಿತ್ತು. ಉಲಾನ್ಬಟೋರ್ಗೆ ಪಥ ಬದಲಿಸಲಾದ ಬೋಯಿಂಗ್ 777ರಲ್ಲಿ 228 ಪ್ರಯಾಣಿಕರು ಹಾಗೂ 17 ಸಿಬ್ಬಂದಿ ಸೇರಿದಂತೆ ಒಟ್ಟು 245 ಮಂದಿಯಿದ್ದರು ಎಂದು ಮೂಲಗಳು ಸೋಮವಾರ ತಿಳಿಸಿವೆ. ಮುನ್ನೆಚ್ಚರಿಕೆಯ ಪಥ ಬದಲಾವಣೆಯ ಬಳಿಕ ಮಂಗೋಲಿಯಾದ ಉಲನ್ಬಟೋರ್ನಲ್ಲಿ ಸಿಲುಕಿಕೊಂಡಿದ್ದ ಎಐ 174 ವಿಮಾನದ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ಬದಲಿ ವಿಮಾನ ಇಂದು ಬೆಳಗ್ಗೆ ದಿಲ್ಲಿಯಲ್ಲಿ ಬಂದಿಳಿಯಿತು ಎಂದು ಏರ್ಲೈನ್ಸ್ ಬುಧವಾರ ನೀಡಿದ ಹೇಳಿಕೆಯಲ್ಲಿ ತಿಳಿಸಿದೆ. ಪಥ ಬದಲಾವಣೆ ಸಂದರ್ಭ ತಾಳ್ಮೆಯಿಂದಿದ್ದ ಹಾಗೂ ಸಮಸ್ಯೆಯನ್ನು ಅರ್ಥ ಮಾಡಿಕೊಂಡ ಪ್ರಯಾಣಿಕರು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಏರ್ ಇಂಡಿಯಾ ಕೃತಜ್ಞತೆ ಸಲ್ಲಿಸಿದೆ. ‘‘ಸಂಚಾರದ ಸಂದರ್ಭ ತಾಂತ್ರಿಕ ದೋಷದ ಬಗ್ಗೆ ವಿಮಾನದ ಸಿಬ್ಬಂದಿ ಶಂಕೆ ವ್ಯಕ್ತಪಡಿಸಿದ ಬಳಿಕ ಸ್ಯಾನ್ಫ್ರಾನ್ಸಿಸ್ಕೊದಿಂದ ಕೋಲ್ಕತ್ತಾ ಮೂಲಕ ದಿಲ್ಲಿಗೆ ಸಂಚರಿಸುತ್ತಿದ್ದ ಎಐ 474 ವಿಮಾನವನ್ನು ಮುನ್ನೆಚ್ಚರಿಕೆ ಕ್ರಮವಾಗಿ ಉಲಾನ್ಬಟೋರ್ನಲ್ಲಿ ಇಳಿಸಲಾಯಿತು’’ ಎಂದು ಟಾಟಾ ಸಮೂಹ ಮಾಲಕತ್ವದ ವಿಮಾನ ಯಾನ ಸಂಸ್ಥೆ ಸೋಮವಾರ ಹೇಳಿತ್ತು.
ಶೀಘ್ರದಲ್ಲೇ ಕ್ರಿಸ್ಟಿಯಾನೊ ರೊನಾಲ್ಡೊ ನಿವೃತ್ತಿ?
ಪ್ಯಾರಿಸ್, ನ.5: ಪೋರ್ಚುಗಲ್ ಹಾಗೂ ಅಲ್ ನಸ್ರ್ ತಂಡದ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ, ‘ಶೀಘ್ರದಲ್ಲೇ’ ನಿವೃತ್ತಿಯಾಗುವ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ. ಪಿಯರ್ಸ್ ಮೊರ್ಗನ್ ಅನ್ಸೆನ್ಸಾರ್ಡ್ಗೆ ನೀಡಿದ ಸಂದರ್ಶನವೊಂದರಲ್ಲಿ ರೊನಾಲ್ಡೊ ಅವರು, ನಿವೃತ್ತಿ ಹಾಗೂ ಫುಟ್ಬಾಲ್ ನಂತರದ ಜೀವನದ ಕುರಿತು ತಮ್ಮ ಆಲೋಚನೆಗಳನ್ನು ಚರ್ಚಿಸಿದರು. 952 ಗೋಲುಗಳನ್ನು ಗಳಿಸಿರುವ 40ರ ವಯಸ್ಸಿನ ರೊನಾಲ್ಡೊ ಅವರು ಫುಟ್ಬಾಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಆಟಗಾರರ ಪೈಕಿ ಒಬ್ಬರಾಗಿದ್ದಾರೆ. 2027ರ ತನಕ ಅಲ್ ನಸ್ರ್ ಫುಟ್ಬಾಲ್ ಕ್ಲಬ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರುವ ರೊನಾಲ್ಡೊ ಅವರಲ್ಲಿ ನಿವೃತ್ತಿಯಾಗುವ ಯೋಚನೆ ಇದೆಯೇ ಎಂದು ಪ್ರಶ್ನಿಸಿದಾಗ, ‘‘ಶೀಘ್ರದಲ್ಲೇ ಆ ನಿಟ್ಟಿನಲ್ಲಿ ಯೋಚಿಸುವೆ. ನಿವೃತ್ತಿಗೆ ನಾನು ಸಿದ್ಧನಾಗಿರುತ್ತೇನೆ ಎಂದು ಭಾವಿಸುವೆ’’ ಎಂದರು. ‘‘ಖಂಡಿತವಾಗಿಯೂ ನಿವೃತ್ತಿಯ ನಿರ್ಧಾರ ಕಠಿಣವಾಗಿರುತ್ತದೆ. ಅದು ಕಷ್ಟಕವಾಗಿರುತ್ತದೆ. ಆಗ ನಾನು ಅಳಬಹುದು. ನಾನು 25,26, 27 ವರ್ಷ ವಯಸ್ಸಿನಿಂದಲೆ ನನ್ನ ಭವಿಷ್ಯವನ್ನು ಸಿದ್ಧಪಡಿಸಿಕೊಂಡೆ. ಆದ್ದರಿಂದ ನಾನು ಆ ಒತ್ತಡವನ್ನು ನಿಭಾಯಿಸಲು ಸಮರ್ಥನಾಗುತ್ತೇನೆಂದು ಭಾವಿಸುವೆ’’ ಎಂದು ರೊನಾಲ್ಡೊ ಹೇಳಿದರು. ಸ್ಪೋರ್ಟಿಂಗ್ ಲಿಸ್ಬನ್ನೊಂದಿಗೆ ತನ್ನ ವೃತ್ತಿಜೀವನ ಆರಂಭಿಸಿದ ನಂತರ ರೊನಾಲ್ಡೊ ಅವರು ಮ್ಯಾಂಚೆಸ್ಟರ್ ಯುನೈಟೆಡ್, ರಿಯಲ್ ಮ್ಯಾಡ್ರಿಡ್ ಹಾಗೂ ಜುವೆಂಟಸ್ ತಂಡಗಳಲ್ಲಿ ಯಶಸ್ವಿ ಪ್ರದರ್ಶನ ನೀಡಿದ್ದರು. ಮ್ಯಾಂಚೆಸ್ಟರ್ನಲ್ಲಿ ತಮ್ಮ ಮೊದಲ ಅವಧಿಯಲ್ಲಿ 3 ಪ್ರೀಮಿಯರ್ ಲೀಗ್ ಪ್ರಶಸ್ತಿಗಳು ಹಾಗೂ ಚಾಂಪಿಯನ್ಸ್ ಲೀಗ್ ಸಹಿತ ಇತರ ಟ್ರೋಫಿಗಳನ್ನು ಗೆದ್ದಿದ್ದರು. ಮ್ಯಾಡ್ರಿಡ್ನೊಂದಿಗೆ 2 ಲಾಲಿಗಾ ಪ್ರಶಸ್ತಿಗಳು ಹಾಗೂ ನಾಲ್ಕು ಚಾಂಪಿಯನ್ಸ್ ಲೀಗ್ ಕಿರೀಟಗಳನ್ನು ಜಯಿಸಿದ್ದರು. 2022ರಲ್ಲಿ ಯುನೈಟೆಡ್ ತಂಡವನ್ನು ತೊರೆದ ನಂತರ ರೊನಾಲ್ಡೊ ಅವರು ಸೌದಿ ಪ್ರೊ ಲೀಗ್ ತಂಡ ಅಲ್ ನಸ್ರ್ ತಂಡವನ್ನು ಸೇರಿದ್ದರು. ಐದು ಬಾರಿ ಪ್ರತಿಷ್ಠಿತ ಬ್ಯಾಲನ್ ಡಿ‘ ಒರ್ ಪ್ರಶಸ್ತಿಗೆ ಭಾಜನರಾಗಿರುವ ರೊನಾಲ್ಡೊ ಈ ತನಕ ಫಿಫಾ ವಿಶ್ವಕಪ್ ಗೆದ್ದಿಲ್ಲ.
ಬಿಹಾರ ವಿಧಾನಸಭಾ ಚುನಾವಣೆ | ನಾಳೆ ನ.6ರಂದು ಮೊದಲ ಹಂತದ ಮತದಾನ
ಪಾಟ್ನಾ,ನ.5: ಬಿಹಾರವು ನ.6ರಂದು ನಡೆಯಲಿರುವ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವಂತೆ ರಾಜ್ಯದಲ್ಲಿ ರಾಜಕೀಯ ಹಣಾಹಣಿ ನಿರ್ಣಾಯಕ ಹಂತವನ್ನು ಪ್ರವೇಶಿಸಿದೆ. 18 ಜಿಲ್ಲೆಗಳ 121 ವಿಧಾನಸಭಾ ಕ್ಷೇತ್ರಗಳಲ್ಲಿಯ 3.75 ಕೋಟಿಗೂ ಅಧಿಕ ಮತದಾರರು 1,314 ಅಭ್ಯರ್ಥಿಗಳ ಹಣೆಬರಹವನ್ನು ನಿರ್ಧರಿಸಲಿದ್ದಾರೆ. ಅಭ್ಯರ್ಥಿಗಳಲ್ಲಿ ಹಲವಾರು ಸಚಿವರು,ಪ್ರಮುಖ ನಾಯಕರು ಮತ್ತು ವಿವಿಧ ಕ್ಷೇತ್ರಗಳಿಂದ ಹೊಸಬರು ಸೇರಿದ್ದಾರೆ. ಮತದಾನವು ಬೆಳಿಗ್ಗೆ ಏಳರಿಂದ ಸಂಜೆ ಆರು ಗಂಟೆಯವರೆಗೆ ನಡೆಯಲಿದೆ. ಆದರೆ ಭದ್ರತಾ ಕಾರಣಗಳಿಂದಾಗಿ ಸಿಮ್ರಿ ಭಕ್ತಿಯಾರಪುರ, ಮಹಿಷಿ, ತಾರಾಪುರ, ಮುಂಗೇರ್ ಮತ್ತು ಜಮಾಲ್ಪುರಗಳಂತಹ ಆಯ್ದ ಕ್ಷೇತ್ರಗಳಲ್ಲಿ ಮತ್ತು ಸೂರ್ಯಗಡದ 56 ಮತಗಟ್ಟೆಗಳಲ್ಲಿ ಮತದಾನವು ಒಂದು ಗಂಟೆ ಮೊದಲೇ, ಸಂಜೆ ಐದಕ್ಕೆ ಅಂತ್ಯಗೊಳ್ಳಲಿದೆ. ಮೊದಲ ಹಂತಕ್ಕಾಗಿ ಪ್ರಚಾರವು ಮಂಗಳವಾರ ಅಂತ್ಯಗೊಂಡಿದೆ.
ಮಹಾರಾಷ್ಟ್ರ: ಬೆಳೆ ನಷ್ಟಕ್ಕೆ ಕೇವಲ 6 ರೂ. ಪರಿಹಾರ!
ಛತ್ರಪತಿ ಸಂಭಾಜಿ ನಗರ್, ನ. 5: ಭಾರೀ ಮಳೆ ಹಾಗೂ ನಂತರ ಸಂಭವಿಸಿದ ನೆರೆಯ ಪರಿಣಾಮ ಉಂಟಾದ ಬೆಳೆ ನಷ್ಟಕ್ಕೆ ಸರಕಾರದಿಂದ ಕೇವಲ 6 ರೂ. ಪರಿಹಾರ ದೊರೆತಿದೆ ಎಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ್ ಜಿಲ್ಲೆಯ ರೈತರೋರ್ವರು ಬುಧವಾರ ತಿಳಿಸಿದ್ದಾರೆ. ಪೈಠಣ ತಾಲೂಕಿನ ದವರವಾಡಿ ಗ್ರಾಮದ ನಿವಾಸಿಯಾಗಿರುವ ರೈತ ದಿಗಂಬರ ಸುಧಾಕರ ತಂಗ್ಡೆ ಅವರು ಉದ್ಧವ್ ಠಾಕ್ರೆ ಭೇಟಿಯ ಸಂದರ್ಭ ಪೈಠಣದ ನಂದರ್ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉದ್ಧವ್ ಠಾಕ್ರೆ ಅವರು ರೈತರನ್ನು ಭೇಟಿ ಮಾಡಲು ಹಾಗೂ ಅವರೊಂದಿಗೆ ಮಾತುಕತೆ ನಡೆಸಲು ಮರಾಠವಾಡ ಪ್ರದೇಶದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ‘‘ನನಗೆ ಕೇವಲ 2 ಎಕರೆ ಭೂಮಿ ಇದೆ. ನನ್ನ ಬ್ಯಾಂಕ್ ಖಾತೆಗೆ 6 ರೂ. ಜಮಾ ಆಗಿದೆ ಎಂದು ಸಂದೇಶ ಸ್ವೀಕರಿಸಿದ್ದೆ. ಸರಕಾರ ಇಷ್ಟು ಕಡಿಮೆ ಹಣ ಪಾವತಿಸಿರುವುದಕ್ಕೆ ನಾಚಿಕೆಯಾಗಬೇಕು. ಈ ಹಣ ಒಂದು ಕಪ್ ಟೀ ಕುಡಿಯಲು ಕೂಡ ಸಾಕಾಗುವುದಿಲ್ಲ. ಸರಕಾರ ರೈತರನ್ನು ತಮಾಷೆ ಮಾಡುತ್ತಿದೆ’’ ಎಂದು ತಂಗ್ಡೆ ಹೇಳಿದ್ದಾರೆ. ‘‘ನಮಗೆ ಸಾಲ ಮನ್ನಾದ ಅಗತ್ಯವಿದೆ. ಆದರೆ ಸರಕಾರ ನನ್ನ ಖಾತೆಗೆ 6 ರೂಪಾಯಿ ಜಮಾ ಮಾಡುವ ಮೂಲಕ ರೈತರನ್ನು ತಮಾಷೆ ಮಾಡುತ್ತಿದೆ. ನಾವು ಯಾವುದೇ ರಾಜಕೀಯ ಪಕ್ಷದಲ್ಲಿ ಇಲ್ಲ. ಉದ್ಧವ್ ಠಾಕ್ರೆ ಅವರು ತನ್ನ ಅಧಿಕಾರ ಅವಧಿಯಲ್ಲಿ ಸಾಲ ಮನ್ನಾ ಮಾಡಿದ್ದಾರೆ. ಈ ಸರಕಾರ ಕೂಡ ಈಗಾಗಲೇ ಸಾಲ ಮನ್ನಾ ಘೋಷಿಸಿದೆ. ಆದರೆ, ಇದುವರೆಗೆ ಮಾಡಿಲ್ಲ’’ ಎಂದು ಅವರು ಹೇಳಿದರು. ರೈತರು ಕಳೆದ ಎರಡು ತಿಂಗಳಿಂದ ಪರಿಹಾರಕ್ಕಾಗಿ ಕಾಯುತ್ತಿದ್ದರು. ಅವರು ಈಗ ಈ ಹಣವನ್ನು ಕಳುಹಿಸಿದ್ದಾರೆ ಎಂದು ತಂಗ್ಡೆ ತಿಳಿಸಿದ್ದಾರೆ. ಇತ್ತೀಚೆಗೆ ರಾಜ್ಯದ ಅಕೋಲಾ ಜಿಲ್ಲೆಯ ಕೆಲವು ಹಳ್ಳಿಗಳ ರೈತರು ಭಾರೀ ಮಳೆಯಿಂದ ಉಂಟಾದ ಬೆಳೆ ನಷ್ಟಕ್ಕೆ ಕೇಂದ್ರ ವಿಮಾ ಯೋಜನೆ ಅಡಿಯಲ್ಲಿ ಕೇವಲ 3 ರೂ. ನಿಂದ 21ರೂ. ವರೆಗೆ ಪರಿಹಾರ ಪಡೆದಿದ್ದರು. ಈ ಪರಿಹಾರವನ್ನು ಅವರು ನಮ್ಮ ಸಂಕಷ್ಟದ ಅವಮಾನ ಹಾಗೂ ಅಣಕ ಎಂದು ಹೇಳಿದ್ದರು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನ (ಪಿಎಂಎಫ್ಬಿವೈ) ಅಡಿಯಲ್ಲಿ ಪರಿಹಾರ ಸ್ವೀಕರಿಸಿದ ರೈತರು ಅನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು ಹಾಗೂ ಪರಿಹಾರವನ್ನು ಚೆಕ್ ಮೂಲಕ ಹಿಂದಿರುಗಿಸಿದ್ದರು.
ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘದಲ್ಲಿ ಭಾರೀ ಅವ್ಯವಹಾರ; ಆರೋಪ
ಉಡುಪಿ: 50ಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಕೊಕ್ಕರ್ಣೆಯ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತದಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಕೋಟಾಂತರ ರೂ.ಗಳ ಅವ್ಯವಹಾರ, ಕಾನೂನಿನ ಉಲ್ಲಂಘನೆ ನಡೆದಿದೆ. ಸಂಘದ ಈಗಿನ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತ ಮಂಡಳಿ ಸದಸ್ಯರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಭೀಮವಾದ ಉಡುಪಿ ಹಾಗೂ ಸಾಮಾಜಿಕ ಹೋರಾಟಗಾರರ ಸಂಘಟನೆ ಆರೋಪಿಸಿದೆ. ಉಡುಪಿ ಪ್ರೆಸ್ ಕ್ಲಬ್ನಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ದಸಂಸದ ಶೇಖರ್ ಹಾವಂಜೆ, ಸಾಮಾಜಿಕ ಹೋರಾಟಗಾರ ಸದಾಶಿವ ಶೆಟ್ಟಿ ಹೇರೂರು ಹಾಗೂ ಜಯಕರ ನಾಯಕ್ ಕಳ್ತೂರು ತಿಳಿಸಿದ್ದಾರೆ. ಕೊಕ್ಕರ್ಣೆಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಸಂಘ, ಗೋಳಿಯಂಗಡಿ, ಆವರ್ಸೆ, ಕೆಂಜೂರು, ಸಂತೆಕಟ್ಟೆ, ಕರ್ಜೆ, ಕೊಕ್ಕರ್ಣೆ, ಮುದ್ದೂರುಗಳಲ್ಲಿ ಶಾಖೆಗಳನ್ನು ಹೊಂದಿದೆ. ಕಳೆದ 10-15 ವರ್ಷಗಳಿಂದ ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಕೆಲ ವ್ಯಕ್ತಿಗಳು ಸೇರಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಯಲ್ಲಿ ವಾಮಮಾರ್ಗದ ಮೂಲಕ ಆಯ್ಕೆಯಾಗುತ್ತಾ ಬಂದಿದ್ದಾರೆ ಎಂದವರು ಆರೋಪಿಸಿದ್ದಾರೆ. ಕಳೆದ ಅ.3ರಂದು ಕೆಂಜೂರಿನಲ್ಲಿ ನಡೆದ ಸಂಘದ ಸದಸ್ಯರ ಸಭೆಯಲ್ಲಿ ನಕಲಿ ಚಿನ್ನವನ್ನು ಅಡವಿಟ್ಟವರಿಗೆ ಮೂರು ಕೋಟಿ ರೂ. ಹಣ ನೀಡಿರುವ ವಿಷಯ ಬಹಿರಂಗವಾಗಿದ್ದು, ಈ ಬಗ್ಗೆ ಕೆಲವರು ಸಹಕಾರಿ ಇಲಾಖೆಯ ಅಧಿಕಾರಿಗಳಿಗೆ ದೂರು ಸಲ್ಲಿಸಿ ತನಿಖೆ ನಡೆಸುವಂತೆ ಕೋರಿದ್ದು, ಸಹಕಾರ ಸಂಘಗಳ ಸಹಾಯಕ ನಿಬಂಧಕರು ತನಿಖೆ ನಡೆಸಿ ಮೇಲ್ನೋಟಕ್ಕೆ ಸಾಬೀತಾಗಿರುವ ಅವ್ಯವಹಾರದ ಕುರಿತಂತೆ ಆಡಳಿತ ಮಂಡಳಿಗೆ ಕಾರಣ ಕೇಳಿ ನೋಟೀಸು ಜಾರಿ ಮಾಡಿದ್ದಾರೆ ಎಂದು ಜಯಕರ ನಾಯಕ್ ವಿವರಿಸಿದರು. ಈ ನೋಟೀಸಿನಲ್ಲಿ ಹೆಸರಿಸಲಾದ ಪ್ರತಾಪ್ ಹೆಗ್ಡೆ ಎಂಬವರು ಆಡಳಿತ ಮಂಡಳಿಯ ಸದಸ್ಯರಾಗಿದ್ದು, ಬಿಜೆಪಿಯ ಪ್ರಭಾವಿ ನಾಯಕರು. ಇವರು ಯಾವುದೇ ಅಡಮಾನ ಅಥವಾ ಆಧಾರವನ್ನು ಸಹಕಾರಿ ಸಂಘಕ್ಕೆ ನೀಡದೇ ಕೋಟ್ಯಾಂತರ ರೂ.ಸಾಲವನ್ನು ಪಡೆದಿರುವುದು ಬಹಿರಂಗಗೊಂಡಿದೆ ಎಂದು ಆರೋಪಿಸಿದರು. ಸಂಘದ ಸಾಲ ನಿಯಮಾವಳಿ ಪ್ರಕಾರ ಒಬ್ಬ ವ್ಯಕ್ತಿಗೆ ನೀಡಬಹುದಾದ ಚಿನ್ನಾಭರಣ ಸಾಲದ ಮಿತಿ 25 ಲಕ್ಷ ರೂ. ಆದರೆ ದಾಖಲೆ ಪರಿಶೀಲಿಸಿದಾಗ ಇಲ್ಲಿ ನಿತಿನ್ಕುಮಾರ್ ಎನ್.ವಿ. ಎಂಬವರಿಗೆ 76.88ಲಕ್ಷ ರೂ., ಉಮಾನಾಥ ಶೆಟ್ಟಿ ಎಂಬವರಿಗೆ 1.09 ಕೋಟಿ ರೂ.ಸಾಲವನ್ನು ನೀಡಿ ನಿಯಮಾವಳಿಯನ್ನು ಉಲ್ಲಂಘಿಸಲಾಗಿದೆ ಎಂದು ನಾಯಕ್ ತಿಳಿಸಿದರು. ಉಮಾನಾಥ ಶೆಟ್ಟಿ ಅವರು ಸಂಘದ ಅಧ್ಯಕ್ಷರ ನಿಕಟ ಸಂಬಂಧಿಯಾಗಿದ್ದು, ನಕಲಿ ಚಿನ್ನಾಭರಣ ಟ್ಟು ಪಡೆದ 1.09 ಕೋಟಿ ರೂ.ಸಾಲವನ್ನು ಮರುಪಾವತಿಸಲು ಅವರಿಗೆ ಮತ್ತೆ ಒಂದು ಕೋಟಿ ರೂ.ಸಾಲ ಮಂಜೂರಾಗಿದೆ ಎಂದು ನೋಟೀಸಿನಲ್ಲಿ ತಿಳಿಸಲಾಗಿದೆ ಎಂದರು. ಸಂಘದ ದಾಖಲೆಗಳನ್ನು ಪರಿಶೀಲಿಸಿದಾಗ ಚಿನ್ನಾಭರಣ ಸಾಲಗಳ ಪ್ರತಿ 102 ಖಾತೆಗಳಲ್ಲಿ ಒಟ್ಟು 2.93 ಕೋಟಿ ರೂ. ವಿವಿಧ ಸಾಲಗಲನ್ನು ನಕಲಿ ಅಥವಾ ಕಳಪೆ ಗುಣಮಟ್ಟದ ಚಿನ್ನಾಭರಣಗಳನ್ನು ಅಡವಿಟ್ಟು ಪಡೆದಿರುವುದು ಕಂಡುಬಂದಿದೆ. ಇದರಲ್ಲಿ 40 ಲಕ್ಷ ರೂ.ಗಳಿಗೂ ಆಧಿಕ ಮೊತ್ತದ ಸಾಲ ಮರುಪಾವತಿಗೆ ಬಾಕಿ ಇರುವುದು ವರದಿಯಿಂದ ತಿಳಿಯುತ್ತದೆ ಎಂದರು. ಸಹಕಾರಿ ಇಲಾಖೆಯ ಅಧಿಕಾರಿಗಳ ಪ್ರಕಾರ ಸಂಘದಲ್ಲಿ ಸುಮಾರು 10 ಕೋಟಿ ರೂ.ಅವ್ಯವಹಾರ ನಡೆದಿದ್ದರೆ, ತಮಗೆ ಬಂದಿರುವ ಮಾಹಿತಿ ಪ್ರಕಾರ ಇಲ್ಲಿ 20ರಿಂದ 30 ಕೋಟಿ ರೂ.ಅವ್ಯವಹಾರ ನಡೆದಿರುವುದಾಗಿ ಜಯಕರ ನಾಯಕ್ ಕಳ್ತೂರು ವಿವರಿಸಿದರು. ಕೊಕ್ಕರ್ಣೆ ಸಹಕಾರಿ ಸಂಘದಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆ ನಡೆಸುವಂತೆ ತಾವು ಈಗಾಗಲೇ ಸಂಬಂಧಿತರಿಗೆ ಮನವಿ ಅರ್ಪಿಸಿದ್ದೇವೆ. ಸಂಘದಲ್ಲಿ 2010ರ ಬಳಿಕ ನಡೆದ ಎಲ್ಲಾ ಕಾನೂನು ಬಾಹಿರ ನೇಮಕಾತಿಗಳ ಬಗ್ಗೆ ಕೂಡಾ ಸಮಗ್ರ ತನಿಖೆ ನಡೆಯಬೇಕು ಎಂದು ಶೇಖರ ಹಾವಂಜೆ, ಸದಾಶಿವ ಶೆಟ್ಟಿ ಹಾಗೂ ಜಯಕರ ನಾಯಕ್ ಒತ್ತಾಯಿಸಿದ್ದಾರೆ.
ಉಡುಪಿ: ನ.8ರಂದು 538ನೇ ಕನಕದಾಸ ಜಯಂತಿ ಆಚರಣೆ
ಉಡುಪಿ: ಉಡುಪಿ ಜಿಲ್ಲಾ ಶ್ರೀಕನಕದಾಸ ಸಮಾಜ ಸೇವಾ ಸಂಘ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠದ ಜಂಟಿ ಆಶ್ರಯದಲ್ಲಿ ಕನಕದಾಸರ 538ನೇ ಜಯಂತಿ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ನ.8ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಸಿದ್ದರಾಜು ಕೆ.ಎಸ್. ತಿಳಿಸಿದ್ದಾರೆ. ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ನಲ್ಲಿ ಜಿಲ್ಲಾಡಳಿತದ ವತಿಯಿಂದ ಕನಕದಾಸರ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದರು. ಬಳಿಕ ಬೆಳಗ್ಗೆ 11ಗಂಟೆಗೆ ಉಡುಪಿ ಜೋಡುಕಟ್ಟೆಯಲ್ಲಿ ಕುಂಭ ಕಲಶ ಮೆರವಣಿಗೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪ್ರಭಾವತಿ ಕೆ.ಆರ್ ಚಾಲನೆ ನೀಡಲಿದ್ದಾರೆ. ಮೆರವಣಿಗೆ ಜೋಡುಕಟ್ಟೆಯಿಂದ ಶ್ರೀಕೃಷ್ಣಮಠದ ಕನಕದಾಸ ಮಂದಿರದವರೆಗೆ ಸಾಗಿಬರಲಿದೆ ಎಂದರು. ಅಪರಾಹ್ನ 1:00 ಗಂಟೆಗೆ ಕನಕದಾಸರ ಮೂರ್ತಿಗೆ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ 1:30ಕ್ಕೆ ರಾಜಾಂಗಣದಲ್ಲಿ ನಡೆಯುವ ಸಭಾಕಾರ್ಯಕ್ರಮದಲ್ಲಿ ಪುತ್ತಿಗೆ ಯತಿ ದ್ವಯರು ಆಶೀರ್ವಚನ ನೀಡಲಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದ ಅಧ್ಯಕ್ಷ ಹನುಮಂತ ಎಸ್. ಡೊಳ್ಳಿನ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಉದ್ಯಮಿ ಕೆ. ಕೃಷ್ಣಮೂರ್ತಿ ಆಚಾರ್ಯ ಅವರಿಗೆ ‘ಭಕ್ತ ಕನಕ ಪುರಸ್ಕಾರ’ ಪ್ರದಾನ ಮಾಡಲಾಗುವುದು. ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಹನುಮಂತ ಎಸ್. ಡೊಳ್ಳಿನ, ಪ್ರಧಾನ ಕಾರ್ಯದರ್ಶಿ ಸಂಗಮೇಶ ಬ. ಆಸಂಗಿ, ಜೊತೆ ಕಾರ್ಯದರ್ಶಿ ದೇವು ಎಸ್. ಪೂಜಾರ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಮಹಾಂತೇಶ್ ಕಾಟಾಪುರ, ಸಲಹೆಗಾರರಾದ ಮುತ್ತಪ್ಪ ಕುರಿ, ಬಸವರಾಜ ಕುರುಬ ಉಪಸ್ಥಿತರಿದ್ದರು.
ಕಲಬುರಗಿ | ಎಫ್ಆರ್ಪಿ ಬೆಲೆ ನಿಗದಿ ಮಾಡದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ದಾಖಲಿಸುವಂತೆ ಆಗ್ರಹ
ಕಲಬುರಗಿ : ಕಬ್ಬು ಬೆಳೆಗಾರರಿಗೆ ಎಫ್ಆರ್ಪಿ ಬೆಲೆ ನಿಗದಿ ಮಾಡದ ಮತ್ತು ಸರಕಾರದ ಮಾರ್ಗಸೂಚಿ ಪಾಲಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಒತ್ತಾಯಿಸಿ ರೈತ ಸಂಘಟನೆಗಳ ಜಂಟಿ ಕ್ರೀಯಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಬಿ.ಆರ್.ಪಾಟೀಲ್ ಅವರು ಯೋಜನಾ ಆಯೋಗದ ಉಪಧ್ಯಾಕ್ಷರು ಹಾಗೂ ರೈತ ಮುಖಂಡರ ಸಭೆಯಲ್ಲಿಯು ಕೂಡ ಸಕ್ಕರೆ ಕಾರ್ಖಾನೆ ಮಾಲಕರಿಗೆ ರೈತರ ಹಿತದೃಷ್ಟಿಯಿಂದ ಕಾನೂನು ಪಾಲನೆ ಮಾಡುವುದರ ಜತೆಗೆ ಬೆಲೆ ನಿಗದಿ ಮಾಡುವುದಕ್ಕಾಗಿ ಎಷ್ಟೇ ಮನವರಿಕೆ ಮಾಡಿದರೂ, ಉದ್ಧಟತನ ತೋರಿಸಿ ಯಾವುದೇ ರೀತಿಯ ಸಹಕಾರ ನೀಡದೆ ಕಾರ್ಖಾನೆಗಳ ಮಾಲಕರು ದರ್ಪವನ್ನು ಎತ್ತಿ ತೋರಿದ್ದಾರೆ. ಇಂತಹ ಸಕ್ಕರೆ ಖಾರ್ಕಾನೆ ಮಾಲಕರ ವಿರುದ್ಧ ಮತ್ತು ಆಡಳಿತ ವರ್ಗದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ರೈತರಿಗೆ ಎಫ್ಆರ್ಪಿ ಬೆಲೆ ನಿಗದಿ ಮಾಡಿಲ್ಲ. ಹಲವಾರು ಬಾರಿ ಜಿಲ್ಲಾಧಿಕಾರಿಗಳು ಸರಕಾರದ ಮಾರ್ಗಸೂಚಿಗಳನ್ನು ಮತ್ತು ಕಬ್ಬು ಬೆಳೆಗಾರರಿಗೆ ಆಗುತ್ತಿರುವ ತೂಕದಲ್ಲಿ ನಷ್ಟವನ್ನು ತಪ್ಪಿಸುವಂತೆ ಎರಡು ಮೂರು ಸಭೆಗಳು ನಡೆಸಿದ್ದರೂ, ಸಕ್ಕರೆ ಕಾರ್ಖಾನೆಗಳ ಆಡಳಿತ ವರ್ಗ ಯಾವುದೇ ಕ್ರಮ ಕೈಗೊಂಡಿಲ್ಲ. ಕೆಲವು ಸಕ್ಕರೆ ಕೈಗಾರಿಕಾ ಮಾಲಕರು ರಾಜಕೀಯವಾಗಿ ಪ್ರಬಲವಾಗಿರುವುದರಿಂದ ರೈತರಿಗೆ ಮತ್ತು ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಿರುವುದು ಕೆಲವು ಕಡೆ ಕಂಡುಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಂಘದ ಜಿಲ್ಲಾ ಸಂಚಾಲಕ ಸುನೀಲ ಮಾರುತಿ ಮಾನಪಡೆ, ರೈತ ಮುಖಂಡರಾದ ಚಂದು ಜಾಧವ ಶಹಾಬಾದ್, ಶಾಂತಪ್ಪ ಪಾಟೀಲ್, ಉಮಾಪತಿ ಪಾಟೀಲ್, ಶೌಖತ ಅಲಿ ಆಲೂರ, ರೈತ ಸಂಸ್ಥೆಯ ಸೋಮಣ್ಣಗೌಡ ಪಾಟೀಲ್, ಮೈಲಾರಿ ದೊಡ್ಡಮನಿ ಅಫಜಲಪುರ, ಶಹಾಬುದ್ದೀನ್ ಪಟೇಲ್ ಜೇವರ್ಗಿ ಇತರರು ಇದ್ದರು.
ಹೊರ ರಾಜ್ಯ-ದೇಶಗಳಿಂದ ಬಂದವರಿಗೆ ಕನ್ನಡ ಕಲಿಸಲು ಕ್ರಮ : ರಾಜೀವ್ ಗಾಂಧಿ ವಿವಿ ಕುಲಪತಿ ಡಾ.ಭಗವಾನ್ ಬಿ.ಸಿ.
‘ಕನ್ನಡ ರಾಜ್ಯೋತ್ಸವ 2025’ ಕಾರ್ಯಕ್ರಮ
ಕಲಬುರಗಿ | ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಕಲಬುರಗಿ: ನಗರದ ಸರಕಾರಿ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆಸಲಾಗುತ್ತಿರುವ ಎಮ್ಎ, ಎಂಕಾಂ, ಎಮ್ಎಸ್ಸಿ ಸ್ನಾತಕೋತ್ತರ ಕೋರ್ಸ್ಗಳ ಪ್ರಥಮ ಸೆಮಿಸ್ಟರ್ ನಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೋರ್ಸ್ವಾರು ಮತ್ತು ಪ್ರವರ್ಗವಾರು ಖಾಲಿ ಇರುವ ಸೀಟುಗಳ ಮಾಹಿತಿ, ಪ್ರವೇಶದ ವಿವರವಾದ ವೇಳಾಪಟ್ಟಿ, ಪ್ರವೇಶ ಶುಲ್ಕ ಮತ್ತು ಪ್ರವೇಶ ಸಂದರ್ಭದಲ್ಲಿ ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಗಾಗಿ ಅಭ್ಯರ್ಥಿಗಳು ಕಾಲೇಜಿನ ಅಧೀಕೃತ ಜಾಲತಾಣ www.gcak.ac.in ಗೆ ಭೇಟಿ ನೀಡಬೇಕೆಂದು ಸರಕಾರಿ ಮಹಾವಿದ್ಯಾಲಯದ (ಸ್ವಾಯತ್ತ) ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು| ವೈಯಕ್ತಿಕ ಸಮಸ್ಯೆಗಳನ್ನು ಪೂಜೆ ಮಾಡಿ ಪರಿಹರಿಸುವುದಾಗಿ ನಂಬಿಸಿ 28.78 ರೂ. ವಂಚನೆ; ಆರೋಪಿಯ ಬಂಧನ
ಮಂಗಳೂರು: ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ. ಸೈಬರ್ ವಂಚನೆ ನಡೆಸಿದ ಆರೋಪದಲ್ಲಿ ಯವಂತಪುರದ ವಾಸುವೇವ ಆರ್(32) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್ಗಳು ಹಾಗೂ ರೂ. 20,300 ನಗದು ಹಣವನ್ನು ಸ್ವಾಧೀನಪಡಿಸಿಕೊಂಡಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ.1,60,300 ಆಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ನ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಲಂಚ ಪಡೆದು ಮದ್ಯ ಸೇವಿಸಿದ EV BMTC ಚಾಲಕರನ್ನು ಕರ್ತವ್ಯಕ್ಕೆ ನಿಯೋಜಿಸಿದ ಆರೋಪ; ಅಧಿಕಾರಿಗಳು ಅಮಾನತು
ಮದ್ಯ ಸೇವಿಸಿದ ಚಾಲಕರನ್ನು ಕರ್ತವ್ಯಕ್ಕೆ ನಿಯೋಜಿಸಿದ ಆರೋಪದಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಘಟಕ-35ರ ಘಟಕ ವ್ಯವಸ್ಥಾಪಕರು ಸೇರಿದಂತೆ ಒಟ್ಟು 9 ಮಂದಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಇವಿ ಬಸ್ಗಳ ಕಾರ್ಯಾಚರಣೆ ಸಂಬಂಧ ಮಂಜೂರಾದ ಬಿಲ್ಗಳಲ್ಲಿ ಕಂಡುಬಂದ ನ್ಯೂನತೆಗಳ ಕುರಿತು ತನಿಖೆ ನಡೆಸಲು ಉನ್ನತಾಧಿಕಾರಿಗಳ ತಂಡವನ್ನು ರಚಿಸಲಾಗಿದೆ.
ಕಲಬುರಗಿ | ನ.5 ರಿಂದ ಎಂಟು ವಾರ ತೊಗರಿ ಆರೋಗ್ಯ ಸಮೀಕ್ಷೆ ಕಾರ್ಯ : ಸಮದ್ ಪಟೇಲ್
ಕಲಬುರಗಿ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ತೊಗರಿ ಆರೋಗ್ಯ ಸಮೀಕ್ಷೆ/ ಕ್ಷೀಪ್ರ ಸಂಚಾರಿ ಸಮೀಕ್ಷೆ (Rapid Rowing Survey) ಕಾರ್ಯವನ್ನು ನ. 5 ರಿಂದ ಎಂಟು ವಾರದವರೆಗೆ ಸರ್ವಿಕ್ಷಣಾ ಕಾರ್ಯ ಜರುಗಿಸಲು ನಿರ್ಧರಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ತಿಳಿಸಿದ್ದಾರೆ. ಕಲಬುರಗಿ ಕೃಷಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿ, ತೊಗರಿ, ಹತ್ತಿ, ಕಬ್ಬು ಹಾಗೂ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಕಡಲೆ, ಜೋಳ ಹಾಗೂ ಇತರೆ ವಿವಿಧ ಬೆಳೆಗಳಲ್ಲಿ ಬರಬಹುದಾದ ಕೀಟ, ರೋಗ ಹಾಗೂ ಇತರ ಪೀಡೆಗಳ ಜಂಟಿ ಸರ್ವೆಕ್ಷಣೆಗಾಗಿ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿಗಳ ಒಳಗೊಂಡ 7 ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು. ಪ್ರತಿ ಬುಧವಾರದಂದು 7 ತಂಡಗಳಲ್ಲಿಯ ಅಧಿಕಾರಿಗಳು ಜಿಲ್ಲೆಯ ಎಲ್ಲಾ 11 ತಾಲೂಕುಗಳ ವಿವಿಧ ಗ್ರಾಮಗಳಲ್ಲಿನ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ, ಕೀಟ ಹಾಗೂ ರೋಗ ಸಮೀಕ್ಷೆ ಮಾಡಿ ತೆಗೆದುಕೊಳ್ಳಬಹುದಾದ ನಿರ್ವಹಣಾ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಿದ್ದಾರೆ. ಪ್ರತಿ ಗುರುವಾರದಂದು ಎಂಟು ವಾರದವರೆಗೆ ರೇಡಿಯೋ (All India Radio) ಮುಖಾಂತರ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನಿಗಳು ರೈತರೊಂದಿಗೆ ವಿವಿಧ ಬೆಳೆಗಳಿಗೆ ಬರಬಹುದಾದ ಕೀಟ, ರೋಗ ಹಾಗೂ ಇತರ ವಿಷಯಗಳ ಕುರಿತು ಸಂವಾದ ನಡೆಸಲಿದ್ದಾರೆ. ಸಭೆಯಲ್ಲಿ ಸಹಾಯಕ ಸಂಶೋಧನಾ ನಿರ್ದೇಶಕರಾದ ಡಾ.ಬಿ.ಎಂ.ದೊಡ್ಡಮನಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ರಾಜು ತೇಗ್ಗೆಳ್ಳಿ, ಕಲಬುರಗಿ ಮತ್ತು ಸೇಡಂ ಉಪ ಕೃಷಿ ನಿರ್ದೇಶಕರು, ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ವಿಜ್ಞಾನಿಗಳು ಭಾಗವಹಿಸಿದ್ದರು.
ಕಲಬುರಗಿ | ಫಲಾನುಭವಿ ಆಧಾರಿತ ಯೋಜನೆಯ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ವಿಸ್ತರಣೆ
ಕಲಬುರಗಿ: 2025-26ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಈ ಕೆಳಕಂಡ 13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ನ.15 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದೋಗ ಭತ್ಯೆ, ಶಿಶು ಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಹಾಗೂ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ಚೇರ್ ದ್ವಿಚಕ್ರ ವಾಹನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿಕಲಚೇತನ ಫಲಾನುಭವಿಗಳು ಆನ್ಲೈನ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಸೇವಾಸಿಂಧು https://sevasindhu.karnataka.gov.in/Sevasindhu/DepartmentServices Kannada ವೆಬ್ಸೈಟ್ ದಲ್ಲಿ ಆನ್ಲೈನ್ ಮೂಲಕ 2025ರ ನ.15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ಮೊಬೈಲ್ ಸಂಖ್ಯೆ: 08472-235222 ಗೆ ಸಂಪರ್ಕಿಸಲು ಕೋರಲಾಗಿದೆ.
ಕಮಲ್ ಹಾಸನ್ ಬ್ಯಾನರ್ನಲ್ಲಿ ರಜನಿಕಾಂತ್ ಹೊಸ ಪ್ರಾಜೆಕ್ಟ್ ಘೋಷಣೆ; ನೆನಪಿರಲಿ, ಇದು 'ಆ' ಸಿನಿಮಾ ಅಲ್ಲ!
Thalaivar 173: 'ಸೂಪರ್ ಸ್ಟಾರ್' ರಜನಿಕಾಂತ್ ನಟನೆಯ 172ನೇ ಸಿನಿಮಾ 'ಜೈಲರ್ 2'ಗೆ ಬಿರುಸಿನ ಶೂಟಿಂಗ್ ನಡೆಯುತ್ತಿದೆ. ಇದರ ಮಧ್ಯೆ ಸೈಲೆಂಟ್ ಆಗಿಯೇ ರಜನಿಕಾಂತ್ ಅವರ 173ನೇ ಸಿನಿಮಾದ ಘೋಷಣೆ ಆಗಿದೆ. ಈ ಚಿತ್ರದ ಕುರಿತ ವಿಶೇಷತೆಗಳು ಇಲ್ಲಿವೆ.
ಮಂಗಳೂರು |ದ್ವಿಚಕ್ರ ವಾಹನ ಚಲಾಯಿಸಿದ ಬಾಲಕ; ಮಾಲಕಿಗೆ 26,000 ರೂ.ದಂಡ
ಮಂಗಳೂರು: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಸವಾರ ಮಾಡಿದ ಆರೋಪದ ಹಿನ್ನಲೆಯಲ್ಲಿ ವಾಹನದ ಮಾಲಕಿಗೆ ಮಂಗಳೂರಿನ ನಾಲ್ಕನೆ ಜೆಎಂಎಫ್ಸಿ ನ್ಯಾಯಾಲಯ ದಂಡ ವಿಧಿಸಿದೆ. ದ್ವಿಚಕ್ರ ವಾಹನವನ್ನು ಅದರ ಮಾಲಕಿ ಅತಿಜಮ್ಮರ ಅಪ್ರಾಪ್ತ ವಯಸ್ಸಿನ ಪುತ್ರ ಅ.10ರಂದು ಬೈಕಂಪಾಡಿಯಲ್ಲಿ ಚಲಾಯಿಸುತ್ತಿದ್ದ. ಈ ಬಗ್ಗೆ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನ್ಯಾಯಾಲಯವು ವಿಚಾರಣೆ ನಡೆಸಿ ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ್ದಕ್ಕೆ ವಾಹನದ ಮಾಲಕಿಗೆ 26,000 ರೂ.ದಂಡ ವಿಧಿಸಿ ಅದೇಶಿದೆ.
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನದಂದೇ ಭೀಮ್ ಆರ್ಮಿಯ ಕಾರ್ಯಕ್ರಮ: ಎಸ್.ಎಸ್. ತಾವಡೆ
ಕಲಬುರಗಿ: ಚಿತ್ತಾಪುರದಲ್ಲಿ ಆರೆಸ್ಸೆಸ್ ಯಾವಾಗ ಪಥ ಸಂಚಲನ ಮಾಡುತ್ತದೆ. ಅದೇ ದಿನದಂದೇ ಭೀಮ್ ಆರ್ಮಿ ಕೂಡ ಕಾರ್ಯಕ್ರಮ ಮಾಡಲಿದೆ ಎಂದು ಭೀಮ್ ಆರ್ಮಿ ಸಂಘಟನೆಯ ಮುಖಂಡ ಎಸ್.ಎಸ್.ತಾವಡೆ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಮೀಪ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ.5 ರಂದು (ಬುಧವಾರ) ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಶಾಂತಿ ಸಭೆಗೆ ನಮ್ಮನ್ನು ಸೇರಿದಂತೆ ಉಳಿದ ಹತ್ತು ಸಂಘಟನೆಗಳಿಗೆ ಆಹ್ವಾನಿಸಿಲ್ಲ. ನಾವು ಚಿತ್ತಾಪುರದಲ್ಲಿ ಪಥ ಸಂಚಲನ ಮಾಡಬೇಕೋ ಅಥವಾ ಮಾಡಬಾರದು ಎನ್ನುವ ಕುರಿತಾಗಿ ಜಿಲ್ಲಾಡಳಿತದಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ತಿಳಿಸಿದರು. ಸಾವಿರಾರು ಮಂದಿಯನ್ನು ಸೇರಿಸಿ ಪಥ ಸಂಚಲನ ಮಾಡುವ ಸಂಘಟನೆಗೆ ನೋಂದಣಿ ಇಲ್ಲ. ಅಂತಹ ನೋಂದಣಿ ಇಲ್ಲದ ಸಂಘಟನೆಗೆ ಕಾರ್ಯಕ್ರಮ ಮಾಡಲು ಅವಕಾಶ ಏಕೆ ನೀಡುತ್ತೀರಿ ಎಂದು ಅವರು ಪ್ರಶ್ನಿಸಿದ್ದಾರೆ. ಜಿಲ್ಲಾಡಳಿತ ನಮ್ಮ ಭೀಮ್ ಅರ್ಮಿಯ ಸಂಘಟನೆ ಬಗ್ಗೆ ನೋಂದಣಿ, ಆಡಿಟ್ ವರದಿ ಸೇರಿದಂತೆ ಹಲವು ದಾಖಲೆಗಳನ್ನು ಕೇಳಿದೆ. ಅದನ್ನು ನಾವು ಕೊಟ್ಟಿದ್ದೇವೆ. ಆದರೆ, ನಮ್ಮನ್ನು ಕೇಳಿದಂತೆ ಆರೆಸ್ಸೆಸ್ ನವರಲ್ಲೂ ದಾಖಲೆಗಳನ್ನು ಕೇಳಲಿ ಎಂದ ಅವರು, ಆರೆಸ್ಸೆಸ್ ಯಾವ ದಿನ ಪಥ ಸಂಚಲನ ಮಾಡುತ್ತದೆಯೋ ಅದೇ ದಿನದಂದೇ ನಮ್ಮ ಕಾರ್ಯಕ್ರಮ ಹಾಗೂ ಹೋರಾಟ ಇದ್ದೆ ಇರುತ್ತದೆ ಎಂದು ಎಚ್ಚರಿಕೆ ನೀಡಿದರು. ಆರೆಸ್ಸೆಸ್ ನವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆಯೊಡ್ಡಿದ್ದಾರೆ. ನಮ್ಮ ಸಮುದಾಯದ ರಾಜಕೀಯ ನಾಯಕರನ್ನು ಹತ್ತಿಕ್ಕುವ ಕೆಲಸ ಆರೆಸ್ಸೆಸ್ ಮಾಡುತ್ತಿದೆ. ಇದರ ವಿರುದ್ದ ಭೀಮ್ ಆರ್ಮಿ ಸುಮ್ಮನೆ ಕೂರುವುದಿಲ್ಲ. ಆರೆಸ್ಸೆಸ್ ವಿರುದ್ಧ ಹೋರಾಟ ಮಾಡೇ ಮಾಡುತ್ತದೆ ಎಂದು ಹೇಳಿದರು. ಇದೇ ವೇಳೆಯಲ್ಲಿ ಭೀಮ್ ಆರ್ಮಿ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು, ಮತ್ತಿತರರು ಇದ್ದರು.
ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ಅಕ್ರಮ ಆರೋಪ: ಸಚಿವ ಕೆ.ಜೆ.ಜಾರ್ಜ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್ಗಳ ಖರೀದಿ ಮತ್ತು ಅಳವಡಿಕೆ ಟೆಂಡರ್ನಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಖಾಸಗಿ ದೂರು ದಾಖಲಿಸಲು ಕಚೇರಿಗೆ ನಿರ್ದೇಶಿಸಿರುವುದು ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಚಿವ ಕೆ.ಜೆ ಜಾರ್ಜ್ ಹಾಗೂ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ತಾಂತ್ರಿಕ ವಿಭಾಗದ ನಿರ್ದೇಶಕ ಎಚ್.ಜೆ. ರಮೇಶ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿ, ದೇಶದ ಬೇರೆ ಬೇರೆ ರಾಜ್ಯಗಳಲ್ಲಿ 97 ಮತ್ತು ಅದಕ್ಕೂ ಹೆಚ್ಚು ಅರ್ಹ ಟೆಂಡರ್ದಾರರು ಸ್ಮಾರ್ಟ್ ಮೀಟರ್ ಅಳವಡಿಕೆ ಕೆಲಸ ಮಾಡುತ್ತಾರೆ. ಅವರೂ ಈ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದರು. ಇದರ ಸಂಬಂಧಿತ ಮಾಹಿತಿಯು ಬೆಸ್ಕಾಂ ವೆಬ್ಸೈಟ್ನಲ್ಲಿ ಲಭ್ಯವಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಐವರು ಟೆಂಡರ್ದಾರರ ಜತೆ ಚರ್ಚೆ ನಡೆದಿದೆ. ಮರು ಬಿಡ್ ಸಹ ಐವರ ನಡುವೆ ನಡೆದಿದೆ. ಎಲ್ಲರೂ ಕರ್ನಾಟಕದವರೇ ಇದ್ದರು. ಈ ಪೈಕಿ ಟೆಂಡರ್ನ 5 ಷರತ್ತುಗಳನ್ನು ಪೂರೈಸಲು ಮೂವರು ಬಿಡ್ದಾರರು ವಿಫಲವಾದ್ದರಿಂದ ಅನರ್ಹರಾಗಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ಅದನ್ನು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು. ದೂರುದಾರರ ಪರ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್ ಅವರು, 97 ಮಂದಿ ಇದ್ದರು ಎಂದು ವಕೀಲರು ಹೇಳಿದ್ದು, ಆನಂತರ ಅದಕ್ಕೂ ಹೆಚ್ಚು ಮಂದಿ ಬಿಡ್ದಾರರು ಇರಬಹುದು ಎಂದಿದ್ದಾರೆ. ನಮ್ಮ ಪ್ರಕಾರ 2 ಸಾವಿರ ಮಂದಿ ಟೆಂಡರ್ದಾರರು ಇದ್ದಾರೆ. ಇದರರ್ಥ ನಾವು ಏನು ಹೇಳಬೇಕು ಎಂದುಕೊಂಡಿದ್ದೆವೋ ಅದನ್ನು ಅವರ ಹೇಳಿಕೆ ಸಾಬೀತುಪಡಿಸಿದೆ ಎಂದರು. ವಾದ ಮುಂದುವರಿಸಿದ ಅರಬಟ್ಟಿ ಅವರು, ದೂರುದಾರರು ಸಂಪೂರ್ಣವಾದ ಖಾಸಗಿ ದೂರು ನೀಡಿದ್ದಾರೆ. ಖಾಸಗಿ ದೂರಿನ ಜತೆ 14 ದಾಖಲೆಗಳಿವೆ. ದೂರುದಾರರು ಮತ್ತು ಟೆಂಡರ್ದಾರರು ಹಾಗೂ ಆರೋಪಿತ ಅಧಿಕಾರಿಗಳು ನಮ್ಮ ಪತ್ರಕ್ಕೆ ಪ್ರತಿಕ್ರಿಯೆ ಸಲ್ಲಿಸಿದ್ದಾರೆ ಎಂದರು. ಅಂತಿಮವಾಗಿ ನ್ಯಾಯಪೀಠ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಯ ವರದಿಯನ್ನು ದೂರುದಾರರು ಮತ್ತು ಅರ್ಜಿದಾರರಿಗೆ ನೀಡಬೇಕು. ಇದನ್ನು ಪರಿಶೀಲಿಸಿ, ಅವರು ಶುಕ್ರವಾರದೊಳಗೆ ತಮ್ಮ ವಾದಾಂಶಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಹೀಗಾದಲ್ಲಿ ಮುಂದಿನ ವಾರದಲ್ಲಿ ಆದೇಶ ಪ್ರಕಟಿಸಲಾಗುವುದು ಎಂದು ಮೌಖಿಕವಾಗಿ ತಿಳಿಸಿ, ಆದೇಶ ಕಾಯ್ದಿರಿಸಿತು. ಪ್ರಕರಣವೇನು? ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಕಾನೂನುಬಾಹಿರವಾಗಿದೆ ಮತ್ತು ಈ ಟೆಂಡರ್ ನೀಡಿಕೆಯಿಂದ ಅಂದಾಜು 16 ಸಾವಿರ ಕೋಟಿ ರೂ. ಮೊತ್ತದ ದುರ್ಲಾಭ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಅವರು ವಿಚಾರಣಾಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಸ್ಮಾರ್ಟ್ ಮೀಟರ್ ಸೇವೆ ಒದಗಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 26ರಂದು ಟೆಂಡರ್ ಕರೆಯಲಾಗಿತ್ತು. ಬಿಡ್ದಾರರಾದ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ ಎಂಬ ಶೆಲ್ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿದ್ದು, ಈ ಟೆಂಡರ್ ಅನ್ನು ರಾಜ್ಯದಲ್ಲಿ ವಿವಿಧ ಭಾಗಗಳ ವಿದ್ಯುತ್ ಸರಬರಾಜು ಕಂಪನಿಗಳಿಗೆ ಪ್ರತ್ಯೇಕ ಟೆಂಡರ್ ಕರೆಯದೆ ಬೆಸ್ಕಾಂ ಕಂಪನಿ ಮೂಲಕವೇ ನೇರವಾಗಿ ಟೆಂಡರ್ ನೀಡಲಾಗಿದೆ. ಇದರಿಂದ, ಅಂದಾಜು 16 ಸಾವಿರ ಕೋಟಿ ರೂ. ಮೊತ್ತವನ್ನು ಪಡೆಯುವ ಅಕ್ರಮ ನಡೆದಿದೆ. ಕಾನೂನು ಬಾಹಿರವಾದ ಈ ಪ್ರಕ್ರಿಯೆ ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಅಧಿನಿಯಮ-2000 ಹಾಗೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್ಸಿ) ನಿಯಮಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಲಾಗಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್.ಜೆ. ರಮೇಶ್ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿತ್ತು. ಇದನ್ನು ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯ, ಖಾಸಗಿ ದೂರು ದಾಖಲಿಸಿಕೊಂಡು, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ವರದಿ ನೀಡಲು ಆದೇಶಿಸಿತ್ತು. ಈ ಆದೇಶಕ್ಕೆ ಹೈಕೋರ್ಟ್ ಈ ಹಿಂದೆಯೇ ತಡೆ ನೀಡಿದೆ.
ಬೆಂಗಳೂರು ಗ್ರಾಮಾಂತರ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ!
ನೆಲಮಂಗಲ ತಾಲೂಕಿನ ಹನುಮಂತಪುರ, ಬಿದಲೂರು, ಕೋಡಿಪಾಳ್ಯ ಗ್ರಾಮಗಳ 387 ಎಕರೆ ಕೆಐಎಡಿಬಿ ಭೂ ಸ್ವಾಧೀನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರೈತರ ಫಲವತ್ತಾದ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ನ್ಯಾಯಾಲಯ ತಡೆ ನೀಡಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ತಪ್ಪು ಮಾಹಿತಿ ನೀಡಲಾಗಿದೆ ಎಂದು ಅರ್ಜಿದಾರರ ವಕೀಲರು ವಾದ ಮಂಡಿಸಿದರು. ನ್ಯಾಯಮೂರ್ತಿಗಳು ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸದಂತೆ ಆದೇಶಿಸಿದ್ದಾರೆ. ರೈತರು ಮತ್ತು ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ.
ಭಾರತೀಯರ ಮತ್ತೊಂದು ಪೂರ್ವಜರ ಮೂಲ ʼಪ್ರೊಟೋ-ದ್ರಾವಿಡಿಯನ್ʼ ಪತ್ತೆ; ಕೊರಗರ ಮೂಲದ ಕುರಿತು ಮಹತ್ವದ ಫಲಿತಾಂಶ ಲಭ್ಯ
ಕೊರಗರ ಕುರಿತ ಸಂಶೋಧನಾ ಪ್ರಬಂಧಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ
ಪ್ರಯೋಗದ ಮಾದರಿಗಳನ್ನು ಸಂಗ್ರಹಿಸಲು ಅಂತರಿಕ್ಷದಲ್ಲಿ ಮೂರು ಗಂಟೆಗಳ ಕಾಲ ತಮ್ಮ ಸುತ್ತಲೇ ತಿರುಗಿದ್ದ ಶುಭಾಂಶು ಶುಕ್ಲಾ!
ಪ್ರಯೋಗದ ಮಾದರಿಗಳನ್ನು ಸಂಗ್ರಹಿಸಲು ಅಂತರಿಕ್ಷದಲ್ಲಿ ಮೂರು ಗಂಟೆಗಳ ಕಾಲ ತಮ್ಮ ಸುತ್ತಲೇ ತಿರುಗಿದ್ದ ಶುಭಾಂಶು ಶುಕ್ಲಾ!
ನಂದಿನಿ ತುಪ್ಪದ ದರ ಪ್ರತಿ ಲೀಟರ್ಗೆ 90 ರೂ. ಏರಿಕೆ; ಬೆಣ್ಣೆಯ ದರದಲ್ಲೂ ಹೆಚ್ಚಳ
ಬೆಂಗಳೂರು : ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾ ಮಂಡಳಿ(ಕೆಎಂಎಫ್) ನಂದಿನಿ ತುಪ್ಪ ಹಾಗೂ ಬೆಣ್ಣೆಯ ದರ ಪರಿಷ್ಕರಣೆ ಮಾಡಿದ್ದು, ತುಪ್ಪದ ದರವನ್ನು ಪ್ರತಿ ಲೀಟರ್ಗೆ 90 ರೂ., ಬೆಣ್ಣೆಯ ದರವನ್ನು ಪ್ರತಿ ಕೆ.ಜಿ.ಗೆ 26 ರೂ.ಗಳನ್ನು ಏರಿಕೆ ಮಾಡಿದೆ. ಈ ಪರಿಷ್ಕೃತ ದರ ಇಂದಿನಿಂದಲೇ(ನ.5) ಜಾರಿಯಾಗಲಿದೆ. ಜಿಎಸ್ಟಿ ದರ ಇಳಿಕೆಯಾದಾಗ ನಂದಿನಿ ತುಪ್ಪದ ಬೆಲೆ ಲೀಟರ್ಗೆ 40 ರೂ. ಇಳಿಕೆ ಮಾಡಿತ್ತು. ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತುಪ್ಪ ಹಾಗೂ ಬೆಣ್ಣೆಗೆ ಬೇಡಿಕೆ ಹೆಚ್ಚಾಗಿ ದರದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ದರ ಏರಿಕೆ ಮಾಡಲಾಗಿದೆ. ಒಂದು ಲೀಟರ್ ನಂದಿನಿ ತುಪ್ಪಕ್ಕೆ ಈಗ 700 ರೂಪಾಯಿ ದರ ನಿಗದಿ ಮಾಡಲಾಗಿದೆ. ಈ ಮೊದಲು 610 ರೂ.ಗೆ ಒಂದು ಲೀಟರ್ ತುಪ್ಪ ಮಾರಾಟ ಮಾಡಲಾಗುತ್ತಿತ್ತು. ಒಂದು ಕೆ.ಜಿ. ಬೆಣ್ಣೆಯ ಬೆಲೆ ಈಗ 570 ರೂಪಾಯಿ ದರ ನಿಗದಿ ಮಾಡಲಾಗಿದೆ. ಈ ಮೊದಲು 544 ರೂ.ಗಳಿಗೆ ಒಂದು ಕೆ.ಜಿ. ಬೆಣ್ಣೆ ಮಾರಾಟ ಮಾಡಲಾಗುತ್ತಿತ್ತು ಎಂದು ಕೆಎಂಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಮ್ದಾನಿಗೆ ಗೆಲುವು | ಚುನಾವಣೆಯಲ್ಲಿ ಸೋಲಿಗೆ ಕಾರಣ ನೀಡಿದ ಅಮೆರಿಕಾ ಅಧ್ಯಕ್ಷ ಟ್ರಂಪ್
ವಾಷಿಂಗ್ಟನ್, ನ.5: ಮಂಗಳವಾರ ನಡೆದ ಚುನಾವಣೆಗಳಲ್ಲಿ ರಿಪಬ್ಲಿಕನ್ನರಿಗೆ ಹಿನ್ನಡೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ `ಟ್ರಂಪ್ ಮತದಾನದಲ್ಲಿ ಇರಲಿಲ್ಲ, ಮತ್ತು ಸರಕಾರದ ಕಾರ್ಯ ಸ್ಥಗಿತಗೊಂಡಿರುವುದು' ಸೋಲಿಗೆ ಎರಡು ಕಾರಣಗಳಾಗಿರುವುದು ಸಮೀಕ್ಷೆಯಿಂದ ತಿಳಿದುಬಂದಿರುವುದಾಗಿ ಸಾಮಾಜಿಕ ಮಾಧ್ಯಮ ಟ್ರುಥ್ ಸೋಷಿಯಲ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಎರಡನೇ ಬಾರಿ ಅಧ್ಯಕ್ಷರಾಗಿ ಅಧಿಕಾರಕ್ಕೆ ಬಂದ ಬಳಿಕ ನಡೆದ ಮೊದಲ ಪ್ರಮುಖ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಜೊತೆಗೆ ಪ್ರತಿಷ್ಠಿತ ನ್ಯೂಯಾರ್ಕ್ ಮೇಯರ್ ಚುನಾವಣೆಯಲ್ಲಿ ಝೊಹ್ರಾನ್ ಮಮ್ದಾನಿ ಗೆಲುವು ಸಾಧಿಸಿರುವುದರಿಂದ ಟ್ರಂಪ್ಗೆ ತೀವ್ರ ಮುಖಭಂಗವಾಗಿದೆ. ಗೆಲುವಿನ ಭಾಷಣದಲ್ಲಿ ಮಮ್ದಾನಿ `ಡೊನಾಲ್ಡ್ ಟ್ರಂಪ್, ನೀವು ನೋಡುತ್ತಿದ್ದೀರಿ ಎನ್ನುವುದು ನನಗೆ ತಿಳಿದಿದೆ. ಧ್ವನಿಯನ್ನು ಹೆಚ್ಚಿಸಿ' ಎಂದು ನೇರ ಸವಾಲು ಎಸೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ರಂಪ್ ` ಆದ್ದರಿಂದ ಇದು ಪ್ರಾರಂಭವಾಗುತ್ತದೆ' ಎಂದು ಪೋಸ್ಟ್ ಮಾಡಿದ್ದಾರೆ. ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಶ್ವೇತಭವನ `ಟ್ರಂಪ್ ನಿಮ್ಮ ಅಧ್ಯಕ್ಷ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.
ರಾಹುಲ್ ಗಾಂಧಿ ಮತಗಳ್ಳತನ ಆರೋಪ; ಅಣುಬಾಂಬ್ ಇನ್ನು ಸ್ಫೋಟಗೊಂಡಿಲ್ಲ ಯಾಕೆ?: ಕಿರಣ್ ರಿಜಿಜು
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಮತ ವಂಚನೆ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ ʻಎಚ್-ಫೈಲ್ಸ್ʼ ಬಿಜೆಪಿ ತೀವ್ರ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಸುಳ್ಳುಗಳನ್ನು ಹರಡಿ ದೇಶದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಆರೋಪಿಸಿದರೆ, ಕೇಂದ್ರ ಸಚಿವ ಕಿರಣ್ ರಿಜಿಜು, ʻರಾಹುಲ್ ಅವರ ಆಟಂ ಬಾಂಬ್ ಎಂದಿಗೂ ಸ್ಫೋಟಿಸುವುದೇ ಇಲ್ಲʼ ಎಂದು ವ್ಯಂಗ್ಯವಾಡಿದ್ದಾರೆ.
ಬೋಸ್ನಿಯಾ: ಹಿರಿಯ ನಾಗರಿಕರ ಆಶ್ರಯ ಕೇಂದ್ರದಲ್ಲಿ ಬೆಂಕಿ ದುರಂತ; 11 ಮಂದಿ ಸಾವು; 30 ಮಂದಿಗೆ ಗಾಯ
ಸರಜೆವೊ, ನ.5: ಬೋಸ್ನಿಯಾದಲ್ಲಿ ಹಿರಿಯ ನಾಗರಿಕರ ಆಶ್ರಯ ಕೇಂದ್ರದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ತುಜ್ಲಾ ಪ್ರದೇಶದ 9 ಅಂತಸ್ತಿನ ಕಟ್ಟಡದ 7ನೇ ಮಹಡಿಯಲ್ಲಿರುವ ಆಶ್ರಯ ಕೇಂದ್ರದಲ್ಲಿ ಮಂಗಳವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಮಾತ್ರದಲ್ಲಿ ಮೇಲಿನ ಅಂತಸ್ತುಗಳಿಗೂ ವ್ಯಾಪಿಸಿದೆ. ತುರ್ತು ಕಾರ್ಯಪಡೆ ಮತ್ತು ಅಗ್ನಿಶಾಮಕ ಪಡೆ ಬೆಂಕಿಯನ್ನು ನಿಯಂತ್ರಿಸಿದ್ದು ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯ ರೈಸ್ಮಿಲ್ಗಳಿಂದ ರೈತರ ಭತ್ತ ಖರೀದಿ ವೇಳೆ ಭಾರಿ ಪ್ರಮಾಣದ ಮೋಸ: ಕೆಆರ್ಎಸ್ ಪಕ್ಷ ಆರೋಪ
ಉಡುಪಿ: ಮುಂಗಾರು ಸಂದರ್ಭದಲ್ಲಿ ಬೆವರಿಳಿಸಿ ದುಡಿದು ತಾವು ಬೆಳೆದ ಭತ್ತವನ್ನು ಕಟಾವಿನ ಬಳಿಕ ರೈಸ್ಮಿಲ್ಗೆ ಕೊಂಡೊಯ್ದು ಮಾರಾಟ ಮಾಡುವ ಜಿಲ್ಲೆಯ ರೈತರಿಗೆ ರೈಸ್ಮಿಲ್ ಮಾಲಕರು ಭಾರೀ ಪ್ರಮಾಣದ ಮೋಸ, ವಂಚನೆ ಮಾಡುತಿದ್ದಾರೆ. ಇದರಿಂದ ವಿವಿಧ ಕಾರಣಗಳಿಂದ ವಂಚನೆಗೆ ಸಿಲುಕುವ ರೈತರು ದೊಡ್ಡ ಪ್ರಮಾಣದ ಶೋಷಣೆಗೂ ಬಲಿಯಾಗುತಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್ಎಸ್) ಪಕ್ಷ ಉಡುಪಿ ಜಿಲ್ಲಾ ಘಟಕ ಆರೋಪಿಸಿದೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಆರ್ಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ರಘುಪತಿ ಭಟ್ ಅವರು, ರೈತ ಬೆಳೆದ ಭತ್ತವನ್ನು ಕೆ.ಜಿ.ಗೆ 23ರಿಂದ 27ರೂ.ಗಳಿಗೆ ಖರೀದಿಸುವ ರೈಸ್ಮಿಲ್ ಮಾಲಕರು, ಬಳಿಕ ಅಕ್ಕಿ ಮಾಡಿದ ಬಳಿಕ ಕೆ.ಜಿ.ಗೆ 54 ರೂ.ಗಳಿಗೆ ಅದೇ ರೈತನಿಗೆ ಮಾರುತ್ತಾರೆ. ಇದರಿಂದ ಒಂದು ಕ್ವಿಂಟಾಲ್ ಭತ್ತವನ್ನು ಮಾರುವ ರೈತನಿಗೆ ಕೇವಲ 500 ಕಿ.ಲೋ. ಅಕ್ಕಿ ಮರಳಿ ಸಿಗುತ್ತಿದೆ ಎಂದು ವಿವರಿಸಿದರು. ಇದರಿಂದ ಕಷ್ಟಪಟ್ಟ ಬೇಸಾಯ ಮಾಡುವ ರೈತರಿಗೆ ದೊಡ್ಡಮಟ್ಟದ ನಷ್ಟ ಉಂಟಾಗುತಿದ್ದು, ದೊಡ್ಡ ದೊಡ್ಡ ರೈಸ್ಮಿಲ್ ಮಾಲಕರು, ದಲ್ಲಾಳಿಗಳು ಹಾಗೂ ಮದ್ಯವರ್ತಿಗಳು ಅನಧಿಕೃತವಾಗಿ, ಯಾವುದೇ ಶ್ರಮ ಪಡದೇ ಕುಳಿತಲ್ಲೇ ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತಿದ್ದಾರೆ. ಈ ಮೂಲಕ ಜಿಲ್ಲೆಯ ರೈತರು ರೈಸ್ಮಿಲ್ ಮಾಲಕರಿಂದ ತೀವ್ರ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದವರು ಆರೋಪಿಸಿದರು. ಹಿಂದೆಲ್ಲಾ ಪ್ರತಿ ಊರುಗಳಲ್ಲಿ ಸಣ್ಣ ಸಣ್ಣ ರೈಸ್ಮಿಲ್ಗಳಿದ್ದು ರೈತರಿಗೆ ಅನುಕೂಲವಾಗುತಿದ್ದರೆ, ಇಂದು ಕೆಲವೇ ಕೆಲವು ದೊಡ್ಡ ದೊಡ್ಡ ರೈಸ್ಮಿಲ್ಗಳು ಮಾತ್ರವಿದ್ದು, ಇಲ್ಲಿ ನಿರಂತರವಾಗಿ ರೈತರು ಮೋಸ, ವಂಚನೆ ಹಾಗೂ ಶೋಷಣೆಗೆ ಗುರಿಯಾಗುತಿದ್ದಾರೆ ಎಂದರು. ಈ ಬಗ್ಗೆ ವಂಚನೆಗೊಳಗಾದ ಕಾರ್ಕಳ ತಾಲೂಕಿನ ರೈತ ಸಂಘದವರು ಕೆಆರ್ಎಸ್ ಪಕ್ಷಕ್ಕೆ ದೂರು ನೀಡಿದ್ದು, ನಾವು ಜಿಲ್ಲೆಯಾದ್ಯಂತ ಈ ಬಗ್ಗೆ ಪರಿಶೀಲನೆ ನಡೆಸಿದಾಗ, ಇಡೀ ಜಿಲ್ಲೆಯಲ್ಲಿ ಇದೇ ರೀತಿ ರೈತರಿಗೆ ಮೋಸ ನಡೆಯುತ್ತಿರುವುದು ಮನದಟ್ಟಾಗಿದೆ. ಈ ಬಗ್ಗೆ ತಮ್ಮ ಪಕ್ಷ ಈಗಾಗಲೇ ಎಲ್ಲವನ್ನೂ ವಿವರಿಸಿ ಉಡುಪಿ ಜಿಲ್ಲಾಧಿಕಾರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಅರ್ಪಿಸಿದ್ದು, ಜಿಲ್ಲೆಯ ರೈತರನ್ನು ರೈಸ್ ಮಿಲ್ ಮಾಲಕರ ವಂಚನೆ, ಮೋಸ ಹಾಗೂ ಶೋಷಣೆಯಿಂದ ರಕ್ಷಿಸಿ ಅವರಿಗೆ ನ್ಯಾಯ ದೊರಕಿಸಿಕೊಡಬೇಕು. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ರೈತ ಬೆಳೆದ ಭತ್ತವನ್ನು ಸೂಕ್ತ ಬೆಂಬಲ ಬೆಲೆ ನೀಡಿ ಸರಿಯಾದ ಸಮಯದಲ್ಲಿ ಖರೀದಿಸುವಂತೆ ನೋಡಿಕೊಳ್ಳಬೇಕು. ಎಪಿಎಂಸಿ ಮೂಲಕ ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿಸಲು ಈಗ ಸೂಕ್ತ ವ್ಯವಸ್ಥೆಗಳಿಲ್ಲ. ಅಕ್ಟೋಬರ್- ನವೆಂಬರ್ ತಿಂಗಳಲ್ಲಿ ಬೆಳೆ ಕಟಾವು ಮಾಡುವ ರೈತ, ಅನಿವಾರ್ಯವಾಗಿ ರೈಸ್ಮಿಲ್ಗಳಿಗೆ ಭತ್ತವನ್ನು ಮಾರಾಟ ಮಾಡಬೇಕಾದ ಸ್ಥಿತಿ ಈಗ ಇದೆ ಎಂದವರು ವಿವರಿಸಿದರು. ಸರಕಾರಗಳು ಅಕ್ಟೋಬರ್ನಲ್ಲೇ ಬೆಂಬಲಬೆಲೆ ಘೋಷಿಸಿ ಖರೀದಿಗೆ ವ್ಯವಸ್ಥೆ ಮಾಡಿದರೆ, ರೈತರು ಶೋಷಣೆಗೊಳಗಾಗುವುದು ತಪ್ಪುತ್ತದೆ. ಈಗ ನವೆಂಬರ್ ಕೊನೆಯಲ್ಲಿ ಎಪಿಎಂಸಿ ಖರೀದಿಗೆ ಮುಂದಾಗುತ್ತದೆ. ಆದರೆ ಕಟಾವಾದ ಭತ್ತವನ್ನು ಅಷ್ಟು ಸಮಯ ಶೇಖರಿಸಿಟ್ಟುಕೊಳ್ಳುವ ವ್ಯವಸ್ಥೆ ರೈತರಲ್ಲಿಲ್ಲದ ಕಾರಣ ಅವರು ರೈಸ್ಮಿಲ್ಗಳಿಗೆ ನೇರವಾಗಿ ಭತ್ತವನ್ನು ಮಾರಾಟ ಮಾಡುತಿದ್ದಾರೆ. ವಿವಿಧ ನೆಪದಲ್ಲಿ 10 ಕ್ವಿಂಟಾಲ್ ಭತ್ತ ನೀಡುವ ರೈತನಿಗೆ ಮರಳಿ ಸಿಗುವುದು 5 ಕ್ವಿಂಟಾಲ್ ಅಕ್ಕಿ ಮಾತ್ರ ಎಂದು ರಘುಪತಿ ಭಟ್ ತಿಳಿಸಿದರು. ಕರಾವಳಿಯನ್ನು ಹೊರತು ಪಡಿಸಿ ರಾಜ್ಯದ ಉಳಿದೆಡೆ ಇಂಥ ಮೋಸ ನಡೆಯುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದ ಅವರು, ರೈಸ್ಮಿಲ್ಗಳ ಕಾನೂನುಬಾಹಿರ ಮೋಸದ ದಂಧೆಗೆ ಕಡಿವಾಣ ಹಾಕಬೇಕು. ಎಪಿಎಂಸಿ ಮೂಲಕ ರೈತರ ಭತ್ತದ ಖರೀದಿಗೆ ಸೂಕ್ತ ವ್ಯವಸ್ಥೆಯನ್ನು ಕೂಡಲೇ ಮಾಡಬೇಕು. ರೈತರಿಗೆ ಈವರೆಗೆ ಆಗಿರುವ ನಷ್ಟವನ್ನು ಮರುಪಾವತಿಸಲು ಆದೇಶ ಹೊರಡಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಕೃಷಿ ಜಂಟಿ ನಿರ್ದೇಶಕರಿಗೆ ಮನವಿ ಮಾಡಿದ್ದೇವೆ ಎಂದರು. ರೈತರ ಆದಾಯವನ್ನು ಡಬಲ್ ಮಾಡುವ ಉದ್ದೇಶದಿಂದ ಅಧಿಕಾರಕ್ಕೆ ಬಂದ ಕೇಂದ್ರ ಸರಕಾರವಾಗಲೀ, ರಾಜ್ಯ ಸರಕಾರವಾಗಲೀ ರೈತರ ಆದಾಯವನ್ನು ಹಗಲು ದರೋಡೆ ಮೂಲಕ ಕೊಳ್ಳೆ ಹೊಡೆಯುತ್ತಿರುವ ಮಿಲ್ಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಖಂಡನೀಯ. ಈಗಲೂ ಕ್ರಮಕೈಗೊಳ್ಳದಿದ್ದರೆ ರೈತರೊಂದಿಗೆ ಸೇರಿ ಹೋರಾಟದ ಹಾದಿ ಹಿಡಿಯುತ್ತೇವೆ ಎಂದವರು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಾಜೇಶ್ ಕೆ.ವಿ., ಕೃಷಿ ವಿಭಾಗದ ಸಂಚಾಲಕ ನಿರುಪಾದಿ ಗೋಮಿಸಿ, ಕಾರ್ಯದಶಿ ಆರತಿ, ಸಂತೋಷ್, ರವಿಕುಮಾರ್, ಶ್ರೀನಿವಾಸ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು. ಅಕ್ಕಿ ನೀಡುವಾಗಲೂ ಮಿಲ್ಗಳಿಂದ ಮೋಸ: ಸುಕೇಶ್ ಜೈನ್ ತಾವು ಬೆಳೆದ ಭತ್ತವನ್ನು ರೈಸ್ಮಿಲ್ಗೆ ಮಾರಾಟ ಮಾಡುವಾಗ ಮಿಲ್ನವರು ಭತ್ತಕ್ಕೆ ಒಂದು ದರ ನಿಗದಿ ಮಾಡಿದರೆ, ಭತ್ತದ ಬದಲು ಅಕ್ಕಿ ಕೇಳಿದರೆ, ಮಾರುಕಟ್ಟೆಯಲ್ಲಿರುವ ದರವನ್ನು ವಸೂಲಿ ಮಾಡುವುದಲ್ಲದೇ, ರೈತ ನೀಡಿದ ಭತ್ತದ ಅಕ್ಕಿ ನೀಡದೇ, ಕಳಪೆ ಗುಣಮಟ್ಟದ ಅಕ್ಕಿಯನ್ನು ತಾವೇ ನಿಗದಿ ಪಡಿಸಿದ ದರಕ್ಕೆ ನೀಡುತ್ತಾರೆ ಎಂದು ರೆಂಜಾಳದ ಕೃಷಿ ಕಿಸಾನ್ ರಕ್ಷಣಾ ಸಂಘದ ಅಧ್ಯಕ್ಷ ಸುಕೀರ್ತಿ ಜೈನ್ ಆರೋಪಿಸಿದರು. ರೈತರಿಗೆ ಭತ್ತದ ದರವನ್ನು ಕೆಜಿಗೆ 26 ರೂ. ಎಂದಾದರೆ ಅದೇ ದರ ನೀಡಿ ಪಡೆದುಕೊಂಡು, ಅಕ್ಕಿಯನ್ನು ಈಗಿನ ಮಾರುಕಟ್ಟೆ ದರ ಅಂದರೆ 55 ರೂ.ನಲ್ಲಿ ಕೊಡುತ್ತಾರೆ. ರೈತ ಒಂದು ಕ್ವಿಂಟಾಲ್ ಭತ್ತ ನೀಡಿದರೆ ಮಿಲ್ನವರು ಶೇಕಡಾವಾರು ಪರಿಶೀಲನೆ ಮಾಡಿ ಕ್ವಿಂಟಾಲ್ಗೆ ಶೇ.72ರಷ್ಟು ನೀಡಬೇಕು. ಆದರೆ ಇವರು ಶೇ.50ರಷ್ಟು ಮಾತ್ರ ನೀಡುತ್ತಾರೆ. ಜೊತೆಗೆ ಭತ್ತದ ತೌಡು, ಉಮಿಯನ್ನು ರೈತರಿಗೆ ನೀಡುವುದಿಲ್ಲ. ನೀಡುವ ಭತ್ತದಲ್ಲಿ ವಿವಿಧ ಕಾರಣಗಳಿಗೆ ಕಡಿತ ಮಾಡುತ್ತಾರೆ. ಇದರೊಂದಿಗೆ ರೈತ ಗದ್ದೆಯಿಂದ ವಾಹನದಲ್ಲಿ ಮಿಲ್ಗೆ ಸಾಗಿಸುವ ವೆಚ್ಚವನ್ನು ತಾನೇ ಭರಿಸಬೇಕಾಗಿದೆ. ಹೀಗಾಗಿ ಜಿಲ್ಲೆಯ ರೈತ ಈಗಲೂ ಎಲ್ಲಾ ವಿಧದದ ಶೋಷಣೆಗೆ ಗುರಿಯಾ ಗುತಿದ್ದಾನೆ ಎಂದು ಜೈನ್ ಆರೋಪಿಸಿದರು.
ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಸಂಸ್ಥೆಗೆ 1.04 ಕೋಟಿ ರೂ. ಆನ್ಲೈನ್ ವಂಚನೆ; ಪ್ರಕರಣ ದಾಖಲು
ಉಡುಪಿ: ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಸಂಸ್ಥೆಗೆ ಕೋಟ್ಯಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಸಂಸ್ಥೆಯು ಇಕ್ವಿಫ್ಲೆಕ್ಸ್ ಪ್ರೈವೆಟ್ ಕಂಪೆನಿ ಜೊತೆ ಲೀಜ್ ರೂಪದಲ್ಲಿ ಅವರ ಮಿಷಿನರಿ ವಸ್ತುಗಳನ್ನು ಬಳಸುತ್ತಿದ್ದು, ಆ ಲೀಜ್ ಹಣವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಸಂಸ್ಥೆಯ ಬ್ಯಾಂಕ್ ಖಾತೆ ಪಾವತಿ ಮಾಡಲಾಗುತ್ತಿತ್ತು. ಈಗಾಗಲೇ ನಾಲ್ಕು ಪಾವತಿಗಳನ್ನು ಮಾಡ ಲಾಗಿದ್ದು ಇದೀಗ 5ನೇ ಕಂತಿನ 1,04,16,229ರೂ. ಹಣವನ್ನು ಪಾವತಿ ಮಾಡಬೇಕಾಗಿದ್ದು, ಅ.11ರಂದು ಇಮೇಲ್ ಒಂದರ ಮೂಲಕ ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ಯ ಇ-ಮೇಲ್ ಐಡಿಗೆ ಸಂಪರ್ಕ ಮಾಡಿ ಅ.15ಕ್ಕೆ ಬಾಕಿ ಇರುವ ಹಣವನ್ನು ಪಾವತಿಸುವಂತೆ ತಿಳಿಸಲಾಗಿತ್ತು. ಆದರೆ ಅ.13ರಂದು ಬಂದ ಇಮೇಲ್ನಲ್ಲಿ ನಮ್ಮ ಬ್ಯಾಂಕ್ ಖಾತೆ ಬದಲಾಗಿದೆ ನೀವು ನಮ್ಮ ಈ ಖಾತೆಗೆ ಬಾಕಿಯಿರುವ 1,04,16,229ರೂ. ಮೊತ್ತವನ್ನು ಪಾವತಿಸುವಂತೆ ಸಂದೇಶ ಬಂತು. ಅದರಂತೆ ಅ.15ರಂದು ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಕಂಪೆನಿಯು 1,04,16,229ರೂ. ಹಣವನ್ನು ಪಾವತಿ ಮಾಡಿತ್ತು. ಆದರೆ ಅ.29ರಂದು ಇಕ್ವಿಫ್ಲೆಕ್ಸ್ ಪ್ರೈವೆಟ್ ಸಂಸ್ಥೆಯವರು ನಮಗೆ ಹಣ ಸ್ವೀಕೃತವಾಗಿರುವುದಿಲ್ಲ ಎಂದು ತಿಳಿಸಿದ್ದು, ಆಗ ಕಂಪೆನಿಗೆ ಮೋಸ ಹೋಗಿರುವ ಬಗ್ಗೆ ತಿಳಿದು ಬಂತು. ಅಪರಿಚಿತರು ಇಕ್ವಿಫ್ಲೆಕ್ಸ್ ಪ್ರೈವೆಟ್ ಕಂಪೆನಿಯ ಹೆಸರಿನಲ್ಲಿ ನಕಲಿ ಇ-ಮೇಲ್ ಐಡಿ ಮೂಲಕ ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಕಂಪೆನಿಯನ್ನು ಸಂಪರ್ಕಿಸಿ 1,04,16,229ರೂ. ಹಣವನ್ನು ಪಡೆದು ವಂಚಿಸಿರುವುದಾಗಿ ದೂರಲಾಗಿದೆ.
ಚಳವಳಿಯ ರೂಪ ಪಡೆದ ಬೆಳಗಾವಿಯ ಕಬ್ಬು ಬೆಳೆಗಾರರ ಹೋರಾಟ; ಇದರ ರಾಜಕೀಯ, ಆರ್ಥಿಕ ಪರಿಣಾಮಗಳೇನು ?
ಬೆಳಗಾವಿ : ಕರ್ನಾಟಕದ ಸಕ್ಕರೆ ಕೈಗಾರಿಕೆಯ ಹೃದಯವೆಂದೇ ಪರಿಗಣಿಸಲ್ಪಡುವ ಬೆಳಗಾವಿ ಜಿಲ್ಲೆ ಇತ್ತೀಚಿಗೆ ಮತ್ತೊಮ್ಮೆ ರೈತರ ಆಕ್ರೋಶದ ಕೇಂದ್ರವಾಗಿದೆ. ಕಬ್ಬಿಗೆ ನ್ಯಾಯಯುತ ಬೆಲೆ ನೀಡಬೇಕೆಂಬ ಆಗ್ರಹದೊಂದಿಗೆ ಪ್ರಾರಂಭವಾದ ಹೋರಾಟ ಇದೀಗ ರಾಜ್ಯವ್ಯಾಪಿ ಚಳುವಳಿಯಾಗಿ ಮಾರ್ಪಟ್ಟಿದೆ. ಹೋರಾಟ ತೀವ್ರಗೊಳ್ಳಲು ಕಾರಣ ಕೇವಲ ದರದ ಪ್ರಶ್ನೆಯಲ್ಲ, ಅದರ ಹಿಂದೆ ವರ್ಷಗಳಿಂದ ಬೇರೂರಿರುವ ರಾಜಕೀಯ ಮತ್ತು ಆರ್ಥಿಕ ಹಿತಾಸಕ್ತಿಗಳ ಜಾಲವಿದೆ. ಕಬ್ಬಿನ ದರ: ನ್ಯಾಯದ ಹೋರಾಟದಿಂದ ರಾಜಕೀಯ ಹೋರಾಟದತ್ತ ಕಬ್ಬು ನುರಿಯುವ ಹಂಗಾಮು ಪ್ರಾರಂಭವಾದರೂ, ಸರಕಾರದಿಂದ ದರ ನಿಗದಿಯ ಕುರಿತು ಯಾವುದೇ ಸ್ಪಷ್ಟ ನಿರ್ಧಾರ ಬಂದಿಲ್ಲ. ರೈತರು ಟನ್ಗೆ 3,500 ರೂ. ದರ ನಿಗದಿ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಆದರೆ ಕಾರ್ಖಾನೆಗಳು ನೀಡಲು ಸಮ್ಮತಿಸದ ಹಿನ್ನೆಲೆ, ರೈತರ ಅಸಮಾಧಾನ ತೀವ್ರಗೊಂಡಿದೆ. ಬೆಳೆಗಾರರಿಗೆ ತಾವೇ ಬೆಳೆದ ಕಬ್ಬಿಗೆ ನ್ಯಾಯಯುತ ಬೆಲೆ ದೊರೆಯದಿರುವುದು, ವರ್ಷದಿಂದ ವರ್ಷಕ್ಕೆ ನಡೆಯುವ ಅದೇ ರೀತಿಯ ಗೊಂದಲವನ್ನು ಪುನರಾವರ್ತಿಸುತ್ತಿದೆ. ಹೋರಾಟದ ಆರಂಭ: ಬೆಳಗಾವಿ ಜಿಲ್ಲೆಯಲ್ಲಿ ಕಬ್ಬಿನ ಬೆಲೆ ನಿಗದಿಗೆ ತಡ ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಪಾವತಿ ಪಡೆಯಲು ರೈತರು ಗುರ್ಲಾಪುರ ಕ್ರಾಸ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ಇದರಲ್ಲಿ ಪ್ರಾಥಮಿಕವಾಗಿ ಸುಮಾರು 50–100 ರೈತರು ಭಾಗವಹಿಸಿದ್ದರು. ಆರಂಭದಲ್ಲಿ ಹೋರಾಟವು ಸ್ಥಳೀಯ ಮಟ್ಟದ, ಶಾಂತಿಯುತ ಪ್ರತಿಭಟನೆಯ ರೂಪದಲ್ಲಿತ್ತು. ರೈತ ಸಂಘಗಳ ಪ್ರವೇಶ ಮತ್ತು ಬೆಂಬಲ: ಕರ್ನಾಟಕ ರಾಜ್ಯ ರೈತ ಸಂಘ : ಹೋರಾಟದ ಮೊದಲ ದಿನದಿಂದಲೇ ಮಾರ್ಗದರ್ಶನ, ಸಂಘಟನೆ ಮತ್ತು ಶಾಂತಿಯುತ ಪ್ರತಿಭಟನೆಗಳ ನಿರ್ವಹಣೆ. ಹಸಿರು ಸೇನೆ: ರೈತರ ಬೇಡಿಕೆಗಳು ಸರಕಾರದ ಗಮನಕ್ಕೆ ಬರಲು ಬೀದಿಯಲ್ಲಿ ಹಾಗೂ ಮಾಧ್ಯಮಗಳಲ್ಲಿ ಗಮನ ಸೆಳೆಯಿತು. ಭಾರತೀಯ ಕೃಷಿಕ ಸಂಘ ಮತ್ತು ಭಾರತೀಯ ಕಿಸಾನ್ ಸಂಘ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರುವ ಮೂಲಕ ರೈತರ ಹಕ್ಕಿಗಾಗಿ ಒತ್ತಾಯ. ಸ್ಥಳೀಯ ಯುವಕ ಸಂಘಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ರಸ್ತೆ ತಡೆ, ಬಂದ್ ಕಾರ್ಯಕ್ರಮಗಳು ಮತ್ತು ಸಾಮಾಜಿಕ ಬೆಂಬಲ. ಹೋರಾಟದ ಬೆಳವಣಿಗೆ: ಹೋರಾಟವು ಸ್ಥಳೀಯ, ತಾಲೂಕು, ಜಿಲ್ಲಾ, ರಾಜ್ಯಮಟ್ಟದ ವಿಷಯವಾಗಿ ಬೆಳೆಯಿತು. ಶಾಂತಿಯುತ ಪ್ರತಿಭಟನೆಗಳು, ಸಾರ್ವಜನಿಕ ಬೆಂಬಲ ಮತ್ತು ಸಾಮಾಜಿಕ ಮಾಧ್ಯಮ ಪ್ರಸಾರದಿಂದ ಹೋರಾಟದ ತೀವ್ರತೆ ಹೆಚ್ಚಿತು. ಕರ್ನಾಟಕ ವಕೀಲರ ಸಂಘ ರೈತರಿಗೆ ಕಾನೂನು ಬೆಂಬಲ ಒದಗಿಸಿ ಹೋರಾಟದ ಹಾದಿಗೆ ಬೆಂಬಲ ನೀಡಿತು. ಹೋರಾಟದ ಪ್ರಮುಖ ಪರಿಣಾಮಗಳು: ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಪಾವತಿ, ಕಬ್ಬಿನ ಟನ್ಗೆ ಕನಿಷ್ಠ 3,500 ರೂ. ಬೆಲೆ, ಮತ್ತು ರೈತರ ಹಕ್ಕುಗಳ ಬಗ್ಗೆ ಸರಕಾರದ ಚರ್ಚೆ ಆರಂಭವಾಯಿತು. ಸಂಘಟನೆಗಳು, ರೈತರು, ವಿದ್ಯಾರ್ಥಿಗಳು ಮತ್ತು ವಕೀಲರ ಸಹಕಾರದಿಂದ ಹೋರಾಟ ರಾಜ್ಯಮಟ್ಟದ ಗಮನ ಸೆಳೆದಿದೆ. ಪ್ರಾಥಮಿಕ, ಸ್ಥಳೀಯ ಪ್ರತಿಭಟನೆವು ರಾಜ್ಯ ರಾಜಕೀಯ, ಕಾನೂನು, ಮತ್ತು ಸಾರ್ವಜನಿಕ ಒತ್ತಡದ ಸಮಗ್ರ ಚಳವಳಿಯಾಗಿ ಬೆಳೆಯಿತು. ರಾಜಕೀಯ ಹಸ್ತಕ್ಷೇಪದ ಕಹಿ ನೋಟ : ಬೆಳಗಾವಿ ಜಿಲ್ಲೆಯಲ್ಲಿನ ಸುಮಾರು 38 ಸಕ್ಕರೆ ಕಾರ್ಖಾನೆಗಳ ಪೈಕಿ ಬಹುತೇಕವು ರಾಜಕೀಯ ನಾಯಕರ ಪ್ರಭಾವದಲ್ಲಿವೆ. ಮಾಜಿ ಸಚಿವರು, ಶಾಸಕರು, ಸಂಸದರು ಹಾಗೂ ಅವರ ಕುಟುಂಬ ಸದಸ್ಯರು ಕಾರ್ಖಾನೆಗಳ ನಿರ್ವಹಣೆಯಲ್ಲಿ ನೇರವಾಗಿ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಕಬ್ಬಿನ ದರ ನಿಗದಿ ಕೇವಲ ಆರ್ಥಿಕ ವಿಷಯವಲ್ಲದೆ, ರಾಜಕೀಯ ಹಿತಾಸಕ್ತಿಯ ವ್ಯವಹಾರವಾಗಿ ಪರಿಣಮಿಸಿದೆ. ಸರಕಾರದ ನಿರ್ಲಕ್ಷ್ಯದಿಂದ ಉರಿದ ಕೋಪ : ಕಳೆದ ಹಂಗಾಮಿನ ಪಾವತಿಗಳೂ ಅನೇಕ ಕಾರ್ಖಾನೆಗಳಿಂದ ಇನ್ನೂ ಬಾಕಿ ಉಳಿದಿವೆ. ಸರಕಾರದಿಂದ ಸ್ಪಷ್ಟ ಮಾರ್ಗಸೂಚಿ ಇಲ್ಲದಿರುವುದು ಮತ್ತು ಮಿಡಿತದ ಮಾತುಗಳಷ್ಟೇ ಸಿಗುತ್ತಿರುವುದರಿಂದ ರೈತರು ನಿರಾಶರಾಗಿದ್ದಾರೆ. ಸರಕಾರದ ಪ್ರತಿಕ್ರಿಯೆಯ ವಿಳಂಬ, ಕಬ್ಬು ಬೆಳೆಗಾರರ ಹೋರಾಟವನ್ನು ಆರ್ಥಿಕ ಅಸಮಾಧಾನದಿಂದ ರಾಜಕೀಯ ಚಳುವಳಿಯಾಗಿಯೇ ಪರಿವರ್ತಿಸಿದೆ. ಪ್ರತಿಪಕ್ಷದ ಬೆಂಬಲ : ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಹೋರಾಟಗಾರರ ಬಳಿಯೇ ನಿಂತು “ರೈತರಿಗೆ ನ್ಯಾಯ ದೊರಕಬೇಕು” ಎಂದು ಘೋಷಿಸಿದ್ದಾರೆ. ಕಾಂಗ್ರೆಸ್ ಮತ್ತು ಜನತಾದಳದ ಕೆಲ ಪ್ರತಿನಿಧಿಗಳು ಕೂಡ ಸರಕಾರ ರೈತರ ಬೇಡಿಕೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸರಕಾರದ ನಿರ್ಲಕ್ಷ್ಯಕ್ಕೆ ವಿರುದ್ಧವಾಗಿ ಸಂಘಟನೆಗಳು ಏಕಧ್ವನಿಯಲ್ಲಿ ಸರಕಾರದ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದು, “ರೈತರು ಸಕ್ಕರೆ ಕಾರ್ಖಾನೆಗಳ ಬಾಕಿ ಹಣ ಮತ್ತು ನ್ಯಾಯಯುತ ದರಕ್ಕಾಗಿ ಹೋರಾಡುತ್ತಿದ್ದಾರೆ. ಸರಕಾರ ತಕ್ಷಣ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿವೆ. ಕರವೇ, ರೈತ ಸಂಘಟನೆಗಳು, ಹಾಗೂ ವಿವಿಧ ಪ್ರಾದೇಶಿಕ ರೈತ ಬಣಗಳು ಹೋರಾಟಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಹೋರಾಟವು ರಾಜ್ಯವ್ಯಾಪಿಯಾಗಿ ವಿಸ್ತರಿಸಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್, ಸುವರ್ಣ ವಿಧಾನಸೌಧ ಮುಂಭಾಗ ಸೇರಿದಂತೆ ಅನೇಕ ಸ್ಥಳಗಳಲ್ಲಿ ರೈತರು ರಸ್ತೆ ತಡೆ, ಧರಣಿ ಹಾಗೂ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಗಾಝಾ | ಅಂತರಾಷ್ಟ್ರೀಯ ಪಡೆಗೆ ವಿಶ್ವಸಂಸ್ಥೆಯ ಆದೇಶ ಪಡೆಯಲು ಅಮೆರಿಕಾ ಸಿದ್ಧತೆ: ಕರಡು ನಿರ್ಣಯ ರಚನೆ
ವಿಶ್ವಸಂಸ್ಥೆ, ನ.5: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಯೋಜನೆಯ ಭಾಗವಾಗಿ ಗಾಝಾದಲ್ಲಿ ನಿಯೋಜಿಸಲಾಗುವ ಅಂತರಾಷ್ಟ್ರೀಯ ಭದ್ರತಾ ಪಡೆ(ಐಎಸ್ಎಫ್)ಗೆ 2 ವರ್ಷದವರೆಗೆ ಕಾರ್ಯನಿರ್ವಹಿಸುವ ಆದೇಶವನ್ನು ವಿಶ್ವಸಂಸ್ಥೆಯಿಂದ ಪಡೆಯಲು ಅಮೆರಿಕ ಯೋಜಿಸುತ್ತಿರುವುದಾಗಿ ವರದಿಯಾಗಿದೆ. ಪ್ರಸ್ತಾವನೆಯನ್ನು ವಿವರಿಸುವ ಕರಡು ನಿರ್ಣಯವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಹಲವು ಸದಸ್ಯರಿಗೆ ಅಮೆರಿಕಾ ರವಾನಿಸಿದೆ. ಅಂತರಾಷ್ಟ್ರೀಯ ಪಡೆಗೆ ಸಂಬಂಧಿಸಿದ ಕಾರ್ಯವು ನಾಗರಿಕರನ್ನು ರಕ್ಷಿಸುವುದು ಮತ್ತು ಹೊಸ ಫೆಲೆಸ್ತೀನಿಯನ್ ಪೊಲೀಸ್ ಪಡೆಗೆ ತರಬೇತಿ ನೀಡುವುದನ್ನು ಒಳಗೊಂಡಿರುತ್ತದೆ ಎಂದು ಕರಡು ನಿರ್ಣಯದಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ `ಆಕ್ಸಿಯೋಸ್' ಸುದ್ದಿಸಂಸ್ಥೆ ವರದಿ ಮಾಡಿದೆ. ಇದರ ಜೊತೆಗೆ, ಹಮಾಸ್ ಅನ್ನು ನಿಶ್ಯಸ್ತ್ರಗೊಳಿಸುವುದೂ(ಹಮಾಸ್ ಅಥವಾ ಆ ಗುಂಪಿನೊಳಗಿನ ಅಂಶಗಳು ಸ್ವಯಂ ಪ್ರೇರಣೆಯಿಂದ ಹಾಗೆ ಮಾಡದಿದ್ದಲ್ಲಿ) ಐಎಸ್ಎಫ್ ನ ಕಾರ್ಯವಾಗಿದೆ. ಐಎಸ್ಎಫ್ ವಿಶಾಲ ಪಾತ್ರವನ್ನು ಹೊಂದಲು ಮತ್ತು ಗಾಝಾ ಒಪ್ಪಂದಕ್ಕೆ ಬೆಂಬಲವಾಗಿ ಅಗತ್ಯವಿರುವ ಹೆಚ್ಚುವರಿ ಕಾರ್ಯಗಳನ್ನು ನಿರ್ವಹಿಸಲು ಅವಕಾಶವಿದೆ ಎಂದು ಕರಡು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಅಂತರಾಷ್ಟ್ರೀಯ ಪಡೆಯು ಹಲವಾರು ಭಾಗವಹಿಸುವ ದೇಶಗಳ ತುಕಡಿಯನ್ನು ಒಳಗೊಂಡಿರುತ್ತದೆ ಮತ್ತು ಗಾಝಾ ಶಾಂತಿ ಮಂಡಳಿಯೊಂದಿಗೆ ಸಮಾಲೋಚಿಸಿದ ಬಳಿಕ ಸ್ಥಾಪಿಸಲಾಗುತ್ತದೆ. ವಿಶ್ವಸಂಸ್ಥೆ, ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೇರಿದಂತೆ ಗಾಝಾಕ್ಕೆ ನೆರವು ನೀಡುವ ಎಲ್ಲಾ ಸಂಸ್ಥೆಗಳು ಶಾಂತಿ ಮಂಡಳಿಯೊಂದಿಗೆ ಕೆಲಸ ಮಾಡುತ್ತದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ► ಗಾಝಾ ಶಾಂತಿ ಮಂಡಳಿ ತಮ್ಮ 20 ಅಂಶಗಳ ಗಾಝಾ ಶಾಂತಿ ಯೋಜನೆಯಲ್ಲಿ ಶಾಂತಿ ಮಂಡಳಿಯ ಸ್ಥಾಪನೆಯನ್ನು ಟ್ರಂಪ್ ಪ್ರಸ್ತಾಪಿಸಿದ್ದರು. ಟ್ರಂಪ್ ಮಂಡಳಿಯ ಅಧ್ಯಕ್ಷರಾಗಿದ್ದರೆ ಬ್ರಿಟನ್ ನ ಮಾಜಿ ಪ್ರಧಾನಿ ಟೋನಿ ಬ್ಲೇರ್ ಸೇರಿದಂತೆ ಹಲವು ಸದಸ್ಯರಿರುತ್ತಾರೆ. ವಿಶ್ವಸಂಸ್ಥೆ, ಅರಬ್ ಮತ್ತು ಮುಸ್ಲಿಂ ದೇಶಗಳ ಪ್ರತಿನಿಧಿಗಳನ್ನು ಮಂಡಳಿ ಹೊಂದಿರುತ್ತದೆ ಮತ್ತು ಇದು ಕನಿಷ್ಠ 2027ರ ಅಂತ್ಯದವರೆಗೆ ಅಸ್ಥಿತ್ವದಲ್ಲಿರುತ್ತದೆ. ಈ ಮಂಡಳಿಯು (ಗಾಝಾದ ನಾಗರಿಕ ಸೇವೆ ಮತ್ತು ಆಡಳಿತದ ದೈನಂದಿನ ಕಾರ್ಯಾಚರಣೆಯ ಹೊಣೆ ಹೊತ್ತ) ಫೆಲೆಸ್ತೀನಿಯನ್ ತಾಂತ್ರಿಕ ಸಮಿತಿಯ ಮೇಲ್ವಿಚಾರಣೆಯ ಜೊತೆಗೆ ಅದನ್ನು ಬೆಂಬಲಿಸುವ ಕೆಲಸ ಮಾಡುತ್ತದೆ.
Super Moon: 2025ರ ಅತಿ ದೊಡ್ಡ ಮತ್ತು ಪ್ರಕಾಶಮಾನ ಸೂಪರ್ ಮೂನ್
ಸೂಪರ್ ಮೂನ್ ಅನ್ನು ಬಾಹ್ಯಾಕಾಶ ಜಗತ್ತಿನಲ್ಲಿ ಅತ್ಯಂತ ಸುಂದರ ಮತ್ತು ಅಪರೂಪದ ಖಗೋಳ ಘಟನೆ ಎಂದು ಹೇಳಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಪೂರ್ಣಿಮೆಯ ರಾತ್ರಿ ಸೂಪರ್ ಮೂನ್ ಆಕಾಶದಲ್ಲಿ ಗೋಚರಿಸುತ್ತದೆ. ಈ ಸಮಯದಲ್ಲಿ, ಚಂದ್ರನು ಭೂಮಿಗೆ ಬಹಳ ಹತ್ತಿರದಲ್ಲಿರುತ್ತಾನೆ, ಅದು ತುಂಬಾ ಪ್ರಕಾಶಮಾನವಾಗಿ ಕಾಣುತ್ತದೆ. ಇಂದು ಕಾರ್ತಿಕ ಪೂರ್ಣಿಮೆ, ರಾತ್ರಿ ಆಕಾಶದಲ್ಲಿ ಸೂಪರ್ ಮೂನ್ ಗೋಚರಿಸುತ್ತದೆ. ಇಂದು
ಸಿದ್ದರಾಮಯ್ಯನವರೇ ಸಿಎಂ ಎಂದ ಡಿಕೆ ಸುರೇಶ್ : ಆದರೆ, ಗ್ಯಾಪ್ ನಲ್ಲಿ ಕೊಟ್ಟ ’ಸೂಕ್ಷ್ಮ ಟ್ವಿಸ್ಟ್’ ಬಗ್ಗೆ ಬಲ್ಲಿರಾ?
Siddaramaiah Tenure As CM : ಬಹಳ ದಿನಗಳ ನಂತರ ಮಾಜಿ ಸಂಸದ ಮತ್ತು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಮಾಧ್ಯಮದವರ ಮುಂದೆ ಬಂದಿದ್ದಾರೆ. ನವೆಂಬರ್ ಕ್ರಾಂತಿಯ ಸುದ್ದಿಯ ನಡುವೆ ಸುರೇಶ್ ಅವರ ಹೇಳಿಕೆಗಳು ಮಹತ್ವವನ್ನು ಪಡೆದಿವೆ. ಸ್ವಾಭಾವಿಕವಾಗಿ, ಯಾವುದೇ ಕ್ರಾಂತಿಯ ವಿಚಾರವನ್ನು ಅವರು ತಳ್ಳಿಹಾಕಿದ್ದಾರೆ. ಜೊತೆಗೆ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಬಗ್ಗೆಯೂ ಮಾತನಾಡಿದ್ದಾರೆ.
ಚಿನ್ನಾಭರಣ ಅಡವಿಟ್ಟು ಸಾಲ ಪಡೆದಿದ್ದ ರೈತ ಸಾವು: ಆರ್.ಅಶೋಕ್ ಗರಂ
ಮೈಸೂರು, ನವೆಂಬರ್ 05: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎರಡು ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರ ನಮ್ಮ ಪರವಾಗಿಲ್ಲ, ಬೆಳೆ ಹಾನಿಗೆ ಪರಿಹಾರ ಸಿಗಲ್ಲ, ನೀರಾವರಿ ಸೌಲಭ್ಯ ಸಿಗುವುದಿಲ್ಲ ಎಂಬ ಭಾವನೆ ರೈತರಲ್ಲಿ ಬಂದಿದೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಕ್ಕೆ ಸರ್ಕಾರವೇ ನೇರ ಕಾರಣ. ಇನ್ನೂ
ಸಕಲ ಸರಕಾರಿ ಗೌರವಗಳೊಂದಿಗೆ ಎಚ್.ವೈ.ಮೇಟಿ ಅಂತ್ಯಕ್ರಿಯೆ
ಬಾಗಲಕೋಟೆ : ಅನಾರೋಗ್ಯದ ಹಿನ್ನೆಲೆಯಲ್ಲಿ ಮೃತಪಟ್ಟ ಮಾಜಿ ಸಚಿವ, ಹಿರಿಯ ಶಾಸಕ ಎಚ್.ವೈ. ಮೇಟಿ(79) ಅವರ ಅಂತ್ಯ ಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ತಿಮ್ಮಾಪುರದಲ್ಲಿ ನೆರವೇರಿಸಲಾಯಿತು. ಮೇಟಿ ಅವರ ಪೋಷಕರ ಸಮಾಧಿ ಪಕ್ಕದಲ್ಲೆ ಕುರುಬ ಸಮುದಾಯದ ಸಂಪ್ರದಾಯದಂತೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು. ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಮೇಟಿ ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಡಾ.ಎಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹೀಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ನಗರದಲ್ಲಿ 2026ರ ಜನವರಿ ತಿಂಗಳಲ್ಲಿ ನಡೆಯುವ ಉಡುಪಿಯ ಅಷ್ಟಮಠಗಳ ಪೈಕಿ ಒಂದಾದ ಶೀರೂರು ಮಠದ ಪರ್ಯಾಯ ಮಹೋತ್ಸವದ ವೇಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ನಗರದಲ್ಲಿ ಅಗತ್ಯ ಮೂಲಭೂತ ಸೌಕರ್ಯ ಸೇರಿದಂತೆ ಕಾನೂನು ಸುವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಪರ್ಯಾಯ ಮಹೋತ್ಸವಕ್ಕೆ ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಸಂಖ್ಯೆಯ ಭಕ್ತರು ಉಡುಪಿ ನಗರಕ್ಕೆ ಆಗಮಿಸುವ ಸಾಧ್ಯತೆಗಳಿವೆ. ಇವರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ವಾಹನಗಳ ಸುಗಮ ಸಂಚಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಜನರ ದಟ್ಟಣೆಯಾಗದಂತೆ ನೋಡಿಕೊಳ್ಳುವುದು ಸೇರಿದಂತೆ ವಿವಿಧ ಸೌಕರ್ಯಗಳನ್ನು ಶ್ರೀಕೃಷ್ಣ ಮಠದ ಸಮನ್ವಯದೊಂದಿಗೆ ಕೈಗೊಳ್ಳಬೇಕು ಎಂದು ಸೂಚಿಸಿದರು. ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇದಕ್ಕಾಗಿ ನಗರವನ್ನು ಸಂಪರ್ಕಿಸುವ ಹಾಗೂ ನಗರದೊಳಗಿನ ರಸ್ತೆಗಳ ದುರಸ್ತಿ ಕಾರ್ಯವನ್ನು ಉತ್ತಮ ಗುಣಮಟ್ಟದೊಂದಿಗೆ ಕೈಗೊಳ್ಳಬೇಕು. ದಾರಿದೀಪಗಳು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದ ಜಿಲ್ಲಾಧಿಕಾರಿಗಳು, ನಗರದ ಶುಚಿತ್ವ ಕಾಪಾಡಲು ಹೆಚ್ಚು ಮಂದಿ ಪೌರ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಪೌರಾಯುಕ್ತರಿಗೆ ಸೂಚನೆ ನೀಡಿದರು. ಮಠದ ಆವರಣದಲ್ಲಿ ಜನಜಂಗುಳಿಯಾಗಿ ಜನರ ಸಂಚಾರಕ್ಕೆ ತೊಂದರೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಬಂದೋಬಸ್ತ್ಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವುದರೊಂದಿಗೆ ಕಂಟ್ರೋಲ್ ರೂಮ್ಗಳು ದಿನದ ಇಪ್ಪನಾಲ್ಕು ಗಂಟೆ ಕಾರ್ಯಾಚರಿಸುವಂತೆ ನೋಡಿ ಕೊಳ್ಳಬೇಕು. ವಾಹನಗಳ ಸುಗಮ ಸಂಚಾರಕ್ಕೆ, ಅವುಗಳ ನಿಲುಗಡೆಗೆ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಅಲ್ಲಲ್ಲಿ ಕಲ್ಪಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ತುರ್ತು ಆರೋಗ್ಯ ಚಿಕಿತ್ಸೆ ನೀಡಲು ಶ್ರೀಕೃಷ್ಣ ಮಠ ಹಾಗೂ ರಥಬೀದಿಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನೊಳಗೊಂಡ ತಂಡದ ಆರೋಗ್ಯ ಕೇಂದ್ರಗಳನ್ನು ತಾತ್ಕಾಲಿಕವಾಗಿ ರಚಿಸುವುದರೊಂದಿಗೆ ಆಂಬುಲೆನ್ಸ್ ಅನ್ನು ಸನ್ನದ್ಧ ಸ್ಥಿತಿಯಲ್ಲಿ ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶೀರೂರು ಸ್ವಾಮೀಜಿಗಳ ಚೊಚ್ಚಲ ಪರ್ಯಾಯವನ್ನು ವೀಕ್ಷಿಸಲು ರಾಜ್ಯದ ವಿವಿದೆಡೆಗಳಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಬೇಡಿಕೆಗೆ ಅನುಗುಣವಾಗಿ ಕೆಎಸ್ಸಾರ್ಟಿಸಿ ಬಸ್ಗಳ ಸೌಲಭ್ಯವನ್ನು ಕಲ್ಪಿಸಬೇಕು ಎಂದ ಅವರು, ಈ ಸಂದರ್ಭದಲ್ಲಿ ಸ್ಥಳೀಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪ್ಯಾಕೇಜ್ ಟೂರ್ ವ್ಯವಸ್ಥೆ ಮಾಡಬೇಕು ಎಂದರು. ಪರ್ಯಾಯ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸ್ವರೂಪ ಟಿ.ಕೆ., ಹೆಚ್ಚುವರಿ ಅಗ್ನಿಶಾಮಕ ವಾಹನಗಳನ್ನು ಮಠದ ಪರಿಸರದಲ್ಲಿ ನಿಯೋಜಿಸಬೇಕು. ಪರ್ಯಾಯೋತ್ಸವ ಅಂಗವಾಗಿ ವಾಹನಗಳಲ್ಲಿ ಹೊರೆ ಕಾಣಿಕೆಗಳು ಬರಲಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಗಳಾಗದ ರೀತಿಯಲ್ಲಿ ಎಲ್ಲಾ ವ್ಯವಸ್ಥೆ ಮಾಡಬೇಕು ಎಂದರು. ಜ.18ರ ಬೆಳಗಿನ ಜಾವ ನಡೆಯಲಿರುವ ಪುರ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು, ಸ್ಥಬ್ಧ ಚಿತ್ರಗಳು ಭಾಗವಹಿಸಲಿದ್ದು, ಇವುಗಳು ಶಿಸ್ತುಬದ್ಧವಾಗಿ ಸಾಗುವಂತೆ ನೋಡಿಕೊಳ್ಳಬೇಕು. ಮೆರವಣಿಗೆ ಸಾಗುವ ದಾರಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿದ್ದಲ್ಲಿ ಅವುಗಳನ್ನು ಗುರುತಿಸುವುದರೊಂದಿಗೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮೆರವಣಿಗೆ ಸಾಗುವ ದಾರಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಜನಸಂದಣಿ ಹೆಚ್ಚಾಗಲಿರುವುದರಿಂದ ಯಾವುದೇ ಅವಘಡ ಗಳು ಸಂಭವಿಸದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ವಾಹನಗಳು ಹೆಚ್ಚು ಆಗಮಿಸುವ ಕಾರಣ ಅವುಗಳಿಗೆ ಸೂಕ್ತ ಪಾರ್ಕಿಂಗ್ ಸ್ಥಳ ನಿಗದಿ ಪಡಿಸಬೇಕು. ಊರ ಹಬ್ಬದ ರೀತಿಯಲ್ಲಿ ಪರ್ಯಾಯ ಮಹೋತ್ಸವ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮಿಷನರ್ ರಶ್ಮಿ, ಮಠದ ದಿವಾನರಾದ ಡಾ.ಉದಯಕುಮಾರ್ ಸರಳತ್ತಾಯ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಸ್ವಾಗತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿ ದ್ದರು.
ಕಬ್ಬ ಬೆಳೆಗಾರರಿಗೆ ದರ ನಿಗದಿ ವಿಚಾರ; ಸಂಪುಟ ಸಭೆಯಲ್ಲಿ ಚರ್ಚೆ: ಚಲುವರಾಯಸ್ವಾಮಿ
ಬೆಂಗಳೂರು : ಕಬ್ಬ ಬೆಳೆಗಾರರಿಗೆ ದರ ನಿಗದಿ ಮಾಡುವ ವಿಚಾರ ಸಂಬಂಧ ನಾಳೆ(ನ.6) ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದೆ. ಇದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಸಕ್ಕರೆ ಸಚಿವರು ಸೇರಿದಂತೆ ಆ ಭಾಗದ ಸಚಿವರು ಕೂಡ ಚರ್ಚೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಿರ್ಧಾರ ಕೈಗೊಂಡರೂ ಕೇಂದ್ರ ಸರಕಾರವೇ ಕಬ್ಬಿನ ದರ ನಿಗದಿಪಡಿಸಬೇಕಿದೆ ಎಂದರು. ರೈತರ ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಂಡಿದ್ದಾರೆ. ಆದರೆ, ವಾಸ್ತವದಲ್ಲಿ ಈ ಬಗ್ಗೆ ಅವರಿಗೆ ಮಾಹಿತಿ ಕೊರತೆ ಇದೆ. ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಸರಕಾರದಲ್ಲಿ ಕಬ್ಬು ಬೆಳೆಗಾರರಿಗೆ ಎಷ್ಟು ಪರಿಹಾರ ಕೊಟ್ಟರು? ಎಂಬುದನ್ನು ಪ್ರಶ್ನಿಸಬೇಕಿದೆ ಎಂದರು. 5 ಲಕ್ಷ ಪರಿಹಾರ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡುವುದಾಗಿ ಕೃಷಿ ಸಚಿವ ಚೆಲುವರಾಯಸ್ವಾಮಿ ಘೋಷಿಸಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ತೆರಳಿದ ಮೃತ ರೈತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವರು, 5 ಲಕ್ಷ ರೂ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಹೆಚ್ಚುವರಿ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುವುದಾಗಿ ಭರವಸೆ ನೀಡಿದರು.
ಅಮೆರಿಕದ ನಿರ್ಬಂಧಗಳ ನಡುವೆ ರಷ್ಯಾದಿಂದ ಕಚ್ಚಾತೈಲದ ನೇರ ಆಮದುಗಳನ್ನು ತಗ್ಗಿಸಲು ಭಾರತ ಸಜ್ಜು
ಹೊಸದಿಲ್ಲಿ,ನ.5: ಅಮೆರಿಕವು ನ.21ರಿಂದ ಜಾರಿಯಾಗುವಂತೆ ರೋಸ್ನೆಫ್ಟ್ ಮತ್ತು ಲುಕೊಯಿಲ್ ಮೇಲೆ ಹೊಸ ನಿರ್ಬಂಧಗಳನ್ನು ಹೇರಿದ ಬಳಿಕ ನವಂಬರ್ ಅಂತ್ಯದಿಂದ ರಷ್ಯಾದಿಂದ ಕಚ್ಚಾತೈಲದ ನೇರ ಆಮದುಗಳನ್ನು ಕಡಿಮೆ ಮಾಡಲು ಭಾರತವು ಸಜ್ಜಾಗಿದೆ. ಭಾರತಕ್ಕೆ ಆಮದಾಗುವ ರಷ್ಯಾದ ಕಚ್ಚಾತೈಲದಲ್ಲಿ ಅರ್ಧಕ್ಕೂ ಹೆಚ್ಚಿನ ಪಾಲನ್ನು ಹೊಂದಿರುವ ದೇಶದಲ್ಲಿಯ ಸಂಸ್ಕರಣಾಗಾರಗಳು ರಷ್ಯಾದ ಎರಡು ಬೃಹತ್ ತೈಲ ರಫ್ತು ಕಂಪನಿಗಳ ಮೇಲಿನ ಇತ್ತೀಚಿನ ನಿರ್ಬಂಧಗಳನ್ನು ಪಾಲಿಸುವ ನಿರೀಕ್ಷೆಯಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ. ಈ ಸಂಸ್ಕರಣಾಗಾರಗಳು ಕಚ್ಚಾತೈಲವನ್ನು ಪೆಟ್ರೋಲ್ ಮತ್ತು ಡೀಸೆಲ್ನಂತಹ ಇಂಧನಗಳಾಗಿ ಪರಿವರ್ತಿಸುತ್ತವೆ. ಕಡಲ ಗುಪ್ತಚರ ಸಂಸ್ಥೆ ಕೆಪ್ಲರ್ ಪ್ರಕಾರ ಇದು ಡಿಸೆಂಬರ್ನಲ್ಲಿ ರಷ್ಯಾದಿಂದ ಆಮದುಗಳ ತೀವ್ರ ಕುಸಿತಕ್ಕೆ ಕಾರಣವಾಗಲಿದ್ದು, ಮಧ್ಯವರ್ತಿಗಳು ಮತ್ತು ಪರ್ಯಾಯ ಮಾರ್ಗಗಳ ಮೂಲಕ 2026ರ ಆರಂಭದಲ್ಲಿ ಕ್ರಮೇಣ ಚೇತರಿಸಿಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ರೋಸ್ನೆಫ್ಟ್ನೊಂದಿಗೆ ದೀರ್ಘಾವಧಿಯ ಪೂರೈಕೆ ಒಪ್ಪಂದವನ್ನು ಹೊಂದಿರುವ ಅಗ್ರ ಆಮದುದಾರ ರಿಲಯನ್ಸ್ ಇಂಡಸ್ಟ್ರೀಸ್ ಲಿ.ರಷ್ಯಾದಿಂದ ಕಚ್ಚಾತೈಲ ಆಮದನ್ನು ನಿಲ್ಲಿಸಲಿದೆ. ರಷ್ಯಾದಿಂದ ತೈಲ ಆಮದನ್ನು ನಿಲ್ಲಿಸುವುದಾಗಿ ಇತರ ಎರಡು ಸರಕಾರಿ ನಿಯಂತ್ರಣದಲ್ಲಿರುವ ತೈಲ ಸಂಸ್ಕರಣಾಗಾರಗಳೂ ತಿಳಿಸಿವೆ. ಮಂಗಳೂರು ರಿಫೈನರಿಸ್ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿ. ಹಾಗೂ ಉಕ್ಕು ಉದ್ಯಮಿ ಲಕ್ಷ್ಮಿ ಮಿತ್ತಲ್ ಅವರ ಮಿತ್ತಲ್ ಎನರ್ಜಿ ಮತ್ತು ಹಿಂದುಸ್ಥಾನ ಪೆಟ್ರೋಲಿಯಂ ಕಾರ್ಪೊರೇಷನ್ ಲಿ.ನ(ಎಚ್ಪಿಸಿಎಲ್) ಜಂಟಿ ಉದ್ಯಮವಾಗಿರುವ ಎಚ್ಪಿಸಿಎಲ್-ಮಿತ್ತಲ್ ಎನರ್ಜಿ ಲಿ.ಭವಿಷ್ಯದ ತೈಲ ಆಮದುಗಳನ್ನು ಸ್ಥಗಿತಗೊಳಿಸುವ ಯೋಜನೆಗಳನ್ನು ಪ್ರಕಟಿಸಿವೆ. 2025ರ ಪೂರ್ವಾರ್ಧದಲ್ಲಿ ದಿನವೊಂದಕ್ಕೆ 1.8 ಮಿಲಿಯನ್ ಬ್ಯಾರೆಲ್ ರಷ್ಯಾದ ಕಚ್ಚಾತೈಲವನ್ನು ಆಮದು ಮಾಡಿಕೊಳ್ಳಲಾಗಿದ್ದು, ಇದರಲ್ಲಿ ಈ ಮೂರು ಸಂಸ್ಥೆಗಳು ಅರ್ಧಕ್ಕೂ ಹೆಚ್ಚಿನ ಪಾಲು ಹೊಂದಿದ್ದವು. ಆದರೆ, ರೋಸ್ನೆಫ್ಟ್ನ ಭಾಗಶಃ ಒಡೆತನದಲ್ಲಿರುವ ಮತ್ತು ಈಗಾಗಲೇ ಐರೋಪ್ಯ ಒಕ್ಕೂಟದ ನಿರ್ಬಂಧಗಳಡಿ ಇರುವ ನಯಾರಾ ಎನರ್ಜಿಯ ವಾದಿನಾರ್ ರಿಫೈನರಿಯು ರಷ್ಯಾದಿಂದ ಕಚ್ಚಾತೈಲ ಆಮದನ್ನು ಮುಂದುವರಿಸುವ ಸಾಧ್ಯತೆಯಿದೆ. ಕೆಪ್ಲರ್ನ ಪ್ರಮುಖ ಸಂಶೋಧನಾ ವಿಶ್ಲೇಷಕ ಸುಮಿತ್ ರಿತೋಲಿಯಾ ಪ್ರಕಾರ,ಅಕ್ಟೋಬರ್ನಲ್ಲಿ ರಷ್ಯಾ ಭಾರತಕ್ಕೆ ಅಗ್ರ ಕಚ್ಚಾ ತೈಲ ಪೂರೈಕೆದಾರನ ಸ್ಥಾನವನ್ನು ಕಾಯ್ದುಕೊಂಡಿತ್ತು. ನಂತರದ ಸ್ಥಾನಗಳಲ್ಲಿ ಇರಾಕ್ ಮತ್ತು ಸೌದಿ ಅರೇಬಿಯಗಳಿದ್ದವು. ನಿರ್ಬಂಧಗಳಿಗೆ ಮುನ್ನ ಭಾರತಕ್ಕೆ ರಷ್ಯಾದ ಕಚ್ಚಾತೈಲ ಆಮದುಗಳು ದಿನವೊಂದಕ್ಕೆ 1.6-1.8 ಮಿಲಿಯನ್ ಬ್ಯಾರೆಲ್ ಗಳನ್ನು ತಲುಪಿದ್ದವು ಮತ್ತು ಸಂಸ್ಕರಣಾಗಾರಗಳು ಅಮೆರಿಕದ ನಿರ್ಬಂಧಗಳಿಗೆ ಗುರಿಯಾಗುವ ಸಾಧ್ಯತೆಯನ್ನು ತಪ್ಪಿಸಲು ಮುಂದಾಗಿದ್ದರಿಂದ ಅ.21ರ ಬಳಿಕ ಆಮದುಗಳಲ್ಲಿ ಕುಸಿತ ಕಂಡು ಬಂದಿತ್ತು. ರಷ್ಯಾದಿಂದ ಆಮದುಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆಯಿಲ್ಲ. ಆದರೆ ಭವಿಷ್ಯದ ಆಮದುಗಳು ಹೆಚ್ಚು ಸಂಕೀರ್ಣವಾದ ಲಾಜಿಸ್ಟಿಕ್ಗಳು ಮತ್ತು ವ್ಯಾಪಾರ ವ್ಯವಸ್ಥೆಗಳನ್ನು ಅವಲಂಬಿಸಿರಲಿವೆ ಎಂದು ವಿಶ್ಲೇಷಕರು ಅಭಿಪ್ರಾಯಿಸಿದ್ದಾರೆ. ರಷ್ಯಾದಿಂದ ಕಚ್ಚಾತೈಲ ಆಮದುಗಳಲ್ಲಿ ಕಡಿತವನ್ನು ಸರಿದೂಗಿಸಲು ಭಾರತೀಯ ಸಂಸ್ಕರಣಾಗಾರಗಳು ಮಧ್ಯಪ್ರಾಚ್ಯ, ಲ್ಯಾಟಿನ್ ಅಮೆರಿಕ,ಪಶ್ಚಿಮ ಆಫ್ರಿಕಾ,ಕೆನಡಾ ಮತ್ತು ಅಮೆರಿಕದಿಂದ ತೈಲ ಖರೀದಿಯನ್ನು ಹೆಚ್ಚಿಸುತ್ತಿವೆ. ಅಮೆರಿಕದಿಂದ ಕಚ್ಚಾತೈಲ ಆಮದು ಅಕ್ಟೋಬರ್ನಲ್ಲಿ ದಿನವೊಂದಕ್ಕೆ 5,68,000 ಬ್ಯಾರೆಲ್ ಗೆ ತಲುಪಿದ್ದು,ಇದು ಮಾರ್ಚ್ 2021ರ ನಂತರ ಗರಿಷ್ಠ ಪ್ರಮಾಣವಾಗಿದೆ. ಇದಕ್ಕೆ ನಿರ್ಬಂಧಗಳಿಗಿಂತ ಆರ್ಥಿಕ ಅಂಶಗಳು ಹೆಚ್ಚು ಕಾರಣವಾಗಿವೆ. ಡಿಸೆಂಬರ್ ಮತ್ತು ಜನವರಿಯಲ್ಲಿ ಅಮೆರಿಕದಿಂದ ತೈಲ ಆಮದು ದಿನವೊಂದಕ್ಕೆ 2,50,000-3,50,000 ಬ್ಯಾರೆಲ್ ಗಳ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ ಎಂದು ರಿತೋಲಿಯಾ ಹೇಳಿದರು.
ಬಳ್ಳಾರಿ | ಸರಕಾರಿ ಶಾಲೆಗಳ ಉನ್ನತೀಕರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮನವಿ
ಬಳ್ಳಾರಿ / ಕಂಪ್ಲಿ :ತಾಲ್ಲೂಕಿನ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಎನ್ಎಮ್ಡಿಸಿ ಸಂಸ್ಥೆಯ CSR ನಿಧಿಯಿಂದ ಅನುದಾನ ಬಿಡುಗಡೆ ಮಾಡಲು ಶಿಫಾರಸ್ಸು ಮಾಡುವಂತೆ ಕಂಪ್ಲಿಯ ಜೆಡಿಎಸ್ ಮುಖಂಡ ಶಬ್ಬೀರ್ ಉಳೇನೂರು ಅವರು ಬೆಂಗಳೂರು ನಗರದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸಲ್ಲಿಸಿದ ನಂತರ ಮಾತನಾಡಿದ ಶಬ್ಬೀರ್ ಉಳೇನೂರು ಅವರು, ಸಂಡೂರು ತಾಲ್ಲೂಕಿನ ದೋಣಿಮಲೆ ಎನ್ಎಮ್ಡಿಸಿ ಸಂಸ್ಥೆಯ CSR (ಸಾಮಾಜಿಕ ಹೊಣೆಗಾರಿಕೆ) ನಿಧಿಯಿಂದ ಕಂಪ್ಲಿ, ಹೊಸಪೇಟೆ ಹಾಗೂ ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರತಿ ತಾಲ್ಲೂಕಿಗೆ ₹5 ಕೋಟಿಗಳು ಬಿಡುಗಡೆ ಮಾಡುವಂತೆ ಶಿಫಾರಸ್ಸು ಮಾಡುವಂತೆ ಕೇಂದ್ರ ಸಚಿವರ ಗಮನಕ್ಕೆ ತಂದಿದ್ದಾಗಿ ಹೇಳಿದರು. ಮನವಿಗೆ ಪ್ರತಿಕ್ರಿಯಿಸಿದ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಈ ಕುರಿತು ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ಮುಹಮ್ಮದ್ ಜಾಕೀರ್, ವಿನೋದ್, ಆಮ್ಜದ್ ಸೇರಿದಂತೆ ಹಲವರು ಹಾಜರಿದ್ದರು.
ಗುಜರಾತ್ | ‘ದೃಶ್ಯಂ’ ಚಿತ್ರದ ಮಾದರಿಯಲ್ಲಿ ಹತ್ಯೆ: ಮಹಿಳೆಯ ಪ್ರಿಯಕರನ ಸೆರೆ
ಅಹಮದಾಬಾದ್: ಮಲಯಾಳಂನ ಬ್ಲಾಕ್ ಬಸ್ಟರ್ ಚಲನಚಿತ್ರ ‘ದೃಶ್ಯಂ' ಶೈಲಿಯಲ್ಲಿ ಮಹಿಳೆಯೊಬ್ಬರ ಪತಿಯನ್ನು ಆಕೆಯ ಪ್ರಿಯಕರ ಹತ್ಯೆಗೈದಿದ್ದು, ಆತನ ಮೃತದೇಹವನ್ನು ತನ್ನ ಇಬ್ಬರು ಸಂಬಂಧಿಕರ ನೆರವಿನೊಂದಿಗೆ ಅಡುಗೆ ಕೋಣೆಯ ನೆಲದ ಕೆಳಗೆ ಹುದುಗಿಸಿರುವ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ. ಸುಮಾರು ಒಂದು ವರ್ಷದಿಂದ ನಿಗೂಢವಾಗಿ ಕಣ್ಮರೆಯಾಗಿದ್ದ ಸಮೀರ್ ಅನ್ಸಾರಿ ಎಂಬ ವ್ಯಕ್ತಿಯ ಮೃತದೇಹದ ಮೂಳೆಗಳು ಹಾಗೂ ಇನ್ನಿತರ ಅವಶೇಷಗಳನ್ನು ಮಂಗಳವಾರ ರಾತ್ರಿ ಅಹಮದಾಬಾದ್ ನಗರದ ಸರ್ಖೇಜ್ ಪ್ರದೇಶದಲ್ಲಿನ ಚಿಲಕ ಹಾಕಿದ್ದ ಮನೆಯ ಅಡುಗೆ ಕೋಣೆಯಿಂದ ನಗರ ಅಪರಾಧ ವಿಭಾಗದ ಪೊಲೀಸರು ಹೊರ ತೆಗೆದಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಅಜಿತ್ ರಜಿಯಾನ್ ಹೇಳಿದ್ದಾರೆ. ಇಮ್ರಾನ್ ವಘೇಲಾ ಎಂಬ ಪರಪುರುಷನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ, ಸದ್ಯ ತಲೆಮರೆಸಿಕೊಂಡಿರುವ ಸಮೀರ್ ಅನ್ಸಾರಿಯ ಪತ್ನಿ ರೂಬಿ, ತನ್ನ ಪತಿಯನ್ನು ಹತ್ಯೆಗೈದು, ಆತನ ದೇಹವನ್ನು ತುಂಡುತುಂಡಾಗಿ ಕತ್ತರಿಸಿ, ಅದನ್ನು ಅಡುಗೆ ಕೋಣೆಯ ನೆಲದಡಿ ಹೂತು ಹಾಕಲು ಇಮ್ರಾನ್ ವಘೇಲಾನ ಇಬ್ಬರು ಸಂಬಂಧಿಕರ ನೆರವು ಪಡೆದಿದ್ದಳು ಎಂದು ರಜಿಯಾನ್ ತಿಳಿಸಿದ್ದಾರೆ. ಸುಮಾರು ಮೂರು ತಿಂಗಳ ಹಿಂದೆ, ಮೂಲತಃ ಬಿಹಾರ ನಿವಾಸಿಯಾದ ಸಮೀರ್ ಅನ್ಸಾರಿ ಎಂಬ ವ್ಯಕ್ತಿ ತುಂಬಾ ದಿನಗಳಿಂದ ಈ ಪ್ರದೇಶದಲ್ಲಿ ಕಾಣಿಸುತ್ತಿಲ್ಲ ಹಾಗೂ ಆತ ನಾಪತ್ತೆಯಾಗಿರುವ ಕುರಿತು ಯಾವುದೇ ಪೊಲೀಸ್ ದೂರು ಕೂಡಾ ದಾಖಲಾಗಿಲ್ಲ ಎಂಬ ಸುಳಿವನ್ನು ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ಸ್ವೀಕರಿಸಿದ್ದರು ಎಂದು ಅವರು ಹೇಳಿದ್ದಾರೆ. “ನಾವು ಆ ಪ್ರದೇಶದ ಮೇಲೆ ನಿಗಾ ಇರಿಸಿದಾಗ, ಸಮೀರ್ ಅನ್ಸಾರಿ ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿದ್ದಾನೆ ಎಂಬ ಸಂಗತಿ ತಿಳಿದು ಬಂದಿತು. ವಿಚಾರಣೆಯ ವೇಳೆ ಗದ್ಗದಿತನಾದ ಇಮ್ರಾನ್ ವಘೇಲಾ, ಸಮೀರ್ ಅನ್ಸಾರಿ ಪತ್ನಿ ರೂಬಿಯ ಸೂಚನೆ ಮೇರೆಗೆ ನಾನು ನನ್ನ ಇನ್ನಿಬ್ಬರು ಸಂಬಂಧಿಕರೊಂದಿಗೆ ಆತನನ್ನು ಹತ್ಯೆಗೈದೆನು. ನಮ್ಮಿಬ್ಬರ ನಡುವಿನ ವಿವಾಹೇತರ ಸಂಬಂಧ ತಿಳಿದು ಬಂದ ನಂತರ, ಸಮೀರ್ ಅನ್ಸಾರಿ ಆಕೆಯನ್ನು ಥಳಿಸುತ್ತಿದ್ದ ಹಾಗೂ ನಮ್ಮಿಬ್ಬರ ನಡುವಿನ ಅಕ್ರಮ ಸಂಬಂಧಕ್ಕೆ ಸಮೀರ್ ಅನ್ಸಾರಿ ಅಡ್ಡಿ ಎಂದು ಭಾವಿಸಿದ ರೂಬಿ, ಈ ಹತ್ಯೆಯ ಯೋಜನೆಯನ್ನು ರೂಪಿಸಿದಳು ಎಂದು ಹೇಳಿಕೆ ನೀಡಿದ್ದಾನೆ” ಎಂದು ಅವರು ತಿಳಿಸಿದ್ದಾರೆ. ವೃತ್ತಿಯಲ್ಲಿ ಗಾರೆ ಕಾರ್ಮಿಕನಾಗಿದ್ದ ಅನ್ಸಾರಿ, ರೂಬಿಯೊಂದಿಗೆ ಪ್ರೇಮ ವಿವಾಹವಾದ ನಂತರ, 2016ರಲ್ಲಿ ಬಿಹಾರದಿಂದ ಅಹಮದಾಬಾದ್ ಗೆ ಸ್ಥಳಾಂತರಗೊಂಡಿದ್ದ. ಈ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ಫತೇವಾಡಿ ನಾಲೆ ಬಳಿಯ ಅಹ್ಮೆದಿ ವಠಾರದಲ್ಲಿದ್ದಾಗ, ರೂಬಿ, ಇಮ್ರಾನ್ ನ ಪ್ರೇಮಪಾಶಕ್ಕೆ ಬಿದ್ದಿದ್ದಳು. ಇದು ಆಕೆಯ ಪತಿ ಸಮೀರ್ ಅನ್ಸಾರಿಯನ್ನು ಕುಪಿತಗೊಳಿಸಿತ್ತು ಎಂದು ಅವರು ಹೇಳಿದ್ದಾರೆ.
ಭಟ್ಕಳದಲ್ಲಿ ಪೀಠೋಪಕರಣ ವಂಚನೆ| ಹಣ ಪಡೆದು ಮಾಲಕರು ಪರಾರಿ; ಗ್ರಾಹಕರಿಂದ ದೂರು
ಭಟ್ಕಳ: ಭಟ್ಕಳದಲ್ಲಿರುವ 'ಗ್ಲೋಬಲ್ ಎಂಟರ್ಪ್ರೈಸಸ್' (Global Enterprise Bhatkal) ಎಂಬ ಪೀಠೋಪಕರಣ ಮಳಿಗೆಯ ಮಾಲಕರು ಗ್ರಾಹಕರಿಗೆ ವಂಚಿಸಿ, ಪರಾರಿಯಾಗಿದ್ದಾರೆನ್ನಲಾದ ಘಟನೆ ಬೆಳಕಿಗೆ ಬಂದಿದೆ. ಪೀಠೋಪಕರಣಗಳಿಗಾಗಿ ಹಣ ಪಾವತಿಸಿದ್ದ ಗ್ರಾಹಕರು ವಸ್ತುಗಳು ಸಿಗದೆ ತೊಂದರೆಗೆ ಒಳಗಾಗಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೀಠೋಪಕರಣಗಳಿಗಾಗಿ ಪಾವತಿ: ಈ ವಂಚನೆಗೆ ಒಳಗಾದ ಗ್ರಾಹಕರೊಬ್ಬರ ಪ್ರಕಾರ, ಅವರು ಗ್ಲೋಬಲ್ ಎಂಟರ್ಪ್ರೈಸಸ್ನಲ್ಲಿ ಎರಡು ಪೀಠೋಪಕರಣ ವಸ್ತುಗಳನ್ನು (ಅಲಮಾರು ಅಥವಾ ಕಪಾಟು) ಖರೀದಿಸಿದ್ದರು. ಒಂದು ವಸ್ತುವಿನ ಮೌಲ್ಯ ರೂ. 7,500 ಆಗಿದ್ದರೆ, ಮತ್ತೊಂದು ವಸ್ತುವಿನ ಮೌಲ್ಯ 2,500 ಆಗಿತ್ತು. ಗ್ರಾಹಕರು ಈ ಮಳಿಗೆಯಿಂದ ಮೊದಲ ಬಾರಿಗೆ ಖರೀದಿ ಮಾಡಿದ್ದು, ಬೇರೆಯವರು ಈ ಮೊದಲು ಇಲ್ಲಿ ವಸ್ತುಗಳನ್ನು ಖರೀದಿಸಿದ್ದಾರೆ ಎಂದು ಹೇಳಿದ ಕಾರಣಕ್ಕೆ ವಹಿವಾಟು ನಡೆಸಿದ್ದರು ಎಂದು ಗ್ರಾಹಕರು ತಿಳಿಸಿದ್ದಾರೆ. ಖರೀದಿ ಮಾಡಿದ ಪೀಠೋಪಕರಣಗಳ ವಿತರಣೆಗಾಗಿ ಮಳಿಗೆಯವರು ಗ್ರಾಹಕರಿಗೆ 5ನೇ ತಾರೀಖಿನ ದಿನಾಂಕವನ್ನು ನಿಗದಿಪಡಿಸಿದ್ದರು. ಈ ದಿನಾಂಕದ ಎರಡು ದಿನಗಳ ಮುಂಚೆ ಗ್ರಾಹಕರು ಮಳಿಗೆಗೆ ಕರೆ ಮಾಡಿ ವಿಚಾರಿಸಿದಾಗಲೂ, ಅವರು 5ನೇ ತಾರೀಖಿಗೇ ವಿತರಣೆಯಾಗುವುದು ಎಂದು ದೃಢಪಡಿಸಿದ್ದರು. ಆದರೆ, ನಿಗದಿತ ದಿನಾಂಕದಂದು ಗ್ರಾಹಕರು ಮಳಿಗೆಯ ಬಳಿ ಬಂದಾಗ, ಅವರಿಗೆ ತಾವು ಖರೀದಿಸಿದ ವಸ್ತುಗಳು ಸಿಗಲಿಲ್ಲ.ಅಲ್ಲದೇ ಮಾಲಕರು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.
ಕಲಬುರಗಿ | ಅಂತರ್ ಕಾಲೇಜು ಮಹಿಳಾ ಅಥ್ಲೇಟಿಕ್ ಮೀಟ್ಗೆ ಚಾಲನೆ
ಕಲಬುರಗಿ: ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಕು.ಶರಣೇಶ್ವರಿ ರೇಷ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ, ವಿಜಯಪುರ ಇವರ ಸಹಯೋಗದಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ 19ನೇ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಅಥ್ಲೇಟಿಕ್ ಮೀಟ್ಅನ್ನು ಅಂತರರಾಷ್ಟ್ರೀಯ ಕ್ರೀಡಾಪಟು ಶೃದಿಯಾ ರಾಮನಗೌಡ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗುವಿವಿ ಕುಲಪತಿ ಪ್ರೊ.ಶಶಿಕಾಂತ ಎಸ್.ಉಡಿಕೇರಿ, ಕುಲಸಚಿವರಾದ ಪ್ರೊ.ರಮೇಶ ಲಂಡನ್ಕರ್, ರೇಷ್ಮಿ ಎಜುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಭಾರತಿ ಎನ್.ರೇಷ್ಮಿ, ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಜಿ.ಕಣ್ಣೂರ, ಸದಸ್ಯರಾದ ಶ್ರೀಪಾದ ಚೌಡಾಪೂರಕರ್, ಅತೀಕ್ ರೆಹಮಾನ್, ರಾಘವೇಂದ್ರ ಎಂ.ಭೈರಪ್ಪ, ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಶಿವಯೋಗಿ ಎಲಿ, ಪ್ರೊ.ಹನುಮಂತಯ್ಯ ಪೂಜಾರಿ, ಕಾಲೇಜಿನ ರೇಷ್ಮಿ ಎಜುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಶರದ್ಎನ್.ರೇಷ್ಮಿ, ಅಥಿತಿ ಸಹಾಯಕ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ವಿಶ್ವನಾಥ ನಡಗಟ್ಟಿ, ರೇಷ್ಮಿ ಎಜುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಚೀಫ್ ಟ್ರಸ್ಟಿ ಶಿಶಿರ ಎನ್.ರೇಷ್ಮಿ, ಕಾಲೇಜಿನ ಪ್ರಾಂಶುಪಾಲೆ ಡಾ.ಗೀತಾ ಆರ್., ಸಂಯೋಜಕ ಸಂಗಣ್ಣ ಕೆ. ಸೇರಿದಂತೆ ಇತರರಿದ್ದರು.
ಕಲಬುರಗಿ | ನ.6 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ಬಸವೇಶ್ವರ ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ನ.6ರಂದು ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ. ಬಸವೇಶ್ವರ ಫೀಡರ್: ನವಾಬ್ ಸಾಬ್ ಮೊಹಲ್ಲಾ, ಗುರುಸ್ನಾಯ್ ಕಾಲೋನಿ, ಚುನ್ನಾಭಟ್ಟಿ, ನ್ಯೂ ರಹೆಮತ್ ನಗರ, ಪೀರ್ದೋಸ್ ಕಾಲೋನಿ, ಬಸವಣ್ಣ ಕಟ್ಟಾ, ಝಮ್ಝಮ್ ಕಾಲೋನಿ, ಸಿಟಿ ಸ್ಕೂಲ್, ಸಭಾ ಫಂಕ್ಷನ್ ಹಾಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಕಲಬುರಗಿ | ಮಕ್ಕಳು ಪಾಲಕರ ಪ್ರೀತಿಯಿಂದ ವಂಚಿತರಾಗಬಾರದು: ನಲಿನ್ ಅತುಲ್
ಕಲಬುರಗಿ : ಸಮಾಜದಲ್ಲಿ ಮಕ್ಕಳು ಶಿಕ್ಷಣ ಹಾಗೂ ಪಾಲಕರ ಪ್ರೀತಿಯಿಂದ ವಂಚಿತರಾಗಬಾರದು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ನಲಿನ್ ಅತುಲ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಮಕ್ಕಳ ಸಹಾಯವಾಣಿ-1098/112 ಮತ್ತು ಸರ್ಕಾರಿ ಹಾಗೂ ಸರ್ಕಾರೇತರ ಮಕ್ಕಳ ಪಾಲನಾ ಸಂಸ್ಥೆಗಳು ಇವರ ಸಹಯೋಗದಲ್ಲಿ ನಗರದ ಮಿನಿವಿಧಾನ ಸೌಧದಿಂದ ಜಗತ್ ವೃತ್ತದವರೆಗೆ ನಡೆದ ಜಾಗೃತಿ ಜಾಥಾಗೆ ಚಾಲನೆಯನ್ನು ನೀಡಿ ಮಾತನಾಡಿದರು. ಇಂದಿನ ಸಮಾಜದಲ್ಲಿ ಕೆಲ ಪಾಲಕರು ಯಾವುದೋ ವೈಯಕ್ತಿಕ ಕಾರಣಗಳಿಂದ ತಮ್ಮ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದಾರೆ. ಅಂತಹ ಮಕ್ಕಳನ್ನು ಕಾನೂನು ಪ್ರಕಾರ ದತ್ತು ನೀಡಲು ಸರ್ಕಾರದ ನಿರ್ದೇಶನದಂತೆ ಇಂತಹ ಘಟನೆಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ದತ್ತು ಮಾಸಾಚರಣೆ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. 2025-26ನೇ ಸಾಲಿನಲ್ಲಿ ನವೆಂಬರ್ 2025ರ ಮಾಹೆಯಲ್ಲಿ ಅಂತರರಾಷ್ಟ್ರೀಯ ದತ್ತು ಮಾಸವನ್ನಾಗಿ ಆಚರಿಸಲು ಹಾಗೂ ಜಿಲ್ಲೆಯಾದ್ಯಂತ ಕಾನೂನು ಬದ್ಧ ದತ್ತು ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಾದ ಮಂಜುಳಾ ಪಾಟೀಲ್ ಅವರು 2025-26 ನೇ ಸಾಲಿನ ವಿಶೇಷ ಚೇತನ ಮಕ್ಕಳ ದತ್ತು ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ಇದೇ ಸಂದರ್ಭದಲ್ಲಿ ಡಾನ್ ಬಾಸ್ಕೋ ಸಂಸ್ಥೆ ವತಿಯಿಂದ ಮಕ್ಕಳು ಕಾನೂನು ಬದ್ಧ ದತ್ತು ಕುರಿತು ಬೀದಿ ನಾಟಕವನ್ನು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ರಾಯಪ್ಪ ಹುಣಸಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶರಣಬಸಪ್ಪ ಕ್ಯಾತನಾಳ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಬಸವರಾಜ, ಯೋಜನಾ ನಿರ್ದೇಶಕರಾದ ಸಂತೋಷ ಕುಲಕರ್ಣಿ, ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀಶೈಲ್, ಜಿಲ್ಲಾ ಆಯುಷ್ಯ ಅಧಿಕಾರಿ ಡಾ.ಕೆ.ಬಿ ಬಬಲಾದ್, ಮಾರ್ಗಧರ್ಶಿ ಸಂಸ್ಥೆಯ ನಿರ್ದೇಶಕರಾದ ಆನಂದರಾಜ, ಅನುಪಾಲನ ಗೃಹ ನಿರ್ದೇಶಕರಾದ ಅನಂತರಾಜ್, ಡಾನ್ ಬಾಸ್ಕೊ ಸಂಸ್ಥೆಯ ಸಹ ನಿರ್ದೇಶಕಿ ಗೀತಾ, ಸರ್ಕಾರಿ ಮತ್ತು ಅರೆಸರ್ಕಾರಿ ಬಾಲಕ ಮತ್ತು ಬಾಲಕಿಯರ ಮಂದಿರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ | ಯುವನಿಧಿ ಯೋಜನೆ : ತಿಂಗಳಿಗೊಮ್ಮೆ ಸ್ವಯಂ ಘೋಷಣೆಗೆ ಫಲಾನುಭವಿಗಳಿಗೆ ಸೂಚನೆ
ಕಲಬುರಗಿ: ಯುವನಿಧಿ ಯೋಜನೆಯ ಪ್ರಯೋಜನ ಪಡೆಯಲು ಇನ್ನು ಮುಂದೆ ಅಭ್ಯರ್ಥಿಗಳು “ಪ್ರತಿ ತಿಂಗಳಿಗೊಮ್ಮೆ” ತಾವು ನಿರುದ್ಯೋಗಿಯೆಂದು ಮತ್ತು ವ್ಯಾಸಂಗವನ್ನು ಮುಂದುವರೆಸುತ್ತಿಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಿದೆ. ಸದರಿ ಅಭ್ಯರ್ಥಿಗಳು ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಸೇವಾ ಸಿಂಧು https://sevasindhugs.karnataka.gov.in ವೆಬ್ಸೈಟ್ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಉಳಿದಂತೆ ಸೇವಾ ಸಿಂಧು ಪೋರ್ಟಲ್ನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಅರ್ಜಿ ಅಪ್ರೂವ್ ಆಗದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅವುಗಳ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಿ ಅಪ್ರೂವ್ ಮಾಡಿಕೊಳ್ಳಬೇಕು. ಯುವನಿಧಿ ಯೋಜನೆಯಡಿ ಪದವಿ ಮತ್ತು ಸ್ನಾತಕೋತರ ಪದವಿ ಹಾಗೂ ಡಿಪ್ಲೋಮಾಗಳನ್ನು 2022-23ನೇ, 2023-2024ನೇ ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ, 2023, 2024, 2025ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಂಡು ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳ ಪೂರೈಸಿದ ನಂತರ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.
ಬಸ್ ಟಿಕೆಟ್ ರದ್ದು ಮಾಡಿ ಹಣ ಮರುಪಾವತಿ ಮಾಡಿದರೂ ಟ್ರಾವೆಲ್ಸ್ಗೆ ಬಿತ್ತು 10 ಸಾವಿರ ರೂ. ದಂಡ! ಕಾರಣವೇನು?
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಲು ಬುಕ್ಕಿಂಗ್ ಮಾಡಿದ್ದ ಬಸ್ ಟಿಕೆಟ್ಗಳನ್ನು ಗ್ರೀನ್ಲೈನ್ ಟ್ರಾವೆಲ್ಸ್ ಸಂಸ್ಥೆ ರದ್ದುಗೊಳಿಸಿತು. ಇದರಿಂದ ಭಕ್ತರೊಬ್ಬರ ಧಾರ್ಮಿಕ ಹಕ್ಕಿಗೆ ಧಕ್ಕೆಯಾಯಿತು. ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸಂಸ್ಥೆಗೆ 10 ಸಾವಿರ ದಂಡ ವಿಧಿಸಿದೆ. ಪ್ರಯಾಣಕ್ಕೆ ಪರ್ಯಾಯ ವ್ಯವಸ್ಥೆ ಮಾಡದ ಸಂಸ್ಥೆಯು ಭಕ್ತರಿಗೆ ಮಾನಸಿಕ ನೋವುಂಟು ಮಾಡಿದೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ.
ಬಳ್ಳಾರಿ | ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ
ಬಳ್ಳಾರಿ / ಕಂಪ್ಲಿ : ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು, ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು. ತಾಲೂಕಿನ ರಾಮಸಾಗರ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸತತ 12ನೇ ವರ್ಷದ ಗೌರಿ ಹಬ್ಬದ ಅಂಗವಾಗಿ ಮಂಗಳವಾರ ಜರುಗಿದ ಉಚಿತ ಸಾಮೂಹಿಕ ವಿವಾಹಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನಂತರ ನೂತನ ವಧು-ವರರಿಗೆ ಆಶೀರ್ವದಿಸಿ ಮಾತನಾಡಿದ ಅವರು, ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗುವ ಜತೆಗೆ ಪ್ರಗತಿಗೆ ಪೂರಕವಾಗುತ್ತದೆ. ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು, ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದರು. ಜಿಪಂ ಮಾಜಿ ಸದಸ್ಯ ಮತ್ತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಿ.ಜಿ.ಸಾಗರ ಬಣ)ಯ ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ, ಮುಖಂಡ ಶಿವಶಂಕರಗೌಡ, ಗ್ರಾಪಂ ಉಪಾಧ್ಯಕ್ಷ ಕಂಪ್ಲಿ ಕ್ಷೇತ್ರ ಎಸ್ಸಿ ಘಟಕದ ಅಧ್ಯಕ್ಷ ಆರ್.ಎಂ.ರಾಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಚಿತ ಸಾಮೂಹಿಕ ವಿವಾಹದಲ್ಲಿ 28 ಜೋಡಿಗಳು ನವ ವಸಂತಕ್ಕೆ ಕಾಲಿಟ್ಟರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಾರಾಯಣಪ್ಪ, ಜಗದೀಶಗೌಡ, ಕಮಲಾಪುರ ಸೋಮಶೇಖರ, ಕೊಟ್ಟಾಲ್ ವಿರೇಶ, ಹಾನಿ ಈರಣ್ಣ, ಕೆ.ಷಣ್ಮುಕಪ್ಪ, ವೀರಾಂಜಿನೀಯಲು, ಹೊಸಕೋಟೆ ಜಗದೀಶ, ಎ.ಸಿ.ದಾನಪ್ಪ, ಹೊನ್ನಳ್ಳಿ ಗಂಗಧಾರ, ಬಿ.ಸಿದ್ದಪ್ಪ, ಮೆಟ್ರಿ ಗಿರೀಶ್, ಬಳೆ ಮಲ್ಲಿಕಾರ್ಜುನ, ಜಾಫರ್ ಸೇರಿದಂತೆ ಅನೇಕರಿದ್ದರು
ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮೇಟಿ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ : ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣ ಮಾಡಲು ಶಾಸಕ ಎಚ್.ವೈ.ಮೇಟಿ ಕಾರಣ. ಅವರ ಆಸೆಯಂತೆ ಈಗಾಗಲೆ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲಿಯೆ ಶಂಕು ಸ್ಥಾಪನೆ ನೆರವೇರಿಸಲಾಗುವುದು. ಆದರೆ, ಈ ಸಂದರ್ಭದಲ್ಲಿ ಅವರು ನಮ್ಮೊಂದಿಗೆ ಇಲ್ಲದಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಬಾಗಲಕೋಟೆಯಲ್ಲಿ ಎಚ್.ವೈ.ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1983 ರಿಂದ ಮೇಟಿ ಅವರೊಂದಿಗೆ ಒಡನಾಡವಿತ್ತು. ನಾನು ಜನತಾ ಪಕ್ಷ, ಜನತಾ ದಳ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದರೂ ನಾನು ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿದ್ದರು ಎಂದು ಹೇಳಿದರು. ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ದುಡಿದವರು. ಮೇಟಿ ಒಬ್ಬ ನಿಷ್ಠಾವಂತ ರಾಜಕಾರಣಿ. ನಾನು ಅವರಿಂದ ಒಂದು ವರ್ಷ ಕಿರಿಯನಾಗಿದ್ದರೂ, ನನ್ನನ್ನು ಅತ್ಯಂತ ಗೌರವದಿಂದ ಕಾಣುತ್ತಿದ್ದರು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ಸೇವೆ ಸಲ್ಲಿಸಿದ ಅವರು ವಿನಯವಂತರಾಗಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದರು. ಅಧಿಕಾರ ಶಾಶ್ವತವಲ್ಲ. ಜನರಿಂದ ದೊರಕುವ ಅಧಿಕಾರವನ್ನು ಜನರ ಒಳಿತಿಗಾಗಿ ಬಳಸಬೇಕು. ಬಹಳ ವಿದ್ಯಾವಂತರಲ್ಲದಿದ್ದರೂ, ರಾಜಕೀಯ ತತ್ವಗಳನ್ನು ತಪ್ಪದೆ ಪಾಲಿಸುತ್ತಿದ್ದರು. ಜನರೊಂದಿಗೆ ಬೆರೆಯುವ ಗುಣವಿದ್ದ ಮೇಟಿ ಕುರುಬ ಸಮುದಾಯದವರಾಗಿದ್ದರೂ, ಜಾತ್ಯತೀತ ತತ್ವದ ಪಾಲಕರಾಗಿದ್ದರು. ಎಲ್ಲ ಜಾತಿ ಧರ್ಮಗಳನ್ನು ಪ್ರೀತಿಯಿಂದ ಕಾಣುವ ಸ್ವಭಾವದವರಾಗಿದ್ದರು ಎಂದು ಮುಖ್ಯಮಂತ್ರಿ ಹೇಳಿದರು. ಮೇಟಿಯವರ ನಿಧನದಿಂದ ವೈಯಕ್ತಿಕವಾಗಿ ದೊಡ್ಡ ನಷ್ಟವಾಗಿದೆ. 1996ರಲ್ಲಿ ಬಾಗಲಕೋಟೆಯಲ್ಲಿ ಸಮೀಕ್ಷೆ ಮಾಡಿಸಿ, ಮೇಟಿಯವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧಾರವಾಗಿತ್ತು. ಆ ಸಂದರ್ಭದಲ್ಲಿ ಸಚಿವರಾಗಿದ್ದ ಮೇಟಿ, ನನ್ನ ಮಾತನ್ನು ಗೌರವಿಸಿ, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಸಾಧಿಸಿದರು. ದೇವೇಗೌಡರು ಪ್ರಧಾನಿಯಾಗಲು ಇವರು ಕಾರಣಕರ್ತರು ಎಂದು ಸಿದ್ದರಾಮಯ್ಯ ಹೇಳಿದರು.
‘ಹುಲಿ ಮರಿಗಳೊಂದಿಗೆ ವಿಡಿಯೋ ಚಿತ್ರೀಕರಣ, ತಾಯಿ ಹುಲಿ ನಾಪತ್ತೆ’; ಸಿಐಡಿ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
ಬೆಂಗಳೂರು: ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವಿಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ. ಬುಧವಾರ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ನೀಡಿರುವ ಲಿಖಿತ ಸೂಚನೆಯಲ್ಲಿ ಅವರು, 2015ರಲ್ಲಿ ಅರಣ್ಯ ಅಪರಾಧ ಪ್ರಕರಣ ದಾಖಲಾಗಿದ್ದ ಸಂಸ್ಥೆಯೊಂದರೊಂದಿಗೆ ನಂಟು ಹೊಂದಿರುವವರೂ ಸೇರಿ ಕೆಲವರು ಅರಣ್ಯದಲ್ಲಿ ವಾಹನದ ಹೆಡ್ ಲೈಟ್ ಬೆಳಕಲ್ಲಿ, ಹುಲಿಮರಿಗಳ ಚಿತ್ರೀಕರಣ ಮಾಡಿ, ಸ್ಪರ್ಶಿಸಿ ವನ್ಯಜೀವಿ ಕಾಯಿದೆ ಉಲ್ಲಂಘಿಸಿರುವ ಬಗ್ಗೆ ಹಾಗೂ ತಾಯಿ ಹುಲಿಯ ಇರುವಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿ ದೂರುಗಳು ಬಂದಿರುವುದರಿಂದ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಈ ಮಧ್ಯೆ ಅ.15ರಂದು ಬಿ.ಆರ್.ಟಿ. ಅರಣ್ಯ ವಿಭಾಗದ ವತಿಯಿಂದ ನೀಡಿದ ಮಾಧ್ಯಮ ಪ್ರಕಟಣೆ ಹಾಗೂ ಹುಲಿ ಮರಿ ಜೊತೆ ಕೆಲವರು ವಿಡಿಯೋ ಮಾಡಿರುವ ದೃಶ್ಯ ತುಣುಕು ಸಾಮಾಜಿಕ ತಾಣದಲ್ಲಿ ವೈರಲ್ ಆದ ಬಳಿಕ ನೀಡಿರುವ ಹೇಳಿಕೆಗಳಲ್ಲಿ ವ್ಯತ್ಯಾಸ ಮತ್ತು ಗೊಂದಲ ಇರುವುದರ ಜೊತೆಗೆ ತಾಯಿ ಹುಲಿ ಹತ್ಯೆ ಆಗಿರುವ ಸಂಶಯವೂ ಮೂಡಿದೆ. ಎನ್.ಜಿ.ಓ.ಗಳಿಗೆ ಬರುವ ಹಣ ದುರುಪಯೋಗದ ಆರೋಪವೂ ಇರುವುದರಿಂದ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವುದು ಸೂಕ್ತ ಎಂದು ಈಶ್ವರ್ ಖಂಡ್ರೆ ಪರಿಗಣಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯನಗರ(ಹೊಸಪೇಟೆ) : ಸರಕಾರಿ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ, ರಕ್ತಹೀನತೆ ಸೇರಿದಂತೆ ಬಹುಪೋಷಕಾಂಶಗಳ ನ್ಯೂನತೆಯನ್ನು ನಿವಾರಿಸಲು ಸರಕಾರ ಮಹತ್ವಾಕಾಂಕ್ಷಿ ಯೋಜನೆ ತಂದಿದ್ದು, ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು. ನಗರದ ಪುಣ್ಯಮೂರ್ತಿ ರಾಘಪ್ಪ ಶೆಟ್ಟಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿ ಪರಿಸರ ಪುನಶ್ಚೇತನ ನಿಗಮ ಇಲಾಖೆಯಿಂದ ಗಣಿಭಾಧಿತ ಪ್ರದೇಶದ ಸಮಗ್ರ ಅಭಿವೃದ್ಧಿ (ಸಿಇಪಿಎಂಐಜೆಡ್) ಕಾರ್ಯಕ್ರಮದಡಿ ಸರ್ಕಾರಿ ಶಾಲಾ ಮಕ್ಕಳಿಗೆ ಪೌಷ್ಠಿಕ ಅಹಾರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಬುಧವಾರ ಮಾತನಾಡಿದರು. ಸರ್ಕಾರದ ಮಹಾತ್ವಕಾಂಕ್ಷಿಯಿಂದಾಗಿ ಗಣಿಬಾಧಿತ 4 ಜಿಲ್ಲೆಗಳ 10 ತಾಲೂಕುಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪೂರಕವಾಗಿ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಅನುಷ್ಠಾನಗೊಳಿಸಲಾಗಿದೆ. ಇದರಿಂದ ಸರ್ಕಾರಿ ಶಾಲಾ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗಲಿದೆ. ಶಾಲಾ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಕಾಳಜಿಗೆ ಸರ್ಕಾರ ಆದ್ಯತೆ ನೀಡಿರುವುದು ಗಮನಾರ್ಹ ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಂ ಷಾ ಮಕ್ಕಳಿಗೆ ಉಣಬಡಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ವೇಳೆ 31ನೇ ವಾರ್ಡಿನ ನಗರಸಭೆ ಸದಸ್ಯ ತಾರಿಹಳ್ಳಿ ಜಂಬುನಾಥ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ, ಎಸ್ಡಿಎಂಸಿ ಸದಸ್ಯರು, ಪೋಷಕರು ಸೇರಿದಂತೆ ಶಾಲಾ ಮಕ್ಕಳು ಹಾಜರಿದ್ದರು.
ರಾಯಚೂರು | ʼಬಳ್ಳಾರಿ ವಲಯ ಮಟ್ಟದ ಕರ್ತವ್ಯ ಕೂಟ–2025ʼ; ಜಿಲ್ಲೆಯ ಪೊಲೀಸರಿಗೆ 20 ಬಹುಮಾನ : ಎಸ್ಪಿ ಪ್ರಶಂಸೆ
ರಾಯಚೂರು: ಬಳ್ಳಾರಿ ವಲಯ ಮಟ್ಟದ ಕರ್ತವ್ಯ ಕೂಟ–2025 ಕಾರ್ಯಕ್ರಮವು ಬಳ್ಳಾರಿಯಲ್ಲಿ ಅದ್ಧೂರಿಯಾಗಿ ನಡೆದಿದ್ದು, ರಾಯಚೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಟ್ಟು 20 ಬಹುಮಾನಗಳನ್ನು ಪಡೆದುಕೊಂಡು ವಿಶಿಷ್ಟವಾದ ಸಾಧನೆ ಮಾಡಿದ್ದಾರೆ. ರಾಯಚೂರು ಜಿಲ್ಲಾ ಕ್ರೈಂ ಬ್ರಾಂಚ್ನ ಪಿಐ ತಿಮ್ಮಣ್ಣ ಚಾಮನೂರ್ ಅವರು ನಾಲ್ಕು ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ನಾಲ್ಕು ಪದಕಗಳನ್ನು ಪಡೆದು ಶ್ರೇಷ್ಠತೆ ಮೆರೆದರು. ರಾಯಚೂರು ತಾಲೂಕಿನ ಯಾಪಲದಿನ್ನಿ ಪೊಲೀಸ್ ಠಾಣೆಯ ಪಿಎಸ್ಐ ಹುಲಿಗೇಶ್ ದೇವದುರ್ಗ ತಾಲೂಕಿನ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಅರುಣ್ ಕುಮಾರ್ ರಾಥೋಡ್ ಎರಡು ಪದಕಗಳನ್ನು ಪಡೆದಿದ್ದಾರೆ. ಸಿಂಧನೂರು ತಾಲೂಕಿನ ಬಳಗಾನೂರು ಪೊಲೀಸ್ ಠಾಣೆಯ ಪಿಎಸ್ ಐ ಎರಿಯಪ್ಪ ಎರಡು ಪದಕಗಳನ್ನು ಪಡೆದುಕೊಂಡಿದ್ದಾರೆ. ಅದರ ಜೊತೆಗೆ ಶ್ವಾನದಳವು ಅಪರಾಧ ಪತ್ತೆ ಪ್ರಕರಣ ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಯಚೂರು ಪೊಲೀಸ್ ಇಲಾಖೆಗೆ ಕೀರ್ತಿ ತಂದಿದ್ದಾರೆ. ಜಿಲ್ಲಾ ಪೊಲೀಸರ ಈ ಸಾಧನೆಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಯಚೂರು | ನ.8ರಂದು ಕನಕದಾಸ ಜಯಂತಿ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ : ಕೆ.ಬಸವಂತಪ್ಪ
ರಾಯಚೂರು: ನ.8ರಂದು ಕನಕದಾಸರ ಜಯಂತಿ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕುರುಬ ಸಮಾಜದ ಜಿಲ್ಲಾಧ್ಯಕ್ಷ ಕೆ.ಬಸವಂತಪ್ಪ ಹೇಳಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಜಿಲ್ಲಾಡಳಿತದ ಸಹಯೋಗದೊಂದಿಗೆ 538ನೇ ಕನಕದಾಸರ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಬೆಳಿಗ್ಗೆ ಕನಕದಾಸರ ವೃತ್ತದಿಂದ ಪುತ್ಥಳಿಗೆ ವೀಶೇಷ ಪೂಜೆ ಸಲ್ಲಿಸಿ ಮೆರವಣಿಗೆ ನಡೆಸಲಾಗುತ್ತದೆ. ನೂರು ಡೊಳ್ಳುಗಳೊಂದಿಗೆ ಪೂರ್ಣ ಕುಂಭ, ಕಳಸ ಹಾಗೂ ನಾನಾ ವಾಧ್ಯಗಳೊಂದಿಗೆ ಭಾವಚಿತ್ರ ಮೆರವಣಿಗೆ ನಡೆಯಲಿದೆ. ನಂತರ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು. ಸಮಾಜ ಕಾರ್ಯಾಧ್ಯಕ್ಷ ಬಿ.ಬಸವರಾಜ ಮಾತನಾಡಿ, ಕನಕದಾಸ ಜಯಂತಿ ಅಂಗವಾಗಿ ಸಿಂಧೂರಿನ ಕೆ.ಕರಿಯಪ್ಪ ಇವರಿಗೆ ಕನಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅಲ್ಲದೇ ವಿವಿಧ ಕ್ಷೇತ್ರ ಸಾಧನೆಗೈದ ಮಹನೀಯರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ರಾಜಶೇಖರ ಸುಂಕೇಶ್ವರಹಾಳ, ಸಾಹಿತ್ಯ ಕ್ಷೇತ್ರದಲ್ಲಿ ಡಾ.ರಾಜಶ್ರೀ ಕಲ್ಲೂರಕರ್, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಅರುಣ್ ಮಸ್ಕಿ, ಪರಿಸರ ಕ್ಷೇತ್ರದಲ್ಲಿ ಸರಸ್ವತಿ ಕಿಲಕಿಲೆ, ಸಂಗೀತ ಕ್ಷೇತ್ರದಲ್ಲಿ ಸೂಗೂರೇಶ ಅಸ್ಕಿಹಾಳ, ಸಮಾಜ ಸೇವೆಯಲ್ಲಿ ಲಿಂಗಪ್ಪ ಪೂಜಾರ, ಮಾಧ್ಯಮ ಕ್ಷೇತ್ರದಲ್ಲಿ ಶ್ರೀಕಾಂತ ಸಾವೂರ ಇವರಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಜಯಂತಿ ಸ್ವಾಗತ ಸಮಿತಿ ಅಧ್ಯಕ್ಷ ಶೇಖರ ವಾರದ, ನಗರಸಭೆ ಮಾಜಿ ಸದಸ್ಯ ಈಶಪ್ಪ, ಕೆ.ನಾಗರಾಜ ಮಡ್ಡಿಪೇಟೆ, ನಾಗೇಂದ್ರಪ್ಪ ಮಟಮಾರಿ, ಬಜಾರಪ್ಪ,ಹನುಮಂತಪ್ಪ, ವೆಂಕಟೇಶ ಸೇರಿ ಅನೇಕರಿದ್ದರು.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ರಿಷಭ್ ಪಂತ್ ಉಪನಾಯಕರಾಗಿ ತಂಡಕ್ಕೆ ಮರಳಿದ್ದಾರೆ. ಆದರೆ, ಫಿಟ್ನೆಸ್ ಕೊರತೆ ಕಾರಣದಿಂದ ಇತ್ತೀಚೆಗೆ ತಂಡದಿಂದ ದೂರ ಉಳಿದಿರುವ ಮೊಹಮ್ಮದ್ ಶಮಿ ಅವರನ್ನು ತಂಡ ಆಯ್ಕೆ ಮಾಡಿಕೊಂಡಿಲ್ಲ. ಅವರೊಂದಿಗೆ ತಂಡದಲ್ಲಿದ್ದ ಪ್ರಸಿದ್ಧ್ ಕೃಷ್ಣ ಅವರನ್ನೂ ತಂಡದಿಂದ ಡ್ರಾಪ್ ಮಾಡಲಾಗಿದೆ. ಬಂಗಾಳದ ವೇಗಿ ಆಕಾಶ್ ದೀಪ್ ಅವರಿಗೆ ಅವಕಾಶ ಕೊಡಲಾಗಿದೆ.
ತಾಲೂಕು - ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಡಿಕೆ ಸುರೇಶ್ ಮಹತ್ವದ ಮಾಹಿತಿ; ತೊಡಕೇನು? ಯಾವಾಗ ನಡೆಯಬಹುದು?
ಬೆಂಗಳೂರು, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ಮುಂದಿನ 6-7 ತಿಂಗಳಲ್ಲಿ ನಡೆಯಲಿವೆ ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ತಿಳಿಸಿದ್ದಾರೆ. ವಾರ್ಡ್ ನಿಗದಿಗೆ ಸುಪ್ರೀಂ ಕೋರ್ಟ್ ಅಂತಿಮ ಅಧಿಸೂಚನೆ ನೀಡಿದ್ದು, ಮೀಸಲಾತಿ ಪ್ರಕ್ರಿಯೆ ನಂತರ ಚುನಾವಣೆ ನಡೆಯಲಿದೆ. ಸಿದ್ದರಾಮಯ್ಯ ಅವರೇ ಮುಂದೆಯೂ ಮುಖ್ಯಮಂತ್ರಿಯಾಗಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ರಾಯಚೂರು | ಪ್ರಥಮದರ್ಜೆ ಕಾಲೇಜಿನಲ್ಲಿ ಸಂಸ್ಕೃತ ಅಧ್ಯಯನ ಕೆಂದ್ರ ಪ್ರಾರಂಭ : ಡಾ.ಯಂಕಣ್ಣ
ರಾಯಚೂರು: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಸ್ಕೃತ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಕೇಂದ್ರ ಸಂಸ್ಕೃತಿ ವಿಶ್ವವಿದ್ಯಾಲಯ ಅನುಮೋದನೆ ನೀಡಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಯಂಕಣ್ಣ ಹೇಳಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ದೊರೆಯುತ್ತಿದ್ದು, ಎಂಎಸ್ಸಿಯಲ್ಲಿ ಐದು, ಎಂ.ಕಾಂನಲ್ಲಿ ಒಂದು ಮತ್ತು ಎಂಎನಲ್ಲಿ ಒಂದು ರ್ಯಾಂಕ್ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಹೇಳಿದರು. ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣದೊಂದಿಗೆ ಇತರೆ ಕೋರ್ಸಗಳ ಅಧ್ಯಯನಕ್ಕೆ ಕಾಲೇಜು ಒತ್ತು ನೀಡಿ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ಕೌಶಲ್ಯ ಆಧಾರಿತ ಕೋರ್ಸ್ಗಳನ್ನು ಪ್ರಾರಂಭಿಸಲು ಚಿಂತನೆ ನಡೆದಿರುವುದಾಗಿ ಹೇಳಿದರು. ಕಾಲೇಜಿನ ಉಪನ್ಯಾಸಕ ಡಾ.ಪ್ರಾಣೇಶ ಕುಲ್ಕರ್ಣಿ ಮಾತನಾಡಿ, ರಾಜ್ಯದ 431 ಪದವಿ ಕಾಲೇಜುಗಳಲ್ಲಿ ಇಲ್ಲದೇ ಇರುವ ಸಂಸ್ಕೃತ ಅಧ್ಯಯನ ಕೇಂದ್ರ ನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾರಂಭಿಸಲಾಗುತ್ತಿದೆ. 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಉಚಿತವಾಗಿ ಸಂಸ್ಕೃತ ಅಧ್ಯಯನ ಮಾಡಬಹುದು. ಪ್ರಮಾಣಪತ್ರದ ಕೋರ್ಸ್ಗಳಿಗೆ ಪ್ರವೇಶ ಪಡೆಯಬೇಕಾಗುತ್ತದೆ. ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ ಅಧ್ಯಯನ ಕೇಂದ್ರವನ್ನು ಮಂಜೂರು ಮಾಡಿದೆ ಎಂದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಡಾ.ಮಹಾಂತೇಶ ಅಂಗಡಿ, ಸಂಸ್ಕೃತ ಉಪನ್ಯಾಸಕ ಚಂದನ್ ಬರುಮಾನ್, ಶ್ಯಾಮಸುಂದರ ಇದ್ದರು.
ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪದಿಸಿ; ಕೇಂದ್ರದ ಮೇಲೆ ಗೂಬೆ ಕೂರಿಸೋದು ಬಿಡಿ; ಸಿದ್ದರಾಮಯ್ಯ ವಿರುದ್ಧ ಯದುವೀರ್ ಕಿಡಿ
ಮೈಸೂರಿನಲ್ಲಿ ಉದ್ದೇಶಿತ ಫ್ಲೈಓವರ್ ನಿರ್ಮಾಣ ಯೋಜನೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದ ಪಾರಂಪರಿಕ ಸೌಂದರ್ಯವನ್ನು ನಾಶಪಡಿಸುತ್ತದೆ ಎಂದು ಎಚ್ಚರಿಸಿದ್ದಾರೆ. ಜನರ ವಿರೋಧದ ನಡುವೆ ಯೋಜನೆ ಮುಂದುವರಿಸಿದರೆ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ ಅವರು, ರಾಜ್ಯ ಸರ್ಕಾರವು ಕೇಂದ್ರದ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

20 C