ಕೆನೆಪದರ ಮೀಸಲಾತಿ ಪರಿಶೀಲಿಸಿ ಸೂಕ್ತ ಕ್ರಮ : ಶಿವರಾಜ ತಂಗಡಗಿ
ಬೆಂಗಳೂರು : ಕೇಂದ್ರ ಸರಕಾರದ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳಿಗೆ ಕೆನೆಪದರ ಮೀಸಲಾತಿ ಜಾರಿ ಸಂಬಂಧ ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಶುಕ್ರವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಶಶೀಲ್ ಜಿ.ನಮೋಶಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯ ಸರಕಾರ ತನ್ನದೇ ಆದ ಕೆನೆಪದರ ನೀತಿ ಹೊಂದಿದೆ. ಈ ನೀತಿಯಡಿ ಆಭ್ಯರ್ಥಿ ಮತ್ತು ಅವರ ಪೋಷಕರ ವಾರ್ಷಿಕ ಆದಾಯ ಮಿತಿ 8 ಲಕ್ಷ ರೂ. ಗೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಯ ತಂದೆ-ತಾಯಿ ಎ ಹಾಗೂ ಬಿ ದರ್ಜೆಯ ಸರಕಾರಿ ನೌಕರರಾಗಿದ್ದರೆ, ಕೆನೆಪದರಡಿ ಬರುತ್ತಾರೆ. ಆದರೆ ಕೇಂದ್ರ ಸರಕಾರ ತನ್ನದೇ ಆದ ನೀತಿ ಹೊಂದಿದೆ ಎಂದರು. ಈ ಬಗ್ಗೆ ಸುಪ್ರೀಂ ಕೋರ್ಟ್, ಮೀಸಲಾತಿ ನಿರ್ಧರಿಸುವಾಗ ಪೋಷಕರ ಆದಾಯವೊಂದನ್ನು ಆಧರಿಸಿ ತೀರ್ಮಾನಿಸುವುದು ಸಾಧ್ಯವಿಲ್ಲ ಎಂದು ಆದೇಶದಲ್ಲಿ ಹೇಳಿದೆ. ಆದೇಶದ ಪೂರ್ಣ ವಿವರ ತರಿಸಿಕೊಂಡು ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲಾಗುವುದು ಎಂದು ಶಿವರಾಜ್ ತಂಗಡಗಿ ಹೇಳಿದರು. ರಾಷ್ಟ್ರಮಟ್ಟದಲ್ಲಿ ಪ್ರವೇಶ ಪರೀಕ್ಷೆ ಬರೆದು ವಿವಿಧ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಪೋಷಕರ ಆದಾಯ 8 ಲಕ್ಷ ರೂ.ಗಿಂತ ಹೆಚ್ಚಿದ್ದರೂ ಅಂತಹ ಮಕ್ಕಳಿಗೆ ಅಖಿಲ ಭಾರತ ಕೋಟಾದಡಿ ಪ್ರವೇಶ ನೀಡಲಾಗುತ್ತಿದೆ. ಆದರೆ, ಅದೇ ವಿದ್ಯಾರ್ಥಿಗಳು ರಾಜ್ಯದ ಕೋಟಾದಡಿ ಪ್ರವೇಶ ಪಡೆಯುವಾಗ ಕೆನೆಪದರ ನೀತಿ ಅನ್ವಯಿಸಲಾಗುತ್ತಿದ್ದು, ಇದರಿಂದ ಅವಕಾಶ ವಂಚಿತರಾಗುತ್ತಿದ್ದಾರೆ. ಇದರಿಂದ ಹಿಂದುಳಿದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಕೇಂದ್ರ ಕೆನೆಪದರ ಮೀಸಲಾತಿ ನೀತಿ ಹಾಗೂ ಸುಪ್ರೀಂ ಆದೇಶದಂತೆ ರಾಜ್ಯದಲ್ಲಿ ಈ ನಿಯಮ ಜಾರಿಯಾಗಬೇಕು ಎಂದು ನಮೋಶಿ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ತಂಗಡಗಿ, ಸಂವಿಧಾನದ ಪರಿಚ್ಛೇದ 342-ಎ (3) ಅಡಿಯಲ್ಲಿ ಕೆನೆಪದರ ನೀತಿಯನ್ನು ಶಿಕ್ಷಣ ಹಾಗೂ ಉದ್ಯೋಗದ ಮೀಸಲಾತಿಗೆ ಅಳವಡಿಸಿಕೊಳ್ಳಬಹುದು. ಆದಾಗ್ಯೂ, ಕೇಂದ್ರ ಸರಕಾರದ ಶಿಕ್ಷಣ ಮತ್ತು ಉದ್ಯೋಗದ ಮೀಸಲಾತಿಗೆ ಅನ್ವಯಿಸುವ ಕೆಲವು ಮಾನದಂಡಗಳು ರಾಜ್ಯ ಸರಕಾರದ ವ್ಯಾಪ್ತಿಗೆ ಬರುವ ಶಿಕ್ಷಣ ಹಾಗೂ ಉದ್ಯೋಗದ ಮೀಸಲಾತಿಯನ್ನು ಚಾಲ್ತಿಯಲ್ಲಿರುವ ಕೆನೆಪದರ ನೀತಿಯಡಿ ಅಳವಡಿಸಿಕೊಳ್ಳುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು. ಕೆನೆಪದರ ನೀತಿ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಪರಿಶೀಲಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಿದ್ದೇನೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸುವ ಉದ್ದೇಶವಿದೆ. ಇದರಿಂದ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಅರ್ಹ ಅಭ್ಯರ್ಥಿಗಳಿಗೆ ಮೀಸಲಾತಿ ಅವಕಾಶ ಸಿಗಲಿದೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.
ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆಯನ್ನು ಸುಲಭಗೊಳಿಸುವ ಉದ್ದೇಶದಿಂದ ಸರಳವಾದ ಆನ್ಲೈನ್ ಪ್ರಕ್ರಿಯೆಯ ಮೂಲಕ ಇ-ಖಾತಾ ಸೇವೆಗಳನ್ನು ಒದಗಿಸಲಾಗುತ್ತಿದೆ. ಇದರಿಂದ ನಾಗರಿಕರು ಯಾವುದೆ ಸರಕಾರಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ. ಶುಕ್ರವಾರ ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ಆಯೋಜಿಸಿದ್ದ ಸ್ಥಳೀಯ ಖಾಸಗಿ ಉದ್ಯಮಿಗಳ ಮೂಲಕ ಇ-ಖಾತಾ ಸೇವೆಗಳ ಕುರಿತ ಮಾರ್ಗದರ್ಶನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಇ-ಖಾತಾ ಅರ್ಜಿಗಳನ್ನು ಆನ್ಲೈನ್ ಮೂಲಕ ತಪ್ಪಿಲ್ಲದಂತೆ ಸಲ್ಲಿಸಲು ಹಾಗೂ ನಾಗರಿಕರಿಗೆ ಡಿಜಿಟಲ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಹಾಯ ಮಾಡುವಂತೆ ಉದ್ಯಮಿಗಳಿಗೆ ಸೂಚಿಸಿದ ಅವರು, ನಾಗರಿಕರಿಗೆ ಸರಿಯಾದ ಮಾರ್ಗದರ್ಶನ ನೀಡಿ, ಅವರ ಅರ್ಜಿಗಳು ನಿಖರವಾಗಿ ಸಲ್ಲಿಕೆಯಾಗುವಂತೆ ಸಹಕರಿಸುವುದು ನಿಮ್ಮ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಮನವರಿಕೆ ಮಾಡಿದರು. ಕಚೇರಿಗಳಿಗೆ ಭೇಟಿ ಅಥವಾ ಮಧ್ಯವರ್ತಿಗಳ ಅವಶ್ಯಕತೆ ಇಲ್ಲ : ಇ-ಖಾತಾ ಸಂಬಂಧಿತ ವಿಷಯಗಳಿಗೆ ನಾಗರಿಕರು ಅಥವಾ ಎಲ್ಪಿಇಗಳು ಯಾವುದೇ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ ಅಥವಾ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸುವ ಅಗತ್ಯವಿಲ್ಲ. ಇ-ಖಾತಾ ವಿತರಣೆ ಸಂಪೂರ್ಣವಾಗಿ ಆನ್ಲೈನ್ ಮೂಲಕ ನಡೆಯುವುದರಿಂದ ಮಧ್ಯವರ್ತಿಗಳೊಂದಿಗೆ ಸಂಪರ್ಕ ಸಾಧಿಸುವುದನ್ನು ತಪ್ಪಿಸಿಕೊಳ್ಳಿ. ಸರಾಸರಿ 3 ರಿಂದ 4 ದಿನಗಳೊಳಗೆ ನಾಗರಿಕರ ಇ-ಖಾತಾ ಅರ್ಜಿಗಳನ್ನು ಅನುಮೋದಿಸಲಾಗುತ್ತಿದೆ ಎಂದು ಮುನೀಶ್ ಮೌದ್ಗಿಲ್ ತಿಳಿಸಿದರು. ಕಾಲಮಿತಿಯಲ್ಲಿ ಪರಿಶೀಲನೆ ಮತ್ತು ಸ್ವಯಂ ಅನುಮೋದನೆ: ಸುಮಾರು ಶೇ.99ರಷ್ಟು ಇ-ಖಾತಾ ಅರ್ಜಿಗಳನ್ನು ಪರಿಶೀಲಿಸಿ ಕಾಲಮಿತಿಯೊಳಗಾಗಿ ಅನುಮೋದಿಸಲಾಗುತ್ತಿದೆ. ಅಂತಿಮ ಇ-ಖಾತಾ ಅರ್ಜಿಯನ್ನು 5 ಕೆಲಸದ ದಿನಗಳೊಳಗೆ ಪರಿಶೀಲಿಸದಿದ್ದರೆ, ವ್ಯವಸ್ಥೆಯೆ ಸ್ವಯಂಚಾಲಿತವಾಗಿ ಅನುಮೋದನೆ ಪ್ರಕ್ರಿಯೆಯನ್ನು ಪ್ರಾರಂಭಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರಿಂದ ನಾಗರಿಕರ ಅರ್ಜಿಗಳನ್ನು ಯಾರೂ ತಡೆಹಿಡಿಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು. ಅಹವಾಲು ನಿವಾರಣಾ ವ್ಯವಸ್ಥೆ : ಇ-ಖಾತಾ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಅಹವಾಲುಗಳನ್ನು ಸಲ್ಲಿಸಲು ನಾಗರಿಕರು ಹಾಗೂ ಸ್ಥಳೀಯ ಖಾಸಗಿ ಉದ್ಯಮಿಗಳಿಗಾಗಿ ವಿಶೇಷ ಪೋರ್ಟಲ್ ಅನ್ನು ರಚಿಸಲಾಗಿದೆ. ಈ ಕುರಿತು https://support.bbmpgov.in/ehelpline/](https://support.bbmpgov.in/ehelpline/ ಲಿಂಕ್ ಮೂಲಕ ಅಹವಾಲುಗಳನ್ನು ಸಲ್ಲಿಸಬಹುದು. ವೈಯಕ್ತಿಕ ಪ್ರಕರಣಗಳಿಗೆ ಸಂಬಂಧಿಸಿದ ಪ್ರಶ್ನೆಗಳಿದ್ದಲ್ಲಿ 9480683695 ಅಧಿಕೃತ ವಾಟ್ಸಾಪ್ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಅಥವಾ ಅದೇ ಲಿಂಕ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮುನೀಶ್ ಮೌದ್ಗಿಲ್ ತಿಳಿಸಿದರು. ಇ-ಖಾತಾ ಸೇವೆಗಳ ಕುರಿತು ಪ್ರಾತ್ಯಕ್ಷಿಕೆ : ಕಾರ್ಯಕ್ರಮದ ವೇಳೆ ಇ-ಖಾತಾ ಸೇವೆಗಳು, ಆನ್ಲೈನ್ ಅರ್ಜಿ ಸಲ್ಲಿಕೆ ವಿಧಾನ ಹಾಗೂ ಡಿಜಿಟಲ್ ವರ್ಕ್-ಫೆÇ್ಲೀ ಕುರಿತು ಸ್ಥಳೀಯ ಖಾಸಗಿ ಉದ್ಯಮಿಗಳಿಗೆ ವಿವರವಾದ ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಯಿತು. ಇದರಿಂದ ವ್ಯವಸ್ಥೆಯನ್ನು ಸಮಗ್ರವಾಗಿ ಅರ್ಥಮಾಡಿಕೊಳ್ಳಲು ಹಾಗೂ ನಾಗರಿಕರಿಗೆ ಉತ್ತಮ ಸಹಾಯ ಒದಗಿಸಲು ನೆರವಾಗಲಿದೆ. ಕಾರ್ಯಕ್ರಮದಲ್ಲಿ ಮಾಹಿತಿ ತಂತಜ್ಞಾನ(ಇ-ಆಸ್ತಿ)ದ ಉಪ ಆಯುಕ್ತ ಮದನ್ ಮೋಹನ್ ಸಿ, ಕಂದಾಯ ವಿಭಾಗದ ಜಂಟಿ ಆಯುಕ್ತರಾದ ಲಕ್ಷ್ಮೀದೇವಿ, ಕಂದಾಯ ಅಧಿಕಾರಿಗಳು ಮತ್ತು ಸ್ಥಳೀಯ ಖಾಸಗಿ ಉದ್ಯಮಿಗಳು ಉಪಸ್ಥಿತರಿದ್ದರು.
Budget Session 2026 | ಎಲೆ ಚುಕ್ಕೆ ರೋಗ: ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿದ ಸಚಿವ ಮಲ್ಲಿಕಾರ್ಜುನ್
ಬೆಂಗಳೂರು : ರಾಜ್ಯದಲ್ಲಿ ಎಲೆ ಚುಕ್ಕೆ ರೋಗದಿಂದ ಹಾನಿಗೊಳಗಾದ ಅಡಿಕೆ ಬೆಳೆ ವಿಸ್ತೀರ್ಣ ಮತ್ತು ಅದಕ್ಕೆ ಪಾವತಿಸಲಾದ ಪರಿಹಾರದ ಬಗ್ಗೆ ಸಮರ್ಪಕ ಉತ್ತರ ನೀಡಲಾಗದೆ ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿಧಾನಸಭೆಯಲ್ಲಿ ಇಕ್ಕಟ್ಟಿಗೆ ಸಿಲುಕಿ ಪರದಾಡಿದ ಪ್ರಸಂಗ ನಡೆಯಿತು. ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಭೀಮಣ್ಣ ಟಿ.ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 88,559 ಹೆಕ್ಟರ್ನಲ್ಲಿ ಅಡಿಕೆ ಬೆಳೆ ಹಾನಿಯಾಗಿದೆ. ಚಿಕ್ಕಮಗಳೂರು ಶಿವಮೊಗ್ಗ. ಉತ್ತರ ಕನ್ನಡ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳು ಸಮಸ್ಯೆಗೆ ಸಿಲುಕಿವೆ ಎಂದು ವಿವರಿಸಿದರು ಈ ವೇಳೆ ಸಚಿವರ ಉತ್ತರದಲ್ಲಿ ಗೊಂದಲಗಳಿತ್ತು. ಇದನ್ನು ಗುರುತಿಸಿದ ಬಿಜೆಪಿಯ ಸದಸ್ಯ ವಿ.ಸುನಿಲ್ ಕುಮಾರ್, ಬಜೆಟ್ ಅನು ಪಾಲನಾ ವರದಿಯಲ್ಲಿ 10,000 ಫಲಾನುಭವಿಗಳಿಗೆ ಪರಿಹಾರ ನೀಡಲಾಗಿದೆ ಎಂದು ತಿಳಿಸಲಾಗಿದೆ ಸಚಿವರು ನೀಡುವ ಉತ್ತರದಲ್ಲಿ ರಾಜ್ಯಾದ್ಯಂತ 16,000 ಬೆಳೆಗಾರರಿಗೆ ಪರಿಹಾರ ನೀಡಿರುವುದಾಗಿ ಹೇಳಲಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಒಂದರಲ್ಲಿ ಒಂದರಲ್ಲೇ 22,000 ಮಂದಿ ಬೆಳೆ ನಷ್ಟ ಅನುಭವಿಸಿದ್ದಾರೆ ಎಂದು ತಿಳಿಸಲಾಗಿದೆ. ಇದರಲ್ಲಿ ಯಾವುದು ಸತ್ಯ ಎಂದು ಪ್ರಶ್ನಿಸಿದರು. ಸಚಿವರು ನೀಡುವ ಉತ್ತರಗಳು ಶಾಸಕರಿಗೆ ಸಮಾಧಾನಕರವಾಗಿರಲಿಲ್ಲ. ಹೀಗಾಗಿ ಬಿಜೆಪಿಯ ಎಲ್ಲ ಸದಸ್ಯರು ಸಚಿವರ ಮೇಲೆ ಮುಗಿಬಿದ್ದರು. ಆಗ ಆಡಳಿತ ಪಕ್ಷದ ಪಕ್ಷದ ಸದಸ್ಯರು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ನೆರವಿಗೆ ಬರಲಿಲ್ಲ. ಏಕಾಂಗಿಯಾಗಿ ಕಕ್ಕಾಬಿಕ್ಕಿಯಾಗಿದ್ದ ಮಲ್ಲಿಕಾರ್ಜುನ್, ಉತ್ತರ ನೀಡಲು ಪರದಾಡಿದರು. ಪರಿಸ್ಥಿತಿಯನ್ನು ಅರ್ಥೈಸಿಕೊಂಡ ಸಭಾಧ್ಯಕ್ಷ ಯು.ಟಿ.ಖಾದರ್ ಸದ್ಯಕ್ಕೆ ಈ ಪ್ರಶ್ನೆಯನ್ನು ತಡೆಹಿಡಿದಿರುತ್ತೇನೆ. ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು ನಂತರ ಸದನಕ್ಕೆ ಉತ್ತರ ನೀಡಿ ಎಂದು ಉಲ್ಲೇಖಿಸಿದರು. ಆದರೆ ಇದಕ್ಕೂ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಸಚಿವರು ವ್ಯತ್ಯಾಸ ಇರುವ ಬಗ್ಗೆ ಪರಿಶೀಲಿಸಿ ಸ್ಪಷ್ಟನೆ ನೀಡುವುದಾಗಿ ಸದನಕ್ಕೆ ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ ಹಂತ ಹಂತವಾಗಿ ತೋಟಗಾರಿಕಾ ಮಹಾವಿದ್ಯಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು. ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ತೋಟಗಾರಿಕೆ ಮಹಾವಿದ್ಯಾಲಯಗಳನ್ನು ಸ್ಥಾಪಿಸಲು ಇರುವ ಸಾಧಕ-ಬಾಧಕಗಳನ್ನು ಪರಿಶೀಲಿಸಲು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವಿಶ್ರಾಂತ ಕುಲಪತಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ತಿಪಟೂರು ತಾಲೂಕಿನ ಬಿದರೆಗುಡಿಕಾವಲಿನಲ್ಲಿ ತೋಟಗಾರಿಕೆ ಮಹಾವಿದ್ಯಾಲಯವನ್ನು ಸ್ಥಾಪಿಸುವುದು ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಲ್ಲಿ ತೋಟಗಾರಿಕೆ ಮಹಾವಿದ್ಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಈ ಸಮಿತಿ ವಿವಿಧ ಆಯಾಮಗಳನ್ನು ಪರಿಶೀಲಿಸಿ ವರದಿ ನೀಡಿದೆ ಎಂದರು.
ಅಡುಗೆ ಅನಿಲಕ್ಕೆ ಕೊರತೆ ಇಲ್ಲ; ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ : ಪ್ರಹ್ಲಾದ್ ಜೋಶಿ
ಬೆಂಗಳೂರು : ಅಡುಗೆ ಅನಿಲ, ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಕೊರತೆ ದೇಶದಲ್ಲಿ ಇಲ್ಲ. ಆದರೆ, ಸಿಲಿಂಡರ್ ಪೂರೈಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್, ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಡುಗೆ ಅನಿಲ ಸಂಬಂಧ ಜನರನ್ನು ಗೊಂದಲಕ್ಕೀಡು ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಆಗುತ್ತದೆ ಎಂದು ರಾಹುಲ್ ಗಾಂಧಿ ನಿನ್ನೆ ಹೇಳಿದ್ದಾರೆ. ಇದು ಸುಳ್ಳು. ಇಡೀ ದೇಶದಲ್ಲಿ ಈಗಲೂ ಮತ್ತು ಮುಂದೆಯೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಆಗುವುದಿಲ್ಲ ಎಂದರು. ಅಡುಗೆ ಅನಿಲ ಮತ್ತು ವಾಣಿಜ್ಯ ಸಿಲಿಂಡರ್ ಪೂರೈಕೆಗೆ ಹಲವು ಮೂಲಗಳಿಂದ ಪ್ರಯತ್ನ ಮಾಡಲಾಗಿದೆ. ಈ ಮೊದಲು 20 ರಿಂದ 22 ದೇಶಗಳಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಭಾರತ ಆಮದು ಮಾಡಿಕೊಳ್ತಿತ್ತು. ಇದೀಗ ಇದು 40 ದೇಶಗಳಿಗೆ ಹೆಚ್ಚಿದೆ. ಅಡುಗೆ ಅನಿಲ ಸಿಲಿಂಡರ್ ಕೊರತೆ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಟೀಕಿಸಿದರು. ಅಡುಗೆ ಅನಿಲ ಮತ್ತು ವಾಣಿಜ್ಯ ಸಿಲಿಂಡರ್ಗಳ ಬುಕಿಂಗ್ ಜಾಸ್ತಿ ಇದೆ. ಹೀಗಾಗಿ ಕೆಲ ನಿರ್ಬಂಧಗಳನ್ನು ಹೇರಲಾಗಿದೆ. ಈ ಮೊದಲಿನಂತೆಯೆ ಸಿಲಿಂಡರ್ಗಳ ಪೂರೈಕೆ ಮಾಡಲಾಗುತ್ತಿದೆ. ಎಲ್ಲಿಯೂ ಕೊರತೆ ಇಲ್ಲ. ಜಾಗತಿಕ ಸರಕು ಸಾಗಣೆಯ ಪ್ರಮುಖ ಜಲಮಾರ್ಗ ಹರ್ಮುಜ್ ಜಲಸಂಧಿ ಮೂಲಕ ಈಗಾಗಲೇ ಒಂದು ಹಡಗು ಬಂದಿದೆ. ಇನ್ನೂ ಹಲವು ಹಡಗು ಬರಲಿವೆ ಎಂದರು.
ಬಳ್ಳಾರಿಯಲ್ಲಿ ‘ಇನ್ಕ್ಯುಬೇಷನ್ ಕೇಂದ್ರ’ ಸ್ಥಾಪನೆ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ಬಳ್ಳಾರಿ ಜಿಲ್ಲೆಯಲ್ಲಿ ಜೈವಿಕ ಕ್ಷೇತ್ರದ ‘ಇನ್ಕ್ಯುಬೇಷನ್ ಕೇಂದ್ರ’ವನ್ನು 55 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಕೆ.ಎಸ್.ನವೀನ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜೈವಿಕ ಸುಧಾರಣೆ ಗಮನದಲ್ಲಿಟ್ಟುಕೊಂಡು ಈ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ. ಗಣಿಗಾರಿಕೆಯಿಂದ ಉಂಟಾಗುವ ಪರಿಸರ ಹಾನಿಯನ್ನು ಇದು ಸರಿಪಡಿಸಲಿದೆ. ಈ ಕೇಂದ್ರವು ಭಾರತದ ಮೊಟ್ಟ ಮೊದಲನೆ ಕೇಂದ್ರವಾಗಲಿದೆ. ಇದಕ್ಕಾಗಿಯೇ ಬಳ್ಳಾರಿಯಲ್ಲಿ ಸುಮಾರು 4.74 ಎಕರೆ ಜಮೀನನ್ನು ಈಗಾಗಲೇ ಕಾಯ್ದಿರಿಸಲಾಗಿದೆ ಎಂದರು. ಉತ್ತರ ಕರ್ನಾಟಕ ಭಾಗದ ಕೃಷಿ ಮತ್ತು ಸಂಬಂಧಿಸಿದ ವಲಯದಲ್ಲಿ ನಾವೀನ್ಯತೆಯನ್ನು ಉತ್ತೇಜಿಸಲು ಕ್ರಮ ಕೈಗೊಳ್ಳಲಾಗಿದೆ. ಕಳೆ ತೆಗೆಯುವ ಯಂತ್ರಗಳನ್ನು ಒಳಗೊಂಡಿರುವ ವಿಶ್ವ ದರ್ಜೆಯ ಪ್ರಯೋಗಾಲಯದ ಶ್ರೇಷ್ಠತಾ ಕೇಂದ್ರವನ್ನು ಕೃಷಿ ಫೌಂಡೇಶನ್ ವತಿಯಿಂದ 16.50 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಯಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ರಾಯಚೂರಿನಲ್ಲಿ ಎಐ ಕೇಂದ್ರ: ಕೃತಕ ಬುದ್ದಿಮತ್ತೆಯ(ಎಐ) ಶ್ರೇಷ್ಠತಾ ಕೇಂದ್ರವನ್ನು ಐಐಐಟಿ ರಾಯಚೂರಿನಲ್ಲಿ ಸ್ಥಾಪಿಸಲು 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಭಾಗಗಳಲ್ಲಿ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಅಭಿವೃದ್ದಿಪಡಿಸಲು ಘೋಷಿಸಲಾಗಿರುವ ಎಲ್ಇಎಪಿ ಕಾರ್ಯಕ್ರಮ ಉತ್ತರ ಕರ್ನಾಟಕ ಯುವ ಉದ್ಯಮಿಗಳಿಗೆ ಉತ್ತೇಜನ ನೀಡಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಹಿಂದಿನ ಮೂರು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಗಳಿಗೆ ಸಂಬಂಧಿಸಿದಂತೆ ಒಟ್ಟು 72 ನವೋದ್ಯಮಗಳು ನೋಂದಾಣಿಯಾಗಿರುತ್ತವೆ. ಈಗಾಗಲೇ ಎಲಿವೇಟ್ ಯೋಜನೆಯಡಿಯಲ್ಲಿ ಈ ಪ್ರದೇಶದ ಸುಮಾರು 20 ನವೋದ್ಯಮಿಗಳಿಗೆ ಒಟ್ಟು 4.90 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು. ನವೋದ್ಯಮಿಗಳಿಗೆ ಉತ್ತೇಜನ ನೀಡುವ ಕೆಲಸವನ್ನು ಸರಕಾರ ಮಾಡುತ್ತಿದೆ. ಹೊಸ ಕಂಪೆನಿಗಳನ್ನು ಪ್ರಾರಂಭಿಸಲು ಅನುಕೂಲವಾಗುವಂತೆ ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ 3, ಬೀದರ್ನಲ್ಲಿ 2 ಮತ್ತು ಕಲಬುರಗಿಯಲ್ಲಿ 2 ನ್ಯೂ ಏಜ್ ಇನ್ನೋವೇಶನ್ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದರು.
ಹಾಸನದಲ್ಲಿ ಆಟೊ ಗ್ಯಾಸ್ ಕೊರತೆ : ಚಾಲಕರ ಪರದಾಟ, ಬಂಕ್ ಮಾಲಕರ ಆಕ್ರೋಶ
ಹಾಸನ : ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಆಟೊ ಗ್ಯಾಸ್ ಸಿಗದೆ ಆಟೊ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಒಂದು ವಾರದಿಂದ ಗ್ಯಾಸ್ ಸರಬರಾಜು ಸ್ಥಗಿತ ಗೊಂಡಿರುವುದರಿಂದ ಆಟೊ ಚಾಲಕರು ದಿನನಿತ್ಯದ ಜೀವನ ಸಾಗಿಸಲು ಪರದಾಡುವಂತಾಗಿದೆ. ನಗರದ ಬಿ. ಕಾಟೀಹಳ್ಳಿ ಪ್ರದೇಶದಲ್ಲಿರುವ ಎಚ್ಪಿ ಆಟೋ ಗ್ಯಾಸ್ ಬಂಕ್ನಲ್ಲಿ ಗ್ಯಾಸ್ ಲಭ್ಯವಿಲ್ಲದೆ, ಚಾಲಕರು ಮತ್ತು ಬಂಕ್ ಮಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದು ಇವರಿಬ್ಬರ ನಡುವೆ ವಾಗ್ವಾದಕ್ಕೂ ನಾಂದಿ ಹಾಡಿದೆ. ಸರ್ಕಾರಿ ಸ್ವಾಮ್ಯದ ಗ್ಯಾಸ್ ಕಂಪೆನಿಯಿಂದ ನಿಗದಿತ ದರದಲ್ಲಿ ದೊರೆಯುತ್ತಿದ್ದ ಆಟೊ ಗ್ಯಾಸ್ ಇದೀಗ ಸಿಗದಿರುವುದರಿಂದ ಚಾಲಕರು ಖಾಸಗಿ ಮಾರ್ಗದಲ್ಲಿ ದುಬಾರಿ ಬೆಲೆಯಲ್ಲಿ ಗ್ಯಾಸ್ ಖರೀದಿಸಲು ಸಿದ್ಧರಾಗಿದ್ದಾರೆ. ಇದರಿಂದ ಆಟೊ ಚಾಲಕರ ಆದಾಯಕ್ಕೂ ದೊಡ್ಡ ಹೊಡೆತ ಬಿದ್ದಿದ್ದು, ಅವರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಗ್ಯಾಸ್ ಬಂಕ್ ಮಾಲಕರ ಮಾತಿನ ಪ್ರಕಾರ, ಈಗಾಗಲೇ ಮುಂಗಡ ಹಣ ಪಾವತಿಸಿ ಗ್ಯಾಸ್ ಬುಕ್ ಮಾಡಿದ್ದರೂ ಕಂಪೆನಿಯಿಂದ ಸರಬರಾಜು ಆಗುತ್ತಿಲ್ಲ. ‘‘ಫೋನ್ ಮಾಡಿದರೂ ಪ್ರತಿಕ್ರಿಯೆ ನೀಡುವುದಿಲ್ಲ. ಸೇಲ್ಸ್ ಆಫೀಸರ್ ಬರುವಾಗಲೇ ಸಮಸ್ಯೆ ಹೇಳಿಕೊಳ್ಳಬೇಕು. ಬೇರೆ ಯಾರನ್ನೂ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ’’ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಆಟೋ ಚಾಲಕರಾದ ಜಾನಿ ಮತ್ತು ಇತರರು ಮಾತನಾಡಿ, ‘‘ಗ್ಯಾಸ್ ಇಲ್ಲದೆ ನಮ್ಮ ಆಟೋಗಳು ರಸ್ತೆಗೆ ಇಳಿಯುತ್ತಿಲ್ಲ. ದಿನಕ್ಕೆ ದುಡಿದು ಮನೆ ನಡೆಸುವ ನಮ್ಮಂತಹವರಿಗೆ ಇದು ದೊಡ್ಡ ಹೊಡೆತವಾಗಿದೆ’’ ಎಂದರು.
Sagara | ಕಾರ್ಗಲ್ನಲ್ಲಿ ಹೆಚ್ಚಿದ ವಾಂತಿ, ಭೇದಿ ಪ್ರಕರಣ; ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದಲ್ಲಿ ಎರಡು ದಿನಗಳಿಂದ ವಾಂತಿ ಮತ್ತು ಭೇದಿ ಪ್ರಕರಣ ಹೆಚ್ಚಾಗಿದ್ದು, ಈ ಮಧ್ಯೆ ಕಾರ್ಗಲ್ ಪಟ್ಟಣದ ಭಾಗ್ಯಮಂದಿರ ಕಾಲನಿಯ ಮಹಿಳೆ ಮೃತಪಟ್ಟ ಘಟನೆ ಶುಕ್ರವಾರ ವರದಿಯಾಗಿದೆ. ಕಾರ್ಗಲ್ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ರಾಜು ಅವರ ತಾಯಿ ಜಯಲಕ್ಷ್ಮೀ (65) ಮೃತ ಮಹಿಳೆ. ಇವರು ಬುಧವಾರ ಜ್ವರ, ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾರೆ. ಕಾರ್ಗಲ್, ಜೋಗ, ಲಿಂಗನಮಕ್ಕಿ, ಅರಳಗೋಡು, ಹೆನ್ನಿ, ಇಡುವಾಣಿ ಗ್ರಾಮಗಳಲ್ಲಿ 4-5 ದಿನಗಳಿಂದ ನಿವಾಸಿಗಳಲ್ಲಿ ಹೊಟ್ಟೆ ನೋವು, ವಾಂತಿ, ಭೇದಿ, ತಲೆನೋವು, ಜ್ವರ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡಿದ್ದ ಕಾರ್ಗಲ್ನ ಸರಕಾರಿ ಶಾಲೆಯ 15ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಚಿಕಿತ್ಸೆಗೆ ಬುಧವಾರ ಕೆಪಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರ್ವೇಕ್ಷಣಾಧಿಕಾರಿ ಭೇಟಿ : ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಲ್. ನಾಗರಾಜ್ ನಾಯ್ಕ ಅವರು ಕಾರ್ಗಲ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಜೊತೆಗೆ ಚರ್ಚಿಸಿದರು. ಅಲ್ಲದೆ, ಜಿಲ್ಲಾ ಆರೋಗ್ಯ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ವೈದ್ಯಾಧಿಕಾರಿಗಳು ಕುಡಿಯುವ ನೀರು ಹಾಗೂ ಆಹಾರದ ಮಾದರಿ ಸಂಗ್ರಹಿಸಿ ತಪಾಸಣೆಗೆ ಕಳುಹಿಸಿದ್ದಾರೆ. ಕಾರ್ಗಲ್ ಭಾಗದಲ್ಲಿ ಎರಡು ದಿನಗಳಿಂದ ವಾಂತಿ-ಭೇದಿ ಪ್ರಕರಣಗಳು ಗಮನಕ್ಕೆ ಬಂದಿವೆ. ಸುಮಾರು ನೂರಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿಯಾಗಿದೆ. ಪ್ರಸಕ್ತ ಐದು ಜನ ಒಳರೋಗಿಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಡಿಯುವ ನೀರಿನಲ್ಲಿ ಯಾವುದೇ ದೋಷ ಕಂಡು ಬಂದಿಲ್ಲ. ಬದಲಾಗಿ ಚೌಡೇಶ್ವರಿ ಜಾತ್ರೆಯಲ್ಲಿ ಸೇವಿಸಿದ ಐಸ್ಕ್ರೀಂ ಹಾಗೂ ಆಲೂಗಡ್ಡೆಯ ತಿನಿಸುಗಳಿಂದ ಈ ಸಮಸ್ಯೆ ಉಂಟಾಗಿರುವ ಶಂಕೆ ಇದೆ. ನೀರಿನ 48 ಗಂಟೆಗಳ ಕಲ್ಚರ್ ಟೆಸ್ಟ್ ವರದಿ ಇನ್ನಷ್ಟೇ ಬರಬೇಕಿದೆ. ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು. -ಪ್ರಭುಲಿಂಗ ಕವಳಿಕಟ್ಟಿ, ಶಿವಮೊಗ್ಗ ಜಿಲ್ಲಾಧಿಕಾರಿ
ಇರಾನ್ ವಿರುದ್ಧ ಮತ್ತಷ್ಟು ದಾಳಿಗೆ ಸಿದ್ಧವಾದ ಇಸ್ರೇಲ್, ಹೊಸ ತಂತ್ರದ ಮೊರೆ | Operation Roaring Lion
ಇರಾನ್ ವಿರುದ್ಧ ಈ ಬಾರಿ ಯುದ್ಧ ಗೆಲ್ಲಬೇಕು, ಆ ಮೂಲಕ ಮಧ್ಯಪ್ರಾಚ್ಯ ಭಾಗದಲ್ಲಿ ತಮ್ಮ ವಿರುದ್ಧ ಯಾವುದೇ ದೇಶ ಕಿರಿಕ್ ಮಾಡದಂತೆ ಭವಿಷ್ಯ ರೂಪಿಸಬೇಕು ಎಂಬುದು ಅಮೆರಿಕ ಹಾಗೂ ಇಸ್ರೇಲ್ ಪ್ಲಾನ್ ಆಗಿದೆ. ಅದರಲ್ಲೂ ಇರಾನ್ ದೇಶ ಪರಮಾಣು ಬಾಂಬ್ ತಯಾರಿಸುತ್ತಿದೆ ಎಂಬ ಕಾರಣಕ್ಕೆ, ಭಾರಿ ದೊಡ್ಡ ಮಟ್ಟದಲ್ಲಿ ದಾಳಿ ಶುರು ಮಾಡಿದ್ದ ಇಸ್ರೇಲ್ ಮತ್ತು ಅಮೆರಿಕ
ವಾಶಿಂಗ್ಟನ್, ಮಾ.13: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ನ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಗಾಯಗೊಂಡಿದ್ದಾರೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ. ಮೊಜ್ತಾಬಾ ಖಾಮಿನೈ ಸರ್ವೋಚ್ಚ ನಾಯಕರಾಗಿ ನೇಮಕಗೊಂಡ ಬಳಿಕ ತಮ್ಮ ಮೊದಲ ಹೇಳಿಕೆಯಲ್ಲಿ ಹೋರಾಟ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ ಒಂದು ದಿನದ ಬಳಿಕ ಹೆಗ್ಸೆತ್ ಈ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಪೆಂಟಗನ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಗ್ಸೆತ್, ಮೊಜ್ತಾಬಾ ಖಾಮಿನೈ ಗಾಯಗೊಂಡಿದ್ದಾರೆ ಮತ್ತು ವಿರೂಪಗೊಂಡಿರಬಹುದು ಎಂದು ತಿಳಿಸಿದ್ದಾರೆ. “ನಿನ್ನೆ ಅವರು ಒಂದು ಹೇಳಿಕೆ ನೀಡಿದರು. ವಾಸ್ತವವಾಗಿ ಅದು ದುರ್ಬಲವಾಗಿತ್ತು. ಯಾವುದೇ ಧ್ವನಿ ಅಥವಾ ವೀಡಿಯೊ ಇರಲಿಲ್ಲ; ಅದು ಕೇವಲ ಲಿಖಿತ ಹೇಳಿಕೆಯಾಗಿತ್ತು” ಎಂದು ಹೆಗ್ಸೆತ್ ಹೇಳಿದರು. ಆದರೆ ತಮ್ಮ ಹೇಳಿಕೆಗೆ ಪೂರಕವಾದ ಯಾವುದೇ ಪುರಾವೆಗಳನ್ನು ಹೆಗ್ಸೆತ್ ನೀಡಿಲ್ಲ. ಖಾಮಿನೈ ಅವರ ಆರೋಗ್ಯ ಸ್ಥಿತಿಯ ಕುರಿತು ಇರಾನ್ ಸರ್ಕಾರವೂ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಹೇಳಿಕೆಗಳಿಗೆ ಇರಾನ್ ನಾಯಕರು ತಕ್ಷಣ ಪ್ರತಿಕ್ರಿಯಿಸಲಿಲ್ಲ. ಫೆಬ್ರವರಿ 28ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿಗಳು ಆರಂಭವಾದ ಮೊದಲ ದಿನವೇ ಮೊಜ್ತಾಬಾ ಖಾಮಿನೈ ಅವರ ತಂದೆ ಆಯತುಲ್ಲಾ ಅಲಿ ಖಾಮಿನೈ ಹತ್ಯೆಗೀಡಾದ ಬಳಿಕ ಅವರು ದೇಶದ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಗುರುವಾರ ಅವರು ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯನ್ನು ಬಿಡುಗಡೆ ಮಾಡಿದ್ದರು. ಇರಾನ್ ನ ಸರಕಾರಿ ಟಿವಿಯಲ್ಲಿ ಓದಿದ ಲಿಖಿತ ಹೇಳಿಕೆಯಲ್ಲಿ, ಈ ಪ್ರದೇಶದಲ್ಲಿರುವ ಅಮೆರಿಕದ ಎಲ್ಲಾ ಸೇನಾ ನೆಲೆಗಳನ್ನು ತಕ್ಷಣವೇ ಮುಚ್ಚಬೇಕು ಎಂದು ಮೊಜ್ತಾಬಾ ಖಾಮಿನೈ ಆಗ್ರಹಿಸಿದರು. ಇಲ್ಲವಾದರೆ ಆ ನೆಲೆಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಜೊತೆಗೆ, ಹಾರ್ಮುಝ್ ಜಲಸಂಧಿಯನ್ನು ಮುಚ್ಚುವ ಕ್ರಮ ಮುಂದುವರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. “ದೇಶದ ಮೇಲೆ ನಡೆಯುತ್ತಿರುವ ದಾಳಿಗಳ ನಡುವೆಯೂ ಧೈರ್ಯದಿಂದ ಹೋರಾಡುತ್ತಿರುವ ಯೋಧರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಖಾಮಿನೈ ಹೇಳಿದ್ದಾರೆ. ಯುದ್ಧ ಆರಂಭವಾದ ಬಳಿಕ ಮೊಜ್ತಾಬಾ ಖಾಮಿನೈ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಈ ವಾರದ ಆರಂಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮೊಜ್ತಾಬಾ ಖಾಮಿನೈ ಅವರನ್ನು ಇರಾನ್ ನ ಹೊಸ ಸುಪ್ರೀಂ ಲೀಡರ್ ಆಗಿ ನೇಮಿಸಿರುವುದು ತಮಗೆ ‘ಸಂತೋಷಕರವಾಗಿಲ್ಲ’ ಎಂದು ಹೇಳಿದ್ದಾರೆ. ಅವರ ತಂದೆಯಂತೆಯೇ ಅವರನ್ನು ಗುರಿಯಾಗಿಸಿ ಕೊಲ್ಲಬಹುದೆಂಬ ಸೂಚನೆಯನ್ನು ಕೂಡ ನೀಡಿದ್ದಾರೆ. “ಅವರು ಸುಪ್ರೀಂ ಲೀಡರ್ ಆಗಿ ಹೆಚ್ಚು ಕಾಲ ಉಳಿಯುತ್ತಾರೆಯೋ ಇಲ್ಲವೋ ತಿಳಿದಿಲ್ಲ. ಅವರನ್ನು ನೇಮಿಸಿರುವುದು ತಪ್ಪು ನಿರ್ಧಾರ ಎಂದು ನಾನು ಭಾವಿಸುತ್ತೇನೆ” ಎಂದು ಟ್ರಂಪ್ ಸೋಮವಾರ ಹೇಳಿದ್ದರು. ಕಳೆದ ತಿಂಗಳ ಕೊನೆಯಲ್ಲಿ ಆರಂಭವಾದ ಯುದ್ಧದ ಬಳಿಕ ಅಮೆರಿಕ–ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 1,444 ಜನರು ಸಾವನ್ನಪ್ಪಿದ್ದು, 18,551 ಜನರು ಗಾಯಗೊಂಡಿದ್ದಾರೆ ಎಂದು ಇರಾನ್ ಆರೋಗ್ಯ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳು ತಿಳಿಸಿವೆ. ಅಮೆರಿಕ ಮತ್ತು ಇಸ್ರೇಲ್, ಇರಾನ್ನ ನಾಯಕತ್ವ, ಮಿಲಿಟರಿ ಮತ್ತು ಪರಮಾಣು ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡಿದ್ದೇವೆ ಎಂದು ಹೇಳಿವೆ. ಆದರೆ ಶಾಲೆಗಳು ಮತ್ತು ಆಸ್ಪತ್ರೆಗಳಂತಹ ಸಾವಿರಾರು ನಾಗರಿಕ ಸ್ಥಳಗಳ ಮೇಲೂ ದಾಳಿ ನಡೆದಿದೆ ಎಂದು ಇರಾನ್ ಆರೋಪಿಸಿದೆ. ಶುಕ್ರವಾರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಗ್ಸೆತ್, ಫೆಬ್ರವರಿ 28ರಿಂದ ಅಮೆರಿಕ ಮತ್ತು ಇಸ್ರೇಲ್ ದಾಳಿಗಳು 15,000 ಕ್ಕೂ ಹೆಚ್ಚು ಇರಾನಿನ ಗುರಿಗಳನ್ನು ಹೊಡೆದುರುಳಿಸಿವೆ ಎಂದು ಹೇಳಿದರು. “ಅವರ ಬಳಿ ಇನ್ನೂ ಉಳಿದಿರುವ ಕ್ಷಿಪಣಿಗಳನ್ನು ನಾವು ಹೊಡೆದುರುಳಿಸಿ ನಾಶಪಡಿಸುತ್ತಿದ್ದೇವೆ. ಮುಖ್ಯವಾಗಿ ಅವರು ಮುಂದಿನ ದಾಳಿಗಳನ್ನು ನಡೆಸುವ ಸಾಮರ್ಥ್ಯವನ್ನು ಕಳೆದುಕೊಳ್ಳುವಂತೆ ಮಾಡುತ್ತಿದ್ದೇವೆ” ಎಂದು ಅವರು ಹೇಳಿದರು. “ಅವರ ಉತ್ಪಾದನಾ ಮಾರ್ಗಗಳು, ಮಿಲಿಟರಿ ಸ್ಥಾವರಗಳು ಮತ್ತು ರಕ್ಷಣಾ ನವೀನತೆ ಕೇಂದ್ರಗಳು ಸೋಲಿಸಲ್ಪಟ್ಟಿವೆ. ಇರಾನ್ ನ ನಾಯಕತ್ವ ಉತ್ತಮ ಸ್ಥಿತಿಯಲ್ಲಿ ಇಲ್ಲ. ಅವರು ಭೂಗತದಲ್ಲಿ ಅಡಗಿಕೊಂಡು ಭಯಭೀತರಾಗಿದ್ದಾರೆ” ಎಂದು ಹೆಗ್ಸೆತ್ ಹೇಳಿದರು. ಶುಕ್ರವಾರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಮತ್ತು ಇರಾನ್ ನ ಉನ್ನತ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಅವರು ರಾಜಧಾನಿ ಟೆಹ್ರಾನ್ನಲ್ಲಿ ನಡೆದ ಅಲ್-ಕುಡ್ಸ್ ದಿನದ ಸಾಮೂಹಿಕ ಪ್ರದರ್ಶನದಲ್ಲಿ ಕಾಣಿಸಿಕೊಂಡರು. ದೋಹಾ ಇನ್ಸ್ಟಿಟ್ಯೂಟ್ ಫಾರ್ ಗ್ರಾಜುಯೇಟ್ ಸ್ಟಡೀಸ್ನ ಪ್ರಾಧ್ಯಾಪಕ ಮೊಹಮ್ಮದ್ ಎಲ್ಮಾಸ್ರಿ ಅವರ ಪ್ರಕಾರ, ಹೆಗ್ಸೆತ್ ಅವರ ಹೇಳಿಕೆಗಳು ಮುಖ್ಯವಾಗಿ ಅಮೆರಿಕದ ಸಾರ್ವಜನಿಕರನ್ನು ಗುರಿಯಾಗಿರಿಸಿಕೊಂಡಿವೆ. “ಹೆಗ್ಸೆತ್ ಆತ್ಮವಿಶ್ವಾಸ ಮತ್ತು ಯಶಸ್ಸನ್ನು ಪ್ರದರ್ಶಿಸಲು ಪ್ರಯತ್ನಿಸುತ್ತಿದ್ದಾರೆ. ಇತ್ತೀಚಿನ ಅಭಿಪ್ರಾಯ ಸಂಗ್ರಹಗಳ ಪ್ರಕಾರ ಇರಾನ್ ನಲ್ಲಿನ ಯುದ್ಧ ಅಮೆರಿಕದಲ್ಲಿ ಹೆಚ್ಚು ಜನಪ್ರಿಯವಾಗಿಲ್ಲ. ಅನಿಲ ಬೆಲೆಗಳು ಏರುತ್ತಿವೆ, ಅಮೆರಿಕದ ಸೈನಿಕರು ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಟ್ರಂಪ್ ಮತ್ತು ಹೆಗ್ಸೆತ್ ಜನರಲ್ಲಿ ವಿಶ್ವಾಸ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
IPL 2026: ಐಪಿಎಲ್ ಹಬ್ಬ ಆರಂಭಕ್ಕೂ ಮುನ್ನ 10 ಫ್ರಾಂಚೈಸಿಗಳಿಗೂ ಬಿಸಿಸಿಐ ಕಟ್ಟುನಿಟ್ಟಿನ ಮಾರ್ಗಸೂಚಿಗಳು
IPL 2026: ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಮೊದಲ ಹಂತದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಎಲ್ಲಾ 10 ಐಪಿಎಲ್ ಫ್ರಾಂಚೈಸಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹಾಗಾದ್ರೆ, ಅವುಗಳಲ್ಲಿ ಏನೆಲ್ಲಾ ಇದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಬಿಸಿಸಿಐ ಹೊರಡಿಸಿದ ಮಾರ್ಗಸೂಚಿಗಳು ಐಪಿಎಲ್ 2026ರ
ಭಾರತದಲ್ಲಿ ಬಗೆಹರಿಯಲಿದೆ ಎಲ್ಪಿಜಿ ಸಮಸ್ಯೆ, ನೀವು ನಮ್ಮ ಗೆಳೆಯ ಎಂದು ಕರೆದ ಇರಾನ್... Donald Trump
ಭಾರತಕ್ಕೆ ಮಧ್ಯಪ್ರಾಚ್ಯ ಭಾಗದಿಂದ ಇದೀಗ ಭಾರಿ ಭರ್ಜರಿ ಸುದ್ದಿ ಸಿಕ್ಕಿದೆ, ಭಾರತದ ಹಡಗುಗಳು &ನೌಕೆಗಳು ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿ ಪರದಾಡುತ್ತಿದ್ದವು. ಅದರಲ್ಲೂ ಇರಾನ್ ಮಿಲಿಟರಿ ಈ ಭಾಗದಲ್ಲಿ ಎಂದರೆ, ಹಾರ್ಮುಜ್ ಜಲಸಂಧಿ ಮೂಲಕ ಯಾವುದೇ ತೈಲ ಹಾಗೂ ಗ್ಯಾಸ್ ಹಡಗು ಸಂಚಾರ ಮಾಡದಂತೆ ಅಡ್ಡ ಹಾಕಿದೆ. ಅಕಸ್ಮಾತ್ ಹಾರ್ಮುಜ್ ಜಲಸಂಧಿ ದಾಟಲು ಪ್ರಯತ್ನಿಸುತ್ತಿದ್ದರೆ ದೊಡ್ಡ ಮಟ್ಟದಲ್ಲಿ
ಎಲ್ಪಿಜಿ ನಂತರ ಅಡುಗೆ ಎಣ್ಣೆ ವಿಚಾರದಲ್ಲೂ ಶುರುವಾಯ್ತು ದೊಡ್ಡ ಟೆನ್ಷನ್... Cooking Oil
ಇರಾನ್ ಯುದ್ಧ ಕಾರಣಕ್ಕೆ ಸಾಲು ಸಾಲು ಸಂಕಷ್ಟ ಎದುರಾಗುತ್ತಿದ್ದು, ಭಾರತದಲ್ಲಿ ಈಗಾಗಲೇ ಈ ವಿಚಾರವಾಗಿ ಎಲ್ಪಿಜಿ ಸಮಸ್ಯೆ ಭುಗಿಲೆದ್ದು ಜನರು ಪರದಾಡುತ್ತಿದ್ದಾರೆ. ಹಾಗೇ ತೈಲ ಬೆಲೆ ಕೂಡ ಈ ಹಂತದಲ್ಲಿ ಹೆಚ್ಚಾಗುವ ಭೀತಿ ಮೂಡಿದ್ದು, ಸಾಲು ಸಾಲು ಕಂಟಕದ ನಡುವೆ ಭಾರತೀಯರೆಲ್ಲಾ ಬಳಲುತ್ತಿದ್ದಾರೆ. ಹಾಗೇ ಇರಾನ್ ಯುದ್ಧ ಇನ್ನಷ್ಟು ದಿನಗಳ ಕಾಲ ಮುಂದುವರಿದರೆ ಜಾಗತಿಕ ಆರ್ಥಿಕ ಪರಿಸ್ಥಿತಿ
Pralhad Joshi Slams Congress- ದೇಶದಲ್ಲಿ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕಾಂಗ್ರೆಸ್ ನಾಯಕರು ಅಭಾವದ ಸುಳ್ಳು ಸುದ್ದಿ ಹಬ್ಬಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರು ದೇಶದ ಜನರನ್ನು ಕೇಂದ್ರ ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 33 ಕೋಟಿ ಕುಟುಂಬಗಳಿಗೆ ಸಮರ್ಪಕವಾಗಿ ಎಲ್ಪಿಜಿ ಪೂರೈಕೆಯಾಗುತ್ತಿದ್ದು, ಕಮರ್ಷಿಯಲ್ ಗ್ಯಾಸ್ ಮೇಲೆ ನಿಗಾ ವಹಿಸಲಾಗಿದೆಯೇ ಹೊರತು ಯಾವುದೇ ಅಭಾವವಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ಮುಟ್ಟಾದರೆ ದೇವಸ್ಥಾನ ಮೈಲಿಗೆ; 8 ವರ್ಷದಿಂದ ಖಾಲಿ ಬಿತ್ತು ಪಕ್ಕದ ವಿದ್ಯಾರ್ಥಿನಿಯರ ಹಾಸ್ಟೆಲ್; ತುಮಕೂರಿನಲ್ಲಿ ಘಟನೆ
ಮೂಢನಂಬಿಕೆಯ ಸಂಕೋಲೆಯಲ್ಲಿ ಬಾಲಕಿಯರ ವಸತಿ ನಿಲಯವು ಎಂಟು ವರ್ಷಗಳಿಂದ ಬಳಕೆಯಾಗದೆ ಖಾಲಿ ಬಿದ್ದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿಯವರು ವಿಧಾನ ಪರಿಷತ್ತಿನಲ್ಲಿ ಪ್ರಶ್ನೆ ಮಾಡಿ ಸರ್ಕಾರದ ಗಮನ ಸೆಳೆದರು.
Budget Session 2026 | ಭಿಕ್ಷಾಟನೆ ದಂಧೆ ಕಂಡು ಬಂದಲ್ಲಿ ಕಠಿಣ ಕ್ರಮ : ಸಚಿವ ಡಾ.ಎಚ್.ಸಿ.ಮಹದೇವಪ್ಪ
ಬೆಂಗಳೂರು : ರಾಜ್ಯದಲ್ಲಿ ಭಿಕ್ಷಾಟನೆ ದಂಧೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಶುಕ್ರವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಾ.ಕೆ.ಗೋವಿಂದರಾಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಿಕ್ಷಾಟನೆ ನಿರ್ಬಂಧ ಮಾಡಲು ಸಮಾಜ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಜೊತೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಕೇಂದ್ರ ಪರಿಹಾರ ಸಮಿತಿಯ ಅಧೀನದಲ್ಲಿ ಒಟ್ಟು 15 ನಿರಾಶ್ರಿತರ ಪರಿಹಾರ ಕೇಂದ್ರಗಳಿದ್ದು, ಬೆಂಗಳೂರು, ಬೆಂಗಳೂರು ಪೂರ್ವ, ಬೆಳಗಾವಿ, ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಧಾರವಾಡ, ದಕ್ಷಿಣ ಕನ್ನಡ, ಕಲಬುರಗಿ, ಕೋಲಾರ, ಮೈಸೂರು, ರಾಯಚೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಎಚ್.ಸಿ.ಮಹದೇವಪ್ಪ ವಿವರಿಸಿದರು. ಹಿಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಭಿಕ್ಷುಕರ ಪುನರ್ವಸತಿಗಾಗಿ 365.17 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ನಿರಾಶ್ರಿತರ ಒಳಿತಿಗಾಗಿ ಮಾನಸಿಕ ಆರೋಗ್ಯ ಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ ಕೇಂದ್ರ ಮತ್ತು ಸಿದ್ದ ಉಡುಪು ಘಟಕವನ್ನು ಸ್ಥಾಪಿಸಲು ಕೇಂದ್ರ ಪರಿಹಾರ ಸಮಿತಿಗೆ ಸೂಚಿಸಲಾಗಿದೆ ಎಂದು ಎಚ್.ಸಿ.ಮಹದೇವಪ್ಪ ಹೇಳಿದರು. ಭಿಕ್ಷುಕರು ಸ್ವಾಭಿಮಾನದ ಬದುಕು ನಡೆಸಲು ಹಾಗೂ ಸಾಮಾಜಿಕ ಭದ್ರತೆಗಾಗಿ ಆಧಾರ್ ಕಾರ್ಡ್ ಮಾಡಿಸಿ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ ಒದಗಿಸಲು ಸಂಬಂಧಿತ ಇಲಾಖೆಗಳೊಂದಿಗೆ ಮಂಜೂರಾತಿಗೆ ಕ್ರಮವಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಭಿಕ್ಷಾಟನೆ ಮುಕ್ತ ರಾಜ್ಯವನ್ನಾಗಿ ಮಾಡಲು ಕ್ರಮವಹಿಸಲಾಗುವುದು ಎಂದು ಎಚ್.ಸಿ.ಮಹದೇವಪ್ಪ ತಿಳಿಸಿದರು. ಭೋವಿ ನಿಗಮದಲ್ಲಿ ಫಲಾನುಭವಿಗಳ ಆಯ್ಕೆ ಕ್ರಮಬದ್ಧವಾಗಿಲ್ಲ: ಎಚ್.ಸಿ.ಮಹದೇವಪ್ಪ ಭೋವಿ ಅಭಿವೃದ್ಧಿ ನಿಗಮದಲ್ಲಿ 2025-26ನೇ ಸಾಲಿನಲ್ಲಿ ಲಭ್ಯವಿರುವ ಸರಕಾರದ ಸಾಂಸ್ಥಿಕ ಕೋಟಾದಡಿಯಲ್ಲಿ ನೇರ ಸಾಲ, ಗಂಗಾ ಕಲ್ಯಾಣ, ಉದ್ಯಮಶೀಲತೆ, ಮೈಕ್ರೋ ಕ್ರೆಡಿಟ್ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಕೆಲವು ಫಲಾನುಭವಿಗಳನ್ನು, ಕ್ರಮಬದ್ಧವಾಗಿ ಆಯ್ಕೆಯಾಗಿಲ್ಲವೆಂದು ಕಂಡು ಬಂದಿದುದರಿಂದ ಈ ಪಟ್ಟಿಗಳನ್ನು ರದ್ದುಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿ.ಎನ್.ಜವರಾಯಿಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಫಲಾನುಭವಿಗಳನ್ನು ರದ್ದುಪಡಿಸಿರುವ ಪಟ್ಟಿಯನ್ನು ಪರಿಶೀಲಿಸಿ, ಕೆಲವು ಫಲಾನುಭವಿಗಳು ಅರ್ಹರಿದ್ದಲ್ಲಿ ಸಾಂಸ್ಥಿಕ ವಿವೇಚನಾ ಕೋಟಾದ ಮಿತಿಯ ಅಡಿಯಲ್ಲಿ ಪರಿಶೀಲಿಸಲಾಗುವುದು. 2025-26ನೇ ಸಾಲಿನ ಆಯವ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 6155.74 ಕೋಟಿ ರೂ.ಅನುದಾನ ಹಂಚಿಕೆಯಾಗಿದೆ ಎಂದರು.
ಇ-ಆಸ್ತಿ ತಂತ್ರಾಂಶ ಸಮಸ್ಯೆ ಬಗೆಹರಿಸಲು ಕ್ರಮ : ಭೈರತಿ ಸುರೇಶ್
ಬೆಂಗಳೂ : ಇ-ಆಸ್ತಿ ತಂತ್ರಾಂಶದಲ್ಲಿ ಉಂಟಾಗುವ ತಾಂತ್ರಿಕ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲಾಗುತ್ತಿದೆ. ಸ್ವತ್ತಿನ ಮಾಲಕರು ಇ-ಖಾತಾ ಕೋರಿ ಕರ್ನಾಟಕ ಒನ್ ಹಾಗೂ ಸಿಟಿಜನ್ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಗರಾಭಿವೃಧ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಜ್ಯೋತಿ ಗಣೇಶ್ ಅವರು ಇ-ತಂತ್ರಾಂಶದಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಆಸ್ತಿಯ ಮಾಲೀಕರುಗಳಿಗೆ ಇ-ಸ್ವತ್ತು ಖಾತೆ ಮಾಡಿಕೊಡಲು ಕೋರಿದರು. ಇದಕ್ಕೆ ಉತ್ತರಿಸಿದ ಸಚಿವರು, ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976ರ ತಿದ್ದುಪಡಿಯಂತೆ ಕೆಲ ಸ್ವತ್ತುಗಳಿಗೆ ಮಾತ್ರ ಖಾತಾ ನೀಡಲು ಇ-ಆಸ್ತಿ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ಒಟ್ಟು ವಿಸ್ತೀರ್ಣ ನಿವೇಶನ ಅಥವಾ ಸ್ವತ್ತಿನ ಪೂರ್ಣ ಅಳತೆಯನ್ನು ನಮೂದಿಸಲು ಅವಕಾಶವಿದೆ. ಕ್ರಯಪತ್ರದಲ್ಲಿರುವಂತೆ ಅಳತೆಯನ್ನು ತಂತ್ರಾಂಶದಲ್ಲಿ ನಮೂದು ಮಾಡಬೇಕು. ಸ್ವತ್ತು ಎಂದರೆ ಖಾಲಿ ಭೂಮಿ ಅಥವಾ ಕಟ್ಟಡ ಎರಡನ್ನೂ ಒಳಗೊಂಡಿರುತ್ತದೆ. ಇ-ಆಸ್ತಿ ತಂತ್ರಾಂಶದಲ್ಲಿ ಉಂಟಾಗುವ ತಾಂತ್ರಿಕ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲಾಗುತ್ತಿದೆ ಎಂದರು.
‘ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ-2026ʼ ವಿಧಾನಸಭೆಯಲ್ಲಿ ಮಂಡನೆ
ಬೆಂಗಳೂರು : ಜಾಹೀರಾತುಗಳ ಮೇಲೆ ಶುಲ್ಕ ಸಂಗ್ರಹಿಸುವುದು ಹಾಗೂ ಅನಧಿಕೃತ ಜಾಹೀರಾತುಗಳನ್ನು ನಿಯಂತ್ರಿಸುವ ಉದ್ದೇಶಕ್ಕಾಗಿ ‘ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ-2026 ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಶುಕ್ರವಾರ ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ಅವರು ವಿಧೇಯಕವನ್ನು ಮಂಡಿಸಿದರು. ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2024ರ ಅನ್ವಯ ನಗರ ಪ್ರದೇಶಗಳಲ್ಲಿನ ಕಟ್ಟಡದ ಗೋಡೆ ಅಥವಾ ರಚನೆಯ ಮೇಲ್ಬಾಗದಲ್ಲಿ ಅಳವಡಿಸಿರುವ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿನ ಜಾಹೀರಾತುಗಳಿಗೆ ತೆರಿಗೆಗೆ ವಿಧಿಸಲು ಹಾಗೂ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಅವರು ತಿಳಿಸಿದರು.
Kolkata Knight Riders Team- ಕೆಕೆಆರ್ ತಂಡಕ್ಕೆ ಬ್ಲೆಸ್ಸಿಂಗ್ ಮುಝರಬಾನಿ ಸೇರ್ಪಡೆಯ ಸಮಾಧಾನದ ಬೆನ್ನಲ್ಲೇ ಹೊಸ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗಿ ಹರ್ಷಿತ್ ರಾಣಾ ಗಾಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. 2024ರ ಚಾಂಪಿಯನ್ ಪಟ್ಟ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಾಣಾ, ಟಿ20 ವಿಶ್ವಕಪ್ ವೇಳೆ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರವೂ ಅವರು ಚೇತರಿಸಿಕೊಳ್ಳದ ಕಾರಣ ಐಪಿಎಲ್ ಆಡುವುದು ಅಸಾಧ್ಯವಾಗಿದೆ. ಇತ್ತ ಮಥೀಶ್ ಪತಿರಣ ಲಭ್ಯತೆಯೂ ಖಚಿತವಿಲ್ಲದ ಕಾರಣ, ಕೆಕೆಆರ್ ಈಗ ರಾಣಾ ಬದಲಿಗೆ ಸಮರ್ಥ ಆಲ್ರೌಂಡರ್ ಹುಡುಕಾಟದಲ್ಲಿದೆ.
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಹತಾಶೆಯಿಂದ ದಾಳಿ ನಡೆಸುತ್ತಿವೆ : ಲಾರಿಜಾನಿ
ಟೆಹ್ರಾನ್, ಮಾ.13: ಇರಾನ್ ರಾಜಧಾನಿ ಟೆಹ್ರಾನ್ನಲ್ಲಿ ಶುಕ್ರವಾರ ನಡೆದ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಂಡ ರಾಷ್ಟ್ರೀಯ ಭದ್ರತಾ ಮುಖ್ಯಸ್ಥ ಆಲಿ ಲಾರಿಜಾನಿ, ಟೆಹ್ರಾನ್ನ ಮೇಲೆ ಇಸ್ರೇಲ್-ಅಮೆರಿಕ ಹತಾಶೆಯಿಂದ ದಾಳಿ ನಡೆಸುತ್ತಿವೆ ಎಂದು ಟೀಕಿಸಿದ್ದಾರೆ. ರ್ಯಾಲಿಯ ಸ್ಥಳದ ಸಮೀಪದಲ್ಲಿ ಇಸ್ರೇಲ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಇತರ ಕೆಲವರು ಗಾಯಗೊಂಡಿದ್ದಾರೆ. `ಈ ದಾಳಿಗಳು ಭಯದಿಂದ, ಹತಾಶೆಯಿಂದ ನಡೆಯುತ್ತಿವೆ. ಬಲಶಾಲಿಯಾದವನು ರ್ಯಾಲಿಗಳ ಮೇಲೆ ದಾಳಿ ನಡೆಸುವುದಿಲ್ಲ. ಈ ದಾಳಿ ವಿಫಲವಾಗಿರುವುದು ಸ್ಪಷ್ಟವಾಗಿದೆ ಎಂದು ಲಾರಿಜಾನಿ ಹೇಳಿರುವುದಾಗಿ ವರದಿಯಾಗಿದೆ.
ವಿಜಯನಗರ | ಹಿರಿಯ ಪತ್ರಕರ್ತ ಕೆ.ಲಕ್ಷ್ಮಣ್ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ
ವಿಜಯನಗರ /ಹೊಸಪೇಟೆ : ವಿಜಯನಗರ ಜಿಲ್ಲೆಯ ಹಿರಿಯ ಪತ್ರಕರ್ತರಾದ ಕೆ. ಲಕ್ಷ್ಮಣ್ ಅವರಿಗೆ 2025ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯನವರು ಪ್ರದಾನ ಮಾಡಿದರು. ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಸಂಜೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯನವರು ಪ್ರಶಸ್ತಿ ಪ್ರದಾನ ಮಾಡಿದರು. ಶಿವಾಜಿನಗರ ಕ್ಷೇತ್ರದ ಶಾಸಕ ರಿಝ್ವಾನ್ ಅರ್ಶದ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್, ಕಾರ್ಯದರ್ಶಿ ಕಾವೇರಿ, ನಾಡೋಜ ಹಂಪನಾ ನಾಗರಾಜ್, ನಾಡಕ ಅಕಾಡೆಮಿ ಅಧ್ಯಕ್ಷ ನಾಗರಾಜ್ ಮೂರ್ತಿ ಸೇರಿದಂತೆ ಇತರರು ಇದ್ದರು.
ಸರಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ: ಪತ್ರಕರ್ತರಿಗೆ ಸಿಎಂ ಕರೆ
► ಪತ್ರಕರ್ತರಿಗೆ ವೃತ್ತಿಧರ್ಮ ಬಹಳ ಮುಖ್ಯ► ಮಾಧ್ಯಮ ಅಕಾಡೆಮಿ ʼ2025ನೇ ಸಾಲಿನ ವಾರ್ಷಿಕ ಪ್ರಶಸ್ತಿʼ ಪ್ರದಾನ ಕಾರ್ಯಕ್ರಮ
ಅಮೆರಿಕ | ವಂಚನೆ ಪ್ರಕರಣದಲ್ಲಿ ಭಾರತೀಯ ಮೂಲದ ಸಹೋದರರು ತಪ್ಪಿತಸ್ಥರೆಂದು ಸಾಬೀತು
ನ್ಯೂಯಾರ್ಕ್, ಮಾ.13: ವೀಸಾ ವಂಚನೆ, ಆರೋಗ್ಯ ರಕ್ಷಣೆ ವಂಚನೆ, ಹಣ ಅಕ್ರಮ ಸಾಗಾಟ ಮತ್ತು ತೆರಿಗೆ ವಂಚನೆ ಸೇರಿದಂತೆ ಹಲವಾರು ರೀತಿಯ ವಂಚನೆಗಳನ್ನು ಒಳಗೊಂಡ ಪಿತೂರಿಯಲ್ಲಿ ಭಾರತೀಯ ಮೂಲದ ಸಹೋದರರಾದ ಭಾಸ್ಕರ್ ಸಾವನಿ(60 ವರ್ಷ) ಮತ್ತು ಅರುಣ್ ಸಾವನಿ(58 ವರ್ಷ) ತಪ್ಪಿತಸ್ಥರೆಂದು ಸಾಬೀತಾಗಿದೆ. ಈ ಸಹೋದರರು ತಮ್ಮ `ಸಾವನಿ ಸಮೂಹ ಸಂಸ್ಥೆ' ಗಳ ಮೂಲಕ ಕಳೆದ ಹಲವು ವರ್ಷಗಳಿಂದ ಈ ಅಕ್ರಮ ಯೋಜನೆಗಳಲ್ಲಿ ಕೋಟ್ಯಾಂತರ ಡಾಲರ್ಗಳನ್ನು ಸಂಗ್ರಹಿಸಿದ್ದಾರೆ ಎಂದು ಪ್ರಾಸಿಕ್ಯೂಟರ್ ಹೇಳಿದ್ದಾರೆ. ಇವರಿಬ್ಬರಿಗೆ ಪ್ರತ್ಯೇಕವಾಗಿ ಸುಮಾರು 400 ವರ್ಷಗಳ ಜೈಲುಶಿಕ್ಷೆ ವಿಧಿಸುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.
ನೆತನ್ಯಾಹುಗಾಗಿ ಅಮೆರಿಕದ ಜನರನ್ನು ಬಲಿಕೊಡುತ್ತಿರುವ ಟ್ರಂಪ್ : ಇರಾನ್ ಆರೋಪ
ಟೆಹ್ರಾನ್, ಮಾ.13: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿಸ್ತರಣಾ ಮಹತ್ವಾಕಾಂಕ್ಷೆಗಳನ್ನು ಮುನ್ನಡೆಸಲು ಡೊನಾಲ್ಡ್ ಟ್ರಂಪ್ ಅಮೆರಿಕನ್ನರ ಜೀವಗಳನ್ನು ತ್ಯಾಗ ಮಾಡುತ್ತಿದ್ದಾರೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಆರೋಪಿಸಿದ್ದಾರೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಶುಕ್ರವಾರ 14ನೇ ದಿನಕ್ಕೆ ಮುಂದುವರಿದಿದ್ದು ಎರಡೂ ಕಡೆಯವರು ದಾಳಿ ಮತ್ತು ಮಿಲಿಟರಿ ಕ್ರಮಗಳನ್ನು ತೀವ್ರಗೊಳಿಸಿದ್ದಾರೆ. ಸಂಘರ್ಷಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ಬೆಳವಣಿಗೆಗಳು: ಶುಕ್ರವಾರ ಟೆಹ್ರಾನ್ನಲ್ಲಿ ಹಲವು ಸ್ಫೋಟ ನಡೆದಿರುವುದಾಗಿ ಇರಾನ್ ಮಾಧ್ಯಮಗಳ ವರದಿ. ಇರಾನ್ನ ಇಂಧನ ಸ್ಥಳಗಳು ಆಕ್ರಮಣಕ್ಕೆ ಒಳಗಾದ್ರೆ ಪ್ರದೇಶದ ತೈಲ ಮತ್ತು ಗ್ಯಾಸ್ ಮೂಲಸೌಕರ್ಯ ಬೆಂಕಿಗೆ ಆಹುತಿಯಾಗಲಿದೆ ಎಂದು ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್ ಶುಕ್ರವಾರ ಎಚ್ಚರಿಕೆ ನೀಡಿದೆ. ಲೆಬನಾನ್ನ ಬೈರೂತ್ ಹಾಗೂ ಉಪನಗರಗಳ ಮೇಲೆ ಶುಕ್ರವಾರ ಇಸ್ರೇಲ್ ಮತ್ತೆ ದಾಳಿ ನಡೆಸಿದೆ. ಗಲ್ಫ್ನಲ್ಲಿ ಶುಕ್ರವಾರ ಕನಿಷ್ಠ 3 ಸರಕು ನೌಕೆಗಳ ಮೇಲೆ ದಾಳಿ ನಡೆದಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್ನತ್ತ ಇರಾನ್ ಮತ್ತೆ ಕ್ಷಿಪಣಿ ದಾಳಿ ನಡೆಸಿದ್ದು ವಾಯು ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿರುವುದಾಗಿ ಇಸ್ರೇಲ್ ಹೇಳಿದೆ. ಪರಮಾಣು ಅಸ್ತ್ರಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಇರಾನ್ನ ಹಿರಿಯ ವಿಜ್ಞಾನಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದು ಇದು ಇರಾನ್ನ ಮಿಲಿಟರಿ ಮತ್ತು ಭದ್ರತಾ ಪಡೆಗಳಿಗೆ ಭಾರೀ ಹೊಡೆತವಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.
ಇಸ್ರೇಲ್ | ಕ್ಷಿಪಣಿ ದಾಳಿಯಲ್ಲಿ 58 ಮಂದಿಗೆ ಗಾಯ
ಟೆಲ್ಅವೀವ್, ಮಾ.13: ಜೆರುಸಲೇಂನ ಉತ್ತರದಲ್ಲಿ, ಲೆಬನಾನ್ ಗಡಿಯ ಸನಿಹದಲ್ಲಿರುವ ಜಾರ್ಜಿರ್ ನಗರದ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಸುಮಾರು 58 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಹಲವು ಕಾರುಗಳು ಹಾನಿಗೊಂಡಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗಿದೆ. ದಾಳಿ ನಡೆದ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗೆ ತುರ್ತು ಸೇವಾ ತಂಡವನ್ನು ನಿಯೋಜಿಸಿರುವುದಾಗಿ ಇಸ್ರೇಲಿ ಮಿಲಿಟರಿ ಹೇಳಿದೆ. ಉತ್ತರ ಇಸ್ರೇಲ್ ಮತ್ತು ದಕ್ಷಿಣ ಲೆಬನಾನ್ನಲ್ಲಿರುವ ಇಸ್ರೇಲಿ ಪಡೆಗಳನ್ನು ಕ್ಷಿಪಣಿ ದಾಳಿ ನಡೆಸಿರುವುದಾಗಿ ಶುಕ್ರವಾರ ಹಿಜ್ಬುಲ್ಲಾ ಹೇಳಿತ್ತು.
ಕಲಬುರಗಿ | ದೇಶದ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಮಹಿಳೆಯರು ಮುಂದಾಗಿ : ತೇಜಸ್ವಿನಿ ಅನಂತ್ ಕುಮಾರ
ಮಹಿಳಾ ಸಾಧಕಿಯರಿಗೆ ಶರಣಬಸವ ವಿವಿಯಿಂದ ಪ್ರಶಸ್ತಿ ಪ್ರದಾನ
ಬಿಜೆಪಿ ಟಿಕೆಟ್ ಆಮೀಷ 2 ಕೋಟಿ ರೂ. ವಂಚನೆ ಆರೋಪ: ಪ್ರಹ್ಲಾದ್ ಜೋಶಿ ಸೋದರನ ವಿರುದ್ಧದ ಪ್ರಕರಣ ಹೈಕೋರ್ಟ್ ರದ್ದು
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಮೀಷ 2 ಕೋಟಿ ರೂ. ವಂಚನೆ ಆರೋಪದಲ್ಲಿ ಪ್ರಹ್ಲಾದ್ ಜೋಶಿ ಸೋದರ ಗೋಪಾಲ್ ಜೋಶಿ ವಿರುದ್ಧದ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಆದೇಶ ನೀಡಿದೆ. ಈ ಬಗ್ಗೆ ವಿವರ ಇಲ್ಲಿದೆ.
ಆಳಂದ | ಕೇಂದ್ರೀಯ ವಿವಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಆಳಂದ: ಎಲ್ಲರನ್ನೂ ಒಳಗೊಂಡ ಮತ್ತು ಸಮಾನ ಸಮಾಜವನ್ನು ನಿರ್ಮಿಸಲು ಮಹಿಳಾ ಸಬಲೀಕರಣ ಅತ್ಯಗತ್ಯ ಎಂದು ಬೆಂಗಳೂರಿನ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತೆ ಡಾ. ಮಮತಾ ಬಿ.ಆರ್. (ಐಎಎಸ್) ಹೇಳಿದರು. ತಾಲೂಕಿನ ಕಡಗಂಚಿ ಬಳಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಲಿಂಗ ಸಮಾನತೆಗಾಗಿ ನಾವೆಲ್ಲರೂ ಸಾಮೂಹಿಕ ಪ್ರಯತ್ನಗಳನ್ನು ಮಾಡಬೇಕು ಮತ್ತು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಬೇಕು. ದುರ್ಬಲರಿಗೆ ಬೆಂಬಲ ನೀಡುವ ದೂರದೃಷ್ಟಿ ಹೊಂದಿರುವ ಜನರ ಅವಶ್ಯಕತೆಯಿದೆ ಎಂದು ಹೇಳಿದರು. ಸಿಯುಕೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ, ಮಾತನಾಡಿ, ಸಮಾಜದ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಮಹಿಳೆಯರು ಗಣನೀಯ ಕೊಡುಗೆ ನೀಡಿದ್ದಾರೆ. ರಾಷ್ಟ್ರ ನಿರ್ಮಾಣ ಮತ್ತು ಕುಟುಂಬಗಳ ಒಳಗೆ ಮಹಿಳೆಯರು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತಿದ್ದಾರೆ. ಅವರು ಸಮಾಜದಲ್ಲಿ ನಾಯಕತ್ವ ಮತ್ತು ವೃತ್ತಿಪರ ಪಾತ್ರಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಕುಲಸಚಿವ ಪ್ರೊ. ಆರ್. ಆರ್. ಬಿರಾದಾರ್ ಮಾತನಾಡಿದರು. ಸಂಯೋಜಕಿ ಡಾ.ಶ್ಯಾಮಲಾ ಆರ್ ಸ್ವಾಗತಿಸಿದರು. ಡಾ.ಶೈಲಜಾ ಎಸ್.ಕೊನೆಕ್ ವಂದಿಸಿದರು. ಡಾ.ಪವಿತ್ರಾ ಆಲೂರ್, ಸಹ-ಸಂಯೋಜಕರಾದ ಡಾ. ರೂಪಾ ರಾಣಿ ಸೋನೋವಾಲ್, ವಿವಿಧ ವಿಭಾಗಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಅಫಜಲಪುರ | ವಿದ್ಯೆ-ವಿನಯ ಇದ್ದಾಗ ಬದುಕಿಗೆ ಶ್ರೇಯಸ್ಸು: ವಿಶ್ವರಾಧ್ಯ ಶ್ರೀ
ಅಫಜಲಪುರ: ಬದುಕು ಪರಿಪೂರ್ಣವಾಗಬೇಕಾದರೆ ಮನಸ್ಸು ಪರಿಶುದ್ದವಾಗಿರಬೇಕು. ಅದರಲ್ಲೂ ವಿದ್ಯೆ ಮತ್ತು ವಿನಯಗಳು ಎಲ್ಲರೂ ಬದುಕಿನಲ್ಲಿ ಮೈಗೂಡಿಸಿಕೊಂಡರೆ ಬುದಕಿಗೆ ಶ್ರೇಯಸ್ಸು ಬರಲು ಸಾಧ್ಯವಿದೆ ಎಂದು ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು. ತಾಲೂಕಿನ ಆನೂರ ಗ್ರಾಮದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ 15ನೇ ವಾರ್ಷಿಕೋತ್ಸವದ ಪಾವನ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಗ್ರಾಮೀಣ ಭಾಗಗಳಲ್ಲಿ ಶಾಲೆಗಳಿರಲಿಲ್ಲ. ಹೀಗಾಗಿ ಅನಕ್ಷರತೆ ಹೆಚ್ಚಾಗಿತ್ತು. ಈಗ ಶಿಕ್ಷಣ ಪ್ರೇಮಿಗಳ ಸೇವಾ ಮನೋಭಾವ ಮತ್ತು ಸಾಹಸದಿಂದ ಹೆಚ್ಚಿನ ಶಾಲೆಗಳು ಹುಟ್ಟಿಕೊಳ್ಳುತ್ತಿವೆ ಎಂದು ಹೇಳಿದರು. ಚಿಂಚೋಳಿ ಮಠದ ಗದ್ದುಗೇಶ್ವರ ಮಲ್ಲಿಕಾರ್ಜುನ ಶಿವಾಚಾರ್ಯರು ಸಾನಿಧ್ಯ ವಹಿಸಿ ಮಾತನಾಡಿ, ಆನೂರ ಗ್ರಾಮ ಗಾತ್ರದಲ್ಲಿ ಸಣ್ಣದಾಗಿದ್ದರೂ ಕೂಡ ಇಲ್ಲಿನವರ ಮನಸ್ಸು ಬಹಳ ದೊಡ್ಡದಾಗಿದೆ. ಸದಾ ಶಿಕ್ಷಣಕ್ಕೆ ಒತ್ತು ನೀಡುವ ಈ ಊರಿನವರ ಪ್ರೋತ್ಸಾಹ, ಪ್ರೇರಣೆಯಿಂದ ಸಾಕಷ್ಟು ಜನ ಸರ್ಕಾರಿ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅಲ್ಲದೆ ಈ ಊರಲ್ಲಿ ಸದಾ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಸ್ವಾಮಿ ವಿವೇಕಾನಂದ ಶಾಲೆಯ ಸಂಸ್ಥಾಪಕರು ಹಾಗೂ ಊರಿನವರು ಶ್ರಮಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು. ಉದ್ಯಮಿ ಈರಣ್ಣಗೌಡ ಪಾಟೀಲ ಪುಣೆ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ದಿ ಇಲಾಖೆ ಮೇಲ್ವಿಚಾರಕಿ ಹುದ್ದೆಯಿಂದ ಸೇವಾ ನಿವೃತ್ತರಾದ ಗುರುಬಾಯಿ ಬಳೂಂಡಗಿ, ಗುಲ್ಬರ್ಗಾ ವಿವಿಯಿಂದ ಪಿಎಚ್ಡಿ ಡಾಕ್ಟರೇಟ್ ಪದವಿ ಪಡೆದ ಡಾ.ಉದಯಕುಮಾರ ವಾಡೇಕರ್, ಡಾ.ಖಾಜಪ್ಪ ಇಟಗಿ, ಪ್ರಗತಿಪರ ರೈತ ಸಿದ್ದಪ್ಪ ಜಮಾದಾರ ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಚಂದ್ರಗಿರಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಹುಲ್ ಭಂಡಾರಿ, ಗ್ರಾಪಂ ಮಾಜಿ ಅಧ್ಯಕ್ಷ ನಿಂಗಣ್ಣ ಕಲಶೆಟ್ಟಿ, ದತ್ತು ಘಾಣೂರ, ರಾಜು ನಿಂಬರ್ಗಿ, ಚಂದ್ರಶೇಖರ ಪಾಟೀಲ, ಅಂಬರೀಶ ಪಟ್ಟಣ, ಶರಣಪ್ಪ ಕನ್ನೋಳ್ಳಿ, ವಿಜಯಕುಮಾರ ಭಂಡಾರಿ, ಮಲ್ಲಣಗೌಡ ಮಾಲೀ ಪಾಟೀಲ, ಭೋಗಣ್ಣಗೌಡ ರೂಗಿ, ಗುಂಡು ಮಾಳಗೆ, ಚಂದ್ರಕಾಂತ ದೇವರಮನಿ, ಹಣಮಂತ ನಾವಿ, ಶ್ರೀಮಂತ ಸಿಂಗೆ, ಜಗದೇವ ತಳವಾರ, ನಿಂಗಣ್ಣ ನಡುವಿನಕೇರಿ, ಮಲ್ಲಿನಾಥ ದೊಡಮನಿ, ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಇದ್ದರು. ಚಂದ್ರಕಾಂತ ಸಿಂಗೆ ಸ್ವಾಗತಿಸಿದರು. ಡಾ.ಸಂಗಣ್ಣ ಸಿಂಗೆ ನಿರೂಪಿಸಿ ವಂದಿಸಿದರು.
ಭಟ್ಕಳ| ಅಡುಗೆ ಅನಿಲ ದುರ್ಬಳಕೆ ತಡೆಗೆ ಹೋಟೆಲ್ಗಳ ಮೇಲೆ ಅಧಿಕಾರಿಗಳಿಂದ ದಾಳಿ
ಭಟ್ಕಳ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸುತ್ತಿರುವ ಯುದ್ಧ ಭೀತಿಯ ಹಿನ್ನೆಲೆಯಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ವ್ಯಕ್ತವಾಗಿದ್ದು, ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ದುರ್ಬಳಕೆ ತಡೆಗಟ್ಟಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ ಭಟ್ಕಳ ಪಟ್ಟಣದ ವಿವಿಧ ಹೋಟೆಲ್ಗಳ ಮೇಲೆ ಅಧಿಕಾರಿಗಳು ಬುಧವಾರ ಸಂಜೆ ತಪಾಸಣೆ ನಡೆಸಿದರು. ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿ ಮತ್ತು ಅದಕ್ಕೆ ಇರಾನ್ ನೀಡುತ್ತಿರುವ ಪ್ರತಿಕ್ರಿಯೆ ಯಿಂದಾಗಿ ಹೊರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತಕ್ಕೆ ಕಚ್ಚಾ ತೈಲ ಸಾಗಾಟದ ಪ್ರಮುಖ ಮಾರ್ಗವಾಗಿರುವ ಈ ಪ್ರದೇಶದಲ್ಲಿ ಉಂಟಾದ ಅಸ್ಥಿರತೆಯಿಂದ ಇಂಧನ ಹಾಗೂ ಅನಿಲ ಪೂರೈಕೆಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ಸೂಚನೆಯಂತೆ ಗೃಹ ಬಳಕೆ ದಾರರಿಗೆ ಅನಿಲ ಪೂರೈಕೆಗೆ ಆದ್ಯತೆ ನೀಡುವಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಈ ಕುರಿತು ರಾಜ್ಯ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕಟ್ಟುನಿಟ್ಟಿನ ಸೂಚನೆಗಳನ್ನು ಜಾರಿಗೊಳಿಸಿದ್ದಾರೆ. ಅಗತ್ಯ ವಸ್ತುಗಳ ಪೂರೈಕೆ ಕಾಯ್ದೆಯಡಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವುದು, ಅಕ್ರಮ ದಾಸ್ತಾನು, ಕಾಳಸಂತೆ ಮಾರಾಟ ಹಾಗೂ ಕಡಿಮೆ ಪ್ರಮಾಣದಲ್ಲಿ ರೀಫಿಲ್ಲಿಂಗ್ ಮಾಡಿ ವಿತರಿಸುವುದನ್ನು ತಡೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. “ಹೋಟೆಲ್ಗಳ ಅಡುಗೆಮನೆಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಅಡುಗೆ ಅನಿಲದ ದುರ್ಬಳಕೆ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ,” ಎಂದು ಭಟ್ಕಳ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಹೋಟೆಲ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಶಾಲೆಗಳು, ಅಂಗನವಾಡಿಗಳು ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಅಡುಗೆ ಅನಿಲದ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸಂಕಷ್ಟದಲ್ಲಿ ಹೋಟೆಲ್ ಉದ್ಯಮ ಇನ್ನೊಂದೆಡೆ, ವಾಣಿಜ್ಯ ಬಳಕೆಯ ಸಿಲಿಂಡರ್ಗಳ ಅಭಾವದಿಂದ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಅನಿಲ ಕೊರತೆಯಿಂದ ಕೆಲವು ಹೋಟೆಲ್ಗಳಲ್ಲಿ ಈಗಾಗಲೇ ಸೌದೆ ಒಲೆಗಳ ಬಳಕೆ ಆರಂಭವಾಗಿದ್ದು, ಇನ್ನೂ ಕೆಲವು ಕಡೆ ಆಹಾರ ಪಟ್ಟಿಯಲ್ಲಿ (ಮೆನು) ಕಡಿತ ಮಾಡಲಾಗಿದೆ. ಪರಿಸ್ಥಿತಿ ಇದೇ ರೀತಿಯಲ್ಲಿ ಮುಂದುವರಿದರೆ ಹೋಟೆಲ್ಗಳನ್ನು ಬಂದ್ ಮಾಡುವ ಅನಿವಾರ್ಯತೆ ಎದುರಾಗಬಹುದು ಎಂದು ಉದ್ಯಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ
ಅಫಜಲಪುರ | ಮೊಬೈಲ್ ನಿಂದ ಮಕ್ಕಳನ್ನು ದೂರವಿಡಿ : ವಿಶ್ವರಾಧ್ಯ ಶ್ರೀ
ಅಫಜಲಪುರ: ಇಳಿ ವಯಸ್ಸಿನಲ್ಲಿ ಹೆತ್ತವರನ್ನು ಮಕ್ಕಳಂತೆ ಪೋಷಣೆ ಮಾಡುವುದು ಹಾಗೂ ವಿದ್ಯೆ ಮತ್ತು ಸಂಸ್ಕಾರ ಎರಡೂ ಒಂದಾಗಿದ್ದರೆ ಆದರ್ಶ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯ ಹೇಳಿದರು. ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಶ್ರೀ ಮಹಾಂತಮ್ಮ ಯಶವಂತರಾವ್ ಪಾಟೀಲ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಜ್ಞಾನಜ್ಯೋತಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಮತ್ತು ಜ್ಞಾನಸಿಂಧು ನವೋದಯ, ಸೈನಿಕ ಕೋಚಿಂಗ್ ಸೆಂಟರ್ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 8ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಬದುಕು ಪರಿಪೂರ್ಣವಾಗಬೇಕಾದರೆ ಮನಸ್ಸು ಪರಿಶುದ್ಧವಾಗಿರಬೇಕು. ವಿದ್ಯೆ ಮತ್ತು ವಿನಯವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನದಲ್ಲಿ ಶ್ರೇಯಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಹಿಂದಿನ ಕಾಲದಲ್ಲಿ ಗ್ರಾಮೀಣ ಭಾಗಗಳಲ್ಲಿ ಶಾಲೆಗಳ ಕೊರತೆಯಿಂದ ಅನಕ್ಷರತೆ ಹೆಚ್ಚಾಗಿತ್ತು. ಆದರೆ ಶಿಕ್ಷಣ ಪ್ರೇಮಿಗಳ ಸೇವಾಭಾವದಿಂದ ಇಂದು ಹೆಚ್ಚಿನ ಶಾಲೆಗಳು ಸ್ಥಾಪನೆಯಾಗಿ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂದರು. ಈ ಸಂದರ್ಭದಲ್ಲಿ ಕಲಬುರಗಿ ಉತ್ತರ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ್ ಸೊನ್ನ ಮಾತನಾಡಿ, ಕೇವಲ 40 ವಿದ್ಯಾರ್ಥಿಗಳಿಂದ ಆರಂಭವಾದ ಈ ಶಿಕ್ಷಣ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆಯುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು. ಸಿ.ಆರ್.ಪಿ ಸಿದ್ದಪ್ಪ ಬಿರಾದಾರ ಮಾತನಾಡಿ, ಕುಟುಂಬದ ಏಳಿಗೆ ಶಿಕ್ಷಣವನ್ನು ಅವಲಂಬಿಸಿದೆ. ಗ್ರಾಮಸ್ಥರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಕೆಲಸ ಮಾಡಬೇಕು. ಈ ಭಾಗದಲ್ಲಿ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆ ಉತ್ತಮ ಶಿಕ್ಷಣ ನೀಡುವ ಮೂಲಕ ಹೆಸರುವಾಸಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಪ್ರಥಮ ದರ್ಜೆ ಗುತ್ತಿಗೆದಾರರಾದ ಎಸ್.ವೈ.ಪಾಟೀಲ್ ಉದ್ಘಾಟಿಸಿದರು. ವೇ.ಗುರುಪಾದಯ್ಯ ಚರಂತಿಮಠ, ಸಿದ್ದಯ್ಯ ಆಕಾಶಮಠ, ಕಲ್ಯಾಣಿ ಸಿಂದಗೇರಿ, ಶಿವರುದ್ರ ಬಬಲಾದ,ಮಾಳಪ್ಪ ಬಿದನೂರ, ನವಿನಗೌಡ ಪಾಟೀಲ್, ಪುಜಾ ಸಿ.ಐ, ಶರಣಬಸು ದೇಶಮುಖ, ಶರಣಬಸು ದೇಶಮುಖ, ಶಿವಪುತ್ರ ಜೇವರ್ಗಿ, ಸಿದ್ರಾಮಯ್ಯ ಹಿರೇಮಠ, ಭಾಗ್ಯವಂತಿ ಆಯೋರ, ಸಿದ್ದು ತೊನಶ್ಯಾಳ,ಸಂಸ್ಥೆಯ ಅಧ್ಯಕ್ಷೆ ಗಂಗಾಶ್ರೀ ದೇಶಮುಖ, ಕಾರ್ಯದರ್ಶಿ ಗುಂಡೇರಾವ್ ದೇಶಮುಖ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ರಮಝಾನ್: ಭಟ್ಕಳದಲ್ಲಿ ವಿಶೇಷ ಸಂಚಾರ ವ್ಯವಸ್ಥೆ, ಮಾರ್ಗ ಬದಲಾವಣೆ
ಭಟ್ಕಳ: ಈದ್-ಉಲ್-ಫಿತರ್ ಹಿನ್ನೆಲೆಯಲ್ಲಿ ಭಟ್ಕಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಖರೀದಿಗೆ ಆಗಮಿಸುವ ನಿರೀಕ್ಷೆಯಿರುವುದರಿಂದ, ನಗರದ ರಮ್ಜಾನ್ ಬಜಾರ್ ಪ್ರದೇಶದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಭಟ್ಕಳ ಪೊಲೀಸ್ ಇಲಾಖೆ ವಿಶೇಷ ಸಂಚಾರ ವ್ಯವಸ್ಥೆ ಮತ್ತು ತಾತ್ಕಾಲಿಕ ಮಾರ್ಗ ಬದಲಾವಣೆಗಳನ್ನು ಜಾರಿಗೆ ತಂದಿದೆ. ಈ ಕುರಿತು ಪ್ರಕಟಣೆ ನೀಡಿರುವ ಭಟ್ಕಳ ಪಟ್ಟಣ ಪೊಲೀಸರು, ಹಬ್ಬದ ಖರೀದಿ ಅವಧಿಯಲ್ಲಿ ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ ಪೊಲೀಸ್ ಇಲಾಖೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಹೊಸ ಸಂಚಾರ ವ್ಯವಸ್ಥೆಯ ಪ್ರಕಾರ, ಹಳೆಯ ಬಸ್ ನಿಲ್ದಾಣದಿಂದ ಮೌಲಾನಾ ಆಜಾದ್ ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಸುಲ್ತಾನ್ ಸ್ಟ್ರೀಟ್ನ ಮಿಸ್ಬಾಹ್ ಕ್ರಾಸ್ ಮೂಲಕ ರಮ್ಜಾನ್ ಮಾರುಕಟ್ಟೆಗೆ ಹೋಗುವ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮರಿಕಟ್ಟೆಯಿಂದ ಹೂ ಮಾರುಕಟ್ಟೆ ಕಡೆಗೆ ಹೋಗುವ ರಸ್ತೆಯನ್ನು ಎಂದಿನಂತೆ ಏಕಮಾರ್ಗವಾಗಿ ಘೋಷಿಸಲಾಗಿದೆ. ಮರಿಕಟ್ಟೆಯಿಂದ ಹಳೆಯ ಬಸ್ ನಿಲ್ದಾಣದತ್ತ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ಆ ದಿಕ್ಕಿಗೆ ತೆರಳುವವರು ಸುಲ್ತಾನ್ ಸ್ಟ್ರೀಟ್ ಅಥವಾ ಕಾರ್ ಸ್ಟ್ರೀಟ್ ಮಾರ್ಗವನ್ನು ಬಳಸಬಹುದು. ಅಲ್ಲದೆ ಮೌಲಾನಾ ಆಜಾದ್ ರಸ್ತೆ ಕ್ರಾಸ್ ಸಮೀಪದ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನ ನಿಲುಗಡೆಗೆ ವ್ಯವಸ್ಥೆ:- ಖರೀದಿಗೆ ಬರುವ ಸಾರ್ವಜನಿಕರಿಗಾಗಿ ವಿಶೇಷ ವಾಹನ ನಿಲುಗಡೆ ಸ್ಥಳಗಳನ್ನು ಗುರುತಿಸಲಾಗಿದೆ. ನಗರಸಭೆ ಕಚೇರಿ ಹಿಂಭಾಗದಲ್ಲಿರುವ ಇಸ್ಲಾಮಿಯಾ ಆಂಗ್ಲ-ಉರ್ದು ಹೈಸ್ಕೂಲ್ ಮೈದಾನದಲ್ಲಿ ಸಂಜೆ 4 ಗಂಟೆಯಿಂದ ರಾತ್ರಿ 3 ಗಂಟೆಯವರೆಗೆ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ. ಇದೇ ಅವಧಿಯಲ್ಲಿ ಸಾರ್ವಜನಿಕ ಚಬೂತ್ರಾ ಪ್ರದೇಶದಲ್ಲಿಯೂ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ನಿವಾಸಿಗಳು ಮತ್ತು ವ್ಯಾಪಾರಿಗಳಿಗೆ ಪಾಸ್ ಹಳೆಯ ಬಸ್ ನಿಲ್ದಾಣದಿಂದ ಮುಖ್ಯ ರಸ್ತೆಯ ಮೂಲಕ ಮರಿಕಟ್ಟೆವರೆಗೆ ಇರುವ ರಸ್ತೆಯಲ್ಲಿರುವ ನಿವಾಸಿಗಳಿಗೆ ವಿಶೇಷ ವಾಹನ ಪಾಸ್ಗಳನ್ನು ನೀಡಲಾಗುತ್ತದೆ. ಪಾಸ್ ಹೊಂದಿರುವವರು ಸಂಜೆ 8 ಗಂಟೆಯವರೆಗೆ ಕೇವಲ ದ್ವಿಚಕ್ರ ವಾಹನಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ. ನಾಲ್ಕು ಚಕ್ರ ಅಥವಾ ದೊಡ್ಡ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಇದೇ ಪ್ರದೇಶದಲ್ಲಿ ವ್ಯಾಪಾರ ನಡೆಸುತ್ತಿರುವ ಅಂಗಡಿಕಾರರಿಗೂ ಪಾಸ್ ನೀಡಲಾಗುತ್ತದೆ. ಪ್ರತಿ ಅಂಗಡಿಗೆ ಕೇವಲ ಒಂದು ದ್ವಿಚಕ್ರ ವಾಹನಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ. ಅಂಗಡಿಗಳಿಗೆ ಅಗತ್ಯವಿರುವ ಸರಕುಗಳನ್ನು ಬೆಳಿಗ್ಗೆ 6ರಿಂದ 10 ಗಂಟೆಯೊಳಗೆ ಮಾತ್ರ ಸಾಗಿಸಲು ಸೂಚಿಸಲಾಗಿದೆ. ರಮ್ಜಾನ್ ಬಜಾರ್ನಲ್ಲಿ ಈದ್ ಖರೀದಿ ಸಂದರ್ಭದಲ್ಲಿ ಹೆಚ್ಚಿನ ಜನಸಂದಣಿ ಮತ್ತು ಸಂಚಾರ ಒತ್ತಡ ಎದುರಾಗುವ ನಿರೀಕ್ಷೆಯಿರುವುದರಿಂದ ಸಾರ್ವಜನಿಕರು ಈ ವ್ಯವಸ್ಥೆಗೆ ಸಹಕರಿಸುವಂತೆ ಭಟ್ಕಳ ಪೊಲೀಸರು ಮನವಿ ಮಾಡಿದ್ದಾರೆ.
ಕಲಬುರಗಿಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ಸಚಿವ ಬೈರತಿ ಸುರೇಶ್
ಬೆಂಗಳೂರು : ಕಲಬುರಗಿ ನಗರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯವಿರುವ ಕಡೆಗಳಲ್ಲಿ ಬೋರ್ವೆಲ್ ತೋಡುವುದು ಹಾಗೂ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮಾಡುವ ಕ್ರಮ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದ ವೇಳೆ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಂದಿಕೂರು ಗ್ರಾಮದ ಬಳಿಯ ರೊಚ್ಚು ನೀರಿನ ಸಂಸ್ಕರಣ ಘಟಕದ ಕೆಲವು ಭಾಗಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವುದಾಗಿ ಹೇಳಿದರು. ಭೀಮಾ ನದಿಯ ಮೂಲಸ್ಥಾನದ ಮೇಲ್ಭಾಗದಲ್ಲಿರುವ ಗ್ರಾಮಗಳಿಂದ ನೈಸರ್ಗಿಕ ನಾಲಾಗಳ ಮೂಲಕ ಹರಿದುಬರುವ ತ್ಯಾಜ್ಯ ನೀರು ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಮಿಶ್ರಣವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ತಿಳಿಸಿದರು. ಈ ಸಮಸ್ಯೆ ನಿವಾರಣೆಗೆ ಎಸ್ಟಿಪಿ ಘಟಕವನ್ನು 3 ಕೋಟಿ ರೂಪಾಯಿ ವೆಚ್ಚದಲ್ಲಿ ದುರಸ್ತಿ ಮಾಡಲಾಗುತ್ತಿದೆ. ಅಲ್ಲದೆ ನೈಸರ್ಗಿಕ ನಾಲಾಗಳಿಂದ ಹರಿದುಬರುವ ತ್ಯಾಜ್ಯ ನೀರನ್ನು ಬ್ಯಾರೇಜ್ನ ತಳಭಾಗಕ್ಕೆ ಹರಿಸುವಂತೆ ಮಾಡಲು 10 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ನಗರದ ಕೆಲವು ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಬೋರ್ವೆಲ್ಗಳು ಮತ್ತು ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು. ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಿಗೆ ನಿರಂತರ ಕುಡಿಯುವ ನೀರು ಪೂರೈಕೆಗೆ ವಿಶ್ವಬ್ಯಾಂಕ್ ನೆರವಿನ ಯೋಜನೆ ಜಾರಿಗೊಳಿಸಲಾಗಿದೆ. ನಗರವನ್ನು ಭೌಗೋಳಿಕವಾಗಿ 47 ವಲಯಗಳಾಗಿ ವಿಭಜಿಸಿದ್ದು, ಪ್ರಸ್ತುತ 32 ವಲಯಗಳಲ್ಲಿ ಹಾಲಿ ಇರುವ ನೀರು ವಿತರಣಾ ಜಾಲವನ್ನು ವಿನ್ಯಾಸಕ್ಕೆ ಅನುಗುಣವಾಗಿ ಬದಲಾಯಿಸಲಾಗುತ್ತದೆ ಎಂದು ತಿಳಿಸಿದರು. ನಗರದ ಮನೆಗಳಿಗೆ ಕುಡಿಯುವ ನೀರು ಪೂರೈಕೆಗೆ 800 ಕೋಟಿ ರೂಪಾಯಿ ವೆಚ್ಚದ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ವಿಳಂಬ ಮಾಡಿದ ಗುತ್ತಿಗೆದಾರ ಸಂಸ್ಥೆಯಾದ Larsen & Toubro ಗೆ 60 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ ಎಂದರು. ಈಗಾಗಲೇ ಸುಮಾರು 8 ಸಾವಿರ ಮನೆಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದ್ದು, ಉಳಿದ ಮನೆಗಳಿಗೂ ನೀರು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಇನ್ನೂ ಕಲಬುರಗಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆಗೆ ನಾರಾಯಣಪುರ ಬ್ಯಾರೇಜ್ ನಿಂದ ನೀರು ತರಲು ಸುಮಾರು 1800 ಕೋಟಿ ರೂಪಾಯಿಗಳ ಯೋಜನೆಯನ್ನು ಈ ಬಜೆಟ್ನಲ್ಲಿ ಘೋಷಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಜೀವನ ಶೈಲಿ ಬದಲಾವಣೆಯಿಂದ ಕಾಯಿಲೆ ದೂರ ಇಡಬಹುದು.: ಡಾ. ಜಯಕೃಷ್ಣ ನಾಯಕ್
ಕಾರ್ಕಳ : ದೇಶದ ಆರ್ಥಿಕತೆಗೂ ಆರೋಗ್ಯಕ್ಕೂ ಸಂಬಂಧವಿದೆ, ಆರ್ಥಿಕವಾಗಿ ಮುಂದುವರಿದ ದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಕಡಿಮೆಯಾಗುತ್ತವೆ ಆದರೆ ಜೀವನ ಶೈಲಿಯಿಂದ ಬರುವ ಕಾಯಿಲೆಗಳು ಹೆಚ್ಚಾಗುತ್ತವೆ. ಆದ್ದರಿಂದ ಜೀವನ ಶೈಲಿಯನ್ನು ಬದಲಾಯಿಸುವುದರ ಮೂಲಕ ಕಾಯಿಲೆಯನ್ನು ದೂರ ಇಡಬಹುದು ಎಂದು ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಉದ್ಯಾವರ ಇದರ ಅಧೀಕ್ಷಕರಾದ ಡಾ. ಜಯಕೃಷ್ಣ ನಾಯಕ್ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, (ರಿ)ಕಾರ್ಕಳ ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ ಉದ್ಯಾವರ ರೋಟರಿ ಕ್ಲಬ್ ಕಾರ್ಕಳ, ಗ್ರಾಮೀಣ ರೋಟರಿ ಸಮುದಾಯದಳ ಕಲ್ಲಂಬಾಡಿ ಪದವು, ಶಾಲಾ ಅಭಿವೃದ್ಧಿ ಸಮಿತಿ ಹಳೆ ವಿದ್ಯಾರ್ಥಿ ಸಂಘ ಕಲಂಬಾಡಿ ಪದವು, ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಂಬಾಡಿ ಪದವು ಇಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡುತ್ತಾ ನಮಗೆ ಗೊತ್ತಿಲ್ಲದಂತೆ ಕಲಬೆರಕೆ ಆಹಾರವನ್ನೇ ತಿನ್ನುತ್ತಿರುವ ಈ ಕಾಲಘಟ್ಟದಲ್ಲಿ ಪ್ರತಿಯೊಬ್ಬರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಕೆನರಾ ಬ್ಯಾಂಕಿನ ಸಮಾಲೋಚಕರಾದ ಪ್ರದೀಪ್ ಬಿ. ರವರು ಸೈಬರ್ ವಂಚನೆ ಜಾಗೃತಿ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು. ವೇದಿಕೆಯಲ್ಲಿ ಎಸ್. ಡಿ.ಎಂ.ಸಿ ಅಧ್ಯಕ್ಷೆ ಸಂಗೀತಾ ಆಚಾರ್ಯ, ಮುಖ್ಯ ಶಿಕ್ಷಕ ನಾಗರಾಜ್ ಬಿ., ಗ್ರಾಮೀಣಾಭಿವೃದ್ಧಿ ಯೋಜನೆ ಒಕ್ಕೂಟ ಪದವು ವಲಯದ ಅಧ್ಯಕ್ಷ ಸುರೇಶ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಕುಲಾಲ್, ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಸುಮಾರು 240 ಜನರು ಉಚಿತ ಆರೋಗ್ಯ ಶಿಬಿರದ ಪ್ರಯೋಜನವನ್ನು ಪಡೆದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಲಯ ಮೇಲ್ವಿಚಾರಕ ಬ್ರಜೇಶ್ ಸ್ವಾಗತಿಸಿದರು. ಜ್ಞಾನವಿಕಾಸ ಕೇಂದ್ರದ ಸವಿತಾ ನಿರೂಪಿಸಿ ವಂದಿಸಿದರು.
ವರ್ಣೋತ್ಸವ ರಾಷ್ಟ್ರಮಟ್ಟದ ಸ್ಪರ್ಧೆ: ಶಿವಮೊಗ್ಗ ಕಾಲೇಜು ಚಾಂಪಿಯನ್
ಉಡುಪಿ, ಮಾ.13: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾದ್ಯಾಲಯದಲ್ಲಿ ನಡೆದ ರಾಷ್ಟ್ರ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವರ್ಣೋತ್ಸವ 2026ರಲ್ಲಿ ಶಿವಮೊಗ್ಗದ ಜವಹಾರ್ ಲಾಲ್ ನೆಹರು ನ್ಯೂ ತಾಂತ್ರಿಕ ಕಾಲೇಜು ಚಾಂಪಿಯನ್ಶಿಪ್ ಬಹುಮಾನ ಗೆದ್ದುಕೊಂಡಿತು. ಮಾ.12ರಂದು ನಡೆದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಮೂಡಬಿದ್ರಿಯ ಮಂಗಳೂರು ತಾಂತ್ರಿಕ ಮಹಾದ್ಯಾಲಯವು ದ್ವಿತೀಯ ಸ್ಥಾನದೊಂದಿಗೆ ರನ್ನರ್ಸ್ ಅಪ್ ಬಹುಮಾನ ಪಡೆದುಕೊಂಡಿತು. ಈ ವರ್ಷ ವಿಶೇಷವಾಗಿ ತಾಂತ್ರಿಕ ಸ್ಪರ್ಧೆ ಚಾಂಪಿಯನ್ಶಿಪ್ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಎನ್.ಎಂ.ಎ.ಎಂ.ಐ.ಟಿ, ನಿಟ್ಟೆ ಪಡೆದು ಕೊಂಡಿತು. ಸ್ಪರ್ಧೆಯಲ್ಲಿ ವಿವಿಧ ತಾಂತ್ರಿಕ ಮತ್ತು ಮ್ಯಾನೇಜ್ ಮೆಂಟ್ ಕಾಲೇಜುಗಳ ಸುಮಾರು 550ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ರೀಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಉಪಾಧ್ಯಕ್ಷ ಪಿ.ಶ್ರೀನಿವಾಸ ತಂತ್ರಿ, ಕಾರ್ಯದರ್ಶಿ ರತ್ನಕುಮಾರ್, ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೊ.ಡಾ.ರಾಧಾಕೃಷ್ಣ ಎಸ್.ಐತಾಳ್ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ನಾಗರಾಜ್ ಭಟ್ ಸ್ವಾಗತಿಸಿದರು. ಕಾಲೇಜಿನ ತಾಂತ್ರಿಕ ಕಾರ್ಯಕ್ರಮಗಳ ಸಂಯೋಜಕಿ ಡಾ.ರೆನಿಟಾ ಶರೋನ್ ಮೋನಿಸ್ ವರದಿಯನ್ನು ವಾಚಿಸಿದರು. ಪ್ರಾಧ್ಯಾಪಕ ರಾಘವೇಂದ್ರ ಜಿ.ಎಸ್. ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ವಾಚಿಸಿದರು. ಸಂಜೆ ಕಾಲೇಜಿನ ಯಕ್ಷಗಾನ ಸಂಘ ಯಕ್ಷಸಿಂಚನದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಿತು.
ಪೆರ್ಡೂರು ಜಾತ್ರೆ: ಮದ್ಯ ಮಾರಾಟ ನಿಷೇಧ; ಮಾಹನಗಳ ಸಂಚಾರಕ್ಕೆ ಬದಲಿ ಮಾರ್ಗ
ಉಡುಪಿ, ಮಾ.13: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ದೇಶೀಯ ಮದ್ಯ ಮಾರಾಟ) ನಿಯಮಗಳು 1968ರ ಅನ್ವಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಹಾಗೂ ವೈನ್ಶಾಪ್ ಅಂಗಡಿಗಳನ್ನು ಮಾ.16ರಂದು ಬೆಳಗ್ಗೆ 6 ಗಂಟೆಯಿಂದ ಮಾ.17ರ ಬೆಳಗ್ಗೆ 6:00 ಗಂಟೆಯವರೆಗೆ ಮುಚ್ಚುವಂತೆ ಹಾಗೂ ಮದ್ಯಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಮಾ.16 ಮುಂಜಾನೆಯಿಂದ 17ರ ಮುಂಜಾನೆವರೆಗೆ ಪೆರ್ಡೂರು ಗ್ರಾಪಂ ವ್ಯಾಪ್ತಿಯಲ್ಲಿ ಒಣದಿನವನ್ನು ಘೋಷಿಸ ಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಮಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ರಾ.ಹೆ 169(ಎ) ರ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕಾಗಿ ಮೋಟಾರು ವಾಹನ ಕಾಯ್ದೆ 1988 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮದಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮಾ.16ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗ: ರಾಷ್ಟ್ರೀಯ ಹೆದ್ದಾರಿ 169(ಎ)ರಲ್ಲಿ ಉಡುಪಿಯಿಂದ ಹೆಬ್ರಿ-ಆಗುಂಬೆ ಕಡೆಗೆ ಹೋಗುವ ವಾಹನಗಳು ಹಿರಿಯಡ್ಕ ಜಂಕ್ಷನ್ನಲ್ಲಿ ಮಾರ್ಗ ಬದಲಾಯಿಸಿ-ಕೋಟ್ನಕಟ್ಟೆ- ಹರಿಖಂಡಿಗೆ-ಬೈರಂಪಳ್ಳಿ- ಪೆರ್ಡೂರು ಮೇಲ್ಪೆಟೆ ಮಾರ್ಗವಾಗಿ ಅಥವಾ ಹಿರಿಯಡ್ಕ ಬಜೆ, ಕುಕ್ಕೆಹಳ್ಳಿ, ಪೇತ್ರಿ ಮಾರ್ಗವಾಗಿ ಹೆಬ್ರಿ, ಆಗುಂಬೆಗೆ ಸಂಚರಿಸಬೇಕು. ರಾಷ್ಟ್ರೀಯ ಹೆದ್ದಾರಿ 169(ಎ)ರಲ್ಲಿ ಆಗುಂಬೆ-ಹೆಬ್ರಿ ಕಡೆಯಿಂದ ಉಡುಪಿ ಕಡೆಗೆ ಬರುವ ವಾಹನಗಳು ಪೆರ್ಡೂರು ಮೇಲ್ಪೆಟೆ- ಬೈರಂಪಳ್ಳಿ- ಹರಿಖಂಡಿಗೆ- ಕೋಟ್ನಾಕಟ್ಟೆ- ಹಿರಿಯಡ್ಕ ಜಂಕ್ಷನ್ ಮಾರ್ಗವಾಗಿ ಉಡುಪಿಗೆ ಸಂಚರಿಸಬೇಕು. ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಹೆಬ್ರಿಯಿಂದ ಪೆರ್ಡೂರು ಮಾರ್ಗ ವಾಗಿ ಪೇತ್ರಿ-ಬ್ರಹ್ಮಾವರ ಕಡೆ ಸಂಚರಿಸುವ ವಾಹನಗಳು ಪೆರ್ಡೂರು ಮೇಲ್ಪೆಟೆಯ ಆರ್ಎಸ್ಎಸ್ ಬ್ಯಾಂಕ್ ಬಳಿ ಇರುವ ಅಲಂಗಾರು ರಸ್ತೆ ಮಾರ್ಗವಾಗಿ ಕರ್ಜೆ-ಪೇತ್ರಿ-ಬ್ರಹ್ಮಾವರ ಕಡೆಗೆ ಸಂಚರಿಸಬೇಕು. ಮಾರ್ಚ್16 ರಂದು ಸಂಜೆ 4:00 ಗಂಟೆಯಿಂದ ರಾತ್ರಿ 10:00 ಗಂಟೆವರೆಗೆ ಪೆರ್ಡೂರು ಕೆಳಪೇಟೆಯಿಂದ-ಮೇಲ್ಪೆಟೆಯ ಬಸ್ ನಿಲ್ದಾಣ ದವರೆಗೆ ವಾಹನ ಸಂಚಾರ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಅನಿಲ ವ್ಯತ್ಯಯ; ವಾರದಲ್ಲಿ ಸಮಸ್ಯೆಗೆ ಪರಿಹಾರ: ಸಂಸದ ಕೋಟ ಭರವಸೆ
ಉಡುಪಿ, ಮಾ.13: ಪಶ್ಚಿಮ ಏಷ್ಯಾ ದೇಶದ ಯುದ್ಧಭೀತಿಯಿಂದ ಉಂಟಾಗಿರುವ ಅನಿಲ ವ್ಯತ್ಯಯದಿಂದಾಗಿ ಹೊಟೇಲ್ ಮಾಲಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರಕ್ಕೆ ಪ್ರಯತ್ನಿಸಲಾಗುವುದು. ಕೇಂದ್ರ ಸರಕಾರ ಒಂದು ವಾರದೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ವಿಶ್ವಾಸವಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಉಡುಪಿ ಜಿಲ್ಲಾ ಹೋಟೇಲ್ ಮಾಲಕರ ಸಂಘದ ವತಿಯಿಂದ ನಗರದ ಡಯಾನ ಹೋಟೇಲ್ನಲ್ಲಿ ಕರೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ವಾಣಿಜ್ಯ ಬಳಕೆಯ ಅನಿಲ ಅಲಭ್ಯತೆಯ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ, ಆಹಾರ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿದ್ದು, ಒಂದು ವಾರದೊಳಗೆ ಸಮಸ್ಯೆ ಪರಿಹಾರವಾಗಲಿದೆ ಎಂದಿದ್ದಾರೆ ಎಂದರು. ಕೊಲ್ಲಿ ಪ್ರದೇಶದಲ್ಲಿ ಕಂಡುಬಂದಿರುವ ಯುದ್ಧದಿಂದ ಇಡೀ ಜಗತ್ತಿನಾ ದ್ಯಂತ ಉಂಟಾಗಿರುವ ತಾತ್ಕಾಲಿಕ ಸಮಸ್ಯೆ ಯಿದು. ಹೀಗಾಗಿ ಲಭ್ಯವಿರುವ ಅನಿಲವನ್ನು ಹೇಗೆ ಸದ್ಭಳಕೆ ಮಾಡಬೇಕು ಎಂಬ ಬಗ್ಗೆ ಚಿಂತಿಸಬೇಕು. ಇದನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳದೇ ಸಮಸ್ಯೆ ಬಗೆಹರಿಸಿಕೊಳ್ಳುವ ಕಡೆ ಗಮನಹರಿಸುವ ಅಗತ್ಯತೆ ಇದೆ ಎಂದರು. ಹೊಟೇಲ್ ಮಾಲಕ ಸಂಘದ ಪದಾಧಿಕಾರಿಗಳು ಕೊನೆಯಲ್ಲಿ ಮನವಿಯೊಂದನ್ನು ಸಂಸದರಿಗೆ ಅರ್ಪಿಸಿ ಶೀಘ್ರವಾಗಿ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದರು.
ಅನಿಲ ಸಿಲಿಂಡರ್ ಸಮಾನ ಹಂಚಿಕೆ; ಇಲ್ಲದಿದ್ದರೆ ಹೊಟೇಲ್ ಬಂದ್: ಉಡುಪಿ ಹೊಟೇಲ್ ಮಾಲಕರ ಸಂಘದ ಸಭೆ ನಿರ್ಣಯ
ಉಡುಪಿ, ಮಾ.13: ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್ಗಳನ್ನು ಕೊಡುವುದಾದರೆ ಎಲ್ಲರಿಗೂ ಅಗತ್ಯಕ್ಕ ನುಗುಣವಾಗಿ ಸಮಾನವಾಗಿ ಹಂಚಿಕೆ ಮಾಡಿ. ಇಲ್ಲದಿದ್ದರೆ ಯಾರಿಗೂ ಬೇಡ. 48 ಗಂಟೆಗಳ ಕಾಲ ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಬಂದ್ ಮಾಡೋಣ ಎಂಬ ನಿರ್ಣಯವನ್ನು ನಗರದ ಡಯಾನಾ ಹೊಟೇಲ್ ಸಭಾಂಗಣದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಹೊಟೇಲ್ ಮಾಲಕರ ಸಂಘದ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು. ಪಶ್ಚಿಮಾ ಏಶ್ಯಾ ದೇಶಗಳಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದಿಂದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ಗಳ ಕಳೆದ ಮೂರು ದಿನಗಳಿಂದ ಸಿಗುತ್ತಿಲ್ಲ. ಇದರಿಂದ ಹೊಟೇಲ್ ಉದ್ಯಮವನ್ನು ನಡೆಸುವುದೇ ಕಷ್ಟವಾಗಿದೆ. ಜಿಲ್ಲಾಧಿಕಾರಿ ಬಳಿ ನಿಯೋಗ ಹೋದರೆ, ನಮಗೆ ನಿಗದಿಯಾದ ಸಿಲಿಂಡರ್ ಗಳಲ್ಲಿ ಶೇ.25ರಷ್ಟನ್ನು ನೀಡಲು ಅವಕಾಶಕ್ಕೆ ಪ್ರಯತ್ನಿಸುವುದಾಗಿ ಉತ್ತರಿಸಿದ್ದಾರೆ ಎಂದು ಸಂಘದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ನುಡಿದರು. ನಮಗೆ ಪ್ರತಿದಿನ 3-4 ಸಿಲಿಂಡರ್ಗಳ ಅಗತ್ಯವಿದ್ದು, ಒಂದನ್ನು ನೀಡಿದರೆ ಅದರಿಂದ ಹೊಟೇಲ್ ನಡೆಸುವುದು ಹೇಗೆ. ನಮ್ಮ ನೌಕರರಿಗೆ ಅದು ಅಡುಗೆ ತಯಾರಿಸಲು ಸಾಕಾಗಬಹುದು. ಅದೆಲ್ಲಾ ಬೇಡ, ನೀಡುವುದಾದರೆ ಸಮಾನವಾಗಿ ನೀಡಲಿ. ಇಲ್ಲದಿದ್ದರೆ ಹೊಟೇಲ್ನ್ನು ಬಂದ್ ಮಾಡೋಣ. ಆಗ ನಮ್ಮ ಅಗತ್ಯತೆ ಅಧಿಕಾರಿಗಳಿಗೆ ಹಾಗೂ ಜನರಿಗೆ ತಿಳಿಯುತ್ತದೆ ಎಂದು ಸಭೆಯಲ್ಲಿ ಮಾತನಾಡಿದ ಹಲವು ಹೊಟೇಲ್ ಮಾಲಕರು ವಾದಿಸಿದರು. ಎಲ್ಲರೂ ಸೇರಿ ಒಂದು ಕಡೆ ಊಟ-ತಿಂಡಿ ತಯಾರಿಸಿ ಹೊಟೇಲ್ಗಳಿಗೆ ಹಂಚುವ ಪ್ರಸ್ತಾಪ ಬಂದರೂ, ಅದಕ್ಕೆ ಸಾಕಷ್ಟು ಮಂದಿಯಿಂದ ವಿರೋಧವೂ ಕೇಳಿಬಂತು. ಕಟ್ಟಿಗೆ, ಇಂಡಕ್ಷನ್ ಬಳಕೆಯ ಪ್ರಸ್ತಾಪ ಬಂದರೂ, ಅದು ಹೆಚ್ಚು ದಿನ ದೂಡಲು ಸಾಕಾಗದು ಎಂದು ಸಾಕಷ್ಟು ಮಂದಿ ವಾದಿಸಿದರು. ಈಗಾಗಲೇ ಹೆಚ್ಚಿನೆಲ್ಲಾ ಹೊಟೇಲ್ಗಳು ಅನಿಲ ಬಳಕೆಗೆ ಹೊಂದಿಕೊಂಡಿದ್ದು, ಇನ್ನು ಕಟ್ಟಿಗೆ ಅಥವಾ ಇತರ ಉರುವಲಿಗೆ ಹೋದರೂ ಅದರಿಂದ ಬಹಳಷ್ಟು ಸಮಸ್ಯೆ ಎದುರಾಗುತ್ತದೆ ಎಂದು ಹಲವರು ವಾದಿಸಿದರು. ಸಭೆಯಲ್ಲಿ ಭಾಗವಹಿಸಿದ ಉಡುಪಿ ಪುತ್ರನ್ ಗ್ಯಾಸ್ ಮಾಲಕ ದಿನೇಶ್ ಪುತ್ರನ್ ಮಾತನಾಡಿ, ಸೋಮವಾರದಿಂದ (ಮಾರ್ಚ್ 9) ವಿತರಣೆಗಾರರಿಗೆ ಗ್ಯಾಸ್ ಪೂರೈಕೆಯಾಗಿಲ್ಲ. ಲಭ್ಯವಿದ್ದ ಅನಿಲ ವಿತರಣೆಗೂ ನಿಯಮಗಳನ್ನು ತಂದಿದ್ದು, ಬಿಸಿಯೂಟದ ಶಾಲೆಗಳು, ಆಸ್ಪತ್ರೆಯ ಕ್ಯಾಂಟೀನ್ ಹಾಗೂ ಇಂದಿರಾ ಕ್ಯಾಂಟೀನ್ಗಳಿಗೆ ವಿತರಿಸಲು ತಿಳಿಸಿದ್ದಾರೆ. ಅಲ್ಲದೇ ಗೃಹ ಬಳಕೆ ಅನಿಲ ಬುಕ್ಕಿಂಗ್ಗೆ ಕೆಲವೊಂದು ನಿಯಮಗಳನ್ನು ತಂದಿದ್ದು, ಹೀಗಾಗಿ ಗೃಹ ಬಳಕೆಯ ಗ್ಯಾಸ್ಗೂ ಪ್ಯಾನಿಕ್ ಬುಕ್ಕಿಂಗ್ ಪ್ರಾರಂಭವಾಗಿತ್ತು. ಗೃಹ ಬಳಕೆಯ ಗ್ಯಾಸ್ ವಿತರಣೆಯಲ್ಲಿ ಯಾವುದೇ ತೊಂದರೆಯಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಾಗುತ್ತಿಲ್ಲ ಎಂದರು. ಸಭೆಯಲ್ಲಿ ಹೊಟೇಲ್ ಮಾಲಕ ಶಿವಪ್ರಸಾದ್ ಶೆಟ್ಟಿ ತಲ್ಲೂರು, ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಡಯಾನ ವಿಠರ ಪೈ, ನಾಗೇಶ್ ಭಟ್, ಲಕ್ಷ್ಮಣ್ ವಾಗ್ಳೆ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ 11,274 ಹೆಣ್ಣು ಮಕ್ಕಳಿಗೆ ಎಚ್ಪಿವಿ ಲಸಿಕೆ: ಸಂಸದ ಕೋಟ
ಉಡುಪಿ ಮಾ.13: ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ಎಚ್ಪಿವಿ ಲಸಿಕೆಯನ್ನು ನೀಡಲು ಉಡುಪಿ ಜಿಲ್ಲೆಯಲ್ಲಿ 14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ ಸುಮಾರು 11,274 ಮಕ್ಕಳನ್ನು ಗುರುತಿಸಲಾಗಿದ್ದು, 4150 ಲಸಿಕೆಗಳು ಈಗಾಗಲೇ ಸರಬರಾಜಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಲಸಿಕೆಗಳು ಲಭ್ಯವಾಗಲಿ ದೆಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತುತಿ ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಗಿರಿ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಎಚ್ಪಿವಿ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿ ಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಎಚ್ಪಿವಿ ಲಸಿಕೆ ಸಹಕಾರಿಯಾಗಿದ್ದು, ಹೆಣ್ಣು ಮಕ್ಕಳ ಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಲಸಿಕಾ ಅಭಿಯಾನ ಕಾರ್ಯಕ್ರಮವು ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಕೇಂದ್ರ ಸರಕಾರದ ಮಾರ್ಗಸೂಚಿ ಅನುಸಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತ ವಾಗಿ ಲಸಿಕೆಯನ್ನು ನೀಡಲಾಗುವುದು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯೂ ಉತ್ತಮ ಹವ್ಯಾಸ, ಪೌಷ್ಠಿಕ ಆಹಾರ ಸೇವನೆ, ನಿಯಮಿತ ದೈಹಿಕ ಚಟುವಟಿಕೆ, ದೇಹದ ತೂಕದಲ್ಲಿ ಸಮತೋಲನ ಕಾಯ್ದುಕೊಂಡಲ್ಲಿ ಆರೋಗ್ಯಯುತ ಜೀವನ ನಡೆಸಬಹುದು. ಕ್ಯಾನ್ಸರ್ ಎನ್ನುವುದು ಮಾರಣಾಂತಿಕ ಕಾಯಿಲೆಯಲ್ಲ. ಕ್ಯಾನ್ಸರ್ ಸೇರಿದಂತೆ ಯಾವುದೇ ರೋಗಗಳ ಲಕ್ಷಣಗಳು ಕಂಡುಬಂದಲ್ಲಿ ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದುಕೊಂಡಲ್ಲಿ ಗುಣಮುಖರಾಗಿ ಆರೋಗ್ಯವಂತ ಜೀವನ ನಡೆಸ ಬಹುದು ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಜಿಲ್ಲಾ ಸರ್ಜನ್ ಡಾ.ಅಶೋಕ್ ಎಚ್, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ, ಸೈಂಟ್ ಸಿಸಿಲಿ ವಿದ್ಯಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸಿಸ್ಟರ್ ಪ್ರಿಯಾ ಮರೀಯಾ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ನಿರೂಪಿಸಿ, ಚಂದ್ರಕಲಾ ವಂದಿಸಿದರು. ‘ದೇಶದಲ್ಲಿ 14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ 1 ಕೋಟಿ 15 ಲಕ್ಷ ವಿದ್ಯಾರ್ಥಿನಿಯರಿಗೆ ನೀಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಸುಮಾರು 6,89,620 ಅರ್ಹರನ್ನು ಗುರುತಿಸಲಾಗಿದೆ. ಈಗಾಗಲೇ 2,54,000 ಲಸಿಕೆಗಳನ್ನು ಆಯಾಯ ಜಿಲ್ಲಾ ಕೇಂದ್ರಕ್ಕೆ ರವಾನಿಸಲಾಗಿದೆ’ -ಕೋಟ ಶ್ರೀನಿವಾಸ ಪೂಜಾರಿ, ಸಂಸದರು
ಮರಣಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ
ಉಡುಪಿ, ಮಾ.13: ಮರಣ ಪತ್ರ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರಪುರದ ಸಾಲ್ಮರ ಎಂಬಲ್ಲಿ ನಡೆದಿದೆ. ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಅವಿವಾಹಿತ ರಾಗಿದ್ದ ಇವರು, ಕ್ಯಾಟರಿಂಗ್ನಲ್ಲಿ ಮುಖ್ಯ ಅಡುಗೆ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡ ಅವರು, ಕ್ಯಾಟರಿಂಗ್ ಶೆಡ್ ಬಳಿ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
National Highway: ಕರ್ನಾಟಕದ ವಿವಿಧ ಭಾಗಗಳಲ್ಲಿ ನಿರ್ಮಾಣವಾಗಿರುವ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ತಾಂತ್ರಿಕ ಲೋಪಗಳು ಕಂಡುಬಂದಿದೆ. ಈ ಸಂಬಂಧ ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ವಿವರ. ರಾಜ್ಯದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಲೋಪಗಳು ಕಂಡುಬಂದಿದ್ದು, ಈ
ಉಡುಪಿ, ಮಾ.13: ಉಡುಪಿ ಸಿಟಿ ಬಸ್ ನಿಲ್ದಾಣದ ಹತ್ತಿರ ಮಾ.13ರಂದು ನಸುಕಿನ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ಓರ್ವನನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊರಡಿಹಿತ್ತಲ್ಲಾ ನಿವಾಸಿ ಪ್ರಶಾಂತ ಕೆ.ವಿ.(35) ಎಂದು ಗುರುತಿಸಲಾಗಿದೆ. ಪೊಲೀಸರು ವಿಚಾರಿಸಿದಾಗ ಸಮರ್ಪಕವಾದ ಉತ್ತರವನ್ನು ನೀಡದೇ ಆತ, ಯಾವುದೇ ಅಪರಾಧ ಎಸಗಲು ಬಂದಿರುವ ಸಂಶಯದ ಮೇರೆಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತನ ವಿರುದ್ಧ ಈಗಾಗಲೇ ಶಿವಮೊಗ್ಗ ಜಿಲ್ಲೆಯ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆ ಪ್ರಕರಣ ದಲ್ಲಿ ಆತ ಸಜಾ ಬಂಧಿ ಯಾಗಿರುವುದಾಗಿ ಬೆರಳಚ್ಚು ದಾಖಲೆಯಿಂದ ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಅಬಕಾರಿ ಡಿಸಿ ಶ್ರೀನಿವಾಸ್ ಮನೆಗೆ ಲೋಕಾಯುಕ್ತ ದಾಳಿ: 8.69 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಉಡುಪಿ: ಆದಾಯಕ್ಕೆ ಮೀರಿ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು, ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್ ಟಿ.ಎಂ. ಅವರ ಮನೆ ಹಾಗೂ ಸಂಬಂಧಿತ ಸ್ಥಳಗಳ ಮೇಲೆ ದಾಳಿ ನಡೆಸಿ 8.69 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಉಡುಪಿ ಪೊಲೀಸ್ ಠಾಣೆಯಲ್ಲಿ ಸರಕಾರಿ ಅಧಿಕಾರಿಯು ತಮ್ಮ ಆದಾಯದ ಮೂಲಗಳಿಗಿಂತ ಹೆಚ್ಚು ಅಕ್ರಮ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಅದರಂತೆ ಲೋಕಾಯುಕ್ತ ಪೊಲೀಸರು, ಮಾ.11ರಂದು ಆರೋಪಿ ಅಧಿಕಾರಿಗೆ ಸಂಬಂಧಿಸಿದ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 15 ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧನಾ ಕಾರ್ಯ ನಡೆಸಿದ್ದರು. ಈ ವೇಳೆ ಆರೋಪಿಗೆ ಸಂಬಂಧಿಸಿದ ಒಟ್ಟು 11 ನಿವೇಶನಗಳು, 6 ವಾಸದ ಮನೆಗಳು, 31 ಎಕರೆ ಕೃಷಿ ಜಮೀನು ಎಲ್ಲಾ ಸೇರಿ ಒಟ್ಟು 6,90,64,716ರೂ. ಮೌಲ್ಯದ ಸ್ಥಿರ ಆಸ್ತಿ, 3,95,941ರೂ. ನಗದು, 1,47,50,506 ರೂ. ಮೌಲ್ಯದ ಚಿನ್ನಾಭರಣಗಳು, 17,00,000 ರೂ. ಮೌಲ್ಯದ ವಾಹನಗಳು, 25,75,000ರೂ. ಬ್ಯಾಂಕ್ ಠೇವಣಿ, 72,68,554 ರೂ. ಮೌಲ್ಯದ ಇತರೆ ವಸ್ತುಗಳು ಎಲ್ಲಾ ಸೇರಿ ಒಟ್ಟು 2,66,90,001ರೂ. ಚರ ಆಸ್ತಿ ಕಂಡು ಬಂದಿದೆ. ಒಟ್ಟು 8,69,23,435ರೂ. ಮೌಲ್ಯದ ಅಕ್ರಮ ಆಸ್ತಿ ಕಂಡುಬಂದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಎಲ್ಪಿಜಿ ಬಿಕ್ಕಟ್ಟು | ಲೋಕಸಭೆಯಲ್ಲಿ ವಿಪಕ್ಷಗಳಿಂದ ಪ್ರತಿಭಟನೆ
ಹೊಸದಿಲ್ಲಿ,ಮಾ.13: ಪಶ್ಚಿಮ ಏಶ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ದೇಶದಲ್ಲಿ ತಲೆದೋರಿರುವ ಎಲ್ಪಿಜಿ ಕೊರತೆಯ ಬಿಕ್ಕಟ್ಟು ಶುಕ್ರವಾರ ಲೋಕಸಭೆಯಲ್ಲಿ ಪ್ರತಿಧ್ವನಿಸಿತು. ಎಲ್ಪಿಜಿ ಕೊರತೆ ಹಾಗೂ ದರ ಏರಿಕೆಯ ಬಿಕ್ಕಟ್ಟನ್ನು ಕೇಂದ್ರ ಸರಕಾರವು ನಿಭಾಯಿಸುವಲ್ಲಿ ವಿಫಲವಾಗಿದೆಯೆಂದು ಆಪಾದಿಸಿ ಪ್ರತಿಪಕ್ಷ ಸದಸ್ಯರು ಸದನದಲ್ಲಿ ಭಾರೀ ಪ್ರತಿಭಟನೆ ನಡೆಸಿದರು. ಲೋಕಸಭೆಯ ಕಲಾಪ ಆರಂಭಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸದನದಲ್ಲಿ ಘೋಷಣೆಗಳನ್ನು ಕೂಗ ತೊಡಗಿದರು. ದೇಶಾದ್ಯಂತ ಉಂಟಾಗಿರುವ ಎಲ್ಪಿಜಿ ಕೊರತೆಯನ್ನು ನಿಭಾಯಿಸಲು ಕೇಂದ್ರ ಸರಕಾರ ವಿಫಲವಾಗಿದ್ದು, ಈ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕೆಂದು ಪಟ್ಟು ಹಿಡಿದರು. ವಿಪಕ್ಷ ಸದಸ್ಯರ ಗದ್ದಲದ ನಡುವೆ ಕಲಾಪಗಳನ್ನು ನಡೆಸುವುದೇ ಅಸಾಧ್ಯವಾಗಿ ಸ್ಪೀಕರ್ ಅವರು ಸದನವನ್ನು ಮುಂದೂಡಿದರು. ಮಧ್ಯಾಹ್ನ 12ಕ್ಕೆ ಸದನ ಮತ್ತೆ ಸೇರಿದಾಗ, ಪ್ರತಿಪಕ್ಷ ಸದಸ್ಯರು ಇದೇ ವಿಷಯವಾಗಿ ಗದ್ದಲವೆಬ್ಬಿಸಿದರು ಹಾಗೂ ಸದನದ ಮುಂಭಾಗಕ್ಕೆ ಧಾವಿಸಿ ಬಂದು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿಪಕ್ಷ ಸದಸ್ಯರು ಕಲಾಪಗಳಿಗೆ ಅಡ್ಡಿಪಡಿಸುತ್ತಿರುವುದನ್ನು ಕಟುವಾಗಿ ಖಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಜನತೆಯ ನಾಡಿಮಿಡಿತವನ್ನು ತಿಳಿದುಕೊಳ್ಳಲು ರಾಹುಲ್ಗಾಂಧಿ ಬಯಸುತ್ತಿಲ್ಲವೆಂದು ಕಿಡಿಕಾರಿದರು. ಪ್ರಧಾನ ಪ್ರತಿಪಕ್ಷವು ಸಂಸತ್ನಲ್ಲಿ ಈ ರೀತಿ ವರ್ತಿಸುತ್ತಿದ್ದರೆ, ಅವರನ್ನು ದೇಶದ ಜನತೆ ಕಠಿಣವಾಗಿ ಶಿಕ್ಷಿಸಲಿದ್ದಾರೆಂದು ಹೇಳಿದರು. ‘‘ಅವರ (ಪ್ರತಿಪಕ್ಷ) ನಾಯಕ ಬದಲಾಗಲು ಒಪ್ಪುತ್ತಿಲ್ಲ. ಸಂಸತ್ಭವನದ ಆವರಣದಲ್ಲಿ ತಟ್ಟೆ ಹಾಗೂ ಲೋಟವನ್ನು ಹಿಡಿದುಕೊಂಡು ಅವರ ನಾಯಕ ನಾಟಕವಾಡುತ್ತಿದ್ದಾರೆಂದು ರಾಹುಲ್ ಆಪಾದಿಸಿದರು. ಇಂತಹ ಪ್ರಹಸನಗಳನ್ನು ಮಾಡುವ ಮೂಲಕ ಜನತೆಯ ಗಮನವನ್ನು ಸೆಳೆಯಬಹುದೆಂದು ಅವರು ಭಾವಿಸಿದ್ದಾರೆ. ಆದರೆ ಅವರ ಬಗ್ಗೆ ದೇಶದ ಜನತೆಗೆ ಚೆನ್ನಾಗಿ ತಿಳಿದಿರುವುದಿಂದಲೇ ಅವರಿಗೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ’’ ಎಂದು ರಿಜಿಜು ವ್ಯಂಗ್ಯವಾಡಿದರು. ಸದನದಲ್ಲಿ ಕಾಂಗ್ರೆಸ್ ಸದಸ್ಯರ ನಡವಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ತಮ್ಮ ನಾಯಕ ತಾರ್ಕಿಕತೆಯಿಂದ ವರ್ತಿಸಲು ಕಾಂಗ್ರೆಸ್ ಪಕ್ಷದ ಯಾವುದೇ ಸದಸ್ಯರು ಪ್ರಯತ್ನಿಸುತ್ತಿಲ್ಲವೆಂದು ಹೇಳಿದರು. ಇನ್ನೂ ಬದಲಾಗಲು ಅವಕಾಶವಿದೆ. ಇಲ್ಲದೆ ಇದ್ದಲ್ಲಿ ದೇಶದ ಜನತೆ ನಿಮ್ಮನ್ನು ಕಠಿಣವಾಗಿ ಶಿಕ್ಷಿಸಲಿದ್ದಾರೆಂದು ರಿಜಿಜು ಕಾಂಗ್ರೆಸ್ ಸದಸ್ಯರ ವಿರುದ್ಧ ಕಿಡಿಕಾರಿದರು. ಆದರೆ ಪ್ರತಿಪಕ್ಷ ಸದಸ್ಯರು ಜಗ್ಗದೆ, ಪ್ರತಿಭಟನೆಯನ್ನು ಮುಂದುವರಿಸಿದಾಗ ಸ್ಪೀಕರ್ ಅವರು ಸದನವನ್ನು ಮುಂದಿನ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.
Kolkata Knight Riders Team - ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್ನಲ್ಲಿ ಮಿಂಚಿದ್ದ ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ ಅವರು ಇದೀಗ ಪಾಕಿಸ್ತಾನ ಸೂಪರ್ ಲೀಗ್ ತೊರೆದು ಕೆಕೆಆರ್ ತಂಡ ಸೇರಲಿದ್ದಾರೆ. ಬಿಸಿಸಿಐ ಸೂಚನೆಯಂತೆ ಕೆಕೆಆರ್ನಿಂದ ಬಿಡುಗಡೆಗೊಂಡ ಬಾಂಗ್ಲಾದೇಶದ ಮುಸ್ತಫಿಝುರ್ ರೆಹ್ಮಾನ್ ಅವರ ಸ್ಥಾನವನ್ನು 6.8 ಅಡಿ ಎತ್ತರದ ಜಿಂಬಾಬ್ವೆಯ ಮಧ್ಯಮ ವೇಗಿ ತುಂಬಲಿದ್ದಾರೆ. ಇದೇವೇಳೆ ಐಪಿಎಲ್ ನಿಂದ ಹೊರಹಾಕಲ್ಪಟ್ಟ ಮುಸ್ತಫಿಝುರ್ ರೆಹ್ಮಾನ್ ಅವರು ಈಗ ಪಿಎಸ್ಎಲ್ ನಲ್ಲಿ ಲಾಹೋರ್ ಖಲಂದರ್ಸ್ ಪರ ಆಡಲಿದ್ದಾರೆ.
ಅಡುಗೆ ಅನಿಲ ಕೊರತೆ | ಕೇಂದ್ರದ ವಿರುದ್ಧ ಸಂಸತ್ಭವನದ ಸಂಕೀರ್ಣದಲ್ಲಿ ಪ್ರತಿಪಕ್ಷ ಧರಣಿ
ಹೊಸದಿಲ್ಲಿ,ಮಾ.13: ಎಲ್ಪಿಜಿ ಕೊರತೆ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆಯೆಂದು ಆರೋಪಿಸಿ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷ ಸಂಸದರು ಶುಕ್ರವಾರ ಸಂಸತ್ಭವನದ ಸಂಕೀರ್ಣದಲ್ಲಿ ಶುಕ್ರವಾರ ಧರಣಿೆ ನಡೆಸಿದರು ಹಾಗೂ ಈ ವಿಷಯವಾಗಿ ಪೆಟ್ರೋಲಿಯಂ ಸಚಿವ ಹರದೀಪ್ ಪುರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಬೆಳಗ್ಗೆ 10:30ರ ವೇಳೆಗೆ ಟಿಎಂಸಿ ಸಂಸದರು ಸಂಸತ್ಭವನದ ಹೊರಗೆ ಪ್ರತಿಭಟನೆಯನ್ನು ಆರಂಭಿಸಿದರು. ಅಡುಗೆ ಅನಿಲದ ಸಿಲಿಂಡರ್ಗಳು ಎಲ್ಲಿಗೆ ಹೋದವು, ದೇಶದಲ್ಲಿ ಎಲ್ಪಿಜಿ ಬಿಕ್ಕಟ್ಟು ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು. ಬಳಿಕ ಟಿಎಂಸಿ ಸಂಸದರು ಜೊತೆ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಇತರ ಸದಸ್ಯರು ಜೊತೆಗೂಡಿದರು. ‘ಎಲ್ಪಿಜಿ ಸಿಲಿಂಡರ್ಗಳ ಜೊತೆ ಮೋದಿ ಕೂಡಾ ಮಾಯವಾಗಿದ್ದಾರೆ’ , ‘ಅಮೆರಿಕಕ್ಕೆ ಪ್ರಧಾನಿ ಶರಣಾಗಿದ್ದಾರೆ’ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು. ಜನರು ಗಾಬರಿಗೊಂಡಿದ್ದಾರೆ. ಪಶ್ಚಿಮಬಂಗಾಳದಲ್ಲಿಯೂ ಅಡುಗೆಅನಿಲ ಬುಕ್ಕಿಂಗ್ ವ್ಯವಸ್ಥೆ ಪತನಗೊಂಡಿದ್ದು, ವಿತರಕರು ಮ್ಯಾನುವಲ್ (ಭೌತಿಕ)ಬುಕ್ಕಿಂಗ್ ವ್ಯವಸ್ಥೆಯ ಮೊರೆ ಹೋಗಿದ್ದಾರೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ತಿಳಿಸಿದ್ದಾರೆ. ಭಾರತದಲ್ಲಿ 75 ದಿನಗಳಿಗೆ ಸಾಕಾಗುವಷ್ಟು ಎಲ್ಪಿಜಿ ಪೂರೈಕೆಯಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವರು ದೇಶದ ಜನತೆಗೆ ಸುಳ್ಳು ಹೇಳಿದ್ದಾರೆಂದು ಮೊಯಿತ್ರಾ ಆಪಾದಿಸಿದರು. ಪ್ರಧಾನಿಯವರು ಕಳೆದ ಐದು ದಿನಗಳಿಂದ ಸದನಕ್ಕೆ ಬರುತ್ತಿಲ್ಲವೆಂದು ಕಟಕಿಯಾಡಿದರು. ದೇಶವು ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಪ್ರಧಾನಿಯವರು ಕೇರಳದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ ಅವರು ಚುನಾವಣಾ ಯಂತ್ರವಾಗಿದ್ದಾರೆಯೇ ಹೊರತು ಪ್ರಧಾನಿಯಲ್ಲ. ಇದು ನಿಜಕ್ಕೂ ಲಜ್ಜೆಗೇಡು’’ ಎಂದು ಮೊಯಿತ್ರಾ ಹೇಳಿದರು.
ದತ್ತಾಂಶ ಸುರಕ್ಷತಾ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಅರ್ಜಿ : ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್
ಹೊಸದಿಲ್ಲಿ,ಮಾ.13: 2023ರ ಡಿಜಿಟಲ್ ವೈಯಕ್ತಿಕ ದತ್ತಾಂಶ ಸುರಕ್ಷತಾ ಕಾಯ್ದೆಯ ನಿಯಮವೊಂದರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಉತ್ತರಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಕೇಂದ್ರ ಸರಕಾರವನ್ನು ಕೋರಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ ಹಾಗೂ ಇದೇ ವಿಷಯಕ್ಕೆ ಸಂಬಂಧಿಸಿ ವಿಚಾರಣೆಗೆ ಬಾಕಿಯಿರುವ ಇತರ ಅರ್ಜಿಗಳ ಜೊತೆಗೆ ಅದನ್ನು ಅಡಕಗೊಳಿಸಿದೆ. 2005ರ ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದುಕೊಳ್ಳಲಾದ ವೈಯಕ್ತಿಕ ದತ್ತಾಂಶದ ಪರಿಷ್ಕರಣೆ, ವಿಶ್ಲೇಷಣೆ, ಪ್ರಸರಣೆ ಹಾಗೂ ಮರು ಪ್ರಕಟಣೆಗೆ 2023ರ ಕಾಯ್ದೆಯ ನಿಯಮಗಳು ಅನ್ವಯಿಸುವುದಿಲ್ಲವೆಂದು ಘೋಷಿಸುವಂತೆ ಆದೇಶ ನೀಡಬೇಕೆಂದು ಕೋರಿ ಅಂಜಲಿ ಭಾರದ್ವಾಜ್ ಹಾಗೂ ಅಮೃತಾ ಜೋಹ್ರಿ ಎಂಬವರು ಅರ್ಜಿ ಸಲ್ಲಿಸಿದ್ದರು. ಭ್ರಷ್ಟಾಚಾರವನ್ನು, ಸಾರ್ವಜನಿಕ ಹುದ್ದೆ ಅಥವಾ ಇಲಾಖೆಯ ದುರುಪಯೋಗವನ್ನು ಬಯಲಿಗೆಳೆಯುವರು ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ವೈಯಕ್ತಿಕ ದತ್ತಾಂಶವನ್ನು ಪ್ರಕಟಿಸುವವರಿಗೆ 2023ರ ಕಾಯ್ದೆಯ ನಿಯಮಗಳು ಅನ್ವಯವಾಗುವುದಿಲ್ಲವೆಂಬ ನಿರ್ದೇಶನ ನೀಡುವಂತೆಯೂ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು. 2023ರ ಡಿಜಿಟಲ್ ವೈಯಕ್ತಿಕ ದತ್ತಾಂಶ ಕಾಯ್ದೆಯು ಸೆಕ್ಷನ್ 44(3) ಅಸಂವಿಧಾನಿಕವಾಗಿದ್ದು, ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್8 (1)ರ ಉಪವಾಕ್ಯ (ಜೆ) ಮಾಹಿತಿಯನ್ನು ಪಡೆಯುವ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವ ಮೂಲಕ ಸಂವಿಧಾನದ 14 ಹಾಗೂ 19(1)(ಎ) ಕಲಂಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದರು. ನ್ಯಾಯಪೀಠವು ಪ್ರಕರಣದ ಆಲಿಕೆಯನ್ನು ಮಾರ್ಚ್ 23ಕ್ಕೆ ಮುಂದೂಡಿದೆ.
ಖಾಲಿ ಇರುವ 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡಲು ರೋಜ್ ಗಾರ್ ಮೇಳಗಳು ಯಾಕೆ ಸಾಕಾಗುವುದಿಲ್ಲ?
2024ರ ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರವು ಉದ್ಯೋಗಗಳನ್ನು ಸೃಷ್ಟಿಸುವುದು ಮತ್ತು ವಿವಿಧ ಸಚಿವಾಲಯಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವತ್ತ ಹೆಚ್ಚು ಗಮನಹರಿಸಲು ಪ್ರಾರಂಭಿಸಿತು. ಚುನಾವಣೆಗಳ ನಂತರದ ಮೊದಲ ಕೇಂದ್ರ ಬಜೆಟ್, ಖಾಸಗಿ ವಲಯದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವ ಇಂಟರ್ನ್ಶಿಪ್ ಕಾರ್ಯಕ್ರಮ ಸೇರಿದಂತೆ ಕೆಲವು ಯೋಜನೆಗಳನ್ನು ಘೋಷಿಸಿತು. ಅದೇ ಸಮಯದಲ್ಲಿ ಸರ್ಕಾರವು ತನ್ನ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಉದ್ಯೋಗಗಳನ್ನು ನೀಡುವ ಅಗತ್ಯಕ್ಕೆ ಹೆಚ್ಚಿನ ಗಮನ ನೀಡಲು ನಿರ್ಧರಿಸಿತು. ಕಳೆದ ವರ್ಷ ಜುಲೈನಲ್ಲಿ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಸಂಸತ್ತಿನಲ್ಲಿ, ಸರ್ಕಾರವು ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೇರ ನೇಮಕಾತಿ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸಕಾಲಿಕ ಮತ್ತು ಮುಂಗಡ ಕ್ರಮ ಕೈಗೊಳ್ಳುವಂತೆ ನಿರ್ದೇಶನಗಳನ್ನು ನೀಡಿದೆ ಎಂದು ತಿಳಿಸಿದ್ದರು. ರೋಜ್ ಗಾರ್ ಮೇಳಗಳನ್ನು ನಿಯಮಿತವಾಗಿ 45–50 ನಗರಗಳಲ್ಲಿ ಆಯೋಜಿಸಲಾಗುತ್ತಿದೆ. ಇದು ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳನ್ನು ಸಮಯೋಚಿತವಾಗಿ ಭರ್ತಿ ಮಾಡಲು ಸಹಕಾರಿಯಾಗುತ್ತದೆ ಎಂದಿದ್ದರು. ವಾಸ್ತವವಾಗಿ, ಡಿಸೆಂಬರ್ 2024ರಲ್ಲಿ ಆಯೋಜಿಸಲಾದ ರೋಜ್ ಗಾರ್ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸದಾಗಿ ನೇಮಕಗೊಂಡ ಸರ್ಕಾರಿ ಉದ್ಯೋಗಿಗಳಿಗೆ 71,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ್ದರು. ಅಕ್ಟೋಬರ್ 2024ರ ಆರಂಭದಲ್ಲಿ ಮೋದಿ ಅವರು ಮತ್ತೊಂದು ರೋಜ್ ಗಾರ್ ಮೇಳದಲ್ಲಿ ಸರ್ಕಾರಿ ಉದ್ಯೋಗಗಳಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ್ದರು. ಸರ್ಕಾರದ ಸ್ವಂತ ಅಂಕಿಅಂಶಗಳು ಆತಂಕಕಾರಿ ಪ್ರವೃತ್ತಿಯನ್ನು ತೋರಿಸಿದ್ದರಿಂದ ಈ ಗಮನವು ಅರ್ಥವಾಗುವಂತಹದ್ದಾಗಿದೆ. ಹಣಕಾಸು ಸಚಿವಾಲಯದ ಪ್ರಕಾರ, 2023ರ ಮಾರ್ಚ್ 1ರ ಹೊತ್ತಿಗೆ ಎಲ್ಲಾ ಅಧಿಕೃತ ಸರ್ಕಾರಿ ಉದ್ಯೋಗಗಳಲ್ಲಿ 24% ಕ್ಕಿಂತ ಹೆಚ್ಚು ಹುದ್ದೆಗಳು ಭರ್ತಿಯಾಗದೆ ಉಳಿದಿವೆ ಎಂದು ಅಂದಾಜಿಸಲಾಗಿದೆ. ಸುಮಾರು 4.04 ಮಿಲಿಯನ್ ಹುದ್ದೆಗಳಲ್ಲಿ ಕೇವಲ 3.06 ಮಿಲಿಯನ್ ಜನರು ಮಾತ್ರ ವಾಸ್ತವವಾಗಿ ಕೆಲಸ ಮಾಡುತ್ತಿದ್ದರು. ಇದರರ್ಥ ಸುಮಾರು 0.98 ಮಿಲಿಯನ್ (ಸುಮಾರು 10 ಲಕ್ಷ) ಹುದ್ದೆಗಳು ಖಾಲಿ ಉಳಿದಿವೆ. ಹಾಗಾದರೆ ಸರ್ಕಾರದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಅಭಿಯಾನದ ನಂತರ ಪರಿಸ್ಥಿತಿ ಸುಧಾರಿಸಿದೆಯೇ? ಆ ಪ್ರಶ್ನೆಗೆ ಉತ್ತರಿಸಲು ಪ್ರಯತ್ನಿಸುವ ಮೊದಲು, ಮೋದಿ ಸರ್ಕಾರವು ಮೇ 2014ರಲ್ಲಿ ರಚನೆಯಾದಾಗಿನಿಂದ ಈ ವಿಷಯದಲ್ಲಿ ಅದರ ಕಾರ್ಯಕ್ಷಮತೆ ಮೇಲೆ ಕಣ್ಣು ಹಾಯಿಸುವುದು ಒಳ್ಳೆಯದು. ಬಜೆಟ್ ದಾಖಲೆಗಳ ಪ್ರಕಾರ, 2015ರ ಮಾರ್ಚ್ 1ರ ಹೊತ್ತಿಗೆ ಕೇಂದ್ರ ಸರ್ಕಾರವು ಸಶಸ್ತ್ರ ಪಡೆಗಳನ್ನು ಹೊರತುಪಡಿಸಿ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.3 ಮಿಲಿಯನ್ ಜನರನ್ನು ಹೊಂದಿತ್ತು. ಕೇವಲ 10 ಇಲಾಖೆಗಳು (ರೈಲ್ವೆ, ಪರಮಾಣು ಶಕ್ತಿ, ಬಾಹ್ಯಾಕಾಶ, ಪೊಲೀಸ್, ಆರೋಗ್ಯ, ಲೆಕ್ಕಪರಿಶೋಧನೆ, ಕಂದಾಯ, ನಾಗರಿಕ ರಕ್ಷಣೆ, ಅಂಚೆ ಮತ್ತು ನಗರಾಭಿವೃದ್ಧಿ) 3.1 ಮಿಲಿಯನ್ ಜನರನ್ನು ನೇಮಿಸಿಕೊಂಡಿದ್ದು, ಇದು ಒಟ್ಟು ಸರ್ಕಾರಿ ಉದ್ಯೋಗಿಗಳ ಶೇಕಡಾ 93 ಕ್ಕಿಂತ ಹೆಚ್ಚು. ಈ ಗುಂಪಿನಲ್ಲಿ ಭಾರತೀಯ ರೈಲ್ವೆಯ ಪಾಲು (1.33 ಮಿಲಿಯನ್ ಉದ್ಯೋಗಿಗಳು) ಶೇಕಡಾ 40 ಕ್ಕಿಂತ ಹೆಚ್ಚು ಇದೆ. ಸುಮಾರು 10 ವರ್ಷಗಳ ನಂತರ, 2025ರ ಮಾರ್ಚ್ 1ರ ಹೊತ್ತಿಗೆ ಒಟ್ಟು ಸರ್ಕಾರಿ ನೌಕರರ ಸಂಖ್ಯೆ 3.3 ಮಿಲಿಯನ್ನಲ್ಲಿ ಬದಲಾಗದೆ ಉಳಿಯಿತು. ಒಟ್ಟು ಸರ್ಕಾರಿ ಕಾರ್ಯಪಡೆಯಲ್ಲಿ ಈ 10 ಇಲಾಖೆಗಳ ಪಾಲು ಕೂಡ ಹಾಗೆಯೇ ಉಳಿದಿದೆ. ಆದರೆ ಭಾರತೀಯ ರೈಲ್ವೆ ತನ್ನ ಕಾರ್ಯಪಡೆಯಲ್ಲಿ 1.21 ಮಿಲಿಯನ್ಗೆ ಇಳಿಕೆ ಕಂಡಿದ್ದು, ಇದು ಒಟ್ಟು ಉದ್ಯೋಗಿ ಬಲದ ಸುಮಾರು 37% ಅನ್ನು ಹೊಂದಿದೆ. ಇದು ಒಂದು ದಶಕದಲ್ಲಿ 100,000 ಕ್ಕೂ ಹೆಚ್ಚು ಉದ್ಯೋಗಿಗಳ ಕುಸಿತವಾಗಿದೆ. ಈ ಇಳಿಕೆಗೆ ಗುತ್ತಿಗೆ ಕಾರ್ಮಿಕರು, ಹೊರಗುತ್ತಿಗೆ ಅಥವಾ ತಂತ್ರಜ್ಞಾನದ ಬಳಕೆಯಿಂದ ಹೆಚ್ಚಿನ ಕೆಲಸಗಳನ್ನು ನಿರ್ವಹಿಸಲಾಗುತ್ತಿರುವುದೇ ಕಾರಣವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದಕ್ಕೆ ವಿರುದ್ಧವಾಗಿ ಪೊಲೀಸ್, ಕಂದಾಯ, ರಕ್ಷಣಾ (ನಾಗರಿಕ) ಮತ್ತು ಅಂಚೆ ಇಲಾಖೆಗಳು ತಮ್ಮ ಕಾರ್ಯಪಡೆಯಲ್ಲಿ ಗಣನೀಯ ಏರಿಕೆ ಕಂಡಿವೆ. ತಂತ್ರಜ್ಞಾನದ ಹೆಚ್ಚುತ್ತಿರುವ ಬಳಕೆಯ ಹೊರತಾಗಿಯೂ, ಕಂದಾಯ ಇಲಾಖೆಯಲ್ಲಿನ ಉದ್ಯೋಗಿಗಳ ಸಂಖ್ಯೆ (ನೇರ ಮತ್ತು ಪರೋಕ್ಷ ತೆರಿಗೆಗಳನ್ನು ಒಳಗೊಂಡಂತೆ) ಶೇಕಡಾ 16 ರಷ್ಟು ಏರಿಕೆಯಾಗಿದ್ದು, ಈ ಅವಧಿಯಲ್ಲಿ ಸುಮಾರು 96,500 ರಿಂದ 112,000 ಕ್ಕಿಂತ ಹೆಚ್ಚಾಗಿದೆ. ನಾಗರಿಕ ರಕ್ಷಣಾ ನೌಕರರ ಸಂಖ್ಯೆ ಬಹುತೇಕ ದ್ವಿಗುಣಗೊಂಡಿದೆ. ಆದರೆ ಕೇಂದ್ರ ಪೊಲೀಸ್ ಪಡೆಗಳು ಮತ್ತು ಅಂಚೆ ಇಲಾಖೆಯಲ್ಲಿ ಉದ್ಯೋಗಿಗಳ ಸಂಖ್ಯೆ ಏರಿಕೆಯಾಗಿದ್ದರೂ ಅದು 10% ಕ್ಕಿಂತ ಕಡಿಮೆ. 2014 ಮತ್ತು 2023ರ ನಡುವಿನ ನೇಮಕಾತಿಗೆ ಹೋಲಿಸಿದರೆ, 2023 ಮತ್ತು 2025ರ ನಡುವೆ ಸರ್ಕಾರವು ತನ್ನ ಇಲಾಖೆಗಳಿಗೆ ಸಿಬ್ಬಂದಿ ನೇಮಕಾತಿಯನ್ನು ಪ್ರಾರಂಭಿಸಿದ ರೀತಿಯಲ್ಲಿ ಆಸಕ್ತಿದಾಯಕ ಬದಲಾವಣೆ ಕಂಡುಬಂದಿದೆ. ಮೋದಿ ಸರ್ಕಾರದ ಮೊದಲ ಒಂಬತ್ತು ವರ್ಷಗಳಲ್ಲಿ ಸರ್ಕಾರಿ ನೌಕರರ ಸಂಖ್ಯೆ 2014–15ರಲ್ಲಿ 3.3 ಮಿಲಿಯನ್ನಿಂದ 2022–23ರಲ್ಲಿ 3.1 ಮಿಲಿಯನ್ಗೆ ಇಳಿದಿತ್ತು. ಆದರೆ ನಂತರದ ಎರಡು ವರ್ಷಗಳಲ್ಲಿ ಈ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. 2025ರ ಮಾರ್ಚ್ ಹೊತ್ತಿಗೆ ಅದು 3.3 ಮಿಲಿಯನ್ ಎಂದು ಅಂದಾಜಿಸಲಾಗಿದೆ. ಸರ್ಕಾರ ತನ್ನ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವತ್ತ ಗಮನಹರಿಸಿದ್ದರೂ, ಇದು ಕೇವಲ ಆರು ಪ್ರತಿಶತದಷ್ಟು ಹೆಚ್ಚಳವನ್ನು ಮಾತ್ರ ಸೂಚಿಸುತ್ತದೆ. ಲಭ್ಯವಿರುವ ಒಟ್ಟು ಉದ್ಯೋಗಗಳ ಸಂಖ್ಯೆ 4.04 ಮಿಲಿಯನ್ ಆಗಿಯೇ ಉಳಿದಿದೆ ಎಂದು ನಾವು ಭಾವಿಸಿದರೆ, ಖಾಲಿ ಹುದ್ದೆಗಳ ಪ್ರಮಾಣವು 24%ರಿಂದ 18%ಕ್ಕೆ ಇಳಿದಿದೆ. ಸರ್ಕಾರದ ಬಜೆಟ್ ದಾಖಲೆಗಳು ಮತ್ತೊಂದು ಆಸಕ್ತಿದಾಯಕ ಮಾದರಿಯನ್ನು ತೋರಿಸುತ್ತವೆ. ಪ್ರತಿ ವರ್ಷ ಬಜೆಟ್ ಮಂಡಿಸುವ ಸಮಯದಲ್ಲಿ ಹಣಕಾಸು ಸಚಿವಾಲಯವು ಆ ವರ್ಷದ ಮಾರ್ಚ್ ಆರಂಭದಲ್ಲಿ ಸರ್ಕಾರದ ಸಿಬ್ಬಂದಿ ಬಲದ ಅಂದಾಜನ್ನು ಹಾಗೂ ಹಿಂದಿನ ವರ್ಷದ ನಿಜವಾದ ಸಿಬ್ಬಂದಿ ಬಲದ ಅಂಕಿಅಂಶಗಳನ್ನು ಪ್ರಸ್ತುತಪಡಿಸುತ್ತದೆ. ಉದಾಹರಣೆಗೆ, 2025–26ರ ಬಜೆಟ್ನಲ್ಲಿ ಮಾರ್ಚ್ 2024ರ ನಿಜವಾದ ಉದ್ಯೋಗಿಗಳ ಸಂಖ್ಯೆ ಮತ್ತು ಮಾರ್ಚ್ 2025ರ ಅಂದಾಜು ತೋರಿಸಲಾಗಿದೆ. ಆದರೆ ಮುಂದಿನ ವರ್ಷದಲ್ಲಿ ಈ ಅಂದಾಜುಗಳು ನಿಜವಾದ ಸಂಖ್ಯೆಗಳಾಗಿ ಪ್ರಕಟವಾದಾಗ, ಯೋಜಿಸಿದಂತೆ ಜನರನ್ನು ನೇಮಿಸಿಕೊಳ್ಳುವ ಸರ್ಕಾರದ ಸಾಮರ್ಥ್ಯವು ಕಳಪೆಯಾಗಿದೆ ಅಥವಾ ಅಂದಾಜುಗಳು ಸ್ವಲ್ಪ ತಪ್ಪುತ್ತಿವೆ ಎಂಬುದು ಸ್ಪಷ್ಟವಾಗುತ್ತದೆ. 2025–26ರ ಬಜೆಟ್ನಲ್ಲಿ ಮಾರ್ಚ್ 1, 2025ರ ಅಂದಾಜು ಸಿಬ್ಬಂದಿ ಬಲವನ್ನು 3.65 ಮಿಲಿಯನ್ ಎಂದು ತೋರಿಸಲಾಗಿದೆ. ಆದರೆ ಒಂದು ವರ್ಷದ ನಂತರ 2026–27ರ ಬಜೆಟ್ನಲ್ಲಿ ಬಹಿರಂಗವಾದ ನಿಜವಾದ ಮಾಹಿತಿಯು ಸಿಬ್ಬಂದಿ ಬಲವನ್ನು 3.3 ಮಿಲಿಯನ್ ಎಂದು ತೋರಿಸುತ್ತದೆ. ಇದು ದೀರ್ಘಕಾಲದ ಪ್ರವೃತ್ತಿಯಾಗಿದ್ದು ಹಲವು ವರ್ಷಗಳಿಂದ ನಡೆಯುತ್ತಿದೆ. ಇತ್ತೀಚೆಗೆ ಈ ಅಂತರ ಇನ್ನಷ್ಟು ಹೆಚ್ಚಾಗಿದೆ. ಅಂದರೆ ಜನರನ್ನು ನೇಮಿಸಿಕೊಳ್ಳುವ ಸರ್ಕಾರದ ಸಾಮರ್ಥ್ಯವು ಸೀಮಿತವಾಗಿದೆ ಎಂಬುದನ್ನು ಇದು ಸೂಚಿಸುತ್ತದೆ. ಸಹಜವಾಗಿ ಸರ್ಕಾರವು ತನ್ನ ಯೋಜನೆಯ ಪ್ರಕಾರ ಕಾರ್ಯಪಡೆಯನ್ನು ನೇಮಿಸಿಕೊಳ್ಳಲು ಸಾಧ್ಯವಾಗದ ಕಾರಣ ಸ್ವಲ್ಪ ಹಣವನ್ನು ಉಳಿಸುತ್ತದೆ. ಉದಾಹರಣೆಗೆ, 2024–25ರಲ್ಲಿ ಈ ಸರ್ಕಾರಿ ನೌಕರರಿಗೆ ವೇತನ, ಭತ್ಯೆ ಮತ್ತು ಪ್ರಯಾಣಕ್ಕಾಗಿ ಪರಿಷ್ಕೃತ ಅಂದಾಜು ₹3.39 ಟ್ರಿಲಿಯನ್ ಆಗಿತ್ತು. ಆದರೆ ವಾಸ್ತವವಾಗಿ ಸರ್ಕಾರ ಇದಕ್ಕಾಗಿ ಯೋಜಿಸಿದ್ದಕ್ಕಿಂತ ಕಡಿಮೆ ಖರ್ಚು ಮಾಡಿದ್ದು, ಅಂತಿಮ ಮೊತ್ತ ಸುಮಾರು ₹3.35 ಟ್ರಿಲಿಯನ್ ಆಗಿದೆ. ಸರ್ಕಾರವು ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ದೊಡ್ಡ ಪ್ರಯತ್ನ ಮಾಡುತ್ತಿರುವಂತೆಯೇ ಆಡಳಿತಾತ್ಮಕ ಸಾಮರ್ಥ್ಯಕ್ಕೆ ಸಂಬಂಧಿಸಿದ ಈ ಸಮಸ್ಯೆಗಳು ಮಹತ್ವ ಪಡೆಯುತ್ತವೆ. ನಿಜವಾದ ಚರ್ಚೆಯು ಸರ್ಕಾರ ಹೆಚ್ಚು ಜನರನ್ನು ನೇಮಿಸಿಕೊಳ್ಳಬೇಕೇ ಬೇಡವೇ ಎಂಬುದರ ಬಗ್ಗೆ ಮಾತ್ರವಲ್ಲ. ಬದಲಾಗಿ 4 ಮಿಲಿಯನ್ ಮಂಜೂರಾದ ಹುದ್ದೆಗಳನ್ನು ಮರುಪರಿಶೀಲಿಸಬೇಕೇ? ಹೆಚ್ಚುವರಿ ನೇಮಕಾತಿಗೆ ಪ್ರಸ್ತಾವನೆಗಳನ್ನು ಮಂಡಿಸಿದ ಸಚಿವಾಲಯಗಳನ್ನು ಮತ್ತು ಆ ಗುರಿಗಳನ್ನು ತಲುಪಲು ವಿಫಲವಾದರೆ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕೇ? ಎಂಬ ಪ್ರಶ್ನೆಗಳೂ ಉದ್ಭವಿಸುತ್ತವೆ. ಈ ವರ್ಷದ ಬಜೆಟ್ ಈಗಾಗಲೇ ಸರ್ಕಾರವು ತನ್ನ ಖರ್ಚನ್ನು ನಿರ್ವಹಿಸಲು ಹೆಣಗಾಡುತ್ತಿದೆ ಎಂದು ತೋರಿಸುತ್ತಿರುವುದರಿಂದ, ಹೊಸ ಜನರನ್ನು ನೇಮಕ ಮಾಡುವ ಅದರ ಸಾಮರ್ಥ್ಯವು ಅಷ್ಟೇ ಸೀಮಿತವಾಗಿದೆ ಎಂದು ತೋರುತ್ತದೆ. ಕೃಪೆ: theprint.in
ಇರಾನ್ ನಲ್ಲಿದೆ ಅಭೇದ್ಯ 'ಮೊಸಾಯಿಕ್ ಡಿಫೆನ್ಸ್'; ಇದರ ಮಾಸ್ಟರ್ ಮೈಂಡ್ ಅಲಿ ಜಾಫರಿ ಯಾರು?
2026ರಲ್ಲಿ ಇರಾನ್ ನಲ್ಲಿ ನಡೆದ ಯುದ್ಧವು 2003ರ ಇರಾಕ್ ಯುದ್ಧದಷ್ಟು ವೇಗವಾಗಿರುತ್ತದೆ ಎಂದು ಅಮೆರಿಕ ನಿರೀಕ್ಷಿಸಿರಬಹುದು. ಆಗ ಸದ್ದಾಂ ಹುಸೇನ್ ಸೈನ್ಯವನ್ನು ಸೋಲಿಸಲು ಅಮೆರಿಕದ ಮಿಲಿಟರಿಗೆ ಕೇವಲ 26 ದಿನಗಳು ಬೇಕಾಯಿತು. ಆದರೆ ಇರಾನ್ ನಲ್ಲಿ ಯಾರೋ ಒಬ್ಬರು 2003ರ ಇರಾಕ್ ಯುದ್ಧವನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಿದ್ದರು. ಸದ್ದಾಂ ನೇತೃತ್ವದ ಆಡಳಿತದ ಪತನವಾದಂತೆ ಆಗಬಾರದು ಎಂದು ಅವರು ನಿರ್ಧರಿಸಿದ್ದರು. ಆ ವ್ಯಕ್ತಿಯೇ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ನ ಮಾಜಿ ಕಮಾಂಡರ್-ಇನ್-ಚೀಫ್ ಮೇಜರ್ ಜನರಲ್ ಮೊಹಮ್ಮದ್ ಅಲಿ ಜಾಫರಿ. ಫೆಬ್ರವರಿ 28, 2026ರಂದು ಅಮೆರಿಕ ಮತ್ತು ಇಸ್ರೇಲಿ ಪಡೆಗಳು ಇರಾನ್ ನ ಅತ್ಯುನ್ನತ ಕಮಾಂಡ್ ಶ್ರೇಣಿಗಳನ್ನು ಗುರಿಯಾಗಿಸಿಕೊಂಡು ಯುದ್ಧ ವಿಮಾನಗಳು, ಡ್ರೋನ್ ಗಳು ಮತ್ತು ನಿಖರ ಕ್ಷಿಪಣಿಗಳನ್ನು ಒಳಗೊಂಡ ಕಾರ್ಯಾಚರಣೆಯಾದ ಆಪರೇಷನ್ ಎಪಿಕ್ ಫ್ಯೂರಿಯನ್ನು ಪ್ರಾರಂಭಿಸಿದವು. ಈ ದಾಳಿಗಳಲ್ಲಿ ಇರಾನ್ ನ ಸರ್ವೋಚ್ಚ ನಾಯಕ ಆಯತುಲ್ಲಾ ಖಾಮಿನೈ, IRGC ಕಮಾಂಡರ್-ಇನ್-ಚೀಫ್ ಮೇಜರ್ ಜನರಲ್ ಮೊಹಮ್ಮದ್ ಪಕ್ ಪೋರ್, ರಕ್ಷಣಾ ಸಚಿವ ಬ್ರಿಗೇಡಿಯರ್ ಜನರಲ್ ಅಜೀಜ್ ನಾಸಿರ್ಜಾದೆ, ಸಶಸ್ತ್ರ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಸಯ್ಯದ್ ಅಬ್ದುಲ್ರಹಿಂ ಮೌಸಾವಿ ಮತ್ತು ಇತರ ಹಿರಿಯ ವ್ಯಕ್ತಿಗಳು ಹತರಾದರು. ಇನ್ಸ್ಟಿಟ್ಯೂಟ್ ಫಾರ್ ದ ಸ್ಟಡಿ ಆಫ್ ವಾರ್ ವರದಿಯ ಪ್ರಕಾರ, ಈ ದಾಳಿಗಳ ಉದ್ದೇಶವು ಇರಾನ್ ನ ಆಜ್ಞೆ ಮತ್ತು ನಿಯಂತ್ರಣ ಉಪಕರಣವನ್ನು ಛಿದ್ರಗೊಳಿಸುವುದು ಮತ್ತು ಪ್ರತೀಕಾರದ ಕ್ರಮವನ್ನು ತಡೆಯುವುದಾಗಿತ್ತು. ಆದರೆ ಅಮೆರಿಕ ಮತ್ತು ಇಸ್ರೇಲ್ ನಿರೀಕ್ಷಿಸಿದಂತೆ ಆಗಲಿಲ್ಲ. ಸಂಘರ್ಷ ಆರಂಭವಾಗಿ ಈಗ ಎರಡು ವಾರಗಳು ಕಳೆದಿವೆ. ಇರಾನ್ ನಿರಂತರವಾಗಿ ಗುಂಡು ಹಾರಿಸುತ್ತಿದ್ದು, ಮಧ್ಯಪ್ರಾಚ್ಯದ ರಾಷ್ಟ್ರಗಳ ಮೇಲೆ ದಾಳಿಯನ್ನು ನಡೆಸುತ್ತಿದೆ. ಇರಾನ್ ಈ ರೀತಿ ಮಾಡಲು ಸಾಧ್ಯವಾಗಿದ್ದು ಮೊಹಮ್ಮದ್ ಅಲಿ ಜಾಫರಿ “ಡಿಸೆಂಟ್ರಲೈಸ್ಡ್ ಮೊಸಾಯಿಕ್ ಡಿಫೆನ್ಸ್” ಎಂಬ ಪರಿಕಲ್ಪನೆಯನ್ನು ರಚಿಸಿದ್ದರಿಂದ. ತನ್ನ ನಾಯಕನ ಹತ್ಯೆಯಾದರೂ ಸೇನೆ ಹೋರಾಟವನ್ನು ಮುಂದುವರಿಸಬಹುದೆಂದು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾದ ಇರಾನ್ ನ ವಿಶೇಷ ಸಿದ್ಧಾಂತವಾಗಿದೆ ಇದು. ಫೆಬ್ರವರಿ 28ರಂದು ಜಂಟಿ ದಾಳಿ ನಡೆದ ತಕ್ಷಣ ಇರಾನ್ ನಿಂದ ಪ್ರತೀಕಾರ ಆರಂಭವಾಯಿತು. ಕೆಲವೇ ಗಂಟೆಗಳಲ್ಲಿ ಬಹರೇನ್, ಖತರ್, ಯುಎಇ, ಕುವೈತ್ ಮತ್ತು ಜೋರ್ಡಾನ್ ನಲ್ಲಿರುವ ಯುಎಸ್ ಮಿಲಿಟರಿ ಸೌಲಭ್ಯಗಳ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್ ಗಳ ದಾಳಿ ನಡೆದವು. ಇಸ್ರೇಲ್ ಮತ್ತು ಮಿತ್ರಪಕ್ಷದ ಗಲ್ಫ್ ಮೂಲಸೌಕರ್ಯಗಳ ಮೇಲೂ ದಾಳಿ ನಡೆಯಿತು. ಒಮಾನ್ ಮತ್ತು ಬಹರೇನ್ನಂತಹ ತಟಸ್ಥ ರಾಷ್ಟ್ರಗಳ ಮೇಲೆ ದಾಳಿ ಮಾಡಿದ್ದಕ್ಕಾಗಿ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಕ್ಷಮೆಯಾಚಿಸಿದ್ದು, ಗಲ್ಫ್ ರಾಷ್ಟ್ರಗಳ ಸಾರ್ವಭೌಮತ್ವವನ್ನು ಗೌರವಿಸುವ ಭರವಸೆ ನೀಡಿದ್ದಾರೆ. ಮಾರ್ಚ್ 13ರಂದು ಯುದ್ಧವು 14ನೇ ದಿನಕ್ಕೆ ಕಾಲಿಟ್ಟಿದ್ದು ದಾಳಿಗಳು ಮುಂದುವರಿದಿವೆ. ಇರಾನ್ ನ ತ್ವರಿತ ಪ್ರತೀಕಾರ, ದೇಶವು ಇನ್ನೇನು ಸೋಲುತ್ತದೆ ಎಂದು ಭಾವಿಸಿದ ಜನರನ್ನು ಆಶ್ಚರ್ಯಚಕಿತರನ್ನಾಗಿಸಿತು. ಮಾರ್ಚ್ 1ರಂದು Xನಲ್ಲಿ ಪೋಸ್ಟ್ ಮಾಡಿದ ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಘ್ಚಿ ಇರಾನ್ ನ ರಕ್ಷಣಾ ಕಾರ್ಯತಂತ್ರವನ್ನು ಈ ರೀತಿ ವಿವರಿಸಿದ್ದಾರೆ: “ನಮ್ಮ ಪೂರ್ವ ಮತ್ತು ಪಶ್ಚಿಮದಲ್ಲಿ ಅಮೆರಿಕದ ಮಿಲಿಟರಿಯ ಸೋಲುಗಳನ್ನು ಅಧ್ಯಯನ ಮಾಡಲು ನಮಗೆ ಎರಡು ದಶಕಗಳು ಸಿಕ್ಕಿವೆ. ನಾವು ಅದಕ್ಕೆ ತಕ್ಕಂತೆ ಪಾಠಗಳನ್ನು ಸೇರಿಸಿದ್ದೇವೆ. ನಮ್ಮ ರಾಜಧಾನಿಯಲ್ಲಿನ ಬಾಂಬ್ ದಾಳಿಗಳು ಯುದ್ಧ ನಡೆಸುವ ನಮ್ಮ ಸಾಮರ್ಥ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಡಿಸೆಂಟ್ರಲೈಸ್ಡ್ ಮೊಸಾಯಿಕ್ ಡಿಫೆನ್ಸ್ ಯುದ್ಧ ಯಾವಾಗ ಮತ್ತು ಹೇಗೆ ಕೊನೆಗೊಳ್ಳುತ್ತದೆ ಎಂಬುದನ್ನು ನಿರ್ಧರಿಸಲು ನಮಗೆ ಅನುವು ಮಾಡಿಕೊಡುತ್ತದೆ.” ಇರಾನ್ ನ ಮಿಲಿಟರಿ ಘಟಕಗಳು ಸ್ವತಂತ್ರವಾಗಿಯೂ ಸ್ವಲ್ಪಮಟ್ಟಿಗೆ ಪ್ರತ್ಯೇಕವಾಗಿಯೂ ಇವೆ. ಇವು ಈ ಮೊದಲು ಪೂರ್ವಸ್ಥಾಪಿತ ಸಾಮಾನ್ಯ ಸೂಚನೆಗಳ ಮೇಲೆ ಕಾರ್ಯನಿರ್ವಹಿಸುತ್ತಿದ್ದವು ಎಂದು ಅರಾಘ್ಚಿ ಹೇಳಿದ್ದಾರೆ. ಇರಾನ್ ನ ಡಿಸೆಂಟ್ರಲೈಸ್ಡ್ ಮೊಸಾಯಿಕ್ ಡಿಫೆನ್ಸ್ ಪರಿಕಲ್ಪನೆಯ ಮಾಸ್ಟರ್ ಮೈಂಡ್ ಮೇಜರ್ ಜನರಲ್ ಮೊಹಮ್ಮದ್ ಅಲಿ ಜಾಫರಿ. ಇರಾನ್ ನ ಉನ್ನತ ನಾಯಕರ ಹತ್ಯೆಯಾಗಿದ್ದರೂ ದೇಶವು ತನ್ನನ್ನು ಉಳಿಸಿಕೊಳ್ಳಬಹುದೆಂದು ಖಚಿತಪಡಿಸಿಕೊಳ್ಳಲು ಅವರು ವರ್ಷಗಳ ಕಾಲ ಹೋರಾಟದ ವಿಧಾನವನ್ನು ಬದಲಾಯಿಸಿದರು. ಈ ಯೋಜನೆಯು ಇರಾನ್ ಯುದ್ಧವನ್ನು “ಗೆಲ್ಲಲು” ಸಹಾಯ ಮಾಡದಿರಬಹುದು, ಆದರೆ ಅದು ಅವರ ಸೋಲನ್ನು ಅಸಾಧ್ಯವಾಗಿಸುತ್ತದೆ. ►ಮೇಜರ್ ಜನರಲ್ ಮೊಹಮ್ಮದ್ ಅಲಿ ಜಾಫರಿ ಯಾರು? ಜನರಲ್ ಜಾಫರಿ ಇರಾನಿನ ಮಿಲಿಟರಿ ಅಧಿಕಾರಿಯಾಗಿದ್ದು, ಇಸ್ಲಾಮಿಕ್ ಕ್ರಾಂತಿಯ ನಂತರ ಇರಾನ್ ನ ಕುರ್ದಿಸ್ತಾನ್ ಪ್ರಾಂತ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ IRGCಯ ಗುಪ್ತಚರ ಘಟಕದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. RAND ಸಂಸ್ಥೆಯ 2013ರ ವರದಿಯ ಪ್ರಕಾರ, ಈ ಕ್ರಾಂತಿಯೇ ಪಹ್ಲವಿ ರಾಜವಂಶವನ್ನು ಅಧಿಕಾರದಿಂದ ಕೆಳಗಿಳಿಸಿತ್ತು. ಜನರಲ್ ಜಾಫರಿ 1979 ಮತ್ತು 1989ರ ನಡುವಿನ ಇರಾನ್–ಇರಾಕ್ ಯುದ್ಧದಲ್ಲಿ ಹೋರಾಡಿದರು. ಆ ಹತ್ತು ವರ್ಷಗಳ ಯುದ್ಧದಲ್ಲಿ ಅವರಿಗೆ ಹಲವು ಬಾರಿ ಬಡ್ತಿ ನೀಡಲಾಯಿತು. ಯುದ್ಧದ ನಂತರ ಅವರನ್ನು 1992ರಲ್ಲಿ IRGC ಭೂಪಡೆಗಳ ಕಮಾಂಡರ್ ಆಗಿ ನೇಮಿಸಲಾಯಿತು. ಜೊತೆಗೆ ಟೆಹ್ರಾನ್ ನ ರಕ್ಷಣೆಗೆ ನಿಯೋಜಿಸಲಾದ ಗಣ್ಯ IRGC ಘಟಕವಾದ ಸರಲ್ಲಾಹ್ನ ಕಮಾಂಡರ್ ಆಗಿಯೂ ನೇಮಕ ಮಾಡಲಾಯಿತು. 2005ರಲ್ಲಿ ಅವರನ್ನು ಗಾರ್ಡ್ಸ್ ಸೆಂಟರ್ ಫಾರ್ ಸ್ಟ್ರಾಟೆಜಿಕ್ ಸ್ಟಡೀಸ್ ನ ನಿರ್ದೇಶಕರನ್ನಾಗಿ ನೇಮಿಸಲಾಯಿತು. ಯುಎಸ್ ಇನ್ಸ್ಟಿಟ್ಯೂಟ್ ಆಫ್ ಪೀಸ್ನ ವರದಿಯ ಪ್ರಕಾರ, ಜಾಫರಿ ನಿರ್ದೇಶಕರಾಗಿದ್ದಾಗ “ಮೊಸಾಯಿಕ್ ಸಿದ್ಧಾಂತ”ವನ್ನು ರಚಿಸಲು ತಮ್ಮ ಸಮಯವನ್ನು ಬಳಸಿಕೊಂಡರು. ಇರಾನ್–ಇರಾಕ್ ಯುದ್ಧದ ಸಮಯದಲ್ಲಿ ಏನಾಯಿತು ಮತ್ತು 2003ರಲ್ಲಿ “ಆಪರೇಷನ್ ಇರಾಕಿ ಫ್ರೀಡಂ” ಸಮಯದಲ್ಲಿ ಯುಎಸ್ ನೇತೃತ್ವದ ಪಡೆಗಳು ಇರಾಕ್ ಅನ್ನು ಹೇಗೆ ತ್ವರಿತವಾಗಿ ವಶಪಡಿಸಿಕೊಂಡವು ಎಂಬುದನ್ನು ಅಧ್ಯಯನ ಮಾಡುವ ಮೂಲಕ ಅವರು ಈ ತಂತ್ರವನ್ನು ರೂಪಿಸಿದರು. ತರುವಾಯ ಅವರನ್ನು 2007ರಲ್ಲಿ IRGCಯ ಕಮಾಂಡರ್-ಇನ್-ಚೀಫ್ ಆಗಿ ನೇಮಿಸಲಾಯಿತು. ಅವರು ಆ ಪಾತ್ರದಲ್ಲಿ ವರ್ಷಗಟ್ಟಲೆ “ಮೊಸಾಯಿಕ್ ರಕ್ಷಣಾ” ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಕಳೆದರು. ಈ ತಂತ್ರವು ಇರಾನ್ ಅಮೆರಿಕ ಮತ್ತು ಇಸ್ರೇಲಿ ದಾಳಿಗಳ ವಿರುದ್ಧ ಹೋರಾಡಲು ಈಗ ಪ್ರಮುಖ ಕಾರಣವಾಗಿದೆ. ►ಇರಾನ್ ನ ಮೊಸಾಯಿಕ್ ಡಿಫೆನ್ಸ್ ಹೇಗಿರುತ್ತದೆ? “ಮೊಸಾಯಿಕ್ ಡಿಫೆನ್ಸ್” ಎಂಬುದು ಇರಾನ್ ನ ಮಿಲಿಟರಿಯನ್ನು ಅನೇಕ ಸಣ್ಣ, ಸ್ವತಂತ್ರ ಗುಂಪುಗಳಾಗಿ ವಿಭಜಿಸುವ ಯೋಜನೆಯಾಗಿದೆ. ಎಲ್ಲವನ್ನೂ ನಡೆಸುವ ಒಂದು ಕೇಂದ್ರ ಅಥವಾ ಪ್ರಧಾನ ಕಚೇರಿಯನ್ನು ಹೊಂದುವ ಬದಲು ಇಲ್ಲಿ ಅಧಿಕಾರವು ಹರಡಿಕೊಂಡಿರುತ್ತದೆ. ದಾಳಿಯಲ್ಲಿ ದೇಶದ ಉನ್ನತ ನಾಯಕರನ್ನು ಹತ್ಯೆ ಮಾಡಿದರೂ ಉಳಿದ ಮಿಲಿಟರಿ ಪಡೆ ಮಂಕಾಗುವುದಿಲ್ಲ. ಅದು ಸ್ವಂತವಾಗಿ ಹೋರಾಟವನ್ನು ಮುಂದುವರಿಸಬಹುದು ಎಂದು ಇದು ಖಚಿತಪಡಿಸುತ್ತದೆ. ಈ ಮಾದರಿಯಡಿಯಲ್ಲಿ IRGC, ಬಸಿಜ್, ನಿಯಮಿತ ಸೇನಾ ಘಟಕಗಳು, ಕ್ಷಿಪಣಿ ಪಡೆಗಳು, ನೌಕಾಪಡೆ ಮತ್ತು ಸ್ಥಳೀಯ ಕಮಾಂಡ್ ರಚನೆಗಳು ವಿತರಣಾ ವ್ಯವಸ್ಥೆಯ ಭಾಗಗಳನ್ನು ರೂಪಿಸುತ್ತವೆ. ಒಂದು ಭಾಗದ ಮೇಲೆ ದಾಳಿಯಾದರೂ ಇತರರು ಕಾರ್ಯನಿರ್ವಹಿಸುತ್ತಲೇ ಇರುತ್ತಾರೆ. ಹಿರಿಯ ನಾಯಕರು ಕೊಲ್ಲಲ್ಪಟ್ಟರೂ ಹೋರಾಟ ಮುಂದುವರಿಯುತ್ತದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ IRGC ಅನ್ನು 31 ಪ್ರಾಂತೀಯ ಕಮಾಂಡ್ ಗಳಾಗಿ ಸಂಘಟಿಸಲಾಗಿದೆ. ಪ್ರತಿ ಪ್ರಾಂತೀಯ ಕಮಾಂಡ್ ತನ್ನದೇ ಆದ ಶಸ್ತ್ರಾಸ್ತ್ರಗಳು, ಗುಪ್ತಚರ ಮತ್ತು ಕಮಾಂಡ್ ವ್ಯವಸ್ಥೆಗಳೊಂದಿಗೆ ಮಿಲಿಟರಿ ಘಟಕವಾಗಿ ಕಾರ್ಯನಿರ್ವಹಿಸುತ್ತದೆ. ಉನ್ನತ ನಾಯಕತ್ವದಿಂದ ಸಂವಹನ ಕಡಿತಗೊಂಡರೂ ಸ್ಥಳೀಯ ಘಟಕಗಳು ತಮ್ಮದೇ ಆದ ಮೇಲೆ ಕಾರ್ಯನಿರ್ವಹಿಸುವ ಅಧಿಕಾರ ಮತ್ತು ಸಾಮರ್ಥ್ಯವನ್ನು ಈ ಸಿದ್ಧಾಂತ ಒದಗಿಸುತ್ತದೆ. 2010ರ ಯುಎಸ್ ಇನ್ಸ್ಟಿಟ್ಯೂಟ್ ಆಫ್ ಪೀಸ್ ವರದಿಯ ಪ್ರಕಾರ, ಇರಾನ್ ನ ಮೊಸಾಯಿಕ್ ಡಿಫೆನ್ಸ್ ಡಾಕ್ಟ್ರಿನ್ ಇರಾನ್–ಇರಾಕ್ ಯುದ್ಧದ ಅನುಭವ ಮತ್ತು 2003ರಲ್ಲಿ ಇರಾಕ್ ಮೇಲೆ ನಡೆದ ಅಮೆರಿಕದ ಆಕ್ರಮಣದ ಅವಲೋಕನಗಳ ಮೇಲೆ ಆಧಾರಿತವಾಗಿದೆ. ಇರಾನ್–ಇರಾಕ್ ಯುದ್ಧವು ದೀರ್ಘ ಯುದ್ಧವಾಗಿತ್ತು. ಇದರಲ್ಲಿ ಇರಾಕಿಗಳು ಇರಾನ್ ಮೇಲೆ ನೆಲದ ಆಕ್ರಮಣ ನಡೆಸಿ, ಇರಾನಿನ ಪಡೆಗಳ ವಿರುದ್ಧ ರಾಸಾಯನಿಕ ದಾಳಿಗಳು ಮತ್ತು ನಗರಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಇರಾಕಿ ಸೈನ್ಯದ ಮೇಲೆ ಏಕಕಾಲದಲ್ಲಿ ದಾಳಿ ಮಾಡಲು ಹೆಚ್ಚಿನ ಸಂಖ್ಯೆಯ ಸೈನಿಕರನ್ನು, ವಿಶೇಷವಾಗಿ ಬಸಿಜ್ ಗುಂಪನ್ನು, ಕಳುಹಿಸುವ ಮೂಲಕ ಪ್ರತಿದಾಳಿ ನಡೆಸಿತು. ಇನ್ಸ್ಟಿಟ್ಯೂಟ್ ಆಫ್ ಪೀಸ್ ಪ್ರಕಾರ, ಈ ಯೋಜನೆಯು ಇರಾನ್ ಅನೇಕ ಸೈನಿಕರನ್ನು ಕಳೆದುಕೊಂಡ ನಂತರವೂ ಹೋರಾಟ ಮುಂದುವರಿಸಲು ಅವಕಾಶ ಮಾಡಿಕೊಟ್ಟಿತು. ಯುದ್ಧವು ಎರಡೂ ಕಡೆಯವರು ಗೆಲ್ಲಲು ಸಾಧ್ಯವಾಗದೆ ‘ಸಮ’ ಸ್ಥಿತಿಗೆ ತಲುಪುವವರೆಗೆ ಅವರು ಬಲವಾದ ಇರಾಕಿ ಸೈನ್ಯವನ್ನು ದಣಿಸುವಲ್ಲಿ ಯಶಸ್ವಿಯಾದರು. ದೀರ್ಘಕಾಲದವರೆಗೆ ಹೆಚ್ಚು ಬಲವಾದ ಶತ್ರುವಿನ ಬಲವನ್ನು ನಿಧಾನವಾಗಿ ಬರಿದುಮಾಡುವ ಮೂಲಕ ಸೋಲನ್ನು ತಪ್ಪಿಸುವ ಈ ತಂತ್ರವು ಮೊಸಾಯಿಕ್ ಸಿದ್ಧಾಂತದ ಪ್ರಮುಖ ಭಾಗವಾಗಿದೆ. ಜಾಫರಿ 2003ರಲ್ಲಿ ಇರಾಕ್ ಮೇಲೆ ನಡೆದ ಅಮೆರಿಕದ ಆಕ್ರಮಣವನ್ನೂ ಎಚ್ಚರಿಕೆಯಿಂದ ಅಧ್ಯಯನ ಮಾಡಿದರು. RAND ಸಂಸ್ಥೆಯ ವರದಿಯ ಪ್ರಕಾರ, 2003ರಲ್ಲಿ ಇರಾಕಿನ ಸರ್ವಾಧಿಕಾರಿ ಸದ್ದಾಂ ಹುಸೇನ್ ಸುತ್ತ ಹೆಚ್ಚು ಕೇಂದ್ರೀಕೃತವಾಗಿದ್ದ ಕಮಾಂಡ್ ರಚನೆಯಿಂದಾಗಿ ಇರಾಕಿ ಪಡೆಗಳು ಸಿಲುಕಿಕೊಂಡವು. ಏಕೆಂದರೆ ಪ್ರತಿಯೊಂದು ನಿರ್ಧಾರವೂ ಉನ್ನತ ನಾಯಕ ಸದ್ದಾಂ ಹುಸೇನ್ ಅವರಿಂದಲೇ ಬರಬೇಕಾಗಿತ್ತು. ವರದಿಯ ಪ್ರಕಾರ, ಇದು ನಿಯಮಿತ ಇರಾಕಿ ಸೈನ್ಯ ಮತ್ತು ರಿಪಬ್ಲಿಕನ್ ಗಾರ್ಡ್ ಘಟಕಗಳು ಪರಸ್ಪರ ಸಮನ್ವಯ ಸಾಧಿಸುವುದನ್ನು ಅಡ್ಡಿಪಡಿಸಿತು. ಡಿವಿಷನ್ ಮತ್ತು ಕಾರ್ಪ್ಸ್ ಮಟ್ಟದ ಅಧಿಕಾರಿಗಳು ಸದ್ದಾಂ ಅವರ ಅನುಮೋದನೆಯಿಲ್ಲದೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿರಲಿಲ್ಲ. ಇದರಿಂದಾಗಿ ಇರಾಕಿ ಸೈನ್ಯವು ಸ್ವಂತವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿಲ್ಲ ಮತ್ತು ಅಮೆರಿಕ ನೇತೃತ್ವದ ಆಕ್ರಮಣವನ್ನು ತಡೆಯುವಲ್ಲಿ ವಿಫಲವಾಯಿತು. 2010ರ ವರದಿಯ ಪ್ರಕಾರ, ಈ ತ್ವರಿತ ಸೋಲು ಜಾಫರಿ ಮತ್ತು ಇತರ ಇರಾನಿನ ಅಧಿಕಾರಿಗಳಿಗೆ ಒಂದು ಪ್ರಮುಖ ಪಾಠ ನೀಡಿತು. ತಮ್ಮ ಮಿಲಿಟರಿ ಪಡೆಗಳು IRGC ಮತ್ತು ನಿಯಮಿತ ಸೈನ್ಯ) ಸ್ವತಂತ್ರವಾಗಿ ಹೋರಾಡಬಹುದೆಂದು ಖಚಿತಪಡಿಸಿಕೊಳ್ಳಬೇಕು ಎಂಬುದನ್ನು ಅವರು ಅರಿತುಕೊಂಡರು. ಸೈನಿಕರು ಪ್ರಧಾನ ಕಚೇರಿಯೊಂದಿಗೆ ಸಂಪರ್ಕ ಕಳೆದುಕೊಂಡರೂ ಸಹ ಹೋರಾಟದಿಂದ ಹಿಂಜರಿಯದ ವ್ಯವಸ್ಥೆಯನ್ನು ಅವರು ಬಯಸಿದರು. ಅದೀಗ ಡಿಸೆಂಟ್ರಲೈಸ್ಡ್ ಮೊಸಾಯಿಕ್ ಡಿಫೆನ್ಸ್ ಮೂಲಕ ಸಾಧ್ಯವಾಗುತ್ತಿದೆ.
ಯುದ್ಧವನ್ನು ಟ್ರಂಪ್ ತಪ್ಪಾಗಿ ಲೆಕ್ಕಾಚಾರ ಮಾಡಿದ್ದಾರೆ: ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಟೀಕೆ
ವಾಶಿಂಗ್ಟನ್, ಮಾ.13: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಮುಂದುವರಿದಂತೆ, ಅಮೆರಿಕವು ಆರ್ಥಿಕವಾಗಿ ಹಾಗೂ ಶಸ್ತ್ರಾಸ್ತ್ರಗಳ ವಿಷಯದಲ್ಲಿ ಭಾರೀ ಹಾನಿಯನ್ನು ಎದುರಿಸುತ್ತಿದೆ. ಆದರೆ ಇರಾನ್ ಹಿಂದೆ ಸರಿಯುವ ಯಾವುದೇ ಲಕ್ಷಣಗಳನ್ನು ತೋರಿಸಿಲ್ಲ. ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆಯೇ, ಇರಾನ್ನಲ್ಲಿನ ಪರಿಸ್ಥಿತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಪ್ಪಾಗಿ ಲೆಕ್ಕಾಚಾರ ಮಾಡಿದ್ದಾರೆ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಟೀಕಿಸಿದ್ದಾರೆ. ವೆನೆಝುವೆಲಾದಲ್ಲಿ ನಡೆದಂತೆಯೇ ಇರಾನ್ನಲ್ಲೂ ಕ್ಷಿಪ್ರವಾಗಿ ಆಡಳಿತ ಬದಲಾವಣೆಯನ್ನು ಪ್ರಚೋದಿಸಬಹುದು ಎಂದು ಟ್ರಂಪ್ ನಂಬಿರುವಂತೆ ತೋರುತ್ತದೆ. ಆದರೆ ಈ ಹೋಲಿಕೆ ಆಳವಾಗಿ ತಪ್ಪು ದಾರಿಗೆ ಎಳೆಯಿತು. ಸಂಘರ್ಷವನ್ನು ನಿಭಾಯಿಸುವಲ್ಲಿ ಟ್ರಂಪ್ ದೀರ್ಘಾವಧಿಯ ಕಾರ್ಯತಂತ್ರದ ಯೋಜನೆಯನ್ನು ಹೊಂದಿಲ್ಲ. ಅಧ್ಯಕ್ಷರು ವಿವರವಾದ ಯೋಜನೆಯಿಲ್ಲದೆ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ಅವರು ಕಾರ್ಯತಂತ್ರದ ಚಿಂತನೆಯನ್ನು ಅನುಸರಿಸುವುದಿಲ್ಲ ಎಂದು ಬೋಲ್ಟನ್ ಹೇಳಿದ್ದಾರೆ ಎಂದು ‘ಇಂಡಿಯಾ ಟುಡೆ’ ವರದಿ ಮಾಡಿದೆ. ಟ್ರಂಪ್ ಅವರ ಮೊದಲ ಅವಧಿಯಲ್ಲಿ ಬೋಲ್ಟನ್ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.
ಅನಿಲಕ್ಕೆ ಪರ್ಯಾಯವಾಗಿ ಇತರೆ ಉರುವಲುಗಳ ಬಳಕೆಗೆ ಪ್ರಯತ್ನಿಸಿ: ಹೊಟೇಲ್ ಉದ್ಯಮಿಗಳಿಗೆ ಉಡುಪಿ ಡಿಸಿ ಕರೆ
ವಾಣಿಜ್ಯ ಅನಿಲ ಸಿಲಿಂಡರ್ ಸಮಸ್ಯೆ ಕುರಿತು ಸಭೆ
ಕಂದಾಯ ಭೂಮಿಯ ಅನಧಿಕೃತ ಬಡಾವಣೆಗಳ ‘ಬಿ' ಖಾತಾ ಸಮಸ್ಯೆ ಪರಿಹಾರಕ್ಕೆ ಕ್ರಮ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ ಕಂದಾಯ ಭೂಮಿಗಳಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಬಡಾವಣೆಗಳ ನಿವೇಶನಗಳಿಗೆ ‘ಬಿ' ಖಾತಾ ನೀಡುವ ಮತ್ತು ತೆರಿಗೆ ವಿಧಿಸುವ ಕುರಿತು ಸರ್ಕಾರವು ಅಗತ್ಯ ಕ್ರಮ ವಹಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಎಚ್.ಎಸ್.ಗೋಪಿನಾಥ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ಅಧಿನಿಯಮ, 2025ರ ಅನ್ವಯ, ಅನುಮೋದಿತವಲ್ಲದ ಲೇಔಟ್ಗಳಲ್ಲಿರುವ ನಿವೇಶನ ಹಾಗೂ ಕಟ್ಟಡಗಳಿಗೆ ಆಸ್ತಿ ತೆರಿಗೆ ವಿಧಿಸಲು ಸರಕಾರ ನಿರ್ಧರಿಸಿದೆ. ಇಂತಹ ಅನಧಿಕೃತ ಆಸ್ತಿಗಳಿಗೆ ಮೊದಲ ವರ್ಷದ ತೆರಿಗೆಯ ಎರಡು ಪಟ್ಟು ದಂಡ ವಿಧಿಸಲಾಗುವುದು. ನಂತರದ ವರ್ಷಗಳಲ್ಲಿ ಸಾಮಾನ್ಯ ತೆರಿಗೆಯನ್ನು ಮಾತ್ರ ಸಂಗ್ರಹಿಸಲಾಗುತ್ತದೆ ಎಂದರು. ಈ ಆಸ್ತಿಗಳನ್ನು ಪ್ರತ್ಯೇಕ ರಿಜಿಸ್ಟರ್ನಲ್ಲಿ(ಬಿ-ಖಾತಾ ಮಾದರಿ) ದಾಖಲಿಸಲಾಗುವುದು. ಆದರೆ, ಇದು ಆಸ್ತಿಯನ್ನು ಸಂಪೂರ್ಣವಾಗಿ ಸಕ್ರಮಗೊಳಿಸಿದಂತೆ ಪರಿಗಣಿತವಾಗುವುದಿಲ್ಲ. ಲೇಔಟ್ ವಿನ್ಯಾಸ ಅನುಮೋದನೆ ಇಲ್ಲದಿದ್ದರೂ, ಮೂಲಭೂತ ಸೌಕರ್ಯಗಳನ್ನು ಪಂಚಾಯತ್ಗೆ ಹಸ್ತಾಂತರಿಸಿದ ನಿವೇಶನಗಳನ್ನು ಮಾಲಕರ ಹೆಸರಿನಲ್ಲಿ ಏಕ ನಿವೇಶನವೆಂದು ಪರಿಗಣಿಸಲು ನಿಯಮ 8(2)(4)ರಡಿ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು. ಸಾರ್ವಜನಿಕರಿಗೆ ಎದುರಾಗುತ್ತಿರುವ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ, 2025ರ ಹೊಸ ನಿಯಮಗಳ ಅಡಿಯಲ್ಲಿ ತುರ್ತು ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ರಶ್ಯದ ತೈಲದ ಮೇಲಿನ ನಿರ್ಬಂಧ ತಾತ್ಕಾಲಿಕ ತೆರವು, ಎಪ್ರಿಲ್ 11ರವರೆಗೆ ಅನ್ವಯ: ಅಮೆರಿಕ ಘೋಷಣೆ
ವಾಶಿಂಗ್ಟನ್, ಮಾ.13: ಇಂಧನ ಬೆಲೆಗಳು ತೀವ್ರವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ರಶ್ಯದ ತೈಲ ಮಾರಾಟದ ಮೇಲಿನ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ತೆರವುಗೊಳಿಸಲು ಅಮೆರಿಕ ಸರ್ಕಾರ ನಿರ್ಧರಿಸಿದೆ. ಇರಾನ್ನೊಂದಿಗಿನ ಇಸ್ರೇಲ್–ಅಮೆರಿಕ ಯುದ್ಧದ ಆರ್ಥಿಕ ಪರಿಣಾಮಗಳನ್ನು ನಿಗ್ರಹಿಸಲು ರಶ್ಯದ ತೈಲ ಖರೀದಿಸಲು ಇತರ ದೇಶಗಳಿಗೆ ಅವಕಾಶ ಮಾಡಿಕೊಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ತಾತ್ಕಾಲಿಕ ನಿರ್ಬಂಧ ತೆರವು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸ್ಥಿರತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಅಲ್ಪಾವಧಿಯ ಕ್ರಮವು ರಶ್ಯ ಸರ್ಕಾರಕ್ಕೆ ಗಮನಾರ್ಹ ಆರ್ಥಿಕ ಲಾಭವನ್ನು ಒದಗಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ. ತಾತ್ಕಾಲಿಕ ನಿರ್ಬಂಧ ಮನ್ನಾ ಎಪ್ರಿಲ್ 11ರವರೆಗೆ ಜಾರಿಯಲ್ಲಿರುತ್ತದೆ ಮತ್ತು ಕೇವಲ ‘ಪರ್ಮಿಟ್ ದೇಶಗಳಿಗೆ’ ಮಾತ್ರ ಅನ್ವಯಿಸುತ್ತದೆ. ತೈಲ ಬೆಲೆಯಲ್ಲಿನ ತಾತ್ಕಾಲಿಕ ಹೆಚ್ಚಳವು ಅಲ್ಪಾವಧಿಯ ಮತ್ತು ತಾತ್ಕಾಲಿಕ ಅಡ್ಡಿಯಾಗಿದ್ದು, ಇದು ದೀರ್ಘಾವಧಿಯಲ್ಲಿ ನಮ್ಮ ದೇಶ ಮತ್ತು ಆರ್ಥಿಕತೆಗೆ ಭಾರೀ ಲಾಭವನ್ನು ಉಂಟುಮಾಡುತ್ತದೆ ಎಂದು ಬೆಸೆಂಟ್ ಹೇಳಿದ್ದಾರೆ. ಸುಮಾರು 10 ಕೋಟಿ ಬ್ಯಾರೆಲ್ಗಳಷ್ಟು ತೈಲ ಪ್ರಸ್ತುತ ಸಾಗಣೆಯಲ್ಲಿದೆ ಎಂದು ರಶ್ಯ ಹೇಳಿದೆ. ಗಲ್ಫ್ ನಲ್ಲಿ ಹಡಗುಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿ ಹಾಗೂ ಹಾರ್ಮುಜ್ ಜಲಸಂಧಿಯ ಮುಚ್ಚುಗಡೆಯಿಂದ ಜಾಗತಿಕ ಇಂಧನ ಮಾರುಕಟ್ಟೆ ತತ್ತರಿಸಿದೆ. ತೈಲ ಬೆಲೆಗಳು ಮತ್ತೆ ಬ್ಯಾರೆಲ್ಗೆ 100 ಡಾಲರ್ ಗಡಿ ದಾಟಿವೆ. ಗಲ್ಫ್ನಲ್ಲಿ ಮತ್ತೆ ಮೂರು ಸರಕು ನೌಕೆಗಳ ಮೇಲೆ ದಾಳಿ ನಡೆದ ಬಳಿಕ ಷೇರು ಮಾರುಕಟ್ಟೆಗಳು ಕುಸಿದಿವೆ. ಪ್ರಪಂಚದ ಸುಮಾರು ಐದನೇ ಒಂದು ಭಾಗದಷ್ಟು ತೈಲವು ಸಾಮಾನ್ಯವಾಗಿ ಹಾರ್ಮುಜ್ ಜಲಸಂಧಿ ಮೂಲಕ ಹಾದುಹೋಗುತ್ತದೆ. ಗಲ್ಫ್ನಲ್ಲಿ ಸಿಲುಕಿರುವ ತೈಲ ಟ್ಯಾಂಕರ್ಗಳು ಇರಾನ್ ಮತ್ತು ಒಮಾನ್ ನಡುವಿನ ಕಿರಿದಾದ ಜಲಸಂಧಿ (ಹಾರ್ಮುಜ್) ಮೂಲಕ ಹಾದುಹೋಗಲು ಸಾಧ್ಯವಾಗದಿರುವುದು ಬಿಕ್ಕಟ್ಟಿಗೆ ಕಾರಣವಾಗಿದೆ. ► ಅಮೆರಿಕದ ಕ್ರಮಕ್ಕೆ ಜರ್ಮನಿ, ಬ್ರಿಟನ್, ಫ್ರಾನ್ಸ್ ವಿರೋಧ ರಶ್ಯದ ತೈಲದ ಮೇಲಿನ ನಿರ್ಬಂಧವನ್ನು ತಾತ್ಕಾಲಿಕವಾಗಿ ತೆರವುಗೊಳಿಸುವ ಟ್ರಂಪ್ ಕ್ರಮವು ‘ಪುಟಿನ್ ಅವರನ್ನು ಶ್ರೀಮಂತಗೊಳಿಸುವ ಮತ್ತು ಉಕ್ರೇನ್ ಯುದ್ಧವನ್ನು ವಿಸ್ತರಿಸುವ ಭಯಾನಕ ನಿರ್ಧಾರ’ವಾಗಿದೆ ಎಂದು ಜರ್ಮನಿ, ಫ್ರಾನ್ಸ್, ಬ್ರಿಟನ್, ಉಕ್ರೇನ್ ಮತ್ತಿತರ ದೇಶಗಳು ಟೀಕಿಸಿವೆ. ನಿರ್ಬಂಧ ತೆರವುಗೊಳಿಸುವುದು ಉಕ್ರೇನಿಯನ್ನರ ಮೇಲೆ ಮಾರಕ ಪ್ರಹಾರವಾಗಿದೆ ಮತ್ತು ರಶ್ಯಕ್ಕೆ ಇನ್ನಷ್ಟು ಆಯುಧಗಳನ್ನು ಖರೀದಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಟೀಕಿಸಿದ್ದಾರೆ. ‘ಈಗ ನಿರ್ಬಂಧ ತೆರವುಗೊಳಿಸುವುದು ತಪ್ಪು ನಿರ್ಧಾರ’ ಎಂದು ಜರ್ಮನಿಯ ಛಾನ್ಸಲರ್ ಫ್ರೆಡ್ರಿಕ್ ಮೆರ್ಝ್ ಹೇಳಿದ್ದಾರೆ. ರಶ್ಯದ ತೈಲದ ಮೇಲಿನ ನಿರ್ಬಂಧ ತೆರವುಗೊಳಿಸಿರುವ ಅಮೆರಿಕದ ಕ್ರಮವನ್ನು ಬ್ರಿಟನ್ ಅನುಸರಿಸುವುದಿಲ್ಲ ಎಂದು ಬ್ರಿಟನ್ನ ಇಂಧನ ಸಚಿವ ಮೈಕೆಲ್ ಶಾಂಕ್ಸ್ ಶುಕ್ರವಾರ ಹೇಳಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಹಾರ್ಮುಜ್ ಜಲಸಂಧಿ ಮುಚ್ಚಿರುವುದು ರಶ್ಯದ ಮೇಲಿನ ನಿರ್ಬಂಧ ತೆರವುಗೊಳಿಸುವ ಕ್ರಮವನ್ನು ಸಮರ್ಥಿಸುವುದಿಲ್ಲ ಎಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿಯವರು ಕುದುರೆ ವ್ಯಾಪಾರಕ್ಕೆ ಹೆಸರುವಾಸಿ : ಡಿ.ಕೆ.ಶಿವಕುಮಾರ್
‘ನಮ್ಮ ಶಾಸಕರಿಗೆ ದೊಡ್ಡ ಆಫರ್ಗಳು ಬಂದಿವೆ’
ದೇಶಾದ್ಯಂತ ನಾಪತ್ತೆಯಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ; 5 ರಾಜ್ಯಗಳಿಂದ ವರದಿ ಕೇಳಿದ NHRC
ಹೊಸದಿಲ್ಲಿ, ಮಾ. 13: ದೇಶಾದ್ಯಂತ ಹಲವು ರಾಜ್ಯಗಳಲ್ಲಿ ನಾಪತ್ತೆಯಾಗುತ್ತಿರುವವರ ಸಂಖ್ಯೆಯು ಹೆಚ್ಚುತ್ತಿದೆ ಹಾಗೂ ಅವರನ್ನು ಪತ್ತೆಹಚ್ಚುವ ದರ ಕ್ಷೀಣಿಸುತ್ತಿದೆ ಎಂಬ ಮಾಧ್ಯಮ ವರದಿಗಳನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ವಯಂಪ್ರೇರಿತವಾಗಿ ಪರಿಗಣಿಸಿದೆ. ಆಯೋಗವು ಬಿಹಾರ, ಒಡಿಶಾ, ತೆಲಂಗಾಣ, ಮಹಾರಾಷ್ಟ್ರ ಮತ್ತು ರಾಜಸ್ಥಾನ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ಗಳನ್ನು ಜಾರಿಗೊಳಿಸಿ, ಈ ವಿಷಯದ ಕುರಿತು ಎರಡು ವಾರಗಳೊಳಗೆ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿದೆ. ವರದಿಗಳ ಪ್ರಕಾರ, ಬಿಹಾರದಲ್ಲಿ 2013ರ ಬಳಿಕ ಪ್ರತಿ ವರ್ಷ 12,000ರಿಂದ 14,000 ಮಂದಿ ನಾಪತ್ತೆಯಾಗುತ್ತಿರುವುದು ದಾಖಲಾಗಿದೆ. ಈ ಪೈಕಿ ಹೆಚ್ಚಿನವರು ಮಕ್ಕಳು. ಆದರೆ, ನಾಪತ್ತೆಯಾದ ಮಕ್ಕಳ ಪೈಕಿ ಕೇವಲ ಮೂರನೇ ಎರಡರಷ್ಟು ಮಂದಿ ಮಾತ್ರ ಪತ್ತೆಯಾಗುತ್ತಿದ್ದಾರೆ. ಪತ್ತೆಯಾಗದ ಮಕ್ಕಳ ಸುರಕ್ಷತೆ ಮತ್ತು ಸಂಭವನೀಯ ಶೋಷಣೆಯ ಬಗ್ಗೆ ಮಾಧ್ಯಮ ವರದಿಗಳು ಕಳವಳ ವ್ಯಕ್ತಪಡಿಸಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)ದಿಂದ ಅಂಕಿಅಂಶಗಳನ್ನು ಪಡೆದಿರುವ ಆಯೋಗವು, ಒಡಿಶಾ, ಬಿಹಾರ, ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ಮಾನವ ಕಳ್ಳಸಾಗಣೆ ನಡೆಯುತ್ತಿರುವುದರತ್ತ ಬೆಟ್ಟು ಮಾಡಿದೆ.
‘ತೃತೀಯ ಲಿಂಗಿ’ ಪದಕ್ಕೆ ನಿಖರ ವ್ಯಾಖ್ಯಾನ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ
ಹೊಸದಿಲ್ಲಿ, ಮಾ.13: ‘ತೃತೀಯ ಲಿಂಗಿ’ ಪದಕ್ಕೆ ನಿಖರವಾದ ವ್ಯಾಖ್ಯಾನವನ್ನು ನೀಡಲು ಮತ್ತು ಅಂತಹ ವ್ಯಕ್ತಿಗಳಿಗೆ ಉಂಟಾಗುವ ಹಾನಿಯ ಗಂಭೀರತೆಯನ್ನು ಆಧರಿಸಿ ಹಂತವಾರು ಶಿಕ್ಷೆಗಳನ್ನು ನೀಡಲು ಉದ್ದೇಶಿಸಿರುವ ಮಸೂದೆಯನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ ಅವರು ತೃತೀಯ ಲಿಂಗಿ ವ್ಯಕ್ತಿಗಳ (ಸಂರಕ್ಷಣೆಯ ಹಕ್ಕುಗಳು) ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಪ್ರಸ್ತುತ ಕಾನೂನಿನಡಿ ಒದಗಿಸಲಾಗಿರುವ ರಕ್ಷಣೆ ಮತ್ತು ಪ್ರಯೋಜನಗಳು ವ್ಯಾಪಕ ಸ್ವರೂಪದ್ದಾಗಿವೆ. ಇವು ತಲುಪಲೇಬೇಕಿರುವ ತೃತೀಯ ಲಿಂಗಿ ವ್ಯಕ್ತಿಗಳನ್ನು ಸೂಕ್ತವಾಗಿ ಮತ್ತು ಖಚಿತವಾಗಿ ಗುರುತಿಸುವಿಕೆಗಾಗಿ ಹಾಗೂ ಅವರ ಸಂರಕ್ಷಣೆಗಾಗಿ ಈ ಪದಕ್ಕೆ ನಿಖರವಾದ ವ್ಯಾಖ್ಯಾನವನ್ನು ನೀಡುವುದು ಅನಿವಾರ್ಯವಾಗಿದೆ ಎಂದು ಮಸೂದೆಯಲ್ಲಿ ಹೇಳಲಾಗಿದೆ. ಮಸೂದೆಯು ಅಗತ್ಯವಿದ್ದರೆ ತಜ್ಞರ ಸಲಹೆ ಪಡೆಯುವ ಆಯ್ಕೆಯೊಂದಿಗೆ ಪ್ರಾಧಿಕಾರ ನೇಮಕಕ್ಕೆ ನಿಬಂಧನೆಗಳನ್ನೂ ಒಳಗೊಂಡಿದೆ. ಕರಡು ಶಾಸನವು ತಮ್ಮ ಅಧಿಕೃತ ದಾಖಲೆಗಳಲ್ಲಿ ಅಗತ್ಯ ಸೂಕ್ತ ಬದಲಾವಣೆಗಳನ್ನು ಮಾಡಲು ತೃತೀಯ ಲಿಂಗಿಗಳಿಗೆ ಅಧಿಕಾರವನ್ನು ನೀಡಲೂ ಉದ್ದೇಶಿಸಿದೆ.
ಕೆಂಪು ಕೋಟೆಯ ವಸ್ತು ಸಂಗ್ರಹಾಲಯಕ್ಕೆ ನೇತಾಜಿ ಟೋಪಿ ಹಿಂದಿರುಗಿಸಿದ ASI: ಅಸಲಿಯಲ್ಲ ಎಂದ ನೇತಾಜಿಯ ಸೋದರ ಮೊಮ್ಮಗ
ಹೊಸದಿಲ್ಲಿ: ದಿಲ್ಲಿಯ ಕೆಂಪು ಕೋಟೆಯ ವಸ್ತು ಸಂಗ್ರಹಾಲಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಟೋಪಿ ಕಾಣೆಯಾಗಿದೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಆರೋಪಿಸಿದ ಒಂದು ದಿನದ ಬಳಿಕ, ಇತ್ತೀಚೆಗೆ ಪೋರ್ಟ್ ಬ್ಲೇರ್ನಲ್ಲಿ ನಡೆದ ಪ್ರದರ್ಶನದಲ್ಲಿ ಇರಿಸಲಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಟೋಪಿ ಸುರಕ್ಷಿತವಾಗಿದೆ ಎಂದು ಶುಕ್ರವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸ್ಪಷ್ಟಪಡಿಸಿದೆ. ಆದರೆ, ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಚಂದ್ರ ಕುಮಾರ್ ಬೋಸ್, ಮರಳಿ ಸ್ಥಾಪಿಸಲಾಗಿರುವ ಟೋಪಿಯು ಅಸಲಿ ಟೋಪಿಯಂತೆ ಭಾಸವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಈ ವಿಷಯದ ಕುರಿತು ತನಿಖೆ ನಡೆಯಬೇಕು ಹಾಗೂ ಸೂಕ್ತ ದೃಢೀಕರಣ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಗುರುವಾರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿಯ ಮಾಜಿ ನಾಯಕರೂ ಆದ ಚಂದ್ರ ಕುಮಾರ್ ಬೋಸ್, “ನಾನು ಹಾಗೂ ನನ್ನ ಕುಟುಂಬದ ಸದಸ್ಯರು ವೈಯಕ್ತಿಕವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನೇತಾಜಿಯ ಟೋಪಿಯನ್ನು ಹಸ್ತಾಂತರಿಸಿದ್ದೆವು. ಜನವರಿ 23, 2019ರಂದು ನಡೆದ ನೇತಾಜಿ ದಿನಾಚರಣೆ (ಭಾರತೀಯ ದೇಶಪ್ರೇಮಿಗಳ ದಿನಾಚರಣೆ) ಸಂದರ್ಭದಲ್ಲಿ ದಿಲ್ಲಿಯ ಕೆಂಪು ಕೋಟೆಯಲ್ಲಿನ ನೇತಾಜಿ ವಸ್ತು ಸಂಗ್ರಹಾಲಯದಲ್ಲಿ ನಾನು ನೇತಾಜಿಯವರ ಟೋಪಿಯನ್ನು ವೈಯಕ್ತಿಕವಾಗಿ ಅರ್ಪಿಸಿದ್ದೆ ಎಂಬುದನ್ನು ಸ್ಮರಿಸಿಕೊಳ್ಳಿ” ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ನೀಡಿದ್ದಾರೆ. ಆದರೆ, ಈ ಆರೋಪವನ್ನು ಅಲ್ಲಗಳೆದಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, “ಜನವರಿ 19ರಿಂದ 25ರವರೆಗೆ ಪೋರ್ಟ್ ಬ್ಲೇರ್ ನಲ್ಲಿ ನಡೆದ ‘ಪರಾಕ್ರಮ್ ದಿನಸ್’ ಪ್ರದರ್ಶನದ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಅಸಲಿ ಟೋಪಿಯನ್ನು ಕೆಂಪು ಕೋಟೆಯ ವಸ್ತು ಸಂಗ್ರಹಾಲಯದಿಂದ ಪೋರ್ಟ್ ಬ್ಲೇರ್ ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿತ್ತು. ಅದು ಮರಳಿದ ಬಳಿಕ ಬೀಗದ ಸಮಸ್ಯೆ ಉಂಟಾಗಿದ್ದರಿಂದ ಅದನ್ನು ಸುರಕ್ಷಿತ ವಶದಲ್ಲಿರಿಸಬೇಕಾಗಿತ್ತು. ಇದೀಗ ಬೀಗವನ್ನು ಸರಿಪಡಿಸಲಾಗಿದ್ದು, ಟೋಪಿಯನ್ನು ಮರಳಿ ಪ್ರದರ್ಶನದಲ್ಲಿ ಇರಿಸಲಾಗಿದೆ” ಎಂದು ‘ಎಕ್ಸ್’ ಪೋಸ್ಟ್ನಲ್ಲಿ ಸ್ಪಷ್ಟಪಡಿಸಿದೆ.
ಕಲಬುರಗಿ | ಬಸವಣ್ಣ, ಅಕ್ಕಮಹಾದೇವಿಯವರಿಗೆ ನಿಂದಿಸಿದ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹ
ಕಲಬುರಗಿ: ವಿಶ್ವಗುರು ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿರುವ ರಾಮಕಾಂತ ಎಂ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಾಗತಿಕ ಲಿಂಗಾಯತ ಮಹಾ ಸಭಾ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ನಗರದ ಜಗತ್ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಪುತ್ಥಳಿ ಎದುರುಗಡೆ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಮಕಾಂತ ಎಂ. ಎಂಬ ವ್ಯಕ್ತಿಯು ಸಾಮಾಜಿಕ ಜಾಲತಾಣವಾದ ಫೇಸ್ಬುಕ್ನಲ್ಲಿ ವಿಶ್ವಗುರು ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ಕುರಿತು ಅವಹೇಳನಕಾರಿ ಮತ್ತು ಅಸಭ್ಯ ಹೇಳಿಕೆಗಳನ್ನು ಪ್ರಕಟಿಸಿ, ಶರಣ ಸಂಪ್ರದಾಯ ಹಾಗೂ ಸಮಾಜದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಪ್ರಚಾರ ಮಾಡಿರುವುದು ಗಮನಕ್ಕೆ ಬಂದಿದೆ. ಇದರಿಂದ ಸಮಾಜದಲ್ಲಿ ತೀವ್ರ ಅಸಮಾಧಾನ ಉಂಟಾಗಿ ಅಶಾಂತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಹಾಗಾಗಿ ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸಮಾಜದ ಶಾಂತಿ ಮತ್ತು ಸೌಹಾರ್ದ ಕಾಪಾಡುವ ಹಿತದೃಷ್ಟಿಯಿಂದ ಸಂಬಂಧಿತ ವ್ಯಕ್ತಿಯ ವಿರುದ್ಧ ತಕ್ಷಣವೇ ಸೂಕ್ತ ಕಾನೂನು ಕ್ರಮ ಕೈಗೊಂಡು, ಆತನನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಲಿಂಗಾಯತ ಮಹಾಸಭಾದ ಅಧ್ಯಕ್ಷ ಆರ್. ಜಿ. ಶೆಟಗಾರ, ಪ್ರಧಾನ ಕಾರ್ಯದರ್ಶಿ ಅಶೋಕ ಗೂಳಿ, ಡಾ.ಮಲ್ಲಿಕಾರ್ಜುನ ವಡ್ಡನಕೇರಿ, ಹಣಮಂತರಾವ ಪಾಟೀಲ, ಸಿದ್ದಣ್ಣ ತಾವರಗೇರ, ಶಿವಶರಣಪ್ಪ ಡಿ, ವಿಶ್ವನಾಥ ಮಂಗಲಗಿ, ಶಿವಕುಮಾಋ ಬಿದರಿ, ಅಶೋಕ ವೀರನಾಯಕ, ದಿನೇಶ ದೊಡ್ಡಮನಿ, ಬಸವರಾಜ ಸೇರಿದಂತೆ ಇತರರು ಇದ್ದರು.
ಕಲಬುರಗಿ | ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಕಲಬುರಗಿ: ನಗರದ ಸೇಡಂ ರಸ್ತೆಯಲ್ಲಿರುವ ಜ್ಯೋತಿ ಕಾಲೋನಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಬಿಜೆಪಿ ಮುಖಂಡೆ ಶಶಿಕಲಾ ವಿ.ಟೆಂಗಳಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಹಾರ ಇಲಾಖೆಯ ಸಹಾಯಕ ನಿರ್ದೇಶಕಿ ಸಾವಿತ್ರಿ ಚಿಡಗುಂಪಿ ಹಾಗೂ ರೇಶ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಭಾರತಿ ಎನ್.ರೇಷ್ಮಿ ಭಾಗವಹಿಸಿದ್ದರು. ಅತಿಥಿಗಳಾಗಿ ಕೇಂದ್ರ ವಿಶ್ವವಿದ್ಯಾಲಯದ ವೈದ್ಯಾಧಿಕಾರಿ ಡಾ.ಜ್ಯೋತಿ ಎಸ್. ತೆಗನೂರು ಮತ್ತು ಸಂಚಾರಿ ಪೊಲೀಸ್ ಠಾಣೆ2 ರ ಉಪನಿರೀಕ್ಷಕಿ (ಪಿಎಸ್ಐ) ಸುಮಂಗಲಾ ಮಾತನಾಡಿದರು. ಇದೇ ಸಂದರ್ಭದಲ್ಲಿ ಜ್ಯೋತಿ ಕಾಲೋನಿಯ ಹಿರಿಯ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಮಲಾದೇವಿ ಯಡಹಳ್ಳಿಮಠ್ ವಹಿಸಿದ್ದರು. ಕಲಬುರಗಿ ಮಹಾನಗರ ಪಾಲಿಕೆಯ ಸದಸ್ಯರಾದ ವೀರಣ್ಣ ಹೊನ್ನಳಿ ಅವರ ವಿಶೇಷ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಅರುಣಾ ನಿರೂಪಿಸಿದರು. ರೇಣುಕಾ ಗುಡ್ಡದ ಅವರು ವಂದಿಸಿದರು. ಜ್ಯೋತಿ ಕಾಲೋನಿಯ ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.
29 ವರ್ಷಗಳ ಸೇವೆಯ ಮಹತ್ವದ ಮೈಲಿಗಲ್ಲು ಸಾಧಿಸಿದ ʼತುಂಬೆ ಗ್ರೂಪ್ʼ
ಯುಎಇ : ತುಂಬೆ ಗ್ರೂಪ್ ಯುಎಇಯಲ್ಲಿ ತನ್ನ 29 ವರ್ಷಗಳ ಸಾರ್ಥಕ ಪ್ರಯಾಣವನ್ನು ಪೂರ್ಣಗೊಳಿಸಿದ್ದು, ಆರೋಗ್ಯ ಸೇವೆ, ಶಿಕ್ಷಣ, ಸಂಶೋಧನೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸುಮಾರು ಮೂರು ದಶಕಗಳ ಸೇವೆಯ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. 1997ರಲ್ಲಿ ಡಾ.ಮೊಯ್ದೀನ್ ಅವರು ತುಂಬೆ ಗ್ರೂಪ್ ಅನ್ನು ಸ್ಥಾಪಿಸಿದರು. ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ ಗಳು, ಸಂಶೋಧನೆ, ತಂತ್ರಜ್ಞಾನ, ಮಾಧ್ಯಮ ಮತ್ತು ಚಿಲ್ಲರೆ ವ್ಯಾಪಾರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಯಾಗಿ ತುಂಬೆ ಗ್ರೂಪ್ ಬೆಳೆದಿದೆ. ಈ ಗ್ರೂಪ್ ನ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ʼಗಲ್ಫ್ ಮೆಡಿಕಲ್ ಯುನಿವರ್ಸಿಟಿʼ ಗಲ್ಫ್ ಪ್ರದೇಶದ ಖಾಸಗಿ ವೈದ್ಯಕೀಯ ವಿಶ್ವವಿದ್ಯಾಲಯವಾಗಿದೆ. ಇದು ಶಿಕ್ಷಣ, ಆರೋಗ್ಯ ಸೇವೆ ಮತ್ತು ಸಂಶೋಧನೆಯ ಕೇಂದ್ರವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಮೆಡಿಕಲ್, ನರ್ಸಿಂಗ್, ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಶಿಕ್ಷಣ ಮತ್ತು ತರಬೇತಿಯನ್ನು ನೀಡುತ್ತಿದೆ. ʼಗಲ್ಫ್ ಮೆಡಿಕಲ್ ಯುನಿವರ್ಸಿಟಿʼ ಜೊತೆಯಾಗಿ ಕಾರ್ಯನಿರ್ವಹಿಸುತ್ತಿರುವ ತುಂಬೆ ಹೆಲ್ ಕೇರ್ ನೆಟ್ವರ್ಕ್ ಈ ಪ್ರದೇಶದ ಪ್ರಮುಖ ಖಾಸಗಿ ಆಸ್ಪತ್ರೆಗಳ ಜಾಲವಾಗಿದೆ. ಕಳೆದ 29 ವರ್ಷಗಳಲ್ಲಿ 175ಕ್ಕೂ ಹೆಚ್ಚು ದೇಶಗಳ ಸುಮಾರು 1.6 ಕೋಟಿಗೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, 1 ಲಕ್ಷಕ್ಕೂ ಹೆಚ್ಚು ಹೆರಿಗೆ ನಡೆದಿದೆ. ಸಂಶೋಧನೆಗೆ ಉತ್ತೇಜನ ನೀಡುವ ಉದ್ದೇಶದಿಂದ ತುಂಬೆ ಇಂಟರ್ ನ್ಯಾಷನಲ್ ರಿಸರ್ಚ್ ಗ್ರ್ಯಾಂಟ್ (Thumbay International Research Grant) ಯೋಜನೆಯಡಿ ವರ್ಷಕ್ಕೆ 3 ಮಿಲಿಯನ್ ದಿರ್ಹಮ್ ಅನುದಾನ ನೀಡಲಾಗುತ್ತಿದೆ. ಶೀಘ್ರದಲ್ಲೇ ಆರಂಭವಾಗಲಿರುವ ತುಂಬೆ ಇಂಟರ್ ನ್ಯಾಷನಲ್ ರಿಸರ್ಚ್ ಸೆಂಟರ್ ಹೊಸ ಸಂಶೋಧನೆ ಮತ್ತು ಆವಿಷ್ಕಾರಗಳಿಗೆ ಉತ್ತೇಜನ ನೀಡಲಿದೆ. ಆರೋಗ್ಯ ರಕ್ಷಣೆ ಮತ್ತು ಶಿಕ್ಷಣದ ಹೊರತಾಗಿ, ತುಂಬೆ ಗ್ರೂಪ್ ಉದ್ಯಮಗಳು, ರೆಸ್ಟೋರೆಂಟ್ ಗಳು ಮತ್ತು ಫಿಟ್ನೆಸ್ ಕೇಂದ್ರಗಳನ್ನು ಮುನ್ನಡೆಸುತ್ತಿದೆ. ಇದಲ್ಲದೆ ಹೆಲ್ತ್ ಮ್ಯಾಗಝೀನ್ ಬಿಡುಗಡೆ ಮಾಡುತ್ತಿದೆ. ಚಿಲ್ಲರೆ ಮಾರಾಟ ಮಳಿಗೆಗಳು ಸೇರಿದಂತೆ ಹಲವಾರು ವ್ಯವಹಾರಗಳನ್ನು ನಡೆಸುತ್ತಿದೆ. ಪ್ರಸ್ತುತ ತುಂಬೆ ಗ್ರೂಪ್ 7 ಅಕಾಡೆಮಿಕ್ ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಡೆಸುತ್ತಿದ್ದು, ವೈದ್ಯಕೀಯ ಪ್ರವಾಸೋದ್ಯಮದ ಮೂಲಕ 87 ದೇಶಗಳಲ್ಲಿ ತನ್ನ ಪ್ರತಿನಿಧಿತ್ವವನ್ನು ಹೊಂದಿದೆ. ಇದಲ್ಲದೆ, ಕ್ಲಿನಿಕಲ್ ಸೇವೆಗಳು, ಶಿಕ್ಷಣ, ಸಂಶೋಧನೆ ಮತ್ತು ಡಿಜಿಟಲ್ ಆರೋಗ್ಯ ಉಪಕ್ರಮಗಳನ್ನು ಸಂಯೋಜಿಸುವ ಸಮಗ್ರ ಆರೋಗ್ಯ ರಕ್ಷಣಾ ತಾಣವಾಗಿ ದುಬೈನಲ್ಲಿ ತುಂಬೆ ಮೆಡಿಸಿಟಿ ಅಭಿವೃದ್ಧಿಯಾಗುತ್ತಿದೆ. ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದೀನ್ ಮಾತನಾಡಿ, “ಶಿಕ್ಷಣ, ಆರೋಗ್ಯ ಸೇವೆ ಮತ್ತು ಸಂಶೋಧನೆಗಳ ಮೂಲಕ ಸಮಾಜವನ್ನು ರೂಪಿಸುವ ದೃಷ್ಟಿಯಿಂದ ನಮ್ಮ ಪಯಣ ಮುಂದುವರಿಯುತ್ತಿದೆ. ಯುಎಇ ಈ ಕನಸನ್ನು ಸಾಕಾರಗೊಳಿಸಲು ಅಗತ್ಯವಾದ ಅವಕಾಶಗಳನ್ನು ಒದಗಿಸಿದೆ ಎಂದು ಹೇಳಿದರು.
ಇರಾಕ್ ನಲ್ಲಿ ಪತನಗೊಂಡ ಅಮೆರಿಕದ KC 135 ವಿಮಾನದಲಿದ್ದ 6 ಸಿಬ್ಬಂದಿಯೂ ಮೃತ್ಯು: CENTCOM
ವಾಷಿಂಗ್ಟನ್, ಮಾ. 13: ಪಶ್ಚಿಮ ಇರಾಕ್ ನಲ್ಲಿ ಪತನಗೊಂಡ ಅಮೆರಿಕದ KC 135 ಇಂಧನ ತುಂಬುವ ಮಿಲಿಟರಿ ವಿಮಾನದಲ್ಲಿದ್ದ ಎಲ್ಲಾ ಆರು ಮಂದಿ ಸಿಬ್ಬಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. ‘ಎಕ್ಸ್’ನಲ್ಲಿ ಪ್ರಕಟಿಸಿದ ಪೋಸ್ಟ್ನಲ್ಲಿ, ಘಟನೆಯ ನಿಖರ ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ ಎಂದು CENTCOM ಹೇಳಿದೆ. ಆದರೆ ವಿಮಾನ ಪತನವು ‘ಪ್ರತಿಕೂಲ ಗುಂಡಿನ ದಾಳಿ ಅಥವಾ ಅದರ ಮಿತ್ರ ಪಡೆಗಳ ನಿಯಂತ್ರಣದಲ್ಲಿರುವ ವಾಯುಪ್ರದೇಶದಲ್ಲಿನ ಗುಂಡಿನ ದಾಳಿಯಿಂದಾಗಿ ಅಲ್ಲ’ ಎಂದು ಸ್ಪಷ್ಟಪಡಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಸೇನಾ ಸಿಬ್ಬಂದಿಗಳ ಗುರುತುಗಳನ್ನು ಅವರ ಕುಟುಂಬಗಳಿಗೆ ಮಾಹಿತಿ ನೀಡಿದ 24 ಗಂಟೆಗಳ ಬಳಿಕ ಮಾತ್ರ ಸಾರ್ವಜನಿಕವಾಗಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ. ಇದಕ್ಕೂ ಮೊದಲು ಶುಕ್ರವಾರ ಮುಂಜಾನೆ ಅಮೆರಿಕ ಸೇನೆ ನೀಡಿದ್ದ ಪ್ರಾಥಮಿಕ ಮಾಹಿತಿಯಲ್ಲಿ ಅಪಘಾತದಲ್ಲಿ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿತ್ತು. ಉಳಿದ ಇಬ್ಬರು ಕಾಣೆಯಾಗಿರುವ ಹಿನ್ನೆಲೆಯಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿತ್ತು. ಈಗ ವಿಮಾನದಲ್ಲಿದ್ದ ಎಲ್ಲಾ ಆರು ಮಂದಿ ಸಿಬ್ಬಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ.
ಮಣಿಪಾಲ| 12 ಗಂಟೆಯೊಳಗೆ ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು: ಬಾಲಕರು ಸಹಿತ ನಾಲ್ವರ ಬಂಧನ
ಮಣಿಪಾಲ: 80 ಬಡಗುಬೆಟ್ಟು ಗ್ರಾಮದ ಶಾಂತಿನಗರದ ಎಂಬಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು, 12ಗಂಟೆಯೊಳಗೆ ಪ್ರಕರಣ ಬೇಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ವಿಜಯಪುರ ಮೂಲದ ಉಡುಪಿ ಪುತ್ತೂರು ಹನುಮಂತ ನಗರ ನಿವಾಸಿ ಸಂತೋಷ ಯಾನೆ ಸಂತೋಷ ಪೊಲೆಷಿ(20), ಕೊಡವೂರು ಗ್ರಾಮದ ಕಲ್ಮಾಡಿಯ ಚಿರಂತನ್(21) ಹಾಗೂ ಇಬ್ಬರು ಬಾಲಕರು ಎಂದು ಗುರುತಿಸಲಾಗಿದೆ. ಶಾಂತಿನಗರದ ಸಂಗೀತ ಮಡಿವಾಳ ಎಂಬವರ ಮನೆಗೆ ಮಾ.12ರಂದು ಬೆಳಗ್ಗೆ ಹೆಂಚು ತೆಗೆದು ಒಳ ಪ್ರವೇಶಿಸಿದ ಕಳ್ಳರು, ಕಪಾಟಿನಲ್ಲಿದ್ದ ಚಿನ್ನ, ಬೆಳ್ಳಿ, ಹಾಗೂ ನಗದನ್ನು ಕಳವುಗೈದಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ವಿಶೇಷ ಪೊಲೀಸ್ ತಂಡ, ಮಾ.13ರಂದು ಮಣಿಪಾಲದ ಸಿಂಬ್ರಾ ಸೇತುವೆ ಬಳಿ ಅನುಮಾಸ್ಪದವಾಗಿ ನಿಂತ ಇಬ್ಬರು ವ್ಯಕ್ತಿಗಳು ಹಾಗೂ ಇಬ್ಬರು ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಿದೆ. ಆಗ ಅವರು ಶಾಂತಿನಗರದಲ್ಲಿ ನಡೆಸಿರುವ ಕಳ್ಳತನದ ಬಗ್ಗೆ ಒಪ್ಪಿಕೊಂಡಿದ್ದಾರೆನ್ನಲಾಗಿದೆ. ನಂತರ ಅವರಲ್ಲಿ ಕೃತ್ಯಕ್ಕೆ ಬಳಸಿದ ಸಾಮಗ್ರಿ ಹಾಗೂ 4,47,000 ರೂ. ಮೌಲ್ಯದ ಚಿನ್ನ ಬೆಳ್ಳಿ, ಆಭರಣ ಹಾಗೂ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ ಎಸ್ ನಾಯ್ಕ ಮಾರ್ಗದರ್ಶನದಂತೆ ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಕೆ. ನಿರ್ದೇಶನದಂತೆ ನಡೆಸಿದ ಕಾರ್ಯಾಚರಣೆಯಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್, ಎಸ್ಶೈ ತಿಮ್ಮೇಶ್ ಬಿ.ಎನ್., ಸಿಬ್ಬಂದಿ ವಿಶ್ವಜಿತ್ ಬೆಳ್ಳೆ, ಮಹಮ್ಮದ್ ಅಜ್ವಲ್ ಹೈಕಾಡಿ, ಚೇತನ್, ರವಿರಾಜ್, ಠಾಣಾ ತನಿಖಾ ಸಹಾಯಕ ಸುರೇಶ ಶೆಟ್ಟಿ, ಸುಕುಮಾರ ಶೆಟ್ಟಿ, ಜೀಪು ಚಾಲಕ ಸಲೀಂ, ಸತೀಶ, ಹಾಗೂ ಉಡುಪಿ ಸಿಡಿಆರ್ ವಿಭಾಗದ ದಿನೇಶ ಹಾಗೂ ನಿತೀನ್ ಪಾಲ್ಗೊಂಡಿದ್ದಾರೆ.
ಹೊಸದಿಲ್ಲಿ, ಮಾ.13: ಇರಾನಿನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಾಮಿನೈ ಅವರ ಹತ್ಯೆ ಕುರಿತು ಮೌನ ವಹಿಸಿರುವುದಕ್ಕಾಗಿ ಕಾಂಗ್ರೆಸ್ ಪಕ್ಷವು ಶುಕ್ರವಾರ ಮೋದಿ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ‘ರಾಜಿ’ ಮಾಡಿಕೊಂಡಿರುವ ಪ್ರಧಾನಿ ತನ್ನ ಅಮೆರಿಕನ್ ಮತ್ತು ಇಸ್ರೇಲಿ ಸ್ನೇಹಿತರನ್ನು (ಟ್ರಂಪ್ ಮತ್ತು ನೆತನ್ಯಾಹು) ಅಸಮಾಧಾನಗೊಳಿಸಲು ಬಯಸುವುದಿಲ್ಲ ಎಂದು ಅದು ಕುಟುಕಿದೆ. ಕೊಲ್ಲಿ ದೇಶಗಳ ಮೇಲಿನ ಇರಾನ್ ದಾಳಿಯನ್ನು ಭಾರತವು ಸರಿಯಾಗಿಯೇ ಖಂಡಿಸಿದೆ, ಆದರೆ ಮುಖ್ಯವಾಗಿ ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಕುರಿತು ಸಂಪೂರ್ಣವಾಗಿ ಮೌನವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಫೆ.28, 2026ರಂದು ಖಾಮಿನೈ ಅವರನ್ನು ಹತ್ಯೆ ಮಾಡಿವೆ. ಪ್ರಧಾನಿ ಮೌನವಾಗಿದ್ದಾರೆ. ವಿದೇಶಾಂಗ ಸಚಿವರು ಮೌನವಾಗಿದ್ದಾರೆ. ಸಂಸತ್ತಿನಲ್ಲಿ ಇನ್ನೂ ಸಂತಾಪವನ್ನೂ ಸೂಚಿಸಿಲ್ಲ ಎಂದು ಹೇಳಿರುವ ರಮೇಶ್, ಇರಾನ್ ಈ ವರ್ಷ ಭಾರತವು ಅಧ್ಯಕ್ಷತೆಯನ್ನು ವಹಿಸಿರುವ ಬ್ರಿಕ್ಸ್+ ವೇದಿಕೆಯ ಸದಸ್ಯ ದೇಶವಾಗಿದೆ ಎಂದು ನೆನಪಿಸಿದ್ದಾರೆ. ಮೇ 2024ರಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿಯವರು ನಿಗೂಢ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು. ಮೇ 21ರಂದು ಮೋದಿ ಸರಕಾರವು ಒಂದು ದಿನದ ಶೋಕಾಚರಣೆಗೆ ಆದೇಶಿಸಿತ್ತು ಮತ್ತು ಜು.1ರಂದು ಸಂಸತ್ತು ಸೇರಿದಾಗ ಅದು ಸಂತಾಪವನ್ನು ಸೂಚಿಸಿತ್ತು ಎಂದು ಹೇಳಿರುವ ರಮೇಶ್, ಈಗ ಹಿಂಜರಿಕೆ ಏಕೆ? ಪ್ರಧಾನಿ ತನ್ನ ಅಮೆರಿಕನ್ ಮತ್ತು ಇಸ್ರೇಲ್ ಸ್ನೇಹಿತರನ್ನು ಅಸಮಾಧಾನಗೊಳಿಸಲು ಬಯಸುವುದಿಲ್ಲ. ಹೀಗಾಗಿಯೇ ಅವರು ನುಣುಚಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಹರಪನಹಳ್ಳಿ | ಅರಸೀಕೆರೆ ಹೋಬಳಿ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ
ಹರಪನಹಳ್ಳಿ : ಅರಸೀಕೆರೆ ಹೋಬಳಿಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಶುಕ್ರವಾರ ಅರಸೀಕೆರೆ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದವು. ತಾಲ್ಲೂಕಿನ ಅತಿದೊಡ್ಡ ಹಾಗೂ ಪ್ರತ್ಯೇಕ ತಾಲೂಕು ಕೇಂದ್ರದ ಅರ್ಹತೆ ಹೊಂದಿರುವ ಅರಸೀಕೆರೆ ಹೋಬಳಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ನಲುಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ವಿವಿಧ ತಾಲ್ಲೂಕುಗಳಿಗೆ ಸಂಪರ್ಕ ಕಲ್ಪಿಸುವ ಅರಸೀಕೆರೆ ಗ್ರಾಮಕ್ಕೆ ಸುಸಜ್ಜಿತ ಬಸ್ ನಿಲ್ದಾಣ ಇಲ್ಲದಿರುವುದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದರು. ಹೋಬಳಿ ವ್ಯಾಪ್ತಿಯಲ್ಲಿ 11 ಗ್ರಾಮ ಪಂಚಾಯಿತಿಗಳು ಸೇರಿದ್ದು, ಶಿಕ್ಷಣದ ದೃಷ್ಟಿಯಿಂದ ಪ್ರಮುಖ ಕೇಂದ್ರವಾಗಿದೆ. ಶಾಲೆ, ಪಿಯು ಹಾಗೂ ಪದವಿ ಕಾಲೇಜುಗಳಿದ್ದು, ನಿತ್ಯ ನೂರಾರು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಆದರೆ ಬಾಲಕರಿಗೆ ಮಾತ್ರ ಒಂದು ವಸತಿ ನಿಲಯವಿದ್ದು, ಬಾಲಕಿಯರ ವಸತಿ ನಿಲಯದ ಕೊರತೆಯಿಂದ ವಿದ್ಯಾರ್ಥಿನಿಯರು ಶಿಕ್ಷಣವನ್ನು ಮಧ್ಯದಲ್ಲಿ ನಿಲ್ಲಿಸುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ದೂರಿದರು. ಹೋಬಳಿ ವ್ಯಾಪ್ತಿಯ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ಸಾರಿಗೆ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಆರಂಭವಾದ ಉಚ್ಚಂಗಿದುರ್ಗ ಗ್ರಾಮದ ಬಸ್ ನಿಲ್ದಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು. ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಅಗತ್ಯ ಚಿಕಿತ್ಸಾ ಸೌಲಭ್ಯಗಳ ಕೊರತೆಯಿಂದ ರೋಗಿಗಳು ಪರದಾಡುತ್ತಿದ್ದಾರೆ. ಆಂಬ್ಯುಲೆನ್ಸ್ ಸೇವೆಯ ಕೊರತೆಯಿಂದ ಕೆಲವರು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿವೆ ಎಂದು ಹೇಳಿದರು. ಹೋಬಳಿ ವ್ಯಾಪ್ತಿಯಲ್ಲಿ ನೀರಿನ ಮೂಲಗಳ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದು, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ 105 ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಸಮುದಾಯ ಆರೋಗ್ಯ ಕೇಂದ್ರದಿಂದ ಗಿಲ್ಲಿ ನಗರ ಸರ್ಕಲ್, ಪೊಲೀಸ್ ಠಾಣೆ ಮೂಲಕ ಗುಡಿಹಳ್ಳಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ನೂರಾರು ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೆಲಕಾಲ ರಸ್ತೆ ತಡೆ ನಡೆಸಿದರು. ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಮಾಜ ಕಲ್ಯಾಣಾಧಿಕಾರಿ ಗಂಗಪ್ಪ, ತಾಲೂಕು ಆರೋಗ್ಯಾಧಿಕಾರಿ ಪೃಥ್ವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್, ಕಬ್ಬಳ್ಳಿ ಮೈಲಪ್ಪ, ಕಬ್ಬಳ್ಳಿ ಡಿ. ನಾಗರಾಜ್, ಬುದಿಹಾಳ್ ಸಿದ್ದಪ್ಪ, ಮಹಾದೇವಪ್ಪ, ಭೀಮಪ್ಪ, ನಿರ್ಮಲಾ ನಂದಿಹಳ್ಳಿ ಮಠ, ಚೂಟಿ ಪ್ರೇಮ, ನಾಗರಾಜ್ ಗೌಡ್ರು, ಎಬಿ ಮಲ್ಲನ ಗೌಡ್ರು, ರಮೇಶ್, ಮಂಜಪ್ಪ, ಮಾರುತಿ, ವಿಶಾಲಮ್ಮ, ರಂಗಪ್ಪ, ಹಾಲಪ್ಪ, ಡಿ. ಅರುಣ್ ಕುಮಾರ್, ಪ್ರಭುಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸಚಿವ ಜಮೀರ್ ಅಹ್ಮದ್ ಖಾನ್ ಅವರ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ ಕೇವಲವಾಗಿ ಮಾತನಾಡಿದ್ದಾರೆ. ಬಾಗಿ ಬಿಗಿ ಇರಲಿ. ಸಚಿವ ಜಮೀರ್ ಅಹ್ಮದ್ ಖಾನ್ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪಾತ್ರ ವಹಿಸಿದ್ದಾರೆ. ಅವರ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಬೇಕು. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ವಿಜಯ ಕರ್ನಾಟಕ ವೆಬ್ ಸಂದರ್ಶನದಲ್ಲಿ ಅಬ್ದುಲ್ ಜಬ್ಬಾರ್ ಹೇಳಿದ್ದಾರೆ.
ಒಂದು ಲಕ್ಷ ಕೋಟಿ ರೂಪಾಯಿ ಆರ್ಥಿಕ ಸ್ಥಿರತೆ ನಿಧಿ: ನಿರ್ಮಲಾ ಸೀತಾರಾಮನ್
ಹೊಸದಿಲ್ಲಿ, ಮಾ. 13: ಜಾಗತಿಕ ಸಂಕಷ್ಟದ ಸಮಯದಲ್ಲಿ ಭಾರತಕ್ಕೆ ಆರ್ಥಿಕವಾಗಿ ಚೇತರಿಸಿಕೊಳ್ಳಲು ಒಂದು ಲಕ್ಷ ಕೋಟಿ ರೂಪಾಯಿ ಆರ್ಥಿಕ ಸ್ಥಿರತೆ ನಿಧಿಯು ಸಹಾಯ ಮಾಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಹೇಳಿದ್ದಾರೆ. ಲೋಕಸಭೆಯಲ್ಲಿ ಎರಡನೇ ಪೂರಕ ಅನುದಾನ ಬೇಡಿಕೆಗಳ ಕುರಿತ ಚರ್ಚೆಗೆ ಉತ್ತರಿಸಿದ ಸಚಿವೆ, ಈಗಿನ ಪಶ್ಚಿಮ ಏಶ್ಯ ಬಿಕ್ಕಟ್ಟಿನಂಥ ಅನೂಹ್ಯ ಜಾಗತಿಕ ಸವಾಲುಗಳಿಂದ ಉದ್ಭವಿಸುವ ಆಘಾತವನ್ನು ಹೀರಿಕೊಳ್ಳಲು ಈ ನಿಧಿಯು ಸಹಾಯ ಮಾಡುತ್ತದೆ ಎಂದು ಹೇಳಿದರು. ಎರಡನೇ ಪೂರಕ ಅನುದಾನ ಬೇಡಿಕೆಗಳ ಮೂಲಕ ಸರ್ಕಾರ ಹಾಲಿ ಹಣಕಾಸು ವರ್ಷದಲ್ಲಿ ಒಟ್ಟು 2.81 ಲಕ್ಷ ಕೋಟಿ ರೂ.ಹೆಚ್ಚುವರಿ ಖರ್ಚಿಗೆ ಲೋಕಸಭೆಯ ಅನುಮೋದನೆ ಕೋರಿದೆ. ಈ ಪೈಕಿ 80,000 ಕೋಟಿ ರೂ. ಮೊತ್ತವನ್ನು ಈಗಾಗಲೇ ಹೆಚ್ಚುವರಿ ಖರ್ಚಿಗಾಗಿ ಸ್ವೀಕರಿಸಲಾಗಿದೆ. ಹಾಲಿ ಹಣಕಾಸು ವರ್ಷ (2025–26)ದ ವಿತ್ತೀಯ ಕೊರತೆಯು ಪರಿಷ್ಕೃತ ಅಂದಾಜಿನ ವ್ಯಾಪ್ತಿಯಲ್ಲಿಯೇ ಇದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಲೋಕಸಭೆಯು ನಿವ್ವಳ 2.01 ಲಕ್ಷ ಕೋಟಿ ರೂ. ಎರಡನೇ ಪೂರಕ ಅನುದಾನ ಬೇಡಿಕೆಗೆ ಅನುಮೋದನೆ ನೀಡಿತು. ಬಳಿಕ ಸದನವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
ಅಡುಗೆ ಅನಿಲ ಪಡಿತರ ಆರಂಭ | ಹೊಸ ಸಿಲಿಂಡರ್ ಬುಕ್ ಮಾಡುವ ಅವಧಿ ಗ್ರಾಮೀಣಕ್ಕೆ 45, ನಗರಕ್ಕೆ 25 ದಿನಗಳಿಗೆ ವಿಸ್ತರಣೆ
ಸೀಮೆಎಣ್ಣೆ ಪೂರೈಕೆಗೆ ಕ್ರಮ: ಕೇಂದ್ರ ಸರ್ಕಾರ ಘೋಷಣೆ
ಬಳ್ಳಾರಿ | ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಂಸದ ಇ ತುಕಾರಾಂ
ಬಳ್ಳಾರಿ : ನಗರದ ಪ್ರಮುಖ ಸಮಸ್ಯೆಯಾಗಿರುವ ರಾಷ್ಟ್ರೀಯ ಹೆದ್ದಾರಿ–67 (NH-67) ರಸ್ತೆ ಸಂಚಾರ ದಟ್ಟಣೆ ಮತ್ತು ಮೂಲಭೂತ ಸೌಕರ್ಯ ಕೊರತೆಯನ್ನು ಶಾಶ್ವತವಾಗಿ ಪರಿಹರಿಸಲು ಪ್ರಸ್ತುತ ಎನ್ಎಚ್-67 ಬಳ್ಳಾರಿ ಬೈಪಾಸ್ನಿಂದ ಸುಧಾಕ್ರಾಸ್ ವರೆಗೆ ಇರುವ ರಸ್ತೆಯನ್ನು ಎರಡು ಲೇನ್ನಿಂದ ನಾಲ್ಕು ಲೇನ್ಗೆ ಅಭಿವೃದ್ಧಿಪಡಿಸಲು ಸುಮಾರು 90 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಸಂಸದ ಇ ತುಕಾರಾಂ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದಲ್ಲದೆ ಗುಳ್ಯಾಮ್ ಸೇತುವೆ ನಿರ್ಮಾಣಕ್ಕಾಗಿ 60 ಕೋಟಿ ರೂ. ಅನುದಾನ ನೀಡುವಂತೆ ಸಹ ಮನವಿ ಮಾಡಲಾಗಿದೆ. ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ಎನ್ಎಚ್-67 ಬಳ್ಳಾರಿ ಬೈಪಾಸ್ನಿಂದ ಸುಧಾಕ್ರಾಸ್ ವರೆಗೆ ಇರುವ ರಸ್ತೆಯನ್ನು ಎರಡು ಲೇನ್ನಿಂದ ನಾಲ್ಕು ಲೇನ್ಗೆ ಅಭಿವೃದ್ಧಿಪಡಿಸಲು ಶೀಘ್ರದಲ್ಲೇ ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಗುಳ್ಯಾಮ್ ಸೇತುವೆ ನಿರ್ಮಾಣಕ್ಕೆ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಕೈಗಾರಿಕಾ ಬೆಳವಣಿಗೆ, ರಾಜ್ಯಾಂತರ ಸಂಪರ್ಕ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಈ ರಸ್ತೆ ಅತ್ಯಂತ ಮಹತ್ವದ್ದಾಗಿದ್ದು, ದಿನೇದಿನೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಅಗತ್ಯವಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ತಂತ್ರಗಾರಿಕೆಗೆ BJP ನಾಯಕರ 6 ತಂಡ ನೇಮಕ; ಮಾಜಿ CM, ಸಚಿವರ ನಿಯೋಜನೆ
ಮುಂಬರುವ ಉಪ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆ ಗೆಲುವಿಗೆ ತಂತ್ರಗಾರಿಗೆ ರೂಪಿಸಲು ಬಿಜೆಪಿ ನಾಯಕರ ತಂಡ ರಚನೆ ಮಾಡಿದೆ. ಈ ತಂಡದಲ್ಲಿ ಮಾಜಿ ಸಿಎಂಗಳು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಸಂಸದರು ಇದ್ದಾರೆ. ಪ್ರಮುಖವಾಗಿ ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಯನ್ನು ಗುರಿಯಾಗಿಸಿಕೊಳ್ಳಲಾಗಿದೆ. ಯಾರಿಗೆಲ್ಲಾ ನಿಯೋಜನೆ ಮಾಡಲಾಗಿದೆ? ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.
ಉಡುಪಿ, ಮಾ.13: ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ(ಎನ್ಆರ್ಸಿ)ವೇ ಉಡುಪಿ ಜಿಲ್ಲಾ ಕೇಂದ್ರದಲ್ಲಿರು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಹೇಳಿದ್ದಾರೆ. ಉಡುಪಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿಶೇಷ ನವಜಾತ ಶಿಶುಗಳ ಚಿಕಿತ್ಸಾ ಘಟಕ, ತಾಯಿ ಆರೈಕೆ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು. ಪ್ರತಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಈ ಕೇಂದ್ರ ಇದೆ. ಆದರೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಸುಪರ್ದಿಗೆ ಬಂದು ನಾಲ್ಕು ವರ್ಷಗಳಾದರೂ ಇನ್ನೂ ಎನ್ಆರ್ಸಿಯನ್ನು ಆರಂಭಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಹಳ ಬೇಸರದ ಸಂಗತಿ. ಈ ಬಗ್ಗೆ ಜಿಲ್ಲಾಡಳಿತ, ಡಿಎಚ್ಓ, ಜಿಲ್ಲಾ ಸರ್ಜನ್ ಯಾವ ಕಾರಣಕ್ಕಾಗಿ ಇದನ್ನು ಇನ್ನೂ ಆರಂಭಿಸಿಲ್ಲ ಎಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ದಾಖಲೆಗಳ ನಿರ್ವಹಣೆ ಇಲ್ಲ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಾಖಲೆಗಳ ಸರಿಯಾದ ನಿರ್ವಹಣೆ ಇಲ್ಲದ ಬಗ್ಗೆ ಆಯೋಗದ ಅಧ್ಯಕ್ಷರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚಿಕಿತ್ಸೆ ಪಡೆಯುತ್ತಿರುವ ನವಜಾತ ಶಿಶುಗಳ ಕೇಸ್- ಶೀಟ್ ಗಳಲ್ಲಿ ಮಕ್ಕಳ ಹೆಸರು ಅಥವಾ ಅವರ ತಂದೆ-ತಾಯಿಗಳ ಹೆಸರು ನಮೂದಿಸದೇ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವುಗಳ ನಿರ್ವಹಣೆಯನ್ನು ನಿಯಮಾ ನುಸಾರ ಮಾಡಬೇಕು ಎಂದು ಅಲ್ಲಿನ ವೈದ್ಯರುಗಳಿಗೆ ತಿಳಿಸಿದ ಅವರು, ಸರಿಯಾಗಿ ನಿರ್ವಹಿಸದೇ ಇರುವ ವೈದ್ಯಾಧಿಕಾರಿಗಳ ವಿರುದ್ಧ ಕ್ರಮವನ್ನು ಕೈಗೊಳ್ಳಲು ಸಹ ಜಿಲ್ಲಾ ಸರ್ಜನ್ಗೆ ಸೂಚಿಸಿದರು. ಯಾವುದೇ ಆಸ್ಪತ್ರೆಯಲ್ಲಿ ದಾಖಲಾಗುವ ಮಕ್ಕಳ, ಹೆಸರು, ತಂದೆತಾಯಿ ಹೆಸರು ದಾಖಲೆ ಮಾಡಿ ಬಳಿಕ ವೈದ್ಯಕೀಯ ಚಿಕಿತ್ಸೆ ನೀಡುವುದು ವ್ಯವಸ್ಥೆ. ಆದರೆ ಇಲ್ಲಿ ಕೇಸ್ ಶೀಟ್ ನೋಡಿದರೆ ಯಾವ ಮಗುವಿನ ಹೆಸರು, ತಂದೆ ತಾಯಿಯ ಹೆಸರು, ವಿಳಾಸ ಕೂಡ ಇಲ್ಲ. ಕೇವಲ ಹಿನ್ನೆಲೆಗಳನ್ನು ಮಾತ್ರ ಬರೆಯಲಾಗಿದೆ. ಇದರಿಂದ ಮಕ್ಕಳಿಗೆ ತಪ್ಪಾದ ಚಿಕಿತ್ಸೆ ನೀಡುವ ಸಾಧ್ಯತೆ ಹೆಚ್ಚು ಇರುತ್ತದೆ. ಅನಾವಶ್ಯಕವಾಗಿ ಆ ಮಗು ಅನಾರೋಗ್ಯಕ್ಕೆ ತುತ್ತಾಗಲಿದೆ. ಆದುದರಿಂದ ವೈದ್ಯರು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಅವರು ಸೂಚನೆ ನೀಡಿದರು. ಕೆಲವೊಂದು ಮಕ್ಕಳು ಡಿಸಾರ್ಚ್ ಆದರೂ ಅದನ್ನು ಕೂಡ ನಮೂದಿಸಿಲ್ಲ. ಇಲ್ಲಿ ಡಿಸಾರ್ಚ್ ಸೇರಿದಂತೆ ಯಾವುದೇ ದಾಖಲೆ ನಿರ್ವಹಣೆ ಇಲ್ಲ. ಪರಿಶೀಲನೆ ನಡೆಸಿದಾಗ ಈ ಕೊರತೆ ಎದ್ದು ಕಾಣುತ್ತದೆ ಎಂದು ಅವರು ತಿಳಿಸಿದರು. ಕೆಎಂಸಿ ಬಗ್ಗೆ ಮಾಹಿತಿ ಇಲ್ಲ: ಪ್ರತಿಯೊಂದು ಹಿಂದುಳಿದ ಪ್ರದೇಶ ಜಿಲ್ಲಾ ತಾಲೂಕು ಕೇಂದ್ರದಲ್ಲಿ ಕಂಗಾರು ತಾಯಿ ಆರೈಕೆ ಕೇಂದ್ರ(ಕೆಎಂಸಿ) ಎಂಬುದು ಇರುತ್ತದೆ. ಆದರೆ ಉಡುಪಿ ಆಸ್ಪತ್ರೆಯ ಅಧಿಕಾರಿಗಳಿಗೆ ಆ ಬಗ್ಗೆ ಮಾಹಿತಿ ಇಲ್ಲ ಎಂದು ಶಶಿಧರ್ ಕೋಸಂಬೆ ಕಳವಳ ವ್ಯಕ್ತಪಡಿಸಿದರು. ಬಾಣಂತಿಯರಿಗೆ ಎದೆ ಹಾಲು ಉಣಿಸುವ, ಯಾವ ಭಂಗಿಯಲ್ಲಿ ಹಾಲು ಉಣಿಸುವುದು ಸೇರಿದಂತೆ ಹಲವು ಮಾಹಿತಿ ಗಳನ್ನು ನೀಡಲಾಗುತ್ತದೆ. ಆದರೆ ವೈದ್ಯಾಧಿಕಾರಿಗಳಿಗೆ ಆ ವಾರ್ಡ್ ಕುರಿತು ಯಾವುದೇ ಕಲ್ಪನೆಯೇ ಇಲ್ಲ. ಆಸ್ಪತ್ರೆಯ ಮುಖ್ಯಸ್ಥರಿಗೆ ಈ ಬಗ್ಗೆ ಮಾಹಿತಿ ಕೊರತೆ ಇರುವುದು ತುಂಬಾ ಕಳವಳರಿಯಾಗಿದೆ. ಸರಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದರೂ ಜನರಿಗೆ ಅದು ತಲುಪದೆ ಇರುವುದು ನೋವಿನ ಸಂಗತಿಯಾಗಿದೆ. ಈ ಬಗ್ಗೆ ಚರ್ಚೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಯೋಗ ಶಿಫಾರಸ್ಸು ಮಾಡುತ್ತದೆ ಎಂದು ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ.ಅಶೋಕ್, ವಾರ್ತಾಧಿಕಾರಿ ಮಂಜುನಾಥ್ ಬಿ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಆರ್.ಸಿ.ಎಚ್. ಅಧಿಕಾರಿ ಜ್ಯೋತ್ಸ್ನಾ ಬಿ.ಕೆ., ನಿವಾಸಿ ವೈದ್ಯಾಧಿಕಾರಿ ವಾಸುದೇವ್ ಉಪಸ್ಥಿತರಿದ್ದರು. ತಕ್ಷಣ ಎನ್ಆರ್ಸಿ ಸ್ಥಾಪನೆಗೆ ಸೂಚನೆ! ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ(ಎನ್ಆರ್ಸಿ)ವನ್ನು ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತಕ್ಷಣವೇ ಸ್ಥಾಪಿಸುವ ಕುರಿತು ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ, ಎನ್ಆರ್ಸಿ ರಾಜ್ಯ ಡೆಪ್ಯುಟಿ ಮ್ಯಾನೇಜರ್ಗೆ ದೂರವಾಣಿ ಕರೆ ಮಾಡಿ ನಿರ್ದೇಶನ ನೀಡಿದರು. ಸಂಜೆಯೊಳಗೆ ಕುಂದಾಪುರದಲ್ಲಿದ್ದ ಎನ್ಆರ್ಸಿ ಘಟಕವನ್ನು ಉಡುಪಿಗೆ ಸ್ಥಳಾಂತರಿಸಬೇಕು. ತಾಲೂಕು ಕೇಂದ್ರ ಗಳಿಗೆ ಹೊಸದಾಗಿ ಎನ್ಆರ್ಸಿ ಘಟಕಗಳನ್ನು ಘೋಷಣೆ ಮಾಡಲಾಗಿದ್ದು, ಅದನ್ನು ಕುಂದಾಪುರಕ್ಕೆ ಒದಗಿಸಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳ ಪೌಷ್ಠಿಕ ಪುನಶ್ಚೇತನ ಕೇಂದ್ರ ಆರಂಭಿಸಲು ಆಯೋಗ ಕ್ರಮ ವಹಿಸಲಿದೆ ಎಂದು ಅವರು ಹೇಳಿದರು. ಸ್ಕ್ಯಾನಿಂಗ್ ಸೆಂಟರ್ಗೆ ಭೇಟಿ ಉಡುಪಿ ನಗರ ಆದರ್ಶ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್ಗೆ ಭೇಟಿ ನೀಡಿದ ಶಶಿಧರ್ ಕೋಸಂಬೆ, ಅಲ್ಲಿನ ಕಡತ ಗಳು, ನಿಗದಿತ ನಮೂನೆಯ ರಿಜಿಸ್ಟರ್ಗಳ ನಿರ್ವಹಣೆ, ಸೂಚನಾ ಫಲಕಗಳ ಅಳವಡಿಕೆ, ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವುದರ ಬಗ್ಗೆ ಪರಿಶೀಲಿಸಿದರು. ಸರಕಾರದ ಮಾರ್ಗಸೂಚಿ ಅನ್ವಯ ದಾಖಲೆಗಳನ್ನು ನಿರ್ವಹಣೆ ಮಾಡಬೇಕು. ಗರ್ಭಿಣಿ ಮಹಿಳೆಯರಿಗೆ ಸ್ಕ್ಯಾನಿಂಗ್ ಮಾಡುವ ಮುನ್ನ ಸರಕಾರದ ಪೋರ್ಟಲ್ ಬಾಲಿಕಾ ಸಾಫ್ಟ್ವೇರ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು ಎಂದು ಅವರು ಸೂಚಿಸಿದರು. ಋನಂತರ ಬ್ರಹ್ಮಾವರ ಪೊಲೀಸ್ ಠಾಣೆ, ಹಂದಾಡಿಯ ಗ್ರಾಪಂ ಕಚೇರಿಗೆ ಅಲ್ಲಿನ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿ ಮಾತನಾಡಿ, ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಎಲ್ಲಾ ಕಚೇರಿಗಳಲ್ಲಿಯೂ ನಮೂದಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳ ಗ್ರಾಮಸಭೆ, ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಶಿಕ್ಷಣ ಕಾರ್ಯಪಡೆಯ ಸಭೆಯನ್ನು ಆಗಿಂದಾಗ್ಗೆ ನಡೆಸಬೇಕೆಂದರು.
ಹಾರ್ಮುಝ್ ಜಲಸಂಧಿಯಲ್ಲಿ ಮತ್ತೆ ಹಡಗಿನ ಮೇಲೆ ಕ್ಷಿಪಣಿ ದಾಳಿ
ಟೆಹ್ರಾನ್, ಮಾ. 13: ಹಾರ್ಮುಝ್ ಜಲಸಂಧಿ ಸಮೀಪದಲ್ಲಿ ಸಾಗುತ್ತಿದ್ದ ಹಡಗಿಗೆ ಕ್ಷಿಪಣಿ ದಾಳಿ ಮಾಡಿದ ಪರಿಣಾಮ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ ಎಂದು ಯುನೈಟೆಡ್ ಕಿಂಗ್ ಡಮ್ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ (UKMTO) ತಿಳಿಸಿದೆ ಎಂದು Aljazeera ವರದಿ ಮಾಡಿದೆ. ‘ಹಾರ್ಮುಝ್ ಜಲಸಂಧಿಯಲ್ಲಿ ಸಾಗುತ್ತಿದ್ದ ಹಡಗಿಗೆ ಅಜ್ಞಾತ ಕ್ಷಿಪಣಿ ದಾಳಿ ಮಾಡಿರುವ ಕುರಿತು ವರದಿ ಬಂದಿದೆ. ಇದರ ಪರಿಣಾಮವಾಗಿ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ,’ ಎಂದು UKMTO ಪ್ರಕಟನೆಯಲ್ಲಿ ತಿಳಿಸಿದೆ. ಇರಾನ್ ಪ್ರಮುಖ ಸಮುದ್ರ ಮಾರ್ಗವಾಗಿರುವ ಈ ಜಲಸಂಧಿಯನ್ನು ಮುಚ್ಚುವ ಕ್ರಮವನ್ನು ಮುಂದುವರಿಸುತ್ತಿರುವ ಹಿನ್ನೆಲೆಯಲ್ಲಿ, ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಹಲವಾರು ಹಡಗುಗಳ ಮೇಲೆ ದಾಳಿಗಳು ನಡೆದಿರುವುದಾಗಿ ವರದಿಯಾಗಿದೆ. ಇದರ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲದ ಬೆಲೆಗಳು ಗಗನಕ್ಕೇರಿವೆ. ಇದರ ನಡುವೆ, ಇರಾನ್ ನ ಸರ್ವೋಚ್ಚ ನಾಯಕನಾಗಿ ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ ಮೊಜ್ತಾಬಾ ಖಾಮಿನೈ ಅವರು, ‘ಹಾರ್ಮುಝ್ ಜಲಸಂಧಿಯನ್ನು ಮುಚ್ಚುವ ತಂತ್ರವನ್ನು ಮುಂದುವರಿಸಬೇಕು,’ ಎಂದು ಹೇಳಿದ್ದಾರೆ.
ಆಸ್ಪತ್ರೆ, ವಿದ್ಯಾರ್ಥಿ ನಿಲಯಗಳಿಗೆ ವಾಣಿಜ್ಯ ಸಿಲಿಂಡರ್ ಪೂರೈಕೆ : ಕೆ.ಎಚ್.ಮುನಿಯಪ್ಪ
‘ಹೋಟೆಲ್ಗಳಿಗೆ ಒಂದು ವಾರ ವಾಣಿಜ್ಯ ಸಿಲಿಂಡರ್ಗಳ ಕೊರತೆ’
ಬಳ್ಳಾರಿ | ಬಾಲ್ಯ ವಿವಾಹ ಕಂಡು ಬಂದರೆ ತಕ್ಷಣ ಮಾಹಿತಿ ನೀಡಿ : ಸಹಾಯಕ ಆಯುಕ್ತ ರಾಜೇಶ್
ಬಳ್ಳಾರಿ / ಕಂಪ್ಲಿ: ಬಾಲ್ಯ ವಿವಾಹ ಕಾನೂನು ಬಾಹಿರವಾಗಿದ್ದು, ಇಂತಹ ಪ್ರಕರಣಗಳು ಕಂಡು ಬಂದರೆ ನಾಗರಿಕರು ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಂತಹ ಕಾನೂನು ಬಾಹಿರ ಘಟನೆಗಳನ್ನು ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತ ಹೆಚ್.ಡಿ. ರಾಜೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಪುರಸಭೆಯಲ್ಲಿ ಗುರುವಾರ ನಡೆದ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕಾವಲು ಸಮಿತಿ ಸಭೆಗೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಈಗಾಗಲೇ ಕಾವಲು ಸಮಿತಿಯನ್ನು ಪುರಸಭೆಗೂ ವಿಸ್ತರಿಸಲಾಗಿದೆ. ಸಮಿತಿ ರಚಿಸಿ ಮಹಿಳೆಯರ ಸುರಕ್ಷತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು. ಎಲ್ಲಾ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಎನ್ಜಿಒಗಳ ಸಮ್ಮುಖದಲ್ಲಿ ಕಂಪ್ಲಿಯಲ್ಲಿ ಮೊದಲ ಬಾರಿಗೆ ಈ ಸಭೆ ಜರುಗಿದೆ. ಮುಂದಿನ ಎರಡು ದಿನಗಳಲ್ಲಿ ಕಾವಲು ಸಮಿತಿ ರಚಿಸಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. ಮಹಿಳೆಯರು ಮತ್ತು ಮಕ್ಕಳಲ್ಲಿ ಕಾನೂನು ಹಕ್ಕುಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ತಾಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ ಮೂಲಕ ಜಾಗೃತಿ ಅಭಿಯಾನ ಕೈಗೊಳ್ಳಬೇಕು. ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪೋಷಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು. ಮಕ್ಕಳ ಭಿಕ್ಷಾಟನೆ ತಡೆಯುವ ಜೊತೆಗೆ ಅವರಿಗೆ ಶಿಕ್ಷಣ ಸಿಗುವಂತೆ ವ್ಯವಸ್ಥೆ ಮಾಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು. ಅಷ್ಟರೊಳಗೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ ವರದಿ ಸಲ್ಲಿಸಬೇಕು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದರ ಜೊತೆಗೆ ಮಹಿಳೆಯರ ರಕ್ಷಣೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಮುಖ್ಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ, ಪುರಸಭೆ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮೂರು ವರ್ಷಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ: ಪೋಷಕರು-ವಿದ್ಯಾರ್ಥಿಗಳಿಗೆ ಜಾಗೃತಿ : ಎಚ್.ಸಿ.ಮಹದೇವಪ್ಪ
ಬೆಂಗಳೂರು : ಹಿಂದಿನ ಮೂರು ವರ್ಷಗಳಲ್ಲಿ ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿದ್ಯಾರ್ಥಿಗಳು ಆತ್ಮಹತ್ಯೆ ಘಟನೆಗಳ ಪೈಕಿ ಸರಕಾರಿ ಶಾಲೆಗಳಲ್ಲಿ 10, ವಸತಿ ನಿಲಯಗಳಲ್ಲಿ 5 ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ 12 ಪ್ರಕರಣಗಳು ದಾಖಲಾಗಿವೆ. ಮಾನಸಿಕ ಒತ್ತಡ, ವೈಯಕ್ತಿಕ ಸಮಸ್ಯೆಗಳು ಮತ್ತು ಆನ್ಲೈನ್ ಜೂಜಾಟವೂ ಕಾರಣಗಳಾಗಿ ಕಂಡುಬಂದಿವೆ ಎಂದರು. ಕರ್ನಾಟಕ ಆತ್ಮಹತ್ಯೆ ತಡೆ ನೀತಿ 2025ರಂತೆ 100ಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಪ್ರತಿಯೊಂದು ಸಂಸ್ಥೆಯು ಕನಿಷ್ಠ ಒಬ್ಬ ಅರ್ಹ ಮನೋವೈದ್ಯರನ್ನು, ಕೌನ್ಸಿಲರ್ ಅಥವಾ ಸಮಾಜ ಸೇವಕರನ್ನು ನೇಮಿಸಬೇಕು. ಅದರಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಇಲಾಖಾ ನಿಲಯಗಳಲ್ಲಿ ಪ್ರತಿವಾರ ಮಹಿಳಾ ಸಮಾಲೋಚಕಿ/ಮಹಿಳಾ ವೈದ್ಯರ ಮೂಲಕ ಸಮಾಲೋಚನೆ ಮಾಡಲು ಆದೇಶಿಸಲಾಗಿದೆ ಎಂದು ಎಚ್.ಸಿ.ಮಹದೇವಪ್ಪ ಹೇಳಿದರು.
Bidar | ನಾರ್ಕೋಟಿಕ್ ಸಿರಪ್ ಬಾಟಲಿ ಮಾರಾಟ: ಇಬ್ಬರು ಆರೋಪಿಗಳ ಬಂಧನ
ಬೀದರ್: ಸುಮಾರು 24,424 ರೂ. ಮೌಲ್ಯದ 100 ಎಂಎಲ್ ಗಾತ್ರದ ಒಟ್ಟು 142 ನಾರ್ಕೋಟಿಕ್ ಮಾದಕ ದ್ರವ್ಯ ಅಂಶಗಳಿರುವ ಸಿರಪ್ ಬಾಟಲಿಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗಾಂಧಿಗಂಜ ಪೊಲೀಸ್ ಠಾಣೆ ವ್ಯಾಪ್ತಿಯ ಶಾಹೀನ್ ಕಾಲೇಜು ಕ್ರಾಸ್ ಸಮೀಪ ಗುರುವಾರ ಇಬ್ಬರು ವ್ಯಕ್ತಿಗಳು ಯಾವುದೇ ಪರವಾನಿಗೆ ಇಲ್ಲದೆ ನಾರ್ಕೋಟಿಕ್ ಅಂಶ ಹೊಂದಿರುವ ಸಿರಪ್ ಬಾಟಲಿಗಳನ್ನು ಎರಡು ಬ್ಯಾಗ್ಗಳಲ್ಲಿ ಇಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ್ದರಿಂದ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ ಆರೋಪಿಗಳಿಂದ ಸುಮಾರು 24,424 ರೂ. ಮೌಲ್ಯದ ಒಟ್ಟು 142 ನಾರ್ಕೋಟಿಕ್ ಸಿರಪ್ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಈ ಸಿರಪ್ಗಳನ್ನು ಹೈದ್ರಾಬಾದ್ನಿಂದ ತಂದು ಜಿಲ್ಲೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಲಾಗಿದೆ. ಈ ಸಂಬಂಧ ಗಾಂಧಿಗಂಜ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೀದರ್ ಜಿಲ್ಲೆಯಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಸರಬರಾಜು ಮಾಡುವುದು ಅಪರಾಧವಾಗಿದ್ದು, ಇಂತಹ ಚಟುವಟಿಕೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ಮುಂದುವರಿಸಲಿದೆ ಎಂದು ಎಸ್ಪಿ ಪ್ರದೀಪ್ ಗುಂಟಿ ಎಚ್ಚರಿಕೆ ನೀಡಿದ್ದಾರೆ.
ಕನಕಗಿರಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ: ಲಕ್ಷಾಂತರ ನಷ್ಟ
ಗ್ರಾಮ ಪಂಚಾಯತ್ ವತಿಯಿಂದ ಕುಟುಂಬಸ್ಥರಿಗೆ 5 ಸಾವಿರ ರೂ. ಚೆಕ್ ವಿತರಣೆ
ಸುರತ್ಕಲ್| ನೀರಿನ ಸಂಪರ್ಕ ಕಡಿತ ಆರೋಪ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ
ಸುರತ್ಕಲ್: ಇಲ್ಲಿನ ಚೇಳ್ಯಾರು ಗ್ರಾಮ ಪಂಚಾಯತ್ನ ಮಧ್ಯದ ಅಳಿವಿನಂಚಿನಲ್ಲಿರುವ ಕೊರಗ ಸಮುದಾಯದ ಕಾಲನಿಯ ಆರು ಕುಟುಂಬಗಳ ನೀರಿನ ಸಂಪರ್ಕ ಕಡಿತಗೊಳಿಸಿದ್ದ ಸ್ಥಳಕ್ಕೆ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಮಹೇಶ್ ಹೊಳ್ಳ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ಕಾಲನಿ ನಿವಾಸಿಗಳ ಅಹವಾಲು ಆಲಿಸಿದರು. ಈ ವೇಳೆ ಕೊರಗ ಕಾಲನಿಯ ಸಂತ್ರಸ್ತರು ಚೇಳಾಯರು ಗ್ರಾಮ ಪಂಚಾಯತ್ನ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೀರಿನ ಸಂಪರ್ಕಕ್ಕೆ ಅಳವಡಿಸಿದ್ದ ವಿದ್ಯುತ್ ಕಡಿತಗೊಳಿಸಿರುವ ಬಗ್ಗೆ ಮಾಹಿತಿ ಕೇಳಿದ ತಾ.ಪಂ. ಇಒ ಅವರು, ತಡಿತಗೊಳಿಸಿದ್ದ ಮನೆಗೆಳ ನೀರಿನ ಸಂಪರ್ಕವನ್ನು ಜೋಡಿಸುವಂತೆ ಸೂಚನೆ ನೀಡಿದರು. ಜೊತೆಗೆ ನೀರಿನ ಟ್ಯಾಂಕ್ ಗೆ ಅಳವಡಿಸಿದ್ದ ವಿದ್ಯುತ್ ಸಂಪರ್ಕವನ್ನೂ ಮರುಜೋಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದರಂತೆ ಅಧಿಕಾರಿಗಳು ಸಂಪರ್ಕ ಮರುಜೋಡಣೆ ನಡೆಸಿದರು. ನಳ್ಳಿಯಲ್ಲಿ ಕಲುಷಿತ ನೀರುಬರುತ್ತಿರುವ ಬಗ್ಗೆ ಕಾಲನಿ ನಿವಾಸಿಗಳು ಕಾರ್ಯನಿರ್ವಹಣಾಧಿಕಾರಿಗೆದೂರು ನೀಡಿದರು. ಈ ವೇಳೆ ನೀರಿನ ಮಾದರಿಯನ್ನು ಪಡೆದುಕೊಂಡು ಪರೀಕ್ಷೆಗೆ ಒಳಪಡಿಸಲಾಗುವುದು. ವರದಿ ಬಂದ ಬಳಿಕ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಮಾತನಾಡಿದ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಮಹೇಶ್ ಹೊಳ್ಳ ಅವರು, ಸದ್ಯ ನೀರಿನ ಬಿಲ್ ಕಟ್ಟದಿರುವ ಕಾರಣಕ್ಕೆ ಕಾನೂನು ಪ್ರಕಾರ ನೀರಿನ ಮೀಟರ್ ನ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಸದ್ಯ ಮರು ವಿದ್ಯುತ್ ಸಂಪರ್ಕ ನೀಡಲಾಗುವುದು. ಬಾಕಿರುವ ವಿದ್ಯುತ್ ಬಿಲ್ ನ ಶೇ.50ನ್ನು ಕಾಲಾವಕಾಶ ಪಡೆದುಕೊಂಡು ಮನೆಯವರು ಭರಿಸಬೇಕು, ಉಳಿದ ಶೇ.50ನ್ನು ಸರಕಾರ ಭರಿಸಲಿದೆ ಎಂದು ಹೇಳಿದರು. ಈ ಮೂಲಕ ಕೊರಗ ಸಮುದಾಯದ ಆರು ಮನೆಗಳ ಕುಡಿಯುವ ನೀರಿನ ಸಂಪರ್ಕವನ್ನು ಕಡಿತಗೊಳಿಸಿದ ಪ್ರಕರಣ ತಾತ್ಕಾಲಿಕವಾಗಿ ಬಗೆಹರಿದಿದೆ. ಅಳಿವಿನಂಚಿನಲ್ಲಿರುವ ಬುಡಕಟ್ಟು ಎಂದು ಸರಕಾರ ಗುರುತಿಸಿರುವ ಕೊರಗ ಸಮುದಾಯದ ತೀರಾ ಬಡ ಕುಟುಂಬ ದೊಂದಿಗೆ ತೀರಾ ಅಮಾನವೀಯವಾಗಿ ನಡೆದುಕೊಂಡ ಪಂಚಾಯತ್ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಕೊರಗ ಕುಟುಂಬಗಳು ತೀವ್ರ ಬಡತನದ ಕಾರಣದಿಂದ ಬಾಕಿ ಉಳಿಸಿರುವ ನೀರಿನ ಬಿಲ್ ಮೊತ್ತವನ್ನು ಪೂರ್ತಿ ಮನ್ನಾ ಗೊಳಿಸಬೇಕು. ಕೊರಗ ಕಾಲನಿಗೆ ಶುದ್ದ ಕುಡಿಯುವ ನೀರಿನ್ನು ಉಚಿತವಾಗಿ ಪೂರೈಸಬೇಕು ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಒತ್ತಾಯಿಸಿದೆ. ಮಂಗಳೂರಿನ ಚೇಳ್ಯಾರು ಗ್ರಾಮ ಪಂಚಾಯತ್ ಅಳಿವಿನಂಚಿನಲ್ಲಿರುವ ಕೊರಗ ಸಮುದಾಯದ ಬಡ ಕುಟುಂಬಗಳ ಮೇಲೆ ತೋರಿಸುತ್ತಿರುವ ಕ್ರೂರ ಮತ್ತು ಪ್ರತೀಕಾರದ ಆಡಳಿತ ಮನೋಭಾವ ಅತ್ಯಂತ ಖಂಡನೀಯವಾಗಿದೆ. ಬಿಲ್ ಪಾವತಿಸಿಲ್ಲ ಎಂಬ ನೆಪವನ್ನು ಮುಂದಿಟ್ಟು ಆರ್ಥಿಕವಾಗಿ ತೀರಾ ದುರ್ಬಲವಾದ ಆರು ಕೊರಗ ಕುಟುಂಬಗಳ ಮನೆ ಗಳ ಕುಡಿಯುವ ನೀರಿನ ಸಂಪರ್ಕವನ್ನು ನಿನ್ನೆ ಕಡಿತಗೊಳಿಸಿರುವುದು ಮಾನವೀಯತೆ ಎಂಬ ಪದಕ್ಕೂ ಅವಮಾನ ವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ದಕ್ಷಿಣ ಕನ್ನಡ ಜಿಲ್ಲಾ ಮಾರ್ಗದರ್ಶಕರಾದ ಯೋಗೀಶ್ ಜಪ್ಪಿನಮೊಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅನ್ಯಾಯವನ್ನು ನಾವು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಪಂಚಾಯತ್ ಆಡಳಿತವು ಸೇಡು ತೀರಿಸುವ ರೀತಿಯಲ್ಲಿ ವರ್ತಿಸಿರುವುದು ಇನ್ನಷ್ಟು ಗಂಭೀರ ವಿಷಯವಾಗಿದೆ. ಮನೆಗಳಿಗೆ ನೀರಿನ ಸಂಪರ್ಕ ಕಡಿತಗೊಂಡ ಬಳಿಕ ಕೊರಗ ಕುಟುಂಬಗಳು ಕಾಲೋನಿಯಲ್ಲಿದ್ದ ಪಂಚಾಯತ್ ಸಾರ್ವಜನಿಕ ಕೊಳವೆಯಿಂದ ನೀರು ತಂದು ಬದುಕು ಸಾಗಿಸುತ್ತಿದ್ದರು. ಆದರೆ ಇದನ್ನೂ ಸಹಿಸದ ಪಂಚಾಯತ್ ಆಡಳಿತವು ಆ ಕೊಳವೆಯ ನೀರಿನ ಸಂಪರ್ಕವನ್ನೂ ಕಡಿತಗೊಳಿಸಿರುವುದು ಆಡಳಿತದ ಕ್ರೂರ ಮನೋಭಾವವನ್ನು ಸ್ಪಷ್ಟವಾಗಿ ಬಯಲಿಗೆಳೆದಿದೆ. ಇದರಿಂದಾಗಿ ಆರು ಕೊರಗ ಕುಟುಂಬಗಳನ್ನು ಹನಿ ನೀರಿಗೂ ವಂಚಿಸುವ ಮಟ್ಟಿಗೆ ಆಡಳಿತ ಇಳಿದಿರುವುದು ಅಕ್ಷರಶಃ ಅಮಾನವೀಯ ದೌರ್ಜನ್ಯವಾಗಿದೆ. ದುಡ್ಡಿಲ್ಲದಿದ್ದರೆ ನೀರು ಕೂಡ ಸಿಗಬಾರದು ಎಂಬ ಅಮಾನವೀಯ ಸಂದೇಶವನ್ನು ಸರ್ಕಾರದ ಆಡಳಿತ ವ್ಯವಸ್ಥೆಯೇ ನೀಡುತ್ತಿರುವಂತಾಗಿದೆ. ಅಳಿವಿನಂಚಿನ ಬುಡಕಟ್ಟು ಸಮುದಾ ಯದ ಮೇಲೆ ನಡೆಯುತ್ತಿರುವ ಈ ರೀತಿಯ ವರ್ತನೆ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ತುಳಿಯುವಂತಾಗಿದೆ. ಈ ಘಟನೆ ಬಗ್ಗೆ ಜಿಲ್ಲಾಡಳಿತ ತೋರಿಸುತ್ತಿರುವ ಮೌನ ಅತ್ಯಂತ ಖಂಡನೀಯ ಮತ್ತು ಅಸಹನೀಯವಾಗಿದೆ. ತಕ್ಷಣವೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಈ ಕುಟುಂಬಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮರು ಸ್ಥಾಪಿಸಬೇಕು ಮತ್ತು ಈ ಅಮಾನವೀಯ ಕ್ರಮಕ್ಕೆ ಹೊಣೆಗಾರರಾದ ಪಂಚಾಯತ್ ಆಡಳಿತದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಈ ಅನ್ಯಾಯದ ವಿರುದ್ಧ ತೀವ್ರ ಹೋರಾಟ ಮತ್ತು ಜನಪ್ರತಿರೋಧ ಅನಿವಾರ್ಯ ವಾಗಲಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ಪಷ್ಟವಾಗಿ ಎಚ್ಚರಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ | ಪೊಲೀಸ್ ಶ್ವಾನ ದಳಕ್ಕೆ ಐದು ನೂತನ ಶ್ವಾನಗಳ ಸೇರ್ಪಡೆ
ಕಲಬುರಗಿ: ನಗರದ ಪೊಲೀಸ್ ಆಯುಕ್ತಾಲಯದ ಶ್ವಾನ ದಳಕ್ಕೆ ಐದು ನೂತನ ಶ್ವಾನಗಳ ಸೇರ್ಪಡೆಯಾಗಿದ್ದು, ಜಿಲ್ಲೆಯ ಭದ್ರತಾ ವ್ಯವಸ್ಥೆ ಮತ್ತಷ್ಟು ಬಲಗೊಂಡಿದೆ. ಬೆಂಗಳೂರಿನ ಸಿ.ಎ.ಆರ್ (ದಕ್ಷಿಣ) ಘಟಕದಲ್ಲಿ ಆರು ತಿಂಗಳ ಕಾಲ ನಡೆದ ಕಠಿಣ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಈ ಶ್ವಾನಗಳು ಶುಕ್ರವಾರ ನಗರಕ್ಕೆ ಮರಳಿವೆ. ಪೊಲೀಸ್ ಪ್ರಧಾನ ಕಚೇರಿಯಿಂದ ಹಂಚಿಕೆಯಾಗಿದ್ದ ಶ್ವಾನ ಮರಿಗಳಿಗೆ ಅಪರಾಧ ತನಿಖೆ, ಸ್ಫೋಟಕಗಳ ಪತ್ತೆ ಹಾಗೂ ಮಾದಕ ವಸ್ತುಗಳ ಶೋಧ ಕಾರ್ಯಗಳಲ್ಲಿ ವಿಶೇಷ ತರಬೇತಿ ನೀಡಲಾಗಿದೆ. ಈ ಶ್ವಾನಗಳು ನಗರದಲ್ಲಿ ನಡೆಯುವ ವಿವಿಐಪಿ ಭದ್ರತೆ, ಸಾರ್ವಜನಿಕ ಸಮಾರಂಭಗಳು ಹಾಗೂ ಗಂಭೀರ ಅಪರಾಧ ಪ್ರಕರಣಗಳ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶ್ವಾನ ದಳದಲ್ಲಿ ಜರ್ಮನ್ ಶೆಫರ್ಡ್ ತಳಿಯ ರೂಬಿ ಮತ್ತು ಆಲಿಸಿ ಸ್ಫೋಟಕ ಪತ್ತೆಯಲ್ಲಿ ಪರಿಣತಿ ಹೊಂದಿವೆ. ಲ್ಯಾಬ್ರಡಾರ್ ರಿಟ್ರೈವರ್ ತಳಿಯ ಸ್ಪಿಯರ್ಕಿ ಮತ್ತು ಕ್ರೀಡೆಕೂಟ ಸ್ಫೋಟಕ ಪತ್ತೆ ಕಾರ್ಯಕ್ಕೆ ನಿಯೋಜನೆಗೊಂಡಿವೆ. ಮಾದಕ ವಸ್ತುಗಳ ಪತ್ತೆಗಾಗಿ ಬೆಲ್ಜಿಯಂ ಮಾಲಿನೋಯಿಸ್ ತಳಿಯ ಲಿಯೋಗೆ ವಿಶೇಷ ತರಬೇತಿ ನೀಡಲಾಗಿದೆ. ಇವುಗಳ ನಿರ್ವಹಣೆಗಾಗಿ ಗಾದಿಲಿಂಗಪ್ಪ, ಪ್ರಶಾಂತ್, ರಮೇಶ್, ಭವಿಷ್ಯ, ಹರಿಶಗೌಡ, ಮನೋಜ್ ಮತ್ತು ಸಂತೋಷ್ ಅವರನ್ನು ಹ್ಯಾಂಡ್ಲರ್ಗಳಾಗಿ ನೇಮಿಸಲಾಗಿದೆ. ಬೆಂಗಳೂರಿನಲ್ಲಿ ತರಬೇತಿ ಮುಗಿಸಿ ಬಂದ ಈ ಶ್ವಾನಗಳನ್ನು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಎಸಿಪಿ (ಸಿಎಆರ್) ಎಚ್.ಎಂ.ಡಿ. ಸರ್ದಾರ್ ಹಾಗೂ ಆರ್ಪಿಐ ಮಹದೇವ ಪಾಟೀಲ್ ಉಪಸ್ಥಿತರಿದ್ದರು. “ನಮ್ಮ ಪೊಲೀಸ್ ಪಡೆಯಲ್ಲಿ ಶ್ವಾನದಳದ ಪಾತ್ರ ಬಹಳ ಮುಖ್ಯ. ಈ ಬಾರಿ ಅತ್ಯಾಧುನಿಕ ತರಬೇತಿ ಪಡೆದು ಇಲಾಖೆಗೆ ಸೇರಿದ ಶ್ವಾನಗಳು ಅಪರಾಧ ಪತ್ತೆ ಹಾಗೂ ತನಿಖೆಗೆ ಹೊಸ ವೇಗ ನೀಡಲಿವೆ. ಇವುಗಳ ಸೇರ್ಪಡೆಯಿಂದ ಇಲಾಖೆಯ ತನಿಖಾ ದಕ್ಷತೆ ಮತ್ತು ಸಾರ್ವಜನಿಕ ಸುರಕ್ಷತೆ ಮತ್ತಷ್ಟು ಹೆಚ್ಚಲಿದೆ.” -ಡಾ. ಶರಣಪ್ಪ ಎಸ್.ಡಿ., ನಗರ ಪೊಲೀಸ್ ಆಯುಕ್ತ, ಕಲಬುರಗಿ
ಕಲಬುರಗಿ | ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ : ಜಾಗೃತಿ ಜಾಥಾ
ಕಲಬುರಗಿ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಲಬುರಗಿ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಶುಕ್ರವಾರ ಜಾಥಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಇಲ್ಲಿನ ತಾರಫೈಲ್ನ ಸರ್ಕಾರಿ ಪ್ರೌಢ ಶಾಲೆಯಿಂದ ಪ್ರಾರಂಭವಾದ ಜಾಥಾವು ನಗರದ ವಿವಿಧ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಜಾಥಾದ ಮೂಲಕ ಸ್ವಚ್ಛತೆ ಮತ್ತು ಸ್ವಚ್ಛ ಭಾರತ ಅಭಿಯಾನ, ಅಪೌಷ್ಟಿಕತೆ ತಡೆಗಟ್ಟುವಿಕೆ, ಪೌಷ್ಟಿಕ ಹಾಗೂ ಆರೋಗ್ಯಕರ ಆಹಾರದ ಮಹತ್ವ, ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ, ಅಗ್ನಿ ಸುರಕ್ಷತೆ, “ಆರೋಗ್ಯವಂತ ಮಹಿಳೆ, ಸದೃಢ ಸಮಾಜ”, ಪರಿಸರ ಸುಸ್ಥಿರತೆ, ‘ಬೇಟಿ ಬಚಾವ್ ಬೇಟಿ ಪಡಾವೋ’, ಮತದಾನ ಜಾಗೃತಿ, ಸಂವಿಧಾನದ ಅರಿವು ಹಾಗೂ ತೋಟಗಾರಿಕೆ ಸೇರಿದಂತೆ ಹಲವು ಸಾಮಾಜಿಕ ವಿಷಯಗಳ ಕುರಿತು ಜಾಗೃತಿ ಮೂಡಿಸಲಾಯಿತು. ವಿಶೇಷವಾಗಿ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ಹಾನಿ ಹಾಗೂ ಅದರ ನಿಯಂತ್ರಣದ ಅಗತ್ಯತೆಯ ಕುರಿತು ತಿಳುವಳಿಕೆ ಹೇಳಲಾಯಿತು. ಈ ಸಂದರ್ಭದಲ್ಲಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಪ್ರಾಚಾರ್ಯ ರಾಘವೇಂದ್ರ ಪಿ. ಆರ್, ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕುಲಸಚಿವ ಶರಣಬಸಪ್ಪ ಹಾಲ್ವಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಆರೀಫಾ ಖಾತೂನ್, ಸಹಾಯಕ ಶಿಬಿರಾಧಿಕಾರಿಗಳಾದ ಗೋವಿಂದ, ಶ್ರೀದೇವಿ ಗಟ್ಟು, ಡಾ. ಸಪ್ನಾ ಸೇರಿದಂತೆ ಉಪನ್ಯಾಸಕರು, ಕಚೇರಿ ಸಿಬ್ಬಂದಿ ವರ್ಗ, ಸಕಲ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇದ್ದರು.
ಚಿತ್ತಾಪುರ | ಮತದಾರರ ಪಟ್ಟಿ ವಿಶೇಷ ಮ್ಯಾಪಿಂಗ್ ಅಭಿಯಾನ
ಚಿತ್ತಾಪುರ: ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಅವರ ಆದೇಶದ ಅನ್ವಯ 2002 ರ ಮತದಾರರ ಪಟ್ಟಿಗೆ 2025 ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕುರಿತು ಶುಕ್ರವಾರದಿಂದ (ಮಾ.13)ವಿಶೇಷ ಮ್ಯಾಪಿಂಗ್ ಅಭಿಯಾನ ಕೈಗೊಳ್ಳಲಾಗುತ್ತಿದೆ ಎಂದು ಚುನಾವಣಾಧಿ ಕಾರಿಗಳು ಹಾಗೂ ತಹಶೀಲ್ದಾರ್ ನಾಗಯ್ಯ ಹಿರೆಮಠ ಅವರು ತಿಳಿಸಿದ್ದಾರೆ. ಚಿತ್ತಾಪುರದಲ್ಲಿ ಒಟ್ಟು 2,53,891 ಮತದಾರರಲ್ಲಿ 2,41,770 ಮತದಾರರ ವಿಶೇಷ ಮತಪಟ್ಟಿ ಪರಿಷ್ಕರಣೆಯ ಮ್ಯಾಪಿಂಗ್ ಮಾಡಲಾಗಿದೆ. ಶೇಕಡ 95.23 ಪ್ರತಿಶತ ಪ್ರಗತಿ ಸಾಧಿಸಿ ಜಿಲ್ಲೆಯಲ್ಲಿಯೇ 2ನೇ ಸ್ಥಾನದಲ್ಲಿದೆ. ಬಾಕಿ ಉಳಿದ 12121 ಮತದಾರರ ಮ್ಯಾಪಿಂಗ್ ಮಾಡಲು ವಿಶೇಷ ಅಭಿಯಾನ ಕೈಗೊಳ್ಳಲಾಗಿದೆ. ಆದ್ದರಿಂದ ಮತದಾರರು ನಿಮ್ಮ ಬಿ.ಎಲ್.ಓ ಅವರಿಗೆ ಭೇಟಿಯಾಗಿ ನಿಮ್ಮ ಮನೆಗೆ ಮತಗಟ್ಟೆ ಅಧಿಕಾರಿಗಳು ಭೇಟಿ ನೀಡಿದಾಗ ಮ್ಯಾಪಿಂಗ್ ಮಾಡಿಕೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
KSRTC ಹೊಸ 70 ಪಲ್ಲಕ್ಕಿ ಸ್ಲೀಪರ್ ಬಸ್ಗಳಿಗೆ ಚಾಲನೆ; ನೂತನ 45 ಕೆಂಪು ಬಸ್ ಕೂಡ ರಸ್ತೆಗೆ! ಎಲ್ಲೆಲ್ಲಿ ಸಂಚಾರ?
ಕೆಎಸ್ಆರ್ಟಿಸಿಯಿಂದ ಹೊಸ 70 ಪಲ್ಲಕ್ಕಿ ಸ್ಲೀಪರ್ ಬಸ್ಗಳಿಗೆ ಚಾಲನೆ ನೀಡಿಲಾಗಿದೆ. ಜತೆಗೆ 45 ಸಾರಿಗೆ ಬಸ್ಗಳು ಕೂಡ ರಸ್ತೆಗಿಳಿದಿವೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಈ ಹೊಸ ಬಸ್ಗಳಿಗೆ ಹಸಿರು ನಿಶಾನೆ ತೋರಿದರು. ಇನ್ನೂ ಯಾವೆಲ್ಲಾ ಮಾರ್ಗದಲ್ಲಿ ನೂತನ ಬಸ್ಗಳು ಸಂಚಾರ ನಡೆಸಲಿವೆ? ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
ಚಿತ್ತಾಪುರ | ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ
ಚಿತ್ತಾಪುರ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೇವಿಂದ್ರ ಅರಣಕಲ್ ಭಾಗೋಡಿ ಹಾಗೂ ಉಪಾಧ್ಯಕ್ಷರಾಗಿ ಅಶೋಕ ಹರನಾಳ ವಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಹಕಾರ ಅಭಿವೃದ್ಧಿ ಅಧಿಕಾರಿ ಹಾಗೂ ಚುನಾವಣಾಧಿಕಾರಿ ಚಾಂದ್ ಭಾಷಾ ಅನ್ಸಾರಿ ತಿಳಿಸಿದ್ದಾರೆ. ಪಟ್ಟಣದ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ದೇವಿಂದ್ರ ಅರಣಕಲ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಹರನಾಳ ಅವರು ನಾಮಪತ್ರ ಸಲ್ಲಿಸಿದರು. ಪ್ರತಿಸ್ಪರ್ಧಿ ಯಾವುದೇ ನಾಮಪತ್ರಗಳು ಬಾರದೆ ಇರುವುದರಿಂದ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಘೋಷಿಸಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ನೂತನ ನಿರ್ದೇಶಕರಾದ ಈರಯ್ಯಾ ರೇವಣಸಿದ್ದಯ್ಯಾ ಬೆಣ್ಣೂರ ಬಿ., ಭೀಮಾಶಂಕರ ಗುರಣ್ಣ ನಾಲವಾರ, ಅಬ್ದುಲ್ ರಶೀದ್ ಹಸನಸಾಬ್ ಯಾದಗೀರ ದಂಡೋತಿ, ಶ್ರೀನಿವಾಸ ರಾಘವೇಂದ್ರ ಕೊಡದೂರ, ರಾಚಪ್ಪಾ ನಿಂಗಪ್ಪ, ವಿಜಯಕುಮಾರ ರೇವಣಸಿದ್ದಪ್ಪ ತೆಂಗಳಿ, ಗೌರಮ್ಮ ಮಲ್ಲಿನಾಥ ಕಮರವಾಡಿ, ಸುನಿತಾ ಅಶೋಕ ವಗ್ಗರ ರಾವೂರ, ಮಹೇಶ ಸಾಬಣ್ಣ ಧರಿ ಭಂಕೂರ, ಅಂಬರೀಷ ಚಂದ್ರಶೇಖರ ಸುಲೇಗಾಂವ ಚಿತ್ತಾಪುರ ಅವರು ಹಾಜರಿದ್ದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಬಿಜೆಪಿ ಮುಖಂಡರಾದ ಭೀಮರೆಡ್ಡಿ ಕುರಾಳ, ವೀರಣ್ಣ ಯಾರಿ, ಭೀಮಶ್ಯಾ ಜೀರೋಳ್ಳಿ, ಆನಂದ ಪಾಟೀಲ ನರಿಬೋಳ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಇಟಗಿ, ಶಿವರಾಮ್ ಚವ್ಹಾಣ, ಕಾಂಗ್ರೆಸ್ ಮುಖಂಡರಾದ ರಸೂಲ್ ಮುಸ್ತಫಾ, ನಾಗರೆಡ್ಡಿ ಗೋಪಸೇನ್, ಹಣಮಂತ ಸಂಕನೂರ್, ಸಂತೋಷ ಪೂಜಾರಿ, ದೇವು ಯಾಬಾಳ, ಮಹೇಶ್ ಜಾಯಿ, ಸಿದ್ದು ಭೋವಿ ಸೇರಿದಂತೆ ಇತರರು ಇದ್ದರು.
ಮಾ.16ರಿಂದ ಮಂಗಳೂರು-ಶಾರ್ಜಾ ಮಧ್ಯೆ ವಿಮಾನ ಸಂಚಾರ ಆರಂಭ
ಮಂಗಳೂರು: ಗಲ್ಫ್ ಯುದ್ಧ ಭೀತಿಯಿಂದ ಸ್ಥಗಿತಗೊಂಡಿದ್ದ ವಿಮಾನ ಯಾನದ ಪೈಕಿ ಏರ್ ಇಂಡಿಯಾ ಮಂಗಳೂರು- ಶಾರ್ಜಾ ಮಧ್ಯೆ ಮಾ.16ರಿಂದ 28ರವರೆಗೆ ಪ್ರತಿದಿನ ವಿಮಾನ ಸಂಚಾರ ಆರಂಭಿಸಲಿದೆ. ಏರ್ ಇಂಡಿಯಾ 6057 ಮಂಗಳೂರಿನಿಂದ ಮಧ್ಯಾಹ್ನ 1:25ಕ್ಕೆ ಹೊರಟು ಶಾರ್ಜಾವನ್ನು ಅಲ್ಲಿನ ಸಮಯ ಸಂಜೆ 4:05ಕ್ಕೆ ತಲುಪಲಿದೆ. ಏರ್ ಇಂಡಿಯಾ 6058 ಶಾರ್ಜಾದಿಂದ ಅಲ್ಲಿನ ಸಮಯ ಸಂಜೆ 5:05 ಕ್ಕೆ ಹೊರಟು ರಾತ್ರಿ 10.30ಕ್ಕೆ ಮಂಗಳೂರು ತಲುಪಲಿದೆ. ಮಂಗಳೂರಿನಿಂದ ದುಬೈಗೆ ವಾರದಲ್ಲಿ 17, ಅಬುಧಾಬಿಗೆ 14, ದೋಹಾಕ್ಕೆ 3, ಜೆದ್ದಾಕ್ಕೆ 3, ಮಸ್ಕತ್ಗೆ 2, ಬಹರೈನ್ಗೆ 4, ಕುವೈತ್ಗೆ 3, ದಮ್ಮಾಮ್ಗೆ 6 ವಿಮಾನಗಳು ಸಂಚರಿಸುತ್ತವೆ. ಆದರೆ ಗಲ್ಫ್ ಯುದ್ಧ ಭೀತಿಯಿಂದ ಉಂಟಾಗಿರುವ ಬಿಕ್ಕಟ್ಟಿನಿಂದ ಬಹುತೇಕ ಎಲ್ಲ ವಿಮಾನಗಳ ಸಂಚಾರ ರದ್ದಾಗಿದೆ. *ಮಂಗಳೂರು-ಹೊಸದಿಲ್ಲಿ ವಿಮಾನ ಮಂಗಳೂರು ಮತ್ತು ಹೊಸದಿಲ್ಲಿ ಮಧ್ಯೆ ಮಾ.16ರಿಂದ 25ರವರೆಗೆ ಸೋಮವಾರ, ಬುಧವಾರ, ರವಿವಾರ ವಿಮಾನ ಸಂಚರಿಸಲಿದೆ. ಐಎಕ್ಸ್ 1992 ಮಂಗಳೂರಿನಿಂದ ಬೆಳಗ್ಗೆ 9:30ಕ್ಕೆ ಹೊರಟು ಮಧ್ಯಾಹ್ನ 12:25ಕ್ಕೆ ಹೊಸದಿಲ್ಲಿ ತಲುಪಲಿದೆ. ಐಎಕ್ಸ್ 1991 ಹೊಸದಿಲ್ಲಿಯಿಂದ ಬೆಳಗ್ಗೆ 5:15ಕ್ಕೆ ಹೊರಟು ಮಂಗಳೂರನ್ನು ಬೆಳಗ್ಗೆ 8:30ಕ್ಕೆ ತಲುಪಲಿದೆ. ವಾರದ ಇತರ ದಿನಗಳಲ್ಲಿ ಐಎಕ್ಸ್ 1276 ಮಂಗಳೂರಿನಿಂದ ಬೆಳಗ್ಗೆ 08:30ಕ್ಕೆ ಹೊರಟು ಮಧ್ಯಾಹ್ನ 11:45ಕ್ಕೆ ಹೊಸದಿಲ್ಲಿ ತಲುಪಲಿದೆ. ಐಎಕ್ಸ್ 1275 ಹೊಸದಿಲ್ಲಿಯಿಂದ ಬೆಳಗ್ಗೆ 5ಕ್ಕೆ ಹೊರಟು ಬೆಳಗ್ಗೆ 8ಕ್ಕೆ ಮಂಗಳೂರು ತಲುಪಲಿದೆ ಎಂದು ಪ್ರಕಟನೆ ತಿಳಿಸಿದೆ.
ಕಲಬುರಗಿ | ಜಿಲ್ಲಾ ಮಟ್ಟದ ಹೆಚ್ಪಿವಿ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ
ಕಲಬುರಗಿ : ಕಲಬುರಗಿ ನಗರ ಆರೋಗ್ಯ ಕೇಂದ್ರ ICDS ನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಹೆಚ್.ಪಿ.ವಿ ಲಸಿಕೆ ನೀಡುವ ಅಭಿಯಾನಕ್ಕೆ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, 14ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ ನಿರೋಧಕ ಲಸಿಕೆಯಾದ ಹೆಚ್.ಪಿ.ವಿ ಲಸಿಕೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಆಸ್ಪತ್ರೆ (ಜಿಮ್ಸ್) ಹಾಗೂ ಎಲ್ಲಾ ತಾಲೂಕಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪ್ರತಿ ದಿವಸ ಮತ್ತು ಪ್ರತಿ ಬುಧವಾರ ಮತ್ತು ಶುಕ್ರವಾರ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ ಎಂದರು. ಭಾರತೀಯ ಮಹಿಳೆಯರಲ್ಲಿ ಕಂಡು ಬರುವ ಕ್ಯಾನ್ಸರ್ಗಳಲ್ಲಿ ಗರ್ಭಕಂಠದ ಕ್ಯಾನ್ಸರ್ 2ನೇ ಸ್ಥಾನದಲ್ಲಿದೆ. ಇದನ್ನು ತಡೆಗಟ್ಟಲು ಭಾರತ ಸರ್ಕಾರ ಹಾಗೂ ನಮ್ಮ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿರುವ ಪ್ರಯುಕ್ತ ಎಲ್ಲಾ 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸಿದ್ರಾಮಪ್ಪ ಪಾಟೀಲ್ ಅವರು ಮಾತನಾಡಿ, ಹೆಚ್.ಪಿ.ವಿ ಎಂದರೆ ‘ಹ್ಯೂಮನ್ ಪ್ಯಾಪಿಲೋಮ್ ವೈರಸ್’. ಇದು ಜನನಾಂಗದ ಸೋಂಕುಗಳಿಗೆ ಕಾರಣವಾಗುವ ಒಂದು ಸಾಮಾನ್ಯ ವೈರಸ್. ಮಹಿಳೆಯರಲ್ಲಿ ಕಂಡು ಬರುವ ಗರ್ಭಕಂಠದ ಕ್ಯಾನ್ಸರ್ ಹೆಚ್ಚಾಗಿ ಇದೇ ವೈರಸ್ ಕಾರಣವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಿ.ಸಿ.ಟಿ ಕಾರ್ಯಕ್ರಮ ನಿಯಂತ್ರಣಾ ಅಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಯುಜಿಸಿ ಕೌನ್ಸಿಲ್ ಸದಸ್ಯ ಡಾ.ಸುಧಾ ಹಾಲಕಾಯಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ಮಾರುತಿ ಕಾಂಬಳೆ ಕಲಬುರಗಿ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ, ನಗರ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ವೀಣಾ ಕಾಳಾಪೂರ ಹಾಗೂ ಜಿಲ್ಲಾ, ತಾಲೂಕಾ ಮಟ್ಟದ ಅಧಿಕಾರಿಗಳು, ನಗರ ಆರೋಗ್ಯ ಕೇಂದ್ರ, ಕಲಬುರಗಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, 15 ವರ್ಷದೊಳಗಿನ ಹೆಣ್ಣು ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಮಿಳುನಾಡಿನ ಬಾಕ್ಸ್ ಆಫೀಸ್ ಗಳಲ್ಲಿ ಗಳಿಕೆಯ ದಾಖಲೆ ಬರೆದ ‘ತಾಯಿ ಕಿಳವಿ’
ಹಿರಿಯ ನಟಿ ರಾಧಿಕಾ ಚಿತ್ರದ ಲಾಭದಲ್ಲಿ ಪಾಲು ಪಡೆದ ಮೊದಲ ನಾಯಕಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ತಮಿಳುನಾಡಿನಲ್ಲಿ ಇದೀಗ ತಾಯಿ ಕಿಳವಿ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಶಿವಕಾರ್ತಿಕೇಯನ್ ನಿರ್ಮಾಣದಲ್ಲಿ ಹಿರಿಯ ನಟಿ ರಾಧಿಕಾ ಅಭಿನಯಿಸಿರುವ ‘ತಾಯಿ ಕಿಳವಿ’ ಸೂಪರ್ ಹಿಟ್ ಆಗಿದೆ. ಅಲ್ಲದೆ, ಚಿತ್ರದ ಲಾಭದಲ್ಲಿ ಪಾಲು ಪಡೆದ ಮೊದಲ ನಾಯಕಿ ಎಂಬ ಹೆಗ್ಗಳಿಕೆಗೂ ರಾಧಿಕಾ ಪಾತ್ರರಾಗಿದ್ದಾರೆ. 10 ದಿನಗಳಲ್ಲಿ 50 ಕೋಟಿ ಬಾಚಿದ ಸಿನಿಮಾ: ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿರುವ ಪ್ರಕಾರ ತಾಯಿ ಕಿಳವಿ ಸಿನಿಮಾ 10 ದಿನಗಳಲ್ಲಿ ವಿಶ್ವಾದ್ಯಂತ 50 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಫೆಬ್ರವರಿಯಲ್ಲಿ ಬಿಡುಗಡೆಯಾದ ಚಿತ್ರಗಳ ಪೈಕಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎಂಬ ದಾಖಲೆಯನ್ನು ‘ತಾಯಿ ಕಿಳವಿ’ ಬರೆದಿದೆ. ಈ ಹಿಂದೆ ‘ವಿತ್ ಲವ್’ ಚಿತ್ರ 35 ಕೋಟಿ ಕಲೆಕ್ಷನ್ ಮಾಡಿ ಮೊದಲ ಸ್ಥಾನದಲ್ಲಿತ್ತು. ನಟ ಶಿವಕಾರ್ತಿಕೇಯನ್ ಅವರ ‘ಪರಾಶಕ್ತಿ’ಯ ನಂತರ ‘ತಾಯಿ ಕಿಳವಿ’ ಅತಿ ಹೆಚ್ಚು ಗಳಿಕೆ ಮಾಡಿದ ಎರಡನೆ ಚಿತ್ರವಾಗಿದೆ. ಶಿವಕಾರ್ತಿಕೇಯನ್ ಅವರ ಎಸ್ಕೆ ಪ್ರೊಡಕ್ಷನ್ಸ್ ಬ್ಯಾನರ್ ವಿಭಿನ್ನ ಕಥೆಗಳುಳ್ಳ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೀಗ ಯಶಸ್ಸು ಗಳಿಸಿದ ‘ತಾಯಿ ಕಿಳವಿ’ ಸಿನಿಮಾವನ್ನು ಶಿವಕುಮಾರ್ ಮುರುಗೇಸನ್ ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಇದಕ್ಕೆ ಮೊದಲು ಅವರು ‘ಕಡೈಸಿ ವಿವಾಸಾಯಿ’ ಚಿತ್ರಕ್ಕೆ ಸಹನಿರ್ದೇಶಕರಾಗಿದ್ದರು. ಮಾತ್ರವಲ್ಲದೆ, ಬ್ಲಾಕ್ಬಸ್ಟರ್ ಚಿತ್ರ ‘ಆನ್ಪಾವಂ ಪೊಲ್ಲಾದದು’ ಸಿನಿಮಾಗೆ ಚಿತ್ರಕತೆ ಮತ್ತು ಸಂಭಾಷಣೆ ಬರೆದಿದ್ದರು. ಜನರಿಗೆ ಇಷ್ಟವಾದ ಪೌನುತಾಯಿ: ರಾಧಿಕಾ ಶರತ್ ಕುಮಾರ್ ಈ ಸಿನಿಮಾದಲ್ಲಿ ‘ಪೌನುತಾಯಿ’ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ರಾಧಿಕಾ ಪಾತ್ರದ ಜೊತೆಗೆ ಬಾಲಸರವಣನ್ ಮತ್ತು ಮನೀಶ್ಕಾಂತ್ ಅವರ ಹಾಸ್ಯ ಪ್ರೇಕ್ಷಕರನ್ನು ಆಕರ್ಷಿಸಿದೆ. ಕೌಟುಂಬಿಕ ಕಮರ್ಷಿಯಲ್ ಸಿನಿಮಾಗಾಗಿ ಕಾಯುತ್ತಿದ್ದ ಪ್ರೇಕ್ಷಕರಿಗೆ ಸಿನಿಮಾ ಇಷ್ಟವಾಗಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಫೆಬ್ರವರಿ 27ರಂದು ತೆರೆಕಂಡಿರುವ ಸಿನಿಮಾ ತೆರೆಕಂಡ ಮೂರೇ ದಿನಗಳಲ್ಲಿ 25 ಕೋಟಿ ರೂ. ಕಲೆಕ್ಷನ್ ಮಾಡಿದೆ. ವೃದ್ಧೆಯ ಪಾತ್ರದಲ್ಲಿ ರಾಧಿಕಾ ಅದ್ಭುತ ನಟನೆ ನೀಡಿರುವುದು ವಿಮರ್ಶಕರಿಂದ ಮೆಚ್ಚುಗೆ ಗಳಿಸಿತು. ಹೀಗಾಗಿ ಬಾಕ್ಸ್ ಆಫೀಸ್ನಲ್ಲಿ 55 ಕೋಟಿ ರೂ.ಗೂ ಮೀರಿ ಲಾಭ ಗಳಿಸಿವೆ. ಸಿನಿಮಾವನ್ನು ಸಂಪೂರ್ಣ ಹಾಸ್ಯಮಯ ರೀತಿಯಲ್ಲಿ ನಿರ್ದೇಶಿಸಲಾಗಿದೆ. ಸಮಾಜದಲ್ಲಿ ಮಹಿಳೆಯೊಬ್ಬರು ಹೇಗೆ ಬದುಕುತ್ತಾರೆ. ಅವರಿಗೆ ಎದುರಾಗುವ ಕಷ್ಟಗಳೇನು ಎಂಬುದನ್ನು ಸುಂದರವಾಗಿ ತೋರಿಸಿದ್ದಾರೆ. ಲಾಭದ ಪಾಲು ಪಡೆದ ಮೊದಲ ನಾಯಕಿ: ಇದೀಗ ಬ್ಲಾಕ್ ಬಸ್ಟರ್ ಸಿನಿಮಾದ ಲಾಭದ ಪಾಲನ್ನು ಚಿತ್ರತಂಡ ರಾಧಿಕಾ ಜೊತೆಗೆ ಹಂಚಿಕೊಂಡಿದೆ. ಈ ಬಗ್ಗೆ ಮಾತನಾಡಿದ ರಾಧಿಕಾ, “ಶಿವಕಾರ್ತಿಕೇಯನ್ ಮತ್ತು ಸುಧಾನ್ಗೆ ಧನ್ಯವಾದಗಳು. ತಮಿಳು ಸಿನಿಮಾದಲ್ಲಿ ಮೊತ್ತ ಮೊದಲ ಬಾರಿಗೆ ನಟಿಗೆ ವೇತನದ ಜೊತೆಗೆ ಸಿನಿಮಾದ ಯಶಸ್ಸಿನ ಪಾಲನ್ನು ನೀಡಲಾಗಿದೆ. ಸಾಮಾನ್ಯವಾಗಿ ನಾಯಕರು ಯಶಸ್ಸಿನ ಪಾಲನ್ನು ಪಡೆದಿದ್ದಾರೆ. ಆದರೆ ನಾಯಕಿಯರಿಗೆ ಸಿನಿಮಾದ ಯಶಸ್ಸಿನ ಪಾಲನ್ನು ನೀಡಲಾಗುತ್ತಿಲ್ಲ” ಎಂದು ಅವರು ಹೇಳಿದ್ದಾರೆ. ಯಶಸ್ಸಿನ ಪಾಲನ್ನು ಪಡೆದಿರುವುದು ಐತಿಹಾಸಿಕ ಕ್ಷಣ ಎಂದು ಅವರು ಹೇಳಿದ್ದಾರೆ. “48 ವರ್ಷಗಳಲ್ಲಿ ಕಾಣದ ಬೆಳವಣಿಗೆಯನ್ನು ಇದೀಗ ಕಂಡಿದ್ದೇನೆ. ತಾಯಿ ಕಿಳವಿ ಹೊಸ ಹಾದಿಯನ್ನು ತೆರೆದಿದೆ. ಇತರ ನಾಯಕಿಯರೂ ಈ ಬದಲಾವಣೆಯನ್ನು ಸ್ವಾಗತಿಸುತ್ತಾರೆ ಎಂದುಕೊಂಡಿದ್ದೇನೆ” ಎಂದು ಅವರು ಹೇಳಿದ್ದಾರೆ. “ನಿಜವಾದ ಯಶಸ್ಸನ್ನು ಆಚರಿಸಲು ವೇದಿಕೆಯ ಮೇಲೆ ನಿಂತಿದ್ದೇನೆ. ಸಾಮಾನ್ಯವಾಗಿ ನಾನು ಯಾವುದನ್ನೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಈ ಸಿನಿಮಾ ಇಷ್ಟವಾಗಿ ಒಪ್ಪಿಕೊಂಡೆ. ‘ಚಿತ್ತಿ’ ಧಾರವಾಹಿ ನಂತರ ಒಬ್ಬ ಮಹಿಳೆ ಒಂಟಿಯಾಗಿ ಹೋರಾಡುವ ಕತೆ ನನಗೆ ಮುಖ್ಯವಾಗಿ ಕಂಡಿದೆ” ಎಂದು ಸಂತಸ ಹಂಚಿಕೊಂಡರು.
ನೂತನ 45 ಕರ್ನಾಟಕ ಸಾರಿಗೆ, 70 ಪಲ್ಲಕ್ಕಿ ಬಸ್ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಬೆಂಗಳೂರು : ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ನೂತನ 45 ಕರ್ನಾಟಕ ಸಾರಿಗೆ ಹಾಗೂ 70 ಪಲ್ಲಕ್ಕಿ ಬಸ್ಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಅಂತರ್ರಾಷ್ಟ್ರೀಯ ಮಹಿಳಾ ದಿನವನ್ನು ಪ್ರತಿ ವರ್ಷ ಮಾ.8ರಂದು ಆಚರಿಸಲಾಗುತ್ತದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ನೀಡಿರುವ ಮಹತ್ವದ ಕೊಡುಗೆಗಳನ್ನು ಸ್ಮರಿಸುವುದು ಮತ್ತು ಅವರ ಹಕ್ಕುಗಳು, ಸಮಾನತೆ ಹಾಗೂ ಗೌರವವನ್ನು ಉತ್ತೇಜಿಸುವುದು ಈ ದಿನದ ಉದ್ದೇಶವಾಗಿದೆ ಎಂದು ಹೇಳಿದರು. ಕುಟುಂಬ, ಶಿಕ್ಷಣ, ವಿಜ್ಞಾನ, ಸಾಮಾಜಿಕ, ರಾಜಕೀಯ, ಆರ್ಥಿಕತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಮಹತ್ತರ ಸಾಧನೆಗಳನ್ನು ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣವು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸಮಾನ ಅವಕಾಶಗಳು ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಪದ್ಮಶ್ರೀ ಪುರಸ್ಕೃತ ಡಾ.ಶುಭಾ ವಿ. ಅವರು ಭಾರತದ ಪ್ರಮುಖ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಳಲ್ಲಿ ಒಂದಾದ ಬೆಂಗಳೂರಿನ ಸಿಎಸ್ಐಆರ್ ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (ಎನ್ಎಎಲ್)ನಲ್ಲಿ ದಶಕಗಳ ಕಾಲ ಕೆಲಸ ಮಾಡಿ, ಸ್ವದೇಶಿ ರನ್ವೇ ಗೋಚರತೆ ಮಾಪನ ವ್ಯವಸ್ಥೆ ‘ದೃಷ್ಠಿ’ ಅಭಿವೃದ್ಧಿಪಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಇವರು ವಿಮಾನ ನಿಲ್ದಾಣಗಳಲ್ಲಿ ಮಂಜಿನ ಸಮಯದಲ್ಲಿ ಸುರಕ್ಷಿತ ಲ್ಯಾಂಡಿಂಗ್ಗೆ ನೆರವಾಗುವ ತಂತ್ರಜ್ಞಾನವನ್ನು ರೂಪಿಸಿರುವ ಬಗ್ಗೆ ಪ್ರಶಂಸಿದರು. ಸಾರಿಗೆ ನಿಗಮದ 17 ವಿಭಾಗಗಳಿಂದ ತಲಾ ಒಬ್ಬರಂತೆ ಉತ್ತಮ ಕಾರ್ಯ ಸಾಧನೆ ತೋರಿದ, ತಾಂತ್ರಿಕ ಸಿಬ್ಬಂದಿ-19, ನಿರ್ವಾಹಕರು-15, ಹಾಗೂ ಕರಾಸಾ ಪೇದೆ-12, ಒಟ್ಟು 46 ಮಹಿಳಾ ಸಿಬ್ಬಂದಿ ಪ್ರಶಸ್ತಿ ಸ್ವೀಕರಿಸಿರುವುದು ಗೌರವದ ವಿಷಯವೆಂದು ತಿಳಿಸಿದರು. ಪದ್ಮಶ್ರೀ ಪುರಸ್ಕೃತ ಡಾ.ಶುಭ ವಿ. ಮಾತನಾಡಿ, ಕೆಎಸ್ಸಾರ್ಟಿಸಿಯಲ್ಲಿ ಅಪಾರ ಸಂಖ್ಯೆಯ ಮಹಿಳಾ ಸಿಬ್ಬಂದಿ ಇರುವುದು ಹೆಮ್ಮೆಯ ವಿಷಯ. ಅವರನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ಉತ್ತಮ ಸಂಪ್ರದಾಯ. ಮಹಿಳೆಯರು, ಪ್ರಾಮಾಣಿಕ, ಬದ್ಧತೆ ಮತ್ತು ಶ್ರದ್ಧೆಯಿಂದ ಕೆಲಸ ನಿರ್ವಹಿಸಿದರೆ, ಯಾವುದೇ ಕೆಲಸವನ್ನಾದರೂ ಮಾಡಬಹುದು ಎಂದು ಹೇಳಿದರು. ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಮಾತನಾಡಿ, ಪ್ರಸ್ತುತ ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಅಭಿವೃದ್ಧಿ ಹೊಂದುತ್ತಿರುವುದು ಸ್ವಾಗತಾರ್ಹ. ಹಾಗೇ ತಮ್ಮ ಮಕ್ಕಳಿಗೆ ಉತ್ತಮವಾದ ವಿದ್ಯಾಬ್ಯಾಸವನ್ನು ದೊರಕಿಸಿಕೊಟ್ಟು, ಸಬಲರನ್ನಾಗಿ ಮಾಡಬೇಕು. ಶಿಕ್ಷಣ ಒಂದೇ ಮಹಿಳೆಯರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಸಾಧನವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕರಾರಸಾ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.
ಯಾದಗಿರಿ | ಸಿಲಿಂಡರ್ ಕೊರತೆ : ಸೌದೆ ಹೊಲೆ ಹಚ್ಚಿ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್ ಸಿಬ್ಬಂದಿ
ಯಾದಗಿರಿ: ನಗರದ ಗಂಜ್ ಪ್ರದೇಶದಲ್ಲಿರುವ ಇಂದಿರಾ ಕ್ಯಾಂಟಿನ್ ನಲ್ಲಿ ಕಳೆದ ಎರಡು ದಿನಗಳಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಸಂಪೂರ್ಣ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಅಡುಗೆ ಕಾರ್ಯಕ್ಕೆ ತೊಂದರೆ ಉಂಟಾಗಿದೆ. ಸಿಲಿಂಡರ್ ಲಭ್ಯವಾಗದ ಕಾರಣ ಸಿಬ್ಬಂದಿ ಕ್ಯಾಂಟಿನ್ ಹೊರಭಾಗದಲ್ಲಿ ಸೌದೆ ಹೊಲೆ ಹಚ್ಚಿ ಅಡುಗೆ ಮಾಡುವ ಪರಿಸ್ಥಿತಿ ಎದುರಾಗಿದೆ. ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ಅಡುಗೆ ವ್ಯವಸ್ಥೆ ವ್ಯತ್ಯಯಗೊಂಡರೂ, ಬಡವರಿಗೆ ಆಹಾರ ಒದಗಿಸುವ ಕಾರ್ಯವನ್ನು ನಿಲ್ಲಿಸದೇ ಸಿಬ್ಬಂದಿ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಬಡವರು ಉಪವಾಸ ಇರಬಾರದು ಎಂಬ ಮನೋಭಾವದಿಂದ ಸಿಬ್ಬಂದಿ ಸೌದೆ ಬಳಸಿ ಅನ್ನ, ಸಾಂಬಾರ್, ಚಪಾತಿ, ಪಲ್ಯ, ದೋಸೆ ಸೇರಿದಂತೆ ವಿವಿಧ ತಿನಿಸುಗಳನ್ನು ಸಿದ್ಧಪಡಿಸಿ ಜನರಿಗೆ ನೀಡುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಇದೇ ರೀತಿಯಲ್ಲಿ ಸೌದೆ ಬಳಸಿ ಅಡುಗೆ ಮಾಡುತ್ತಾ ಕ್ಯಾಂಟಿನ್ ಸೇವೆಯನ್ನು ಮುಂದುವರಿಸಿದ್ದಾರೆ. ಇಂದಿರಾ ಕ್ಯಾಂಟಿನ್ ಮೇಲೆ ಅವಲಂಬಿತವಾಗಿರುವ ಬಡವರು, ಕೂಲಿ ಕಾರ್ಮಿಕರು ಹಾಗೂ ಪ್ರಯಾಣಿಕರಿಗೆ ಆಹಾರ ದೊರಕುವಂತೆ ಮಾಡಲು ಸಿಬ್ಬಂದಿ ಕ್ಯಾಂಟಿನ್ ಹೊರಭಾಗದಲ್ಲೇ ಸೌದೆ ಹೊಲೆ ಹಚ್ಚಿ ಅಡುಗೆ ಮಾಡಿ ಸೇವೆ ಒದಗಿಸಿದ್ದಾರೆ.
ʼಸೂಪರ್ ಎಲ್ ನಿನೊʼ | ಭಾರತದ ಕರಾವಳಿಯ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯ ಪರಿಣಾಮ ಏನಾಗಲಿದೆ?
ಎಲ್ ನಿನೊ ಈ ವರ್ಷದ ನಂತರದ ಭಾಗದಲ್ಲಿ ಕಾಣಿಸಿಕೊಳ್ಳಲಿದ್ದು, ಜಾಗತಿಕವಾಗಿ ಹವಾಮಾನವನ್ನು ಪ್ರಮುಖವಾಗಿ ಬದಲಿಸಲಿದೆ. ಭೂಗ್ರಹ ಶೀಘ್ರವೇ ಶಕ್ತಿಯುತವಾದ ಎಲ್ನಿನೊ ಹಂತಕ್ಕೆ ಪ್ರವೇಶಿಸಲಿದೆ ಎಂದು ಹವಾಮಾನ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಇತ್ತೀಚೆಗಿನ ದಶಕಗಳಲ್ಲಿ ಕಂಡಂತಹ ಅತಿ ಪ್ರಬಲ ಎಲ್ ನಿನೊ ಹಂತ ಬರಲಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಎಲ್ ನಿನೊ ಈ ವರ್ಷದ ನಂತರದ ಭಾಗದಲ್ಲಿ ಕಾಣಿಸಿಕೊಳ್ಳಲಿದ್ದು, ಜಾಗತಿಕವಾಗಿ ಹವಾಮಾನವನ್ನು ಪ್ರಮುಖವಾಗಿ ಬದಲಿಸಲಿದೆ. ಅತಿಯಾದ ಶಾಖ ಮತ್ತು ಅಸಹಜವಾದ ಮುಂಗಾರು ಕಂಡುಬರಲಿದೆ ಎಂದು ವರದಿಯಾಗಿದೆ. ಮಧ್ಯಮ ರೇಂಜ್ ಹವಾಮಾನ ಸೂಚ್ಯಂಕದ ಯುರೋಪಿಯನ್ ಕೇಂದ್ರದ (ECMWF) ಹೊಸ ದತ್ತಾಂಶದ ಪ್ರಕಾರ ಭೂಗ್ರಹವು ಇತಿಹಾಸದಲ್ಲೇ ಕಂಡರಿಯದಷ್ಟು ಪ್ರಬಲವಾದ “ಸೂಪರ್” ಎಲ್ ನಿನೊವನ್ನು ಎದುರಿಸಲಿದೆ. ಜೂನ್ ವೇಳೆಗೆ ಸಾಗರ ಮತ್ತು ಹವಾಮಾನದ ಸಂಕೇತಗಳು ಸಾಲು ಜೋಡಲು ಆರಂಭಿಸಲಿರುವ ಮುನ್ಸೂಚನೆ ಮಾದರಿಗಳನ್ನು ತೋರಿಸಲಿವೆ. ಈ ವಿದ್ಯಮಾನವು ಎಲ್ ನಿನೊ ಅಭಿವೃದ್ಧಿ ಹೊಂದುತ್ತಿರುವ ಪ್ರಮುಖ ಸಂಕೇತವಾಗಿರುತ್ತದೆ. ಈ ವಿದ್ಯಮಾನದ ಕೇಂದ್ರ ಭಾಗದಲ್ಲಿ ಎಲ್ ನಿನೊ ಇದೆ. ಇದು ಮಧ್ಯ ಮತ್ತು ಪೂರ್ವ ಪೆಸಿಫಿಕ್ ಮಹಾಸಾಗರದಲ್ಲಿ ಸಮುದ್ರದ ಮೇಲ್ಮೈ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾದಾಗ ಸಂಭವಿಸುವ ನೈಸರ್ಗಿಕ ಹವಾಮಾನ ಚಕ್ರ. ಎಲ್ ನಿನೊ ಎಂದರೇನು? ಸಾಮಾನ್ಯ ಸ್ಥಿತಿಯಲ್ಲಿ ಟ್ರೇಡ್ ವಿಂಡ್ಗಳು (ಯಾವಾಗಲೂ ಸಮಭಾಜಕದ ಕಡೆಗೆ ಮತ್ತು ನಂತರ ಪಶ್ಚಿಮಕ್ಕೆ ಬೀಸುವ ಬಲವಾದ ಗಾಳಿ) ಬೆಚ್ಚನೆಯ ಮೇಲ್ಮೈ ನೀರನ್ನು ಆಗ್ನೇಯ ಏಷ್ಯಾದ ಮತ್ತು ಆಸ್ಟ್ರೇಲಿಯ ಕಡೆಗೆ ಬೀಸಲಿವೆ ಮತ್ತು ತಂಪಾದ ನೀರನ್ನು ದಕ್ಷಿಣ ಅಮೆರಿಕದ ಕಡೆಗೆ ಏರಿಸಲಿವೆ. ಎಲ್ ನಿನೊ ಸಂದರ್ಭದಲ್ಲಿ ಈ ಗಾಳಿಗಳು ದುರ್ಬಲವಾಗಲಿವೆ ಮತ್ತು ಬೆಚ್ಚನೆಯ ನೀರು ಪೆಸಿಫಿಕ್ನಾದ್ಯಂತ ಪೂರ್ವಮುಖವಾಗಿ ಹರಡಲಿವೆ. ಫಲಿತಾಂಶವಾಗಿ ಜಾಗತಿಕ ವಾತಾವರಣದ ಪರಿಚಲನೆಯಲ್ಲಿ ಅತಿ ದೊಡ್ಡ ಬದಲಾವಣೆಯಾಗಲಿದೆ. ಬೆಚ್ಚನೆಯ ಸಾಗರದ ನೀರು ವಾಯುಭಾರವನ್ನು ಏರಿಸಲಿದೆ ಮತ್ತು ಮಧ್ಯ ಮತ್ತು ಪೂರ್ವ ಪೆಸಿಫಿಕ್ನಲ್ಲಿ ಅತಿಯಾದ ಮಳೆಯಾಗಲಿದೆ. ಅದೇ ಸಮಯದಲ್ಲಿ ಹಿಂದೂ ಮಹಾ ಸಾಗರದ ಪ್ರದೇಶಗಳು ಮತ್ತು ಆಫ್ರಿಕಾದ ಭಾಗಗಳು ವಾಯು ಕುಸಿತವಾಗಲಿದ್ದು, ಮಳೆಯನ್ನು ನಿಗ್ರಹಿಸಲಿದೆ ಮತ್ತು ತಾಪಮಾನವನ್ನು ಹೆಚ್ಚಿಸಲಿದೆ. ಹೊಸ ಮುನ್ಸೂಚನೆಗಳು ಅತ್ಯಂತ ಬಲಿಷ್ಠವಾದ ಎಲ್ ನಿನೊ ವಾತಾವರಣದ ಪ್ರತಿಕ್ರಿಯೆಯು ರೂಪುಗೊಳ್ಳುವುದನ್ನು ತೋರಿಸುತ್ತಿವೆ. ಅದರಲ್ಲಿ ಪೆಸಿಫಿಕ್ನಲ್ಲಿ ಪ್ರಬಲ ವಾಯು ಭಾರ ಮತ್ತು ಹಿಂದೂ ಮಹಾ ಸಾಗರದ ಸುತ್ತಲೂ ವಾಯು ಕುಸಿತವನ್ನು ಕಾಣಬಹುದು. ಭಾರತದ ಮೇಲೆ ಏಕೆ ಪರಿಣಾಮ ಬೀರಲಿದೆ? ಭಾರತದ ಮಟ್ಟಿಗೆ ಎಲ್ ನಿನೊ ಎಂದರೆ ಐತಿಹಾಸಿಕವಾಗಿ ಹೆಚ್ಚಿನ ತಾಪಮಾನ ಮತ್ತು ದುರ್ಬಲ ಮುಂಗಾರು ಆಗಿರುತ್ತದೆ. ಭಾರತದ ಬೇಸಗೆಯ ಮುಂಗಾರು ಮುಖ್ಯವಾಗಿ ಭೂಮಿ ಮತ್ತು ಸಾಗರದ ನಡುವಿನ ತಾಪಮಾನ ವ್ಯತ್ಯಾಸವನ್ನು ಅವಲಂಬಿಸಿದೆ. ಎಲ್ ನಿನೊ ವರ್ಷಗಳಲ್ಲಿ ಹವಾಮಾನ ಬದಲಾವಣೆಯು ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಿಂದ ತೇವಾಂಶವನ್ನು ತರುವ ಮುಂಗಾರನ್ನು ದುರ್ಬಲಗೊಳಿಸಬಹುದು. ಪ್ರಬಲ ಎಲ್ ನಿನೊ ಅಭಿವೃದ್ಧಿ ಹೊಂದಿದಲ್ಲಿ ಉತ್ತರ ಮತ್ತು ಮಧ್ಯ ಭಾರತದಲ್ಲಿ ಉಷ್ಣ ಅಲೆಗಳು ಉಂಟಾಗುವ ಸಾಧ್ಯತೆ ಅಧಿಕವಿದೆ ಮತ್ತು ಮುಂಗಾರು ಋತುವಿನಲ್ಲಿ ಮಳೆ ಕೊರತೆಯ ಬಗ್ಗೆ ಕಳವಳ ವ್ಯಕ್ತವಾಗಬಹುದು. ಪ್ರಬಲವಾದ ಎಲ್ ನಿನೊ ಜಾಗತಿಕ ತಾಪಮಾನವನ್ನು ದಾಖಲೆಯ ಗರಿಷ್ಠ ಮಟ್ಟಕ್ಕೆ ತಳ್ಳಬಹುದು. 1997-98 ಮತ್ತು 2015-16ರಲ್ಲಿ ನಡೆದ ಕೊನೆಯ ಪ್ರಮುಖ ಹವಾಮಾನ ಬದಲಾವಣೆಯಲ್ಲಿ ವಿಶ್ವಾದ್ಯಂತ ಅತಿಯಾದ ಧಗೆಯನ್ನು ತಂದು ತಾತ್ಕಾಲಿಕವಾಗಿ ಜಾಗತಿಕ ತಾಪಮಾನ ಏರಿಕೆಯ ಮಟ್ಟವನ್ನು ಹೆಚ್ಚಿಸಿದ್ದವು. ECMWF ನೀಡಿರುವ ಹೊಸ ಮುನ್ಸೂಚನೆಯ ಪ್ರಕಾರ ಜೂನ್ ವೇಳೆಗೆ ಸಾಗರ ಮತ್ತು ವಾತಾವರಣ ಜೊತೆಗೂಡಿ ಪೆಸಿಫಿಕ್ ನೀರನ್ನು ಬಿಸಿಯಾಗಿಸಬಹುದು ಮತ್ತು ಪೂರ್ಣ ಎಲ್ ನಿನೊಗೆ ಅಗತ್ಯವಿರುವಂತೆ ವಾತಾವರಣದ ಮಾದರಿಗಳು ಪರಸ್ಪರ ಬಲಪಡಿಸಲಿವೆ. ಭಾರತವನ್ನು ಮೀರಿ ಅಭಿವೃದ್ಧಿಹೊಂದುತ್ತಿರುವ ಹವಾಮಾನದ ಮಾದರಿಯು ಜಾಗತಿಕವಾಗಿ ಹವಾಮಾನವನ್ನು ಮರುರೂಪಿಸಬಹುದು. ಪ್ರಬಲವಾಗಿ ಬೀಸಲಿರುವ ಗಾಳಿ ಅಟ್ಲಾಂಟಿಕ್ ದಾಟಿ ಚಂಡಮಾರುತದ ಚಟುವಟಿಕೆಯನ್ನು ನಿಗ್ರಹಿಸಬಹುದು ಮತ್ತು ಪಶ್ಚಿಮ ಪೆಸಿಫಿಕ್ ಸಾಮಾನ್ಯಕ್ಕಿಂತ ಹೆಚ್ಚು ಸುಂಟರಗಾಳಿಯನ್ನು ಕಾಣಬಹುದು. ಆದರೆ ಪೂರ್ಣಪ್ರಮಾಣದಲ್ಲಿ ಎಲ್ ನಿನೊವನ್ನು ಈಗಲೇ ಊಹಿಸಲು ಸಾಧ್ಯವಿಲ್ಲದೆ ಇದ್ದರೂ, ವಿಜ್ಞಾನಿಗಳ ಪ್ರಕಾರ ಸೂಚನೆಗಳು ಸ್ಪಷ್ಟವಾಗಿ ಕಾಣಿಸುತ್ತಿವೆ. ಎಲ್ ನಿನೊ ರೂಪುಗೊಳ್ಳುತ್ತಿದೆ ಮತ್ತು ಅದರ ಪರಿಣಾಮಗಳು ಜಾಗತಿಕವಾಗಿ ಮುಂದಿನ ತಿಂಗಳುಗಳಲ್ಲಿ ಹವಾಮಾನವನ್ನು ಮರುರೂಪಿಸಲಿದೆ.
ಯಾದಗಿರಿ | ಮಹಿಳೆಯರು ಹಕ್ಕುಗಳ ಅರಿವಿನಿಂದ ಸ್ವಾವಲಂಬಿಯಾಗಿ ಬದುಕಬೇಕು: ನ್ಯಾಮರಿಯಪ್ಪ
ಯಾದಗಿರಿ: ಮಹಿಳೆಯರು ತಮ್ಮ ಎಲ್ಲ ತರಹದ ಹಕ್ಕುಗಳ ಬಗ್ಗೆ ತಿಳಿದುಕೊಂಡು ಸ್ವಾವಲಂಬಿಗಳಾಗಿ ಬದುಕಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಹೇಳಿದರು. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಮಿಷನ್ ಶಕ್ತಿ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ನಾರಿ ಅದಾಲತ್ ನ್ಯಾಯ ಸಖಿ ಸಮಿತಿ ಸದಸ್ಯರು ಹಾಗೂ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕುರಿತು ಶುಕ್ರವಾರ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪುರುಷ ಪ್ರಧಾನ ಸಮಾಜದಲ್ಲಿ ಇಂದಿಗೂ ಮಹಿಳೆಯರಿಗೆ ಅವರದ್ದೇ ಆದ ಕಾನೂನುಗಳು ಇದ್ದರೂ ಅವುಗಳ ಬಗ್ಗೆ ಅರಿವು ಇಲ್ಲದ ಕಾರಣ ಹಲವು ರೀತಿಯ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಮರಿಯಪ್ಪ ವಿಷಾದಿಸಿದರು. ಜಿಲ್ಲೆಯ ಪ್ರತಿಯೊಬ್ಬ ಮಹಿಳೆಗೂ ಕಾನೂನು ಹಾಗೂ ಹಕ್ಕುಗಳ ಅರಿವು ಮೂಡಿಸಬೇಕೆಂಬ ಉದ್ದೇಶದಿಂದ ನಾರಿ ಸಖಿ ನ್ಯಾಯ ಅದಾಲತ್ಗಳ ಮೂಲಕ ತರಬೇತಿ ನೀಡಲಾಗುತ್ತಿದೆ. ಆಯ್ಕೆಯಾದ ನಾರಿ ಸಖಿಯರು ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸಿ ಮಹಿಳಾ ಶಕ್ತಿಯನ್ನು ಗಟ್ಟಿಗೊಳಿಸಬೇಕೆಂದು ಅವರು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ, ಇದು ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದ್ದು ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳುತ್ತಿದೆ ಎಂದರು. ಜಿಲ್ಲೆಯ ಐದು ಗ್ರಾಮ ಪಂಚಾಯಿತಿಗಳಿಂದ ನ್ಯಾಯಸಖಿಯರನ್ನು ಆಯ್ಕೆ ಮಾಡಲಾಗಿದ್ದು, ಅವರ ಮೂಲಕ ಮಹಿಳೆಯರಿಗೆ ಕಾನೂನು ಹಾಗೂ ಹಕ್ಕುಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಹಳ್ಳಿಗಳಲ್ಲಿ ಮಹಿಳೆಯರು ಯಾವುದೇ ಸಮಸ್ಯೆ ಕುರಿತು ಪಂಚಾಯಿತಿ ಕಚೇರಿಗೆ ಬಂದಾಗ ನಿರ್ಲಕ್ಷ್ಯ ಮಾಡದೇ ಸಮಸ್ಯೆಯನ್ನು ಆಲಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ನಾರಿ ಸಖಿಯರ ಮೂಲಕ ಅವರಿಗೆ ನೆರವಾಗುವಂತೆ ದಾರಿ ತೋರಿಸಬೇಕು ಎಂದು ಹೇಳಿದರು. ಮಹಿಳೆಯರ ಗೌರವ ಹೆಚ್ಚಿಸಿ, ಅವರ ಆತ್ಮಬಲವನ್ನು ವೃದ್ಧಿಸುವ ಕೆಲಸ ಮಾಡಬೇಕೆಂದು ಅವರು ತಿಳಿಸಿದರು. ಡಿಎಚ್ ಒ ಡಾ.ಮಹೇಶ ಬಿರಾದಾರ, ಆಯುಷ್ಯ ಅಧಿಕಾರಿ ಡಾ.ವಂದನಾ ಗಾಳಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಚನ್ನಬಸಪ್ಪ, ಜಿಲ್ಲಾ ನಿರೂಪಣಾಧಿಕಾರಿ ಗುರುರಾಜ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಾವಿತ್ರಿ ಗೂಗ್ಗರಿ, ಪೊಲೀಸ್ ಅಧಿಕಾರಿ ಶ್ರೀದೇವಿ ಬಿರಾದಾರ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಮಿಷಿನ್ ಸಂಯೋಜಕ ಯಲ್ಲಪ್ಪ ಕೆ.ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧಿಕಾರಿ ಭೀಮರಾಯ ನಿರೂಪಿಸಿದರು. ಆಯ್ದ ಐದು ಗ್ರಾಪಂಗಳಾದ ಕಂದಕೂರ, ಕುರಕುಂದಿ, ಮಲ್ಲಾ (ಬಿ) ಕೊಳ್ಳೂರ, ಬಂದಳ್ಳಿಗಳ ನಾರಿ ಸಖಿಯರಿಗೆ ತರಬೇತಿ ನೀಡಲಾಯಿತು.
ಗೂಗಲ್ ಫೆಲೋಶಿಪ್ ಪ್ರೋಗ್ರಾಂ | ಅಮೆರಿಕದಲ್ಲಿ ಕೆಲಸ ಮಾಡುವ ಅವಕಾಶ
ಇಂಟರ್ನೆಟ್ ತಂತ್ರಜ್ಞಾನ ಮತ್ತು ನೀತಿಗಳಲ್ಲಿ ಆಸಕ್ತಿ ಹೊಂದಿರುವವವರು ಎಪ್ರಿಲ್ 9 ರೊಳಗೆ ಅರ್ಜಿ ಸಲ್ಲಿಸಿ ಗೂಗಲ್ ನೊಂದಿಗೆ ವೃತ್ತಿಜೀವನಕ್ಕೆ ಹೊಸ ತಿರುವು ನೀಡಬಹುದು. 2026ರ ಗೂಗಲ್ ಫೆಲೋಶಿಪ್ ಪ್ರೋಗ್ರಾಂ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ ಸ್ಟೈಫಂಡ್ನೊಂದಿಗೆ ಉತ್ತಮ ಅವಕಾಶ ನೀಡಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಪದವಿ, ಸ್ನಾತಕೋತ್ತರ ಅಥವಾ ಪಿಎಚ್ಡಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಇಂಟರ್ನೆಟ್ ತಂತ್ರಜ್ಞಾನ ಮತ್ತು ನೀತಿಗಳಲ್ಲಿ ಆಸಕ್ತಿ ಹೊಂದಿರುವವವರು ಏಪ್ರಿಲ್ 9 ರೊಳಗೆ ಅರ್ಜಿ ಸಲ್ಲಿಸಿ ಗೂಗಲ್ನೊಂದಿಗೆ ವೃತ್ತಿಜೀವನಕ್ಕೆ ಹೊಸ ತಿರುವು ನೀಡಬಹುದು. ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಗೂಗಲ್ ನ ಅಧಿಕೃತ ವೃತ್ತಿ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಈ ಮುಂದಿನ ಲಿಂಕ್ ಬಳಸಬಹುದು: https://www.google.com/about/careers/applications/ ಪ್ರಮುಖ ದಿನಾಂಕಗಳು ಮತ್ತು ಷರತ್ತುಗಳು * ಅರ್ಜಿ ಸಲ್ಲಿಸಲು ಕೊನೆಯ ದಿನ: 2026 ಎಪ್ರಿಲ್ 9 (ಮಧ್ಯಾಹ್ನ 12:00 ರೊಳಗೆ) * ಪ್ರವೇಶದ ಷರತ್ತು: 2026 ಆಗಸ್ಟ್ 30 ರೊಳಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿ ದಾಖಲಾಗಿರಬೇಕು. * ಈ ಹಿಂದೆ ಗೂಗಲ್ನ ಈ ಫೆಲೋಶಿಪ್ನಲ್ಲಿ ಭಾಗವಹಿಸಿದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ವಿದ್ಯಾರ್ಹತೆ ನೀವು ಪದವಿ, ಸ್ನಾತಕೋತ್ತರ ಪದವಿ ಅಥವಾ ಪಿಎಚ್ಡಿ ವ್ಯಾಸಂಗ ಮಾಡುತ್ತಿರಬೇಕು. ಪೂರ್ಣ ಸಮಯದ ಅಥವಾ ಅರೆಕಾಲಿಕ ವಿದ್ಯಾರ್ಥಿಯಾಗಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ. ವಯೋಮಿತಿ ಮತ್ತು ಕೌಶಲ್ಯಗಳು 2026 ಜನವರಿ 1ರ ವೇಳೆಗೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಇಂಟರ್ನೆಟ್ ತಂತ್ರಜ್ಞಾನ ಮತ್ತು ನೀತಿಗಳ ಬಗ್ಗೆ ಆಸಕ್ತಿ ಇರಬೇಕು. ಉತ್ತಮ ಸಂಶೋಧನಾ ಮನೋಭಾವ, ಬರವಣಿಗೆ ಮತ್ತು ಸಂವಹನ ಕೌಶಲ್ಯ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಸ್ಟೈಫಂಡ್ ವಿವರ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಕೆಲಸದ ಅವಧಿಗೆ ಅನುಗುಣವಾಗಿ ಸ್ಟೈಫಂಡ್ ನೀಡಲಾಗುತ್ತದೆ. * ಪೂರ್ಣ ಸಮಯ (ವಾರಕ್ಕೆ 40 ಗಂಟೆ): ಸುಮಾರು $12,000 (ಅಂದಾಜು ₹10 ಲಕ್ಷ) * ಅರೆಕಾಲಿಕ (ವಾರಕ್ಕೆ 20 ಗಂಟೆ): ಸುಮಾರು $6,000 (ಅಂದಾಜು ₹5 ಲಕ್ಷ) ವಿಶೇಷ ಸೂಚನೆ ಅಭ್ಯರ್ಥಿಗಳು ಅಮೆರಿಕದಲ್ಲಿ ಕೆಲಸ ಮಾಡಲು ಕಾನೂನುಬದ್ಧ ಅನುಮತಿ (Work Authorization) ಹೊಂದಿರಬೇಕು. ವೀಸಾ ಪ್ರಕ್ರಿಯೆಗೆ ಗೂಗಲ್ ಯಾವುದೇ ನೆರವು ನೀಡುವುದಿಲ್ಲ.
ಗುರುಮಠಕಲ್ | ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ
ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದ ಡಿ. ದೇವರಾಜ ಅರಸು ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ತಾಲ್ಲೂಕಿನ ನಂದೇಪಳ್ಳಿ ಗ್ರಾಮದ ಸ್ವಾತಿ ಶರಣುಗೌಡ (18) ಎಂದು ಗುರುತಿಸಲಾಗಿದೆ. ಸ್ವಾತಿ ಗುರುಮಠಕಲ್ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿ ನಿಲಯದಲ್ಲೇ ವಾಸಿಸುತ್ತಿದ್ದರು. ಶುಕ್ರವಾರ ಬೆಳಿಗ್ಗೆ ಉಪಹಾರಕ್ಕೆ ಕರೆದರೂ ಸ್ವಾತಿ ಹೊರಗೆ ಬರಲಿಲ್ಲ. ನಾಳೆಯ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡ ಬಳಿಕ ಉಪಹಾರ ಅಥವಾ ಊಟ ಮಾಡುವುದಾಗಿ ಹೇಳಿ ಕೋಣೆಯೊಳಗೆ ಉಳಿದುಕೊಂಡು ಬಾಗಿಲು ಹಾಕಿಕೊಂಡಿದ್ದಳು ಎಂದು ತಿಳಿದು ಬಂದಿದೆ. ಕೆಲ ಸಮಯದ ನಂತರ ಸ್ವಾತಿಯ ಪೋಷಕರು ಆಕೆಯ ಸಹಪಾಠಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರಿಸಿದಾಗ, ಅವರು ಕೋಣೆಗೆ ತೆರಳಿ ಬಾಗಿಲು ತಟ್ಟಿದರು. ಆದರೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಮೇಲಿನ ಕಿಟಕಿ ಗಾಜು ಒಡೆದು ಮೊಬೈಲ್ ಮೂಲಕ ಒಳಗೆ ನೋಡಿದಾಗ ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸ್ವಾತಿ ಪತ್ತೆಯಾದರು. ತಕ್ಷಣವೇ ವಸತಿ ನಿಲಯದ ವಾರ್ಡನ್ ಅಂಬಾಬಾಯಿ ತಳವಾರ ಅವರಿಗೆ ಮಾಹಿತಿ ನೀಡಲಾಯಿತು. ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಹಿಂದುಳಿದ ವರ್ಗಗಳ ಇಲಾಖೆ ಉಪನಿರ್ದೇಶಕ ಸದಾಶಿವ ನಾರಾಯಣಕರ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾಲ್ಲೂಕು ಪಂಚಾಯಿತಿ ಇಒ ಅಂಬರೇಶ ಪಾಟೀಲ ಹಾಗೂ ಹಿಂದುಳಿದ ವರ್ಗಗಳ ಸಹಾಯಕ ನಿರ್ದೇಶಕ ಸಂತೋಷರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಸ್ವಾತಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದು, ಈಗಾಗಲೇ ನಾಲ್ಕು ವಿಷಯಗಳ ಪರೀಕ್ಷೆಗಳನ್ನು ಬರೆದು ಉಳಿದ ಎರಡು ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದಳು. ಶುಕ್ರವಾರ ಬೆಳಿಗ್ಗೆ ತನ್ನ ತಮ್ಮನಿಗೆ ಕರೆ ಮಾಡಿ ಕ್ಯಾಲ್ಕುಲೇಟರ್ ತಂದುಕೊಡಲು ಕೇಳಿದ್ದಳು ಎಂಬ ಮಾಹಿತಿ ದೊರೆತಿದೆ. ಘಟನೆಯ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.

24 C