SENSEX
NIFTY
GOLD
USD/INR

Weather

16    C
... ...View News by News Source

ಪ್ರಯಾಣಿಕರ ಪಾಲಿನ ಮೃತ್ಯುಕೂಪವಾದ ರಾಜಧಾನಿ: 3.5 ವರ್ಷದಲ್ಲಿ ಅಪಘಾತಕ್ಕೆ 3,296 ಬಲಿ, ಈ ಅಪಘಾತಗಳಿಗೆ ಕಾರಣವೇನು?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಧಾನಗತಿಯಲ್ಲಿದ್ದರೂ ಸಹ ಕಾಮಗಾರಿಗಳು, ಗುಂಡಿ ಬಿದ್ದ ರಸ್ತೆಗಳು, ಅತಿ ವೇಗದ ಚಾಲನೆ ಅಪಘಾತಗಳಿಗೆ ಕಾರಣವಾಗುತ್ತಿವೆ. ಕಳೆದ ಮೂರೂವರೆ ವರ್ಷಗಳಲ್ಲಿ 3,296 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 8,754 ಅಪಘಾತಗಳಾಗಿವೆ. ಸಂಚಾರ ಪೊಲೀಸರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಬ್ಲಾಕ್‌ಸ್ಪಾಟ್‌ಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಪಾದಚಾರಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಅಪಘಾತಗಳನ್ನು ತಡೆಯಲು ಸೂಕ್ತ ಕ್ರಮಗಳ ಬಗ್ಗೆ ಪ್ರಸ್ತಾವನಾ ಪತ್ರ ಸಲ್ಲಿಸಲಾಗಿದೆ.

ವಿಜಯ ಕರ್ನಾಟಕ 16 Dec 2025 5:34 am

ಕುಲಪತಿ ವಜಾಕ್ಕೆ ಆಗ್ರಹಿಸಿ ತೇಝ್‌ ಪುರ ವಿ.ವಿ.ಯ ಸಿಬ್ಬಂದಿ, ವಿದ್ಯಾರ್ಥಿಗಳಿಂದ ಉಪವಾಸ ಮುಷ್ಕರ

ತೇಝ್‌ಪುರ, ಡಿ. 15: ಹಣಕಾಸು ಅವ್ಯವಹಾರದ ಆರೋಪದ ಕುರಿತಂತೆ ತೇಝ್‌ಪುರ ವಿಶ್ವವಿದ್ಯಾನಿಲಯದ ಕುಲಪತಿ ಶಂಭು ನಾಥ್ ಸಿಂಗ್ ಅವರನ್ನು ಕೂಡಲೇ ವಜಾಗೊಳಿಸುವುದು ಸೇರಿದಂತೆ ತಾವು ಎತ್ತಿದ ಸಮಸ್ಯೆಗಳ ಕುರಿತು ಶಿಕ್ಷಣ ಸಚಿವಾಲಯ (ಎಂಒಇ) ದಿಂದ ಪ್ರತಿಕ್ರಿಯೆ ಆಗ್ರಹಿಸಿ ವಿ.ವಿ.ಯ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿ ಸೋಮವಾರ 9 ಗಂಟೆಗಳ ಕಾಲ ಉಪವಾಸ ಮುಷ್ಕರ ನಡೆಸಿದರು. ಪ್ರತಿಭಟನಕಾರರು ನವೆಂಬರ್ ಅಂತ್ಯದಿಂದ ಪ್ರತಿಭಟನೆ ನಡೆಸುತ್ತಿರುವುದರಿಂದ ವಿಶ್ವವಿದ್ಯಾನಿಲಯ ಮುಚ್ಚಲಾಗಿದೆ. ಕಳೆದ ವಾರದಿಂದ ಅಂತಿಮ ಪರೀಕ್ಷೆಯನ್ನು ನಡೆಸಲು ಸೀಮಿತವಾಗಿ ತೆರೆಯಲಾಗಿದೆ. ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಯ ಜಂಟಿ ವೇದಿಕೆಯಾದ ತೇಝ್‌ಪುರ ವಿಶ್ವವಿದ್ಯಾನಿಲಯ ಯುನೈಟೆಡ್ ಫೋರಂ (ಟಿಯುಯುಎಫ್) ಆಶ್ರಯದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯಿಂದ ಉಪವಾಸ ಮುಷ್ಕರ ನಡೆಸಲಾಗಿದೆ ಎಂದು ವೇದಿಕೆ ಹೇಳಿದೆ. ಸಿಂಗ್ ವಿರುದ್ಧ ಶಿಕ್ಷಣ ಸಚಿವಾಲಯ ತ್ವರಿತ ಕ್ರಮ ತೆಗೆದುಕೊಳ್ಳಬೇಕೆಂಬುದು ಈ ಮುಷ್ಕರದ ಆಗ್ರಹವಾಗಿದೆ. ತೆಝ್‌ಪುರ ವಿ.ವಿ.ಯ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಯ ಹೆಚ್ಚುತ್ತಿರುವ ಹತಾಶೆಯನ್ನು ಶಿಕ್ಷಣ ಸಚಿವಾಲಯ ನಿರ್ಲಕ್ಷಿಸುತ್ತಿದೆ. ನಿರಂತರ ಪ್ರತಿಭಟನೆ ಹಾಗೂ ಮನವಿ ಸಲ್ಲಿಸಿರುವ ಹೊರತಾಗಿಯೂ ಸಚಿವಾಲಯ ಮೌನವಾಗಿದೆ ಎಂದು ಟಿಯುಯುಎಫ್ ಹೇಳಿದೆ.

ವಾರ್ತಾ ಭಾರತಿ 16 Dec 2025 12:39 am

ಕಾಂಗ್ರೆಸ್‌ ನ ‘ಮತಗಳ್ಳತನ’ ಆರೋಪದಿಂದ ಅಂತರ ಕಾಯ್ದುಕೊಂಡು ಉಮರ್ ಅಬ್ದುಲ್ಲಾ

ಶ್ರೀನಗರ, ಡಿ. 15: ಕಾಂಗ್ರೆಸ್‌ ನ ‘ಮತಗಳ್ಳತನ’ದ ಆರೋಪದಿಂದ ಅಂತರ ಕಾಯ್ದುಕೊಂಡಿರುವ ಜಮ್ಮು ಹಾಗೂ ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲಾ, ಇದಕ್ಕೂ ಇಂಡಿಯಾ ಬಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸೋಮವಾರ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ ‘‘ವೋಟ್ ಚೋರ್ ಗದ್ದಿ ಛೋಡ್’’ ರ್ಯಾಲಿಯಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರು ಬಿಜೆಪಿ ಹಾಗೂ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ಮಾಡಿದ ಒಂದು ದಿನದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ. ಮತಗಳ್ಳತನ ಆಡಳಿತ ಪಕ್ಷದ ಡಿಎನ್‌ಎಯಲ್ಲಿದೆ. ಬಿಜೆಪಿ ನಾಯಕರು ದೇಶದ್ರೋಹಿಗಳು. ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಅವರು ಪಿತೂರಿ ನಡೆಸುತ್ತಿದ್ದಾರೆ. ಅಂತಹ ನಾಯಕರನ್ನು ಅಧಿಕಾರದಿಂದ ತೆಗೆದು ಹಾಕಬೇಕು ಎಂದು ನಾಯಕರು ಆರೋಪಿಸಿದ್ದಾರೆ ಎಂದು ಉಮರ್ ಅಬ್ದುಲಾ ತಿಳಿಸಿದರು. ಉಮರ್ ಅಬ್ದುಲ್ಲಾ ಅವರ ನ್ಯಾಶನಲ್ ಕಾನ್ಫರೆನ್ಸ್ ಇಂಡಿಯಾ ಬಣದಲ್ಲಿರುವ ಪ್ರಮುಖ ಮಿತ್ರ ಪಕ್ಷವಾಗಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರು ಸಂಖ್ಯೆಗೆ ಅನುಗುಣವಾಗಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿದೆ. ಕಾಂಗ್ರೆಸ್ ಗಮನ ಸೆಳೆದ ‘‘ಮತಗಳ್ಳತನ’’ ಹಾಗೂ ಚುನಾವಣಾ ಅಕ್ರಮದ ಬಗ್ಗೆ ಪ್ರಶ್ನಿಸಿದಾಗ ಅಬ್ದುಲ್ಲಾ ಅವರು, ಇದಕ್ಕೂ ಇಡಿಯಾ ಬಣಕ್ಕೂ ಯಾವುದೇ ಸಂಬಂಧ ಇಲ್ಲ. ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ತನ್ನದೇ ಆದ ಕಾರ್ಯಸೂಚಿಯನ್ನು ರೂಪಿಸುವ ಸ್ವಾತಂತ್ರ್ಯವಿದೆ. ಕಾಂಗ್ರೆಸ್ ಮತಗಳ್ಳತನ ಹಾಗೂ ಎಸ್‌ಐಆರ್ ಅನ್ನು ತನ್ನ ಮುಖ್ಯ ವಿಷಯವನ್ನಾಗಿ ಮಾಡಿಕೊಂಡಿದೆ. ಇದನ್ನು ಮಾಡಬೇಡಿ ಎಂದು ಹೇಳಲು ನಾವು ಯಾರು ಎಂದು ಅವರು ಹೇಳಿದರು. ಮತಗಳ್ಳತನದ ವಿರುದ್ಧ ಸುಮಾರು 6 ಕೋಟಿ ಸಹಿಗಳನ್ನು ಸಂಗ್ರಹಿಸಲಾಗಿದೆ ಹಾಗೂ ಅದನ್ನು ರಾಷ್ಟ್ರಪತಿಗಳಿಗೆ ನೀಡುವುದಾಗಿ ಕಾಂಗ್ರೆಸ್ ಹೇಳಿದೆ.

ವಾರ್ತಾ ಭಾರತಿ 16 Dec 2025 12:35 am

Punjab | ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

ಜಲಂಧರ್(ಪಂಜಾಬ್), ಡಿ. 15: ಇಲ್ಲಿನ ಹಲವು ಶಾಲೆಗಳು ಸೋಮವಾರ ಬಾಂಬ್ ಬೆದರಿಕೆಯ ಇಮೇಲ್ ಸ್ವೀಕರಿಸಿವೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗಳಿಂದ ತೆರವುಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘‘ವಿದ್ಯುತ್ ಪೂರೈಕೆಯಲ್ಲಿ ಏನೋ ದೋಷವಿದೆ ಎಂದು ನಮಗೆ ತಿಳಿಸಲಾಯಿತು ಹಾಗೂ ನಮ್ಮ ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಹೋಗುವಂತೆ ಸೂಚಿಸಲಾಯಿತು’’ ಎಂದು ವಿದ್ಯಾರ್ಥಿಗಳ ಹೆತ್ತವರು ಹೇಳಿದ್ದಾರೆ. ‘‘ಶಾಲಾ ಕಟ್ಟಡವನ್ನು ಧ್ವಂಸಗೊಳಿಸಲಾಗುವುದು ಎಂದು ಬೆದರಿಕೆ ಒಡ್ಡಿದ ಇಮೇಲ್‌ಗಳನ್ನು ಶಾಲೆಗಳ ಮುಖ್ಯೋಪಾಧ್ಯಾಯರು ಸ್ವೀಕರಿಸಿದ್ದಾರೆ’’ ಎಂದು ಎಸಿಪಿ (ಉತ್ತರ) ಸಂಜಯ್ ಕುಮಾರ್ ತಿಳಿಸಿದ್ದಾರೆ. ಸೈಬರ್ ಪೊಲೀಸ್‌ನ ತಂಡ ಇಮೇಲ್‌ನ ಮೂಲವನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ವಾರ್ತಾ ಭಾರತಿ 16 Dec 2025 12:31 am

Messi ಭೇಟಿ ವೇಳೆ ಸಾಲ್ಟ್ ಲೇಕ್ ಕ್ರೀಡಾಂಗಣಲ್ಲಿ ದಾಂಧಲೆ | CBI, EDಯಿಂದ ತನಿಖೆ ಕೋರಿ ಕಲ್ಕತಾ ಹೈಕೋರ್ಟ್‌ ಗೆ PIL

ಕೋಲ್ಕತಾ, ಡಿ. 15: ಸಾಲ್ಟ್ ಲೇಕ್ ಸ್ಟೇಡಿಯನಲ್ಲಿ ನಡೆದ ದಾಂಧಲೆಯ ತನಿಖೆಗೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಅಸೀಮ್ ಕುಮಾರ್ ರಾಯ್ ನೇತೃತ್ವದ ತನಿಖಾ ಸಮಿತಿ ರೂಪಿಸುವ ಪಶ್ಚಿಮ ಬಂಗಾಳ ಸರಕಾರದ ನಿರ್ಧಾರ ಪ್ರಶ್ನಿಸಿ ಕೋಲ್ಕತಾದ ಉಚ್ಚ ನ್ಯಾಯಾಲಯದಲ್ಲಿ ಸೋಮವಾರ 3 ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಗಳನ್ನು ಸಲ್ಲಿಸಲಾಗಿದೆ. ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ), ಜಾರಿ ನಿರ್ದೇಶನಾಲಯ (ED), ಗಂಭೀರ ವಂಚನೆ ತನಿಖೆ ಕಚೇರಿ (ಎಸ್‌ಎಫ್‌ಐಒ)ಯಂತಹ ಕೇಂದ್ರೀಯ ಸಂಸ್ಥೆಗಳಿಗೆ ಹಸ್ತಾಂತರಿಸುವಂತೆ ಅರ್ಜಿದಾರರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ. ಅವರು ತಮ್ಮ ಬೇಡಿಕೆಯನ್ನು ಬೆಂಬಲಿಸಲು ಘಟನೆಯ ತೀವ್ರತೆ, ಜನಸಂದಣಿಯ ನಿರ್ವಹಣೆ ಹಾಗೂ ಭದ್ರತೆಯಲ್ಲಿ ಲೋಪದ ಕುರಿತು ಗಮನ ಸೆಳೆದಿದ್ದಾರೆ. ಹಿಂಸಾಚಾರಕ್ಕೆ ಕಾರಣವಾದ ಅಂಶಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸಲು ರಾಜ್ಯ ಮಟ್ಟದ ತನಿಖೆಯನ್ನು ಕೇಂದ್ರೀಯ ಸಂಸ್ಥೆಗಳಿಗೆ ವರ್ಗಾಯಿಸಬೇಕೆಂದು ಅರ್ಜಿಗಳು ಕೋರಿವೆ. ಪಶ್ಚಿಮಬಂಗಾಳ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಹಾಗೂ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಹಾಗೂ ನ್ಯಾಯವಾದಿಗಳಾದ ಸಬ್ಯಸಾಚಿ ಚಟರ್ಜಿ, ಮೈನಕ್ ಘೋಶಾಲ್ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪ್ರತ್ಯೇಕವಾಗಿ ಸಲ್ಲಿಸಿದ್ದಾರೆ. ಈ ಅರ್ಜಿಗಳನ್ನು ನ್ಯಾಯಾಲಯ ಈ ವಾರಾಂತ್ಯದಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. 

ವಾರ್ತಾ ಭಾರತಿ 16 Dec 2025 12:27 am

ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿ ಅರ್ಜಿ; ವಿಚಾರಣೆ ಜ. 7ಕ್ಕೆ ಮುಂದೂಡಿಕೆ

ಹೊಸದಿಲ್ಲಿ, ಡಿ. 15: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಸೋನಮ್ ವಾಂಗ್ಚುಕ್ ಅವರ ಬಂಧನ ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಜನವರಿ 7ಕ್ಕೆ ಮುಂದೂಡಿದೆ. ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಸೆಪ್ಟಂಬರ್ 26ರಂದು ಬಂಧಿಸಲಾಗಿತ್ತು. ಆಲಿಸಲು ಸಾಕಷ್ಟು ಸಮಯ ಇಲ್ಲದೇ ಇರುವುದರಿಂದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಹಾಗೂ ಎನ್.ವಿ. ಅಂಜಾರಿಯಾ ಅವರ ಪೀಠ ವಿಚಾರಣೆಯನ್ನು ಮುಂದೂಡಿತು. ಸೋನಮ್ ವಾಂಗ್ಚುಕ್ ಅವರ ಬಂಧನ ಕಾನೂನು ಬಾಹಿರ ಹಾಗೂ ಅದು ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

ವಾರ್ತಾ ಭಾರತಿ 16 Dec 2025 12:21 am

Australia | ‘ನನ್ನ ಮಗ ಒಬ್ಬ ಹೀರೋ, ಆತ ಜಾತಿ ಧರ್ಮ ನೋಡಲಿಲ್ಲ: ಅಹ್ಮದ್ ತಂದೆ Mohamed Fateh al-Ahmed

ಪ್ರಾಣವನ್ನು ಲೆಕ್ಕಿಸದೆ ದಾಳಿಕೋರನಿಂದ ಬಂದೂಕು ಕಸಿದುಕೊಂಡು, ಜನರನ್ನು ರಕ್ಷಿಸಿದ ಸಿರಿಯಾ ಮೂಲದ ಹಣ್ಣಿನ ವ್ಯಾಪಾರಿ

ವಾರ್ತಾ ಭಾರತಿ 15 Dec 2025 11:56 pm

ಸುರತ್ಕಲ್ | ಮನೆಗೆ ನುಗ್ಗಿ ನಗ-ನಗದು ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ಸುರತ್ಕಲ್, ಡಿ.15: ಇಲ್ಲಿನ ಮುಕ್ಕ ಮಿತ್ರಪಟ್ನದ ವೃದ್ಧೆ ಜಲಜಾ ಎಂಬವರ ಮನೆಗೆ ಡಿ.3ರಂದು ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಗುಡ್ಡೆಕೊಪ್ಲ ಶ್ರೀ ರಾಮ ಭಜನಾ ಮಂದಿರ ಬಳಿಯ ನಿವಾಸಿ ಶೈನ್ ಎಚ್. ಪುತ್ರನ್ ಯಾನೆ ಶಯನ್ ಯಾನೆ ಶೈನ್ (21), ಬೆಂಗಳೂರು ಎಳಚನಹಳ್ಳಿ, ಕಾಶಿನಗರ 5ನೇ ಕ್ರಾಸ್ ನಿವಾಸಿ ವಿನೋದ್ ಯಾನೆ ಕೋತಿ ಯಾನೆ ವಿನೋದ್ ಕುಮಾರ್ (33), ಬೆಂಗಳೂರು ಉಡಿಪಾಳ್ಯ ಕನಕಪುರ ಮುಖ್ಯ ರಸ್ತೆ ನಿವಾಸಿ ಗಿರೀಶ್ ಯಾನೆ ಸೈಕಲ್ ಗಿರಿ (28) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 4.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ಬೈಕ್, 3 ಮೊಬೈಲ್ ಫೋನ್ ಹಾಗೂ 3 ಸಾವಿರ ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಬಳಿಕ ಸುರತ್ಕಲ್ ಪೊಲೀಸ್ ಉಪ ನಿರೀಕ್ಷಕ ರಘು ನಾಯ್ಕ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ಆರಂಭಿಸಿ, ಕಳವು ಕೃತ್ಯ ನಡೆದಿದ್ದ ಮನೆಯ ಸಮೀಪದ ಎಲ್ಲಾ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಸುರತ್ಕಲ್ ಗುಡ್ಡೆಕೊಪ್ಲ ನಿವಾಸಿ ಶೈನ್ ಎಚ್. ಪುತ್ರನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಈ ವೇಳೆ ಉಡುಪಿ ಜಿಲ್ಲೆ ಕಾರ್ಕಳ ನಿವಾಸಿ ಜೈಸನ್ ಯಾನೆ ಲೆನ್ಸನ್ ಎಂಬಾತನೊಂದಿಗೆ ಸೇರಿಕೊಂಡು ಕೃತ್ಯ ಎಸಗಿದ್ದು, ಕಳವುಗೈದ ಚಿನ್ನಾಭರಣವನ್ನು ಬೆಂಗಳೂರಿನ ವಿನೋದ್ ಕುಮಾರ್‌ಗೆ ಮಾರಾಟ ಮಾಡಿರುವುದಾಗಿ ಬಾಯಿಬಿಟ್ಟಿದ್ದ. ಇದೇ ಜಾಡು ಹಿಡಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯದಲ್ಲಿ ನೇರ ಭಾಗಿಯಾಗಿದ್ದ ಇನ್ನೋರ್ವ ಆರೋಪಿ ಜೈಸನ್ ಯಾನೆ ಲೆನ್ಸನ್ ಕಾರ್ಕಳ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಆರೋಪಿಗಳ ಪೈಕಿ ಶೈನ್ ಎಚ್. ಪುತ್ರನ್ ಯಾನೆ ಶಯನ್ ಯಾನೆ ಶೈನ್ ಎಂಬಾತನ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಸೇವನೆಯ 1 ಪ್ರಕರಣ, ವಿನೋದ್ ಯಾನೆ ಕೋತಿ ಯಾನೆ ವಿನೋದ್ ಕುಮಾರ್ ಮೇಲೆ ಬೆಂಗಳೂರಿನ ಕೆ.ಎಸ್.ಆರ್.ಲೇಔಟ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ 2 ಕೊಲೆ, 2 ಕೊಲೆಯತ್ನ, 4 ದರೋಡೆ, 1 ಬೆದರಿಕೆ, 1 ಗಾಂಜಾ ಮಾರಾಟ, 1 ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಗಿರೀಶ್ ಯಾನೆ ಸೈಕಲ್ ಗಿರಿ ಎಂಬಾತನ ಮೇಲೆ ಬೆಂಗಳೂರಿನ ಕಗ್ಗಲಿಪುರ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು ಬೆಂಗಳೂರು ನಗರದ ವಿವಿಧ ಠಾಣೆಗಳಲ್ಲಿ 5 ಕೊಲೆಯತ್ನ, 1 ದರೋಡೆ, 3 ಹಲ್ಲೆ ಪ್ರಕರಣ ಸೇರಿ ಒಟ್ಟು 9 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಾರ್ತಾ ಭಾರತಿ 15 Dec 2025 11:53 pm

Schools Closed: ಮಹಾನಗರದಲ್ಲಿ ಹದಗೆಟ್ಟ ಗಾಳಿ ಗುಣಮಟ್ಟ: ಶಾಲೆಗಳ ಬಂದ್‌ಗೆ ಸರ್ಕಾರ ತಿರ್ಮಾನ

Poor Air Quality in City: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಗಾಳಿ ಗುಣಮಟ್ಟ ತೀರಾ ಕಳಪೆ ಮಟ್ಟ ತಲುಪುತ್ತದೆ. ಕಳೆದ ಮೂರು ನಾಲ್ಕು ದಿನಗಳಿಂದ ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ಗಾಳಿ ಕಲುಷಿತಗೊಂಡಿದ್ದು ವರದಿ ಆಗಿತ್ತು. ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಸಿರಾಡಲು ಯೋಗ್ಯವಲ್ಲದ ಗಾಳಿ ದಾಖಲಾಗಿದೆ. ಹೀಗಾಗಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲೆಗಳ ಬಂದ್‌ಗೆ ದೆಹಲಿ ಸರ್ಕಾರ

ಒನ್ ಇ೦ಡಿಯ 15 Dec 2025 11:52 pm

ಇರಾಕ್ ಚುನಾವಣಾ ಫಲಿತಾಂಶಕ್ಕೆ ಸುಪ್ರೀಂ ಫೆಡರಲ್ ಕೋರ್ಟ್ ಅನುಮೋದನೆ

ಬಗ್ದಾದ್, ಡಿ.15: ಇರಾಕಿನಲ್ಲಿ ಕಳೆದ ತಿಂಗಳು ನಡೆದ ಸಂಸದೀಯ ಚುನಾವಣೆಯ ಫಲಿತಾಂಶವನ್ನು ಸುಪ್ರೀಂ ಫೆಡರಲ್ ನ್ಯಾಯಾಲಯ ಅನುಮೋದಿಸಿದ್ದು ಉಸ್ತುವಾರಿ ಪ್ರಧಾನಿ ಮುಹಮ್ಮದ್ ಶಿಯಾ ಅಲ್-ಸುಡಾನಿ ಅವರ ಪಕ್ಷವು ಅತೀ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದರೆ ಅವರಿಗೆ ಮತ್ತೊಂದು ಅವಧಿಯನ್ನು ಖಚಿತಪಡಿಸಲು ಇದು ಸಾಕಾಗದು ಎಂದು ದೃಢಪಡಿಸಿದೆ. ಮತದಾನ ಪ್ರಕ್ರಿಯೆಯು ಸಾಂವಿಧಾನಿಕ ಮತ್ತು ಕಾನೂನಿನ ಅವಶ್ಯಕತೆಗಳನ್ನು ಪೂರೈಸಿದೆ ಮತ್ತು ಮತದಾನದ ಸಿಂಧುತ್ವದ ಮೇಲೆ ಪರಿಣಾಮ ಬೀರುವಂತಹ ಯಾವುದೇ ಅಕ್ರಮಗಳನ್ನು ಹೊಂದಿಲ್ಲ ಎಂದು ನ್ಯಾಯಾಲಯ ದೃಢಪಡಿಸಿದೆ. 329 ಸ್ಥಾನಗಳಿರುವ ಸಂಸತ್ತಿನಲ್ಲಿ ಅಲ್-ಸುಡಾನಿ ಅವರ `ರಿಕನ್‍ಸ್ಟ್ರಕ್ಷನ್ ಆ್ಯಂಡ್ ಡೆವಲಪ್‍ಮೆಂಟ್' ಒಕ್ಕೂಟ 46 ಸ್ಥಾನಗಳನ್ನು ಪಡೆದು ಅತೀ ದೊಡ್ಡ ಪಕ್ಷವಾಗಿ ಗುರುತಿಸಿಕೊಂಡಿದೆ. ಆದರೆ ಯಾವುದೇ ಒಕ್ಕೂಟವು ಸ್ವತಃ ಸರಕಾರ ರಚಿಸುವಷ್ಟು ಸ್ಥಾನಗಳನ್ನು ಗಳಿಸಲು ವಿಫಲವಾಗಿದೆ. 

ವಾರ್ತಾ ಭಾರತಿ 15 Dec 2025 11:50 pm

ಹಾವೇರಿ | ಕರ್ತವ್ಯ ಲೋಪ ಆರೋಪ : ಸರ್ಕಲ್ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಅಮಾನತು

ಹಾವೇರಿ, ಡಿ.15: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಷಕರು ಹಾಗೂ ಸಾರ್ವಜನಿಕರಿಂದ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಜಿಲ್ಲೆಯ ಸವಣೂರು ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಓರ್ವ ಪೊಲೀಸ್ ಕಾನ್‌ಸ್ಟೇಬಲ್‌ಅನ್ನು ದಾವಣಗೆರೆ ಐಜಿಪಿ ಬಿ.ಆರ್.ರವಿಕಾಂತೇಗೌಡ ಅಮಾನತು ಮಾಡಿ ಇಲಾಖೆ ವಿಚಾರಣೆ ನಡೆಸಲು ನಿರ್ದೇಶನ ನೀಡಿದ್ದಾರೆ. ಅಮಾನತಾದ ಅಧಿಕಾರಿಯನ್ನು ಸವಣೂರು ಸರ್ಕಲ್ ಇನ್‌ಸ್ಪೆಕ್ಟರ್ ದೇವಾನಂದ ಎಂದು ತಿಳಿದುಬಂದಿದೆ. ವಿವರ : ಸವಣೂರು ಸರಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕ ಜಗದೀಶ್ ಎಂಬಾತ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಆತನಿಗೆ ವಿದ್ಯಾರ್ಥಿನಿಯ ಪೋಷಕರು ಹಾಗೂ ಸಾರ್ವಜನಿಕರು ಹಲ್ಲೆ ನಡೆಸಿರುವ ಘಟನೆ ಡಿ.10ರಂದು ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕ ಹಾಗೂ ವಿದ್ಯಾರ್ಥಿನಿಯ ಪೋಷಕರು ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಕುರಿತು ಪ್ರಾಥಮಿಕ ತನಿಖೆಗೆ ಹಾವೇರಿ ಎಸ್ಪಿ ಯಶೋಧಾ ಆದೇಶ ನೀಡಿದ್ದರು. ಕಠಿಣ ಶಿಕ್ಷೆ ಆಗಲಿ : ಈ ಪ್ರಕರಣದಲ್ಲಿ ತಪ್ಪುಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಶಿಗ್ಗಾಂವ-ಸವಣೂರು ಕ್ಷೇತ್ರದ ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ್ ತಿಳಿಸಿದ್ದಾರೆ.

ವಾರ್ತಾ ಭಾರತಿ 15 Dec 2025 11:46 pm

ನೇಟೋ ಗುರಿಯನ್ನು ಕೈಬಿಡಲು ಉಕ್ರೇನ್ ಸಿದ್ಧ: ಝೆಲೆನ್‍ಸ್ಕಿ

ಬರ್ಲಿನ್, ಡಿ.15: ರಶ್ಯದೊಂದಿಗಿನ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕಾದ ಪ್ರತಿನಿಧಿಯೊಂದಿಗೆ ಬರ್ಲಿನ್‍ನಲ್ಲಿ ಐದು ಗಂಟೆ ಮಾತುಕತೆ ನಡೆಸಿದ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್‍ಸ್ಕಿ, ನೇಟೋ ಮಿಲಿಟರಿ ಒಕ್ಕೂಟಕ್ಕೆ ಸೇರ್ಪಡೆಗೊಳ್ಳುವ ಆಕಾಂಕ್ಷೆಗಳನ್ನು ಕೈಬಿಡಲು ಸಿದ್ಧ ಎಂದು ಹೇಳಿರುವುದಾಗಿ ವರದಿಯಾಗಿದೆ. `ಪಾಶ್ಚಿಮಾತ್ಯರು ಭದ್ರತೆಯ ಖಾತರಿ ನೀಡಿದರೆ ನೇಟೋಗೆ ಸೇರ್ಪಡೆಯಾಗುವ ಗುರಿಯನ್ನು ಉಕ್ರೇನ್ ಕೈಬಿಡಲು ಸಿದ್ಧ. ಆರಂಭದಿಂದಲೂ ನೇಟೋಗೆ ಸೇರ್ಪಡೆಗೊಳ್ಳುವುದು ಉಕ್ರೇನ್‍ ನ ಆಶಯವಾಗಿತ್ತು. ಇದು ನಿಜವಾದ ಭದ್ರತಾ ಖಾತರಿಯಾಗಿದೆ. ಅಮೆರಿಕ ಮತ್ತು ಯುರೋಪ್‍ನ ಕೆಲವು ಪಾಲುದಾರರು ಈ ನಿಟ್ಟಿನಲ್ಲಿ ಬೆಂಬಲ ನೀಡಲಿಲ್ಲ. ಆದ್ದರಿಂದ ನಮಗೆ ಅಮೆರಿಕಾದಿಂದ ಆರ್ಟಿಕಲ್-5ರ ರೀತಿಯ ಖಾತರಿ ಮತ್ತು ಯುರೋಪಿಯನ್ ಮಿತ್ರರಿಂದ, ಕೆನಡಾ, ಜಪಾನ್ ಮತ್ತಿತರ ದೇಶಗಳಿಂದ ಭದ್ರತೆಯ ಖಾತರಿ ದೊರಕುವುದು ರಶ್ಯದ ಮತ್ತೊಂದು ಆಕ್ರಮಣವನ್ನು ತಡೆಯಲು ಅವಕಾಶ ನೀಡುತ್ತದೆ. ಭದ್ರತಾ ಖಾತರಿಗೆ ಕಾನೂನಿನ ಬದ್ಧತೆಯಿರಬೇಕು. ಆಗ ನಾವು ಹೊಂದಾಣಿಕೆಗೆ ಸಿದ್ಧವಿದ್ದೇವೆ' ಎಂದು ಝೆಲೆನ್‍ಸ್ಕಿ ಹೇಳಿದ್ದಾರೆ. ಝೆಲೆನ್‍ಸ್ಕಿಯ ಈ ಹೇಳಿಕೆ ಉಕ್ರೇನ್ ನಿಲುವಿನಲ್ಲಿ ಪ್ರಮುಖ ಬದಲಾವಣೆಯನ್ನು ಸೂಚಿಸುತ್ತದೆ. ರಶ್ಯದ ದಾಳಿಗಳಿಂದ ರಕ್ಷಣೆ ಪಡೆಯಲು ನೇಟೋಗೆ ಸೇರ್ಪಡೆಗೊಳ್ಳುವುದಾಗಿ ಪ್ರತಿಪಾದಿಸುತ್ತಾ ಬಂದಿರುವ ಉಕ್ರೇನ್, ಈ ಆಕಾಂಕ್ಷೆಯನ್ನು ತನ್ನ ಸಂವಿಧಾನದಲ್ಲೂ ಸೇರ್ಪಡೆಗೊಳಿಸಿದೆ. ಯುದ್ಧ ಕೊನೆಗೊಳಿಸಲು ಟ್ರಂಪ್ ಪ್ರಸ್ತಾಪಿಸಿರುವ 20 ಅಂಶದ ಶಾಂತಿ ಯೋಜನೆಯ ಮತ್ತೊಂದು ಅಂಶವಾದ `ಭೂಪ್ರದೇಶವನ್ನು ರಶ್ಯಕ್ಕೆ ಬಿಟ್ಟುಕೊಡಲು' ಉಕ್ರೇನ್ ಇದುವರೆಗೆ ಸಮ್ಮತಿಸಿಲ್ಲ.

ವಾರ್ತಾ ಭಾರತಿ 15 Dec 2025 11:45 pm

ಬೆನಿನ್‍ ನಲ್ಲಿ ಮಿಲಿಟರಿ ದಂಗೆ | ಅಧ್ಯಕ್ಷರ ಪದಚ್ಯುತಿ

ಸರಕಾರದ ವಿಸರ್ಜನೆ: ಯೋಧರ ಗುಂಪು ಘೋಷಣೆ

ವಾರ್ತಾ ಭಾರತಿ 15 Dec 2025 11:42 pm

ಬೆನಿನ್‍ | ದಂಗೆ ವಿಫಲವಾಗಿದೆ: ಆಂತರಿಕ ಸಚಿವರ ಹೇಳಿಕೆ

ಪೋರ್ಟೋ ನೊವೊ, ಡಿ.15: ಬೆನಿನ್‍ ನಲ್ಲಿ ಘೋಷಿಸಲಾದ ದಂಗೆಯನ್ನು ವಿಫಲಗೊಳಿಸಲಾಗಿದೆ ಎಂದು ಆಂತರಿಕ ಸಚಿವ ಅಲಾಸೆನ್ ಸೆಯಿದೊವ್ `ಫೇಸ್‍ಬುಕ್'ನಲ್ಲಿ ಪೋಸ್ಟ್ ಮಾಡಿರುವ ವೀಡಿಯೊದಲ್ಲಿ ಹೇಳಿದ್ದಾರೆ. ಸೈನಿಕರ ಒಂದು ಸಣ್ಣ ಗುಂಪು ರಾಷ್ಟ್ರ ಮತ್ತು ಅದರ ಸಂಸ್ಥೆಗಳನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ರವಿವಾರ ಬೆಳಿಗ್ಗೆ ದಂಗೆಯನ್ನು ಪ್ರಾರಂಭಿಸಿತು. ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿದ ಸಶಸ್ತ್ರ ಪಡೆಗಳು ಮತ್ತು ಅದರ ಮುಖ್ಯಸ್ಥರು ದೇಶಕ್ಕೆ ತಮ್ಮ ಬದ್ಧತೆಯನ್ನು ಎತ್ತಿಹಿಡಿದಿದ್ದಾರೆ' ಎಂದವರು ಪೋಸ್ಟ್ ಮಾಡಿದ್ದಾರೆ. ಎಲ್ಲವೂ ಚೆನ್ನಾಗಿದೆ. ಯಾವುದೇ ಸಮಸ್ಯೆಯಿಲ್ಲ ಎಂದು ಸರಕಾರದ ವಕ್ತಾರ ವಿಲ್ಫ್ರೆಡ್ ಹೌಂಗ್‍ಬೆಡ್ಜಿ ಹೇಳಿರುವುದಾಹಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಫ್ರಾನ್ಸ್ ನಿಂದ 1960ರಲ್ಲಿ ಸ್ವಾತಂತ್ರ್ಯ ಪಡೆದ ಬಳಿಕ ಬೆನಿನ್ ಹಲವು ದಂಗೆಗಳಿಗೆ ಸಾಕ್ಷಿಯಾಗಿದೆ. 

ವಾರ್ತಾ ಭಾರತಿ 15 Dec 2025 11:41 pm

ಗ್ರಾಮೀಣ ಉದ್ಯೋಗ ಖಾತ್ರಿ ಬದಲಿಗೆ ಕೇಂದ್ರದಿಂದ ಹೊಸ ಯೋಜನೆ, ರಾಜ್ಯಗಳ ಮೇಲೆ 40% ಹೊರೆ? ಆರಂಭದಲ್ಲೇ ವಿರೋಧ

ಕೇಂದ್ರ ಸರಕಾರ 'ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ'ಯನ್ನು ಬದಲಿಸಿ 'ಉದ್ಯೋಗ ಮತ್ತು ಜೀವನೋಪಾಯ ಖಾತರಿಗೆ ವಿಕಸಿತ ಭಾರತ ಯೋಜನೆ' ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ಹೊಸ ಯೋಜನೆಯು 2047ರ ವೇಳೆಗೆ 'ವಿಕಸಿತ ಭಾರತ' ಗುರಿ ಸಾಧಿಸಲು ಮೂಲಸೌಕರ್ಯ ಒದಗಿಸುವ ಗುರಿ ಹೊಂದಿದೆ. ಯೋಜನೆಯ ವೆಚ್ಚದಲ್ಲಿ ರಾಜ್ಯಗಳೂ ಪಾಲು ಹಂಚಿಕೊಳ್ಳಬೇಕಾಗುತ್ತದೆ.

ವಿಜಯ ಕರ್ನಾಟಕ 15 Dec 2025 11:37 pm

ಹಾಲಿವುಡ್ ನಿರ್ದೇಶಕ ರೀನರ್, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ನ್ಯೂಯಾರ್ಕ್, ಡಿ.15: ಖ್ಯಾತ ಹಾಲಿವುಡ್ ನಿರ್ದೇಶಕ ರಾಬ್ ರೀನರ್ ಮತ್ತು ಅವರ ಪತ್ನಿ ಮಿಶೆಲ್ ರೀನರ್ ಅವರ ಮೃತದೇಹ ಕತ್ತುಸೀಳಿದ ಸ್ಥಿತಿಯಲ್ಲಿ ಲಾಸ್‍ಏಂಜಲೀಸ್‍ ನ ಮನೆಯಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. `ವೆನ್ ಹ್ಯಾರಿ ಮೆಟ್ ಸ್ಯಾಲಿ; ಮಿಸರಿ, ಸ್ಟ್ಯಾಂಡ್ ಬೈ ಮಿ' ಮುಂತಾದ ಹಿಟ್ ಸಿನೆಮಾಗಳನ್ನು ನಿರ್ದೇಶಿಸಿದ್ದ 78 ವರ್ಷದ ರೀನರ್ ಹಾಗೂ ಅವರ ಪತ್ನಿ ಹಾಗೂ ಕುಟುಂಬದ ಸದಸ್ಯರೊಬ್ಬರ ನಡುವೆ ಮಾತಿನ ಚಕಮಕಿ ನಡೆದಿರುವ ಮಾಹಿತಿಯಿದೆ. ದಂಪತಿಯ ಪುತ್ರ ನಿಕ್ ಶಂಕಿತ ಆರೋಪಿಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ವಾರ್ತಾ ಭಾರತಿ 15 Dec 2025 11:36 pm

Australia | ಗುಂಡಿನ ದಾಳಿಯ ವೇಳೆ ಸಾಹಸ ಮೆರೆದ ಅಹ್ಮದ್‍ ಗೆ 1 ಲಕ್ಷ ಡಾಲರ್ ಬಹುಮಾನ

ವಾಷಿಂಗ್ಟನ್, ಡಿ.15: ಬೋಂಡಿ ಬೀಚ್‍ ನಲ್ಲಿ ಜನರ ಮೇಲೆ ಗುಂಡು ಹಾರಿಸುತ್ತಿದ್ದ ಶೂಟರ್‍ ನನ್ನು ಪ್ರಾಣದ ಹಂಗು ತೊರೆದು ಮಣಿಸಿದ ಹಣ್ಣಿನ ವ್ಯಾಪಾರಿ ಅಹ್ಮದ್ ಅಲ್ ಅಹ್ಮದ್‍ಗೆ ಅಮೆರಿಕಾದ ಕೋಟ್ಯಾಧಿಪತಿ, ಖಾಸಗಿ ಹೂಡಿಕೆ ಸಂಸ್ಥೆಯ ಮ್ಯಾನೇಜರ್ ಬಿಲ್ ಆಕ್ಮನ್ 1 ಲಕ್ಷ ಡಾಲರ್ ಬಹುಮಾನ ಘೋಷಿಸಿದ್ದಾರೆ. ಬೋಂಡಿ ಬೀಚ್‍ನಲ್ಲಿ ಹಣ್ಣಿನ ಅಂಗಡಿಯ ವ್ಯಾಪಾರಿ 43 ವರ್ಷ ವಯಸ್ಸಿನ ಅಹ್ಮದ್ ಅಲ್ ಅಹ್ಮದ್ ಅವರು ಪಾರ್ಕ್ ಮಾಡಲಾಗಿದ್ದ ಕಾರಿನ ಹಿಂಬದಿಯಿಂದ ನುಗ್ಗಿಬಂದು ಶೂಟರ್‍ ನ ಮೇಲೆ ಮುಗಿಬಿದ್ದು ಆತನ ಬಂದೂಕು ಕಸಿದುಕೊಳ್ಳುವ ಮೂಲಕ ಹಲವರ ಜೀವ ಉಳಿಸಿದ್ದಾರೆ. ಈ ಸಾಹಸಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘನೆ ವ್ಯಕ್ತವಾಗಿದ್ದು ಅಹ್ಮದ್ ಹೆಸರಿನಲ್ಲಿ ಆನ್‍ಲೈನ್ ನಿಧಿ ಸಂಗ್ರಹಿಸುವ ಅಭಿಯಾನವೂ ಆರಂಭವಾಗಿದೆ. `ಗೋ ಫಂಡ್ ಮಿ' ಆನ್‍ಲೈನ್ ಅಭಿಯಾನದಡಿ ಸೋಮವಾರ ಮಧ್ಯಾಹ್ನದ ವರೆಗೆ 3,06,000 ಡಾಲರ್ ನಿಧಿ ಸಂಗ್ರಹಿಸಲಾಗಿದೆ. ಈ ಮಧ್ಯೆ, ತೋಳು ಮತ್ತು ಕೈಗೆ ಗುಂಡೇಟಿನ ಗಾಯಗಳಾಗಿರುವ ಅಹ್ಮದ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ಹೇಳಿವೆ.

ವಾರ್ತಾ ಭಾರತಿ 15 Dec 2025 11:27 pm

ಒಳ ಮೀಸಲಾತಿ ಜಾರಿಗಾಗಿ ಡಿ.17ರಂದು ಬೆಳಗಾವಿ ಚಲೋ ಹೋರಾಟ: ನರಸಪ್ಪ ದಂಡೋರ

ರಾಯಚೂರು: ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ಪೂರ್ಣ ಪ್ರಮಾಣ ಜಾರಿಗೆ ಆಗ್ರಹಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಡಿಸೆಂಬರ್ 17 ರಂದು ಬೆಳಗಾವಿ ಚಲೋ ಹಾಗೂ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ನರಸಪ್ಪ ದಂಡೋರ ಹೇಳಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಒಳಮೀಸಲು ಜಾರಿಗೆ ಆಸಕ್ತಿ ತೋರುತ್ತಿಲ್ಲ. ಜನರಿಗೆ ನೀಡಿದ ಮಾತು ಉಳಿಸಿಕೊಳ್ಳುವದಾಗಿ ಹೇಳುತ್ತಲೇ ಉದ್ದೇಶ ಪೂರಕವಾಗಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿ ಗೊಳಿಸುವುದಾಗಿ ಹೇಳಿ ನ್ಯಾಯಮೂರ್ತಿ ನಾಗಮೋಹನದಾಸ ಅವರಿಂದ ಪಡೆದ ವರದಿಯನ್ನು ಜಾರಿಗೊಳಿಸದೆ ಮೀಸಲು ಹಂಚಿಕೆ ಮಾಡಿ ಗೊಂದಲ ಸೃಷ್ಟಿಗೆ ಕಾರಣರಾದರು ಎಂದು‌ ಹೇಳಿದರು.   ಈ ಸಂದರ್ಭದಲ್ಲಿ ದುಳ್ಳಯ್ಯ ಗುಂಜಳ್ಳಿ, ರಂಜೀತ ದಂಡೋರ, ಜಕ್ರಪ್ಪ ಹಂಚಿನಾಳ, ಗೋವಿಂದ ಇಟೇಕರ್, ಹನುಮಂತ ಜುಲಮಗೇರ, ಭೀಮೇಶ ತುಂಟಾಪುರು, ದಾವೀದ, ರಾಜಪ್ಪ ಮರ್ಚಟ್ಹಾಳ, ಮಾರುತಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 15 Dec 2025 11:26 pm

ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಮಲ್ಲಿನಾಥ ಎಸ್ ಹಿರೇಮಠ ನೇಮಕ

ರಾಯಚೂರು ಡಿ15: ರಾಯಚೂರು ಜಿಲ್ಲಾ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಮಲ್ಲಿನಾಥ ಎಸ್ ಹಿರೇಮಠ ಅವರನ್ನು ನೇಮಿಸಿ ಕರ್ನಾಟಕ ಲೋಕಾಯುಕ್ತ ನಿಬಂಧಕರು ಆದೇಶ ಹೊರಡಿಸಿದ್ದಾರೆ. ಇಂಧೂದರ ಎಂ ಪಾಟೀಲ್ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಅವರ ಸ್ಥಾನಕ್ಕೆ ರಾಯಚೂರು ಜಿಲ್ಲಾ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಮಲ್ಲಿನಾಥ ಎಸ್ ಹಿರೇಮಠ ಅವರನ್ನು ತತ್‍ಕ್ಷಣ ದಿಂದ ಬರುವಂತೆ ನೇಮಕ ಮಾಡಲಾಗಿದೆ.  

ವಾರ್ತಾ ಭಾರತಿ 15 Dec 2025 11:22 pm

ನ್ಯೂಝಿಲ್ಯಾಂಡ್: ಅತ್ಯಾಚಾರ ಆರೋಪಿ ಭಾರತೀಯ ಮೂಲದ ಚಾಲಕನಿಗೆ ಜೈಲು

ವೆಲ್ಲಿಂಗ್ಟನ್, ಡಿ.7: ನ್ಯೂಝಿಲ್ಯಾಂಡ್‍ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಭಾರತೀಯ ಮೂಲದ ಉಬೆರ್ ಚಾಲಕ ಸತ್ವಿಂದರ್ ಸಿಂಗ್‍ ಗೆ 7 ವರ್ಷ ಎರಡು ತಿಂಗಳು ಜೈಲುಶಿಕ್ಷೆ ವಿಧಿಸಲಾಗಿದೆ. 2023ರಲ್ಲಿ ಡ್ಯುನೆಡಿನ್‍ ನ ಸ್ಪೆಯ್ಟ್ಸ್ ಏಲ್‍ ಹೌಸ್‍ ನಿಂದ ಪೂರ್ವ ಹ್ಯಾಮಿಲ್ಟನ್‍ ಗೆ ತಡರಾತ್ರಿ ಉಬರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಚಾಲಕ ಸತ್ವಿಂದರ್ ಸಿಂಗ್ ಅತ್ಯಾಚಾರ ಎಸಗಿರುವುದು ಸಾಬೀತಾಗಿದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಉಲ್ಲೇಖಿಸಿದ್ದು ಸತ್ವಿಂದರ್ ಸಿಂಗ್‍ ಗೆ ವಿಧಿಸಿರುವ ಶಿಕ್ಷೆಯ ಪ್ರಮಾಣವನ್ನು ಇಳಿಸಬೇಕೆಂಬ ಕೋರಿಕೆಯನ್ನು ತಳ್ಳಿಹಾಕಿದ್ದಾರೆ.

ವಾರ್ತಾ ಭಾರತಿ 15 Dec 2025 11:21 pm

ಪಡುಬಿದ್ರಿ | ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ : ಇಬ್ಬರು ಆರೋಪಿಗಳ ಬಂಧನ

ಪಡುಬಿದ್ರಿ, ಡಿ.15: ಇಲ್ಲಿಗೆ ಸಮೀಪದ ಮಹಾದೇವಿ ಟೂರಿಸ್ಟ್ ಹೋಮ್ ಎಂಬ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಡಿ.14ರಂದು ಬಂಧಿಸಿದ್ದಾರೆ. ಯತಿರಾಜ್ ಶೆಟ್ಟಿ ಪೊಲ್ಯ ಮತ್ತು ನವೀನ್ ಪೂಜಾರಿ ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ಮಹಿಳೆಯರನ್ನು ಪುಸಲಾಯಿಸಿ ಕಳ್ಳಸಾಗಾಣಿಕೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 15 Dec 2025 11:19 pm

ಕಲಬುರಗಿ| ಸೆಪ್ಸಿಸ್ ಸೋಂಕು ಮೂಕ ಕೊಲೆಗಾರ: ಡಾ.ಶರಣಬಸಪ್ಪ ಹರವಾಳ

ಕಲಬುರಗಿ: ಸೆಪ್ಸಿಸ್ ಎಂದರೆ ನಿಮ್ಮ ದೇಹದ ಅತಿಯಾದ ಮತ್ತು ಜೀವಕ್ಕೆ ಅಪಾಯಕಾರಿಯಾದ ಪ್ರತಿಕ್ರಿಯೆಯಾಗಿದ್ದು, ಇದು ಸೋಂಕಿನಿಂದ ಉಂಟಾಗುತ್ತದೆ. ಇದನ್ನು ಮೂಕ ಕೊಲೆಗಾರ ಎಂದು ಕರೆಯಲಾಗುತ್ತದೆ ಎಂದು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕರಾದ ಡಾ.ಶರಣಬಸಪ್ಪ ಹರವಾಳ ಹೇಳಿದರು. ಅವರು ಹೈದರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಜರುಗಿದ ಮೈಕ್ರೋಬಾಯಲಾಜಿ ವಿಭಾಗದಿಂದ ಜರುಗಿದ ಸೆಪ್ಸಿಸ್ ಊಹಿಸಬೇಡಿ, ಪತ್ತೆಮಾಡಿ ವಿಷಯದ ಕುರಿತು ಜರುಗಿದ ಸಿ ಎಮ್ ಇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ.ಶರಣಬಸಪ್ಪ ಹರವಾಳ, ಇದು ಹೆಚ್ಚಿನ ಜನರಿಗೆ ತುಂಬಾ ಪರಿಚಿತವಲ್ಲದಿರಬಹುದು, ಆದರೆ ವಾಸ್ತವವಾಗಿ ಇದು ನಮ್ಮಿಂದ ದೂರವಿಲ್ಲ. ಗಂಭೀರ ಕಾಯಿಲೆಯಾಗಿ, ಸೆಪ್ಸಿಸ್‌ನ ಅನಾರೋಗ್ಯ ಮತ್ತು ಮರಣ ಪ್ರಮಾಣವು ಹೆಚ್ಚಾಗಿರುತ್ತದೆ. ಪ್ರತಿ ವರ್ಷ ವಿಶ್ವಾದಾದ್ಯಂತ ಸುಮಾರು 20 ರಿಂದ 30 ಮಿಲಿಯನ್ ಸೆಪ್ಸಿಸ್ ಪ್ರಕರಣಗಳು ಕಂಡುಬರುತ್ತವೆ ಎಂದು ಅಂದಾಜಿಸಲಾಗಿದೆ ಎಂದು ಹೇಳಿದರು.   ಗೌರವ ಅತಿಥಿಗಳಾಗಿದ್ದ ಬಸವೇಶ್ವರ ಆಸ್ಪತ್ರೆಯ ಸಂಚಾಲಕ ಡಾ.ಕಿರಣ್ ದೇಶಮುಖ್ ಮಾತನಾಡಿ, ಸೆಪ್ಸಿಸ್ ಚಿಕಿತ್ಸೆಯಲ್ಲಿ ಸಮಯವು ಅತ್ಯಗತ್ಯ ಮತ್ತು ಸೆಪ್ಸಿಸ್‌ನ ಆರಂಭಿಕ ಗುರುತಿಸುವಿಕೆ ಚಿಕಿತ್ಸೆಯ ಅತ್ಯಂತ ನಿರ್ಣಾಯಕ ಭಾಗವಾಗಿದೆ. ಇತ್ತೀಚೆಗೆ ಬ್ಯಾಕ್ಟೀರಿಯಾದ ಸೋಂಕಿನ ಆರಂಭಿಕ ರೋಗನಿರ್ಣಯಕ್ಕೆ ಹೆಪಾರಿನ್-ಬೈಂಡಿಂಗ್ ಪ್ರೋಟೀನ್ (HBP) ಉದಯೋನ್ಮುಖ ಗುರುತುಗಳಲ್ಲಿ ಒಂದಾಗಿದೆ ಎಂದು ಸಾಬೀತಾಗಿದೆ. ಇದು ವೈದ್ಯರು ಸೆಪ್ಸಿಸ್ ರೋಗಿಗಳನ್ನು ಸಾಧ್ಯವಾದಷ್ಟು ಬೇಗ ಪತ್ತೆಹಚ್ಚಲು ಮತ್ತು ಚಿಕಿತ್ಸೆಯ ಪರಿಣಾಮಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ವೇದಿಕೆಯ ಮೇಲೆ ವೈದ್ಯಕೀಯ ಆಡಳಿತ ಮಂಡಳಿ ಸದಸ್ಯರಾದ ಡಾ ಗುರುಲಿಂಗಪ್ಪ ಪಾಟೀಲ್, ಮಹಾವಿದ್ಯಾಲಯದ ಡೀನ್ ಡಾ.ಶರಣಗೌಡ ಪಾಟೀಲ್, ನಿರ್ದೇಶಕರಾದ ಡಾ.ಮಲ್ಲಿಕಾರ್ಜುನ ಬಂಡಾರ, ವೈಸ್ ಡೀನ್ ಡಾ.ವಿಜಯಕುಮಾರ್ ಕಪ್ಪಿಕೇರಿ, ವೈದ್ಯಕೀಯ ಅಧೀಕ್ಷಕರಾದ ಡಾ.ಮಲ್ಲಿಕಾರ್ಜುನ ತೇಗನೂರ, ಡಾ.ಗಿರಿಧರ ಹಾವನೂರು, ಡಾ ಶಿಲ್ಪಾ ಪ್ರಧಾನ್, ಡಾ.ಬಸವರಾಜ ಪಾಟೀಲ್, ಶಿಬಾ ಪರ್ವೀನ್, ಶರಣಮ್ಮ ಬಿರಾದಾರ್‌ ಉಪಸ್ಥಿತರಿದ್ದರು. ಡಾ.ಪರಮೇಶ್‌ ಬಿರಾದಾರ್‌ ಸ್ವಾಗತಿಸಿದರು. ಡಾ.ಉಡಚಾಣ ಕಾರ್ಯಕ್ರಮ ನಿರೂಪಿಸಿದರು, ಡಾ.ಪ್ರೀತಿ ಹುಗ್ಗಿ ವಂದಿಸಿದರು.

ವಾರ್ತಾ ಭಾರತಿ 15 Dec 2025 11:18 pm

40 ವರ್ಷದ ಹಿಂದೆ ಅಳವಡಿಸಿದ್ದ ಕೊಳವೆಗಳಲ್ಲಿ ಸೋರಿಕೆ, ಎಂ.ಜಿ. ರಸ್ತೆ ಅಗೆಯಲಿದೆ ಜಲಮಂಡಳಿ

ಬೆಂಗಳೂರು ಜಲಮಂಡಳಿ 40 ವರ್ಷಗಳ ಬಳಿಕ ಎಂಜಿ ರಸ್ತೆಯಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಕೊಳವೆಗಳನ್ನು ಬದಲಾಯಿಸಲಿದೆ. ಈ ಕಾಮಗಾರಿ ಜನವರಿಯಲ್ಲಿ ಗಣರಾಜ್ಯೋತ್ಸವದ ನಂತರ ಆರಂಭವಾಗಲಿದೆ. ಸವೆದು ಹೋದ ಕೊಳವೆಗಳನ್ನು ಬದಲಾಯಿಸಿ, ಸೋರಿಕೆ ಮತ್ತು ಮಾಲಿನ್ಯವನ್ನು ತಡೆಯಲು ಮಂಡಳಿ ಉದ್ದೇಶಿಸಿದೆ. ಈ ಯೋಜನೆಯು 45 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಂಕ್ರಿಟೀಕರಣದೊಂದಿಗೆ ನಡೆಯಲಿದೆ.

ವಿಜಯ ಕರ್ನಾಟಕ 15 Dec 2025 11:14 pm

ಕಲಬುರಗಿ| ಶರಣಬಸವ ವಿಶ್ವವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ನಿಮಿತ್ತ ಪೂಜ್ಯ ಡಾ.ಶರಣಬಸಪ್ಪ ಅಪ್ಪ ಅನುಭವ ಮಂಟಪದಲ್ಲಿ ವಿವಿಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದ ಘಟಿಕೋತ್ಸವದಲ್ಲಿ ಪದವಿ ಪಡೆಯಲು ವಂಚಿತರಾದ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ಪ್ರದಾನ ಮಾಡಲಾಯಿತು. ಈ ಸಮಾರಂಭವು ಘಟಿಕೋತ್ಸವದ ಎಲ್ಲಾ ಸಂಪ್ರದಾಯಗಳನ್ನು ಒಳಗೊಂಡಿದ್ದು, ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿಯವರು ಬೆಳ್ಳಿ ಗದೆಯೊಂದಿಗೆ ವಿಧ್ಯುಕ್ತವಾಗಿ ಮೆರವಣಿಗೆಯನ್ನು ಮುನ್ನಡೆಸಿದರು. ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್ ಹಾಗೂ ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ ಸೇರಿದಂತೆ ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ಎಲ್ಲಾ ವಿಭಾಗಗಳ ಮುಖ್ಯಸ್ಥರು ವಿಧ್ಯುಕ್ತ ಮೆರವಣಿಗೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ 1800ಕ್ಕೂ ಹೆಚ್ಚು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಗಣ್ಯರಿಂದ ತಮ್ಮ ಪ್ರಮಾಣಪತ್ರಗಳನ್ನು ಪಡೆದರು. 

ವಾರ್ತಾ ಭಾರತಿ 15 Dec 2025 11:12 pm

ಮಂಗಳೂರು | ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲು ಈಶ್ವರಾನಂದ ಪುರಿ ಸ್ವಾಮೀಜಿ ಸಲಹೆ

ಮಂಗಳೂರು, ಡಿ.15: ಜ್ಞಾನವಿಲ್ಲದ ಬದುಕು ಯಾತಕೋ ಮನುಜ ಎಂದು ಭಕ್ತ ಕನಕದಾಸರು ಜನರಲ್ಲಿ ಕೇಳುತ್ತಿದ್ದರು. ಹಾಗಾಗಿ ಜ್ಞಾನವೇ ಪ್ರಧಾನವಾದುದು. ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ, ಅವರನ್ನು ವಿದ್ಯಾವಂತರನ್ನಾಗಿಸಿದರೆ, ಮುಂದೆ ಉತ್ತಮ ಉದ್ಯೋಗ ಸಂಪಾದಿಸಿಕೊಳ್ಳುತ್ತಾರೆ ಎಂದು ಕನಕ ಗುರು ಪೀಠ ಹೊಸದುರ್ಗ ಶಾಖಾ ಮಠದ ಈಶ್ವರಾನಂದ ಪುರಿ ಸ್ವಾಮೀಜಿ ಸಲಹೆ ನೀಡಿದರು. ಮಂಗಳೂರಿನ ಉರ್ವಸ್ಟೋರ್ ತುಳು ಭವನದಲ್ಲಿ ರವಿವಾರ ಕರಾವಳಿ ಕುರುಬರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ 538ನೇ ಕನಕ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಹಿಂದಿನ ಕಾಲದಲ್ಲಿ ಧಾರ್ಮಿಕ ವಿಚಾರಗಳನ್ನು ಜನಸಾಮಾನ್ಯರಿಗೆ ತಿಳಿದುಕೊಳ್ಳಲು ಕಷ್ಟವಾಗುತ್ತಿತ್ತು. ಬಸವಣ್ಣ, ಕನಕದಾಸರು, ಪುರಂದರದಾಸರು ಮೊದಲಾದ ದಾಸವರೇಣ್ಯರು ಧಾರ್ಮಿಕ ವಿಚಾರಗಳನ್ನೊಳಗೊಂಡ ಪದ್ಯಗಳನ್ನು ಸರಳವಾದ ಭಾಷೆಯಲ್ಲಿ ಬರೆದು ಹಾಡಿ ಜನರ ಮಧ್ಯದಲ್ಲಿ ಪಸರಿಸುತ್ತಿದ್ದರು. ಹೀಗೆ ಸರಳವಾದ ಭಾಷೆಯಲ್ಲಿ ಜನರಿಂದ ಜನರಿಗೆ ಹರಡಿ ಭಕ್ತಿಯ ವಿಚಾರಗಳು, ಧಾರ್ಮಿಕ ವಿಚಾರಗಳು ಜ್ಞಾನದ ವಾಹಿನಿಗಳಾಗಿ ಹರಡಿದವು ಎಂದು ಹೇಳಿದರು. ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಶ್ರೀಧರ್ ಟಿ.ಡಿ ಕಾರ್ಯಕ್ರಮ ಉದ್ಘಾಟಿಸಿದರು. ಯುವ ಸಾಹಿತಿ ಪ್ರವೀಣ ವೈ ಬೆನಕನವಾರಿ ಕನಕ ಸಂದೇಶ ನೀಡಿದರು. ಕರಾವಳಿ ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗುರುಮೂರ್ತಿ ಶುಭ ಹಾರೈಸಿದರು. ಕರಾವಳಿ ಕುರುಬರ ಸಂಘದ ಅಧ್ಯಕ್ಷ ನಿರಂಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕರಾವಳಿ ಕುರುಬರ ಸಂಘದ ಗೌರವಾಧ್ಯಕ್ಷ ಡಾ.ಕೆ.ಇ ಪ್ರಕಾಶ್, ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಗಾಂಧಿನಗರ, ಉಪಾಧ್ಯಕ್ಷರಾದ ಮಂಜುನಾಥ್ ನೋಟಗಾರ್ ಹಾಗೂ ಕೆ.ಬಿ ನಾಗರಾಜ್, ಸಂಘದ ಜೊತೆ ಕಾರ್ಯದರ್ಶಿ ಯಲ್ಲಪ್ಪಹದಗಲ್, ಸಂಘದ ಕೋಶಾಧಿಕಾರಿ ಮಲ್ಲಿಕಾರ್ಜುನ ಕಲ್ಲಹೊಲದ, ಜೊತೆ ಕೋಶಾಧಿಕಾರಿ ನಾರಾಯಣ ಪಾಟೀಲ್, ಸಂಘಟನಾ ಕಾರ್ಯದರ್ಶಿ ಶರಣಪ್ಪ ಹಳ್ಳಿಕೇರಿ, ಜೊತೆ ಸಂಘಟನಾ ಕಾರ್ಯದರ್ಶಿ ಕರಿಯಪ್ಪ ಗೌಡರ, ಸಂಘದ ನಿರ್ದೇಶಕರಾದ ಬಸವರಾಜ ದಾಸಬಾಳ, ಹನುಮಂತ ಸಂಗೊಂದಿ, ಯಲ್ಲಪ್ಪಸಿದ್ದಾಪುರ, ಪರಶುರಾಮ ಕಡೂರ ಮತ್ತು ಶಿವು ಲಾಯದಗೊಂಡಿ ಉಪಸ್ಥಿತರಿದ್ದರು. ಮೋಹನ್ದಾಸ್ ಮರಕಡ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಗಾಂಧಿನಗರ ವಂದಿಸಿದರು. ಕನಕದಾಸರ ಭಾವಚಿತ್ರದ ಮೆರವಣಿಗೆ : ಕಾರ್ಯಕ್ರಮದ ಆರಂಭದಲ್ಲಿ ಉರ್ವಸ್ಟೋರ್ ನ ಶಾರದಾ ಮಾನಸ ಮಂಟಪದಿಂದ ತುಳು ಭವನದ ತನಕ ಕುಣಿತ ಭಜನೆ, ಡೊಳ್ಳು ಕುಣಿತ, ಕಲಶ, ಕುಂಭ ಸಹಿತ ಕನಕದಾಸರ ಭಾವಚಿತ್ರದ ಮೆರವಣಿಗೆ ನಡೆಯಿತು. ಲೋಕೋಪಯೋಗಿ ಇಲಾಖೆಯ ಎಇಇ ಶ್ರೀಧರ್ ಟಿ.ಡಿ ಮೆರವಣಿಗೆಗೆ ಚಾಲನೆ ನೀಡಿದರು. ಕಾರ್ಯಕ್ರಮ ಆರಂಭಕ್ಕೆ ಮೊದಲು ಶೃಂಗೇರಿಯ ಶಾರದಾ ಅಂಧ ಕಲಾವಿದರಿಂದ ಭಕ್ತಿ ಗೀತೆಗಳ ಗಾಯನ ನಡೆಯಿತು. ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕನಕ ಗುರು ಪೀಠ ಹೊಸದುರ್ಗ ಶಾಖಾ ಮಠದ ಈಶ್ವರಾನಂದ ಪುರಿ ಸ್ವಾಮೀಜಿ ಅವರನ್ನು ಗೌರವಿಸಲಾಯಿತು. ಕರಾವಳಿ ಕುರುಬರ ಸಂಘದ ಚಟುವಟಿಕೆಗಳಿಗೆ ಪ್ರೊತ್ಸಾಹಿಸುತ್ತಿರುವ ಲೋಕೋಪಯೋಗಿ ಇಲಾಖೆಯ ಎಇಇ ಶ್ರೀಧರ್ ಟಿ.ಡಿ, ಕರಾವಳಿ ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗುರುಮೂರ್ತಿ, ದ.ಕ. ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಅಸಂಗಪ್ಪ ಎಸ್.ಪಾಲ್ತಿ, ಸರ್ವಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಗಣೇಶ್ ಶಿವಾನಂದ ಯರಝೇರಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾದ ಶಿವಾನಂದ ಯರಝೇರಿ ಅವರು ಪ್ರಾಯೋಜಿಸಿದ ವಿದ್ಯಾರ್ಥಿವೇತನವನ್ನು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯ ಸಾಧಕ 29 ವಿದ್ಯಾರ್ಥಿಗಳಿಗೆ ನೀಡಲಾಯಿತು. ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶ್ರೀಶಾ ಶೆಟ್ಟಿ ಅಬ್ಬೆಟ್ಟು ಇವರಿಗೆ 50,000 ರೂ. ಪ್ರೋತ್ಸಾಹಕ ನಗದು ನೀಡಲಾಯಿತು.

ವಾರ್ತಾ ಭಾರತಿ 15 Dec 2025 11:04 pm

ಕಲಬುರಗಿ| ಬಹುಭಾಷಾ ನಾಟಕೋತ್ಸವ ಸಮಾರೋಪ ಸಮಾರಂಭ

ಕಲಬುರಗಿ: ರಂಗಾಯಣ ಕಲಬುರಗಿ ವತಿಯಿಂದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಬಹುಭಾಷಾ ನಾಟಕೋತ್ಸವದ ಸಮಾರೋಪ ಸಮಾರಂಭ ನಡೆಯಿತು.  ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರೀಯ ವಿಶ್ವವಿದ್ಯಾಲಯದ ಭಾಷಾನಿಕಾಯದ ಡೀನ್‌ ಆಗಿರುವ ನಾಟಕ ರಚನಾಕಾರ ಡಾ.ವಿಕ್ರಮ ವಿಸಾಜಿ, ರಂಗಭೂಮಿಯು ಬಹುಸಂಸ್ಕೃತಿಗಳ ತವರು. ಇಲ್ಲಿ ಸಮಾಜದ ಹಲವು ತಿಳಿವಳಿಕೆಗಳು, ಜೀವನದ ಅನೇಕ ತತ್ವಗಳು, ಭಾಷೆಯ ವಿವಿಧ ಕ್ರಮಗಳು ಬೆರೆತು ಹೋಗಿರುತ್ತವೆ. ಇದರಿಂದ ಜೀವನವನ್ನು ಅರಿಯುವ ಹೊಸ ದಾರಿಗಳು ತೆರೆದುಕೊಳ್ಳುತ್ತವೆ ಎಂದು ಹೇಳಿದರು.   ಈ ಭಾಗದಲ್ಲಿ ಜನಪದ ರಂಗಭೂಮಿ, ವೃತ್ತಿ ರಂಗಭೂಮಿ, ಹವ್ಯಾಸಿ ರಂಗಭೂಮಿ, ಉರ್ದು ರಂಗಭೂಮಿ ಮತ್ತು ಮರಾಠಿ ರಂಗಭೂಮಿ ಒಟ್ಟಿಗೆ ಬೆಳೆದಿವೆ. ಪರಸ್ಪರ ಕಲಿತಿವೆ. ರಂಗಭೂಮಿಯ ಈ ಸೌಹಾರ್ದ ಸಂಸ್ಕೃತಿಯನ್ನು ಪೋಷಿಸಬೇಕಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಆಗಮಿಸಿ ಡಾ.ಮೀನಾಕ್ಷಿ ಬಾಳಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶವು ಭಾಷಾ ಸಾಮರಸ್ಯಕ್ಕೆ ಹೆಸರುವಾಸಿಯಾಗಿದೆ. ಪ್ರಾಚೀನ ಕಾಲದಿಂದಲೂ ಕನ್ನಡವು ತೆಲಗು, ತುಳು, ತಮಿಳು ಇತ್ಯಾದಿ ಸಹೋದರಿ ಭಾಷೆಗಳಲ್ಲದೆ ಉರ್ದುವಿನಂಥ ಭಾಷೆಯೊಂದಿಗೂ ಸಾಮರಸ್ಯ ಸಾಧಿಸಿದೆ ಎಂದರು. ಪತ್ರಾಗಾರ ಕಚೇರಿಯ ಉಪನಿರ್ದೇಶಕರಾದ ಡಾ.ವೀರಶೆಟ್ಟಿ ಗಾರಂಪಳ್ಳಿ ಮಾತನಾಡಿ, ಕನ್ನಡ ರಂಗಭೂಮಿಗೆ ಒಂದು ಸಾವಿರ ವರ್ಷಗಳ ಇತಿಹಾಸವಿದೆ. ಅದು ಈ ಶತಮಾನಗಳ ಉದ್ದಕ್ಕೂ ಧರ್ಮಾತೀತವಾಗಿಯೇ ಉಳಿದು ಬಂದಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಂಗಾಯಣದ ನಿರ್ದೇಶಕ ಸುಜಾತಾ ಜಂಗಮಶೆಟ್ಟಿ ಮಾತನಾಡಿ, ಭಾಷೆಯ ಮಿತಿಗಳನ್ನು ಮೀರಿ ಕನ್ನಡದ ನೆಲ ಎಲ್ಲವನ್ನು ಹೀರಿಕೊಂಡು ಬೆಳೆದಿದೆ. ಇನ್ನೊಂದನ್ನು ಸ್ವೀಕರಿಸುತ್ತಾ ನಮ್ಮದನ್ನು ಉಳಿಸಿಕೊಳ್ಳುತ್ತಾ ಬಹುತ್ವದ ದಾರಿಯಲ್ಲಿ ಸಾಗುವುದೇ ನಮಗೆ ಇರುವ ಅತ್ಯುತ್ತಮ ದಾರಿ. ಇಂತಹ ಬಹುತ್ವದ ಸಂಸ್ಕೃತಿಯನ್ನು ಬೆಳೆಸಲು ಹಲವು ಸೋದರ ಭಾಷೆಗಳ ಜೊತೆಗೆ ಸೇರಿ ಹಮ್ಮಿಕೊಂಡಿರುವ ಉತ್ಸವವೇ ಬಹುಭಾಷಾ ನಾಟಕೋತ್ಸವವಾಗಿದೆ ಎಂದು ಹೇಳಿದರು.

ವಾರ್ತಾ ಭಾರತಿ 15 Dec 2025 11:04 pm

Bihar | ಕಾರ್ಯಕ್ರಮದಲ್ಲಿ ವೈದ್ಯೆಯ ಹಿಜಾಬ್ ಎಳೆದ CM ನಿತೀಶ್ ಕುಮಾರ್; ವಿಡಿಯೋ ವೈರಲ್

ವಿರೋಧ ಪಕ್ಷಗಳಿಂದ ತೀವ್ರ ಖಂಡನೆ; ನೀಚ ಕೃತ್ಯ ಎಂದ ಕಾಂಗ್ರೆಸ್

ವಾರ್ತಾ ಭಾರತಿ 15 Dec 2025 11:01 pm

Dileep ಚಿತ್ರದ ಪೋಸ್ಟರ್ ಹಂಚಿಕೊಂಡ ಮೋಹನ್ ಲಾಲ್‌ ಗೆ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ತರಾಟೆ

ತಿರುವನಂತಪುರ,ಡಿ.15: ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ಹೊರಬಿದ್ದ ಬಳಿಕ ‘ಭಾ ಭಾ ಬಾ’ ಚಿತ್ರದ ಪೋಸ್ಟರ್ ಹಂಚಿಕೊಂಡಿದ್ದಕ್ಕಾಗಿ ಮಲಯಾಳಂ ನಟ ಮೋಹನಲಾಲ್ ವಿರುದ್ಧ ಕಿಡಿ ಕಾರಿರುವ ಖ್ಯಾತ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ಅವರು, ಅದನ್ನು ಭಾವನೆಗಳನ್ನು ಪರಿಗಣಿಸದ ಅವಿವೇಕಿ ಕೃತ್ಯವಾಗಿದೆ ಎಂದು ಬಣ್ಣಿಸಿದ್ದಾರೆ. ಸೋಮವಾರ ಕೇರಳ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭಾಗ್ಯಲಕ್ಷ್ಮಿ,ಚಿತ್ರದ ಪೋಸ್ಟರ್‌ ನ್ನು ಹಂಚಿಕೊಳ್ಳುವ ಮುನ್ನ ಮೋಹನಲಾಲ್ ಒಂದು ಕ್ಷಣವಾದರೂ ಯೋಚಿಸಿದ್ದರೇ ಎಂದು ಪ್ರಶ್ನಿಸಿದರು. ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿದ್ದ ದಿಲೀಪ್ ನಾಯಕ ನಟನಾಗಿದ್ದ ಚಿತ್ರದಲ್ಲಿ ಮೋಹನಲಾಲ್ ಅತಿಥಿ ನಟನಾಗಿ ಕಾಣಿಸಿಕೊಂಡಿದ್ದರು. ‘ತೀರ್ಪು ಬಂದ ದಿನವೇ ಆ ಪೋಸ್ಟರ್ ಬಿಡುಗಡೆ ಮಾಡಿದವರು ನಾವೆಲ್ಲರೂ ಪ್ರೀತಿಸುವ ಅದೇ ಮೋಹನ್ ಲಾಲ್ ಅಲ್ಲವೇ? ಆ ಕ್ಷಣದಲ್ಲಿ ತಾನೇನು ಮಾಡುತ್ತಿದ್ದೇನೆ ಎನ್ನುವುದನ್ನು ಅವರು ಯೋಚಿಸಬೇಕಿತ್ತಲ್ಲವೇ?’ ಎಂದು ಭಾಗ್ಯಲಕ್ಷ್ಮಿ ಪ್ರಶ್ನಿಸಿದರು. ದೂರು ದಾಖಲಿಸುವ ಸಂತ್ರಸ್ತೆಯ ನಿರ್ಧಾರದಿಂದ ಚಿತ್ರರಂಗದಲ್ಲಿಯ ಇತರ ಹಲವಾರು ಮಹಿಳೆಯರು ಬದುಕುಳಿದಿದ್ದಾರೆ. ಸಂತ್ರಸ್ತೆ ದೂರು ಸಲ್ಲಿಸಲು ಮುಂದೆ ಬಂದಿರದಿದ್ದರೆ ಮುಂದಿನ ಬಲಿಪಶು ಮಂಜು ವಾರಿಯರ್ ಆಗುತ್ತಿದ್ದರು ಎಂದ ಅವರು, ಸಂತ್ರಸ್ತೆಗೆ ಉದ್ಯಮದ ಬೆಂಬಲದ ಕೊರತೆಗೆ ದಿಲೀಪ್‌ ರ ಆರ್ಥಿಕ ಪ್ರಭಾವ ಪ್ರಮುಖ ಕಾರಣವಾಗಿತ್ತು ಎಂದರು.

ವಾರ್ತಾ ಭಾರತಿ 15 Dec 2025 10:48 pm

ಬೀದರ್| ಬಸವಕಲ್ಯಾಣದಲ್ಲಿ ಕುರ್‌ಆನ್‌ ಪ್ರವಚನ ಕಾರ್ಯಕ್ರಮ

ಬೀದರ್ : ತಂದೆ ತಾಯಿ, ಸಹೋದರ, ಸಹೋದರಿ, ನೆರೆಹೊರೆಯವರು, ಸಂಬಂಧಿಕರೂಂದಿಗೆ ನಮ್ಮ ಸಂಬಂಧ ಚೆನ್ನಾಗಿದ್ದರೆ ಮೆಡಿಷನ್ ಕಡಿಮೆ ಮಾಡಬಹುದು. ಜಗತ್ತಿನಲ್ಲಿ ಅತ್ಯಂತ ಬೆಲೆಬಾಳುವ ವಸ್ತು ಅಂದರೆ ಅದು ಪ್ರೀತಿ. ಎಲ್ಲರನ್ನೂ ಪ್ರೀತಿಯಿಂದ ಕಾಣಬೇಕು ಎಂದು ಪ್ರಖ್ಯಾತ ಪ್ರವಚನಕಾರ ಮುಹಮ್ಮದ್ ಕುಂಞ ಹೇಳಿದರು. ಬಸವಕಲ್ಯಾಣದ ಅನುಭವ ಸಭಾ ಭವನದಲ್ಲಿ ನಡೆದ ಮೂರನೆ ದಿನದ ಕುರ್‌ಆನ್‌ ಪ್ರವಚನ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಮುಹಮ್ಮದ್ ಕುಂಞ, ಪರಸ್ಪರ ಅಪಹಾಸ್ಶ ಮಾಡಬೇಡಿ. ಪರಸ್ಪರ ನಿಂದಿಸಬೇಡಿ, ಅಡ್ಡ ಹೆಸರಿನಿಂದ ಕರೆಯಬೇಡಿ, ದ್ವೇಷಾನ್ವೇಷಣೆ ಮಾಡಬೇಡಿ ಎಂದು ಉಪದೇಶ ನೀಡಿದರು. ಪವಿತ್ರ ಕುರ್‌ಆನ್ ಮಾನವನ ಏಳಿಗೆಗಾಗಿ ಅಂಧಕಾರದಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಮೂಲಕ ಬದುಕಿನ ವಾಸ್ತವ ಹಾಗೂ ಉದ್ದೇಶ ತಿಳಿಸುತ್ತದೆ. ಹಾಗೆಯೇ ವಾಯು, ಉಸಿರು, ನೀರು, ಭೂಮಿ ಜೀವನ ಎಲ್ಲವೂ ದೇವರದ್ದಾಗಿದೆ. ಜಾತಿ, ಧರ್ಮ, ಮತ, ಪಂಗಡ, ದೇಶ ನೋಡದೆ ಎಲ್ಲರನ್ನು ಪ್ರಿತಿಸಲು ಪವಿತ್ರ ಕುರ್ ಆನ್ ಹೇಳಿಕೊಡುತ್ತದೆ ಎಂದು ಹೇಳಿದರು.   ಯಾರಲ್ಲಿ ಧರ್ಮ ಇರುತ್ತದೆಯೋ ಅವರು ಎಲ್ಲರನ್ನೂ ಪ್ರೀತಿಸುತ್ತಾರೆ. ಯಾರಲ್ಲಿ ಧರ್ಮದ ಚಿನ್ನೆ, ಬಣ್ಣ, ಪಕ್ಷಪಾತ, ಶ್ರೇಷ್ಠ ಎನ್ನುವ ಭಾವನೆ ಇರುತ್ತದೆಯೋ ಅವರು ಸಮಾಜ ಒಡೆಯುವ ಕೆಲಸ ಮಾಡುತ್ತಾರೆ. ಎಲ್ಲರನ್ನೂ ಕಂಡು ಮುಗುಳ್ನಗಬೇಕು. ಜನರೊಂದಿಗೆ ಒಳ್ಳೆಯ ಭಾವನೆ ಇಟ್ಟುಕೊಳ್ಳುವುದು ಶ್ರೇಷ್ಠವಾದ ಕೆಲಸವಾಗಿದೆ. ಸಂಬಂಧ ಹಾಳಾಗುವ ಯಾವ ಕೆಲಸ ಮಾಡಬೇಡಿ. ಜನರನ್ನು ನಿಂದಿಸಬೇಡಿ. ಬೆರೆಯವರ ಬಗ್ಗೆ ಚರ್ಚೆ ಮಾಡಿದರೆ ತಮ್ಮ ಮೃತ ಸಹೋದರನ ಮಾಂಸ ತಿಂದಹಾಗೆ ಎಂದು ಕುರ್ ಆನ್ ಹೇಳುತ್ತದೆ. ಅನಗತ್ಯವಾಗಿ ಬೇರೆಯವರ ಬಗ್ಗೆ ಮಾತನಾಡಬೇಡಿ. ಕುಟುಂಬ ಸಂಬಂಧ ಹಾಳು ಮಾಡುವರನ್ನು ದೇವರು ಮೆಚ್ಚುವುದಿಲ್ಲ. ನೆರೆಹೊರೆಯರ ಜೊತೆಗೆ ಉತ್ತಮವಾಗಿ ವರ್ತಿಸಿ ಸಂಬಂಧವನ್ನು ಬಲಪಡಿಸಿ ಎಂದು ಉಪದೇಶ ನೀಡಿದರು. ಈ ಸಂದರ್ಭದಲ್ಲಿ ನಿರ್ಗುಡಿಯ ಹವಾ ಮಲ್ಲಿನಾಥ್ ಮಹಾರಾಜ, ಬಸವಪ್ರಭು ಸ್ವಾಮೀಜಿ, ಮಾಜಿ ಸಚಿವ ರಾಜಶೇಖರ್ ಪಾಟೀಲ್, ದತ್ತಾತ್ರೇಯ ಗಾದಾ, ಮಲ್ಲಿಕಾರ್ಜುನ್ ಗುಂಗೆ, ಇಸ್ಥೇಖಾರ್ ಅಹ್ಮದ್ ಖಾದ್ರಿ, ಬಸವೇಶ್ವರ ಪಂಚ ಕಮಿಟಿ ಸದಸ್ಯರು, ಜಮಾತೆ ಇಸ್ಲಾಂಎ ಹಿಂದ್ ನ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 15 Dec 2025 10:45 pm

ತ್ರಿರಾಷ್ಟ್ರ ಪ್ರವಾಸ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ

ಹೊಸದಿಲ್ಲಿ,ಡಿ.15: ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್‌ಗೆ ತ್ರಿರಾಷ್ಟ್ರ ಪ್ರಯಾಣವನ್ನು ಕೈಗೊಂಡಿದ್ದಾರೆ. ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದ ಪ್ರಮುಖ ಪಾಲುದಾರರೊಂದಿಗೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸುವುದು ಈ ಭೇಟಿಯ ಉದ್ದೇಶವಾಗಿದೆ. ತನ್ನ ಭೇಟಿಯು ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದಾದ್ಯಂತ ರಾಜಕೀಯ, ಆರ್ಥಿಕ ಮತ್ತು ಜನರ ನಡುವಿನ ಸಂಬಂಧಗಳನ್ನು ಬಲಗೊಳಿಸುವುದರ ಮೇಲೆ ಕೇಂದ್ರೀಕರಿಸಲಿದೆ ಎಂದು ನಿರ್ಗಮನಕ್ಕೆ ಮುನ್ನ ನೀಡಿದ ಹೇಳಿಕೆಯಲ್ಲಿ ಮೋದಿ ತಿಳಿಸಿದರು. ಮೊದಲು ಜೋರ್ಡಾನ್‌ ಗೆ ಭೇಟಿ ನೀಡಲಿರುವ ಮೋದಿ ಬಳಿಕ ಇಥಿಯೋಪಿಯಾಕ್ಕೆ ತೆರಳಲಿದ್ದಾರೆ. ಇದು ಈ ಆಫ್ರಿಕನ್ ದೇಶಕ್ಕೆ ಮೋದಿಯವರ ಮೊದಲ ಭೇಟಿಯಾಗಲಿದೆ. ಈ ವೇಳೆ ಅವರು ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರವಾಸದ ಅಂತಿಮ ಹಂತದಲ್ಲಿ ಮೋದಿ ಒಮಾನ್‌ ಗೆ ಭೇಟಿ ನೀಡಲಿದ್ದಾರೆ.

ವಾರ್ತಾ ಭಾರತಿ 15 Dec 2025 10:45 pm

ಕಲಬುರಗಿ| ಕಸದ ರಾಶಿಗೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಯಲಬುರ್ಗಾ: ಪಟ್ಟಣದ ಪೋಸ್ಟ್ ಆಫೀಸ್ ಹಿಂಭಾಗದಲ್ಲಿ ಕೆಇಬಿ–ಕೆಪಿಟಿಸಿಎಲ್ 110 ಕೆವಿ ಸ್ಟೇಷನ್ ಎಡಗಡೆ ಕಸದ ರಾಶಿಗೆ ಬೆಂಕಿ ತಗುಲಿ ಭಾರೀ ಅನಾಹುತವೊಂದು ತಪ್ಪಿದೆ.  ಕಸದ ರಾಶಿಗೆ ಸಣ್ಣ ಕಿಡಿ ಬಿದ್ದು ಕ್ಷಣಾರ್ಧದಲ್ಲಿ ದೊಡ್ಡ ಪ್ರಮಾಣದ ಬೆಂಕಿ ಆವರಿಸಿಕೊಂಡಿತ್ತು. ಬೆಂಕಿಯ ತೀವ್ರತೆಯಿಂದ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಿಸಿದ್ದಾರೆ.  ಅವಘಡದ ವೇಳೆ ಕೆಇಬಿ ಸೆಕ್ಷನ್ ಆಫೀಸರ್ ರವಿ, ಲೈನ್‌ಮನ್ ಶಬ್ಬೀರ್ ಒಂಟಿ ಹಾಗೂ ಹನುಮಂತಪ್ಪ ಸೇರಿದಂತೆ ಸ್ಥಳೀಯರು ಸ್ಥಳದಲ್ಲಿದ್ದರು. ಘಟನೆ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ವಾರ್ತಾ ಭಾರತಿ 15 Dec 2025 10:35 pm

ಮೆಸ್ಸಿಗೆ ಟಿ-20 ವಿಶ್ವಕಪ್ ಟಿಕೆಟ್, ಜೆರ್ಸಿ, ಬ್ಯಾಟ್ ಉಡುಗೊರೆ ನೀಡಿದ ಜಯ್ ಶಾ

ಹೊಸದಿಲ್ಲಿ, ಡಿ.15: ಐಸಿಸಿ ಅಧ್ಯಕ್ಷ ಜಯ್ ಶಾ ಅರ್ಜೆಂಟೀನದ ಫುಟ್ಬಾಲ್ ಐಕಾನ್ ಲಿಯೊನೆಲ್ ಮೆಸ್ಸಿಗೆ ಭಾರತ ಹಾಗೂ ಅಮೆರಿಕ ನಡುವೆ ನಡೆಯಲಿರುವ 2026ರ ಆವೃತ್ತಿಯ ಪುರುಷರ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯದ ಟಿಕೆಟ್, ಟೀಮ್ ಇಂಡಿಯಾದ ಜೆರ್ಸಿ ಹಾಗೂ ಬ್ಯಾಟ್‌ಗಳನ್ನು ಉಡುಗೊರೆಯಾಗಿ ನೀಡಿದರು. ಈ ಕಾರ್ಯಕ್ರಮದಲ್ಲಿ ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಅವರು ಉಪಸ್ಥಿತರಿದ್ದರು. ಮೆಸ್ಸಿ ಅವರೊಂದಿಗೆ ಅರ್ಜೆಂಟೀನದ ಸ್ಟಾರ್‌ಗಳಾದ ರೊಡ್ರಿಗೊ ಡಿ ಪೌಲ್ ಹಾಗೂ ಲೂಯಿಸ್ ಸುಯರೆಝ್‌ಗೆ ಟೀಮ್ ಇಂಡಿಯಾದ ಜೆರ್ಸಿ ಹಾಗೂ ಫ್ರೇಮ್ ಹಾಕಿರುವ ಕ್ರಿಕೆಟ್ ಬ್ಯಾಟನ್ನು ಜಯ್ ಶಾ ನೀಡಿದರು. ಮಹಿಳೆಯರ ಪ್ರೀಮಿಯರ್ ಲೀಗ್‌ನಲ್ಲಿ ವೆಸ್ಟ್ ಹ್ಯಾಮ್ ಯುನೈಟೆಡ್ ಪರ ಆಡಿರುವ ಭಾರತದ ಮಾಜಿ ಗೋಲ್‌ಕೀಪರ್ ಅದಿತಿ ಚೌಹಾಣ್ ಅವರು ಎಲ್ಲ ಮೂವರು ಫುಟ್ಬಾಲ್ ತಾರೆಯರಿಗೆ ಸಹಿ ಇರುವ ಟೀ-ಶರ್ಟ್‌ಗಳನ್ನು ಉಡುಗೊರೆಯಾಗಿ ನೀಡಿದರು.

ವಾರ್ತಾ ಭಾರತಿ 15 Dec 2025 10:35 pm

ಸುರತ್ಕಲ್ | ಚೊಕ್ಕಬೆಟ್ಟು ಮಾಹಿತಿ, ನಾಗರಿಕ ಕೇಂದ್ರದ 15ನೇ ವಾರ್ಷಿಕೋತ್ಸವ

ಸುರತ್ಕಲ್: ಚೊಕ್ಕಬೆಟ್ಟು ಮಾಹಿತಿ ಮತ್ತು ನಾಗರಿಕ ಕೇಂದ್ರದ 15ನೇ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರವಿವಾರ ಸಂಜೆ ಕಚೇರಿ ಮುಂಭಾಗದಲ್ಲಿ ಜರುಗಿತು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚೊಕ್ಕಬೆಟ್ಟು ಜುಮಾ ಮಸೀದಿಯ ಖತೀಬ್‌ ಅಬ್ದುಲ್ ಅಝೀಝ್ ದಾರಿಮಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ, ಪಬ್ಲಿಕ್ ಅಡ್ಡೆಸರ್ ಎಂ.ಜಿ.ತಲ್ಲತ್, ವಿಶ್ವಕಪ್ ವಿಜೇತೆ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ, ಸಿ.ಎ. ಫಾಯಿಝ್, ಬೆನಝೀರ್, ಕುಸ್ತಿ ಕ್ರೀಡಾಪಟು ಫಾಹಿಮ್, ಹಿಷಾಮ್ ಅವರನ್ನು ಸನ್ಮಾನಿಸಿ ಗೌರವಿಲಾಯಿತು. ಮಾಹಿತಿ ಹಾಗೂ ನಾಗರೀಕ ಸೇವಾ ಕೇಂದ್ರದ ಅಧ್ಯಕ್ಷ ನೌಶಾದ್ ಚೊಕ್ಕಬೆಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಚೊಕ್ಕಬೆಟ್ಟು ಚರ್ಚ್ ಧರ್ಮಗುರು ಎಸ್.ಪಾಲನ್‌, ಪಬ್ಲಿಕ್ ಅಡ್ವೈಸರ್ ಎಂ.ಜಿ.‌ ತಲ್ಹತ್,‌ ಎಸ್ಡಿಪಿಐ ರಾಜ್ಯಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಮೊದಲಾದವರು ಮಾತನಾಡಿದರು. ನಿಕಟಪೂರ್ವ ಮನಪಾ ಸದಸ್ಯೆ ಶಂಶಾದ್‌ ಅಬೂಬಕ‌ರ್, ತಣ್ಣೀರುಬಾವಿ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್, ಮುಹಮ್ಮದ್ ಅಲಿ ರೂಮಿ, ಮುಸ್ಲಿಂ ಜಮಾಅತ್ ಪಣಂಬೂರು ಇದರ ಅಧ್ಯಕ್ಷ ಎಸ್.ಎ.ರಹ್ಮತುಲ್ಲಾ, ಮುಹಮ್ಮದ್ ಕಾನ, ಜುಮಾ ಮಸೀದಿ ಸುರತ್ಕಲ್ ಇದರ ಅಧ್ಯಕ್ಷ ಎಸ್.ಕೆ. ಮುಸ್ತಫಾ, ಝಾಕಿರ್, ಇಬ್ರಾಹಿಂ, ತೌಸೀಫ್ ಕಕ್ಕಿಂಜೆ, ಜಾಫರ್ ಫೈಝಿ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 15 Dec 2025 10:29 pm

ಮೂರು ದಿನಗಳ ಭಾರತ ಪ್ರವಾಸ ಅಂತ್ಯಗೊಳಿಸಿದ ಲಿಯೊನೆಲ್ Messi

ಪ್ರತಿಕೂಲ ಹವಾಮಾನದಿಂದಾಗಿ ತಡವಾಗಿ ದಿಲ್ಲಿ ತಲುಪಿದ ಅರ್ಜೆಂಟೀನದ ಆಟಗಾರ

ವಾರ್ತಾ ಭಾರತಿ 15 Dec 2025 10:29 pm

ಆಫ್ರಿಕನ್ ಯೂತ್ ಚೆಸ್ ಚಾಂಪಿಯನ್‌ಶಿಪ್ : ಮಂಗಳೂರು ಮೂಲದ ಸನಾ ಕಯ್ಯಾರ್ ಚಾಂಪಿಯನ್

ಮಂಗಳೂರು, ಡಿ.15: ಉಗಾಂಡಾವನ್ನು ಪ್ರತಿನಿಧಿಸುತ್ತಿರುವ ಮಂಗಳೂರು ಮೂಲದ ಯುವ ಚೆಸ್ ಪ್ರತಿಭೆ ಸನಾ ಓಂಪ್ರಕಾಶ್ ಕಯ್ಯಾರ್, ಡಿ. 7 ರಿಂದ 13, 2025 ರವರೆಗೆ ಜಿಂಬಾಬೈಯ ಹರಾರೆಯಲ್ಲಿ ನಡೆದ ಆಫ್ರಿಕನ್ ಯೂತ್ ಚೆಸ್ ಚಾಂಪಿಯನ್‌ಶಿಫ್‌ನ ಅಂಡರ್-18 ಬಾಲಕಿಯರ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಈ ಸಾಧನೆಯೊಂದಿಗೆ ಸನಾ ಅವರಿಗೆ ಪ್ರತಿಷ್ಠಿತ ವಿಮೆನ್ ಕ್ಯಾಂಡಿಡೇಟ್ ಮಾಸ್ಟರ್’ (ಡಬ್ಲ್ಯುಸಿಎಂ ) ಪದವಿ ಲಭಿಸಿದ್ದು, ಪೂರ್ವ ಆಫ್ರಿಕಾ ಪ್ರದೇಶದಿಂದ ಈ ಪದವಿ ಗಳಿಸಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ. ಈ ಮಹತ್ವದ ಸಾಧನೆ ಸನಾ ಅವರ ಈಗಾಗಲೇ ಗಮನಾರ್ಹ ಚೆಸ್ ಪಯಣಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ. 2022ರಲ್ಲಿ, ಜಾಂಬಿಯಾದಲ್ಲಿ ನಡೆದ ಆಫ್ರಿಕನ್ ಯೂತ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಅಂಡರ್-14 ಬಾಲಕಿಯರ ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿದ್ದರು. ಆ ಸಾಧನೆಯ ಫಲವಾಗಿ ಅವರಿಗೆ ಡಬ್ಲ್ಯುಸಿಎಂ ಪದವಿ ದೊರಕಿದ್ದು, ರೊಮೇನಿಯಾದಲ್ಲಿ ನಡೆದ ವಿಶ್ವ ಯೂತ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಉಗಾಂಡಾವನ್ನು ಪ್ರತಿನಿಧಿಸುವ ಅರ್ಹತೆ ಲಭಿಸಿತ್ತು. ಸನಾ ಅವರು ಫೈಡೆ ರೇಟಿಂಗ್ 1,900 ದಾಟಿದ ಪೂರ್ವ ಆಫ್ರಿಕಾದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಂಡಿದ್ದರು. ಅದೇ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಿದ ಅವರ ಸಹೋದರ ಶೌಭಿತ್ ಓಂಪ್ರಕಾಶ್ ಕಯ್ಯಾರ್ ಅಂಡರ್-16 ಓಪನ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಶ್ಲಾಘನೀಯ ಪ್ರದರ್ಶನ ನೀಡಿದ್ದರು. ಸನಾ ಮತ್ತು ಶೌಭಿತ್ ಇಬ್ಬರೂ ಅಂತರರಾಷ್ಟ್ರೀಯ ಟೂರ್ನಮೆಂಟ್ ಅನುಭವ ಹಾಗೂ ಸಂರಚಿತ ತರಬೇತಿಯ ಸಂಯೋಜನೆಯ ಮೂಲಕ ತಮ್ಮ ಸಿದ್ಧತೆಯನ್ನು ನಡೆಸಿದ್ದಾರೆ. ಭಾರತಕ್ಕೆ ಭೇಟಿ ನೀಡಿದ ಸಂದರ್ಭಗಳಲ್ಲಿ, ಅವರು ಮಂಗಳೂರಿನ ಡೆರಿಕ್ಸ್ ಚೆಸ್ ಸ್ಕೂಲ್ (ಡಿಸಿಎಸ್)ನಲ್ಲಿ ಡೆರಿಕ್ ಪಿಂಟೊ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದು, ಬಳಿಕ ಆನ್‌ಲೈನ್ ತರಬೇತಿಯನ್ನೂ ಪಡೆದಿದ್ದಾರೆ. ಈ ಸಹೋದರ-ಸಹೋದರಿಯ ಸಾಧನೆಗಳ ಹಿಂದೆ ಅವರ ಪೋಷಕರಾದ ಓಂಪ್ರಕಾಶ್ ಕಯ್ಯಾರ್ ಮತ್ತು ಸರಿತಾ ಓಂಪ್ರಕಾಶ್ ಕಯ್ಯಾರ್ ಅವರ ನಿರಂತರ ಬೆಂಬಲ, ಪ್ರೋತ್ಸಾಹ ಮತ್ತು ಸಮರ್ಪಣೆ ಪ್ರಮುಖ ಪಾತ್ರ ವಹಿಸಿದೆ ಎಂದು ಡೆರಿಕ್ ಚೆಸ್ ಸ್ಕೂಲ್‌ನ ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 15 Dec 2025 10:25 pm

ಮಂಗಳವಾರ ಐಪಿಎಲ್‌ ಮಿನಿ ಹರಾಜು: ಗ್ರೀನ್‌, ವೆಂಕಟೇಶ್‌ ದುಬಾರಿ ಮೊತ್ತ ಪಡೆಯುವ ನಿರೀಕ್ಷೆ; ಯಾರ ಬಳಿ ಎಷ್ಟಿದೆ ಹಣ?

ಐಪಿಎಲ್ 19ನೇ ಆವೃತ್ತಿಯ ಆಟಗಾರರ ಮಿನಿ ಹರಾಜು ಅಬುಧಾಬಿಯಲ್ಲಿ ನಡೆಯಲಿದೆ. ಕೋಲ್ಕೊತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಯಾವ ಆಟಗಾರರ ಮೇಲೆ ಹೆಚ್ಚು ಗಮನ ಹರಿಸಲಿವೆ ಎಂಬುದು ಕುತೂಹಲ ಮೂಡಿಸಿದೆ. ಕ್ಯಾಮೆರಾನ್ ಗ್ರೀನ್, ವೆಂಕಟೇಶ್ ಅಯ್ಯರ್, ಮತ್ತು ಲಿಯಾಮ್ ಲಿವಿಂಗ್‌ಸ್ಟನ್ ಹೆಚ್ಚಿನ ಮೊತ್ತ ಪಡೆಯುವ ನಿರೀಕ್ಷೆಯಿದೆ. ಹತ್ತು ತಂಡಗಳು 77 ಸ್ಥಾನಗಳನ್ನು ತುಂಬಲು 237.55 ಕೋಟಿ ರೂ. ಖರ್ಚು ಮಾಡಲಿವೆ.

ವಿಜಯ ಕರ್ನಾಟಕ 15 Dec 2025 10:24 pm

ವಿಟ್ಲ | ಪೊಲೀಸ್ ಇಲಾಖೆ, ʼಡಿ' ಗ್ರೂಪ್ ವತಿಯಿಂದ ಮಾದಕ ವ್ಯಸನ ಸಮಾಜಕ್ಕಾಗಿ ಜನ ಜಾಗೃತಿ ಜಾಥಾ

ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಉಪ ವಿಭಾಗ ವಿಟ್ಲ ಪೊಲೀಸ್ ಠಾಣೆ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಟ್ಲ ʼಡಿʼ ಗ್ರೂಪ್ ವತಿಯಿಂದ ವಿಟ್ಲದಲ್ಲಿ ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಜನ ಜಾಗೃತಿ ಜಾಥಾ ಹಾಗೂ ಸಮಾರಂಭ ನಡೆಯಿತು. ವಿವಿಧ ಸಂಘಟನೆ ಹಾಗೂ ಶಿಕ್ಷಣ ಸಂಸ್ಥೆಗಳ ಸಹಸ್ರಾರು ಮಂದಿ ಕಾಲ್ನಡಿಗೆ ಜಾಥದಲ್ಲಿ ಭಾಗಹಿಸಿದ್ದರು. ವಿಟ್ಲ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಬ್ ‌ಇನ್‌ಸ್ಪೆಕ್ಟರ್ ರಾಮಕೃಷ್ಣ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿದರು. ಶೈಖ್ ಮಹಮ್ಮದ್ ಇರ್ಫಾನಿ ಫೈಝಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ವಿಟ್ಲ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ವಿಶ್ವೇಶ್ವರ ಭಟ್, ವಿಠಲ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಕಿರಣ್ ಬ್ರಹ್ಮಾವರ, ವಿಟ್ಲ ಹೊರೈಝನ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಅಝೀಝ್ ಸನ, ವಿಟ್ಲ ವರ್ತಕರ ಸಂಘದ ಅಧ್ಯಕ್ಷ ಬಾಬು ಕೆ.ವಿ. ಮುಖ್ಯ ಅತಿಥಿಗಳಾಗಿದ್ದರು. ಡಿ ಗ್ರೂಪ್ ಅಧ್ಯಕ್ಷ ಶಾಕಿರ್ ಅಳಕೆಮಜಲು ಪ್ರಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಅಬೂಬಕರ್ ಅನಿಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 15 Dec 2025 10:17 pm

ಕೊಪ್ಪಳ| ಹಸುವಿನ ಕಾಲು ಕತ್ತರಿಸಿದ ಆರೋಪಿ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ: ಹೊಲಕ್ಕೆ ಮೇಯಲು ಬಂದ ಹಸುವಿನ ಕಾಲು ಕತ್ತರಿಸಿದ ಆರೋಪಿ ವಿರುದ್ಧ  ಕೊಪ್ಪಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ನಿಂಗಲಬಂಡಿ ಗ್ರಾಮದ ರಮೇಶಪ್ಪ ಹಡಪದ ವಿರುದ್ಧ ಪ್ರಕರಣ ದಾಖಲಾಗಿದೆ.   ಮಾಟರಂಗಿ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ದೇವಸ್ಥಾನಕ್ಕೆ ಸೇರಿದ ಹಸು ತನ್ನ ಹೊಲದಲ್ಲಿ ಬಂದು ಬೆಳೆ ತಿಂದು ಹಾಳು ಮಾಡುತ್ತಿದೆ ಎಂದು ಕೋಪಗೊಂಡು ರಮೇಶಪ್ಪ ಕೊಡಲಿಯಿಂದ ಹಸುವಿನ ಬಲಗಾಲನ್ನು ಕತ್ತರಿಸಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಹಸುವಿಗೆ ಹಿರೇಹರಳ್ಳಿ ಗ್ರಾಮದ ಪಶು ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಕೆಲ ದಿನಗಳ ನಂತರ ಹಸು ಮೃತಪಟ್ಟಿದೆ.  ಈ ಕುರಿತು ಶರಣಪ್ಪ ಮ್ಯಾಗೇರಿ ಎಂಬವರು ದೂರು ನೀಡಿದ್ದರು. ಈ ಕುರಿತು ಯಲಬುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕಳು ಮೃತಪಟ್ಟ ಕಾರಣ ಕೊಪ್ಪಳ ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯ ಉಪನಿರ್ದೇಶಕರು ಕೊಪ್ಪಳ ಎಸ್‌ಪಿ ಅವರಿಗೆ ಪತ್ರ ಬರೆದು ಆರೋಪಿಯ ಮೇಲೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಅಡಿಯಲ್ಲಿ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 15 Dec 2025 10:15 pm

ಉಡುಪಿ | ವಾರಸುದಾರರಿಗೆ ಸೂಚನೆ

ಉಡುಪಿ, ಡಿ.15: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗಿಡ-ಗಂಟಿಗಳು ಬೆಳೆದಿರುವ ಖಾಲಿ ಜಾಗದಲ್ಲಿ ಡಿ.12ರಂದು ಅಂದಾಜು 40-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತು ಅಸ್ಥಿ ಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಅಜ್ಜರಕಾಡು ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಿ ಇಡಲಾಗಿದ್ದು, ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರು /ಸಂಬಂಧಿಕರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಮೊ.ನಂ: 9480805445, ಪಿಐ ಮೊ.ನಂ: 9480805408, ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444ನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 15 Dec 2025 10:11 pm

ಡಿಕೆ ಶಿವಕುಮಾರ್‌ ಬಾಲ ಬಿಚ್ಚಿದ್ರೆ ನೆಟ್ಟಗಿರಲ್ಲ ಎಂದು ಹೇಳಿದ್ದು ಈ ಇಬ್ಬರಿಗಂತೆ; ಆ ದಿನಗಳು 2.0 ಆರಂಭ ಎಂದ ಬಿಜೆಪಿ!

ಕಳೆದ ಶನಿವಾರ (ಡಿ.13) ನಡೆದ ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಶನ್‌ ಸಂವಾದ ಕಾರ್ಯಕ್ರಮದಲ್ಲಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಾಡಿದ ಮಾತುಗಳನ್ನು, ಪ್ರತಿಪಕ್ಷ ಬಿಜೆಪಿ ರಾಜ್ಯದಲ್ಲಿ ನಡೆಯುತ್ತಿರುವ ಅಧಿಕಾರ ಹಸ್ತಾಂತರ ಸಂಘರ್ಷಕ್ಕೆ ತಳುಕು ಹಾಕಿದೆ. ಅಸಲಿಗೆ ಡಿಕೆಶಿ ಅವರು ಧಮ್ಕಿ ಹಾಕಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣಕ್ಕೆ ಎಂದು ಬಿಜೆಪಿ ಪ್ರತಿಪಾದಿಸಿದೆ. ಸಂವಾದ ಸಭೆಯಲ್ಲಿ ಡಿಸಿಎಂ ಹೇಳಿದ್ದೇನು? ಅದಿಕ್ಕೆ ಬಿಜೆಪಿ ಏನು ಪ್ರತಿಕ್ರಿಯೆ ನೀಡಿತ್ತು? ಅಧಿಕಾರ ಹಸ್ತಾಂತರ ಸಂಘರ್ಷ ಎಲ್ಲಿಗೆ ಬಂದು ನಿಂತಿದೆ? ಇಲ್ಲಿದೆ ಮಾಹಿತಿ.

ವಿಜಯ ಕರ್ನಾಟಕ 15 Dec 2025 10:06 pm

ಬ್ರಹ್ಮಾವರ | ರಿಕ್ಷಾ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಬ್ರಹ್ಮಾವರ, ಡಿ.15: ರಿಕ್ಷಾವೊಂದು ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹಾವಂಜೆ ಗ್ರಾಮದ ಮುಗ್ಗೇರಿ ಮಠ ಕ್ರಾಸ್ ಹತ್ತಿರ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ಹಾವಂಜೆ ಗ್ರಾಮದ ಚಾರ್ಲಿ ಮಸ್ಕರೇನಸ್(63) ಎಂದು ಗುರುತಿಸಲಾಗಿದೆ. ಕೊಳಲಗಿರಿ ಕಡೆಯಿಂದ ಬರುತ್ತಿದ್ದ ರಿಕ್ಷಾ, ಎದುರಿನಿಂದ ಬರುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಚಾರ್ಲಿ ರಸ್ತೆಗೆ ಬಿದ್ದರೆನ್ನ ಲಾಗಿದೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿವೆ. ಗಂಭೀರ ಸ್ಥಿತಿಯಲ್ಲಿದ್ದ ಚಾರ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 15 Dec 2025 10:05 pm

ಮಂಗಳೂರು ವಿ.ವಿ. ಸರಣಿ ಉಪನ್ಯಾಸ ಮಾಲಿಕೆ

ಮಂಗಳೂರು,ಡಿ.15: ಮಂಗಳೂರು ವಿಶ್ವವಿದ್ಯಾನಿಲಯ, ಎಸ್ವಿಪಿ. ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಪಂಪ ಪ್ರಶಸ್ತಿ ಪುರಸ್ಕೃತ ಪ್ರೊ. ಬಿ.ಎ. ವಿವೇಕ ರೈಅವರಿಂದ ಪಂಪನ ಆದಿಪುರಾಣ ಕಾವ್ಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಡಿಸೆಂಬರ್ 22, 23 ಮತ್ತು 24 ರಂದು ಸಂಜೆ 5:30 ರಿಂದ 6:30 ರವರೆಗೆ ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಡಿಸೆಂಬರ್ 22 ರಂದು ಸಂಜೆ 5 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಉದ್ಘಾಟಿಸಲಿದ್ದಾರೆ. ವಿಶ್ವವಿದ್ಯಾನಿಲಯ ಕುಲಸಚಿವ (ಪ್ರಭಾರ) ಪ್ರೊ. ಗಣೇಶ್ ಸಂಜೀವ್ ಹಾಗೂ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಭಾಗವಹಿಸಲಿರುವರು ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 15 Dec 2025 10:02 pm

ಮಂಗಳೂರು | ದಸಂಸದಿಂದ ಡಾ. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

ಮಂಗಳೂರು, ಡಿ.15: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ ಮಂಗಳೂರು ತಾಲೂಕು ಶಾಖೆ ವತಿಯಿಂದ ಸಂವಿಧಾನ ಶಿಲ್ಪಿಭಾರತ ರತ್ನ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇಯ ಪರಿನಿಬ್ಬಾಣ ದಿನವನ್ನು ರವಿವಾರ ಆಚರಿಸಲಾಯಿತು. ತಾಲೂಕು ಸಂಚಾಲಕರಾದ ರಾಘವೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಯ ಸಂಘಟನಾ ಸಂಚಾಲಕರಾದಂತ ದಲಿತ ನೌಕರರ ಒಕ್ಕೂಟದ ಉಸ್ತುವಾರಿ ಎಚ್.ಡಿ. ಲೋಹಿತ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಜಿಲ್ಲಾ ಸಂಘಟನಾ ಸಂಚಾಲಕರಾದ ರಘು ಕೆ. ಎಕ್ಕಾರು, ಮಂಗಳೂರು ವಿಮಾನ ನಿಲ್ದಾಣ ಪುನರ್ ನಿರ್ವಾಸಿತ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಕಪ್ಪ ಕಾಂಚನ್, ದಲಿತ ಕಲಾಮಂಡಳಿ ಜಿಲ್ಲಾ ಸಂಚಾಲಕ ಕಮಲಾಕ್ಷ ಬಜಲ್, ಸಿದ್ದಾರ್ಥ ನಗರ ಗ್ರಾಮ ಸಂಘಟನಾ ಸಂಚಾಲಕರಾದ ರವೀಂದ್ರ ಕೋಟ್ಯಾನ್, ಪೂರ್ಣಿಮಾ ಮುಳ್ಳೊಟ್ಟು, ರಾಧಾ ಪೇಜಾವರ, ಹಾಗೂ ವಿವಿಧ ಗ್ರಾಮ ಶಾಖೆಗಳ ಸಂಚಾಲಕರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ತಾಲೂಕು ಕಲಾ ಮಂಡಳಿ ಸಂಚಾಲಕರಾದ ಗಂಗಾಧರ ಕೋಟ್ಯಾನ್, ತಾಲೂಕು ಸಮಿತಿ ಖಜಾಂಚಿ ರುಕ್ಕಯ ಅಮೀನ್ ಸ್ವಾಗತಿಸಿ, ಕೃಷ್ಣ ಕೆ ಎಕ್ಕಾರು, ತಾರಾಕ್ಷಿ ಎಂ.ಬಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವಾರ್ತಾ ಭಾರತಿ 15 Dec 2025 9:57 pm

ಯೆಯ್ಯಾಡಿ | ಕಾರು ಢಿಕ್ಕಿ : ವ್ಯಕ್ತಿ ಮೃತ್ಯು

ಮಂಗಳೂರು, ಡಿ.15: ನಗರದ ಯೆಯ್ಯಾಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಯೆಯ್ಯಾಡಿಯ ನಿವಾಸಿ ಫೆಡ್ರಿಕ್ ಅಲ್ವಿನ್ ಫೆರ್ನಾಂಡಿಸ್ ಮೃತಪಟ್ಟ ವ್ಯಕ್ತಿ. ಇವರು ಶನಿವಾರ ಸಂಜೆ 6:30ಕ್ಕೆ ಯೆಯ್ಯಾಡಿಯ ತನ್ನ ಫ್ಲ್ಯಾಟ್ನಿಂದ ಮುಂಭಾಗದಲ್ಲಿರುವ ಅಂಗಡಿಗೆ ಹಾಲು ತರಲೆಂದು ರಸ್ತೆ ದಾಟಿ ಹೋಗುತ್ತಿದ್ದಾಗ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿಕೊಂಡು ಬಂದ ಕಾರು ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಫೆಡ್ರಿಕ್ ರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿರುವ ಸಂಚಾರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 15 Dec 2025 9:55 pm

ಮಂಜೊಟ್ಟಿ : ಹೆಲ್ಪಿಂಗ್ ಹ್ಯಾಂಡ್ಸ್ ನಿಂದ ರಕ್ತದಾನ ಶಿಬಿರ

ಅಡ್ಡೂರು, ಡಿ.15: ಹೆಲ್ಪಿಂಗ್ ಹ್ಯಾಂಡ್ಸ್ ಮಂಜೊಟ್ಟಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಅತ್ತಾವರ ಕೆಎಂಸಿ ಆಸ್ಪತ್ರೆಯ ರಕ್ತನಿಧಿಯ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವು ರವಿವಾರ ಅಡ್ಡೂರು ಬದ್ರಿಯಾ ಮದ್ರಸ ಸಭಾಂಗಣದಲ್ಲಿ ನಡೆಯಿತು. ಹೆಲ್ಪಿಂಗ್ ಹ್ಯಾಂಡ್ಸ್ ನ ಅಧ್ಯಕ್ಷ ಮನ್ಸೂರು ಮಣ್ಣಗುಡ್ಡೆ ಅಧ್ಯಕ್ಷತೆ ವಹಿಸಿದ್ದರು. ಸ್ವದಖತುಲ್ಲಾ ಫೈಝಿ ದುಆಗೈದರು. ಅಡ್ಡೂರು ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಅಹ್ಮದ್ ಬಾವ ಅಂಗಡಿಮನೆ, ಹೆಲ್ಪಿಂಗ್ ಹ್ಯಾಂಡ್ಸ್ ನ ಸದಸ್ಯ ರಝಾಕ್ ಮಂಜೊಟ್ಟಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಸಲಹೆಗಾರ ಮುಸ್ತಫಾ ದೆಮ್ಮಲೆ ಮತ್ತಿತರರು ಉಪಸ್ಥಿತರಿದ್ದರು. ಎಸ್.ಬಿ. ಮುಸ್ತಫಾ ಕಾರ್ಯಕ್ರಮ ನಿರೂಪಿಸಿದರು. ಶಾಹಿಕ್ ಪಾಂಡೆಲ್ ವಂದಿಸಿದರು.

ವಾರ್ತಾ ಭಾರತಿ 15 Dec 2025 9:50 pm

ಮಂಗಳೂರು | ಎನ್ಐಟಿಕೆಯ ಅದ್ಯಾ ಅವರ ಸ್ಮಾರ್ಟ್ ಎಕ್ಸ್ ಪ್ರಾಜೆಕ್ಟ್ ಗೆ 1.19 ಕೋಟಿ ರೂ. ಅನುದಾನ

ಆಸ್ಟ್ರೇಲಿಯಾ-ಭಾರತ ಶಿಕ್ಷಣ, ಕೌಶಲ್ಯ ಮಂಡಳಿಯ 3ನೇ ಸಭೆ

ವಾರ್ತಾ ಭಾರತಿ 15 Dec 2025 9:47 pm

ಅರ್ಕಾವತಿ ಬಡಾವಣೆ; ಭೂಸ್ವಾಧೀನ ಪ್ರಕ್ರಿಯೆಯಿಂದ ಜಮೀನು ಕೈಬಿಡಲು ನಿರ್ದೇಶನ ಕೋರಿದ್ದ ಅರ್ಜಿ ವಜಾ

ಬೆಂಗಳೂರು : ನಗರದ ಹೆಣ್ಣೂರು ಗ್ರಾಮದಲ್ಲಿ ಅರ್ಕಾವತಿ ಬಡಾವಣೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ನೂರಾರು ಕೋಟಿ ರೂ. ಮೌಲ್ಯದ 26 ಎಕರೆ 12 ಗುಂಟೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಬಿಡಿಎಗೆ ಆದೇಶಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಭೂ ಮಾಲೀಕರಾದ ಪ್ರೇಮ್‌ ಸಿಂಗ್‌, ಅವರ ಪುತ್ರಿ ಬೀಜಾಕ್ಷರಿ ವರ್ಮನ್‌ ಮತ್ತು ಪುತ್ರ ಶಾಹಿಲ್‌ ವರ್ಮನ್‌ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಡಿ.ಕೆ. ಸಿಂಗ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ. ಇದರಿಂದ ನೂರಾರು ಕೋಟಿ ಮೌಲ್ಯದ ಜಮೀನು ಬಿಡಿಎ ಸುಪರ್ದಿಯಲ್ಲಿ ಉಳಿದಂತಾಗಿದೆ. ಹೈಕೋರ್ಟ್ ಆದೇಶವೇನು? ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನಪಡಿಸಿಕೊಳ್ಳಲು ಸರ್ಕಾರ 2003 ಫೆಬ್ರವರಿ 3ರಂದು ಪ್ರಾಥಮಿಕ ಮತ್ತು 2004ರ ಫೆಬ್ರವರಿ 23ರಂದು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯಂತೆ ಬಿಡಿಎ, ಅರ್ಜಿದಾರರ ಜಮೀನು ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿದೆ. ಈ ಹಿಂದೆ ಭೂಸ್ವಾಧೀನ ಪ್ರಕ್ರಿಯೆಗೆ ತಮ್ಮದೇನೂ ಆಕ್ಷೇಪಣೆ ಇಲ್ಲವೆಂದೂ ಹಾಗೂ ಜಮೀನಿಗೆ ಪರಿಹಾರ ಕಲ್ಪಿಸುವಂತೆ ಪ್ರೇಮ್‌ ಸಿಂಗ್‌ ಅವರ ಪತ್ನಿಯೇ ಬಿಡಿಎಗೆ ತಿಳಿಸಿದ್ದರು. ಜತೆಗೆ, ವಿವಾದಿತ ಜಮೀನನ್ನು ಭೂ ಸ್ವಾಧೀನದಿಂದ ಕೈಬಿಡಬೇಕೆಂಬ ಅರ್ಜಿದಾರರ ಮನವಿಯನ್ನು ನ್ಯಾಯಮೂರ್ತಿ ಕೆ.ಎನ್‌. ಕೇಶವ ನಾರಾಯಣ ಅವರ ಸಮಿತಿ ಪರಿಶೀಲಿಸಿ ತಿರಸ್ಕರಿಸಿದೆ. ಈ ಹಂತದಲ್ಲಿ ಅರ್ಜಿದಾರರ ಜಮೀನನ್ನು ಭೂಸ್ವಾಧೀನದಿಂದ ರಕ್ಷಣೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ. ಪ್ರಕರಣದ ಹಿನ್ನೆಲೆ: ಹೆಣ್ಣೂರು ಗ್ರಾಮದ ಸರ್ವೇ ನಂಬರ್‌ 17/1, 18, 19, 20 ಮತ್ತು 26ರಲ್ಲಿನ ತಮ್ಮ ಮಾಲೀಕತ್ವದ ಒಟ್ಟು 26 ಎಕರೆ 12 ಗುಂಟೆ ಜಮೀನನ್ನು ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಜಮೀನನ್ನು ಭೂಸ್ವಾಧೀನದಿಂದ ಕೈಬಿಡಲು ಬಿಡಿಎಗೆ ಆದೇಶಿಸಬೇಕು. ಈ ಕುರಿತ ತಮ್ಮ ಮನವಿ ತಿರಸ್ಕರಿಸಿರುವ ನಿವೃತ್ತ ನ್ಯಾಯಮೂರ್ತಿ ಕೆ.ಎನ್‌. ಕೇಶವ ನಾರಾಯಣ ಅವರ ಸಮಿತಿಯ ಕ್ರಮ ರದ್ದುಪಡಿಸಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ವಾರ್ತಾ ಭಾರತಿ 15 Dec 2025 9:43 pm

ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ! ಗಡುವು ವಿಸ್ತರಣೆ ಸಾಧ್ಯತೆ?

ಕೇಂದ್ರ ಸರ್ಕಾರದ ನೌಕರರಿಗೆ (Central Government Employees) ಮತ್ತು ಪಿಂಚಣಿದಾರರಿಗೆ ಇದು ಬಹಳ ಮುಖ್ಯವಾದ ಮಾಹಿತಿ. ಏಪ್ರಿಲ್ 1, 2025 ರಿಂದ ಜಾರಿಗೆ ಬಂದಿರುವ ‘ಏಕೀಕೃತ ಪಿಂಚಣಿ ಯೋಜನೆ’ (Unified Pension Scheme – UPS) ಗೆ ಸೇರ್ಪಡೆಗೊಳ್ಳಲು ನೀಡಲಾಗಿದ್ದ ಗಡುವು ಮುಗಿದಿದೆ. ಆದರೆ, ನೌಕರರ ನಿರಾಸಕ್ತಿಯಿಂದಾಗಿ ಸರ್ಕಾರವು ಮತ್ತೊಮ್ಮೆ ದಿನಾಂಕವನ್ನು ವಿಸ್ತರಣೆ ಮಾಡುವ ಸಾಧ್ಯತೆಯಿದೆ ಎಂದು ವರದಿಗಳು ಹೇಳುತ್ತಿವೆ. ಏನಿದು ಯೋಜನೆ? ಪ್ರಸ್ತುತ ಸ್ಥಿತಿಗತಿ ಏನು? ಮತ್ತು ಇದರಿಂದ ನೌಕರರಿಗೆ ಆಗುವ ಲಾಭವೇನು? ಇಲ್ಲಿದೆ ಸಂಪೂರ್ಣ ... Read more The post ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ! ಗಡುವು ವಿಸ್ತರಣೆ ಸಾಧ್ಯತೆ? appeared first on Karnataka Times .

ಕರ್ನಾಟಕ ಟೈಮ್ಸ್ 15 Dec 2025 9:37 pm

Bihar | ಮೂವರು ಪುತ್ರಿಯರಿಗೆ ನೇಣು ಬಿಗಿದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ

ಮುಝಫ್ಫರ್‌ಪುರ,ಡಿ.16: ವ್ಯಕ್ತಿಯೋರ್ವ ತನ್ನ ಮೂವರು ಪುತ್ರಿಯರನ್ನು ನೇಣು ಬಿಗಿದು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಝಫ್ಫರ್‌ಪುರ ಜಿಲ್ಲೆಯ ಮಿಸ್ರೌಲಿಯಾ ಗ್ರಾಮದಲ್ಲಿ ನಡೆದಿದೆ. ಅಮರನಾಥ್ ರಾಮ್ ತನ್ನ ಎಲ್ಲ ಐವರು ಮಕ್ಕಳಿಗೆ ನೇಣು ಹಾಕಲು ಯತ್ನಿಸಿದ್ದನಾದರೂ ಇಬ್ಬರು ಪುತ್ರರು ಸಾವಿನ ಕುಣಿಕೆಯಿಂದ ಪಾರಾಗಿದ್ದಾರೆ ಎಂದು ಪೋಲಿಸರು ತಿಳಿಸಿದರು. ಅಮರನಾಥ್ ನ ಪತ್ನಿ ವರ್ಷದ ಹಿಂದೆ ಮೃತಪಟ್ಟಿದ್ದು,ಆತ ಪುತ್ರಿಯರಾದ ಅನುರಾಧಾ(12),ಶಿವಾನಿ(7) ಮತ್ತು ರಾಧಿಕಾ(6) ಹಾಗೂ ಪುತ್ರರಾದ ಶಿವಂ(6) ಮತ್ತು ಚಂದನ್ (5) ಅವರೊಂದಿಗೆ ವಾಸವಿದ್ದ. ಈ ದುರಂತ ಘಟನೆಗೆ ಹಲವಾರು ಕಾರಣಗಳು ಕೇಳಿ ಬರುತ್ತಿವೆ. ಆದರೆ ಪೋಲಿಸರು ಯಾವುದನ್ನೂ ದೃಢಪಡಿಸಿಲ್ಲ. ಪತ್ನಿಯ ನಿಧನದ ಬಳಿಕ ಐವರು ಮಕ್ಕಳನ್ನು ನೋಡಿಕೊಳ್ಳುವುದು ಅಮರನಾಥಗೆ ಕಷ್ಟವಾಗಿತ್ತು ಎಂದು ಕೆಲವು ಸ್ಥಳೀಯರು ಹೇಳಿದರೆ, ಆತ ಖಾಸಗಿ ಹಣಕಾಸು ಸಂಸ್ಥೆಯಿಂದ ಸಾಲವನ್ನು ಪಡೆದಿದ್ದ ಮತ್ತು ಅದನ್ನು ಮರುಪಾವತಿಸುವ ಒತ್ತಡದಲ್ಲಿದ್ದ ಎಂದು ಇತರರು ತಿಳಿಸಿದರು. ಅಡಿಗೆ ಮನೆಯಲ್ಲಿ ಮೊಟ್ಟೆಯ ಸಿಪ್ಪೆಗಳು ಬಿದ್ದುಕೊಂಡಿದ್ದು, ದುರಂತ ಅಂತ್ಯಕ್ಕೆ ಮುನ್ನ ಅಮರನಾಥ್ ಮೊಟ್ಟೆಗಳನ್ನು ಬೇಯಿಸಿ ಮಕ್ಕಳಿಗೆ ತಿನ್ನಿಸಿದ್ದ ಎನ್ನುವುದನ್ನು ಇದು ಸೂಚಿಸಿದೆ. ಅಮರನಾಥ್ ತನ್ನ ಮಕ್ಕಳನ್ನು ಟ್ರಂಕ್‌ ವೊಂದರ ಮೇಲೆ ನಿಲ್ಲಿಸಿದ್ದ ಮತ್ತು ಸೀರೆಗಳಿಂದ ಮಾಡಿಕೊಂಡಿದ್ದ ಕುಣಿಕೆಗಳನ್ನು ಕುತ್ತಿಗೆ ಸುತ್ತ ಹಾಕಿಕೊಳ್ಳುವಂತೆ ಸೂಚಿಸಿದ್ದ. ಈ ಸೀರೆಗಳು ಮಕ್ಕಳ ಮೃತ ತಾಯಿಯದ್ದಾಗಿದ್ದವು. ತಾನೂ ಕುತ್ತಿಗೆಗೆ ಕುಣಿಕೆಯನ್ನು ಬಿಗಿದುಕೊಂಡಿದ್ದ ಆತ ಬಳಿಕ ಮಕ್ಕಳಿಗೆ ಟ್ರಂಕ್‌ ನಿಂದ ಕೆಳಕ್ಕೆ ಜಿಗಿಯುವಂತೆ ಸೂಚಿಸಿದ್ದ ಮತ್ತು ತಾನೂ ಅದನ್ನೇ ಮಾಡಿದ್ದ. ಆದರೆ ಇಬ್ಬರು ಪುತ್ರರು ಮಾತ್ರ ಸಾವಿನ ಕುಣಿಕೆಯಿಂದ ಪಾರಾಗಿ ಬದುಕುಳಿದಿದ್ದಾರೆ ಎಂದು ಪೋಲಿಸರು ತಿಳಿಸಿದರು.

ವಾರ್ತಾ ಭಾರತಿ 15 Dec 2025 9:36 pm

ಕುಂದಾಪುರ | ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ನಾರಾಯಣ ಖಾರ್ವಿ ನಿಧನ

ಕುಂದಾಪುರ, ಡಿ.15: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ (2008-11), ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಕೆ.ನಾರಾಯಣ ಖಾರ್ವಿ (79) ಅವರು ರವಿವಾರ ಮಣೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೊಂಕಣಿ ಮಾತನಾಡುವ ಜಿಎಸ್‌ಬಿ ಅಥವಾ ಕ್ರಿಶ್ಚಿಯನ್ ಸಮುದಾಯಕ್ಕೆ ಹೊರತಾದ ಹಿಂದುಳಿದ ಖಾರ್ವಿ ಸಮುದಾಯದಿಂದ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲಿಗರು ನಾರಾಯಣ ಖಾರ್ವಿ. ಇವರು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಕೊಂಕಣಿ ಜನಪದ ಹಾಗೂ ಸಂಸ್ಕೃತಿಗಾಗಿ ವಿಶೇಷವಾಗಿ ಮುತುವರ್ಜಿಯಿಂದ ದುಡಿದಿದ್ದ ಅವರು ಮಾಂಡ್ ಸೋಭಾಣ್‌ನ ಪ್ರಮುಖ ಆಧಾರ ಸ್ತಂಭವಾಗಿದ್ದರು. 2005ರಲ್ಲಿ ಇವರಿಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಯು ದೊರಕಿತ್ತು. ಕೊಂಕಣಿ ಖಾರ್ವಿ ಕಲಾ ಗುಂಪಿನ ಮುಖ್ಯಸ್ಥರು ಇವರಾಗಿದ್ದರು. ಕಾರ್ಮಿಕ ನಾಯಕನಾಗಿ ಭಾರತೀಯ ಮಜ್ದೂರ್ ಸಂಘದಲ್ಲಿ ಸಕ್ರಿಯವಾಗಿ ದುಡಿದ ಇವರು ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಂಘಟನೆಯ ಕ್ಷೇತ್ರದಲ್ಲೂ ತಮ್ಮನ್ನು ಗುರುತಿಸಿಕೊಂಡಿದ್ದರು. ಕುಂದಾಪುರ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ಅಧ್ಯಕ್ಷರಾಗಿ, ವಿದ್ಯಾರಂಗ ಮಿತ್ರ ಮಂಡಳಿಯ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದು, ಕಾರ್ಮಿಕರ ಸಮಸ್ಯೆಗೆ ಸಂಬಂಧಪಟ್ಟಂತೆ ಹಲವಾರು ಹೋರಾಟದ ಮೂಂಚೂಣಿಯಲ್ಲಿದ್ದರು. ಚಿಪ್ಪು ಕಾರ್ಮಿಕರ ಪರ ಹೋರಾಟದಲ್ಲೂ ಇವರು ಮುಂಚೂಣಿಯಲ್ಲಿದ್ದು, ಸಂಘಟನೆಗೆ ಒತ್ತು ನೀಡಿದ್ದರು. ನಾರಾಯಣ ಖಾರ್ವಿಯವರ ನಿಧನಕ್ಕೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ವಾರ್ತಾ ಭಾರತಿ 15 Dec 2025 9:31 pm

Pune | ಸಹಪಾಠಿಯಿಂದ ವಿದ್ಯಾರ್ಥಿಯ ಹತ್ಯೆ

ಪುಣೆ,ಡಿ.15: ಖಾಸಗಿ ಕೋಚಿಂಗ್ ಸೆಂಟರ್‌ ನ ತರಗತಿ ಕೋಣೆಯಲ್ಲಿ 16ರ ಹರೆಯದ ಬಾಲಕನನ್ನು ಆತನ ಸಹಪಾಠಿಯೇ ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಸೋಮವಾರ ಬೆಳಿಗ್ಗೆ ಪುಣೆ ಜಿಲ್ಲೆಯ ರಾಜಗುರುನಗರದಲ್ಲಿ ನಡೆದಿದೆ. ಇಬ್ಬರೂ 10ನೇ ತರಗತಿಯಲ್ಲಿ ಓದುತ್ತಿದ್ದು ಅವರ ನಡುವಿನ ಹಿಂದಿನ ವಿವಾದ ಕೊಲೆಗೆ ಕಾರಣವಾಗಿದೆ ಎಂದು ಪೋಲಿಸರು ತಿಳಿಸಿದರು. ಚೂರಿ ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು,ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದಾನೆ. ಆರೋಪಿ ಬಾಲಕನನ್ನು ಬಂಧಿಸಲಾಗಿದೆ ಎಂದು ಪೋಲಿಸರು ತಿಳಿಸಿದರು.

ವಾರ್ತಾ ಭಾರತಿ 15 Dec 2025 9:28 pm

ಡಿ.17ರಂದು ಬೆಳ್ತಂಗಡಿ ತಾಲೂಕು ಮಟ್ಟದ ದಫ್ ಸ್ಪರ್ಧೆಗೆ ಆಹ್ವಾನ

ಬೆಳ್ತಂಗಡಿ, ಡಿ.15: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಡಿ.17ರಂದು ಸಂಜೆ 4ಕ್ಕೆ ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ದಫ್ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ತಂಡಗಳು ಡಿ.16ರ ಸಂಜೆ 6 ಗಂಟೆಯೊಳಗೆ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಹೆಸರು ನೋಂದಾಯಿಸಲು ಮೊ.ಸಂ: 9845499527ನ್ನು ಸಂಪರ್ಕಿಸಬಹುದು ಎಂದು ಅಕಾಡಮಿಯ ಸದಸ್ಯ ಹಾಗೂ ದಫ್ ಸ್ಪರ್ಧೆಯ ಸದಸ್ಯ ಸಂಚಾಲಕ ಯು.ಎಚ್. ಖಾಲಿದ್ ಉಜಿರೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ವಾರ್ತಾ ಭಾರತಿ 15 Dec 2025 9:26 pm

ಶಿವಸೇನೆ (ಯುಬಿಟಿ)ಗೆ ಭಾರೀ ಹಿನ್ನಡೆ: ಬಿಜೆಪಿಗೆ ಸೇರಿದ ತೇಜಸ್ವಿ ಗೋಸಾಲ್ಕರ್

ಮುಂಬೈ,ಡಿ.15: ಶಿವಸೇನೆ (ಯುಬಿಟಿ)ಯ ಮಾಜಿ ಕಾರ್ಪೊರೇಟರ್ ಹಾಗೂ ಪಕ್ಷದ ಹಿರಿಯ ನಾಯಕ ವಿನೋದ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಾಲ್ಕರ್ ಅವರು ಸೋಮವಾರ ಬಿಜೆಪಿಗೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡಿದ್ದು,ಇದು ವಿಶೇಷವಾಗಿ ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಗಳ ಮುನ್ನ ಉದ್ಧವ ಠಾಕ್ರೆ ನೇತೃತ್ವದ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ತಿಂಗಳುಗಳ ಕಾಲ ಊಹಾಪೋಹಗಳ ಬಳಿಕ ಘೋಸಾಲ್ಕರ್ ಬಿಜೆಪಿಯನ್ನು ಅಪ್ಪಿಕೊಂಡಿದ್ದಾರೆ. ಘೋಸಾಲ್ಕರ್ ಈ ವರ್ಷದ ಆರಂಭದಲ್ಲಿಯೇ ಬಿಜೆಪಿ ಸೇರಲು ಆಸಕ್ತಿಯನ್ನು ವ್ಯಕ್ತಪಡಿಸಿದ್ದರು. ಆಗ ಅವರನ್ನು ಮಹಿಳಾ ಸಂಘಟಕ್ ಆಗಿ ನೇಮಕಗೊಳಿಸುವ ಮೂಲಕ ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಯುಬಿಡಿ ನಾಯಕತ್ವ ಪ್ರಯತ್ನಿಸಿತ್ತು. ಆದರೂ ಅಂತಿಮವಾಗಿ ಅವರು ಪಕ್ಷವನ್ನು ತೊರೆದಿದ್ದಾರೆ. ಫೆ.2024ರಲ್ಲಿ ಕ್ಯಾಮೆರಾದಲ್ಲಿ ನೇರಪ್ರಸಾರದಲ್ಲಿ ಸೆರೆಯಾಗಿದ್ದ ಆಘಾತಕಾರಿ ಘಟನೆಯಲ್ಲಿ ತೇಜಸ್ವಿಯವರ ಪತಿ ಹಾಗೂ ಶಿವಸೇನೆ (ಯುಬಿಟಿ) ನಾಯಕ ಅಭಿಷೇಕ್ ಘೋಸಾಲ್ಕರ್ ಅವರನ್ನು ಫೇಸ್‌ಬುಕ್ ಲೈವ್‌ನಲ್ಲಿ ಇದ್ದಾಗಲೇ ಮೌರಿಸ್ ನೊರ್ಹೋನಾ ಎಂಬಾತ ಹಳೆಯ ದ್ವೇಷದಿಂದ ಗುಂಡಿಟ್ಟು ಹತ್ಯೆಗೈದಿದ್ದ.

ವಾರ್ತಾ ಭಾರತಿ 15 Dec 2025 9:24 pm

ಈ ಕಾರಣಕ್ಕೆ ಬೆಳಗಾವಿ ಅಧಿವೇಶನ ಒಂದು ವಾರ ವಿಸ್ತರಿಸಿ: ಸಭಾಧ್ಯಕ್ಷರಿಗೆ ಆರ್.ಅಶೋಕ್ ಪತ್ರ

Belagavi Winter Session 2025: ಕರ್ನಾಟಕ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ 2025 ಡಿಸೆಂಬರ್ 08 ರಿಂದ 19ರವರೆಗೆ ನಡೆಯಲಿದೆ. ಇದರಲ್ಲಿ ಸದ್ಯ ಎಂಟು ಕಳೆದಿದೆ. ಕಾರಣಾಂತರಗಳಿಂದ 10 ದಿನಗಳ ಅಧಿವೇಶನದಲ್ಲಿ 2 ದಿನದ ಅಧಿವೇಶನದ ಸಮಯವು ಮೊಟುಕುಗೊಂಡಿರುತ್ತದೆ. ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಬರೆದು ಅಧಿವೇಶನ ವಿಸ್ತರಣೆ ಬಗ್ಗೆ

ಒನ್ ಇ೦ಡಿಯ 15 Dec 2025 9:22 pm

ಡಿ.16-17ರಂದು ಉಡುಪಿಯ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ಡಿ.15: ಉಡುಪಿ ನಗರಸಭಾ ವ್ಯಾಪ್ತಿಯ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ. ವಿದ್ಯುತ್ ಗೆ ಸಂಬಂಧಿಸಿದ ಉಪಕರಣಗಳ ನಿರ್ವಹಣೆ ಕೆಲಸಕ್ಕಾಗಿ ಡಿ.16 ಮತ್ತು 17ರಂದು ವಿದ್ಯುತ್ ಪೂರೈಕೆ ಇಲ್ಲದಿರುವುದರಿಂದ, ಈ ದಿನಗಳಂದು ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಿಗೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಾರ್ತಾ ಭಾರತಿ 15 Dec 2025 9:21 pm

ಜೈಲು ಅಧಿಕಾರಿಗಳೇ ಪರೋಲ್ ಅರ್ಜಿ ನಿರ್ಧರಿಸಿದರೆ ನ್ಯಾಯಾಲಯದ ಮೇಲಿನ ಹೊರೆ ಇಳಿಯಲಿದೆ : ಹೈಕೋರ್ಟ್ ಮೌಖಿಕ ಅಭಿಪ್ರಾಯ

ಬೆಂಗಳೂರು : ಸಜಾಬಂದಿಗಳು ಪರೋಲ್‌ ಕೋರಿ ಸಲ್ಲಿಸುವ ಮನವಿಗಳ ಸಂಬಂಧ ಜೈಲು ಅಧಿಕಾರಿಗಳೇ ಸೂಕ್ತ ಆದೇಶ ಹೊರಡಿಸಿದರೆ, ನ್ಯಾಯಾಲಯದ ಮೇಲಿನ ಹೊರೆ ಕಡಿಮೆಯಾಗಲಿದೆ ಎಂದು ಹೈಕೋರ್ಟ್‌ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ. ಪರೋಲ್‌ ಮಂಜೂರಾತಿಗೆ ಕೋರಿದ ಸುಮಾರು 60 ಅರ್ಜಿಗಳು ಸೋಮವಾರ ಒಂದೇ ದಿನ ವಿಚಾರಣೆಗೆ ನಿಗದಿಯಾಗಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಸೋಮವಾರ ಮಧ್ಯಾಹ್ನದ ಕಲಾಪದ ವೇಳೆ ನ್ಯಾಯಮೂರ್ತಿಗಳು ಪರೋಲ್‌ ಮಂಜೂರಾತಿ ಕೋರಿದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡರು. ಒಂದೂವರೆ ಗಂಟೆ ಸಮಯದಲ್ಲಿ 25ಕ್ಕೂ ಅಧಿಕ ಪರೋಲ್‌ ಅರ್ಜಿಗಳ ವಿಚಾರಣೆ ನಡೆಸಿ ವಿಲೇವಾರಿ ಮಾಡಿದರು. ಸಂಜೆ 4.50 ಸಮಯವಾದರೂ ಪೆರೋಲ್‌ ಅರ್ಜಿಗಳ ವಿಚಾರಣೆ ಅಂತ್ಯವಾಗಿರಲಿಲ್ಲ. ಈ ಹಂತದಲ್ಲಿ ಇನ್ನೆಷ್ಟು ಅರ್ಜಿಗಳಿವೆ, ಇನ್ನೂ ಮುಗಿದಿಲ್ಲವೇ ಎಂದು ಸರಕಾರಿ ವಕೀಲರನ್ನು ಕೇಳಿದ ನ್ಯಾಯಮೂರ್ತಿಗಳು, ವಿಚಾರಣಾ ಪಟ್ಟಿಯಲ್ಲಿನ ಪರೋಲ್‌ ಅರ್ಜಿಗಳ ಸಂಖ್ಯೆ ಗಮನಿಸಿದರು. ಆಗ 60 ಅರ್ಜಿಗಳು ವಿಚಾರಣೆ ನಿಗದಿಯಾಗಿರುವುದನ್ನು ಕಂಡ ನ್ಯಾಯಮೂರ್ತಿಗಳು ಸರಕಾರಿ ವಕೀಲರನ್ನು ಕುರಿತು, ಇಷ್ಟೆಲ್ಲ ಅರ್ಜಿಗಳನ್ನು ವಿಚಾರಣೆ ನಡೆಸಬೇಕಾದರೆ ಇಡೀ ದಿನದ ಸಮಯಬೇಕಾಗುತ್ತದೆ. ಜೈಲು ಅಧಿಕಾರಿಗಳೇ, ಪರೊಲ್‌ ಕೋರಿದ ಅರ್ಜಿಗಳನ್ನು ಪರಿಗಣಿಸಿ ಕಾನೂನು ಪ್ರಕಾರ ಆದೇಶಿಸಬೇಕು. ಇದರಿಂದ, ನ್ಯಾಯಾಲಯಕ್ಕೆ ಬರುವ ಅರ್ಜಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಇಲ್ಲವಾದರೆ ನ್ಯಾಯಾಲಯದ ಮೇಲೆ ಹೆಚ್ಚು ಹೊರೆಯಾಗುತ್ತದೆ. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿ ಎಂದು ಸರಕಾರಿ ವಕೀಲರಿಗೆ ನಿರ್ದೇಶಿಸಿದರು. 11 ವರ್ಷ ನಾಪತ್ತೆಯಾಗಿದ್ದ ಕೈದಿಗೆ ಪರೋಲ್ ನಿರಾಕರಣೆ: ಸಜಾಬಂದಿಯೊಬ್ಬನಿಗೆ ಪರೋಲ್ ಕೋರಿ ಆತನ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು ಹಾಜರಾಗಿ, 90 ದಿನಗಳ ಪರೋಲ್‌ ಮಂಜೂರಾತಿಗೆ ಕೋರಿದರು. ಆಗ ನ್ಯಾಯಮೂರ್ತಿಗಳು, ಜೈಲು ಅಧಿಕಾರಿಗಳು ಏಕೆ ಪರೋಲ್‌ ನಿರಾಕರಿಸಿದ್ದಾರೆ ಎಂದು ಪ್ರಶ್ನಿಸಿದರು. ವಕೀಲರು ಉತ್ತರಿಸಿ, ಈ ಹಿಂದೆ 30 ದಿನಗಳ ಕಾಲ ಪರೋಲ್‌ ಮೇಲೆ ಬಿಡುಗಡೆಯಾಗಿದ್ದ ಕೈದಿ 11 ವರ್ಷ ತಲೆಮರೆಸಿಕೊಂಡಿದ್ದರು. ಕಳೆದ ವರ್ಷವಷ್ಟೇ ಪೊಲೀಸರು ಆತನನ್ನು ಪತ್ತೆ ಹಚ್ಚಿ ಜೈಲಿಗೆ ಕಳುಹಿಸಿದ್ದಾರೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, 30 ದಿನ ಪರೋಲ್‌ ನೀಡಿದ್ದಕ್ಕೆ 11 ವರ್ಷ ತಲೆಮರೆಸಿಕೊಂಡಿದ್ದಾನೆ. ಇದೀಗ ಮತ್ತೆ ಪರೋಲ್‌ ನೀಡಿದರೆ ಮತ್ತೆ 11 ವರ್ಷ ನಾಪತ್ತೆಯಾಗುತ್ತಾನೆ. ಅದಕ್ಕೆ ಅವಕಾಶ ಕೊಡಲಾಗುವುದಿಲ್ಲ. ಈ ಕೈದಿ ಪರೋಲ್‌ಗೆ ಅರ್ಹನಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿದರು.

ವಾರ್ತಾ ಭಾರತಿ 15 Dec 2025 9:19 pm

ಕುಂದಾಪುರ | ಕೋಡಿಯಲ್ಲಿ ‘ಬ್ಯಾರೀಸ್ ಉದ್ಘಮ್’ ಕ್ಯಾಂಪಸ್ ಕನೆಕ್ಟ್-2025 ಕಾರ್ಯಕ್ರಮ

ಕುಂದಾಪುರ, ಡಿ.15: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ 120ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ‘ಬ್ಯಾರೀಸ್ ಉದ್ಘಮ್’ ಕ್ಯಾಂಪಸ್ ಕನೆಕ್ಟ್- 2025 ಕಾರ್ಯಕ್ರಮ ಕೋಡಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಮತ್ತು ಮನೋವೈದ್ಯ ಡಾ.ಪಿ.ವಿ. ಭಂಡಾರಿ ಮಾತನಾಡಿ, ಹೆತ್ತವರು ಮೊದಲು ಮಕ್ಕಳನ್ನು ಅರ್ಥ ಮಾಡಿ ಕೊಳ್ಳಬೇಕು, ಆನಂತರ ನಿರ್ಣಯವನ್ನು ತೆಗೆದುಕೊಳ್ಳಬೇಕು. ಮಕ್ಕಳನ್ನು ಬೇರೆಯವರೊಂದಿಗೆ ಹೋಲಿಸಬಾರದು ಎಂದು ತಿಳಿಸಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಸಂಚಾಲಕ ಸೈಯದ್‌ ಮುಹಮ್ಮದ್ ಬ್ಯಾರಿ ಮಾತನಾಡಿ, ಸತ್ಯ, ನ್ಯಾಯ, ಸಮಾನತೆ ಎದುರು ಯಾವುದೂ ಇಲ್ಲ. ನಂಬಿಕೆ ಅತೀ ಮುಖ್ಯ. ಹಣದ ಬಗ್ಗೆ ಯೋಚಿಸದೆ ಗುಣದ ಬಗ್ಗೆ ಯೋಚಿಸಬೇಕು. ಹೃದಯವನ್ನು ಯಾವಾಗಲೂ ಶುದ್ಧವಾಗಿಟ್ಟುಕೊಳ್ಳಬೇಕು. ಜೀವನದ ಪರೀಕ್ಷೆಯಲ್ಲಿ ಯಾವಾಗಲೂ ಪಾಸಾಗುವಂತೆ ನೋಡಿಕೊಳ್ಳಬೇಕು ಎಂದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ ಮಾತನಾಡಿ, ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಅತೀ ಮುಖ್ಯವಾದದು. ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು ’ಬ್ಯಾರೀಸ್ ಉದ್ಘಮ್’ ಕ್ಯಾಂಪಸ್ ಕನೆಕ್ಟ್ -2025 ಕಾರ್ಯಕ್ರಮ ಅಡಿಯಲ್ಲಿ ಹೈಸ್ಕೂಲ್ ಮತ್ತು ಪಿಯುಸಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಟ್ಯಾಲೆಂಟ್ ಹಂಟ್, ಕ್ವಿಜ್, ಮಾಡೆಲ್ ಮೇಕಿಂಗ್ ಸ್ಪರ್ಧೆಗಳನ್ನು ಮತ್ತು ಶಿಕ್ಷಕರಿಗಾಗಿ ಎಜುಕ್ರಿಯೇಟ್-ಇನೊವೇಟಿವ್ ಟೀಚಿಂಗ್ ಮಾಡೆಲ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡುವುದರೊಂದಿಗೆ ಗುರುತಿಸಲಾಯಿತು. ವಿದ್ಯಾರ್ಥಿ ಗಳಿಗಾಗಿ ವೃತ್ತಿ ಮಾರ್ಗದರ್ಶನ ಗ್ಯಾಲರಿ ಪ್ರದರ್ಶನ ಹಮ್ಮಿಕೊಳ್ಳಲಾಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯರಾದ ಡಾ.ಆಸೀಫ್ ಬ್ಯಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಹಿತೈಷಿ ಸಲೀಂ ಅತ್ತರ್ ಶುಭ ಹಾರೈಸಿದರು. ಕ್ವಿಝ್ ಮಾಸ್ಟರ್ ಆಗಿ ಕನ್ನಡ ಪಾಡ್ ಕಾಸ್ಟ್ ನಿರ್ಮಾಪಕಿ ಮತ್ತು ನಿರೂಪಕಿ ಸ್ಪೂರ್ತಿ ತೇಜ್ ಹಾಗೂ ವಿವಿಧ ಸ್ಪರ್ಧೆಗಳ ತೀರ್ಪುಗಾರರಾಗಿ ಸಂತೋಷ್ ಕುಮಾರ್ ಶೆಟ್ಟಿ, ಶಂಕರ್ ಉಪಾಧ್ಯಾಯ, ನಾಗರಾಜ್ ಯು. ಮತ್ತು ಉದಯ ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆರಿಯರ್ ಎಕ್ಸ್‌ಪ್ರೆಸ್‌ನ ಸಂಸ್ಥಾಪಕ ಶೋಯಿಬ್ ವಲಾಯಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಅಶ್ವಿನಿ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಮತ್ತು ಸಲಹಾ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಪುರಸಭೆ ಸದಸ್ಯರು, ಪೋಷಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಉದ್ಘಾಟನಾ ಕಾರ್ಯಕ್ರಮವನ್ನು ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಅಸ್ರಾ ಮತ್ತು ಬಿಎಡ್ ಪ್ರಶಿಕ್ಷಣಾರ್ಥಿ ಸ್ವಾತಿ ನಿರೂಪಿಸಿದರು. ಬ್ಯಾರಿಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಡಾ.ಫಿರ್ದೋಸ್ ಸ್ವಾಗತಿಸಿದರು. ಅಕಾಡೆಮಿಕ್ ಡೀನ್ ಡಾ.ಪೂರ್ಣಿಮಾ ಟಿ. ಗಣ್ಯರನ್ನು ಪರಿಚಯಿಸಿದರು. ಬಿ.ಎಡ್ ಉಪನ್ಯಾಸಕಿ ಶಾಝಿಯಾ ವಂದಿಸಿದರು. ಸಮಾರೋಪ ಸಮಾರಂಭವನ್ನು ಬ್ಯಾರಿಸ್ ಪಿಯು ಕಾಲೇಜಿನ ಉಪನ್ಯಾಸಕಿ ಲಮಿಸ್ ನಿರೂಪಿಸಿದರು. ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿ ಆನಂ ಸ್ವಾಗತಿಸಿದರು. ಶೀತಲ್ ಮೆಂಡೋನ್ಸಾ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಮತ್ತು ಹೊರಜಿಲ್ಲೆಯ 31 ಸರಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.  

ವಾರ್ತಾ ಭಾರತಿ 15 Dec 2025 9:19 pm

ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ

ಬೆಂಗಳೂರು : ಸೋಮವಾರ ನಗರದಲ್ಲಿರುವ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಜೈಲಿನ ಚೆಕ್ ಪೋಸ್ಟ್‌ ಬಳಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಅಧಿಕಾರಿಗಳ ಜೊತೆ ಜೈಲಿನ ಸುತ್ತಮುತ್ತ ಓಡಾಡಿ ಪರಿಶೀಲನೆ ನಡೆಸಿ ಹಾಗೂ ಪ್ರತಿ ಬ್ಯಾರಕ್‍ಗೂ ತೆರಳಿ ಮಾಹಿತಿ ಕಲೆಹಾಕಿ ಗಾಂಜಾ, ಬಿಡಿ ಸಿಗರೇಟ್ ಇನ್ನು ಮುಂದೆ ಸಿಗಲ್ಲ. ಎಲ್ಲ ಬಂದ್ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೈಲಿನ ಪ್ರತಿ ಬ್ಯಾರಕ್‍ಗೂ ಭೇಟಿ ನೀಡಿರುವ ಡಿಜಿಪಿ, ಕೈದಿಗಳ ಬಳಿಯು ಮಾಹಿತಿ ಕಲೆ ಹಾಕಿದ್ದಾರೆ. ಊಟ, ತಿಂಡಿ, ಶೌಚಾಲಯ ವ್ಯವಸ್ಥೆ ಬಗ್ಗೆ ಕೈದಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಮೊಬೈಲ್ ಬಳಕೆ ಮಾಡುತ್ತಿದ್ದಾರೆ ಕೂಡಲೆ ಸಿಬ್ಬಂದಿ ವಶಕ್ಕೆ ನೀಡುವಂತೆ ತಾಕೀತು ಮಾಡಿದ್ದಾರೆ. ಕಳ್ಳಾಟವಾಡಿದರೆ, ಇನ್ನು ಮುಂದೆ ಕಠಿಣ ಕ್ರಮ ಎದುರಿಸಲು ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಜೈಲಿನ ಅಡುಗೆ ಮನೆ, ಬೇಕರಿ, ಆಸ್ಪತ್ರೆಗೂ ಭೇಟಿ ನೀಡಿ, ವೈದ್ಯರು ಚಿಕಿತ್ಸೆ ಮಾತ್ರ ಕೋಡಬೇಕು. ಅದನ್ನು ಬಿಟ್ಟು ಮೊಬೈಲ್, ಗಾಂಜಾ ಸಾಗಾಣೆ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಐಜಿಪಿ ದಿವ್ಯಾ, ಡಿಸಿಪಿ ನಾರಾಯಣ, ಮುಖ್ಯ ಅಧೀಕ್ಷ ಕ ಅಂಶುಕುಮಾರ್, ಕಮಾಂಡರ್ ವೀರೇಶ್ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 15 Dec 2025 9:16 pm

ಕಸ್ತೂರಿ ಅನಂತ ಭಟ್

ಉಡುಪಿ, ಡಿ.15: ದಿವಂಗತ ಚೇಂಪಿ ಮಂಜುನಾಥ ಯಾನೆ ಅನಂತ ಲಕ್ಷ್ಮಣ ಭಟ್ ಇವರ ಧರ್ಮಪತ್ನಿ ಚೇಂಪಿ ಮಹಾಮಾಯಾ ಯಾನೆ ಕಸ್ತೂರಿ ಅನಂತ ಭಟ್(83) ಡಿ15ರಂದು ಉಡುಪಿ ಒಳಕಾಡಿನ ಸ್ವಗೃಹದಲ್ಲಿ ನಿಧನರಾದರು. ಮೃತರು ಉಡುಪಿಯ ಅನಂತ ವೈದಿಕ ಕೇಂದ್ರದ ಪ್ರಧಾನ ನಿರ್ದೇಶಕ ವೇ.ಮೂ ಚೇಂಪಿ ರಾಮಚಂದ್ರ ಅನಂತ ಭಟ್ ಸಹಿತ ಇಬ್ಬರು ಪುತ್ರರನ್ನು ಹಾಗೂ ನಾಲ್ಕು ಪುತ್ರಿಯರನ್ನು ಅಗಲಿದ್ದಾರೆ.

ವಾರ್ತಾ ಭಾರತಿ 15 Dec 2025 9:15 pm

Bengaluru | ಒಂಟಿ ಮಹಿಳೆಯರನ್ನು ಅಡ್ಡಗಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ

ಬೆಂಗಳೂರು : ನಗರದ ರಸ್ತೆಗಳಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಇಲ್ಲಿನ ಕಾಮಾಕ್ಷಿಪಾಳ್ಯ ಠಾಣೆ poಲೀಸರು ಬಂಧಿಸಿದ್ದಾರೆ. ಹರೋಹಳ್ಳಿಯ ಮಾದೇಶ್ವರನಗರ ನಿವಾಸಿ ವಿನೋದ್(27) ಬಂಧಿತ ಆರೋಪಿ. ಸುಮ್ಮನಹಳ್ಳಿ ಜಂಕ್ಷನ್ ಮುಖಾಂತರ ಶ್ರೀನಿವಾಸನಗರ ಸರ್ಕಲ್ ಕಡೆಯಿಂದ ಮಹಿಳೆಯೊಬ್ಬರು ಪೀಣ್ಯ ಜಿಕೆಡಬ್ಲೂ ಲೇಔಟ್‍ಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ರಸ್ತೆ ಗುಂಡಿಯಿದ್ದ ಕಾರಣ ವಾಹನವನ್ನು ನಿಧಾನ ಮಾಡಿದಾಗ ಈತ ಹಿಂಬಾಲಿಸಿಕೊಂಡು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಅವರನ್ನು ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಹಿಂದೆ ಕಾರಿನಲ್ಲಿ ಬರುತ್ತಿದ್ದ ಮಹಿಳೆಯ ಪತಿ ಗಮನಿಸಿ ಆತನನ್ನು ಹಿಡಿದುಕೊಳ್ಳಲು ಯತ್ನಿಸಿದಾಗ ತಪ್ಪಿಸಿಕೊಂಡು ಪರಾರಿಯಾಗಿದ್ದ. ಬಳಿಕ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿದ್ದಾರೆ. ಹೊಯ್ಸಳ ಪೊಲೀಸರು ತಕ್ಷ ಣ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಕೈಗೊಂಡು ವಿಕೃತ ಕಾಮಿಯನ್ನು ಬಂಧಿಸಿ ಕ್ರಮ ಜರುಗಿಸಿದ್ದಾರೆ. ಈ ವಿಕೃತ ಕಾಮಿ ಸಂಜೆಯಾಗುತ್ತಿದ್ದಂತೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಏಕಾಏಕಿ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ವಾರ್ತಾ ಭಾರತಿ 15 Dec 2025 9:13 pm

ನಾಲ್ಕು ಬಾರಿ ಸಂಸದೆಯಾಗಿ ಆಯ್ಕೆಯಾಗಿದ್ದೇನೆ, ಇವಿಎಂ ವಿರೋಧಿಸಲ್ಲ; ಸುಳ್ಳು ಹೇಳಲು ಒಪ್ಪದ ಸುಪ್ರಿಯಾ ಸುಳೆ

ದೇಶಾದ್ಯಂತ ಬಿಜೆಪಿ ಚುನಾವಣಾ ದಿಗ್ವಿಜಯಗಳಿಗೆ ಎಲೆಕ್ಟ್ರಾನಿಕ್ಸ್‌ ಮತಯಂತ್ರ (ಇವಿಎಂ)ದಲ್ಲಿ ನಡೆಯುತ್ತಿರುವ ಗೋಲ್‌ಮಾಲ್‌ ಕಾರಣ ಎಂಬುದು ಪ್ರತಿಪಕ್ಷಗಳ ಆರೋಪ. ಆದರೆ ಮಹಾರಾಷ್ಟ್ರದಲ್ಲಿ ವಿಪಕ್ಷ ಮೈತ್ರಿಕೂಟದ ಭಾಗವಾಗಿರುವ ಎನ್‌ಸಿಪಿಯ ಸಂಸದೆ ಸುಪ್ರಿಯಾ ಸುಳೆ, ಇವಿಎಂ ವಿರುದ್ಧ ಸುಳ್ಳು ಆರೋಪ ಮಾಡುವುದಿಲ್ಲ ಎಂದು ಹೇಳುವ ಮೂಲಕ, ವಿಪಕ್ಷಗಳಿಗೆ ಆಘಾತ ನೀಡಿದ್ದಾರೆ. ನಾನು ನಾಲ್ಕು ಬಾರಿ ಸಂಸದೆಯಾಗಿ ಆಯ್ಕೆಯಾಗಿರುವುದು ಇದೇ ಇವಿಎಂ ವ್ಯವಸ್ಥೆ ಮೂಲಕ ಎಂದು ಸುಪ್ರಿಯಾ ಸುಳೆ ಹೇಳಿದ್ದಾರೆ. ಇಲ್ಲಿದೆ ನೋಡಿ ಹೆಚ್ಚಿನ ಮಾಹಿತಿ.

ವಿಜಯ ಕರ್ನಾಟಕ 15 Dec 2025 9:13 pm

Bengaluru | ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸುವುದಾಗಿ ಉದ್ಯಮಿಗೆ 8.3 ಕೋಟಿ ರೂ. ವಂಚನೆ

ಬೆಂಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸುವುದಾಗಿ ನಂಬಿಸಿ ನಗರದ ಉದ್ಯಮಿಯೊಬ್ಬರಿಗೆ ಸುಮಾರು 8.3 ಕೋಟಿ ರೂ.ಗಳನ್ನು ಸೈಬರ್ ಕಳ್ಳರು ವಂಚಿಸಿರುವ ಘಟನೆ ನಡೆದಿದ್ದು, ಈ ಬಗ್ಗೆ ದಕ್ಷಿಣ ವಿಭಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಉದ್ಯಮಿ ರಾಜೇಂದ್ರ ನಾಯ್ಡು ಅವರಿಗೆ ಷೇರು ಮಾರುಕಟ್ಟೆ ಹೆಸರಿನಲ್ಲಿ ವಂಚಿಸಲಾಗಿದ್ದು, ದಕ್ಷಿಣ ವಿಭಗದ ಸಿಇಎನ್ ಠಾಣೆಗೆ ಅವರು ದೂರು ನೀಡಿದ್ದಾರೆ. ರಾಜೇಂದ್ರ ನಾಯ್ಡು ಅವರಿಗೆ ಕರೆ ಮಾಡಿದ್ದ ವಂಚಕರು, ಅವರು ಈ ಹಿಂದೆ ಪಡೆದಿದ್ದ ಸಾಲದ ಕುರಿತು ಮಾತನಾಡುತ್ತಾ ‘ನಿಮ್ಮ ಸಿವಿಲ್ ಸ್ರ್ಕೋರ್ ಉತ್ತಮವಾಗಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಂಶಗಳಿಸಬಹುದು’ ಎಂದು ನಂಬಿಸಿದ್ದರು ಎನ್ನಲಾಗಿದೆ. ಕೆಲವು ಚಾರಿಟಿ ಸೇವೆಗಳನ್ನು ನಡೆಸುತ್ತಿದ್ದ ರಾಜೇಂದ್ರ ನಾಯ್ಡು ಅವರು ಸ್ವಲ್ಪ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅದರಿಂದ ಬರುವ ಹಣವನ್ನು ಚಾರಿಟಿಗೆ ಉಪಯೋಗಿಸಬಹುದು ಎಂದು ಭಾವಿಸಿ ಹೂಡಿಕೆ ಮಾಡಲು ಮುಂದಾಗಿದ್ದರು. ಬಳಿಕ ರಾಜೇಂದ್ರ ನಾಯ್ಡು ಅವರ ಮೊಬೈಲ್ ಫೋನ್‍ನಲ್ಲಿ ವಂಚಕರು ಆ್ಯಪ್‍ವೊಂದನ್ನು ಇನ್‌ಸ್ಟಾಲ್ ಮಾಡಿಸಿದ್ದರು ಎನ್ನಲಾಗಿದೆ. ಆರಂಭದಲ್ಲಿ 25 ಲಕ್ಷ ರೂ. ಹೂಡಿಕೆ ಮಾಡಿದ್ದ ನಾಯ್ಡು ನಂತರ ಹಂತಹಂತವಾಗಿ ಒಟ್ಟು 8.3 ಕೋಟಿ ರೂ. ಹಣ ವರ್ಗಾಯಿಸಿದ್ದರು. ಇದಕ್ಕೆ ಪೂರಕವೆಂಬಂತೆ ಆ್ಯಪ್‍ನಲ್ಲಿ 59.4 ಕೋಟಿ ರೂ. ಲಾಭಾಂಶವನ್ನು ಆರೋಪಿಗಳು ತೋರಿಸಿದ್ದರು ಎಂದು ರಾಜೇಂದ್ರ ನಾಯ್ಡು ಪೊಲೀಸರಿಗೆ ತಿಳಿಸಿದ್ದಾರೆ. ತಮ್ಮ ಹೂಡಿಕೆಯು ದೊಡ್ಡ ಮೊತ್ತದ ಲಾಭಗಳಿಸಿದೆ ಎಂದುಕೊಂಡಿದ್ದ ರಾಜೇಂದ್ರ ನಾಯ್ಡು, 15 ಕೋಟಿ ರೂ.ಗಳನ್ನು ಹಿಂಪಡೆಯಲು ಪ್ರಯತ್ನಿಸಿದ್ದರು. ಆದರೆ ಹಣ ವಿತ್ ಡ್ರಾ ಆಗದಿದ್ದಾಗ ಅನುಮಾನಗೊಂಡ ಅವರು, ಮೊದಲು ತಮ್ಮನ್ನು ಸಂಪರ್ಕಿಸಿದ್ದ ಅಪರಿಚಿತ ವಂಚಕರಿಗೆ ಕರೆ ಮಾಡಿ ವಿಚಾರಿಸಿದಾಗ, ಶೇ.18 ಸೇವಾ ಶುಲ್ಕವಾಗಿ ಸುಮಾರು 2.70 ಕೋಟಿ ರೂ. ಪಾವತಿಸಬೇಕು ಎಂದು ಆಗ್ರಹಿಸಿದ್ದರು. ಆ ಸಮಯದಲ್ಲಿ ತಾವು ವಂಚನೆಗೊಳಗಾಗಿರುವುದನ್ನು ಅರಿತ ನಾಯ್ಡು ಸೈಬರ್ ಕ್ರೈಮ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದರು. ನಂತರ ದಕ್ಷಿಣ ವಿಭಗದ ಸಿಇಎನ್ ಪೊಲೀಸ್ ಠಾಣೆಗೆ ತೆರಳಿ ಲಿಖಿಯ ದೂರು ನೀಡದ್ದಾರೆ. ಸದ್ಯ ದಕ್ಷಿಣ ವಿಭಗ ಸಿಇಎನ್ ಪೊಲೀಸರು ವಂಚಕರ ಖಾತೆಯಲ್ಲಿದ್ದ ಸುಮಾರು 60 ಲಕ್ಷ ಹಣವನ್ನು ಫ್ರೀಜ್ ಮಾಡಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.

ವಾರ್ತಾ ಭಾರತಿ 15 Dec 2025 9:10 pm

ಮಂಗಳೂರು | ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿ ಸ್ಥಳಾಂತರ

ಮಂಗಳೂರು,ಡಿ.15: ದಕ್ಷಿಣ ಕನ್ನಡ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿ ಡಿಸೆಂಬರ್ 15ರಂದು ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕೇಂದ್ರವಾದ ಪಡೀಲ್ ಪ್ರಜಾಸೌಧ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವಿಳಾಸ: ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪ್ರಜಾಸೌಧ, 2ನೇ ಮಹಡಿ, ಪಡೀಲ್ ಮಂಗಳೂರು-575007 (ದೂ.ಸಂ:-0824-2459494) ಇಮೇಲ್- dsodes.dakshinakannada@gmail.com ಎಂದು ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 15 Dec 2025 9:10 pm

ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ

ಬೆಂಗಳೂರು : ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ವಾಹನವನ್ನು ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್/ಸೀಟ್‍ಬೆಲ್ಟ್ ಧರಿಸುವುದರ ಜೊತೆಗೆ ಎಲ್ಲ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಬೆಂಗಳೂರು ಸಂಚಾರ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ. ಸೋಮವಾರ ಸುತ್ತೋಲೆ ಹೊರಡಿಸಿರುವ ಅವರು, ಮುಂದಿನ ದಿನಗಳಲ್ಲಿ ಸಂಚಾರ ಪೊಲೀಸರಿಂದ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಇಂತಹ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ರೀತ್ಯಾ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪೊಲೀಸರಿಂದಲೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳ ಹೆಚ್ಚಳವಾಗುತ್ತಿದ್ದು, ಸಂಚಾರ ನಿಯಮಗಳ ಪಾಲನೆಗೆ ಪೊಲೀಸರು ಪ್ರಾಮುಖ್ಯತೆ ನೀಡಬೇಕು. ಪೊಲೀಸರೇ ಸಂಚಾರ ನಿಯಮಗಳ ಉಲ್ಲಂಘಿಸಿದರೆ, ಪ್ರಶ್ನಿಸುವ ನೈತಿಕತೆ ಇರುವುದಿಲ್ಲ. ಜೊತೆಗೆ ಸಾರ್ವಜನಿಕರಿಂದ ಟೀಕೆಗಳಿಗೆ ಒಳಗಾಗಬೇಕಾಗುತ್ತದೆ. ಹೀಗಾಗಿ ಸಂಚಾರ ಪೊಲೀಸರಿಂದ ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಐಎಂವಿ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಕಾನೂನನ್ನು ಜಾರಿಗೆ ತರುವ ಆರಕ್ಷಕರೇ ಸಂಚಾರ ನಿಯಮಗಳನ್ನು ಪಾಲಿಸದೇ ವಾಹನ ಚಾಲನೆ ಮಾಡುತ್ತಿರುವ ಪ್ರಕರಣಗಳು ಕಂಡುಬಂದಿರುತ್ತವೆ. ಇದರಲ್ಲಿ ಪ್ರಮುಖವಾಗಿ ಸೀಟ್‍ಬೆಲ್ಟ್ ಧರಿಸದೇ ಇರುವುದು ಹಾಗೂ ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಮತ್ತಿತರ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ವರದಿಯಾಗಿವೆ. ಸಂಚಾರ ನಿಯಮಗಳನ್ನು ಪಾಲನೆ ಮಾಡುವುದು ಕೇವಲ ನಾಗರಿಕರಿಗೆ ಅನ್ವಯಿಸುವುದಿಲ್ಲ. ಕಾನೂನಿನ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಪೊಲೀಸ್ ಅಧಿಕಾರಿಗಳು ಸಂಚಾರ ನಿಯಮಗಳಿಗೆ ಬಹಳ ಪ್ರಾಮುಖ್ಯತೆಯನ್ನು ನೀಡಬೇಕಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ವಾರ್ತಾ ಭಾರತಿ 15 Dec 2025 9:05 pm

ಪರಪ್ಪನ ಅಗ್ರಹಾರ ಜೈಲಿನ ಇಂಚಿಂಚೂ ಪರಿಶೀಲಿಸಿದ ಅಲೋಕ್‌ ಕುಮಾರ್‌, ದರ್ಶನ್‌ ಸೆಲ್‌ಗೂ ಭೇಟಿ; ಏನಂದ್ರು ನಟ?

ನೂತನ ಡಿಜಿಪಿ ಅಲೋಕ್ ಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದರು. ಕೈದಿಗಳ ಊಟ, ವಸತಿ ಬಗ್ಗೆ ವಿಚಾರಿಸಿದ ಅವರು, ಮೊಬೈಲ್ ಬಳಕೆ, ಗಾಂಜಾ, ಬೀಡಿ, ಸಿಗರೇಟ್ ಮುಂತಾದ ಅಕ್ರಮ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ತಾಕೀತು ಮಾಡಿದರು. ನಟ ದರ್ಶನ್ ಅವರ ಬ್ಯಾರೆಕ್‌ಗೂ ಭೇಟಿ ನೀಡಿ ಮಾಹಿತಿ ಪಡೆದರು.

ವಿಜಯ ಕರ್ನಾಟಕ 15 Dec 2025 9:03 pm

ಸಾರ್ವಜನಿಕ ಸಮಾರಂಭದಲ್ಲೇ ಮಹಿಳಾ ವೈದ್ಯೆಯ ಹಿಜಾಬ್ ಎಳೆದ ನಿತೀಶ್ ಕುಮಾರ್; ಬಿಹಾರ ಸಿಎಂ ನಡೆಗೆ ವಿಪಕ್ಷಗಳು ಕಿಡಿ

ಬಿಹಾರದ ಪಾಟ್ನಾದಲ್ಲಿ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರ ವಿತರಿಸುವ ಸರ್ಕಾರಿ ಸಮಾರಂಭವೊಂದರಲ್ಲಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವೇದಿಕೆಯ ಮೇಲೆಯೇ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆಸಿದ ಘಟನೆ ನಡೆದಿದೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯನ್ನು 'ಅತ್ಯಂತ ಕೀಳುಮಟ್ಟದ ಕೃತ್ಯ' ಎಂದು ಕರೆದಿರುವ ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳು, ಮುಖ್ಯಮಂತ್ರಿಗಳ ವರ್ತನೆಯನ್ನು ಕಟುವಾಗಿ ಟೀಕಿಸಿವೆ. ಮಹಿಳೆಯರ ಗೌರವಕ್ಕೆ ಧಕ್ಕೆ ತರುವಂತಹ ಈ ನಡೆಗಾಗಿ ನಿತೀಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿವೆ.

ವಿಜಯ ಕರ್ನಾಟಕ 15 Dec 2025 9:01 pm

ಶಾಮನೂರು ಶಿವಶಂಕರಪ್ಪ: ಅಂದಿನ JDS ಸಿಎಂ ಕೊಟ್ಟ ಶಿಕ್ಷಣ ಸಚಿವ ಸ್ಥಾನದ ಆಫರ್‌ ಒಲ್ಲೆ ಎಂದಿದ್ದ ಪಕ್ಷ ನಿಷ್ಠ!

ಸಚಿವ ಸ್ಥಾನದ ಆಮಿಷವಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆ ತೋರಿದ ಶಾಮನೂರು ಶಿವಶಂಕರಪ್ಪನವರ ಘಟನೆಯನ್ನು ಕಾಂಗ್ರೆಸ್ ಮುಖಂಡ ಡಿ. ಬಸವರಾಜ್ ನೆನಪಿಸಿಕೊಂಡಿದ್ದಾರೆ. ಪಕ್ಷ ಬದಲಿಸಿದ್ದರೆ ಮುಖ್ಯಮಂತ್ರಿಯಾಗುವ ಅವಕಾಶವಿದ್ದರೂ, ಕಾಂಗ್ರೆಸ್ ಪಕ್ಷವನ್ನು ಬಿಡದೆ ತಮ್ಮ ನಿಷ್ಠೆಯನ್ನು ಪ್ರದರ್ಶಿಸಿದರು. ಮೂರು ದಶಕಗಳ ಕಾಲ ಕೆಪಿಸಿಸಿ ಖಜಾಂಚಿಯಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದರು.

ವಿಜಯ ಕರ್ನಾಟಕ 15 Dec 2025 8:57 pm

ಶಿಥಿಲಾವಸ್ಥೆಯ ನೆಪ: ಬಳಕುಂಜೆ - ಪಲಿಮಾರು ಸೇತುವೆ ಬಂದ್

► ಸೇತುವೆ ಶೀಘ್ರ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಿಸಲು ಗ್ರಾಮಸ್ಥರ ಆಗ್ರಹ ► ನ್ಯಾ.ಉಳೆಪಾಡಿ, ಮುನೀರ್ ಕಾಟಿಪಳ್ಳ ನೇತೃತ್ವದ ನಿಯೋಗ ಸ್ಥಳಕ್ಕೆ ಭೇಟಿ

ವಾರ್ತಾ ಭಾರತಿ 15 Dec 2025 8:49 pm

ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಉಚಿತವಾಗಿ ಲಸಿಕೆ ನೀಡುವಂತೆ ಒತ್ತಾಯ

ಸಚಿವ ದಿನೇಶ್ ಗುಂಡೂರಾವ್‌ಗೆ ರಾಜ್ಯ ಮಹಿಳಾ ಆಯೋಗ ಪತ್ರ

ವಾರ್ತಾ ಭಾರತಿ 15 Dec 2025 8:44 pm

ರಾಜ್ಯದೆಲ್ಲೆಡೆ ಮುಂದುವರಿಯಲಿದೆ ಚಳಿಯ ವಾತಾವರಣ : ಹವಾಮಾನ ಇಲಾಖೆ

ಬೀದರ್‌ನಲ್ಲಿ ಕನಿಷ್ಠ 7.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

ವಾರ್ತಾ ಭಾರತಿ 15 Dec 2025 8:35 pm

ರಾಯಚೂರು| ಬಳಗಾನೂರು ಪಟ್ಟಣ ಪಂಚಾಯಿತಿ ಜನವಿರೋಧಿ ನಡೆ ಖಂಡಿಸಿ ಪ್ರತಿಭಟನೆ

ರಾಯಚೂರು: ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯ, ಭ್ರಷ್ಟಾಚಾರ ಮತ್ತು ಜನವಿರೋಧಿ ನಡೆಯ ವಿರುದ್ದ ಅಖಿಲ ಭಾರತ ಕಿಸಾನ್ ಸಭಾ ಮಸ್ಕಿ ತಾಲೂಕು ಘಟಕದ ವತಿಯಿಂದ ಸೋಮವಾರ ಬೆಳಿಗ್ಗೆ ಮಸ್ಕಿಯ ಡಾ.ಬಿ.ಆರ್.ಅಂಬೇಡ್ಕರ್‌ ಪುತ್ತಳಿಯ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಸಿಪಿಐಎಂಎಲ್ ರೆಡ್ ಸ್ಟಾರ್ ರಾಜ್ಯಸಮಿತಿ ಸದಸ್ಯ ಎಂ.ಗಂಗಾಧರ್ ಬುದ್ದಿನ್ನಿ, ಬಳಗಾನೂರು ಪಟ್ಟಣ ಪಂಚಾಯಿತಿ ಅವ್ಯವಸ್ಥೆಯ ಆಗರವಾಗಿದೆ. ಸರ್ವೆ ನಂಬರ್ 509ರ ಜಮೀನಿನಲ್ಲಿ ಹಲವಾರು ಕುಟುಂಬಗಳು ವಾಸಮಾಡುತ್ತಿದ್ದಾರೆ. ಆದರೆ ಖಾಸಗಿ ವ್ಯಕ್ತಿಗಳು ಪಶ್ಚಿಮಕ್ಕಿರುವ ಐದು ಅಡಿ ರಸ್ತೆಯನ್ನು ವಿನಾಕಾರಣ ಬಂದ್ ಮಾಡಿ ನಿವಾಸಿಗಳ ಓಡಾಟಕ್ಕೆ ತೊಂದರೆ ನೀಡುತ್ತಿದ್ದಾರೆ. ಇದನ್ನು ಕೂಡಲೇ ಸ್ಥಳ ಪರಿಶೀಲನೆ ಮಾಡಿ ಸರಿಪಡಿಸಬೇಕು. ಬಸವೇಶ್ವರ ನಗರದಲ್ಲಿ ಅಂಬೇಡ್ಕರ್ ಭವನವನ್ನು ನಿರ್ಮಿಸಬೇಕು ಹಾಗೂ ಹೈಟೆಕ್ ಶೌಚಾಲಯ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ಪರಿಸರ, ಜನ, ಜಾನುವಾರುಗಳಿಗೆ ಕಂಟಕವಾಗಿರುವ ಬುದ್ದಿನ್ನಿ ಮತ್ತು ಜಾಲವಾಡಗಿಯಲ್ಲಿನ ಅಕ್ರಮ ಮರಳು ಗಣಿಗಾರಿಕೆ ತಡೆಯಬೇಕು. ಬಯಲು ಶೌಚಾಲಯ ಮುಕ್ತ ಮಾಡಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.   ಈ ವೇಳೆ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಾರುತಿ ಜಿನ್ನಾಪೂರು, ಹೋರಾಟಗಾರ ಬಸವರಾಜ ಎಕ್ಕಿ, ಕರ್ನಾಟಕ ರೈತಸಂಘದ ಮಸ್ಕಿ ತಾಲೂಕು ಘಟಕದ ಅಧ್ಯಕ್ಷ ಸಂತೋಷ್‌ ಹಿರೇದಿನ್ನಿ, ತಾಲೂಕಾ ಕಾರ್ಯದರ್ಶಿ ವೆಂಕಟೇಶ್‌ ನಾಯಕ್‌, ಹುಲಿಗೆಪ್ಪ, ಶಾಂತಮೂರ್ತಿ, ಮರಿಯಪ್ಪ, ದುರುಗಪ್ಪ, ಶರಣಪ್ಪ, ಶಿವಣ್ಣ, ಹನುಮಂತ, ಹುಚ್ಚಪ್ಪ, ಯಂಕಪ್ಪ ಭಾಗವಹಿಸಿದ್ದರು.

ವಾರ್ತಾ ಭಾರತಿ 15 Dec 2025 8:28 pm

ಯುವನಿಧಿ ಯೋಜನೆಯಡಿ 2.84 ಲಕ್ಷ ಫಲಾನುಭವಿಗಳಿಗೆ 757 ಕೋಟಿ ನಿರುದ್ಯೋಗ ಭತ್ಯೆ; ಉದ್ಯೋಗ ಸಿಕ್ಕಿದ್ದು ಎಷ್ಟು ಜನರಿಗೆ?

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟೀ ಯೋಜನೆಯಲ್ಲಿ, ಯುವನಿಧಿ ಯೋಜನೆ ಕೂಡ ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯ ಕುರಿತು ಸರ್ಕಾರ ಬಿಡುಗಡೆ ಮಾಡಿರುವ ವರದಿ ಇದೀಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ನಿರುದ್ಯೋಗಿ ಯುವಕರಿಗೆ 3,000 ಭತ್ಯೆ ನೀಡುವ ಯೋಜನೆಯು ಒಟ್ಟು 2,84,802 ಫಲಾನುಭವಿಗಳನ್ನು ಹೊಂದಿದ್ದು, ಇದುವರೆಗೂ ಒಟ್ಟು 757.92 ಕೋಟಿ ರೂ. ನಿರುದ್ಯೋಗ ಭತ್ಯೆ ಒದಗಿಸಲಾಗಿದೆ. ಆದರೆ ಈ ಯೋಜನೆಯಡಿ ಕೇವಲ 2,327 ಯುವಕರು ಉದ್ಯೋಗ ಪಡೆದುಕೊಂಡಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

ವಿಜಯ ಕರ್ನಾಟಕ 15 Dec 2025 8:26 pm

ಮಂಗಳೂರು | ಯಕ್ಷಮಿತ್ರರು ಟ್ರಸ್ಟ್ ನಿಂದ ದಿನದರ್ಶಿಕೆ ಬಿಡುಗಡೆ

ಮಂಗಳೂರು, ಡಿ.15: ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ ವತಿಯಿಂದ 2026 ಹೊಸ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭ ಬೆಂಗಳೂರಿನ ನಾಗಸಂದ್ರ ಕರಿಓಬನಹಳ್ಳಿ ‘ಶಬರಿಗಿರಿ’ಯಲ್ಲಿ ಶನಿವಾರ ನಡೆಯಿತು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ ಭಟ್ ದಿನದರ್ಶಿಕೆ ಬಿಡುಗಡೆಗೊಳಿಸಿದರು. ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ ಕಾರ್ಯದರ್ಶಿ ಶ್ಯಾಮ ಸೂರ್ಯ ಮುಳಿಗದ್ದೆ ಮಾತನಾಡಿದರು, ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ ಗೌರವಾಧ್ಯಕ್ಷ ಆರ್.ಕೆ. ಭಟ್ ಬೆಳ್ಳಾರೆ ಅತಿಥಿಯಾಗಿದ್ದರು. ಟ್ರಸ್ಟ್ ಉಪಾಧ್ಯಕ್ಷ ಕಿರಣ್ಕುಮಾರ್ ಉಪಸ್ಥಿತರಿದ್ದರು. ಈ ಸಂದರ್ಭ ಡಾ.ಟಿ. ಶಾಮ ಭಟ್ ಹಾಗೂ ಕಲಾಪೋಷಕ ಆರ್.ಕೆ. ಭಟ್ ಬೆಳ್ಳಾರೆ ಅವರನ್ನು ಗೌರವಿಸಲಾಯಿತು. ವಿದುಷಿ ಪ್ರಣತಿ ಚೈತನ್ಯ ಪದ್ಯಾಣ ಮತ್ತು ಬಳಗದಿಂದ ಭರತನಾಟ್ಯ ಹಾಗೂ ಭವ್ಯಶ್ರೀ ಕುಲ್ಕುಂದ ಮತ್ತು ಸಂಪೂರ್ಣ ಮಹಿಳಾ ಕಲಾವಿದರನ್ನು ಒಳಗೊಂಡ ತಂಡದಿಂದ ಯಕ್ಷ ಗಾನ ವೈಭವ ನೆರವೇರಿತು.

ವಾರ್ತಾ ಭಾರತಿ 15 Dec 2025 8:18 pm

ಕಲಬುರಗಿ| ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣ: ಐವರು ಆರೋಪಿಗಳ ಬಂಧನ

ಕಲಬುರಗಿ: ಜೇವರ್ಗಿ ಹಾಗೂ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಹೇಳಿದ್ದಾರೆ. ನಗರದ ಪೊಲೀಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಡ್ಡೂರು ಶ್ರೀನಿವಾಸುಲು,  ಶಹಾಬಾದ್ ನಗರದಲ್ಲಿ ಮೋಟಾರ್ ಸೈಕಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು, ಜಿಲ್ಲೆಯ ಹೊನಗುಂಟಾದ ಚಂದ್ರಲಾ ಪರಮೇಶ್ವರಿ ದೇವಸ್ಥಾನದ ಕಳ್ಳತನದ ಆರೋಪಿ ಮಹಾರಾಷ್ಟ್ರ ಮೂಲದ ಚಿರಾಗ್ ರಾಠೋಡ್‌ ಹಾಗೂ ಗುಡೂರಿನಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಸುನೀಲ್, ಹಣಕ್ಕಾಗಿ ಸಂಬಂಧಿಕರ ಮೇಲೆ ಹಲ್ಲೆ ಮಾಡಿ ಮನೆಯನ್ನು ದೋಚಿ ಪರಾರಿಯಾದ ಮಹಮ್ಮದ್ ಯೂನುಸ್ ನನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದರು. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ 51 ಗ್ರಾಂ ಚಿನ್ನ, 212 ಗ್ರಾಂ ಬೆಳ್ಳಿ ಜಪ್ತಿ ಮಾಡಲಾಗಿದೆ. ಅದೇ ರೀತಿ ಜೇವರ್ಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನವಾಗಿದ್ದ 16 ಗ್ರಾಂ ಚಿನ್ನ ಜಪ್ತಿಗೊಳಿಸಲಾಗಿದೆ. ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಮೋಟಾರ್ ಸೈಕಲ್ ಕಳ್ಳತನ ಮತ್ತು  ದೇವಸ್ಥಾನದ ಆಭರಣ ಕಳ್ಳತನ ಪ್ರಕರಣವನ್ನು ಬೇಧಿಸಿ 10 ಗ್ರಾಂ ಚಿನ್ನ ಹಾಗೂ 3 ಮೋಟಾರ್ ಸೈಕಲ್ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ವಾರ್ತಾ ಭಾರತಿ 15 Dec 2025 8:18 pm

ಮಂಗಳೂರು | ತುಳುನಾಡಿನ ಅಸ್ಮಿತೆ ದೈವಾರಾಧನೆಯ ನಿಯಮಗಳ ಪಾಲನೆಯಾಗಲಿ: ತಮ್ಮಣ್ಣ ಶೆಟ್ಟಿ

ಮಂಗಳೂರು, ಡಿ.15: ಆಧುನಿಕತೆ, ಪ್ರಚಾರದ ಭರದಲ್ಲಿ ತುಳುನಾಡಿನ ಅಸ್ಮಿತೆಯಾದ ದೈವರಾಧಾನೆಯ ಕಟ್ಟುಕಟ್ಟಳೆಗಳು, ನಿಯಮಗಳನ್ನು ಮೀರಿ ವರ್ತಿಸಲಾಗುತ್ತಿದೆ. ಮೌಖಿಕವಾಗಿ ನಡೆದುಕೊಂಡು ಬಂದಿರುವ ದೈವಾರಾಧನೆಯೆಂಬ ನಂಬಿಕೆಯ ಸತ್ವವನ್ನು ಉಳಿಸುವ ಕೆಲಸ ಮುಂದಿನ ಪೀಳಿಗೆಗೆ ಆಗಬೇಕಾಗಿದೆ ಎಂದು ತಮ್ಮಣ್ಣ ಶೆಟ್ಟಿ ತಿಳಿಸಿದ್ದಾರೆ. ಬಾರೆಬೈಲ್ ನ ಜಾರಂದಾಯ ಬಂಟ ದೈವಸ್ಥಾನದಲ್ಲಿ ಹೊಂಬಾಳೆ ತಂಡ ಇತ್ತೀಚೆಗೆ ಹರಕೆ ನೇಮ ನೀಡಿದ ಕುರಿತಂತೆ ಎದ್ದಿರುವ ವಿವಾದಕ್ಕೆ ಸಂಬಂಧಿಸಿ ತನ್ನ ಮೇಲೆ ತಪ್ಪು ಮಾಡಿರುವ ಆರೋಪಕ್ಕೆ ಸಂಬಂಧಿಸಿ ಸೋಮವಾರ ಪ್ರೆಸ್ ಕ್ಲಬ್ ನಲ್ಲಿ  ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಾರೆಬೈಲ್ ವಿವಾದಕ್ಕೆ ಸಂಬಂಧಿಸಿ ವೈಯಕ್ತಿಕವಾಗಿ ಕ್ಷೇತ್ರ, ದೈವ ಹಾಗೂ ಆಡಳಿತ ಮಂಡಳಿ ಬಗ್ಗೆ ಎಲ್ಲಿಯೂ ಸ್ವರ ಎತ್ತಿಲ್ಲ ಎಂದು ಹೇಳಿದ ಅವರು, ದೈವಾರಾಧನೆಯ ಸಂದರ್ಭ ಕಂಡುಬರುವ ಲೋಪದೋಷಗಳನ್ನು ಸಮಾಜಕ್ಕೆ ತಿಳಿಸುವ ಕೆಲಸ ಮಾಡುತ್ತಿದ್ದೇನೆ. ಮುಂದೆಯೂ ಮಾಡುತ್ತೇನೆ ಎಂದರು. ದೈವಾರಾಧನೆಯ ಕುರಿತಂತೆ ನಡೆಯುತ್ತಿರುವ ಅಪಪ್ರಚಾರದ ಕುರಿತಂತೆ ಬಾರೆಬೈಲ್ ಕ್ಷೇತ್ರದಲ್ಲಿ ಇತ್ತೀಚೆಗೆ ಪ್ರಾರ್ಥನೆ ಸಲ್ಲಿಕೆಯಾಗಿದ್ದು, ಇಂತಹ ಕಾರ್ಯಗಳು ಪ್ರತಿ ಗ್ರಾಮದಲ್ಲಿಯೂ ನಡೆಯಬೇಕಾಗಿದೆ. ಜಾರಂದಾಯ ಕ್ಷೇತ್ರವನ್ನು ಪ್ರತಿಷ್ಟೆ, ಪ್ರಶಸ್ತಿಗಾಗಿ ದುರುಪಯೋಗ ಮಾಡಿರುವುದು ಅಪಪ್ರಚಾರ ಮಾಡಿರುವುದು ಯಾರೆಂದು ಸ್ಪಷ್ಟವಾಗಬೇಕಿದೆ. ದೈವದ ಕ್ಷೇತ್ರದಲ್ಲಿ ಏರು ದನಿಯಲ್ಲಿ ಮಾತನಾಡಬಾರದು. ಕಾರಣಿಕದ ಸ್ಥಳದಲ್ಲಿ ಸುಳ್ಳು ಸಂದೇಶ ನೀಡಬಾರದು. ತೆಂಬರೆ ಕೋಲಿನಿಂದ ದೌರ್ಜನ್ಯ ಎಸಗಬಾರದು. ಆದರೆ ಅದೆಲ್ಲವೂ ಆ ಕ್ಷೇತ್ರದಲ್ಲಿ ನಡೆದಿದೆ ಎಂದವರು ಆಕ್ಷೇಪಿಸಿದರು. ದೈವಾರಾಧನೆಯ ಇತಿಹಾಸದಲ್ಲಿ ದೈವ ಸಂಬಂಧಿತ ಪ್ರಾರ್ಥನೆ ಮಾತೃಭಾಷೆಯಾದ ತುಳುವಿನಲ್ಲಿಯೇ ಆಗಬೇಕು. ಆದರೆ ಹರಕೆ ನೇಮದ ವೇಳೆ ಕನ್ನಡದಲ್ಲಿ ನಡೆದಿದೆ. ಚಲನಚಿತ್ರ ನಟರಿಗೋಸ್ಕರ ನಿಯಮಗಳನ್ನು ಮುರಿದು ಹರಕೆ ನೇಮ ಮಾಡುವುದು, ಅವರಿಗೆ ಬೇಕಾದ ಭಾಷೆಯಲ್ಲಿ ನುಡಿ ಹೇಳುವುದು ನಡೆಯುತ್ತಾ ಸಾಗಿದರೆ ಮುಂದೆ ತುಳುನಾಡಿನ ನಂಬಿಕೆಯ ದೈವಾರಾಧನೆ ಪ್ಯಾನ್ ಇಂಡಿಯಾ ಆಗಿ ಬದಲಾಗುವ ಆತಂಕವಿದೆ. ದೈವಾರಾಧನೆಯಲ್ಲಿ ಮಾಂತ್ರಿಕ ದೃಷ್ಟಿ ಇರದೆ ಕಾರಣಿಕದ ದೃಷ್ಟಿ ಹೊಂದಿರಬೇಕು. ದೈವಾರಾಧನೆಯನ್ನು ವ್ಯಾಪಾರ, ವ್ಯವಹಾರಕ್ಕೆ ಬಳಸಬಾರದು. ಸಂಪ್ರದಾಯ ಮುರಿಯದೆ ದೈವಾರಾಧನೆಯನ್ನು ಮುಂದುವರಿಸಬೇಕೆಂಬುದು ನನ್ನ ಕಳಕಳಿಯಾಗಿದೆ ಎಂದವರು ಹೇಳಿದರು. ತುಳುನಾಡಿನಲ್ಲಿ ದೈವಾರಾಧನೆಗೆ ಅನ್ಯ ಧರ್ಮೀಯರಿಂದ ಯಾವುದೇ ಅಪಪ್ರಚಾರ ನಡೆದಿಲ್ಲ. ಬದಲಾಗಿ ಇಲ್ಲಿನ ಕ್ರೈಸ್ತರು, ಮುಸಲ್ಮಾನರನ್ನು ಒಳಗೊಂಡು ಇಲ್ಲಿನ ದೈವಾರಾಧನೆಗಳು ನಡೆಯುತ್ತಿವೆ. ಹಾಗಾಗಿ ಧರ್ಮಗಳ ನಡುವೆ ಎತ್ತಿಕಟ್ಟುವ ಕೆಲಸ ಬೇಡ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ತಮ್ಮಣ್ಣ ಶೆಟ್ಟಿ ಪ್ರತಿಕ್ರಿಯಿಸಿದರು.

ವಾರ್ತಾ ಭಾರತಿ 15 Dec 2025 8:16 pm

‘Prime Minister Professorship’ ಯೋಜನೆಯಡಿ ಪ್ರೊಫೆಸರ್ ಆಗಿ ಡಾ. ಕಿಶೋರ್ ಎಂ. ಪಕ್ನಿಕರ್ ಆಯ್ಕೆ; ಏನಿದು ಯೋಜನೆ?

ಈ ಯೋಜನೆಡಿ ಆಯ್ಕೆಯಾದ ಸಂಶೋಧಕರಿಗೆ ವಾರ್ಷಿಕ 30 ಲಕ್ಷ ರೂ. ಸಂಬಳ!

ವಾರ್ತಾ ಭಾರತಿ 15 Dec 2025 8:10 pm

ಆದೇಶ ಅಪ್ಲೋಡ್ ಮಾಡಲು ಯಾವ ವ್ಯವಸ್ಥೆ ಇದೆ?; ಎನ್‌ಸಿಎಲ್‌ಟಿ ರಿಜಿಸ್ಟ್ರಾರ್‌ರಿಂದ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು : ನಗರದಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನುಗಳ ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ತನ್ನ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ಕಾಲಮಿತಿಯಲ್ಲಿ ಅಪ್ಲೋಡ್ ಮಾಡುವ ವ್ಯವಸ್ಥೆ ಹೊಂದಿದೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ನ್ಯಾಯಮಂಡಳಿಯ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ನಿರ್ದೇಶಿಸಿದೆ. ಕಂಪನಿ ವ್ಯಾಜ್ಯವೊಂದರಲ್ಲಿ ಎನ್‌ಸಿಎಲ್‌‌ಟಿ ಕಳೆದ ಜುಲೈ 29ರಂದೇ ಆದೇಶ ನೀಡಿದ್ದರೂ ಈವರೆಗೂ ಅದರ ಅಧಿಕೃತ ಪ್ರತಿಯನ್ನು ನೀಡಿಲ್ಲ. ಆದ್ದರಿಂದ, ಈ ಸಂಬಂಧ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಫೀನಿಕ್ಸ್‌ ಆರ್ಕ್‌ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ವ್ಯಾಜ್ಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಂಪನಿ ಕಾನೂನುಗಳ ನ್ಯಾಯಮಂಡಳಿ ಕಳೆದ ಜುಲೈ 29ರಂದು ಮೌಖಿಕವಾಗಿ ತೀರ್ಪು ಪ್ರಕಟಿಸಿದೆ. ಆದರೆ, ಅದರ ದೃಢೀಕೃತ ಪ್ರತಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಪ್ರಕರಣದ ಬಗ್ಗೆ ನಾವು ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣ (ಎನ್‌ಸಿಎಲ್‌‌ಎಟಿ) ಮುಂದೆಯೂ ಮೇಲ್ಮನವಿ ಸಲ್ಲಿಸಿದ್ದೇವೆ. ಅದೂ ಸಹ ಆದಷ್ಟು ಬೇಗ ಪ್ರಮಾಣೀಕೃತ ಪ್ರತಿ ಬಿಡುಗಡೆಗೆ ಆದೇಶಿಸಿದೆ. ಆದರೆ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಎನ್‌ಸಿಎಲ್‌ಟಿ ಪರ ವಕೀಲರು, ರಿಜಿಸ್ಟ್ರಾರ್‌ ನೀಡಿರುವ ಮಾಹಿತಿಯಂತೆ ಆದಷ್ಟು ಶೀಘ್ರ ಅದೇಶದ ಪ್ರತಿಯನ್ನು ಅಪ್‌ಲೋಡ್‌ ಮಾಡಲಾಗುವುದು ಎಂದರು. ಇದನ್ನು ಆಲಿಸಿದ ನ್ಯಾಯಪೀಠ, ಹೈಕೋರ್ಟ್‌ ನೀಡುವ ಆದೇಶಗಳಲ್ಲಿ ದಿನಾಂಕ ಮತ್ತು ಸಮಯದ ಮುದ್ರೆ (ಸ್ಟಾಂಪ್‌) ಇರುತ್ತದೆ, ಅದೇ ಮಾದರಿಯನ್ನು ಎನ್‌ಸಿಎಲ್‌ಟಿ ಕೂಡ ಅನುಸರಿಸಬಹುದಲ್ಲವೇ ಎಂದು ಮೌಖಿಕವಾಗಿ ಕೇಳಿತಲ್ಲದೆ, ನ್ಯಾಯಮಂಡಳಿಗಳು ಮಾಡುವ ಆದೇಶಗಳನ್ನು ಗರಿಷ್ಠ ಒಂದು ವಾರದಲ್ಲಿ ಅಪ್‌ಲೋಡ್‌ ಮಾಡಬೇಕು. ಹೈಕೋರ್ಟ್‌ನಲ್ಲಿ ಸದ್ಯ ಅನುಸರಿಸುತ್ತಿರುವ ವ್ಯವಸ್ಥೆಯನ್ನೇ ಅಲ್ಲೂ ಪಾಲಿಸಬೇಕಾಗುತ್ತದೆ. ಆದ್ದರಿಂದ, ಸದ್ಯ ಅಲ್ಲಿ ಯಾವ ವ್ಯವಸ್ಥೆ ಜಾರಿಯಲ್ಲಿದೆ ಎಂಬ ಬಗ್ಗೆ ನ್ಯಾಯಮಂಡಳಿಯ ರಿಜಿಸ್ಟ್ರಾರ್‌ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿ ಅರ್ಜಿ ವಿಚಾರಣೆ ಮುಂದೂಡಿತು.

ವಾರ್ತಾ ಭಾರತಿ 15 Dec 2025 8:06 pm

ಬಂಟ್ವಾಳ | ನುಸುರತ್ ಮಿಲಾದುನ್ನಭಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಶಾಂತಿ ಅಂಗಡಿ ಆಯ್ಕೆ

ಬಂಟ್ವಾಳ : ಬಿ.ಸಿ.ರೋಡ್ ಸಮೀಪದ ಶಾಂತಿಅಂಗಡಿ ನುಸುರತ್ ಮಿಲಾದುನ್ನಭಿ ಸಂಘ (ರಿ) ಇದರ ಅಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಶಾಂತಿ ಅಂಗಡಿ ಆಯ್ಕೆಯಾಗಿದ್ದಾರೆ. ಮಿತ್ತಬೈಲ್ ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಉಮರುಲ್ ಫಾರೂಕ್ ಫೈಝಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವ ಅಧ್ಯಕ್ಷರಾಗಿ ಮುಹಮ್ಮದ್ ಮಜಲ್, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಎಸ್, ಕೋಶಧಿಕಾರಿಯಾಗಿ ಅಬೂಬಕ್ಕರ್ ಕರಾವಳಿ, ಉಪಾಧ್ಯಕ್ಷರಾಗಿ ಸಾಹುಲ್ ಅದ್ದೇಡಿ, ಸಾದಿಕ್ ತಾಳಿಪಡ್ಪು, ಜೊತೆ ಕಾರ್ಯದರ್ಶಿಗಳಾಗಿ ಆದಂ ಪಲ್ಲ, ಇಸ್ಮಾಯಿಲ್ ಪಲ್ಲ, ಲೆಕ್ಕ ಪರಿಶೋಧಕರಾಗಿ ಹಮೀದ್ ಪಲ್ಲ ಅವರು ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ 12 ಮಂದಿಯನ್ನು ಆರಿಸಲಾಯಿತು. ಅಶ್ರಫ್ ಎಸ್ ಸ್ವಾಗತಿಸಿ, ಇಸ್ಮಾಯಿಲ್ ಪಲ್ಲ ವಂದಿಸಿದರು.

ವಾರ್ತಾ ಭಾರತಿ 15 Dec 2025 8:01 pm

ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-30 | 5 ಶತಕೋಟಿ ಡಾಲರ್‌ ಮೊತ್ತದ ಹೂಡಿಕೆ ಆಕರ್ಷಿಸುವ ಗುರಿ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಸರಕಾರದ 'ಬಾಹ್ಯಾಕಾಶ ತಂತ್ರಜ್ಞಾನ ನೀತಿಯು 2025-30ʼ ದೇಶದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಕರ್ನಾಟಕವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿನ ಮಹತ್ವದ ಹೆಜ್ಜೆಯಾಗಿದ್ದು, 5 ಶತಕೋಟಿ ಡಾಲರ್‌ ಮೊತ್ತದ ಹೂಡಿಕೆ ಆಕರ್ಷಿಸುವ ಗುರಿ ಹೊಂದಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸೋಮವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ನವೆಂಬರ್‌ನಲ್ಲಿ ನಡೆದಿದ್ದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಸಂದರ್ಭದಲ್ಲಿ ಪ್ರಕಟಿಸಲಾಗಿರುವ ಈ ನೀತಿ ರೂಪಿಸಲಾಯಿತು. ಈ ನೀತಿಯಡಿ 2034ರ ವೇಳೆಗೆ ದೇಶದ ಬಾಹ್ಯಾಕಾಶ ತಂತ್ರಜ್ಞಾನ ಮಾರುಕಟ್ಟೆಯಲ್ಲಿ ಶೇ.50 ರಷ್ಟು ಪಾಲು ಸ್ವಾಧೀನಪಡಿಸಿಕೊಳ್ಳಲು ಮತ್ತು ಜಾಗತಿಕ ಬಾಹ್ಯಾಕಾಶ ಆರ್ಥಿಕತೆಯಲ್ಲಿ ಶೇ.5ರಷ್ಟು ಪಾಲು ಹೊಂದುವ ಗುರಿ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಬೆಳವಣಿಗೆಗೆ ವೇಗ ನೀಡಲು ರಾಜ್ಯವು ಕಾರ್ಯಸಾಧ್ಯವಾದ ಸ್ಪಷ್ಟ ಗುರಿ ಹೊಂದಿದೆ. ಈ ನೀತಿಯ ಮೂಲಕ, ಕರ್ನಾಟಕವು 500ಕ್ಕೂ ಹೆಚ್ಚು ಬಾಹ್ಯಾಕಾಶ ನವೋದ್ಯಮಗಳು ಮತ್ತು ಕಿರು, ಸೂಕ್ಷ್ಮ ಹಾಗೂ ಮಧ್ಯಮ ಉದ್ದಿಮೆಗಳನ್ನು (ಎಂಎಸ್‌ಎಂಇ) ಬೆಂಬಲಿಸುವುದು, 50 ಸಾವಿರಕ್ಕೂ ಹೆಚ್ಚು ಉನ್ನತ-ಕೌಶಲದ ಉದ್ಯೋಗಗಳನ್ನು ಸೃಷ್ಟಿಸುವುದು ಮತ್ತು ಮುಂಬರುವ ವರ್ಷಗಳಲ್ಲಿ ರಾಜ್ಯದಲ್ಲಿನ ಕಂಪನಿಗಳು 50ಕ್ಕೂ ಹೆಚ್ಚು ಉಪಗ್ರಹಗಳನ್ನು ವಿನ್ಯಾಸಗೊಳಿಸಲು ಮತ್ತು ಉಡಾವಣೆ ಮಾಡಲು ಅನುವು ಮಾಡಿಕೊಡುವ ಗುರಿ ನಿಗದಿಪಡಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಂಗಳೂರು ನಗರವು ಹೊಸ ಚಿಂತನೆಗಳನ್ನು ರಾಷ್ಟ್ರೀಯ ಮತ್ತು ಜಾಗತಿಕವಾಗಿ ಮಹತ್ವದ ಕಾರ್ಯಕ್ರಮಗಳಾಗಿ ಪರಿವರ್ತಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಉಪಗ್ರಹಗಳು ಮತ್ತು ವೈಮಾಂತರಿಕ್ಷ, ರೊಬೊಟಿಕ್ಸ್ ಮತ್ತು ಡೀಪ್‌ಟೆಕ್‌ ವಲಯಗಳಲ್ಲಿ ಭಾರತದ ಜಾಗತಿಕ ಆಕಾಂಕ್ಷೆಗಳು ರೂಪುಗೊಳ್ಳುವ ಸ್ಥಳವಾಗಿ ಬೆಂಗಳೂರು ವಿಶ್ವದಾದ್ಯಂತ ಗಮನ ಸೆಳೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈ ವ್ಯವಸ್ಥೆಯು ಹಿಂದಿನ ದಶಕಗಳಲ್ಲಿ ಎಚ್‌ಎಎಲ್‌, ಎನ್‌ಎಎಲ್‌ ಮತ್ತು ಇಸ್ರೋ ನಂತಹ ಪ್ರತಿಷ್ಠಿತ ಸಂಸ್ಥೆಗಳ ಸ್ಥಾಪನೆಯ ಫಲವಾಗಿ ನಿರ್ಮಾಣಗೊಂಡಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಮ್ಮ ಬಾಹ್ಯಾಕಾಶ ತಂತ್ರಜ್ಞಾನ ನೀತಿಯು ಕರ್ನಾಟಕದ ತಂತ್ರಜ್ಞಾನ ನೇತೃತ್ವದಲ್ಲಿನ ಬೆಳವಣಿಗೆಯ ಮುಂದಿನ ಹಂತವನ್ನು ಪ್ರತಿನಿಧಿಸಲಿದೆ. ಡೀಪ್‌ಟೆಕ್‌ ಸಂಶೋಧನೆ, ತಯಾರಿಕೆ ಮತ್ತು ಕೋರ್ ಸಿಸ್ಟಮ್ಸ್‌ ಒಳಗೊಂಡಂತೆ ವಾಸ್ತವ ಜಗತ್ತಿನ ಸವಾಲುಗಳನ್ನು ಪರಿಹರಿಸಲು ಬಾಹ್ಯಾಕಾಶ ಆಧಾರಿತ ಅಪ್ಲಿಕೇಷನ್ಸ್‌ಗಳನ್ನು ಅಭಿವೃದ್ಧಿಪಡಿಸುವ ಹಾಗೂ ನಾವೀನ್ಯತೆಗಳಿಗೆ ಮಾರುಕಟ್ಟೆ ಒದಗಿಸುವಲ್ಲಿ ರಾಜ್ಯದ ಮುಂಚೂಣಿ ಸ್ಥಾನ ಬಲಪಡಿಸಲು ಈ ನೀತಿಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ನೀತಿಯಡಿ ಹೊಸ ತಲೆಮಾರಿನ ಬಾಹ್ಯಾಕಾಶ ಸಾಮರ್ಥ್ಯಗಳನ್ನು ವೃದ್ಧಿಗೊಳಿಸುವ ಕ್ಷೇತ್ರಗಳಲ್ಲಿ ತೊಡಗಿರುವ ಕಂಪನಿಗಳಿಗೆ ಅಗತ್ಯ ಬೆಂಬಲ ನೀಡಲಾಗುವುದು. ಉದಾಹರಣೆಗೆ ಬಾಹ್ಯಾಕಾಶ ತಂತ್ರಜ್ಞಾನ ತಯಾರಿಕೆ, ವೈಮಾಂತರಿಕ್ಷ ಹಾಗೂ ರಕ್ಷಣಾ ಉದ್ದಿಮೆ ಮತ್ತು ರಕ್ಷಣಾ ವಲಯದ ಬಳಕೆಗೆ ಸುಧಾರಿತ ವೈರ್‌ಲೆಸ್ ಸಂವಹನ ಕ್ಷೇತ್ರಗಳಲ್ಲಿನ ಕಂಪನಿಗಳಿಗೆ ನೆರವು ನೀಡಲಾಗುವುದು. ಇದನ್ನು ಕಾರ್ಯಗತಗೊಳಿಸಲು, ರಾಜ್ಯವು ಪ್ರತ್ಯೇಕ ಬಾಹ್ಯಾಕಾಶ ತಯಾರಿಕಾ ಕ್ಲಸ್ಟರ್‌ಗಳನ್ನು ಸ್ಥಾಪಿಸಲಿದೆ ಎಂದು ಅವರು ನುಡಿದಿದ್ದಾರೆ. ಭಾರತದ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ನಂತಹ ಪ್ರತಿಷ್ಠಿತ ಸಂಸ್ಥೆಗಳ ಜೊತೆಗಿನ ರಾಜ್ಯದ ಬಲವಾದ ಸಾಂಸ್ಥಿಕ ಸಂಪರ್ಕಗಳನ್ನು ಬಳಸಿಕೊಳ್ಳಲಿದೆ. ಈ ನೀತಿಯೊಂದಿಗೆ, ಕರ್ನಾಟಕವು ಈ ವಲಯದಲ್ಲಿನ ನಾವೀನ್ಯತೆ, ತಯಾರಿಕೆ ಮತ್ತು ಸೇವಾ ಕಂಪನಿಗಳು ಯಶಸ್ವಿಯಾಗಲು ಪೂರಕ ವ್ಯವಸ್ಥೆ ಸೃಷ್ಟಿಸಲಿದೆ ಎಂದು ಅವರು ಭರವಸೆ ನೀಡಿದ್ದಾರೆ. ಜಾಗತಿಕ ಬಾಹ್ಯಾಕಾಶ ಆರ್ಥಿಕತೆಯಲ್ಲಿ ಭಾರತದ ಮುಂದಿನ ಹಂತದ ಬೆಳವಣಿಗೆಗೆ ಶಕ್ತಿ ತುಂಬಲು ರಾಜ್ಯವು ಈಗ ಉತ್ತಮ ಸ್ಥಾನದಲ್ಲಿದೆ. ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿಯು ನಾವೀನ್ಯತೆ-ನೇತೃತ್ವದ ಅಭಿವೃದ್ಧಿಗೆ ರಾಜ್ಯದ ಬದ್ಧತೆಯ ಮೇಲೆ ಬೆಳಕು ಚೆಲ್ಲುತ್ತದೆ. ಬಾಹ್ಯಾಕಾಶ ತಂತ್ರಜ್ಞಾನ ಮೌಲ್ಯ ಸರಪಳಿಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುವ ರಾಜ್ಯದ ಮಹತ್ವಾಕಾಂಕ್ಷೆಯನ್ನು ಬಲಪಡಿಸಲಿದೆ ಎಂದು ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 15 Dec 2025 7:59 pm

ಕಾರ್ಕಳ | ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : ಮಾಲಕನಿಗೆ 10 ಸಾವಿರ ರೂ. ದಂಡ

ಕಾರ್ಕಳ : ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮಷೀನ್ ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕಾರ್ಕಳ ನ್ಯಾಯಾಲಯವು ವಾಹನದ ಮಾಲಕ ನಾಗಪ್ಪ ಎಂಬವರಿಗೆ 10 ಸಾವಿರ ದಂಡ ವಿಧಿಸಿದೆ. ಕಾರ್ಕಳ ಪರಿಸರದಲ್ಲಿ ಮಾತ್ರವಲ್ಲ ಜಿಲ್ಲೆಯದ್ಯಂತ ಬೆಳಿಗ್ಗೆ ಕೆಲಸಕ್ಕೆ ಕರೆದುಕೊಂಡು ಮತ್ತು ಕೆಲಸ ಮುಗಿಸಿ ಹಿಂದಿರುಗುವ ಸಂದರ್ಭದಲ್ಲಿ ಕೂಲಿ ಕಾರ್ಮಿಕರನ್ನು ಸಿಮೆಂಟ್ ಕಾಂಕ್ರೀಟ್ ಮಷೀನ್ ನೊಟ್ಟಿಗೆ ತುಂಬಿಕೊಂಡು ಹೋಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಪೊಲೀಸರು ಈ ಬಗ್ಗೆ ಹಲವಾರು ಬಾರಿ ಎಚ್ಚರಿಕೆ ನೀಡಿದರೂ ಕ್ಯಾರೇ ಎನ್ನದ ಕಾಂಟಾಕ್ಟ್ದಾರರು ಮತ್ತದೇ ಚಾಳಿಯನ್ನು ಮುಂದುವರಿಸುತಿದ್ದು, ವಾಹನದಲ್ಲಿ ಇಷ್ಟಬಂದಂತೆ ಕಾರ್ಮಿಕರನ್ನು ತುಂಬಿಸಿಕೊಂಡು, ಅತಿವೇಗ ಹಾಗೂ ನಿರ್ಲಕ್ಷದಿಂದ ವಾಹನ ಚಲಾಯಿಸುವುದು ದಾರಿಯಲ್ಲಿ ಓಡಾಡುವ ಇತರ ವಾಹನಗಳಿಗೂ ತೊಂದರೆಯಾಗುವ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿತ್ತು. ಈ ಬಗ್ಗೆ ಕಾರ್ಯಪ್ರವೃತ್ತರಾದ ಕಾರ್ಕಳ ನಗರ ಪೊಲೀಸರು ವಾಹನವನ್ನು ಬೆನ್ನಟ್ಟಿ ಕಾರ್ಕಳ ಪುರಸಭಾ ವ್ಯಾಪ್ತಿಯ ಶಿವತಿಕೆರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಕಾರ್ಕಳ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರ್ಗಾನ ಗ್ರಾಮದ ಶಾಲಾ ಮುಂಭಾಗದ ತಿರುವಿನಲ್ಲಿ ವಾಹನದಲ್ಲಿದ್ದ ಸಿಮೆಂಟ್ ಕಾಂಕ್ರೀಟ್ ಮಷೀನ್ ಕಾರ್ಮಿಕರ ಮೇಲೆ ಮಗುಚಿ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಕಾರ್ಮಿಕರು ಗಂಭೀರ ಗಾಯ ಗೊಂಡಿದ್ದರು. 

ವಾರ್ತಾ ಭಾರತಿ 15 Dec 2025 7:57 pm

ಹೊಸ ಕಾರ್ಮಿಕ ಕಾನೂನು: ವಾರಕ್ಕೆ 4 ದಿನ ಕೆಲಸ, 3 ದಿನ ರಜೆ ನಿಯಮ ಜಾರಿ ಕಡ್ಡಾಯವೇ? ಸರ್ಕಾರ ಹೇಳಿದ್ದೇನು?

ದೇಶದಲ್ಲಿ ನಾಲ್ಕು ದಿನಗಳ ಕೆಲಸದ ನಿಯಮದ ಬಗ್ಗೆ ಮತ್ತೆ ಚರ್ಚೆ ಜೋರಾಗಿದೆ. ಹೊಸ ಕಾರ್ಮಿಕ ಸಂಹಿತೆಯಂತೆ, ವಾರದ 48 ಗಂಟೆಗಳ ಕೆಲಸವನ್ನು 4 ದಿನಗಳಲ್ಲಿ ಪೂರ್ಣಗೊಳಿಸಬಹುದು, ಆದರೆ ಇದು ಕಡ್ಡಾಯವಲ್ಲ. ಕಂಪನಿಗಳು ತಮ್ಮ ನೀತಿಗಳ ಆಧಾರದ ಮೇಲೆ ಈ ಆಯ್ಕೆಯನ್ನು ಅಳವಡಿಸಿಕೊಳ್ಳಬಹುದು.

ವಿಜಯ ಕರ್ನಾಟಕ 15 Dec 2025 7:52 pm

ನಶೆ ಮುಕ್ತ ಮಂಗಳೂರು ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್

ಮಂಗಳೂರು, ಡಿ.15: ಮೇಕ್ ಎ ಚೇಂಜ್ ಫೌಂಡೇಶನ್ ಹಾಗೂ ಮಂಗಳೂರು ನಗರ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ನಶೆ ಮುಕ್ತ ಮಂಗಳೂರು ಅಭಿಯಾನದ ಅಂಗವಾಗಿ ಕಾರ್ನರ್ ಮೀಟ್ ಕಾರ್ಯಕ್ರಮವು ನಗರದ ಸಂತ ಆಗ್ನೇಸ್ ಕಾಲೇಜಿನಲ್ಲಿ ನಡೆಯಿತು. ಮೇಕ್ ಎ ಚೇಂಜ್ ಫೌಂಡೇಶನ್ ಸಂಸ್ಥಾಪಕ ಸುಹೈಲ್ ಕಂದಕ್ ಮಾತನಾಡಿ, ಮಂಗಳೂರು ನಗರವು ಸಮೃದ್ಧ ಇತಿಹಾಸ ಹಾಗೂ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೆಸರು ಮಾಡಿದೆ. ಆದರೆ ಇತ್ತೀಚಿನ ಕೆಲ ದುರ್ಘಟನೆಗಳಿಂದ ಮಂಗಳೂರಿನ ಹೆಸರು ಋಣಾತ್ಮಕ ವಿಚಾರಗಳೊಂದಿಗೆ ಹೆಚ್ಚು ಕೇಳಿಬರುತ್ತಿರುವುದು ನೋವಿನ ಸಂಗತಿ. ಇದನ್ನು ಬದಲಾಯಿಸಲು ವಿದ್ಯಾರ್ಥಿಗಳು ನಶೆ ಮುಕ್ತ ಮಂಗಳೂರು ಅಭಿಯಾನಕ್ಕೆ ಕೈಜೋಡಿಸಬೇಕು. ಹಿಂದಿನಂತೆ ಮಂಗಳೂರು ಮತ್ತೊಮ್ಮೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ದೇಶದ ಗಮನ ಸೆಳೆಯುವಂತೆ ಮಾಡಬೇಕು ಎಂದರು. ಕದ್ರಿ ಪೊಲೀಸ್ ಠಾಣೆಯ ಎಸ್ಸೈ ಮನೋಹರ್ ಡ್ರಗ್ಸ್ ಮುಕ್ತ ಮಂಗಳೂರು ನಿರ್ಮಾಣಕ್ಕೆ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಹಕಾರ ಅಗತ್ಯವಿದೆ. ಮಾದಕ ವಸ್ತುಗಳಿಗೆ ಬಲಿಯಾಗಿರುವ ವಿದ್ಯಾರ್ಥಿಗಳ ಕುರಿತು ಮಾಹಿತಿ ನೀಡಿದರೆ, ಅವರನ್ನು ಈ ವ್ಯಸನದಿಂದ ರಕ್ಷಿಸುವ ಹೊಣೆ ಪೊಲೀಸ್ ಇಲಾಖೆಯದ್ದಾಗಿದೆ. ಇದಕ್ಕಾಗಿ ಉಚಿತ ಕೌನ್ಸಿಲಿಂಗ್ ವ್ಯವಸ್ಥೆಯನ್ನೂ ಇಲಾಖೆ ಒದಗಿಸುತ್ತದೆ. ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಇಲಾಖೆಯ ಉದ್ದೇಶವಲ್ಲ, ಅವರನ್ನು ಮಾದಕ ವ್ಯಸನದಿಂದ ಹೊರತರುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದರು. ಬಾರ್ನ್ ಅಗೈನ್ ಫೌಂಡೇಶನ್ ಮುಖ್ಯಸ್ಥೆ ಬೀನಾ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾದ ತಮ್ಮ ಅನುಭವ ಹಾಗೂ ಅದರಿಂದ ಹೊರಬರಲು ಎದುರಿಸಿದ ಸಂಕಷ್ಟಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರಲ್ಲದೆ ಮಾದಕ ವ್ಯಸನವು ಒಬ್ಬ ವ್ಯಕ್ತಿಯನ್ನಷ್ಟೇ ಅಲ್ಲ, ಸಂಪೂರ್ಣ ಕುಟುಂಬ ಮತ್ತು ಸಮಾಜ ವ್ಯವಸ್ಥೆಯನ್ನೇ ಹಾಳುಮಾಡುತ್ತದೆ ಎಂದು ಎಚ್ಚರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಕಾರ್ಪೊರೇಟರ್ ನವೀನ್ ಡಿಸೋಜ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಸಿಸ್ಟರ್ ಎಂ. ವೆನಿಸಾ ಎ.ಸಿ., ಗುರುಪ್ರಸಾದ್, ಲಾವಣ್ಯ ಬಲ್ಲಾಳ್ ಉಪಸ್ಥಿತರಿದ್ದರು.  

ವಾರ್ತಾ ಭಾರತಿ 15 Dec 2025 7:51 pm

ಉಳ್ಳಾಲ ತಾಲೂಕು ಮಟ್ಟದ ದಫ್ ಸ್ಪರ್ಧೆ: ರೆಂಜಾಡಿ ತಾಜುಲ್ ಹುದಾ ದಪ್ಪು ತಂಡ ಪ್ರಥಮ

ಮಂಗಳೂರು, ಡಿ.15: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿದ್ದ ಉಳ್ಳಾಲ ತಾಲೂಕು ಮಟ್ಟದ ದಫ್ ಸ್ಪರ್ಧೆಯಲ್ಲಿ ರೆಂಜಾಡಿ ತಾಜುಲ್ ಹುದಾ ದಪ್ಪುತಂಡ ಪ್ರಥಮ ಸ್ಥಾನ ಗಳಿಸಿದೆ. ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಇಮಾದುದ್ದೀನ್ ಜುಮಾ ಮಸೀದಿಯ ವಠಾರದಲ್ಲಿ ನಡೆದ ಸ್ಪರ್ಧೆಯಲ್ಲಿ ಶಂಸುಲ್ ಹುದಾ ದಪ್ಪು ತಂಡ ದ್ವಿತೀಯ ಸ್ಥಾನ ಪಡೆದಿದೆ. ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದ ತಂಡಗಳು ಜಿಲ್ಲಾ ಮಟ್ಟದ ದಫ್ ಸ್ಪರ್ಧೆಗೆ ಆಯ್ಕೆಯಾಗಿವೆ. ಎ.ಐ. ಝಕರಿಯಾ ಮತ್ತು ಮುಹಮ್ಮದ್ ರಫೀಕ್ ಮದನಿ ತಾಲೂಕು ಮಟ್ಟದ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದರು. ಡಿ. 20 ರಂದು ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿ ಆವರಣದಲ್ಲಿ ಮಸೀದಿ ಆಡಳಿತ ಸಮಿತಿಯ ಸಹಯೋಗದೊಂದಿಗೆ ದ.ಕ. ಜಿಲ್ಲಾ ಮಟ್ಟದ ದಫ್ ಸರ್ಧೆ ಆಯೋಜಿಸಲಾಗಿದೆ. ಉದ್ಘಾಟನೆ : ಉಳ್ಳಾಲ ತಾಲೂಕು ಮಟ್ಟದ ದಫ್ ಸ್ಪರ್ಧೆಯನ್ನು ಉದ್ಘಾಟಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಉಮರ್ ಯು.ಹೆಚ್. ಅವರು ಬ್ಯಾರಿ ಭಾಷೆ, ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದರು. ಭಾಷೆಯೆಂದರೆ ಕೆಲವು ಶಬ್ಧಗಳಲ್ಲ ಅಥವಾ ಸಂವಹನ ಮಾಧ್ಯಮ ಮಾತ್ರವಲ್ಲ. ಪ್ರತೀ ಭಾಷೆಯೊಂದಿಗಿರುವ ಭವ್ಯ ಸಂಸ್ಖೃತಿ ಆ ಭಾಷೆ ಮಾತನಾಡುವವರ ಬದುಕನ್ನು ರೂಪಿಸುತ್ತದೆ ಎಂದು ಉಮರ್ ತಿಳಿಸಿದರು. ಕೋಟೆಕಾರು ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಮೊಹಿದೀನ್ ಬಾವ,ಇಮಾದುದ್ದೀನ್ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷ ಮಜೀದ್ ಹಸನ್ ಮಾಡೂರು, ಉಪಾಧ್ಯಕ್ಷ ಅಬ್ದುಲ್ ಅಝೀಝ್, ಕಾರ್ಯದರ್ಶಿ ರಶೀದ್ ಹಂಝ, ಮಾಜಿ ಅಧ್ಯಕ್ಷ ಅಬ್ದುಲ್ಲ ಕೊಂಡಾಣ, ಮಾಜಿ ಕೋಶಾಧಿಕಾರಿ ಅಬ್ಬಾಸ್ ಪಿ.ಎಚ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ ಅನ್ಸಾರ್ ಕಾಟಿಪಳ್ಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಕಾಡಮಿ ಸದಸ್ಯ ಹಾಗೂ ಸ್ಪರ್ಧೆಯ ಸಂಚಾಲಕ ಹಮೀದ್ ಹಸನ್ ಮಾಡೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 15 Dec 2025 7:48 pm

ಕಲಬುರಗಿ| ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆ

ಕಲಬುರಗಿ: ಕೇಂದ್ರ ಹಾಗೂ ರಾಜ್ಯ ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಬೇಕು. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಓಬಿಸಿಗಳಿಗೆ 33 ವರ್ಷ ಹಾಗೂ ಸಾಮಾನ್ಯ ವರ್ಗಕ್ಕೆ 30 ವರ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಬೇಕು. ಒಳಮೀಸಲಾತಿ ಗೊಂದಲವನ್ನು ಕೂಡಲೇ ಪರಿಹರಿಸಿ ಅಧಿಸೂಚನೆ ಹೊರಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಂಚಾಲಕ ರಮೇಶ್ ದೇವಕರ್‌, ಸಚಿನ್ ಪವಾರ್, ಕೂಬಾ ನಾಯಕ್, ಪ್ರಶಾಂತ್ ಹಾದಿಮನಿ, ಪ್ರಭಾಕರ್‌ ಚಿಂಚೋಳಿ, ಸವಿತಾ, ಅಶ್ವಿನಿ, ಜಗನ್ನಾಥ್ ಎಸ್.ಎಚ್., ವಿ.ಜಿ.ದೇಸಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 15 Dec 2025 7:46 pm

ಛೂ ಬಾಣ – ಪಿ. ಮೊಹಮ್ಮದ್ ಕಾರ್ಟೂನ್

ವಾರ್ತಾ ಭಾರತಿ 15 Dec 2025 7:46 pm

ಶಾಮನೂರು ಶಿವಶಂಕರಪ್ಪ ಯುಗಾಂತ್ಯ, ಆಪ್ತ ಬಂಧುಗೆ ಕಂಬನಿ ಮಿಡಿದ ದೇವನಗರಿ ದಾವಣಗೆರೆ ಜನತೆ

ದಾವಣಗೆರೆಗೆ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಭಾನುವಾರ ತಲುಪುತ್ತಿದ್ದಂತೆ ನಗರದಲ್ಲಿ ನೀರವ ಮೌನ ಆವರಿಸಿತ್ತು. ಸೋಮವಾರ ಪಾರ್ಥಿವ ಶರೀರವನ್ನು ದಾವಣಗೆರೆಗೆ ತಂದು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ನಂತರ ಮೆರವಣಿಗೆ ಮೂಲಕ ಹೈಸ್ಕೂಲ್ ಮೈದಾನಕ್ಕೆ ತಂದು ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಸಾವಿರಾರು ಜನರು ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದರು.

ವಿಜಯ ಕರ್ನಾಟಕ 15 Dec 2025 7:46 pm

ಕಾಲ್ತುಳಿತ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆಗೆ ಹೈಕೋರ್ಟ್ ಅನುಮತಿ ಕೋರಿದ ಸರಕಾರ; ಆರ್‌ಸಿಬಿ, ಡಿಎನ್‌ಎ ಆಕ್ಷೇಪ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಆರೋಪ ಪಟ್ಟಿಯನ್ನು ತನಿಖಾಧಿಕಾರಿಯು ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಿದರೂ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ ಪ್ರಶ್ನಿಸಿರುವ ಅರ್ಜಿಗಳನ್ನು ನಿರ್ಧರಿಸುವ ಅಧಿಕಾರ ಹೈಕೋರ್ಟ್‌ಗೆ ಇದೆ ಎಂಬುದಕ್ಕೆ ಸಂಬಂಧಿಸಿದ ತೀರ್ಪುಗಳ ಕುರಿತು ವಾದ ಮಂಡಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಕಾಲ್ತುಳಿತ ಪ್ರಕರಣದ ಸಂಬಂಧ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ), ಡಿಎನ್‌ಎ ಎಂಟರ್ಟೇನ್ಮೆಂಟ್‌, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ), ಆರ್‌ಸಿಬಿಯ ಮಾರುಕಟ್ಟೆ ವಿಭಾಗದ ನಿಖಿಲ್‌ ಸೋಸಲೆ, ಡಿಎನ್‌ಎ ಎಂಟರ್ಟೇನ್ಮೆಂಟ್‌ನ ಸುನೀಲ್‌ ಮ್ಯಾಥ್ಯೂ ಮತ್ತಿತರರು ಸಲ್ಲಿಸಿರವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ರಾಜ್ಯ ಸರಕಾರದ ಪರ ವಿಶೇಷ ವಕೀಲ ಬಿ.ಟಿ. ವೆಂಕಟೇಶ್‌ವಾದ ಮಂಡಿಸಿ, ಕಾಲ್ತುಳಿತ ಪ್ರಕರಣದ ಸಂಬಂಧ ಆರೋಪ ಪಟ್ಟಿ ಸಿದ್ಧವಾಗಿದ್ದು, ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಬೇಕು. ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಎಫ್‌ಐಆರ್‌ ದಾಖಲಾಗಿದ್ದು, ಒಂದು ಪ್ರಕರಣದ ವಿಚಾರಣೆ ನಡೆಸುವಂತೆ ಹೈಕೋರ್ಟ್‌ ಆದೇಶಿಸಿದೆ. 2025ರ ಜೂನ್ 17ರಂದು ಪ್ರಕರಣದ ತನಿಖೆ ಮುಂದುವರಿಸಬಹುದು. ಅರ್ಜಿದಾರರ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು, ಸಿಐಡಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸುವುದಕ್ಕೂ ಮುನ್ನ ಹೈಕೋರ್ಟ್‌ ಅನುಮತಿ ಪಡೆಯಬೇಕು ಎಂದು ಮಧ್ಯಂತರ ಆದೇಶ ಮಾಡಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅರ್ಜಿದಾರರು ತನಿಖೆಗೆ ಸಹಕರಿಸಿದ್ದು, ಅವರ ಹೇಳಿಕೆ ದಾಖಲಿಸಲಾಗಿದೆ. ಇದರ ಆಧಾರದಲ್ಲಿ ಆರೋಪ ಪಟ್ಟಿ ಸಿದ್ಧಪಡಿಸಿದ್ದು, ಅದನ್ನು ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಇದಕ್ಕಾಗಿ ನ್ಯಾಯಾಲಯದ ಈ ಹಿಂದಿನ ನಿರ್ದೇಶನದಂತೆ ಅನುಮತಿ ಕೋರಲಾಗುತ್ತಿದೆ ಎಂದರು. ಆಗ ನ್ಯಾಯಪೀಠ, ಅಂತಿಮ ವರದಿಯನ್ನು ಅರ್ಜಿದಾರರು ಪ್ರಶ್ನಿಸಬಹುದಲ್ಲವೇ? ಎಂದು ಕೇಳಿತು. ಚಾರ್ಜ್‌ಶೀಟ್‌ಗೆ ಅರ್ಜಿದಾರರ ಆಕ್ಷೇಪ: ಇದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ ಅವರು, ಜುಲೈ 8ರಂದು ಹೈಕೋರ್ಟ್ ಅನುಮತಿ ಪಡೆಯದೇ ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬಾರದೆಂಬ ಮಧ್ಯಂತರ ಆದೇಶ ಹೊರಡಿಸಲಾಗಿದೆ. ಸರಕಾರ ಸಕ್ಷಮ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದರೆ ಈ ನ್ಯಾಯಾಲಯವು ಅರ್ಜಿದಾರರ ಪರವಾಗಿ ಮಾಡಿರುವ ಮಧ್ಯಂತರ ಆದೇಶ ಹೋಗಲಿದೆ ಎಂದು ಆರೋಪ ಪಟ್ಟಿ ಸಲ್ಲಿಸುವ ಸರಕಾರದ ಕೋರಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಾದ ಮುಂದುವರಿಸಿದ ಸಿ.ವಿ. ನಾಗೇಶ್, ಆರೋಪ ಪಟ್ಟಿಯನ್ನು ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಿದಾಕ್ಷಣ ಎಫ್‌ಐಆರ್‌ ರದ್ದು ಕೋರಿರುವ ಅರ್ಜಿಯು ಅಮಾನ್ಯವಾಗುವುದಿಲ್ಲ ಎಂದು ಇತ್ತೀಚಿನ ತೀರ್ಪಿನಲ್ಲಿ ಸುಪ್ರೀಂಕೋರ್ಟ್‌ ಹೇಳಿದ್ದು, ಈ ಕುರಿತು ಹಲವು ತೀರ್ಪುಗಳಿವೆ. ಆರೋಪ ಪಟ್ಟಿ ಸಿದ್ಧವಾಗಿದ್ದರೂ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದುವರಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹಾಲಿ ಪ್ರಕರಣದಲ್ಲಿ ಎಫ್‌ಐಆರ್‌ಗಳನ್ನು ರದ್ದುಪಡಿಸಲು ಕೋರಲಾಗಿದೆ. ಈ ಅರ್ಜಿಗಳನ್ನು ನ್ಯಾಯಾಲಯ ಪುರಸ್ಕರಿಸಿದರೆ ಆರೋಪ ಪಟ್ಟಿಯೇ ಅಮಾನ್ಯವಾಗಲಿದೆ. ಆರೋಪ ಪಟ್ಟಿ ಸಿದ್ಧವಾದ ಮಾತ್ರಕ್ಕೆ ಹಾಲಿ ಅರ್ಜಿಗಳು ಅಮಾನ್ಯವಾಗುವುದಿಲ್ಲ ಎಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಹಿರಿಯ ವಕೀಲ ಸಿ.ವಿ. ನಾಗೇಶ್‌ ಅವರು ಉಲ್ಲೇಖಿಸಿರುವ ತೀರ್ಪುಗಳ ಮೇಲೆ ವಾದಿಸಲು ಸರಕಾರದ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು 2026ರ ಜನವರಿ 20ಕ್ಕೆ ಮುಂದೂಡಿತಲ್ಲದೆ, ಪ್ರಕರಣದಲ್ಲಿ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

ವಾರ್ತಾ ಭಾರತಿ 15 Dec 2025 7:45 pm

ಉಡುಪಿ | ಡಾ.ಮಹಾಲಿಂಗುರ ಕೃತಿಗೆ ಪ್ರಶಸ್ತಿ

ಉಡುಪಿ, ಡಿ.15: ಲೇಖಕ, ಅಂಕಣಕಾರ ಮೈಸೂರು ಮೂಲದ ಡಾ.ಕೆ.ಪಿ.ಮಹಾಲಿಂಗು ಕಲ್ಕುಂದ ಅವರ ’ವಿಮೋಚನ ದರ್ಶನ’ ಕೃತಿಗೆ ’ರಾಷ್ಟ್ರೀಯ ಪುಸ್ತಕ ಪ್ರಶಸ್ತಿ’ ಗೌರವ ಲಭಿಸಿದೆ. ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಗದಗ ವತಿಯಿಂದ ಡಿ.20ರಂದು ರಾಯಚೂರಿನಲ್ಲಿ ನಡೆಯಲಿರುವ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 15 Dec 2025 7:44 pm

MGNREGA ಹೆಸರು ಬದಲಾವಣೆಗೆ ಅಖಿಲೇಶ್‌ ಯಾದವ್‌ ವಿರೋಧ, ಧ್ವನಿಗೂಡಿಸಿದ ಶಶಿ ತರೂರ್‌; ಗಾಂಧಿ ಭಾರತಕ್ಕೆ ಒತ್ತಾಯ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಬಗೆಗಿನ ಪರ-ವಿರೋಧ ಚರ್ಚೆಗಳು ಮುಂದುವರೆದಿರುವಾಗಲೇ, ಈ ಯೋಜನೆಯ ಹೆಸರನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಿದೆ. MGNREGAವನ್ನು VB G RAM G​ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಬಯಸಿದ್ದು, ಇದಕ್ಕೆ ಪ್ರತಿಪಕ್ಷ ನಾಯಕರಿಂದ ವಿರೋಧ ಕೇಳಿಬಂದಿದೆ. ಈ ಪ್ರಸ್ತಾವನೆಯನ್ನು ವಿರೋಧಿಸಿರುವ ಎಸ್‌ಪಿ ಮುಖ್ಯಸ್ಥ ಅಖಿಲೇಶ್‌ ರಯಾದವ್‌, ಬಿಜೆಪಿ ಇತರರು ಮಾಡಿದ ಒಳ್ಳೆಯ ಕೆಲಸವನ್ನು ಹೈಜಾಕ್‌ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ.

ವಿಜಯ ಕರ್ನಾಟಕ 15 Dec 2025 7:43 pm