Dina Bhavishya: 23 ಡಿಸೆಂಬರ್ 2025 –ಮಂಗಳವಾರದ ಗ್ರಹಗಳ ಆಟ, ಯಾರಿಗೆ ಅದೃಷ್ಟ? ಯಾರಿಗೆ ಸಂಕಷ್ಟ?
ಪ್ರತಿಯೊಂದು ದಿನವೂ ಗ್ರಹಗಳ ಚಲನೆಯ ಮೇಲೆ ನಮ್ಮ ಜೀವನದ ಆಗುಹೋಗುಗಳು ನಿರ್ಧಾರವಾಗುತ್ತವೆ. ಮಂಗಳವಾರ ಎಂದರೆ ಕುಜನ (ಮಂಗಳ ಗ್ರಹ) ದಿನ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನದಂದು ಗ್ರಹಗಳ ಸ್ಥಾನಮಾನಗಳು ದ್ವಾದಶ ರಾಶಿಗಳ ಮೇಲೆ ಮಿಶ್ರ ಫಲವನ್ನು ನೀಡಲಿವೆ. ಇಂದು ಕೆಲವು ರಾಶಿಯವರಿಗೆ ಹಠಾತ್ ಧನಲಾಭದ ಯೋಗವಿದ್ದರೆ, ಇನ್ನು ಕೆಲವು ರಾಶಿಯವರು ಅನಗತ್ಯ ವಾದ-ವಿವಾದಗಳಲ್ಲಿ ಸಿಲುಕುವ ಸಾಧ್ಯತೆಯಿದೆ. ಹಾಗಾದರೆ ಡಿಸೆಂಬರ್ 23 ರ ಮಂಗಳವಾರ ನಿಮ್ಮ ರಾಶಿಫಲ ಹೇಗಿದೆ? ಗ್ರಹಗಳ ಸಂದೇಶವೇನು? ನಿಮ್ಮ ದಿನವನ್ನು ಯೋಜಿಸುವ ಮುನ್ನ, ... Read more The post Dina Bhavishya: 23 ಡಿಸೆಂಬರ್ 2025 – ಮಂಗಳವಾರದ ಗ್ರಹಗಳ ಆಟ, ಯಾರಿಗೆ ಅದೃಷ್ಟ? ಯಾರಿಗೆ ಸಂಕಷ್ಟ? appeared first on Karnataka Times .
ಶಿವಮೊಗ್ಗ | ಹೊಟೇಲ್ ಕಾರ್ಮಿಕನಿಗೆ ಪಿಎಸ್ಸೈ ಥಳಿತ: ಆರೋಪ
ಶಿವಮೊಗ್ಗ: ಹೊಟೇಲ್ ಯಾಕೆ ಬಂದ್ ಮಾಡಿಲ್ಲ ಎಂದು ಪ್ರಶ್ನಿಸಿ ಕಾರ್ಮಿಕನೊಬ್ಬನಿಗೆ ಪಿಎಸ್ಸೈಯೊಬ್ಬರು ಥಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಹೊಟೇಲ್ನಲ್ಲಿ ಈ ಘಟನೆ ನಡೆದಿದ್ದು, ಷಾವಾಸ್(24) ಎಂಬ ಕಾರ್ಮಿಕನ ಮೇಲೆ ದೊಡ್ಡಪೇಟೆಯ ಪಿಎಸ್ಸೈ ನಾರಾಯಣ ಮಧುಗಿರಿ ಥಳಿಸಿರುವ ವೀಡಿಯೊ ವೈರಲ್ ಆಗಿದೆ. ಪಿಎಸ್ಸೈ ಹಲ್ಲೆ ಮಾಡುವ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹಲ್ಲೆಗೊಳಗಾಗಿದ್ದ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ: ಯುವಕನೋರ್ವನಿಗೆ ಚಾಕು ಇರಿದಿರುವ ಘಟನೆ ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ನಲ್ಲಿ ಸೋಮವಾರ ಸಂಜೆ ನಡೆದಿರುವುದಾಗಿ ವರದಿಯಾಗಿದೆ. ಸಯ್ಯದ್ ಬರ್ಕತ್(32) ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ನಗರದ ಲಷ್ಕರ್ ಮೊಹಲ್ಲಾ ನಿವಾಸಿಯಾಗಿದ್ದ ಬರ್ಕತ್ ಮೊಬೈಲ್ ಶಾಪ್ ಇಟ್ಟುಕೊಂಡಿದ್ದರು. ಸೋಮವಾರ ಸಂಜೆ ಕಿಡಿಗೇಡಿಗಳು ಮೊಬೈಲ್ ಶಾಪ್ ಬಳಿಯೇ ಹೋಗಿ ಆತನ ಕೈ, ಹೊಟ್ಟೆಯ ಭಾಗಕ್ಕೆ ಚಾಕು ಇರಿದು ಪರಾರಿಯಾಗಿದ್ದಾರೆ. ಚಾಕು ಇರಿತದಿಂದ ಗಾಯಗೊಂಡಿದ್ದ ಸಯ್ಯದ್ ಬರ್ಕತ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದುಬೈನಲ್ಲಿ ಬಾಕ್ಸರ್ ಗಳ ಜಟಾಪಟಿ; ಭಾರತದ ನೀರಜ್ ಗೋಯಟ್ ಮೇಲೆ ಬಾಟಲಿ ಎಸೆದ ಅಮೆರಿಕದ ಆ್ಯಂಟನಿ ಟೇಲರ್!
Neeraj Goyat Vs Anthony Tailor- ಬಾಕ್ಸಿಂಗ್ ರಿಂಗ್ ನಲ್ಲಿ ಕಾಡಾಡಿದ ಇಬ್ಬರು ಕ್ರೀಡಾಪಟುಗಳು ಬಳಿಕ ವೇದಿಕೆಯ ಹಿಂಭಾಗದಲ್ಲೂ ಜಟಾಪಟಿಗೆ ಮುಂದಾದ ಘಟನೆ ದುಬೈನಿಂದ ವರದಿಯಾಗಿದೆ. ಭಾರತದ ಬಾಕ್ಸರ್ ನೀರಜ್ ಗೋಯಟ್ ಅವರ ಮೇಲೆ ಅಮೆರಿಕದ ಬಾಕ್ಸರ್ ವೇದಿಕೆ ಹಿಂದೆ ನೀರಿನ ಬಾಟಲಿಯಿಂದ ಹಲ್ಲೆ ನಡೆಸಿದ್ದು ಈ ವಿಡಿಯೋ ಇದೀಗ ಜಾಲತಾಣಗಳಲ್ಲಿ ವೈರಲ್ ಆಗಿದೆ. ದುಬೈನಲ್ಲಿ ನಡೆದ ಮಿಸ್ಫಿಟ್ಸ್ ಬಾಕ್ಸಿಂಗ್ ಕಾರ್ಯಕ್ರಮದಲ್ಲಿ ಇದು ನಡೆದಿದ್ದು ಭದ್ರತಾ ಸಿಬ್ಬಂದಿ ತಕ್ಷಣವೇ ಮಧ್ಯ ಪ್ರವೇಶಿಸಿ ಅನಾಹುತ ತಪ್ಪಿಸಿದ್ದಾರೆ.
ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳು ಬೀದಿಪಾಲಾದರೂ ಆಯೋಗಗಳ ಮೌನ ಯಾಕೆ?: ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಪ್ರಶ್ನೆ
ಕೋಗಿಲು ಬಡಾವಣೆ ಮನೆಗಳ ಧ್ವಂಸ ಪ್ರಕರಣ
ರಾಮೇಶ್ವರಂ ಕೆಫೆ ಮಾಲೀಕರಿಗೆ ಬಿಗ್ ರಿಲೀಫ್: ಎಫ್ಐಆರ್ಗೆ ಹೈಕೋರ್ಟ್ ತಡೆ
ರಾಮೇಶ್ವರಂ ಕೆಫೆ ಮಾಲೀಕರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಸಿಬ್ಬಂದಿ ವಿರುದ್ಧ ದೂರು ದಾಖಲಾಗಿತ್ತು. ಆಹಾರದಲ್ಲಿ ಹುಳು ಪತ್ತೆಯಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಈ ಪ್ರಕರಣವು ಬ್ಲಾಕ್ಮೇಲ್ ತಂತ್ರ ಎಂದು ವಾದಿಸಿದ್ದರು.
ಹೊಸ ಪಕ್ಷ ಘೋಷಿಸಿದ ಟಿಎಮ್ಸಿ ಮಾಜಿ ಶಾಸಕ ಹುಮಾಯೂನ್ ಕಬೀರ್
ಕೋಲ್ಕತಾ, ಡಿ. 22: ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಹುಮಾಯೂನ್ ಕಬೀರ್ ಸೋಮವಾರ ಜನತಾ ಉನ್ನಯನ್ ಪಾರ್ಟಿ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದಾರೆ. ಸಾಮಾನ್ಯ ಜನರಿಗಾಗಿ ಕೆಲಸ ಮಾಡುವುದಕ್ಕಾಗಿ ಪಕ್ಷವನ್ನು ಸ್ಥಾಪಿಸಲಾಗುವುದು ಎಂದು ಅವರು ಈ ಮೊದಲು ಹೇಳಿದ್ದರು. ಪಶ್ಚಿಮ ಬಂಗಾಳದ ಮುರ್ಶಿದಾಬಾದ್ನಲ್ಲಿ ಡಿಸೆಂಬರ್ 6ರಂದು ತಾನು ಬಾಬರಿ ಮಸೀದಿಯನ್ನು ಉದ್ಘಾಟಿಸುವುದಾಗಿ ಹೇಳಿದ ಬಳಿಕ ಅವರನ್ನು ಟಿಎಮ್ಸಿ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಬಳಿಕ ಅವರು ಬಾಬರಿ ಮಸೀದಿಯನ್ನು ಹೋಲುವ ಮಸೀದಿಯೊಂದಕ್ಕೆ ಅಡಿಪಾಯವನ್ನೂ ಹಾಕಿದ್ದಾರೆ.
ದಿಲ್ಲಿ| ಬಾಂಗ್ಲಾದೇಶ ಹೈಕಮಿಶನ್ನಲ್ಲಿ ವೀಸಾ ನೀಡಿಕೆ ಸ್ಥಗಿತ
ಹೊಸದಿಲ್ಲಿ, ಡಿ.22: ಹೊಸದಿಲ್ಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಶನ್ನಲ್ಲಿ ಕೌನ್ಸುಲರ್ ಸೇವೆಗಳು ಮತ್ತು ವೀಸಾ ನೀಡುವ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಬಾಂಗ್ಲಾದೇಶದ ಅಧಿಕಾರಿಗಳು ಸೋಮವಾರ ತಿಳಿಸಿದರು. ಅನಿರೀಕ್ಷಿತ ಸನ್ನಿವೇಶಗಳ ಹಿನ್ನೆಲೆಯಲ್ಲಿ, ಹೈಕಮಿಶನ್ನ ಎಲ್ಲಾ ಕೌನ್ಸುಲರ್ ಕೆಲಸಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಬಾಂಗ್ಲಾದೇಶಿ ಪತ್ರಿಕೆ ‘ಪ್ರಥಮ್ ಅಲೊ’ ವರದಿ ಮಾಡಿದೆ. ಹೊಸದಿಲ್ಲಿಯಲ್ಲಿ ನಡೆದ ಪ್ರತಿಭಟನೆಯ ಬಳಿಕ ಬಾಂಗ್ಲಾದೇಶ ಈ ಕ್ರಮ ತೆಗೆದುಕೊಂಡಿದೆ. ಈ ವಾರದ ಆರಂಭದಲ್ಲಿ, ಭದ್ರತಾ ಬೆದರಿಕೆಯ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ನಗರಗಳಲ್ಲಿನ ತನ್ನ ವೀಸಾ ಸೇವೆಗಳನ್ನು ಭಾರತವು ಸ್ಥಗಿತಗೊಳಿಸಿತ್ತು.
ಆಪರೇಷನ್ ಸಿಂಧೂರ್ ಸಂದರ್ಭ ದೇವರು ಪಾಕಿಸ್ತಾನವನ್ನು ರಕ್ಷಿಸಿದ: ಪಾಕ್ ಸೇನಾ ಮುಖ್ಯಸ್ಥ ಮುನೀರ್
ಇಸ್ಲಮಾಬಾದ್, ಡಿ.22: ಈ ವರ್ಷದ ಆರಂಭದಲ್ಲಿ ಭಾರತದೊಂದಿಗಿನ ಮಿಲಿಟರಿ ಸಂಘರ್ಷದ ಸಂದರ್ಭ ದೇವರು ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದಾರೆ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮೇ ತಿಂಗಳಿನಲ್ಲಿ ಉಭಯ ದೇಶಗಳ ನಡುವೆ ನಡೆದಿದ್ದ ಮಿಲಿಟರಿ ಸಂಘರ್ಷದ ಬಗ್ಗೆ ಸಾರ್ವಜನಿಕ ಸಭೆಯೊಂದರಲ್ಲಿ ಉಲ್ಲೇಖಿಸಿದ ಆಸಿಮ್ ಮುನೀರ್ `ಒಂದು ವೇಳೆ ಅಲ್ಲಾಹ್ ನಿಮಗೆ ಸಹಾಯ ಮಾಡಿದರೆ, ಯಾರೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ. ಆಪರೇಷನ್ ಸಿಂಧೂರ್ ಸಂದರ್ಭ ಪಾಕಿಸ್ತಾನಕ್ಕೆ ದೇವರ ಬೆಂಬಲವಿತ್ತು' ಎಂದು ಹೇಳಿರುವ ವೀಡಿಯೊ ಇದೀಗ ವೈರಲ್ ಆಗಿದೆ. ಡಿಸೆಂಬರ್ 10ರಂದು ಆಸಿಮ್ ಮುನೀರ್ ಈ ಹೇಳಿಕೆ ನೀಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
ಬೆಂಗಳೂರು: ಕಾರ್ಯಕ್ರಮವೊಂದಕ್ಕೆ ಉದ್ದೇಶ ಪೂರಕವಾಗಿ ಪ್ರವೇಶಿಸಿ ಚರ್ಚ್ ಪಾದ್ರಿಗೆ ಬೆದರಿಕೆವೊಡ್ಡಿರುವುದು ಮಾತ್ರವಲ್ಲದೆ, ಕ್ರೈಸ್ತ ಹಾಗೂ ಮುಸ್ಲಿಮ್ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಆಗಿ ಮಾತನಾಡಿರುವ ಆರೋಪದಡಿ ಸತ್ಯನಿಷ್ಠ ಆರ್ಯ ಎಂಬಾತನ ವಿರುದ್ಧ ಇಲ್ಲಿನ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಹೆಸರಿನ ಖಾತೆಗಳನ್ನು ತೆರೆದಿರುವ ಸತ್ಯನಿಷ್ಠ ಆರ್ಯ ಎಂಬಾತ, ನಿರಂತರ ಕೋಮುದ್ವೇಷ ಹರಡುವ ಸಂದೇಶ ಹಾಗೂ ಭಾಷಣಗಳನ್ನು ಮಾಡಿ ಹರಿಬಿಡುತ್ತಿದ್ದ. ಜತೆಗೆ, ಕೋರಮಂಗಲ ವ್ಯಾಪ್ತಿಯ ಬ್ಯಾಂಕ್ ಒಂದರಲ್ಲಿ ಖಾತೆ ತೆರೆದು ತನಗೆ ಆರ್ಥಿಕ ಸಹಾಯ ಮಾಡುವಂತೆ, ಧರ್ಮ ರಕ್ಷಣೆ ಮಾಡುವಂತೆ ಸಂದೇಶ ಹಾಕುತ್ತಿದ್ದ ಎನ್ನಲಾಗಿದೆ. ಇತ್ತೀಚಿಗೆ ಕ್ರೈಸ್ತ ಧರ್ಮದ ಪ್ರಾರ್ಥನಾ ಕಾರ್ಯಕ್ರಮಕ್ಕೆ ತನ್ನ ತಂಡದೊಂದಿಗೆ ನುಗ್ಗಿದ ಸತ್ಯನಿಷ್ಠ ಆರ್ಯ, ಕ್ರೈಸ್ತರ ಬಗ್ಗೆ, ಯೇಸುಕ್ರಿಸ್ತರ ಕುರಿತು ಅವಹೇಳನಕಾರಿ ಆಗಿ ಮಾತನಾಡಿದ್ದ. ಈ ಬಗ್ಗೆ ಸ್ಥಳದಲ್ಲಿದ್ದ ಮಹಿಳೆಯೊಬ್ಬರು ಪ್ರಶ್ನಿಸಿದಾಗ, ಅವರನ್ನು ನಿಂದಿಸಿದ್ದ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾನೂನು ಕ್ರಮ ಜರುಗಿಸುವಂತೆ ಹಲವರು ನಗರ ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದ್ದಾರೆ. ಸದ್ಯ ಘಟನೆ ಸಂಬಂಧ ಕೋರಮಂಗಲ ಠಾಣಾ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಹೇಳಿದ್ದಾರೆ.
ಉತ್ತರ ಪ್ರದೇಶ| 2 ಪ್ರತ್ಯೇಕ ಕಾರ್ಯಾಚರಣೆ: ಕೊಡೈನ್ ಮಿಶ್ರಿತ ಕೆಮ್ಮಿನ ಸಿರಪ್ ವಶ; 6 ಮಂದಿ ಬಂಧನ
ಎಟಾ, ಡಿ. 22: ಕೊಡೈನ್ ಮಿಶ್ರಿತ ಕೆಮ್ಮಿನ ಸಿರಪ್ ಅಕ್ರಮ ವ್ಯಾಪಾರದ ವಿರುದ್ಧ ಉತ್ತರಪ್ರದೇಶ ಪೊಲೀಸರು ತಮ್ಮ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಎಟ ಹಾಗೂ ಮಿರ್ಝಾಪುರ ಜಿಲ್ಲೆಗಳಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಒಟ್ಟು 6 ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಆಗ್ರಾ ಮಾದಕ ದ್ರವ್ಯ ವಿರೋಧಿ ಘಟಕ ಹಾಗೂ ಅಲಿಗಂಜ್ ಪೊಲೀಸ್ನ ಜಂಟಿ ತಂಡ ಎಟಾದ ಅಲಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ತಂಬಾಕು ಗೋದಾಮಿನಿಂದ ಅಂದಾಜು ಸುಮಾರು 50 ಲಕ್ಷ ರೂ. ಮೌಲ್ಯದ ಕೊಡೈನ್ ಮಿಶ್ರಿತ ಕೆಮ್ಮಿನ ಸಿರಪ್ನ 47 ಪೆಟ್ಟಿಗೆಗಳನ್ನು ರವಿವಾರ ರಾತ್ರಿ ವಶಪಡಿಸಿಕೊಂಡಿದೆ ಹಾಗೂ ನಾಲ್ವರನ್ನು ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತ್ಯೇಕ ಬೆಳವಣಿಗೆಯೊಂದರಲ್ಲಿ ಮಿರ್ಝಾಪುರ ಪೊಲೀಸರು ಅದಾಲತ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಡೈನ್ ಮಿಶ್ರಿತ ಕೆಮ್ಮಿನ ಸಿರಪ್ ಅನ್ನು ಅಕ್ರಮವಾಗಿ ಪೂರೈಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಾದ ಅಜಿತ್ ಯಾದವ್ ಹಾಗೂ ಅಕ್ಷತ್ ಯಾದವ್ನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತದೊಂದಿಗೆ ವ್ಯಾಪಾರ ಒಪ್ಪಂದ ಅಂತಿಮಗೊಳಿಸಿದ ನ್ಯೂಝಿಲ್ಯಾಂಡ್: ವರದಿ
ವೆಲ್ಲಿಂಗ್ಟನ್, ಡಿ.22: ಮುಂದಿನ ಐದು ವರ್ಷಗಳಲ್ಲಿ ದ್ವಿ ಪಕ್ಷೀಯ ವ್ಯಾಪಾರವನ್ನು ದುಪ್ಪಟ್ಟುಗೊಳಿಸಲು ಸಹಾಯ ಮಾಡುವ ಮುಕ್ತ ವ್ಯಾಪಾರ ಒಪ್ಪಂದದ ಕುರಿತ ಮಾತುಕತೆಗಳನ್ನು ಮುಕ್ತಾಯಗೊಳಿಸಿರುವುದಾಗಿ ನ್ಯೂಝಿಲ್ಯಾಂಡ್ ಮತ್ತು ಭಾರತ ಸೋಮವಾರ ಹೇಳಿವೆ. ಇದು ಎರಡೂ ದೇಶಗಳ ನಡುವಿನ ಹೆಚ್ಚಿನ ಸರಕುಗಳ ವ್ಯಾಪಾರವನ್ನು ಸುಂಕಮುಕ್ತಗೊಳಿಸುತ್ತದೆ. ಈ ಒಪ್ಪಂದವು ಭಾರತಕ್ಕೆ ನ್ಯೂಝಿಲ್ಯಾಂಡ್ನ 95% ರಫ್ತುಗಳ ಮೇಲಿನ ಸುಂಕವನ್ನು ತೆಗೆದುಹಾಕುತ್ತದೆ ಅಥವಾ ಕಡಿಮೆಗೊಳಿಸುತ್ತದೆ ಮತ್ತು 50%ಕ್ಕಿಂತ ಹೆಚ್ಚು ಉತ್ಪನ್ನಗಳು ಸುಂಕ ಮುಕ್ತವಾಗಿರುತ್ತದೆ. ಭಾರತದ ಎಲ್ಲಾ ಸರಕುಗಳೂ ಸುಂಕ ಮುಕ್ತವಾಗಿ ನ್ಯೂಝಿಲ್ಯಾಂಡ್ ಪ್ರವೇಶಿಸಲು ಅವಕಾಶವಿರುತ್ತದೆ. ಮುಂದಿನ 15 ವರ್ಷಗಳಲ್ಲಿ ಭಾರತದಲ್ಲಿ 20 ಶತಕೋಟಿ ಡಾಲರ್ ಹೂಡಿಕೆ ಮಾಡಲು ನ್ಯೂಝಿಲ್ಯಾಂಡ್ ಒಪ್ಪಿದೆ. ನ್ಯೂಝಿಲ್ಯಾಂಡ್ನ ವ್ಯಾಪಾರ ಸಚಿವ ಟಾಡ್ ಮೆಕ್ಕ್ಲೇ ಅವರ ಇತ್ತೀಚಿನ ಭಾರತ ಪ್ರವಾಸದ ಬಳಿಕ ಒಪ್ಪಂದವನ್ನು ಅಂತಿಮಗೊಳಿಸಲಾಗಿದ್ದು ಮುಂದಿನ ವರ್ಷದ ಪ್ರಥಮ ತ್ರೈಮಾಸಿಕದಲ್ಲಿ ಸಹಿ ಮಾಡುವ ನಿರೀಕ್ಷೆಯಿದೆ. ದ್ವಿಪಕ್ಷೀಯ ವ್ಯಾಪಾರಕ್ಕೆ ಸಂಬಂಧಿಸಿ ಇತರ ದೇಶಗಳೊಂದಿಗೆ ಭಾರತ ಮಾಡಿಕೊಂಡ 18ನೇ ಒಪ್ಪಂದ ಇದಾಗಿದೆ. `ಈ ಒಪ್ಪಂದದ ಲಾಭಗಳು ವ್ಯಾಪಕ ಮತ್ತು ಮಹತ್ವದ್ದಾಗಿದೆ. ಭಾರತವು ವಿಶ್ವದ ಅತ್ಯಧಿಕ ಜನಸಂಖ್ಯೆಯ ದೇಶ ಮತ್ತು ವೇಗವಾಗಿ ಬೆಳೆಯುತ್ತಿರುವ ಬೃಹತ್ ಆರ್ಥಿಕತೆಯಾಗಿದೆ. ಇದು ನ್ಯೂಝಿಲ್ಯಾಂಡ್ಗೆ ಉದ್ಯೋಗಾವಕಾಶ, ರಫ್ತು ಮತ್ತು ಬೆಳವಣಿಗೆಗೆ ಸಹಾಯ ಮಾಡುತ್ತದೆ' ಎಂದು ನ್ಯೂಝಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೇಶದಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ವೀಸಾ ಸೇರಿದಂತೆ ಸೇವೆಗಳ ಅಡಿಯಲ್ಲಿ 118 ವಲಯಗಳಿಗೆ ಹೆಚ್ಚಿನ ಪ್ರವೇಶವನ್ನು ನ್ಯೂಝಿಲ್ಯಾಂಡ್ ಅನುಮತಿಸುತ್ತದೆ. ಜೊತೆಗೆ, ನ್ಯೂಝಿಲ್ಯಾಂಡ್ನಲ್ಲಿ 3 ವರ್ಷಗಳವರೆಗೆ ತಾತ್ಕಾಲಿಕ ವೀಸಾಗಳನ್ನು ಬಯಸುವ ಭಾರತೀಯರಿಗೆ 5000 ವೀಸಾಗಳ ಕೋಟಾವನ್ನು ಪರಿಚಯಿಸಲಾಗುವುದು. `ಕೆಲಸ ಮತ್ತು ರಜೆ' ವೀಸಾ ಕಾರ್ಯಕ್ರಮದಡಿ ಸುಮಾರು 1 ಸಾವಿರ ಯುವ ಭಾರತೀಯರು ನ್ಯೂಝಿಲ್ಯಾಂಡ್ ಪ್ರವೇಶಿಸಬಹುದು. ಆರೋಗ್ಯ, ಶಿಕ್ಷಣ, ಐಸಿಟಿ ಮತ್ತು ಇಂಜಿನಿಯರಿಂಗ್ನಂತಹ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು , ನವೀಕರಿಸಲಾಗದ ಮೂರು ವರ್ಷಗಳ ವೀಸಾಗಳ ಮೂಲಕ ವಾರ್ಷಿಕವಾಗಿ ಸರಾಸರಿ 1,667 ನುರಿತ(ಸ್ಕಿಲ್ಡ್) ಭಾರತೀಯ ಉದ್ಯೋಗಿಗಳಿಗೆ ಕೆಲಸ ಮಾಡಲು ನ್ಯೂಝಿಲ್ಯಾಂಡ್ ಅವಕಾಶ ಕಲ್ಪಿಸುತ್ತದೆ.
ಅಮೆರಿಕದ ಉದ್ಯೋಗ ಪರವಾನಗಿ ನವೀಕರಿಸಲು ಭಾರತಕ್ಕೆ ಬಂದು ಸಿಕ್ಕಿಹಾಕಿಕೊಂಡ H1B ವೀಸಾದಾರರು
ವಾಶಿಂಗ್ಟನ್, ಡಿ. 22: ತಮ್ಮ ಅಮೆರಿಕನ್ ಉದ್ಯೋಗ ಪರವಾನಿಗೆಗಳನ್ನು ನವೀಕರಿಸಲು ಈ ತಿಂಗಳು ಅಮೆರಿಕದಿಂದ ಸ್ವದೇಶಕ್ಕೆ ಮರಳಿರುವ ಭಾರತೀಯ ಎಚ್-1ಬಿ ವೀಸಾದಾರರು ಈಗ ಭಾರತದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಸಂದರ್ಶನವನ್ನು ಭಾರತದಲ್ಲಿರುವ ಅಮೆರಿಕನ್ ಕೌನ್ಸುಲರ್ ಕಚೇರಿಗಳು ದಿಢೀರನೇ ಮರುನಿಗದಿಪಡಿಸಿವೆ ಎಂದು ‘ವಾಶಿಂಗ್ಟನ್ ಪೋಸ್ಟ್’ ವರದಿ ಮಾಡಿದೆ. ಉನ್ನತ ಕೌಶಲದ ಭಾರತೀಯ ಉದ್ಯೋಗಿಗಳ ಡಿಸೆಂಬರ್ 15 ಮತ್ತು 26ರ ನಡುವಿನ ಸಂದರ್ಶನಗಳನ್ನು ರದ್ದುಪಡಿಸಲಾಗಿದೆ ಎಂದು ವಲಸೆ ವಕೀಲರನ್ನು ಉಲ್ಲೇಖಿಸಿ ‘ವಾಶಿಂಗ್ಟನ್ ಪೋಸ್ಟ್’ ವರದಿ ಮಾಡಿದೆ. ಈ ಅವಧಿಯು ಅಮೆರಿಕದ ರಜಾ ಕಾಲವಾಗಿದೆ. ಟ್ರಂಪ್ ಆಡಳಿತದ ಹೊಸ ಸಾಮಾಜಿಕ ಮಾಧ್ಯಮ ಪರಿಶೀಲನಾ ನೀತಿಯು ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ನಿಮ್ಮ ಸಂದರ್ಶನಗಳು ವಿಳಂಬಗೊಂಡಿವೆ ಎಂಬುದಾಗಿ ಅಮೆರಿಕದ ವಿದೇಶಾಂಗ ಇಲಾಖೆಯು ಎಚ್-1ಬಿ ವೀಸಾದಾರರಿಗೆ ಕಳುಹಿಸಿದ ಇಮೇಲ್ನಲ್ಲಿ ತಿಳಿಸಿದೆ ಎಂದು ಪತ್ರಿಕೆ ಹೇಳಿದೆ. ಯಾವುದೇ ಅಭ್ಯರ್ಥಿಯು ಅಮೆರಿಕದ ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುರಕ್ಷತೆಗೆ ಬೆದರಿಕೆಯಾಗದಂತೆ ನೋಡಿಕೊಳ್ಳುವುದಕ್ಕಾಗಿ ನೂತನ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ‘‘ಅಮೆರಿಕವು ತನ್ನ ಸಾಮಾಜಿಕ ಮಾಧ್ಯಮ ಮತ್ತು ಆನ್ಲೈನ್ ಉಪಸ್ಥಿತಿ ಪರಿಶೀಲನೆ ನಿಯಮವನ್ನು ಎಚ್-1ಬಿ ವೀಸಾದಾರರು ಮತ್ತು ಅವರ ಎಚ್-4 ಅವಲಂಬಿತರಿಗೂ ವಿಸ್ತರಿಸಲು ನಿರ್ಧರಿಸಿದೆ’’ ಎಂದು ಭಾರತದಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ಡಿಸೆಂಬರ್ 10ರಂದು ಹೇಳಿತ್ತು. ತನ್ನ ಕನಿಷ್ಠ 100 ಕಕ್ಷಿಗಾರರು ಭಾರತದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹ್ಯೂಸ್ಟನ್ನ ವಲಸೆ ಸಂಸ್ಥೆ ರೆಡ್ಡಿ ನ್ಯೂಮನ್ ಬ್ರೌನ್ ಪಿಸಿಯ ಪಾಲುದಾರೆ ಎಮಿಲಿ ನ್ಯೂಮನ್ ಹೇಳಿದ್ದಾರೆ. ತಮ್ಮ ಹತ್ತಕ್ಕೂ ಅಧಿಕ ಕಕ್ಷಿಗಾರರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಭಾರತದ ವಲಸೆ ವಕೀಲೆ ವೀಣಾ ವಿಜಯ ಅನಂತ್ ಮತ್ತು ಅಟ್ಲಾಂಟದಲ್ಲಿ ವಲಸೆ ವಿಷಯಲ್ಲಿ ವಕೀಲ ವೃತ್ತಿ ಮಾಡುತ್ತಿರುವ ಚಾರ್ಲ್ಸ್ ಕಕ್ ಹೇಳಿದ್ದಾರೆ.
ಶಾಲೆಗಳನ್ನು ʼಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರಕಾರ
► ಸಂಘ ಪರಿವಾರ ನಡೆಸುತ್ತಿರುವ ಶಾಲೆಗಳಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ: ಆರೋಪ
ಡಿ.28ರಂದು ಕ್ರಿಯೇಟಿವ್ ಕಾಲೇಜಿನಲ್ಲಿ ʼಕಾರ್ಕಳ 21ನೇ ಸಾಹಿತ್ಯ ಸಮ್ಮೇಳನʼ
ಕಾರ್ಕಳ: ಕಾರ್ಕಳ ತಾಲೂಕಿನ 21ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ. 28ರಂದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ಸಾಹಿತಿ ಹಾಗೂ ಪತ್ರಕರ್ತ ವಾಸುದೇವ ಭಟ್ ಸಿದ್ದಾಪುರ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ತಿಳಿಸಿದರು. ಅವರು ಕಾರ್ಕಳದ ಪತ್ರಿಕಾಭವನದಲ್ಲಿ ಸಮ್ಮೇಳನದ ಅಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಸಮ್ಮೇಳನದ ಅಂಗವಾಗಿ ಪೂರ್ವಾಹ್ನ 8 ಗಂಟೆಗೆ ರಾಷ್ಟ್ರ ಧ್ವಜಾರೋಹಣವನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಧ್ವಜಾರೋಹಣವನ್ನು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಿತಾ ಪೂಜಾರಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ನಿರ್ವಹಣೆಯನ್ನು ಕನ್ನಡ ಉಪನ್ಯಾಸಕ ಶಿವಕುಮಾರ್ ಹಾಗೂ ಸುನಿಲ್ ಶೆಟ್ಟಿ ವಹಿಸಲಿದ್ದು, ನಿರೂಪಣೆಯನ್ನು ನಾಗೇಶ್ ನಲ್ಲೂರು ಮಾಡಲಿದ್ದಾರೆ ಎಂದರು. ಕಾಲೇಜು ಸಂಸ್ಥಾಪಕ ಅಶ್ವಥ್ ಎಸ್ ಎಲ್ ಮಾತನಾಡಿ ಪೂರ್ವಾಹ್ನ ಕ್ರಿಯೇಟಿವ್ ಪುಸ್ತಕ ಮನೆಯಿಂದ ಜೋಡು ರಸ್ತೆಯ ಮೂಲಕ ಸಮ್ಮೇಳನಾಧ್ಯಕ್ಷರ ಗೌರವಪೂರ್ವಕ ಸ್ವಾಗತದೊಂದಿಗೆ ಭವ್ಯ ಪುರಮೆರವಣಿಗೆ ನಡೆಯಲಿದೆ. ಕನ್ನಡ ತಾಯಿ ಭುವನೇಶ್ವರಿ ದೇವಿಯ ಶೋಭಾಯಾತ್ರೆ, ಸ್ಥಳೀಯ ಸಾಂಸ್ಕೃತಿಕ ತಂಡಗಳು, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು, ಚೆಂಡೆ ಹಾಗೂ ಗೊಂಬೆ ತಂಡಗಳು ಮೆರವಣಿಗೆಗೆ ಮೆರಗು ನೀಡಲಿವೆ. ಮೆರವಣಿಗೆಯನ್ನು ಯಕ್ಷ ಕಲಾರಂಗ ಕಾರ್ಕಳದ ಅಧ್ಯಕ್ಷ ವಿಜಯ ಶೆಟ್ಟಿ ಉದ್ಘಾಟಿಸಲಿದ್ದಾರೆ ಎಂದರು. ಪೂರ್ವಾಹ್ನ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಡಾ. ಮಾಲತಿ ಜಿ. ಪ್ರಭು ವಿರಚಿತ ‘ನನ್ನೊಳಗಿನ ನಾನು’ ಹಾಗೂ ಆರ್. ರಮೇಶ್ ಪ್ರಭುರವರ ‘ಮನದಾಳದ ಮುತ್ತುಗಳು’ ಕೃತಿಗಳನ್ನು ವಿಶ್ರಾಂತ ಪ್ರಾಂಶುಪಾಲ ಸಾಹಿತ್ಯ ಸಂಘ ಕಾರ್ಕಳ ಅಧ್ಯಕ್ಷ ಪ್ರೊ. ಬಿ. ಪದ್ಮನಾಭ ಗೌಡ ಬಿಡುಗಡೆಗೊಳಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಾರ್ಕಳ ಬಜಗೋಳಿ ಉದ್ಯಮಿ, ರಾಜ್ಯ ಕ್ವಾರಿ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷರ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಉದ್ಘಾಟಿಸಲಿದ್ದಾರೆ. ಆಶಯ ನುಡಿಯನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನೀಡಲಿದ್ದಾರೆ. ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ಪ್ರೊ. ಕೆ. ಗುಣಪಾಲ ಕಡಂಬ ಉಪಸ್ಥಿತರಿರಲಿದ್ದಾರೆ. ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು ನಡೆಯಲಿದ್ದು, ವಿದ್ಯಾರ್ಥಿ–ಪುಸ್ತಕ ಪ್ರೀತಿ ವಿಷಯದ ಗೋಷ್ಠಿಯಲ್ಲಿ ವಿದ್ಯಾರ್ಥಿ ಗಳು ತಮ್ಮ ನೆಚ್ಚಿನ ಪುಸ್ತಕಗಳನ್ನು ಪರಿಚಯಿಸಲಿದ್ದಾರೆ. ಪುಸ್ತಕ ಲೋಕ – ಸಾಹಿತ್ಯ ವಿಸ್ಮಯ ಗೋಷ್ಠಿಯಲ್ಲಿ ಖ್ಯಾತ ಸಾಹಿತಿಗಳು ಭಾಗವಹಿಸಲಿದ್ದಾರೆ. ಗೋಷ್ಠಿಗಳ ಸಮನ್ವಯಕಾರರಾಗಿ ಮಿತ್ರಪ್ರಭ ಹೆಗ್ಡೆ ಹಾಗೂ ಮುನಿರಾಜ್ ರೆಂಜಾಳ ಕಾರ್ಯನಿರ್ವಹಿಸಲಿದ್ದಾರೆ. ಇಳಿಹಗಲು 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ನಡೆಯಲಿದೆ. ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ ಸನ್ಮಾನ ನೆರವೇರಿಸಲಿದ್ದು, ನಿಟ್ಟೆ ಕ್ಯಾಂಪಸ್ ನಿರ್ದೇಶಕ ಯೋಗೀಶ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾರೋಪ ಭಾಷಣವನ್ನು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹ ಸಂಸ್ಥಾಪಕ ಅಶ್ವತ್ ಎಸ್.ಎಲ್ ನೀಡಲಿದ್ದು, ಅಧ್ಯಕ್ಷತೆಯನ್ನು ಕೊಂಡಳ್ಳಿ ಪ್ರಭಾಕರ ಶೆಟ್ಟಿ ವಹಿಸಲಿದ್ದಾರೆ. ಪ್ರತಿಸ್ಪಂದನವನ್ನು ಸಮ್ಮೇಳನಾಧ್ಯಕ್ಷ ವಾಸುದೇವ ಭಟ್ ಸಿದ್ದಾಪುರ ನೀಡಲಿದ್ದಾರೆ. ಸಾಹಿತ್ಯ, ಶಿಕ್ಷಣ, ಉದ್ಯಮ, ಸಮಾಜ ಸೇವೆ, ಕೃಷಿ, ದೈವಾರಾಧನೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು ಎಂದ ಅವರು ಈ ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸೀಮಿತವಾಗಿರದೆ ಕಾರ್ಕಳ ಇನ್ನಿತರ ಕಡೆಗಳ ಸಾಹಿತಿಗಳು ಸಾಹಿತ್ಯಭಿಮಾನಿಗಳು, ಕವಿಗಳು, ಇತರ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವ ಸಾಹಿತಿಗಳು, ಬರಹಗಾರರು ಭಾಗವಹಿಸಿ ಈ ಬಾರಿಯ ಸಾಹಿತ್ಯ ಸಮ್ಮೇಳನ ಬಹಳ ಅದ್ದೂರಿ ಹಾಗೂ ಅರ್ಥಪೂರ್ಣವಾಗಲಿದೆ. ಈ ಕನ್ನಡದ ಹಬ್ಬದ ಯಶಸ್ವಿಗೆ ಎಲ್ಲರೂ ಕೈ ಜೋಡಿಸುವಂತೆ ವಿನಂತಿಸಿದರು. ಸುದ್ದಿಗೋಷ್ಠಿಯಲ್ಲಿ ಕಸಾಪ ಪಧಾಧಿಕಾರಿಗಳಾದ ದೇವದಾಸ್ ಕೆರೆಮನೆ , ನಿತ್ಯಾನಂದ ಪೈ, ಕ್ರಿಯೆಟಿವ್ ಕಾಲೇಜುಸಹ ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ಉಪಸ್ಥಿತರಿದ್ದರು.
ಎಮ್ ಡಿಎಮ್ಎ ಮಾರಾಟ ಪ್ರಕರಣ: ಓರ್ವ ಆರೋಪಿ ಸೆರೆ
ಉಳ್ಳಾಲ: ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ ಕೇರಳದ ಮೂಲದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಳ, ಮಂಗಲ್ಪಾಡಿ ನಿವಾಸಿ ಶೇಖ್ ಮೊಹಮ್ಮದ್ ಕೈಫ್ (22) ಎಂದು ಗುರುತಿಸಲಾಗಿದೆ. ಈತ ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವಿನ ಮಾರಾಟದಲ್ಲಿ ನಿರತನಾಗಿದ್ದ ಈ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಬಂಧಿತ ಆರೋಪಿಯಿಂದ ಅಂದಾಜು 55,000 ರೂ. ಮೌಲ್ಯದ ನಿಷೇಧಿತ 11 ಗ್ರಾಂ ಎಮ್ ಡಿಎಮ್ಎ ಕ್ರಿಸ್ಟಲ್ ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ತೂಕ ಮಾಪನ,500 ರೂ.ನಗದು ಮತ್ತು ಒಂದು ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. . ಮೊಹಮ್ಮದ್ ಕೈಫ್ ಎಂಬಾತ ವಿಲಾಸಿ ಜೀವನ ನಡೆಸಲು ಉಪ್ಪಳದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರೊಂದಿಗೆ ಸೇರಿ ಕೆಸಿ ರೋಡ್ ಫಲಾಹ್ ಶಾಲಾ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಪರಿಚಯಸ್ಥ ಗಿರಾಕಿಗಳಿಗೆ ಎಮ್ ಡಿಎಮ್ಎ ಕ್ರಿಸ್ಟಲನ್ನು ಪೂರೈಸುತ್ತಿದ್ದ ಎಂದು ತಿಳಿದು ಬಂದಿದೆ. ಬಂಧಿತ ಶೇಖ್ ಮೊಹಮ್ಮದ್ ಕೈಫ್ ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಾಫಿ ಬೆಳೆಗಾರರಿಗೆ ಮಾರಕವಾಗಿರುವ ಸರ್ಫೇಸಿ ಕಾಯ್ದೆ ಬದಲಾವಣೆಗೆ ಪ್ರಯತ್ನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ
ಚಿಕ್ಕಮಗಳೂರು: ಕಾಫಿ ಬೆಳೆಗಾರರಿಗೆ ಅನಾನುಕೂಲವಾಗಿರುವ ಕೇಂದ್ರದ ಸರ್ಫೇಸಿ ಕಾಯ್ದೆ ಬದಲಾವಣೆಗೆ ಪ್ರಧಾನಿ ಹಾಗೂ ಹಣಕಾಸು ಸಚಿವರ ಗಮನ ಸೆಳೆದು ಕಾಫಿ ಬೆಳೆಗಾರರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಕಾಫಿ ಮಂಡಳಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ, ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ ವತಿಯಿಂದ ಸೋಮವಾರ ಬಾಳೆಹೊನ್ನೂರಿನ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ(ಸಿ.ಸಿ.ಆರ್.ಐ.)ಯಲ್ಲಿ ನಡೆದ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಫಿ ಬೆಳೆಗಾರರನ್ನು ಈ ಕಾಯ್ದೆಯಿಂದ ರಕ್ಷಣೆ ಮಾಡುವಂತೆ ಹಲವರು ಬೇಡಿಕೆ ಇಟ್ಟಿದ್ದಾರೆ. ಸಾಲ ಬಾಕಿ ಉಳಿಸಿಕೊಂಡ ರೈತರ ತೋಟಗಳು ಹರಾಜು ಹಾಕುವ ಕರಾಳ ಕಾಯ್ದೆ ಇದಾಗಿದೆ ಎಂಬ ಅಭಿಪ್ರಾಯ ಬೆಳೆಗಾರರಲ್ಲಿದೆ. ಕಾಫಿ ಬೆಳೆಗಾರರಿಗೆ ಉರುಳಾಗಿರುವ ಈ ಕಾಯ್ದೆ ಬದಲಾವಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಇದರ ಜೊತೆ ಬೆಳೆಗಾರರಿಗೆ ಶೇ.3ರ ಬಡ್ಡಿ ದರದಲ್ಲಿ ಸಾಲ ನೀಡುವಂತೆ ಕೋರಲಾಗಿದೆ. ಕಾಫಿ ಮಂಡಳಿ ಅಧ್ಯಕ್ಷರ ಜೊತೆ ಬೆಳೆಗಾರ ಪ್ರಮುಖರು ಆಗಮಿಸಿದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿಸಿ ಬೆಳೆಗಾರರ ಹಿತ ಕಾಯಲಾಗುವುದು ಎಂದು ಭರವಸೆ ನೀಡಿದರು. ಅರಣ್ಯ ಇಲಾಖೆಯ ಕೆಲ ಕಾಯ್ದೆ, ನಿಯಮಗಳಿಂದ ಕಾಫಿ ಬೆಳೆ ವಿಸ್ತರಣೆ ಕಡಿಮೆಯಾಗುತ್ತಿದೆ. ಇದಕ್ಕೆ ನ್ಯಾಯಾಲಯದ ಕೆಲ ತೀರ್ಪುಗಳು ಸಹ ಕಾರಣವಾಗಿವೆ. ಅರಣ್ಯ ಇಲಾಖೆಯೊಂದಿಗಿನ ವಿವಾದಗಳ ಪರಿಹಾರಕ್ಕೆ ಕೇಂದ್ರ ಸರಕಾರದ ಮಟ್ಟದಲ್ಲಿ ಸಾಧ್ಯವಾದ ಕ್ರಮ ಜರುಗಿಸಲಾಗುವುದು ಎಂದರು. ವನ್ಯ ಜೀವಿಗಳು ಮತ್ತು ಮಾನವ ಸಂಘರ್ಷ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಕಾಫಿ ಬೆಳೆಗಾರರು ತೋಟಗಳಿಗೆ ಹೋಗಲು ಭಯಪಡುವ ಸ್ಥಿತಿ ಕೆಲವು ಕಡೆ ಇದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಇದನ್ನು ತಪ್ಪಿಸಲು ರೈಲು ಹಳಿ ತಡೆಗೋಡೆ ನಿರ್ಮಿಸಲು ಚಾಲನೆ ನೀಡಿದ್ದೆ. ಈ ಯೋಜನೆ ನಿಂತು ಹೋಗಿದ್ದು, ಇದರ ಮರು ಚಾಲನೆ ನೀಡಿ ರೈತರ ಸುರಕ್ಷತೆಗೆ ಗಮನ ಹರಿಸಲಾಗುವುದು ಎಂದರು. ಕ್ರೆಡಿಲ್ ಅಧ್ಯಕ್ಷ ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ ಮಾತನಾಡಿ, ಬಾಬಾಬುಡನ್ ಎಂಬ ಸಂತರು ವಿದೇಶದಿಂದ ತಂದ ಕಾಫಿ ಬೀಜ ಇಂದು ಹಲವು ಬೆಳೆಗಾರರ ಆರ್ಥಿಕ ಸ್ವಾವಲಂಬನೆಗೆ ಕಾರಣವಾಗಿ, ಉದ್ಯಮ ಸ್ವರೂಪ ಪಡೆದುಕೊಂಡಿದೆ. ಕಾಫಿ ಉದ್ಯಮ ಪ್ರಪಂಚದ ಗಮನ ಸೆಳೆಯಬೇಕಾಗಿದೆ. ಕಾಫಿ ಅಂಗಡಿಯವರು ನಡೆಸುವ ನೆಮ್ಮದಿಯ ಜೀವನವನ್ನು ಬೆಳೆಗಾರರು ಮಾಡಲಾಗುತ್ತಿಲ್ಲ. ಕಾಡು ಪ್ರಾಣಿಗಳು ಮತ್ತು ಮಾನವ ಸಂಘರ್ಷ ಕಾಫಿ ಬೆಳೆಗೆ ಸಮಸ್ಯೆಯಾಗಿ ಕಾಣುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಹೆಚ್ಚು ಪರಿಹಾರ ನೀಡಬೇಕು. ಕಾಫಿ ತೋಟದಲ್ಲಿ ಹೋಗಲು ಈಗ ಭಯವಾಗುತ್ತಿದೆ. ಹೊಸ ತಂತ್ರಜ್ಞಾನದ ಮೂಲಕ ಬೆಳೆಗಾರರಿಗೆ ತೊಂದರೆ ಆಗದಂತೆ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಸೆ ವ್ಯಕ್ತಪಡಿಸಿದರು. ಸರ್ಫೇಸಿ ಕಾಯ್ದೆ ಕಾಫಿ ಬೆಳೆಗಾರರಿಗೆ ಮಾರಕವಾಗಿದೆ. ಕಾಫಿ ಬೆಳೆ ಪ್ರಕೃತಿ ಹಾಗೂ ಮಾರುಕಟ್ಟೆ ಬೆಲೆ ಅವಲಂಬಿಸಿದೆ. ಬೆಳೆ ನಷ್ಟದಿಂದ ರೈತರು ಕೆಲ ಸಾಲದ ಕಂತು ಕಟ್ಟದಿರಬಹುದು. ಆಗ ಈ ಕಾಯ್ದೆ ಪ್ರಕಾರ ಬಾಕಿ ಉಳಿಸಿಕೊಂಡ ಬೆಳೆಗಾರರ ತೋಟಗಳನ್ನು ಬ್ಯಾಂಕ್ ಹೆಸರಿಗೆ ಮಾಡಿಸಿಕೊಂಡು ಹರಾಜು ಮಾಡಲು ಅವಕಾಶ ಮಾಡಲಾಗಿದೆ. ಇದರಿಂದ ರೈತರನ್ನು ಮುಕ್ತ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಮಾತನಾಡಿ, ಕರ್ನಾಟಕದ ಕಾಫಿ ಬೆಳೆಗಾರರ ಧ್ವನಿಯಾಗಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಕೆಲಸ ಮಾಡುತ್ತಿದ್ದಾರೆ. ತೆಂಗಿನ ಮರದ ಜೊತೆ ಕಾಫಿ ಕೂಡ ಕಲ್ಪವೃಕ್ಷ ಆಗಲಿದೆ. ಕಾಫಿಯಿಂದ ಜೈವಿಕ ಇಂಧನ, ಬಟ್ಟೆ ಮತ್ತಿತರರ ಉಪ ಉತ್ಪನ್ನ ತಯಾರು ಮಾಡುವ ಸಂಶೋಧನೆ ಮಾಡಲಾಗುತ್ತಿದೆ. ಸಣ್ಣ ಕಾಫಿ ಬೆಳೆಗಾರರ ಅನುಕೂಲಕ್ಕಾಗಿ ಶತಮಾನೋತ್ಸವ ಕಾರ್ಯಕ್ರಮ ಮಾಡಲಾಗುತ್ತಿದೆ. ಕಾಫಿ ಮಂಡಳಿ ಈಗ ಬೆಳೆಗಾರರ ಪರವಾಗಿ ಬದಲಾಗುತ್ತಿದೆ ಎಂದರು. ನಾಗಲ್ಯಾಂಡ್ ಕಾಫಿಯನ್ನು 10 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಬೆಳೆಗಾರರು ಮಾರುಕಟ್ಟೆ ಸಾಧ್ಯತೆಗಳನ್ನು ಕಂಡುಕೊಳ್ಳಬೇಕು. ಈಗ ಬೆಳೆ ಕಡಿಮೆಯಾಗುತ್ತಿದ್ದು, ಇದರ ಅವಕಾಶ ಬೆಳೆಗಾರರು ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾಫಿ ಮಂಡಳಿ ಕಾರ್ಯದರ್ಶಿ ಕೂರ್ಮಾರಾವ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಬೇಲೂರು ಶಾಸಕ ಸುರೇಶ್, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಸಕಲೇಶಪುರದ ಮಾಜಿ ಶಾಸಕ ವಿಶ್ವನಾಥ್, ಸುಧಾಕರಶೆಟ್ಟಿ, ಕಾಫಿ ಸಂಶೋಧನಾ ಸಂಸ್ಥೆಯ ನಿರ್ದೇಶಕ ಸೆಂಥಿಲ್ಕುಮಾರ್ ಮುಂತಾದವರಿದ್ದರು.
ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ಹೊಸ ಬಡಾವಣೆ, 2113 ಎಕರೆ ಗುರುತು; ಎಲ್ಲಿ?
ಮೈಸೂರು ಅಭಿವೃದ್ಧಿ ಪ್ರಾಧಿಕಾರವು ಎರಡು ದಶಕಗಳಿಂದ ಚರ್ಚೆಯಲ್ಲಿದ್ದ ಬೊಮ್ಮೇನಹಳ್ಳಿ ಹೊಸ ಬಡಾವಣೆ ನಿರ್ಮಾಣಕ್ಕೆ ಮಹತ್ವದ ತೀರ್ಮಾನ ಕೈಗೊಂಡಿದೆ. ಇಲವಾಲ ಹೋಬಳಿಯ 2113.24 ಎಕರೆ ಜಾಗ ಗುರುತಿಸಲಾಗಿದ್ದು, ಭೂಮಾಲೀಕರ ಒಪ್ಪಿಗೆ ಬಳಿಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಬಡಾವಣೆ ನಿರ್ಮಾಣಕ್ಕೆ ಪ್ರತ್ಯೇಕ ಕಚೇರಿ, ಕ್ಷಿಪ್ರ ಕಾರ್ಯಪಡೆ ರಚನೆಗೂ ಒಪ್ಪಿಗೆ ನೀಡಲಾಗಿದೆ.
ಬಳ್ಳಾರಿ | ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣಾ ವೇಳಾಪಟ್ಟಿ ಪ್ರಕಟ
ಬಳ್ಳಾರಿ, ಡಿ.22: ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಕ್ಷೇತ್ರದಿಂದ ಚುನಾಯಿತ ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಹಮ್ಮದ್ ಹಾರೀಸ್ ಸುಮೇರ್ ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 310ರ ಪ್ರಕಾರ ಜಿಲ್ಲಾ ಯೋಜನಾ ಸಮಿತಿ ರಚಿಸಬೇಕಾಗಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆ) 1996ರ 8ರ ನಿಯಮದ ಪ್ರಕಾರ ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಮತಕ್ಷೇತ್ರಗಳಿಂದ ಪ್ರತ್ಯೇಕವಾಗಿ ಸದಸ್ಯರ ಆಯ್ಕೆ ಕುರಿತು ಚುನಾವಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಚುನಾವಣಾ ವೇಳಾಪಟ್ಟಿ: ಪುರಸಭಾ ಕ್ಷೇತ್ರದಿಂದ ಚುನಾಯಿಸಬೇಕಾದ ಸದಸ್ಯರ ಸಂಖ್ಯೆ: ಪುರಸಭಾ ಕ್ಷೇತ್ರದಿಂದ - 23 ಸದಸ್ಯರು (ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಚುನಾಯಿತ ಸದಸ್ಯರು). ನಾಮಪತ್ರ ಸ್ವೀಕರಿಸುವ ದಿನಾಂಕ, ಸಮಯ ಮತ್ತು ಸ್ಥಳ (ಸಾರ್ವಜನಿಕ ರಜಾದಿನ ಹೊರತುಪಡಿಸಿ): ಡಿ.22ರಿಂದ 31ರ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ, ಸ್ಥಳ: ಜಿಲ್ಲಾ ಪಂಚಾಯತ್ನ ಪಿಎಇಒ ಕೊಠಡಿ ಯೋಜನಾ ಶಾಖೆ. ನಾಮಪತ್ರ ಪರಿಶೀಲಿಸುವ ದಿನಾಂಕ, ದಿನ, ಸಮಯ ಮತ್ತು ಸ್ಥಳ: 2026ರ ಜನವರಿ 2 (ಶುಕ್ರವಾರ) ಬೆಳಗ್ಗೆ 11 ಗಂಟೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ. ನಾಮಪತ್ರ ಹಿಂಪಡೆಯುವ ಕೊನೆ ದಿನಾಂಕ, ದಿನ ಮತ್ತು ಸಮಯ: 2026ರ ಜನವರಿ 05 (ಸೋಮವಾರ) ಮಧ್ಯಾಹ್ನ 3 ಗಂಟೆಯವರೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ. ಮತದಾನ ಅಗತ್ಯವಾದಲ್ಲಿ ಮತದಾನ ನಡೆಸಬೇಕಾದ ದಿನಾಂಕ, ದಿನ, ಸಮಯ ಮತ್ತು ಸ್ಥಳ: 2026ರ ಜನವರಿ 12 (ಸೋಮವಾರ) ಬೆಳಗ್ಗೆ 9 ರಿಂದ ಸಂಜೆ 4ರವರೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣ. ಮತ ಎಣಿಕೆ ದಿನಾಂಕ, ಸಮಯ ಮತ್ತು ಸ್ಥಳ: 2026 ರ ಜನವರಿ 12 (ಸೋಮವಾರ) ಸಂಜೆ 5 ಗಂಟೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣ. 2026ರ ಜನವರಿ 13 (ಮಂಗಳವಾರ) ಸಂಜೆ 5 ಗಂಟೆಗೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಹಮ್ಮದ್ ಹಾರೀಸ್ ಸುಮೇರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೊಸಪೇಟೆ | ಸರಕಾರಿ ಶಾಲೆಗಳ ಮುಚ್ಚುಗಡೆ ಖಂಡನೀಯ: ಡಾ.ಚಂದ್ರಶೇಖರ್
ಹೊಸಪೇಟೆ, ಡಿ.22: ರಾಜ್ಯ ಸರಕಾರ ಸರಕಾರಿ ಶಾಲೆಗಳನ್ನು ಮುಚ್ಚಿ ಬಡ ಮಕ್ಕಳಿಂದ ಶಿಕ್ಷಣವನ್ನು ಕಸಿದುಕೊಳ್ಳಲು ಯತ್ನಿಸುತ್ತಿದೆ ಎಂದು ಪ್ರಗತಿಪರ ಚಿಂತಕ ಡಾ.ಎಸ್.ಬಿ.ಚಂದ್ರಶೇಖರ್ ಆರೋಪಿಸಿದ್ದಾರೆ. ನಗರದ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ಪ್ರಥಮ ಸಮ್ಮೇಳನವನ್ನು ಉದ್ಘಟಿಸಿ ಅವರು ಮಾತನಾಡಿದರು. ಹಿಂದೆ 50 ಲಕ್ಷ ಸಹಿ ಸಂಗ್ರಹ ಅಭಿಯಾನ ಮೂಲಕ ದೊಡ್ಡ ಮಟ್ಟದಲ್ಲಿ ವಿದ್ಯಾರ್ಥಿ ಸಂಘಟನೆಯು ಹೋರಾಟ ಮಾಡಿ 6,200 ಸರಕಾರಿ ಶಾಲೆಗಳನ್ನು ಉಳಿಸಿದೆ. ದೇಶ ಅಭಿವೃದ್ಧಿ ಹೊಂದಬೇಕಾದರೆ ಆ ದೇಶದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕು. ಶಿಕ್ಷಣ ನಮ್ಮ ಹಕ್ಕು, ಈ ಶಿಕ್ಷಣ ಉಳಿಸಿಕೊಳ್ಳಲು ವಿದ್ಯಾರ್ಥಿಗಳು ಒಂದಾಗಬೇಕು ಎಂದು ಅವರು ಹೇಳಿದರು. ಎಐಡಿಎಸ್ಒ ರಾಜ್ಯಾಧ್ಯಕ್ಷ ಕೆ.ಎಸ್.ಅಶ್ವಿನಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಹಿಂದೆ ಸಾವಿತ್ರಿ ಬಾಫುಲೆ, ಜ್ಯೋತಿರಾ ಫುಲೆ ಮತ್ತು ವಿದ್ಯಾಸಾಗರ್ ಂತಹ ಮಹಾನ್ ವ್ಯಕ್ತಿಗಳು ಎಲ್ಲರಿಗೂ ಶಿಕ್ಷಣ ದೊರೆಯಬೇಕೆಂಬ ಆಶಯದೊಂದಿಗೆ ಎಲ್ಲಾ ಕಡೆ ಶಾಲೆಗಳನ್ನು ತೆರೆಯಲು ಹೋರಾಡಿದರು. ಆದರೆ ಈಗಿನ ಸರಕಾಗಳು ಇಂತಹ ಮಹಾನ್ ವ್ಯಕ್ತಿಗಳ ವಿಚಾರದ ವಿರುದ್ಧವಾಗಿ ಶಾಲೆಗಳನ್ನು ಮುಚ್ಚುತ್ತಿವೆ, ರಾಜ್ಯ ಸರಕಾರ ಕೆಪಿಎಸ್ ಮ್ಯಾಗ್ನೆಟ್ ಶಾಲೆಯ ಹೆಸರಿನಲ್ಲಿ ಗ್ರಾಮ ಪಂಚಾಯತ್ಗೆ ಒಂದರಂತೆ ರಾಜ್ಯದಲ್ಲಿ 6,000 ಮ್ಯಾಗ್ನೆಟ್ ಶಾಲೆಗಳನ್ನು ಸ್ಥಾಪಿಸಲು 40 ಸಾವಿರಕ್ಕೂ ಹೆಚ್ಚು ಸರಕಾರಿ ಶಾಲೆಗಳನ್ನು ಮುಚ್ಚುತ್ತಿದೆ. ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಮಹತ್ವದ ಜವಾಬ್ದಾರಿ ರಾಜ್ಯದ ವಿದ್ಯಾರ್ಥಿ ಮತ್ತು ಜನತೆಯ ಮೇಲಿದೆ ಎಂದರು. ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮುಖ್ಯ ಭಾಷಣಕಾರರಾಗಿ ಮಾತನಾಡಿ, ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರಕಾರದ ಸ್ಪಷ್ಟನೆ, ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಹೇಳುತ್ತಿರುವ ಮಾತು ಸತ್ಯಕ್ಕೆ ದೂರವಾಗಿದೆ ಎಂದು ಆಕ್ರೋಶ್ಯ ವ್ಯಕ್ತಪಡಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾವ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಬೇಕು ಮತ್ತು ಆ ಶಾಲೆಗೆ ಯಾವ ಯಾವ ಶಾಲೆಗಳನ್ನು ಸೇರಿಸಬೇಕು ಎಂಬುದರ ಪೂರ್ಣ ಪಟ್ಟಿಯನ್ನು ಈಗಾಗಲೇ ಸಿದ್ಧಗೊಳಿಸಲಾಗಿದೆ, ಸರಕಾರದ ಘೋರ ಹುನ್ನಾರ ಮತ್ತು ಕರಾಳ ಸತ್ಯವನ್ನು ಎಐಡಿಎಸ್ಒ ಬಯಲಿಗೆಳೆದಿದೆ ಎಂದರು. ವಿಜಯನಗರ ಜಿಲ್ಲೆಯ ಸಂಘಟನೆಯ ನೂತನ ಜಿಲ್ಲಾ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರವಿಕಿರಣ್ ಜೆಪಿ, ಕಾರ್ಯದರ್ಶಿ ಉಮಾದೇವಿಯು, ಜಂಟಿ ಕಾರ್ಯದರ್ಶಿ ಆದಿತ್ಯ, ಚಂದ್ರ, ಆಕಾಶ್, ಜ್ಞಾನೇಶ್, ಮೇರಿ, ನೀಮ, ಕಾವೇರಿ ಎ, ದಿವ್ಯಶ್ರೀ. ಕಾರ್ಯಕಾರಿ ಸಮಿತಿಯಲ್ಲಿ ನಾನಾ ಕಾಲೇಜಿನ 12 ವಿದ್ಯಾರ್ಥಿಗಳು ಹಾಗೂ 25 ವಿದ್ಯಾರ್ಥಿಗಳು ಸದಸ್ಯರಾಗಿ ಆಯ್ಕೆಯಾದರು. ಸಮ್ಮೇಳನದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಬೇಕು ಹಾಗೂ ಇನ್ನಿತರ ವಿದ್ಯಾರ್ಥಿಗಳ ಬೇಡಿಕೆಯ ಗೊತ್ತುವಳಿಗಳನ್ನು ಮಂಡಿಸಲಾಯಿತು. ಸಮ್ಮೇಳನದಲ್ಲಿ ನಾನಾ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆ ವೇಳೆ ಯಾವುದೇ ಅಕ್ರಮ ಪಾರ್ಟಿಗಳು, ಮಾದಕ ವಸ್ತುಗಳ ಮಾರಾಟ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮಹಿಳೆಯರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಹೆಲ್ಪ್ ಡೆಸ್ಕ್, ರಾಣಿ ಚನ್ನಮ್ಮ ಪಡೆಗಳು ಕಾರ್ಯನಿರ್ವಹಿಸಲಿವೆ. ಓಲಾ, ಊಬರ್ ಆ್ಯಪ್ಗಳಲ್ಲೂ ತುರ್ತು ಸಹಾಯವಾಣಿ ಅಳವಡಿಸಲಾಗಿದೆ.
ಉತ್ತರ ಪ್ರದೇಶ| 2016ರ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಲಕ್ನೋ, ಡಿ. 22: ಬುಲಂದ್ಶಹರ್ ಎನ್ಎಚ್-91 ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಿಗೆ, ಒಂಭತ್ತು ವರ್ಷಗಳ ಕಾನೂನು ಪ್ರಕ್ರಿಯೆಯ ಬಳಿಕ ಸ್ಥಳೀಯ ನ್ಯಾಯಾಲಯವೊಂದು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ತಲಾ 1.81 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಧೀಶ (ಪೋಕ್ಸೊ) ಓಮ್ ಪ್ರಕಾಶ್ ಈ ತೀರ್ಪು ನೀಡಿದರು. 2016 ಜುಲೈ 29ರಂದು ಐವರು ಸದಸ್ಯರ ಕುಟುಂಬವೊಂದು ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಲು ನೋಯಿಡದಿಂದ ಶಹಜಹಾನ್ಪುರಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಭಯಾನಕ ಘಟನೆ ಸಂಭವಿಸಿತ್ತು. ಕಾರು ರಾಷ್ಟ್ರೀಯ ಹೆದ್ದಾರಿ 91ರಲ್ಲಿ ದೋಸ್ತ್ಪುರ ಗ್ರಾಮದ ಸಮೀಪ ತಲುಪಿದಾಗ ದುಷ್ಕರ್ಮಿಗಳು ಯಾವುದೋ ವಸ್ತುವೊಂದನ್ನು ಕಾರಿನತ್ತ ಎಸೆದರು. ಕಾರಿಗೆ ಏನು ಬಿದ್ದಿದೆ ಎಂದು ನೋಡಲು ಕುಟುಂಬದ ಒಬ್ಬ ಸದಸ್ಯ ಕೆಳಗಿಳಿದಾಗ ಆರೇಳು ಜನರು ಅವರ ಮೇಲೆ ದಾಳಿ ಮಾಡಿ ಕಾರನ್ನು ನಿಲ್ಲಿಸಿದರು. ಬಳಿಕ ಕಾರಿನಲ್ಲಿದ್ದ ಐವರನ್ನು ಕೆಳಗಿಳಿಸಿ ಸಮೀಪದ ಗದ್ದೆಗೆ ಕರೆದೊಯ್ದರು. ಅಲ್ಲಿ ದುಷ್ಕರ್ಮಿಗಳು ಓರ್ವ ಮಹಿಳೆ ಮತ್ತು ಅವರ ಮಗಳ ಮೇಲೆ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ಮಾಡಿದರು. ಕುಟುಂಬದ ಇತರ ಸದಸ್ಯರನ್ನು ಒತ್ತೆಯಾಳುಗಳಾಗಿ ಇಡಲಾಗಿತ್ತು. ಪಾತಕಿಗಳು ಬಳಿಕ ಅವರ ಚಿನ್ನಾಭರಣಗಳು ಮತ್ತು ಹಣವನ್ನು ದರೋಡೆಗೈದು ಪರಾರಿಯಾದರು. ಪ್ರಕರಣಕ್ಕೆ ಸಂಬಂಧಿಸಿ, ಆರಂಭದಲ್ಲಿ 11 ಮಂದಿಯನ್ನು ಆರೋಪಿಗಳು ಎಂಬುದಾಗಿ ಹೆಸರಿಸಲಾಗಿತ್ತು. ಪ್ರಮುಖ ಆರೋಪಿ ಸಲೀಮ್ ಬವರಿಯ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ 2019ರಲ್ಲಿ ಮೃತಪಟ್ಟಿದ್ದಾನೆ. ಇತರ ಇಬ್ಬರು ಆರೋಪಿಗಳು ಎಸ್ಟಿಎಫ್ ನಡೆಸಿದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಮೃತಪಟ್ಟಿದ್ದಾರೆ. ಬಳಿಕ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಯಿತು. ಸಿಬಿಐ ತನ್ನ ತನಿಖೆಯ ವೇಳೆ, ಮೂವರು ಆರೋಪಿಗಳು ಅಮಾಯಕರು ಎಂಬುದಾಗಿ ಕಂಡುಕೊಂಡಿತು ಹಾಗೂ ಆರೋಪಿಗಳ ಪಟ್ಟಿಯಿಂದ ಅವರ ಹೆಸರುಗಳನ್ನು ಕೈಬಿಟ್ಟಿತು. ಸೋಮವಾರ ಧರ್ಮವೀರ, ನರೇಶ್, ಸುನೀಲ್, ಜುಬೇರ್ ಮತ್ತು ಸಾಜಿದ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಉಡುಪಿ: ರೆಸಾರ್ಟ್ನಲ್ಲಿ ಯಾವುದೇ ದಾಖಲೆಗಳಿಲ್ಲದ ವಿದೇಶಿಗರನ್ನು ಅಕ್ರಮವಾಗಿ ಕೆಲಸಕ್ಕೆ ಇಟ್ಟುಕೊಂಡು ದೇಶದ ಭದ್ರತೆಗೆ ಆತಂಕ ಒಡ್ಡಿರುವ ಹಾಗೂ ದೇಶದ್ರೋಹದ ಕಾರ್ಯ ಮಾಡಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿಯನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸೋಮವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರಿಗೆ ಮನವಿ ಸಲ್ಲಿಸಿತು. ಯಾವುದೇ ದೇಶದ ಪ್ರಜೆಗಳು ಅಕ್ರಮವಾಗಿ ದೇಶದಲ್ಲಿ ವಾಸಿಸುವುದು ದೇಶದ ಆಂತರಿಕ ಭದ್ರತೆ ಮಾರಕವಾಗುವ ಸಾಧ್ಯತೆ ಇರುವುದರಿಂದ, ಇಂತಹವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ. ರೆಸಾರ್ಟ್/ಲಾಡ್ಜ್ಗಳು ಯಾವುದೇ ಮಾಹಿತಿಗಳಿಲ್ಲದ ವ್ಯಕ್ತಿಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧವಾಗಿದೆ. ಆದುದರಿಂದ ಪೃಥ್ವಿರಾಜ್ ಶೆಟ್ಟಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿ, ಇದರ ಹಿಂದಿರುವ ಷಡ್ಯಂತ್ರ ಬಯಲಿಗೆ ಎಳೆಯಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಜಿಲ್ಲೆಯ ಯಾವುದೇ ರೆಸಾರ್ಟ್/ಲಾಡ್ಜ್ಗಳಲ್ಲಿ ಯಾವುದೇ ರೀತಿಯ ಅನೈತಿಕ/ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಉಡುಪಿ ಜಿಲ್ಲೆಯಲ್ಲಿ ರೆಸಾರ್ಟ್/ಲಾಡ್ಜ್ಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಕಟ್ಟುನಿಟ್ಟಿನ ಕ್ರಮ ತೆಗುದುಕೊಳ್ಳಬೇಕು ಎಂದು ನಿಯೋಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ, ಪ್ರಮುಖರಾದ ನವೀನ್ ಸಾಲಿಯಾನ್, ಮಮತಾ ನಾಯ್ಕ್, ಶಮಂತ್ ಕುಂದಾಪುರ, ಅಫ್ರಿದ್, ಪ್ರವೀಣ್ ಬಾರಕೂರು ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸರಕಾರ ಯಾವುದೇ ಚರ್ಚೆ, ಸಮಾಲೋಚನೆ ನಡೆಸದೆ MGNREGAವನ್ನು ರದ್ದುಗೊಳಿಸಿದೆ: ಸೋನಿಯಾ ಗಾಂಧಿ ವಾಗ್ದಾಳಿ
ಹೊಸದಿಲ್ಲಿ,ಡಿ. 22: ಚಾರಿತ್ರಿಕ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ) ಯ ‘‘ಧ್ವಂಸ’’ ಗ್ರಾಮೀಣ ಭಾರತದ ಕೋಟ್ಯಂತರ ಜನರ ಮೇಲೆ ವಿನಾಶಕಾರಿ ಪರಿಣಾಮ ಉಂಟು ಮಾಡಲಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಸೋಮವಾರ ಹೇಳಿದ್ದಾರೆ. ಎಲ್ಲರೂ ಸಂಘಟಿತರಾಗುವಂತೆ ಹಾಗೂ ನಾಗರಿಕರ ಹಕ್ಕುಗಳನ್ನು ರಕ್ಷಿಸುವಂತೆ ಅವರು ಆಗ್ರಹಿಸಿದ್ದಾರೆ.ರೆ̤ ‘ಹಿಂದೂ’ ಪತ್ರಿಕೆಯ ‘‘ದಿ ಬುಲ್ಡೋಜ್ಡ್ ಡೆಮೋಲಿಶನ್ ಆಫ್ ಎಂನರೇಗಾ’’ ಶೀರ್ಷಿಕೆಯ ಸಂಪಾದಕೀಯದಲ್ಲಿ ಕಾಂಗ್ರೆಸ್ನ ಮಾಜಿ ವರಿಷ್ಠೆ, ‘‘ಎಂನರೇಗಾದ ರದ್ದು ಸಂಘಟಿತ ವಿಫಲತೆ’’ ಎಂದು ಹೇಳಿದ್ದಾರೆ. ‘‘ಮಹಾತ್ಮಾ ಗಾಂಧಿ ಅವರ ಸರ್ವೋದಯ (ಎಲ್ಲರ ಕಲ್ಯಾಣ) ಕಲ್ಪನೆಯನ್ನು ಎಂನರೇಗಾ ಸಾಕಾರಗೊಳಿಸಿತು ಹಾಗೂ ಸಂವಿಧಾನ ಭರವಸೆ ನೀಡಿದಂತೆ ಜನರು ಉದ್ಯೋಗ ಪಡೆಯುವ ಕಾನೂನು ಬದ್ಧ ಖಾತರಿ ನೀಡಿತು’’ ಎಂದು ಅವರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ನರೇಂದ್ರ ಮೋದಿ ಸರಕಾರ ಯಾವುದೇ ಚರ್ಚೆ, ಸಮಾಲೋಚನೆ, ಅಥವಾ ಸಂಸದೀಯ ಪ್ರಕ್ರಿಯೆಗಳು ಅಥವಾ ಕೇಂದ್ರ-ರಾಜ್ಯ ಸಂಬಂಧಗಳನ್ನು ಗೌರವಿಸದೆ ಎಂನರೇಗಾವನ್ನು ರದ್ದುಗೊಳಿಸಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. MGNREGA ರದ್ದು ಹಿಂಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ನಿಂದ ಸಾರ್ವಜನಿಕ ಆಂದೋಲನ: ಜೈರಾಮ್ ರಮೇಶ್ ಎಂನರೇಗಾವನ್ನು ರದ್ದುಗೊಳಿಸಿರುವುದನ್ನು ಹಿಂಪಡೆಯುವಂತೆ ಆಗ್ರಹಿಸಿ ಸಾರ್ವಜನಿಕ ಆಂದೋಲನ ನಡೆಸಲು ಪಕ್ಷ ಯೋಜಿಸಿರುವುದಾಗಿ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಸೋಮವಾರ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘ಎಕ್ಸ್’ನ ಪೋಸ್ಟ್ನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ)ಯ ಹಿನ್ನೆಲೆಯನ್ನು ಅವರು ಹಂಚಿಕೊಂಡಿದ್ದಾರೆ.
ಒಪಿಎಸ್ ಮರುಜಾರಿಗೆ ಪಟ್ಟು, ಅನಿವಾರ್ಯವಾದರೆ ಹೋರಾಟಕ್ಕೆ ಸಿದ್ಧ ಎಂದು ಎಚ್ಚರಿಕೆ ನೀಡಿದ ಸರಕಾರಿ ನೌಕರರು
ರಾಜ್ಯ ಸರಕಾರಿ ನೌಕರರ ಸಂಘವು ಎನ್ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸಲು ಒತ್ತಾಯಿಸಿದೆ. ಕೇಂದ್ರ ಹಾಗೂ ಇತರ ರಾಜ್ಯಗಳ ಉದಾಹರಣೆಗಳನ್ನು ನೀಡಿದೆ. ಖಾಲಿ ಹುದ್ದೆಗಳಿಂದ ಸರಕಾರಕ್ಕೆ ಉಳಿತಾಯವಾಗುತ್ತಿರುವ ಹಣವನ್ನು ಪಿಂಚಣಿಗೆ ಬಳಸಬಹುದು ಎಂದು ತಿಳಿಸಿದೆ. ನೌಕರರ ಆರ್ಥಿಕ ಭದ್ರತೆಗಾಗಿ ಈ ಕ್ರಮ ಅಗತ್ಯ ಎಂದು ಮನವಿ ಮಾಡಿದೆ. ಸಮಿತಿಯು ಶೀಘ್ರದಲ್ಲೇ ವರದಿ ಸಲ್ಲಿಸುವ ಭರವಸೆ ನೀಡಿದೆ.
ಕಾರಂತರ ಕಾದಂಬರಿಗಳಲ್ಲಿ ವರ್ತಮಾನದ ತಲ್ಲಣ ಎದುರಿಸುವ ಅಸ್ತ್ರ: ಕೆ.ಪಿ.ಸುರೇಶ್ ಕಂಜರ್ಪಣೆ
ಉಡುಪಿ, ಡಿ.22: ಶಿವರಾಮ ಕಾರಂತರು ಬಹಳ ಶ್ರೇಷ್ಠ ಎನಿಸುವುದು ಅವರ ಕಾದಂಬರಿಗಳಿಂದಾಗಿ. ಪ್ರಸ್ತುತ ಕಾಲದ ಬಿಕ್ಕಟ್ಟು ಎದುರಿಸಲು ಅದರೊಂದಿಗೆ ಅನುಸಂಧಾನ ಮಾಡಲು ಬೇಕಾದ ಅಂಶಗಳು ಅವರ ಕಾದಂಬರಿ ಗಳಲ್ಲಿ ಇವೆ. ಅವರ ಕಾದಂಬರಿಗಳು ವರ್ತಮಾನದ ತಲ್ಲಣಗಳು ಹಾಗೂ ಆತಂಕಗಳನ್ನು ಎದುರಿಸಲು ಬೇಕಾದ ಅಸ್ತ್ರಗಳನ್ನು ನೀಡುತ್ತದೆ. ಎಂದು ಚಿಂತಕ ಕೆ.ಪಿ.ಸುರೇಶ್ ಕಂಜರ್ಪಣೆ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ರಥಬೀದಿ ಗೆಳೆಯರು ಸಾಂಸ್ಕೃತಿಕ ವೇದಿಕೆಯ ಸಹಯೋಗದೊಂದಿಗೆ ಸೋಮವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ಉಪನ್ಯಾಸ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ‘ನಮ್ಮ ಕಾಲದಲ್ಲಿ ಕಾರಂತರು-ಒಂದು ವಿಶ್ಲೇಷಣೆ’ ಕುರಿತು ಉಪನ್ಯಾಸ ನೀಡಿದರು. ಸದ್ಯ ಕರ್ನಾಟಕ ಸಾಂಸ್ಕೃತಿಕ ಬೌದ್ಧಿಕ ಚರ್ಚೆಯ ಸ್ಪೂರ್ತಿಯ ಮೂಲ ಬಸವಣ್ಣ, ಕುವೆಂಪು ಮತ್ತು ಅಂಬೇಡ್ಕರ್ ಮಾತ್ರ ಇದ್ದಾರೆ. ಕಳೆದ 25 ವರ್ಷಗಳ ಹಿಂದೆ ಕಾರಂತರು ಕೂಡ ಸ್ಪೂರ್ತಿಯಮೂಲದ ಭಾಗವಾಗಿ ದ್ದರು. ಆದರೆ ಕಳೆದ 20ವರ್ಷಗಳಿಂದ ಕಾರಂತರು ಅಲ್ಲಿ ಇಲ್ಲ. ಕಾರಂತರು ಯಾಕೆ ಸ್ಪೂರ್ತಿಯ ಮೂಲವಾಗಿ ಕರ್ನಾಟಕದ ಎಲ್ಲ ಚಲನಶೀಲ ಚಟುವಟಿಕೆಗಳ ಭಾಗವಾಗಿಲ್ಲ ಎಂಬುದು ಪ್ರಶ್ನೆಯಾಗಿದೆ ಎಂದರು. ವರ್ತಮಾನದ ಜಿಜ್ಞಾಸೆ, ಬಿಕ್ಕಟ್ಟುಗಳಿಗೆ ಉತ್ತರ ಹಾಗೂ ಸವಾಲು ಆಗುವಂತಹ ಒಳನೋಟುಗಳನ್ನು ಕಾರಂತರ ಕಾದಂಬರಿ ಮೂಲಕ ನಾವು ಹುಡುಕುವ ಪ್ರಯತ್ನ ಮಾಡಿಲ್ಲ. ಕಾರಂತರ ಅತ್ಯಂತ ಶ್ರೇಷ್ಠ ಕೊಡುಗೆಗಳಾದ ಕಾದಂಬರಿಗಳಲ್ಲಿ ಬಿಕ್ಕಟ್ಟು ಎದುರಿಸುವ ಅಂಶಗಳನ್ನು ಗುರುತಿಸುವಲ್ಲಿ ನಾವು ನಿರ್ಲಕ್ಷ್ಯ ಮಾಡಿದ್ದೇವೆ ಎಂದರು. ಈ ದೇಶದ ಎಲ್ಲ ಜ್ವಲಂತ ಸಮಸ್ಯೆಗಳ ಹೋರಾಟಗಳಲ್ಲಿ ಬಹಳ ಸ್ಪೂರ್ತಿಯ ನೆಲೆಯಾಗಿ ಬಹಳ ನೇರವಾಗಿ ಇದ್ದವರು ಕಾರಂತರು. ಅವರು 10 ವಿಶ್ವವಿದ್ಯಾನಿಲಯ ಮಾಡುವ ಕೆಲಸವನ್ನು ಹಾಗೂ 10 ಸಂಘಟನೆಗಳು ಮಾಡುವ ಗ್ರಾಮೀಣಾಬಿವೃದ್ಧಿ ಬೇಕಾದ ಕೆಲಸವನ್ನು ಕಾರಂತರು ಒಬ್ಬರೇ ಮಾಡಿದ್ದಾರೆ. ನಾಗರಿಕತೆ ಬೆಳೆಯಲು ಬೇಕಾದ ಶಿಕ್ಷಣ, ಸಾಹಿತ್ಯ, ಕಲೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ಎಲ್ಲ ಚಟುವಟಿಕೆಗಳನ್ನು ಕಾರಂತರು ಬೌದ್ಧಿಕವಾಗಿ ಮಾಡಿದ್ದಾರೆ ಎಂದು ಅವರು ತಿಳಿಸಿದರು. ಕಾರಂತರ ಶಕ್ತಿ ಅವರ ಕಾದಂಬರಿಯಲ್ಲಿ ಇತ್ತು. ಆ ಕಾದಂಬರಿಗಳೆಲ್ಲ ಒಂದು ಕಾಲಘಟ್ಟದ, ಒಂದು ನಾಗರಿಕತೆ ಬಹಳ ಅಪೂರ್ವ ರೂಪಕಗಳಿದ್ದವು ಅವರು ಕಾದಂಬರಿ ಮತ್ತು ಯಕ್ಷಗಾನದಂತಹ ಎರಡು ಕ್ಷೇತ್ರದಲ್ಲಿ ಬಹಳ ದೊಡ್ಡ ಸಾಧನೆಯನ್ನು ಮಾಡಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. ಅಧ್ಯಕ್ಷತೆಯನ್ನು ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ವಹಿಸಿದ್ದರು. ಮುಖ್ಯ ಅತಿಥಿ ಯಾಗಿ ಕಾರ್ಕಳ ಯಕ್ಷ ರಂಗಾಯಣ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ ಮಾತನಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ನ ವಾರ್ತಾಪತ್ರವನ್ನು ಬಿಡುಗಡೆ ಮಾಡಲಾಯಿತು. ರಥಬೀದಿ ಗೆಳೆಯರು ಕಾರ್ಯದರ್ಶಿ ಪ್ರೊ.ಸುಬ್ರಹ್ಮಣ್ಯ ಜೋಶಿ, ಟ್ರಸ್ಟ್ನ ಸದಸ್ಯ ಸಂಚಾಲಕ ಸತೀಶ್ ಕೊಡವೂರು ಉಪಸ್ಥಿತರಿದ್ದರು. ರಥಬೀದಿ ಗೆಳೆಯರು ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿದರು. ಸದಸ್ಯ ಸಂಚಾಲಕ ಸಂತೋಷ್ ನಾಯಕ್ ಪಟ್ಲ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಯಕ್ಷ ರಂಗಾಯಣ ರೆಪರ್ಟರಿ ಕಲಾವಿದರು ಪ್ರಸ್ತುತ ಪಡಿಸುವ ನಾಟಕ ‘ಸೋಮಿಯ ಸೌಭಾಗ್ಯ’ ಪ್ರದರ್ಶನಗೊಂಡಿತು.
ಶಿಮ್ಲಾ | ಐಜಿಎಂಸಿ ಆಸ್ಪತ್ರೆಯಲ್ಲಿ ರೋಗಿಯ ಮೇಲೆ ಹಲ್ಲೆ ಆರೋಪ: ವೈದ್ಯರ ವಿರುದ್ಧ ಪ್ರತಿಭಟನೆ
ಶಿಮ್ಲಾ: ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಐಜಿಎಂಸಿ)ಯಲ್ಲಿ ರೋಗಿಯೊಬ್ಬರ ಮೇಲೆ ವೈದ್ಯರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ರವಿವಾರ ಕೇಳಿ ಬಂದಿದೆ. ಘಟನೆಯ ಬಳಿಕ ರೋಗಿಯ ಸಹಾಯಕರು ಆಸ್ಪತ್ರೆ ಆವರಣದ ಹೊರಗೆ ಪ್ರತಿಭಟನೆ ನಡೆಸಿದರು. ಶಿಮ್ಲಾ ಜಿಲ್ಲೆಯ ಕುಪ್ವಿ ಉಪವಿಭಾಗದ ಗ್ರಾಮವೊಂದರ ನಿವಾಸಿಯಾಗಿರುವ ರೋಗಿಯು ಉಸಿರಾಟದ ತೊಂದರೆಯಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು. ವೈದ್ಯರು ತನ್ನೊಂದಿಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ರೋಗಿ, ಗೌರವದಿಂದ ಮಾತನಾಡುವಂತೆ ಕೇಳಿದಾಗ ವೈದ್ಯರು ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ. ಘಟನೆಯ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಲಾಗಿದ್ದು, ಅವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ ಎಂದು ರೋಗಿಯ ಸಹಾಯಕರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿತ ವೈದ್ಯರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಅವರು ಘೋಷಣೆಗಳನ್ನು ಕೂಗಿದರು. ಘಟನೆ ಕುರಿತು ಆಸ್ಪತ್ರೆ ಆಡಳಿತದಿಂದ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಂದಿಲ್ಲ.
ಕುಂದಾಪುರ, ಡಿ.22: ಕಾಳಾವರ ಗ್ರಾಮದ ಅರೆಕಲ್ಲು ಜನತಾ ಕಾಲೂನಿ ಹತ್ತಿರದ ಸರಕಾರಿ ಹಾಡಿಯಲ್ಲಿ ಡಿ.20ರಂದು ರಾತ್ರಿ ವೇಳೆ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಮೂವರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ರಾಕೇಶ್(24), ಮ್ಯಾಕ್ಸಿ ರೋಶನ್(39), ಸತೀಶ್(37) ಬಂಧಿತ ಆರೋಪಿಗಳು. ಉಳಿದಂತೆ ಪ್ರಕಾಶ, ರಾಜೇಶ್ ಮತ್ತು ಸುಜನ್ ಎಂಬವರು ಪೊಲೀಸ್ ದಾಳಿ ವೇಳೆ ಓಡಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರಿಂದ 4,450ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ
ಬೈಂದೂರು, ಡಿ.22: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಉಪ್ಪುಂದ ನಿವಾಸಿ ವಿಠ್ಠಲ್ ಶೇಟ್(63) ಎಂಬವರು ಡಿ.6ರಂದು ಮನೆಯಿಂದ ಹೋದವರು ಈತನಕ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಎಲ್ಲೂರು ಗ್ರಾಮದ ಅದಮಾರು ಅಂಬೇಡ್ಕರ್ ನಗರ ನಿವಾಸಿ ಕೃಷ್ಣಪ್ಪ (65) ಎಂಬವರು ಡಿ.21ರಂದು ಮನೆಯಿಂದ ಹೋದವರು ಈವರೆಗೆ ವಾಪಾಸು ಬಾರದೇ ನಾಪತ್ತೆಯಾಗಿ ದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿಯಲ್ಲಿ ನೇಪಾಳಿ ಬಾಲಕ ಆತ್ಮಹತ್ಯೆ
ಉಡುಪಿ, ಡಿ.22: ವೈಯಕ್ತಿಕ ಕಾರಣದಿಂದ ಮನನೊಂದ ನೇಪಾಳಿ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.21ರಂದು ರಾತ್ರಿ ವೇಳೆ 76 ಬಡಗುಬೆಟ್ಟು ಗ್ರಾಮದ ಚಂದು ಮೈದಾನದ ಬಳಿ ನಡೆದಿದೆ. ಮೃತರನ್ನು ನೇಪಾಳ ದೇಶದ, ಪ್ರಸ್ತುತ ಚಂದು ಮೈದಾನದ ಬಳಿ ಬಾಡಿಗೆ ಮನೆ ನಿವಾಸಿ ಪದಮ್ ಬಹದೂರ್ ಎಂಬವರ ಮಗ ಸಂಜಯ್ ಎಂದು ಗುರುತಿಸಲಾಗಿದೆ. ಈತ ರಾತ್ರಿ ಮನೆಯ ಹಿಂಬದಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ | ತುಂಗಭದ್ರಾ ಜಲಾಶಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ : ಕೆ.ಎಂ.ಹೇಮಯ್ಯಸ್ವಾಮಿ
ಬಳ್ಳಾರಿ / ಕಂಪ್ಲಿ : ತುಂಗಭದ್ರಾ ಜಲಾಶಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಲಾಶಯ ಲಕ್ಷಾಂತರ ಜೀವಿಗಳಿಗೆ ಆಸರೆಯಾಗಲಿದೆ. ತುಂಗಭದ್ರಾ ಜಲಾಶಯದ ಉಳಿವಿಗೆ ನಡೆಯುತ್ತಿರುವ ‘ನಿರ್ಮಲ ತುಂಗಭದ್ರಾ’ ಅಭಿಯಾನಕ್ಕೆ ಕೈಜೋಡಿಸಿ, ಪಾಲ್ಗೊಳ್ಳಬೇಕು ಎಂದು ಅಭಿಯಾನದ ಸಂಚಾಲಕ ಕೆ.ಎಂ.ಹೇಮಯ್ಯಸ್ವಾಮಿ ಹೇಳಿದರು. ಪಟ್ಟಣದ ಶ್ರೀ ಪೇಟೆ ಬಸವೇಶ್ವರ ದೇವಸ್ಥಾನದ ಬಳಿ ಅಭಿಯಾನದ ಅಂಗವಾಗಿ ಎಲ್ಇಡಿ ಪರದೆ ಅಳವಡಿಸಿದ 'ನಿರ್ಮಲ ತುಂಗಭದ್ರಾ ಅಭಿಯಾನ’ದ ಜನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಚಾರ ವಾಹನದ ಮೂಲಕ ತುಂಗಭದ್ರ ನದಿಯ ವಾಸ್ತವ ಪರಿಸ್ಥಿತಿ ಕುರಿತು ಪ್ರದರ್ಶನ ಪಟ್ಟಣದ ವಿವಿಧಡೆ ಜರಗಿತು. ಸಂಚಾಲಕರಾದ ಬಿ.ವಿ.ಗೌಡ ಶಿವಕುಮಾರ್ ಮಾಲಿಪಾಟೀಲ್, ಅಗಳಿ ಪಂಪಾಪತಿ, ಇಂದ್ರಜಿತ್ ಸಿಂಗ್, ಕೊಟ್ಟೂರ್ ರಮೇಶ, ಗಡದ ಪ್ರಸಾದ, ಆದೋನಿ ರಂಗಪ್ಪ, ಬಿ.ಎಮ್.ರುದ್ರಯ್ಯ, ಮುಕುಂದಿ ಮಮತಾ, ಕೃಷ್ಣ, ರಾಕೇಶ್, ಇಟಗಿ ವಿರೂಪಾಕ್ಷಿ, ಹಳ್ಳಿ ನಾಗಪ್ಪ, ಕಲ್ಗುಡಿ ನಾಗರತ್ನಮ್ಮ, ಟ.ಗಂಗಣ್ಣ, ಕಲ್ಗುಡಿ ರತ್ನ, ಉಮಾದೇವಿ ಸೇರಿದಂತೆ ಇತರರು ಇದ್ದರು.
ಬೀಡಾಡಿ ಪ್ರಾಣಿಗಳ ಆಶ್ರಯ ತಾಣ ಕೂಡಲೇ ಪ್ರಾರಂಭಿಸಿ: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಡಿ.22: ಬೀದಿ ನಾಯಿಗಳು, ಬೀಡಾಡಿ ದನಗಳ ನಿಯಂತ್ರಣಕ್ಕೆ ಹಾಗೂ ಎಲ್ಲಾ ಪ್ರಾಣಿಗಳ ಜನನ ನಿಯಂತ್ರಣಕ್ಕೆ ಈಗಾಗಲೇ ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಿದ್ದು, ಅವುಗಳನ್ನು ಕೂಡಲೇ ಅನುಷ್ಠಾನ ಗೊಳಿಸಬೇಕು. ಬೀಡಾಡಿ ಪ್ರಾಣಿಗಳ ಆಶ್ರಯಕ್ಕೆ ಅಗತ್ಯವಿರುವ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯ ಖಾಸಗಿ, ಸರಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣ, ಬಸ್ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ವಿವಿಧ ಪ್ರದೇಶ ಗಳಲ್ಲಿ ಬೀದಿ ನಾಯಿಗಳ ಹೆಚ್ಚುತ್ತಿರುವ ಹಾವಳಿ, ಅದರ ಪರಿಣಾಮವಾಗಿ ಉಂಟಾಗ ಬಹುದಾದ ಅಪಾಯಗಳನ್ನು ತಡೆಯುವ ಉದ್ದೇಶದಿಂದ ಉಚ್ಛ ನ್ಯಾಯಾಲಯ ನಿರ್ದೇಶನಗಳನ್ನು ನೀಡಿದ್ದು, ಅವುಗಳನ್ನು ತಪ್ಪದೇ ಪಾಲಿಸುವ ಮೂಲಕ ಬೀದಿನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು. ಈಗಾಗಲೇ ರೈಲ್ವೆ ಹಾಗೂ ಬಸ್ ನಿಲ್ದಾಣ, ಕ್ರೀಡಾ ಸಂಕೀರ್ಣ, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಕೆಲವು ಪ್ರದೇಶಗಳಲ್ಲಿರುವ ಬೀದಿನಾಯಿಗಳ ಸಂಖ್ಯೆ 4405 ಎಂದು ಗುರುತಿಸಲಾಗಿದೆ. ಪ್ರತಿಯೊಂದು ಸಂಸ್ಥೆಗಳಿಗೂ ಇವುಗಳ ನಿರ್ವಹಣೆ ಜವಾಬ್ದಾರಿಯನ್ನು ನೋಡಿಕೊಳ್ಳಲು ನೋಡೆಲ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ ಎಂದ ಜಿಲ್ಲಾಧಿಕಾರಿ, ಕೆಲವು ಸಂಸ್ಥೆಗಳು ಇವುಗಳ ನಿಯಂತ್ರಣಕ್ಕೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡದೇ ಇದ್ದಲ್ಲಿ ಕೂಡಲೇ ನೇಮಕ ಮಾಡಬೇಕೆಂದು ತಿಳಿಸಿದರು. ರೇಬೀಸ್ ಕಾಯಿಲೆ, ಸಂಶಯಾಸ್ಪದ ರೋಗ ಪೀಡಿತ ಅಥವಾ ಆಕ್ರಮಣ ಕಾರಿ ನಡತೆ ಇರುವ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಬಿಡಲು ಅನುಕೂಲವಾಗುವಂತೆ ಪ್ರತೀ ತಾಲೂಕಿನಲ್ಲಿಯೂ ಆಶ್ರಯ ತಾಣಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಈಗಾಗಲೇ ಗುರುತಿಸಲಾಗಿದೆ. ಬಾಕಿ ಉಳಿದಿರುವ ಬ್ರಹ್ಮಾವರ ಮತ್ತು ಹೆಬ್ರಿ ತಾಲೂಕುಗಳಲ್ಲಿಯೂ ವಾರದ ಒಳಗೆ ಜಾಗ ಗುರುತಿಸಿ, ಎಸ್ಓಪಿ ಅನ್ವಯ ಅಗತ್ಯವಿರುವ ಆಹಾರ, ನೀರು, ನೆರಳು, ಪಶು ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸುವಂತಹ ಆಶ್ರಯ ತಾಣಗಳನ್ನು ನಿರ್ಮಾಣ ಮಾಡಬೇಕು ಎಂದು ಅವರು ಸೂಚನೆ ನೀಡಿದರು. ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಎ.ಬಿ.ಸಿ ನಿಯಮಗಳಡಿ ಕ್ಯಾಪ್ಚರ್- ಸ್ಟೆರಿಲೈಸೇಷನ್ - ವ್ಯಾಕ್ಸಿನೇಷನ್ ಕಾರ್ಯವನ್ನು ನಿರಂತರವಾಗಿ ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಕೈಗೊಳ್ಳಬೇಕು ಎಂದ ಅವರು, ಸಾಧ್ಯವಾದಲ್ಲಿ ನಾಯಿಗಳನ್ನು ಹಿಡಿಯಲು ಪೌರ ಕಾರ್ಮಿಕರು ಮುಂದೆ ಬಂದಲ್ಲಿ ಅವರಿಗೆ ಅಗತ್ಯ ತರಬೇತಿಯನ್ನು ನೀಡಬೇಕು ಎಂದರು. ಆಶ್ರಯ ತಾಣಗಳಲ್ಲಿ ಇರುವ ಬೀಡಾಡಿ ನಾಯಿಗಳ ನಿರ್ವಹಣೆಗೆ ಯಾರಾದರೂ ದಾನಿಗಳು ಮುಂದೆ ಬಂದಲ್ಲಿ ದತ್ತು ಕಾರ್ಯಕ್ರಮದಡಿಯಲ್ಲಿ ಅವರ ಸಹಕಾರ ಪಡೆಯಲು ಮುಂದಾಗಬೇಕು. ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಇಲಾಖೆಗಳ ಸಹಭಾಗಿತ್ವದಲ್ಲಿ ಸಮನ್ವಯ ಸಾಧಿಸಿ ಅಗತ್ಯ ಕ್ರಮಗಳನ್ನು ರೂಪಿಸಬೇಕು ಎಂದರು. ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು, ತಾಲೂಕುಗಳ ತಹಶೀಲ್ದಾರ್ರು, ಕಾರ್ಯ ನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.
ಗುಲ್ಬರ್ಗಾ ವಿವಿಯ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವಕ್ಕೆ ತೆರೆ
ಕಲಬುರಗಿ: 2025-26ನೇ ಸಾಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವಕ್ಕೆ ಸೋಮವಾರ ತೆರೆ ಬಿದ್ದಿದೆ. ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗವು ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಐತಿಹಾಸಿಕ ಪರಂಪರೆಯನ್ನು ಹೊಂದಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಲ್ಲಿ ಕ್ರಿಯಾಶೀಲತೆಯಿಂದ ಭಾಗವಹಿಸಬೇಕು ಎಂದರು. ಉನ್ನತ ಮಟ್ಟದ ಸಾಧನೆಯನ್ನು ಮಾಡಲು ಸಹನೆ, ತಾಳ್ಮೆ, ಅತೀವ ಆಸಕ್ತಿ ಅಗತ್ಯವಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡಬೇಡಿ. ದೇಶಕ್ಕೆ ಮತ್ತು ಸಮಾಜಕ್ಕೆ ಏನಾದರು ಕೊಡುಗೆಯನ್ನು ನೀಡಲು ನಿರ್ಧರಿಸಿ ಧೃಡ ಸಂಕಲ್ಪವನ್ನು ಮಾಡಬೇಕು ಎಂದು ಸಲಹೆ ನೀಡಿದರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಶಶಿಕಾಂತ ಉಡಿಕೇರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ವರ್ಷದ ಯುವಜನೋತ್ಸವದಲ್ಲಿ 25ಕ್ಕಿಂತ ಹೆಚ್ಚಿನ ಕಾಲೇಜಿನ ಸುಮಾರು 500 ಸ್ಪರ್ಧಿಗಳು ಭಾಗವಹಿಸಿದ್ದು, ತಮ್ಮೆಲ್ಲರ ಸಹಕಾರದಿಂದ ಗುಲ್ಬರ್ಗಾ ವಿಶ್ವವಿದ್ಯಾಲಯ ಯುವಜನೋತ್ಸವ ಇಂಡಿಯಾ ಬುಕ್ ಆಪ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದೆ ಎಂದು ಹೇಳಿದರು. ಕುಲಸಚಿವ ಪ್ರೊ.ರಮೇಶ್ ಲಂಡನಕರ್ ಯುವಜನೋತ್ಸವ ವರದಿ ಮಂಡಿಸಿದರು. ಗ್ರಂಥಾಲಯದ ಗ್ರಂಥಪಾಲಕ ಡಾ.ಸುರೇಶ್ ಜಂಗೆ ಅತಿಥಿಗಳನ್ನು ಸ್ವಾಗತಿಸಿದರು. ಜೊತೆಗೆ ಗುಲಬರ್ಗಾ ವಿಶ್ವವಿದ್ಯಾಲಯ 2025-26ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಇಂಡಿಯನ್ ಬುಕ್ ಅಪ್ ರೆಕಾರ್ಡ್ಗೆ ಸೇರಲ್ಪಟ್ಟಿರುವ ಪ್ರತಿಯನ್ನು ಮಂಡಿಸಿದರು. ಮೌಲ್ಯಮಾಪನ ವಿಭಾಗದ ಕುಲಸಚಿವ ಡಾ.ಎನ್.ಜಿ. ಕಣ್ಣೂರು, ವಿತ್ತ ಅಧಿಕಾರಿಗಳಾದ ಜಯಂಬಿಕಾ, ಸಂಶೋಧನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಆನಂದ ಮೇತ್ರಿ, ಸಿಂಡಿಕೇಟ್ ಸದಸ್ಯರು ಎಲ್ಲ ವಿಭಾಗದ ಡೀನರುಗಳು, ಪ್ರಾಧ್ಯಾಪಕರು ಬೋಧಕ ಮತ್ತು ಭೋಧಕೇತರ ಸಿಬ್ಬಂಧಿಗಳು, ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು, ಸಿಬ್ಬಂಧಿಗಳು ಭಾಗವಹಿಸಿದ್ದರು.
ಲಿಂಗಸುಗೂರು | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
ಲಿಂಗಸುಗೂರು : ತಾಲೂಕಿನ ಹಿರೇ ನಗನೂರು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ರೋಡ್ ರೋಲರ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು ಕೊಲೆಯೋ, ಆತ್ಮಹತ್ಯೆ ಎಂದು ತಿಳಿದು ಬಂದಿಲ್ಲ. ಮೃತರನ್ನು ಹಟ್ಟಿ ಪಟ್ಟಣದ ನಿವಾಸಿ ಜ್ಯೋತಿ (28) ಎಂದು ಗುರುತಿಸಲಾಗಿದೆ. ಜ್ಯೋತಿ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಉದ್ಯಮಿ ರಘುನಾಥ್ ಹತ್ಯೆ ಕೇಸ್; ಡಿವೈಎಸ್ಪಿ, ಮಾಜಿ ಸಂಸದ ಡಿಕೆ ಆದಿಕೇಶವುಲು ನಾಯ್ಡು ಪುತ್ರ, ಪುತ್ರಿ ಬಂಧನ
ಉದ್ಯಮಿ ಕೆ.ರಘುನಾಥ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಹೊಸ ತಿರುವು ಪಡೆದುಕೊಂಡಿದೆ. ಮಾಜಿ ಸಂಸದ ಡಿ.ಕೆ. ಆದಿಕೇಶವುಲು ನಾಯ್ಡು ಅವರ ಪುತ್ರ, ಪುತ್ರಿ ಹಾಗೂ ಡಿವೈಎಸ್ಪಿ ಅವರನ್ನು ಸಿಬಿಐ ಬಂಧಿಸಿದೆ. ಆಸ್ತಿಗಾಗಿ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣ ನಡೆದು ಏಳು ವರ್ಷಗಳ ನಂತರ ಆರೋಪಿGಳನ್ನು ಬಂಧಿಸಲಾಗಿದೆ.
ಚಿಂಚೋಳಿ | ಸರಕಾರಿ ಶಾಲೆಗಳ ವಿಲೀನ ಕೈಬಿಡಿ: ಗ್ರಾಮೀಣ ಮೂಲಸೌಕರ್ಯಕ್ಕೆ ಆದ್ಯತೆ ನೀಡುವಂತೆ ಆಗ್ರಹ
ಚಿಂಚೋಳಿ, ಡಿ.22: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಸರ್ಕಾರದ ಧೋರಣೆ ಕೈಬಿಡಬೇಕು ಮತ್ತು ತಾಲೂಕಿನ ವಿವಿಧ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ 25,000 ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರ ತಕ್ಷಣ ಹಿಂಪಡೆಯಬೇಕು. ಬಡ ಮತ್ತು ದಲಿತ ವರ್ಗದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಪ್ರತಿ ಶಾಲೆಯಲ್ಲಿ ವಿಷಯವಾರು ಶಿಕ್ಷಕರನ್ನು ನೇಮಿಸಬೇಕು. ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನಾಗಿ ಮಾಡುವ ನೀತಿ ಕೈಬಿಡಬೇಕು. ತಜ್ಞ ವೈದ್ಯರ ನೇಮಕಾತಿ ಮೂಲಕ ಗ್ರಾಮೀಣ ಆರೋಗ್ಯ ಸೇವೆಯನ್ನು ಬಲಪಡಿಸಬೇಕು. ನಮ್ಮ ಹೊಲ ನಮ್ಮ ರಸ್ತೆ’ ಯೋಜನೆಯಡಿ ಗಾರಂಪಳ್ಳಿ-ಕನಕಪುರ ಹಾಗೂ ಗೌಡನಹಳ್ಳಿ-ಗಾರಂಪಳ್ಳಿ ರಸ್ತೆಗಳನ್ನು ಕೂಡಲೇ ಅಭಿವೃದ್ಧಿಪಡಿಸಬೇಕು.ಹುಮನಾಬಾದ್ ರಾಜ್ಯ ಹೆದ್ದಾರಿಯಲ್ಲಿ ಅರ್ಧಕ್ಕೆ ನಿಂತಿರುವ ಸೇತುವೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ದಿನಕ್ಕೆ ಎರಡು ಬಾರಿ ಜಿಪಿಎಸ್ ಹಾಜರಾತಿ ಪಡೆಯುವ ಪದ್ಧತಿಯಿಂದ ತೊಂದರೆಯಾಗುತ್ತಿದ್ದು, ಒಂದು ಬಾರಿ ಮಾತ್ರ ಹಾಜರಾತಿ ಪಡೆಯುವಂತೆ ನಿಯಮ ರೂಪಿಸಬೇಕು ಎಂದು ಒತ್ತಡ ಹಾಕಿದರು. ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ಮುಖಂಡರು ಎಚ್ಚರಿಸಿದರು. ಶ್ರೀಮಂತ ಕಟ್ಟಿಮನಿ, ಕೆ ಎಮ್ ಬಾರಿ, ಹನುಮಂತ ಕೆ. ಪೂಜಾರಿ, ಗೋಪಾಲ ಎಂ.ಪಿ, ವಿಠ್ಠಲ ಕುಸಳೆ, ಗಿರಿರಾಜ ನಾಟೀಕರ್, ಸಾಜಿದ್ ಮಿಯಾ, ಸತೀಶ್ ಕನಕಪುರ, ಶಿವಕುಮಾರ್ ಅಂಬುಲಗಿ, ರಾಜು ತೋಡಿ, ಸುರೇಶ ಕುಮಾರ್ ದಂಡಿನ, ರಾಹುಲ್, ಸುಭಾಷ್, ಮಹೇಶ್, ಸುನೀಲ್ ಸೇರಿ ಇತರರಿದ್ದರು.
ವೈದ್ಯೋ ನಾರಾಯಣ ಹರಿ; ಕೇರಳದಲ್ಲಿ ರಸ್ತೆ ಮಧ್ಯೆ ಶಸ್ತ್ರ ಚಿಕಿತ್ಸೆ ನಡೆಸಿ ಯುವಕನ ಪ್ರಾಣ ಉಳಿಸಿದ ಡಾಕ್ಟರ್ಸ್
ಕೊಚ್ಚಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಉಸಿರಾಡಲು ಪರದಾಡುತ್ತಿದ್ದ ಯುವಕನಿಗೆ ರಸ್ತೆಯಲ್ಲೇ ಶಸ್ತ್ರ ಚಿಕಿತ್ಸೆ ಮಾಡಿದ ಘಟನೆ ನಡೆದಿದೆ. ಸದ್ಯ ಕೇರಳದಾದ್ಯಂತ ಅವರ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಆಸ್ಪತ್ರೆಯ ಸುಸಜ್ಜಿತ ಸೌಲಭ್ಯಗಳಿಲ್ಲದಿದ್ದರೂ, ಲಭ್ಯವಿದ್ದ ಬ್ಲೇಡ್ ಮತ್ತು ಸ್ಟ್ರಾ ಬಳಸಿಕೊಂಡು ವೈದ್ಯರು ನಡೆಸಿದ ಸಾಹಸಕ್ಕೆ ಈಗ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಜೊತೆಗೆ ಐಎಂಎ ಪ್ರತಿಕ್ರಿಯೆ ಕೊಟ್ಟಿದೆ.
ಬೆಂಗಳೂರಿನಲ್ಲಿ ಡಿಸೆಂಬರ್ 24, 2025 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಕಡಿತವಾಗಲಿದೆ. ವಿಜಯನಗರದ 66/11KV ಸ್ಟೇಷನ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಬಸವೇಶ್ವರನಗರ, ವಿಜಯನಗರ, ಗೋವಿಂದರಾಜನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕಲಬುರಗಿ | ದೇಶದ ಮೂಲ ನಿವಾಸಿಗಳು ಬೌದ್ಧರು : ನಿಂಗಪ್ಪ ಪ್ರಭುದಕರ್
ಕಲಬುರಗಿ, ಡಿ.22: ಭಾರತ ದೇಶದ ಮೂಲ ನಿವಾಸಿಗಳು ಬೌದ್ಧರು. ನಮ್ಮ ಧರ್ಮದ ಬಗ್ಗೆ ತಿಳಿದುಕೊಳ್ಳುವುದು ಅತ್ಯವಶ್ಯಕ ಎಂದು ಕಾಂಗ್ರೆಸ್ ಮುಖಂಡ ನಿಂಗಪ್ಪ ಪ್ರಭುದಕರ್ ಹೇಳಿದರು. ಕಮಲಾಪುರದಲ್ಲಿರುವ ಭೀಮನಗರದಲ್ಲಿ ರಂಗ ವೃಕ್ಷ ನಾಟಕ ನೃತ್ಯ ಸೇವಾ ಸಂಘ ವತಿಯಿಂದ 69ನೇ ಧಮ್ಮಚಕ್ರ ಪ್ರವರ್ತನ ದಿನದ ಪ್ರಯುಕ್ತ ಆಯೋಜಿಸಿದ್ದ ಬಹಿರಂಗ ಸಭೆ ಹಾಗೂ ನಾಟಕ ಪ್ರದರ್ಶನದಲ್ಲಿ ಮಾತನಾಡಿದರು. ಸಮಾಜದಲ್ಲಿರುವ ಮೂಢನಂಬಿಕೆ, ಅಂಧ ಶ್ರದ್ದೆ, ಮತ್ತಿತ್ತರ ಮೌಢ್ಯಾಚರಣೆಗಳಿಂದ ದೂರವಿರಬೇಕು, ಬುದ್ಧನ ತತ್ವಗಳನ್ನ ನಾವೆಲ್ಲರೂ ಪಾಲಿಸಬೇಕು. ನಮ್ಮ ನಡೆ ಬುದ್ಧನ ಕಡೆಗೆ, ಅಂದರೆ ಅಜ್ಞಾನದಿಂದ ಜ್ಞಾನದ ಕಡೆಗೆ ಎಲ್ಲ ಸಮಾಜದವರು ಮುಖ ಮಾಡಬೇಕು ಎಂದರು. ಸಮಾಜದಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು, ದ್ವೇಷ, ಅಸೂಯೆ ಪಡಬಾರದು. ಬಾಬಾಸಾಹೇಬರು ಕಂಡಂತಹ ಕನಸು ನನಸು ಮಾಡಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಶರಣು ಗೌರೆ, ಹರೀಶ್ ಪಟ್ನಾಯಕ್, ಫತ್ರುಬಿ ವಕೀಲರು, ರವೀಂದ್ರ. ಬಿಕೆ, ರಂಗ ನಿರ್ದೇಶಕ ಮಲ್ಲಿಕಾರ್ಜುನ್ ದೊಡ್ಮನಿ ಸೇರಿ ಮುಖಂಡರು, ಮಹಿಳೆಯರು, ಮಕ್ಕಳು ಉಪಸ್ಥಿತರಿದ್ದರು.
ಪಟಿಯಾಲ,ಡಿ. 22: 8.10 ಕೋಟಿ ರೂ. ಮೌಲ್ಯದ ಸೈಬರ್ ವಂಚನೆಯಲ್ಲಿ ಮೋಸ ಹೋಗಿದ್ದ ಪಂಜಾಬ್ನ ಮಾಜಿ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಅಮರ್ ಸಿಂಗ್ ಚಾಹಲ್ ಅವರು ಸೋಮವಾರ ತಮ್ಮ ಪಟಿಯಾಲ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭದ್ರತಾ ಸಿಬ್ಬಂದಿಯ ರಿವಾಲ್ವರ್ನಿಂದ ಎದೆಗೆ ಗುಂಡು ಹಾರಿಸಿಕೊಂಡ ನಿವೃತ್ತ ಐಪಿಎಸ್ ಅಧಿಕಾರಿ ಚಾಹಲ್ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಪಟಿಯಾಲ ಪೊಲೀಸರು ತಿಳಿಸಿದ್ದಾರೆ. ಘಟನೆಯ ಮಾಹಿತಿ ಲಭ್ಯವಾದ ತಕ್ಷಣ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಚಾಹಲ್ ಅವರು ಉಸಿರಾಡುತ್ತಿರುವ ಸ್ಥಿತಿಯಲ್ಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪಟಿಯಾಲ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಶರ್ಮಾ ತಿಳಿಸಿದ್ದಾರೆ. ಸೈಬರ್ ವಂಚನೆಯಿಂದ ಉಂಟಾದ ತೀವ್ರ ಆರ್ಥಿಕ ಸಂಕಷ್ಟವೇ ಈ ನಿರ್ಧಾರಕ್ಕೆ ಕಾರಣ ಎಂದು ಹೇಳಲಾಗಿದ್ದು, ಈ ಕುರಿತು ಚಾಹಲ್ ಅವರು ಪಂಜಾಬ್ ಪೊಲೀಸ್ ಮಹಾನಿರ್ದೇಶಕರಿಗೆ 12 ಪುಟಗಳ ಟಿಪ್ಪಣಿಯನ್ನು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಅಕ್ಟೋಬರ್ನಲ್ಲಿ ವಂಚನೆ ಆರೋಪ ಎದುರಿಸುತ್ತಿರುವ ಕಂಪೆನಿಯೊಂದರಲ್ಲಿ ಚಾಹಲ್ ಅವರು ಹೂಡಿಕೆ ಮಾಡಿದ್ದರು. ತಮ್ಮ ಪತ್ರದಲ್ಲಿ ತಾವು 1 ಕೋಟಿ ರೂ. ಹೂಡಿಕೆ ಮಾಡಿದ್ದು, ಉಳಿದ ಹಣವನ್ನು ಸ್ನೇಹಿತರು ಹಾಗೂ ಸಂಬಂಧಿಕರಿಂದ ಸಾಲವಾಗಿ ಪಡೆದು ಮೂರು ಬ್ಯಾಂಕ್ಗಳ ಮೂಲಕ ಆನ್ಲೈನ್ನಲ್ಲಿ ಪಾವತಿ ಮಾಡಿರುವುದಾಗಿ ಉಲ್ಲೇಖಿಸಿದ್ದಾರೆ. ಈ ಪ್ರಕರಣ ಸಂಬಂಧ ಚಾಹಲ್ ಅವರು ಪ್ರಧಾನಿ, ಕೇಂದ್ರ ಗೃಹ ಸಚಿವ ಮತ್ತು ಹಣಕಾಸು ಸಚಿವೆ ಅವರಿಗೆ ಸಹ ಪತ್ರ ಬರೆದಿರುವುದಾಗಿ ತಿಳಿದುಬಂದಿದೆ. ಮಾಜಿ ಐಪಿಎಸ್ ಅಧಿಕಾರಿ ನೀಡಿರುವ ಹೇಳಿಕೆಗಳು ಸೇರಿದಂತೆ ಘಟನೆಯ ಎಲ್ಲಾ ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 2015ರಲ್ಲಿ ನಡೆದ ಬೆಹ್ಬಲ್ ಕಲಾನ್ ಮತ್ತು ಕೊಟ್ಕಾಪುರ ಗುಂಡಿನ ದಾಳಿ ಪ್ರಕರಣಗಳಲ್ಲಿ ಚಾಹಲ್ ಅವರು ಆರೋಪ ಎದುರಿಸುತ್ತಿದ್ದು, ಅಪವಿತ್ರತೆ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ನಡೆದ ಈ ಘಟನೆಗಳಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದರು. “ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ಮಾಡಲಾಗುತ್ತಿದೆ. ಅವರ ಜೀವ ಉಳಿಸುವುದೇ ನಮ್ಮ ಮೊದಲ ಆದ್ಯತೆ,” ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಶರ್ಮಾ ತಿಳಿಸಿದ್ದಾರೆ.
ಕಲಬುರಗಿ | ಮನರೇಗಾ ಹೆಸರು ಬದಲಿಸಿದ್ದಕ್ಕೆ ಎಡಪಕ್ಷಗಳಿಂದ ಪ್ರತಿಭಟನೆ
ಕಲಬುರಗಿ, ಡಿ.22: ಕೇಂದ್ರ ಸರ್ಕಾರ ಎಂನರೇಗಾ ಹೆಸರನ್ನು ಬದಲಿಸಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ ಕಾಯ್ದೆ ಜಾರಿಮಾಡುತ್ತಿರುವುದನ್ನು ಖಂಡಿಸಿ ಎಡಪಕ್ಷಗಳ ಮುಖಂಡರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ನಗರದ ತಿಮ್ಮಾಪುರಿ ಸರ್ಕಲ್ನಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ವಿವಿಧ ಪಕ್ಷ, ಸಂಘಟನೆಗಳ ಮುಖಂಡರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ), ಭಾರತ ಕಮ್ಯುನಿಸ್ಟ್ ಪಕ್ಷ, ಮತ್ತು ಸೋಷಿಯಲಿಸ್ಟ್ ಯುನಿಟ್ ಸೆಂಟರ್ ಆಫ್ ಇಂಡಿಯಾ(ಸಿ) ಒಕ್ಕೂಟದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ, ಯೋಜನೆಯ ಹೆಸರನ್ನು ವಿಬಿಜಿ ರಾಮಜಿ ಎಂದು ಬದಲಾಯಿಸಿರುವುದು ಮಹಾತ್ಮ ಗಾಂಧೀಜಿಗೆ ಮಾಡಿದ ದೊಡ್ಡ ಅಪಮಾನ. ಗಾಂಧೀಜಿಯವರನ್ನು ಕೊಂದು ವಿಜೃಂಭಿಸಿದ ಗೋಡ್ಸೆ ಪರಿವಾರ ಈಗ ಗಾಂಧೀಜಿ ಅವರನ್ನು ಮತ್ತೆ ಮತ್ತೆ ಕೊಲ್ಲುತ್ತಿದೆ ಎಂದು ಹೇಳಿದರು. ವಿ.ಜಿ.ದೇಸಾಯಿ ಮಾತನಾಡಿ, ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳುವುದೇ ನೂತನ ಕಾಯ್ದೆಯ ಉದ್ದೇಶವಾಗಿದೆ. ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಯಂತ್ರಣ ಮಾಡುವುದನ್ನು ಸಂಪೂರ್ಣ ಕೇಂದ್ರ ಸರ್ಕಾರದ ಹಿಡಿತದಲ್ಲಿಡಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಪ್ರಭುದೇವ್ ಯಳಸಂಗಿ, ಎಸ್.ಎಂ.ಶರ್ಮಾ, ಮಹೇಶ್ ನಾಡಗೌಡ, ಮಹೇಶ್ ಎಸ್.ಬಿ., ಶಿವರಾಜ್ ಗಂಗಾಣಿ, ಈಶ್ವರ್, ವಿಶಾಲಾಕ್ಷಿ ಪಾಟೀಲ್, ವರುಣ್ ದೇಸಾಯಿ, ಸಂತೋಷ್ ಕುಮಾರ್ ಹಿರವೇ, ಶ್ರೀಮಂತ ಬಿರಾದಾರ್, ಸುಧಾಮ್ ಧನ್ನಿ, ಮೀನಾಕ್ಷಿ ಬಾಳಿ, ಲವಿತ್ರ ವಸ್ತ್ರದ್, ಭೀಮಾಶಂಕರ್ ಮಾಡಿಯಾಳ, ಮೌಲಾ ಮುಲ್ಲಾ, ಸೂರ್ಯಕಾಂತ ಸೊನ್ನದ್, ಪದ್ಮಾವತಿ ಮಾಲಿಪಾಟೀಲ್, ಮತ್ತಿತರರು ಇದ್ದರು.
ಮಹಾರಾಷ್ಟ್ರ| ಡಿಜಿಟಲ್ ಅರೆಸ್ಟ್: ಹಿರಿಯ ನಾಗರಿಕನಿಗೆ 23.5 ಲಕ್ಷ ರೂ.ವಂಚನೆ
ಥಾಣೆ, ಡಿ. 22: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 68 ವರ್ಷದ ವೃದ್ಧರೋರ್ವರಿಗೆ ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ನ ಬೆದರಿಕೆ ಒಡ್ಡಿ 23.5 ಲಕ್ಷ ರೂ. ವಂಚಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಥಾಣೆ ಜಿಲ್ಲೆಯಲ್ಲಿ ಈ ವಾರ ವರದಿಯಾಗುತ್ತಿರುವ ಎರಡನೇ ಘಟನೆ ಇದಾಗಿದೆ ಎಂದು ಅವರು ಹೇಳಿದ್ದಾರೆ. ದೂರಿನ ಆಧಾರದಲ್ಲಿ ಕಲ್ಯಾಣ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಹಾತ್ಮಾ ಫುಲೆ ಪೊಲೀಸ್ ಠಾಣೆಯ ಸಹಾಯಕ ಇನ್ಸ್ಪೆಕ್ಟರ್ ವಿನೋದ್ ಪಾಟೀಲ್ ಹೇಳಿದ್ದಾರೆ. ಆರೋಪಿಗಳು ಸಂತ್ರಸ್ತನನ್ನು ಮತ್ತೆ ಮತ್ತೆ ಬೆದರಿಸಿದರು. 23.5 ಲಕ್ಷ ರೂ.ವನ್ನು ಆನ್ಲೈನ್ ಮೂಲಕ ಹಲವು ಬಾರಿ ವರ್ಗಾಯಿಸುವಂತೆ ಒತ್ತಡ ಹೇರಿದರು ಎಂದು ಅವರು ತಿಳಿಸಿದ್ದಾರೆ.
ಚತ್ತೀಸ್ಗಡ| ಸಹೋದ್ಯೋಗಿಯನ್ನು ಗುಂಡಿಕ್ಕಿ ಹತ್ಯೆಗೆದ ಸಿಎಎಫ್ ಯೋಧ
ರಾಯಪುರ, ಡಿ. 22: ಚತ್ತೀಸ್ಗಡ ಶಸಸ್ತ್ರ ಪಡೆ (ಸಿಎಎಫ್) ಕಾನ್ಸ್ಟೆಬಲ್ ತನ್ನ ಸಹೋದ್ಯೋಗಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಖೈರಾಗಡ ಜಿಲ್ಲೆಯಲ್ಲಿ ರವಿವಾರ ತಡ ರಾತ್ರಿ ನಡೆದಿದೆ. ಘಾಗ್ರಾ ಮೂಲ ಶಿಬಿರದ 17 ಸಿಎಎಫ್ ಬೆಟಾಲಿಯನ್ನಲ್ಲಿ ಈ ಘಟನೆ ನಡೆದಿದೆ. ಕಾನ್ಸ್ಟೆಬಲ್ ಅರವಿಂದ ಗೌತಮ್ ಹಾಗೂ ಮೆಸ್ ಕಮಾಂಡರ್ ಸೋನ್ಬೀರ್ ಜಾಟ್ ನಡುವೆ ರವಿವಾರ ರಾತ್ರಿ ಕೆಲವು ವಿಷಯಗಳ ಕುರಿತು ವಾಗ್ವಾದ ನಡೆಯಿತು. ಈ ವಾಗ್ವಾದ ಅವರ ನಡುವೆ ಜಗಳಕ್ಕೆ ಕಾರಣವಾಯಿತು ಎಂದು ಖೈರಗಡದ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಮಮ್ತಾ ಅಲಿ ಶರ್ಮಾ ತಿಳಿಸಿದ್ದಾರೆ. ಅನಂತರ ಗೌತಮ್ ಮಧ್ಯರಾತ್ರಿ ಗಸ್ತು ಕರ್ತವ್ಯದ ಸಂದರ್ಭ ಬ್ಯಾರಕ್ನ ಒಳಗೆ ಮಲಗಿದ್ದ ಸೋನ್ಬಿರ್ ಜಾಟ್ನನ್ನು ತನ್ನ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂದು ಹೇಳಿದ್ದಾರೆ. ಆರೋಪಿ ಸಿಎಎಫ್ ಕಾನ್ಸ್ಟೆಬಲ್ ಅರವಿಂದ್ ಗೌತಮ್ನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಗೌತಮ್ ಹಾಗೂ ಜಾಟ್ ಇಬ್ಬರೂ ಉತ್ತರ ಪ್ರದೇಶದ ನಿವಾಸಿಗಳು ಎಂದು ಶರ್ಮಾ ಹೇಳಿದ್ದಾರೆ.
ಸೈದಾಪುರ | ಪೊಲೀಸ್ ಇಲಾಖೆ ವತಿಯಿಂದ ಕುರಿಗಾಹಿಗಳ ಸಮಸ್ಯೆಗಳು, ಕಾನೂನು ಅರಿವು ಕಾರ್ಯಕ್ರಮ
ಯಾದಗಿರಿ/ ಸೈದಾಪುರ: ಕಳ್ಳತನ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆ ಪ್ರಾಮಾಣಿಕ ಪ್ರಯತ್ನದೊಂದಿಗೆ ಸದಾ ಸಿದ್ಧವಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಶಂಕರ ಅಭಿಪ್ರ್ರಾಯಪಟ್ಟರು. ಪಟ್ಟಣದ ಕನಕ ಭವನದಲ್ಲಿ ಸೋಮುವಾರ ಜಿಲ್ಲಾ ಮತ್ತು ಸೈದಾಪುರ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಂಡಿದ್ದ ಕುರಿಗಾಹಿಗಳ ಸಮಸ್ಯೆಗಳು ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಾರ್ವಜನಿಕರಿಗೆ ಕಾನೂನಡಿಯಲ್ಲಿ ನ್ಯಾಯ ಕಲ್ಪಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ ಹೀಗಾಗಿ ಜನ ಭಯ, ಆತಂಕ ಪಡದೆ ನೇರವಾಗಿ ಹತ್ತಿರದ ಠಾಣೆಗೆ ಬಂದು ದೂರು ದಾಖಲಿಸಬೇಕು. ಅಲ್ಲಿ ನಿಮಗೆ ಸೂಕ್ತ ಸ್ಪಂದನೆ ಸಿಗದಿದ್ದಲ್ಲಿ ನೇರವಾಗಿ ಕಚೇರಿ ಸಮಯದಲ್ಲಿ ನನ್ನನ್ನು ಭೇಟಿ ಮಾಡಿ. ಇಲ್ಲಿ ಯಾವ ಮುಖಂಡನ ಮದ್ಯಸ್ಥಿಕೆಯೂ ಬೇಡ. ಇದರ ಜೊತೆಗೆ ಕುರಿಗಾಹಿಗಳಿಗೆ ಕಾನೂನಿನ ಅರಿವು ಮತ್ತು ಜಾಗೃತಿ ಅತ್ಯಗತ್ಯವಾಗಿದೆ. ಅದನ್ನು ಸಮರ್ಪಕವಾಗಿ ತಿಳಿದುಕೊಂಡು ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಇದಕ್ಕೂ ಮೊದಲು ಜಿಲ್ಲಾ ಕುರುಬ ಸಮಾಜದ ಮಾಜಿ ಅಧ್ಯಕ್ಷ ಕೆ. ವಿಶ್ವನಾಥ ನೀಲಹಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕುರಿ ಕಳ್ಳತನ ಪ್ರಕರಣಗಳು ಹಿಂದಿನಿಂದಲೂ ನಿರಂತವಾಗಿ ನಡೆಯುತ್ತಿದ್ದು, ಅದನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಿ, ಬಡ ಕುರಿಗಾಹಿಗಳ ಕುಟುಂಬದ ರಕ್ಷಣೆ ಮಾಡಬೇಕು. ಕುರಿಗಳು ಸತ್ತ ಸಂದರ್ಭದಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಹಾಗೂ ವರದಿಯೊಂದಿಗೆ ಸರ್ಕಾರದ ಪರಿಹಾರಕ್ಕೆ ಅವಕಾಶ ಮಾಡಿಕೊಡಬೇಕು. ಆದರೆ ಅಧಿಕಾರಿಗಳು ಸರಿಯಾಗಿ ಸ್ಪಂದನೆ ನೀಡುತ್ತಿಲ್ಲ ಎಂಬ ಬೇಸರ ಕಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಸುರೇಶ ನಾಯಕ, ಉಪ ತಹಸೀಲ್ದಾರ ದಸ್ತಗಿರಿ ನಾಯಕ, ಪೊಲೀಸ್ಇನ್ ಸ್ಪೆಕ್ಟರ್ ಶಿವಾನಂದ ಎಂ ಮರಡಿ, ಅರಣ್ಯ ಇಲಾಖೆಯ ಅಧಿಕಾರಿ ಮಂಜುನಾಥ, ಪಶುಸಂಗೋಪನೆ ಇಲಾಖೆಯ ಅಧಿಕಾರಿ ಡಾ. ಆಕಾಶ, ಡಾ. ಸುರಜಿತ್ ಕುಮಾರ್, ಪಿಡಿಓ ವಿಜಯಲಕ್ಷ್ಮಿ, ಕುರುಬ ಸಮಾಜದ ಹಿರಿಯ ಮುಖಂಡರಾದ ಚಂದ್ರಶೇಖರ ವಾರದ, ಸಿದ್ದಣ್ಣಗೌಡ ಕಾಡಂನೋರ, ಭೀಮಶಪ್ಪ ಜೇಗರ, ಪ್ರಭುಲಿಂಗ ವಾರದ, ಶೇಷಪ್ಪ ಜೇಗರ, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಮಲ್ಲಣ್ಣ ಐಕೂರು, ಸಾಬರೆಡ್ಡಿ, ವೆಂಕೋಬ ತುರುಕಾನದೊಡ್ಡಿ, ವಲಯಾಧ್ಯಕ್ಷ ರವೀಂದ್ರ ಕಡೇಚೂರು, ಸಿದ್ದು ಪೂಜಾರಿ, ವಿಜಯ ಕಂದಳ್ಳಿ, ಪುಂಡಲಿಕ, ರಾಚೋಟಿ ಕಣೇಕಲ್, ಮಹೇಶ ಜೇಗರ್ ಸೇರಿದಂತೆ ಇತರರಿದ್ದರು. ಬಾಲಚೇಡ ಮತ್ತು ದುಪ್ಪಲ್ಲಿ ಗ್ರಾಮಗಳ ಕುರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಪಸ್ವಲ್ಪ ಹಣ ಮಾತ್ರ ದೂರುದಾರರಿಗೆ ತಲುಪಿಸಿದ್ದು, ಪೂರ್ಣ ಪ್ರಮಾಣದ ಹಣ ಕೊಡಿಸಲು ಪೊಲೀಸ್ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. -ಕೆ.ವಿಶ್ವನಾಥ ನೀಲಹಳ್ಳಿ, ಕುರುಬ ಸಮಾಜದ ಹಿರಿಯ ಮುಖಂಡ
ಯಾದಗಿರಿ | ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಜನಪರ ಆಡಳಿತವೇ ಕಾಂಗ್ರೆಸ್ ಶಕ್ತಿ: ಸಚಿವ ದರ್ಶನಾಪುರ
ಮಂಡ್ಯ: ಪೊಲೀಸ್ ಭದ್ರತೆಯಲ್ಲಿ ದೇವಾಲಯಗಳಿಗೆ ಪ್ರವೇಶಿಸಿ ಪೂಜೆ ಸಲ್ಲಿಸಿದ ಪರಿಶಿಷ್ಟರು
ಮಂಡ್ಯ: ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜನಾಂಗದ ಮಹಿಳೆಯರು, ಪುರುಷರು ಸೋಮವಾರ ದೇವಾಲಯಗಳಿಗೆ ಪ್ರವೇಶಿಸಿಸಿ ಪೂಜೆ ಸಲ್ಲಿಸಿದರು. ಗ್ರಾಮದಲ್ಲಿ ಕಳೆದ ಡಿ.15ರಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣದ ಸ್ಥಳ ಹಾಗೂ ಅಂಬೇಡ್ಕರ್ ಫ್ಲೆಕ್ಸ್ ಹರಿದಿದ್ದ ವಿಚಾರಕ್ಕೆ ಪರಿಶಿಷ್ಟರು, ಇತರೆ ಜನಾಂಗದ ನಡುವೆ ಘರ್ಷಣೆಯಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಡಿವೈಎಸ್ಪಿ ಯಶವಂತ್ಕುಮಾರ್, ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಜಿಲ್ಲಾ ಶಶಸ್ತ್ರ ಪಡೆ ನಿಯೋಜನೆಗೊಳಿಸಲಾಗಿತ್ತು. ಈ ಮಧ್ಯೆ ಮದ್ದೂರಿನ ತಾಲೂಕು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಲಾಗಿತ್ತು. ಇಲ್ಲಿ ಪರಿಶಿಷ್ಟ ಜಾನಾಂಗದವರು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸ್ಥಳ ಕೊಡಿಸುವಂತೆ, ಬೊಮ್ಮಲಿಂಗೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಶುಭ ಸಮಾರಂಭಗಳಿಗೆ ಅವಕಾಶ ಮತ್ತು ದೇವಾಲಗಳಿಗೆ ಪ್ರವೇಶ ಕೊಡಿಸುವಂತೆ ಮನವಿ ಮಾಡಿದ್ದರು. ಶಾಂತಿ ಸಭೆಯಲ್ಲಿ ತೀರ್ಮಾಣದಂತೆ ಇಂದು(ಸೋಮವಾರ) ಪೊಲೀಸ್ ಭದ್ರತೆಯಲ್ಲಿ ಬೊಮ್ಮಲಿಂಗೇಶ್ವರಸ್ವಾಮಿ, ಚಾಮುಂಡೇಶ್ವರಿ, ಮಾರಮ್ಮ, ಕಾಲಭೈರವ, ತಿಮ್ಮಪ್ಪ ದೇವಾಲಯಗಳಿಗೆ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ಹಾಗೂ ಮುಖಂಡರ ನೇತೃತ್ವದಲ್ಲಿ ಪರಿಶಿಷ್ಟ ಜನರು ಪ್ರವೇಶಿಸಿ ಪೂಜೆ ಸಲ್ಲಿಸಿದರು. ಶಾಂತಿ ಸಭೆಯಲ್ಲಿ 5 ಬೇಡಿಕೆಗಳನ್ನು ಮಂಡಿಸಲಾಗಿತ್ತು. ಅದರಂತೆ ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಕಾರದೊಂದಿಗೆ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದೇವೆ. ಉಳಿದ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಈಡೇರಿಸುವ ಭರವಸೆಯನ್ನು ಜಿಲಾಡಳಿತ, ತಾಲೂಕು ಆಡಳಿತ ಭರವಸೆ ನೀಡಿದೆ ಎಂದು ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರವಿ, ಮೂರ್ತಿ, ಹನುಮಯ್ಯ, ಶಿವನಂಜಪ್ಪ, ವಸಂತ್ ಕುಮಾರ್, ಮಲ್ಲಯ್ಯ, ಬೊಮ್ಮಲಿಂಗಯ್ಯ ಸೇರಿದಂತೆ ಇತರೆ ಪರಿಶಿಷ್ಟ ಮುಖಂಡರು ಇದ್ದರು. ಕೆ.ಎಂ.ದೊಡ್ಡಿ ಠಾಣಾ ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಇಲ್ಲಿವರೆಗೆ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ಆತುರದಲ್ಲಿ ಅಂಗೀಕರಿಸಿಲ್ಲ: ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಣೆ
ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಆತುರದಲ್ಲಿ ಅಂಗೀಕರಿಸಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದರು. ಸೋಮವಾರ ವಿಧಾನಸೌಧದಲ್ಲಿ ಅಧಿವೇಶನದ ಕಾರ್ಯಕಲಾಪಗಳ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕದ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಲ್ಲಿ ಬೇರೆ ಬೇರೆ ವಿಷಯದ ಬಗ್ಗೆ ಚರ್ಚೆಗಳನ್ನು ಮಾಡಿದ್ದರಿಂದ ಗೊಂದಲ ಉಂಟಾಯಿತು ಎಂದು ಹೇಳಿದರು. ಅತ್ಯಂತ ಮಹತ್ವದ ವಿಧೇಯಕದ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ವಿಪಕ್ಷಗಳ ಸದಸ್ಯರು ಬಾವಿಗೆ ಇಳಿದು ಪ್ರತಿಭಟನೆಯಲ್ಲಿ ತೊಡಗಿದರೆ ಏನು ಮಾಡಬೇಕು. ಇದೇ ವಿಧೇಯಕದ ಕುರಿತು ವಿಧಾನಪರಿಷತ್ತಿನಲ್ಲಿ ವಿವರವಾಗಿ ಚರ್ಚೆ ನಡೆದಿದೆ. ವಿಧಾನಸಭೆಯಲ್ಲೂ ಚರ್ಚೆಗೆ ಮುಕ್ತ ಅವಕಾಶವಿದ್ದರೂ ವಿಪಕ್ಷಗಳು ಚರ್ಚೆಯಲ್ಲಿ ಭಾಗವಹಿಸಿಲ್ಲ ಎಂದು ಖಾದರ್ ಹೇಳಿದರು. ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ ನಡೆಸಲು ಚರ್ಚೆ: ಚಳಿಗಾಲದ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಕ್ರಮಗಳು, ಶುಭ ಕಾರ್ಯಗಳು ನಿಗದಿಯಾಗಿರುತ್ತವೆ. ಸಚಿವರು, ಶಾಸಕರು ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಂಡಿರುತ್ತಾರೆ. ಆದುದರಿಂದ, ಬೆಳಗಾವಿಯಲ್ಲಿ ಚಳಿಗಾಲದ ಬದಲಾಗಿ, ಮಳೆಗಾಲದ ಅಧಿವೇಶನ ನಡೆಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿರುವ ಸ್ಪೀಕರ್ ಪೀಠಕ್ಕೆ 43 ಲಕ್ಷ ರೂ. ಖರ್ಚು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಾದರ್, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ ಮತ್ತು ಲೋಕೋಪಯೋಗಿ ಇಲಾಖೆಯವರು ಅದನ್ನು ಮಾಡಿದ್ದಾರೆ. ನಮಗೆ ಪೀಠದ ಇತಿಹಾಸ ಗೊತ್ತು. ಖರ್ಚಿನ ಬಗ್ಗೆ ಗೊತ್ತಿಲ್ಲ. ನಮ್ಮ ವಿಧಾನಸಭೆಯಲ್ಲಿರುವ ಸ್ಪೀಕರ್ ಪೀಠದ ಮಾದರಿಯನ್ನು ಉತ್ತರಪ್ರದೇಶದ ವಿಧಾನಸಭಾಧ್ಯಕ್ಷರು ಇಷ್ಟಪಟ್ಟು, ಅಲ್ಲಿ ಮಾಡಿಸುತ್ತಿದ್ದಾರೆ. ಇದು ನಮಗೂ ಹೆಮ್ಮೆ ಎಂದು ಹೇಳಿದರು. ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹ ಲಕ್ಷ್ಮಿ ಕಂತು ಬಿಡುಗಡೆ ಕುರಿತು ತಪ್ಪು ಉತ್ತರ ನೀಡಿದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸ್ಪೀಕರ್, ಸಚಿವೆ ಸದನದಲ್ಲಿ ತಪ್ಪು ಉತ್ತರ ಕೊಟ್ಟಿದ್ದರು. ನಂತರ ಕ್ಷಮೆಯನ್ನು ಯಾಚಿಸಿದ್ದಾರೆ. ಅಲ್ಲದೇ, ಈ ಲೋಪಕ್ಕೆ ಕಾರಣವೇನು ಎಂಬುದರ ಕುರಿತು ಇಲಾಖೆಯಲ್ಲಿ ತನಿಖೆ ಮಾಡುವುದಾಗಿಯೂ ಹೇಳಿದ್ದಾರೆ ಎಂದು ತಿಳಿಸಿದರು. 57 ಗಂಟೆ 35 ನಿಮಿಷ ಕಲಾಪ ನಡೆದಿದೆ: 10 ದಿನಗಳಲ್ಲಿ 57 ಗಂಟೆ 35 ನಿಮಿಷ ಕಲಾಪ ನಡೆದಿದೆ. 23 ವಿಧೇಯಕಗಳನ್ನು ಅಂಗೀಕರಿಸಲಾಗಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ 39 ಸದಸ್ಯರು 17 ಗಂಟೆ 2 ನಿಮಿಷ ಚರ್ಚೆ ಮಾಡಿದ್ದಾರೆ. ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಲು 7 ನಿರ್ಣಯಗಳನ್ನು ಮಂಡಿಸಿ ಸದನವು ಸರ್ವಾನುಮತದಿಂದ ಅಂಗೀಕರಿಸಿದೆ ಎಂದು ಅವರು ಹೇಳಿದರು. 2109 ಪ್ರಶ್ನೆಗಳನ್ನು ಸ್ವೀಕರಿಸಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 135 ಪ್ರಶ್ನೆಗಳ ಪೈಕಿ 134 ಪ್ರಶ್ನೆಗಳಿಗೆ ಹಾಗೂ ಲಿಖಿತ ಮೂಲಕ ಉತ್ತರಿಸುವ 1974 ಪ್ರಶ್ನೆಗಳ ಪೈಕಿ 1750 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. ನಿಯಮ 351ರಡಿಯಲ್ಲಿ 180 ಸೂಚನೆಗಳನ್ನು ಅಂಗೀಕರಿಸಿದ್ದು, 70 ಸೂಚನೆಗಳಿಗೆಗೆ ಉತ್ತರ ಕೊಡಲಾಗಿದೆ. ಗಮನ ಸೆಳೆಯುವ 368 ಸೂಚನೆಗಳ ಪೈಕಿ 228 ಸೂಚನೆಗಳಿಗೆ ಉತ್ತರ ನೀಡಲಾಗಿದೆ. ಶೂನ್ಯವೇಳೆಯಲ್ಲಿ 2 ಸೂಚನೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಖಾದರ್ ಮಾಹಿತಿ ನೀಡಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಅಧಿವೇಶನ ವೀಕ್ಷಣೆ ಮಾಡಿದ್ದಾರೆ. ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನದ ಉದ್ಘಾಟನೆ ಮಾಡಲಾಗಿದೆ. ವಿಶ್ವದಲ್ಲೇ ಎರಡನೇ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ ಕಾರ್ಯಕ್ರಮ ಮಾಡಲಾಗಿದೆ ಎಂದು ಅವರು ವಿವರ ನೀಡಿದರು.
ಹಾವು ಕಡಿತದ ಸಾವೆಂದು ದಾಖಲಿಸಿ ಪ್ರಕರಣ ಮುಚ್ಚಿದ್ದ ಪೊಲೀಸರು
‘ಗಾಂಧೀಜಿ ಹೆಸರಿಗೆ ಕತ್ತರಿ’ | ಬಿಜೆಪಿಯ ಅಂತಿಮ ದಿನಗಳು ಪ್ರಾರಂಭವಾಗಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸಡಿಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ ಎಂದರು. ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ. ಡಿ.27 ರಂದು ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು ಎಂದು ಶಿವಕುಮಾರ್ ಹೇಳಿದರು. ಅತ್ಯುತ್ತಮ ಯೋಜನೆಯನ್ನು ಕೊಲೆ, ಸಮಾಧಿ ಮಾಡಲಾಗಿದೆ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ದಿಲ್ಲಿಯಲ್ಲಿ ಮಂಗಳವಾರ ಸಭೆ ಕರೆದಿದ್ದಾರೆ. ಅಲ್ಲಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು. ಕೇಂದ್ರ ಸರಕಾರ ಹೇಳಿದ ಅನುಪಾತದಲ್ಲಿ ಯಾವ ರಾಜ್ಯ ಸರಕಾರವೂ ಹಣ ನೀಡಲು ಸಾಧ್ಯವಿಲ್ಲ. ಈ ರೀತಿ ಆದರೆ ಕಾರ್ಯಕ್ರಮ ಸತ್ತು ಹೋದಂತೆ. ಇದನ್ನು ಸಮಾಧಿ ಮಾಡಲಾಗಿದೆ. ಕೊಲೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಟೀಕಿಸಿದರು. ಸರಕಾರ ಮತ್ತು ಪಕ್ಷ ಒಟ್ಟಾಗಿ ಹೋರಾಡಲಿದೆ: ಸರಕಾರ ಮತ್ತು ಪಕ್ಷ ಒಟ್ಟಾಗಿ ನರೇಗಾ ಯೋಜನೆಯ ವಿರುದ್ಧ ಕೇಂದ್ರ ಬಿಜೆಪಿ ಸರಕಾರ ತೆಗೆದುಕೊಂಡಿರುವ ತೀರ್ಮಾನ ವಿರೋಧಿಸಿ ಹೋರಾಟ ಮಾಡುತ್ತೇವೆ. ಪಂಚಾಯತಿಗೆ, ಮತದಾರರಿಗೆ, ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ನೀಡಿರುವ ಹಕ್ಕನ್ನು ಕಾಂಗ್ರೆಸ್ ಪಕ್ಷ ಕಾಪಾಡಲಿದೆ. ಇದರ ಬಗ್ಗೆ ರಾಜ್ಯದ ಎಲ್ಲ ಗ್ರಾಮಪಂಚಾಯತಿಗಳ ಮುಖಂಡರನ್ನು ಪಕ್ಷಾತೀತವಾಗಿ ಕರೆದು ಅವರ ಬಳಿ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು. ಇಡೀ ಭಾರತದಲ್ಲಿಯೆ ನನ್ನ ಕನಕಪುರ ಕ್ಷೇತ್ರ ಅತಿ ಹೆಚ್ಚು ನರೇಗಾ ಕಾಮಗಾರಿಗಳನ್ನು ನಡೆಸಿದ ಕ್ಷೇತ್ರ. ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕೇಂದ್ರ ಬಿಜೆಪಿ ಸರಕಾರ ತನಿಖಾ ತಂಡವನ್ನು ಕಳುಹಿಸಿತು. ಹತ್ತಾರು ನಿಯೋಗ ಬಂದಿತು. 250-300 ಕೋಟಿ ರೂಪಾಯಿ ಕೆಲಸವನ್ನು ನರೇಗಾ ಮೂಲಕ ಮಾಡಲಾಗಿತ್ತು ಎಂದು ಶಿವಕುಮಾರ್ ತಿಳಿಸಿದರು. 50 ಸಾವಿರ ದನದ ಕೊಟ್ಟಿಗೆಗಳನ್ನು ಕಟ್ಟಲಾಗಿತ್ತು. ಶಾಲಾ ಕಟ್ಟಡ, ಜಮೀನು ಮಟ್ಟ ಮಾಡುವುದು, ಕೃಷಿ ಹೊಂಡ ನಿರ್ಮಾಣ, ನೂರಾರು ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲಾಯಿತು. ಇಲ್ಲಿನ ಕೆಲಸಗಳನ್ನು ನೋಡಿ ನನಗೆ ಎಲ್ಲಿ ಪ್ರಶಸ್ತಿ ನೀಡಬೇಕಾಗುತ್ತದೊ ಎಂದು ಕ್ಷೇತ್ರದ ತಾಲೂಕು ಪಂಚಾಯತಿ ಅಧ್ಯಕ್ಷರಿಗೆ ಪ್ರಶಸ್ತಿ ನೀಡಿದರು ಎಂದು ಅವರು ಹೇಳಿದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಎಫ್ಐಆರ್ ಇಲ್ಲದೆ ಈ.ಡಿ ಈ ಪ್ರಕರಣವನ್ನು ಹೇಗೆ ಕೈಗೆತ್ತಿಕೊಂಡಿತು. ನಮ್ಮ ಮೇಲೂ ಈ.ಡಿ ಬೇಕಾದಷ್ಟು ಪ್ರಕರಣಗಳನ್ನು ದಾಖಲಿಸಿತ್ತು. ಕೊನೆಗೆ ಏನಾಯಿತು? ಜೈಲಿಗೆ ಕಳುಹಿಸಿದರು. ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೂ ಇದೇ ರೀತಿ ಮಾಡಲು ಹೊರಟರು ಆದರೆ ಧೈರ್ಯ ಸಾಲದೆ ಚಾರ್ಜ್ ಶೀಟ್ ಹಾಕಿದರು. ನ್ಯಾಯಾಲಯ ಇದನ್ನು ತಿರಸ್ಕರಿಸಿತು ಎಂದು ಅವರು ತಿಳಿಸಿದರು. ನೋಟಿಸ್ ವಿರುದ್ಧ ಮೇಲ್ಮನವಿ: ನನಗೂ ದಿಲ್ಲಿ ಪೊಲೀಸರು ನೋಟಿಸ್ ನೀಡಿದ್ದರು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು. ನೋಟಿಸ್ ಗೆ ಉತ್ತರ ನೀಡಲು ನಾಳೆ (ಮಂಗಳವಾರ) ದಿಲ್ಲಿಗೆ ತೆರಳುತ್ತೇನೆ ಎಂದು ಶಿವಕುಮಾರ್ ಹೇಳಿದರು. ಪಕ್ಷಕ್ಕೆ ಹಾಗು ಪಕ್ಷದ ಕಾರ್ಯಕ್ರಮಗಳಿಗೆ ಹಣ ನೀಡದೆ ಇನ್ನು ಯಾವ ಕೆಲಸಗಳಿಗೆ, ಇನ್ಯಾರಿಗೆ ಹಣ ನೀಡಬೇಕು. ಎಲ್ಲ ಶಾಸಕರಿಂದಲೂ ಹಣ ಸಂಗ್ರಹ ಮಾಡಲಾಗುತ್ತಿದೆ. ಎಸ್.ಎಸ್.ಮಲ್ಲಿಕಾರ್ಜುನ್ ಅವರ ಸಂಬಂಧಿಕರು 5 ಕೋಟಿ ರೂಪಾಯಿ ಹಣ ನೀಡಿದ್ದಾರೆ. ನಾವು ಏನು ತಪ್ಪು ಮಾಡಿಲ್ಲ. ನಾವು ದುಡಿದ ಹಣವನ್ನೇ ನೀಡಿದ್ದೇವೆ. ಕಪ್ಪು ಹಣ ನೀಡಿಲ್ಲ. ಸ್ವಂತ ಹಣದಿಂದ ದೇಣಿಗೆ ನೀಡಿದ್ದೇವೆ ಎಂದು ಅವರು ತಿಳಿಸಿದರು. ಬಿಜೆಪಿಯವರು ಕೋಟ್ಯಂತರ ರೂಪಾಯಿಯನ್ನು ದೇಣಿಗೆ ಪಡೆದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಎಷ್ಟು ಕೋಟಿ ಹಣವನ್ನು ಚುನಾವಣಾ ಬಾಂಡ್ ಮೂಲಕ ಪಡೆದಿದ್ದಾರೆ ಎಂದು ಪತ್ರಿಕೆಗಳಲ್ಲಿ ಬಂದಿದೆ. ಸೆಕ್ಷನ್ 25 ರ ಅಡಿ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯನ್ನು ನೋಂದಣಿ ಮಾಡಿಸಲಾಗಿದೆ ಎಂದು ಅವರು ತಿಳಿಸಿದರು. ಕಾಂಗ್ರೆಸ್ ಪಕ್ಷ ಈ ಸಂಸ್ಥೆಗೆ ಸಾಲ ನೀಡಿತು. ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಹೆಸರಿಗೆ ಷೇರುಗಳು ವರ್ಗಾವಣೆಯಾಗುತ್ತವೆ. ನಾನು ಕೂಡ ಕಾಂಗ್ರೆಸ್ ಭವನದ ಟ್ರಸ್ಟಿ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಇದ್ದೇನೆ ಎಂದರೆ ನನ್ನ ಹೆಸರಿಗೆ ಆಸ್ತಿಗಳು ನೋಂದಾಯಿಸಲ್ಪಡುತ್ತವೆ. ಬೇರೆಯವರು ಬಂದಾಗ ಅವರ ಹೆಸರಿಗೆ ಹೋಗುತ್ತದೆ ಎಂದು ಶಿವಕುಮಾರ್ ಹೇಳಿದರು.
ಒಡಿಶಾ| ಸಾಂತಾ ಟೋಪಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳಿಗೆ ದುಷ್ಕರ್ಮಿಗಳಿಂದ ಕಿರುಕುಳ
ಭುವನೇಶ್ವರ: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಾಂತಾ ಟೋಪಿಗಳನ್ನು ಮಾರಾಟ ಮಾಡುತ್ತಿರುವ ಬಡ ರಸ್ತೆ ಬದಿ ವ್ಯಾಪಾರಿಗಳಿಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳ ಗುಂಪೊಂದು, ಇದು ಹಿಂದೂ ರಾಷ್ಟ್ರವಾಗಿದ್ದು, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳನ್ನು ಮಾರಾಟ ಮಾಡಲು ಇನ್ನು ಮುಂದೆ ಅವಕಾಶವಿಲ್ಲ ಎಂದು ಬೆದರಿಸಿರುವ ಘಟನೆ ವರದಿಯಾಗಿದೆ. ಈ ಘಟನೆಯ ವಿಡಿಯೊ ವೈರಲ್ ಆಗಿದ್ದು, ನೀವು ಎಲ್ಲಿಯವರು ಹಾಗೂ ನೀವು ಹಿಂದೂಗಳೇ? ಎಂದು ವ್ಯಾಪಾರಿಗಳನ್ನು ದುಷ್ಕರ್ಮಿಯೊಬ್ಬ ಪ್ರಶ್ನಿಸುತ್ತಿರುವ ದೃಶ್ಯ ಸೆರೆಯಾಗಿದೆ. ಆ ಪ್ರಶ್ನೆಗೆ, ನಾವು ನಿಜವಾಗಿಯೂ ಹಿಂದೂಗಳಾಗಿದ್ದು, ಬಡವರಾಗಿರುವುದರಿಂದ ಸಾಂತಾ ಟೋಪಿಗಳನ್ನು ಮಾರಾಟ ಮಾಡುತ್ತಿದ್ದೇವೆ ಎಂದು ವ್ಯಾಪಾರಿಗಳು ಉತ್ತರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ, ಇಲ್ಲಿ ಕೇವಲ ಜಗನ್ನಾಥ ದೇವರು ಮಾತ್ರ ಆಳಲು ಸಾಧ್ಯ. ಹಿಂದುಗಳಾಗಿ ನೀವೇಗೆ ಇದನ್ನು ಮಾಡುತ್ತಿದ್ಧೀರಿ? ಮೂಟೆ ಕಟ್ಟಿ ಇಲ್ಲಿಂದ ತಕ್ಷಣವೇ ತೆರಳಿ. ನಿಮಗೇನಾದರೂ ಮಾರಾಟ ಮಾಡಬೇಕಿದ್ದರೆ ಜಗನ್ನಾಥ ದೇವರ ಸಾಮಗ್ರಿಗಳನ್ನು ಮಾರಾಟ ಮಾಡಿ ಎಂದು ಆತ ಪ್ರತಿಕ್ರಿಯೆ ನೀಡಿದ್ದಾನೆ. ಆಗ ಒಂದಿಬ್ಬರು ವ್ಯಾಪಾರಿಗಳು ನಾವು ರಾಜಸ್ಥಾನದಿಂದ ಬಂದಿದ್ದೇವೆ ಎಂದು ತಿಳಿಸಿದ್ದಾರೆ. ಅದಕ್ಕೆ ಅವರು ನೀವು ಎಲ್ಲಿಯವರೆಗೆ ಕ್ರಿಶ್ಚಿಯನ್ ಕಲಾಕೃತಿಗಳನ್ನು ಮಾರಾಟ ಮಾಡುವುದಿಲ್ಲವೊ, ಅಲ್ಲಿಯವರೆಗೂ ನಿಮಗೆ ಯಾವುದೇ ತೊಂದರೆಯಿಲ್ಲ ಎಂದು ಭರವಸೆ ನೀಡಿದ್ದಾನೆ. ಮತ್ತೊಂದೆಡೆ ಸಾಂತಾ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಯೊಬ್ಬನ ಬಳಿ ಬಂದಿರುವ ಗೂಂಡಾ ಒಬ್ಬ, ಇದು ಹಿಂದೂ ರಾಷ್ಟ್ರ. ಇಲ್ಲಿ ಯಾರೂ ಕ್ರಿಸ್ಮಸ್ ಹಬ್ಬ ಆಚರಿಸಲು ನಾವು ಅವಕಾಶ ನೀಡುವುದಿಲ್ಲ. ಬಿಜೆಪಿ ಅಡಿಯ ಹೊಸ ಒಡಿಶಾಗೆ ಸುಸ್ವಾಗತ ಎಂದು ನಿಂದಿಸಿ, ಆತನಿಗೆ ಬೆದರಿಕೆ ಒಡ್ಡಿದ್ದಾನೆ.
ಕೊಪ್ಪಳ | ಮನೆ ಕಳ್ಳತನ ಪ್ರಕರಣ : ಅಪರಾಧಿಗೆ 3 ವರ್ಷ ಜೈಲು
ಕೊಪ್ಪಳ.ಡಿ.22: ಕಾರಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಮೀಪದ ಮನೆಯೊಂದರಲ್ಲಿ ನಡೆದಿದ್ದ ಬಂಗಾರದ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ನ್ಯಾಯಾಲಯವು ಅಪರಾಧಿಗೆ 3 ವರ್ಷ ಜೈಲುಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2025ರ ಜ.27ರಂದು ಕಾರಟಗಿ ಪಟ್ಟಣದ ನಿವಾಸಿ ದಿಗಂಬರ ಎಂಬುವವರ ಮನೆಗೆ ನುಗ್ಗಿ ಕಳ್ಳರು ಬೀಗ ಮುರಿದು ಸುಮಾರು 5 ತೊಲೆ ಬಂಗಾರದ ಆಭರಣ ಕಳ್ಳತನ ಮಾಡಿದ್ದರು. ಈ ಬಗ್ಗೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಕಾರಟಗಿ ಪಿ.ಎಸ್.ಐ ಕಾಮಣ್ಣ ಶಿವಪ್ರಸಾದ ಅಲಿಯಾಸ್ ಶಿವಕುಮಾರ ಶಿವು ಎಂಬಾತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಗಂಗಾವತಿಯ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ (ಪ್ರಭಾರ) ನ್ಯಾಯಾಧೀಶ ನಾಗೇಶ ಪಾಟೀಲ ವಿಚಾರಣೆ ನಡೆಸಿ, ಗುರುವಾರ 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಮಂಗಳೂರು | ಎಂಡಿಎಂಎ ಮಾರಾಟ: ಯುವಕ ಸೆರೆ
ಮಂಗಳೂರು, ಡಿ.22: ನಗರದ ಬಂದರ್ ಉತ್ತರ ದಕ್ಕೆಯ ಗೋದಾಮಿನ ಬಳಿ ಖಾಲಿ ಜಾಗದಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಅರ್ಕುಳ ಫರಂಗಿಪೇಟೆ ನಿವಾಸಿ ಮುಹಮ್ಮದ್ ತೌಹೀದ್ (30) ಬಂಧಿತ ಆರೋಪಿಯಾಗಿದ್ದಾನೆ. ಖಚಿತ ಮಾಹಿತಿಯ ಮೇರೆಗೆ ಬಂದರ್ ಠಾಣೆಯ ಎಸ್ಸೈ ವನಜಾಕ್ಷಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅರೋಪಿಯ ಬಳಿಯಿಂದ ಕವರಿನಲ್ಲಿದ್ದ 15.64 ಗ್ರಾಂ ತೂಕದ 1.56 ಲಕ್ಷ ರೂ. ಮೌಲ್ಯದ ಎಂಡಿಎಂಎ, 8 ಸಾವಿರ ರೂ. ಮೌಲ್ಯದ ಮೊಬೈಲ್ ವಶ ಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
187 ಹೋಮ್ಗಾರ್ಡ್ ಹುದ್ದೆಗೆ 8,000ಕ್ಕೂ ಅಧಿಕ ಅಭ್ಯರ್ಥಿಗಳು: ರನ್ವೇಯಲ್ಲಿ ಪರೀಕ್ಷೆ!
ಭುವನೇಶ್ವರ, ಡಿ. 22: ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟು ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ ಎನ್ನುವುದನ್ನು ವಿವರಿಸುವ ಘಟನೆಯೊಂದು ಒಡಿಶಾದಲ್ಲಿ ನಡೆದಿದೆ. ಇತ್ತೀಚೆಗೆ 187 ಹೋಮ್ಗಾರ್ಡ್ ಹುದ್ದೆಗಳಿಗಾಗಿ 8,000ಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. ಇಷ್ಟೊಂದು ಜನರಿಗೆ ಒಮ್ಮೆಲೆ ಹೇಗೆ ಪರೀಕ್ಷೆ ಮಾಡುವುದು? ಅದಕ್ಕಾಗಿ ರನ್ವೇಯೊಂದನ್ನು ಆಯ್ಕೆ ಮಾಡಲಾಯಿತು. ಅಭ್ಯರ್ಥಿಗಳೆಲ್ಲರೂ ಸಂಬಾಲ್ಪುರ ರನ್ವೇಯಲ್ಲಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆದರು. ಈ ಪರೀಕ್ಷೆಗೆ ಹಾಜರಾದ ಕೆಲವು ಅಭ್ಯರ್ಥಿಗಳು ಎಮ್ಬಿಎ ಮತ್ತು ಎಮ್ಸಿಎ ಪದವಿಗಳನ್ನು ಪಡೆದವರಾಗಿದ್ದರು. ಒಡಿಶಾದಲ್ಲಿ ಹೋಮ್ಗಾರ್ಡ್ಗಳಿಗೆ 639 ರೂಪಾಯಿ ದೈನಂದಿನ ಭತ್ತೆ ನೀಡಲಾಗುತ್ತದೆ. ‘‘ನೇಮಕಾತಿ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಪೊಲೀಸರು ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದರು. ಕಣ್ಗಾವಲಿಗಾಗಿ ಡ್ರೋನ್ಗಳನ್ನೂ ನಿಯೋಜಿಸಲಾಗಿತ್ತು’’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ‘ವಿರಾಟ ನಿರುದ್ಯೋಗ ಸಮಸ್ಯೆಯ ನಗ್ನದರ್ಶನ’ ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆಯೇ, ಟಿಎಮ್ಸಿ ಪಕ್ಷವು ರಾಜ್ಯದ ನಿರುದ್ಯೋಗ ಪರಿಸ್ಥಿತಿಯ ಬಗ್ಗೆ ಬಿಜೆಪಿಯನ್ನು ಟೀಕಿಸಿದೆ. ನೇಮಕಾತಿ ಪರೀಕ್ಷೆಯ ವೀಡಿಯೊವೊಂದನ್ನು ಎಕ್ಸ್ನಲ್ಲಿ ಹಾಕಿರುವ ಟಿಎಮ್ಸಿ, ‘‘ಇದು ಸಿನೇಮಾ ದೃಶ್ಯವಲ್ಲ. ಇದು ಬಿಜೆಪಿ ಆಡಳಿತದ ಒಡಿಶಾ. ಇಲ್ಲಿ ಎಮ್ಬಿಎ ಮತ್ತು ಎಮ್ಸಿಎ ಪದವೀಧರರು ಸೇರಿದಂತೆ 8,000ಕ್ಕೂ ಅಧಿಕ ಆಕಾಂಕ್ಷಿಗಳು ಕೇವಲ 187 ಹೋಮ್ಗಾರ್ಡ್ ಹುದ್ದೆಗಳಿಗೆ ಸ್ಪರ್ಧಿಸುತ್ತಿದ್ದಾರೆ’’ ಎಂದು ಹೇಳಿದೆ. ‘‘ಇದು ಬಿಜೆಪಿಯ ಡಬಲ್ ಇಂಜಿನ್ ಸರಕಾರದ ಕಟು ವಾಸ್ತವ. ಪದವಿಗಳು ಇವೆ. ಆದರೆ, ಕೆಲಸ ಎಲ್ಲಿಯೂ ಇಲ್ಲ. ನಿರುದ್ಯೋಗ ಎನ್ನುವುದು ಆಕಸ್ಮಿಕವಲ್ಲ; ಅದು ಬಿಜೆಪಿಯ ಸಾಧನೆ. ನಿರುದ್ಯೋಗದ ವಿರಾಟ್ ಸಮಸ್ಯೆಯ ನಗ್ನದರ್ಶನ’’ ಎಂದು ಅದು ಬಣ್ಣಿಸಿದೆ.
ಬಫರ್ ವಲಯದಲ್ಲಿ 5.50 ಕಿ.ಮೀ ಉದ್ದದ ರಸ್ತೆ ಮಾರ್ಚ್ಗೆ ಪೂರ್ಣ: ಡಿಕೆ ಶಿವಕುಮಾರ್; ಎಲ್ಲಿಂದ ಎಲ್ಲಿಗೆ?
ಕೋರಮಂಗಲದಿಂದ ಸರ್ಜಾಪುರದವರೆಗೆ 5.50 ಕಿ.ಮೀ ರಾಜಕಾಲುವೆ ಬಫರ್ ರಸ್ತೆ ಕಾಮಗಾರಿ ಮಾರ್ಚ್ಗೆ ಪೂರ್ಣಗೊಳ್ಳಲಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು 300 ಕಿ.ಮೀ ರಸ್ತೆ ನಿರ್ಮಾಣ ಮೊದಲ ಹಂತದಲ್ಲಿದೆ. ರಕ್ಷಣಾ ಇಲಾಖೆ ಜಾಗ ನೀಡಿದ್ದು, ಸೇನಾ ಪ್ರದೇಶ ಸುತ್ತುವ ಅಗತ್ಯವಿಲ್ಲ. ಬೈಕ್, ಕಾರುಗಳಿಗೆ ಮಾತ್ರ ಅವಕಾಶವಿದ್ದು, ಭಾರಿ ವಾಹನಗಳಿಗೆ ನಿರ್ಬಂಧವಿದೆ.
ಮಂಗಳೂರು | ಕನ್ನಡ ಸಾಹಿತ್ಯದ ಚೆಲುವನ್ನು ಮರೆಯದಿರೋಣ : ಪ್ರೊ.ಧರ್ಮ
ಮಂಗಳೂರು : ಇಂಗ್ಲಿಷ್ ನ ಪ್ರಭಾವಕ್ಕೊಳಗಾಗಿ ನಮ್ಮ ಭಾಷೆಯನ್ನು, ಅದರ ಚೆಲುವನ್ನು ಮರೆತಿದ್ದೇವೆ. ಇಂತಹ ಸಂದರ್ಭದಲ್ಲಿ ಪಂಪನ ಬಗ್ಗೆ, ಕನ್ನಡದ ಬಗ್ಗೆ ತಿಳಿಯಪಡಿಸುವ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುತ್ತಿರುವುದು ಅಭಿನಂದನೀಯ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ.ಎಲ್ ಧರ್ಮ ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಪ್ರಧಾನಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆ ಪ್ರಾಯೋಜಿತ ಸರಣಿ ಉಪನ್ಯಾಸ ಕಾರ್ಯಕ್ರಮವನ್ನು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಶ್ರೀಸಾಮಾನ್ಯನೇ ಎಲ್ಲ ನಾಡಿನ ನಿಜವಾದ ಆಸ್ತಿ. ಅವರ ಅರಿವನ್ನು ಬೆಳೆಸುವ ಕಾರ್ಯ ಶಿಕ್ಷಣ ಸಂಸ್ಥೆಗಳು ನಡೆಸಬೇಕಿದೆ ಎಂದರು. ಪ್ರೊ.ಬಿ.ಎ ವಿವೇಕ ರೈ ಮಾತನಾಡಿ, ಆದಿಪುರಾಣವನ್ನು ಪಂಪ ತನ್ನ ಮೂವತ್ತೊಂಬತ್ತನೇ ವಯಸ್ಸಲ್ಲಿ ಬರೆದ. ಅದು ಬದುಕಿನ ದರ್ಶನ, ಒಳನೋಟವುಳ್ಳ ಕಾವ್ಯ. ಪ್ರಭುತ್ವದ ಹೆಸರಿನ ಮೋಹವನ್ನು ತೊರೆಯುವಂತೆ ಮಾಡುವ, ಗರ್ವರಸ ಸೋರುವಂತೆ ಮಾಡುವ ಅಧಿಕಾರ ತ್ಯಾಗದ ಭಾವನೆಯನ್ನು ಬೆಳೆಸುವ ಕಾವ್ಯ. ಭರತ ಬಾಹುಬಲಿಯ ಪ್ರಸಂಗವನ್ನು ನೆನಪು ಮಾಡಿಕೊಂಡ ಅವರು ನಾವು ಅಧಿಕಾರ ಪ್ರೀತಿಯ ಭರತನನ್ನು ಮರೆತಿದ್ದೇವೆ ಆದರೆ ಬಾಹುಬಲಿಯ ಮೂರ್ತಿಯನ್ನು ಅಲ್ಲಲ್ಲಿ ಕಾಣುತ್ತೇವೆ. ಅವನು ವೈರಾಗ್ಯಮೂರ್ತಿ, ತ್ಯಾಗಮೂರ್ತಿ. ಅದಿಪುರಾಣ ಮನೋಧರ್ಮದ ಪಕ್ವತೆಯನ್ನು ಸಾರುವ ಕೃತಿ ಎಂದು ಹೇಳಿದರು. ಸಮಾರಂಭದಲ್ಲಿ ವಿವಿ ಕುಲಸಚಿವ ಪ್ರೊ.ಗಣೇಶ್ ಸಂಜೀವ್, ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಗಣಪತಿಗೌಡ ಉಪಸ್ಥಿತರಿದ್ದರು. ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ.ನಾಗಪ್ಪ ಗೌಡ ಸ್ವಾಗತಿಸಿದರು. ಡಾ.ಧನಂಜಯ ಕುಂಬ್ಳೆ ವಂದಿಸಿದರು. ಡಾ.ಯಶುಕುಮಾರ್ ನಿರೂಪಿಸಿದರು.
ಗಾಝಾ ಅಂತಾರಾಷ್ಟ್ರೀಯ ಪಡೆಗೆ 3,500 ಯೋಧರನ್ನು ಕಳುಹಿಸಲು ಪಾಕ್ ಯೋಜನೆ: ವರದಿ
ಇಸ್ಲಮಾಬಾದ್, ಡಿ.22: ಗಾಝಾ ಶಾಂತಿ ಯೋಜನೆಯ ಭಾಗವಾಗಿ ಪ್ರಸ್ತಾವಿತ ಅಂತಾರಾಷ್ಟ್ರೀಯ ಸ್ಥಿರೀಕರಣ ಪಡೆಗೆ ಸುಮಾರು 3,500 ಯೋಧರನ್ನು ಕಳುಹಿಸಲು ಪಾಕಿಸ್ತಾನ ಯೋಜಿಸಿದೆ ಎಂದು ರಾಜತಾಂತ್ರಿಕ ಮೂಲಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ. ಪಾಕಿಸ್ತಾನವು ಅಧಿಕೃತವಾಗಿ ಅಂತಿಮ ನಿರ್ಧಾರವನ್ನು ದೃಢಪಡಿಸಿಲ್ಲ. ಆದರೆ ಸಂಭಾವ್ಯ ನಿಯೋಜನೆಯ ಕುರಿತು ಪಾಕಿಸ್ತಾನದ ಮಿಲಿಟರಿ ನಾಯಕತ್ವವು ಅಮೆರಿಕಾದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿದುಬಂದಿದೆ. ಪಾಕಿಸ್ತಾನಿ ಪಡೆಗಳ ಭಾಗವಹಿಸುವಿಕೆಯು ಪಶ್ಚಿಮ ಏಶ್ಯಾದಲ್ಲಿ ಅಂತಾರಾಷ್ಟ್ರೀಯ ಶಾಂತಿ ಕಾರ್ಯಾಚರಣೆಯಲ್ಲಿ ದೇಶಕ್ಕೆ ಅಪರೂಪದ ನೇರ ಪಾತ್ರವನ್ನು ಗುರುತಿಸುತ್ತದೆ ಮತ್ತು ಅಮೆರಿಕಾದೊಂದಿಗಿನ ಸಂಬಂಧಗಳನ್ನು ಬಲಪಡಿಸಲಿದೆ. ಆದರೆ ಸ್ಥಳೀಯವಾಗಿ ವ್ಯಾಪಕ ಪ್ರತಿರೋಧವನ್ನೂ ಎದುರಿಸಬೇಕಾಗಬಹುದು ಎಂದು `ಡಾನ್' ಪತ್ರಿಕೆ ವರದಿ ಮಾಡಿದೆ.
ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ ಹೊಸ ಶಾಂತಿ ಯೋಜನೆ ತಿರಸ್ಕರಿಸಿದ ರಶ್ಯ: ವರದಿ
ಮಾಸ್ಕೋ, ಡಿ.22: ಉಕ್ರೇನ್ನಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿರುವ ಯೋಜನೆಗೆ ಇತ್ತೀಚಿನ ತಿದ್ದುಪಡಿಯನ್ನು ರಶ್ಯ ತಿರಸ್ಕರಿಸುತ್ತದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ವಿದೇಶಾಂಗ ನೀತಿ ಸಲಹೆಗಾರ ಯೂರಿ ಉಷಕೋವ್ ಸೋಮವಾರ ಹೇಳಿದ್ದಾರೆ. ಶಾಂತಿ ಯೋಜನೆಯ ಮೂಲ ಆವೃತ್ತಿಯನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಉಷಕೋವ್, ಅಮೆರಿಕಾ ರಶ್ಯ ಮತ್ತು ಉಕ್ರೇನ್ ನಡುವೆ ತ್ರಿಪಕ್ಷೀಯ ಮಾತುಕತೆಯ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. `ಶಾಂತಿ ಯೋಜನೆಗೆ ಮಾಡಿರಬಹುದಾದ ತಿದ್ದುಪಡಿಯನ್ನು ನಾನು ನೋಡಿಲ್ಲ. ಆದರೆ ಯುರೋಪಿಯನ್ನರು ಮತ್ತು ಉಕ್ರೇನಿಯನ್ನರು ಮಾಡಿರುವ ಅಥವಾ ಮಾಡಲು ಪ್ರಯತ್ನಿಸುತ್ತಿರುವ ಪ್ರಸ್ತಾವನೆಗಳು ಖಂಡಿತವಾಗಿಯೂ ಯೋಜನೆಯನ್ನು ಉತ್ತಮಗೊಳಿಸುವುದಿಲ್ಲ ಮತ್ತು ದೀರ್ಘಾವಧಿಯ ಶಾಂತಿಯನ್ನು ಸಾಧಿಸುವ ಸಾಧ್ಯತೆಗಳನ್ನು ಸುಧಾರಿಸುವುದಿಲ್ಲ' ಎಂದವರು ಹೇಳಿದ್ದಾರೆ. ಈ ಮಧ್ಯೆ, ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸಂಪೂರ್ಣ ಉಕ್ರೇನ್ ಮತ್ತು ಯುರೋಪ್ನ ಭಾಗವನ್ನು(ಈ ಹಿಂದಿನ ಸೋವಿಯತ್ ಒಕ್ಕೂಟದ ಭಾಗವಾಗಿದ್ದ ಪ್ರದೇಶ) ವಶಪಡಿಸಿಕೊಳ್ಳಲು ಬಯಸಿದ್ದಾರೆ ಎಂಬ ಅಮೆರಿಕಾ ಗುಪ್ತಚರ ವರದಿಯನ್ನು ರಶ್ಯ ತಳ್ಳಿಹಾಕಿದೆ. ಇದು ಖಂಡಿತಾ ಸತ್ಯವಲ್ಲ. ಮಾಧ್ಯಮಗಳ ವರದಿ ಎಷ್ಟು ವಿಶ್ವಾಸಾರ್ಹವಾಗಿದೆ ಎಂದು ನಮಗೆ ಖಚಿತವಾಗಿಲ್ಲ. ಆದರೆ ಒಂದು ವೇಳೆ ಈ ವರದಿ ನಿಜವಾಗಿದ್ದರೆ ಅಮೆರಿಕಾದ ಗುಪ್ತಚರ ಮೌಲ್ಯಮಾಪನ ತಪ್ಪಾಗಿದೆ ಎಂದು ರಶ್ಯ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ರಶ್ಯ, ಉಕ್ರೇನ್ ಜೊತೆಗಿನ ಮಾತುಕತೆ ರಚನಾತ್ಮಕ: ಅಮೆರಿಕಾ ಉಕ್ರೇನ್ನಲ್ಲಿನ ಯುದ್ದವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಫ್ಲೋರಿಡಾ ರಾಜ್ಯದಲ್ಲಿ ಉಕ್ರೇನ್, ಯುರೋಪ್ ಮತ್ತು ರಶ್ಯದ ನಿಯೋಗದ ಜೊತೆ ನಡೆಸಿದ ಪ್ರತ್ಯೇಕ ಮಾತುಕತೆಗಳು ರಚನಾತ್ಮಕವಾಗಿತ್ತು. ಯೋಜನೆಯ ಮುಂದಿನ ಹಂತಗಳ ಅನುಕ್ರಮಕ್ಕೆ ನಿರ್ದಿಷ್ಟ ಗಮನವನ್ನು ನೀಡಲಾಗಿದೆ ಎಂದು ಅಮೆರಿಕಾದ ವಿಶೇಷ ಪ್ರತಿನಿಧಿ ಸ್ಟೀವ್ ವಿಟ್ಕಾಫ್ ಹೇಳಿದ್ದಾರೆ. `ಹತ್ಯೆಗಳನ್ನು ನಿಲ್ಲಿಸುವುದು, ಉಕ್ರೇನ್ಗೆ ಭದ್ರತೆಯನ್ನು ಖಾತರಿ ಪಡಿಸುವುದು, ಉಕ್ರೇನ್ನ ಚೇತರಿಕೆ, ಸ್ಥಿರತೆ ಮತ್ತು ದೀರ್ಘಾವಧಿಯ ಸಮೃದ್ಧಿಗೆ ಪೂರಕ ಪರಿಸ್ಥಿತಿ ಸೃಷ್ಟಿಸುವುದು ನಮ್ಮೆಲ್ಲರ ಪ್ರಮುಖ ಆದ್ಯತೆಯಾಗಿದೆ. ನ್ಯಾಯಯುತ ಮತ್ತು ಸುಸ್ಥಿರ ಶಾಂತಿಯನ್ನು ಸಾಧಿಸಲು ಉಕ್ರೇನ್ಗೆ ಪೂರ್ಣ ಹಕ್ಕು ಇದೆ' ಎಂದು ವಿಟ್ಕಾಫ್ ಪ್ರತಿಪಾದಿಸಿದ್ದಾರೆ. ಸುಮಾರು 4 ವರ್ಷಗಳಿಂದ ಮುಂದುವರಿದಿರುವ ಉಕ್ರೇನ್ ಯುದ್ದವನ್ನು ಕೊನೆಗೊಳಿಸಲು ಟ್ರಂಪ್ ಪ್ರಸ್ತಾಪಿಸಿರುವ 20 ಅಂಶದ ಯೋಜನೆಯ ಬಗ್ಗೆ ಅಮೆರಿಕಾ, ರಶ್ಯ ಮತ್ತು ಉಕ್ರೇನ್ ನಿಯೋಗಗಳ ನಡುವೆ ಸರಣಿ ಸಭೆ ನಡೆಯುತ್ತಿದೆ. ಶನಿವಾರ ರಶ್ಯ ಅಧ್ಯಕ್ಷ ಪುಟಿನ್ ಅವರ ವಿಶೇಷ ಪ್ರತಿನಿಧಿ ಕಿರಿಲ್ ಡಿಮಿಟ್ರಿಯೆವ್ ಅವರೊಂದಿಗೆ ಸಭೆ ನಡೆಸಿದ್ದ ವಿಟ್ಕಾಫ್ ರವಿವಾರ ಉಕ್ರೇನ್ನ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ರುಸ್ತುಮ್ ಉಮೆರೊವ್ ಜೊತೆ ಮಾತುಕತೆ ನಡೆಸಿದ್ದಾರೆ.
ಅಂಡರ್-19 ವಿಶ್ವಕಪ್ ವಿಜೇತರಿಗೆ ನಗದು ಬಹುಮಾನ ಪ್ರಕಟಿಸಿದ ಪಾಕಿಸ್ತಾನ ಪ್ರಧಾನಿ
ಲಾಹೋರ್, ಡಿ.22: ದುಬೈನಲ್ಲಿ ರವಿವಾರ ಏಶ್ಯಕಪ್ ಪ್ರಶಸ್ತಿಯನ್ನು ಗೆದ್ದಿರುವ ಅಂಡರ್-19 ಕ್ರಿಕೆಟ್ ತಂಡಕ್ಕೆ ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಝ್ ಶರೀಫ್ ಭಾರೀ ಮೊತ್ತದ ಬಹುಮಾನವನ್ನು ಪ್ರಕಟಿಸಿದ್ದಾರೆ. ಸೋಮವಾರ ಇಸ್ಲಾಮಾಬಾದ್ನಲ್ಲಿ ಆಟಗಾರರು ಹಾಗೂ ಅಧಿಕಾರಿಗಳಿಗೆ ವಿಶೇಷ ಕಾರ್ಯಕ್ರಮ ಏರ್ಪಡಿಸಿದ್ದ ಶರೀಫ್, ಈ ವೇಳೆ ಪ್ರತಿಯೊಬ್ಬ ಆಟಗಾರನಿಗೆ ತಲಾ 10 ಮಿಲಿಯನ್ ಪಾಕಿಸ್ತಾನ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದರು. ಪಾಕಿಸ್ತಾನ ತಂಡವು ರವಿವಾರ ನಡೆದಿದ್ದ ಫೈನಲ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವನ್ನು 191 ರನ್ಗಳ ಅಂತರದಿಂದ ಮಣಿಸಿ ಅಂಡರ್-19 ಏಶ್ಯಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರತಿಯೊಬ್ಬರು ತಂಡದ ಪ್ರದರ್ಶನವನ್ನು ಶ್ಲಾಘಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಟೀಮ್ ಸಲಹೆಗಾರ ಹಾಗೂ ಮ್ಯಾನೇಜರ್ ಸರ್ಫರಾಝ್ ಅಹ್ಮದ್ ಈ ಘೋಷಣೆಯನ್ನು ದೃಢಪಡಿಸಿದರು. ‘‘ಪ್ರಧಾನಿಮಂತ್ರಿ ಶರೀಫ್ ಅವರು ಪ್ರತಿಯೊಬ್ಬ ಆಟಗಾರಿಗೆ ತಲಾ 10 ಮಿಲಿಯನ್ ರೂಪಾಯಿಯನ್ನು ಘೋಷಿಸಿದ್ದಾರೆ. ನಾನು ಇಂತಹ ಪ್ರತಿಭಾವಂತ ಯುವ ಆಟಗಾರರೊಂದಿಗೆ ಕೆಲಸ ಮಾಡಿ ಖುಷಿಪಟ್ಟಿದ್ದೇನೆ. ಈ ಎಲ್ಲ ಆಟಗಾರರು ಕ್ರಿಕೆಟ್ನಲ್ಲಿ ಉಜ್ವಲ ಭವಿಷ್ಯ ಹೊಂದಿದ್ದಾರೆ’’ ಎಂದು ಅಹ್ಮದ್ ಹೇಳಿದ್ದಾರೆ. ‘‘ಈ ಗೆಲುವು ಎಚ್ಚರಿಕೆಯ ಯೋಜನೆ ಹಾಗೂ ದೀರ್ಘ ಕಾಲದ ತಯಾರಿಯ ಫಲಿತಾಂಶವಾಗಿದೆ. ಜೂನ್ನಲ್ಲಿ ನಮ್ಮ ತಯಾರಿ ಆರಂಭವಾಗಿತ್ತು. ಟ್ರಯಲ್ಸ್ ನಂತರ ಸುಮಾರು 70 ಆಟಗಾರರನ್ನು ಆಯ್ಕೆ ಮಾಡಿದ್ದೇವೆ. ಅದನ್ನು 20ಕ್ಕೆ ಇಳಿಸಿದ್ದೆವು. ಬಹುತೇಕ ಆಟಗಾರರಿಗೆ ದೇಶೀಯ ಮಟ್ಟದಲ್ಲಿ 50 ಓವರ್ ಕ್ರಿಕೆಟ್ ಆಡಲು ಅವಕಾಶ ನೀಡಲಾಗಿತ್ತು’’ ಎಂದು ಪಾಕಿಸ್ತಾನ ತಂಡದ ಮುಖ್ಯ ಕೋಚ್ ಶಾಹಿದ್ ಅನ್ವರ್ ಹೇಳಿದ್ದಾರೆ. ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವು 8 ವಿಕೆಟ್ಗಳ ನಷ್ಟಕ್ಕೆ 347 ರನ್ ಕಲೆ ಹಾಕಿತ್ತು. ಸಮೀರ್ ಮಿನ್ಹಾಸ್ 172 ರನ್ ಗಳಿಸಿ ಪಂದ್ಯದಲ್ಲಿ ಮಿಂಚಿದ್ದರು. ಪಾಕಿಸ್ತಾನದ ವೇಗದ ಬೌಲರ್ಗಳು ಭಾರತದ ವಿರುದ್ಧ ಪ್ರಾಬಲ್ಯ ಸಾಧಿಸಿದ್ದು, ಎದುರಾಳಿಯನ್ನು ಕೇವಲ 156 ರನ್ಗೆ ನಿಯಂತ್ರಿಸಿದ್ದರು. ಭಾರತ ತಂಡದ ನಾಯಕ ಆಯುಷ್ ಮ್ಹಾತ್ರೆ, ಫೈನಲ್ ಪಂದ್ಯದಲ್ಲಿ ತನ್ನ ತಂಡ ದೊಡ್ಡ ತಪ್ಪು ಮಾಡಿದೆ ಎಂದು ಒಪ್ಪಿಕೊಂಡರು. ‘‘ನಾವು ಮೊದಲಿಗೆ ಬೌಲಿಂಗ್ ಮಾಡುವ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಂಡಿದ್ದೆವು. ಬೌಲಿಂಗ್ನಲ್ಲಿ ಅಸ್ಥಿರ ಪ್ರದರ್ಶನ ನೀಡಿದ್ದೆವು. 50 ಓವರ್ಗಳನ್ನು ಆಡುವ ಸರಳ ಯೋಜನೆ ಹೊಂದಿದ್ದೆವು. ಹುಡುಗರು ನಿಜವಾಗಿಯೂ ಉತ್ತಮವಾಗಿ ಆಡಿದ್ದಾರೆ. ಪಂದ್ಯಾವಳಿಯು ನಮಗೆ ಉತ್ತಮವಾಗಿತ್ತು. ಕೆಲವು ಆಟಗಾರರು ಗಮನಾರ್ಹ ಪ್ರದರ್ಶನ ನೀಡಿದ್ದರು’’ಎಂದು ಆಯುಷ್ ಹೇಳಿದರು.
ಕೆಂಗೇರಿ ಸಮೀಪ ರೈಲ್ವೆ ಕಾಮಗಾರಿ; ಬೆಂಗಳೂರು ಮೈಸೂರು ಮಾರ್ಗದ 9 ರೈಲುಗಳು ರದ್ದು! ಯಾವೆಲ್ಲಾ?
ಕೆಂಗೇರಿ ಸಮೀಪ ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು-ಮೈಸೂರು ಮಾರ್ಗದ 8 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಡಿಸೆಂಬರ್ 25 ಮತ್ತು ಜನವರಿ 8 ರಂದು 3 ರೈಲುಗಳು ಸಂಪೂರ್ಣ ರದ್ದಾಗಲಿದ್ದು, 6 ರೈಲುಗಳು ಭಾಗಶಃ ರದ್ದಾಗಲಿವೆ. ಈ ಬದಲಾವಣೆಗಳು ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿವೆ.
ಮಂಗಳೂರು | ಗದಗ ಮೂಲದ ಕಾರ್ಮಿಕನ ಮೃತದೇಹ ಪತ್ತೆ
ಮಂಗಳೂರು,ಡಿ.22: ನಗರದ ಕಂಕನಾಡಿ-ಪಂಪ್ವೆಲ್ ಹಳೆಯ ರಸ್ತೆಯ ಚರಂಡಿಯಲ್ಲಿ ಗದಗ ಮೂಲದ ಕಾರ್ಮಿಕನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೃತರನ್ನು ಗದಗ ಜಿಲ್ಲೆಯ ಪಡಿಯಪ್ಪ ಎಂದು ಗುರುತಿಸಲಾಗಿದೆ. ಮೃತದೇಹದ ಮೇಲೆ ಗಾಯಗಳು ಕಂಡು ಬಂದಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಇವರು ಶನಿವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು. ಬಳಿಕ ನಾಪತ್ತೆಯಾಗಿದ್ದರು. ಅದರಂತೆ ಮನೆಮಂದಿ, ಕುಟುಂಬದ ಇತರ ಸದಸ್ಯರು ಪಡಿಯಪ್ಪರಿಗಾಗಿ ಹುಡುಕಾಟ ನಡೆಸಿದ್ದರು. ಸೋಮವಾರ ಸಂಜೆಯ ವೇಳೆಗೆ ಚರಂಡಿಯಲ್ಲಿ ಪಡಿಯಪ್ಪರ ಮೃತದೇಹ ಪತ್ತೆಯಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕದ ಆಲ್ರೌಂಡರ್ ಕೃಷ್ಣಪ್ಪ ಗೌತಮ್ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ
ಬೆಂಗಳೂರು, ಡಿ.22: ಕರ್ನಾಟಕದ ಆಲ್ರೌಂಡರ್ ಹಾಗೂ ಮಾಜಿ ಐಪಿಎಲ್ ಸ್ಟಾರ್ ಕೃಷ್ಣಪ್ಪ ಗೌತಮ್ ಸೋಮವಾರ ತನ್ನ 37ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಗಳ ಕ್ರಿಕೆಟ್ನಿಂದ ನಿವೃತ್ತಿ ಪ್ರಕಟಿಸಿದ್ದಾರೆ. ಕರ್ನಾಟಕ ತಂಡದ ಹಲವು ಪಂದ್ಯಗಳ ಗೆಲುವಿನ ರೂವಾರಿಯಾಗಿದ್ದ ಗೌತಮ್ 14 ವರ್ಷಗಳ ಕಾಲ ವೃತ್ತಿಪರ ಕ್ರಿಕೆಟ್ ಆಡಿದ್ದಾರೆ. ಕೆಳ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟಿಂಗ್ಗೆ ಖ್ಯಾತಿ ಪಡೆದಿದ್ದರು. ಆಫ್ ಸ್ಪಿನ್ ಬೌಲಿಂಗ್ ಕೂಡ ಮಾಡುತ್ತಿದ್ದರು. ಗೌತಮ್ ಅವರು ಕರ್ನಾಟಕದ ಪರ 59 ಪ್ರಥಮ ದರ್ಜೆ ಹಾಗೂ 68 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದರು. ಫೆಬ್ರವರಿ 2023ರಲ್ಲಿ ಕೊನೆಯ ಪ್ರಥಮ ದರ್ಜೆ ಪಂದ್ಯವನ್ನು ಆಡಿದ್ದರು. ಕರ್ನಾಟಕದ ಪರ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ 394 ವಿಕೆಟ್ಗಳು ಹಾಗೂ 2,783 ರನ್ ಗಳಿಸಿದ್ದು, ಇದರಲ್ಲಿ ರಣಜಿಯಲ್ಲಿ ಗಳಿಸಿದ ಒಂದು ಶತಕ ಹಾಗೂ ಐದು ಅರ್ಧಶತಕಗಳಿವೆ. ಗೌತಮ್ 2012ರಲ್ಲಿ ರಣಜಿ ಟ್ರೋಫಿ ಋತುವಿನಲ್ಲಿ ಉತ್ತರ ಪ್ರದೇಶ ವಿರುದ್ಧ ತನ್ನ ಚೊಚ್ಚಲ ಪ್ರಥಮ ದರ್ಜೆ ಪಂದ್ಯವನ್ನು ಆಡಿದ್ದರು. ತನ್ನ ಮೊದಲ ಪಂದ್ಯದಲ್ಲಿ ಸುರೇಶ್ ರೈನಾ ಹಾಗೂ ಭುವನೇಶ್ವರ ಕುಮಾರ್ ಅವರಂತಹ ಪ್ರಮುಖ ಆಟಗಾರರ ವಿಕೆಟ್ ಉರುಳಿಸಿ ಗಮನ ಸೆಳೆದಿದ್ದರು. 2016-17 ರ ರಣಜಿ ಋತು ಗೌತಮ್ ವೃತ್ತಿಜೀವನದ ಮಹತ್ವದ ಸಾಧನೆಗೆ ಸಾಕ್ಷಿಯಾಗಿತ್ತು. ಆಗ ಅವರು ಕೇವಲ 8 ಪಂದ್ಯಗಳಲ್ಲಿ 27 ವಿಕೆಟ್ಗಳನ್ನು ಪಡೆದಿದ್ದರು. ನೈಜ ಆಲ್ರೌಂಡರ್ ಎಂದು ಸ್ವತಃ ಸಾಬೀತುಪಡಿಸಿದ್ದರು. ಆ ನಂತರದ ವರ್ಷ ಮೈಸೂರಿನಲ್ಲಿ ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ತನ್ನ ಚೊಚ್ಚಲ ಪ್ರಥಮ ದರ್ಜೆ ಶತಕವನ್ನು ಸಿಡಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಗೌತಮ್ ದೇಶೀಯ ಕ್ರಿಕೆಟ್ನಲ್ಲಿ ಉತ್ತಮ ದಾಖಲೆ ನಿರ್ಮಿಸಿದ್ದಾರೆ. ಪ್ರಥಮ ದರ್ಜೆ ಹಾಗೂ ಲಿಸ್ಟ್ ಎ ಕ್ರಿಕೆಟ್ನಲ್ಲಿ 320ಕ್ಕೂ ಅಧಿಕ ವಿಕೆಟ್ಗಳನ್ನು ಕಬಳಿಸಿ ತನ್ನ ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ. ಬ್ಯಾಟಿಂಗ್ನಲ್ಲಿ ಕೆಲವು ಉಪಯುಕ್ತ ಇನಿಂಗ್ಸ್ಗಳನ್ನು ಆಡಿದ್ದಾರೆ. 2023ರ ತನಕ ಕರ್ನಾಟಕ ಕ್ರಿಕೆಟ್ ತಂಡದ ಪ್ರಮುಖ ಸದಸ್ಯರಾಗಿದ್ದರು. 2019ರಲ್ಲಿ ರಣಜಿ ಟ್ರೋಫಿ ಟೂರ್ನಿಯಲ್ಲಿ ತಮಿಳುನಾಡು ತಂಡದ ವಿರುದ್ಧ ಎಂಟು ವಿಕೆಟ್ ಗೊಂಚಲು ಕಬಳಿಸಿದ್ದರು. ಆ ಪಂದ್ಯದಲ್ಲಿ ಕರ್ನಾಟಕ ತಂಡ 26 ರನ್ನಿಂದ ಜಯ ಸಾಧಿಸಿತ್ತು. 2019-20ರ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಫೈನಲ್ನಲ್ಲಿ ತಮಿಳುನಾಡು ವಿರುದ್ಧ ಕರ್ನಾಟಕ ತಂಡ 1 ರನ್ನಿಂದ ರೋಚಕ ಗೆಲುವು ದಾಖಲಿಸಲು ಪ್ರಮುಖ ಪಾತ್ರವಹಿಸಿದ್ದರು. ತನ್ನ ಸ್ಥಿರ ಪ್ರದರ್ಶನದ ಮೂಲಕ ಹಲವು ಬಾರಿ ಭಾರತ ‘ಎ’ ತಂಡಕ್ಕೆ ಆಯ್ಕೆಯಾಗಿದ್ದರು. ನ್ಯೂಝಿಲ್ಯಾಂಡ್ ‘ಎ’, ವೆಸ್ಟ್ಇಂಡೀಸ್ ‘ಎ’, ಆಸ್ಟ್ರೇಲಿಯ ‘ಎ’ ಹಾಗೂ ಇಂಗ್ಲೆಂಡ್ ಲಯನ್ಸ್ ತಂಡಗಳ ವಿರುದ್ಧ ಆಡಿದ್ದರು. 2021ರಲ್ಲಿ ಶ್ರೀಲಂಕಾ ಕ್ರಿಕೆಟ್ ಪ್ರವಾಸಕ್ಕೆ ಸೀನಿಯರ್ ಭಾರತೀಯ ತಂಡಕ್ಕೆ ಕರೆ ಪಡೆದಿದ್ದರು. ಕೊಲಂಬೊದಲ್ಲಿ ಏಕೈಕ ಟಿ-20 ಅಂತರ್ರಾಷ್ಟ್ರೀಯ ಪಂದ್ಯವನ್ನು ಆಡಿದ್ದ ಗೌತಮ್ ಒಂದು ವಿಕೆಟನ್ನು ಪಡೆದಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಟಿ-20 ಪಂದ್ಯಾವಳಿಯಲ್ಲಿ ಗೌತಮ್ ಅವರು ಮುಂಬೈ ಇಂಡಿಯನ್ಸ್, ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೊ ಸೂಪರ್ ಜಯಂಟ್ಸ್ ತಂಡಗಳ ಪರ ಆಡಿದ್ದರು. ಒಟ್ಟು 36 ಪಂದ್ಯಗಳಲ್ಲಿ 8.24ರ ಇಕಾನಮಿ ರೇಟ್ನಲ್ಲಿ 21 ವಿಕೆಟ್ಗಳನ್ನು ಕಬಳಿಸಿದ್ದರು. 2021ರಲ್ಲಿ ಐಪಿಎಲ್ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ಗೆ 9.25 ಕೋ.ರೂ.ಗೆ ಹರಾಜಾಗಿದ್ದರು. ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಬೆಲೆಗೆ ಹರಾಜಾದ ಹೊಸ ಆಟಗಾರನಾಗಿದ್ದರು. 2018ರಲ್ಲಿ ರಾಜಸ್ಥಾನ ರಾಯಲ್ಸ್ ತಂಡಕ್ಕೆ 6.2 ಕೋ.ರೂ.ಗೆ ಹರಾಜಾಗಿದ್ದರು. ತನ್ನ ಐಪಿಎಲ್ ವೃತ್ತಿಜೀವನದಲ್ಲಿ 35 ಕೋ.ರೂ.ಗೂ ಅಧಿಕ ಆದಾಯ ಗಳಿಸಿರುವ ಗೌತಮ್ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದರು. 2019ರ ಆವೃತ್ತಿಯ ಕರ್ನಾಟಕ ಪ್ರೀಮಿಯರ್ ಲೀಗ್ನಲ್ಲಿ ಅತ್ಯಂತ ಸ್ಮರಣೀಯ ಪ್ರದರ್ಶನ ನೀಡಿದ್ದರು. ಬಳ್ಳಾರಿ ಟಸ್ಕರ್ಸ್ ಪರ ಆಡಿದ್ದ ಗೌತಮ್ ಕೇವಲ 56 ಎಸೆತಗಳಲ್ಲಿ 13 ಸಿಕ್ಸರ್ಗಳ ಸಹಿತ 134 ರನ್ ಗಳಿಸಿದ್ದರು. ಆನಂತರ ಬೌಲಿಂಗ್ನಲ್ಲಿ ಅಮೋಘ ಸ್ಪೆಲ್ ಎಸೆದಿದ್ದ ಗೌತಮ್ 4 ಓವರ್ಗಳಲ್ಲಿ ಕೇವಲ 15 ರನ್ ನೀಡಿ 8 ವಿಕೆಟ್ಗಳನ್ನು ಕಬಳಿಸಿದ್ದರು. ಇಂದು ಭಾರತೀಯ ಟಿ-20 ಕ್ರಿಕೆಟ್ನಲ್ಲಿ ಒಂದು ಅತ್ಯುತ್ತಮ ಆಲ್ರೌಂಡರ್ ಪ್ರದರ್ಶನವಾಗಿ ಉಳಿದುಕೊಂಡಿದೆ. ಗೌತಮ್ ನಿವೃತ್ತಿಯ ಮೂಲಕ ಭಾರತೀಯ ದೇಶೀಯ ಕ್ರಿಕೆಟ್ನಲ್ಲಿ ಓರ್ವ ಪ್ರಭಾವಶಾಲಿ ಆಲ್ರೌಂಡರ್ ನೇಪಥ್ಯಕ್ಕೆ ಸರಿದಂತಾಗಿದೆ. ಮೈಸೂರು ವಾರಿಯರ್ಸ್ ತಂಡದಲ್ಲಿ ಮೆಂಟರ್ ಆಗಿರುವ ಗೌತಮ್ 2025ರ ಆವೃತ್ತಿಯ ಮಹಾರಾಜ ಟಿ20 ಟೂರ್ನಿಯಲ್ಲಿ ಆಡಿದ್ದರು. ಕಳೆದ ಎರಡು ವರ್ಷಗಳಿಂದ ಕ್ರಿಕೆಟ್ ವೀಕ್ಷಕ ವಿವರಣೆಗಾರನಾಗಿ ಕೆಲಸ ಮಾಡುತ್ತಿದ್ದಾರೆ. ‘‘ಬೇರೆ ರಾಜ್ಯಕ್ಕೆ ಹೋಗುವ ಆಯ್ಕೆ ನನ್ನ ಬಳಿ ಇದ್ದರೂ ನಾನು ಅದನ್ನು ಎಂದಿಗೂ ಗಂಭೀರವಾಗಿ ಪರಿಗಣಿಸಲಿಲ್ಲ. ನಾನು ಹೆಮ್ಮೆಯ ಕರ್ನಾಟಕದ ಕ್ರಿಕೆಟಿಗನಾಗಿ ನನ್ನ ಪ್ರಯಾಣವನ್ನು ಆರಂಭಿಸಿದ್ದೆ. ಬೇರೆ ರಾಜ್ಯಕ್ಕಾಗಿ ಆಡುವ ಬಗ್ಗೆ ನಾನು ಎಂದಿಗೂ ಯೋಚಿಸಲಿಲ್ಲ’’ ಎಂದು ಗೌತಮ್ ಸೋಮವಾರ ಹೇಳಿದ್ದಾರೆ.
ಮುರುಡೇಶ್ವರ | ಮೀನುಗಾರಿಕಾ ಬೋಟ್ ಮುಳುಗಡೆ: ಏಳು ಮಂದಿಯ ರಕ್ಷಣೆ
ಮುರುಡೇಶ್ವರ,ಡಿ.22:ನಗರದ ಮೀನುಗಾರಿಕೆ ಬಂದರ್ ನಿಂದ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಮೈಶಾ-2 ಹೆಸರಿನ ಮೀನುಗಾರಿಕಾ ಬೋಟ್ ಶನಿವಾರ ಮುಂಜಾವ ಮುರುಡೇಶ್ವರ ಸಮೀಪ ಮುಳುಗಡೆಯಾಗಿದೆ. ನಗರದ ಬಂದರು ಅಝೀಝುದ್ದೀನ್ ರಸ್ತೆಯ ನಿವಾಸಿ ಮುಹಮ್ಮದ್ ಶರೀಕ್ ಉಲ್ ಇಸ್ಲಾಂ ಎಂಬವರಿಗೆ ಸೇರಿದ ಬೋಟ್ ಡಿ.16ರಂದು ಆಂಧ್ರ ಪ್ರದೇಶ ಮೂಲದ ಚಾಲಕ ಮತ್ತು 6 ಮಂದಿ ಮೀನುಗಾರರು ಬಂದರಿನಿಂದ ತೆರಳಿದ್ದರು. ಡಿ.20ರಂದು ಮುರುಡೇಶ್ವರದಿಂದ ಸುಮಾರು 14 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮುಂಜಾವ 3.15ರ ವೇಳೆಗೆ ಸಮುದ್ರದ ರಭಸವಾದ ಅಲೆಗೆ ಸಿಕ್ಕಿ ಬೋಟ್ ಮುಳುಗಡೆಯಾಗಿದೆ ಎನ್ನಲಾಗಿದೆ. ಬೋಟ್ ನಲ್ಲಿದ್ದವರನ್ನು ಇನ್ನೊಂದು ಬೋಟ್ ನ ಮೀನುಗಾರರು ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 60 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮಾಲಕರು ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ | ಜ.12ರಂದು ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರ : ಸಂಸದ ಕೋಟ
ಉಡುಪಿ, ಡಿ.22: ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿ, ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವೊಂದು ಮುಂದಿನ ಜನವರಿ 12ರಂದು ನಡೆಯಲಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವನ್ನು ಕುಂದಾಪುರ ತಾಲೂಕಿನಲ್ಲಿ ಆಯೋಜಿಸುವಂತೆ ತಿಳಿಸಿದ ಅವರು, ಇದಕ್ಕಾಗಿ ಎರಡು ದಿನಗಳ ಒಳಗೆ ಸ್ಥಳ ಗುರುತಿಸುವುದರೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ 16,252 ಹೆಕ್ಟೇರ್ ತೆಂಗು ಬೆಳೆಯುವ ಪ್ರದೇಶವಿದ್ದು, ಕರಾವಳಿ ಭಾಗದಲ್ಲಿ ಜೇಡಿ ಮತ್ತು ಮರಳು ಮಿಶ್ರಿತ ಮಣ್ಣು ಜೊತೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿರುವುದರಿಂದ ತೆಂಗು ಬೆಳೆ ಬೆಳವಣಿಗೆಗೆ ಸೂಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತೆಂಗು ಬೆಳೆಗಾರರಿಗೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕೋಟ ತಿಳಿಸಿದರು. ಕಾರ್ಯಾಗಾರದಲ್ಲಿ ದೇಶದ ವಿವಿದೆಡೆಗಳಲ್ಲಿರುವ ತೆಂಗಿನ ಉತ್ಪನ್ನಗಳ ಪ್ರದರ್ಶನ, ತೆಂಗಿನ ಮೂಲಕ ನಿರ್ಮಾಣವಾಗುತ್ತಿರುವ ನೀರಾ, ಬೆಲ್ಲ, ಚಾಕಲೇಟ್ ಉತ್ಪನ್ನಗಳು ಮತ್ತು ಅಪರೂಪದ ತೆಂಗು ಉತ್ಪನ್ನಗಳ ಪ್ರದರ್ಶನಗಳು, ಸಣ್ಣ ಕೈಗಾರಿಕೆ, ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಪಟ್ಟ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳಗಳು ನಡೆಯಲಿದೆ ಎಂದರು. ಕಾರ್ಯಾಗಾರದಲ್ಲಿ ತೆಂಗು ಅಭಿವೃದ್ಧಿ ಕುರಿತ ಪ್ರಾತ್ಯಕ್ಷಿಕೆ ನೀಡಲಿದ್ದು, ತೆಂಗು ಬೆಳೆಯಲ್ಲಿ ಅಪಾರ ಜ್ಞಾನ ಹೊಂದಿರುವ ಹಿರಿಯ ರೈತರಿಗೆ ಸನ್ಮಾನ, ಭವಿಷ್ಯದಲ್ಲಿ ತೆಂಗು ಕೃಷಿಯಿಂದಾಗುವ ಪ್ರಯೋಜನಗಳು, ರೋಬೋಟಿಕ್ ಹಾರ್ವೆಸ್ಟರ್ ಕುರಿತು, ತೆಂಗು ಬೆಳೆಗೆ ದೊರೆಯುವ ಪ್ರೋತ್ಸಾಹಧನ, ದೈನಂದಿನ ಬಳಕೆಗೆ ಸ್ಥಳೀಯವಾಗಿ ತಯಾರಾಗುವ ತೆಂಗಿನ ಎಣ್ಣೆ, ಹಾಲು, ಕೊಬ್ಬರಿ, ತೆಂಗಿನ ನಾರು, ಹೈಬ್ರಿಡ್ ಮತ್ತು ಗಿಡ್ಡ ತಳಿಗಳ ಬಗ್ಗೆ ಮಾಹಿತಿ, ನೀರಾ ಘಟಕ ತಯಾರಿಸುವ ಪರ್ಯಾಯ ಆಯಾಮ, ತೆಂಗಿಗೆ ತಗಲುವ ರೋಗ-ರುಜಿನಗಳ ನಿರ್ವಹಣೆ ಹಾಗೂ ಚಿಕಿತ್ಸೆಯ ಬಗ್ಗೆ, ತೆಂಗು ವಿಮಾ ಯೋಜನೆ, ತೆಂಗಿನ ಚಿಪ್ಪಿಗೆ ಬೇಡಿಕೆ ಸೇರಿದಂತೆ ತೆಂಗಿಗೆ ಸಂಬಂಧಿತ ವಿವಿಧ ವಿಷಯಗಳ ಬಗ್ಗೆ ಅಗತ್ಯ ಮಾಹಿತಿಯನ್ನು ನೀಡಲಾಗುವುದು ಎಂದರು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜ.12ರಂದು ನಡೆಯಲಿರುವ ತೆಂಗು ಅಭಿವೃದ್ಧಿಗೊಳಿಸುವ ಕುರಿತು ರೈತರು ಅಳವಡಿಸಿಕೊಳ್ಳಬೇಕಾದ ಆಧುನಿಕ ಬೇಸಾಯ ಪದ್ಧತಿ, ಉತ್ಪನ್ನಗಳ ಮೌಲ್ಯವರ್ಧನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಕಾರ್ಯಾಗಾರದಲ್ಲಿ ನೀಡಲಾಗುತ್ತಿದ್ದು, ರೈತರು ಈ ತಂತ್ರಜ್ಞಾನಗಳನ್ನು ಬಳಸಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಲು ಹಾಗೂ ತೆಂಗು ಬೆಳೆಗೆ ದೊರೆಯುವ ಸಹಾಯಧನಗಳ ಪ್ರಯೋಜನವನ್ನು ಪಡೆದುಕೊಂಡು ತೆಂಗಿನ ಮೌಲ್ಯವರ್ಧನೆಯಿಂದ ಹೆಚ್ಚಿನ ಲಾಭ ಪಡೆದು ಯಶಸ್ವಿ ರೈತರಾಗಿ ಹೊರಹೊಮ್ಮಬೇಕು ಎಂದರು. ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್, ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ್ ನಾಯಕ್, ಭಾರತೀಯ ಕಿಸಾನ್ ಸಂಘದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪಿ, ಕೃಷಿ ವಿಜ್ಞಾನ ಕೇಂದ್ರದ ಧನಂಜಯ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ | ಜಿಲ್ಲೆಯ 1.5 ಸಾವಿರ ಭಿನ್ನ ಸಾಮರ್ಥ್ಯದ ಮಕ್ಕಳ ವಿಶೇಷ ಕಾಳಜಿ ವಹಿಸಿ : ಡಾ.ತಿಪ್ಪೇಸ್ವಾಮಿ ಕೆ.ಟಿ.
► ಮಕ್ಕಳ ಹಕ್ಕುಗಳ ರಕ್ಷಣೆಗೆ ಸರಕಾರ ಸದಾ ಬದ್ಧ ► ಮಕ್ಕಳ ಹಕ್ಕುಗಳು ಹಾಗೂ ರಕ್ಷಣೆಗೆ ಕಾರ್ಯಾಗಾರ
ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಆಗದಿದ್ದರೆ ಏನು ಮಾಡಬೇಕು ಹಾಗೂ ಸ್ಟೇಟಸ್ ಚೆಕ್ ಮಡುವ ವಿಧಾನಗಳನ್ನು ತಿಳಿಯಿರಿ
Gruhalakshmi Scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಖಾತೆಗೆ 2,000 ರೂಪಾಯಿ ಹಣವನ್ನು ಹಾಕಲಾಗುತ್ತಿದೆ. ಒಂದು ವೇಳೆ ನಿಮ್ಮ ಖಾತೆಗೆ ಹಣ ಬಂದಿಲ್ಲವೆ? ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾ? ಹಾಗಾದ್ರೆ, ಇಲ್ಲಿದೆ ನೋಡಿ ಈ ಬಗ್ಗೆ ಸಂಪೂರ್ಣ ಮಾಹಿತಿ.
ಶಾಮನೂರು ಶಿವಶಂಕರಪ್ಪ ಅವರ ಶಿವಗಣಾರಾಧನೆಗೆ ರಾಹುಲ್, ಸೋನಿಯಾ ಗಾಂಧಿಗೆ ಆಹ್ವಾನ
ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಅವರ ಶಿವಗಣಾರಾಧನೆ ಹಾಗೂ ನುಡಿ ನಮನ ಕಾರ್ಯಕ್ರಮ ಡಿಸೆಂಬರ್ 26ರಂದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ಪ್ರಿಯಾಂಕಾ ಗಾಂಧಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ಥಳಿ ಅನಾವರಣ ಮಾಡಲಿದ್ದಾರೆ.
ಉಡುಪಿ | ಡಿ.24ರಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆ
ಉಡುಪಿ, ಡಿ.22: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಬಳಕೆದಾರರ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಡಿ.24ರಂದು ಬೆಳಗ್ಗೆ 10 ಗಂಟೆಗೆ ನಗರದ ವಾದಿರಾಜ ರಸ್ತೆಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಸಂದೀಪ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂಬಲಪಾಡಿ ಶ್ರೀಜನಾರ್ಧನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ., ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸುಮೀಲ ತಿ. ಮಾಸರೆಡ್ಡಿ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮೂರನೇ ಪಂದ್ಯ| ವೆಸ್ಟ್ಇಂಡೀಸ್ ವಿರುದ್ಧ ಭರ್ಜರಿ ಜಯ: ನ್ಯೂಝಿಲ್ಯಾಂಡ್ ಮಡಿಲಿಗೆ ಟೆಸ್ಟ್ ಸರಣಿ
ಮೌಂಟ್ಮೌಂಗ್ನುಯಿ, ಡಿ.22: ಅತ್ಯುತ್ತಮ ಪ್ರದರ್ಶನ ನೀಡಿದ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡ ಸೋಮವಾರ ಕೊನೆಗೊಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ಇಂಡೀಸ್ ತಂಡವನ್ನು 323 ರನ್ಗಳ ಅಂತರದಿಂದ ಮಣಿಸಿತು. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ವೇಗದ ಬೌಲರ್ ಜೇಕಬ್ ಡಫಿ ಐದು ವಿಕೆಟ್ ಗೊಂಚಲು ಕಬಳಿಸುವ ಮೂಲಕ ವಿಂಡೀಸ್ನ ದಿಢೀರ್ ಕುಸಿತಕ್ಕೆ ಕಾರಣರಾದರು. ಗೆಲ್ಲಲು 432 ರನ್ ಗುರಿ ಪಡೆದಿದ್ದ ವೆಸ್ಟ್ಇಂಡೀಸ್ ತಂಡ ನಾಲ್ಕನೇ ದಿನದಾಟವಾದ ಸೋಮವಾರ 80.3 ಓವರ್ಗಳಲ್ಲಿ ಕೇವಲ 138 ರನ್ ಗಳಿಸಿ ಆಲೌಟಾಯಿತು. ಡಫಿ 42 ರನ್ಗೆ ಐದು ವಿಕೆಟ್ ಗೊಂಚಲು ಪಡೆದರು. ಸ್ಪಿನ್ನರ್ ಅಜಾಝ್ ಪಟೇಲ್ 23 ರನ್ ವೆಚ್ಚಕ್ಕೆ ಮೂರು ವಿಕೆಟ್ಗಳನ್ನು ಕಬಳಿಸಿ ಬೌನ್ಸ್ ಆಗುತ್ತಿದ್ದ ಪಿಚ್ನಲ್ಲಿ ಮೇಲುಗೈ ಸಾಧಿಸಿದರು. ಈ ಸೋಲಿನ ಮೂಲಕ ವಿಂಡೀಸ್ ತಂಡವು ನ್ಯೂಝಿಲ್ಯಾಂಡ್ ಕ್ರಿಕೆಟ್ ಪ್ರವಾಸವನ್ನು ನಿರಾಶಾದಾಯಕವಾಗಿ ಅಂತ್ಯಗೊಳಿಸಿತು. ಕ್ರೈಸ್ಟ್ ಚರ್ಚ್ನಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯವನ್ನು ರೋಚಕವಾಗಿ ಡ್ರಾಗೊಳಿಸಿದ್ದ ವೆಸ್ಟ್ಇಂಡೀಸ್ ತಂಡವು ವೆಲ್ಲಿಂಗ್ಟನ್ನಲ್ಲಿ ನಡೆದಿದ್ದ ಎರಡನೇ ಟೆಸ್ಟ್ವನ್ನು ಸುಲಭವಾಗಿ ಗೆದ್ದುಕೊಂಡು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಐದನೇ ಹಾಗೂ ಕೊನೆಯ ದಿನವಾದ ಸೋಮವಾರ ವೆಸ್ಟ್ಇಂಡೀಸ್ ತಂಡವು ವಿಕೆಟ್ ನಷ್ಟವಿಲ್ಲದೆ 43 ರನ್ನಿಂದ ತನ್ನ ಎರಡನೇ ಇನಿಂಗ್ಸ್ ಆರಂಭಿಸಿತು. ಆರಂಭಿಕ ಆಟಗಾರ ಬ್ರೆಂಡನ್ ಕಿಂಗ್ 96 ಎಸೆತಗಳಲ್ಲಿ 13 ಬೌಂಡರಿಗಳ ಸಹಿತ 67 ರನ್ ಗಳಿಸಿ ಸರ್ವಾಧಿಕ ಸ್ಕೋರ್ ಗಳಿಸಿದರು. ಆದರೆ ಪಾನೀಯ ವಿರಾಮದ ನಂತರ ಪಂದ್ಯವು ತಿರುವು ಪಡೆಯಿತು. ವಿಕೆಟ್ ನಷ್ಟವಿಲ್ಲದೆ 87 ರನ್ ಗಳಿಸಿದ್ದ ವಿಂಡೀಸ್ 112 ರನ್ ತಲುಪಿದಾಗ 8 ವಿಕೆಟ್ಗಳನ್ನು ಕಳೆದುಕೊಂಡು ದಿಢೀರ್ ಕುಸಿತ ಕಂಡಿತು. ನಂತರ ಅದು ಚೇತರಿಸಿಕೊಳ್ಳಲಿಲ್ಲ. ಡಫಿ ಅವರು ಆರಂಭಿಕ ಆಟಗಾರರಾದ ಕಿಂಗ್ ಹಾಗೂ ಕ್ಯಾಂಪ್ಬೆಲ್ ನಡುವಿನ 87 ರನ್ ಜೊತೆಯಾಟವನ್ನು ಮುರಿದರು. ಕಿಂಗ್ ಅವರು ಡಫಿ ಅವರ ಎಸೆತವನ್ನು ಕೆಣಕಲು ಹೋಗಿ ಗ್ಲೆನ್ ಫಿಲಿಪ್ಗೆ ಕ್ಯಾಚ್ ನೀಡಿದರು. ಜಾನ್ ಕ್ಯಾಂಪ್ಬೆಲ್(16 ರನ್)ವಿಕೆಟನ್ನು ಉರುಳಿಸಿದ ಅಜಾಝ್ಪಟೇಲ್ ಕಿವೀಸ್ಗೆ ಮೇಲುಗೈ ಒದಗಿಸಿದರು. ಎಡಗೈ ಸ್ಪಿನ್ನರ್ ಪಟೇಲ್ ಮೊದಲ ಇನಿಂಗ್ಸ್ನಲ್ಲಿ ಶತಕ ಗಳಿಸಿರುವ ಕಾವೆಮ್ ಹಾಜ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಅಲಿಕ್ ಅಥನಾಝ್(2 ರನ್) ಹಾಗೂ ಜಸ್ಟಿನ್ ಗ್ರೀವ್ಸ್ (0)ವಿಕೆಟ್ಗಳನ್ನು ಸತತ ಎಸೆತಗಳಲ್ಲಿ ಉರುಳಿಸಿದ ಡಫಿ ಅವರು ವಿಂಡೀಸ್ನ ಮಧ್ಯಮ ಸರದಿಯನ್ನು ಭೇದಿಸಿದರು. ವೆಸ್ಟ್ಇಂಡೀಸ್ ತಂಡದ ನಾಯಕ ರೋಸ್ಟನ್ ಚೇಸ್ ಐದು ರನ್ಗೆ ವಿಕೆಟ್ ಒಪ್ಪಿಸುವ ಮೂಲಕ ಸರಣಿಯಲ್ಲಿ ತನ್ನ ಕಳಪೆ ಪ್ರದರ್ಶನ ಮುಂದುವರಿಸಿದರು. ಚೇಸ್ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 7ರ ಸರಾಸರಿಯಲ್ಲಿ ಕೇವಲ 42 ರನ್ ಗಳಿಸಿದರು. ಪಟೇಲ್ ಅವರು ಶಾಯ್ ಹೋಪ್(3 ರನ್)ಅವರನ್ನು ಎಲ್ಬಿಡಬ್ಲ್ಯು ಬಲೆಗೆ ಬೀಳಿಸಿದರು. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೇಮರ್ ರೋಚ್(4 ರನ್)ಅವರಿಗೆ ಗ್ಲೆನ್ ಫಿಲಿಪ್ಸ್ ಪೆವಿಲಿಯನ್ ಹಾದಿ ತೋರಿಸಿದರು. ಡಫಿ ಹಾಗೂ ರವೀಂದ್ರ ಜಡೇಜ ಕೊನೆಯ ಎರಡು ವಿಕೆಟ್ಗಳನ್ನು ಉರುಳಿಸಿ ವಿಂಡೀಸ್ ಇನಿಂಗ್ಸ್ಗೆ ತೆರೆ ಎಳೆದರು. ಸರಣಿಯಲ್ಲಿ ಒಟ್ಟು 23 ವಿಕೆಟ್ಗಳು ಹಾಗೂ 42 ರನ್ ಗಳಿಸಿರುವ ಜೇಕಬ್ ಡಫಿ ‘ಸರಣಿಶ್ರೇಷ್ಠ’ ಪ್ರಶಸ್ತಿ ಪಡೆದರು. ಪಂದ್ಯದಲ್ಲಿ ಒಟ್ಟು 327 ರನ್ ಗಳಿಸಿರುವ ಡೆವೊನ್ ಕಾನ್ವೆ ‘ಪಂದ್ಯಶ್ರೇಷ್ಠ’ ಪ್ರಶಸ್ತಿಗೆ ಭಾಜನರಾದರು. ಕಿವೀಸ್ ಪರ ಕ್ಯಾಲೆಂಡರ್ ವರ್ಷದಲ್ಲಿ ಗರಿಷ್ಠ ವಿಕೆಟ್ಗಳನ್ನು ಕಬಳಿಸಿದ ಜೇಕಬ್ ಡಫಿ ಅವರು ಸರ್ ರಿಚರ್ಡ್ ಹ್ಯಾಡ್ಲೀ ದಾಖಲೆಯನ್ನು ಮುರಿದರು. ಮೂರನೇ ಟೆಸ್ಟ್ನಲ್ಲಿ ನ್ಯೂಝಿಲ್ಯಾಂಡ್ನ ಆರಂಭಿಕ ಆಟಗಾರರು ಸಂಪೂರ್ಣ ಪ್ರಾಬಲ್ಯ ಸಾಧಿಸಿದರು. ಡೆವೊನ್ ಕಾನ್ವೆ 227 ಹಾಗೂ 100 ರನ್ ಗಳಿಸಿದರು. ನಾಯಕ ಟಾಮ್ ಲ್ಯಾಥಮ್ 137 ಹಾಗೂ 101 ರನ್ ಕಲೆ ಹಾಕಿದರು. ಒಂದೇ ಟೆಸ್ಟ್ ಪಂದ್ಯದಲ್ಲಿ ಅವಳಿ ಶತಕಗಳನ್ನು ಗಳಿಸಿದ ಮೊದಲ ಆರಂಭಿಕ ಜೋಡಿ ಎಂಬ ಕೀರ್ತಿಗೆ ಭಾಜನರಾದರು. ಸಂಕ್ಷಿಪ್ತ ಸ್ಕೋರ್ ನ್ಯೂಝಿಲ್ಯಾಂಡ್ ಮೊದಲ ಇನಿಂಗ್ಸ್: 575/8 ಡಿಕ್ಲೇರ್ ವೆಸ್ಟ್ಇಂಡೀಸ್ ಮೊದಲ ಇನಿಂಗ್ಸ್: 420 ರನ್ಗೆ ಆಲೌಟ್ ನ್ಯೂಝಿಲ್ಯಾಂಡ್ ಎರಡನೇ ಇನಿಂಗ್ಸ್: 306/2 ಡಿಕ್ಲೇರ್ ವೆಸ್ಟ್ಇಂಡೀಸ್ ಎರಡನೇ ಇನಿಂಗ್ಸ್: 138 ರನ್ಗೆ ಆಲೌಟ್ (ಬ್ರೆಂಡನ್ ಕಿಂಗ್ 67, ಜೇಕಬ್ ಡಫಿ 5-42, ಅಜಾಝ್ ಪಟೇಲ್ 3-23) ಪಂದ್ಯಶ್ರೇಷ್ಠ: ಡೆವೊನ್ ಕಾನ್ವೆ ಸರಣಿಶ್ರೇಷ್ಠ: ಜೇಕಬ್ ಡಫಿ ........... ನ್ಯೂಝಿಲ್ಯಾಂಡ್ನಲ್ಲಿ ಟೆಸ್ಟ್ ಸರಣಿಯಲ್ಲಿ ಗರಿಷ್ಠ ವಿಕೆಟ್ ಪಡೆದವರು 25 ವಿಕೆಟ್-ವಸೀಂ ಅಕ್ರಂ, ನ್ಯೂಝಿಲ್ಯಾಂಡ್ ವಿರುದ್ಧ 1994ರಲ್ಲಿ 24 ವಿಕೆಟ್-ಎರ್ರಪಲ್ಲಿ ಪ್ರಸನ್ನ, ನ್ಯೂಝಿಲ್ಯಾಂಡ್ ವಿರುದ್ಧ 1968ರಲ್ಲಿ 24 ವಿಕೆಟ್-ರಿಯಾನ್ ಸೀಡ್ಬಾಟಮ್, ನ್ಯೂಝಿಲ್ಯಾಂಡ್ ವಿರುದ್ಧ, 2008ರಲ್ಲಿ 23-ಜೇಕಬ್ ಡಫಿ, ವೆಸ್ಟ್ಇಂಡೀಸ್ ವಿರುದ್ಧ, 2025ರಲ್ಲಿ 21-ವೆರ್ನಾನ್ ಫಿಲ್ಯಾಂಡರ್, ನ್ಯೂಝಿಲ್ಯಾಂಡ್ ವಿರುದ್ಧ 2012ರಲ್ಲಿ
ಮಂಗಳೂರು | ʼಸಾಹೇಬರು ಬರುತ್ತಾರೆʼ ನಾಟಕ ಪ್ರದರ್ಶನ
ಮಂಗಳೂರು, ಡಿ.22: ನಗರದ ಜರ್ನಿ ಥೇಟರ್ ಗ್ರೂಪ್ ನ ಸದಸ್ಯರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಸಿ.ಆರ್.ಐ ಸಭಾಂಗಣದಲ್ಲಿ ಸಾಹೇಬರು ಬರುತ್ತಾರೆ ನಾಟಕವನ್ನು ಇತ್ತೀಚೆಗೆ ಪ್ರದರ್ಶಿಸಿದರು. ಡಾ.ಆರ್.ನರಸಿಂಹ ಮೂರ್ತಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ರೆ.ಫಾ.ಡಾ.ಪ್ರವೀಣ್ ಮಾರ್ಟಿನ್ ಎಸ್. ಜೆ. ಶುಭ ಹಾರೈಸಿದರು. ತ್ರಿಪುರಾದ ಇಂಟರ್ ಕಲ್ಚರಲ್ ಥಿಯೇಟರ್ ಇನ್ಸ್ ಟ್ಯೂಟ್ (ಐಸಿಟಿಐ) ನ ಪ್ರೊಫೆಷನಲ್ ಡಿಪ್ಲೊಮಾ ತರಬೇತಿಗೆ ಆಯ್ಕೆಯಾಗಿರುವ ಅವಿನಾಶ್ ರೈ ಕುಂಬ್ಳೆ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ತ್ರಿಪುರಾದ ಐಸಿಟಿಐ ದ್ವಿತೀಯ ವರ್ಷದ ವಿದ್ಯಾರ್ಥಿ, ಜರ್ನಿಯ ಸದಸ್ಯ ಮನೀಷ್ ಜೆ. ಪಿಂಟೋ, ನಾಟಕ ನಿರ್ದೇಶಕ ಚೇತನ್ ಗಣೇಶ್ಪುರ, ಜರ್ನಿಯ ಶಶಾಂಕ್ ಐತಾಳ್ ಮತ್ತು ಮೇಘನಾ ಕುಂದಾಪುರ ಉಪಸ್ಥಿತರಿದ್ದರು. ನಿಕೋಲಾಯ್ ಗೊಗೋಲ್ ಬರೆದ ದಿ ಗವರ್ನಮೆಂಟ್ ಇನ್ಸ್ಪೆಕ್ಟರ್ ಕೆ.ವಿ. ಅಕ್ಷರ ಮತ್ತು ಕೆ.ವಿ. ಸುಬ್ಬಣ್ಣ ಕನ್ನಡಕ್ಕೆ ಅನುವಾದಿಸಿದ ಸಾಹೇಬರು ಬರುತ್ತಾರೆ ನಾಟಕವನ್ನು ಯುವ ನಿರ್ದೇಶಕ ಚೇತನ್ ಗಣೇಶ್ ಅವರು ನಿರ್ದೇಶಿಸಿದ್ದರು. ನಾಟಕದಲ್ಲಿ ಮಂಗಳೂರಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮೊದಲ ಬಾರಿಗೆ ರಂಗದಲ್ಲಿ ಅಭಿನಯಿಸಿದರು. ರಾಜೇಶ್ ಉಳ್ಳಾಲ್ ಧ್ವನಿ, ಶ್ರಾವಿಕ್ ಅಡ್ಕ ಬೆಳಕು, ವರುಣ್ ವಿ. ಆಚಾರ್ಯ ಸಂಗೀತ ನಿರ್ವಹಣೆ ಮತ್ತು ಚಿನ್ಮಯಿ ವಿ. ಭಟ್ ಹಾಗೂ ಮೇಘನಾ ಕುಂದಾಪುರ ಹಾಡಿನಲ್ಲಿ ಸಹಕರಿಸಿದ್ದರು. ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಂಗ ಅಧ್ಯಯನ ಕೇಂದ್ರ ಸಹಯೋಗವನ್ನು ನೀಡಿತ್ತು.
ದ.ಕ.ಜಿಲ್ಲೆಯಲ್ಲಿ ಸೌಹಾರ್ದ ಕಾರ್ಯಕ್ರಮಗಳು ಹೆಚ್ಚಾಗಲಿ : ಜಿಲ್ಲಾಧಿಕಾರಿ ದರ್ಶನ್
ಸರ್ವಧರ್ಮ ಕ್ರಿಸ್ಮಸ್ ಆಚರಣೆ
ಕ್ರಿಪ್ಟೋ ಕರೆನ್ಸಿ ಹೂಡಿಕೆ ಹೆಸರಲ್ಲಿ ವಂಚನೆ ಪ್ರಕರಣ: ಕರ್ನಾಟಕ, ಹೊಸದಿಲ್ಲಿ, ಮಹಾರಾಷ್ಟ್ರದ ವಿವಿಧೆಡೆ ಈಡಿ ಶೋಧ
ಬೆಂಗಳೂರು: ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಹೆಸರಿನಲ್ಲಿ ಸಂಘಟಿತವಾಗಿ ವಂಚನೆ ನಡೆಸುತ್ತಿದ್ದ ಆರೋಪ ಪ್ರಕರಣದಲ್ಲಿ 4ನೇ ಬ್ಲಾಕ್ ಕನ್ಸಲ್ಟೆಂಟ್ಸ್ ಕಂಪೆನಿ ಮತ್ತು ಇದಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಈ.ಡಿ.)ವು ಡಿಸೆಂಬರ್ 18ರಂದು ಶೋಧ ನಡೆಸಿದೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಹೊಸದಿಲ್ಲಿಯಲ್ಲಿರುವ ಆರೋಪಿಗಳು ಮತ್ತು ಅವರ ಸಹಚರರ ನಿವಾಸ ಹಾಗೂ ಕಚೇರಿ ಸಹಿತ ಸುಮಾರು 22 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಈಡಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. ವಿದೇಶಿ ಪ್ರಜೆಗಳು, ಭಾರತೀಯ ನಾಗರಿಕರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು ತಾವೇ ವಿನ್ಯಾಸಗೊಳಿಸಿದ ವೆಬ್ಸೈಟ್ಗಳ ಮೂಲಕ ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭಾಂಶ ನೀಡುವುದಾಗಿ ನಂಬಿಸುತ್ತಿದ್ದರು. ಇದಕ್ಕಾಗಿ ಅನುಮತಿ ಪಡೆಯದಿದ್ದರೂ ಹೆಸರಾಂತ ಕ್ರಿಪ್ಟೋ ತಜ್ಞರು, ಪ್ರಸಿದ್ಧ ವ್ಯಕ್ತಿಗಳ ಫೋಟೋಗಳನ್ನು ಬಳಸಿಕೊಂಡು ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಪ್, ಟೆಲಿಗ್ರಾಮ್ ಮುಂತಾದ ಸಾಮಾಜಿಕ ಜಾಲತಾಣಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಮಾಡಿ ಜನರನ್ನು ನಂಬಿಸುತ್ತಿದ್ದರು. ನಂಬಿ ಹಣ ಹೂಡಿಕೆ ಮಾಡುವವರಿಗೆ ತ್ವರಿತ ಆದಾಯದ ಭರವಸೆ ನೀಡುತ್ತಿದ್ದ ಆರೋಪಿಗಳು, ಆರಂಭಿಕ ಹಂತದಲ್ಲಿ ಅವರ ನಂಬಿಕೆ ಹೆಚ್ಚಿಸಲು ಕೆಲವು ಲಾಭಾಂಶಗಳನ್ನು ನೀಡುತ್ತಿದ್ದರು ಎಂದು ಈ.ಡಿ. ತಿಳಿಸಿದೆ. ಹಣವನ್ನು ಸಂಗ್ರಹಿಸಲು ಬಹು ಸಂಖ್ಯೆಯಲ್ಲಿ ಕ್ರಿಪ್ಟೋ ವ್ಯಾಲೆಟ್ಗಳು, ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ಕಂಪೆನಿಗಳನ್ನು ಸೃಷ್ಟಿಸಿಕೊಂಡಿದ್ದರು. 2015ರಿಂದ ಇದೇ ತಂತ್ರ ಬಳಸುತ್ತಿದ್ದ ಆರೋಪಿಗಳು, ಕ್ರಿಪ್ಟೋ ಕರೆನ್ಸಿ ರೂಪದಲ್ಲಿ ಸಂಗ್ರಹಿಸುವ ಹಣವನ್ನು ನೇರವಾಗಿ ಕ್ರಿಪ್ಟೋ ವಹಿವಾಟುಗಳಲ್ಲಿಯೇ ಬಳಸಿಕೊಂಡು ನಂತರ ನಗದು/ಬ್ಯಾಂಕ್ ಬ್ಯಾಲೆನ್ಸ್ ರೂಪದಲ್ಲಿ ಪರಿವರ್ತಿಸುತ್ತಿದ್ದರು. ಮತ್ತು ಆ ಹಣದಲ್ಲಿ ಭಾರತ ಹಾಗೂ ವಿದೇಶಗಳಲ್ಲಿ ಚರ ಮತ್ತು ಸ್ಥಿರಾಸ್ತಿಗಳನ್ನು ಖರೀದಿಸಿದ್ದರು. ಸದ್ಯ ನಡೆಸಲಾದ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ಆರೋಪಿಗಳ ಕೆಲವು ಕ್ರಿಪ್ಟೋ ವ್ಯಾಲೆಟ್ಗಳು, ಆಸ್ತಿಗಳನ್ನು ಗುರುತಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಈಡಿ ಪ್ರಕಟನೆಯಲ್ಲಿ ವಿವರಿಸಿದೆ.
ಪಿಲಿಕುಳ | ರಾಷ್ಟ್ರೀಯ ಗಣಿತ ದಿನಾಚರಣೆ
ಮಂಗಳೂರು,ಡಿ.22: ಗಣಿತದ ಮೇರು ಸಾಧಕ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನಾಚರಣೆಯ ಅಂಗವಾಗಿ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಬಿ.ಎಸ್ಸಿ ಮತ್ತು ಬಿ.ಎಡ್. ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಬಗ್ಗೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥ ಡಾ.ರಮಾನಂದ ಎಚ್.ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಡುಬಡತನದಲ್ಲಿ ಬೆಳೆದ ರಾಮಾನುಜನ್ ಗಣಿತವನ್ನು ಉಸಿರಾಡಿ, ಸೃಷ್ಟಿಸಿದ ಕೃತಿಗಳು ಇಂದಿಗೂ ಅಧ್ಯಯನ ಮಾಡುವಂತಿದೆ. ವಿದ್ಯಾರ್ಥಿಗಳಿಗೆ ಅವರ ಬದುಕು, ಸಾಧನೆ ಮಾದರಿ. ಅವರ ನೆನಪು ಸ್ಫೂರ್ತಿಯಾಗಬೇಕೆಂದರು. ಅಧ್ಯಕ್ಷತೆ ವಹಿಸಿದ್ದ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಮಾತನಾಡಿ, ವಿಶ್ವದಾದ್ಯಂತ ಗಣಿತ ವಿಷಯವನ್ನು ಸುಲಭವಾಗಿ ಅರ್ಥೈಸುವಂತೆ ಮಾಡಲು ಎಲ್ಲಾ ಹಂತಗಳಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಭಾರತ ಪ್ರಾಚೀನ ಕಾಲದಿಂದಲೂ ಈ ಕ್ಷೇತ್ರದಲ್ಲಿ ತನ್ನ ಪ್ರತಿಭೆಯನ್ನು ಮೆರೆದಿದೆ. ಈ ಪರಂಪರೆ ಮುಂದುವರಿಯುವಂತೆ ಆಧುನಿಕ ತಂತ್ರಜ್ಞಾನದ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಅಧ್ಯಾಪಕರು ಪ್ರಯತ್ನಪಟ್ಟಲ್ಲಿ ನಿರೀಕ್ಷಿತ ಫಲ ದೊರೆಯುವುದರಲ್ಲಿ ಸಂಶಯವಿಲ್ಲ .ಪ್ರಾದೇಶಿಕ ವಿಜ್ಞಾನ ಕೇಂದ್ರ ಆಸಕ್ತ ಸಂಪನ್ಮೂಲ ವ್ಯಕ್ತಿಗಳ ಹಾಗೂ ಸಂಸ್ಥೆಗಳ ಸಹಕಾರದೊಂದಿಗೆ ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದೆ ಎಂದರು. ನಂತರ ನಡೆದ ಕೃತಕ ಬುದ್ದಿಮತ್ತೆ ಕಾರ್ಯಾಗಾರದಲ್ಲಿ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಎಮ್.ಸಿ.ಎ ವಿಭಾಗದ ಮುಖ್ಯಸ್ಥ ಡಾ.ಹರೀಶ ಬಿ ಮತ್ತು ಸಹಾಯಕ ಪ್ರಾಧ್ಯಾಪಕ ಸುನೀತ್ ಕುಮಾರ್ ಟಿ. ಸಂಪನ್ಮೂಲ ವ್ಯಕ್ತಿಗಳಾಗಿ ಕೃತಕ ಬುದ್ದಿಮತ್ತೆ ಕ್ಷೇತ್ರದ ವಿವಿಧ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಗಳನ್ನು ನೀಡಿದರು. ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಕಾರ್ಯಕ್ರಮದ ಅಂಶಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕೇಂದ್ರದ ವೈಜ್ಞಾನಿಕಾಧಿಕಾರಿ ವಿಘ್ನೇಶ್ ಭಟ್ ಸ್ವಾಗತಿಸಿ, ರಶ್ಮಿ ನಿರೂಪಿಸಿದರು.
ಕಡಬ | ಪಿಡಿಒ, ವಿಎಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆ ತರಬೇತಿ
ಮಂಗಳೂರು,ಡಿ.22: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮವನ್ನು ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಡಬ ತಾಲೂಕು ತಹಶೀಲ್ದಾರ್ ಪ್ರಭಾಕರ್ ಖಜೂರೆ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅವರು, ಮಕ್ಕಳ ಹಕ್ಕುಗಳ ಅರಿವು ಗ್ರಾಮಗಳ ಕೊನೆಯ ನಾಗರಿಕರಿಗೂ ತಲುಪಬೇಕು ಎಂದು ಹೇಳಿದರು. ಪ್ರತಿಯೊಬ್ಬ ಅಧಿಕಾರಿಯೂ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪ್ರತಿ ಗ್ರಾಮವೂ ಮಕ್ಕಳ ಹಕ್ಕು ಉಲ್ಲಂಘನೆರಹಿತ ಗ್ರಾಮ ಆಗುವಂತೆ ಅಧಿಕಾರಿಗಳು ಮುಂದಾಗಬೇಕು ಎಂದು ಅವರು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ರೆನ್ನಿ ಡಿಸೋಜ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ನ್ಯಾಯ ಕಾಯ್ದೆ -2015 ಮತ್ತು ಅದರ ತಿದ್ದುಪಡಿ, ಹಾಗೂ ಪೋಕ್ಸೊ ಕಾಯ್ದೆ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣೆ ಘಟಕದ ಅಧಿಕಾರಿಗಳಾದ ಕುಮಾರ ಹಾಗೂ ವಜೀರ್ ಅಹ್ಮದ್ ಭಾಗವಹಿಸಿ ದತ್ತು ತೆಗೆದುಕೊಳ್ಳುವ ಬಗ್ಗೆ ಹಾಗೂ ಮಗಳನ್ನು ಉಳಿಸಿ ಮಗಳನ್ನು ಓದಿಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಮಕ್ಕಳ ವಿವಾಹ, ಬಾಲ ಕಾರ್ಮಿಕತೆ, ಲೈಂಗಿಕ ದೌರ್ಜನ್ಯ ಮತ್ತು ನಿರ್ಲಕ್ಷ್ಯ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್ ಕೆ ಸ್ವಾಗತಿಸಿ, ಮೇಲ್ವಿಚಾರಕಿ ಭವಾನಿ ವಂದಿಸಿದರು. ಮೇಲ್ವಿಚಾರಕಿ ವನಿತ ನಿರೂಪಿಸಿದರು.
ತಾಂತ್ರಿಕ ದೋಷ: ಏರ್ ಇಂಡಿಯ ವಿಮಾನ ದಿಲ್ಲಿಯಲ್ಲಿ ತುರ್ತು ಭೂಸ್ಪರ್ಶ
ಹೊಸದಿಲ್ಲಿ, ಡಿ. 22: ಸೋಮವಾರ ಬೆಳಗ್ಗೆ ದಿಲ್ಲಿಯಿಂದ ಮುಂಬೈಗೆ ಹಾರಾಟ ಆರಂಭಿಸಿದ ಏರ್ ಇಂಡಿಯಾ ವಿಮಾನವೊಂದರ ಒಂದು ಇಂಜಿನ್ನ ಕೀಲೆಣ್ಣೆ ಒತ್ತಡ (ಆಯಿಲ್ ಪ್ರೆಶರ್) ಶೂನ್ಯಕ್ಕೆ ಕುಸಿದ ಹಿನ್ನೆಲೆಯಲ್ಲಿ, ವಿಮಾನವು ಹಿಂದಿರುಗಿ ದಿಲ್ಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ನಡೆಸಿದೆ. 335 ಪ್ರಯಾಣಿಕರನ್ನು ಹೊತ್ತ ವಿಮಾನದ ಸಿಬ್ಬಂದಿ ಒಂದು ಇಂಜಿನ್ನ ಸಹಾಯದಿಂದ ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾದರು. ಈ ಸಂದರ್ಭದಲ್ಲಿ, ದಿಲ್ಲಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಎಐಸಿ 887 ವಿಮಾನವು ಮುಂಜಾನೆ 3:20ರ ಬದಲಿಗೆ ಬೆಳಗ್ಗೆ 6:30ಕ್ಕೆ ಹಾರಾಟ ಆರಂಭಿಸಿತು. ಸುಮಾರು ಒಂದು ಗಂಟೆ ಪ್ರಯಾಣದ ಬಳಿಕ ವಿಮಾನವು ಮರಳಿ ದಿಲ್ಲಿಯ ಇಂದಿರಾ ಗಾಂಧಿ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದತ್ತ ತಿರುಗಿತು. ವಿಮಾನವು ಬಳಿಕ ಸುರಕ್ಷಿತವಾಗಿ ಇಳಿಯಿತು ಹಾಗೂ ಪ್ರಯಾಣಿಕರು ಮತ್ತು ಸಿಬ್ಬಂದಿ ವಿಮಾನದಿಂದ ಹೊರಬಂದರು. ಹಾರಾಟದ ಬಳಿಕ, ವಿಮಾನದ ಎರಡನೇ ಇಂಜಿನ್ನಲ್ಲಿ ಕೀಲೆಣ್ಣೆ ಒತ್ತಡ ಕಡಿಮೆ ಇರುವುದನ್ನು ಸಿಬ್ಬಂದಿ ಗಮನಿಸಿದರು. ಸ್ವಲ್ಪ ಸಮಯದ ಬಳಿಕ ಒತ್ತಡವು ಶೂನ್ಯಕ್ಕೆ ಕುಸಿಯಿತು. ಪೈಲಟ್ಗಳು ಆ ಇಂಜಿನನ್ನು ಬಂದ್ ಮಾಡಿದರು ಹಾಗೂ ವಿಮಾನವನ್ನು ತಿರುಗಿಸಿದರು. ಬಳಿಕ ವಿಮಾನ ಸುರಕ್ಷಿತವಾಗಿ ಇಳಿಯಿತು ಎಂದು ನಾಗರಿಕ ವಾಯುಯಾನ ಸಚಿವಾಲಯದ ಹೇಳಿಕೆಯೊಂದು ತಿಳಿಸಿದೆ.
ಮಂಗಳೂರು | ಕರಾವಳಿ ಉತ್ಸವದಲ್ಲಿ ಆಕರ್ಷಿಸಿದ ಗ್ರಾಮೀಣ ಉತ್ಪನ್ನಗಳ ಮಳಿಗೆಗಳು
ಮಂಗಳೂರು,ಡಿ.22: ಕರಾವಳಿ ಉತ್ಸವಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉತ್ಸವದ ಎರಡನೇ ರವಿವಾರ (ಡಿ.21) ನಾಲ್ಕು ಸಾವಿರಕ್ಕೂ ಅಧಿಕ ಜನ ಭೇಟಿ ನೀಡಿದ್ದಾರೆ. ಮುಖ್ಯ ಕಾರ್ಯಕ್ರಮ ನಡೆಯುತ್ತಿರುವ ಲಾಲ್ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ 4,104 ಟಿಕೆಟ್ ಗಳು ಮಾರಾಟವಾಗಿದೆ. ಈ ಪೈಕಿ 1,222 ಟಿಕೆಟ್ ಗಳು ಆನ್ಲೈನ್ ಮೂಲಕ ಹಾಗೂ 2,882 ಟಿಕೆಟ್ ಗಳು ಟಿಕೆಟ್ ಕೌಂಟರ್ ನಲ್ಲಿ ಖರೀದಿಯಾಗಿದೆ. ಕರಾವಳಿ ಉತ್ಸವದಲ್ಲಿ ವಿವಿಧ ಮಳಿಗೆಗಳು, ಕರಕುಶಲ ವಸ್ತುಗಳು, ಆಯುರ್ವೇದ ತಿಂಡಿಗಳು ಸಾರ್ವಜನಿಕರನ್ನು ಆಕರ್ಷಿಸುತ್ತಿದೆ. ವಿವಿಧ ಮಾರಾಟ ಕೇಂದ್ರಗಳು, ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ನಯಾಗರ ಜಲಪಾತದ ಮಾದರಿಯ ಕೃತಕ ಜಲಪಾತವು ಸಾರ್ವಜನಿಕರ ಕಣ್ಮನ ಸೆಳೆಯುತ್ತಿದೆ. ವಿವಿಧ ಸ್ವಸಹಾಯ ಸಂಘಗಳು, ಸ್ವ ಉದ್ಯೋಗ ಸಂಘ ಸಂಸ್ಥೆಗಳ ತಿಂಡಿ-ತಿನಿಸುಗಳ ಮಾರಾಟ ಮಳಿಗೆಗಳು ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದ ಹಿರಿಯ- ಕಿರಿಯ ವಯಸ್ಕರ ಮನಸ್ಸಿನ ಆನಂದವನ್ನು ಹೆಚ್ಚಿಸುತ್ತಿದೆ. ಔಷಧೀಯ ಅಂಶಗಳನ್ನೊಳಗೊಂಡ ಗಿಡಮೂಲಿಕೆಗಳು, ಆಹಾರ ಪದಾರ್ಥಗಳಿಗೆ ರುಚಿ ಕೊಡುವ ಸಾಂಬಾರ ಪದಾರ್ಥಗಳು, ವಿವಿಧ ರೀತಿಯ ಎಣ್ಣೆ ಮಳಿಗೆ, ಗ್ರಾಮೀಣ ಕುಶಲಕರ್ಮಿಗಳು ತಯಾರಿಸಿದ ಕರಕುಶಲ ವಸ್ತುಗಳು, ಮಣ್ಣಿನಿಂದ ತಯಾರಿಸಲ್ಪಟ್ಟ ವಸ್ತುಗಳು, ಬುಟ್ಟಿ, ಜೇನು ಉತ್ಪನ್ನ, ವಿವಿಧ ಮಸಾಲ ಉತ್ಪನ್ನ, ಶುಚಿ ರುಚಿಯಾದ ಮೀನು ಮತ್ತು ಸ್ಥಳೀಯ ಖಾದ್ಯಗಳ ಮಳಿಗೆ ಹಾಗೂ ಮಕ್ಕಳನ್ನೂ ಆಕರ್ಷಿಸಿಸುವ ಮಕ್ಕಳ ಆಟಿಕೆಗಳ ಮಾರಾಟ ಮಳಿಗೆಗಳು ಇದರಲ್ಲಿ ಪಾಲ್ಗೊಂಡಿರುತ್ತದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಈ ಎಲ್ಲಾ ಮಳಿಗೆಗಳಿಗೆ ಪೂರಕ ವ್ಯವಸ್ಥೆ ಕಲ್ಪಿಸಿದೆ ಎಂದು ಪ್ರಕಟನೆ ತಿಳಿಸಿದೆ. ಮಳಿಗೆಗಳ ವಿವರ : ► ಯಶಸ್ವಿ ನವೋದಯ ಸ್ವ ಸಹಾಯ ಗುಂಪು ಪೆರ್ಮುದೆ- ಉಪ್ಪಿನಕಾಯಿ, ಸಾಂಬಾರ ಪುಡಿ, ಜೇನು ತುಪ್ಪ ► ಯಶಸ್ವಿ ಸಂಜೀವಿನಿ ಅರಳ- ನೆಲ್ಲಿಕಾಯಿ ರಸ, ಬ್ರಾಹ್ಮೀ ರಸ, ಬಾಳೆದಿಂಡು ರಸ, ಗಿಡಮೂಲಿಕೆ ಔಷದಿ ► ಮಾನಸ ಸಂಜೀವಿನಿ ಕರಿಯಂಗಳ - ವಿವಿಧ ರೀತಿಯ ಎಣ್ಣೆಗಳು ( ಕೊಬ್ಬರಿ ಎಣ್ಣೆ, ಕಡಲೆ ಎಣ್ಣೆ, ಇತ್ಯಾದಿ) ► ಸ್ನೇಹ ಸಂಜೀವಿನಿ ವೀರಕಂಭ - ಮಣ್ಣಿನ ವಸ್ತು ಹಾಗೂ ಬುಟ್ಟಿ ಇತ್ಯಾದಿ ಉತ್ಪನ್ನಗಳು ► ಶ್ರೀದೇವಿ ಸ್ವಸಹಾಯ ಗುಂಪು ಅಂಡಿಂಜೆ - ಬ್ಯಾಗ್, ಜೂಟ್ ಬ್ಯಾಗ್ಗಳು ► ವನ್ಯಶ್ರೀ ಸ್ವಸಹಾಯ ಗುಂಪು - ಕಡಬ - ಜೇನು, ಪೊರಕೆ ► ಪ್ರಕೃತಿ ವನ ಧನ ವಿಕಾಸ ಕೇಂದ್ರ ಆರಂತೋಡು - ಬುಟ್ಟಿ, ಬೆಟ್ಟದ ನೆಲ್ಲಿಕಾಯಿ, ಕಾಡು ಜೇನು, ಕಾಚಿಪುಳಿ, ಇತ್ಯಾದಿ 40 ಉತ್ಪನ್ನಗಳು ► ನಿತ್ಯಶ್ರೀ ಸ್ತ್ರೀ ಶಕ್ತಿ ಇಲಂತಿಲ - ಮಣ್ಣಿನ ಮಡಕೆಗಳು, ಮತ್ತು ಮಣ್ಣಿನ ಆಟಿಕೆಗಳು ► ಆಸರೆ ಸಂಜೀವಿನಿ - ಹೊಸಂಗಡಿ - ನುಟ್ರಿಮಿಕ್ಸ್ ► ಬಂಟ್ವಾಳ ಮಹಿಳಾ ಕಿಸಾನ್ ಉತ್ಪಾದಕರ ಸಂಸ್ಥೆ - ಪುನರ್ಪುಳಿ, ಈಂದು ಪುಡಿ, ಮಸಾಲಾ ಉತ್ಪನ್ನಗಳು ಇತ್ಯಾದಿ ► ಧರ್ಮಕ್ಷೇತ್ರ ಸಂಜೀವಿನಿ ಬೆಲ್ಮ - ಕ್ಯಾಂಟೀನ್ ಮೀನು ಮತ್ತು ಕೋಳಿ ಸ್ಥಳೀಯ ಶೈಲಿ ಖಾದ್ಯಗಳು
ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ ಸ್ಪೀಕರ್ ಗೆ ಮಹಾರಾಷ್ಟ್ರ ಸಂಸದ ದೂರು; ಕನ್ನಡ ಸಂಘಟನೆಗಳ ತೀವ್ರ ಆಕ್ರೋಶ
ಬೆಳಗಾವಿ: ನವೆಂಬರ್ 1ರಂದು ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದನ್ನು ಖಂಡಿಸಿ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಅವರು ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಲೋಕಸಭೆ ಸ್ಪೀಕರ್ ಗೆ ದೂರು ನೀಡಿರುವುದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಕನ್ನಡ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು. ಮಹಾರಾಷ್ಟ್ರ ಏಕೀಕರಣ ಸಮಿತಿಯು ನವೆಂಬರ್ 1ರಂದು ಆಚರಿಸಿದ “ಕಪ್ಪುದಿನ” ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಲಿದ್ದ ಸಂಸದ ಧೈರ್ಯಶೀಲ್ ಮಾನೆಗೆ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್ ಅವರು ರಾಜ್ಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದರು. ಇದನ್ನು ತಮ್ಮ ಹಕ್ಕುಗಳ ಉಲ್ಲಂಘನೆ ಎಂದು ಆರೋಪಿಸಿರುವ ಧೈರ್ಯಶೀಲ್ ಮಾನೆ, ಡಿ.20ರಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ. ಡಿಸಿ ವಿರುದ್ಧ ದೂರು ನೀಡಿರುವುದನ್ನು ಖಂಡಿಸಿ ಕನ್ನಡ ಸಂಘಟನೆಗಳು ರಾಣಿ ಚನ್ನಮ್ಮ ವೃತ್ತದಲ್ಲಿ ಧರಣಿ ನಡೆಸಿ, ಮಾನೆಯವರ ಅಣಕು ಶವಯಾತ್ರೆ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ಈ ವೇಳೆ ಅಣಕು ಶವಯಾತ್ರೆ ತಡೆಯಲು ಮುಂದಾದ ಪೊಲೀಸರ ವಿರುದ್ಧವೂ ಕರವೇ ಮುಖಂಡರು ಆಕ್ರೋಶ ಹೊರಹಾಕಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, “ಧೈರ್ಯಶೀಲ್ ಮಾನೆ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಡೆ ಗಮನಹರಿಸಬೇಕು. ಅದನ್ನು ಬಿಟ್ಟು ಕರ್ನಾಟಕಕ್ಕೆ ಬಂದು ಭಾಷಾ ಸಾಮರಸ್ಯಕ್ಕೆ ಧಕ್ಕೆ ತಂದು ಕಾನೂನು-ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ವಿರುದ್ಧ ಹಕ್ಕುಚ್ಯುತಿ ಪ್ರಕರಣ ದಾಖಲಿಸಬೇಕು” ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಕನ್ನಡ ಕಳಕಳಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ಕಾರ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದರು. ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಮಾತನಾಡಿ, “ಜಿಲ್ಲಾಧಿಕಾರಿಗಳ ವಿರುದ್ಧ ದೂರು ಸಲ್ಲಿಸಿರುವುದು ಅಸಮಂಜಸ ಹಾಗೂ ತರ್ಕಹೀನ. ವಾಸ್ತವಾಂಶ ಮರೆಮಾಚಿ ಸಭಾಧ್ಯಕ್ಷ ಪೀಠವನ್ನು ದುರುಪಯೋಗಪಡಿಸಿಕೊಂಡಿದ್ದಾರೆ” ಎಂದು ಆರೋಪಿಸಿದರು. ದೇಶದ ಯಾವುದೇ ಭಾಗದ ಸಂಸದರು ಎಲ್ಲೆಡೆ ಸಂಚರಿಸಬಹುದಾದರೂ, ನವೆಂಬರ್ 1ರಂದು ಗಡಿ ಭಾಗದಲ್ಲಿ ‘ಕಪ್ಪುದಿನ’ ಆಚರಣೆ ಮೂಲಕ ಪ್ರಚೋದನಾತ್ಮಕ ಭಾಷಣಗಳು ನಡೆಯುವ ಹಿನ್ನೆಲೆ ಇರುವುದರಿಂದ ನಿರ್ಬಂಧ ವಿಧಿಸಲಾಗಿತ್ತು. ಈ ಸತ್ಯವನ್ನು ಮಾನೆಯವರು ಮುಚ್ಚಿಟ್ಟಿದ್ದಾರೆ ಎಂದು ಅವರು ಕಿಡಿಕಾರಿದರು. ಒಟ್ಟಾರೆ, ಗಡಿ ಹಾಗೂ ಭಾಷಾ ವಿಚಾರದಲ್ಲಿ ಪ್ರಚೋದನೆಗೆ ಅವಕಾಶ ನೀಡಬಾರದೆಂಬ ಬೇಡಿಕೆಯೊಂದಿಗೆ ಕನ್ನಡ ಸಂಘಟನೆಗಳು ಜಿಲ್ಲಾಡಳಿತದ ಕ್ರಮಕ್ಕೆ ಬೆಂಬಲ ಸೂಚಿಸಿ, ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.
ಮಂಗಳೂರು | ಡಿ.23ರಂದು ಕರಾವಳಿ ಉತ್ಸವದಲ್ಲಿ ಸಂಗೀತ ಗಾನ ಸಂಭ್ರಮ
ಮಂಗಳೂರು,ಡಿ.22: ಕರಾವಳಿ ಉತ್ಸವ ವಸ್ತು ಪ್ರದರ್ಶನ ವೇದಿಕೆಯಲ್ಲಿ ಡಿ.23 ರಂದು ಸಂಜೆ 6 ಗಂಟೆಯಿಂದ 9 ಗಂಟೆಯವರೆಗೆ ಸಂಗೀತ ಗಾನ ಸಂಭ್ರಮ ಭಾವಗೀತೆ, ಜನಪದ ಗೀತೆ ಕಾರ್ಯಕ್ರಮ ನಡೆಯಲಿದೆ.
ಉಡುಪಿ ಜಿಲ್ಲೆಯ ನಕ್ಸಲ್ ಪ್ರಕರಣಗಳು | 39 ಪ್ರಕರಣಗಳ ನ್ಯಾಯಾಂಗ ವಿಚಾರಣೆ, 28 ಕೇಸು ವಿಲೇವಾರಿ : ಎಸ್ಪಿ
ಉಡುಪಿ : ಜಿಲ್ಲೆಯಲ್ಲಿ 2003ರಲ್ಲಿ ಕಾಣಿಸಿಕೊಂಡ ನಕ್ಸಲ್ ಚಟುವಟಿಕೆ ಸಂಬಂಧ ಈವರೆಗೆ ದಾಖಲಾದ ಒಟ್ಟು 68 ಪ್ರಕರಣಗಳಲ್ಲಿ 39 ಪ್ರಕರಣಗಳು ನ್ಯಾಯಾಂಗ ವಿಚಾರಣೆಯಲ್ಲಿದ್ದು, 28 ಪ್ರಕರಣಗಳು ವಿಲೇವಾರಿಯಾಗಿದೆ. ಇದರಲ್ಲಿ ಒಂದು ಪ್ರಕರಣ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲು ಬಾಕಿ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಹೆಚ್ಚುವರಿ ದಾಖಲಾತಿ ಸಲ್ಲಿಸಲು ಬಾಕಿ ಇದೆ. ಒಂದು ಪ್ರಕರಣ ಸಿಐಡಿ ತನಿಖೆಯಲ್ಲಿದೆ. ಕಳೆದ 6 ತಿಂಗಳಲ್ಲಿ 39 ಪ್ರಕರಣಗಳಲ್ಲಿ 11 ಜನ ನಕ್ಸಲ್ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಈ 39 ಪ್ರಕರಣಗಳಲ್ಲಿ ಹಾಜರುಪಡಿಸಿದ ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ಚಾರ್ಜ್ ಪ್ರೇಮ್ ಆಗಿದ್ದು, ನ್ಯಾಯಾಲಯದ ವಿಚಾರಣೆಯಲ್ಲಿದೆ ಎಂದು ಅವರು ತಿಳಿಸಿದರು. ಕಳಸದ ಎಂ.ವನಜಾಕ್ಷಿ ಯಾನೆ ಜ್ಯೋತಿ ಯಾನೆ ಕಲ್ಪನ(58) ಸದ್ಯ ಬೆಂಗಳೂರು ಸೆಂಟ್ರಲ್ ಜೈಲ್ ನಲ್ಲಿದ್ದು, ಇವರ ವಿರುದ್ಧ ಆರು ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ. ಶೃಂಗೇರಿಯ ಬಿ.ಜಿ.ಕೃಷ್ಣಮೂರ್ತಿ ಯಾನೆ ವಿಜಯ್(46) ಸದ್ಯ ಕೇರಳ ರಾಜ್ಯದ ವಿಯೂರ್ ತ್ರಿಶೂರ್ ಹೈ ಸೆಕ್ಯೂರಿಟಿ ಪ್ರಿಸನ್ ನಲ್ಲಿದ್ದಾರೆ. ಇವರ ವಿರುದ್ಧ 7 ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ. ಕಳಸದ ಸಾವಿತ್ರಿ ಜೆ.ಎಲ್. ಯಾನೆ ಉಷಾ(33) ಸದ್ಯ ಕೇರಳ ರಾಜ್ಯದ ತ್ರಿಶೂರ್ನಲ್ಲಿರುವ ಮಹಿಳಾ ಕಾರಾಗೃಹದಲ್ಲಿದ್ದಾರೆ. ಇವರ ವಿರುದ್ಧ ಎರಡು ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ. ಕೊಪ್ಪದ ನೀಲಗುಳಿ ಪದ್ಮನಾಭ ಜಾಮೀನು ಪಡೆದು ಬಿಡುಗಡೆಗೊಂಡಿದ್ದು, ಇವರ ವಿರುದ್ಧ 2 ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ. ಕುಂದಾಪುರ ಮಚ್ಚಟ್ಟು ಗ್ರಾಮದ ತೊಂಬಟ್ಟು ಲಕ್ಷ್ಮಿ(39) ಜಾಮೀನು ಪಡೆದುಕೊಂಡಿದ್ದು, ಇವರ ವಿರುದ್ಧ ಮೂರು ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ. ಶೃಂಗೇರಿಯ ಲತಾ ಯಾನೆ ಮುಂಡಗಾರು ಲತಾ(45) ಬೆಂಗಳೂರು ಸೆಂಟ್ರಲ್ ಜೈಲ್ ನಲ್ಲಿದ್ದು, ಇವರ ವಿರುದ್ಧ 12 ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ. ರಾಯಚೂರು ಜಿಲ್ಲೆಯ ಮಾನ್ವಿಯ ಮಹೇಶ ಯಾನೆ ಮಾದವ(49) ಸದ್ಯ ಕೇರಳ ರಾಜ್ಯದ ತ್ರಿಶೂರ್ ಹೈ ಸೆಕ್ಯೂರಿಟಿ ಪ್ರಿಸನ್ನಲ್ಲಿದ್ದು, 8 ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ. ಕಳಸದ ಕನ್ಯಾಕುಮಾರಿ ಬೆಂಗಳೂರು ಸೆಂಟ್ರಲ್ ಜೈಲ್ ನಲ್ಲಿದ್ದು, ಇವರ ವಿರುದ್ಧದ 10 ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ. ಎ.ಎಸ್.ಸುರೇಶ್ ಯಾನೆ ಮಹೇಶ್(50) ಕೇರಳ ರಾಜ್ಯದ ಕಣ್ಣೂರು ಸೆಂಟ್ರಲ್ ಪ್ರಿಸನ್ ನಲ್ಲಿದ್ದು, ಇವರ ವಿರುದ್ಧದ 23 ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ. ಬೆಳ್ತಂಗಡಿ ಕುತ್ಲೂರಿನ ಸುಂದರಿ ಯಾನೆ ಗೀತಾ, ಸದ್ಯ ಪರಪ್ಪನ ಅಗ್ರಹಾರ ಬೆಂಗಳೂರು ಸೆಂಟ್ರಲ್ ಜೈಲ್ ನಲ್ಲಿದ್ದು, ಇವರ ವಿರುದ್ಧ 9 ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ. ಆಗುಂಬೆಯ ಪ್ರಭಾ ಯಾನೆ ಹೊಸಗದ್ದೆ ಪ್ರಭಾ ತಮಿಳುನಾಡು ವೆಲ್ಲೂರಿನ ಸಾಯಿ ಓಲ್ಡ್ ಏಜ್ ಹೋಮ್ ನಲ್ಲಿದ್ದು, ಇವರ ವಿರುದ್ಧ 6 ಪ್ರಕರಣಗಳಲ್ಲಿ ಜಾರ್ಜ್ ಪ್ರೇಮ್ ಆಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ʻಸ್ವಾರಿ ಮಮ್ಮಾ, ಪಪ್ಪಾ ನಿಮ್ಮ ಹಣ ವ್ಯರ್ಥ ಮಾಡಿದೆʼ; ಎಂಜಿನಿಯರ್ ಓದಲಾಗದೆ ಯುವತಿ ಆತ್ಮಹತ್ಯೆ
ಛತ್ತೀಸ್ಗಢದ ರಾಯಗಢ ಜಿಲ್ಲೆಯ ವಿಶ್ವವಿದ್ಯಾಲಯವೊಂದರಲ್ಲಿ ಎಂಜಿನಿಯರ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶೈಕ್ಷಣಿಕ ಒತ್ತಡ ಮತ್ತು ಪೋಷಕರ ನಿರೀಕ್ಷೆಗಳನ್ನು ತಲುಪಲಾಗದ ಆತಂಕದಿಂದಾಗಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿದ್ಯಾರ್ಥಿನಿ ಜಮ್ಶೆಡ್ಪುರ ಮೂಲದವರಾಗಿದ್ದು, ಅವರ ಕೊಠಡಿಯಲ್ಲಿ ಮನಕಲಕುವ ಡೆತ್ ನೋಟ್ ಪತ್ತೆಯಾಗಿದೆ.
ಉಡುಪಿ | ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ
ಉಡುಪಿ, ಡಿ.22: ತೋನ್ಸೆ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಇತ್ತೀಚೆಗೆ ಜರಗಿತು. ಮುಖ್ಯ ಅತಿಥಿಯಾಗಿ ಜಮಾಆತೇ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಹಾಸನದ ಮನಸೂರ್ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಪದವಿಗಳನ್ನು ನೀಡುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬೇಕು, ವಿದ್ಯಾರ್ಥಿಗಳು ವಿದ್ಯಾವಂತರಾಗಿ ಸಮಾಜಕ್ಕೆ ಪೂರಕವಾಗಿರಬೇಕೇ ವಿನಃ ಮಾರಕರಾಗಿ ರೂಪುಗೊಳ್ಳಬಾರದು ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಾಲಿಹಾತ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಜನಾಬ್ ಇದ್ರಿಸ್ ಹೂಡೆ ವಹಿಸಿದರು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಡಾ.ತಾಹಾ ಮತೀನ್ ಮಾತನಾಡಿದರು. ವೇದಿಕೆಯಲ್ಲಿ ಶಿಕ್ಷಣ ತಜ್ಞೆ ಫಕೀರಾ ಆತೀಕ್ ತಮಿಳುನಾಡು, ಜನಸೇವಾ ಕೋಪರೇಟೀವ್ ಸೊಸೈಟಿಯ ಪ್ರವರ್ತಕ ಅತೀಕ್ ಉರ್ ರೆಹಮಾನ್ ವಾನಂಬಡಿ, ಮಣಿಪಾಲ ಎಂ.ಐ.ಟಿ. ಕಾಲೇಜಿನ ಪ್ರೊಫೆಸರ್ ಡಾ.ಅಬ್ದುಲ್ ಅಜೀಜ್, ಸಾಲಿಹಾತ್ ಶಿಕ್ಷಣ ಸಂಸ್ಥೆಯ ಸಲಹಾ ಮಂಡಳಿ ಅಧ್ಯಕ್ಷ ಡಾ.ಶಹನವಾಜ್, ಟ್ರಸ್ಟ್ ನ ಖಜಾಂಚಿ ಅಬ್ದುಲ್ ಖಾದರ್, ಹಿರಿಯ ಟ್ರಸ್ಟಿಗಳಾದ ಮೌಲಾನ ಆದಂ ಸಾಹೇಬ್, ಹುಸೇನ್ ಮಾಸ್ಟರ್, ಶಾಲಾ ಅಕಾಡಮಿ ಮುಖ್ಯಸ್ಥ ಹಾಸೀಬ್ ತರಫ್ದಾರ್, ಪದವಿ ಕಾಲೇಜು ಪ್ರಾಂಶುಪಾಲೆ ಡಾ.ಸಬೀನಾ, ಪಿ.ಯು. ಕಾಲೇಜು ಪ್ರಾಂಶುಪಾಲೆ ದಿವ್ಯಾ ಪೈ, ಅರೇಬಿಕ್ ವಿಭಾಗದ ಮುಖ್ಯಸ್ಥೆ ಕುಲ್ಸುಮ್ ಅಬೂಬಕರ್, ಶಾಹಿದ್ ನದ್ವಿ, ಉಪ ಮುಖ್ಯ ಶಿಕ್ಷಕಿಯರಾದ ಶಾಹದತ್ ಬಾನು, ಯಾಸ್ಮೀನ್ ಬಾನು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ, ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿ ಅಕ್ಮಲ್ ಉಸ್ತಾದ್ ಪ್ರಾರ್ಥನೆಗೈದರು. ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುನಂದ ವಂದಿಸಿದರು. ಶಿಕ್ಷಕಿ ಫಹೀನಾ ಹುಸೇನ್ ಕಾರ್ಯಕ್ರಮ ನಿರ್ವಹಿಸಿದರು.
2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ನಗರದಲ್ಲಿರುವ ಬಿಎಂಆರ್ಸಿಎಲ್ ಕಚೇರಿಯಲ್ಲಿ ಮೆಟ್ರೋ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ 96 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಹಳದಿ ಮಾರ್ಗಕ್ಕೆ ಚಾಲನೆ ಮಾಡಲಾಗಿದ್ದು, 24 ಕಿ.ಮೀ ಉದ್ದದ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ. ಪ್ರತಿ ನಿತ್ಯ 1 ಲಕ್ಷ ಜನ ಈ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದು, ಈ ಮಾರ್ಗದಲ್ಲಿ ಶೇ.30ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಮುಂದಿನ ವರ್ಷ (2026ರಲ್ಲಿ) 41 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. 2027ರ ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಮಾರ್ಗ ಸೇರಿದಂತೆ 38 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. ಆ ಮೂಲಕ ಬೆಂಗಳೂರಿನಲ್ಲಿ 175 ಕಿ.ಮೀ ಉದ್ದದ ಮಾರ್ಗ ಕಾರ್ಯನಿರ್ವಹಿಸಲಿದೆ. ಇದರ ಹೊರತಾಗಿ ಮಾಗಡಿ ರಸ್ತೆಯಲ್ಲಿ ತಾವರಕೆರೆವರೆಗೆ, ಹೊಸಕೋಟೆ, ಬಿಡದಿ, ನೆಲಮಂಗಲದವರೆಗೆ ವಿಸ್ತರಿಸುವ ಯೋಜನೆ ಹಮ್ಮಿಕೊಂಡಿದ್ದೇವೆ. ಒಂದು ಕಡೆ ಯೋಜನೆ ಕೈಗೆತ್ತಿಕೊಂಡಿದ್ದು, ಉಳಿದ ಕಡೆಗಳಲ್ಲಿ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್: ಮುಂದಿನ ತಿಂಗಳು ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಎಲಿವೇಟೆಡ್ ಕಾರಿಡಾರ್ (ಡಬಲ್ ಡೆಕ್ಕರ್) ಸೇರಿದಂತೆ ಸುಮಾರು 100 ಕಿ.ಮೀ ಉದ್ದದ ಮೆಟ್ರೋ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು ಎಂದು ಅವರು ಹೇಳಿದರು. ಸಂಚಾರ ದಟ್ಟಣೆ ನಿಯಂತ್ರಿಸಿ ಜನರ ಪ್ರಯಾಣಕ್ಕೆ ಅನುಕೂಲವಾಗಲು ಕಾಮಗಾರಿ ವೇಗವಾಗಿ ನಡೆಸುತ್ತಿದೆ. ಮೆಟ್ರೋ ನಿಲ್ದಾಣಗಳ ಬಳಿ ಹೆಚ್ಚಿನ ಜಮೀನು ಸ್ವಾಧೀನಪಡಿಸಿಕೊಂಡು ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ. ವಾಹನ ನಿಲುಗಡೆಗೂ ಅವಕಾಶ ಕಲ್ಪಿಸಬೇಕಿದೆ ಎಂದು ಶಿವಕುಮಾರ್ ತಿಳಿಸಿದರು. ಮೂರನೇ ಹಂತದ ಯೋಜನೆಗೆ ಟೆಂಡರ್ ಕರೆಯಲಾಗುತ್ತಿದೆ. 25,311 ಸಾವಿರ ಕೋಟಿ ರೂ. ವೆಚ್ಚದ ಈ ಕಾಮಗಾರಿಗೆ, ಜೈಕಾದಿಂದ 15,600 ಕೋಟಿ ರೂ. ಸಾಲ ಮಾಡಲಾಗುತ್ತಿದೆ. ಉಳಿದಂತೆ ಎಲಿವೇಟೆಡ್ ಕಾರಿಡಾರ್ ಗೆ 9,700 ಕೋಟಿ ರೂ.ಮೊತ್ತದ ಟೆಂಡರ್ ಅನ್ನು ಜನವರಿಯಲ್ಲಿ ಕರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು. ಮೂರನೇ ಹಂತದಲ್ಲಿ ಸಂಪೂರ್ಣ ಮಾರ್ಗ ಎಲಿವೇಟೆಡ್ ಕಾರಿಡಾರ್ (ಡಬಲ್ ಡೆಕ್ಕರ್) ಮಾಡಲಾಗುವುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೂರನೇ ಹಂತದ ಯೋಜನೆಯಲ್ಲಿ ಸಂಪೂರ್ಣವಾಗಿ ಎಲ್ಲ ಮಾರ್ಗದಲ್ಲೂ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲಾಗುವುದು. ತಾವರೆಕೆರೆ ಬಳಿ ಮೆಟ್ರೋ ನಿಲ್ದಾಣಕ್ಕೆ ಜಾಗ ಅಂತಿಮಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಹಾಸನದಿಂದ ಬರುವ ಜನರು ಈ ಮಾರ್ಗವಾಗಿ ಬರುವುದರಿಂದ ಇಲ್ಲೂ ಡಬಲ್ ಡೆಕ್ಕರ್ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು. ಟನಲ್ ರಸ್ತೆ ಟೆಂಡರ್ ಅಂತಿಮಗೊಂಡಿದ್ದು, ಅದಾನಿ ಕಂಪನಿ ಕಡಿಮೆ ಬಿಡ್ ಮಾಡಿದೆ ಎಂಬ ವರದಿಗಳು ಬಂದಿವೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಇನ್ನು ಸಂಪೂರ್ಣ ಮಾಹಿತಿ ಬಂದಿಲ್ಲ. ನನಗೆ ಅಧಿಕೃತವಾಗಿ ಪತ್ರ ಬರುವವರೆಗೂ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು. ಸರಕಾರ ನಿಗದಿ ಮಾಡಿದ ಮೊತ್ತಕ್ಕಿಂತ ಹೆಚ್ಚಿನ ಹಣ ಬಿಡ್ ಮಾಡಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಯಾರಿಗೂ ಹಣ ನೀಡುವುದಿಲ್ಲ. ಅವರೇ ಹಣ ಬಂಡವಾಳ ಹಾಕಿ ಮಾಡಬೇಕು. ವಿಜೆಎಫ್ ಎಷ್ಟು ಪಸೆರ್ಂಟ್ ನೀಡುತ್ತೇವೆ ಎಂದು ಹೇಳಿದ್ದೇವೋ ಅಷ್ಟನ್ನೇ ನೀಡುತ್ತೇವೆ. ನಾವು ಅಂದಾಜು ಮಾಡಿರುವುದರಲ್ಲಿ ಶೇ.40ರಷ್ಟು ಮಾತ್ರ ನೀಡುತ್ತೇವೆ. ಅದರ ಮೇಲೆ ನಾವು ನೀಡುವುದಿಲ್ಲ. ಮೆಟ್ರೋಗೆ ತಗುಲುವ ವೆಚ್ಚ ಪರಿಶೀಲಿಸಿದ್ದೇನೆ. ಮುಂಬೈಯಲ್ಲಿ ಪ್ರತಿ ಕಿ.ಮೀಗೆ 1,200 ಕೋಟಿ ರೂ.ಆಗುತ್ತಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಡಾ.ಮಹೇಶ್ವರರಾವ್, ಬಿಎಂಆರ್ಸಿಎಲ್ ಆಯುಕ್ತ ಡಾ.ಜೆ. ರವಿಶಂಕರ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
ಕೇರಳ| ಕ್ರಿಸ್ಮಸ್ ಕ್ಯಾರಲ್ ತೆರಳುತ್ತಿದ್ದ ಮಕ್ಕಳ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ: ವರದಿ
ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ನಲ್ಲಿ ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಪುಟ್ಟ ಮಕ್ಕಳ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಪುದುಶೇರಿಯಲ್ಲಿ ರವಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಸುಮಾರು 13 ವರ್ಷ ಪ್ರಾಯದ 25ಕ್ಕೂ ಹೆಚ್ಚು ಪುಟ್ಟ ಮಕ್ಕಳು ಸೇರಿ ಕ್ರಿಸ್ಮಸ್ ಕ್ಯಾರಲ್ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಮನೆ ಮನೆಗೆ ತೆರಳಿ ಹಾಡು ಹಾಡುತ್ತಾ ಸಂಭ್ರಮಿಸುತ್ತಿದ್ದ ಮಕ್ಕಳ ತಂಡದ ಮೇಲೆ ಅಶ್ವಿನ್ ರಾಜ್ ಎಂಬ ಬಿಜೆಪಿ ಕಾರ್ಯಕರ್ತ ಹಾಗೂ ಆತನ ತಂಡ ಏಕಾಏಕಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ಮಕ್ಕಳು ಕ್ಯಾರಲ್ ಹಾಡಲು ಬಳಸುತ್ತಿದ್ದ ಬ್ಯಾಂಡ್ ಸೆಟ್ ಸ್ಥಳೀಯ ಸಿಪಿಐಎಂ ಕಚೇರಿಯದ್ದಾಗಿತ್ತು. ಆ ಬ್ಯಾಂಡ್ ಮೇಲೆ CPIM ಎಂದು ಬರೆಯಲಾಗಿತ್ತು. ಇದನ್ನು ಕಂಡ ಬಿಜೆಪಿ ಕಾರ್ಯಕರ್ತರ ಗುಂಪು, ನಿಮಗೆ ಹಣ ನೀಡುತ್ತೇವೆ ಬನ್ನಿ ಎಂದು ಮಕ್ಕಳನ್ನು ಕರೆದುಕೊಂಡು ಹೋಗಿ, ಅಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಮಕ್ಕಳು ಬಳಸುತ್ತಿದ್ದ ಬ್ಯಾಂಡ್ ಸೆಟ್ ಅನ್ನು ಕೂಡ ಪುಡಿಪುಡಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಸಬಾ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಮುಖ್ಯ ಆರೋಪಿ ಬಿಜೆಪಿ ಕಾರ್ಯಕರ್ತ ಅಶ್ವಿನ್ ರಾಜ್ನನ್ನು ಬಂಧಿಸಿದ್ದಾರೆ. ಅಶ್ವಿನ್ ಮೇಲೆ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ. ಈ ದಾಳಿಯಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹಲ್ಲೆಗೊಳಗಾದ ಬಾಲಕನೋರ್ವ ಮಾಧ್ಯಮದ ಜೊತೆ ಮಾತನಾಡುತ್ತಾ, ನಾವು ಕೇವಲ ಸಂಭ್ರಮಕ್ಕಾಗಿ ಬ್ಯಾಂಡ್ ಬಳಸಿದ್ದೆವು. ಅದರಲ್ಲಿ ಸಿಪಿಎಂ ಎಂದು ಬರೆದಿರುವುದನ್ನು ನೋಡಿ ನಮ್ಮನ್ನು ಕರೆದುಕೊಂಡು ಹೋಗಿ ಹೊಡೆದರು ಎಂದು ನೋವು ತೋಡಿಕೊಂಡಿದ್ದಾನೆ. ನಮ್ಮ ಕಚೇರಿಯಲ್ಲಿದ್ದ ಬ್ಯಾಂಡ್ ಸೆಟ್ ಅನ್ನು ಮಕ್ಕಳು ಕೇಳಿದಾಗ ಪ್ರೀತಿಯಿಂದ ಕೊಟ್ಟಿದ್ದೆವು. ರಾಜಕೀಯದ ಗಂಧಗಾಳಿಯೇ ಗೊತ್ತಿಲ್ಲದ ಈ ಪುಟ್ಟ ಮಕ್ಕಳ ಮೇಲೆ ಹಲ್ಲೆ ನಡೆಸಿರುವುದು ಬಿಜೆಪಿ ಕಾರ್ಯಕರ್ತರ ಕ್ರಿಮಿನಲ್ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಸ್ಥಳೀಯ ಸಿಪಿಐಎಂ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ | ಡಿ.29ರಂದು ನಿಧಿ ಆಪ್ಕೆ ನಿಕಟ್
ಉಡುಪಿ, ಡಿ.22: ನಿಧಿ ಆಪ್ಕೆ ನಿಕಟ್/ ಭವಿಷ್ಯನಿಧಿ ನಿಮ್ಮ ಹತ್ತಿರ ಎಂಬುದು ಭವಿಷ್ಯ ನಿಧಿ ಸದಸ್ಯರ ಹಾಗೂ ಪಿಂಚಣಿದಾರರ ಕುಂದುಕೊರತೆಗಳನ್ನು ಪರಿಹರಿಸಲು ಮತ್ತು ಜಾಗೃತಿ ಮೂಡಿಸಲು ಭವಿಷ್ಯ ನಿಧಿ ಸಂಘಟನೆಯ ಪ್ರಧಾನ ಕಚೇರಿ ಇರುವ ಹೊಸದಿಲ್ಲಿಯಿಂದ ಪ್ರಾರಂಭಿಸಲಾದ ಜಿಲ್ಲಾ ವಾರ್ಷಿಕ ಕಾರ್ಯಕ್ರಮ. ಇದರಂತೆ ಡಿಸೆಂಬರ್ ತಿಂಗಳ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ಇದೇ ಡಿ.29ರಂದು ಬೆಳಗ್ಗೆ 11:30ರಿಂದ ಉಡುಪಿ ಎ.ಜೆ.ಅಲ್ಸೆ ರಸ್ತೆಯ ಅಲಂಕಾರ್ ಥಿಯೇಟರ್ ಹಿಂಭಾಗದಲ್ಲಿರುವ ‘ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆ’ಯಲ್ಲಿ ನಡೆಯಲಿದೆ. ನಿಧಿ ಆಪ್ಕೆ ನಿಕಟ್ ಎಂಬುದು ತನ್ನ ಲಕ್ಷಾಂತರ ಚಂದಾದಾರರಿಗೆ ತನ್ನ ವಿವಿಧ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ಭವಿಷ್ಯ ನಿಧಿ ಸಂಸ್ಥೆ ನಡೆಸುವ ಪ್ರಯತ್ನವಾಗಿದೆ. ಇದರ ಪ್ರಾಥಮಿಕ ಗಮನ ಜಿಲ್ಲೆಯನ್ನು ಕೇಂದ್ರೀಕರಿಸುವ, ಒಗ್ಗೂಡಿಸುವ ಮತ್ತು ಸುಸಂಬದ್ಧವಾದ ಕಾರ್ಯಕ್ರಮದ ಗುರಿಯನ್ನು ಹೊಂದಿದೆ. ಇದು ಉದ್ಯೋಗದಾತರು ಹಾಗೂ ಉದ್ಯೋಗಿಗಳಿಗೆ ಸಹಭಾಗಿತ್ವದ ಅರಿವು ಮೂಡಿಸುವ ಕಾರ್ಯಕ್ರಮವಾಗಿದ್ದು, ಸದಸ್ಯರ ಕುಂದುಕೊರತೆ ಪರಿಹಾರ ಮತ್ತು ಮಾಹಿತಿ ವಿನಿಮಯ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ. ಡಿ.29ರ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮದಲ್ಲಿ ಎಲ್ಲಾ ಪಿಎಫ್ ಚಂದಾದಾರರು, ಇಪಿಎಸ್ ಪಿಂಚಣಿದಾರರು, ಪಿಎಫ್ ವ್ಯಾಪ್ತಿಗೆ ಒಳಪಡುವ ಸಂಸ್ಥೆಗಳ ಉದ್ಯೋಗದಾತರು, ಟ್ರೇಡ್ ಯೂನಿಯನ್ ಮುಖಂಡರು ಮತ್ತು ಸದಸ್ಯರು ಹಾಜರಿದ್ದು, ಪ್ರಯೋಜನ ಪಡೆದುಕೊಳ್ಳುವಂತೆ ಉಡುಪಿ ಪ್ರಾದೇಶಿಕ ಕಾರ್ಯಾಲಯದ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ | ಉದ್ಯಾವರ ಗ್ರಾಪಂನ ಕೆಂಪುಪಟ್ಟಿಯ ವಿರುದ್ಧ ಲೋಕಾಯುಕ್ತದಲ್ಲಿ ದಾವೆ
ಉಡುಪಿ, ಡಿ.22: ಉದ್ಯಾವರ ಗ್ರಾಮ ಪಂಚಾಯತ್ ಕಳೆದ ನಾಲ್ಕು ವರ್ಷಗಳಿಂದ ಗ್ರಾಮದ ನಾಗರಿಕರೊಬ್ಬರಿಗೆ ಮನೆ ನಿರ್ಮಾಣಕ್ಕೆ ನೀಡುವ 9/11ಎ ದಾಖಲೆ ಹಾಗೂ ಮನೆಯ ಡೋರ್ ನಂ ಅನ್ನು ನೀಡದೇ ಸತಾಯಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಲೋಕಾಯುಕ್ತ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿದೆ. ಉದ್ಯಾವರ ಗ್ರಾಪಂನ ನಾಗರಿಕರಾದ ವಸಂತ ಶೇರಿಗಾರ್ ಅವರಿಗೆ ಮನೆ ನಿರ್ಮಾಣಕ್ಕೆ ಗ್ರಾಪಂನಿಂದ ನೀಡಬೇಕಾದ ಪರವಾನಿಗೆ ದಾಖಲೆಗಳನ್ನು ನೀಡದೇ ಸತಾಯಿಸುತ್ತಿರುವ ಬಗ್ಗೆ ಪ್ರತಿಷ್ಠಾನ ಕಳೆದ ವಾರ ಪತ್ರಿಕಾಗೋಷ್ಠಿ ಕರೆದು ಸಮಗ್ರ ಮಾಹಿತಿಯನ್ನು ಬಹಿರಂಗ ಪಡಿಸಿತ್ತು. ಈ ವಿಷಯದಲ್ಲಿ ಗ್ರಾಪಂನ ಪಿಡಿಓ ಆದ ಎಚ್.ಆರ್.ರಮೇಶ್ ಅವರು ಮೇಲಾಧಿಕಾರಿ ಉಡುಪಿ ಜಿಪಂನ ಸಿಇಓ ಪ್ರತೀಕ್ ಬಾಯಲ್ ಹಾಗೂ ಮೇಲ್ಮನವಿ ಪ್ರಾಧಿಕಾರ ನೀಡಿದ ಸ್ಪಷ್ಟ ಆದೇಶಗಳನ್ನೂ ಧಿಕ್ಕರಿಸುತ್ತಿರುವ ಬಗ್ಗೆ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ ಶ್ಯಾನುಭಾಗ್ ಹಾಗೂ ವಸಂತ ಶೇರಿಗಾರ್ ಅವರು ಕಳವಳ, ಆತಂಕ ವ್ಯಕ್ತಪಡಿಸಿದ್ದರು. ಆದರೆ ಈಗಲೂ ಜಿಲ್ಲಾ ಪಂಚಾಯತ್ ಹಾಗೂ ಗ್ರಾಪಂನಿಂದ ಯಾವುದೇ ಸ್ಪಂದನೆ ಬಾರದಿರುವ ಹಿನ್ನೆಲೆಯಲ್ಲಿ ಸಂತ್ರಸ್ಥ ವಸಂತ ಶೇರಿಗಾರ್ ಅವರಿಗೆ ನ್ಯಾಯ ದೊರಕಿಸಿಕೊಡುವಂತೆ ಲೋಕಾಯುಕ್ತ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಲಾಗಿದೆ ಎಂದು ಡಾ.ಶ್ಯಾನುಭಾಗ್ ತಿಳಿಸಿದ್ದಾರೆ. ದಾಖಲೆ ಪಡೆಯಲು ವಿವಿಧ ಹಂತದ ಅಧಿಕಾರಿಗಳೊಂದಿಗೆ ಮಾಡಿರುವ ಪತ್ರ ವ್ಯವಹಾರಗಳನ್ನು ದೂರು ಅರ್ಜಿಯೊಂದಿಗೆ ಲಗ್ಗತ್ತಿಸಿರುವ ವಸಂತ ಅವರು, ಈ ಪ್ರಕರಣದಲ್ಲಿ ತನಗಾಗಿರುವ ನಷ್ಟವನ್ನು ಈ ಅಧಿಕಾರಿಯಿಂದ ಭರಿಸಿಕೊಡಬೇಕೆಂದು ನ್ಯಾಯಾಧೀಶರನ್ನು ವಿನಂತಿಸಿದ್ದಾರೆ ಎಂದು ಡಾ.ಶ್ಯಾನುಭಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಕ್ಕ ಸಿಕ್ಕ ಲಿಂಕ್ ಕ್ಲಿಕ್ ಮಾಡಬೇಡಿ; Ghost Pairing ಬಲೆಗೆ ಬಿದ್ದಿರಿ ಜೋಕೇ!
ಡಿಸೆಂಬರ್ 19ರಂದು ಭಾರತದ ಸೈಬರ್ಭದ್ರತೆ ಕಾವಲುಪಡೆಯಾಗಿರುವ ಸಿಇಆರ್ಟಿ-ಇನ್ GhostPairing ಬಗ್ಗೆ ಹೈ ಅಲರ್ಟ್ನಲ್ಲಿರುವಂತೆ ಸೂಚಿಸಿದೆ. ಭಾರತೀಯ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್ಟಿ-ಇನ್) ಇತ್ತೀಚೆಗೆ ಒಂದು ಹೊಸ ಎಚ್ಚರಿಕೆಯನ್ನು ಬಿಡುಗಡೆ ಮಾಡಿದೆ. ಘೋಸ್ಟ್ ಪೇರಿಂಗ್ (GhostPairing) ಎನ್ನುವ ತಂತ್ರದ ಮೂಲಕ ವಾಟ್ಸ್ಆ್ಯಪ್ ಖಾತೆಗಳನ್ನು ಹೈಜಾಕ್ ಮಾಡುವ ಕುರಿತಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಡಿಸೆಂಬರ್ 19ರಂದು ಭಾರತದ ಸೈಬರ್ಭದ್ರತೆ ಕಾವಲುಪಡೆಯಾಗಿರುವ ಸಿಇಆರ್ಟಿ-ಇನ್ GhostPairing ಬಗ್ಗೆ ಹೈ ಅಲರ್ಟ್ನಲ್ಲಿರುವಂತೆ ಸೂಚಿಸಿದೆ. ಏನಿದು GhostPairing? ದುರುದ್ದೇಶೀತರ ಪೂರಿತ ಲಿಂಕ್ ಅನ್ನು ವಾಟ್ಸ್ಆ್ಯಪ್ ಖಾತೆ ಮೂಲಕ ಕಳುಹಿಸಿ ಪಾಸ್ವರ್ಡ್ ಅಥವಾ ಸಿಮ್ ಸ್ವ್ಯಾಪ್ ಅಗತ್ಯವಿಲ್ಲದೆಯೇ ನಿಮ್ಮ ವಾಟ್ಸ್ಆ್ಯಪ್ ಖಾತೆಗಳನ್ನು ದುರುಳರು ತಮ್ಮ ವಶಕ್ಕೆ ತೆಗೆದುಕೊಳ್ಳುತ್ತಾರೆ. ಒಟ್ಟಿನಲ್ಲಿ GhostPairing ದಾಳಿ ತಂತ್ರದಲ್ಲಿ ಬಳಕೆದಾರರನ್ನು ಮೋಸಗೊಳಿಸಿ ದಾಳಿಕೋರರು ನಿಮ್ಮ ಬ್ರೌಸರ್ಗೆ ಪ್ರವೇಶ ಪಡೆಯುತ್ತಾರೆ. ಅಧಿಕೃತವಾಗಿ ಕಾಣುವ ಪೇರಿಂಗ್ ಕೋಡ್ ಮೂಲಕ ಹೆಚ್ಚುವರಿ ವಿಶ್ವಾಸಾರ್ಹ ಮತ್ತು ನಿಗೂಢ ಸಾಧನದಂತೆ ಪ್ರವೇಶಕ್ಕೆ ಅವಕಾಶ ಪಡೆಯಲಾಗುತ್ತದೆ. GhostPairing ಹೇಗಾಗುತ್ತದೆ? ವಾಟ್ಸ್ಆ್ಯಪ್ ಬಳಕೆದಾರರಿಗೆ ತಮ್ಮ ಲ್ಯಾಪ್ಟಾಪ್ ಅಥವಾ ಟ್ಯಾಬ್ಲೆಟ್ನಲ್ಲಿ ಫೋನ್ ಮೂಲಕ ಲಿಂಕ್ ಮಾಡುವ ಮೂಲಕ ತೆರೆಯಲು ಅವಕಾಶ ಕೊಡುತ್ತದೆ. ಪ್ರಸ್ತುತ ಎಷ್ಟು ವಾಟ್ಸ್ಆ್ಯಪ್ ಖಾತೆಗಳನ್ನು ಸಾಧನಗಳಿಗೆ ಲಿಂಕ್ ಮಾಡಬಹುದು ಎನ್ನುವುದಕ್ಕೆ ಮಿತಿ ಇರುವುದಿಲ್ಲ. ಬಳಕೆದಾರರು ಕ್ಯುಆರ್ ಕೋಡ್ ಮೂಲಕ ಅಥವಾ ಸಾಧನದಲ್ಲಿ ಕಂಡ ಕೋಡ್ ಸ್ಕ್ಯಾನ್ ಮಾಡಿ ಖಾತೆಗೆ ಪ್ರವೇಶ ಪಡೆಯುತ್ತಾರೆ. ಕೆಲವೊಮ್ಮೆ ಸಂತ್ರಸ್ತರಿಗೆ “ಹಾಯ್ ಈ ಫೋಟೋ ಚೆಕ್ ಮಾಡಿ” ಎನ್ನುವ ವಿಶ್ವಾಸಾರ್ಹ ಮೂಲದಿಂದ ಸಂದೇಶ ಬರುತ್ತದೆ. ಅವರು ಆ ಫೋಟೋ ತೆರೆಯಲು ಹೋಗಿ ದುರುದ್ದೇಶಪೂರಿತ GhostPairingಗೆ ಒಳಗಾಗುತ್ತಾರೆ. - ಸಂದೇಶದಲ್ಲಿ ಫೇಸ್ಬುಕ್ ರೀತಿಯ ಪ್ರಿವ್ಯೂ ಇರುವ ಲಿಂಕ್ ಇರುತ್ತದೆ. - ಲಿಂಕ್ ನಕಲಿ ಫೇಸ್ಬುಕ್ ವೀಕ್ಷಣೆಗೆ ಕೊಂಡೊಯ್ಯುತ್ತದೆ. ಅದನ್ನು ನೋಡಲು ಬಳಕೆದಾರರು “ವೆರಿಫೈ” ಮಾಡುವಂತೆ ಪ್ರಾಂಪ್ಟ್ ಮಾಡುತ್ತದೆ. - ನಂತರ ಸಂತ್ರಸ್ತರಿಗೆ ತಮ್ಮ ಫೋನ್ ಸಂಖ್ಯೆ ಮತ್ತು ಕೋಡ್ ಹಾಕುವಂತೆ ತಂತ್ರ ಹೂಡುತ್ತಾರೆ. ನೋಡಿದರೆ ಹೆಚ್ಚೇನು ತಪ್ಪು ಕಾಣದ ಈ ಹಂತಗಳ ನಂತರ ಸಂತ್ರಸ್ತರು ತಮಗೆ ತಿಳಿಯದಂತೆ ದಾಳಿಕೋರರಿಗೆ ಸಂಪೂರ್ಣ ವಾಟ್ಸ್ಆ್ಯಪ್ ಖಾತೆಗೆ ಪ್ರವೇಶವನ್ನು ಕೊಟ್ಟಿರುತ್ತಾರೆ. ಪಾಸ್ವರ್ಡ್ ಅಗತ್ಯವಿಲ್ಲದೆ ಅಥವಾ ಸಿಮ್ ಸ್ವ್ಯಾಪ್ ಮಾಡದೆಯೇ ನಿಮ್ಮ ವಾಟ್ಸ್ಆ್ಯಪ್ ಖಾತೆಯನ್ನು ದುರುಳರ ಕೈಗಿಟ್ಟುಬಿಡುವಿರಿ. ಒಮ್ಮೆ ವಾಟ್ಸ್ಆ್ಯಪ್ ಖಾತೆಗೆ ಪ್ರವೇಶ ಪಡೆದ ನಂತರ ದಾಳಿಕೋರರು ನಿಮ್ಮೆಲ್ಲಾ ಸಂದೇಶಗಳನ್ನು ನೋಡಬಹುದು ಮತ್ತು ನಿಮ್ಮ ಹೆಸರಿನಲ್ಲಿ ಬೇರೆಯವರಿಗೆ ಸಂದೇಶಗಳನ್ನು ಕಳುಹಿಸಬಹುದು. ನಿಮ್ಮ ಫೋಟೋ, ವೀಡಿಯೋ ಮತ್ತು ಧ್ವನಿ ನೋಟ್ಗಳಿಗೆ ಪ್ರವೇಶ ಪಡೆಯಬಹುದು. ಬಳಕೆದಾರರು ಯಾವ ಹೆಜ್ಜೆಗಳ ಮೂಲಕ ರಕ್ಷಣೆ ಪಡೆಯಬಹುದು? ಖಾತೆ ಬಳಕೆಯಲ್ಲಿರುವ ಅಪಾಯವನ್ನು ತಪ್ಪಿಸಲು ಸಿಇಆರ್ಟಿ-ಇನ್ ಈ ಕೆಳಗಿನ ಶಿಫಾರಸುಗಳನ್ನು ಮಾಡಿದೆ. ಖಾಸಗಿ ಖಾತೆಗಳಿಗೆ: - ತಿಳಿದಿರುವ ಸಂಪರ್ಕಗಳಿಂದ ಬಂದರೂ ಸಹ ಅನುಮಾನಾಸ್ಪದ ಲಿಂಕ್ಗಳಿಗೆ ಕ್ಲಿಕ್ ಮಾಡಬೇಡಿ. - ವಾಟ್ಸ್ಆ್ಯಪ್/ಫೇಸ್ಬುಕ್ ಎಂದು ತೋರಿಸುವ ಬಾಹ್ಯ ವೆಬ್ಸೈಟ್ಗಳಿಗೆ ಎಂದಿಗೂ ನಿಮ್ಮ ಫೋನ್ ಸಂಖ್ಯೆಗಳನ್ನು ಹಾಕಬೇಡಿ. - ವಾಟ್ಸ್ಆ್ಯಪ್ನಲ್ಲಿ ಲಿಂಕ್ ಮಾಡಿದ ಸಾಧನವನ್ನು ಆಗಾಗ್ಗೆ ಪರೀಕ್ಷಿಸುತ್ತಿರಿ. ಸೆಟ್ಟಿಂಗ್-ಲಿಂಕ್ಡ್ ಡಿವೈಸ್ಗಳಲ್ಲಿ ನೀವು ಇದನ್ನು ಮಾಡಬಹುದು. ಗುರುತಿಸದೆ ಇರುವ ಸಾಧನವನ್ನು ಕಂಡಲ್ಲಿ ತಕ್ಷಣವೇ ಲಾಗೌಟ್ ಮಾಡಿ. ಸಂಸ್ಥೆಗಳ ಖಾತೆಗಳಿಗೆ: - ಸಂದೇಶ ಆ್ಯಪ್ ದಾಳಿ ಬಗ್ಗೆ ಭದ್ರತಾ ಜಾಗೃತಿ ತರಬೇತಿ ಕೊಡಿ. - ಅನ್ವಯಿಸಿದಲ್ಲಿ ಮೊಬೈಲ್ ಡಿವೈಸ್ ಮ್ಯಾನೇಜ್ಮೆಂಟ್ ಅನ್ವಯಿಸಿ. - ಫಿಶಿಂಗ್ ಮತ್ತು ಸೋಷಿಯಲ್ ಎಂಜಿನಿಯರಿಂಗ್ ಇಂಡಿಕೇಟರ್ಗಳನ್ನು ಮೇಲ್ವಿಚಾರಣೆ ಮಾಡಿ. - ತ್ವರಿತ ಪತ್ತೆ ಮತ್ತು ಪರಿಹಾರಕ್ಕೆ ಪ್ರೊಟೋಕಾಲ್ಗಳನ್ನು ಅಳವಡಿಸಿ.
ಉಡುಪಿ | ಡಿ.23ರಂದು ರಾಷ್ಟ್ರೀಯ ರೈತ ದಿನಾಚರಣೆ
ಉಡುಪಿ, ಡಿ.22: ಉಡುಪಿ ಜಿಲ್ಲಾ ರೈತ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಮತ್ತು ಸಾಧಕ ರೈತರಿಗೆ ಸನ್ಮಾನ ಕಾರ್ಯಕ್ರಮ ಡಿ.23ರ ಮಂಗಳವಾರ ಬೆಳಗ್ಗೆ 9:30ಕ್ಕೆ ಬ್ರಹ್ಮಗಿರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ. ರೈತ ದಿನಾಚರಣೆಯನ್ನು ಉದ್ಘಾಟಿಸುವ ಕೃಷಿ ನೀತಿ ಚಿಂತಕರಾದ ಮೈಸೂರಿನ ಸುರೇಶ ಕಂಜರ್ಪಣೆ ಅವರು ‘ರೈತರು ಮತ್ತು ಕೃಷಿಯ ಸಂಕಟಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪ್ಚಂದ್ರ ಶೆಟ್ಟಿ ಅದ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಏಳು ತಾಲೂಕುಗಳ ಏಳು ಮಂದಿ ಸಾದಕ ರೈತರಿಗೆ ಸನ್ಮಾನ ಹಾಗೂ ರೈತ ಸಹಕಾರಿಗಳಿಗೆ ಸನ್ಮಾನ ನಡೆಯಲಿದೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ಪ್ರಕಟಣೆ ತಿಳಿಸಿದೆ.
Chamarajanagar | ನಂಜೇದೇವನಪುರ ಬಳಿ ಒಂದೇ ಕಡೆ 5 ಹುಲಿಗಳ ಬಿಡಾರ: ನಾಳೆ (ಡಿ. 23) ಸಂಜೆ ತನಕ ನಿಷೇಧಾಜ್ಞೆ ಜಾರಿ
ಚಾಮರಾಜನಗರ : ತಾಲೂಕಿನ ಹರವೆ ಹೋಬಳಿಯ ನಂಜೆದೇವಪುರ ಗ್ರಾಮದ ಬಳಿ 5 ಹುಲಿಗಳು ಒಂದೇ ಕಡೆ ಇರುವ ಬಗ್ಗೆ ದೃಢಪಟ್ಟಿದ್ದು, ಹುಲಿಗಳ ಸೆರೆಹಿಡಿಯುವ ಕಾರ್ಯಾಚರಣೆ ಹಿನ್ನೆಲೆ ನಂಜೆದೇವಪುರ ಸೇರಿ ಮೂರು ಗ್ರಾಮಗಳಿಗೆ ನಾಳೆ (ಡಿ. 23) ಸಂಜೆ 6 ಗಂಟೆಯ ತನಕ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು ನಾಗರಿಕರು ಮನೆಯಲ್ಲೇ ಇರುವಂತೆ ತಹಶೀಲ್ದಾರ್ ಗಿರಿಜಾ ಆದೇಶಿಸಿದ್ದಾರೆ. ಕಾಡಿನಲ್ಲಿರಬೇಕಿದ್ದ ಹುಲಿಗಳು ನಾಡಿಗೆ ನುಗ್ಗಿವೆ. ಚಾಮರಾಜನಗರ ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್ ಗಿರಿಜಾ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿ: ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಇರುವುದು ಕೇವಲ ಇಬ್ಬರೇ ಪಶು ವೈದ್ಯರು ಮಾತ್ರ. ಹೀಗಾಗಿ ಹುಲಿಗಳನ್ನು ಸೆರೆ ಹಿಡಿಯಲು ಕಷ್ಟಸಾಧ್ಯ ಎನ್ನುತ್ತಿದ್ದಾರೆ ಅರಣ್ಯ ಸಿಬ್ಬಂದಿ. ಸದ್ಯ ಹುಲಿಗಳ ಸೆರೆ ಕಾರ್ಯಾಚರಣೆ ಹಿನ್ನೆಲೆ ನಂಜೆದೇವನಪುರ, ವೀರನಪುರ, ಉಡಿಗಾಲ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆ ಮೂಲಕ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಯಾರೂ ಗುಂಪು ಸೇರಬಾರದು, ಮನೆಯಿಂದ ಹೊರಬರದಂತೆ ತಿಳಿಸಲಾಗಿದ್ದು, ಮೂರು ಗ್ರಾಮಗಳ ಜನರು ಸಹಕರಿಸುವಂತೆ ತಹಶೀಲ್ದಾರ್ ಗಿರಿಜಾ ಮನವಿ ಮಾಡಿದ್ದಾರೆ. ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಹೆಚ್ಚಿನ ಆನೆ ಹಾಗೂ ನುರಿತ ಪಶು ವೈದ್ಯರನ್ನು ಕಳುಹಿಸುವ ಆಶ್ವಾಸನೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಕೂಂಬಿಂಗ್ಗೆ ಚಾಲನೆ : ಇನ್ನು ದುಬಾರೆ ಆನೆ ಶಿಬಿರದಿಂದ ಈಗಾಗಲೇ ಈಶ್ವರ ಹಾಗೂ ಲಕ್ಷ್ಮಣ ಆನೆಗಳು ಸ್ಥಳಕ್ಕೆ ಆಗಮಿಸಿದ್ದು, ಕೂಂಬಿಂಗ್ ಕಾರ್ಯಚರಣೆಗೆ ಚಾಲನೆ ನೀಡಲಾಗಿದೆ.
ಉದ್ಯಾವರ ಎಂಇಟಿ ಶಾಲೆಯ ಕ್ರೀಡೋತ್ಸವ ಸಂಭ್ರಮ
ಉಡುಪಿ, ಡಿ.22: ಉದ್ಯಾವರದ ಎಂಇಟಿ ಇಂಗ್ಲಿಷ್ ಮೀಡಿಯಂ ಶಾಲೆಯ ವತಿಯಿಂದ ಕ್ರೀಡೋತ್ಸವ-2025ನ್ನು ಶನಿವಾರ ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಫಲಿತಾಂಶಕ್ಕಿಂತಲೂ ಶಿಸ್ತು ಹಾಗೂ ನಿರಂತರ ಪ್ರಯತ್ನವೇ ಮಹತ್ವದ್ದು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಮಿಲ್ಲತ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಅಬ್ದುಲ್ ಜಲೀಲ್ ಮಾತನಾಡಿ, ಸಮಗ್ರ ಶಿಕ್ಷಣ, ನೈತಿಕ ಮೌಲ್ಯಗಳು ಹಾಗೂ ದೈಹಿಕ ಆರೋಗ್ಯವು ಪ್ರಜ್ಞಾವಂತ ನಾಗರಿಕತೆಯ ಮೂಲ ಸ್ತಂಭಗಳೆಂದು ತಿಳಿಸಿದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಉಡುಪಿ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ರವೀಂದ್ರ ನಾಯಕ್ ಮಾತನಾಡಿದರು. ಟ್ರಸ್ಟ್ ನ ಸದಸ್ಯರಾದ ಸಬೀಹ್ ಕಾಜಿ, ಮುಹಮ್ಮದ್ ಇಕ್ಬಾಲ್, ಫಯಾಜ್, ಇಕ್ಬಾಲ್ ಶಂಸುದ್ದೀನ್, ಸಮೀರ್ ಪಾರ್ಕಳ, ಶಹನವಾಜ್, ಪಿಟಿಎ ಅಧ್ಯಕ್ಷ ಡಾ.ಫೈಸಲ್ ಹಾಗೂ ಇಕ್ಬಾಲ್ ಮನ್ನಾ ಉಪಸ್ಥಿತರಿದ್ದರು. ಶಾಲೆಯ ಶೈಕ್ಷಣಿಕ ಮುಖ್ಯಸ್ಥೆ ಡಾ.ಜುನೈದಾ ಸುಲ್ತಾನಾ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸುಖಲತಾ ವಂದಿಸಿದರು. ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳು, ಪೋಷಕರು, ಅಜ್ಜ-ಅಜ್ಜಿ ಹಾಗೂ ಹಳೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಹೌಸ್ ಚಾಂಪಿಯನ್ಶಿಪ್ ಟ್ರೋಫಿಯನ್ನು ಮರ್ಕ್ಯುರಿ ಹೌಸ್(ಗ್ರೀನ್ ಹೌಸ್) ತನ್ನದಾಗಿಸಿಕೊಂಡಿತು. ವಿವಿಧ ವಿಭಾಗಗಳಲ್ಲಿ ವೈಯಕ್ತಿಕ ಚಾಂಪಿಯನ್ ಗಳಾಗಿ ಮುಹಮ್ಮದ್ ಯಾಸೀನ್, ಆಥ್ಮಿ, ರಿಹಾನ್ ಅಲಿ, ಇಫ್ರಾ ಆಯೇಷಾ ಮೂಡಿಬಂದರು. ಅಲೂಮ್ನಿ ಬೆಸ್ಟ್ ಅಥ್ಲೀಟ್ ಆಗಿ ಇಲಾನ್ ನವಾಜ್ ಹಾಗೂ ಬೆಸ್ಟ್ ಪೆರಂಟ್ ಅಥ್ಲೀಟ್ ಆಗಿ ಶಬೀನಾ ಪಾಲೌಕರ್ ಪ್ರಶಸ್ತಿ ಪಡೆದುಕೊಂಡರು.
National Herald case: ಗಾಂಧಿ ಕುಟುಂಬದ ಪ್ರತಿಕ್ರಿಯೆ ಕೋರಿದ ದಿಲ್ಲಿ ಹೈಕೋರ್ಟ್
ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಈಡಿ
Bangladesh| ಉಸ್ಮಾನ್ ಹಾದಿ ಹತ್ಯೆ ಬೆನ್ನಲ್ಲೆ ಮತ್ತೊಬ್ಬ ಯುವ ನಾಯಕನ ಮೇಲೆ ಗುಂಡಿನ ದಾಳಿ
ಖುಲ್ನಾ (ಬಾಂಗ್ಲಾದೇಶ): ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ, ಬಾಂಗ್ಲಾದೇಶದ National Citizen Party(NCP)ಯ ಯುವ ನಾಯಕನ ಮೇಲೆ ಖುಲ್ನಾದಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ. NCPಯ ಕಾರ್ಮಿಕ ಘಟಕದ ನಾಯಕರಾಗಿರುವ ಮುಹಮ್ಮದ್ ಮೊತಾಲೆಬ್ ಸಿಕ್ದರ್ ಅವರ ಮೇಲೆ ಮಧ್ಯಾಹ್ನ ಸುಮಾರು 12.15ರ ವೇಳೆಗೆ ಖುಲ್ನಾದ ಸೋನದಂಗಾ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಗುಂಡು ಹಾರಿಸಲಾಗಿದೆ. ಗುಂಡು ತಲೆಬುರುಡೆಗೆ ತಗುಲಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾರಂಭದಲ್ಲಿ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದರೂ, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಿಕ್ದರ್ ಅವರು ಪಕ್ಷದ ಕಾರ್ಮಿಕ ಸಂಘಟನೆಯಾದ ‘ಜಾತಿಯಾ ಶ್ರಮಿಕ್ ಶಕ್ತಿ’ಯ ಕೇಂದ್ರ ಸಂಘಟಕರಾಗಿಯೂ ಖುಲ್ನಾ ವಿಭಾಗೀಯ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಮುಂಬರುವ ದಿನಗಳಲ್ಲಿ ಖುಲ್ನಾದಲ್ಲಿ ನಡೆಯಲಿರುವ ವಿಭಾಗೀಯ ಕಾರ್ಮಿಕ ರ್ಯಾಲಿಯ ಸಿದ್ಧತೆಯಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ಎನ್ಸಿಪಿ ನಾಯಕ ಸೈಫ್ ನೆವಾಝ್ ತಿಳಿಸಿದ್ದಾರೆ. ಈ ದಾಳಿ, ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆಯ ಕೆಲವೇ ದಿನಗಳ ನಂತರ ನಡೆದಿದೆ. ಹಾದಿಯನ್ನು ಡಿಸೆಂಬರ್ 12ರಂದು ಢಾಕಾದ ಬಿಜೋಯ್ನಗರ ಪ್ರದೇಶದಲ್ಲಿ ಬ್ಯಾಟರಿ ಚಾಲಿತ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪರಿಚಿತ ದಾಳಿಕೋರರು ಹತ್ತಿರದಿಂದ ಗುಂಡು ಹಾರಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮೊದಲು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ ಕಳುಹಿಸಲಾಗಿತ್ತು. ಸಿಂಗಾಪುರದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದರೂ, ವೈದ್ಯಕೀಯ ಪ್ರಯತ್ನಗಳು ಫಲಕಾರಿಯಾಗದೆ ಡಿಸೆಂಬರ್ 18ರಂದು ಹಾದಿ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅವರ ಸಾವಿನ ಬಳಿಕ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

16 C