ಭೂಮಾಲೀಕರಿಗೆ ಪಾವತಿಯಾಗದ ಪರಿಹಾರ; 17 ವರ್ಷಗಳ ಹಿಂದಿನ ಭೂಸ್ವಾಧೀನ ಅಧಿಸೂಚನೆ ರದ್ದು
ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಗೆ (ಬಿಎಂಐಸಿಪಿ) 17 ವರ್ಷಗಳ ಹಿಂದೆ ಬೆಂಗಳೂರು ದಕ್ಷಿಣದ ತಲಘಟ್ಟಪುರದಲ್ಲಿ 1 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಬೆಂಗಳೂರಿನ ಯಲಚೇನಹಳ್ಳಿಯ ರತ್ನಾ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗೆ ಪುರಸ್ಕರಿಸಿರುವ ನ್ಯಾಯಮೂರ್ತಿ ಕೆ. ಎಸ್. ಹೇಮಲೇಖಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ಭೂಮಿಯ ಸರ್ವೇ ಸಂಖ್ಯೆಗೆ ಸೀಮಿತವಾಗಿ ಭೂಸ್ವಾಧೀನ ಅಧಿಸೂಚನೆಯನ್ನು ರದ್ದುಪಡಿಸಿದೆ. ಅಂತಿಮ ಅಧಿಸೂಚನೆಯಾಗಿ 17 ವರ್ಷಗಳಾದರೂ ಪರಿಹಾರ ಪಾವತಿಸಿಲ್ಲ. ಪ್ರತಿವಾದಿಗಳು ಇದಕ್ಕೆ ಯಾವುದೇ ವಿವರಣೆ ನೀಡಿಲ್ಲ. ಇಂಥ ಅಸಾಧಾರಣ ನಿಷ್ಕ್ರಿಯತೆಯು ಕಾನೂನನ್ನು ವಿಫಲಗೊಳಿಸುವುದರ ಜತೆಗೆ ಸ್ವಾಧೀನವನ್ನು ದುರ್ಬಲಗೊಳಿಸುತ್ತದೆ. ಆದ್ದರಿಂದ, ಅರ್ಜಿದಾರರ ವಾದದಲ್ಲಿ ಹುರುಳಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ ಅರ್ಜಿದಾರರ ಭೂಮಿ ಸ್ವಾಧೀನಕ್ಕೆ ಹೊರಡಿಸಲಾಗಿದ್ದ ಅಧಿಸೂಚನೆ ರದ್ದುಪಡಿಸಿ ಆದೇಶಿಸಿದೆ. ಅರ್ಜಿದಾರರ ವಾದವೇನು? ವಿಚಾರಣೆ ವೇಳೆ ವಾದ ಮಂಡಿಸಿದ್ದ ರತ್ನಾ ರೆಡ್ಡಿ ಪರ ಹಿರಿಯ ವಕೀಲ ಎಚ್.ಎನ್. ಶಶಿಧರ ಅವರು, 2008ರಲ್ಲೇ ಅಂತಿಮ ಭೂಸ್ವಾಧೀನ ಅಧಿಸೂಚನೆ ಹೊರಡಿಸಲಾಗಿದ್ದರೂ ಸರ್ಕಾರ ಭೂಮಿಯನ್ನು ವಶಕ್ಕೆ ಪಡೆದಿಲ್ಲ ಮತ್ತು ಪರಿಹಾರವನ್ನೂ ಪಾವತಿಸಿಲ್ಲ. ಇದರಿಂದ ಭೂಸ್ವಾಧೀನ ಪ್ರಕ್ರಿಯೆಯು ಸಿಂಧುವಾಗುವುದಿಲ್ಲ. ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ರತ್ನಾ ರೆಡ್ಡಿಯವರಿಂದ ಪಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ. ಭೂಮಿ ಇಂದಿಗೂ ಅವರ ಬಳಿಯೇ ಇದೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಬಿಎಂಐಸಿಪಿಯು ನಿಯಮಕ್ಕೆ ವಿರುದ್ಧವಾಗಿ ಹಿಂಬರಹ ನೀಡಿದ್ದು, ನಂದಿ ಮೂಲಸೌಕರ್ಯ ಕಾರಿಡಾರ್ ಸಂಸ್ಥೆಯು (ನೈಸ್) ವಿವಾದಿತ ಭೂಮಿ ಬೇರೊಂದು ಕಾರಣಕ್ಕೆ ಬೇಕು ಎಂದು ಹೇಳಲಾಗದು. ನೈಸ್ ಸಂಸ್ಥೆಯು ರಿಯಾಯಿತಿದಾರ ಮಾತ್ರ, ಬಿಎಂಐಸಿಪಿಯ ತಾಂತ್ರಿಕ ನಿರ್ಣಯವನ್ನು ನೈಸ್ ಅತಿಕ್ರಮಿಸಲಾಗದು ಎಂದು ಆಕ್ಷೇಪಿಸಿದ್ದರಲ್ಲದೆ, 554 ಎಕರೆ ಹೆಚ್ಚುವರಿ ಭೂಮಿಯನ್ನು ವರ್ಗಾಯಿಸಲಾಗಿದ್ದು, ಮುಂದೆ ಯಾವುದೇ ಭೂಮಿಯನ್ನು ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ಗೆ ರಾಜ್ಯ ಸರ್ಕಾರ ಪ್ರಮಾಣಪತ್ರ ಸಲ್ಲಿಸಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಪ್ರತಿವಾದಿಗಳಾದ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ), ನೈಸ್ ಮತ್ತು ಇತರ ರಾಜ್ಯ ಸಂಸ್ಥೆಗಳ ಪರ ವಕೀಲರು, ಸುಮಾರು 2 ದಶಕಗಳ ಹಿಂದೆ ಪ್ರಾಥಮಿಕ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅರ್ಜಿದಾರರು ತಡವಾಗಿ ಅರ್ಜಿ ಸಲ್ಲಿಸಿದ್ದಾರೆ. ಅದನ್ನು ಮಾನ್ಯ ಮಾಡಬಾರದೆಂದು ಕೋರಿದ್ದರು. ನೈಸ್ ಪರ ವಕೀಲರು, ಕನಕಪುರ ರಸ್ತೆಗೆ ಸಂಪರ್ಕ ಕಲ್ಪಿಸಲು (ಎನ್ಎಚ್ 209) ಅನ್ನು ಬಿಎಂಐಸಿಪಿಯ ಬಾಹ್ಯ ರಸ್ತೆಯೊಂದಿಗೆ ಸಂಪರ್ಕಿಸುವ ರ್ಯಾಂಪ್ ನಿರ್ಮಿಸಲು ಭೂಮಿ ಅಗತ್ಯವಿದೆ. ಅರ್ಜಿದಾರರು ಭೂಮಿ ಹಸ್ತಾಂತರಿಸಲು ನಿರಾಕರಿಸಿದ್ದರಿಂದ ತಾತ್ಕಾಲಿಕ ರ್ಯಾಂಪ್ ಅನ್ನು ಬೇರೆಡೆ ಸ್ಥಾಪಿಸಲಾಗಿದೆ ಎಂದು ವಾದಿಸಿದ್ದರು.
ಕೆಪಿಸಿಸಿ ಮಾಧ್ಯಮ ವಿಭಾಗದ ಜಿಲ್ಲಾ ಉಸ್ತುವಾರಿ ನೇಮಕ
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಕೆಪಿಸಿಸಿ ಮಾಧ್ಯಮ ವಿಭಾಗದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿ, ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರಕ್ಕೆ ರಮೇಶ್ ಬಾಬು ಹಾಗೂ ಐಶ್ವರ್ಯ ಮಹಾದೇವ್, ಬೆಂಗಳೂರು ಗ್ರಾಮಾಂತರಕ್ಕೆ ನಾಯ್ಡ ಬಿ.ಆರ್., ಚಿಕ್ಕಬಳ್ಳಾಪುರಕ್ಕೆ ದಯಾನಂದ್, ಚಿತ್ರದುರ್ಗ ದಿವಾಕರ್ ಎನ್., ದಾವಣಗೆರೆ ಸ್ವಾತಿ ಚಂದ್ರಶೇಖರ್, ಕೋಲಾರ ನಾರಾಯಣಸ್ವಾಮಿ ಎಂ, ರಾಮನಗರ ಎಂ.ಜಿ. ಸುಧೀಂದ್ರ, ತುಮಕೂರು ದರ್ಶನ್ ಡಿ, ಶಿವಮೊಗ್ಗ ಜಿಲ್ಲೆಗೆ ಎಚ್.ಬಿ. ಚಂದ್ಪಾಷಾ ಅವರನ್ನು ಕೆಪಿಸಿಸಿ ಮಾಧ್ಯಮ ವಿಭಾಗದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಗೆ ವೆಂಕಟೇಶ್, ಚಿಕ್ಕಮಗಳೂರು ಸೂರ್ಯ ಮುಕುಂದ್ರಾಜ್, ದಕ್ಷಿಣ ಕನ್ನಡ ಬಿ. ಥಾಮಸ್, ಹಾಸನ ಭವ್ಯ ನರಸಿಂಹಮೂರ್ತಿ, ಕೊಡಗು ಎಂ.ಜಿ. ಹೆಗ್ಡೆ, ಮೈಸೂರು ನಗರ ತೇಜಸ್ವಿನಿ ಗೌಡ, ಮೈಸೂರು ಗ್ರಾಮಾಂತರ ಮಂಜುನಾಥ್ ಅದ್ದೆ, ಮಂಡ್ಯ ಜಿ.ಸಿ. ರಾಜು, ಉಡುಪಿ ಜಿಲ್ಲೆಗೆ ರವೀಶ್ ಬಸಪ್ಪ ಅವರನ್ನು ನೇಮಕ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಗೆ ನಾಗರಾಜ್ ಯಾದವ್, ಚಿಕ್ಕೋಡಿ ಮಹಾಂತೇಶ್ ಹಟ್ಟಿ, ಬೆಳಗಾವಿ ಶೈಲಜಾ ಅಮರನಾಥ್, ಬೆಳಗಾವಿ ನಗರಕ್ಕೆ ಲಾವಣ್ಯ ಬಲ್ಲಾಳ್, ವಿಜಯಪುರ ಪದ್ಮಪ್ರಸಾದ್ ಜೈನ್, ಧಾರವಾಡ ಗ್ರಾಮಾಂತರ ಜಸವರಾಜ್, ಗದಗ ಧ್ರುವ ಜತ್ತಿ, ಹಾವೇರಿ ಶೈಲಜಾ ಪಾಟೀಲ್, ಹುಬ್ಬಳ್ಳಿ-ಧಾರವಾಡ ನಗರ ಡಾ. ಶಂಕರ್ ಗುಹಾ, ಉತ್ತರ ಕನ್ನಡ ಜಿಲ್ಲೆಗೆ ರಮೇಶ್ ಹೆಗ್ಡೆ ಮಾಧ್ಯಮ ವಿಭಾಗದ ಜಿಲ್ಲಾ ಉಸ್ತುವಾರಿಗಳನ್ನು ನೇಮಕವಾಗಿದ್ದಾರೆ. ಬಳ್ಳಾರಿ ಗ್ರಾಮಾಂತರ ಬಾಲಕೃಷ್ಣ ಯಾದವ್, ಬಳ್ಳಾರಿ ನಗರ ಕಶ್ಯಪ್ ನಂದನ್, ವಿಜಯನಗರ ಸತ್ಯ ಪ್ರಕಾಶ್, ಬೀದರ್ ವಿನಯ್ ರಾಜ್, ಕಲಬುರಗಿ ಆಯಿಷಾ ಫರ್ಝಾನಾ, ಕೊಪ್ಪಳ ಎಸ್.ಎ. ಹುಸೈನ್, ರಾಯಚೂರು ಇರ್ಷಾದ್ ಅಹ್ಮದ್, ಯಾದಗಿರಿ ವಿಠಲ್ ಶೆಟ್ಟಿ ಅವರನ್ನು ಕೆಪಿಸಿಸಿ ಮಾಧ್ಯಮ ವಿಭಾಗದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.
ಏಷ್ಯನ್ ಯೂತ್ ಪ್ಯಾರಾ ಒಲಿಂಪಿಕ್ಸ್ 2025 | ರಾಜ್ಯದ ಯುವ ಪ್ಯಾರಾ ಕ್ರೀಡಾಪಟುಗಳಿಗೆ 3 ಚಿನ್ನ, 2 ಬೆಳ್ಳಿ ಪದಕ
ಬೆಂಗಳೂರು : ದುಬೈನಲ್ಲಿ ನಡೆದ ಏಷ್ಯನ್ ಯೂತ್ ಪ್ಯಾರಾ ಒಲಿಂಪಿಕ್ಸ್ 2025ರಲ್ಲಿ ಕರ್ನಾಟಕದ ಯುವ ಪ್ಯಾರಾ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡಿದ್ದು, ಮೂರು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೂ ದೇಶಕ್ಕೂ ಅಪಾರ ಹೆಮ್ಮೆ ತಂದಿದ್ದಾರೆ. ನೆಲಮಂಗಲದ ಮೋಹಿತ್ ಪಾಲ್ ಈ ಒಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಸಾಧನೆ ತೋರಿದ ಕ್ರೀಡಾಪಟುವಾಗಿ ಹೊರಹೊಮ್ಮಿದರು. ಭಾಗಶಃ ದೃಷ್ಟಿಹೀನ ವಿಭಾಗದಲ್ಲಿ ಸ್ಪರ್ಧಿಸಿದ ಅವರು 100 ಮೀಟರ್ ಹಾಗೂ 200 ಮೀಟರ್ ಓಟಗಳಲ್ಲಿ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದು, 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಸರಳ ಕುಟುಂಬ ಹಿನ್ನೆಲೆಯಿಂದ ಬಂದಿರುವ ಮೋಹಿತ್ ಅವರ ಸಾಧನೆ ಶ್ರಮ, ಶಿಸ್ತು ಮತ್ತು ದೃಢ ಸಂಕಲ್ಪದ ಪ್ರತಿಫಲವಾಗಿದೆ. ಅವರ ತಂದೆ ಚಾಲಕರಾಗಿದ್ದು, ತಾಯಿ ಗೃಹಿಣಿ. ಕಳೆದ ಎರಡು ವರ್ಷಗಳಿಂದ ನಿರಂತರ ಕಠಿಣ ತರಬೇತಿ ಪಡೆದು ದೈಹಿಕ ಸಾಮರ್ಥ್ಯ ಮತ್ತು ಮಾನಸಿಕ ದೃಢತೆಯನ್ನು ಬೆಳೆಸಿಕೊಂಡಿರುವುದು ಏಷ್ಯನ್ ಮಟ್ಟದಲ್ಲಿ ಅವರ ಯಶಸ್ಸಿಗೆ ಕಾರಣವಾಯಿತು. ಚಾಮರಾಜನಗರದ ಸೌಮ್ಯಾ ಅವರು ಸಹ ಭಾಗಶಃ ದೃಷ್ಟಿಹೀನ ವಿಭಾಗದಲ್ಲಿ ಸ್ಪರ್ಧಿಸಿ 1500 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಕರ್ನಾಟಕಕ್ಕೆ ಮತ್ತೊಂದು ಸುವರ್ಣ ಕ್ಷಣ ಒದಗಿಸಿದರು. ಉತ್ತಮ ಸಹನಶಕ್ತಿ, ತಂತ್ರಬದ್ಧ ಓಟ ಹಾಗೂ ಆತ್ಮವಿಶ್ವಾಸದಿಂದ ಅವರು ದೂರದ ಓಟದ ವಿಭಾಗದಲ್ಲಿ ತಮ್ಮ ಪ್ರತಿಭೆಯನ್ನು ಮೆರೆದರು. ಮೈಸೂರು ಮೂಲದ ಭಾರತಿ ಭರತೇಶ್ ಅವರು ಸೆರಿಬ್ರಲ್ ಪಾಲ್ಸಿ ವಿಭಾಗದಲ್ಲಿ ಸ್ಪರ್ಧಿಸಿ ಲಾಂಗ್ ಜಂಪ್ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಜ್ಯಕ್ಕೆ ಗೌರವ ತಂದಿದ್ದಾರೆ. ಈ ಸಾಧನೆಯ ಹಿಂದೆ ಬೆಂಗಳೂರಿನ ಜಯನಗರದಲ್ಲಿರುವ ಇಂಡಿಯನ್ ಅಥ್ಲೆಟಿಕ್ ಅಕಾಡೆಮಿಯ ಶ್ರಮ ಪ್ರಮುಖವಾಗಿದೆ. ಅಂತರ್ರಾಷ್ಟ್ರೀಯ ಅಥ್ಲೀಟ್ ಹಾಗೂ ಕೋಚ್ ರೋಷನ್ ಬಚ್ಚನ್ ಅವರ ನೇತೃತ್ವದಲ್ಲಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಿಸಿದ್ದ ಕೋಚ್ ವಿಕ್ರಮ್ ಅವರ ಮಾರ್ಗದರ್ಶನದಲ್ಲಿ ಈ ಕ್ರೀಡಾಪಟುಗಳು ತರಬೇತಿ ಪಡೆದಿದ್ದಾರೆ. ಸರಿಯಾದ ಮಾರ್ಗದರ್ಶನ, ಶಿಸ್ತುಬದ್ಧ ತರಬೇತಿ ಮತ್ತು ನಿರಂತರ ಬೆಂಬಲ ದೊರೆತರೆ ಪ್ಯಾರಾ ಕ್ರೀಡಾಪಟುಗಳು ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಬಹುದು. ಈ ಮಕ್ಕಳು ಮುಂದಿನ ದಿನಗಳಲ್ಲಿ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರಾಂಡ್ ಪ್ರಿ, ಹಿರಿಯರ ಏಷ್ಯನ್ ಒಲಿಂಪಿಕ್ಸ್ ಹಾಗೂ ಒಲಿಂಪಿಕ್ಸ್ ಮಟ್ಟದ ಸ್ಪರ್ಧೆಗಳಿಗೆ ಸಿದ್ಧರಾಗುತ್ತಿದ್ದಾರೆ. ಇವರಿಗೆ ಸರಕಾರ, ಸಂಸ್ಥೆಗಳು ಹಾಗೂ ಸಮಾಜದ ನಿರಂತರ ಬೆಂಬಲ ಅಗತ್ಯವಿದೆ. ರೋಷನ್ ಬಚ್ಚನ್, ಅಥ್ಲೀಟ್
ನಾಗರಿಕ ಹಕ್ಕುಗಳನ್ನು ಪ್ರಶ್ನಿಸುವ ಅಧಿಕಾರ ಚುನಾವಣಾ ಆಯೋಗಕ್ಕಿಲ್ಲ : ಶಿವಸುಂದರ್
ಗುಡಿಬಂಡೆ : ನಮ್ಮ ದೇಶದ ಪ್ರಜೆಗಳ ನಾಗರಿಕ ಹಕ್ಕುಗಳನ್ನು ಪ್ರಶ್ನಿಸುವಂತಹ ಹಕ್ಕು ಚುನಾವಣಾ ಆಯೋಗಕ್ಕೆ ಇಲ್ಲ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿನ ಸಮುದಾಯ ಭವನದಲ್ಲಿ ಸಂವಿಧಾನ ಸಂರಕ್ಷಣಾ ಪಡೆ- ಕರ್ನಾಟಕದ ವತಿಯಿಂದ ಆಯೋಜಿಸಿದ್ದ ‘ಸಂವಿಧಾನ ಅಳಿವು ಉಳಿವು ಸಂರಕ್ಷಣೆ’ಯ ಒಂದು ದಿನದ ಕಾರ್ಯಾಗಾರ ಚಿಂತನ ಮಂಥನ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ರಾಜ ರಾಣಿಯ ಹೊಟ್ಟೆಯಲ್ಲಿ ಹುಟ್ಟುತ್ತಿದ್ದರು. ಈಗ ರಾಜ ಮತದಾರರ ಪಟ್ಟಿಯಲ್ಲಿ ಹುಟ್ಟುತ್ತಿದ್ದಾನೆ. ಇದು ಈ ದೇಶಕ್ಕೆ ಸಂವಿಧಾನ ಜಾರಿಯಾದಾಗಿನಿಂದ ಮಾತ್ರ. ಈ ದೇಶದ ಸಂವಿಧಾನ ಪ್ರತಿಯೊಬ್ಬ ನಾಗರಿಕನು ಸಹ ಘನತೆಯಿಂದ ಬದುಕುವಂತಹ ಹಕ್ಕನ್ನು ನೀಡಿದೆ. 18 ವರ್ಷ ತುಂಬಿದ ಈ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕನ್ನು ನೀಡುವುದು ಚುನಾವಣಾ ಆಯೋಗದ ಕರ್ತವ್ಯವೂ ಆಗಿದೆ. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಹ ಮತದಾನದ ಹಕ್ಕನ್ನು ಪ್ರತಿಪಾದಿಸಿದ್ದು ಡಾ .ಬಿ. ಅಂಬೇಡ್ಕರ್ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆಗಳಿಗೆ ಬಿಎಲ್ಒ ರವರು ಬಂದು ಅರ್ಜಿಯನ್ನು ನೀಡುತ್ತಾರೆ. ಆ ಅರ್ಜಿಯನ್ನು ಭರ್ತಿ ಮಾಡಿ ಚುನಾವಣಾ ಕಚೇರಿಗೆ ತಲುಪಿಸಬೇಕು. ಇಲ್ಲವಾದರೆ ನಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರಲ್ಲ. ಮೊದಲು ಬಿಎಲ್ಒ ಅವರು ಮನೆಗಳಗೆ ಭೇಟಿ ನೀಡಿ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವುದು ಅಥವಾ ತೆಗೆಯುವುದನ್ನು ಮಾಡುತ್ತಿದ್ದರು. ಈಗ ಈ ರೀತಿಯಲ್ಲಿ ಮತದಾರ ಪಟ್ಟಿಯನ್ನು ಪರಿಷ್ಕರಣೆ ಮಾಡಲು ಹೊರಟಿದ್ದಾರೆ. ಇದು ತುಂಬಾ ಅಪಾಯದ ನಡೆ. ಜನರು ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಡಿಎಸ್ಎಸ್ ಹಿರಿಯ ಮುಖಂಡ ಎನ್.ವೆಂಕಟೇಶ್, ಜೀವಿಕಾ ಸಂಘಟನೆಯ ರಾಜ್ಯ ಸಂಚಾಲಕ ಕಿರಣ್ ಕಮಾಲ್ ಪ್ರಸಾದ್, ಎಲ್.ಲಕ್ಷ್ಮೀನಾರಾಯಣರೆಡ್ಡಿ, ಮುಹಮ್ಮದ್ ನೂರ್ವುಲ್ಲಾ, ಕೆಡಿಪಿ ಸದಸ್ಯ ಎಚ್.ಪಿ.ಲಕ್ಷ್ಮೀನಾರಾಯಣ, ಮಂಜುನಾಥ್ ರೆಡ್ಡಿ, ಸೌಭಾಗ್ಯಮ್ಮ, ಸೈದ್ ಬಾಷ್, ರಿಝ್ವ್ವಾನ್, ಎದ್ದೇಳು ಕರ್ನಾಟಕದ ಸಮೀರ್, ಶ್ರೀರಂಗಾಚಾರಿ, ಜೀವಿಕಾ ನಾರಾಯಣಸ್ವಾಮಿ, ಚನ್ನರಾಯಪ್ಪ, ಇನ್ನಿತರರು ಉಪಸ್ಥಿತರಿದ್ದರು. ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವುದು ಸಾಮಾನ್ಯ. ಆದರೆ ಜನರಿಗೆ ಅರ್ಥವಾಗದ ರೀತಿಯಲ್ಲಿ ಪರಿಷ್ಕರಣೆ ಮಾಡುವುದನ್ನು ದೇಶದ ಜನ ಮನವರಿಕೆ ಮಾಡಿಕೊಳ್ಳಬೇಕು. ದೇಶದ ನಿವಾಸಿಗಳ ಮೇಲೆ ಕೇಂದ್ರ ಸರಕಾರ ಅನುಮಾನದಿಂದ ನೋಡುತ್ತಿದೆ. -ಶಿವಸುಂದರ್, ಚಿಂತಕ
ಬಿಷಪ್ ಹೌಸ್ನಲ್ಲಿ ವಾರ್ಷಿಕ ‘ಬಂಧುತ್ವ’ ಕ್ರಿಸ್ಮಸ್ ಸಂಭ್ರಮಾಚರಣೆ
ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ‘ಬಂಧುತ್ವ’ ಕ್ರಿಸ್ಮಸ್ ಸಂದೇಶ
ಬೆಂಗಳೂರು : ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉನ್ನಾವೊ ಅತ್ಯಾಚಾರ ಪ್ರಕರಣದ ದೋಷಿ ಸೆಂಗಾರ್ನ AI-ರಚಿತ ಚಿತ್ರವನ್ನು ಹಂಚಿಕೊಂಡು ನ್ಯಾಯಾಲಯದ ಆದೇಶದ ಕುರಿತು ಸಾರ್ವಜನಿಕರನ್ನು ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಕರ್ನಾಟಕ ಘಟಕವು ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಕರ್ನಾಟಕ ಘಟಕವು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತನ್ನ ಅಧಿಕೃತ ಖಾತೆಯಲ್ಲಿ ಪ್ರಕಟಿಸಿದ ಪೋಸ್ಟ್ ನಲ್ಲಿ, ಪ್ರಿಯಾಂಕ್ ಖರ್ಗೆ ಅವರನ್ನು ‘ಸ್ವಯಂ ಘೋಷಿತ fact checker ’ ಎಂದು ಉಲ್ಲೇಖಿಸಿ, ನಕಲಿ ಸುದ್ದಿ ಹರಡುವಾಗ ಅವರು ಸಿಕ್ಕಿಬಿದ್ದಿದ್ದಾರೆ ಎಂದು ಆರೋಪಿಸಿದೆ. ಐಟಿ ಮತ್ತು ಬಿಟಿ ಖಾತೆ ಹೊಂದಿರುವ ಸಚಿವರಾಗಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ದಾಳಿ ನಡೆಸುವ ಉದ್ದೇಶದಿಂದ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಕುರಿತು ಸಾರ್ವಜನಿಕರನ್ನು ತಪ್ಪು ದಾರಿಗೆಳೆಯಲು ದುರುದ್ದೇಶಪೂರಿತವಾಗಿ AI ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ ಎಂದು ಬಿಜೆಪಿ ಹೇಳಿದೆ. ಭಾರತದ ಪುತ್ರಿಯರ ಸಬಲೀಕರಣಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಯಾದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯ ಅರ್ಥವನ್ನು ಸುಳ್ಳುಗಳ ಮೂಲಕ ವ್ಯಂಗ್ಯವಾಡಿ, ಅಗ್ಗದ ರಾಜಕೀಯಕ್ಕೆ ಬಳಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಸೆಂಗಾರ್ ಜೀವಾವಧಿ ಶಿಕ್ಷೆ ರದ್ದು ಸರಕಾರದ ನಿರ್ಧಾರವಲ್ಲ; ಅದು ನ್ಯಾಯಾಲಯದ ಆದೇಶವಾಗಿದ್ದು, ಆ ಆದೇಶವನ್ನು ಸಿಬಿಐ ಪ್ರಶ್ನಿಸಲಿದೆ. ಅಲ್ಲದೆ, ಪ್ರಿಯಾಂಕ್ ಖರ್ಗೆ ಹಂಚಿಕೊಂಡಿರುವ ಪೋಸ್ಟ್ ಅವರದೇ ಸರಕಾರ ಜಾರಿಗೆ ತಂದಿರುವ ದ್ವೇಷ ಭಾಷಣ ವಿರೋಧಿ ಮಸೂದೆಯ ಉಲ್ಲಂಘನೆಯಾಗಿದ್ದು, ನ್ಯಾಯಾಂಗ ಪ್ರಕ್ರಿಯೆಯನ್ನು ಅಣಕಿಸುವ ಕೋಮು ದೃಶ್ಯಾವಳಿಗಳನ್ನು ಬಳಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ತಪ್ಪು ಮಾಹಿತಿಗೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ ಬೇಷರತ್ತಾಗಿ ಕ್ಷಮೆಯಾಚಿಸಬೇಕು ಮತ್ತು ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಇದಕ್ಕೂ ಮೊದಲು, ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ AI ಯಿಂದ ರಚಿಸಲಾಗಿದೆ ಎನ್ನಲಾದ ಚಿತ್ರವಿದ್ದು, ಸರಕಾರದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯನ್ನು ವ್ಯಂಗ್ಯಾತ್ಮಕವಾಗಿ ಟೀಕಿಸಲಾಗಿತ್ತು. ಆ ಚಿತ್ರದಲ್ಲಿ ದಿಲ್ಲಿಯ ತಿಹಾರ್ ಜೈಲು ಹೊರಗೆ ಶಿಕ್ಷೆಗೊಳಗಾದ ಅತ್ಯಾಚಾರಿ ಕುಲದೀಪ್ ಸಿಂಗ್ ಸೆಂಗಾರ್ ಗೆ ಜನರು ಹಾರ ಹಾಕುತ್ತಿರುವಂತೆ ತೋರಿಸುವ ಡೀಪ್ಫೇಕ್ ದೃಶ್ಯವಿದೆ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ಸ್ಪಷ್ಟಪಡಿಸಿದ್ದು, ಸೆಂಗಾರ್ಗೆ ಒಂದೇ ಪ್ರಕರಣದಲ್ಲಿ ಜಾಮೀನು ದೊರೆತಿದ್ದು, ಆ ಜಾಮೀನನ್ನು ಸಿಬಿಐ ಪ್ರಶ್ನಿಸಿದೆ. ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿ ಸೆಂಗಾರ್ ಇನ್ನೂ ಜೈಲಿನಲ್ಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಆ ಬಳಿಕ ಮತ್ತೊಂದು ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ತಾವು ಹಂಚಿಕೊಂಡಿದ್ದ ಚಿತ್ರವು AI ಯಿಂದ ರಚಿಸಲ್ಪಟ್ಟಿರಬಹುದು ಹಾಗೂ ಅದು ಕಣ್ತಪ್ಪಿ ಪೋಸ್ಟ್ ಆಗಿರಬಹುದೆಂದು ಒಪ್ಪಿಕೊಂಡಿದ್ದಾರೆ. ಬಿಜೆಪಿ ಕರ್ನಾಟಕ ಘಟಕದ ಆರೋಪಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, “ಹಿಂದಿನ ಪೋಸ್ಟ್ನಲ್ಲಿರುವ ಚಿತ್ರವು AI ರಚಿತವಾಗಿರಬಹುದು ಹಾಗೂ ಹಂಚಿಕೊಂಡಿರಬಹುದು. ಆದರೆ ನಿಮ್ಮ ಖ್ಯಾತಿಯು ನಿಮ್ಮ ಮುಂದೆಯೇ ಇದೆ” ಎಂದು ಗುಜರಾತ್ನ ಬಿಲ್ಕೀಸ್ ಬಾನೊ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಹೂವಿನ ಹಾರ ಹಾಕಿ ಸನ್ಮಾನಿಸಿದ ಸಂದರ್ಭದ ಚಿತ್ರವನ್ನು ಲಗತ್ತಿಸಿದ್ದಾರೆ. ಅದೇ ವೇಳೆ ಅವರು, “ಮುಖ್ಯ ಪ್ರಶ್ನೆ ಇನ್ನೂ ಉಳಿದಿದೆ. ಬಿಜೆಪಿ ಅಪರಾಧಿಗಳನ್ನು ಗೌರವಿಸುವುದನ್ನೂ ರಕ್ಷಿಸುವುದನ್ನೂ ಮುಂದುವರಿಸಿದೆ. ಕರ್ನಾಟಕದಲ್ಲಿ POCSO ಆರೋಪಿಗಳ ವಿರುದ್ಧ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ? ಮತ್ತು ಈ ನಾಯಕನನ್ನು ಇನ್ನೂ ನಿಮ್ಮ ಪಕ್ಷದ ‘ಮಾರ್ಗದರ್ಶಕ’ ಹಾಗೂ ‘ಮಾರ್ಗದರ್ಶಿ ಬೆಳಕು’ ಎಂದು ಏಕೆ ಬಿಂಬಿಸಲಾಗುತ್ತಿದೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ. “ನಾನು ಇದನ್ನು ನಿಮಗಾಗಿ Fact check ಮಾಡಿ ಪರಿಶೀಲಿಸಬೇಕೆಂದು ನೀವು ಬಯಸುತ್ತೀರಾ?” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Belagavi | ಕಾಲುವೆಯಲ್ಲಿ ಈಜಲು ತೆರಳಿ ದುರಂತ; ಇಬ್ಬರು ಬಾಲಕರು ನೀರುಪಾಲು
ಬೆಳಗಾವಿ : ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ದುರ್ಘಟನೆ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ಹಣಮಂತ ದುರ್ಗಪ್ಪ ಹಗೇದ (10) ಮತ್ತು ಬಸವರಾಜ ರಮೇಶ ಸೋಮಣ್ಣವರ (10) ಎಂದು ಗುರುತಿಸಲಾಗಿದೆ. ತಂದೆಯೊಂದಿಗೆ ಕುರಿ ಕಾಯಲು ತೆರಳಿದ್ದ ಸಂದರ್ಭದಲ್ಲಿ, ಸಮೀಪದ ಕಾಲುವೆಯಲ್ಲಿ ಈಜಲು ಮಕ್ಕಳು ಇಳಿದಿದ್ದಾರೆ. ಬಳಿಕ ಸಾಕಷ್ಟು ಸಮಯ ಕಳೆದರೂ ಮಕ್ಕಳು ಕಾಣಿಸದೇ ಇದ್ದುದರಿಂದ ಪೋಷಕರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಇಬ್ಬರ ಮೃತದೇಹಗಳು ಕಾಲುವೆಯಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ. ಘಟನೆಯ ಕುರಿತು ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಶೋಕ ವಾತಾವರಣ ಆವರಿಸಿದೆ.
ಭಟ್ಕಳ: ಏಕಾಏಕಿ ಹಸುವೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ನಾಲ್ಕು ವಾಹನಗಳು ಪರಸ್ಪರ ಢಿಕ್ಕಿ ಹೊಡೆದ ಘಟನೆ ತಾಲೂಕಿನ ಶೆಟ್ಟಿ ಗ್ಯಾರೇಜ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಕೇರಳದಿಂದ ಮಹಾರಾಷ್ಟ್ರದ ಕಡೆಗೆ ತೆರಳುತ್ತಿದ್ದ ಕಾರಿನ ಮುಂದೆ ಏಕಾಏಕಿ ಹಸು ಅಡ್ಡ ಬಂದಿದ್ದು, ಅದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ವಾಹನವನ್ನು ಬದಿಗೆ ತಿರುಗಿಸಿದ್ದಾನೆ. ಈ ವೇಳೆ ಕಾರು ಮೊದಲು ಗೂಡ್ಸ್ ಆಟೊ ರಿಕ್ಷಾಗೆ ಢಿಕ್ಕಿ ಹೊಡೆದಿದೆ. ನಂತರ ಹೊಸದಾಗಿ ಖರೀದಿಸಿದ ಬೊಲೆರೊ ಪಿಕ್ಅಪ್, ನಂತರ ದುರಸ್ತಿ ಮುಗಿಸಿ ಗ್ಯಾರೇಜ್ನಿದ ಹೊರಬಂದ ಇನ್ನೊಂದು ಪಿಕ್ಅಪ್ಗೆ ಢಿಕ್ಕಿ ಹೊಡೆದಿದೆ. ಬಳಿಕ ವಾಹನಗಳ ವೇಗ ಸೂಚಿಸುವ ಸೈನ್ ಬೋರ್ಡ್ ಕಂಬಕ್ಕೂ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಎಲ್ಲ ವಾಹನಗಳು ರಸ್ತೆ ಕೆಳಗಿನ ಇಳಿಜಾರಿನೊಳಗೆ ಜಾರಿ ಬಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಕಾರಿನಲ್ಲಿ ಕೇರಳದ ದಂಪತಿ ಹಾಗೂ ಅವರ ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ. ಆದರೆ, ಗೂಡ್ಸ್ ಆಟೊ ರಿಕ್ಷಾ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ವಾಹನಗಳನ್ನು ಇಳಿಜಾರಿನಿಂದ ಮೇಲಕ್ಕೆತ್ತಲು ಕ್ರೇನ್ನ ನೆರವು ಪಡೆಯಲಾಗಿತ್ತು.ಈ ವೇಳೆ ಕೆಲ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಈ ಘಟನೆ ಕುರಿತು ಆತಂಕ ವ್ಯಕ್ತಪಡಿಸಿದ ಸ್ಥಳೀಯರು, ಭಟ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ಪ್ರಾಣಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೀದಿ ಪ್ರಾಣಿಗಳು ರಸ್ತೆ ಮೇಲೆ ಬರದಂತೆ ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ರಸ್ತೆಗಳಲ್ಲಿ ಸಂಚರಿಸುವ ಪ್ರಾಣಿಗಳನ್ನು ವಶಕ್ಕೆ ಪಡೆಯುವಂತೆ ನಗರಸಭೆ ಮತ್ತು ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.
ಹೊಸಪೇಟೆ | ಗುಡ್ಡ ಹತ್ತುವಾಗ ಕುಸಿದು ಬಿದ್ದು ಫ್ರಾನ್ಸ್ ಪ್ರವಾಸಿಗನಿಗೆ ಗಾಯ
ಹೊಸಪೇಟೆ : ಹಂಪಿಯ ಪ್ರಸಿದ್ಧ ಅಷ್ಟಭುಜ ಸ್ನಾನದ ಕೊಳದ ಸಮೀಪ ಗುಡ್ಡದ ಹತ್ತಲು ಯತ್ನಿಸುತ್ತಿರುವ ವೇಳೆ ಕಾಲು ಜಾರಿ ಬಿದ್ದ ಫ್ರಾನ್ಸ್ನ ಪ್ರವಾಸಿಗನೊಬ್ಬರನ್ನು ಸ್ಥಳೀಯರು ಎರಡು ದಿನಗಳ ಬಳಿಕ ಕಂಡು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಯು ಕೆಲ ದಿನಗಳ ಹಿಂದೆ ನಡೆದಿದೆ. ಪ್ರಾಥಮಿಕವಾಗಿ ಪ್ರವಾಸಿಗನು ಗುಡ್ಡದಿಂದ ಬೀಳುವ ಸಮಯದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾನೆ. ಸ್ಥಳೀಯರು ಮತ್ತು ಪೋಲೀಸರು ಈ ಬಗ್ಗೆ ತಕ್ಷಣ ಮಾಹಿತಿ ಪಡೆದರೂ, ಗಾಯಗೊಂಡ ವ್ಯಕ್ತಿಯನ್ನು ಪತ್ತೆಹಚ್ಚಲು ಎರಡು ದಿನಗಳ ಕಾಲ ಪ್ರಯತ್ನಗಳು ನಡೆದಿವೆ. ಆಸ್ಪತ್ರೆಗೆ ದಾಖಲಿಸಿದ ನಂತರ ಪ್ರವಾಸಿಗನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಪ್ರವಾಸಿಗನು ಹಂಪಿಯ ಪ್ರವಾಸ ಕೈಗೊಂಡು ಸ್ಥಳೀಯ ದೃಶ್ಯಾವಳಿಗಳನ್ನು ನೋಡುತ್ತಿದ್ದಂತೆ ಈ ದುರ್ಘಟನೆ ಸಂಭವಿಸಿದೆ. ಸ್ಥಳೀಯ ಪೊಲೀಸ್ ಠಾಣೆ ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದು, ಭದ್ರತೆ ಕ್ರಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಲಾಗಿದೆ.
ಶ್ರೀಲಂಕಾ ವಿರುದ್ಧ ಘರ್ಜಿಸಿದ ಲೇಡಿ ಸೆಹ್ವಾಗ್; ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದ ಹರ್ಮನ್ ಪ್ರೀತ್ ಕೌರ್!
India W Vs Sri Lanka W- ಭಾರತ ಮಹಿಳಾ ಕ್ರಿಕೆಟ್ ತಂಡ ಶ್ರೀಲಂಕಾವನ್ನು ಮೂರನೇ ಟಿ20 ಪಂದ್ಯದಲ್ಲೂ ಸೋಲಿಸಿ ಐದು ಪಂದ್ಯಗಳ ಸರಣಿಯನ್ನು ಇನ್ನೂ 2 ಪಂದ್ಯಗಳು ಬಾಕಿ ಉಳಿದಿರುವಂತೆಯೇ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಮಹಿಳಾ T20I ಕ್ರಿಕೆಟ್ನಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ನಾಯಕಿ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಶೆಫಾಲಿ ವರ್ಮಾ ಮತ್ತು ರೇಣುಕಾ ಸಿಂಗ್ ಅವರು ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು.
ಔರಾದ್ | ಮಹಾರಾಜವಾಡಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ
ಔರಾದ್ : ಪೊಲೀಸ್ ಮತ್ತು ಸಾರ್ವಜನಿಕರ ನಡುವಿನ ನಂಬಿಕೆ ಬಲಪಡಿಸುವುದು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಸಂತಪುರ್ ಪೊಲೀಸ್ ಠಾಣೆ ಪಿಎಸ್ಐ ದಿನೇಶ್ ಅವರು ಹೇಳಿದರು. ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಸಂತಪುರ್ ಪೊಲೀಸ್ ಇಲಾಖೆ ವತಿಯಿಂದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ಯಕ್ರಮದಡಿ ಪೊಲೀಸ್ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಕಾನೂನು ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳುತ್ತಿದ್ದಾರೆ ಎಂದರು. ಈ ವೇಳೆ ಮಹಿಳೆಯರ ಸುರಕ್ಷತೆ, ಸೈಬರ್ ಅಪರಾಧಗಳ ಕುರಿತು ಎಚ್ಚರಿಕೆ, ಸಂಚಾರ ನಿಯಮಗಳ ಪಾಲನೆ, ಮಾದಕ ವಸ್ತು ವಿರೋಧಿ ಜಾಗೃತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅವರು ಮಾಹಿತಿ ನೀಡಿದ ಅವರು, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಭಗವನರಾವ್ ಪಾಟೀಲ್, ಮಾಜಿ ತಾ.ಪಂ ಸದಸ್ಯ ದಿಗಂಬರ್ ಮಾಲೇಕರ್, ಸಂದೀಪ್ ಪಾಟೀಲ್, ನಾಗಗೊಂಡ, ಇಸ್ಮಾಯಿಲ್ ಸಾಬ್ ಹಾಗೂ ಮಕ್ಸುದ್ ಸೇರಿದಂತೆ ಇತರ ಗ್ರಾಮಸ್ಥರು ಇದ್ದರು.
ಕಲಬುರಗಿ | ದೇಶದ ಸ್ವಾತಂತ್ರ್ಯ, ನವನಿರ್ಮಾಣದಲ್ಲಿ ಮುಸ್ಲಿಮರ ಪಾತ್ರ ದೊಡ್ದದು : ಕೋರಣೇಶ್ವರ ಮಹಾಸ್ವಾಮೀಜಿ
ಜಲ್ಸಾ ರಹ್ಮತುಲ್ ಲಿಲ್ ಆಲಮೀನ್ ಕಾರ್ಯಕ್ರಮದಲ್ಲಿ ಸೌಹಾರ್ದತೆಯ ಸಂದೇಶ
ರಾಜ್ಯದಲ್ಲಿ 11 ಮಂದಿ ನಕಲಿ ಆಯುರ್ವೇದ ವೈದ್ಯರ ಪತ್ತೆ
ಬೆಂಗಳೂರು : ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯು ವೈದ್ಯರ ನೋಂದಣಿ ಪ್ರಮಾಣ ಪತ್ರಗಳು ಇಲ್ಲದ 11 ಮಂದಿ ಆಯುರ್ವೇದ ಮತ್ತು ಯುನಾನಿ ವೈದ್ಯರನ್ನು ಪತ್ತೆ ಮಾಡಿದ್ದು, ಇವರನ್ನು ನಕಲಿ ವೈದ್ಯರೆಂದು ಗುರುತಿಸಿದೆ. ಧಾರವಾಡ ಜಿಲ್ಲೆಯ ನಾಗಯ್ಯ ಮಠ, ರಾಜಶೇಖರ ತೊರಗಲ್ಲು, ಅಬ್ದುಲ್ ಅಜೀಮ್ ಮುಲ್ಲಾ, ಬಳ್ಳಾರಿ ಜಿಲ್ಲೆಯ ಶೀಲವೇರಿ ದಿವಾಕರ್, ಲಕ್ಷ್ಮೀ ನಾರಾಯಣರೆಡ್ಡಿ, ತುಮಕೂರು ಜಿಲ್ಲೆಯ ರಾಮಾಂಜನೇಯ ಲಿಖಿತ್ ರಾಮ್ ಕ್ಲಿನಿಕ್, ಚೌಡಪ್ಪ, ಯೋಗಾನಂದ, ದಿನೇಶ್ ಕೆ.ಎಸ್., ಚಿತ್ರದುರ್ಗ ಜಿಲ್ಲೆಯ ಎಂ.ವಿ.ನಾಗರಾಜು, ಗದಗ ಜಿಲ್ಲೆಯ ಸೋಮೇಶ್ವರ ಕದಡಿ ಅವರನ್ನು ನಕಲಿ ವೈದ್ಯರೆಂದು ಗುರುತಿಸಲಾಗಿದೆ. 11 ಜನರಿಗೆ ವೈದ್ಯರ ನೋಂದಣಿ ಪ್ರಮಾಣ ಪತ್ರಗಳ ನೈಜತೆ ಪರಿಶೀಲನೆಗಾಗಿ ಹಾಜರಾಗಲು ಈಗಾಗಲೇ ಮೂರು ಬಾರಿ ಸೂಚನಾ ಪತ್ರಗಳನ್ನು ನೀಡಲಾಗಿತ್ತು. ಆದರೂ ಮಂಡಳಿಗೆ ಯಾವುದೇ ಮೂಲ ದಾಖಲಾತಿಗಳನ್ನು ಹಾಜರುಪಡಿಸಿಲ್ಲ. ಅಲ್ಲದೇ ಈ ವೈದ್ಯರು ವೈದ್ಯ ವೃತ್ತಿ ಕೈಗೊಳ್ಳಲು ಮಂಡಳಿಯಲ್ಲಿ ನೋಂದಣಿಗೊಂಡಿರುವುದಿಲ್ಲ. ಹೀಗಾಗಿ 11 ಜನ ವೈದ್ಯರುಗಳು ನಕಲಿ ವೈದ್ಯರೆಂದು ಆಯಾ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮತ್ತು ಜಿಲ್ಲಾ ಆಯುಷ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಜಾಗೃತೆ ಮೂಡಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯು ಪ್ರಕಟನೆಯಲ್ಲಿ ತಿಳೀಸಿದೆ.
ಧರ್ಮಸ್ಥಳ ಪ್ರಕರಣ: ಜಯಂತ್ ಕೈಸೇರಿದ ಎಸ್ಐಟಿ ವರದಿಯ ಪ್ರತಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಶುಕ್ರವಾರ ಮಹತ್ವದ ಬೆಳವಣಿಗೆಗಳು ನಡೆದಿದ್ದು, ಎಸ್ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯ ಪ್ರತಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ಕೈ ಸೇರಿದೆ. ಎಸ್ಐಟಿ 3,923 ಪುಟಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿ 1,100 ಪುಟಗಳ ಪ್ರತಿಯನ್ನು ನ್ಯಾಯಾಲಯವು ಜಯಂತ್ರಿಗೆ ನೀಡಿರುವುದಾಗಿ ತಿಳಿದುಬಂದಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ನ.20ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ವಿರುದ್ಧ ಕ್ರಮ ಕೈಗೊಳ್ಳಲು ಎಸ್ಐಟಿ ಅವಕಾಶ ಕೋರಿತ್ತು. ಅಲ್ಲದೇ ಈ ವರದಿಯನ್ನು ಬಹಿರಂಗಗೊಳಿಸದಂತೆ ನ್ಯಾಯಾಲಯವನ್ನು ಕೋರಿತ್ತು. ಎಸ್ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಈ ವರದಿಯ ಪ್ರತಿ ಪಡೆಯಲು ಜಯಂತ್ ಟಿ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಎಸ್ಐಟಿ ಕೋರಿಕೆಯ ಹಿನ್ನೆಲೆಯಲ್ಲಿ ನ್ಯಾಯಾಲಯ ಅದನ್ನು ನೀಡಲು ನಿರಾಕರಿಸಿತ್ತು. ಬಳಿಕ ಬೆಂಗಳೂರಿನ ಹಿರಿಯ ನ್ಯಾಯವಾದಿ ದೊರೆ ರಾಜು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ಜಯಂತ್ ಪರವಾಗಿ ವಾದ ಮಂಡಿಸಿದ್ದರು. ಅಂತಿಮವಾಗಿ ನ್ಯಾಯಾಲಯವು ಎಸ್ಐಟಿ ವರದಿಯ ಪ್ರತಿ ನೀಡಲು ಸಮ್ಮತಿ ಸೂಚಿಸಿತ್ತು. ಅದರಂತೆ ನ್ಯಾಯಾಲಯವು ಜಯಂತ್ರಿಗೆ ಎಸ್ಐಟಿ ವರದಿಯ ಕೆಲ ಭಾಗಗಳನ್ನು ಶುಕ್ರವಾರ ನೀಡಿದೆ. ಲಭ್ಯ ಮಾಹಿತಿಯಂತೆ ನ್ಯಾಯಾಲಯ ನೀಡಿರುವುದು ಜಯಂತ್ ಹಾಗೂ ಇತರರ ಹೇಳಿಕೆಗಳೇ ಆಗಿವೆ. ಚಿನ್ನಯ್ಯ ನ್ಯಾಯಾಲಯದ ಮುಂದೆ ನೀಡಿರುವ ಹೇಳಿಕೆ ಹಾಗೂ ಎಸ್ಐಟಿ ವರದಿಯಲ್ಲಿರುವ ಇತರ ಮಹತ್ವದ ವಿಚಾರಗಳನ್ನು ನ್ಯಾಯಾಲಯ ನೀಡಿಲ್ಲ ಎಂದು ತಿಳಿದುಬಂದಿದೆ.
ಕಲಬುರಗಿ | ಪತ್ರಕರ್ತ ಅಜೀಜುಲ್ಲಾ ಸರ್ಮಸ್ತ್ ಗೆ ʼಮೌಲಾನಾ ಅಬುಲ್ ಕಲಾಂ ಆಜಾದ್ ಅಲಂಬರ್ದರ್ʼ ಪ್ರಶಸ್ತಿ
ಕಲಬುರಗಿ: ಕಲಬುರಗಿಯ ಹಿರಿಯ ಪತ್ರಕರ್ತ ಅಜೀಜುಲ್ಲಾ ಸರ್ಮಸ್ತ ಅವರನ್ನು ಹೈದರಾಬಾದಿನ ರಾಜ್ಯಮಟ್ಟದ “ಮೌಲಾನಾ ಅಬುಲ್ ಕಲಾಂ ಆಜಾದ್ ಅಲಂಬರ್ದರ್ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕದ ಏಕೈಕ ಸಾಹಿತ್ಯಿಕ ಮತ್ತು ಪತ್ರಿಕೋದ್ಯಮ ವ್ಯಕ್ತಿಯಾಗಿ ಅಜೀಜುಲ್ಲಾ ಸರ್ಮಸ್ತ ಅವರು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಉಳಿದ ಎಲ್ಲಾ ಪ್ರಶಸ್ತಿ ಪುರಸ್ಕೃತರು ತೆಲಂಗಾಣ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ಡಿ.27 ರಂದು ಶನಿವಾರ ಸಂಜೆ 7 ಗಂಟೆಗೆ ಹೈದರಾಬಾದಿನ ಉರ್ದು ಘರ್ ಮುಘಲ್ಪುರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಹೈದರಾಬಾದ್ ನ ಬಜ್ಮ ಇಲ್ಮ್ ಹಾಗೂ ಅದಬ್ ನ ವತಿಯಿಂದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಸಂಸ್ಥೆಯ ಅಧ್ಯಕ್ಷ ಡಾ.ನಾದರ್ ಅಲ್-ಮಸ್ದೋಸಿ ಅವರು ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ. ಹೈದ್ರಾಬಾದಿನ ಉಸ್ಮಾನಿಯಾ ಯುವರ್ಸಿಟಿ ಉರ್ದು ವಿಭಾಗದ ಮಾಜಿ ಅಧ್ಯಕ್ಷ ಪ್ರೊಫೆಸರ್ ಮಜೀದ್ ಬೇದಾರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Bengaluru | ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಖಂಡಿಸಿ ಪ್ರತಿಭಟನೆ
ಬೆಂಗಳೂರು : ಲಿಂಗಾಯತ ಯುವತಿ ಮಾನ್ಯ ಹಾಗೂ ದಲಿತ ಯುವಕ ವಿವೇಕಾನಂದ ಮದುವೆಯಾಗಿರುವುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆಯನ್ನು ಖಂಡಿಸಿ, ಸಮಾನ ಮನಸ್ಕ-ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಹೋರಾಟಗಾರ್ತಿ ಕೆ.ಎಸ್.ವಿಮಲಾ, ನಮಗೆ ಇಷ್ಟಪಟ್ಟ ವ್ಯಕ್ತಿಯನ್ನು ಮದುವೆಯಾಗಿ ಬದುಕುವ ಸ್ವಾತಂತ್ರ್ಯ ಕೂಡ ಇಲ್ಲದಿರುವಂತಹ ಸ್ವತಂತ್ರ ಭಾರತದಲ್ಲಿ ನಾವು ಇದ್ದೇವೆ. ಡಾ.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ಯಾವ ಜಾತಿ, ಲಿಂಗ, ಧರ್ಮ ಯಾವುದೇ ತಾರತಮ್ಯ ಇಲ್ಲದ ಸಮಾನವಾದ ಘನತೆಯ ಬದುಕುವ ಅಧಿಕಾರವನ್ನು ಖಚಿತಪಡಿಸಿದೆ. ಆದರೆ ಇವತ್ತು ಆಗುತ್ತಿರುವುದು ಏನು? ಎಂದು ಪ್ರಶ್ನಿಸಿದರು. ಶ್ರೇಣೀಕೃತ ವ್ಯವಸ್ಥೆಯನ್ನು ಬೇಡ ಎಂದು ಹೇಳುತ್ತಿರುವ ಈ ಸಂದರ್ಭದಲ್ಲಿ, ಬ್ರಾಹ್ಮಣ್ಯವನ್ನು ಕಾಲಲ್ಲಿ ಒದ್ದು, ಅದರಿಂದ ಹೊರಗೆ ಬಸವಣ್ಣ ಮಾಡಿರುವ ಲಿಂಗಾಯತ ಧರ್ಮಿಯರು ಎಂದು ತಾವು ಹೇಳಿಕೊಂಡು ಬಸವಣ್ಣ ಅವರಿಗೆ ಅವಮಾನ ಮಾಡುವ ಕೆಲಸ ಮಾಡಲಾಗಿದೆ. ಯುವತಿ ಮಾನ್ಯ ಹಾಗೂ ಗರ್ಭದಲ್ಲಿರುವ ಮಗುವಿನ ಜೀವ ತೆಗೆದಿರುವುದು ಲಿಂಗಾಯತ ಧರ್ಮಕ್ಕೆ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು. ದಲಿತ ಸಂಘರ್ಷ ಸಮಿತಿಯ ಪ್ರದಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ನೂರು ವರ್ಷ ತುಂಬಿರುವ ನೋಂದಣಿ ಇಲ್ಲದ ಸಂಸ್ಥೆ ದೇಶವನ್ನು ಗುತ್ತಿಗೆ ಹಿಡಿದಿದೆ. ಹಿಂದೂ ಧರ್ಮದಲ್ಲಿರುವ ಹೆಣ್ಣುಮಕ್ಕಳು ಅದರಲ್ಲಿನ ಕಟ್ಟುಪಾಡುಗಳಿಂದ ಹೊರ ಬರಬಾರದು ಎಂಬ ಮಾತನ್ನು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದರು. ಈ ರೀತಿಯ ಎಚ್ಚರಿಕೆಯನ್ನು ಅವರು ಆಗಾಗ ಕೊಡುತ್ತಿದ್ದಾರೆ. ಒಟ್ಟಾರೆ ಈ ದೇಶದಲ್ಲಿ ಹಿಂದೆ ಸೀತೆಯನ್ನು ಸುಟ್ಟು ಹಾಕಿದಂತೆ, ಬಹಿರಂಗವಾಗಿ ದ್ರೌಪದಿಯ ವಸ್ತ್ರಾಪಹರಣ ಮಾಡಿದಂತೆ ಇವತ್ತು ಬೇರೆ ಬೇರೆ ಸ್ವರೂಪಗಳಲ್ಲಿ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕರ್ನಾಟಕ ಮಹಿಳಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಮಾತನಾಡಿ, ಜಾತಿ- ಧರ್ಮದ ಹೆಸರಿನಲ್ಲಿ ನಮ್ಮ ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿರುವುದು ಖಂಡನೀಯ. ನಾವು ಯಾರೂ ಯಾವುದೇ ಧರ್ಮ, ಜಾತಿ, ಲಿಂಗದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕುವುದಿಲ್ಲ. ಈ ರೀತಿಯ ಮರ್ಯಾದೆಗೇಡು ಹತ್ಯೆ ಘಟನೆಗಳು ಮುಂದೆ ಆಗಬಾರದು. ಪರಿಹಾರ ನೀಡಿದರೆ ಜೀವ ಹಿಂದೆ ಬರುವುದಿಲ್ಲ ಎಂದು ಹೇಳಿದರು. ಹೋರಾಟವನ್ನು ನಾವು ಮುಂದುವರಿಸೋಣ. ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುತ್ತೇನೆ. ಮರ್ಯಾದೆಗೇಡು ಹತ್ಯೆಗಳನ್ನು ತಡೆಯಲು ರಾಜ್ಯದಲ್ಲಿ ಒಂದು ಕಾನೂನು ತರಬೇಕು. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸೋಣ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಹೋರಾಟಗಾರರಾದ ಬಸವರಾಜ ಕೌತಾಳ್, ಹುಲಿಕುಂಟೆ ಮೂರ್ತಿ, ಲೇಖಕಿ ದು.ಸರಸ್ವತಿ, ಆರ್.ಸುನಂದಮ್ಮ, ಉಮಾದೇವಿ, ವಕೀಲ ವಿನಯ್ ಶ್ರೀನಿವಾಸ್, ಮೈತ್ರೇಯಿ, ಕೆ.ವೈ.ನಾರಾಯಣಸ್ವಾಮಿ, ನಾಗವೇಣಿ ಮತ್ತಿತರರು ಹಾಜರಿದ್ದರು. ಮರ್ಯಾದೆಗೇಡು ಹತ್ಯೆ ತಡೆಗೆ ಕಾಯ್ದೆ ರೂಪಿಸುವಂತೆ ಆಗ್ರಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ಮೇಣದಬತ್ತಿ ಹಚ್ಚಿ ಮರ್ಯಾದೆಗೇಡು ಹತ್ಯೆಯನ್ನು ಖಂಡಿಸಿ, ರಾಜ್ಯ ಸರಕಾರ ಮರ್ಯಾದೆಗೇಡು ಹತ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ಸಮಗ್ರ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಪ್ರಮುಖ ಹಕ್ಕೊತ್ತಾಯಗಳು : ಮಾನ್ಯ ಹಾಗೂ ವಿವೇಕಾನಂದ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ವಿವೇಕಾನಂದ ಮತ್ತು ಅವರ ಕುಟುಂಬಕ್ಕೆ ಭದ್ರತೆ, ಘನತೆಯಿಂದ ಬದುಕುವ ಹಕ್ಕನ್ನು ಖಾತ್ರಿಪಡಿಸಲು ರಕ್ಷಣೆ ಒದಗಿಸಬೇಕು. ವಿವೇಕಾನಂದ ಅವರಿಗೆ ಸರಕಾರಿ ಉದ್ಯೋಗ ಒದಗಿಸಬೇಕು. ಸರಕಾರ ಪ್ರಾಮಾಣಿಕವಾದ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ನಡೆಸಬೇಕು. ಹತ್ಯೆಯನ್ನು ಯೋಜಿಸಿದ, ಅದರಲ್ಲಿ ಭಾಗಿಯಾದ ಅಥವಾ ಅದಕ್ಕೆ ನೆರವಾದವರೂ ಸೇರಿದಂತೆ ಎಲ್ಲಾ ತಪ್ಪಿತಸ್ಥರಿಗೂ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರಕಾರವು ಸಮಗ್ರ ಕಾಯಿದೆಯನ್ನು ರೂಪಿಸಲು, ಸಾರ್ವಜನಿಕ ಸಂವಾದಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಸರಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾನಿರತರು ಹಕ್ಕೊತ್ತಾಯ ಮಂಡಿಸಿದರು.
ಜೇವರ್ಗಿ | ಗ್ಯಾರೆಂಟಿ ಅನುಷ್ಠಾನ ಸಮಿತಿಗೆ ಆಯ್ಕೆಯಾದ ಸದಸ್ಯರಿಗೆ ಸನ್ಮಾನ
ಕಲಬುರಗಿ: ಜೇವರ್ಗಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾಗಿ ನೇಮಕೊಂಡಿರುವ ಬಸವರಾಜ ದೇವದುರ್ಗ ಹಾಗೂ ರಾಜು ಗುತ್ತೇದಾರ್, ಸಂತೋಷ್ ಜೈನಾಪುರ ಅವರನ್ನು ಆಂದೋಲ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಆಂದೋಲ ಗ್ರಾಮದ ಕಾಂಗ್ರೆಸ್ ಯುವ ಮುಖಂಡರಾದ ಭಾಗರೆಡ್ಡಿ ಹೋತಿನಮಡು, ಶರಣಯ್ಯ ಹಿರೇಮಠ, ಘನನಿಂಗಯ್ಯ ಗದ್ದಗಿ, ಶಾಂತಪ್ಪ ಸಾಹು ಅಂಗಡಿ, ಗೋವಿಂದ ರೆಡ್ಡಿ, ನಬಿ ಕುಕನೂರ, ಶಿವಶರಣಪ್ಪ ಬಳಬಟ್ಟಿ, ಅಯ್ಯಣ್ಣ ಶಹಾಪೂರ, ಹುಸೇನಪ್ಪ ಗುಂಡಳಿ ಮತ್ತಿತರರು ಇದ್ದರು.
ಕಲಬುರಗಿ | ಪುಸ್ತಕ ಓದುವ ಸಂಸ್ಕೃತಿ ಬೆಳೆಸಿ : ಡಾ.ಮಾನಸ
ಕಲಬುರಗಿ : ಪ್ರತಿಯೊಬ್ಬರೂ ಪುಸ್ತಕ ಓದುವ ಸಂಸ್ಕೃತಿ ಬೆಳೆಸಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಏರ್ಪಡಿಸಿದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಜಿಲ್ಲಾ ಜಾಗೃತ ಸಮಿತಿಗೆ ನೇಮಕಗೊಂಡ ಸದಸ್ಯರಿಗೆ ನೇಮಕಾತಿ ಅರ್ಹತಾ ಪತ್ರ ವಿತರಿಸಿ ಮಾತನಾಡಿದರು.ರು̤ ಪ್ರಾಧಿಕಾರದಿಂದ ಹೊಸ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಮನೆಗೊಂದು ಗ್ರಂಥಾಲಯ ಸ್ಥಾಪಿಸುವ ಮೂಲಕ ಓದುವ ಅಭಿರುಚಿ ಬೆಳೆಸುವ ಮೂಲಕ ಸುಸಂಸ್ಕೃತ ಸಮಾಜ ಕಟ್ಟುವುದಾಗಿದೆ. ಜಿಲ್ಲೆಯಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿಸಲು ಪ್ರತಿ ಜಿಲ್ಲೆಯಲ್ಲಿ ಸದಸ್ಯರನ್ನು ಜಾಗೃತ ಸಮಿತಿಗೆ ನೇಮಿಸಲಾಗಿದೆ. ಈ ಸಮಿತಿ ಜತೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗ ತುಂಬಾ ಮುಖ್ಯವಾಗಿದೆ ಎಂದರು. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿದರು. ಕೇಂದ್ರ ಕಸಾಪ ಪ್ರತಿನಿಧಿ ಸಯ್ಯದ್ ನಝಿರುದ್ದಿನ್ ಮುತ್ತವಲ್ಲಿ, ಪ್ರಾಧಿಕಾರದ ಶ್ರೀನಿವಾಸ ಕರಿಯಪ್ಪ, ಸಾಹಿತಿ ಸಿ.ಎಸ್.ಆನಂದ, ಹಿರಿಯ ಕವಿ ಎಂ.ಎನ್.ಸುಗಂಧಿ, ಶಾರದ ಗುಮ್ಮೇದಾರ್, ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ದರ್ಮರಾಜ ಜವಳಿ, ರಾಜೇಂದ್ರ ಮಾಡಬೂಳ, ಶಿವಾನಂದ ಸುರವಸೆ ಸೇರಿದಂತೆ ಅನೆಕರು ಹಾಜರಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಯ ಜಿಲ್ಲಾ ಜಾಗೃತ ಸಮಿತಿಗೆ ಶರಣಬಸಪ್ಪ ನರೂಣಿ, ಸುನೀತಾ ರೆಡ್ಡಿ, ಮಹಾನಂದಾ ಹುಲಿ, ರಾಜಶೇಖರ ಚೌದ್ರಿ ಅವರನ್ನು ನೇಮಕಾತಿ ಪತ್ರ ನೀಡಿ ಸತ್ಕರಿಸಿದರು.
ಕೆಪಿಸಿಎಲ್: 622 ಹುದ್ದೆಗೆ ಮರು ಪರೀಕ್ಷೆ
ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಡಿ.27 ಮತ್ತು 28ರಂದು ಮರು ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಶುಕ್ರವಾರ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ಕೆಮಿಕಲ್ ಸೂಪರ್ ವೈಸರ್, ವಿವಿಧ ವಿಭಾಗಗಳ ಸಹಾಯಕ ಎಂಜಿನಿಯರ್ಗಳ ನೇಮಕಕ್ಕೆ ಡಿ.27ರಂದು ನಗರದ 17 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಒಟ್ಟು 8,622 ಮಂದಿ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ವಿವರಿಸಿದ್ದಾರೆ. ಡಿ.28ರಂದು ಕೆಮಿಸ್ಟ್, ವಿವಿಧ ವಿಭಾಗಗಳ ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ನಗರದ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 10,136 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಹಾಗೆಯೇ ಡಿ.28ರಂದು ಕನ್ನಡ ಭಾಷಾ ಪರೀಕ್ಷೆಯೂ ನಡೆಯಲಿದೆ ಎಂದು ಅವರು ಹೇಳಿದರು.
ಕಲಬುರಗಿ | ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ರಾಜ್ಯಮಟ್ಟದಲ್ಲಿ ಮೆರೆಸಲಿ : ಕುಲಪತಿ ಡಾ.ಎಂ.ಹನುಮಂತಪ್ಪ
ಕಲಬುರಗಿ: ಯುವಜನೋತ್ಸವವು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಮಹತ್ವದ ವೇದಿಕೆಯಾಗಿದೆ. ಪಠ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗಲೇ ಸಂಪೂರ್ಣ ವ್ಯಕ್ತಿತ್ವ ವಿಕಸನ ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಗುರುತಿಸಿಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗುವಂತೆ ಶ್ರಮಿಸಬೇಕು ಎಂದು ರಾಯಚೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಹನುಮಂತಪ್ಪ ಅವರು ಕರೆ ನೀಡಿದರು. ಶುಕ್ರವಾರ ಕೃಷಿ ಮಹಾವಿದ್ಯಾಲಯ, ಕಲಬುರಗಿಯಲ್ಲಿ ಆಯೋಜಿಸಲಾದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ, ರಾಯಚೂರು 16ನೇ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ 2025–26 ‘ಕಲಾ ಸಂಗಮ್’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಯುವಜನೋತ್ಸವದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸ, ನಾಯಕತ್ವ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತವೆ. ಪ್ರತಿಯೊಂದು ತಂಡದಿoದ 22 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ತೀರ್ಪುಗಾರರು ನಿಜವಾದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು ಎಂದರು. ಈ ಯುವಜನೋತ್ಸವದಲ್ಲಿ ಏಳು ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು, ದೇಶಭಕ್ತಿ ಗೀತೆ, ಸುಗಮ ಸಂಗೀತ, ಸಮೂಹ ಗಾಯನ, ಏಕಾಂಕ ನಾಟಕ, ಭಿತ್ತಿ ಚಿತ್ರ, ವ್ಯಂಗ್ಯಚಿತ್ರ ರಚನೆ, ಚರ್ಚಾ ಸ್ಪರ್ಧೆ, ಆಶುಭಾಷಣ, ಏಕಪಾತ್ರಾಭಿನಯ, ಸ್ಥಳದಲ್ಲೇ ಚಿತ್ರ ಬಿಡಿಸುವುದು ಹಾಗೂ ಮಣ್ಣಿನಿಂದ ಆಕೃತಿ ರಚನೆ ಸೇರಿದಂತೆ ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿವೆ. ಕಾರ್ಯಕ್ರಮಕ್ಕೆ ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ಖ್ಯಾತ ಹಾಸ್ಯ ಕಲಾವಿದ ವೈಜನಾಥ ಬಿರಾದರ ಅವರು ಡೊಳ್ಳು ಭಾರಿಸುವ ಮೂಲಕ ಯುವಜನೋತ್ಸವಕ್ಕೆ ಚಾಲನೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಸದಸ್ಯ ಡಾ. ಸಂದೀಪ್ ಬಿ.ಮಾಳಗಿ, ಡೀನ್ (ವಿದ್ಯಾರ್ಥಿ ಕ್ಷೇಮಾಭಿವೃದ್ಧಿ) ಡಾ. ಯು. ಸತೀಶಕುಮಾರ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಕೃಷಿ ವಿಶ್ವವಿದ್ಯಾಲಯದ ಶಿವಶರಣಪ್ಪ ಬಿ.ಗೌಡ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಘನವೈರಾಗ್ಯ ಚಕ್ರವರ್ತಿ ಘನಮಠ ಶಿವಯೋಗಿಗಳಿಗೆ ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು. ವಿವಿಧ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ವೇದಿಕೆ ಮೇಲೆ ಮಲ್ಲಿಕಾರ್ಜುನ ಡಿ.ಮಲ್ಲೇಶ ಕೋಲಿಮಿ, ರಾಯಚೂರು ಗೌರವಾನ್ವಿತ ಸದಸ್ಯರುಗಳಾದ ವ್ಯವಸ್ಥಾಪನಾ ಮಂಡಳಿ ಕೃಷಿ ವಿಶ್ವವಿದ್ಯಾಲಯ ಸಹ ಶಿಕ್ಷಣ ನಿರ್ದೇಶಕ ಡಾ.ಗುರುರಾಜ ಸುಂಕದ, ಸಂಶೋಧನಾ ನಿರ್ದೇಶಕರ ಡಾ.ಎ.ಅಮರೇಗೌಡ, ಡಾ.ಶ್ಯಾಮರಾವ ಜಹಾಗೀರದಾರ, ಕೃಷಿ ಮಹಾವಿದ್ಯಾಲಯ ಹಗರಿ ಡಾ.ರವಿಶಂಕರ, ರಾಯಚೂರು ಆಡಳಿತಾಧಿಕಾರಿ ಡಾ.ಬಿ.ದೇಶಮಾನ್ಯ, ಡಾ.ಶಿವಶರಣಪ್ಪ ಬಿ.ಗೌಡಪ್ಪ, ಸೇರಿದಂತೆ ಉಪನ್ಯಾಸಕರು, ಶಿಕ್ಷಕೇತರ ಸಿಬ್ಬಂದಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಶಿಕ್ಷಕೇತರ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Udupi | ಕೊರಗರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹ
ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ 12ನೇ ದಿನಕ್ಕೆ
ಬಡ ಕುಟುಂಬಗಳಿಗೆ ಸರಕಾರ ತಕ್ಷಣ ಪುನರ್ವಸತಿ ಕಲ್ಪಿಸಬೇಕು : ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್
ಯಲಹಂಕದಲ್ಲಿ ತೆರವು ಕಾರ್ಯಾಚರಣೆಗೆ ಕಳವಳ ವ್ಯಕ್ತಪಡಿಸಿದ ಇಂಡಿಯನ್ ಗ್ರ್ಯಾಂಡ್ ಮುಫ್ತಿ
ರಾಜ್ಯದಲ್ಲಿ 64 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪಲ್ಸ್ ಪೋಲಿಯೋ ವಿತರಣೆ
ಬೆಂಗಳೂರು : ರಾಜ್ಯದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದ್ದು, ರಾಜ್ಯಾದ್ಯಂತ 64,25,399 ಅರ್ಹ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಗಳನ್ನು ಹಾಕಲಾಗಿದೆ. ರಾಜ್ಯ ಸರಕಾರವು ರಾಜ್ಯದಲ್ಲಿ 62,40,114 ಮಕ್ಕಳಿಗೆ ಪಲ್ಸ್ ಪೋಲಿಯೋ ನೀಡುವ ಗುರಿ ಇಟ್ಟುಕೊಂಡಿತ್ತು. ಈ ಮೂಲಕ ಶೇ.103ರಷ್ಟು ಗುರಿ ಸಾಧಿಸಲಾಗಿದೆ. ಶುಕ್ರವಾರದಂದು ಆರೋಗ್ಯ ಇಲಾಖೆಯು ಅಂಕಿ-ಅಂಶಗಳನ್ನು ಪ್ರಕಟಿಸಿದ್ದು, ಬಾಗಲಕೋಟೆ 2,25,795 ಬಳ್ಳಾರಿ 2,00,968 ಗ್ರೇಟರ್ ಬೆಂಗಳೂರು ಪ್ರಾಧಿಕಾರ 11,65,169 ಬೆಳಗಾವಿ 5,02,921, ಬೆಂಗಳೂರು ಗ್ರಾಮಾಂತರ 1,11,469 ಬೆಂಗಳೂರು ನಗರ ಜಿಲ್ಲೆಯಲ್ಲಿ 2,12,669 ಮಕ್ಕಳಿಗೆ ಪಲ್ಸ್ ಪೋಲಿಯೋ ನೀಡಲಾಗಿದೆ ಎಂದು ಮಾಹಿತಿ ನೀಡಿದೆ. ಬೀದರ್ 2,13,213 ಚಾಮರಾಜನಗರ 60,221, ಚಿಕ್ಕಬಳ್ಳಾಪುರ 1,05,980, ಚಿಕ್ಕಮಗಳೂರು 76,034, ಚಿತ್ರದುರ್ಗ 1,33,567 ದಕ್ಷಿಣ ಕನ್ನಡ 1,46,605 ದಾವಣಗೆರೆ 1,40,756 ಧಾರವಾಡ ಜಿಲ್ಲೆಯಲ್ಲಿ 2,09,564 ಮಕ್ಕಳಿಗೆ ಪಲ್ಸ್ ಪೋಲಿಯೋ ನೀಡಲಾಗಿದೆ. ಗದಗ 1,16,284, ಹಾಸನ 1,11,205, ಹಾವೇರಿ 1,50,842, ಕಲಬುರಗಿ 3,55,011, ಕೊಡಗು 39,601, ಕೋಲಾರ 1,66,380, ಕೊಪ್ಪಳ 1,84,628, ಮಂಡ್ಯ 1,06,100, ಮೈಸೂರು 2,33,484, ರಾಯಚೂರು 2,60,053, ರಾಮನಗರ ಜಿಲ್ಲೆಯಲ್ಲಿ 78,376 ಮಕ್ಕಳಿಗೆ ಪಲ್ಸ್ ಪೋಲಿಯೋ ನೀಡಲಾಗಿದೆ. ಶಿವಮೊಗ್ಗ 1,39,919, ತುಮಕೂರು 1,94,888, ಉಡುಪಿ 65,343, ಉತ್ತರ ಕನ್ನಡ 98,135, ವಿಜಯಪುರ 2,99,564 ವಿಜಯನಗರ 1,34,895 ಯಾದಗಿರಿ ಜಿಲ್ಲೆಯಲ್ಲಿ 1,67,647 ಮಕ್ಕಳಿಗೆ ಪಲ್ಸ್ ಪೋಲಿಯೋ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯು ತಿಳಿಸಿದೆ.
ಹಂಪಿಯಲ್ಲಿ ಬೆಟ್ಟ ಏರುವಾಗ ಕೆಳಗೆ ಬಿದ್ದ ವಿದೇಶಿ ಪ್ರವಾಸಿ; 2 ದಿನ ಅಲ್ಲೇ ವಾಸ, ಸಾವಿನ ದವಡೆಯಿಂದ ಪಾರಾಗಿದ್ದೇ ಪವಾಡ
ಹಂಪಿಯ ಅಷ್ಟಭುಜ ಸ್ನಾನದ ಕೊಳದ ಸಮೀಪ ಗುಡ್ಡ ಹತ್ತಲು ಹೋಗಿ ಫ್ರಾನ್ಸ್ ಪ್ರವಾಸಿಗರೊಬ್ಬರು ಕಾಲು ಜಾರಿ ಬಿದ್ದಿದ್ದ ಘಟನೆ ಬೆಳಕಿಗೆ ಬಂದಿದೆ. ನಿರ್ಜನ ಪ್ರದೇಶದಲ್ಲಿ ಸತತ ಎರಡು ದಿನಗಳ ಕಾಲ ನರಳಾಡಿ ಕೊನೆಗೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಲಿಗೆ ತೀವ್ರ ಪೆಟ್ಟಾಗಿ ಕದಲಲಾಗದ ಸ್ಥಿತಿಯಲ್ಲಿದ್ದ ಇವರು, ಎರಡು ದಿನಗಳ ನಂತರ ತೆವಳುತ್ತಾ ಬಾಳೆ ತೋಟಕ್ಕೆ ಬಂದಾಗ ರೈತರು ಇವರನ್ನು ಗಮನಿಸಿ ರಕ್ಷಿಸಿದ್ದಾರೆ ಎನ್ನಲಾಗಿದೆ.
Mangaluru | ಡಿ.28ರಂದು ಅಡ್ಯಾರ್ನಲ್ಲಿ ಶತಾಬ್ದಿ ಸಂದೇಶ ಯಾತ್ರೆಯ ಸಮಾರೋಪ
ಸಮಸ್ತ ಕೇಂದ್ರೀಯ ಜಂಇಯ್ಯತುಲ್ ಉಲಮಾದ ಶತಮಾನೋತ್ಸವ
ಕೇಂದ್ರಿಯ ವಿಶ್ವ ವಿದ್ಯಾನಿಲಯ : ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ, ಕಲಬುರಗಿಯಲ್ಲಿ 2026-27ನೇ ಸಾಲಿಗಾಗಿ ವಿವಿಧ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾಧ್ಯಾಪಕ ಬಸವರಾಜ್ ತಿಳಿಸಿದ್ದಾರೆ. ಶುಕ್ರವಾರ ನಗರದ ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವೇಶವನ್ನು ಎನ್ಟಿಎ-ಸಿಯುಇಟಿ ಪರೀಕ್ಷೆಯ ಮೂಲಕ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಡಿ.14 ರಿಂದ ಪ್ರಾರಂಭವಾಗಿದೆ. ಸ್ನಾತಕ ಅಂತಿಮ ಸೆಮಿಸ್ಟರ್ನಲ್ಲಿ ಓದುತ್ತಿರುವ ಮತ್ತು ಈಗಾಗಲೇ ಉತ್ತೀರ್ಣರಾಗಿರುವ ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದರು. ಅರ್ಜಿಗಳನ್ನು https://exams.nta.nic.in/cuet-pg/ ಮೂಲಕ ಸಲ್ಲಿಸಬಹುದು. ಆನ್ ಲೈನ್ ಅರ್ಜಿ ಸಲ್ಲಿಸಲು 2026ರ ಜನವರಿ 14 ಕೊನೆಯ ದಿನಾಂಕವಾಗಿದೆ. ಪ್ರವೇಶ ಪರೀಕ್ಷೆ ಮಾರ್ಚ್ ತಿಂಗಳಿನಲ್ಲಿ ನಡೆಯಲಿದ್ದು, ಮಂಗಳೂರು, ಉಡುಪಿ, ಶಿವಮೊಗ್ಗ, ಬೆಂಗಳೂರು, ಮೈಸೂರು, ಕಲಬುರಗಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಆಯೋಜಿಸಲಾಗಿದೆ ಎಂದರು. ಕೇಂದ್ರೀಯ ವಿಶ್ವ ವಿದ್ಯಾನಿಲಯ ಒದಗಿಸುವ ಕೋರ್ಸ್ಗಳ ವಿವರ ಮತ್ತು ಅವುಗಳ ಅರ್ಹತೆಯ ವಿವರಗಳನ್ನು ವಿಶ್ವ ವಿದ್ಯಾನಿಲಯದ ವೆಬ್ ಸೈಟ್ www.cuk.ac.in , https://nta.ac.in/ , https://exams.nta.nic.in/cuet-pg/ ನಲ್ಲಿ ಲಭ್ಯವಿರುತ್ತದೆ. ಭಾಷಾ ಪ್ರಶ್ನೆ ಪತ್ರಿಕೆಗಳು ಹೊರತು ಪಡಿಸಿ, ಉಳಿದ ಎಲ್ಲ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿರಲಿವೆ. ವಿದ್ಯಾರ್ಥಿಗಳು ಸಿಯುಕೆ, ಎನ್ಟಿಎ ವೆಬ್ಸೈಟ್ಗಳನ್ನು www.cuk.ac.in www.nta.ac.in , https://exams.nta.nic.in/cuet-pg/ ನಿರಂತರವಾಗಿ ನೋಡುತ್ತಿರಬೇಕು ಎಂದು ಬಸವರಾಜ್ ತಿಳಿಸಿದರು. ಲಭ್ಯವಿರುವ ಸ್ನಾತಕೋತ್ತರ ಕೋರ್ಸ್ಗಳು: ಎಂಎ: ಇಂಗ್ಲಿಷ್, ಹಿಂದಿ, ಕನ್ನಡ, ಭಾಷಾಶಾಸ್ತ್ರ, ಜಾನಪದ ಮತ್ತು ಬುಡಕಟ್ಟು ಅಧ್ಯಯನ, ಅರ್ಥಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ., ಎಂಎಸ್ಸಿ : ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಭೂಗೋಳ, ಭೂವಿಜ್ಞಾನ, ಸನ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಅಂಕಿಅಂಶಗಳು ಮತ್ತು ದತ್ತಾಂಶ ವಿಶ್ಲೇಷಣೆ, ಮನೋವಿಜ್ಞಾನ, ಜೆನೆಟಿಕ್ಸ್ ಮತ್ತು ಜೀನೋಮಿಕ್ಸ್. ವಾಣಿಜ್ಯ ಮತ್ತು ನಿರ್ವಹಣೆ: ಎಂಕಾಂ (ಬ್ಯಾಂಕಿಂಗ್ ಮತ್ತು ಹಣಕಾಸು ತಂತ್ರಜ್ಞಾನ), ಎಂಕಾಂ, ಎಂಬಿಎ, ಎಂಬಿಎ (ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ), ಸಮಾಜಕಾರ್ಯ, ಎಂಸಿಎ, ಶಿಕ್ಷಣ ಮತ್ತು ಕಾನೂನು: ಎಲ್ಎಲ್ಎಂ, ಬಿಎಡ್, ಎಂಎಡ್, ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ: ಎಂಟೆಕ್ (ಪವರ್ ಅಂಡ್ ಎನರ್ಜಿ ಇಂಜಿನಿಯರಿಂಗ್), ಎಂಟೆಕ್ (ಆರ್ಎಫ್ ಮತ್ತು ಮೈಕ್ರೋವೇವ್ ಇಂಜಿನಿಯರಿಂಗ್), ಎಂಟೆಕ್ (ಎಐ ಮತ್ತು ಎಂಎಲ್), ಎಂಪಿಎ ಹಿಂಸ್ತುಸ್ಥಾನಿ ಗಾಯನ, ಎಂಪಿಎ ಇನ್ಸ್ಟ್ರುಮೆಂಟಲ್, ಮಾಸ್ಟರ್ ಆಪ್ ವಿಷುಯಲ್ ಆಟ್ರ್ಸ್ ಪೆಂಟಿಂಗ್.
ಅರಾವಳಿ ಪರ್ವತ ಶ್ರೇಣಿ: ನಿಲ್ಲದ ಅಕ್ರಮ ಗಣಿಗಾರಿಕೆ, ಕಾಂಗ್ರೆಸ್ - ಬಿಜೆಪಿ ಯಾವ ಅವಧಿಯಲ್ಲಿ ಹೆಚ್ಚು
ರಾಜಸ್ಥಾನ: ರಾಜಸ್ಥಾನದ ಅರಾವಳಿ ಪರ್ವತ ಶ್ರೇಣಿಯಲ್ಲಿ ಗಣಿಗಾರಿಕೆ ವಿಚಾರವು ಇದೀಗ ಹಲವು ಹೊಸ ಚರ್ಚೆಗಳಿಗೆ ಕಾರಣವಾಗಿದೆ. ಅರಾವಳಿ ಪರ್ವತ ಶ್ರೇಣಿಯಲ್ಲಿ ಅಕ್ರಮ ಗಣಿಗಾರಿಕೆ ಅವ್ಯಾತವಾಗಿ ನಡೆದಿದೆ ಎನ್ನುವ ವಿಚಾರವು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ರಾಜಸ್ಥಾನದಲ್ಲಿ ಕಳೆದ ಏಳು ವರ್ಷಗಳಲ್ಲಿ ಅಕ್ರಮ ಗಣಿಗಾರಿಕೆ, ಸಾಗಣೆ, ದಾಸ್ತಾನು ಇತ್ಯಾದಿಗಳಿಗೆ ಸಂಬಂಧಿಸಿದಂತೆ 7,173 ಎಫ್ಐಆರ್ಗಳು ವರದಿಯಾಗಿವೆ. ಅವುಗಳಲ್ಲಿ 4,181 ಅರಾವಳಿ
ಮಹಾರಾಷ್ಟ್ರದಲ್ಲಿ ಸ್ಥಳೀಯ ಚುನಾವಣೆ: ಜೆಡಿಎಸ್ ಪಕ್ಷದ ಐವರು ಅಭ್ಯರ್ಥಿಗಳು ಜಯ
ಬೆಂಗಳೂರು : ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ನ ಐವರು ಅಭ್ಯರ್ಥಿಗಳು(ಕೌನ್ಸಿಲರ್ ಸ್ಥಾನ) ಚುನಾಯಿತರಾಗಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಹಾರಾಷ್ಟ್ರದ ಜೆಡಿಎಸ್ ರಾಜ್ಯಾಧ್ಯಕ್ಷ ಶ್ರೀನಾಥ ಹರಿಬಾಹು ಶೇವಾಲೆ ಅವರಿಗೆ ಪತ್ರ ಬರೆದಿರುವ ಎಚ್.ಡಿ.ದೇವೇಗೌಡ, ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಆಯ್ಕೆಯಾಗಿರುವ ಐದು ಮಂದಿ ಕೌನ್ಸಿಲರ್ಗಳನ್ನು ಅಭಿನಂದಿಸಿದ್ದಾರೆ. ಕೊಲ್ಲಾಪುರ ಜಿಲ್ಲೆಯ ಗಧಿಂಗ್ಲಾಜ್ ಪರಿಷತ್ನಲ್ಲಿ ಜೆಡಿಎಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಸಂಜಯ್ ರೋಟೆ, ಸ್ವಾತಿ ತೈಕೋರಿ, ನಿತಿನ್ ದೇಸಾಯಿ ಹಾಗೂ ಪೂರ್ಣಾ ಪರಿಷತ್ನಲ್ಲಿ ಸ್ಪರ್ಧಿಸಿದ್ದ ಪ್ರಕಾಶ್ ಕಾಂಬ್ಳೆ, ರೇಖಾ ಖಾರ್ಗ್ಖರಾತಿ ಅವರು ಚುನಾಯಿತರಾಗಿದ್ದಾರೆ. ಇದು ಪಕ್ಷ ಮಹಾರಾಷ್ಟ್ರದಲ್ಲಿ ಬಲಗೊಳ್ಳುತ್ತಿರುವುದರ ಸೂಚನೆಯಾಗಿದ್ದು, ಈ ಗೆಲುವು ಒಂದು ಮೈಲಿಗಲ್ಲಾಗಿದೆ. ಮುಂಬರುವ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ಹಾಗೂ ಭವಿಷ್ಯದ ಚುನಾವಣೆಗಳಲ್ಲಿ ಇನ್ನೂ ಹೆಚ್ಚಿನ ಸ್ಥಾನಗಳನ್ನು ಜೆಡಿಎಸ್ ಗಳಿಸುವ ವಿಶ್ವಾಸವಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಮರ್ಯಾದಾ ಹತ್ಯೆ ವಿರುದ್ಧ ಕಠಿಣ ಕಾಯ್ದೆ ರೂಪಿಸುವಂತೆ ಒತ್ತಾಯಿಸಿ ಸಿಎಂಗೆ ಹೋರಾಟಗಾರರು, ಸಾಹಿತಿಗಳಿಂದ ಪತ್ರ
ಬೆಂಗಳೂರು : ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ, ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು ‘ಘೋರ ಅಪರಾಧ’ ಎಂದು ಪರಿಗಣಿಸಬೇಕು ಮತ್ತು ಇಂತಹ ಅಪರಾಧಗಳನ್ನು ನಿಗ್ರಹಿಸಲು ಸರಕಾರ ಕಠಿಣ ಕಾನೂನ್ನು ರೂಪಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಹೋರಾಟಗಾರರು, ಸಾಹಿತಿಗಳು, ಪತ್ರಕರ್ತರು, ಸೇರಿದಂತೆ ಹಲವರು ಮುಖ್ಯಮಂತ್ರಿ ಸಿದ್ದರಾಮ್ಯಯಗೆ ಪತ್ರ ಬರೆದಿದ್ದಾರೆ. ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಸನತ್ ಕುಮಾರ್ ಬೆಳಗಲಿ, ಎಂ.ಎನ್.ಅಹೋಬಳಪತಿ, ರಘೋತ್ತಮ ಹೊ.ಬ, ಸುಭಾಸ್ ಹೂಗಾರ್, ಎನ್.ರವಿಕುಮಾರ್, ಸಾಹಿತಿಗಳಾದ ಬಸವರಾಜ ಸೂಳಿಬಾವಿ, ವಿಕಾಸ್ ಮೌರ್ಯ, ನಳಿನ ಚಿಕ್ಕಮಗಳೂರು, ಹೋರಾಟಗಾರರಾದ ಮಹಾಂತೇಶ್ ಕೆ., ಜ್ಯೋತಿ ಅನಂತಸುಬ್ಬರಾವ್, ಅನಂತನಾಯಕ್, ವಿ.ಎಲ್.ನರಸಿಂಹ ಮೂರ್ತಿ, ಕಲಾವಿದರಾದ ಡಾ.ಎಂ.ಗಣೇಶ್, ಹಾದಿಮನಿ, ವಕೀಲ ಕೆ.ಪಿ.ಶ್ರೀಪಾಲ್ ಸೇರಿದಂತೆ ನೂರಾರು ಸಾಮಾಜಿಕ ಕಾರ್ಯಕರ್ತರು ಪತ್ರದಲ್ಲಿ ಸಹಿ ಹಾಕಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದೆ. ಇದೊಂದು ಆತಂಕಕಾರಿ ಬೆಳವಣಿಗೆ. ಇದೊಂದು ಜಾತಿ ವಿನಾಶಕ್ಕೆ ಅಥವಾ ಜಾತಿ ಆಧಾರಿತ ತಾರತಮ್ಯ, ಹಿಂಸೆಗಳಿಗೆ ಅಂತರ್ ಜಾತಿ ವಿವಾಹಗಳು ಪರಿಹಾರ ಎಂಬುದನ್ನು ಮಹಾನ್ ಮಾನವತಾವಾದಿಗಳಾದ ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಕರಾರುವಕ್ಕಾಗಿ ಪ್ರತಿಪಾದಿಸಿದ್ದರು ಮತ್ತು ಅದನ್ನು ಅನುಷ್ಠಾನಗೊಳಿಸುವಲ್ಲಿ ತಮ್ಮ ಬದುಕನ್ನು ಸಮರ್ಪಿಸಿಕೊಂಡವರು ಎಂದು ಹೇಳಿದ್ದಾರೆ. ವಿಪರ್ಯಾಸವೆಂದರೆ ಅಂತರ್ ಜಾತಿ ವಿವಾಹಗಳನ್ನು ಒಪ್ಪಲಾರದ ಜಾತೀಯತೆಯ ರೋಗಪೀಡಿತ ಮನೋಸ್ಥಿತಿ ವಿಜ್ಞಾನ ಯುಗದಲ್ಲೂ ಮುಂದುವರೆದಿದೆ ಮತ್ತು ಹೆಚ್ಚಾಗುತ್ತಲೇ ಇದೆ. ಇದು ಸಮಸಮಾಜ ನಿರ್ಮಾಣದ ಎಲ್ಲ ಬಗೆಯ ಮಾನವೀಯ ಪ್ರಯತ್ನಗಳನ್ನು ಹತ್ತಿಕ್ಕಿಬಿಡುತ್ತವೆ. ಇಂತಹ ಮನೋಸ್ಥಿತಿ ಎಷ್ಟೊಂ ದು ಕ್ರೌರ್ಯವನ್ನು ಮೆರೆಯುತ್ತಿದೆ ಎಂದರೆ, ಅಂತರ್ ಜಾತಿ ವಿವಾಹಗಳಾದ ಮಕ್ಕಳನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ ಎಂದು ಬೇಸರ ವ್ಯಕ್ತಪಡಿದ್ದಾರೆ. ಇದಕ್ಕೆ ‘ಮರ್ಯಾದ ಹತ್ಯೆ’ ಎಂಬ ಹೆಸರಿನಿಂದಲೂ ಕರೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಾತಿವಾದಿಗಳು ಇಂತಹ ಕ್ರೌರ್ಯವನ್ನೇ ಸಾಮಾಜಿಕ ಘನತೆ, ಮೌಲ್ಯ ಎಂಬಂತೆ ಪ್ರತಿಷ್ಠಾಪಿಸುವ ಅಪಾಯವೂ ಇದೆ. ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ, ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು ‘ಘೋರ ಅಪರಾಧ’ ಎಂದು ಪರಿಗಣಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸರಕಾರ ಇಂತಹ ಘೋರ ಅಪರಾಧಗಳನ್ನು ನಿಗ್ರಹಿಸಲು ಉಗ್ರ ಕಾನೂನನ್ನು ರೂಪಿಸಿ ಜಾರಿಗೆ ತರಬೇಕು. ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಾ ಹತ್ಯೆ ಹೆಸರಿನ ಜಾತಿ ಭಯೋತ್ಪಾದನೆಗೆ ಬಲಿಯಾದ ‘ಮಾನ್ಯ’ಳ ಹೆಸರಲ್ಲಿ ಉಗ್ರ ಶಿಕ್ಷೆಯ ಕಾನೂನು ರೂಪಿಸಬೇಕಾಗಿದೆ. ಈ ಉಗ್ರ ಶಿಕ್ಷೆಯ ಕಾಯ್ದೆಗೆ ‘ಮಾನ್ಯ’ ಹೆಸರಿಡುವುದು ಇದುವರೆಗೂ ಈ ರಾಜ್ಯದಲ್ಲಿ ಮರ್ಯಾದ ಹತ್ಯೆಗೆ ಬಲಿಯಾದ ಜೀವಗಳನ್ನು ಪ್ರತಿನಿಧಿಸುವಂತಾಗಲಿ ಎಂದು ಸಾಹಿತಿಗಳು, ಹೋರಾಟಗಾರರು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ಅಹಿಂದ ನಾಯಕ ಆಗಿದ್ದರೆ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದಿತ್ತು : ಎಚ್.ಡಿ.ದೇವೇಗೌಡ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ನಾಯಕ ಆಗಿದ್ದರೆ, ಎಲ್ಲಿ ಬೇಕಾದರೂ ಸ್ಪರ್ಧಿಸಬಹುದಿತ್ತು. ಆದರೆ, ನಿಮ್ಮ ಮಗ ಬಿಟ್ಟ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕಾಯಿತು ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದ್ದಾರೆ. ಶುಕ್ರವಾರ ನಗರದ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೈಸೂರಿನಲ್ಲಿ ಜ.25ಕ್ಕೆ ಅಹಿಂದ ಸಮಾವೇಶ ನಡೆಸುವ ವಿಚಾರ ಗೊತ್ತಾಗಿದೆ. ಆದರೆ, ನೀವು(ಸಿದ್ದರಾಮಯ್ಯ) ಅಹಿಂದ ನಾಯಕ ಎಂದಾದರೆ ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದಿತ್ತು. ಏಕೆ ನೀವು ನಿಮ್ಮ ಮಗನನ್ನು ಖಾಲಿ ಮಾಡಿಸಲಾಯಿತು ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅವರನ್ನು ಗುರುತಿಸಿದ್ದು ನಾನು ಎಂದು ಹೇಳಲ್ಲ, ಅವರೇ ಹೇಳಲಿ. ನನ್ನ ಬಗ್ಗೆ ಕಠಿಣವಾಗಿ ಏನು ಬೇಕಾದರೂ ಅವರು ಮಾತಾಡಲಿ. ಅವರ ಮಗ ಸಾವನ್ನಪ್ಪಿದಾಗ ಅವರ ಮನೆಗೆ ಹೋಗಿದ್ದೆ. ಎರಡನೆ ಮಗನ ರಾಜಕೀಯಕ್ಕೆ ಬರಬೇಕೆಂದು ಹೇಳಿದ್ದೆ. ಅವರು ಬಾದಾಮಿಯಲ್ಲಿ ನಿಂತರು. ಕೋಲಾರ, ಮೈಸೂರು, ಬಾದಾಮಿಯಿಂದಲೂ ಸ್ಪರ್ಧೆ ಮಾಡಲಾಗುತ್ತದೆ ಎಂದು ಚರ್ಚೆ ಆಯಿತು. ನೀವು ಅಹಿಂದ ನಾಯಕರು. ಆದರೂ ಒಂದು ಕ್ಷೇತ್ರಕ್ಕೆ ಹುಡುಕಾಟ ನಡೆಸಲಾಯಿತು ಎಂದು ಅವರು ಉಲ್ಲೇಖಿಸಿದರು.
ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ನಗರ ಪೊಲೀಸ್ ಆಯುಕ್ತರು ಸೂಕ್ಷ್ಮ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರೊಂದಿಗೆ ಸಭೆ ನಡೆಸಿ, ರಾತ್ರಿ 1 ಗಂಟೆಯವರೆಗೆ ಮಾತ್ರ ವಹಿವಾಟು ನಡೆಸುವಂತೆ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.
ಬಿಡಬ್ಲ್ಯುಎಫ್ ಅತ್ಲೀಟ್ ಗಳ ಆಯೋಗದ ಅಧ್ಯಕ್ಷೆಯಾಗಿ ಪಿ.ವಿ. ಸಿಂಧು ಆಯ್ಕೆ
ಹೊಸದಿಲ್ಲಿ, ಡಿ. 26: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಹಾಗೂ ಮಾಜಿ ವಿಶ್ವ ಚಾಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು 2026-29ರ ಅವಧಿಗೆ ಬಿಡಬ್ಲ್ಯುಎಫ್ ಅತ್ಲೀಟ್ ಗಳ ಆಯೋಗದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ತನ್ನ ಈ ಹುದ್ದೆಯ ಆಧಾರದಲ್ಲಿ ಸಿಂಧು ಬ್ಯಾಡ್ಮಿಂಟನ್ ವಿಶ್ವ ಫೆಡರೇಶನ್ (ಬಿಡಬ್ಲ್ಯುಎಫ್) ಕೌನ್ಸಿಲ್ ನ ಸದಸ್ಯೆಯಾಗಿಯೂ ಅವರು ಸೇವೆ ಸಲ್ಲಿಸಲಿದ್ದಾರೆ. ಈ ಮೂಲಕ ಅವರು ಕ್ರೀಡೆಯ ಜಾಗತಿಕ ಆಡಳಿತದಲ್ಲಿ ಆಟಗಾರರ ಪ್ರತಿನಿಧಿಯಾಗಿ ಕೆಲಸ ಮಾಡಲಿದ್ದಾರೆ. ತನ್ನನ್ನು ಈ ಹುದ್ದೆಗೆ ಆರಿಸಿರುವುದಕ್ಕಾಗಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಹಿಂದಿನ ಅವಧಿಯಲ್ಲಿ ಅತ್ಯುತ್ತಮ ಕೆಲಸ ಮಾಡಿರುವುದಕ್ಕಾಗಿ ಇಂಡೋನೇಶ್ಯದ ಗ್ರೇಸಿಯಾ ಪೋಲಿಯಿ ಅವರನ್ನು ಅಭಿನಂದಿಸಿದ್ದಾರೆ. “ಈ ಹುದ್ದೆಗೆ ನನ್ನನ್ನು ಸಹ ಆಟಗಾರರು ಆರಿಸಿರುವುದು ನನಗೆ ಸಿಕ್ಕ ಗೌರವವಾಗಿದೆ. ಇದನ್ನು ನಾನು ವಿನಯ ಮತ್ತು ಕೃತಜ್ಞತೆಯಿಂದ ಸ್ವೀಕರಿಸುತ್ತೇನೆ. ಇದೇ ಸಂದರ್ಭದಲ್ಲಿ, ಹಿಂದಿನ ಅವಧಿಯಲ್ಲಿ ಗ್ರೇಸಿಯಾ ಪೋಲಿಯಿ ಸಲ್ಲಿಸಿದ ಅಮೋಘ ಸೇವೆಗಾಗಿ ನಾನು ಅವರನ್ನು ಅಭಿನಂದಿಸುತ್ತೇನೆ’’ ಎಂದು ಸಿಂಧು ಹೇಳಿದ್ದಾರೆ. ನೆದರ್ಲ್ಯಾಂಡ್ಸ್ ನ ದೆಬೋರಾ ಜಿಲಿ ಆಯೋಗದ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಲಿದ್ದಾರೆ. ಆಯೋಗದಲ್ಲಿರುವ ಇತರ ಆಟಗಾರರ ಪ್ರತಿನಿಧಿಗಳೆಂದರೆ- ಹಾಲಿ ಒಲಿಂಪಿಕ್ ಮಹಿಳಾ ಸಿಂಗಲ್ಸ್ ಚಾಂಪಿಯನ್ ದಕ್ಷಿಣ ಕೊರಿಯದ ಆನ್ ಸೆ ಯಂಗ್, ಆರು ಬಾರಿಯ ಆಫ್ರಿಕನ್ ಗೇಮ್ಸ್ ಪದಕ ವಿಜೇತೆ ಈಜಿಪ್ಟ್ನ ದೋಹಾ ಹನಿ ಮತ್ತು ಪ್ಯಾರಿಸ್ ಒಲಿಂಪಿಕ್ಸ್ 2024ರ ಡಬಲ್ಸ್ ಚಿನ್ನ ವಿಜೇತೆ ಚೀನಾದ ಜಿಯಾ ಯಿಫಾನ್.
1000 ಕೋಟಿ ಕ್ಲಬ್ ಗೆ ಪ್ರವೇಶಿಸಿದ ‘ಧುರಂಧರ್’ ಚಿತ್ರ
ಈ ಮೈಲಿಗಲ್ಲನ್ನು ದಾಟಿದ ಸಿನಿಮಾಗಳು ಯಾವುವು?
Vijay Hazare Trophy | ಕೇರಳವನ್ನು 8 ವಿಕೆಟ್ ನಿಂದ ಸೋಲಿಸಿದ ಕರ್ನಾಟಕ
ಅಹ್ಮದಾಬಾದ್, ಡಿ. 26: ವಿಜಯ ಹಝಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಶುಕ್ರವಾರ, ದೇವದತ್ತ ಪಡಿಕ್ಕಲ್ ಮತ್ತು ಕರುಣ್ ನಾಯರ್ ಅವರ ಶತಕಗಳ ನೆರವಿನಿಂದ ಹಾಲಿ ಚಾಂಪಿಯನ್ ಕರ್ನಾಟಕವು ಕೇರಳ ತಂಡವನ್ನು ಎಂಟು ವಿಕೆಟ್ ಗಳ ಭರ್ಜರಿ ಅಂತರದಿಂದ ಸೋಲಿಸಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಮ್ ಬಿ ಮೈದಾನದಲ್ಲಿ ನಡೆದ ಎರಡನೇ ಗುಂಪು ಎ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕವು ಎದುರಾಳಿ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಇಳಿಸಿತು. ಕೇರಳವು ಬಾಬಾ ಅಪರಾಜಿತ ಮತ್ತು ಮುಹಮ್ಮದ್ ಅಝರುದ್ದೀನ್ರ ಅರ್ಧ ಶತಕಗಳ ನೆರವಿನಿಂದ 50 ಓವರ್ ಗಳಲ್ಲಿ ಏಳು ವಿಕೆಟ್ ಗಳ ನಷ್ಟಕ್ಕೆ 284 ರನ್ ಗಳಿಸಿತು. ಕೇರಳದ ಆರಂಭ ಉತ್ತಮವಾಗಿರಲಿಲ್ಲ. ಅದು ತನ್ನ ಮೊದಲ ಮೂರು ವಿಕೆಟ್ ಗಳನ್ನು ಕೇವಲ 49 ರನ್ ಗಳಿಗೆ ಕಳೆದುಕೊಂಡಿತು. ಆದರೆ ಬಾಬಾ ಅಪರಾಜಿತ (62 ಎಸೆತಗಳಲ್ಲಿ 71 ರನ್) ಮತ್ತು ವಿಕೆಟ್ ಕೀಪರ್ ಮುಹಮ್ಮದ್ ಅಝರುದ್ದೀನ್ (58 ಎಸೆತಗಳಲ್ಲಿ 84 ರನ್) ತಂಡಕ್ಕೆ ಸ್ಥಿರತೆ ಒದಗಿಸಿದರು. ಅಖಿಲ್ ಸ್ಕಾರಿಯ 27 ರನ್ ಗಳ ಕೊಡುಗೆ ನೀಡಿದರೆ, ವಿಷ್ಣು ವಿನೋದ್ 35 ರನ್ ಗಳನ್ನು ಗಳಿಸಿದರು. ಎಮ್.ಡಿ. ನಿದೀಶ್ 34 ರನ್ ಗಳಿಸಿ ಔಟಾಗದೆ ಉಳಿದರು. ಕರ್ನಾಟಕದ ಪರವಾಗಿ ಎಡಗೈ ಮಧ್ಯಮ ವೇಗಿ ಅಭಿಲಾಶ್ ಶೆಟ್ಟಿ ಮೂರು ವಿಕೆಟ್ ಗಳನ್ನು ಪಡೆದರೆ, ಶ್ರೇಯಸ್ ಗೋಪಾಲ್ ಎರಡು ವಿಕೆಟ್ ಗಳನ್ನು ಉರುಳಿಸಿದರು. ಗೆಲುವಿಗೆ 285 ರನ್ಗಳ ಗುರಿಯನ್ನು ಪಡೆದ ಕರ್ನಾಟಕ 48.2 ಓವರ್ ಗಳಲ್ಲಿ ಕೇವಲ ಎರಡು ವಿಕೆಟ್ ಗಳನ್ನು ಕಳೆದುಕೊಂಡು ವಿಜಯದ ಗುರಿ ತಲುಪಿತು. ನಾಯಕ ಮಯಾಂಕ್ ಅಗರ್ವಾಲ್ (1)ರನ್ನು ಕರ್ನಾಟಕವು ಬೇಗನೇ ಕಳೆದುಕೊಂಡರೂ, ಪಡಿಕ್ಕಲ್ ಮತ್ತು ನಾಯರ್ ಎರಡನೇ ವಿಕೆಟ್ಗೆ 223 ರನ್ ಗಳನ್ನು ಸೇರಿಸಿದರು. ಪಡಿಕ್ಕಲ್ 137 ಎಸೆತಗಳಲ್ಲಿ 124 ರನ್ ಗಳಿಸಿದರೆ, ನಾಯರ್ 130 ಎಸೆತಗಳಲ್ಲಿ 130 ರನ್ ಗಳಿಸಿ ಔಟಾಗದೆ ಉಳಿದರು. ರವಿಚಂದ್ರನ್ ಸ್ಮರಣ್ 25 ರನ್ ಗಳಿಸಿ ಔಟಾಗದೆ ಉಳಿದರು. ಸಂಕ್ಷಿಪ್ತ ಸ್ಕೋರ್ ಕೇರಳ (50 ಓವರ್ ಗಳಲ್ಲಿ) 284-7 ಬಾಬಾ ಅಪರಾಜಿತ 71, ಅಖಿಲ್ ಸ್ಕಾರಿಯ 27, ವಿಷ್ಣು ವಿನೋದ್ 35, ಮುಹಮ್ಮದ್ ಅಝರುದ್ದೀನ್ (ಔಟಾಗದೆ) 84. ಎಮ್.ಡಿ. ನಿದೀಶ್ (ಔಟಾಗದೆ) 34 ಅಭಿಲಾಶ್ ಶೆಟ್ಟಿ 3-59, ಶ್ರೇಯಸ್ ಗೋಪಾಲ್ 2-61 ಕರ್ನಾಟಕ (48.2 ಓವರ್ ಗಳಲ್ಲಿ) 285-2 ದೇವದತ್ತ ಪಡಿಕ್ಕಲ್ 124, ಕರುಣ್ ನಾಯರ್ (ಔಟಾಗದೆ) 130, ರವಿಚಂದ್ರನ್ ಸ್ಮರಣ್ (ಔಟಾಗದೆ) 25
Bihar: ನಿರ್ಮಾಣ ಹಂತದ ರೋಪ್ ವೇ ಕುಸಿತ
ಪಾಟ್ನಾ, ಡಿ. 26: ಬಿಹಾರದ ರೋಹ್ತಾಕ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೋಪ್ ವೇ ಶುಕ್ರವಾರ ಕುಸಿದು ಬಿದ್ದಿದೆ. ಇದರಿಂದಾಗಿ ಯೋಜನೆ ಸಂಪೂರ್ಣ ಸ್ಥಗಿತಗೊಂಡಿದೆ. ಈ ರೋಪ್ ವೇಯನ್ನು ಜನವರಿ 1ರಂದು ಪ್ರವಾಸಿಗರಿಗಾಗಿ ತೆರೆಯಲು ನಿರ್ಧರಿಸಲಾಗಿತ್ತು. ಈ ಘಟನೆಯಲ್ಲಿ ರೋಪ್ ವೇಯ ಕಂಬಗಳು ಹಾಗೂ ಟ್ರಾಲಿಗಳಿಗೆ ಹಾನಿ ಉಂಟಾಗಿದೆ. ಆದರೆ, ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಬಿಹಾರದ ನೆಚ್ಚಿನ ಪ್ರವಾಸಿ ತಾಣಗಳಲ್ಲಿ ಒಂದಾದ ರೋಹ್ತಾಸ್ಗಢ ಎಂದು ಜನಪ್ರಿಯವಾಗಿರುವ ರೋಹ್ತಾಸ್ ಕೋಟೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಈ ರೋಪ್ ವೇ ನಿರ್ಮಿಸಲಾಗುತ್ತಿತ್ತು. ರೋಹ್ತಾಸ್ ಕೋಟೆ ಸಮುದ್ರ ಮಟ್ಟದಿಂದ ಸುಮಾರು 1,400 ಅಡಿ ಎತ್ತರದಲ್ಲಿದೆ. ಈ ಯೋಜನೆ ಅಂತಿಮ ಹಂತದಲ್ಲಿತ್ತು. ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿರುವಾಗ ದುರಂತ ಸಂಭವಿಸಿದೆ. ‘‘ನಿರ್ಮಾಣ ಹಂತದಲ್ಲಿರುವ ರೋಪ್ವೇ ಯ ತಾಂತ್ರಿಕ ದೋಷಕ್ಕೆ ಕಾರಣವನ್ನು ಕಂಡು ಹಿಡಿಯಲಾಗುತ್ತಿದೆ’’ ಎಂದು ರೋಹ್ತಾಸ್ ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಲೆ ಏರಿಕೆ, ಉದ್ಯೋಗಿಗಳ ವೇತನದಲ್ಲಿಅಲ್ಪ ಪ್ರಗತಿ; ದೇಶದ 7 ಪ್ರಮುಖ ನಗರಗಳಲ್ಲಿ ಮನೆ ಮಾರಾಟ ಶೇ.14ರಷ್ಟು ಕಡಿಮೆ
ದೇಶದ ಏಳು ಪ್ರಮುಖ ನಗರಗಳಲ್ಲಿ ಮನೆಗಳ ಮಾರಾಟ ಶೇ.14ರಷ್ಟು ಕುಸಿದಿದೆ. ಆದರೂ, ಹಣಕಾಸಿನ ಮೌಲ್ಯದಲ್ಲಿ ಶೇ.6ರಷ್ಟು ಏರಿಕೆಯಾಗಿದ್ದು, 6 ಲಕ್ಷ ಕೋಟಿ ರೂ. ತಲುಪಿದೆ. ವಸತಿ ಆಸ್ತಿಗಳ ಬೆಲೆ ಶೇ.8ರಷ್ಟು ಹೆಚ್ಚಳ ಕಂಡಿದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ ಮತ್ತು ಬೆಲೆ ಏರಿಕೆಯೇ ಮಾರಾಟ ಕುಸಿತಕ್ಕೆ ಕಾರಣ ಎಂದು ವರದಿ ತಿಳಿಸಿದೆ.
Air Pollution: ಸದ್ದೇ ಇಲ್ಲದೆ ಜೀವ ತೆಗೆಯುತ್ತಿದೆ ಗಾಳಿ, ತಜ್ಞರ ಎಚ್ಚರಿಕೆ ಸಂದೇಶ!
ಭಾರತದಲ್ಲಿ ವಾಯು ಮಾಲಿನ್ಯ ಎಂಬುದು ದೊಡ್ಡ ಪಿಡುಗಾಗಿ ಪರಿಣಮಿಸಿದೆ, ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿ ಪರಿಸ್ಥಿತಿ ದೇವರಿಗೆ ಪ್ರೀತಿ ಎಂಬಂತಾಗಿದೆ. ವಾಯು ಮಾಲಿನ್ಯ ಪರಿಣಾಮ ಈಗ ದೆಹಲಿ ಜನ ಊರು ಬಿಡುವಂತೆ ಆಗಿದ್ದು, ಸಾವಿರಾರು ಜನ ಉಸಿರಾಡಲು ಪರದಾಡುತ್ತಾ ಆಸ್ಪತ್ರೆ ಸೇರಿದ್ದಾರೆ. ಇಂತಹ ಹೊತ್ತಲ್ಲೇ ದೂರದ ಲಂಡನ್ನಿಂದ ಭವಿಷ್ಯದ ಬಗ್ಗೆ ಭಯಾನಕ ಸುದ್ದಿಯು ಹೊರಬಿದ್ದಿದ್ದು, ಭಾರತೀಯರಿಗೆ ತಜ್ಞರು
ಹೆಜಮಾಡಿ ನೇಮೋತ್ಸವದಲ್ಲಿ ಸರ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ
ಪಡುಬಿದ್ರೆ: ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೊತ್ಸದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ ಬೀದಿಯ ಶೀಥಲ್, ಕಾಳಿಯಮ್ಮ ಹಾಗೂ ಮಾರಿ(40) ಬಂಧಿತ ಆರೋಪಿಗಳು. ಹೆಜಮಾಡಿಯ ಕಮಲ(78) ಎಂಬವರು ಡಿ.24ರಂದು ಮನೆಯ ಬಳಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೊತ್ಸಕ್ಕೆ ಹೋಗಿದ್ದರು. ದೈವದ ದರ್ಶನ ಮಾಡಿ ನಂತರ ಅಲ್ಲಿಗೆ ಬಂದ ತನ್ನ ಶಾರದಾ ಪೂಜಾರಿ ಎಂಬವರು ಕಮಲ ಅವರ ಕುತ್ತಿಗೆಯಲ್ಲಿ ಚಿನ್ನದ ಸರ ಇಲ್ಲದೆ ಇರುವ ಬಗ್ಗೆ ತಿಳಿಸಿದರು. ಡಿ.25ರಂದು ಸಂಜೆ ದೇವಸ್ಥಾನದ ಆಡಳಿತ ಮಂಡಳಿಯವರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೂರು ಅಪರಿಚಿತ ಮಹಿಳೆಯರು ಕಮಲ ಅವರಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಗಮನಕ್ಕೆ ಬಾರದೆ ಕುತ್ತಿಗೆಯಲ್ಲಿದ್ದ ಸುಮಾರು 3 ಪವನ್ ಚಿನ್ನದ ಸರವನ್ನು ಕಳವು ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದರಂತೆ ತನಿಖೆ ನಡೆಸಿದ ಪೊಲೀಸರು, ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು, ಹೆಚ್ಟಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ದ್ವೇಷ ಭಾಷಣ ನಿಷೇಧ ಕಾಯ್ದೆ: ಸುಳ್ಳು ಮಾಹಿತಿ ಹಂಚಿದ ಪ್ರಿಯಾಂಕ್ ಖರ್ಗೆಗೆ ಶಿಕ್ಷೆಯಾಗುತ್ತದೆಯೇ: ಸಿ.ಟಿ ರವಿ ಪ್ರಶ್ನೆ
ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಡಿರುವ ಟ್ವೀಟ್ವೊಂದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಸೋಷಿಯಲ್ ಮೀಡಿಯಾ ಕರ್ನಾಟಕ ಬಿಜೆಪಿ ಖಾತೆ ಹಾಗೂ ವಿವಿಧ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ. ದ್ವೇಷ ಭಾಷಣ ನಿಷೇಧ ಕಾಯ್ದೆಯಡಿ ಸುಳ್ಳು ಮಾಹಿತಿ ಹಂಚಿದ ಪ್ರಿಯಾಂಕ್ ಖರ್ಗೆ ಅವರಿಗೆ ಶಿಕ್ಷೆಯಾಗುತ್ತದೆಯೇ ಎಂದು ಪ್ರಶ್ನೆ ಮಾಡಲಾಗಿದೆ. ಈ ಸಂಬಂಧ ಮಾತನಾಡಿರುವ
ವಾರ್ಷಿಕ ಆಸ್ತಿ ವಿವರಗಳನ್ನು ಸಲ್ಲಿಸದಿದ್ದರೆ ಕ್ರಮ: ಕೇಂದ್ರ ಎಚ್ಚರಿಕೆ
ಹೊಸದಿಲ್ಲಿ, ಡಿ. 26: ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಗಳು ತಮ್ಮ ವಾರ್ಷಿಕ ಆಸ್ತಿ ವಿವರಗಳನ್ನು ಸಕಾಲದಲ್ಲಿ ಸಲ್ಲಿಸುವಂತೆ ಕೇಂದ್ರ ಸರಕಾರ ಸೂಚಿಸಿದೆ. ವಿಳಂಬ ಮಾಡಿದರೆ ಬಡ್ತಿ ನಿರಾಕರಣೆ ಸೇರಿದಂತೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಅದು ಎಚ್ಚರಿಸಿದೆ. ಸೇವಾ ನಿಯಮಗಳ ಪ್ರಕಾರ ಐಎಎಸ್ ಅಧಿಕಾರಿಗಳು ಮುಂದಿನ ವರ್ಷದ ಜನವರಿ 31ರ ಒಳಗೆ ತಮ್ಮ ಸ್ಥಿರ ಆಸ್ತಿ ರಿಟರ್ನ್ ಅನ್ನು ಸಲ್ಲಿಸಬೇಕಾಗುತ್ತದೆ. ಇದನ್ನು ಪಾಲಿಸಲು ವಿಫಲವಾದರೆ ಗಂಭೀರ ಲೋಪವೆಂದು ಪರಿಗಣಿಸಲಾಗುತ್ತದೆ ಎಂದು ಸಚಿವಾಲಯದ ಸಿಬ್ಬಂದಿ ಹೇಳಿದ್ದಾರೆ. ಮುಂದಿನ ವೇತನ ಶ್ರೇಣಿಗೆ ನೌಕರರನ್ನು ಪರಿಗಣಿಸಬೇಕಾದರೆ ಸ್ಥಿರಾಸ್ಥಿಗಳ ವಿವರ ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವೆಂಕಟೇಶ್ ಅಯ್ಯರ್ ಸ್ಥಾನದ ಬಗ್ಗೆ ಅನಿಲ್ ಕುಂಬ್ಳೆ ಶಾಕಿಂಗ್ ಹೇಳಿಕೆ! ಹಾಗಿದ್ರೆ RCB ಅಷ್ಟೊಂದು ಖರ್ಚು ಮಾಡಿದ್ಯಾಕೆ?
Anil Kumble On Venkatesh Iyer- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡುವ ಬಳಗದಲ್ಲಿ ವೆಂಕಟೇಶ್ ಅಯ್ಯರ್ ಅವರು ಆರಂಭದಲ್ಲಿ ಕಾಣಿಸಿಕೊಳ್ಳುವುದು ಕಷ್ಟ ಎಂದು ಮಾಜಿ ನಾಯಕ ಅನಿಲ್ ಕುಂಬ್ಳೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಹಾಗಿದ್ದರೆ ಅಷ್ಟೊಂದು ಹಣ ತೆತ್ತು ಫ್ರಾಂಚೈಸಿ ಅವರನ್ನು ಖರೀದಿಸಿದ್ದು ಯಾಕೆ ಎಂಬ ಪ್ರಶ್ನೆ ಏಳುವುದು ಸಹಜ. ಆದರೆ ಇದಕ್ಕೆ ಅನಿಲ್ ಕುಂಬ್ಳೆ ಅವರು ನೀಡುವ ಉತ್ತರವೂ ಸಮಂಜಸವಾಗಿದೆ. ಹಾಲಿ ಚಾಂಪಿಯನ್ ತಂಡ ಸದ್ಯ ಸ್ಥಿರವಾಗಿದ್ದು ಇದರಲ್ಲಿ ಬದಲಾವಣೆ ತರುವುದು ಕಷ್ಟ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Saudi Arabia: 3 ದಶಕಗಳಲ್ಲಿ ಮೊದಲ ಹಿಮಪಾತ; ಐಸ್ಲ್ಯಾಂಡ್ ನಲ್ಲಿ ತಾಪಮಾನ ಏರಿಕೆ
ರಿಯಾದ್, ಡಿ.26: ಸುಮಾರು 3 ದಶಕಗಳಲ್ಲಿ ಮೊದಲ ಬಾರಿ ಸೌದಿ ಅರೆಬಿಯಾದಲ್ಲಿ ಹಿಮಪಾತ ಸಂಭವಿಸಿದ್ದು ಮರುಭೂಮಿ ಮತ್ತು ಪರ್ವತಗಳನ್ನು ಹಿಮ ಆವರಿಸಿದ ಅಪರೂಪದ ದೃಶ್ಯ ಕಂಡು ಬಂದಿರುವುದಾಗಿ ವರದಿಯಾಗಿದೆ. ` ಜಾಗತಿಕ ತಾಪಮಾನ. ಸೌದಿ ಅರೆಬಿಯಾದಲ್ಲಿ ಹಿಮಪಾತವಾಗಿದೆ. ಅನೇಕ ಸ್ಥಳೀಯರಿಗೆ ಇದು ನಿಜವಾದ ಪವಾಡ. ಏಕೆಂದರೆ ಅವರು ತಮ್ಮ ಜೀವನದಲ್ಲಿ ಇದನ್ನು ಮೊದಲ ಬಾರಿಗೆ ನೋಡಿದ್ದಾರೆ' ಎಂದು ಓರ್ವ ಬಳಕೆದಾರ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. In a surprising and unusual weather event... ❄⛄ Snowfall is expected in areas north of Riyadh and in the Al-Qassim region tomorrow, Thursday. pic.twitter.com/0beYyrtHwt — Saudi-Expatriates.com (@saudiexpat) December 17, 2025 ಜಬಲ್ ಅಲ್ಲಾಜ್ ಮತ್ತು ಟ್ರೊಜೆನಾದಂತಹ ಪ್ರದೇಶಗಳಲ್ಲಿ ತಾಪಮಾನವು ಮೈನಸ್ 4 ಡಿಗ್ರಿ ಸೆಲ್ಶಿಯಸ್ಗೆ ಕುಸಿದು ಸುಮಾರು 30 ವರ್ಷಗಳಲ್ಲಿ ಮೊದಲ ಬಾರಿಗೆ ಹಿಮವು ನೆಲೆಗೊಳ್ಳಲು ಅನುವು ಮಾಡಿಕೊಟ್ಟಿದೆ. ಸೌದಿ ಅರೆಬಿಯಾ ಮತ್ತು ಖತರ್ ನಲ್ಲಿ ಡಿಸೆಂಬರ್ 18ರಂದು ಅರೆಬಿಯನ್ ಮರುಭೂಮಿಯ ಕೆಲವು ಭಾಗಗಳು ಹಿಮಪಾತಕ್ಕೆ ಸಾಕ್ಷಿಯಾಯಿತು ಎಂದು `ಖಲೀಜ್ ಟೈಮ್ಸ್' ವರದಿ ಮಾಡಿದೆ. ಈ ಮಧ್ಯೆ, ಐಸ್ ಲ್ಯಾಂಡ್ ನಲ್ಲಿ ತಾಪಮಾನ ದಾಖಲೆಯ 20 ಡಿಗ್ರಿ ಸೆಲ್ಶಿಯಸ್ಗೆ ಏರಿಕೆಯಾಗಿದೆ. ಡಿಸೆಂಬರ್ 26ರ ರಾತ್ರಿ ಐಸ್ ಲ್ಯಾಂಡ್ ನ ಬೆಕ್ಕಗೆರೋಯ್ ಪ್ರದೇಶದಲ್ಲಿ 19.7 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದ್ದು ಇದು ಸಾಮಾನ್ಯ ಮಟ್ಟಕ್ಕಿಂತ ಸುಮಾರು 10 ಡಿಗ್ರಿ ಸೆಲ್ಶಿಯಸ್ ಅಧಿಕವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜತೆ ಹೊಂದಾಣಿಕೆ ಕಷ್ಟ : ಎಚ್.ಡಿ.ದೇವೇಗೌಡ
ಬೆಂಗಳೂರು : ನಗರ, ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಬಿಜೆಪಿ ಜತೆಗಿನ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಶುಕ್ರವಾರ ನಗರದ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರಿಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಕಷ್ಟವಾಗಲಿದೆ. ನಮ್ಮ ಶಕ್ತಿ ಇರುವ ಕಡೆ ನಾವು ಹೋರಾಟ ಮಾಡುತ್ತೇವೆ ಎಂದು ಅವರು ಉಲ್ಲೇಖಿಸಿದರು. ನಗರ ಸ್ಥಳೀಯ ಸಂಸ್ಥೆಗಳ ಹೊಂದಾಣಿಕೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಜೊತೆ ಚರ್ಚೆ ಮಾಡಲು ಸಾಧ್ಯವೇ?, ಈ ವಿಚಾರದಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಅವರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದೂ ಅವರು ಉಲ್ಲೇಖಿಸಿದರು.
ಉಡುಪಿ : ಉಪವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಸಂಭ್ರಮ
ಉಡುಪಿ: ಉಡುಪಿ ಜಿಲ್ಲೆ ಉಪವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಸಂಭ್ರಮ, ನೂತನತ ವರ್ಷದ ಡೈರಿ ಬಿಡುಗಡೆ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ರಕ್ತದಾನಿಗಳಿಗೆ ಗೌರವ, ಪ್ರತಿಭಾ ಪುರಸ್ಕಾರ ಸಮಾರಂಭ ಮುಂದಿನ ವರ್ಷದ ಜ.4ರಂದು ಬೆಳಗ್ಗೆ 9:30ಕ್ಕೆ ಉಡುಪಿಯ ಕಿದಿಯೂರು ಹೊಟೇಲಿನ ಶೇಷಶಯನ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನಾಗೇಶ ಬಿಲ್ಲವ ತಿಳಿಸಿದ್ದಾರೆ. ಉಡುಪಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2000ನೇ ಸಾಲಿನಲ್ಲಿ ಪ್ರಾರಂಭಗೊಂಡ ನಮ್ಮ ಸಂಘವನ್ನು ಪ್ರಾರಂಭದಲ್ಲಿ ವನಪಾಲಕರ ಸಂಘ, ಅರಣ್ಯಪಾಲಕರ ಸಂಘ ಎಂದು ಕರೆಸಿಕೊಳ್ಳುತಿದ್ದು, ಇದೀಗ ಉಪವಲಯ ಅರಣ್ಯಾಧಿಕಾರಿಗಳ ಸಂಘ ಎಂದು ನಾಮಾಂಕಿತ ಗೊಂಡಿದೆ ಎಂದರು. ನಮ್ಮ ಸಂಘದ ಪ್ರಮುಖ ಕಾರ್ಯಕ್ರಮ ಪ್ರತಿವರ್ಷ ನಡೆಯುವ ರಕ್ತದಾನ ಶಿಬಿರ. ಅರಣ್ಯ ಹುತಾತ್ಮರ ದಿನದಂಗವಾಗಿ, ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಡೆಯುವ ಈ ಶಿಬಿರದಲ್ಲಿ ನೂರಾರು ಯುನಿಟ್ ರಕ್ತೆವನ್ನು ಸಂಗ್ರಹಿಸಿ ನೀಡಲಾಗುತ್ತಿದೆ. 2025ರಲ್ಲಿ 155 ಯುನಿಟ್ ರಕ್ತವನ್ನು ದಾನ ಮಾಡಿದ್ದೇವೆ ಎಂದು ನಾಗೇಶ್ ಬಿಲ್ಲವ ತಿಳಿಸಿದರು. ಅಲ್ಲದೇ ಪ್ರತಿವರ್ಷ ಜಿಲ್ಲಾಮಟ್ಟದಲ್ಲಿ, ಅಂತರಜಿಲ್ಲಾ ಮಟ್ಟದಲ್ಲಿ ಅರಣ್ಯ, ಪರಿಸರ ಹಾಗೂ ವನ್ಯಜೀವಿಗಳ ಕುರಿತು ನಡೆಸುವ ಚಿತ್ರಕಲಾ ಸ್ಪರ್ಧೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸುತಿದ್ದಾರೆ ಎಂದ ಅವರು ಈ ಬಾರಿ ರಜತ ಮಹೋತ್ಸವದ ಸಂದರ್ಭದಲ್ಲಿ ಅನಾರೋಗ್ಯ ಪೀಡಿತರಿಗೆ ಹಾಗೂ ಅನಾಥಾಶ್ರಮದವರಿಗೆ ಧನ ಸಹಾಯ ಮಾಡಲಾಗುವುದು ಎಂದರು. ಈ ಬಾರಿಯ ಕಾರ್ಯಕ್ರಮವನ್ನು ಅದಾನಿ ಪವರ್ನ ಅಧ್ಯಕ್ಷ ಕಿಶೋರ್ ಆಳ್ವ ಉದ್ಘಾಟಿಸಲಿದ್ದಾರೆ. ಶಾಸಕರಾದ ಯಶಪಾಲ ಸುವರ್ಣ, ಉಮಾನಾಥ ಕೋಟ್ಯಾನ್ ಅಲ್ಲದೇ ವಿನಯಕುಮಾರ್ ಸೊರಕೆ, ಕೆ.ರಘುಪತಿ ಭಟ್, ಡಿಸಿ ಸ್ವರೂಪ ಟಿ.ಕೆ. ಭಾಗವಹಿಸಲಿದ್ದಾರೆ. ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ವಿ.ಕರಿಕಲನ್, ಕುಂದಾಪುರ ಪ್ರಾದೇಶಿಕ ವಿಭಾಗದ ಉಪಅರಣ್ಯ ಸಂರಕ್ಷಣಾದಿಕಾರಿ ಗಣಪತಿ ಕೆ., ಕುದುರೆಮುಖ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ ಬಾಬು, ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ರವೀಂದ್ರ ಕುಮಾರ್ ಡಿ.ಎನ್.ಉಪಸ್ಥಿತರಿರುವರು. ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರವಿ, ಖಜಾಂಚಿ ಗೋವಿಂದ ಎಂ.ಪಟಗಾರ್, ಜೊತೆ ಕಾರ್ಯದರ್ಶಿ ನಾಗರಾಜ್, ಸಂಘಟನಾ ಕಾರ್ಯದರ್ಶಿ ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.
ಉಡುಪಿ: 15 ದಿನಗಳಲ್ಲಿ ಸೂಲಡ್ಪು-ಮಡಿವಾಳ ಸಾಲು ಹೊಳೆ ಹೂಳೆತ್ತಲು ಆಗ್ರಹ
ತಪ್ಪಿದರೆ ಬ್ರಹ್ಮಾವರ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ;ರೈತ ಸಂಘಟನೆಗಳಿಂದ ಎಚ್ಚರಿಕೆ
ಕೊನೆಗೂ ಬಂಧನ ಭೀತಿಯಿಂದ ಪಾರಾದ ಬೈರತಿ ಬಸವರಾಜ್, ಮಧ್ಯಂತರ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
ರೌಡಿ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜುಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಸದ್ಯಕ್ಕೆ ಅವರು ಬಂಧನದಿಂದ ಪಾರಾಗಿದ್ದಾರೆ. ತನಿಖೆಗೆ ಸಹಕರಿಸುವಂತೆ ನ್ಯಾ.ಜಿ. ಬಸವರಾಜು ಅವರಿದ್ದ ರಜಾಕಾಲದ ನ್ಯಾಯಪೀಠ ಶುಕ್ರವಾರ ಆದೇಶಿಸಿದೆ.
Bangladesh | ಇನ್ನೋರ್ವ ವ್ಯಕ್ತಿಯ ಹತ್ಯೆಗೆ ಭಾರತ ಖಂಡನೆ
ಅಲ್ಪಸಂಖ್ಯಾತರ ಮೇಲಿನ ದಾಳಿಗಳು ‘ಆತಂಕಕಾರಿ’: ವಿದೇಶಾಂಗ ಸಚಿವಾಲಯ
Kundapura | ನೈತಿಕ ಮೌಲ್ಯಗಳನ್ನು ಅಳವಡಿಸಿ, ಉತ್ತಮ ಮನುಷ್ಯರಾಗಲು ಶ್ರಮಿಸಿ: ಡಾ.ಎಚ್. ದೇವೇಂದ್ರಪ್ಪ
ಬ್ಯಾರಿಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಪತ್ನಿಯನ್ನು ಜೀವಂತವಾಗಿ ದಹಿಸಿ ಹತ್ಯೆ: ಮಕ್ಕಳ ಮುಂದೆಯೇ ಘೋರ ಕೃತ್ಯವೆಸಗಿದ ಪತಿ ಪರಾರಿ
ಹೊಸದಿಲ್ಲಿ,ಡಿ.26: ಹೈದರಾಬಾದ್ನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಮಕ್ಕಳ ಮುಂದೆಯೇ ಜೀವಂತವಾಗಿ ದಹಿಸಿದ ಭೀಭತ್ಸ ಘಟನೆ ಹೈದರಾಬಾದ್ನಲ್ಲಿ ಶುಕ್ರವಾರ ವರದಿಯಾಗಿದೆ. ಆತ ತನ್ನ ಪುತ್ರಿಯನ್ನು ಕೂಡಾ ಬೆಂಕಿಯ ಜ್ವಾಲೆಗೆ ದೂಡಿ ಪರಾರಿಯಾಗಿದ್ದಾನೆ. ನಗರದ ನಲ್ಲಕುಂಟಾ ಪ್ರದೇಶದಲ್ಲಿ ಬುಧವಾರ ಈ ಘೋರ ಘಟನೆ ನಡೆದಿದೆ. ವೆಂಕಟೇಶ್ ಈ ಪಾತಕ ಕೃತ್ಯವನ್ನು ಎಸಗಿದ ಆರೋಪಿಯಾಗಿದ್ದು, ಆತ ತನ್ನ ಪತ್ನಿ ತ್ರಿವೇಣಿಯ ಚಾರಿತ್ರದ ಬಗ್ಗೆ ಶಂಕೆಗೊಂಡಿದ್ದ ಎನ್ನಲಾಗಿದೆ. ಈ ಕಾರಣಕ್ಕಾಗಿ ದಂಪತಿಯ ನಡುವೆ ಪದೇ ಪದೇ ಜಗಳವಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 24ರಂದು , ತನ್ನ ಮಕ್ಕಳ ಮುಂದೆಯೇ ವೆಂಕಟೇಶ್ ಹೆಂಡತಿಯ ಮೇಲೆ ಹಲ್ಲೆ ನಡೆಸಿದ್ದ. ಆನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಆಗ ಅವರ ಪುತ್ರಿಯು ತಾಯಿಯನ್ನು ರಕ್ಷಿಸಲು ಯತ್ನಿಸಿದಾಗ, ಆಕೆಯನ್ನು ಬೆಂಕಿಯ ಜ್ವಾಲೆಗೆ ದೂಡಿದ್ದ. ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಸ್ಥಳದಲ್ಲಿ ಆಕ್ರಂದನವನ್ನು ಕೇಳಿದ ನೆರೆಹೊರೆಯವರು ಸ್ಥಳಕ್ಕೆಧಾವಿಸಿದ್ದರು. ತೀವ್ರವಾಗಿ ಸುಟ್ಟ ಗಾಯಗಳಾಗಿದ್ದ ತ್ರಿವೇಣಿ ಸ್ಥಳದಲ್ಲೇ ಮೃತಪಟ್ಟಿದ್ದರು. ದಂಪತಿಯ ಆರು ವರ್ಷದ ಪುತ್ರಿ ಸಣ್ಣಪುಟ್ಟ ಸುಟ್ಟಗಾಯಗಳೊಂದಿಗೆ ಪಾರಾಗಿದ್ದಾಳೆ. ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೆಂಕಟೇಶ್ ಹಾಗೂ ತ್ರಿವೇಣಿ ಪ್ರೇಮವಿವಾಹವಾಗಿದ್ದು, ಅವರಿಗೆ ಓರ್ವ ಪುತ್ರಿ ಹಾಗೂ ಪುತ್ರನಿದ್ದಾರೆ. ತನ್ನ ಪತ್ನಿಯ ಬಗ್ಗೆ ಸಂದೇಹವನ್ನು ಬೆಳೆಸಿಕೊಂಡ ವೆಂಕಟೇಶ್, ಆಕೆಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದ. ಆತನ ದೌರ್ಜನ್ಯವನ್ನು ಸಹಿಸಲು ಸಾಧ್ಯವಾಗದೆ ತ್ರಿವೇಣಿ, ಆಕೆಯ ಪಾಲಕರ ಮನೆಗೆ ತೆರಳಿದ್ದಳು. ಆದಾಗ್ಯೂ ವೆಂಕಟೇಶ್ ಕ್ಷಮೆಯಾಚಿಸಿದ್ದ ಮತ್ತು ಹಿರಿಯರ ಮಧ್ಯಸ್ಥಿಕೆಯಿಂದ ವಿವಾದವನ್ನು ಬಗೆಹರಿಸಿದ್ದರು. ಬಳಿಕ ವೆಂಕಟೇಶ್ ಮನೆಯನ್ನು ತೊರೆದಿದ್ದರೆ, ಜೀವನೋಪಾಯಕ್ಕಾಗಿ ತ್ರಿವೇಣಿ ಹೊಟೇಲ್ನಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳುಗಳ ಬಳಿಕ ವೆಂಕಟೇಶ್ ಮನೆಗೆ ವಾಪಸಾಗಿದ್ದು,ಆತನ ಬಗ್ಗೆ ಎಚ್ಚರಿಕೆಯಿಂದಿರುವಂತೆಯೂ ತಾವು ತ್ರಿವೇಣಿಗೆ ಹೇಳಿದ್ದಾಗಿ ಲಕ್ಷ್ಮಿ ತಿಳಿಸಿದರು. ಕೆಲವು ಸಮಯದ ಹಿಂದೆ ತ್ರಿವೇಣಿಯು ತನ್ನ ಪತಿಗೆ ಲಕ್ಷ ರೂ.ಮೌಲ್ಯದ ಬೈಕ್ ಕೊಡಿಸಿದ್ದಳು. ಮದ್ಯಪಾನ ವ್ಯಸನಿಯಾಗಿದ್ದ ಆತ ಅದನ್ನು ಕೇವಲ 15 ಸಾವಿರ ರೂ.ಗೆ ಮಾರಾಟ ಮಾಡಿದ್ದನೆಂದು ಅವರು ಹೇಳಿದ್ದಾರೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ವೆಂಕಟೇಶ್ನನ್ನು ಸೆರೆಹಿಡಿಯಲು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.
ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ: ಗಾಯಾಳು ಮಹಿಳೆ ಮೃತ್ಯು
ನಾಲ್ವರಿಗೆ ಮುಂದುವರೆದ ಚಿಕಿತ್ಸೆ
ಬಾಲ ಪುರಸ್ಕಾರ ದೇಶದ ಎಲ್ಲಾ ಮಕ್ಕಳಿಗೂ ಸಾಧನೆಗೆ ಪ್ರೇರಣೆಯಾಗಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು
20 ಮಂದಿ ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ
ಕೇರಳ| 6 ನಗರಪಾಲಿಕೆಗೆ ನೂತನ ಮೇಯರ್ಗಳ ಆಯ್ಕೆ
► ಕೊಚ್ಚಿ, ಕಣ್ಣೂರು, ತ್ರಿಶೂರ್,ಕೊಲ್ಲಂನಲ್ಲಿ ಯುಡಿಎಫ್► ಕೋಝಿಕ್ಕೋಡ್ನಲ್ಲಿ ಎಲ್ಡಿಎಫ್, ತಿರುವನಂತಪುರದಲ್ಲಿ ಬಿಜೆಪಿ
ಆಧುನೀಕರಣಗೊಳ್ಳುತ್ತಿರುವ ರಾಮನಗರ ರೈಲು ನಿಲ್ದಾಣ ಉದ್ಘಾಟನೆ ಯಾವಾಗ? ಅಪ್ಡೇಟ್ ನೀಡಿದ ಸಚಿವ ವಿ ಸೋಮಣ್ಣ
ರಾಮನಗರ ರೈಲು ನಿಲ್ದಾಣ 21 ಕೋಟಿ ರೂ. ವೆಚ್ಚದಲ್ಲಿ ಶೇ.90ರಷ್ಟು ಆಧುನೀಕರಣಗೊಂಡಿದ್ದು, ಒಂದೂವರೆ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು. ಪ್ರಯಾಣಿಕರಿಗೆ ಸುಸಜ್ಜಿತ ಸೌಲಭ್ಯಗಳೊಂದಿಗೆ, ಒಡೆಯರ್ ಮತ್ತು ಮೈಲಾಡ ತೊರೈ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೂ ಕ್ರಮ ಕೈಗೊಳ್ಳಲಾಗುವುದು. ಬಿಡದಿ, ಚನ್ನಪಟ್ಟಣ ನಿಲ್ದಾಣಗಳೂ ಮೇಲ್ದರ್ಜೆಗೇರಲಿವೆ ಎಂದು ಅವರು ಮಾಹಿತಿ ನೀಡಿದರು.
ಡಿ.29, 30: ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ
ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ಈ ವರ್ಷದ ರಂಗಭೂಮಿ ರಂಗ ಶಿಕ್ಷಣ ಅಭಿಯಾನದಲ್ಲಿ ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250ಕ್ಕೂ ಅಧಿಕ ಮಕ್ಕಳ ಭಾಗವಹಿಸುವಿಕೆಯಲ್ಲಿ 11 ಹೆಸರಾಂತ ನಿರ್ದೇಶಕರಿಂದ ತಯಾರಾದ 11 ಕಿರು ನಾಟಕಗಳ ಪ್ರದರ್ಶನ ‘ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ’ ಡಿ.29 ಮತ್ತು ಡಿ.30 ರಂದು ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಬೂಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಪ್ರೆಸ್ಕ್ಲಬ್ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ರಂಗಭೂಮಿ ತನ್ನ 60ನೇ ವರ್ಷದ ಪ್ರಯುಕ್ತ ಮಕ್ಕಳ ರಂಗಭೂಮಿಗೆ ಉತ್ತೇಜನ ನೀಡಲು ಪ್ರೌಢ ಶಾಲೆಗಳಲ್ಲಿ ಪ್ರಾರಂಭಿಸಿದ ಮಕ್ಕಳ ರಂಗಶಿಕ್ಷಣದಲ್ಲಿ ಉಡುಪಿಯ ಆಸುಪಾಸಿನ 12 ಶಾಲೆಗಳ 350ಕ್ಕೂ ಅಧಿಕ ಮಕ್ಕಳ ಪಾಲ್ಗೊಂಡಿದ್ದರು ಎಂದರು. ರಂಗಶಿಕ್ಷಣ ಪಡೆದ ಶಾಲೆಗಳ ಮಕ್ಕಳ ನಾಟಕೋತ್ಸವ ಕಾರ್ಯಕ್ರಮವನ್ನು ಡಿ.29ರ ಸೋಮವಾರ ಬೆಳಗ್ಗೆ 9:30ಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಉದ್ಘಾಟಿಸಲಿದ್ದಾರೆ. ರಂಗಭೂಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಭುವನೇಂದ್ರ ಕಿದಿಯೂರು, ಹರಿಪ್ರಸಾದ್ ರೈ, ಎಂಜಿಎಂ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎಂ.ವಿಶ್ವನಾಥ ಪೈ, ರಂಗಶಿಕ್ಷಣ ಅಭಿಯಾನ ಸಂಚಾಲಕ ವಿದ್ಯಾವಂತ ಆಚಾರ್ಯ ಉಪಸ್ಥಿತರಿರುವರು. ಸಮಾರೋಪ ಡಿ.30 ಮಂಗಳವಾರ ಅಪರಾಹ್ನ 12:00 ಗಂಟೆಗೆ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಅದಾನಿ ಗ್ರೂಪ್ನ ಕಿಶೋರ್ ಆಳ್ವ ಸಮಾರೋಪ ಭಾಷಣ ಮಾಡಲಿದ್ದಾರೆ. ಉದ್ಯಮಿಗಳಾದ ಜಮಾಲುದ್ದೀನ್ ಅಬ್ಬಾಸ್, ಅಲಯನ್ಸ್ ಜಿಲ್ಲಾ ಗವರ್ನರ್ ಸುನೀಲ್ ಸಾಲ್ಯಾನ್, ಉದ್ಯಮಿ ಪೆರ್ಣಂಕಿಲ ಶ್ರೀಶ ನಾಯಕ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ಉಪಸ್ಥಿತರಿರುವರು ಎಂದರು. ಯಾವೆಲ್ಲಾ ನಾಟಕಗಳು?: ಎರಡು ದಿನಗಳಲ್ಲಿ ಈ ಬಾರಿಯ ಅಭಿಯಾನದಲ್ಲಿ ಭಾಗವಹಿಸಿರುವ 11 ಶಾಲೆಗಳ ವಿದ್ಯಾರ್ಥಿಗಳು 30 ನಿಮಿಷದಿಂದ ಗರಿಷ್ಠ 45 ನಿಮಿಷಗಳ ಕಿರು ನಾಟಕಗಳನ್ನು ಪ್ರದರ್ಶಿಸಲಿದ್ದಾರೆ. 29ರ ಮೊದಲ ದಿನ ಆರು ನಾಟಕಗಳು ಪ್ರದರ್ಶನಗೊಂಡರೆ, ಎರಡನೇ ದಿನ ಐದು ನಾಟಕಗಳು ನಡೆಯಲಿವೆ. ಡಿ.29ರಂದು ಬೆಳಗ್ಗೆ 10:45ಕ್ಕೆ ಕುಂಜಿಬೆಟ್ಟು ಶಾರದಾ ರೆಸಿಡೆನ್ಶಿಯಲ್ ಸ್ಕೂಲಿನ ಮಕ್ಕಳಿಂದ ‘ಪುಷ್ಪರಾಣಿ’, 11:45ಕ್ಕೆ ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಮಕ್ಕಳಿಂದ ‘ಕಾಡಿನ ಪಕ್ಷಿ ಪ್ಯಾಟೆಗೆ ಬಂತು’, ಅಪರಾಹ್ನ 12:45ಕ್ಕೆ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲಿನ ಮಕ್ಕಳಿಂದ ‘ಅಳಿಲು ಮರಿಯ ಹೊರಳು ಸೇವೆ’, 2:30ಕ್ಕೆ ಆದಿಉಡುಪಿ ಪ್ರೌಢಶಾಲೆ ಮಕ್ಕಳಿಂದ ‘ಲಂಬಕರ್ಣನ ಉಷ್ಣೇಶ’, 3:30ಕ್ಕೆ ಉಡುಪಿ ಬೋರ್ಡ್ ಹೈಸ್ಕೂಲ್ ಮಕ್ಕಳಿಂದ ‘ಕಾವ್ಯ ಕಥಾನಾಟಕ’ ಹಾಗೂ ಸಂಜೆ 4:30ಕ್ಕೆ ಮಣಿಪಾಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಮಕ್ಕಳಿಂದ ‘ಕಾಮನ್ಸೆನ್ಸ್’ ನಾಟಕ ಪ್ರದರ್ಶನಗೊಳ್ಳಲಿವೆ. ಡಿ.30ರಂದು ಬೆಳಗ್ಗೆ 9:30ಕ್ಕೆ ಉಡುಪಿ ಬೈಲಕೆರೆ ಶ್ರೀಅನಂತೇಶ್ವರ ಪ್ರೌಢ ಶಾಲೆ ಮಕ್ಕಳಿಂದ ‘ಒಮ್ಮೆ ಸಿಕ್ಕರೆ’, 11:00ಕ್ಕೆ ನಿಟ್ಟೂರು ಪ್ರೌಢಶಾಲಾ ಮಕ್ಕಳಿಂದ ‘ಕತ್ತಲೆ ನಗರ ತಲೆಕೆಟ್ಟ ರಾಜ’, ಅಪರಾಹ್ನ 2:00ಕ್ಕೆ ಕುಂಜಿಬೆಟ್ಟು ಟಿಎ ಪೈ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ ‘ತಾರೆ’, 3:00ಕ್ಕೆ ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಮಕ್ಕಳಿಂದ ‘ಅಳಿಲು ರಾಮಾಯಣ’ ಹಾಗೂ ಸಂಜೆ 4:00ಕ್ಕೆ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ ‘ಎಂಡ್ ಇಲ್ಲದ ಬಂಡ್ ಅವತಾರ’ ನಾಟಕಗಳು ಪ್ರದರ್ಶನಗೊಳ್ಳಲಿವೆ. ಪತ್ರಿಕಾ ಗೋಷ್ಠಿಯಲ್ಲಿ ರಂಗಭೂಮಿಯ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಪ್ರದೀಪ್ಚಂದ್ರ ಕುತ್ಪಾಡಿ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ನ್ಯೂ ಇಯರ್ ಸಂಭ್ರಮ; ಪಾರ್ಕ್, ಕೆರೆಗಳ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಜೋರಾಗಿರುವ ಕಾರಣ ಯಾವುದೇ ಅವಘಡ ಸಂಭವಿಸದಂತೆ ಕ್ರಮ ಕೈಗೊಳ್ಳುವ ಸಲುವಾಗಿ, ಡಿ.31ರ ಬುಧವಾರ ಸಂಜೆ 6ಯಿಂದ ಗುರುವಾರದವರೆಗೂ ನಗರ ಇಲಾಖೆಗೆ ಸೇರಿದ ಕೆರೆ ಮತ್ತು ಪಾರ್ಕ್ ಗಳಿಗೆ ಪ್ರವೇಶವನ್ನು ಪೊಲೀಸ್ ಇಲಾಖೆ ನಿರ್ಬಂಧಿಸಿದೆ
ಕೋಲ್ಕತಾ| ಸಿಲಿಗುರಿಯಲ್ಲಿ ಬಾಂಗ್ಲಾದೇಶದ ಪ್ರವಾಸಿಗರಿಗೆ ನಿಷೇಧ ವಿಧಿಸಿದ ಹೊಟೇಲ್ ಮಾಲಕರ ಸಂಘ
ಕೋಲ್ಕತಾ, ಡಿ. 26: ನೆರೆಯ ಬಾಂಗ್ಲಾದೇಶದಲ್ಲಿ ರಾಜಕೀಯ ಪ್ರಕ್ಷುಬ್ದತೆ ಹಿನ್ನೆಲೆಯಲ್ಲೆ ಪಶ್ಚಿಮಬಂಗಾಳದ ಹೊಟೇಲ್ ಮಾಲಕರ ಸಂಘ ಸಿಲಿಗುರಿಯ ಸುತ್ತಮುತ್ತ ಬಾಂಗ್ಲಾದೇಶದ ಪ್ರವಾಸಿಗರಿಗೆ ವಸತಿ ಸೌಲಭ್ಯ ಒದಗಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲು ನಿರ್ಧರಿಸಿದೆ. ಗ್ರೇಟರ್ ಸಿಲಿಗುರಿ ಹೊಟೇಲ್ ಮಾಲಕರ ಕಲ್ಯಾಣ ಸಂಘ ಇತ್ತೀಚೆಗೆ ಹೊರಡಿಸಿದ ನೋಟಿಸ್ ಪ್ರಕಾರ, ಈ ನಿರ್ಧಾರ ಕೆಲವು ಘಟನೆಗಳಿಗೆ ಸಂಬಂಧಿಸಿದೆ. ಈ ಘಟನೆಗಳು ಭಾರತ ಹಾಗೂ ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಡಲು ಕಾರಣವಾಗಿದೆ. ಈ ಘಟನೆಗಳಲ್ಲಿ ಭಾರತದ ಧ್ವಜಕ್ಕೆ ಅವಮಾನ ಮಾಡಿರುವುದು ಹಾಗೂ ಬಾಂಗ್ಲಾದೇಶದ ಒಂದು ವರ್ಗದ ಪ್ರಜೆಗಳು ಪ್ರಚೋದನಾಕಾರಿ ಹೇಳಿಕೆ ನೀಡಿರುವುದು ಕೂಡ ಸೇರಿದೆ. ಪ್ರಸಕ್ತ ಅತಿ ಸೂಕ್ಷ್ಮ ಪರಿಸ್ಥಿತಿಯಲ್ಲಿ ಅತಿಥಿಗಳು ಹಾಗೂ ಹೊಟೇಲ್ ಸಿಬ್ಬಂದಿಯ ಸುರಕ್ಷೆಯ ಉದ್ದೇಶವನ್ನು ಈ ನಿರ್ಧಾರ ಹೊಂದಿದೆ ಎಂದು ಹೊಟೇಲ್ ಮಾಲಕರ ಸಂಘ ತಿಳಿಸಿದೆ. ಮುಂದಿನ ನೋಟಿಸಿನವರೆಗೆ ಸಂಘದ ಸದಸ್ಯರು ಬಾಂಗ್ಲಾದೇಶಿ ಪ್ರವಾಸಿಗರಿಗೆ ವಸತಿ ನೀಡುವುದಿಲ್ಲ ಎಂದು ಸಂಘದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಸ್ಸಾಂ| ಶಾಲೆಯಲ್ಲಿ ಕ್ರಿಸ್ಮಸ್ ಅಲಂಕಾರ ಧ್ವಂಸ ಆರೋಪ : ವಿಎಚ್ಪಿ, ಬಜರಂಗದಳದ ನಾಲ್ವರು ಕಾರ್ಯಕರ್ತರ ಬಂಧನ
ಗುವಾಹಟಿ, ಡಿ. 26: ಅಸ್ಸಾಂನ ನಲ್ಬರಿ ಜಿಲ್ಲೆಯ ಸಂತ ಮೇರಿ ಶಾಲೆಯಲ್ಲಿ ಕ್ರಿಸ್ಮಸ್ ಅಲಂಕಾರಗಳನ್ನು ಧ್ವಂಸಗೊಳಿಸಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷದ್ (ವಿಎಚ್ಪಿ)ನ ಮೂವರು ಹಾಗೂ ಬಜರಂಗ ದಳದ ಒಬ್ಬರು ಕಾರ್ಯಕರ್ತರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಘಟನೆ ನಲ್ಬರಿಯಲ್ಲಿ ಬುಧವಾರ ನಡೆದಿದೆ. ಸಂಘಪರಿವಾರದ ಗುಂಪು ಇಲ್ಲಿನ ಶಾಲೆಯ ಕ್ಯಾಂಪಸ್ಗೆ ನುಗ್ಗಿ ಬ್ಯಾನರ್ ಹಾಗೂ ಪೋಸ್ಟರ್ಗಳನ್ನು ಹರಿದು ಹಾಕಿದೆ ಹಾಗೂ ಬೆಂಕಿ ಹಚ್ಚಿದೆ. ಸಮೀಪದ ಬೀದಿಯಲ್ಲಿ ಮಾರಾಟ ಮಾಡುತ್ತಿದ್ದ ಕ್ರಿಸ್ಮಸ್ ಅಲಂಕಾರಿಕ ವಸ್ತುಗಳನ್ನು ನಾಶ ಮಾಡಿದೆ. ದಾಂಧಲೆಗೆ ಸಂಬಂಧಿಸಿ ನಾಲ್ವರನ್ನು ಬಂಧಿಸಿರುವುದನ್ನು ನಲ್ಬರಿಯ ಎಸ್ಎಸ್ಪಿ ಬಿಬೇಕಾನಂದ ದಾಸ್ ದೃಢಪಡಿಸಿದ್ದಾರೆ. ‘‘ನಾವು ಮೊದಲೇ ಮೂವರನ್ನು ಗುರುತಿಸಿದ್ದೆವು. ಆದರೆ, ಗುಂಪು ದೊಡ್ಡದಾಗಿತ್ತು. ಎಲ್ಲರೂ ನಲ್ಬರಿ ಜಿಲ್ಲೆಯ ಸ್ಥಳೀಯರು’’ ಎಂದು ದಾಸ್ ಹೇಳಿದ್ದಾರೆ. ಶಾಲೆಯ ಪ್ರಾಂಶುಪಾಲ ಫಾದರ್ ಬೈಜು ಸೆಬಾಸ್ಟಿಯನ್ ಬೆಲ್ಸೋರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ ಬಳಿಕ ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಬುಧವಾರ ಅಪರಾಹ್ನ ಸುಮಾರು 2.30ಕ್ಕೆ ಅಪರಿಚಿತ ದುಷ್ಕರ್ಮಿಗಳು ಶಾಲೆಯ ಆವರಣ ಪ್ರವೇಶಿಸಿದರು. ಅಲಂಕಾರ, ಲೈಟ್, ಗಿಡದ ಕುಂಡ ಹಾಗೂ ಇತರ ವಸ್ತುಗಳಿಗೆ ಹಾನಿ ಉಂಟು ಮಾಡಿದರು. ಗೊದಲಿಗೆ ಬೆಂಕಿ ಹಚ್ಚಿದರು ಎಂದು ಸೆಬಾಸ್ಟಿಯನ್ ದೂರಿನಲ್ಲಿ ಆರೋಪಿಸಿದ್ದಾರೆ. ಬಂಧಿತರದಲ್ಲಿ ವಿಎಚ್ಪಿಯ ನಲ್ಬರಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್ ದೇಕಾ (34), ವಿಎಚ್ಪಿಯ ಉಪಾಧ್ಯಕ್ಷರಾದ ಮಾನಸ್ ಜ್ಯೋತಿ ಪಟ್ಗಿರಿ (32), ವಿಎಚ್ಪಿಯ ಸಹಾಯಕ ಕಾರ್ಯದರ್ಶಿ ಬಿಜು ದತ್ತಾ (34), ನಲ್ಬರಿ ಬಜರಂಗದಳದ ಜಿಲ್ಲಾ ಸಂಚಾಲಕರಾದ ನಯನ್ ತೆಂಡೂಲ್ಕರ್(34) ಸೇರಿದ್ದಾರೆ. ಇವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)ಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕ್ರಿಮಿನಲ್ ಅತಿಕ್ರಮಣ, ದುಷ್ಕೃತ್ಯ, ಕ್ರಿಮಿನಲ್ ಬೆದರಿಗೆ ಹಾಗೂ ಕ್ರಿಮಿನಲ್ ಪಿತೂರಿಯ ಪ್ರಕರಣಗಳನ್ನು ದಾಖಲಿಸಲಾಗಿದೆ.
ಹೊಸದಿಲ್ಲಿ,ಡಿ.26: ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಕುಲದೀಪ್ ಸೆಂಗಾರ್ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಇಲ್ಲಿನ ದಿಲ್ಲಿ ಉಚ್ಚ ನ್ಯಾಯಾಲಯದ ಹೊರಗೆ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರದರ್ಶನಾ ಫಲಕಗಳನ್ನು ಹಿಡಿದುಕೊಂಡ ಪ್ರತಿಭಟನಕಾರರು ಉನ್ನಾವೋ ಅತ್ಯಾಚಾರ ಸಂತ್ರಸ್ತೆಯನ್ನು ಬೆಂಬಲಿಸಿ ‘‘ಅತ್ಯಾಚಾರಿಗಳನ್ನು ರಕ್ಷಿಸುವುದನ್ನು ನಿಲ್ಲಿಸಿ’’ ಎಂದು ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಯೋಗಿತಾ ಭಯಾನಾ ಹಾಗೂ ಸಂತ್ರಸ್ತೆಯ ತಾಯಿಯೊಂದಿಗೆ ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘಟನೆ (ಎಐಡಿಡಬ್ಲುಎ) ಯ ಮಹಿಳಾ ಹೋರಾಟಗಾರರು ಪಾಲ್ಗೊಂಡಿದ್ದರು. ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸಂತ್ರಸ್ತೆಯ ತಾಯಿ, ನನ್ನ ಮಗಳು ತುಂಬಾ ಕಷ್ಟ ಅನುಭವಿಸಿದ್ದರಿಂದ ಪ್ರತಿಭಟಿಸಲು ಉಚ್ಚ ನ್ಯಾಯಾಲಯಕ್ಕೆ ಬಂದಿದ್ದೇನೆ ಎಂದು ಹೇಳಿದರು. ‘‘ನಾನು ಇಡೀ ಉಚ್ಚ ನ್ಯಾಯಾಲಯವನ್ನು ದೂಷಿಸುತ್ತಿಲ್ಲ. ನಮ್ಮ ನಂಬಿಕೆಯನ್ನು ನುಚ್ಚು ನೂರು ಮಾಡಿದ ಆದೇಶ ನೀಡಿದ ಇಬ್ಬರು ನ್ಯಾಯಾಧೀಶರನ್ನು ಮಾತ್ರ ದೂಷಿಸುತ್ತೇನೆ’’ ಎಂದು ಹೇಳಿದರು. ಹಿಂದಿನ ನ್ಯಾಯಾಧೀಶರು ನಮ್ಮ ಕುಟುಂಬಕ್ಕೆ ನ್ಯಾಯಾ ನೀಡಿದ್ದರು. ಆದರೆ, ಈಗ ಆರೋಪಿಗಳಿಗೆ ಜಾಮೀನು ನೀಡಲಾಗಿದೆ ಎಂದು ತಿಳಿಸಿದರು. ‘‘ಇದು ನಮ್ಮ ಕುಟುಂಬಕ್ಕೆ ಆದ ಅನ್ಯಾಯ. ನನಗೆ ನ್ಯಾಯಾಲಯದಲ್ಲಿ ನಂಬಿಕೆ ಇರುವುದರಿಂದ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲಿದ್ದೇನೆ’’ ಎಂದು ಹೇಳಿದರು. ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕುಲದೀಪ್ ಸೆಂಗಾರ್ನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ದಿಲ್ಲಿ ಉಚ್ಚ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ವಿಚಾರಣಾ ನ್ಯಾಯಾಲಯ ಡಿಸೆಂಬರ್ 2019ರಂದು ಕುಲದೀಪ್ ಸೆಂಗಾರ್ಗೆ ಜೀವಾವಧಿ ಶಿಕ್ಷೆ ನೀಡಿತ್ತು. ಇದನ್ನು ಪ್ರಶ್ನಿಸಿ ಆತ ಮೇಲ್ಮನವಿ ಸಲ್ಲಿಸಿದ್ದ. ಈ ಮೇಲ್ಮನವಿಯ ವಿಚಾರಣೆ ಬಾಕಿ ಇರುವಾಗಲೇ ಉಚ್ಚ ನ್ಯಾಯಾಲಯ ಜಾಮೀನು ನೀಡಿದೆ.
ಕರಾವಳಿ ಉತ್ಸವ | ಹೆಲಿಕಾಪ್ಟರ್ ಪ್ರಯಾಣ ‘ಹೆಲಿರೈಡ್’ಗೆ ಚಾಲನೆ
ಪ್ರತಿ ವ್ಯಕ್ತಿಗೆ 3500 ರೂ. ದರ ನಿಗಧಿ
ವಿಜಯನಗರ | ಜ.1 ರಿಂದ 30ರವರಗೆ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ : ಕೆ.ಎಂ.ರಾಜಶೇಖರ್
ವಿಜಯನಗರ(ಹೊಸಪೇಟೆ) : ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜ.1 ರಿಂದ 30ರವರಗೆ ರಸ್ತೆ ಸುರಕ್ಷತೆಯ ಬಗ್ಗೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ದತೆಯನ್ನು ಕೈಗೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಂ.ರಾಜಶೇಖರ್ ಹೇಳಿದರು. ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡಿದರು. ರಸ್ತೆ ನಿಯಮಗಳ ಪಾಲನೆ, ಅಪಘಾತ ತಡೆಗಟ್ಟುವಿಕೆ ಮತ್ತು ಸುರಕ್ಷಿತ ರಸ್ತೆ ಸಂಚಾರದ ಕುರಿತು ಜನಸಾಮಾನ್ಯರು, ಯುವಜನರು ಸೇರಿದಂತೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾಗಳು, ಬೀದಿ ನಾಟಕಗಳು ಮತ್ತು ಎಲ್ಲಾ ಶಾಲಾ-ಕಾಲೇಜಿಗಳಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಗರದಲ್ಲಿ ವಾಹನಗಳ ಸಂಖ್ಯೆಯು ಹೆಚ್ಚಾಗಿದ್ದು ಅವುಗಳನ್ನು ಸರಿಯಾದ ರೀತಿ ಪಾರ್ಕಿಂಗ್ ಮಾಡುತ್ತಿಲ್ಲ. ಅದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಮತ್ತು ಸೂಕ್ತ ವಾಹನಗಳ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಬೇಕು ಎಂದು ಹೇಳಿದರು. 18 ವರ್ಷದೊಳಗಿನ ಮಕ್ಕಳು ವಾಹನಗಳನ್ನು ಚಲಾಯಿಸುತ್ತಿದ್ದು, ಅವರ ಪೋಷಕರ ಮೇಲೆ ಪ್ರಕರಣ ದಾಖಲಿಸಿ 25 ಸಾವಿರ ರೂ. ದಂಡವನ್ನು ವಿಧಿಸಬೇಕು. ಹೈವೇ ರಸ್ತೆಯಲ್ಲಿ ಕೆಟ್ಟುನಿಂತ ವಾಹನಗಳನ್ನು ರಸ್ತೆಯ ಮಧ್ಯದಲ್ಲೇ ನಿಲ್ಲಿಸದೇ ರಸ್ತೆ ಬದಿಗೆ ಹಾಕಿ ರಿಪೇರಿ ಮಾಡಬೇಕು ಎಂದರು. ಈ ವೇಳೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕುಮಾರ ಸ್ವಾಮಿ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಮತ್ತು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಸುಬ್ರಮಣ್ಯ, ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿ ಕೆ.ದಾಮೋದರ್, ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ ಸೇರಿದಂತೆ ಇತರರು ಇದ್ದರು.
‘ಉತ್ತರ ಭಾರತದ ಬುಲ್ಡೋಝರ್ ನ್ಯಾಯ’ ಕರ್ನಾಟಕದಲ್ಲಿ ಪ್ರತಿಧ್ವನಿಸುತ್ತಿದೆ: ಕೇರಳ ಸಿಎಂ ಪಿಣರಾಯಿ ವಿಜಯನ್
ಬೆಂಗಳೂರಿನ ಫಕೀರ್ ಕಾಲೋನಿ, ವಾಸಿಂ ಲೇಔಟ್ ನೆಲಸಮ ಕಾರ್ಯಾಚರಣೆ ಬಗ್ಗೆ ಆಕ್ರೋಶ
ವಿಜಯ ಹಝಾರೆ ಟ್ರೋಫಿ: ಕೊಹ್ಲಿ ವಿಶ್ವ ದಾಖಲೆ
ಬೆಂಗಳೂರು, ಡಿ. 26: ವಿಜಯ ಹಝಾರೆ ಟ್ರೋಫಿ ಪಂದ್ಯಾವಳಿಯಲ್ಲಿ, ಶುಕ್ರವಾರ ಗುಜರಾತ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಿಲ್ಲಿ ತಂಡದ ಪರವಾಗಿ 77 ರನ್ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ, ಲಿಸ್ಟ್ ಎ ಕ್ರಿಕೆಟ್ನಲ್ಲಿ ಅತಿ ಹೆಚ್ಚಿನ ರನ್ ಸರಾಸರಿಯಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆ ಈವರೆಗೆ ಆಸ್ಟ್ರೇಲಿಯದ ಮೈಕೆಲ್ ಬೆವನ್ ಹೆಸರಿನಲ್ಲಿತ್ತು. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ 61 ಎಸೆತಗಳಲ್ಲಿ 77 ರನ್ಗಳನ್ನು ಬಾರಿಸಿದರು. ಇದರೊಂದಿಗೆ ಅವರ ಲಿಸ್ಟ್ ಎ ಸರಾಸರಿ 57.87ಕ್ಕೆ ಏರಿತು. ಈ ಮೂಲಕ ಅವರು ಬೆವನ್ರ 57.86ರ ಸರಾಸರಿಯನ್ನು ಕೂದಲೆಳೆಯ ಅಂತರದಿಂದ ಹಿಂದಿಕ್ಕಿದರು. ಕೊಹ್ಲಿ ಕಳೆದ ಆರು 50-ಓವರ್ ಪಂದ್ಯಗಳಲ್ಲಿ 146ರ ಸರಾಸರಿಯಲ್ಲಿ ರನ್ಗಳನ್ನು ಗಳಿಸಿದ್ದಾರೆ. ಶುಕ್ರವಾರ ದಿಲ್ಲಿ ತಂಡವು ಗುಜರಾತನ್ನು ಏಳು ರನ್ಗಳಿಂದ ಸೋಲಿಸಿದೆ. 77 ರನ್ಗಳನ್ನು ಬಾರಿಸಿದ ಹಾಗೂ ಎರಡು ಕ್ಯಾಚ್ಗಳನ್ನು ಹಿಡಿದ ಕೊಹ್ಲಿಯನ್ನು ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕರಿಸಲಾಯಿತು. ಟಾಸ್ ಗೆದ್ದ ಗುಜರಾತ್ ಎದುರಾಳಿಯನ್ನು ಮೊದಲು ಬ್ಯಾಟಿಂಗ್ಗೆ ಇಳಿಸಿತು. ದಿಲ್ಲಿ 50 ಓವರ್ಗಳಲ್ಲಿ 9 ವಿಕೆಟ್ಗಳ ನಷ್ಟಕ್ಕೆ 254 ರನ್ಗಳನ್ನು ಗಳಿಸಿತು. ವಿರಾಟ್ ಕೊಹ್ಲಿಯ 77 ರನ್ ತಂಡದ ಗರಿಷ್ಠ ಮೊತ್ತವಾಯಿತು. ಉಳಿದಂತೆ ನಾಯಕ ರಿಶಭ್ ಪಂತ್ 70 ರನ್ಗಳ ದೇಣಿಗೆ ನೀಡಿದರು. ಹರ್ಷ ತ್ಯಾಗಿ 40 ರನ್ಗಳನ್ನು ಗಳಿಸಿದರು. ಗುಜರಾತ್ ಪರವಾಗಿ ವಿಶಾಲ್ ಜೈಸ್ವಾಲ್ ನಾಲ್ಕು ವಿಕೆಟ್ಗಳನ್ನು ಉರುಳಿಸಿದರೆ, ರವಿ ಬಿಷ್ಣೋಯ್ ಎರಡು ವಿಕೆಟ್ಗಳನ್ನು ಪಡೆದರು. ಗೆಲ್ಲಲು 255 ರನ್ಗಳ ಗುರಿಯನ್ನು ಪಡೆದ ಗುಜರಾತ್, 47.4 ಓವರ್ಗಳಲ್ಲಿ 247 ರನ್ಗಳಿಗೆ ಸರ್ವಪತನಗೊಂಡಿತು. ಆರಂಭಿಕ ಬ್ಯಾಟರ್ ಆರ್ಯ ದೇಸಾಯಿ 57 ರನ್ಗಳನ್ನು ಗಳಿಸಿದರು. ಉರ್ವಿ ಪಟೇಲ್ 31, ಅಭಿಶೇಕ್ ದೇಸಾಯಿ 26, ಸೌರವ್ ಚೌಹಾಣ್ 49 ಮತ್ತು ವಿಶಾಲ್ ಜೈಸ್ವಾಲ್ 26 ರನ್ಗಳ ದೇಣಿಗೆ ನೀಡಿದರು. ದಿಲ್ಲಿ ಪರವಾಗಿ ಪ್ರಿನ್ಸ್ ಯಾದವ್ 3 ವಿಕೆಟ್ಗಳನ್ನು ಕೆಡವಿದರೆ, ಇಶಾಂತ್ ಶರ್ಮಾ ಮತ್ತು ಅರ್ಪಿತ್ ರಾಣಾ ತಲಾ ಎರಡು ವಿಕೆಟ್ಗಳನ್ನು ಪಡೆದರು. ಲಿಸ್ಟ್ ಎ ಕ್ರಿಕೆಟ್ನಲ್ಲಿ ಗರಿಷ್ಠ ರನ್ ಸರಾಸರಿ ಹೊಂದಿರುವ ಬ್ಯಾಟರ್ಗಳು 1. ವಿರಾಟ್ ಕೊಹ್ಲಿ (ಭಾರತ)- 57.87 2. ಮೈಕೆಲ್ ಬೆವನ್ (ಆಸ್ಟ್ರೇಲಿಯ)- 57.86 3. ಸ್ಯಾಮ್ ಹೇನ್ (ಇಂಗ್ಲೆಂಡ್)- 57.76 4. ಚೇತೇಶ್ವರ್ ಪೂಜಾರ (ಭಾರತ)- 57.01 5. ಋತುರಾಜ್ ಗಾಯಕ್ವಾಡ್ (ಭಾರತ)- 56.68 6. ಬಾಬರ್ ಅಝಮ್ (ಪಾಕಿಸ್ತಾನ)- 53.82 7. ಎಬಿ ಡಿ ವಿಲಿಯರ್ಸ್ (ದಕ್ಷಿಣ ಆಫ್ರಿಕ)- 53.46
ಕಲಬುರಗಿ | ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ : ಲಕ್ಷ್ಮಣ ಶೃಂಗೇರಿ
ಕಲಬುರಗಿ: ಸಮಾಜದ ಪ್ರತಿಯೊಬ್ಬರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆ ನಿರ್ಮಾಣ ಮಾಡಬೇಕು ಎಂದು ಸ್ವೀಪ್ ಸಮಿತಿಯ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ ಹೇಳಿದರು. ನಗರದ ಹಳೆಯ ಜಿಲ್ಲಾ ಪಂಚಾಯತ್ ಕಟ್ಟಡದ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತದಾರರ ಸಾಕ್ಷರತಾ ಸಂಘ ಅಡಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಆ ಮೂಲಕ ಒಳ್ಳೆಯ ಚಾರಿತ್ರಿ ಉಳ್ಳ ವ್ಯಕ್ತಿಯನ್ನು ಆರಿಸಿ ಪ್ರಜಾಪ್ರಭುತ್ವದ ಬೇರು ಗಟ್ಟಿ ಮಾಡಬೇಕು ಎಂದರು. ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷರಾದ ಶಿವಾನಂದ್ ಖಜೂರಿ ಮಾತನಾಡಿ, ನೈಸರ್ಗಿಕವಾಗಿ ಭಾರತ ಶ್ರೀಮಂತವಾಗಿದೆ. ಯುವಕರಿಂದ ಕೂಡಿದ ರಾಷ್ಟ್ರವಾಗಿದೆ. ಪ್ರತಿಯೊಬ್ಬರು ನನ್ನ ಮತ ನನ್ನ ಹಕ್ಕು ತಿಳಿದುಕೊಂಡು ರಾಷ್ಟ್ರಕ್ಕೆ ಆಧಾರಸ್ತಂಭ ವಾಗುವ ನಾಯಕರನ್ನು ಆರಿಸಿ ತರಬೇಕು, ಆ ಮೂಲಕ ಸದೃಢ ಭಾರತ ನಿರ್ಮಾಣ ಮಾಡಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪನಿರ್ದೇಶಕರಾದ ಸುರೇಶ ಅಕ್ಕಣ್ಣ, ಇದು ಅತ್ಯಂತ ಮಹತ್ವದ ಕಾರ್ಯಕ್ರಮ. ವಿದ್ಯಾರ್ಥಿ ಸಮೂಹ ಮತದಾನ ಪ್ರಕ್ರಿಯೆ, ಮತದಾನದ ಹಕ್ಕು ಮತ್ತು ಚುನಾವಣೆ ಈ ವ್ಯವಸ್ಥೆ ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಪ್ರಜಾಪ್ರಭುತ್ವದ ತತ್ವಗಳನ್ನು ಬಿತ್ತರಿಸುವ ಸಲುವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದರು. ಎನ್ಎಸ್ಎಸ್ ವಿಭಾಗೀಯ ಅಧಿಕಾರಿ ಡಾ.ಚಂದ್ರಶೇಖರ್ ದೊಡ್ಡಮನಿ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಜೆ ಮಲ್ಲಪ್ಪ, ನಿವೃತ್ತ ಪ್ರಾಂಶುಪಾಲ ಬಸವರಾಜ ಬಿರಾದಾರ್, ಪ್ರಾಂಶುಪಾಲರಾದ ಜಯಶ್ರೀ ಪಾಟೀಲ್, ರಾಜ್ಯ ಪರಿಷತ್ತಿನ ಸದಸ್ಯರಾದ ಧರ್ಮರಾಯ ಜವಳಿ, ಡಾ.ಭೀಮರಾಯ ಅರಿಕೇರಿ ಉಮೇಶ್ ಅಷ್ಟಗಿ, ಡಾ.ಭಿಮರಾಯ ಅರಿಕೇರಿ, ಬಾಬುಮಿಯ ಶರಣಗೌಡ ಪಾಟೀಲ್ ,ಶ್ರೀಶೈಲ್ ಮಾಳಗೆ ಸೋಮು ರಾಠೋಡ್ ಕಾಲೇಜಿನ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ELC ನೋಡಲ್ ಅಧಿಕಾರಿ, ಪ್ರಾಂಶುಪಾಲ ಚಂದ್ರಕಾಂತ್ ಸನದಿ ಸ್ವಾಗತಿಸಿದರು. ಕಲಬುರಗಿ ತಾಲೂಕಿನ ELC ನೋಡಲ್ ಅಧಿಕಾರಿ ಪಾಂಡು ಎಲ್ ರಾಠೋಡ್ ನಿರೂಪಿಸಿದರು.
ವೈಭವ್ ಸೂರ್ಯವಂಶಿಗೆ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿ ಪ್ರದಾನ
ಹೊಸದಿಲ್ಲಿ,ಡಿ. 26: 2025ರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಹದಿನಾಲ್ಕು ವರ್ಷದ ಬಾಲ ಕ್ರಿಕೆಟಿಗ ವೈಭವ್ ಸೂರ್ಯವಂಶಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ‘ವೀರ ಬಾಲ ದಿವಸ’ ಕಾರ್ಯಕ್ರಮದಲ್ಲಿ ವೈಭವ್ ಸೂರ್ಯವಂಶಿಯನ್ನು ಗೌರವಿಸಲಾಯಿತು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಆಡುತ್ತಿರುವ ವೈಭವ್, ಪುರುಷರ ಟಿ20 ಕ್ರಿಕೆಟ್ನಲ್ಲಿ ಶತಕ ಬಾರಿಸಿರುವ ಅತ್ಯಂತ ಕಿರಿಯ ಆಟಗಾರನಾಗಿದ್ದಾರೆ. ಅವರು ರಾಜಸ್ಥಾನದ ಪರವಾಗಿ 38 ಎಸೆತಗಳಲ್ಲಿ 101 ರನ್ಗಳನ್ನು ಸಿಡಿಸಿದ್ದಾರೆ. ಇದು ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ವೇಗದ ಶತಕವಾಗಿದೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2025 ಟಿ20 ಪಂದ್ಯಾವಳಿಯಲ್ಲಿ ಅವರು ಮಹಾರಾಷ್ಟ್ರದ ವಿರುದ್ಧ ಬಿಹಾರದ ಪರವಾಗಿ 61 ಎಸೆತಗಳಲ್ಲಿ ಅಜೇಯ 108 ರನ್ಗಳನ್ನು ಸಿಡಿಸಿದ್ದಾರೆ. ಅಲ್ಲಿಯೂ, ಪಂದ್ಯಾವಳಿಯ ಇತಿಹಾಸದಲ್ಲಿ ಶತಕ ಬಾರಿಸಿರುವ ಅತ್ಯಂತ ಕಿರಿಯ ಆಟಗಾರ ಅವರಾಗಿದ್ದಾರೆ. ಬಿಹಾರದ ಈ ಸಾಲಿನ ಮೊದಲ ವಿಜಯ ಹಝಾರೆ ಟ್ರೋಫಿ 50 ಓವರ್ಗಳ ಪಂದ್ಯಾವಳಿಯಲ್ಲಿ, ಸೂರ್ಯವಂಶಿ ಅರುಣಾಚಲಪ್ರದೇಶದ ವಿರುದ್ಧ ಕೇವಲ 84 ಎಸೆತಗಳಲ್ಲಿ 190 ರನ್ಗಳನ್ನು ಇತ್ತೀಚೆಗೆ ಸಿಡಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದ ಹಿನ್ನೆಲೆಯಲ್ಲಿ, ಬಿಹಾರದ ಎರಡನೇ ವಿಜಯ ಹಝಾರೆ ಟ್ರೋಫಿ ಪಂದ್ಯದಿಂದ ವೈಭವ್ ಹೊರಗುಳಿಯಬೇಕಾಯಿತು. ಮಣಿಪುರ ವಿರುದ್ಧದ ಪಂದ್ಯವು ರಾಂಚಿಯ ಜೆಎಸ್ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯಿತು.
ಮೆಜೆಸ್ಟಿಕ್ ಮೆಟ್ರೋದಲ್ಲಿ ವಿಕೃತಿ; ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ , ನಗ್ತಿದ್ದ ಕಾಮುಕ ಅಂಕಲ್ ವಿರುದ್ಧ NCR
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಸಾಮಾನ್ಯವಾಗಿ ಜನದಟ್ಟಣೆ ಇರುತ್ತದೆ. ಇದನ್ನೇ ಬಂಡವಾಳ ಮಾಡಿಕೊಂಡ ಕಾಮುಕನೊಬ್ಬ ಯುವತಿಯೊಬ್ಬರ ಖಾಸಗಿ ಅಂಗಾಗ ಮುಟ್ಟಿ, ಆಕೆಯ ಎದುರು ಏನೂ ತಿಳಿದೇ ಇಲ್ಲ ಎನ್ನುವಂತೆ ಕೆಟ್ಟದಾಗಿ ನಗುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಇದರಿಂದ ಸಿಟ್ಟಾದ ಯುವತಿ ಜನರ ಮುಂದೆಯೇ ಆತನನ್ನು ತರಾಟೆಗೆ ತೆಗೆದುಕೊಂಡು ದೂರು ದಾಖಲಿಸಿದ್ದಾಳೆ. ಆರೋಪಿ ಆಕೆಯ ಕಾಲಿಗೆ ಬಿದ್ದು ಕ್ಷಮೆ ಕೇಳಿರುವ ದೃಶ್ಯಾವಳಿ ಜನರ ಮೊಬೈಲ್ನಲ್ಲಿ ರೆಕಾರ್ಡ್ ಆದ ವಿಡಿಯೋದಲ್ಲಿ ಇದೆ.
ಆಸ್ಟ್ರೇಲಿಯ-ಇಂಗ್ಲೆಂಡ್ 4ನೇ ಆ್ಯಶಸ್ ಟೆಸ್ಟ್: ಮೊದಲ ದಿನವೇ 20 ವಿಕೆಟ್ಗಳು ಪತನ
ಮೆಲ್ಬರ್ನ್,ಡಿ.26: ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನೆರೆದ ದಾಖಲೆ ಸಂಖ್ಯೆಯ ಪ್ರೇಕ್ಷಕರ ಎದುರು ಶುಕ್ರವಾರ ಆಸ್ಟ್ರೇಲಿಯ ಮತ್ತು ಪ್ರವಾಸಿ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ನಾಲ್ಕನೇ ಆ್ಯಶಸ್ ಟೆಸ್ಟ್ನ ಮೊದಲ ದಿನ 20 ವಿಕೆಟ್ಗಳು ಉರುಳಿದವು. ಇದು 1902ರ ಆ್ಯಶಸ್ ಸರಣಿಯ ಬಳಿಕ, ಮೆಲ್ಬರ್ನ್ ಮೈದಾನದಲ್ಲಿ ಒಂದು ದಿನದಲ್ಲಿ ಉರುಳಿದ ಗರಿಷ್ಠ ಸಂಖ್ಯೆಯ ವಿಕೆಟ್ಗಳಾಗಿವೆ. 1902ರಲ್ಲಿ ದಾಖಲೆಯ 25 ವಿಕೆಟ್ಗಳು ಉರುಳಿದ್ದವು. ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ದಾಖಲೆಯ 93,442 ಪ್ರೇಕ್ಷಕರು ನೆರೆದಿದ್ದರು. ಈ ಮೈದಾನದ ಹಿಂದಿನ ದಾಖಲೆ 93,013 ಆಗಿದೆ. 2015ರ ವಿಶ್ವಕಪ್ ಫೈನಲ್ ವೀಕ್ಷಣೆಗೆ ಅಷ್ಟು ಜನ ಸೇರಿದ್ದರು. ಮೊದಲ ದಿನದಾಟದ ಕೊನೆಯ ಹೊತ್ತಿಗೆ ಆಸ್ಟ್ರೇಲಿಯವು ತನ್ನ ದ್ವಿತೀಯ ಇನಿಂಗ್ಸ್ನಲ್ಲಿ ವಿಕೆಟ್ ನಷ್ಟವಿಲ್ಲದೆ ನಾಲ್ಕು ರನ್ಗಳನ್ನು ಗಳಿಸಿದೆ. ನೈಟ್ವಾಚ್ಮನ್ ಸ್ಕಾಟ್ ಬೊಲಾಂಡ್ ನಾಲ್ಕು ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ. ಇನ್ನೋರ್ವ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಇನ್ನಷ್ಟೇ ಖಾತೆಯನ್ನು ತೆರೆಯಬೇಕಾಗಿದೆ. ಆಸ್ಟ್ರೇಲಿಯವು ಒಟ್ಟಾರೆ 46 ರನ್ಗಳ ಮುನ್ನಡೆಯನ್ನು ಹೊಂದಿದೆ. ಸಾಂಪ್ರದಾಯಿಕ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ, ಟಾಸ್ ಗೆದ್ದ ಇಂಗ್ಲೆಂಡ್ ಎದುರಾಳಿ ತಂಡವನ್ನು ಮೊದಲು ಬ್ಯಾಟಿಂಗ್ಗೆ ಇಳಿಸಿತು. ಆಸ್ಟ್ರೇಲಿಯವು ತನ್ನ ಮೊದಲ ಇನ್ನಿಂಗ್ಸ್ನಲ್ಲಿ ಜೋಶ್ ಟಂಗ್ರ ಉರಿದಾಳಿಗೆ ತತ್ತರಿಸಿ 152 ರನ್ಗೆ ಆಲೌಟ್ ಆಯಿತು. ಜೋಶ್ ಟಂಗ್ 45 ರನ್ಗಳನ್ನು ಕೊಟ್ಟು ಐದು ವಿಕೆಟ್ಗಳನ್ನು ಉರುಳಿಸಿದರು. ಇದು ಅವರ ಜೀವನಶ್ರೇಷ್ಠ ನಿರ್ವಹಣೆಯಾಗಿದೆ. ಆಸ್ಟ್ರೇಲಿಯದ ಪರವಾಗಿ 35 ರನ್ಗಳನ್ನು ಗಳಿಸಿದ ಮೈಕಲ್ ನೇಸರ್ ತಂಡದ ಗರಿಷ್ಠ ಗಳಿಕೆದಾರರಾದರು. ಉಳಿದಂತೆ ಉಸ್ಮಾನ್ ಖ್ವಾಜಾ 29 ರನ್ಗಳ ದೇಣಿಗೆ ನೀಡಿದರು. ಅಲೆಕ್ಸ್ ಕ್ಯಾರಿ 20 ರನ್ಗಳನ್ನು ಗಳಿಸಿದರು. ಇಂಗ್ಲೆಂಡ್ ಪರವಾಗಿ ಗಸ್ ಆ್ಯಟ್ಕಿನ್ಸನ್ 28 ರನ್ಗಳನ್ನು ನೀಡಿ 2 ವಿಕೆಟ್ಗಳನ್ನು ಉರುಳಿಸಿದರು. ಬಳಿಕ, ಇಂಗ್ಲೆಂಡ್ನ ಪ್ರಥಮ ಇನಿಂಗ್ಸ್ನಲ್ಲಿ ಬ್ಯಾಟರ್ಗಳು ಇನ್ನಷ್ಟು ಕ್ಷಿಪ್ರ ಕುಸಿತ ಕಂಡರು. ಮಿಚೆಲ್ ಸ್ಟಾರ್ಕ್, ಮೈಕಲ್ ನೇಸರ್ ಮತ್ತು ಸ್ಕಾಟ್ ಬೊಲಾಂಡ್ರ ಮಾರಕ ದಾಳಿಗೆ ತತ್ತರಿಸಿದರು. ಇಂಗ್ಲೆಂಡ್ ಇನಿಂಗ್ಸ್ಗೆ ಆಧಾರ ನೀಡಿದ್ದು ಹ್ಯಾರಿ ಬ್ರೂಕ್ ಮಾತ್ರ. ಅವರು 34 ಎಸೆತಗಳಲ್ಲಿ 41 ರನ್ ಗಳಿಸಿ ತಂಡದ ಗರಿಷ್ಠ ಸ್ಕೋರ್ದಾರರಾದರು. ಗಸ್ ಆ್ಯಟ್ಕಿನ್ಸನ್ 28 ರನ್ಗಳನ್ನು ಕೂಡಿಸಿದರೆ, ನಾಯಕ ಬೆನ್ ಸ್ಟೋಕ್ಸ್ 16 ರನ್ಗಳ ದೇಣಿಗೆ ನೀಡಿದರು. ಉಳಿದ ಬ್ಯಾಟರ್ಗಳಿಗೆ ಎರಡಂಕಿ ಮೊತ್ತ ತಲುಪಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಅದು 29.5 ಓವರ್ಗಳಲ್ಲಿ 110 ರನ್ಗಳನ್ನು ಗಳಿಸಿ ಆಲೌಟಾಯಿತು. ಇಂಗ್ಲೆಂಡ್ ಈಗಾಗಲೇ ಮೊದಲ ಮೂರು ಟೆಸ್ಟ್ಗಳನ್ನು ಸೋತು ಸರಣಿಯನ್ನು ಕಳೆದುಕೊಂಡಿದೆ. ಸಂಕ್ಷಿಪ್ತ ಸ್ಕೋರ್ ಆಸ್ಟ್ರೇಲಿಯ ಮೊದಲ ಇನಿಂಗ್ಸ್ (45.2 ಓವರ್ಗಳಲ್ಲಿ) 152 ಉಸ್ಮಾನ್ ಖ್ವಾಜಾ 29, ಅಲೆಕೆ ಕ್ಯಾರಿ 20, ಮೈಕಲ್ ನೇಸರ್ 35 ಗಸ್ ಆ್ಯಟ್ಕಿನ್ಸನ್ 2-28, ಜೋಶ್ ಟಂಗ್ 5-45 ಇಂಗ್ಲೆಂಡ್ ಮೊದಲ ಇನಿಂಗ್ಸ್ (29.5 ಓವರ್ಗಳಲ್ಲಿ) 110 ಹ್ಯಾರಿ ಬ್ರೂಕ್ 41, ಬೆನ್ ಸ್ಟೋಕ್ಸ್ 16, ಗಸ್ ಆ್ಯಟ್ಕಿನ್ಸನ್ 28 ಮಿಚೆಲ್ ಸ್ಟಾರ್ಕ್ 2-23, ಮೈಕಲ್ ನೇಸರ್ 4-45, ಸ್ಕಾಟ್ ಬೊಲಾಂಡ್ 3-30 ಆಸ್ಟ್ರೇಲಿಯ ದ್ವಿತೀಯ ಇನಿಂಗ್ಸ್ (ಒಂದು ಓವರ್ನಲ್ಲಿ) 4-0 ಸ್ಕಾಟ್ ಬೊಲಾಂಡ್ 4 (ಔಟಾಗದೆ), ಟ್ರಾವಿಸ್ ಹೆಡ್ (ಔಟಾಗದೆ) 0
Nelamangala | ರಸ್ತೆ ಅಪಘಾತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು : ಕ್ರಿಸ್ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟಗೆರೆ ಕ್ರಾಸ್ನಲ್ಲಿ ವರದಿಯಾಗಿದೆ. ಗೌರಿಬಿದನೂರು ಮೂಲದ ಹರೀಶ್(39) ಮತ್ತು ವೀರಭದ್ರ(88) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಗೌರಮ್ಮ(62), ಮೈತ್ರಿ(32), ಸಿರಿ(10), ವಂದನಾ(8) ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದ್ದಾರೆ. ಇವರು ಡಿ.25ರ ಗುರುವಾರ ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ತಮ್ಮ ನಿವಾಸದಿಂದ ಹುಟ್ಟೂರು ಗೌರಿಬಿದನೂರಿಗೆ ತೆರಳಿದ್ದರು. ಹುಟ್ಟೂರಿನಲ್ಲಿ ಜಮೀನು ನೋಡಿಕೊಂದು ಅದೇ ದಿನ ಸಂಜೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೈವಾನ್ಗೆ ಶಸ್ತ್ರಾಸ್ತ್ರ ಮಾರಾಟ: ಅಮೆರಿಕಾದ ರಕ್ಷಣಾ ಸಂಸ್ಥೆಗಳಿಗೆ ಚೀನಾ ನಿರ್ಬಂಧ
ಬೀಜಿಂಗ್, ಡಿ.26: ತೈವಾನ್ಗೆ ಶಸ್ತ್ರಾಸ್ತ್ರ ಮಾರಾಟದ ವಿಷಯಕ್ಕೆ ಸಂಬಂಧಿಸಿ ಅಮೆರಿಕಾದ 20 ರಕ್ಷಣಾ ಸಂಸ್ಥೆಗಳು ಹಾಗೂ 10 ವ್ಯಕ್ತಿಗಳ ಮೇಲೆ ಚೀನಾದ ವಿದೇಶಾಂಗ ಇಲಾಖೆ ಶುಕ್ರವಾರ ನಿರ್ಬಂಧ ಘೋಷಿಸಿದೆ. ಈ ಸಂಸ್ಥೆಗಳು ಮತ್ತು ವ್ಯಕ್ತಿಗಳು ಚೀನಾದಲ್ಲಿ ಹೊಂದಿರುವ ಯಾವುದೇ ಸ್ವತ್ತುಗಳನ್ನು ಈ ಕ್ರಮವು ಸ್ಥಂಭನಗೊಳಿಸುತ್ತದೆ ಹಾಗೂ ದೇಶೀಯ ಸಂಸ್ಥೆಗಳು ಮತ್ತು ವ್ಯಕ್ತಿಗಳು ಅವರೊಂದಿಗೆ ವ್ಯಾಪಾರ ಮಾಡುವುದನ್ನು ನಿರ್ಬಂಧಿಸುತ್ತದೆ. ಪಟ್ಟಿಯಲ್ಲಿರುವ ವ್ಯಕ್ತಿಗಳು ಹಾಗೂ ನಿರ್ಬಂಧಿತ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಚೀನಾ ಪ್ರವೇಶಿಸುವುದನ್ನು ನಿಷೇಧಿಸುತ್ತದೆ. ಅಂದೂರಿಲ್ ಇಂಡಸ್ಟ್ರೀಸ್, ನಾರ್ಥ್ರಾಪ್ ಗ್ರಮ್ಮನ್ ಸಿಸ್ಟಮ್ಸ್ ಕಾರ್ಪೊರೇಷನ್, ಎಲ್3 ಹ್ಯಾರಿಸ್ ಮಾರಿಟೈಮ್ ಸರ್ವಿಸಸ್ ನಿರ್ಬಂಧಕ್ಕೆ ಒಳಗಾದ ಸಂಸ್ಥೆಗಳ ಪಟ್ಟಿಯಲ್ಲಿವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. ಕಳೆದ ವಾರ ತೈವಾನ್ಗೆ 11.1 ಶತಕೋಟಿ ಡಾಲರ್ ಮೊತ್ತದ ಶಸ್ತ್ರಾಸ್ತ್ರ ಮಾರಾಟ ಒಪ್ಪಂದವನ್ನು ಅಮೆರಿಕಾ ಘೋಷಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಚೀನಾ `ತೈವಾನ್ ವಿಷಯವು ಚೀನಾದ ಪ್ರಮುಖ ಹಿತಾಸಕ್ತಿಯಾಗಿದೆ ಮತ್ತು ಚೀನಾ-ಅಮೆರಿಕಾ ಸಂಬಂಧಗಳಲ್ಲಿ ದಾಟಲಾಗದ ಮೊದಲ ಕೆಂಪು ಗೆರೆಯಾಗಿದೆ. ತೈವಾನ್ ವಿಷಯದ ಗಡಿಯನ್ನು ದಾಟುವ ಯಾವುದೇ ಪ್ರಚೋದನಕಾರಿ ಕ್ರಮಗಳು ಚೀನಾದಿಂದ ಬಲವಾದ ಪ್ರತಿಕ್ರಿಯೆಯನ್ನು ಪಡೆಯುತ್ತದೆ' ಎಂದು ಎಚ್ಚರಿಕೆ ನೀಡಿದೆ.
ಕುಕನೂರು | ತೋಳ ದಾಳಿ : 12 ಕುರಿಗಳು ಸಾವು
ಕುಕನೂರು : ತಾಲೂಕಿನ ಮಂಗಳೂರು ಗ್ರಾಮದ ಕುರಿಗಾಹಿ ಯಮನೂರಪ್ಪ ನಾಗಪ್ಪ ಕಟಗಿ ಅವರ ಕುರಿಗಳ ಹಿಂಡಿನ ಮೇಲೆ ತೋಳವೊಂದು ದಾಳಿ ಮಾಡಿದ್ದರಿಂದ 12 ಕುರಿಗಳು ಸಾವನ್ನಪ್ಪಿದ್ದ ಘಟನೆ ಗುರುವಾರ ಸಂಜೆ 6 ಘಂಟೆ ವೇಳೆ ನಡೆದಿದೆ. ಮಂಗಳೂರು ಸೀಮೆಯಲ್ಲಿ ಕುರಿಗಳ ಹಿಂಡು ಬಿಟ್ಟ ಸಮಯದಲ್ಲಿ ಈ ಘಟನೆ ನಡೆದಿದೆ. ಸಾವಿರಾರು ರೂಪಾಯಿ ಬೆಲೆ ಬಾಳುವ ಕುರಿಗಳನ್ನು ತೋಳ ತಿಂದು ಹಾಕಿದೆ ಎಂದು ಮೂಲಗಳು ತಿಳಿಸಿವೆ. ಗ್ರಾಮದ ಪಶು ವೈದ್ಯಾಧಿಕಾರಿ ಬಾಪುಗೌಡ ಪಾಟೀಲ ಹಾಗೂ ಡಾ.ಸುಷ್ಮಾ ಮತ್ತು ಅರಣ್ಯ ಇಲಾಖೆ ಅಧಿಕಾರಿ ಸಂತೋಷ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುರಿಗಳಿಂದಲೇ ನಮ್ಮ ಕುಟುಂಬದ ಜೀವನ ಸಾಗುತ್ತಿತ್ತು ಈ ಘಟನೆಯಿಂದ ನಮ್ಮ ಪರಿಸ್ಥಿತಿ ಚಿಂತಾ ಜನಕ ಸ್ಥಿತಿಯಲ್ಲಿದೆ ದಯವಿಟ್ಟು ನಮಗೆ ಸರಕಾರದಿಂದ ಪರಿಹಾರ ನೀಡಬೇಕೆಂದು ಕುರಿಗಾಗಿ ಯಮನೂರಪ್ಪ ನಾಗಪ್ಪ ಕಟಗಿ ಕೇಳಿಕೊಂಡಿದ್ದಾರೆ.
ಬಿಕ್ಲು ಶಿವು ಕೊಲೆ ಪ್ರಕರಣ | ಶಾಸಕ ಬೈರತಿ ಬಸವರಾಜ್ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿರುವ ಬಿ.ಎ. ಬಸವರಾಜ ಅಲಿಯಾಸ್ ಬೈರತಿ ಬಸವರಾಜ್, ಅರ್ಜಿ ಇತ್ಯರ್ಥವಾಗುವವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಮಧ್ಯಂತರ ಅರ್ಜಿಯನ್ನು ಶುಕ್ರವಾರ ಪುರಸ್ಕರಿಸಿರುವ ನ್ಯಾಯಮೂರ್ತಿ ಜಿ. ಬಸವರಾಜ ಅವರಿದ್ದ ರಜಾಕಾಲದ ನ್ಯಾಯಪೀಠ, ತನಿಖಾಧಿಕಾರಿಗಳು ಅರ್ಜಿದಾರರನ್ನು ಬಂಧಿಸಿದರೆ ಅವರಿಂದ 5 ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಶ್ಯೂರಿಟಿ ಪಡೆದು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಆದೇಶಿಸಿತು. ಇದೇ ವೇಳೆ, ಅರ್ಜಿದಾರರು ತನಿಖೆಗೆ ಸಹಕರಿಸಬೇಕು, ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ತಿರುಚುವುದಾಗಲಿ ಅಥವಾ ಸಾಕ್ಷಿಗಳಿಗೆ ಬೆದರಿಕೆ ಹಾಕುವುದಾಗಲಿ ಮಾಡಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.
ಬಳ್ಳಾರಿ | ಸಂತೋಷ, ಶಾಂತಿ ಸಮಾಧಾನದ ಹಬ್ಬ ಕ್ರಿಸ್ಮಸ್ : ಶಾಸಕ ಜೆ.ಎನ್.ಗಣೇಶ
ಬಳ್ಳಾರಿ / ಕಂಪ್ಲಿ: ಮುಂದಿನ ದಿನಗಳಲ್ಲಿ ಚರ್ಚ್ಗಳಿಗೆ ಅಗತ್ಯ ಅನುದಾನ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಅವರು ಹೇಳಿದರು. ಪಟ್ಟಣದ ಸೋಮಪ್ಪ ದೇವಸ್ಥಾನದ ಬಳಿಯಿರುವ ಎಲ್-ಷಡ್ಡಾಯ್ ಚರ್ಚ್ನಲ್ಲಿ ಗುರುವಾರ ಆಯೋಜಿಸಿದ್ದ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಕೇಕ್ ಕತ್ತರಿಸಿದ ಬಳಿಕ ಅವರು ಮಾತನಾಡಿದರು. ಕ್ರಿಸ್ಮಸ್ ಹಬ್ಬವು ಸಂತೋಷ, ಶಾಂತಿ ಮತ್ತು ಸಮಾಧಾನದ ಶ್ರೇಷ್ಠ ಹಬ್ಬವಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಕಲಿಸುವತ್ತ ಎಲ್ಲರೂ ಗಮನ ಹರಿಸಬೇಕು ಎಂದರು. ಎಲ್-ಷಡ್ಡಾಯ್ ಚರ್ಚ್ನಲ್ಲಿ ಕ್ರಿಸ್ಮಸ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿರುವುದು ಸಂತಸ ತಂದಿದೆ. ಸೋಮಪ್ಪ ದೇವಸ್ಥಾನದಿಂದ ಚರ್ಚ್ವರೆಗಿನ ರಸ್ತೆಯನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಭರವಸೆ ನೀಡಿದರು. ಚರ್ಚ್ ಸಭಾಪಾಲಕ ಪಾಸ್ಟರ್ ಪಾಲ್ ಪಂಪಾಪತಿ ಮಾತನಾಡಿ, ಮನುಷ್ಯ ಮನುಷ್ಯನನ್ನು ಪ್ರೀತಿಸುವಾಗ ಮನಸ್ಸಿನಲ್ಲಿ ದೇವರು ಜನಿಸುತ್ತಾನೆ. ಮಕ್ಕಳಿಗಾಗಿ ತಂದೆ–ತಾಯಿ ತ್ಯಾಗ ಮಾಡುತ್ತಾರೆ. ಮಕ್ಕಳು ವೃದ್ಧಾಪ್ಯದಲ್ಲಿ ತಂದೆ–ತಾಯಿಯರನ್ನು ಪಾಲಿಸಬೇಕು. ಬಡವರು, ಹಸಿದವರು ಹಾಗೂ ರೋಗಿಗಳ ಸೇವೆ ಮಾಡಬೇಕು. ಸ್ವಾರ್ಥ, ಅಹಂಕಾರ ಹಾಗೂ ದರ್ಪವನ್ನು ಬಿಟ್ಟು ಜೀವನ ನಡೆಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಉಸ್ಮಾನ್, ಸದಸ್ಯ ಸಿ.ಆರ್. ಹನುಮಂತ, ಪುರಸಭೆ ಮಾಜಿ ಅಧ್ಯಕ್ಷ ಬಿ. ಸಿದ್ದಪ್ಪ, ಮೆಟ್ರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸಕೋಟೆ ಜಗದೀಶ, ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮಲ್ಲೇಶಪ್ಪ, ಮುಖಂಡರಾದ ಕೆ. ಷಣ್ಮುಕಪ್ಪ, ಮೆಹಬೂಬ್, ಶಶಿಕುಮಾರ, ಸಿ. ವಿರುಪಾಕ್ಷಿ, ಸೋಮಪ್ಪ, ಮೌಲಪ್ಪ, ಹುಲುಗಪ್ಪ, ಗಣೇಶ, ಮಾರೆಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಉಡುಪಿ | ಸ್ವರ್ಗ ಆಶ್ರಮದಲ್ಲಿ ವಿಶಿಷ್ಟ ರೀತಿಯಲ್ಲಿ ಕ್ರಿಸ್ಮಸ್ ಆಚರಣೆ
ಉಡುಪಿ, ಡಿ.26: ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ಇದರ ವತಿಯಿಂದ ವಿಶಿಷ್ಟ ರೀತಿಯಲ್ಲಿ 7ನೇ ವರ್ಷದ ಕ್ರಿಸ್ಮಸ್ ಸಂಭ್ರಮ ಕಾರ್ಯಕ್ರಮ ಸ್ವರ್ಗ ಆಶ್ರಮದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಮ್ಮ ಡ್ರೀಮ್ಸ್ ತಂಡದ ವಿಶೇಷ ಸಂಗೀತ ಕಾರ್ಯಕ್ರಮ ಜರಗಿತು. ಅದೇ ರೀತಿ 3 ಅಸಹಾಯಕ ಕುಟುಂಬಗಳಿಗೆ 2 ತಿಂಗಳ ತಲಾ 25 ಕೆಜಿ ಅಕ್ಕಿ, 3 ಅಸಹಾಯಕರಿಗೆ ತಲಾ 10 ಸಾವಿರ ರೂ. ಸಹಾಯಧನ ವಿತರಣೆ ಮಾಡಲಾಯಿತು. ಹೋಮ್ ಡಾಕ್ಟರ್ ಫೌಂಡೇಶನ್ ಮುಖ್ಯಸ್ಥ ಡಾ.ಶಶಿಕಿರಣ್ ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಡಾ.ಸುಮಾ ಎಸ್.ಶೆಟ್ಟಿ, ರಾಘವೇಂದ್ರ ಪೂಜಾರಿ, ಉದಯ ನಾಯ್ಕ್, ರಾಘವೇಂದ್ರ ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.
Karnataka Vs Kerala- ಚಂದವೋ ಚಂದ ಕನ್ನಡಿಗರಾಟ; ದೇವದತ್ ಪಡಿಕ್ಕಲ್ ಜೊತೆ ಕರುಣ್ ನಾಯರ್ ಕೂಡ ಗೆಲುವಿನ ಶತಕ!
VHT 2025-26 Karnataka Vs Kerala- ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಸತತ ಎರಡನೇ ಶತಕ ಬಾರಿಸಿದರೆ, ಕಳೆದ ಬಾರಿಯ ಹೀರೋ ಕರುಣ್ ನಾಯರ್ ಅವರೂ ಅಜೇಯ ಶತಕ ಹೊಡೆದು ಮಿಂಚಿದರು. ಇವರಿಬ್ಬರ ಅಮೋಘ ಜೊತೆಯಾಟದಿಂದ ಕರ್ನಾಟಕ ತಂಡ ಕೇರಳದ ವಿರುದ್ಧ 8 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತು. 285 ರನ್ ಗಳ ಗುರಿ ಬೆನ್ನಟ್ಟಿದ ಕರ್ನಾಟಕ, 10 ಎಸೆತ ಬಾಕಿ ಇರುವಂತೆ ಗೆಲುವು ಕಂಡಿತು. ಅಜೇಯ 130 ರನ್ ಗಳಿಸಿದ ಕರುಣ್ ನಾಯರ್ಅ ಅಜೇಯ 130 ರನ್ ಗಳಿಸಿ ಪಂದ್ಯಶ್ರೇಷ್ಠರಾದರು.
Bengaluru | ಕತ್ತು ಕೊಯ್ದು ಸ್ಟಾಫ್ ನರ್ಸ್ ಹತ್ಯೆ; ಆರೋಪಿಯ ಬಂಧನ
ಬೆಂಗಳೂರು : ಮಹಿಳೆಯೊಬ್ಬರ ಕತ್ತು ಕೊಯ್ದು ಹತ್ಯೆಗೈದ ಪ್ರಕರಣ ಸಂಬಂಧ ಆರೋಪಿಯನ್ನು ಇಲ್ಲಿನ ಕೆ.ಎಸ್.ಲೇಔಟ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬೆಂಗಳೂರಿನ ಕೆ.ಎಸ್.ಲೇಔಟ್ನ ಪ್ರಗತಿಪುರದಲ್ಲಿನ ಮನೆಯಲ್ಲಿ ಡಿಸೆಂಬರ್ 24ರಂದು ರಾತ್ರಿ ಘಟನೆ ನಡೆದಿದ್ದು, ಚಿತ್ರದುರ್ಗದ ಹಿರಿಯೂರು ಮೂಲದ ಮಮತಾ(39) ಎಂಬುವರು ಹತ್ಯೆಗೊಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಹಿಂದಿನ ಒಂದು ವರ್ಷದಿಂದ ಕೆಲಸ ಮಾಡುತಿದ್ದ ಮಮತಾ, ತನ್ನ ಸ್ನೇಹಿತೆಯೊಂದಿಗೆ ಒಟ್ಟಿಗೆ ವಾಸವಾಗಿದ್ದರು. ಡಿಸೆಂಬರ್ 24ರಂದು ಮಮತಾ ಅವರ ಸ್ನೇಹಿತೆ ಊರಿಗೆ ಹೋಗಿದ್ದಾಗ ಘಟನೆ ನಡೆದಿದೆ. ಈ ಸಂಬಂಧ ಮಮತಾ ಜೊತೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸುಧಾಕರ್ ಎಂಬಾತನನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಕೆ.ಎಸ್.ಲೇಔಟ್ ಠಾಣೆ ಪೊಲೀಸರು ಹೇಳಿದ್ದಾರೆ. ಆಸ್ಪತ್ರೆಯೊಂದರಲ್ಲಿ ಸುಧಾಕರ್ ಹಾಗೂ ಮಮತಾ ಇಬ್ಬರೂ ಸ್ಟಾಫ್ ನರ್ಸ್ ಕೆಲಸ ಮಾಡಿಕೊಂಡಿದ್ದರು. ಒಂದು ವರ್ಷದಿಂದ ಇಬ್ಬರ ನಡುವೆ ಪರಸ್ಪರ ಪ್ರೀತಿ ಮೂಡಿತ್ತು. ಇತ್ತೀಚೆಗೆ ಕುಟುಂಬಸ್ಥರ ನಿರ್ಧಾರದ ಮೇರೆಗೆ ಬೇರೊಂದು ಯುವತಿಯೊಂದಿಗೆ ಸುಧಾಕರ್ಗೆ ನಿಶ್ಚಿತಾರ್ಥವಾಗಿತ್ತು. ಈ ವಿಚಾರ ತಿಳಿದ ಮಮತಾ ತನ್ನನ್ನೇ ಮದುವೆಯಾಗು ಎಂದು ಸುಧಾಕರ್ ನ ಮೇಲೆ ಒತ್ತಡ ಹೇರಲಾರಂಭಿಸಿದ್ದಳು. ಇದರಿಂದ ಹೆದರಿದ್ದ ಸುಧಾಕರ್ ಡಿಸೆಂಬರ್ 24ರಂದು ಮಮತಾಳ ಮನೆಗೆ ಬಂದು ಕತ್ತು ಕೊಯ್ದು ಹತ್ಯೆಗೈದು ಬಳಿಕ ಅಲ್ಲಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ | ಎಸ್ಐಟಿ ಅಧಿಕಾರಿಗಳು ಸಲ್ಲಿಸಿದ್ದ ವರದಿ ಕುರಿತ ಆದೇಶವನ್ನು ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215ರ ಅಡಿಯಲ್ಲಿ ಸಲ್ಲಿಸಿದ್ದ ವರದಿಯ ಬಗ್ಗೆ ಡಿ.26 ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ.29ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು 'ಸುಳ್ಳು ಸಾಕ್ಷಿ' ವರದಿಯನ್ನು (u/s)215ರ ಅಡಿಯಲ್ಲಿ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ., ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ವರದಿ ಸಲ್ಲಿಸಿದ್ದರು. ಈ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಎಚ್.ಟಿ ಅವರು ವಿಚಾರಣೆ ನಡೆಸಿ ತೀರ್ಪನ್ನು ಡಿ.26ಕ್ಕೆ ನಿಗದಿಪಡಿಸಿದ್ದರು. ಇಂದು ನ್ಯಾಯಾಲಯ ತೀರ್ಪನ್ನು ಮತ್ತೆ ಮುಂದಿನ ಡಿ.29 ಕ್ಕೆ ಮುಂದೂಡಿದೆ. ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ಐಟಿ ಕಂಪನಿಯ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ: ಸಿಇಒ ಸೇರಿ ಮೂವರ ಬಂಧನ
ರಾಜಸ್ಥಾನ: ರಾಜಸ್ಥಾನದ ಉದಯಪುರ ಐಟಿ ಕ್ಷೇತ್ರದ ಪ್ರಮುಖ ಕಂಪನಿಯಲ್ಲಿ ಸಾಮೂಹಿಕ ಅತ್ಯಾಚಾರವಾಗಿದ್ದು, ಸಿಇಒ ಸೇರಿ ಮೂವರ ಬಂಧನವಾಗಿದೆ. ರಾಜಸ್ಥಾನದ ಉದಯಪುರದಲ್ಲಿ ಹುಟ್ಟುಹಬ್ಬದ ಪಾರ್ಟಿಯ ನಂತರ ಖಾಸಗಿ ಐಟಿ ಕಂಪನಿಯ ಮಹಿಳಾ ಮ್ಯಾನೇಜರ್ವೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಖಾಸಗಿ ಐಟಿ ಕಂಪನಿಯ ಸಿಇಒ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಸಿಇಒ
KL Rahul: ಕನ್ನಡಿಗ ಕೆಎಲ್ ರಾಹುಲ್ಗೆ ದೊಡ್ಡ ಹೊಣೆ ನೀಡಲು ಸಿದ್ಧತೆ
Kannadiga KL Rahul: ಈಗಾಗಲೇ ಐಪಿಎಲ್ 2026 ಮಿನಿ ಹರಾಜು ಪ್ರಕ್ರಿಯೆಯೇನೋ ಮಗಿದಿದೆ. ಇದೀಗ ಎಲ್ಲಾ ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಬಲಿಷ್ಠಗೊಳಿಸುವತ್ತ ಚಿತ್ತ ನೆಟ್ಟಿವೆ. ಹಾಗೆಯೇ ಆ ಟೀಂ ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ದೊಡ್ಡ ಜವಾಬ್ದಾರಿ ನೀಡಲು ಪ್ಲಾನ್ ನಡೆಸಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್ಸಿಬಿ
ಮರವಂತೆ | ಕಥೆ, ಕವನ ರಚನಾ ಕಾರ್ಯಗಾರ ಉದ್ಘಾಟನೆ
ಕುಂದಾಪುರ, ಡಿ.26: ಕಥೆ, ಕವನಗಳು ಅನುಭವ ಜನ್ಯವಾಗಿದ್ದು, ಪ್ರತಿಯೊಬ್ಬರು ಪಾಲ್ಗೊಳಿಸುವ ಒಂದು ಪ್ರಕ್ರಿಯೆಯಾಗಿದ್ದು, ಎಲ್ಲಾ ಪ್ರದರ್ಶನ ಪ್ರಕಾರಗಳು ಕಥೆ ಹೇಳುವುದರ ಸ್ತರಣೆಯಾಗಿದೆ ಮತ್ತು ವ್ಯಕ್ತಿಯ ಭಾವನೆಗಳನ್ನು ಸಮರ್ಪಕವಾಗಿ ಹಂಚಿಕೊಳ್ಳುವುದು ಈ ಕಥೆ ಹೇಳುವುದರಿಂದ ಹೆಚ್ಚು ಪ್ರಭಾವ ಬೀರುತ್ತದೆ. ಕಥೆ ಹೇಳುವ ಮತ್ತು ಕೇಳುಗರ ಮಧ್ಯೆ ಶಿಷ್ಟ ಸಂವಹನ ಹಾಗೂ ಬಾಂಧವ್ಯ ಭಾರೀ ಬೇಗ ಹುಟ್ಟಿಕೊಳ್ಳುತ್ತದೆ ಎಂದು ಮರವಂತೆ ಗ್ರಾಪಂ ಅಧ್ಯಕ್ಷ ನಾಗರಾಜ ಪಟಗಾರ್ ಹೇಳಿದ್ದಾರೆ. ಹಂಗಾರಕಟ್ಟೆ ಬಾಳ್ಕುದ್ರು ಅಭಿವೃದ್ಧಿ ಸಂಸ್ಥೆ, ಮರವಂತೆ ಗ್ರಾಮ ಪಂಚಾಯತ್, ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢ ಶಾಲೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಶಾಲೆಯಲ್ಲಿ ಆಯೋಜಿಸಲಾದ ಮಕ್ಕಳಿಗೆ ಕಥೆ ಕವನ ರಚನಾ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮುಖ್ಯ ಅತಿಥಿಯಾಗಿ ಮರವಂತೆ ಶ್ರೀರಾಮ ಕನ್ನಡ ಖಾರ್ವಿ ಸೇವಾ ಸಮಿತಿಯ ಅಧ್ಯಕ್ಷ ವೆಂಕಟರಮಣ ಖಾರ್ವಿ ಮಾತನಾಡಿ, ಮಕ್ಕಳಲ್ಲಿ ವಿವಿಧ ಭಾವನೆಯು ಅನುಭವಕ್ಕೆ ಬಂದು ಹೊಸ ಸಾಧ್ಯತೆಗೆ ಹೆಚ್ಚು ಒತ್ತು ನೀಡುತ್ತದೆ ಮತ್ತು ಮಕ್ಕಳಲ್ಲಿ ಮೌಲ್ಯಗಳನ್ನು ಅಳವಡಿಸಲು ಇದು ಅತ್ಯಂತ ಪ್ರಭಾವಶಾಲಿಯಾಗಿದೆ ಎಂದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುಮನ ಹೇರ್ಳೆ ಮಾತನಾಡಿ, ನಾವೆಲ್ಲರೂ ಬೇರೆ ಬೇರೆ ಸನ್ನಿವೇಶದಲ್ಲಿ ನಮ್ಮ ಭಾವನೆಯನ್ನು ವ್ಯಕ್ತಪಡಿಸುವುದರ ಜೊತೆಗೆ ಹೇಳುವ ಮತ್ತು ಕೇಳುವ ಪ್ರಕ್ರಿಯೆ ನಿರಂತರವಾಗಿದ್ದು, ಈ ಭೂಮಂಡಲದಲ್ಲಿ ಇನ್ನು ಜೀವಂತವಾಗಿ ಉಳಿದ ಏಕಮಾತ್ರ ಪ್ರಕಾರವೇ ಕಥೆ ಹೇಳುವುದು ಎಂದರು. ಇವರು ಮಕ್ಕಳಿಗೆ ಬೇರೆ ಬೇರೆ ವಸ್ತುಗಳನ್ನು ಆಯ್ಕೆ ಮಾಡಿಕೊಂಡು ಕಥೆ ಕವನ ರಚನೆ ಮಾಡಲು ಪ್ರೇರಣೆ ನೀಡಿದರು. ಮಕ್ಕಳು ಸುಮಾರು 40ಕ್ಕೂ ಹೆಚ್ಚು ಕವನ ರಚಿಸಿದರು. ಅಧ್ಯಕ್ಷತೆಯನ್ನು ಸುಜಾತಾ ಮರವಂತೆ ವಹಿಸಿದ್ದರು. ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರ ಪ್ರೌಢಶಾಲೆಯ ಮುಖ್ಯಶಿಕ್ಷಕ ಭಾಸ್ಕರ ಮಯ್ಯ ಸ್ವಾಗತಿಸಿದರು. ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ರಮೇಶ ವಕ್ವಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ವಂದಿಸಿದರು. ದಿವ್ಯ ಉಡುಪಿ ಕಾರ್ಯಕ್ರಮ ನಿರೂಪಿಸಿದರು. ಸುಮಾರು 85 ವಿದ್ಯಾರ್ಥಿಗಳು ಈ ಶಿಬಿರದ ಪ್ರಯೋಜನ ಪಡೆದರು.
ಔರಾದ್ | ಡಿ.30ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಔರಾದ್ : ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಿ.30ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ತಾಲೂಕಿನ ಎಲ್ಲಾ ಭಾಗಗಳಿಂದ ಸಾರ್ವಜನಿಕರು, ಯುವಕರು ಆಗಮಿಸಿ ರಕ್ತದಾನ ಮಾಡಬೇಕು ಎಂದು ಸಂತಪೂರ್ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರತಿಕಾಂಟ್ ಸ್ವಾಮಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ರಕ್ತದಾನ ಮಾಡಲು ಬಯಸುವರು 94484 69744, ಹಾಗೂ ಡಾ. ಸಿದ್ದರಡ್ಡಿ 96638 59062 ಅವರಿಗೆ ಫೋನ್ ಮಾಡಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
Bengaluru | ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವ ವಿಡಿಯೋ ಸೆರೆ: ಟೆಕ್ನಿಷಿಯನ್ ಬಂಧನ
ಬೆಂಗಳೂರು : ಖಾಸಗಿ ಆಸ್ಪತ್ರೆಯೊಂದರ ಆಪರೇಷನ್ ಥಿಯೇಟರ್ನ(ಒ.ಟಿ.) ಡ್ರೆಸಿಂಗ್ ಕೊಠಡಿಯಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವಾಗ ರಹಸ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಮಾಡಲು ಯತ್ನಿಸಿದ ಜೂನಿಯರ್ ಟೆಕ್ನಿಷಿಯನ್ನನ್ನು ಇಲ್ಲಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಾಗರಬಾವಿಯ ಎರಡನೇ ಹಂತದಲ್ಲಿರುವ ಖಾಸಗಿ ಆಸ್ಪತ್ರೆಯೊಂದರ ನಿರ್ದೇಶಕ ಡಾ.ಚೇತನ್ ಎಂಬುವರು ನೀಡಿದ ದೂರಿನ ಮೇರೆಗೆ ಸುವೆಂದು ಮೊಹತಾ(23) ಎಂಬುವನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸುವೆಂದು ಒಂದು ವರ್ಷದಿಂದ ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ ಜೂನಿಯರ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಕೊಟ್ಟಿಗೆಪಾಳ್ಯದ ಪಿ.ಜಿ.ಯೊಂದರಲ್ಲಿ ನೆಲೆಸಿದ್ದ. ಡಿ.20ರಂದು ಬೆಳಗ್ಗೆ 8.30ರ ಸುಮಾರಿಗೆ ಶಸ್ತ್ರ ಚಿಕಿತ್ಸಾ ಘಟಕದ ಕೊಠಡಿಯಲ್ಲಿ ಮಹಿಳಾ ಸಿಬ್ಬಂದಿಗಳು ಬಟ್ಟೆ ಬದಲಾಯಿಸುವಾಗ ಆರೋಪಿ ಇಟ್ಟಿದ್ದ ಮೊಬೈಲ್ ಗಮನಿಸಿದ್ದಾರೆ. ಆತಂಕಗೊಂಡ ಸಿಬ್ಬಂದಿಯು ಮೊಬೈಲ್ ಪರಿಶೀಲಿಸಿದಾಗ ಗುಪ್ತವಾಗಿ ವಿಡಿಯೋ ಮಾಡುತ್ತಿರುವುದು ಗೊತ್ತಾಗಿದೆ. ಈ ಸಂಬಂಧ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು | ಮೇಲ್ತೆನೆಯ ದಶಮಾನೋತ್ಸವದ ಸಂಚಿಕೆ ಬಿಡುಗಡೆ
ಮಂಗಳೂರು, ಡಿ.26: ಮೇಲ್ತೆನೆ (ಬ್ಯಾರಿ ಎಲ್ತ್ಗಾರ್-ಕಲಾವಿದಮಾರೊ ಕೂಟ) ದೇರಲಕಟ್ಟೆ-ಉಳ್ಳಾಲ ತಾಲೂಕು ಇದರ ಹತ್ತನೆ ವರ್ಷದ ನೆನಪಿನ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಶುಕ್ರವಾರ ದೇರಳಕಟ್ಟೆಯಲ್ಲಿ ನಡೆಯಿತು. ಮುಡಿಪು ಸರಕಾರಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹೈದರಾಲಿ ನೆನಪಿನ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬ್ಯಾರಿ ಭಾಷೆ, ಜನಾಂಗ, ಸಮುದಾಯ, ಅಸ್ಮಿತೆಯ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಯಬೇಕು. ಸಾಹಿತ್ಯದಲ್ಲಿ ಬ್ಯಾರಿ ಮುಸ್ಲಿಂ ಸಂವೇದನೆಗೆ ಒತ್ತು ನೀಡಬೇಕು ಎಂದರು. ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೇಲ್ತೆನೆಯ ಅಧ್ಯಕ್ಷ ವಿ. ಇಬ್ರಾಹಿಂ ನಡುಪದವು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಬೆಳ್ಮ ಗ್ರಾಪಂ ಮಾಜಿ ಅಧ್ಯಕ್ಷ ಯೂಸುಫ್ ಭಾಗವಹಿಸಿದ್ದರು. ಮೇಲ್ತೆನೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಚಿಕೆಯ ಸಂಪಾದಕ ಹಂಝ ಮಲಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯರಾದ ಇಬ್ರಾಹೀಂ ಮುದುಂಗಾರುಕಟ್ಟೆ ಸ್ವಾಗತಿಸಿದರು. ಯೂಸುಫ್ ವಕ್ತಾರ್ ವಂದಿಸಿದರು. ಟಿ. ಇಸ್ಮಾಯಿಲ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. ಮೇಲ್ತೆನೆಯ ಬಶೀರ್ ಅಹ್ಮದ್ ಕಿನ್ಯ, ಸಿದ್ದೀಕ್ ಎಸ್. ರಾಝ್, ಮುಹಮ್ಮದ್ ಬಾಷಾ ನಾಟೆಕಲ್, ಬಶೀರ್ ಕಲ್ಕಟ್ಟ, ಅಶೀರುದ್ದೀನ್ ಸಾರ್ತಬೈಲ್, ಸಿ.ಎಂ.ಶರೀಫ್ ಪಟ್ಟೋರಿ, ಅಬೂಬಕರ್ ಎಚ್.ಕಲ್., ಲೇಖಕ ಇಸ್ಮತ್ ಪಜೀರ್ ಮತ್ತಿತರರು ಉಪಸ್ಥಿತರಿದ್ದರು.
ಹುಮನಾಬಾದ್ | ಹಝ್ರತ್ ಇಸ್ಮಾಯಿಲ್ ಷಾ ಖಾದ್ರಿ ದರ್ಗಾದ 2026ರ ಕ್ಯಾಲೆಂಡೆರ್ ಬಿಡುಗಡೆ
ಹುಮನಾಬಾದ್ : ತಾಲೂಕಿನ ಸುಪ್ರಸಿದ್ದ ಸೂಫಿ ಹಝ್ರತ್ ಸೈಯದ್ ಇಸ್ಮಾಯಿಲ್ ಷಾ ಖಾದ್ರಿ ದರ್ಗಾದಲ್ಲಿ ಹಝ್ರತ್ ಸೈಯದ್ ಇಸ್ಮಾಯಿಲ್ ಷಾ ಖಾದ್ರಿ ಮುತ್ತವಲ್ಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರು 2026ನೇ ಹೊಸ ವರ್ಷದ ಕ್ಯಾಲಂಡರ್ ಉದ್ಘಾಟನೆಗೊಳಿಸಿದರು. ಶುಕ್ರವಾರ ಕ್ಯಾಲೆಂಡೆರ್ ಉದ್ಘಾಟಿಸಿ ಮಾತನಾಡಿದ ಅವರು, ಹಝ್ರತ್ ಇಸ್ಮಾಯಿಲ್ ಷಾ ಖಾದ್ರಿ ದರ್ಗಾ ನಮ್ಮ ಭಾಗದ ಅತ್ಯಂತ ಐತಿಹಾಸಿಕ ದರ್ಗಾವಾಗಿದೆ. ನಾನು ಹೈದರಾಬಾದ್ ಕರ್ನಾಟಕ ಅಧ್ಯಕ್ಷನಾಗಿರುವಾಗ ಇಲ್ಲಿನ ಕೆರೆ ಸೌಂದರ್ಯಕರಣಕ್ಕೆ 4 ಕೋಟಿ ರೂ. ಅನುದಾನವನ್ನು ನನ್ನ ಸ್ವಇಚ್ಛೆಯಿಂದ ತಂದಿದ್ದೇನೆ. ನನ್ನ ಅಭಿವೃದ್ಧಿ ಕಾರ್ಯಕ್ಕೆ ಇಸ್ಮಾಯಿಲ್ ಷಾ ಖಾದ್ರಿ ರವರ ಆಶೀರ್ವಾದ ಸಿಕ್ಕಿತ್ತು ಎಂದರು. ಇಲ್ಲಿನ ಟ್ರಸ್ಟ್ ಅತ್ಯುತ್ತಮ ಸೇವೆ ನೀಡುತ್ತಿದೆ. ಟ್ರಸ್ಟ್ ನ ಅಧ್ಯಕ್ಷ ಗುಲಾಮ್ ದಸ್ತಗೀರ್ ಮತ್ತು ಸಮಸ್ತ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಹಿಂದಿನಂತೆ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡರೆ ಮುಂದೆಯೂ ನಿಮ್ಮ ಜೊತೆಗಿರುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಗುಲಾಮ್ ದಸ್ತಗೀರ್, ಆದಿಲ್ ಸಾಬ್ ಮುತ್ತವಲ್ಲಿ, ಪೀರ್ ಸಾಬ್ ಮುತ್ತವಲ್ಲಿ, ಶಾಬೋದ್ದಿನ್ ಮುಜಾವರ್ ಸೇರಿದಂತೆ ಹಝ್ರತ್ ಇಸ್ಮಾಯಿಲ್ ಷಾ ಖಾದ್ರಿ ದರ್ಗಾ ಮುತ್ತವಲ್ಲಿ ಚಾರಿಟೇಬಲ್ ಟ್ರಸ್ಟ್ ನ ಎಲ್ಲ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.
ಪ್ರಾದೇಶಿಕ ವಿಮಾನಯಾನ ಸೇವೆ ನೀಡಲಿರುವ ಕೇರಳದ 'ಅಲ್ ಹಿಂದ್ ಏರ್'ನ ಪ್ರವರ್ತಕ ಮುಹಮ್ಮದ್ ಹ್ಯಾರಿಸ್ ಟಿ ಯಾರು?
ಅಲ್ ಹಿಂದ್ ಏರ್ ಪ್ರಾದೇಶಿಕ ದೇಶೀಯ ವಿಮಾನಯಾನ ಸಂಸ್ಥೆಯಾಗಿ ಕಾರ್ಯಾರಂಭ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ವರ್ಷದ ಅಂತ್ಯದೊಳಗೆ ಹಾರಾಟ ಆರಂಭಿಸುವ ಉದ್ದೇಶ ಹೊಂದಿರುವ ಸಂಸ್ಥೆ, ಆರಂಭಿಕ ಹಂತದಲ್ಲಿ ATR 72-600 ಮಾದರಿಯ ವಿಮಾನಗಳನ್ನು ಬಳಸಿ ದೇಶೀಯ ಮಾರ್ಗಗಳಲ್ಲಿ ಸೇವೆ ನೀಡಲು ಸಜ್ಜಾಗಿದೆ. ತಿರುವನಂತಪುರಂ: ಮೂರು ದಶಕಗಳ ಹಿಂದೆ ಕೇರಳದ ಕೋಝಿಕ್ಕೋಡ್ ನಲ್ಲಿ ಪ್ರವಾಸೋದ್ಯಮ ಸೇವೆಗಳೊಂದಿಗೆ ಆರಂಭವಾದ ಸಂಸ್ಥೆ ಅಲ್ಹಿಂದ್ ಇದೀಗ ಭಾರತದ ಆಕಾಶದಲ್ಲಿ ಹಾರಾಟ ನಡೆಸಲು ಸಜ್ಜಾಗಿದೆ. ಅಲ್ಹಿಂದ್ ಏರ್ ಎಂಬ ಹೊಸ ವಿಮಾನಯಾನ ಸಂಸ್ಥೆಗೆ ನಾಗರಿಕ ವಿಮಾನಯಾನ ಸಚಿವಾಲಯದಿಂದ ನಿರಾಕ್ಷೇಪಣಾ ಪ್ರಮಾಣಪತ್ರ (NOC) ಲಭಿಸಿದ್ದು, ಶೀಘ್ರದಲ್ಲೇ ವಾಣಿಜ್ಯ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆಯಿದೆ. ಇದೇ ವೇಳೆ ಫ್ಲೈಎಕ್ಸ್ಪ್ರೆಸ್ ಎಂಬ ಮತ್ತೊಂದು ಸಂಸ್ಥೆಗೂ NOC ದೊರೆತಿದೆ. ಕೇರಳ ಮೂಲದ ಅಲ್ ಹಿಂದ್ ಗ್ರೂಪ್ ಆಫ್ ಕಂಪೆನೀಸ್ ಅಲ್ ಹಿಂದ್ ಏರ್ ನ ಪ್ರವರ್ತಕ ಸಂಸ್ಥೆ. ಟೂರ್, ಹಜ್ ಮತ್ತು ಉಮ್ರಾ ಸೇವೆ ನೀಡುತ್ತಿರುವ ಈ ಸಂಸ್ಥೆಗೆ ವಿಮಾನಯಾನ ಕ್ಷೇತ್ರದ ಪ್ರವೇಶವು ಹೊಸ ಅಧ್ಯಾಯವಾಗಲಿದೆ. ಯಾರು ಮುಹಮ್ಮದ್ ಹ್ಯಾರಿಸ್ ಟಿ? ಅಲ್ಹಿಂದ್ ಗ್ರೂಪ್ ನ ಪ್ರವರ್ತಕ ಮುಹಮ್ಮದ್ ಹ್ಯಾರಿಸ್ ಟಿ, ಟ್ರಾವೆಲ್ಸ್ ಮತ್ತು ಪ್ರವಾಸೋದ್ಯಮ ವಲಯದಲ್ಲಿ ದೀರ್ಘ ಅನುಭವ ಹೊಂದಿರುವ ಉದ್ಯಮಿ. ಕೋಝಿಕ್ಕೋಡ್ ನಲ್ಲಿ ಜನಿಸಿದ ಅವರು ಇತಿಹಾಸ ಮತ್ತು ಅರ್ಥಶಾಸ್ತ್ರ BA ಪದವಿ ಪಡೆದಿದ್ದಾರೆ. ಅವರು ಫಾರ್ಮಕಾಲಜಿ ಪದವೀಧರರೂ ಹೌದು. ಪ್ರವಾಸೋದ್ಯಮದ ಜೊತೆಗೆ ಹಜ್ ಉಮ್ರಾ ಪ್ರವಾಸಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ಅವರು ಭಾರತೀಯ ಹಜ್ ಉಮ್ರಾ ಅಸೋಸಿಯೇಷನ್ನ ಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಜಾಗತಿಕ ಹೆಜ್ಜೆಗುರುತು ಅಲ್ ಹಿಂದ್ ಗ್ರೂಪ್ ಟೂರ್ ಸಂಬಂಧಿತ ಸೇವೆಗಳ ಸಂಪೂರ್ಣ ಪ್ಯಾಕೇಜ್ ಒದಗಿಸುವ ಸಂಸ್ಥೆಯಾಗಿ ಬೆಳೆದಿದೆ. ಯುಎಇ, ಸೌದಿ ಅರೇಬಿಯಾ, ಖತಾರ್, ಒಮಾನ್, ಬಾಂಗ್ಲಾದೇಶ ಮತ್ತು ಕುವೈತ್ ಸೇರಿದಂತೆ ಹಲವು ದೇಶಗಳಲ್ಲಿ ಕಚೇರಿಗಳು ಹಾಗೂ ಪಾಲುದಾರಿಕೆಗಳನ್ನು ಹೊಂದಿರುವ ಈ ಕಂಪೆನಿ ಅಂತರರಾಷ್ಟ್ರೀಯ ಗ್ರಾಹಕರಲ್ಲಿ ವಿಶ್ವಾಸಾರ್ಹ ಸೇವೆಗಾಗಿ ಹೆಗ್ಗುರುತು ಮೂಡಿಸಿದೆ. ಅಲ್ಹಿಂದ್ ಏರ್ ಪ್ರಾದೇಶಿಕ ದೇಶೀಯ ವಿಮಾನಯಾನ ಸಂಸ್ಥೆಯಾಗಿ ಕಾರ್ಯಾರಂಭ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ವರ್ಷದ ಅಂತ್ಯದೊಳಗೆ ಹಾರಾಟ ಆರಂಭಿಸುವ ಉದ್ದೇಶ ಹೊಂದಿರುವ ಈ ಸಂಸ್ಥೆ, ಆರಂಭಿಕ ಹಂತದಲ್ಲಿ ATR 72-600 ಮಾದರಿಯ ವಿಮಾನಗಳನ್ನು ಬಳಸಿ ದೇಶೀಯ ಮಾರ್ಗಗಳಲ್ಲಿ ಸೇವೆ ನೀಡಲು ಸಜ್ಜಾಗಿದೆ. ದಕ್ಷ, ವಿಶ್ವಾಸಾರ್ಹ ಹಾಗೂ ಕೈಗೆಟುಕುವ ವಿಮಾನ ಪ್ರಯಾಣವನ್ನು ಒದಗಿಸುವುದು ಸಂಸ್ಥೆಯ ಗುರಿಯಾಗಿದೆ. 1990ರಲ್ಲಿ ಸ್ಥಾಪಿತವಾದ ಅಲ್ ಹಿಂದ್ ಗ್ರೂಪ್, ಏಷ್ಯಾದಲ್ಲಿ ಪ್ರವಾಸ ಮತ್ತು ಪ್ರವಾಸ ನಿರ್ವಹಣಾ ಕ್ಷೇತ್ರದಲ್ಲಿ ತನ್ನದೇ ಆದ ಗುರುತು ಮೂಡಿಸಿದೆ. ಇದೀಗ ಆ ಅನುಭವದ ಬೆನ್ನೇರಿಕೊಂಡು ವಿಮಾನಯಾನ ಕ್ಷೇತ್ರಕ್ಕೂ ಕಾಲಿಡುವ ಮೂಲಕ, ‘ಪ್ರವಾಸದಿಂದ ಆಕಾಶದವರೆಗೆ’ ತನ್ನ ಪಯಣವನ್ನು ವಿಸ್ತರಿಸುತ್ತಿದೆ.
ಯಾದಗಿರಿ | ಡಿ.28 ರಿಂದ ಮೂರು ದಿನಗಳ ವೈಜ್ಞಾನಿಕ ಸಮ್ಮೇಳನ : ಕ್ರೀಡಾಂಗಣದಲ್ಲಿ ಭರದ ಸಿದ್ಧತೆ
ಯಾದಗಿರಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋದನಾ ಪರಿಣತ್ತಿನ ಆಶ್ರಯದಲ್ಲಿ ಡಿ.28 ರಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಭರದ ಸಿದ್ಧತೆಗಳು ನಡೆದಿವೆ. ಕ್ರೀಡಾಂಗಣದ ಹೃದಯ ಭಾಗದಲ್ಲಿ ಪ್ರಧಾನ ವೇದಿಕೆ ನಿರ್ಮಿಸಲಾಗುತ್ತಿದೆ. ಮುಂಭಾಗದಲ್ಲಿ ಆಸನಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 28ರಂದು ಮಧ್ಯಾಹ್ನ 2.30 ಕ್ಕೆ ನಗರದ ಮೈಲಾಪುರ ಬೇಸ್ ನಿಂದ ಬ್ಯಾಕವರ್ಡ್ ಹಾಸ್ಟೆಲ್ ವರೆಗೆ ಸರ್ವಾಧ್ಯಕ್ಷರ ಮೆರವಣಿಗೆ ನಡೆಯಲಿದೆ ಎಂದು ಪರಿಷತ್ತಿನ ಜಿಲ್ಲಾದ್ಯಕ್ಷ ಗುಂಡಪ್ಪ ಕಲಬುರಗಿ ವಿವರಿಸಿದರು. ಸತತ ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನಕ್ಕೆ ಒಟ್ಟು 16ರಿಂದ 20 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ. ಇದಕ್ಕಾಗಿ ಹಲವು ಭೋಜನ, ಪ್ರಚಾರ, ವೇದಿಕೆ, ಮೆರವಣಿಗೆ, ಜಲ, ವಸತಿ ಸಮಿತಿಗಳನ್ನು ರಚಿಸಲಾಗಿದೆ ಎಂದರು. ಕಾರ್ಯಕ್ರಮಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ಒದಗಿಸಲಾಗುತ್ತಿದೆ. ಯಾದಗಿರಿ ಸೇರಿದಂತೆ ಪಕ್ಕದ ಕಲಬುರಗಿ, ರಾಯಚೂರು ಜಿಲ್ಲೆಗಳಿಂದ ಜನತೆ ಆಗಮಿಸಲಿದ್ದಾರೆ .ಜಿಲ್ಲೆಯಿಂದಲೂ ಹೆಚ್ಚಿನ ಪ್ರಮಾಣದಲ್ಲಿ ಜನತೆ ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಿಕಲ ನಟರಾಜ, ವಸತಿ ಸಮಿತಿಯ ಇಂದೂದರ ಸಿನ್ನೂರ ಇದ್ದರು. ಭೋಜನಕ್ಕಾಗಿ 19 ಕೌಂಟರ್ ವ್ಯವಸ್ಥೆ : ಸಮ್ಮೇಳನಕ್ಕೆ ಆಗಮಿಸುವ ಜನತೆಗೆ ಭೋಜನದ ವ್ಯವಸ್ಥೆ ಅಚ್ಚುಕಟ್ಟಾಗಿ ಕಲ್ಪಿಸಲಾಗುತ್ತಿದೆ. ಇದಕ್ಕಾಗಿ ಒಟ್ಟು 19 ಕೌಂಟರ್ ಗಳನ್ನು ಸ್ಥಾಪಿಸಲಾಗಿದೆ.
ಹೀಲಿಯಂ ಸಿಲಿಂಡರ್ ಸ್ಫೋಟ: ಸಾರ್ವಜನಿಕ ಸ್ಥಳಗಳಲ್ಲಿ ಸ್ಫೋಟಕ ರಾಸಾಯನಿಕಗಳ ನಿರ್ಬಂಧಕ್ಕೆ ಕ್ರಮ- ಮಹದೇವಪ್ಪ
ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ರಾಸಾಯನಿಕ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗುವುದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಗಾಯಾಳುಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಚಿವರು, ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದರು. ಉತ್ತರ ಪ್ರದೇಶದ ವ್ಯಾಪಾರಿ ಸಲೀಂ ಮತ್ತು ನಂಜನಗೂಡಿನ ಮಂಜುಳಾ ಕುಟುಂಬಕ್ಕೆ ಪರಿಹಾರ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
BSNL New Offer: ಮೊಬೈಲ್ ರೀಚಾರ್ಜ್ಗಿಂತ ಕಡಿಮೆ ದರದಲ್ಲಿ ಇಡೀ ಮನೆಗೆ ಅನ್ಲಿಮಿಟೆಡ್ ಇಂಟರ್ನೆಟ್:
ಇಂದಿನ ದಿನಗಳಲ್ಲಿ ಸ್ಮಾರ್ಟ್ಫೋನ್ ಇಲ್ಲದೆ ಜೀವನವೇ ಇಲ್ಲ ಎನ್ನುವಂತಾಗಿದೆ. ಆದರೆ ಫೋನ್ ಇದ್ದರೆ ಸಾಲದು, ಅದಕ್ಕೆ ತಕ್ಕಂತೆ ಇಂಟರ್ನೆಟ್ ಕೂಡ ಇರಬೇಕು. ಸದ್ಯದ ಮಾರುಕಟ್ಟೆಯಲ್ಲಿ ದಿನಕ್ಕೆ 1.5GB ಅಥವಾ 2GB ಡೇಟಾ ನೀಡುವ ಮೊಬೈಲ್ ಪ್ಲಾನ್ಗಳಿಗೆ ತಿಂಗಳಿಗೆ ಕನಿಷ್ಠ 300 ರಿಂದ 400 ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ಇದೆ. ಇನ್ನು ಮನೆಯಲ್ಲಿ ವೈ-ಫೈ (Wi-Fi) ಹಾಕಿಸೋಣ ಎಂದರೆ, ಅದಕ್ಕೆ ತಿಂಗಳಿಗೆ ಕನಿಷ್ಠ 500 ರೂ. ಬಾಡಿಗೆ ಇರುತ್ತದೆ ಎಂಬ ಭಯ ಸಾಮಾನ್ಯ ಜನರಲ್ಲಿದೆ. ಆದರೆ, ಈ ... Read more The post BSNL New Offer: ಮೊಬೈಲ್ ರೀಚಾರ್ಜ್ಗಿಂತ ಕಡಿಮೆ ದರದಲ್ಲಿ ಇಡೀ ಮನೆಗೆ ಅನ್ಲಿಮಿಟೆಡ್ ಇಂಟರ್ನೆಟ್: appeared first on Karnataka Times .
ಹುಣಸಗಿ | ದೇವರಗಡ್ಡಿಯಲ್ಲಿ ಬಸ್ ಓಡಾಟ ಆರಂಭ : ಗ್ರಾಮಸ್ಥರಲ್ಲಿ ಸಂಭ್ರಮ
ಹುಣಸಗಿ: ಹುಣಸಗಿ ತಾಲೂಕಿನ ಕಟ್ಟೆಕಡೆ ಗ್ರಾಮ ಹಾಗೂ ಸುಕ್ಷೇತ್ರ ದೇವರಗಡ್ಡಿ ಹಲವು ವರ್ಷಗಳಿಂದ ಸಾರಿಗೆ ಸಂಪರ್ಕದಿಂದ ವಂಚಿತವಾಗಿದ್ದು, ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಇದೀಗ ಡಿ.26ರಿಂದ ನಾರಾಯಣಪೂರ–ದೇವರಗಡ್ಡಿ ಮಾರ್ಗದಲ್ಲಿ ಬಸ್ ಓಡಾಟ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಪೂಜೆ ಸಲ್ಲಿಸುವ ಮೂಲಕ ಸಂತಸ ವ್ಯಕ್ತಪಡಿಸಿದರು. ನಾರಾಯಣಪೂರ ಗ್ರಾಮಕ್ಕೆ ಬಸ್ ಸಂಚರಿಸಲು ಹಲವು ವರ್ಷಗಳಿಂದ ಸಾರ್ವಜನಿಕರು, ಕೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಟಂ-ಟಂ ಅಥವಾ ಖಾಸಗಿ ವಾಹನಗಳ ಮೇಲೆ ಅವಲಂಬಿತರಾಗಿದ್ದರು. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಸಂಚಾರ ಸಮಸ್ಯೆ ಗ್ರಾಮಸ್ಥರ ದೈನಂದಿನ ಜೀವನಕ್ಕೆ ದೊಡ್ಡ ಅಡ್ಡಿಯಾಗಿತ್ತು. ಗ್ರಾಮಸ್ಥರ ಬಹುಕಾಲದ ಬೇಡಿಕೆ ಕೊನೆಗೂ ಹಲವು ಸಂಘಟನೆಗಳು ಹಾಗೂ ಮಾಧ್ಯಮ ಸ್ನೇಹಿತರ ಶ್ರಮದಿಂದ ಈಡೇರಿದ್ದು, ದೇವರಗಡ್ಡಿಗೆ ಬಸ್ ಓಡಾಟ ಆರಂಭವಾಗಿರುವುದು ಗ್ರಾಮಕ್ಕೆ ಹೊಸ ಉತ್ಸಾಹ ತಂದಿದೆ. ಸಾರಿಗೆ ನಿಯಂತ್ರಕರ ಮಾಹಿತಿ ಪ್ರಕಾರ, ನಾರಾಯಣಪೂರದಿಂದ ಬೆಳಿಗ್ಗೆ 8.30ಕ್ಕೆ ಹೊರಡುವ ಬಸ್ ದೇವರಗಡ್ಡಿಗೆ 9 ಗಂಟೆಗೆ ತಲುಪಲಿದೆ. ಅದೇ ರೀತಿಯಾಗಿ ಸಂಜೆ 4.30ಕ್ಕೆ ನಾರಾಯಣಪೂರದಿಂದ ಹೊರಡುವ ಬಸ್ ದೇವರಗಡ್ಡಿಗೆ 5 ಗಂಟೆಗೆ ತಲುಪಲಿದೆ. ದೇವರಗಡ್ಡಿಗೆ ಬಸ್ ಸಂಪರ್ಕ ಕಲ್ಪಿಸಲು ಶ್ರಮಿಸಿದ ಸಾರಿಗೆ ವಿಭಾಗೀಯ ಅಧಿಕಾರಿ ವಿ.ಆರ್.ರೆಡ್ಡಿ, ಸುರಪುರ ಘಟಕ ವ್ಯವಸ್ಥಾಪಕ ಭೀಮಸಿಂಗ್ ರಾಠೋಡ್, ಸಾರಿಗೆ ನಿಯಂತ್ರಕ ಐ.ಎ.ಕರಣಿ ಹಾಗೂ ಸಂಘಟಕರ ಸಹಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ನಾರಾಯಣಪೂರದ ಮಾಧ್ಯಮ ಸ್ನೇಹಿತೆ ಪ್ರೀತಿ ರಾಠಿ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಬಳಗದ ಸದಸ್ಯರು, ಚಾಲಕ ಹಾಗೂ ನಿರ್ವಾಹಕರನ್ನು ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಾರಿಗೆ ನಿಯಂತ್ರಕ ಐ.ಎ.ಕರಣಿ, ಸಿಬ್ಬಂದಿಗಳಾದ ವಿಜಯಕುಮಾರ, ಚಂದ್ರು, ಸ್ಥಳೀಯ ಶಾಲಾ ಮಕ್ಕಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
20.96 ಕೋಟಿ ರೂ.ಅಂದಾಜು ವೆಚ್ಚದಲ್ಲಿ ರಾಮನಗರ ರೈಲು ನಿಲ್ದಾಣ ಆಧುನೀಕರಣ : ವಿ.ಸೋಮಣ್ಣ
ಬೆಂಗಳೂರು : ಅಮೃತ ಭಾರತ ನಿಲ್ದಾಣ ಯೋಜನೆ ಅಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ರೈಲು ನಿಲ್ದಾಣದ ಆಧುನೀಕರಣವನ್ನು 20.96 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಶುಕ್ರವಾರ ರಾಮನಗರ ಮತ್ತು ಬಿಡದಿ ರೈಲು ನಿಲ್ದಾಣಗಳನ್ನು ಪರಿಶೀಲಿಸಿದ ಅವರು, ಬೆಂಗಳೂರು-ರಾಮನಗರ ಪ್ರದೇಶವು ತ್ವರಿತ ಬೆಳವಣಿಗೆಯನ್ನು ಕಾಣುತ್ತಿದೆ. ಭವಿಷ್ಯದ ಅಗತ್ಯತೆಗಳಿಗೆ ಅನುಗುಣವಾಗಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲಾಗುತ್ತಿದೆ ಎಂದರು. ಈ ಅಭಿವೃದ್ಧಿ ಕಾರ್ಯದಲ್ಲಿ ನಿಲ್ದಾಣದ ಸಂಚಾರ ಪ್ರದೇಶದ ನವೀಕರಣ, ಹೊಸ ಪಾದಚಾರಿ ಮೇಲ್ಸೇತುವೆ, ಹೊಸ ಪ್ಲಾಟ್ಫಾರ್ಮ್ ಶೆಲ್ಟರ್ಗಳು ಮತ್ತು ನಿರೀಕ್ಷಣಾ ಕೊಠಡಿ, ಹೆಚ್ಚುವರಿ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳ ನಿಲುಗಡೆ ಸ್ಥಳ, ಮೂರು ಲಿಫ್ಟ್ ಗಳು ಮತ್ತು ಒಂದು ಎಸ್ಕಲೇಟರ್ ಮತ್ತು ಹೊಸ ಶೌಚಾಲಯ ನಿರ್ಮಾಣ ಆಗಲಿದ್ದು, ಇದು ಪ್ರಯಾಣಿಕ ಸ್ನೇಹಿ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ ಎಂದು ಅವರು ಮಾಹಿತಿ ನೀಡಿದರು. ಬೆಂಗಳೂರು ದಕ್ಷಿಣ ಜಿಲ್ಲೆಯು ಅಪಾರ ಅಭಿವೃದ್ಧಿ ಸಾಮರ್ಥ್ಯವನ್ನು ಹೊಂದಿದೆ. ಈ ಪ್ರದೇಶದ ಒಟ್ಟಾರೆ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ನಿಕಟ ಸಮನ್ವಯದಿಂದ ಕೆಲಸ ಮಾಡುವಂತೆ ಕರೆ ನೀಡಿದ ಸೋಮಣ್ಣ, ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಮು ರೈಲು ಸೇವೆಗಳು ಸಾರ್ವಜನಿಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತಿವೆ ಎಂದರು. ದೇಶಾದ್ಯಂತ ಎಲ್ಲ ರಸ್ತೆ ಕೆಳ ಸೇತುವೆಗಳು ಮತ್ತು ರಸ್ತೆ ಮೇಲ್ಸೇತುವೆಗಳ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರಕಾರ ಭರಿಸಲಿದೆ. ದೇಶದೆಲ್ಲೆಡೆ ಸುಮಾರು ಶೇ.98ರಷ್ಟು ರೈಲ್ವೆ ಮಾರ್ಗ ವಿದ್ಯುದ್ದೀಕರಣ ಪೂರ್ಣಗೊಂಡಿದೆ ಮತ್ತು ಕರ್ನಾಟಕ ಸೇರಿದಂತೆ ರಾಷ್ಟ್ರವ್ಯಾಪಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ವೇಗವಾಗಿ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು. ಪರಿಶೀಲನೆ ವೇಳೆ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಮತ್ತು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಉಪಸ್ಥಿತರಿದ್ದರು. ನಿಲ್ದಾಣದಲ್ಲಿ, ಸಚಿವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು ಮತ್ತು ಅವರ ಕುಂದುಕೊರತೆಗಳನ್ನು ಪರಿಹರಿಸಲು ಮನವಿಗಳನ್ನು ಸ್ವೀಕರಿಸಿದರು. ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್ಪುರಿಯಾ, ಹಿರಿಯ ವಿಭಾಗೀಯ ಎಂಜಿನಿಯರ್ (ಸಮನ್ವಯ) ರಾಜೀವ್ ಶರ್ಮಾ, ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಕೃಷ್ಣ ಚೈತನ್ಯ, ಉಪಮುಖ್ಯ ಯೋಜನಾ ವ್ಯವಸ್ಥಾಪಕ (ಗತಿ ಶಕ್ತಿ) ಶುಭಂ ಶರ್ಮಾ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೇರಿದಂತೆ ಹಿರಿಯ ರೈಲ್ವೆ ಮತ್ತು ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮೊದಲು, ಸೋಮಣ್ಣ ಬಿಡದಿ ರೈಲು ನಿಲ್ದಾಣವನ್ನು ಪರಿಶೀಲಿಸಿದರು. ಅಲ್ಲಿ ನಡೆಯುತ್ತಿರುವ ಪಾದಚಾರಿ ಸೇತುವೆ ವಿಸ್ತರಣೆ ಮತ್ತು ಪ್ಲಾಟ್ಫಾರ್ಮ್ ವಿಸ್ತರಣೆ ಕಾಮಗಾರಿಗಳನ್ನು ಪರಿಶೀಲಿಸಿದರು. ಬಿಡದಿಯಲ್ಲಿರುವ ಟೊಯೋಟಾ ಉತ್ಪಾದನಾ ಘಟಕಕ್ಕೂ ಭೇಟಿ ನೀಡಿ ರೈಲ್ವೆ ಮೂಲಕ ವಾಹನಗಳ ಸಾಗಣೆಯ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂಸದ ಡಾ.ಸಿ.ಎನ್.ಮಂಜುನಾಥ್ ಮತ್ತು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಉಪಸ್ಥಿತರಿದ್ದರು.
ಚಿತ್ರದುರ್ಗ ಬಸ್ ದುರಂತ; ಸೀಬರ್ಡ್ ಚಾಲಕ ಆಸ್ಪತ್ರೆಯಲ್ಲಿ ಸಾವು : ಮೃತರ ಸಂಖೆ ಏಳಕ್ಕೆ ಏರಿಕೆ
ಹಿರಿಯೂರಿನಲ್ಲಿ ಕಂಟೈನರ್ ಲಾರಿ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದೆ. ಪ್ರಕರಣದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯ, ಅತಿವೇಗ ಅಥವಾ ನಿದ್ರಾವಸ್ಥೆಯೇ ದುರಂತಕ್ಕೆ ಕಾರಣವೆಂದು ಶಂಕಿಸಲಾಗಿದೆ. ಶಾಲಾ ಮಕ್ಕಳ ಬಸ್ ಅನ್ನು ಓವರ್ಟೇಕ್ ಮಾಡಿದ್ದರಿಂದ ಸೀಬರ್ಡ್ ಬಸ್ ದೊಡ್ಡ ಅಪಾಯದಿಂದ ಪಾರಾಯಿತು.
ಚಿಂಚೋಳಿ | ಸಂವಿಧಾನವೇ ಭಾರತದ ಆತ್ಮ: ಜ್ಞಾನಪ್ರಕಾಶ್ ಸ್ವಾಮೀಜಿ ಅಭಿಮತ
ಚಿಂಚೋಳಿ: ಸಂವಿಧಾನವೇ ಭಾರತ ದೇಶದ ಆತ್ಮವಾಗಿದೆ, ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಉರಿಲಿಂಗ ಪೆದ್ದಿಮಠ, ಮೈಸೂರು ಪೀಠಾಧ್ಯಕ್ಷರಾದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು. ಸುಲೇಪೇಟ ಪಟ್ಟಣದಲ್ಲಿ ಶೋಷಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಶುಕ್ರವಾರ ಸರಕಾರಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣದಲ್ಲಿ ಅವರು ದಿವ್ಯ ಸಾನಿಧ್ಯ ವಹಿಸಿದ ಮಾತನಾಡಿದರು. ಸಂವಿಧಾನವನ್ನು ಮುಗಿಸುವ ಅಥವಾ ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ, ಸಂವಿಧಾನವನ್ನು ಜೀವಂತವಾಗಿ ಉಳಿಸುವ ಉದ್ದೇಶದಿಂದಲೇ ಸುಲೇಪೇಟ ಗ್ರಾಮದಲ್ಲಿ ಎಲ್ಲಾ ಮಹಾಪುರುಷರ ಭಾವಚಿತ್ರಗಳು ಹಾಗೂ ಸಂವಿಧಾನದ ಪೀಠಿಕೆಯೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು. ಭಾರತ ವಿಕಸಿತ ರಾಷ್ಟ್ರವಾಗಬೇಕಾದರೆ ಸಂವಿಧಾನವೇ ದೇಶದ ಆತ್ಮವಾಗಬೇಕು. ಸಂವಿಧಾನವನ್ನು ಒಂದು ಧರ್ಮ ಅಥವಾ ಒಂದು ಜಾತಿಗೆ ಮಾತ್ರ ಸೀಮಿತವಾಗಿ ಬರೆಯಲಾಗಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲಾ ಜಾತಿ, ಧರ್ಮ ಹಾಗೂ ವರ್ಗಗಳ ಹಿತಕ್ಕಾಗಿ ಸಂವಿಧಾನ ರಚಿಸಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಮುಂಚಿತವಾಗಿ ಸುಲೇಪೇಟ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಬಸವೇಶ್ವರ ವೃತ್ತದಿಂದ ತೆರವಾದ ವಾಹನದಲ್ಲಿ ಮುಖ್ಯ ಅತಿಥಿಗಳನ್ನು ಮೆರವಣಿಗೆ ಮೂಲಕ ಕರೆತರಲಾಯಿತು. ದೇಶಭಕ್ತರು, ಸಮಾಜಸೇವಕರು, ಶರಣರು ಹಾಗೂ ವೀರಯೋಧರ ಭಾವಚಿತ್ರಗಳನ್ನು ಆಟೋಗಳ ಮೇಲೆ ಅಳವಡಿಸಿ ನಡೆಸಿದ ಮೆರವಣಿಗೆ ಸಾರ್ವಜನಿಕರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ವಿಠಲ ಮಹಾರಾಜ ಕೊರವಿ, ಬಾಲರಾಜ ಗುತ್ತೇದಾರ್, ಟಿಪ್ಪು ಸುಲ್ತಾನ ವಂಶಜರಾದ ಸಾಹೆಬ್ ಮಂಸೂರ್ ಅಲಿ, ಗ್ರಾ.ಪಂ. ಅಧ್ಯಕ್ಷರಾದ ಸಂತೋಷ ರಾಠೋಡ, ಪ್ರೊ.ಸುಭಾಷ ಶಿಲವಂತ, ಶಿವರಾಮ ರಾಠೋಡ್, ರುದ್ರಶೆಟ್ಟಿ ಪಡಶೆಟ್ಟಿ, ದೇವಿಂದ್ರಪ್ಪ ಹೋಳ್ಕರ್, ಅಶೋಕ್ ಹೂವಿನಭಾವಿ, ನರಸಮ್ಮ ಅವಂಟಿ, ಜ್ಯೋತಿ ಡಿ. ಬೊಮ್ಮ, ಶರಣಬಸಪ್ಪ, ಮಾರುತಿ ಗಂಜಗಿರಿ, ಮಲ್ಲಿಕಾರ್ಜುನ ಪಾಳದಿ, ಮಲ್ಲಿಕಾರ್ಜುನ ಮಾಳಗಿ, ಗುರುನಾಥ ರೆಡ್ಡಿ, ವಿರಣ್ಣ ಗಂಗಣ್ಣ, ಬಾಬಾಣ್ಣ ಗುಲಗುಂಜಿ, ಸಂಪತ್ ಕುಮಾರ ಬೆಳ್ಳಿಚುಕ್ಕಿ, ಸಂದಾನಿ ಕೋಹಿರ್, ಪ್ರಕಾಶ ಮಂತ್ರಿ, ಮಲ್ಲಿಕಾರ್ಜುನ ಜಮ್ಮುನ್, ಮೋಯಿನ್ ಮೊಮಿನ್, ರಜಾಕ್ ಪಟೇಲ್, ತೌಫೀಕ್ ಯಾಕಾಪೂರ, ರವಿ ರುಸ್ತಂಪೂರ, ಸುನಿಲ್ ಕಪೂರ್, ಮಲ್ಲಿಕಾರ್ಜುನ್ ಗುಲಗುಂಜಿ, ಸೀರಾಜ್ ಪಟೇಲ್, ಮೈಹಿಬೂಬ ಮೋಮಿನ್, ಲಾಡ್ಲೆಸಾಬ, ರಸೂಲ್ ಸೇರಿದಂತೆ ಅನೇಕರು ಇದ್ದರು.

17 C