ಅಮೆರಿಕ ಕಟ್ಟಿದ ಭಾರತೀಯ ಕೌಶಲ್ಯವನ್ನು ಮರೆಯಲಾದಿತೇ? H-1B ವೀಸಾ ಪರ ಬ್ಯಾಟ್ ಬೀಸಿದ ಎಲಾನ್ ಮಸ್ಕ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ವಿರೋಧಿ ನೀತಿಯು, ಅಮೆರಿಕನ್ನರಲ್ಲಿ ವಲಸೆಯ ವಿರುದ್ಧ ಅಸಹನೀಯತೆ ಬೆಳೆಯುವಂತೆ ಮಾಡಿದೆ. ಅಮೆರಿಕಕ್ಕೆ ವಿದೇಶಿಯರೇ ಬೇಡ ಎಂಬ ರೀತಿಯಲ್ಲಿ ಹಲವರು ವರ್ತಿಸುತ್ತಿದ್ದಾರೆ. ವಲಸೆ ತಡೆಗಟ್ಟಲು ಟ್ರಂಪ್ ಆಡಳಿತ ಜಾರಿಗೊಳಿಸುತ್ತಿರು ಕಠಿಣ ವೀಸಾ ನೀತಿ ಕೂಡ ಇದರಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಅನೇಕರು H-1B ವೀಸಾ ಕಾರ್ಯಕ್ರಮವನ್ನೇ ರದ್ದುಗೊಳಿಸಬೇಕೆಂದು ವಾದಿಸುತ್ತಿದ್ದಾರೆ. ಈ ಬಗ್ಗೆ ಖ್ಯಾತ ಉದ್ಯಮಿ ಎಲಾನ್ ಮಸ್ಕ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ.
Gold Price on December 1: ಬಂಗಾರ ದರ ಎಷ್ಟಿದೆ ಗೊತ್ತಾ? ಇಲ್ಲಿದೆ ಡಿಸೆಂಬರ್ 1ರ ಚಿನ್ನದ ದರಪಟ್ಟಿ
Gold Price on December 1: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 1) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಬಂಗಾರ ದರಗಳ ವಿವರ: ನಿನ್ನೆ (ನವೆಂಬರ್
ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್ಇ ಶಾಲೆಗಳಲ್ಲಿ 'ಶುಗರ್' ಕಂಟ್ರೋಲ್ ಮಂಡಳಿ! ಏನಿದರ ಪ್ರಯೋಜನಗಳು ಗೊತ್ತಾ?
ದೇಶದಾದ್ಯಂತದ ಸಿಬಿಎಸ್ಇ ಶಾಲೆಗಳಲ್ಲಿ ಸಕ್ಕರೆ ಮಂಡಳಿಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ 62 ಸಿಬಿಎಸ್ಇ ಶಾಲೆಗಳಲ್ಲಿ 10 ಸಾವಿರ ವಿದ್ಯಾರ್ಥಿಗಳು ಸಕ್ಕರೆ ಸೇವನೆ ಕಡಿಮೆ ಮಾಡುವ ಉಪಕ್ರಮಗಳಲ್ಲಿ ತೊಡಗಿದ್ದಾರೆ. ಶಾಲಾ ಕ್ಯಾಂಟೀನ್ಗಳಲ್ಲಿ ತಂಪು ಪಾನೀಯ ಮತ್ತು ಸಿಹಿತಿಂಡಿಗಳನ್ನು ತೆಗೆದುಹಾಕಲಾಗುತ್ತಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲೂ ಈ ಕ್ರಮ ಜಾರಿಗೆ ತರಲು ಆಗ್ರಹಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನವಿಲು ಗರಿಯುಳ್ಳ ಮುತ್ತಿನ ಪೇಟವನ್ನು ಧರಿಸಿದ ಹಿಂದೆ ಒಂದು ಸುಂದರ ಕಥೆಯಿಂದೆ. ಈ ಪೇಟದ ತಯಾರಿ ಹೇಗಿತ್ತು, ಇದೇ ಪೇಟವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಗಳು ಆಯ್ಕೆ ಮಾಡಿದ್ದು ಹೇಗೆ ಎಲ್ಲ ವಿವರ ಇಲ್ಲಿದೆ ನೋಡಿ.
ಎಚ್ಚರ: ಇಲಿಜ್ವರ ಹೆಚ್ಚಳ, 2 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು, ಲಕ್ಷಣಗಳೇನು? ಇಲ್ಲಿದೆ ವಿವರ
ರಾಜ್ಯದಲ್ಲಿ ಈ ವರ್ಷ ಲೆಪ್ಟೊಸ್ಪೈರೋಸಿಸ್ (ಇಲಿ ಜ್ವರ) ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿದ್ದು, ಕಳೆದ ಮೂರು ವರ್ಷಗಳಲ್ಲೇ ಅತಿಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದುವರೆಗೆ 2,029 ಪ್ರಕರಣಗಳು ವರದಿಯಾಗಿದ್ದು, ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಸೋಂಕಿತ ಪ್ರಾಣಿಗಳ ಮೂತ್ರ, ನೀರು, ಮಣ್ಣು ಅಥವಾ ಆಹಾರದ ಮೂಲಕ ಮಾನವ ದೇಹಕ್ಕೆ ಪ್ರವೇಶಿಸುವ ಈ ರೋಗವು ತೀವ್ರ ತಲೆನೋವು, ಜ್ವರ, ವಾಂತಿ ಮುಂತಾದ ಲಕ್ಷಣಗಳನ್ನು ಉಂಟುಮಾಡುತ್ತದೆ.
ಕಾಶ್ಮೀರಿ ಕೇಸರಿ ಬೆಳೆದ ದೊಡ್ಡಬಳ್ಳಾಪುರ ಪದವೀಧರ: ಪ್ರತಿ ಗ್ರಾಂಗೆ 1,500 ರೂ.ವರೆಗೂ ದರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಐಟಿ ಉದ್ಯೋಗಿ ಪವನ್ ಧನಂಜಯ್ ಕಾಶ್ಮೀರದ ಕೇಸರಿಯನ್ನು ಯಶಸ್ವಿಯಾಗಿ ಬೆಳೆದು ಗಮನ ಸೆಳೆದಿದ್ದಾರೆ. ಮನೆಯಲ್ಲೇ 6-9 ಡಿಗ್ರಿ ಸೆಲ್ಸಿಯಸ್ ತಾಪಮಾನ ಸೃಷ್ಟಿಸಿ, ಕಾಶ್ಮೀರದಷ್ಟೇ ಗುಣಮಟ್ಟದ ಕೇಸರಿ ಬೆಳೆದಿದ್ದು, ಪ್ರತಿ ಗ್ರಾಂಗೆ 1000-1500 ರೂ. ದರದಲ್ಲಿ ಭರ್ಜರಿ ಬೇಡಿಕೆ ಪಡೆದಿದೆ.
ರೈತರಿಂದಲೇ ನೇರವಾಗಿ ಮೆಕ್ಕೆಜೋಳ ಖರೀದಿಸಿ ಡಿಸ್ಟಲರಿಗಳಿಗೆ ಸರಬರಾಜು ಮಾಡುವಂತೆ ಆದೇಶ
ಬೆಂಗಳೂರು : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ(ಕೆಎಸ್ಸಿಎಂಎಫ್) ಸಂಸ್ಥೆಯು ರೈತರಿಂದ ನೇರವಾಗಿ ಖರೀದಿಸಿ ಡಿಸ್ಟಲರಿಗಳಿಗೆ ಸರಬರಾಜು ಮಾಡುವಂತೆ ಸರಕಾರ ರವಿವಾರ ಆದೇಶ ಹೊರಡಿಸಿದೆ. ಧಾನ್ಯ ಆಧಾರಿತ ಎಥನಾಲ್ ಉತ್ಪಾದಿಸುವ ಡಿಸ್ಟಿಲರಿಗಳಿಗೆ ಮೊದಲು ತ್ರೈಮಾಸಿಕದಲ್ಲಿ(2025 ನವೆಂಬರ್ 25ರಿಂದ 2026 ಜನವರಿ 26ರವರೆಗೆ) ಒಟ್ಟು 44,895 ಮೆಟ್ರಿಕ್ ಟನ್ ಮೆಕ್ಕೆಜೋಳ ಅಗತ್ಯವಿದ್ದು, ಅದರ ಶೇ.50ರಷ್ಟು ಅಂದರೆ 22,446 ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ರೈತರಿಂದ ಪಿಎಸಿಎಸ್/ಟಿಎಪಿಸಿಎಂಎಸ್ ಸಂಸ್ಥೆಗಳ ಮೂಲಕ ಖರೀದಿಸಿ ಡಿಸ್ಟಿಲರಿಗಳ ಗೋದಾಮುಗಳಿಗೆ ಸರಬರಾಜು ಮಾಡುವಂತೆ ಕೆಎಸ್ಸಿಎಂಎಫ್ಗೆ ಸೂಚನೆ ನೀಡಲಾಗಿದೆ. ಪ್ರತಿ ರೈತರಿಂದ ನೇರವಾಗಿ ಗರಿಷ್ಟ 5 ಕ್ವಿಂಟಾಲ್ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್ಗೆ 2,400 ರೂ.ನಂತೆ ಖರೀದಿಸಬೇಕು ಮತ್ತು ಡಿಸ್ಟಿಲರಿಗಳ ಸಮೀಪದ ಪಿಎಸಿಎಸ್ಗಳ ಮೂಲಕ ಖರೀದಿಸಲು ಆದ್ಯತೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳವು ಖರೀದಿದಾರ ಡಿಸ್ಟಿಲರಿಗಳಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಬೇಕು ಎಂದು ತಿಳಿಸಲಾಗಿದೆ. ಖರೀದಿ ಪ್ರಕ್ರಿಯೆಗೆ ಎನ್ಇಎಂಎಲ್ ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರಕಾರದ ಎಫ್ಆರ್ಯುಐಟಿಎಸ್ ಪೋರ್ಟಲ್ ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ಡಿಸೆಂಬರ್ 1ರಿಂದ ಮೂರು ದಿನಗಳವರೆಗೆ ರೈತರ ನೋಂದಣಿ ಕಾರ್ಯವನ್ನು ನಿರ್ವಹಿಸಬೇಕು ಎಂದು ಹೇಳಲಾಗಿದೆ. ಮೂರು ದಿನಗಳ ನಂತರದಲ್ಲಿ ರೈತರ ನೋಂದಣಿ ಹಾಗೂ ಖರೀದಿ ಎರಡೂ ಪ್ರಕ್ರಿಯೆಗಳನ್ನು ಏಕಕಾಲದಲ್ಲಿ ನಿರ್ವಹಿಸಬೇಕು. ಧಾನ್ಯ ಹಾಗೂ ಕಾಕಂಬಿ ಆಧಾರಿತ ಡಿಸ್ಟಿಲರಿಗಳು ಬೇಡಿಕೆ ಸಲ್ಲಿಸಿದಲ್ಲಿ, ಅವುಗಳಿಗೆ ಸಂಬಂಧಿಸಿದಂತೆ, ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಕೆಎಸ್ಸಿಎಂಎಫ್ ಮುಂದುವರೆಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಖರೀದಿ ಪ್ರಕ್ರಿಯೆಗೆ ತಗಲುವ ಪ್ರಾಸಂಗಿಕ ವೆಚ್ಚ, ಎನ್ಇಎಂಎಲ್ ಸಂಸ್ಥೆಯ ಸೇವಾ ವೆಚ್ಚ ಹಾಗೂ ಇತರೆ ವೆಚ್ಚಗಳನ್ನು ಕೆಎಸ್ಸಿಎಂಎಫ್ಗೆ ರಾಜ್ಯ ಸರಕಾರದಿಂದ ಒದಗಿಸಲಾಗುವುದು ಎಂದು ತಿಳಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು, ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿಗಳು, ಸಹಕಾರ ಇಲಾಖೆಯ ಜಿಲ್ಲಾ ನಿಬಂಧಕರು ಹಾಗೂ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಖರೀದಿ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಸರಕಾರದ ಅಧೀನ ಕಾರ್ಯದರ್ಶಿ ಜಿ.ಎನ್.ಧನಲಕ್ಷ್ಮೀ ಆದೇಶದಲ್ಲಿ ತಿಳಿಸಿದ್ದಾರೆ.
ಇಂದಿನಿಂದ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ
ಬೆಂಗಳೂರು : ಸರಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಡಿ.1ರಿಂದ ಆರಂಭಿಸಬೇಕು ಎಂದು ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ. ಕೆಪಿಎಸ್, ಪಿಎಂಶ್ರೀ, ಮ್ಯಾಗ್ನೇಟ್ ಶಾಲೆಗಳು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಪ್ರಾರಂಭಿಸಲಾಗಿರುವ ಶಾಲೆಗಳು ಸೇರಿದಂತೆ 2018ರಿಂದ ಪ್ರಾರಂಭವಾಗಿರುವ ಎಲ್ಲ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ವಾರದ ಆರು ದಿನ ಪೂರಕ ಪೌಷ್ಠಿಕಾಂಶವನ್ನು ನೀಡಬೇಕು. ಕೆಪಿಎಸ್ ಶಾಲೆಗಳಲ್ಲಿ ಈವರೆಗೆ ನೀಡುತ್ತಿದ್ದ ಬೆಳಗ್ಗಿನ ಉಪಹಾರವನ್ನು ರದ್ದುಪಡಿಸಿ, ಪೂರಕ ಪೌಷ್ಠಿಕ ಆಹಾರವನ್ನು ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ಎಲ್ಲ ಸರಕು ಮತ್ತು ಸೇವೆಗಳ ಖರೀದಿ ಪ್ರಕ್ರಿಯೆಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರನ್ವಯ ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಗಾಂಧಿಗ್ರಾಮ ಪುರಸ್ಕಾರ, ಇ-ಸ್ವತ್ತು ತಂತ್ರಾಂಶ ಚಾಲನೆ; 238 ಗ್ರಾ.ಪಂ.ಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ
ಬೆಂಗಳೂರು : ಗ್ರಾಮೀಣ ಪ್ರದೇಶದ ಜನರ ಬೇಡಿಕೆಗಳ ಅನುಗುಣವಾಗಿ ಅಗತ್ಯ ಮೂಲ ಸೌಕರ್ಯಗಳನ್ನು ಮತ್ತು ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳು ಸ್ವಯಂ ಆಡಳಿತ ಸಂಸ್ಥೆಗಳಾಗಿ ಕಾರ್ಯನಿರ್ವಹಿಸುತ್ತಿವೆ. ಗ್ರಾ.ಪಂ.ಗಳ ಕಾರ್ಯನಿರ್ವಹಣೆಯನ್ನು ಪ್ರೋತ್ಸಾಹಿಸಲು ರಾಜ್ಯದ ತಾಲೂಕಿಗೊಂದು ಉತ್ತಮ ಗ್ರಾ.ಪಂ. ಅನ್ನು ಆಯ್ಕೆ ಮಾಡಿ ಪ್ರತಿ ವರ್ಷವೂ ‘ಗಾಂಧಿ ಗ್ರಾಮ ಪುರಸ್ಕಾರ’ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತಿದೆ. ಪಂಚಾಯತಿಗಳಿಗೆ ಪುರಸ್ಕಾರವನ್ನು ನೀಡುವುದರಿಂದ ಮುಂಬರುವ ದಿನಗಳಲ್ಲಿ ಮತ್ತಷ್ಟು ಜನೋಪಯೋಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಗ್ರಾಮೀಣ ಭಾಗದ ಜನರ ಜೀವನಮಟ್ಟ ಸುಧಾರಣೆಗೆ ಶ್ರಮಿಸಲು ಪ್ರೇರೇಪಿಸುವ ಮೂಲಕ ಪಂಚಾಯತಿಗಳನ್ನು ಸದೃಢಗೊಳಿಸಲು ಮತ್ತು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಸಹಕಾರಿಯಾಗುತ್ತದೆ. ಪ್ರಶಸ್ತಿಗೆ ಮಾನದಂಡವಾಗಿ ಗ್ರಾ.ಪಂ.ಗಳ ಕಾರ್ಯನಿರ್ವಹಣೆಯ ಮೌಲ್ಯಮಾಪನಕ್ಕೆ ಪಂಚಾಯತಿಗಳು ಕಾಯ್ದೆ ಬದ್ಧವಾಗಿ ನಿರ್ವಹಿಸಬೇಕು. ಪಂಚಾಯತಿಗಳು ಸ್ವಯಂ ಪ್ರೇರಣೆಯಿಂದ ಕೈಗೊಳ್ಳಲಾಗುವ ಅಭಿವೃದ್ಧಿ ಚಟುವಟಿಕೆಗಳು, ಸರಕಾರ ರೂಪಿಸಿದ ಕಾರ್ಯಕ್ರಮಗಳ ನಿರ್ವಹಣೆಗೆ ಕೈಗೊಂಡ ಕ್ರಮವು ಒಳಗೊಂಡಂತೆ ಜೀವನದ ಗುಣಮಟ್ಟ, ಉತ್ತಮ ಆಡಳಿತ, ಸೇವೆಗಳು ಮತ್ತು ಅಭಿವೃದ್ಧಿ ಚಟುವಟಿಕೆಗಳ ವಿಭಾಗಗಳ ಅಂಶಗಳನ್ನೊಳಗೊಂಡಂತೆ ಪ್ರಶ್ನಾವಳಿಗಳನ್ನು ಸರಕಾರದಿಂದ ಸಿದ್ಧಪಡಿಸಿ ಅಂಕಿ-ಅಂಶಗಳನ್ನು ಸಂಗ್ರಹಿಸಿ ಅವುಗಳ ಆಧಾರದ ಮೇಲೆ ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆ : ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಪಂಚಾಯತಿಗಳನ್ನು ಆಯ್ಕೆ ಮಾಡಲು ನಿಗದಿ ಪಡಿಸಿದ ಮಾನದಂಡಗಳನ್ನು ನಿಗದಿಪಡಿಸಿ, ರಾಜ್ಯದ ಎಲ್ಲ ಗ್ರಾ.ಪಂ.ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ ತಂತ್ರಾಂಶದ ಮೂಲಕ ಉತ್ತರಿಸಿದ ವಿವರಗಳಿಗನುಗುಣವಾಗಿ ಪ್ರತಿ ತಾಲೂಕಿಗೆ ಅತಿಹೆಚ್ಚು ಅಂಕ ಗಳಿಸಿರುವ ಐದು ಪಂಚಾಯತಿಗಳು ಅರ್ಹತೆ ಪಡೆದಿದ್ದು, ಇಂತಹ ಪಂಚಾಯತಿಗಳ ಸ್ಥಳ ಪರಿಶೀಲನೆ ಹಾಗೂ ದಾಖಲಾತಿ ಪರಿಶೀಲನೆ ಮಾಡಿ, ಆಯಾ ಜಿ.ಪಂ. ಸಿಇಓಗಳ ಅಧ್ಯಕ್ಷತೆಯಲ್ಲಿನ ಜಿಲ್ಲಾಮಟ್ಟದ ಆಯ್ಕೆ ಸಮಿತಿಯ ಮೂಲಕ ತಾಲೂಕಿಗೆ ಒಂದರಂತೆ ಪಂಚಾಯತಿಗಳನ್ನು ಆಯ್ಕೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಅಭಿವೃದ್ಧಿ ಕಾರ್ಯಗಳಿಗೆ ಪ್ರಶಸ್ತಿ ಮೊತ್ತ : ಗ್ರಾಮೀಣಾಭಿವೃದ್ಧಿ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿನ ರಾಜ್ಯಮಟ್ಟದ ಪರಾಮರ್ಶೆ ಸಮಿತಿಯ ಮೂಲಕ ಗ್ರಾಮಗಳನ್ನು ಅಂತಿಮಗೊಳಿಸಿ, ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಪಂಚಾಯತಿಗಳಿಗೆ ಪ್ರಶಸ್ತಿ ಪ್ರಮಾಣಪತ್ರ, ಸ್ಮರಣಿಕೆ ಹಾಗೂ 5ಲಕ್ಷ ರೂ. ಪ್ರೋ ತ್ಸಾಹಧನವನ್ನು ನೀಡಿ ಗೌರವಿಸಲಾಗುತ್ತಿದೆ. ಪ್ರಸ್ತುತ 2023-2024ನೆ ಸಾಲಿನಲ್ಲಿ ಆಯ್ಕೆ ಮಾಡಲಾದ ಒಟ್ಟು 238 ಗ್ರಾ.ಪಂ.ಗಳಿಗೆ ‘ಗಾಂಧಿ ಗ್ರಾಮ ಪುರಸ್ಕಾರ’ವನ್ನು ಪ್ರದಾನ ಮಾಡಲಾಗುತ್ತಿದೆ. ರಾಜ್ಯದ ಎಲ್ಲ ತಾಲೂಕುಗಳಿಂದ ಬರುವ ಪಂಚಾಯತಿ ಅಧ್ಯಕ್ಷರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಂದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಸ್ವೀಕರಿಸಲಿದ್ದಾರೆ. ಪ್ರಶಸ್ತಿ ಮೊತ್ತವನ್ನು ಗ್ರಾಮ ಪಂಚಾಯತಿಗಳು ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ: ಗ್ರಾ.ಪಂ.ಗಳ ಸಂಪನ್ಮೂಲ ಹೆಚ್ಚಿಸುವ ಸಲುವಾಗಿ ಸರಕಾರದಿಂದ ಗ್ರಾ.ಪಂ.ಗಳ ಆಸ್ತಿಗಳನ್ನು ಇ-ಸ್ವತ್ತು ವ್ಯಾಪ್ತಿಗೆ ತರಲಾಗಿದೆ. ಪಂಚಾಯತಿಗಳ ವ್ಯಾಪ್ತಿಯಲ್ಲಿ ಗ್ರಾಮಠಾಣಾಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ವಾಸಿಸುವ ಜನರಿಗೆ ನೀರು, ಬೀದಿ ದೀಪ, ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದು ಗ್ರಾ.ಪಂ.ಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸರಕಾರ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತರಲಾಗಿದೆ. ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ-ಸ್ವತ್ತು ಪಡೆಯಲು ಗ್ರಾಮೀಣಾಭಿವೃದ್ಧಿ ಇಲಾಖೆಯು ಸುವರ್ಣಾವಕಾಶ ಕಲ್ಪಿಸಿದೆ. ತಂತ್ರಾಂಶದ ಮೂಲಕ ಗ್ರಾ.ಪಂ.ವ್ಯಾಪ್ತಿಯ ಸಾರ್ವಜನಿಕರ ಆಸ್ತಿಗಳಿಗೆ ಡಿಜಿಟಲ್ ಇ-ಸ್ವತ್ತು ಪ್ರಮಾಣ ಪತ್ರ (ನಮೂನೆ- 11ಎ ಮತ್ತು ನಮೂನೆ 11ಬಿ) ವಿತರಣೆಯನ್ನು ಆರಂಭಿಸಲಾಗುತ್ತಿದೆ. ತಂತ್ರಾಂಶದ ಮೂಲಕ ಇ-ಸ್ವತ್ತು ಪಡೆಯಲು ಎದುರಾಗುವ ಎಲ್ಲ ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇ-ಸ್ವತ್ತು ಸಹಾಯವಾಣಿ(ಸಂಖ್ಯೆ: 94834 76000) ಸ್ಥಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ʼಟೆಲಿ ಕಾರ್ಡಿಯೋಲಾಜಿ’ ಮೂಲಕ 600 ಜೀವಗಳ ರಕ್ಷಣೆ : ದಿನೇಶ್ ಗುಂಡೂರಾವ್
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ 82 ತಾಲೂಕು ಅಸ್ಪತ್ರೆಗಳಲ್ಲಿ ಟೆಲಿ ಕಾರ್ಡಿಯೋಲಾಜಿ ವ್ಯವಸ್ಥೆ ಮೂಲಕ ಜನರಿಗೆ ಆರೋಗ್ಯ ಸೇವೆ ನೀಡುತ್ತಿದ್ದು, ದುಬಾರಿ ದರದ ಚುಚ್ಚುಮದ್ದು ಉಚಿತವಾಗಿ ನೀಡಲಾಗುತ್ತಿದೆ. ಇದರಿಂದ 600 ಜೀವಗಳನ್ನು ಒಂದುವರೆ ವರ್ಷದಲ್ಲಿ ಉಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ರವಿವಾರ ನಗರದ ಐಐಎಸ್ಸಿ ಟಾಟಾ ಸಭಾಂಗಣದಲ್ಲಿ ಟೆಲಿಮೆಡಿಸಿನ್ ಸೊಸೈಟಿ ಆಫ್ ಇಂಡಿಯಾ ಅಂತರ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇವಲ 8/9 ನಿಮಿಷದಲ್ಲಿ ಪರಿಣಿತ ವೈದ್ಯರು ಇಸಿಜಿ ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನು ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗೆ ಇದೇ ವರ್ಷ ಕಲ್ಪಿಸಲಾಗುತ್ತದೆ. ಇಲಾಖೆ ಆರೋಗ್ಯ ಉಪಕರಣಗಳ ನಿರ್ವಹಣೆ ಮಾಡಲು ತಂತ್ರಜ್ಞಾನ ಬಳಸಿಕೊಂಡು ಕೆಲಸ ಮಾಡುತ್ತಿದೆ ಎಂದರು. ಇಂತಹ ಎಲ್ಲ ತಂತ್ರಜ್ಞಾನ ಬಳಸಿ ಹಳ್ಳಿಯಲ್ಲಿ ವಾಸಿಸುವವರಿಗೂ ಉತ್ತಮ ಚಿಕಿತ್ಸೆ ನೀಡಲು, ಪರಿಣಿತ ವೈದ್ಯರ ಸಲಹೆ ಸಿಗುವಂತೆ ಮಾಡಲು ಕಾರ್ಯೋನ್ಮುಖರಾಗಿದ್ದೇವೆ. ಇಲ್ಲಿರುವ ಪರಿಣಿತರು, ನಮ್ಮ ಆರೋಗ್ಯ ಇಲಾಖೆಯ ತಜ್ಞರೊಂದಿಗೆ ಸಮಾಲೋಚನೆ ನಡೆಸೋಣ. ನಿಮ್ಮ ಸಲಹೆ ಆರೋಗ್ಯ ಇಲಾಖೆಗೂ ಉಪಯೋಗ ಆಗಲಿ. ರಾಜ್ಯ ಮೆಡಿಕಲ್ ಫೆಸಿಲಿಟಿ, ಟೂರಿಸಂಗೆ ಮುಂಚೂಣಿಯಲ್ಲಿದ್ದು ಬೇರೆ ಬೇರೆ ದೇಶಗಳಿಂದ ಜನರು ಇಲ್ಲಿಗೆ ಬರುತ್ತಿದ್ದಾರೆ. ಎಐ ಮತ್ತು ಡಿಜಿಟಲ್ ತಂತ್ರಜ್ಞಾನ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶಕ್ಕೆ ಬಹಳ ಉಪಯುಕ್ತ ಎಂದು ಅವರು ಹೇಳಿದರು. ಇದು ಅತ್ಯಂತ ಆಸಕ್ತಿದಾಯಕ ವಿಷಯವಾಗಿದ್ದು, ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾರ್ಯೋನ್ಮುಖವಾಗಿದೆ. ಅದಕ್ಕೆ ಬೇಕಾದ ಸಾಪ್ಟವೇರ್, ತಂತ್ರಜ್ಞಾನ ಲಭ್ಯವಿದ್ದು, ಅದನ್ನು ಸರಿಯಾಗಿ ಬಳಸಬೇಕಾಗಿದೆ. ಇದಕ್ಕೆ ಅತ್ಯುತ್ತಮ ದರ್ಜೆಯ ಕ್ಯಾಮರಾ ಬಳಸಲಾಗುತ್ತಿದ್ದು ದೂರದಲ್ಲಿದ್ದುಕೊಂಡೇ ತಜ್ಞ ವೈದ್ಯರು ಹಳ್ಳಿಯಲ್ಲಿರುವ ರೋಗಿಗೆ ಚಿಕಿತ್ಸೆ ನೀಡಲು ಸ್ಥಳೀಯ ವೈದ್ಯರಿಗೆ ನೆರವಾಗಬಹುದು. ಎಐ ತಂತ್ರಜ್ಞಾನ ಬಳಸಿ ಟೆಲಿ ರೆಡಿಯೋಲಾಜಿ, ಆಪ್ತಮಾಲೊಜಿ ಸೇವೆ ಮುಖಾಂತರ ರೋಗ ಪತ್ತೆ ಮಾಡುವ ನೂತನ ವ್ಯವಸ್ಥೆ ಜಾರಿಗೆ ತರಲು ಸಿದ್ದತೆ ನಡೆದಿದೆ ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ಸಮ್ಮೇಳನದಲ್ಲಿ 700ಕ್ಕೂ ಹೆಚ್ಚು ದೇಶಿಯ ಮತ್ತು ಅಂತರರಾಷ್ಟ್ರೀಯ ಪ್ರತಿನಿಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನಿಮ್ಹಾನ್ಸ್ ನ ಮಾಜಿ ನಿರ್ದೇಶಕ ಡಾ.ಗಂಗಾಧರ, ಇಸ್ರೊ ಮಾಜಿ ನಿರ್ದೇಶಕ ಡಾ.ಸತ್ಯಮೂರ್ತಿ, ಟಿಎಸ್ಐ ಅಧ್ಯಕ್ಷ ಡಾ.ಸುನಿಲ್ ಶ್ರಾಫ್, ಐಐಎಸ್ಸಿ ಮೆಡಿಕಲ್ ಸ್ಕೂಲ್ ಮುಖ್ಯಸ್ಥೆ ಡಾ.ಉಮಾ ನಂಬಿಯಾರ್, ಐಐಎಸ್ಸಿ ನಿರ್ದೇಶಕ ಡಾ.ಭಾಸ್ಕರ್ ರಾಜಕುಮಾರ್, ಪದಾಧಿಕಾರಿಗಳಾದ ಡಾ.ಉಮಾಶಂಕರ್, ಡಾ.ಸಂಜಯ್ ಶರ್ಮ, ಡಾ. ರಾಜೀವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಅರಕಲಗೂಡು | ʼಜಮೀನು ವಿವಾದʼ ಅಣ್ಣನಿಂದ ತಮ್ಮನ ಹತ್ಯೆ: ಆರೋಪಿ ಪರಾರಿ
ಅರಕಲಗೂಡು : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಅಣ್ಣನೇ ಸ್ವಂತ ತಮ್ಮನನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಮಾಡಿರುವ ಘಟನೆ ತಾಲೂಕಿನ ಮಲ್ಲಿ ಪಟ್ಟಣ ಹೋಬಳಿ ಸೊಂಪೂರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಸಹೋದರನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ರವಿವಾರ ವರದಿಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಸೊಂಪೂರ ಗ್ರಾಮದ ನಿವಾಸಿ ದಯಾಕಾರ್ (48). ಕೊಲೆ ಆರೋಪಿಯನ್ನು ಮೃತನ ಅಣ್ಣ ರಾಜಶೇಖರ್ (55) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯ ಗೊಂಡ ಮತ್ತೋರ್ವ ಸಹೋದರ ಸೋಮಶೇಖರನ್ನು ಚಿಕಿತ್ಸೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅರಕಲ ಗೂಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಹತ್ಯೆ ಪ್ರಕರಣ ದಾಖಲಿಸಿ, ಆರೋಪಿ ಬಂಧನಕ್ಕೆ ಪೊಲೀಸರು ಶೋಧ ಕಾರ್ಯವನ್ನು ಕೈಗೊಂಡಿದ್ದಾರೆ. ವಿವರ: ಕುಟುಂಬಕ್ಕೆ ಸೇರಿದ ಸುಮಾರು 20 ಎಕರೆ ಜಮೀನಿಗೆ ಸಂಬಂಧಿಸಿದ ವಿಚಾರ ನಾಲ್ಕು ವರ್ಷಗಳಿಂದ ಅರಕಲಗೂಡು ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿತ್ತು. ಪ್ರಕರಣ ವಿಚಾರಣೆ ನಡುವೆಯೇ ವಿವಾದಿತ ಭೂಮಿಯಲ್ಲಿ ಸಿಲ್ವರ್ ಮರ ಕಡಿತ ಕಾರ್ಯ ನಡೆಯುತ್ತಿರುವುದು ಹೊಸ ಗಲಾಟೆಗೆ ಕಾರಣ ಎಂದು ತಿಳಿದುಬಂದಿದೆ. ಮರ ಕಡಿತದ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ದಯಾಕಾರ್, ಪ್ರಕರಣ ನ್ಯಾಯಾಲಯದಲ್ಲಿರುವಾಗ ಮರವನ್ನು ಏಕೆ ಕಡಿಯುತ್ತಿದ್ದೀರಿ ಎಂದು ರಾಜಶೇ ಖರ್ ಅವರನ್ನು ಪ್ರಶ್ನಿಸಿದ ಸಂದರ್ಭದಲ್ಲಿ, ವಾಗ್ವಾದ ತೀವ್ರಗೊಂಡು, ರಾಜಶೇಖರ್ ಕೈಯಲ್ಲಿದ್ದ ಮಚ್ಚಿನಿಂದ ತಮ್ಮನ ಮೇಲೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯದಿಂದ ದಯಾಕಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಈ ವೇಳೆ ಮತ್ತೋರ್ವ ಸಹೋದರನು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅನಗತ್ಯ : ಕೆ.ಎಚ್.ಮುನಿಯಪ್ಪ
ಗುಡಿಬಂಡೆ : ದಲಿತರನ್ನು ಮುಖ್ಯಮಂತ್ರಿ ಮಾಡುವುದು ಸೇರಿದಂತೆ ಮುಖ್ಯಮಂತ್ರಿ ಬದಲಾವಣೆಯ ವಿಚಾರವಾಗಿ ಪಕ್ಷದ ವರಿಷ್ಠರು ಈಗಾಗಲೇ ಅಂತಿಮವಾಗಿ ಸಂದೇಶ ರವಾನೆ ಮಾಡಿದ್ದಾರೆ. ಆ ವಿಚಾರ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗುಡಿಬಂಡೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬೇಡ ಮಾದರ ಸಮುದಾಯದ ಅನೇಕ ವರ್ಷಗಳಿಂದ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಈ ಸಮುದಾಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪಕ್ಷ ಬೇದ ಮರೆತು ಮಾದರ ಮಹಾ ಸಭಾ ಸಂಘವನ್ನು ಅಸ್ಥಿತ್ವಕ್ಕೆ ತಂದಿದ್ದೇವೆ. ತಾತ್ಕಾಲಿಕವಾಗಿ ಮಾದರ ಮಹಾ ಸಭಾದ ಜಿಲ್ಲಾಧ್ಯಕ್ಷರನ್ನಾಗಿ ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಎಲ್ಲ ತಾಲೂಕುಗಳಲ್ಲಿ ತಾಲೂಕು ಸಮಿತಿಗಳನ್ನು ರಚನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಚಂದ್ರಪ್ಪ, ಮಾದರ ಮಹಾ ಸಭಾ ಜಿಲ್ಲಾಧ್ಯಕ್ಷ ಕೃಷ್ಣ , ಮಾತಾಂಗ ಸೇವಾ ಸಮಿತಿ ಅಧ್ಯಕ್ಷ ಆರ್.ಲೋಕೇಶ್, ಆರ್ಟಿಒ ವೆಂಕಟೇಶ್, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಚೆಂಡೂರು ರಮಣ, ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಬಾಣಂತಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮ : ದಿನೇಶ್ ಗುಂಡೂರಾವ್
ಶಿವಮೊಗ್ಗ : ರಾಜ್ಯದಲ್ಲಿ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಎಲ್ಲ ತಾಲೂಕು ಆಸ್ಪತ್ರೆಯಲ್ಲಿ ಸ್ತ್ರೀರೋಗ, ಅರಿವಳಿಕೆ ತಜ್ಞರ ನಿಯೋಜನೆ ಮಾಡಲಾಗುತ್ತಿದೆ. ಅಧಿವೇಶನದ ಬಳಿಕ ಎರಡೆರಡು ಸ್ತ್ರೀರೋಗ, ಮಕ್ಕಳ ಹಾಗೂ ಅರಿವಳಿಕೆ, ಪ್ರಸೂತಿ ತಜ್ಞರನ್ನು ನೇಮಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಜ್ಞಾನಿಕವಾಗಿ ಬಾಣಂತಿ ಸಾವು ಪ್ರಕರಣ ಇಳಿಸಲಾಗುವುದು. ಶೇ. 58 ರಲ್ಲಿರುವ ಬಾಣಂತಿಯರ ಸಾವಿನ ಪ್ರಕರಣವನ್ನು 2030 ರ ಹೊತ್ತಿಗೆ ಶೇ.20ಕ್ಕೆ ಇಳಿಸಲಾಗುವುದು. ಪ್ರತಿಯೊಂದು ಬಾಣಂತಿ ಸಾವು ಆಡಿಟ್ ಮಾಡಿಸುತ್ತೇವೆ. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದರು. ಮಂಗನ ಕಾಯಿಲೆ ಸಂಬಂಧಿಸಿದಂತೆ ಲಸಿಕೆ ಸಿದ್ಧವಾಗಿ ಪ್ರಯೋಗ ಮಾಡಲಾಗುತ್ತಿದೆ. ಮುಂದಿನ ವರ್ಷ ಲಸಿಕೆ ಲಭ್ಯವಾಗಲಿದೆ. ಈ ವರ್ಷ ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಸರಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ರಾಜ್ಯ ಸರಕಾರದಲ್ಲಿ ಯಾವುದೇ ಗೊಂದಲವಿಲ್ಲ. ನಾವು ಮುಂದೆಯೂ ಉತ್ತಮ ಆಡಳಿತ ನೀಡುತ್ತೇವೆ. ಸಿಎಂ ಸಿದ್ದರಾಮಯ್ಯನವರು ಎಲ್ಲದಕ್ಕೂ ಬಹಳ ತಾಳ್ಮೆಯಿಂದ ಉತ್ತರ ನೀಡಿದ್ದಾರೆ. ಸಿದ್ದರಾಮಯ್ಯ ಜನನಾಯಕರಾಗಿದ್ದು, ಕೊಟ್ಟ ಮಾತನ್ನು ಉಳಿಸಿಕೊಂಡು ನಡೆಸಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಪೂರ್ಣಗೊಳಿಸಿದ್ದಾರೆ. ವಿಪಕ್ಷಗಳು ಬೇಕಂತಲೇ ಆರೋಪ ಮಾಡುತ್ತಿವೆ ಎಂದು ಹೇಳಿದರು. ಎಚ್ಡಿಕೆಗೆ ತಿರುಗೇಟು: ಕೇಂದ್ರ ಸಚಿವ ಕುಮಾರಸ್ವಾಮಿ ಕೇವಲ ಅರ್ಧಂಬರ್ಧ ತಿಳಿದುಕೊಂಡು ಮಾತನಾಡುತ್ತಾರೆ. ಎಲ್ಲ ಇಲಾಖೆಗಳಲ್ಲಿ ಅಭಿವೃದ್ಧಿ ಕುಸಿತ ಎಂದಿರುವುದು ಸತ್ಯಕ್ಕೆ ದೂರವಾದುದು. ಅವರ ಬಳಿ ಯಾವುದೇ ದಾಖಲೆಗಳಿಲ್ಲ.ಇವರ ಆರೋಪಕ್ಕೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ನೀಡುತ್ತೇವೆ ಎಂದರು. ಕಾಂಗ್ರೆಸ್ನ ಎಲ್ಲ ಶಾಸಕರು ಶಿಸ್ತಿನಿಂದ ವರ್ತಿಸಿದ್ದಾರೆ. ಯಾರೂ ಕೂಡ ರೆಸಾರ್ಟ್ಗೆ ಹೋಗಿಲ್ಲ. ಬಿಜೆಪಿ ಅವಧಿಯಲ್ಲಿ ಕಿತ್ತಾಟ ಎಲ್ಲರೂ ನೋಡಿದ್ದಾರೆ. ಬಿಜೆಪಿಯ ಹಾಗೇ ರೆಸಾರ್ಟ್ ರಾಜಕೀಯ ನಮ್ಮಲ್ಲಿ ಮಾಡಿಲ್ಲ. ರಾಜ್ಯ ಕಾಂಗ್ರೆಸ್ ಸರಕಾರ ಸುಭದ್ರವಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಸಿಎಂ ಸೇರಿದಂತೆ ಎಲ್ಲರೂ ಬದ್ಧವಾಗಿದ್ದೇವೆ ಎಂದು ತಿಳಿಸಿದರು.
ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ | 52 ಎಸೆತಗಳಲ್ಲಿ 148 ರನ್ ಸಿಡಿಸಿದ ಅಭಿಶೇಕ್ ಶರ್ಮಾ
ಹೈದರಾಬಾದ್, ನ. 30: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಪಂದ್ಯವೊಂದರಲ್ಲಿ ರವಿವಾರ ಪಂಜಾಬ್ ತಂಡದಲ್ಲಿ ಆಡುತ್ತಿರುವ ಭಾರತೀಯ ತಂಡದ ಆರಂಭಿಕ ಆಟಗಾರ ಅಭಿಶೇಕ್ ಶರ್ಮಾ 52 ಎಸೆತಗಳಲ್ಲಿ 148 ರನ್ ಗಳನ್ನು ಸಿಡಿಸಿದ್ದಾರೆ. ಅವರ ಬೃಹತ್ ಇನಿಂಗ್ಸ್ ನ ನೆರವಿನಿಂದ ಪಂಜಾಬ್ ತಂಡವು ಬಂಗಾಳದ ವಿರುದ್ಧ 20 ಓವರ್ ಗಳಲ್ಲಿ ಕೇವಲ ಐದು ವಿಕೆಟ್ ಗಳನ್ನು ಕಳೆದುಕೊಂಡು 310 ರನ್ ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಪಂದ್ಯದಲ್ಲಿ ಪಂಜಾಬ್ ಬಂಗಾಳ ತಂಡವನ್ನು 112 ರನ್ ಗಳ ಬೃಹತ್ ಅಂತರದಿಂದ ಸೋಲಿಸಿದೆ. ಮೊದಲ ಎಸೆತದಿಂದಲೇ ಆಕ್ರಮಣಕ್ಕಿಳಿದ ಅಭಿಷೇಕ್ ಕೇವಲ 12 ಎಸೆತಗಳಲ್ಲಿ ಅರ್ಧ ಶತಕವನ್ನು ಸಿಡಿಸಿದರು. ಇದು ಪುರುಷರ ಟಿ20 ಕ್ರಿಕೆಟ್ ನ ಜಂಟಿ ಮೂರನೇ ಅತಿವೇಗದ ಅರ್ಧ ಶತಕವಾಗಿದೆ ಹಾಗೂ ಭಾರತೀಯನೊಬ್ಬನ ಜಂಟಿ ಎರಡನೇ ಅತಿ ವೇಗದ ಅರ್ಧ ಶತಕವಾಗಿದೆ. ಅವರು ಐದು ಬೌಂಡರಿಗಳು ಮತ್ತು ಐದು ಸಿಕ್ಸರ್ ಗಳನ್ನು ಸಿಡಿಸಿದರು. ಬಳಿಕ, ಅವರು 32 ಎಸೆತಗಳಲ್ಲಿ ಶತಕ ಬಾರಿಸಿದರು. ಅದರಲ್ಲಿ 11 ಸಿಕ್ಸರ್ ಗಳು ಮತ್ತು ಏಳು ಬೌಂಡರಿಗಳಿದ್ದವು. ಇದು ಭಾರತೀಯನೊಬ್ಬನ ಮೂರನೇ ಅತಿ ವೇಗದ ಟಿ20 ಶತಕವಾಗಿದೆ. ಭಾರತೀಯನೊಬ್ಬನ ಎರಡನೇ ಅತಿ ವೇಗದ ಟಿ20 ಶಕತದ ದಾಖಲೆಯನ್ನೂ ಅಭಿಷೇಕ್ ಈಗಾಗಲೇ ಹೊಂದಿದ್ದಾರೆ. ಅವರು 28 ಎಸೆತಗಳಲ್ಲಿ ಟಿ20 ಶತಕವನ್ನು ಇದಕ್ಕೆ ಮುನ್ನವೇ ಬಾರಿಸಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 5 ವಿಕೆಟ್ ಗಳ ನಷ್ಟಕ್ಕೆ 310 ರನ್ ಗಳಿಸಿತು. ಇದು ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಇತಿಹಾಸದಲ್ಲಿ ಎರಡನೇ ಗರಿಷ್ಠ ಮೊತ್ತವಾಗಿದೆ. 2024ರ ಡಿಸೆಂಬರ್ನಲ್ಲಿ, ಇಂದೋರ್ನಲ್ಲಿ ಸಿಕ್ಕಿಮ್ ವಿರುದ್ಧ ಬರೋಡ ತಂಡವು ಐದು ವಿಕೆಟ್ ಗಳ ನಷ್ಟಕ್ಕೆ 349 ರನ್ ಗಳಿಸಿತ್ತು. ಇದು ಗರಿಷ್ಠ ಮೊತ್ತವಾಗಿದೆ. ಆರಂಭಿಕ ಆಟಗಾರ ಪ್ರಭ್ಮಾನ್ ಸಿಂಗ್ 35 ಎಸೆತಗಳಲ್ಲಿ 70 ರನ್ ಗಳನ್ನು ಸಿಡಿಸಿದರು. ಬಳಿಕ, ಗೆಲುವಿಗೆ 311 ರನ್ ಗಳ ಗುರಿಯನ್ನು ಬೆಂಬತ್ತಿದ ಬಂಗಾಳಕ್ಕೆ 20 ಓವರ್ ಗಳಲ್ಲಿ 9 ವಿಕೆಟ್ ಗಳ ನಷ್ಟಕ್ಕೆ 198 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ನಾಯಕ ಅಭಿಮನ್ಯು ಈಶ್ವರನ್ 66 ಎಸೆತಗಳಲ್ಲಿ 130 ರನ್ ಗಳಿಸಿ ಅಜೇಯವಾಗಿ ಉಳಿದರು. ಆಕಾಶ್ ದೀಪ್ 31 ರನ್ ಗಳ ಕೊಡುಗೆಯನ್ನು ನೀಡಿದರು. ಪಂಜಾಬ್ ತಂಡದ ಹರ್ಪ್ರೀತ್ ಬ್ರಾರ್ 23 ರನ್ ಗಳನ್ನು ನೀಡಿ 4 ವಿಕೆಟ್ ಗಳನ್ನು ಗಳಿಸಿದರು.
ಸೈಯದ್ ಮೋದಿ ಇಂಟರ್ನ್ಯಾಶನಲ್ ಬ್ಯಾಡ್ಮಿಂಟನ್ ಪಂದ್ಯಾವಳಿ | ಟ್ರೀಸಾ-ಗಾಯತ್ರಿ ಜೋಡಿಗೆ ಮಹಿಳಾ ಡಬಲ್ಸ್ ಪ್ರಶಸ್ತಿ
ಪುರುಷರ ಸಿಂಗಲ್ಸ್ ನಲ್ಲಿ ಶ್ರೀಕಾಂತ್ಗೆ ಮತ್ತೆ ನಿರಾಶೆ
ಬೀದಿ ನಾಯಿಗಳ ಸ್ಥಳಾಂತರ ವಿಚಾರ; ತೀರ್ಪು ಮರುಪರಿಶೀಲನೆಗೆ ಒತ್ತಾಯಿಸಿ 1.75 ಲಕ್ಷ ಜನರ ಸಹಿ ಸಂಗ್ರಹ
ಬೀದಿ ನಾಯಿಗಳ ಸ್ಥಳಾಂತರಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲನೆಗೆ ಒತ್ತಾಯಿಸಿ 1.75 ಲಕ್ಷ ನಾಗರಿಕರು ಸಲ್ಲಿಸಿದ ಪತ್ರಗಳನ್ನು ಸುಪ್ರೀಂ ಕೋರ್ಟ್ಗೆ ರವಾನಿಸಲಾಗಿದೆ. ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳ ಸಮೀಕ್ಷೆಯ ಜವಾಬ್ದಾರಿ ನೀಡಿರುವುದಕ್ಕೆ ಶಾಸಕ ಸುರೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆಯು ಶಾಲೆಗಳ ಬಳಿ ಬೀದಿನಾಯಿ ನಿಯಂತ್ರಣಕ್ಕೆ ಮಾರ್ಗಸೂಚಿ ಹೊರಡಿಸಿದೆ.
ಪ್ರತಿಭಾವಂತ ಭಾರತೀಯರಿಂದ ಅಮೆರಿಕಾ ಅಪಾರ ಪ್ರಯೋಜನ ಪಡೆದಿದೆ: ಎಲಾನ್ ಮಸ್ಕ್
ವಾಷಿಂಗ್ಟನ್, ನ.30: ಹಲವು ದಶಕಗಳಿಂದ ಪ್ರತಿಭಾವಂತ ಭಾರತೀಯರ ಆಗಮನದಿಂದ ಅಮೆರಿಕಾ ಅಗಾಧ ಪ್ರಯೋಜನವನ್ನು ಪಡೆದಿದೆ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಹೇಳಿದ್ದು ಅಮೆರಿಕಾದ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರವನ್ನು ರೂಪಿಸುವಲ್ಲಿ ವಲಸಿಗ ಪ್ರತಿಭೆಗಳ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಝೆರೋಧಾದ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಅವರೊಂದಿಗೆ ಪೋಡ್ಕಾಸ್ಟ್ ಸಂವಾದದ ಸಂದರ್ಭ ಮಸ್ಕ್ ಈ ಹೇಳಿಕೆ ನೀಡಿದ್ದಾರೆ. ಅಮೆರಿಕಾವು ಬಹಳ ಹಿಂದಿನಿಂದಲೇ ಪ್ರಪಂಚದಾದ್ಯಂತದ ಬುದ್ಧಿವಂತ ಜನರನ್ನು ಆಕರ್ಷಿಸಿದೆ. ಭಾರತದಲ್ಲಿ ಇದನ್ನು `ಪ್ರತಿಭಾ ಪಲಾಯನ' ಎಂದು ಕರೆಯುತ್ತಾರೆ. ನಮ್ಮ ಎಲ್ಲಾ ಭಾರತೀಯ ಮೂಲದ ಸಿಇಒ ಗಳು ಪಾಶ್ಚಿಮಾತ್ಯ ಕಂಪನಿಗಳಿದ್ದಾರೆ ಎಂದು ಸಂವಾದ ಆರಂಭಿಸಿದ ಕಾಮತ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮಸ್ಕ್ ` ದೇಶದ ಬೆಳವಣಿಗೆಯಲ್ಲಿ ಭಾರತೀಯ ಪ್ರತಿಭೆಗಳು ಪ್ರಮುಖ ಪಾತ್ರ ವಹಿಸಿದ್ದಾರೆ. ಹೌದು ಅಮೆರಿಕಾಕ್ಕೆ ಬಂದಿರುವ ಪ್ರತಿಭಾವಂತ ಭಾರತೀಯರಿಂದ ಅಮೆರಿಕಾ ಅಪಾರ ಪ್ರಯೋಜನ ಪಡೆದಿರುವುದಾಗಿ ಭಾವಿಸುತ್ತೇನೆ' ಎಂದಿದ್ದಾರೆ.
Virat Kohli: ಗೆದ್ದು.. ಸೋತು.. ಗೆದ್ದು ಬೀಗಿದ ಭಾರತ... ವಿರಾಟ್ ಕೊಹ್ಲಿ ವೀರಾವೇಶ!
ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ, ಭಾರತೀಯರು ಕ್ರಿಕೆಟ್ ಆಟವನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ಪೂಜಿಸುತ್ತಾರೆ. ಕ್ರಿಕೆಟ್ ಎಂಬ ಕ್ರೀಡೆ ಭಾರತೀಯರ ರಕ್ತದಲ್ಲೇ ಬೆರೆತು ಹೋಗಿದೆ. ಹೀಗೆ ಕ್ರಿಕೆಟ್ ಬಗ್ಗೆ ಇಷ್ಟೆಲ್ಲಾ ಪ್ರೀತಿ &ಗೌರವ ಭಾರತೀಯರಲ್ಲಿ ಮೂಡಿದ್ದೇ 1983 ಏಕದಿನ ವಿಶ್ವಕಪ್ ಗೆಲುವಿನ ನಂತರ. ಶತಮಾನಗಳ ಇತಿಹಾಸ ಹೊಂದಿರುವ ಭಾರತೀಯ ಕ್ರಿಕೆಟ್ ತಂಡವು ಕೆಲವು ದಿನಗಳ ಹಿಂದಷ್ಟೇ ದಕ್ಷಿಣ
ಮನೆಗೆ ಮರಳಲು ಅವಕಾಶ ನೀಡುವಂತೆ ಆಗ್ರಹಿಸಿ ಮಣಿಪುರ ಹಿಂಸಾಚಾರ ಸಂತ್ರಸ್ತರಿಂದ ಧರಣಿ
ಇಂಫಾಲ, ನ. 30: ತಮ್ಮ ಮನೆಗಳಿಗೆ ಮರಳಲು ಅವಕಾಶ ನೀಡುವಂತೆ ಒತ್ತಾಯಿಸಿ ನೂರಾರು ನಿರ್ವಸಿತರು ಇಲ್ಲಿನ ರಾಜಭವನದ ಸಮೀಪ ರವಿವಾರ ಪ್ರತಿಭಟನೆ ನಡೆಸಿದ್ದಾರೆ. 2023 ಮೇಯಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಬಳಿಕ ಇಲ್ಲಿನ ವಿವಿಧ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿರುವ ಚುರಾಚಂದಪುರ, ಕಂಗ್ಪೊಕ್ಪಿ, ಇಂಫಾಲ ಪಶ್ಚಿಮ ಹಾಗೂ ಇಂಫಾಲ ಪೂರ್ವ ಜಿಲ್ಲೆಗಳ ನಿರ್ವಸಿತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಈಗ ನಡೆಯುತ್ತಿರುವ ಸಾಂಗೈ ಪ್ರವಾಸೋದ್ಯಮ ಉತ್ಸವನ್ನು ಬಹಿಷ್ಕರಿಸುವಂತೆ ಅವರು ಘೋಷಣೆಗಳನ್ನು ಕೂಗಿದರು. ಅಲ್ಲದೆ, ತಮ್ಮ ಮನೆಗಳಿಗೆ ಮರಳಲು ಅವಕಾಶ ನೀಡುವಂತೆ ಆಗ್ರಹಿಸಿದರು. ಪ್ರತಿಭಟನಕಾರರು ‘‘ನಿರ್ವಸಿತರ ಜೀವಗಳು ಮುಖ್ಯ’, ‘‘ಜನರು ಸಂಗೈ ಉತ್ಸವವನ್ನು ಬಹಿಷ್ಕರಿಸುತ್ತಾರೆ’’, ‘‘ಹಕ್ಕು ಮೊದಲು, ಪ್ರವಾಸೋದ್ಯಮ ಅನಂತರ’’, ‘‘ನಮ್ಮ ಮೂಲಭೂತ ಹಕ್ಕುಗಳಿಗೆ ಖಾತರಿ ನೀಡಿ’’ ಎಂದು ಬರೆದೆ ಪ್ರದರ್ಶನಾ ಫಲಕಗಳನ್ನು ಹಿಡಿದುಕೊಂಡಿದ್ದರು. ರಾಜಭವನದಿಂದ ಸುಮಾರು 200 ಮೀಟರ್ಗಳ ದೂರದಲ್ಲಿರುವ ಕಂಗ್ಲೆ ಗೇಟಿನ ಸಮೀಪ ಭದ್ರತಾ ಪಡೆ ಪ್ರತಿಭಟನಕಾರರನ್ನು ತಡೆದು ನಿಲ್ಲಿಸಿತು. ಅನಂತರ ಪ್ರತಿಭಟನಕಾರರು ಇಂಫಾಲ ಪಶ್ಚಿಮ ಜಿಲ್ಲೆಯ ಉರಿಪೋಕ್ ಪ್ರದೇಶದತ್ತ ರ್ಯಾಲಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಭಟ್ಕಳ, ನ.30: ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ಡಿ.13ರಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ಬೃಹತ್ ಲೋಕ್ ಅದಾಲತ್ ಏರ್ಪಡಿಸಲಾಗಿದ್ದು, ಕಕ್ಷಿದಾರರು ಇದರ ಸದುಪಯೋಗ ಪಡೆಯುವಂತೆ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಹೇಳಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಲೋಕ ಅದಾಲತ್ನಲ್ಲಿ ರಾಜಿಯಾಗಲಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಇದೆ. ಲೋಕ್ ಅದಾಲತ್ನಲ್ಲಿ ಇತ್ಯರ್ಥ ಪಡಿಸಲು ಮೂರೂ ನ್ಯಾಯಾಲಯಗಳ ಒಟ್ಟು 2,116 ಪ್ರಕರಣಗಳನ್ನು ಗುರುತಿಸಲಾಗಿದೆ. ಇನ್ನಷ್ಟು ಪ್ರಕರಣಗಳಿದ್ದಲ್ಲಿ ಕಕ್ಷಿದಾರರು ಕೂಡ ರಾಜಿಯಾಗುವಂತಹ ಪ್ರಕರಣಗಳನ್ನು ತಮ್ಮ ವಕೀಲರ ಮೂಲಕ ಇಲ್ಲವೇ ನೇರವಾಗಿ ಕಾನೂನು ಸೇವಾ ಸಮಿತಿಯ ಮೂಲಕ ಲೋಕ್ ಅದಾಲತ್ನಲ್ಲಿ ರಾಜಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು. ಲೋಕ್ ಅದಾಲತ್ನಲ್ಲಿ ಐಪಿಸಿ, ರಾಜಿಯಾಗತಕ್ಕ ಕ್ರಿಮಿನಲ್ ಪ್ರಕರಣ, ಚೆಕ್ ಬೌನ್ಸ್ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ, ಮೋಟರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣ, ಜಮೀನು ಸ್ವಾಧೀನ ಪ್ರಕರಣ, ಎಕ್ಸಿಕ್ಯೂಶನ್ ಪ್ರಕರಣ, ಮೋಟರು ವಾಹನ ಅಪಘಾತ ಪ್ರಕರಣ, ಜನನ ನೋಂದಣಿ ಪ್ರಕರಣ ಸೇರಿದಂತೆ ಇನ್ನೂ ಅನೇಕ ಪ್ರಕರಣಗಳು ರಾಜಿಯಾಗಲಿದ್ದು, ಲೋಕ ಅದಾಲತ್ ಬಗ್ಗೆ ಪಕ್ಷಗಾರರು ನ್ಯಾಯಾಲಯದ ಆವರಣದಲ್ಲಿರುವ ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು ಎಂದರು. ಶೇ.50ರ ರಿಯಾಯಿತಿ: ಟ್ರಾಫಿಕ್ ಕಾಯ್ದೆ ಉಲ್ಲಂಘಿಸಿದ ಪ್ರಕರಣಗಳಲ್ಲಿ ದಂಡ ಕಟ್ಟುವವರಿಗೆ ಸರಕಾರ ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿದ್ದು, ಇದು ಡಿ.12ರಂದು ಕೊನೆಗೊಳ್ಳಲಿದೆ. ಮೋಟರು ವಾಹನ ಕಾಯ್ದೆಯಡಿಯಲ್ಲಿ ದಂಡ ಕಟ್ಟಲು ಬಾಕಿ ಇಟ್ಟುಕೊಂಡಿರುವವರು ಡಿ.12ರ ಒಳಗಾಗಿ ಭರಣ ಮಾಡಿ ಸರಕಾರ ಘೋಷಣೆ ಮಾಡಿದ ಶೇ.50 ರಿಯಾಯಿತಿಯ ಲಾಭ ಪಡೆದುಕೊಳ್ಳುವಂತೆ ಅವರು ತಿಳಿಸಿದರು. ಈ ಸಂದರ್ಭ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ ದೀಪಾ ಅರಳಗುಂಡಿ, ಹೆಚ್ಚುವರಿ ನ್ಯಾಯಾಧೀಶೆ ಧನವತಿ ಉಪಸ್ಥಿತರಿದ್ದರು.
ತೆಲಂಗಾಣ | ‘ಡಿಜಿಟಲ್ ಅರೆಸ್ಟ್’ ಹಗರಣ; 71 ವರ್ಷದ ವ್ಯಕ್ತಿಗೆ ಸುಮಾರು 2 ಕೋಟಿ ರೂ. ವಂಚನೆ
ಇಂಫಾಲ, ನ. 30: ಇನ್ನೊಂದು ‘ಡಿಜಿಟಲ್ ಅರೆಸ್ಟ್’ ಪ್ರಕರಣದಲ್ಲಿ ಹೈದರಾಬಾದ್ ನ ಸೈಬರ್ ಕ್ರೈಮ್ ಪೊಲೀಸರು ಹಿರಿಯ ನಾಗರಿಕರೊಬ್ಬರಿಂದ 1.92 ಕೋಟಿ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಮೂವರು ವಂಚಕರನ್ನು ಬಂಧಿಸಿದ್ದಾರೆ. ‘‘ಡಿಜಿಟಲ್ ಅರೆಸ್ಟ್’’ ಸೋಗಿನಲ್ಲಿ ಸೈಬರ್ ವಂಚಕರು ತನಗೆ ವಂಚಿಸಿದ್ದಾರೆ ಎಂದು ಆರೋಪಿಸಿ ಹೈದರಾಬಾದ್ ನ 71 ವರ್ಷದ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಸಿಬಿಐ ಅಧಿಕಾರಿಗಳಂತೆ ಸೋಗು ಹಾಕಿದ ವಂಚಕರು ನವೆಂಬರ್ 7 ಹಾಗೂ 14ರ ನಡುವೆ ವಿವಿಧ ಬ್ಯಾಂಕ್ ಖಾತೆಗಳಲ್ಲಿ 1,92,50,070 ರೂ.ವನ್ನು ಆ ವ್ಯಕ್ತಿಯಿಂದ ಜಮೆ ಮಾಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ರವಿವಾರ ತಿಳಿಸಿದ್ದಾರೆ. ಆಧಾರ್ ಕಾರ್ಡ್ ದುರ್ಬಳಕೆ ಮಾಡಿಕೊಂಡಿರುವುದಕ್ಕೆ ನಿಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗದೆ ಎಂದು ವಂಚಕರು ಆ ವ್ಯಕ್ತಿಗೆ ತಿಳಿಸಿದರು. ಆಧಾರ್ ಕಾರ್ಡ್ ಬಳಿಸಿ ಮುಂಬೈಯ ಕೆನರಾ ಬ್ಯಾಂಕ್ ನಲ್ಲಿ ಖಾತೆ ತೆರೆಯಲಾಗಿದೆ ಎಂದು ಅವರು ಹೇಳಿದರು. ಅವರು ವೀಡಿಯೊ ಕರೆ ಮಾಡಿ ಫೋಟೊ ಹಾಗೂ ಕೆನರಾ ಬ್ಯಾಂಕ್ ನ ಎಟಿಎಂ ಕಾರ್ಡ್ ತೋರಿಸಿದರು. ಅಲ್ಲದೆ, ದಿಲ್ಲಿ ಸಿಬಿಐಯ ನಕಲಿ ಎಫ್ಐಆರ್ ಅನ್ನು ಕೂಡ ಕಳುಹಿಸಿದರು. ಅನಂತರ ಅವರು ಪ್ರಕರಣ ಮುಚ್ಚಿ ಹಾಕಲು ಹಣದ ಬೇಡಿಕೆ ಇರಿಸಿದರು. ವ್ಯಕ್ತಿ ಅವರು ನೀಡಿದ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಿದರು ಎಂದು ಅವರು ಹೇಳಿದ್ದಾರೆ. ತಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿದ ಬಳಿಕ ಆ ವ್ಯಕ್ತಿ ಪೊಲೀಸರನ್ನು ಸಂಪರ್ಕಿಸಿದರು. ಸೈಬರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದರು ಎಂದು ಅವರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪಾಂಡು ವಿನೀತ್ ರಾಜ್, ಜಿ. ತಿರುಪತಯ್ಯ ಹಾಗೂ ಗೌನಿ ವಿಶ್ವನಾಥಮ್ ಅವರನ್ನು ಬಂಧಿಸಿದ್ದಾರೆ. ಎಲ್ಲರೂ ಹೈದರಾಬಾದ್ ನ ನಿವಾಸಿಗಳು. ಮುಖ್ಯ ಆರೋಪಿಯಾಗಿರುವ ಸಂದೀಪ್ ಆಲಿಯಾಸ್ ಅಲೆಕ್ಸ್ ತಲೆಮರೆಸಿಕೊಂಡಿದ್ದಾನೆ.
IND Vs SA- ಹರಿಣಗಳ ಕಟ್ಟಿಹಾಕಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ನಿರ್ಮಿಸಿದ್ದ ಹಳೇ ದಾಖಲೆ ಮುರಿದ ಕುಲ್ದೀಪ್ ಯಾದವ್
India Vs South Africa 1st ODI- ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯವನ್ನು 17 ರನ್ ಗಳಿಂದ ಗೆದ್ದಿತಷ್ಟೇ. ಈ ಪಂದ್ಯದಲ್ಲಿ 4 ವಿಕೆಟ್ ಗೊಂಚಲು ಪಡೆದ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರು ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಮತ್ತು ಭಾರತದ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರ ನಿರ್ಮಿಸಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಹಾಕಿ 4 ವಿಕೆಟ್ ಪಡೆದ ಸ್ಪಿನ್ನರ್ ಎಂದ ಗೌರವಕ್ಕೆ ಪಾತ್ರರಾಗಿದ್ದಾರೆ.
ಚಿತ್ರಹಿಂಸೆಯನ್ನು ಆಡಳಿತ ನೀತಿಯಾಗಿಸಿಕೊಂಡ ಇಸ್ರೇಲ್: ವಿಶ್ವಸಂಸ್ಥೆ ಸಮಿತಿ ವರದಿಯಲ್ಲಿ ಆರೋಪ
ಹಮಾಸ್ ದಾಳಿಗೂ ಖಂಡನೆ
ಉಡುಪಿ | ಸಾಹೇಬಾನ್ ಸಮುದಾಯ ವೇದಿಕೆಯಿಂದ ಮಹಿಳೆಯರಿಗಾಗಿ ‘ಮಯ್ಯತ್ ಕಾ ಗುಸ್ಲ್’ ಕಾರ್ಯಾಗಾರ
ಉಡುಪಿ: ಸಾಹೇಬಾನ್ ಸಮುದಾಯ ವೇದಿಕೆಯ ವತಿಯಿಂದ ಉಡುಪಿಯ ನಾಯರ್ಕೆರೆಯ ಹಶಿಮಿ ಮಸೀದಿಯಲ್ಲಿ ಮಹಿಳೆಯರಿಗಾಗಿ ‘ಮಯ್ಯತ್ ಕಾ ಗುಸ್ಲ್ ಫಾರ್ ಲೇಡೀಸ್’ ಧಾರ್ಮಿಕ ಕಾರ್ಯಾಗಾರವನ್ನು ರವಿವಾರ ಆಯೋಜಿಸಲಾಗಿತ್ತು. ಡಾ. ರುಖ್ಸರ್ ಅಂಜುಮ್ ಅವರು ನಡೆಸಿದ ಕಾರ್ಯಗಾರದಲ್ಲಿ 125 ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದರು. ಮಯ್ಯತ್ ಪರಿಪಾಲನೆಗೆ ಸಂಬಂಧಿಸಿದ ಇಸ್ಲಾಮಿಕ್ ವಿಧಿ–ವಿಧಾನಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸುವ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಸಮುದಾಯದ ಮಹಿಳೆಯರಲ್ಲಿ ಅರಿವು ಮಾಡಿಸಿತು. ಕಾರ್ಯಕ್ರಮದಲ್ಲಿ ಮೆಹ್ನಾಜ್ ಸ್ವಾಗತಿಸಿ, ರುಬಿನಾ ಅಶ್ರಫ್ ವಂದಿಸಿದರು ರಮೀಝಾ ಇಕ್ಬಾಲ್ ಮನ್ನಾ ಅವರು ಸಂಯೋಜಿಸಿದರು.
ಬೆಂಗಳೂರಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ!
ಕೊಚ್ಚಿ, ನ. 30: ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಸೂರಜ್ ಲಾಮಾ ಅವರದು ಎನ್ನಲಾದ ಕೊಳೆತ ಮೃತದೇಹ ಕಲಮಶ್ಶೇರಿಯ ಹಿಂದೂಸ್ತಾನ್ ಮೆಷಿನ್ ಟೂಲ್ಸ್ (ಎಚ್ಎಂಟಿ)ಆವರಣ ಸಮೀಪದ ಅರಣ್ಯ ಪ್ರದೇಶದಲ್ಲಿ ರವಿವಾರ ಪತ್ತೆಯಾಗಿದೆ. ಕುವೈತ್ನಿಂದ ಗಡಿಪಾರಾದ ಬಳಿಕ ಲಾಮಾ ಅವರು ನಾಪತ್ತೆಯಾಗಿದ್ದರು. ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಕನಿಷ್ಠ ಒಂದೂವರೆ ತಿಂಗಳು ಹಳೆಯದ್ದೆಂದು ಭಾವಿಸಲಾದ ಅವಶೇಷವನ್ನು ಪತ್ತೆ ಮಾಡಿದೆ ಎಂದು ಎರ್ನಾಕುಲಂ ಗ್ರಾಮೀಣ ಪೊಲೀಸ್ ನ ಮೂಲಗಳು ತಿಳಿಸಿವೆ. ಕಲಮಶ್ಶೇರಿ ಪ್ರದೇಶದಲ್ಲಿ ಅವರು ಕೊನೆಯದಾಗಿ ಕಾಣಿಸಿಕೊಂಡ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ಎಸ್ಐಟಿ ತನಿಖೆಯನ್ನು ತೀವ್ರಗೊಳಿಸಿದೆ. ತಂಡ ಮೃತದೇಹವನ್ನು ಗುರುತಿಸಿತು ಹಾಗೂ ಕೂಡಲೇ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿತು ಎಂದು ಮೂಲಗಳು ತಿಳಿಸಿವೆ.
ಭ್ರಷ್ಟಾಚಾರ ಪ್ರಕರಣ: ಇಸ್ರೇಲ್ ಅಧ್ಯಕ್ಷರಿಗೆ ಕ್ಷಮಾದಾನ ಕೋರಿದ ಪ್ರಧಾನಿ ನೆತನ್ಯಾಹು
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೆತನ್ಯಾಹು ಅವರನ್ನು ಕ್ಷಮಿಸುವಂತೆ ಇತ್ತೀಚೆಗೆ ಮನವಿ ಪತ್ರ ಬರೆದಿದ್ದರು. ಆ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು, ತಮಗೆ ಕ್ಷಮಾದಾನ ನೀಡುವಂತೆ ಕೋರಿ ಇಸ್ರೇಲ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ಇದು ದೇಶದ ಮೇಲೆ ಮಹತ್ವದ ಪರಿಣಾಮ ಬೀರಬಲ್ಲದು ಎಂದು ಇಸ್ರೇಲ್ ಅಧ್ಯಕ್ಷರ ಕಚೇರಿ ಹೇಳಿದೆ.
ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಕಾಂಗ್ರೆಸ್ ವಿರುದ್ಧ ತೀವ್ರ ಹೋರಾಟ: ಗುರುನಾಥ ಪೂಜಾರಿ
ಕಲಬುರಗಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಹುದ್ದೆ ಬದಲಾವಣೆಯಾಗಲಿದೆ ಎನ್ನುವ ಚರ್ಚೆಗಳಿಗೆ ನಡೆಯುತ್ತಿವೆ. ಒಂದು ವೇಳೆ ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಕಾಂಗ್ರೆಸ್ ಪಕ್ಷದ ವಿರುದ್ಧ ರಾಜ್ಯಾದಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಗುರುನಾಥ ಪೂಜಾರಿ, 2023ರ ವಿಧಾನ ಸಭೆ ಚುನಾವಣೆಯಲ್ಲಿ ಶೇ.70 ರಿಂದ 80ರಷ್ಟು ಅಹಿಂದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವಂತೆ ಮಾಡಿದೆ. ಆದರೆ ಮುಖ್ಯಮಂತ್ರಿ ಆಯ್ಕೆ ಮಾಡುವ ಸಂದರ್ಭದಲ್ಲಿ 30 ತಿಂಗಳ ಅವಧಿಗೆ ಎಂದು ಹೈಕಮಾಂಡ್ ಯಾರಿಗೂ ತಿಳಿಸಿಲ್ಲ, ಹಾಗಾಗಿ ಇನ್ಮುಂದೆ ಉಳಿದ ಕಾಲಾವಧಿಗೂ ಸಿದ್ದರಾಮಯ್ಯರನ್ನೇ ಸಿಎಂ ಎಂದು ಹೈಕಮಾಂಡ್ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದಾರೆ. ಎರಡೂವರೆ ವರ್ಷದ ಬಳಿಕ ಈಗ ಸಿಎಂ ಬದಲಾವಣೆ ಕೂಗು ಬರುತ್ತಿರುವುದು ಸರಿಯಲ್ಲ, ಚುನಾವಣೆಗಿಂತ ಪೂರ್ವದಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಹಾಗಾಗಿ ಅಂತಹ ಅಭಿವೃದ್ಧಿಪರ ನಾಯಕರನ್ನು ಸಂಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ನಾಗೇಂದ್ರಪ್ಪ ಪೂಜಾರಿ, ಲಕ್ಷ್ಮಣ ನಂದಿಕೂರ್ ಉಪಸ್ಥಿತರಿದ್ದರು.
ಕಲಬುರಗಿ| ವಂಚಿತ ರೈತರಿಗೆ ಬೆಳೆ ಪರಿಹಾರ ನೀಡಿ: ಶರಣಬಸಪ್ಪ ಮಮಶೆಟ್ಟಿ ಆಗ್ರಹ
ಕಲಬುರಗಿ: ಅತಿವೃಷ್ಟಿಯಿಂದಾಗಿರುವ ಬೆಳೆ ಹಾನಿಗೆ ಸರಕಾರ ನೀಡಿರುವ ಪರಿಹಾರದಲ್ಲಿ ಸುಮಾರು 12,313 ರೈತರಿಗೆ ಪರಿಹಾರ ಬರದಂತಾಗಿ ವಂಚನೆಯಾಗಿದೆ. ಕೂಡಲೇ ಸರಿಪಡಿಸಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶರಣಬಸಪ್ಪ ಮಮಶೆಟ್ಟಿ, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿರುವ ಹಾನಿಗೆ ವರಿಹಾರಕ್ಕಾಗಿ ನೊಂದಾಯಿಸಿಕೊಂಡಿರುವ 4,17,000 ರೈತರು ಮತ್ತು ಎಫ್ಐಡಿ ನಂಬರ್ ಹೊಂದಿರುವ 3,17,000 ರೈತರಿಗೆ ಪರಿಹಾರ ಯಾವ ಆಧಾರದ ಮೇಲೆ ನೀಡಲಾಗಿದೆ ಎಂದು ತಿಳಿಯುತ್ತಿಲ್ಲ, ಆದರೆ ಇನ್ನೂ 12,313 ರೈತರು ಪರಿಹಾರದಿಂದ ವಂಚಿತರಾಗಿದ್ದಾರೆಂದು ತಿಳಿಸಿದರು. ಬೆಳೆ ಪರಿಹಾರದಲ್ಲಿ ಬಾಕಿ ಇರುವ 35 ಕೋಟಿ ಹಣವನ್ನು ಸರಕಾರ ಕೂಡಲೇ ರೈತರ ಖಾತೆಗೆ ಜಮೆ ಮಾಡಬೇಕು. ಬೆಳೆಹಾನಿ ಸಂದರ್ಭದಲ್ಲಿ ವಿಲೇಜ್ ಅಕೌಂಟೆಂಟ್ ಅವರು ಎಲ್ಲೋ ಕುಳಿತು ಸಮೀಕ್ಷೆ ಮಾಡಿದ್ದರಿಂದ ಈಗ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಸರಕಾರ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಒಂದು ವೇಳೆ ಇದಕ್ಕೆ ವಿಳಂಬ ನೀತಿ ಅನುಸರಿಸಿದರೆ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಜಂಟಿ ಸಂಘಟನೆಗಳ ಆಶ್ರಯದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ವೀರಣ್ಣಾ ಗಂಗಾಣೆ, ಶಿವರಾಜ್ ಪಾಟೀಲ್, ಸಿದ್ದು ತೆಂಗಳಿ, ಕರೆಪ್ಪಾ ಕರಗೊಂಡ, ಸಿದ್ದು ಎಸ್.ಎಲ್, ಪ್ರಭಾಕರ್, ಸತೀಶ್ ಹೆಬ್ಬಾಳ, ಶಿವಪುತ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೋಟಿ ಕೋಟಿ ಆರ್ಸಿಬಿ ಅಭಿಮಾನಿಗಳಿಗೆ ದಿಢೀರ್ ಹೃದಯಾಘಾತ, ಕಾರಣ ಇಲ್ಲಿದೆ... Lauren Bell
ಕನ್ನಡಿಗರ ತಂಡ ಆರ್ಸಿಬಿ ಅಂದ್ರೆ ಅಭಿಮಾನಿಗಳ ಪಾಲಿಗೆ ಹೃದಯದ ಬಡಿತ... ಆರ್ಸಿಬಿ ಪರ ಜೀವ ಬೇಕಾದರೂ ಕೊಟ್ಟು ಬೆಂಬಲ ನೀಡುತ್ತೇವೆ ಅಂತಾರೆ ಕೋಟಿ ಕೋಟಿ ಅಭಿಮಾನಿಗಳು... ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಕಂಡರೆ ಯಾಕೆ ಇಷ್ಟು ಪ್ರೀತಿ? ಅನ್ನೋದು ಕನ್ನಡಿಗರ ಹೃದಯಕ್ಕೆ ಮಾತ್ರ ಗೊತ್ತು. ಅದಲ್ಲೂ ಸತತ 17 ವರ್ಷ ಕಪ್ ಗೆಲ್ಲದೇ ಇದ್ದರೂ ಆರ್ಸಿಬಿ ಟೀಂ
ಹಿರಿಯಡ್ಕ | ಯುವಕ ಆತ್ಮಹತ್ಯೆ : ಪ್ರಕರಣ ದಾಖಲು
ಹಿರಿಯಡ್ಕ, ನ.30: ವಿಪರೀತ ಕುಡಿತದ ಚಟ ಹೊಂದಿದ್ದ ಬೈರಂಪಳ್ಳಿ ಗ್ರಾಮ ಹರಿಖಂಡಿಗೆ ನಿವಾಸಿ ಅಮ್ಮಣ್ಣಿ ಎಂಬವರ ಮಗ ಅಜೀತ್(25) ಎಂಬವರು ಶನಿವಾರ ರಾತ್ರಿ ಮನೆಯ ಹಾಲ್ ನಲ್ಲಿ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Hunsur | ತಾಯಿ ಹುಲಿ ಸೆರೆಯ ಬಳಿಕ 4 ಮರಿಗಳನ್ನು ರಕ್ಷಿಸಿದ ಅರಣ್ಯ ಇಲಾಖೆ
ಮೈಸೂರು/ಹುಣಸೂರು : ಹುಣಸೂರು ತಾಲೂಕಿನ ಹನಗೂಡು ಹೋಬಳಿಯ ಗೌಡನ ಕಟ್ಟೆ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ತಾಯಿ ಹುಲಿ ಸೆರೆ ಹಿಡಿದಿದ್ದ ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ, ರವಿವಾರ ಹುಲಿಯ ಮರಿಗಳನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಕೆಲದಿನಗಳಿಂದ ಗ್ರಾಮಸ್ಥರಲ್ಲಿ ಭೀತಿ ಉಂಟು ಮಾಡಿದ್ದ ಹುಲಿಯನ್ನು ನಾಲ್ಕು ದಿನಗಳ ಹಿಂದಷ್ಟೆ ಸೆರೆ ಹಿಡಿದಿದ್ದರು. ಇದೀಗ 4 ಮರಿ ಹುಲಿಗಳನ್ನು ಸಂರಕ್ಷಿಸಿದ್ದಾರೆ. ಈ ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಾದ ಸೀಮಾ , ಪ್ರಭುಗೌಡ, ಫಯಾಜ್, ಪರಮೇಶ್, ಎಸಿಎಫ್ ಲಕ್ಷ್ಮಿಕಾಂತ್, ಮಹದೇವಯ್ಯ, ಆರ್.ಎಫ್.ಓ ನಂದಕುಮಾರ್, ವಿನೋದ್ ಗೌಡ , ಡಿ.ವೈ.ಆರ್.ಎಫ್.ಓ ಚಂದ್ರೇಶ್,ಮಲ್ಲಿಕಾರ್ಜುನ್, ಪರಮೇಶ್, ಮಂಜುನಾಥ್ ಆರಾಧ್ಯ, ಸಂಪತ್,ನವೀನ್, ಸುನಿಲ್ ಭಾಗವಹಿಸಿದ್ದರು. ಆನೆ ಕಾರ್ಯ ಪಡೆ, ಚಿರತೆ ಕಾರ್ಯ ಪಡೆ, ಹುಣಸೂರು, ವೀರನಹೊಸಹಳ್ಳಿ , ಕೆ ಆರ್ ನಗರ, ಪಿರಿಯಾಪಟ್ಟಣ ವಲಯದ ಗಸ್ತು ವನಪಾಲಕರು ಹಾಗೂ ಸಿಬ್ಬಂದಿಗಳು ಸಹ ಕಾರ್ಯಚರಣೆಯಲ್ಲಿ ಕೈಜೋಡಿಸಿದ್ದರು. ಅರಣ್ಯ ಇಲಾಖೆ ವೈದ್ಯರುಗಳಾದ ಡಾ.ಆದರ್ಶ, ವಸೀಮ್ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ| ನಂದಿಕೂರ ಗ್ರಾಮದಲ್ಲಿ ಪಂಚಲೋಹದ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣ
ಕಲಬುರಗಿ: ನಗರದ ಹೊರವಲಯದ ನಂದಿಕೂರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ರವರ ಪಂಚಲೋಹದ ಪ್ರತಿಮೆಯನ್ನು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ, ಡಾ. ವಿಠ್ಠಲ ದೊಡ್ಡಮನಿ, ಕಾಂಗ್ರೆಸ್ ಮುಖಂಡ ನೀಲಕಂಠರಾವ್ ಮೂಲಗೆ, ಡಾ. ಕಿರಣ್ ದೇಶಮುಖ್, ರಾಜಕುಮಾರ ಕಪನೂರ್, ದಿನೇಶ ದೊಡ್ಡಮನಿ, ಲಕ್ಷ್ಮಣ ಶೃಂಗೇರಿ, ತಹಶೀಲ್ದಾರ್ ಆನಂದಶಿಲ್, ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ್ ಪೂಜಾರಿ, ಸಿಪಿಐ ಹುಸೇನ ಭಾಷಾ, ಲಿಂಗರಾಜ್ ಕಣ್ಣಿ, ಶಾಮರಾಯ ಜಿ ಪಾಟೀಲ್, ನಾಗೇಂದ್ರ ಶೇರಿಕರ, ಶಾಮರಾಯ ಪಾಟೀಲ್, ಸುರೇಶ್ ಹಾದಿಮನಿ, ಎಸ್.ಎಸ್ ತವಡೆ, ದೇವೇಂದ್ರ ಸಿನ್ನೂರ್, ಪವನಕುಮಾರ್ ವಳಕೇರಿ, ಶ್ರೀನಿವಾಸ ದೊಡ್ಡಮನಿ, ಕುಪೆಂದ್ರ ವರ್ಮಾ, ಸೂರ್ಯಕಾಂತ್ ಕಣ್ಣಿ, ದಸ್ತಾಯ್ಯ ಗುತ್ತೇದಾರ, ಸಂದೀಪ್ ಗುತ್ತೇದಾರ, ಲಕ್ಷ್ಮಣ ಪೂಜಾರಿ, ವಿರೇಶ ಪಡೋಳಕರ್, ರಾಚಯ್ಯ ಸ್ವಾಮಿ ಸೇರಿದಂತೆ ಗ್ರಾಮಸ್ಥರು ಮತ್ತು ಡಾ. ಬಿ ಆರ್ ಅಂಬೇಡ್ಕರ್ ತರುಣ ಸಂಘದ ಮುಖಂಡರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಸಹಕಾರ ನೀಡಿದ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ್ ಪೂಜಾರಿ, ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಶ್ವೇತಾ ದಿನೇಶ ದೊಡ್ಡಮನಿ, ಸದಸ್ಯರುಗಳಾದ ಚಂದ್ರಕಲಾ ಎಸ್. ಕಣ್ಣಿ, ಶಾಂತಾಬಾಯಿ ಪಡೋಳಕರ, ಶ್ರೀಕಾಂತ ಉಳ್ಳಿ ರವರಿಗೆ ವೇದಿಕೆ ಮೇಲೆ ಸನ್ಮಾನಿಸಿ ಗೌರವಿಸಲಾಯಿತು.
IND Vs SA- ಶಹ`ಬಾಷ್'; ಕಠಿಣ ಹೋರಾಟ ನೀಡಿದ ಹರಿಣಗಳ ವಿರುದ್ಧ ಭಾರತಕ್ಕೆ ಕೊನೆಗೂ ಸಕ್ಸಸ್!
India Vs South Africa 1st ODI- ವಿರಾಟ್ ಕೊಹ್ಲಿ ಶತಕದ ನೆರವಿನಿಂದ ರನ್ ಪರ್ವತವೇರಿ ನಿಂತ ಭಾರತ. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ತಂಡದ 3 ವಿಕೆಟ್ 11 ರನ್ ಆಗುವಷ್ಟರಲ್ಲೇ ಪತನ. ಎಲ್ಲರೂ ಅಂದುಕೊಂಡದ್ದು ಇನ್ನೇನು ಭಾರತ ತಂಡ ಬಹಳ ಸುಲಭದಲ್ಲಿ ಪಂದ್ಯ ಗೆದ್ದುಕೊಂಡಿತು ಎಂದು. ಆದರೆ ಎದೆಗುಂದದೆ ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಪ್ರತಿಹೋರಾಟ ನೀಡಿದಾಗ ಆತಿಥೇಯರ ಪಾಳಯದಲ್ಲಿ ಆತಂಕ. ಅಂತಿಮ ಓವರ್ ವರೆಗೂ ಹೋರಾಡಿದ ಕಾರ್ಬಿನ್ ಬಾಷ್! ಒಟ್ಟಾರೆ ಕ್ರಿಕೆಟ್ ನ ರೋಮಾಂಚಕತೆಯ ರಸದೌತಣ. ಕೊನೆಗೂ ಪಂದ್ಯವನ್ನು ತೆಕ್ಕೆಗೆಳೆದುಕೊಳ್ಳುವಲ್ಲಿ ಯಶಸ್ವಿಯಾದದ್ದು ಭಾರತ!
IND Vs SA ODI | ʼವಿರಾಟ್ʼ ದರ್ಶನಕ್ಕೆ ಬೆದರಿದ ಹರಿಣಗಳು; ಭಾರತಕ್ಕೆ ರೋಚಕ ಜಯ
ರಾಂಚಿ: ಇಲ್ಲಿನ JSCA ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಭಾರತ – ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು 17 ರನ್ ಗಳ ರೋಚಕ ಜಯ ಸಾಧಿಸಿದೆ. ಭಾರತ ತಂಡವು ನೀಡಿದ್ದ 350 ರನ್ ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫಿಕಾ ತಂಡವು 332 ರನ್ ಗೆ ಆಲೌಟ್ ಆಯಿತು.
ರೈತರಿಂದ ಖರೀದಿಸಿ ಎಥೆನಾಲ್ ಡಿಸ್ಟಿಲರಿಗಳಿಗೆ ಮೆಕ್ಕೆಜೋಳ ಸರಬರಾಜು ಮಾಡಲು KSCMF ಗೆ ಸರ್ಕಾರ ಸೂಚನೆ; ದರ ಎಷ್ಟು?
ಮುಂಗಾರು ಹಂಗಾಮಿನಲ್ಲಿ ಬೆಳೆದ ಮೆಕ್ಕೆಜೋಳವನ್ನು ಕೆಎಸ್ಸಿಎಂಎಫ್ ಖರೀದಿಸಲಿದೆ. ಎಥೆನಾಲ್ ಉತ್ಪಾದಿಸುವ ಡಿಸ್ಟಿಲರಿಗಳಿಗೆ ಈ ಮೆಕ್ಕೆಜೋಳ ಸರಬರಾಜು ಆಗಲಿದೆ. ರೈತರಿಂದ ಕ್ವಿಂಟಾಲ್ಗೆ 2,400 ರೂ. ದರದಲ್ಲಿ ಖರೀದಿಸಲಾಗುತ್ತದೆ. ಖರೀದಿ ಪ್ರಕ್ರಿಯೆಗೆ ರೈತರ ನೋಂದಣಿ ಡಿ.1 ರಿಂದ ಆರಂಭವಾಗಲಿದೆ. ಮೂರು ದಿನಗಳಲ್ಲಿ ರೈತರಿಗೆ ಹಣ ಪಾವತಿಸಲಾಗುತ್ತದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ ಜಿಲ್ಲೆಗಳ ಐದು ಡಿಸ್ಟಿಲರಿಗಳನ್ನು ಗುರುತಿಸಲಾಗಿದೆ.
ಉಡುಪಿ, ನ.30: ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೋರ್ವನನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೆರ್ಡೂರು ಹಿಂದು ಜಾಗರಣಾ ವೇದಿಕೆಯ ನಾಯರ್ಕೋಡು ಘಟಕದ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ. ಈತ ಯುವತಿಯೊಬ್ಬಳನ್ನು ಮದುವೆಯಾಗುವಂತೆ ನಿರಂತರ ಕಿರುಕುಳ ನೀಡುತ್ತಿದ್ದು, ಆಕೆ ಆತನೊಂದಿಗೆ ಮದುವೆಗೆ ನಿರಾಕರಿಸಿದ್ದಳು. ಈ ಬಗ್ಗೆ ಆಕೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆತನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದನು. ಮತ್ತೆ ಅದೇ ಧ್ವೇಷದಲ್ಲಿ ಪ್ರದೀಪ್ ಪೂಜಾರಿ, ನ.29ರಂದು ನಿರ್ಜನ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಆ ಯುವತಿಯನ್ನು ಅಡ್ಡಗಟ್ಟಿ ಮತ್ತೆ ಮದುವೆಯಾಗುವಂತೆ ಪೀಡಿಸಿದನು. ಇದಕ್ಕೆ ಆಕೆ ನಿರಾಕರಿಸಿದಾಗ ಆಕೆಯನ್ನು ಅಲ್ಲೇ ಕತ್ತು ಹಿಸುಕಿ ಬೆದರಿಸಿ ಅತ್ಯಾಚಾರ ಎಸಗಿದನು ಎಂದು ದೂರಲಾಗಿದೆ. ಈ ಕುರಿತು ಆಕೆ ಮನೆಯವರಿಗೆ ಮಾಹಿತಿ ನೀಡಿದ್ದು, ಅದರಂತೆ ಪೋಷಕರು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಉಡುಪಿ | ಲಕ್ಷಾಂತರ ರೂ. ಆನ್ಲೈನ್ ವಂಚನೆ ಪ್ರಕರಣ; ಬಿಹಾರದ ಇಬ್ಬರು ಆರೋಪಿಗಳ ಬಂಧನ : ನಗದು, ಸೊತ್ತು ವಶ
ಉಡುಪಿ, ನ.30: ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರ ರಾಜ್ಯದ ಪಟ್ನಾ ಜಿಲ್ಲೆಯ ದೇವ್ ಹರ್ಷ(20) ಹಾಗೂ ಬಿಹಾರ ನಳಂದಾ ಜಿಲ್ಲೆಯ ಚಂದನ ಕುಮಾರ್(29) ಬಂಧಿತ ಆರೋಪಿಗಳು. ಇವರಿಂದ 97ಸಾವಿರ ರೂ. ಮೌಲ್ಯದ 10 ಮೊಬೈಲ್ ಫೋನ್, 68,000ರೂ. ಮೌಲ್ಯದ 4 ಲ್ಯಾಪ್ಟಾಪ್ ಗಳು ಹಾಗೂ 4,50,000ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಅವಿನಾಶ್ ಎಂಬವರು ರಿಲಯನ್ಸ್ ಇಂಡಸ್ಟ್ರೀ ಮಾಲಕತ್ವದ ಕ್ಯಾಂಪಾ ಕೋಲಾ ಪ್ರಾಂಚೈಸ್ ಗೆ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿದ್ದು, ಕೆಲವು ದಿನಗಳಲ್ಲಿ ಅವಿನಾಶ್ ಗೆ ಮೇಲ್ ಹಾಗೂ ಪೋನ್ ಮೂಲಕ ಹೆಚ್ಚಿನ ಮಾಹಿತಿಗಾಗಿ ಹಾಗೂ ದಾಖಲಾತಿಗಾಗಿ ಕರೆ ಬಂದಿತ್ತು. ಅವಿನಾಶ್ ವಿದ್ಯಾಭ್ಯಾಸ, ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳನ್ನು ಕಳುಹಿಸಿದ್ದರು. ಆಗ ಅವರು ಪ್ರಾಂಚೈಸ್ ಅರ್ಜಿ ಸಲ್ಲಿಕೆ ಆಗಿರುವುದಾಗಿ ತಿಳಿಸಿದ್ದು, ಆರೋಪಿಗಳು ತಿಳಿಸಿದಂತೆ ಅವಿನಾಶ್ ರಿಜಿಸ್ಟೇಷನ್, ಪ್ರೋಡಕ್ಟ್ ಬುಕಿಂಗ್ ಗೆ ಹಂತ ಹಂತವಾಗಿ 5,72,500ರೂ. ಹಣವನ್ನು ಅಪರಿಚಿತರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದ್ದರು. ಆರೋಪಿತರು ಮತ್ತೆ ಮತ್ತೆ ಹಣ ಹಾಕುವಂತೆ ಒತ್ತಾಯಿಸುತ್ತಿದ್ದು, ಇದರಿಂದ ಅವಿನಾಶ್ ಸಂಶಯ ಉಂಟಾಯಿತು. ಆರೋಪಿಗಳು ಕ್ಯಾಂಪಾ ಕೋಲಾ ಪ್ರಾಂಚೈಸಿಯನ್ನು ಕೊಡುವುದಾಗಿ ನಂಬಿಸಿ ಒಟ್ಟು 5,72,500ರೂ. ಹಣ ಪಡೆದುಕೊಂಡು ವಂಚಿಸಿರುವುದಾಗಿ ಅವಿನಾಶ್ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸ್ ತಂಡ, ಬಿಹಾರ ರಾಜ್ಯದ ಪಾಟ್ನಾ ಮತ್ತು ಬೆಂಗಳೂರಿನಲ್ಲಿ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ನೇತೃತ್ವದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ನಿಲೇಶ್ ಜಿ.ಚವ್ಹಾಣ್, ಪೊಲೀಸ್ ಉಪನಿರೀಕ್ಷಕ ಅಶೋಕ್ ಕುಮಾರ್, ಸೈಬರ್ ಕ್ರೈಂ ಪೊಲೀಸ್ ಠಾಣಾ ಸಿಬ್ಬಂದಿ ರಾಘವೇಂದ್ರ ಕಾರ್ಕಡ, ಪ್ರವೀಣ್ ಕುಮಾರ್, ಪ್ರವೀಣ ಶೆಟ್ಟಿಗಾರ್, ರಾಜೇಶ್, ದೀಕ್ಷಿತ್, ಎಎಸ್ಸೈ ಉಮೇಶ್ ಜೋಗಿ, ಯತೀನ್, ವೆಂಕಟೇಶ್, ಧರ್ಮಪ್ಪ, ಹೇಮರಾಜ್, ನಿಲೇಶ್, ಪವನ್ ಹಾಗೂ ದಿನೇಶ್ ಈ ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ.
ರೈತರ, ವಿಮೆ ಕಂಪೆನಿಯ ಸಮಕ್ಷಮದಲ್ಲಿ ಬೆಳೆ ಕಟಾವು ಪ್ರಯೋಗ ನಡೆಯಲಿ: ಬಿ.ಫೌಝಿಯಾ ತರನ್ನುಮ್
ಕಲಬುರಗಿ: ವಿವಿಧ ಕೃಷಿ ಉತ್ಪನ್ನಗಳ ಇಳುವರಿ ನಿಖರ ಮಾಹಿತಿ ಸಂಗ್ರಹಣೆಗೆ ಪೂರಕವಾಗಿ ಆಯ್ದ ಗ್ರಾಮಗಳಲ್ಲಿ ನಡೆಯುವ ಬೆಳೆ ಕಟಾವು ಪ್ರಯೋಗದ ಸಂದರ್ಭದಲ್ಲಿ ಮೂಲ ಕಾರ್ಯಕರ್ತರು, ಮೇಲ್ವಿಚಾರಕರು, ರೈತರು ಮತ್ತು ವಿಮೆ ಕಂಪೆನಿಗಳ ಪ್ರತಿನಿಧಿಗಳ ಸಮಕ್ಷಮದಲ್ಲಿ ಬೆಳೆ ಕಟಾವು ಪ್ರಯೋಗ ಮಾಡಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇತ್ತೀಚೆಗೆ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿ.ಫೌಝಿಯಾ ತರನ್ನುಮ್, ಕೃಷಿ ಉತ್ಪನ್ನಗಳ ನಿಖರ ಇಳುವರಿ ಲಭ್ಯವಾದಲ್ಲಿ ಬೆಳೆ ಪರಿಹಾರ ಸೇರಿದಂತೆ ರೈತಾಪಿ ವರ್ಗಕ್ಕೆ ಸವಲತ್ತು ಕಲ್ಪಿಸಲು ಸರಕಾರಕ್ಕೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಬೆಳೆ ಕಟಾವು ಪ್ರಯೋಗ ಕಾರ್ಯ ಮಹತ್ವದ್ದಾಗಿದೆ. ಇದರಲ್ಲಿ ಯಾವುದೇ ಲೋಪದೋಷವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಕಟಾವು ಪ್ರಯೋಗಗಳನ್ನು ಕೈಗೊಳ್ಳುವಾಗ ಮೂಲ ಕಾರ್ಯಕರ್ತರು, ಹೊಲದ ರೈತರು, ಮೇಲ್ವಿಚಾರಕರು ಹಾಗೂ ವಿಮಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದರು. ಜನನ-ಮರಣ ಪ್ರಕರಣಗಳಲ್ಲಿ 21 ದಿನಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಆಡಳಿತಾಧಿಕಾರಿ ಮತ್ತು ಪಂಚಾಯತ್ ಕಾರ್ಯದರ್ಶಿಗಳು ಕ್ರಮವಾಗಿ ನೋಂದಣಾಧಿಕಾರಿ ಮತ್ತು ಉಪ ನೋಂದಣಾಧಿಕಾರಿಯಾಗಿದ್ದು, ಪ್ರತಿಯೊಂದನ್ನು ನೋಂದಣಿ ಮಾಡಬೇಕು. ಅದೇ ರೀತಿ ಪಟ್ಟಣ ಪ್ರದೇಶದಲ್ಲಿ ಮುಖ್ಯಾಧಿಕಾರಿಗಳು ನೋಂದಣಿಕಾರಿಗಳಾಗಿದ್ದಾರೆ. ತಾಲೂಕಿನ ತಹಶೀಲ್ದಾರರು ಮತ್ತು ತಾಲೂಕು ಪಂಚಾಯತ್ ಇ.ಓ ಅವರು ಈ ಕುರಿತು ಹೆಚ್ಚಿನ ಜಾಗೃತಿ ಹಾಗೂ ಅರಿವು ಮೂಡಿಸಬೇಕೆಂದ ಜಿಲ್ಲಾಧಿಕಾರಿಗಳು, ಅಸ್ಪತ್ರೆಯಲ್ಲಿ ಹೆರಿಗೆಯಾದ ಪ್ರಕರಣದಲ್ಲಿ ಡಿಸ್ಚಾರ್ಜ್ ಮಾಡುವ ಮುನ್ನ ಉಚಿತ ಜನನ ಪ್ರಮಾಣ ಪತ್ರ ನೀಡಬೇಕು ಎಂದು ಹೇಳಿದರು. ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ನಾಗನಗೌಡ ಭಾವಿ, ಜಿಲ್ಲಾ ಪಂಚಾಯತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಮಧುಮತಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎಂ.ಡಿ.ಇಮ್ರಾನ ಅಲಿ, ಸಹಾಯಕ ನಿರ್ದೇಶಕ ಶರಣಬಸವ, ಡಿ.ಎಚ್.ಓ ಶರಣಬಸಪ್ಪ ಕ್ಯಾತನಾಳ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಬಿಹಾರ ಚುನಾವಣಾ ಹಿನ್ನಡೆ: ಆರ್ಜೆಡಿ-ಕಾಂಗ್ರೆಸ್ ನಡುವೆ ಪರಸ್ಪರ ಆರೋಪ
ಪಾಟ್ನಾ: 18ನೇ ಬಿಹಾರ ವಿಧಾನಸಭೆಯ ಮೊದಲ ಅಧಿವೇಶನ ನಾಳೆಯಿಂದ (ಸೋಮವಾರ) ಪ್ರಾರಂಭಗೊಳ್ಳಲಿದ್ದು, ಈ ನಡುವೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ ಹಿನ್ನಡೆಗೆ ವಿರೋಧ ಪಕ್ಷಗಳ ಮೈತ್ರಿಕೂಟವಾದ ಮಹಾಘಟಬಂಧನ್ನ ಪ್ರಮುಖ ಅಂಗಪಕ್ಷಗಳಾದ ಆರ್ಜೆಡಿ ಮತ್ತು ಕಾಂಗ್ರೆಸ್ ಪರಸ್ಪರ ದೂಷಿಸಿಕೊಳ್ಳತೊಡಗಿವೆ. ಕಳೆದ ವಾರ ಹೊಸ ದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಬಿಹಾರ ವಿಧಾನಸಭಾ ಫಲಿತಾಂಶದ ಕುರಿತು ನಡೆದ ಚರ್ಚೆಯಲ್ಲಿ, ಆರ್ಜೆಡಿ ಆಕ್ರಮಣಕಾರಿ ಪ್ರಚಾರ ನಡೆಸಿದ್ದರಿಂದ, ಮತ್ತೆ ಜಂಗಲ್ ರಾಜ್ ಮರಳಬಹುದು ಎಂಬ ಭೀತಿಯಿಂದ ಲಕ್ಷಾಂತರ ಮತದಾರರು ಮಹಾಘಟಬಂಧನ್ ಮೈತ್ರಿಕೂಟದಿಂದ ದೂರ ಸರಿದರು ಎಂದು ಬಿಹಾರ ಕಾಂಗ್ರೆಸ್ ಘಟಕದ ನಾಯಕರು ಆರೋಪಿಸಿದ್ದರು. ಈ ಆರೋಪಕ್ಕೆ ತಿರುಗೇಟು ನೀಡಿದ್ದ ಬಿಹಾರ ಆರ್ಜೆಡಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಸಚಿವ ಮಾಂಗಿ ಲಾಲ್ ಮಂಡಲ್, 'ಆರ್ಜೆಡಿಗೆ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಅನಿವಾರ್ಯತೆ ಇರಲಿಲ್ಲ. ಮೇಲಾಗಿ, ಕಾಂಗ್ರೆಸ್ ಪಕ್ಷಕ್ಕೆ ಬಿಹಾರದಲ್ಲಿ ಕಾರ್ಯಕರ್ತರ ನೆಲೆಯೇ ಇಲ್ಲ. ಹೀಗಿದ್ದೂ, ಕಾಂಗ್ರೆಸ್ ಉಳಿಸಿಕೊಂಡಿರುವ ಆರು ವಿಧಾನಸಭಾ ಕ್ಷೇತ್ರಗಳು ಆರ್ಜೆಡಿಯ ಬೆಂಬಲದಿಂದ ಗೆದ್ದಿರುವುದು ಎಂದು ತಿವಿದಿದ್ದರು. ಈ ಆರೋಪ-ಪ್ರತ್ಯಾರೋಪಗಳ ನಡುವೆ, “ನಾವು ಎದುರಿಸಬೇಕಿರುವುದು ಬಿಜೆಪಿ ನೇತೃತ್ವದ ಮೈತ್ರಿಕೂಟವನ್ನೇ ಹೊರತು, ನಮ್ಮ ನಮ್ಮಲ್ಲೇ ಕಿತ್ತಾಡಿಕೊಳ್ಳುವುದಲ್ಲ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ವರಿಷ್ಠರು ಬಂದಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ 243 ಸದಸ್ಯ ಬಲದ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಮೈತ್ರಿಕೂಟ 202 ಸ್ಥಾನಗಳ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದರೆ, ಆರ್ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟ ಹೀನಾಯ ಸೋಲು ಅನುಭವಿಸಿತ್ತು. ಇದು ಆರ್ಜೆಡಿ-ಕಾಂಗ್ರೆಸ್ ನಡುವೆ ಪರಸ್ಪರ ಆರೋಪಕ್ಕೆ ಕಾರಣವಾಗಿದೆ.
India and China: ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ: ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ!
India and China: ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ ಮೋದಿ ವಿರುದ್ಧ ನಟ ಕಿಶೋರ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಈಚೆಗೆ ವಿವಿಧ ವಿಚಾರಗಳ ಬಗ್ಗೆ ಆರ್ಎಸ್ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಟ ಕಿಶೋರ್ ಅವರು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಸಾರ್ವಜನಿಕ ವಲಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಇದರ
Punjab | ವಿವಾಹ ಸಮಾರಂಭದಲ್ಲಿ ಗುಂಡು ಹಾರಾಟ; ಇಬ್ಬರು ಮೃತ್ಯು, ಓರ್ವನಿಗೆ ಗಾಯ
ಲುಧಿಯಾನ, ನ. 29: ಇಲ್ಲಿನ ಪಾಖೊವಾಲ್ ರಸ್ತೆಯಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ಎದುರಾಳಿ ಗುಂಪುಗಳು ಪರಸ್ಪರ ಗುಂಡು ಹಾರಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಶನಿವಾರ ರಾತ್ರಿ ನಡೆದ ವಿವಾಹ ಸಮಾರಂಭಕ್ಕೆ ಆಹ್ವಾನಿಸಲಾಗಿದ್ದ ಎರಡು ಗುಂಪುಗಳ ನಡುವೆ ಹಳೆಯ ದ್ವೇಷವಿತ್ತು. ಒಂದು ಗುಂಪಿನ ನೇತೃತ್ವವನ್ನು ಶುಭಂ ಮೊಟ್ಟ ವಹಿಸಿದ್ದಾರೆ, ಇನ್ನೊಂದು ಗುಂಪಿನ ನೇತೃತ್ವವನ್ನು ಅಂಕುರ್ ವಹಿಸಿದ್ದರು. ಇಬ್ಬರ ವಿರುದ್ಧವೂ ಹಲವು FIR ಗಳು ದಾಖಲಾಗಿವೆ ಎಂದು ಅವರು ಹೇಳಿದ್ದಾರೆ. ವಿವಾಹ ಸಮಾರಂಭದಲ್ಲಿ ಅವರು ಮುಖಾಮುಖಿಯಾದರು. ಆರಂಭದಲ್ಲಿ ಅವರ ನಡುವೆ ಕೆಲವು ವಿಷಯಗಳ ಕುರಿತು ವಾಗ್ವಾದ ನಡೆಯಿತು. ಅದು ಘರ್ಷಣೆಗೆ ಕಾರಣವಾಯಿತು. ಈ ಸಂದರ್ಭ ಕೆಲವರು ಮಧ್ಯಪ್ರವೇಶಿಸಿ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ ಅನಂತರ ಎರಡೂ ಎದುರಾಳಿ ಗುಂಪುಗಳು ಪರಸ್ಪರ ವಿವೇಚನಾರಹಿತವಾಗಿ ಗುಂಡು ಹಾರಿಸಿದವು. ಅವರು 25-30 ಸುತ್ತು ಗುಂಡು ಹಾರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭ ಗುಂಡು ತಗುಲಿ ಅತಿಥಿಗಳಾದ ವಾಸು ಚೋಪ್ರಾ ಹಾಗೂ ನೀರು ಮೃತಪಟ್ಟಿದ್ದಾರೆ. ಅನಂತರ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್ ಹಾಗೂ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
DELHI | ಅಂತ್ಯಕ್ರಿಯೆಗೆ ಹಸುವಿನ ಸೆಗಣಿಯ ಬೆರಣಿ ಬಳಸುವ MCD ನಿರ್ಧಾರವು ಮಾಲಿನ್ಯ ಹೆಚ್ಚಿಸಬಹುದು: ತಜ್ಞರು
ಹೊಸದಿಲ್ಲಿ, ನ. 29: ದಿಲ್ಲಿ ಮಹಾನಗರ ಪಾಲಿಕೆ (MCD) ಚಿತಾಗಾರಗಳಲ್ಲಿ ಹಸುವಿನ ಸೆಗಣಿಯ ಬೆರಣಿಯನ್ನು ಬಳಸಲು ಆರಂಭಿಸಲು ನಿರ್ಧರಿಸಿದೆ. ಆದರೆ, ಹಸುವಿನ ಸಗಣಿಯ ಬೆರಣಿಗಳನ್ನು ಸುಡುವುದರಿಂದ ಮಾಲಿನ್ಯದ ಮಟ್ಟ ಮತ್ತಷ್ಟು ಹೆಚ್ಚಾಗುತ್ತದೆ ಎಂಬುದನ್ನು ವೈಜ್ಞಾನಿಕ ಅಧ್ಯಯನಗಳು ದೃಢಪಡಿಸಿವೆ ಎಂದು ತಜ್ಞರು ಗಮನ ಸೆಳೆದಿದ್ದಾರೆ. ಹಸುವಿನ ಸೆಗಣಿಯ ಬೆರಣಿಗಳನ್ನು ಸುಟ್ಟಾಗ ಮರಕ್ಕಿಂತ ಹೆಚ್ಚಿನ ಪ್ರಮಾಣದ ಕಣಗಳು (ಪಿಎಂ 2.5 ಹಾಗೂ ಪಿಎಂ 10), ಸಾವಯವ ಸಂಯುಕ್ತ ಗಳು ಹಾಗೂ ಕಪ್ಪು ಇಂಗಾಲ ಬಿಡುಗಡೆಯಾಗುತ್ತದೆ ಎಂದು ಅವರು ಹೇಳಿದ್ದಾರೆ. ದಿಲ್ಲಿ ಮಹಾನಗರ ಪಾಲಿಕೆ (MCD)ಯ ಸಾರ್ವಜನಿಕ ಆರೋಗ್ಯ ಇಲಾಖೆ ಗುರುವಾರ ಸಭೆ ನಡೆಸಿತು. ಈ ಸಭೆಯಲ್ಲಿ ನಗರದಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮಟ್ಟವನ್ನು ಕಡಿಮೆ ಮಾಡಲು ಮಹಾನಗರ ಪಾಲಿಕೆಯ ಚಿತಾಗಾರದಲ್ಲಿ ಹಸುವಿನ ಸೆಗಣಿಯ ಬೆರಣಿಯನ್ನು ಬಳಸುವ ಬಗ್ಗೆ ಚರ್ಚಿಸಲಾಗಿತ್ತು. ಚಿತಾಗಾರಗಳಲ್ಲಿ ಮೃತದೇಹಗಳನ್ನು ಸುಡಲು ಕಟ್ಟಿಗೆಯನ್ನು ಬಳಸುವುದರಿಂದ ನಗರದ ವಾಯು ಮಾಲಿನ್ಯ ಹೆಚ್ಚಾಗುತ್ತದೆ. ಆದುದರಿಂದ ಮೃತದೇಹಗಳನ್ನು ಸುಡಲು ಕಟ್ಟಿಗೆ ಬಳಸುವುದನ್ನು ನಿಲ್ಲಿಸಲು ದಿಲ್ಲಿ ಮಹಾನಗರ ಪಾಲಿಕೆ ನಿರ್ಧರಿಸಿದೆ ಎಂದು ಸಭೆಗೆ ಹಾಜರಾಗಿದ್ದ ಸದಸ್ಯರೊಬ್ಬರು ತಿಳಿಸಿದ್ದಾರೆ. ‘‘ವಿದ್ಯುತ್ ಚಿತಾಗಾರಗಳು ಕಡಿಮೆ ವಾಯು ಮಾಲಿನ್ಯ ಉಂಟು ಮಾಡುತ್ತವೆ. ಆದುದರಿಂದ ನಾವು ಸಾಂಪ್ರದಾಯಿಕ ವಿಧಾನಗಳಿಂದ ದೂರ ಸರಿಯಬೇಕು. ಇದು ನಮಗೆ ಉತ್ತಮ ಆಯ್ಕೆಗೆ ಸಹಾಯ ಮಾಡುತ್ತದೆ ಎಂದು ಪರಿಸರವಾದಿ ವಿಮಲೇಂದು ಝಾ ಹೇಳಿದ್ದಾರೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ರಾಜಕುಮಾರ್ ಮೀನಕೇರಾ ಆಯ್ಕೆ
ಕಲಬುರಗಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ನಿರ್ದೇಶಕರಾಗಿ ಕಲ್ಯಾಣ ಕರ್ನಾಟಕ ಭಾಗದಿಂದ ನಾಮನಿರ್ದೇಶನಗೊಂಡಿರುವ ರಾಜಕುಮಾರ್ ತರಿ ಮೀನಕೇರಾ ಅವರನ್ನು ಚಿಂಚೋಳಿ ತಾಲೂಕು ವೀರಶೈವ ಲಿಂಗಾಯತ ಮಹಾಸಭೆಯ ಘಟಕವು ಸನ್ಮಾನಿಸಿ ಅಭಿನಂದಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಸರಕಾರಿ ನೌಕರರ ಸಂಘದ ನಿರ್ದೇಶಕ ಮಂಜುನಾಥ ದುಬಲಗುಂಡಿ, ರಾಜಕುಮಾರ್ ತರಿರವರು ಪಂಚಮಸಾಲಿ ಬಣಜಿಗ ಸಮಾಜದ ಮೀಸಲಾತಿ ಹೋರಾಟದಲ್ಲಿ ದಶಕಗಳ ಕಾಲ ಸಕ್ರಿಯವಾಗಿ ತೊಡಗಿಸಿಕೊಂಡು ಅಖಂಡ ಲಿಂಗಾಯತ ಸಮಾಜದ ಸಂಘಟನೆ ಮಾಡುತ್ತಾ ಬಂದಿದ್ದಾರೆ. ಅವರ ಮೂಲಕ ಸಮಾಜದ ಕೆಲಸಗಳು ನಡೆದು, ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಏಳ್ಗೆಗೆ ಅವರು ಶ್ರಮಿಸಲಿ ಎಂದು ಶುಭ ಕೋರಿದರು. ತಾಲೂಕು ಮಹಾಸಭೆಯ ಅಧ್ಯಕ್ಷರಾದ ಶರಣು ಪಾಟೀಲ್ ಮೋತಕಪಳ್ಳಿ ಮಾತನಾಡಿ, ಚಿಂಚೋಳಿ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಅಭಿವೃದ್ಧಿ ಕಾರ್ಯಗಳು ಮತ್ತು ಅಗತ್ಯ ನೆರವುಗಳನ್ನು ನಿಗಮದ ಮೂಲಕ ಒದಗಿಸುವಂತೆ ನೂತನ ನಿರ್ದೇಶಕರಲ್ಲಿ ಮನವಿ ಮಾಡಿದರು. ಸನ್ಮಾನ ಸ್ವೀಕರಿಸಿದ ರಾಜಕುಮಾರ್ ತರಿ ಮೀನಕೇರಾ ಅವರು, ಸಮಾಜದ ವಿಶ್ವಾಸಕ್ಕೆ ತಕ್ಕಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶಿವರಾಜ ಪಾಟೀಲ, ನಂದಿಕುಮಾರ ಪಾಟೀಲ, ಸುರೇಶ್ ದೇಶಪಾಂಡೆ, ರಾಜಶೇಖರ ಹಿತ್ತಲ್, ಮಲ್ಲಿಕಾರ್ಜುನ ಬುಶೆಟ್ಟಿ, ಶಂಕರ ಶಿವಪುರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಉಡುಪಿ | ಮೀನು ಫೆಡರೇಶನ್ಗೆ ನೀಡಿದ್ದ ಜಾಗ ಹಿಂಪಡೆಯಲು ಆಗ್ರಹ
ಉಡುಪಿ, ನ.30: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯಲ್ಲಿ ಮಲ್ಪೆ ಮೀನುಗಾರರು ಬಳಸುತ್ತಿದ್ದ ಜಾಗವನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆಯ ಮೀನು ಮಾರಾಟ ಫೆಡರೇಷನ್ ಗೆ ಗುತ್ತಿಗೆ ನೀಡಿರುವ ಆದೇಶವನ್ನು ರದ್ದು ಮಾಡಬೇಕೆಂಬ ಬೇಡಿಕೆಯನ್ನು ಪ್ರಸ್ತಾಪಿಸಲಾಯಿತು. ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ ಈ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪಿಸಿದರು. ಈ ಕುರಿತು ರಾಜ್ಯ ಮೀನುಗಾರರ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಂಜುನಾಥ್ ಸುನೆಗಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಪೂರಕವಾಗಿ ಪ್ರತಿಕ್ರಿಯಿಸಿದ ಅವರು ರಾಜ್ಯ ಮೀನುಗಾರರ ಕಾಂಗ್ರೆಸ್ ಸಮಿತಿಯಿಂದ ಎಲ್ಲಾ ರೀತಿಯ ಪ್ರಯತ್ನ ಮಾಡಿ ಸರಕಾರದ ಮೂಲಕ ಆದೇಶವನ್ನು ರದ್ದು ಮಾಡಿಸಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ಸೌಲಭ್ಯ! ಏನೆಲ್ಲಾ ಉಪಯೋಗ?
ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ಸೌಲಭ್ಯ ವಿಸ್ತರಿಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ. ಅತ್ಯುತ್ತಮ ಕ್ಯಾಮೆರಾ, ಎಐ ತಂತ್ರಜ್ಞಾನ ಬಳಸಿ ದೂರದಿಂದಲೇ ತಜ್ಞ ವೈದ್ಯರು ಸ್ಥಳೀಯರಿಗೆ ಚಿಕಿತ್ಸೆ ನೀಡಲು ನೆರವಾಗಲಿದ್ದಾರೆ. ಟೆಲಿ ಕಾರ್ಡಿಯೋಲಾಜಿ ಮೂಲಕ ಈಗಾಗಲೇ 600 ಜೀವಗಳನ್ನು ಉಳಿಸಲಾಗಿದೆ.
ಫ್ರೀಡಂ ಪಾರ್ಕ್ನಲ್ಲಿ ಅಭಿವೃದ್ಧಿ ಕಾಮಗಾರಿ; ಹೋರಾಟ, ರ್ಯಾಲಿಗಳು ತಾತ್ಕಾಲಿಕ ಸ್ಥಗಿತ
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ, ಹೋರಾಟ, ಚಿತ್ರೀಕರಣ ಸೇರಿದಂತೆ ಇನ್ಯಾವುದೇ ಕಾರ್ಯಕ್ರಮಗಳು ತಾತ್ಕಾಲಿಕ ಸ್ಥಗಿತಗೊಳ್ಳಲಿದೆ ಎನ್ನಲಾಗಿದೆ. ಐದು ಕೋಟಿ ರೂ. ವೆಚ್ಚದಲ್ಲಿ ಶೌಚಾಲಯ ಮತ್ತು ಹೋರಾಟಗಾರರಿಗೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳು ನಡೆಯುತ್ತಿದ್ದು, ಪೂರ್ಣಗೊಳ್ಳುವವರೆಗೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ.
ಬೆಳ್ವೆ | ಎನ್ಎನ್ಓ ವತಿಯಿಂದ ಸಾಧಕರಿಗೆ ಸನ್ಮಾನ
ಹೆಬ್ರಿ, ನ.30: ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕದ ವತಿಯಿಂದ ಸನ್ಮಾನ ಸಮಾರಂಭ ಬೆಳ್ವೆ ಶ್ರೀಸಂದೇಶ್ ಕಿಣಿ ಮೆಮೋರಿಯಲ್ ಸಬಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕ ಅಧ್ಯಕ್ಷ ಮುಹಮ್ಮದ್ ರಫೀಕ್ ಅಜೆಕಾರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ ಮುಖ್ಯ ಶಿಕ್ಷಕ ವೈ.ಪಟ್ಟಾಬಿರಾಮ್ ಭಟ್ ಬೆಳ್ವೆ, ಸಾಹಿತಿ ಮುಸ್ತಾಕ್ ಹೆನ್ನಾಬೈಲ್, ನಮ್ಮ ನಾಡ ಒಕ್ಕೂಟ ಸೆಂಟ್ರಲ್ ಕಮಿಟಿಯ ಕೋಶಾಧಿಕಾರಿ ಫೀರ್ ಸಾಹೇಬ್, ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮುನಾವರ್ ಅಜೆಕಾರು ಉಪಸ್ಥಿತರಿದ್ದರು. 2025-26ನೇ ಸಾಲಿನ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತೆ ಮರೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಿ, ದಕ್ಷಿಣ ಭಾರತ ಕರಾಟೆ ಚಾಂಪಿಯನ್ ವಿಜೇತ ವಿದ್ಯಾರ್ಥಿ ಅಬ್ದುಲ್ ಮಲಿಕ್, 2024-25ನೇ ಸಾಲಿನ ಸಿಎ ಪರೀಕ್ಷೆಯಲ್ಲಿ ಉತೀರ್ಣಗೊಂಡ ವಿದ್ಯಾರ್ಥಿಗಳಾದ ಶೇಖ್ ಅಬ್ದುಲ್ ಝಾಹಿದ್ ಹಾಗೂ ಶಾಹುಲ್ ಹಮೀದ್ ಅಜೆಕಾರು ಅವರನ್ನು ಸನ್ಮಾನಿಸಲಾಯಿತು. ನಮ್ಮ ನಾಡ ಒಕ್ಕೂಟದ ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷ ಮುಸ್ತಾಕ್ ಅಹಮದ್ ಬೆಳ್ವೆ, ಹೆಬ್ರಿ ಘಟಕದ ಉಪಾಧ್ಯಕ್ಷ ಸಮದ್ ಹೈಕಾಡಿ, ಅನ್ಸಾರ್ ಹೊಸಂಗಡಿ, ಜಿಲ್ಲಾ ಸಮಿತಿ ಸದಸ್ಯ ಹರೂನ್ ರಶೀದ್ ಸಾಸ್ತಾನ, ಶಾಕಿರ್ ಹಾವಂಜೆ, ಕುಂದಾಪುರ ತಾಲೂಕು ಅಧ್ಯಕ್ಷ ಜಮಾಲ್ ಗುಲ್ವಾಡಿ, ಬೆಳ್ವೆ ಜುಮ್ಮಾ ಮಸೀದಿ ಅಧ್ಯಕ್ಷ ಅಹಮದ್ ಬ್ಯಾರಿ, ಶರೀಫ್ ಸಾಹೇಬ್ ಬೆಳ್ವೆ ಮೊದಲಾದವರು ಉಪಸ್ಥಿತರಿದ್ದರು. ಹೆಬ್ರಿ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಶುಕೂರು ಬೆಳ್ವೆ ಸಹಕರಿಸಿದರು. ಮುಹಮ್ಮದ್ ರಬಿ ಕಿರಾತ್ ಪಠಿಸಿದರು. ರಯಾನ್ ಬೆಳ್ವೆ ಕಾರ್ಯಕ್ರಮ ನಿರೂಪಿಸಿದರು. ಅರಾಫತ್ ಸ್ವಾಗತಿಸಿ, ವಂದಿಸಿದರು. ಬೆಳ್ವೆ ಮಸೀದಿಯ ಖತೀಬ್ ಮೌಲಾನಾ ಮುಹಮ್ಮದ್ ರಫೀಕ್ ಬೆಳ್ವೆ ದುವಾ ನೆರವೇರಿಸಿದರು.
ಕಲಬುರಗಿ: ದುಬೈನಲ್ಲಿ ಶನಿವಾರದಂದು ನಡೆದ ಸಮಾರಂಭದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಅವರಿಗೆ ವಚನ ಟಿವಿ ವತಿಯಿಂದ ಗದಗಿನ ಡಾ.ತೋಂಟದಾರ್ಯ ಸಿದ್ದಲಿಂಗ ಸ್ವಾಮಿಗಳ ಸ್ಮರಣಾರ್ಥ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ದುಬೈನ ಮಿಲ್ಲೇನಿಯಂ ಪ್ಲಾಝಾದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ಹಾಗೂ ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ)ನ ಮಾಜಿ ಅಧ್ಯಕ್ಷ ಡಾ. ಎ. ಎಸ್. ಕಿರಣ್ ಕುಮಾರ್ ಮತ್ತು ಸಾಣಿಹಳ್ಳಿ ಶ್ರೀ ಪಂಡಿತರಾಧ್ಯ ಸ್ವಾಮಿಗಳು, ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಹಾಗೂ ಇತರ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಪ್ರಶಸ್ತಿಯೊಂದಿಗೆ ನಗದು ಬಹುಮಾನ, ಫಲಕ ಹಾಗೂ ಪ್ರಶಂಸಾ ಪ್ರಮಾಣಪತ್ರ ನೀಡಿ, ಶಾಲು ಹೋದಿಸಿ ಡಾ. ಅವ್ವಾಜಿಯವರಿಗೆ ಸನ್ಮಾನಿಸಿದರು. ಡಾ. ಅವ್ವಾಜಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ, ಪ್ರಖ್ಯಾತ ಬಾಹ್ಯಾಕಾಶ ವಿಜ್ಞಾನಿ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಾಜಿ ಅಧ್ಯಕ್ಷ ಡಾ. ಎ. ಎಸ್. ಕಿರಣ್ಕುಮಾರ್, ವಿಶ್ವವು ತಾಂತ್ರಿಕ ನಾವೀನ್ಯತೆಯ ಯುಗದಿಂದ ಪ್ರಾಬಲ್ಯ ಹೊಂದಿದೆ. ತಂತ್ರಜ್ಞಾನ ಜಗತ್ತಿನಲ್ಲಿ ಆಗುತ್ತಿರುವ ಪ್ರಗತಿಗಳು ಆಶ್ಚರ್ಯಕಾರಿಯಾದರೂ, ಅದರ ಹಿಂದೆ ಇರುವ ರಹಸ್ಯವು ಮಾನವ ಮೆದುಳಿನ ಅದ್ಭುತ ಬುದ್ಧಿವಂತಿಕೆಯಾಗಿದೆ ಎಂದು ಹೇಳಿದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿದ್ದ ಗಣ್ಯರಲ್ಲಿ, ಶರಣಬಸವೇಶ್ವರ ಸಂಸ್ಥಾನದ 9ನೇ ಮಹಾದಸೋಹ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ, ಹಣಕಾಸು ಅಧಿಕಾರಿ ಡಾ. ಕಿರಣ ಮಾಕಾ, ಜಗದ್ಗುರು ಮಾತೆ ಗಂಗಾದೇವಿ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು. ಸಮಾರಂಭದ ಆರಂಭದಲ್ಲಿ ಕು. ಭವಾನಿ ಎಸ್. ಅಪ್ಪ, ಕು. ಶಿವಾನಿ ಎಸ್. ಅಪ್ಪ ಮತ್ತು ಕುಮಾರಿ ಮಹೇಶ್ವರಿ ಎಸ್. ಅಪ್ಪ ಅವರು ಭಾವಪೂರ್ಣ ವಚನಗಳನ್ನು ಪಠಿಸಿದರು. ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿಯವರಿಗೆ ಗದಗನ ತೋಂಟದಾರ್ಯ ಸ್ವಾಮಿಗಳ ಸ್ಮರಣಾರ್ಥ ಪ್ರಶಸ್ತಿ ನೀಡಲಾಗಿದ್ದು, ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಸ್ಮರಣಾರ್ಥ ಪ್ರಶಸ್ತಿ ನೀಡಲಾಯಿತು. ವಿಜಯಲಕ್ಷ್ಮಿ ಮತ್ತು ಗುರುನಾಥ್ ಗಡ್ಡಿ ಅವರಿಗೆ ಡಾ. ಫ. ಗು. ಹಳಕಟ್ಟಿ ಪ್ರಶಸ್ತಿ, ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಜಗದ್ಗುರು ಲಿಂಗಾನಂದ ಶ್ರೀಗಳ ಪ್ರಶಸ್ತಿ ಮತ್ತು ಜಗದ್ಗುರು ಮಾತೆ ಗಂಗಾದೇವಿಯವರಿಗೆ ಇಳಕಲನ ಶ್ರೀ ಮಹಾಂತ ಅಪ್ಪುಗಳ ಸ್ಮರಣಾರ್ಥ ಪ್ರಶಸ್ತಿ ನೀಡಲಾಯಿತು. ಪ್ರೊ. ಎಸ್. ಜಿ. ಸಿದ್ದರಾಮಯ್ಯನವರು ತರಳಬಾಳು ಜಗದ್ಗುರು ಶಿವಕುಮಾರ್ ಶ್ರೀಗಳ ಹೆಸರಿನ ಪ್ರಶಸ್ತಿ ಹಾಗೂ ಐ. ಆರ್. ಮಠಪತಿಯವರು ಭಾಲ್ಕಿಯ ಡಾ. ಚನ್ನಬಸವ ಪಟ್ಟೇದೇವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಸಚಿವೆ, ಎಂಎಲ್ಸಿ, ನಟಿ ಉಮಾಶ್ರೀ, ನಟಿ ಸುಧಾರಾಣಿ, ಟಿಸಿಎಸ್ ಡ್ರೀಮ್ ಹಾಲಿಡೇಸ್ ಮುಖ್ಯಸ್ಥ ಎಸ್. ಎಂ. ಸುರೇಶ್, ನಿರ್ದೇಶಕ ಸುದೇಶ್ ರಾವ್ ಮತ್ತು ಪ್ರೊ. ಸಿದ್ದು ಯಾಪಲಪರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶತಕದ ಬಳಿಕ ವಿರಾಟ್ ಕೊಹ್ಲಿ ವಿಶೇಷ ಸೆಲೆಬ್ರೇಷನ್; ರೋಹಿತ್ ಶರ್ಮಾ ಭಾವನಾತ್ಮಕ ರಿಯಾಕ್ಷನ್! ಎರಡೂ ವೈರಲ್
India Vs South Africa- ರಾ೦ಚಿ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಶತಕ ಬಾರಿಸಿದ ಬಳಿಕ ನಡೆಸಿದ ವಿಶೇಷ ಸಂಭ್ರಮಾಚರಣೆ ಮತ್ತು ಪೆವಿಲಿಯನ್ ನಲ್ಲಿದ್ದ ರೋಹಿತ್ ಶರ್ಮಾ ಅವರ ಪ್ರತಿಕ್ರಿಯೆ ಇದೀಗ ಫುಲ್ ವೈರಲ್ ಆಗಿದೆ. ವಿರಾಟ್ ಕೊಹ್ಲಿ ಅವರು ಶತಕ ಪೂರೈಸಿದ ಬಳಿಕ ಜಿಗಿದು ಮುಷ್ಟಿಯನ್ನು ಗಾಳಿಯಲ್ಲಿ ಗುದ್ದಿ ವಿಶೇಷ ಶೈಲಿಯಲ್ಲಿ ಸಂಭ್ರಮಿಸಿದರು. ಇದು ವಿರಾಟ್ ಕೊಹ್ಲಿ ಅವರ 52ನೇ ಏಕದಿನ ಶತಕವಾಗಿದ್ದು ಸಚಿನ್ ತೆಂಡೂಲ್ಕರ್ ಅವರ ವಿಶ್ವದಾಖಲೆಯನ್ನು ಮೀರಿ ನಿಂತಿದ್ದಾರೆ.
ಉಡುಪಿ | ನೆರೆಹೊರೆಯವರೊಂದಿಗಿನ ಸಂಬಂಧ ವಿಶ್ವಾಸದ ಭಾಗ : ಮುಹಮ್ಮದ್ ಕುಂಞ
ಉಡುಪಿ, ನ.30: ನೆರೆಹೊರೆಯವರೊಂದಿಗಿನ ಸಂಬಂಧ ಎಂಬುವುದು ಮುಸ್ಲಿಮರ ವಿಶ್ವಾಸದ ಭಾಗವಾಗಿದೆ. ನೆರಮನೆಯವನು ನಿಮ್ಮಿಂದ ನಿರ್ಭಯದಿಂದ ಬದುಕುತ್ತಿಲ್ಲವೆಂದಾದರೆ ನೀವು ವಿಶ್ವಾಸಿಯಾಗಲು ಸಾಧ್ಯವಿಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ ಹೇಳಿದ್ದಾರೆ. ಜಮಾಅತೆ ಇಸ್ಲಾಮಿ ಉಡುಪಿ ಜಿಲ್ಲೆ ಇದರ ವತಿಯಿಂದ ಉಡುಪಿಯ ಜಾಮೀಯ ಮಸೀದಿಯಲ್ಲಿ ರವಿವಾರ ಆಯೋಜಿಸಲಾದ ನೆರಹೊರೆ ಹಕ್ಕುಗಳು ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಮನುಷ್ಯ ಸಮಾಜಿಕ ಜೀವಿಯಾಗಿದ್ದು, ಯಾವಾಗಲೂ ಇತರರ ಮೇಲೆ ಅವಲಂಬಿತನಾಗಿದ್ದಾನೆ. ಮನುಷ್ಯನಷ್ಟು ಇತರರ ಮೇಲೆ ಅವಲಂಬಿತ ಜೀವಿ ಈ ಭೂಮಿಯಲ್ಲಿ ಇಲ್ಲ. ಬೇರೆಲ್ಲಾ ಪ್ರಾಣಿಗಳು ಹುಟ್ಟಿದ ಕೆಲವೇ ನಿಮಿಷ, ಗಂಟೆಯಲ್ಲಿ ನಡೆಯಲು, ಕೆಲಸ ಮಾಡಲು ಆರಂಭಿಸುತ್ತದೆ. ಆದರೆ ಮನುಷ್ಯ ಮಾತ್ರ ದೀರ್ಘಕಾಲದ ಪರಾವಲಂಬಿಯಾಗಿದ್ದಾನೆ. ಮನುಷ್ಯನಿಗೆ ಆ ಕಾರಣಕ್ಕಾಗಿ ಸಂಬಂಧಗಳ ತೀರಾ ಅಗತ್ಯವಿದೆ ಎಂದರು. ಸಂಬಂಧಗಳು ದುರ್ಬಲವಾಗುತ್ತಿರುವ ಕಾಲ ಇದಾಗಿದೆ. ಈ ಆಧುನಿಕ ಭೌತಿಕ ಕಾಲದಲ್ಲಿ ನಾನು, ನನ್ನದು ಎಂಬುವುದರ ಆಚೆ ಬದುಕಿಗೆ ಯಾವುದೆ ಅಜೆಂಡಾ ಇಲ್ಲದೆ ಬದುಕುತ್ತಿದ್ದೇವೆ. ಆದರೆ ಇಸ್ಲಾಮ್ ಧರ್ಮ ಎಲ್ಲ ಕಾಲದಲ್ಲೂ ನಾವು ಎಂಬುವುದನ್ನು ಕಲಿಸಿಕೊಟ್ಟಿದೆ. ಸಾಮಾಜಿಕ ಜಾಲ ತಾಣದ ಈ ಕಾಲಘಟ್ಟದಲ್ಲಿ ನಮಗೆ ಎಲ್ಲೆಲ್ಲಿ ಜನರ ಸಂಪರ್ಕವಿದೆ. ಆದರೆ ನೆರಹೊರೆಯ ಕುರಿತು ಪರಿಚಯವಿಲ್ಲದ, ಅವರ ನೋವುಗಳನ್ನು ಅರ್ಥೈಸದ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ ಎಂದು ಅವರು ತಿಳಿಸಿದರು. ಈ ಕಾಲಘಟ್ಟದಲ್ಲಿ ಮುಸ್ಲಿಂ ಸಮುದಾಯದ ಕುರಿತು ಅತೀ ಹೆಚ್ಚು ಇಸ್ಲಾಮಫೋಬಿಯಾ ಹರಡಲಾಗುತ್ತದೆ. ಸುಳ್ಳುಸುದ್ದಿಗಳು, ತಪ್ಪು ಮಾಹಿತಿಗಳನ್ನು ಹರಡಲಾಗುತ್ತದೆ. ಮುಸ್ಲಿಂ ಸಮುದಾಯದ ವರ್ಚಸ್ಸಿಗೆ ಧಕ್ಕೆ ತರಲು ಹಲವು ವರ್ಷಗಳಿಂದ ಕೆಲವರು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದ್ದಾರೆ. ಅದರ ಹೊರತಾಗಿಯೂ ಇಂದು ಕೂಡ ಈ ದೇಶದ ಬಹುಸಂಖ್ಯಾತ ಜನ ಮುಸ್ಲಿಮರನ್ನು ಗೌರವಿಸುತ್ತಾರೆ, ಪ್ರೀತಿಸುತ್ತಾರೆ. ಇದಕ್ಕೆ ಮುಖ್ಯ ಕಾರಣ ಮುಸ್ಲಿಮರಲ್ಲಿನ ಸಂಸ್ಕಾರ. ಇಸ್ಲಾಮಿನ ಉದಾತ್ತವಾದ ಮಾನವೀಯ ಮೌಲ್ಯಗಳು ಎಂದರು. ಎಸ್ಐಓನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಅಶ್ಫಾಕ್ ಶರೀಫ್ ಮಂಗಳೂರು ಮಾತನಾಡಿದರು. ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ರಿಯಾಝ್ ಅಹ್ಮದ್, ನಿಹಾಲ್ ಕಿದಿಯೂರು ಉಪಸ್ಥಿತರಿದ್ದರು. ನಿಸಾರ್ ಅಹ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಆಯಾನ್ ಮಲ್ಪೆ ಕಾರ್ಯಕ್ರಮ ನಿರೂಪಿಸಿದರು.
ದಿತ್ವಾ ಚಂಡಮಾರುತ | ತಮಿಳುನಾಡಿನಲ್ಲಿ ಭಾರೀ ಮಳೆಗೆ ಮೂವರ ಮೃತ್ಯು; 234 ಗುಡಿಸಲುಗಳಿಗೆ ಹಾನಿ
ಚೆನ್ನೈ,ನ.30: ತಮಿಳುನಾಡಿನಲ್ಲಿ ದಿತ್ವಾ ಚಂಡಮಾರುತದಿಂದಾಗಿ ಉಂಟಾಗಿರುವ ಮಳೆ ಸಂಬಂಧಿತ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ರಾಜ್ಯದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್ಎಸ್ಆರ್ ರಾಮಚಂದ್ರನ್ ರವಿವಾರ ತಿಳಿಸಿದ್ದಾರೆ. ರಾಜ್ಯದಲ್ಲಿ ನಾಗಪಟ್ಟಣಂ,ತಿರುವರೂರ್ ಮತ್ತು ಮೈಲಾದುತುರೈ ಸೇರಿದಂತೆ ಸುಮಾರು 56,000 ಹೆಕ್ಟೇರ್ ಕೃಷಿ ಭೂಮಿ ಜಲಾವೃತಗೊಂಡಿದೆ ಎಂದರು. ದಿವಾ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಸನ್ನದ್ಧತೆಯ ಕುರಿತು ವಿವರಗಳನ್ನು ನೀಡಿದ ಸಚಿವರು, ಪುದುಕೊಟ್ಟೈ, ಮೈಲಾದುತುರೈ,ರಾಮನಾಥಪುರಂ ಸೇರಿದಂತೆ ಪೀಡಿತ ಜಿಲ್ಲೆಗಳಲ್ಲಿ ಒಟ್ಟು 38 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಇವು 2,391 ಜನರಿಗೆ ಆಶ್ರಯ ಒದಗಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ತಿಳಿಸಿದರು. ‘ಚಂಡಮಾರುತದ ಸ್ವರೂಪ ಏನೇ ಆಗಿರಲಿ,ಅದನ್ನೆದುರಿಸಲು ನಾವು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಶನಿವಾರ ಸಂಜೆಯಿಂದ ಭಾರೀ ಮಳೆಯಿಂದಾಗಿ ಮೂವರು ವ್ಯಕ್ತಿಗಳು ಮತ್ತು 149 ಜಾನುವಾರುಗಳು ಮೃತಪಟ್ಟಿದ್ದು, 234 ಗುಡಿಸಲುಗಳಿಗೆ ಹಾನಿಯಾಗಿದೆ. 38 ವಿಪತ್ತು ಪ್ರತಿಕ್ರಿಯಾ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಮಳೆ ನಿಂತ ಬಳಿಕ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪರಿಹಾರ ಕ್ರಮಗಳನ್ನು ನಿರ್ಧರಿಸಲಿದ್ದಾರೆ ಎಂದರು. ದಿತ್ವಾ ಚಂಡಮಾರುತವು ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಉತ್ತರದತ್ತ ಸಾಗುತ್ತಿದ್ದು, ಸ್ಥಿರವಾಗಿ ಸಮುದ್ರ ತೀರಕ್ಕೆ ಹತ್ತಿರವಾಗುತ್ತಿರುವುದರಿಂದ ರವಿವಾರ ಬೆಳಿಗ್ಗೆ ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ತಮಿಳುನಾಡು, ಪುದುಚೇರಿ ಮತ್ತು ನೆರೆಯ ದಕ್ಷಿಣ ಆಂಧ್ರಪ್ರದೇಶಗಳಲ್ಲಿ ರೆಡ್ ಅಲರ್ಟ್ ಹೊರಡಿಸಿತ್ತು. ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ಕರಾವಳಿಗೆ ಸಮಾನಾಂತರವಾಗಿ ನೇರವಾಗಿ ಉತ್ತರ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಉಡುಪಿ | ಕಲ್ಸಂಕ ಜಂಕ್ಷನ್ನಲ್ಲಿ ಟ್ರಾಫಿಕ್ ಸಿಗ್ನಲ್ಲೈಟ್ ಕಾರ್ಯಾರಂಭ
ಎಸ್ಪಿ ಸಹಿತ ಅಧಿಕಾರಿಗಳಿಂದ ಪರಿಶೀಲನೆ : ಸಂಚಾರ ಸುಧಾರಣೆಗೆ ಕ್ರಮ
ಪ್ರಧಾನಿ ಮೋದಿ ಎಂದಾದರೂ ರಾಷ್ಟ್ರ ಧ್ವಜಾರೋಹಣ ಮಾಡುವಾಗ ಭಾವುಕರಾಗಿದ್ದಾರಾ?: ನಟ ಪ್ರಕಾಶ್ ರಾಜ್ ಪ್ರಶ್ನೆ
ಕಲಬುರಗಿ: ಇತ್ತೀಚೆಗೆ ಧಾರ್ಮಿಕ ಬಾವುಟ ಏರಿಸುವಾಗ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ ಎಂದಾದರೂ ರಾಷ್ಟ್ರ ಧ್ವಜಾರೋಹಣ ಮಾಡುವಾಗ ಭಾವುಕರಾಗಿದ್ದಾರಾ? ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರಶ್ನಿಸಿದ್ದಾರೆ. ನಗರದ ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ರವಿವಾರ ಈದಿನ.ಕಾಮ್ ಆಯೋಜಿಸಿದ ಎರಡನೆಯ ಓದುಗರ ಸಮಾವೇಶ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಪ್ರಕಾಶ್ ರಾಜ್, ದೇಶದಲ್ಲಿ ಸುಳ್ಳುಗಳ ಮಹಾಪೂರವೇ ನಡೆಯುತ್ತಿದೆ. ಮಾಧ್ಯಮ ಎಂದರೆ ಸುಳ್ಳುಗಳಾಗಿವೆ. ಮಾತೆತ್ತಿದರೆ ದೇಶಭಕ್ತಿ ಎಂದು ಹೇಳಿಕೊಂಡು ತಿರುಗುವ ಪ್ರಧಾನಿಗಳು ಕೂಡ ಸುಳ್ಳಾಗಿದ್ದಾರೆ ಎಂದು ಹೇಳಿದರು. ನ.25ರಂದು ಆರೆಸ್ಸೆಸ್ ನವರ ಜೊತೆಗಿದ್ದು, ಧ್ವಜಾರೋಹಣ ಮಾಡುವಾಗ ಪ್ರಧಾನಿಗಳ ಕೈಗಳು ನಡುಗುತ್ತಿದ್ದವು. ಇದನ್ನು ಗಮನಿಸಿದ ನನ್ನ ಗೆಳೆಯರೊಬ್ಬರು, ನಿಮ್ಮ ಗೆಳೆಯರಿಗೆ ಆರೋಗ್ಯ ಸರಿಯಿಲ್ಲ, ಒಂದು ಟ್ವೀಟ್ ಆದರೂ ಮಾಡಿ ಎಂದು ಸಲಹೆ ನೀಡಿದ್ದರು. ನಾನು ಅದನ್ನು ನೋಡಿ ಪ್ರಧಾನಿಗಳಿಗೆ ದೇವರ ಮೇಲೆರುವ ನಂಬಿಕೆ ಎಂತಹದ್ದು ಎಂದು ನಾನು ಭಾವಿಸಿದೆ. ಭಾರತದ ಧ್ವಜದ ಮೇಲೆ ಇಷ್ಟೊಂದು ಭಾವುಕತೆ ಎಂದಾದರೂ ಕಂಡಿದ್ದೇನಾ ಎಂದು ಯೋಚಿಸಿದ್ದೆ ಎಂದು ಪ್ರಕಾಶ್ ರಾಜ್ ಹೇಳಿದರು. ಈ ವೇಳೆ ಆಳಂದ ಶಾಸಕ ಬಿ.ಆರ್.ಪಾಟೀಲ್, ಹೋರಾಟಗಾರ ಮರಿಯಪ್ಪ ಹಳ್ಳಿ, ಡಾ.ಫಾರೂಕ್ ಮನೂರ್, ಆರ್.ಕೆ.ಹುಡಗಿ, ಲಕ್ಷ್ಮಣ್ ದಸ್ತಿ, ಅರ್ಜುನ್ ಭದ್ರೆ, ಡಿ.ಉಮಾಪತಿ, ಡಾ.ರಝಾಕ್ ಉಸ್ತಾದ್, ನಾಗೇಶ್ ಹರಳಯ್ಯ, ಭೀಮರೆಡ್ಡಿ ಸಿಂಧನಕೇರಾ, ಶಿವಾನಂದ ಪಾಟೀಲ್, ಅಬ್ದುಲ್ ಖಾದರ್, ಮಹಾಂತೇಶ್ ಕೌಲಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
A320 ವರ್ಗದ 323 ವಿಮಾನಗಳಿಗೆ ಸಾಫ್ಟ್ವೇರ್ ನವೀಕರಣ ಪೂರ್ಣಗೊಳಿಸಿದ ಭಾರತೀಯ ವಿಮಾನಯಾನಗಳು
ಹೊಸದಿಲ್ಲಿ,ನ.30: ಹಾರಾಟ ನಿಯಂತ್ರಣಕ್ಕೆ ಸಂಬಂಧಿಸಿದ ಸಂಭಾವ್ಯ ಸಮಸ್ಯೆಯನ್ನು ಬಗೆಹರಿಸಲು ಭಾರತೀಯ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯಲ್ಲಿರುವ ಏರ್ಬಸ್ A320 ವರ್ಗದ 323 ವಿಮಾನಗಳ ಸಾಫ್ಟ್ವೇರ್ ನವೀಕರಣಗಳನ್ನು ಪೂರ್ಣಗೊಳಿಸಿವೆ ಎಂದು ನಾಗರಿಕ ವಾಯುಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ರವಿವಾರ ತಿಳಿಸಿದೆ. ತೀವ್ರ ಸೌರ ವಿಕಿರಣವು ಗಮನಾರ್ಹ ಸಂಖ್ಯೆಯ A320 ವಿಮಾನಗಳಲ್ಲಿ ಹಾರಾಟ ನಿಯಂತ್ರಣಗಳ ಕಾರ್ಯ ನಿರ್ವಹಣೆಗೆ ನಿರ್ಣಾಯಕವಾದ ಡೇಟಾವನ್ನು ದೋಷಯುಕ್ತಗೊಳಿಸಬಹುದು ಮತ್ತು ಕಾರ್ಯಾಚರಣೆಗಳಿಗೆ ವ್ಯತ್ಯಯಗಳಿಗೆ ಕಾರಣವಾಬಲ್ಲ ಸಮಸ್ಯೆಯನ್ನು ಬಗೆಹರಿಸಲು ಸಾಫ್ಟ್ವೇರ್ ಬದಲಾವಣೆಗಳು ಅಗತ್ಯ ಎಂದು ಏರ್ಬಸ್ ಕಂಪನಿಯು ಶುಕ್ರವಾರ ತಿಳಿಸಿತ್ತು. ಸಾಫ್ಟ್ವೇರ್ ನವೀಕರಣಕ್ಕಾಗಿ ಆರಂಭದಲ್ಲಿ ಭಾರತೀಯ ವಿಮಾನಯಾನ ಸಂಸ್ಥೆಗಳಾದ ಇಂಡಿಗೋ, ಏರ್ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ ಹೊಂದಿರುವ ಒಟ್ಟು 338 A320 ವಿಮಾನಗಳನ್ನು ಗುರುತಿಸಲಾಗಿತ್ತು. ಈ ಪೈಕಿ 323 ವಿಮಾನಗಳು ಕಾರ್ಯಾಚರಣೆಯಲ್ಲಿದ್ದರೆ ಆರು ವಿಮಾನಗಳು ಸಮಗ್ರ ತಪಾಸಣೆಯಡಿ ಇವೆ. ಏರ್ ಇಂಡಿಯಾದ ಬಳಿಯಿರುವ ವಿಮಾನಗಳ ಪೈಕಿ ಒಂಭತ್ತು ವಿಮಾನಗಳಿಗೆ ಸಾಫ್ಟ್ವೇರ್ ನವೀಕರಣದ ಅಗತ್ಯವಿಲ್ಲ ಎಂದು ನಂತರ ದೃಢಪಟ್ಟಿತ್ತು ಎಂದು ಹಿರಿಯ ಡಿಜಿಸಿಎ ಅಧಿಕಾರಿಯೋರ್ವರು ತಿಳಿಸಿದರು. ಇಂಡಿಗೋ ಕಾರ್ಯಾಚರಣೆಯಲ್ಲಿರುವ ತನ್ನ ಎಲ್ಲ 200 A320 ವಿಮಾನಗಳ ಸಾಫ್ಟ್ವೇರ್ ನವೀಕರಣವನ್ನು ಪೂರ್ಣಗೊಳಿಸಿದೆ. ಏರ್ ಇಂಡಿಯಾ 113 ವಿಮಾನಗಳನ್ನು ಹೊಂದಿದ್ದು,ಈ ಪೈಕಿ ಕಾರ್ಯಾಚರಣೆಯಲ್ಲಿರುವ 100 ವಿಮಾನಗಳಿಗೆ ಸಾಫ್ಟ್ವೇರ್ ನವೀಕರಣವನ್ನು ಮಾಡಲಾಗಿದೆ. ನಾಲ್ಕು ವಿಮಾನಗಳು ಸಮಗ್ರ ತಪಾಸಣೆಯಲ್ಲಿವೆ ಮತ್ತು ಒಂಭತ್ತು ವಿಮಾನಗಳಿಗೆ ಯಾವುದೇ ಮಾರ್ಪಾಟಿನ ಅಗತ್ಯವಿಲ್ಲ ಎಂದು ಅಧಿಕಾರಿ ತಿಳಿಸಿದರು. ಏರ್ ಇಂಡಿಯಾ ಎಕ್ಸ್ಪ್ರೆಸ್ ನ 23 A320 ವಿಮಾನಗಳ ಸಾಫ್ಟ್ವೇರ್ ನವೀಕರಣ ಪೂರ್ಣಗೊಂಡಿದ್ದು, ಇಂತಹ ಎರಡು ವಿಮಾನಗಳು ಮರು ವಿತರಣೆಗಾಗಿ ನಿರ್ವಹಣೆಯಲ್ಲಿವೆ. ಬಾಧಿತ ವಿಮಾನಗಳಲ್ಲಿಯ ಎಲಿವೇಟರ್ ಆ್ಯಂಡ್ ಏಲರಾನ್ ಕಂಪ್ಯೂಟರ್ ಅಥವಾ ಇಎಲ್ಎಸಿ ಎಂದು ಕರೆಯಲ್ಪಡುವ ಹಾರಾಟ ನಿಯಂತ್ರಣ ವ್ಯವಸ್ಥೆಯನ್ನು ಬದಲಿಸುವಂತೆ ಅಥವಾ ಮಾರ್ಪಡಿಸುವಂತೆ ಏರ್ಬಸ್ ವಿಶ್ವಾದ್ಯಂತ ವಾಯುಯಾನ ಸಂಸ್ಥೆಗಳಿಗೆ ಸೂಚಿಸಿತ್ತು. ಯುರೋಪಿಯನ್ ಯೂನಿಯನ್ ಏವಿಯೇಶನ್ ಸೇಫ್ಟಿ ಏಜೆನ್ಸಿಯು (ಇಎಎಸ್ಎ) ವಿಮಾನಗಳು ಮುಂದಿನ ಹಾರಾಟವನ್ನು ನಡೆಸುವ ಮುನ್ನ ದೋಷವನ್ನು ನಿವಾರಿಸುವುದನ್ನು ಅಥವಾ ಸಾಫ್ಟ್ವೇರ್ನ್ನು ಮೇಲ್ದರ್ಜೆಗೇರಿಸುವುದನ್ನು ಕಡ್ಡಾಯಗೊಳಿಸಿ ಶುಕ್ರವಾರ ತಡರಾತ್ರಿ ತುರ್ತು ನಿರ್ದೇಶವನ್ನು ಹೊರಡಿಸಿತ್ತು.
Ukraine: ರಷ್ಯಾ ಸೇನಾ ದಾಳಿಯಲ್ಲಿ 3 ಉಕ್ರೇನ್ ನಾಗರಿಕರ ಸಾವು ಆರೋಪ
ರಷ್ಯಾ ಸೇನೆಯಿಂದ ಉಕ್ರೇನ್ ವಿರುದ್ಧ ಭಾರಿ ದೊಡ್ಡ ಮಟ್ಟದಲ್ಲಿ ದಾಳಿ ಶುರುವಾಗಿದ್ದು, ಮತ್ತೆ ಮತ್ತೆ ನಾಗರಿಕರು ವಾಸ ಇರುವ ಜಾಗಗಳನ್ನೇ ಗುರಿಯಾಗಿಸಿ ರಷ್ಯಾ ದಾಳಿ ಮಾಡುತ್ತಿದೆ ಎನ್ನುವ ಆರೋಪವನ್ನ ಉಕ್ರೇನ್ ಮಾಡುತ್ತಿದೆ. ಕಳೆದ 4 ದಿನಗಳಿಂದ ತನ್ನ ದಾಳಿಯನ್ನು ಮತ್ತಷ್ಟು ಘೋರ ರೀತಿಯಲ್ಲಿ ಮುಂದುವರಿಸಿರುವ ರಷ್ಯಾ ಮಿಲಿಟರಿ, ಉಕ್ರೇನ್ ಸೇನೆಗೆ ಸುಧಾರಿಸಿಕೊಳ್ಳಲು ಕೂಡ ಸಮಯ ಕೊಡುತ್ತಿಲ್ಲ. ಆ
ಯಾದಗಿರಿ| ಚಿರತೆಯ ದಾಳಿಗೆ ಆಕಳು, ಮೇಕೆ ಬಲಿ : ಆತಂಕದಲ್ಲಿ ಗ್ರಾಮಸ್ಥರು
ಯಾದಗಿರಿ: ತಾಲೂಕಿನ ಅಲ್ಲಿಪೂರದಲ್ಲಿ ಚಿರತೆ ದಾಳಿಗೆ ಶರಣಪ್ಪ ತಂ.ಸಾಬಣ್ಣ ಬಡಿಗೇರ ಅವರಿಗೆ ಸೇರಿದ ಆಕಳು ಮತ್ತು ಮೇಕೆಗಳು ಬಲಿಯಾಗಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ, ಮಸಕನಹಳ್ಳಿ ಮತ್ತು ಮುಂಡರಗಿಯಲ್ಲೂ ಇದೇ ರೀತಿಯ ಘಟನೆಗಳು ನಡೆದಿದ್ದರೂ ಅರಣ್ಯ ಇಲಾಖೆ ಈ ಕಡೆಗೆ ಗಮನ ಹರಿಸುತ್ತಿಲ್ಲ. ಆದ್ದರಿಂದ ಡಿ.3ರಂದು ಯಾದಗಿರಿ ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿಗೆ ರೈತರ ನೇತೃತ್ವದಲ್ಲಿ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದರು. ಈ ಬಗ್ಗೆ ಗ್ರಾಮಸ್ಥರು ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಯಾದಗಿರಿ–ಕಲಬುರಗಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಈ ಸಂದರ್ಭದಲ್ಲಿ ಪವನ, ವಿಜಯ, ರಾಜು, ಚಂದ್ರು, ಕಾಶಪ್ಪ ಬಡಿಗೇರ, ಹಣಮಂತ ಹುಲೇರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಉಡುಪಿ | ಕೊಳಂಬೆ ಮದೀನ ಮಸೀದಿ ಅಧ್ಯಕ್ಷರಾಗಿ ಫಿರೋಝ್ ಅಹ್ಮದ್ ಆಯ್ಕೆ
ಉಡುಪಿ, ನ.30: ಉಡುಪಿ ಶಾಂತಿನಗರ ಕೊಳಂಬೆಯ ಮದೀನ ಮಸೀದಿಯ ಆಡಳಿತ ಕಮಿಟಿಯ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಸ್.ಎ.ಶಮೀಮ್, ಅಧ್ಯಕ್ಷರಾಗಿ ಫಿರೋಝ್ ಅಹ್ಮದ್, ಉಪಾಧ್ಯಕ್ಷರಾಗಿ ಶಮೂನ್ ಅಹ್ಮದ್, ಕಾರ್ಯದರ್ಶಿಯಾಗಿ ಮುಹಮ್ಮದ್ ಶಫೀರ್, ಜತೆ ಕಾರ್ಯದರ್ಶಿಯಾಗಿ ಝಕೀರ್ ಹುಸೇನ್, ಕೋಶಾಧಿಕಾರಿಯಾಗಿ ಅಲ್ಫಾಝ್ ಅಬ್ದುಲ್ ಘನಿ, ಜತೆ ಕೋಶಾಧಿಕಾರಿಯಾಗಿ ಸಫ್ವಾನ್ ಅಹ್ಮದ್ ಆಯ್ಕೆಯಾದರು. ಸದಸ್ಯರುಗಳಾಗಿ ಯಾಸೀನ್ ಚಾಂದ್ ಸಾಹೇಬ್, ರೆಹಮತ್ ಅಬ್ದುಲ್ ಖಾದರ್, ಸಾಧಿಕ್ ಯುಸೂಫ್, ಇರ್ಷಾದ್ ಬಾಬುಲಾಲ್, ನಯಾಝ್ ಅನ್ವರ್ ಅವರನ್ನು ಆಯ್ಕೆ ಮಾಡಲಾಯಿತು.
ತಮಿಳುನಾಡಿನಲ್ಲಿ ಎರಡು ಬಸ್ಗಳ ನಡುವೆ ಡಿಕ್ಕಿ; 10 ಜನರು ಸಾವು, 20ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಎರಡು ಸರ್ಕಾರಿ ಬಸ್ಗಳ ನಡುವೆ ಡಿಕ್ಕಿಯಾದ ಪರಿಣಾಮ ಹತ್ತು ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುಪತ್ತೂರು ಪ್ರದೇಶದ ಪಿಳ್ಳೈಯಾರ್ಪಟ್ಟಿಯಿಂದ ಹತ್ತು ಕಿಲೋಮೀಟರ್ ದೂರದಲ್ಲಿ ಈ ಪ್ರಕರಣ ನಡೆದಿದೆ.
ವಿಜಯನಗರ| ಉಚ್ಚಂಗಿದುರ್ಗ ಕೋಟೆ ಕ್ಯಾಂಪ್ ಬಳಿ ಪುರಾತನ ಕಾಲದ ಬಾವಿ ಪತ್ತೆ
ಹರಪನಹಳ್ಳಿ: ತಾಲೂಕಿನ ಐತಿಹಾಸಿಕ ಪ್ರಸಿದ್ಧ ಉಚ್ಚಂಗಿದುರ್ಗ ಕೋಟೆ ಕ್ಯಾಂಪ್ ಬಳಿ ಪುರಾತನ ಕಾಲದ ಬಾವಿ ಪತ್ತೆಯಾಗಿದೆ. ಗ್ವಾಲಿಯರ್ ಖ್ಯಾತಿಯ ಕೋಟೆಗೆ ತೆರಳುವ ಮಾರ್ಗದ ದುರಸ್ತಿ ಕಾರ್ಯ ನಡೆಸುವಾಗ ಏಕಾಏಕಿ ವಾಹನದ ಚಕ್ರಗಳು ಕುಸಿದಿದೆ. ಸ್ಥಳದಲ್ಲಿ ಹೆಚ್ಚಿನ ಪರಿಶೀಲನೆ ನಡೆಸಿದಾಗ ಪುರಾತನ ರಸ್ತೆಯಡಿ ಪುರಾತನ ಕಾಲದ ಬಾವಿ ಪತ್ತೆಯಾಗಿದೆ. ಬಾವಿಯು 20 ಅಡಿಯಷ್ಟು ಅಳವಾಗಿದ್ದು, ಬಾವಿಗೆ ಅಡ್ಡವಾಗಿ ಕಲ್ಲುಗಳು ಇವೆ. ಮೇಲ್ನೋಟಕ್ಕೆ ಬಾವಿಯಂತೆ ಗೋಚರವಾಗುತ್ತಿದ್ದರೂ ಅಗೆವು ಅಥವಾ ಟಂಕಸಾಲೆಯಂತೆ ಕಾಣುತ್ತಿದೆ. ಹಿಂದೆ ಕೋಟೆ ಬೀದಿಯಲ್ಲಿ ಗ್ರಾಮವೊಂದಿತ್ತು. ರಾಜರು ಆಳ್ವಿಕೆ ಕಾಲದಲ್ಲಿ ಪ್ರತಿ ಸಮುದಾಯಕ್ಕೊಂದು ಕುಡಿಯುವ ನೀರಿನ ಬಾವಿ ಕೊರೆಯಲಾಗಿತ್ತು. ಪ್ರಸ್ತುತ ಒಂದೆರಡು ಬಾವಿಯನ್ನು ಹೊರತು ಪಡಿಸಿದರೆ, ಹಲವು ಬಾವಿಗಳು ಮುಚ್ಚಲ್ಪಟ್ಟಿವೆ. ಅವುಗಳ ಉತ್ಖನನದ ಕುರಿತು ಅಧ್ಯಯನ ನಡೆಯಬೇಕು' ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಕೋಟೆಯ ಸುತ್ತಲೂ ಹಲವು ದೇವಾಲಯಗಳು, ಬಾವಿಗಳು ಪುರಾತತ್ವ ಇಲಾಖೆ ನಿರ್ಲಕ್ಷ್ಯಕ್ಕೆ ಒಳಗಾಗಿ ನಶಿಸಿಹೋಗಿವೆ. ಹಿರಿಯರು ನೀಡಿದ ಬಳುವಳಿಯನ್ನು ಪ್ರತಿಯೊಬ್ಬರೂ ರಕ್ಷಣೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಸಮಗ್ರ ಉತ್ಖನನ ಕೈಗೊಳ್ಳಬೇಕು ಎಂದು ಸ್ಥಳೀಯ ಮುಖಂಡ ಸುರೇಶ್ ಒತ್ತಾಯಿಸಿದರು.
ಮನ್ ಕಿ ಬಾತ್ನಲ್ಲಿ ʼಮಧು ಕೀ ಬಾತ್ʼ ಮಾಡಿದ ಪ್ರಧಾನಿ ಮೋದಿ; ಪುತ್ತೂರಿನ ‘ಗ್ರಾಮಜನ್ಯ’ ಜೇನುತುಪ್ಪಕ್ಕೆ ಭೇಷ್
ತುಮಕೂರಿನ ಶಿವಗಂಗಾ ಕಲಾಂಜಿಯಾ ರೈತ ಸಂಘಟನೆಯ ಕಾರ್ಯಕ್ಕೂ ಮೆಚ್ಚುಗೆ
ಶಾಸಕ ರಾಹುಲ್ ಮಾಂಕೂಟತ್ತಿಲ್ ವಿವಾದದಿಂದ ಅಂತರ ಕಾಯ್ದುಕೊಂಡ ಕೇರಳ ಕಾಂಗ್ರೆಸ್
ತಿರುವನಂತಪುರಂ: ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕ್ರಮ ಎದುರಿಸುತ್ತಿರುವ, ಸದ್ಯ ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡಿರುವ ಶಾಸಕ ರಾಹುಲ್ ಮಾಂಕೂಟತ್ತಿಲ್ ರನ್ನು ಸುತ್ತುವರಿದಿರುವ ವಿವಾದದಿಂದ ಕೇರಳ ಕಾಂಗ್ರೆಸ್ ಘಟಕ ಅಂತರ ಕಾಯ್ದುಕೊಂಡಿದೆ. ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಈಗಾಗಲೇ ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಕೇರಳ ಕಾಂಗ್ರೆಸ್ ಘಟಕ ಸ್ಪಷ್ಟಪಡಿಸಿದೆ. ನಾವು ಶಾಸಕ ರಾಹುಲ್ ಮಾಂಕೂಟತ್ತಿಲ್ ವಿವಾದದಿಂದ ಪಲಾಯನ ಮಾಡಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದರೆ, ರಾಹುಲ್ ಮಾಂಕೂಟತ್ತಿಲ್ ಈಗಾಗಲೇ ಪಕ್ಷದಿಂದ ಅಮಾನತುಗೊಂಡಿರುವುದರಿಂದ, ಅವರ ಚಟುವಟಿಕೆಗಳ ಕುರಿತು ಹೇಳಲೇನೂ ಉಳಿದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೆ.ಮುರಳೀಧರನ್ ಸ್ಪಷ್ಟಪಡಿಸಿದ್ದಾರೆ. ಆದರೆ, ಶಾಸಕ ರಾಹುಲ್ ಮಾಂಕೂಟತ್ತಿಲ್ ವಿವಾದದ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಸ್ಪಷ್ಟತೆಯಿಲ್ಲ ಎಂದು ಆರೋಪಿಸಿರುವ ಸಿಪಿಎಂನ ಹಿರಿಯ ನಾಯಕ ಹಾಗೂ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ, ರಾಹುಲ್ ಮಾಂಕೂಟತ್ತಿಲ್ ರನ್ನು ಪಕ್ಷದಿಂದ ಉಚ್ಚಾಟಿಸಿದರೆ, ಪಕ್ಷದ ವರ್ಚಸ್ಸು ಕುಂದಬಹುದು ಎಂಬ ಕಾರಣಕ್ಕೆ ಪ್ರತಿ ವಿಷಯದ ಕುರಿತು ಧ್ವನಿ ಎತ್ತುವ ಕಾಂಗ್ರೆಸ್ ನಾಯಕರು, ಅವರನ್ನು ಪಕ್ಷದಿಂದ ಉಚ್ಚಾಟಿಸುವ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ”, ಎಂದು ದೂರಿದ್ದಾರೆ. ಇದಕ್ಕೂ ಮುನ್ನ ಶಾಸಕ ರಾಹುಲ್ ಮಾಂಕೂಟತ್ತಿಲ್ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪರಿಣಾಮ, ನಾನು ಬಲವಂತವಾಗಿ ಗರ್ಭಪಾತ ಮಾಡಿಸಿಕೊಳ್ಳಬೇಕಾಯಿತು ಎಂದು ಶುಕ್ರವಾರ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರ | ಜಾತಿ ಕಾರಣಕ್ಕಾಗಿ ತನ್ನ ಪೋಷಕರಿಂದಲೇ ಹತ್ಯೆಯಾದ ಪ್ರಿಯಕರನ ಮೃತದೇಹವನ್ನೇ ವರಿಸಿದ ಯುವತಿ!
ನಮ್ಮ ಪ್ರೀತಿ ಜೀವಂತವಾಗಿದೆ ಎಂದ ಪ್ರೇಯಸಿ
ಮಂಗಳೂರು | ಉರ್ದು ಭಾರತದ ನೆಲದ ಭಾಷೆ : ಫಾತಿಮಾಬಿ
ಮಂಗಳೂರು, ನ.30: ಉರ್ದು ಭಾಷೆ ಭಾರತದಲ್ಲೇ ಹುಟ್ಟಿ, ಬೆಳೆದು, ಶಿಖರಕ್ಕೇರಿದ್ದು, ಅದು ಗಂಗೆ- ಯಮುನೆಯ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿದೆ. ಉರ್ದು ಭಾಷಿಗರು ಇದರ ಬಗ್ಗೆ ಹೆಮ್ಮೆಪಡಬೇಕು ಎಂದು ಮಂಗಳೂರು ಡಯೆಟ್ನ ಹಿರಿಯ ಪ್ರಾಧ್ಯಾಪಕಿ ಫಾತಿಮಾಬಿ ಟಿ.ಐ. ಹೇಳಿದ್ದಾರೆ. ಬೋಳಾರದ ಶಾದಿ ಮಹಲ್ನಲ್ಲಿ ರವಿವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಅಂಜುಮನ್ ತರಖಿ-ಎ- ಉರ್ದು ಮತ್ತು ಅರೇಬಿಕ್ ಸಂಸ್ಥೆ ಆಯೋಜಿಸಿದ್ದ ಉರ್ದು ಚರ್ಚಾ ಚಾಂಪಿಯನ್ಶಿಪ್ ಟ್ರೋಫಿ- 2025ರ ಬಹುಮಾನ ವಿತರಣೆ ನೆರವೇರಿಸಿ ಅವರು ಮಾತನಾಡಿದರು. ಉರ್ದು ದೇಶದ ಮಣ್ಣಿನ ಭಾಷೆಯಾಗಿದ್ದು, ಅದರಲ್ಲಿ ಸಿಹಿತನ, ತಾಜಾತನ, ಸಂಸ್ಕೃತಿ, ಸಂಸ್ಕಾರದ ಸಮ್ಮಿಲನ ಹಾಗೂ ಹೃದಯವನ್ನು ತಟ್ಟುವ ಶಕ್ತಿ ಇದೆ. ಧಾರ್ಮಿಕ ವಿದ್ವಾಂಸರು, ಕವಿಗಳು, ಸಾಹಿತಿಗಳು ಉರ್ದುವನ್ನು ಬೆಳೆಸಿದ್ದಾರೆ. ಇದು ಇಡೀ ಭಾರತೀಯರಿಗೆ ಸೇರಿದ ಭಾಷೆಯಾಗಿದ್ದು, ಕೇವಲ ಒಂದು ಧರ್ಮದ ಜತೆ ಜೋಡಿಸುವುದು ದುರಂತ ಎಂದು ವಿಷಾದಿಸಿದರು. ಮಾತೃ ಭಾಷೆಯಲ್ಲೇ ಶಿಕ್ಷಣ ಕಲಿಯಬೇಕು ಎಂಬುದು ನಿಯಮ. ಅದರಂತೆ ಪೋಷಕರು ತಮ್ಮ ಮಕ್ಕಳಿಗೆ ಉರ್ದು ಕಲಿಸಬೇಕು. ಮಕ್ಕಳು ಸ್ವರ್ಗದ ಹೂಗಳಂತೆ. ಆ ಹೂಗಳು ಬಾಡದಂತೆ, ಅವರ ವ್ಯಕ್ತಿತ್ವ ರೂಪಿಸಿ ಅರಳಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರದ್ದು ಎಂದು ಅವರು ಹೇಳಿದರು. ಶಿವಮೊಗ್ಗ ಡಿಡಿಪಿಐ ಕಚೇರಿ ಸಿಇಒ ಡಾ.ಝಾಕಿರ್ ಮಾತನಾಡಿ, ರಾಜ್ಯದಲ್ಲಿ ಕನ್ನಡದ ಜತೆ ತಮಿಳು, ತೆಲುಗು ಶಾಲೆಗಳ ಸಂಖ್ಯೆ ಹೆಚ್ಚುತ್ತಿದೆ. ಬಹುಭಾಷೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಶಾಲೆಗಳಲ್ಲಿ ಮಾತ್ರ ಉರ್ದು ಉಳಿದಿದೆ ಎನ್ನುವುದು ಬೇಸರದ ಸಂಗತಿ. ಅರೇಬಿಕ್ ಓದುವ ಮಕ್ಕಳು ಉರ್ದು ಓದಬಲ್ಲರು. ಸರಕಾರಿ ಶಾಲೆಗಳ 1-5 ತರಗತಿಯಲ್ಲಿ ಉರ್ದು ಕಲಿಸಲು ಅನುಮತಿ ಪಡೆಯುವ ಅಗತ್ಯವಿಲ್ಲ. ಇಂಗ್ಲಿಷ್, ಕನ್ನಡ ಅಥವಾ ಉರ್ದು ಆಯ್ಕೆಗೆ ಅವಕಾಶವಿದೆ ಎಂದರು. ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಸಲಾಮ್ ಮದನಿ ಅಧ್ಯಕ್ಷತೆ ವಹಿಸಿದ್ದರು. ಶಾದಿ ಮಹಲ್ ಉಪಾಧ್ಯಕ್ಷ ಎಸ್.ಎ.ಖಲೀಲ್ ಉಪಸ್ಥಿತರಿದ್ದರು. ಶಿಕ್ಷಕರಾದ ಮುಹಮ್ಮದ್ ಸಲೀಂ ಮತ್ತು ಮುಹಮ್ಮದ್ ಝಿಯಾವುಲ್ಲಾ ತೀರ್ಪುಗಾರರಾಗಿದ್ದರು. ಸಂಸ್ಥೆಯ ಸದಸ್ಯ ಆಬಿದ್ ಅಸ್ಗರ್ ಸ್ವಾಗತಿಸಿದರು. ಕಾರ್ಯದರ್ಶಿ ಮಾಸ್ಟರ್ ಮುಹಮ್ಮದ್ ಹನೀಫ್ ಪ್ರಾಸ್ತಾವಿಕ ಮಾತನಾಡಿದರು. ಇಕ್ರಾಮುದ್ದೀನ್ ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ಖಾದರ್ ವಂದಿಸಿದರು.
ತಿರುಪತಿ ಸೇರಿ 2 ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಕರ್ನಾಟಕದ ಭಕ್ತರಿಗೆ ಸೌಲಭ್ಯ; ಆಂಧ್ರ ಪ್ರದೇಶ ಸರ್ಕಾರ ಅಭಯ
ಆಂಧ್ರಪ್ರದೇಶ ರಾಜ್ಯವು ಕರ್ನಾಟಕಕ್ಕೆ ಹಲವು ಸೌಲಭ್ಯಗಳನ್ನು ಕಲ್ಪಿಸಲು ನಿರ್ಧರಿಸಿದೆ. ತಿರುಮಲದಲ್ಲಿ 7 ಎಕರೆ ಜಾಗದ ಗುತ್ತಿಗೆಯನ್ನು 99 ವರ್ಷಕ್ಕೆ ವಿಸ್ತರಿಸಲಾಗುವುದು. ಶ್ರೀಶೈಲ ದೇವಸ್ಥಾನದ ಬಳಿ ಕರ್ನಾಟಕಕ್ಕೆ 5 ಎಕರೆ ಭೂಮಿ ನೀಡಲಾಗುವುದು. ತಿರುಮಲದಲ್ಲಿ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಮಂತ್ರಾಲಯದಲ್ಲಿ ಖರೀದಿಸಿದ 5 ಎಕರೆ ಜಾಗವನ್ನು ಕರ್ನಾಟಕ ಸರಕಾರದ ಹೆಸರಿಗೆ ಖಾತೆ ಮಾಡಲು ಕೋರಲಾಗಿದೆ. ಈ ನಿರ್ಧಾರಗಳಿಂದ ಭಕ್ತರಿಗೆ ಅನುಕೂಲವಾಗಲಿದೆ.
ಮಂಗಳೂರು | ಕಾರುಣ್ಯ ಟ್ರೋಫಿ ಕ್ರಿಕೆಟ್ ಟೂರ್ನಿ : ಸನ್ನಿ ಕ್ರಿಕೆಟರ್ಸ್ ಪಂಜಿಮೊಗರು ಚಾಂಪಿಯನ್
ಮಂಗಳೂರು,ನ.30: ನಗರದ ಬಂಗ್ರಕೂಳೂರು ಗೋಲ್ಡ್ಫಿಂಚ್ ಮೈದಾನದಲ್ಲಿ ರವಿವಾರ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಸನ್ನಿ ಕ್ರಿಕೆಟರ್ಸ್ ಪಂಜಿಮೊಗರು ತಂಡ ಪ್ರಥಮ ಸ್ಥಾನದೊಂದಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಸಂಗಮ್ ಯಂಗ್ ಬಾಯ್ಸ್ ಕೃಷ್ಣಾಪುರ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು ಎಜು ಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ವಿದ್ಯಾನಿಧಿಯ ಸಹಾಯಾರ್ಥ ದಿ.ವಿಶ್ವನಾಥ ಭಂಡಾರಿ ಕಾವೂರು ಸ್ಮರಣಾರ್ಥ ಆಹ್ವಾನಿತ 32 ತಂಡಗಳ ಅಂಡರ್ ಆರ್ಮ್ ಕ್ರಿಕೆಟ್ ‘ಕಾರುಣ್ಯ ಟ್ರೋಫಿ 2025’ ಟೂರ್ನಮೆಂಟನ್ನು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆ ಎಲ್ಲರನ್ನು ಒಗ್ಗೂಡಿಸುವುದರೊಂದಿಗೆ ಸಂಘಟಾನತ್ಮಕವಾಗಿ ಬೆಳೆಯಲು ಸಹಕಾರಿಯಾಗಿದೆ. ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕ್ರೀಡೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತಿದೆ. ಇದರಿಂದಾಗಿ ಒಲಿಂಪಿಕ್ಸ್ನಲ್ಲಿ ಭಾರತ ಹೆಚ್ಚು ಪದಕಗಳನ್ನು ಗಳಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು. ಇದೇ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಅರ್ಜುನ್ ಭಂಡಾರ್ಕರ್ ಅವರನ್ನು ಗೌರವಿಸಲಾಯಿತು. ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಲೋಕೇಶ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಡಾ.ವೈ.ಭರತ್ ಶೆಟ್ಟಿ, ಉದ್ಯಮಿ ಅಲೋಶಿಯಸ್ ಲಾಯ್ಸನ್ ಡಿಸೋಜ, ಕೋಟಿ ಚೆನ್ನಯ್ಯ ಸೇವಾ ಬ್ರಿಗೇಡ್ ಅಧ್ಯಕ್ಷ ಕಿರಣ್ ಕುಮಾರ್ ಕೋಡಿಕಲ್, ಉದ್ಯಮಿ ಅಲೋಶಿಯಸ್ ಲಾಯ್ಸನ್ ಡಿಸೋಜ, ಕೀರ್ತಿಶೇಷ ದಿ. ವಿಶ್ವನಾಥ ಆಳ್ವ ದತ್ತಿನಿಧಿಯ ಸಂಚಾಲಕ ಸುಧೀರ್ ಆಳ್ವ, ಮರಕಡ ಸಾರ್ವಜನಿಕ ಶ್ರೀಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಮರಕಡ, ಯುವವಾಹಿನಿ ಕೇಂದ್ರೀಯ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಬಜರಂಗದಳ ಮಂಗಳೂರು ಜಿಲ್ಲಾ ಸುರಕ್ಷಾ ಪ್ರಮುಖ್ ಮನೋಜ್ ವೀರನಗರ, ಕೋಟಿ ಚೆನ್ನಯ್ಯ ಸೇವಾ ಬ್ರಿಗೇಡ್ ಪ್ರಧಾನ ಕಾರ್ಯದರ್ಶಿ ಉಮೇಶ್ ಮಲರಾಯಸಾನ, ಶಾಂತಿನಗರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ನವೀನ್ ಮಲ್ಲರಬೆಟ್ಟು, ಉದಯ ಯುವಕ ಮಂಡಲ ಅಬ್ಬೆಟ್ಟು ಇದರ ಅಧ್ಯಕ್ಷ ಪ್ರದೀಪ್ ಕುಮಾರ್, ಯುವವಾಹಿನಿ ಕೂಳೂರು ಘಟಕದ ಮಾಜಿ ಅಧ್ಯಕ್ಷೆ ನಯನಾ ರಮೇಶ್, ಪ್ರಮುಖರಾದ ಸಂದೀಪ್ ಪೂಜಾರಿ ವಿದ್ಯಾನಗರ, ಪ್ರಶಾಂತ್ ಭಟ್, ರೆಹಮಾನ್ ದತ್ತನಗರ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದ.ಕ. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಕಲಿಯುತ್ತಿರುವ ಆಯ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಯಿತು. ಎಜು ಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಮೋಹನದಾಸ್ ಮರಕಡ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶುಕುಮಾರ್ ಪಂಜಿಮೊಗರು ಕಾರ್ಯಕ್ರಮ ನಿರೂಪಿಸಿದರು.
ಜಾತಿ ಕಾರಣಕ್ಕೆ ಪ್ರಿಯತಮನ ಕೊಂದ ಕುಟುಂಬ; ಸಿಂಧೂರವಿಟ್ಟುಕೊಂಡು ಶವದೊಂದಿಗೆ ಮದುವೆಯಾದ ಪ್ರಾಣಸಖಿ
ವಿರೋಧದ ಮಧ್ಯೆಯೂ ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂದು ಕೋಪಗೊಂಡ ತಂದೆ ಆಕೆಯ ಪ್ರಿಯಕರನನ್ನು ಕೊಂದ ಘಟನೆ ಮಹಾರಾಷ್ಟ್ರದ ನಾಂದೇಡ್ನಲ್ಲಿ ಬೆಳಕಿಗೆ ಬಂದಿದೆ. ಇದೊಂದು ಮರ್ಯಾದಾ ಹತ್ಯೆ ಪ್ರಕರಣವಾಗಿದೆ. ಸರಿಯಾದ ಸಮಯ ನೋಡಿಕೊಂಡು ಯುವತಿ ಆಂಚಲ್ ತಂದೆ ಮತ್ತು ಆಕೆಯ ಸಹೋದರ ಸೇರಿ ಸಕ್ಷಮ್ ತಲೆಗೆ ಕಲ್ಲು ಎತ್ತಿಹಾಕಿ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಆತನ ಮೃತದೇಹವನ್ನೇ ಮದುವೆಯಾದ ಆಕೆ ಕುಟುಂಬ ಸೋತಿದೆ, ನಮ್ಮ ಪ್ರೀತಿ ಗೆದ್ದಿದೆ ಎಂದು ಕಣ್ಣೀರಿಟ್ಟಳು.
Bengaluru | ಲೈಂಗಿಕ ಕಿರುಕುಳ; ಯುವತಿ ಆತ್ಮಹತ್ಯೆ
ಬೆಂಗಳೂರು : ಚಿತ್ರ ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ ಯುವತಿ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾಂಡುರಂಗ ನಗರದಲ್ಲಿ ನಡೆದಿದೆ. ಹಾಸನ ಮೂಲದ ಯುವತಿ ಅಚಲ(22) ನವೆಂಬರ್ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆದರೆ, 10 ದಿನ ಕಳೆದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಎಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ಸೇರುವ ತಯಾರಿಯಲ್ಲಿದ್ದ ಯುವತಿ ಅಚಲ ತನ್ನ ದೂರದ ಸಂಬಂಧಿ ಮಯಾಂಕ್ ಎಂಬಾತನ ಜೊತೆ ಸ್ನೇಹ ಹೊಂದಿದ್ದರು. ಇದೇ ವೇಳೆ ಪ್ರೀತಿಸುವುದಾಗಿ ನಂಬಿಸಿ ಸುತ್ತಾಡುತ್ತಿದ್ದ ಮಯಾಂಕ್ ಮದುವೆಗೆ ಮೊದಲೇ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದ್ದ. ಡ್ರಗ್ ಅಡಿಕ್ಟ್ ಆಗಿದ್ದ ಮಯಾಂಕ್ ಪದೇ ಪದೇ ಸಂಪರ್ಕಕ್ಕೆ ಪೀಡಿಸುತ್ತಿದ್ದ. ಇದಕ್ಕೆ ಅಚಲ ಒಪ್ಪದಿದ್ದಕ್ಕೆ ದೈಹಿಕ ಹಲ್ಲೆ ನಡೆಸಿ ಮಾನಸಿಕವಾಗಿಯೂ ಕಿರುಕುಳ ಕೊಡುತ್ತಿದ್ದ. ಪದೇ ಪದೇ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ ಇದರಿಂದ ಬೇಸತ್ತ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಚಲ ತಾಯಿ ಆರೋಪಿಸಿದ್ದಾರೆ. ಸದ್ಯ, ಆರೋಪಿ ಮಯಾಂಕ್ ಹಾಗೂ ಆತನ ತಾಯಿ ಮೈನಾ ವಿರುದ್ಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಛತ್ರಪತಿ ಶಿವಾಜಿ ಮೊಘಲರ ವಿರುದ್ಧ ಹೋರಾಡಿದರೆ ವಿನಃ ಮುಸಲ್ಮಾನರ ವಿರುದ್ಧವಲ್ಲ : ಸಚಿವ ಸಂತೋಷ್ ಲಾಡ್
ಬೀದರ್ : ಛತ್ರಪತಿ ಶಿವಾಜಿ ಮಹಾರಾಜ್ ಒಬ್ಬರು ಸೆಕ್ಯುಲರ್ ಲೀಡರ್ ಆಗಿದ್ದು, ಅವರು ಮೊಘಲರ ವಿರುದ್ಧ ಹೊರಾಡಿದರೆ ವಿನಃ ಮುಸಲ್ಮಾನರ ವಿರುದ್ಧವಲ್ಲ. ಇದನ್ನು ನಮ್ಮ ಸಮಾಜದವರು ಅರ್ಥ ಮಾಡಿಕೊಳ್ಳಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಗಣೇಶ್ ಮೈದಾನದಲ್ಲಿ ಆಯೋಜಿಸಿದ 'ಸ್ವಾಭಿಮಾನಿ ಮರಾಠ ಸಮಾವೇಶ ಕಾರ್ಯಕ್ರಮ' ಉದ್ಘಾಟಿಸಿ ಮಾತನಾಡಿದ ಸಂತೋಷ್ ಲಾಡ್, ಛತ್ರಪತಿ ಶಿವಾಜಿ ಮಹಾರಾಜ್ ಅವರ ಸಮಾಧಿ ಶೋಧಿಸಿದವರು ಮಹಾತ್ಮಾ ಜ್ಯೋತಿಬಾ ಫುಲೆ ಅವರಾಗಿದ್ದಾರೆ. ಆದರೆ ಅವರ ಫೋಟೋವನ್ನು ನಾವು ಇಡುವುದಿಲ್ಲ. ಶಿವಾಜಿ ಬಗ್ಗೆ ಮಾತನಾಡುವ ನಾವು ಮಹಾತ್ಮಾ ಜ್ಯೋತಿಬಾ ಫುಲೆ ಅವರನ್ನು ಮರೆಯುವ ಹಾಗಿಲ್ಲ. ಒಂದು ವೇಳೆ ಮಹಾತ್ಮಾ ಜ್ಯೋತಿಬಾ ಫುಲೆ ಅವರು ಇರದಿದ್ದರೆ ಇಂದು ಶಿವಾಜಿ ಬಗ್ಗೆ ನಾವು ಕಾರ್ಯಕ್ರಮ ಮಾಡುತ್ತಿರಲಿಲ್ಲ ಎಂದರು. ಭಾರತದಲ್ಲಿ ಮೊದಲಿಗೆ ಶಾಹೂ ಮಹಾರಾಜ್ ಅವರು ಶೇ.50 ರಷ್ಟು ಮೀಸಲಾತಿ ನೀಡಿದ್ದರು. ಶಾಹು ಮಹಾರಾಜ್ ಮತ್ತು ಗಾಯಕವಾಡ್ ಮಹಾರಾಜ್ ಅವರು ಅಂಬೇಡ್ಕರ್ ಅವರನ್ನು ಮೀಸಲಾತಿ ನೀಡಿ ಅವರ ಶಿಕ್ಷಣಕ್ಕೆ ಸಹಾಯ ಮಾಡಿದರು. ಆದ್ದರಿಂದ ಅಂಬೇಡ್ಕರ್ ಅವರು ಹೊರದೇಶದಲ್ಲಿ ಶಿಕ್ಷಣ ಪಡೆದರು. ಮರಾಠ ಸಮಾಜದ ಜನರು ಶಿವಾಜಿ ಒಬ್ಬರೇ ಅಲ್ಲ, ಬಸವಣ್ಣ, ಅಂಬೇಡ್ಕರ್, ಫುಲೆ ಹಾಗೂ ಎಲ್ಲ ಮಹಾ ಪುರುಷರ ಜಯಂತಿ ಮಾಡಬೇಕು. ಹಾಗೆಯೇ ಶಿವಾಜಿ ಜಯಂತಿ ಕೂಡ ಬೇರೆ ಸಮುದಾಯದವರು ಆಚರಣೆ ಮಾಡಬೇಕು ಎಂದು ಹೇಳಿದರು. ಎಲ್ಲಾ ರಾಜಕೀಯ ಪಕ್ಷದಲ್ಲಿರುವ ಮರಾಠ ಸಮುದಾಯದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಅವರು ಯಾವುದೇ ರಾಜಕೀಯ ಪಕ್ಷದಲ್ಲಿರಲಿ ಆದರೆ ಆ ರಾಜಕೀಯ ನಮ್ಮ ಸಮಾಜದಲ್ಲಿ ತರುವುದು ಬೇಡ ಎಂದು ಮನವಿ ಮಾಡಿದ ಅವರು, ಮರಾಠಾ ಸಮಾಜದ ಅಭಿವೃದ್ಧಿಗಾಗಿ ಜಿಜಾ ಮಾತಾ ಟ್ರಸ್ಟ್ ಸ್ಥಾಪಿಸಿ ಅದರ ವೃದ್ಧಿಗೆ ಬೇಕಾಗುವ ಎಲ್ಲಾ ರೀತಿ ಸಹಕಾರ ನೀಡುತ್ತೇನೆ. ಈ ಟ್ರಸ್ಟ್ ಮೂಲಕ ಮರಾಠ ಸಮಾಜದ ಏಳಿಗೆಗೆ ಶ್ರಮಿಸೋಣ ಎಂದು ಹೇಳಿದರು. ಮರಾಠಾ ಸಮಾಜದ ಮುಖಂಡ ಪದ್ಮಾಕರ ಪಾಟೀಲ್ ಅವರು ಮಾತನಾಡಿ, ಸಚಿವ ಸಂತೋಷ್ ಲಾಡ್ ಅವರ ಜೊತೆ ಇವತ್ತು ಎಲ್ಲಾ ಮರಾಠಿಗರು ಪಕ್ಷಬೇಧ ಮರೆತು ಜೊತೆಗೆ ನಿಂತಿದ್ದಾರೆ. ಸಂತೋಷ ಲಾಡ್ ಅವರು ಕರ್ನಾಟಕದ ಉದ್ದಗಲಕ್ಕೂ ಸಾಕಷ್ಟು ಹೆಸರು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಮುಖ್ಯಮಂತ್ರಿ ಆಗಬೇಕು ಎನ್ನುವುದು ಆಸೆ ಇದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ವೇಳೆ ಪುಣೆಯ ದಾದ ಮಹರಾಜ್ ನಾಗರಕರ್ ಅವರು ಜನರಿಗೆ ತಮ್ಮ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್ ಮರಿಯೋಜಿರಾವ್, ಕ್ಷತ್ರಿಯ ಮರಾಠಾ ಸಮಾಜದ ಅಧ್ಯಕ್ಷ ಸುರೇಶರಾವ್ ಸಾಟೆ, ಸಮಾಜದ ಮುಖಂಡರಾದ ಬಾಬುರಾವ ಕಾರಬಾರಿ, ಪ್ರಕಾಶ ಪಾಟೀಲ್, ದಿಗಂಬರ ಮಾನಕೇರಿ, ಬಾಬುರಾವ ಬಿರಾದಾರ, ಪ್ರಕಾಶ ಪಾಟೀಲ್, ಜನಾರ್ಧನರಾವ್ ಬಿರಾದಾರ, ವಿ.ಟಿ. ಸಿಂಗ್, ನಾರಾಯಣ ಗಣೇಶ, ಅನಿಲ ಕಾಳೆ, ಪಾಂಡುರಂಗ ಕನಸೆ, ಆನಂದ ಜನತಾಪ, ಪ್ರದೀಪ ಬಿರಾದಾರ, ಗೊರಖ ಶಿರಿಮೊಳೆ ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ ಮರಾಠಾ ಸಮುದಾಯದ ಪುರುಷರು, ಮಹಿಳೆಯರು, ಯುವಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
Govt Employees: ಸರ್ಕಾರಿ ನೌಕರರಿಗೆ ಈ ಜಿಲ್ಲಾಡಳಿತದಿಂದ ಗುಡ್ನ್ಯೂಸ್!
Govt Employees: ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಹಾಗೂ ಡಿಜಿಟಲ್ ಅರೆಸ್ಟ್ನಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು. ಕೆಲವು ವಂಚಕರು ಸರ್ಕಾರಿ ನೌಕರರು ಹಾಗೂ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಸಹ ವಂಚನೆ ನಡೆಸುತ್ತಿದ್ದಾರೆ. ಇದೀಗ ಕೆಜಿಐಡಿ ಸೌಲಭ್ಯಗಳು ಹಾಗೂ ಆರ್ಥಿಕ ವಂಚನೆ, ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧಗಳ ಕುರಿತು ಡಿ.2 ರಂದು ಸರಕಾರಿ ನೌಕರರಿಗೆ ವಿಶೇಷ ಉಪನ್ಯಾಸ ಆಯೋಜನೆ ಮಾಡಲಾಗಿದೆ.
ಮೂಡುಬಿದಿರೆ | ರೋಟರಿ ಸಂಭ್ರಮ 2025: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ
ಮೂಡುಬಿದಿರೆ : ರೋಟರಿ ಕ್ಲಬ್ನ ಸಾಂಸ್ಕೃತಿಕ ಚಟುವಟಿಕೆಗಳು ಭಾಂಧವ್ಯವನ್ನು ಸಮೃದ್ಧಗೊಳಿಸುತ್ತದೆ. ನೆಲದ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಕೆಲಸ ರೋಟರಿಯ ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ನಂತ ಯುವ ಕ್ಲಬ್ಗಳಿಂದಾಗುತ್ತಿರುವುದು ಶ್ಲಾಘನೀಯ. ಕ್ಲಬ್ ಸ್ಥಾಪನೆ ಹೇಗೆ ಮುಖ್ಯವಾಗುತ್ತದೋ ಅದೇ ರೀತಿಯಲ್ಲಿ ಅದನ್ನು ಸಮರ್ಥವಾಗಿ ಮುನ್ನಡೆಸುವುದು ಕೂಡ ಮುಖ್ಯ ಎಂದು ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ. ಹೇಳಿದರು. ಅವರು ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ಟೌನ್ ಆಶ್ರಯದಲ್ಲಿ ರೋಟರಿ ಸೆಂಟ್ರಲ್ ಸ್ಕೂಲ್ ಆವರಣದಲ್ಲಿ ರೋಟರಿ ಸಂಭ್ರಮ 2025-ಜಿಲ್ಲಾ ಮಟ್ಟದ ಸಾಂಸ್ಕೃತಿಗೆ ಸ್ಪರ್ಧೆಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು. 4ರ ಸಹಾಯಕ ಗವರ್ನರ್ ಡಾ. ರಾಜಾರಾಂ ಕೆ.ವಿ ಮುಖ್ಯ ಅತಿಥಿಯಾಗಿದ್ದು, ಸಾಮಾಜಿಕ ಚಿಂತನೆಯೊಂದಿಗೆ ರೋಟರಿ ಸಂಸ್ಥೆ ಶಿಕ್ಷಣ, ಸಂಸ್ಕೃತಿ, ಕ್ರೀಡೆಯಲ್ಲೂ ಸೇವೆ ಸಲ್ಲಿಸುತ್ತಿದೆ ಎಂದರು. ಕಾರ್ಯಕ್ರಮ ವಿಭಾಗದ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕೆ., ಜಿಲ್ಲಾ ಸಾಂಸ್ಕೃತಿಕ ವಿಭಾಗದ ಅಧ್ಯಕ್ಷ ಪ್ರವೀಣ್ ಪಿರೇರಾ, ವಲಯ 4ರ ಸಹಾಯಕ ಗವರ್ನರ್ ಉಮೇಶ್ ರಾವ್ ಮಿಜಾರ್, ರೋಟರಿ ಶಿಕ್ಷಣ ಸಂಸ್ಥೆ ನಾರಾಯಣ ಪಿ.ಎಂ.,ಸಹಾಯಕ ಗವರ್ನರ್ಗಳಾದ ಡಾ. ಎ. ಜಯಕುಮಾರ್ ಶೆಟ್ಟಿ, ಕೆ. ಪದ್ಮನಾಭ ರೈ, ವಲಯ ಲೆಫ್ಟಿನೆಂಟ್ ಸಿ.ಎಚ್. ಅಬ್ದುಲ್ ಗಫೂರ್, ಉದ್ಯಮಿ ಪ್ರಭಾತ್ಚಂದ್ರ ಜೈನ್ ಮುಖ್ಯ ಅತಿಥಿಯಾಗಿದ್ದರು. ಕ್ಲಬ್ನ ಅಧ್ಯಕ್ಷ ಹರೀಶ್ ಎಂ.ಕೆ, ಕಾರ್ಯದರ್ಶಿ ಭರತ್ ಶೆಟ್ಟಿ, ಸಾಂಸ್ಕೃತಿಕ ಸಂಯೋಜಕ ಡಾ.ಮಹಾವೀರ ಜೈನ್ ಉಪಸ್ಥಿತರಿದ್ದರು. ಸರಿತಾ ಹರೀಶ್, ಡಾ.ಪ್ರಣಮ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು | ಮಿಲಾಗ್ರಿಸ್ ಕಾಲೇಜಿನಲ್ಲಿ ‘ಗುಮಟ್ ಗಿನ್ಯಾನ್’ ತರಬೇತಿ ಶಿಬಿರ
ಮಂಗಳೂರು, ನ 27: ಮಿಲಾಗ್ರಿಸ್ ಕಾಲೇಜು ಮಂಗಳೂರು ಇದರ ಕೊಂಕಣಿ ಸಂಘದ ವತಿಯಿಂದ ಮಾಂಡ್ ಸೋಭಾಣ್ ಸಹಯೋಗದೊಂದಿಗೆ ‘ಗುಮಟ್ ಗಿನ್ಯಾನ್’ ಒಂದು ದಿನದ ಗುಮ್ಟಾ ತರಬೇತಿ ಕಾರ್ಯಗಾರವು ಗುರುವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಂಡ್ ಸೋಭಾಣ್ ಅಧ್ಯಕ್ಷ ಲುವಿ ಪಿಂಟೊ ಮಾತನಾಡಿ, ‘ಗುಮ್ಟಾ ನಮ್ಮ ಸಂಸ್ಕೃತಿಯ ಪ್ರತೀಕ. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮ ಇಂದಿನ ಯುವ ಪೀಳಿಗೆಯ ಕೈಯಲ್ಲಿದೆ. ವಿದ್ಯಾರ್ಥಿಗಳ ಮೂಲಕ ಇಂತಹ ಒಂದು ಕಲೆಯನ್ನು ನಮ್ಮ ಮುಂದಿನ ಜನಾಂಗಕ್ಕೆ ಪರಿಚಯಿಸುತ್ತಿರುವುದು ಶ್ಲಾಘನೀಯ ಎಂದರು. ಕಾಲೇಜಿನ ಪ್ರಾಂಶುಪಾಲ ರೆ. ಡಾ.ಆಲ್ವಿನ್ ಸೇರಾವೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಗಾರದಲ್ಲಿ ಗುಮ್ಟಾವಾದಕರಾದ ಜಾಯೆಲ್ ಪಿರೇರಾ, ಜಾಸ್ಮಿನ್ ಲೋಬೊ, ನಿಕೋಲ್ ಮೋರಸ್, ಡೆಲ್ಟಾನ್ ಲೋಬೊ ಅವರು ವಿದ್ಯಾರ್ಥಿಗಳಿಗೆ ಗುಮಟವಾದನದ ತರಬೇತಿಯನ್ನು ನೀಡಿದರು. 40 ವಿದ್ಯಾರ್ಥಿಗಳು ಈ ಕಾರ್ಯಗಾರದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಂಡ್ ಸೋಭಾಣ್ನ ಸದಸ್ಯರಾದ ಕಿಶೋರ್ ಫೆರ್ನಾಂಡಿಸ್, ಕಾಲೇಜಿನ ಕೊಂಕಣಿ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಆಸ್ಟಿನ್ ಡಿ ಸೋಜ ಉಪಸ್ಥಿತರಿದ್ದರು. ವಿದ್ಯಾರ್ಥಿ ಜಾಸ್ಲಿನ್ ವಾಲ್ಡರ್ ಕಾರ್ಯಕ್ರಮ ನಿರೂಪಿಸಿದರು ಕಾಲೇಜಿನ ಕೊಂಕಣಿ ಸಂಘದ ಸಂಚಾಲಕಿ ಟ್ರೆಸ್ಸಿ ಪಿಂಟೊ ವಂದಿಸಿದರು.
ಕಾಪು ಭೀಕರ ರಸ್ತೆ ಅಪಘಾತ ಪ್ರಕರಣ : ಮೃತರೆಲ್ಲರೂ ಉತ್ತರ ಭಾರತದ ಕಾರ್ಮಿಕರು !
ಏಳು ಮಂದಿ ಗಾಯಾಳುಗಳಿಗೆ ಚಿಕಿತ್ಸೆ: ಆಸ್ಪತ್ರೆಗೆ ಶಾಸಕರು, ಮಾಜಿ ಸಚಿವರು ಭೇಟಿ
Bengaluru | ಭೀಕರ ರಸ್ತೆ ಅಪಘಾತ: ತಾಯಿ-ಮಗ ಮೃತ್ಯು
ಬೆಂಗಳೂರು : ಬೆಂಗಳೂರು-ಮೈಸೂರು ರಸ್ತೆಯ ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮಗ ಮೃತಪಟ್ಟ ದಾರುಣ ಘಟನೆ ರವಿವಾರ ವರದಿಯಾಗಿದೆ. ನ.30ರ ರವಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ತಾಯಿ-ಮಗ ಇಬ್ಬರೂ ಕೆ.ಆರ್.ಮಾರ್ಕೆಟ್ ಕಡೆಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಮತ್ತು ಕಂಟೈನರ್ ನಡುವಿನ ಸಣ್ಣ ಜಾಗದಲ್ಲಿ ದ್ವಿಚಕ್ರ ವಾಹನ ಚಲಾಯಿಸಲು ಯತ್ನಿಸಿದಾಗ, ಕಂಟೈನರ್ಗೆ ದ್ವಿಚಕ್ರ ವಾಹನ ತಾಕಿ ಇಬ್ಬರೂ ರಸ್ತೆ ಮೇಲೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರ ತಲೆಗೆ ತೀವ್ರ ಪೆಟ್ಟು ತಗುಲಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಾಯಿ ಅಶ್ವಿನಿ(41) ಮತ್ತು ಮಗ ಅಭಿಲಾಶ್(19) ಎಂದು ಗುರುತಿಸಲಾಗಿದೆ. ಈ ಸಂಬಂಧ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ದೊಡ್ಡಗೊಲ್ಲರಹಟ್ಟಿಯವರಾಗಿದ್ದು, ಅಶ್ವಿನಿ ಅವರು ನಗರದ ಆಸ್ಪತ್ರೆಯೊಂದರಲ್ಲಿ ಭದ್ರತಾ ಸಿಬ್ಬಂದಿ ಆಗಿದ್ದರು ಎಂದು ತಿಳಿದುಬಂದಿದೆ. ಸದ್ಯ, ಮರಣೋತ್ತರ ಪರೀಕ್ಷೆಗಾರಿ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಇದ್ದರೂ ಧರಿಸದೆ ಚಾಲನೆ ಮಾಡಿರುವುದು ಅಪಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ.
ಕೊಪ್ಪಳ| 20 ಜೋಡಿಗಳ ಸಾಮೂಹಿಕ ವಿವಾಹ
ಕೊಪ್ಪಳ: ಸಾಮೂಹಿಕ ವಿವಾಹಗಳು ಏರ್ಪಡಿಸುವುದರಿಂದ ಬಡವರಿಗೆ, ಆರ್ಥಿಕವಾಗಿ ಸದೃಢವಿಲ್ಲದವರಿಗೆ ಅನುಕೂಲವಾಗುತ್ತದೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದರು. ಹಝರತ್ ಮೆಹಬೂಬ್ ಸುಬ್ಹಾನಿರವರ ಪವಿತ್ರ ಗ್ಯಾರವಿ ಶರೀಫ್ ಆಚರಣೆಯ ನಿಮಿತ್ತ ಸರ್ದಾರ್ ಗಲ್ಲಿಯ ಮುಸ್ಲಿಂ ಪಿಂಜಾರ್ ಪಂಚ ಕಮಿಟಿಯವರು ಆಯೋಜಿಸಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಸತತವಾಗಿ 21 ವರ್ಷದಿಂದ ಪ್ರತಿ ವರ್ಷ ಬಡ ಮುಸ್ಲಿಂ ಜೋಡಿಗಳ ಉಚಿತ ವಿವಾಹಗಳನ್ನು ನಡೆಸಿಕೊಂಡು ಬಂದಿರುವುದು ಸಂತೋಷದ ವಿಚಾರ. ಈ ವರ್ಷ ಸುಮಾರು 20 ಬಡ ಜೋಡಿಗಳು ಹೆಸರುಗಳನ್ನು ನೋಂದಾಯಿಸಿದ್ದು, ನೂತನ ವಧು ವರರಿಗೆ ಶುಭ ಕೋರುತ್ತೇನೆ ಎಂದು ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್ ಮಾತನಾಡಿ, ಸಮಾಜದಲ್ಲಿರುವ ಬಡ ಮುಸ್ಲಿಂ ಜೋಡಿಗಳಿಗೆ ಸಾಮೂಹಿಕ ವಿವಾಹಗಳನ್ನು ಮಾಡುವುದರ ಮೂಲಕ ಅವರ ದೊಡ್ಡ ಭಾರವನ್ನು ಕಡಿಮೆ ಮಾಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಈ ಪವಿತ್ರ ಗ್ಯಾರವಿ ನಿಮಿತ್ತ ಬೃಹತ್ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದವರಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಪ್ರಮಾಣ ಪತ್ರವನ್ನು ವಿತರಿಸಿದರು. ಪ್ರಾಸ್ತಾವಿಕವಾಗಿ ಖಾಸಿಂ ಸರ್ದಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ್ ಗುಪ್ತ, ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಸುರೇಶ್ ಭೂಮರೆಡ್ಡಿ, ಕೆಪಿಸಿಸಿ ಸಂಯೋಜಕ ಡಾ.ಕೆ.ಎಂ. ಸೈಯದ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕಾಟನ್ ಪಾಷಾ, ಸಮಾಜದ ಗುರುಗಳು, ನದಾಫ್ ಸಮಾಜದ ಜಿಲ್ಲಾಧ್ಯಕ್ಷ ಕೆ.ಎಫ್. ಮುದ್ದಾಬಳ್ಳಿ, ಕೊಪ್ಪಳ ತಾಲೂಕು ನದಾಫ್ ಸಂಘದ ಅಧ್ಯಕ್ಷರಾದ ಅಸ್ಮನ್ ಸಾಬ್, ಉಪಾಧ್ಯಕ್ಷರಾದ ಫಕ್ರುಸಾಬ್, ಮಹಿಳಾ ಜಿಲ್ಲಾ ಅಧ್ಯಕ್ಷರಾದ ಸಲೀಂ ಜಾನ್, ಮುಸ್ಲಿಂ ಪಿಂಜಾರ್ ಪಂಚ ಕಮಿಟಿಯ ಗೌರವ ಅಧ್ಯಕ್ಷರು ಹಾಗೂ ನದಾಫ್ ಪಿಂಜಾರ್ ಸಂಘದ ರಾಜ್ಯ ಕೋಶಾಧಿಕಾರಿ ಶಹಾಬುದ್ದೀನ್ ಸಾಬ್ ನೂರಬಾಷ್, ಪಂಚ ಕಮಿಟಿಯ ಅಧ್ಯಕ್ಷರಾದ ಖಾದರ್ ಸಾಬ್ ಕುದುರಿಮೋತಿ, ನಗರಸಭೆ ಮಾಜಿ ಸದಸ್ಯ, ಪಂಚ ಕಮಿಟಿಯ ಕಾರ್ಯದರ್ಶಿ ಮೆಹಬೂಬ್ ಬಾಷಾ ಮಾನ್ವಿ, ಖಜಾಂಚಿಯಾದ ಮೀರಾಸಾಬ್, ಝಂಡಾ ಕಟ್ಟಿ ಅಧ್ಯಕ್ಷ ಮರ್ದಾನ್ ಸಾಬ್ ಲುಂಗಿ, ಪಂಚ ಕಮಿಟಿಯ ಇತರ ಸದಸ್ಯರಾದ ರಿಯಾಝ್ ಕುದ್ರಿಮೋತಿ, ರಶೀದ್ ನೀರಲಗಿ, ಅಬ್ದುಲ್ ರೆಹಮಾನ್, ವಾಸಿಮ್, ಇಸ್ಮಾಯಿಲ್ ಸಾಬ್, ನಬಿಸಾಬ್ , ಕುತ್ತುಬುದ್ದೀನ್, ಖಾಜಾಸಾಬ್ ನಗರ ಘಟಕ ಕಾರ್ಯದರ್ಶಿ ಬಾಬುಸಾಬ, ಅಮೀರ್ ಹಮ್ಜಾ ನಿವೃತ್ತ ಶಿಕ್ಷಕರು, ರಮಜಾನ್ ಸಾಬ್ ಸೇರಿದಂತೆ ಸರ್ವ ಸದಸ್ಯರು ಪಾಲ್ಗೊಂಡಿದ್ದರು.
ಕೊಪ್ಪಳ| ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ
ಯಲಬುರ್ಗಾ: ರೈತರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ರೈತರ ಹಿತಕಾಪಾಡಬೇಕಿದ್ದ ಸರಕಾರ ಸಿಎಂ ಗದ್ದುಗೆಗಾಗಿ ಕಾಲಹರಣ ಮಾಡುತ್ತಿದೆ. ಜನರ ಹಿತ ಕಾಯಬೇಕಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರೈತ ವಿರೋಧಿ ಸರಕಾರ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಅರೋಪಿಸಿದರು. ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಹಾಲಪ್ಪ ಆಚಾರ್, ಬಿಟ್ಟಿಭಾಗ್ಯದ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿಕೊಂಡಿರುವ ರಾಜ್ಯ ಸರಕಾರ ಹಣದ ಕೊರತೆ ಎದುರಿಸುತ್ತಿದೆ. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಾರುತಿ, ಹೊಸಮನಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ಸುರೇಶಗೌಡ ಶಿವನಗೌಡ, ಹಂಚ್ಯಾಳಪ್ಪ ತಳವಾರ, ಸಿ.ಎಚ್ ಪೊಲೀಸಪಾಟೀಲ, ಶಿವಲೀಲಾ ದಳವಾಯಿ ಮಾತನಾಡಿದರು. ಈ ವೇಳೆ ಮುಖಂಡರಾದ ಶಿವಕುಮಾರ್, ಕಲ್ಲಪ್ಪ ಕರಮುಡಿ ಬಸವರಾಜ, ಗುರುಗುಳಿ, ಶಿವಪ್ಪ ವಾದಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳಲಿ : ಸ್ಪೀಕರ್ ಯು.ಟಿ.ಖಾದರ್
ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ವಾರ್ಷಿಕ ಪ್ರಶಸ್ತಿ ಪ್ರದಾನ
SMAT 2025- ಬಂಗಾಳವನ್ನು ಚೆಂಡಾಡಿದ ಅಭಿಷೇಕ್ ಶರ್ಮಾ 16 ಸಿಕ್ಸ್! ತಿಲಕ್ ವರ್ಮಾ ದಾಖಲೆ ಜಸ್ಟ್ ಮಿಸ್
Punjab Vs Bengal- ಭಾರತ ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರು ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕೇವಲ 52 ಎಸೆತಗಳಲ್ಲಿ 148 ರನ್ ಗಳಿಸಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ ಅದರಲ್ಲಿ. 16 ಸಿಕ್ಸರ್, 8 ಬೌಂಡರಿಗಳಿದ್ದವು. ಆರಂಭದಿಂದಲೇ ಹೊಡ್ಡ ಹೊಡೆತಗಳಿಗೆ ಮನಸ್ಸು ಮಾಡಿದ ಅವರು ಕೇವಲ 12 ಎಸೆತಗಳಲ್ಲಿ ಅರ್ಧಶತಕ ಮತ್ತು 32 ಎಸೆತಗಳಲ್ಲಿ ಶತಕ ಪೂರೈಸಿದರು. ಅವರ ಸ್ಫೋಟಕ ಇನ್ನಿಂಗ್ಸ್ ನ ನೆರವಿನಿಂದ ಪಂಜಾಬ್ ತಂಡ 310/5 ರನ್ ಗಳಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ 300 ರನ್ ಗಡಿ ದಾಟಿದ ಐದನೇ ತಂಡವಾಯಿತು.
ಉಡುಪಿ | ಸ್ಪೀಕ್ ಸ್ಮಾರ್ಟ್, ಸ್ಪೀಕ್ ಕಾನ್ಫಿಡೆಂಟ್ ಕಾರ್ಯಾಗಾರ
ಉಡುಪಿ, ನ.30: ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ವಿಭಾಗ ಮತ್ತು ಐಕ್ಯುಎಸಿ ಸಹಯೋಗದಲ್ಲಿ ಸ್ಪೀಕ್ ಸ್ಮಾರ್ಟ್, ಸ್ಪೀಕ್ ಕಾನ್ಫಿಡೆಂಟ್ ಕುರಿತು ಶನಿವಾರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ತೆಂಕನಿಡಿಯೂರು ಸರಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಸಂವಹನ ಕಲೆಯನ್ನು ಬೆಳೆಸಿಕೊಳ್ಳಲು ಅನುಕೂಲವಾಗುವಂತೆ ಹಲವು ಚಟುವಟಿಕೆಗಳನ್ನು ನಡೆಸಿದರು. ಅಲ್ಲದೆ, ನಿರಂತರ ಅಭ್ಯಾಸದ ಮೂಲಕ ಇಂಗ್ಲೀಷ್ ಭಾಷಾ ಪ್ರಾವೀಣ್ಯತೆಯನ್ನು ಪಡೆದುಕೊಳ್ಳಲು ಸಾಧ್ಯ ಎಂಬುದನ್ನು ವಿವರಿಸಿದರು. ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಅಧ್ಯಕ್ಷತೆಯನ್ನು ವಹಿಸಿದ್ದರು. ಐಕ್ಯುಎಸಿ ಸಂಚಾಲಕ ಡಾ.ಲಿತಿನ್ ಬಿ.ಎಂ., ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ಡಾ.ಸೌಮ್ಯಲತಾ ಪಿ., ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ನಿಶ್ಚಿತ ಎಸ್.ಹೋಬಳಿದಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಿತೀಕ್ಷಾ ಸ್ವಾಗತಿದರು. ವೈಷ್ಣವಿ ಅತಿಥಿ ಪರಿಚಯ ಮಾಡಿದರು. ಸುಹಾ ವಂದಿಸಿದರು. ದಿವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ | ಎಂಜಿಎಂ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಉಡುಪಿ, ನ.30: ಉಡುಪಿ ಎಂಜಿಎಂ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಕಾಲೇಜಿನ ಮುದ್ದಣ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಅದಮಾರು ಮಠ ಶಿಕ್ಷಣ ಒಕ್ಕೂಟದ ಉಪ ಆಡಳಿತಾಧಿಕಾರಿ ಪ್ರೊ.ಪುಂಡರೀಕಾಕ್ಷ ಕೊಡಂಚ ಮಾತನಾಡಿ, ಜಾಗತಿಕ ಆಗು-ಹೋಗುಗಳ ತಲ್ಲಣ ಮತ್ತು ವಿದ್ಯಾರ್ಥಿಗಳು ಹಾಗೂ ಪೋಷಕರು ಇದನ್ನು ಅರಿತುಕೊಳ್ಳಬೇಕಾದ ಅನಿವಾರ್ಯತೆಯನ್ನು ಸವಿಸ್ತಾರವಾಗಿ ತಿಳಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಉಪಪ್ರಾಂಶುಪಾಲ ಡಾ.ಎಂ.ವಿಶ್ವನಾಥ್ ಪೈ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಡಾ.ನಾರಾಯಣ ಅಮೀನ್, ವಿದ್ಯಾರ್ಥಿ ಪ್ರತಿನಿಧಿಗಳಾದ ಸುಶ್ಮಿತಾ ಡಿ.ರಾವ್, ಪ್ರಣವ್ ಕಾಮತ್, ಸುಮೇಧಾ ಉಪಸ್ಥಿತರಿದ್ದರು. ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಭೌತಶಾಸ್ತ್ರ ವಿಭಾಗದ ನೀಲಕಂಠ ದಂಡೋತಿ, ಸಮಾಜಶಾಸ್ತ್ರ ವಿಭಾಗದ ರೋಹಿತ್ ಅಮೀನ್ ಅವರನ್ನು ಅಭಿನಂದಿಸಲಾಯಿತು. ಪ್ರಾಂಶುಪಾಲೆ ಪ್ರೊ.ಮಾಲತಿ ದೇವಿ ಎ. ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿನಿ ಸುಮೇಧಾ ವಂದಿಸಿ, ಕೀರ್ತಿರಾಜ್ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ | ಮೌಲಾನಾ ಆಝಾದ್ ಪಬ್ಲಿಕ್ ಸ್ಕೂಲ್ನಲ್ಲಿ ವಾರ್ಷಿಕ ಕ್ರೀಡಾಕೂಟ
ಬಂಟ್ವಾಳ : ಪುದು ಇಲ್ಲಿನ ಕರ್ನಾಟಕ ಮೌಲಾನಾ ಆಝಾದ್ ಪಬ್ಲಿಕ್ ಸ್ಕೂಲ್ ಇದರ 2025-26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿದ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, ಶಿಕ್ಷಣದ ಜೊತೆ ಕ್ರೀಡೆಯನ್ನು ಮೈಗೂಡಿಸಿಕೊಂಡಾಗ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಫರಂಗಿಪೇಟೆ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಉಮರ್ ಫಾರೂಕ್, ಕೋಶಾಧಿಕಾರಿ ಅಬ್ದುಲ್ ಮಜೀದ್ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾ ಪ್ರಾಂಶುಪಾಲ ಮುಹಮ್ಮದ್ ಫಾರೂಕ್ , ಕಚೇರಿ ಸಹಾಯಕ ಅಬ್ದುಲ್ ಮಜೀದ್, ಸುಜೀರ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲೋಕನಾಯ್ಕ್ , ದೈಹಿಕ ಶಿಕ್ಷಕ ಇಮ್ತಿಯಾಝ್, ಶಾಲಾ ಶಿಕ್ಷಕರು, ಉಪನ್ಯಾಸಕರು ಉಪಸ್ಥಿತರಿದ್ದರು. ರಬೀಅತ್ತುಲ್ ಅದ್ ವಿಯ ಸ್ವಾಗತಿಸಿ, ಅಲ್ ನಿಧಾ ಫಾತಿಮಾ ವಂದಿಸಿದರು. ಹಲೀಮತ್ ರಶೀದ, ಪುನೀತ್ ಮತ್ತು ರಝೀಯ ಎಸ್.ಪಿ. ವಿವಿಧ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠವು ದ್ವಿಚಕ್ರ ವಾಹನಗಳ ಪ್ರಸಿದ್ಧ ಬ್ರ್ಯಾಂಡ್ ಆದ 'ಯೆಜ್ಡಿ' ಟ್ರೇಡ್ಮಾರ್ಕ್ ಹಕ್ಕುಗಳನ್ನು ಕ್ಲಾಸಿಕ್ ಲೆಜೆಂಡ್ಸ್ನ ಸಹ-ಸಂಸ್ಥಾಪಕರಾದ ಬೋಮನ್ ಇರಾನಿ ಅವರಿಗೆ ನೀಡುವ ಮೂಲಕ ಮಹತ್ವದ ತೀರ್ಪು ನೀಡಿದೆ. ಮೂಲ ಸಂಸ್ಥೆ ಐಡಿಯಲ್ ಜಾವಾ 15 ವರ್ಷಗಳಿಗೂ ಹೆಚ್ಚು ಕಾಲ ಟ್ರೇಡ್ಮಾರ್ಕ್ ಅನ್ನು ಬಳಸದೆ, ನವೀಕರಿಸದೆ ಇರುವುದರಿಂದ ಅದು ಬ್ರ್ಯಾಂಡ್ ಅನ್ನು ತ್ಯಜಿಸಿದೆ ಎಂದು ನ್ಯಾಯಾಲಯ ಹೇಳಿದೆ.
Udupi Road Accident: ಈವೆಂಟ್ಗೆ ಸಾಮಗ್ರಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿ; ಐವರು ಸಾವು
ಉಡುಪಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಾಪುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಸ್ಥಳದಲ್ಲಿ ಐವರು ಮೃತಪಟ್ಟಿದ್ದರೆ, ಹಲವರಿಗೆ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತಪಟ್ಟವರ ಹೆಸರು, ದಾಖಲೆ ಇನ್ನಷ್ಟೇ ಪತ್ತೆಯಾಗಬೇಕಿದೆ ಎನ್ನಲಾಗಿದೆ. ಆಸ್ಪತ್ರೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯದ ಸ್ಥಿತಿ ವಿಚಾರಿಸಿದ್ದಾರೆ.
ಕಾಪು | ಗೂಡ್ಸ್ ಟೆಂಪೋ ಪಲ್ಟಿ : ಮೃತರ ಸಂಖ್ಯೆ 5ಕ್ಕೆ ಏರಿಕೆ
ಕಾಪು, ನ.30: ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ನ.30ರ ಮಧ್ಯಾಹ್ನ ವೇಳೆ ನಡೆದಿದ್ದು, ಇದೀಗ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇನ್ನೊಬ್ಬರು ಹೈಟೆಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ ಎನ್ನಲಾಗಿದೆ. ಇದರಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಸಾಗುತ್ತಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ. ಇವರ ಪೈಕಿ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಮೃತಪಟ್ಟಿದ್ದು, ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ನಟಿ ಆಶಿಕಾ ರಂಗನಾಥ್ ಸಂಬಂಧಿ ಯುವತಿ ಆತ್ಮಹತ್ಯೆ! ಯುವಕನಿಂದ ಕಿರುಕುಳ ಆರೋಪ; ಪ್ರಕರಣ ದಾಖಲು
ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ ಅಚಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಮಾಯಾಂಕ್ ಎಂಬ ಯುವಕ ಕಿರುಕುಳ ನೀಡಿದ್ದರಿಂದ ಅಚಲ ಸಾವಿಗೆ ಶರಣಾಗಿದ್ದಾಳೆ. ಈ ಬಗ್ಗೆ ಅಚಲ ಪೋಷಕರು ಮಾಯಾಂಕ್ ಮತ್ತು ಆತನ ತಾಯಿ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಚಲ ಕೊನೆಯ ಸಂದೇಶದಲ್ಲಿ ಮಾಯಾಂಕ್ ಮೋಸದ ಬಗ್ಗೆ ಉಲ್ಲೇಖಿಸಿದ್ದಳು.
ಪ್ರೀತಿಸಿದ ಯುವತಿಯೊಬ್ಬಳು ಯುವಕನಿಗೆ ಬಲವಂತವಾಗಿ ದನದ ಮಾಂಸ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ, 5 ಬಾರಿ ನಮಾಜ್ ಮಾಡುವಂತೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವಕ ಪೊಲೀಸರಿಗೆ ದೂರು ನೀಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾರ್ವಜನಿಕರ ಸಭೆಯಲ್ಲಿ ಎಲ್ಲರ ಮುಂದೆ ಸಚಿವರ ಬಳಿ ತನ್ನ ನೋವು ತೋಡಿಕೊಂಡಿದ್ದಾನೆ. ಸಚಿವರು ಮಧ್ಯಪ್ರವೇಶಿಸಿ,ಯುವತಿ ಕುಟುಂಬದ ವಿರುದ್ಧ ಕ್ರಮಕೈಗೊಳ್ಳುವಂತೆ ಮತ್ತೊಮ್ಮೆ ದೂರು ದಾಖಲಿಸುವಂತೆ ಸೂಚನೆ ನೀಡಲಾಗಿದೆ.
ಉಡುಪಿ | ನಾಗರಾಜ್ ರಾವ್ಗೆ ಪಿಎಚ್ಡಿ ಪದವಿ ಪ್ರದಾನ
ಉಡುಪಿ, ನ.30: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ನಾಗರಾಜ್ ರಾವ್ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಶಾಂತರಾಮ್ ರೈ ಸಿ. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಪರ್ಫಾಮೆನ್ಸ್ ಎನ್ಹ್ಯಾನ್ಸ್ಮೆಂಟ್ ಆಫ್ ಎ ಸ್ಪೆಸಲ್ ಮೆಶಿನ್ ಯೂಸಿಂಗ್ ಸಾಫ್ಟ್ ಕಂಪ್ಯೂಟಿಂಗ್ ಟೆಕ್ನಿಕ್ಸ್ ಅಂಡರ್ ಪ್ಯಾರಾಮೆಟ್ರಿಕ್ ಅನ್ಸರ್ನಿಟಿ’ ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಕಾಪು | ರಾಷ್ಟ್ರಮಟ್ಟದ ಕರಾಟೆ: ಕ್ರೆಸೆಂಟ್ ವಿದ್ಯಾರ್ಥಿಗಳ ಸಾಧನೆ
ಕಾಪು, ನ.30: ಉಡುಪಿ ಬುಡೋಕಾನ್ ಸ್ಪೋರ್ಟ್ಸ್ ಕರಾಟೆ ಕರ್ನಾಟಕ ಇದರ ವತಿಯಿಂದ ಇತ್ತೀಚೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್ ನಲ್ಲಿ ಆಯೋಜಿಸಲಾದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಾಪು ಚಂದ್ರನಗರದ ಕ್ರೆಸೆಂಟ್ ಇಂಟರ್ ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಹಲವು ಪದಕಗಳನ್ನು ಗೆದ್ದು ಸಾಧನೆ ಮಾಡಿದ್ದಾರೆ. ಶುಹೈಫ ಶೇಕ್ ಚಿನ್ನ, ಬೆಳ್ಳಿ, ಆಯಿಷಾ ಶಾನ್ವ ಚಿನ್ನ, ಕಂಚು,ಮುಹಮ್ಮದ್ ಶಾಮೀಲ್ ಬೆಳ್ಳಿ, ಕಂಚು, ಅಲೀಶ ಬೆಳ್ಳಿ, ಕಂಚು, ರಿಝ ಫಾತಿಮಾ 2 ಕಂಚು, ಮುಹಮ್ಮದ್ ಹಿಶಾಮ್ ಕಂಚು, ಅಲೀನಾ ಕಂಚು, ಫಾಯೆಕ್ ಕಂಚು, ರಿಫಾ ಫಾತಿಮ ಕಂಚಿನ ಪದಕಗಳನ್ನು ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಆಸೀಫ್ ಯುಸೂಫ್ ಸಾಹೇಬ್, ಪ್ರಾಂಶುಪಾಲ ಅಕ್ಬರ್ ಅಲಿ, ಉಪಪ್ರಾಂಶುಪಾಲ ಗುರುದತ್, ಕರಾಟೆ ಶಿಕ್ಷಕ ಶಂಶುದ್ಧೀನ್ ಹಾಜರಿದ್ದರು.
52ನೇ ಶತಕ ಬಾರಿಸಿದ ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ, ಹರಿಣಗಳಿಗೆ ದಿಢೀರ್ ಆಘಾತ... Virat Kohli
ಕನ್ನಡಿಗರ ಬೆಂಗಳೂರು ತಂಡದ ಮಾಜಿ ನಾಯಕ &ಭಾರತ ಕ್ರಿಕೆಟ್ ತಂಡದ ಅನಭಿಷಿಕ್ತ ದೊರೆ &ಕ್ರಿಕೆಟ್ ಲೋಕದ ಅಸಲಿ ಕಿಂಗ್ ವಿರಾಟ್ ಕೊಹ್ಲಿ ಇಂದು ನೂರಾರು ದಾಖಲೆಗಳನ್ನು ಪುಡಿ, ಪುಡಿ ಮಾಡಿ ಹಾಕಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ ಆಟ ನೋಡಿ, ಎದುರಾಳಿ ಬೌಲರ್ಗಳು ತಲೆ ಮೇಲೆ ಕೈಹೊತ್ತು ಕುಳಿತುಬಿಟ್ಟರು. 7 ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ
ತಮಿಳುನಾಡಿನ ಮಹಾಬಲಿಪುರಂನಿಂದ ಬಿಹಾರದ ಪೂರ್ವ ಚಂಪಾರಣ್ಗೆ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗದ ಸಾಗಣೆ ಪ್ರಾರಂಭವಾಗಿದೆ. ನವೆಂಬರ್ 21 ರಂದು ಚಾಲನೆಗೊಂಡ ಈ ಯೋಜನೆ, 33 ಅಡಿ ಎತ್ತರ ಮತ್ತು 210 ಮೆಟ್ರಿಕ್ ಟನ್ ತೂಕದ ಗ್ರಾನೈಟ್ ಶಿವಲಿಂಗವನ್ನು 2,100 ಕಿ.ಮೀ.ಗಳ ಕಠಿಣ ಪ್ರಯಾಣದಲ್ಲಿ ಹೊತ್ತೊಯ್ಯುತ್ತಿದೆ. ಈ ಶಿವಲಿಂಗವನ್ನು 2026 ರಲ್ಲಿ ಚಕಿಯಾ ಬಳಿ ನಿರ್ಮಾಣವಾಗುತ್ತಿರುವ ಮತ್ತು ಅಂಕೋರ್ ವಾಟ್ಗಿಂತ ದೊಡ್ಡದಾಗುವ ಗುರಿ ಹೊಂದಿರುವ ವಿರಾಟ್ ರಾಮಾಯಣ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವುದು.

18 C