ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಸಿನಿಮಾಗಳ ಕಡೆಗಣನೆ: ಡಾ. ರಾಜೇಂದ್ರ ಸಿಂಗ್ ಬಾಬು ಆರೋಪ
ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸುಲಾಗುತ್ತಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ್ರಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿ ಮತ್ತು ಸಹಾಯಧನ ನೆರವನ್ನು ತುಳು ಚಿತ್ರಗಳಿಗೆ ವಿಸ್ತರಿಸಿದೆ. ಪ್ರತಿ ವರ್ಷ ಒಂದು ಪ್ರಾದೇಶಿಕ ಭಾಷಾ ಚಿತ್ರಕ್ಕೆ ಪ್ರಶಸ್ತಿ ನೀಡುತ್ತದೆ. ತ್ರೈಮಾಸಿಕ ಪ್ರಶಸ್ತಿಗಳನ್ನು ಪಡೆಯುವ ಈ ಚಿತ್ರಗಳು ಸ್ವರ್ದಿಸಿವೆ. 16ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಎರಡನೆ ಮತ್ತು ಮೂರನೇ ಪ್ರಶಸ್ತಿಗಳನ್ನು ತುಳು ಚಿತ್ರಗಳು ಪಡೆದಿದ್ದವು. ಇಂದು ಈ ಬಾರಿ 17ನೇ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಯಾವುದೇ ತುಳು ಚಿತ್ರವನ್ನು ಪರಿಗಣಿಸಿಲ್ಲ ಎಂದವರು ತಿಳಿಸಿದ್ದಾರೆ. ನಾನು ತುಳುವಿನಲ್ಲಿ ನಿರ್ದೇಶಿಸಿದ ಬಿದ್೯ದ ಕಂಬುಲ' ಚಿತ್ರವನ್ನು ಸ್ವರ್ಧೆಗಾಗಿ ಕಳುಹಿಸಿದೆ. ತುಳುನಾಡಿನ ವಿಶಿಷ್ಟ ಜಾನಪದ ಕ್ರೀಡೆಯಾಗಿರುವ ಕಂಬಳದ ಹಿನ್ನಲೆ ಕಥೆಯಿದು. ಸುಮಾರು 700 ವರ್ಷಗಳ ಇತಿಹಾಸ ಇರುವ ಕಂಬಳ ತುಳುನಾಡಿನ ಸಾಂಸ್ಕೃತಿಕ ಕ್ರೀಡೆ, ಮಾನ್ಯ ಮುಖ್ಯಮಂತ್ರಿಗಳು ಈ ಸಾರಿಯ ಬಜೆಟ್ನಲ್ಲಿ ಕಂಬಳ ಕ್ರೀಡೆಗೆ ವಿಶೇಷ ಅನುದಾನ ಮತ್ತು ಪ್ರೊತ್ಸಾಹ ನೀಡುತ್ತೇನೆ ಎಂದು ಘೋಶಿಸಿದ್ದರು. ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಈ ಚಿತ್ರ ವನ್ನು ತಿರಸ್ಕರಿಸುವ ಮೂಲಕ ತುಳುನಾಡು ಮತ್ತು ತುಳುನಾಡು ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಗಳಿಗೆ ಬೆಂಬಲಿ ಸದೆ ಪರಿಗಣಿಸದೆ ಇರುವುದರ ಮೂಲಕ ಸಂಬಂಧ ಪಟ್ಟವರು ತುಳು ಚಿತ್ರರಂಗದ ಮೇಲೆ ಕಡೆಗಣಿಸುವ ವ್ಯವಸ್ತೆಯನ್ನು ಸೃಷ್ಟಿಸಿದ್ದಾರೆ. 17ನೇ ಚಿತ್ರೋತ್ಸವದಲ್ಲಿ ಮಲೆಯಾಳಂನ 6 ಚಿತ್ರಗಳು ಮತ್ತು ಮಾರಾಠಿಯ 4 ಚಿತ್ರಗಳಿಗೆ ಮನ್ನಣೆ ಹಾಕುವ ಮೂಲಕ ಕನ್ನಡ ನಾಡಿನಲ್ಲಿಯೆ ನಾವು ಅನಾಥರಾಗಿರುವುದು ದುರಂತವೆ ಸರಿ ಎಂದವರು ತಿಳಿಸಿದ್ದಾರೆ. ತುಳು ಭಾಷೆಯನ್ನು ರಾಜ್ಯದ ಎರಡನೆ ಆಡಳಿತ ಭಾಷೆಯಾಗಿ ಪರಿಗಣಿಸಬೆಕಾಗಿದೆ ಅದನ್ನು ಪರಿಚ್ಚೆದಕ್ಕೆ ಸೇರಿಸಬೇಕು ಎನ್ನುವ ಒತ್ತಾಯ. ಒತ್ತಡಗಳು ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ತುಳು ಚಿತ್ರಗಳನ್ನು 17ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಸ್ವರ್ಧಾಮಾನಕ್ಕೆ ಆಯ್ಕೆ ನೀಡದೆ ಇರುವುದು ಅನ್ಯಾಯ ಮಾಡಿದಂತಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಸೂಕ್ತ ಆದೇಶ ನೀಡಿ, ತುಳು ಚಿತ್ರರಂಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ನಿರ್ದೇಶಕ ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
IND Vs NZ T20 | ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ ಸರಣಿ ಜಯ
ಗುವಾಹಟಿ: ಬರ್ಸಪಾರದ ಎಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಝಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಕೈ ವಶಪಡಿಸಿಕೊಂಡಿದೆ.
ಶುಭಾ ವೆಂಕಟೇಶ ಅಯ್ಯಂಗಾರ್ ರಿಗೆ ಪದ್ಮಶ್ರೀ ಪ್ರಶಸ್ತಿ
ಶುಭಾ ವೆಂಕಟೇಶ ಅಯ್ಯಂಗಾರ್ ಅವರು ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯದ (ಎನ್ಎಎಲ್) ಮೆಟೀರಿಯಲ್ ಸೈನ್ಸಸ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಪ್ರಸಿದ್ಧ ವಿಜ್ಞಾನಿಯಾಗಿದ್ದಾರೆ. ಸುಮಾರು 40 ವರ್ಷಗಳ ಕಾಲ ಎನ್ಎಎಲ್ನಲ್ಲಿ ಸಂಶೋಧಕಿಯಾಗಿ ಕಾರ್ಯನಿರ್ವಹಿಸಿರುವ ಅವರು, ವಿಮಾನ ನಿಲ್ದಾಣಗಳಲ್ಲಿ ಬಳಸುವ ರನ್ವೇ ಗೋಚರತೆ ಅಳೆಯುವ ಉಪಕರಣವಾದ ‘ಟ್ರಾನ್ಸ್ಮಿಸೋಮೀಟರ್' ಅನ್ನು ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಶುಭಾ ಅಯ್ಯಂಗಾರ್ ತಂಡ ಅಭಿವೃದ್ಧಿಪಡಿಸಿದ ಈ ಉಪಕರಣಗಳನ್ನು ಲಕ್ನೋ, ದೆಹಲಿ ಮತ್ತು ಕೋಲ್ಕತ್ತಾ ವಿಮಾನ ನಿಲ್ದಾಣಗಳಲ್ಲಿ ಅಳವಡಿಸಲಾಗಿದೆ.
ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಮೇಲೆ ಕಲ್ಲೆಸೆತ! ಕೊಪ್ಪಳದ ಅನ್ನದಾನೇಶ್ವರ ಮಠದ ಆವರಣದಲ್ಲಿ ಘಟನೆ
ಕೊಪ್ಪಳ ಜಿಲ್ಲೆಯ ಕೂಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ ಬಸವರಾಜ ರಾಯರಡ್ಡಿ ಅವರ ಮೇಲೆ ಕಲ್ಲೆಸೆದ ಘಟನೆ ನಡೆದಿದೆ. ಕಾರ್ಯಕ್ರಮದ ವೇಳೆ, ಅರೆಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಕಲ್ಲೆಸೆದಿದ್ದು, ಈ ಹಿಂದೆ ಇದೇ ರೀತಿ ಘಟನೆ ನಡೆದಿದ್ದಾಗಿ ತಿಳಿದುಬಂದಿದೆ. ಶಾಸಕರು ನಂತರ ತಮ್ಮ ಭಾಷಣ ಮುಂದುವರೆಸಿದರು.
IND Vs NZ- ಅಭಿಷೇಕ್ ಶರ್ಮಾ ಬಿರುಗಾಳಿ ಅರ್ಧಶತಕಕ್ಕೆ ನಡುಗಿದ ಕಿವೀಸ್; ಗುರು ಯುವರಾಜ್ ಸಿಂಗ್ ದಾಖಲೆ ಜಸ್ಟ್ ಮಿಸ್!
ಭಾನುವಾರ ಗುವಾಹಟಿಯಲ್ಲಿ ನಡೆದ ದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಗಳನ್ನು ಕಳೆದುಕೊಂಡು 153 ರನ್ ಗಳಿಸಿತ್ತು. ಈ ಮೊತ್ತವನ್ನು ಲೆಕ್ಕಕ್ಕಿಲ್ಲದಂತೆ ಬೆನ್ನಟ್ಟಿದ ಭಾರತ ತಂಡ ಇನ್ನೂ 60 ಎಸೆತಗಳನ್ನು ಬಾಕಿ ಉಳಿದಿರುವಂತೆ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರು ಭಾರತದ ಪರವಾಗಿ 2ನೇ ಅತಿ ವೇಗದ ಅರ್ಧಶತಕ ಹೊಡೆದದ್ದು ವಿಶೇಷವಾಗಿತ್ತು. ಅವರ ಮೆಂಟರ್ ಆಗಿರುವ ಯುವರಾಜ್ ಸಿಂಗ್ ಅವರು ಕೇವಲ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿರುವುದು ಭಾರತದ ಪರವಾಗಿ ದಾಖಲಾಗಿರುವ ಅತ್ಯಂತ ವೇಗದ ಅರ್ಧಶತಕವಾಗಿದೆ. ಈ ದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಳ್ಳಲು ಅಭಿಷೇಕ್ ಶರ್ಮಾ ಅವರು ಕೇವಲ 2 ಎಸೆತಗಳಲ್ಲಿ ವಂಚಿತರಾದರು. ಅವರು 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಸಮಸ್ತ ನೂರನೇ ವರ್ಷದ ಸಂಭ್ರಮ: ಕಾಸರಗೋಡಿನ ಕುಣಿಯದಲ್ಲಿ ಭರದ ಸಿದ್ಧತೆ
ಕುಣಿಯ (ಕಾಸರಗೋಡು): ಸಮಸ್ತ ಕೇರಳ ಜಮೀಯ್ಯತುಲ್ ಉಲಮಾದ ನೂರನೇ ವರ್ಷದ ಸಂಭ್ರಮದ ಪ್ರಯುಕ್ತ ಆಯೋಜಿಸಲಾಗಿರುವ ಬೃಹತ್ ಅಂತರಾಷ್ಟ್ರೀಯ ಮಹಾಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಕುಣಿಯದಲ್ಲಿ ನಿರ್ಮಿಸಲಾಗಿರುವ 'ವರಕ್ಕಲ್ ಮುಲ್ಲಕ್ಕೋಯ ತಂಙಳ್ ನಗರ'ದಲ್ಲಿ ಫೆ. 4 ರಿಂದ 8 ರವರೆಗೆ ನಡೆಯಲಿದೆ. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ಕೇರಳ, ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳು, ಲಕ್ಷದ್ವೀಪ ಹಾಗೂ ವಿದೇಶಗಳಿಂದ ಗಣ್ಯರು, ನಾಯಕರು ಮತ್ತು ಲಕ್ಷಾಂತರ ಕಾರ್ಯಕರ್ತರು ಆಗಮಿಸಲಿದ್ದಾರೆ. ಜಾಗತಿಕ ಎಕ್ಸ್ಪೋ ಮತ್ತು ಮಹಿಳೆಯರಿಗೆ ಅವಕಾಶ:- ಸಮ್ಮೇಳನದ ಅಂಗವಾಗಿ ಏರ್ಪಡಿಸಲಾಗಿರುವ 'ಗ್ಲೋಬಲ್ ಎಕ್ಸ್ಪೋ' ಜ.30ರ ಸಂಜೆ ಉದ್ಘಾಟನೆಗೊಳ್ಳಲಿದೆ. ಎಕ್ಸ್ಪೋ ವೀಕ್ಷಣೆಗಾಗಿ ಆನ್ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ವಿಶೇಷವೆಂದರೆ, ಜನವರಿ 31 ಮತ್ತು ಫೆಬ್ರವರಿ 1 ರಂದು ಮಹಿಳೆಯರಿಗೆ ಮಾತ್ರ ಎಕ್ಸ್ಪೋ ವೀಕ್ಷಿಸಲು ಅವಕಾಶ ನೀಡಲಾಗಿದ್ದು, ಆ ದಿನಗಳಲ್ಲಿ ಸಂಪೂರ್ಣ ಪೆವಿಲಿಯನ್ ಮಹಿಳಾ ಸ್ವಯಂಸೇವಕರ ನಿಯಂತ್ರಣದಲ್ಲಿರಲಿದೆ. ಫೆಬ್ರವರಿ 2 ರಿಂದ 8 ರವರೆಗೆ ಪುರುಷರಿಗೆ ಪ್ರವೇಶವಿರುತ್ತದೆ. 100 ಧ್ವಜಗಳ ಮೆರವಣಿಗೆ:- ಈಜಿಪ್ಟ್ ಸೇರಿದಂತೆ ವಿವಿಧ ದೇಶಗಳು ಮತ್ತು ಭಾರತದ ವಿವಿಧ ರಾಜ್ಯಗಳಿಂದ ತರಲಾದ 100 ಧ್ವಜಗಳು ಫೆಬ್ರವರಿ 4 ರಂದು ಕುಣಿಯ ತಲುಪಲಿವೆ. ಕೋಝಿಕೋಡ್ ನ ವರಕ್ಕಲ್ ನಲ್ಲಿರುವ ಶಂಸುಲ್ ಉಲಮಾ ಇ.ಕೆ. ಅಬೂಬಕ್ಕರ್ ಮುಸ್ಲಿಯಾರ್ ಅವರ ಮಖಾಮಿನಿಂದ ದ ತರಲಾಗುವ ಈ ಧ್ವಜಗಳನ್ನು ತಳಂಗರೆಯ ಮಲಿಕ್ ಇಬ್ನು ದೀನಾರ್ ಮಖಾಮಿಗೆ ತಲುಪಿಸಿ, ಅಲ್ಲಿಂದ ಭವ್ಯ ಮೆರವಣಿಗೆಯ ಮೂಲಕ ಸಮ್ಮೇಳನ ನಗರಿಗೆ ತರಲಾಗುವುದು. ಧ್ವಜಾರೋಹಣದೊಂದಿಗೆ ಕ್ಯಾಂಪ್ ಸೆಷನ್ಗಳಿಗೆ ಚಾಲನೆ ಸಿಗಲಿದೆ. ಬೃಹತ್ ಪ್ರತಿನಿಧಿ ಶಿಬಿರ:- * ಆನ್ಲೈನ್ ಮೂಲಕ ಆಯ್ಕೆಯಾದ 33,313 ಪ್ರತಿನಿಧಿಗಳು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. * ಫೆಬ್ರವರಿ 4 ರಿಂದ 6ರವರೆಗೆ 10,000 ಪ್ರತಿನಿಧಿಗಳಿಗೆ 'ದಾಈ' ಶಿಬಿರ. * ಫೆಬ್ರವರಿ 6 ರಿಂದ 8ರವರೆಗೆ 23,313 ಪ್ರತಿನಿಧಿಗಳನ್ನೊಳಗೊಂಡ ಜನರಲ್ ಕ್ಯಾಂಪ್. ವಿವಿಧ ವಿಷಯಗಳ ಕುರಿತು ಪ್ರಮುಖ ವಿದ್ವಾಂಸರು ತರಗತಿಗಳನ್ನು ನಡೆಸಿಕೊಡಲಿದ್ದಾರೆ. ಇದರೊಂದಿಗೆ ಸಮ್ಮೇಳನ ನಗರಿಯ ಹಾಲ್ಗಳಲ್ಲಿ ಅಂತರಾಷ್ಟ್ರೀಯ ಸೆಮಿನಾರ್ ಗಳು ನಡೆಯಲಿವೆ. ಸುಸಜ್ಜಿತ ವ್ಯವಸ್ಥೆ ಮತ್ತು ಭದ್ರತೆ:- ಆರೋಗ್ಯ ಸೇವೆ: ಸಮ್ಮೇಳನ ನಗರಿಯಲ್ಲಿ 30 ಹಾಸಿಗೆಗಳ ತಾತ್ಕಾಲಿಕ ಚಿಕಿತ್ಸಾ ಕೇಂದ್ರ, ವೈದ್ಯರು ಮತ್ತು ಸಿಬ್ಬಂದಿ ಲಭ್ಯವಿರುತ್ತಾರೆ. ತುರ್ತು ಚಿಕಿತ್ಸೆಗಾಗಿ 20 ಅಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಅಗ್ನಿಶಾಮಕ ದಳ: ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಮೊಕ್ಕಾಂ ಹೂಡಲಿವೆ. ಊಟೋಪಚಾರ: ಶಿಬಿರದ ಪ್ರತಿನಿಧಿಗಳಿಗೆ ನುರಿತ ತಜ್ಞರ ಮೇಲ್ವಿಚಾರಣೆಯಲ್ಲಿ ಸಿದ್ಧಪಡಿಸಿದ ಆಹಾರ ಮತ್ತು ಕುಡಿಯುವ ನೀರನ್ನು ಪೂರೈಸಲಾಗುವುದು. ಸ್ವಯಂಸೇವಕರು: ಸುಗಮ ಸಂಚಾರ ಮತ್ತು ಜನದಟ್ಟಣೆ ನಿಯಂತ್ರಿಸಲು 3,313 'ವಿಖಾಯ' ಸ್ವಯಂಸೇವಕರು ಹಾಗೂ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಸಮಸ್ತದ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಹಾಗೂ ಸ್ಥಳೀಯ ಸ್ವಾಗತ ಸಮಿತಿಯವರು ಹಗಲಿರುಳು ಸಿದ್ಧತೆಯಲ್ಲಿ ತೊಡಗಿದ್ದಾರೆ. ವಿಶೇಷವೆಂದರೆ, ಜಾತಿ-ಮತ ಮತ್ತು ರಾಜಕೀಯ ಭೇದವಿಲ್ಲದೆ ಕುಣಿಯದ ಸುತ್ತಮುತ್ತಲಿನ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಿದ್ದಾರೆ. ವರದಿ : ಯೂಸುಫ್ ಮುಂಡೋಲೆ
ತಲಪಾಡಿ: ಮನೆಗೆ ನುಗ್ಗಿ ಕಳ್ಳತನ; ಪ್ರಕರಣ ದಾಖಲು
ಉಳ್ಳಾಲ: ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದೆ. ಘಟನೆಯ ವಿವರ: ಎಲಿಯಾರ್ ಪದವುನಲ್ಲಿ ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು 25 ವರ್ಷಗಳಿಂದ ಸೌದಿಯಲ್ಲಿ ಉದ್ಯೋಗದಲ್ಲಿದ್ದು, ಕಳೆದ ಆಗಸ್ಟ್ ತಿಂಗಳಲ್ಲಿ ಅಬೂಬಕ್ಕರ್ ಪತ್ನಿ, ಪುತ್ರ ಹಾಗೂ ಪುತ್ರಿ ಅವರು ಈ ಮನೆಗೆ ಬೀಗ ಹಾಕಿ ಕುಟುಂಬ ಸಹಿತ ಸೌದಿಗೆ ಹೋಗಿದ್ದರು. ಇದರ ಬಳಿಕ ಅಬೂಬಕ್ಕರ್ ಅವರ ಸಹೋದರ ನ ಪತ್ನಿ ಇಂದು ಮನೆ ನೋಡಿ ಸ್ವಚ್ಛ ಮಾಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಮನೆಯ ಮುಂಬಾಗಿಲನ್ನು ಒಡೆದು ಒಳ ನುಗ್ಗಿದ ಕಳ್ಳರು ಕೆಳ ಮಹಡಿಯಲ್ಲಿರುವ ಮೂರು ಕೊಠಡಿಗಳು ಹಾಗೂ ಮೊದಲ ಮಹಡಿಯಲ್ಲಿ ಇರುವ ಒಂದು ಕೊಠಡಿಯಲ್ಲಿರುವ ಒಟ್ಟು ನಾಲ್ಕು ಕಪಾಟುಗಳನ್ನು ಒಡೆದು ಜಾಲಾಡಿದ್ದಾರೆ. ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.ಅಲ್ಲದೇ ಅಡುಗೆ ಕೋಣೆ ಯ ಕಪಾಟುಗಳನ್ನು ಜಾಲಾಡಿದ ಕಳ್ಳರಿಗೆ ಚಿನ್ನಾಭರಣ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಕಳ್ಳರು ಕಪಾಟಿನಲ್ಲಿದ್ದ ಬೆಲೆ ಬಾಳುವ ವಾಚ್, ಮೊಬೈಲ್ ಕಳವುಗೈದಿದ್ದಾರೆ. ಈ ಮನೆಯ ಕುಟುಂಬ ವಿದೇಶಕ್ಕೆ ಹೋಗುವ ಮೊದಲೇ ಚಿನ್ನಾಭರಣಗಳನ್ನು ಸೇಫ್ ಲಾಕರ್ ನಲ್ಲಿ ಇಟ್ಟು ಹೋಗಿದ್ದರು ಎಂದು ಅಬೂಬಕ್ಕರ್ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಚಿನ್ನಾಭರಣ ದೋಚಲು ಬಂದಿದ್ದರು: ಕಳವುಗೈದ ಆರೋಪಿಗಳು ಚಿನ್ನಾಭರಣ ದೋಚಲು ಬಂದಿದ್ದರು.ಚಿನ್ನಾಭರಣ ಸಿಗದ ಕಾರಣ ಮೊಬೈಲ್, ವಾಚ್ ಕಳವುಗೈದಿರಬೇಕು ಎಂದು ಶಂಕಿಸಲಾಗಿದೆ.ಈ ಬಗ್ಗೆ ಅಬೂಬಕ್ಕರ್ ಅವರ ಬಾವ ಶೇಖಬ್ಬ ಅವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆನ್ಲೈನ್ ಬೆಟ್ಟಿಂಗ್ನಲ್ಲಿ ಗೆದ್ದ ಹಣ ನೀಡದೆ ಬೆದರಿಕೆ ಪ್ರಕರಣ: ಐದು ಮಂದಿ ಆರೋಪಿಗಳ ಬಂಧನ
ಕೋಟ, ಜ.25: ಆನ್ಲೈನ್ ಬೆಟ್ಟಿಂಗ್ನಲ್ಲಿ ಗೆದ್ದ 15ಲಕ್ಷ ರೂ. ಹಣ ನೀಡದೆ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿಯ ರೂಪೇಶ್(23), ಮನೋಜ್(25), ಕೊಳ್ಕೆಬೈಲುವಿನ ಸೃಜನ್ ಶೆಟ್ಟಿ(28), ಪಡುಮುಂಡುವಿನ ರಾಘವೇಂದ್ರ (37), ಶಿರಿಯಾರ ಕುಶಲ(38) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಲ್ಲಾಡಿಯ ಸಂದೇಶ್ ಕುಲಾಲ್ ಎಂಬವರಿಗೆ ಸುಮಾರು ಒಂದು ವರ್ಷದ ಹಿಂದೆ ಆನ್ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಶಿರಿಯಾರ ನಿವಾಸಿ ಪ್ರದೀಪ್ ಎಂಬಾತನ ಪರಿಚಯವಾಗಿತ್ತು. ಸಂದೇಶ್ ಕುಲಾಲ್, ಪ್ರದೀಪ್ ಸೂಚನೆಯಂತೆ ರೂಪೇಶ್, ಮನೋಜ್, ಧೀರಜ್, ಹರೀಶ, ವಿದೇಶ್ ಹಾಗೂ ಇತರೆ ವ್ಯಕ್ತಿಗಳ ಮೊಬೈಲ್ ನಂಬರ್ಗಳಿಗೆ ಆನ್ಲೈನ್ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಸಂದೇಶ್ ಕುಲಾಲ್ ಬೆಟ್ಟಿಂಗ್ನಲ್ಲಿ ಸುಮಾರು 15 ಲಕ್ಷ ರೂ. ಹಣವನ್ನು ಗೆದ್ದಿದ್ದು ಈ ಹಣವನ್ನು ಇವರು ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ. ಒಂದು ತಿಂಗಳ ಹಿಂದೆ ಶಿರಿಯಾರದಲ್ಲಿ ಪ್ರದೀಪ್ನನ್ನು ಭೇಟಿ ಮಾಡಿ ಗೆದ್ದ 15ಲಕ್ಷ ರೂ. ಹಣ ನೀಡುವಂತೆ ಕೇಳಿದ್ದು, ಆಗ ಪ್ರದೀಪ್, ಆತನ ತಂಡವರು ಹಣವನ್ನು ನೀಡಲು ನಿರಾಕರಿಸಿ ಜೀವ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಿರಾಶ್ರಿತರ ಕಲ್ಯಾಣಕ್ಕಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ ಎಸ್.ಜಿ. ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ
ಬೆಂಗಳೂರು: ಇಲ್ಲಿನ ಆರ್.ಟಿ.ನಗರದ ನಿವಾಸಿಯಾದ ಡಾ.ಎಸ್.ಜಿ. ಸುಶೀಲಮ್ಮ ಅವರಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಲಭಿಸಿದ್ದು, ಮಹಿಳಾ ಸಬಲೀಕರಣ, ಶಿಶು ಸಂರಕ್ಷಣೆ, ಬಡವರ ಹಾಗೂ ನಿರಾಶ್ರಿತರ ಕಲ್ಯಾಣಕ್ಕಾಗಿ ದಶಕಗಳ ಕಾಲ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ಕೇಂದ್ರ ಸರಕಾರ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. 1939ರ ಮೇ 24ರಂದು ನಗರದಲ್ಲಿ ಜನಿಸಿದ ಡಾ. ಎಸ್.ಜಿ. ಸುಶೀಲಮ್ಮ ಅವರು 1959ರಿಂದ 1967ರವರೆಗೆ ಕಾರ್ಖಾನೆಯೊಂದರಲ್ಲಿ 15 ವರ್ಷ ಸೇವೆ ಸಲ್ಲಿಸಿದರು. 1963ರಲ್ಲಿ ವೃತ್ತಿ ಜೀವನಕ್ಕೆ ರಾಜೀನಾಮೆ ನೀಡಿ ಸಂಪೂರ್ಣವಾಗಿ ಸಮಾಜಸೇವೆಗೆ ತಮ್ಮ ಜೀವನವನ್ನು ಸಮರ್ಪಿಸಿದರು. ಅವರು 1974ರಿಂದ 1978ರವರೆಗೆ ಭುವನೇಶ್ವರಿ ಮಹಿಳಾ ಮಂಡಳಿಯಲ್ಲಿ ವಾರ್ಡನ್ ಆಗಿ ಕಾರ್ಯನಿರ್ವಹಿಸಿದ್ದಾರೆ. 1975ರಲ್ಲಿ ಹೆಬ್ಬಾಳದ ಸಮೀಪದ ಚೋಳನಾಯಕನಹಳ್ಳಿಯಲ್ಲಿ ಬಡವರು, ಅನಾಥರು, ನಿರಾಶ್ರಿತ ಮಕ್ಕಳು ಮತ್ತು ಮಹಿಳೆಯರ ಸೇವೆಗಾಗಿ ಸುಮಂಗಲಿ ಸೇವಾ ಆಶ್ರಮವನ್ನು ಸ್ಥಾಪಿಸಿದರು. 1976ರಲ್ಲಿ ಬಸವಾನಂದ ನರ್ಸರಿ, 1979ರಲ್ಲಿ ಸುಮಂಗಲಿ ಯುವತಿ ಮಂಡಳಿ ಹಾಗೂ 1985ರಲ್ಲಿ ಚೋಳನಾಯಕನಹಳ್ಳಿಯಲ್ಲಿ ಬಸವಾನಂದ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸಿ ಶಿಕ್ಷಣ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಿದರು. ಪ್ರಾರಂಭದಿಂದ ಸುಮಂಗಲಿ ಸೇವಾಶ್ರಮದ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿರುವ ಎಸ್.ಜಿ.ಸುಶೀಲಮ್ಮ 1987ರಲ್ಲಿ ಬೆಂಗಳೂರು ಉತ್ತರ ತಾಲ್ಲೂಕಿನ ಮಹಿಳಾ ಮಂಡಲದ ಒಕ್ಕೂಟದ ಅಧ್ಯಕ್ಷರಾಗಿ ಮತ್ತು ಜಾಲಹಳ್ಳಿಯ ಸಮೂಹ ಸಾಮಾಜಿಕ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ, 1989ರಲ್ಲಿ ಬೆಂಗಳೂರು ನಗರ ಜಿಲ್ಲಾ ಮಹಿಳಾ ಮಹಾಮಂಡಲದ ಸಂಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 1990ರಲ್ಲಿ ದೊಡ್ಡಬಳ್ಳಾಪುರದ ಸದ್ಗುರು ಅಮರಜ್ಯೋತಿ ವಿಶ್ವಕುಂಡಲ ಯೋಗ ಆಶ್ರಮದ ಅಧ್ಯಕ್ಷರಾಗಿ ಮತ್ತು ಬೆಂಗಳೂರು ನಗರ ಜಿಲ್ಲೆಯ ಬಹೋಪಯೋಗಿ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ಅನೇಕ ಸಂಘ-ಸಂಸ್ಥೆಗಳಿಗೆ ಪದಾಧಿಕಾರಿಗಳಾಗಿ, ಸಲಹೆಗಾರರಾಗಿ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಡಾ. ಸುಶೀಲಮ್ಮ ಅವರು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಮಹಿಳಾ ಒಕ್ಕೂಟಗಳ ರಚನೆ, ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮಗಳು ಹಾಗೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಇವರ ಸೇವಾ ಕಾರ್ಯಗಳಿಂದ ಸಾವಿರಾರು ಮಹಿಳೆಯರು ಮತ್ತು ಮಕ್ಕಳು ಹೊಸ ಬದುಕಿನ ದಾರಿಯನ್ನು ಕಂಡಿದ್ದಾರೆ.
ಭಾರತ ಮಾತೆಯ ದೈವಿಕ ರೂಪಕ್ಕೆ ವಂದೇ ಮಾತರಂ ಗೀತೆಯಿಂದ ದೇಶಭಕ್ತಿಯ ಸಿಂಚನ; ರಾಷ್ಟ್ರಪತಿ ದ್ರೌಪದಿ ಮುರ್ಮು
ಭಾರತದ ಸ್ವಾತಂತ್ರ್ಯ ಸಂಗ್ರಾಮ ಮತ್ತು ಆ ನಂತರದ ದೇಶ ರಚನೆಯಲ್ಲಿ ವಂದೇ ಮಾತರಂ ಗೀತೆ ನಿರ್ವಹಿಸಿರುವ ಮಹತ್ವದ ಪಾತ್ರವನ್ನು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಮರಿಸಿದ್ದಾರೆ. ಭಾರತದ 77ನೇ ಗಣರಾಜ್ಯೋತ್ಸವ ಮುನ್ನಾದಿನ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ದ್ರೌಪದಿ ಮುರ್ಮು ಅವರು ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಶ್ರೌರ್ಯವನ್ನು ಕೊಂಡಾಡಿದರು. ಇದೇ ವೇಳೆ ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ರಾಷ್ಟ್ರಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಇಲ್ಲಿದೆ ಮಾಹಿತಿ.
ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಯಡಿ ಮಂಗಳೂರಿಗೆ 200 ಕೋಟಿ ರೂ. ಅನುದಾನ: ಸಚಿವ ಭೈರತಿ ಸುರೇಶ್
ಮಹಾಕಾಳಿಪಡ್ಪು ಅಂಡರ್ ಪಾಸ್ ಉದ್ಘಾಟನೆ
ಬೆಳಗಾವಿಯ ಪ್ರಭಾಕರ್ ಕೋರೆ ಅವರಿಗೆ ಪದ್ಮಶ್ರೀ ಗರಿ
ಬೆಂಗಳೂರು: ‘ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ’(ಕೆಎಲ್ಇ)ಯ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಅವರ ಅನುಪಮ ಸೇವೆಯನ್ನು ಗುರುತಿಸಿ ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಯನ್ನು ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಮೂಲದ ಪ್ರಭಾಕರ ಕೋರೆ ಅವರು, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅದ್ವಿತೀಯ ಸೇವೆಯನ್ನು ಗುರುತಿಸಿ ಪ್ರತಿಷ್ಟಿಯ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಪ್ರೇಮಿಯಾಗಿರುವ ಕೋರೆ ಅವರ ದೂರದೃಷ್ಟಿ ಹಾಗೂ ನಾಯಕತ್ವ ಗುಣಗಳೇ ಅವರನ್ನು ಇಷ್ಟೊಂದು ಎತ್ತರಕ್ಕೆ ಬೆಳೆಸಿವೆ ಎಂದು ಅವರ ಆಪ್ತರ ಅನಿಸಿಕೆಯಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿನ ಕೋರೆ ಅವರ ಸೇವೆ ಪರಿಗಣಿಸಿ ಅಮೆರಿಕದ ಪ್ರತಿಷ್ಠಿತ ಥಾಮಸ್ ಜಾಫರ್ಸನ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿದೆ. ಪ್ರಭಾಕರ ಕೋರೆ ಈ ಗೌರವ ಪಡೆದ ಮೊದಲ ಕನ್ನಡಿಗ. ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಹಲವು ಪ್ರಶಸ್ತಿಗಳೂ ಅವರನ್ನು ಅರಸಿ ಬಂದಿವೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಸರಕಾರ ಗೌರವಿಸಿದೆ. 2008ರಲ್ಲಿ ಕರ್ನಾಟಕ ವಿಶ್ವ ವಿದ್ಯಾನಿಲಯ ಹಾಗೂ 2013ರಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾನಿಲಯಗಳು ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿವೆ. ಇದೀಗ ಪದ್ಮಶ್ರೀ ಪ್ರಶಸ್ತಿಯೂ ಬಂದಿದೆ. 1947ರ ಆಗಸ್ಟ್ 1ರಂದು ಜನಿಸಿದ ಅವರು, ಬಿ.ಕಾಂ ಪದವೀಧರ. ಮೂರು ಅವಧಿಗೆ (1990-1996, 2008-2014, 2014-2020) ರಾಜ್ಯಸಭಾ ಸದಸ್ಯರಾಗಿ ಅವರು ಕೆಲಸ ಮಾಡಿದ್ದಾರೆ. 2001ರಿಂದ 2007ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಕೃತಕ ಬುದ್ದಿಮತ್ತೆಯಿಂದ ಸೃಷ್ಠಿಶೀಲ ಮನಸ್ಸುಗಳು ನಾಶ: ಟಿ.ಎನ್.ಸೀತಾರಾಂ ಆತಂಕ
ಉಡುಪಿ: ಕೃತಕ ಬುದ್ದಿಮತ್ತೆ ಎಂಬುದು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮೂಡಿಸುತ್ತಿದೆ. ಆದರೆ ಅದು ಸಾಹಿತ್ಯ, ಸಂಸ್ಕೃತಿಗಳ ಕ್ಷೇತ್ರಕ್ಕೆ ಕಾಲಿಟ್ಟರೆ ಸೃಷ್ಠಿಶೀಲ ಮನಸ್ಸುಗಳು ನಾಶವಾಗಿ ದೊಡ್ಡ ಅಪಾಯ ಉಂಟು ಮಾಡುವ ಸಾಧ್ಯತೆ ಇದೆ. ಅದರ ಬಗ್ಗೆ ಎಚ್ಚರ ವಹಿಸಬೇಕಾಗಿದೆ ಎಂದು ಸಾಹಿತಿ, ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ಆತಂಕ ವ್ಯಕ್ತಪಡಿಸಿದ್ದಾರೆ. ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಸಂಸ್ಕೃತಿ ಉತ್ಸವದ ಎರಡನೆ ದಿನವಾದ ರವಿವಾರ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರವನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು. ಕೃತಕ ಬುದ್ಧಿಮತ್ತೆಯ ಅನುಕೂಲಗಳನ್ನು ನಾವು ಸ್ವಾಗತಿಸಬೇಕು ಮತ್ತು ಯಾವುದೇ ಕಾರಣಕ್ಕೂ ನಿರಾಕರಿಸಬಾ ರದು. ಕೃತಕ ಬುದ್ದಿಮತ್ತೆಗೆ ಎಷ್ಟೇ ಬುದ್ದಿ ಇರಬಹುದು. ಆದರೆ ಹೃದಯ ಕಣ್ಣೀರು ಅರ್ಥ ಮಾಡಲು ಅದಕ್ಕೆ ಸಾಧ್ಯ ಇಲ್ಲ. ಆದುದರಿಂದ ಮುಂದೆ ಇದರ ಜೊತೆ ಪ್ರತಿ ಹಂತದಲ್ಲೂ ಯುದ್ಧ ಮಾಡುವ ಸ್ಥಿತಿ ಬರಲಿದೆ ಎಂದರು. ಕೃತಕ ಬುದ್ದಿಮತ್ತೆಯ ಪರಿಣಾಮವಾಗಿ ಲಕ್ಷಾಂತರ ಮಂದಿ ಕೆಲಸ ಕಳೆದು ಕೊಳ್ಳಲಿದ್ದಾರೆ. ಈ ಜಗತ್ತಿನಲ್ಲಿ ನಿರು ದ್ಯೋಗ ಸಂಖ್ಯೆ ಕೋಟಿಗೆ ತಂದು ಇಡುವ ಸ್ಥಿತಿಯನ್ನು ಕೃತಕ ಬುದ್ದಿಮತ್ತೆ ಸೃಷ್ಠಿಸುತ್ತದೆ. ಈ ಸವಾಲನ್ನು ನಾವು ಸ್ವೀಕರಿಸ ಬೇಕು. ಇಲ್ಲದಿದ್ದರೆ ಇಲ್ಲಿ ಮನುಷ್ಯರು ಉಳಿಯುವುದಿಲ್ಲ ಎಂದು ಅವರು ತಿಳಿಸಿದರು. ಅಧ್ಯಕ್ಷತೆಯನ್ನು ಉಡುಪಿ ಹಿರಿಯ ವಿದ್ವಾಂಸ ನಾಡೋಜ ಪ್ರೊ.ಕೆ.ಪಿ.ರಾವ್ ವಹಿಸಿದ್ದರು. ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅಭಿನಂದನಾ ಮಾತುಗಳನ್ನಾಡಿದರು. ಲೇಖಕ ಜೋಗಿ, ಕಾರ್ಕಳ ಯಕ್ಷ ರಂಗಾಯಣ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ್, ಪಂಚಮಿ ಟ್ರಸ್ಟ್ನ ಸಂಸ್ಥಾಪಕ ಡಾ.ಎಂ.ಹರಿಶ್ಚಂದ್ರ ಮುಖ್ಯ ಅತಿಥಿಗಳಾಗಿದ್ದರು. ಉದ್ಯಮಿ ಸುಗುಣ ಸುವರ್ಣ, ಕಲಾ ಪೋಷಕ ಭುವನಪ್ರಸಾದ್ ಹೆಗ್ಡೆ, ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್ ಉಪಸ್ಥಿತರಿದ್ದರು. ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅಸ್ಟ್ರೋ ಮೋಹನ್ ಸ್ವಾಗತಿಸಿದರು. ಪುರಸ್ಕಾರ ಸಮಿತಿಯ ಸಂಯೋಜಕ ಜನಾರ್ದನ ಕೊಡವೂರು ವಂದಿಸಿದರು. ವಿದ್ಯಾ ಶ್ಯಾಮಸುಂದರ್ ಸನ್ಮಾನ ಪತ್ರ ವಾಚಿಸಿದರು. ಪೂರ್ಣಿಮಾ ಜನಾರ್ದನ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಯಕ್ಷ ರಂಗಾಯಣ ರೆಪರ್ಟರಿ ಕಲಾವಿದರಿಂದ ಗುಲಾಮನ ಸ್ವಾತಂತ್ರ್ಯ ಯಾತ್ರೆ ನಾಟಕ ಪ್ರದರ್ಶನಗೊಂಡಿತು. ಗುರು ಲಂಕೇಶರನ್ನು ನೆನಪಿಸಿದ ಸೀತಾರಾಮ್! ಇದೇ ದಿನ ನನ್ನ ಗುರು ಪಿ.ಲಂಕೇಶ್ ತೀರಿಹೋಗಿರುವುದು. ಇಂದಿಗೆ 25ವರ್ಷಗಳಾಗಿವೆ. ಲಂಕೇಶ್ ಅವರು ನನ್ನನು ಮನುಷ್ಯರನ್ನಾಗಿ ಮಾಡಿದರು. ಅವರ ನಾಟಕಗಳಲ್ಲಿ ನಾನು ಮುಖ್ಯ ಪಾತ್ರ ವಹಿಸುತ್ತಿದ್ದೆ. ಅವರ ಪಲ್ಲವಿ ಸಿನೆಮಾ ದಲ್ಲಿ ನನಗೆ ನಾಯಕನಾಗಿ ನಟಿಸುವ ಅವಕಾಶ ಮಾಡಿಕೊಟ್ಟರು. ಅವರ ದೃಷ್ಠಿಕೋನ ಸಾಮಾನ್ಯರನ್ನು ಗುರುತಿ ಸುವುದು. ಇದು ನನ್ನ ಬದುಕಿನ ಬಹಳ ದೊಡ್ಡ ಪಾಠ ಮತ್ತು ದೀಪ ಎಂದು ಭಾವಿಸುತ್ತೇನೆ. ಆದುದರಿಂದ ನನ್ನ ಸಾಧನೆಗೆ ದೊರೆತ ಈ ಪ್ರಶಸ್ತಿಯಲ್ಲಿ ಮುಖ್ಯ ಪಾಲು ಲಂಕೇಶ್ ಅವರಿಗೆ ಸಲ್ಲಬೇಕು ಎಂದು ಟಿ.ಎನ್.ಸೀತಾರಾಂ ತಿಳಿಸಿದರು.
ಬಿಡದಿ ಟೌನ್ಶಿಪ್ ಭೂಸ್ವಾಧೀನ: ರೈತರ ಪರ ನಿಂತ ಎಚ್ಡಿ ಕುಮಾರಸ್ವಾಮಿ - ಹೊಸ ದರಕ್ಕೆ ಆಗ್ರಹ; ಎಕರೆಗೆ ಎಷ್ಟು?
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಭೂಮಿ ಉಳಿಸಲು ಬದ್ಧತೆ ತೋರಿದ್ದಾರೆ. ಭೂಸ್ವಾಧೀನವಾದರೆ ಎಕರೆಗೆ 13 ಕೋಟಿ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜಮೀನಿಗೂ ಪರಿಹಾರ ಪಡೆಯುವುದಿಲ್ಲ ಎಂದಿದ್ದಾರೆ. 2028ಕ್ಕೆ ಜನತಾ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಚರ್ಚೆಗೆ ಆಹ್ವಾನ ನೀಡಿದ್ದಾರೆ.
ಶೀಘ್ರವೇ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಕಾರ್ಕಳದಲ್ಲಿ ಹೊನಲು ಬೆಳಕಿನ ಕಾಂಗ್ರೆಸ್ ಕ್ರೀಡಾಕೂಟ ಉದ್ಘಾಟನೆ
ದೇವದುರ್ಗ | ಕುಡುಕರ ಅಡ್ಡೆಯಾದ ಎಪಿಎಂಸಿ ಕಲ್ಯಾಣ ಮಂಟಪ
ಕೋಟಿ ರೂ. ವೆಚ್ಚದ ಕಟ್ಟಡ ನಿರ್ವಹಣೆಯಿಲ್ಲದೆ ಶಿಥಿಲ: ಅಧಿಕಾರಿಗಳು ಮೌನ
ಸಮಾಜದ ಏಳಿಗೆಗೆ ಸವಿತಾ ಮಹರ್ಷಿ ಮಾರ್ಗದರ್ಶನ ಅತೀ ಅಗತ್ಯ: ಎಂ.ಎ.ಗಫೂರ್
ಉಡುಪಿ, ಜ.25: ಸವಿತಾ ಸಮಾಜವು ತಮ್ಮ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ಸೃಜನಶೀಲತೆಯನ್ನು ಹೊಂದುವ ಮೂಲಕ ಸಮಾಜಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದು, ವೃತ್ತಿಯ ಮೂಲ ಪುರುಷರಾದ ಸವಿತಾ ಮಹರ್ಷಿ ಅವರ ಮಾರ್ಗದರ್ಶನ ಸಮಾಜದ ಏಳಿಗೆಗೆ ಅತೀ ಅಗತ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದ್ದಾರೆ. ಉಡುಪಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸವಿತಾ ಸಮಾಜದ ಸಹಯೋಗದಲ್ಲಿ ರವಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯವನ್ನು ಉದ್ಘಾಟಿಸಿ, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಅವರು ಮಾತನಾಡುತಿದ್ದರು. ಸಮಾಜವನ್ನು ಸನ್ಮಾರ್ಗದಲ್ಲಿ ನಡೆಯುವಂತ ಸಂದೇಶವನ್ನು ನೀಡಿದ ಮಹನೀಯರು ಜಯಂತಿ ಕಾರ್ಯಕ್ರಮವನ್ನು ಸರಕಾರ ಆಚರಿಸಿಕೊಂಡು ಬಂದಿದ್ದು,ಸವಿತಾ ಸಮಾಜದ ಏಳಿಗೆಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಮುಂದಿನ ದಿನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಮಕ್ಕಳು ಶಿಕ್ಷಣವನ್ನು ಪಡೆವುದ ರೊಂದಿಗೆ ಶೈಕ್ಷಣಿಕವಾಗಿ ಆರ್ಥಿಕವಾಗಿ ಸಮಾಜವು ಇನ್ನಷ್ಟು ಅಭಿವೃದ್ಧಿ ಹೊಂದುವಂತಾಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಜಿಪಂ ಮುಖ್ಯ ಯೋಜನಾಧಿಕಾರಿ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಸವಿತಾ ಮಹರ್ಷಿ ಗಳು ಜೀವನ ನಿರ್ವಹಣೆಗಾಗಿ ಅನೇಕ ತತ್ವಗಳನ್ನು ಕೊಡುಗೆಯಾಗಿ ನೀಡಿದ್ದು, ಪ್ರಸ್ತುತ ಬದುಕಿನಲ್ಲಿ ಅವುಗಳ ಪಾಲನೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ರಾಜು ಸಿ.ಭಂಡಾರಿ ಕಿನ್ನಿಮುಲ್ಕಿ, ಸವಿತಾ ಮಹರ್ಷಿಗಳ ತತ್ವ ಆದರ್ಶ ಗಳ ಪಾಲನೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿನಿತ್ಯದ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಹೇಳಿದರು. ಸಮುದಾಯದ ಹಿರಿಯರಾದ ಗೋವಿಂದ ಭಂಡಾರಿ ಬನ್ನಂಜೆ, ಸವಿತಾ ಮಹರ್ಷಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಶೇಖರ ಸಾಲಿಯಾನ್ ಆದಿಉಡುಪಿ ಅವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿ ದರು. ಮಹೇಶ್ ಕಾರ್ಯಕ್ರಮ ನಿರೂಪಿಸಿ, ಶೇಖರ್ ಸಾಲಿಯಾನ್ ವಂದಿಸಿದರು.
KSRTC: ಬಸ್ಗಳ ಲೈವ್ ಲೋಕೇಶನ್ ಇನ್ಮುಂದೆ ನಿಮ್ಮ ಮೊಬೈಲ್ನಲ್ಲಿ, ವಿಟಿಎಂಎಸ್ ವ್ಯವಸ್ಥೆ ಶೀಘ್ರವೇ ಜಾರಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವ್ಯಾಪ್ತಿಯಲ್ಲಿ 8,000 ಕ್ಕೂ ಅಧಿಕ ಬಸ್ಗಳು ನಿತ್ಯ ಲಕ್ಷಾಂತರ ಕಿಲೋ ಮೀಟರ್ ಸಂಚರಿಸಿ ಸಾರ್ವಜನಿಕರಿಗೆ ದಕ್ಷ ಸೇವೆ ನೀಡುತ್ತಿವೆ. ಇವುಗಳ ಮೇಲ್ವಿಚಾರಣೆಗೆ ಮತ್ತು ಪ್ರಯಾಣಿಕರಿಗೆ ಅನುಕೂಲ ಒದಗಿಸುವ ಉದ್ದೇಶದಿಂದ ಬಹುನಿರೀಕ್ಷಿತ ವಾಹನ ಟ್ರ್ಯಾಕಿಂಗ್ ಮತ್ತು ಮಾನಿಟರಿಂಗ್ ಸಿಸ್ಟಮ್ (VTMS) ಸಾರಿಗೆ ಇಲಾಖೆ ಜಾರಿಗೆ ತರಲು ಮುಂದಾಗಿದೆ. ಈ
ಮತದಾರರಿಂದ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯ: ಉಡುಪಿ ಡಿಸಿ ಸ್ವರೂಪ
ಉಡುಪಿ, ಜ.25: ಭಾರತವು ಒಂದು ಪ್ರಜಾಪ್ರಭುತ್ವ ದೇಶವಾಗಿದ್ದು ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಕ್ಕು ಮತ್ತು ಕರ್ತವ್ಯ. 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿಕೆಯಿಂದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಿ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ. ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತ ಆಶ್ರಯ ದಲ್ಲಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ರವಿವಾರ ನಡೆದ 16 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ದೇಶದ ಚುನಾವಣಾ ಆಯೋಗ ಸ್ಥಾಪನೆಯಾದ ಸಂಸ್ಕರಣಾರ್ಥವಾಗಿ 2011ರಿಂದ ಪ್ರತಿ ವರ್ಷ ಜನವರಿ 25ನ್ನು ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪಾರದರ್ಶಕ ಮತದಾನ ಪ್ರಕ್ರಿಯೆಗಾಗಿ ಚುನಾವಣಾ ಆಯೋಗವು ನಾಗರಿಕ ಸ್ನೇಹಿ ತಂತ್ರಜ್ಞಾನಗಳನ್ನು ಪರಿಚಯಿಸಿದೆ. ಮತದಾನವು ಐಚ್ಛಿಕವಾಗಿದ್ದು, ಹೆಚ್ಚು ಜನರು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಾಗರಿಕರು ತಮ್ಮ ಆಸೆ ಆಕಾಂಕ್ಷೆಗಳನ್ನು ಪೂರೈಸುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಮತದಾನ ನಮಗೆ ನೀಡುತ್ತಿದ್ದು ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸ್ವಾತಂತ್ರ್ಯ ಸೇನಾನಿಗಳ ಬಲಿದಾನ ದಿಂದ ದೇಶವು ಗುಲಾಮ ಗಿರಿಯಿಂದ ಮುಕ್ತವಾಯಿತು. ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವವನ್ನು ಸಂವಿಧಾನದ ಮೂಲಕ ಪಡೆದುಕೊಂಡು ಮತದಾನದ ಅಧಿಕಾರವನ್ನು ಗಳಿಸಿದ್ದೇವೆ. 18 ವರ್ಷ ಮೀರಿದ ಎಲ್ಲಾ ವಯಸ್ಕರು ಪಕ್ಷಪಾತವಿಲ್ಲದೇ ಮತ ನೀಡಬಹುದು. ಯಾವುದೇ ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸ ಬೇಕು. ಜನ ಪ್ರತಿನಿಧಿಗಳು ಜವಾಬ್ದಾರಿಯಿಂದ ಕೆಲಸ ಮಾಡಲು ನಾವು ಜವಾಬ್ದಾರಿಯುತವಾಗಿ ಮತ ಚಲಾಯಿಸ ಬೇಕು. ನಮ್ಮ ಅಮೂಲ್ಯ ಮತವನ್ನು ಮಾರಾಟ ಮಾಡಬಾರದು ಎಂದರು. ನಿವೃತ್ತ ಸರಕಾರಿ ಅಭಿಯೋಜಕ ರಾಜು ಪೂಜಾರಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶಿವಪ್ರಸಾದ್ ಶೆಟ್ಟಿ ಎಸ್ಐಆರ್ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಯುವ ಮತದಾರ ರಿಗೆ ಎಪಿಕ್ ಕಾರ್ಡುಗಳನ್ನು ವಿತರಿಸಲಾಯಿತು. ಮತದಾನ ನಿಮಿತ್ತ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಉತ್ತಮವಾಗಿ ಕಾರ್ಯನಿರ್ವಹಿಸಿದ 5 ಜನ ಬಿಎಲ್ಓಗಳನ್ನು ಹಾಗೂ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯವನ್ನು ನಿರ್ವಹಿಸಿದ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಕೆ.ಎಸ್.ಜ್ಯೋತಿಶ್ರೀ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿದರು. ಗಂಗಾಧರ್ ಕೆ. ನಿರೂಪಿಸಿ, ವಂದಿಸಿದರು.
BBL 15- ಲೀಗ್ ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸಿದ ಪರ್ತ್ ಸ್ಕಾಚರ್ಸ್; CSK- MI ಜಂಟಿ ದಾಖಲೆ ನುಚ್ಚುನೂರು!
Perth Scorchers Vs Sydney Sixers- ಬಿಗ್ ಬ್ಯಾಷ್ ಲೀಗ್ ನಲ್ಲಿ ಪರ್ತ್ ಸ್ಕಾಚರ್ಸ್ ತಂಡವು ಸಿಡ್ನಿ ಸಿಕ್ಸರ್ಸ್ ತಂಡದ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸುವುದರೊಂದಿಗೆ 6ನೇ ಬಾರಿ ಪ್ರಶಸ್ತಿ ಗೆದ್ದಿದೆ. ಇದು ಲೀಗ್ ಕ್ರಿಕೆಟ್ ನಲ್ಲಿ ಹೊಸ ದಾಖಲೆಯಾಗಿದೆ. ಈ ವರೆಗೂ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಮತ್ತು ಟ್ರಿನಿಬಾಗೊ ನೈಟ್ ರೈಡರ್ಸ್ ತಂಡಗಳ ಜೊತೆಗೆ ಪರ್ತ್ ಸ್ಕಾಚರ್ಸ್ 5 ಬಾರಿ ಪ್ರಶಸ್ತಿ ಗೆದ್ದಿದ್ದು ಈ ಗೌರವವನ್ನು ಹಂಚಿಕೊಂಡಿದ್ದರು.
ಕರ್ನಾಟಕಕ್ಕೆ 8 ಪದ್ಮ ಗೌರವ; ಶತಾವಧಾನಿ ಆರ್. ಗಣೇಶ್ ರಿಗೆ ಪದ್ಮಭೂಷಣ
ಬೆಂಗಳೂರು: 2026ರ ಪದ್ಮ ಪ್ರಶಸ್ತಿಗಳು ಪ್ರಕಟವಾಗಿದ್ದು, ಈ ಬಾರಿ ಪದ್ಮ ಪ್ರಶಸ್ತಿಗಳಿಗೆ ಕರ್ನಾಟಕದಿಂದ ಎಂಟು ಮಂದಿ ಸಾಧಕರು ಆಯ್ಕೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಅಪೂರ್ವ ಸಾಧನೆ ಸಲ್ಲಿಸಿರುವ ಶತಾವಧಾನಿ ಆರ್. ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಏಳು ಮಂದಿ ಕರ್ನಾಟಕದ ಸಾಧಕರು ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸಾಮಾಜಿಕ ಸೇವೆಗಾಗಿ ಮಂಡ್ಯದ ಪುಸ್ತಕ ಮನೆಯ ಅಂಕೆ ಗೌಡ, ಸಾಮಾಜಿಕ ಸೇವೆಗಾಗಿ ಎಸ್.ಜಿ. ಸುಶೀಲಮ್ಮ, ಸಾಹಿತ್ಯ ಕ್ಷೇತ್ರದಲ್ಲಿ ಶಶಿ ಶೇಖರ್ ವೆಂಪತಿ, ವೈದ್ಯಕೀಯ ವಿಭಾಗದಲ್ಲಿ ಡಾ. ಸುರೇಶ್ ಹಂಗನವಾಡಿ, ವ್ಯಾಪಾರ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಟಿ.ಟಿ. ಜಗನ್ನಾಥನ್, ವಿಜ್ಞಾನ ಮತ್ತು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಶುಭಾ ವೆಂಕಟೇಶ ಅಯ್ಯಂಗಾರ್, ಹಾಗೂ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಭಾಕರ್ ಬಸವಪ್ರಭು ಕೋರೆ ಅವರಿಗೆ ಪದ್ಮಶ್ರೀ ಗೌರವ ನೀಡಲಾಗಿದೆ. ಶತಾವಧಾನಿ ಗಣೇಶ್ ಅವರ ಪರಿಚಯ ಇಲ್ಲಿದೆ... ಬಹುಭಾಷಾ ಪಂಡಿತರಾದ ಶತಾವಧಾನಿ ಆರ್.ಗಣೇಶ ಅವರಿಗೆ ಕಲಾ ಕ್ಷೇತ್ರದಲ್ಲಿ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯು ಸಂದಿದೆ. ಬಹುಭಾಷಾ ಪಂಡಿತರಾದ ಶತಾವಧಾನಿ ಗಣೇಶ ಅವರು 1962ರಲ್ಲಿ ಕೋಲಾರದಲ್ಲಿ ಜನಿಸಿದರು. ಅವರ ತಂದೆ ಆರ್.ಶಂಕರನಾರಾಯಣ ಅಯ್ಯರ್ ಹಾಗೂ ತಾಯಿ ಅಲಮೇಲಮ್ಮ. ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಹಾಗೂ ಗೌರಿಬಿದನೂರಿನಲ್ಲಿ ಪ್ರೌಢ ಶಿಕ್ಷಣವನ್ನು ಪಡೆದರು. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದ ಅವರು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವಿ ಪಡೆದಿದ್ದಾರೆ. ಮೈಸೂರ್ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ‘ಕನ್ನಡದಲ್ಲಿ ಅವಧಾನ ಕಲೆ’ ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಸಂಸ್ಕೃತ, ಕನ್ನಡ, ತೆಲುಗು ಹೀಗೆ 8 ಭಾಷೆಗಳಲ್ಲಿ ಅವಧಾನವನ್ನು ಪ್ರಸ್ತುತಪಡಿಸಿದ್ದಾರೆ. ‘ಚಿತ್ರಕಾವ್ಯ' ಗಣೇಶ್ ಅವರ ವಿಶೇಷತೆಯಾಗಿದ್ದು, ಅಮೆರಿಕ ಮತ್ತು ಯೂರೋಪ್ ದೇಶಗಳಿಗೆ ಭೇಟಿ ನೀಡಿ ಈ ಕುರಿತು ಪ್ರದರ್ಶನ ನೀಡಿದ್ದಾರೆ. ಈ ಕಲೆಯ ಕುರಿತು ಶತಾವಧಾನ ಶಾರದೆ ಹಾಗೂ ಶತಾವಧಾನ ಶ್ರೀವಿದ್ಯೆ ಎರಡು ಕೃತಿಗಳನ್ನು ರಚಿಸಿದ್ದಾರೆ. ಕಾವ್ಯಮೀಮಾಂಸೆ, ಛಂದಶ್ಯಾಸ್ತ್ರ, ವೇದಾಂತ, ಉಪನಿಷತ್, ಧರ್ಮಶಾಸ್ತ್ರ, ಇತಿಹಾಸ, ಸಂಸ್ಕೃತಿ, ಕಲೆ, ಭಾರತೀಯ ತತ್ವಶಾಸ್ತ್ರ, ವ್ಯಾಕರಣ, ಅಲಂಕಾರ ಶಾಸ್ತ್ರ ವಿಷಯಗಳಲ್ಲಿ ಪರಿಣಿತರಾಗಿರುವ ಗಣೇಶ್ ಅವರು, ಸಂಸ್ಕೃತದಲ್ಲಿ 12ಕ್ಕೂ ಹೆಚ್ಚಿನ ನಾಟಕಗಳನ್ನೂ, 16 ಕಾವ್ಯಗಳನ್ನೂ, ಕನ್ನಡದಲ್ಲಿ 8 ಕಾವ್ಯಗಳನ್ನು, 3 ಕಾದಂಬರಿಗಳನ್ನು ಬರೆದಿದ್ದಾರೆ. 6 ಕೃತಿಗಳನ್ನು ಅನುವಾದ ಮಾಡಿದ್ದಾರೆ. ಗಣೇಶ ಅವರು ತಮ್ಮ ಮೊದಲ ಶತಾವಧಾನವನ್ನು 1991ರ ಡಿ.15ರಂದು ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ಪ್ರದರ್ಶಿಸಿದರು. 2012ರ ನವೆಂಬರ್ 30ರಿಂದ ಡಿಸೆಂಬರ್ 2 ರವರೆಗೆ ಅವರು ಕನ್ನಡದಲ್ಲಿ ಮೊದಲ ಶತಾವಧಾನವನ್ನು ಸಂಪೂರ್ಣವಾಗಿ ಪ್ರದರ್ಶಿಸಿದರು. 2014ರ ಫೆ.16 ರಂದು ಬೆಂಗಳೂರಿನಲ್ಲಿ ಅವರು ತಮ್ಮ 1000ನೇ ಅವಧಾನವನ್ನು ಪ್ರದರ್ಶಿಸಿದ್ದಾರೆ.
17 ಸ್ಥಾನ ಪಡೆದಿರುವ ಜೆಡಿಎಸ್ ಹೇಗೆ ಅಧಿಕಾರಕ್ಕೆ ಬರುತ್ತಾರೆ: ಸಿ.ಎಂ ಸಿದ್ದರಾಮಯ್ಯ
17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದಾವೋಸ್ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ನಮ್ಮಲ್ಲಿ ಕೌಶಲ್ಯವಿರುವ ಮಾನವ ಸಂಪನ್ಮೂಲದ ಲಭ್ಯತೆಯಿದೆ. ಇದಕ್ಕೆ
ಕಲಬುರಗಿ | ಸಾಧಕರಿಗೆ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ಪ್ರದಾನ
ಕಲಬುರಗಿ : ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಅವರ 163ನೇ ಜಯಂತಿ ನಿಮಿತ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಸಾಧಕರಿಗೆ ನಗರದ ಕನ್ನಡ ಭವನದಲ್ಲಿ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯುವ ಸಾಧಕರಾದ ಸಂಗೀತ ಎಂ ಪಡಶೆಟ್ಟಿ, ಅಕ್ಷಯ್ ಯಂಕಪ್ಪ ಡ್ಯಾನ್ಸರ್, ವಿಜಯಕುಮಾರ, ಶ್ರೇಯ ಪಾಟೀಲ್, ಅನನ್ಯ, ಡಿ.ಎಸ್.ಪ್ರಜ್ವಲ್ ಅವರಿಗೆ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಕಾಂಗ್ರೆಸ್ ಮುಖಂಡ ನೀಲಕಂಠಾವ್ ಮೂಲಗೆ, ಸುರೇಶ್ ಮಾಲಿಕ್, ಮನ್ನೂರ್ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರೂಕ್ ಮನ್ನೂರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧೂಳಪ್ಪ ದೊಡ್ಡಮನಿ, ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಚಿನ್ ಪರತಾಹಬಾದ, ಡಾ. ರಾಜಶೇಖರ್ ಮಾಂಗ್, ಮಹಮದ್ ಇಬ್ರಾಹಿಂ ಕಪನೂರ್, ವಿಜಯಕುಮಾರ ಕಟ್ಟಿಮನಿ, ಜೈ ಭೀಮ ಹುಡುಗಿ, ಗಿರೀಶ ಬೋರೆ, ಕಲ್ಯಾಣರಾವ ತೋನಸಳ್ಳಿ, ಮಂಜುನಾಥ್ ನಾಲವಾರಕರ್, ಸತೀಶ್ ಫರಹತಾಬಾದ, ಸುರೇಶ ಹನಗುಡಿ, ಅಣವೀರ ಪಾಟೀಲ, ಅಕ್ಷಯ್, ಗುಂಡು ಸಿಂಗ್, ಶಿವು ಯಾದವ, ಅಂಕುಶ್ ಬಿಲ್ಲವ್, ಶ್ರೀಮಂತ ಚೌದರಿ ಇದ್ದರು.
ರಾಷ್ಟ್ರೀಯ ಮತದಾರರ ದಿನಾಚರಣೆ: ಕಲಬುರಗಿಯಲ್ಲಿ ಮತದಾರ ಜಾಗೃತಿಗಾಗಿ ಸೈಕಲ್ ಜಾಥಾ
ಕಲಬುರಗಿ: ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರವಿವಾರ ಕಲಬುರಗಿ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಈ ಸೈಕಲ್ ಜಾಥಾಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ನಗರದ ಜಗತ್ ವೃತ್ತದಲ್ಲಿ ಚಾಲನೆ ನೀಡಿದರು. ಸ್ವತಃ ಸೈಕಲ್ ತುಳಿಯುವ ಮೂಲಕ ಯುವಕರಿಗೆ ಮತದಾನದ ಮಹತ್ವದ ಬಗ್ಗೆ ಸಂದೇಶ ನೀಡಿದರು. ಜಗತ್ ವೃತ್ತದಿಂದ ಆರಂಭಗೊಂಡ ಜಾಥಾ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಸಾಗಿತು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಕೂಡ ಸೈಕಲ್ ತುಳಿದು ಜಾಥಾದಲ್ಲಿ ಭಾಗವಹಿಸಿ ಮತದಾರರ ಜಾಗೃತಿಗೆ ಬೆಂಬಲ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ತಹಶೀಲ್ದಾರ್ ಆನಂದಶೀಲ, ತಾಲೂಕು ಪಂಚಾಯತ್ ಇ.ಒಗಳಾದ ಸೈಯದ್ ಪಟೇಲ್, ಮಾನಪ್ಪ ಕಟ್ಟಿಮನಿ, ಕ್ರೀಡಾ ಇಲಾಖೆಯ ಸಂಜಯ ಬಾಣದ, ಪ್ರವೀಣ ಪುಣೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಯುವಕರು ಹಾಗೂ ಸೈಕ್ಲಿಸ್ಟ್ಗಳು ಉತ್ಸಾಹದಿಂದ ಭಾಗವಹಿಸಿದ್ದರು.
2026ರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ | ಯಾರಿಗೆ ಸಿಕ್ಕಿತು ʼಗೌರವʼ?; ಇಲ್ಲಿದೆ ಸಂಪೂರ್ಣ ವಿವರ
ಹೊಸದಿಲ್ಲಿ, ಜ.25: ರಾಷ್ಟ್ರದ ಅತ್ಯುನ್ನತ ನಾಗರಿಕ ಗೌರವಗಳಲ್ಲೊಂದಾದ ಪದ್ಮ ಪ್ರಶಸ್ತಿಗಳ 2026ನೇ ಸಾಲಿನ ಪುರಸ್ಕೃತರ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾಹಿತ್ಯ–ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರಿಗೆ ಈ ಗೌರವ ನೀಡಲಾಗಿದೆ. ಪದ್ಮ ಪ್ರಶಸ್ತಿಗಳನ್ನು ಪ್ರತಿವರ್ಷ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ಪ್ರದಾನ ಮಾಡಲಾಗುತ್ತದೆ. ಈ ಬಾರಿ ಹಲವು ಗಣ್ಯರಿಗೆ ಮರಣೋತ್ತರವಾಗಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. 2026ರ ಪದ್ಮ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ ಹೀಗಿದೆ: ►ಪದ್ಮವಿಭೂಷಣ 1. ಧರ್ಮೇಂದ್ರ ಸಿಂಗ್ ಡಿಯೋಲ್ (ಮರಣೋತ್ತರ) 2. ಕೆ.ಟಿ. ಥಾಮಸ್ 3. ಎನ್. ರಾಜಮ್ 4. ಪಿ. ನಾರಾಯಣನ್ 5. ವಿ.ಎಸ್. ಅಚ್ಯುತಾನಂದನ್ (ಮರಣೋತ್ತರ) ►ಪದ್ಮಭೂಷಣ 1. ಅಲ್ಕಾ ಯಾಗ್ನಿಕ್ 2. ಭಗತ್ ಸಿಂಗ್ ಕೋಶ್ಯಾರಿ 3. ಕಳ್ಳಿಪಟ್ಟಿ ರಾಮಸಾಮಿ ಪಳನಿಸ್ವಾಮಿ 4. ಮಮ್ಮುಟ್ಟಿ 5. ನೋರಿ ದತ್ತಾತ್ರೇಯುಡು 6. ಪಿಯೂಷ್ ಪಾಂಡೆ (ಮರಣೋತ್ತರ) 7. ಎಸ್.ಕೆ.ಎಂ. ಮೈಲಾನಂದನ್ 8. ಶತಾವಧಾನಿ ಆರ್. ಗಣೇಶ್ 9. ಶಿಬು ಸೊರೆನ್ (ಮರಣೋತ್ತರ) 10. ಉದಯ್ ಕೋಟಕ್ 11. ವಿ.ಕೆ. ಮಲ್ಹೋತ್ರಾ (ಮರಣೋತ್ತರ) 12. ವೆಲ್ಲಪ್ಪಳ್ಳಿ ನಟೇಶನ್ 13. ವಿಜಯ್ ಅಮೃತರಾಜ್ ► ಪದ್ಮಶ್ರೀ 1. ಎ.ಇ. ಮುತ್ತುನಾಯಗಂ 2. ಅನಿಲ್ ಕುಮಾರ್ ರಸ್ತೋಗಿ 3. ಅಂಕೇಗೌಡ ಎಂ. 4. ಆರ್ಮಿಡಾ ಫೆರ್ನಾಂಡಿಸ್ 5. ಅರವಿಂದ್ ವೈದ್ಯ 6. ಅಶೋಕ್ ಖಾಡೆ 7. ಅಶೋಕ್ ಕುಮಾರ್ ಸಿಂಗ್ 8. ಅಶೋಕ್ ಕುಮಾರ್ ಹಲ್ದಾರ್ 9. ಬಲದೇವ್ ಸಿಂಗ್ 10. ಭಗವಾಂದಾಸ್ ರೈಕ್ವಾರ್ 11. ಭರತ್ ಸಿಂಗ್ ಭಾರತಿ 12. ಭಿಕ್ಲ್ಯಾ ಲಡಾಕ್ಯ ಧಿಂಡಾ 13. ಬಿಶ್ವ ಬಂಧು (ಮರಣೋತ್ತರ) 14. ಬ್ರಿಜ್ ಲಾಲ್ ಭಟ್ 15. ಬುದ್ಧ ರಶ್ಮಿ ಮಣಿ 16. ಬುಧ್ರಿ ತತಿ 17. ಚಂದ್ರಮೌಳಿ ಗಡ್ಡಮನುಗು 18. ಚರಣ್ ಹೆಂಬ್ರಾಮ್ 19. ಚಿರಂಜಿ ಲಾಲ್ ಯಾದವ್ 20. ದೀಪಿಕಾ ರೆಡ್ಡಿ 21. ಧಾರ್ಮಿಕ್ಲಾಲ್ ಚುನಿಲಾಲ್ ಪಾಂಡ್ಯ 22. ಗದ್ದೆ ಬಾಬು ರಾಜೇಂದ್ರ ಪ್ರಸಾದ್ 23. ಗಫ್ರುದ್ದೀನ್ ಮೇವಾಟಿ ಜೋಗಿ 24. ಗಂಭೀರ್ ಸಿಂಗ್ ಯೋನ್ಜೋನ್ 25. ಗರಿಮೆಲ್ಲ ಬಾಲಕೃಷ್ಣ ಪ್ರಸಾದ್ (ಮರಣೋತ್ತರ) 26. ಗಾಯತ್ರಿ ಬಾಲಸುಬ್ರಮಣಿಯನ್ ಮತ್ತು ರಂಜನಿ ಬಾಲಸುಬ್ರಮಣಿಯನ್ (ಜೋಡಿ) 27. ಗೋಪಾಲ್ ಜಿ. ತ್ರಿವೇದಿ 28. ಗುಡೂರು ವೆಂಕಟ್ ರಾವ್ 29. ಎಚ್.ವಿ. ಹಂಡೆ 30. ಹಾಲಿ ವಾರ್ 31. ಹರಿ ಮಾಧಬ್ ಮುಖೋಪಾಧ್ಯಾಯ (ಮರಣೋತ್ತರ) 32. ಹರಿಚರಣ್ ಸೈಕಿಯಾ 33. ಹರ್ಮನ್ಪ್ರೀತ್ ಕೌರ್ ಭುಲ್ಲರ್ 34. ಇಂದರ್ಜಿತ್ ಸಿಂಗ್ ಸಿಧು 35. ಜನಾರ್ದನ್ ಬಾಪುರಾವ್ ಬೋಥೆ 36. ಜೋಗೇಶ್ ದೇವುರಿ 37. ಜುಜರ್ ವಾಸಿ 38. ಜ್ಯೋತಿಶ್ ದೇಬನಾಥ್ 39. ಕೆ. ಪಜನಿವೇಲ್ 40. ಕೆ. ರಾಮಸಾಮಿ 41. ಕೆ. ವಿಜಯ್ ಕುಮಾರ್ 42. ಕಬೀಂದ್ರ ಪುರಕಾಯಸ್ಥ (ಮರಣೋತ್ತರ) 43. ಕೈಲಾಶ್ ಚಂದ್ರ ಪಂತ್ 44. ಕಲಾಮಂಡಲಂ ವಿಮಲಾ ಮೆನನ್ 45. ಕೇವಲ್ ಕ್ರಿಶನ್ ಥಕ್ರಾಲ್ 46. ಖೇಮ್ ರಾಜ್ ಸುಂಡ್ರಿಯಾಲ್ 47. ಕೊಲ್ಲಕಲ್ ದೇವಕಿ ಅಮ್ಮ ಜಿ 48. ಕೃಷ್ಣಮೂರ್ತಿ ಬಾಲಸುಬ್ರಮಣಿಯನ್ 49. ಕುಮಾರ್ ಬೋಸ್ 50. ಕುಮಾರಸ್ವಾಮಿ ತಂಗರಾಜ್ 51. ಲಾರ್ಸ್–ಕ್ರಿಶ್ಚಿಯನ್ ಕೋಚ್ 52. ಲಿಯುಡ್ಮಿಲಾ ವಿಕ್ಟೋರೊವ್ನಾ ಖೋಖ್ಲೋವಾ 53. ಮಾಧವನ್ ರಂಗನಾಥನ್ 54. ಮಾಗಂಟಿ ಮುರಳಿ ಮೋಹನ್ 55. ಮಹೇಂದ್ರ ಕುಮಾರ್ ಮಿಶ್ರಾ 56. ಮಹೇಂದ್ರ ನಾಥ್ ರಾಯ್ 57. ಮಾಮಿದಾಳ ಜಗದೇಶ್ ಕುಮಾರ್ 58. ಮಂಗಳಾ ಕಪೂರ್ 59. ಮೀರ್ ಹಾಜಿಭಾಯಿ ಕಾಸಂಭಾಯ್ 60. ಮೋಹನ್ ನಗರ 61. ನಾರಾಯಣ ವ್ಯಾಸ್ 62. ನರೇಶ್ ಚಂದ್ರ ದೇವ್ ವರ್ಮ 63. ನೀಲೇಶ್ ವಿನೋದಚಂದ್ರ ಮಂಡ್ಲೇವಾಲ 64. ನೂರುದ್ದೀನ್ ಅಹಮದ್ 65. ಒತುವಾರ್ ತಿರುತ್ತಣಿ ಸ್ವಾಮಿನಾಥನ್ 66. ಪದ್ಮಾ ಗುರ್ಮೆಟ್ 67. ಪಾಲ್ಕೊಂಡ ವಿಜಯ್ ಆನಂದ್ ರೆಡ್ಡಿ 68. ಪೋಖಿಲ ಲೆಕ್ತೇಪಿ 69. ಪ್ರಭಾಕರ ಬಸವಪ್ರಭು ಕೋರೆ 70. ಪ್ರತೀಕ್ ಶರ್ಮಾ 71. ಪ್ರವೀಣ್ ಕುಮಾರ್ 72. ಪ್ರೇಮ್ ಲಾಲ್ ಗೌತಮ್ 73. ಪ್ರೊಸೆನ್ಜಿತ್ ಚಟರ್ಜಿ 74. ಪುನ್ನಿಮೂರ್ತಿ ನಟೇಶನ್ 75. ಆರ್. ಕೃಷ್ಣನ್ (ಮರಣೋತ್ತರ) 76. ಆರ್.ವಿ.ಎಸ್. ಮಣಿ 77. ರಬಿಲಾಲ್ ತುಡು 78. ರಘುಪತ್ ಸಿಂಗ್ (ಮರಣೋತ್ತರ) 79. ರಘುವೀರ್ ತುಕಾರಾಂ ಖೇಡ್ಕರ್ 80. ರಾಜಸ್ತಪತಿ ಕಾಳಿಯಪ್ಪ ಗೌಂಡರ್ 81. ರಾಜೇಂದ್ರ ಪ್ರಸಾದ್ 82. ರಾಮ ರೆಡ್ಡಿ ಮಾಮಿಡಿ (ಮರಣೋತ್ತರ) 83. ರಾಮಮೂರ್ತಿ ಶ್ರೀಧರ್ 84. ರಾಮಚಂದ್ರ ಗೋಡ್ಬೋಲೆ ಮತ್ತು ಶ್ರೀಮತಿ ಸುನೀತಾ ಗೋಡ್ಬೋಲೆ (ಜೋಡಿ) 85. ರತಿಲಾಲ್ ಬೋರಿಸಾಗರ್ 86. ರೋಹಿತ್ ಶರ್ಮಾ 87. ಎಸ್.ಜಿ. ಸುಶೀಲಮ್ಮ 88. ಸಂಗ್ಯುಸಾಂಗ್ ಎಸ್. ಪೊಂಗೆನರ್ 89. ಸಂತ ನಿರಂಜನ್ ದಾಸ್ 90. ಶರತ್ ಕುಮಾರ್ ಪಾತ್ರ 91. ಸರೋಜ್ ಮಂಡಲ್ 92. ಸತೀಶ್ ಶಾ (ಮರಣೋತ್ತರ) 93. ಸತ್ಯನಾರಾಯಣ ನುವಾಲ್ 94. ಸವಿತಾ ಪುನಿಯಾ 95. ಶಾಫಿ ಶೌಕ್ 96. ಶಶಿ ಶೇಖರ್ ವೆಂಪಾಟಿ 97. ಶ್ರೀರಂಗ್ ದೇವಬ ಲಾಡ್ 98. ಶುಭಾ ವೆಂಕಟೇಶ ಅಯ್ಯಂಗಾರ್ 99. ಶ್ಯಾಮ್ ಸುಂದರ್ 100. ಸಿಮಾಂಚಲ್ ಪಾತ್ರೋ 101. ಶಿವಶಂಕರಿ 102. ಸುರೇಶ ಹನಗವಾಡಿ 103. ಸ್ವಾಮಿ ಬ್ರಹ್ಮದೇವ್ ಜಿ ಮಹಾರಾಜ್ 104. ಟಿ.ಟಿ. ಜಗನ್ನಾಥನ್ (ಮರಣೋತ್ತರ) 105. ತಗಾ ರಾಮ್ ಭಿಲ್ 106. ತರುಣ್ ಭಟ್ಟಾಚಾರ್ಯ 107. ಟೆಕಿ ಗುಬಿನ್ 108. ತಿರುವಾರೂರ್ ಭಕ್ತವತ್ಸಲಂ 109. ತೃಪ್ತಿ ಮುಖರ್ಜಿ 110. ವೀಜಿನಾಥನ್ ಕಾಮಕೋಟಿ 111. ವೆಂಪಾಟಿ ಕುಟುಂಬ ಶಾಸ್ತ್ರಿ 112. ವ್ಲಾಡಿಮರ್ ಮೆಸ್ಟ್ವಿರಿಶ್ವಿಲಿ (ಮರಣೋತ್ತರ) 113. ಯುಮ್ನಮ್ ಜತ್ರಾ ಸಿಂಗ್ (ಮರಣೋತ್ತರ)
ಉಡುಪಿ| ಕಲ್ಸಂಕ ಜಂಕ್ಷನ್ ಬಳಿ ಭೀಕರ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತ್ಯು
ಉಡುಪಿ, ಜ.25: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಣಿಪಾಲದ ಅವಿನಾಶ್ (19) ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬಿದ್ದಿದ್ದು, ಈ ವೇಳೆ ಲಾರಿಯ ಚಕ್ರವು ಸವಾರದ ತಲೆಯ ಮೇಲೆ ಹರಿಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಧ್ಯ ಕರ್ನಾಟಕದ ದಾವಣಗೆರೆಯ ಡಾ. ಸುರೇಶ್ ಹನಗವಾಡಿಯವರಿಗೆ ಹಿಮೋಫೀಲಿಯಾ ರೋಗಿಗಳಿಗೆ ನೀಡಿದ ಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಇದು ಜಿಲ್ಲೆಗೆ ಲಭಿಸಿದ ಮೊದಲ ಪದ್ಮಶ್ರೀ ಗೌರವ. ಮಾವನ ಸಾವಿನಿಂದ ಪ್ರೇರಿತರಾಗಿ ಸುರೇಶ್ ಅವರು ವೈದ್ಯರಾಗಿ ಕರ್ನಾಟಕ ಹಿಮೋಫೀಲಿಯಾ ಸೊಸೈಟಿಯನ್ನು ಸ್ಥಾಪಿಸಿ ಸಾವಿರಾರು ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರೂ ಈ ಸಂಸ್ಥೆಗೆ ಬೆನ್ನೆಲುಬಾಗಿ ನಿಂತಿದ್ದರು. ಈ ಬಗ್ಗೆ ವಿವರ ಇಲ್ಲಿದೆ.
‘ಗಣರಾಜ್ಯೋತ್ಸವ’ | ಕರ್ನಾಟಕದ ಇಬ್ಬರು ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಆಯ್ಕೆ: 27 ಮಂದಿಗೆ ಸೇವಾ ಪದಕ
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಪ್ರದಾನ ಮಾಡಲಾಗುವ ಪದಕ ವಿಜೇತರ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ ರವಿವಾರ ಪ್ರಕಟಿಸಿದೆ. ಶೌರ್ಯ ಮತ್ತು ಸೇವಾ ಪದಕಗಳಿಗೆ ಪೊಲೀಸ್, ಗೃಹರಕ್ಷಕ, ಅಗ್ನಿಶಾಮಕ, ನಾಗರಿಕ ರಕ್ಷಣಾ ಮತ್ತು ತಿದ್ದುಪಡಿ ಸೇವೆಗಳ 982 ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ. ಇವುಗಳಲ್ಲಿ 125 ಶೌರ್ಯ ಪದಕಗಳು ಸೇರಿವೆ. ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ಉತ್ತಮ ಸೇವೆಗಾಗಿ ರಾಷ್ಟ್ರಪತಿಗಳ ಪದಕ ಹಾಗೂ 27 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶ್ಲಾಘನೀಯ ಸೇವಾ ಪದಕ ಲಭಿಸಿದೆ. ರಾಷ್ಟ್ರಪತಿಗಳ ಪದಕ: ಎಡಿಜಿಪಿ(ಮಾನವ ಹಕ್ಕುಗಳು) ದೇವಜ್ಯೋತಿ ರೈ, ಹಲಸೂರು ಉಪವಿಭಾಗದ ಎಸಿಪಿ ರಂಗಪ್ಪ ಟಿ. ಅವರಿಗೆ ರಾಷ್ಟ್ರಪತಿಗಳ ಪದಕ ಘೋಷಿಸಿ ಗೌರವಿಸಲಾಗಿದೆ. ಶ್ಲಾಘನೀಯ ಸೇವಾ ಪದಕ: ಐಜಿಪಿಗಳಾದ ಅಮಿತ್ ಸಿಂಗ್, ಚೇತನ್ ಸಿಂಗ್ ರಾಥೋರ್, ಡಿಐಜಿ ಸೀಮಾ ಲಾಟ್ಕರ್, ಎಸ್ಪಿ ಸವಿತಾ ಶ್ರೀನಿವಾಸ್, ಎಎಸ್ಪಿ ಪುಟ್ಟಮಾದಯ್ಯ, ಎಎಸ್ಪಿ ನಾಗಪ್ಪ ನವೀನ್ ಕುಮಾರ್, ಡಿಸಿಪಿ ರಾಜಾ ಇಮಾಂ ಖಾಸೀಂ ಪಿಂಜಾರ್, ಡಿಎಸ್ಪಿ ಹನುಮಂತರಾಯ, ಎಸ್ಪಿ ಸಿ.ಎ.ಸೈಮನ್, ಇನ್ಸ್ಪೆಕ್ಟರ್ ಮೊಹಮ್ಮದ್ ಎಂ.ಎ., ಇನ್ಸ್ಪೆಕ್ಟರ್ ಶಿವಸ್ವಾಮಿ ಸಿ.ಬಿ., ಇನ್ಸ್ಪೆಕ್ಟರ್ ಎಂ.ಎಂ.ತಹಶೀಲ್ದಾರ್, ಇನ್ಸ್ಪೆಕ್ಟರ್ ಎಸ್.ಕೆ.ಬ್ಯಾಕೋಡ್, ಪಿಎಸ್ಸೈ ಕಾಶಿನಾಥ್ ಬಿ., ಪಿಎಸ್ಸೈ ವೈಲೆಟ್ ಫೆಮಿನಾ, ಪಿಎಸ್ಸೈ ಶಕುಂತಲಾ ಎಚ್.ಕೆ., ಎಎಸ್ಸೈ ಹರ್ಷ ನಾಗರಾಜ್, ಎಎಸ್ಸೈ ಸಿದ್ಧರಾಜು ಜಿ., ಹೆಡ್ ಕಾನ್ಸ್ಟೇಬಲ್ ಎಚ್.ಡಿ.ಈರಪ್ಪ, ಹೆಡ್ ಕಾನ್ಸ್ಟೇಬಲ್ ಬಸವರಾಜ್ ಎಂ. ಅವರುಗಳು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಅಲ್ಲದೆ, ಅಗ್ನಿಶಾಮಕ ಇಲಾಖೆಯ ಅಸಿಸ್ಟೆಂಟ್ ಫೈರ್ ಸ್ಟೇಷನ್ ಅಧಿಕಾರಿ ಗುರುಸ್ವಾಮಿ, ಲೀಡಿಂಗ್ ಫೈರ್ಮ್ಯಾನ್ ಅರುಣ್ ಸಿ.ನಾಯ್ಕ್, ಗೃಹರಕ್ಷಕದಳ ವಿಭಾಗದ ಕಮಾಂಡಿಂಗ್ ಅಧಿಕಾರಿಗಳಾದ ಸುನಂದ್ ಸಂಪತ್, ಬಾಲಾಜಿ ಶ್ರೀನಿವಾಸನ್, ಪ್ಲಟೂನ್ ಕಮಾಂಡರ್ಗಳಾದ ಮಲಾಲಿ ಗೌಡ, ವಾದಿರಾಜ್ ನಾರಾಯಣ್ ರಾವ್ ದೇಶಪಾಂಡೆ ಹಾಗೂ ತಿದ್ದುಪಡಿ ಸೇವೆ ವಿಭಾಗದ ಸಹಾಯಕ ಅಧೀಕ್ಷಕ ಪರಮೇಶ್ ಎಚ್.ಎ. ಅವರಿಗೂ ಶ್ಲಾಘನೀಯ ಸೇವಾ ಪದಕ ಘೋಷಿಸಿ ಗೌರವಿಸಲಾಗಿದೆ.
ಕರಾವಳಿ ಕಾವಲು ಪೊಲೀಸ್ ಮಲ್ಪೆ| ಎಸ್ಸೈ ವೈಲೆಟ್ ಫೆಮಿನಾಗೆ ರಾಷ್ಟ್ರಪತಿ ಪದಕ
ಉಡುಪಿ, ಜ.25: ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ನೀಡುವ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ ಕರಾವಳಿ ಕಾವಲು ಪೊಲೀಸ್ ಮಲ್ಪೆ ಠಾಣೆಯ ಉಪನಿರೀಕ್ಷಕಿ ವೈಲೆಟ್ ಫೆಮಿನಾ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಕರ್ನಾಟಕ ರಾಜ್ಯ ಸರಕಾರ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ನೇಮಕ ಮಾಡಿರುವ ಎಸ್ಐಟಿ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಪ್ರಜ್ವಲ್ ರೇವಣ್ಣ ಪ್ರಕರಣದ ಎಸ್ಐಟಿ ತಂಡದಲ್ಲೂ ಅವರು ಕರ್ತವ್ಯ ನಿರ್ವಹಿಸಿದ್ದರು. 1994ರಲ್ಲಿ ಪೊಲೀಸ್ ಇಲಾಖೆ ಸೆರ್ಪಡೆಗೊಂಡ ಇವರು, 2018ನೆ ಎಸ್ಸೈ ಆಗಿ ಭಡ್ತಿ ಹೊಂದಿದರು. ಇವರು ಉಡುಪಿ, ಮಣಿಪಾಲ, ಕಾರ್ಕಳ, ಕುಂದಾಪುರ, ಮಣಿಪಾಲ ಹಾಗೂ ಹೊನ್ನಾವರ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ದ್ದಾರೆ. ಇವರು 2012ರಲ್ಲಿ ಮುಖ್ಯಮಂತ್ರಿ ಪದಕ ಹಾಗೂ 2025ರಲ್ಲಿ ಡಿಜಿ- ಐಜಿಪಿ ಪ್ರಶಂಸನಾ ಪದಕಕ್ಕೆ ಭಾಜನ ಆಗಿದ್ದರು.
5 ಪದ್ಮವಿಭೂಷಣ, 13 ಪದ್ಮಭೂಷಣ, 113 ಪದ್ಮಶ್ರೀ; ಪುರಸ್ಕೃತರದಲ್ಲಿ 19 ಮಹಿಳೆಯರು, 16 ಮಂದಿಗೆ ಮರಣೋತ್ತರ ಗೌರವ
ಅಫಜಲಪುರ | ರಾಷ್ಟ್ರೀಯ ಮತದಾರರ ದಿನಾಚರಣೆ
ಅಫಜಲಪುರ: ಮತದಾನದ ಮಹತ್ವ ತಿಳಿದುಕೊಂಡು ಮತದಾನ ಮಾಡಿದರೆ ಮಾತ್ರ ಉತ್ತಮವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಮತದಾನದ ಹಕ್ಕು ಮಾರಾಟ ಮಾಡುವ ಕಾಲಘಟ್ಟದಲ್ಲಿ ನಾವು ಇದ್ದೇವೆ, ನಾವೆಲ್ಲರೂ ಜಾಗೃತರಾಗಿ ಮತದಾನದ ಹಕ್ಕಿನಿಂದ ಸಮಾಜ ಬದಲಾವಣೆ ಮಾಡೋಣ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿನಾಯಕ ಮಾಯಣ್ಣನವರ ತಿಳಿಸಿದರು. ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಬಿ.ಇ.ಡಿ ಕಾಲೇಜಿನಲ್ಲಿ ಜಿಲ್ಲಾ ಆಡಳಿತ ಮತ್ತು ತಾಲೂಕು ಆಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ ಮತ್ತು ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಕ್ಕೆ ಉದ್ಘಾಟಿಸಿ ಮಾತನಾಡಿದ ಅವರು, ಮತದಾನದ ಮಹತ್ವ ತಿಳಿದುಕೊಂಡಾಗ ಮಾತ್ರ ಸೂಕ್ತ ವ್ಯಕ್ತಿಗೆ ಸೂಕ್ತ ಸಂದರ್ಭದಲ್ಲಿ ಮತ ಚಲಾವಣೆ ಮಾಡಲು ಸಾಧ್ಯವಾಗುತ್ತದೆ,ಹೀಗಾಗಿ ಯುವಕರು ಮತದಾನದ ಮಹತ್ವ ತಿಳಿದುಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿ ಸಿವಿಲ್ ನ್ಯಾಯಾಧೀಶರಾದ ಅನೀಲ ಅಮಾತೆ ಮಾತನಾಡಿ,1950 ಜನವರಿ 25ರಂದು ಚುನಾವಣೆ ಆಯೋಗ ಸ್ಥಾಪನೆ ಮಾಡಲಾಗಿತ್ತು, 2011ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಪ್ರತಿ 10 ವರ್ಷಕೊಮ್ಮೆ ಜನಗಣತಿ ಮಾಡಿದಾಗ ಜನಸಂಖ್ಯೆ ಹೆಚ್ಚಾಗುತ್ತಿದ್ದಾರೆ,ಆದರೆ ಮತದಾನ ಮಾತ್ರ ಹೆಚ್ಚಾಗುತ್ತಿಲ್ಲ, ಆದ್ದರಿಂದ ಜನರಿಗೆ ಮತದಾನದ ಮಹತ್ವ ತಿಳಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಾ ಬರಲಾಗಿದೆ ಎಂದರು. ತಹಶೀಲ್ದಾರ್ ಸಂಜೀವಕುಮಾರ ದಾಸರ ಮಾತನಾಡಿ, ರಾಜಕೀಯ ವ್ಯವಸ್ಥೆಯಲ್ಲಿ ಚುನಾವಣೆ ಆಯೋಗದ ಕೆಲಸ ಬಹಳ ಮಹತ್ವದ್ದಾಗಿದೆ.ರಾಷ್ಟ್ರ ಮತ್ತು ರಾಜ್ಯದಲ್ಲಿ ನಮ್ಮ ನಾಯಕರನ್ನಾಗಿ ಯಾರನ್ನೂ ಆಯ್ಕೆ ಮಾಡಬೇಕೆಂದು ಮತದಾರರ ಕೈಯಲ್ಲಿದೆ.ನನ್ನ ದೇಶ ನನ್ನ ಮತ ಎಂಬ ಸದುದ್ದೇಶದಿಂದ ಸರ್ಕಾರ ಯೋಜನೆ ರೂಪಿಸಿದೆ,18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಗುರುತಿನ ಚೀಟಿ ಕಡ್ಡಾಯವಾಗಿ ಪಡೆದುಕೊಳ್ಳಬೇಕು.ಮುಂದಿನ ದಿನಗಳಲ್ಲಿ ಜಿಪಂ,ತಾಪಂ, ಗ್ರಾಪಂ ಚುನಾವಣೆಯಲ್ಲಿ ಗ್ರಾಮ,ತಾಲೂಕು ಅಭಿವೃದ್ಧಿಗೆ ನಿಮ್ಮ ನೆಚ್ಚಿನ ವ್ಯಕ್ತಿಗಳನ್ನು ನಾಯಕರನ್ನಾಗಿ ಆಯ್ಕೆ ಮಾಡುವ ಹಕ್ಕು ಸಂವಿಧಾನ ನಿಮಗೆ ನೀಡಿದೆ ಎಂದರು. ನ್ಯಾಯವಾದಿ ಕೆ.ಜಿ.ಪೂಜಾರಿ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಚುನಾವಣಾ ಸಿಬ್ಬಂದಿಗಳಿಗೆ ವಿಶೇಷವಾಗಿ ಸನ್ಮಾನ ಮಾಡಲಾಯಿತು.ತಾಲೂಕು ನ್ಯಾಯವಾದಿಗಳ ಸಂಘ ಅಧ್ಯಕ್ಷ ಎಸ್.ಎಸ್.ಪಾಟೀಲ್, ಪ್ರಾಂಶುಪಾಲ ಶಶಿಕಲಾ ಖಜೂರಿ, ಉಪನ್ಯಾಸಕ ಸದಾನಂದ ಟೇಳೆ ಉಪಸ್ಥಿತರಿದ್ದರು.
Padma Shri: ನಡೆದಾಡುವ ವಿಶ್ವಕೋಶ ಶತಾವಧಾನಿ ಆರ್. ಗಣೇಶ್ರಿಗೆ 'ಪದ್ಮಶ್ರೀ' ಗೌರವ, ಯಾರಿವರು?
ಶತಾವಧಾನಿ ಆರ್. ಗಣೇಶ್ (Shatavadhani R Ganesh) ಅವರ ಕಲಾ ಸಾಧನೆ ಗುರುತಿಸಿ ಭಾರತದ ಅತ್ಯುನ್ನತ ಗೌರವವಾದ 'ಪದ್ಮಶ್ರೀ' ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಕಲೆಯಲ್ಲಿ ಮಾತ್ರವಲ್ಲದೇ ವಿವಿಧ ವಿಭಾಗಗಳಲ್ಲೂ ಉತ್ತಮ ಕಾರ್ಯ ನಿರ್ವಹಣೆಯಿಂದ ಸಾಕಷ್ಟು ಹೆಸರು ಮಾಡಿದ್ದಾರೆ. ಅನೇಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ವ್ಯಾಸ ಪುರಸ್ಕಾರ, ಗೌರವ ಡಾಕ್ಟರೇಟ್ ಪ್ರಶಸ್ತಿಗಳು ಇವರಿಗೆ ಬಂದಿದ್ದು, ಇದೀಗ ಪ್ರದ್ಮಶ್ರೀ
ಪುಸ್ತಕ ಭಂಡಾರ ಸೃಷ್ಟಿಸಿದ ಮಂಡ್ಯದ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ
ಮಂಡ್ಯ: ಪುಸ್ತಕ ಪ್ರೇಮಿ, ಲಕ್ಷಾಂತರ ಪುಸ್ತಕಗಳ ಸಂಗ್ರಹಕಾರ ಜಿಲ್ಲೆಯ ಪುಸ್ತಕದ ಮನೆ ಅಂಕೇಗೌಡ ಪ್ರಸಕ್ತ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತ ಸರಕಾರ ದೇಶದ 45 ಸಾಧಕರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಮಾಡಿದ್ದು, ಇವರಲ್ಲಿ ಮಂಡ್ಯದ ಪುಸ್ತಕದ ಮನೆ ಅಂಕೇಗೌಡರು ಸೇರಿದ್ದಾರೆ. ಇವರಿಗೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಶಸ್ತಿಯನ್ನು ನೀಡಲಾಗಿದೆ. ಅಂಕೇಗೌಡರ ಪರಿಚಯ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹರಳಹಳ್ಳಿಯಲ್ಲಿ(ಪಾಂಡವಪುರ ರೈಲ್ವೆ ಸ್ಟೇಷನ್ ಬಳಿ) 'ಪುಸ್ತಕದ ಮನೆ'ಯನ್ನು ಸಾರ್ವಜನಿಕರಿಗಾಗಿ ತೆರೆದಿಟ್ಟಿರುವ ಎಂ.ಅಂಕೇಗೌಡರು, ಸುಮಾರು ನಾಲ್ಕು ಲಕ್ಷ ಪುಸ್ತಕಗಳನ್ನು ಸಂಗ್ರಹಿಸಿದ್ದಾರೆ. ಇದಲ್ಲದೆ ನಾಣ್ಯ, ಅಂಚೆ ಚೀಟಿ ಮತ್ತು ಲಗ್ನಪತ್ರಿಕೆಗಳ ಅಪರೂಪದ ಸಂಗ್ರಹ ಈ ಪುಸ್ತಕ ಮನೆಯಲ್ಲಿ ಇವೆ. ಸಾರಿಗೆ ಸಂಸ್ಥೆಯ ನೌಕರರಾಗಿದ್ದ ಅಂಕೇಗೌಡ, ತನ್ನ ಸಂಬಳದ ಬಹುಪಾಲು ಪುಸ್ತಕಗಳಿಗೇ ಮೀಸಲಿಟ್ಟರು. ಉದ್ಯಮಿ ಹರಿಖೋಡೆ ಅವರು ನಿರ್ಮಿಸಿಕೊಟ್ಟಿರುವ ಈ ಪುಸ್ತಕದ ಮನೆ, ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ನಲ್ಲೂ ಸ್ಥಾನ ಪಡೆದಿದೆ. ಎಂ.ಅಂಕೇಗೌಡರು ಪಾಂಡವಪುರ ತಾಲೂಕಿನ ಚಿನಕುರಳಿಯಲ್ಲಿ ಜನಿಸಿದರು. ಸಂಜೆ ಕಾಲೇಜಿನಲ್ಲಿ ಓದಿ ಬಿ.ಎ.ಪದವಿ ಪಡೆದಿದ್ದಾರೆ. ಬಳಿಕ, ಮೈಸೂರು ವಿವಿಯ ಅಂಚೆ ಮತ್ತು ತೆರಪಿನ ಶಿಕ್ಷಣ ಸಂಸ್ಥೆಯಿಂದ (ಈಗಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ) ಕನ್ನಡ ಎಂ.ಎ. ಪದವಿಯನ್ನೂ ಗಳಿಸಿದ್ದಾರೆ. ಜಿಲ್ಲಾಧಿಕಾರಿ ಅಭಿನಂದನೆ: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅಭಿನಂದನೆ ಸಲ್ಲಿಸಿದ್ದಾರೆ.
ಅಫಜಲಪುರ | ಸಾರಿಗೆ ಬಸ್ ಪಲ್ಟಿ : ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು
ಅಫಜಲಪುರ: ತಾಲೂಕಿನ ಬಿದನೂರ ಗ್ರಾಮದ ಸಮೀಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ಸೊಂದು ಆಕಸ್ಮಿಕವಾಗಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ರವಿವಾರ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ದೇವಲಗಾಣಪೂರ ಪೊಲೀಸ್ ಠಾಣೆಯ ಪಿಎಸ್ಐ ಸಂಗೀತಾ ಶಿಂಧೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಮಾತನಾಡಿದ ಅವರು, “ಬಸ್ಸಿನಲ್ಲಿ ಸುಮಾರು 15 ಮಂದಿ ಪ್ರಯಾಣಿಕರು ಇದ್ದರು. ಕೆಲವರಿಗೆ ಮಾತ್ರ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ” ಎಂದು ಹೇಳಿದರು. ಇಕ್ಕಟ್ಟಾದ ರಸ್ತೆ ಅಪಘಾತಕ್ಕೆ ಕಾರಣ : ಅಪಘಾತಕ್ಕೆ ಬಿದನೂರ ಗ್ರಾಮದ ಬಳಿ ಇರುವ ಇಕ್ಕಟ್ಟಾದ ರಸ್ತೆ ಪ್ರಮುಖ ಕಾರಣವಾಗಿದೆ ಎಂದು ಅಫಜಲಪುರ ಸಾರಿಗೆ ಘಟಕ ವ್ಯವಸ್ಥಾಪಕ ಎ.ವಿ. ಭೋವಿ ಮಾಹಿತಿ ನೀಡಿದರು. ಎದುರುಗಡೆಯಿಂದ ಮತ್ತೊಂದು ಬಸ್ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕರು ಬಸ್ ಅನ್ನು ರಸ್ತೆ ಬದಿಗೆ ತೆಗೆದುಕೊಳ್ಳಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ ಎಂದು ಅವರು ವಿವರಿಸಿದರು. ಈ ಘಟನೆ ಅಫಜಲಪುರ ತಾಲೂಕಿನ ದೇವಲಗಾಣಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿತ್ತಾಪುರ | ಪತ್ರಕರ್ತರು ಅಪ್ರಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ: ಸಚಿವ ಪ್ರಿಯಾಂಕ್ ಖರ್ಗೆ
ಚಿತ್ತಾಪುರ: ಪತ್ರಕರ್ತರು ಅಪ್ರಾಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಿರಿಯ ಪತ್ರಕರ್ತ ದಿ. ನಾಗಯ್ಯಸ್ವಾಮಿ ಅಲ್ಲೂರ್ ಅವರ ಗೆಳೆಯರ ಬಳಗದ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ “ನಾಗಾವಿ ನಕ್ಷತ್ರ” ಸಂಸ್ಮರಣ ಗ್ರಂಥ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾಗಯ್ಯಸ್ವಾಮಿ ಅಲ್ಲೂರ್ ಅವರು ಅತ್ಯಂತ ಪ್ರಾಮಾಣಿಕ ಪತ್ರಕರ್ತರಾಗಿದ್ದು, ಪ್ರಾಮಾಣಿಕತೆಯನ್ನು ಜೀವನ ಮೌಲ್ಯವಾಗಿ ಮೈಗೂಡಿಸಿಕೊಂಡಿದ್ದರು. ಅವರ ಈ ಗುಣವೇ ಅವರನ್ನು ಕೇವಲ ಪತ್ರಿಕಾರಂಗಕ್ಕೆ ಮಾತ್ರ ಸೀಮಿತಗೊಳಿಸದೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ಒಬ್ಬ ನಿಷ್ಠಾವಂತ ಬರಹಗಾರರನ್ನಾಗಿ ರೂಪಿಸಿತು. ಜನರಿಗಾಗಿ ಹಾಗೂ ಮಕ್ಕಳಿಗಾಗಿ ಅವರು ಮಾಡಿದ ಸಮಾಜ ಸೇವೆ ಅವರನ್ನು ಸಮಾಜಮುಖಿ ಚಿಂತಕ ಮತ್ತು ಶಿಕ್ಷಣ ಪ್ರೇಮಿಯಾಗಿ ಗುರುತಿಸುವಂತೆ ಮಾಡಿತು ಎಂದು ಸಚಿವರು ಹೇಳಿದರು. ಪತ್ರಕರ್ತರು ಅಪ್ರಾಮಾಣಿಕರಾದರೆ ಸಮಾಜದಲ್ಲಿ ಅರಾಜಕತೆ ಉಂಟಾಗುತ್ತದೆ ಎಂದು ತಿಳಿಸಿದ ಅವರು, ನಾಗಯ್ಯಸ್ವಾಮಿಯಂತಹ ಪತ್ರಕರ್ತರು ಸಮಾಜದ ಎಲ್ಲಾ ವರ್ಗದವರಿಗೆ ಮಾದರಿಯಾಗಿದ್ದಾರೆ. ಅವರು ನಮ್ಮೊಂದಿಗೆ ಈಗ ಇಲ್ಲದಿದ್ದರೂ, ಅವರ ಸ್ನೇಹಿತರ ಬಳಗ ಅವರ ಜೀವನ ಹಾಗೂ ಸಾಧನೆಗಳನ್ನು ದಾಖಲಿಸುವ ಉದ್ದೇಶದಿಂದ “ನಾಗಾವಿ ನಕ್ಷತ್ರ” ಎಂಬ ಸಂಸ್ಮರಣ ಗ್ರಂಥ ಹೊರತಂದಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ನಾಗಯ್ಯಸ್ವಾಮಿ ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವರು, ವೇದಿಕೆಯ ಮೇಲಿದ್ದ ಅವರ ಕುಟುಂಬ ವರ್ಗದವರಿಗೆ ಧೈರ್ಯ ತುಂಬಿ, ಗೆಳೆಯರ ನೆರವಿನ ಜೊತೆಗೆ ತಾವು ವೈಯಕ್ತಿಕವಾಗಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ನೇಹಿತ ವಲಯದಿಂದ ಸಂಗ್ರಹಿಸಲಾದ 1.90 ಲಕ್ಷ ರೂ. ಮೊತ್ತದ ಚೆಕ್ ಅನ್ನು ಸಚಿವರು ಮೃತರ ಕುಟುಂಬದವರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಹಲಕಟ್ಟಿಮನಿ ಮಠದ ಮುನೀಂದ್ರ ಶಿವಾಚಾರ್ಯ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್ ಮಾತನಾಡಿದರು. ಸಂಸ್ಮರಣ ಗ್ರಂಥದ ಪ್ರಧಾನ ಸಂಪಾದಕ ಲಿಂಗಪ್ಪ ಮಲ್ಕನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಮಹಮೂದ್ ಸಾಹೇಬ್, ಲಿಂಗಾರೆಡ್ಡಿ ಬಾಸರೆಡ್ಡಿ, ಭವಾನಿ ಸಿಂಗ್ ಠಾಕೋರ್, ಶಿವಾನಂದ ಪಾಟೀಲ್ ಮರ್ತೂರು, ಭೀಮಣ್ಣ ಸಾಲಿ, ಚಂದ್ರಶೇಖರ ಆವಂಟಿ, ಶಂಕರಗೌಡ ಪಾಟೀಲ್, ಬಸವರಾಜ ಬಳೂಂಡಗಿ, ವೀರಭದ್ರಪ್ಪ ಗುರುಮಿಟಕಲ್, ವೀರೇಂದ್ರ ಕೊಲ್ಲೂರ್, ಸಿದ್ಧಮ್ಮ, ಶಿವಾನಂದ ನಾಲವಾರ, ದೇವಪ್ಪ ನಂದೂರಕರ್, ಕಾಶಿರಾಯ ಕಲಾಲ್, ನಟರಾಜ ಶಿಲ್ಪಿ ಸೇರಿದಂತೆ ಅನೇಕ ಮುಖಂಡರು, ಪತ್ರಕರ್ತರು, ಅಭಿಮಾನಿಗಳು ಹಾಗೂ ಗೆಳೆಯ ಬಳಗದವರು ಉಪಸ್ಥಿತರಿದ್ದರು. ರಾಚಯ್ಯ ಸ್ವಾಮಿ ಸ್ವಾಗತಿಸಿದರು. ನರಸಪ್ಪ ಚಿನ್ನಾಕಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್ ರಿಗೆ ರಾಜ್ಯಪಾಲರಿಂದ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪ್ರಧಾನ
ಕೊಪ್ಪಳ: ಚುನಾವಣಾ ಪ್ರಕ್ರಿಯೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದಕ್ಕಾಗಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಸುರೇಶ್ ಬಿ.ಇಟ್ನಾಳ್ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಿದ್ದಾರೆ. ಭಾನುವಾರ ಬೆಂಗಳೂರಿನ ಶ್ರೀ ಪುಟ್ಟಣ್ಣ ಚೆಟ್ಟಿ ಟೌನ್ಹಾಲ್ನಲ್ಲಿ ಆಯೋಜಿಸಲಾಗಿದ್ದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು. ಭಾರತ ಚುನಾವಣಾ ಆಯೋಗವು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ, ಚುನಾವಣಾ ಕಾರ್ಯಗಳಲ್ಲಿ ಹಾಗೂ ಮತದಾರರ ಪಟ್ಟಿಗಳ ಪರಿಷ್ಕರಣೆ ಕಾರ್ಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಜಿಲ್ಲಾ ಚುನಾವಣಾಧಿಕಾರಿಗಳು, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಮತದಾರರ ನೋಂದಣಿ ಅಧಿಕಾರಿಗಳು, ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳು, ಬಿಎಲ್ಓ ಮೇಲ್ವಿಚಾರಕರು ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತದೆ. 2025–26ನೇ ಸಾಲಿನ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜ.19ರಂದು ಭಾರತ ಚುನಾವಣಾ ಆಯೋಗ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಅದರಲ್ಲಿ ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ್ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಘೋಷಿಸಲಾಗಿತ್ತು. ಇದೇ ಸಂದರ್ಭದಲ್ಲಿ 64–ಕೊಪ್ಪಳ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 208ರ ಬೂತ್ ಮಟ್ಟದ ಅಧಿಕಾರಿ, ಹಿರೇಬಗನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕರಾದ ಸತೀಶಚಂದ್ರ ಅವರಿಗೆ ಉತ್ತಮ ಬೂತ್ ಮಟ್ಟದ ಅಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
BBCಯ ಮೂಲಕ ದಶಕಗಳ ಕಾಲ ಭಾರತದ ಕಥನ ಹೇಳಿದ ಪತ್ರಕರ್ತ ಮಾರ್ಕ್ ಟುಲ್ಲಿ ನಿಧನ
ಹೊಸದಿಲ್ಲಿ, ಜ. 25: ಭಾರತದ ಕುರಿತು ದಶಕಗಳ ಕಾಲ ಸಮತೋಲಿತ ಮತ್ತು ಆಳವಾದ ಒಳನೋಟದ ವರದಿಗಳ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಸರ್ ವಿಲಿಯಂ ಮಾರ್ಕ್ ಟುಲ್ಲಿ ಅವರು ರವಿವಾರ ಹೊಸದಿಲ್ಲಿಯಲ್ಲಿ 90ನೇ ವಯಸ್ಸಿನಲ್ಲಿ ನಿಧನರಾದರು. ಸ್ವಲ್ಪಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಒಂದು ವಾರದ ಹಿಂದೆ ಸಾಕೇತ್ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಬಿಸಿಯ ಭಾರತದ ವ್ಯಾಖ್ಯಾನಕಾರಕ ಧ್ವನಿಯಾಗಿ ಗುರುತಿಸಿಕೊಂಡಿದ್ದ ಟುಲ್ಲಿ, ಭಾರತೀಯ ಪತ್ರಿಕೋದ್ಯಮದಲ್ಲಿ ಅತ್ಯಂತ ಪ್ರಭಾವಶಾಲಿ ಹಾಗೂ ವಿಶ್ವಾಸಾರ್ಹ ವಿದೇಶಿ ಪತ್ರಕರ್ತರಲ್ಲೊಬ್ಬರಾಗಿದ್ದರು. ಭಾರತ ಮತ್ತು ಪಶ್ಚಿಮ ಜಗತ್ತಿನ ನಡುವಿನ ಅಂತರವನ್ನು ಕಡಿಮೆ ಮಾಡಿದ ಧ್ವನಿಯಾಗಿ ಅವರು ಗುರುತಿಸಲ್ಪಟ್ಟಿದ್ದರು. 1935ರಲ್ಲಿ ಕಲ್ಕತ್ತಾ (ಈಗಿನ ಕೋಲ್ಕತ್ತಾ) ನಗರದ ಟಾಲಿಗಂಜ್ ನಲ್ಲಿ ಶ್ರೀಮಂತ ಬ್ರಿಟಿಷ್ ಕುಟುಂಬದಲ್ಲಿ ಜನಿಸಿದ ಟುಲ್ಲಿ, ವಸಾಹತುಶಾಹಿ ಸಾಮಾಜಿಕ ಸಂಹಿತೆಗಳು ಭಾರತೀಯರೊಂದಿಗೆ ನಿಕಟ ಸಂವಹನವನ್ನು ನಿರುತ್ಸಾಹಗೊಳಿಸುತ್ತಿದ್ದ ಕಾಲಘಟ್ಟದಲ್ಲಿ ಭಾರತದಲ್ಲೇ ತಮ್ಮ ಬಾಲ್ಯವನ್ನು ಕಳೆದರು. ಬಾಲ್ಯದಲ್ಲಿ ನಿರಾಕರಿಸಲ್ಪಟ್ಟ ಆ ನಿಕಟ ಸಂಪರ್ಕವೇ ಮುಂದಿನ ದಿನಗಳಲ್ಲಿ ಅವರ ಜೀವನದ ಪ್ರಮುಖ ಅನ್ವೇಷಣೆಯಾಗಿ ಪರಿಣಮಿಸಿತು. ಮುಂದಿನ ಆರು ದಶಕಗಳಲ್ಲಿ ಅವರು ಭಾರತದ ಬೀದಿಗಳಲ್ಲಿ ನಡೆದು, ಜನರ ಮಾತುಗಳನ್ನು ಆಲಿಸಿ, ದೇಶದ ವೈವಿಧ್ಯಗಳನ್ನು ಸಹಾನುಭೂತಿ ಮತ್ತು ಸಂಯಮದಿಂದ ದಾಖಲಿಸಿದರು. ಡಾರ್ಜಿಲಿಂಗ್ನ ಬೋರ್ಡಿಂಗ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅವರು, ನಂತರ ಮಾರ್ಲ್ಬರೋ ಕಾಲೇಜು ಹಾಗೂ ಕೇಂಬ್ರಿಡ್ಜ್ ನಲ್ಲಿ ಉನ್ನತ ಶಿಕ್ಷಣ ಪಡೆದರು. ಆ ಅವಧಿಯಲ್ಲಿ ಭಾರತದಿಂದ ದೂರವಿದ್ದ ನೋವನ್ನು ಅವರು ನಂತರದ ವರ್ಷಗಳಲ್ಲಿ ಆಗಾಗ್ಗೆ ವ್ಯಕ್ತಪಡಿಸುತ್ತಿದ್ದರು. ಕೇಂಬ್ರಿಡ್ಜ್ ನಂತರ ಟುಲ್ಲಿ ಲಿಂಕನ್ ಥಿಯಾಲಜಿಕಲ್ ಕಾಲೇಜಿಗೆ ಸೇರಿದರು. ಆದರೆ ಸೆಮಿನರಿಯ ಶಿಸ್ತುಬದ್ಧ ಜೀವನ ಅವರ ಸ್ವಭಾವಕ್ಕೆ ಹೊಂದಿಕೆಯಾಗಲಿಲ್ಲ. 1964ರಲ್ಲಿ ಬಿಬಿಸಿ ಅವರನ್ನು ಭಾರತದ ವರದಿಗಾರನಾಗಿ ಹೊಸದಿಲ್ಲಿಗೆ ನಿಯೋಜಿಸಿದಾಗ, ಭಾರತವು ಅವರ ಜೀವನದಲ್ಲಿ ನಿರ್ಣಾಯಕವಾಗಿ ಮರುಪ್ರವೇಶಿಸಿತು. ಮುಂದಿನ 30 ವರ್ಷಗಳ ಅವಧಿಯಲ್ಲಿ ಬಿಬಿಸಿಯೊಂದಿಗಿನ ಅವರ ಸಂಬಂಧವು ಅವರನ್ನು ದೇಶದ ಅತ್ಯಂತ ಗುರುತಿಸಲ್ಪಟ್ಟ ಹಾಗೂ ಗೌರವಿಸಲ್ಪಟ್ಟ ವಿದೇಶಿ ಪತ್ರಕರ್ತರನ್ನಾಗಿ ರೂಪಿಸಿತು. 1969ರಲ್ಲಿ ‘ಫ್ಯಾಂಟಮ್ ಇಂಡಿಯಾ’ ಸಾಕ್ಷ್ಯಚಿತ್ರದ ಪ್ರಸಾರಕ್ಕೆ ಸಂಬಂಧಿಸಿದಂತೆ ಭಾರತವು ಬಿಬಿಸಿಗೆ ನಿಷೇಧ ಹೇರಿದ ಬಳಿಕ ಅವರು ಲಂಡನ್ ಗೆ ಹಿಂತಿರುಗಬೇಕಾಯಿತು. ಆದರೆ 1971ರಲ್ಲಿ ಅವರು ಮತ್ತೆ ಭಾರತಕ್ಕೆ ಮರಳಿದರು. 1972ರ ವೇಳೆಗೆ ಹೊಸದಿಲ್ಲಿಯಲ್ಲಿನ ಬಿಬಿಸಿಯ ಬ್ಯೂರೋ ಮುಖ್ಯಸ್ಥರಾಗಿ ನೇಮಕಗೊಂಡ ಅವರು, ದಕ್ಷಿಣ ಏಷ್ಯಾದ ವರದಿಯ ಮೇಲ್ವಿಚಾರಣೆ ಮಾಡಿದರು. ಸ್ವತಂತ್ರ ಭಾರತದ ಇತಿಹಾಸದ ಅತ್ಯಂತ ಪ್ರಕ್ಷುಬ್ಧ ಘಟ್ಟಗಳಲ್ಲಿ ಟುಲ್ಲಿಯವರ ಶಾಂತ, ಸಂವೇದನಾಶೀಲವಲ್ಲದ ವರದಿಗಾರಿಕೆ ವಿಶಿಷ್ಟ ಗುರುತು ಪಡೆದಿತ್ತು. 1971ರ ಬಾಂಗ್ಲಾದೇಶ ಯುದ್ಧ, ತುರ್ತು ಪರಿಸ್ಥಿತಿ (1975–77), ಜುಲ್ಫಿಕರ್ ಅಲಿ ಭುಟ್ಟೋ ಅವರ ಮರಣದಂಡನೆ, ಆಪರೇಷನ್ ಬ್ಲೂ ಸ್ಟಾರ್, ಇಂದಿರಾ ಗಾಂಧಿಯವರ ಹತ್ಯೆ, 1984ರ ಸಿಖ್ ವಿರೋಧಿ ಹಿಂಸಾಚಾರ, ರಾಜೀವ್ ಗಾಂಧಿಯವರ ಹತ್ಯೆ, 1992ರ ಬಾಬರಿ ಮಸೀದಿ ಧ್ವಂಸ, ಆರ್ಥಿಕ ಉದಾರೀಕರಣ ಸೇರಿದಂತೆ ಅನೇಕ ಚುನಾವಣೆಗಳು ಮತ್ತು ಸಾಮಾಜಿಕ ಬದಲಾವಣೆಗಳು ಅವರ ವರದಿಗಳ ವ್ಯಾಪ್ತಿಯಲ್ಲಿ ಬಂದಿದ್ದವು. ಉಪಖಂಡದಾದ್ಯಂತದ ತಲೆಮಾರುಗಳ ಶ್ರೋತೃಗಳು ಬಿಬಿಸಿ ವರ್ಲ್ಡ್ ಸರ್ವೀಸ್ನ ‘ಫ್ರಮ್ ಅವರ್ ಓನ್ ಕರೆಸ್ಪಾಂಡೆಂಟ್’ ಕಾರ್ಯಕ್ರಮದಲ್ಲಿನ ಅವರ ಅಳತೆಯ ಧ್ವನಿಯನ್ನು ಅಪಾರ ನಂಬಿಕೆಯಿಂದ ಕೇಳುತ್ತಿದ್ದರು. “ಮಾರ್ಕ್ ಟುಲ್ಲಿಯಿಂದ ಕೇಳಿದ ನಂತರವೇ ಆ ಸುದ್ದಿಯನ್ನು ನಂಬಬಹುದು” ಎಂಬ ಮಾತು ಶ್ರೋತೃವಲಯದಲ್ಲಿ ವ್ಯಾಪಕವಾಗಿತ್ತು. ಆಪರೇಷನ್ ಬ್ಲೂ ಸ್ಟಾರ್ ಮತ್ತು ಪಂಜಾಬ್ ಬಿಕ್ಕಟ್ಟನ್ನು ಆಧರಿಸಿದ ‘ಅಮೃತಸರ: ಶ್ರೀಮತಿ ಗಾಂಧಿಯವರ ಕೊನೆಯ ಯುದ್ಧ’ (1985) ಎಂಬ ಅವರ ಮೊದಲ ಪ್ರಮುಖ ಕೃತಿ, ಪತ್ರಕರ್ತ ಸತೀಶ್ ಜಾಕೋಬ್ ಅವರೊಂದಿಗೆ ಪ್ರಕಟವಾಯಿತು. ಅವರ ಅತ್ಯಂತ ಪ್ರಭಾವಶಾಲಿ ಕೃತಿ ‘ನೋ ಫುಲ್ ಸ್ಟಾಪ್ಸ್ ಇನ್ ಇಂಡಿಯಾ’ (1988) ಎರಡು ದಶಕಗಳ ವರದಿಗಳನ್ನು ಪ್ರಬಂಧಗಳಾಗಿ ಸಂಗ್ರಹಿಸಿ, ಮಹತ್ವದ ಘಟನೆಗಳಾಚೆಗೂ ಹೋಗಿ ಭಾರತೀಯ ಸಮಾಜವನ್ನು ಆಳವಾಗಿ ಅನ್ವೇಷಿಸಿತು. ರೂಪ್ ಕನ್ವರ್ ಸತಿ ಪ್ರಕರಣದಿಂದ ಕುಂಭಮೇಳದವರೆಗೆ ಹಾಗೂ ದೂರದರ್ಶನದ ‘ರಾಮಾಯಣ’ದಂತಹ ಮಹಾಕಾವ್ಯಗಳಿಂದ ಹಿಡಿದು ಪಾಶ್ಚಿಮಾತ್ಯ ಚೌಕಟ್ಟುಗಳಿಂದ ಉಂಟಾದ ವಕ್ರತೆಗಳವರೆಗೆ. 1994ರಲ್ಲಿ ಬಿಬಿಸಿಯನ್ನು ತೊರೆದ ಬಳಿಕ ಆಗಿನ ಮಹಾನಿರ್ದೇಶಕ ಜಾನ್ ಬರ್ಟ್ ಅವರೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಟುಲ್ಲಿ 2019ರವರೆಗೆ ಬಿಬಿಸಿ ರೇಡಿಯೋ 4ರಲ್ಲಿ ‘ಸಮ್ಥಿಂಗ್ ಅಂಡರ್ಸ್ಟುಡ್’ ಎಂಬ ಆಧ್ಯಾತ್ಮಿಕ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ಅವರು ಯಾವುದೇ ಸುದ್ದಿ ಕೋಣೆಗೆ ಔಪಚಾರಿಕವಾಗಿ ಸೇರಿಕೊಳ್ಳದೆ, ದಿಲ್ಲಿಯಲ್ಲಿ ನೆಲೆಸಿರುವ ಸ್ವತಂತ್ರ ಬರಹಗಾರ ಮತ್ತು ನಿರೂಪಕರಾಗಿ ಕಾರ್ಯನಿರ್ವಹಿಸಿದರು. ಟುಲ್ಲಿ ಒಟ್ಟು 10 ಪುಸ್ತಕಗಳನ್ನು ಬರೆದಿದ್ದು, ಅವೆಲ್ಲವೂ ಭಾರತಕ್ಕೆ ಸಂಬಂಧಿಸಿದ್ದೇ ಆಗಿದೆ. ಗಿಲಿಯನ್ ರೈಟ್ ಅವರೊಂದಿಗೆ ಬರೆದ ‘ಇಂಡಿಯಾ ಇನ್ ಸ್ಲೋ ಮೋಷನ್’ (2002) ಕೃತಿಯು ಭಯೋತ್ಪಾದನೆ, ಕಾಶ್ಮೀರ, ಕೃಷಿ, ಭ್ರಷ್ಟಾಚಾರ ಮತ್ತು ಅತೀಂದ್ರಿಯತೆಯಂತಹ ವಿಷಯಗಳೆಡೆ ಬೆಳಕು ಚೆಲ್ಲಿದೆ. ‘ದಿ ಹಾರ್ಟ್ ಆಫ್ ಇಂಡಿಯಾ’ (1995) ಮತ್ತು ‘ಅಪ್ಕಂಟ್ರಿ ಟೇಲ್ಸ್’ (2017) ಕೃತಿಗಳು ದೈನಂದಿನ ಭಾರತೀಯ ಬದುಕನ್ನು ಪ್ರೀತಿ ಮತ್ತು ಶಾಂತ ವಾಸ್ತವಿಕತೆಯಿಂದ ಚಿತ್ರಿಸುತ್ತವೆ. ‘ಇಂಡಿಯಾಸ್ ಅನ್ ಎಂಡಿಂಗ್ ಜರ್ನಿ’ (2008) ಮತ್ತು ‘ಇಂಡಿಯಾ: ದಿ ರೋಡ್ ಅಹೆಡ್’ (2011) ಕೃತಿಗಳು ದೇಶದ ಭವಿಷ್ಯದತ್ತ ಅವರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತವೆ. ಅವರ ಸೇವೆಯನ್ನು ಗುರುತಿಸಿ 1992ರಲ್ಲಿ ಪದ್ಮಶ್ರೀ, 2002ರಲ್ಲಿ ಯುಕೆಯ ಹೊಸ ವರ್ಷದ ಗೌರವಗಳಲ್ಲಿ ಒಂದಾದ ನೈಟ್ ಪದವಿ ಹಾಗೂ 2005ರಲ್ಲಿ ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಿ ಪ್ರದಾನಿಸಲಾಯಿತು. ಬ್ರಿಟನ್ ಮತ್ತು ಭಾರತ ಎರಡೂ ದೇಶಗಳಿಂದ ಅಧಿಕೃತ ಗೌರವ ಪಡೆದ ಅಪರೂಪದ ವ್ಯಕ್ತಿಗಳಲ್ಲಿ ಅವರು ಒಬ್ಬರಾಗಿದ್ದರು. ಟುಲ್ಲಿ ತಮ್ಮ ಜೀವನದ ಬಹುಭಾಗವನ್ನು ಹೊಸದಿಲ್ಲಿ ಮತ್ತು ಮ್ಯಾಕ್ಲಿಯೋಡ್ ಗಂಜ್ನಲ್ಲಿ ಕಳೆದರು. ಪ್ರತಿದಿನ ಸಾಮಾನ್ಯ ನಾಗರಿಕರೊಂದಿಗೆ ಸಂವಾದ ನಡೆಸಿ, ಭಾರತದ ಸಾಮಾಜಿಕ ಹಾಗೂ ರಾಜಕೀಯ ಲಯಗಳ ಕುರಿತು ಆಳವಾದ ಆಸಕ್ತಿ ಉಳಿಸಿಕೊಂಡಿದ್ದರು. ಧರ್ಮನಿಷ್ಠ ಆಂಗ್ಲಿಕನ್ ಆಗಿದ್ದ ಅವರು, ತಮ್ಮ ನಂಬಿಕೆ ಮತ್ತು ಭಾರತದ ಜೀವಂತ ಬಹುತ್ವದ ನಡುವಿನ ಅನುರಣನದ ಬಗ್ಗೆ ಆಗಾಗ್ಗೆ ಮಾತನಾಡುತ್ತಿದ್ದರು. ಕಳೆದ ಅಕ್ಟೋಬರ್ನಲ್ಲಿ ಅವರ 90ನೇ ಹುಟ್ಟುಹಬ್ಬದ ಸಂದರ್ಭದಲ್ಲಿ, ಅವರ ಪುತ್ರ ಸ್ಯಾಮ್ ಟುಲ್ಲಿ ಯುಕೆ–ಭಾರತ ಸಂಬಂಧಗಳಲ್ಲಿ ತಮ್ಮ ತಂದೆಯ ವಿಶಿಷ್ಟ ಸ್ಥಾನವನ್ನು ಪ್ರತಿಬಿಂಬಿಸುತ್ತಾ, “ದಿಲ್ ಹೈ ಹಿಂದೂಸ್ತಾನಿ, ಮಗರ್ ತೋಡ ಅಂಗ್ರೇಜಿ ಭಿ”, ಎಂದು ಬರೆದಿದ್ದರು.
50ರ ವಯಸ್ಸು ಅಂತ್ಯವಲ್ಲ, ಆರೋಗ್ಯಕರ ಜೀವನಕ್ಕೆ ಹಾದಿ!
ಸೂಕ್ತ ಅಭ್ಯಾಸಗಳನ್ನು ಅಳವಡಿಸಿಕೊಂಡಲ್ಲಿ 50ರ ವಯಸ್ಸಿನ ಹಂತವನ್ನು ಸಾಮರ್ಥ್ಯ, ಸ್ಪಷ್ಟತೆ ಮತ್ತು ನವೀಕೃತ ಆರೋಗ್ಯದ ಮೂಲಕ ಕಳೆಯಬಹುದು! ಮಹಿಳೆಯರಿಗೆ 50ರ ವಯಸ್ಸಾದಂತೆ ದೇಹದಲ್ಲಿ ಬದಲಾವಣೆಗಳು ಬರಲಾರಂಭಿಸುತ್ತವೆ. ಋತುಬಂಧದ ಸಮಸ್ಯೆ, ಹಾರ್ಮೋನ್ ಬದಲಾವಣೆ, ಚಯಾಪಚಯ ಕ್ರಿಯೆಯ ನಿಧಾನಗತಿಯಿಂದ ಆರಂಭವಾಗಿ ಓಸ್ಟಿಯೊಪೊರೊಸಿಸ್ (ಅಸ್ಥಿರಂಧ್ರತೆ), ಹೃದಯ ರೋಗ, ಟೈಪ್ 2 ಮಧುಮೇಹದಂತಹ ದೀರ್ಘಕಾಲೀನ ರೋಗಗಳೂ ಕಾಡುತ್ತವೆ. ಸೂಕ್ತ ಅಭ್ಯಾಸಗಳನ್ನು ಅಳವಡಿಸಿಕೊಂಡಲ್ಲಿ ಈ ಹಂತವನ್ನು ಸಾಮರ್ಥ್ಯ, ಸ್ಪಷ್ಟತೆ ಮತ್ತು ನವೀಕೃತ ಆರೋಗ್ಯದ ಮೂಲಕ ಕಳೆಯಬಹುದು. ನೀವು ಏನು ತಿನ್ನುತ್ತೀರಿ ಅಥವಾ ನಿದ್ರೆ ಮಾಡುತ್ತೀರಿ ಎಂಬುದರಿಂದ ಆರಂಭಿಸಿ ನಿತ್ಯ ಜೀವನದ ಚಟುವಟಿಕೆಗಳು ದೀರ್ಘಾಯುಷ್ಯವನ್ನು ಉತ್ತೇಜಿಸುವುದು ಮತ್ತು ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. 50ರ ವಯಸ್ಸು ಮೀರಿದ ಮಹಿಳೆಯರು ಅಳವಡಿಸಿಕೊಳ್ಳಬೇಕಾದ ಅಭ್ಯಾಸಗಳು ಯಾವುವು? ►ಹಾರ್ಮೋನುಗಳ ಬದಲಾವಣೆಯ ಸಮಯ ಫರೀದಾಬಾದ್ ನ ಕ್ಲೌಡ್ನೈನ್ ಆಸ್ಪತ್ರೆಯ ಸಲಹೆಗಾರರಾದ ಸ್ತ್ರೀರೋಗ ತಜ್ಞೆ ಡಾ. ಶೈಲಿ ಶರ್ಮಾ ಪ್ರಕಾರ, ಈ ವಯಸ್ಸಿನಲ್ಲಿ ಮಹಿಳೆಯರು ಋತುಬಂಧದಿಂದ ಗಮನಾರ್ಹ ಹಾರ್ಮೋನುಗಳ ಬದಲಾವಣೆಗಳನ್ನು ಎದುರಿಸುತ್ತಾರೆ. ಮುಖ್ಯವಾಗಿ ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ ಮಟ್ಟದಲ್ಲಿನ ಕುಸಿತ ಕಂಡುಬರುತ್ತದೆ. ಹಾರ್ಮೋನುಗಳ ಬದಲಾವಣೆಯಿಂದ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರಿದ್ದು, ತೂಕ ಹೆಚ್ಚಾಗಬಹುದು. ಮುಖ್ಯವಾಗಿ ಹೊಟ್ಟೆಯ ಸುತ್ತ ಕೊಬ್ಬು ಬೆಳೆಯಬಹುದು. ವಯಸ್ಸಾದಂತೆ ಸ್ನಾಯುವಿನ ಪ್ರಮಾಣ (Muscle mass) ಕುಸಿಯುತ್ತದೆ. ಅದರಿಂದಾಗಿ ಕ್ಯಾಲರಿ ಕರಗುವ ದರ ಕಡಿಮೆಯಾಗುತ್ತದೆ. ಹೀಗಾಗಿ 50ರ ವಯಸ್ಸಿನ ಮಹಿಳೆಯರು ಶಿಸ್ತಿನ ಆಹಾರ ಕ್ರಮವನ್ನು ಅಳವಡಿಸಿಕೊಳ್ಳಬೇಕು ಮತ್ತು ಚಟುವಟಿಕೆಯನ್ನೂ ಏರಿಸಬೇಕು. ►50ರ ವಯಸ್ಸಿನ ಮಹಿಳೆಯರು ಅಳವಡಿಸಿಕೊಳ್ಳಬೇಕಾದ ಆರು ದೈನಂದಿನ ಚಟುವಟಿಕೆಗಳು ಹೀಗೆ: ►ದೈಹಿಕವಾಗಿ ಸಕ್ರಿಯವಾಗಿರಿ ನಿಯಮಿತ ದೈಹಿಕ ಚಟುವಟಿಕೆ ಕೀಲುಗಳ ಆರೋಗ್ಯಕ್ಕೆ ಉತ್ತಮ. ಹೃದಯ ರೋಗದ ಅಪಾಯ ಕಡಿಮೆಯಾಗುತ್ತದೆ. ಆರೋಗ್ಯಕರ ತೂಕವನ್ನು ನಿರ್ವಹಿಸಬಹುದು. ಮನೋಸ್ಥಿತಿ ಮತ್ತು ನಿದ್ರೆಯ ಗುಣಮಟ್ಟವನ್ನೂ ಸುಧಾರಿಸಬಹುದು. ►ಸಮತೋಲಿತ ಆಹಾರ ಸೇವನೆ ಪೌಷ್ಠಿಕಾಂಶದಲ್ಲಿ ಸಮೃದ್ಧವಾಗಿರುವ ಆಹಾರ ಸೇವಿಸಬೇಕು. ಅಂದರೆ ಫೈಬರ್, ಆಂಟಿಆಕ್ಸಿಡಂಟ್ಗಳು, ಲೀನ್ ಪ್ರೋಟೀನ್ಗಳು ಮತ್ತು ಆರೋಗ್ಯಕರ ಕೊಬ್ಬುಗಳು ಇರುವ ಆಹಾರ ಉರಿಯೂತವನ್ನು ಕಡಿಮೆಗೊಳಿಸುತ್ತದೆ. ತೂಕ ನಿಯಂತ್ರಣಕ್ಕೆ ಸಹಕಾರಿ ಹಾಗೂ ಹಾರ್ಮೋನುಗಳ ಸಮತೋಲನಕ್ಕೂ ಬೆಂಬಲ ನೀಡುತ್ತದೆ. ►ನೀರಿನಂಶ ಹೆಚ್ಚು ಸೇವಿಸಿ ಸಾಕಷ್ಟು ನೀರು ಕುಡಿಯುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ. ಮಲಬದ್ಧತೆಯನ್ನು ತಡೆಯುತ್ತದೆ. ಚರ್ಮ ಮತ್ತು ದೇಹದ ಅಂಗಗಳ ಕಾರ್ಯಕ್ಷಮತೆಯನ್ನು ಸುಸ್ಥಿತಿಯಲ್ಲಿಡುತ್ತದೆ. ಮುಖ್ಯವಾಗಿ ವಯಸ್ಸಾದಂತೆ ಬಾಯಾರಿಕೆಯ ಭಾವನೆ ಕಡಿಮೆಯಾಗುವ ಕಾರಣದಿಂದ ಆಗಾಗ್ಗೆ ನೀರು ಕುಡಿಯುತ್ತಿರಬೇಕು. ►ನಿದ್ರೆಗೆ ಆದ್ಯತೆ ನೀಡಿ 7–8 ಗಂಟೆಗಳ ಕಾಲ ಗುಣಮಟ್ಟದ ನಿದ್ರೆ ಅಗತ್ಯ. ಸೂಕ್ತ ನಿದ್ರೆಯಿಂದ ದೇಹಕ್ಕೆ ದುರಸ್ತಿ ಸಿಗುತ್ತದೆ. ಅರಿವಿನ ಕಾರ್ಯವನ್ನು ಸುಧಾರಿಸುತ್ತದೆ. ಭಾವನಾತ್ಮಕ ಆರೋಗ್ಯಕ್ಕೂ ಉತ್ತಮ. ►ಒತ್ತಡ ನಿರ್ವಹಣೆ ಅಗತ್ಯ ನಿತ್ಯವೂ ಧ್ಯಾನ ಮಾಡಬೇಕು, ಪ್ರಾರ್ಥನೆ ಮಾಡಬಹುದು ಅಥವಾ ದೀರ್ಘ ಉಸಿರಾಟದಿಂದ ಕಾರ್ಟಿಸಾಲ್ ಮಟ್ಟವನ್ನು ನಿಯಂತ್ರಿಸಬಹುದು. ಇಲ್ಲದೆ ಹೋದರೆ ಕಾರ್ಟಿಸಾಲ್ನಿಂದ ತೂಕ ಏರಿಕೆ ಮತ್ತು ಹೃದಯದ ಸಮಸ್ಯೆಗಳು ಕಂಡುಬರಬಹುದು. ►ಸಾಮಾಜಿಕವಾಗಿ ಸಂಪರ್ಕಿತರಾಗಿರಿ ಸಂಬಂಧಗಳನ್ನು ಚೆನ್ನಾಗಿ ನಿರ್ವಹಿಸುವುದು ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಏಕಾಂತವನ್ನು ದೂರಮಾಡಬಹುದು. ಅದರಿಂದ ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯವೂ ಸುಧಾರಿಸುತ್ತದೆ. ವಯಸ್ಸಾಗುವಾಗ ಭಾವನಾತ್ಮಕವಾಗಿ ಮತ್ತು ಮಾನಸಿಕವಾಗಿ ಸುಸ್ಥಿತಿಯಲ್ಲಿರುವುದು ಅತಿ ಮುಖ್ಯ.
ಭಟ್ಕಳ: 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ, ಸವಿತಾ ಮಹರ್ಷಿ ಜಯಂತಿ ಆಚರಣೆ
ಭಟ್ಕಳ: ತಾಲೂಕು ಆಡಳಿತ ಹಾಗೂ ಭಾರತ ಚುನಾವಣಾ ಆಯೋಗದ ಸಂಯುಕ್ತ ಆಶ್ರಯದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಭಟ್ಕಳ ತಾಲೂಕಿನ ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಸವಿತಾ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಅವರು ಮಾತನಾಡಿ, ಮತದಾನ ಪ್ರತಿಯೊಬ್ಬ ಭಾರತೀಯ ನಾಗರಿಕನಿಗೂ ಸಂವಿಧಾನ ನೀಡಿದ ಅಮೂಲ್ಯ ಹಕ್ಕಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಕರೆ ನೀಡಿದರು. ಯುವ ಪೀಳಿಗೆಯೇ ರಾಷ್ಟ್ರದ ಭವಿಷ್ಯವಾಗಿರುವುದರಿಂದ ಮತದಾನದ ಮಹತ್ವವನ್ನು ಅರಿತು ಜವಾಬ್ದಾರಿಯುತ ಪ್ರಜೆಗಳಾಗಿ ಬೆಳೆಯಬೇಕು ಎಂದರು. ಮತದಾನ ಒಂದು ಪವಿತ್ರ ಪ್ರಕ್ರಿಯೆಯಾಗಿದ್ದು, ಸಾಮಾನ್ಯ ನಾಗರಿಕನಿಗೂ ಸಮಾನ ಮತದ ಹಕ್ಕು ಇರುವುದೇ ಪ್ರಜಾಪ್ರಭುತ್ವದ ಶಕ್ತಿ. ದೇಶದಲ್ಲಿ ಇಂದಿಗೂ ಶೇ.60ರಿಂದ 70ರಷ್ಟು ಮಾತ್ರ ಮತದಾನವಾಗುತ್ತಿರುವುದು ಪ್ರಜಾ ಪ್ರಭುತ್ವಕ್ಕೆ ಹಾನಿಕಾರಕವಾಗಿದೆ. ಶೇ.100ರಷ್ಟು ಮತದಾನವಾದಾಗ ಮಾತ್ರ ಪ್ರಜಾಪ್ರಭುತ್ವ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶೀಲ್ದಾರ್ ನಾಗೇಂದ್ರ ಕೊಳ್ಳಶೆಟ್ಟಿ ಅವರು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ 16 ವರ್ಷಗಳಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಮತದಾರರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಮತದಾನದ ಮಹತ್ವವನ್ನು ತಿಳಿಸುವುದೇ ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಕಿಟ್ಗಳನ್ನು ವಿತರಿಸಲಾಯಿತು. ಜೊತೆಗೆ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು. ದಿ ನ್ಯೂ ಇಂಗ್ಲಿಷ್ ಪಿ.ಯು. ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಶ್ಯಾಮಲಾ ಕಾಮತ್ ಅವರು ಮತದಾರರ ದಿನಾಚರಣೆಯ ಮಹತ್ವ ಹಾಗೂ ಮತದಾನದ ಅಗತ್ಯತೆಯ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಈಶ್ವರ ನಾಯ್ಕ, ಕಾರ್ಯನಿರ್ವಹಣಾಧಿಕಾರಿ ಸುನೀಲ್ ಎಂ., ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ್, ನಗರ ಠಾಣೆಯ ಪಿಎಸ್ಐ ನವೀನ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
'ಸಣ್ಣ ಘಟನೆ' ಹೇಳಿಕೆ | ನನ್ನ ಹೇಳಿಕೆಯ ಉದ್ದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದ ಸಂಸದ ರಾಜಶೇಖರ ಹಿಟ್ನಾಳ್
ಕೊಪ್ಪಳ: ನಾನು ಸರಿಯಾಗಿಯೇ ಮಾತನಾಡಿದ್ದೇನೆ, ನಾನು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ನನ್ನ ಉದ್ದೇಶ ಮತ್ತು ಕಳಕಳಿ ಸಂಪೂರ್ಣವಾಗಿ ಸರಿಯೇ ಇದೆ. ಅಂಜನಾದ್ರಿಯನ್ನು ಜಗತ್ತಿಗೆ ಪರಿಚಯಿಸುವ ವೇಳೆ ಒಂದು ಘಟನೆಯನ್ನು ಅತಿಯಾಗಿ ವೈಭವೀಕರಿಸುವುದರಿಂದ ಆಂಜನೇಯನ ಭಕ್ತರಿಗೆ ನೋವಾಗಬಹುದು ಎಂಬ ಭಾವನೆಯಿಂದಲೇ ನಾನು ಆ ಮಾತುಗಳನ್ನು ಹೇಳಿದ್ದೇನೆ ಎಂದು ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ನೆಲದ ವೈಭವ, ಪರಂಪರೆ ಹಾಗೂ ಸಂಸ್ಕೃತಿಯನ್ನು ಒಳಗೊಂಡಿರುವ ಐತಿಹಾಸಿಕ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿಯನ್ನು ದೇಶ–ವಿದೇಶಗಳಿಗೆ ಪರಿಚಯಿಸುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಅಲ್ಲಿನ ಮೂಲಭೂತ ಸೌಲಭ್ಯಗಳು, ಪ್ರವಾಸಿ ವ್ಯವಸ್ಥೆಗಳ ಕುರಿತು ಸಮಗ್ರ ಪ್ರಚಾರ ನಡೆಸಬೇಕೆಂಬುದೇ ನನ್ನ ಮಾತಿನ ಅರ್ಥವಾಗಿತ್ತು. ಯಾವುದೇ ಅಹಿತಕರ ಘಟನೆಗಳನ್ನು ಕಡೆಗಣಿಸುವ ಉದ್ದೇಶ ನನ್ನದಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಮುಖಂಡರು ನನ್ನ ಹೇಳಿಕೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಾನು ‘ಸಣ್ಣ ಘಟನೆ’ ಎಂದು ಹೇಳಿದ ತಕ್ಷಣವೇ ಅದು ನೋವುಂಟುಮಾಡುವ ಘಟನೆ ಎಂಬುದನ್ನೂ ಉಲ್ಲೇಖಿಸಿದ್ದೇನೆ ಎಂದು ಅವರು ತಿಳಿಸಿದರು. ಈ ಹಿಂದೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಕೇಂದ್ರ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿದ್ದ “ಕೊಪ್ಪಳವನ್ನು ಅನ್ವೇಷಿಸಿ” ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ, ಕಳೆದ ವರ್ಷ ಸಣಾಪುರ ಕಾಲುವೆ ದಂಡೆಯ ಬಳಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ ಹಾಗೂ ಪ್ರವಾಸಿಗನ ಕೊಲೆ ಪ್ರಕರಣವನ್ನು ಉಲ್ಲೇಖಿಸಿ, ಆ ಘಟನೆಯನ್ನು ಮಾಧ್ಯಮಗಳು ಅತಿಯಾಗಿ ಬಿಂಬಿಸಿದ್ದರಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹಾನಿಯಾಗಿದೆ ಎಂದು ಹೇಳಿದ್ದುದು ವಿವಾದಕ್ಕೆ ಕಾರಣವಾಗಿತ್ತು.
Mark Tully: ಹಿರಿಯ ಪತ್ರಕರ್ತ ಹಾಗೂ ಖ್ಯಾತ ಇತಿಹಾಸಕಾರ ಮಾರ್ಕ್ ಟುಲ್ಲಿ ಇನ್ನಿಲ್ಲ
ಭಾರತೀಯ ಪತ್ರಿಕೋದ್ಯಮಕ್ಕೆ ಇಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಏಕೆಂದರೆ ಹಿರಿಯ ಪತ್ರಕರ್ತ ಮತ್ತು ಲೇಖಕ ಹಾಗೂ ಭಾರತದ ಅತ್ಯುನ್ನತ ವಿದೇಶಿ ವೀಕ್ಷಕರಲ್ಲಿ ಒಬ್ಬರಾದ, ಮಾರ್ಕ್ ಟುಲ್ಲಿ ಅವರು ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. 90 ವರ್ಷ ವಯಸ್ಸಿನಲ್ಲಿ ಮಾರ್ಕ್ ಟುಲ್ಲಿ ಅವರು ಕೊನೆಯುಸಿರು ಎಳೆದಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜನವರಿ 21 ರಂದು ಸಾಕೇತ್ನ ಖಾಸಗಿ
ಅಳಿವಿನಂಚಿನಲ್ಲಿರುವ ಭಾರತದ ಗುಲಾಬಿ ಡಾಲ್ಫಿನ್ ಗಳ ಸಮೀಕ್ಷೆ
ಭಾರತ, ಬಾಂಗ್ಲಾದೇಶ, ನೇಪಾಳ ಮತ್ತು ಭೂತಾನ್ನಲ್ಲಿ ಕಂಡುಬರುವ ಸಿಹಿನೀರಿನ ಡಾಲ್ಫಿನ್ ಗಳು ಮುಖ್ಯವಾಗಿ ಗಂಗಾ, ಬ್ರಹ್ಮಪುತ್ರ, ಕರ್ಣಫುಲಿ ಮತ್ತು ಮೇಘನಾ ನದಿಗಳಲ್ಲಿ ಕಂಡುಬರುತ್ತವೆ. ನದಿ ಡಾಲ್ಫಿನ್ ಗಳಿಗೆ ಸಂಬಂಧಿಸಿದ ಅತಿದೊಡ್ಡ ಸಮೀಕ್ಷೆಯಾದ ‘ಪ್ರೊಜೆಕ್ಟ್ ಡಾಲ್ಫಿನ್’ ಉತ್ತರ ಪ್ರದೇಶದ ಬಿಜ್ನೋರಿನಲ್ಲಿ ಎರಡು ದಿನಗಳ ಹಿಂದೆ ಆರಂಭವಾಗಿದೆ. 2021–23ರಲ್ಲಿ ನಡೆದ ರಾಷ್ಟ್ರವ್ಯಾಪಿ ಸಮೀಕ್ಷೆಯಲ್ಲಿ ಭಾರತದಲ್ಲಿ ಒಟ್ಟು 6,327 ನದಿ ಡಾಲ್ಫಿನ್ ಗಳಿರುವುದನ್ನು ಪತ್ತೆ ಮಾಡಲಾಗಿತ್ತು. ಇದೀಗ ಉತ್ತರ ಪ್ರದೇಶದ ಬಿಜ್ನೋರಿನಲ್ಲಿ ಮತ್ತೊಂದು ಸಮೀಕ್ಷೆ ಆರಂಭವಾಗಿದೆ. ಭಾರತದಲ್ಲಿ ಗಂಗಾ ನದಿ ಸಾವಿರಾರು ಡಾಲ್ಫಿನ್ ಗಳಿಗೆ ನೆಲೆಯಾಗಿದೆ. ಅಮೆಝಾನ್ ನದಿ ಡಾಲ್ಫಿನ್ ಗಳ ಸ್ಥಳೀಯ ರೂಪವೆಂದು ಗಂಗಾ ನದಿ ಡಾಲ್ಫಿನ್ ಗಳನ್ನು ಪರಿಗಣಿಸಲಾಗುತ್ತದೆ. ಭಾರತದ ರಾಷ್ಟ್ರೀಯ ಜಲಚರ ಪ್ರಾಣಿಯಾದ ಗಂಗಾ ನದಿ ಡಾಲ್ಫಿನ್ ಗಳು ಹೆಚ್ಚಾಗಿ ದೇಶದ ಉತ್ತರ ಭಾಗದಲ್ಲಿರುವ ಗಂಗಾ–ಬ್ರಹ್ಮಪುತ್ರ ನದಿ ವ್ಯಾಪ್ತಿಯಲ್ಲಿ ಕಂಡುಬರುತ್ತವೆ. ಅಂತಾರಾಷ್ಟ್ರೀಯ ಪ್ರಕೃತಿ ಸಂರಕ್ಷಣಾ ಒಕ್ಕೂಟ (ಐಯುಸಿಎನ್) ಈ ನದಿ ಡಾಲ್ಫಿನ್ ಗಳನ್ನು ‘ಅಳಿವಿನಂಚಿನಲ್ಲಿರುವ’ ಪ್ರಭೇದವೆಂದು ವರ್ಗೀಕರಿಸಿದೆ. ಪಿಂಕ್ ರಿವರ್ ಡಾಲ್ಫಿನ್ ಅಥವಾ ‘ಬೊಟೊ’ ಎಂದು ಕರೆಯಲಾಗುವ ಸಿಹಿನೀರಿನ ಡಾಲ್ಫಿನ್ ಪ್ರಭೇದಗಳು ಮುಖ್ಯವಾಗಿ ಅಮೆಝಾನ್ ತಟದಲ್ಲಿ ಕಂಡುಬರುತ್ತವೆ. ಬೊಲಿವಿಯಾ, ಬ್ರೆಜಿಲ್, ಕೊಲಂಬಿಯಾ, ಈಕ್ವೆಡಾರ್, ಗಯಾನ, ಪೆರು ಮತ್ತು ವೆನೆಝುವೆಲಾದ ಅಮೆಝಾನ್ ಮತ್ತು ಒರಿನೋಕೋ ನದಿ ಜಲಾನಯನ ಪ್ರದೇಶಗಳ ಜಲಮೂಲಗಳಲ್ಲಿ ವಾಸಿಸುವ ಈ ಸಿಹಿನೀರಿನ ಡಾಲ್ಫಿನ್ ಪ್ರಭೇದವಾಗಿದೆ. ಭಾರತ, ಬಾಂಗ್ಲಾದೇಶ, ನೇಪಾಳ ಮತ್ತು ಭೂತಾನ್ನಲ್ಲಿ ಕಂಡುಬರುವ ಸಿಹಿನೀರಿನ ಡಾಲ್ಫಿನ್ ಗಳು ಮುಖ್ಯವಾಗಿ ಗಂಗಾ, ಬ್ರಹ್ಮಪುತ್ರ, ಕರ್ಣಫುಲಿ ಮತ್ತು ಮೇಘನಾ ನದಿಗಳಲ್ಲಿ ಕಂಡುಬರುತ್ತವೆ. ವಯಸ್ಕ ಡಾಲ್ಫಿನ್ ಗಳು ಸುಮಾರು 10 ಅಡಿ ಉದ್ದವಿರುತ್ತವೆ. ಸೀಗಡಿ ಮತ್ತು ಮೃದ್ವಂಗಿಗಳು ಈ ಡಾಲ್ಫಿನ್ ಗಳ ಪ್ರಮುಖ ಆಹಾರವಾಗಿವೆ. ►ಡಾಲ್ಫಿನ್ ಗಳು ಗುಲಾಬಿ ಬಣ್ಣದಲ್ಲೇಕೆ ಇರುತ್ತವೆ? ಸಿಹಿನೀರಿನ ಡಾಲ್ಫಿನ್ ಗಳು ವಿವಿಧ ಕಾರಣಗಳಿಂದ ಗುಲಾಬಿ ಬಣ್ಣವನ್ನು ಪಡೆದಿರುತ್ತವೆ. ಜೈವಿಕ ಗುಣಲಕ್ಷಣಗಳಿಂದಾಗಿ ಅವುಗಳ ಬಣ್ಣ ಬದಲಾಗುತ್ತದೆ. ನೀರಿನ ಮೂಲಗಳ ಖನಿಜಾಂಶಗಳು ಚರ್ಮದ ಬಣ್ಣವನ್ನು ಬದಲಿಸುವ ಸಾಧ್ಯತೆಯಿದೆ. ಕೆಲವೊಮ್ಮೆ ಆಹಾರವೂ ಬಣ್ಣದ ಮೇಲೆ ಪರಿಣಾಮ ಬೀರುತ್ತದೆ. ಬಹಳಷ್ಟು ಸಂದರ್ಭಗಳಲ್ಲಿ ಚರ್ಮದ ಕೆಳಗಿರುವ ರಕ್ತನಾಳಗಳ ಹಿಗ್ಗುವಿಕೆಯಿಂದಲೂ ಅವು ಗುಲಾಬಿ ಬಣ್ಣಕ್ಕೆ ತಿರುಗುತ್ತವೆ. ಚಿಕ್ಕ ವಯಸ್ಸಿನ ಡಾಲ್ಫಿನ್ ಗಳು ಬೂದು ಮತ್ತು ಕಂದು ಬಣ್ಣದಲ್ಲಿರುತ್ತವೆ. ಪ್ರೌಢಾವಸ್ಥೆಗೆ ಬಂದಾಗ ಅವು ಬೂದು ಅಥವಾ ಗುಲಾಬಿ ಬಣ್ಣಕ್ಕೆ ತಿರುಗುತ್ತವೆ. ಕೆಲವು ಗಂಡು ಡಾಲ್ಫಿನ್ ಗಳು ಬಹಳ ಕಡು ಗುಲಾಬಿ ಬಣ್ಣ ಹೊಂದಿರುತ್ತವೆ. ನದಿ ನೀರಿನಲ್ಲಿ ಹೆಚ್ಚು ಅಡ್ಡಾಡುವ ಕಾರಣದಿಂದಲೂ ಬಣ್ಣ ಬದಲಾಗಬಹುದು. ►ಅಳಿವಿನಂಚಿನಲ್ಲಿರುವ ಪ್ರಭೇದಗಳು ದುರುದೃಷ್ಟವಶಾತ್, ಮಾನವ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಹಿನೀರಿನ ಡಾಲ್ಫಿನ್ ಪ್ರಭೇದಗಳು ಅಳಿವಿನಂಚಿನಲ್ಲಿವೆ. ಕೈಗಾರೀಕರಣ, ತೈಲ ಸೋರಿಕೆ, ಬೇಟೆಯಾಡುವುದು ಮತ್ತು ಮೀನು ವ್ಯಾಪಾರ ಇವುಗಳು ಅವುಗಳ ಸಂಖ್ಯೆಗಳು ಕಡಿಮೆಯಾಗಲು ಕಾರಣವಾಗಿವೆ. ಇದೀಗ ಡಾಲ್ಫಿನ್ ಗಳ ಸಮೀಕ್ಷೆ ನಡೆಯುತ್ತಿದ್ದು, ಸ್ಪಷ್ಟ ಸಂಖ್ಯೆಯನ್ನು ಕಂಡುಹಿಡಿಯಲಾಗುತ್ತಿದೆ. ಪರಿಸರ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, “ಸಮೀಕ್ಷೆಯ ಮೊದಲ ಹಂತದಲ್ಲಿ ಬಿಜ್ನೋರಿನಿಂದ ಗಂಗಾ ಸಾಗರ್ ಮತ್ತು ಸಿಂಧೂ ನದಿವರೆಗೆ ಗಂಗಾ ನದಿಯ ಮುಖ್ಯ ನದಿ ಪಾತ್ರದಲ್ಲಿ ಸಮೀಕ್ಷೆ ನಡೆಯಲಿದೆ. ಎರಡನೇ ಹಂತದಲ್ಲಿ ಬ್ರಹ್ಮಪುತ್ರ, ಗಂಗಾ ಉಪನದಿಗಳು, ಸುಂದರ್ಬನ್ಸ್ ಮತ್ತು ಒಡಿಶಾದಲ್ಲಿ ಸಮೀಕ್ಷೆ ನಡೆಯಲಿದೆ. ಹಿಂದಿನ ಸಮೀಕ್ಷೆಯಲ್ಲಿ ಗಂಗಾ, ಯಮುನಾ, ಚಂಬಲ್, ಗಂಡಕ್, ಘಘರ, ಕೋಸಿ, ಮಹಾನಂದ ಮತ್ತು ಬ್ರಹ್ಮಪುತ್ರ ನದಿ ಪಾತ್ರಗಳಲ್ಲಿ ಡಾಲ್ಫಿನ್ ಗಳನ್ನು ಗುರುತಿಸಲಾಗಿತ್ತು.” ಈ ಡಾಲ್ಫಿನ್ ಪ್ರಭೇದಗಳು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿವೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಂತರದ ಸ್ಥಾನದಲ್ಲಿವೆ.
ಟೀ20 ವಿಶ್ವಕಪ್ ಗೂ ಮುನ್ನ ಭಾರತ ತಂಡದಲ್ಲಿ ಭಾರೀ ಪ್ರಯೋಗ! ಬುಮ್ರಾಗಾಗಿ ಅರ್ಶದೀಪ್ ಔಟ್! ಹರ್ಷಿತ್ ರಾಣಾ ಸೇಫ್!
India Vs New Zealand- ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲೆಂಡ್ ತಂಡದ ವಿರುದ್ಧ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಇದೀಗ 3ನೇ ಪಂದ್ಯವನ್ನೂ ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ. ಗುವಾಹಟಿಯಲ್ಲಿ ನಡೆಯುತ್ತಿರುವ 3ನೇ ಪಂದ್ಯದಲ್ಲಿ ಭಾರತ ತಂಡದ 2 ಮುಖ್ಯ ಬದಲಾವಣೆಗಳನ್ನು ಮಾಡಿಕೊಂಡಿದೆ. ಟಿ20ಯ ಅತ್ಯಂತ ಯಶಸ್ವಿ ಬೌಲರ್ ಅರ್ಶದೀಪ್ ಸಿಂಗ್ ಅವರ ಬದಲಿಗೆ ಜಸ್ಪ್ರೀತ್ ಬುಮ್ರಾ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ಬದಲು ರವಿ ಬಿಷ್ಣೋಯಿ ಅವರು ತಂಡವನ್ನು ಸೇರಿಕೊಂಡಿದ್ದಾರೆ.
ಕ್ರಿಸ್ಮಸ್ಗೆ ಬರಲಿದೆ ಶಾರುಖ್ ಖಾನ್ ಅಭಿನಯದ ‘ಕಿಂಗ್’
ಶಾರುಖ್ ಖಾನ್ ‘ಕಿಂಗ್’ ಆಗಿ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಅದಕ್ಕಾಗಿ ಈ ವರ್ಷದ ಅಂತ್ಯದವರೆಗೆ ಕಾಯಬೇಕಿದೆ. ‘ಕಿಂಗ್’ ಚಿತ್ರದ ಒಂದು ಝಲಕ್ ಬಿಡುಗಡೆ ಮಾಡುವ ಮೂಲಕ ಶಾರುಖ್ ಖಾನ್ ಚಿತ್ರದ ಮೇಲೆ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ. ಸತತ ಮೂರು ಹಿಟ್ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್ ಖಾನ್ ಕೆಲಕಾಲ ಪರದೆಯಿಂದ ದೂರವಾಗಿದ್ದರು. ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಚಿತ್ರಗಳು ಒಂದೇ ವರ್ಷದಲ್ಲಿ ತೆರೆಗಪ್ಪಳಿಸಿ ಭರ್ಜರಿ ಯಶಸ್ಸು ಕಂಡಿದ್ದವು. ಆ ಬಳಿಕ ‘ಕಿಂಗ್’ ಚಿತ್ರದ ಬಗ್ಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇದೀಗ ಇದೇ ವರ್ಷ ಕ್ರಿಸ್ಮಸ್ ಗೆ ‘ಕಿಂಗ್’ ಬಿಡುಗಡೆಯಾಗಲಿದೆ ಎಂದು ಶಾರುಖ್ ಖಾನ್ ಘೋಷಿಸಿದ್ದಾರೆ. ‘ಪಠಾಣ್’ ಖ್ಯಾತಿಯ ಸಿದ್ಧಾರ್ಥ್ ಆನಂದ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ‘ಕಿಂಗ್’ 2026 ಡಿಸೆಂಬರ್ 24ರಂದು ಬಿಡುಗಡೆಯಾಗಲಿದೆ. ‘ಪಠಾಣ್’ ಬ್ಲಾಕ್ಬಸ್ಟರ್ ಚಿತ್ರದ ಮೂರನೇ ವಾರ್ಷಿಕೋತ್ಸವದ ಮುನ್ನವೇ ‘ಕಿಂಗ್’ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಅವರ ಮಗಳು ಸುಹಾನಾ ಖಾನ್ ಕೂಡ ನಟಿಸುತ್ತಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅನಿಲ್ ಕಪೂರ್, ಜಾಕಿ ಶ್ರಾಫ್, ರಾಣಿ ಮುಖರ್ಜಿ ಸೇರಿದಂತೆ ಇನ್ನೂ ಹಲವರು ನಟಿಸಿದ್ದಾರೆ. ವಿಎಫ್ಎಕ್ಸ್ ಚಿತ್ರದಲ್ಲಿನ ಪ್ರಮುಖ ಆಕರ್ಷಣೆಯಾಗಿರಲಿದೆ. ಅನಿರುದ್ಧ ರವಿಚಂದ್ರನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲೇ ‘ಕಿಂಗ್’ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮುಂಬೈ ಮತ್ತು ವರ್ಸಾವ್ ಲೊಕೇಶನ್ಗಳಲ್ಲಿ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಇದೇ ಕ್ರಿಸ್ಮಸ್ ಸಂದರ್ಭದಲ್ಲಿ ಹಾಲಿವುಡ್ನ ಮಾರ್ವೆಲ್ ಸಿನಿಮಾ ‘ಅವೆಂಜರ್ಸ್: ಡೂಮ್ಸ್ಡೇ’ ಕೂಡ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಅವರ ‘ಕಿಂಗ್’ ಮತ್ತು ಮಾರ್ವೆಲ್ ಚಿತ್ರದ ನಡುವೆ ಬಾಕ್ಸ್ಆಫೀಸ್ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
ಸಿನಿಮಾ ನಟರು ಡೈಲಾಗ್ ಹೊಡೆಯುವುದರಲ್ಲಿ ನಿಸ್ಸೀಮರು. ಅದರಲ್ಲೂ ನಟರು ರಾಜಕೀಯ ಪ್ರವೇಶ ಮಾಡಿದರಂತೂ ಅವರ ರಾಜಕೀಯ ಭಾಷಣಗಳೂ ಕೂಡ ಸಿನಿಮಾ ಡೈಲಾಗ್ ರೀತಿಯೇ ಕೇಳಿಸುತ್ತವೆ. ಆದರೆ ಎಲ್ಲ ನಟರೂ ಕೇವಲ ಡೈಲಾಗ್ ಹೊಡೆಯಲು ರಾಜಕೀಯಕ್ಕೆ ಬರಲ್ಲ. ಕೆಲವರು ಸಿರಿಯಸ್ ಪೊಲಿಟಿಶಿಯನ್ಸ್ ಕೂಡ ಆಗಿರುತ್ತಾರೆ. ಅದೇ ರೀತಿ ಟಿವಿಕೆ ಪಕ್ಷ ಸ್ಥಾಪನೆಯೊಂದಿಗೆ ತಮಿಳುನಾಡು ರಾಜಕೀಯಕ್ಕೆ ಧುಮುಕಿರುವ ನಟ ವಿಜಯ್, ಇಂದು (ಜ.25-ಭಾನುವಾರ) ಪದಾಧಿಕಾರಿಗಳ ಸಭೆಯಲ್ಲಿ ಅಬ್ಬರದ ಭಾಷಣ ಮಾಡಿದ್ದಾರೆ. ಇಲ್ಲಿದೆ ಮಾಹಿತಿ.
ಎಸ್ಸಿ ಎಸ್ಟಿ ಕುಂದುಕೊರತೆ ಸಭೆ
Mumbai | ಪ್ರಾಧ್ಯಾಪಕನಿಗೆ ಇರಿದು ಪರಾರಿ: ಹಂತಕನನ್ನು ಪೊಲೀಸರು ಸೆರೆ ಹಿಡಿದಿದ್ದು ಹೇಗೆ?
ಮುಂಬೈ: ಮುಂಬೈ ನಿವಾಸಿಗಳ ಜೀವನಾಡಿಯಾಗಿರುವ ಸ್ಥಳೀಯ ರೈಲ್ವೆಯ ಮಲಾಡ್ ರೈಲ್ವೆ ನಿಲ್ದಾಣದಲ್ಲಿ ಪ್ರಾಧ್ಯಾಪಕರಿಗೆ ಭೀಕರವಾಗಿ ಇರಿದು ಹತ್ಯೆಗೈದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು 27 ವರ್ಷದ ಓಂಕಾರ್ ಶಿಂದೆ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯನ್ನು ಅಲೋಕ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರು ವಿಲೆ ಪಾರ್ಲೆಯಲ್ಲಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪ್ರಾಧ್ಯಾಪಕರಾಗಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ಮಲಾಡ್ ರೈಲ್ವೆ ನಿಲ್ದಾಣದ 1 ಮತ್ತು 2ನೇ ಪ್ಲಾಟ್ಫಾರ್ಮ್ಗಳ ನಡುವೆ ನಡೆದಿದೆ. ಈ ಘಟನೆ ಕ್ಷುಲ್ಲಕ ವಾಗ್ವಾದದ ಹಿನ್ನೆಲೆಯಲ್ಲಿ ನಡೆದಿರುವಂತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಶಿಂದೆ ಹಾಗೂ ಮೃತ ಸಿಂಗ್ ಇಬ್ಬರೂ ಸ್ಥಳೀಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಮಲಾಡ್ ರೈಲ್ವೆ ನಿಲ್ದಾಣ ಸಮೀಪಿಸುತ್ತಿದ್ದಂತೆಯೇ, ರೈಲಿನಿಂದ ಇಳಿಯುವ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ಪ್ರಾರಂಭವಾಗಿದೆ ಎಂದು ಹೇಳಲಾಗಿದೆ. ಈ ವಾಕ್ಸಮರ ಭಯಾನಕ ತಿರುವು ಪಡೆದುಕೊಂಡಿದ್ದು, ಸ್ತಿಮಿತ ಕಳೆದುಕೊಂಡ ಶಿಂದೆ ಹರಿತವಾದ ಚಾಕುವನ್ನು ಹೊರತೆಗೆದು ಸಿಂಗ್ ಅವರ ಹೊಟ್ಟೆಗೆ ಹಲವು ಬಾರಿ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಸಿಂಗ್ ಕುಸಿದು ಬಿದ್ದರೆ, ಆರೋಪಿ ಶಿಂದೆ ಪ್ರಯಾಣಿಕರ ದಟ್ಟಣೆಯ ನಡುವೆ ಪರಾರಿಯಾಗಿ ಕಣ್ಮರೆಯಾಗಿದ್ದಾನೆ. ಬಳಿಕ ಆತನ ಪತ್ತೆಗೆ ತಕ್ಷಣವೇ ತನಿಖೆಗೆ ಚಾಲನೆ ನೀಡಿದ ಬೊರಿವಿಲಿ ರೈಲ್ವೆ ಪೊಲೀಸರು, ನಿಲ್ದಾಣದ ಸಿಸಿಟಿವಿ ಕ್ಯಾಮೆರಾಗಳ ಸಹಾಯದಿಂದ ಹಲ್ಲೆಯ ನಂತರ ಪಾದಚಾರಿ ಸೇತುವೆಯ ಮೇಲೆ ಪರಾರಿಯಾಗುತ್ತಿದ್ದ ಬಿಳಿ ಶರ್ಟ್ ಹಾಗೂ ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದ ಶಿಂದೆಯನ್ನು ಗುರುತಿಸಿದ್ದಾರೆ. ವೀಡಿಯೊ ಸಾಕ್ಷ್ಯ ಹಾಗೂ ತಾಂತ್ರಿಕ ಸುಳಿವುಗಳ ಆಧಾರದಲ್ಲಿ ವಸಾಯಿಯಲ್ಲಿ ಶಿಂದೆಯನ್ನು ಪತ್ತೆ ಹಚ್ಚಿದ ಪೊಲೀಸರು, ಆತನನ್ನು ಬಂಧಿಸಿದ್ದಾರೆ. ಆದರೆ ಕೇವಲ ವಾಗ್ವಾದದ ಕಾರಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬನನ್ನು ಇರಿದು ಹತ್ಯೆಗೈಯುವುದು ಅಸಹಜ ಘಟನೆ. ಇದರ ಹಿಂದೆ ಇನ್ನೂ ಆಳವಾದ ವ್ಯಾಜ್ಯ ಇರುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಟ್ರಾಫಿಕ್ ಪೊಲೀಸರು ಹಾಕಿದ ದಂಡದ ರಶೀದಿಯನ್ನು ಪ್ರಶ್ನೆ ಮಾಡ್ಬಹುದು! ಹೊಸ ನಿಯಮದಲ್ಲಿ ಏನೇನಿದೆ? ಇಲ್ಲಿದೆ ವಿವರ
ದೇಶದ ರಸ್ತೆ ಸಾರಿಗೆ ಇಲಾಖೆಯು ಟ್ರಾಫಿಕ್ ದಂಡದ ಚಲನ್ಗಳನ್ನು ಪ್ರಶ್ನಿಸಲು 45 ದಿನಗಳ ಕಾಲಾವಕಾಶ ನೀಡುವ ಹೊಸ ನಿಯಮ ಜಾರಿಗೆ ತಂದಿದೆ. ಈ ಅವಧಿಯಲ್ಲಿ ದಾಖಲೆಗಳೊಂದಿಗೆ ಪ್ರಶ್ನಿಸದಿದ್ದರೆ, ದಂಡ ಪಾವತಿಸುವುದು ಕಡ್ಡಾಯವಾಗುತ್ತದೆ. ಈ ಬದಲಾವಣೆಯು ದಂಡ ತಪ್ಪಿಸುವವರನ್ನು ತಡೆಯುವ ಗುರಿ ಹೊಂದಿದೆ.
Canada | ಭಾರತೀಯ ಮೂಲದ ಯುವಕ ಗುಂಡೇಟಿಗೆ ಬಲಿ: ಗ್ಯಾಂಗ್ ವಾರ್ ಶಂಕೆ
ಬುರ್ನಬಿ (ಕೆನಡಾ): ಗುರುವಾರ ಬುರ್ನಬಿಯಲ್ಲಿ ನಡೆದ 28 ವರ್ಷದ ಭಾರತೀಯ ಮೂಲದ ಯುವಕನ ಹತ್ಯೆ ಮಾಡಲಾಗಿದೆ. ಇದು ಗ್ಯಾಂಗ್ ವಾರ್ ಆಗಿರಬಹುದು ಎಂದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಯುವಕನನ್ನು ವ್ಯಾಂಕೋವರ್ ನಿವಾಸಿ ದಿಲ್ ರಾಜ್ ಸಿಂಗ್ ಗಿಲ್ ಎಂದು ಗುರುತಿಸಲಾಗಿದ್ದು, ಆತ ಪೊಲೀಸರಿಗೆ ಪರಿಚಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಸಂಜೆ ಸುಮಾರು 5.30ರ ಕೆಲವೇ ಕ್ಷಣಗಳ ಮುಂಚೆ, ಕೆನಡಾ ವೇಯ 3700 ಬ್ಲಾಕ್ ಬಳಿ ಗುಂಡಿನ ದಾಳಿ ನಡೆದಿದೆ ಎಂಬ ಮಾಹಿತಿ ಬುರ್ನಬಿ ಆರ್ಸಿಎಂಪಿ ಫ್ರಂಟ್ ಲೈನ್ ಅಧಿಕಾರಿಗಳಿಗೆ ಲಭಿಸಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪುರುಷನೊಬ್ಬ ಸಾವು–ಬದುಕಿನ ಹೋರಾಟ ನಡೆಸುತ್ತಿರುವುದು ಕಂಡು ಬಂದಿದೆ. ಜೀವ ರಕ್ಷಿಸಲು ಕೈಗೊಂಡ ಪ್ರಯತ್ನಗಳ ಹೊರತಾಗಿಯೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಇದಾದ ಕೆಲವೇ ಕ್ಷಣಗಳಲ್ಲಿ ಬುಕ್ಸ್ಟನ್ ಸ್ಟ್ರೀಟ್ನ 5000 ಬ್ಲಾಕ್ ಬಳಿ ಒಂದು ವಾಹನ ಪತ್ತೆಯಾಗಿದೆ. ಆ ವಾಹನಕ್ಕೂ ಗುಂಡಿನ ದಾಳಿಗೂ ಯಾವುದೇ ಸಂಬಂಧವಿದೆಯೇ ಎಂಬುದನ್ನು ಪತ್ತೆ ಹಚ್ಚಲು ತನಿಖಾಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ಬ್ರಿಟಿಷ್ ಕೊಲಂಬಿಯಾದ ಬುರ್ನಬಿ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಮಗ್ರ ಹತ್ಯೆ ತನಿಖಾ ತಂಡ ಈ ಪ್ರಕರಣದ ತನಿಖೆ ನಡೆಸುತ್ತಿದೆ. “ಗಿಲ್ ಪೊಲೀಸರಿಗೆ ಪರಿಚಿತನಾಗಿದ್ದ ಹಾಗೂ ಈ ಗುಂಡಿನ ದಾಳಿ ಬಿಸಿ ಗ್ಯಾಂಗ್ ಘರ್ಷಣೆಯೊಂದಿಗೆ ಸಂಬಂಧ ಹೊಂದಿರುವಂತೆ ಕಾಣುತ್ತದೆ” ಎಂದು ಪ್ರಕಟನೆಯಲ್ಲಿ ಹೇಳಲಾಗಿದೆ.
ಬೆಂಗಳೂರು: ದೇಶದ ಉನ್ನತ ಪ್ರಶಸ್ತಿಗಳಲ್ಲಿ ಒಂದಾಗಿರುವ 'ಪದ್ಮಶ್ರೀ ಪ್ರಶಸ್ತಿ 2026'ಯನ್ನು ಭಾರತ ಸರ್ಕಾರವು ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕರ್ನಾಟಕದ ಮಂಡ್ಯ ಜಿಲ್ಲೆಯ ಅಕ್ಷರ ಯೋಗಿ ಎಂ. ಅಂಕೇಗೌಡ (M Anke Gowda) ಅವರಿಗೆ ನೀಡಿ ಗೌರವಿಸಲಿದೆ. ಭಾನುವಾರ ಪದ್ಮಶ್ರೀ ಪ್ರಶಸ್ತಿಗಳ ಪಟ್ಟಿ ಬಿಡುಗಡೆ ಆಗಿದ್ದು, ಅದರಲ್ಲಿ ಅಂಕೇಗೌಡರ ಹೆಸರು ನೋಡುತ್ತಿದ್ದಂತೆ ರಾಜಕೀಯ ಗಣ್ಯರು
Dr. Suresh Hanagavadi Profile: 2026ನೇ ಸಾಲಿನ ಪದ್ಮಶ್ರೀ ಪ್ರಕಟವಾಗಿದ್ದು, ಈ ಬಾರಿ ಮೂವರು ಕನ್ನಡಿಗರು ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರಲ್ಲಿ ಡಾ. ಸುರೇಶ್ ಹನಗವಾಡಿ ಅವರು ಸಹ ಒಬ್ಬರು. ಡಾ. ಸುರೇಶ್ ಹನಗವಾಡಿ ಅವರು ಕರ್ನಾಟಕದ ಪ್ರಸಿದ್ಧ ವೈದ್ಯರು, ಹಿಮೋಫಿಲಿಯಾ (ರಕ್ತಸ್ರಾವ, ರಕ್ತ ಹೆಪ್ಪುಗಟ್ಟುವಿಕೆ ಕಾಯಿಲೆ / Hemophilia) ರೋಗದ ಕುರಿತು ಜಾಗೃತಿ ಮೂಡಿಸುತ್ತಿರುವ ಸಮಾಜ
ಚಿವುಟಿದಷ್ಟು ಚಿಗುರುತ್ತಿರುವ ಮೊಹಮ್ಮದ್ ಶಮಿ ರಣಜಿಯಲ್ಲೂ ಬೆಂಕಿ ಬೌಲಿಂಗ್; ಸರ್ವಿಸಸ್ ವಿರುದ್ಧ 7 ವಿಕೆಟ್!
Ranji Trophy 2025-26- ಉತ್ತಮ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾದಿಂದ ಬಹುಕಾಲದಿಂದ ದೂರ ಉಳಿದಿರುವ ಮೊಹಮ್ಮದ್ ಶಮಿ ಇದೀಗ ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ. ಸರ್ವಿಸಸ್ ವಿರುದ್ಧ ಅವರು ಒಟ್ಟು 7 ವಿಕೆಟ್ ಪಡೆದು ಮಿಂಚಿದ್ದಾರೆ. ಇನ್ನಿಂಗ್ಸ್ ಮತ್ತು 46 ರನ್ ಗಳ ಜಯ ಗಳಿಸಿರುವ ಬಂಗಾಳ ತಂಡ ಇದೀಗ ಟೂರ್ನಿಯ ಕ್ವಾರ್ಟರ್-ಫೈನಲ್ ಪ್ರವೇಶಿಸಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದರೂ ಶಮಿ ಅವರನ್ನು ಫಿಟ್ನೆಸ್ ಕಾರಣಗಳಿಗಾಗಿ ರಾಷ್ಟ್ರೀಯ ಆಯ್ಕೆದಾರರು ನಿರ್ಲಕ್ಷ್ಯ ಮಾಡಿದ್ದರು. ಇದೀಗ ಶಮಿ ಮತ್ತೆ ತಮ್ಮ ಫಿಟ್ನೆಸ್ ಸಾಬೀತುಪಡಿಸಿದ್ದಾರೆ.
ಮನೆಗೆ ನುಗ್ಗಿ ಚಿನ್ನಾಭರಣ ಕಳವು: ಸಂಬಂಧಿಕರ ವಿರುದ್ಧ ದೂರು ದಾಖಲು
ಪಡುಬಿದ್ರಿ: ಸಂಬಂಧಿಕರು ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವುದಾಗಿ ಆರೋಪಿಸಿ ಹೆಜಮಾಡಿ ಕೋಡಿಯ ರಜನಿ ನೀಡಿದ ದೂರಿನಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಜನಿ ಉದ್ಯೋಗದ ನಿಮಿತ್ತ ಮುಂಬೈನಲ್ಲಿ ವಾಸವಾಗಿದ್ದು ಜ.21ರಂದು ಸಂಜೆ ಅವರ ಸಂಬಂದಿಕರಾಧ ರೇಖಾ ಕಾಂಚನ್, ಹೇಮಲತಾ ಕೋಟ್ಯಾನ್, ದೇವದಾಸ್ ಕಾಂಚನ್, ರೋಹಿತ್ ಕೋಟ್ಯಾನ್, ಧನರಾಜ್ ಕಾಂಚನ್, ಹಾಗೂ ಶ್ರೀಶ ಕೋಟ್ಯಾನ್ ಎಂಬವರು ಕೀ ಮೇಕರ್ನ್ನು ಕರೆದುಕೊಂಡು ಬಂದು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿರುವುದು ಸಿಸಿ ಕ್ಯಾಮರಾ ದಲ್ಲಿ ಕಂಡುಬಂದಿದೆ. ರಜನಿ ಮನೆಗೆ ಬೀಗ ಹಾಕಿ ಹೋಗುವಾಗ ಮನೆಯಲ್ಲಿ ಇಟ್ಟಿದ್ದ 6,65,000ರೂ. ಮೌಲ್ಯದ ಚಿನ್ನದ ಮಂಗಳ ಸೂತ್ರ, ಉಂಗುರ, ಚಿನ್ನದ ಚೈನ್ ಹಾಗೂ 1,27,000ರೂ. ಮೌಲ್ಯದ ಬೆಳ್ಳಿಯ ಚೆಂಬು, ಬೆಳ್ಳಿಯ ತಟ್ಟೆಗಳು, ಬೆಳ್ಳಿಯ ದೇವರ ಸಾಮಗ್ರಿಗಳು, ಬೆಳ್ಳಿಯ ದೀಪಗಳು ಹಾಗೂ 12,000ರೂ. ನಗದು ಹಣವನ್ನು ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜನ ನೋಡಿಕೊಂಡು ಕೆಳಗಿಳಿ ಅಂದಿದ್ದೇ ತಪ್ಪಾಯ್ತು; ಮುಂಬೈನ ರೈಲು ನಿಲ್ದಾಣದಲ್ಲಿ ಹೆಣವಾದ ಗಣಿತ ಪ್ರಾಧ್ಯಾಪಕ!
ಇಂದಿನ ಹೊಸ ಪೀಳಿಗೆಯ ಬಹುತೇಕ ಯುವಕ/ಯುವತಿಯರಲ್ಲಿ ಎಲ್ಲವೂ ಇದೆ ಆದರೆ ತಾಳ್ಮೆಯೊಂದನ್ನು ಬಿಟ್ಟು. ಸಣ್ಣ ಸಣ್ಣ ವಿಚಾರಕ್ಕೆ ಮತ್ತೊಬ್ಬರಿಗೆ ಘೋರ ಹಾನಿ ಮಾಡುವುದು ಮಾತ್ರವಲ್ಲ, ತಮ್ಮ ಜೀವನವನ್ನೂ ಹಾಳು ಮಾಡಿಕೊಳ್ಳುತ್ತಿರುವುದಕ್ಕೆ ಈ ತಾಳ್ಮೆಯ ಕೊರತೆಯೇ ಕಾರಣ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಮುಂಬೈನ ಮಲಾಡ್ ರೈಲು ನಿಲ್ದಾಣದಲ್ಲಿ ರೈಲಿನಿಂದ ಇಳಿಯುವ ವಿಚಾರವಾಗಿ ಆರಂಭವಾದ ಜಗಳ, ಗಣಿತ ಪ್ರಾಧ್ಯಾಪಕನೋರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನೋರ್ವನನ್ನು ಬಂಧಿಸಿದ್ದಾರೆ. ಇಲ್ಲಿದೆ ಮಾಹಿತಿ.
ಸಿದ್ದಾಪುರ ಏತ ನೀರಾವರಿ ಯೋಜನೆ ತಜ್ಞರ ಸಮಿತಿ ವರದಿಯಂತೆ ಕ್ರಮ: ಸಚಿವೆ ಹೆಬ್ಬಾಳ್ಕರ್
ಉಡುಪಿ, ಜ.25: ಸಿದ್ದಾಪುರ ಏತ ನೀರಾವರಿ ಯೋಜನೆಗೆ ಸಂಬಂಧಿಸಿ ದಂತೆ ಈಗಾಗಲೇ ರಾಜ್ಯ ಸರಕಾರದಿಂದ ತಜ್ಞರ ಸಮಿತಿಯ ಅಭಿಪ್ರಾಯ ಪಡೆಯಲು ಸೂಚಿಸಲಾಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ತಜ್ಞರ ಸಮಿತಿಯ ವರದಿಯ ಆಧಾರದ ಮೇಲೆ ಸಾಧಕ ಭಾದಕಗಳ ಕುರಿತು ಗಮನ ಹರಿಸಿ, ಯಾವುದೇ ರೈತರಿಗೆ ಅನ್ಯಾಯವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ತಜ್ಞರ ತಂಡ ವರದಿ ನೀಡುವ ತನಕ ಕಾಮಗಾರಿಯನ್ನು ಸ್ಥಗಿತಗೊಳಿಸಲು ಕರ್ನಾಟಕ ನೀರಾವರಿ ನಿಗಮದಿಂದ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ʼಪುಸ್ತಕಮನೆʼಯ ಅಂಕೇ ಗೌಡ, ಅರ್ಮಿಡಾ ಫೆರ್ನಾಂಡಿಸ್ ಸೇರಿದಂತೆ 45 ಮಂದಿಗೆ ʼಪದ್ಮʼ ಗೌರವ: ವರದಿ
ಹೊಸದಿಲ್ಲಿ,ಜ.25: ವಿಶ್ವದ ಅತಿದೊಡ್ಡ ಉಚಿತ ಪ್ರವೇಶ ಗ್ರಂಥಾಲಯವನ್ನು ಸ್ಥಾಪಿಸಿದ ಮಾಜಿ ಬಸ್ ಕಂಡಕ್ಟರ್, ಏಷ್ಯಾದ ಮೊದಲ ಮಾನವ ಹಾಲಿನ ಬ್ಯಾಂಕ್ ಅನ್ನು ಆರಂಭಿಸಿದ ಮಕ್ಕಳ ತಜ್ಞೆ, 90 ವರ್ಷದ ಅಪರೂಪದ ಸಂಗೀತ ವಾದ್ಯ ವಾದಕ ಸೇರಿದಂತೆ ದೇಶದ ವಿವಿಧ ಭಾಗಗಳ 45 ಮಂದಿಯನ್ನು ಈ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಒಮ್ಮೆ ಬಸ್ ಕಂಡಕ್ಟರ್ ಆಗಿದ್ದ ಅಂಕೇ ಗೌಡ ಅವರು ವಿಶ್ವದ ಅತಿದೊಡ್ಡ ಉಚಿತ ಪ್ರವೇಶ ಗ್ರಂಥಾಲಯವೆಂದು ಗುರುತಿಸಲ್ಪಟ್ಟಿರುವ ‘ಪುಸ್ತಕ ಮನೆ’ಯನ್ನು ಸ್ಥಾಪಿಸಿದ್ದಾರೆ. ಅಪರೂಪದ ಹಸ್ತಪ್ರತಿಗಳನ್ನು ಒಳಗೊಂಡಂತೆ 20 ಭಾಷೆಗಳಲ್ಲಿ 20ಲಕ್ಷಕ್ಕಿಂತ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಈ ಗ್ರಂಥಾಲಯವು ದೇಶದಾದ್ಯಂತ ಮುಕ್ತ ಜ್ಞಾನಕೇಂದ್ರವಾಗಿ ರೂಪುಗೊಂಡಿದೆ. ಕರ್ನಾಟಕದ ಮಂಡ್ಯ ಸಮೀಪದ ಹರಳಹಳ್ಳಿ ಗ್ರಾಮದ 75 ವರ್ಷದ ಈ ʼಗ್ರಂಥಪಾಲಕʼ ಅಂಕೇಗೌಡರನ್ನು ಶಿಕ್ಷಣ ಕ್ಷೇತ್ರದಲ್ಲಿ ಸಮಾಜಮುಖಿ ಸೇವೆ ಹಾಗೂ ಜ್ಞಾನ ಸಬಲೀಕರಣಕ್ಕೆ ನೀಡಿದ ವಿಶಿಷ್ಟ ಕೊಡುಗೆಗಾಗಿ ಪದ್ಮಶ್ರೀಗೆ ಆಯ್ಕೆ ಮಾಡಲಾಗಿದೆ. ಇವರೊಂದಿಗೆ ಶಿಶುಗಳ ಬದುಕುಳಿಯುವ ಸಾಧ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಏಷ್ಯಾದ ಮೊದಲ ಮಾನವ ಹಾಲಿನ ಬ್ಯಾಂಕ್ ಸ್ಥಾಪಿಸಿದ ಮುಂಬೈ ಮೂಲದ ಮಕ್ಕಳ ತಜ್ಞೆ ಅರ್ಮಿಡಾ ಫೆರ್ನಾಂಡಿಸ್, ಮಧ್ಯಪ್ರದೇಶದ ಬುಂದೇಲಿ ಸಮರಕಲೆ ತರಬೇತುದಾರ ಭಗವಾನ್ದಾಸ್ ರಾಯ್ಕ್ವಾರ್, ಮಹಾರಾಷ್ಟ್ರದ 90 ವರ್ಷದ ಬುಡಕಟ್ಟು ತರ್ಪ ವಾದಕ ಭಿಕ್ಲ್ಯಾ ಲಡಕ್ಯಾ ದಿಂಡಾ (ಸೋರೆಕಾಯಿ ಮತ್ತು ಬಿದಿರಿನಿಂದ ತಯಾರಿಸಿದ ಸಂಗೀತ ವಾದ್ಯ), ಜಮ್ಮು ಮತ್ತು ಕಾಶ್ಮೀರದ ಸಮಾಜ ಸೇವಕ ಬ್ರಿಜ್ ಲಾಲ್ ಭಟ್ ಸೇರಿದಂತೆ ಹಲವು ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಸಾಮಾನ್ಯ ಭಾರತೀಯರು ಮೌನವಾಗಿ, ಆದರೆ ನಿರಂತರವಾಗಿ ನೀಡುತ್ತಿರುವ ಅಸಾಧಾರಣ ಸೇವೆಗಳನ್ನು ಗುರುತಿಸುವ ಪರಂಪರೆಯನ್ನು ಮುಂದುವರೆಸುತ್ತಾ, ಈ ವರ್ಷದ ಪದ್ಮ ಪ್ರಶಸ್ತಿಗಳು ದೇಶದ ಉದ್ದಗಲಕ್ಕೂ ಹರಡಿರುವ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಿವೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯ ಪರಂಪರೆಯ ಸಂರಕ್ಷಣೆ, ಗಡಿ ರಾಜ್ಯಗಳಲ್ಲಿ ರಾಷ್ಟ್ರೀಯ ಏಕೀಕರಣದ ಉತ್ತೇಜನ, ಬುಡಕಟ್ಟು ಭಾಷೆಗಳು ಮತ್ತು ಸ್ಥಳೀಯ ಸಮರಕಲೆಗಳ ಪ್ರಚಾರ, ಅಳಿಯುತ್ತಿರುವ ಕಲೆಗಳು ಹಾಗೂ ನೇಯ್ಗೆಗಳ ಪುನರುಜ್ಜೀವನ, ಪರಿಸರ ಸಂಪತ್ತಿನ ರಕ್ಷಣೆ ಮತ್ತು ಸ್ವಚ್ಛತೆಯ ಜಾಗೃತಿ—ಈ ಎಲ್ಲ ಕ್ಷೇತ್ರಗಳಲ್ಲಿ ಪ್ರಶಸ್ತಿ ಪುರಸ್ಕೃತರು ದೇಶಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಶಾಲೆಗಳನ್ನು ಸ್ಥಾಪಿಸಿದ ಬುದ್ರಿ ಥಾಟಿ, ಒಡಿಶಾದ ಸಂಥಾಲಿ ಲೇಖಕ–ಸಂಯೋಜಕ ಚರಣ್ ಹೆಂಬ್ರಾಮ್, ಮೊರಾದಾಬಾದ್ನ ಸಂಕೀರ್ಣ ಹಿತ್ತಾಳೆ ಕೆತ್ತನೆ ಕಲೆಗೈದ ಚಿರಂಜಿ ಲಾಲ್ ಯಾದವ್, ಸಾಂಪ್ರದಾಯಿಕ ಗುಜರಾತಿ ಪ್ರದರ್ಶನ ಕಲೆಯಾದ ‘ಮಾನ್ಭಟ್’ ಪರಂಪರೆಯನ್ನು ಉಳಿಸಿಕೊಂಡ ಧಾರ್ಮಿಕಲಾಲ್ ಚುನಿಲಾಲ್ ಪಾಂಡ್ಯ, ಆಫ್ರಿಕಾದಿಂದ ಭಾರತಕ್ಕೆ ಮಾನವ ವಲಸೆಯನ್ನು ಪತ್ತೆಹಚ್ಚಿದ ಹೈದರಾಬಾದ್ ಮೂಲದ ತಳಿಶಾಸ್ತ್ರಜ್ಞ ಕುಮಾರಸಾಮಿ ತಂಗರಾಜ್ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾರೆ. ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡಿರುವುದಷ್ಟೇ ಅಲ್ಲದೆ, ಸಮಾಜಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅನೇಕ ವೈಯಕ್ತಿಕ ಕಷ್ಟಗಳು ಹಾಗೂ ಸಂಕಷ್ಟಗಳನ್ನು ಜಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವರಲ್ಲಿ ಅಂಚಿನಲ್ಲಿರುವ ಹಾಗೂ ದಲಿತ ಸಮುದಾಯಗಳವರು, ಪ್ರಾಚೀನ ಬುಡಕಟ್ಟು ಜನಾಂಗದವರು, ದೂರದ ಮತ್ತು ದುರ್ಗಮ ಪ್ರದೇಶಗಳಿಂದ ಬಂದವರೂ ಸೇರಿದ್ದಾರೆ. ಆರೋಗ್ಯ, ಶಿಕ್ಷಣ, ಜೀವನೋಪಾಯ, ನೈರ್ಮಲ್ಯ ಮತ್ತು ಸುಸ್ಥಿರ ಅಭಿವೃದ್ಧಿ ಮೊದಲಾದ ಕ್ಷೇತ್ರಗಳಲ್ಲಿ ಅಂಗವಿಕಲರು, ಮಹಿಳೆಯರು, ಮಕ್ಕಳು, ದಲಿತರು ಹಾಗೂ ಬುಡಕಟ್ಟು ಸಮುದಾಯಗಳ ಹಿತಕ್ಕಾಗಿ ತಮ್ಮ ಇಡೀ ಜೀವನವನ್ನು ಸಮರ್ಪಿಸಿದವರೇ ಈ ಪ್ರಶಸ್ತಿ ಪುರಸ್ಕೃತರು ಎಂದು ಮೂಲಗಳು ತಿಳಿಸಿವೆ. ಪ್ರಾಚೀನ ತಮಿಳು ಆಯುಧಾಧಾರಿತ ಸಮರಕಲೆಯಾದ ಸಿಲಂಬಮ್ ಅನ್ನು ಪೋಷಿಸಿ ಬೆಳೆಸಿದಕ್ಕಾಗಿ ಪುದುಚೇರಿಯ ಕೆ. ಪಜನಿವೇಲ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಭಾರತದಾದ್ಯಂತ ಹಿಂದಿ ಭಾಷೆಯ ಪ್ರಚಾರಕ್ಕಾಗಿ 60 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಹಿರಿಯ ಪತ್ರಕರ್ತ ಕೈಲಾಶ್ ಚಂದ್ರ ಪಂತ್ ಅವರಿಗೆ ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಲ್ಲಿ ಈ ಗೌರವ ಲಭಿಸಿದೆ. ಹರಿಯಾಣ ಮತ್ತು ಹಿಮಾಚಲ ಪ್ರದೇಶಗಳ ಸಾವಿರಾರು ಕುಶಲಕರ್ಮಿಗಳಿಗೆ ವಸ್ತ್ರ ಹಾಗೂ ಜಮ್ದಾನಿ ನೇಯ್ಗೆ ತಂತ್ರವನ್ನು ಕಲಿಸಿ ಸಂರಕ್ಷಿಸಿದ ಹರಿಯಾಣದ ಖೇಮ್ ರಾಜ್ ಸುಂದ್ರಿಯಲ್ ಅವರನ್ನೂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅವರು ಪಾಣಿಪತ್ ‘ಖೇಸ್’ ಅನ್ನು ಹೊಸ ವಿನ್ಯಾಸಗಳೊಂದಿಗೆ ಪುನರುಜ್ಜೀವನಗೊಳಿಸಿ, ಕೈಮಗ್ಗಗಳಲ್ಲಿ ಪಾಲಿಯೆಸ್ಟರ್ ನೂಲಿನ ಬಳಕೆಯನ್ನು ಪರಿಚಯಿಸಿದ್ದಾರೆ. ►ಪದ್ಮ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ 1. ಅಂಕೇ ಗೌಡ 2. ಅರ್ಮಿಡಾ ಫೆರ್ನಾಂಡಿಸ್ 3. ಭಗವಾನ್ದಾಸ್ ರಾಯ್ಕ್ವಾರ್ 4. ಭಿಕ್ಲ್ಯಾ ಲಡಕ್ಯಾ ದಿಂಡಾ 5. ಬ್ರಿಜ್ ಲಾಲ್ ಭಟ್ 6. ಬುದ್ರಿ ಥಾಟಿ 7. ಚರಣ್ ಹೆಂಬ್ರಾಮ್ 8. ಚಿರಂಜಿ ಲಾಲ್ ಯಾದವ್ 9. ಧಾರ್ಮಿಕಲಾಲ್ ಚುನಿಲಾಲ್ ಪಾಂಡ್ಯ 10. ಗಫ್ರುದ್ದೀನ್ ಮೇವಾಟಿ ಜೋಗಿ 11. ಹಾಲಿ ವಾರ್ 12. ಇಂದರ್ಜಿತ್ ಸಿಂಗ್ ಸಿಧು 13. ಕೆ. ಪಜನಿವೇಲ್ 14. ಕೈಲಾಶ್ ಚಂದ್ರ ಪಂತ್ 15. ಖೇಮ್ ರಾಜ್ ಸುಂದ್ರಿಯಲ್ 16. ಕೊಲ್ಲಕ್ಕಾಯಿಲ್ ದೇವಕಿ ಅಮ್ಮಜಿ 17. ಕುಮಾರಸಾಮಿ ತಂಗರಾಜ್ 18. ಮಹೇಂದ್ರ ಕುಮಾರ್ ಮಿಶ್ರಾ 19. ಮೀರ್ ಹಾಜಿಭಾಯಿ ಕಸಂಭಾಯಿ 20. ಮೋಹನ್ ನಗರ 21. ನರೇಶ್ ಚಂದ್ರ ದೇವ್ ವರ್ಮಾ 22. ನೀಲೇಶ್ ವಿನೋದಚಂದ್ರ ಮಂಡ್ಲೇವಾಲ 23. ನೂರುದ್ದೀನ್ ಅಹಮದ್ 24. ಒತ್ತುವರ್ ತಿರುಟ್ಟಣಿ ಸ್ವಾಮಿನಾಥನ್ 25. ಪದ್ಮಾ ಗುರ್ಮೆಟ್ 26. ಪೋಖಿಲ ಲೆಕ್ತೇಪಿ 27. ಪುನ್ನಿಮೂರ್ತಿ ನಟೇಶನ್ 28. ಆರ್. ಕೃಷ್ಣನ್ 29. ರಘುಪತ್ ಸಿಂಗ್ 30. ರಘುವೀರ್ ತುಕಾರಾಂ ಖೇಡ್ಕರ್ 31. ರಾಜಸ್ತಪತಿ ಕಾಳಿಯಪ್ಪ ಗೌಂಡರ್ 32. ರಾಮ ರೆಡ್ಡಿ ಮಾಮಿಡಿ 33. ರಾಮಚಂದ್ರ ಗೋಡ್ಬೋಲೆ ಮತ್ತು ಸುನೀತಾ ಗೋಡ್ಬೋಲೆ 34. ಎಸ್. ಜಿ. ಸುಶೀಲಮ್ಮ 35. ಸಂಗ್ಯುಸಾಂಗ್ ಎಸ್. ಪೊಂಗೆನರ್ 36. ಶಾಫಿ ಶೌಕ್ 37. ಶ್ರೀರಂಗ್ ದೇವಬ ಲಾಡ್ 38. ಶ್ಯಾಮ್ ಸುಂದರ್ 39. ಸಿಮಾಂಚಲ್ ಪತ್ರೋ 40. ಸುರೇಶ್ ಹನಗವಾಡಿ 41. ತಗಾ ರಾಮ್ ಭಿಲ್ 42. ಟೆಕಿ ಗುಬಿನ್ 43. ತಿರುವಾರೂರ್ ಭಕ್ತವತ್ಸಲಂ 44. ವಿಶ್ವ ಬಂಧು 45. ಯುಮ್ನಮ್ ಜತ್ರಾ ಸಿಂಗ್
ಕ್ರೀಡೆಯಿಂದ ಒತ್ತಡ ನಿವಾರಣೆ ಸಾಧ್ಯ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ರವಿವಾರ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕೆ.ಪಿ.ಟಿ.ಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಶುಭ ಹಾರೈಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ.ಪೂಜಾರಿ, ಉಪಾಧ್ಯಕ್ಷ ವಿಲ್ಫ್ರೇಡ್ ಡಿಸೋಜ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ ವಂದಿಸಿದರು. ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಎಲ್ಲಾ ನಗರಗಳಲ್ಲಿ ಮುಂದಿನ 25 ವರ್ಷಗಳ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆದಿದೆ. ದಾವೋಸ್ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕರ್ನಾಟಕದ 2-3ನೇ ಹಂತದ ನಗರಗಳ ಬಗ್ಗೆ ಕಂಪನಿಗಳು ಆಸಕ್ತಿ ತೋರಿಸಿವೆ. ಎಲ್ಲಾ ನಗರಗಳಲ್ಲಿ ವರ್ತುಲ ರಸ್ತೆಗಳ ಯೋಜನೆ ರೂಪಿಸಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. 45ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಹೂಡಿಕೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಎಐ ಸಿಟಿ ಯೋಜನೆಗೆ ಹಲವರು ಉತ್ಸುಕರಾಗಿದ್ದಾರೆ.
Shubhanshu Shukla: ಬಾಹ್ಯಾಕಾಶ ಸಾಧನೆಗೆ ಶುಭಾಂಶು ಶುಕ್ಲಾಗೆ 'ಅಶೋಕ್ ಚಕ್ರ' ಗೌರವ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಜನವರಿ 26ರಂದು ಅದ್ಧೂರಿ ಗಣರಾಜ್ಯೋತ್ಸವ ಆಚರಣೆ ನಡೆಯಲಿದೆ. ಈ ಸಮಾರಂಭದಲ್ಲಿ ಭಾರತೀಯ ವಾಯುಪಡೆಯ (IAF) ಗ್ರೂಪ್ ಕ್ಯಾಪ್ಟನ್ ಮತ್ತು ಗಗನಯಾತ್ರಿ ಆಗಿರುವ ಶುಭಾಂಶು ಶುಕ್ಲಾ (Shubhanshu Shukla) ಅವರಿಗೆ ದೇಶದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ 'ಅಶೋಕ ಚಕ್ರ'ವನ್ನು ನೀಡಿ ಗೌರವಿಸಲಾಗುತ್ತದೆ. ಇತ್ತೀಚೆಗೆ ಅವರಿಗೆ ಉತ್ತರ ಪ್ರದೇಶದ ಗೌರವ ಸಮ್ಮಾನ್ ಪ್ರಶಸ್ತಿ ನೀಡಲು
ಬಾಂಗ್ಲಾ ಮನವಿಗೆ ಸೊಪ್ಪು ಹಾಕದ ಐಸಿಸಿ; ಭಾರತವನ್ನು ಪ್ರಸ್ತಾಪಿಸಿದ ಶಾಹಿದ್ ಅಫ್ರಿದಿ ವಾದವೇ ವಿಚಿತ್ರ!
Shahid Afridi On ICC- ಐಸಿಸಿ ಟಿ20 ವಿಶ್ವಕಪ್ 2026ರ ಟೂರ್ನಿಗೆ ಬಾಂಗ್ಲಾದೇಶದ ಬದಲಿಗೆ ಸ್ಕಾಟ್ಲೆಂಡ್ ತಂಡವನ್ನು ಸೇರಿಸಿರುವುದಕ್ಕೆ ಪಾಕಿಸ್ತಾನ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದ ಪಂದ್ಯಗಳನ್ನು ಶ್ರೀಲಂಕಾಗೆ ವರ್ಗಾಯಿಸಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭಾರತದ ಮನವಿಯನ್ನು ಪುರಸ್ಕರಿಸಿ ಬಾಂಗ್ಲಾದೇಶದ ಮನವಿಯನ್ನು ತಿರಸ್ಕರಿಸಿದ ಐಸಿಸಿ ನಿರ್ಧಾರಗಳಲ್ಲಿನ ಅಸಂಗತತೆಯನ್ನು ಅವರು ಪ್ರಶ್ನಿಸಿದ್ದಾರೆ. ಇದು ಜಾಗತಿಕ ಕ್ರಿಕೆಟ್ ಆಡಳಿತದ ಸ್ಥಿರತೆ ಮತ್ತು ನ್ಯಾಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ ಎಂದು ಅವರು ಟೀಕಿ,ಸಿದ್ದಾರೆ.
China General: ಚೀನಾ ಸೇನೆಗೆ ಶಾಕ್ ನೀಡಿದ ಕ್ಸಿ ಜಿನ್ಪಿಂಗ್, ಭಾರತಕ್ಕೆ ಇದರಿಂದ ಲಾಭ ಆಗುತ್ತಾ?
ಬೀಜಿಂಗ್: ಚೀನಾ ಸೇನೆಗೆ ದೊಡ್ಡ ಆಘಾತ ಸಿಕ್ಕಿದೆ, ಚೀನಾ ಸರ್ಕಾರ ಇದೀಗ ಚೀನಾ ಸೇನೆಯಲ್ಲಿ ಇರುವ ಭ್ರಷ್ಟ ಅಧಿಕಾರಿಗಳು ಹಾಗೂ ದೇಶ ವಿರೋಧಿ ಚಟುವಟಿಕೆ ನಡೆಸುವವರನ್ನ ಮಟ್ಟ ಹಾಕಲು ಸಜ್ಜಾಗಿದೆ. ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಶಿಸ್ತು ಹಾಗೂ ಕಾನೂನುಗಳ ಗಂಭೀರ ಉಲ್ಲಂಘನೆ ಆರೋಪ ಹಿನ್ನೆಲೆ ಇದೀಗ ಪಿಎಲ್ಎ ಅತ್ಯುನ್ನತ ಅಧಿಕಾರಿ ಜನರಲ್ ಜಾಂಗ್ ಯೂಕ್ಸಿಯಾ ಸೇರಿ ಚೀನಾದ
ಅಮೆರಿಕದ ವಲಸೆ ಅಧಿಕಾರಿಗಳ ವಶದಲ್ಲಿ 2 ವರ್ಷದ ಕಂದಮ್ಮ; ಅತ್ತು ಅತ್ತು ಸುಸ್ತಾದರೂ ಕರಗಲಿಲ್ಲ ಕಲ್ಲುಹೃದಯ!
ಎರಡು ವರ್ಷದ ಮಗುವನ್ನು ಕಂಡೊಡನೆ ನಾವು, ನೀವು ಅದರ ಮುಗ್ಧ ನಗುವಿಗೆ ಮಾರುಹೋಗುತ್ತೇವೆ. ಅದರೆ ಅಮೆರಿಕದ ವಲಸೆ ಅಧಿಕಾರಿಗಳು ಆ ಮಗುವನ್ನು ಬಂಧಿಸಿ ಕ್ರೂರತೆ ಮೆರೆಯುತ್ತಾರೆ. ಹೌದು, ಅಮೆರಿಕದ ವಲಸೆ ಮತ್ತು ಕಸ್ಟಮ್ಸ್ ಜಾರಿ ಅಧಿಕಾರಿಗಳು ಕೇವಲ ಎರಡು ವರ್ಷದ ಮಗುವನ್ನು ಬಂಧಿಸಿರುವ ಘಟನೆ ಮಿನ್ನಿಯಾಪೋಲಿಸ್ನಲ್ಲಿ ನಡೆದಿದೆ. ವಲಸಿಗರ ಮೇಲೆ ಐಸಿಇ ಅಧಿಕಾರಿಗಳು ಈ ಪರಿಯ ಕಠೋರ ವರ್ತನೆ ತೋರಲು, ಡೊನಾಲ್ಡ್ ಟ್ರಂಪ್ ಅವರ ಕಠಿಣ ವಲಸೆ ನೀತಿಯೇ ಕಾರಣವಾಗಿದೆ.
ಆರ್ಜೆಡಿ ನೂತನ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ಯಾದವ್ ನೇಮಕ
ತೇಜಸ್ವಿ ಯಾದವ್ ಅವರನ್ನು ಆರ್ಜೆಡಿ ಪಕ್ಷದ ನೂತನ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಲಾಲು ಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಅವರ ಸಮ್ಮುಖದಲ್ಲಿ ಈ ನಿರ್ಧಾರ ಪ್ರಕಟವಾಯಿತು. ಪಕ್ಷದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಎದುರಿಸಿದ ಹಿನ್ನಡೆ ಮತ್ತು ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ತೇಜಸ್ವಿ ಯಾದವ್ ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ.
ಅನಿವಾಸಿ ಕನ್ನಡಿಗನಿಗೆ ಸಾಲ ನೀಡುವುದಾಗಿ ನಂಬಿಸಿ 21ಲಕ್ಷ ರೂ. ಆನ್ಲೈನ್ ವಂಚನೆ: ಪ್ರಕರಣ ದಾಖಲು
ಉಡುಪಿ, ಜ.25: ಆನ್ಲೈನ್ ಸಾಲ ನೀಡುವುದಾಗಿ ನಂಬಿಸಿ ಕುವೈತ್ ನಲ್ಲಿರುವ ಅನಿವಾಸಿ ಕನ್ನಡಿಗರೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಶಿರ್ವದ ಸ್ಟಾನ್ಲಿ ಪಿರೇರಾ (57) ಎಂಬವರು ಕುವೈತ್ನಲ್ಲಿ ವಾಸವಾಗಿದ್ದು ಇವರು ಮೊಬೈಲ್ನ ಟೆಲಿಗ್ರಾಂ ಆಪ್ನಲ್ಲಿ ಲೋನ್ ಬಗ್ಗೆ ಜಾಹೀರಾತು ನೋಡಿದ್ದರು. ಇವರನ್ನು ಅಪರಿಚಿತ ವ್ಯಕ್ತಿ ಟೆಲಿಗ್ರಾಂ ಗ್ರೂಪ್ವೊಂದಕ್ಕೆ ಸೇರಿಸಿದ್ದು, ಸ್ಟಾನ್ಲಿ ತನಗೆ 75,00,000 ರೂ. ಸಾಲ ಬೇಕಾಗಿರುವುದಾಗಿ ಸಂದೇಶದಲ್ಲಿ ತಿಳಿಸಿದ್ದರು. ಅದಕ್ಕೆ ಅಪರಿಚಿತ ವ್ಯಕ್ತಿ ಶೇ.0.5ರಂತೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ತಿಳಿಸಿದ್ದು, ಅದಕ್ಕೆ ಮೊದಲಿಗೆ ಟ್ಯಾಕ್ಸ್ ಆಗಿ 5,00,000ರೂ. ಹಣ ಭರಿಸು ವಂತೆ ಆತ ತಿಳಿಸಿದ್ದನು. ಅದರಂತೆ ಸ್ಟಾನ್ಲಿ, ಅಪರಿಚಿತ ವ್ಯಕ್ತಿ ತಿಳಿಸಿದ ಭಾರತ ದಲ್ಲಿರುವ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಡಿ.23ರಿಂದ ಡಿ.31ವರೆಗೆ ಒಟ್ಟು 21,66,769ರೂ. ಹಣವನ್ನು ವರ್ಗಾ ಯಿಸಿದರು. ಆದರೆ ಆರೋಪಿ ಈವರೆಗೆ ಇವರಿಗೆ ಸಾಲ ಅಥವಾ ಆತನಿಗೆ ವರ್ಗಾಯಿಸಿದ ಹಣವನ್ನಾಗಲೀ ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ.
ನಿಮಗೆ 15 ನಿಮಿಷಗಳ ಕಾಲಾವಕಾಶ ನೀಡುತ್ತೇವೆ. ಒಂದೋ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಷರತ್ತುಗಳನ್ನು ಒಪ್ಪಿಕೊಳ್ಳಿ, ಇಲ್ಲವೇ ನಮ್ಮ ಗುಂಡುಗಳಿಗೆ ಎದೆಯೊಡ್ಡಿ ಸಾಯಿರಿ ಇದು ವನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಪಹರಿಸಲು ಬಂದಿದ್ದ ಯುಎಸ್ ಕಮಾಂಡೋ ಪಡೆ, ವೆನೆಜುವೆಲಾ ಸಚಿವ ಸಂಪುಟಕ್ಕೆ ನೀಡಿದ್ದ ಎಚ್ಚರಿಕೆ. ಇದು ಖುದ್ದು ಪ್ರಸ್ತುತ ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೇ ಹೊರಹಾಕಿದ ಮಾಹಿತಿ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.
ಕನ್ನಡಿಗ ಅಂಕೇಗೌಡಗೆ ಪದ್ಮಶ್ರೀ ಪ್ರಶಸ್ತಿ! ಒಂದು ಕಾಲದ ಬಸ್ ಕಂಡಕ್ಟರ್ ಈಗ ಪುಸ್ತಕ ಬಂಡಾರದ ಒಡೆಯ; ಯಾರಿದು?
ಮಂಡ್ಯದ ಅಂಕೇಗೌಡರಿಗೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ 2026ರ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಲಕ್ಷಾಂತರ ಪುಸ್ತಕ, ನಾಣ್ಯ, ಅಂಚೆ ಚೀಟಿ ಸಂಗ್ರಹಿಸಿರುವ ಇವರ 'ಪುಸ್ತಕದ ಮನೆ' ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ನಲ್ಲೂ ಸ್ಥಾನ ಪಡೆದಿದೆ. ಗ್ರಾಮೀಣ ಪ್ರದೇಶದ ಪುಸ್ತಕ ಪ್ರಿಯರಿಗೆ ಇವರು ಸ್ಫೂರ್ತಿಯಾಗಿದ್ದಾರೆ.
ಹೊಸ ಮತದಾರರ ಪಟ್ಟಿ ಸಿದ್ದಪಡಿಸಲಾಗುತ್ತಿದೆಯೇ ಹೊರತು ಪರಿಷ್ಕರಣೆ ಅಲ್ಲ: ಶಿವಸುಂದರ್
ಎಸ್ಐಆರ್ -ಮತದಾರರ ಪಟ್ಟಿ ಮ್ಯಾಪಿಂಗ್ ಕುರಿತ ಜನಜಾಗೃತಿ ಸಭೆ
ಪದ್ಮ ಪ್ರಶಸ್ತಿ 2026 ಪ್ರಕಟ: ಕರ್ನಾಟಕದ 3 ಮಂದಿಗೆ ಪದ್ಮಶ್ರೀ ಗೌರವ! ಸಂಪೂರ್ಣ ಪಟ್ಟಿ ಇಲ್ಲಿದೆ
ಈ ವರ್ಷದ ಪದ್ಮ ಪ್ರಶಸ್ತಿಗಳು ಪ್ರಕಟಗೊಂಡಿವೆ. 45 ಮಂದಿ ಪದ್ಮಶ್ರೀ ಗೌರವಕ್ಕೆ ಭಾಜನರಾಗಿದ್ದಾರೆ. ಕರ್ನಾಟಕದ ಮೂವರು ಸಾಧಕರು ಈ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ ಮತ್ತು ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಅವರು ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ದೇಶದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಲಾಗಿದೆ.
ಬಾಗಲಕೋಟೆ: ಕಳ್ಳರ ಗ್ಯಾಂಗ್ ಬಂಧನ; 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಬಾಗಲಕೋಟೆ: ಬಾಗಲಕೋಟೆ-ದಂಡುಪಾಳ್ಯದ ಪ್ರಾದೇಶಿಕ ಪ್ರದೇಶಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬು ಕಟಾವು ಮಾಡುತ್ತಾ ದಿನಗೂಲಿ ಕೆಲಸ ಮಾಡುತ್ತಿದ್ದ ಈ ಗ್ಯಾಂಗ್ ರಾತ್ರಿ ವೇಳೆ ಮನೆಗಳ್ಳತನ, ಸರಗಳ್ಳತನ ಸೇರಿದಂತೆ ವಿವಿಧ ಕಳ್ಳತನ ಕೃತ್ಯಗಳಲ್ಲಿ ತೊಡಗಿಕೊಂಡಿದ್ದರು. ಬಾದಾಮಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮಹಾರಾಷ್ಟ್ರದ ಮಂಗನೂರ ತಾಂಡಾದಿಂದ ಈ ಗ್ಯಾಂಗ್ ಸದಸ್ಯರನ್ನು ಬಂಧಿಸಲಾಗಿದೆ. ಇದರಲ್ಲಿ ಬರೋಬ್ಬರಿ 6 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಇತ್ತೀಚೆಗೆ, ರೋಣ ತಾಲೂಕಿನ ಕೆಲವು ಮನೆಗಳಲ್ಲಿ ಮತ್ತು ಮೊಬೈಲ್ ಕಳ್ಳತನ ಪ್ರಕರಣಗಳಲ್ಲಿ ಗ್ಯಾಂಗ್ ಸದಸ್ಯರ ಹಸ್ತಕ್ಷೇಪ ಕಂಡುಬಂದಿದೆ. ಶಂಕರ್ ಹನುಮಂತ ಪವಾರ್ (20), ಅಬಿ ಅಲಿಯಾಸ್ ಸಿಕಮನಿ ಬೋಸಲೆ (19), ಕರಣ್ ಶೇಖಪ್ಪ ಬೋಸಲೆ (19), ಲಕ್ಷ್ಮಿ ಅಲಿಯಾಸ್ ಅಶ್ವಿನಿ (40) ಸೇರಿ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 6.08 ಲಕ್ಷ ರೂಪಾಯಿಗಳ ಮೌಲ್ಯದ 76 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ತಿಳಿಸಿದ್ದಾರೆ. ಹುನಗುಂದ ಡಿಎಸ್ಪಿ ಸಂತೋಷ ಬನಹಟ್ಟಿ ಮತ್ತು ಬಾದಾಮಿ ಸಿಪಿಐ ಬನ್ನೆ ನೇತೃತ್ವದಲ್ಲಿ ರಚಿಸಲಾದ ವಿಶೇಷ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದ್ದು, ಪೊಲೀಸ್ ಅಧಿಕಾರಿಗಳ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
Pakistan Sqaud For ICC T20i World Cup 2026- ಬಾಂಗ್ಲಾದೇಶದ ವಿರುದ್ಧ ಐಸಿಸಿ ಕಠಿಣ ಕ್ರಮ ತೆಗೆದುಕೊಂಡದ್ದಕ್ಕಾಗಿ ಅದನ್ನು ಬಹುವಾಗಿ ಬೆಂಬಲಿಸಿದ್ದ ಪಾಕಿಸ್ತಾನವೂ ಟಿ20 ವಿಶ್ವಕಪ್ ನಿಂದ ಹಿಂಸರಿಯಬಹುದು ಎಂದು ಎಲ್ಲರೂ ಎಣಿಸಿದ್ದರು. ಆದರೆ ಇದೀಗ ಐಸಿಸಿಯ ಖಡಕ್ ಎಚ್ಚರಿಕೆಯ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಟಿ20 ವಿಶ್ವಕಪ್ಗೆ ತನ್ನ ತಂಡವನ್ನು ಪ್ರಕಟಿಸಿದೆ. ಬಾಂಗ್ಲಾದೇಶದ ಬೆಂಬಲಕ್ಕೆ ನಿಂತಿದ್ದ ಪಾಕಿಸ್ತಾನ ಈಗ ಟೂರ್ನಿಯಲ್ಲಿ ಪಾಲ್ಗೊಳ್ಳಳ್ಳುವುದು ಖಚಿತವಾಗಿದೆ. ಸಲ್ಮಾನ್ ಅಲಿ ಆಘಾ ನಾಯಕತ್ವದ ತಂಡದಲ್ಲಿ ಬಾಬರ್ ಅಜಂ ಮತ್ತು ಶಾಹೀನ್ ಶಾ ಅಫ್ರಿದಿ ಮರಳಿರುವುದು ವಿಶೇಷ.
ರಾಜ್ಯವನ್ನು ದಿವಾಳಿಯತ್ತ ತಳ್ಳಿದ ಕಾಂಗ್ರೆಸ್ ಸರ್ಕಾರ: ವಿಜಯೇಂದ್ರ
ಹುಬ್ಬಳ್ಳಿ: ಕಾಂಗ್ರೆಸ್ ಸರಕಾರವು ಕಳೆದ ಎರಡೂವರೆ ವರ್ಷದಿಂದ ಅಧಿಕಾರದಲ್ಲಿದ್ದರೂ ಯಾವುದೇ ಅಭಿವೃದ್ಧಿಯನ್ನು ರಾಜ್ಯದಲ್ಲಿ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅತಿ ಹೆಚ್ಚು ಅನುಭವಿ ಮುಖ್ಯಮಂತ್ರಿ ಇದ್ದರೂ ರಾಜ್ಯದ ಅಭಿವೃದ್ಧಿಗೆ ಬಿಡಿಗಾಸು ನೀಡಿಲ್ಲ; ಇದುವರೆಗೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ ಎಂದು ಆಕ್ಷೇಪಿಸಿದರು. ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಮಯದಲ್ಲಿ ಪರಿಹಾರ ಇರಲಿ; ಕನಿಷ್ಠ ಪಕ್ಷ ಸಚಿವರು ಆ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ರಾಜ್ಯವು ಆರ್ಥಿಕ ದಿವಾಳಿಯತ್ತ ರಾಜ್ಯ ಸಾಗುತ್ತಿದೆ. ಗ್ಯಾರಂಟಿ ಯೋಜನೆಗೆ ಹಣ ನೀಡಲು ಆಗುತ್ತಿಲ್ಲ. ಒಂದು ಕಡೆ ಬೆಲೆ ಏರಿಕೆ ಮಾಡಿ ತನ್ನ ಬೊಕ್ಕಸ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ದಿನಸಿ ಅಂಗಡಿಯಲ್ಲಿ ಸಹ ಹೆಂಡ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ಒತ್ತಡ ಕಾರಣ. ಸಿದ್ದರಾಮಯ್ಯರ ಸರ್ಕಾರ ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಮುಂದಾಗಿದೆ. ಇದು ರಾಜ್ಯದ ದುರ್ದೈವ ಎಂದು ಆರೋಪಿಸಿದರು. ಇಲ್ಲಿ ಕಪಟನಾಟಕ ಮಾಡಿ ಮನೆ ಹಸ್ತಾಂತರ ಕಾರ್ಯಕ್ರಮ ಮಾಡಿದ್ದಾರೆ. ಆದರೆ ಇದು ಯಡಿಯೂರಪ್ಪ ಕಾಲದಲ್ಲಿ ಆಗಿದ್ದುದು ಎಂದು ಗಮನ ಸೆಳೆದರು. ಬಿಜೆಪಿ ಮಹಾನಗರ ಪಾಲಿಕೆ ಅಧಿಕಾರದಲ್ಲಿದ್ದಾಗ 16 ಎಕರೆ ಜಾಗವನ್ನು ಸ್ಲಂ ಬೋರ್ಡ್ ನೀಡಿದೆ. ಇದಕ್ಕೆ ಕೇಂದ್ರ ಸರ್ಕಾರವೂ ಆರ್ಥಿಕ ಸಹಾಯ ಮಾಡಿದೆ. ಸಿಎಂ ತಾವೇನೋ ಕಡಿದು ಕಟ್ಟೆ ಹಾಕಿ ದೊಡ್ಡದು ಭಾಷಣ ಮಾಡಿದ್ದಾರೆ ಎಂದು ಟೀಕಿಸಿದರು. ಜಮೀರ್ ಅವರು ಅಬಕಾರಿ ಇಲಾಖೆ ಜೊತೆಗೆ ಮಾತನಾಡಿ ಕಾರ್ಯಕ್ರಮ ಹೆಸರಿನಲ್ಲಿ ಲಿಕ್ಕರ್ ಮಾರಾಟ ಮಾಡಲು ಉತ್ತೇಜಿಸಿದ್ದಾರೆ. ಇದು ಲಜ್ಜೆಗೆಟ್ಟ ಸರ್ಕಾರ. ಇವರು ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ. ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿಎಂ, ಹಿಂದ ಸಮಾಜ ಮರೆತು ಬರೀ ಅಲ್ಪಸಂಖ್ಯಾತರ ಓಲೈಕೆ ಮಾಡಲು ಮುಂದಾಗಿದ್ದಾರೆ. ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣದ ನೀತಿ ಕಾಂಗ್ರೆಸ್ಸಿನದು ಎಂದು ದೂರಿದರು. ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಅಬಕಾರಿ ಇಲಾಖೆಯಲ್ಲಿ ಕಾಳದಂಧೆ ನಡೆಯುತ್ತಿದೆ. ಕಳ್ಳದಂಧೆ, ಮಟ್ಕಾ, ಲಂಚದ ಹಣದ ಮೇಲೆ ರಾಜ್ಯ ಸರ್ಕಾರ ಬದುಕುತ್ತಿದೆ ಎಂದು ತಿಳಿಸಿದರು. ತರಕೇರಿಯಲ್ಲಿ ಭಾಷಣಕ್ಕೂ ಮುನ್ನವೇ ಪೊಲೀಸ್ ನೋಟಿಸ್ ನೀಡಲಾಗಿದೆ ಎಂದ ಅವರು, ನಾವು ಯಾವ ರಾಜ್ಯದಲ್ಲಿ ಇದ್ದೇವೆ? ನಾವೇನು ಪಾಕಿಸ್ತಾನ ಅಥವಾ ಬಾಂಗ್ಲಾದೇಶದಲ್ಲಿ ಇದ್ದೇವಾ? ಎಂದು ಕೇಳಿದರು. ದ್ವೇಷ ಭಾಷಣ ಕಾಯ್ದೆ ಮೂಲಕ ರಾಜ್ಯ ಸರ್ಕಾರ ಗೂಂಡಾಗಿರಿ ನಡೆಸುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಗಾಂಧಿ ಕುಟುಂಬ ಯಾವ ರೀತಿಯಲ್ಲಿ ಈ ಹಿಂದೆ ಯಾವ ರೀತಿಯಲ್ಲಿ ರಾಜ್ಯಪಾಲರನ್ನು ನಡೆಸಿಕೊಂಡಿತ್ತು ಎಂಬುದನ್ನು ನಾವು ನೋಡಿದ್ದೆವೆ; ದೇಶದ ಗೌರವಾನ್ವಿತ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿದ್ದು ನಕಲಿ ಗಾಂಧಿ ಕುಟುಂಬ ಎಂದು ಅವರು ಟೀಕಿಸಿದರು.
ರಿಯಾದ್: DKSC ಫ್ಯಾಮಿಲಿ ಮುಲಾಖಾತ್- 2025
ರಿಯಾದ್: DKSC ಯ 30ನೇ ವಾರ್ಷಿಕೋತ್ಸವ ಪ್ರಯುಕ್ತ DKSC ಫ್ಯಾಮಿಲಿ ಮುಲಾಖಾತ್- 2025 ರಿಯಾದ್ ನಲ್ಲಿ ಡಿಸೆಂಬರ್ 18, 2025 ಗುರುವಾರ ಅಲ್ ಮಾಸಿಯ ರೆಸಾರ್ಟ್ ನಲ್ಲಿ ಜರಗಿತು. ಫ್ಯಾಮಿಲಿ ಮುಲಾಖಾತ್ ಕಾರ್ಯಕ್ರಮದ ಚೆಯರ್ಮ್ಯಾನ್ ಅಬ್ದುಲ್ ಅಝೀಝ್ ಬಜ್ಪೆಯವರ ಅಧ್ಯಕ್ಷತೆಯಲ್ಲಿ ಜರಗಿದ ಸಭಾಕಾರ್ಯಕ್ರಮದಲ್ಲಿ DKSC ಕೇಂದ್ರ ಸಮಿತಿ ದಾಈ ಅಬ್ದುರ್ರಶೀದ್ ಸಅದಿ ಅವರು ದುಆದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಸ್ಮಾಯೀಲ್ ಕಾಟಿಪಳ್ಳ ಪವಿತ್ರ ಖುರ್ ಆನ್ ನ ಸೂಕ್ತವನ್ನು ಪಠಿಸಿ ಅದರ ಅರ್ಥವನ್ನು ಕನ್ನಡಕ್ಕೆ ಅನುವಾದಿಸಿದರು. ರಿಯಾದ್ ಝೋನ್ ಪ್ರಧಾನ ಕಾರ್ಯದರ್ಶಿ ಹುಝೈಫ ಪೆರಾಜೆ ಸಮಾರಂಭಕ್ಕೆ ಆಗಮಿಸಿದ್ದ ಗಣ್ಯ ಅತಿಥಿಗಳನ್ನು ಹಾಗೂ ಸಭಿಕರನ್ನು ಸ್ವಾಗತಿಸಿದರು. DKSC ಕೇಂದ್ರ ಸಮಿತಿ ಹಣಕಾಸು ಕಾರ್ಯದರ್ಶಿ ದಾವೂದ್ ಕಜಮಾರ್ ಅವರು ಸಮಾರಂಭವನ್ನು ಉದ್ಘಾಟಿಸಿದರು. DKSC ರಿಯಾದ್ ವಲಯ ಅಧ್ಯಕ್ಷ ಅಬ್ದುಲ್ ಅಝೀಝ್ ಕಾಟಿಪಳ್ಳ, ಫ್ಯಾಮಿಲಿ ಮುಲಾಖಾತ್ ಕನ್ವೀನರ್ ನಝೀರ್ ಹಾಜಿ ಕಾಶಿಪಟ್ಣ, ಝೋನ್ ಉಪಾಧ್ಯಕ್ಷ ಅಬ್ದುಲ್ ಖಾದರ್ ಕಣ್ಣಂಗಾರ್ ಬುರೈದ, DKSC ಕೇಂದ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಮೂಳೂರು, ವೆನ್ಝ್ ಹೋಮ್ಸ್ ಮಾಲೀಕ ಅಬ್ದುಲ್ ಹಮೀದ್ ವೆನ್ಝ್ ,ದಮ್ಮಾಂ ವಲಯಾಧ್ಯಕ್ಷ ಅಬ್ದುಲ್ ಹಮೀದ್ ಕಾಪು, ರಿಯಾದ್ ವಲಯ ಉಸ್ತುವಾರಿ ಸುಲೈಮಾನ್ ಮಿಲನ್ ಸೂರಿಂಜೆ, DKSC ಸ್ಥಾಪಕ ಸದಸ್ಯ ಅಬ್ದುಲ್ ಗಫೂರ್ ಸಜಿಪ, ಮುಲಾಖಾತ್ ನ ಹಣಕಾಸು ಕಾರ್ಯದರ್ಶಿ ದಾವೂದ್ ಕಂದಕ್, ಕೇಂದ್ರ ಸಮಿತಿ ಆರ್ಗನೈಝಿಂಗ್ ಸೆಕ್ರಟರಿ ಜಮಾಲ್ ಸ್ವಾಲಿಹ್ ಕಣ್ಣಂಗಾರ್, ರಿಯಾದ್ ವಲಯ ಹಣಕಾಸು ಕಾರ್ಯದರ್ಶಿ ಇಸ್ಮಾಯಿಲ್ ಕಣ್ಣಂಗಾರ್, ಕೇಂದ್ರ ಸಮಿತಿ ಸದಸ್ಯ ಸಯ್ಯದ್ ಬಾವ ಬಜ್ಪೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಫ್ಯಾಮಿಲಿ ಮುಲಾಖಾತ್ ಚೆಯರ್ಮ್ಯಾನ್ ಅಬ್ದುಲ್ ಅಝೀಝ್ ಬಜ್ಪೆರವರು DKSC ಮತ್ತು ಮರ್ಕಝ್ ತಅಲೀಮಿಲ್ ಇಹ್ಸಾನ್ ಮೂಳೂರು ಇದರ ಈವರೆಗಿನ ಸಾಧನೆ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಪಿಪಿಟಿ ಮೂಲಕ ಸವಿಸ್ತಾರವಾಗಿ ವಿವರಿಸಿದರು. ಝೋನ್ ಉಪಾಧ್ಯಕ್ಷ ಅಬ್ದುಲ್ ಹಮೀದ್ ಉಸ್ತಾದ್ ಅಲ್ ಖರ್ಜ್, ಉಪಾಧ್ಯಕ್ಷ ಯೂಸುಫ್ ಹಾಜಿ ಕಳಂಜಿಬೈಲ್, ಸಲಹೆಗಾರರಾದ ಮುಸ್ತಫ ಸಅದಿ ಸೂರಿಕುಮೇರು, ರಿಯಾದ್ ವಲಯ ನೂತನ ಆರ್ಗನೈಝರ್ ಉಸ್ತಾದ್ ಆಸಿಫ್ ಅಶ್ರಫಿ, ಅಬ್ದುಲ್ಲ ಮದನಿ, ಹಾರಿಸ್ ಸಖಾಫಿ, ಇಬ್ರಾಹೀಂ ಬಜ್ಪೆ, ಸೈಫುಲ್ಲಾ ಕಾಟಿಪಳ್ಳ, ಶರೀಫ್ ತೋಕೂರು, ಅಬ್ದುಲ್ ಮಜೀದ್ ವಿಟ್ಲ, ನೌಫಲ್ ಮನಾಲ್, ಮುನೀರ್ ಕೃಷ್ಣಾಪುರ, ಜುನೈದ್ ಮೂಡುತೋಟ, ವಿವಿಧ ವಿಭಾಗಗಳಲ್ಲಿ ಉತ್ತಮವಾಗಿ ನೇತೃತ್ವ ನೀಡಿದರು. ಕರ್ನಾಟಕ ಕಲ್ಚರಲ್ ಫೌಂಡೇಶನ್ ವತಿಯಿಂದ ಜರುಗಿದ ದಫ್ ಕಾರ್ಯಕ್ರಮವು ಮುಲಾಖಾತ್ ಸಮಾರಂಭಕ್ಕೆ ಮೆರುಗು ನೀಡಿತ್ತು. DKSC ಇದರ ವತಿಯಿಂದ ನಡೆದ ಲಕ್ಕಿ ಡ್ರಾದಲ್ಲಿ ಬಂಪರ್ ಬಹುಮಾನವನ್ನು ಮುಹಮ್ಮದ್ ಮಂಗಳೂರು ತನ್ನದಾಗಿಸಿದರು. ವೆನ್ಝ್ ಹೋಮ್ಸ್ ಪ್ರಾಯೋಜಕತ್ವದ ಡ್ರಾದಲ್ಲಿ ಅಬ್ದುಸ್ಸಲಾಂ ಎಣ್ಮೂರ್ ರವರು ಮೂರು ದಿವಸ ದುಬೈ ವಾಸ್ತವ್ಯ ಸೌಲಭ್ಯ ಸಹಿತ ರಿಟರ್ನ್ ಟಿಕೆಟ್ ವಿಜೇತರಾದರು. ಹಲವಾರು ಸಂಘ ಸಂಸ್ಥೆಗಳ ನೇತಾರರು, ಹಾಗು DKSC ರಿಯಾದ್ ವಲಯದ ಅಧೀನಕ್ಕೊಳಪಟ್ಟ ಬತ್ತ, ಬುರೈದ, ಸನಯ್ಯಾ, ಶಿಫಾ, ಅಲ್ ಖರ್ಜ್, ಮಲಾಝ್, ದಲ್ಲಾ, ಹಾಯಿಲ್ ಘಟಕಗಳ ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಹಾಜರಿದ್ದರು. ಪುರುಷರಿಗೆ ಹಾಗೂ ಮಕ್ಕಳ ವಿವಿಧ ಆಟೋಟ ಸ್ಪರ್ಧೆಗಳನ್ನು ಹನೀಫ್.ನ್.ಎಸ್ ಇವರ ನೇತೃತ್ವದಲ್ಲಿ ಬಹಳ ಅಚ್ಚುಕಟ್ಟಾಗಿ ನಡೆಸಲಾಯಿತು. ನೆರೆದ ಸಭಿಕರಿಗೆ ಆಕರ್ಷಕ ಹಾಗೂ ವಿನೂತನ ಶೈಲಿಯ ಡಿಜಿಟಲ್ ಕ್ವಿಝ್ ಸ್ಪರ್ಧೆಯನ್ನು ಅಬ್ದುಲ್ ಸಲಾಂ ಎಣ್ಮೂರ್ ಇವರು ನಡೆಸಿದರು. ಮಹಿಳೆಯರಿಗೆ ಹಾಗೂ ಹೆಣ್ಣು ಮಕ್ಕಳಿಗೆ ಖಿರಾಅತ್,ಹಾಗೂ ಇನ್ನಿತರ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಅತ್ಯಾಕರ್ಷಕ ಬಹುಮಾನಗಳನ್ನು ವಿತರಿಸಲಾಯಿತು. ದುರತ್ ಲಮಾರ್ ಕ್ಲಿನಿಕ್ ವತಿಯಿಂದ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿತ್ತು. ಝೂಮ್ ಪ್ಲಸ್,ವ್ಯಾಲ್ಯೂ ಸ್ಟಾರ್ ಹಾಗು ಪ್ರಾನ್ ಕಂಪೆನಿ ವತಿಯಿಂದ ಆಕರ್ಷಕ ಗಿಫ್ಟ್ ಗಳನ್ನು ವಿತರಿಸಲಾಯಿತು. ದಾವೂದ್ ಸಅದಿ ಉರುವಾಲುಪದವು ಹಾಗೂ ಹುಝೈಫಾ ಪೆರಾಜೆ ನೇತೃತ್ವದಲ್ಲಿ ಸ್ವಯಂ ಸೇವಕರು ಉತ್ತಮ ಸೇವೆಗೈದು ಫ್ಯಾಮಿಲಿ ಮುಲಾಖಾತ್ ಯಶಸ್ವಿಗೆ ಕಾರಣಕರ್ತರಾದರು. ಅವಿಭಜಿತ ದಕ್ಷಿಣ ಕನ್ನಡದ ಸಾಂಪ್ರದಾಯಿಕ ತಿಂಡಿತಿನಿಸುಗಳಾದ ಚರ್ಮುರಿ, ಜಿಲೇಬಿ, ಬೇಯಿಸಿದ ಮೊಟ್ಟೆ, ಚಿಕನ್ ಸೂಪ್, ಪಾಯಸ, ಮಸಾಲಾ ಚಾ, ಕಾಫಿ, ಜ್ಯೂಸ್, ಗಳಿಂದ ಕೂಡಿದ ಉತ್ತಮ ಭೋಜನ ವ್ಯವಸ್ಥೆ ಏರ್ಪಡಿಸಲಾಗಿತ್ತು. ಅತಿಥಿಗಳಗೆ ಉಣಬಡಿಸಲಾಯಿತು. DKSC ರಿಯಾದ್ ವಲಯ ಸಂವಹನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಸುಲೈಮಾನ್ ಉಚ್ಚಿಲ ಕಾರ್ಯಕ್ರಮ ನಿರೂಪಿಸಿದರು. 1995 ರಲ್ಲಿ ಸ್ಥಾಪಿತ ಗೊಂಡ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಗೆ ಇದೀಗ 30 ರ ಹರೆಯ. DKSCಯ ಅಧೀನದಲ್ಲಿ ಉಡುಪಿ ಜಿಲ್ಲೆಯ ಮೂಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಮರ್ಕಝ್ ತಅಲೀಮಿಲ್ ಇಹ್ಸಾನ್ ನಲ್ಲಿ ಸುಮಾರು ಎರಡು ಸಾವಿರಕ್ಕೂ ಮಿಕ್ಕ ವಿದ್ಯಾರ್ಥಿಗಳು ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾರೆ. ಎಲ್ ಕೆಜಿ ಯಿಂದ ಡಿಗ್ರಿಯವರೆಗೆ ಲೌಕಿಕ ವಿಧ್ಯಾಭ್ಯಾಸ ಪಡೆದು ಪದವೀಧರರಾಗಿ ಹೊರ ಹೊಮ್ಮುತ್ತಿದ್ದಾರೆ ಅದಲ್ಲದೆ ಧಾರ್ಮಿಕ ವಿಧ್ಯಾಭ್ಯಾಸ ಪಡೆದು ಇಹ್ಸಾನಿ ಬಿರುದು ಪಡೆದು ವಿವಿಧ ಕ್ಷೇತ್ರಗಳಲ್ಲಿ ಸೇವೆಗೈಯ್ಯುತ್ತಿದ್ದಾರೆ.
Karnataka Weather: ಶಿವಮೊಗ್ಗ, ಹಾಸನ, ಕೊಡಗು ಸೇರಿ ಹಲವೆಡೆ ಮಳೆ ಮುನ್ಸೂಚನೆ-ಒಳನಾಡಲ್ಲಿ ಹೆಚ್ಚಾಗಲಿದೆ ಚಳಿ
ರಾಜ್ಯದ ಒಳನಾಡಿನಲ್ಲಿ ಚಳಿ ತಿವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ದಕ್ಷಿಣ ಕರ್ನಾಟಕದಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆ ಆಗಲಿದೆ. ಹಲವೆಡೆ ಮಳೆ ಮುನ್ಸೂಚನೆ ಸಿಕ್ಕಿದೆ.
ತಮಿಳುನಾಡಿನಲ್ಲಿ ಹಿಂದೆ, ಇಂದು, ಮುಂದೆಂದೂ ಹಿಂದಿಗೆ ಅವಕಾಶವಿಲ್ಲ: ಸಿಎಂ ಸ್ಟಾಲಿನ್ ಘೋಷಣೆ
ಚೆನ್ನೈ: “ತಮಿಳುನಾಡಿನಲ್ಲಿ ಹಿಂದೆಯೂ ಹಿಂದಿಗೆ ಅವಕಾಶವಿರಲಿಲ್ಲ, ಇಂದೂ ಅವಕಾಶವಿಲ್ಲ, ಮುಂದೂ ಕೂಡ ಅವಕಾಶವಿಲ್ಲ” ಎಂದು ರವಿವಾರ ಭಾಷಾ ಹುತಾತ್ಮರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ. ಭಾಷಾ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಎಂ.ಕೆ. ಸ್ಟಾಲಿನ್, “ಭಾಷೆಯನ್ನು ತನ್ನ ಜೀವದಂತೆ ಪ್ರೀತಿಸುವ ರಾಜ್ಯವೊಂದು ಒಗ್ಗಟ್ಟಾಗಿ ಹಿಂದಿ ಹೇರಿಕೆಯ ವಿರುದ್ಧ ಹೋರಾಡಿತ್ತು. ಹಿಂದಿ ಹೇರಿಕೆಯಾದಾಗಲೆಲ್ಲಾ ಅದೇ ತೀವ್ರತೆಯಲ್ಲಿ ಪ್ರತಿಭಟಿಸಿದೆ” ಎಂದು ಹೇಳಿದ್ದಾರೆ. 1965ರಲ್ಲಿ ನಡೆದ ಹಿಂದಿ ವಿರೋಧಿ ಚಳವಳಿಯ ಕ್ಲುಪ್ತ ವಿಡಿಯೊವನ್ನು ಸ್ಟಾಲಿನ್ ಹಂಚಿಕೊಂಡಿದ್ದಾರೆ. ಅದರಲ್ಲಿ ಡಿಎಂಕೆ ಪಕ್ಷದ ಮುಖಂಡರಾದ ಸಿ.ಎನ್. ಅಣ್ಣಾದುರೈ ಹಾಗೂ ಎಂ. ಕರುಣಾನಿಧಿ ಅವರು ಭಾಷಾ ವಿಷಯಕ್ಕೆ ನೀಡಿದ ಕೊಡುಗೆಗಳನ್ನು ಉಲ್ಲೇಖಿಸಲಾಗಿದೆ. “ತಮಿಳುನಾಡು ಹಿಂದಿ ವಿರೋಧಿ ಚಳವಳಿಗೆ ನೇತೃತ್ವ ವಹಿಸಿದ್ದು, ಉಪಖಂಡದಲ್ಲಿ ವಿವಿಧ ಭಾಷಾ ಜನಾಂಗಗಳ ಹಕ್ಕು ಹಾಗೂ ಅಸ್ಮಿತೆಯನ್ನು ರಕ್ಷಿಸಿದೆ” ಎಂದು ಅವರು ಹೇಳಿದ್ದಾರೆ. “ತಮಿಳಿಗಾಗಿ ತಮ್ಮ ಅಮೂಲ್ಯ ಜೀವಗಳನ್ನು ತ್ಯಾಗ ಮಾಡಿದ ಹುತಾತ್ಮರಿಗೆ ನಾನು ನನ್ನ ಆಭಾರಯುತ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಭಾಷಾ ಕದನದಲ್ಲಿ ಇನ್ನಾವುದೇ ಜೀವ ನಷ್ಟವಾಗುವುದಿಲ್ಲ. ತಮಿಳಿಗಾಗಿನ ನಮ್ಮ ಪ್ರೀತಿ ಎಂದಿಗೂ ಸಾಯುವುದಿಲ್ಲ. ನಾವು ಹಿಂದಿ ಹೇರಿಕೆಯನ್ನು ಎಂದಿಗೂ ವಿರೋಧಿಸುತ್ತೇವೆ” ಎಂದೂ ಅವರು ಘೋಷಿಸಿದ್ದಾರೆ.
ಬಂಟ್ವಾಳ : ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ಬಂಟ್ವಾಳ ಬಾರ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ, ನೋಟರಿ, ನ್ಯಾಯವಾದಿ ಸುರೇಶ್ ಪೂಜಾರಿ ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯಾಧ್ಯಕ್ಷ ಸಿ.ಎಂ.ಧನುಂಜಯ ಅವರ ಆದೇಶದ ಮೇರೆಗೆ ದ.ಕ.ಜಿಲ್ಲಾದ್ಯಕ್ಷ ಮನೋಜ್ ರಾಜ್ ರಾಜೀವ ನೇಮಕಾತಿಗೊಳಿಸಿ ಆದೇಶ ಪತ್ರ ಹೊರಡಿಸಿದ್ದಾರೆ. ಉಪಾಧ್ಯಕ್ಷರಾಗಿ ಉಮಾಕರ ನೆಕ್ಕರಾಜೆ, ಪ್ರಧಾನ ಕಾರ್ಯದರ್ಶಿ ಯಾಗಿ ಮುಹಮ್ಮದ್ ಗಝ್ಝಾಲಿ ಕೊಳ್ನಾಡು, ಕಾರ್ಯದರ್ಶಿಯಾಗಿ ವಿನ್ಸ್ ಲೆಟ್ ಪಿಂಟೋ ಅಲ್ಲಿಪಾದೆ, ಜೊತೆ ಕಾರ್ಯದರ್ಶಿಯಾಗಿ ನಿರ್ಮಲ ಮೊಡಂಕಾಪು, ಕೋಶಾಧಿಕಾರಿಯಾಗಿ ಮೋಹನ್ ಕುಮಾರ್ ನೆತ್ತರಕೆರೆ ಇವರನ್ನು ಆಯ್ಕೆಗೊಳಿಸಿ ಆದೇಶಿಸಲಾಗಿದೆ. ಮಾಜಿ ಸಚಿವ ಬಿ.ರಮಾನಾಥ ರೈ , ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ಆದೇಶ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವರದಿ ಕೊಟ್ಟರೆ ಕೊಡಲಿ: ಸಿಎಂ ಸಿದ್ದರಾಮಯ್ಯ
ಮೈಸೂರು, ಜ.25: ಗಣರಾಜ್ಯೋತ್ಸವ ಸಂದೇಶದಲ್ಲಿ ಸರ್ಕಾರ ಬರೆದುಕೊಟ್ಟ ಭಾಷಣವನ್ನು ಬೇಕಾದರೆ ರಾಜ್ಯಪಾಲರು ಬದಲಾಯಿಸಬಹುದು. ಆದರೆ, ಜಂಟಿ ಅಧಿವೇಶನದಲ್ಲಿ ಸರ್ಕಾರ ಏನು ಬರೆದುಕೊಡುತ್ತದೋ ಅದನ್ನು ಸಂವಿಧಾನದ ಧಾರೆಯಾದ 163 ರ ಪ್ರಕಾರ ರಾಜ್ಯಪಾಲರು ಓದಲು ಮಾತ್ರ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವರದಿ ನೀಡುತ್ತಾರೆ ಎಂದರೆ ಕೊಡಲಿ. ಜಂಟಿ ಅಧಿವೇಶನದಲ್ಲಿ ಏನು ನಡೆಯಿತು ಎಂಬುದನ್ನು ಅವರು ಅರಿತಿರಬೇಕು” ಎಂದರು. ಸಿದ್ದರಾಮಯ್ಯ ಹೇಳಿದರು, “ನಾಳೆ ನಡೆಯಲಿರುವ ಗಣರಾಜ್ಯೋತ್ಸವ ಭಾಷಣದಲ್ಲಿ ಸರ್ಕಾರ ಬರೆದುಕೊಟ್ಟ ಭಾಷಣವನ್ನು ಬೇಕಾದರೆ ಅವರು ಬದಲಾಯಿಸಬಹುದು. ಆದರೆ, ಜಂಟಿ ಅಧಿವೇಶನದಲ್ಲಿ ನಾವು ಏನು ಬರೆದುಕೊಡುತ್ತೇವೆ ಅದನ್ನು ಓದಲೇ ಬೇಕಾಗಿತ್ತು. ನಾಳೆ ನಾವು ಬರೆದುಕೊಡುತ್ತೇವೆ; ಬೇಕಾದರೆ ಅವರು ಬದಲಾಯಿಸಿಕೊಳ್ಳಲಿ” ಎಂದರು. ದೆಹಲಿಯಲ್ಲಿ ನಾಳೆ ನಡೆಯುವ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿರಲಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ “ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಕರ್ನಾಟಕ ಸರ್ಕಾರ ಕೇಂದ್ರದೊಂದಿಗೆ ಪತ್ರವ್ಯವಹಾರ ನಡೆಸಿದೆ. ಅವರು ಅವಕಾಶ ನೀಡದಿದ್ದರೆ, ನಾವು ಏನು ಮಾಡೋದು? ಎಲ್ಲಾ ರಾಜ್ಯಗಳ ಸ್ಥಬ್ಧ ಚಿತ್ರಗಳಿಗೆ ಅವಕಾಶ ಮಾಡಬೇಕಿತ್ತು” ಎಂದು ಹೇಳಿದರು.
ಮಾಜಿ ಸಚಿವ ರೇವಣ್ಣ ಬಂಧನ ಕಾನೂನು ಪ್ರಕಾರವೇ ಆಗಿದೆ: ಸಿಎಂ ಸಿದ್ಧರಾಮಯ್ಯ
ಮೈಸೂರು: ಮಾಜಿ ಸಚಿವ ರೇವಣ್ಣ ಬಂಧನ ಕಾನೂನು ಪ್ರಕಾರವೇ ಆಗಿದೆ. ಇದರಲ್ಲಿ ನಮ್ಮ ಹಸ್ತಕ್ಷೇಪ ಇಲ್ಲ. ಈ ಪ್ರಕರಣ ಅಲ್ಲ, ಯಾವ ಪ್ರಕರಣದಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು. ನಿನ್ನೆ ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ನನ್ನ ಕಣ್ಣ ಎದುರೆ ರೇವಣ್ಣ ಅವರನ್ನು ಬಂಧನ ಮಾಡಿದರು ಎಂದು ಗುಡುಗಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ, ರೇವಣ್ಣ ಬಂಧನ ಕಾನೂನು ಪ್ರಕಾರ ಆಗಿದೆ. ನಾವು ಅಧಿಕಾರಿಗಳಿಗೆ ಒತ್ತಡ ಹಾಕಿ ಬಂಧಿಸಲಿಲ್ಲ. ಅಂತಹ ಯಾವ ಕೆಲಸವನ್ನು ನಾವು ಮಾಡುವುದಿಲ್ಲ. ರೇವಣ್ಣ ಬಂಧನ ಮಾಡಿದ್ದರಿಂದ ಯಾವ ಅಧಿಕಾರಿಗಳಿಗೂ ಉಡುಗೊರೆ ನೀಡಿಲ್ಲ ಎಂದು ಹೇಳಿದರು. ಜೆಡಿಎಸ್ ಅಧಿಕಾರಕ್ಕೆ ಬಂದರೆ ನಿಮ್ಮನ್ನು ಬಂಧನ ಮಾಡುತ್ತೇವೆ ಎಂದು ಎಚ್.ಡಿ.ದೇವೇಗೌಡರು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ಧರಾಮಯ್ಯ, ನಾವು ರೇವಣ್ಣ ಅವರನ್ನು ಕಾನೂನು ಪ್ರಕಾರ ಬಂಧನ ಮಾಡಿದ್ದೇವೆ. ಅವರು ಅಧಿಕಾರಕ್ಕೆ ಬಂದರೆ ಕಾನೂನು ಪ್ರಕಾರ ಮಾಡಲಿ. ಆದರೆ ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಲೇವಡಿ ಮಾಡಿದರು. ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಯಾವ ಬಾಯಲ್ಲಿ ಹೇಳುತ್ತಾರೋ? ಬಾಯಲ್ಲಿ ರಾಜಕೀಯ ಭಾಷಣ ಮಾಡಿದಾಕ್ಷಣ ಅಧಿಕಾರಕ್ಕೆ ಬರಲು ಆಗುತ್ತಾ? ನಾನು ಜೆಡಿಎಸ್ ಪಕ್ಷದ ಅಧ್ಯಕ್ಷನಾಗಿದ್ದಾಗ 59 ಶಾಸಕರನ್ನು ಗೆಲ್ಲಿಸಿದ್ದೆ. ಈಗ ಅವರು ಎಷ್ಟಿದ್ದಾರೆ ಕೇವಲ 17 ಶಾಸಕರು. ಇವರು ಅಧಿಕಾರಕ್ಕೆ ಬರುತ್ತಾರ ಎಂದು ಪ್ರಶ್ನಿಸಿದರು. ಬಿಜೆಪಿ-ಜೆಡಿಎಸ್ ಮೈತ್ರಿಯಾದರೂ ಇವರು ಅಧಿಕಾರಕ್ಕೆ ಬರಲ್ಲ, ಒಂದು ವೇಳೆ ಬಂದರೂ ಬಿಜೆಪಿಯವರು ಇವರಿಗೆ ಅಧಿಕಾರ ನಡೆಸಲು ಬಿಡುತ್ತಾರ? ಮೊದಲು ಇವರು ಅಧಿಕಾರಕ್ಕೆ ಬರಲ್ಲ, ಈಗ ನಾವು 140 ಸ್ಥಾನ ಗೆದ್ದಿದ್ದೇವೆ. 2028 ಕ್ಕೂ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು. ಮುಂದಿನ 2028 ಕ್ಕೂ ನಿಮ್ಮ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ಧರಾಮಯ್ಯ ಇದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಏನು ಹೇಳುತ್ತದೊ ಅದನ್ನು ಕೇಳುತ್ತೇವೆ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಜೆಡಿಎಸ್, ಬಿಜೆಪಿ ಅಧಿಕಾರಕ್ಕೆ ಬರಲ್ಲ, 2028 ಕ್ಕೂ ನಮ್ಮದೇ ಅಧಿಕಾರ : ಸಿಎಂ ಸಿದ್ದರಾಮಯ್ಯ
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಜೊತೆ ಸೇರಿ ಅಧಿಕಾರಕ್ಕೆ ಬರಲು ಜೆಡಿಎಸ್ ಯೋಚಿಸುತ್ತಿದೆ. ಬಹುಮತ ಬಂದರೆ ಬಿಜೆಪಿ ಜೆಡಿಎಸ್ ಗೆ ಅಧಿಕಾರ ಬಿಟ್ಟುಕೊಡುವುದಿಲ್ಲ. 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ರೇವಣ್ಣ ಬಂಧನ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲ. ಬಜೆಟ್ ಸಿದ್ಧತೆ ಫೆಬ್ರವರಿ 2ರಿಂದ ಆರಂಭವಾಗಲಿದೆ. ರಾಜ್ಯಪಾಲರ ಭಾಷಣದ ಬಗ್ಗೆಯೂ ಅವರು ಮಾತನಾಡಿದರು.
ಹಿಂದಿಗೆ ತಮಿಳುನಾಡು ನೆಲದಲ್ಲಿ ಜಾಗ ಇಲ್ಲ, ಸಿಎಂ ಸ್ಟಾಲಿನ್ ಹೇಳಿದ್ದೇನು? Hindi Language Policy
ಹಿಂದಿ ಭಾಷೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಲೇ ಇದೆ, ಅದರಲ್ಲೂ ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಾದದ ನಡುವೆ ದೊಡ್ಡ ಕಾಳಗ ಶುರುವಾಗುತ್ತಿದೆ. ಹೀಗಿದ್ದಾಗ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುವ ಪ್ರಯತ್ನ ಆಗುತ್ತಿದೆ ಎಂಬ ಆರೋಪ ಕೂಡ ಇದೆ. ಹೀಗಾಗಿಯೇ ದಕ್ಷಿಣ ಭಾರತದ ರಾಜ್ಯಗಳು ಹಿಂದಿ ಭಾಷೆ ಹೇರಿಕೆ ಮಾಡುವ ವಿಚಾರದಲ್ಲಿ, ತೀವ್ರ
ಚಿಕ್ಕಮಗಳೂರು | ಹಿಂದೂ ಸಮಾಜೋತ್ಸವ: ಆಯೋಜಕರು, ಭಾಷಣಕಾರರಿಗೆ ಪೊಲೀಸ್ ನೋಟಿಸ್
ಚಿಕ್ಕಮಗಳೂರು: ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಆಯೋಜಕರು ಹಾಗೂ ಭಾಷಣಕಾರರಿಗೆ ಪೊಲೀಸರು ನೋಟಿಸ್ ಜಾರಿಗೊಳಿಸಿರುವ ಬಗ್ಗೆ ವರದಿಯಾಗಿದೆ. ಕಾರ್ಯಕ್ರಮದ ಆಯೋಜಕರು ಮತ್ತು ಭಾಷಣಕಾರರಿಗೆ ನೋಟಿಸ್ ನೀಡಲಾಗಿದ್ದು, ದಿಕ್ಸೂಚಿ ಭಾಷಣಕಾರ ವಿಕಾಸ್ ಪುತ್ತೂರು ಅವರಿಗೆ ವಿಶೇಷವಾಗಿ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಶನಿವಾರ ತರೀಕೆರೆಯಲ್ಲಿ ನಡೆದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ, ಭಾಷಣದ ವೇಳೆ ಎಚ್ಚರಿಕೆ ವಹಿಸುವಂತೆ ಪೊಲೀಸರು ಸೂಚಿಸಿದ್ದಾರೆ. ದ್ವೇಷ ಭಾಷಣ ತಡೆ ಕಾಯ್ದೆ–2025ರ ಯಾವುದೇ ವಿಧಾನದ ಉಲ್ಲಂಘನೆ ಆಗದಂತೆ ಮಾತನಾಡಬೇಕು ಎಂದು ನೋಟಿಸ್ನಲ್ಲಿ ಸ್ಪಷ್ಟಪಡಿಸಲಾಗಿದೆ. ಬೇರೆ ಸಮುದಾಯಗಳ ಭಾವನೆಗೆ ಧಕ್ಕೆ ಉಂಟಾಗದಂತೆ ಭಾಷಣ ಮಾಡಬೇಕು. ಯಾವುದೇ ಸಮುದಾಯ ಅಥವಾ ಗುಂಪಿನ ವಿರುದ್ಧ ದ್ವೇಷ, ವೈಷಮ್ಯ ಅಥವಾ ಹಿಂಸೆಗೆ ಪ್ರಚೋದನೆ ಉಂಟಾಗುವಂತಹ ಮಾತುಗಳನ್ನು ಆಡಬಾರದು. ಮೆರವಣಿಗೆಯ ವೇಳೆ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ. ದ್ವೇಷ ಭಾಷಣ ಮಸೂದೆ–2025ರ ಕಾಯ್ದೆ ಉಲ್ಲಂಘನೆಯಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
‘ಕ್ರಾಫ್ಟ್ಸ್ ಆಫ್ ಮಲ್ನಾಡ್’ ವೆಬ್ಸೈಟ್ಗೆ ಚಾಲನೆ
ಕಲೆಗೆ ಉತ್ತೇಜನ ನೀಡಿ ಬೆಳೆಸಬೇಕು: ಸಚಿವ ಎಸ್. ಮಧು ಬಂಗಾರಪ್ಪ
ಗಣರಾಜ್ಯೋತ್ಸವ: ಕರ್ನಾಟಕದ 2 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಆಯ್ಕೆ; 27 ಮಂದಿಗೆ ಸೇವಾ ಪದಕ; ಯಾರೆಲ್ಲಾ?
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕರ್ನಾಟಕದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಲಭಿಸಿದೆ. ಅಲ್ಲದೆ, ರಾಜ್ಯದ 27 ಪೊಲೀಸ್ ಅಧಿಕಾರಿಗಳು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಕೇಂದ್ರ ಗೃಹ ಸಚಿವಾಲಯವು ಪೊಲೀಸ್, ಗೃಹರಕ್ಷಕ, ಅಗ್ನಿಶಾಮಕ ಸೇವೆಗಳ ಸಿಬ್ಬಂದಿಗೆ ಈ ಗೌರವಗಳನ್ನು ಪ್ರಕಟಿಸಿದೆ.
Actor Dolly Dhananjay: ನಟ ಡಾಲಿ ಧನಂಜಯ್ ಅವರು ಮಾಂಸಾಹಾರ ಸೇವನೆ ಮಾಡಿರುವುದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ನಟ ಧನಂಜಯ್ ದೊನ್ನೆ ಬಿರಿಯಾನಿ ಸವಿದಿದ್ದಾರೆ. ಆದರೆ ಇದು ಪರ - ವಿರೋಧಕ್ಕೆ ಕಾರಣವಾಗಿದೆ. ಆಹಾರ ಸೇವನೆ ಅವರವರ ಹಕ್ಕು. ಈಚೆಗೆ ಬಾಡೇ ನಮ್ಮ ಗಾಡು ಎನ್ನುವ ಅಭಿಯಾನವೇ ಕರ್ನಾಟಕದಲ್ಲಿ ನಡೆದಿತ್ತು. ಇದೀಗ ಧನಂಜಯ್ ಅವರ ವಿಚಾರದಲ್ಲೂ
ಉಕ್ರೇನ್ ಶಾಂತಿ ಒಪ್ಪಂದಕ್ಕೆ ಅಂತಿಮ ಹಂತದ ಸಿದ್ಧತೆ, ಪುಟಿನ್ ಮತ್ತು ಝೆಲೆನ್ಸ್ಕಿ ಭೇಟಿ ಶೀಘ್ರ?
ರಷ್ಯಾ ಮತ್ತು ಉಕ್ರೇನ್ ನಡುವೆ ಶುರುವಾಗಿರುವ ಭೀಕರ ಕಾಳಗಕ್ಕೆ ಇನ್ನೇನು 4 ವರ್ಷ ತುಂಬುತ್ತಿದೆ. 2022 ಫೆಬ್ರವರಿ 24 ಗುರುವಾರ ಈ ಭೀಕರ ಯುದ್ಧ ಶುರುವಾಗಿತ್ತು, ಕೆಲವೇ ದಿನಗಳಲ್ಲಿ ಮುಗಿದು ಹೋಗಬಹುದು ಎಂದು ಊಹಿಸಿದ್ದ ಯುದ್ಧ ಈಗಾಗಲೇ 4ನೇ ವರ್ಷ ಮುಗಿಸಿ 5ನೇ ವರ್ಷಕ್ಕೆ ಎಂಟ್ರಿ ಪಡೆಯಲು ಸಜ್ಜಾಗಿದೆ. ಆದರೆ ಹೇಗಾದರೂ ಮಾಡಿ 4ನೇ ವರ್ಷ ತುಂಬುವ
IMD Weather Forecast: ವಿಪರೀತ ಚಳಿಗಾಳಿ ನಡುವೆ ದೇಶದ ಹಲವೆಡೆ ಮೂರು ದಿನ ಬಿರುಗಾಳಿ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಶೀತಗಾಳಿ ಮುಂದುವರೆದಿದೆ. ಈ ನಡುವೆಯೇ ಮುಂದಿನ ಮೂರು ದಿನ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಭಾರತೀಯ ಹವಾಮಾನ ಇಲಾಖೆಯು, ಭಾನುವಾರ, ಜನವರಿ
‘ಹಾರ್ನ್ಬಿಲ್’ ರಕ್ಷಣೆಗೆ ಜಾಗೃತಿ ಹಕ್ಕಿಗಳ ಉಳಿವಿಗೆ ಹೀಗೊಂದು ಪ್ರಯೋಗ ; ಶಾಲೆಗಳಲ್ಲಿ ಜಾಗೃತಿಗಾಗಿ ಹಕ್ಕಿ ಪಾಠ
ಮಂಗಟ್ಟೆ ಹಕ್ಕಿಯ ಸಂರಕ್ಷಣೆಗಾಗಿ 'ವನಚೇತನಾ' ತಂಡವು ಯಲ್ಲಾಪುರ, ಜೋಯ್ಡಾ, ಅಂಕೋಲಾ ಮುಂತಾದ ಅರಣ್ಯ ಶಾಲೆಗಳ ಮಕ್ಕಳಿಂದ ಚಿತ್ರಕಲಾ ಪ್ರದರ್ಶನ ಏರ್ಪಡಿಸಿದೆ. ಕಾಡಿನ ರೈತನೆಂದೇ ಕರೆಯಲ್ಪಡುವ ಈ ಹಕ್ಕಿಯ ಅಳಿವಿನಂಚಿನ ಸ್ಥಿತಿಯನ್ನು ಚಿತ್ರಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮವು ಮಕ್ಕಳಲ್ಲಿ ವನ್ಯಜೀವಿಗಳ ಬಗ್ಗೆ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ.
ಚೋರ್ಲಾ ಘಾಟ್ನಲ್ಲಿ ಕಂಟೇನರ್ ದರೋಡೆ ಪ್ರಕರಣ; ಬೆಳಗಾವಿ ಜಿಲ್ಲಾ ಎಸ್ಪಿ ಹೇಳಿದ್ದೇನು?
ಬೆಳಗಾವಿ: ಕರ್ನಾಟಕ–ಗೋವಾ ಗಡಿಭಾಗದ ಚೋರ್ಲಾ ಘಾಟ್ನಲ್ಲಿ ₹400 ಕೋಟಿ ಮೊತ್ತದ ರಾಬರಿ ನಡೆದಿದೆ ಎಂಬ ಮಾಹಿತಿ ನಾಸಿಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಜನವರಿ 6ರಂದು ಪತ್ರದ ಮೂಲಕ ಲಭಿಸಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ. ರಾಮರಾಜನ್ ತಿಳಿಸಿದ್ದಾರೆ. ಆ ಪತ್ರದಲ್ಲಿ ಅಕ್ಟೋಬರ್ 16ರಂದು ಹಣ ಅಪಹರಣ ಹಾಗೂ ಅಕ್ಟೋಬರ್ 22ರಂದು ನಾಸಿಕ್ನಲ್ಲಿ ಸಂದೀಪ್ ಪಾಟೀಲ್ ಅವರ ಅಪಹರಣ ನಡೆದಿರುವುದಾಗಿ ಉಲ್ಲೇಖಿಸಲಾಗಿದೆ. ಈ ಪ್ರಕರಣದ ಸಂಬಂಧ ಖಾನಾಪುರ ಉಪನಿರೀಕ್ಷಕರ ನೇತೃತ್ವದಲ್ಲಿ ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ವಿಶೇಷ ತನಿಖಾ ತಂಡ (ಎಸ್ಐಟಿ) ಕೂಡ ರಚಿಸಲಾಗಿದೆ. ಮಹಾರಾಷ್ಟ್ರ ಪೊಲೀಸರು ಪ್ರಕರಣದ ಮುಖ್ಯ ತನಿಖೆ ನಡೆಸುತ್ತಿದ್ದು, ಕರ್ನಾಟಕ ಪೊಲೀಸರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ. ಚೋರ್ಲಾ ಘಾಟ್ ಮೂರು ರಾಜ್ಯಗಳ ಗಡಿ ಪ್ರದೇಶವಾಗಿರುವುದರಿಂದ ಭದ್ರತೆ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಅಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನದಿಂದ ಟಿ–20 ವಿಶ್ವಕಪ್ ಬಹಿಷ್ಕಾರ ಬೆದರಿಕೆ: ಕಠಿಣ ಕ್ರಮಕ್ಕೆ ಮುಂದಾದ ಐಸಿಸಿ
ಹೊಸದಿಲ್ಲಿ: ಟಿ–20 ವಿಶ್ವಕಪ್ನ ಗಡುವು ಸಮೀಪಿಸುತ್ತಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನಡುವಿನ ಸಂಬಂಧ ಮುರಿದು ಬೀಳುವ ಹಂತಕ್ಕೆ ತಲುಪಿದೆ. ಬಾಂಗ್ಲಾದೇಶಕ್ಕೆ ಬೆಂಬಲ ವ್ಯಕ್ತಪಡಿಸಿ ಟಿ–20 ವಿಶ್ವಕಪ್ ಅನ್ನು ಬಹಿಷ್ಕರಿಸುವ ಬೆದರಿಕೆಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಒಡ್ಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ, ಪಾಕಿಸ್ತಾನದ ವಿರುದ್ಧ ಅಭೂತಪೂರ್ವ ದಿಗ್ಬಂಧನಗಳನ್ನು ಹೇರಬಹುದು ಎಂದು ವರದಿಯಾಗಿದೆ. ಪಾಕಿಸ್ತಾನದ ಮಧ್ಯಂತರ ಸಚಿವರಾಗಿಯೂ ಕಾರ್ಯನಿರ್ವಹಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ, “ಐಸಿಸಿ ದ್ವಿಮುಖ ನೀತಿ ಅನುಸರಿಸುತ್ತಿದೆ” ಎಂಬ ಹೇಳಿಕೆ ನೀಡಿರುವುದರಿಂದ ಈ ವಿವಾದ ಸ್ಫೋಟಗೊಂಡಿದೆ. ಈ ಹಿಂದೆ ಪಾಕಿಸ್ತಾನದ ಪಂದ್ಯಗಳನ್ನು ಹೈಬ್ರಿಡ್ ಮಾದರಿಯಲ್ಲಿ ಸ್ಥಳಾಂತರ ಮಾಡಿರುವ ನಿದರ್ಶನವಿದ್ದರೂ, ಬಾಂಗ್ಲಾದೇಶದ ಪಂದ್ಯಗಳನ್ನು ಸ್ಥಳಾಂತರಿಸಬೇಕು ಎಂಬ ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಬೆಂಬಲ ಸೂಚಿಸಿರುವುದು ಸೇರಿದಂತೆ ಮೊಹ್ಸಿನ್ ನಖ್ವಿ ಅವರ ಸಂಘರ್ಷಾತ್ಮಕ ಹೇಳಿಕೆಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಸಮಾಧಾನಗೊಂಡಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಪಾಕಿಸ್ತಾನ ತಂಡವು ಟಿ–20 ವಿಶ್ವಕಪ್ನಿಂದ ಹಿಂದೆ ಸರಿಯಲಿದೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡುವ ಮೂಲಕ ಮೊಹ್ಸಿನ್ ನಖ್ವಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಮುಜುಗರಕ್ಕೀಡು ಮಾಡಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಪಾಕಿಸ್ತಾನ ತಂಡವೇನಾದರೂ ಟಿ–20 ವಿಶ್ವಕಪ್ನಿಂದ ಹಿಂದೆ ಸರಿದರೆ, ಪಾಕಿಸ್ತಾನವನ್ನು ಕ್ರಿಕೆಟ್ ಆಟದಿಂದ ಏಕಾಂಗಿಯಾಗಿಸುವ ಕ್ರಮ ಸೇರಿದಂತೆ ಅಭೂತಪೂರ್ವ ದಿಗ್ಬಂಧನಗಳನ್ನು ಹೇರಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದಾಗಿದೆ ಎಂದು ಹೇಳಲಾಗಿದೆ. ಈ ಕಠಿಣ ಕ್ರಮಗಳಲ್ಲಿ ಎಲ್ಲ ದ್ವಿಪಕ್ಷೀಯ ಸರಣಿಗಳ ಅಮಾನತು, ಏಶ್ಯ ಕಪ್ನಿಂದ ಹೊರಹಾಕುವುದು ಹಾಗೂ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ವಿದೇಶಿ ತಾರಾ ಆಟಗಾರರು ಭಾಗವಹಿಸದಂತೆ ತನ್ನ ಸದಸ್ಯ ರಾಷ್ಟ್ರಗಳೊಂದಿಗೆ ಸಮನ್ವಯ ಸಾಧಿಸಿ ನಿರಾಕ್ಷೇಪಣಾ ಪತ್ರ ನೀಡದಿರುವುದು ಸೇರಿವೆ. ಇಂತಹ ಕ್ರಮಗಳಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹಣಕಾಸು ಆದಾಯ ಕುಂಟಲಿದೆಯಲ್ಲದೆ, ರಾಷ್ಟ್ರೀಯ ತಂಡಕ್ಕೆ ಯಾವುದೇ ಪ್ರಮುಖ ಐಸಿಸಿ ಪಂದ್ಯಗಳಿಲ್ಲದೆ ಹೋಗುವುದರಿಂದ ಪಾಕಿಸ್ತಾನದ ದೇಶೀಯ ಕ್ರಿಕೆಟ್ನ ವಾಣಿಜ್ಯ ಮೌಲ್ಯ ನೆಲಕಚ್ಚಲಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಬೆಂಬಲವಾಗಿ ಪಾಕಿಸ್ತಾನ ತಂಡ ಈವರೆಗೆ ಟಿ–20 ವಿಶ್ವಕಪ್ ಅನ್ನು ಬಹಿಷ್ಕರಿಸದಿದ್ದರೂ, ಈ ಕುರಿತು ಅಂತಿಮ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಶರೀಫ್ ಕೈಗೊಳ್ಳಲಿದ್ದಾರೆ ಎಂದು ಮೊಹ್ಸಿನ್ ನಖ್ವಿ ಹೇಳಿದ್ದಾರೆ. ವಾಸ್ತವವಾಗಿ, ಬಾಂಗ್ಲಾದೇಶದ ನಿಲುವಿಗೆ ಪಾಕಿಸ್ತಾನ ಬೆಂಬಲ ಸೂಚಿಸಿರುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯೂ ಬೆಂಬಲ ಸೂಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಜಗತ್ತಿನ ಗಮನ ಸೆಳೆದ ಪೆಂಗ್ವಿನ್ ಪಕ್ಷಿಯ ಒಂಟಿ ನಡಿಗೆ
ಒಂಟಿಯಾಗಿ ಸಾಗುವ ಪೆಂಗ್ವಿನ್ ನ ನಿಗೂಢ ಪ್ರಯಾಣಕ್ಕೆ ಬಳಕೆದಾರರು ಹಾಸ್ಯ, ತತ್ವಶಾಸ್ತ್ರ ಮತ್ತು ಭಾವನಾತ್ಮಕ ಅರ್ಥಗಳನ್ನು ನೀಡುತ್ತಿದ್ದಂತೆ ಟಿಕ್ಟಾಕ್, ಇನ್ಸ್ಟಾಗ್ರಾಮ್, ರೆಡಿಟ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೊ ವ್ಯಾಪಕವಾಗಿ ಜನಪ್ರಿಯವಾಗುತ್ತಿದೆ. ವರ್ನರ್ ಹೆರ್ಜಾಗ್ ಅವರ ಸಾಕ್ಷ್ಯಚಿತ್ರದಲ್ಲಿರುವ ಒಂದು ಪೆಂಗ್ವಿನ್ ಏಕಾಂಗಿಯಾಗಿ ಒಳನಾಡಿನತ್ತ ನಡೆಯುವ ದೃಶ್ಯ ಇದೀಗ ವೈರಲ್ ಮೀಮ್ ಆಗಿದೆ. ಆಧುನಿಕ ಮನಸ್ಥಿತಿಗೆ ಅಚ್ಚುಕಟ್ಟಾಗಿ ಹೊಂದಿಕೊಳ್ಳುವ ಕಾರಣದಿಂದ ಈ ಒಂಟಿ ಪೆಂಗ್ವಿನ್ ಜನರ ಗಮನ ಸೆಳೆಯುತ್ತಿದೆ. ಈ ಪೆಂಗ್ವಿನ್ ನ ಒಂಟಿ ನಡಿಗೆ ಆಧುನಿಕ ಕಾಲದ ಭಾವನಾತ್ಮಕ ಹೋರಾಟಗಳು ಮತ್ತು ಪ್ರತ್ಯೇಕತೆಯನ್ನು ಸಂಕೇತಿಸುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಒಂಟಿಯಾಗಿ ಭಿನ್ನ ಹಾದಿ ಹಿಡಿದು ಸಾಗುವ ಪೆಂಗ್ವಿನ್ ನ ಭಾವನಾತ್ಮಕ ತೊಳಲಾಟಗಳು ವೈರಲ್ ಸಂವೇದನೆಗಳಲ್ಲಿ ಒಂದಾಗಿವೆ. ಬಳಕೆದಾರರು ಅದರ ನಿಗೂಢ ಪ್ರಯಾಣಕ್ಕೆ ಹಾಸ್ಯ, ತತ್ವಶಾಸ್ತ್ರ ಮತ್ತು ಭಾವನಾತ್ಮಕ ಅರ್ಥಗಳನ್ನು ನೀಡುತ್ತಿದ್ದಂತೆ ಟಿಕ್ಟಾಕ್, ಇನ್ಸ್ಟಾಗ್ರಾಮ್, ರೆಡಿಟ್ ಮತ್ತು ಇತರ ವೇದಿಕೆಗಳಲ್ಲಿ ಈ ವೀಡಿಯೊ ಹೆಚ್ಚು ಜನಪ್ರಿಯವಾಗುತ್ತಿದೆ. ►ಜನರ ಗಮನ ಸೆಳೆದ ಒಂಟಿ ನಡಿಗೆ ಪ್ರಸ್ತುತ ಜಾಗತಿಕವಾಗಿ ಗಮನ ಸೆಳೆಯುತ್ತಿರುವ ಈ ಪೆಂಗ್ವಿನ್ ನ ದೃಶ್ಯ 2007ರಲ್ಲಿ ಬಿಡುಗಡೆಯಾದ ‘ಎನ್ಕೌಂಟರ್ಸ್ ಅಟ್ ದಿ ಎಂಡ್ ಆಫ್ ದಿ ವರ್ಲ್ಡ್’ ಎಂಬ ಸಾಕ್ಷ್ಯಚಿತ್ರದಿಂದ ಬಂದಿದೆ. ಹೆರ್ಜಾಗ್ ಅವರ ತಂಡ ಪೆಂಗ್ವಿನ್ ಗಳ ಚಿತ್ರೀಕರಣ ನಡೆಸುತ್ತಿದ್ದಾಗ, ಒಂದು ಪೆಂಗ್ವಿನ್ ಸಮುದ್ರದ ಕಡೆಗೆ ತೆರಳುತ್ತಿದ್ದ ತನ್ನ ಸಮೂಹದಿಂದ ದೂರ ಸರಿದು ಏಕಾಂಗಿಯಾಗಿ ಒಳನಾಡಿನತ್ತ, ಹಿಮಪರ್ವತಗಳ ಸಾಲಿನೆಡೆಗೆ ಸಾಗಲು ಆರಂಭಿಸುತ್ತದೆ. ಒಂದೇ ಪೆಂಗ್ವಿನ್ ದೂರ ಸಾಗುತ್ತಿರುವುದನ್ನು ತಂಡ ಗಮನಿಸುತ್ತದೆ. ಆಹಾರ, ಬದುಕುಳಿಯುವಿಕೆ ಮತ್ತು ಸಮುದಾಯದೊಂದಿಗೆ ಸಾಗುವ ಬದಲಾಗಿ ಏಕಾಂಗಿಯಾಗಿ ಸಾಗುತ್ತಿರುವ ಪೆಂಗ್ವಿನ್ ಸ್ವಲ್ಪ ದೂರ ಹೋಗಿ ತಿರುಗಿ ನೋಡುತ್ತದೆ. ಉಳಿದ ಪೆಂಗ್ವಿನ್ ಗಳು ಕೆಲ ಕ್ಷಣಗಳ ಕಾಲ ಅದನ್ನು ಗಮನಿಸಿ, ಮತ್ತೆ ತಮ್ಮ ಹಾದಿ ಹಿಡಿಯುತ್ತವೆ. ಸಾಮಾನ್ಯವಾಗಿ ಪೆಂಗ್ವಿನ್ ಗಳು ಗುಂಪಾಗಿ ಸಾಗುತ್ತವೆ. ಆದರೆ ಈ ಪೆಂಗ್ವಿನ್ ನ ಒಂಟಿ ನಡಿಗೆಯನ್ನು ಹೆರ್ಜಾಗ್ ‘ಡೆತ್ ಮಾರ್ಚ್’ (ಸಾವಿನ ನಡಿಗೆ) ಎಂದು ಕರೆಯುತ್ತಾರೆ. ಏಕೆಂದರೆ ಪೆಂಗ್ವಿನ್ ಗಳು ಒಳನಾಡಿನತ್ತ ಸಾಗಿದರೆ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ. ►ಹಳೆಯ ವೀಡಿಯೊಗೆ ಹೊಸ ಭಾವನೆ 2026ರ ಆರಂಭದಲ್ಲಿ ಈ ಒಂಟಿ ಪೆಂಗ್ವಿನ್ ನ ಸಣ್ಣ ತುಣುಕುಗಳು ಆನ್ಲೈನ್ ನಲ್ಲಿ ವೇಗವಾಗಿ ಹರಡಲು ಆರಂಭಿಸಿದವು. ‘ನಿಹಿಲಿಸ್ಟ್ ಪೆಂಗ್ವಿನ್’ ಎಂಬ ಅಡ್ಡಹೆಸರಿನೊಂದಿಗೆ ಈ ದೃಶ್ಯಗಳು ವೈರಲ್ ಆದವು. ಜನವರಿ 16ರಂದು ಟಿಕ್ಟಾಕ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೊ ಮೊದಲ ಬಾರಿಗೆ ವ್ಯಾಪಕವಾಗಿ ಗಮನ ಸೆಳೆಯಿತು. ಪೆಂಗ್ವಿನ್ ನ ಭಾವನಾತ್ಮಕ ಒಂಟಿ ಪಯಣವನ್ನು ‘ಎಲ್ ಅಮೂರ್ ಟೂಜೂರ್ಸ್’ ಎಂಬ ಪ್ರಸಿದ್ಧ ಹಾಡಿನೊಂದಿಗೆ ಮಿಶ್ರ ಮಾಡಿ ಟಿಕ್ಟಾಕ್ ನಲ್ಲಿ ಹಂಚಲಾಗಿತ್ತು. ನಾಟಕೀಯ ಸಂಗೀತ, ಹೆರ್ಜಾಗ್ ಅವರ ನಿರೂಪಣೆ ಮತ್ತು ಪೆಂಗ್ವಿನ್ ನ ನಿಧಾನಗತಿಯ ಪ್ರಯಾಣ ಪ್ರಬಲ ಆಡಿಯೊ-ವಿಜುವಲ್ ಮೀಮ್ ಆಗಿ ರೂಪುಗೊಂಡವು. ►‘ನಿಹಿಲಿಸ್ಟ್ ಪೆಂಗ್ವಿನ್’ ಎಂದರೇನು? ಈ ಬಾರಿ ಇಂಟರ್ನೆಟ್ ಮೀಮ್ ಗಳ ಮೂಲಕ ಪೆಂಗ್ವಿನ್ ನ ನಡಿಗೆಯಲ್ಲಿ ಹೆಚ್ಚು ಆಳವಾದ ಅರ್ಥವನ್ನು ಜನರು ಕಾಣುತ್ತಿದ್ದಾರೆ. ಇದಕ್ಕೆ ‘ನಿಹಿಲಿಸ್ಟ್ ಪೆಂಗ್ವಿನ್’ ಎಂಬ ಹೆಸರು ಲಭಿಸಿದೆ. ‘ನಿಹಿಲಿಸ್ಟ್’ ಅಥವಾ ‘ಶೂನ್ಯವಾದಿ’ ಎಂದರೆ ಜೀವನಕ್ಕೆ ಅರ್ಥವಿಲ್ಲ ಎಂದು ನಂಬುವ ಮತ್ತು ಧಾರ್ಮಿಕ ಹಾಗೂ ನೈತಿಕ ತತ್ವಗಳನ್ನು ತಿರಸ್ಕರಿಸುವ ವ್ಯಕ್ತಿ. ಹೀಗಾಗಿ ವೀಕ್ಷಕರು ಪೆಂಗ್ವಿನ್ ನ ನಿಧಾನಗತಿಯ ಒಂಟಿ ನಡಿಗೆಯ ಮೇಲೆ ಮಾನವ ಭಾವನೆಗಳು ಮತ್ತು ಅಸ್ತಿತ್ವವಾದದ ಪ್ರಶ್ನೆಗಳನ್ನು ಹೇರಿದ್ದಾರೆ. ಹಲವರು ಈ ಪೆಂಗ್ವಿನ್ ನ ಶಾಂತ ಆದರೆ ಗುರಿಯಿಲ್ಲದ ನಡಿಗೆಯನ್ನು ಆಧುನಿಕ ಜೀವನದ ಹೋರಾಟಗಳಿಗೆ ಹೋಲಿಸಿದ್ದಾರೆ. ಇನ್ನು ಕೆಲವರು ಇದನ್ನು ಸುಸ್ತು, ಭಾವನಾತ್ಮಕ ಆಯಾಸ, ದಿನಚರಿ ಮತ್ತು ನಿರೀಕ್ಷೆಗಳಿಂದ ದೂರವಿರುವ ಭಾವನೆ, ಅಥವಾ ಅಗಾಧ ಜಗತ್ತಿನಲ್ಲಿ ಕಳೆದುಹೋಗುವ ಶಾಂತತೆಯ ಸಂಕೇತವಾಗಿ ನೋಡುತ್ತಿದ್ದಾರೆ. ►ವೈಜ್ಞಾನಿಕ ವಿವರಣೆಗೆ ಯತ್ನ ವೈಜ್ಞಾನಿಕ ದೃಷ್ಟಿಯಿಂದಲೂ ಪೆಂಗ್ವಿನ್ ನ ಈ ನಡಿಗೆಯನ್ನು ವಿಶ್ಲೇಷಿಸಲಾಗುತ್ತಿದೆ. ಕೆಲವು ಪೆಂಗ್ವಿನ್ ಗಳು ತಮ್ಮ ಸಮೂಹದಿಂದ ದೂರ ಸರಿದು ಪರ್ವತಗಳ ಕಡೆಗೆ ಸಾಗುವುದು ಕಂಡುಬರುತ್ತದೆ. ಇದಕ್ಕೆ ವಯಸ್ಸು, ಗೊಂದಲ ಅಥವಾ ಕಾಂತೀಯ ಕ್ಷೇತ್ರಗಳ ಪ್ರಭಾವ ಕಾರಣವಾಗಿರಬಹುದು ಎಂದು ಕೆಲವು ವಿಜ್ಞಾನಿಗಳು ಹೇಳುತ್ತಾರೆ. ಇನ್ನು ಕೆಲವರ ಪ್ರಕಾರ ಇದು ಸಂಪೂರ್ಣವಾಗಿ ನೈಸರ್ಗಿಕವಾದ, ಕಾರಣವಿಲ್ಲದ ನಡಿಗೆಯೂ ಆಗಿರಬಹುದು. ಕೆಲ ಜೀವಿಗಳು ಸಹಜವಾಗಿಯೇ ಭಿನ್ನ ಹಾದಿಯನ್ನು ಆಯ್ಕೆ ಮಾಡುತ್ತವೆ ಎಂಬ ವಿವರಣೆಯೂ ಇದೆ. ವಿಜ್ಞಾನಿಗಳ ಅಭಿಪ್ರಾಯದಲ್ಲಿ, ಇದು ಒಂದು ಪ್ರತ್ಯೇಕ ನಡಿಗೆಯಷ್ಟೇ. ಇದಕ್ಕೆ ಮಾನವ ಜೀವನದ ಅರ್ಥಗಳನ್ನು ಹೇರಬೇಕಾಗಿಲ್ಲ. ಇದು ವೈಜ್ಞಾನಿಕವಾಗಿ ಕುತೂಹಲಕರವಾದ ವರ್ತನೆ ಮಾತ್ರ; ಎಚ್ಚರಿಕೆಯ ಸಂಕೇತವೆಂದು ಪರಿಗಣಿಸುವ ಅಗತ್ಯವಿಲ್ಲ.
►ದೇಶವನ್ನೇ ಬೆಚ್ಚಿಬೀಳಿಸಿದ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬಹಿರಂಗ ► ಎಸ್ಐಟಿ ತನಿಖೆಗೆ ಮಹಾರಷ್ಟ್ರ ಸಿಎಂ ಫಡ್ನವಿಸ್ ಆದೇಶ

21 C