Kerala | ಚಿಕನ್ ಕರಿ ವಿಚಾರಕ್ಕೆ ಜಗಳ: ಸೋದರಳಿಯನಿಂದಲೇ ಹತ್ಯೆಗೀಡಾದ ಮಾವ!
ಪಾಲಕ್ಕಾಡ್: ಚಿಕನ್ ಕರಿ ವಿಚಾರಕ್ಕೆ ನಡೆದ ಜಗಳದಲ್ಲಿ 45 ವರ್ಷದ ವ್ಯಕ್ತಿಯೊಬ್ಬರನ್ನು ಅವರ ಸೋದರಳಿಯನೇ ಹತ್ಯೆಗೈದಿರುವ ಆಘಾತಕಾರಿ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೌಂದನೂರ್ನಲ್ಲಿ ಸೋಮವಾರ ನಡೆದಿದೆ. ಮೃತ ವ್ಯಕ್ತಿಯನ್ನು ಕೊಳಿಂಜಾಪಾರ ಪೊಲೀಸ್ ಠಾಣೆ ವ್ಯಾಪ್ತಿಯ ಒಳಕಪತಿಯ ಕೌಂದನೂರ್ ಗ್ರಾಮದ ನಿವಾಸಿ ಸೆಂಥಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪ್ರಭಾಕರನ್ ಎಂದು ಗುರುತಿಸಲಾಗಿದ್ದು, ಘಟನೆ ನಡೆಯುತ್ತಿದ್ದಂತೆಯೇ ಸ್ಥಳದಿಂದ ಪರಾರಿಯಾಗಿರುವ ಆತ ತಮಿಳುನಾಡಿಗೆ ಕಾಲ್ಕಿತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಿವಾಹಿತರಾಗಿದ್ದ ಮೃತ ಸೆಂಥಿಲ್ ಕುಮಾರ್ ತಮ್ಮ ಸಹೋದರಿ ಹಾಗೂ ಆಕೆಯ ಪುತ್ರ ಪ್ರಭಾಕರನ್ನೊಂದಿಗೆ ವಾಸಿಸುತ್ತಿದ್ದರು. ಘಟನೆ ನಡೆದಾಗ ಸೆಂಥಿಲ್ ಕುಮಾರ್ ಹಾಗೂ ಆರೋಪಿ ಪ್ರಭಾಕರನ್ ಇಬ್ಬರೂ ಮದ್ಯ ಸೇವಿಸಿದ್ದರು. ಊಟ ಮಾಡುವಾಗ ಅವರಿಬ್ಬರ ನಡುವೆ ಮಾತಿನ ಚಮಕಿ ನಡೆದಿದೆ ಎಂದು ಹೇಳಲಾಗಿದೆ. ಮೃತ ಸೆಂಥಿಲ್ ಕುಮಾರ್ ಮನೆಯಲ್ಲಿ ಚಿಕನ್ ಕರಿ ಸಿದ್ಧಪಡಿಸಿದ್ದರು. ಆದರೆ, ಅದನ್ನು ಆರೋಪಿ ಪ್ರಭಾಕರನ್ನೊಂದಿಗೆ ಹಂಚಿಕೊಂಡಿರಲಿಲ್ಲ. ಹೀಗಾಗಿ ಅವರಿಬ್ಬರ ನಡುವೆ ವಾಗ್ವಾದ ನಡೆಯಿತು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ತಮ್ಮ ಮನೆಯ ಮುಂದಿನ ರಸ್ತೆಯಲ್ಲಿ ಸೆಂಥಿಲ್ ಕುಮಾರ್ರನ್ನು ಅಡ್ಡಗಟ್ಟಿದ ಪ್ರಭಾಕರನ್, ಅವರ ಮೇಲೆ ಬಿಳಿ ಬಣ್ಣದ ಪೈಪ್ನಿಂದ ಹಲ್ಲೆ ನಡೆಸಿದ್ದಾನೆ. ಈ ಹಲ್ಲೆಯಲ್ಲಿ ಸೆಂಥಿಲ್ ಕುಮಾರ್ ತಲೆ ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಂಥಿಲ್ ಕುಮಾರ್ ಮೇಲೆ ಹಲ್ಲೆ ನಡೆಸುತ್ತಿದ್ದಂತೆಯೇ ಪ್ರಭಾಕರನ್ ಮೋಟರ್ ಬೈಕ್ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಮಿಳುನಾಡು ಪೊಲೀಸರ ನೆರವಿನೊಂದಿಗೆ ಆತನನ್ನು ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೊಳಿಂಜಾಪಾರ ಪೊಲೀಸ್ ಠಾಣೆಯಲ್ಲಿ ಹತ್ಯೆಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಮರಣೋತ್ತರ ಪರೀಕ್ಷೆಯ ಬಳಿಕ, ಮೃತದೇಹವನ್ನು ಅವರ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
KRS Dam: ಬೆಂಗಳೂರು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯದ ನೀರಿನ ಮಟ್ಟವು ಭಾರಿ ಪ್ರಮಾಣದಲ್ಲಿ ಕುಸಿತವಾಗಿದೆ. ಪ್ರಸ್ತುತ ನೀರಿನ ಮಟ್ಟವು ಇಂದು (ಏಪ್ರಿಲ್ 20) 100 ಅಡಿಗಿಂತ ಕೆಳಕ್ಕೆ ತಲುಪಿದೆ. ಒಳಹರಿವು ಕಡಿಮೆಯಿದ್ದು, ಹೊರಹರಿವಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ ಈ ಭಾಗಗಳ ರೈತರು, ಜನರು ಆತಂಕದಲ್ಲಿದ್ದಾರೆ. ಜಲಾಶಯದ ಗರಿಷ್ಠ ಮಟ್ಟ
ಜಪಾನ್ನ ಈಶಾನ್ಯ ಕರಾವಳಿಯಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ
ಟೋಕಿಯೋ: ಜಪಾನ್ನ ಈಶಾನ್ಯ ಕರಾವಳಿಯಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶಗಳಿಂದ ದೂರ ಇರುವಂತೆ ಅಧಿಕಾರಿಗಳು ಜನರಲ್ಲಿ ಒತ್ತಾಯಿಸಿದ್ದಾರೆ. ಜಪಾನ್ ಮೆಟ್ರೋಲಾಜಿಕಲ್ ಏಜೆನ್ಸಿ(Japan Meteorological Agency) ಪ್ರಕಾರ, ಪೆಸಿಫಿಕ್ ಮಹಾಸಾಗರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಇವಾಟೆ ಪ್ರಾಂತ್ಯದ ಕುಜಿ ಬಂದರಿನಲ್ಲಿ ಸುಮಾರು 80 ಸೆಂಟಿಮೀಟರ್ ಎತ್ತರದ ಸುನಾಮಿ ಅಲೆ ಮತ್ತು ಪ್ರಾಂತ್ಯದ ಮತ್ತೊಂದು ಬಂದರಿನಲ್ಲಿ 40 ಸೆಂಟಿಮೀಟರ್ ಎತ್ತರದ ಸಣ್ಣ ಸುನಾಮಿ ಅಲೆ ದಾಖಲಾಗಿದೆ. ಇದರ ಬೆನ್ನಲ್ಲೆ ಜಪಾನ್ ಪ್ರಧಾನ ಮಂತ್ರಿ ಸನೇ ತಕೈಚಿ ತುರ್ತು ಕಾರ್ಯಪಡೆ ರಚಿಸುವಂತೆ ಮತ್ತು ನಾಗರಿಕರನ್ನು ಸ್ಥಳಾಂತರಿಸುವ ಆದೇಶಗಳನ್ನು ನೀಡಿದ್ದಾರೆ. ಸಂಭವನೀಯ ಹಾನಿ ಬಗ್ಗೆ ಪರಿಶೀಲನೆ ಮತ್ತು ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಸೂಚನೆಯನ್ನು ನೀಡಿದ್ದಾರೆ,
'ಇಲ್ಲೇ ಇರು, ಇಲ್ಲೇ ಆಡು': ಅಫ್ಘಾನಿಸ್ತಾನ ತೊರೆದು ಭಾರತದ ಪೌರತ್ವ ಸ್ವೀಕರಿಸಲು ರಶೀದ್ ಖಾನ್ ಗಿತ್ತು ಆಫರ್!
ರಶೀದ್ ಖಾನ್ ಗೆ ಭಾರತವೆಂದರೆ ಅಚ್ಚುಮೆಚ್ಚು. ಭಾರತೀಯರಿಗೂ ಅವರೆಂದರೆ ಬಹಳ ಇಷ್ಟ. ಹಾಗೆಂದು ಇಲ್ಲೇ ಇದ್ದುಬಿಡಿ, ಇಲ್ಲೇ ಆಡಿ ಎಂದು ಹೇಳಿದರೆ ಮಾತ್ರ ಅವರ ಉತ್ತರ ಖಡಕ್ ಆಗಿರುತ್ತದೆ. ನನ್ನ ದೇಶಕ್ಕಾಗಿ ಆಡುವುದೇ ಪರಮ ಗೌರವ, ಅಫ್ಘಾನಿಸ್ತಾನದ ಪರ ಆಡದಿದ್ದರೆ ಮತ್ಯಾವುದೇ ದೇಶದ ಪರ ಆಡುವುದಿಲ್ಲ ಎಂಬ ಅವರ ಖಡಕ್ ನಿಲುವು ಮತ್ತು ತಾಯ್ನಾಡಿನ ಮೇಲಿನ ನಿಷ್ಠೆ ಕ್ರೀಡಾಲೋಕದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ತಮ್ಮ ಜೀವನಚರಿತ್ರೆಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾದಿಂದ ಪೌರತ್ವದ ಆಫರ್ ಬಂದಿದ್ದನ್ನು ಬಹಿರಂಗಪಡಿಸಿದ್ದಾರೆ.
ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಗೊಂದಲ, ಕೋರ್ಟ್ ವಿಚಾರಣೆ ಮುಂದುವರೆದರೆ ಸಮಸ್ಯೆ
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ತೃತೀಯ ಭಾಷೆಯ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಗ್ರೇಡಿಂಗ್ ಯೋಜನೆಯು ಕಾನೂನು ಸಂಘರ್ಷಕ್ಕೆ ಸಿಲುಕಿದೆ. ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಾಗಿ ಗ್ರೇಡಿಂಗ್ ನೀಡಲು ಸರ್ಕಾರ ನಿರ್ಧರಿಸಿತ್ತು, ಆದರೆ ಇದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಕಾರಣ ಅಂಕಗಳನ್ನೇ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿತು. ಈ ಆದೇಶದ ವಿರುದ್ಧ ಸರ್ಕಾರ ಈಗ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆಯು ಏಪ್ರಿಲ್ 21 ರಂದು ನಡೆಯಲಿದೆ.
ಐಷಾರಾಮಿ ಪೋರ್ಷೆ ಕಾರ್ ಬಳಸಿದ ಬೆಂಗಳೂರು ರಸ್ತೆ ಗುಂಡಿ ಮುಚ್ಚಿದ ಉದ್ಯಮಿ! ಬಾನೆಟ್ ಮೇಲೆಯೇ ಸಿಮೆಂಟ್ ಜಲ್ಲಿ ಮಿಶ್ರಣ
ಬೆಂಗಳೂರು ಉದ್ಯಮಿ ಅಖಿಲ್ ಹೇಮಾದ್ರಿ, ತಮ್ಮ ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಕಲಸಿ ರಸ್ತೆ ಗುಂಡಿ ಮುಚ್ಚಿದ ವಿಡಿಯೋ ವೈರಲ್ ಆಗಿದೆ. ನಾಗರಿಕ ಜವಾಬ್ದಾರಿಯ ಸಂದೇಶ ನೀಡಿದರೂ, ಐಷಾರಾಮಿ ಕಾರಿನ ಬಳಕೆ ಮತ್ತು ಕಂಪನಿ ಪ್ರಚಾರದ ಅಂಶ ಟೀಕೆಗೆ ಗುರಿಯಾಗಿದೆ. ಇದು ಸಮಾಜ ಸೇವೆಯೇ ಅಥವಾ ಪ್ರಚಾರದ ಗಿಮಿಕ್ ಎಂಬುದು ಚರ್ಚೆಗೆ ಕಾರಣವಾಗಿದೆ.
ಹ್ಯಾರಿಸ್, ನಲಪಾಡ್ ಗೆ ಇಡಿ ಶಾಕ್: ದಾಳಿ ಹಿಂದಿದ್ಯಾ ಬಿಟ್ ಕಾಯಿನ್ ರಹಸ್ಯ, ಶ್ರೀಕಿ ಸಹವಾಸ ತಂದಿಡ್ತಾ ಸಂಕಷ್ಟ
ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮತ್ತು ಅವರ ಪುತ್ರ ಮುಹಮ್ಮದ್ ನಲಪಾಡ್ ಅವರ ಬೆಂಗಳೂರಿನ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ. ಸೋಮವಾರ ಬೆಳಗ್ಗೆ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 17 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಈ ನಡುವೆ ಈ ದಾಳಿಯ ಹಿಂದೆ ಬಿಟ್ ಕಾಯಿನ್ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಹ್ಯಾಕರ್ ಶ್ರೀಕಿ ಮತ್ತು ನಲಪಾಡ್ ನಡುವೆ ಸಂಪರ್ಕ ಇತ್ತು ಎಂಬ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಶಂಕೆ ಇದೆ. ಅಷ್ಟಕ್ಕೂ ಬಿಟ್ ಕಾಯಿನ್ ಹಗರಣ ಏನು? ಶ್ರೀಕಿ ಪ್ರಕರಣ ಏನು? ಎಂಬ ಮಾಹಿತಿ ಇಲ್ಲಿದೆ.
Nikhil Kumaraswamy: ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಒಂದಾಗಿರುವ ಹಾಗೂ ಪ್ರಾದೇಶಿಕ ಪಕ್ಷವಾದ ಜಾತ್ಯಾತೀತ ಜನತಾದಳ ಬಿಜೆಪಿಯೊಂದಿಗೆ (ಎನ್ಡಿಎ ಮೈತ್ರಿಕೂಟವನ್ನು) ಸೇರಿದೆ. ಇದಾದ ನಂತರ ಕರ್ನಾಟಕದಲ್ಲಿ ಮುಸ್ಲಿಂ ನಾಯಕರು ಹಾಗೂ ರಾಜಕಾರಣಿಗಳು, ಮತದಾರರು ಸಹ ಜೆಡಿಎಸ್ನಿಂದ ದೂರ ಸರಿದಿದ್ದಾರೆ. ಆದರೆ, ಇದೀಗ ಜೆಡಿಎಸ್ ತನ್ನ ನಿಲುವು ಬದಲಾಯಿಸುತ್ತಿದೆ. ಅದರಲ್ಲೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ
ಹಣ ವ್ಯರ್ಥ ಮಾಡಿಕೊಳ್ಳಬೇಡಿ : ಮೃತ ಪೋಷಕರ TDS Refund ಪಡೆಯುವುದು ಹೇಗೆ - ಇಲ್ಲಿದೆ ಮಾಹಿತಿ
TDS Refund : ಮೃತ ಪೋಷಕರ ಟಿಡಿಎಸ್ ಮರುಪಾವತಿಯನ್ನು ಸುಲಭವಾದ ಪ್ರಕ್ರಿಯೆಯಿಂದ ಮರಳಿ ಪಡೆಯಬಹುದಾಗಿದೆ. ಆದಾಯ ತೆರಿಗೆ ಇಲಾಖೆಯ ಅಂತರ್ಜಾಲದ ಮೂಲಕ, ಇದನ್ನು ಅಪ್ಲೈ ಮಾಡಬಹುದಾಗಿದೆ. ಮೃತ ಪೋಷಕರ ಉತ್ತರಾಧಿಕಾರಿ ಎನ್ನುವುದಕ್ಕೆ ಕಾನೂನುಬದ್ದವಾದ ದಾಖಲೆಗಳು ಮಾತ್ರ ಇರಬೇಕಾಗುತ್ತದೆ.
ಬದಲಾಗುತ್ತಿರುವ ಇಂದಿನ ಕಾರ್ಪೊರೇಟ್ ಸಂಸ್ಕೃತಿಯಲ್ಲಿ 'ವರ್ಕ್ ಫ್ರಮ್ ಹೋಮ್' ಕೇವಲ ಒಂದು ಸೌಲಭ್ಯವಾಗಿ ಉಳಿಯದೆ, ಉದ್ಯೋಗಿ ಮತ್ತು ಸಂಸ್ಥೆಯ ನಡುವಿನ ಸಂಬಂಧವನ್ನು ಅಳೆಯುವ ಮಾನದಂಡವಾಗಿ ಮಾರ್ಪಟ್ಟಿದೆ. ಹಲವು ಕಂಪನಿಗಳು ಕಟ್ಟುನಿಟ್ಟಾದ ನಿಯಮಗಳಿಗೆ ಅಂಟಿಕೊಂಡಿರುವ ಈ ಕಾಲದಲ್ಲಿ, ಇತ್ತೀಚೆಗೆ ವೈರಲ್ ಆದ ಘಟನೆಯು ಮಾನವೀಯತೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ. ತುರ್ತು ಸಂದರ್ಭದಲ್ಲಿ ಉದ್ಯೋಗಿಯೊಬ್ಬರ ಅನಿವಾರ್ಯತೆಯನ್ನು ಅರಿತ ಸಂಸ್ಥೆಯು, ತನ್ನ ಕಠಿಣ ನಿಯಮಗಳನ್ನು ಬದಿಗೊತ್ತಿ ಸಹಾನುಭೂತಿಯಿಂದ ಸ್ಪಂದಿಸಿದ್ದು ಎಲ್ಲರ ಗಮನ ಸೆಳೆದಿದೆ.
ಬಸವ ಜಯಂತಿ ಕಾರ್ಯಕ್ರಮ
ಪೊಲೀಸರಿಂದ ಲಾಠೀ ಚಾರ್ಜ್
ಕಲಬುರಗಿಯ ಚಿಂಚೋಳಿಯಲ್ಲಿ ಅಕ್ರಮ ಗಣಿಗಾರಿಕೆ
ಕೆಂಪು ಮಣ್ಣು ಸಾಗಾಟದಲ್ಲಿ ಅಧಿಕಾರಿಗಳ ಶಾಮೀಲು ಆರೋಪ
2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಶಾಲೆಟ್ ಪಿಂಟೋ
ಮಂಗಳೂರು, ಎ. 20: ಕ್ಷೇತ್ರ ವಿಂಗಡನೆ ರಹಿತವಾಗಿ 2023ರಲ್ಲಿ ಅಂಗೀಕಾರಗೊಂಡಿರುವ ಶೇ. 33 ಮಹಿಳಾ ಮೀಸಲಾತಿಯನ್ನು ಅನುಷ್ಟಾನಗೊಳಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯದಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಡಳಿಯ ಅಧ್ಯಕ್ಷೆ ಶಾಲೆಟ್ ಪಿಂಟೋ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕ್ಷೇತ್ರ ವಿಂಗಡನೆ ಹಾಗೂ ಜನಗಣತಿಯೊಂದಿಗೆ ಜೋಡಿಸಿಕೊಂಡು ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಕೇಂದ್ರ ಸರಕಾರದ ಕುತಂತ್ರಕ್ಕೆ ಸೋಲಾಗಿರುವುದೇ ಹೊರತು 2023ರಲ್ಲಿ ಅಂಗೀಕಾರಗೊಂಡಿರುವ ಶೇ. 33 ಮೀಸಲಾತಿ ಸರ್ವ ಪಕ್ಷಗಳಿಂದ ಅಂಗೀಕಾರಗೊಂಡಿದೆ. ಅದನ್ನು ಯಥವತ್ತಾಗಿ ಜಾರಿಗೊಳಿಸುವ ಕಾರ್ಯವನ್ನು ಪ್ರಧಾನಿ ಮೋದಿಯವರು ಮಾಡಬೇಕು ಎಂದರು. 80ರ ದಶಕದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಮಹಿಳೆಯ ಮೀಸಲಾತಿಯ ಕನಸು ಕಂಡಿದ್ದರು. 23-74ನೆ ಸಾಲಿನಲ್ಲಿ ಪಿ.ವಿ. ನರಸಿಂಹ ರಾವ್ ಪ್ರಧಾನಿಯಾಗಿದ್ದಾಗ ಸ್ಥಳೀಯಾಡಳಿತದಲ್ಲಿ ಶೇ. 33 ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಿರುವುದು ಕಾಂಗ್ರೆಸ್. ಇದೀಗ ಕ್ಷೇತ್ರ ವಿಂಗಡನೆಯ ಮಹಿಳಾ ಮೀಸಲಾತಿಯ ವಿಧೇಯಕಕ್ಕೆ ಸೋಲಾಗಿರುವ ಬಗ್ಗೆ ಕಾಂಗ್ರೆಸ್ ವಿರುದ್ಧ ಬೊಬ್ಬೆ ಹಾಕುತ್ತಿರುವ ಬಿಜೆಪಿಯ ಮಹಿಳೆಯರು, ಕೇಂದ್ರ ಸರಕಾರಕ್ಕೆ ಈಗಾಗಲೇ ಅಂಗೀಕಾರ ಗೊಂಡಿರುವ ಮಹಿಳಾ ಮೀಸಲಾತಿ ಜಾರಿಗೆ ಒತ್ತಾಯಿಸಲಿ ಎಂದರು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಇಂತಹ ಮಸೂದೆಯನ್ನು ಮಂಡನೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಅರಿವಿಲ್ಲವೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಸರಕಾರ ಹಿಂದೆಯೂ ಮಹಿಳಾ ಮೀಸಲಾತಿ ಪರವಾಗಿದ್ದು, ಈಗಲೂ ಬೆಂಬಲ ನೀಡಲಿದೆ. ಪ್ರಿಯಾಂಕಾ ಗಾಂಧಿಯವರು ಈಗಾಗಲೇ ಕೇಂದ್ರಕ್ಕೆ ಬಹಿರಂಗ ಸವಾಲು ಹಾಕಿದ್ದು, ಮಹಿಳಾ ಮೀಸಲಾತಿ ಜಾರಿಯಾಗುವ ನಮ್ಮ ಕನಸು ನನಸಾಗಬೇಕು. ಸಿದ್ಧರಾಮಯ್ಯ ಸರಕಾರದಲ್ಲಿ ವಿವಿಧ ಯೋಜನೆಗಳ ಮೂಲಕ ಮಹಿಳೆಯರು ಸಬಲರಾಗಿದ್ದಾರೆ. ಮುಂದಿನ ದಿನಗಳಲ್ಲಿ ಮಹಿಳಾ ಮೀಸಲಾತಿ ಮೂಲಕ ರಾಜಕೀಯವಾಗಿ ಎದ್ದು ನಿಲ್ಲಲು ಅವಕಾಶ ಆಗಬೇಕು ಎಂದವರು ಹೇಳಿದರು. ಗೋಷ್ಟಿಯಲ್ಲಿ ಮುಖಂಡರಾದ ನಮಿತಾ ಡಿ ರಾವ್, ಗೀತಾ ಅತ್ತಾವರ, ಸುರೇಖಾ ಚಂದ್ರಹಾಸ್, ಚಂದ್ರಕಲಾ ಜೋಗಿ, ರೂಪ, ಸಾರಿಕಾ, ಉಷಾ ಅಂಚನ್ ಉಪಸ್ಥಿತರಿದ್ದರು. ‘ನಾರಿಶಕ್ತಿ ಅಧಿನಿಯಮ ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಭ್ರೂಣ ಹತ್ಯೆಯ ಪದ ಬಳಕೆ ಮಾಡಿದ್ದಾರೆ. ಕುತಂತ್ರದ ಮಸೂದೆಗಾಗಿ ಈ ಪದ ಬಳಕೆ ಮಾಡಿರುವುದನ್ನು ನಾವು ಖಂಡಿಸುತ್ತೇವೆ. ವರದಕ್ಷಿಣೆ ರಹಿತ ವಿವಾಹ ಕಾಯ್ದೆ, ಮಹಿಳಾ ಆಯೋಗ ರಚನೆ, ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೂ ಪಾಲು, ಪಾಶ್ ಕಾಯಿದೆ ಮೂಲಕ ಕಾಂಗ್ರೆಸ್ ಸರಕಾರ ಮಹಿಳೆಯರ ಘನತೆಯನ್ನು ಎತ್ತಿಹಿಡಿದಿದೆ. ರಾಜ್ಯದಲ್ಲಿಯೂ ಹಲವಾರು ಯೋಜನೆಗಳ ಮೂಲಕ ಮಹಿಳೆಯರಿಗೆ ಗೌರವ ನೀಡಲಾಗಿದೆ. ಉನ್ನಾವೋ, ಹತ್ರಾಸ್ ಪ್ರಕರಣ, ಯುಪಿಯಲ್ಲಿ ಅತ್ಯಾಚಾರಿ ಆರೋಪಿಗೆ ಬಹಿರಂಗವಾಗಿ ಸನ್ಮಾನ ಮೂಲಕ ಬಿಜೆಪಿ ಮಹಿಳೆಯರ ಆತ್ಮಗೌರವಕ್ಕೆ ಧಕ್ಕೆ ನೀಡಿದೆ. ಮಹಿಳಾ ಮೀಸಲಾತಿ ಎಂಬ ರಾಜಕೀಯ ಸ್ವಾತಂತ್ರ್ಯಕ್ಕೆ ಕ್ಷೇತ್ರ ವಿಂಗಡನೆ, ಗಣತಿ ಎಂಬ ಸಂಕೋಲೆ ಹಾಕಿ ಕಟ್ಟಿ ಹಾಕುವ ಪ್ರಯತ್ನ ಮಾಡಲಾಗಿದೆ. ಕಾಂಗ್ರೆಸ್ 1989ರಿಂದಲೂ ಮಹಿಳಾ ಮೀಸಲಾತಿಗೆ ಪ್ರಯತ್ನಿಸುತ್ತಾ ಬಂದಿದೆ. ಇದೀಗ ಸ್ಪಷ್ಟ ಬಹುಮತದೊಂದಿಗೆ ಸರಕಾರ ಹೊಂದಿರುವ ಬಿಜೆಪಿ 2023ರಲ್ಲಿ ಅಂಗೀಕಾರವಾಗಿರುವ ಶೇ. 33ರ ಮಹಿಳಾ ಮೀಸಲಾತಿಯನು ಮುಂದಿನ ಚುನಾವಣೆಯಲ್ಲಿ ಜಾರಿಗೊಳಿಸಬೇಕು. ಅಲ್ಪಸಂಖ್ಯಾತ, ದಮನಿತ ಮಹಿಳೆಯರಿಗೂ ಸ್ಥಾನಮಾನ ಸಿಗುವಂತಾಗಬೇಕು ಎಂದು ಕೆಪಿಸಿಸಿ ರಾಜ್ಯ ವಕ್ತಾರರಾದ ಯು.ಟಿ.ಫರ್ಝಾನ ಆಗ್ರಹಿಸಿದರು.
ಆಳ್ವಾಸ್ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ
ಮೂಡಬಿದಿರೆ, ಎ.20: ಕರಾವಳಿ ಹಾಗೂ ಮಲೆನಾಡಿನ ಸಮಸ್ತ ಜೈನ ಬಾಂಧವರ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವವನ್ನು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ರವಿವಾರ ಹಮ್ಮಿಕೊಳ್ಳಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ರಾಣಿ ಅಬ್ಬಕ್ಕಳ ವಂಶಸ್ಥರಾದ ಮೂಡುಬಿದಿರೆಯ ಚೌಟರ ಅರಮನೆಯ ಅನಿತಾ ಸುರೇಂದ್ರ ಕುಮಾರ್ರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಜೈನ ಧರ್ಮದ ಮೂಲ ತತ್ವಗಳು ನಮ್ಮ ಆತ್ಮಸ್ಥೆ5ಬರ್ಯವನ್ನು ಬಲಪಡಿಸುತ್ತವೆ. ಸ್ವಾಭಿಮಾನದಿಂದ ಬದುಕುವುದು ಜೈನ ಧರ್ಮ ನನಗೆ ಕಲಿಸಿದ ಮಹತ್ವದ ಪಾಠ. ಈ ಮೌಲ್ಯಗಳು ವ್ಯಕ್ತಿತ್ವವನ್ನು ದೃಢಗೊಳಿಸಿ, ಸತ್ಯನಿಷ್ಠೆ ಹಾಗೂ ಆತ್ಮಗೌರವಯುತ ಜೀವನಕ್ಕೆ ದಾರಿ ತೋರಿಸುತ್ತದೆ ಎಂದರು. ಆಳ್ವಾಸ್ ಸಂಸ್ಥೆಯ ಒಳಂಗಣ ಕ್ರೀಡಾಂಗಣಕ್ಕೆ ನನ್ನ ತಂದೆಯ ಹೆಸರು ಇಟ್ಟಿರುವುದು ಮೋಹನ್ ಆಳ್ವರಿಗೆ ನಮ್ಮ ಕುಟುಂಬದ ಮೇಲಿರುವ ಗೌರವವನ್ನು ಸೂಚಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಪಟ್ನಶೆಟ್ಟಿ ಸುದೇಶ್ ಕುಮಾರ್, ಚೌಟರ ಅರಮನೆಯ ಕುಲದೀಪ್ ಎಂ, ಆದರ್ಶ್ ಜೈನ್, ಏರ್ಮಾಳ ಬೀಡು ಸೂರಜ್ ಕುಮಾರ್, ಕುತ್ಯಾರು ಅರಮನೆ ಜಿನೇಶ್ ಬಲ್ಲಾಳ್, ರತ್ನಾಕರ್ ಜೈನ್, ಪಡುಬಿದ್ರಿ ಅರಮನೆಯ ಅರಸರು, ಕೂಳೂರಿನ ಆಶಿಕ್ಕುಮಾರ್, ದುಗ್ಗಣ್ಣ ಸಾವಂತ್ರು ಪಡ್ಯಾರ್ಬೆಟ್ಟಿನ ಜೀವಂಧರ ಕುಮಾರ್, ಉದ್ಯಮಿ ಶ್ರೀಪತಿ ಭಟ್, ಟ್ರಸ್ಟಿ ವಿವೇಕ್ ಆಳ್ವ, ಅವಿಭಜಿತ ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಅರಸು ಮನೆತನದ ಅರಸರು, ಬೀಡುಮನೆತನದ ಯಜಮಾನರು ಉಪಸ್ಥಿತರಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಹಾಗೂ ಶಿಕ್ಷಕ ನವೀನಚಂದ್ರ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು.
ಬೆಂಗಳೂರು: ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಮತ್ತು ಉಜ್ವಲ ಭವಿಷ್ಯವನ್ನು ರೂಪಿಸುವ ಮಹತ್ವಾಕಾಂಕ್ಷೆಯೊಂದಿಗೆ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗೆ 'ಪ್ರತಿಷ್ಠಿತ ಶಾಲೆಗಳ ಪ್ರವೇಶಾತಿ'ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ತಳಮಟ್ಟದ ಸಮುದಾಯದ ಮಕ್ಕಳಿಗೆ ರಾಜ್ಯದ ಉನ್ನತ ದರ್ಜೆಯ ಹಾಗೂ ಪ್ರತಿಷ್ಠಿತ ಖಾಸಗಿ
ಅಂಬೇಡ್ಕರ್ರ ಆಶಯಗಳು ಮತ್ತು ಸಂಜೀವಿನಿ ಸ್ವಸಹಾಯ ಸಂಘಗಳು
ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳ (SHGs) ಕಾರ್ಯವೈಖರಿ ಒಂದೇ ನಾಣ್ಯದ ಎರಡು ಮುಖ ಗಳಿದ್ದಂತೆ. ಅಂಬೇಡ್ಕರ್ ಪ್ರತಿ ಪಾದಿಸಿದ ‘ಸಂಘಟಿತರಾಗಿ’ ಎಂಬ ಮಂತ್ರವು ಇಂದು ಮಹಿಳಾ ಸಬಲೀ ಕರಣಕ್ಕೆ ಭದ್ರ ಬುನಾದಿಯಾಗಿದೆ. ಸ್ತ್ರೀ ಪರ ಚಿಂತನೆ ಹೊಂದಿದ್ದ ಅಂಬೇಡ್ಕರ್, ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದ ಮಹಿಳೆಯರು ಸಾಧಿಸಿರುವ ಪ್ರಗತಿಯ ಆಧಾರದ ಮೇಲೆ ನಾನು ಅಳೆಯುತ್ತೇನೆ ಎಂದಿದ್ದರು. ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸಮಾನತೆ ಸಿಗುವವರೆಗೂ ದೇಶದ ಅಭಿವೃದ್ಧಿ ಅಸಾಧ್ಯವೆಂಬುದು ಅವರ ದೃಢ ನಂಬಿಕೆಯಾಗಿತ್ತು. ಆರ್ಥಿಕ ಸ್ವಾವಲಂಬನೆ ಮತ್ತು ಸಬಲೀಕರಣ ಪ್ರತಿ ಮಹಿಳೆಯೂ ಆರ್ಥಿಕ ಸ್ವಾವಲಂಬಿ ಯಾಗುವುದು ಅಂಬೇಡ್ಕರ್ರ ಕನಸಾಗಿತ್ತು. ಇಂದು ಸ್ವಸಹಾಯ ಸಂಘಗಳು ಮಹಿಳೆಯರಲ್ಲಿ ಉಳಿತಾಯದ ಮನೋಭಾವವನ್ನು ಬೆಳೆಸುವ ಮೂಲಕ ಅವರನ್ನು ಸಾಲದ ಸುಳಿಯಿಂದ ಮುಕ್ತಗೊಳಿಸುತ್ತಿವೆ. ಹಣಕಾಸಿನ ನೆರವು: ಮಹಿಳೆಯರು ಬೇರೆಯವರನ್ನು ಅವಲಂಬಿಸದೆ ಸ್ವಂತ ಕಾಲಮೇಲೆ ತಾವು ನಿಲ್ಲಬೇಕು ಎನ್ನುವುದು ಅಂಬೇಡ್ಕರ್ ಪ್ರತಿಪಾದನೆಯಾಗಿತ್ತು. ಇಂದು ಬ್ಯಾಂಕ್/ಒಕ್ಕೂಟಗಳ ಮೂಲಕ ಸಾಲ ಸೌಲಭ್ಯ ಪಡೆದು ಮಹಿಳೆಯರು ಸಣ್ಣ ಕೈಗಾರಿಕೆ ಅಥವಾ ಸ್ವಂತ ಉದ್ಯೋಗ ಆರಂಭಿಸಲು ಈ ಸಂಘಗಳು ದಾರಿಯಾಗಿವೆ. ಹಿಂದೆ ಮಹಿಳೆ ಯರು ತುರ್ತು ಅವಶ್ಯಕತೆಗಳಿಗಾಗಿ ಶ್ರೀಮಂತರ ಮನೆ ಮುಂದೆ ಕೈಚಾಚಿ ನಿಲ್ಲಬೇಕಿತ್ತು. ಇದು ಅವರ ಆತ್ಮ ಗೌರವಕ್ಕೆ ಧಕ್ಕೆ ತರುತ್ತಿತ್ತು. ಆದರೆ ಇಂದು ತಮ್ಮದೇ ‘ಸಂಜೀವಿನಿ’ ಒಕ್ಕೂಟಗಳ ಮೂಲಕ ಆರ್ಥಿಕ ನೆರವು ಪಡೆಯುತ್ತಿರುವು ದರಿಂದ, ಅನ್ಯರ ಮುಂದೆ ನಿಲ್ಲುವ ಅನಿವಾರ್ಯ ತಪ್ಪಿದೆ. ಕೌಶಲ್ಯಾಭಿವೃದ್ಧಿ ತರಬೇತಿ: ಅಂಬೇಡ್ಕರ್ರ ಆಶಯದಂತೆ ಶಿಕ್ಷಣ ಮತ್ತು ತರಬೇತಿ ಪಡೆದ ಮಹಿಳೆಯರು ಇಂದು ಕೃಷಿ, ಹೈನುಗಾರಿಕೆ ಹಾಗೂ ಕುಶಲಕರ್ಮಿಗಳಾಗಿ ಗುರುತಿ ಸಿಕೊಳ್ಳುತ್ತಿದ್ದಾರೆ. ಹಪ್ಪಳ, ಸಂಡಿಗೆ, ಉಪ್ಪಿನಕಾಯಿ ತಯಾರಿಯಿಂದ ಹಿಡಿದು ದೊಡ್ಡ ಮಟ್ಟದ ಫ್ಯಾಕ್ಟರಿಗಳನ್ನು ನಡೆಸುವವರೆಗೆ ಆರ್ಥಿಕ ಸಬಲೀಕರ ಣದತ್ತ ದೊಡ್ಡ ಹೆಜ್ಜೆ ಇಡುತ್ತಿದ್ದಾರೆ ಸಾಮಾಜಿಕ ಸಂಘಟನೆ ಅಂಬೇಡ್ಕರ್ ‘ಸಂಘಟನೆ’ಗೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಗ್ರಾಮ ಮಟ್ಟದಲ್ಲಿ ಮಹಿಳೆಯರು ಸ್ವ ಸಹಾಯ ಗುಂಪುಗಳ ಮೂಲಕ ಸಂಘಟಿತರಾಗಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿದ್ದಾರೆ. ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಆಡಳಿತದ ನಿರ್ಧಾರಗಳಲ್ಲಿ ಭಾಗಿಯಾಗುತ್ತಿದ್ದಾರೆ ಹಾಗೂ ಮೂಢನಂಬಿಕೆ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಡುತ್ತಿದ್ದಾರೆ. ನಾಯಕತ್ವ ಗುಣದ ಬೆಳವಣಿಗೆ: ಸ್ವ ಸಹಾಯ ಸಂಘಗಳು ಕೇವಲ ಹಣಕಾಸಿನ ವಹಿವಾಟಿಗೆ ಸೀಮಿತವಾಗದೆ, ಮಹಿಳೆಯರಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತಿವೆ. ಸಂಜೀವಿನಿ ಸ್ವಸಹಾಯ ಸಂಘದ ಪ್ರತಿನಿಧಿಯಾಗಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಅಧ್ಯಕ್ಷರಾಗಿ ಸಂಜೀವಿನಿ ಸಂಘಗಳನ್ನು ಮುನ್ನಡೆಸುತ್ತಿರುವುದು, ಅಂಬೇಡ್ಕರ್ ಕಂಡ ಸಮಾನ ಸಮಾಜದ ಕನಸನ್ನು ನನಸು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಸಂಜೀವಿನಿ (KSRLPS) - ಒಂದು ಆಶಾಕಿರಣ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯ (ಸಂಜೀವಿನಿ) ಯೋಜನೆಗಳು, ಅಂಬೇಡ್ಕರ್ರ ಆರ್ಥಿಕ ನ್ಯಾಯದ ತತ್ವಗಳನ್ನು ಗ್ರಾಮೀಣ ಮಟ್ಟದಲ್ಲಿ ಅನುಷ್ಠಾನಗೊಳಿಸುತ್ತಿವೆ. ಇದು ಮಹಿಳೆಯರನ್ನು ಕೇವಲ ‘ಗೃಹಿಣಿ’ಯರಾಗಿ ಉಳಿಸದೆ ‘ಉದ್ಯಮಿ’ಗಳನ್ನಾಗಿ ಪರಿವರ್ತಿಸುತ್ತಿದೆ. ಸಾರಾಂಶ: ಅಂಬೇಡ್ಕರ್ರ ಹೋರಾಟ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿರದೆ, ಇಡೀ ಭಾರತೀಯ ಮಹಿಳಾ ಕುಲದ ಬಿಡುಗಡೆಯ ಹಾದಿಯಾಗಿತ್ತು. ಇಂದು ಆಧುನಿಕ ಭಾರತದಲ್ಲಿ ಮಹಿಳೆಯರು ಗೌರವಯುತವಾಗಿ ಬದುಕುತ್ತಿದ್ದಾರೆ ಎಂದರೆ ಅದಕ್ಕೆ ಅವರು ರೂಪಿಸಿದ ಕಾನೂನು ಮತ್ತು ಸಾಮಾಜಿಕ ಚೌಕಟ್ಟುಗಳೇ ಮುಖ್ಯ ಕಾರಣ. ಅಂಬೇಡ್ಕರ್ರ ಕ್ರಾಂತಿಕಾರಿ ಚಿಂತನೆಗಳು ಮತ್ತು ಸ್ವ ಸಹಾಯ ಸಂಘಗಳ ಶಿಸ್ತುಬದ್ಧ ಕಾರ್ಯವೈಖರಿ ಒಂದಾದಾಗ ಮಾತ್ರ ಮಹಿಳೆಯರು ಸರ್ವತೋಮುಖವಾಗಿ ಸಬಲರಾಗಲು ಸಾಧ್ಯ. ಮಹಿಳೆ ಸಬಲಳಾದರೆ ಇಡೀ ಕುಟುಂಬ ಮತ್ತು ರಾಷ್ಟ್ರ ಸಬಲವಾಗುತ್ತದೆ. -ಅವಿನಾಶ್, ಜಿಲ್ಲಾ ವ್ಯವಸ್ಥಾಪಕರು (ಸಂಜೀವಿನಿ ಯೋಜನೆ) ಜಿಪಂ ಉಡುಪಿ.
ಇ-ಕೆವೈಸಿ ಮಾಡಿಸಲು ಏಪ್ರಿಲ್ 30ವರೆಗೆ ಗಡುವು ವಿಸ್ತರಣೆ: ರೈತರ ನಿರಾಸಕ್ತಿ ಬೆನ್ನಲ್ಲೇ ಕೃಷಿ ಇಲಾಖೆ ಕ್ರಮ
ಕೃಷಿ ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಇ-ಕೆವೈಸಿ ಪಡೆದುಕೊಳ್ಳುವುದನ್ನು ಕೇಂದ್ರ ಸರಕಾರ ಕಡ್ಡಾಯಗೊಳಿಸಿದೆ. ಆದಾಗ್ಯೂ, ರಾಮನಗರದಲ್ಲಿ ಈ ಕುರಿತು ರೈತರು ನಿರಾಸಕ್ತಿಯನ್ನು ಹೊಂದಿದ್ದು, ಈ ಬೆನ್ನಲ್ಲೇ, ಏ.30ರವರೆಗೆ ಇ-ಕೆವೈಸಿ ಮಾಡಿಸುವ ಗಡುವನ್ನು ವಿಸ್ತರಿಸಲಾಗಿದ್ದು, ಈ ಕಾಲವಧಿಯಲ್ಲಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು, ಇಲ್ಲವಾದಲ್ಲಿ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ ಎಂದು ಸೂಚನೆ ನೀಡಿದ್ದಾರೆ. ಈ ಕುರಿತು ಮಾಹಿತಿ ಇಲ್ಲಿದೆ..
ಹಸಿವು ಮುಕ್ತ ಭಾರತದ ಕನಸು ಹೊತ್ತ ಇಫಾ ಫೌಂಡೇಶನ್
ರಿಮ್ಸ್ನಲ್ಲಿ ಮಧ್ಯಾಹ್ನ, ರಾತ್ರಿ ರೋಗಿಗಳಿಗೆ ಊಟ
Raichur | ಬ್ಲೂ ಆರ್ಮಿಯಿಂದ ಬಸವ ಜಯಂತಿ ಆಚರಣೆ
ಬಸವಣ್ಣರ ತತ್ವಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಚಂದ್ರಶೇಖರ್
ರಾಯಚೂರಿನ ಜಿಲ್ಲಾಡಳಿತದಿಂದ ಬಸವ ಜಯಂತೋತ್ಸವ
ಸಮಾನತೆಯ ತತ್ವದ ಪ್ರತಿಪಾದಕ ಬಸವಣ್ಣ: ಶಾಸಕ ಡಾ.ಶಿವರಾಜ ಪಾಟೀಲ್
ಬಯಲು ಸೀಮೆಯಲ್ಲೂ ಕಂಗೊಳಿಸಿದ ಅಡಿಕೆ ಕೃಷಿ
ಚಾಮರಾಜನಗರ: ಸಾಮಾನ್ಯವಾಗಿ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಅಡಿಕೆ ಕೃಷಿ ಹೆಚ್ಚಾಗಿ ಕಾಣುತ್ತೇವೆ. ಅಂತಹ ಕೃಷಿಯನ್ನು ಬಯಲು ಸೀಮೆಯಲ್ಲಿ ಸಾವಯವದಲ್ಲಿ ಮಾದರಿಯಲ್ಲಿ ಕೃಷಿ ಮಾಡಿ ಯಶಸ್ಸು ಕಂಡಿರುವುದು ಚಾಮರಾಜನಗರ ತಾಲೂಕಿನ ದಡದಹಳ್ಳಿ ಗ್ರಾಮದ ರೈತ. ವಾಣಿಜ್ಯ ಬೆಳೆಯಾಗಿರುವ ಅಡಿಕೆ ಕೃಷಿಯು ಸಾವಯವ ವಿಧಾನದಲ್ಲಿ ಬೆಳೆಯುವ ಮೂಲಕ ರೈತರೊಬ್ಬರು ಗಮನ ಸೆಳೆದಿದ್ದಾರೆ.ಚಾಮರಾಜನಗರ ತಾಲೂಕಿನ ಚಂದಕವಾಡಿ ಹೋಬಳಿಯ ದಡದಹಳ್ಳಿದ ನಿವಾಸಿ, ಹೆಬ್ಬಸೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗೋವಿಂದರಾಜು ಅಡಿಕೆ ಕೃಷಿಯಲ್ಲಿ ತೊಡಗಿಸಿಕೊಂಡ ಸಾಹಸಿ ರೈತ. ಚಂದಕವಾಡಿ-ದಡದಹಳ್ಳಿಯಿಂದ ಕುಂಬೇಶ್ವರ ಕಾಲನಿಗೆ ಹೋಗುವ ಮಾರ್ಗದಲ್ಲಿರುವ 4 ಎಕರೆ ಜಮೀನಿನಲ್ಲಿ ರಾಸಾಯನಿಕ ಗೊಬ್ಬರ ಬಳಕೆ ಮಾಡದೇ ಅಡಿಕೆ ಕೃಷಿ ಮಾಡುತ್ತಿದ್ದಾರೆ. ಅರ್ಥಾತ್ ಸಾವಯವ ವಿಧಾನದಲ್ಲಿ ಬೇಸಾಯ ಮಾಡುತ್ತಿದ್ದಾರೆ. 4 ವರ್ಷಗಳಿಂದ ಈ ಪದ್ಧತಿ ಅನುಸರಿಸಲು ಆರಂಭಿಸಿ ಇಂದಿಗೆ ಜಮೀನಿನ ಮಣ್ಣಲ್ಲಿ ಫಲವತ್ತತೆ ತುಂಬಿದ್ದಾರೆ. ನಾಟಿ ತಳಿಯ ಸುಮಾರು 3 ಸಾವಿರ ಅಡಿಕೆ ಮರಗಳಿವೆ. ಆಕಾಶದ ಅಗಲಕ್ಕೆ ಮೇಲೆದ್ದು ನಿಂತಿರುವ ಅಡಿಕೆ ಬೆಳೆಗಳು ಆರೋಗ್ಯದಿಂದ ಕೂಡಿವೆ. ಹಸಿರ ಸಿರಿ ತುಂಬಿಕೊಂಡು ಕಂಗೊಳಿಸುತ್ತಿವೆ. ಇದರ ಹಿಂದಿನ ರಹಸ್ಯವೇನೆಂಬ ಪ್ರಶ್ನೆಗೆ ರೈತ ಗೋವಿಂದರಾಜು ಹೇಳುವ ಉತ್ತರವೇ ರಾಸಾಯನಿಕ ಮುಕ್ತ ಕೃಷಿ. ರೋಗಬಾಧೆ ಮುಕ್ತ: ಅಡಿಕೆ ಕೃಷಿಯಲ್ಲಿ ರಾಸಾಯನಿಕ ಔಷಧಿಗಳನ್ನು ಬಳಕೆ ಮಾಡದ ರೈತ ಗೋವಿಂದರಾಜು ವರ್ಷಕ್ಕೆ ಒಮ್ಮೆ ಕೊಟ್ಟಿಗೆ ಗೊಬ್ಬರವನ್ನು ಬೆಳೆಗೆ ಹಾಕುತ್ತಿದ್ದಾರೆ. ಇದಕ್ಕೂ ಮೊದಲು ಗೊಬ್ಬರವನ್ನು ಚೆನ್ನಾಗಿ ಹದ ಮಾಡಿಕೊಂಡು ಎರೆಹುಳುಗಳು, ಸೂಕ್ಷ್ಮಾಣು ಜೀವಿಗಳು ಇರುವಿಕೆಯನ್ನು ಉತ್ತಮಗೊಳಿಸಿಕೊಂಡು, ತೇವಾಂಶವನ್ನೂ ಕೂಡಿಸಿದ ಗೊಬ್ಬರವನ್ನು ಅಡಿಕೆ ಬೆಳೆಯುವ ಸಂಪೂರ್ಣ ಜಮೀನಿಗೆ ಹಾಕುತ್ತಾರೆ. ರೋಟವೇಟರ್ನಿಂದ ಮಣ್ಣನ್ನು ಹದಗೊಳಿಸುತ್ತಾರೆ. ಬಳಿಕ 1 ವರ್ಷದವರೆಗೂ ಮತ್ತೆ ಗೊಬ್ಬರ ಹಾಕುವುದಿಲ್ಲ. ಅಡಿಕೆ ಬೆಳೆ ಇಷ್ಟನ್ನೇ ಬಳಸಿ ಕೊಂಡು ಬೆಳವಣಿಗೆ ಕಾಣುತ್ತಿದೆ. ಇದರ ನಡುವೆ ಕಳೆ ಸಸ್ಯಗಳನ್ನು ಬ್ರಷ್ ಕಟರ್ನಿಂದ ಕತ್ತರಿಸಿ ಭೂಮಿಯಲ್ಲೇ ಬಿಟ್ಟು ಕೊಳೆಸುತ್ತಾರೆ. ಇದನ್ನೂ ಗೊಬ್ಬರವನ್ನಾಗಿ ಪರಿವರ್ತಿಸುತ್ತಿದ್ದಾರೆ. ಅಡಿಕೆ ಬೆಳೆಯಲ್ಲಿ ಈವರೆಗೂ ರೋಗಬಾಧೆ ಕಾಣಿಸಿಕೊಂಡಿಲ್ಲ. ಅಡಿಕೆ ಬೆಳೆ ಉತ್ತಮವಾಗಿವೆ ಎಂದು ರೈತ ಗೋವಿಂದರಾಜು ಹೇಳುತ್ತಾರೆ. ಆರ್ಥಿಕ ವ್ಯವಸ್ಥೆಯಲ್ಲಿ ಅಡಿಕೆ ಕೃಷಿಯ ಪಾತ್ರ ಮಹತ್ವದ್ದಾಗಿದೆ. ಸಸಿ ನೆಡುವುದರಿಂದ ಹಿಡಿದು ಇಳುವರಿ ತೆಗೆಯುವವರೆಗೆ ಫಸಲನ್ನು ಮಾರುಕಟ್ಟೆಗೆ ತಲುಪಿಸುವವರೆಗೆ ಅಡಿಕೆಗೆ ರಾಸಾಯನಿಕ ಬಳಕೆಯಾಗುವುದನ್ನು ಸಾಮಾನ್ಯವಾಗಿ ಕಾಣಬಹುದು. ಇದೇ ರೀತಿ ದಿನನಿತ್ಯ ಬಳಕೆಯ ಆಹಾರಗಳಿಗೂ ರಾಸಾಯನಿಕ ಬಳಕೆ ಮಾಡಲಾಗುತ್ತದೆ. ಇವುಗಳನ್ನು ಸೇವಿಸಿದರೆ ಆರೋಗ್ಯ ಹಾಳಾಗುತ್ತದೆ ಎನ್ನುವ ಅರಿವಿರುವ ಗ್ರಾಹಕರು ಸಾವಯವ ಉತ್ಪನ್ನಗಳನ್ನು ಬಳಕೆ ಮಾಡುತ್ತಾರೆ. ಈ ಸಾಲಿಗೆ ಸಾವಯವ ಅಡಿಕೆಯೂ ಸೇರ್ಪಡೆಯಾಗುವುದು ಸಂತಸದ ವಿಚಾರ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾವಯವ ವಿಧಾನದಲ್ಲಿ ಅಡಿಕೆ ಕೃಷಿ ಮಾಡುತ್ತಿರುವ ರೈತರು ರಾಸಾಯನಿ ಬಳಕೆ ಮಾಡುವ ರೈತರಿಗಿಂತಲೂ ಉತ್ತಮವಾಗಿ ಕೃಷಿ ಮಾಡುತ್ತಿದ್ದಾರೆ. ಒಳ್ಳೆಯ ಇಳುವರಿ ತೆಗೆಯುತ್ತಿದ್ದಾರೆ. ಅಡಿಕೆ ನಡುವೆ ತೆಂಗು, ತೇಗ ತಮ್ಮ ಜಮೀನಿನಲ್ಲಿರುವ ಅಡಿಕೆ ಬೆಳೆಯ ನಡುವೆ 100 ತೆಂಗು, 15 ತೇಗದ ಮರಗಳಿವೆ. ಅಡಿಕೆ ಎತ್ತರಕ್ಕೆ ಬೆಳೆದ ಪರಿಣಾಮ ಬುಡದಲ್ಲಿ ನೆರಳು ಆವರಿಸಿದ್ದರೂ ತೆಂಗು ಮೇಲೆದ್ದಿವೆ. ತೇಗವೂ ಚೆನ್ನಾಗಿ ಬೆಳೆದು ನಿಂತಿವೆ. 1 ಬೋರ್ವೆಲ್ ಇದ್ದು, ಸರಕಾರದಿಂದ ಸಬ್ಸಿಡಿ ಪಡೆದು ಹನಿ ನೀರಾವರಿ ಸೌಲಭ್ಯ ಅಳವಡಿಸಿಕೊಂಡಿದ್ದಾರೆ. ರೈತ ಗೋವಿಂದರಾಜು ಅವರಿಗೆ ಇಲ್ಲಿ ಮಾತ್ರವಲ್ಲದೆ, ಡೊಳ್ಳಿಪುರದಲ್ಲಿ 3 ಎಕರೆ ಜಮೀನಿದೆ. ಈ ಭೂಮಿಯಲ್ಲೂ ಸಾವಯವ ವಿಧಾನದಲ್ಲಿ ಅಡಿಕೆ ಕೃಷಿ ಮಾಡುತ್ತಿದ್ದಾರೆ. ಜತೆಗೆ ಬಾಳೆಯನ್ನೂ ಹಾಕಿದ್ದಾರೆ. ಅಡಿಕೆಯೊಂದಿಗೆ ಬಾಳೆ ಬೆಳೆಯುವುದು ಅತ್ಯುತ್ತಮ ಮಿಶ್ರ ಬೇಸಾಯವಾಗಿದೆ.
ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ
ಬೆಂಗಳೂರು : ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿಚಾರಧಾರೆಯ ಬಗ್ಗೆ ಯುವ ಪೀಳಿಗೆಯಲ್ಲಿ ಹೆಚ್ಚಿನ ಅರಿವು ಮೂಡಿಸಲು ಬಸವ ತತ್ವ ಅಧ್ಯಯನ ಪೀಠ ಸ್ಥಾಪಿಸುವ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಕುಲಪತಿಗಳಾದ ಪ್ರೊ.ರಮೇಶ್ ಬಿ. ಪ್ರಕಟಿಸಿದ್ದಾರೆ. ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ರಾಜಾಜಿ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಬಸವೇಶ್ವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು, ಸಮಸಮಾಜ ನಿರ್ಮಾಣದ ಗುರಿ ಸಾಧನೆಯ ನಿಟ್ಟಿನಲ್ಲಿ 12ನೇ ಶತಮಾನದ ಸಮಾಜ ಸುಧಾರಕ ಕಾಯಕಯೋಗಿ ಬಸವಣ್ಣನವರ ಕೊಡುಗೆ ಅನನ್ಯ ಎಂದು ಬಣ್ಣಿಸಿದರು. ಜಾತಿ ಪದ್ಧತಿ, ಕಂದಾಚಾರ ಮತ್ತು ಮೌಢ್ಯತೆಯ ಕೂಪದಲ್ಲಿ ಸಿಲುಕಿದ್ದ ಅಂದಿನ ವ್ಯವಸ್ಥೆಯಲ್ಲಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಮತ್ತು ಲಿಂಗ ಸಮಾನತೆಯ ಆಶಯಗಳನ್ನು ದಿಟ್ಟತನದಿಂದ ಎತ್ತಿಹಿಡಿಯುವ ಮೂಲಕ ಬಸವಣ್ಣನವರು ಕ್ರಾಂತಿಕಾರಿ ಪರಿಣಾಮ ಬೀರಿದರೆಂದು ಅವರು ವಿಶ್ಲೇಷಿಸಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಂಡಿಕೇಟ್ ಸದಸ್ಯರಾದ ಕೆ.ಪಿ.ಪಾಟೀಲ್ ಅವರು, ಅಂತರ್ಜಾತೀಯ ವಿವಾಹದ ಮೂಲಕ ಜಾತಿ ವ್ಯವಸ್ಥೆಯ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿದ ಬಸವಣ್ಣನವರು ಸಾಮಾಜಿಕ ಸಮಾನತೆಯ ಹರಿಕಾರರೆಂದು ಕೊಂಡಾಡಿದರು. ವೈದಿಕ ಧರ್ಮ ಮತ್ತು ಸಂಸ್ಕೃತಿಯನ್ನು ತಿರಸ್ಕರಿಸಿದ ಬಸವಣ್ಣನವರು ವಚನ ಸಾಹಿತ್ಯದ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವ ಮಹತ್ಕಾರ್ಯದಲ್ಲಿ ಮಹಿಳೆಯರೂ ಸೇರಿದಂತೆ ಶೋಷಿತ ಜನವರ್ಗವನ್ನು ತೊಡಗಿಸಿದರೆಂದು ಅವರು ವಿವರಿಸಿದರು. ಕುಲಸಚಿವ (ಮೌಲ್ಯಮಾಪನ) ಪ್ರೊ.ರಮೇಶ. ಬಿ.ಕುಡೇನಟ್ಟಿ, ಹಿರಿಯ ಪ್ರಾಧ್ಯಾಪಕರಾದ ಪ್ರೊ.ಪಿ.ಆರ್.ಚೇತನ, ಸಿಂಡಿಕೇಟ್ ಸದಸ್ಯರಾದ ಡಾ.ಕೃಷ್ಣರಾಮ್, ಶಿವಕುಮಾರ್, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾದ ಡಾ. ಅಬ್ದುಲ್ ಖಾದರ್ ಮತ್ತು ಧರ್ಮೇಂದ್ರ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಡಾ.ಗೋಪಿ. ಎಸ್.ಎಂ. ಕಾರ್ಯಕ್ರಮ ನಿರೂಪಿಸಿದರು. ಡಾ.ಮಂಜು.ಸಿ.ಎನ್. ಮತ್ತು ಡಾ ಪ್ರಭು ವಚನ ಗಾಯನ ಪ್ರಸ್ತುತಪಡಿಸಿದರು. ಡಾ. ತೇಜೇಶ್ವರ್ ಸ್ವಾಗತಿಸಿ ಡಾ ಅಖ್ತರ್ ವಂದಿಸಿದರು.
ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ
ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ಇದರ ವತಿಯಿಂದ ಬಸವ ಜಯಂತಿ ಕಾರ್ಯಕ್ರಮ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಚುನಾವಣಾ ಉಪ ತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸ್ಥಾನೀಯ ಉಪ ತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು ಮಾತನಾಡಿ, ಬಸವಣ್ಣನವರು ಸಾಮಾಜಿಕ ಕ್ರಾಂತಿಯ ಹರಿಕಾರರು. ಸಮಾನತೆಯ ಸಮಾಜದ ನಿರ್ಮಾಣಕ್ಕಾಗಿ ಇವರು ನಡೆಸಿದ ಹೋರಾಟ ಯಾವತ್ತೂ ಸ್ತುತ್ಯರ್ಹ. ಬಸವಣ್ಣವರ ದೂರದೃಷ್ಟಿ ಸಮಾಜದ ಎಲ್ಲಾ ಸ್ತರದ ಜನತೆಗೆ ಸಮಾನ ಅವಕಾಶಗಳನ್ನು ಒದಗಿಸಲು ಶ್ರಮಿಸಿತು. ವಚನ ಸಾಹಿತ್ಯದ ಮೂಲಕ ಎಲ್ಲಾ ವರ್ಗದ ಜನರು ಮುನ್ನೆಲೆಗೆ ಬರಲು ಸಾಧ್ಯವಾಯಿತು ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ತಾಲೂಕು ಆಡಳಿತ ಶಾಖೆಯ ವಿಷಯ ನಿರ್ವಾಹಕ ಸೀತಾರಾಮ ಕಮ್ಮಾಜೆ ಸ್ವಾಗತಿಸಿ ವಂದಿಸಿದರು.
ಏಪ್ರಿಲ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 20) ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆ ಆಗಿಲ್ಲ.
ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ
[…] The post ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ first appeared on Vistara News .
ಮೇಲ್ಜಾತಿಯ ಅಧಿಕಾರಿಗಳಿಂದ ಕಿರುಕುಳ, ಯಾವುದೇ ಅವಘಡಕ್ಕೂ ನೀವೇ ಹೊಣೆ! ವಿಡಿಯೋ ಮಾಡಿ ದಲಿತ ಅಧಿಕಾರಿಯ ಮನವಿ
ಪೊಲೀಸ್ ಇಲಾಖೆಯಲ್ಲಿ ನಡೆಯುವ ಕಿರುಕುಳ, ತನಿಖೆ ಹೆಸರಿನಲ್ಲಿ ಒತ್ತಡ ಹಿಂಸೆ ಕೊಡಲಾಗ್ತಿದೆ, ದಲಿತ ಅಧಿಕಾರಿಗೆ ಅಹಿಂದ ಸರಕಾರದಲ್ಲಿ ಕಿರುಕುಳ ಆಗ್ತಿದೆ ಎಂದು ಇನ್ಸ್ಪೆಕ್ಟರ್ ಶ್ರೀನಿವಾಸ್ ನೋವು ತೋಡಿಕೊಂಡಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 12.02.2022 ರಂದು ಸ್ಮೈಲ್ - ಜೀವನೋಪಾಯ ಮತ್ತು ಉದ್ಯಮಕ್ಕಾಗಿ ಅಂಚಿನಲ್ಲಿರುವ ವ್ಯಕ್ತಿಗಳಿಗೆ ಬೆಂಬಲ ಎಂಬ ಒಂದು ವಿಶೇಷ ಯೋಜನೆಯನ್ನು ಪ್ರಾರಂಭಿಸಿದೆ. ಇದರಲ್ಲಿ ಮಂಗಳಮುಖಿಯರ ಸಮಗ್ರ ಪುನರ್ವಸತಿಗಾಗಿ ಕೇಂದ್ರ ವಲಯ ಯೋಜನೆ ಮತ್ತು ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳ ಸಮಗ್ರ ಪುನರ್ವಸತಿಗಾಗಿ ಕೇಂದ್ರ ವಲಯ ಯೋಜನೆ ಎಂಬ ಎರಡು ಉಪ ಯೋಜನೆಗಳಿವೆ. ಈ ಯೋಜನೆಯಡಿ ಮಂಗಳಮುಖಿಯರು ಮತ್ತು ಭಿಕ್ಷಾಟನೆಯಲ್ಲಿ ತೊಡಗಿರುವವವರಿಗೆ ಪುನರ್ವಸತಿ, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು, ಸಮಾಲೋಚನೆ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಸೇರಿದಂತೆ ಅನೇಕ ರೀತಿಯ ನೆರವು ಒದಗಿಸಲಾಗುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
ವಿನಯ್ ಕುಲಕರ್ಣಿ ಪುತ್ರಿಯರ ಭಾವುಕ ಪತ್ರ ವೈರಲ್; 'ಇದು ಕೂಡ ಸಾಗಿ ಹೋಗುತ್ತದೆ' ಎಂದ ವೈಶಾಲಿ, ದೀಪಾಲಿ
ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಪುತ್ರಿಯರು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ತಂದೆಯ ಪ್ರಾಮಾಣಿಕತೆ ಮತ್ತು ಜನಸೇವೆಯ ಮೇಲೆ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾನೂನು ಸಂಕಷ್ಟದ ಸಮಯದಲ್ಲಿ ಧೃತಿಗೆಡದೆ, ನ್ಯಾಯಾಂಗದ ಮೇಲೆ ಭರವಸೆ ಇಟ್ಟಿರುವ ಅವರು, ಇದು ಕೂಡ ಸಾಗಿಹೋಗುತ್ತದೆ ಎನ್ನುವ ಮೂಲಕ ಬೆಂಬಲ ನೀಡಿದ ಜನರಿಗೆ ಕೃತಜ್ಞತೆ ಸಲ್ಲಿಸಿ, ಕುಟುಂಬದ ದೃಢ ನಿಲುವನ್ನು ಸಾರಿದ್ದಾರೆ.
ಅರಸೀಕೆರೆ : ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನನ್ನು ರಕ್ಷಿಸಲು ಹೋಗಿ ಮಾವನೂ ನೀರುಪಾಲು
ಹಾಸನ : ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನನ್ನು ರಕ್ಷಿಸಲು ಹೋದ ಮಾವ ಕೂಡ ನೀರುಪಾಲಾದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮನಹಳ್ಳಿ ಗ್ರಾಮದ ಬಾಲಕ ಪ್ರತೀಕ್ (12) ಶಾಲೆಗೆ ಬೇಸಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ತನ್ನ ಮಾವ ಪ್ರಭಾಕರ್ (45) ಅವರ ಮನೆಗೆ ಬಂದಿದ್ದ. ಇಂದು ಇಬ್ಬರೂ ಗ್ರಾಮದ ಕೆರೆಯ ದಡದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಆಕಸ್ಮಿಕವಾಗಿ ಬಾಲಕ ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ. ಅಳಿಯ ಮುಳುಗುತ್ತಿರುವುದನ್ನು ಕಂಡು ಗಾಬರಿಗೊಂಡ ಪ್ರಭಾಕರ್ ಕೂಡಲೇ ಆತನನ್ನು ರಕ್ಷಿಸಲು ಕೆರೆಗೆ ಇಳಿದಿದ್ದಾರೆ. ಆದರೆ ದುರದೃಷ್ಟವಶಾತ್ ಅವರಿಗೆ ಈಜು ತಿಳಿದಿರಲಿಲ್ಲ. ಅಳಿಯನನ್ನು ಉಳಿಸಲು ಮಾಡಿದ ಪ್ರಯತ್ನವೇ ಇಬ್ಬರಿಗೂ ಪ್ರಾಣಾಪಾಯವಾಗಿ, ನೀರಿನ ಆಳದಲ್ಲಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಶಿವಮೊಗ್ಗ : ಶಿಕಾರಿಗೆ ಬಳಸುತ್ತಿದ್ದ 45 ನಾಡ ಬಾಂಬ್ಗಳು ವಶಕ್ಕೆ; ಓರ್ವ ಸೆರೆ, ಇಬ್ಬರು ಪರಾರಿ
ಶಿವಮೊಗ್ಗ : ಅಕ್ರಮವಾಗಿ ಕಾಡು ಪ್ರಾಣಿಗಳ ಬೇಟೆಗೆ ಬಳಸುತ್ತಿದ್ದ 45 ನಾಡ ಬಾಂಬ್ಗಳು ಹಾಗೂ ಒಂದು ಬೈಕನ್ನು ಜಿಲ್ಲೆಯ ಹೊಸನಗರ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು, ಒಬ್ಬನನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಎಪ್ರಿಲ್ 19ರಂದು ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿಯ ಹರತಾಳು ಗ್ರಾಮದ ಬಳಿ ಕೋಟೆತಾರಿಗದಿಂದ ಹರತಾಳು ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಪಕ್ಕದ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹೊಸನಗರ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಡಾಕಪ್ಪ(55), ಭಾಸ್ಕರ (55) ಹಾಗೂ ನಾಗರಾಜ್ (53) ಎಂಬುವರು ನಾಡ ಬಾಂಬ್ ಇಟ್ಟು ಶಿಕಾರಿಗೆ ಹೊಂಚು ಹಾಕುತ್ತಿರುವುದು ಕಂಡುಬಂದಿದೆ. ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ, ಭಾಸ್ಕರ್ ಹಾಗೂ ನಾಗರಾಜ್ ಪರಾರಿಯಾಗಿದ್ದು, ಡಾಕಪ್ಪನನ್ನು ಬಂಧಿಸಲಾಗಿದೆ. ಡಾಕಪ್ಪನನ್ನು ಹೊಸನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಾದ ಭಾಸ್ಕರ್ ಹಾಗೂ ನಾಗರಾಜ್ ಎಂಬವರ ಹುಡುಕಾಟಕ್ಕೆ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ. ಕಾರ್ಯಾಚರಣೆಯಲ್ಲಿ ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿಗಳಾದ ಅನಿಲ್ ಬೆಳ್ಳೆನವರ್, ಭರತ್ ಕುಮಾರ್, ಗಸ್ತು ಅರಣ್ಯ ಪಾಲಕ ಮಂಜುನಾಥ ಡಿ., ಪ್ರಶಾಂತ ಜಿ., ಪುಟ್ಟಸ್ವಾಮಿ ಕೆ.ವಿ., ಗಸ್ತು ಅರಣ್ಯ ಪಾಲಕರು ಹಾಗೂ ಇಲಾಖೆಯ ಇತರ ಸಿಬ್ಬಂದಿ ಭಾಗಿಯಾಗಿದ್ದರು.
ಜಪಾನ್ ನ ಈಶಾನ್ಯ ಕರಾವಳಿಯ ಭಾಗದಲ್ಲಿ 7.4ತೀವ್ರತೆಯ ಪ್ರಬಲ ಭೂಕಂಪನವಾಗಿದ್ದು, ಸುಮಾರು 10ಅಡಿಗಳ ವರೆಗೂ ಸುನಾಮಿಯ ಅಲೆಗಳು ಅಪ್ಪಳಿಸುವ ಎಚ್ಚರಿಕೆಯನ್ನು ಜಪಾನ್ ಹವಾಮಾನ ಸಂಸ್ಥೆ ನೀಡಿದೆ. ಅಲ್ಲದೆ, ಇದು ಇವಾಟೆ ಪ್ರಾಂತ್ಯ ಮತ್ತು ಹೊಕ್ಕೈಡೊದ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದ್ದು, ಅಲ್ಲಿನ ನಿವಾಸಿಗಳು ತಕ್ಷಣವೇ ಆ ಪ್ರದೇಶದಿಂದ ಎತ್ತರದ ಹಾಗೂ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರವಾಗಬೇಕು ಎಂದು ಸಲಹೆ ನೀಡಿದ್ದು,ತುರ್ತು ಸೇವೆಗಳನ್ನು ಅಲರ್ಟ್ ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ..
Delhi | ಪಾರ್ಕಿಂಗ್ ವಿಚಾರಕ್ಕೆ ಜಗಳ: ವ್ಯಕ್ತಿಯ ಕೊಲೆಯಲ್ಲಿ ಅಂತ್ಯ
ಹೊಸದಿಲ್ಲಿ: ವಾಹನ ಪಾರ್ಕಿಂಗ್ ವಿಚಾರದಲ್ಲಿ ಉಂಟಾದ ಜಗಳದಲ್ಲಿ 34 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಸೋಮವಾರ ಮುಂಜಾನೆ ಪೂರ್ವ ದಿಲ್ಲಿಯ ಪ್ರೀತ್ ವಿಹಾರ್ ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಪಂಕಜ್ ನಯ್ಯರ್ ಎಂದು ಗುರುತಿಸಲಾಗಿದೆ. ಪಂಕಜ್ ನಯ್ಯರ್, ಅವರ ಸಹೋದರ ಪಾರಸ್ ಹಾಗೂ ಆರೋಪಿ ಗೌರವ್ ಶರ್ಮ ಮತ್ತಿತರರ ನಡುವೆ ವಾಹನ ಪಾರ್ಕಿಂಗ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿದ್ದು, ಇದು ಪಂಕಜ್ ನಯ್ಯರ್ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಈ ಮಾತಿನ ಚಕಮಕಿಯ ವೇಳೆ ಪಂಕಜ್ ನಯ್ಯರ್ ಎದೆಗೆ ಗೌರವ್ ಶರ್ಮ ಗುಂಡಿಕ್ಕಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಆದಷ್ಟೂ ಶೀಘ್ರವಾಗಿ ಬಂಧಿಸಲು ಪ್ರಯತ್ನಗಳು ಮುಂದುವರಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 24ಕ್ಕೆ ವಿಶೇಷ ಸಂಪುಟ ಸಭೆ: ಸರ್ಕಾರ ಕೈಗೊಳ್ಳುತ್ತಾ ಒಳ ಮೀಸಲಾತಿ ಬಗ್ಗೆ ಮಹತ್ವದ ನಿರ್ಧಾರ?
ಒಳ ಮೀಸಲಾತಿ ವಿಚಾರ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವು ಉಂಟು ಮಾಡಿದೆ. ಒಳ ಮೀಸಲಾತಿ ವಿಚಾರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು. ಆದರೆ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿತ್ತು. ಇದೀಗ ಶುಕ್ರವಾರ ಏಪ್ರಿಲ್ 24 ರಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಸಭೆಯಲ್ಲಿ ಒಳ ಮೀಸಲಾತಿ ಕುರಿತಾಗಿ ಮಹತ್ವದ ನಿರ್ಧಾರ ಸಾಧ್ಯತೆ ಇದೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ.
ಜನಗಣತಿಯ ನಂತರವೇ ಕ್ಷೇತ್ರ ಮರು ವಿಂಗಡನೆ ಸೂಕ್ತ: ಸಿಎಂ ಸಿದ್ದರಾಮಯ್ಯ ಅಭಿಪ್ರಾಯ
ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಹಾಗೂ ದಕ್ಷಿಣ ರಾಜ್ಯಗಳ ಹಕ್ಕುಗಳ ಕುರಿತು ತಮ್ಮ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ಹೆಚ್ಚುತ್ತಿರುವ ಅಪಘಾತ: SC ಮಧ್ಯ ಪ್ರವೇಶ - ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮಹತ್ವದ 12 ಸೂಚನೆ
SC Guidelines to NHAI and State Government : ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಬಗ್ಗೆ ಸರ್ವೋಚ್ಚ ನ್ಯಾಯಾಲಯ ತೀವ್ರ ಕಳವಳವನ್ನು ವ್ಯಕ್ತ ಪಡಿಸಿದೆ. ರಾಜಸ್ಥಾನದ ಫೆಲೋಡಿ ಮತ್ತು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಹಿನ್ನಲೆಯಲ್ಲಿ, ಸ್ವಯಂಪ್ರೇರಿತವಾಗಿ, ಕೋರ್ಟ್ ಪ್ರಕರಣ ದಾಖಲಿಸಿಕೊಂಡಿದೆ ಮತ್ತು ಹೆದ್ದಾರಿ ಪ್ರಾಧಿಕಾರಕ್ಕೆ ಹನ್ನೆರಡು ಸೂಚನೆಯನ್ನು ನೀಡಿದೆ.
ಡಿವೋರ್ಸ್ ಸಂಭ್ರಮಿಸಿದ್ದಕ್ಕೆ ಸಿಕ್ಕಾಪಟ್ಟೆ ಟ್ರೋಲ್: ಖಿನ್ನತೆಗೆ ಒಳಗಾಗಿ ಕಣ್ಣೀರಿಟ್ಟ ಮೀರತ್ ಮಹಿಳೆ
ಇತ್ತೀಚೆಗೆ ಮೀರತ್ನ ಕುಟುಂಬವೊಂದು ತಮ್ಮ ಮಗಳ ವಿಚ್ಛೇದನವನ್ನು ಬ್ಯಾಂಡ್-ಬಾಜಾ ಮತ್ತು ಮೆರವಣಿಗೆಯ ಮೂಲಕ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ, ಈ ಸಂಭ್ರಮದ ಬೆನ್ನಲ್ಲೇ ಡಿವೋರ್ಸ್ ಪಡೆದಿದ್ದ ಆ ಸಂತ್ರಸ್ತ ಮಹಿಳೆ ಪ್ರಣೀತಾ ವಸಿಷ್ಠ ಅವರು ನೆಟ್ಟಿಗರಿಂದ ಟ್ರೋಲ್ಗೆ ಗುರಿಯಾಗಿದ್ದು, ತೀವ್ರ ಮಾನಸಿಕ ನೋವನ್ನು ಅನುಭವಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಟ್ರೋಲಿಂಗ್ನಿಂದ ಖಿನ್ನತೆ ಈ ಬಗ್ಗೆ ಮನಬಿಚ್ಚಿ
ಸೀಲು, ಸಹಿ ಇಲ್ಲದ ಚೆಕ್ ಬೌನ್ಸ್ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು; ಮೆಮೊ ಕೂಡ ಪುರಾವೆ
ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಸೀಲು ಸಹಿಯಿಲ್ಲದ ಕಂಪ್ಯೂಟರ್ ಆಧಾರಿತ ಬ್ಯಾಂಕ್ ರಿಟರ್ನ್ ಮೆಮೊಗಳು ಮಾನ್ಯ ಪುರಾವೆಗಳೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಲೆಕ್ಟ್ರಾನಿಕ್ ಕ್ಲಿಯರಿಂಗ್ ವ್ಯವಸ್ಥೆಯಲ್ಲಿ ಇವು ಕಡ್ಡಾಯವಲ್ಲ ಎಂದು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠವು ಸ್ಪಷ್ಟಪಡಿಸಿದೆ. ತಾಂತ್ರಿಕ ನೆಪಗಳನ್ನು ಒಡ್ಡಿ ಚೆಕ್ ಬೌನ್ಸ್ ದೂರುಗಳನ್ನು ವಜಾಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಈ ಮೂಲಕ ಸ್ಪಷ್ಟಪಡಿಸಿದೆ.
ಮಣಿಪಾಲ | ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ
ಮಣಿಪಾಲ: ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅಕಸ್ಮಿಕ ಸಂಭವಿಸಿದ್ದು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಘಟಕದಲ್ಲಿ ವೆಡ್ಡಿಂಗ್ ಮಾಡುತ್ತಿರುವ ಸಂದರ್ಭದಲ್ಲಿ ಅದರ ಬೆಂಕಿಯ ಕಿಡಿ ಅಲ್ಲೆ ಸಮೀಪದಲ್ಲಿದ್ದ ಆಯಿಲ್ ಗೆ ತಗುಲಿ ಬೆಂಕಿ ಕಾಣಿಸಿಕೊಂಡಿತ್ತೆನ್ನಲಾಗಿದೆ. ಇದರಿಂದ ಬೆಂಕಿ ಅಲ್ಲಿನ ಬಾಯ್ಲರ್ ಗೂ ವಿಸ್ತರಿಸಿತು. ಕೂಡಲೇ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದವರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಇದರಿಂದ ಅಪಾರ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಸುಮಾರು 8 ವರ್ಷಗಳ ಬಳಿಕ ದ.ಕೊರಿಯಾದ ಅಧ್ಯಕ್ಷರು ಭಾರತ ಪ್ರವಾಸ ನಡೆಸುತ್ತಿದ್ದು, ದ.ಕೊರಿಯಾ ಅಧ್ಯಕ್ಷ ಲಿ ಜೇ ಮಿಯಾಂಗ್ ಏ.20ರಂದು ದೆಹಲಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಭೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಅವರು ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶವೆಂದು ಬಣ್ಣಿಸಿದ್ದು, ಉಭಯದೇಶಗಳ ದ್ವಿಪಕ್ಷೀಯ ಸಂಬಂಧದಿಂದ ಅನೇಕ ಲಾಭವಾಗಲಿದೆ ಎಂದು ತಿಳಿಸಿದ್ದಾರೆ. ಇನ್ನು, ಇವರ ಪ್ರವಾಸ ಉಭಯದೇಶಗಳ ನಡುವಿನ ಹಲವು ವಾಣಿಜ್ಯ ಕ್ಷೇತ್ರಗಳಲ್ಲಿ ಸಂಬಂಧ ವೃದ್ದಿಗೊಳಿಸುವ ಮೂಲಕ ದ್ವಿಪಕ್ಷೀಯ ವಾಣಿಜ್ಯ ಸಂಬಂಧವನ್ನು 2030ರ ವೇಳೆಗೆ $50ಬಿಲಿಯನ್ ಡಾಲರ್ ಮಾಡುವ ನಿಟ್ಟನಲ್ಲಿ ಕೇಂದ್ರಿತವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ..
Bidar | ಬಿಸಿಲಿನ ಝಳಕ್ಕೆ ಯುವಕ ಕುಸಿದು ಬಿದ್ದು ಮೃತ್ಯು
ಬೀದರ್: ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ರಸ್ತೆ ಬಳಿ ಬಿಸಿಲಿನ ತೀವ್ರತೆಗೆ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉತ್ತರ ಪ್ರದೇಶದ ಮಿರ್ಜಾಪುರ್ ಪಲ್ಲಾ ಗ್ರಾಮದ ನಿವಾಸಿ ಮುಹಮ್ಮದ್ ಸಮೀರ್ (20) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ನಿಮಿತ್ತ ಕೆಲ ದಿನಗಳ ಹಿಂದೆ ಕಮಲನಗರಕ್ಕೆ ಬಂದಿದ್ದನು ಎನ್ನಲಾಗಿದೆ. ಎ.14ರಂದು ಬೆಳಿಗ್ಗೆ ತರಕಾರಿ ತರಲು ತೆರಳಿದ್ದ ಸಮೀರ್, ಮನೆಗೆ ವಾಪಸ್ಸಾಗುವ ವೇಳೆ ಬಿಸಿಲಿನ ಝಳದಿಂದ ತಲೆತಿರುಗಿ ಸಮೀಪದ ಮೆಕಾನಿಕ್ ಅಂಗಡಿಯಲ್ಲಿ ನೀರು ಕುಡಿದು ವಿಶ್ರಾಂತಿ ಪಡೆದಿದ್ದನು. ಬಳಿಕ ಮನೆಗೆ ತೆರಳುವಾಗ ಡಿಗ್ಗಿ ಗ್ರಾಮದ ರಸ್ತೆ ಬಳಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಬಿಸಿಲಿನ ಪರಿಣಾಮವೇ ಸಾವಿಗೆ ಕಾರಣ ಎಂದು ಮೃತನ ತಂದೆ ಲಯಿಕ್ ಅಹ್ಮದ್ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಮಲನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಾವು: ಇನ್ನಿಬ್ಬರ ಸ್ಥಿತಿ ಗಂಭೀರ
ಮೈಸೂರು ಜಿಲ್ಲೆಯ ಕೆ.ಆರ್. ನಗರದ ಬಳಿ ನಡೆದ ಘಟನೆಯಲ್ಲಿ ಆರು ಮಂದಿ ಕಾವೇರಿ ನದಿಯ ಪಾಲಾಗಿದ್ದಾರೆ. ದರ್ಗಾಕ್ಕೆ ಭೇಟಿ ನೀಡಲು ಬಂದಿದ್ದವರು ನದಿಯಲ್ಲಿ ಈಜಲು ಹೋಗಿ ಅಥವಾ ಕಾಲು ಜಾರಿ ಈ ದುರಂತ ಸಂಭವಿಸಿದೆ. ಒಂದೇ ಗುಂಪಿನ ಆರು ಮಂದಿ ಸಾವನ್ನಪ್ಪಿರುವುದು ಆ ಕುಟುಂಬಗಳಲ್ಲಿ ಶೋಕ ಮಡುಗಟ್ಟುವಂತೆ ಮಾಡಿದೆ.
ಭಾರತದ ಅತಿದೊಡ್ಡ ಬಯೋ ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಸಜ್ಜು
ಸುಸ್ಥಿರ ನಗರ ಜಲ ನಿರ್ವಹಣೆ ಹಾಗೂ ಸಕ್ಯೂ೯ಲರ್ ಎಕಾನಮಿ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಮುಂದಾಗಿರುವ ಜಲಮಂಡಳಿಯು, ಈಗ ಕೊಳಚೆ ನೀರನ್ನು ಬೃಹತ್ ಆದಾಯದ ಮೂಲವನ್ನಾಗಿ ಪರಿವರ್ತಿಸಲು ಸಜ್ಜಾಗಿದೆ. ತನ್ನ ಸಂಸ್ಕರಣಾ ಘಟಕಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಬಳಸಿಕೊಂಡು ಮುಂದಿನ 20 ವರ್ಷಗಳಲ್ಲಿ ಅಂದಾಜು 120 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಗಳಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಮಂಡಳಿ ರೂಪಿಸಿದೆ.
Vaibhav: ತಂದೆ ಕನಸನ್ನ ಪೂರೈಸುವುದೇ ನನ್ನ ಮುಖ್ಯ ಗುರಿ, ಪ್ರತಿಸ್ಪರ್ಧಿಗಳಿಗೆ ವೈಭವ್ ಸೂರ್ಯವಂಶಿ ಖಡಕ್ ಎಚ್ಚರಿಕೆ
Vaibhav Sooryavanshi: ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಆಡುತ್ತಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರು ತಮ್ಮ ಅದ್ಭುತ ಬ್ಯಾಟಿಂಗ್ ಶೈಲಿಯಿಂದ ಇಡೀ ಕ್ರಿಕೆಟ್ ಲೋಕದ ಗಮನ ಸೆಳೆದಿದ್ದಾರೆ. ಕ್ರೀಸ್ನಲ್ಲಿ ನಿಂತರೆ ಎದುರಾಳಿ ಬೌಲರ್ಗಳ ಮೇಲೆ ಆಕ್ರಮಣಕಾರಿ ಸವಾರಿ ಮಾಡುವ ಇವರು, ಬೌಂಡರಿ, ಸಿಕ್ಸರ್ಗಳ ಮೂಲಕ ರನ್ ಮಳೆ ಹರಿಸುತ್ತಿದ್ದಾರೆ. ಈ
ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್ ಜಾರಕಿಹೊಳಿ
[…] The post ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್ ಜಾರಕಿಹೊಳಿ first appeared on Vistara News .
ಹಾರ್ಮುಝ್ ಬಳಿ ಇರಾನ್ನ ಹಡಗನ್ನು ವಶಪಡಿಸಿಕೊಂಡ ಅಮೆರಿಕ: ಪ್ರತೀಕಾರದ ಪ್ರತಿಜ್ಞೆ ಮಾಡಿದ ಇರಾನ್
ಟೆಹ್ರಾನ್: ಹಾರ್ಮುಝ್ ಜಲಸಂಧಿ ಬಳಿ ಇರಾನ್ ಧ್ವಜ ಹೊತ್ತ ಸರಕು ಸಾಗಣೆ ಹಡಗನ್ನು ಅಮೆರಿಕದ ಪಡೆಗಳು ವಶಪಡಿಸಿಕೊಂಡ ನಂತರ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಹೆಚ್ಚಾಗಿದೆ. ಈ ಬೆಳವಣಿಗೆಯು, ಕದನ ವಿರಾಮ, ಶಾಂತಿ ಮಾತುಕತೆ ಕುರಿತ ರಾಜತಾಂತ್ರಿಕ ಪ್ರಯತ್ನಗಳಿಗೆ ಹೊಸ ಅನಿಶ್ಚಿತತೆಯನ್ನು ಉಂಟುಮಾಡಿದೆ. “ಇರಾನ್ ಬಂದರುಗಳ ಮೇಲೆ ಹೇರಲಾದ ದಿಗ್ಬಂಧನವನ್ನು ಜಾರಿಗೊಳಿಸುವ ಅಮೆರಿಕದ ಯುದ್ಧನೌಕೆಯ ಪುನರಾವರ್ತಿತ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ ಟೌಸ್ಕಾ ಎಂಬ ಹಡಗನ್ನು ಒಮಾನ್ ಕೊಲ್ಲಿಯಲ್ಲಿ ಎಂಜಿನ್ ಮೇಲೆ ದಾಳಿ ನಡೆಸಿ ನಿಷ್ಕ್ರಿಯಗೊಳಿಸಲಾಗಿದೆ. ಈಗ ಹಡಗಿನಲ್ಲಿರುವ ಸರಕುಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಯುಎಸ್ ಸೆಂಟ್ರಲ್ ಕಮಾಂಡ್ ಈ ಕುರಿತ ಕಾರ್ಯಾಚರಣೆಯ ವಿಡಿಯೋವನ್ನು ಬಿಡುಗಡೆ ಮಾಡಿದೆ. ಹಡಗಿಗೆ ನೀಡಿದ ಎಚ್ಚರಿಕೆಗಳು ಹಾಗೂ ಎಂಜಿನ್ ನಿಷ್ಕ್ರಿಯಗೊಳಿಸಲು ತೆಗೆದುಕೊಂಡ ಕ್ರಮವು ವೀಡಿಯೊದಲ್ಲಿ ಸೆರೆಯಾಗಿದೆ. ಅಮೆರಿಕದ ಈ ಕ್ರಮವನ್ನು ಇರಾನ್ “ಸಮುದ್ರ ದರೋಡೆ” ಎಂದು ಕರೆದಿದ್ದು, ಪ್ರತಿಕಾರ ನೀಡುವುದಾಗಿ ಪ್ರತಿಜ್ಞೆ ಮಾಡಿದೆ. ಈ ಸಶಸ್ತ್ರ ದರೋಡೆ ಹಾಗೂ ಅಮೆರಿಕದ ಮಿಲಿಟರಿ ದಾಳಿ ವಿರುದ್ಧ ಇರಾನ್ ಸಶಸ್ತ್ರ ಪಡೆಗಳು ಶೀಘ್ರದಲ್ಲೇ ಪ್ರತೀಕಾರ ತೀರಿಸಲಿದೆ ಎಂದು ಇರಾನ್ ಮಿಟರಿಯ ವಕ್ತಾರ ಖತಮ್ ಅಲ್ ಅನ್ಬಿಯಾ ಹೇಳಿದ್ದಾರೆ. ಇದರ ಬೆನ್ನಲ್ಲೆ ಅಮೆರಿಕದ ಮಿಲಿಟರಿ ಹಡಗುಗಳ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ಬಗ್ಗೆ ಅಮೆರಿಕ ದೃಢಪಡಿಸಿಲ್ಲ.
Kalaburagi | ಜಮಗಾ (ಜೆ) ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಆಚರಣೆ
ಕಲಬುರಗಿ: ಆಳಂದ ತಾಲ್ಲೂಕಿನ ಜಮಗಾ (ಜೆ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಗಣ್ಯರು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಗ್ರಾಮದ ಹಿರಿಯ ಮುಖಂಡ ಕಲ್ಯಾಣರಾವ ದೊಡ್ಡಮನಿ ಪ್ರಸ್ತಾವಿಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ದಲಿತ ಮುಖಂಡ ಚನ್ನವೀರ ಕಾಳೆಕಿಂಗೆ, ಹಿಂದಿನ ಕಾಲದ ಸಾಮಾಜಿಕ ವ್ಯವಸ್ಥೆಯಲ್ಲಿ ದಲಿತ ಸಮುದಾಯಕ್ಕೆ ನ್ಯಾಯ ಸಿಗಲಿಲ್ಲ. ಆದರೆ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ಇಂದು ಸಮಾನತೆ ಮತ್ತು ಘನತೆಯ ಬದುಕು ಸಾಧ್ಯವಾಗಿದೆ ಎಂದು ಹೇಳಿದರು. ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳಿಗೂ ಹೆಚ್ಚಿನ ಮಹತ್ವ ನೀಡಿದ್ದು, ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶಗಳನ್ನು ಕಲ್ಪಿಸಿದ ಮಹಾನ್ ನಾಯಕರು ಎಂದು ಹೇಳಿದರು. ಅಂಬೇಡ್ಕರ್ ಸಂವಿಧಾನ ರಚಿಸದೇ ಇದ್ದಿದ್ದರೆ ಹಿಂದುಳಿದ ವರ್ಗಗಳ ಸ್ಥಿತಿ ಇನ್ನಷ್ಟು ದುಸ್ಥಿತಿಯಲ್ಲಿರುತ್ತಿತ್ತು. ಇಂದು ಶಿಕ್ಷಣ ಮತ್ತು ಅರ್ಹತೆಯಿಂದ ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿರುವುದು ಅವರ ಕೊಡುಗೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಬುರಾವ್ ಅರುಣೋದಯ, ಸಿದ್ದರಾಮ ನಡಗೇರಿ, ಸುಭಾಸ್ ಚಕ್ರವರ್ತಿ, ಬಬ್ರುವಾಹನ ಶರಣಬಸಪ್ಪ ಬುಸನೂರ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜೀವ ಕುಮಾರ್ ಆರೆ ವಹಿಸಿದ್ದರು. ಸ್ವಾಗತ ಭಾಷಣವನ್ನು ಪ್ರಥ್ವಿರಾಜ ಆರೆ ನೆರವೇರಿಸಿದ್ದು, ದಿಗಂಬರ ಇಮ್ಮುನ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಜೈಭೀಮ್ ತರುಣ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಎಸೆಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಸರಕಾರಿ ಸೇವೆ ಪಡೆದ ಯುವಕನಿಗೆ ಸನ್ಮಾನಿಸಲಾಯಿತು.
ಶಾಸಕ ಹಾರಿಸ್ ನಿವಾಸದ ಮೇಲೆ ಈಡಿ ದಾಳಿ; ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ : ಶೋಭಾ ಕರಂದ್ಲಾಜೆ
ಬೆಂಗಳೂರು: ಬಿಟ್ ಕಾಯಿನ್ ಮೂಲಕ ಬೇರೆ ಬೇರೆ ದೇಶಗಳಲ್ಲಿ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ. ವಿಶೇಷವಾಗಿ ಕಾಂಗ್ರೆಸ್ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್.ಎ.ಹಾರಿಸ್ ಅವರ ಮನೆ ಮೇಲೆ ಈಡಿ ದಾಳಿ ಕುರಿತು ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಿರಂತರವಾಗಿ ಕಾಂಗ್ರೆಸ್ ಆರ್ಥಿಕ ಅಪರಾಧಗಳನ್ನು ಮಾಡುತ್ತಲೇ ಬರುತ್ತಿದೆ. ಇದರಲ್ಲಿ ಬಿಟ್ ಕಾಯಿನ್ ಸಹ ಒಂದು. ಬಿಟ್ ಕಾಯಿನ್ ನಲ್ಲಿ ಹೂಡಿಕೆ ಆಗಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆದಿದೆ ಎಂದರು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಯಾವುದೇ ನಿಖರ ಮಾಹಿತಿ ಇಲ್ಲದೆ ದಾಳಿ ನಡೆದಿಲ್ಲ. ಎಲ್ಲದರಲ್ಲೂ ಕಾಂಗ್ರೆಸ್ ನವರು ತಪ್ಪಿಸಿಕೊಳ್ಳುತ್ತಾರೆ. ರಾಜ್ಯದಲ್ಲಿನ ಹಣವನ್ನು ಲೂಟಿ ಮಾಡಿ ಬೇರೆ ದೇಶಗಳಿಗೆ ಸಾಗಿಸಿ, ಅಲ್ಲಿ ಹೂಡಿಕೆ ಮಾಡುತ್ತಾರೆ. ಕಾಂಗ್ರಸ್ ಸರ್ಕಾರ ಭ್ರಷ್ಟ ಸರ್ಕಾರ ಎಂದು ಹೇಳಿದರು.
ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ
[…] The post ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ first appeared on Vistara News .
ಏರ್ ಇಂಡಿಯಾ, ಲೆನ್ಸ್ಕಾರ್ಟ್ನಿಂದ 'ಬಿಂದಿ, ಸಿಂಧೂರ' ಬ್ಯಾನ್ ! ಕಂಪನಿಗಳು ಹೇಳಿದ್ದೇನು?
ಜನಪ್ರಿಯ ಕನ್ನಡಕ ಮಾರಾಟ ಸಂಸ್ಥೆ ಲೆನ್ಸ್ಕಾರ್ಟ್ ತನ್ನ ಉದ್ಯೋಗಿಗಳಿಗೆ ಬಿಂದಿ (ಕುಂಕುಮ) ಧರಿಸುವುದನ್ನು ನಿಷೇಧಿಸಿದ ಸ್ಟೈಲ್ ಗೈಡ್ನಿಂದಾಗಿ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ, ಇದೀಗ ಪ್ರತಿಷ್ಠಿತ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಕೂಡ ಇದೇ ರೀತಿಯ ಮಾರ್ಗಸೂಚಿಗಳನ್ನು ಹೊರಡಿಸಿ ವಿವಾದಕ್ಕೆ ಸಿಲುಕಿದೆ. ಏರ್ ಇಂಡಿಯಾದ ಕ್ಯಾಬಿನ್ ಸಿಬ್ಬಂದಿಗಾಗಿ ರೂಪಿಸಲಾದ ಆಂತರಿಕ ವೇಷಭೂಷಣ ಮತ್ತು ಅಲಂಕಾರ (ಗ್ರೂಮಿಂಗ್)
ಎನ್ಎ ಹ್ಯಾರಿಸ್ ಹಾಗೂ ಮುಹಮ್ಮದ್ ನಲಪಾಡ್ ನಿವಾಸದ ಮೇಲೆ ಬಿಟ್ ಕಾಯಿನ್ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ದಾಳಿಯ ಬೆನ್ನಲ್ಲೇ ರಾಜಕೀಯ ಚರ್ಚೆಗಳು ಶುರುವಾಗಿವೆ. ಬಿಟ್ಕಾಯಿನ್ ಹಗರಣದ ಬಿಜೆಪಿ ನಾಯಕರ ಮೇಲೆ ದಾಳಿ ಯಾಕಿಲ್ಲ? ಎಂದು ಸಚಿವ ಪ್ರಿಯಾಂಕ್ ಖರ್ಗೆ ನೇರವಾಗಿ ಪ್ರಶ್ನೆ ಮಾಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ಈ ಹಿಂದೆ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದು ಚರ್ಚೆಗೆ ಗ್ರಾಸವಾಗಿತ್ತು.
ಎನ್ಎ ಹ್ಯಾರಿಸ್ ಹಾಗೂ ಮುಹಮ್ಮದ್ ನಲಪಾಡ್ ನಿವಾಸದ ಮೇಲೆ ಬಿಟ್ ಕಾಯಿನ್ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ದಾಳಿಯ ಬೆನ್ನಲ್ಲೇ ರಾಜಕೀಯ ಚರ್ಚೆಗಳು ಶುರುವಾಗಿವೆ. ಬಿಟ್ಕಾಯಿನ್ ಹಗರಣದ ಬಿಜೆಪಿ ನಾಯಕರ ಮೇಲೆ ದಾಳಿ ಯಾಕಿಲ್ಲ? ಎಂದು ಸಚಿವ ಪ್ರಿಯಾಂಕ್ ಖರ್ಗೆ ನೇರವಾಗಿ ಪ್ರಶ್ನೆ ಮಾಡಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ಈ ಹಿಂದೆ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದು ಚರ್ಚೆಗೆ ಗ್ರಾಸವಾಗಿತ್ತು.
ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ : ಪ್ರಯಾಣಿಕರಿಂದ ಆಕ್ರೋಶ
ನಾವು ಜೀವಂತವಾಗಿ ಉಳಿಯುತ್ತೇವೋ ಇಲ್ಲವೋ ಎಂದು ಭಯಗೊಂಡಿದ್ದೆವು : ಪ್ರಯಾಣಿಕ ಜಯಕುಮಾರ್
ಐಪಿಎಲ್ ಪಂದ್ಯಾವಳಿಗಳಲ್ಲಿ ಬ್ಲ್ಯಾಕ್ ಮ್ಯಾಜಿಕ್ ನಡೆಯುತ್ತಾ? ಕಳೆದ ಶನಿವಾರ (ಏ.18) ನಡೆದ CSK vs SRH ಪಂದ್ಯದಲ್ಲಿ, SRH ಅಭಿಮಾನಿಯೋರ್ವನ ನಿಂಬೆಹಣ್ಣು ಮಂತ್ರ ಈಗ ಇಂತದ್ದೊಂದು ಪ್ರಶ್ನೆಯನ್ನು ಹುಟ್ಟುಹಾಕಿದೆ. ಆದರೆ ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಅವರು ಫ್ರಾಂಚೈಸಿ ಮಾಲೀಕರೊಬ್ಬರು ಎದುರಾಳಿ ತಂಡದ ಡ್ರೆಸ್ಸಿಂಗ್ ಕೋಣೆಯಲ್ಲಿ ನಿಂಬೆಹಣ್ಣು ಮಂತ್ರಿಸಿ ಇಡುತ್ತಿದ್ದರ ಬಗ್ಗೆ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ಇದು ಈಗ ಸೆನ್ಸೆಷನ್ ಸೃಷ್ಟಿಸಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
ಪ್ರಧಾನಿ ಮೋದಿಯವರು ಸಿಎಂ ಕಿವಿಯಲ್ಲಿ ಹೇಳಿದ ಗುಟ್ಟೇನು? ಮೈಸೂರಲ್ಲಿ ವಿಷಯ ಬಹಿರಂಗಪಡಿಸಿದ ಸಿಎಂ ಸಿದ್ದರಾಮಯ್ಯ
ಮಹಿಳಾ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ಮಾತನಾಡಿದ್ದು, ಪ್ರಧಾನಿ ಮೋದಿ ಭೇಟಿ ವೇಳೆಯ ವಿಚಾರವನ್ನು ಹೇಳಿದ್ದಾರೆ.
ಅಲ್ಪ ಮಟ್ಟಿಗೆ ಕುಸಿದ ಚಿನ್ನ; ಇಂದಿನ ದರವೆಷ್ಟು?
ಹಾರ್ಮುಝ್ ಜಲಸಂಧಿಯ ಸುತ್ತಲಿನ ಹೊಸ ಉದ್ವಿಗ್ನತೆಗಳು ತೈಲ ಬೆಲೆಗಳನ್ನು ಏರಿಸಿದ ಕಾರಣ ಹಣದುಬ್ಬರದ ಬಗ್ಗೆ ಆತಂಕಗಳು ಹೆಚ್ಚಾಗಿವೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಶಾಂತಿ ಮಾತುಕತೆಯ ಆಶಾವಾದದ ನಡುವೆ ಚಿನ್ನದ ಬೆಲೆಗಳು ಅಲ್ಪ ಮಟ್ಟಿಗೆ ಏರಿದ್ದವು. ಆದರೆ ಶುಕ್ರವಾರ ಮಾರುಕಟ್ಟೆ ಮುಚ್ಚುವ ಕ್ಷಣದಲ್ಲಿ ಚಿನ್ನದ ಬೆಲೆಗಳು ಸ್ವಲ್ಪ ಕುಸಿದಿದ್ದವು. ನಂತರ ಶನಿವಾರ ಅಲ್ಪ ಮಟ್ಟಿಗೆ ಏರಿಕೆ ಕಂಡಿವೆ. ಆದರೆ ಸೋಮವಾರ ಮಾರುಕಟ್ಟೆ ದುರ್ಬಲವಾಗಿ ಪ್ರಾರಂಭವಾಯಿತು. ಅಮೆರಿಕ ಮತ್ತು ಇರಾನ್ ನಡುವೆ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕದನ ವಿರಾಮದ ಆಶಾವಾದ ಕಡಿಮೆಯಾಗಿದೆ. ಹೀಗಾಗಿ ಡಾಲರ್ ಸೂಚ್ಯಂಕ ಬಲಗೊಂಡಿದೆ. ಅಮೆರಿಕನ್ ಡಾಲರ್ ಬಲವಾಗಿ ಪ್ರಾರಂಭವಾದ ಕಾರಣ ಚಿನ್ನ-ಬೆಳ್ಳಿಯ ಬೆಲೆ ಕುಸಿದಿವೆ. ಅದೇ ಸಮಯದಲ್ಲಿ ಹಾರ್ಮುಝ್ ಜಲಸಂಧಿಯ ಸುತ್ತಲಿನ ಹೊಸ ಉದ್ವಿಗ್ನತೆಗಳು ತೈಲ ಬೆಲೆಗಳನ್ನು ಏರಿಸಿದ ಕಾರಣ ಹಣದುಬ್ಬರದ ಬಗ್ಗೆ ಆತಂಕಗಳು ಹೆಚ್ಚಾಗಿವೆ. ಇವೆಲ್ಲವೂ ಚಿನ್ನದ ಬೆಲೆಗಳು ಕುಸಿತದಿಂದ ದಿನವನ್ನು ಪ್ರಾರಂಭಿಸಲು ಕಾರಣವಾಗಿವೆ. ಇಂದಿನ ಚಿನ್ನದ ದರ ಹೇಗಿದೆ? ಎಪ್ರಿಲ್ 20ರಂದು ಸೋಮವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶನಿವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 49 ರೂ. ಕಡಿಮೆಯಾಗಿ ಹತ್ತು ಗ್ರಾಂ ಬೆಲೆ 1,55,290 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 45 ರೂ. ಕಡಿಮೆಯಾಗಿ ಹತ್ತು ಗ್ರಾಂಗೆ 1,42,350 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 37 ರೂ. ಕುಸಿದು, ಹತ್ತು ಗ್ರಾಂಗೆ 1,16,470 ರೂ. ಗೆ ತಲುಪಿದೆ. ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ? ಎಪ್ರಿಲ್ 20ರಂದು ಸೋಮವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಕಡಿಮೆಯಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,529 (-49) ರೂ. ನಷ್ಟಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,235 (-45) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,647 (-37) ರೂ. ಬೆಲೆಗೆ ತಲುಪಿದೆ. ಬೆಳ್ಳಿಯ ದರದಲ್ಲಿ ಸ್ಥಿರತೆ ಮಾರ್ಚ್ ಆರಂಭದಲ್ಲಿ ಹೆಚ್ಚು ಏರಿಳಿತ ಕಾಣದೆ ಸ್ಥಿರವಾಗಿದ್ದ ಬೆಳ್ಳಿಯ ದರ, ಮಾರ್ಚ್ 09ರ ನಂತರ ಸ್ವಲ್ಪ ಕುಸಿತದ ಹಾದಿಯಲ್ಲಿತ್ತು. ಏಪ್ರಿಲ್ ಆರಂಭದಲ್ಲಿ 2,50,000 ರೂ. ಗೆ ಬಂದು ತಲುಪಿದ ನಂತರ ಕಳೆದ ವಾರಾಂತ್ಯದಲ್ಲಿ ಪ್ರತಿ ಕೆಜಿಗೆ 2,60,000 ರೂ.ಗೆ ಸ್ಥಿರವಾಗಿ ನಿಂತಿತ್ತು. ಕಳೆದ ಶನಿವಾರ ಪ್ರತಿ ಗ್ರಾಂಗೆ 10 ರೂ. ಏರಿಕೆಯಾಗಿ ಪ್ರತಿ ಕೆಜಿಗೆ 2,75,000 ಕ್ಕೆ ಬಂದು ತಲುಪಿದೆ. ಇದೀಗ ಸೋಮವಾರವೂ ಅದೇ ದರದಲ್ಲಿ ಸ್ಥಿರವಾಗಿದೆ. ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ? ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,544 (-49) ರೂ., 22 ಕ್ಯಾರೆಟ್ ಚಿನ್ನದ ದರ 14,250 (-45) ರೂ. ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,529 (-49) ರೂ., 22 ಕ್ಯಾರೆಟ್ ಚಿನ್ನದ ದರ 14,235 (-45) ರೂ. ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,534 (-49) ರೂ., 22 ಕ್ಯಾರೆಟ್ ಚಿನ್ನದ ದರ 14,240 (-45) ರೂ. ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,600 (-66) ರೂ., 22 ಕ್ಯಾರೆಟ್ ಚಿನ್ನದ ದರ 14,300 (-60) ರೂ. ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,529 (-49) ರೂ., 22 ಕ್ಯಾರೆಟ್ ಚಿನ್ನದ ದರ 14,235 (-45) ರೂ. ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,529 (-49) ರೂ., 22 ಕ್ಯಾರೆಟ್ ಚಿನ್ನದ ದರ 14,235 (-45) ರೂ. ಜೈಪುರ: 24 ಕ್ಯಾರೆಟ್ ಚಿನ್ನದ ದರ 15,544 (-49) ರೂ., 22 ಕ್ಯಾರೆಟ್ ಚಿನ್ನದ ದರ 14,250 (-45) ರೂ. ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,544 (-49) ರೂ., 22 ಕ್ಯಾರೆಟ್ ಚಿನ್ನದ ದರ 14,250 (-45) ರೂ. ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,544 (-49) ರೂ., 22 ಕ್ಯಾರೆಟ್ ಚಿನ್ನದ ದರ 14,250 (-45) ರೂ.
US-ಇರಾನ್ ನಡುವಿನ 2ನೇ ಸುತ್ತಿನ ಮಾತುಕತೆಗೆ ಇಸ್ಲಾಮಾಬಾದ್ ಸಜ್ಜು; ಈ ಬಾರಿಯಾದ್ರೂ ಸಂಧಾನ ಆಗುತ್ತಾ?
ಇಸ್ಲಾಮಾಬಾದ್ ನಲ್ಲಿ ಅಮೆರಿಕಾ-ಇರಾನ್ ನಡುವಿನ ಮೊದಲ ಸುತ್ತಿನ ಶಾಂತಿ ಮಾತುಕತೆಗಳು ವಿಫಲವಾದ ಬೆನ್ನಲ್ಲೆ, ಇದೀಗ ಮತ್ತೆ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಉಭಯದೇಶಗಳ ನಡುವೆ 2ನೇ ಸುತ್ತಿನ ಮಾತುಕತೆಗೆ ವೇದಿಕೆ ಸಿದ್ದವಾಗಿದ್ದು, ಈ ಕುರಿತು ಅಮೆರಿಕಾ ಅಧಿಕೃತವಾಗಿ ಹೇಳಿಕೆ ನೀಡಿದೆ. ಆದರೆ, ಇರಾನ್ ಈವರೆಗೂ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ, ಅಲ್ಲದೆ, ಈ ಮಾತುಕತೆಯಲ್ಲಿ ಇರಾನ್ ನಿಯೋಗ ಭಾಗಿಯಾಗುವ ಸಾಧ್ಯತೆಗಳ ಕುರಿತು ಇರಾನ್ ಮಾಧ್ಯಮಗಳು ಸಂಶಯ ವ್ಯಕ್ತಪಡಿಸಿವೆ. ಈ ಕುರಿತ ಮಾಹಿತಿ ಇಲ್ಲಿದೆ..
3 ಮಸೂದೆಗೆ ಹಿನ್ನಡೆ : ಅಮಿತ್ ಶಾ ಸಭೆಯಲ್ಲಿ ಸ್ಟಾಲಿನ್-ಅಖಿಲೇಶ್ ಅಂದು ಒಪ್ಪಿಗೆ, ಇಂದು ವಿರೋಧ?
HD Kumaraswamy on Ammendment bill : ಲೋಕಸಭೆಯಲ್ಲಿ ಮೂರು ಮಸೂದೆಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಅಂಕಿ-ಅಂಶಗಳ ಸಮೇತ ಮನಮುಟ್ಟುವಂತೆ ಹೇಳಿದರು. ಹಾಗಿದ್ದರೂ ಕಾಂಗ್ರೆಸ್ ಪಕ್ಷವು ತನ್ನ ಪ್ರತಿಷ್ಠೆಗಾಗಿ ತಾನೂ ದಾರಿ ತಪ್ಪಿದ್ದಲ್ಲದೆ, ತನ್ನ ಮಿತ್ರಪಕ್ಷಗಳನ್ನು ಕೂಡ ದಿಕ್ಕುತಪ್ಪಿಸಿತು. ಈಗ ದಕ್ಷಿಣದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾರು ಸರಿಪಡಿಸುತ್ತಾರೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಯುಎಇ ಮೂಲದ ಯಶ್ ರಾಜ್ ಪುಂಜಾಗಿದೆ ಕರ್ನಾಟಕದ ನಂಟು; ಇಲ್ಲಿದೆ ಆರ್ಆರ್ ಸೇರಿದ ಹೊಸ ಪ್ರತಿಭೆಯ ರೋಚಕ ಕಥೆ
Yash Raj Punja:ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲಿನಿಂದಲೂ ಹೊಸ ಪ್ರತಿಭೆಗಳನ್ನು ಹುಡುಕಿ ಹೊರತರುವಲ್ಲಿ ಹೆಸರುವಾಸಿಯಾಗಿದೆ. ಆ ಪಟ್ಟಿಗೆ ಈಗ ಸೇರ್ಪಡೆಯಾಗಿರುವ ಹೊಸ ಹೆಸರು ಯಶ್ ರಾಜ್ ಪುಂಜಾ. ಮೂಲತಃ ಅಬುಧಾಬಿಯವರಾದ ಇವರಿಗೆ ಕರ್ನಾಟಕದ ನಂಟಿದೆ. ಹಾಗಾದ್ರೆ ಈ ಆಟಗಾರನ ಬಗ್ಗೆ ಕೆಲವು ಆಸಕ್ತಿದಾಯಕ ವಿಷಯಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಐಪಿಎಲ್ 2026ರ ಮಿನಿ ಹರಾಜಿನ ವೇಳೆ
Ramangar Bus Tragedy: ಹೆದ್ದಾರಿಯಲ್ಲಿ ಬಸ್ ಅಪಘಾತ, 15 ಸಾವು, 20 ಮಂದಿಗೆ ಗಾಯ
Ramanagar Highway Tradegy: ಭಾರತ ಅಕ್ರಮಿತ ಜಮ್ಮು ಮತ್ತು ಕಾಶ್ಮೀರ ವ್ಯಾಪ್ತಿಯ ಉಧಂಪುರ ಜಿಲ್ಲೆಯಲ್ಲಿ ಧಾರುಣ ಘಟನೆಯೊಂದು ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ತುಂಬಿದ್ದ ಬಸ್ ಉರುಳಿಬಿದ್ದ ಪರಿಣಾಮ ಸುಮಾರು 15 ಮಂದಿ ಮೃತಪಟ್ಟಿದ್ದಾರೆ. 20 ಮಂದಿಗೆ ಗಾಯಗಳಾಗಿವೆ ಎಂದು ವರದಿ ಆಗಿದೆ. ಹೆದ್ದಾರಿ ರಸ್ತೆಯು ತಿರುವುಗಳಿಂದ ಕೂಡಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ
ಪಕ್ಷಾಂತರ ತಡೆ ಕಾಯ್ದೆ ಮೌಲ್ಯಮಾಪನ; ಒಡಿಶಾದಲ್ಲಿ ಸ್ಪೀಕರ್ಗಳ ಮಹತ್ವದ ಸಭೆ: ಯು.ಟಿ. ಖಾದರ್
ಮಂಗಳೂರು, ಎ.20: ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22, 23ರಂದು ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಮುಂಬಯಿಯಲ್ಲಿ ಒಂದು ಸಭೆ ನಡೆದಿತ್ತು. ಇದೀಗ ಎರಡನೇ ಸಭೆ ಒಡಿಶಾದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಒಡಿಶಾ, ಸಿಕ್ಕಿಂ, ಮಹಾರಾಷ್ಟ್ರ, ನಾಗಾಲ್ಯಾಂಡ್, ಕರ್ನಾಟಕ ಸೇರಿದಂತೆ 5 ರಾಜ್ಯಗಳ ಸ್ಪೀಕರ್ಗಳು ಭಾಗವಹಿಸಲಿದ್ದಾರೆ. ಒಂದು ವರ್ಷದ ಒಳಗೆ ಈ ಸಮಿತಿ ಲೋಕಸಭಾ ಅಧ್ಯಕ್ಷರಿಗೆ ವರದಿ ನೀಡಬೇಕಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ. ಶಾಸಕ ವಿನಯ ಕುಲಕರ್ಣಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರೂ, ಅಧಿಕೃತ ಸೂಚನೆ ಬಂದ ಬಳಿಕ ಅವರ ವಿಧಾನಸಭಾ ಅಧಿಕಾರದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಬಹುಮತವಿಲ್ಲದೆ ಬಿದ್ದುಹೋದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಯು.ಟಿ. ಖಾದರ್ ಮಾತನಾಡುತ್ತಾ, ಸಂವಿಧಾನಬದ್ಧ ತೀರ್ಮಾನಗಳು ಹಾಗೂ ಚರ್ಚೆಗಳ ಮೂಲಕ ಯಾವುದೇ ಪ್ರದೇಶದ ಜನರು, ಸಮುದಾಯಗಳಿಗೆ ಅನ್ಯಾಯವಾಗಬಾರದು ಎನ್ನುವುದು ಮುಖ್ಯ ಎಂದು ಹೇಳಿದರು.
ಶಾಸಕ ಎನ್.ಎ.ಹಾರಿಸ್ ಅವರ ನಿವಾಸದ ಮೇಲೆ ಈಡಿ ದಾಳಿ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಸಕ ಎನ್.ಎ.ಹಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ನಗರದ ವಿವಿಧ ಸ್ಥಳಗಳನ್ನು ಸೇರಿ ಹಲವು ಕಡೆಗಳಲ್ಲಿ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಹ್ಯಾರಿಸ್ ಅವರ ಪುತ್ರ ಮುಹಮ್ಮದ್ ನಲಪಾಡ್ ಅವರ ಮನೆಯ ಮೇಲೂ ಈಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ದಾಳಿಗೆ ಸ್ಪಷ್ಟ ಕಾರಣವೇನು ಎಂಬುದು ಇನ್ನೂ ಅಧಿಕೃತವಾಗಿ ಬಹಿರಂಗವಾಗಿಲ್ಲ.
ಹೈದರಾಬಾದ್ನಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ 'ಫ್ಲೈ 91' ವಿಮಾನವು ಹವಾಮಾನ ವೈಪರೀತ್ಯ ಹಾಗೂ ತಾಂತ್ರಿಕ ದೋಷದಿಂದಾಗಿ ಭಾರೀ ಆತಂಕಕ್ಕೆ ಈಡಾಗಿದ್ದರೂ, ಅಂತಿಮವಾಗಿ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಯುವ ಮೂಲಕ ದೊಡ್ಡ ಗಂಡಾಂತರದಿಂದ ಪಾರಾಗಿದೆ.
ಸೂರ್ಯ ನೆತ್ತಿ ಮೇಲೆ ಏರಿದಂತೆಲ್ಲಾ ಸೆನ್ಸೆಕ್ಸ್, ನಿಫ್ಟಿ ಏರಿಕೆ; ಷೇರು ಮಾರುಕಟ್ಟೆಯ ಸ್ಥಿರತೆ ಮುಂದುವರೆಯುವ ಭರವಸೆ
ಪಶ್ಚಿಮ ಏಷ್ಯಾ ಯುದ್ಧ ಮತ್ತು ಅಮೆರಿಕ-ಇರಾನ್ ಶಾಂತಿ ಮಾತುಕತೆ ನಡುವಿನ ಗೊಂದಲಮಯ ವಾತಾವರಣದ ನಡುವೆ, ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸ್ಥಿರ ವಹಿವಾಟು ಕಂಡುಬರುತ್ತದೆ. ಇಂದು (ಏ.20-ಸೋಮವಾರ) ವಹಿವಾಟು ಆರಂಭವಾಗುತ್ತಿದ್ದಂತೇ ನಕಾರಾತ್ಮಕವಾಗಿ ತೆರೆದುಕೊಂಡ ಸೆನ್ಸೆಕ್ಸ್ ಮತ್ತು ನಿಫ್ಟಿ, ಮಧ್ಯಂತರ ವಹಿವಾಟಿನಲ್ಲಿ ಏರಿಕೆಯತ್ತ ಮುಖ ಮಾಡಿವೆ. ಸೆನ್ಸೆಕ್ಸ್ ಸದ್ಯ 300 ಪಾಯಿಂಟ್ವರೆಗೆ ಏರಿಕೆ ಕಂಡಿದ್ದರೆ, ನಿಫ್ಟಿ 50 ಕೂಡ ಬ್ಯಾಂಕಿಂಗ್ ವಲಯದ ಷೇರುಗಳ ಉತ್ತಮ ಪ್ರದರ್ಶನದಿಂಣದ ಏರಿಕೆ ಕಂಡಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
ಮದ್ಯ ಸೇವನೆ ಮಾಡುವವರಿಗೆ ಕಹಿ ಸುದ್ದಿ ಇಲ್ಲಿದೆ. ಹೆಚ್ಚು ಜನ ಅವಲಂಬಿಸಿದ್ದ ಅಗ್ಗದ ಮದ್ಯಕ್ಕೆ ಇನ್ನು ಮುಂದೆ ಬೆಲೆ ಏರಿಕೆ ಆಗಲಿದೆ. ಹೊಸ ವಿಧಾನದ ಮೂಲಕ ದರ ಏರಿಕೆಗೆ ಸರಕಾರ ಮುಂದಾಗಿದ್ದು, ಆಲ್ಕೋಹಾಲ ಅಂಶದ ಮೇಲೆ ತೆರಿಗೆ ಹಾಕುವುದರಿಂದ ಬೆಲೆ ಹೇಎ ಹೆಚ್ಚಳ ಆಗಲಿದೆ ಎಂಬ ವಿವರ ಇಲ್ಲಿದೆ ನೋಡಿ
ನಿರಂತರ ಮೌನದಿಂದ ತಪ್ಪು ಸಂದೇಶ, ಪಕ್ಷ ಮತ್ತು ಸರ್ಕಾರದ ಹಿಡಿತ ಬಿಗಿ ಇರಲಿ: ಸಿದ್ದುಗೆ ಆಪ್ತರ ಮನವರಿಕೆ
ಸಿಎಂ ಸಿದ್ದರಾಮಯ್ಯ ಅವರ ಮೌನ ಇದೀಗ ಆಪ್ತರ ಆತಂಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಕೆಲವು ಸಚಿವರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮೌನ ಹೊಂದಿದರೆ ಅದು ಬೇರೆ ಸಂದೇಶಕ್ಕೆ ಅವಕಾಶ ನೀಡಬಹುದು. ಹಾಗಾಗಿ ಮಧ್ಯಪ್ರವೇಶ ಮಾಡಬೇಕು ಎಂಬ ಮನವಿಯನ್ನು ಮಾಡಿದ್ದಾರೆ. ಕೆ ಎನ್ ರಾಜಣ್ಣ, ಅಬ್ದುಲ್ ನಸೀರ್, ಅಬ್ದುಲ್ ಜಬ್ಬಾರ್ ಸೇರಿದಂತೆ ಆಪ್ತರ ವಿರುದ್ಧ ಕ್ರಮ ಆದರೂ ಸಿದ್ದರಾಮಯ್ಯ ಅವರು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶ ಮಾಡದೆ ಇರುವುದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
ಜಮ್ಮುಕಾಶ್ಮೀರ| ಉಧಂಪುರದಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್: ಕನಿಷ್ಠ 10 ಮಂದಿ ಮೃತ್ಯು
ಉಧಂಪುರ: ಜಮ್ಮುಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಪ್ರಯಾಣಿಕರ ಬಸ್ಸೊಂದು ರಸ್ತೆಯಿಂದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 10 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆ ಸುಮಾರಿಗೆ ರಾಮನಗರದಿಂದ ಉಧಂಪುರಕ್ಕೆ ಹೋಗುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು ಬೆಟ್ಟದ ಇಳಿಜಾರಿನ ಕೆಳಗೆ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಘಟನೆ ಬಗ್ಗೆ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡಲಾಗುವುದು. ಗಂಭೀರವಾಗಿ ಗಾಯಗೊಂಡವರನ್ನು ವಿಮಾನದ ಮೂಲಕ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಈ ಕುರಿತು ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.
Gold Rate: ಭಾರೀ ಇಳಿಕೆ ಕಂಡ ಚಿನ್ನದ ದರ: ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ
ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ಸಲ್ಪ ಇಳಿಕೆ ಕಂಡುಬಂದಿದ್ದು, ಅಕ್ಷಯ ತೃತೀಯದ ಖರೀದಿಗೆ ಸಿದ್ಧತೆ ನಡೆಸುತ್ತಿರುವ ಗ್ರಾಹಕರಿಗೆ ಇದು ತುಸು ನೆಮ್ಮದಿ ತಂದಿದೆ. ಏಪ್ರಿಲ್ 20ರ ಇಂದಿನ ಮಾರುಕಟ್ಟೆ ದರದ ಪ್ರಕಾರ, 24 ಕ್ಯಾರೆಟ್ನ ಒಂದು ಗ್ರಾಂ ಚಿನ್ನದ ಬೆಲೆ 49 ರೂಪಾಯಿ ಇಳಿಕೆಯಾಗಿ 15,529 ರೂಪಾಯಿ ತಲುಪಿದೆ. ಆಭರಣದ ಹಬ್ಬದ ಹೊತ್ತಲ್ಲೇ ಆಭರಣ ಪ್ರಿಯರಿಗೆ ಚಿನ್ನದ
ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ದೇಶದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು
[…] The post ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ದೇಶದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು first appeared on Vistara News .
ಎ.24-26 | ಮುಡಿಪು ಉತ್ಸವ, ಕೃಷಿ ಮೇಳ : ಯು.ಟಿ. ಖಾದರ್
ಮಂಗಳೂರು, ಎ.20: ಮುಡಿಪು ಉತ್ಸವ ಸಮಿತಿ, ಕೃಷಿಕ ಸಮಾಜ ಉಳ್ಳಾಲ ತಾಲೂಕು ಹಾಗೂ ಯು.ಟಿ. ಫರೀದ್ ಫೌಂಡೇಶನ್ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಕೃಷಿ ಮೇಳ ಹಾಗೂ ಮುಡಿಪು ಉತ್ಸವ ಎ.24, 25, 26 ರಂದು ಶ್ರೀ ಕೃಷ್ಣ ಧ್ಯಾನ ಮಂದಿರ, ಮುಡಿಪುವಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಸೋಮವಾರ ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಎ.24ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಕೃಷಿ ಸಚಿವ ಚೆಲುವರಾಯ ಸ್ವಾಮಿ ಕೃಷಿ ಮೇಳವನ್ನು ಹಾಗೂ ಸಂಸದ ಬ್ರಿಜೇಶ್ ಚೌಟ ಆಹಾರ ಮೇಳವನ್ನು ಉದ್ಘಾಟಿಸಲಿದ್ದಾರೆ. ಈ ಉತ್ಸವದಲ್ಲಿ ಹಿರಿಯ ಸಮಾಜಸೇವಕ ಡಾ. ಮದನ್ ಮೋಹನ್ ನಾಯ್ಕ್ ಅವರಿಗೆ ಸೇವಾ ಧುರಂದರ ಪ್ರಶಸ್ತಿ ನೀಡಲಾಗುವುದು ಮತ್ತು ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ ಹಲವು ಗಣ್ಯರಿಗೆ ಗೌರವಾಭಿನಂದನೆ ಸಲ್ಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೃಷಿಯ ಬಗ್ಗೆ ವಸ್ತು ಪ್ರದರ್ಶನ ಹಾಗೂ ಉಪಯುಕ್ತ ಮಾಹಿತಿ ನೀಡುವ ಗುರಿ ಇದೆ. ಗುಡ್ಡಗಾಡು ಓಟ, ಸ್ವಚ್ಛತಾ ಅಭಿಯಾನ, ಆಹಾರ ಮೇಳ, ಗಾಳಿಪಟ ಉತ್ಸವ, ಮಹಿಳೆಯರಿಗೆ ಸ್ಪರ್ಧೆಗಳು, ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮಗಳು ಸೇರಿದಂತೆ ಐತಿಹಾಸಿಕ ಕಾರ್ಯಕ್ರಮ ರೂಪಿಸುವ ಗುರಿ ಇದೆ ಎಂದು ಕಾರ್ಯಾಧ್ಯಕ್ಷ ದೇವದಾಸ್ ಭಂಡಾರಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಉತ್ಸವದ ಆಮಂತ್ರಣ ಪತ್ರವನ್ನು ಅವರು ಬಿಡುಗಡೆಗೊಳಿಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಿಪು ಉತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ಮದನ್ ಮೋಹನ್ ನಾಯ್ಕ್, ಕೋಶಾಧಿಕಾರಿ ರಾಧಾಕೃಷ್ಣ ರೈ ಉಮಿಯ, ಸಂಚಾಲಕ ಅಬ್ದುಲ್ ಜಲೀಲ್, ಮಾಜಿ ಮನಪಾ ಸದಸ್ಯೆ ಅಪ್ಪಿ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮೊದಲಾದವರು ಉಪಸ್ಥಿತರಿದ್ದರು.
ಸರ್ಕಾರದ ಎಲ್ಲಾ ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಅತಿಮುಖ್ಯ. ಅದರಲ್ಲಾಗುವ ಸಣ್ಣ ತಪ್ಪುಗಳು ಸಹ ನಮ್ಮನ್ನು ಹಲವು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುವಂತೆ ಮಾಡಬಹುದು. ಅದರಂತಯೇ ಕುತಿಜಾಬಿ ರಾಜೇಸಾಬ ಪಠಾಯತ ವೃದ್ದಮಹಿಳೆಯ ಆಧಾರ್ ಕಾರ್ಡ್ ನಲ್ಲಿ ತನ್ನ ವಯಸ್ಸನ್ನು ತಪ್ಪಾಗಿ ನಮೂದಿಸಲಾಗಿದ್ದು, ಇದರಿಂದಾಗಿ ಆಕೆ ತನ್ನ ಪಿಂಚಣಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇದಕ್ಕೂ ಮೊದಲು ತರಕಾರಿ ಮಾರಿ ಜೀವನ ಸಾಗಿಸುತ್ತಿದ್ದ ವೃದ್ದೆ ಇದೀಗ ಮನೆಕೆಲಸಗಳನ್ನು ಮಾಡುತ್ತಾ ಜೀವನ ಸಾಗಿಸುತ್ತಿದ್ದು, ಆಧಾರ್ ಕಾರ್ಡ್ ನಲ್ಲಿ ವೃದ್ದೆಯ ವಯಸ್ಸು ತಗ್ಗಿಸಿ ದಾಖಲಿಸಿರುವುದು ಆಕೆಗೆ ಹೊರೆಯಾಗಿದ್ದು, ಕಳೆದೊಂದು ವರ್ಷದಿಂದ ಪಿಂಚಣಿ ಸೌಲಭ್ಯಕ್ಕಾಗಿ ಅಲೆಯುವಂತ ಪರಿಸ್ಥಿತಿ ಇದೆ. ಈ ಕುರಿತ ವರದಿ ಇಲ್ಲಿದೆ..
ಹೊಸನಗರ : ಎರಡು ಕಾರುಗಳು ಪರಸ್ಪರ ಢಿಕ್ಕಿ; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ಶಿವಮೊಗ್ಗ: ಎರಡು ಕಾರುಗಳು ಪರಸ್ಪರ ಢಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 4 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ನಡೆದಿದೆ. ಕೊಪ್ಪದ ಕಡೆಗೆ ಪ್ರಯಾಣ ಬೆಳೆಸುತ್ತಿದ್ದ ಕಾರು ಹಾಗೂ ಶಿರಸಿ ಮಾರ್ಗವಾಗಿ ಸಾಗುತ್ತಿದ್ದ ಮಾರುತಿ ಆಲ್ಟೊ ಕಾರಿನ ಮಧ್ಯೆ ಈ ಅಪಘಾತ ಸಂಭವಿಸಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣವೇ ವಾಹನಗಳಲ್ಲಿ ಸಿಲುಕಿದ್ದ ಗಾಯಾಳುಗಳನ್ನುಸಾರ್ವಜನಿಕರು ರಕ್ಷಿಸಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಮಾರುತಿ ಆಲ್ಟೊ ಕಾರು ಹೊಸನಗರ ತಾಲ್ಲೂಕಿನ ಹಿಂಡ್ಲೆಮನೆ ಗ್ರಾಮದ ನಿವಾಸಿಗೆ ಸೇರಿದ್ದು ಹಾಗೂ ಐ20 ಕಾರು ಶಿರಸಿ ಮೂಲದವರದ್ದು ಎಂದು ತಿಳಿದು ಬಂದಿದೆ. ಈ ಬಗ್ಗೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Explained: ಚಿನ್ನದ ಅಕ್ಷಯ ಯಾತ್ರೆ: ಮಣ್ಣಿನಾಳದಲ್ಲಿದ್ದ ಸಾಮಾನ್ಯ ಅದಿರಿಗೆ ಗೋಲ್ಡನ್ ಕಾಲ ಬಂದಿದ್ಹೇಗೆ?
ಈಜಿಪ್ಟಿನವರು ಚಿನ್ನವನ್ನು 'ಮಣ್ಣಿಗಿಂತ ಹೆಚ್ಚು ಹೇರಳ' ಎಂದು ಬಣ್ಣಿಸಿದರು. ಮಾನವನ ವಿಕಾಸವಾದಂತೆ, ಚಿನ್ನಕ್ಕೂ ಮೌಲ್ಯ ಬರಲಾರಂಭಿಸಿತು. ಆರಂಭದಲ್ಲಿಆಕರ್ಷಕ ಲೋಹವಷ್ಟೇ ಆಗಿದ್ದ ಚಿನ್ನವೀಗ ಜಾಗತಿಕ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವಷ್ಟು ಬೆಳೆದಿದೆ. ಭಾರತದ ಮಟ್ಟಿಗಂತೂ ಚಿನ್ನ ಪ್ರತಿಷ್ಠೆ, ಶ್ರೀಮಂತಿಕತೆ ಮಾನದಂಡದೊಂದಿಗೆ ಸಾಂಸ್ಕೃತಿಕತೆಯೊಳಗೂ ಹಾಸುಹೊಕ್ಕಾಗಿದೆ. ಅದಕ್ಕಾಗೇ ಅಕ್ಷಯ ತೃತೀಯವೇ ಇರಲಿ, ದೀಪಾವಳಿಯೇ ಬರಲಿ ಚಿನ್ನಕ್ಕೆ 'ಗೋಲ್ಡನ್ ಕಾಲ' ಶುರುವಾಗುತ್ತದೆ.
SSLC Results 2026: 10ನೇ ತರಗತಿ ಫಲಿತಾಂಶ ಏ.24ರಂದು ಬಿಡುಗಡೆ ಅನುಮಾನ
ಬೆಂಗಳೂರು: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಕೊಡಬೇಕೆ? ಅಥವಾ ಅಂಕ ನೀಡಬೇಕೆ? ಎಂಬುದರಲ್ಲಿ ಅಂತಿಮ ನಿರ್ಧಾರವಾಗಿಲ್ಲ. ಈ ವಿಚಾರದಲ್ಲಿ ಒಂದಷ್ಟು ಗೊಂದಲವಾಗಿದ್ದಂತೂ ಸತ್ಯ. ಸದ್ಯ ಇದೇ ವಿಚಾರ ಹೈಕೋರ್ಟ್ ಅಂಗಳದಲ್ಲಿರುವ ಕಾರಣ ನಿರೀಕ್ಷೆಯಂತೆ ಏಪ್ರಿಲ್ 24ರಂದು 10ನೇ ತರಗತಿ ಫಲಿತಾಂಶ 2026 (SSLC
ಅಕ್ಷಯ ತೃತೀಯದ ದಿನ ಆಭರಣ ಪ್ರಿಯರಿಗೆ ಗುಡ್ನ್ಯೂಸ್
[…] The post ಅಕ್ಷಯ ತೃತೀಯದ ದಿನ ಆಭರಣ ಪ್ರಿಯರಿಗೆ ಗುಡ್ನ್ಯೂಸ್ first appeared on Vistara News .
ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮನೆಯ ಮೇಲೆ ಇಡಿ ದಾಳಿ: ಬಿಟ್ ಕಾಯಿನ್ ಹಗರಣದ ಲಿಂಕ್ ಕಾರಣ?
ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್ ಎ ಹ್ಯಾರಿಸ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ದಾಳಿ ನಡೆಸಲಾಗಿದೆ. ಎನ್ ಎ ಹ್ಯಾರಿಸ್ ಅಲ್ಲದೆ, ಅವರ ಪುತ್ರ ಮುಹಮ್ಮದ್ ನಲಪಾಡ್ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಇಡಿ ಅಧಿಕಾರಿಗಳ ದಾಳಿಯ ಹಿಂದೆ ಬಿಟ್ ಕಾಯಿನ್ ಹಗರಣದ ಲಿಂಕ್ ಕಾರಣವೇ ಎಂಬ ಅನುಮಾನ ವ್ಯಕ್ತವಾಗಿದೆ. ಇದೀಗ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ವಿವರ ಇಲ್ಲಿದೆ.
ಚಿತ್ತಾಪುರ : ಸಿಡಿಲು ಬಡಿದು ಮರಕ್ಕೆ ಬೆಂಕಿ
ಚಿತ್ತಾಪುರ: ತಾಲೂಕಿನ ಟೆಂಗಳಿ ಕ್ರಾಸ್ ಹತ್ತಿರ ರವಿವಾರ ಸಾಯಂಕಾಲ ಭಾರೀ ಗಾಳಿ-ಮಳೆ ಹಾಗೂ ಅಬ್ಬರದ ನಡುವೆ ಒಣಗಿದ ಮರವೊಂದಕ್ಕೆ ಸಿಡಿಲು ಬಡಿದು, ಮರ ಸಂಪೂರ್ಣವಾಗಿ ಹೊತ್ತಿ ಉರಿದ ಅಪರೂಪದ ಘಟನೆ ನಡೆದಿದೆ. ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಸಮೀಪದ ಟೆಂಗಳಿ ಕ್ರಾಸ್ ಹತ್ತಿರದ ಹೊಲವೊಂದರಲ್ಲಿ ಒಣಗಿದ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ. ಮಳೆಯ ನಡುವೆಯೂ ಮರ ಬೆಂಕಿಗಾಹುತಿಯಾಗಿದ್ದು, ಗಾಳಿಯ ರಭಸಕ್ಕೆ ಮರದಿಂದ ಹಾರುತ್ತಿರುವ ಬೆಂಕಿಯ ಕಿಡಿಗಳು ದೃಶ್ಯ ಮಿಂಚು ಹುಳುವಿನಂತೆ ಹೊಳೆಯುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಅನೇಕ ತಿಂಗಳಿನಿಂದ ಒಣಗಿದ್ದ ಈ ಹಳೆಯ ಮರ ಸಿಡಿಲಿನ ಅಪಘಾತಕ್ಕೆ ಹೊತ್ತಿ ಉರಿದಿದ್ದು, ಘಟನೆಯಿಂದ ಯಾವುದೇ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಲೆಬನಾನ್ನಲ್ಲಿ ಯೇಸುಕ್ರಿಸ್ತರ ಪ್ರತಿಮೆ ಧ್ವಂಸಗೊಳಿಸಿದ ಇಸ್ರೇಲ್ ಸೈನಿಕ: ಜಾಗತಿಕವಾಗಿ ವ್ಯಾಪಕ ಆಕ್ರೋಶ
ಪ್ರತಿಮೆ ಧ್ವಂಸದ ಪೋಟೊ ಹಂಚಿಕೊಂಡಿದ್ದ ಫೆಲೆಸ್ತೀನ್ ಪತ್ರಕರ್ತ
ಬಂಗಾಳದ ರಾಜಕೀಯ ಮತ್ತು ರಕ್ತಸಿಕ್ತ ಚುನಾವಣೆ : EVM ಸದ್ದಿನ ನಡುವೆ ಮನುಷ್ಯ ಜೀವಕ್ಕೆ ಈ ಬಾರಿಯಾದರೂ ಬೆಲೆ ಸಿಗುವುದೇ?
West Bengal Poll and Violence : ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಸದಾ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಲ್ಲಿರುವ ಬಂಗಾಳದಲ್ಲಿ ಈ ಬಾರಿಯಾದರೂ, ಶಾಂತಿಯುತ ಚುನಾವಣೆ ನಡೆಯುತ್ತದೋ, ಇಲ್ಲವೋ, ಮತ್ತದೇ ಹಿಂಸಾಚಾರ ತಾಂಡವಾಡುತ್ತದಾ ಎನ್ನುವುದು ಪ್ರಶ್ನೆಯಾಗಿದೆ. 1960ರಿಂದ ಇದುವರೆಗೆ, ಅದ್ಯಾವುದೇ ಚುನಾವಣೆಯಿರಲಿ, ಅದು ಪೀಸ್’ಫುಲ್ ಆಗಿ ನಡೆದ ಉದಾಹರಣೆಗಳು ಕಮ್ಮಿ. ಇದೇ ಏಪ್ರಿಲ್ ತಿಂಗಳಲ್ಲಿ ಎರಡು ಹಂತದಲ್ಲಿ ಬಂಗಾಳದಲ್ಲಿ ಚುನಾವಣೆ ನಡೆಯಲಿದೆ. ಈ ಬಾರಿಯಾದರೂ, ಶಾಂತಿಯುತ ಚುನಾವಣೆ ನಡೆಯಲಿ ಎನ್ನುವುದು ಎಲ್ಲರ ಆಶಯ.
Gold Rate Fall: ಅಕ್ಷಯ ತೃತೀಯದ ದಿನವೇ ಇಳಿದ ಚಿನ್ನದ ಬೆಲೆ: ಬೆಳ್ಳಿ ಬೆಲೆ ತಟಸ್ಥ
ಮಧ್ಯಪ್ರಾಷ್ಯ ಬಿಕ್ಕಟ್ಟು, ಇರಾನ್ ಯುದ್ಧ ಪರಿಸ್ಥಿತಿಗಳು ಮೂಂದುವರಿದಿರುವ ಸಂದರ್ಭದಲ್ಲಿಯೇ ಚಿನ್ನ ಮಾರುಕಟ್ಟೆಗಳಲ್ಲಿ ಬೆಲೆ ಇಳಿಕೆ ದಾಖಲಿಸಿದೆ. ಜನರಿಗೆ ಸಿಹಿಸುದ್ದಿಯಾಗಿದ್ದು, ಅಕ್ಷಯ ತೃತೀಯದ ದಿನ ಮನೆಗೆ ಬಂಗಾರವನ್ನು ಖರೀದಿಸಿಕೊಂಡು ಹೋಗುವವರಿಗೆ ತುಸು ಅಗ್ಗವಾಗಲಿದೆ.
LPG: ಭಾರತದಲ್ಲಿ ಎಲ್ಪಿಜಿ ಬಳಕೆ ಭಾರಿ ಇಳಿಕೆ: ಕಚ್ಚಾ ತೈಲ ಆಮದು ಕೂಡ ಶೇ.17ರಷ್ಟು ಕುಸಿತ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ ಉಂಟಾದ ಪೂರೈಕೆ ವ್ಯತ್ಯಯದಿಂದಾಗಿ ಮಾರ್ಚ್ ತಿಂಗಳಿನಲ್ಲಿ ಭಾರತದ ಎಲ್ಪಿಜಿ (ಅಡುಗೆ ಅನಿಲ) ಬಳಕೆ ಶೇಕಡಾ 13ರಷ್ಟು ಗಣನೀಯವಾಗಿ ಇಳಿಕೆಯಾಗಿದೆ. ಇದರೊಂದಿಗೆ ದೇಶದ ಕಚ್ಚಾ ತೈಲ ಆಮದು ಕೂಡ ಶೇಕಡಾ 17ರಷ್ಟು ಕುಸಿತ ಕಂಡಿದೆ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ. ಎಲ್ಪಿಜಿ ಬಳಕೆಯಲ್ಲಿ ವ್ಯತ್ಯಯ ಪೆಟ್ರೋಲಿಯಂ ಯೋಜನಾ ಮತ್ತು ವಿಶ್ಲೇಷಣಾ ಘಟಕದ
ಬೆಂಗಳೂರು ನಗರ ವಾಸಿಗಳಿಗೆ ನಿವೇಶನ ಮರೀಚಿಕೆ, ಯೋಜನೆ ಅನುಷ್ಠಾನ ವಿಳಂಬದಿಂದ ಸಮಸ್ಯೆ
ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಬೇಕೆಂಬ ಮಧ್ಯಮ ವರ್ಗದವರ ಕನಸು ಇಂದು ವಿವಿಧ ಕಾರಣಗಳಿಂದಾಗಿ ಸವಾಲಾಗಿ ಪರಿಣಮಿಸಿದೆ. ಹಿಂದೆ ಸಿಐಟಿಬಿಯಂತಹ ಸಂಸ್ಥೆಗಳು ಜನರಿಗೆ ಭರವಸೆ ನೀಡುತ್ತಿದ್ದವು, ಆದರೆ ಪ್ರಸ್ತುತ ಸ್ಥಳೀಯ ಪ್ರಾಧಿಕಾರಗಳ ಆಡಳಿತಾತ್ಮಕ ವಿಳಂಬ, ಯೋಜನಾ ಅನುಷ್ಠಾನದಲ್ಲಿನ ಜಡತ್ವ ಹಾಗೂ ಕಾನೂನು ಸಂಕಷ್ಟಗಳಿಂದಾಗಿ ನಿವೇಶನಗಳ ಹಂಚಿಕೆ ಅರ್ಜಿದಾರರಿಗೆ ಮರೀಚಿಕೆಯಾಗುತ್ತಿದೆ.
ಹೈದರಾಬಾದ್–ಹುಬ್ಬಳ್ಳಿ Fly91 ವಿಮಾನದಲ್ಲಿ ದೋಷ: 4 ಬಳಿಕ ಬೆಂಗಳೂರಲ್ಲಿ ಲ್ಯಾಂಡ್, ಸಂಸ್ಥೆ ಮೇಲೆ ಆಕ್ರೋಶ
ಬೆಂಗಳೂರು: ಏಪ್ರಿಲ್ ಎರಡನೇ ವಾರದಿಂದ ಆರಂಭಿಸಲಾಗಿದ್ದ ಹುಬ್ಬಳ್ಳಿ-ಹೈದರಾಬಾದ್ ಫ್ಲೈ 91 (Fly 91 Flight)ವಿಮಾನ ಸೇವೆಯಲ್ಲಿ ತೊಂದರೆ ಆಗಿದೆ. ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನವು ಆಗಸದಲ್ಲೇ ನಾಲ್ಕು ಗಂಟೆ ಹಾರಾಡಿದೆ. ಪ್ರಯಾಣಿಕರು ಆತಂಕಗೊಂಡು ಕಣ್ಣೀರಿಟ್ಟ ವಿಡಿಯೋಗಳು ಹರಿದಾಡುತ್ತಿವೆ. ಲ್ಯಾಂಡ್ ಆದ ಬಳಿಕ ಫ್ಲೈ 91 ವಿಮಾನಯಾನ ಸಂಸ್ಥೆಯ ನಿರ್ಲಕ್ಷ್ಯಕ್ಕೆ
’ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ : ಕೋಡಿಶ್ರೀಗಳ ಹೊಸ ಭವಿಷ್ಯ - ಏನಿದರ ಅರ್ಥ?
Kodi Mutt Swamiji Prediction : ಮಕರ ಸಂಕ್ರಾಂತಿ ಮತ್ತು ಯುಗಾದಿ ಹಬ್ಬದ ಆಸುಪಾಸಿನಲ್ಲಿ ಭವಿಷ್ಯವನ್ನು ನುಡಿಯುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಂಡ್ಯ ಜಿಲ್ಲೆ ಕಿಕ್ಕೇರಿಯಲ್ಲಿ ಭವಿಷ್ಯವನ್ನು ನುಡಿದಿದ್ದಾರೆ. ಮಾನ್ಸೂನ್ ಸರಿಯಾದ ಸಮಯಕ್ಕೆ ಬರಲಿದೆ, ಅಣೆಕಟ್ಟುಗಳು ತುಂಬಲಿವೆ, ಆದರೆ ಅವಘಡ ತಪ್ಪಿದ್ದಲ್ಲ ಎಂದು ಕೋಡಿಶ್ರೀಗಳು ಹೇಳಿದ್ದಾರೆ.
ಬೇಸಿಗೆಯೆಂದರೆ, ಅದು ನೀರು ಆಹಾರ ಆರೋಗ್ಯ ಎಲ್ಲದರ ಮೇಲೆ ಪ್ರಭಾವ ಬೀರುತ್ತದೆ. ಹೆಚ್ಚು ಬ್ಯಾಕ್ಟೀರಿಯಾ ಚಟುವಟಿಕೆಗಳು ಆರೋಗ್ಯವನ್ನು ಕೆಡಿಸುವುದರಿಂದ ಸೇವಿಸುವ ಆಹಾರ, ನೀರಿನ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು.
ಕನಕಗಿರಿ ಉತ್ಸವಕ್ಕೆ ಕೊನೆಗೂ ಕಾಲ ಬಂತು , ಮೇ 9, 10 ಕ್ಕೆ ಉತ್ಸವ ನಿಗದಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕೊನೆಗೂ 'ಕನಕಗಿರಿ ಉತ್ಸವ' ಆಚರಣೆಗೆ ದಿನಾಂಕ ನಿಗದಿಯಾಗಿದೆ. ಈ ಹಿಂದೆ ಸ್ಥಳೀಯವಾಗಿ ವ್ಯಕ್ತವಾದ ಪರ-ವಿರೋಧದ ಅಭಿಪ್ರಾಯಗಳಿಂದಾಗಿ ಉತ್ಸವವನ್ನು ಕೈಬಿಡಲಾಗಿತ್ತಾದರೂ, ಈಗ ಸಾರ್ವಜನಿಕರ ಒತ್ತಾಸೆಯಂತೆ ಮೇ 9 ಮತ್ತು 10 ರಂದು ಅದ್ಧೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ.
ಅಫಜಲಪುರ: ಈಜಲು ಹೋದ ಯುವಕನೋರ್ವ ನೀರಿನಲ್ಲಿ ಕಲ್ಲಿನ ಪದರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮಾಶಾಳ ಗ್ರಾಮದ ಹೊರವಲಯದ ಕಲ್ಲಿನ ಖಣಿಯಲ್ಲಿ ರವಿವಾರ ನಡೆದಿದೆ. ಕರಜಗಿ ಗ್ರಾಮದ ಕಿರಣ್ ರೇವೂರ(24) ಮೃತ ಯುವಕ ಎಂದು ತಿಳಿದುಬಂದಿದೆ. ಕಿರಣ್ ತನ್ನ ಗೆಳೆಯರೊಂದಿಗೆ ಮಾಶಾಳ ಗ್ರಾಮದ ಹೊರವಲಯದ ಕಲ್ಲಿನ ಖಣಿಯಲ್ಲಿ ಈಜಾಡಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣಾಧಿಕಾರಿ ವಿಶ್ವನಾಥ ಭೇಟಿ ನೀಡಿ, 'ಸುಮಾರು 3 ಗಂಟೆ ನಡೆಸಲಾದ ಕಾರ್ಯಾಚರಣೆ ನಂತರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಪಿಎಸ್ಐ ಶಾಂತಪ್ಪ ಹಾಗೂ ವಿಶ್ವನಾಥ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Liquor: ಹೊಸ ಅಬಕಾರಿ ನೀತಿ: ಮತ್ತಷ್ಟು ಕೈಗೆಟುಕುವ ದರಕ್ಕೆ ಅಗ್ಗದ ಮದ್ಯ, ಪ್ರೀಮಿಯಂ ಬ್ರ್ಯಾಂಡ್ಗಳು ದುಬಾರಿ
ಬೆಂಗಳೂರು: ರಾಜ್ಯದ ಮದ್ಯ ಪ್ರಿಯರಿಗೆ ಸರ್ಕಾರವು ಸಿಹಿ ಮತ್ತು ಕಹಿ ಎರಡೂ ಸುದ್ದಿಯನ್ನು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ಘೋಷಿಸಿದಂತೆ, ರಾಜ್ಯ ಅಬಕಾರಿ ಸುಂಕದ ನೀತಿಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲಾಗಿದ್ದು, ಇದಕ್ಕಾಗಿ ಕರಡು ಮಸೂದೆಯನ್ನು ಪ್ರಕಟಿಸಲಾಗಿದೆ. ಹೊಸ ನಿಯಮದ ಪ್ರಕಾರ, ಕಡಿಮೆ ಬೆಲೆಯ ಮದ್ಯದ ದರದಲ್ಲಿ ಇಳಿಕೆಯಾಗಲಿದ್ದರೆ, ದುಬಾರಿ ಬೆಲೆಯ ಮದ್ಯದ ದರ ಮತ್ತಷ್ಟು
Salary Cut: ಹಿಮಾಚಲ ಪ್ರದೇಶದಲ್ಲಿ ಮುಂದುವರಿದ ವೇತನ ಕಡಿತದ ಬಿಸಿ: ಈಗ ಮುಖ್ಯ ಕಾರ್ಯದರ್ಶಿ, ಡಿಜಿಪಿ ಸರದಿ
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ಶಾಸಕರ ವೇತನ ಕಡಿತದ ಬೆನ್ನಲ್ಲೇ, ಈಗ ರಾಜ್ಯದ ಹಿರಿಯ ಅಧಿಕಾರಿಗಳಿಗೂ ಆರ್ಥಿಕ ಮಿತವ್ಯಯದ ಬಿಸಿ ತಟ್ಟಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹಳಿಗೆ ತರುವ ನಿಟ್ಟಿನಲ್ಲಿ ಸರ್ಕಾರವು ಭಾನುವಾರ ಮಹತ್ವದ ಆದೇಶ ಹೊರಡಿಸಿದ್ದು, ಮುಖ್ಯ ಕಾರ್ಯದರ್ಶಿ ಸಂಜಯ್ ಗುಪ್ತಾ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ತಿವಾರಿ ಸೇರಿದಂತೆ
ಭಾರತ ಪ್ರಭಾವಿ IAS, IPS ಅಧಿಕಾರಿಗಳನ್ನು ನೋಡಿದೆ; ಅಸಲಿ ಪವರ್ ಕೊಡಲು ಗಂಡಸರ ಕೈ ನಡುಗುತ್ತದೆ: ಸಿದ್ದು ಮಠಪತಿ
ಭಾರತ ಪ್ರಭಾವಿ IAS, IPS ಅಧಿಕಾರಿಗಳನ್ನು ನೋಡಿದೆ; ಅಸಲಿ ಪವರ್ ಕೊಡಲು ಗಂಡಸರ ಕೈ ನಡುಗುತ್ತದೆ: ಹವ್ಯಾಸಿ ಬರಹಗಾರ ಸಿದ್ದು ಮಠಪತಿ ಅವರ ಬರಹ ಇಲ್ಲಿದೆ. ದಶಕಗಳಿಂದ ಈ ದೇಶ ಅತ್ಯದ್ಭುತ ಮಹಿಳಾ ನಾಯಕಿಯರನ್ನು, ಪ್ರಭಾವಿ IAS, IPS ಅಧಿಕಾರಿಗಳನ್ನು, ಕ್ರಾಂತಿಕಾರಿ ಹೋರಾಟಗಾರ್ತಿಯರನ್ನು ನೋಡಿದೆ. ಆದರೆ, ದೇಶದ ಭವಿಷ್ಯ ಬರೆಯುವ ಅತಿ ದೊಡ್ಡ ಪಂಚಾಯಿತಿಯಲ್ಲಿ ಅವರಿಗೆ ಸರಿಯಾದ

35 C