SENSEX
NIFTY
GOLD
USD/INR

Weather

20    C
... ...View News by News Source

ಬ್ರಹ್ಮಾವರ | ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು 1.38 ಲಕ್ಷ ರೂ. ವಂಚನೆ

ಬ್ರಹ್ಮಾವರ: ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿ ಆನ್‌ಲೈನ್ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇರೂರು ಗ್ರಾಮದ ರೀಟಾ ರೊಡ್ರಿಗಸ್(50) ಎಂಬವರಿಗೆ ನ.20ರಂದು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಎಟಿಎಂ ರಿನಿವಲ್ ಮಾಡಲು ಇದೆ ಎಂದು ಹೇಳಿ, ಆಧಾರ್ ಕಾರ್ಡ್, ಪಾನ್ ಕಾರ್ಡ್ ವಿವರ ಪಡೆದು ನಂತರ ಮೊಬೈಲ್‌ಗೆ ಓಟಿಪಿ ಕಳುಹಿಸಿದನು. ಅದನ್ನು ಕೇಳಿ ಪಡೆದು ರೀಟಾ ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಆರು ಬಾರಿ ಒಟ್ಟು ರೂ 1,38,900ರೂ. ಹಣವನ್ನು ತನ್ನ ಖಾತೆಗೆ ವರ್ಗಾಯಿಸಿ ಕೊಂಡು ವಂಚಿಸಿರುವುದಾಗಿ ದೂರಲಾಗಿದೆ.

ವಾರ್ತಾ ಭಾರತಿ 1 Dec 2025 9:31 pm

ಮಧ್ಯಪ್ರದೇಶದ ಕ್ರೀಡಾ ನೀತಿಯಲ್ಲಿ ಬದಲಾವಣೆ: ಒಲಿಂಪಿಕ್ಸ್, ಏಶ್ಯನ್ ಗೇಮ್ಸ್, ಕಾಮನ್‌ವೆಲ್ತ್ ಪದಕ ವಿಜೇತರಿಗೆ ಗಜೆಟಡ್ ಸರಕಾರಿ ಹುದ್ದೆ

ಭೋಪಾಲ, ಡಿ. 1: ಮಧ್ಯಪ್ರದೇಶ ರಾಜ್ಯವು ಕ್ರೀಡೆಗೆ ಕಾಯಕಲ್ಪ ನೀಡುವುದಕ್ಕಾಗಿ ತನ್ನ ಕ್ರೀಡಾ ನೀತಿಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಲು ಮುಂದಾಗಿದೆ. ಒಲಿಂಪಿಕ್ಸ್, ಏಶ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕಗಳನ್ನು ಗೆಲ್ಲುವ ರಾಜ್ಯದ ಕ್ರೀಡಾಪಟುಗಳನ್ನು ಇನ್ನು ಮುಂದೆ ನೇರವಾಗಿ ಗಜೆಟಡ್ ಅಧಿಕಾರಿಗಳಾಗಿ ನೇಮಿಸಿಕೊಳ್ಳಲಾಗುವುದು ಎಂದು ರಾಜ್ಯದ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ವಿಶ್ವಾಸ್ ಸಾರಂಗ್ ತಿಳಿಸಿದ್ದಾರೆ. ವಿಕ್ರಮ ಪ್ರಶಸ್ತಿ ವಿಜೇತರಿಗೆ ತೃತೀಯ ದರ್ಜೆ ಮತ್ತು ನಾಲ್ಕನೇ ದರ್ಜೆ ಉದ್ಯೋಗಗಳನ್ನು ನೀಡುವ ಹಾಲಿ ನಿಯಮವನ್ನು ರಾಜ್ಯ ಸರಕಾರ ಅನುಸರಿಸಿದೆ, ಆದರೆ, ಈ ಮಾನದಂಡವು ಹಲವು ಸಂದರ್ಭಗಳಲ್ಲಿ ಅರ್ಹ ಕ್ರೀಡಾಪಟುಗಳಿಗೆ ನಿರ್ಬಂಧ ವಿಧಿಸಿದೆ ಎಂದು ಸಾರಂಗ್ ಹೇಳಿದರು. ಓರ್ವ ವಿಕ್ರಮ ಪದಕ ವಿಜೇತ ತೃತೀಯ ದರ್ಜೆಯ ಉದ್ಯೋಗಕ್ಕೆ ಅರ್ಹರಾದರೆ ಅವರಿಗೆ ತೃತೀಯ ದರ್ಜೆಯ ಉದ್ಯೋಗವನ್ನೇ ನೀಡಲಾಗುವುದು. ನಾವು ಅವರನ್ನು ಜವಾನರಾಗಿ ನೇಮಿಸುತ್ತೇವೆ ಎಂದು ಹೇಳುವುದು ತಪ್ಪು’’ ಎಂದು ಅವರು ಹೇಳಿದರು. ‘‘ಈಗ ನಾವು ಸಮಗ್ರ ಕ್ರೀಡಾ ನೀತಿಯೊಂದನ್ನು ಜಾರಿಗೆ ತರುತ್ತಿದ್ದೇವೆ. ಇದರ ಪ್ರಕಾರ, ಒಲಿಂಪಿಕ್ಸ್, ಏಶ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕಗಳನ್ನು ಗೆಲ್ಲುವ ನಮ್ಮ ಕ್ರೀಡಾಪಟುಗಳನ್ನು ಗಜೆಟಡ್ ಅಧಿಕಾರಿಗಳಾಗಿ ನೇಮಿಸಲಾಗುವುದು’’ ಎಂದರು. ಇತ್ತೀಚೆಗೆ, ಮಧ್ಯಪ್ರದೇಶದ ಅತ್ಯಂತ ಜನಪ್ರಿಯ ಶೂಟರ್ ಐಶ್ವರ್ಯ ಪ್ರತಾಪ್ ಸಿಂಗ್ ತೋಮರ್ ರಾಜ್ಯ ಸರಕಾರದ ಈಡೇರದ ಭರವಸೆಗಳ ಬಗ್ಗೆ ಸಾರ್ವಜನಿಕವಾಗಿ ಅತೃಪ್ತಿ ವ್ಯಕ್ತಪಡಿಸಿದ್ದರು. ತಾನು ಇನ್ನು ಮುಂದೆ ಮಧ್ಯಪ್ರದೇಶವನ್ನು ಪ್ರತಿನಿಧಿಸುವುದಿಲ್ಲ ಎಂಬುದಾಗಿಯೂ ಅವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ, ಕ್ರೀಡಾ ನೀತಿಯಲ್ಲಿ ಬದಲಾವಣೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ ಎನ್ನಲಾಗಿದೆ.

ವಾರ್ತಾ ಭಾರತಿ 1 Dec 2025 9:17 pm

Udupi | ಅಗ್ನಿ ಅವಘಢ: ಹಳೆಯ ಶಾಲಾ ಬಸ್ ಬೆಂಕಿಗಾಹುತಿ

ಉಡುಪಿ: ಒಣ ಹುಲ್ಲಿಗೆ ಹತ್ತಿಕೊಂಡ ಬೆಂಕಿಯಿಂದ ಹಳೆಯ ಶಾಲಾ ಬಸ್‌ವೊಂದು ಸಂಪೂರ್ಣ ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ನಡೆದಿದೆ. ಅಲೆವೂರು ಪ್ರಗತಿ ನಗರ ಪರಿಸರದಲ್ಲಿ ಒಣ ಹುಲ್ಲಿಗೆ ತಗಲಿದ ಬೆಂಕಿ ಪರಿಸರವಿಡಿ ವ್ಯಾಪಿಸಿದೆ. ಅಲ್ಲೇ ಸಮೀಪ ನಿಲ್ಲಿಸಿದ್ದ ಹಳೆಯ ಖಾಸಗಿ ಶಾಲಾ ಬಸ್ ಬೆಂಕಿಗಾಹುತಿಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಮಲ್ಪೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅವಘಡದಿಂದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 1 Dec 2025 9:13 pm

Government Job: ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ, ₹6 ಕೋಟಿ ನಗದು ಬಹುಮಾನ

ಉತ್ತಮ ತರಬೇತಿ, ತರಬೇತುದಾರರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ. ಕ್ರೀಡಾಪಟುಗಳು ತಮ್ಮ ಗುರಿಸಾಧನೆಗೆ ಹಗಲಿರುಳು ಶ್ರಮಿಸಬೇಕು. ಏಳು ಕೋಟಿ ಕನ್ನಡಿಗರಿರುವ ಕರ್ನಾಟಕದಿಂದ ಪದಕ ಗೆಲ್ಲುವುದು ಅಸಾಧ್ಯವೇನಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ

ಒನ್ ಇ೦ಡಿಯ 1 Dec 2025 9:10 pm

ರೋಹಿತ್, ಕೊಹ್ಲಿ ಹಾಗೂ ಗಂಭೀರ್ ನಡುವಿನ ಉದ್ವಿಗ್ನತೆ ಶಮನಕ್ಕೆ ಬಿಸಿಸಿಐ ಹೆಜ್ಜೆ!

ಮುಂಬೈ, ಡಿ. 1: ಎಲ್ಲಾ ಮಾದರಿಗಳ ಕ್ರಿಕೆಟ್‌ಗೆ ಮಾರ್ಗ ನಕ್ಷೆಯೊಂದನ್ನು ರೂಪಿಸಲು ಮತ್ತು ಪ್ರಮುಖ ವ್ಯಕ್ತಿಗಳ ನಡುವಿನ ಸಂವಹನವನ್ನು ಸುಗಮಗೊಳಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಪುರುಷರ ಕ್ರಿಕೆಟ್ ತಂಡದ ಆಡಳಿತದೊಂದಿಗೆ ಸಭೆಯೊಂದನ್ನು ನಿಗದಿಪಡಿಸಿದೆ. ಸಭೆಯು ಭಾರತ ಮತ್ತು ದಕ್ಷಿಣ ಆಫ್ರಿಕ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಮುನ್ನ ಬುಧವಾರ ರಾಯ್ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯ, ಜಂಟಿ ಕಾರ್ಯದರ್ಶಿ ಪ್ರಭುತೇಜ್ ಸಿಂಗ್ ಭಾಟಿಯ, ಪ್ರಧಾನ ಕೋಚ್ ಗೌತಮ್ ಗಂಭೀರ್ ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಭಾಗವಹಿಸುವ ನಿರೀಕ್ಷೆಯಿದೆ. ಸಭೆಯು ಎರಡನೇ ಏಕದಿನ ಪಂದ್ಯದ ದಿನವೇ ನಡೆಯಲಿರುವುದರಿಂದ ಹಿರಿಯ ಆಟಗಾರರನ್ನು ಕರೆಯುವ ಸಾಧ್ಯತೆ ವಿರಳವಾಗಿದೆ. ಆಯ್ಕೆಯಲ್ಲಿ ಸ್ಥಿರತೆಯನ್ನು ಕಾಯ್ದುಕೊಂಡು ಬರಲು ಆಯ್ಕೆಗಾರರು ಮತ್ತು ತಂಡಾಡಳಿತ ನಡುವೆ ಸಾಮರಸ್ಯ ಇರುವಂತೆ ನೋಡಿಕೊಳ್ಳುವುದು, ವೈಯಕ್ತಿಕ ಬೆಳವಣಿಗೆ ದಾರಿಯನ್ನು ಸುಧಾರಿಸುವುದು ಮತ್ತು ಒಟ್ಟಾರೆ ತಂಡ ನಿರ್ವಹಣೆಯನ್ನು ಹೆಚ್ಚಿಸುವುದು ಈ ಸಭೆಯ ಉದ್ದೇಶವಾಗಿದೆ ಎಂದು ಹಿರಿಯ ಬಿಸಿಸಿಯ ಅಧಿಕಾರಿಯೊಬ್ಬರು ತಿಳಿಸಿದರು. ‘‘ಟೆಸ್ಟ್ ಸರಣಿಯ ಅವಧಿಯಲ್ಲಿ, ಮೈದಾನದ ಒಳಗಿನ ಮತ್ತು ಹೊರಗಿನ ಗೊಂದಲಕಾರಿ ತಂತ್ರಗಾರಿಕೆಗಳು ಗಮನ ಸೆಳೆದಿದ್ದವು. ನಾವು ಈ ವಿಷಯದಲ್ಲಿ ಸ್ಪಷ್ಟತೆ ಬಯಸುತ್ತೇವೆ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ಬಯಸುತ್ತೇವೆ. ಮುಖ್ಯವಾಗಿ ಮುಂದಿನ ಟೆಸ್ಟ್ ಸರಣಿಗೆ ಎಂಟು ತಿಂಗಳು ಇರುವುದರಿಂದ ಈ ವಿಷಯವನ್ನು ಈಗಲೇ ಇತ್ಯರ್ಥಪಡಿಸಲು ನಿರ್ಧರಿಸಲಾಗಿದೆ’’ ಎಂದು ಅವರು ಹೇಳಿದರು. ಭಾರತೀಯ ಕ್ರಿಕೆಟ್ ತಂಡದ ಆಡಳಿತ ಮತ್ತು ಹಿರಿಯ ಸೀಮಿತ ಓವರ್‌ಗಳ ಆಟಗಾರರ ನಡುವೆ ಸಂವಹನ ಕೊರತೆ ಉಂಟಾಗಿರುವ ಬಗ್ಗೆಯೂ ಕಳವಳಗಳಿವೆ ಎನ್ನುವುದನ್ನು ಆ ಅಧಿಕಾರಿ ಒಪ್ಪಿಕೊಂಡಿದ್ದಾರೆ. ‘‘ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತವು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಅದರ ಬಳಿಕ ನಡೆಯುವ ಏಕದಿನ ವಿಶ್ವಕಪ್‌ಗೂ ಭಾರತ ಪ್ರಬಲ ದಾವೇದಾರ ತಂಡವಾಗಿದೆ. ಹಾಗಾಗಿ, ಈ ಸಮಸ್ಯೆಗಳನ್ನು ಕ್ಷಿಪ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ನಾವು ಬಯಸಿದ್ದೇವೆ’’ ಎಂದರು. ಇಲ್ಲಿ ಯಾವುದೇ ಹೆಸರುಗಳು ಪ್ರಸ್ತಾಪವಾಗದಿದ್ದರೂ, ತಂಡಾಡಳಿತ ಹಾಗೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವಿನ ಕುಸಿಯುತ್ತಿರುವ ಸಂವಹನದ ಹಿನ್ನೆಲೆಯಲ್ಲಿ ಈ ಸಭೆಯನ್ನು ಏರ್ಪಡಿಸಲಾಗಿದೆ ಎನ್ನಲಾಗಿದೆ. ಈ ಇಬ್ಬರು ಆಟಗಾರರು ಅಂತರ್‌ರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ಗೆ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಅಂದಿನಿಂದ ಈ ಇಬ್ಬರು ಆಟಗಾರರು ಮತ್ತು ತಂಡದ ಪ್ರಸಕ್ತ ಆಡಳಿತ, ಅದರಲ್ಲೂ ಮುಖ್ಯವಾಗಿ ಪ್ರಧಾನ ಕೋಚ್ ಗೌತಮ್ ಗಂಭೀರ್ ನಡುವಿನ ಸಂಪರ್ಕ ಕಡಿಮೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಗಂಭೀರ್ ಹಾಗೂ ರೋಹಿತ್, ಕೊಹ್ಲಿ ನಡುವಿನ ಸಂಬಂಧ ಹಳಸಿದೆಯೇ? ದಕ್ಷಿಣ ಆಫ್ರಿಕ ವಿರುದ್ಧದ ಟೆಸ್ಟ್ ಸರಣಿಗೆ ಹೋಲಿಸಿದರೆ, ಅದೇ ತಂಡದ ವಿರುದ್ಧದ ಏಕದಿನ ಸರಣಿಯಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಭಾರತೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಈಗಲೂ ಮುಖ್ಯ ಪಾತ್ರವನ್ನು ವಹಿಸುತ್ತಿದ್ದಾರೆ. ಆದರೆ ಅವರ ಭವಿಷ್ಯ ಕುರಿತ ನಿಗೂಢತೆ ಮುಂದುವರಿದಿದೆ. ಅದೇ ವೇಳೆ, ಅವರು ಮತ್ತು ಪ್ರಧಾನ ಕೋಚ್ ಗೌತಮ್ ಗಂಭೀರ್ ನಡುವಿನ ಸಂಬಂಧವು ಈಗ ಎಲ್ಲರ ಚರ್ಚೆಯ ವಿಷಯವಾಗಿದೆ. ಪ್ರಧಾನ ಕೋಚ್ ಆಗಿ ತಂಡಕ್ಕೆ ಬಂದ ಹೊಸತರಲ್ಲಿ ಕೊಹ್ಲಿ ಮತ್ತು ರೋಹಿತ್ ಜೊತೆ ಹೊಂದಿದ್ದ ಸಂಬಂಧವನ್ನು ಗೌತಮ್ ಗಂಭೀರ್ ಈಗ ಹೊಂದಿಲ್ಲ ‘ದೈನಿಕ್ ಜಾಗರಣ್’ ಪತ್ರಿಕೆ ವರದಿ ಮಾಡಿದೆ. ವಾಸ್ತವವಾಗಿ, ಈ ಇಬ್ಬರು ಹಿರಿಯ ಆಟಗಾರರು ಮತ್ತು ಕೋಚ್ ನಡುವಿನ ಸಂಬಂಧ ಹಳಸುತ್ತಿದೆ ಎಂದು ವರದಿ ಹೇಳಿದೆ. ‘‘ಗೌತಮ್ ಗಂಭೀರ್ ಹಾಗೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವಿನ ಸಂಬಂಧವು ಎಷ್ಟು ಉತ್ತಮವಾಗಿರಬೇಕಾಗಿತ್ತೋ ಅಷ್ಟು ಉತ್ತಮವಾಗಿಲ್ಲ. ಈ ಇಬ್ಬರು ಆಟಗಾರರ ಭವಿಷ್ಯಕ್ಕೆ ಸಂಬಂಧಿಸಿ ಒಂದು ಸಭೆ ನಡೆಯುವ ಸಾಧ್ಯತೆಯಿದೆ. ಇದು ರಾಯ್ಪುರ ಅಥವಾ ವಿಶಾಖಪಟ್ಟಣಂನಲ್ಲಿ ನಡೆಯಬಹುದಾಗಿದೆ. ಈ ನಗರಗಳಲ್ಲಿ ಕ್ರಮವಾಗಿ ದಕ್ಷಿಣ ಆಫ್ರಿಕ ವಿರುದ್ಧದ ಎರಡು ಮತ್ತು ಮೂರನೇ ಏಕದಿನ ಪಂದ್ಯಗಳು ನಡೆಯಲಿವೆ’’ ಎಂದು ದೈನಿಕ್ ಜಾಗರಣ್ ಹೇಳಿದೆ.

ವಾರ್ತಾ ಭಾರತಿ 1 Dec 2025 9:07 pm

ಉಡುಪಿ: ಬೀದಿ ನಾಯಿಗಳ ಉಪಟಳ ತಡೆಯಲು ಕ್ರಮಕ್ಕೆ ಸೂಚನೆ

ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ, ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಪುರಸಭಾ ಮುಖ್ಯಾಧಿಕಾರಿಗೆ ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತಮ್ಮ ಸಂಸ್ಥೆಯ ಅವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದರ ಮೇಲ್ವಿಚಾರಣೆ ನಡೆಸಲು ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವಂತೆ ಸೂಚಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಮತ್ತೆ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಈ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 1 Dec 2025 9:06 pm

ರಾಜ್ಯ ಪಿಕಲ್‌ಬಾಲ್ ಅಸೋಸಿಯೇಶನ್‌ಗೆ ಒಲಿಂಪಿಕ್ಸ್ ಅಸೋಸಿಯೇಶನ್ ಮನ್ನಣೆ: 9 ವರ್ಷಗಳ ಹೋರಾಟಕ್ಕೆ ಸಂದ ಜಯ

ಬೆಂಗಳೂರು, ಡಿ. 1: ರಾಜ್ಯದಲ್ಲಿ ಪಿಕಲ್‌ಬಾಲ್ ಕ್ರೀಡೆಗೆ ನಾಂದಿ ಹಾಡಿದ ಕರ್ನಾಟಕ ರಾಜ್ಯ ಪಿಕಲ್‌ಬಾಲ್ ಅಸೋಸಿಯೇಶನ್ (ಕೆಎಸ್‌ಪಿಎ)ಗೆ ಕೊನೆಗೂ ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಶನ್ (ಕೆಒಎ) ಮಾನ್ಯತೆ ನೀಡಿದೆ. ಈ ಮೂಲಕ 2016ರಿಂದ ರಾಜ್ಯದಲ್ಲಿ ಪಿಕಲ್‌ಬಾಲ್ ಕ್ರೀಡೆಯನ್ನು ಪೋಷಿಸಿದ ಶ್ರಮಕ್ಕೆ ಕೆಎಸ್‌ಪಿಎಗೆ ಗೆಲುವು ಸಿಕ್ಕಂತಾಗಿದೆ. ಶನಿವಾರ ಕರ್ನಾಟಕ ರಾಜ್ಯ ಪಿಕಲ್ ಬಾಲ್ ಅಸೋಸಿಯೇಶನ್ ಅಧಿಕೃತವಾಗಿ ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್‌ನಿಂದ ಮಾನ್ಯತೆ ಪ್ರಮಾಣಪತ್ರ ಸ್ವೀಕರಿಸಿದೆ. ಇದರೊಂದಿಗೆ ಅದು ರಾಜ್ಯದಲ್ಲಿ ಪಿಕಲ್‌ಬಾಲ್ ಕ್ರೀಡೆಯ ಏಕೈಕ ಅಧಿಕೃತ ಸಂಸ್ಥೆಯಾಗಿದೆ. ಕರ್ನಾಟಕ ರಾಜ್ಯ ಪಿಕಲ್‌ಬಾಲ್ ಅಸೋಸಿಯೇಶನ್ ಅಧ್ಯಕ್ಷ ಎ.ಜಿ. ಶಿವಕುಮಾರ್ ಮತ್ತು ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ರಜತ್ ಕಂಕರ್ ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಗೋವಿಂದರಾಜು ಮತ್ತು ಕಾರ್ಯದರ್ಶಿ ಅನಂತರಾಜು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 2016ರಿಂದಲೂ ಕರ್ನಾಟಕ ರಾಜ್ಯ ಪಿಕಲ್‌ಬಾಲ್ ಅಸೋಸಿಯೇಶನ್ ಹಲವು ಜಿಲ್ಲಾ ಮತ್ತು ರಾಜ್ಯ ಮಟ್ಟದ ಟೂರ್ನಿಗಳನ್ನು ಆಯೋಜಿಸಿದೆ. ಅದು ನವೆಂಬರ್ 21ರಿಂದ 24ರವರೆಗೆ ವಿಶ್ವ ಮಟ್ಟದ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌ನ್ನು ಯಶಸ್ವಿಯಾಗಿ ನಡೆಸಿದೆ.

ವಾರ್ತಾ ಭಾರತಿ 1 Dec 2025 9:01 pm

ಕಲೆ ಮತ್ತು ಸಂಸ್ಕೃತಿಯ ಕುರಿತು ಅರಿವು ಅಗತ್ಯ: ಎಂ.ಎ.ಗಫೂರ್

ಉಡುಪಿ: ಮನುಷ್ಯನ ಜೀವನ ಶೈಲಿಯು ಒತ್ತಡದೊಂದಿಗೆ ಸಾಗುತ್ತಿದ್ದು, ಕಲೆ ಸಂಸ್ಕೃತಿಯ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಾಗ ಮತ್ತು ಅದರಲ್ಲಿ ತೊಡಗಿಕೊಂಡಾಗ ಜೀವನದ ಬಗ್ಗೆ ವಿಶ್ವಾಸ, ವಿಶೇಷ ಪ್ರೀತಿ ಮೂಡಲು ಸಾಧ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದ್ದಾರೆ. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಕ್ಷ ರಂಗಾಯಣ ಕಾರ್ಕಳ ವತಿಯಿಂದ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ನಡೆದ ನಾಟಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಕಲಾವಿದರಿಗೆ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಸರಕಾರ ಇಂತಹ ಕಾರ್ಯಕ್ರಮ ವನ್ನು ಅಯೋಜಿಸಿದೆ. ಕಲೆ, ಸಾಹಿತ್ಯಕ್ಕೆ ಸಾಹಿತಿಗಳ ಕೊಡುಗೆ ಅಪಾರ ವಾಗಿದ್ದು, ಇತಿಹಾಸದ ಕುರಿತು ಅರಿವು ಮೂಡಿದಾಗ ಉತ್ತಮ ನಾಗರಿಕರಾಗಲು ಸಾಧ್ಯ ಎಂದರು. ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಪದ್ಮನಾಭ ಗೌಡ ಉಪಸ್ಥಿತರಿದ್ದರು. ಯಕ್ಷರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಕಾರ್ತಿಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದ ನಂತರ ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ ನಿರ್ದೇಶನದ ಗುಲಾಮನ ಸ್ವಾತಂತ್ರ್ಯ ಯಾತ್ರೆ ನಾಟಕ ಪ್ರದರ್ಶನಗೊಂಡಿತು.

ವಾರ್ತಾ ಭಾರತಿ 1 Dec 2025 8:58 pm

ಶಾಲಾ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆ; ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಬೆಂಗಳೂರು : ರಾಜ್ಯ ಸರಕಾರವು ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಎಲ್ಲ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ನಾಯಿಗಳ ಸಂಖ್ಯೆ ಒಳಗೊಂಡ ಮಾಹಿತಿಯನ್ನು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ನೀಡಬೇಕು ಎಂದು ತಿಳಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಸುತ್ತೋಲೆಯನ್ನು ಹೊರಡಿಸಿದ್ದು, ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುತಿಸಿದ ನಾಯಿಗಳನ್ನು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ನಾಯಿ ಆಶ್ರಯ ತಾಣಗಳಿಗೆ ಸಾಗಿಸಬೇಕು. ಒಮ್ಮೆ ನಾಯಿಗಳನ್ನು ಶಿಕ್ಷಣ ಸಂಸ್ಥೆಯ ಆವರಣದಿಂದ ಸ್ಥಳಾಂತರಿಸಿದ ನಂತರ ಬೀದಿ ನಾಯಿಗಳು ಶಾಲಾ ಆವರಣದೊಳಗೆ ಪ್ರವೇಶಿಸದಂತೆ ತಡೆಯಲು ಸಂಸ್ಥೆಯ ಆವರಣಕ್ಕೆ ಕಾಂಪೌಂಡ್/ಬೇಲಿಯನ್ನು ನಿರ್ಮಿಸಬೇಕು ಎಂದಿದ್ದಾರೆ. ಈ ಕುರಿತಾಗಿ ಮೇಲುಸ್ತುವಾರಿ ಮಾಡಲು ಹಾಗೂ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಲು ಆಯಾ ಶಾಲೆಯ ಮುಖ್ಯಶಿಕ್ಷಕರು ಹಿರಿಯ ಸಹಶಿಕ್ಷಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಬೇಕು. ಆಯಾ ತಾಲ್ಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳು ಶಾಲಾ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಗಟ್ಟಲು ಸೂಕ್ತ ಕ್ರಮವಹಿಸಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಶಾಲಾ-ಕಾಲೇಜುಗಳಲ್ಲಿ ಅನುಷ್ಠಾನ ಆಗುತ್ತಿರುವುದನ್ನು ಪ್ರತಿ 15 ದಿನಗಳಿಗೊಮ್ಮೆ ಶಾಲಾ-ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಸಿ, ಅನುಪಾಲನೆ ಮಾಡಬೇಕು ಎಂದು ಅವರು ಹೇಳಿದ್ದಾರೆ.

ವಾರ್ತಾ ಭಾರತಿ 1 Dec 2025 8:58 pm

ಕರ್ನಾಟಕದಲ್ಲಿ ಮುಟ್ಟಿನ ರಜೆ ಕಡ್ಡಾಯ; ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಸಂಘ

ಮುಟ್ಟಿನ ರಜೆಯನ್ನು ಸರ್ಕಾರ ತನ್ನ ಉದ್ಯೋಗಿಗಳಿಗೆ ಕೊಟ್ಟಿಲ್ಲ. ಇನ್ನು ಸರ್ಕಾರಕ್ಕೆ ಮುಟ್ಟಿನ ರಜೆ ಕಡ್ಡಾಯಗೊಳಿಸುವ ಅಧಿಕಾರವಿಲ್ಲ ಎಂದು ಬೆಂಗಳೂರು ಹೋಟೆಲ್ ಸಂಘ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನ.12ರಂದು ಸರ್ಕಾರ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ರಜೆ ಕಡ್ಡಾಯಗೊಳಿಸಿ, ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಹೊಟೇಲ್‌ ಮಾಲೀಕರ ಸಂಘ ಹೈ ಕೋರ್ಟ್‌ ಮೆಟ್ಟಿಲೇರಿದೆ.

ವಿಜಯ ಕರ್ನಾಟಕ 1 Dec 2025 8:58 pm

ಭ್ರಷ್ಟಾಚಾರ ಪ್ರಕರಣ|ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 5 ವರ್ಷ ಜೈಲು

ಢಾಕ, ಡಿ.1: ಭೂ ಹಗರಣಕ್ಕೆ ಸಂಬಂಧಿಸಿ ಬಾಂಗ್ಲಾದೇಶದ ನ್ಯಾಯಾಲಯವು ಪದಚ್ಯುತ ಪ್ರಧಾನಿ ಶೇಖ್ ಹಸೀನಾರಿಗೆ ಐದು ವರ್ಷ ಮತ್ತು ಅವರ ಸೊಸೆ, ಬ್ರಿಟನ್‍ನ ಲೇಬರ್ ಪಕ್ಷದ ಸಂಸದೆ ಟುಲಿಪ್ ಸಿದ್ದಿಕ್‍ಗೆ ಎರಡು ವರ್ಷಗಳ ಜೈಲುಶಿಕ್ಷೆ ಘೋಷಿಸಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಢಾಕಾದ ಹೊರವಲಯದಲ್ಲಿರುವ ಸರ್ಕಾರಿ ಸ್ವಾಮ್ಯದ `ಪೂರ್ವಾಚಲ ನ್ಯೂ ಟೌನ್ ಪ್ರೊಜೆಕ್ಟ್'ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣ ಇದಾಗಿದೆ. ಆಗ ಪ್ರಧಾನಿಯಾಗಿದ್ದ ಶೇಖ್ ಹಸೀನಾ ಸೈಟ್ ಹಂಚಿಕೆ ಪ್ರಕ್ರಿಯೆಯಲ್ಲಿ ತನ್ನ ಪ್ರಭಾವ ಬಳಸಿಕೊಂಡಿದ್ದರು. ಟುಲಿಪ್ ಸಿದ್ದಿಕಿ ತನ್ನ ತಾಯಿ(ಹಸೀನಾ ಅವರ ಸಹೋದರಿ) ಹೆಸರಿನಲ್ಲಿ ಸೈಟ್ ಪಡೆಯಲು ಹಸೀನಾ ಹೆಸರು ಬಳಸಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು. ಇದೇ ಪ್ರಕರಣದಲ್ಲಿ ಟುಲಿಪ್ ಅವರ ತಾಯಿ ಶೇಖ್ ರೆಹಾನಾ ಅವರಿಗೂ 7 ವರ್ಷದ ಜೈಲುಶಿಕ್ಷೆ ವಿಧಿಸಲಾಗಿದೆ. ಈ ಮೂವರೂ ನ್ಯಾಯಾಲಯದ ವಿಚಾರಣೆಗೆ ಅಥವಾ ತೀರ್ಪು ಪ್ರಕಟಿಸುವಾಗ ಹಾಜರಿರಲಿಲ್ಲ.

ವಾರ್ತಾ ಭಾರತಿ 1 Dec 2025 8:55 pm

ಮಹಿಳಾ ಸಿಬ್ಬಂದಿಗೆ ಋತುಚಕ್ರದ ರಜೆ; ಬೆಂಗಳೂರು ಹೋಟೆಲ್‌ಗಳ ಸಂಘದಿಂದ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಹೈಕೋರ್ಟ್ ಮಟ್ಟಿಲೇರಿದೆ. ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದ್ದು, ಅರ್ಜಿಯು ಇನ್ನಷ್ಟೇ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ. ಅರ್ಜಿದಾರರ ಮನವಿ: ಕಾರ್ಮಿಕರು ಅಥವಾ ನೌಕರರ ಆರೋಗ್ಯ, ಯೋಗಕ್ಷೇಮ, ಸುರಕ್ಷತೆ ಕೆಲಸದ ಅವಧಿ, ವಾರದ ರಜೆ, ಒಟ್ಟು ರಜೆ ದಿನಗಳು, ವೇತನ ಸಹಿತ ರಜೆ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಕಾಯ್ದೆ-ಕಾನೂನುಗಳಿದ್ದು, ಅದರಂತೆ ಉದ್ದಿಮೆ, ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ. ಈಗ ಏಕಾಏಕಿ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ವೇತನಸಹಿತ ಋತುಚಕ್ರ ರಜೆ ಸೌಲಭ್ಯ ಒದಗಿಸಲು ಸರಕಾರ ಅಧಿಸೂಚನೆ ಹೊರಡಿಸಿದೆ. ಇದರಿಂದ, ಉದ್ದಿಮೆಗಳ ಕಾರ್ಯನಿರ್ವಹಣೆಯಲ್ಲಿ ಅಡಚಣೆ ಆಗಲಿದ್ದು, ಆರ್ಥಿಕ ಹೊರೆ ಸಹ ಬೀಳಲಿದೆ. ಕಾಯ್ದೆಗೆ ತಿದ್ದುಪಡಿ ಇಲ್ಲದೆ, ಕಾರ್ಯಕಾರಿ ಆದೇಶದ ಮೂಲಕ ಇಂತಹ ಸೌಲಭ್ಯ ಜಾರಿಗೊಳಿಸಲು ಅವಕಾಶವಿಲ್ಲ. ಇದೊಂದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದ್ದು, ಸರಕಾರದ ಅಧಿಸೂಚನೆ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ವಾರ್ತಾ ಭಾರತಿ 1 Dec 2025 8:53 pm

ಪ್ರಧಾನಿ ನೆತನ್ಯಾಹು ವಿರುದ್ಧ ಇಸ್ರೇಲ್‍ನಲ್ಲಿ ಭುಗಿಲೆದ್ದ ಪ್ರತಿಭಟನೆ: ಕ್ಷಮಾದಾನ ಕೋರಿಕೆ ತಿರಸ್ಕರಿಸುವಂತೆ ಅಧ್ಯಕ್ಷರಿಗೆ ಆಗ್ರಹ

ಟೆಲ್ ಅವೀವ್, ಡಿ.1: ಭ್ರಷ್ಟಾಚಾರ ಪ್ರಕರಣದಲ್ಲಿ ಕ್ಷಮಾದಾನ ನೀಡಬೇಕೆಂಬ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕೋರಿಕೆಯನ್ನು ಮಾನ್ಯ ಮಾಡಬಾರದು ಎಂದು ಆಗ್ರಹಿಸಿ ಅಧ್ಯಕ್ಷ ಇಸಾಕ್ ಹೆರ್ಜೋಗ್ ಅವರ ನಿವಾಸದ ಎದುರು ರವಿವಾರ ತಡರಾತ್ರಿ ಬೃಹತ್ ಪ್ರತಿಭಟನೆ ನಡೆದಿರುವುದಾಗಿ ವರದಿಯಾಗಿದೆ. ದೀರ್ಘಾವಧಿಯಿಂದ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯಲ್ಲಿ ತನಗೆ ಕ್ಷಮಾದಾನ ನೀಡಬೇಕೆಂದು ರವಿವಾರ ನೆತನ್ಯಾಹು ಅಧ್ಯಕ್ಷರಿಗೆ ಅಧಿಕೃತ ಕೋರಿಕೆ ಸಲ್ಲಿಸಿದ್ದರು. ಆದರೆ ತಪ್ಪೊಪ್ಪಿಕೊಳ್ಳದೆ ಮತ್ತು ಪಶ್ಚಾತ್ತಾಪ ವ್ಯಕ್ತಪಡಿಸದೆ ಕ್ಷಮಾದಾನ ಕೋರುವುದನ್ನು ವಿರೋಧಿಸಿ ` ಕ್ಷಮೆ ಅಂದರೆ ಬನಾನಾ ರಿಪಬ್ಲಿಕ್' ಎಂಬ ಬ್ಯಾನರ್‌ನಡಿ ಪ್ರತಿಭಟನೆ ನಡೆಸಲಾಗಿದೆ. ಕೆಲವು ಪ್ರತಿಭಟನಾಕಾರರು ನೆತನ್ಯಾಹು ಅವರನ್ನು ಹೋಲುವ ಮುಖವಾಡ ಮತ್ತು ಜೈಲಿನ ಸಮವಸ್ತ್ರ ಧರಿಸಿದ್ದರೆ, ಇನ್ನು ಕೆಲವರು ಬಾಳೆಹಣ್ಣುಗಳ ರಾಶಿಯ ಹಿಂದೆ `ಕ್ಷಮೆ' ಎಂಬ ಫಲಕ ಹಿಡಿದು ನಿಂತಿದ್ದರು. `ಅಧ್ಯಕ್ಷರ ಕೆಲಸ ಇಸ್ರೇಲ್‍ನ ಪ್ರಜಾಪ್ರಭುತ್ವವನ್ನು ರಕ್ಷಿಸುವುದು. ನೀವು ಕಾನೂನು ಮತ್ತು ಸುವ್ಯವಸ್ಥೆಯನ್ನು ನಾಶಗೊಳಿಸಿದರೆ, ಇದು ಇಸ್ರೇಲ್ ಪ್ರಜಾಪ್ರಭುತ್ವದ ಅಂತ್ಯವಾಗಲಿದೆ. ಯಾವುದೇ ಹೊಣೆಗಾರಿಕೆ ವಹಿಸದೆ, ದೇಶವನ್ನು ಹರಿದುಹಾಕಿದ್ದಕ್ಕೆ ಯಾವುದೇ ಬೆಲೆ ತೆರದೆ ತನ್ನ ವಿರುದ್ಧದ ಪ್ರಕರಣವನ್ನು ಸಂಪೂರ್ಣವಾಗಿ ರದ್ದುಗೊಳಿಸಲು ಅವರು ಕೇಳುತ್ತಿದ್ದಾರೆ. ನೆತನ್ಯಾಹು ಅವರ ಉದ್ದೇಶ ಮತ್ತು ಅದರಿಂದ ನಮ್ಮ ದೇಶದ ಭವಿಷ್ಯದ ಮೇಲಾಗುವ ಪರಿಣಾಮಗಳನ್ನು ಇಸ್ರೇಲ್‍ನ ಜನತೆ ತಿಳಿದುಕೊಂಡಿದ್ದಾರೆ' ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆತನ್ಯಾಹು ವಿರುದ್ಧ ಮೂರು ಪ್ರತ್ಯೇಕ ಭ್ರಷ್ಟಾಚಾರದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಒಂದು ಪ್ರಕರಣದಲ್ಲಿ ನೆತನ್ಯಾಹು ಮತ್ತವರ ಪತ್ನಿ ಸಾರಾ ರಾಜಕೀಯ ಪ್ರಭಾವ ಬೀರಿದ್ದಕ್ಕೆ ಪ್ರತಿಯಾಗಿ ಕೋಟ್ಯಾಧಿಪತಿ ಉದ್ಯಮಿಯಿಂದ 2,60,000 ಡಾಲರ್ ಮೌಲ್ಯದ (ಸಿಗಾರ್, ಒಡವೆಗಳು) ಐಷಾರಾಮಿ ವಸ್ತುಗಳನ್ನು ಕೊಡುಗೆಯಾಗಿ ಸ್ವೀಕರಿಸಿದ ಆರೋಪವಿದೆ. ತನ್ನ ಪರವಾಗಿ ಹೆಚ್ಚು ವರದಿ ಪ್ರಕಟಿಸುವುದಕ್ಕೆ ಪ್ರತಿಯಾಗಿ ಇಸ್ರೇಲ್‍ನ ಎರಡು ಮಾಧ್ಯಮ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಟ್ಟಿರುವ ಪ್ರಕರಣಗಳೂ ನೆತನ್ಯಾಹು ವಿರುದ್ಧ ದಾಖಲಾಗಿವೆ. ಒಂದು ವೇಳೆ ವಿಚಾರಣೆ ಮುಂದುವರಿದರೂ ತಾನು ಖುಲಾಸೆಗೊಳ್ಳುವ ವಿಶ್ವಾಸವಿದೆ. ಆದರೆ ದೀರ್ಘಾವಧಿಯ ಕಾನೂನು ಪ್ರಕ್ರಿಯೆ ದೇಶವನ್ನು ಮುನ್ನಡೆಸುವ ಜವಾಬ್ದಾರಿಗೆ ತೊಡಕಾಗುತ್ತದೆ ಎಂದು ನೆತನ್ಯಾಹು ಅಧ್ಯಕ್ಷರಿಗೆ ಸಲ್ಲಿಸಿರುವ 111 ಪುಟಗಳ ಕ್ಷಮಾದಾನ ಕೋರಿಕೆ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ. ಈ ಮಧ್ಯೆ, ಸರಕಾರದ ಮಿತ್ರಪಕ್ಷಗಳು, ರಾಷ್ಟ್ರೀಯ ಭದ್ರತಾ ಸಚಿವ ಇಟಾಮರ್ ಬೆನ್-ಗ್ವಿರ್ ಮತ್ತು ವಿತ್ತ ಸಚಿವ ಬೆಝಾಲೆಲ್ ಸ್ಮೊಟ್ರಿಚ್ ಕ್ಷಮಾದಾನಕ್ಕೆ ನೆತನ್ಯಾಹು ಕೋರಿಕೆಯನ್ನು ಬೆಂಬಲಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾದ ನೆತನ್ಯಾಹು ದೀರ್ಘಾವಧಿಯಿಂದ ನಡೆಯುತ್ತಿರುವ ಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೋಮವಾರ ಟೆಲ್ ಅವೀವ್‍ನ ನ್ಯಾಯಾಲಯದಲ್ಲಿ ಹಾಜರಾಗಿದ್ದಾರೆ. ಇದಕ್ಕೂ ಮುನ್ನ, ಈ ಪ್ರಕರಣದಲ್ಲಿ ತನಗೆ ಕ್ಷಮಾದಾನ ನೀಡಬೇಕೆಂದು ನೆತನ್ಯಾಹು ಇಸ್ರೇಲ್ ಅಧ್ಯಕ್ಷ ಇಸಾಕ್ ಹೆರ್ಜೋಗ್‍ಗೆ ಬರೆದಿರುವ ಪತ್ರದಲ್ಲಿ ವಿನಂತಿಸಿಕೊಂಡಿದ್ದರು. ಇಸ್ರೇಲ್‍ನ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನಿಯಾಗಿರುವ ನೆತನ್ಯಾಹು ವಿರುದ್ಧ ಲಂಚ, ವಂಚನೆ ಮತ್ತು ವಿಶ್ವಾಸ ದ್ರೋಹದ ಆರೋಪದ ಮೇಲೆ 2019ರಲ್ಲಿ ದೋಷಾರೋಪಣೆ ಮಾಡಲಾಗಿದ್ದು 2020ರಲ್ಲಿ ವಿಚಾರಣೆ ಪ್ರಾರಂಭಗೊಂಡಿದೆ. ಸೋಮವಾರ ಟೆಲ್ ಅವೀವ್‍ನ ನ್ಯಾಯಾಲಯದ ಎದುರು ಸೇರಿದ ಪ್ರತಿಭಟನಾಕಾರರ ಗುಂಪು ಜೈಲಿನ ಸಮವಸ್ತ್ರವನ್ನು ಹೋಲುವ ಕಿತ್ತಳೆ ಬಣ್ಣದ ದಿರಿಸನ್ನು ಧರಿಸಿ ಪ್ರತಿಭಟನೆ ನಡೆಸಿದರು ಮತ್ತು ನೆತನ್ಯಾಹು ಜೈಲಿಗೆ ಹೋಗಬೇಕೆಂದು ಘೋಷಣೆ ಕೂಗಿದರು. ನೆತನ್ಯಾಹು ತಪ್ಪಿತಸ್ಥರೆಂದು ಒಪ್ಪಿಕೊಳ್ಳದೆ ಅಥವಾ ಯಾವುದೇ ಜವಾಬ್ದಾರಿ ವಹಿಸಿಕೊಳ್ಳದೆ ಕ್ಷಮಾದಾನ ಕೋರುವುದು ಸ್ವೀಕಾರಾರ್ಹವಲ್ಲ ಎಂದು ಪ್ರತಿಭಟನಾಕಾರರು ಆಗ್ರಹಿಸಿರುವುದಾಗಿ ವರದಿಯಾಗಿದೆ. ತಪ್ಪೊಪ್ಪಿಕೊಂಡು, ಪದತ್ಯಾಗ ಮಾಡಿದರೆ ಮಾತ್ರ ನೆತನ್ಯಾಹುಗೆ ಕ್ಷಮಾದಾನ: ವಿಪಕ್ಷಗಳ ಆಗ್ರಹ ಭ್ರಷ್ಟಾಚಾರ ಪ್ರಕರಣದಲ್ಲಿ ಕ್ಷಮಾದಾನ ಕೋರಿ ಅಧ್ಯಕ್ಷರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಲ್ಲಿಸಿರುವ ಕೋರಿಕೆಗೆ ವಿರೋಧ ಪಕ್ಷಗಳು ಆಕ್ಷೇಪಿಸಿವೆ. ತಪ್ಪನ್ನು ಒಪ್ಪಿಕೊಳ್ಳದೆ, ಪಶ್ಚಾತ್ತಾಪ ವ್ಯಕ್ತಪಡಿಸದೆ ಮತ್ತು ತಕ್ಷಣವೇ ರಾಜಕೀಯ ಜೀವನದಿಂದ ನಿವೃತ್ತಿ ಹೊಂದದೆ ನೆತನ್ಯಾಹುರನ್ನು ಕ್ಷಮಿಸಬಾರದು ಎಂದು ವಿಪಕ್ಷ ನಾಯಕ ಯಾಯಿರ್ ಲ್ಯಾಪಿಡ್ ಒತ್ತಾಯಿಸಿದ್ದಾರೆ. ಅಧ್ಯಕ್ಷರು ಕ್ಷಮಾದಾನ ನೀಡಬಾರದು. ತಪ್ಪಿತಸ್ಥರು ಮಾತ್ರ ಕ್ಷಮೆ ಯಾಚಿಸುತ್ತಾರೆ. ಪ್ರಧಾನಿ ತಕ್ಷಣ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷದ ಮತ್ತೊಬ್ಬ ನಾಯಕ ಯಾಯಿರ್ ಗೊಲಾನ್ ಆಗ್ರಹಿಸಿದ್ದಾರೆ. ವಂಚನೆ ಮತ್ತು ವಿಶ್ವಾಸ ದ್ರೋಹದಂತಹ ಗಂಭೀರ ಅಪರಾಧಗಳ ಆರೋಪಿ ಪ್ರಧಾನಿಗೆ ಕ್ಷಮಾದಾನ ನೀಡುವುದು `ಕೆಲವರು ಕಾನೂನಿಗಿಂತ ಮೇಲೆ ಇರುತ್ತಾರೆ' ಎಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತದೆ ಎಂದು `ಗುಣಮಟ್ಟದ ಆಡಳಿತಕ್ಕೆ ಅಭಿಯಾನ' ಪ್ರತಿಪಾದಿಸಿದೆ.

ವಾರ್ತಾ ಭಾರತಿ 1 Dec 2025 8:52 pm

ಸಂಸದ ಜಗದೀಶ್‌ ಶೆಟ್ಟರ್‌ಗೆ ಕರೆ ಮಾಡಿ ಐಫೋನ್ ಕೊಡಿಸಿ ಎಂದು ಬೇಡಿಕೆ ಇಟ್ಟ ಯುವಕ; ಆಡಿಯೋ ವೈರಲ್‌

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಯುವಕನೊಬ್ಬ ಫೋನ್ ಕರೆ ಮಾಡಿ ಹೊಸ ಐಫೋನ್ 17 ಪ್ರೊ ಮ್ಯಾಕ್ಸ್ ಬೇಕು ಎಂದು ವಿಚಿತ್ರ ಬೇಡಿಕೆ ಇಟ್ಟಿದ್ದಾನೆ. ಈ ಬಗ್ಗೆ ಶೆಟ್ಟರ್ ಅವರು ಅಚ್ಚರಿಗೊಂಡು, 'ಎಂಪಿ ಬಳಿ ಇಂತಹ ಬೇಡಿಕೆ ಕೇಳ್ತಿರಲ್ವಾ?' ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ. ಈ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಜಯ ಕರ್ನಾಟಕ 1 Dec 2025 8:52 pm

ಭಾರತೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿಗೆ ಇಬ್ಬರು ಸದನ ಸದಸ್ಯರ ಆಯ್ಕೆ ನಿರ್ಣಯಕ್ಕೆ ಲೋಕಸಭೆ ಅಂಗೀಕಾರ

ಹೊಸದಿಲ್ಲಿ,ಡಿ.1: ಲೋಕಸಭೆಯು ಸೋಮವಾರ ಸರಕಾರವು ಮಂಡಿಸಿದ ನಿರ್ಣಯವನ್ನು ಅಂಗೀಕರಿಸುವ ಮೂಲಕ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್‌ಸಿ) ಆಡಳಿತ ಮಂಡಳಿಗೆ ಸದನದ ಇಬ್ಬರು ಸದಸ್ಯರ ಆಯ್ಕೆಗೆ ಮಾರ್ಗವನ್ನು ಸುಗಮಗೊಳಿಸಿತು. ವಿಜ್ಞಾನ ಶಿಕ್ಷಣವನ್ನು ನೀಡುವ ಪ್ರಮುಖ ಸಂಸ್ಥೆಯಾಗಿರುವ ಐಐಎಸ್‌ಸಿಯ ಆಡಳಿತ ಮಂಡಳಿಗೆ ಲೋಕಸಭೆಯ ಇಬ್ಬರು ಸದಸ್ಯರನ್ನು ಆಯ್ಕೆ ಮಾಡುವ ನಿರ್ಣಯವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಮಂಡಿಸಿದರು. ಎಸ್‌ಐಆರ್ ವಿರುದ್ಧ ಪ್ರತಿಭಟನೆಯ ನಡುವೆಯೇ ನಿರ್ಣಯವು ಧ್ವನಿಮತದೊಂದಿಗೆ ಅಂಗೀಕಾರಗೊಂಡಿತು.

ವಾರ್ತಾ ಭಾರತಿ 1 Dec 2025 8:47 pm

ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರಕಾರ ನಿಗದಿಪಡಿಸಿರುವ 2400ರೂ. ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಶು ಆಹಾರ ಮತ್ತು ಕುಕ್ಕುಟ ಆಹಾರ ಉತ್ಪಾದಕರ ಸಭೆ ನಡೆಸಿದ ಅವರು, ಕರ್ನಾಟಕ ಮಾರುಕಟ್ಟೆ ಫೆಡರೇಶನ್ ಮೂಲಕ ರೈತರಿಂದ ಮೆಕ್ಕೆಜೋಳ ಖರೀದಿಸಿ ಸರಬರಾಜು ಮಾಡಲಾಗುವುದು. ಸಾಗಾಣಿಕೆ ವೆಚ್ಚ, ಲೋಡಿಂಗ್, ಅನ್ಲೋಡಿಂಗ್ ವೆಚ್ಚವನ್ನು ಸರಕಾರವೆ ಭರಿಸಲಿದೆ. ಕುಕ್ಕುಟ ಉದ್ಯಮಕ್ಕೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು. ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳ ದರ ಕುಸಿದಿರುವುದರಿಂದ ರೈತರಿಗೆ ನೆರವಾಗುವ ಉದ್ದೇಶದಿಂದ ಸರಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಡಿಸ್ಟಿಲರಿಗಳು 7 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸುವ ಪ್ರಕ್ರಿಯೆಯನ್ನು ಈಗಾಗಲೆ ಪ್ರಾರಂಭಿಸಿದೆ. ಕೆಎಂಎಫ್ 50 ಸಾವಿರ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಗೆ ಚಾಲನೆ. ಇದೇ ರೀತಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನಾ ವಲಯ 5 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಯನ್ನು ತಕ್ಷಣ ಪ್ರಾರಂಭಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು. ರಾಜ್ಯದಲ್ಲಿ ಖಾರಿಫ್ ಹಂಗಾಮಿನಲ್ಲಿ 17.6 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದ್ದು, 53.8 ಲಕ್ಷ ಮೆಕ್ಕೆಜೋಳ ಉತ್ಪಾದನೆ ಅಂದಾಜಿಸಲಾಗಿದೆ. ಇದರಲ್ಲಿ ಶೇ.50-60ರಷ್ಟು ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕಾಗಿ ಉಪಯೋಗಿಸಲಾಗುತ್ತದೆ. ಪ್ರತಿವರ್ಷ ಅಂದಾಜು 25.89 ಲಕ್ಷ ಟನ್ ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕಾಗಿ ಉಪಯೋಗಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್, ಕೃಷಿ ಚಿವ ಎನ್.ಚಲುವರಾಯ ಸ್ವಾಮಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್, ಪಶು ಆಹಾರ ಉತ್ಪಾದಕರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 1 Dec 2025 8:44 pm

ಗುಣಮಟ್ಟ ಪರೀಕ್ಷೆಯಲ್ಲಿ ಪತಂಜಲಿ ತುಪ್ಪ ವಿಫಲ: ಕಂಪೆನಿಗಳಿಗೆ 1.40 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಪಿತೋರ್‌ಗಢ, ಡಿ. 1: ಭಾರತದ ಪ್ರಮುಖ ಕಂಪೆನಿ ಪತಂಜಲಿ ತಯಾರಿಸಿರುವ ತುಪ್ಪದ ಮಾದರಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರಾಖಂಡದ ಸ್ಥಳೀಯ ನ್ಯಾಯಾಲಯ ಪತಂಜಲಿ ಕಂಪೆನಿಗೆ ಭಾರೀ ಮೊತ್ತದ ದಂಡ ವಿಧಿಸಿದೆ. ರಾಷ್ಟ್ರ ಹಾಗೂ ರಾಜ್ಯದ ಪ್ರಯೋಗಾಲಯಗಳು ತುಪ್ಪದ ಮಾದರಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿರುವುದನ್ನು ದೃಢಪಡಿಸಿವೆ. ಅಲ್ಲದೆ, ಪರೀಕ್ಷೆಯಲ್ಲಿ ತುಪ್ಪ ಕಲಬೆರೆಕೆಯಾಗಿರುವುದು ಬಹಿರಂಗಗೊಂಡಿದೆ. ಈ ಕಾರಣಕ್ಕಾಗಿ ನ್ಯಾಯಾಲಯ ಉತ್ಪಾದಕರು, ವಿತರಕರು ಹಾಗೂ ಚಿಲ್ಲರೆ ವ್ಯಾಪಾರಿಗೆ ಒಟ್ಟು 1.40 ಲಕ್ಷ ರೂ. ದಂಡ ವಿಧಿಸಿದೆ. ಈ ಪ್ರಕರಣ ಅಕ್ಟೋಬರ್ 2020ರಲ್ಲಿ ದಾಖಲಾಗಿದೆ. ಹಿರಿಯ ಆಹಾರ ಸುರಕ್ಷಾ ಅಧಿಕಾರಿ ದಿಲೀಪ್ ಜೈನ್ ನಿಯಮಿತ ತಪಾಸಣೆಗಾಗಿ ಪಿಥೋರ್‌ಗಢದ ಕಶ್ನಿಯಲ್ಲಿರುವ ಕರಣ್ ಜನರಲ್ ಸ್ಟೋರ್‌ನಿಂದ ಪತಂಜಲಿ ತುಪ್ಪದ ಮಾದರಿ ಸಂಗ್ರಹಿಸಿದ್ದರು. ರುದ್ರಪುರದ ಸರಕಾರಿ ಪ್ರಯೋಗಾಲಯದಲ್ಲಿ ನಡೆಸಲಾದ ಆರಂಭಿಕ ಪರೀಕ್ಷೆಯಲ್ಲಿ ಈ ತುಪ್ಪದ ಮಾದರಿ ನಿಗದಿತ ಮಾನದಂಡಗಳನ್ನು ಪೂರೈಸಿಲ್ಲ ಎಂಬುದು ಬಹಿರಂಗಗೊಂಡಿದೆ ಹಾಗೂ ಕಲಬೆರೆಕೆ ಪದಾರ್ಥಗಳನ್ನು ಹೊಂದಿರುವುದನ್ನು ದೃಢಪಡಿಸಿದೆ. ಆರಂಭಿಕ ವಿಫಲತೆಯ ನಂತರ ಪತಂಜಲಿ ಆಯುರ್ವೇದ ಲಿಮಿಟೆಡ್ ಈ ಪರೀಕ್ಷೆಯ ಫಲಿತಾಂಶವನ್ನು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ನಿರ್ಣಾಯಕ ಪರೀಕ್ಷೆಗಾಗಿ ತುಪ್ಪದ ಮಾದರಿಯನ್ನು ಗಾಝಿಯಾಬಾದ್‌ನಲ್ಲಿರುವ ರಾಷ್ಟ್ರೀಯ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಯಿತು. ರಾಷ್ಟ್ರೀಯ ಪ್ರಯೋಗಾಲಯ ಕೂಡ ಉತ್ಪನ್ನ ಕಳಪೆ ಎಂದು ದೃಢಪಡಿಸಿತು. ಇದು ಉತ್ಪಾದಕರು ಹಾಗೂ ಮಾರಾಟಗಾರರ ವಿರುದ್ಧದ ಪ್ರಕರಣವನ್ನು ಬಲಪಡಿಸಿತು. ಅನಂತರ ಆಹಾರ ಸುರಕ್ಷಾ ಅಧಿಕಾರಿ ಪಿತೋರ್‌ಗಢದ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದರು. ಎಲ್ಲಾ ವಾದಗಳನ್ನು ಆಲಿಸಿದ ಹಾಗೂ ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ಆರೋಪಿಗಳ ವಿರುದ್ಧ ತೀರ್ಪು ನೀಡಿತು. ಈ ತೀರ್ಪಿನಲ್ಲಿ ನ್ಯಾಯಾಲಯ ಉತ್ಪಾದಕ ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ 10 ಲಕ್ಷ ರೂ., ವಿತರಕ ಬ್ರಹ್ಮ ಆಕ್ಸೆಸೆರೀಸ್‌ಗೆ 25 ಸಾವಿರ ರೂ. ಹಾಗೂ ಕರಣ್ ಜನರಲ್ ಸ್ಟೋರ್‌ಗೆ 15 ಸಾವಿರ ರೂ. ದಂಡ ವಿಧಿಸಿತು.

ವಾರ್ತಾ ಭಾರತಿ 1 Dec 2025 8:44 pm

ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ : ಡಿ.ಕೆ.ಸುರೇಶ್

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಒಂದು ಹಂತಕ್ಕೆ ಬರಲಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು. ಸೋಮವಾರ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನನ್ನ ದಿಲ್ಲಿಯ ಖಾಸಗಿ ಭೇಟಿ ಬಗ್ಗೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಸಿಎಂ ಉಪಾಹಾರ ಕೂಟ ನಡೆದಿದ್ದು, ನಾಳೆ(ಡಿ.2)ಯೂ ಒಂದು ಉಪಾಹಾರಕೂಟ ನಡೆಯಲಿದೆ ಎಂದರು. ಇಬ್ಬರೂ ನಾಯಕರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ. ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪದ ವಿಚಾರ ಸಂಬಂಧ ರಾಜಕೀಯವಾಗಿ ಉತ್ತರ ಕೊಡುವುದಕ್ಕಿಂತ, ಯಾರು ಯಾವ ಸಂದರ್ಭದಲ್ಲಿ ಮಠವನ್ನು ಹೇಗೆ ಬಳಸಿಕೊಂಡಿದ್ದಾರೆಂಬುದು ಜನರಿಗೆ ಗೊತ್ತಿದೆ ಎಂದು ತಿಳಿಸಿದರು.

ವಾರ್ತಾ ಭಾರತಿ 1 Dec 2025 8:42 pm

ಸಿಎಂ ಬದಲಾವಣೆಗೆ ಹೊಸ ಟ್ವಿಸ್ಟ್ : ’ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಒಂದು ಹಂತಕ್ಕೆ ಬರಲಿದೆ’ - ಡಿಕೆ ಸುರೇಶ್

DK Suresh On CM Change : ಬಮೂಲ್ ಅಧ್ಯಕ್ಷರಾದ ಡಿಕೆ ಸುರೇಶ್, ದೆಹಲಿಯಿಂದ ಹಿಂದಿರುಗಿದ್ದಾರೆ. ಖಾಸಗಿ ಭೇಟಿಗೆ ನಾನು ರಾಜಧಾನಿಗೆ ಹೋಗಿದ್ದು, ಅದರ ಮಾಹಿತಿಯನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಎಲ್ಲವೂ ಸಸೂತ್ರವಾಗಿ ನಡೆಯುತ್ತಿದೆ ಎಂದಷ್ಟೇ ಡಿಕೆ ಸುರೇಶ್ ಹೇಳಿದ್ದಾರೆ.

ವಿಜಯ ಕರ್ನಾಟಕ 1 Dec 2025 8:40 pm

ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ ಒಲಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವುದು ಕಷ್ಟವಲ್ಲ : ಸಿಎಂ ಸಿದ್ದರಾಮಯ್ಯ

ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾ ಭಾರತಿ 1 Dec 2025 8:36 pm

Mangaluru: ದ್ವಿಚಕ್ರ ವಾಹನ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಗಳ ಸೆರೆ

ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಬಂಧಿತ ಆರೋಪಿಗಳಾಗಿದ್ದಾರೆ. ನ.14ರಂದು ಮಂಗಳೂರಿಗೆ ಬಂದಿದ್ದ ಇವರು ಮಂಗಳೂರು ರೈಲ್ವೇ ಜಂಕ್ಷನ್ ಪ್ರದೇಶದಲ್ಲಿ ಸುತ್ತಾಡಿದ ಬಳಿಕ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ.30ರಂದು ಮಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿಯನ್ನು ಪಡೆದ ಪೊಲೀಸರು ಆರೋಪಿಗಳಾದ ಅಲೆಕ್ಸ್ ಡೊಮಿನಿಕ್ ಹಾಗೂ ಅಮಲ್ ಕೃಷ್ಣರನ್ನು ಬಂಧಿಸಿ ಎರಡು ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೊತ್ತ 1.23 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ಅಲೆಕ್ಸ್‌ನ ವಿರುದ್ದ ಕೇರಳದ ಅಲಕ್ಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಟ ಮಾಡಿರುವ ಪ್ರಕರಣ ಹಾಗೂ ಅಮಲ್ ಕೃಷ್ಣ ನ ವಿರುದ್ದ ತಲಶೇರಿ ಹಾಗೂ ಕುರಚೂಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಕಳವು ಮಾಡಿದ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 1 Dec 2025 8:34 pm

ಉತ್ತರ ಪ್ರದೇಶ| ಯುವಕನಿಗೆ ಹಲ್ಲೆ ನಡೆಸಿ ಉಗುಳು ನೆಕ್ಕುವಂತೆ ಬಲವಂತ: ಓರ್ವ ಆರೋಪಿ ಪೊಲೀಸ್‌ ವಶಕ್ಕೆ

ದೆವರಿಯಾ,(ಡಿ.1): ಇಲ್ಲಿನ ಗ್ರಾಮವೊಂದರಲ್ಲಿ ಜನರ ಗುಂಪು ಯುವಕನೋರ್ವನಿಗೆ ಬೆಲ್ಟ್ ಹಾಗೂ ಚಪ್ಪಲಿಯಿಂದ ಥಳಿಸಿ ಉಗುಳು ನೆಕ್ಕುವಂತೆ ಬಲವಂತಪಡಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಬಳಿಕ ಪೊಲೀಸರು ಓರ್ವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. वीडीओ यूपी के देवरिया का है जहाँ जाति विशेष के सामंतियों ने PDA समाज के युवक को चप्पल पे थूक के चटवाया है । आप नहीं लगता पिछले 8 सालों से यूपी में सामंतियों का बोलबाला है ?? pic.twitter.com/U5Y61kJafj — GAURAV (@GK010200) December 1, 2025 ಗೋಬರಾಹಿ ಗ್ರಾಮದಲ್ಲಿ ನಡೆದಿದೆ ಎಂದು ಹೇಳಲಾದ ಘಟನೆಯ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ರವಿವಾರ ಸಂಜೆಯಿಂದ ಹರಿದಾಡುತ್ತಿದೆ. ಸಂತ್ರಸ್ತನ ತಾಯಿ ದಾಖಲಿಸಿದ ಪೊಲೀಸ್ ದೂರಿನ ಪ್ರಕಾರ, ಅವರ ಪುತ್ರ ನವೆಂಬರ್ 29ರಂದು ಸಂಜೆ ಸುಮಾರು 3 ಗಂಟೆಗೆ ಶಾಪಿಂಗ್‌ಗಾಗಿ ದೇವರಿಯಾ ಪಟ್ಟಣಕ್ಕೆ ಹೋಗುತ್ತಿದ್ದ. ಈ ಸಂದರ್ಭ ಸಕ್ರಾ ಪರ್ ಹಾಗೂ ಗೋಬರಾಹಿ ಗ್ರಾಮಗಳ ನಾಲ್ವರು ಆತನಿಗೆ ತಡೆ ಒಡ್ಡಿದರು. ಅನಂತರ ಆ ಗುಂಪು ಆತನಿಗೆ ಹಲ್ಲೆ ನಡೆಸಿತು ಹಾಗೂ ಉಗುಳು ನೆಕ್ಕುವಂತೆ ಬಲವಂತಪಡಿಸಿತು. ಅನಂತರ ರಾತ್ರಿ ಅದೇ ಗುಂಪು ಅವರ ಮನೆಗೆ ಆಗಮಿಸಿತು. ಮನೆಯ ಬಾಗಿಲು ಒಡೆಯಲು ಪ್ರಯತ್ನಿಸಿತು ಹಾಗೂ ಕಲ್ಲು ತೂರಾಟ ನಡೆಸಿತು ಎಂದು ದೂರಿನಲ್ಲಿ ಪ್ರತಿಪಾದಿಸಲಾಗಿದೆ. ‘‘ಈ ಕುರಿತು ಯುವಕನ ತಾಯಿ ದೂರು ದಾಖಲಿಸಿದ್ದಾರೆ. ಓರ್ವ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗುವುದು’’ ಎಂದು ದೆವರಿಯಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ವಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ವಾರ್ತಾ ಭಾರತಿ 1 Dec 2025 8:29 pm

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅಲ್ ಫಲಾಹ್ ವಿವಿ ಸ್ಥಾಪಕ ಸಿದ್ದೀಕಿಗೆ 14 ದಿನ ನ್ಯಾಯಾಂಗ ಬಂಧನ

ಹೊಸದಿಲ್ಲಿ,ಡಿ.1: ಇಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಭಯೋತ್ಪಾದನೆ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫರೀದಾಬಾದ್‌ನ ಅಲ್ ಫಲಾಹ್ ವಿವಿಯ ಸ್ಥಾಪಕ ಜವಾದ್ ಅಹ್ಮದ್ ಸಿದ್ದೀಕಿಗೆ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಸಿದ್ದೀಕಿಯನ್ನು ನ.19ರಂದು 13 ದಿನಗಳ ಅವಧಿಗೆ ಜಾರಿ ನಿರ್ದೇಶನಾಲಯದ (ಈ.ಡಿ.) ಕಸ್ಟಡಿಗೆ ನೀಡಲಾಗಿದ್ದು, ಸೋಮವಾರ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ಸಿದ್ದೀಕಿ ಪರ ವಕೀಲರು ತನ್ನ ಕಕ್ಷಿದಾರರರಿಗೆ ಕಸ್ಟಡಿಯಲ್ಲಿ ಔಷಧಿಗಳು ಮತ್ತು ಕನ್ನಡಕ ಲಭ್ಯತೆಯನ್ನು ಕೋರಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿತು. ಯುಜಿಸಿ ಮಾನ್ಯತೆಯನ್ನು ಪಡೆದುಕೊಂಡಿರುವುದಾಗಿ ಅಲ್ ಫಲಾಹ್ ವಿವಿಯು ಸುಳ್ಳು ಹೇಳಿದೆ ಮತ್ತು ತನ್ನ ನ್ಯಾಕ್ ಮಾನ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿದೆ ಎಂದು ಈಡಿ ಈ ಮೊದಲು ಆರೋಪಿಸಿತ್ತು. ಹಣಕಾಸು ದಾಖಲೆಗಳು ವಿವಿಯು ಸಂಪಾದಿಸಿದ ಆಸ್ತಿಗಳಿಗೆ ತಾಳೆಯಾಗದಿದ್ದರೂ ಅದು 2018 ಮತ್ತು 2025ರ ನಡುವೆ 415.10 ಕೋ.ರೂ.ಗಳ ಆದಾಯವನ್ನು ಗಳಿಸಿತ್ತು ಎಂದು ಈಡಿ ಹೇಳಿತ್ತು. ಸಿದ್ದೀಕಿ ಅಲ್ ಫಲಾಹ್ ಚ್ಯಾರಿಟೇಬಲ್ ಟ್ರಸ್ಟ್ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದು, ವಿದ್ಯಾರ್ಥಿಗಳಿಂದ ಸಂಗ್ರಹಿಸಲಾದ ಶುಲ್ಕಗಳು ಮತ್ತು ಸಾರ್ವಜನಿಕ ನಿಧಿಗಳನ್ನು ಖಾಸಗಿ ಉದ್ದೇಶಕ್ಕಾಗಿ ಬಳಸಲಾಗಿದೆ ಎಂದು ಈಡಿ ನ್ಯಾಯಾಲಯಕ್ಕೆ ತಿಳಿಸಿತ್ತು. ಸಿದ್ದೀಕಿಯ ಬಂಧನದ ದಿನ ದಿಲ್ಲಿ-ಎನ್‌ಸಿಆರ್‌ನ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿದ್ದ ಈಡಿ 48 ಲ.ರೂ.ನಗದು ಹಣವನ್ನು ವಶಪಡಿಸಿಕೊಂಡಿತ್ತು. ನ.10ರಂದು ದಿಲ್ಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಸ್ಫೋಟದ ತನಿಖೆ ನಡೆಸುತ್ತಿರುವ ಎನ್‌ಐಎ ,ಅಲ್ ಫಲಾಹ್ ವಿವಿಯು ‘ವೈಟ್ ಕಾಲರ್’ ಭಯೋತ್ಪಾದಕ ಜಾಲದೊಂದಿಗೆ ಸಂಬಂಧ ಹೊಂದಿದೆ ಎಂದು ಆರೋಪಿಸಿದೆ.

ವಾರ್ತಾ ಭಾರತಿ 1 Dec 2025 8:25 pm

ಡಾಲರ್‌ನೆದುರು ಸಾರ್ವಕಾಲಿಕ ಕನಿಷ್ಠ 89.7ಕ್ಕೆ ಕುಸಿದ ರೂಪಾಯಿ ಮೌಲ್ಯ

ಹೊಸದಿಲ್ಲಿ,ಡಿ.1: ಭಾರತದ ರೂಪಾಯಿ ಮೌಲ್ಯವು ಸೋಮವಾರ ಅಮೆರಿಕದ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 89.7ಕ್ಕೆ ಕುಸಿದಿದೆ. ರಾಯ್ಟರ್ಸ್ ಸುದ್ದಿಸಂಸ್ಥೆಯು ವರದಿ ಮಾಡಿರುವಂತೆ ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ ಒಪ್ಪಂದ ಕುರಿತು ಅನಿಶ್ಚಿತತೆಯೊಂದಿಗೆ ಮಂದಗತಿಯ ವ್ಯಾಪಾರ ಚಟುವಟಿಕೆ ಮತ್ತು ಬಂಡವಾಳ ಹರಿವಿನ ನಡುವೆ ಈ ಕುಸಿತ ಸಂಭವಿಸಿದೆ. ಆದರೆ ಸಂಜೆಯ ವೇಳೆಗೆ ರೂಪಾಯಿ ಮೌಲ್ಯ 89.54ಕ್ಕೆ ಚೇತರಿಸಿಕೊಂಡಿತ್ತು. ಶುಕ್ರವಾರ ಬಿಡುಗಡೆಗೊಂಡ ಜಿಡಿಪಿಯ ಧನಾತ್ಮಕ ಅಂಕಿಅಂಶಗಳು ರೂಪಾಯಿಗೆ ಕೊಂಚ ನೆಮ್ಮದಿಯನ್ನು ಒದಗಿಸಿದ್ದವು. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತೀಯ ಆರ್ಥಿಕತೆಯು ವರ್ಷದಿಂದ ವರ್ಷಕ್ಕೆ ಶೇ.8.2ರಷ್ಟು ಬೆಳವಣಿಗೆ ದಾಖಲಿಸಿದ್ದು,ಹಿಂದಿನ ತ್ರೈಮಾಸಿಕದಲ್ಲಿ ಅದು ಶೇ.7.8ರಷ್ಟಿತ್ತು. ಕಳೆದ ವರ್ಷದ ಇದೇ ಅವಧಿಯಲ್ಲಿ ಆರ್ಥಿಕತೆಯು ಶೆ.5.6ರಷ್ಟು ಬೆಳವಣಿಗೆಯನ್ನು ದಾಖಲಿಸಿತ್ತು. ಆದರೆಭಾರತ-ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ಪ್ರಗತಿಯ ಕೊರತೆ, ಆಮದುದಾರರಿಂದ ತಮ್ಮ ಹಿತಾಸಕ್ತಿಗಳ ರಕ್ಷಣೆಗಾಗಿ ಕ್ರಮಗಳು, ಪಾವತಿ ಸಮತೋಲನ ಸ್ಥಿತಿಯ ಕಡಿಮೆ ಬೆಂಬಲದಿಂದಾಗಿ ರೂಪಾಯಿ ಒತ್ತಡದಡಿ ಮುಂದುವರಿದಿದೆ ಎಂದು ಬ್ಯಾಂಕರ್‌ಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ.

ವಾರ್ತಾ ಭಾರತಿ 1 Dec 2025 8:20 pm

ಮಂಗಳವಾರ ಮತ್ತೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ(ಡಿ.2) ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಉಪಹಾರಕ್ಕೆ ತೆರಳಲಿದ್ದಾರೆ. ಸೋಮವಾರ ಈ ಕುರಿತು ಅಧಿಕೃತವಾಗಿ ಡಿ.ಕೆ.ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದು, ‘ನಾನು ಮತ್ತು ಮುಖ್ಯಮಂತ್ರಿಗಳು ಒಂದು ತಂಡವಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ನಾವು ರಾಜ್ಯದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ನಮ್ಮ ಸಾಮೂಹಿಕ ಪ್ರಯತ್ನಗಳನ್ನು ಚರ್ಚಿಸಲು ಮತ್ತು ಬಲಪಡಿಸಲು ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಪಹಾರಕ್ಕೆ ಆಹ್ವಾನಿಸಿದ್ದೇನೆ’ ಎಂದು ತಿಳಿಸಿದ್ದಾರೆ. ಇತ್ತ ಸೋಮವಾರ ಇದೇ ವಿಚಾರವಾಗಿ ವಿಧಾನಸೌಧದಲ್ಲಿ ಖುದ್ದು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಡೆಯಿಂದ ಮಂಗಳವಾರ(ಡಿ.2) ಬೆಳಗ್ಗೆ ಉಪಹಾರಕ್ಕೆ ಆಹ್ವಾನ ಬಂದಿದ್ದು, ಅಲ್ಲಿಗೆ ಹೋಗುತ್ತೇನೆ’ ಎಂದು ಸ್ಪಷ್ಟಪಡಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಇದು ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನೀವುಗಳು ಸದಾ ಗುಂಪು, ಗುಂಪು ಎಂದು ಬಿಂಬಿಸುತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ’ ಎಂದು ಹೇಳಿದರು. ನಮ್ಮ ಜೊತೆ ಕಾಂಗ್ರೆಸ್ ಪಕ್ಷದ 140 ಮಂದಿ ಶಾಸಕರು ಇದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೆ. ಪಕ್ಷದ ವಿಚಾರ ಬಂದಾಗ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ಈ ಬಗ್ಗೆ ಚಿಂತೆ ಬೇಡ ಎಂದು ಅವರು ತಿಳಿಸಿದರು. ಈ ವಾರ ಹೊಸದಿಲ್ಲಿಯಲ್ಲಿ ಸರ್ವಪಕ್ಷ ಸಭೆ ನಡೆಯಲಿದೆಯೇ ಎಂದು ಕೇಳಿದಾಗ, ನಾನು ಸರ್ವಪಕ್ಷ ಸಭೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತಿದ್ದೇನೆ. ಸಂಸತ್ ಅಧಿವೇಶನ ಆರಂಭವಾಗಿದ್ದು, ರಾಜ್ಯದ ಹಿತರಕ್ಷಣೆ ವಿಚಾರವಾಗಿ ಸಂಸದರಿಗೆ ಕೆಲವು ಜವಾಬ್ದಾರಿಗಳ ಬಗ್ಗೆ ಹೇಳಬೇಕಿದೆ ಎಂದು ತಿಳಿಸಿದರು. ಅಧಿಕಾರ ಹಂಚಿಕೆ ಚರ್ಚೆ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಹ್ವಾನದ ಮೇರೆಗೆ ಡಿ.ಕೆ.ಶಿವಕುಮಾರ್ ಶನಿವಾರ ಅವರ ನಿವಾಸದಲ್ಲಿ ಉಪಹಾರ ಸೇವಿಸಿದ್ದರು. ಇದೀಗ ಮಂಗಳವಾರ ಡಿ.ಕೆ.ಶಿವಕುಮಾರ್ ಅವರು ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಹಾರಕ್ಕೆ ಆಹ್ವಾನ ನೀಡಿರುವುದು ಗಮನ ಸೆಳೆದಿದೆ.

ವಾರ್ತಾ ಭಾರತಿ 1 Dec 2025 8:18 pm

ಮೂಡುಬಿದಿರೆ: ವಿಶ್ವಕಪ್ ಗೆದ್ದ ಕಬಡ್ಡಿ ಆಟಗಾತಿ೯ ಧನಲಕ್ಷ್ಮೀಗೆ ಆಳ್ವಾಸ್ ನಲ್ಲಿ ಅಭಿನಂದನೆ

ಮೂಡುಬಿದಿರೆ: ಢಾಕಾದಲ್ಲಿ ನಡೆದ ದ್ವಿತೀಯ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭವು ಸೋಮವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಮಾತನಾಡಿ, ಕ್ರೀಡಾ ಸಾಧಕರಿಗೆ ಮತ್ತಷ್ಟು ಉತ್ತೇಜನ ನೀಡಲು ಅನೇಕ ರಾಜ್ಯ ಸರ್ಕಾರಗಳು (ಹರ್ಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಕೇರಳ) ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುತ್ತಿರುವುದು ಶ್ಲಾಘನೀಯ. ಇದರಿಂದ ಆ ರಾಜ್ಯಗಳಲ್ಲಿ ಕ್ರೀಡೆಗೆ ಯುವ ಸಮುದಾಯದ ಆಕರ್ಷಣೆ ಹೆಚ್ಚಾಗಿ, ಮೂಲಸೌಕರ್ಯ ಅಭಿವೃದ್ಧಿಗೊಂಡು ಪದಕಗಳ ಪ್ರಮಾಣವೂ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ, ಕರ್ನಾಟಕ ಸರ್ಕಾರವೂ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡಲು ಮುಂದಾಗಬೇಕು. ಇದು ಕ್ರೀಡಾಪಟುವಿಗೆ ಆರ್ಥಿಕ ಭದ್ರತೆ ನೀಡುವುದಷ್ಟೇ ಅಲ್ಲದೆ, ಅವರ ಸಾಧನೆಗೆ ಗೌರವ ಹಾಗೂ ಭವಿಷ್ಯಕ್ಕೆ ಭದ್ರ ನೆಲೆ ನೀಡಿದಂತಾಗುತ್ತದೆ. ಯುವ ಶಕ್ತಿಯನ್ನು ದೇಶದ ಪ್ರಗತಿಗೆ ಬಳಸಲು ಸರ್ಕಾರ, ಇಲಾಖೆಗಳು ಹಾಗೂ ಕ್ರೀಡಾ ಸಂಸ್ಥೆಗಳು ಸಮನ್ವಯದಿಂದ ಕೆಲಸ ಮಾಡುವುದು ಅಗತ್ಯ ಎಂದರು. ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಗೌರವಾಧ್ಯಕ್ಷ ರಾಕೇಶ್ ಮಲ್ಲಿ ಅವರು ಧನಲಕ್ಷ್ಮೀಯವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಅವರಿಗೆ ಸರ್ಕಾರಿ ಹುದ್ದೆ ದೊರಕಿಸಿಕೊಡಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಒತ್ತಡ ತರಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಧನಲಕ್ಷ್ಮೀ ಪೂಜಾರಿ, ವಿಶ್ವ ವೇದಿಕೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹಾರಿಸುವ ಅವಕಾಶ ದೊರೆತ ಕ್ಷಣ ನನ್ನ ಜೀವನದ ಅತ್ಯಂತ ಸ್ಮರಣೀಯ ಕ್ಷಣವಾಗಿತ್ತು ಎಂದು ಭಾವಪೂರ್ಣವಾಗಿ ನುಡಿದರು. ತಮ್ಮ ಯಶಸ್ಸಿನ ಹಿಂದೆ ಆಳ್ವಾಸ್ ಸಂಸ್ಥೆಯ ಪಾತ್ರವನ್ನು ಉಲ್ಲೇಖಿಸಿ, ಆಳ್ವಾಸ್ ಸೇರದಿದ್ದರೆ ಇಂತಹ ಸಾಧನೆ ನನ್ನಿಂದ ಸಾಧ್ಯವಾಗುತ್ತಿರಲಿಲ್ಲ. ಇಲ್ಲಿ ಸೇರಿದ್ದರಿಂದ ಕ್ರೀಡೆ ಮಾತ್ರವಲ್ಲದೆ, ಶೈಕ್ಷಣಿಕ ಕ್ಷೇತ್ರದಲ್ಲಿಯೂ ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು ಎಂದರು. ಈ ಸಂದರ್ಭದಲ್ಲಿ ಧನಲಕ್ಷ್ಮೀ ಹಾಗೂ ಅವರ ಪೋಷಕರನ್ನು ಸನ್ಮಾನಿಸಿ, ಆಳ್ವಾಸ್ ಸಂಸ್ಥೆಯ ವತಿಯಿಂದ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಉದ್ಯಮಿ ನಾರಾಯಣ ಪಿ.ಎಂ., ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮೂಡುಬಿದಿರೆಯ ಅಧ್ಯಕ್ಷ ಸುರೇಶ್ ಕೆ. ಪೂಜಾರಿ, ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉಪಾಧ್ಯಕ್ಷ ಸುದರ್ಶನ್, ಧನಲಕ್ಷ್ಮೀ ಅವರ ಕೋಚ್ ಹಂಸವತಿ ಉಪಸ್ಥಿತರಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು, ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ಮೂಡುಬಿದಿರೆ) ಇವರ ಸಂಯುಕ್ತ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದ.ಕ. ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಪುರುಷೋತ್ತಮ ಪೂಜಾರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೈಹಿಕ ಶಿಕ್ಷಕ ನವೀನ್‌ಚಂದ್ರ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 1 Dec 2025 8:17 pm

ಸಂಸತ್ತಿನ ಚಳಿಗಾಲದ ಅಧಿವೇಶನ| ಎಸ್‌ಐಆರ್ ಕುರಿತು ಪ್ರತಿಪಕ್ಷಗಳಿಂದ ಪ್ರತಿಭಟನೆ; ಮೊದಲ ದಿನವೇ ಕಲಾಪ ಮುಂದೂಡಿಕೆ

ಗದ್ದಲದ ನಡುವೆ ಮಣಿಪುರ ಜಿಎಸ್‌ಟಿ ಮಸೂದೆ ಅಂಗೀಕಾರ

ವಾರ್ತಾ ಭಾರತಿ 1 Dec 2025 8:15 pm

ಪಾಕಿಸ್ತಾನಕ್ಕೆ ರಹಸ್ಯ ರವಾನೆ ಪ್ರಕರಣ: ಬ್ರಹ್ಮೋಸ್ ವಿಜ್ಞಾನಿ ನಿಶಾಂತ್ ಅಗರ್ವಾಲ್ ಪ್ರಮುಖ ಆರೋಪಗಳಿಂದ ಖುಲಾಸೆ!

ಬ್ರಹ್ಮೋಸ್ ಏರೋಸ್ಪೇಸ್‌ನ ವಿಜ್ಞಾನಿ ನಿಶಾಂತ್ ಅಗರ್ವಾಲ್‌ಗೆ ದೊಡ್ಡ ರಿಲೀಫ್ ಸಿಕ್ಕಿದೆ. ಪಾಕಿಸ್ತಾನಿ ಗೂಢಚಾರರಿಗೆ ರಕ್ಷಣಾ ರಹಸ್ಯ ರವಾನೆ ಪ್ರಕರಣದಲ್ಲಿ ಅವರ ಮೇಲಿದ್ದ ಪ್ರಮುಖ ಆರೋಪಗಳನ್ನು ಉನ್ನತ ನ್ಯಾಯಾಲಯಗಳು ಖುಲಾಸೆಗೊಳಿಸಿವೆ. 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದ ಕೆಳ ನ್ಯಾಯಾಲಯದ ಆದೇಶವನ್ನು ಬದಲಾಯಿಸಲಾಗಿದೆ. ಅಧಿಕೃತ ದಾಖಲೆಗಳನ್ನು ವೈಯಕ್ತಿಕ ಸಾಧನದಲ್ಲಿ ಹೊಂದಿದ್ದ ಆರೋಪಕ್ಕೆ ಮೂರು ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ಈ ಅವಧಿಯನ್ನು ಅವರು ಈಗಾಗಲೇ ಕಳೆದಿದ್ದರಿಂದ, ನಿಶಾಂತ್ ಅಗರ್ವಾಲ್ ಜೈಲಿನಿಂದ ಹೊರಬರಲು ಸಿದ್ಧರಾಗಿದ್ದಾರೆ.

ವಿಜಯ ಕರ್ನಾಟಕ 1 Dec 2025 8:13 pm

Ganja Home Delivery: ಆಪ್‌ ಮೂಲಕ ಗಾಂಜಾ ಹೋಂ ಡೆಲಿವರಿ, ಖತರ್ನಾಕ್‌ ಗ್ಯಾಂಗ್‌ ಸಿಕ್ಕಿಬಿದ್ದಿದ್ದೇಗೆ?

ಮಾದಕ ವಸ್ತು ಗಾಂಜಾ ಆರೋಗ್ಯಕ್ಕೆ ಹಾನಿಕಾರಕ. ಅಲ್ಲದೆ ಇದನ್ನು ಸೇವಿಸುವುದು ಕಾನೂನುಬಾಹಿರ ಕೂಡ. ಆದರೆ ಈಗಿನ ಯುವಜನರು ಅಕ್ರಮವಾಗಿ ಗಾಂಜಾ ತರಿಸಿಕೊಂಡು ಎಂಜಾಯ್‌ ಮಾಡುತ್ತಾರೆ. ಇದರ ಹಿಂದೆ ದೊಡ್ಡ ದಂಧೆಯೇ ಇದ್ದು, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುವ ಭೂಪರೂ ಇದ್ದಾರೆ. ಆದರೆ, ಯಾರಿಗೂ ಅನುಮಾನ ಬಾರದಂತೆ ಆನ್‌ಲೈನ್‌ ಮೂಲಕವೇ ಬಾಗಿಲಿಗೆ ಗಾಂಜಾ ಡೆಲಿವರಿ ನೀಡುತ್ತಿದ್ದ ಜಾಲವನ್ನು ಪೊಲೀಸರು ಹತ್ತಿಕ್ಕಿದ್ದಾರೆ.

ಒನ್ ಇ೦ಡಿಯ 1 Dec 2025 8:06 pm

`ಇದು ಲೆಜೆಂಡ್ ಗಳ ಐಪಿಎಲ್!'; ಗೋವಾದಲ್ಲಿ ರಂಗೇರಲಿರುವ ಕ್ರಿಕೆಟ್ ಜಾತ್ರೆ ಬಗ್ಗೆ ಶೇನ್ ವಾಟ್ಸನ್ ಗುಣಗಾನ

ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಶೇನ್ ವಾಟ್ಸನ್ ಅವರು ಗೋವಾದಲ್ಲಿ ಜನವರಿ 26ರಿಂದ ಪ್ರಾರಂಭ ಆಗಲಿರುವ ಲೆಜೆಂಡ್ಸ್ ಪ್ರೊ ಟಿ20 ಲೀಗ್ ಅನ್ನು 'ಲೆಜೆಂಡ್ಸ್‌ಗಳ ಐಪಿಎಲ್' ಎಂದು ಬಣ್ಣಿಸಿದ್ದಾರೆ. ಐಪಿಎಲ್ ನಲ್ಲಿ ಈ ಹಿಂದೆ ಮಿಂಚಿದ್ದ ಘಟಾನುಘಟಿ ಮಾಜಿ ಆಟಗಾರರೇ ಇಲ್ಲಿ ಕಣಕ್ಕಲಿಯಲಿದ್ದಾರೆ. ಹೀಗಾಗಿ ಗೋವಾದ ಆಹ್ಲಾದಕರ ವಾತಾವರಣದಲ್ಲಿ ಐಪಿಎಲ್‌ನ ರೋಚಕತೆಯನ್ನು ಇದು ಉಣಬಡಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಳೆಯ ಗೆಳೆಯರೊಂದಿಗೆ ಆಡುವ ಖುಷಿ ಮತ್ತು ಸ್ಪರ್ಧಾತ್ಮಕ ಮನೋಭಾವ ನನ್ನಲ್ಲಿ ಸದಾ ಜೀವಂತ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯ ಕರ್ನಾಟಕ 1 Dec 2025 8:03 pm

ಎಡಿಪಿಜಿ ಮುರುಗನ್ ಉಡುಪಿ ಜಿಲ್ಲಾ ಪೊಲೀಸ್ ಕಚೇರಿ ಭೇಟಿ

ಉಡುಪಿ: ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಪಿಜಿ) ಎಸ್.ಮುರುಗನ್ ಉಡುಪಿ ಜಿಲ್ಲಾ ಪೊಲೀಸ್ ಪರಿವೀಕ್ಷಣೆ ಸಂಬಂಧ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ಎಸ್.ಮುರುಗನ್ ಪರಿವೀಕ್ಷಣೆ ನಡೆಸಿ ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ಉತ್ತಮ ಕರ್ತವ್ಯ ನಿರ್ವಹಿಸುವ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್, ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದ, ಡಿವೈಎಸ್ಪಿಗಳಾದ ಪ್ರಭು ಡಿ.ಟಿ., ಎಚ್.ಡಿ.ಕುಲಕರ್ಣಿ ಉಪಸ್ಥಿತರಿದ್ದಗರು.

ವಾರ್ತಾ ಭಾರತಿ 1 Dec 2025 7:55 pm

ಮೈಸೂರು ರೈಲು ನಿಲ್ದಾಣ ವಿಶ್ವಮಟ್ಟಕ್ಕೆ ಅಭಿವೃದ್ಧಿ, ₹395.73 ಕೋಟಿ ವೆಚ್ಚ, ಏನೇನು ಬದಲಾವಣೆ?

ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವಮಟ್ಟದ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯಲ್ಲಿ ಮೂರು ಹೊಸ ಪ್ಲಾಟ್‌ಫಾರಂಗಳು, ನಾಲ್ಕು ಪಿಟ್ ಲೈನ್‌ಗಳು ನಿರ್ಮಿಸಲಾಗುವುದು. ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಹಾಗೂ ಹೊಸ ರೈಲುಗಳ ಚಾಲನೆಗೆ ಇದು ಸಹಕಾರಿಯಾಗಲಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್‌ ಮಿತ್ತಲ್‌ ಹೇಳಿದ್ದಾರೆ.

ವಿಜಯ ಕರ್ನಾಟಕ 1 Dec 2025 7:53 pm

ಡಿ.3ರಂದು ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.3ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಲಿರುವರು ಅವರು 11:40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿಸಲಾದ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ , ಶ್ರೀಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ , ಯತಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12:30ಕ್ಕೆ ಪಿಎ ಕಾಲೇಜು ಆಫ್ ಇಂಜಿನಿಯರಿಂಗ್‌ನ ಪೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಪೋರ್ಟ್ಸ್ ಅರೆನಾ ಇದರ ಶಿಲಾನ್ಯಾಸ ಮತ್ತು ಪೇಸ್ ಕೇರ್ಸ್ ಸಮುದಾಯ ಸೇವಾ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು. ಮಧ್ಯಾಹ್ನ 1:15ಕ್ಕೆ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ದ.ಕ. ಜಿಲ್ಲೆಯ ಜನಪ್ರತಿನಿಧಿಗಳು ವಕೀಲರ ಸಂಘದ ನಿಯೋಗ ಭೇಟಿ, ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಸಲಿದ್ದಾರೆ. ಸಂಜೆ 4:30ಕ್ಕೆ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 1 Dec 2025 7:47 pm

ನ್ಯಾಷನಲ್ ಹೆರಾಲ್ಡ್ ಪ್ರಕರಣ | ರಾಜಕೀಯವಾಗಿ ಸೇಡು ತೀರಿಸಿಕೊಳ್ಳುತ್ತಿರುವ ಬಿಜೆಪಿ : ಸಿದ್ದರಾಮಯ್ಯ

ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಎಫ್‍ಐಆರ್ ದಾಖಲಿಸುವ ಮೂಲಕ ಬಿಜೆಪಿಯವರು ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸದಲ್ಲಿ ನಿರತವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಿರುವುದು ಖಂಡನೀಯ. ಇದು ಬಿಜೆಪಿಯವರು ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸವಾಗಿದೆ ಎಂದು ಹೇಳಿದರು. ಅಧಿಕಾರ ದುರ್ಬಳಕೆ: ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದರು. ಇದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ ಒಂದು ಮಿತಿ ಇದೆ. ಈ ಪ್ರಕರಣದಲ್ಲಿ ಕಿರುಕುಳ ನೀಡುವ ಅಗತ್ಯವಿಲ್ಲ. ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರ ಆಸ್ತಿಯಲ್ಲ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದ ಕಾರಣಕ್ಕೆ ಅವರು ಈ ಸಂಸ್ಥೆಯ ಷೇರುಗಳ ಪಾಲಕರಾಗಿದ್ದರು. ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ. ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ. ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ. ಅದೇ ರೀತಿ ನಮ್ಮ ನಾಯಕರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಕಾರಣ, ಜವಹಾರ್ ಲಾಲ್ ನೆಹರೂ ಅವರ ಕಾಲದಿಂದ ನಡೆದುಕೊಂಡು ಬಂದಿರುವ ಪ್ರತೀತಿಯಂತೆ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಜವಾಬ್ದಾರಿ ಹೊತ್ತಿರುತ್ತಾರೆ ಎಂದು ವಿವರಿಸಿದರು.

ವಾರ್ತಾ ಭಾರತಿ 1 Dec 2025 7:46 pm

ವೈರಲ್ ಆಗುತ್ತಿರುವ ವಿಡಿಯೋ: ವೇದಿಕೆ ಏರುವಾಗಲೇ ರಣವೀರ್ ಸಿಂಗ್‌ಗೆ ವಾರ್ನ್ ಮಾಡಿದ್ದ ರಿಷಬ್ ಶೆಟ್ಟಿ

Kantara Chapter 2 : ಗೋವಾದಲ್ಲಿ ನಡೆದ ಚಲನಚಿತ್ರೋತ್ಸವದ ವೇಳೆ, ಬಾಲಿವುಡ್ ನಟ ರಣವೀರ್ ಸಿಂಗ್, ದೈವವನ್ನು ಅನುಕರಣೆ ಮಾಡಲು ಹೋಗಿ, ಅಪಹಾಸ್ಯಕ್ಕೆ ಈಡಾಗಿದ್ದು ಒಂದು ಕಡೆ. ಇನ್ನೊಂದು ಕಡೆ, ರಿಷಬ್ ಶೆಟ್ಟಿ ವಾರ್ನ್ ಮಾಡಿದರೂ, ಅದನ್ನು ಲೆಕ್ಕಿಸದೇ ಇದ್ದದ್ದು ವ್ಯಾಪಕ ಟೀಕೆಗೆ ಕಾರಣವಾಗಿದೆ.

ವಿಜಯ ಕರ್ನಾಟಕ 1 Dec 2025 7:40 pm

BMTC ಹೊಸದಾಗಿ 4 ಬಸ್‌ ಮಾರ್ಗಗಳ ಆರಂಭ; ಎಲ್ಲಿಂದ ಎಲ್ಲಿಗೆ ಸಂಚಾರ? ವೇಳಾಪಟ್ಟಿ ಏನು?

ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ನಾಲ್ಕು ಹೊಸ ಬಸ್ ಮಾರ್ಗಗಳನ್ನು ಪರಿಚಯಿಸಿದೆ. ಡಿಸೆಂಬರ್ 1 ರಿಂದ ಈ ಸೇವೆಗಳು ಆರಂಭವಾಗಲಿವೆ. ನಗರದ ವಿವಿಧ ಬಡಾವಣೆಗಳಿಂದ ಶಿವಾಜಿನಗರ, ಜಯನಗರದಂತಹ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸಲಿವೆ. ಪ್ರಯಾಣಿಕರು ಈ ಹೊಸ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಮಾರ್ಗಗಳು ಜನಸಾಮಾನ್ಯರ ಓಡಾಟಕ್ಕೆ ಅನುಕೂಲವಾಗಲಿವೆ.

ವಿಜಯ ಕರ್ನಾಟಕ 1 Dec 2025 7:39 pm

Dharwad | ಸರಕಾರಿ ಹುದ್ದೆ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ; ಹಲವರು ಪೊಲೀಸ್‌ ವಶಕ್ಕೆ

ಧಾರವಾಡ : ಸರಕಾರಿ ಹುದ್ದೆಗೆ ನೇಮಕಾತಿ ಮಾಡದೆ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದರ ವಿರುದ್ಧ ಇಂದು(ಸೋಮವಾರ) ಜನಸಾಮಾನ್ಯರ ವೇದಿಕೆ ಹಾಗೂ ಉದ್ಯೋಗ ಆಕಾಂಕ್ಷಿ ವಿದ್ಯಾರ್ಥಿಗಳು ನಗರದ ಶ್ರೀನಗರ ಸರ್ಕಲ್‌ನಲ್ಲಿ ಪ್ರತಿಭಟನೆಗೆ ನಡೆಸಿದರು. ಶ್ರೀನಗರ ವೃತ್ತದಲ್ಲಿ ಜಮಾಯಿಸಿದ್ದ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಪ್ರಯತ್ನ ಮಾಡಿದರು. ಈ ವೇಳೆ  ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಎರಡು ವಾಹನಗಳಲ್ಲಿ ಕರೆದೊಯ್ದರು. ಪ್ರತಿಭಟನೆಗೆ ಅನುಮತಿ ನೀಡಿಲ್ಲ: ಎನ್ ಶಶಿಕುಮಾರ್ ಇಂದು ನಡೆಸಲು ಮುಂದಾದ ಪ್ರತಿಭಟನೆಗೆ ಯಾವುದೇ ಅನುಮತಿ ನೀಡಿಲ್ಲ. ಕಾನೂನು, ಶಾಂತಿ ಮತ್ತು ಸುವ್ಯವಸ್ಥಿತ | ಕಾಪಾಡುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನ‌ರ್ ಎನ್.ಶಶಿಕುಮಾರ್ ತಿಳಿಸಿದರು. ಪ್ರತಿಭಟನಾಕಾರರ ಆಕ್ರೋಶ : ʼನಾವು ದರೋಡೆ ಮಾಡಲು ಬಂದಿಲ್ಲ, ನಮ್ಮ ಹಕ್ಕನ್ನು ನಾವು ಕೇಳುತ್ತಿದ್ದೇವೆ.  ಈ ತರಹ ಆಕ್ರಮಣಕಾರಿ ಧೋರಣೆ ಸಂವಿಧಾನದ ಆಶಯಗಳ ವಿರುದ್ಧವಾಗಿದೆ. ಉದ್ಯೋಗಕ್ಕಾಗಿ ಆಗ್ರಹಿಸಿದರೆ ಪೊಲೀಸರು ಪ್ರತಿಭಟನೆಯನ್ನು ಹತ್ತಿಕ್ಕಿದರುʼ ಎಂದು ಪ್ರತಿಭಟನಕಾರರು ದೂರಿದರು. ಪ್ರತಿಭಟನಕಾರರನ್ನು ಬಿಡುಗಡೆ ಮಾಡಿ: ರೈತ ನಾಯಕರ ಆಕ್ರೋಶ ʼಇಂದು ನಡೆದ ಘಟನೆಯಲ್ಲಿ ಪೊಲೀಸರ ವರ್ತನೆಗೆ ರೈತ ನಾಯಕರು ಆಕ್ರೋಶ ಹೊರಹಾಕಿದ್ದು, ವಶಕ್ಕೆ ಪಡೆದಿರುವ ಪ್ರತಿಭಟನಕಾರರನ್ನು ಬಿಡುಗಡೆಗೊಳಿಸಿ ಶ್ರೀನಗರ ವೃತ್ತಕ್ಕೆ ಕರೆ ತರಬೇಕುʼ ಎಂದು ರೈತ ಸಂಘ ಸಹಿತ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ವಾರ್ತಾ ಭಾರತಿ 1 Dec 2025 7:38 pm

KEA Ayush 2025: ಯುಜಿ, ಪಿಜಿ ಆಯುಷ್ ಕೊರ್ಸ್ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

KEA Ayush Seat Allocation Updates: ಕರ್ನಾಟಕದಲ್ಲಿ ಸ್ನಾತಕೋತ್ತರ ಮತ್ತು ಪದವಿ ಆಯುಷ್ ಕೋರ್ಸ್‌ಗಳ (PGAyush UGAyush 2025) ಅಭ್ಯರ್ಥಿಗಳ ಸ್ಟ್ರೇ ವೆಕೆನ್ಸಿ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಇದರೊಂದಿಗೆ ಸ್ನಾತಕೋತ್ತರ ಆಯುಷ್ ಕೋರ್ಸ್ ಗಳ (PGAyush) ಪ್ರವೇಶ ಸಂಬಂಧ 3ನೇ ಸುತ್ತಿನ ಸೀಟು ಹಂಚಿಕೆ

ಒನ್ ಇ೦ಡಿಯ 1 Dec 2025 7:32 pm

ʻಸಿಎಂ, ಡಿಸಿಎಂ ನಡುವೆ ಹೊಂದಾಣಿಕೆಯಾಗಿದೆ, ಯಾರಿಗೂ ಗೊತ್ತಾಗಿಲ್ಲʼ: ದೇಶಪಾಂಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿ ಬದಲಾವಣೆ ಗೊಂದಲದ ಬಗ್ಗೆ ಚರ್ಚಿಸಿ ನಿರ್ಣಯಕ್ಕೆ ಬಂದಿದ್ದಾರೆ. ಈ ವಿಷಯಕ್ಕೆ ಪೂರ್ಣವಿರಾಮ ಬಿದ್ದಿದೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿದೆ. ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಅನುಕೂಲ ಕಲ್ಪಿಸುತ್ತಿವೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಅಭಿವೃದ್ಧಿ ಯೋಜನೆಗಳಿಗೆ ಪ್ರಾಧಾನ್ಯತೆ ನೀಡಲಾಗುವುದು ಎಂದು ಆರ್‌.ವಿ.ದೇಶಪಾಂಡೆ ಸ್ಪಷ್ಟಪಡಿಸಿದರು.

ವಿಜಯ ಕರ್ನಾಟಕ 1 Dec 2025 7:27 pm

ಗೌಪ್ಯವಾಗಿ ಕೋಡಿಮಠದ ಸ್ವಾಮೀಜಿ ಭೇಟಿಯಾದ ಜಿ.ಪರಮೇಶ್ವರ್‌, ಚರ್ಚೆಯಾಗಿದ್ದೇನು?

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಚರ್ಚೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಸಂಚಲನ ಸೃಷ್ಟಿಸಿದೆ. ಹೈಕಮಾಂಡ್‌ ಸೂಚನೆ ಮೇರೆಗೆ ಈ ಬೆಳವಣಿಗೆ ನಡೆದಿದ್ದು, ಸದ್ಯದಲ್ಲೇ ಇಬ್ಬರನ್ನೂ ದೆಹಲಿಗೆ ಕರೆಸಿ ಮಾತನಾಡುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್‌ ಅವರ ನಡೆ ಅಚ್ಚರಿ ಮೂಡಿಸಿದೆ. ರಾಜಕೀಯ ಭವಿಷ್ಯವಾಣಿಗೆ

ಒನ್ ಇ೦ಡಿಯ 1 Dec 2025 7:11 pm

ವಲ್ಲಭ ಚೈತನ್ಯ ಮಹಾರಾಜರ 75ನೇ ಜಯಂತಿ: ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

ವಲ್ಲಭ ಚೈತನ್ಯ ಮಹಾರಾಜರ 75ನೇ ಜಯಂತಿ ಅಂಗವಾಗಿ ಗಾಯತ್ರೀ ತಪೋಭೂಮಿ ಚಾರಿಟೇಬಲ್ ಟ್ರಸ್ಟ್ ಮತ್ತು ಚೈತನ್ಯ ಯುವ ಸಮಿತಿ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಹುಬ್ಬಳ್ಳಿ ಮತ್ತು ಹಾವೇರಿಯ ತಜ್ಞ ವೈದ್ಯರ ನೇತೃತ್ವದಲ್ಲಿ ನಡೆದ ಈ ಶಿಬಿರದಲ್ಲಿ ನೂರಾರು ಜನರು ಉಚಿತ ತಪಾಸಣೆ ಮತ್ತು ಔಷಧಿಯ ಲಾಭ ಪಡೆದರು. ಜೊತೆಗೆ ಇಪ್ಪತ್ತು ಹೆಚ್ಚು ಮಂದಿ ಯುವಕರು ರಕ್ತದಾನ ಮಾಡಿದ್ದಾರೆ ಎನ್ನಲಾಗಿದೆ.

ವಿಜಯ ಕರ್ನಾಟಕ 1 Dec 2025 7:04 pm

ವಿಶ್ವಕಪ್ ಚಿಂತೆ ಬಿಡಿ, ರೋಹಿತ್- ವಿರಾಟ್ ಆಟ ನೋಡಿ ಖುಷಿಪಡಿ: ಕ್ರಿಕೆಟ್ ತಜ್ಞರಿಗೆ ಹೇಳಿದ್ದೇನು ಇರ್ಫಾನ್ ಪಠಾಣ್?

India Vs South Africa 1st Odi- ಕ್ರಿಕೆಟ್ ಅಭಿಮಾನಿಗಳು ಇದೀಗ ಊಹಾಪೋಗಳಿಗೆ ಗಮನ ನೀಡದೆ ಸದ್ಯ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಆಟವನ್ನು ಆನಂದಿಸಬೇಕು ಎಂದು ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಅವರು ಅಭಿಪ್ರಾಯಪಟ್ಟಿದ್ದಾರೆ. ವಿಶ್ವಕಪ್ ವರೆಗೆ ಅವರು ಆಡ್ತಾರೋ ಇಲ್ಲವೋ ಎಂಬಿತ್ಯಾದಿ ಚಿಂತೆಯನ್ನು ಬಿಟ್ಟು ಅವರ ಕ್ರಿಕೆಟ್ ಬದುಕಿನ ಕೊನೆಯ ಹಂತವನ್ನು ಸಂತೋಷವಾಗಿ ಆಡಲು ಅವಕಾಶ ನೀಡಬೇಕು ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ.

ವಿಜಯ ಕರ್ನಾಟಕ 1 Dec 2025 6:58 pm

ದಿಲ್ಲಿಯಲ್ಲಿನ ಮುಖ್ಯ ಕಚೇರಿಗೆ ಪಾರ್ಕಿಂಗ್‌ಗೆ ಸ್ಥಳಾವಕಾಶ ಕಲ್ಪಿಸಲು ಪುರಾತನ ದೇವಾಲಯ ಕೆಡವಿದ ಆರೆಸ್ಸೆಸ್‌ : ಪ್ರಿಯಾಂಕ ಖರ್ಗೆ, ಸುಪ್ರಿಯಾ ಶ್ರಿನೇತ್ ಆರೋಪ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ಝಂಡೇವಾಲ್‌ನಲ್ಲಿರುವ ಆರೆಸ್ಸೆಸ್ ಮುಖ್ಯ ಕಚೇರಿ ಬಳಿ ನಡೆದ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆರೆಸ್ಸೆಸ್‌ ತನ್ನ ಕಟ್ಟಡದ ಬಳಿ ವಾಹನ ನಿಲುಗಡೆಗೆ ಜಾಗವನ್ನು ನಿರ್ಮಿಸಲು ಪುರಾತನ ದೇವಾಲಯವೊಂದನ್ನು ನೆಲಸಮಗೊಳಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ‌. ಈ ಬಗ್ಗೆ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ. ಆದರೆ ಸೂಕ್ತ ನಿಯಮಗಳನ್ನು ಅನುಸರಿಸಿ ಒತ್ತುವರಿ ತೆರವು ಕ್ರಮಕೈಗೊಳ್ಳಲಾಗಿದೆ ಎಂದು ದಿಲ್ಲಿ ನಗರ ಪಾಲಿಕೆ ಸಮರ್ಥಿಸಿಕೊಂಡಿದೆ. 45 ದಿನಗಳ ಹಿಂದೆ ಸ್ಥಳ ತೆರವುಗೊಳಿಸುವಂತೆ ನೋಟಿಸ್ ಜಾರಿಗೊಳಿಸಿದ ಬಳಿಕ ಈ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ದಿಲ್ಲಿ ನಗರ ಪಾಲಿಕೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ನೆಲಸಮ ಕಾರ್ಯಾಚರಣೆ ರಾಜಕೀಯ ವಿವಾದಕ್ಕೆ ತಿರುಗಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಖಾತೆ ಸಚಿವ ಪ್ರಿಯಾಂಕ್ ಖರ್ಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ಬಳಿ ವಾಹನ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಲು ಪುರಾತನ ದೇವಾಲಯವೊಂದನ್ನು ನೆಲಸಮಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ವಿಶ್ವದ ಅತಿದೊಡ್ಡ NGO ಎಂದು ಹೇಳಿಕೊಳ್ಳುವ ಆರೆಸ್ಸೆಸ್‌ ದೇವಾಲಯವನ್ನು ಕೆಡವಿ, ಪಾರ್ಕಿಂಗ್ ಸ್ಥಳವನ್ನು ಸೃಷ್ಟಿಸುತ್ತಿದೆ. ಹಿಂದೂ ಹೃದಯ ಸಾಮ್ರಾಟ್‌ಗಳು ಮತ್ತು ಬುಲ್ಡೋಝರ್ ಬಾಬಾಗಳು ಎಂದು ಕರೆಯಲ್ಪಡುವವರು ಯಾಕೆ ಮೌನವಾಗಿದ್ದಾರೆ? ಬೆನ್ನುಮೂಳೆಯಿಲ್ಲದ ಇವರು ವೇದಿಕೆಗಳು ಮತ್ತು ಮೆರವಣಿಗೆಗಳಲ್ಲಿ ಮಾತ್ರ ಘರ್ಜಿಸುತ್ತಾರೆ ಎಂದು ಹೇಳಿದ್ದಾರೆ. ಈ ವಿಷಯದ ಕುರಿತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇತ್ ಕೂಡ ಪ್ರತಿಕ್ರಿಯಿಸಿದ್ದು, ವೈರಲ್ ವೀಡಿಯೊದಲ್ಲಿ ಹೇಳಲಾಗಿರುವ ಸಂಗತಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಜನರಿಗೆ ಕರೆ ನೀಡಿದ್ದಾರೆ. ದಿಲ್ಲಿಯಲ್ಲಿರುವ ಆರೆಸ್ಸೆಸ್‌ ಪ್ರಧಾನ ಕಚೇರಿಯಲ್ಲಿ ಪಾರ್ಕಿಂಗ್ ಸ್ಥಳದ ಕೊರತೆಯಿಂದಾಗಿ, 1400 ವರ್ಷಗಳಷ್ಟು ಹಳೆಯದಾದ ದೇವಾಲಯವನ್ನು ಕೆಡವಿ ಪಾರ್ಕಿಂಗ್‌ಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ಹಿಂದೂಗಳೇ ಎಚ್ಚರಗೊಳ್ಳಿ ಮತ್ತು ಸ್ವಯಂ ಘೋಷಿತ ಧಾರ್ಮಿಕ ಗುತ್ತಿಗೆದಾರರ ಬಗ್ಗೆ ಎಚ್ಚರದಿಂದಿರಿ. ಇವರು ಸನಾತನ ಧರ್ಮದ ದೊಡ್ಡ ಶತ್ರುಗಳು ಎಂದು ಸುಪ್ರಿಯಾ ಶ್ರಿನೇತ್ ಹೇಳಿದ್ದಾರೆ.

ವಾರ್ತಾ ಭಾರತಿ 1 Dec 2025 6:57 pm

ʻAI ನ್ಯಾನೋ ಬನಾನಾʼ ಕರಾಮತ್ತು; ನಕಲಿ ಗಾಯ ಸೃಷ್ಟಿಸಿ, ರಜೆ ಗಿಟ್ಟಿಸಿಕೊಂಡ ಉದ್ಯೋಗಿ

ಈಗಂತು ಎಐ ಬಳಕೆ ಹೆಚ್ಚಾಗಿದೆ. ಹಲವರು ಹಾಡು ಕ್ರಿಯೇಟ್‌ ಮಾಡಲು, ಫೋಟೋ ಡಿಸೈನಿಂಗ್‌ ಸೇರಿ ಹಲವು ವಿಚಾರಕ್ಕೆ ಎಐ ಬಳಕೆ ಮಾಡುತ್ತಾರೆ. ಇಲ್ಲೊಬ್ಬ ಉದ್ಯೋಗಿ ರಜೆಗಾಗಿ ನ್ಯಾನೋ ಬನಾನದಲ್ಲಿ ಕೈಗೆ ಗಾಯವಾದಂತೆ ಚಿತ್ರ ಕ್ರಿಯೇಟ್‌ ಮಾಡಿ, ಎಚ್‌ಆರ್‌ಗೆ ಲೀವ್‌ ಅಪ್ಲಿಕೇಶನ್‌ ಹಾಕಿದ್ದಾರೆ. ಇದರಿಂದ ಮರುಗಿದ ಅವರು ಮ್ಯಾನೇಜರ್‌ ಬಳಿ ಮಾತನಾಡಿ ರಜೆ ಸಿಗುವಂತೆ ಮಾಡಿರುವ ಘಟನೆ ನಡೆದಿದೆ. ಇದಕ್ಕೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ಎಂತ ಪುಣ್ಯವಂತ ಎಂದು ಟ್ವೀಟ್‌ ಮಾಡಿದ್ದಾರೆ.

ವಿಜಯ ಕರ್ನಾಟಕ 1 Dec 2025 6:38 pm

ರಾಜ್ಯ ಸರ್ಕಾರದಿಂದ ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆ ಜಾರಿ: ಮಧ್ಯವರ್ತಿ ನೆರವಿಲ್ಲದೆ ಸ್ವತಃ ಸ್ಟಾಂಪ್ ಪೇಪರ್ ಪಡೆದುಕೊಳ್ಳಿ

ಕರ್ನಾಟಕ ಸರ್ಕಾರವು ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದು ಸ್ಟಾಂಪ್ ವಂಚನೆ ಮತ್ತು ಭದ್ರತಾ ಲೋಪಗಳನ್ನು ತಡೆಯುತ್ತದೆ. ನಾಗರಿಕರು ಮಧ್ಯವರ್ತಿಗಳಿಲ್ಲದೆ ಸ್ವತಃ ಇ-ಸ್ಟಾಂಪ್ ತಯಾರಿಸಬಹುದು. ಇದು ಸಂಪೂರ್ಣ ಆನ್‌ಲೈನ್, ಸುರಕ್ಷಿತ ಮತ್ತು 24x7 ಲಭ್ಯವಿರುತ್ತದೆ. ಈ ವ್ಯವಸ್ಥೆಯಿಂದ ಸರ್ಕಾರಕ್ಕೆ ಆದಾಯ ಹೆಚ್ಚಳವಾಗಲಿದೆ. ಇದು ಪಾರದರ್ಶಕತೆ ಮತ್ತು ಆಡಳಿತದ ದಕ್ಷತೆಯನ್ನು ಸುಧಾರಿಸುತ್ತದೆ.

ವಿಜಯ ಕರ್ನಾಟಕ 1 Dec 2025 6:27 pm

ಕೊಣಾಜೆಯಲ್ಲಿ ಗುರು-ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ದತೆ

ಕಾರ್ಯಕ್ರಮ ಇತಿಹಾಸದ ಪುಟದಲ್ಲಿ ದಾಖಲಾಗಲಿದೆ: ಯು.ಟಿ.ಖಾದರ್

ವಾರ್ತಾ ಭಾರತಿ 1 Dec 2025 6:19 pm

Ration: ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್‌ ಗುಡ್‌ನ್ಯೂಸ್‌

ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಈಗಾಗಲೇ ರಾಜ್ಯದ ಜನತೆಗಾಗಿ ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಅಕ್ಕಿ ಉಚಿತವಾಗಿ ವಿತರಿಸುವ ಅನ್ನಭಾಗ್ಯ ಎನ್ನುವ ಮಹತ್ವದ ಯೋಜನೆ ಜಾರಿ ಮಾಡಲಾಗಿದ್ದು ಇತ್ತೀಚೆಗೆ ಇದರಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಇದೀಗ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲು ಇಂದಿರಾ ಆಹಾರ ಕಿಟ್ ನೀಡಲಾಗುತ್ತಿದೆ. ಈ ಕಿಟ್‌ನಲ್ಲಿ

ಒನ್ ಇ೦ಡಿಯ 1 Dec 2025 6:14 pm

ರೈತರಿಗೆ ಶುಭ ಸುದ್ದಿ: ಮುಂಗಾರು ಬೆಳೆ ಹಾನಿಗೆ ಪರಿಹಾರ ಜಮೆ, ಇನ್ನು ಬರಬೇಕಿದೆ ಬೆಳೆ ವಿಮೆ ಪರಿಹಾರ

ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ದಾವಣಗೆರೆ ಜಿಲ್ಲೆಯ 542 ರೈತರಿಗೆ 51.10 ಲಕ್ಷ ರೂಪಾಯಿ ಪರಿಹಾರವನ್ನು ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ. ಇನ್‌ಪುಟ್‌ ಸಬ್ಸಿಡಿಯನ್ನು ದ್ವಿಗುಣಗೊಳಿಸಿ, ಮಳೆಯಾಶ್ರಿತ, ನೀರಾವರಿ ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಅನುಗುಣವಾಗಿ ಪರಿಹಾರ ನೀಡಲಾಗಿದೆ. ಇದು ಸರಕಾರದ ಬೆಳೆ ಹಾನಿ ಪರಿಹಾರವಾಗಿದ್ದು, ಬೆಳೆ ವಿಮೆ ಪರಿಹಾರ ಬರಬೇಕಿದೆ.

ವಿಜಯ ಕರ್ನಾಟಕ 1 Dec 2025 6:13 pm

ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಜಾಲವನ್ನು ಭೇದಿಸಿದ ದಿಲ್ಲಿ ಪೊಲೀಸರು: ಮೂವರ ಬಂಧನ

ಹೊಸದಿಲ್ಲಿ : ದಿಲ್ಲಿ ಪೊಲೀಸ್‌ನ ವಿಶೇಷ ಘಟಕವು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಜಾಲವೊಂದನ್ನು ಭೇದಿಸಿದೆ. ಪ್ರಸ್ತುತ ನೆರೆಯ ದೇಶದಲ್ಲಿ ನೆಲೆಸಿರುವ ಗ್ಯಾಂಗ್‌ಸ್ಟರ್ ಪರಿವರ್ತಿತ ಭಯೋತ್ಪಾದಕ ಶಹಜಾದ್ ಭಟ್ಟಿ ಈ ಜಾಲದ ನಾಯಕನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪಂಜಾಬ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶಗಳಿಂದ ಈ ಜಾಲದ ಮೂವರು ಪ್ರಮುಖ ಸದಸ್ಯರನ್ನು ಬಂಧಿಸಿದ್ದು, ಸೆಮಿ ಆಟೊಮ್ಯಾಟಿಕ್ ಪಿಸ್ತೂಲು, 10 ಸಜೀವ ಗುಂಡುಗಳು, ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಸಿಪಿ ಪ್ರಮೋದ ಸಿಂಗ್ ಕುಶ್ವಾಹ್ ರವಿವಾರ ಸುದ್ದಿಗಾರರಿಗೆ ತಿಳಿಸಿದರು. ನ.25ರಂದು ಪಂಜಾಬಿನ ಗುರುದಾಸಪುರದಲ್ಲಿ ನಗರ ಪೋಲಿಸ್ ಠಾಣೆಯ ಹೊರಗೆ ನಡೆದಿದ್ದ ಗ್ರೆನೇಡ್ ದಾಳಿಯಲ್ಲಿ ಈ ಜಾಲವು ಭಾಗಿಯಾಗಿದ್ದು, ಭಟ್ಟಿಯ ಸೂಚನೆಯ ಮೇರೆಗೆ ಈ ದಾಳಿಯನ್ನು ನಡೆಸಲಾಗಿತ್ತು. ಭಟ್ಟಿ ಪಾಕಿಸ್ತಾನದಿಂದ ಎನ್‌ಕ್ರಿಪ್ಟ್ ಮಾಡಲಾದ ಪ್ಲ್ಯಾಟ್‌ಫಾರಂಗಳು ಮತ್ತು ಸಾಮಾಜಿಕ ಮಾಧ್ಯಮ ಚಾನೆಲ್‌ಗಳನ್ನು ಬಳಸಿಕೊಂಡು ಕಾರ್ಯಾಚರಣೆಗಳನ್ನು ಸಂಘಟಿಸುತ್ತಿದ್ದಾನೆ ಎಂದರು. ಮಧ್ಯಪ್ರದೇಶದ ದಾಟಿಯಾ ನಿವಾಸಿ ವಿಕಾಸ ಪ್ರಜಾಪತಿ ಅಲಿಯಾಸ ಬೇತು(19), ಪಂಜಾಬಿನ ಫಿರೋಜ್‌ಪುರ ನಿವಾಸಿ ಹರ್ಗುಣಪ್ರೀತ್ ಸಿಂಗ್ ಅಲಿಯಾಸ್ ಗುರುಕರಣಪ್ರೀತ್ ಸಿಂಗ್ (19) ಮತ್ತು ಉತ್ತರ ಪ್ರದೇಶದ ಬಿಜ್ನೌರ್‌ನ ಆರಿಷ್(22) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಕುಶ್ವಾಹ್ ತಿಳಿಸಿದರು. ಶಸ್ತ್ರಾಸ್ತ್ರ ಕಳ್ಳಸಾಗಣೆ ಪ್ರಕರಣದಲ್ಲಿ ಬೇಕಾಗಿದ್ದ ಪ್ರಜಾಪತಿ ಸಾಮಾಜಿಕ ಮಾಧ್ಯಮಗಳಲ್ಲಿ ಭಟ್ಟಿ ಜೊತೆ ಆಗಾಗ ಸಂಪರ್ಕದಲ್ಲಿರುತ್ತಿದ್ದ. ಆತ ಗುರುದಾಸಪುರ ಮತ್ತು ದಿಲ್ಲಿ ನಡುವೆ ತನ್ನ ನೆಲೆಯನ್ನು ಬದಲಿಸುತ್ತಿದ್ದ. ಜಾಡನ್ನು ಪತ್ತೆ ಹಚ್ಚುವುದನ್ನು ತಪ್ಪಿಸಲು ತನ್ನ ಸೆಲ್ ಪೋನ್ ಸ್ವಿಚ್ ಆಫ್ ಮಾಡುವಂತೆ ಭಟ್ಟಿ ಆತನಿಗೆ ಆಗಾಗ್ಗೆ ಸೂಚಿಸುತ್ತಿದ್ದ ಎಂದರು. ಎರಡು ದಿನಗಳ ಶೋಧ ಕಾರ್ಯಾಚರಣೆಯ ಬಳಿಕ ಪ್ರಜಾಪತಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ. ವಿಚಾರಣೆಯಲ್ಲಿ ಆತ ಜಾಲದ ಕಾರ್ಯತಂತ್ರವನ್ನು ಬಹಿರಂಗಗೊಳಿಸಿದ್ದಾನೆ. ಭಟ್ಟಿ ಮತ್ತು ಪಾಕಿಸ್ತಾನ ಮೂಲದ ಆತನ ಸಹಚರರು ಸಾಮಾಜಿಕ ಮಾಧ್ಯಮಗಳಲ್ಲಿ ಯುವ ಭಾರತೀಯರನ್ನು ಗುರಿಯಾಗಿಸಿಕೊಂಡು ಅವರಿಗೆ ಹಣದ ಮತ್ತು ಗ್ಯಾಂಗ್‌ಸ್ಟರ್‌ಗಳಾಗಿ ವೈಭವದ ಜೀವನದ ಆಮಿಷವನ್ನೊಡ್ಡುತ್ತಿದ್ದರು ಎಂದರು. ಭಟ್ಟಿಯ ಆನ್‌ಲೈನ್ ವ್ಯಕ್ತಿತ್ವದಿಂದ ಪ್ರಭಾವಿತನಾಗಿ ತಾನು ಸಾಮಾಜಿಕ ಮಾಧ್ಯಮದ ಮೂಲಕ ಆತನನ್ನು ಸಂಪರ್ಕಿಸಿದ್ದಾಗಿ ಪ್ರಜಾಪತಿ ಪೊಲೀಸರಿಗೆ ತಿಳಿಸಿದ್ದಾನೆ. ಭಟ್ಟಿ ಪ್ರಜಾಪತಿಗೆ ಗ್ರೆನೇಡ್ ಇದ್ದ ಪಾರ್ಸಲ್ ಕಳುಹಿಸಿದ್ದ. ಭಟ್ಟಿಯ ಸೂಚನೆಯ ಮೇರೆಗೆ ಗುರುದಾಸಪುರ ಪೊಲೀಸ್ ಠಾಣೆಯ ಪರಿಸರದ ಸಮೀಕ್ಷೆ ನಡೆಸಿದ್ದ ಪ್ರಜಾಪತಿ ಗ್ರೆನೇಡ್‌ನ್ನು ಹರ್ಗುಣಪ್ರೀತ ಸಿಂಗ್ ಮತ್ತು ಆತನ ಸಹಚರನಿಗೆ ಹಸ್ತಾಂತರಿಸಿದ್ದ. ನ.25ರಂದು ಪೋಲಿಸ್ ಠಾಣೆಯ ಹೊರಗೆ ಗ್ರೆನೇಡ್ ದಾಳಿಯನ್ನು ತಾನೇ ನಡೆಸಿದ್ದಾಗಿ ಹರ್ಗುಣಪ್ರೀತ್ ಸಿಂಗ್ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾನೆ. ಈ ವೇಳೆ ತನ್ನ ಸಹಚರ ಬೈಕ್ ಸವಾರಿ ಮಾಡುತ್ತಿದ್ದು, ತಾನು ಹಿಂದಿನ ಸೀಟಿನಲ್ಲಿದ್ದೆ ಎಂದು ಆತ ಹೇಳಿದ್ದಾನೆ. ಮೂರನೇ ಆರೋಪಿ ಆಸಿಫ್‌ನನ್ನೂ ಸಾಮಾಜಿಕ ಮಾಧ್ಯಮದ ಮೂಲಕ ನೇಮಕ ಮಾಡಿಕೊಳ್ಳಲಾಗಿತ್ತು ಮತ್ತು ಪಂಜಾಬ್‌ನಲ್ಲಿ ಇದೇ ರೀತಿಯ ಗ್ರೆನೇಡ್ ದಾಳಿಗಳಿಗೆ ಸಿದ್ಧವಾಗಿರುವಂತೆ ಆತನಿಗೆ ಸೂಚಿಸಲಾಗಿತ್ತು. ಇದಕ್ಕಾಗಿ ಭಟ್ಟಿ ಸ್ಥಳದ ನಕ್ಷೆಗಳು ಮತ್ತು ಚಿತ್ರಗಳನ್ನು ಆತನೊಂದಿಗೆ ಹಂಚಿಕೊಂಡಿದ್ದ ಎಂದು ಕುಶ್ವಾಹ್ ತಿಳಿಸಿದರು. ಪೊಲೀಸರು ಜಾಲದ ಇತರ ಸದಸ್ಯರನ್ನು ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.

ವಾರ್ತಾ ಭಾರತಿ 1 Dec 2025 6:12 pm

ಮಂಗಳೂರು: ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕಾಗಿ ಅನಿರ್ದಿಷ್ಟಾವಧಿ ಧರಣಿ

ಮಂಗಳೂರು: ಕೇಂದ್ರ ಸರಕಾರವು ಬಿಸಿಯೂಟ ನೌಕರರಿಗೆ ವೇತನ ಹೆಚ್ಚಿಸಬೇಕು ಮತ್ತು ಕನಿಷ್ಠ ಕೂಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ನಗರದ ಮಿನಿ ವಿಧಾನಸೌಧದ ಮುಂದೆ ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಬಿಸಿಯೂಟ ನೌಕರರು ಧರಣಿ ಸತ್ಯಾಗ್ರಹ ನಡೆಸಿದರು. ಬದುಕು ನಡೆಸಲು ಪೂರಕವಾದ ಕನಿಷ್ಠ ಕೂಲಿಯನ್ನು ನೀಡದೆ ಅತ್ಯಂತ ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಧರಣಿಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲೆಯ ಕಾರ್ಮಿಕ ಚಳುವಳಿಯ ಹಿರಿಯ ನೇತಾರ ಜೆ. ಬಾಲಕೃಷ್ಣ ಶೆಟ್ಟಿ ಅತ್ಯಂತ ನಿಕೃಷ್ಠವಾಗಿ ಕೂಲಿಯನ್ನು ಪಡೆದು, ದಮನೀಯ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿರುವ ಬಿಸಿಯೂಟ ನೌಕರರಿಗೆ ಪ್ರಸಕ್ತ ಸಿಗುತ್ತಿರುವ 4,500 ರೂ. ವೇತನದಿಂದ ಬದುಕು ಸಾಗಿಸಲು ಸಾಧ್ಯವಿಲ್ಲ. ಗೌರವಧನದ ಹೆಸರಿನಲ್ಲಿ ಅಗೌರವ ತೋರಿಸುತ್ತಾ ಬಿಸಿಯೂಟ ನೌಕರೆಯರನ್ನು ಕೀಳಾಗಿ ಕಾಣುವ ಕೇಂದ್ರ ಸರಕಾರದ ವಿರುದ್ಧ ಹೋರಾಟಕ್ಕೆ ಅಣಿಯಾಗಬೇಕೆಂದು ಕರೆ ನೀಡಿದರು. ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡುತ್ತಾ, 2001ರಲ್ಲಿ ಜಾರಿಗೆ ಬಂದ ಬಿಸಿಯೂಟ ಯೋಜನೆಗೆ 2014ರಲ್ಲಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರವು ನಿರಂತರವಾಗಿ ತನ್ನ ಪಾಲನ್ನು ಕಡಿತಗೊಳಿಸುತ್ತಾ ಬಂದಿದೆ. ದೇಶಾದ್ಯಂತ 26ಕ್ಕೂ ಮಿಕ್ಕಿದ ಬಿಸಿಯೂಟ ನೌಕರರು, ಸರಕಾರದ ಆದೇಶದಲ್ಲಿ 4 ಗಂಟೆಯ ಕೆಲಸವೆಂದು ಹೇಳಿದ್ದರೂ 8 ಗಂಟೆಯಷ್ಟು ದುಡಿಯುತ್ತಿದ್ದಾರೆ. ಆದರೆ ಸರಕಾರಗಳು ಮಾತ್ರ ದಿವ್ಯಮೌನ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಸಿಯೂಟ ನೌಕರರ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷೆ ಪದ್ಮಾವತಿ ಶೆಟ್ಟಿ ಮಾತನಾಡಿ ಮುಂದಿನ ಬಜೆಟ್‌ನಲ್ಲಿ ಕನಿಷ್ಠ ವೇತನ ಜಾರಿಯಾಗಬೇಕು, ಯಾವುದೇ ಕಾರಣಕ್ಕೂ ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಬಾರದು, ಐಎಲ್‌ಸಿ ಶಿಫಾರಸ್ಸಿನಂತೆ ಖಾಯಂ ಉದ್ಯೋಗಸ್ಥರಂತೆ ಪರಿಗಣಿಸಿ ಎಲ್ಲಾ ಶಾಸನಬದ್ದ ಸವಲತ್ತುಗಳನ್ನು ನೀಡಬೇಕು ಎಂದು ಆಗ್ರಹಿಸಿದರು. ಬೀಡಿ ಕಾರ್ಮಿಕರ ಸಂಘಟನೆಯ ಜಿಲ್ಲಾ ನಾಯಕ ಜಯಂತ ನಾಯಕ್, ಸಮುದಾಯ ಸಂಘಟನೆಯ ನಾಯಕ ವಾಸುದೇವ ಉಚ್ಚಿಲ್ ಮಾತನಾಡಿದರು. ಸಿಐಟಿಯು ನಾಯಕರಾದ ಯೋಗೀಶ್ ಜಪ್ಪಿನಮೊಗರು, ಸುಂದರ ಕುಂಪಲ, ಪ್ರಮೋದಿನಿ, ಬಿಸಿಯೂಟ ನೌಕರರ ಸಂಘಟನೆಯ ನಾಯಕಿಯರಾದ ರೇಖಾಲತಾ, ಬಬಿತಾ, ಲೀಲಾವತಿ, ಮೋಹಿನಿ, ಶೋಭಾ, ಸುಶೀಲಾ, ಚಿತ್ರಾವತಿ, ಸಬೀನಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ವಾರ್ತಾ ಭಾರತಿ 1 Dec 2025 6:11 pm

E swathu: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಆಸ್ತಿಗಳಿಗೆ ಅಧಿಕೃತ ಮಾನ್ಯತೆ ನೀಡಲು ಇ- ಸ್ವತ್ತು ವಿತರಣೆ

ಬೆಂಗಳೂರು, ಡಿಸೆಂಬರ್‌ 01: ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಇದೇ ವೇಳೆ, ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತಿಗಳ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ, ಸೂಕ್ತ ಖಾತಾ ಭದ್ರತೆ ದೊರಕದ

ಒನ್ ಇ೦ಡಿಯ 1 Dec 2025 5:58 pm

ʼಡಿಜಿಟಲ್ ಅರೆಸ್ಟ್ʼ ಪ್ರಕರಣಗಳ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶನ

ಹೊಸದಿಲ್ಲಿ: ದೇಶದಾದ್ಯಂತ ನೂರಾರು ಕೋಟಿ ರೂಪಾಯಿ ಲೂಟಿ ಮಾಡಿದ ಡಿಜಿಟಲ್ ಅರೆಸ್ಟ್ ಪ್ರಕರಣಗಳ ತನಿಖೆಗಳನ್ನು ಕೈಗೆತ್ತಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನಿರ್ದೇಶಿಸಿದೆ. ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ನ್ಯಾ. ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಡಿಜಿಟಲ್ ಅರೆಸ್ಟ್ ಪ್ರಕರಣದ ತುರ್ತು ಕ್ರಮದ ಅಗತ್ಯವಿದೆ ಎಂದು ಗಮನಿಸಿದೆ. ಡಿಜಿಟಲ್ ಬಂಧನಕ್ಕೆ ಸಂಬಂಧಿಸಿದ ವಂಚನೆ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡುವಂತೆ ಎಲ್ಲಾ ರಾಜ್ಯ ಸರಕಾರಗಳಿಗೆ ಸೂಚಿಸಿದೆ. ಡಿಜಿಟಲ್ ಅರೆಸ್ಟ್ ಪ್ರಕರಣಗಳ ಬಗ್ಗೆ ದೇಶದ ಪ್ರಮುಖ ತನಿಖಾ ಸಂಸ್ಥೆಯು ತಕ್ಷಣಕ್ಕೆ ಗಮನಹರಿಸಬೇಕು. ಇತರ ಹಗರಣಗಳ ಬಗ್ಗೆ ಮುಂದಿನ ಹಂತಗಳಲ್ಲಿ ನಿರ್ಧಾರವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ವಾರ್ತಾ ಭಾರತಿ 1 Dec 2025 5:56 pm

ಈ ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡೋದೇ ದೊಡ್ಡ ಕಿರಿಕಿರಿ: ಮಾರ್ಕೋ ಯಾನ್ಸನ್ ಹೀಗೆ ಹೇಳಿದ್ದು ಯಾಕೆ ?

Marco Jansen On Virat Kohli- ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಒಮ್ಮೆ ಕ್ರೀಸ್‌ನಲ್ಲಿ ನೆಲೆಯೂರಿದರೆ ಅವರನ್ನು ನಿಯಂತ್ರಿಸುವುದು ಅಸಾಧ್ಯ ಎಂದು ದಕ್ಷಿಣ ಆಫ್ರಿಕಾದ ಮಾರ್ಕೋ ಯಾನ್ಸನ್ ಅಭಿಪ್ರಾಯಪಟ್ಟಿದ್ದಾರೆ.. ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಅವರು 135 ರನ್ ಗಳಿಸಿ ಮಿಂಚಿದರು. 17 ವರ್ಷ ಇರುವಾಗಿನಿಂದ ಕೊಹ್ಲಿ ಅವರಿಗೆ ಬೌಲಿಂಗ್ ಮಾಡಿ ಅನುಭವ ಇರುವ ಯಾನ್ಸನ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದು, ಕೊಹ್ಲಿ ಬ್ಯಾಟಿಂಗ್‌ನ ಸಂಪೂರ್ಣತೆಯೇ ಬೌಲರ್‌ಗಳಿಗೆ ದೊಡ್ಡ ಸವಾಲು ಎಂದಿದ್ದಾರೆ.

ವಿಜಯ ಕರ್ನಾಟಕ 1 Dec 2025 5:55 pm

ಚಾಮರಾಜನಗರ ಆಕ್ಸಿಜನ್ ದುರಂತದ ತನಿಖಾ ವರದಿ ಸಲ್ಲಿಕೆ: ಕೆ. ಸುಧಾಕರ್‌ಗೆ ಕಾದಿದ್ಯಾ ಸಂಕಷ್ಟ?

ಕೋವಿಡ್-19 ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದ ಅಂತಿಮ ತನಿಖಾ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಐದು ವರ್ಷಗಳ ಹಿಂದೆ ಆಕ್ಸಿಜನ್ ಕೊರತೆಯಿಂದ 36 ಮಂದಿ ಮೃತಪಟ್ಟ ಈ ಘಟನೆಯು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದು ವ್ಯಾಪಕ ವಿವಾದಕ್ಕೆ ಕಾರಣವಾಗಿತ್ತು. ಘಟನೆಯ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಕಾಂಗ್ರೆಸ್ ಚುನಾವಣೆಯಲ್ಲಿ ನೀಡಿತ್ತು. ಇದೀಗ ಸಿಎಂಗೆ ಸಲ್ಲಿಸಿರುವ ಈ ವರದಿಯಲ್ಲಿ ಕೆಲವು ಮಹತ್ವದ ಸಂಗತಿಗಳು ಉಲ್ಲೇಖಗೊಂಡಿದ್ದು, ಕುತೂಹಲ ಕೆರಳಿಸಿದೆ.

ವಿಜಯ ಕರ್ನಾಟಕ 1 Dec 2025 5:51 pm

ಸೈಬರ್ ಸುರಕ್ಷತೆಗೆ ಹೊಸ ಮೊಬೈಲ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ, ಆ್ಯಪಲ್‌ ವಿರೋಧಿಸುವ ಸಾಧ್ಯತೆ

ಕೇಂದ್ರ ಸರ್ಕಾರವು ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಯಲು ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಭಾರತದ ದೂರಸಂಪರ್ಕ ಸಚಿವಾಲಯವು, ಇನ್ನು ಮುಂದೆ ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ ಸರ್ಕಾರದ 'ಸಂಚಾರ್ ಸಾಥಿ' ಎಂಬ ಸೈಬರ್-ಸುರಕ್ಷತಾ ಅಪ್ಲಿಕೇಶನ್ ಅನ್ನು ಕಡ್ಡಾಯವಾಗಿ ಅಳವಡಿಸಿರಬೇಕು ಎಂದು ಆದೇಶಿಸಿದೆ. ತಯಾರಕರು ಈ ನಿಯಮವನ್ನು 90 ದಿನಗಳೊಳಗೆ ಜಾರಿಗೆ ತರಬೇಕು ಮತ್ತು ಬಳಕೆದಾರರು ಈ ಆ್ಯಪ್ ಅನ್ನು ಡಿಲೀಟ್ ಮಾಡಲು ಸಾಧ್ಯವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ವಿಜಯ ಕರ್ನಾಟಕ 1 Dec 2025 5:39 pm

ಭಾರತದ ಆರ್ಥಿಕತೆಯನ್ನು ಟಾರ್ಗೆಟ್ ಮಾಡಿದ ಎಲ್ ಐಸಿ ಮಿರರ್ 2010-2013 ಅಭಿಯಾನ

ಭಾರತೀಯ ಜೀವ ವಿಮಾ ನಿಗಮವು ಮತ್ತೊಮ್ಮೆ ಸಾರ್ವಜನಿಕ ಚರ್ಚೆಯ ಕೇಂದ್ರಬಿಂದುವಾಗಿದೆ. ದೊಡ್ಡ ಭಾರತೀಯ ಕಾರ್ಪೊರೇಟ್ ಗುಂಪುಗಳಲ್ಲಿ, ವಿಶೇಷವಾಗಿ ಅದಾನಿ ಮತ್ತು ರಿಲಯನ್ಸ್‌ನಲ್ಲಿ ಅದರ ಹೂಡಿಕೆಗಳ ಸದೃಢತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಕೆಲವು ವಿಭಾಗಗಳು ಈ ಹೂಡಿಕೆಗಳನ್ನು ಅಸುರಕ್ಷಿತವೆಂದು ಬಿಂಬಿಸಲು ಪ್ರಯತ್ನಿಸುತ್ತಿವೆ, ಇದು ವಿಮಾದಾರರ ನಿರ್ಧಾರಗಳ ಬಗ್ಗೆ ಎಚ್ಚರಿಕೆಯ ಭಾವನೆಯನ್ನು ಸೃಷ್ಟಿಸುತ್ತಿದೆ. ಸೂಕ್ಷ್ಮವಾಗಿ ಪರಿಶೀಲಿಸಿದಾಗ ಈ ನಿರೂಪಣೆಯು ಆಯ್ದದ್ದಷ್ಟೇ

ಒನ್ ಇ೦ಡಿಯ 1 Dec 2025 5:26 pm

E-Swattu and E-Katha: ಇ - ಸ್ವತ್ತು, ಇ ಖಾತಾ ಬಗ್ಗೆ ಬಿಗ್ ಗುಡ್‌ನ್ಯೂಸ್ ಕೊಟ್ಟ ಡಿ.ಕೆ ಶಿವಕುಮಾರ್!

E-Swattu and E-Katha: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಇ - ಸ್ವತ್ತು ಹಾಗೂ ಇ -ಖಾತಾಗೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಜನರ ಶಕ್ತಿಯೇ ನಮ್ಮ ಶಕ್ತಿ - ಅವರೇ ನಮ್ಮ ಆಸ್ತಿ ಎಂದು ಹೇಳಿರುವ ಅವರು ಕೆಲವೊಂದು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ

ಒನ್ ಇ೦ಡಿಯ 1 Dec 2025 5:21 pm

ಕೊಡಗಿನ ಮೃಗಾಲಯವೊಂದರಲ್ಲಿ ಇಟಲಿ ವ್ಯಕ್ತಿಯೇ ʻವಿಚಿತ್ರ ಪ್ರಾಣಿʼ; ಕೈ ಹಿಡಿದು ಫೋಟೋಗೆ ಮುಗಿಬಿದ್ದ ಜನ

ಆಫ್ರಿಕಾ, ಅಮೆರಿಕ ಸೇರಿದಂತೆ ವಿದೇಶಿ ಪ್ರವಾಸಿಗರು ಕರ್ನಾಟಕಕ್ಕೆ ಬಂದರೆ ಅವರನ್ನು ವಿಚಿತ್ರವಾಗಿ ನೋಡಿ, ಅವರು ಧರಿಸಿರುವ ಬಟ್ಟೆ, ಕೂದಲಿನ ಬಗ್ಗೆ ಮಾತಾಡಿಕೊಳ್ಳೋದು ಸಾಮಾನ್ಯ. ಅದೇ ರೀತಿ ಇಟಲಿಯ ಪ್ರವಾಸಿಗನೊಬ್ಬ ಕರ್ನಾಟಕದ ಕೊಡಗಿನಲ್ಲಿರುವ ಮೃಗಾಲಯಕ್ಕೆ ಭೇಟಿ ನೀಡಿದ ವೇಳೆ ಆತನಿಗಾದ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲಿನ ಜನರು ಪ್ರಾಣಿಗಳನ್ನು ವೀಕ್ಷಿಸದೆ ಹೇಗೆ ತನ್ನ ಜೊತೆ ಫೋಟೋ ತೆಗೆಸಿಕೊಳ್ಳಲು ಮುಗಿಬಿದ್ದರು ಎಂದು ಪ್ರಸ್ತಾಪಿಸಲಾಗಿದೆ.

ವಿಜಯ ಕರ್ನಾಟಕ 1 Dec 2025 5:21 pm

ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು QR ಸ್ಕ್ಯಾನ್ ಕಡ್ಡಾಯ; ದಿನಾಂಕ ನಿಗದಿ! ಏನೆಲ್ಲಾ ಸಾಮಗ್ರಿ ಇರುತ್ತೆ?

ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಸ್ಕ್ಯಾನ್ ಕಡ್ಡಾಯಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ಬದಲಾಗಿ ಈ ಕಿಟ್ ನೀಡಲಾಗುತ್ತಿದ್ದು, ಉತ್ತಮ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಪಾರದರ್ಶಕವಾಗಿ ವಿತರಿಸಬೇಕು. ಪ್ರತಿ ತಿಂಗಳು 10ರೊಳಗೆ ಕಿಟ್ ವಿತರಣೆಗೊಂಡು, ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಸಾಮಗ್ರಿ ನೀಡಲು ತಿಳಿಸಲಾಗಿದೆ.

ವಿಜಯ ಕರ್ನಾಟಕ 1 Dec 2025 5:07 pm

ಉಚ್ಚಿಲ| ರಿಕ್ಷಾ- ಕಾರಿನ ಮಧ್ಯೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

ಪಡುಬಿದ್ರಿ: ರಿಕ್ಷಾ ಮತ್ತು ಕಾರಿನ ಮಧ್ಯೆ ಸೋಮವಾರ ಸಂಜೆ ವೇಳೆ ಉಚ್ಟಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕರೊಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಉಚ್ಚಿಲದ ರಫೀಕ್ ಎಂದು ಗುರುತಿಸಲಾಗಿದೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ರಿಕ್ಷಾಗೆ ಕಾರೊಂದು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಕಾರು ಮತ್ತು ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದೆ. ತಲೆಗೆ ತೀವ್ರವಾಗಿ ಗಾಯಗೊಂಡ ಚಾಲಕನನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಪಡುಬಿದ್ರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.  

ವಾರ್ತಾ ಭಾರತಿ 1 Dec 2025 4:53 pm

ಸಂಸತ್ ಕಲಾಪಕ್ಕೆ ಸಾಕು ನಾಯಿ ಕರೆತಂದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ!

ಡಿ. 1ರಂದು ನಡೆದ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನದಂದು, ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ತಮ್ಮ ಸಾಕು ನಾಯಿಯನ್ನು ಕಲಾಪಕ್ಕೆ ಕರೆತಂದು ವಿವಾದಕ್ಕೆ ಕಾರಣರಾದರು. ರೇಣುಕಾ ಚೌಧರಿ ತಮ್ಮ ನಾಯಿ ಯಾರಿಗೂ ತೊಂದರೆ ಕೊಡುವುದಿಲ್ಲ ಎಂದು ಸಮರ್ಥಿಸಿಕೊಂಡರು. ಈ ನಡೆಯನ್ನು ತೀವ್ರವಾಗಿ ಟೀಕಿಸಿರುವ ಬಿಜೆಪಿ, ಇದು ಸಂಸದರಿಗೆ ನೀಡಿದ ಸೌಲಭ್ಯಗಳ ದುರುಪಯೋಗ ಎಂದು ಹೇಳಿದೆ.

ವಿಜಯ ಕರ್ನಾಟಕ 1 Dec 2025 4:51 pm

ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ; ಏನಿದು ತಂತ್ರಾಂಶ? ಗ್ರಾಮೀಣ ಆಸ್ತಿಗಳಿಗೆ ಇ-ಖಾತಾ ಪಡೆಯುವುದು ಹೇಗೆ?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚತಂತ್ರ ಸಾಫ್ಟ್‌ವೇರ್‌ನ ನವೀಕರಿಸಿದ ಆವೃತ್ತಿಯಾದ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದೆ. ಈ ಉಪಕ್ರಮದ ಮುಖ್ಯ ಉದ್ದೇಶವು ಗ್ರಾಮೀಣ ಕರ್ನಾಟಕದ 97 ಲಕ್ಷಕ್ಕೂ ಹೆಚ್ಚು ಕೃಷಿಯೇತರ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ, ಅವುಗಳನ್ನು ಅಧಿಕೃತ ತೆರಿಗೆ ವ್ಯಾಪ್ತಿಗೆ ತರುವುದು ಮತ್ತು ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವುದಾಗಿದೆ. ಈ ವ್ಯವಸ್ಥೆಯು ಕಾವೇರಿ 2.0 ಸಾಫ್ಟ್‌ವೇರ್‌ನೊಂದಿಗೆ ಸಂಯೋಜನೆಗೊಂಡಿದ್ದು, ನೋಂದಣಿಯನ್ನು ಸರಳಗೊಳಿಸುತ್ತದೆ. ಈ ಹಿನ್ನೆಲೆಯಲ್ಲಿ ಏನಿದು ಇ-ಸ್ವತ್ತು 2.0 ತಂತ್ರಾಂಶ; ಗ್ರಾಮೀಣ ಆಸ್ತಿಗಳಿಗೆ ಇ-ಖಾತಾ ಪಡೆಯುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ.

ವಿಜಯ ಕರ್ನಾಟಕ 1 Dec 2025 4:50 pm

New Railway Line: ಹೊಸ ಜೋಡಿ ರೈಲು ಯೋಜನೆ ಪೂರ್ಣ, ರಾಜ್ಯದ ಈ ಜಿಲ್ಲೆಗಳ ಜನರಿಗೆ ಗುಡ್‌ನ್ಯೂಸ್

ಬೆಂಗಳೂರು, ಡಿಸೆಂಬರ್ 01: ಮಹಾರಾಷ್ಟ್ರದ ಸೋಲಾಪುರವನ್ನು ಕರ್ನಾಟಕದ ಗದಗಕ್ಕೆ ಸಂಪರ್ಕಿಸುವ ಜೋಡಿ ರೈಲು ಮಾರ್ಗದ ಕಾಮಗಾರಿ ಬಹುತೇಕ (ಶೇ.99) ಪೂರ್ಣಗೊಂಡಿದೆ. ಕರ್ನಾಟಕ ಪ್ರಮುಖ ಜಿಲ್ಲೆಗಳಾದ, ವಿಜಯನಗರ, ಗದಗ ಮತ್ತು ಬಾಗಲಕೋಟೆಗೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ಮಾರ್ಗವನ್ನು ಕಾರ್ಯಾರಂಭ ಮಾಡುವುದಾಗಿ ಕೇಂದ್ರ ರೈಲ್ವೆ ಸಚಿವಾಲಯ ಘೋಷಣೆ ಮಾಡಿದೆ. ಈ ಮಾರ್ಗದಿಂದ ಏನೆಲ್ಲ ಪ್ರಯೋಜನಗಳು? ಮಾರ್ಗ, ಯೋಜನೆ ಮಾಹಿತಿ ಇಲ್ಲಿದೆ.

ಒನ್ ಇ೦ಡಿಯ 1 Dec 2025 4:41 pm

Kalaburagi | ಬೈಕ್‌ಗಳ ಮಧ್ಯೆ ಢಿಕ್ಕಿ; ಸವಾರ ಮೃತ್ಯು

ಕಲಬುರಗಿ : ಎರಡು ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರವಿವಾರ ರಾತ್ರಿ ಆಳಂದ ರಸ್ತೆಯ ಸಾವಳಗಿ ಕ್ರಾಸ್ ಸಮೀಪ ನಡೆದಿದೆ. ಆಳಂದ ತಾಲ್ಲೂಕಿನ ಲಾಡ್ ಚಿಂಚೋಳಿ ಗ್ರಾಮದ ಶಿವರಾಯ ಶಾಂತಪ್ಪ ಬಿರಾದಾರ ಮೃತ ಸವಾರ ಎಂದು ತಿಳಿದುಬಂದಿದೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆ - 2 ರಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 1 Dec 2025 4:40 pm

ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು : ಕೆ.ವಿ.ಪ್ರಭಾಕರ್

ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರ 93ನೇ ಜನ್ಮದಿನೋತ್ಸವ ಕಾರ್ಯಕ್ರಮ

ವಾರ್ತಾ ಭಾರತಿ 1 Dec 2025 4:36 pm

ಬೆಂಗಳೂರಿನ ಟ್ರಾಫಿಕ್‌ನಲ್ಲಿ ಒಂದು ಗಂಟೆ ಕಾಲ ಸಿಲುಕಿಕೊಂಡ ಉತ್ತರ ಪ್ರದೇಶ ಸಂಸದ ರಾಜೀವ್ ರಾಯ್; ಪೊಲೀಸರು ನಿಷ್ಪ್ರಯೋಜಕರು ಎಂದು ವಾಗ್ಧಾಳಿ

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆಯ ಬಗ್ಗೆ ಮತ್ತೊಂದು ಟೀಕೆ ವ್ಯಕ್ತವಾಗಿದ್ದು, ಬೆಂಗಳೂರಿನ ಅತ್ಯಂತ ಕೆಟ್ಟ ಸಂಚಾರ ನಿರ್ವಹಣೆಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಿಲುಕಿಕೊಂಡೆ. ಈ ವೇಳೆ ಯಾವುದೇ ಅಧಿಕಾರಿಯನ್ನೂ ನೆರವಿಗಾಗಿ ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ರಾಜೀವ್ ರಾಯ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಈ ಘಟನೆ ಭಾರಿ ಸಂಚಾರಿ ದಟ್ಟಣೆ ಇರುವ ಡಾ‌. ರಾಜಕುಮಾರ್ ಸಮಾಧಿಯ ರಸ್ತೆಯಲ್ಲಿ ನಡೆದಿದ್ದು, ಈ ಸಂಚಾರ ದಟ್ಟಣೆಯಿಂದ ನಾನು ವಿಮಾನವನ್ನು ತಪ್ಪಿಸಿಕೊಳ್ಳಬೇಕಾಯಿತು ಎಂದು ಅವರು ಬೆಂಗಳೂರಿನ ಗಂಭೀರ ಸಂಚಾರ ದಟ್ಟಣೆಯ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಇಂದಿನಿಂದ (ಸೋಮವಾರ) ಪ್ರಾರಂಭಗೊಂಡಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವರು ಹೊಸದಿಲ್ಲಿಗೆ ತೆರಳಬೇಕಿತ್ತು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜೀವ್ ರಾಯ್, ಮಾನ್ಯ ಕರ್ನಾಟಕ ಮುಖ್ಯಮಂತ್ರಿಗಳೇ, ನನಗಿದನ್ನು ಹೇಳಲು ವಿಷಾದವಾಗುತ್ತಿದ್ದರೂ, ನಿಮ್ಮಲ್ಲಿ ಅತ್ಯಂತ ಕೆಟ್ಟ ಸಂಚಾರ ನಿರ್ವಹಣೆ ಇದೆ ಹಾಗೂ ಅತ್ಯಂತ ಬೇಜವಾಬ್ಸಾರಿ ಮತ್ತು ನಿಷ್ಪ್ರಯೋಜಕ ಪೊಲೀಸರಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಸಂಚಾರ ದಟ್ಟಣೆಯ ಸಂದರ್ಭದಲ್ಲಿ ಸುತ್ತಮುತ್ತ ಯಾವೊಬ್ಬ ಪೊಲೀಸ್ ಸಿಬ್ಬಂದಿಯೂ ಇರಲಿಲ್ಲ ಎಂಬುದರತ್ತ ಅವರು ತಮ್ಮ ಪೋಸ್ಟ್‌ನಲ್ಲಿ ಗಮನ ಸೆಳೆದಿದ್ದಾರೆ. ತಮ್ಮ ಈ ಮಾತಿಗೆ ಪುರಾವೆಯಾಗಿ ಅವರು ತಮ್ಮ ಮೊಬೈಲ್‌ನ ಕಾಲ್ ಲಾಗ್ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದು, ನಾಲ್ಕು ವಿವಿಧ ಸಂಚಾರಿ ಸಹಾಯವಾಣಿಗೆ ಅವರು ಕರೆ ಮಾಡಿದ್ದರೂ, ಯಾರೊಬ್ಬರೂ ಅವರ ಕರೆಯನ್ನು ಸ್ವೀಕರಿಸಲಿಲ್ಲ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಅತ್ಯಂತ ಕುಖ್ಯಾತ ಸಂಚಾರ ದಟ್ಟಣೆ ಎಂದು ದೂರಿರುವ ಅವರು, ತಮ್ಮ ಪೋಸ್ಟ್‌ನೊಂದಿಗೆ ಬೆಂಗಳೂರು ನಗರ ಪೊಲೀಸರು ಹಾಗೂ ಜಂಟಿ ಸಂಚಾರ ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗಿದೆ. Hon’ble @CMofKarnataka I m sorry but you have the worst traffic management, and most irresponsible, useless traffic police. They don’t even pick up phone calls, here is the SS of my attempt to speak to them , none of them picked up my call. Last one hour we are stuck at same… pic.twitter.com/GlWjJ4RgKH — Rajeev Rai (@RajeevRai) November 30, 2025

ವಾರ್ತಾ ಭಾರತಿ 1 Dec 2025 4:30 pm

Raichur | ರಸ್ತೆ ಮಧ್ಯೆ ಅಡ್ಡಲಾಗಿ ಪಲ್ಟಿಯಾದ ಗಾಜು ತುಂಬಿದ್ದ ಲಾರಿ; ಇಬ್ಬರಿಗೆ ಗಾಯ

ರಾಯಚೂರು : ರಾಯಚೂರು ತಾಲೂಕಿನ ಕಲ್ಮಲಾ ಸಮೀಪ ಗಾಜು ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇಂದು(ಡಿ.1) ಬೆಳಗ್ಗೆ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿದೆ. ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರಿಂದ ರಸ್ತೆಯ ಮಧ್ಯೆ ಅಡ್ಡಲಾಗಿ ಲಾರಿ ಪಲ್ಟಿಯಾಗಿದೆ. ಸ್ಥಳಕ್ಕೆ ತೆರಳಿದ ರಾಯಚೂರು ಗ್ರಾಮೀಣ ಪೊಲೀಸರು ಕ್ರೇನ್ ಮೂಲಕ ಲಾರಿ ತೆರವುಗೊಳಿಸುತ್ತಿದ್ದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಬೈಕ್ ಸವಾರರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 1 Dec 2025 4:29 pm

ಮುಗೀತು ಎಂದರೂ ಮುಗಿಯದ ನಾಯಕತ್ವ ಬಿಕ್ಕಟ್ಟು: ಬ್ರೇಕ್ ಫಾಸ್ಟ್ ಚರ್ಚೆ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಕಾಂಗ್ರೆಸ್ ಶಾಸಕ

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟು ತಾತ್ಕಾಲಿಕವಾಗಿ ಬಗೆಹರಿದಂತೆ ಕಾಣುತ್ತಿದೆ. ಆದರೆ, ಸಂಪೂರ್ಣವಾಗಿ ಗೊಂದಲಗಳು ದೂರವಾಗಿವೆ ಎನಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ ನೀಡುತ್ತಿದ್ದಾರೆ. ಆದರೆ, ಶಾಸಕ ಅಜಯ್ ಸಿಂಗ್ ಅವರ ಹೇಳಿಕೆಯು ಬೇರೆಯದೆ ವಿಚಾರವನ್ನು ಹೇಳಹೊರಟಿದೆ ಎಂದನಿಸುತ್ತದೆ. ಹಾಗಿದ್ದರೆ , ಶಾಸಕ ಅಜಯ್ ಸಿಂಗ್ ಹೇಳಿದ್ದೇನು, ನಾಯಕತ್ವ ಬದಲಾವಣೆಯಾಗಲಿದೆಯೇ ಎಂಬುದರ ಬಗ್ಗೆ ಮಾಹಿತಿ ಈ ಲೇಖನದಲ್ಲಿ ಇದೆ.

ವಿಜಯ ಕರ್ನಾಟಕ 1 Dec 2025 4:17 pm

ಪ್ರಧಾನಿಗಳು ಅಭಿನಂದಿಸಿದ್ದಾರೆ - ಆಕಾಶ ಎಷ್ಟೇ ದೊಡ್ಡದಿರಲಿ, ಸೂರ್ಯ ಚಂದ್ರ ನಕ್ಷತ್ರಕ್ಕೆ ಹೆಚ್ಚಿನ ಬೆಲೆ : ಡಿಕೆ ಶಿವಕುಮಾರ್

DCM DK Shivakumar working style : ಜಲಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತಲಾ 45% ಅನುದಾನ ನೀಡಬೇಕು. 10% ಹಣವನ್ನು ಜನರಿಂದ ಪಡೆಯುವುದಾಗಿದೆ. ಕಳೆದ ವರ್ಷ ಈ ಯೋಜನೆಗೆ ರಾಜ್ಯ ಸರ್ಕಾರ 3700 ಕೋಟಿ ರೂ. ಅನ್ನು ನೀಡಿದರೆ, ಕೇಂದ್ರ ಸರ್ಕಾರ ನೀಡಿರುವ ಅನುದಾನ ಈವರೆಗೂ ಶೂನ್ಯ. ನನ್ನ ಕಾರ್ಯವೈಖರಿಯನ್ನು ನೋಡಿ, ಬಿಜೆಪಿ ಮತ್ತು ಕೇಂದ್ರ ಸರ್ಕಾರ ಶಾಕ್ ಆಗಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಜಯ ಕರ್ನಾಟಕ 1 Dec 2025 4:16 pm

Raichur | ಭೀಕರ ರಸ್ತೆ ಅಪಘಾತ; ತಂದೆ-ಮಗ ಸ್ಥಳದಲ್ಲೇ ಮೃತ್ಯು

ರಾಯಚೂರು : ರಾಯಚೂರು ಹೊರವಲಯದ ಯರಮರಸ್ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು(ಸೋಮವಾರ) ನಡೆದಿದೆ. ಬೈಪಾಸ್ ಟರ್ನಿಂಗ್‌ನಲ್ಲಿ ವೇಗವಾಗಿ ಹರಿದು ಬಂದ ಲಾರಿ ರಸ್ತೆ ಬದಿ ನಿಂತಿದ್ದ ಯರಮರಸ್ ಗ್ರಾಮದ ಮೇಸ್ತ್ರಿ ನಾಗಪ್ಪ ಉಪ್ಪಾರ (65) ಮತ್ತು ಪುತ್ರ ರಮೇಶ ಉಪ್ಪಾರ (38) ಮೇಲೆ ಹರಿದಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಹರಿದ ರಭಸಕ್ಕೆ ದೇಹಗಳು ಛಿದ್ರಛಿದ್ರಗೊಂಡಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.  

ವಾರ್ತಾ ಭಾರತಿ 1 Dec 2025 4:14 pm

ಗ್ರಾಮ ಪಂಚಾಯತಿ ಅನಧಿಕೃತ ಆಸ್ತಿಗಳ ದಾಖಲೆ ಸರಿಪಡಿಸಿಕೊಳ್ಳಿ; ಅರ್ಜಿ ಹಾಕಿದ 15 ದಿನದಲ್ಲಿ 11 ಬಿ ಖಾತಾ: ಡಿಕೆ ಶಿವಕುಮಾರ್

ಡಿಸಿಎಂ ಡಿಕೆ ಶಿವಕುಮಾರ್ ಅವರು ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ಇದರ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿಯೇತರ ಆಸ್ತಿಗಳಿಗೆ 11 ಬಿ ಖಾತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ 15 ದಿನದೊಳಗೆ ಖಾತೆ ವಿತರಿಸುವ ಗುರಿ ಇದೆ. ಆನ್‌ಲೈನ್ ಮೂಲಕವೂ ಖಾತೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದು ಆಸ್ತಿ ಮಾಲೀಕರಿಗೆ ಅನುಕೂಲವಾಗಲಿದೆ.

ವಿಜಯ ಕರ್ನಾಟಕ 1 Dec 2025 3:54 pm

ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

► ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ಕಾಂಗ್ರೆಸ್► ʼಗಾಂಧಿ ಗ್ರಾಮ ಪುರಸ್ಕಾರʼ ಪ್ರದಾನ; ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ

ವಾರ್ತಾ ಭಾರತಿ 1 Dec 2025 3:50 pm

ಟೆಸ್ಲಾ ಅಲ್ಲ ಭಾರತದ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಚೀನಾ ಕಂಪನಿಗಳ ಹವಾ, ಟಾಟಾಗೆ ಫೈಟ್‌

ಭಾರತದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಚೀನಾ ಮೂಲದ ಕಂಪನಿಗಳು ಭಾರಿ ಪ್ರಾಬಲ್ಯ ಸಾಧಿಸುತ್ತಿವೆ. ವರದಿಯ ಪ್ರಕಾರ, ದೇಶದಲ್ಲಿ ಮಾರಾಟವಾಗುವ ಪ್ರತಿ ಮೂರು ಎಲೆಕ್ಟ್ರಿಕ್ ಕಾರುಗಳಲ್ಲಿ ಒಂದು ಕಾರು ಚೀನಾ ಕಂಪನಿಗಳಾದ ಎಂಜಿ, ಬಿವೈಡಿ ಅಥವಾ ವೋಲ್ವೋಗೆ ಸೇರಿದ್ದಾಗಿದೆ. ಈ ಮೂರು ಕಂಪನಿಗಳು ಮಾರುಕಟ್ಟೆಯ ಶೇ. 33.3 ರಷ್ಟು ಪಾಲನ್ನು ಆಕ್ರಮಿಸಿಕೊಂಡಿದ್ದು, ಟಾಟಾ ಮೋಟರ್ಸ್‌ನ ಏಕಸ್ವಾಮ್ಯಕ್ಕೆ ಸವಾಲಾಗಿವೆ.

ವಿಜಯ ಕರ್ನಾಟಕ 1 Dec 2025 3:49 pm

ಹೊಸಕೋಟೆ ‘ಕೃಷ್ಣ’ನ ನಾಲ್ವರು ‘ರಾಧೆ’ಯರಲ್ಲಿ ಯಾರಿಗೆ ಹೋಗುತ್ತೆ 20 ಕೋಟಿಯ ಆಸ್ತಿ?

ಹೊಸಕೋಟೆಯ 12 ಎಕರೆ ಜಮೀನಿನ ಕಾನೂನಾತ್ಮಕ ಹಕ್ಕು ವಿವಾದವೊಂದು ಕುತೂಹಲಕಾರಿಯಾಗಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ ಈ ಪ್ರಕರಣ ವಿಚಾರಣೆಯಲ್ಲಿದೆ. ಈ ಜಮೀನು 1986ರಲ್ಲಿ ಮೃತರಾದ ಕೃಷ್ಣನ್ ಎಂಬುವರಿಗೆ ಸೇರಿದ್ದು, ಕಾನೂನಾತ್ಮಕವಾಗಿ ಅವರ ಪತ್ನಿ ಹಾಗೂ ಮಕ್ಕಳಿಗೆ ಆಸ್ತಿಯ ಹಕ್ಕುಗಳು ಬರುತ್ತವೆ. ಈ ಪ್ರಕರಣದ ಕೃಷ್ಣನ್ ಅವರ ಪತ್ನಿಯ ಹೆಸರು ರಾಧಾ. ಆದರೆ, ರಾಧಾ ಎಂಬ ಇನ್ನೂ ಮೂವರು ಮಹಿಳೆಯರು ತಾವೇ ಕೃಷ್ಣನ್ ಅವರ ನಿಜವಾದ ಪತ್ನಿ ಎಂದು ಪ್ರತ್ಯೇಕವಾಗಿ ಕೇಸ್ ದಾಖಲಿಸಿರುವುದು ಕುತೂಹಲಕ್ಕೆಡೆ ಮಾಡಿದೆ.

ವಿಜಯ ಕರ್ನಾಟಕ 1 Dec 2025 3:48 pm

ಇದು ನಮ್ಮ ಆರನೇ ಗ್ಯಾರಂಟಿ: ಡಿ ಕೆ ಶಿವಕುಮಾರ್‌ ಮಹತ್ವ ಘೋಷಣೆ

ಬೆಂಗಳೂರು, ಡಿಸೆಂಬರ್‌ 01: ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಉಳುವವನಿಗೆ ಭೂಮಿ, ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮ ಮಾಡಿದೆ. ಅರಣ್ಯ ಪ್ರದೇಶದಲ್ಲೂ ವಾಸಿಸುವವರಿಗೆ ಕಾನೂನಿನ ಅಡಿಯಲ್ಲಿ ಸಹಾಯ ಮಾಡಿದೆ. ನಿಮ್ಮ ಭೂಮಿ ಹಾಗೂ ಆಸ್ತಿ ದಾಖಲೆ ಸರಿಪಡಿಸುವುದು ನಮ್ಮ ಆರನೇ ಗ್ಯಾರಂಟಿ ಯೋಜನೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ

ಒನ್ ಇ೦ಡಿಯ 1 Dec 2025 3:38 pm

ʻಸಿಎ-ಡಿಸಿಎಂ ಒಟ್ಟಾಗಿ ಸರ್ಕಾರ ನಡೆಸುತ್ತಿದ್ದಾರೆ, ಯಾವುದೇ ಗೊಂದಲ ಬೇಡʼ: ದಿನೇಶ್ ಗುಂಡೂರಾವ್

ಕೊಟ್ಟ ಮಾತಿನ ವಿಚಾರ, ಸಿಎಂ ಸ್ಥಾನ ಬದಲಾವಣೆ ಬಗ್ಗೆ ಕಳೆದ ಕೆಲವು ದಿನಗಳಿಂದ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿತ್ತು. ಹೈಕಮಾಂಡ್‌ ನಿರ್ದೇಶನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗುವುದರ ಭಾಗವಾಗಿ ಸಿಎಂ ಅವರ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಸಭೆ ನಡೆಸಿದ್ದರು. ಈ ಬಗ್ಗೆ ದಿನೇಶ್‌ ಗುಂಡೂರಾವ್‌ ಅವರು ಮಾತನಾಡಿದ್ದಾರೆ.

ವಿಜಯ ಕರ್ನಾಟಕ 1 Dec 2025 3:38 pm

ತಮಿಳುನಾಡು ಕರಾವಳಿಯಲ್ಲಿ 'ದಿತ್ವಾ' ಸೈಕ್ಲೋನ್ ದುರ್ಬಲ; ಮುಂದುವರೆದ ಭಾರೀ ಮಳೆ, ಅವಾಂತರ

ಚಂಡಮಾರುತ 'ದಿತ್ವಾ' ತೀವ್ರತೆ ಕಳೆದುಕೊಂಡಿದೆ. ಮಳೆಯ ಅಬ್ಬರ ಕಡಿಮೆಯಾಗಲಿದೆ. ತಮಿಳುನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತವು ಶ್ರೀಲಂಕಾಗೆ ಸಹಾಯ ಕಳುಹಿಸಿದೆ. ಚೆನ್ನೈನಲ್ಲಿ ಮಳೆಯಾಗಿದ್ದು, ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು. ರಾಜ್ಯದ ಇತರ ಭಾಗಗಳಲ್ಲಿ ಮೂರು ಸಾವು ಸಂಭವಿಸಿದೆ. ಕಾವೇರಿ ಡೆಲ್ಟಾ ಪ್ರದೇಶದಲ್ಲಿ ಕೃಷಿ ಭೂಮಿ ಮುಳುಗಡೆಯಾಗಿದೆ.

ವಿಜಯ ಕರ್ನಾಟಕ 1 Dec 2025 3:25 pm

ಕುತುಬ್ ಮಿನಾರ್ ಸಮುಚ್ಚಯ: ಭಾರತದ ಇತಿಹಾಸದ ಅದ್ಭುತ ಸ್ಮಾರಕ

ದಿಲ್ಲಿ: ಭಾರತದ ರಾಜಧಾನಿ ದಿಲ್ಲಿಯ ಮೆಹ್ರೋಲಿ ಪ್ರದೇಶದಲ್ಲಿ 800 ವರ್ಷಗಳ ಹಿಂದೆ ನಿರ್ಮಿಸಲ್ಪಟ್ಟ ಕುತುಬ್ ಮಿನಾರ್, ಖುವ್ವತ್ ಉಲ್ ಇಸ್ಲಾಮ್ ಮಸೀದಿ, ಗುಪ್ತರ ಕಾಲದ ಲೋಹದ ಸ್ತಂಭ, ಅಪೂರ್ಣವಾಗಿರುವ ಅಲಾಯಿ ಮಿನಾರ್ ಒಂದೇ ಸಮುಚ್ಚಯದಲ್ಲಿದ್ದು, ನಮ್ಮ ದೇಶದ ಇತಿಹಾಸದ ಶೌರ್ಯ, ಕಲಾ ಮತ್ತು ವಾಸ್ತುಶಿಲ್ಪದ ಸಂಯೋಜನೆಯ ಪ್ರತೀಕವಾಗಿದೆ. ಇತಿಹಾಸ ಮತ್ತು ನಿರ್ಮಾಣ: ಕುತುಬ್ ಮಿನಾರ್ ನಿರ್ಮಾಣವನ್ನು ಕ್ರಿ.ಶ.1192ರಲ್ಲಿ ದಿಲ್ಲಿಯ ಮೊದಲ ಮುಸ್ಲಿಮ್ ಆಡಳಿತಗಾರ ಕುತುಬುದ್ದೀನ್ ಐಬಕ್ ಪ್ರಾರಂಭಿಸಿದರು. ಆದರೆ ಅವರ ನಿಧನದ ನಂತರ ಅವರ ಉತ್ತರಾಧಿಕಾರಿ ಅಲ್ತಮಶ್ ಈ ಮಿನಾರ್ ಅನ್ನು ಪೂರ್ಣಗೊಳಿಸಿದರು. ನಂತರದ ವರ್ಷಗಳಲ್ಲಿ ಅಲ್ಲಾಉದ್ದೀನ್ ಖಿಲ್ಜಿ ಹಾಗೂ ಇತರ ಸುಲ್ತಾನರು ಇದರ ಪುನರ್ ನಿರ್ಮಾಣ ಮತ್ತು ವಿಸ್ತರಣಾ ಕಾರ್ಯಗಳನ್ನು ನಡೆಸಿದರು. ವಾಸ್ತುಶಿಲ್ಪದ ವೈಶಿಷ್ಟ್ಯ: ಕುತುಬ್ ಮಿನಾರ್‌ನ ಎತ್ತರವು ಸುಮಾರು 73 ಮೀಟರ್ (240 ಅಡಿ) ಆಗಿದ್ದು, ಇದನ್ನು ಕೆಂಪು ಹಾಗೂ ಹಳದಿ ಮರಳುಗಲ್ಲುಗಳಿಂದ ನಿರ್ಮಿಸಲಾಗಿದೆ. ಮಿನಾರ್‌ನಲ್ಲಿ ಐದು ಅಂತಸ್ತುಗಳಿವೆ. ಮಿನಾರ್‌ನ ಹೊರಭಾಗದಲ್ಲಿ ಪವಿತ್ರ ಕುರ್‌ಆನ್‌ನ ಆಯತ್‌ಗಳು ಮತ್ತು ಅಲಂಕಾರಿಕ ಲಿಪಿಗಳನ್ನು ಅತ್ಯಂತ ಸುಂದರವಾಗಿ ಕೆತ್ತಲಾಗಿದೆ. ಮಿನಾರ್ ಒಳಗಡೆ ಹಾಗೂ ಹೊರಗಿನ ಅಂದವಾದ ವಾಸ್ತುಶೈಲಿ ಪ್ರವಾಸಿಗರ ಗಮನ ಸೆಳೆಯುತ್ತದೆ. ಮೊದಲ ಮೂರು ಹಂತಗಳು ಕೆಂಪು ಮರಳುಗಲ್ಲುಗಳಿಂದ ಹಾಗೂ ನಂತರದ ಎರಡು ಹಂತಗಳು ಬಿಳಿ ಸಣ್ಣ ಕಲ್ಲಿನಿಂದ ನಿರ್ಮಿಸಲಾಗಿದೆ. ಸಂಸ್ಕೃತಿಯ ಪ್ರಾಮುಖ್ಯತೆ: ಕುತುಬ್ ಮಿನಾರ್ ಕೇವಲ ಒಂದು ಗೋಪುರವಲ್ಲ, ಅದು ಭಾರತದ ಮುಸ್ಲಿಮ್ ರಾಜ್ಯಾಡಳಿತದ ಆರಂಭದ ಸಂಕೇತವಾಗಿದೆ. ಇದರ ಪಕ್ಕದಲ್ಲಿರುವ ಖುವ್ವತ್-ಉಲ್-ಇಸ್ಲಾಮ್ ಮಸ್ಜಿದ್ ದಿಲ್ಲಿಯಲ್ಲಿ ನಿರ್ಮಾಣವಾದ ಮೊಟ್ಟ ಮೊದಲ ಮಸೀದಿ ಎಂಬ ಹೆಗ್ಗಳಿಕೆ ಹೊಂದಿದೆ. ಕುತುಬುದ್ದೀನ್ ಐಬಕ್ ಕ್ರಿ.ಶ.1192-93 ಅವಧಿಯಲ್ಲಿ ಈ ಮಸೀದಿಯನ್ನು ನಿರ್ಮಿಸಿದರು. ಗುಪ್ತರ ಕಾಲದ ಲೋಹದ ಸ್ತಂಭ: ಕುತುಬ್ ಮಿನಾರ್ ಸಮುಚ್ಚಯದೊಳಗೆ ನಿಂತಿರುವ ಲೋಹದ ಸ್ತಂಭವು ಭಾರತೀಯ ತಾಂತ್ರಿಕ ನೈಪುಣ್ಯವನ್ನು ಜಗತ್ತಿಗೆ ಪರಿಚಯಿಸುವ ಅಪೂರ್ವ ಸ್ಮಾರಕವಾಗಿದೆ. 1,600 ವರ್ಷಗಳಿಗಿಂತಲೂ ಹಳೆಯದಾದ ಈ ಲೋಹದ ಸ್ತಂಭವು ಇಂದಿಗೂ ವಿಜ್ಞಾನಿಗಳು, ಇತಿಹಾಸಕಾರರು ಮತ್ತು ಪ್ರವಾಸಿಗರಿಗೆ ಕುತೂಹಲದ ವಿಷಯವಾಗಿದೆ. ಲೋಹದ ಸ್ತಂಭವು ಕ್ರಿ.ಶ.4ನೇ ಶತಮಾನದಲ್ಲಿ, ಗುಪ್ತರ ಸಾಮ್ರಾಜ್ಯದ ಸುವರ್ಣಯುಗದಲ್ಲಿ ನಿರ್ಮಿಸಲ್ಪಟ್ಟಿದೆ. ಶಾಸನಗಳು ಇದನ್ನು ಸಾಮ್ರಾಟ್ ಚಂದ್ರಗುಪ್ತ ವಿಕ್ರಮಾದಿತ್ಯರಿಗೆ ಸಮರ್ಪಿಸಲ್ಪಟ್ಟ ಸ್ಮಾರಕವೆಂದು ಸೂಚಿಸುತ್ತವೆ. ಗುಪ್ತರ ಯುಗವನ್ನು ಭಾರತೀಯ ವಿಜ್ಞಾನ, ಕಲೆ, ಸಾಹಿತ್ಯ ಮತ್ತು ಲೋಹಶಿಲ್ಪದ ಶೃಂಗಾರೋಹಣದ ಕಾಲವೆಂದು ಇತಿಹಾಸ ದಾಖಲಿಸಿದೆ. ಈ ಸ್ತಂಭವು ಆ ಕಾಲದ ತಾಂತ್ರಿಕ ಶಕ್ತಿಯನ್ನು ಸಾಕ್ಷಿಯಾಗಿ ನಿಲ್ಲಿಸಿದೆ. ಸುಮಾರು 7.2 ಮೀಟರ್ ಎತ್ತರ ಹೊಂದಿರುವ ಈ ಸ್ತಂಭದ ಮೇಲೆ ಗುಪ್ತರ ಯುಗದ ಬ್ರಾಹ್ಮಿ ಲಿಪಿಯಲ್ಲಿ ಸಂಧ್ಯಗಂಧ ಸಂಸ್ಕೃತ ಶಾಸನ ಕೆತ್ತಲ್ಪಟ್ಟಿದೆ. ಈ ಶಾಸನದಲ್ಲಿ ಚಂದ್ರಗುಪ್ತನ ಶೌರ್ಯ, ರಾಜ್ಯಭಾರ ಮತ್ತು ಯುದ್ಧ ಕೌಶಲಗಳ ಕುರಿತು ಪ್ರಶಂಸಿಸಲಾಗಿದೆ. ಕೆಲವು ಇತಿಹಾಸಕಾರರು ಈ ಸ್ತಂಭ ಮೂಲತಃ ಉದಯಗಿರಿ (ಮಧ್ಯಪ್ರದೇಶ) ಪ್ರದೇಶದಲ್ಲಿ ಇರಿಸಿದ್ದಾಗಿ, ನಂತರ ದಿಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕುತುಬುದ್ದೀನ್ ಐಬಕ್, ಖುವ್ವತ್ ಉಲ್ ಇಸ್ಲಾಮ್ ಮಸೀದಿಯನ್ನು ನಿರ್ಮಿಸಿದಾಗ ಈ ಸ್ತಂಭವನ್ನು ಮಸೀದಿಯ ಆವರಣದಲ್ಲಿ ಪ್ರತಿಷ್ಠಾಸಿದರು. ಹೀಗಾಗಿ, ಈ ಸ್ತಂಭವು ಪ್ರಾಚೀನ ಭಾರತೀಯ ಮತ್ತು ಮಧ್ಯಯುಗೀಯ ಇಸ್ಲಾಮಿಕ್ ವಾಸ್ತುಶಿಲ್ಪದ ಪರಂಪರೆಯನ್ನು ಒಂದೇ ಪರಿಚಯಿಸುತ್ತದೆ. ದಿಲ್ಲಿ ಸಾಮಾಜ್ರ್ಯವನ್ನು ಆಳಿದ ಸುಲ್ತಾನ್ ಅಲ್ಲಾಉದ್ದೀನ್ ಖಿಲ್ಜಿ ತನ್ನ ವಿಜಯಗಳು, ಸಾಮ್ರಾಜ್ಯದ ವಿಸ್ತರಣೆ ಮತ್ತು ಆಡಳಿತದ ನೆನಪಿಗಾಗಿ ಖುತುಬ್ ಮಿನಾರ್‌ಗಿಂತ ಎತ್ತರದ ಸ್ಮಾರಕ ನಿರ್ಮಿಸಲು ಉದ್ದೇಶಿದ್ದನು. ಕ್ರಿ.ಶ.1311ರ ಸುಮಾರಿಗೆ ಖುತುಬ್ ಮಿನಾರ್ ಎದುರೇ ಅಲಾಯಿ ಮಿನಾರ್ ನಿರ್ಮಾಣ ಕಾಮಗಾರಿ ಆರಂಭಿಸಿದನಾದರೂ, ಅದು ಪೂರ್ಣಗೊಳ್ಳುವ ಮುನ್ನವೇ ಮೃತಪಟ್ಟನು. ಆನಂತರ, ದಿಲ್ಲಿಯನ್ನು ಆಳಿದ ಯಾವ ಸುಲ್ತಾನರು ಮಿನಾರ್ ನಿರ್ಮಾಣ ಕಾಮಗಾರಿಗೆ ಆಸಕ್ತಿ ತೋರದ ಹಿನ್ನೆಲೆಯಲ್ಲಿ ಅದು ಅಪೂರ್ಣವಾಗಿದೆ. ಆದರೂ, ಅಲಾಯಿ ಮಿನಾರ್ ತನ್ನ ವೈಶಿಷ್ಟ್ಯತೆಯಿಂದ ಪ್ರವಾಸಿಗರನ್ನು ಆಕರ್ಷಷಿಸುತ್ತಿದೆ.

ವಾರ್ತಾ ಭಾರತಿ 1 Dec 2025 3:14 pm

SIR ಒತ್ತಡ ತಾಳಲಾರದೇ ಜೀವ ಬಲಿಕೊಟ್ಟ ಸರ್‌? ಸರ್ವೇ ಮುಗಿಸಲು ಸಾಧ್ಯವಾಗಿಲ್ಲ ಎಂದು ಕೊನೆ ವಿಡಿಯೋ ಮಾಡಿದ ಸರ್ವೇಶ್‌ ಸಿಂಗ್!

ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR), ಚುನಾವಣಾ ಆಯೋಗ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಆಡಳಿತ ಪಕ್ಷ ಚುನಾವಣಾ ಆಯೋಗದ ಪರ ಬ್ಯಾಟ್‌ ಬೀಸುತ್ತಿದೆ. ಈ ಮಧ್ಯೆ ಉತ್ತರ ಪ್ರದೇಶದಲ್ಲಿ SIR ಕರ್ತವ್ಯದಲ್ಲಿ ನಿರತವಾಗಿದ್ದ ಶಾಲಾ ಶಿಕ್ಷಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದು, ಈ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷಗಳು ಈ ಘಟನೆಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಲು ಸಿದ್ಧವಾಗಿವೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ವಿಜಯ ಕರ್ನಾಟಕ 1 Dec 2025 3:09 pm

ʼಉಪಾಹಾರ ಕೂಟʼ ನನ್ನ-ಸಿಎಂಗೆ ಸಂಬಂಧಿಸಿದ ವಿಚಾರ, ನಾವಿಬ್ಬರೂ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ʼಉಪಾಹಾರ ಕೂಟ ನನ್ನ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ, ನಾವಿಬ್ಬರೂ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆʼ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಾಳೆ ಸಿಎಂ ಅವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿದ್ದೀರಾ ಎಂದು ಕೇಳಿದಾಗ, “ಇದು ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನೀವುಗಳು ಸದಾ ಗುಂಪು, ಗುಂಪು ಎಂದು ಬಿಂಬಿಸುತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ನಮ್ಮ ಜೊತೆ 140 ಶಾಸಕರಿದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೆ. ಪಕ್ಷದ ವಿಚಾರ ಬಂದಾಗ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ಈ ಬಗ್ಗೆ ಚಿಂತೆ ಬೇಡ” ಎಂದು ತಿಳಿಸಿದರು. ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್ ಐಆರ್ ದಾಖಲಿಸಿರುವ ಬಗ್ಗೆ ಕೇಳಿದಾಗ, “ಇದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ ಒಂದು ಮಿತಿ ಇದೆ. ಈ ಪ್ರಕರಣದಲ್ಲಿ ಕಿರುಕುಳ ನೀಡುವ ಅಗತ್ಯವಿಲ್ಲ. ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರ ಆಸ್ತಿಯಲ್ಲ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದ ಕಾರಣಕ್ಕೆ ಅವರು ಈ ಸಂಸ್ಥೆಯ ಷೇರುಗಳ ಪಾಲಕರಾಗಿದ್ದರು. ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ. ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ. ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ. ಅದೇ ರೀತಿ ನಮ್ಮ ನಾಯಕರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಕಾರಣ, ಜವಹಾರ್ ಲಾಲ್ ನೆಹರೂ ಅವರ ಕಾಲದಿಂದ ನಡೆದುಕೊಂಡು ಬಂದಿರುವ ಪ್ರತೀತಿಯಂತೆ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಜವಾಬ್ದಾರಿ ಹೊತ್ತಿರುತ್ತಾರೆ” ಎಂದು ವಿವರಿಸಿದರು. ನ್ಯಾಷನಲ್ ಹೆರಾಲ್ಡ್ ಅವರ ವೈಯಕ್ತಿಕ ಆಸ್ತಿಯಲ್ಲ, ಪಕ್ಷದ ಆಸ್ತಿ : “ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ಪಕ್ಷದ ಪಾಲಕರು ಅವರಾಗಿದ್ದಾರೆ. ಇಲ್ಲಿ ಅನೇಕ ಸದಸ್ಯರುಗಳು ಇದ್ದಾರೆ. ಮೊರಾರ್ಜಿ ಅವರು, ಅಹ್ಮದ್ ಪಟೇಲ್ ಅವರ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಹಿತಕ್ಕಾಗಿ ಕೆಲವು ನಿರ್ಧಾರ ಕೈಗೊಳ್ಳಲಾಗಿತ್ತು. ಕೇಸರಿ ಅವರ ಕಾಲದಲ್ಲಿ ಪಕ್ಷ ಸಂಕಷ್ಟದ ಸಮಯದಲ್ಲಿದ್ದಾಗ, ಕಾಂಗ್ರೆಸ್ ಪಕ್ಷದ ನಾಯಕರಾದ ನಾವುಗಳು ಸೋನಿಯಾ ಗಾಂಧಿ ಅವರ ಮುಂದೆ ಹೋಗಿ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳುವಂತೆ ಬೇಡಿಕೊಂಡೆವು. ಅವರು ನೇತೃತ್ವ ವಹಿಸಿದ ನಂತರ ನಮ್ಮ ಪಕ್ಷ ದೇಶದ ಅತ್ಯುತ್ತಮ ಆರ್ಥಿಕ ತಜ್ಞರ ಮುಂದಾಳತ್ವದಲ್ಲಿ 10 ವರ್ಷ ಆಡಳಿತ ನಡೆಸಿದೆ. ಈಗ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ. ಇತಿಹಾಸ ಮರುಕಳಿಸಲಿದೆ. ಅವರು ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಿದರೂ ಅವರು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಕೇಂದ್ರ ಸರಕಾರದ ಈ ದ್ವೇಷ ರಾಜಕಾರಣ ಸರಿಯಲ್ಲ. ಇದರಿಂದ ಅವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಕೇಂದ್ರಕ್ಕೆ ಹೇಳಲು ಬಯಸುತ್ತೇನೆ. ಇದು ಕೇಂದ್ರ ಸರಕಾರದ ನೈತಿಕತೆಯನ್ನಷ್ಟೇ ಕುಗ್ಗಿಸಲಿದೆ. ರಾಜಕೀಯವನ್ನು ನೇರಾನೇರವಾಗಿ ಜನರ ಮಧ್ಯೆ ಮಾಡೋಣ. ಚುನಾವಣೆಯಲ್ಲಿ ಹೋರಾಡೋಣ. ಆದರೆ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಈ ರೀತಿ ಕಿರುಕುಳ ನೀಡುವುದು ಸರಿಯಲ್ಲ” ಎಂದು ತಿಳಿಸಿದರು. ಈ ವಾರ ದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆಯಲಿದೆಯೇ ಎಂದು ಕೇಳಿದಾಗ, “ನಾನು ಸರ್ವಪಕ್ಷ ಸಭೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತಿದ್ದೇನೆ. ಸಂಸತ್ ಅಧಿವೇಶನ ಆರಂಭವಾಗಿದ್ದು, ರಾಜ್ಯದ ಹಿತರಕ್ಷಣೆ ವಿಚಾರವಾಗಿ ಸಂಸದರಿಗೆ ಕೆಲವು ಜವಾಬ್ದಾರಿಗಳ ಬಗ್ಗೆ ಹೇಳಬೇಕಿದೆ” ಎಂದು ತಿಳಿಸಿದರು. ಉತ್ತರ ಪ್ರದೇಶ ಸಂಸದ ರಾಜೀವ್ ರಾಯ್ ಎಂಬುವವರು ನಿನ್ನೆ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಎಕ್ಸ್ ಖಾತೆಯಲ್ಲಿ ಸಿಎಂ ಅವರನ್ನು ಟ್ಯಾಗ್ ಮಾಡಿ ಇದು ಅತ್ಯಂತ ಕೆಟ್ಟ ಟ್ರಾಫಿಕ್ ಜಾಮ್ ಎಂದು ಬರೆದಿರುವ ಬಗ್ಗೆ ಕೇಳಿದಾಗ, “ಅವರಿಗೆ ನನ್ನನ್ನು ದೆಹಲಿಯಲ್ಲಿ ಭೇಟಿ ಮಾಡಲು ಹೇಳಿ. ದೆಹಲಿಯಲ್ಲಿರುವ ಟ್ರಾಫಿಕ್ ಸಮಸ್ಯೆ ಏನು ಎಂದು ಅವರಿಗೆ ತೋರಿಸುತ್ತೇನೆ” ಎಂದು ತಿಳಿಸಿದರು.

ವಾರ್ತಾ ಭಾರತಿ 1 Dec 2025 3:08 pm

ಮಡಿಕೇರಿ: ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗಿ ಮಾರ್ಪಟ್ಟ ಮ್ಯೂಸಿಯಂ

ಮಡಿಕೇರಿ: ಕರ್ನಾಟಕ ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ವೀರರ ನಾಡು ಖ್ಯಾತಿಯ ಕೊಡಗು ಅತ್ಯಂತ ಸಣ್ಣ ಪ್ರದೇಶವಾಗಿದ್ದು, ಜನಸಂಖ್ಯೆಯೂ 6ಲಕ್ಷ ಮೀರಿಲ್ಲ. ಈ ಪ್ರದೇಶದಲ್ಲೂ ಹಿಂದೆ ಅನೇಕ ಅರಸರು ಹಾಗೂ ಬ್ರಿಟಿಷರು ರಾಜ್ಯಭಾರ ಮಾಡಿ ಹೋಗಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ಇದರ ಕುರುಹನ್ನು ಇಂದಿಗೂ ಕಾಣಬಹುದಾಗಿದೆ. ಜಿಲ್ಲಾ ಕೇಂದ್ರಸ್ಥಾನವಾದ ಮಡಿಕೇರಿಯಲ್ಲಿರುವ ಕೋಟೆ ಮತ್ತು ಮ್ಯೂಸಿಯಂ ಇಂದು ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗಿ ಮಾರ್ಪಟ್ಟಿದೆ. ಹಾಲೇರಿ ವಂಶಸ್ಥ ಮುದ್ದುರಾಜನು ಎತ್ತರದ ಪ್ರದೇಶದಲ್ಲಿ ಮಣ್ಣಿನಿಂದ ನಿರ್ಮಿಸಿದ ಕೋಟೆಯನ್ನು ಟಿಪ್ಪುಸುಲ್ತಾನನು ಕಲ್ಲಿನಿಂದ ಪುನರ್‌ರಚಿಸಿ ಇದಕ್ಕೆ ‘ಜಾಫರಾಬಾದ್’ ಎಂದು ನಾಮಕರಣ ಮಾಡಿರುವ ಕುರಿತು ಇತಿಹಾಸ ವಿವರಿಸುತ್ತದೆ. 1790ರಲ್ಲಿ ದೊಡ್ಡ ವೀರರಾಜೇಂದ್ರನು ತನ್ನ ಪ್ರಬಲವಾದ ಸೈನ್ಯದಿಂದ ಸುತ್ತುವರಿದು ಕೋಟೆಯನ್ನು ವಶಕ್ಕೆ ಪಡೆಯುತ್ತಾನೆ. 1834ರಲ್ಲಿ ಮಡಿಕೇರಿಯ ಕೋಟೆಯು ಬ್ರಿಟಿಷರ ಹತೋಟಿಗೆ ಒಳಪಡುತ್ತದೆ. ಅತ್ಯಂತ ಆಕರ್ಷಣೀಯವಾಗಿರುವ ಈ ಕೋಟೆಯ ಆವರಣದಲ್ಲಿ ಕಳೆದ ಅನೇಕ ವರ್ಷಗಳ ಕಾಲ ಸರಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು. ಕೋಟೆ ಶಿಥಿಲಾವಸ್ಥೆಗೆ ತಲುಪಿದ ಹಿನ್ನೆಲೆ ಸರಕಾರಿ ಕಚೇರಿಗಳು ಜಿಲ್ಲಾಡಳಿತದ ನೂತನ ಭವನಕ್ಕೆ ಸ್ಥಳಾಂತರಗೊಂಡವು. ಪ್ರಸಕ್ತ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಕೋಟೆಯನ್ನು ತನ್ನ ಅಧೀನಕ್ಕೆ ಪಡೆದು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದೆ. ಚರ್ಚ್ ಮ್ಯೂಸಿಯಂ ಆಯಿತು: ಕೋಟೆಯ ಮಹಾದ್ವಾರ ಪೂರ್ವಾಭಿಮುಖವಾಗಿದ್ದು, ಬೃಹದಾಕಾರದ ಬಾಗಿಲುಗಳಿವೆ. ಕೋಟೆಯನ್ನು ಪ್ರವೇಶಿಸಿದಾಗ ದಕ್ಷಿಣಕ್ಕೆ ಒಂದು ಮ್ಯೂಸಿಯಂ ಅನ್ನು ಕಾಣಬಹುದಾಗಿದೆ. ಬ್ರಿಟಿಷರ ಆಡಳಿತದ ಕಾಲದಲ್ಲಿ ರೆ. ಎ.ಫೆನೆಲ್ ಎಂಬ ಪಾದ್ರಿಯು ಚರ್ಚ್ ಅನ್ನು ನಿರ್ಮಿಸಿದರು. ಆಂಗ್ಲರ ಚರ್ಚ್ ಕಟ್ಟಡವು ಕೋನಾಕಾರದ ಗಾಥಿಕ್ ಶೈಲಿಯ ಗೋಪುರಗಳನ್ನು ಹೊಂದಿದೆ. ಹಿಂಭಾಗದಲ್ಲಿ ಕೋನಾಕಾರದ ಕಮಾನುಗಳಿಂದ ಕೂಡಿರುವ ಕಿಟಕಿಯು ಅಲಂಕಾರ ಹೊಂದಿರುವ ಗಾಜಿನ ಚಿತ್ರಕಲೆಯಿಂದ ಅತ್ಯಂತ ಆಕರ್ಷಣೀಯವಾಗಿದೆ. ರಾಜ್ಯ ಪ್ರಾಚ್ಯವಸ್ತು ಇಲಾಖೆ ಇದೇ ಕಟ್ಟಡದಲ್ಲಿ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಿದೆ. ಮಡಿಕೇರಿ ತಾಲೂಕಿನ ಬೆಟ್ಟಗೇರಿಯ ಜೈನ ಬಸದಿಯ ಎರಡು ತೀರ್ಥಂಕರುಗಳು, ಕುಬೇರ, ಪದ್ಮಾವತಿ ಯಕ್ಷಿ, ಶಾಂತಿನಾಥ ತೀರ್ಥಂಕರ, ವಿಷ್ಣು ಮುಂತಾದ ಶಿಲ್ಪಗಳು ಹಾಗೂ ಹೊಯ್ಸಳರ ಶೈಲಿಯ ಕೆತ್ತನೆಯುಳ್ಳ ಬಾಗಿಲು ಈ ವಸ್ತು ಸಂಗ್ರಹಾಲಯದಲ್ಲಿ ಗಮನ ಸೆಳೆಯುತ್ತಿವೆ. 11ನೇ ಶತಮಾನದ ಹಲವು ಶಿಲ್ಪಗಳು ಈ ಮ್ಯೂಸಿಯಂನಲ್ಲಿದ್ದು, ನೋಡಲು ಅತ್ಯಾಕರ್ಷಕವಾಗಿವೆ. 10ನೇ ಶತಮಾನದ ದೇವಿಯ ವಿಗ್ರಹ, 12ನೇ ಶತಮಾನದ ತೀರ್ಥಂಕರ, ಶಾಂತಿನಾಥ ಮುಂತಾದ ವಿಗ್ರಹಗಳನ್ನೂ ಕಾಣಬಹುದಾಗಿದೆ. ಬ್ರಿಟಿಷರು ಬಳಸುತ್ತಿದ್ದ ಒಂಟಿ ನಳಿಗೆ, ಜೋಡಿ ನಳಿಗೆಗಳ ಬಂದೂಕುಗಳು, ಪಿಸ್ತೂಲ್‌ಗಳು, ರಿವಾಲ್ವರ್‌ಗಳು, ಕಂಚಿನ ಗಣೇಶನ ಮೂರ್ತಿ, ಈಟಿಯಂತಹ ಆಯುಧಗಳು, 1841ರ ಪಿರಂಗಿಗಳು ಮತ್ತು ತಾಳೆಗರಿಗಳು ಇಲ್ಲಿವೆ. ದೇಶದ ಮೊದಲ ಸೇನಾ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪಅವರಿಗೆ ಉಡುಗೊರೆಯಾಗಿ ಬಂದಿರುವ ವಸ್ತುಗಳನ್ನು ಕೂಡ ಇಲ್ಲಿ ಇಡಲಾಗಿದೆ. ಕಾರ್ಯಪ್ಪ ಅವರಿಗೆ ದೊರೆತ ಸನ್ಮಾನ ಪತ್ರಗಳು, ನೆನಪಿನ ಕಾಣಿಕೆಗಳಿವೆ. ಇಲ್ಲಿನ ಪ್ರಮುಖ ಆಕರ್ಷಣೆ ಎಂದರೆ 1911ರಲ್ಲಿ ಆಗಿನ ಕೊಡಗಿನ ಜಿಲ್ಲಾಧಿಕಾರಿ ಕಾರ್ಯಪ್ಪ ಅವರಿಗೆ ನೀಡಿದ ಆಸನ. ಇದು ಹಳೆಯ ಕಾಲದ ಶೈಲಿಯಲ್ಲಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಅರಸರ ಆಯುಧ, ವಸ್ತ್ರ, ವೇಷ-ಭೂಷಣ, ಕೊಡಗಿನ ಜನರ ಸಂಸ್ಕೃತಿಗೆ ಸಂಬಂಧಿಸಿದ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ. ಮ್ಯೂಸಿಯಂನ ಹೊರ ಭಾಗದಲ್ಲಿ ಅನೇಕ ವೀರಗಲ್ಲುಗಳನ್ನು ತಂದು ಸ್ಥಾಪಿಸಲಾಗಿದೆ. ಕೋಟೆಯ ಒಳಗಿರುವ ಆಕರ್ಷಕ ಅರಮನೆಯನ್ನು ನೋಡಲು ಬರುವ ಅಸಂಖ್ಯಾತ ಪ್ರವಾಸಿಗರು ಈ ಮ್ಯೂಸಿಯಂಗೂ ಭೇಟಿ ನೀಡಿ ಇತಿಹಾಸದ ಕುರುಹುಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇಲ್ಲಿರುವ ಅರಮನೆ ಎರಡನೇಯ ಲಿಂಗರಾಜೇಂದ್ರನ ಕಾಲದಲ್ಲಿ 1812ರಿಂದ 1814ರ ಅವಧಿಯಲ್ಲಿ ಪುನರಚನೆಗೊಂಡಿದೆ. ಅರಮನೆಯ ಬಾಗಿಲೊಂದರ ಮೇಲ್ಭಾಗದಲ್ಲಿರುವ ಹಿತ್ತಾಳೆಯ ಫಲಕದ ಮೇಲಿರುವ ಶಾಸನವು ಅರಮನೆಯ ನಿರ್ಮಾಣದ ಆರಂಭ ಹಾಗೂ ಮುಕ್ತಾಯದ ಕುರಿತು ವಿವರಿಸುತ್ತದೆ. 

ವಾರ್ತಾ ಭಾರತಿ 1 Dec 2025 3:07 pm

ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿ ಇಲ್ವಾ? ಗೌತಮ್ ಗಂಭೀರ್- ರೋಹಿತ್ ಶರ್ಮಾ ಗರಂ ಚರ್ಚೆಯ ವೈರಲ್ ವಿಡಿಯೋಗೆ ಏನರ್ಥ?

Gautam Gambhir And Rohit Sharma Conversation- ದಕ್ಷಿಣ ಆಫ್ರಿಕಾ ವಿರುದ್ಧ ಪ್ರಥಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ್ದೇನೋ ನಿಜ. ಆದರೆ ಡ್ರೆಸ್ಸಿಂಗ್ ರೂಂನ ವಾತಾವರಣ ಹೇಗಿದೆ ಎಂಬ ಅನುಮಾನ ಇದೀಗ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಹುಟ್ಟಿಕೊಂಡಿದೆ. ಪಂದ್ಯದ ಬಳಿಕ ಡ್ರೆಸ್ಸಿಂಗ್ ರೂಂನಲ್ಲಿ ಗೌತಮ್ ಗಂಭೀರ್ ಮತ್ತು ರೋಹಿತ್ ಶರ್ಮಾ ಅವರು ಗಂಭೀರವಾಗಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿರುವುದು ಹೀಗೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣ. ಹಾಗಿದ್ದರೆ ನಡೆದದ್ದಾದರೂ ಏನು?

ವಿಜಯ ಕರ್ನಾಟಕ 1 Dec 2025 3:07 pm

ಉಮೀದ್ ಪೋರ್ಟಲ್‌ನಲ್ಲಿ ವಿವರಗಳ ಸಲ್ಲಿಕೆ: ಸಮಯ ವಿಸ್ತರಣೆಗೆ ನ್ಯಾಯಮಂಡಳಿಗಳನ್ನು ಸಂಪರ್ಕಿಸಲು ವಕ್ಫ್‌ಗಳಿಗೆ ಸುಪ್ರೀಂ ಸೂಚನೆ

ಹೊಸದಿಲ್ಲಿ: ಉಮೀದ್ ಪೋರ್ಟಲ್‌ನಲ್ಲಿ ವಕ್ಫ್ ಆಸ್ತಿಗಳ ವಿವರಗಳನ್ನು ಅಪ್‌ಲೋಡ್ ಮಾಡಲು ಗಡುವನ್ನು ವಿಸ್ತರಿಸಲು ಸರ್ವೋಚ್ಚ ನ್ಯಾಯಾಲಯವು ಸೋಮವಾರ ನಿರಾಕರಿಸಿದೆ. ಏಕೀಕೃತ ವಕ್ಫ್ ನಿರ್ವಹಣೆ,ಸಬಲೀಕರಣ,ದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆಯ ಕಲಂ 3ಬಿ ಸೂಕ್ತ ಪ್ರಕರಣಗಳಲ್ಲಿ ಗಡುವು ವಿಸ್ತರಿಸಲು ವಕ್ಫ್ ನ್ಯಾಯಮಂಡಳಿಗಳಿಗೆ ಅಧಿಕಾರ ನೀಡಿದೆ ಎಂದು ಅದು ಬೆಟ್ಟು ಮಾಡಿದೆ. ನ್ಯಾಯಮೂರ್ತಿಗಳಾದ ದೀಪಂಕರ ದತ್ತ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಅರ್ಜಿಗಳನ್ನು ವಿಲೇವಾರಿಗೊಳಿಸುವ ಮೂಲಕ ಅರ್ಜಿದಾರರು ಗಡುವಿಗೆ ಮುನ್ನ ಆಯಾ ನ್ಯಾಯಮಂಡಳಿಗಳನ್ನು ಸಂಪರ್ಕಿಸಲು ಅವಕಾಶವನ್ನು ನೀಡಿತು. ‘ವಿವರಗಳನ್ನು ಅಪ್‌ಲೋಡ್ ಮಾಡಲು ನೀಡಲಾಗಿರುವ ಆರು ತಿಂಗಳು ಗಡುವು ತುಂಬ ಕಡಿಮೆಯಾಗಿದೆ. ನಮಗೆ ವಿವರಗಳು ತಿಳಿದಿಲ್ಲ. 100-125 ವರ್ಷಗಳಷ್ಟು ಹಳೆಯದಾದ ವಕ್ಫ್‌ಗಳಿಗೆ ವಕಿಫ್ ಯಾರು ಎನ್ನುವುದು ನಮಗೆ ಗೊತ್ತಿಲ್ಲ. ಈ ವಿವರಗಳಿಲ್ಲದೆ ಪೋರ್ಟಲ್ ಸ್ವೀಕರಿಸುವುದಿಲ್ಲ’ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಪೀಠಕ್ಕೆ ತಿಳಿಸಿದರು. ಪೋರ್ಟಲ್‌ನಲ್ಲಿ ಹಲವಾರು ದೋಷಗಳಿವೆ ಎಂದು ಹಿರಿಯ ವಕೀಲ ಅಭಿಷೇಕ ಮನು ಸಿಂಘ್ವಿ ಹೇಳಿದರು. ನೋಂದಣಿ ಅಗತ್ಯಗಳನ್ನು ಪಾಲಿಸಲು ಒಪ್ಪಿಕೊಂಡ ಅವರು,ಅರ್ಜಿದಾರರು ಗಡುವು ವಿಸ್ತರಣೆಯನ್ನು ಮಾತ್ರ ಕೋರಿದ್ದಾರೆ ಎಂದು ನಿವೇದಿಸಿಕೊಂಡರು. ಕಾಯ್ದೆಯ ಕಲಂ 3ಬಿ ನಿಬಂಧನೆಗಳ ಪ್ರಕಾರ ವಕ್ಫ್‌ಗಳು ನ್ಯಾಯಮಂಡಳಿಗಳನ್ನು ಸಂಪರ್ಕಿಸಬಹುದು ಮತ್ತು ಆಯಾ ಪ್ರಕರಣದ ಆಧಾರದಲ್ಲಿ ಗಡುವು ವಿಸ್ತರಣೆಯನ್ನು ಕೋರಬಹುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಇದರರ್ಥ 10 ಲಕ್ಷ ಮುತ್ತವಲ್ಲಿಗಳು ಗಡುವು ವಿಸ್ತರಣೆಯನ್ನು ಕೋರಿ ನ್ಯಾಯಮಂಡಳಿಗಳ ಮುಂದೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಸಿಬಲ್ ಪ್ರತಿಕ್ರಿಯಿಸಿದರು. ಜೂ.6ರಂದು ಪೋರ್ಟಲ್ ಕಾರ್ಯಾರಂಭಗೊಂಡಿದೆ, ಹೀಗಾಗಿ ವಿವರಗಳನ್ನು ಅಪ್‌ಲೋಡ್ ಮಾಡಲು ಡಿ.6 ಕೊನೆಯ ದಿನಾಂಕವಾಗಿದೆ ಎಂದು ಮೆಹ್ತಾ ಹೇಳಿದರು. ವಕ್ಫ್‌ಗಳು 100-125 ವರ್ಷಗಳಷ್ಟು ಹಳೆಯದಾಗಿದ್ದು ವಿವರಗಳು ತಿಳಿದಿರದ ಪ್ರಕರಣಗಳಲ್ಲಿ ನ್ಯಾಯಮಂಡಳಿಯನ್ನು ಸಂಪರ್ಕಿಸಬಹುದು ಎಂದು ಪೀಠವು ತಿಳಿಸಿತು. ಪೋರ್ಟಲ್ ಕಾರ್ಯ ನಿರ್ವಹಿಸುತ್ತಿದೆ ಎಂದು ಸಾಲಿಸಿಟರ್ ಜನರಲ್ ತಿಳಿಸಿದ್ದಾರೆ ಮತ್ತು ಅದು ನಿಮ್ಮಿಂದ ವಿವಾದಿತವಾಗಿದೆ. ಹೀಗಿರುವಾಗ ನೀವು ಏನಾದರೂ ಸಾಕ್ಷ್ಯವನ್ನು ತೋರಿಸಬೇಕು ಎಂದು ನ್ಯಾ.ದತ್ತಾ ಹೇಳಿದರು. ಪೋರ್ಟಲ್‌ನಲ್ಲಿಯ ದೋಷಗಳನ್ನು ತೋರಿಸುವ ಟಿಪ್ಪಣಿಯನ್ನು ತಾನು ಸಲ್ಲಿಸುವುದಾಗಿ ಸಿಬಲ್ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೆಹ್ತಾ,ಈಗಾಗಲೇ ಹಲವಾರು ವಕ್ಫ್‌ಗಳು ನೋಂದಣಿಯಾಗಿವೆ ಎಂದು ವಾದಿಸಿದರು. ನಿಜಾಮ್ ಪಾಶಾ ಮತ್ತು ಪಿ.ವಿ.ಸುರೇಂದ್ರನಾಥ ಸೇರಿದಂತೆ ವಕೀಲರ ವಾದ-ವಿವಾದಗಳನ್ನು ಆಲಿಸಿದ ಬಳಿಕ ಪೀಠವು ಗಡುವು ವಿಸ್ತರಣೆಗೆ ನಿರ್ದೇಶನಗಳನ್ನು ನೀಡಲು ನಿರಾಕರಿಸಿತು. 2025ರ ವಕ್ಫ್ (ತಿದ್ದುಪಡಿ) ಕಾಯ್ದೆಯು ಸರಕಾರದ ಉಮೀದ್ ಪೋರ್ಟಲ್‌ನಲ್ಲಿ ‘ವಕ್ಫ್ ಬೈ ಯೂಸರ್’ ಸೇರಿದಂತೆ ಎಲ್ಲ ವಕ್ಫ್ ಆಸ್ತಿಗಳ ನೋಂದಣಿಯನ್ನು ಕಡ್ಡಾಯಗೊಳಿಸಿದೆ. ನೂತನ ಕಾಯ್ದೆಯಡಿ ಕಡ್ಡಾಯ ನೋಂದಣಿಗೆ ಗಡುವನ್ನು ವಿಸ್ತರಿಸುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಸಂಸದ ಅಸದುದ್ದೀನ್ ಉವೈಸಿ ಸೇರಿದಂತೆ ಹಲವಾರು ಕಕ್ಷಿಗಳು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ವಾರ್ತಾ ಭಾರತಿ 1 Dec 2025 3:06 pm

ಡಿಸೆಂಬರ್ 1ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಡಿಸೆಂಬರ್ 1) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ. ಶಕ್ತಿಯ ಮೂಲ ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಲ್ಲಿ

ಒನ್ ಇ೦ಡಿಯ 1 Dec 2025 3:05 pm

ಕಮಾಂಡರ್ ಚಿಟ್ಟೆಯ ಲಾರ್ವಾದ ಅದ್ಭುತ ರಕ್ಷಣಾತ್ಮಕ ತಂತ್ರ!

ಶತ್ರುಗಳಿಂದ ರಕ್ಷಿಸಿಕೊಳ್ಳಲು ಪೀಳಿಗೆಯಿಂದ ಪೀಳಿಗೆ ಕಂಡುಕೊಂಡ ಕಲೆ

ವಾರ್ತಾ ಭಾರತಿ 1 Dec 2025 3:03 pm

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿತಗಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ’ಜನರ ಕೆಲಸ ದೇವರ ಕೆಲಸʼ ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯಂದು ಸರಕಾರದ ವತಿಯಿಂದ ಗೌರವ ಸಲ್ಲಿಸಲಾಗುತ್ತಿದೆ. ಕೆಂಗಲ್ ಹನುಮಂತಯ್ಯನವರು ಒಬ್ಬ ದಕ್ಷ ಆಡಳಿತಗಾರರಾಗಿದ್ದು, ಕರ್ನಾಟಕದ ಎರಡನೇ ಮುಖ್ಯಮಂತ್ರಿಯಾಗಿದ್ದರು. ಸ್ವಾತಂತ್ರ್ಯನಂತರವಿದ್ದ ಸಮಸ್ಯೆಗಳನ್ನು ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಎದುರಿಸಿದರು. ವಿಧಾನಸೌಧದ ಭವ್ಯ ಕಟ್ಟಡ ನಿರ್ಮಾಣಕ್ಕೆ ಅವರು ರೂವಾರಿಯಾಗಿದ್ದರೂ, ಕಟ್ಟಡದ ಉದ್ಘಾಟನೆಯ ವೇಳೆಗೆ ಅವರು ಅಧಿಕಾರದಲ್ಲಿರಲಿಲ್ಲ. ಜನಪ್ರತಿನಿಧಿಯಾಗಿ ಪ್ರಮಾಣಿಕ ಜನರ ಸೇವೆ ಸಲ್ಲಿಸುವುದು ಅತಿಮುಖ್ಯ ಎಂದು ವಿಧಾನಸೌಧದ ಕಟ್ಟಡದ ಪೂರ್ವಭಾಗದಲ್ಲಿ’ಜನರ ಕೆಲಸ ದೇವರ ಕೆಲಸ’ ಎಂದು ಕೆತ್ತಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಕೆಂಗಲ್ ಹನುಮಂತಯ್ಯ ಅವರ ಸೇವೆಯನ್ನು ಸರಕಾರ ಸ್ಮರಿಸುತ್ತಿದೆ. ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದರು. ಉಪಮುಖ್ಯಮಂತ್ರಿ ಅವರಿಂದ ಉಪಹಾರ ಕೂಟ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಮುಖ್ಯಮಂತ್ರಿಗಳನ್ನು ಮಂಗಳವಾರ ಉಪಹಾರಕ್ಕೆ ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ನನ್ನ ಮನೆಯಲ್ಲಿ ಉಪಹಾರದ ಸಂದರ್ಭದಲ್ಲಿ ಉಪಮುಖ್ಯಮಂತ್ರಿಯವರು ಆಗಮಿಸಿದ್ದಾಗ, ಮಂಗಳವಾರ ತಮ್ಮ ನಿವಾಸದಲ್ಲಿ ಬೆಳಗಿನ ಉಪಹಾರಕ್ಕೆ ಆಹ್ವಾನವನ್ನು ನೀಡಿದ್ದಾರೆಯೇ ಹೊರತು, ಈ ಬಗ್ಗೆ ಯಾವುದೇ ದೂರವಾಣಿ ಕರೆ ಬಂದಿಲ್ಲ ಆದರೆ ಉಪಹಾರಕ್ಕೆ ಆಹ್ವಾನ ಬಂದರೆ ,ಮಂಗಳವಾರದ ಉಪಹಾರ ಕೂಟಕ್ಕೆ ತೆರಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ನ್ಯಾಷನಲ್ ಹೆರಾಲ್ಡ್ ಪ್ರಕರಣ : ರಾಜಕೀಯವಾಗಿ ಸೇಡು ತೀರಿಸಿಕೊಳ್ಳುತ್ತಿರುವ ಬಿಜೆಪಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸದಲ್ಲಿ ನಿರತವಾಗಿದೆ ಎಂದು ತಿಳಿಸಿದರು.

ವಾರ್ತಾ ಭಾರತಿ 1 Dec 2025 3:00 pm

ಬ್ರೇಕ್ ಫಾಸ್ಟ್ ಗೆ ಸಿದ್ದರಾಮಯ್ಯಗೆ ಇಷ್ಟವಾದ ನಾಟಿ ಕೋಳಿ ಸಾಂಬಾರ್: ಮನೆಗೆ ಬನ್ನಿ ಸಾರ್ ಎಂದು ಆಹ್ವಾನ ಕೊಟ್ಟ ಡಿಕೆಶಿ

ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಶಮನಗೊಂಡಿದ್ದು, ಇದೀಗ ಬ್ರೇಕ್ ಫಾಸ್ಟ್ ಮೀಟಿಂಗ್ ಗಳು ಸದ್ದು ಮಾಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಹ್ವಾನದ ಮೇರೆಗೆ ಡಿಕೆ ಶಿವಕುಮಾರ್ ಶನಿವಾರ ಅವರ ನಿವಾಸದಲ್ಲಿ ಉಪಹಾರ ಸೇವಿಸಿದ್ದರು. ಇದೀಗ ಮಂಗಳವಾರ ಡಿಕೆ ಶಿವಕುಮಾರ್ ಅವರು ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬ್ರೇಕ್‌ ಫಾಸ್ಟ್‌ ನಲ್ಲಿ ನಾಟಿಕೋಳಿ ಸಾಂಬಾರ್ ವಿಶೇಷ ಉಪಹಾರ ಸವಿಯಲು ಆಹ್ವಾನ ನೀಡಿದ್ದಾರೆ.

ವಿಜಯ ಕರ್ನಾಟಕ 1 Dec 2025 2:55 pm

ವಕ್ಫ್ ಉಮೀದ್ ಪೋರ್ಟಲ್‌ನ ದೋಷಗಳನ್ನು ಸರಿಪಡಿಸಿ ಕಾಲಾವಕಾಶ ನೀಡಿ: ಪ್ರಧಾನಿಗೆ ಎಪಿ ಉಸ್ತಾದ್‌ ಪತ್ರ

ಕೋಝಿಕ್ಕೋಡ್: ಕೇಂದ್ರ ವಕ್ಫ್ ಪೋರ್ಟಲ್ ಆದ 'ಉಮೀದ್' ನಲ್ಲಿ ವಕ್ಫ್ ಆಸ್ತಿಗಳ ವಿವರಗಳನ್ನು ನೋಂದಾಯಿಸಲು ನೀಡಲಾದ ಗಡುವು ಡಿ.5 ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪೋರ್ಟಲ್‌ನಲ್ಲಿನ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು ಮತ್ತು ಮಾಹಿತಿ ಅಪ್‌ಲೋಡ್ ಮಾಡಲು ಹೆಚ್ಚಿನ ಸಮಯಾವವಕಾಶ ನೀಡಬೇಕು ಎಂದು ಒತ್ತಾಯಿಸಿ ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರಿಗೆ ಪತ್ರ ಬರೆದಿದ್ದಾರೆ. ಸದ್ಯ ದೇಶಾದ್ಯಂತ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆಯಾದರೂ, ವೆಬ್‌ಸೈಟ್‌ನ ತಾಂತ್ರಿಕ ಸಮಸ್ಯೆಗಳಿಂದಾಗಿ ಪ್ರಕ್ರಿಯೆಯು ವಿಳಂಬವಾಗುತ್ತಿದ್ದು, ಸಲ್ಲಿಕೆ (submission) ಪ್ರಕ್ರಿಯೆಯ ಸಂಕೀರ್ಣತೆಗಳು ಕಾರ್ಯವಿಧಾನದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಹೊಸದಾಗಿ ಪರಿಚಯಿಸಲಾದ ಪೋರ್ಟಲ್ ಆಗಿರುವುದರಿಂದ ಹಲವಾರು ಕಾರ್ಯಾಚರಣೆಯ ದೋಷಗಳಿವೆ. ಅಲ್ಲದೆ, ಈ ನಿರ್ದಿಷ್ಟ ವೆಬ್‌ಸೈಟ್ ಬಳಕೆಯ ಬಗ್ಗೆ ಡಿಜಿಟಲ್ ಸಾಕ್ಷರತೆಯ ಕೊರತೆಯೂ ಬಳಕೆದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಈ ನಿಟ್ಟಿನಲ್ಲಿ, ಹೆಚ್ಚಿನ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಮತ್ತು ಪೋರ್ಟಲ್ ಅನ್ನು ನವೀಕರಿಸಬೇಕಿದೆ.  ಆದ್ದರಿಂದ, ಮಾಹಿತಿ ಅಪ್‌ಲೋಡ್ ಮಾಡಲು ಕನಿಷ್ಠ ಒಂದು ವರ್ಷದವರೆಗೆ ಕಾಲಾವಕಾಶವನ್ನು ವಿಸ್ತರಿಸಬೇಕು. ಕಡಿಮೆ ಕಾಲಾವಧಿಯು ಸಾವಿರಾರು ಮುತವಲ್ಲಿಗಳಿಗೆ ಮತ್ತು ವಕ್ಫ್ ಆಸ್ತಿಗಳಿಗೆ ದಂಡ ವಿಧಿಸುವ ಸಾಧ್ಯತೆಗೆ ದಾರಿಮಾಡಿಕೊಡುತ್ತದೆ. ಸರ್ಕಾರಿ ಪ್ಲಾಟ್‌ಫಾರ್ಮ್‌ನ ತಾಂತ್ರಿಕ ದೋಷಗಳಿಗೆ ಬಳಕೆದಾರರನ್ನು ಶಿಕ್ಷಿಸಬಾರದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಕ್ಫ್ ತಿದ್ದುಪಡಿ ಮತ್ತು ನೋಂದಣಿಗೆ ಸಮಯ ವಿಸ್ತರಣೆ ಕೋರಿ ವಿವಿಧ ಪಕ್ಷಗಳು ಸಲ್ಲಿಸಿದ ಅರ್ಜಿಗಳು ಸುಪ್ರೀಂ ಕೋರ್ಟ್‌ನ ಪರಿಗಣನೆಯಲ್ಲಿರುವಾಗ, ನೋಂದಣಿ ಪ್ರಕ್ರಿಯೆಯನ್ನು ತರಾತುರಿಯಲ್ಲಿ ಮುಕ್ತಾಯಗೊಳಿಸುವುದು ಆತಂಕಕಾರಿ ಮತ್ತು ಸಂಕೀರ್ಣವಾದ ವಿಷಯವಾಗಿದೆ ಎಂದು ವಿವಿಧ ಮುಸ್ಲಿಂ ಸಂಘಟನೆಗಳು ಮತ್ತು ಮೊಹಲ್ಲಾ ಒಕ್ಕೂಟಗಳು ಅಭಿಪ್ರಾಯಪಟ್ಟಿವೆ.

ವಾರ್ತಾ ಭಾರತಿ 1 Dec 2025 2:54 pm

ಸಂಪಾದಕೀಯ | ಬೆಸೆದ ಕೈಗಳು !

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

ವಾರ್ತಾ ಭಾರತಿ 1 Dec 2025 2:53 pm

ವಕ್ಫ್‌ ಆಸ್ತಿ ಮಾಹಿತಿ ಪೋರ್ಟ್‌ಲ್‌ಗೆ ಅಪ್ಲೋಡ್‌ ಮಾಡುವ ಅವಧಿ ವಿಸ್ತರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಣೆ! ಕೊನೆ ದಿನ ಯಾವಾಗ?

ವಕ್ಫ್ ಆಸ್ತಿಗಳ ವಿವರಗಳನ್ನು ಪೋರ್ಟಲ್‌ನಲ್ಲಿ ಅಪ್‌ಡೇಟ್ ಮಾಡಲು ಡಿಸೆಂಬರ್ 6ರ ಗಡುವನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ತಾಂತ್ರಿಕ ಸಮಸ್ಯೆಗಳಿದ್ದರೆ ವಕ್ಫ್ ಟ್ರಿಬ್ಯುನಲ್ ಅನ್ನು ಸಂಪರ್ಕಿಸುವಂತೆ ನ್ಯಾಯಾಲಯ ಸೂಚಿಸಿದೆ. ಸಂಸತ್ತು ಪರಿಹಾರ ಒದಗಿಸಿದೆ, ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ವಿಜಯ ಕರ್ನಾಟಕ 1 Dec 2025 2:52 pm