T20 World Cup- ಐಸಿಸಿ ಕ್ಯಾರೇ ಅನ್ನದಾಗ ದಾರಿ ಕಾಣದೆ ಯೂ ಟರ್ನ್ ಹೊಡೆದ ಪಾಕ್; ಈಗ ಭಾರತದ ವಿರುದ್ಧ ಆಡಲು ರೆಡಿ
Indo Pak Cricket Rivalry- ಭಾರತದ ವಿರುದ್ಧ ಟಿ20 ವಿಶ್ವಕಪ್ ಪಂದ್ಯವನ್ನು ಆಡುವುದಿಲ್ಲ ಎಂದು ನಾಟಕ ಮಾಡಿದ್ದ ಪಾಕಿಸ್ತಾನ ಇದೀಗ ದಾರಿಗೆ ಬಂದಿದೆ. ಲಾಹೋರ್ ನಲ್ಲಿ ಐಸಿಸಿ, ಪಿಸಿಬಿ ಮತ್ತು ಬಿಸಿಬಿ ಅಧಿಕಾರಿಗಳ ನಿರಂತರ ಮಾತುಕತೆಯ ಬಳಿಕ ಪಾಕಿಸ್ತಾನ ಸರ್ಕಾರದಿಂದಲೇ ಈ ಸಂಗತಿ ಇದೀಗ ಹೊರಬಿದ್ದಿದೆ. ಕೊಲಂಬೊದಲ್ಲಿ ಫೆಬ್ರವರಿ 15ರಂದು ಭಾರತದ ವಿರುದ್ಧ ನಡೆಯಲಿರುವ ಪಂದ್ಯಕ್ಕೆ ರಾಷ್ಟ್ರೀಯ ತಂಡವನ್ನು ಕಳುಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಹಾಕಿದ್ದರೆ ಅದು ನೀಡಿದ ಕಾರಣ ಏನು?
ವೃದ್ಧ ತಂದೆಯ ಆರೈಕೆ ಮಾಡದ ಪುತ್ರಿಯರು, 2.4 ಎಕರೆ ಜಮೀನಿನ ಗಿಫ್ಟ್ ಡೀಡ್ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು : ಜೀವನದ ಸಂಧ್ಯಾಕಾಲದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ಜೀವನಾಧಾರವಾಗಿದ್ದ 2.4 ಎಕರೆ ಭೂಮಿಯನ್ನು ಪುತ್ರಿಯರಿಬ್ಬರ ಹೆಸರಿಗೆ ಮಾಡಿಕೊಟ್ಟಿದ್ದ ವೃದ್ಧರೊಬ್ಬರು, ನಂತರ ಪುತ್ರಿಯರು ತಮ್ಮನ್ನು ನಿರಾಶ್ರಿತನನ್ನಾಗಿ ಮಾಡಿದ್ದ ಹಿನ್ನೆಲೆಯಲ್ಲಿ ಗಿಫ್ಟ್ ಡೀಡ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಹಿರಿಯ ನಾಗರಿಕರಿಗೆ ಅವರ ವೃದ್ಧಾಪ್ಯದಲ್ಲಿ ಮಕ್ಕಳು ಆರೈಕೆ ಮಾಡದ ಸಂದರ್ಭದಲ್ಲಿ ನ್ಯಾಯಾಲಯ ಅವರ ರಕ್ಷಣೆಗೆ ಧಾವಿಸಿ ಅವರ ಆಸ್ತಿಯನ್ನು ರಕ್ಷಿಸಿ, ಅವರ ಹಕ್ಕುಗಳನ್ನು ಮರಳಿ ದೊರಕಿಸಿಕೊಡಲಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಹೆಬ್ಬೂರು ಹೋಬಳಿಯ ದೊಡ್ಡಗೊಲ್ಲಹಳ್ಳಿಯ ವೆಂಕಟಯ್ಯ (84) ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯನ್ಯಾಯಪೀಠ, 2007ರ ಹಿರಿಯ ನಾಗರಿಕರ ಮತ್ತು ಪೋಷಕರ ನಿರ್ವಹಣಾ ಮತ್ತು ಕಲ್ಯಾಣ ಕಾಯಿದೆಯನ್ನು ಅನ್ವಯಿಸಿ, ಕೃಷಿ ಭೂಮಿಯನ್ನು ಪುತ್ರಿಯರ ಹೆಸರಿಗೆ ಮಾಡಿಕೊಟ್ಟಿದ್ದ ಗಿಫ್ಟ್ ಡೀಡ್ ರದ್ದುಪಡಿಸಿದೆ. ಪ್ರಕರಣವೇನು? ಸುಮಾರು 2.4 ಎಕರೆ ಕೃಷಿ ಭೂಮಿ ಹೊಂದಿದ್ದ ವೆಂಕಟಯ್ಯ, ತಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತೇವೆಂದು ಭರವಸೆ ನೀಡಿದ್ದ ಪುತ್ರಿಯರಾದ ಶಿವಮ್ಮ ಮತ್ತು ಪುಟ್ಟಮ್ಮ ಅವರ ಪರವಾಗಿ ಉಡುಗೊರೆ ಪತ್ರವನ್ನು ಮಾಡಿಕೊಟ್ಟು ಆಸ್ತಿಯನ್ನು ವರ್ಗಾವಣೆ ಮಾಡಿದ್ದರು. ಆನಂತರ, ಪುತ್ರಿಯರು ತಮ್ಮನ್ನು ನೋಡಿಕೊಳ್ಳಲು ವಿಫಲರಾಗಿದ್ದಾರೆಂದು ಅವರು ಆರೋಪಿಸಿದ್ದರಲ್ಲದೆ, ಹಿರಿಯ ನಾಗರಿಕರ ಕಾಯ್ದೆಯಡಿ, ಗಿಫ್ಟ್ ಡೀಡ್ ರದ್ದು ಕೋರಿ ಉಪವಿಭಾಗಾಧಿಕಾರಿ ನೇತೃತ್ವದ ನ್ಯಾಯಮಂಡಳಿ ಮುಂದೆ ಮನವಿ ಸಲ್ಲಿಸಿದ್ದರು. ಇದನ್ನು ವಜಾಗೊಳಿಸಿದ್ದ ನ್ಯಾಯಮಂಡಳಿ, ಉಡುಗೊರೆ ಪತ್ರದಲ್ಲಿ ಹೆಣ್ಣು ಮಕ್ಕಳು ತಮ್ಮನ್ನು ನೋಡಿಕೊಳ್ಳಲು ನಿರ್ಬಂಧವನ್ನು ಹೊಂದಿರುವ ಸ್ಪಷ್ಟ ಷರತ್ತು ಇಲ್ಲ ಎಂದು ತೀರ್ಪು ನೀಡಿತ್ತು. ಈ ಆದೇಶವನ್ನು ಜಿಲ್ಲಾಧಿಕಾರಿ ಸಹ ಎತ್ತಿಹಿಡಿದಿದ್ದರು. ಇದರಿಂದ, ಗಿಫ್ಟ್ ಡೀಡ್ ರದ್ದು ಕೋರಿ ಹೈಕೋರ್ಟ್ಗೆ ಮೊರೆ ಹೋಗಿದ್ದ ವೆಂಕಟಯ್ಯ, ತಾವು ಅನಕ್ಷರಸ್ಥರು ಮತ್ತು ಗಿಫ್ಟ್ ಡೀಡ್ ಬಗ್ಗೆ ತಿಳಿದಿಲ್ಲದ ಕಾರಣ ಪುತ್ರಿಯರಾದ ಶಿವಮ್ಮ ಮತ್ತು ಪುಟ್ಟಮ್ಮ ಉಡುಗೊರೆ ಪತ್ರ ಸಿದ್ಧಪಡಿಸಿದ್ದರು. ತನ್ನನ್ನು ಚೆನ್ನಾಗಿ ನೋಡಿಕೊಳ್ಳಲಾಗುವುದೆಂಬ ಭರವಸೆಯ ಮೇರೆಗೆ ಗಿಫ್ಟ್ ಡೀಡ್ ಮಾಡಿಕೊಟ್ಟಿದ್ದೆನು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಹೈಕೋರ್ಟ್ ಹೇಳಿದ್ದೇನು? ಅಧಿಕಾರಿಗಳು ಅಳವಡಿಸಿಕೊಂಡ ವ್ಯಾಖ್ಯಾನವನ್ನು ಒಪ್ಪದ ನ್ಯಾಯಪೀಠ, ಗಿಫ್ಟ್ ಡೀಡ್ನಲ್ಲಿ ಸ್ಪಷ್ಟವಾದ ನಿರ್ವಹಣಾ ಷರತ್ತು ಕಾಯ್ದೆಯ ಸೆಕ್ಷನ್ 23(1) ರಡಿಯಲ್ಲಿ ಕಡ್ಡಾಯ ಅವಶ್ಯಕತೆಯಲ್ಲ. ಒಂದು ವೇಳೆ ಅಂತಹ ಪ್ರಕರಣಗಳು ಎದುರಾದರೆ, ಅವುಗಳ ಸಂಗತಿಗಳು, ಸಂದರ್ಭಗಳು ಮತ್ತು ನಡವಳಿಕೆಯಿಂದ ಊಹಿಸಬಹುದು ಎಂದು ಹೇಳಿದೆ. ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ನೀಡಿರುವ ಕಾರಣಗಳು ಕಾನೂನುಬದ್ಧವಾಗಿ ದೋಷಪೂರಿತ ಮತ್ತು ಕಾಯ್ದೆಯ ತಪ್ಪು ತಿಳುವಳಿಕೆ ಆಧರಿಸಿವೆ. ಇದು ವಯಸ್ಸಾದ ಪೋಷಕರು ತಮ್ಮ ಮಕ್ಕಳಿಗೆ ಆಸ್ತಿಯನ್ನು ವರ್ಗಾಯಿಸುವಾಗ ಕಟ್ಟುನಿಟ್ಟಾದ ಕಾನೂನು ವಿಧಿವಿಧಾನಗಳಿಗಿಂತ ಹೆಚ್ಚಾಗಿ ನಂಬಿಕೆ, ನೈತಿಕ ಭರವಸೆಗಳು ಮತ್ತು ಕೌಟುಂಬಿಕ ಬಂಧಗಳನ್ನು ಅವಲಂಬಿಸುತ್ತಾರೆ ಎಂದು ನ್ಯಾಯಾಲಯ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.
ಮಹಿಳಾ ಸಿಬ್ಬಂದಿಗೆ ಋತುಚಕ್ರದ ರಜೆ ಪ್ರಶ್ನಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರ್ಕಾರದ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 23ಕ್ಕೆ ಮುಂದೂಡಿದೆ. ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಕರ್ನಾಟಕ ಉದ್ಯೋಗದಾತರ ಸಂಘ, ಬೆಂಗಳೂರು ಹೋಟೆಲ್ಗಳ ಸಂಘ, ಅವಿರತ ಡಿಫೆನ್ಸ್ ಸಿಸ್ಟಮ್, ಫೆಸಿಲ್ ಏರೋಸ್ಪೇಸ್ ಟೆಕ್ನಾಲಜೀಸ್ ಲಿಮಿಟೆಡ್, ಸ್ಯಾಮೋಸ್ ಟೆಕ್ನಾಲಜೀಸ್ ಲಿಮಿಟೆಡ್ಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಅರ್ಜಿದಾರರೊಬ್ಬರ ಪರ ವಕೀಲರು, ರಾಜ್ಯದ ಮಹಿಳಾ ನೌಕರರಿಗೆ ಮಾಸಿಕ 1 ದಿನದ ವೇತನಸಹಿತ ರಜೆಯಂತೆ ವಾರ್ಷಿಕ 12 ಋತುಚಕ್ರದ ರಜೆ ಘೋಷಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಗೆ ಯಾವುದೇ ತಡೆಯಾಜ್ಞೆ ನೀಡಿರದ ಕಾರಣ ಸಮಸ್ಯೆಯಾಗುತ್ತಿದೆ. ಆದ್ದರಿಂದ, ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಇದನ್ನು ಆಲಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಫೆಬ್ರವರಿ 23ಕ್ಕೆ ಮುಂದೂಡಿತು.
5 ವರ್ಷಗಳಲ್ಲಿ 3.4 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣ: ದಕ್ಷಿಣ ಕನ್ನಡದಲ್ಲೇ ಅತಿ ಹೆಚ್ಚು ಕೇಸ್
ಮಂಗಳೂರು: ಕರ್ನಾಟಕದ ಆರೋಗ್ಯ ವಲಯಕ್ಕೆ ಎಚ್ಚರಿಕೆಯ ಗಂಟೆಯೆಂಬಂತೆ, ರಾಜ್ಯದ ಮೂರು ಪ್ರಮುಖ ಜಿಲ್ಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ಪ್ರಮಾಣದಲ್ಲಿ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿವೆ. ಲೋಕಸಭೆಯಲ್ಲಿ ಮಂಡಿಸಲಾದ ಇತ್ತೀಚಿನ ದತ್ತಾಂಶಗಳ ಪ್ರಕಾರ, 2020-21 ರಿಂದ 2024-25ರ ಅವಧಿಯಲ್ಲಿ ದಕ್ಷಿಣ ಕನ್ನಡ, ಕಲಬುರಗಿ ಮತ್ತು ಹಾಸನ ಜಿಲ್ಲೆಗಳು ಕ್ಯಾನ್ಸರ್ ಪತ್ತೆ ಹಚ್ಚುವಿಕೆಯಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿವೆ. ಬಾಯಿ, ಗರ್ಭಕಂಠ ಮತ್ತು
Epstein files | ಎಪ್ಸ್ಟೀನ್ ಬಳಿ ಪತ್ತೆಯಾದ ಕಾಬಾದ ಪವಿತ್ರ ಬಟ್ಟೆ ‘ಕಿಸ್ವಾ’!
ಆಕ್ರೋಶ ವ್ಯಕ್ತಪಡಿಸಿದ ಜಾಗತಿಕ ಮುಸ್ಲಿಂ ಸಮುದಾಯ
ವಿಜಯನಗರ | ಫೆ.21ರಂದು ಬೃಹತ್ ಉದ್ಯೋಗ ಮೇಳ : 50ಕ್ಕೂ ಹೆಚ್ಚು ಕಂಪನಿಗಳು ಭಾಗಿ
ವಿಜಯನಗರ (ಹೊಸಪೇಟೆ), ಫೆ.09: ಫೆಬ್ರವರಿ 21ರಂದು ನಗರದ ವಿಜಯನಗರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ವಿಜಯನಗರ ಕಾಲೇಜುಗಳ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಪ್ರತಿಷ್ಠಿತ ಎಂಎನ್ಸಿ ಕಂಪನಿಗಳು ಭಾಗವಹಿಸಲಿದ್ದು, ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರಿಗೆ ಉತ್ತಮ ಅವಕಾಶ ಕಲ್ಪಿಸಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಹೇಳಿದರು. 18ರಿಂದ 35 ವರ್ಷದೊಳಗಿನ ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಇಂಜಿನಿಯರಿಂಗ್, ಬಿಕಾಂ, ಬಿಎಸ್ಸಿ, ಬಿಎ, ಬಿಬಿಎ, ಬಿಎಚ್ಎಂ, ಎಂಕಾಂ, ಎಂಬಿಎ, ಎಂಎಸ್ಸಿ, ಎಂಎ ಪದವಿ ಪಡೆದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಉದ್ಯೋಗ ಮೇಳದ ಕರಪತ್ರ ಬಿಡುಗಡೆಗೊಳಿಸಿದರು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಕಾಲೇಜನ್ನು ಅಥವಾ ದೂರವಾಣಿ ಸಂಖ್ಯೆ 7975278783, 9986779624 ಅನ್ನು ಸಂಪರ್ಕಿಸಬಹುದು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಮಹ್ಮದ್ ಅಲಿ ಅಕ್ರಂ ಷಾ, ವಿಜಯನಗರ ಕಾಲೇಜು ಅಧ್ಯಕ್ಷ ಮೆಟ್ರಿ ಮಲ್ಲಿಕಾರ್ಜುನ, ಪ್ರಾಂಶುಪಾಲ ಎ. ಮಹಾಂತೇಶ್ ಸೇರಿದಂತೆ ವಿವಿಧ ಕಂಪನಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿಜಯನಗರ | ಹಂಪಿ ಉತ್ಸವಕ್ಕೆ ಎಲ್ಲರ ಸಹಕಾರ ಅಗತ್ಯ: ಡಿಸಿ
ವಿಜಯನಗರ : ಹಂಪಿ ಉತ್ಸವ ಫೆ. 13ರಿಂದ 15ರವರೆಗೆ ಆಯೋಜಿಸಲಾಗಿದ್ದು, ಉತ್ಸವದ ಯಶಸ್ವಿಗೆ ತಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಂಪಿ ಉತ್ಸವದ ಅಂಗವಾಗಿ ಹತ್ತು ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಫೆ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು. ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ 3 ದಿನಗಳ ಕಾಲ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಅದರಂತೆ ಅಗತ್ಯ ಮೂಲಭೂತ ಸೌಕರ್ಯ ನೀಡಲು ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ ಎಂದು ಡಿಸಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಉಪಾಧ್ಯಕ್ಷ ಜಿ.ಎಸ್.ರಮೇಶ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ದರು.
ಬೀದರ್ | ಫೆ.12ರಂದು ಜಿಲ್ಲೆಯಲ್ಲಿ ಸಾರ್ವತ್ರಿಕ ಮುಷ್ಕರ : ಬಾಬುರಾವ್ ಹೊನ್ನಾ
ಬೀದರ್ : ಫೆ.12ರಂದು ಜಿಲ್ಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಆಲ್ ಇಂಡಿಯಾ ಕಿಸಾನ್ ಸಭಾದ ರಾಜ್ಯ ಉಪಾಧ್ಯಕ್ಷ ಬಾಬುರಾವ್ ಹೊನ್ನಾ ತಿಳಿಸಿದರು. ನಗರದ ಸ್ಟಾರ್ ಲಾಡ್ಜ್ ಸಭಾಂಗಣದಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ ಹಾಗೂ ಕರ್ನಾಟಕ ರಾಜ್ಯ ರೈತ ಸಂಘಗಳು ಸೇರಿ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು. ಕೇಂದ್ರ ಸರ್ಕಾರ ಅಮೇರಿಕಾದೊಂದಿಗೆ ಕೃಷಿ ಒಪ್ಪಂದ ಮಾಡಿಕೊಂಡಿರುವುದು, ವಿದ್ಯುತ್ ಖಾಸಗಿಕರಣ, ಕಾರ್ಪೊರೇಟ್ ಕಂಪನಿಗಳ ಬೀಜ ಬಳಕೆ ಕಡ್ಡಾಯಗೊಳಿಸುವ ಬೀಜ ಕಾಯಿದೆ ಸೇರಿದಂತೆ ಹಲವು ನೀತಿಗಳ ವಿರುದ್ಧ ಈ ಹೋರಾಟ ನಡೆಯುತ್ತಿದೆ. ರೈತರಿಗೆ ಹಾನಿ ಉಂಟುಮಾಡುವ ಎಲ್ಲಾ ಕಾನೂನುಗಳನ್ನು ವಾಪಸ್ಸು ಪಡೆಯಬೇಕು ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸಲಾಗುತ್ತಿದೆ ಎಂದು ಹೇಳಿದರು. ಈ ಹೋರಾಟ ದೇಶವ್ಯಾಪಿಯಾಗಿ ನಡೆಯುತ್ತಿದ್ದು, ಕೆಲವು ರಾಜ್ಯಗಳಲ್ಲಿ ರೈಲು ತಡೆ, ಪಾದಯಾತ್ರೆ ಸೇರಿದಂತೆ ವಿವಿಧ ರೀತಿಯ ಪ್ರತಿಭಟನೆಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಚೊಂಡಿ, ಬಸವರಾಜ್ ಅಷ್ಟೂರೆ, ಶಾಂತಮ್ಮ ಮೂಲಗೆ, ವಾಮನರಾವ್, ಖಮರ್ ಪಟೇಲ್, ಶಫಿಯತ್ ಅಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Belagavi | ಮಹಿಳಾ ಅಧಿಕಾರಿಯ ಖಾಸಗಿ ವೀಡಿಯೊ ಸೆರೆ ಪ್ರಕರಣ; ಮತ್ತೊಬ್ಬ ಆರೋಪಿಯ ಬಂಧನ
ಬೆಳಗಾವಿ : ಮಹಿಳಾ ಅಧಿಕಾರಿಯ ನಿವಾಸದಲ್ಲಿ ರಹಸ್ಯ ಕ್ಯಾಮರಾಗಳನ್ನು ಅಳವಡಿಸಿ ಖಾಸಗಿತನದ ದೃಶ್ಯಗಳನ್ನು ಸೆರೆಹಿಡಿದು 50 ಲಕ್ಷ ರೂ.ಗೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತನನ್ನು ಮಹಿಳಾ ಅಧಿಕಾರಿಯ ಕಚೇರಿಯಲ್ಲೇ ಕೆಲಸ ಮಾಡುತ್ತಿದ್ದ ನೌಕರ ವಿನೋದ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಮೂವರು ಯೂಟ್ಯೂಬರ್ಗಳಾದ ಗೋಕಾಕನ ಅಬ್ದುಲ್ ರಷೀದ್, ನಝರ್ ಅಹ್ಮದ್ ಮಕಾನದಾರ, ಸಮೀರ್ ನಿಸಾರ್ ಅಹ್ಮದ್ ಶೇಖ್, ಘಟಪ್ರಭಾದ ಮುಹಮ್ಮದ್ ದಿಲಾವರ ನಝೀರ್ ಅಹ್ಮದ್ ಬಾಳೇಕುಂದ್ರಿ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಇಂಡಿಯನ್ ಮುಸ್ಲಿಮ್ಸ್ ಫಾರ್ ಪ್ರೊಗ್ರೆಸ್ ಆ್ಯಂಡ್ ರಿಫಾರ್ಮ್ಸ್ ನಿಯೋಗದಿಂದ ಕೇಂದ್ರ ರಕ್ಷಣಾ ಸಚಿವರ ಭೇಟಿ
ಏಕತೆ, ಸಾಮಾಜಿಕ ಸೌಹಾರ್ದ ಪ್ರಜಾಪ್ರಭುತ್ವದ ಶಕ್ತಿಗೆ ಮೂಲಾಧಾರ : ರಾಜನಾಥ್ ಸಿಂಗ್
ಬೀದರ್ | ಮಕ್ಕಳಿಗೆ ಶಿಕ್ಷಣ ನೀಡಿ ಸ್ವಾವಲಂಬಿಗಳಾಗಿ ಮಾಡಬೇಕು : ಮಾಲಾ ಬಿ.ನಾರಾಯಣರಾವ್
ಐಡಿಯಲ್ ಗ್ಲೋಬಲ್ ಶಾಲೆಯ ಸಿಲ್ವರ್ ಜುಬಿಲಿ ಆಚರಣೆ
ಯಶಸ್ವಿಯಾದ ರಾಯಚೂರು ಉತ್ಸವ | ಸಚಿವ ಎನ್ಎಸ್ ಬೋಸರಾಜು ಅವರಿಂದ ಶ್ಲಾಘನೆ
ರಾಯಚೂರು: ʼಎಡೆದೊರೆ ನಾಡುʼ ರಾಯಚೂರು (ದೋ-ಅಬ್) ಪ್ರದೇಶದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮರುಕಳಿಸುವ ಹಾಗೂ ಸ್ಥಳೀಯ ಕಲೆ ಮತ್ತು ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಫೆ.5, 6 ಮತ್ತು 7ರಂದು ಮೂರು ದಿನಗಳ ಕಾಲ ಆಯೋಜಿಸಲಾಗಿದ್ದ ʼರಾಯಚೂರು ಉತ್ಸವ–2026ʼ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆ ಹಾಗೂ ಆಯೋಜಕರಿಗೆ ಸಣ್ಣ ನೀರಾವರಿ ಮತ್ತು ವಿಜ್ಞಾನ–ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅಭಿನಂದನೆ ಸಲ್ಲಿಸಿದ್ದಾರೆ. ನಾಡಹಬ್ಬದ ಸಂಭ್ರಮದಂತೆ ನಡೆದ ಉತ್ಸವದಲ್ಲಿ ಜಿಲ್ಲೆಯ ಜನತೆ ನಿರೀಕ್ಷೆಗೂ ಮೀರಿದ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಿರುವುದು ಸಂತಸದ ಸಂಗತಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಉತ್ಸವವು ರಾಯಚೂರು ಜಿಲ್ಲೆಯ ಜನರ ಬಹುದಿನದ ಕನಸಾಗಿದ್ದು, ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಿಸ್ತಿನಿಂದ ಮತ್ತು ಸುವ್ಯವಸ್ಥಿತವಾಗಿ ನಡೆದಿರುವುದು ವಿಶೇಷ. ಉತ್ಸವದ ಯಶಸ್ಸಿಗೆ ಅಚ್ಚುಕಟ್ಟಾಗಿ ಯೋಜನೆ ರೂಪಿಸಿ ಕಾರ್ಯಗತಗೊಳಿಸಿದ ಜಿಲ್ಲಾಡಳಿತ, ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿದ ಜಿಲ್ಲಾ ಪೊಲೀಸ್ ಇಲಾಖೆ, ವಿವಿಧ ಸಂಘ-ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ಪ್ರತ್ಯಕ್ಷ-ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಸಚಿವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಮಕ್ಕಳಿಂದ ನಿರ್ಲಕ್ಷ್ಯಕ್ಕೊಳಗಾಗಿದ್ದ ವಯೋವೃದ್ಧಗೆ ನ್ಯಾಯ: ಪುತ್ರಿಯರ ಆಸ್ತಿ ಮೋಹಕ್ಕೆ ಮದ್ದು ಅರೆದ ಹೈಕೋರ್ಟ್
ಬೆಂಗಳೂರು: ಇಳಿವಯಸ್ಸಿನಲ್ಲಿ ತನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ವಯೋವೃದ್ಧರೊಬ್ಬರು ಜೀವನಾಧಾರವಾಗಿದ್ದ 2.4 ಎಕರೆ ಭೂಮಿಯನ್ನು ಪುತ್ರಿಯರಿಬ್ಬರ ಹೆಸರಿಗೆ ಮಾಡಿಕೊಟ್ಟಿದ್ದರು. ನಂತರ ಪುತ್ರಿಯರ 'ನಿಜ ಬಣ್ಣ' ಬಯಲಾಗಿ ತನ್ನನ್ನು ನಿರಾಶ್ರಿತನನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ಗಿಫ್ಟ್ ಡೀಡ್ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಮಾನ್ಯ ಮಾಡಿರುವ ಹೈಕೋರ್ಟ್ ತುಮಕೂರಿನ 84 ವರ್ಷದ ವೃದ್ಧನ ನೆರವಿಗೆ ಧಾವಿಸಿದೆ.ಹೆಬ್ಬೂರು ಹೋಬಳಿಯ ದೊಡ್ಡಗೊಲ್ಲಹಳ್ಳಿಯ ವೆಂಕಟಯ್ಯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ಅವರಿದ್ದ ಏಕಸದಸ್ಯ ಪೀಠ, 2007ರ ಹಿರಿಯ ನಾಗರಿಕರ ಮತ್ತು ಅನ್ವಯಿಸಿ, ಕೃಷಿ ಭೂಮಿಯನ್ನು ಪುತ್ರಿಯರ ಹೆಸರಿಗೆ ಮಾಡಿಕೊಟ್ಟಿದ್ದ ಗಿಫ್ಟ್ ಡೀಡ್ ರದ್ದುಗೊಳಿಸಿದೆ. ಅಲ್ಲದೆ, 'ಹಿರಿಯ ನಾಗರಿಕರಿಗೆ ವೃದ್ಧಾಪ್ಯದಲ್ಲಿ ಆರೈಕೆ ಮಾಡದೆ ಅವರ ಜೀವನ ನಿರ್ವಹಣೆಗೆ ನೆರವಾಗದೆ ಇದ್ದರೆ ಅಂತಹ ಸಂದರ್ಭದಲ್ಲಿ ನ್ಯಾಯಾಲಯ ಅವರ ರಕ್ಷಣೆಗೆ ಧಾವಿಸಿ ಆಸ್ತಿ ರಕ್ಷಿಸಿ, ಅವರ ಹಕ್ಕುಗಳನ್ನು ಮರಳಿ ದೊರಕಿಸಿಕೊಡಲಾಗುತ್ತದೆ,'' ಎಂದು ಹೇಳಿದೆ. ಆದೇಶದಲ್ಲಿ ಹೇಳಿದ್ದೇನು? ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ನೀಡಿರುವ ಕಾರಣಗಳು 'ಕಾನೂನುಬದ್ಧವಾಗಿ ದೋಷಪೂರಿತ' ಮತ್ತು ಕಾಯಿದೆಯ ತಪ್ಪು ತಿಳಿವಳಿಕೆ ಆಧರಿಸಿವೆ ಎಂದು ಹೇಳಿರುವ ನ್ಯಾಯಾಲಯ, 'ಇದು ವಯಸ್ಸಾದ ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ ವರ್ಗಾಯಿಸುವಾಗ ಕಟ್ಟುನಿಟ್ಟಾದ ಕಾನೂನು ವಿಧಿವಿಧಾನಗಳಿಗಿಂತ ಹೆಚ್ಚಾಗಿ ನಂಬಿಕೆ, ನೈತಿಕ ಭರವಸೆಗಳು ಮತ್ತು ಕೌಟುಂಬಿಕ ಬಂಧಗಳನ್ನು ಅವಲಂಬಿಸುತ್ತಾರೆ,'' ಎಂದು ಅಭಿಪ್ರಾಯಪಟ್ಟಿದೆ.ಹಿರಿಯ ನಾಗರಿಕರ, ವಿಶೇಷವಾಗಿ ಗ್ರಾಮೀಣ ಕರ್ನಾಟಕದವರ ವಿಶ್ವಾಸಾರ್ಹ ಸ್ವಭಾವ ಮತ್ತು ಮಕ್ಕಳ ಮೇಲೆ ಅವರ ಭಾವನಾತ್ಮಕ ಮತ್ತು ಆರ್ಥಿಕ ಅವಲಂಬನೆಯು ಕಾನೂನಿನಿಂದ ಸ್ಪಷ್ಟವಾಗಿ ಗುರುತಿಸಲ್ಪಟ್ಟ ಸಾಮಾಜಿಕ ವಾಸ್ತವವಾಗಿದೆ. ವೆಂಕಟಯ್ಯನವರ ವೃದ್ಧಾಪ್ಯ, ಗ್ರಾಮೀಣ ಹಿನ್ನೆಲೆ, ನಿಕಟ ಕುಟುಂಬ ಸಂಬಂಧ ಮತ್ತು ಆಸ್ತಿ ವರ್ಗಾವಣೆಯ ನಂತರದ ನಿರ್ಲಕ್ಷ್ಯ ಗಮನಿಸಿದ ನ್ಯಾಯಾಲಯವು, ಗಿಫ್ಟ್ ಡೀಡ್ ಆರೈಕೆ ಮತ್ತು ನಿರ್ವಹಣೆಯ ನಿರೀಕ್ಷೆಗೆ ಸ್ಪಷ್ಟವಾಗಿ ಸಂಬಂಸಿದೆ ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣದ ಹಿನ್ನೆಲೆ ಹೆಬ್ಬೂರು ಹೋಬಳಿಯ ದೊಡ್ಡಗೊಲ್ಲಹಳ್ಳಿಯ ವೆಂಕಟಯ್ಯ ಸುಮಾರು 2.4 ಎಕರೆ ಕೃಷಿ ಭೂಮಿ ಹೊಂದಿದ್ದರು. ವೃದ್ಧಾಪ್ಯದಲ್ಲಿ ತನ್ನನ್ನು ಚೆನ್ನಾಗಿ ನೋಡಿಕೊಳ್ಳುತಾರೆಂಬ ಭರವಸೆ ಹಿನ್ನೆಲೆಯಲ್ಲಿ ಪುತ್ರಿಯರಾದ ಶಿವಮ್ಮ ಮತ್ತು ಪುಟ್ಟಮ್ಮ ಅವರ ಪರವಾಗಿ ಉಡುಗೊರೆ ಪತ್ರವನ್ನು ಮಾಡಿಕೊಟ್ಟು ಆಸ್ತಿಯನ್ನು ವರ್ಗಾವಣೆ ಮಾಡಿದ್ದರು. ಆನಂತರ ಪುತ್ರಿಯರು ತಮ್ಮನ್ನು ನೋಡಿಕೊಳ್ಳಲು ವಿಫಲರಾಗಿದ್ದಾರೆಂದು ಅವರು ಆರೋಪಿಸಿದ್ದರು. ಅಲ್ಲದೆ, ಹಿರಿಯ ನಾಗರಿಕರ ಕಾಯಿದೆಯಡಿ ತಮ್ಮ ಗಿಫ್ಟ್ ಡೀಡ್ ರದ್ದು ಕೋರಿ ಉಪವಿಭಾಗಾಧಿಕಾರಿ ನೇತೃತ್ವದ ನ್ಯಾಯಮಂಡಳಿ ಮುಂದೆ ಮನವಿ ಸಲ್ಲಿಸಿದ್ದರು.ನ್ಯಾಯಮಂಡಳಿಯು 2023ರ ಡಿಸೆಂಬರ್ 19 ರಂದು ಅವರ ದೂರನ್ನು ವಜಾಗೊಳಿಸಿತು. ಉಡುಗೊರೆ ಪತ್ರದಲ್ಲಿ ಹೆಣ್ಣು ಮಕ್ಕಳು ತಮ್ಮನ್ನು ನೋಡಿಕೊಳ್ಳಲು ನಿರ್ಬಂಧ ಹೊಂದಿರುವ ಸ್ಪಷ್ಟ ಷರತ್ತು ಇಲ್ಲಎಂದು ತೀರ್ಪು ನೀಡಿತ್ತು. 2024ರ ಅ.22ರಂದು ಜಿಲ್ಲಾಕಾರಿ ಕೂಡ ಅದೇ ಆದೇಶವನ್ನು ಎತ್ತಿ ಹಿಡಿದಿದ್ದರು. ಹಾಗಾಗಿ, ಗಿಫ್ಟ್ ಡೀಡ್ ರದ್ದು ಕೋರಿ ಹೈಕೋರ್ಟ್ಗೆ ಮೊರೆ ಹೋಗಿದ್ದ ವೆಂಕಟಯ್ಯ, ''ನಾನು ಅನಕ್ಷರಸ್ಥ ಮತ್ತು ಗಿಫ್ಟ್ ಡೀಡ್ ಬಗ್ಗೆ ತಿಳಿದಿಲ್ಲದ ಕಾರಣ ಪುತ್ರಿಯರಾದ ಶಿವಮ್ಮ ಮತ್ತು ಪುಟ್ಟಮ್ಮ ಉಡುಗೊರೆ ಪತ್ರ ಸಿದ್ಧಪಡಿಸಿದ್ದೆ. ಅಲ್ಲದೆ, ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆಂಬ ಭರವಸೆಯ ಮೇರೆಗೆ ಗಿಫ್ಟ್ ಡೀಡ್ ಮಾಡಿಕೊಟ್ಟಿದ್ದೆ,'' ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
ರಾಯಚೂರು | ಉಚಿತ ಔಷಧಿ, ಆರೋಗ್ಯ ಹಕ್ಕು ಕಾಯ್ದೆ ಜಾರಿಗೆ ಆಗ್ರಹಿಸಿ ಲಿಂಗತ್ವ ಅಲ್ಪಸಂಖ್ಯಾತರಿಂದ ಪ್ರತಿಭಟನೆ
ರಾಯಚೂರು: ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮತ್ತು ಉತ್ತಮ ಗುಣಮಟ್ಟದ ಔಷಧಿಗಳನ್ನು ಲಭ್ಯವಾಗುವಂತೆ ಮಾಡಬೇಕು ಹಾಗೂ ರಾಜ್ಯದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸಂಗಮ ಸಂಸ್ಥೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಮಾತನಾಡಿ, ಚಿಕಿತ್ಸೆ ವೆಚ್ಚದಲ್ಲಿ ಶೇ.60 ರಿಂದ 70ರಷ್ಟು ಹಣ ಔಷಧಿಗಳ ಖರೀದಿಗೆ ವ್ಯಯವಾಗುತ್ತಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಔಷಧಿ ನೀಡಬೇಕು. ಸರ್ಕಾರಿ ಆಸ್ಪತ್ರೆಗಳ ವೈದ್ಯರು ಯಾವುದೇ ಕಾರಣಕ್ಕೂ ರೋಗಿಗಳಿಗೆ ಹೊರಗಡೆ ಔಷಧಿ ಖರೀದಿಸಲು ಚೀಟಿ ಬರೆಯಬಾರದು. ಅಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಾಗುವ ಔಷಧಿಗಳ ಗುಣಮಟ್ಟವೂ ಉತ್ತಮವಾಗಿರಬೇಕು ಎಂದು ಆಗ್ರಹಿಸಿದರು. ತಮಿಳುನಾಡು, ಕೇರಳ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಉಚಿತ ಔಷಧಿ ವ್ಯವಸ್ಥೆ ಸಮರ್ಪಕವಾಗಿ ಜಾರಿಯಲ್ಲಿದೆ. ಆದರೆ ಕರ್ನಾಟಕದಲ್ಲಿ ಈ ವ್ಯವಸ್ಥೆ ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ. ಸರ್ಕಾರಿ ಆಸ್ಪತ್ರೆಗಳ ಮುಂದೆಯೇ ಖಾಸಗಿ ಔಷಧಿ ಅಂಗಡಿಗಳು ಸಾಲಾಗಿ ಇರುವುದೇ ಇದರ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದರು. ಸಾರ್ವಜನಿಕ ಆರೋಗ್ಯ ಆಂದೋಲನ ಕರ್ನಾಟಕ ಸಂಘಟನೆಯ ಸಮೀಕ್ಷೆಯ ಪ್ರಕಾರ, 12 ಜಿಲ್ಲೆಗಳ 568 ರೋಗಿಗಳು ಔಷಧಿಗಾಗಿ ಒಟ್ಟು 4,05,140 ರೂ. ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಆರೋಗ್ಯ ಸೇವೆಗಳು ಎಲ್ಲಾ ಜಾತಿ, ಧರ್ಮ, ಜನಾಂಗ ಹಾಗೂ ಲಿಂಗದವರಿಗೆ ಸಮಾನವಾಗಿ ದೊರೆಯಬೇಕು. ವಿಶೇಷವಾಗಿ ಬಡವರು, ಕಾರ್ಮಿಕರು, ದಲಿತರು, ಹಿಂದುಳಿದ ಸಮುದಾಯದವರು, ಸ್ಲಂ ನಿವಾಸಿಗಳು ಹಾಗೂ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ಸಮರ್ಪಕ ಆರೋಗ್ಯ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಹೇಶ, ಮಹಾದೇವ್, ರಾಜ್, ಕಾಜಲ್, ಬೃಂದಾ, ಸ್ನೇಹರೆಡ್ಡಿ, ವಂದನಾ, ಕಾವ್ಯ, ಆನಂದ, ತಿಮ್ಮಪ್ಪ, ಅಮೃತಾ, ಅಪೂರ್ವ, ಕೀರ್ತಿ, ಸಪ್ನ, ಹುಲಿಗಮ್ಮ, ಅಂಕಿತ, ವೀರೇಶ, ಈರಣ್ಣ ನಾಯಕ ಸೇರಿದಂತೆ ಹಲವರು ಭಾಗವಹಿಸಿದ್ದರು.
1500 ವರ್ಷಗಳ ಇತಿಹಾಸವಿರುವ ಭಟ್ಕಳದ ಪಶುಪತಿ ದೇವಸ್ಥಾನಕ್ಕೆ ಶಿಲಾನ್ಯಾಸ: ಸಚಿವ ಮಂಕಾಳು ವೈದ್ಯ ಭರವಸೆ
ಭಟ್ಕಳ: ಇಲ್ಲಿನ ಬೋಯಿರಕೇರಿಯಲ್ಲಿರುವ ಸುಮಾರು 1500 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಪಶುಪತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ನೆರವೇರಿತು. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ದೇವಸ್ಥಾನದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ದೇವಸ್ಥಾನಗಳ ನಿರ್ಮಾಣ ಹಾಗೂ ಬಡವರ ಸೇವೆ ಪುಣ್ಯದ ಕಾರ್ಯ. ಇಂತಹ ಸೇವೆ ಮಾಡುವ ಅವಕಾಶ ದೊರೆತಿರುವುದು ನನ್ನ ಮಹಾಪುಣ್ಯ” ಎಂದು ಹೇಳಿದರು. ಪಶುಪತಿ ದೇವಸ್ಥಾನವು ಅತ್ಯಂತ ಪುರಾತನ ಕ್ಷೇತ್ರವಾಗಿದ್ದರೂ, ಹಲವು ವರ್ಷಗಳಿಂದ ಜೀರ್ಣೋದ್ಧಾರವಾಗದೇ ಉಳಿದಿತ್ತು. ಇದೀಗ ಗ್ರಾಮದ ಹಿರಿಯರು ಹಾಗೂ ಗ್ರಾಮಸ್ಥರು ಒಟ್ಟಾಗಿ ಈ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಮುಂದಾಗಿರುವುದು ಸಂತಸದ ಸಂಗತಿ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಜೀರ್ಣೋದ್ಧಾರ ಕಾರ್ಯಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಒದಗಿಸುವುದಾಗಿ ಹಾಗೂ ವೈಯಕ್ತಿಕವಾಗಿ ಸದಾ ಬೆಂಬಲ ನೀಡುವುದಾಗಿ ಸಚಿವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಶಿವಾನಂದ ನಾಯ್ಕ್ ಮಾತನಾಡಿ, “ಊರಿನ ಹಿರಿಯರ ಮಾರ್ಗದರ್ಶನದಲ್ಲಿ ಯುವಕರು ದೇವಸ್ಥಾನದ ಜೀರ್ಣೋದ್ಧಾರ ಎಂಬ ಮಹತ್ತರ ಕಾರ್ಯ ಕೈಗೊಂಡಿದ್ದಾರೆ. ನೂತನ ದೇವಾಲಯವು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವಿದ್ದು, ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು” ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋವಿಂದ ನಾಯ್ಕ್ ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಶಾಸಕ ಸುನಿಲ್ ನಾಯ್ಕ್, ನಾಮಧಾರಿ ಸಮಾಜದ ಅಧ್ಯಕ್ಷ ಅರುಣ್ ನಾಯ್ಕ್, ಉದ್ಯಮಿ ಪದ್ಮನಾಭ ಪ್ರಭು ಸೇರಿದಂತೆ ಊರಿನ ಅನೇಕ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ | ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ವಿತರಣೆ
ಕಲಬುರಗಿ: ನಗರದ ಪಂಡಿತ್ ರಂಗಮಂದಿರದಲ್ಲಿ ಸನ್ ಶಾಹೀನ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಜನವಿಕಾಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ಮತ್ತು ಪೆನ್ ಗಳು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶಾಹೀನ್ ಬೇಗಂ, ಮಶಾಕ್ ಪಟೇಲ್, ನಿವೃತ್ತ ಶಿಕ್ಷಕ ಮೊಹಮ್ಮದ್ ಗೇಸುದರಾಜ್, ತಾಹೇರ್ ಅಲಿ, ರೀಜ್ವಾನ್ ಸಿದ್ದಿಖಿ ಸೇರಿದಂತೆ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಇದ್ದರು.
ಕಲಬುರಗಿ | ಜವಳಿ ಪಾರ್ಕ್ ಕಾಮಗಾರಿ ತಕ್ಷಣ ಆರಂಭಿಸದಿದ್ದರೆ ಹೋರಾಟ: ಮಲ್ಲಿಕಾರ್ಜುನ ಸಾರವಾಡ
ಕಲಬುರಗಿ: ನಗರದ ಹೊರವಲಯದ ಫರಹತಾಬಾದ್ ವ್ಯಾಪ್ತಿಯಲ್ಲಿ ಘೋಷಣೆಯಾಗಿದ್ದ ಪಿಎಂ ಮಿತ್ರ ಟೆಕ್ಸ್ಟೈಲ್ ಜವಳಿ ಪಾರ್ಕ್ ಕಾಮಗಾರಿ ತಕ್ಷಣ ಆರಂಭಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಜವಳಿ ಪಾರ್ಕ್ ಬೇಡಿಕೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಅವಂಟಗಿ ಹಾಗೂ ಜೈ ಕರ್ನಾಟಕ ಸಂಘಟನೆ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ ಎಚ್ಚರಿಕೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳ ನಿರ್ಲಕ್ಷ್ಯದಿಂದ ಮಹತ್ವಾಕಾಂಕ್ಷಿ ಯೋಜನೆ ನೆನೆಗುದಿಗೆ ಬಿದ್ದಿದೆ. ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡದಿದ್ದರೆ ಸಚಿವರು, ಶಾಸಕರು ಹಾಗೂ ಸಂಸದರ ಮನೆಗಳ ಮುಂದೆ ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. 2023ರ ಮಾರ್ಚ್ 28ರಂದು ಬಿಜೆಪಿ ಸರ್ಕಾರದ ಅವಧಿಯಲ್ಲಿ ತತ್ಕಾಲೀನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಜವಳಿ ಪಾರ್ಕ್ಗೆ ಚಾಲನೆ ನೀಡಿದ್ದರು. ಸುಮಾರು ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಉದ್ದೇಶ ಹೊಂದಿದ್ದ ಈ ಯೋಜನೆಗೆ ಮೂರು ವರ್ಷಗಳಾದರೂ ಯಾವುದೇ ಸ್ಪಷ್ಟ ಪ್ರಗತಿ ಕಂಡುಬಂದಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರವೂ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ. ಈ ಕುರಿತು ಜನಪ್ರತಿನಿಧಿಗಳನ್ನು ಪ್ರಶ್ನಿಸಿದರೆ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರಾಜಕೀಯ ಹುಸಿ ಭರವಸೆಗಳಿಂದ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ನಿರಾಸೆಯಾಗಿದೆ ಎಂದರು. ರಾಜ್ಯ ಸರ್ಕಾರದಿಂದ 200 ಕೋಟಿ ರೂ., ಕೆಕೆಆರ್ಡಿಬಿಯಿಂದ 190 ಕೋಟಿ ರೂ. ಸೇರಿ ಒಟ್ಟು 390 ಕೋಟಿ ರೂ. ಬಿಡುಗಡೆಗೊಂಡ ಬಳಿಕವೇ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ನಂತರ ಕೇಂದ್ರ ಸರ್ಕಾರದಿಂದ 600 ಕೋಟಿ ರೂ. ಬಿಡುಗಡೆ ಆಗಬೇಕಿದೆ. ಈ ಬಗ್ಗೆ ಉಸ್ತುವಾರಿ ಸಚಿವರು ಕೇಂದ್ರದತ್ತ ಬೆರಳು ತೋರಿಸುವುದನ್ನು ಬಿಟ್ಟು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜವಳಿ ಪಾರ್ಕ್ಗೆ ಜಮೀನು ನೀಡಿದ ನದಿಸಿನ್ನೂರ, ಫಿರೋಜಾಬಾದ್, ಹೊನ್ನಕಿರಣಗಿ, ಫರಹತಾಬಾದ್, ನಡುವಿನಹಳ್ಳಿ, ಬಳವಾಡ, ತಿಳಗೂಳ, ಸರಡಗಿ (ಬಿ) ಸೇರಿದಂತೆ ಹಲವು ಗ್ರಾಮಗಳ ರೈತರು ತಮ್ಮ ಮಕ್ಕಳಿಗೆ ಉದ್ಯೋಗ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ ಮೂಲಭೂತ ಸೌಲಭ್ಯ ಒದಗಿಸಿ ಜಾಗತಿಕ ಮಟ್ಟದ ಕಂಪನಿಗಳಿಗೆ ಟೆಂಡರ್ ಆಹ್ವಾನಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ದೂರಿದರು. ಜವಳಿ ಪಾರ್ಕ್ ಕುರಿತು ಹಳ್ಳಿಹಳ್ಳಿಗೂ ಜಾಗೃತಿ ಮೂಡಿಸಲು ಮತ್ತು ಒಂದು ಲಕ್ಷ ಸದಸ್ಯತ್ವ ಅಭಿಯಾನ ನಡೆಸಲು ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಳಪ್ಪ ಪೂಜಾರಿ, ಅಣವೀರ ಬೆಳಗುಂಪಿ, ಶರಣು ಅವಂಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಲಬುರಗಿ | ಮಾ.2ರಂದು ಪ್ರೀಡಂ ಪಾರ್ಕ್ನಲ್ಲಿ ಬಿಸಿಯೂಟ ತಯಾರಕರ ಬೃಹತ್ ಪ್ರತಿಭಟನೆ
ಕಲಬುರಗಿ: ರಾಜ್ಯದಲ್ಲಿರುವ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ. 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಜಿ.ಅಕ್ಕಮ್ಮ ಹಾಗೂ ಜಿಲ್ಲಾ ಗೌರವ ಅಧ್ಯಕ್ಷ ಪ್ರಭುದೇವ ಯಳಸಂಗಿ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 31 ಜಿಲ್ಲೆಗಳಿಂದ ಸುಮಾರು 20 ಸಾವಿರಕ್ಕೂ ಅಧಿಕ ತಯಾರಕರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಬಿಸಿಯೂಟ ತಯಾರಕರು ಸೇವೆಯಲ್ಲಿದ್ದಾಗ ಶಾಲೆಯಲ್ಲಿ ಅಥವಾ ಹೊರಗಡೆ ಮರಣ ಹೊಂದಿದಲ್ಲಿ, ಅವರ ಕುಟುಂಬಕ್ಕೆ ಕನಿಷ್ಠ 20 ಲಕ್ಷ ರೂ. ಮರಣ ಪರಿಹಾರ ನೀಡಬೇಕು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ ಅನುಕಂಪದ ನೌಕರಿ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಈ ಸೇರಿದಂತೆ ಹಲವು ಬೇಡಿಕೆಗಳನ್ನು ನಗರದ ಹಿಂದಿ ಪ್ರಚಾರ ಸಭಾಭವನದಲ್ಲಿ ಭಾನುವಾರ ನಡೆದ ಜಿಲ್ಲಾ ಸಮಾವೇಶದಲ್ಲಿ ಅಂಗೀಕರಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ತಯಾರಕರು ಹಾಗೂ ಅವರ ಕುಟುಂಬ ಸದಸ್ಯರ ವೈದ್ಯಕೀಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಅಥವಾ ಅವರನ್ನು ಇಎಸ್ಐ ವ್ಯಾಪ್ತಿಗೆ ಒಳಪಡಿಸಬೇಕು. ವೇತನ ಮತ್ತು ಭತ್ಯೆಗಳನ್ನು ವಿಳಂಬವಿಲ್ಲದೆ ಪಾವತಿಸಬೇಕು. ಕನಿಷ್ಠ ವೇತನ ಜಾರಿಗೊಳಿಸಬೇಕು. 2022-23ನೇ ಸಾಲಿನಿಂದ ನಿವೃತ್ತಿಯಾಗುತ್ತಿರುವ ಬಿಸಿಯೂಟ ತಯಾರಕರ ಬಾಕಿ ಇಡುಗಂಟು ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಯಶೋಧಾ ರಾಠೋಡ್, ಸರೋಜಿನಿ ಹೀರಾಪುರ, ಶಿವಲಿಂಗಮ್ಮ ಲೆಂಗಟಿಕರ್, ಅನೀತಾ ಸೊಂತ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆಯ ಬೇಗೆ ಆರಂಭ! ಏನು ಹೇಳ್ತಾರೆ ಹವಾಮಾನ ತಜ್ಞರು?
Karnataka Weather- ಈ ಬಾರಿ ತೀವ್ರ ಚಳಿ ಅನುಭವಿಸಿದ್ದಾಯ್ತು. ಇದೀಗ ಕರ್ನಾಟಕ ರಾಜ್ಯದ ಜನತೆ ಕಡು ಬೇಸಗೆಯನ್ನು ಎದುರಿಸಲು ಸಿದ್ಧವಾಗಬೇಕಿದೆ. ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆಯ ತಾಪ ಆರಂಭ ಆಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಫೆಬ್ರವರಿ ಮೂರನೇ ವರದಿಂದ ಬೇಸಿಗೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ ಸೇರಿದಂತೆ ಕೆಲ ಭಾಗಗಳಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿಯಷ್ಟು ಹೆಚ್ಚಳವಾಗುವ ಸಂಭವ ಇದೆ. ಶಾಖದ ಅಲೆಯ ಪ್ರಭಾವ ಹೆಚ್ಚಾಗುವ ಸಾಧ್ಯತೆಗಳಿವೆ.
ಮಧ್ಯಪ್ರದೇಶ| 100ರೂ. ಮೌಲ್ಯದ ಗೋದಿ ಕಳ್ಳತನ ಆರೋಪ: 45 ವರ್ಷಗಳ ಬಳಿಕ ಆರೋಪಿಯ ಬಂಧನ
ಭೋಪಾಲ.ಫೆ.9: ಜನಮಾನಸದಿಂದ ಅಳಿಸಿ ಹೋಗಿದ್ದಿರಬಹುದಾದ, 1980ರಲ್ಲಿ ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದ್ದ ಕೇವಲ ನೂರು ರೂ.ಮೌಲ್ಯದ ಗೋದಿ ಕಳ್ಳತನವು ಮತ್ತೆ ಮುನ್ನೆಲೆಗೆ ಬಂದಿದೆ. ಬಲ್ಕಾವಾಡಾ ಪೋಲಿಸ್ ಠಾಣಾ ವ್ಯಾಪ್ತಿಯ ಬಲ್ಖಾಡ್ ಗ್ರಾಮದ ಸಮೀಪದ ಹೊಲಕ್ಕೆ ನುಗ್ಗಿದ್ದ ಸಲೀಂ ಮತ್ತು ಇತರ ಆರು ಜನರು ನೂರು ರೂ.ಮೌಲ್ಯದ ಗೋದಿಯನ್ನು ಕದ್ದ ಬಗ್ಗೆ ಪೋಲಿಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಆಗ 20 ವರ್ಷದವನಾಗಿದ್ದ ಸಲೀಂ ಘಟನೆಯ ಬಳಿಕ ಕುಟುಂಬದೊಂದಿಗೆ ನೆರೆಯ ಧಾರ್ ಜಿಲ್ಲೆಗೆ ಸ್ಥಳಾಂತರಗೊಂಡು ಅಲ್ಲಿಯ ಬಾಗ್ ಪ್ರದೇಶದಲ್ಲಿ ತನ್ನ ಬದುಕನ್ನು ಮತ್ತೆ ಕಟ್ಟಿಕೊಂಡಿದ್ದ. ಈಗ 65 ವರ್ಷ ಪ್ರಾಯವಾಗಿರುವ ಸಲೀಂ ಅಲ್ಲಿ ಸಣ್ಣ ಅಂಗಡಿಯೊಂದನ್ನು ನಡೆಸುತ್ತಿದ್ದು,ಕುಟುಂಬವನ್ನು ಹೊಂದಿದ್ದಾನೆ. ಮಧ್ಯಪ್ರದೇಶ ಪೋಲಿಸರು ಸುದೀರ್ಘ ಕಾಲದಿಂದ ಬಾಕಿಯುಳಿದಿರುವ ಪ್ರಕರಣಗಳಿಗೆ ಅಂತ್ಯ ಕಾಣಿಸಲು ಮತ್ತು ತಲೆ ಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ರಾಜ್ಯಾದ್ಯಂತ ನಡೆಸುತ್ತಿರುವ ಅಭಿಯಾನ ಸಲೀಂ ಬಂಧನಕ್ಕೆ ಕಾರಣವಾಗಿದೆ. ಸಲೀಂ ಇರುವಿಕೆಯ ಬಗ್ಗೆ ಮಾಜಿ ಸಹಚರನೋರ್ವ ನೀಡಿದ ಮಾಹಿತಿಯನ್ನು ಆಧರಿಸಿ ಪೋಲಿಸರು ಆತನನ್ನು ಬಂಧಿಸಿದ್ದಾರೆ. ಅಪರಾಧವು ಜುಜುಬಿ ಕಳ್ಳತನದ್ದಾಗಿದ್ದರೂ 45 ವರ್ಷಗಳ ಬಳಿಕ ನಡೆದ ಬಂಧನವು ಪ್ರಕರಣವನ್ನು ವಿಶಿಷ್ಟವಾಗಿಸಿದೆ.
ವಾಡಿ | ಐಎನ್ಎ ಸಾಹಸಗಾಥೆ ಶಾಲಾ ಪಠ್ಯದಲ್ಲಿ ಸೇರಲಿ: ಮಹೇಶ್ ಎಸ್.ಬಿ
ವಾಡಿ: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಲು ನೇತಾಜಿ ಸುಭಾಷ್ಚಂದ್ರ ಬೋಸ್ ಅವರು ಸ್ಥಾಪಿಸಿದ್ದ ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್ಎ)ಯ ಸಾಹಸಗಾಥೆಯನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್.ಬಿ ಅವರು ಆಗ್ರಹಿಸಿದರು. ಹಲಕರಟಿ ಗ್ರಾಮದಲ್ಲಿ ಎಐಡಿಎಸ್ಒ, ಎಐಡಿವೈಒ ಹಾಗೂ ಎಐಕೆಕೆಎಂಎಸ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನೇತಾಜಿ ಸುಭಾಷ್ಚಂದ್ರ ಬೋಸ್ ಜನ್ಮದಿನಾಚರಣೆಯ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತದಲ್ಲಿ ಎರಡು ನೂರು ವರ್ಷಗಳ ಕಾಲ ಕ್ರೌರ್ಯ ಮೆರೆದ ಬ್ರಿಟೀಷರು, ಸ್ವಾತಂತ್ರ್ಯ ಚಳವಳಿಯ ಸಂಧಾನಪರ ನಾಯಕರಿಗೆ ಕಿಂಚಿತ್ತೂ ಬೆದರಲಿಲ್ಲ. ಆದರೆ ನೇತಾಜಿ ಸುಭಾಷ್ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ ಆಜಾದ್, ಅಶ್ಫಾಕುಲ್ಲಾ ಖಾನ್, ಖುದಿರಾಂ ಬೋಸ್ ಮೊದಲಾದ ಕ್ರಾಂತಿಕಾರಿಗಳ ಹೋರಾಟದ ತೀವ್ರತೆಗೆ ಬ್ರಿಟೀಷರು ತತ್ತರಿಸಿದರು. ಇಂತಹ ಶ್ರೇಷ್ಠ ಹೋರಾಟಗಾರರ ಇತಿಹಾಸವನ್ನು ಸರ್ಕಾರಗಳು ಮಕ್ಕಳಿಗೆ ಸಮರ್ಪಕವಾಗಿ ಬೋಧಿಸಲು ಹಿಂದೇಟು ಹಾಕುತ್ತಿರುವುದು ವಿಷಾದನೀಯ ಎಂದು ಅವರು ಆಪಾದಿಸಿದರು. ಸ್ವಾತಂತ್ರ್ಯಾನಂತರ ಅಧಿಕಾರಕ್ಕೆ ಬಂದ ರಾಜಕೀಯ ಪಕ್ಷಗಳು ಶೋಷಣಾ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಬಂದಿವೆ. ಶಿಕ್ಷಣ ದುಬಾರಿಯಾಗಿದೆ, ಉದ್ಯೋಗಾವಕಾಶಗಳು ಕಡಿಮೆಯಾಗಿವೆ, ಭ್ರಷ್ಟಾಚಾರ ಹೆಚ್ಚಾಗಿದೆ. ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಜನರು ಜಾಗೃತರಾಗಬೇಕು ಎಂದು ಅವರು ಕರೆ ನೀಡಿದರು. ಸಭೆಯಲ್ಲಿ ಗೌತಮ್ ಪರ್ತೂರಕರ, ಭೀಮಪ್ಪ ಮಾಟ್ನಳ್ಳಿ, ಚೌಡಪ್ಪ ಗಂಜಿ, ಮಹಾಂತೇಶ ಹುಳಗೊಳ, ಸಾಬಣ್ಣ ಸುಣಗಾರ, ದತ್ತಾತ್ರೇಯ ಹುಡೇಕರ್, ರಮೇಶ್ ಮಣಿಗಿರಿ, ಶಿವಕುಮಾರ ಆಂದೋಲಾ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸೇಡಂ | ಜಾನಪದ ಸಾಹಿತ್ಯ ಉಳಿಸಲು ರಾಜಕುಮಾರ್ ಪಾಟೀಲ್ ತೆಲ್ಕೂರ ಕರೆ
ಸೇಡಂ: ಮನುಷ್ಯನ ಜೀವನದಲ್ಲಿ ಜಾನಪದ ಸಾಹಿತ್ಯ ಮಹತ್ವದ್ದಾಗಿದ್ದು, ಅದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ ಹೇಳಿದರು. ಪಟ್ಟಣದ ಕರ್ನಾಟಕ ನೌಕರರ ಭವನದಲ್ಲಿ ಕನ್ನಡ ಜಾನಪದ ಸಾಹಿತ್ಯ ವತಿಯಿಂದ ಆಯೋಜಿಸಿದ್ದ ತಾಲೂಕು ಜಾನಪದ ಸಮ್ಮೇಳನದಲ್ಲಿ ಶತಮಾನೋತ್ಸವ ಲೋಗೋ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಜಾನಪದ ಕಲೆ ಮರೆಮಾಚುತ್ತಿರುವುದು ವಿಷಾದನೀಯ. ಜಾನಪದ ಸಾಹಿತ್ಯವು ಶ್ರೇಷ್ಠವಾದ ಪರಂಪರೆ; ಅದನ್ನು ನಾವು ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕಾಗಿದೆ ಎಂದರು. ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಎಂ.ಜಿ. ದೇಶಪಾಂಡೆ ಮಾತನಾಡಿ, ಹಿಂದಿನ ಕಾಲದಲ್ಲಿ ಬೆಳಗ್ಗೆ ಎದ್ದ ಕೂಡಲೇ ತಾಯಿಯ ಕಟ್ಟುವ, ಬೀಸುವ ಹಾಗೂ ಮಗುವಿನ ಲಾಲಿ ಹಾಡುಗಳು ಕೇಳಿಬರುತ್ತಿದ್ದವು. ಇಂದಿನ ದಿನಗಳಲ್ಲಿ ಆ ಪರಂಪರೆ ಮರೆಯಾಗುತ್ತಿದೆ. ಮನೆಗಳಲ್ಲಿ ಪರಂಪರೆಯ ಆಹಾರ ಪದ್ಧತಿಗಳ ಬದಲು ರಾಸಾಯನಿಕ ಮಿಶ್ರಿತ ಆಹಾರ ಪದಾರ್ಥಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕಜಾಪ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ, ಜಿಲ್ಲಾಧ್ಯಕ್ಷ ಎಂ.ಬಿ. ನಿಂಗಪ್ಪ, ತಾಲೂಕು ಅಧ್ಯಕ್ಷ ಶಿವರಾವ್ ಭೋವಿ, ಶ್ರೀ ವಿರಕ್ತ ಮಠದ ಪರಮ ಪೂಜ್ಯ ಶ್ರೀ ಪಂಚಾಕ್ಷರ ಸ್ವಾಮಿಜಿಗಳು, ಬಸವರಾಜ ಪಾಟೀಲ್ ಉಡಗಿ, ಪತ್ರಕರ್ತ ಪ್ರಭಾಕರ ಜೋಶಿ, ಹಿರಿಯ ಸಾಹಿತಿ ಮುಡುಬಿ ಗುಂಡೆರಾವ್, ಲಿಂಗರೆಡ್ಡಿ ಶೇರಿ, ಶೋಭಾದೇವಿ ಚಿಕ್ಕಿ, ಶ್ರೀನಿವಾಸ ಮೊಕದ್ದಮ್, ಶಿವಯೋಗಿ ಸಂಕಲ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜ್ಯೋತಿ ಲಿಂಗಂಪಲ್ಲಿ ನಿರೂಪಿಸಿದರು. ಡಾ. ಜಗನ್ನಾಥ ತರನಳ್ಳಿ ವಂದಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಡಾ. ಸಾಬಯ್ಯ ಬೋವಿ, ಶಿವಯ್ಯ ಸ್ವಾಮಿ ಬಿಬ್ಬಳ್ಳಿ, ಡಾ. ಶ್ರೀನಿವಾಸ ಮೊಕದ್ದಮ್ ಹಾಗೂ ಉಮೇಶ್ ಚೌವ್ಹಾಣ್ ಅವರನ್ನು ವೇದಿಕೆಯಲ್ಲಿ ಕಜಾಪ ದಶಮಾನೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಉದ್ಯೋಗ ಅರ್ಜಿ ಶುಲ್ಕವಾಗಿ ನಿರುದ್ಯೋಗಿ ಯುವಜನರಿಂದ 48 ಕೋಟಿ.ರೂ. ಸಂಗ್ರಹಿಸಿದ ಜಮ್ಮು-ಕಾಶ್ಮೀರ ಸರಕಾರ
ಶ್ರೀನಗರ, ಫೆ. 9: ಕಳೆದ ಎರಡು ವರ್ಷಗಳಲ್ಲಿ ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದ ನಿರುದ್ಯೋಗಿ ಯುವಕರಿಂದ ಜಮ್ಮು ಹಾಗೂ ಕಾಶ್ಮೀರ ಸರಕಾರ 48 ಕೋ.ರೂ. ಶುಲ್ಕ ಸಂಗ್ರಹಿಸಿದೆ. ಜಮ್ಮು ಹಾಗೂ ಕಾಶ್ಮೀರದಲ್ಲಿ ನಿರುದ್ಯೋಗದ ಪ್ರಮಾಣ ಶೇ. 6.7 ಇದೆ. ಇದು ರಾಷ್ಟ್ರೀಯ ಸರಾಸರಿ ಶೇ. 3.5ಕ್ಕಿಂತ ಹೆಚ್ಚು. ಪಿಡಿಪಿ ಶಾಸಕ ವಹೀದ್ ಉರ್ ರೆಹ್ಮಾನ್ ಪಾರಾ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಸರಕಾರ ಸೋಮವಾರ ವಿಧಾನ ಸಭೆಗೆ ಈ ಮಾಹಿತಿ ನೀಡಿತು. ಜಮ್ಮು ಹಾಗೂ ಕಾಶ್ಮೀರದ ಎರಡು ನೇಮಕಾತಿ ಸಂಸ್ಥೆಗಳಾದ ಜಮ್ಮು ಹಾಗೂ ಕಾಶ್ಮೀರ ನಾಗರಿಕ ಸೇವಾ ಆಯೋಗ ಮತ್ತು ಜಮ್ಮು ಹಾಗೂ ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ ನಿರುದ್ಯೋಗಿ ಯುವಕರಿಂದ ಅರ್ಜಿ ಶುಲ್ಕವನ್ನು ಸಂಗ್ರಹಿಸಿವೆ ಎಂದು ಅದು ಹೇಳಿದೆ. ಈ ಎರಡು ಸಂಸ್ಥೆಗಳು ಕಳೆದ ಎರಡು ಹಣಕಾಸು ವರ್ಷಗಳಲ್ಲಿ ಒಟ್ಟಾಗಿ 48 ಕೋ.ರೂ.ಗೂ ಅಧಿಕ ಸಂಗ್ರಹಿಸಿವೆ ಎಂದು ಅದು ತಿಳಿಸಿದೆ.
ಎಸ್ಐಆರ್ ಪ್ರಕ್ರಿಯೆಗೆ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡುವುದಿಲ್ಲ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ
ಹೊಸದಿಲ್ಲಿ, ಫೆ. 9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರಕಾರಗಳಿಗೆ ಎಚ್ಚರಿಕೆ ನೀಡಿದೆ. ‘‘ತಾರ್ಕಿಕ ವ್ಯತ್ಯಾಸ’’ ಪಟ್ಟಿಯಲ್ಲಿ ಮತದಾರರನ್ನು ಸೇರಿಸಿದ ವಿಧಾನವನ್ನು ಪ್ರಶ್ನಿಸುವ ಮಮತಾ ಬ್ಯಾನರ್ಜಿ ಅವರ ಅರ್ಜಿ ಸೇರಿದಂತೆ ಪಶ್ಚಿಮಬಂಗಾಳದ ಎಸ್ಐಆರ್ಗೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿತು. ಅಲ್ಲದೆ ಪಶ್ಚಿಮಬಂಗಾಳದಲ್ಲಿ ಎಸ್ಐಆರ್ಗೆ ನೀಡಲಾಗಿದ್ದ ಗಡುವನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಿಸಿತು. ‘‘ಯಾವುದೇ ಆದೇಶಗಳು ಅಥವಾ ಸ್ಪಷ್ಟನೆಗಳು ಅಗತ್ಯವಿದ್ದರೆ, ನಾವು ಹೊರಡಿಸುತ್ತೇವೆ. ಆದರೆ, ನಾವು ಎಸ್ಐಆರ್ ಪ್ರಕ್ರಿಯೆಗೆ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡುವುದಿಲ್ಲ. ಇದನ್ನು ಎಲ್ಲಾ ರಾಜ್ಯಗಳು ಅರ್ಥ ಮಾಡಿಕೊಳ್ಳಬೇಕು’’ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದರು. ಎಸ್ಐಆರ್ ಕರ್ತವ್ಯಕ್ಕೆ ಚುನಾವಣಾ ಆಯೋಗಕ್ಕೆ ಬಿ ಗುಂಪಿನ ಅಧಿಕಾರಿಗಳನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಪಶ್ಚಿಮಬಂಗಾಳ ಸರಕಾರಕ್ಕೆ ನಿರ್ದೇಶಿಸಿತು. ಇಸಿಐ ನಿಯೋಜಿಸಿದ ತಳಮಟ್ಟದ ವೀಕ್ಷಕರನ್ನು ಬದಲಾಯಿಸಲು ಅನುಮತಿ ನೀಡಿತು. ಹಕ್ಕು ಪ್ರತಿಪಾದನೆ ಹಾಗೂ ಆಕ್ಷೇಪದ ಬಗ್ಗೆ ಚುನಾವಣಾ ನೋಂದಣಿ ಅಧಿಕಾರಿಗಳು ಮಾತ್ರ ಅಂತಿಮ ಆದೇಶಗಳನ್ನು ನೀಡಬಹುದು ಎಂದು ಸ್ಪಷ್ಟಪಡಿಸಿತು. ತಳಮಟ್ಟದ ವೀಕ್ಷಕರು ನೆರವು ಮಾತ್ರ ನೀಡಬಹುದು ಎಂದು ಹೇಳಿತು. ಈ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ. ಪಂಚೋಳಿ ಅವರನ್ನು ಒಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.
ಕಲಬುರಗಿ | ಜಿಲ್ಲಾ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ
ಕಲಬುರಗಿ: ಗ್ರಾಮೀಣ ಪತ್ರಕರ್ತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಾರಿಗೆ ತಂದಿರುವ ಉಚಿತ ಬಸ್ ಪಾಸ್ ಯೋಜನೆಯಡಿ ಜಿಲ್ಲೆಯ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಬಸ್ ಪಾಸ್ಗಳನ್ನು ವಿತರಿಸಲಾಯಿತು. ನಿಗದಿತ ಸಂಬಳವಿಲ್ಲದೆ ಗೌರವಧನದ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ನೆರವಾಗುವ ಉದ್ದೇಶದಿಂದ ಕಳೆದ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಲಾಗಿತ್ತು. ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಬಸ್ ಪಾಸ್ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದ್ದರು. ಸೋಮವಾರ ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಾಲ್ವರು ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ಅವರು, ತಾಲೂಕು ಮಟ್ಟದ ಅರ್ಹ ಪತ್ರಕರ್ತರು ಅಗತ್ಯ ದಾಖಲೆಗಳೊಂದಿಗೆ ಸರ್ಕಾರದ ಸೇವಾಸಿಂಧು ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಈ ಯೋಜನೆಯಡಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಯಾವುದೇ ಬಸ್ಗಳಲ್ಲಿ ಜಿಲ್ಲೆಯ ವ್ಯಾಪ್ತಿಯೊಳಗೆ ಪತ್ರಕರ್ತರು ಉಚಿತವಾಗಿ ಸಂಚರಿಸಿ ಸುದ್ದಿ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಇದು ಮಹತ್ವದ ನೆರವಾಗಲಿದೆ ಎಂದು ಅವರು ತಿಳಿಸಿದರು. ಈಗಾಗಲೇ ಅರ್ಜಿ ಸಲ್ಲಿಸಿರುವವರ ಅರ್ಜಿಗಳನ್ನು ಪರಿಶೀಲಿಸಿ ಶಿಫಾರಸು ಮಾಡಿ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಲಾಗಿದೆ. ಸಮಿತಿ ಸಭೆಯಲ್ಲಿ ಅಂತಿಮ ಪರಿಶೀಲನೆಯ ನಂತರ ಉಳಿದ ಅರ್ಹ ಪತ್ರಕರ್ತರಿಗೆ ಪಾಸ್ ವಿತರಿಸಲಾಗುವುದು ಎಂದರು. ಹಿರಿಯ ಪತ್ರಕರ್ತರಾದ ಮಹಾದೇವ ವಡಗಾಂವ್, ಸೋಮೇಶ್ ಗೌಡ, ಸೂರ್ಯಕಾಂತ್ ಕಾಳಗಿ ಹಾಗೂ ಡಿ.ಎಂ. ಪಾಟೀಲ್ ಅವರಿಗೆ ಈ ಸಂದರ್ಭದಲ್ಲಿ ಬಸ್ ಪಾಸ್ಗಳನ್ನು ಹಸ್ತಾಂತರಿಸಲಾಯಿತು. ಬಸ್ ಪಾಸ್ ಸ್ವೀಕರಿಸಿದ ಮಹಾದೇವ ವಡಗಾಂವ್ ಮಾತನಾಡಿ, “ಜಿಲ್ಲೆಯ ಅನೇಕ ಅರ್ಹ ಗ್ರಾಮೀಣ ಪತ್ರಕರ್ತರು ಈ ಯೋಜನೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹಲವು ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮಂತಹವರಿಗೆ ಇದು ಬಹು ಉಪಯುಕ್ತವಾಗಿದೆ. ಶೀಘ್ರದಲ್ಲೇ ಎಲ್ಲಾ ಅರ್ಹ ಪತ್ರಕರ್ತರಿಗೆ ಯೋಜನೆಯ ಲಾಭ ದೊರಕಲಿ” ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳಾದ ಜಿ.ಕೆ. ರಾಜರತ್ನ, ಉಮಾಶಂಕರ್ ಚಿನಮಳ್ಳಿ, ಸೈಯದ್ ಇಸ್ಮಾಯಿಲ್ ಪಾಷಾ, ಮಹದೇವಿ ಎಸ್. ಕುರ್ತಕೊಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.ರು.
ಮದುರೈ ಬೆಟ್ಟದಲ್ಲಿ ಕಾರ್ತಿಕ ದೀಪ ಬೆಳಗಲು ಅನುಮತಿಸುವ ಮದ್ರಾಸ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ,ಫೆ.9: ಮದುರೈನ ತಿರುಪರಂಕುಂಡ್ರಂ ಬೆಟ್ಟದಲ್ಲಿ ಧಾರ್ಮಿಕ ಆಚರಣೆಗಳ ಕುರಿತು ದೀರ್ಘಕಾಲದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ ಮೇಲೆ ಕಾರ್ತಿಕ ದೀಪವನ್ನು ಬೆಳಗಿಸಲು ಅಲ್ಲಿಯ ಮುರುಗನ್ ದೇವಸ್ಥಾನದ ಆಡಳಿತಕ್ಕೆ ಅನುಮತಿ ನೀಡಿರುವ ಮದ್ರಾಸ್ ಉಚ್ಚ ನ್ಯಾಯಾಲಯದ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡಲು ಸೋಮವಾರ ನಿರಾಕರಿಸಿದೆ. ಸಮೀಪದ ನೆಲ್ಲಿತೊಪ್ಪು ನಿವೇಶನದಲ್ಲಿ ರಮಝಾನ್ ಮತ್ತು ಬಕ್ರೀದ್ ಸಂದರ್ಭಗಳನ್ನು ಹೊರತುಪಡಿಸಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದನ್ನೂ ಉಚ್ಚ ನ್ಯಾಯಾಲಯವು ನಿರ್ಬಂಧಿಸಿತ್ತು. 33 ಸೆಂಟ್ಸ್ ವಿಸ್ತೀರ್ಣದ ನಿವೇಶನವು ಸಿಕಂದರ್ ಬಾದುಶಾ ಔಲಿಯಾ ದರ್ಗಾದ ಒಡೆತನಕ್ಕೆ ಸೇರಿದೆ. ಪ್ರದೇಶದಲ್ಲಿ ಪ್ರಾಣಿಬಲಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಉಚ್ಚ ನ್ಯಾಯಾಲಯವು ತೀರ್ಪಿನಲ್ಲಿ ಸ್ಪಷ್ಟ ಪಡಿಸಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ದರ್ಗಾದ ಭಕ್ತ ಇಮಾಮ್ ಹುಸೇನ್ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ.ಬಿ.ವರಾಳೆ ಅವರ ಪೀಠವು,ಅದು ಅತ್ಯಂತ ಸಮತೋಲಿತವಾಗಿದೆ ಎಂದು ಬಣ್ಣಿಸಿತು. ಪ್ರದೇಶದಲ್ಲಿ ಎಂದೂ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಾಗಿರಲಿಲ್ಲ ಎಂದು ನ್ಯಾಯವಾದಿ ಪ್ರಶಾಂತ ಭೂಷಣ ಹೇಳಿದಾಗ,ಅಂತಹ ಸಮಸ್ಯೆಯಾಗಿರದಿದ್ದರೆ ಶಾಂತಿ ಸಮಿತಿಯ ಸಭೆ ನಡೆಯುತ್ತಿರಲಿಲ್ಲ ಎಂದು ನ್ಯಾ.ಕುಮಾರ ಬೆಟ್ಟು ಮಾಡಿದರು.
ಕಲಬುರಗಿ | ರೋಹಿತ್ ವೇಮುಲ ಕಾಯ್ದೆ ಜಾರಿಗೊಳಿಸಲು ದಸಂಸ ಧರಣಿ
ಯುಜಿಸಿ ನಿಯಮಗಳ ಮೇಲೆ ಸುಪ್ರೀಂ ತಡೆ ತೆರವುಗೊಳಿಸಲು ಆಗ್ರಹ
ಇರಾನ್ನ ಟಿವಿ ಪತ್ರಕರ್ತೆ ಲತೀಫಾ ಅಬೌಚಕ್ರರನ್ನು ಬಂಧಿಸಿದ ಬ್ರಿಟನ್ ಪೊಲೀಸರು
ಲಂಡನ್, ಫೆ.9: ಬರ್ಮಿಂಗ್ಹಾಮ್ನಲ್ಲಿ ಆಯೋಜಿಸಿದ್ದ ಯಹೂದಿ ವಿರೋಧಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಇರಾನ್ನ ಸರಕಾರಿ ಸ್ವಾಮ್ಯದ ಪ್ರೆಸ್ ಟಿವಿಯ ಲಂಡನ್ ಮೂಲದ ಪತ್ರಕರ್ತೆಯನ್ನು ಬ್ರಿಟನ್ ಪೊಲೀಸರು ರವಿವಾರ ಬಂಧಿಸಿರುವುದಾಗಿ ವರದಿಯಾಗಿದೆ. 35 ವರ್ಷದ ಲತೀಫಾ ಅಬೌಚಕ್ರ ಅವರನ್ನು `ಜನಾಂಗೀಯ ದ್ವೇಷವನ್ನು ಪ್ರಚೋದಿಸುವ' ಆರೋಪದಲ್ಲಿ ಬಂಧಿಸಲಾಗಿದೆ. ಯೆಹೂದಿ ವಿರೋಧಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲು ತೆರಳುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಲತೀಫಾ ಕಳೆದ ವರ್ಷ ಮೇ ತಿಂಗಳಿಂದ ಅಕ್ಟೋಬರ್ ಅವಧಿಯಲ್ಲಿ ಸಾಮಾಜಿಕ ಮಾಧ್ಯಮದ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಸುವ್ಯವಸ್ಥೆ ಕಾಯ್ದೆಯಡಿಯ ಅಪರಾಧಕ್ಕಾಗಿ ಪೊಲೀಸರ `ವಾಂಟೆಡ್ ಲಿಸ್ಟ್'ನಲ್ಲಿದ್ದರು ಎಂದು ವೆಸ್ಟ್ ಮಿಡ್ಲ್ಯಾಂಡ್ಸ್ ಪೊಲೀಸರು ಹೇಳಿದ್ದಾರೆ.
ಇರಾನ್| 37 ವರ್ಷಗಳಲ್ಲಿ ಮೊದಲ ಬಾರಿಗೆ ವಾಯುಪಡೆಯ ಸಭೆಗೆ ಆಯತುಲ್ಲಾ ಆಲಿ ಖಾಮಿನೈ ಗೈರು
ಟೆಹ್ರಾನ್, ಫೆ.9: ಅಮೆರಿಕಾ-ಇರಾನ್ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ 37 ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್ನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ ವಾರ್ಷಿಕ ವಾಯುಪಡೆಯ ಸಭೆಗೆ ಗೈರು ಹಾಜರಾಗಿರುವುದಾಗಿ ವರದಿಯಾಗಿದೆ. ಫೆಬ್ರವರಿ 8ರಂದು ನಡೆದಿದ್ದ ವಾಯುಪಡೆ ಕಮಾಂಡರ್ಗಳ ವಾರ್ಷಿಕ ಸಭೆಯಲ್ಲಿ ಖಾಮಿನೈ ಭಾಗವಹಿಸಲಿಲ್ಲ. ಅವರ ಬದಲು ಸಶಸ್ತ್ರ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಅಬ್ದುಲ್ರಹೀಂ ಮೌಸವಿ ವಾಯುಪಡೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾದರು. 1989ರಲ್ಲಿ ಅಧಿಕಾರ ವಹಿಸಿಕೊಂಡಂದಿನಿಂದ ಪ್ರತೀ ವರ್ಷ ಖಾಮಿನೈ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯುತ್ತಿತ್ತು. ವ್ಯಾಪಕ ಭೌಗೋಳಿಕ ರಾಜಕೀಯ ಸನ್ನಿವೇಶಗಳ ಹಿನ್ನೆಲೆಯಲ್ಲಿ ಸಭೆಯಿಂದ ದೂರವಿರುವ ಖಾಮಿನೈ ಅವರ ನಿರ್ಧಾರ ಗಮನ ಸೆಳೆದಿದೆ. ಒಮಾನ್ನಲ್ಲಿ ಇರಾನ್-ಅಮೆರಿಕಾ ನಡುವೆ ಪರಮಾಣು ಮಾತುಕತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇರಾನ್ನ ನಾಯಕತ್ವವು ಸಾಂಕೇತಿಕ ಶಕ್ತಿ ಪ್ರದರ್ಶನದ ಬದಲು ಕಾರ್ಯತಂತ್ರದ ಸಂಯಮಕ್ಕೆ ಆದ್ಯತೆ ನೀಡಿರಬಹುದು. ಈ ಕ್ರಮವು ಲೆಕ್ಕಾಚಾರದ ಬದಲಾವಣೆಯನ್ನು ಸೂಚಿಸುತ್ತದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.
ಕಲಬುರಗಿ | ಪತ್ರಕರ್ತ ಅಪ್ಪಾರಾವ್ ಬಿರಾದಾರ್ ನಿಧನ
ಕಲಬುರಗಿ : ಹಿರಿಯ ಪತ್ರಕರ್ತ ಅಪ್ಪಾರಾವ್ ಬಿರಾದಾರ್ (80) ಸೋಮವಾರ ಸಂಜೆ ನಿಧನರಾಗಿದ್ದಾರೆ. ಬಿರಾದಾರ್ 1980ರ ದಶಕದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಗ್ರಾಮವಾಣಿ ಕನ್ನಡ ದಿನ ಪತ್ರಿಕೆಯ ಸಂಪಾದಕರಾಗಿದ್ದು, ಪತ್ರಿಕೋದ್ಯಮದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಮೃತರು ಹಿರಿಯ ಪತ್ರಕರ್ತ ಸಿದ್ದು ಬಿರಾದಾರ್ ಸೇರಿದಂತೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಕಮಲಾಪುರ ತಾಲೂಕಿನ ಗೋಗಿ (ಕೆ) ಗ್ರಾಮದಲ್ಲಿ ಫೆ. 10ರಂದು ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ರಸ್ತೆ ತೆರವಾಗದಿದ್ದರೆ ಹನ್ನೆರಡು ಕುಟುಂಬಗಳಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಕುರ್ನಾಡು ಗ್ರಾಮ ಕಿನ್ನಾಜೆ ಬೆಟ್ಟುವಿನ ರಸ್ತೆ ಅತಿಕ್ರಮಣ ವಿರೋಧಿಸಿ ಪ್ರತಿಭಟನೆ
ಯಾದಗಿರಿ | 11 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ತಾಯಿ
ಯಾದಗಿರಿ : ಹೆತ್ತ ತಾಯಿಯೇ ತನ್ನ 11 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ದುರ್ಘಟನೆ ನಗರದಲ್ಲಿನ ರಾಜೀವ್ ಗಾಂಧಿ ನಗರದಲ್ಲಿ ಸಂಭವಿಸಿದೆ. ಮೃತ ಬಾಲಕಿಯನ್ನು ಪ್ರತಿಭಾ (11) ಎಂದು ಗುರುತಿಸಲಾಗಿದ್ದು, ಆಕೆಯ ತಾಯಿ ನಿರ್ಮಲಾ ಮಲ್ಲಯ್ಯ ಬೀಳಾರ್ ಈ ಕೃತ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ. ನಿರ್ಮಲಾ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದಳು. ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆ ಮದ್ಯ ಸೇವಿಸಿ ಮನೆಗೆ ಬಂದಿದ್ದಾಳೆ ಎನ್ನಲಾಗಿದೆ. ಇದನ್ನು ಗಮನಿಸಿದ ಪ್ರತಿಭಾ ತಾಯಿಯನ್ನು ಪ್ರಶ್ನಿಸಿದ್ದರಿಂದ ಇಬ್ಬರ ನಡುವೆ ವಾಗ್ವಾದ ಉಂಟಾಗಿದೆ. ಈ ವೇಳೆ ಪಾನಮತ್ತಳಾಗಿದ್ದ ತಾಯಿ ಆಕ್ರೋಶಗೊಂಡು ಮಗಳ ಕತ್ತು ಹಿಸುಕಿದ ಪರಿಣಾಮ, ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.
ಬೆಂಗಳೂರಿನಲ್ಲಿ 27 ಕೋಟಿ ರೂ. ವೆಚ್ಚದಲ್ಲಿ ‘ಧಾರ್ಮಿಕ ಸೌಧ’ ನಿರ್ಮಾಣ : ರಾಮಲಿಂಗಾರೆಡ್ಡಿ
ಬೆಂಗಳೂರು : ರಾಜ್ಯ ಸರಕಾರವು ಸುಮಾರು 27 ಕೋಟಿ ರೂ.ವೆಚ್ಚದಲ್ಲಿ ಧಾರ್ಮಿಕ ಸೌಧವನ್ನು ನಿರ್ಮಿಸುತ್ತಿದ್ದು, 18 ತಿಂಗಳಲ್ಲಿ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಕಟ್ಟಡವನ್ನು ಹೊಯ್ಸಳ ಶೈಲಿಯಲ್ಲಿ ನಿರ್ಮಿಸಲಾಗುತ್ತದೆ ಎಂದು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸೋಮವಾರ ಇಲ್ಲಿನ ವಿಕಾಸಸೌಧದ ಹಿಂಭಾಗ ಇರುವ ರಾಮಾಂಜನೇಯ ದೇವಸ್ಥಾನದ ಪಕ್ಕದ ಜಾಗದಲ್ಲಿ ಮುಜರಾಯಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲು ಯೋಜಿಸಿರುವ ‘ಧಾರ್ಮಿಕ ಸೌಧ’ದ ಗುದ್ದಲಿ ಪೂಜೆ ಕಾರ್ಯ ನೆರವೇರಿಸಿ ಅವರು ಮಾತನಾಡಿದರು. ಪ್ರತಿ ವರ್ಷ ಕೇಂದ್ರದಿಂದ ರಾಜ್ಯ ಧಾರ್ಮಿಕ ಪರಿಷತ್ಗೆ ಅನುದಾನ ಬರುತ್ತದೆ. ಆ ಹಣವನ್ನು ಈ ಹಿಂದೆ ದೇವಸ್ಥಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ನೀಡಲಾಗುತ್ತಿತ್ತು. ಈಗ ಆ ಹಣವನ್ನು ಕೂಡಿಟ್ಟು, ಸುಮಾರು 27 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಟ್ಟುತ್ತಿದ್ದೇವೆ ಎಂದು ಅವರು ಹೇಳಿದರು. ಮುಜರಾಯಿ ಇಲಾಖೆಗೆ ಸುಮಾರು 35ರಿಂದ 36 ಸಾವಿರ ಎಕರೆ ಜಾಗವಿದೆ. ಬೆಂಗಳೂರಿನಲ್ಲಿ ನೂರಾರು ಎಕರೆ ಜಾಗ ಇದೆ. ಆದರೂ, ಇಲಾಖೆಗೆ ಸ್ವಂತ ಕಟ್ಟಡವಿಲ್ಲದೆ, ಬಾಡಿಗೆ ಕಟ್ಟಲಾಗುತ್ತಿದೆ. ಹೀಗಾಗಿ 35 ಸಾವಿರ ಚದರ ಅಡಿಯಲ್ಲಿ ಧಾರ್ಮಿಕ ಸೌಧವನ್ನು ನಿರ್ಮಿಸಲಾಗುತ್ತಿದ್ದು, ಪಾರ್ಕಿಂಗ್, ಮುಜರಾಯಿ ಕಚೇರಿ, ಸಭಾಂಗಣ, ಆಯುಕ್ತರ ಕಚೇರಿ, ಗ್ರಂಥಾಲಯ, ರೇಕಾರ್ಡ್ ರೂಮ್ ಇರಲಿದೆ ಎಂದು ಅವರು ತಿಳಿಸಿದರು. ಮುಜರಾಯಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಮಾತನಾಡಿ, ರಾಜ್ಯದಲ್ಲಿ ಎ, ಬಿ, ಸಿ ಮೂರೂ ವರ್ಗಗಳನ್ನು ಸೇರಿ ಸುಮಾರು 35 ಸಾವಿರ ದೇವಸ್ಥಾನಗಳಿವೆ. ಹಿಂದಿನ ವರ್ಷ ನಡೆದ ಸರ್ವೇಯಲ್ಲಿ ಸುಮಾರು 4,500 ದೇವಸ್ಥಾನಗಳಿಲ್ಲ ಎಂದು ತಿಳಿದುಬಂದಿತ್ತು. ಪುನಃ ಎಲ್ಲಾ ಕಡೆ ಸರ್ವೇ ನಡೆಸಿದ ಬಳಿಕ 800 ದೇವಸ್ಥಾನ ಸಿಕ್ಕಿದ್ದು, 3000 ದೇವಸ್ಥಾನಗಳು ಎಲ್ಲಿವೆ ಎಂದು ತಿಳಿಯುತ್ತಿಲ್ಲ. ಆದುದರಿಂದ ಸರ್ವೇ ಕಾರ್ಯ ಮುಂದುವರೆದಿದೆ ಎಂದರು. ಇತಿಹಾಸದಲ್ಲಿಯೇ ಇದೇ ಮೊದಲು ಬಾರಿಗೆ 20 ಸಾವಿರಕ್ಕೂ ಹೆಚ್ಚಿನ ಆಸ್ತಿಗಳನ್ನು ಗುರುತಿಸಿದ್ದೇವೆ. ಇನ್ನೂ 25 ಸಾವಿರ ಆಸ್ತಿಗಳು ವಿವಿಧ ಕಡೆ ಇದ್ದು, ಅದನ್ನು ಪತ್ತೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆಯಲಾಗುವುದು ಎಂದು ಅವರು ತಿಳಿಸಿದರು. ‘ನಗರದಲ್ಲಿ ಇಲಾಖೆಗೆ ಸೇರಿದ 40 ಸಾವಿರ ಆಸ್ತಿಗಳಿದ್ದು, ಅದರಲ್ಲಿ ಇದುವರೆಗೂ 20 ಸಾವಿರ ಆಸ್ತಿಗಳ ಪಹಣಿ, ಖಾತಾ ದೇವಸ್ಥಾನದ ಹೆಸರಿಗೆ ಬದಲಾಗಿದೆ. ಉಳಿದಿರುವ 20 ಸಾವಿರ ಆಸ್ತಿಗಳ ಸರ್ವೇ ಕಾರ್ಯ ಪ್ರಗತಿಯಲ್ಲಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ’ -ರಾಮಲಿಂಗಾ ರೆಡ್ಡಿ, ಮುಜರಾಯಿ ಇಲಾಖೆ ಸಚಿವ
ಬಾಂಗ್ಲಾದೇಶವನ್ನು ಈ ಬಾರಿಯ ಟೂರ್ನಿಯಿಂದ ಹೊರಗಿಟ್ಟಿರುವ ಕ್ರಮವನ್ನು ವಿರೋಧಿಸಿ ಭಾರತದ ವಿರುದ್ಧ ಪಂದ್ಯವನ್ನು ಬಹಿಷ್ಕರಿಸಿದ್ದ ಪಾಕಿಸ್ತಾನ ಇದೀಗ ಯೂ ಟರ್ನ್ ಹೊಡೆಯುವ ಪ್ರಯತ್ನದಲ್ಲಿ ಅನೇಕ ಬೇಡಿಕೆಗಳನ್ನು ಐಸಿಸಿ ಮುಂದಿಟ್ಟಿದೆಯಷ್ಟೇ. ಎಲ್ಲವನ್ನೂ ಕೇಳಿಸಿಕೊಂಡಿರುವ ಐಸಿಸಿಯು ಭಾರತದೊಂದಿಗೆ ದ್ವಿಪಕ್ಷೀಯ ಸರಣಿ ಸೇರಿದಂತೆ ಬಹುತೇಕ ಬೇಡಿಕೆಗಳಿಗೆ ನಕಾರ ಸೂಚಿಸಿದೆ. ಹಾಗಾಗಿ ಗಳೆಲ್ಲವೂ ನೀರ ಮೇಲಿನ ಹೋಮವಾಗುವುದು ಖಚತ ಎಂಬಂತಾಗಿದೆ. ಪಾಕ್ ನ ಪಂಚ ಬೇಡಿಕೆ ಮತ್ತು ಐಸಿಸಿ ಪ್ರತಿಕ್ರಿಯೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಬಪಿಷ್ಕರಿಸಿರುವ ಬಾಂಗ್ಲಾದೇಶಕ್ಕೆ ಯಾವುದೇ ಆರ್ಥಿಕ ದಂಡವನ್ನು ಹಾಕಬಾರದು. ಟಿ20 ವಿಶ್ವಕಪ್ ಆಡದಿದ್ದರೂ ಬಾಂಗ್ಲಾದೇಶ ತನ್ನ ಸಂಪೂರ್ಣ ಐಸಿಸಿ ಆದಾಯದ ಪಾಲನ್ನು ಪಡೆಯಬೇಕು ಎಂದು ಪಿಸಿಬಿಯ ಮೊದಲ ಒತ್ತಾಯವಾಗಿತ್ತು. ಇದಕ್ಕೆ ಐಸಿಸಿಯು `ಇದು ಈಗಾಗಲೇ ತನ್ನ ನಿರ್ಧಾರವಾಗಿದ್ದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಯಾವುದೇ ರೀತಿಯ ದಂಡವನ್ನೂ ವಿಧಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. . ಬಾಂಗ್ಲಾದೇಶಕ್ಕೆ ಹೆಚ್ಚುವರಿ ಐಸಿಸಿ ಟೂರ್ನಿಯಲ್ಲಿ ಪಾಲ್ಗೊಳ್ಳಲು ಅಪಕಾಶ ನೀಡಬೇಕೆಂದು ಪಿಸಿಬಿ ಮನವಿ ಮಾಡಿತ್ತು. ಮುಂದಿನ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶವನ್ನು ಪರಿಗಣಿಸಲಾಗಿವುದು ಎಂದು ಐಸಿಸಿಯು ಪರಿಗಣಿಸಲಾಗುತ್ತಿದೆ ಎಂದು ಐಸಿಸಿಯು ತಿಳಿಸಿದೆ. ಪಿಸಿಬಿಯು ಮೂರನೇ ಬೇಡಿಕೆಯಾಗಿ ಐಸಿಸಿಯ ಮುಂದಿಟ್ಟಿದ್ದೇ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆಸಲು ಐಸಿಸಿ ಹಸ್ತಕ್ಷೇಪ ಮಾಡಬೇಕೆಂಬ ಒತ್ತಾಯವನ್ನು ಮಾಡಿತು. ಇದಕ್ಕೆ ಐಸಿಸಿಯು ಅಷ್ಟೇ ತಾರ್ಕಿಕವಾದ ಪ್ರತಿಕ್ರಿಯೆಯನ್ನು ನೀಡಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಆವೃತ್ತಿಯೂ ಸೇರಿದಂತೆ ಎಲ್ಲಾ ದ್ವಿಪಕ್ಷೀಯ ಸರಣಿಗಳು ತನ್ನ ಆದೇಶದ ಮಿತಿಯಿಂದ ಹೊರಗಿವೆ ಎಂದು ಕಾರಣ ತಿಳಿಸಿದ ಐಸಿಸಿಯು ಇದನ್ನೂ ತಿರಸ್ಕರಿಸಿತು. ಭಾರತ-ಪಾಕಿಸ್ತಾನ-ಬಾಂಗ್ಲಾದೇಶಗಳ ನಡುವೆ ತ್ರಿಕೋನ ಸರಣಿಯ ಬಗ್ಗೆ ಪಿಸಿಬಿ ಪ್ರಸ್ತಾಪವನ್ನು ಇಟ್ಟಿತ್ತು. ಅದಕ್ಕೆ ಐಸಿಸಿಯು ಇದು ಸಹ ತನ್ನ ವ್ಯಾಪ್ತಿಯ ಒಳಗೆ ಬರುವುದಲ್ಲ ಎಂದು ತಿಳಿಸಿ ಮನವಿಯನ್ನು ಪ್ರಸ್ತಾಪಿಸಿತು. 2026 ರಲ್ಲಿ ಭಾರತದ ಬಾಂಗ್ಲಾದೇಶ ಪ್ರವಾಸ ಮತ್ತು ಬಾಂಗ್ಲಾದೇಶದ ಭಾರತದ ಪ್ರವಾಸವನ್ನು ಖಚಿತಪಡಿಸಿಕೊಳ್ಳುವಲ್ಲಿ ಐಸಿಸಿಯು ಮಧ್ಯೆ ಪ್ರವೇಶಿಸಬೇಕೆಂಬುದು ಪಿಸಿಬಿಯ ಐದನೇ ಬೇಡಿಕೆಯಾಗಿತ್ತು. ಆದರೆ ದ್ವಿಪಕ್ಷೀಯ ಪ್ರವಾಸಗಗಳನ್ನು ಆಯಾ ಕ್ರಿಕೆಟ್ ಮಂಡಳಿಗಳೇ ನಿರ್ಧರಿಸುತ್ತವೆ ಎಂದು ಪುನರುಚ್ಚರಿಸಿದ ಐಸಿಸಿ ಇದನ್ನೂ ಪುರಸ್ಕರಿಸಿಲ್ಲ. ಹೀಗೆ ಪಾಕಿಸ್ತಾನದ ಒಟ್ಟು ಐದು ಬೇಡಿಕೆಗಳಲ್ಲಿ ಮೊದಲೆರಡನ್ನು ಸಹಜವಾಗಿ ಒಪ್ಪಿಕೊಂಡಿರುವ ಐಸಿಸಿಯು ಕೊನೆಯ ಮೂರನ್ನೂ ಒಪ್ಪಿಕೊಂಡಿಲ್ಲ. ಯಾವೆಲ್ಲ ಬೇಡಿಕೆಗಳಲ್ಲಿ ಭಾರತದ ಪ್ರಸ್ತಾಪ ಬರುತ್ತದೋ ಅಲ್ಲೆಲ್ಲಾ ಐಸಿಸಿಯು ಕಡ್ಡಿ ಮುರಿದಂತೆ ಪ್ರತಿಕ್ರಿಯಿಸಿದೆ. ಏತನ್ಮಧ್ಯೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಅಧ್ಯಕ್ಷರೂ ಆಗಿರುವ ಅಲ್ಲಿನ ಆಂತರಿಕ ಸಚಿವ ಪಾಕಿಸ್ತಾನದ ಪ್ರಧಾನಿಯೊಂದಿಗೆ ಸಮಾಲೋಚಿಸಲು ಪಿಸಿಬಿಗೆ 24 ಗಂಟೆಗಳ ಸಮಯ ನೀಡಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಸಭೆಯನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ. ಜೊತೆಗೆ ಮುಂದಿನ 24 ಗಂಟೆಗಳಲ್ಲಿ ಐಸಿಸಿ ಅಧಿಕೃತ ಪ್ರಕಟಣೆಯ ಸಾಧ್ಯತೆಯಿದೆ.
ನಾಳೆ ದಿಲ್ಲಿ ಭೇಟಿ | ನನ್ನನ್ನು ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತೇನೆ: ಡಿ.ಕೆ.ಶಿವಕುಮಾರ್
ಬೆಂಗಳೂರು : ನನ್ನನ್ನು ದಿಲ್ಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದಿಲ್ಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ರಾಜ್ಯ ಬಜೆಟ್ ಸಿದ್ಧತೆಯ ಸಭೆ ನಡೆಯುವ ಸಂದರ್ಭದಲ್ಲೆ ದಿಲ್ಲಿಗೆ ಭೇಟಿ ನೀಡುತ್ತಿರುವ ಕುರಿತು ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಯಾರನ್ನು ಭೇಟಿ ಮಾಡುತ್ತೇನೋ ಅವರ ಎಲ್ಲ ಹೆಸರನ್ನು ಹೇಳಲು ಆಗುವುದಿಲ್ಲ. ನಿಮಗೆ ಏಕೆ ಇಷ್ಟು ಕುತೂಹಲ ಎಂದು ಹೇಳಿದರು. ನಾನು ಉಪಮುಖ್ಯಮಂತ್ರಿ ಅಷ್ಟೇ ಅಲ್ಲ, ಕೆಪಿಸಿಸಿ ಅಧ್ಯಕ್ಷ ಕೂಡ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಮಾ.10ಕ್ಕೆ 6 ವರ್ಷವಾಗುತ್ತದೆ. ನಮ್ಮ ಸಂಸದರನ್ನು, ನಾಯಕರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ನಾನು ಭೇಟಿ ಮಾಡುತ್ತಾ ಇರುತ್ತೇನೆ, ಆಗ ನನ್ನ ಕಷ್ಟ, ದುಃಖ, ದುಮ್ಮಾನ, ನಿಮ್ಮ ಸಂತೋಷ, ಬಯಕೆ ಎಲ್ಲ ಹೇಳುತ್ತಾ ಇರುತ್ತೇನೆ ಎಂದು ಶಿವಕುಮಾರ್ ತಿಳಿಸಿದರು. ನಿಮ್ಮ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಜೆಟ್ ಪೂರ್ವಸಿದ್ಧತಾ ಸಭೆ ಕರೆದಿದ್ದಾರೆ. ಇದೇ ಸಂದರ್ಭದಲ್ಲಿ ನೀವು ದಿಲ್ಲಿಗೆ ಹೋಗುತ್ತಿದ್ದೀರಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮುಖ್ಯಮಂತ್ರಿ ಅನುಮತಿ ಪಡೆದುಕೊಳ್ಳುತ್ತಿದ್ದೇನೆ. ನೀರಾವರಿ ನಿಗಮಗಳಿಗೆ ಮುಖ್ಯಮಂತ್ರಿಯೆ ಅಧ್ಯಕ್ಷರಾಗಿದ್ದು, ಮಂಗಳವಾರದ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ನನಗಿಂತ ಮುಖ್ಯಮಂತ್ರಿ ಅವರಿಗೆ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚು ಗೊತ್ತಿದೆ. ಮೇಕೆದಾಟು ಯೋಜನೆ ಬಗ್ಗೆ ಅಧಿಕಾರಿಗಳು ಭೇಟಿ ಮಾಡಿದ್ದಾರೆ ಎಂದರು.
Bengaluru | 25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತಾ ಹಂಚಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತಾಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಇ ಖಾತಾ ಅಭಿಯಾನ ಪ್ರಾರಂಭ ಮಾಡಲು ಜಿಬಿಎ ವ್ಯಾಪ್ತಿಯ ಎಲ್ಲ ನಗರ ಪಾಲಿಕೆಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ಎಲ್ಲ ಆಸ್ತಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇ-ಖಾತಾ ವ್ಯವಸ್ಥೆ ತರಬೇಕು. ತೆರಿಗೆ ಸೋರಿಕೆ ತಡೆಯಬೇಕು. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಾವೇರಿ ಸಾಫ್ಟ್ ವೇರ್ ತಂದು ಇದನ್ನು ಪರಶೀಲನೆ ಮಾಡಲು ಅವಕಾಶ ನೀಡಿದ್ದೇವೆ. ಜೊತೆಗೆ ಪ್ರತಿಯೊಂದು ದಾಖಲೆಗಳು ಆಧಾರ್ ಜೊತೆ ಲಿಂಕ್ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಯೂನಿಫಾರ್ಮ್ ಲ್ಯಾಂಡ್ ರೆಕಾರ್ಡ್ ಮ್ಯಾನೇಜ್ ಮೆಂಟ್ ಸಿಸ್ಟಮ್ ಮೂಲಕ ಬಿ ಖಾತಾ ಮೂಲಕ ಎ ಖಾತಾ ನೀಡುವ ಯೋಜನೆ ಇದಾಗಿದೆ. ಈಗಾಗಲೇ 7 ಸಾವಿರ ಅರ್ಜಿಗಳು ಇದಕ್ಕೆ ಬಂದಿವೆ. 15 ದಿನದಲ್ಲಿ ಬಿ ಖಾತಾಯಿಂದ ಎ ಖಾತಾಗೆ ವರ್ಗಾವಣೆ ಮಾಡಲಾಗುವುದು ಎಂದು ಶಿವಕುಮಾರ್ ತಿಳಿಸಿದರು. ಇನ್ನೂ ಅನೇಕರು ಸೇಲ್ ಡೀಡ್ ಇಟ್ಟುಕೊಂಡು ಖಾತಾವನ್ನು ಮಾಡಿಸಿಕೊಂಡಿಲ್ಲ. 1.20 ಲಕ್ಷ ಜನ ಈ ಬಗ್ಗೆ ಅರ್ಜಿ ನೀಡಿದ್ದಾರೆ. 60 ಸಾವಿರ ಜನರ ಅರ್ಜಿ ಒಪ್ಪಿತವಾಗಿದೆ. 40 ಸಾವಿರ ಅರ್ಜಿ ರದ್ದಾಗಿದೆ. 15 ಸಾವಿರ ಅರ್ಜಿಗಳು ವಿವಿಧ ಹಂತದಲ್ಲಿವೆ. ಅರ್ಜಿಗಳು ಏಕೆ ತಿರಸ್ಕೃ ತವಾಗಿವೆ ಎಂದು ಮತ್ತೊಮ್ಮೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು. 12 ಸಾವಿರ ನಕ್ಷೆ ಹಂಚಿಕೆ: ನಂಬಿಕೆ ನಕ್ಷೆ ಯೋಜನೆಯಡಿ 12 ಸಾವಿರ ನಕ್ಷೆಗಳನ್ನು ನೀಡಲಾಗಿದೆ. ಓಟಿಎಸ್ ಯೋಜನೆಯ ಅಡಿ ದಂಡ ಹಾಗೂ ಬಡ್ಡಿಯನ್ನು ರದ್ದು ಮಾಡಲಾಯಿತು. ಇದರಿಂದ 2 ಲಕ್ಷ ಜನರಿಗೆ ಅನುಕೂಲವಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ 1,200 ಕೋಟಿ ರೂ. ಸಂಗ್ರಹವಾಗಿದೆ ಎಂದು ಅವರು ನುಡಿದರು. ಕಳೆದ ವರ್ಷ ಪ್ರಾರಂಭ ಮಾಡಿದ ‘ಬಿ ಸ್ಮೈಲ್’ ಕಂಪೆನಿಯಡಿ 1.47 ಲಕ್ಷ ಕೋಟಿ ರೂ. ಹೂಡಿಕೆ ಮಾಡಿ, ಟೆಂಡರ್ ಕರೆಯಲಾಗಿದೆ. 1.5 ಕಿಮೀ ಉದ್ದದ ಕಟ್ ಅಂಡ್ ಕವರ್ ಟನಲ್, ಮೇಖ್ರಿ ವೃತ್ತದ ಬಳಿ ವಾಹನ ದಟ್ಟಣೆ ತಪ್ಪಿಸಲು ಯೋಜನೆ ಮಾಡಲಾಗುವುದು. 1,700 ಕೋಟಿ ರೂ. ವೆಚ್ಚದ ವೈಟ್ ಟಾಪಿಂಗ್ 150 ಕಿ.ಮೀ. ಉದ್ದದ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಎರಡನೆ ಹಂತದಲ್ಲಿ 7,500 ಕೋಟಿ ರೂ.ವೆಚ್ಚದಲ್ಲಿ ಯೋಜನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. 690 ಕೋಟಿ ರೂ.ವೆಚ್ಚದಲ್ಲಿ ಬ್ಲಾಕ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಅವರು ಮಾಹಿತಿ ನೀಡಿದರು. ಕೆ.ಆರ್.ಪುರಂ ನಿಂದ ಮೈಸೂರು ರಸ್ತೆ ವರೆಗಿನ ಟನಲ್ ರಸ್ತೆ ಯೋಜನೆಯ ಡಿಪಿಆರ್ ಪ್ರಗತಿಯ ಹಂತದಲ್ಲಿದೆ. ಬೆಂಗಳೂರು ಬಿಜಿನೆಸ್ ಕಾರಿಡಾರ್ ಯೋಜನೆಯಡಿ ಭೂಮಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರದ ಯೋಜನೆ ಮೊದಲೆ ಮಾಡಿದ್ದರೆ 4-5 ಸಾವಿರ ಕೋಟಿ ರೂ.ಗಳಿಗೆ ಮುಗಿದು ಹೋಗುತ್ತಿತ್ತು. ಈಗ ನಾನು ನೋಡಿರುವ ಪರಿಹಾರ ನೋಡಿ ಸಂತ್ರಸ್ತರು ಸಂತೋಷದಿಂದ ಪರಿಹಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು. ಪ್ರತಿಯೊಬ್ಬರೂ 3 ರಿಂದ 15 ಕೋಟಿ ರೂ.ವರೆಗೆ ಪರಿಹಾರ ತೆಗೆದುಕೊಳ್ಳುತ್ತಿದ್ದಾರೆ. ಮೊದಲನೇ ಹಂತದಲ್ಲಿ 129 ಕಿ.ಮೀ. ಇರಲಿದೆ. ಎರಡನೇ ಹಂತದ ರಸ್ತೆ ಎಲೆಕ್ಟ್ರಾನಿಕ್ ಸಿಟಿಯಿಂದ ಮೈಸೂರು ರಸ್ತೆವರೆಗೆ ಇರಲಿದೆ. 9 ಸಾವಿರ ಕೋಟಿ ರೂ.ವೆಚ್ಚದ 44 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ಯೋಜನೆಯ ಡಿಪಿಆರ್ ಸಿದ್ಧವಿದೆ. ಇದಕ್ಕೆ ಸದ್ಯದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಅವರು ಹೇಳಿದರು. ರಾಜಕಾಲುವೆಗಳ ಬಫರ್ ಜೋನ್ ಗಳ ಪಕ್ಕ ರಸ್ತೆ ನಿರ್ಮಾಣ ಕಾರ್ಯ ಮೂರು ಕಡೆ ಪ್ರಾರಂಭವಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ 50 ಕೋಟಿ ರೂ. ಮೀಸಲು ಇಡಲಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು. 17 ಸಾವಿರ ನಿವೇಶನ ಭೂ ಮಾಲಕರಿಗೆ ಹಂಚಿಕೆ : ಶಿವರಾಂ ಕಾರಂತ್ ಬಡಾವಣೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಿ ಎಂದು ನ್ಯಾಯಲಯ ತಿಳಿಸಿದೆ. 34,977 ನಿವೇಶನ ಮಾಡಲಾಗಿದೆ. 17 ಸಾವಿರ ನಿವೇಶನಗಳನ್ನು ಭೂ ಮಾಲಕರಿಗೆ ನೀಡಬೇಕು. ಶೇ. 75ರಷ್ಟು ಮಾಲಕರು ಇದಕ್ಕೆ ತಯಾರಿದ್ದಾರೆ. ಉಳಿದವರಿಗೂ ನಾನು ಮನವಿ ಮಾಡುತ್ತಿದ್ದೇನೆ ಎಂದು ಅವರು ಹೇಳಿದರು. ಬಿಡಿಎಗೆ 50 ವರ್ಷ ತುಂಬುತ್ತಿದ್ದು 17 ಸಾವಿರ ಜನರಿಗೂ ಒಂದೇ ದಿನ ನಿವೇಶನ ಹಂಚಿಕೆ ಮಾಡುವ ಕಾರ್ಯಕ್ರಮ ನಡೆಸಲಾಗುವುದು. ಉಳಿದ ನಿವೇಶನಗಳಿಗೆ ಅರ್ಜಿ ಕರೆದು ನೀಡಲಾಗವುದು. ಸ್ಕೈಡೆಕ್ ಬಗ್ಗೆ ಬಿಡಿಎಗೆ ಜವಾಬ್ದಾರಿ ನೀಡಿದ್ದೇನೆ. ಕೆಂಪೇಗೌಡ ಲೇಔಟ್ ಬಳಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು. ಜಿಬಿಎ ಐದು ಪಾಲಿಕೆಗಳ ಚುನಾವಣೆ ಮಾಡಬೇಕು. ವಾರ್ಡ್ ಗಳ ವಿಂಗಡೆಯಾಗಿದೆ, ಮೀಸಲಾತಿ ಮುಗಿದಿದೆ. ಇದಕ್ಕೆ ಆಕ್ಷೇಪಣೆಗಳಿದ್ದರೆ ಸಲ್ಲಿಕೆ ಮಾಡಿ ಎಂದೂ ತಿಳಿಸಲಾಗಿದೆ. ನ್ಯಾಯಲಯಕ್ಕೂ ಅಫಿಡವಿಟ್ ಸಲ್ಲಿಕೆ ಮಾಡಲಾಗಿದೆ. ನ್ಯಾಯಲಯವೂ ನಮಗೆ ಮಾಗದರ್ಶನ ನೀಡಿದೆ ಎಂದು ಶಿವಕುಮಾರ್ ಹೇಳಿದರು. ʼಅಧಿಕಾರಕ್ಕೆ ತಂದವರಿಗೆ ಅಧಿಕಾರ ಕೊಡುವುದರಲ್ಲಿ ತಪ್ಪೇನಿದೆ?’ : ‘54 ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಪಕ್ಷವನ್ನು ಅಧಿಕಾರಕ್ಕೆ ತಂದವರಿಗೆ ಅಧಿಕಾರ ಕೊಡುವುದರಲ್ಲಿ ತಪ್ಪೇನಿದೆ?. ಈ ಹಿಂದೆ ಬಿಜೆಪಿಯವರು ಯಾರಿಗೆಲ್ಲ ಅಧಿಕಾರ ಕೊಟ್ಟಿದ್ದಾರೆ ಎಂದು ಗೊತ್ತಿದೆ. ನಮಗೆ ಅವರೆ ಮಾದರಿ. ಅವರು ನಮ್ಮ ಕಾರ್ಯಕರ್ತರು. ಅವರಿಗೆ ಅಧಿಕಾರ ನೀಡಿರುವುದರಲ್ಲಿ ತಪ್ಪೇನು ಇಲ್ಲ ಎಂದು ಸರ್ಮರ್ಥಿಸಿಕೊಂಡರು.
ಭದ್ರಾ ಮೇಲ್ದಂಡೆ ಯೋಜನೆ ವಿಳಂಬ: ಸಿಡಿದೆದ್ದ ರೈತರಿಂದ ನಾಳೆ ಚಿತ್ರದುರ್ಗ ಬಂದ್ಗೆ ಕರೆ
ಚಿತ್ರದುರ್ಗ: ಬಯಲು ಸೀಮೆಯ ಜನರ ದಶಕಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯು ಕಳೆದ ಎರಡು ದಶಕಗಳಿಂದ ಕುಂಟುತ್ತಾ ಸಾಗುತ್ತಿದೆ. ಸರ್ಕಾರದ ಭರವಸೆಗಳು ಕೇವಲ ಕಾಗದಕ್ಕಷ್ಟೇ ಸೀಮಿತವಾಗಿದ್ದು, ಹೊಲಗಳಿಗೆ ನೀರು ಬರುವುದು ಮಾತ್ರ ಗಗನಕುಸುಮವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿಳಂಬವನ್ನು ಖಂಡಿಸಿ ಚಿತ್ರದುರ್ಗದ ರೈತರು ನಾಳೆ, ಅಂದರೆ ಫೆಬ್ರವರಿ 10 ರಂದು ಜಿಲ್ಲೆಯ ಪ್ರಮುಖ
ಉಡುಪಿ: ಪೆರಂಪಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ ಇಬಾದ ಇಂಡಿಯನ್ ಸ್ಕೂಲ್ (CBSE) ಇಲ್ಲಿನ 4ನೇ ತರಗತಿಯ ವಿದ್ಯಾರ್ಥಿ ಅಹ್ಮದ್ ಅಕ್ಸುರ್ ಶೇಖ್ ಅವರು ಶೈಕ್ಷಣಿಕ ಅಧ್ಯಯನದ ಜೊತೆಗೆ ಒಂದೂವರೆ ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಹಿಫ್ಝುಲ್ ಖುರ್ಆನ್ ಅನ್ನು ಪೂರ್ಣಗೊಳಿಸಿದ್ದಾರೆ. ಅಹ್ಮದ್ ಅಕ್ಸುರ್ ಶೇಖ್ ಅವರು ಅಕ್ಸುರ್ ಅಹ್ಮದ್ ಹಾಗೂ ಐನುಸ್ ಸಬಾಹ್ ಕರಾಣಿ ದಂಪತಿಯ ಪುತ್ರ ಹಾಗು ದಿ. ಪೊಲೀಸ್ ನಝೀರ್ ಅಹಮದ್ ಗುಡ್ಮಿ ಸಸ್ತಾನ ಅವರ ಮೊಮ್ಮಗ. ಈ ಮಹತ್ವದ ಸಾಧನೆ ವಿದ್ಯಾರ್ಥಿಯ ವೈಯಕ್ತಿಕ ಪರಿಶ್ರಮದ ಜೊತೆಗೆ, ಪಾಲಕರ ನಿರಂತರ ಸಹಕಾರ ಮತ್ತು ಶಾಲೆಯ ಶಿಕ್ಷಕರ ಸಮರ್ಪಿತ ಮಾರ್ಗದರ್ಶನದ ಫಲವಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಶಾಲೆಯು ಅನುಸರಿಸುತ್ತಿರುವ ಶಿಕ್ಷಣ ಪದ್ಧತಿ ಅಕಾಡೆಮಿಕ್ ಶ್ರೇಷ್ಠತೆಯೊಂದಿಗೆ ನೈತಿಕ ಮತ್ತು ಆತ್ಮೀಯ ಬೆಳವಣಿಗೆಯನ್ನು ಸಮತೋಲನದಿಂದ ಒಗ್ಗೂಡಿಸುವುದಾಗಿದೆ. ಹೊಸತನದ ಬೋಧನಾ ವಿಧಾನಗಳು, ವೈಯಕ್ತಿಕ ಮೇಲ್ವಿಚಾರಣೆ ಹಾಗೂ ಪೋಷಕ ಕಲಿಕಾ ವಾತಾವರಣವು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಸಹಕಾರಿಯಾಗಿವೆ ಎಂದು ತಿಳಿಸಲಾಗಿದೆ. ಅಲ್ ಇಬಾದ ಇಂಡಿಯನ್ ಸ್ಕೂಲ್ ನಲ್ಲಿ ಆರಂಭಿಕ ವಯಸ್ಸಿನಲ್ಲಿಯೇ ಅನೇಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿಗೆ ಯಾವುದೇ ಅಡಚಣೆ ಇಲ್ಲದೆ ಖುರ್ಆನ್ ಹಿಫ್ಝ್ ಪೂರ್ಣಗೊಳಿಸುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣದಲ್ಲಿಯೂ ಉತ್ತಮ ಸಾಧನೆ ಮಾಡುತ್ತಿದ್ದು, ದೈವಿಕ ಜ್ಞಾನಕ್ಕೆ ಗಾಢವಾಗಿ ಸಂಪರ್ಕಿತರಾಗಿರುವುದು ಗಮನಾರ್ಹವಾಗಿದೆ ಎಂದು ಅವರು ವಿವರಿಸಿದ್ದಾರೆ. ಈ ರೀತಿಯ ಸಮಗ್ರ ಶಿಕ್ಷಣ ವ್ಯವಸ್ಥೆ ಮುಂದಿನ ದಿನಗಳಲ್ಲಿ ಸಮುದಾಯ, ಸಮಾಜ ಮತ್ತು ರಾಷ್ಟ್ರಕ್ಕೆ ಹೆಚ್ಚಿನ ಲಾಭವನ್ನು ತರಲಿದೆ ಎಂಬ ವಿಶ್ವಾಸವನ್ನು ಸಂಸ್ಥೆ ವ್ಯಕ್ತಪಡಿಸಿದೆ. ಬಲವಾದ ನೈತಿಕ ಹಾಗೂ ಆತ್ಮೀಯ ಮೌಲ್ಯಗಳೊಂದಿಗೆ ವಿಶ್ವಮಟ್ಟದ CBSE ಶಿಕ್ಷಣ ನೀಡುವ ತನ್ನ ಧ್ಯೇಯವನ್ನು ಶಾಲೆ ಮುಂದುವರಿಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಪಕ್ಷಾಂತರ ವಿರೋಧಿ ಕಾಯ್ದೆಯ ಪರಿಶೀಲನಾ ಸಮಿತಿಗೆ ಸ್ಪೀಕರ್ ಯು.ಟಿ. ಖಾದರ್ ನೇಮಕ
ಮುಂಬೈ, ಫೆ.9: ಪಕ್ಷಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದಂತೆ ಸಂವಿಧಾನದ 10ನೆ ಅನುಸೂಚಿಯಡಿ ರಚಿಸಲಾದ ನಾಲ್ಕು ಮಂದಿ ಸ್ಪೀಕರ್ಗಳ ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರ ವಿಧಾನ ಸಭೆಯ ಸ್ಪೀಕರ್ ರಾಹುಲ್ ನಾಗ್ವೇಕರ್ ಅಧ್ಯಕ್ಷತೆಯ ಈ ಉನ್ನತ ಮಟ್ಟದ ಅಧಿಕಾರ ಸಮಿತಿಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರಲ್ಲದೆ ಒರಿಸ್ಸಾ ಮತ್ತು ನಾಗಲ್ಯಾಂಡ್ ಸ್ಪೀಕರ್ ಕೂಡಾ ಇದ್ದಾರೆ. ಮಹಾರಾಷ್ಟ್ರದ ವಿಧಾನಸೌಧದ ಕ್ಯಾಬಿನೆಟ್ ಹಾಲ್ನಲ್ಲಿ ಸೋಮವಾರ ಈ ಸಮಿತಿಯ ಸಭೆಯು ನಡೆಯಿತು. ಸ್ಪೀಕರ್ ಯು.ಟಿ. ಖಾದರ್ ಚರ್ಚೆಯಲ್ಲಿ ಪಾಲ್ಗೊಂಡರು.
54,000 ಕೋಟಿ ರೂ. ಡಿಜಿಟಲ್ ವಂಚನೆ ‘ಡಕಾಯಿತಿಗೆ ಸಮಾನ’: ಸುಪ್ರೀಂ ಕೋರ್ಟ್ ಕಳವಳ
ಹೊಸದಿಲ್ಲಿ: 54,000 ಕೋಟಿ ರೂ. ಮೌಲ್ಯದ ಡಿಜಿಟಲ್ ವಂಚನೆಯನ್ನು ನಿಶ್ಚಿತವಾಗಿ ದರೋಡೆ ಮತ್ತು ಡಕಾಯಿತಿ ಎಂದು ಸೋಮವಾರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, RBI, ಬ್ಯಾಂಕ್ಗಳು ಹಾಗೂ ದೂರಸಂಪರ್ಕ ಇಲಾಖೆಯಂತಹ ಸಂಬಂಧಿತ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ, ಇಂತಹ ಪ್ರಕರಣಗಳನ್ನು ನಿಭಾಯಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನ ಕರಡನ್ನು ರೂಪಿಸಬೇಕು ಎಂದು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾ. ಜೋಯ್ ಮಲ್ಯ ಬಾಗ್ಚಿ ಮತ್ತು ನ್ಯಾ. ಎನ್.ವಿ. ಅಂಜಾರಿಯಾರನ್ನೊಳಗೊಂಡ ನ್ಯಾಯಪೀಠ, ಡಿಜಿಟಲ್ ವಂಚನೆಯಲ್ಲಿ ಅಕ್ರಮವಾಗಿ ವರ್ಗಾಯಿಸಲಾಗಿರುವ ಮೊತ್ತವು ಹಲವು ಸಣ್ಣ ರಾಜ್ಯಗಳ ಬಜೆಟ್ಗಿಂತ ಹೆಚ್ಚಿದೆ ಎಂದು ಕಳವಳ ವ್ಯಕ್ತಪಡಿಸಿತು. ಇಂತಹ ಅಪರಾಧಗಳು ಬ್ಯಾಂಕ್ ಅಧಿಕಾರಿಗಳು ಕೈಮಿಲಾಯಿಸಿರುವುದರಿಂದ ಅಥವಾ ನಿರ್ಲಕ್ಷ್ಯದಿಂದ ನಡೆಯುತ್ತಿವೆ ಎಂಬುದನ್ನು ಗಮನಕ್ಕೆ ತೆಗೆದುಕೊಂಡ ನ್ಯಾಯಾಲಯ, ಇಂತಹ ಪ್ರಕರಣಗಳಲ್ಲಿ ಆರ್ಬಿಐ ಹಾಗೂ ಬ್ಯಾಂಕ್ಗಳು ಸಕಾಲಿಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಿ ಹೇಳಿತು. ಈ ಪ್ರಕರಣದಲ್ಲಿ ಸರಣಿ ನಿರ್ದೇಶನಗಳನ್ನು ನೀಡಿದ ನ್ಯಾಯಾಲಯ, ಭಾರತೀಯ ರಿಸರ್ವ್ ಬ್ಯಾಂಕ್ನ ಪ್ರಮಾಣಿತ ಕಾರ್ಯಾಚರಣಾ ವಿಧಾನ ಹಾಗೂ ದೂರಸಂಪರ್ಕ ಇಲಾಖೆಯ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು ಪರಿಗಣಿಸಬೇಕು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಸೂಚಿಸಿತು. ಇಂತಹ ಅಪರಾಧ ಕೃತ್ಯಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಇನ್ನು ನಾಲ್ಕು ವಾರಗಳಲ್ಲಿ ಒಡಂಬಡಿಕೆ ಕರಡಿನೊಂದಿಗೆ ನ್ಯಾಯಾಲಯಕ್ಕೆ ಬರಬೇಕು ಎಂದು ನಿರ್ದೇಶನ ನೀಡಿತು.
ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಗೆ ಸಂಬಂಧಿಸಿದಂತೆ FIR ದಾಖಲಿಸಲು ಹೊಸ ಮಾರ್ಗಸೂಚಿ: ಡಿಜಿಪಿ ಎಂ.ಎ. ಸಲೀಮ್ ಆದೇಶ
ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಲ್ಲಿ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ ಎಫ್ಐಆರ್ ದಾಖಲಿಸುವುದಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG & IGP) ಎಂ.ಎ. ಸಲೀಮ್ ಬ್ರೇಕ್ ಹಾಕಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸುವ ಉದ್ದೇಶದಿಂದ ಫೆಬ್ರವರಿ 7 ರಂದು ಹೊಸ ಸುತ್ತೋಲೆಯನ್ನು ಹೊರಡಿಸಲಾಗಿದ್ದು,
ಭಾರತ–ಯುಎಸ್ ವ್ಯಾಪಾರ ಒಪ್ಪಂದದ ನಂತರ ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲಿದೆಯೇ ಭಾರತ?
ಕಳೆದ ವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಭಾರತ ಮತ್ತು ಅಮೆರಿಕ ನಡುವಿನ ಬಹುನಿರೀಕ್ಷಿತ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಒಪ್ಪಂದದ ಭಾಗವಾಗಿ ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುತ್ತದೆ ಎಂದು ಟ್ರಂಪ್ ಹೇಳಿದ್ದಾರೆ. ಭಾರತ ಹಾಗೂ ಅಮೆರಿಕ ನಡುವಣ ವ್ಯಾಪಾರ ಒಪ್ಪಂದದ ಚೌಕಟ್ಟಿನಲ್ಲಿ ರಷ್ಯಾ ತೈಲ ಖರೀದಿ ಬಗ್ಗೆ ಯಾವುದೇ ಉಲ್ಲೇಖ ಇಲ್ಲದಿದ್ದರೂ, ಭಾರತವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ. ಅದು ಮಾಸ್ಕೋದಿಂದ ನೇರ ಅಥವಾ ಪರೋಕ್ಷವಾಗಿ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಬದ್ಧತೆ ವ್ಯಕ್ತಪಡಿಸಿದೆ ಎಂದು ಟ್ರಂಪ್ ವ್ಯಾಪಾರ ಚೌಕಟ್ಟು ಘೋಷಣೆಯಾದ ಬಳಿಕ ಹೇಳಿದ್ದರು. ಅಂದಹಾಗೆ, ರಷ್ಯಾದಿಂದ ತೈಲ ಆಮದು ನಿಲ್ಲಿಸುವ ಬಗ್ಗೆ ಭಾರತದಿಂದ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ರಷ್ಯಾದ ತೈಲದ ಬಗ್ಗೆ ಟ್ರಂಪ್ ಹೇಳಿದ್ದೇನು? ಫೆಬ್ರವರಿ 2ರಂದು ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿರುವುದಾಗಿ ಹೇಳಿದ್ದು, ನಾವು ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿದ್ದೇವೆ. ಈ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಅಮೆರಿಕ ಭಾರತದ ಸುಂಕವನ್ನು ಶೇಕಡಾ 25ರಿಂದ 18ಕ್ಕೆ ಇಳಿಸುತ್ತದೆ ಎಂದಿದ್ದರು. ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ಪೋಸ್ಟ್ನಲ್ಲಿ ಪ್ರಧಾನಿ ಮೋದಿ ರಷ್ಯಾದ ತೈಲವನ್ನು ಖರೀದಿಸುವುದನ್ನು ನಿಲ್ಲಿಸುವುದಾಗಿ ಮತ್ತು ಅಮೆರಿಕದಿಂದ ಹಾಗೂ ಬಹುಶಃ ವೆನೆಝುವೆಲಾದಿಂದ ಹೆಚ್ಚಿನದನ್ನು ಖರೀದಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಅಮೆರಿಕದಿಂದ 500 ಬಿಲಿಯನ್ ಡಾಲರ್ ಮೊತ್ತದ ಇಂಧನ, ತಂತ್ರಜ್ಞಾನ, ಕೃಷಿ ಉತ್ಪನ್ನ ಮತ್ತು ಕಲ್ಲಿದ್ದಲು ಖರೀದಿಸಲು ಭಾರತ ಒಪ್ಪಿದೆ. ಭಾರತದೊಂದಿಗಿನ ನಮ್ಮ ಸಂಬಂಧ ಇನ್ನಷ್ಟು ಸದೃಢವಾಗಿ ಮುಂದುವರಿಯಲಿದೆ. ಕೆಲವರಿಗೆ ಹೇಳಲು, ಮಾಡಲು ಸಾಧ್ಯವಾಗದ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ನಾನು ಇಬ್ಬರು ಸೇರಿ ಮಾಡಿದ್ದೇವೆ ಎಂದಿದ್ದರು. ಶುಕ್ರವಾರ ಟ್ರಂಪ್ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದು, ಅದು ಭಾರತದ ರಷ್ಯಾದ ಇಂಧನ ಖರೀದಿಗಾಗಿ ವಿಧಿಸಲಾದ ಶೇಕಡಾ 25ರಷ್ಟು ದಂಡ ಸುಂಕವನ್ನು ತೆಗೆದುಹಾಕುತ್ತದೆ. ತಮ್ಮ ಆದೇಶದಲ್ಲಿ ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುತ್ತದೆ ಎಂಬ ಹೇಳಿಕೆಯನ್ನು ಟ್ರಂಪ್ ಪುನರುಚ್ಚರಿಸಿದರು. ನಿರ್ದಿಷ್ಟವಾಗಿ ಹೇಳುವುದಾದರೆ, ಭಾರತವು ರಷ್ಯಾದ ಒಕ್ಕೂಟದ ತೈಲವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಬದ್ಧವಾಗಿದೆ. ಇದು ಯುನೈಟೆಡ್ ಸ್ಟೇಟ್ಸ್ನಿಂದ ಇಂಧನ ಉತ್ಪನ್ನಗಳನ್ನು ಖರೀದಿಸುವುದಾಗಿ ಪ್ರತಿನಿಧಿಸಿದೆ ಮತ್ತು ಮುಂದಿನ 10 ವರ್ಷಗಳಲ್ಲಿ ರಕ್ಷಣಾ ಸಹಕಾರವನ್ನು ವಿಸ್ತರಿಸಲು ಅಮೆರಿಕದೊಂದಿಗೆ ಒಂದು ಚೌಕಟ್ಟಿಗೆ ಬದ್ಧವಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ರಷ್ಯಾದ ತೈಲ ಖರೀದಿಯ ಕುರಿತಾದ ಅಮೆರಿಕದ ಕಳವಳಗಳನ್ನು ಪರಿಹರಿಸಲು ಮತ್ತು ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ ಹಾಗೂ ಆರ್ಥಿಕ ವಿಷಯಗಳಲ್ಲಿ ಅಮೆರಿಕದೊಂದಿಗೆ ಸಾಕಷ್ಟು ಹೊಂದಾಣಿಕೆ ಮಾಡಿಕೊಳ್ಳಲು ಭಾರತವು “ಮಹತ್ವದ ಕ್ರಮಗಳನ್ನು” ತೆಗೆದುಕೊಂಡಿದೆ ಎಂದು ಆದೇಶದಲ್ಲಿ ಹೇಳಿದೆ. ಕಾರ್ಯಕಾರಿ ಆದೇಶವು ಮೇಲ್ವಿಚಾರಣಾ ಕಾರ್ಯವಿಧಾನವನ್ನು ಸಹ ಜಾರಿಗೆ ತಂದಿದೆ. ಇದರಲ್ಲಿ ಭಾರತ ರಷ್ಯಾದಿಂದ ಇಂಧನ ಖರೀದಿಯನ್ನು ನಿಲ್ಲಿಸಿದೆಯೇ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಮೇಲ್ವಿಚಾರಣೆ ಮಾಡಲಿದ್ದಾರೆ. ಭಾರತವು ರಷ್ಯಾದ ಇಂಧನದ ನೇರ ಅಥವಾ ಪರೋಕ್ಷ ಆಮದನ್ನು ಪುನರಾರಂಭಿಸಿದೆ ಎಂದು ಲುಟ್ನಿಕ್ ಕಂಡುಕೊಂಡರೆ, ಅವರ ತಂಡದ ಶಿಫಾರಸುಗಳಿಗೆ ಅನುಗುಣವಾಗಿ ಟ್ರಂಪ್ ಭಾರತೀಯ ಸರಕುಗಳ ಮೇಲೆ ದಂಡವಾಗಿ ಹೆಚ್ಚುವರಿ 25 ಪ್ರತಿಶತ ಸುಂಕವನ್ನು ಮತ್ತೆ ವಿಧಿಸಬಹುದು ಎಂದು ಅದು ಹೇಳಿದೆ. ‘ಮಧ್ಯಂತರ’ ವ್ಯಾಪಾರ ಒಪ್ಪಂದದ ಕುರಿತು ಶ್ವೇತಭವನ ಶನಿವಾರ ಅಮೆರಿಕ–ಭಾರತ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿತು. ಆದಾಗ್ಯೂ, ಇದು ಭಾರತದ ರಷ್ಯಾದ ತೈಲ ಖರೀದಿಗಳ ಬಗ್ಗೆ ಯಾವುದೇ ಉಲ್ಲೇಖವನ್ನು ಹೊಂದಿಲ್ಲ. ರಷ್ಯಾ ಖರೀದಿಗಳ ಬಗ್ಗೆ ಭಾರತ ಏನು ಹೇಳಿದೆ? ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುತ್ತದೆ ಎಂದು ಟ್ರಂಪ್ ಹೇಳಿಕೆಯ ನಂತರದ ಮೊದಲ ಹೇಳಿಕೆಗಳಲ್ಲಿ, ಮಾರುಕಟ್ಟೆ ಪರಿಸ್ಥಿತಿ ಮತ್ತು ಅಂತಾರಾಷ್ಟ್ರೀಯ ಪರಿಸ್ಥಿತಿಗೆ ಅನುಗುಣವಾಗಿ ಇಂಧನದ ಮೂಲ ವಿಸ್ತರಿಸುವುದು ನಮ್ಮ ಕಾರ್ಯತಂತ್ರದ ಭಾಗವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಭಾರತ ಹೇಳಿದೆ. ಭಾರತದ ಇಂಧನ ಭದ್ರತೆ ಅಥವಾ ಮೂಲಗಳ ಖರೀದಿ ದೃಢಪಟ್ಟಿರುವ ಮಟ್ಟಿಗೆ, ಸರ್ಕಾರವು ಹಲವಾರು ಸಂದರ್ಭಗಳಲ್ಲಿ — ನಾನು ಸೇರಿದಂತೆ — 1.4 ಶತಕೋಟಿ ಜನರಿಗೆ ಇಂಧನ ಭದ್ರತೆಯನ್ನು ಖಾತರಿಪಡಿಸುವುದು ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ ಎಂದು ಸಾರ್ವಜನಿಕವಾಗಿ ಹೇಳಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಭಾರತವು ಜನವರಿಯಲ್ಲಿ ದಿನಕ್ಕೆ 1.215 ಮಿಲಿಯನ್ ಬ್ಯಾರೆಲ್ (bpd) ರಷ್ಯಾದ ಕಚ್ಚಾ ತೈಲವನ್ನು ಆಮದು ಮಾಡಿಕೊಂಡಿದೆ ಎಂದು ವರದಿಯಾಗಿದೆ. ನಯಾರಾ ಸಂಸ್ಕರಣಾಗಾರವು ರೋಸ್ನೆಫ್ಟ್ ಮತ್ತು ಹೂಡಿಕೆ ಒಕ್ಕೂಟದ ಜಂಟಿ ಒಡೆತನದಲ್ಲಿದೆ. ಇದರಲ್ಲಿ 0.41 ಮಿಲಿಯನ್ bpd ನಷ್ಟಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಜನವರಿಯಲ್ಲಿ ಭಾರತದ ರಷ್ಯಾದ ತೈಲ ಆಮದು ಡಿಸೆಂಬರ್ ನಿಂದ ಪ್ರತಿದಿನ ಶೇ.12ರಷ್ಟು ಕಡಿಮೆಯಾಗಿದೆ. ನವೆಂಬರ್ನಿಂದ ಡಿಸೆಂಬರ್ನಲ್ಲಿ ಸುಮಾರು ಶೇ.22ರಷ್ಟು ಕಡಿಮೆಯಾಗಿದೆ. 2025ರ ಮಧ್ಯದಲ್ಲಿ ಕೊನೆಯ ಬಾರಿಗೆ 2 ಮಿಲಿಯನ್ bpd ಆಮದು ಮಟ್ಟಗಳು ಕಂಡುಬಂದಿವೆ. ವ್ಯಾಪಾರ ಒಪ್ಪಂದದ ಭಾಗವಾಗಿ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಲು ಭಾರತ ಬದ್ಧವಾಗಿದೆ ಎಂಬ ಟ್ರಂಪ್ ಆಡಳಿತದ ಹೇಳಿಕೆಗಳನ್ನು ಭಾರತ ದೃಢಪಡಿಸಲಿಲ್ಲ ಅಥವಾ ನಿರಾಕರಿಸಲಿಲ್ಲ. ಭಾರತ ಮತ್ತು ಅದರ ರಷ್ಯಾದ ತೈಲ ಖರೀದಿಗಳ ಕುರಿತು ಅಮೆರಿಕದ ಹೇಳಿಕೆಗಳ ಕುರಿತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಪ್ರತಿಕ್ರಿಯಿಸಿದ್ದು, ಈ ವಿಷಯದ ಬಗ್ಗೆ MEA ಮಾಹಿತಿಯನ್ನು ಒದಗಿಸಬಹುದು ಎಂದು ಹೇಳಿದರು. ಬಳಿಕ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ್ದು, ಇಂಧನ ಮೂಲದಲ್ಲಿ “ಸರ್ವೋಚ್ಚ ಆದ್ಯತೆ” 1.4 ಶತಕೋಟಿ ನಾಗರಿಕರ ಇಂಧನ ಸುರಕ್ಷತೆಯನ್ನು ರಕ್ಷಿಸುವುದು ಎಂದಿದ್ದಾರೆ. ರವಿವಾರ ಭಾರತದ ರಷ್ಯಾದ ತೈಲ ಖರೀದಿಗಳ ಕುರಿತು ಟ್ರಂಪ್ ಅವರ ಹೇಳಿಕೆಗಳ ಬಗ್ಗೆ ಗೋಯಲ್ ನೇರ ಉತ್ತರವನ್ನು ನೀಡಿಲ್ಲ. ನಾವು ನಮ್ಮ ತೈಲ ಮೂಲಗಳನ್ನು ವೈವಿಧ್ಯಗೊಳಿಸುವುದರಿಂದ ಅಮೆರಿಕದಿಂದ ಕಚ್ಚಾ ತೈಲ ಅಥವಾ LNG, LPG ಖರೀದಿಸುವುದು ಭಾರತದ ಸ್ವಂತ ಕಾರ್ಯತಂತ್ರದ ಹಿತಾಸಕ್ತಿಗಳಲ್ಲಿದೆ ಎಂದಿದ್ದಾರೆ ಅವರು. ಸುದ್ದಿ ಸಂಸ್ಥೆ ANIಗೆ ನೀಡಿದ ಸಂದರ್ಶನದಲ್ಲಿ ಗೋಯಲ್ ಅವರಲ್ಲಿ, ‘ರಷ್ಯಾದ ತೈಲ ಅಥವಾ ರಕ್ಷಣಾ ವಿಷಯಗಳಲ್ಲಿ ದ್ವಿಪಕ್ಷೀಯ ಒಮ್ಮತದ ಕೊರತೆಯಿದ್ದರೆ, ಅದು ವ್ಯಾಪಾರ ಒಪ್ಪಂದದ ಮೇಲೂ ಪರಿಣಾಮ ಬೀರುವುದಿಲ್ಲವೇ?’ ಎಂದು ಕೇಳಲಾಯಿತು. ಅದಕ್ಕೆ ಅವರು, “ಇಲ್ಲ, ಖಂಡಿತ ಇಲ್ಲ. ಈ ಒಪ್ಪಂದವು ಯಾರು ಏನು ಮತ್ತು ಎಲ್ಲಿಂದ ಖರೀದಿಸುತ್ತಾರೆ ಎಂಬುದನ್ನು ಚರ್ಚಿಸುವುದಿಲ್ಲ. ವ್ಯಾಪಾರ ಒಪ್ಪಂದವು ವ್ಯಾಪಾರದ ಹಾದಿ ಸುಗಮವಾಗಿರುವುದನ್ನು ಖಚಿತಪಡಿಸುತ್ತದೆ, ಆದ್ಯತೆಯ ಪ್ರವೇಶವನ್ನು ಖಚಿತಪಡಿಸುತ್ತದೆ. ಮುಕ್ತ ವ್ಯಾಪಾರ ಒಪ್ಪಂದಗಳು ಎಲ್ಲವೂ ಆದ್ಯತೆಯ ಪ್ರವೇಶದ ಬಗ್ಗೆಯಾಗಿದೆ. ನಾವು 18% ಪ್ರತಿಸುಂಕವನ್ನು ಹೊಂದಿರುವಾಗ ಸಾಮಾನ್ಯವಾಗಿ ನಮ್ಮ ಪ್ರತಿಸ್ಪರ್ಧಿಯಾಗಿರುವ ಇತರ ಅಭಿವೃದ್ಧಿಶೀಲ ರಾಷ್ಟ್ರಗಳಿಗಿಂತ ನಮಗೆ ಆದ್ಯತೆ ಇರುತ್ತದೆ” ಎಂದಿದ್ದಾರೆ. ರಷ್ಯಾ ಏನು ಹೇಳಿದೆ? ಭಾರತ ಇನ್ನು ಮುಂದೆ ರಷ್ಯಾದ ತೈಲವನ್ನು ಖರೀದಿಸುವುದಿಲ್ಲ ಎಂದು ಟ್ರಂಪ್ ಹೇಳಿಕೆ ನೀಡಿದ ನಂತರ ಕ್ರೆಮ್ಲಿನ್ ಭಾರತವು ಯಾವುದೇ ದೇಶದಿಂದ ಬೇಕಿದ್ದರೂ ತೈಲ ಖರೀದಿಸಬಹುದು. ಭಾರತಕ್ಕೆ ರಷ್ಯಾ ಮಾತ್ರ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ರಫ್ತು ಮಾಡುತ್ತಿಲ್ಲ. ದೇಶವೊಂದು ಯಾರಿಂದ ಬೇಕಿದ್ದರೂ ತೈಲ ಖರೀದಿಸಬಹುದು ಎಂದು ಪ್ರತಿಕ್ರಿಯೆ ನೀಡಿದೆ. ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸುವುದು ಸರ್ಕಾರದ ಪ್ರಮುಖ ಆದ್ಯತೆ: ಮಿಸ್ರಿ ಇತ್ತೀಚೆಗೆ ಅಮೆರಿಕದೊಂದಿಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ನಂತರ ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುತ್ತದೆಯೇ ಎಂಬ ಪ್ರಶ್ನೆಗಳ ನಡುವೆ, ರಾಷ್ಟ್ರೀಯ ಹಿತಾಸಕ್ತಿ, ಗ್ರಾಹಕರ ಕೈಗೆಟುಕುವಿಕೆ ಮತ್ತು ಪೂರೈಕೆ ಸುರಕ್ಷತೆಯಿಂದ ತನ್ನ ಇಂಧನ ಆಮದು ನೀತಿಯನ್ನು ನಿರ್ದೇಶಿಸಲಾಗಿದೆ ಎಂದು ಭಾರತ ಸೋಮವಾರ ಪುನರುಚ್ಚರಿಸಿದೆ. ಭಾರತದ ರಷ್ಯಾದ ಕಚ್ಚಾ ತೈಲದ ಮೂಲದ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆ ಮತ್ತು ತೈಲ-ಅನಿಲದ ದೊಡ್ಡ ನಿವ್ವಳ ಆಮದುದಾರರಾಗಿ ಭಾರತ ಸ್ಥಿರ, ವಿಶ್ವಾಸಾರ್ಹ ಮತ್ತು ಸಮಂಜಸ ಬೆಲೆಯ ಇಂಧನ ಪೂರೈಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದರು. ನೀವು ಆಮದು ಮಾಡಿಕೊಂಡ ಇಂಧನದ ಮೇಲೆ ಶೇಕಡಾ 80–85ರಷ್ಟು ಅವಲಂಬಿತರಾಗಿರುವಾಗ ಇಂಧನ ವೆಚ್ಚಗಳಿಂದ ಉಂಟಾಗುವ ಹಣದುಬ್ಬರದ ಬಗ್ಗೆ ಕಳವಳಗಳು ಸಹಜ. ಆದರೆ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಒತ್ತಿ ಹೇಳಿದರು. ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಇಂಧನ ಮಾರುಕಟ್ಟೆಗಳು ಬೆಲೆಗಳು ಮತ್ತು ಪೂರೈಕೆ ಸರಪಳಿಗಳ ಮೇಲೆ ಪರಿಣಾಮ ಬೀರುವ ಗಣನೀಯ ಅನಿಶ್ಚಿತತೆಯನ್ನು ಕಂಡಿವೆ. ಈ ಹಿನ್ನೆಲೆಯಲ್ಲಿ ಭಾರತವು ಯಾವುದೇ ಒಂದೇ ಪೂರೈಕೆದಾರರನ್ನು ಅವಲಂಬಿಸುವ ಬದಲು ತನ್ನ ಇಂಧನ ಆಮದು ಮೂಲಗಳನ್ನು ವೈವಿಧ್ಯಗೊಳಿಸುವತ್ತ ಗಮನಹರಿಸಿದೆ. ಭಾರತವು ಜಾಗತಿಕ ಇಂಧನ ಮಾರುಕಟ್ಟೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಾವು ಬಹು ಮೂಲಗಳಿಂದ ಶಕ್ತಿಯನ್ನು ಆಮದು ಮಾಡಿಕೊಳ್ಳಲು ಇದು ಒಂದು ಕಾರಣವಾಗಿದೆ. ಲಭ್ಯತೆ, ನ್ಯಾಯಯುತ ಬೆಲೆ ನಿಗದಿ ಮತ್ತು ವಿಶ್ವಾಸಾರ್ಹತೆ ಭಾರತದ ಆಮದು ನೀತಿಯ ಮೂಲ ತತ್ವಗಳಾಗಿವೆ ಎಂದು ಒತ್ತಿ ಹೇಳಿದ ಮಿಸ್ರಿ, ಅಧಿಕೃತ ದತ್ತಾಂಶವು ಭಾರತವು ಡಜನ್ಗಟ್ಟಲೆ ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ ಎಂದು ತೋರಿಸುತ್ತದೆ. ನಾವು ಯಾವುದೇ ಒಂದೇ ಮೂಲವನ್ನು ಅವಲಂಬಿಸಿಲ್ಲ ಅಥವಾ ಅವಲಂಬಿಸಿರಲು ಉದ್ದೇಶಿಸಿಲ್ಲ. ವಸ್ತುನಿಷ್ಠ ಮಾರುಕಟ್ಟೆ ಪರಿಸ್ಥಿತಿಗಳನ್ನು ಅವಲಂಬಿಸಿ ಇದು ಕಾಲಕಾಲಕ್ಕೆ ಬದಲಾಗಬಹುದು. ಮಾರುಕಟ್ಟೆ ಪರಿಸ್ಥಿತಿಗಳು, ವೆಚ್ಚಗಳು, ಅಪಾಯಗಳು ಮತ್ತು ಲಭ್ಯತೆಯನ್ನು ನಿರ್ಣಯಿಸುವ ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು ನಿಜವಾದ ಸೋರ್ಸಿಂಗ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ. ಈ ಕಂಪನಿಗಳು ತಮ್ಮದೇ ಆದ ಆಂತರಿಕ ಹೊಣೆಗಾರಿಕೆ ಕಾರ್ಯವಿಧಾನಗಳನ್ನು ಹೊಂದಿವೆ. ಅದು ಸರ್ಕಾರವಾಗಲಿ ಅಥವಾ ವ್ಯವಹಾರಗಳಾಗಲಿ, ದಿನದ ಕೊನೆಯಲ್ಲಿ ರಾಷ್ಟ್ರೀಯ ಹಿತಾಸಕ್ತಿ ಮಾರ್ಗದರ್ಶಕ ಅಂಶವಾಗಿದೆ ಎಂದು ಮಿಸ್ರಿ ಹೇಳಿದ್ದಾರೆ.
ಹಾಂಕಾಂಗ್| ಉದ್ಯಮಿ ಜಿಮ್ಮಿ ಲಾಯ್ಗೆ 20 ವರ್ಷ ಜೈಲುಶಿಕ್ಷೆ
ಹಾಂಕಾಂಗ್. ಫೆ.9: ಹಾಂಕಾಂಗ್ನ ಪ್ರಸಿದ್ಧ ಮಾಧ್ಯಮ ಉದ್ಯಮಿ, ಚೀನಾ ಆಡಳಿತವನ್ನು ಕಟುವಾಗಿ ಟೀಕಿಸುವ ಜಿಮ್ಮಿ ಲಾಯ್ ಅವರಿಗೆ ರಾಷ್ಟ್ರೀಯ ಭದ್ರತಾ ಕಾನೂನಿನಡಿ 20 ವರ್ಷ ಜೈಲು ಶಿಕ್ಷೆ ವಿಧಿಸಿರುವುದಾಗಿ ವರದಿಯಾಗಿದೆ. ಹಾಂಕಾಂಗ್ ಪ್ರಜಾಪ್ರಭುತ್ವದ ಪರ ಚಳವಳಿಗೆ ಬೆಂಬಲ ನೀಡುತ್ತಿದ್ದ ಹಾಗೂ ಚೀನಾವನ್ನು ಟೀಕಿಸುತ್ತಿದ್ದ 78 ವರ್ಷದ ಲಾಯ್ ಅವರನ್ನು ವಿದೇಶಿ ಪಡೆಗಳೊಂದಿಗೆ ಒಳಸಂಚು ರೂಪಿಸುತ್ತಿದ್ದ ಆರೋಪದಡಿ ಬಂಧಿಸಿದ್ದು ಕಳೆದ ಸುಮಾರು ಐದು ವರ್ಷಗಳಿಂದ ಬಂಧನದಲ್ಲಿದ್ದರು. ವಿದೇಶೀ ಪಡೆಗಳೊಂದಿಗೆ ಕೈಜೋಡಿಸಿದ ಸಂಚುಕೋರರ ಹಿಂದಿರುವ `ಮಾಸ್ಟರ್ ಮೈಂಡ್' ಎಂದು ಲಾಯ್ ಅವರನ್ನು ಪರಿಗಣಿಸಿದ್ದರಿಂದ ಅವರ ಶಿಕ್ಷೆಯನ್ನು ಹೆಚ್ಚಿಸಿರುವುದಾಗಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಪಶ್ಚಿಮದಂಡೆಯ ಮೇಲೆ ನಿಯಂತ್ರಣ ಪ್ರಬಲಗೊಳಿಸುವ ಕ್ರಮ ಘೋಷಿಸಿದ ಇಸ್ರೇಲ್
ಜೆರುಸಲೇಂ, ಫೆ.9: ಆಕ್ರಮಿತ ಪಶ್ಚಿಮದಂಡೆಯ ಮೇಲೆ ಇಸ್ರೇಲ್ನ ನಿಯಂತ್ರಣವನ್ನು ಪ್ರಬಲಗೊಳಿಸುವ ಸರಣಿ ಕ್ರಮಗಳನ್ನು ಇಸ್ರೇಲ್ನ ಕ್ಯಾಬಿನೆಟ್ ಅನುಮೋದಿಸಿದ್ದು ಫೆಲೆಸ್ತೀನಿಯನ್ ಪ್ರದೇಶದಲ್ಲಿ ಮತ್ತಷ್ಟು ವಸಾಹತು ವಿಸ್ತರಣೆಗೆ ದಾರಿ ಮಾಡಿಕೊಟ್ಟಿದೆ. ಭದ್ರತಾ ಕ್ಯಾಬಿನೆಟ್ ಇವತ್ತು ನಿರ್ಧಾರಗಳ ಸರಣಿಯನ್ನು ಅನುಮೋದಿಸಿದ್ದು ಪಶ್ಚಿಮದಂಡೆಯಲ್ಲಿ ಕಾನೂನು ಮತ್ತು ನಾಗರಿಕ ವಾಸ್ತವತೆಯನ್ನು ಮೂಲಭೂತವಾಗಿ ಬದಲಾಯಿಸುತ್ತದೆ. ಮತ್ತು ಪಶ್ಚಿಮದಂಡೆಯಲ್ಲಿ ಯಹೂದಿ ನಾಗರಿಕರು ಭೂಮಿಯನ್ನು ಖರೀದಿಸುವುದನ್ನು ತಡೆಯುವ ದಶಕಗಳ ಹಳೆಯ ನಿಯಮವನ್ನು ತೆಗೆದುಹಾಕಿದೆ ಎಂದು ವಿತ್ತ ಸಚಿವ ಬೆಝಲೆಲ್ ಸ್ಮೊಟ್ರಿಚ್ ಮತ್ತು ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಜಂಟಿಯಾಗಿ ಘೋಷಿಸಿದ್ದಾರೆ. ಈ ಕ್ರಮವು ಇಸ್ರೇಲ್ನ ಭೂಮಿಯ ಎಲ್ಲಾ ಪ್ರದೇಶಗಳಲ್ಲೂ ನಮ್ಮ ಬೇರುಗಳನ್ನು ಆಳವಾಗಿಸುವ ಮತ್ತು ಫೆಲೆಸ್ತೀನಿಯನ್ ರಾಷ್ಟ್ರದ ಪರಿಕಲ್ಪನೆಯನ್ನು ಸಮಾಧಿ ಮಾಡುವ ಉದ್ದೇಶವನ್ನು ಹೊಂದಿದೆ . ಪಶ್ಚಿಮದಂಡೆಯು ದೇಶದ ಹೃದಯಭಾಗವಾಗಿದೆ ಮತ್ತು ಅದನ್ನು ಬಲಪಡಿಸುವುದು ಅತ್ಯುನ್ನತ ಭದ್ರತಾ, ರಾಷ್ಟ್ರೀಯ ಮತ್ತು ಯಹೂದಿ ರಾಷ್ಟ್ರೀಯತಾವಾದ ಹಿತಾಸಕ್ತಿಯ ಕ್ರಮವಾಗಿದೆ ಎಂದು ಹೇಳಿಕೆ ಪ್ರತಿಪಾದಿಸಿದೆ. ಹೆಬ್ರಾನ್ ಸೇರಿದಂತೆ ಫೆಲೆಸ್ತೀನಿಯನ್ ನಗರಗಳ ಕೆಲವು ಭಾಗಗಳಲ್ಲಿ ವಸಾಹತುಗಳಿಗೆ ಕಟ್ಟಡ ಪರವಾನಗಿಗಳ ಮೇಲಿನ ಅಧಿಕಾರವನ್ನು ಫೆಲೆಸ್ತೀನಿಯನ್ ಪ್ರಾಧಿಕಾರದ ಮುನ್ಸಿಪಲ್ ಸಂಸ್ಥೆಗಳಿಂದ ಇಸ್ರೇಲ್ಗೆ ವರ್ಗಾಯಿಸುವುದಕ್ಕೆ ಈ ಕ್ರಮಗಳು ಅವಕಾಶ ನೀಡುತ್ತವೆ. ಇದುವರೆಗೆ, ನಗರದ ಯಹೂದಿ ಸಮುದಾಯದವರು ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ಸ್ಥಳೀಯ ಮುನ್ಸಿಪಾಲಿಟಿ ಹಾಗೂ ಇಸ್ರೇಲ್ ಅಧಿಕಾರಿಗಳು ಇಬ್ಬರಿಂದಲೂ ಲೈಸೆನ್ಸ್ ಪಡೆಯಬೇಕಿತ್ತು. ಹೊಸ ಕ್ರಮದಡಿ ಇಸ್ರೇಲ್ ಅಧಿಕಾರಿಗಳಿಂದ ಮಾತ್ರ ಲೈಸೆನ್ಸ್ ಪಡೆದರೆ ಸಾಕು ಎಂದು ಮೂಲಗಳನ್ನು ಉಲ್ಲೇಖಿಸಿ `ದಿ ಟೈಮ್ಸ್ ಆಫ್ ಇಸ್ರೇಲ್' ವರದಿ ಮಾಡಿದೆ. ಈ ಕ್ರಮಗಳು ಇಸ್ರೇಲಿ ಅಧಿಕಾರಿಗಳಿಗೆ ಕೆಲವು ಧಾರ್ಮಿಕ ಸ್ಥಳಗಳನ್ನು (ಫೆಲೆಸ್ತೀನಿಯನ್ ನಿಯಂತ್ರಣದ ಪ್ರದೇಶದಲ್ಲಿ ಇದ್ದರೂ ಕೂಡಾ) ನಿರ್ವಹಿಸಲು ಅನುವು ಮಾಡಿಕೊಡುತ್ತದೆ. 1967ರಿಂದ ಇಸ್ರೇಲ್ ವಶಪಡಿಸಿಕೊಂಡಿರುವ ಪ್ರದೇಶವು ಭವಿಷ್ಯದ ಯಾವುದೇ ಫೆಲೆಸ್ತೀನಿಯನ್ ರಾಷ್ಟ್ರದ ಅತಿದೊಡ್ಡ ಭಾಗವನ್ನು ರೂಪಿಸುತ್ತದೆ. ಆದರೆ ಧಾರ್ಮಿಕ ಹಕ್ಕಿನ ಮೇಲೆ ಇದು ಇಸ್ರೇಲ್ನ ಪ್ರದೇಶವೆಂದೂ ಹಲವರು ವಾದಿಸುತ್ತಾರೆ. ಫೆಲೆಸ್ತೀನಿಯನ್ ಆಡಳಿತದ ಖಂಡನೆ ಈ ನಿರ್ಧಾರವು ಆಕ್ರಮಿತ ಪಶ್ಚಿಮದಂಡೆಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನಗಳನ್ನು ಆಳವಾಗಿಸುವ ಗುರಿಯನ್ನು ಹೊಂದಿದೆ ಎಂದು ರಮಲ್ಲಾದಲ್ಲಿನ ಫೆಲೆಸ್ತೀನಿಯನ್ ಆಡಳಿತ ಖಂಡಿಸಿದೆ. ಈ ನಿರ್ಧಾರಗಳು ಫೆಲೆಸ್ತೀನಿಯನ್ ಸಾರ್ವಭೌಮತ್ವದ ಅಡಿಯಲ್ಲಿರುವ ಪ್ರದೇಶಗಳಲ್ಲಿಯೂ ಸಹ ವಸಾಹತು ವಿಸ್ತರಣೆ, ಭೂಮಿ ವಶಪಡಿಸಿಕೊಳ್ಳುವಿಕೆ ಮತ್ತು ಫೆಲೆಸ್ತೀನಿಯನ್ ಆಸ್ತಿಗಳನ್ನು ನೆಲಸಮಗೊಳಿಸುವುದನ್ನು ಕಾನೂನುಬದ್ಧಗೊಳಿಸುವ ಇಸ್ರೇಲ್ನ ಮುಕ್ತ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿಕೆ ತಿಳಿಸಿದೆ.
BCCI Central Contract: ಕೊನೆಗೂ ಗ್ರೇಡ್ `ಬಿ'ಗೆ ಇಳಿಸಲ್ಪಟ್ಟ ವಿರಾಟ್- ರೋಹಿತ್!: ಉಳಿದವರ ಕತೆ ಹೀಗಿದೆ
Virat Kohli And Rohit Sharma- ಟೆಸ್ಟ್ ಮತ್ತು ಟಿ20 ಕ್ರಿಕೆಟ್ ನಿಂದ ನಿವೃತ್ತಿ ಪಡೆದು ಕೇವಲ ಏಕದಿನ ಮಾದರಿಯಲ್ಲಿ ಸಕ್ರಿಯರಾಗಿರುವ ಮಾಜಿ ನಾಯಕರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಇದೀಗ ಬಿಸಿಸಿಐ ವಾರ್ಷಿಕ ಒಪ್ಪಂದದಲ್ಲಿ ಎ ಪ್ಲಸ್ ಶ್ರೇಣಿಯಿಂದ ಬಿ ಶ್ರೇಣಿಗೆ ಇಳಿಸಲಾಗಿದೆ. ಈ ಬಾರಿ ಎ ಶ್ರೇಣಿಯನ್ನು ಕೈಬಿಡಲಾಗಿದ್ದು ಎ ಶ್ರೇಣಿಯಲ್ಲಿ ಗಿಲ್, ಬಮ್ರಾ ಮತ್ತು ರವೀಂದ್ರ ಜಡೇಜಾ ಮಾತ್ರ ಇದ್ದಾರೆ. ಯಾವ ಶ್ರೇಣಿಗೆ ಯಾವ ರೀತಿಯ ಸಂಭಾವನೆ ಎಂಬುದನ್ನು ಬಿಸಿಸಿಐ ಇನ್ನೂ ಪ್ರಕಟಿಸಿಲ್ಲ.
ಫೆ.11ಕ್ಕೆ ಕನ್ನಡ ಶಾಲೆ ಉಳಿಸಿ, ಬೆಳೆಸಿ ಅಭಿಯಾನದಿಂದ ಮಂಗಳೂರಲ್ಲಿ ರಾಜ್ಯ ಸಮಾವೇಶ; ನೃತ್ಯ ವೈಭವ
ಉಡುಪಿ, ಫೆ.9: ಕನ್ನಡ ಭಾಷೆ ಮತ್ತು ಸರಕಾರಿ ಕನ್ನಡ ಶಾಲೆಗಳ ಅಸ್ತಿತ್ವಕ್ಕಾಗಿ ನಿರಂತರ ಹೋರಾಟ ನಡೆಸುತ್ತಿ ರುವ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ 75ನೇ ಸಂಭ್ರಮದ ಅಂಗವಾಗಿ ಇದೇ ಫೆ.11ರಂದು ಮಂಗಳೂರಿನಲ್ಲಿ ರಾಜ್ಯ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ಉಡುಪಿ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ.ಹರೀಶ್ ಜೋಷಿ ತಿಳಿಸಿದ್ದಾರೆ. ಉಡುಪಿ ಪ್ರೆಸ್ಕ್ಲಬ್ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.11ರಂದು ಅಪರಾಹ್ನ 2 ಗಂಟೆಗೆ ಮಂಗಳೂರಿನ ಪುರಭವನ ದಲ್ಲಿ ಕನ್ನಡ ಮನಸ್ಸುಗಳ ಬೃಹತ್ ಸಂಗಮ ನಡೆಯಲಿದೆ. ಸಮಾವೇಶದ ವಿಶೇಷ ಆಕರ್ಷಣೆಯಾಗಿ ಕ್ರಾಂತಿ ಗೀತೆಗಳ ನೃತ್ಯ ವೈಭವ ನಡೆಯಲಿದೆ ಎಂದರು. ಕನ್ನಡ ಶಾಲೆಗಳ ಉಳಿವಿಗಾಗಿ ಮೂಡಿಬಂದಿರುವ ಕ್ರಾಂತಿಗೀತೆಗಳಿಗೆ ನಾಡಿನ ಹೆಸರಾಂತ ಕಲಾತಂಡಗಳು ಹೆಜೆಜ ಹಾಕಲಿವೆ. ಶಿಕ್ಷಣ ಕ್ಷೇತ್ರದಲ್ಲಿರುವ ತಾರತಮ್ಯವನ್ನು ಪ್ರಶ್ನಿಸುವ ಹಾಗೂ ಕನ್ನಡ ಅಸ್ಮಿತೆಯನ್ನು ಸಾರುವ ಈ ನೃತ್ಯ ವೈಭವ ಜನರಲ್ಲಿ ಜಾಗೃತಿ ಮೂಡಿಸಲಿದೆ ಎಂದರು. ಉಡುಪಿ ಜಿಲ್ಲಾಧ್ಯಕ್ಷ ಕೆ.ವಾಸುದೇವ ರಾವ್ ಮಾತನಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ವಹಿಸ ಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಬೃಜೇಶ್ ಚೌಟ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ಸಮಾವೇಶದಲ್ಲಿ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಪದಗ್ರಹಣ, ಅಂಗವಿಕಲ ವಿದ್ಯಾರ್ಥಿಗಳಿಗೆ ವ್ಹೀಲ್ಚೆಯರ್, ಶ್ರವಣಯಂತ್ರಗಳ ವಿತರಣೆ, ಗುರು ವಂದನೆ, ನಾಡು-ನುಡಿಗಾಗಿ ಅಪ್ರತಿಮ ಸೇವೆ ಸಲ್ಲಿಸಿದ ಸಾಧಕರಿಗೆ ಕನ್ನಡ ರತ್ನ ಪ್ರಶಸ್ತಿ, ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಕಾಪು ತಾಲೂಕು ಅಧ್ಯಕ್ಷ ಫಾರೂಕ್, ಗಂಗಾಧರ ಬಿರ್ತಿ ಹಾಗೂ ಶಂಸುದ್ದೀನ್ ಮಜೂರು ಉಪಸ್ಥಿತರಿದ್ದರು.
ಕೆ.ಎಲ್.ರಾಹುಲ್ ಶತಕ| ಮುಂಬೈ ತಂಡಕ್ಕೆ ಸೋಲು, ಕರ್ನಾಟಕ ಸೆಮಿ ಫೈನಲ್ಗೆ ಲಗ್ಗೆ
ಮುಂಬೈ, ಫೆ.9: ಕೆ.ಎಲ್.ರಾಹುಲ್ ಆಕರ್ಷಕ ಶತಕದ ಸಹಾಯದಿಂದ ಕರ್ನಾಟಕ ತಂಡವು 42 ಬಾರಿಯ ಚಾಂಪಿಯನ್ಸ್ ಮುಂಬೈ ತಂಡವನ್ನು ನಾಲ್ಕು ವಿಕೆಟ್ಗಳ ಅಂತರದಿಂದ ಮಣಿಸಿತು. ಈ ಮೂಲಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೆಮಿ ಫೈನಲ್ಗೆ ಪ್ರವೇಶಿಸಿದೆ. ಸೋಮವಾರ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ನ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೆಲ್ಲಲು 325 ರನ್ ಚೇಸ್ ಮಾಡಿದ ಕರ್ನಾಟಕ ತಂಡವು ಭಾರತದ ಬ್ಯಾಟರ್ ರಾಹುಲ್ ಅವರ 24ನೇ ಪ್ರಥಮ ದರ್ಜೆ ಕ್ರಿಕೆಟ್ ಶತಕದ(130 ರನ್, 182 ಎಸೆತ, 14 ಬೌಂಡರಿ, 1 ಸಿಕ್ಸರ್)ಸಹಾಯದಿಂದ ಗುರಿ ತಲುಪಿತು. ಆರ್. ಸ್ಮರಣ್ರಿಂದ ಉತ್ತಮ ಬೆಂಬಲ ಪಡೆದ ರಾಹುಲ್ ನಾಲ್ಕನೇ ವಿಕೆಟ್ಗೆ 147 ರನ್ ಜೊತೆಯಾಟ ನಡೆಸಿದರು. ರಾಹುಲ್-ಸ್ಮರಣ್ ಅವರ ಜೊತೆಯಾಟದ ನೆರವಿನಿಂದ ಭೋಜನ ವಿರಾಮದ ವೇಳೆಗೆ ಕರ್ನಾಟಕ ತಂಡವು 3 ವಿಕೆಟ್ಗಳ ನಷ್ಟಕ್ಕೆ 265 ರನ್ ಗಳಿಸಿತು. ತುಷಾರ್ ದೇಶಪಾಂಡೆ ಅವರು ರಾಹುಲ್ ಇನಿಂಗ್ಸ್ಗೆ ತೆರೆ ಎಳೆದು ಮುಂಬೈ ತಂಡಕ್ಕೆ ಗೆಲುವಿನ ವಿಶ್ವಾಸ ಮೂಡಿಸಿದರು. ತುಷಾರ್ ಹಾಗೂ ತನುಷ್ ಕೋಟ್ಯಾನ್ ಇನ್ನೆರಡು ವಿಕೆಟ್ಗಳನ್ನು ಉರುಳಿಸಿದಾಗ ಕರ್ನಾಟಕ ತಂಡವು 285 ರನ್ಗೆ ಆರು ವಿಕೆಟ್ಗಳನ್ನು ಕಳೆದುಕೊಂಡಿದ್ದು, ಗೆಲ್ಲಲು ಇನ್ನೂ 40 ರನ್ ಅಗತ್ಯವಿತ್ತು. ಒತ್ತಡದಲ್ಲೂ ಉತ್ತಮ ಪ್ರದರ್ಶನ ನೀಡಿದ 22ರ ಹರೆಯದ ಸ್ಮರಣ್ 123 ಎಸೆತಗಳಲ್ಲಿ 11 ಬೌಂಡರಿಗಳ ಸಹಿತ ಔಟಾಗದೆ 83 ರನ್ ಗಳಿಸಿದರು. ವಿದ್ಯಾಧರ ಪಾಟೀಲ್ ಗೆಲುವಿನ ರನ್ ಗಳಿಸಿದ್ದು, ಇದು ಎಂಟು ಬಾರಿಯ ಚಾಂಪಿಯನ್ ಕರ್ನಾಟಕ ತಂಡಕ್ಕೆ ಮಹತ್ವದ ಗೆಲುವಾಗಿದೆ. ಪಂಜಾಬ್ ತಂಡದ ವಿರುದ್ಧದ ಈ ಹಿಂದಿನ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದ ರಾಹುಲ್ ಉಪಸ್ಥಿತಿಯು ಕರ್ನಾಟಕದ ಯಶಸ್ಸಿಗೆ ಕಾರಣವಾಯಿತು. ಕರ್ನಾಟಕ ತಂಡವು ಮುಂದಿನ ವಾರ ಬೆಂಗಳೂರಿನಲ್ಲಿ ನಡೆಯಲಿರುವ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಎದುರಿಸಲಿದೆ.
Reservation: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೀಸಲಾತಿ ಹೆಚ್ಚಳ: ಸಿ.ಎಂ ಸಿದ್ದರಾಮಯ್ಯ ಹೇಳಿದ್ದೇನು
ಕರ್ನಾಟಕ ಸರ್ಕಾರವು ಸಾಮಾಜಿಕ ನ್ಯಾಯದ ಪರವಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರವನ್ನು ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ-2026 ಮತ್ತು ಜನ ಜಾಗೃತಿ ಜಾಥಾ ಮಹೋತ್ಸವವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಟಿ-20 ಕ್ರಿಕೆಟ್| ಒಮಾನ್ ವಿರುದ್ಧ ಝಿಂಬಾಬ್ವೆಗೆ ಗೆಲುವು
ಕೊಲಂಬೊ, ಫೆ.9: ವೇಗದ ಬೌಲರ್ಗಳಾದ ಬ್ಲೆಸ್ಸಿಂಗ್ ಮುಝರಬನಿ(3-16), ರಿಚರ್ಡ್ ಗರಾವಾ(3-17) ಹಾಗೂ ಬ್ರಾಡ್ ಎವನ್ಸ್(3-18)ಆಕರ್ಷಕ ಬೌಲಿಂಗ್ ನೆರವಿನಿಂದ ಝಿಂಬಾಬ್ವೆ ತಂಡವು ಒಮಾನ್ ತಂಡದ ವಿರುದ್ಧ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಎಂಟು ವಿಕೆಟ್ಗಳ ಅಂತರದಿಂದ ಜಯ ಸಾಧಿಸಿತು. ಸೋಮವಾರ ನಡೆದ ‘ಬಿ’ ಗುಂಪಿನ ಪಂದ್ಯದಲ್ಲಿ ಗೆಲ್ಲಲು 104 ರನ್ ಗುರಿ ಪಡೆದ ಝಿಂಬಾಬ್ವೆ ತಂಡವು 13.3 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿದೆ. ಆರಂಭಿಕ ಆಟಗಾರ ಬ್ರಿಯಾನ್ ಬೆನ್ನೆಟ್(ಔಟಾಗದೆ 48 ರನ್, 36 ಎಸೆತ, 7 ಬೌಂಡರಿ)ಹಾಗೂ ವಿಕೆಟ್ಕೀಪರ್-ಬ್ಯಾಟರ್ ಬ್ರೆಂಡನ್ ಟೇಲರ್(31 ರನ್, 30 ಎಸೆತ, 3 ಬೌಂಡರಿ)ಸಂಘಟಿತ ಪ್ರದರ್ಶನದ ನೆರವಿನಿಂದ ಝಿಂಬಾಬ್ವೆ ತಂಡವು ಇನ್ನೂ 39 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ನಗೆ ಬೀರಿತು. ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿರುವ ಒಮಾನ್ ತಂಡವು 19.5 ಓವರ್ಗಳಲ್ಲಿ ಕೇವಲ 103 ರನ್ಗೆ ಆಲೌಟಾಯಿತು. ತ್ರಿವಳಿ ವೇಗಿಗಳಾದ ಮುಝರ್ಬನಿ, ಎವನ್ಸ್ ಹಾಗೂ ರಿಚರ್ಡ್ ಎಎಸ್ಸಿಯ ಬೌನ್ಸಿ ಪಿಚ್ನಲ್ಲಿ ಎದುರಾಳಿ ತಂಡವನ್ನು ಕಾಡಿದರು. ಟಿ-20 ವಿಶ್ವಕಪ್ ಪಂದ್ಯದಲ್ಲಿ ಇದೇ ಮೊದಲ ಬಾರಿ ವೇಗದ ಬೌಲರ್ಗಳು ಈ ಸಾಧನೆ ಮಾಡಿದ್ದಾರೆ. ಪವರ್ಪ್ಲೇನಲ್ಲಿ ಮೂರು ವಿಕೆಟ್ಗಳು ಪತನಗೊಂಡವು. ಒಮಾನ್ ತಂಡವು 27 ರನ್ಗೆ ಐದು ವಿಕೆಟ್ಗಳನ್ನು ಕಳೆದುಕೊಂಡಿತು. ಆಗ ವಿನಾಯಕ ಶುಕ್ಲಾ(28 ರನ್, 21 ಎಸೆತ), ಸುಫಿಯಾನ್ ಮೆಹಮೂದ್(25 ರನ್, 39 ಎಸೆತ)ಆರನೇ ವಿಕೆಟ್ಗೆ 42 ರನ್ ಸೇರಿಸಿದರು. ನದೀಂ ಖಾನ್(20 ರನ್, 18 ಎಸೆತ)ಸಾಧಾರಣ ಪ್ರದರ್ಶನ ನೀಡಿದರು. ಝಿಂಬಾಬ್ವೆ ತಂಡದ ಪರವಾಗಿ ಬ್ಲೆಸ್ಸಿಂಗ್ ಮುಝರಬನಿ(3-16), ರಿಚರ್ಡ್ ಗರಾವ(3-17)ಹಾಗೂ ಬ್ರಾಡ್ ಎವನ್ಸ್(3-18)ತಲಾ ಮೂರು ವಿಕೆಟ್ಗಳನ್ನು ಕಬಳಿಸಿದರು.
ಎ.25ರವರೆಗೆ ಮಂಗಳೂರು ಜಂಕ್ಷನ್-ಮುಂಬೈ ಎಕ್ಸ್ಪ್ರೆಸ್ ರೈಲಿನ ಸಂಚಾರದಲ್ಲಿ ವ್ಯತ್ಯಯ
ಉಡುಪಿ, ಫೆ.9: ಮುಂಬೈ ಸಿಎಸ್ಎಂಟಿ ರೈಲು ನಿಲ್ದಾಣದ ಪ್ಲಾಟ್ಫಾರಂ ನಂ.16 ಮತ್ತು 17ರಲ್ಲಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಥಾಣೆ ಹಾಗೂ ದಾದರ್ಗೆ ನಿಲ್ಲಿಸಲು ಕೇಂದ್ರೀಯ ರೈಲ್ವೆ ನಿರ್ಧರಿಸಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ. ಮಂಗಳೂರು ಜಂಕ್ಷನ್ ಹಾಗೂ ಮುಂಬೈ ಸಿಎಸ್ಎಂಟಿ ನಡುವೆ ಸಂಚರಿಸುವ ನಂ.12134 ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ಮುಂದಿನ ಎಪ್ರಿಲ್ ತಿಂಗಳ 25ರ ಶನಿವಾರದವರೆಗೆ ಥಾಣೆ ನಿಲ್ದಾಣದಲ್ಲೇ ಕೊನೆಗೊಳಿಸಲಾಗುತ್ತಿದೆ. ಅದೇ ರೀತಿ ಮಡಗಾಂವ್ ಜಂಕ್ಷನ್ ಹಾಗೂ ಮುಂಬೈ ಸಿಎಸ್ಎಂಟಿ ನಡುವೆ ಸಂಚರಿಸುವ ತೇಜಸ್ ಎಕ್ಸ್ಪ್ರೆಸ್ನ ಸಂಚಾರವನ್ನು ಎಪ್ರಿಲ್ 25ರವರೆಗೆ ದಾದರ್ ನಿಲ್ದಾಣದಲ್ಲೇ ಕೊನೆಗೊಳಿಸಲಾಗುವುದು ಎಂದೂ ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಮಾಜಿ ಸೇನಾ ಮುಖ್ಯಸ್ಥ ನರವಣೆಯವರ ಅಪ್ರಕಟಿತ ಕೃತಿಯ ಪ್ರಸಾರ: ದಿಲ್ಲಿ ಪೊಲೀಸರಿಂದ ಎಫ್ಐಆರ್ ದಾಖಲು
ಹೊಸದಿಲ್ಲಿ,ಫೆ.9: ಸಾಮಾಜಿಕ ಮಾಧ್ಯಮಗಳಲ್ಲಿ ಮಾಜಿ ಸೇನಾ ಮುಖ್ಯಸ್ಥ ಜ.ನರವಣೆ ಅವರ ಅಪ್ರಕಟಿತ ಕೃತಿಯ ಪ್ರಸಾರಕ್ಕಾಗಿ ದಿಲ್ಲಿ ಪೋಲಿಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಸೋಮವಾರ ಅಧಿಕೃತ ಹೇಳಿಕೆಯು ತಿಳಿಸಿದೆ. ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕೃತಿಯ ಮುದ್ರಣ ಪೂರ್ವ ಪ್ರತಿಯನ್ನು ಸಕ್ಷಮ ಅಧಿಕಾರಿಗಳಿಂದ ಕಡ್ಡಾಯ ಅನುಮತಿಯನ್ನು ಪಡೆಯದೆ ಪ್ರಸಾರ ಮಾಡಲಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳು ಮತ್ತು ಆನ್ಲೈನ್ ಸುದ್ದಿ ವೇದಿಕೆಗಳಲ್ಲಿ ಹರಿದಾಡುತ್ತಿರುವ ಮಾಹಿತಿಯನ್ನು ದಿಲ್ಲಿ ಪೋಲಿಸರು ಗಮನಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪೊಲೀಸ್ ಹೇಳಿಕೆಯ ಪ್ರಕಾರ,ಕೃತಿಯ ಪ್ರಕಟಣೆಗೆ ಅಗತ್ಯವಾದ ಅನುಮತಿಯನ್ನು ಸಂಬಂಧಿತ ಅಧಿಕಾರಿಗಳಿಂದ ಈವರೆಗೂ ಸ್ವೀಕರಿಸಲಾಗಿಲ್ಲ ಎಂದು ವರದಿಯಾಗಿದೆ. ಪರಿಶೀಲನೆಯ ಬಳಿಕ, ಅದೇ ಶೀರ್ಷಿಕೆಯೊಂದಿಗೆ ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾ ಪ್ರೈ.ಲಿ.ಸಿದ್ಧಪಡಿಸಿರುವ ಟೈಪ್-ಸೆಟ್ ಕೃತಿಯ ಪಿಡಿಎಫ್ ಪ್ರತಿಯು ಕೆಲವು ವೆಬ್ಸೈಟ್ಗಳಲ್ಲಿ ಲಭ್ಯವಿರುವುದು ಕಂಡು ಬಂದಿದೆ. ಕೆಲವು ಆನ್ಲೈನ್ ಮಾರಾಟ ತಾಣಗಳೂ ಕೃತಿಯು ಖರೀದಿಗೆ ಲಭ್ಯವಿದೆ ಎಂಬಂತೆ ಪೂರ್ಣಗೊಂಡ ಪುಸ್ತಕದ ಮುಖಪುಟವನ್ನು ಪ್ರದರ್ಶಿಸಿವೆ ಎಂದು ಹೇಳಿಕೆಯು ತಿಳಿಸಿದೆ. ದಿಲ್ಲಿ ಪೊಲೀಸರ ವಿಶೇಷ ಘಟಕವು ಪ್ರಕರಣವನ್ನು ದಾಖಲಿಸಿಕೊಂಡಿದ್ದು,ಇನ್ನೂ ಅನುಮೋದನೆ ಪಡೆದಿರದ ಅಪ್ರಕಟಿತ ಕೃತಿಯ ಸೋರಿಕೆಯಾಗಿದ್ದು ಹೇಗೆ ಎಂಬ ಬಗ್ಗೆ ತನಿಖೆಯನ್ನು ನಡೆಸುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಈ ಕೃತಿಯ ಪ್ರತಿಯನ್ನು ಪ್ರದರ್ಶಿಸಿದ್ದರು. ಇದು ಸದನದಲ್ಲಿ ತೀವ್ರ ಕಾವೇರಿಸಿದ್ದು,ಕಲಾಪಗಳಿಗೆ ವ್ಯತ್ಯಯಗಳನ್ನುಂಟು ಮಾಡಿತ್ತು. ಎಂಟು ಪ್ರತಿಪಕ್ಷ ಸದಸ್ಯರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತನ್ನೂ ಮಾಡಲಾಗಿದೆ. ‘ಮೂರ್ನಾಲ್ಕು ಸಲ ನನಗೆ ಮಾತನಾಡಲು ಅವರು ಅವಕಾಶ ನೀಡಲಿಲ್ಲ. ಕೃತಿಯನ್ನು ಉಲ್ಲೇಖಿಸಲು ಸಾಧ್ಯವಿಲ್ಲ ಎಂದು ಅವರು ಮೊದಲು ಹೇಳಿದ್ದರು. ನಾನು ಕೃತಿಯನ್ನಲ್ಲ,ಮ್ಯಾಗಝಿನ್ ಉಲ್ಲೇಖಿಸುತ್ತಿದ್ದೇನೆ ಎಂದು ತಿಳಿಸಿದ್ದೆ. ಆಗ ಅವರು ಮ್ಯಾಗಝಿನ್ ಅನ್ನೂ ಉಲ್ಲೇಖಿಸುವಂತಿಲ್ಲ ’ಎಂದು ಹೇಳಿದ್ದರು ಎಂದು ರಾಹುಲ್ ತಿಳಿಸಿದರು. ‘ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪುಸ್ತಕವು ಪ್ರಕಟಗೊಂಡಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಪುಸ್ತಕವು ಪ್ರಕಟಗೊಂಡಿದೆ ಮತ್ತು ನಮ್ಮ ಬಳಿ ಅದರ ಪ್ರತಿಯಿದೆ’ ಎಂದು ಹೇಳಿದ ರಾಹುಲ್,ಅದು ವಿದೇಶಗಳಲ್ಲಿ ಲಭ್ಯವಿದೆ,ಆದರೆ ಭಾರತದಲ್ಲಿ ಪ್ರಕಟಿಸಲು ಅನುಮತಿಸಲಾಗಿಲ್ಲ ಎಂದು ತಿಳಿಸಿದರು.
ವಿಜಯನಗರ | ಫೆ.13 ರಿಂದ 15ರವರೆಗೆ ಹಂಪಿ ಉತ್ಸವ
ಉತ್ಸವ ಯಶಸ್ವಿಗೆ ಜಿಲ್ಲಾಡಳಿತ ಸನ್ನದ್ದ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ಟಿ-20 ಕ್ರಿಕೆಟ್| ಮೈಕಲ್ ಲೀಸ್ಕ್ ಆಲ್ರೌಂಡ್ ಆಟ: ಇಟಲಿ ವಿರುದ್ಧ ಸ್ಕಾಟ್ಲ್ಯಾಂಡ್ಗೆ ಭರ್ಜರಿ ಜಯ
ಕೋಲ್ಕತಾ, ಫೆ.9: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲ್ಯಾಂಡ್ ತಂಡವು ಮೈಕಲ್ ಲೀಸ್ಕ್ ಆಲ್ರೌಂಡ್ ಆಟದ(ಔಟಾಗದೆ 22, 4-17)ನೆರವಿನಿಂದ ಚೊಚ್ಚಲ ಪಂದ್ಯವನ್ನಾಡಿದ ಇಟಲಿ ತಂಡವನ್ನು 73 ರನ್ಗಳ ಅಂತರದಿಂದ ಮಣಿಸಿದೆ. ಈಡನ್ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ‘ಸಿ’ ಗುಂಪಿನ ಏಳನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲ್ಯಾಂಡ್ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ಗಳ ನಷ್ಟಕ್ಕೆ 207 ರನ್ ಗಳಿಸಿದೆ. ಇದಕ್ಕುತ್ತರವಾಗಿ ಇಟಲಿ ತಂಡವು 16.4 ಓವರ್ಗಳಲ್ಲಿ ಕೇವಲ 134 ರನ್ ಗಳಿಸಿ ಆಲೌಟಾಗಿದೆ. ಎರಡು ದಿನಗಳ ಹಿಂದೆ ಕೋಲ್ಕತಾದಲ್ಲಿ ವೆಸ್ಟ್ಇಂಡೀಸ್ ವಿರುದ್ಧ ಸೋತಿದ್ದ ಸ್ಕಾಟ್ಲ್ಯಾಂಡ್ ತಂಡವು ಇದೀಗ ಗೆಲುವಿನ ಖಾತೆ ತೆರೆದು ಎರಡು ಪಾಯಿಂಟ್ಸ್ ಗಳಿಸಿತು. ಬೆನ್ ಮನೆಂಟಿ(52 ರನ್, 31 ಎಸೆತ, 5 ಬೌಂಡರಿ, 1 ಸಿಕ್ಸರ್)ಅರ್ಧಶತಕ ಗಳಿಸಿ ಏಕಾಂಗಿ ಹೋರಾಟ ನೀಡಿದರು. ಹ್ಯಾರಿ ಮನೆಂಟಿ (37 ರನ್)ಹಾಗೂ ಜೆಜೆ ಸ್ಮಟ್ಸ್(22 ರನ್)ಎರಡಂಕೆಯ ಸ್ಕೋರ್ ಗಳಿಸಿದರು. ಸ್ಕಾಟ್ಲ್ಯಾಂಡ್ ತಂಡದ ಪರ ಮೈಕಲ್ ಲೀಸ್ಕ್(4-17)ಯಶಸ್ವಿ ಪ್ರದರ್ಶನ ನೀಡಿದರೆ, ಮಾರ್ಕ್ ವ್ಯಾಟ್(2-24)ಎರಡು ವಿಕೆಟ್ ಪಡೆದರು. ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಸ್ಕಾಟ್ಲ್ಯಾಂಡ್ ತಂಡವು ಜಾರ್ಜ್ ಮುನ್ಸೆ(84 ರನ್, 54 ಎಸೆತ, 13 ಬೌಂಡರಿ, 2 ಸಿಕ್ಸರ್)ಅರ್ಧಶತಕದ ಕೊಡುಗೆ ಹಾಗೂ ಮೈಕಲ್ ಜಾನ್ಸ್ (37 ರನ್, 30 ಎಸೆತ)ಹಾಗೂ ಮೈಕಲ್ ಲೀಸ್ಕ್(ಔಟಾಗದೆ 22 ರನ್ , 5 ಎಸೆತ) ನೆರವಿನಿಂದ 4 ವಿಕೆಟ್ಗಳ ನಷ್ಟಕ್ಕೆ 207 ರನ್ ಕಲೆ ಹಾಕುವಲ್ಲಿ ಯಶಸ್ವಿಯಾಯಿತು. ಸ್ಕಾಟ್ಲ್ಯಾಂಡ್ ತಂಡವು ಪುರುಷರ ಟಿ20 ವಿಶ್ವಕಪ್ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಅಸೋಸಿಯೇಟ್ ತಂಡವಾಗಿದೆ. ಹಿಂದಿನ ಆವೃತ್ತಿಯಲ್ಲಿ 3 ವಿಕೆಟ್ಗಳ ನಷ್ಟಕ್ಕೆ 197 ರನ್ ಗಳಿಸಿದ್ದ ಅಮೆರಿಕ ತಂಡದ ದಾಖಲೆಯನ್ನು ಮುರಿದಿದೆ.
ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ: ಗೌರವ್ ಗೊಗೋಯಿ
ದಿಸ್ಪುರ, ಫೆ. 9: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೋಮು ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೋಯ್ ಸೋಮವಾರ ಆರೋಪಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಹಂಚಿಕೊಂಡಿದೆ ಎನ್ನಲಾದ ವಿವಾದಾತ್ಮಕ ವೀಡಿಯೊವನ್ನು ಪೊಲೀಸರು ಸ್ವಯಂ ಪ್ರೇರಿತವಾಗಿ ಗಮನಕ್ಕೆ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಅಸ್ಸಾಂ ಬಿಜೆಪಿ ಈ ಹಿಂದೆ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ ಹಾಗೂ ಈಗ ಅಳಿಸಿದ ವೀಡಿಯೊವನ್ನು ಗೊಗೋಯಿ ಅವರು ಉಲ್ಲೇಖಿಸಿದ್ದಾರೆ. ಆ ವೀಡಿಯೊದಲ್ಲಿ ಶರ್ಮಾ ಅವರು ರೈಫಲ್ ಗುರಿಯಿರಿಸಿ ಇಬ್ಬರು ವ್ಯಕ್ತಿಗಳ ಮೇಲೆ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿತ್ತು. ಒಬ್ಬರು ಸ್ಕಲ್ ಕ್ಯಾಪ್ ಧರಿಸಿದ್ದರು ಹಾಗೂ ಇನ್ನೊಬ್ಬರು ಗಡ್ಡ ಬಿಟ್ಟಿದ್ದರು. ಜೊತೆಗೆ ‘ಪಾಯಿಂಟ್ ಬ್ಲಾಂಕ್ ಶಾಟ್’ ಎಂಬ ಶೀರ್ಷಿಕೆ ಇತ್ತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೊಗೋಯಿ, ವೀಡಿಯೊ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿರಿಸಿಕೊಂಡಿದೆ ಎಂದಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಅವರು ಕೆಟ್ಟ ಹಾಗೂ ಅಪಾಯಕಾರಿ ವಿಷಯಗಳನ್ನು ಹರಡಲು ಸಾಮಾಜಿಕ ಮಾಧ್ಯಮವನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದರು. ಗೊಗೋಯ್ ಹಾಗೂ ಅವರ ಕುಟುಂಬ ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದೆ ಎಂದು ಬಿಜೆಪಿ ಪದೇ ಪದೇ ಆರೋಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಶರ್ಮಾ ಹಾಗೂ ಗೊಗೋಯಿ ನಡುವೆ ವಾಕ್ಸಮರ ನಡೆಯುತ್ತಿದೆ. ಈ ನಡುವೆ ಗೊಗೋಯಿ ಅವರು ಈ ಹೇಳಿಕೆ ನೀಡಿದ್ದಾರೆ.
ಪಂಜಾಬ್| ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ: ಸಹಪಾಠಿಯಿಂದ ಕೃತ್ಯ
ಚಂಡಿಗಢ, ಫೆ. 9: ಕಾನೂನು ವಿದ್ಯಾರ್ಥಿಯೋರ್ವ ತರಗತಿ ಒಳಗೆ ಸಹಪಾಠಿ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಹತ್ಯೆಗೈದ ಬಳಿಕ ತಾನು ಕೂಡ ಗುಂಡು ಹಾರಿಸಿಕೊಂಡ ಘಟನೆ ಪಂಜಾಬ್ನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ಉಸ್ಮಾ ಗ್ರಾಮದಲ್ಲಿರುವ ಕಾಲೇಜಿನಲ್ಲಿ ಸೋಮವಾರ ಈ ಘಟನೆ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಸಂದೀಪ್ ಕೌರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿದ್ಯಾರ್ಥಿ ಪ್ರಿನ್ಸ್ ರಾಜಾ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂದೀಪ್ ಪನ್ನುವಾನ್ ಗ್ರಾಮದ ನೌಶೇರಾದ ನಿವಾಸಿ. ರಾಜಾ ಮಲ್ಲಿಯನ್ ಗ್ರಾಮದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಾ ಹಾಗೂ ಸಂದೀಪ್ ಇಬ್ಬರೂ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳು ಹಾಗೂ ಸಹಪಾಠಿಗಳು ಅವರು ಹೇಳಿದ್ದಾರೆ. ತರಗತಿ ಕೊಠಡಿ ಒಳಗೆ ರಾಜಾ ಸಹಪಾಠಿ ಸಂದೀಪ್ ಕೌರ್ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ. ಅನಂತರ ತಾನೂ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗ್ಬೀರ್ ಸಿಂಗ್ ತಿಳಿಸಿದ್ದಾರೆ. ಈ ಹತ್ಯೆಯ ಹಿಂದಿ ಕಾರಣವನ್ನು ನಿರ್ಧರಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಲೇಜಿನ ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿಯಲ್ಲಿ ತರಗತಿಯಲ್ಲಿ ರಾಜಾ ಹಾಗೂ ಸಂದೀಪ್ ಒಟ್ಟಿಗೆ ಕುಳಿತುಕೊಂಡಿರುವುದು ದಾಖಲಾಗಿದೆ. ತರಗತಿಯಲ್ಲಿ ಇತರ ವಿದ್ಯಾರ್ಥಿಗಳು ಕೂಡ ಕುಳಿತುಕೊಂಡಿರುವುದು ಕಂಡು ಬಂದಿದೆ.
ವಿಜಯನಗರ | ಯುಜಿಸಿ ನಿಯಮಾವಳಿಗಳನ್ನು ತಕ್ಷಣ ಜಾರಿಗೆ ತರಲು ಡಿ.ಎಸ್.ಎಸ್ ಒತ್ತಾಯ
ವಿಜಯನಗರ / ಹೊಸಪೇಟೆ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಎಸ್.ಎಸ್) ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಯುಜಿಸಿ ರೂಪಿಸಿರುವ ಎಸ್ಸಿ, ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಸಮಾನ ಪ್ರೋತ್ಸಾಹ ನೀಡುವ ನಿಯಮಾವಳಿಗಳನ್ನು ತಕ್ಷಣ ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ (ಹೊಸಪೇಟೆ) ಮೂಲಕ ಪ್ರಧಾನಮಂತ್ರಿ ಹಾಗೂ ಕೇಂದ್ರ ಮಾನವ ಸಂಪನ್ಮೂಲ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಿದ ಜಿಲ್ಲಾ ವಿಭಾಗದ ಅಧಿಕಾರಿಯಾದ ಉದಯಕುಮಾರ್ ಅವರು ಮಾತನಾಡಿ, ಸಂವಿಧಾನದ ಮೂಲಕ ಸಮಾಜಮುಖಿ ಬದುಕು ಮತ್ತು ಮಾನವ ಹಕ್ಕುಗಳು ಅನೇಕ ಸಮುದಾಯಗಳಿಗೆ ದೊರಕಿವೆ. ಶಿಕ್ಷಣದ ಮೂಲಕ ಶತಮಾನಗಳಿಂದಲೂ ಮುಂದುವರಿದ ಜಾತಿ, ಲಿಂಗ ಮತ್ತು ವರ್ಗ ಆಧಾರಿತ ತಾರತಮ್ಯದಿಂದ ಮುಕ್ತಿ ಪಡೆಯಲು ದಲಿತ, ಹಿಂದುಳಿದ ಹಾಗೂ ಬುಡಕಟ್ಟು ವಿದ್ಯಾರ್ಥಿಗಳು ಆಶಾವಾದಿಗಳಾಗಿದ್ದಾರೆ. ಆದರೆ ಈ ಹಿನ್ನೆಲೆಯಲ್ಲಿ ಕೆಲವು ವಿರೋಧಾತ್ಮಕ ಷಡ್ಯಂತ್ರಗಳು ನಡೆಯುತ್ತಿರುವುದು ಆತಂಕಕಾರಿ ಎಂದು ಹೇಳಿದರು. ಯುಜಿಸಿ ರೂಪಿಸಿರುವ ನಿಯಮಾವಳಿಗಳನ್ನು ವಿಶೇಷವಾಗಿ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಪ್ರತ್ಯೇಕವಾಗಿ ಜಾರಿಗೊಳಿಸಬೇಕೆಂದು ಅವರು ಒತ್ತಾಯಿಸಿದರು. ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ, ಮೆರವಣಿಗೆ ಹಾಗೂ ಧರಣಿ ನಡೆಸಿ ಮನವಿ ಸಲ್ಲಿಸಲಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಮನವಿಯನ್ನೂ ಜಿಲ್ಲಾಧಿಕಾರಿಗಳ ಮೂಲಕ ನೀಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಳಂಬ ನೀತಿಯನ್ನು ಅನುಸರಿಸದೇ ದಲಿತ ವಿದ್ಯಾರ್ಥಿಗಳ ಸಮಾನತೆ ಮತ್ತು ಉತ್ತೇಜನಕ್ಕಾಗಿ ತಕ್ಷಣ ಕ್ರಮ ಕೈಗೊಳ್ಳಬೇಕು. ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಡಿ.ಎಸ್.ಎಸ್ ಆಗ್ರಹಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಮರಿಸ್ವಾಮಿ, ಸೋಮಶೇಖರ, ಕೊಟಾಲ್ ವೀರೇಶ, ಹೆಚ್. ನಾಗಪ್ಪ, ಮರಿಯಮ್ಮನಹಳ್ಳಿ ಜಗನ್ನಾಥ, ಮರಿಯಮ್ಮನಹಳ್ಳಿ ಮಂಜಪ್ಪ, ಸಂತೋಷ ಕುಮಾರ್, ಉದಯಕುಮಾರ್ ಹೆಚ್.ಆರ್., ಪರಶುರಾಮ ಎಂ., ಜಯರಾಮ, ಮರಿದಾಸ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ನರವಣೆ ಅವರ ಪುಸ್ತಕಕ್ಕೆ ಹೆದರಿ ಪ್ರಧಾನಿ ಮೋದಿ ಲೋಕಸಭೆಗೆ ಗೈರು: ರಾಹುಲ್ ಗಾಂಧಿ ವಾಗ್ದಾಳಿ
ಹೊಸದಿಲ್ಲಿ, ಫೆ. 9: ರಾಷ್ಟ್ರಪತಿ ಅವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಬರಲಿಲ್ಲ. ವಿರೋಧ ಪಕ್ಷಗಳು ಎತ್ತಿದ ವಿಷಯಗಳಿಗೆ, ಮುಖ್ಯವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅವರ ಪುಸ್ತಕದಲ್ಲಿರುವ ಉಲ್ಲೇಖಗಳಿಗೆ ಹೆದರಿ ಮೋದಿ ಅವರು ಸದನದಿಂದ ದೂರ ಉಳಿದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಸಂಸದರಿಂದ ಪ್ರಧಾನಿಗೆ ಭದ್ರತಾ ಬೆದರಿಕೆ ಇತ್ತು ಎಂಬ ಪ್ರತಿಪಾದನೆಯನ್ನು ತಿರಸ್ಕರಿಸಿರುವ ರಾಹುಲ್ ಗಾಂಧಿ, ಆರೋಪ ಮಾಡುತ್ತಿರುವವರು ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು. ಯಾರಾದರೂ ತಾನು ಪ್ರಧಾನಿ ಮೇಲೆ ದಾಳಿ ಮಾಡಲಿದ್ದೇನೆ ಎಂದು ಹೇಳಿದರೆ, ದಯವಿಟ್ಟು ಆತನ ವಿರುದ್ಧ ಪ್ರಕರಣ ದಾಖಲಿಸಿ, ಆ ವ್ಯಕ್ತಿಯನ್ನು ಬಂಧಿಸಿ. ನೀವು ಅದನ್ನು ಮಾಡುತ್ತಿಲ್ಲ ಏಕೆ ? ಎಂದು ಅವರು ಪ್ರಶ್ನಿಸಿದ್ದಾರೆ. ‘‘ಇದರಲ್ಲಿ ಯಾವುದೇ ಸಂದೇಹ ಇಲ್ಲ. ಸತ್ಯ ತುಂಬಾ ಸ್ಪಷ್ಟವಾಗಿದೆ. ಪ್ರಧಾನಿ ಅವರು ಸದನಕ್ಕೆ ಬರಲು ಹೆದರಿದ್ದು ಸದಸ್ಯರ ಕಾರಣಕ್ಕೆ ಅಲ್ಲ. ಬದಲಾಗಿ ನಾನು ಏನು ಹೇಳುತ್ತಿದ್ದೇನೆಯೊ ಆ ಕಾರಣಕ್ಕೆ. ಅವರಿಗೆ ಸತ್ಯವನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಅವರು ಈಗಲೂ ಹೆದರುತ್ತಿದ್ದಾರೆ’’ ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು. ಕಾಂಗ್ರೆಸ್ ಸದಸ್ಯರು ಪ್ರಧಾನಿ ಮೇಲೆ ದಾಳಿ ಮಾಡುವ ಪ್ರಶ್ನೆಯೇ ಇರಲಿಲ್ಲ ಎಂದು ಅವರು ಹೇಳಿದರು. ಅಲ್ಲದೆ, ಮೋದಿ ಅವರಿಗೆ ಸದನವನ್ನು ಎದುರಿಸುವ ಧೈರ್ಯ ಇರಬೇಕಿತ್ತು ಎಂದರು. ‘‘ನಾವು ಏನು ಹೇಳುತ್ತೇವೆಯೋ ಎಂದು ಅವರಿಗೆ ಭಯವಾಗಿತ್ತು. ಮೊದಲ ಹಂತವಾಗಿ ನರವಣೆ ಅವರ ಪುಸ್ತಕವನ್ನು ನೀಡಬಹುದೆಂದು ಎಂದು ಅವರಿಗೆ ಭಯವಾಗಿತ್ತು’’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಬಜೆಟ್ ಕುರಿತ ವ್ಯಾಪಕ ಚರ್ಚೆಯನ್ನು ಸರಕಾರ ತಪ್ಪಿಸುತ್ತಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. ಬಜೆಟ್ ಬಗ್ಗೆ ಚರ್ಚೆ ನಡೆಸುವ ಬಗ್ಗೆ ಸರಕಾರ ಆತಂಕಗೊಂಡಿದೆ. ಯಾಕೆಂದರೆ, ಅಮೆರಿಕದೊಂದಿಗಿನ ಒಪ್ಪಂದದ ವಿಷಯ, ಅದನ್ನು ಮಾಡಿಕೊಂಡ ರೀತಿ, ರೈತರ ಮೇಲೆ ಅದರ ಪರಿಣಾಮ ಇವೆಲ್ಲವುಗಳ ಬಗ್ಗೆ ಚರ್ಚೆ ನಡೆಯುತ್ತದೆ. ಈ ಚರ್ಚೆ ನಡೆಯುವುದನ್ನು ಸರಕಾರ ಬಯಸುವುದಿಲ್ಲ. ಇದು ನನ್ನ ಊಹೆ ಎಂದು ರಾಹುಲ್ ಗಾಂಧಿ ಹೇಳಿದರು.
ಬಳ್ಳಾರಿ | ಡಿ.ಅಂತಾಪುರ ಸರಕಾರಿ ಪ್ರೌಢ ಶಾಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ
ಬಳ್ಳಾರಿ / ಸಂಡೂರು: ಡಿ. ಅಂತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವನ್ನು ಸಂಸದ ಈ ತುಕಾರಾಂ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ನಿರಂತರ ಅಧ್ಯಯನದ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಡಿಜಿಟಲ್ ತಂತ್ರಜ್ಞಾನದ ಸಮರ್ಪಕ ಬಳಕೆ ವಿದ್ಯಾರ್ಥಿಗಳಲ್ಲಿ ಅಧ್ಯಯನದ ಆಸಕ್ತಿಯನ್ನು ಹೆಚ್ಚಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಸಹಕಾರಿಯಾಗಲಿದೆ ಎಂದರು. ಉತ್ತಮ ಅಂಕಗಳೊಂದಿಗೆ ಶೈಕ್ಷಣಿಕ ಸಾಧನೆ ಮಾಡುವುದರ ಜೊತೆಗೆ ವ್ಯಕ್ತಿತ್ವದ ಬೆಳವಣಿಗೆಯಲ್ಲಿಯೂ ವಿದ್ಯಾರ್ಥಿಗಳು ಮುನ್ನಡೆಯಬೇಕು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಡಿಜಿಟಲ್ ಗ್ರಂಥಾಲಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಶಾಲೆಯ ಶೈಕ್ಷಣಿಕ ಮಟ್ಟವನ್ನು ಮತ್ತಷ್ಟು ಉನ್ನತಿಗೆ ಕೊಂಡೊಯ್ಯಲಿ ಎಂದು ಅವರು ಆಶಿಸಿದರು. ಈ ಹೊಸ ಸೌಲಭ್ಯದಿಂದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ಸಂಪನ್ಮೂಲಗಳು ಲಭ್ಯವಾಗುತ್ತಿದ್ದು, ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಹೊಸ ಉತ್ತೇಜನ ದೊರೆಯಲಿದೆ ಎಂದು ತಿಳಿಸಿದರು.
ಸೈಬರ್ ವಂಚನೆ ತಡೆಯಲು ಎಸ್ಒಪಿ ರೂಪಿಸಿ: ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ಹೊಸದಿಲ್ಲಿ, ಫೆ. 9: ಡಿಜಿಟಲ್ ವಂಚನೆಗಳ ಮೂಲಕ 54,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ವರ್ಗಾವಣೆಯು ‘‘ದರೋಡೆಯೇ ಆಗಿದೆ’’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ. ಇಂಥ ವಂಚನೆಗಳನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ), ಬ್ಯಾಂಕ್ಗಳು ಮತ್ತು ದೂರಸಂಪರ್ಕ ಇಲಾಖೆ ಮುಂತಾದ ಸಂಬಂಧಪಟ್ಟ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ ಸಾಮಾನ್ಯ ಕಾರ್ಯಾಚರಣಾ ವಿಧಾನ (ಎಸ್ಒಪಿ)ವೊಂದನ್ನು ಸಿದ್ಧಪಡಿಸುವಂತೆ ಸರ್ವೋಚ್ಛ ನ್ಯಾಯಾಲಯವು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ. ಡಿಜಿಟಲ್ ವಂಚನೆಗಳ ಮೂಲಕ ನಡೆಸಲಾಗುತ್ತಿರುವ ಹಣ ಕಳ್ಳತನವು ಹಲವು ಸಣ್ಣ ರಾಜ್ಯಗಳ ಬಜೆಟ್ಗಿಂತಲೂ ಅಧಿಕವಾಗಿದೆ ಎಂದು ಮುಖ್ಯ ನ್ಯಾಯಾಧೀಶ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಯಮಲ್ಯ ಬಾಗ್ಚಿ ಮತ್ತು ಎನ್.ವಿ. ಅಂಜಾರಿಯ ಅವರನ್ನು ಒಳಗೊಂಡ ನ್ಯಾಯಪೀಠವೊಂದು ಅಭಿಪ್ರಾಯಪಟ್ಟಿತು. ಇಂಥ ವಂಚನೆಗಳು ಬ್ಯಾಂಕ್ ಸಿಬ್ಬಂದಿಯ ಶಾಮೀಲಾತಿ ಅಥವಾ ನಿರ್ಲಕ್ಷ್ಯದಿಂದ ಸಂಭವಿಸುತ್ತಿರಬಹುದು ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ ಆರ್ಬಿಐ ಮತ್ತು ಬ್ಯಾಂಕ್ಗಳು ಸಕಾಲಿಕ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿತು. ಕೇಂದ್ರ ಸರಕಾರಕ್ಕೆ ಹೊಸ ನಿರ್ದೇಶನಗಳನ್ನು ನೀಡಿದ ನ್ಯಾಯಾಲಯವು, ಆರ್ಬಿಐಯ ಪ್ರಮಾಣಿತ ಕಾರ್ಯಾಚರಣಾ ವಿಧಾನ ಹಾಗೂ ದೂರಸಂಪರ್ಕ ಇಲಾಖೆಯ ಇಂಥದೇ ಪ್ರಮಾಣಿತ ಕಾರ್ಯಾಚರಣಾ ವಿಧಾನ ಅಥವಾ ನಿರ್ಧಾರಗಳನ್ನು ಗಣನೆಗೆ ತೆಗೆದುಕೊಳ್ಳುವಂತೆ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಸೂಚಿಸಿತು. ಸೈಬರ್ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಡೆಬಿಟ್ ಕಾರ್ಡ್ಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಬ್ಯಾಂಕ್ಗಳು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಒಳಗೊಂಡ ಪ್ರಮಾಣಿತ ಕಾರ್ಯಾಚರಣಾ ವಿಧಾನವೊಂದನ್ನು ಆರ್ಬಿಐ ರೂಪಿಸಿದೆ ಎಂದು ನ್ಯಾಯಾಲಯ ಹೇಳಿತು. ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ಪರಿಹಾರ ನೀಡಲು ರೂಪುರೇಷೆಗಳನ್ನು ಸಿದ್ಧಪಡಿಸುವುದಕ್ಕಾಗಿ ಜಂಟಿ ಸಭೆಯೊಂದನ್ನು ನಡೆಸುವಂತೆಯೂ ನ್ಯಾಯಾಲಯವು ಆರ್ಬಿಐ, ದೂರಸಂಪರ್ಕ ಇಲಾಖೆ ಮತ್ತು ಸಂಬಂಧಪಟ್ಟ ಇತರರಿಗೆ ನಿರ್ದೇಶನ ನೀಡಿತು. ಡಿಜಿಟಲ್ ಬಂಧನ ಸಂತ್ರಸ್ತರಿಗೆ ನೀಡುವ ಪರಿಹಾರವನ್ನು ನಿರ್ಧರಿಸಲು ಪ್ರಾಯೋಗಿಕ ಹಾಗೂ ಉದಾರವಾದಿ ನೀತಿಯೊಂದನ್ನು ಅನುಸರಿಸಬೇಕು ಎಂದು ಅದು ಹೇಳಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ನಾಲ್ಕು ವಾರಗಳ ಮಟ್ಟಿಗೆ ಮುಂದೂಡಿತು.
ಬಳ್ಳಾರಿ | ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಿವಾರ ಗ್ರಾಮದ 1ನೇ ವಾರ್ಡ್ ನಿವಾಸಿ ಬಸವರಾಜ್ ಹೆಚ್ (35) ಅವರು ಫೆಬ್ರವರಿ 05ರಂದು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಅವರ ಪತ್ತೆಗೆ ಸಾರ್ವಜನಿಕರು ಸಹಕರಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಚಹರೆ ಗುರುತು: ಸುಮಾರು 5.8 ಅಡಿ ಎತ್ತರ, ದುಂಡು ಮುಖ, ಕಪ್ಪು ಮೈಬಣ್ಣ, ಕಪ್ಪು ಕೂದಲು ಹೊಂದಿದ್ದಾರೆ. ಬಲಗೈಯಲ್ಲಿ ಅಚ್ಚೆ ಹಾಕಿಸಿಕೊಂಡಿದ್ದು, ಬಲಗಡೆಯ ಹಣೆಯ ಮೇಲೆ ಪುಲ್ಪುರೆ (ಗಾಯದ ಗುರುತು) ಇದೆ. ಕಾಣೆಯಾದ ವೇಳೆ ಬಿಳಿ ಬಣ್ಣದ ಅಂಗಿ ಹಾಗೂ ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ (ದೂ. 08392-276461, ಮೊ. 9480803049) ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ (ದೂ. 08392-258100) ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಬಳ್ಳಾರಿ | ತಾಯಿ–ಮಗು ಕಾಣೆ: ಪತ್ತೆಗೆ ಮನವಿ
ಬಳ್ಳಾರಿ : ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ನಿವಾಸಿ ಸುಶ್ಮಿತಾ (28) ಎಂಬ ಮಹಿಳೆ ತನ್ನ 2 ವರ್ಷದ ಮಗ ಸಂಜಯ್ ಜೊತೆಗೆ ಜ.22ರಂದು ಕಾಣೆಯಾಗಿರುವ ಘಟನೆ ನಡೆದಿದೆ. ಈ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಾರ್ವಜನಿಕರು ಸಹಕರಿಸಬೇಕೆಂದು ತನಿಖಾಧಿಕಾರಿಗಳು ಮನವಿ ಮಾಡಿದ್ದಾರೆ. ಸುಶ್ಮಿತಾ ಚಹರೆ ಗುರುತು: ಸುಮಾರು 5.5 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದಾರೆ. ಕಾಣೆಯಾದ ವೇಳೆ ಪಿಂಕ್ ಬಣ್ಣದ ಕುಪ್ಪಸ ಹಾಗೂ ಆಕಾಶ ನೀಲಿ ಬಣ್ಣದ ಸೀರೆ ಧರಿಸಿದ್ದರು. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಸಂಜಯ್ ಚಹರೆ ಗುರುತು: ಸುಮಾರು 2 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದಾನೆ. ಕಾಣೆಯಾದ ವೇಳೆ ಟಿ-ಶರ್ಟ್ ಹಾಗೂ ಚಡ್ಡಿ ಧರಿಸಿದ್ದನು. ಮೇಲ್ಕಂಡ ಚಹರೆಯುಳ್ಳ ತಾಯಿ ಮತ್ತು ಮಗುವಿನ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಚೋರನೂರು ಪೊಲೀಸ್ ಠಾಣೆಯ ಪಿಎಸ್ಐ (ಮೊ. 9480803063), ಸಂಡೂರು ಸಿಪಿಐ (ಮೊ. 9480803036), ತೋರಣಗಲ್ಲು ಡಿಎಸ್ಪಿ (ಮೊ. 9480803010) ಅಥವಾ ಬಳ್ಳಾರಿ ಎಸ್ಪಿ (ಮೊ. 9480803000) ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಬೆಂಗಳೂರು : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ ವಂದನಾ ನಿರ್ಣಯವನ್ನು ಅಂಗೀಕರಿಸಲಾಗಿದೆ. ಇದನ್ನು ಓರ್ವ ಪ್ರಧಾನಿ ಸಂಸತ್ತನ್ನು ನಿರ್ಲಕ್ಷಿಸುವುದೆಂದರೆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ನಡೆ ಎಂದರ್ಥ ಎಂದು ಉಲ್ಲೇಖಿಸಿದ್ದಾರೆ. ಅಧಿಕಾರರೂಢ ಬಿಜೆಪಿ ಪಕ್ಷ ಮೊದಲು ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡದೆ ತಡೆಯಿತು, ನಂತರ ತಾನೂ ಮಾತನಾಡದೆ ಮೌನಕ್ಕೆ ಶರಣಾಯಿತು. ಇದು ಬಹಳ ಆತಂಕಕಾರಿ ಬೆಳವಣಿಗೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಮ್ಮ ವಂದನಾ ನಿರ್ಣಯದ ಭಾಷಣದಲ್ಲಿ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಪುಸ್ತಕದಲ್ಲಿದ್ದ ದೇಶದ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಚಾರಗಳನ್ನು ಪ್ರಸ್ತಾಪಿಸಲು ಮುಂದಾದಾಗ ಅವರ ಮಾತನ್ನು ಸಂಪೂರ್ಣವಾಗಿ ತಡೆಯಲಾಯಿತು ಎಂದು ಅವರು ಹೇಳಿದ್ದಾರೆ. ಆ ಪುಸ್ತಕದಲ್ಲಿ 2020ರ ಚೀನಾ ಗಡಿ ಸಂಘರ್ಷದ ಸಂದರ್ಭ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳುವ ಬದಲು ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಮುಖ್ಯಸ್ಥರಿಗೆ ಕೇವಲ ‘ಜೋ ಉಚಿತ್ ಸಮಝೋ, ವೋಹ್ ಕರೋ’ (ನಿಮಗೆ ಯೋಗ್ಯವೆನಿಸಿದ್ದನ್ನು ಮಾಡಿ) ಎಂದು ಹೇಳಿದ್ದಾಗಿ ದಾಖಲಾಗಿದೆ. ಇದು ಪ್ರಧಾನಿ ಮೋದಿ ಅವರ ನಾಯಕತ್ವದ ಟೊಳ್ಳುತನವನ್ನು ಜಗಜ್ಜಾಹೀರುಗೊಳಿಸಿರುವುದು ಮಾತ್ರವಲ್ಲ, ಮೋದಿ ತಾನೇ ಕಟ್ಟಿಕೊಂಡಿರುವ 56 ಇಂಚಿನ ಎದೆಯೊಳಗಿನ ಪುಕ್ಕಲುತನವನ್ನು ಬಯಲು ಮಾಡಿದೆ ಎಂದು ಅವರು ಟೀಕಿಸಿದ್ದಾರೆ. ಪ್ರಧಾನಿ ಮೋದಿ ಈ ಪಲಾಯನವಾದಿ ನಡೆಯು ಸಂಸತ್ತಿನಲ್ಲಿ ಚರ್ಚೆ ಆಗಬಾರದೆಂಬ ಕಾರಣಕ್ಕೆ ರಾಹುಲ್ ಗಾಂಧಿ ಅವರು ಭಾಷಣ ಮಾಡದಂತೆ ತಡೆಯಲಾಗಿದೆ. ದೇಶದ ಬಹುಸಂಖ್ಯೆಯ ಜನರನ್ನು ಪ್ರತಿನಿಧಿಸುವ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಇಂತಹ ಗಂಭೀರ ಪ್ರಶ್ನೆಗಳನ್ನು ಎದುರಿಸುವ ಬದಲು ಪ್ರಧಾನಿ ಮೋದಿ ಅವರು ಲೋಕಸಭೆಗೆ ಗೈರಾಗಿರುವುದು ನಿಜಕ್ಕೂ ನಾಚಿಕೆಗೇಡು. ಪ್ರಧಾನಿ ಮೋದಿ ಸಂಪೂರ್ಣವಾಗಿ ಹೆದರಿದ್ದಾರೆ, ಹಾಗಾಗಿ ಅವರು ಸಂಸತ್ತಿಗೆ ಹಾಜರಾಗುವ ಧೈರ್ಯವನ್ನು ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ಮುಂಚಿತವಾಗಿಯೇ ಹೇಳಿದ್ದರು. ಅದರಂತೆ ಮೋದಿ ಅವರು ಲೋಕಸಭೆಯಿಂದ ದೂರ ಉಳಿಯುವ ಮೂಲಕ ತಾನು ಭೀತಿಗೊಂಡಿರುವುದನ್ನು ರುಜು ಮಾಡಿದ್ದಾರೆ. ತನ್ನ ನಿರ್ಧಾರದ ಬಗ್ಗೆ ಆತ್ಮವಿಶ್ವಾಸವಿಲ್ಲದವರು, ಹೀಗೆ ಚರ್ಚೆಯಿಂದ ಯಾವಾಗಲೂ ಹಿಂದೆ ಸರಿಯುವವರು ದೇಶಕ್ಕೆ ಅದ್ಯಾವ ಸಮರ್ಥ ನಾಯಕತ್ವ ನೀಡಲು ಸಾಧ್ಯ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ @narendramodi ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್ಗೆ ತೋರಿಸಿರುವ ಅಗೌರವ ಮಾತ್ರವಲ್ಲ, ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ ವಂದನಾ ನಿರ್ಣಯವನ್ನು… pic.twitter.com/IGHR4eRHnb — Siddaramaiah (@siddaramaiah) February 9, 2026
Cm Change: ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲಿದ್ದೇನೆ: ಡಿಸಿಎಂ ಡಿ.ಕೆ ಶಿವಕುಮಾರ್
Cm Change: ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ
ಪ್ರತಿಪಕ್ಷಗಳಿಂದ ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ
ಹೊಸದಿಲ್ಲಿ,ಫೆ.9: ಪ್ರತಿಪಕ್ಷಗಳು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ಸೋಮವಾರ ವರದಿ ಮಾಡಿದೆ. ಸೋಮವಾರ ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಚರ್ಚಿಸಲಾಗಿದ್ದು, ಇಂಡಿಯಾ ಮೈತ್ರಿಕೂಟದ ಭಾಗವಲ್ಲದ ಟಿಎಂಸಿ ಸೇರಿದಂತೆ ಎಲ್ಲ ಪ್ರತಿಪಕ್ಷಗಳು ಇದಕ್ಕೆ ಸಹಮತ ವ್ಯಕ್ತಪಡಿಸಿವೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ಪ್ರತಿಪಕ್ಷವು ಕನಿಷ್ಠ 100 ಸದಸ್ಯರ ಸಹಿಗಳನ್ನು ಸಲ್ಲಿಸುವ ಅಗತ್ಯವಿದೆ. ಸೋಮವಾರ ಸ್ಪೀಕರ್ ಬಿರ್ಲಾ ಅವರು ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡುವ ಮುನ್ನ ಪ್ರತಿಪಕ್ಷಗಳು ಕಲಾಪಗಳಿಗೆ ಅಡ್ಡಿಯನ್ನುಂಟು ಮಾಡಲು ಯೋಜಿಸುತ್ತಿವೆ ಎಂದು ಆರೋಪಿಸಿದ ಬಳಿಕ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಪ್ರಸ್ತಾವವು ಬಲಗೊಂಡಿದೆ. ಕಳೆದ ವಾರ ನಿರಂತರ ಪ್ರತಿಭಟನೆಗಳ ನಡುವೆ ಕಲಾಪಕ್ಕೆ ವ್ಯತ್ಯಯಗಳ ಜೊತೆಗೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ವಾಗ್ಯುದ್ಧದ ಬಳಿಕ ಸೋಮವಾರ ಮತ್ತೆ ಲೋಕಸಭೆಯನ್ನು ಮುಂದೂಡಲಾಯಿತು. ಸದನವು ಪ್ರಶ್ನೆವೇಳೆಯನ್ನು ಕೈಗೆತ್ತಿಕೊಂಡಾಗ ವಿಷಯಗಳನ್ನು ಎತ್ತಲು ಆರಂಭಿಸಿದ ಪ್ರತಿಪಕ್ಷ ಸದಸ್ಯರು ತಕ್ಷಣವೇ ಅವುಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು. ಶೂನ್ಯವೇಳೆಯಲ್ಲಿ ಅಥವಾ ಕೇಂದ್ರ ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಅವುಗಳನ್ನು ಪ್ರಸ್ತಾವಿಸಬಹುದು ಎಂದು ಸ್ಪೀಕರ್ ಬಿರ್ಲಾ ತಿಳಿಸಿದರು. ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಮಾತನಾಡಲು ಅವಕಾಶ ನೀಡುವಂತೆ ಕಾಂಗ್ರೆಸ್ ಸದಸ್ಯರು ಸೇರಿದಂತೆ ಪ್ರತಿಪಕ್ಷಗಳ ಸಂಸದರು ಪ್ರತಿಭಟನೆಯನ್ನು ಮುಂದುವರಿಸಿದಾಗ, ಅವರು ಸದನದ ಕಲಾಪಗಳಿಗೆ ಅಡ್ಡಿಯನ್ನುಂಟು ಮಾಡಲು ಯೋಜಿಸಿದ್ದಾರೆ ಎಂದು ಆರೋಪಿಸಿದ ಬಿರ್ಲಾ ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು. 12 ಗಂಟೆಗೆ ಸದನವು ಮತ್ತೆ ಸೇರಿದಾಗಲೂ ಪ್ರತಿಭಟನೆ ಮುಂದುವರಿದಿದ್ದರಿಂದ ಕಲಾಪವನ್ನು ಅಪರಾಹ್ನ ಎರಡು ಗಂಟೆಯವರೆಗೆ ಮತ್ತು ನಂತರ ದಿನದ ಮಟ್ಟಿಗೆ ಮುಂದೂಡಲಾಯಿತು. ಸಂಸತ್ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ ಅವರು, ಸದನದಲ್ಲಿ ಪ್ರತಿಪಕ್ಷಗಳಿಗೆ ಅವಕಾಶವೇ ಇಲ್ಲ. ಪ್ರಸಕ್ತ ಅಧಿವೇಶನದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಏನನ್ನೂ ಮಾತನಾಡಲು ಅವಕಾಶ ನೀಡುತ್ತಿಲ್ಲ. ಸರಕಾರದ ಕಡೆಯವರು ಏನು ಬೇಕಾದರೂ ಮಾತನಾಡಬಹುದು, ಅವರು ಯಾರ ಮೇಲೂ ದಾಳಿ ನಡೆಸಬಹುದು, ಅವಹೇಳನಕಾರಿಯಾಗಿ ಮಾತನಾಡಬಹುದು. ಅದೂ ಜೀವಂತವಿಲ್ಲದವರ ಬಗ್ಗೆ ಕೂಡ. ಸ್ಪೀಕರ್ ಕಾಂಗ್ರೆಸ್ ಸಂಸದೆಯರ ವಿರುದ್ಧವೂ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಪ್ರತಿಪಕ್ಷವು ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಲಿದೆಯೇ ಎಂಬ ಪ್ರಶ್ನೆಗೆ ಅವರು,ನಾವು ಕ್ರಮ ಕೈಗೊಂಡ ಬಳಿಕ ನಿಮಗೇ ತಿಳಿಯುತ್ತದೆ ಎಂದು ಉತ್ತರಿಸಿದರು.
ಹೊಸದಿಲ್ಲಿ,ಫೆ.9: ಕೇಂದ್ರ ಮುಂಗಡಪತ್ರದ ಮೇಲೆ ಚರ್ಚೆ ಆರಂಭಕ್ಕೆ ಮುನ್ನ ತನಗೆ ಮಾತನಾಡಲು ಅವಕಾಶ ನೀಡಬೇಕೆಂದು ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಬೇಡಿಕೆ ಕುರಿತು ಸರಕಾರ ಮತ್ತು ಪ್ರತಿಪಕ್ಷದ ನಡುವೆ ಉಂಟಾದ ಬಿಕ್ಕಟ್ಟಿನ ನಡುವೆಯೇ ಸೋಮವಾರ ಲೋಕಸಭೆಯನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಅತ್ತ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡದ್ದನ್ನು ಪ್ರತಿಭಟಿಸಿ ಪ್ರತಿಪಕ್ಷಗಳು ಸಭಾತ್ಯಾಗ ನಡೆಸಿದವು. ಲೋಕಸಭೆಯು ಎರಡು ಸಲ ಮುಂದೂಡಲ್ಪಟ್ಟ ನಂತರ ಅಪರಾಹ್ನ ಎರಡು ಗಂಟೆಗೆ ಸದನವು ಮತ್ತೆ ಸೇರಿದಾಗ ಪೀಠದಲ್ಲಿದ್ದ ಸಂಧ್ಯಾ ರೇ ಅವರು ಬಜೆಟ್ ಮೇಲಿನ ಚರ್ಚೆಯನ್ನು ಆರಂಭಿಸುವಂತೆ ಕಾಂಗ್ರೆಸ್ ಸದಸ್ಯ ಶಶಿ ತರೂರ್ ಅವರಿಗೆ ಸೂಚಿಸಿದರು. ರಾಹುಲ್ ವಿಪಕ್ಷ ನಾಯಕರಾಗಿರುವುದರಿಂದ ತಾನು ಭಾಷಣವನ್ನು ಆರಂಭಿಸುವ ಮುನ್ನ ಕೆಲವು ಅಂಶಗಳನ್ನು ಪ್ರಸ್ತಾವಿಸಲು ಅವರಿಗೆ ಅವಕಾಶ ನೀಡಬೇಕು ಎಂದು ತರೂರ್ ಪೀಠಕ್ಕೆ ತಿಳಿಸಿದರು. ರಾಹುಲ್ ಬಜೆಟ್ ಕುರಿತು ಮಾತನಾಡಲು ಬಯಸಿದರೆ ತನ್ನ ಅಭ್ಯಂತರವಿಲ್ಲ ಎಂದು ಹೇಳಿದ ರೇ, ಭಾಷಣವನ್ನು ಆರಂಭಿಸುವಂತೆ ಅವರಿಗೆ ಸೂಚಿಸಿದರು. ಬಜೆಟ್ ಚರ್ಚೆಗೆ ಮುನ್ನ ಕೆಲವು ಅಂಶಗಳನ್ನು ಪ್ರಸ್ತಾವಿಸಲು ತನಗೆ ಅವಕಾಶ ನೀಡಲು ಸ್ಪೀಕರ್ ಮತ್ತು ಕೆಲವು ಪ್ರತಿಪಕ್ಷ ಸಂಸದರ ನಡುವಿನ ಸಭೆಯಲ್ಲಿ ಒಪ್ಪಿಕೊಳ್ಳಲಾಗಿತ್ತು, ಆದರೆ ಈಗ ಸ್ಪೀಕರ್ ತನ್ನ ಮಾತಿನಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ರಾಹುಲ್ ಹೇಳಿದರು. ತನಗೆ ಅಂತಹ ಒಪ್ಪಂದದ ಬಗ್ಗೆ ಯಾವುದೇ ಮಾಹಿತಿಯಿಲ್ಲ ಮತ್ತು ನೋಟಿಸ್ ಇಲ್ಲದೇ ಯಾವುದೇ ವಿಷಯವನ್ನು ಪ್ರಸ್ತಾವಿಸಲು ತಾನು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ರೇ ಹೇಳಿದರು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಅವರು, ಅಂತಹ ಯಾವುದೇ ಒಪ್ಪಂದವಾಗಿಲ್ಲ ಮತ್ತು ವಿಪಕ್ಷ ನಾಯಕರು ಸ್ಪೀಕರ್ ಬಗ್ಗೆ ಏನಾದರೂ ಹೇಳಲು ಬಯಸಿದ್ದರೆ ಪ್ರತಿಕ್ರಿಯಿಸಲು ಸ್ಪೀಕರ್ ಕೂಡ ಸದನದಲ್ಲಿ ಉಪಸ್ಥಿತರಿರಬೇಕು ಎಂದು ಪ್ರತಿಪಾದಿಸಿದರು. ಸದನದ ಇತರ ಸದಸ್ಯರೂ ಬಜೆಟ್ ಕುರಿತು ಮಾತನಾಡಲಿದ್ದಾರೆ ಮತ್ತು ವ್ಯಾಪಕ ಚರ್ಚೆ ನಡೆಯಲಿದೆ ಎಂದೂ ಅವರು ಹೇಳಿದರು. ಸರಕಾರ ಮತ್ತು ಪ್ರತಿಪಕ್ಷ ತಮ್ಮ ನಿಲುವಿಗೆ ಅಂಟಿಕೊಂಡಿದ್ದರಿಂದ ರೇ ದಿನದ ಮಟ್ಟಿಗೆ ಸದನವನ್ನು ಮುಂದೂಡಿದರು. ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡದ್ದನ್ನು ಪ್ರತಿಭಟಿಸಿ ಪ್ರತಿಪಕ್ಷಗಳ ಸದಸ್ಯರು ಸಭಾತ್ಯಾಗ ನಡೆಸಿದರು. ಪ್ರಶ್ನೆ ವೇಳೆಯಲ್ಲಿ ಎದ್ದು ನಿಂತ ಕಾಂಗ್ರೆಸ್ ಸದಸ್ಯ ಖರ್ಗೆ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಮಾತನಾಡಲು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಅವಕಾಶ ನೀಡದ್ದನ್ನು ಪ್ರಸ್ತಾವಿಸಲು ಮುಂದಾದರು. ಆದರೆ ಸದನದಲ್ಲಿ ಲೋಕಸಭೆಗೆ ಸಂಬಂಧಿಸಿದ ವಿಷಯವನ್ನು ಪ್ರಸ್ತಾವಿಸಲು ಖರ್ಗೆಯವರಿಗೆ ಅವಕಾಶ ನಿರಾಕರಿಸಿದ ಸಭಾಪತಿ ಸಿ.ಪಿ.ರಾಧಾಕೃಷ್ಣನ್, ಅವರು ಹೇಳುವ ಯಾವುದೂ ದಾಖಲಾಗುವುದಿಲ್ಲ ಎಂದು ತಿಳಿಸಿದರು. ಇದಕ್ಕೂ ಮುನ್ನ ಖರ್ಗೆ ಕಳೆದ ವಾರ ಸಂಸತ್ತಿನ ಅಧಿವೇಶನ ನಡೆಯುತ್ತಿದ್ದಾಗ ವಾಣಿಜ್ಯ ಸಚಿವ ಪಿಯೂಷ ಗೋಯಲ್ ಅವರು ಸದನದ ಹೊರಗೆ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಹೇಳಿಕೆ ನೀಡಿದ್ದನ್ನು ಪ್ರಸ್ತಾವಿಸಿದರು. ಸಭಾಪತಿಗಳು ಖರ್ಗೆಯವರಿಗೆ ಮಾತನಾಡಲು ಅವಕಾಶ ನಿರಾಕರಿಸಿದಾಗ ಇಡೀ ಪ್ರತಿಪಕ್ಷ ಸದಸ್ಯರು ಎದ್ದು ನಿಂತು ಪ್ರತಿಭಟನೆಯನ್ನು ನಡೆಸಿದರು. ಸಭಾಪತಿಗಳು ಪ್ರಶ್ನೆ ವೇಳೆಯ ಕಲಾಪವನ್ನು ಕೈಗೆತ್ತಿಕೊಂಡಾಗಲೂ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ ಪ್ರತಿಪಕ್ಷ ಸದಸ್ಯರು ನಂತರ ಸಭಾತ್ಯಾಗ ನಡೆಸಿದರು.
ಬೆಂಗಳೂರು : ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್ಐಆರ್ಗಳನ್ನು ನೋಂದಾಯಿಸಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಇಲಾಖೆ ಸುತ್ತೋಲೆ ಹೊರಡಿಸಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್ಐಆರ್ಗಳ ನೋಂದಣಿಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ರೂಪಿಸಿದ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಎಫ್ಐಆರ್ ಗಳ ಯಾಂತ್ರಿಕ ನೋಂದಣಿ ಮತ್ತು ಬಂಧನವನ್ನು ತಪ್ಪಿಸಲು ಕರ್ನಾಟಕದಲ್ಲಿಯೂ ಅದೇ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಆಪಾದಿತ ಮಾನನಷ್ಟ ಅಥವಾ ಅಂತಹುದೇ ಅಪರಾಧಗಳಿಗೆ ಯಾವುದೇ ಎಫ್ಐಆರ್ ದಾಖಲಿಸುವ ಮೊದಲು, ದೂರುದಾರರು ಕಾನೂನಿನ ಪ್ರಕಾರ ‘ನೊಂದ ವ್ಯಕ್ತಿ’ ಎಂದು ಅರ್ಹತೆ ಹೊಂದಿದ್ದಾರೆಯೇ ಎಂದು ಪೊಲೀಸರು ಪರಿಶೀಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ ದೂರುಗಳು ಸಂಜ್ಞೆಯ ಅಪರಾಧವನ್ನು ಬಹಿರಂಗಪಡಿಸಿದರೆ, ಅಪರಾಧವನ್ನು ದಾಖಲಿಸುವ ಮೊದಲು, ಆಪಾದಿತ ಅಪರಾಧದ ಶಾಸನಬದ್ಧ ಅಂಶಗಳು ಪ್ರಾಥಮಿಕವಾಗಿ ಸಾಬೀತಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ಪ್ರಾಥಮಿಕ ವಿಚಾರಣೆಯನ್ನು ನಡೆಸಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಹಿಂಸೆ, ದ್ವೇಷ ಅಥವಾ ಸಾರ್ವಜನಿಕ ಅವ್ಯವಸ್ಥೆಗೆ ಪ್ರಚೋದನೆಯನ್ನು ಬಹಿರಂಗಪಡಿಸುವ ಪ್ರಾಥಮಿಕ ಮಾಹಿತಿಯ ಪುರಾವೆಗಳಿಲ್ಲದಿದ್ದರೆ, ದ್ವೇಷದ ಪ್ರಚಾರ, ಉದ್ದೇಶಪೂರ್ವಕ ಅವಮಾನ, ಸಾರ್ವಜನಿಕ ಕಿಡಿಗೇಡಿತನ, ಸಾರ್ವಜನಿಕ ಸುವ್ಯವಸ್ಥೆಗೆ ಬೆದರಿಕೆ ಅಥವಾ ದೇಶದ್ರೋಹದ ಆರೋಪದ ಯಾವುದೇ ಪ್ರಕರಣವನ್ನು ದಾಖಲಿಸಲಾಗುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ ರಾಜಕೀಯ ಭಾಷಣ/ಪೋಸ್ಟ್ ರಕ್ಷಣೆ: ಕಠಿಣ, ಆಕ್ರಮಣಕಾರಿ ಅಥವಾ ವಿಮರ್ಶಾತ್ಮಕ ರಾಜಕೀಯ ಭಾಷಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾಂತ್ರಿಕವಾಗಿ ಪ್ರಕರಣಗಳನ್ನು ದಾಖಲಿಸಬಾರದು. ಭಾಷಣವು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದಾಗ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಸನ್ನಿಹಿತ ಬೆದರಿಕೆಯನ್ನುಂಟುಮಾಡಿದಾಗ ಮಾತ್ರ ಕ್ರಿಮಿನಲ್ ಕಾನೂನನ್ನು ಅನ್ವಯಿಸಬಹುದು. ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಮುಕ್ತ ರಾಜಕೀಯ ಟೀಕೆಗೆ ಸಾಂವಿಧಾನಿಕ ರಕ್ಷಣೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ ಮಾನನಷ್ಟವನ್ನು ಅರಿಯಲಾಗದ ಅಪರಾಧ ಎಂದು ವರ್ಗೀಕರಿಸಲಾಗಿರುವುದರಿಂದ, ಪೊಲೀಸರು ಅಂತಹ ವಿಷಯಗಳಲ್ಲಿ ನೇರವಾಗಿ ಎಫ್ಐಆರ್ ಅಥವಾ ಅಪರಾಧವನ್ನು ದಾಖಲಿಸಲು ಸಾಧ್ಯವಿಲ್ಲ. ದೂರುದಾರರು ನ್ಯಾಯ ವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅವರನ್ನು ಸಂಪರ್ಕಿಸಲು ನಿರ್ದೇಶಿಸಬೇಕು. ಬಿಎನ್ಎಸ್ಎಸ್ನ ಸೆಕ್ಷನ್ 174(2) ಅಡಿಯಲ್ಲಿ ಮ್ಯಾಜಿಸ್ಟ್ರೇಟ್ನ ನಿರ್ದಿಷ್ಟ ಆದೇಶದ ಮೇರೆಗೆ ಮಾತ್ರ ಪೊಲೀಸ್ ಕ್ರಮ ಕೈಗೊಳ್ಳಬಹುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಲಾಗಿದೆ. ಬಂಧನ ಮಾರ್ಗಸೂಚಿಗಳ ಅನುಸರಣೆ : ಎಲ್ಲಾ ಸಂದರ್ಭಗಳಲ್ಲಿ, ಪೊಲೀಸರು ಅರ್ನೇಶ್ ಕುಮಾರ್ ವಿ. ಸ್ಟೇಟ್ ಆಫ್ ಬಿಹಾರ,(2014) 8 ಎಸ್ಸಿಸಿ 273 ರಲ್ಲಿ ನಿಗದಿಪಡಿಸಿದ ತತ್ವಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸ್ವಯಂಚಾಲಿತ ಅಥವಾ ಯಾಂತ್ರಿಕ ಬಂಧನಗಳು ಸ್ವೀಕಾರಾರ್ಹವಲ್ಲ ಮತ್ತು ಕ್ರಿಮಿನಲ್ ಪ್ರಕ್ರಿಯೆಯ ಅನುಷ್ಠಾನದಲ್ಲಿ ಪ್ರಮಾಣಾನುಗುಣತೆಯ ತತ್ವವನ್ನು ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಸೂಕ್ಷ್ಮ ಪ್ರಕರಣಗಳಲ್ಲಿ ಪೂರ್ವ ಕಾನೂನು ಪರಿಶೀಲನೆ: ರಾಜಕೀಯವನ್ನು ಒಳಗೊಂಡ ವಿಷಯಗಳಲ್ಲಿ ಭಾಷಣ/ಪೋಸ್ಟ್ ಅಥವಾ ಇತರ ಸೂಕ್ಷ್ಮ ಅಭಿವ್ಯಕ್ತಿ ರೂಪಗಳ ಕುರಿತು, ಪ್ರಸ್ತಾವಿತ ಕ್ರಮವು ಕಾನೂನುಬದ್ಧವಾಗಿ ಸುಸ್ಥಿರವಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ಎಫ್ಐಆರ್ ದಾಖಲಿಸುವ ಮೊದಲು ಪಬ್ಲಿಕ್ ಪ್ರಾಸಿಕ್ಯೂಟರ್ನಿಂದ ಪೂರ್ವ ಕಾನೂನು ಅಭಿಪ್ರಾಯವನ್ನು ಪಡೆಯಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ ಕ್ಷುಲ್ಲಕ ಅಥವಾ ಪ್ರೇರಿತ ದೂರುಗಳು: ದೂರು ಕಂಡುಬಂದಲ್ಲಿ ಕ್ಷುಲ್ಲಕ, ಕಿರಿಕಿರಿ ಅಥವಾ ರಾಜಕೀಯ ಪ್ರೇರಿತವಾಗಿದ್ದರೆ, ತನಿಖೆಗೆ ಸಾಕಷ್ಟು ಆಧಾರಗಳಿಲ್ಲ ಎಂದು ಉಲ್ಲೇಖಿಸಿ ಪೊಲೀಸರು ಬಿಎನ್ಎಸ್ಎಸ್ನ ಸೆಕ್ಷನ್ 176(1)ರ ಅಡಿಯಲ್ಲಿ ಪ್ರಕರಣವನ್ನು ಮುಕ್ತಾಯಗೊಳಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಮೇಲಿನ ಮಾರ್ಗಸೂಚಿಗಳನ್ನು ಅಕ್ಷರಶಃ ಪಾಲಿಸಲು ಮತ್ತು ಅದನ್ನು ತಮ್ಮ ಘಟಕಗಳ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ತಲುಪಿಸಲು ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
ಬಳ್ಳಾರಿ | ಫೆ.24ರಂದು ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ: ಅಚ್ಚುಕಟ್ಟಾದ ಸಿದ್ಧತೆಗೆ ಶಾಸಕ ಭರತ್ ರೆಡ್ಡಿ ಸೂಚನೆ
ಬಳ್ಳಾರಿ, ಫೆ.09: ಇದೇ ಫೆಬ್ರವರಿ 24ರಂದು ನಡೆಯಲಿರುವ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಸೂಚಿಸಿದರು. ದೇವಸ್ಥಾನದ ಯಾತ್ರಿ ನಿವಾಸ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಅಧಿದೇವತೆಯ ಮಹೋತ್ಸವವನ್ನು ಸಂಪ್ರದಾಯಬದ್ಧವಾಗಿ ಆಚರಿಸಬೇಕು. ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು. ರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಕುಡಿಯುವ ನೀರು, ಸರತಿ ಸಾಲಿನ ವ್ಯವಸ್ಥೆ, ವಾಹನ ನಿಲುಗಡೆ (ಪಾರ್ಕಿಂಗ್), ದೀಪಾಲಂಕಾರ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು. ಸಿಡಿಬಂಡಿ ರಥದಲ್ಲಿ ಅನೇಕರು ಏರುವ ಪ್ರವೃತ್ತಿ ಕಂಡುಬರುವುದರಿಂದ ಸುರಕ್ಷತಾ ದೃಷ್ಟಿಯಿಂದ ಕೆಲವರಿಗೆ ಮಾತ್ರ ಅನುಮತಿ ನೀಡಬೇಕು. ಅವರಿಗೆ ಗುರುತಿನ ಚೀಟಿ ನೀಡುವ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಅಲ್ಲದೆ, ಅಂದು ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಕ್ತಿಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ನೀಡಿದರು. ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಮಾತನಾಡಿ, ಜಾತ್ರಾ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಲು ವಿಶೇಷ ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ತಂಡ, ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ದಳವನ್ನು ಸಿದ್ಧವಾಗಿರಿಸಬೇಕು ಎಂದು ಹೇಳಿದರು. ಬಳ್ಳಾರಿ ನಗರ ಡಿಎಸ್ಪಿ ನಂದಾರೆಡ್ಡಿ ಅವರು, ಕಟ್ಟೆಚ್ಚರ ಕ್ರಮವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಟ್ರಾಫಿಕ್ ನಿರ್ವಹಣೆಗೆ ದೇವಸ್ಥಾನದ ಸುತ್ತಮುತ್ತ ಪ್ರಮುಖ ರಸ್ತೆಗಳಲ್ಲೂ ವಿಶೇಷ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಗಾಣಿಗ ಸಮುದಾಯದ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು, ಭಕ್ತರಿಗೆ ಸುಗಮ ದರ್ಶನಕ್ಕಾಗಿ ಬ್ಯಾರಿಕೇಡ್ ವ್ಯವಸ್ಥೆ ಹಾಗೂ ರಥೋತ್ಸವದ ಸುತ್ತಲೂ ರಕ್ಷಣೆ ಒದಗಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ರಾಜೇಶ್ ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ. ಮಂಜುನಾಥ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಸವಿತಾ ಹೆಚ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಗಾಣಿಗ ಸಮುದಾಯದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸದನಕ್ಕೆ ಬರಲು ಪ್ರಧಾನಿಗೆ ಧೈರ್ಯವಿರಲಿಲ್ಲ: ಲೋಕಸಭಾ ಸ್ಪೀಕರ್ಗೆ ಕಾಂಗ್ರೆಸ್ ಸಂಸದೆಯರಿಂದ ಪತ್ರ
ಹೊಸದಿಲ್ಲಿ,ಫೆ.9: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರವನ್ನು ಬರೆದಿರುವ ಕಾಂಗ್ರೆಸ್ ಸಂಸದೆಯರ ಗುಂಪೊಂದು ತಮ್ಮ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆದರಿಕೆಯನ್ನುಂಟು ಮಾಡಿತ್ತು ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಸದನಕ್ಕೆ ಹಾಜರಾಗಲು ಪ್ರಧಾನಿಯವರಿಗೆ ಧೈರ್ಯವಿರಲಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರತಿಪಕ್ಷ ಸಂಸದೆಯರ ವಿರುದ್ಧ ಸ್ಪೀಕರ್ ಹೇಳಿಕೆಗಳನ್ನು ‘ಸುಳ್ಳು, ಆಧಾರರಹಿತ ಮತ್ತು ಅವಹೇಳನಕಾರಿ’ ಎಂದು ಪತ್ರದಲ್ಲಿ ಬಣ್ಣಿಸಿರುವ ಕಾಂಗ್ರೆಸ್ ಸಂಸದೆಯರು, ಸರಕಾರವು ಪ್ರತಿಪಕ್ಷಕ್ಕೆ ಅದರ ಸಂಸದೀಯ ಹಕ್ಕುಗಳನ್ನು ನಿರಾಕರಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಂಸದೆ ಎಸ್.ಜ್ಯೋತಿಮಣಿ ಬರೆದಿರುವ ಪತ್ರಕ್ಕೆ ಹಲವಾರು ಸಂಸದೆಯರೂ ಸಹಿ ಮಾಡಿದ್ದಾರೆ. ಕಳೆದ ವಾರ ಲೋಕಸಭೆಯಲ್ಲಿ ಕೋಲಾಹಲದಿಂದಾಗಿ ಮೋದಿಯವರಿಗೆ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಲು ಸಾಧ್ಯವಾಗಿಲ್ಲ. 22 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯೋರ್ವರು ಚರ್ಚೆಗಳಿಗೆ ಉತ್ತರಿಸಿರಲಿಲ್ಲ. ಪದೇ ಪದೇ ಮುಂದೂಡಿಕೆಗಳ ನಡುವೆ ವಂದನಾ ನಿರ್ಣಯವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಗಿತ್ತು. ಸದನದಲ್ಲಿ ಮೋದಿಯವರ ಭಾಷಣದ ಸಮಯದಲ್ಲಿ ಕೆಲವು ಕಾಂಗ್ರೆಸ್ ಸಂಸದೆಯರು ಅವರ ಆಸನದ ಬಳಿ ತಲುಪಬಹುದು ಮತ್ತು ಅನಿರೀಕ್ಷಿತ ಘಟನೆಗಳಿಗೆ ಕಾರಣರಾಗಬಹುದು ಎಂಬ ವಿಶ್ವಾಸಾರ್ಹ ಮಾಹಿತಿ ತನಗೆ ಲಭಿಸಿತ್ತು ಎಂದು ಬಿರ್ಲಾ ಹೇಳಿದ್ದರು. ಪ್ರತಿಪಕ್ಷ ಸದಸ್ಯರ ನಡವಳಿಕೆಯನ್ನು ಖಂಡಿಸಿದ್ದ ಅವರು, ಆ ಸಮಯಕ್ಕೆ ಸದನಕ್ಕೆ ಬರದಂತೆ ತಾನು ಪ್ರಧಾನಿಯವರಿಗೆ ಸಲಹೆ ನೀಡಿದ್ದೆ ಎಂದೂ ಹೇಳಿದ್ದರು. ಸ್ಪೀಕರ್ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಬಲವಾಗಿ ವಿರೋಧಿಸಿದ್ದಾರೆ. ಮೋದಿ ಸ್ಪೀಕರ್ ಹಿಂದೆ ಅಡಗಿಕೊಂಡಿದ್ದರು ಎಂದು ಟೀಕಿಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಸರಕಾರವು ಚರ್ಚೆಯಿಂದ ನುಣುಚಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಪ್ರಧಾನಿ ಸತ್ಯಕ್ಕೆ ಹೆದರುತ್ತಿರುವುದರಿಂದ ಸುಳ್ಳುಗಳ ಆಶ್ರಯ ಪಡೆದಿದ್ದಾರೆ ಎಂದು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸಿದ್ದಾರೆ. ತಮ್ಮ ಪ್ರತಿಭಟನೆ ಶಾಂತಿಯುತವಾಗಿತ್ತು ಮತ್ತು ಪ್ರಜಾಪ್ರಭುತ್ವಕ್ಕೆ ಅನುಗುಣವಾಗಿತ್ತು ಎಂದು ಪತ್ರದಲ್ಲಿ ಬಿರ್ಲಾ ಅವರಿಗೆ ತಿಳಿಸಿರುವ ಸಂಸದೆಯರು, ‘ಸದನದಲ್ಲಿ ಪ್ರಧಾನಿ ಮೋದಿಯವರು ಹಾಜರಾಗದಂತೆ ನಮ್ಮಿಂದ ಯಾವುದೇ ಬೆದರಿಕೆಯಿರಲಿಲ್ಲ. ಅದಕ್ಕೆ ಭಯ ಕಾರಣವಾಗಿತ್ತು. ಅವರಿಗೆ ಪ್ರತಿಪಕ್ಷವನ್ನು ಎದುರಿಸುವ ಧೈರ್ಯವಿರಲಿಲ್ಲ’ ಎಂದು ಹೇಳಿದ್ದಾರೆ. ಆಡಳಿತ ಪಕ್ಷವು ಸ್ಪೀಕರ್ ಮೇಲೆ ಒತ್ತಡ ಹೇರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಸಂಸದೆಯರು, ಪೀಠವು ನಿಷ್ಪಕ್ಷವಾಗಿರಬೇಕು ಎಂದಿದ್ದಾರೆ. ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿಯವರಿಗೆ ಮಾತನಾಡಲು ಅವಕಾಶವನ್ನು ಪದೇ ಪದೇ ನಿರಾಕರಿಸಲಾಗಿತ್ತು ಎಂದು ಆರೋಪಿಸಿರುವ ಮಹಿಳಾ ಸದಸ್ಯೆಯರು, ಹಿಂದೆಂದೂ ಇಂತಹುದು ನಡೆದಿರಲಿಲ್ಲ, ಇದು ಅಸಮರ್ಥನೀಯ ಎಂದು ಹೇಳಿದ್ದಾರೆ.
T20 World Cup 2026: ಪಾಕಿಸ್ತಾನ ಇಟ್ಟಿದ್ದ ಮೂರು ಬೇಡಿಯನ್ನ ಮುಲಾಜಿಲ್ಲದೆ ತಿರಸ್ಕರಿಸಿದ ಐಸಿಸಿ
India vs Pakistan T20 World Cup: ಟಿ20 ವಿಶ್ವಕಪ್ ಬಹಿಷ್ಕಾರ ವಿವಾದದ ನಡುವೆಯೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಇಟ್ಟಿದ್ದ ಪ್ರಮುಖ ಬೇಡಿಕೆಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿರಸ್ಕರಿಸಿದೆ. ಭಾರತ ತಂಡದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸರಣಿಯನ್ನು ಪುನರಾರಂಭಿಸುವಂತೆ ಪಿಸಿಬಿ ಒತ್ತಾಯಿಸಿತ್ತು. ಆದರೆ, ಈ ವಿಚಾರದಲ್ಲಿ ತಮಗೆ ಯಾವುದೇ ಅಧಿಕಾರವಿಲ್ಲ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಬೇಡಿಕೆಗಳು
BDA ಶಿವರಾಮ ಕಾರಂತ ಬಡಾವಣೆ 17 ಸಾವಿರ ನಿವೇಶನ 1 ದಿನದಲ್ಲಿ ಭೂ ಮಾಲೀಕರಿಗೆ ಹಂಚಿಕೆಗೆ ನಿರ್ಧಾರ - ಡಿಕೆ ಶಿವಕುಮಾರ್
ಬಿಡಿಎ ನಿರ್ಮಿಸುತ್ತಿರುವ ಬಹುನಿರೀಕ್ಷಿತ ಶಿವರಾಮ ಕಾರಂತ ಬಡಾವಣೆಯು ಬಹುತೇಕ ಮುಕ್ತಾಯ ಹಂತದಲ್ಲಿದೆ. ಈ ಯೋಜನೆಗೆ ಭೂಮಿ ನೀಡಿದ ರೈತರಿಗೆ ಸೈಟ್ಗಳನ್ನು ನೀಡಲು ಕೋರ್ಟ್ ಸೂಚನೆ ನೀಡಿತ್ತು. ಅಂತೆಯೇ 17 ಸಾವಿರ ನಿವೇಶನವನ್ನು ಭೂ ಮಾಲೀಕರಿಗೆ 1 ದಿನದಲ್ಲಿಹಂಚಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ವಿವರ ಇಲ್ಲಿದೆ.
ಅದ್ನಾನ್ ಸಮಿ ಜೊತೆ ಊಟ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಮುಂಬೈ,ಫೆ.9: ಪಾಕ್ ಮೂಲದ ಗಾಯಕ-ಸಂಗೀತ ಸಂಯೋಜಕ ಅದ್ನಾನ್ ಸಮಿ ಜೊತೆ ಊಟ ಮಾಡಿದ್ದಕ್ಕಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸೋಮವಾರ ಟೀಕಿಸಿರುವ ಮಹಾರಾಷ್ಟ್ರ ಕಾಂಗ್ರೆಸ್, ಅದು ರಾಷ್ಟ್ರವಿರೋಧಿ ಕೃತ್ಯಕ್ಕೆ ಸಮನಾಗಿದೆ ಎಂದು ಆರೋಪಿಸಿದೆ. ಆರೆಸ್ಸೆಸ್ನ ಶತಾಬ್ದಿ ಅಂಗವಾಗಿ ವಾರಾಂತ್ಯದಲ್ಲಿ ಮುಂಬೈನಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸೆಲೆಬ್ರಿಟಿಗಳಲ್ಲಿ ಸಮಿ ಸೇರಿದ್ದರು. ‘ಸಮಿ ತಂದೆ ಅರ್ಷದ್ ಸಮಿ ಖಾನ್ ಪಾಕಿಸ್ತಾನದ ವಾಯುಪಡೆಯಲ್ಲಿ ಪೈಲಟ್ ಆಗಿದ್ದರು ಮತ್ತು 1965ರ ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಪಠಾಣಕೋಟ ವಾಯುನೆಲೆಯ ಮೇಲೆ ದಾಳಿ ನಡೆಸಿ ಅದನ್ನು ನಾಶಗೊಳಿಸಿದ್ದರು. ಇಂದು ಭಾಗವತ ಸಮಿ ಜೊತೆ ಊಟವನ್ನು ಆನಂದಿಸುತ್ತಿದ್ದಾರೆ. ಆರೆಸ್ಸೆಸ್=ರಾಷ್ಟ್ರವಿರೋಧಿ’ ಎಂದು ಕಾಂಗ್ರೆಸ್ ಎಕ್ಸ್ ಪೋಸ್ಟ್ನಲ್ಲಿ ಹೇಳಿದೆ. ರವಿವಾರ ತನ್ನ ಎಕ್ಸ್ ಹ್ಯಾಂಡಲ್ನಲ್ಲಿ ಭಾಗವತ್ ಅವರೊಂದಿಗಿನ ಛಾಯಾಚಿತ್ರಗಳನ್ನು ಹಂಚಿಕೊಂಡಿರುವ ಸಮಿ, ‘ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ಕಳೆದ ಮಧ್ಯಾಹ್ನ ಅದ್ಭುತವಾಗಿತ್ತು. ಅವರ ಭಾಷಣವನ್ನು ಕೇಳುವುದು ಸಂತೋಷದಾಯಕವಾಗಿತ್ತು. ಸಂಘದ ಕುರಿತು ಹಲವಾರು ಮಿಥ್ಯೆಗಳು ಮತ್ತು ತಪ್ಪುಕಲ್ಪನೆಗಳನ್ನು ಅವರು ನಿರರ್ಗಳವಾಗಿ ವಿವರಿಸಿದರು ಮತ್ತು ಅವುಗಳನ್ನು ನಿವಾರಿಸಿದರು. ಅವರು ಅದ್ಭುತ ಮತ್ತು ಹೃದಯವಂತ ವ್ಯಕ್ತಿ’ ಎಂದು ಪ್ರಶಂಸಿಸಿದ್ದಾರೆ.
ಶಹಾಪುರ | ವೈದಿಕ ಪ್ರಲೋಭನೆಗೆ ಒಳಗಾದ ಲಿಂಗಾಯತರು ದಾರಿ ತಪ್ಪುತ್ತಿದ್ದಾರೆ: ಗುರುಪಾದ ಸ್ವಾಮೀಜಿ
ಶಹಾಪುರ: ಲಿಂಗಾಯತರು ಬಸವಾದಿ ಶರಣರು ಹೇಳಿದ ತತ್ವಚಿಂತನೆಗಳನ್ನು ಮರೆತು ವೈದಿಕತೆಯತ್ತ ಆಕರ್ಷಿತರಾಗುತ್ತಿರುವುದು ವಿಷಾದಕರ ಸಂಗತಿ ಎಂದು ಫಕೀರೇಶ್ವರ ಮಠದ ಗುರುಪಾದ ಸ್ವಾಮೀಜಿಗಳು ಅಭಿಪ್ರಾಯಪಟ್ಟರು. ನಗರದ ಬಸವ ಮಾರ್ಗ ಪ್ರತಿಷ್ಠಾನ, ಸತ್ಯಂಪೇಟೆಯ ಶಿವನ್ ಕಾರ್ತೀಕ ಅವರ ಗುರುಪ್ರವೇಶದ ಅಂಗವಾಗಿ ಮನೆಯಲ್ಲಿ ಹಮ್ಮಿಕೊಂಡ ‘ಮಹಾಮನೆ’ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಅವರು ಮಾತನಾಡಿದರು. ಯಾವ ಕಾಲವೂ ಶ್ರೇಷ್ಠವೂ ಅಲ್ಲ, ಕನಿಷ್ಠವೂ ಅಲ್ಲ. ಎಲ್ಲವೂ ಇಷ್ಟಲಿಂಗದಲ್ಲಿಯೇ ಅಡಗಿವೆ. ವೈದಿಕ ಪ್ರಲೋಭನೆಗೆ ಒಳಗಾದ ಲಿಂಗಾಯತರು ದಾರಿ ತಪ್ಪುತ್ತಿದ್ದಾರೆ ಎಂದು ಅವರು ಹೇಳಿದರು. ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ ಮಾತನಾಡಿ, ನೂರಾರು ಮಾತುಗಳಿಗಿಂತ ನಮ್ಮ ಬದುಕಿನ ನಡವಳಿಕೆಯೇ ಹೆಚ್ಚು ಜನರನ್ನು ಪ್ರಭಾವಿಸುತ್ತದೆ. ಬಾಲ್ಯದಲ್ಲಿ ಪಡೆದ ಮಾರ್ಗದರ್ಶನ ಇಂದಿಗೂ ಬದುಕಿಗೆ ದಾರಿದೀಪವಾಗಿದೆ. ಶರಣರ ಸಮಗ್ರ ಚಿಂತನೆಗಳನ್ನು ಸಮಾಜ ಅಳವಡಿಸಿಕೊಳ್ಳಬೇಕು ಎಂದರು. ಪ್ರಾಂತರೈತ ಸಂಘದ ಚೆನ್ನಪ್ಪ ಆನೇಗುಂದಿ ಮಾತನಾಡಿ, ಶರಣರು ದುಡಿಯುವ ರೈತಾಪಿ ವರ್ಗದ ಬಗ್ಗೆ ಅಪಾರ ಗೌರವ ಹೊಂದಿದ್ದರು. ಆದರೆ ಇಂದು ರೈತರು ಶೋಷಣೆಗೆ ಒಳಗಾಗುತ್ತಿದ್ದಾರೆ. ಬೆಳೆದ ಬೆಳೆಗೆ ಯೋಗ್ಯ ಬೆಲೆ ಸಿಕ್ಕರೆ ರೈತ ಆತ್ಮಹತ್ಯೆಗೆ ಹೋಗುವುದಿಲ್ಲ. ಸರ್ಕಾರ ಮತ್ತು ಶರಣ ಹೃದಯಿಗಳು ಈ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು ಎಂದು ಕರೆ ನೀಡಿದರು. ಬಸವಮಾರ್ಗ ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾರಾಧ್ಯ ಸತ್ಯಂಪೇಟೆ ಅನುಭಾವ ನೀಡಿ, ಮನೆ ಕಟ್ಟುವುದು ದೊಡ್ಡ ವಿಷಯವಲ್ಲ; ಆ ಮನೆಯಲ್ಲಿ ದೊಡ್ಡ ಮನಸ್ಸು ಇರಬೇಕು. ‘ಇವನಾರವ, ಅವನಾರವ’ ಎಂದು ದೂರ ಮಾಡದೆ ಎಲ್ಲರನ್ನು ಆತ್ಮೀಯವಾಗಿ ಸ್ವೀಕರಿಸಿದಾಗ ಮಾತ್ರ ಮನೆ ಮಹಾಮನೆ ಆಗುತ್ತದೆ. ಮೌಢ್ಯಗಳಿಗೆ ಒಳಗಾಗಿ ಯಜ್ಞಯಾಗಗಳಿಗೆ ಬಲಿಯಾಗಬಾರದು. ಸರಳ, ಸಹಜ ನಡೆ-ನುಡಿಗಳಲ್ಲೇ ದೇವರು ನೆಲೆಸಿದ್ದಾನೆ. ದೇವರನ್ನು ಒಲಿಸಿಕೊಳ್ಳಲು ನಿರ್ಮಲ ಮನಸ್ಸೇ ಸಾಕು ಎಂದು ಹೇಳಿದರು. ಸಾಹಿತಿ ಶಿವಣ್ಣ ಇಜೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಸಿದ್ಧರಾಮ ಹೊನ್ಕಲ್ ಅಧ್ಯಕ್ಷತೆ ವಹಿಸಿದ್ದರು. ಶರಣು ಕಾರ್ಯಕ್ರಮ ನಿರ್ವಹಿಸಿದರು. ಮಡಿವಾಳಮ್ಮ ಇಜೇರಿ ವಂದಿಸಿದರು. ಸಭೆಯಲ್ಲಿ ಶಿವಶಂಕರ ಔರಸಂಗ, ಗುಂಡಪ್ಪ ತುಂಬಗಿ, ವಿರೂಪಾಕ್ಷಿ ಹೇರುಂಡಿ, ಖಾಜಾ ಪಟೇಲ್, ಕರೀಂ ಪಟೇಲ್, ಡಾ. ಪ್ರಭುರಾಜ ಮಡ್ಡಿ, ನಾಡಗೌಡ, ಗುರುಬಸಯ್ಯ ಗದ್ದುಗೆ, ಸೋಮಶೇಖರ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಶಿವಣ್ಣ ಇಜೇರಿ ರಚಿಸಿ ಪ್ರಕಾಶನಗೊಳಿಸಿದ ಪುಸ್ತಕಗಳನ್ನು ಗೌರವವಾಗಿ ನೀಡಲಾಯಿತು.
ಗೂಂಡಾ ರಾಜ್ ಸಹಿಸುವುದಿಲ್ಲ: ದಿಲ್ಲಿ ನ್ಯಾಯಾಲಯದ ಒಳಗೆ ವಕೀಲನ ಮೇಲೆ ಹಲ್ಲೆ ಕುರಿತು ಸಿಜೆಐ ಸೂರ್ಯ ಕಾಂತ್ ಎಚ್ಚರಿಕೆ
ಹೊಸದಿಲ್ಲಿ,ಫೆ. 9: ತನ್ನ ಮೇಲೆ ದಿಲ್ಲಿ ಜಿಲ್ಲಾ ನ್ಯಾಯಾಲಯದ ಒಳಗೆ ಹಲ್ಲೆ ನಡೆಸಲಾಗಿದೆ ಎಂಬುದಾಗಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ಗೆ ದೂರು ಸಲ್ಲಿಸಿದ್ದಾರೆ. ಸೋಮವಾರ ದೂರಿನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಸೂರ್ಯ ಕಾಂತ್, ಈ ಘಟನೆಯ ಬಗ್ಗೆ ತಕ್ಷಣ ಕ್ರಮ ಜಾರಿಯಾಗಬೇಕು, ‘‘ಗೂಂಡಾ ರಾಜ್’’ನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಮುಖ್ಯ ನ್ಯಾಯಾಧೀಶ ಹಾಗೂ ನ್ಯಾಯಮೂರ್ತಿಗಳಾದ ಜಯಮಲ್ಯ ಬಾಗ್ಚಿ ಮತ್ತು ಎನ್.ವಿ. ಅಂಜಾರಿಯ ಅವರನ್ನು ಒಳಗೊಂಡ ನ್ಯಾಯಪೀಠದ ಮುಂದೆ ಈ ಆರೋಪವನ್ನು ಇಡಲಾಯಿತು. ತೀಸ್ ಹಜಾರಿ ನ್ಯಾಯಾಲಯ ಸಂಕೀರ್ಣದ ಒಳಗೆ ಫೆಬ್ರವರಿ 7ರಂದು ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ವಕೀಲರು ಆರೋಪಿಸಿದರು. ‘‘ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಹರ್ಜಿತ್ ಸಿಂಗ್ ಪಾಲ್ರ ನ್ಯಾಯಾಲಯದ ಮುಂದೆ ನಾನು ಹಾಜರಾಗಿದ್ದೆ. ಆರೋಪಿಯ ಪರವಾಗಿ ನಾನು ವಾದಿಸುವವನಿದ್ದೆ. ಆಗ ದೂರುದಾರರ ವಕೀಲರು ಹಲವಾರು ಗೂಂಡಾಗಳೊಂದಿಗೆ ಸೇರಿಕೊಂಡು ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನಗೆ ಥಳಿಸಿದರು. ನ್ಯಾಯಾಧೀಶರು ಅಲ್ಲೇ ಕುಳಿತಿದ್ದರು. ನ್ಯಾಯಾಲಯದ ಎಲ್ಲ ಸದಸ್ಯರೂ ಅಲ್ಲಿದ್ದರು’’ ಎಂದು ವಕೀಲರು ಹೇಳಿದರು. ದಿಲ್ಲಿ ಪೊಲೀಸರು ಅಪರಾಧಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಸಕ್ತಿ ತೋರಿಸುತ್ತಿಲ್ಲ ಎಂದು ಅವರು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಾಧೀಶರು, ದಿಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಲಿಖಿತ ದೂರು ಸಲ್ಲಿಸುವಂತೆ ವಕೀಲರಿಗೆ ಸೂಚಿಸಿದರು. ‘‘ಇಂಥ ಘಟನೆಗಳು ನ್ಯಾಯ ವ್ಯವಸ್ಥೆಯ ಬುಡಕ್ಕೇ ಕೊಡಲಿ ಏಟು ಹಾಕುತ್ತವೆ. ಈ ರೀತಿಯ ಗೂಂಡಾ ರಾಜ್ ನಮಗೆ ಸ್ವೀಕಾರಾರ್ಹವಲ್ಲ. ಇದು ಕಾನೂನು ಮತ್ತು ವ್ಯವಸ್ಥೆಯ ವೈಫಲ್ಯವನ್ನು ಸೂಚಿಸುತ್ತದೆ’’ ಎಂದು ಮುಖ್ಯ ನ್ಯಾಯಾಧೀಶರು ಹೇಳಿದರು.
ಯಾದಗಿರಿ | ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿಗೆ ಆಗ್ರಹಿಸಿ ಫೆ.23ರಂದು ರಾಜ್ಯಮಟ್ಟದ ಜಾಗೃತಿ ಸಮಾವೇಶ
ಯಾದಗಿರಿ: ಕುರುಬ ಸಮಾಜಕ್ಕೆ ನ್ಯಾಯಯುತ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಫೆ.23ರಂದು ಯಾದಗಿರಿ ನಗರದಲ್ಲಿ ರಾಜ್ಯಮಟ್ಟದ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಟ್ಟದ ಕುರುಬರ ಸಂಘದ ರಾಜ್ಯ ಗೌರವಾಧ್ಯಕ್ಷ ಸಿದ್ದಣ್ಣ ತೇಜಿ ತಿಳಿಸಿದ್ದಾರೆ. ಸೋಮವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1976–77ರಲ್ಲಿ ದೇವರಾಜ್ ಅರಸು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಮಂಡಲ ಆಯೋಗದ ವರದಿ ಜಾರಿಗೆ ಬಂದ ಸಂದರ್ಭದಲ್ಲಿ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಇದ್ದ ಕುರುಬ ಸಮಾಜವನ್ನು 24ನೇ ಹಿಂದುಳಿದ ವರ್ಗಕ್ಕೆ ಸೇರಿಸಿದ ಕ್ರಮ ಐತಿಹಾಸಿಕ ಅನ್ಯಾಯವಾಗಿದೆ. ಈ ಅನ್ಯಾಯವನ್ನು ತಕ್ಷಣ ಸರಿಪಡಿಸಬೇಕು ಎಂದು ಆಗ್ರಹಿಸಿದರು. ಎಲ್.ಜಿ. ಹಾವನೂರ್ ಆಯೋಗದ ವರದಿ ಸಂದರ್ಭದಲ್ಲೂ ಕೇಂದ್ರ ಸರ್ಕಾರದ ಯಾವುದೇ ಅಧಿಕೃತ ಆದೇಶವಿಲ್ಲದೆ ಕುರುಬ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿರುವ ಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಿದ್ದುಪಡಿ ಮಾಡಬೇಕು ಎಂದು ಹೇಳಿದರು. ಮೈಸೂರು ಕುಲ ಶಾಸ್ತ್ರೀಯ ಅಧ್ಯಯನ ಸಂಶೋಧನಾ ಸಂಸ್ಥೆಯ ವರದಿಯನ್ನು ಕೇಂದ್ರ ಸರ್ಕಾರ ತಕ್ಷಣ ಅಂಗೀಕರಿಸಿ, ಅದರ ಆಧಾರದಲ್ಲಿ ಕುರುಬ ಸಮಾಜಕ್ಕೆ ಎಸ್ಟಿ ಸ್ಥಾನಮಾನ ನೀಡಬೇಕು. ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಗೊಂಡ ಪರಿಶಿಷ್ಟ ಪಂಗಡ ಸಂಬಂಧಿತ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಶೈಕ್ಷಣಿಕ, ಉದ್ಯೋಗ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡುವ ಮೂಲಕ ಸಮಾನ ನ್ಯಾಯ ಒದಗಿಸಬೇಕು. ಹಳೆಯ ಮೈಸೂರು ಭಾಗದಲ್ಲಿ ಕಾಡುಕುರುಬ, ಜೇನುಕುರುಬರಿಗೆ ನೀಡುತ್ತಿರುವ ಪರಿಶಿಷ್ಟ ಪಂಗಡ ಪ್ರಮಾಣಪತ್ರ ಮಾದರಿಯಂತೆ ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ, ರಾಜಗೊಂಡ ಸಮುದಾಯಗಳಿಗೆ ಯಾವುದೇ ತಾರತಮ್ಯವಿಲ್ಲದೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡುವಂತೆ ರಾಜ್ಯಾದ್ಯಂತ ಏಕಸಮಾನ ಆದೇಶ ಜಾರಿಗೊಳಿಸಬೇಕು ಎಂದರು. ಮುಂದಿನ ಲೋಕಸಭಾ ಅಧಿವೇಶನದೊಳಗೆ ಕುರುಬ ಸಮಾಜದ ನ್ಯಾಯಯುತ ಬೇಡಿಕೆ ಈಡೇರದಿದ್ದಲ್ಲಿ, ದೆಹಲಿಯ ರಾಮಲೀಲಾ ಮೈದಾನ ಅಥವಾ ಜಂತರ್ ಮಂತರ್ನಲ್ಲಿ ನಿರಂತರ ಹೋರಾಟ ಹಮ್ಮಿಕೊಳ್ಳುವ ಚಿಂತನೆ ಇದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಪರಸಣ್ಣ ಗೌಡರು, ಜಿಲ್ಲಾಧ್ಯಕ್ಷ ಶಿವಕುಮಾರ್ ಮುನಗಲ್, ಕರಿಯಪ್ಪ ಕರಿಗಾರ್, ರಾಘವಾಂಕ ಪಾಟೀಲ ಜೈಗ್ರಾಮ, ಭೀಮು ಪೂಜಾರಿ, ನಿಜಲಿಂಗಪ್ಪ ಸಂಭ್ರ, ರವೀಂದ್ರಕುಮಾರ್ ಕಡೇಚೂರು, ಸಿದ್ದು ಪೂಜಾರಿ, ಸಿದ್ಧನಗೌಡ ಹುಣಸಗಿ, ಗಿರೀಶ ಕವಡೆ (ನೀಲಹಳ್ಳಿ), ರೇವಣಸಿದ್ದಪ್ಪ, ದೇವಿಂದ್ರಪ್ಪ ಮಾಡಿಗಿ, ಬೀರಪ್ಪ ನಸಲವಾಯಿ, ಮಾಳಪ್ಪ ಪೂಜಾರಿ ಬಬಲಾದ, ತಾಯಪ್ಪ ಕರಣಿಗಿ ಮತ್ತಿತರರು ಉಪಸ್ಥಿತರಿದ್ದರು.
ಯಾದಗಿರಿ | ಯುಜಿಸಿ 2026 ನಿಯಮಾವಳಿ ಜಾರಿಗೆ ಒತ್ತಾಯಿಸಿ ಡಿಎಸ್ಎಸ್ ಪ್ರತಿಭಟನೆ
ಯಾದಗಿರಿ: ವಿಶ್ವವಿದ್ಯಾಲಯಗಳಲ್ಲಿ ದಲಿತ, ಹಿಂದುಳಿದ ಹಾಗೂ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಗಟ್ಟಲು ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ರೂಪಿಸಿರುವ 2026ರ ಹೊಸ ನಿಯಮಾವಳಿಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ) ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ದಸಂಸ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಐದು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಹಾಗೂ ಮಾನವ ಸಂಪನ್ಮೂಲ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಅವರು, ಎಸ್ಸಿ, ಎಸ್ಟಿ ಹಾಗೂ ಓಬಿಸಿ ವಿದ್ಯಾರ್ಥಿಗಳ ಸಮಾನತೆ ಮತ್ತು ಪ್ರೋತ್ಸಾಹಕ್ಕಾಗಿ ಯುಜಿಸಿ ರೂಪಿಸಿರುವ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ಎಸ್ಸಿ, ಎಸ್ಟಿ ಮತ್ತು ಓಬಿಸಿ ಸಮುದಾಯದ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಜಾತಿ, ಧರ್ಮ ಸೇರಿದಂತೆ ವಿವಿಧ ರೀತಿಯ ತಾರತಮ್ಯಗಳನ್ನು ತಡೆಯಲು ರೂಪಿಸಲಾದ ಯುಜಿಸಿ ನಿಯಮಾವಳಿಗಳನ್ನು ಕೂಡಲೇ ಜಾರಿಗೊಳಿಸಬೇಕು. ರಾಜ್ಯ ಸರ್ಕಾರವು ದಲಿತ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಕಾನೂನುಗಳನ್ನು ಜಾರಿಗೆ ತರಬೇಕು. ಜೊತೆಗೆ ರೋಹಿತ್ ವೇಮುಲ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಹ ಸಂಚಾಲಕರಾದ ಚಂದಪ್ಪ ಮುನೆಪ್ಪನೋರ, ಶಿವಲಿಂಗ ಹಸನಾಪುರ, ಮರೆಪ್ಪ ಕ್ರಾಂತಿ ಸೇರಿದಂತೆ ಶಿವಕುಮಾರ ತಳವಾರ, ತಾಯಪ್ಪ ಭಂಡಾರಿ, ಭೀಮಣ್ಣ ಹುಣಸಗಿ, ತಿಪ್ಪಣ್ಣ ಶೆಳ್ಳಗಿ, ಶರಭಣ್ಣ ದೋರನಹಳ್ಳಿ, ಭೀಮಾಶಂಕರ ಗುಂಡಳ್ಳಿ, ರಂಗಸ್ವಾಮಿ ಕೊಂಕಲ್, ದೊಡ್ಡಪ್ಪ ಕಾಡಂಗೇರಾ, ರಮೇಶ್ ಬಾಚಿಮಟ್ಟಿ, ಎಂ. ಪಟೇಲ್, ಬಲಭೀಮ ಬೇವಿನಹಳ್ಳಿ, ಚನ್ನಪ್ಪ ಸೇರಿದಂತೆ ಅನೇಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನೆಯ ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕೋಲಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಮೆಟ್ರೋ ಪ್ರಯಾಣ ದರ ಏರಿಕೆ ತಡೆ ಹಿಡಿದ ನಿರ್ಧಾರ ರಾಜ್ಯ ಸರಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರದಲ್ಲಿ ಯಾವುದೇ ರಾಜಕೀಯವಿಲ್ಲ. ನಮಗೆ ಯಾವುದೇ ರೀತಿಯ ನಿರ್ದೇಶನ ನೀಡುವ ಹಾಗೂ ಹಸ್ತಕ್ಷೇಪ ಮಾಡುವ ಅಧಿಕಾರ ಕೇಂದ್ರ ಸರಕಾರಕ್ಕೆ ಇಲ್ಲ ಎಂದು ಹೇಳಿದರು. ಓಎಂಆರ್ ವೆಚ್ಚ, ಬದಲಾಗುವ ಸಿಪಿಐ, ಸಿಬ್ಬಂದಿ ವೆಚ್ಚ, ಪ್ರತಿ ಯುನಿಟ್ ವೆಚ್ಚ, ಇಂಧನ ವೆಚ್ಚವನ್ನು ಲೆಕ್ಕಚಾರ ಮಾಡಲು ನಮಗೆ ಅವಕಾಶವಿದೆ. ಇವುಗಳ ಆಧಾರದ ಮೇಲೆ ಮತ್ತೊಮ್ಮೆ ಮರು ಲೆಕ್ಕಚಾರವನ್ನು ಮಾಡಿಕೊಂಡು ಬನ್ನಿ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಅಲ್ಲಿಯವರೆಗೂ ದರ ಏರಿಕೆಯನ್ನು ತಡೆಯಿಡಿಯಿರಿ ಎಂದು ಸೂಚನೆ ನೀಡಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು. ಮೆಟ್ರೋ ದರ ಏರಿಕೆ ಬಗ್ಗೆ ತೀರ್ಮಾನವಾಗಿರುವುದು ಒಂದು ವರ್ಷದ ಹಿಂದೆ. ಅಂದರೆ 2025ರ ಫೆ.9ರಂದೆ ಶೇ.5ರಷ್ಟು ದರ ಏರಿಕೆಯನ್ನು 2026ರ ಫೆ.9ರಿಂದ ಜಾರಿಗೆ ಬರುವಂತೆ ನಿಗದಿ ಮಾಡಿ ದರ ಏರಿಕೆ ಸಮಿತಿ ಆದೇಶ ನೀಡಿದೆ. ಆ ಪ್ರಕಾರ ದರ ಏರಿಕೆ ಮಾಡಲಾಗಿದೆ. ಈಗ ಮಾತನಾಡುತ್ತಿರುವವರು ಅವತ್ತು ಇದರ ಬಗ್ಗೆ ಮಾತನಾಡಲಿಲ್ಲ. ಬೆಂಗಳೂರಿನ ಜನತೆ ಗೌರವದಿಂದ ಇದನ್ನು ಸ್ವೀಕಾರ ಮಾಡಿದ್ದಾರೆ ಎಂದು ಅವರು ವಿವರಿಸಿದರು. ಶ್ಯಾಡೋ ಕ್ಯಾಶ್ ಸಪೋರ್ಟ್ (ಎಸ್ಸಿಎಸ್) ಅನ್ನು ನಿಲ್ಲಿಸುವುದಾಗಿ ಸರಕಾರ ಹೇಳಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಉಪ ಮುಖ್ಯಮಂತ್ರಿ, ನಗದು ರಹಿತ ಮರುಪಾವತಿಗಾಗಿ 1064.32 ಸಾವಿರ ಕೋಟಿ ರೂ., ಸಾಲ ಮರುಪಾವತಿಗಾಗಿ ಕೇಂದ್ರ ಸರಕಾರಕ್ಕೆ 4,002.23 ಕೋಟಿ ರೂ. ಸೇರಿ ಒಟ್ಟು 5,066.55 ಕೋಟಿ ರೂ. ಕೊಟ್ಟಿದ್ದೇವೆ ಎಂದು ತಿಳಿಸಿದರು. ಬೇರೆ ಮೆಟ್ರೋಗಳಿಗೆ ಹೋಲಿಸಿದರೆ ನಮ್ಮ ಮೆಟ್ರೋ ದರ ಪಟ್ಟಿ ಹೆಚ್ಚಿದೆ ಎಂದು ಹೇಳುತ್ತಾರೆ. ದಿಲ್ಲಿಯಲ್ಲಿ ಭದ್ರತಾ ವಿಭಾಗದ ಜವಾಬ್ದಾರಿ ಕೇಂದ್ರ ಸರಕಾರದ ಅಡಿಯಲ್ಲಿದೆ. ಸಿಎಸ್ಎಫ್ ಅಲ್ಲಿನ ಜವಾಬ್ದಾರಿ ತೆಗೆದುಕೊಂಡಿದೆ. ಇಲ್ಲಿ ನಾವೇ ಭದ್ರತೆಯ ಜವಾಬ್ದಾರಿ ಹೊತ್ತಿದ್ದೇವೆ. ಜೊತೆಗೆ ನಾವು ಇಲ್ಲಿ ಇದಕ್ಕೆ ಜಿಎಸ್ ಟಿಯನ್ನೂ ಪಾವತಿಸುತ್ತಿದ್ದೇವೆ ಎಂದು ಅವರು ನುಡಿದರು. ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಇಂದು ದಿಲ್ಲಿಯಲ್ಲಿ ಸಭೆ ಕರೆಯುತ್ತಾರೆ ಎಂದುಕೊಂಡಿದ್ದೆ. ಸಭೆ ನಡೆಸಿ ಏನು ಆದೇಶ ಕೊಡುತ್ತಾರೆ ಎಂದು ಕಾಯುತ್ತಿದ್ದೆ. ಆದರೆ, ಸಭೆಯನ್ನು ಮುಂದಕ್ಕೆ ಹಾಕಲಾಗಿದೆ. ತಾತ್ಕಾಲಿಕ ಜಯ ಎಂದು ಹೇಳುತ್ತಿರುವವರು ಇಂದು ಬೋರ್ಡ್ ಮೀಟಿಂಗ್ ಮಾಡಿ ನಿರ್ದೇಶನ ನೀಡಬೇಕಿತ್ತು ಎಂದು ಶಿವಕುಮಾರ್ ತಿರುಗೇಟು ನೀಡಿದರು. ದರ ಏರಿಕೆ ತಡೆ ಹಿಡಿಯಿರಿ ಎಂದು ಕೇಂದ್ರ ಸರಕಾರದವರು ಪತ್ರ ಬರೆದಿರಬಹುದು. ಆದರೆ, ಈ ರೀತಿ ಮಾಡಲು ಅವರಿಗೂ ಕಾನೂನಿನಲ್ಲಿ ಅವಕಾಶವಿಲ್ಲ. ದರದ ವಿಚಾರದಲ್ಲಿ ಹೊಸದಾಗಿ ತೀರ್ಮಾನ ಮಾಡಬೇಕಾದರೆ ನೂತನ ದರ ನಿಗದಿ ಸಮಿತಿ ರಚನೆ ಆಗಬೇಕು ಎಂದು ಅವರು ಸ್ಪಷ್ಟಪಡಿಸಿದರು. ನಮ್ಮಿಂದ ದರ ಏರಿಕೆಗೆ ತಡೆ ಬಿದ್ದಿದೆ ಎಂದು ಹೇಳುತ್ತಿರುವವರ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಇದರಿಂದ ಯಾರು ಬೇಕಾದರೂ ಹೆಸರನ್ನು ತೆಗೆದುಕೊಳ್ಳಲಿ. ಅಂತಿಮವಾಗಿ ಜನರಿಗೆ ಒಳ್ಳೆಯದಾಗಬೇಕು ಅಷ್ಟೇ. ಜನರಿಗೆ ಹಾಗೂ ಮೆಟ್ರೋ ಸಂಸ್ಥೆಗೂ ಭಾರ ಆಗಬಾರದು ಎಂದು ಹೇಳಿದರು. ಹೊಸ ದರ ನಿಗದಿ ಸಮಿತಿ ರಚಿಸಲು ಒತ್ತಾಯ ಮಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಈ ಗೊಂದಲಕ್ಕೆ ನಾನು ಹೋಗುವುದಿಲ್ಲ. ರಾಜ್ಯ ಸರಕಾರದ ಅಧಿಕಾರ ವ್ಯಾಪ್ತಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಏನು ಮಾಡಲು ಸಾಧ್ಯವೋ ಅದನ್ನು ಮಾಡಲಾಗುವುದು. ಇದು ನಮ್ಮ ಭೂಮಿ. ನಮ್ಮ ಗ್ರಾಹಕರಿಗೆ ಯಾವ ರೀತಿ ಸಹಾಯ ಮಾಡಲಾಗುವುದೋ ಆ ದಾರಿಯನ್ನು ಹುಡುಕಲಾಗಿದೆ ಎಂದರು. ದರ ಏರಿಕೆ ನಿರ್ಧಾರ ಕೇಂದ್ರ ಹಾಗೂ ರಾಜ್ಯ ಸರಕಾರದ ವ್ಯಾಪ್ತಿಗೆ ಬರುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರ ವ್ಯಾಪ್ತಿಗೂ ಬರುವುದಿಲ್ಲ. ದರ ಪರಿಷ್ಕರಣಾ ಸಮತಿಯ ಅಡಿಯಲ್ಲಿ ಬರುತ್ತದೆ. ಈ ಮೊದಲು ರಾಜ್ಯ ಸರಕಾರದವರು ಈ ಸಮಿತಿಯಲ್ಲಿ ಇರುತ್ತಿದ್ದರು. ಈಗ ಇಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್, ಶಾಸಕ ಶಿವಣ್ಣ, ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ, ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಮಣಿವಣ್ಣನ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು. ‘ಬಿ ಖಾತಾ’ದಿಂದ ‘ಎ ಖಾತಾ’ ಮಾಡಿಸಿಕೊಂಡವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‘ಎ ಖಾತಾ’ ಪತ್ರಗಳನ್ನು ಸಾಂಕೇತಿಕವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ʼಸುರಪುರ ವಿಜಯೋತ್ಸವ 1858ʼ ಕಾರ್ಯಕ್ರಮ ಆಚರಣೆ
ಸುರಪುರ: ಪಟ್ಟಣದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಸುರಪುರ ಇತಿಹಾಸ ಸಂಶೋಧನಾ ಕೇಂದ್ರದ ವತಿಯಿಂದ ʼಸುರಪುರ ವಿಜಯೋತ್ಸವ 1858ʼ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹೆಸರಾಂತ ಅನುವಾದಕರಾದ ರಿಯಾಝ್ ಬೋಡೆ ಅವರು ಮಾತನಾಡಿ, 1857-58ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಜಾ ನಾಲ್ವಡಿ ವೆಂಕಟಪ್ಪ ನಾಯಕರ ಪಾತ್ರ ಮತ್ತು ಅವರೊಂದಿಗೆ ಯುದ್ಧದಲ್ಲಿ ಕೈಜೋಡಿಸಿದ ಸುರಪುರ ಸೈನಿಕರ ತ್ಯಾಗ-ಬಲಿದಾನಗಳ ಕುರಿತು ವಿವರಿಸಿದರು. ಸುರಪುರ ಸಂಸ್ಥಾನವು ಶಹಾಪುರ, ಯಾದಗಿರಿ, ಜೇವರ್ಗಿ, ದೇವದುರ್ಗ, ಮುದ್ದೇಬಿಹಾಳ ಸೇರಿದಂತೆ ವಿಶಾಲ ಪ್ರದೇಶವನ್ನು ಒಳಗೊಂಡಿತ್ತು ಎಂದು ತಿಳಿಸಿದ ಅವರು, ಸಾಮರಸ್ಯದಿಂದ ಆಡಳಿತ ನಡೆಸಿದ ಶ್ರೇಯಸ್ಸು ಸುರಪುರ ರಾಜರಿಗೆ ಸಲ್ಲುತ್ತದೆ. ಮೊಗಲ್ ಸಾಮ್ರಾಟರನ್ನು ಎದುರಿಸಿದ್ದ ಇತಿಹಾಸ ಅವಿಸ್ಮರಣೀಯವಾಗಿದ್ದು, ಔರಂಗಜೇಬ್ ತನ್ನ ಕೊನೆಯ ದಿನಗಳನ್ನು ಈ ಭಾಗದಲ್ಲಿ ಕಳೆದ ಕುರಿತು ಇನ್ನಷ್ಟು ಸಂಶೋಧನೆಗಳು ನಡೆಯಬೇಕೆಂದು ಅಭಿಪ್ರಾಯಪಟ್ಟರು. ಸನ್ಮಾನ ಸ್ವೀಕರಿಸಿದ ಬಸವರಾಜ ಕೊಡೇಕಲ್ ಅವರು, ಈ ಗೌರವ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸುರಪುರ ಪ್ರದೇಶದ ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲುವ ಕಾರ್ಯ ಮುಂದುವರಿಸುತ್ತೇವೆ ಎಂದು ಹೇಳಿದರು. ಉಪನ್ಯಾಸಕ ರಾಜಗೋಪಾಲ್ ಎಂ.ವಿಭೂತಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ 26 ವರ್ಷಗಳಿಂದ ಸುರಪುರ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಜಾ ನಾಲ್ವಡಿ ವೆಂಕಟಪ್ಪ ನಾಯಕರು ದಕ್ಷಿಣ ಭಾರತದ ಸ್ವತಂತ್ರ ರಾಜ್ಯಗಳ ನೇತೃತ್ವ ವಹಿಸಿ ಬ್ರಿಟಿಷರ ವಿರುದ್ಧ ಹೋರಾಡಿದರು. 1858ರ ಫೆಬ್ರವರಿ 8ರಂದು ಕ್ಯಾಪ್ಟನ್ ಜಾರ್ಜ್ ನ್ಯೂಬೆರಿ ಅವರನ್ನು ಸೋಲಿಸಿದ ದಿನದ ಸ್ಮರಣಾರ್ಥ ಈ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ಡಾ. ಶಾಂತಲಾ ಎಸ್. ನಿಷ್ಠಿ ವಹಿಸಿದ್ದರು. ಉದ್ಘಾಟಕರಾಗಿ ಸುರಪುರ ಅರಸು ವಂಶಸ್ಥರಾದ ರಾಜಾ ಲಕ್ಷ್ಮೀನಾರಾಯಣ ನಾಯಕ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕೃಷ್ಣಾ ಸುಬೇದಾರ, ವಿಜಯ ಹಾಗರಗುಂಡಗಿ, ರಾಮನಗೌಡ, ಉಮೇಶ್ ಮುಡುಗೋಡ್, ಎಚ್. ಶ್ರವಣಕುಮಾರ್ ನಾಯಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದೇ ವೇಳೆ ಬಸವರಾಜ ಕೊಡೇಕಲ್, ಸಣ್ಣಕೆಪ್ಪ ಕೊಂಡಿಕಾರ್ ಹಾಗೂ ಸಂಶೋಧಕರಾದ ಶರಣಬಸಯ್ಯ ಎಂ. ಹಿರೇಮಠ ಅವರನ್ನು ಸನ್ಮಾನಿಸಲಾಯಿತು. ರಾಜಕುಮಾರ್ ಎಸ್. ದೊರೆ ನಿರೂಪಿಸಿದರು. ನಬಿಸಾಬ್ ಸ್ವಾಗತಿಸಿದರು. ರಜಾಕ್ ಎಸ್. ಭಗವಾನ್ ವಂದಿಸಿದರು. ಕಾರ್ಯಕ್ರಮದಲ್ಲಿ ಬಸವರಾಜ ಜಮಾದರಖಾನಿ, ಪ್ರಕಾಶ್ ಚಂದ್ ಜೈನ್, ಗೋಣೆಪ್ಪ ಪೂಜಾರಿ, ಪರಶುರಾಮ ನಾಯಕ ಗುಡ್ಡಕಾಯಿ, ರಮೇಶ್ ಕುಲಕರ್ಣಿ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.
ಬಜೆಟ್ ಪೂರ್ವವಾಗಿ ಪ್ರಸ್ತಾವನೆ ಸಲ್ಲಿಸಲು ಬೈಂದೂರು ಶಾಸಕರ ಸೂಚನೆ
ಬೈಂದೂರು, ಫೆ.9: ಕ್ಷೇತ್ರದ ಹೊಸ ಬೇಡಿಕೆಗಳಾದ ಡ್ರೆಜ್ಜಿಟಗ್, ಬ್ರೇಕ್ ವಾಟರ್ ವಿಸ್ತರಣೆ, ಸಮುದ್ರ ಕೊರತೆ ತಡೆಗೋಡೆ, ಮೀನುಗಾರಿಕಾ ಕೊಂಡಿ ರಸ್ತೆ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಮೀನುಗಾರರಿಂದ ಬೇಡಿಕೆ ಇರುವ ಎಲ್ಲಾ ಬಂದರು ಹಾಗೂ ಮೀನುಗಾರಿಕಾ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಒದಗಿಸಲು ಈಗಾಗಲೇ ಸಚಿವರಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಹಾಗಾಗಿ ಅಧಿಕಾರಿಗಳು ಇದಕ್ಕೆ ಪೂರಕವಾಗಿ ಇಲಾಖೆ ವತಿಯಿಂದ ಬಜೆಟ್ ಪೂರ್ವ ಪ್ರಸ್ತಾವನೆ ಸಲ್ಲಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ತಿಳಿಸಿದ್ದಾರೆ. ಕುಂದಾಪುರದ ಹಳೇ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಕ್ಷೇತ್ರದ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡುತಿದ್ದರು. ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕೇಂದ್ರ ಪುರಸ್ಕೃತ ಯೋಜನೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೇ ನಿಗದಿತ ಕಾಲ ಮಿತಿಯಲ್ಲಿ ಮುಕ್ತಾಯಗೊಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 85 ಕೋಟಿ ರೂ. ಮೊತ್ತದ ಕಾಮಗಾರಿಯು ಪ್ರಸ್ತುತ ಪ್ರಗತಿಯಲ್ಲಿದ್ದು, ಬ್ರೇಕ್ ವಾಟರ್ ನಿರ್ಮಿಸಲು ಅಗತ್ಯವಿರುವ ವಿವಿಧ ಗಾತ್ರದ ಗ್ರಾನೈಟ್ ಕಲ್ಲುಗಳನ್ನು ಶೇಖರಿಸಲಾಗುತ್ತಿದೆ. ಟೆಟ್ರಾಪಾಡ್ ಕಾಸ್ಟಿಂಗ್, ಸ್ಲೋಪಿಂಗ್ ಹಾಗೂ ಟೋ ಬರ್ಮ್ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಕಾಮಗಾರಿಯನ್ನು ವೇಗಗೊಳಿಸಲು ಹಾಗೂ ಪೂರಕ ಕಾಮಗಾರಿಗಳಿಗೆ ಅನುದಾನದ ಪ್ರಸ್ತಾವನೆಯೊಂದಿಗೆ ಸೂಕ್ತ ವರದಿಯನ್ನು ಸರಕಾರಕ್ಕೆ ಸಲ್ಲಿಸಲು ಅವರು ಸೂಚಿಸಿದರು. ಗಂಗೊಳ್ಳಿ ಬಂದರು ಆಧುನಿಕರಣ ಕಾಮಗಾರಿ ಈಗಾಗಲೇ ಪ್ರಾರಂಭ ವಾಗಿದ್ದು ಹರಾಜು ಪ್ರಾಂಗಣ, ಆವರಣ ಗೋಡೆ ಕಾಮಗಾರಿ ಪ್ರಾರಂಭಿಸ ಲಾಗಿದ್ದು, ಉಳಿದ ಕಾಮಗಾರಿಗಳನ್ನು ತ್ವರಿತಗೊಳಿಸಲು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಪ್ರಸನ್ನ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶೋಭಾ ಉಪಸ್ಥಿತರಿದ್ದರು
ಗದಗ : ನಮ್ಮ ಸರಕಾರದ ಎರಡೂವರೆ ವರ್ಷದ ಅವಧಿಯಲ್ಲಿ ತಾಂಡಾ ಹಾಗೂ ಹಟ್ಟಿಗಳ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕ್ರಮದಡಿ 1.10 ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಫೆ.14ರಂದು ಹಾವೇರಿಯಲ್ಲಿ ಸಮಾವೇಶ ನಡೆಸಿ ಇದೇ ಸಂಖ್ಯೆಯ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಿ ಸಾರ್ವಜನಿಕರಿಗೆ ಪಾರದರ್ಶಕ ಸೇವೆ ಒದಗಿಸುವುದು ಸರಕಾರದ ಗುರಿಯಾಗಿದ್ದು, ಇದರಿಂದ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬೀಳಲಿದೆ ಎಂದು ಹೇಳಿದರು. ನಮ್ಮ ಸರಕಾರ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ತಹಶೀಲ್ದಾರ್ ಕಚೇರಿಗಳಲ್ಲಿ 10,774 ಅವಧಿ ಮೀರಿದ ಪ್ರಕರಣಗಳಿದ್ದವು. ವಿಶೇಷ ಅಭಿಯಾನ ಹಮ್ಮಿಕೊಂಡು ಅವುಗಳನ್ನು ವಿಲೇವಾರಿ ಮಾಡಲಾಗಿದ್ದು, ಸದ್ಯ 478 ಪ್ರಕರಣ ಮಾತ್ರ ಬಾಕಿ ಉಳಿದಿವೆ. ಅವುಗಳನ್ನೂ ಶೀಘ್ರ ಇತ್ಯರ್ಥಗೊಳಿಸಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಎ.ಸಿ ನ್ಯಾಯಾಲಯಗಳಲ್ಲಿ 73,624 ಅವಧಿ ಮೀರಿದ ಪ್ರಕರಣಗಳಿದ್ದರೆ, ಈಗ ಅವು 11,605 ಕ್ಕೆ ಇಳಿದಿವೆ. ಐದು ವರ್ಷಕ್ಕಿಂತ ಹೆಚ್ಚು ಕಾಲ ಬಾಕಿ ಇದ್ದ 32,782 ಪ್ರಕರಣಗಳಲ್ಲಿ ಕೇವಲ 3,155 ಮಾತ್ರ ಉಳಿದಿದ್ದು, ಮುಂದಿನ ಎರಡು ತಿಂಗಳಲ್ಲಿ ಇವುಗಳನ್ನು ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು. ಬಗರ್ ಹುಕುಂ ರೈತರ ಜಮೀನುಗಳ ಸರ್ವೆ ಮತ್ತು ಆರ್.ಟಿ.ಸಿ ಸಮಸ್ಯೆ ನಿವಾರಣೆಗೆ ‘ನನ್ನ ಭೂಮಿ ಅಭಿಯಾನ’ ಆರಂಭಿಸಲಾಗಿದೆ. 2013-18 ಅವಧಿಯಲ್ಲಿ 5,842 ಪೋಡಿ ದುರಸ್ತಿ ಆಗಿದ್ದರೆ, 2018-23ರಲ್ಲಿ 8,500 ಪ್ರಕರಣಗಳು ವಿಲೇವಾರಿಯಾಗಿವೆ. ಜನವರಿ 2025ರಿಂದ ಆರಂಭವಾದ ಅಭಿಯಾನದಡಿ ಸದ್ಯ ರಾಜ್ಯಾದ್ಯಂತ 1,93,615 ಪ್ರಕರಣಗಳಲ್ಲಿ ಸರ್ವೆ ಮತ್ತು ಪೋಡಿ ದುರಸ್ತಿ ನಡೆಯುತ್ತಿದೆ. ಅಧಿಕಾರಿಗಳು ಮನೆಬಾಗಿಲಿಗೆ ತೆರಳಿ ಸೇವೆ ನೀಡುತ್ತಿರುವುದು ಸರಕಾರದ ಬದ್ಧತೆಯ ಕಾರ್ಯ ಎಂದು ಅವರು ನುಡಿದರು. ರಾಜ್ಯದಲ್ಲಿ ಮೃತರ ಹೆಸರಿನಲ್ಲಿ ಉಳಿದಿದ್ದ 49 ಲಕ್ಷ ಜಮೀನುಗಳನ್ನು ಗುರುತಿಸಿ ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ 12 ಲಕ್ಷ ಮೂಲ ವಾರಸುದಾರರಿಗೆ ಜಮೀನು ಹಸ್ತಾಂತರಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಇಂತಹ 50 ಸಾವಿರ ಪ್ರಕರಣಗಳಿದ್ದು, ಸದ್ಯ 12 ಸಾವಿರ ಮಾತ್ರ ಬಾಕಿ ಉಳಿದಿವೆ. ಗ್ರಾಮ ಲೆಕ್ಕಾಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದು, ಅವರಿಗೆ ಪ್ರೋತ್ಸಾಹ ಧನವಾಗಿ 5 ಕೋಟಿ ರೂ. ನೀಡಲು ಸರಕಾರ ತೀರ್ಮಾನಿಸಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು. ಹಳೆ ದಾಖಲೆಗಳ ನಕಲಿ ತಡೆಗಟ್ಟಲು ‘ಭೂಸುರಕ್ಷಾ’ ಯೋಜನೆಯಡಿ 64 ಲಕ್ಷಕ್ಕೂ ಹೆಚ್ಚು ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. ಸಾರ್ವಜನಿಕರು ಆನ್ಲೈನ್ನಲ್ಲೆ ಕಂದಾಯ ದಾಖಲೆಗಳನ್ನು ಪಡೆಯುವ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ಭೂಮಿಯ ಮಾಲಕತ್ವಕ್ಕೆ ಗ್ಯಾರಂಟಿ ನೀಡುವ ಉದ್ದೇಶದಿಂದ ಯೋಜನೆ ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದರು. ಗ್ರಾಮ ಲೆಕ್ಕಾಧಿಕಾರಿಗಳಿಗೆ 5 ಸಾವಿರ ಲ್ಯಾಪ್ಟಾಪ್ಗಳನ್ನು ವಿತರಿಸಿದ್ದು, ಅತ್ಯಾಧುನಿಕ ಸರ್ವೆ ಉಪಕರಣಗಳನ್ನು ಕೂಡ ಒದಗಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ಉಪಸ್ಥಿತರಿದ್ದರು.
ರಾಯಚೂರು: ವಿಶ್ವದ ಬಹು ಚರ್ಚಿತ ಎಪ್ಸ್ಟೀನ್ ಫೈಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖವಾಗಿದೆ ಎಂಬ ಆರೋಪವನ್ನು ಉಲ್ಲೇಖಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆರೋಪಿಸಿದ ಕರ್ನಾಟಕ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು, ಎಪ್ಸ್ಟೀನ್ ಫೈಲ್ನಲ್ಲಿ ಹೊರಬಿದ್ದ ಮಾಹಿತಿಗಳು ಜಾಗತಿಕ ಮಟ್ಟದಲ್ಲಿ ಕಳವಳ ಮೂಡಿಸಿದ್ದು, ಈ ಸಂಬಂಧ ಯಾವುದೇ ಉಲ್ಲೇಖ ಇದ್ದರೆ ಅದು ದೇಶದ ಘನತೆ, ವಿಶ್ವಾಸಾರ್ಹತೆ ಮತ್ತು ಜಾಗತಿಕ ಚಿತ್ರಣದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು. ಈ ಪ್ರಕರಣದ ಕುರಿತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳಿಗೆ ಪ್ರಧಾನಮಂತ್ರಿ ಸ್ಪಷ್ಟ ಉತ್ತರ ನೀಡಬೇಕು. ಗಂಭೀರ ಆರೋಪಗಳ ಕುರಿತು ಮೌನ ವಹಿಸುವುದು ಸರಿಯಲ್ಲ ಎಂದು ಅವರು ಆಗ್ರಹಿಸಿದರು. ಪ್ರಧಾನಿಯಿಂದ ಪಾರದರ್ಶಕ ಮತ್ತು ಸ್ಪಷ್ಟ ವಿವರಣೆ ನೀಡಬೇಕು. ಅಗತ್ಯವಿದ್ದರೆ ಸ್ವತಂತ್ರ ಹಾಗೂ ವಿಶ್ವಾಸಾರ್ಹ ತನಿಖೆ ನಡೆಯಬೇಕು. ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆಯಾಗುವಂತಹ ಯಾವುದೇ ವಿಚಾರವೂ ನಿರ್ಲಕ್ಷ್ಯಗೊಳ್ಳಬಾರದು ಎಂದು ಪ್ರತಿಭಟನಾಕಾರರು ಹೇಳಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ ಗಟ್ಟು, ಮುಹಮ್ಮದ್ ಶೈಬಾಜ್, ಬಿ. ಮಧುಕುಮಾರ, ಪ್ರತಾಪ್ ರೆಡ್ಡಿ, ಕೆ.ಇ. ಕುಮಾರ, ಶಿವು, ಸಾಗರ, ರಘು ಮಡಿವಾಳ, ಅಭಿ, ಅಜ್ಜು, ವಿಜಯಕುಮಾರ, ರವಿ ದುಗನೂರು ಸೇರಿದಂತೆ ಅನೇಕ ಯುವ ಕಾರ್ಯಕರ್ತರು ಭಾಗವಹಿಸಿದ್ದರು.
ಫೆ.13ರಂದು ಎಸ್.ವಿ.ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ
ಉಡುಪಿ, ಫೆ.9: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಈ ವರ್ಷದಿಂದ ನೀಡಲಾಗುವ ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ ಫೆ.13ರ ಬೆಳಗ್ಗೆ 10ಗಂಟೆಗೆ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ರವೀಂದ್ರ ಮಂಟಪ ಸಭಾಂಗಣ ದಲ್ಲಿ ನಡೆಯಲಿದೆ. ಈ ಬಾರಿಯ ಪ್ರತಿಷ್ಠಿತ ಪ್ರಶಸ್ತಿ ಯನ್ನು ಕನ್ನಡದ ಪ್ರಸಿದ್ಧ ಕವಿ, ಕಥೆಗಾರ ಹಾಗೂ ವಿಮರ್ಶಕರಾದ ಸುಬ್ರಾಯ ಚೊಕ್ಕಾಡಿ ಅವರಿಗೆ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಪ್ರೊ.ಬಿ.ಎ.ವಿವೇಕ ರೈ ವಹಿಸಲಿದ್ದಾರೆ. ಮಾಹೆ ಸಹ ಕುಲಾಧಿ ಪತಿ ಡಾ. ಎಚ್. ಎಸ್. ಬಲ್ಲಾಳ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತರ ಕುರಿತು ವಿಶ್ರಾಂತ ಪ್ರಾಧ್ಯಾಪಕ, ಹಿರಿಯ ಸಾಹಿತಿ ಡಾ.ನಾ.ದಾಮೋದರ ಶೆಟ್ಟಿ ಅಭಿನಂದನಾ ಭಾಷಣ ಮಾಡದ್ದಾರೆ. ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರ ಪುತ್ರರಾದ ಎಸ್.ಪಿ. ರಾಮಚಂದ್ರ, ಎಂಜಿಎಂ ಕಾಲೇಜಿನ ಪ್ರಾಂಶುಪಾವೆ ಪ್ರೊ. ವನಿತಾ ಮಯ್ಯ ಉಪಸ್ಥಿತರಿ ರುವರು. ಪ್ರಾರಂಭದಲ್ಲಿ ಉಡುಪಿಯ ಪ್ರಸಿದ್ಧ ಗಾಯಕರಾದ ಕೆ.ಆರ್. ರಾಘವೇಂದ್ರ ಆಚಾರ್ಯ ಅವರಿಂದ ಎಸ್ವಿಪಿ ಹಾಗೂ ಸುಬ್ರಾಯ ಚೊಕ್ಕಾಡಿ ಅವರ ಕವನಗಳ ಗಾಯನ ನಡೆಯಲಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
ಬಡವರಿಗೆ ವರದಾನವಾಗಿದ್ದ ಉದ್ಯೋಗ ಖಾತರಿ ಯೋಜನೆ ಮುಗಿಸುವ ಹುನ್ನಾರ - ಜಯಪ್ರಕಾಶ್ ಹೆಗ್ಡೆ
ನರೇಗಾ ಯೋಜನೆ ಬದಲಾವಣೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ‘ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆ’
ರಾಯಚೂರು | ಜಿಲ್ಲಾ ಉತ್ಸವ ಸಂಭ್ರಮದ ನಡುವೆ 12 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಸಂಭ್ರಮದ ನಡುವೆಯೇ ನಗರದ ಮಾವಿನಕೆರೆ ಬಳಿ ಶನಿವಾರ (ಫೆ.7) ರಾತ್ರಿ ಸುಮಾರು 1 ಗಂಟೆ ಸುಮಾರಿಗೆ 12 ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತು. ಜಿಲ್ಲಾ ಉತ್ಸವದ ಸಮಾರೋಪದ ದಿನವಾದ ಕಾರಣ ಮಾವಿನಕೆರೆ ಸುತ್ತಮುತ್ತ ಜನ ಸಂಚಾರ ಹೆಚ್ಚಾಗಿದ್ದ ವೇಳೆ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲಕಾಲ ಭಯಭೀತ ವಾತಾವರಣ ನಿರ್ಮಾಣವಾಯಿತು. ಆಹಾರ ಅರಸಿ ಕೆರೆಯ ದಡದಿಂದ ಈ ಭಾಗಕ್ಕೆ ಬಂದಿದೆ ಎಂದು ಶಂಕಿಸಲಾಗಿದೆ. ಕೆರೆಯ ಒಂದು ಬದಿಯಲ್ಲಿರುವ ನಂದೀಶ್ವರ ದೇವಸ್ಥಾನದ ಮಾರ್ಗವಾಗಿ ಬಂದ ಹಾವು, ಕೋಟೆ ಪಕ್ಕದ ರಸ್ತೆಯಲ್ಲಿ ಕಂಡುಬಂದಿದೆ. ಉತ್ಸವಕ್ಕೂ ಮುನ್ನ ಇದೇ ಸ್ಥಳದಲ್ಲಿ ಕೆರೆ ಹಬ್ಬ ನಡೆಯಿದ್ದು, ಸಾಕಷ್ಟು ಜನರು ಹಾಗೂ ಮಕ್ಕಳು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ರಸ್ತೆಯಲ್ಲಿ ಸಂಚರಿಸುತ್ತಿದ್ದ ಜನರು ಹೆಬ್ಬಾವನ್ನು ನೋಡಿ ಗಾಬರಿಗೊಂಡು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ನುರಿತ ಉರಗ ತಜ್ಞ ಬಸವರಾಜ ಅವರ ಜಂಟಿ ಕಾರ್ಯಾಚರಣೆಯಲ್ಲಿ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ.
Belagavi | ಸೋಮಶೇಖರ್ಗೆ ಬದುಕು ಕೊಟ್ಟ ಮೆಹಬೂಬ್ ಹಸನ್ ನಾಯಿಕವಾಡಿ ದಂಪತಿ; ಬಸ್ತವಾಡದಲ್ಲೊಂದು ಸಹಬಾಳ್ವೆಯ ಕಥೆ
ಸಾಕಿ, ಬೆಳೆಸಿ, ಮದುವೆ ಮಾಡಿದ ಕುಟುಂಬ
ಭಾರತ ತಂಡದ ಪಾಕಿಸ್ತಾನದಲ್ಲಿ ಆಡುವುದಿಲ್ಲ ಎಂದು ಚಾಂಪಿಯನ್ಸ್ ಟ್ರೋಪಿ ಹೇಳಿದ್ದು ಹೌದು. ಅದಕ್ಕೆ ಬಲವಾದ ಕಾರಣವಿದೆ. ಆದರೆ ಆ ಉದಾಹರಣೆಯನ್ನು ಮುಂದಿಟ್ಟು ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪರ ಮಾತನಾಡಿದ್ದ ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಅವರಿಗೆ ಸುನಿಲ್ ಗವಾಸ್ಕರ್ ಅವರು ತೀವ್ರ ತರಾಟೆಗೆ ತೆಗೆದಕೊಂಡಿದ್ದಾರೆ. 2003ರಲ್ಲಿ ಇಂಗ್ಲೆಂಡ್ ತಂಡ ಜಿಂಬಾಬ್ವೆಯಲ್ಲಿ ಆಡದ್ದನ್ನು ಅವರು ಪ್ರಸ್ತಾಪಿಸಿದ್ದಾರೆ. ಆಗ ಐಸಿಸಿಯಲ್ಲಿ ಇಂಗ್ಲಂಡ್ ಮತ್ತು ಆಸ್ಟ್ರೇಲಿಯಾ ಹಿಡಿತವಿತ್ತು. ಹಾಗಾಗಿ ಉಳಿದ ದೇಶಗಳು ಪ್ರಶ್ನಿಸಲಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಅನ್ನ, ವಸತಿ ನೀಡುವುದು ಮಾತ್ರ ಮಕ್ಕಳ ಪಾಲನಾ ಸಂಸ್ಥೆಗಳ ಕರ್ತವ್ಯ ಅಲ್ಲ: ಕೆ.ಟಿ. ತಿಪ್ಪೇಸ್ಬಾಮಿ
ಮಕ್ಕಳ ಹಕ್ಕುಗಳು ಮತ್ತು ರಕ್ಷಣಾ ಕಾಯ್ದೆಗಳ ಕುರಿತು ಕಾರ್ಯಾಗಾರ
ಶಾರ್ಟ್ಕಟ್ ಬೇಡ, ಪ್ರತಿಭೆಯ ಮೇಲೆ ನಂಬಿಕೆ ಇಡಿ: ಯುವ ಗಾಯಕರಿಗೆ ವಿಶಾಲ್ ದದ್ಲಾನಿ ಸಲಹೆ
ಪ್ರಭಾವಿಗಳ ಶಿಪಾರಸ್ಸು ತಂದರೆ ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದ ಖ್ಯಾತ ಗಾಯಕ–ಸಂಗೀತ ಸಂಯೋಜಕ
ಬೀದರ್ | ಯುಜಿಸಿ- 2026 ನಿಯಮ ತಕ್ಷಣ ಜಾರಿಗೆ ಆಗ್ರಹಿಸಿ ಡಿಎಸ್ಎಸ್ ಪ್ರತಿಭಟನೆ
ಬೀದರ್ : ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) 2026ರಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳ ಸಮಾನತೆ ಉತ್ತೇಜನಕ್ಕಾಗಿ ರೂಪಿಸಿರುವ ನಿಯಮಾವಳಿಗಳು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಶಾಹಗಂಜ ಬುದ್ಧ ವಿಹಾರದಿಂದ ಪ್ರಾರಂಭಗೊಂಡ ಪ್ರತಿಭಟನಾ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ವರೆಗೆ ಸಾಗಿತು. ಪ್ರತಿಭಟನೆಯಲ್ಲಿ ಯುಜಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಲಾಯಿತು. ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ಕಿರುಕುಳ, ದೌರ್ಜನ್ಯ ಮತ್ತು ದಲಿತ ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡದಿಂದ ಉಂಟಾಗುತ್ತಿರುವ ಆತ್ಮಹತ್ಯೆಗಳ ಸರಣಿಯನ್ನು ತಡೆಗಟ್ಟುವಂತೆ ಸಮಿತಿಯಿಂದ ಆಗ್ರಹಿಸಲಾಯಿತು. ಯುಜಿಸಿ-2026ರ ಕರಡು ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆ ಆದೇಶವನ್ನು ತೆರವುಗೊಳಿಸಿ, ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ರಕ್ಷಣಾತ್ಮಕ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಯಿತು. ಯುಜಿಸಿ-2026 ನಿಯಮಾವಳಿಗಳಿಗೆ ನೀಡಿರುವ ತಡೆ ತೆರವುಗೊಳಿಸಬೇಕು. ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಿಯಮಾವಳಿ ಜಾರಿಗೊಳಿಸಿ ವಿಶ್ವವಿದ್ಯಾಲಯಗಳಲ್ಲಿ ಜಾತಿ ದೌರ್ಜನ್ಯ ತಡೆಯಲು ಕಟ್ಟುನಿಟ್ಟಿನ ಕ್ರಮವಹಿಸಿ ರೋಹಿತ್ ವೇಮುಲ ಕಾಯ್ದೆಯನ್ನು ರಾಜ್ಯದಲ್ಲಿ ಕಡ್ಡಾಯ ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಗಿದೆ. ಪ್ರತಿಭಟನೆಯಲ್ಲಿ ಡಿಎಸ್ಎಸ್ ನ ರಾಜ್ಯ ಸಂಚಾಲಕ ಮಾರುತಿ ಬೌದ್ಧೆ, ಜಿಲ್ಲಾ ಸಂಚಾಲಕ ರಾಜಕುಮಾರ್ ವಾಘಮಾರೆ, ಅರುಣ್ ಪಟೇಲ್, ಅಶೋಕ್ ಗಾಯಕವಾಡ್, ರಮೇಶ್ ಉಮಾಪುರೆ, ಶಿವರಾಜ್ ತಡಪಳ್ಳಿ, ರಮೇಶ್ ಬೆಲ್ದಾರ್, ಸತೀಶ್ ರತ್ನಾಕರ್, ವಾಮನ್ ಮೈಸಲಗೆ, ಶಿರೋಮಣಿ ಹಲಗೆ, ನರಸಿಂಗ್ ಮೇಟಿ, ಝರೆಪ್ಪಾ ವರ್ಮಾ, ಗೌತಮ್ ಮುತ್ತಂಗಿಕರ್, ವಿಜಯಕುಮಾರ್ ಭಾವಿಕಟ್ಟಿ, ರಾಹುಲ್ ಹಾಲಹಿಪ್ಪರ್ಗಾ, ಬಸವರಾಜ್ ಭಾವಿದೊಡ್ಡಿ, ಸಂತೋಷ್ ಪಡಸಾಲೆ, ವಿನೋದ್ ಬಂದಗೆ, ಸಾಯಿ ಸಿಂಧೆ, ಬಾಬುರಾವ್ ಹೊನ್ನಾ, ಗಾಲೇಬ್ ಹಾಶ್ಮಿ, ಜೈಭೀಮ್ ಚಿಮನಾಯಕ, ಅಜಯ್ ದಿನೆ, ಶಿವಕುಮಾರ್ ಗುನಳ್ಳಿ, ಗೊಂಡ ವಿದ್ಯಾರ್ಥಿ ಸಂಘದ ಸಂತೋಷ್ ಜೊಳದಾಬಕಾ, ಸಮಾಜಿಕ ಜನಪರ ಹೋರಾಟಗಾರ ಓಂಪ್ರಕಾಶ್ ರೊಟ್ಟೆ, ಲಿಂಗಾಯತ ಸಮಾಜದ ಮುಖಂಡ ಜಗದೀಶ್ ಬಿರಾದಾರ್, ಕನ್ನಡಪರ ಸಂಘಟನೆಗಳ ಒಕ್ಕೂಟ ಶಿವಕುಮಾರ್ ತುಂಗಾ, ಜಗಜೀವನರಾಮ್ ಹೊರಾಟ ಸಮಿತಿಯ ಅಭಿ ಕಾಳೆ , ಸಿಪಿಐ ನ ನಜೀರ್ ಅಹ್ಮದ್ ಹಾಗೂ ಸೈಫದ್ ಅಲಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ದಯಾನಂದ ನಾಗೂರುಗೆ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ ಪ್ರದಾನ
ಉಡುಪಿ, ಫೆ.9: ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ 75ನೇ ವಾರ್ಷಿಕೋತ್ಸವ, ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ, ಅಮೃತ ಮಹೋತ್ಸವ ಸಮಿತಿಯ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯ ಕ್ರಮ ಗುಂಡಿಬೈಲು ತಲ್ಲೂರು ಗಾರ್ಡನ್ನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಉಡುಪಿ ತುಳುಕೂಟದ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯ ಇತಿಹಾಸದಲ್ಲಿ ಅಮೃತ ಮಹೋತ್ಸವ ಕಂಡ ಏಕೈಕ ಹವ್ಯಾಸಿ ಯಕ್ಷಗಾನ ಸಂಘ ಕಲಾಕ್ಷೇತ್ರವಾಗಿದೆ. ನೂರಾರು ಕಲಾವಿದರನ್ನು ಕಲಾಸೇವೆಗೆ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ಸಂಘದ ಪಾತ್ರ ಹಿರಿದಾಗಿದೆ ಎಂದು ಹೇಳಿದರು. ಅಮೃತ ಮಹೋತ್ಸವದ ವಿಜ್ಞಾಪನಾ ಪತ್ರವನ್ನು ಉಡುಪಿ ಎಂಜಿನಿ ಯರ್ಸ್ ಅಸೋಸಿಯೇಷನ್ ಅಧ್ಯಕ್ಷ ರಂಜನ್ ಬಿಡುಗಡೆಗೊಳಿಸಿದರು. ಉಡುಪಿ ಶಾಸಕ ಯಶಪಾಲ್ ಸುವರ್ಣ ಶುಭ ಹಾರೈಸಿದರು, ಅಮೃತ ಮಹೋತ್ಸವ ಕಾರ್ಯಯೋಜನೆಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಹಿರಿಯ ಯಕ್ಷಗಾನ ಕಲಾವಿದ, ಪ್ರಸಿದ್ಧ ಸ್ತ್ರೀ ವೇಷಧಾರಿ ದಯಾನಂದ ಬಳೆಗಾರ ನಾಗೂರು ಅವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಯಕ್ಷಗಾನ ವಿಮರ್ಶಕ ಪ್ರೊ.ಉದಯ ಕುಮಾರ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಅಧ್ಯಕ್ಷ ಕೇಶವಮೂರ್ತಿ ಬೆಲ್ಪತ್ರೆ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ಕೋಟ್ಯಾನ್ ವರದಿ ವಾಚಿಸಿದರು, ಉಪಾಧ್ಯಕ್ಷ ನಿಟ್ಟೂರು ಮಹಾಬಲ ಶೆಟ್ಟಿ ವಂದಿಸಿದರು. ಸಂಘದ ವಿದ್ಯಾರ್ಥಿಗಳಿಂದ ಮಾಯಾಪುರಿ ಮಹಾತ್ಮೆ ಹಾಗೂ ವೀರ ಮಣಿ ಕಾಳಗ ಯಕ್ಷಗಾನ ಬಯಲಾಟ ಜರಗಿತು.
ಉಡುಪಿ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆ: ನಿಹಾಲ್ ಶೆಟ್ಟಿ ಚಾಂಪಿಯನ್
ಉಡುಪಿ, ಫೆ.9: ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಹಾಗೂ ಕಲ್ಯ ದೇವರಾಯ ಶೆಣೈ ಸ್ಮಾರಕ ಚೆಸ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 3ನೇ ಉಡುಪಿ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್ ಮತ್ತು 17ನೇ ಕಲ್ಯ ದೇವರಾಯ ಶೆಣೈ ಸ್ಮರಣಾರ್ಥ ಚೆಸ್ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಒಟ್ಟು 195 ಆಟಗಾರರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಟೂರ್ನಮೆಂಟ್ನಲ್ಲಿ ವಿವಿಧ ವಯೋ ವರ್ಗಗಳಲ್ಲಿ ಪಂದ್ಯಗಳು ನಡೆದವು. ಒಟ್ಟು 98 ಟ್ರೋಫಿಗಳು ಹಾಗೂ 28,500ರೂ. ನಗದು ಬಹುಮಾನಗಳನ್ನು ವಿಜೇತರಿಗೆ ವಿತರಿಸಲಾಯಿತು. ಬೆಸ್ಟ್ ಅಕಾಡೆಮಿ ಪ್ರಶಸ್ತಿ ಶ್ರೀನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಹಾಗು ಶ್ರೀಸಿದ್ಧಿವಿನಾಯಕ ಚೆಸ್ ಅಕಾಡೆಮಿ ಉಪ್ಪುಂದ ತಮ್ಮದಾಗಿಸಿ ಕೊಂಡಿತು. ಓಪನ್ ವಿಭಾಗದಲ್ಲಿ ನಿಹಾಲ್ ಎನ್.ಶೆಟ್ಟಿ ಚಾಂಪಿಯನ್ ಆಗಿ ಮೂಡಿಬಂದರು. ಅನೀಶ್ ಎಸ್.ಸಿ. ದ್ವಿತೀಯ ಸ್ಥಾನ ಹಾಗೂ ಚಿನ್ಮಯ ಎಸ್.ಭಟ್ ತೃತೀಯ ಸ್ಥಾನ ಗಳಿಸಿದರು. ಉತ್ತಮ ವೇಟರನ್ ಆಟಗಾರ ಪ್ರಶಸ್ತಿಯನ್ನು ರಾಮ ಶೆರಿಗಾರ್ ಹಾಗೂ ಉತ್ತಮ ಮಹಿಳಾ ಆಟಗಾರ್ತಿ ಪ್ರಶಸ್ತಿಯನ್ನು ಶಾನ್ವಿ ಎಸ್.ಬಳ್ಳಾಲ್ ಪಡೆದರು. ಅಂಡರ್-7 ಬಾಲಕರ ವಿಭಾಗದಲ್ಲಿ ಪರೀಕ್ಷಿತ್ ಬಿ.ಖಾರ್ವಿ ಪ್ರಥಮ ಹಾಗೂ ಸಮ್ರಾಟ್ ಬೆಲ್ಚಡ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಅನೇಕರ ಎ.ಸಲಿಯಾನ್ ಪ್ರಥಮ, ಅಂಡರ್-9 ಬಾಲಕರ ವಿಭಾಗದಲ್ಲಿ ಪ್ರಮುಖ್ ಬಿ.ಪೂಜಾರಿ ಪ್ರಥಮ ಹಾಗೂ ಶ್ರೀನಿತ್ ಶೆಟ್ಟಿ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಬ್ರಹ್ಮೀಪ್ರೀಯ ಪ್ರಥಮ ಮತ್ತು ಇಂಚರ ಉಡುಪಿ ದ್ವಿತೀಯ ಸ್ಥಾನ ಗಳಿಸಿದರು. ಅಂಡರ್-11 ಬಾಲಕರ ವಿಭಾಗದಲ್ಲಿ ಅಥರ್ವ ಪ್ರಥಮ ಹಾಗೂ ಮಾಧ್ವ ವ್ಯಾಸರಾಜ್ ತಾಂತೆಯ್ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ನಿರ್ವಿ ಪೂಜಾರಿ ಪ್ರಥಮ ಮತ್ತು ಸಾನ್ವಿಕಾ ಎಸ್.ಗಣಿಗಾ ದ್ವಿತೀಯ, ಅಂಡರ್-13 ಬಾಲಕರ ವಿಭಾಗದಲ್ಲಿ ಉತ್ಸವ್ ಬಿ.ಪಿ. ಪ್ರಥಮ ಹಾಗೂ ಅವನೀಶ್ ಪ್ರಸಾದ್ ಕೆ. ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಅಲಿಶಾ ರೋಡ್ರಿಗಸ್ ಪ್ರಥಮ ಹಾಗೂ ಅಕ್ಷರ ಎ. ದ್ವಿತೀಯ ಸ್ಥಾನ ಗಳಿಸಿದರು. ಅಂರ್ಡ-15 ಬಾಲಕರ ವಿಭಾಗದಲ್ಲಿ ಕೃಷಾಂಗ್ ಪ್ರಭು ಪ್ರಥಮ ಹಾಗೂ ಅಂಬರೀಷ್ ಉಪಾಧ್ಯಾಯ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಶ್ರೀಲತಾ ನಾಯಕ್ ಪ್ರಥಮ ಮತ್ತು ಸಾಥ್ವಿ ದ್ವಿತೀಯ. ಅಂಡರ್-17 ಬಾಲಕರ ವಿಭಾಗದಲ್ಲಿ ಕಲಾಶ್ ಪಠಕ್ ಪ್ರಥಮ ಹಾಗೂ ಅಭಯ ಕಾಮತ್ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಅದ್ವಿಕಾ ಪ್ರಭು ಪ್ರಥಮ ಮತ್ತು ಕೃತಿ ಎ.ಜಿ. ಖಾರ್ವಿ ದ್ವಿತೀಯ , ಅಂಡರ್-19 ಬಾಲಕರ ವಿಭಾಗದಲ್ಲಿ ನಿಖಿಲ್ ವಿಕ್ರಮ್ ಕೆ.ಎಸ್. ಪ್ರಥಮ ಹಾಗೂ ದಕ್ಷ್ ಕೆ. ಜೋಗಿ ದ್ವಿತೀಯ ಸ್ಥಾನ ಪಡೆದರು. ಕಾರ್ಯಕ್ರಮದಲ್ಲಿ ಡಾ.ಪ್ರಕಾಶ್ ಶೆಣೈ ಕಲ್ಯ, ಡಾ.ಸುರೇಶ್ ಶೆಣೈ, ಡಾ. ಶೋಭಾ ಕಾಮತ್, ಡಾ.ರಾಘವೇಂದ್ರ ನಾಯಕ್, ಡಾ.ಉಲ್ಲಾಸ್ ಕಾಮತ್, ಡಾ.ಪ್ರಕಾಶ್ ಶ ಶೆಣೈ ಕಲ್ಯ, ಟಿ.ಕೇಶವರಾಯ ಪೈ, ಡಾ.ನಿಶಾಂತ್ ಭಟ್, ಉಮಾನಾಥ್ ಕಾಪು, ಡಾ.ಕೆ.ರಾಜಗೋಪಾಲ್ ಶೆಣೈ, ಎಂ. ರಮೇಶ್ ಕಿಣಿ ಹಾಗೂ ಡಾ.ಎಚ್. ಗಣೇಶ್ ಪೈ ಉಪಸ್ಥಿತರಿದ್ದರು.

19 C