ಸುಳ್ಯ | ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ದ್ವಿತೀಯ ಬಿರುದುದಾನ ಸಮ್ಮೇಳನ
ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ನ 42ನೇ ವಾರ್ಷಿಕ ಸಮಾರಂಭ
ಫೆ.2ಕ್ಕೆ ‘ಮನರೇಗಾ’ ಮರು ಜಾರಿಗೆ ಆಗ್ರಹಿಸಿ ‘ಕಾರ್ಮಿಕರ ಮಹಾಪಂಚಾಯತ್’
ಬೆಂಗಳೂರು : ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರಿಂದ ಉದ್ಯೋಗದ ಹಕ್ಕನ್ನು ಕಸಿದಿರುವ ವಿಬಿ-ಜಿ ರಾಮ್-ಜಿ ಕಾಯ್ದೆಯನ್ನು ವಿರೋಧಿಸಿ, ಮನರೇಗಾ ಮುಂದುವರೆಸಬೇಕು ಮತ್ತು ಬಲಪಡಿಸಬೇಕೆಂದು ಆಗ್ರಹಿಸಿ ‘ಮನರೇಗಾ ರಕ್ಷಣಾ ಒಕ್ಕೂಟ’ದ ವತಿಯಿಂದ ಫೆ.2ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಕಾರ್ಮಿಕರ ಮಹಾಪಂಚಾಯತ್ ಅನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಒಕ್ಕೂಟದ ಪದಾಧಿಕಾರಿಗಳಾದ ಶಾರದಾ ಗೋಪಾಲ್, ಗಾಯತ್ರಿ ವಿ., ಶಂಸುದ್ದೀನ್ ಬಳಿಗಾರ್, ಪುಟ್ಟಮಾಧು, ವತ್ಸಲ ಆನೇಕಲ್, ನವೀನ್ ಎನ್. ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಒಕ್ಕೂಟ ಸರಕಾರವು ಗ್ರಾಮೀಣ ಜನರಿಗೆ ತಮ್ಮ ಊರಲ್ಲಿಯೇ ಕೆಲಸ ದೊರಕಿಸಿಕೊಡುತ್ತಿದ್ದ, ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ ಕೊಡುತ್ತಿದ್ದ ‘ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ' ಯೋಜನೆಯನ್ನು ಕಿತ್ತೊಗೆದು, ಹೊಸ ವಿಬಿ-ಜಿರಾಮ್-ಜಿ ಎಂಬ ಕಾನೂನನ್ನು ತಂದಿದೆ ಎಂದಿದ್ದಾರೆ. ಎಲ್ಲೆಡೆ 125 ದಿನಗಳ ಕೆಲಸ ಎಂದು ಪ್ರಚಾರ ಪಡೆಯುತ್ತಿರುವ ಈ ಹೊಸ ಕಾನೂನು, ಜನರಿಗೆ ಉದ್ಯೋಗವನ್ನು ಗೌರವದ ಹಕ್ಕಾಗಿ ಇಟ್ಟಿಲ್ಲ. ಬದಲಿಗೆ ಒಕ್ಕೂಟ ಸರಕಾರ ನೀಡುವ ಭಿಕ್ಷೆಯಾಗಿ ಮಾರ್ಪಡಿಸಿದೆ. ಯಾವ ಪಂಚಾಯತಿಯಲ್ಲಿ ಕೆಲಸ ಸಿಗುತ್ತದೆ ಎಂಬ ಖಾತರಿ ಇಲ್ಲ. ಹಳ್ಳಿ ಜನರೇ ನಿರ್ಧರಿಸಿ ಸ್ಥಳೀಯ ಸಂಪನ್ಮೂಲಗಳನ್ನು ಹೆಚ್ಚಿಸುವಂಥ ಕೆಲಸಗಳಲ್ಲ. ವರ್ಷದ ಎಲ್ಲ ದಿನಗಳಲ್ಲೂ ಕೆಲಸವಿಲ್ಲ, ಅಂತಹ ಕಾನೂನು ಇದು. ತನ್ನ ಮೇಲಿನ ಹೊರೆಯ ಅರ್ಧ ಪಾಲನ್ನು ರಾಜ್ಯಗಳ ಮೇಲೆ ದಾಟಿಸಿರುವುದರಿಂದ ರಾಜ್ಯಗಳೂ ಜನರಿಗೆ ಕೆಲಸ ಕೊಡಲು ಉತ್ಸಾಹ ತೋರಲಿಕ್ಕಿಲ್ಲ ಎಂದು ಹೋರಾಟಗಾರರು ವಿವರಿಸಿದ್ದಾರೆ. ಜನರಿಗೆ ತಮ್ಮ ಊರಲ್ಲಿಯೇ ಕೆಲಸ ಸಿಗಬೇಕೆಂದರೆ, ಗ್ರಾಮಗಳ ಸಂಪನ್ಮೂಲ ವೃದ್ಧಿಯಾಗಬೇಕೆಂದರೆ ಹೊಸ ಕಾನೂನನ್ನು ಹಿಂಪಡೆದು ಸರಕಾರವು ಹಳೆಯ ಕಾನೂನನ್ನೇ ಮರು ಸ್ಥಾಪಿಸುವಂತಾಗಬೇಕು. ಅದು ಸುಲಭದ ಮಾತಲ್ಲ. ಜನರಿಂದ ತೀವ್ರ ಹೋರಾಟಗಳಾಗಬೇಕು. ‘ಮನರೇಗಾ ರಕ್ಷಣಾ ಒಕ್ಕೂಟ'ವು ರಾಜ್ಯಾದ್ಯಂತದಿಂದ ಕೂಲಿಕಾರರನ್ನು, ಸಣ್ಣ ರೈತರನ್ನು ಒಟ್ಟುಗೂಡಿಸಿ ಮೊದಲಿನ ಮನರೇಗಾ ಬೇಕೆಂಬ ಅವರ ಬೇಡಿಕೆ ದಿಲ್ಲಿಯವರಿಗೂ, ಅಧಿಕಾರಸ್ಥರಿಗೂ ಕೇಳುವಂತೆ ಮಾಡಲು ಪ್ರಯತ್ನಗಳನ್ನು ನಡೆಸಿದೆ. ಅಂತಹ ಪ್ರಯತ್ನಗಳಲ್ಲೊಂದು ಈ ಮಹಾ ಪಂಚಾಯತ್, ಕೂಲಿಕಾರ್ಮಿಕರು, ಮಹಿಳಾ ಕಾರ್ಮಿಕರು, ದಲಿತ ಕಾರ್ಮಿಕರು, ಸಣ್ಣ ರೈತರು, ದೊಡ್ಡ ಸಂಖ್ಯೆಯಲ್ಲಿ ಬೆಂಗಳೂರಿಗೆ ಬಂದು ಮಾತಾಡಲಿದ್ದಾರೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.
ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ‘ರೈತ ಜಾಗೃತಿ ಯಾತ್ರೆʼ
ಬೆಂಗಳೂರು : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗಾಗಿ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಮಾಡುವ ಮೂಲಕ ರೈತ ಜಾಗೃತಿ ಯಾತ್ರೆ ನಡೆಸಲಾಗುತ್ತದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಶನಿವಾರ ನಗರದ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಎಂಎಸ್ಪಿ ಖಾತರಿ ಕಾನೂನು ಇಲ್ಲದ ಕಾರಣ ವರ್ಷಕ್ಕೆ 15ಲಕ್ಷ ಕೋಟಿ ರೂ.ನಷ್ಟ ಅನುಭವಿಸುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಫೆ.7ರಿಂದ ರೈತ ಜಾಗೃತಿ ಯಾತ್ರೆ ಕನ್ಯಾಕುಮಾರಿಯಿಂದ ಆರಂಭವಾಗಿ ಕೇರಳ, ಪಾಂಡಿಚರಿ, ತಮಿಳುನಾಡು ಮುಖಾಂತರ ಅಲ್ಲಿನ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಾ ಯಾತ್ರೆ ಸಾಗಲಿದೆ ಎಂದರು. ಈ ಮಾರ್ಗದಲ್ಲಿ ಸಿಗುವ ಹಳ್ಳಿಗಳ ರೈತರಿಂದ ಸಹಿ ಸಂಗ್ರಹ ಪಡೆದು ಮಾ.19 ರಂದು ಪ್ರಧಾನಿಗೆ ಸಲ್ಲಿಸಲಾಗುವುದು. 40 ದಿನಗಳ ನಂತರ ರೈತ ಯಾತ್ರೆ ಕಾಶ್ಮೀರಕ್ಕೆ ತಲುಪಿ, ದಿಲ್ಲಿಯ ರಾಮ್ ಲೀಲಾ ಮೈದಾನದಲ್ಲಿ ದೇಶದ ಎಲ್ಲ ರೈತರ ಬೃಹತ್ ಸಮಾವೇಶ ನಡೆಸಲಾಗುತ್ತದೆ ಎಂದು ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ರೈತ ಹೋರಾಟಗಾರರಾದ ಹತ್ತಳ್ಳಿ ದೇವರಾಜ್, ಗುರುದೇವ ನಾರಾಯಣ ಕುಮಾರ್, ನರಸರೆಡ್ಡಿ, ಶಿವಕುಮಾರ್, ಬೈರಾರೆಡ್ಡಿ, ನಾಗರಾಜ್ ಉಪಸ್ಥಿತರಿದ್ದರು.
ಗೃಹ ಸಚಿವರೇ ಅಸಹಾಯಕರಾದರೆ ಸರ್ಕಾರ ಅಕ್ರಮ ಮರಳು ಗಣಿಗಾರಿಕೆ ತಡೆಯುವುದೆಂಬ ಭರವಸೆ ಉಳಿಯದು : ಹೈಕೋರ್ಟ್
ಬೆಂಗಳೂರು : ಮರಳು ಅಕ್ರಮ ದಂಧೆಗೆ ಕಡಿವಾಣ ಹಾಕಲು ರಾಜ್ಯದ ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದರೆ ರಾಜ್ಯ ಸರ್ಕಾರವು ಅದಕ್ಕೆ ಕಡಿವಾಣ ಹಾಕಲಿದೆ ಎಂಬ ಭರವಸೆ ಹೊಂದಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಇದೊಂದು ಗಂಭೀರ ವಿಚಾರವಾಗಿರುವುದರಿಂದ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಕೇಂದ್ರೀಯ ಸಂಸ್ಥೆ ಅಥವಾ ವಿಶೇಷ ತನಿಖಾ ಸಂಸ್ಥೆಯಿಂದ ತನಿಖೆ (ಎಸ್ಐಟಿ) ನಡೆಸಬೇಕಾದ ಅಗತ್ಯವಿದೆ ಎಂದು ಹೇಳಿದೆ. ಗೃಹ ಸಚಿವ ಜಿ. ಪರಮೇಶ್ವರ್ ಅವರು ಜನವರಿ 27ರಂದು ಅಧಿವೇಶನದಲ್ಲಿ ಮಾತನಾಡುತ್ತಾ, ರಾಜ್ಯದಲ್ಲಿ ಪಕ್ಷಾತೀತವಾಗಿ ಹಲವು ಪ್ರಭಾವಿಗಳು ಮರಳು ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಜನವರಿ 28ರಂದು ಮಾಧ್ಯಮಗಳು ಪ್ರಕಟಿಸಿರು ವರದಿಯನ್ನು ಉಲ್ಲೇಖಿಸಿ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ತಾರಾ ವಿತಾಸ್ತಾ ಗಂಜು ಅವರ ವಿಭಾಗೀಯ ನ್ಯಾಯಪೀಠ, ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿದೆ. ಇದೇ ವೇಳೆ, ಪ್ರತಿವಾದಿಗಳಾದ ರಾಜ್ಯ ಗೃಹ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಅರಣ್ಯ ಮತ್ತು ಪರಿಸರ ಇಲಾಖೆಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಪೀಠ, 3 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿದೆ. ಜತೆಗೆ, ಪ್ರಕರಣ ದಾಖಲಿಸಿದ ಬಳಿಕ ಸ್ವಯಂಪ್ರೇರಿತ ಪಿಐಎಲ್ ಅನ್ನು ಸೂಕ್ತ ಪೀಠ ವಿಚಾರಣೆ ನಡೆಸಲು ನಿರ್ದೇಶಿಸಲು ಮುಖ್ಯ ನ್ಯಾಯಮೂರ್ತಿಗಳ ಮುಂದಿಡುವಂತೆ ನಿರ್ದೇಶಿಸಿದೆ. ಗೃಹ ಸಚಿವ ಜಿ ಪರಮೇಶ್ವರ್ ಅವರು, ಮರಳು ಅಕ್ರಮ ಸಾಗಣೆಯು ದೊಡ್ಡ ರ್ಯಾಕೆಟ್ ಆಗಿದ್ದು, ಅದರಲ್ಲಿ ಹಲವು ಪ್ರಭಾವಿಗಳು ಭಾಗಿಯಾಗಿದ್ದಾರೆ. ಇಲ್ಲಿ ನಾನು ಯಾರ ಹೆಸರನ್ನೂ ಹೇಳುತ್ತಿಲ್ಲ. ಏಕೆಂದರೆ ಅದು ಮುಜುಗರ ಉಂಟು ಮಾಡುತ್ತದೆ. ಸೀಮಿತ ಉತ್ತರ ನೀಡಿದ್ದು, ಈ ದಂಧೆಯಲ್ಲಿ ಹಲವು ಪ್ರಭಾವಿಗಳಿದ್ದಾರೆ. ಈ ಕುರಿತು ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಹೇಳಿರುವುದನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ. ಮರಳು ಗಣಿಗಾರಿಕೆ ನಡೆಸಲು ಬಿಡ್ ಆಹ್ವಾನಿಸಲಾಗಿದೆ. ಆದರೆ, ಅವುಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಹಣದ ಹೊಳೆ ಹರಿಸುವ ಈ ರ್ಯಾಕೆಟ್ನಲ್ಲಿ ದೊಡ್ಡ ತಿಮಿಂಗಿಲಗಳು ಭಾಗಿಯಾಗಿದ್ದು, ಮರಳು ಗಣಿಗಾರಿಕೆಯನ್ನು ಕಾನೂನಾತ್ಮಕಗೊಳಿಸುವುದು ಅವರಿಗೆ ಇಷ್ಟವಿಲ್ಲ. ಮರಳು ಗಣಿಗಾರಿಕೆಯ ಗುತ್ತಿಗೆಗಾರಿಗೆ ನೀಡಿದರೆ, ಹಣವು ಸರ್ಕಾರದ ಬೊಕ್ಕಸಕ್ಕೆ ಹೋಗಲಿದ್ದು, ಮಾಫಿಯಾಗಳಿಗೆ ಅಕ್ರಮ ಹಣ ಸಂದಾಯವಾಗುವುದು ನಿಂತು ಹೋಗಲಿದೆ ಎಂದು ವರದಿ ಮಾಡಲಾಗಿದೆ ಎಂದೂ ಆದೇಶದಲ್ಲಿ ದಾಖಲಿಸಲಾಗಿದೆ. ರಾತ್ರಿ ವೇಳೆಯಲ್ಲಿ ಕೃಷ್ಣಾ ನದಿ ತೀರದಲ್ಲಿ ಮರಳು ಅಕ್ರಮ ಸಾಗಣೆ ನಡೆಯುತ್ತಿದ್ದು, ಇದರಿಂದ ಬೆಳೆಗಳ ಮೇಲೆ ಧೂಳು ಕುಳಿತು ಫಸಲಿಗೆ ಹಾನಿಯಾಗುತ್ತಿದೆ ಎಂದು ರೈತರು ದೂರುತ್ತಿದ್ದಾರೆ. ವಿಶೇಷ ಕಾರ್ಯಾಚರಣಾ ದಳವು (ಎಸ್ಟಿಎಫ್) ನೆಪಮಾತ್ರಕ್ಕೆ ಉಳಿದಿದೆ. ಮರಳು ಅಕ್ರಮ ಗಣಿಗಾರಿಕೆ ನಡೆಯುವ ಜಾಗಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸದಿರುವುದು ಹಾಗೂ ಚೆಕ್ ಪೋಸ್ಟ್ಗಳು ಇಲ್ಲದೇ ಇರುವುದರಿಂದ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವ ವಾಹನಗಳಿಂದ ಹಲವು ಸಾವುಗಳು ಸಂಭವಿಸಿವೆ. ರಾಯಚೂರು ಜಿಲ್ಲೆಯ ಮಹಿಳಾ ವಿಧಾನಸಭಾ ಸದಸ್ಯರೊಬ್ಬರು ಮರಳು ಮಾಫಿಯಾ ವಿಚಾರದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ತಮಗೆ ಜೀವ ಬೆದರಿಕೆ ಇರುವುದರ ಕುರಿತು ದೂರಿದ್ದಾರೆ ಎಂದೂ ಆದೇಶದಲ್ಲಿ ವಿವರಿಸಲಾಗಿದೆ.
ಕಲಬುರಗಿಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ NABL ಮಾನ್ಯತೆ
ಕಲಬುರಗಿ : ಗುಣಮಟ್ಟ ಮತ್ತು ನಿಖರ ಪೀಡೆನಾಶಕ ಪರೀಕ್ಷಾ ವಿಧಾನಗಳನ್ನು ಅನುಸರಿಸುತ್ತಿರುವುದಕ್ಕಾಗಿ ಕಲಬುರಗಿಯ ರಾಜ್ಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ (SPTL) ರಾಷ್ಟ್ರೀಯ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯ ಮಂಡಳಿ (NABL)ಯಿಂದ ISO/IEC 17025 ಅಂತರರಾಷ್ಟ್ರೀಯ ಮಾನ್ಯತೆ ಲಭಿಸಿದೆ. ಈ ಮೂಲಕ ಪ್ರಯೋಗಾಲಯದ ಪರೀಕ್ಷಾ ವರದಿಗಳಿಗೆ ಅಂತರರಾಷ್ಟ್ರೀಯ ಮಾನ್ಯತೆ ದೊರೆತಂತಾಗಿದೆ. ISO/IEC 17025 ಮಾನ್ಯತೆ ಪಡೆಯುವ ಮೂಲಕ ಕಲಬುರಗಿ ರಾಜ್ಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯವು ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಕೃಷಿ ಗುಣಮಟ್ಟ ಭರವಸೆ ಮತ್ತು ತಾಂತ್ರಿಕ ಶ್ರೇಷ್ಠತೆಯನ್ನು ಬಲಪಡಿಸುವತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಎನ್.ಎ.ಬಿ.ಎಲ್. ಮಾನ್ಯತೆಯು ಪ್ರಯೋಗಾಲಯದ ವಿಶ್ವಾಸಾರ್ಹತೆ, ನಿಖರತೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಕೀಟನಾಶಕ ಪರೀಕ್ಷಾ ಸೇವೆಗಳ ಬದ್ಧತೆಯನ್ನು ದೃಢಪಡಿಸುತ್ತದೆ. ಈ ಮಾನ್ಯತೆಯಿಂದ ಕಲಬುರಗಿ, ಯಾದಗಿರಿ, ಬೀದರ್ ಹಾಗೂ ವಿಜಯಪುರ ಜಿಲ್ಲೆಗಳ ರೈತರು, ಕೃಷಿ ಇನ್ಪುಟ್ ಪೂರೈಕೆದಾರರು ಮತ್ತು ಇತರ ಪಾಲುದಾರರಿಗೆ ಗುಣಮಟ್ಟದ ಪೀಡೆನಾಶಕಗಳ ಭರವಸೆ ದೊರೆಯಲಿದ್ದು, ಸುಸ್ಥಿರ ಕೃಷಿಗೆ ಉತ್ತೇಜನ ಸಿಗಲಿದೆ. ಇದರಿಂದ ಒಟ್ಟಾರೆ ಕಲ್ಯಾಣ ಕರ್ನಾಟಕ ಪ್ರದೇಶದ ಕೃಷಿ ವಲಯದ ಗುಣಮಟ್ಟ ಬಲಪಡಿಸುವಲ್ಲಿ ಈ ಪ್ರಯೋಗಾಲಯ ಮಹತ್ವದ ಪಾತ್ರ ವಹಿಸಲಿದೆ. ಕೀಟನಾಶಕ ಕಾಯ್ದೆ–1968ರ ಅಡಿಯಲ್ಲಿ ರೈತರಿಗೆ ಗುಣಮಟ್ಟದ ಪೀಡೆನಾಶಕಗಳನ್ನು ಖಚಿತಪಡಿಸುವ ಉದ್ದೇಶದಿಂದ 1997ರ ಏಪ್ರಿಲ್ನಲ್ಲಿ ಕಲಬುರಗಿಯಲ್ಲಿ ಸ್ಥಾಪಿಸಲಾದ ಈ ಪ್ರಯೋಗಾಲಯವು, ವಾರ್ಷಿಕವಾಗಿ 1,280 ಪೀಡೆನಾಶಕ ಮಾದರಿಗಳ ಪರೀಕ್ಷೆ ನಡೆಸುವ ಗುರಿ ಹೊಂದಿದೆ. ಕಳೆದ ಆರು ತಿಂಗಳುಗಳಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಜಂಟಿ ನಿರ್ದೇಶಕರ ಮಾರ್ಗದರ್ಶನದಲ್ಲಿ ಪ್ರಯೋಗಾಲಯ ತಂಡವು ಉಪಕರಣಗಳ ಮಾಪನಾಂಕ ನಿರ್ಣಯ, ಸಿಬ್ಬಂದಿಗೆ ಸಮಗ್ರ ತರಬೇತಿ, ಕಠಿಣ ಗುಣಮಟ್ಟ ನಿರ್ವಹಣಾ ವ್ಯವಸ್ಥೆ ಹಾಗೂ ಅಂತರಿಕ ಲೆಕ್ಕಪರಿಶೋಧನೆಗಳ ಮೂಲಕ ಗಮನಾರ್ಹ ಸಮರ್ಪಣೆಯನ್ನು ಪ್ರದರ್ಶಿಸಿದೆ. ಇದರ ಫಲವಾಗಿ ಎನ್.ಎ.ಬಿ.ಎಲ್. ತಂಡವು ಪ್ರಯೋಗಾಲಯದ ತಾಂತ್ರಿಕ ಸಾಮರ್ಥ್ಯವನ್ನು ಪರಿಶೀಲಿಸಿ ISO/IEC 17025 ಮಾನದಂಡದ ಪ್ರಕಾರ ಪ್ರಮಾಣೀಕರಿಸಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಆರು ಎಸ್.ಪಿ.ಟಿ.ಎಲ್ ಪ್ರಯೋಗಾಲಯಗಳು ಎನ್.ಎ.ಬಿ.ಎಲ್ ಮಾನ್ಯತೆ ಪಡೆದಂತಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಮಾನ್ಯತೆ ಲಭಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಮಾನ್ಯತಾ ಪ್ರಮಾಣಪತ್ರವನ್ನು ಪ್ರಯೋಗಾಲಯದ ಮುಖ್ಯಸ್ಥರಾಗಿರುವ ಉಪ ಕೃಷಿ ನಿರ್ದೇಶಕ ಜುಲ್ಫಿಖರ ಅಹೆಮದ್ ಅವರಿಗೆ ಔಪಚಾರಿಕವಾಗಿ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಎಸ್.ಪಿ. ಅಡೂರು ಶ್ರೀನಿವಾಸಲು, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಂಟಿ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್ ಉಪಸ್ಥಿತರಿದ್ದರು.
ಕಲಬುರಗಿ | ವಿಬಿ ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವಂತೆ ಆಗ್ರಹ
ಕೇಂದ್ರ ಸರಕಾರದಿಂದ ರೈತ, ಕೃಷಿ ಕಾರ್ಮಿಕರಿಗೆ ಮೋಸ: ಕೆ.ನೀಲಾ ಆಕ್ರೋಶ
ರಾಯಚೂರು | ಬಾಲ್ಯ ವಿವಾಹ ನಿಷೇಧ ಜಾಗೃತಿ ಸಂಚಾರಿ ರಥಕ್ಕೆ ಹಸಿರು ನಿಶಾನೆ
ಮಕ್ಕಳು ಭವಿಷ್ಯ ರೂಪಿಸಿಕೊಳ್ಳುವತ್ತ ಗಮನ ಹರಿಸಲಿ: ನ್ಯಾ.ಹೆಚ್.ಎ.ಸಾತ್ವಿಕ್
Gaza Peace: ಗಾಜಾ ಶಾಂತಿ ಮಾತುಕತೆ ಜೊತೆಗೇ ನಿಲ್ಲದ ಕಾರ್ಯಾಚರಣೆ, ವಾಯುದಾಳಿಗೆ 27 ಬಲಿ?
ಇಸ್ರೇಲ್ ಮತ್ತು ಹಮಾಸ್ ನಡುವೆ ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ರಣಭೀಕರ ಯುದ್ಧವನ್ನು ನಿಲ್ಲಿಸಬೇಕು ಎಂಬುದು ಇಡೀ ಜಗತ್ತಿನ ಆಸೆ. ಇದೇ ಕಾರಣಕ್ಕೆ ಇಸ್ರೇಲ್ ಮತ್ತು ಹಮಾಸ್ ಯುದ್ಧ ನಿಲ್ಲಿಸಲು ಏನು ಸಾಧ್ಯವೋ ಅದನ್ನೆಲ್ಲಾ ಮಾಡುತ್ತಿವೆ ಜಗತ್ತಿನ ಶಕ್ತಿಶಾಲಿ ದೇಶಗಳು. ಆದರೂ ಈ ಯುದ್ಧ ನಿಲ್ಲಿಸುವುದು ಅಷ್ಟು ಸುಲಭದ ವಿಚಾರವಲ್ಲ, ಏಕೆಂದರೆ ಒಂದು ಕಡೆ ಯುದ್ಧ ನಿಲ್ಲಿಸಿ ಇನ್ನೇನು
ಹೊಸಪೇಟೆ | ಸಂಚಾರ ಪೊಲೀಸ್ ಠಾಣೆಯ ಎಸ್ಐ ಶೇಷಾಚಲಂ ನಾಯ್ಡುಗೆ ವಯೋನಿವೃತ್ತಿ ಬೀಳ್ಕೊಡುಗೆ
ವಿಜಯನಗರ (ಹೊಸಪೇಟೆ) :ಹೊಸಪೇಟೆ ನಗರದ ಸಂಚಾರ ಪೊಲೀಸ್ ಠಾಣೆಯ ಎಸ್ಐ ಶ್ರೀ ಶೇಷಾಚಲಂ ನಾಯ್ಡು ಅವರ ವಯೋನಿವೃತ್ತಿ ಕಾರ್ಯಕ್ರಮವನ್ನು ನಗರದ ರಾಯಲ್ ಫಂಕ್ಷನ್ ಹಾಲ್ನಲ್ಲಿ ಭಾನುವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು, ಬಂಧುಬಳಗ ಹಾಗೂ ಸ್ನೇಹಿತರು ಭಾಗವಹಿಸಿ, ಶ್ರೀ ಶೇಷಾಚಲಂ ನಾಯ್ಡು ಅವರ ದೀರ್ಘಕಾಲದ ಸೇವೆ, ಶಿಸ್ತುಬದ್ಧ ಕಾರ್ಯಶೈಲಿ ಹಾಗೂ ಪೊಲೀಸ್ ಇಲಾಖೆಗೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು. ತಮ್ಮ ವೃತ್ತಿ ಜೀವನದಲ್ಲಿ ಸಂಚಾರ ನಿಯಂತ್ರಣ, ಸಾರ್ವಜನಿಕ ಸೇವೆ ಮತ್ತು ಶಿಸ್ತು ಕಾಪಾಡುವಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಮೆಚ್ಚಿ, ಭಾಗವಹಿಸಿದ್ದ ಗಣ್ಯರು ಭಾವಪೂರ್ಣವಾಗಿ ಬೀಳ್ಕೊಡುಗೆ ನೀಡಿ ಶುಭ ಹಾರೈಸಿದರು.
ಖುಮತೈ (ಅಸ್ಸಾಂ): ಬಂಗಾಳಿ ಭಾಷಿಕ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ತಮ್ಮ ಮೇಲೆ ಲೇಖಕ ಹಾಗೂ ಸಾಮಾಜಿಕ ಹೋರಾಟಗಾರ ಹರ್ಷ್ ಮಂದರ್ ಪೊಲೀಸ್ ದೂರು ದಾಖಲಿಸಿದ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ, “ನಾನು ಅವರ ವಿರುದ್ಧ ಕನಿಷ್ಠ 100 ಪ್ರಕರಣಗಳನ್ನು ದಾಖಲಿಸುತ್ತೇನೆ” ಎಂದು ಬೆದರಿಕೆ ಒಡ್ಡಿದ್ದಾರೆ. ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಮಾತನಾಡಿದ ಹಿಮಂತ ಬಿಸ್ವ ಶರ್ಮ, “ಹರ್ಷ್ ಮಂದರ್ ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕ ನೋಂದಣಿ ಪ್ರಕ್ರಿಯೆಯನ್ನು ಹಾಳುಗೆಡವುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. “ಯಾರು ಹರ್ಷ್ ಮಂದರ್? ಅವರಂತಹ ಅನೇಕರನ್ನು ನಾನು ನೋಡಿದ್ದೇನೆ” ಎಂದು ಅವರು ಹರಿಹಾಯ್ದಿದ್ದಾರೆ. “ಅವರು ನನ್ನ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದಾರೆ. ನೋಡುತ್ತಿರಿ, ನಾನು ಕನಿಷ್ಠ 100 ಪ್ರಕರಣಗಳನ್ನು ಅವರ ವಿರುದ್ಧ ದಾಖಲಿಸುತ್ತೇನೆ. ನನ್ನ ಬಳಿ ಅದಕ್ಕೆ ಬೇಕಾದ ಪುರಾವೆಗಳಿವೆ” ಎಂದು ಅವರು ನೇರ ಬೆದರಿಕೆ ಒಡ್ಡಿದ್ದಾರೆ. “ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕ ನೋಂದಣಿ ಪ್ರಕ್ರಿಯೆಯನ್ನು ಹಾಳುಗೆಡವುತ್ತಿದ್ದಾರೆ” ಎಂದು ಹರ್ಷ್ ಮಂದರ್ ವಿರುದ್ಧ ವಾಗ್ದಾಳಿ ನಡೆಸಿದ ಹಿಮಂತ ಬಿಸ್ವ ಶರ್ಮ, “ಒಂದು ವೇಳೆ ಆಗ ನಾನಿದ್ದಿದ್ದರೆ, ಆತನಿಗೆ ಒಂದು ಪಾಠ ಕಲಿಸುತ್ತಿದ್ದೆ” ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ನಾಗರಿಕ ನೋಂದಣಿ ಪ್ರಕ್ರಿಯೆಯನ್ನು ಸುಧಾರಿಸಿದಾಗ, ರಾಜ್ಯಕ್ಕೆ ಭೇಟಿ ನೀಡಿದ್ದ ಹರ್ಷ್ ಮಂದರ್ ಹಾಗೂ ಇನ್ನಿತರರು ಇಡೀ ಪ್ರಕ್ರಿಯೆಯನ್ನು ಹಾಳುಗೆಡವಿದ್ದರು ಎಂದು ಅವರು ಆರೋಪಿಸಿದ್ದಾರೆ. ಅಸ್ಸಾಂನಲ್ಲಿ ಬಂಗಾಳಿ ಭಾಷಿಕ ಮುಸ್ಲಿಮರ ವಿರುದ್ಧ ಹಿಮಂತ ಬಿಸ್ವ ಶರ್ಮ ದ್ವೇಷ, ಕಿರುಕುಳ ಹಾಗೂ ತಾರತಮ್ಯವನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ, ಹರ್ಷ್ ಮಂದರ್ ಅವರು ದಿಲ್ಲಿಯ ಹೌಝ್ ಖಾಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕಲಬುರಗಿ ನಗರಕ್ಕೆ ಕಲುಷಿತ ನೀರು: ಮಹಾಪೌರ, ಆಯುಕ್ತರಿಂದ ಸ್ಪಷ್ಟನೆ
ಕಲಬುರಗಿ, ಜ.31: ಭೀಮಾ ಬ್ಯಾರೇಜ್ನಿಂದ ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುತ್ತಿರುವ ಶುದ್ಧೀಕರಣ ಘಟಕದಲ್ಲಿ ಯಂತ್ರಗಳಲ್ಲಿ ದೋಷಗಳು ಕಾಣಿಸಿಕೊಂಡಿದ್ದರಿಂದ ಕಲುಷಿತ ನೀರು ಸರಬರಾಜು ಆಗಿದೆ. ಹಾಗಾಗಿ ನೀರು ಪೂರೈಕೆ ಸ್ಥಗಿತಗೊಳಿಸಲಾಗಿತ್ತು ಎಂದು ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರ ವರ್ಷಾ ಜಾನೆ ಹಾಗೂ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ ಅವರು ಸ್ಪಷ್ಟನೆ ನೀಡಿದ್ದಾರೆ. ಶುಕ್ರವಾರ ಪಾಲಿಕೆಯ ಕಚೇರಿಯಲ್ಲಿ ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶುದ್ಧೀಕರಣ ಘಟಕದಲ್ಲಿ ತಾಂತ್ರಿಕ ತೊಂದರೆಯಾಗಿರುವ ಕಾರಣ ಹಾಳಾಗಿರುವ ಯಂತ್ರ ಸ್ಥಳೀಯವಾಗಿ ಲಭ್ಯವಿರಲಿಲ್ಲ. ಹಾಗಾಗಿ ಅವುಗಳನ್ನು ಮಹಾರಾಷ್ಟ್ರದ ಪುಣೆ, ಗುಜರಾತ್ ಕಡೆಗಳಿಂದ ತರಿಸಿ ಅಳವಡಿಸಲಾಗಿದೆ. ರವಿವಾರದಿಂದ ಮತ್ತೆ ಶುದ್ಧ ನೀರು ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ ಎಂದರು. ಕಳೆದ ಒಂದು ವಾರದಿಂದ ಯಂತ್ರಗಳು ಕೆಟ್ಟು ಹೋಗಿದ್ದರಿಂದ ನೀರು ಸಮರ್ಪಕವಾಗಿ ಶುದ್ಧೀಕರಣ ಆಗುತ್ತಿರಲಿಲ್ಲ. ಹಾಗಾಗಿ ಕಲುಷಿತ ನೀರು ಸರಬರಾಜು ಆಗಿತ್ತು. ಇದನ್ನು ಎಚ್ಚೆತ್ತುಕೊಂಡೇ ನಾವು ನೀರು ಸರಬರಾಜು ಮಾಡುವುದನ್ನು ನಿಲ್ಲಿಸಿದ್ದೆವು. ಈಗ ಉತ್ತಮ ಯಂತ್ರಗಳ ಅಳವಡಿಕೆ ಮಾಡಿರುವುದರಿಂದ ಯೋಗ್ಯ ನೀರು ಸಿಗಲಿದೆ ಎಂದು ವಿವರಿಸಿದರು. ಕಳೆದ ಒಂದು ವಾರದಿಂದ ನೀರಿನ ಪೂರೈಕೆ ಆಗದೆ ಇರುವುದರಿಂದ ಹೆಚ್ಚಿನ ಕಡೆಗಳಲ್ಲಿ ಟ್ಯಾಂಕರ್ ನೀರು ಸರಬರಾಜು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನಿವಾಸಿಗಳಿಗೆ ತೊಂದರೆಯಾಗದಂತೆ ಸಮರ್ಪಕ ನೀರು ಒದಗಿಸುವಲ್ಲಿ ಪಾಲಿಕೆ ಶ್ರಮಿಸುತ್ತಿದೆ ಎಂದ ಪಾಲಿಕೆ ಆಯುಕ್ತರು, ಕೊಳವೆ ಬಾವಿ ದುರಸ್ತಿ, ಹೊಸ ಕೊಳವೆ ಬಾವಿ ಕೊರೆಯುವುದು ಸೇರಿದಂತೆ ಶುದ್ಧ ನೀರಿನ ಘಟಕಗಳ ಅಳವಡಿಕೆ, ಕಾರ್ಯವೂ ನಡೆಯುತ್ತಿದೆ ಎಂದು ತಿಳಿಸಿದರು.
Pakistan Economy: ಸಾಲಕ್ಕಾಗಿ ಭಿಕ್ಷೆ ಬೇಡುತ್ತಿರುವ ಬಗ್ಗೆ ಕೊನೆಗೂ ಒಪ್ಪಿಕೊಂಡ ಪಾಕ್ ಪ್ರಧಾನಿ ಷರೀಫ್
ಪಾಕಿಸ್ತಾನ ಆರ್ಥಿಕವಾಗಿ ಬೀದಿಗೆ ಬಂದು ನರಳುತ್ತಿರುವ ವಿಚಾರ ಇಡೀ ಜಗತ್ತಿಗೇ ಗೊತ್ತಾಗಿದ್ದು, ಈ ದೇಶ ತನ್ನನ್ನು ತಾನು ಮುನ್ನಡೆಸಿಕೊಂಡು ಹೋಗಲು ಆಗುತ್ತಿಲ್ಲ. ಅದರಲ್ಲೂ ಸ್ವತಃ ಪಾಕ್ ರಾಜಕಾರಣಿಗಳೇ ಇದೀಗ ಸಾಲಕ್ಕಾಗಿ ಭಿಕ್ಷೆ ಬೇಡುತ್ತಿರುವ ಬಗ್ಗೆ ಕೊನೆಗೂ ಸತ್ಯ ಒಪ್ಪಿಕೊಂಡಿದ್ದಾರೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಗೌರವ ಯಾಕೆ ಕುಸಿಯುತ್ತಿದೆ ಎಂಬುದನ್ನ ಅವರೇ ಒಪ್ಪಿಕೊಂಡ ರೀತಿ ಕಾಣಿಸುತ್ತಿದೆ.
ಕಾರಾಗೃಹಗಳ ಮೇಲೆ 24 ಗಂಟೆಯೂ ನಿಗಾ: ಗಾಂಧಿನಗರದಲ್ಲಿ ಹೊಸ ಕಮಾಂಡ್ ಸೆಂಟರ್ ಆರಂಭ
ಬೆಂಗಳೂರು: ರಾಜ್ಯದ ಕಾರಾಗೃಹ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆಯತ್ತ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರಧಾನ ಕಚೇರಿಯಲ್ಲಿ ನೂತನವಾಗಿ ಸ್ಥಾಪಿಸಲಾದ ಕಾರಾಗೃಹ ‘ಸೆಂಟ್ರಲ್ ಕಮಾಂಡ್ ಸೆಂಟರ್' ಅನ್ನು ಗೃಹ ಸಚಿವ ಜಿ.ಪರಮೇಶ್ವರ್ ಉದ್ಘಾಟಿಸಿದ್ದು, ಈ ಕೇಂದ್ರದ ಮೂಲಕ ರಾಜ್ಯದ ಎಲ್ಲ ಪ್ರಮುಖ ಕಾರಾಗೃಹಗಳ
ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲು ಆಗ್ರಹಿಸಿ ಕೇಂದ್ರಕ್ಕೆ ಪತ್ರ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು, ಜ. 31: ಸಾಮಾಜಿಕ ಜಾಲಾತಾಣಗಳು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ವಿಚಾರ ಇದೊಂದು ಜಾಗತಿಕ ಸಮಸ್ಯೆಯಾಗಿದೆ. ಇದಕ್ಕೆ ಕಾನೂನಾತ್ಮಕವಾಗಿ ಸ್ಪಂದಿಸಬೇಕಾಗುತ್ತಿದೆ. ಇವತ್ತಿನ ಪೀಳಿಗೆಗೆ ಇದೊಂದು ದೊಡ್ಡ ಸಮಸ್ಯೆಯಾಗಿದೆ. ಆಸ್ತ್ರೇಲಿಯದಲ್ಲಿ ಈಗಾಗಲೇ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಲಾಗಿದೆ. ನಮ್ಮ ದೇಶದಲ್ಲಿ ಇದು ಅಗತ್ಯ. ಈ ವಿಚಾರದ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ ಮಂಗಳೂರಿನಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಮಾಜಿಕ ಜಾಲಾತಾಣಗಳು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ವಿಚಾರದ ಬಗ್ಗೆ ಮಾತನಾಡಿದ ಅವರು ಯುವ ಸಮುದಾಯ ಮಾನಸಿಕ ಖಿನ್ನತೆ , ಒತ್ತಡ ಮತ್ತಿತರ ಸಮಸ್ಯೆಯಿಂದ ಬಳಲುತ್ತಿರುವ ಪ್ರಕರಣಗಳು ನಮ್ಮಲ್ಲಿ ಜಾಸ್ತಿಯಾಗಿದೆ. ಇದೊಂದು ಯುವ ಪೀಳಿಗೆಗೆ ದೊಡ್ಡ ಸಮಸ್ಯೆಯಾಗಿದೆ ಆತ್ಮಹತ್ಯೆ ಉದ್ಯಮಿ ಸಿ.ಜೆ. ರಾಯ್ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡರು ಮತ್ತು ಏನಾಗಿದೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಐಟಿ ಮತ್ತು ಈಡಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ. ರಾಯ್ ಆತ್ಮಹತ್ಯೆಗೆ ಈಡಿ ಹಾಗೂ ಐಟಿ ಒತ್ತಡ ಕಾರಣ ಎಂದು ನಾನು ಹೇಳುವುದಿಲ್ಲ ಎಂದರು. ದೇಶದಲ್ಲಿ ಈಡಿ , ಐಟಿ ಮತ್ತಿತರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ಬಳಕೆಯಾಗುತ್ತಿದೆ. ಆದರೆ ರಾಯ್ ಆತ್ಮಹತ್ಯೆ ಈಡಿ ಮತ್ತು ಐಟಿ ಅಧಿಕಾರಿಗಳು ಒತ್ತಡವಿತ್ತು ಎಂದು ನನಗೆ ಹೇಳಲು ಸಾಧ್ಯವಿಲ್ಲ ಎಂದರು. ಬಿಲ್ ಬಾಕಿ ಇರುವುದು ನಿಜ: ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಬಿಲ್ ಬಾಕಿ ಇರುವ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂ ರಾವ್ ಅವರು ರಾಜ್ಯದಲ್ಲಿ ಎಲ್ಲ ಕಡೆ ಕಾಮಗಾರಿ ನಡೆಯುತ್ತಿದೆ. ಕೆಲವು ಕಾಮಗಾರಿಗಳ ಬಿಲ್ ಬಾಕಿ ಇರುವುದು ನಿಜ. ಕೇಂದ್ರ ಸರಕಾರದಿಂದ ಕೋಟ್ಯಂತರ ಹಣ ಬರಲು ಬಾಕಿ ಇದೆ.ಆದರೆ ವಿನಾ ಕಾರಣ ಗುತ್ತಿಗೆದಾರ ಸಂಘಟನೆಗಳು ಸರಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವುದು ಸಲ್ಲದು. ಸರಕಾರದೊಂದಿಗೆ ಮಾತುಕತೆ ನಡೆಸಿ ಅವರು ತಮ್ಮ ಸಮಸ್ಯೆ ಇತ್ಯರ್ಥಗೊಳಿಸಲಿ ಎಂದು ಹೇಳಿದರು.
ಆಯುಷ್ನಿಂದ ಆನೇಕ ರೋಗಗಳ ನಿಯಂತ್ರಣ, ಚಿಕಿತ್ಸೆ ಸಾಧ್ಯ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು, ಜ.31: ಇಂದು ಜಗತ್ತಿನಲ್ಲಿ ಆಲೋಪತಿಗೆ ಬೇಡಿಕೆ ಆವಶ್ಯಕತೆ ಇದ್ದೇ ಇದೆ. ಇದರ ಜೊತೆಗೆ ಆಯುರ್ವೇದ, ಹೋಮಿಯೊಪತಿ, ಯುನಾನಿ ಮತ್ತಿತರ ಆಯುಷ್ ಪದ್ಧತಿಯ ಮೂಲಕ ಆನೇಕ ರೋಗಗಳ ನಿವಾರಣೆ ಮತ್ತು ರೋಗ ನಿಯಂತ್ರಣ ಮಾಡಲು ಸಾಧ್ಯ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ ನಗರದ ಡಾ. ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಶನ್ ಸೆಂಟರ್ನಲ್ಲಿ ಆಯುಷ್ ಹಬ್ಬ ಸಮಿತಿ 2026 ವತಿಯಿಂದ ಆಯೋಜಿಸಲಾದ ಎರಡು ದಿನಗಳ ಆಯುಷ್ ಹಬ್ಬ 2026ರಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಯುಷ್ ಮೇಳವನ್ನು ಉತ್ತಮವಾಗಿ ಆಯೋಜಿಸಲಾಗಿದೆ.ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಆಯುಷ್ಗೆ ಬಹಳಷ್ಟು ಪ್ರಾಮುಖ್ಯತೆ ಇದೆ. ಆಯುಷ್ನಲ್ಲಿ ಉತ್ತಮ ಸಂಶೋಧನೆ ನಡೆದಿದೆ. ಪಾರಂಭಿಕ ವೈದ್ಯ ಪದ್ಥತಿಯನ್ನು ಸಂಶೋಧನೆ ಮಾಡಿರುವುದನ್ನು ಆಧುನಿಕ ಜಗತ್ತಿಗೆ ಮತ್ತೊಮ್ಮೆ ತಿಳಿಸುವ ಪ್ರಯತ್ನ ಅಗಿದೆ ಎಂದು ಶ್ಲಾಘಿಸಿದರು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪ್ರಾಚೀನ ವೈದ್ಯ ಪದ್ದತಿಯ ಪಾತ್ರ ದೊಡ್ಡದು. ಇದರ ಬಗ್ಗೆ ಜಾಗೃತಿ ಅಗತ್ಯ ಎಂದು ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಮಠಾಧೀಶ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ನಗರದ ಡಾ. ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಶನ್ ಸೆಂಟರ್ನಲ್ಲಿ ಆಯುಷ್ ಹಬ್ಬ ಸಮಿತಿ 2026 ವತಿಯಿಂದ ಆಯೋಜಿಸಲಾದ ಎರಡು ದಿನಗಳ ಆಯುಷ್ ಹಬ್ಬ 2026ನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಭಾರತೀಯ ಪ್ರಾಚೀನ ವೈದ್ಯ ಪದ್ದತಿಗಳು ದೈಹಿಕ ಮಾತ್ರವಲ್ಲದೆ ಮಾನಸಿಕ ಆರೋಗ್ಯವನ್ನು ಕೂಡ ನೀಡುತ್ತವೆ. ಇದು ಋಷಿ ಮುನಿಗಳು ಜಗತ್ತಿನ ಆರೋಗ್ಯ, ಕಲ್ಯಾಣಕ್ಕಾಗಿ ತೋರಿಸಿದ ಉತ್ತಮ ದಾರಿ ಎಂದು ನುಡಿದರು. ದೇಶದ ಶ್ರೀಮಂತವಾದ ವೈದ್ಯ ಪರಂಪರೆ ಉಳಿಸಬೇಕು. ಅಂತೆಯೇ ಮುಂದಿನ ಜನಾಂಗಕ್ಕಾಗಿ ನಮ್ಮ ಪ್ರಕೃತಿಯನ್ನು ಉಳಿಸುವ ಜವಾಬ್ದಾರಿ ಕೂಡ ನಮ್ಮೆಲ್ಲರ ಮೇಲಿದೆ ಎಂದು ಸ್ವಾಮೀಜಿ ಹೇಳಿದರು. ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನ್ಹ ಅವರು ಮಾತನಾಡಿ, ಅಲೋಪತಿ ಹಲವು ಕಾಯಿಲೆಗಳಿಗೆ ಲಸಿಕೆ, ಔಷಧಿ ನೀಡಿದೆ. ಆದರೆ ಇಂದು ಆಯುರ್ವೇದ, ಯುನಾನಿ ಮೊದಲಾದವುಗಳನ್ನು ಒಳಗೊಂಡ ಪಾರಂಪರಿಕವಾದ ಸಮಗ್ರ ವೈದ್ಯಪದ್ದತಿ ಕೂಡ ಜಾಗತಿಕವಾಗಿ ವ್ಯಾಪಕವಾಗಿ ಬಳಕೆಯಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆಯ ಇತ್ತೀಚಿನ ವರದಿ ಪ್ರಕಾರ ಶೇ 40- ಶೇ.90 ರಷ್ಟು ಮಂದಿ ಬೇರೆ ಬೇರೆ ರೀತಿಯ ಸಾಂಪ್ರದಾಯಿಕ ವೈದ್ಯಕೀಯ ಪದ್ದತಿಯನ್ನು ಅನುಸರಿಸುತ್ತಿದ್ದಾರೆ ಇದರ ಮಾರುಕಟ್ಟೆ ಕೂಡ ವಿಸ್ತರಣೆಯಾಗುತ್ತಿದೆ. ಆಲೋಪತಿಯಲ್ಲಿ ಗುಣವಾಗದ ಕೆಲವು ಕಾಯಿಲೆಗಳಿಗೆ ಆಯುರ್ವೇದದಲ್ಲಿ ಪರಿಹಾರ ದೊರೆಯುತ್ತಿದೆ. ಮಾನಸಿಕ, ದೈಹಿಕ ಆರೋಗ್ಯ, ನೆಮ್ಮದಿಗೆ ಆಯುಷ್ ಕಾರಣವಾಗಿದೆ ಎಂದು ಹೇಳಿದರು. ಪರಂಪರೆಯ ಆಹಾರ ಪದ್ದತಿ ಕಡೆಗೆ ಗಮನ ಹರಿಸಬೇಕಾಗಿದೆ: ಎಸ್ ವೈ ಎಸ್ ದ.ಕ ಜಿಲ್ಲಾಧ್ಯಕ್ಷ ಮೌಲಾನಾ ಅಬ್ದುಲ್ಅಝೀಝ್ ದಾರಿಮಿ ಅವರು ಮಾತನಾಡಿ, ಪ್ರಕೃತಿಯೊಂದಿಗೆ ಸೇರಿ ಬದುಕುವುದನ್ನು ನಮ್ಮ ಪಾರಂಪರಿಕ ಚಿಕಿತ್ಸಾ ಪದ್ದತಿ ಕಲಿಸಿಕೊಟ್ಟಿದೆ. ಮತ್ತೆ ಪರಂಪರೆಯ ಆಹಾರ ಪದ್ದತಿ, ವೈದ್ಯಕೀಯ ಪದ್ದತಿಯ ಕಡೆಗೆ ಹೆಚ್ಚು ಗಮನಹರಿಸಬೇಕಾಗಿದೆ ಎಂದು ಹೇಳಿದರು. ಮಾಹೆ ವಿವಿಯ ಪ್ರೊ ಚಾನ್ಸಲರ್ ಪ್ರೊ. ಎಚ್.ಎಸ್. ಬಳ್ಳಾಲ್ ಅವರು ಮಾತನಾಡಿ, ಇಂದು ಆಯುರ್ವೇದದ ಮೇಲಿನ ನಂಬಿಕೆ ಹೆಚ್ಚುತ್ತಿದೆ. ಮಾಹೆ ಆಯುರ್ವೇದಕ್ಕೂ ಆದ್ಯತೆ ನೀಡುತ್ತಿದೆ. ಹಲವು ಕಾಯಿಲೆಗಳಿಗೆ ಆಯುರ್ವೇದದಲ್ಲಿ ಪರಿಹಾರವಿದೆ. ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಆಯುರ್ವೇದ ಸಹಾಯ ಮಾಡುತ್ತದೆ. ಆಯುರ್ವೇದದ ಬಗ್ಗೆ ಯುವ ಜನತೆಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಹೇಳಿದರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಭಾರತದ ಪ್ರಾಚೀನ ವೈದ್ಯ ಪದ್ದತಿ ಶ್ರೀಮಂತವಾಗಿತ್ತು. ಇಂದಿಗೂ ಅದನ್ನು ಅನುಸರಿಸಿಕೊಂಡು ಬರಲಾಗುತ್ತಿದೆ. ಇದು ಋಷಿ ಮುನಿಗಳಿಂದ ಜಗತ್ತಿಗೆ ಲಭಿಸಿದ ವೈದ್ಯ ಪದ್ದತಿ. ದೈಹಿಕ ಕಾಯಿಲೆಗಳಿಗೆ ಔಷಧಿಯಾಗುವ ಜತೆಗೆ ಒತ್ತಡ ನಿವಾರಣೆ ಯಂತಹ ಮಾನಸಿಕ ಸಮಸ್ಯೆಗೂ ಪರಿಹಾರ ಒದಗಿಸುತ್ತದೆ. ಆಯುರ್ವೇದ ಸಹಿತ ಪಾರಂಪರಿಕ ವೈದ್ಯ ಪದ್ದತಿಯನ್ನು ಬೆಳೆಸುವುದಕ್ಕಾಗಿ ಕೇಂದ್ರ ಸರಕಾರ ಪ್ರತ್ಯೇಕ ಆಯುಷ್ ಸಚಿವಾಲಯ ರಚನೆ ಮಾಡಿದೆ ಎಂದು ಹೇಳಿದರು. ‘ಆಯುಷ್ ಹಬ್ಬ ಸಮಿತಿ- 2026‘ರ ಅಧ್ಯಕ್ಷ ಡಾ. ಕೇಶವ ಪಿ.ಕೆ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಆಯುಷ್ ಅಧಿಕಾರಿ ಡಾ. ಮುಹಮ್ಮದ್ ಇಕ್ಬಾಲ್, ಬೆಂಗಳೂರು ಎಸ್.ವ್ಯಾಸ ವಿಶ್ವವಿದ್ಯಾಲಯದ ಕುಲಪತಿ ಡಾ. ಎಚ್. ಆರ್. ನಾಗೇಂದ್ರ, ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ.ಪುರಾಣಿಕ್, ಎಸ್ ಡಿ ಎಂ ಆಯುರ್ವೇದ ಮೆಡಿಕಲ್ ಕಾಲೇಜುಗಳ ನಿರ್ದೇಶಕ ಡಾ.ಪ್ರಸನ್ನ ನರಸಿಂಹ ರಾವ್, ಡಾ.ಖಾಲಿದ್, ಕೋಟೆಕಲ್ ವೈದ್ಯಕೀಯ ಸಂಸ್ಥೆಯ ಡಾ. ಮಧು ವಾರಿಯರ್, ಆಯುರ್ವೇದ ಯುನಾನಿ ವೈದ್ಯ ಮಂಡಳಿಯ ಮಾಜಿ ಅಧ್ಯಕ್ಷ ಡಾ.ಸತ್ಯಮೂರ್ತಿ ಭಟ್, ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಕಣಚೂರು ಮೋನು, ಸಂಘಟನಾ ಕಾರ್ಯದರ್ಶಿ ಡಾ.ಸಚಿನ್ ನಡ್ಕ ಉಪಸ್ಥಿತರಿದ್ದರು. ಆಯುಷ್ ಹಬ್ಬ ಸಮಿತಿಯ ಗೌರವಾಧ್ಯಕ್ಷೆ ಡಾ. ಆಶಾ ಜ್ಯೋತಿ ರೈ ಸ್ವಾಗತಿಸಿ ವಂದಿಸಿದರು. ಆರೋಗ್ಯಕರ ಆಹಾರ ಹಬ್ಬ, ಮಹಿಳಾ ಸ್ವಾಸ್ಥ್ಯ ಹಬ್ಬ, ಆಯುಷ್ ಸೌಂದರ್ಯ ಹಬ್ಬ, ಹೃದಯ ಆರೋಗ್ಯ ಸಂಭ್ರಮ, ನಾಡಿ ತರಂಗಿಣಿ, ಒತ್ತಡ ನಿರ್ವಹಣಾ ಕೌಶಲ್ಯ, ಸಂತೃಪ್ತ ಜೀವನ ಸಂಧ್ಯಾ, ಸ್ವದೇಶಿ ಸಾವಯವ ಹಬ್ಬ, ಸ್ವಾಸ್ಥ್ಯ ಪ್ರದರ್ಶನ ಮತ್ತು ಔಷಧ ಮಳಿಗೆಗಳು, ವೈದ್ಯಕೀಯ ಅಧೀವೇಶನದ ಹಾಕಥಾನ್, ಸಾಂಸ್ಕೃತಿಕ ವೈಭವ, ಮನರಂಜನಾ ಹಬ್ಬ, ಮಕ್ಕಳ ಹಬ್ಬ, ಆಯುಷ್ ಚಿಕಿತ್ಸಾ ದರ್ಶನ ಔಷಧಿ ಸಸ್ಯ ಪ್ರದರ್ಶನ, ಹಣ್ಣು ಹಂಪಲು, ತರಕಾರಿಗಳ ಆಯುಷ್ ಹಬ್ಬದಲ್ಲಿವೆ.
ಮೂಡಿಗೆರೆ ಶಾಸಕಿಯನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಕೆ.ಮುಹಮ್ಮದ್
ಚಿಕ್ಕಮಗಳೂರು ಜಿಲ್ಲಾ ಮುಸ್ಲಿಮ್ ಒಕ್ಕೂಟದ ಸಭೆ
ಹಾಸನದಲ್ಲಿ ಸೈಟ್ ವಿಚಾರಕ್ಕೆ ನಟ ಯಶ್ನ ತಾಯಿ ಪುಷ್ಪಾ ಜಗಳ! ಏನ್ ರೌಡಿಸಂ ಮಾಡ್ತಿಯಾ? ಎಂದು ಆಕ್ರೋಶ; ಕೇಸ್ ದಾಖಲು
ಹಾಸನ ನಗರದ ವಿದ್ಯಾನಗರ ಬಡಾವಣೆಯಲ್ಲಿ ನಿವೇಶನದ ಮಾಲೀಕತ್ವ ವಿಚಾರವಾಗಿ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಜಿಪಿಎ ಹೋಲ್ಡರ್ ದೇವರಾಜು ನಡುವೆ ತೀವ್ರ ವಾಗ್ವಾದ ನಡೆಯಿತು. ದಾಖಲೆಗಳ ಕುರಿತು ಪ್ರಶ್ನೆ ಎತ್ತಿದ ಪುಷ್ಪಾ, ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿರುವುದಾಗಿ ತಿಳಿಸಿದರು. ಈ ಘಟನೆ ಸಂಬಂಧ ಐವರ ವಿರುದ್ಧ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಲೂಚಿಸ್ತಾನದ 7 ನಗರಗಳ ಮೇಲೆ ಬಿಎಲ್ಎ ದಾಳಿ: ಕ್ವೆಟಾದಲ್ಲಿ ಗಂಭೀರ ಪರಿಸ್ಥಿತಿ
ಜೈಲಿನ ಮೇಲೆ ದಾಳಿ; ಕೈದಿಗಳು ಪರಾರಿ
ಪಂಜಾಬ್ ಕಿಂಗ್ಸ್ನ ಯುವ ಲೆಗ್ ಸ್ಪಿನ್ನರ್ ವಿಶಾಲ್ ನಿಶಾದ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಮ್ಮ ಆದರ್ಶವಾಗಿರುವ ವಿರಾಟ್ ಕೊಹ್ಲಿ ವಿಕೆಟ್ ಪಡೆದರೆ ಅವರ ಪಾದ ಮುಟ್ಟಿ ನಮಸ್ಕರಿಸುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶ ಮೂಲದ ಪ್ರತಿಭಾವಂತ ಸ್ಪಿನ್ನರ್ ಕಠಿಣ ಪರಿಸ್ಥಿತಿಯಲ್ಲೂ ಛಲ ಬಿಡದೆ ಕ್ರಿಕೆಟ್ನಲ್ಲಿ ಯಶಸ್ಸು ಕಂಡವರು. ಯುಪಿಟಿ20 ಲೀಗ್ ನಲ್ಲಿ ಇವರ ಪ್ರತಿಭೆಯನ್ನು ಗಮನಿಸಿದ ಪಂಜಾಬ್ ಕಿಂಗ್ಸ್ ತಂಡ ಇವರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತ. ಇದೀಗ ಅವರು ತಮ್ಮ ಬಾಲ್ಯದ ಕನಸನ್ನು ನನಸಾಗಿಸಿಕೊಳ್ಳಲು ಉತ್ಸುಕರಾಗಿದ್ದಾರೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಬೆಳಗಿನ ವಾಕಿಂಗ್ಗೆ ತೆರಳಿದ್ದ ಟೆಕ್ಕಿ ಮಹಿಳೆಯ ಮೇಲೆ ನೆರೆಯವರ ಸಾಕು ನಾಯಿ ದಾಳಿ ನಡೆಸಿದೆ. ಈ ಘಟನೆಯಲ್ಲಿ ಮಹಿಳೆಗೆ ಮುಖ ಮತ್ತು ಕುತ್ತಿಗೆಗೆ ಗಂಭೀರ ಗಾಯಗಳಾಗಿದ್ದು, ಸುಮಾರು 50ಕ್ಕೂ ಹೆಚ್ಚು ಹೊಲಿಗೆ ಹಾಕಲಾಗಿದೆ. ನಾಯಿ ಮಾಲೀಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಗಾಯಗಳು ಶಾಶ್ವತವಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
Union Budget 2026: 75 ವರ್ಷಗಳ ಬಜೆಟ್ ಪರಂಪರೆಗೆ ಬ್ರೇಕ್: ಹೊಸ ಹೆಜ್ಜೆ ಇಡಲಿದ್ದಾರೆ ನಿರ್ಮಲಾ ಸೀತಾರಾಮನ್
ನವದೆಹಲಿ: ಈ ವರ್ಷದ ಕೇಂದ್ರ ಬಜೆಟ್ (Union Budget 2026) 75 ವರ್ಷಗಳ ಹಿಂದಿನಿಂದ ನಡೆದುಕೊಂಡು ಬಂದಿರುವ ಪರಂಪರೆಯನ್ನು ಮುರಿಯಲು ಸಜ್ಜಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದ ಭಾಗ-ಬಿ ಇದರಲ್ಲಿ ತೆರಿಗೆ ಘೋಷಣೆಗಳಿಗೆ ಮಾತ್ರ ಸೀಮಿತವಾಗದೇ, ಭಾರತದ ಆರ್ಥಿಕ ಭವಿಷ್ಯದ ಬಗ್ಗೆ ಸಮಗ್ರ ದೃಷ್ಟಿಕೋನವನ್ನು ಮಂಡಿಸುವ ಸಾಧ್ಯತೆ ಇದೆ ಎಂದು
ಹಣ ಬೇಡುತ್ತಾ ಜಗತ್ತು ಸುತ್ತಲು ನಮಗೆ ನಾಚಿಕೆಯಾಗುತ್ತದೆ: ಪಾಕ್ ಪ್ರಧಾನಿ ಷರೀಫ್
ಇಸ್ಲಮಾಬಾದ್: ತಾನು ಮತ್ತು ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಆರ್ಥಿಕ ನೆರವು ಬಯಸಿ ಜಗತ್ತನ್ನು ಸುತ್ತಿರುವುದಾಗಿ ಪಾಕಿಸ್ತಾನದ ಪ್ರಧಾನಿ ಷಹಬಾಜ್ ಷರೀಫ್ ಹೇಳಿದ್ದಾರೆ . ಶುಕ್ರವಾರ ರಾತ್ರಿ ಇಸ್ಲಮಾಬಾದ್ನಲ್ಲಿ ಪ್ರಮುಖ ರಫ್ತುದಾರರ ಜೊತೆ ನಡೆಸಿದ ಸಭೆಯಲ್ಲಿ ಷರೀಫ್ ` ಪಾಕಿಸ್ತಾನದ ಆರ್ಥಿಕ ಸ್ಥಿತಿಯಿಂದಾಗಿ ನಮ್ಮ ಮಿತ್ರರಾಷ್ಟ್ರಗಳೂ ಸಾಲ ನೀಡಲು ಹಿಂದೇಟು ಹಾಕುತ್ತಿವೆ. ಸಾಲ ಪಡೆಯಲು ಹೋಗುವವರ ತಲೆ ಯಾವತ್ತೂ ಬಾಗಿರುತ್ತದೆ ಎಂಬುದು ನಿಮಗೂ ತಿಳಿದಿದೆ. ಆಸಿಮ್ ಮುನೀರ್ ರೊಂದಿಗೆ ಹಣವನ್ನು ಬೇಡುತ್ತಾ ಜಗತ್ತನ್ನು ಸುತ್ತಲು ನಮಗೆ ನಾಚಿಕೆಯಾಗುತ್ತದೆ' ಎಂದು ಹೇಳಿರುವುದಾಗಿ ವರದಿಯಾಗಿದೆ.
ಮೂಡುಬಿದಿರೆ: 23ನೇ ವಷ೯ದ ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ
ಮೂಡುಬಿದಿರೆ : ಶಾಸಕ ಉಮಾನಾಥ ಎ. ಕೋಟ್ಯಾನ್ ಸಾರಥ್ಯದಲ್ಲಿ ಮೂಡುಬಿದಿರೆ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ 23ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಕಂಬಳೋತ್ಸವವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು. ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರ ವೇ. ಮೂ.ಈಶ್ವರ ಭಟ್, ಆಲಂಗಾರು ಚಚ್೯ನ ಧಮ೯ಗುರು । ಫಾ। ಮೆಲ್ವಿನ್ ನೊರೊನ್ಹಾ, ಕುಂಟಾಡಿ ಸುಧೀರ್ ಹೆಗ್ಡೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಈಶ್ವರ ಭಟ್ ಅವರು ಜಾತಿ, ಮತ, ಅಂತರ ಮರೆತು ಒಗ್ಗಟ್ಟಾಗಲು ಕಂಬಳ ಸಹಕಾರಿ ಯಾಗಿದೆ. ಕಂಬಳ ಆಯೋಜಕರಿಗೆ, ಕೋಣಗಳ ಮಾಲೀಕರಿಗೆ, ಓಟಗಾರರಿಗೆ ಯಾವುದೇ ದೋಷವಿಲ್ಲದೆ ಕಂಬಳ ನಡೆಯಲಿ ಎಂದು ಶುಭ ಹಾರೈ ಸಿದರು. ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಎಂ. ರವರ ಅಧ್ಯಕ್ಷತೆ ವಹಿಸಿದ್ದರು. ಇದಕ್ಕೂ ಮೊದಲು ಮೂಡುಬಿದಿರೆಯ ಪುತ್ತಿಗೆ, ಆಲಂಗಾರು, ಮಹಮ್ಮಾಯಿ, ಹನುಮಂತ ದೇವಸ್ಥಾನ, ನಾಗರಕಟ್ಟೆ ಗರಡಿ ಹಾಗೂ ಅಯ್ಯಪ್ಪ ಮಂದಿರದ ಪ್ರಸಾದವನ್ನು ಮತ್ತು ತೀಥ೯ವನ್ನು ಕಂಬಳ ಕರೆಗೆ ಪ್ರೋಕ್ಷಿಸಿದರು. ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಉಮಾನಾಥ ಕೋಟ್ಯಾನ್, ಕಂಬಳ ಸಮಿತಿಯ ಪ್ರಧಾನ ಕಾಯ೯ದಶಿ೯ ಗುಣಪಾಲ ಕಡಂಬ, ಕಾಯ೯ದಶಿ೯ ರಂಜಿತ್ ಪೂಜಾರಿ, ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ಪ್ರ.ಕಾಯ೯ದಶಿ೯ ಹರಿಪ್ರಸಾದ್, ಯುವ ಮೋಚಾ೯ದ ಅಧ್ಯಕ್ಷ ಕುಮಾರ್ ಪ್ರಸಾದ್, ರಾಜ್ಯ ಬಿಜೆಪಿ ಕಾಯ೯ಕಾರಿಣಿ ಸದಸ್ಯ ಕೆ. ಆರ್. ಪಂಡಿತ್, ವಕೀಲ ಸುರೇಶ್ ಕೆ. ಪೂಜಾರಿ ಪುರಸಭಾ ನಿಕಟಪೂವ೯ ಅಧ್ಯಕ್ಷೆ ಜಯಶ್ರೀ ಕೇಶವ್, ನಿಕಟಪೂವ೯ ಉಪಾಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ನವೀನ್ ಶೆಟ್ಟಿ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಮೂಡುಬಿದಿರೆ ಲಯನ್ಸ್ ಕ್ಲಬ್ ಅಧ್ಯಕ್ಷ ಶಿವ ಪ್ರಸಾದ್ ಹೆಗ್ಡೆ, ವೆಂಕಟರಮಣ ಮತ್ತು ಹನುಮಂತ ದೇವಸ್ಥಾನಗಳ ಆಡಳಿತ ಮೊಕ್ತೇಸರ ಉಮೇಶ್ ಪೈ, ಬೆಳುವಾಯಿ ಗ್ರಾ. ಪಂ. ಸದಸ್ಯ ರಘು ಪೆಲಕುಂಜ, ಕೋಣಗಳ ಯಜಮಾನ ಇರುವೈಲು ಪಾಣಿಲ ಸತೀಶ್ಚಂದ್ರ ಪ್ರಮುಖರಾದ ದಿನೇಶ್ ಮಾರೂರು, ಲಕ್ಷ್ಮಣ್ ಪೂಜಾರಿ, ಯಶೋಧರ ದೇವಾಡಿಗ ಮತ್ತಿತರರು ಈ ಸಂದಭ೯ದಲ್ಲಿದ್ದರು.
ಕಾಂಗೋದಲ್ಲಿ ಗಣಿ ಕುಸಿತ: 200ಕ್ಕೂ ಅಧಿಕ ಮಂದಿ ಸಾವು
ಕಿನ್ಷಾಸ: ಪೂರ್ವ ಕಾಂಗೋ ಗಣರಾಜ್ಯದ ರುಬಯಾ ನಗರದಲ್ಲಿ ಗಣಿ ಕುಸಿದು 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ರುಬಯಾ ಗ್ರಾಮದಲ್ಲಿ ಧಾರಾಕಾರ ಮಳೆಯಿಂದಾಗಿ ಬುಧವಾರ ಗಣಿ ಕುಸಿದಿದೆ. ನಿರಂತರ ಸುರಿಯುತ್ತಿರುವ ಮಳೆಯು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದ್ದು ಶನಿವಾರದವರೆಗೆ ಕನಿಷ್ಠ 200 ಮಂದಿಯ ಮೃತದೇಹವನ್ನು ಪತ್ತೆಹಚ್ಚಲಾಗಿದೆ ಎಂದು ಬಂಡುಕೋರರ ನಿಯಂತ್ರಣದಲ್ಲಿರುವ ಉತ್ತರ ಕಿವು ಪ್ರಾಂತದ ಗವರ್ನರ್ ಅವರ ವಕ್ತಾರರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಕೋಲ್ಟನ್ (ಮಂದ ಕಪ್ಪು ಲೋಹದ ಅದಿರು) ಗಣಿಯಲ್ಲಿ ದುರಂತ ಸಂಭವಿಸಿದ್ದು ಮಹಿಳೆಯರು ಮತ್ತು ಮಕ್ಕಳು ಮೃತಪಟ್ಟವರಲ್ಲಿ ಸೇರಿದ್ದಾರೆ. ಇವರಲ್ಲಿ ಕೆಲವರು ಗಣಿ ಸಂಸ್ಥೆಯ ಅಧಿಕೃತ ಸಿಬ್ಬಂದಿಗಳಲ್ಲ. ಸುಮಾರು 20 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ. ಸೆಲ್ಫೋನ್, ಲ್ಯಾಪ್ಟಾಪ್ ಮುಂತಾದ ಆಧುನಿಕ ತಾಂತ್ರಿಕ ಸಾಧನಗಳ ಉತ್ಪಾದನೆಯಲ್ಲಿ ಕೋಲ್ಟನ್ ನಿರ್ಣಾಯಕ ಖನಿಜವಾಗಿದೆ.
CJ Roy Death: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನ ವಿಚಾರಣೆ ನಡೆಸಿದ ಬೆಂಗಳೂರು ಪೊಲೀಸ್! ಯಾರೆಲ್ಲಾ? ಏನಂದ್ರು?
ರಿಯಲ್ ಎಸ್ಟೇಟ್ ಉದ್ಯಮಿ ರಾಯ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಐಟಿ ದಾಳಿಯೇ ಆತ್ಮಹತ್ಯೆಗೆ ಕಾರಣ ಎಂದು ಸಹೋದರ ಅನುಮಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಹವಾಲ, ರಾಜಕೀಯ ನಂಟು ಆರೋಪಗಳನ್ನು ಪೊಲೀಸರು ತಳ್ಳಿಹಾಕಿದ್ದಾರೆ.
ಮಿತ್ತೂರು: ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ: ಶಿಕ್ಷಕನ ವಿರುದ್ಧ ಪ್ರಕರಣ ದಾಖಲು
ವಿಟ್ಲ: ಇಡ್ಕಿದು ಗ್ರಾಮದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಶಾಲಾ ಶಿಕ್ಷಕ ಇಸ್ತಿಕಾರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಹೋಗಿದ್ದು ಮಧ್ಯಾಹ್ನ 2 ಗಂಟೆಗೆ ನಿಮ್ಮ ಮಗು ಇತರೆ ಮಕ್ಕಳಿಗೆ ತೊಂದರೆ ಮಾಡುದ್ದು ಹಾಗೂ ಈ ವಿಚಾರವಾಗಿ ಬೈದಾಗ ಅಲ್ಲಿಯೇ ಮೂತ್ರ ಮಾಡಿಕೊಂಡಿದ್ದು ನೀವು ಬಂದು ಮಗುವನ್ನು ಕರೆದುಕೊಂಡು ಹೋಗಿ ಎಂದು ಶಾಲೆಯ ಕಚೇರಿಯಿಂದ ಕರೆ ಬಂದಿದ್ದು ಆಗ ಮನೆಯಲ್ಲಿ ಯಾರೂ ಇರದ ಕಾರಣ ಮಗುವನ್ನು ನೀವೇ ಆಟೋದಲ್ಲಿ ಕಳಿಸಿ ಎಂದು ಹೆತ್ತವರು ತಿಳಿಸಿದ್ದಾರೆ. ಮನೆಗೆ ಬಂದ ಮಗು ಶಾಲೆಯಲ್ಲಿ ಅಧ್ಯಾಪಕ ಇಸ್ತಿಕಾರ್ ನನಗೆ ಕೈಗೆ ಬೆತ್ತದಿಂದ ಬಲವಾಗಿ ಗಂಭೀರವಾಗಿ ಹಲ್ಲೆ ಮಾಡಿದ್ದು ಹಲ್ಲೆ ಮಾಡುವ ಸಂದರ್ಭ ನಾನು ಹೆದರಿ ಮೂತ್ರ ಮಾಡಿಕೊಂಡಿರುತ್ತೇನೆ ಎಂದು ಹೇಳಿದ್ದು ಆ ಪ್ರಕಾರ ಹೆತ್ತವರು ಶಾಲೆಯ ಶಿಕ್ಷಕ ಇಸ್ತಿಕಾರ್ಗೆ ಕರೆ ಮಾಡಿದಾಗ ಉಡಾಫೆ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಸೂಕ್ತ ನ್ಯಾಯ ಒದಗಿಸುವಂತೆ ಮತ್ತು ವಿನಾ ಕಾರಣ ಗಂಭೀರವಾಗಿ ಹಲ್ಲೆ ನಡೆಸಿದ ಶಿಕ್ಷಕನ ವಿರುದ್ಧ ವಿಟ್ಲ ಪೊಲೀಸರಿಗೂ ಮತ್ತು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೂ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕುದ್ಮುಲ್ ರಂಗರಾವ್ ಸಮಾಧಿ ಸ್ಥಳ ಅಭಿವೃದ್ಧಿ : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ರಂಗರಾವ್ಅವರ ಸಮಾಧಿ ಸ್ಥಳದ ಪರಿಸರ ಅಭಿವೃದ್ಧಿಗೆ ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಶನಿವಾರ ಕುದ್ಮುಲ್ ರಂಗರಾವ್ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಗೌರವ ಸಲ್ಲಿಸಿದರು. ಅಂದಿನ ಕಾಲದಲ್ಲಿ ಸಮಾಜದಅತ್ಯಂತ ತಳಸ್ತರದಲ್ಲಿದ್ದ ಸಮಾಜದ ಏಳಿಗೆಗಾಗಿ ನಿಷ್ಕಳಂಕವಾಗಿ ಸೇವೆ ಸಲ್ಲಿಸಿದ ಕುದ್ಮುಲ್ ರಂಗರಾವ್ರಾಜ್ಯದ ಅದಮ್ಯ ಚೇತನ. ಯಾರ ವಿರೋಧವನ್ನು ಲೆಕ್ಕಿಸದೆ ಅವರು ದಲಿತರ ಶಿಕ್ಷಣ ಮತ್ತು ಸಾಮಾಜಿಕ ಏಳಿಗೆಗಾಗಿ ಹಗಲು ರಾತ್ರಿ ಶ್ರಮಿಸಿದರು ಎಂದು ಸಚಿವರು ಹೇಳಿದರು. ಅತ್ತಾವರದಲ್ಲಿರುವ ಕುದ್ಮುಲ್ ರಂಗರಾವ್ ಸಮಾಧಿ ಸ್ಥಳದ ಅಭಿವೃದ್ಧಿಗೆ ಅನುದಾನ ಈ ಹಿಂದೆಯೇ ಬಿಡುಗಡೆ ಯಾಗಿ, ಅರಣ್ಯ ಇಲಾಖೆ ತಕರಾರಿನಿಂದಾಗಿ ಅಭಿವೃದ್ಧಿಗೆ ತೊಡಕಾಗಿತ್ತು ಎಂದು ಮಾಹಿತಿ ತಿಳಿದುಬಂದಿದೆ. ಈ ಬಗ್ಗೆ ಶೀಘ್ರವೇ ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ, ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಇದೇ ಸಂದರ್ಭದಲ್ಲಿ ಸಚಿವರನ್ನು ಭೇಟಿಯಾದ ವಿವಿಧ ದಲಿತ ಸಂಘಟನೆಗಳು, ಕುದ್ಮುಲ್ ಸಮಾಧಿ ಸ್ಥಳದ ಅಭಿವೃದ್ಧಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ಡಿ ಸೋಜ, ಮೆಸ್ಕಾಂ ಅಧ್ಯಕ್ಷ ಹರೀಶ್ಕುಮಾರ್, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ಮುಖಂಡರಾದ ಪದ್ಮರಾಜ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಜನಸಾಮಾನ್ಯರಿಗೆ ನ್ಯಾಯ ಒದಗಿಸುವುದೇ ನ್ಯಾಯಾಲಯಗಳ ಕರ್ತವ್ಯ : ನ್ಯಾ. ಅಬ್ದುಲ್ ನಝೀರ್
ಮಂಗಳೂರು: ಜನಸಾಮಾನ್ಯರಿಗೆ ನ್ಯಾಯವನ್ನು ಒದಗಿಸುವುದಕ್ಕಾಗಿ ನ್ಯಾಯಾಲಯಗಳು ಕಾರ್ಯನಿರ್ವಹಿಸು ತ್ತಿದ್ದು, ಇದು ಸಾಂವಿಧಾನಿಕವಾಗಿರುತ್ತದೆ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಹೇಳಿದ್ದಾರೆ. ಶನಿವಾರ ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು. ನ್ಯಾಯಾಲಯವು ಕಾನೂನಿನ ಆಡಳಿತದ ಸಂಕೇತವಾಗಿದ್ದು, ಸಮಾಜದಲ್ಲಿ ಅನ್ಯಾಯದ ವಿರುದ್ಧ ಪ್ರತಿಯೊಬ್ಬರಿಗೆ ನ್ಯಾಯ ಒದಗಿಸಲು ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯಗಳಿಗೆ ಆಧುನಿಕ ಕಟ್ಟಡ ಮತ್ತು ತಂತ್ರಜ್ಞಾನಗಳು ಜನರಿಗೆ ತ್ವರಿತವಾಗಿ ನ್ಯಾಯ ಒದಗಿಸಲು ಪೂರಕ ಅಗತ್ಯಗಳಾಗಿದೆ ಎಂದು ಅವರು ಹೇಳಿದರು. ಸಂವಿಧಾನ ರಚನೆ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಬೆನಗಲ್ ನರಸಿಂಹರಾವ್ ಅವರು ಮಹತ್ತರ ಪಾತ್ರ ನಿರ್ವಹಿಸಿದ್ದು, ಸಂವಿಧಾನದಲ್ಲಿ ಹಲವು ಪ್ರಮುಖ ಅಂಶಗಳನ್ನು ಕ್ರೋಢಿಕರಿಸಿರುತ್ತಾರೆ. ಡಾ.ಬಿ.ಆರ್ ಅಂಬೇಡ್ಕರ್ ಅವರು ಕೂಡ ಬೆನಗಲ್ ಅವರ ಶ್ರಮವನ್ನು ಗುರುತಿಸಿದ್ದರು ಎಂದು ಅಬ್ದುಲ್ ನಝೀರ್ ಹೇಳಿದರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭುಬಖ್ರು ಮಾತನಾಡಿ, ನ್ಯಾಯಾಲಯಗಳ ಕಟ್ಟಡದೊಂದಿಗೆ ನ್ಯಾಯಾಧೀಶರ ನಿಷ್ಠೆ ನ್ಯಾಯವಾದಿಗಳ ಬದ್ಧತೆ, ಹಾಗೂ ಸಿಬ್ಬಂದಿಗಳ ಕರ್ತವ್ಯವು ನ್ಯಾಯ ಒದಗಿಸಲು ಅಗತ್ಯವಾಗಿದೆ ಎಂದು ಹೇಳಿದರು. *ಒಟ್ಟು 12 ನ್ಯಾಯಾಲಯ ಸಭಾಂಗಣ: ಪುತ್ತೂರಿನ ನ್ಯಾಯಾಲಯ ಸಂಕೀರ್ಣದಲ್ಲಿ ಒಟ್ಟು 12 ನ್ಯಾಯಾಲಯ ಸಭಾಂಗಣಗಳಿವೆ. ಆಧುನಿಕ ಶೈಲಿಯಲ್ಲಿಕಟ್ಟಡ ನಿರ್ಮಾಣ ಮಾಡಿರುವುದು ಶ್ಲಾಘನೀಯ. ನ್ಯಾಯಾಲಯವು ಸಾಂವಿಧಾನಿಕ ಆಡಳಿತದ ಸಂಕೇತವಾಗಿದೆ ಎಂದು ಹೇಳಿದರು. *ಮಂಗಳೂರಿನಲ್ಲಿ 60 ಕೋಟಿರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಕಟ್ಟಡ : ಆರೋಗ್ಯ ಮತ್ತು ದಕ್ಷಿಣಕನ್ನಡ ಜಿಲ್ಲಾಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪುತ್ತೂರು ನ್ಯಾಯಾಲಯ ಕಟ್ಟಡ ರಾಜ್ಯದಲ್ಲಿಯೇ ತಾಲೂಕು ಕೇಂದ್ರದಲ್ಲಿರುವ ಅತಿದೊಡ್ಡ ಕಟ್ಟಡವಾಗಿದೆ. ಇಲ್ಲಿನ ಮೂಲ ಸೌಕರ್ಯಗಳಿಗೆ ಸರಕಾರವು ಎಲ್ಲಾರೀತಿಯ ಬೆಂಬಲ ನೀಡಲಿದೆ ಎಂದು ಹೇಳಿದರು. ಮಂಗಳೂರಿನಲ್ಲಿ 60 ಕೋಟಿರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಕಟ್ಟಡ ಬ್ಲಾಕ್ ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಬೆಳ್ತಂಗಡಿಯಲ್ಲಿ 9 ಕೋಟಿ ರೂ. ಹೊಸ ನ್ಯಾಯಾಲಯ ಕಟ್ಟಡಕ್ಕೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು. ಮಂಗಳೂರಿನಲ್ಲಿ ಹೈಕೋರ್ಟ್ ಪೀಠಸ್ಥಾಪನೆ ಅಗತ್ಯವಾಗಿದೆ ಎಂದು ಅವರು ಹೇಳಿದರು. ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ ಮಾತನಾಡಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠವನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಿದರು. ಪುತ್ತೂರು ಶಾಸಕ ಅಶೋಕ್ ಕುಮಾರ್ರೈ ಮಾತನಾಡಿ, ಪುತ್ತೂರು ನ್ಯಾಯಾಲಯ ಸಂಕೀರ್ಣಕ್ಕೆ ಎಲ್ಲಾ ಮೂಲ ಸೌಕರ್ಯ ಒದಗಿಸಲು ಸರಕಾರ ನೆರವು ನೀಡಲಿದೆ. ಪುತ್ತೂರು ಜಿಲ್ಲಾ ನ್ಯಾಯಾಲಯದ ವ್ಯಾಪ್ತಿಗೆ ಬೆಳ್ತಂಗಡಿ ತಾಲೂಕನ್ನು ಸೇರಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಭರತ್ಕುಮಾರ್, ಜಿಲ್ಲಾಧಿಕಾರಿದರ್ಶನ್ ಎಚ್ ವಿ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಸವರಾಜ ಸ್ವಾಗತಿಸಿದರು.
ಪ್ರಾಯೋಗಿಕ ತರಬೇತಿಯಿಂದ ವೃತ್ತಿ ಅನ್ವೇಷಣೆಗೆ ನೆರವು: ಡಾ.ಸತೀಶ್ ರಾವ್
ಮಂಗಳೂರು, ಜ.31: ನಗರದ ಲೇಡಿಗೋಶನ್ ಆಸ್ಪತ್ರೆ ಆವರಣದಲ್ಲಿರುವ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ರಕ್ತನಿಧಿ ಕೇಂದ್ರದಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕ ತರಬೇತಿ ಪಡೆದ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳಿಗೆ ಶನಿವಾರ ಪ್ರಮಾಣ ಪತ್ರ ವಿತರಿಸಲಾಯಿತು. ಪ್ರಮಾಣ ಪತ್ರ ವಿತರಿಸಿದ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಸತೀಶ್ ರಾವ್ ಮಾತನಾಡಿ ‘ ವಿದ್ಯಾರ್ಥಿಗಳು ಅಧ್ಯಯನಕ್ಕೆ ಸಂಬಂಸಿ ಪಡೆಯುವ ತರಬೇತಿ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯೋ ಗಾವಕಾಶವನ್ನು ಹೆಚ್ಚಿಸುತ್ತದೆ .ಭವಿಷ್ಯದಲ್ಲಿ ವೃತ್ತಿ ಅನ್ವೇಷಣೆಗೆ ನೆರವಾಗುತ್ತದೆ. ತರಬೇತಿ ಪಡೆಯುವುದರಿಂದ ವೃತ್ತಿ ಜೀವನದ ಆರಂಭಿಕ ಸವಾಲುಗಳನ್ನು ಎದುರಿಸುವ ಆತ್ಮ ವಿಶ್ವಾಸ ಬೆಳೆಯುತ್ತದೆ ಎಂದರು. ಮುಖ್ಯ ಅತಿಥಿಯಾಗಿದ್ದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಶುಭ ಹಾರೈಸಿದರು. ರೆಡ್ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್ಚಂದ್ರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿ ‘ ವಿದ್ಯಾರ್ಥಿಗಳು ರಕ್ತ ಸಂಗ್ರಹ, ವರ್ಗೀಕರಣ, ರಕ್ತ ಹೊಂದಾಣಿಕೆ ಪರೀಕ್ಷೆ, ರಕ್ತದ ಘಟಕಗಳ ವರ್ಗೀಕರಣ ಸಹಿತ ಬ್ಲಡ್ ಬ್ಯಾಂಕ್ ಪೂರಕವಾದ ಪ್ರಾಯೋಗಿಕ ತರಬೇತಿ ಪಡೆದಿದ್ದು ಉದ್ಯೋಗಕ್ಕೆ ನೆರವಾಗಲು ಪ್ರಮಾಣ ಪತ್ರ ನೀಡಲಾಗಿದೆ ಎಂದರು. ರಕ್ತನಿ ಕೇಂದ್ರದ ತಾಂತ್ರಿಕ ಮೇಲ್ವಿಚಾರಕಿ ಮರಿಯಾ ಆರತಿ ಸೋನ್ಸ್ , ರಕ್ತನಿ ಕೇಂದ್ರದ ಸಿಬ್ಬಂದಿ ಪ್ರಿಯಾ, ಪ್ರತೀಕ್ಷಾ ಉಪಸ್ಥಿತರಿದ್ದರು.
ಫೆ.2: ಬ್ರಾಹ್ಮಣ ಅಭಿವೃದ್ಧಿ ನಿಗಮದಿಂದ ಮಾಹಿತಿ ಕಾರ್ಯಕ್ರಮ
ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಆಶ್ರಯ ದಲ್ಲಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದಿಂದ ಬ್ರಾಹ್ಮಣ ಸಮುದಾಯಕ್ಕೆ ಸಿಗುವ ನಾನಾ ಸೌಲಭ್ಯಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಫೆ.2ರಂದು ಸಂಜೆ 4 ಗಂಟೆಗೆ ನಗರದ ಗೋವಿಂದ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀಕಾಂತ ಉಪಾಧ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ನಿಗಮದ ನಿರ್ದೇಶಕ ಪಿ.ಎಂ. ಮಾಲ್ತೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಜ್ಯೋತಿ ಕೃಷ್ಣ ಹೆಬ್ಬಾರ್, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಉಪಸ್ಥಿತರಿರುವರು ಎಂದರು. ನಿಗಮಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಂದ ಬ್ರಾಹ್ಮಣ ಸಮುದಾಯಕ್ಕೆ ವಿವಿಧ ನಿಗಮಗಳಿಂದ ದೊರೆಯುವ ನಾನಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದರು. ಸೌಲಭ್ಯ ಪಡೆಯಲು ರಾಜ್ಯ ನಿವಾಸಿಗಳಾದ ಬ್ರಾಹ್ಮಣ ಸಮುದಾಯದ 18ರಿಂದ 60 ವರ್ಷದೊಳಗಿನವರಾಗಿರ ಬೇಕು. ಆದಾಯ ತೆರಿಗೆ ಪಾವತಿದಾರ ರಾಗಿರಬಾರದು. ಇಎಸ್ಐ ಹಾಗೂ ಇಪಿಎಫ್ ಸೌಲಭ್ಯ ಪಡೆಯುತ್ತಿರ ಬಾರದು. ನೊಂದಣಿಗೆ ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್, ರೇಷನ್ ಕಾರ್ಡ ಹಾಗೂ ಬ್ಯಾಂಕ್ ಪಾಸ್ಪುಸ್ತಕ ತರಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಪದಾಧಿಕಾರಿಗಳಾದ ದುರ್ಗಾಪ್ರಸಾದ್ ಭಾರ್ಗವ, ಹಯವದನ ಭಟ್ಟ, ಶ್ರೀನಿವಾಸ ಬಲ್ಲಾಳ್ ಮಲ್ಲಂಪಳ್ಳಿ, ಹವ್ಯಕ ಮಹಾಸಭಾದ ಪ್ರೊ.ಶಂಕರ್, ರಾಜೇಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಫೆ.6ರಿಂದ ರಾಗಧನದಿಂದ ಸಂಗೀತ ತ್ರಿಮೂರ್ತಿ ಉತ್ಸವ
ಉಡುಪಿ, ಜ.31: ಉಡುಪಿಯ ಪ್ರತಿಷ್ಠಿತ ರಾಗಧನ ಸಂಸ್ಥೆಯ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ 38ನೆಯ ಶ್ರೀ ಪುರಂದರದಾಸರು ಮತ್ತು ಸಂಗೀತ ತ್ರಿಮೂರ್ತಿ ಉತ್ಸವ ಇದೇ ಫೆ.6ರಿಂದ 8ರವರೆಗೆ ನಡೆಯಲಿದೆ ಎಂದು ರಾಗಧನ ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿದ್ದಾರೆ. ಫೆ.6ರಂದು ಸಂಜೆ ಮಂಗಳೂರಿನ ‘ಆರೋಹಣಂ’ ಸಂಗೀತ ಶಾಲೆಯ ಡಾ.ಅನೀಶ್ ಭಟ್ ಇವರ ಶಿಷ್ಯರಿಂದ ಹಾಡುಗಾರಿಕೆ ಇದ್ದು, ಸಂಜೆ 6 ಗಂಟೆಗೆ ಮೈಸೂರಿನ ಖ್ಯಾತ ಕಲಾ ವಿಮರ್ಶಕರಾದ ಪ್ರೊ.ರಾಮಮೂರ್ತಿ ರಾವ್ ಇವರಿಂದ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿ ಗಳಾಗಿ ಅದಾನಿ ಸಂಸ್ಥೆಯ ಕಿಶೋರ್ ಆಳ್ವ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಇತ್ತೀಚೆಗೆ ಪುರಂದರ ಗಾನ ನರ್ತನ ಎಂಬ ಶೀರ್ಷಿಕೆಯಡಿ ಸತತವಾಗಿ 6 ಗಂಟೆ 13 ನಿಮಿಷಗಳ ಕಾಲ ಪುರಂದರದಾಸರ ಹಾಡುಗಳಿಗೆ ಸ್ವತಃ ಹಾಡಿಕೊಂಡು ನೃತ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ವಿಶ್ವ ದಾಖಲೆ ಸಾಧಿಸಿದ ದೀಕ್ಷಾ ರಾಮಕೃಷ್ಣ ಇವರನ್ನು ರಾಗ ಧನ ಸಂಸ್ಥೆಯ ವತಿಯಿಂದ ಗೌರವಿಸಲಾಗುವುದು. ಸಂಜೆ 6:30ಕ್ಕೆ ಚೆನ್ನೈನ ಖ್ಯಾತ ಸಂಗೀತಗಾರರಾದ ಸಾಯಿ ವಿಘ್ನೇಶ್ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಲಿದೆ. ಫೆ.7ರಂದು ಶನಿವಾರ ಅಪರಾಹ್ನ 2 ಗಂಟೆಗೆ ಪಿಳ್ಳಾರಿ ಗೀತೆಗಳು, ಶ್ರೀತ್ಯಾಗರಾಜರ ಘನ ಪಂಚ ರತ್ನ ಗೋಷ್ಠಿ ಗಾಯನ ನಡೆಯಲಿದೆ. ಸಂಜೆ 4:30ಕ್ಕೆ ಡಾ. ಸುಶೀಲಾ ಉಪಾಧ್ಯಾಯ ಸ್ಮರಣಾರ್ಥ ರಾಗಧನ ಪಲ್ಲವಿ ಪ್ರಶಸ್ತಿಯನ್ನು ಉಡುಪಿಯ ಪ್ರತಿಭಾವಂತ ಗಾಯಕಿ ಪ್ರಜ್ಞಾ ಅಡಿಗರಿಗೆ ಡಾ.ಗಣಪತಿ ಜೋಯಿಸ ಇವರು ಪ್ರದಾನ ಮಾಡುವರು. ಸಂಜೆ 5:30ಕ್ಕೆ ’ರಾಗಧನ ಪಲ್ಲವಿ ಪ್ರಶಸ್ತಿ’ ಪುರಸ್ಕೃತ ಪ್ರಜ್ಞಾ ಅಡಿಗ ಇವರ ಕಚೇರಿ ನಡೆಯಲಿದೆ. ಫೆಬ್ರವರಿ 8ರಂದು ಬೆಳಿಗ್ಗೆ 9 ರಿಂದ ಹಿಂದುಸ್ತಾನಿ ಗಾಯನ ಕಛೇರಿಯನ್ನು ಮಹಾರಾಷ್ಟ್ರದ ಧನಂಜಯ ಜೋಶಿ ನಡೆಸಿ ಕೊಡಲಿದ್ದಾರೆ. ಬೆಳಗ್ಗೆ 11:15ರಿಂದ ಕರ್ನಾಟಕ ಸಂಗೀತದ ತ್ರಿಮೂರ್ತಿಗಳು ವಿಷಯವಾಗಿ ಆತ್ರೇಯೀ ಕೃಷ್ಣಾ ಕಾರ್ಕಳ ಸಂಗೀತ ಪ್ರಾತ್ಯಕ್ಷಿಕೆ ನಡೆಸಿಕೊಡುವರು. ಅಪರಾಹ್ನ 2ರಿಂದ ಅದಿತಿ ಕೊಂಕೋಡಿ ಹಾಡುಗಾರಿಕೆ ನಡೆಸಿಕೊಡಲಿದ್ದಾರೆ. ಸಂಜೆ ಸಮಾರೋಪ ಸಮಾರಂಭದಲ್ಲಿ ಭರತನಾಟ್ಯ ಕಲಾವಿದೆ ಲಕ್ಷ್ಮಿ ಗುರುರಾಜ್ ಮತ್ತು ಡಾ. ಬಾಲಕೃಷ್ಣ ಮದ್ದೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಬೆಂಗಳೂರಿನ ವಿನಯ್ ಶರ್ಮ ಇವರ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಲಿದೆ ಎಂದು ರಾಗ ಧನ ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಗಧನ ಪಲ್ಲವಿ ಪ್ರಶಸ್ತಿಗೆ ಪ್ರಜ್ಞಾ ಅಡಿಗ ಆಯ್ಕೆ
ಉಡುಪಿ: ಪ್ರಸಿದ್ಧ ಸಂಶೋಧಕಿ ಡಾ.ಸುಶೀಲಾ ಉಪಾಧ್ಯಾಯ ಸ್ಮರಣಾರ್ಥ ರಾಗಧನ ಸಂಸ್ಥೆ ಮೂಲಕ ನೀಡಲಾಗುವ ‘ರಾಗಧನ ಪಲ್ಲವಿ’ ಪ್ರಸಸ್ತಿಗೆ ಉಡುಪಿಯ ಪ್ರತಿಭಾವಂತ ಗಾಯಕಿ ಪ್ರಜ್ಞಾ ಅಡಿಗ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ಫೆ.7ರ ಶನಿವಾರ ಸಂಜೆ 5:30ಕ್ಕೆ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ 38ನೆಯ ಶ್ರೀಪುರಂದರದಾಸ ಮತ್ತು ಸಂಗೀತ ತ್ರಿಮೂರ್ತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಗಧನ ಸಂಸ್ಥೆ ತಿಳಿಸಿದೆ. ಪ್ರಶಸ್ತಿಯನ್ನು ಡಾ.ಗಣಪತಿ ಜೋಯಿಸ್ ಪ್ರದಾನ ಮಾಡಲಿರುವರು. ಸಂಸ್ಥೆಯ ಅಧ್ಯಕ್ಷರಾದ ಡಾ.ಕಿರಣ್ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿರುವರು. ನಂತರ ಪ್ರಜ್ಞಾ ಅಡಿಗ ಅವರ ರಾಗಂ.. ತಾನಂ.. ಪಲ್ಲವಿ.. ಗಾಯನ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಣಜಿ: ಕರ್ನಾಟಕದ ವಿರುದ್ಧ ಪಂಜಾಬ್ಗೆ 112 ರನ್ ಮುನ್ನಡೆ
ಮೊಹಾಲಿ: ನಾಯಕ ಉದಯ್ ಸಹರಾನ್ ಅರ್ಧಶತಕದ (ಔಟಾಗದೆ 63, 110 ಎಸೆತ, 4 ಬೌಂಡರಿ, 2 ಸಿಕ್ಸರ್)ನೆರವಿನಿಂದ ಪಂಜಾಬ್ ತಂಡ ರಣಜಿ ಟ್ರೋಫಿ ಟೂರ್ನಿಯ ‘ಬಿ’ ಗುಂಪಿನ ಪಂದ್ಯದಲ್ಲಿ ಕರ್ನಾಟಕ ಕ್ರಿಕೆಟ್ ತಂಡದ ವಿರುದ್ಧ 112 ರನ್ ಮುನ್ನಡೆಯಲ್ಲಿದೆ. ಮೂರನೇ ದಿನವಾದ ಶನಿವಾರ ದಿನದಾಟದಂತ್ಯಕ್ಕೆ ಪಂಜಾಬ್ ತಂಡವು ತನ್ನ ಎರಡನೇ ಇನಿಂಗ್ಸ್ನಲ್ಲಿ 3 ವಿಕೆಟ್ಗಳ 119 ರನ್ ಗಳಿಸಿದೆ. ಉದಯ್ ಹಾಗೂ ಅನ್ಮೋಲ್ಪ್ರೀತ್ ಸಿಂಗ್(6 ರನ್)ಕ್ರೀಸ್ ಕಾಯ್ದುಕೊಂಡಿದ್ದಾರೆ. ಆರಂಭಿಕ ಆಟಗಾರ ಅಭಿಜೀತ್ ಗರ್ಗ್ 33 ರನ್ ಗಳಿಸಿ ಔಟಾಗಿದ್ದಾರೆ. ಶ್ರೇಯಸ್ ಗೋಪಾಲ್(1-25), ಮುಹ್ಸಿನ್ ಖಾನ್(2-29)ಹಾಗೂ ಶಿಖರ್ ಶೆಟ್ಟಿ(1-43)ತಲಾ ಒಂದು ವಿಕೆಟ್ಗಳನ್ನು ಪಡೆದರು. ಇದಕ್ಕೂ ಮೊದಲು 6 ವಿಕೆಟ್ಗಳ ನಷ್ಟಕ್ಕೆ 255 ರನ್ನಿಂದ ತನ್ನ ಮೊದಲ ಇನಿಂಗ್ಸ್ ಮುಂದುವರಿಸಿದ ಕರ್ನಾಟಕ ತಂಡವು 316 ರನ್ ಗಳಿಸಿ ಆಲೌಟಾಯಿತು. ಕೇವಲ 7 ರನ್ ಮುನ್ನಡೆ ಪಡೆಯಿತು. 42 ರನ್ನಿಂದ ಬ್ಯಾಟಿಂಗ್ ಮುಂದುವರಿಸಿದ ಶ್ರೇಯಸ್ ಗೋಪಾಲ್(77 ರನ್, 195 ಎಸೆತ, 6 ಬೌಂಡರಿ)ಅರ್ಧಶತಕ ಗಳಿಸಿದರು. ವಿದ್ಯಾಧರ ಪಾಟೀಲ್ 34 ರನ್ ಗಳಿಸಿ ಔಟಾದರು. ಹರ್ಪ್ರೀತ್ ಬ್ರಾರ್(4-125), ಸುಖದೀಪ ಸಿಂಗ್(3-42)ಹಾಗೂ ಅನ್ಮೋಲ್ಜೀತ್ ಸಿಂಗ್(2-62)ಕರ್ನಾಟಕ ತಂಡವನ್ನು ಕಾಡಿದರು.
ಬ್ಯಾಂಕ್ ಸಾಲ ವಂಚನೆ ಹಗರಣ: ‘ಆರ್ಕಾಂ’ ಮಾಜಿ ಅಧ್ಯಕ್ಷ ಪುನೀತ್ ಗಾರ್ಗ್ ಬಂಧನ
ಹೊಸದಿಲ್ಲಿ: ಅನಿಲ್ ಅಂಬಾನಿ ನೇತೃತ್ವದ ಉದ್ಯಮ ಸಮೂಹ ಶಾಮೀಲಾಗಿದೆಯೆನ್ನಲಾದ 40 ಸಾವಿರ ಕೋಟಿ ರೂ. ಬ್ಯಾಂಕ್ ಸಾಲ ವಂಚನೆ ಪ್ರಕರಣದ ಆರೋಪಗಳಿಗೆ ಸಂಬಂಧಿಸಿ ರಿಲಾಯನ್ಸ್ ಕಮ್ಯುನಿಕೇಶನ್ಸ್ (ಆರ್ಕಾಂ )ನ ಮಾಜಿ ಅಧ್ಯಕ್ಷ ಪುನೀತ್ ಗಾರ್ಗ್ ಅವರನ್ನು ಜಾರಿ ನಿರ್ದೇಶನಾಲಯವು ಶನಿವಾರ ಬಂಧಿಸಿದೆ. ಗಾರ್ಗ್ ಅವರನ್ನು ಗುರುವಾರ ಬಂಧಿಸಲಾಗಿದ್ದು, ದಿಲ್ಲಿಯ ನ್ಯಾಯಾಲಯವು ಅವರನ್ನು 9 ದಿನಗಳ ಕಾಲ ಜಾರಿ ನಿರ್ದೇಶನಾಲಯ (ಈ.ಡಿ.) ಕಸ್ಟಡಿಗೆ ಒಪ್ಪಿಸಿದೆ ಎಂದು ಏಜೆನ್ಸಿಯ ಹೇಳಿಕೆ ತಿಳಿಸಿದೆ. ರಿಲಾಯನ್ಸ್ ಅನಿಲ್ ಅಂಬಾನಿ ಸಮೂಹಕ್ಕೆ ಸೇರಿದ 1885 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಏಜೆನ್ಸಿಯು ಮುಟ್ಟುಗೋಲು ಹಾಕಿತ್ತು. ಇದರೊಂದಿಗೆ ಪ್ರಕರಣದ ತನಿಖೆಗೆ ಸಂಬಂಧಿಸಿ ಅನಿಲ್ ಅಂಬಾನಿ ಅವರಿಗೆ ಸೇರಿದ 12 ಸಾವಿರ ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿದಂತಾಗಿದೆ. ಗಾರ್ಗ್ ಅವರು 2006ರಿಂದ 2013ರವರೆಗೆ ಆರ್ಕಾಂ ಅಧ್ಯಕ್ಷರಾಗಿ (ಜಾಗತಿಕ ಉದ್ಯಮ ವ್ಯವಹಾರ), 2014ರಿಂದ 2017ರವರೆಗೆ ಸಂಸ್ಥೆಯ ಅಧ್ಯಕ್ಷ (ನಿಯಮಿತ ವ್ಯವಹಾರಗಳ)ರಾಗಿ ಸೇವೆ ಸಲ್ಲಿಸಿದ್ದರು. 2017ರ ಆಕ್ಟೋಬರ್ನಲ್ಲಿ ಅವರು ಆರ್ಕಾಂನ ಕಾರ್ಯಕಾರಿ ನಿರ್ದೇಶಕರಾಗಿ ನೇಮಕಗೊಂಡಿದ್ದರು.ಎಪ್ರಿಲ್ 2019ರಿಂದ ಎಪ್ರಿಲ್ 2025ರವರೆಗೆ, ಕಾರ್ಯಕಾರಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಬ್ಯಾಂಕ್ ಸಾಲ ವಂಚನೆಯಿಂದ ಸೃಷ್ಟಿಯಾದ ಆದಾಯವನ್ನು ಹೊಂದಿದ ಹಾಗೂ ಬಚ್ಚಿಡುವಲ್ಲಿ ಮತು ವಿಲೇವಾರಿ ಮಾಡುವಲ್ಲಿ ಗಾರ್ಗ್ ಅವರು ಸಕ್ರಿಯವಾಗಿ ಭಾಗಿಯಾಗಿದ್ದರೆಂದು ತನಿಖೆಯು ಬಹಿರಂಗಪಡಿಸಿದೆ.
ನೇಜಾರು ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ: ಎಂಟು ಸಾಕ್ಷಿಗಳ ವಿಚಾರಣೆ
ಉಡುಪಿ, ಜ.31: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜ.30 ಮತ್ತು ಜ.31ರಂದು ಒಟ್ಟು ಎಂಟು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿ ಮಹಜರು ನಡೆಸಿದ ಖಾಸಗಿ ಸಾಕ್ಷಿಗಳ ಮುಖ್ಯ ವಿಚಾರಣೆಯನ್ನು ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ನಡೆಸಿದರೆ, ಆರೋಪಿ ಪರ ವಕೀಲ ರಾಜು ಪೂಜಾರಿ ಪಾಟಿಸವಾಲು ನಡೆಸಿ ದರು. ಈ ಮೂಲಕ ಈವರೆಗೆ ಈ ಪ್ರಕರಣದಲ್ಲಿ ಒಟ್ಟು 26 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಮುಂದಿನ ವಿಚಾರಣೆಯನ್ನು ಫೆ.27 ಮತ್ತು 28ಕ್ಕೆ ನಿಗದಿಪಡಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ಆ ದಿನದಂದು ಮತ್ತೆ 10-15 ಸಾಕ್ಷಿಗಳ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಲು ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.
ವಾಷಿಂಗ್ಟನ್: ಅಮೆರಿಕಾ ಸಂಸತ್ತು 2026ರ ಬಜೆಟನ್ನು ಗಡುವಿನೊಳಗೆ ಅನುಮೋದಿಸಲು ವಿಫಲಗೊಂಡ ಹಿನ್ನೆಲೆಯಲ್ಲಿ ಅಮೆರಿಕಾದ ಸರಕಾರ ಶನಿವಾರ ಭಾಗಶಃ ಸ್ಥಗಿತಗೊಂಡಿರುವುದಾಗಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಮುಂದಿನ ವಾರದ ಆರಂಭದಲ್ಲಿ ಸೆನೆಟ್ ಬೆಂಬಲಿತ ನಿಧಿಯ ಒಪ್ಪಂದವನ್ನು ಸದನ ಅನುಮೋದಿಸುವ ನಿರೀಕ್ಷೆ ಇರುವುದರಿಂದ ಸ್ಥಗಿತ ಪ್ರಕ್ರಿಯೆ ಸಂಕ್ಷಿಪ್ತವಾಗಿರಬಹುದು ಎಂದು ಸಂಸದರು ಸೂಚನೆ ನೀಡಿದ್ದಾರೆ. ಮಿನಿಯಾಪೋಲಿಸ್ನಲ್ಲಿ ಫೆಡರಲ್ ವಲಸೆ ಅಧಿಕಾರಿಗಳ ಕೈಯಲ್ಲಿ ಇಬ್ಬರು ಸಾವನ್ನಪ್ಪಿದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಡೆಮಾಕ್ರಟಿಕ್ ಸದಸ್ಯರು ರಾಷ್ಟ್ರೀಯ ಭದ್ರತಾ ಇಲಾಖೆಗೆ ಬಜೆಟ್ನಲ್ಲಿ ಹೊಸ ಅನುದಾನ ಮೀಸಲಿಡುವ ಚರ್ಚೆಗೆ ಅಡ್ಡಿಪಡಿಸಿದ್ದರಿಂದ ಬಜೆಟ್ ಅನುಮೋದನೆ ಕುರಿತ ಚರ್ಚೆ ಮುರಿದು ಬಿದ್ದಿದೆ ಎಂದು ವರದಿಯಾಗಿದೆ. ಇದು 75%ದಷ್ಟು ಫೆಡರಲ್ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಲಿದೆ. ಮುಂದಿನ ವಾರದ ಆರಂಭದಲ್ಲಿ ಸದನ ಬಜೆಟ್ ಪ್ಯಾಕೇಜ್ಗೆ ಅನುಮೋದನೆ ನೀಡಿದರೆ ಕೆಲ ದಿನಗಳಲ್ಲೇ ಅನುದಾನವನ್ನು ಮರುಸ್ಥಾಪಿಸಬಹುದು ಎಂದು ವರದಿ ಹೇಳಿದೆ.
ವಿಬಿ ಜಿ ರಾಮ್ ಜೀ ಯೋಜನೆ ಜಾಗೃತಿ ಸಮಾವೇಶ
ಉಡುಪಿ, ಜ.31: ಬಿಜೆಪಿ ಉಡುಪಿ ಜಿಲ್ಲೆ ವತಿಯಿಂದ ವಿಬಿ ಜಿ ರಾಮ್ ಜೀ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) ಕಾಯ್ದೆ ಜಾಗೃತಿ ಸಮಾವೇಶವನ್ನು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಹೆರ್ಗ ದಿನಕರ್ ಶೆಟ್ಟಿ, ರೇಷ್ಮಾ ಶೆಟ್ಟಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ್ ಹೆಬ್ಬಾರ್ ಉಪಸ್ಥಿತರಿದ್ದರು.
ನಿರ್ಮಲಾ ಸೀತಾರಾಮನ್ ಅವರು ಫೆ. 1ರಂದು 2026ರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆ ಕ್ರಮಕ್ಕೆ ಒಂದು ಪದ್ಧತಿಯಿದೆ. ಸಾಮಾನ್ಯವಾಗಿ ವಿತ್ತ ಸಚಿವರು ಓದುವ ಬಜೆಟ್ ಕಾಪಿಯಲ್ಲಿ ಭಾಗ - 1, ಭಾಗ -2 ಎಂಬ ಎರಡು ವಿಭಾಗಗಳಿರುತ್ತವೆ. ಆ ಎರಡನ್ನು ವಿತ್ತ ಸಚಿವರು ಓದುತ್ತಾರೆ. ಆದರೆ, ಈ ಬಾರಿ ಆಯ-ವ್ಯಯ ಮಂಡಿಸುವ ವೇಳೆ ನಿರ್ಮಲಾ ಸೀತಾರಾಮನ್ ಅವರು ಭಾಗ - 1 ಕೈಬಿಡುತ್ತಾರೆಂದು ಹೇಳಲಾಗಿದೆ. ಭಾಗ -1 ಕೈಬಿಡಲು ಕಾರಣವೇನು? ಇಲ್ಲಿದೆ ಮಾಹಿತಿ.
Nikhil Kumaraswamy: ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಸ್ಪಷ್ಟನೆ
ತುಮಕೂರು: ಚಾಮರಾಜನಗರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ವಿಚಾರ ಜೆಡಿಎಸ್ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಮಾಧ್ಯಮಗಳ ಮೂಲಕ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ನಾನು ಕ್ಲಿಯರ್ ಆಗಿ ಹೇಳುತ್ತೇನೆ ಯಾವುದೇ ಗೊಂದಲ ಮಾಡೋದು ಬೇಡ. ಚಾಮರಾಜನಗರದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಿರಿಯ ನಾಯಕರಿದ್ದಾರೆ.ಯಾವುದು ಯಾವುದು ಕ್ಷೇತ್ರಕ್ಕೆ ಮೂಗು ತೂರಿಸುವ
ರಾಯಚೂರು | ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚಾರಣೆ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮ
ಹೆಲ್ಮೆಟ್ ಧರಿಸದ ಕಾರಣ ರಸ್ತೆ ಅಪಘಾತಗಳಲ್ಲಿ ಜೀವ ಹಾನಿ : ಜಿಲ್ಲಾಧಿಕಾರಿ ನಿತಿಶ್ ಕೆ.
1455 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ
ಉಡುಪಿ, ಜ.31: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಮಲ್ಪೆ ಏಳೂರು ಮೊಗವೀರ ಭವನದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಜಿಲ್ಲೆಯ 1455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉಡುಪಿಯ ಮನೋ ವೈದ್ಯ ಡಾ. ಪಿ.ವಿ.ಭಂಡಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವನ ದಲ್ಲಿ ಯಶಸ್ವಿಯಾಗಲು ಶೈಕ್ಷಣಿಕ ಸಾಧನೆಯ ಜೊತೆ ಜೊತೆಗೆ ಸವಾಲುಗಳನ್ನು ಎದುರಿಸಲು ಧನಾತ್ಮಕ ಚಿಂತನೆಯೊಂದಿಗೆ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಹಿಸಿದ್ದರು. ಈ ಸಂದರ್ಭದಲ್ಲಿ ಸಾಧಕರಾದ ರಾಮಚಂದ್ರ ಕುಂದರ್, ನಾಗರಾಜ ಸುವರ್ಣ ಹಾಗೂ ರಿಮ ರಾವ್ ಯು.ಬಿ. ಅವರನ್ನು ಸನ್ಮಾನಿಸಲಾಯಿತು. ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ.ಬಂಗೇರ, ನಗರಸಭೆ ಸದಸ್ಯ ಯೋಗೀಶ್ ಸಾಲ್ಯಾನ್, ಉದ್ಯಮಿ ಆನಂದ ಪಿ. ಸುವರ್ಣ, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ರತ್ನಾಕರ ಸಾಲ್ಯಾನ್, ಆಳ ಸಮುದ್ರ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸುಭಾಷ್ ಮೆಂಡನ್, ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕುಂರ್ದ, ಕೋಟ ಪರ್ಸೀನ್ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಜೇಂದ್ರ ಸುವರ್ಣ, ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಗೀತಾ ಕರ್ಕೇರ, ನಗರಸಭೆಯ ಸದಸ್ಯರಾದ ಸುಂದರ ಕಲ್ಮಾಡಿ, ಎಡ್ಲಿನ್ ಕರ್ಕಡ, ಫೆಡರೇಶನ್ ಉಪಾಧ್ಯಕ್ಷ ದೇವಪ್ಪ ಕಾಂಚನ್, ವ್ಯವಸ್ಥಾಪಕ ನಿರ್ದೇಶಕಿ ದರ್ಶನ್ ಟಿ.ಕೆ. ಉಪಸ್ಥಿತರಿದ್ದರು. ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸಿ.ಜೆ.ರಾಯ್ ಅವರೇ ಗುಂಡು ಹೊಡೆದುಕೊಂಡರಾ ಅಥವಾ ಯಾರಾದರೂ ಗುಂಡು ಹೊಡೆದರಾ? : ಪ್ರದೀಪ್ ಈಶ್ವರ್ ಶಂಕೆ
ಬೆಂಗಳೂರು : ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಹಲವು ಅನುಮಾನ ಇದ್ದು, ಅವರು ನಿಜವಾಗಿಯೂ ಪಿಸ್ತೂಲಿನಿಂದ ಗುಂಡು ಹೊಡೆದುಕೊಂಡರಾ ಅಥವಾ ಯಾರಾದರೂ ಗುಂಡು ಹೊಡೆದರಾ? ಎಂದು ಕಾಂಗ್ರೆಸ್ ಪ್ರದೀಪ್ ಈಶ್ವರ್ ಶಂಕೆ ವ್ಯಕ್ತಪಡಿಸಿದ್ದಾರೆ. ಕನಕಪುರದಲ್ಲಿ ನಡೆಯುತ್ತಿರುವ ಕನಕೋತ್ಸವದಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಆದ ಸ್ಥಳದಲ್ಲಿ ಸಿಸಿಟಿವಿ ಇಲ್ಲ, ಇದ್ದವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾತ್ರ. ಒಳಗಡೆ ಏನಾಗಿದೆ ಎನ್ನುವುದು ಗೊತ್ತಿಲ್ಲ ಎಂದರು. ನನಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಬಿಜೆಪಿಯವರು ಚುನಾವಣೆಗೆ ನೂರಾರು ಕೋಟಿ ದುಡ್ಡು ಕೇಳಿದ್ದಾರೆ. ಅವರು ಹಣ ಕೊಡದಿದ್ದಕ್ಕೆ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಇಂತಹ ಭ್ರಷ್ಟ ಬಿಜೆಪಿಯಿಂದ ನಮ್ಮ ದೇಶ ಅಭಿವೃದ್ಧಿ ಆಗಲ್ಲ. ಅಶೋಕಣ್ಣ, ಸುನೀಲಣ್ಣ, ಯತ್ನಾಳ್ ಅವರು ಮಾತ್ರವಲ್ಲದೆ, ಮೈಸೂರಿನ ಒಂದು ಕೋತಿ ಎಲ್ಲದಕ್ಕೂ ಬಾಯಿ ಬಡಿದುಕೊಳ್ತಾರೆ. ಇದರ ಬಗ್ಗೆ ಯಾಕೆ ಯಾರೂ ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಒಬ್ಬ ಸಾಮಾನ್ಯ ವ್ಯಕ್ತಿ ಹಣ ಸಂಪಾದನೆ ಮಾಡಲು ಬಿಜೆಪಿ ಬಿಡುತ್ತಿಲ್ಲ. ಅವರಿಗೆ ಸಾಲ ಇಲ್ಲ, ಯಾವುದೇ ಸಮಸ್ಯೆ ಇಲ್ಲ ಕಳೆದ ಒಂದು ತಿಂಗಳಿನಿಂದ ಆದಾಯ ತೆರಿಗೆ ಅಧಿಕಾರಿಗಳು ಅವರಿಗೆ ಕಿರುಕುಳ ನೀಡಿದೆ. ಕೇಂದ್ರದಲ್ಲಿ ಬಿಜೆಪಿ ಇದ್ದರೆ ಇದೇ ಕಿರುಕುಳ ಮುಂದುವರಿಯುತ್ತದೆ. ಈ ಬಗ್ಗೆ ಎಸ್ಐಟಿ ತನಿಖೆ ಆಗಲಿ ಎಂದು ಅವರು ಒತ್ತಾಯಿಸಿದರು.
ಕೆಮ್ಮಣ್ಣು ಪರಿಸರದಲ್ಲಿ ಚಿರತೆ: ಸ್ಥಳೀಯರಲ್ಲಿ ಆತಂಕ
ಉಡುಪಿ, ಜ.31: ಕೆಮ್ಮಣ್ಣು, ತೆಂಕನಿಡಿಯೂರು, ಬಡಾನಿಡಿಯೂರು ಹಾಗೂ ಕಲ್ಯಾಣಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿದ್ದು, ಇದರಿಂದ ಸ್ಥಳೀಯರು ಭಯ ಭೀತರಾಗಿರುವ ಬಗ್ಗೆ ವರದಿಯಾಗಿದೆ. ಒಂದು ವಾರದ ಹಿಂದೆ ಅಂಬಾಗಿಲಿನ ಬಳಿ ಕಾಣಿಸಿಕೊಂಡ ಚಿರತೆ, ಬಳಿಕ ತೆಂಕನಿಡಿಯೂರು ಪ್ರದೇಶದಲ್ಲಿ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಬಡಾನಿಡಿಯೂರು ಗ್ರಾಮದ ಕದಿಕೆ ಎಂಬಲ್ಲಿಯೂ ಚಿರತೆ ಕಾಣ ಸಿಕ್ಕಿದೆ ಎಂದು ತಿಳಿದುಬಂದಿದೆ. ಇದರಿಂದ ಈ ಪರಿಸರದ ಜನ ಭಯ ಭೀತರಾಗಿ ಅರಣ್ಯ ಇಲಾಖೆಯ ಮೊರೆ ಹೋಗಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎರಡು ದಿನಗಳ ಹಿಂದೆ ಕೆಮ್ಮಣ್ಣು ಸಮೀಪದ ಹಂಪನ ಕಟ್ಟೆ ಎಂಬಲ್ಲಿ ಚಿರತೆಯ ಸೆರೆಗೆ ಬೋನು ಇರಿಸಿದ್ದಾರೆ. ಆದರೆ ಈವರೆಗೆ ಚಿರತೆ ಸೆರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದೃಢ ಸಮಾಜದ ನಿರ್ಮಾಣದಲ್ಲಿ ಎಲ್ಲರ ಪಾತ್ರ ಮುಖ್ಯ: ಪ್ರೊ.ಪೇಮ್ನಾಥ್
ಶಿರ್ವ, ಜ.31: ಆರೋಗ್ಯ ಪೂರ್ಣ ಸಮಾಜದಲ್ಲಿ ಎಲ್ಲಾ ವೃತ್ತಿಗಳ ಪಾತ್ರವೂ ಪ್ರಾಮುಖ್ಯವಾಗಿದೆ. ಹಿಂದೆ ಪರಂಪರಗತವಾಗಿ ಒಂದೊಂದು ಸಮುದಾಯಗಳ ಕುಲಕಸುಬುಗಳಾಗಿ ಬೆಳೆದು ಬಂದಿದ್ದು, ಇಂದು ಜ್ಞಾನದ ಆವಿಷ್ಕಾರಗಳು ಬೆಳೆದಂತೆ ಶಿಕ್ಷಣದ ಆಧಾರದ ಮೇಲೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಮಾಡಬಹುದಾಗಿದೆ ಎಂದು ಶಿರ್ವ ಸಂತಮೇರಿ ಪದವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಪೇಮ್ನಾಥ್ ಹೇಳಿದ್ದಾರೆ. ರೋಟರಿ ಅಂತಾರಾಷ್ಟ್ರೀಯ ವೃತ್ತಿ ಮಾಸಾಚರಣೆಯ ಅಂಗವಾಗಿ ಶುಕ್ರವಾರ ಬಂಟಕಲ್ಲು ರೋಟರಿ ಭವನದಲ್ಲಿ ಏರ್ಪಡಿಸಲಾದ ಸೌಹಾರ್ದ ಸಮ್ಮಿಲನ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು. ಯಾವುದೇ ವೃತ್ತಿಯನ್ನು ಪ್ರೀತಿಸಿ, ಶ್ರದ್ಧೆ, ಪ್ರಾಮಾಣಿಕತೆುಂದ ನಿರ್ವಹಿಸಿ ದಾಗ ಯಶಸ್ಸನ್ನು ಸಾಧಿಸಬಹುದು. ಪ್ರತೀಯೊಂದು ವೃತ್ತಿಗೂ ಅದರದ್ದೇ ಆದ ಗೌರವ ಇದೆ. ಸದೃಢ ಸಮಾಜದ ನಿರ್ಮಾಣದಲ್ಲಿ ಎಲ್ಲಾ ವೃತ್ತಿ ಸೇವೆಗಳ ಪಾತ್ರ ಮಹತ್ವದ್ದಾಗಿದೆ ಎಂದರು. ಈ ಸಂದರ್ಭದಲ್ಲಿ ಸಮಾಜಮುಖಿ ಸಾಧನೆಗಳನ್ನು ಮಾಡಿದ ತೆಂಗಿನ ಕಾಯಿ ಕೀಳುವ ಮಧುಕರ, ರಿಕ್ಷಾ ಚಾಲಕ ತಿಯೋಡೋರ್ ಮತಾಯಸ್ ಬಿ.ಸಿ.ರೋಡ್, ಬಾಣಂತಿ ಮದ್ದು, ಅಡುಗೆಯ ಸೆಲಿನ್ ಮೆಂಡೋನ್ಸಾ, ಹೊಟೇಲ್ ಕಾರ್ಮಿಕ ಸೋಮನಾಥ, ಪಿಗ್ಮಿ ಸಂಗ್ರಾಹಕ ಸತೀಶ್, ಸೈಕಲ್ ರಿಪೇರಿ ತಂತ್ರಜ್ಞ ಸನಾವುಲ್ಲಾ ಅಸಾದಿ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ರೋಟರಿ ಅದ್ಯಕ್ಷ ವಿಲಿಯಮ್ ಮಚಾದೊ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ಡಾ.ವಿಟ್ಠಲ್ ನಾಯಕ್ ಪ್ರಾಸಾವ್ತಿಕವಾಗಿ ಮಾತನಾಡಿ ಸ್ವಾಗತಿಸಿದರು. ಮೆಲ್ವಿನ್ ಡಿಸೋಜ, ಮೈಕಲ್ ಮತಾಯಸ್, ಜಾಕ್ಲಿನ್ ಡಿಸೋಜ, ವಿಕ್ಟರ್ ಅಲ್ಮೇಡಾ, ಜೆಸಿಂತಾ ಡಿಸೋಜ, ರಘುಪತಿ ಐತಾಳ್ ಪರಿಚಯಿಸಿದರು. ರೋಟರಿ ಜಿಲ್ಲಾ ಮಾಜಿ ಸಹಾಯಕ ಗವರ್ನರ್ ಬಿ.ಪುಂಡಲೀಕ ಮರಾಠೆ ರೋಟರಿ ವೃತ್ತಿ ಸೇವಾ ಮಾಸಾಚರಣೆಯ ಮಹತ್ವ ತಿಳಿಸಿದರು. ವಿಷ್ಣುಮೂರ್ತಿ ಸರಳಾಯ ಶುಭಾಶಯ ಕೋರಿದರು. ಸಾರ್ಜಂಟ್ ರಫಾಯಲ್ ಮತಾಯಸ್, ಕ್ಲಬ್ ಸೇವಾ ನಿರ್ದೇಶಕ ಹೆರಾಲ್ಡ್ ಕುಟಿನ್ಹೊ ಸಹಕರಿಸಿದರು. ಕಾರ್ಯದರ್ಶಿ ಹೊನ್ನಯ್ಯ ಶೆಟ್ಟಿಗಾರ್ ವಂದಿಸಿದರು.
IND Vs NZ | ನ್ಯೂಝಿಲ್ಯಾಂಡ್ಗೆ 272 ರನ್ಗಳ ಬೃಹತ್ ಗುರಿ ನೀಡಿದ ಭಾರತ
ಇಶಾನ್ ಕಿಶನ್ ಸ್ಫೋಟಕ ಶತಕ
IND Vs NZ- ಸಂಜು ಸ್ಯಾಮ್ಸನ್ ತವರಲ್ಲಿ ಇಶಾನ್ ಕಿಶನ್ ಶತಕದಬ್ಬರ; ನ್ಯೂಜಿಲೆಂಡ್ ಪಡೆ ನಿರುತ್ತರ
Ishan Kishan Maiden T20i Century-ಎರಡೂ ವರೆ ವರ್ಷಗಳ ಬಳಿಕ ಭಾರತ ತಂಡದಲ್ಲಿ ಕಾಣಿಸಿಕೊಂಡ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರು ಇದೀಗ ಸ್ಫೋಟಕ ಶತಕ ಬಾರಿಸಿ ಮಿಂಚಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಇಶಾನ್ ಕಿಶನ್ ಅವರು 42 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದರು. ನಾಯಕ ಸೂರ್ಯಕುಮಾರ್ ಯಾದವ್ 63 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಇವರಿಬ್ಬರ ಶತಕದ ಜೊತೆಯಾಟದಿಂದಾಗಿ ಭಾರತ 271 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಕೇವಲ 6 ರನ್ ಗಳಿಸಿ ಔಟಾದರು.
ಎಪ್ಸ್ಟೀನ್ ಕಡತದಲ್ಲಿ ಪ್ರಧಾನಿ ಮೋದಿಯ ಇಸ್ರೇಲ್ ಭೇಟಿ ಬಗ್ಗೆ ಉಲ್ಲೇಖ: ಸುಳ್ಳು ಕಥೆಗಳು ಎಂದು ತಿರಸ್ಕರಿಸಿದ ಭಾರತ
ಹೊಸದಿಲ್ಲಿ: ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಎಪ್ಸ್ಟೀನ್ ಕಡತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ 2017ರಲ್ಲಿ ಇಸ್ರೇಲ್ ಭೇಟಿ ಬಗ್ಗೆ ಉಲ್ಲೇಖಿಸಿದ್ದ ಇಮೇಲ್ ಅನ್ನು ಶನಿವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಳ್ಳಿಹಾಕಿದೆ ಮತ್ತು ಅದನ್ನು ವದಂತಿ ಎಂದು ಹೇಳಿದೆ. ಈ ಉಲ್ಲೇಖವನ್ನು ಅಪರಾಧಿಯೊಬ್ಬನ ನಕಲಿ ವದಂತಿಗಳು ಎಂದು ಕರೆದ ವಿದೇಶಾಂಗ ಸಚಿವಾಲಯ, ಇದರಲ್ಲಿನ ಉಲ್ಲೇಖವನ್ನು ಸಾರಸಗಟವಾಗಿ ತಿರಸ್ಕರಿಸಿದೆ. ಎಪ್ಸ್ಟೀನ್ ಕಡತಗಳಲ್ಲಿ ಪ್ರಧಾನಿ ಮೋದಿ ಮತ್ತು ಅವರ ಇಸ್ರೇಲ್ ಭೇಟಿಯ ಉಲ್ಲೇಖವಿರುವ ಇಮೇಲ್ ಸಂದೇಶದ ವರದಿಗಳನ್ನು ನಾವು ನೋಡಿದ್ದೇವೆ. ಜುಲೈ 2017ರಲ್ಲಿ ಪ್ರಧಾನಿಯವರ ಇಸ್ರೇಲ್ ಅಧಿಕೃತ ಭೇಟಿಯ ಸಂಗತಿಯನ್ನು ಮೀರಿ, ಇಮೇಲ್ನಲ್ಲಿರುವ ಉಳಿದ ಪ್ರಸ್ತಾಪಗಳು ಶಿಕ್ಷೆಗೊಳಗಾದ ಅಪರಾಧಿಯೊಬ್ಬರ ಕಸದಂತಹ ಸುಳ್ಳು ಕಥೆಗಳು, ಅದನ್ನು ಅತ್ಯಂತ ತಿರಸ್ಕಾರದಿಂದ ವಜಾಗೊಳಿಸಬೇಕಾದ ವಿಷಯವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನ್ಯಾಯಾಂಗ ಇಲಾಖೆ (DOJ) ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ಗೆ ಸಂಬಂಧಿಸಿದ ಗಣನೀಯ ಪ್ರಮಾಣದ ದಾಖಲೆಗಳನ್ನು(Epstein files) ಬಿಡುಗಡೆ ಮಾಡಿದೆ. ಬಿಡುಗಡೆಯಾದ ದಾಖಲೆಗಳು ಮೂರು ಮಿಲಿಯನ್ ಪುಟಗಳನ್ನು ಮೀರಿದೆ ಎಂದು ಯುಎಸ್ ಡೆಪ್ಯೂಟಿ ಅಟಾರ್ನಿ ಜನರಲ್ ಟಾಡ್ ಬ್ಲಾಂಚೆ ಹೇಳಿದ್ದಾರೆ. ಈ ಕಡತಗಳು 2,000ಕ್ಕೂ ಹೆಚ್ಚು ವೀಡಿಯೊಗಳು ಮತ್ತು ಸರಿಸುಮಾರು 180,000 ಚಿತ್ರಗಳನ್ನು ಒಳಗೊಂಡಿದೆ.
ಶುಶ್ರೂಷಕ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ: ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಎ.ಆರ್.ಟಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕ ಹುದ್ದೆ -1 ಅನ್ನು ಭರ್ತಿ ಮಾಡಲು ಬಿ.ಎಸ್ಸಿ ನರ್ಸಿಂಗ್ ಅಥವಾ ಜಿ.ಎನ್.ಎಂ ವಿದ್ಯಾರ್ಹತೆ ಹೊಂದಿದ್ದು, ರಾಜ್ಯ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಾಯಿಸಿರುವ, ಕಂಪ್ಯೂಟರ್ ಬಳಕೆಯಲ್ಲಿ ಜ್ಞಾನ ಹೊಂದಿರುವ, ಕ್ಷೇತ್ರ ಮಟ್ಟದಲ್ಲಿ ಪ್ರಮುಖ ಜನಸಂಖ್ಯೆ ಮತ್ತು ಬಾಧಿತ ಸಮುದಾಯಗಳೊಂದಿಗೆ ತೊಡಗಿಸಿಕೊಂಡಿರುವ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಫೆಬ್ರವರಿ 6ರ ಒಳಗೆ ಜಿಲ್ಲಾ ಏಡ್ಸ್ ತಡೆ ಗಟ್ಟುವ ಮತ್ತು ನಿಯಂತ್ರಣ ಘಟಕ, ಅಜ್ಜರಕಾಡು, ಉಡುಪಿ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಸಂಪರ್ಕಿಸಬಹುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಟಿ-20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದ ಪ್ಯಾಟ್ ಕಮಿನ್ಸ್; ಆಸ್ಟ್ರೇಲಿಯ ಕ್ರಿಕೆಟ್ ತಂಡಕ್ಕೆ ಹಿನ್ನಡೆ
ಮೆಲ್ಬರ್ನ್: ಗಾಯದ ಸಮಸ್ಯೆಯ ಕಾರಣದಿಂದ ಪ್ಯಾಟ್ ಕಮಿನ್ಸ್ ಅವರು ಪುರುಷರ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದು, ಈ ಬೆಳವಣಿಗೆಯು ಆಸ್ಟ್ರೇಲಿಯ ಕ್ರಿಕೆಟ್ ತಂಡಕ್ಕೆ ತೀವ್ರ ಹಿನ್ನಡೆವುಂಟು ಮಾಡಿದೆ. ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7ರಿಂದ ಮಾರ್ಚ್ 8ರ ತನಕ ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಗೆ ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿಯು 15 ಸದಸ್ಯರ ಪುರುಷರ ತಂಡವನ್ನು ಶನಿವಾರ ದೃಢಪಡಿಸಿದೆ. 2021ರ ಟಿ-20 ಚಾಂಪಿಯನ್ ಆಸ್ಟ್ರೇಲಿಯ ತಂಡಕ್ಕೆ ಮಿಚೆಲ್ ಮಾರ್ಷ್ ನಾಯಕತ್ವವಹಿಸಿದ್ದಾರೆ. ಕಮಿನ್ಸ್ ಅವರು ಬೆನ್ನುನೋವಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜಾಗತಿಕ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ ಎಂದು ಐಸಿಸಿ ವೆಬ್ಸೈಟ್ ತಿಳಿಸಿದೆ. ಅಗ್ರ ಸರದಿಯ ಬ್ಯಾಟರ್ ಮ್ಯಾಥ್ಯೂ ಶಾರ್ಟ್ ಕೂಡ ಹೊರಗುಳಿದಿದ್ದಾರೆ. ಈ ಇಬ್ಬರ ಬದಲಿಗೆ ಬೆನ್ ಡ್ವಾರ್ಶುಯಿಸ್ ಹಾಗೂ ಮ್ಯಾಥ್ಯೂ ರೆನ್ಶಾ ಆಯ್ಕೆಯಾಗಿದ್ದಾರೆ. ‘‘ಪ್ಯಾಟ್ಗೆ ಬೆನ್ನುನೋವಿನಿಂದ ಚೇತರಿಸಿಕೊಳ್ಳಲು ಇನ್ನಷ್ಟು ಸಮಯದ ಅಗತ್ಯವಿದೆ. ಎಡಗೈ ವೇಗದ ಬೌಲಿಂಗ್, ಡೈನಾಮಿಕ್ ಫೀಲ್ಡಿಂಗ್ ಹಾಗೂ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಲ್ಲ ಬೆನ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಉತ್ತಮ ವೇಗದೊಂದಿಗೆ ಚೆಂಡನ್ನು ಸ್ವಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ’’ ಎಂದು ಆಯ್ಕೆಗಾರ ಟೋನಿ ಡೊಡ್ಮೈಡ್ ಹೇಳಿದ್ದಾರೆ. ಆಸ್ಟ್ರೇಲಿಯ ತಂಡವು ವಿಶ್ವಕಪ್ನಲ್ಲಿ ‘ಬಿ’ ಗುಂಪಿನಲ್ಲಿ ಐರ್ಲ್ಯಾಂಡ್, ಝಿಂಬಾಬ್ವೆ, ಶ್ರೀಲಂಕಾ ಹಾಗೂ ಒಮಾನ್ ತಂಡಗಳೊಂದಿಗೆ ಸ್ಥಾನ ಪಡೆದಿದೆ. ಫೆಬ್ರವರಿ 11ರಂದು ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಐರ್ಲ್ಯಾಂಡ್ ತಂಡದ ವಿರುದ್ಧ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಆಸ್ಟ್ರೇಲಿಯದ ವಿಶ್ವಕಪ್ ತಂಡ: ಮಿಚೆಲ್ ಮಾರ್ಷ್(ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲ್ಲಿ, ಟಿಮ್ ಡೇವಿಡ್, ಬೆನ್ ಡ್ವಾರ್ಶುಯಿಸ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನ್ನೆೆಮನ್, ಗ್ಲೆನ್ ಮ್ಯಾಕ್ಸ್ವೆಲ್, ಮ್ಯಾಥ್ಯೂ ರೆನ್ಶಾ, ಮಾರ್ಕಸ್ ಸ್ಟೋಯಿನಿಸ್, ಆ್ಯಡಮ್ ಝಂಪಾ.
ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಹೆಬ್ರಿ, ಜ.31: ಅನಾರೋಗ್ಯ ಹಾಗೂ ಇತ್ತೀಚೆಗೆ ಮೃತಪಟ್ಟ ಸಹೋದರನ ಬಗ್ಗೆ ಮಾನಸಿಕವಾಗಿ ನೊಂದ ಹೆಬ್ರಿ ಮದಗ ಹಿಂದುಗಡೆ ಮೂರು ರಸ್ತೆ ನಿವಾಸಿ ಶ್ರೇಯಾ ವಿ.ಹೆಗ್ಡೆ(55) ಎಂಬವರು ಜ.30ರಂದು ಬೆಳಗ್ಗೆ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟ: ಅನಾರೋಗ್ಯದಿಂದ ಕೋಟತಟ್ಟು ಗ್ರಾಮದ ಬಸವ ಪೂಜಾರಿ (79) ಬಳಲುತ್ತಿದ್ದ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.30ರಂದು ರಾತ್ರಿ ಕೋಟತಟ್ಟು ಗ್ರಾಮದ ರಾಮ ಮಂದಿರ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ದಾಸ್ತಾನು: ಅನ್ನಭಾಗ್ಯದ 7.14ಕ್ವಿಂಟಾಲ್ ಅಕ್ಕಿ ವಶ
ಬೈಂದೂರು, ಜ.31: ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿವ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಬೈಂದೂರು ಆಹಾರ ನಿರೀಕ್ಷಕರ ನೇತೃತ್ವದ ತಂಡ ಜ.30ರಂದು ಬೆಳಗ್ಗೆ ವಶಪಡಿಸಿಕೊಂಡಿದೆ. ಅಬ್ದುಲ್ ಎಂಬಾತ ತನ್ನ ಮನೆಯಲ್ಲಿ ಅಕ್ರಮವಾಗಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ದಾಸ್ತಾನು ಇರಿಸಿರುವ ಬಗ್ಗೆ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ವಿನಯ್ ಕುಮಾರ ಈ ದಾಳಿ ನಡೆಸಿದ್ದಾರೆ. ಆರೋಪಿ ಈ ಅಕ್ಕಿಯನ್ನು ಕಾನೂನು ಬಾಹಿರವಾಗಿ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿರುವುದಾಗಿ ದೂರಲಾಗಿದೆ. ಒಟ್ಟು 7.14 ಕ್ವಿಂಟಾಲ್ ತೂಕದ 16422ರೂ. ಮೌಲ್ಯದ 16 ಕುಚ್ಚಲು ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡು, ತಲ್ಲೂರು ಟಿಎಎಂಪಿಎಂಸಿ ಗೋಡಾಮಿಗೆ ಇರಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಖ್ಯಮಂತ್ರಿಗೆ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ ವರದಿ ಸಲ್ಲಿಕೆ
ಬೆಂಗಳೂರು : ಆರ್ಥಿಕ ತಜ್ಞ ಪ್ರೊ.ಎಂ.ಗೋವಿಂದರಾವ್ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿಯು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ನಿವಾಸ ಕಾವೇರಿಯಲ್ಲಿ ಸಮಿತಿಯ ಅಂತಿಮ ವರದಿಯನ್ನು ಸಲ್ಲಿಸಿತು. ಈ ಸಂದರ್ಭದಲ್ಲಿ ಸಚಿವ ಈಶ್ವರ್ ಖಂಡ್ರೆ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಮಿತಿ ಸದಸ್ಯರಾದ ಎಸ್.ಟಿ.ಬಾಗಲಕೋಟೆ, ಸೂರ್ಯನಾರಾಯಣ ರಾವ್, ಸಂಗೀತಾ ಎನ್.ಕೆ, ಎಲ್.ಕೆ.ಅತೀಕ್, ಸದಸ್ಯ ಕಾರ್ಯದರ್ಶಿ ವಿಶಾಲ್ ಉಪಸ್ಥಿತರಿದ್ದರು.
ಗಾಝಾದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್: 6 ಮಕ್ಕಳು ಸೇರಿದಂತೆ ಕನಿಷ್ಠ 31 ಫೆಲೆಸ್ತೀನ್ ನಾಗರಿಕರು ಮೃತ್ಯು
ಗಾಝಾ: ಇಸ್ರೇಲ್ ಗಾಝಾ ನಗರ ಮತ್ತು ಗಾಝಾ ಪಟ್ಟಿಯ ಖಾನ್ ಯೂನಿಸ್ ನಗರವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಆರು ಮಕ್ಕಳು ಸೇರಿದಂತೆ ಕನಿಷ್ಠ 31 ಫೆಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು Al Jazeera ವರದಿ ಮಾಡಿದೆ. ಗಾಝಾವನ್ನು ಈಜಿಪ್ಟ್ಗೆ ಸಂಪರ್ಕಿಸುವ ರಫಾ ಕ್ರಾಸಿಂಗ್ ಅನ್ನು ಇಸ್ರೇಲ್ ರವಿವಾರ ಮತ್ತೆ ತೆರೆಯುವುದಾಗಿ ಹೇಳಿತ್ತು. ಇದಕ್ಕೂ ಒಂದು ದಿನ ಮೊದಲು ಈ ದಾಳಿ ನಡೆದಿದೆ. ಅಕ್ಟೋಬರ್ 10ರಂದು ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ಗಾಝಾದಲ್ಲಿ ಕದನ ವಿರಾಮ ಜಾರಿಗೆ ಬಂದ ನಂತರ ಇಸ್ರೇಲ್ ಪಡೆಗಳ ದಾಳಿಗೆ 500ಕ್ಕೂ ಹೆಚ್ಚು ಫೆಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಗಾಝಾ ಸರಕಾರಿ ಮಾಧ್ಯಮ ತಿಳಿಸಿದೆ.
ಉಡುಪಿ: ಬೈಕಿನಿಂದ ಬಿದ್ದು ಸಹಸವಾರೆ ಮೃತ್ಯು
ಉಡುಪಿ, ಜ.31: ಬೈಕಿನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಮೃತಪಟ್ಟ ಘಟನೆ ಜ.30ರಂದು ಸಂಜೆ ವೇಳೆ ಕಿನ್ನಿಮುಲ್ಕಿ ಜಾಯಿ ವೀಲ್ ಅಲೈನ್ಮೆಂಟ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಬಾಗೀರಥಿ(53) ಎಂದು ಗುರುತಿಸಲಾಗಿದೆ. ರಜತ್ ಆಚಾರ್ಯ ಎಂಬವರು ತನ್ನ ಬೈಕಿನಲ್ಲಿ ತಾಯಿ ಬಾಗೀರಥಿ ಅವರನ್ನು ಕುಳ್ಳಿರಿಸಿಕೊಂಡು ಕಟಪಾಡಿ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದು, ಈ ವೇಳೆ ಬೈಕ್ ಸ್ಕಿಡ್ ಆಗಿ ನಿಯಂತ್ರಣ ತಪ್ಪಿ ಬಿತ್ತೆನ್ನಲಾಗಿದೆ. ಇದರಿಂದ ಬೈಕ್ ಸವಾರ ಮತ್ತು ಸಹ ಸವಾರೆ ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡರು. ಇದರಿಂದ ಗಂಭೀರ ವಾಗಿ ಗಾಯಗೊಂಡ ಭಾಗೀರಥಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀಟ್ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಆರೋಪ : ಸಿಬಿಐ ತನಿಖೆಗೆ ಬಿಹಾರ ಸರಕಾರ ಶಿಫಾರಸು
ಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿ ಕೊಲೆಗೈದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಬಿಹಾರ ಸರಕಾರವು ಶನಿವಾರ ಶಿಫಾರಸು ಮಾಡಿದೆ. ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧುರಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ ಪೋಸ್ಟ್ನಲ್ಲಿ ರಾಜ್ಯ ಸರಕಾರದ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪ್ರಕರಣವನ್ನು ಪಾರದರ್ಶಕವಾಗಿ ಹಾಗೂ ನ್ಯಾಯುಯುತವಾಗಿ ಅನಾವರಣಗೊಳಿಸಬೇಕೆಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಸೋಮವಾರ ವಿಧಾನಸಭಾ ಅಧಿವೇಶನ ಆರಂಭಗೊಳ್ಳುವುದಕ್ಕೆ ಮುಂಚಿತವಾಗಿ ಬಿಹಾರ ಸರಕಾರವು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವುದು ಗಮನಾರ್ಹವಾಗಿದೆ. ಜೆಹನಾಬಾದ್ ಜಿಲ್ಲೆಯ ನಿವಾಸಿಗಳಾದ ಮೃತ ನೀಟ್ ವಿದ್ಯಾರ್ಥಿನಿಯ ಪಾಲಕರು ಶುಕ್ರವಾರ ಹೇಳಿಕೆಯೊಂದನ್ನು ನೀಡಿ ಅತ್ಯಾಚಾರ ನಡೆದಿರುವುದನ್ನು ನಿರಾಕರಿಸುವ ಮೂಲಕ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆಂದು ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರಕಾರವು ಈ ನಿರ್ಧಾರವನ್ನು ಘೋಷಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ರ ಆಹ್ವಾನದ ಮೇರೆಗೆ ಅವರನ್ನು ವಿದ್ಯಾರ್ಥಿನಿಯ ಹೆತ್ತವರು ಇಂದು ಭೇಟಿಯಾಗಿದ್ದರು. ಸ್ಥಳೀಯ ಪೊಲೀಸ್ ಅಧಿಕಾರಿಗಳು ಶಂಕಿತ ಆರೋಪಿಗಳ ಜೊತೆ ನಂಟು ಹೊಂದಿದ್ದು, ಪ್ರಕರಣದಲ್ಲಿ ತಮಗೆ ನ್ಯಾಯವನ್ನು ಒದಗಿಸಲು ಡಿಜಿಪಿಯ ಮಧ್ಯಪ್ರವೇಶಕ್ಕೆ ಅವರು ಡಿಜಿಪಿಗೆ ಮನವಿ ಮಾಡಿದ್ದರು. ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್)ಗೆ ಬರೆಯಲು ಪೂರ್ವಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿಯು ಜನವರಿ 6ರಂದು ಪಾಟ್ನಾದ ಚಿತ್ರಗುಪ್ತಾ ನಗರದಲ್ಲಿರುವ ಮಹಿಳಾ ಹಾಸ್ಟೆಲ್ನ ಕೊಠಡಿಯೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ನೀಟ್ ಪರೀಕ್ಷೆಗೆ ತರಬೇತಿ ಪಡೆಯಲು ಆಕೆ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದರು. ಕೆಲವು ದಿನಗಳ ಕಾಲ ಕೋಮಾವಸ್ಥೆಯಲ್ಲಿದ್ದ ಆಕೆ ಜನವರಿ 11ರಂದು ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಅಧಿಕಾರಿಗಳು ಅದನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆಂದು ಆಕೆಯ ಕುಟುಂಬಿಕರು ಆಪಾದಿಸಿದ್ದಾರೆ.
ಫೆಬ್ರವರಿ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ: ಅಶೋಕ್ ಕುಮಾರ್ ಕೊಡವೂರು
ಉಡುಪಿ, ಜ.31: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪಕ ಪ್ರಚಾರಕ್ಕಾಗಿ ಹಾಗೂ ತಳಮಟ್ಟದಲ್ಲಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ತಾಲೂಕು ಮಟ್ಟದ ಸಮಾವೇಶವನ್ನು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ. ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ರಾಜ್ಯ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದು, ಗ್ಯಾರಂಟಿ ಯೋಜನೆಯ ಲಾಭವನ್ನು ಪ್ರತಿ ಫಲಾನುಭವಿ ಪಡೆಯುವಂತಾಗಲು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆಬ್ರವರಿ ತಿಂಗಳಲ್ಲಿ ಎಲ್ಲಾ ತಾಲೂಕುಗಳಲ್ಲೂ ಸಮಾವೇಶವನ್ನು ನಡೆಸಲಾಗುವುದು ಎಂದವರು ವಿವರಿಸಿದರು. ಪಂಚ ಗ್ಯಾರಂಟಿ ಯೋಜನೆಗಳ 2025ರ ಡಿಸೆಂಬರ್ ತಿಂಗಳವರೆಗಿನ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅಶೋಕ್ ಕೊಡವೂರು, ಶಕ್ತಿ ಯೋಜನೆಯಡಿ ಜಿಲ್ಲೆಯ ಉಡುಪಿ-ಕುಂದಾಪುರ ಘಟಕಗಳಿಂದ ಕಾರ್ಯಾಚರಣೆಯಾ ಗುವ ಸಾರಿಗೆಗಳಲ್ಲಿ ಈವರೆಗೆ ಒಟ್ಟು 3.53 ಕೋಟಿ ಮಹಿಳಾ ಪ್ರಯಾಣಿಕರು ಯೋಜನೆಯ ಸೌಲಭ್ಯ ಪಡೆದಿದ್ದು, ಒಟ್ಟು 137.59 ಕೋಟಿ ರೂ. ಮೊತ್ತದ ವೆಚ್ಚ ಭರಿಸಲಾಗಿದೆ ಎಂದರು. ಬಸ್ ಸೇವೆ ಪ್ರಾರಂಭ: ಗ್ರಾಮೀಣ ಪ್ರದೇಶದ ಜನರ ಬೇಡಿಕೆಯಂತೆ ಗೋಳಿಯಂಗಡಿ- ವಡ್ಡರ್ಸೆ- ಕುಂದಾಪುರ ಮಾರ್ಗ, ಕೊರೋನಾ ಅವಧಿಯಲ್ಲಿ ಸ್ಥಗಿತಗೊಂಡಿದ್ದ ಕೋಡಿಬೆಂಗ್ರೆ ಸಾರಿಗೆ, ಉಡುಪಿ- ಬ್ರಹ್ಮಾವರ-ಹೆಬ್ರಿ, ಪೆಣರ್ಂಕಿಲ, ಕುಂದಾಪುರ- ತಲ್ಲೂರು- ಮಾವಿನಕಟ್ಟೆ- ನೇರಳಕಟ್ಟೆ ಮಾರ್ಗ, ಬೈಂದೂರು- ಪಡುವರಿ- ಸೋಮೇಶ್ವರ- ದೊಂಬೆ- ಕರಾವಳಿ-ಶಿರೂರು ಮಾರ್ಗ, ನಾಡಾ- ಬಡಾಕೆರೆ ಮಾರ್ಗದ ಬಸ್ಸುಗಳು ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಸತತ ಪ್ರಯತ್ನದಿಂದ ಕಾರ್ಯಾರಂಭ ಮಾಡಿವೆ ಎಂದವರು ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ಯೋಜನೆಯ ಪ್ರಾರಂಭದಲ್ಲಿ ಜಿಲ್ಲೆಯಲ್ಲಿ 1,99,285 ಮಹಿಳಾ ಫಲಾನುಭವಿಗಳಿದ್ದು, ಸೆಪ್ಟೆಂಬರ್ 2025ರ ಅಂತ್ಯಕ್ಕೆ ಈ ಸಂಖ್ಯೆ 2,24,636ಕ್ಕೆ ಏರಿಕೆಯಾಗಿದೆ. ಇದುವರೆಗೆ 1050.90 ಕೋಟಿ ರೂ. ಗೃಹಲಕ್ಷ್ಮಿ ಅನುದಾನವನ್ನು ಮಹಿಳಾ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಪಾವತಿಸಲಾಗಿದೆ. ಈ ಯೋಜನೆ ಯಡಿ ಇದುವರೆಗೆ 2,36,995 ಮಹಿಳೆಯರು ನೊಂದಾಯಿಸಿಕೊಂಡಿದ್ದು, 2,24,636 ಫಲಾನುಭವಿಗಳು ಯೋಜನೆಯ ಸೌಲಭ್ಯವನ್ನು ಪಡೆಯುತಿದ್ದಾರೆ ಎಂದರು. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 3,80,040 ಬಳಕೆದಾರ ರಲ್ಲಿ 3,00,642 ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯುತಿ ದ್ದಾರೆ. ಡಿಸೆಂಬರ್ ಅಂತ್ಯದವರೆಗೆ 591.07 ಕೋಟಿ ರೂ. ರಿಯಾಯಿತಿ ಮೊತ್ತವನ್ನು ಗೃಹಬಳಕೆ ಸ್ಥಾವರಗಳಿಗೆ ನೀಡಲಾಗಿದೆ. ಅನ್ನಭಾಗ್ಯ ಯೋಜನೆ ಯಡಿ 2026ರ ಜನವರಿ ಅಂತ್ಯದ ವರೆಗೆ ಒಟ್ಟು 1,87,576 ಪಡಿತರ ಚೀಟಿದಾರರಿಗೆ 39771.40 ಕ್ವಿಂಟಾಲ್ ಅಕ್ಕಿ ಹಂಚಿಕೆ ಮಾಡಲಾಗಿದೆ ಎಂದರು. ಯುವನಿಧಿ ಯೋಜನೆಯಡಿ ಡಿಸೆಂಬರ್ವರೆಗೆ 4274 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, 3350 ಫಲಾನುಭವಿಗಳು ಯೋಜನೆಯ ಲಾಭ ಪಡೆದಿದ್ದಾರೆ. ಒಟ್ಟು 8.54 ಕೋಟಿ ರೂ. ಡಿಬಿಟಿ ಮೂಲಕ ಅರ್ಹ ವಿದ್ಯಾರ್ಥಿ ಗಳ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂದ ಅವರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠ್ಠಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಇಲಾಖಾಧಿಕಾರಿಗಳೊಂದಿಗೆ ವಿವಿಧ ಶೈಕ್ಷಣಿಕ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿ ಶಿಬಿರಗಳನ್ನು ಏರ್ಪಡಿಸಿ, ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿ ಯೋಜನೆಯ ಬಗ್ಗೆ ವಿಚಾರವಿನಿಮಯ ನಡೆಸಿದ್ದಾರೆ ಎಂದರು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಗುಂಪುಗಳನ್ನು ರಚಿಸಿ ಸರಕಾರದ ವಿವಿಧ ಯೋಜನೆಗಳೊಂದಿಗೆ ಒಗ್ಗೂಡಿಸಿಕೊಂಡು ಬೇರೆ ಬೇರೆ ಚಟುವಟಿಕೆ ಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಬಗ್ಗೆ ಆದಷ್ಟು ಶೀಘ್ರದಲ್ಲಿ ಗುಂಪುಗಳನ್ನು ರಚನೆ ಮಾಡುವಂತೆ ಸಮಿತಿಗಳ ಸದಸ್ಯರಿಗೆ ಸೂಚನೆಗಳನ್ನು ನೀಡಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿ ಉದಯ್ಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿ ಉಪಸ್ಥಿತರಿದ್ದರು.
ನಾಳೆ (ಫೆ.1) ಕೇಂದ್ರ ಬಜೆಟ್ | ದಾಖಲೆಯ 9ನೇ ಬಾರಿಗೆ ಬಜೆಟ್ ಭಾಷಣ ಮಾಡಲಿರುವ ನಿರ್ಮಲಾ ಸೀತಾರಾಮನ್
ಹೊಸದಿಲ್ಲಿ: 2026-2027ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವಿವಾರ ಬೆಳಗ್ಗೆ 11:00 ಗಂಟೆಗೆ ಮಂಡಿಸಲಿದ್ದಾರೆ. ನಿರ್ಮಲಾ ಅವರು ಸತತ 9ನೇ ಬಾರಿಗೆ ಮಂಡಿಸಲಿರುವ ಬಜೆಟ್ ಇದಾಗಿದೆ. ನರೇಂದ್ರ ಮೋದಿ ಸರಕಾರದ ಮೂರನೇ ಅಧಿಕಾರಾವಧಿಯಲ್ಲಿ ಮಂಡನೆಯಾಗಲಿರುವ ಮೂರನೆ ಬಜೆಟ್ ಕೂಡಾ ಹೌದು. ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಬಜೆಟ್ ಭಾಷಣ ಮಾಡಿದ ಬಳಿಕ ಅದರ ಪ್ರತಿಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗುವುದು. ಲೋಕಸಭೆಯಲ್ಲಿ ಬಜೆಟ್ ಭಾಷಣ ಪೂರ್ಣಗೊಂಡ ಬಳಿಕ ಅದರ ದಾಖಲೆಗಳು ಅಧಿಕೃತ ಮೊಬೈಲ್ ಆ್ಯಪ್ ಹಾಗೂ ವೆಬ್ಸೈಟ್ನಲ್ಲಿ ಲಭ್ಯವಾಗಲಿದೆ. ಬಜೆಟ್ ಮಂಡನೆಯ ಆನಂತರ ನಿರ್ಮಲಾ ಸೀತಾರಾಮನ್ ಅವರು ದೇಶಾದ್ಯಂತದ ವಿವಿಧ ಪ್ರಾಂತಗಳ ಕಾಲೇಜು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಬಜೆಟ್ ಸಿದ್ಧಪಡಿಸುವ ಮುನ್ನ ನಿರ್ಮಲಾ ಅವರು ಆರ್ಥಿಕ ತಜ್ಞರು, ಕಾರ್ಮಿಕ ಸಂಘಟನೆಗಳು, ಆರೋಗ್ಯಪಾಲನಾ ವಲಯ,ಕಿರು ಹಾಗೂ ಸೂಕ್ಷ್ಮ ಮಧ್ಯಮಗಾತ್ರದ ಉದ್ಯಮಗಳು, ವ್ಯಾಪಾರ ಹಾಗೂ ಸೇವೆಗಳು, ಕೈಗಾರಿಕೆ, ಹಣಕಾಸು ವಲಯ ಮತ್ತು ಬಂಡವಾಳ ಮಾರುಕಟ್ಟೆಗಳ ಪ್ರತಿನಿಧಿಗಳು ಸೇರಿದಂತೆ ಸಂಬಂಧಪಟ್ಟವರ ಜೊತೆ ಸಮಾಲೋಚನೆ ಹಾಗೂ ಸಭೆಗಳನ್ನು ನಡೆಸಿದ್ದರು. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕೂಡಾ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಅಂಶಗಳ ಕುರಿತು ವಿಸ್ತೃತವಾಗಿ ಬಜೆಟ್ ಪೂರ್ವಭಾವಿ ಸಮಾಲೋಚನೆಗಳನ್ನು ನಡೆಸಿದ್ದರು ಹಾಗೂ ಸಲಹೆಗಳನ್ನು ಒಳಗೊಂಡ ವರದಿಗಳನ್ನು ಅವರು ವಿತ್ತ ಸಚಿವೆಗೆ ಸಲ್ಲಿಸಿದ್ದರು. ಬಜೆಟ್ ಸಿದ್ಧತೆಯ ಸಂದರ್ಭ ಯುವಜನರು ಸೇರಿದಂತೆ ವಿವಿಧ ವೇದಿಕೆಗಳ ಮೂಲಕ ನಾಗಕರಿಕರ ಅಭಿಪಾಯಗಳನ್ನು ಸಂಗ್ರಹಿಸಲಾಗಿತ್ತು. ಭಾರತವು ಜಗತ್ತಿನ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳ ಸಾಲಿಗೆ ಸೇರಿದ ಸಮಯದಲ್ಲಿ ಈ ಬಜೆಟ್ ಮಂಡನೆಯಾಗುತ್ತಿದೆ. ಕೇಂದ್ರದ ಮುಂದಿರುವ ಸವಾಲುಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಉತ್ಪನ್ನಗಳಿಗೆ ಶೇ.50ರಷ್ಟು ಹೆಚ್ಚುವರಿ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಭಾರತವು ಜಾಗತಿಕವಾಗಿ ಹಲವಾರು ಸವಾಲುಗಳನ್ನೆದುರಿಸುತ್ತಿದೆ. ಅಲ್ಲದೆ ಕೇಂದ್ರ ಸರಕಾರವು ವಿತ್ತೀಯ ಕೊರತೆಯನ್ನೂ ನಿರ್ವಹಿಸಬೇಕಾಗಿದೆ. ವಿತ್ತೀಯ ಕೊರತೆಯನ್ನು ಒಟ್ಟು ಆಂತರಿಕ ಉತ್ಪನ್ನದ ಶೇ . 4.5ರಷ್ಟು ಇಳಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ. ಈ ಹಿಂದಿನ ವರ್ಷಗಳಲ್ಲಿ ಕೇಂದ್ರ ಸರಕಾರವು ಮೂಲಸೌಕರ್ಯಗಳು ಅಥವಾ ಬಂಡವಾಳ ವೆಚ್ಚದ ಮೇಲಿನ ಖರ್ಚನ್ನು ಹೆಚ್ಚಿಸಿದೆ. 2025ರ ಸಾಲಿನ ಬಜೆಟ್ನಲ್ಲಿ ಈ ವಲಯವು ಹೆಚ್ಚು ಬೆಳವಣಿಗೆಯನ್ನು ಕಂಡಿತ್ತು. ಹಾಗೆಯೇ ಉತ್ಪಾದನಾ ವಲಯಕ್ಕೂ ಕೇಂದ್ರ ಸರಕಾರ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆಯಿದೆ. ಬಜೆಟ್ನಲ್ಲಿ ಕೇರಳ, ಪಶ್ಚಿಮಬಂಗಾಳ, ತಮಿಳುನಾಡು ಸೇರಿದಂತೆ ವಿಧಾನಸಭಾ ಚುನಾವಣೆಯನ್ನು ಎದುರಿಲಿರುವ ರಾಜ್ಯಗಳಿಗೆ ಬಂಪರ್ಕೊಡುಗೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಬಜೆಟ್ ಮಂಡನೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ಆರ್ಥಿಕ ಬೆಳವಣಿಗೆಯು ಎಲ್ಲರಿಗೂ ಸಮಾನವಾಗಿ ದೊರೆಯುತ್ತಿಲ್ಲವೆಂದು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ನಾಯಕರು ಆರೋಪಿಸಿದ್ದಾರೆ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ಎಂನರೇಗಾ’ದ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಮರುನಾಮಕರಣಗೊಳಿಸಿರುವ ಕೇಂದ್ರ ಸರಕಾರವು, ಬಜೆಟ್ನಲ್ಲಿ ಈ ಯೋಜನೆಗೆ ಸಂಬಂಧಿಸಿ ವಿಶೇಷ ಕೊಡುಗೆಗನ್ನು ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಸೋಮನಹಳ್ಳಿ ಟೋಲ್ ಪ್ಲಾಜಾ ಬಳಸುವ ಸ್ಥಳೀಯರಿಗೆ ಉಚಿತ ಪಾಸ್ ನೀಡಲು ಎನ್ಎಚ್ಎಐಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು : ಕನಕಪುರ ರಸ್ತೆಯಲ್ಲಿರುವ ಸೋಮನಹಳ್ಳಿ ಟೋಲ್ ಪ್ಲಾಜಾದಲ್ಲಿ ಬಳಕೆದಾರ ಶುಲ್ಕ ಸಂಗ್ರಹ ನಿಯಮಬಾಹಿರವಾಗಿದೆ ಹಾಗೂ ರಾಷ್ಟ್ರೀಯ ಹೆದ್ದಾರಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆದೇಶಿಸಿರುವ ಹೈಕೋರ್ಟ್, ಒಂದು ತಿಂಗಳೊಳಗೆ ಸ್ಥಳೀಯ ನಿವಾಸಿಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಉಚಿತ ಪಾಸ್ಗಳನ್ನು ನೀಡುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ನಿರ್ದೇಶಿಸಿದೆ. ಸೋಮನಹಳ್ಳಿ, ನೆಲಗುಲಿ ಮತ್ತು ಕಗ್ಗಲಿಪುರ ಗ್ರಾಮಸ್ಥರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಷ್ಟ್ರೀಯ ಹೆದ್ದಾರಿ 209ರಲ್ಲಿನ ಟೋಲ್ ಪ್ಲಾಜಾ ಸ್ಥಾಪನೆ ನಿಯಮಗಳನ್ನು ಉಲ್ಲಂಘಿಸಿದೆ, ಅಂತಹ ಸೌಲಭ್ಯವು ಪುರಸಭೆ ಅಥವಾ ಸ್ಥಳೀಯ ನಗರದ ವ್ಯಾಪ್ತಿಯಿಂದ 10 ಕಿ.ಮೀ. ದೂರವಿರಬೇಕು ಎಂದು ಆದೇಶಿಸಿದೆ. ಜತೆಗೆ, ಸರ್ವೀಸ್ ರಸ್ತೆ ಒದಗಿಸದೆ ಟೋಲ್ ವಿಧಿಸುವುದು ಏಕಪಕ್ಷೀಯ ಮತ್ತು ಅಸಮಂಜಸ ಎಂದಿರುವ ನ್ಯಾಯಾಲಯ, ರಾಷ್ಡ್ರೀಯ ಹೆದ್ದಾರಿ ಟೋಲ್ ಅಥವಾ ಬಳಕೆದಾರ ಶುಲ್ಕವನ್ನು ವಿಧಿಸದೆ, ಅರ್ಜಿದಾರರು ಮತ್ತು ಅಂತಹ ಪಾಸ್ಗಳಿಗಾಗಿ ಅರ್ಜಿ ಸಲ್ಲಿಸಿದ ಎಲ್ಲ ಇತರ ನಿವಾಸಿಗಳ ವಾಸಸ್ಥಳ ಪರಿಶೀಲಿಸಿ, ಉಚಿತ ಸ್ಥಳೀಯ ನಿವಾಸಿ ಪಾಸ್ಗಳನ್ನು ನೀಡುವಂತೆ ಎನ್ಎಚ್ಎಐ ಹಾಗೂ ಟೋಲ್ ಪ್ಲಾಜಾ ನಿರ್ವಹಣೆ ಮಾಡುತ್ತಿರುವ ಸಂಸ್ಥೆಗೆ ನಿರ್ದೇಶಿಸಿದೆ. ಈ ಪ್ರಕ್ರಿಯಯನ್ನು 30 ದಿನಗಳೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿರುವ ನ್ಯಾಯಪೀಠ, ಒಂದು ವೇಳೆ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸದಿದ್ದರೆ, ಪ್ರತಿವಾದಿಗಳು ಸೋಮನಹಳ್ಳಿಯಲ್ಲಿ ಟೋಲ್ ಸಂಗ್ರಹವನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಟೋಲ್ ಪ್ಲಾಜಾವನ್ನು ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳು ಮತ್ತು ಸಂಗ್ರಹದ ನಿರ್ಣಯ) ನಿಯಮಗಳು, 2008ರ ಪ್ರಕಾರ ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆದೇಶಿಸಿದೆ. ಅಗತ್ಯವಿದ್ದರೆ ಸೋಮನಹಳ್ಳಿ ಟೋಲ್ ಪ್ಲಾಜಾವನ್ನು ಬದಲಾಯಿಸಬಹುದು. ರಿಯಾಯಿತಿ ಅಥವಾ ರಿಯಾಯಿತಿ ಪಾಸ್ಗಳ ಮೂಲಕ ಕೆಲ ವರ್ಗದ ಬಳಕೆದಾರರಿಗೆ ಟೋಲ್ ಹೊರೆಯನ್ನು ಕಡಿಮೆ ಮಾಡಲು ಉದ್ದೇಶಿಸಲಾಗಿದೆ. ಆದರೆ, ಅಗತ್ಯ ಸೇವೆಗಳನ್ನು ಪಡೆಯಲು ಸ್ಥಳೀಯರು ಪದೇಪದೆ ಟೋಲ್ ಪ್ಲಾಜಾವನ್ನು ದಾಟುವುದನ್ನು ಬಿಟ್ಟು ಬೇರೆ ದಾರಿ ಇಲ್ಲದಿರುವುದರಿಂದ ಟೋಲ್ ವಿಧಿಸುವುದನ್ನು ಕಾನೂನುಬದ್ಧಗೊಳಿಸಲು ಸಾಧ್ಯವಿಲ್ಲ. ಸರ್ವೀಸ್ ರಸ್ತೆ ಅಥವಾ ಪರ್ಯಾಯ ರಸ್ತೆಯನ್ನು ಒದಗಿಸದೆಯೇ ಬಳಕೆದಾರ ಶುಲ್ಕ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಎಲ್ಲ ಸುರಕ್ಷತಾ ಕ್ರಮಗಳ ಅನುಪಸ್ಥಿತಿಯಲ್ಲಿ, ಸ್ಥಳೀಯ ನಿವಾಸಿಗಳಿಂದ ಟೋಲ್ ಸಂಗ್ರಹಕ್ಕೆ ಒತ್ತಾಯ ಮಾಡುವುದು ಅನ್ಯಾಯ ಮತ್ತು ದಬ್ಬಾಳಿಕೆಯಾಗಲಿದೆ ಎಂದು ನ್ಯಾಯಪೀಠ ಆದೇಶಿಸಿದೆ. ಅರ್ಜಿದಾರರ ಆಕ್ಷೇಪವೇನು? ಕಗ್ಗಲೀಪುರ, ತರಳು ಮತ್ತು ಸೋಮನಹಳ್ಳಿ ಗ್ರಾಮ ಪಂಚಾಯಿತಿಗಳು ಸರ್ವೀಸ್ ರಸ್ತೆಗಳನ್ನು ಒದಗಿಸುವವರೆಗೆ ಟೋಲ್ ಪ್ಲಾಜಾ ಸ್ಥಾಪಿಸದಂತೆ ರಸ್ತೆ ಅಭಿವೃದ್ಧಿ ಒಪ್ಪಂದ ಮಾಡಿಕೊಂಡಿರುವವರನ್ನು ಮನವಿ ಮಾಡಿದರೂ ಅದನ್ನು ಪರಿಗಣಿಸಿಲ್ಲ ಹಾಗೂ ಹೊಸ ಗುತ್ತಿಗೆದಾರರು ಹೊಸ ಟೋಲ್ ಸಂಗ್ರಹಕ್ಕಾಗಿ ಮೂಲಸೌಕರ್ಯಗಳನ್ನು ನಿರ್ಮಿಸಲಿದ್ದಾರೆ ಎಂದು ಹೇಳಿದ್ದರು. ಅದನ್ನು ಪ್ರಶ್ನಿಸಿ ಮಂಜೇಶ್ ಕುಮಾರ್ ಮತ್ತಿತರ ಗ್ರಾಮಸ್ಥರು 2024ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೊಸದಾಗಿ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಗೆ ಸೋಮನಹಳ್ಳಿ ಗ್ರಾಮ ಒಳಪಡುತ್ತದೆ ಮತ್ತು ಟೋಲ್ ಪ್ಲಾಜಾ ಅದರ ವ್ಯಾಪ್ತಿಗೆ ಬರುತ್ತದೆ. ಸೋಮನಹಳ್ಳಿ ಟೋಲ್ ಪ್ಲಾಜಾ ಮತ್ತು ಮುಂದಿನ ಟೋಲ್ ಪ್ಲಾಜಾ ನಡುವಿನ ಅಂತರ ಸುಮಾರು 89 ಕಿ.ಮೀ.ಗಳಾಗಿದ್ದು, ಅದರ ಪರಿಣಾಮವಾಗಿ ಇಡೀ ರಸ್ತೆಗೆ ಲೆಕ್ಕಹಾಕಿ ಅಧಿಕ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು.
ಪ್ರತಿ 10 ಲಕ್ಷ ಜನರಿಗೆ ಕೇವಲ 22 ನ್ಯಾಯಾಧೀಶರು!
ಪರದಾಡುತ್ತಿರುವ ಭಾರತೀಯ ನ್ಯಾಯಾಂಗ ವ್ಯವಸ್ಥೆ
74.80 ಕೋಟಿ ರೂ.ಮೌಲ್ಯದ ಸರಕಾರಿ ಜಮೀನು ಒತ್ತುವರಿ ತೆರವು : ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 74.80 ಕೋಟಿ ರೂ. ಅಂದಾಜು ಮೌಲ್ಯದ ಒಟ್ಟು 15 ಎಕರೆ 0.38 ಗುಂಟೆ ಸರಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ತೆರವುಗೊಳಿಸಿ ಸರಕಾರದ ವಶಕ್ಕೆ ಪಡೆಯಲಾಯಿತು. ಶುಕ್ರವಾರ ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಸ್ಮಶಾನ, ಸರಕಾರಿ ಒಣಿ, ಸರಕಾರಿ ಕುಂಟೆ, ಬಂಡಿದಾರಿ, ಸರಕಾರಿ ಕಟ್ಟೆ, ಗುಂಡುತೋಪು, ಖರಾಬು, ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು. ಬೆಂಗಳೂರು ಪೂರ್ವ ತಾಲೂಕಿನ ವರ್ತೂರು ಹೋಬಳಿಯ ಬಳಗೆರೆ ಗ್ರಾಮದ ಸ.ನಂ. 65ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.18 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 5.50 ಕೋಟಿ ರೂ.ಗಳಾಗಿದೆ. ವರ್ತೂರು ಗ್ರಾಮದ ಸ.ನಂ.170ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 1.50 ಕೋಟಿ ರೂ.ಗಳಾಗಿದೆ. ಆನೇಕಲ್ ತಾಲೂಕಿನ ಕಸಬಾ ಹೋಬಳಿಯ ಆನೇಕಲ್ ಗ್ರಾಮಾಂತರ ಸ.ನಂ.426, 427 ಮತ್ತು 428ರ ಮಧ್ಯದ ಓಣಿ, ಸರಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.06 ಲಕ್ಷ ರೂ.ಗಳಾಗಿದೆ. ಅತ್ತಿಬೆಲೆ ಹೋಬಳಿಯ ಇಂಡ್ಲಬೆಲೆ ಗ್ರಾಮದ ಸ.ನಂ.60ರ ಸರಕಾರಿ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.14 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.28 ಲಕ್ಷ ರೂ.ಗಳಾಗಿದೆ. ಸರ್ಜಾಪುರ ಹೋಬಳಿಯ ಹಾರೋಹಳ್ಳಿ ಗ್ರಾಮದ ಸ.ನಂ.64, 81 ಹಾಗೂ ಇತರೆ ಬಂಡಿದಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.12 ಗುಂಟೆಗಳಾಗಿದ್ದು ಅಂದಾಜು ಮೌಲ್ಯ 0.80 ಲಕ್ಷ ರೂ.ಗಳಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ತಗಚಗುಪ್ಪೆ ಗ್ರಾಮದ ಸ.ನಂ.29 ರ ಸರಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.14 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.56 ಲಕ್ಷ ರೂ.ಗಳಾಗಿದೆ. ಕೆಂಗೇರಿ ಹೋಬಳಿಯ ಅಗರ ಗ್ರಾಮದ ಸ.ನಂ.14ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.50 ಲಕ್ಷ ರೂ.ಗಳಾದೆ. ಉತ್ತರಹಳ್ಳಿ ಹೋಬಳಿಯ ಉತ್ತರಿ ಗ್ರಾಮದ ಸ.ನಂ.111ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 4 ಎಕರೆ 0.38 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 25 ಕೋಟಿ ರೂ.ಗಳಾಗಿದೆ. ತಾವರೆಕೆರೆ ಹೋಬಳಿಯ ಹುಲುವೇನಹಳ್ಳಿ ಗ್ರಾಮದ ಸ.ನಂ. 14/23ರ ಸರಕಾರಿ ಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.10 ಲಕ್ಷ ರೂ.ಗಳಾಗಿದೆ. ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ಬೈಲುಕೋನೆನಹಳ್ಳಿ ಗ್ರಾಮದ ಸ.ನಂ.60ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 5 ಎಕರೆ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 30 ಕೋಟಿ ರೂ.ಗಳಾಗಿದೆ. ದಾಸನಪುರ ಹೋಬಳಿಯ ಮತ್ತಿಹಳ್ಳಿ ಗ್ರಾಮದ ಸ.ನಂ.40ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 5 ಕೋಟಿ ರೂ.ಗಳಾಗಿದೆ. ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಕಾಕೋಳು ಗ್ರಾಮದ ಸ.ನಂ.44ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.38 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 5.50 ಕೋಟಿ ರೂ.ಗಳಾಗಿದೆ. ಈ ಸಂದರ್ಭದಲ್ಲಿ ಬೆಂಗಳೂರು ನಗರದ ವಿವಿಧ ತಾಲೂಕಿನ ತಹಶೀಲ್ದಾರ್ಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು.
ಶಿವರಾತ್ರಿಗೆ ಯಶವಂತಪುರ - ಮಡಗಾಂವ್ ವಿಶೇಷ ರೈಲು; ವೇಳಾಪಟ್ಟಿ ಏನು? ಮಂಗಳೂರು, ಉಡುಪಿ, ಕಾರವಾರ ಮೂಲಕ ಸಂಚಾರ
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ ಮತ್ತು ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ ಆರಂಭವಾಗಲಿದೆ. ಈ ರೈಲು ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಸಂಚರಿಸಲಿದೆ. ಫೆಬ್ರವರಿ 13 ಮತ್ತು 16 ರಂದು ಈ ರೈಲುಗಳ ಸಂಚಾರ ನಿಗದಿಯಾಗಿದೆ. ಒಟ್ಟು 20 ಬೋಗಿಗಳನ್ನು ಹೊಂದಿರುವ ಈ ರೈಲು ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಪಶ್ಚಿಮ ಬಂಗಾಳ SIR: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಝೂಲನ್ ಗೋಸ್ವಾಮಿಗೆ ಸಮನ್ಸ್
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಡಿ (ಎಸ್ಐಆರ್) ತಂದೆಯ ಹೆಸರಿನಲ್ಲಿ ವ್ಯತ್ಯಾಸ ಕಂಡು ಬಂದಿರುವ ಹಿನ್ನೆಲೆಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಝೂಲನ್ ಗೋಸ್ವಾಮಿ ಮತ್ತು ಅವರ ಇಬ್ಬರು ಒಡಹುಟ್ಟಿದವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ. ತಂದೆಯ ಹೆಸರು ಕೆಲವು ದಾಖಲೆಗಳಲ್ಲಿ ‘ನಿಷಿತ್ ರಂಜನ್ ಗೋಸ್ವಾಮಿ’ ಮತ್ತು ಇತರ ದಾಖಲೆಗಳಲ್ಲಿ ‘ನಿಷಿತ್ ಗೋಸ್ವಾಮಿ’ ಎಂದಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ. ಜ.27ಕ್ಕೆ ವಿಚಾರಣೆಯನ್ನು ನಿಗದಿಗೊಳಿಸಲಾಗಿತ್ತು. ಗೋಸ್ವಾಮಿ ಖುದ್ದಾಗಿ ಹಾಜರಾಗುವ ಅಗತ್ಯವಿರಲಿಲ್ಲ ಮತ್ತು ಅವರು ತನ್ನ ನಿವಾಸದಿಂದಲೇ ವಿಷಯವನ್ನು ಬಗೆಹರಿಸಿಕೊಂಡಿದ್ದಾರೆ. ಅವರ ಇಬ್ಬರು ಒಡಹುಟ್ಟಿದವರು ಸ್ಥಳೀಯ ಶಾಲೆಯೊಂದರಲ್ಲಿ ವಿಚಾರಣೆಗೆ ಹಾಜರಾಗಿದ್ದರು. ವೇಗದ ಬೌಲರ್ ಆಗಿದ್ದ ಗೋಸ್ವಾಮಿ 12 ಟೆಸ್ಟ್,204 ಏಕದಿನ ಅಂತರರಾಷ್ಟ್ರೀಯ ಮತ್ತು 68 T20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಹಲವಾರು ಅಂತರರಾಷ್ಟ್ರಿಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಮಾಜಿ ಫುಟ್ಬಾಲ್ ಪಟು ಮೆಹತಾಬ್ ಹುಸೇನ್ ಅವರಿಗೂ ಎಸ್ಐಆರ್ ಅಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಹುಸೇನ್ ರವಿವಾರ ದಕ್ಷಿಣ 24 ಪರಗಣಗಳ ಜಿಲ್ಲೆಯ ಮಲ್ಲಿಕ್ಪುರದ ಶಾಲೆಯೊಂದರಲ್ಲಿ ವಿಚಾರಣೆಗೆ ಹಾಜರಾಗಬೇಕಿದೆ. ಕೋಲ್ಕತಾದ ನ್ಯೂಟೌನ್ ನಿವಾಸಿಯಾಗಿರುವ ಅವರ ಹೆಸರು ಹುಟ್ಟೂರು ಮಲ್ಲಿಕ್ಪುರದ ಮತದಾರರ ಪಟ್ಟಿಯಲ್ಲಿದೆ. ಚುನಾವಣಾ ದಾಖಲೆಗಳಲ್ಲಿ ತನ್ನ ಮತ್ತು ತನ್ನ ತಾಯಿಯ ಹೆಸರುಗಳು ತಾಳೆಯಾಗಿಲ್ಲ, ಹೀಗಾಗಿ ಸಮನ್ಸ್ ನೀಡಲಾಗಿದೆ ಎಂದು ಹುಸೇನ್ ಸುದ್ದಿಸಂಸ್ಥೆಗೆ ತಿಳಿಸಿದರು.
ಕಲಬುರಗಿ | ಮಹಾನಗರ ಪಾಲಿಕೆಯಿಂದ ಕಲುಷಿತ ನೀರು ಸರಬರಾಜು: ಡಾ.ಸುಧಾ ಹಾಲಕಾಯಿ ಆರೋಪ
ಕಲಬುರಗಿ: ಕಲಬುರಗಿ ನಗರ ನಿವಾಸಿಗಳಿಗೆ ಮಹಾನಗರ ಪಾಲಿಕೆಯಿಂದ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟ ಉಸ್ತುವಾರಿ ಸಚಿವರು ಮೌನ ವಹಿಸಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಡಾ.ಸುಧಾ ಹಾಲಕಾಯಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲಬುರಗಿ ನಗರಕ್ಕೆ ಸರಬರಾಜು ಮಾಡುತ್ತಿರುವ ಭೀಮಾ ನದಿ ನೀರಿಗೆ ಕೊಳಚೆ ನೀರು ವ್ಯಾಪಕವಾಗಿ ಸೇರುತ್ತಿದೆ. ನಗರ ಪಾಲಿಕೆಯ ನೀರು ಶುದ್ದಿಕಾರಣ ಘಟಕ ಸಮರ್ಪಕ ರೀತಿಯಲ್ಲಿ ಕಾರ್ಯರ್ವಹಿಸದೆ ಸ್ಥಗಿತಗೊಂಡರೂ ಇದಕ್ಕೆ ಜನಪ್ರತಿನಿಧಿಗಳು ಮೌನವಾಗಿದ್ದಾರೆ ಎಂದು ಆರೋಪಿಸಿದರು. ಭೀಮಾ ನದಿಯ ನೀರನ್ನೇ ಅವಲಂಬಿಸಿರುವ ಇಲ್ಲಿನ ಜನತೆಗೆ ಸರಕಾರ ಯೋಗ್ಯವಾದ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ಎಡವಿದೆ. ಕೂಡಲೇ ಇಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಅಫಜಲಪುರ | ದಲಿತ ಸಂಘರ್ಷ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ
ಅಫಜಲಪುರ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೆ. ಸ್ಥಾಪಿತ) ಅಫಜಲಪುರ ತಾಲೂಕು ಸಮಿತಿಯ ಸರ್ವ ಸದಸ್ಯರ ಸಭೆ ಹಾಗೂ ಪುನರ್ಚೇತನ ಸಭೆಯಲ್ಲಿ ಸಮಿತಿಯ ನೂತನ ತಾಲೂಕು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಅವರ ಆದೇಶದ ಮೇರೆಗೆ ಅಫಜಲಪುರ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡರಾದ ಭೀಮರಾಯ ಗೌರ ವಹಿಸಿದ್ದರು. ಜಿಲ್ಲಾ ಸಂಚಾಲಕರಾದ ಭೀಮಶಾ ಖನ್ನಾ ಹಾಗೂ ವಿಭಾಗೀಯ ಸಂಚಾಲಕರಾದ ಧರ್ಮಣ್ಣ ಕೋನೇಕರ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಸಭೆಯಲ್ಲಿ ಯಲ್ಲಾಲಿಂಗ ದೊಡ್ಡಮನಿ, ಮಡಿವಾಳಪ್ಪ ಮಲ್ಲಾಬಾದ್, ಭಾಗಣ್ಣ ಕೋಳುಕರ, ಅರುಣ್ ಇನಾಮಾದಾರ್, ರಾಣು ಮುದ್ದನಕರ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಅಫಜಲಪುರ ತಾಲೂಕು ಸಂಚಾಲಕರಾಗಿ ಬಸವರಾಜ್ ಬಿಲಕರ, ತಾಲೂಕು ಸಂಘಟನಾ ಸಂಚಾಲಕರಾಗಿ ಲಕ್ಷ್ಮಣ ನಡಿಗೇರಿ, ಪಾಂಡುರಂಗ ಬಿಲಕರ, ಲಕ್ಷ್ಮಣ ಭೀಮಶಾ ತೇಲ್ಕರ್, ಅಶೋಕ್ ಲಕ್ಷ್ಮಣ ದೊಡ್ಡಮನಿ, ಪ್ರಕಾಶ್ ತೋಲಣ, ದತ್ತು ಬಂಕಲಗಿ ಹಾಗೂ ರವಿ ಛಲವಾದಿ ಅವರನ್ನು ಆಯ್ಕೆ ಮಾಡಲಾಯಿತು. ಅದೇ ರೀತಿ ಮಲ್ಲಾಬಾದ್ ಗ್ರಾಮ ಶಾಖೆಯ ಸಂಚಾಲಕರಾಗಿ ಸಾಗರ್ ಬಾಗಪ್ಪ ಮೇಕೆರಿ, ಸಂಘಟನಾ ಸಂಚಾಲಕರಾಗಿ ಯಲ್ಲಾಲಿಂಗ ಖಾಜಪ್ಪ ಕಟ್ಟಿಮನಿ, ಲೋಕೇಶ್, ದೇವೇಂದ್ರ, ಅಭಿಷೇಕ, ವಿಶಾಲ್ ಕಟ್ಟಿಮನಿ, ಯಲ್ಲಾಲಿಂಗ ಬಾಲಚಂದ್ರ, ಹುಚ್ಚಪ್ಪ ಖಾಜಪ್ಪ ಯಳಸಂಗಿ ಅವರನ್ನು ನೇಮಕ ಮಾಡಲಾಯಿತು. ನಿಲೂರು ಗ್ರಾಮ ಶಾಖೆಯ ಸಂಚಾಲಕರಾಗಿ ಸಂಗಮನಾಥ ವಿ. ಬಿಲಕರ ಹಾಗೂ ಸಂಘಟನಾ ಸಂಚಾಲಕರಾಗಿ ಪ್ರಭುಲಿಂಗ ಎಸ್. ಬಿ. ಅವರನ್ನು ಆಯ್ಕೆ ಮಾಡಲಾಯಿತು.
ಕಲಬುರಗಿ | ರಸ್ತೆ ಅಪಘಾತಗಳ ತಡೆಗೆ ಜನರ ಸಹಭಾಗಿತ್ವ ಅಗತ್ಯ: ಡಾ.ಶರಣಪ್ಪ ಎಸ್.ಡಿ
ಕಲಬುರಗಿ: ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆ ಮಾಡಲು ಪೊಲೀಸರದಷ್ಟೇ ಜವಾಬ್ದಾರಿ ಅಲ್ಲ, ಇಲ್ಲಿ ಜನರ ಸಹಭಾಗಿತ್ವವೂ ಅಗತ್ಯ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ಹೇಳಿದ್ದಾರೆ. ಶುಕ್ರವಾರ ನಗರದ ಎಸ್.ವಿ.ಪಿ ವೃತ್ತದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಸಮಾರೋಪದ ಅಂಗವಾಗಿ ಕಲಬುರಗಿ ನಗರ ಪೊಲೀಸ್ ಹಾಗೂ ಯುನೈಟೆಡ್ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಸ್ತೆ ಸುರಕ್ಷತೆಯನ್ನು ಖಚಿತಪಡಿಸುವುದು ಪೊಲೀಸರ ಜವಾಬ್ದಾರಿಯಷ್ಟೇ ಅಲ್ಲ, ಇದು ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಹೊಣೆಗಾರಿಕೆಯೂ ಆಗಿದೆ. ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ಸುರಕ್ಷಿತ ಚಾಲನಾ ಕ್ರಮಗಳನ್ನು ಅನುಸರಿಸಿ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಾಗ ಮಾತ್ರ ರಸ್ತೆ ಅಪಘಾತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯ ಎಂದು ಹೇಳಿದರು. ನಮ್ಮ ಅಜಾಗರೂಕ ಚಾಲನೆ ನಮ್ಮ ಜೀವಕ್ಕೂ, ಇತರರ ಜೀವಕ್ಕೂ ಅಪಾಯಕಾರಿಯಾಗಬಹುದು ಎಂಬ ಅರಿವು ಎಲ್ಲರಲ್ಲೂ ಇರಬೇಕು. ಸಂಚಾರ ನಿಯಮಗಳನ್ನು ನಿಷ್ಠೆಯಿಂದ ಪಾಲಿಸಿದರೆ ಬಹುತೇಕ ಎಲ್ಲಾ ರಸ್ತೆ ಅಪಘಾತಗಳನ್ನು ತಪ್ಪಿಸಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಯುನೈಟೆಡ್ ಕಾಲೇಜ್ ಆಫ್ ಫಿಸಿಯೋಥೆರಪಿಯ ಮುಖ್ಯಸ್ಥ ಡಾ. ಅಬ್ದುಲ್ ಹಕೀಮ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿಸಿಪಿ ಪ್ರವೀಣ್ ಎಚ್. ನಾಯಕ್, ಎಸಿಪಿ ಶರಣಬಸಪ್ಪ ಸುಬೇದಾರ್, ಸುಧಾ ಆದಿ, ಸೇರಿದಂತೆ ಸಂಚಾರ ವಿಭಾಗ–1 ಮತ್ತು 2ರ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಯುನೈಟೆಡ್ ಆಸ್ಪತ್ರೆಯ ವತಿಯಿಂದ ಸಾರ್ವಜನಿಕರಿಗೆ ಹೆಲ್ಮೆಟ್ಗಳು ಹಾಗೂ ಪ್ರಥಮ ಚಿಕಿತ್ಸಾ ಕಿಟ್ಗಳನ್ನು ವಿತರಿಸಲಾಯಿತು.
ಜನವರಿ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಜನವರಿ 31) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ.
ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ.ಅಗ್ರಹಾರ ಠಾಣೆಯ ಇನ್ಸ್ಪೆಕ್ಟರ್ ಅಮಾನತು : ಜಿ.ಪರಮೇಶ್ವರ್
ಬೆಂಗಳೂರು : ಅಪರಾಧ ಪ್ರಕರಣವೊಂದರಲ್ಲಿ ಸಹಾಯ ಮಾಡಲು 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ.ಅಗ್ರಹಾರ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಎಂಬಾತನನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಲಂಚ ಪಡೆದ ಆರೋಪ ಸಂಬಂಧ ಇನ್ಸ್ಪೆಕ್ಟರ್ನನ್ನು ಅಮಾನತು ಮಾಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಕೆಲ ದಿನಗಳ ಹಿಂದೆ ವಾರ್ಷಿಕ ಪೊಲೀಸ್ ಸಮ್ಮೇಳನದಲ್ಲಿ ಭ್ರಷ್ಠಾಚಾರ ಪ್ರಕರಣದಲ್ಲಿ ಸಿಲುಕಕೂಡದು ಎಂದು ಎಚ್ಚರಿಸಲಾಗಿತ್ತು. ಪದೇ ಪದೇ ಇಂತಹ ಘಟನೆಯಾದಾಗ ಸರ್ಕಾರಕ್ಕೆ ಹಾಗೂ ವೈಯುಕ್ತಿಕವಾಗಿ ನನಗೂ ಮುಜುಗರವಾಗಲಿದೆ. ಆಗಾಗ ಇಂತಹ ಘಟನೆಗಳು ಯಾಕೆ ನಡೆಯುತ್ತದೆ ಎಂಬುದರ ಬಗ್ಗೆ ಅಧ್ಯಯನ ಮಾಡಬೇಕಿದೆ ಎಂದು ಜಿ.ಪರಮೇಶ್ವರ್ ಹೇಳಿದರು. ಪೋಸ್ಟಿಂಗ್ ಕೊಡಲು ಹಣ ಕೊಡುವ ವ್ಯವಸ್ಥೆ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ನನ್ನ ಹಂತದಲ್ಲಿ ಇಂತಹ ವಿಚಾರ ನಡೆಸುವುದಕ್ಕೆ ಬಿಡುವುದಿಲ್ಲ. ನಮಗೆ ಜವಾಬ್ದಾರಿ ಇದೆ. ಜನರಿಗೆ ನಾವು ಉತ್ತರ ಕೊಡಬೇಕು. ಜನ ನಮ್ಮನ್ನು ಗೆಲ್ಲಿಸಿದ್ದಾರೆ. ಆದಷ್ಟು ಈ ತರಹದ ಘಟನೆ ಆಗದ ರೀತಿ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಪ್ರಾಮಾಣಿಕವಾಗಿದ್ದರೆ ಲೋಕಾಯುಕ್ತಕ್ಕೂ ಹೆದರುವುದು ಬೇಡ, ಸರಕಾರಕ್ಕೂ ಹೆದರುವುದು ಬೇಡ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ನಾವು ಬದ್ಧವಾಗಿದ್ದೇವೆ. ಭ್ರಷ್ಟಾಚಾರದಲ್ಲಿ ತೊಡಗಿರುವವರ ಪರ ನಮ್ಮ ಸರಕಾರ ಯಾವುದೇ ಕಾರಣಕ್ಕೂ ನಿಲ್ಲಲ್ಲ ಎಂದು ತಿಳಿಸಿದರು. ಪ್ರಕರಣದ ಹಿನ್ನೆಲೆ: ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ ವಂಚನೆ ಪ್ರಕರಣವೊಂದರಲ್ಲಿ ಮೊಹಮ್ಮದ್ ಅಕ್ಬರ್ ಎಂಬಾತ ಆರೋಪಿಯಾಗಿದ್ದ. ಆ ಪ್ರಕರಣದ ಕುರಿತು ಇನ್ಸ್ಪೆಕ್ಟರ್ ಗೋವಿಂದರಾಜು ಅವರು ಬೆದರಿಸಿ 4 ಲಕ್ಷ ರೂ.ಲಂಚಕ್ಕೆ ಬೇಡಿಕೆಯಿಟ್ಟಿರುವುದರ ಕುರಿತು ಲೋಕಾಯುಕ್ತ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜ.29ರ ಗುರುವಾರ ಮೈಸೂರು ರಸ್ತೆಯ ಸಿಎಎಆರ್ ಮೈದಾನ ಬಳಿ ಪೊಲೀಸ್ ಸಮವಸ್ತ್ರದಲ್ಲಿಯೇ ಲಂಚ ಪಡೆಯುತ್ತಿದ್ದಾಗ ಇನ್ಸ್ಪೆಕ್ಟರ್ ಗೋವಿಂದರಾಜು ಸಿಕ್ಕಿಬಿದ್ದಿದ್ದ. ಟ್ರ್ಯಾಪ್ಗೆ ಒಳಗಾಗುತ್ತಿದ್ದಂತೆ ಗೋವಿಂದರಾಜು ಜೋರಾಗಿ ಚೀರಾಡಿದ್ದರು. ಬಳಿಕ ಸಿನಿಮೀಯ ಶೈಲಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಲೋಕಾಯುಕ್ತ ದಾಳಿ ವೇಳೆ ಗೋವಿಂದರಾಜು ಚೀರಾಡಿದ್ದ ವಿಡಿಯೋ ವೈರಲ್ ಆಗಿತ್ತು.
ಕಲಬುರಗಿ | ಅನುಮೋದನೆಗೊಂಡ ಕಾಮಗಾರಿಗಳ ಆರಂಭಕ್ಕೆ ಡಿಸಿ ಬಿ.ಫೌಝಿಯಾ ತರನ್ನುಮ್ ಸೂಚನೆ
ಕಲಬುರಗಿ: ಜಿಲ್ಲೆಯಾದ್ಯಾಂತ ಜಿಲ್ಲಾ ಖನಿಜ ನಿಧಿ ಅನುದಾನದಡಿ ಈಗಾಗಲೇ ಕ್ರಿಯಾ ಯೋಜನೆಯಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಫೆ.10ರೊಳಗೆ ಆರಂಭಿಸುವಂತೆ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಸೂಚನೆ ನೀಡಿದರು. ಶುಕ್ರವಾರ ಈ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಒಂದು ವೇಳೆ ನಿಗದಿತ ಅವಧಿಯಲ್ಲಿ ಕೆಲಸ ಕಾಮಗಾರಿಗಳು ಪ್ರಾರಂಭ ಮಾಡದಿದ್ದರೆ ಅಂತಹ ಕಾಮಗಾರಿಗಳನ್ನು ಕೈಬಿಟ್ಟು, ಉಳಿತಾಯದ ಅನುದಾನದಡಿ ಅವಶ್ಯವಿರುವ ಇತರೆ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿ ಆರಂಭಕ್ಕೆ ವಿಳಂಬ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಇನ್ನು ಈಗಾಗಲೇ ಕ್ರಿಯಾ ಯೋಜನೆಯಡಿ ಅನುಮೋದನೆಗೊಂಡಿರುವ ಕಾಮಗಾರಿಗಳನ್ನು ಆರಂಭಕ್ಕೆ ಆಡಳಿತಾತ್ಮಕ ಅನುಮೋದನೆ ಪಡೆಯಲು 3 ದಿನದೊಳಗೆ ಈ ಕಚೇರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅನುಷ್ಠಾನ ಅಧಿಕಾರಿಗಳಿಗೆ ಡಿ.ಸಿ. ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿ.ಸಿ.ಎಫ್ ಸುಮಿತ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಯ ಅನುಷ್ಠಾನ ಏಜೆನ್ಸಿಗಳ ಅಧಿಕಾರಿಗಳು ಭಾಗವಹಿಸಿದ್ದರು.
ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡದೇ, ಕರ್ತವ್ಯದಲ್ಲಿ ಲೋಪ ಮಾಡಿದರೆ ಇಡೀ ವ್ಯವಸ್ಥೆಯೇ ಹಾಳಾಗುತ್ತದೆ : ಜಿ.ಪರಮೇಶ್ವರ್
ಬೆಂಗಳೂರು : ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡದೇ, ಕರ್ತವ್ಯದಲ್ಲಿ ಲೋಪ ಮಾಡಿದರೆ ಇಡೀ ವ್ಯವಸ್ಥೆಯೇ ಹಾಳಾಗುತ್ತದೆ. ಆದುದರಿಂದ ಯಾವುದೆ ಕರ್ತವ್ಯ ಲೋಪವಾಗದಂತೆ ಜವಾಬ್ಧಾರಿಯುತವಾಗಿ ಕೆಲಸ ಮಾಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಲಹೆ ನೀಡಿದ್ದಾರೆ. ಶನಿವಾರ ನಗರದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರದಾನ ಕಚೇರಿಯಲ್ಲಿ ಸ್ಥಾಪಿಸಲಾದ ಕಾರಾಗೃಹ ‘ಸೆಂಟ್ರಲ್ ಕಮಾಂಡ್ ಸೆಂಟರ್’ನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಕಾರ ಬಹಳ ವಿಶ್ವಾಸದಿಂದ ಕೈದಿಗಳನ್ನು ಪೊಲೀಸರ ಕೈಗೆ ಕೊಟ್ಟಿದ್ದು, ಅವರ ಮನಃಪರಿವರ್ತನೆ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಆತ್ಮಸಾಕ್ಷಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು. ಸಿಬ್ಬಂದಿಯ ಕರ್ತವ್ಯದ ಮೇಲೆ ಹಿರಿಯ ಅಧಿಕಾರಿಗಳು ನಿಗಾವಹಿಸಬೇಕು. ನಾವು ಕರ್ತವ್ಯದಲ್ಲಿ ತಪ್ಪು ಎಸಗಿ ನಾಲ್ಕು ಜನರಿಂದ ತಪ್ಪಿಸಿಕೊಳ್ಳಬಹುದು. ಆದರೆ ಆತ್ಮಸಾಕ್ಷಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಿಮ್ಮ ಕಣ್ಣುತಪ್ಪಿ, ಯಾವುದೇ ವಸ್ತುಗಳು ಜೈಲಿನ ಒಳಗೆ ಹೋಗಲು ಸಾಧ್ಯವಿಲ್ಲ. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಸಿಬ್ಬಂದಿಯ ನಿರ್ಲಕ್ಷ್ಯದಿಂದ ಇದೆಲ್ಲ ಸಾಧ್ಯವಾಗುತ್ತಿದೆ. ಇದನ್ನು ತಡೆಯಲು ನಿಮ್ಮಿಂದ ಸಾಧ್ಯವಿದೆ ಎಂದು ಹೇಳಿದರು. ರಾಜ್ಯದ ಎಲ್ಲ ಕಾರಾಗೃಹಗಳಲ್ಲಿನ ಚಟುವಟಿಕೆಗಳ ಮೇಲೆ ನಿಗಾವಹಿಸಲು ಅನುಕೂಲವಾಗುವ ನಿಟ್ಟಿನಲ್ಲಿ ‘ಸೆಂಟ್ರಲ್ ಕಮಾಂಡ್ ಸೆಂಟರ್’ ಸ್ಥಾಪಿಸಲು ತೀರ್ಮಾನಿಸಲಾಗಿತ್ತು. ಈ ಕ್ರಮದಿಂದ ಬಹಳಷ್ಟು ಸುಧಾರಣೆಯಾಗುತ್ತದೆ. ಜೈಲುಗಳಿಗೆ ಭೇಟಿ ನೀಡುವವರ ವಸ್ತುಗಳನ್ನು ತಪಾಸಣೆ ನಡೆಸುವುದು, ಸಿಬ್ಬಂದಿ ಕಾರ್ಯಚಟುವಟಿಕೆಯನ್ನು ಕಮಾಂಡ್ ಸೆಂಟರ್ನಿಂದ ನಿಗಾವಹಿಸಲು ಸಾಧ್ಯವಾಗುತ್ತದೆ. ಇದೊಂದು ಉತ್ತಮ ಹೆಜ್ಜೆ. ಉತ್ತಮವಾಗಿ ಆಡಳಿತ ನಡೆಸಲು ಬಹಳ ಸಹಾಯವಾಗುತ್ತದೆ ಎಂದು ಹೇಳಿದರು. ಕಾರಾಗೃಹ ಇಲಾಖೆ ಎನ್ನುವುದಕ್ಕಿಂತ ಸುಧಾರಣೆ ಇಲಾಖೆ ಎನ್ನುವುದು ಮುಖ್ಯ. ಯಾವುದೋ ಕಾರಣಕ್ಕಾಗಿ ವ್ಯಕ್ತಿ ತಪ್ಪು ಮಾಡಬಹುದು. ಆತನನ್ನು ಸರಿಪಡಿಸುವುದು ನಮ್ಮ ಕೆಲಸ ಎಂಬ ನಿಟ್ಟಿನಲ್ಲಿ ಸುಧಾರಣಾ ಇಲಾಖೆ ಎಂದು ಮಾಡಲಾಗಿದೆ. ನಾನು ಮೂರು ಬಾರಿ ಗೃಹ ಸಚಿವನಾಗಿ ನನ್ನ ಅವಧಿಯಲ್ಲಿ ಸುಮಾರು 2500 ಕೈದಿಗಳನ್ನು ಸುಧಾರಣೆ ಮಾಡಿ, ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯು ಬಹಳ ಉತ್ತಮವಾಗಿ ಕೆಲಸ ಮಾಡುತ್ತಿದೆ. ಬಹಳ ವರ್ಷಗಳಿಂದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ನೇಮಕಾತಿ ನಡೆದಿಲ್ಲ. ಸಿಬ್ಬಂದಿ ನೇಮಕಾತಿ ಮಾಡಿಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ. ಇದಕ್ಕೆ ತಕ್ಷಣದ ಕ್ರಮ ಕೈಗೊಳ್ಳಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ರಾಜ್ಯ ಕಾರಾಗೃಹ ಮತ್ರು ಸುಧಾರಣಾ ಸೇವಾ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಪೊಲೀಸ್ ಉಪಮಹಾನಿರೀಕ್ಷ ಜಿನೇಂದ್ರ ಖನಗಾವಿ, ಪೊಲೀಸ್ ಅಧೀಕ್ಷಕ ಅಂಶು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ, ಯಾವೆಲ್ಲ ಖಾತೆ ಹಂಚಿಕೆ?
ಮುಂಬೈ: ಇತ್ತೀಚೆಗೆ ವಿಮಾನ ಅಪಘಾತದಲ್ಲಿ ನಿಧನರಾದ ಎನ್ಸಿಪಿ ಅಧ್ಯಕ್ಷ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪದವಿ ಮತ್ತು ಪ್ರಮಾಣವಚನ ಬೋಧಿಸಿದರು.
Iran | ʼಬಂದರ್ ಅಬ್ಬಾಸ್ʼ ನಲ್ಲಿ ಸ್ಫೋಟ: ಓರ್ವ ಮೃತ್ಯು, 14 ಜನರಿಗೆ ಗಾಯ
ಟೆಹ್ರಾನ್: ಇರಾನ್ನ ದಕ್ಷಿಣ ಬಂದರ್ ʼಬಂದರ್ ಅಬ್ಬಾಸ್ ʼನಲ್ಲಿ ಶನಿವಾರ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ ಓರ್ವ ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ಇರಾನ್ ಮಾಧ್ಯಮಗಳು ವರದಿ ಮಾಡಿದೆ. ಸ್ಫೋಟದಲ್ಲಿ ರೆವೆಲ್ಯೂಷನರಿ ಗಾರ್ಡ್ ನೌಕಾಪಡೆಯ ಕಮಾಂಡರ್ ರನ್ನು ಗುರಿಯಾಗಿಸಲಾಗಿದೆ ಎಂಬ ಸಾಮಾಜಿಕ ಮಾಧ್ಯಮ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು Tasnim ಸುದ್ದಿ ಸಂಸ್ಥೆ ತಿಳಿಸಿದೆ. ಸ್ಫೋಟದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.
ಕೆಫೆ ಕಾಫಿ ಡೇ ಸ್ಥಾಪಕ ಸಿದ್ದಾರ್ಥ್ ಹೆಗ್ಡೆ ಆತ್ಮಹತ್ಯೆ ನೆನಪಿಸಿದ ಸಿಜೆ ರಾಯ್ ಪ್ರಕರಣ
ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಜನವರಿ 30 ಶುಕ್ರವಾರ ಮಧ್ಯಾಹ್ನ 3.15ರ ಹೊತ್ತಿಗೆ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದ ವೇಳೆಯೇ ರಾಯ್ ಗುಂಡು ಹಾರಿಸಿಕೊಂಡಿದ್ದಾರೆ. ಐಟಿ ಅಧಿಕಾರಿಗಳು ದಾಳಿ ವೇಳೆ ಮಾನಸಿಕ ಒತ್ತಡ ಹೇರಿದ್ದರಿಂದಲೇ ರಾಯ್ ಆತ್ಮಹತ್ಯೆ ಮಾಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ. ಸಿಜೆ ರಾಯ್ ಆತ್ಮಹತ್ಯೆಗೆ ತೆರಿಗೆ ಭಯೋತ್ಪಾದನೆ ಕಾರಣ ಎಂದು ರಾಜಕೀಯ ಪಕ್ಷಗಳು ಆರೋಪಿಸಿದ್ದು ಈ ಪ್ರಕರಣ ಕಾಫಿ ಡೇ ಮಾಲೀಕ ವಿ.ಜಿ. ಸಿದ್ದಾರ್ಥ ಹೆಗ್ಡೆ ಆತ್ಮಹತ್ಯೆ ಪ್ರಕರಣವನ್ನು ನೆನೆಪಿಸುವಂತೆ ಮಾಡಿದೆ. 2019 ಜುಲೈ 29ರಂದು ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮೃತದೇಹ ಎರಡು ದಿನಗಳ ಬಳಿಕ ನಾಲ್ಕು ಕಿ.ಮೀ. ದೂರದ ಹೊಯ್ಗೆ ಬಜಾರ್ ಎಂಬಲ್ಲಿ ಪತ್ತೆಯಾಗಿತ್ತು. ಬೆಂಗಳೂರಿನಿಂದ ಸಕಲೇಶಪುರಕ್ಕೆ ಹೋಗುವುದಾಗಿ ಹೊರಟಿದ್ದ ಸಿದ್ದಾರ್ಥ, ಮಧ್ಯದಲ್ಲಿ ಮಾರ್ಗ ಬದಲಿಸಿ ಮಂಗಳೂರಿಗೆ ಬಂದಿದ್ದರು. ನಂತರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಯಾರು ಈ ಸಿದ್ದಾರ್ಥ್? ಸಿದ್ದಾರ್ಥ್ ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಚೇತನ ಹಳ್ಳಿಯ ಉದ್ಯಮಿ. ಅವರ ಅಪ್ಪ ಗಂಗಯ್ಯ ಹೆಗ್ಡೆ ಜಮೀನ್ದಾರರು. ಕುಟುಂಬ ಕಾಫಿ ಕೃಷಿಯಲ್ಲಿ ತೊಡಸಿಕೊಂಡಿತ್ತು. ಅಪ್ಪ ಕಾಫಿ ಕೃಷಿಯಲ್ಲಿ ನಿರತರಾದಾಗ ಮಗ ಸಿದ್ದಾರ್ಥ್, ಚಿಕ್ಕಮಗಳೂರಿನ ಕಾಫಿ ಮಾರುಕಟ್ಟೆಯನ್ನು ಜಗತ್ತಿನಾದ್ಯಂತ ವಿಸ್ತರಿಸಿದರು. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಎಕನಾಮಿಕ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಸಿದ್ದಾರ್ಥ್ ಮುಂಬೈನ ಜೆ.ಎಂ. ಫೈನಾನ್ಷಿಯಲ್ಸ್ ಲಿಮಿಟೆಡ್ನಲ್ಲಿ ಕೆಲಕಾಲ ಷೇರು ವಹಿವಾಟಿನ ಕೆಲಸ ಮಾಡಿದ್ದರು. ಬೆಂಗಳೂರಿನಲ್ಲಿ ‘ಸಿವನ್ ಸೆಕ್ಯುರಿಟಿಸ್ ಎಂಟರ್ಪ್ರೈಸಸ್’ ಸ್ಥಾಪಿಸಿದ್ದ ಅವರು ನಂತರ ಕಾಫಿ ಉದ್ಯಮಕ್ಕೆ ಕಾಲಿಟ್ಟರು. 1993ರಲ್ಲಿ ಮೂಡಿಗೆರೆ ಭಾಗದ ಕುದುರೆಗಂಡಿಯ ಪ್ರದೇಶದಲ್ಲಿ ಅಮಾಲ್ಗಮೇಟೆಡ್ ಬೀನ್ ಕಂಪನಿ ಲಿಮಿಟೆಡ್ (ABCL) ಒಡೆತನದಲ್ಲಿದ್ದ 220 ಎಕರೆ ಕಾಫಿ ತೋಟವನ್ನು ಸಿದ್ದಾರ್ಥ್ ಖರೀದಿಸಿದ್ದರು. ಈ ಕಂಪನಿಯ ಮೂಲಕ ಅವರು ಕಾಫಿ ರಫ್ತು ಮಾರುಕಟ್ಟೆಯಲ್ಲಿ ಉದ್ಯಮಿಯಾಗಿ ಬೆಳೆದರು. ಕಾಫಿ ಕ್ಯೂರಿಂಗ್, ರೋಸ್ಟಿಂಗ್, ಖರೀದಿ, ಮಾರಾಟ ಶುರು ಮಾಡಿದ ಸಿದ್ದಾರ್ಥ ಕಾಫಿ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿ ಎಲ್ಲದಕ್ಕೂ ವ್ಯವಸ್ಥೆ ಕಲ್ಪಿಸಿದ್ದರು. ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ 1996ರ ಜುಲೈ 11ರಂದು ಮೊದಲ ಕೆಫೆ ಕಾಫಿ ಡೇ (ಸಿಸಿಡಿ)ಆರಂಭಿಸುವ ಮೂಲಕ ಸಿದ್ದಾರ್ಥ ಕಾಫಿ ಸಂಸ್ಕೃತಿಯನ್ನು ಉದ್ಯಮವಾಗಿ ಬೆಳೆಸತೊಡಗಿದರು. ಹೀಗೆ ಶುರುವಾದ ಅವರ ಉದ್ಯಮ ವರ್ಷಕ್ಕೆ 1,600 ಕೋಟಿ ರೂಪಾಯಿ ವ್ಯವಹಾರಗಳ ಉದ್ಯಮವಾಗಿ ವಿಸ್ತರಿಸತೊಡಗಿತು. 2002ರಲ್ಲಿ ಕಾಫಿ ತಯಾರಿ ಯಂತ್ರ ಪರಿಚಯಿಸಿದ್ದರು ಸಿದ್ದಾರ್ಥ್. ‘ಎ ಲಾಟ್ ಕ್ಯಾನ್ ಹ್ಯಾಪನ್ ಓವರ್ ಎ ಕಪ್ ಆಫ್ ಕಾಫಿ’ ‘ಕೆಫೆ ಕಾಫಿ ಡೇ’ಯ ಅಡಿಬರಹ . ಸಿಂಗಾಪುರ ವಿಯೆನ್ನಾ, ಮಲೇಷ್ಯಾ, ಝಕೊಸ್ಲೊವಾಕಿಯ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಸಿಸಿಡಿ ಶಾಖೆಗಳಿವೆ. ಇದು ಬರೀ ಕಾಫಿ ಕುಡಿಯುವ ಜಾಗ ಮಾತ್ರವಲ್ಲ, ಬ್ಯುಸಿನೆಸ್ ಮೀಟಿಂಗ್, ಮದುವೆ ಮಾತುಕತೆ, ಆಫೀಸ್ ಕೆಲಸದ ಮಾತುಕತೆ, ಹರಟೆ ತಾಣ, ಅಷ್ಟೇ ಯಾಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ವೇದಿಕೆ ಕೂಡಾ ಆಗಿದೆ. ಭಾರತಕ್ಕೆ ಬರಿಸ್ತಾ, ಸ್ಟಾರ್ ಬಕ್ಸ್ ಮೊದಲಾದ ದೊಡ್ಡ ದೊಡ್ಡ ಕಾಫಿ ಬ್ರ್ಯಾಂಡ್ ಗಳು ಬಂದಾಗ ಸಿಸಿಡಿ ತೀವ್ರ ಪೈಪೋಟಿ ಎದುರಿಸಿತ್ತು. ಕರ್ನಾಟಕ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಪುತ್ರಿ ಮಾಳವಿಕ ಅವರನ್ನು ವಿವಾಹವಾಗಿದ್ದ ಸಿದ್ದಾರ್ಥ್, ಕಾಫಿ ಉದ್ಯಮ ಮಾತ್ರವಲ್ಲದೆ ಎಸ್ಐಸಿಎಲ್ ಸರಕು ಸಾಗಣೆ ಕಂಪನಿ, ಪೀಠೋಪಕರಣ ತಯಾರಿಕೆಗಾಗಿ ‘ದಿ ಡಾರ್ಕ್ ಫಾರೆಸ್ಟ್’ ಫರ್ನಿಚರ್ ((Daffco), ಕಂಪನಿಯನ್ನೂ ಸ್ಥಾಪಿಸಿದ್ದರು. ►ವಿವಾದಗಳು ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರಿ ಆಡಳಿತ ಕಾರ್ಯಗಳಲ್ಲಿ ಸಿದ್ದಾರ್ಥ್ ಹಸ್ತಕ್ಷೇಪ ಮಾಡುತ್ತಿದ್ದರು, ಅವರು ಸಾವಿರಾರು ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂಬ ದೂರುಗಳೂ ಕೇಳಿ ಬಂದಿತ್ತು . ಕೃಷ್ಣ ಅವರು ಬಿಜೆಪಿಗೆ ಹೋಗಿದ್ದು ಕೂಡಾ ಅಳಿಯನನ್ನು ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ಸಂಕಷ್ಟಗಳಿಂದ ಪಾರು ಮಾಡುವ ಉದ್ದೇಶದಿಂದ ಎಂಬ ವದಂತಿಯೂ ಕೇಳಿಬಂದಿತ್ತು. ಆದರೆ, ಬಿಜೆಪಿ ಆಡಳಿತದ ಅವಧಿಯಲ್ಲೇ ಸಿದ್ಧಾರ್ಥ್ ಅವರ ಕಂಪನಿಗಳ ಮೇಲೆ 2018 ಮತ್ತು 2019ರಲ್ಲಿ ಆದಾಯ ತೆರಿಗೆ ದಾಳಿ ನಡೆದಿತ್ತು. ►ಐಟಿ ಇಲಾಖೆಯಿಂದ ಕಿರುಕುಳ: ಸಿದ್ಧಾರ್ಥ್ ಬರೆದ ಕೊನೇ ಪತ್ರ ಆತ್ಮಹತ್ಯೆಗೆ ಮುನ್ನ ಕಾಫಿ ಡೇ ಆಡಳಿತ ಮಂಡಳಿಗೆ ಸಿದ್ಧಾರ್ಥ್ ಪತ್ರವೊಂದನ್ನು ಬರೆದಿದ್ದರು. ಆ ಪತ್ರದ ಸಾರ ಹೀಗಿದೆ 37 ವರ್ಷಗಳಲ್ಲಿ ಕಠಿಣ ಪರಿಶ್ರಮ, ಬದ್ಧತೆಯೊಂದಿಗೆ, ನಾನು ನಮ್ಮ ಕಂಪನಿಗಳು ಮತ್ತು ಅವುಗಳ ಅಂಗಸಂಸ್ಥೆಗಳಲ್ಲಿ ನೇರವಾಗಿ 30,000 ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ. ಸ್ಥಾಪನೆಯಾದಾಗಿನಿಂದ ನಾನು ದೊಡ್ಡ ಷೇರುದಾರನಾಗಿರುವ ತಂತ್ರಜ್ಞಾನ ಕಂಪನಿಯಲ್ಲಿ ಇನ್ನೂ 20,000 ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ. ನನ್ನ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಸರಿಯಾದ ಲಾಭದಾಯಕ ವ್ಯವಹಾರ ಮಾದರಿಯನ್ನು ರಚಿಸಲು ನಾನು ವಿಫಲನಾಗಿದ್ದೇನೆ. ನಾನು ನನ್ನ ಎಲ್ಲವನ್ನೂ ಕೊಟ್ಟಿದ್ದೇನೆ ಎಂದು ಹೇಳಲು ಬಯಸುತ್ತೇನೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದ ಎಲ್ಲ ಜನರನ್ನು ನಿರಾಸೆಗೊಳಿಸಿದ್ದಕ್ಕೆ ವಿಷಾದವಿದೆ. ನಾನು ಬಹಳ ಸಮಯ ಹೋರಾಡಿದೆ, ಆದರೆ ಇಂದು ನಾನು ಬಿಟ್ಟುಕೊಟ್ಟೆ. ಸಂಸ್ಥೆಯಲ್ಲಿ ಹೂಡಿಕೆ ಮಾಡಿರುವ ಸಹವರ್ತಿಯೊಬ್ಬರು ನಾನು ಷೇರುಗಳನ್ನು (ಬೈಬ್ಯಾಕ್) ಮರುಖರೀದಿ ಮಾಡಬೇಕೆಂದು ತೀವ್ರ ಒತ್ತಡ ಹೇರುತ್ತಿದ್ದಾರೆ. ಆರು ತಿಂಗಳ ಹಿಂದೆ ನನ್ನ ಸ್ನೇಹಿತನಿಂದ ದೊಡ್ಡಮೊತ್ತದ ಹಣ ಪಡೆದು ನಾನು ಈ ವ್ಯವಹಾರ ಮಾಡಿದ್ದೆ. ನನಗೆ ಸಾಲ ಕೊಟ್ಟಿರುವ ಇತರ ಕೆಲವರೂ ಈಗ ತೀವ್ರ ಒತ್ತಡ ಹೇರುತ್ತಿದ್ದಾರೆ. ಹಿಂದಿನ ಆದಾಯ ತೆರಿಗೆ ಮಹಾನಿರ್ದೇಶಕರು ನಮ್ಮ ಮೈಂಡ್ಟ್ರೀ ಒಪ್ಪಂದವನ್ನು ತಡೆಯಲು ಎರಡು ಪ್ರತ್ಯೇಕ ಸಂದರ್ಭಗಳಲ್ಲಿ ನಮ್ಮ ಷೇರುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ , ಪರಿಷ್ಕೃತ ರಿಟರ್ನ್ಗಳನ್ನು ಸಲ್ಲಿಸಿದ್ದರೂ ಕಾಫಿ ಡೇ ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಕಿರುಕುಳ ನೀಡಿದರು. ಇದು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಯಿತು. ಹೊಸ ವ್ಯವಸ್ಥಾಪಕ ಸಮಿತಿಯೊಂದಿಗೆ ಈ ವ್ಯವಹಾರಗಳನ್ನು ನಡೆಸುವುದನ್ನು ಮುಂದುವರಿಸಬೇಕೆಂದು ನಾನು ಪ್ರಾಮಾಣಿಕವಾಗಿ ವಿನಂತಿಸುತ್ತೇನೆ. ಎಲ್ಲಾ ತಪ್ಪುಗಳಿಗೆ ನಾನೊಬ್ಬನೇ ಕಾರಣ. ಪ್ರತಿಯೊಂದು ಹಣಕಾಸಿನ ವಹಿವಾಟಿಗೂ ನಾನೇ ಹೊಣೆಗಾರ. ನನ್ನ ತಂಡ, ಲೆಕ್ಕಪರಿಶೋಧಕರು ಮತ್ತು ಹಿರಿಯ ವ್ಯವಸ್ಥಾಪಕರಿಗೆ ನನ್ನ ವಹಿವಾಟುಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ. ಕಾನೂನು ನನ್ನನ್ನು ಮಾತ್ರ ಹೊಣೆಗಾರರನ್ನಾಗಿ ಮಾಡಬೇಕು, ಏಕೆಂದರೆ ನಾನು ಈ ಮಾಹಿತಿಯನ್ನು ನನ್ನ ಕುಟುಂಬ ಸೇರಿದಂತೆ ಯಾರ ಜತೆಗೂ ಹಂಚಿಕೊಂಡಿಲ್ಲ. ಯಾರಿಗೂ ಮೋಸ ಮಾಡುವುದು ಅಥವಾ ದಾರಿ ತಪ್ಪಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನಾನು ಉದ್ಯಮಿಯಾಗಿ ಸೋತೆ. ಒಂದು ದಿನ ನೀವು ನನ್ನನ್ನು ಅರ್ಥಮಾಡಿಕೊಳ್ಳುವಿರಿ, ಕ್ಷಮಿಸುವಿರಿ ಎಂದು ನಾನು ಭಾವಿಸುತ್ತೇನೆ. ನಾನು ನಮ್ಮ ಆಸ್ತಿಗಳ ಪಟ್ಟಿಯನ್ನು ಮತ್ತು ಪ್ರತಿಯೊಂದರ ತಾತ್ಕಾಲಿಕ ಮೌಲ್ಯವನ್ನು ಲಗತ್ತಿಸಿದ್ದೇನೆ. ನಮ್ಮ ಹೊಣೆಗಳಿಗೆ (ಲಿಯಬಿಲಿಟಿ, ಸಾಲ ಇತ್ಯಾದಿ)ಹೋಲಿಸಿದರೆ ನಮ್ಮ ಸ್ವತ್ತುಗಳ ಮೊತ್ತ ಜಾಸ್ತಿ ಇದೆ. ಇದು ಎಲ್ಲರಿಗೂ ಅವರವರಿಗೆ ಸಲ್ಲಬೇಕಾದ ಹಣ ಮರುಪಾವತಿಸಲು ಸಹಾಯ ಮಾಡುತ್ತದೆ ಸಿದ್ಧಾರ್ಥ ಅವರು 2019 ಜುಲೈ 27, ರಂದು ಸಹಿ ಹಾಕಿದ ಪತ್ರ ಇದಾಗಿದ್ದು. ಆ ಪತ್ರದ ಪ್ರತಿಯನ್ನು ಕಾಫಿ ಡೇ ಶೇರ್ ಮಾಡಿತ್ತು. ►ಆದಾಯ ಇಲಾಖೆಗೆ ಕ್ಲೀನ್ ಚಿಟ್ ಸಿದ್ಧಾರ್ಥ್ ಅವರ ಸಾವಿಗೆ ಆದಾಯ ತೆರಿಗೆ ಇಲಾಖೆಯ ಕಿರುಕುಳ ಕಾರಣ ಎಂದು ಆರೋಪಿಸಲಾಗಿತ್ತು. ಆದರೆ ಸಿಬಿಐನ ಮಾಜಿ ಉಪ ಮಹಾ ನಿರ್ದೇಶಕ ಅಶೋಕ್ ಕುಮಾರ್ ಮಲ್ಹೋತ್ರ ಅವರ ನೇತೃತ್ವದಲ್ಲಿ ನಡೆದ ತನಿಖೆಯು ಆದಾಯ ತೆರಿಗೆ ಇಲಾಖೆಗೆ ಕ್ಲೀನ್ ಚಿಟ್ ನೀಡಿತ್ತು. ಸಿದ್ಧಾರ್ಥ್ ಅವರ ಮಾಲೀಕತ್ವದಲ್ಲಿದ್ದ ಮೈಸೂರು ಅಮಾಲ್ಗಮೇಟೆಡ್ ಕಾಫಿ ಎಸ್ಟೇಟ್ಸ್ ಲಿಮಿಟೆಡ್ ಕಂಪನಿಯು, ಕಾಫಿ ಡೇ ಎಂಟರ್ಪ್ರೈಸಸ್ನ (ಸಿಡಿಇಎಲ್) ಅಂಗಸಂಸ್ಥೆಗಳಿಗೆ ಒಟ್ಟು ₹3,535 ಕೋಟಿ ಬಾಕಿ ಇರಿಸಿಕೊಂಡಿದೆ ಎಂಬುದು ಸಿದ್ಧಾರ್ಥ್ ಅವರ ಆತ್ಮಹತ್ಯೆ ಕುರಿತು ನಡೆದ ತನಿಖೆಯಿಂದ ಬಹಿರಂಗವಾಗಿದೆ. ಎಂಎಸಿಇಎಲ್ ನೀಡಬೇಕಿದ್ದ ಈ ಮೊತ್ತದಲ್ಲಿ ಒಟ್ಟು ರೂ. 842 ಕೋಟಿಯ ಬಗ್ಗೆ ಮಾತ್ರ 2019ರ ಮಾರ್ಚ್ 31ರವರೆಗಿನ ಲೆಕ್ಕಪತ್ರಗಳಲ್ಲಿ ಉಲ್ಲೇಖವಿದೆ ಎಂದು ತನಿಖಾ ತಂಡ ಹೇಳಿದೆ. ಎಂಎಸಿಇಎಲ್ ಎಂಬುದು ಸಿದ್ಧಾರ್ಥ ಅವರ ಖಾಸಗಿ ಕಂಪನಿ. ಸಿಡಿಇಎಲ್ನ ಅಂಗಸಂಸ್ಥೆಗಳು ಎಂಎಸಿಇಎಲ್ಗೆ ಸಾಲ ನೀಡಿದ್ದವು. ಆದಾಯ ತೆರಿಗೆ ಇಲಾಖೆಯ ಕಡೆಯಿಂದ ಉದ್ದೇಶಪೂರ್ವಕವಾಗಿ ಅಥವಾ ಉದ್ದೇಶ ಇಲ್ಲದೆ ಕಿರುಕುಳ ಉಂಟಾಗಿತ್ತು ಎಂದು ಹೇಳಲು ಯಾವುದೇ ದಾಖಲೆ ಇಲ್ಲ ಎಂದು ತನಿಖಾ ತಂಡ ಹೇಳಿತ್ತು.
ಕಾನ್ಫಿಡೆಂಟ್ ಗ್ರೂಪ್ನ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ ಎಸ್ಐಟಿ ರಚನೆ
ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ.ರಾಯ್ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಾಗಿದೆ. ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ವಂಶಿಕೃಷ್ಣ ಹಾಗೂ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ ನೇತೃತ್ವದಲ್ಲಿ ಎಸ್ಐಟಿ ರಚನೆಯಾಗಿದೆ. ತಂಡದಲ್ಲಿ ಯಾರಿದ್ದಾರೆ: ಹೆಚ್ಚುವರಿ ಪೊಲೀಸ್ ಕಮಿಷನರ್ ವಂಶಿಕೃಷ್ಣ (ಪೂರ್ವ ವಿಭಾಗ) ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಾಕೇ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಹಲಸೂರು ಉಪ ವಿಭಾಗದ ಎಸಿಪಿ ಸುಧೀರ್ ಸಿಸಿಆರ್ಬಿ ಎಸಿಪಿ ರಾಮಚಂದ್ರ ಅಶೋಕನಗರ ಇನ್ಸ್ಪೆಕ್ಟರ್ ಕೆ.ಬಿ.ರವಿ
ರಾಯಚೂರು | ಉದ್ಯೋಗ ಖಾತ್ರಿ ಕಾಯ್ದೆ ಬದಲಾವಣೆ ವಾಪಸ್ ಪಡೆಯುವಂತೆ ಆಗ್ರಹಿಸಿ ಸಿಪಿಐ(ಎಂ) ವತಿಯಿಂದ ಪ್ರತಿಭಟನೆ
ರಾಯಚೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಕಾಯ್ದೆಯ ಹಕ್ಕುಸ್ವರೂಪವನ್ನು ತೆಗೆದುಹಾಕಿ, ಅದನ್ನು ಕೇವಲ ಸರ್ಕಾರದ ಅಣತಿಯ ಯೋಜನೆಯಾಗಿ ಬದಲಾಯಿಸಿರುವುದನ್ನು ಖಂಡಿಸಿ, ಹಳೆಯ ಕಾಯ್ದೆಯನ್ನು ಪುನಃ ಜಾರಿಗೊಳಿಸುವಂತೆ ಒತ್ತಾಯಿಸಿ ಸಿ.ಪಿ.ಐ(ಎಂ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, 2004–05ರಲ್ಲಿ ಎಡಪಕ್ಷಗಳ ಬೆಂಬಲದೊಂದಿಗೆ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಉದ್ಯೋಗ ಖಾತ್ರಿ ಕಾಯ್ದೆಯನ್ನು ಜಾರಿಗೊಳಿಸಿತ್ತು. ಈ ಕಾಯ್ದೆಯ ಮೇಲೆ ಗ್ರಾಮೀಣ ಭಾಗದ ಕೃಷಿ ಕೂಲಿಕಾರರು, ಬಡ ರೈತರು ಸೇರಿದಂತೆ ಶೇ.30ಕ್ಕೂ ಹೆಚ್ಚು ಗ್ರಾಮೀಣ ಜನರು ಜೀವನೋಪಾಯಕ್ಕಾಗಿ ಅವಲಂಬಿತರಾಗಿದ್ದರು ಎಂದು ಹೇಳಿದರು. ಆದರೆ, 2025ರಲ್ಲಿ ಕೇಂದ್ರ ಸರ್ಕಾರ ಮನರೇಗಾ ಕಾಯ್ದೆಯ ಹಕ್ಕುಸ್ವರೂಪವನ್ನು ರದ್ದುಗೊಳಿಸಿ ‘ವಿಕಸಿತ ಭಾರತ ರೋಜ್ಗಾರ ಮತ್ತು ಆಜೀವಿಕ ಮಿಷನ್ – ಗ್ರಾಮೀಣ ಖಾತ್ರಿ’ ಎಂಬ ಹೊಸ ಕಾಯ್ದೆಯನ್ನು ಜಾರಿಗೊಳಿಸಿದೆ, ಇದು ಕೂಲಿಕಾರರ ಹಕ್ಕುಗಳನ್ನು ಕಸಿದುಕೊಳ್ಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೊಸ ಕಾಯ್ದೆಯಿಂದ 125 ದಿನಗಳ ಉದ್ಯೋಗ ಖಾತರಿ ಇಲ್ಲದಂತಾಗಿದ್ದು, 60 ದಿನಗಳ ಕೃಷಿ ಕೆಲಸದ ನಿರ್ಬಂಧದಿಂದ ಅನೇಕ ಕೂಲಿಕಾರರು ಕೆಲಸದಿಂದ ವಂಚಿತರಾಗುತ್ತಾರೆ. ಕೇಂದ್ರ ಸರ್ಕಾರ ಶೇ.60 ಮತ್ತು ರಾಜ್ಯ ಸರ್ಕಾರ ಶೇ.40ರಷ್ಟು ವೆಚ್ಚ ಭರಿಸಬೇಕೆಂಬ ನಿಯಮದಿಂದ ಹಣ ಬಿಡುಗಡೆ ವಿಷಯದಲ್ಲಿ ಕೇಂದ್ರ–ರಾಜ್ಯ ಸರ್ಕಾರಗಳ ನಡುವೆ ಹೊಣೆಗಾರಿಕೆ ತಳ್ಳಾಟ ನಡೆಯುವ ಸಾಧ್ಯತೆ ಇದ್ದು, ಇದರಿಂದ ಕೂಲಿಕಾರರಿಗೆ ಕೂಲಿ ಸಿಗದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಪಿಸಿದರು. ಇದೇ ವೇಳೆ, ಕೇಂದ್ರ ಸರ್ಕಾರದ ಅನುಮೋದನೆ ಪಡೆದ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಮಾತ್ರ ಉದ್ಯೋಗ ಖಾತರಿ ಜಾರಿಗೊಳಿಸುವ ನಿಯಮ ಕೂಲಿಕಾರರ ಹಕ್ಕುಗಳನ್ನು ಕುಗ್ಗಿಸುತ್ತದೆ. ಕೂಲಿ ದರವನ್ನು ದಿನೇ ದಿನೇ ಏರುತ್ತಿರುವ ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸುವ ಅವಕಾಶವನ್ನೂ ಹೊಸ ಕಾಯ್ದೆ ತಳ್ಳಿಹಾಕುತ್ತಿದೆ. ಇದರಿಂದ ಕೂಲಿಕಾರರು ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಆದ್ದರಿಂದ 2025ರ ಹೊಸ ಕಾಯ್ದೆಯನ್ನು ಹಿಂಪಡೆದು, 2005ರ ಮನರೇಗಾ ಕಾಯ್ದೆಯನ್ನು ಯಥಾವತ್ತಾಗಿ ಮುಂದುವರೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವಿರೇಶ, ಜಿಲ್ಲಾ ಸಮಿತಿ ಸದಸ್ಯರಾದ ಹೆಚ್. ಪದ್ಮಾ, ಶ್ರೀಧರ, ಡಿ.ಎಸ್. ಶರಣಬಸವ, ಹೆಚ್. ಶರ್ಪುದ್ದೀನ್, ಹನುಮಂತ ಮಟಮಾರಿ, ಸತ್ಯಪ್ಪ, ವರಲಕ್ಷ್ಮೀ, ಮಹಾದೇವಿ, ಸುಜಾತ, ನರಸಮ್ಮ, ಸರೋಮ್ಮ, ರಂಗಮ್ಮ, ಮಹಾಂತಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟ್ರಂಪ್ ಇಸ್ರೇಲ್ನ ಹಿಡಿತದಲ್ಲಿದ್ದಾರೆ: ಎಪ್ಸ್ಟೀನ್ ಕಡತದಲ್ಲಿ ಅಮೆರಿಕ ಅಧ್ಯಕ್ಷರ ಕುರಿತು ಮಹತ್ವದ ವಿಚಾರ ಉಲ್ಲೇಖ
ಹೊಸದಿಲ್ಲಿ: ಎಪ್ಸ್ಟೀನ್ ಫೈಲ್ಸ್ ಎಂದೇ ಹೆಸರಾಗಿರುವ ಅಮೆರಿಕದ ಕುಖ್ಯಾತ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ಗೆ ಸಂಬಂಧಿಸಿದ ಮೂರು ಲಕ್ಷಕ್ಕೂ ಅಧಿಕ ಪುಟಗಳು, 2,000ಕ್ಕೂ ಅಧಿಕ ವೀಡಿಯೊಗಳು ಮತ್ತು ಸುಮಾರು 18,000 ಚಿತ್ರಗಳನ್ನು ಅಮೆರಿಕದ ನ್ಯಾಯ ಇಲಾಖೆಯು ಬಹಿರಂಗಗೊಳಿಸಿದ್ದು, ಇವು ಹೊಸ ಆರೋಪಗಳನ್ನು ಹುಟ್ಟುಹಾಕಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ನ ಹಿಡಿತದಲ್ಲಿದ್ದಾರೆ ಎಂದು ‘ವಿಶ್ವಾಸಾರ್ಹ’ ಗೌಪ್ಯ ಮೂಲವನ್ನು ಉಲ್ಲೇಖಿಸಿರುವ ಎಫ್ಬಿಐ ವರದಿ ಇವುಗಳಲ್ಲಿ ಸೇರಿದೆ. ಟ್ರಂಪ್ ಅವರ ಅಳಿಯ ಜಾರೆಡ್ ಕುಷ್ನರ್ ಅವರು ಅಧ್ಯಕ್ಷರಾಗಿ ಟ್ರಂಪ್ ಮೊದಲ ಅಧಿಕಾರಾವಧಿಯಲ್ಲಿ ಆಡಳಿತದ ಮೇಲೆ ಅತಿಯಾದ ಪ್ರಭಾವವನ್ನು ಹೊಂದಿದ್ದರು ಎಂದು ವರದಿಯು ಆರೋಪಿಸಿದೆ. ಕುಷ್ನರ್ ಕುಟುಂಬವು ಭ್ರಷ್ಟಾಚಾರ, ರಶ್ಯನ್ ಹಣದ ಹರಿವುಗಳು ಮತ್ತು ಅಲ್ಟ್ರಾ-ಝಿಯೋನಿಸ್ಟ್ ಚಾಬಾದ್ ಜಾಲದೊಂದಿಗೆ ಸಂಪರ್ಕಗಳನ್ನು ಹೊಂದಿತ್ತು ಎಂದು ಈ ಸ್ಫೋಟಕ ದಾಖಲೆಗಳು ಆರೋಪಿಸಿವೆ. ಕುಷ್ನರ್ ಕುಟುಂಬದ ಇತಿಹಾಸದ ಮೇಲೂ ಬೆಳಕು ಚೆಲ್ಲಿರುವ ವರದಿಯು, ಅವರ ತಂದೆ ಈ ಹಿಂದೆ ಹಣಕಾಸು ಆರೋಪಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದರು, ಆದರೆ ನಂತರ ಟ್ರಂಪ್ ಅವರಿಂದ ಅಧ್ಯಕ್ಷೀಯ ಕ್ಷಮಾದಾನವನ್ನು ಪಡೆದಿದ್ದರು ಎಂದು ಬೆಟ್ಟು ಮಾಡಿದೆ. ಕುಷ್ನರ್ ಗಣನೀಯ ರಷ್ಯನ್ ಹೂಡಿಕೆಯನ್ನು ಬೇರೆಡೆಗೆ ವರ್ಗಾಯಿಸಿದ್ದರು ಮತ್ತು ರಷ್ಯನ್ ಸರಕಾರದೊಂದಿಗೆ ಸಂಬಂಧಿಸಿದ ಸಂಸ್ಥೆಗಳೊಂದಿಗೆ ತನ್ನ ಹಿತಾಸಕ್ತಿಗಳನ್ನು ಸೂಕ್ತವಾಗಿ ಬಹಿರಂಗಗೊಳಿಸಿರಲಿಲ್ಲ. ರಿಯಲ್ ಎಸ್ಟೇಟ್ ಹೂಡಿಕೆ ವೇದಿಕೆ ಕೇಡರ್ನಲ್ಲಿ ಕುಷ್ನರ್ ಅವರು ಪಾಲನ್ನು ಹೊಂದಿರುವುದು ಕಳವಳಕಾರಿ ಅಂಶ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದ್ದು,ರಷ್ಯದ ಹಣವನ್ನು ಮಧ್ಯವರ್ತಿಗಳ ಮೂಲಕ ಅಮೆರಿಕದ ಯೋಜನೆಗಳಿಗೆ ಹರಿಸಲಾಗಿತ್ತೇ ಎಂದು ಮೂಲವು ಪ್ರಶ್ನಿಸಿದೆ. ಜೊತೆಗೆ ಎಫ್ಬಿಐ ವರದಿಯು ಟ್ರಂಪ್ ಅವರ ರಿಯಲ್ ಎಸ್ಟೇಟ್ ವ್ಯವಹಾರಗಳ ಕುರಿತ ಹಿಂದಿನ ವರದಿಗಳನ್ನೂ ಉಲ್ಲೇಖಿಸಿದೆ. ಇವುಗಳಲ್ಲಿ ಟ್ರಂಪ್ 14 ಮಿಲಿಯನ್ ಡಾಲರ್ಗಳಿಗೆ ಆಸ್ತಿಯೊಂದನ್ನು ಖರೀದಿಸಿ ಬಳಿಕ ಅದನ್ನು ವಿದೇಶಿ ಸಂಪರ್ಕಗಳನ್ನು ಹೊಂದಿದ್ದ ಶೆಲ್ ಕಂಪನಿಯೊಂದಕ್ಕೆ 95 ಮಿಲಿಯನ್ ಡಾಲರ್ಗಳಿಗೆ ಮಾರಾಟ ಮಾಡಿದ್ದ ವಿವಾದಾತ್ಮಕ ಬೆವರ್ಲಿ ಹಿಲ್ಸ್ ಮ್ಯಾನ್ಶನ್ ವಹಿವಾಟು ಸೇರಿದೆ. ಈ ವಹಿವಾಟು ವಿಲಕ್ಷಣತೆಗಳು ಮತ್ತು ಎಚ್ಚರಿಕೆಯ ಸಂಕೇತಗಳನ್ನು ಒಳಗೊಂಡಿದ್ದು, ಅಪಾರದರ್ಶಕ ಹಣಕಾಸು ವಹಿವಾಟುಗಳ ವಿಶಾಲ ಮಾದರಿಯ ಭಾಗವಾಗಿ ಪರಿಶೀಲನೆಯನ್ನು ಅಗತ್ಯವಾಗಿಸಿದೆ ಎಂದು ಗುಪ್ತ ಮಾನವ ಮೂಲವನ್ನು ಉಲ್ಲೇಖಿಸಿ ವರದಿಯು ಪ್ರತಿಪಾದಿಸಿದೆ. ವರದಿಯು ಜೆಫ್ರಿ ಎಪ್ಸ್ಟೀನ್ ಪರ ವಕೀಲ ಅಲನ್ ಡೆರ್ಶೊವಿಝ್ ಅವರನ್ನೂ ಹೆಸರಿಸಿದೆ. ಡೆರ್ಶೊವಿಝ್ ಮೊಸಾದ್(ಇಸ್ರೇಲಿ ಗುಪ್ತಚರ ಸಂಸ್ಥೆ) ಜೊತೆಗೆ ಗುರುತಿಸಿಕೊಂಡಿದ್ದು,ಇಸ್ರೇಲಿ ಗುಪ್ತಚರ ಉದ್ದೇಶಗಳಿಗಾಗಿ ಶ್ರೀಮಂತ ಮತ್ತು ರಾಜಕೀಯ ಸಂಪರ್ಕ ಹೊಂದಿದ್ದ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ಪ್ರತಿಷ್ಠಿತ ಸಂಸ್ಥೆಗಳಲ್ಲಿ ತನ್ನ ಪ್ರಭಾವವನ್ನು ಬಳಸಿದ್ದರು ಎಂದು ಗುಪ್ತ ಮೂಲ ಎಫ್ಬಿಐಗೆ ತಿಳಿಸಿದ್ದನ್ನು ವರದಿಯು ಉಲ್ಲೇಖಿಸಿದೆ. 2019ರಲ್ಲಿ ಜೈಲಿನಲ್ಲಿಯೇ ಮೃತಪಟ್ಟ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ನನ್ನೂ ಆತ ಜಾಗತಿಕ ರಾಜಕೀಯ ಮತ್ತು ಹಣಕಾಸು ಜಾಲಗಳೊಂದಿಗೆ ಹೊಂದಿದ್ದ ಸಂಪರ್ಕಗಳಿಂದಾಗಿ ಇದೇ ರೀತಿ ಬಳಸಿಕೊಳ್ಳಲಾಗಿತ್ತು ಎಂಬ ವ್ಯಾಪಕ ಶಂಕೆಯಿದೆ ಎಂದೂ ಮೂಲವು ತಿಳಿಸಿದೆ. ತಮ್ಮ ನಡುವಿನ ಸಂಬಂಧ ಹದಗೆಡುವ ಮುನ್ನ 1990ರ ದಶಕ ಮತ್ತು 2000ರ ದಶಕದ ಆರಂಭದಲ್ಲಿ ಎಪ್ಸ್ಟೀನ್ ಜೊತೆ ಉತ್ತಮ ಸ್ನೇಹವನ್ನು ಹೊಂದಿದ್ದ ಟ್ರಂಪ್ ವಿರುದ್ಧ ಎಪ್ಸೀನ್ ಅಪರಾಧಗಳಿಗೆ ಸಂಬಂಧಿಸಿದಂತೆ ಎಂದಿಗೂ ಔಪಚಾರಿಕವಾಗಿ ಆರೋಪವನ್ನು ಹೊರಿಸಲಾಗಿಲ್ಲ. ಎಪ್ಸ್ಟೀನ್ನ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ತನಗೆ ಯಾವುದೇ ಮಾಹಿತಿಯಿಲ್ಲ ಎಂದು ಟ್ರಂಪ್ ಪದೆ ಪದೇ ಹೇಳಿಕೊಂಡಿದ್ದಾರೆ.
ಬೆಂಗಳೂರು ಸಮೀಪದ ಪ್ರಮುಖ ಟೋಲ್ ಪ್ಲಾಜಾ ಶುಲ್ಕ ಸಂಗ್ರಹ ನಿಯಮಬಾಹಿರ! ಉಚಿತ ಪಾಸ್ ನೀಡಲು ಕರ್ನಾಟಕ ಹೈಕೋರ್ಟ್ ಆದೇಶ
ಬೆಂಗಳೂರಿನ ಕನಕಪುರ ರಸ್ತೆಯ ಸೋಮನಹಳ್ಳಿ ಗೇಟ್ ಬಳಿ ಟೋಲ್ ಸಂಗ್ರಹ ನಿಯಮಬಾಹಿರ ಎಂದು ಹೈಕೋರ್ಟ್ ಆದೇಶಿಸಿದೆ. ರಾಷ್ಟ್ರೀಯ ಹೆದ್ದಾರಿ ನಿಯಮ ಉಲ್ಲಂಘನೆಯಾಗಿದೆ. ಒಂದು ತಿಂಗಳೊಳಗೆ ಸ್ಥಳೀಯ ನಿವಾಸಿಗಳಿಗೆ ಉಚಿತ ಪಾಸ್ ನೀಡಲು ನಿರ್ದೇಶನ ನೀಡಿದೆ. ನಿಯಮ ಪಾಲಿಸದಿದ್ದರೆ ಟೋಲ್ ಪ್ಲಾಜಾ ಸ್ಥಳಾಂತರಿಸಲು ಸೂಚಿಸಿದೆ. ಸರ್ವೀಸ್ ರಸ್ತೆ ಒದಗಿಸದೆ ಟೋಲ್ ಸಂಗ್ರಹಿಸುವುದು ಅಸಮಂಜಸ ಎಂದಿದೆ.
ಶ್ರೇಯಸ್ ಗೋಪಾಲ್ ಸಾಹಸಕ್ಕೆ ಪಂಜಾಬ್ ಕಂಗಾಲು; ಆದ್ರೂ ಪಂದ್ಯ ಗೆದ್ದರಷ್ಟೇ ರಣಜಿಯಲ್ಲಿ ಕರ್ನಾಟಕಕ್ಕೆ ಉಳಿಗಾಲ!
Karnataka Vs Punjab Ranji Match- ಗೆಲ್ಲಲೇಬೇಕಾಗಿರುವ ರಣಜಿ ಟ್ರೋಫಿಯ ಗುಂಪು ಹಂತದ ಕೊನೇ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಪ್ರಥಮ ಇನ್ನಿಂಗ್ಸ್ ಮುನ್ನಡೆ ಗಳಿಸುವಲ್ಲಿ ಯಶಸ್ವಿಯಾಗಿರುವ ಕರ್ನಾಟಕ ತಂಡ ಇದೀಗ ಜಯದತ್ತ ದೃಷ್ಟಿ ನೆಟ್ಟಿದೆ. 3ನೇ ದಿನಾಂತ್ಯಕ್ಕೆ 2ನೇ ಇನ್ನಿಂಗ್ಸ್ ಆಡುತ್ತಿದ್ದ ಪಂಜಾಬ್ ಒಟ್ಟಾರೆ 112 ರನ್ ಮುನ್ನಡೆಯಲ್ಲಿದ್ದು ಕೈಯಲ್ಲಿನ್ನೂ 7 ವಿಕೆಟ್ ಉಳಿದಿದೆ. ನಾಕೌಟ್ ಹಂತಕ್ಕೆ ಏರಬೇಕಾದರೆ ಕರ್ನಾಟಕ ಈ ಪಂದ್ಯವನ್ನು ಗೆಲ್ಲಲೇಬೇಕಾಗಿರುವುದರಿಂದ ಡ್ರಾ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ನಾಲ್ಕನೇ ಮತ್ತು ಅಂತಿಮ ದಿನದ ಆಟ ಕುತೂಹಲ ಕೆರಳಿಸಿದೆ.
Kuknoor | ಬನ್ನಿಕೊಪ್ಪದಲ್ಲಿ ನಿವೇಶನಗಳ ಹಂಚಿಕೆ : 122 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ
ಕುಕನೂರು : ತಾಲೂಕಿನ ಬನ್ನಿಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಜೀವಗಾಂಧಿ ವಸತಿ ನಿಗಮದ ನಿವೇಶನಗಳ ಹಂಚಿಕೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ ವೆಂಕಟಾಪುರ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ವೀರಪ್ಪ ಗೊಂದಿ, ವಿಜಯಲಕ್ಷ್ಮಿ ಯರಾಶಿ, ಮಹೇಶ್ ತಳವಾರ, ಜುನಾಭಿ ವಾಲಿಕಾರ್, ಲಲಿತಮ್ಮ ಹರಿಜನ, ಶಾಂತಮ್ಮ ಆಲೂರ, ಊರಿನ ಹಿರಿಯರು, ಮುಖಂಡರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿ ನಿವೇಶನಗಳನ್ನು ಅಳತೆ ಮಾಡಿ, ಕಲ್ಲು ಹಾಕಿ, ನಂಬರ್ ಮಾರ್ಕಿಂಗ್ ಮಾಡಿ ನಿವೇಶನರಹಿತ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಯಿತು. ನಿವೇಶನ ಪಡೆದ ಫಲಾನುಭವಿಗಳು ಆದಷ್ಟು ಬೇಗ ಮ್ಯೂಟೇಶನ್ ಮಾಡಿಕೊಂಡು 9/11 ದಾಖಲಾತಿ ಪಡೆಯಬೇಕು ಎಂದು ಸಲಹೆ ನೀಡಿದರು. ರಾಜೀವಗಾಂಧಿ ವಸತಿ ನಿಗಮದಡಿ ಮಂಜೂರಾದ ಒಟ್ಟು 144 ನಿವೇಶನಗಳಲ್ಲಿ 122 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಉಳಿದ 20 ನಿವೇಶನಗಳನ್ನು ಟರಾವು ಮಾಡಲಾಗಿದ್ದು, ಇನ್ನೂ ಎರಡು ನಿವೇಶನಗಳನ್ನು ಕಾಯ್ದಿರಿಸಲಾಗಿದೆ. ನಿವೇಶನ ಬಡಾವಣೆಯಲ್ಲಿ ಸಿಸಿ ರಸ್ತೆ, ಚರಂಡಿ, ವಿದ್ಯುತ್ ಕಂಬಗಳು ಹಾಗೂ ನಳದ ನೀರಿನ ವ್ಯವಸ್ಥೆ ಕಲ್ಪಿಸುವ ಕುರಿತು ಶಾಸಕರಿಗೆ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲೇ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗುವುದಾಗಿ ಭರವಸೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಫಲಾನುಭವಿ ಸುರೇಶ್ ನಾಯಕ ಮಾತನಾಡಿ, ಈ ನಿವೇಶನಗಳು ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದವು. ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ ವೆಂಕಟಾಪುರ ಅವರ ಪ್ರಯತ್ನದಿಂದ ಬಡವರಿಗೆ ನಿವೇಶನಗಳ ಹಂಚಿಕೆ ಸಾಧ್ಯವಾಗಿದೆ. ಸಿಸಿ ರಸ್ತೆ, ಚರಂಡಿ ಹಾಗೂ ಮನೆಗಳ ಮಂಜೂರಾತಿಯಿಂದ ಈ ಭಾಗದ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಲಾವಣ್ಯ ಬಲ್ಲಾಳ್ ಜೈನ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ; ಆದೇಶ
ಬೆಂಗಳೂರು : ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ 'ರಾಜ್ಯ ಸಚಿವರ' ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
Kalaburagi | ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ
ಕಲಬುರಗಿ : ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಹಂಗನಹಳ್ಳಿ ಗ್ರಾಮದ ನಿವಾಸಿ ಬಸವರಾಜ ತಳವಾರ (35) ಎಂದು ಗುರುತಿಸಲಾಗಿದೆ. ಆಸ್ತಿ ಹಂಚಿಕೆ ವಿಚಾರದಲ್ಲಿ ಬಸವರಾಜ ಹಾಗೂ ಆತನ ಸಹೋದರ ಸಂಬಂಧಿ ಘೂಳೇಶ ನಡುವೆ ಕೆಲಕಾಲದಿಂದ ಮನಸ್ತಾಪವಿತ್ತು ಎನ್ನಲಾಗಿದೆ. ಶುಕ್ರವಾರ ರಾತ್ರಿ ಇದೇ ವಿಷಯಕ್ಕೆ ಸಂಬಂಧಿಸಿ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಘೂಳೇಶ ಚಾಕುವಿನಿಂದ ಬಸವರಾಜನಿಗೆ ಮನಬಂದಂತೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಸವರಾಜ ಸ್ಥಳದಲ್ಲೇ ಮೃತಪಟ್ಟಿದ್ದು, ಕೃತ್ಯ ಎಸಗಿದ ಆರೋಪಿ ಘೂಳೇಶ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಸಂಗಮನಾಥ ಹಿರೇಮಠ ಹಾಗೂ ಸಿಪಿಐ ಮಹಾದೇವ ದಿಡ್ಡಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಳಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೋಡಿಬೆಂಗ್ರೆ ಪ್ರವಾಸಿ ದೋಣಿ ದುರಂತ ಪ್ರಕರಣ: ದೋಣಿ ಮಾಲಕ ಸಹಿತ ಮೂವರ ಬಂಧನ
ಉಡುಪಿ: ಕೋಡಿಬೆಂಗ್ರೆ ಅಳಿವೆಬಾಗಿಲಿನಲ್ಲಿ ಆರು ದಿನಗಳ ಹಿಂದೆ ಸಂಭವಿಸಿದ ಪ್ರವಾಸಿ ದೋಣಿ ದುರಂತಕ್ಕೆ ಸಂಬಂಧಿಸಿ ದೋಣಿ ಮಾಲಕ ಸಹಿತ ಮೂವರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕೋಡಿಬೇಂಗ್ರೆಯ ನಿವಾಸಿಗಳಾದ ಸುಹಾಸ್ ಶ್ರೀಯಾನ್ (23), ಸುಫಿಯಾನ್ (20), ವಾಸು ಮೆಂಡನ್(52) ಬಂಧಿತ ಆರೋಪಿಗಳು. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎಲ್ಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜ.26ರಂದು ಆರೋಪಿ ಸುಹಾಸ್ ಮೈಸೂರಿನಿಂದ ಬಂದ 29 ಮಂದಿ ಪ್ರವಾಸಿಗರನ್ನು ಎರಡು ದೋಣಿಗಳಲ್ಲಿ ಸಮುದ್ರ ವಿಹಾರಕ್ಕೆ ಕಳುಹಿಸಿದ್ದನು. ಇದರಲ್ಲಿ ಒಂದು ದೋಣಿಯು ಅದರ ಚಾಲಕರಾದ ಸೂಫಿಯಾನ ಮತ್ತು ವಾಸು ಎಂಬವರ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಕೋಡಿಬೇಂಗ್ರೆ ಅಳಿವೆಬಾಗಿಲಿನ ಸ್ವರ್ಣ ನದಿಯಲ್ಲಿ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ದೋಣಿಯಲ್ಲಿದ್ದ ಇಬ್ಬರು ಯುವತಿಯರು ಸಹಿತ ಮೂವರು ಮೃತಪಟ್ಟು, ಉಳಿದ 11 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೋಟಿಗೆ ಅನುಮತಿ ಇಲ್ಲ: ಈ ಬಗ್ಗೆ ತನಿಖೆ ನಡೆಸಿದಾಗ ಬೋಟ್ ವಿಹಾರಕ್ಕೆ ಆರೋಪಿಗಳು ಪ್ರವಾಸೋದ್ಯಮ ಇಲಾಖೆಯಿಂದ ಯಾವುದೇ ಪರವಾನಿಗೆಯನ್ನು ಪಡೆಯದೇ ಇರುವುದು ಕಂಡುಬಂದಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಅಲ್ಲದೇ ಈ ಘಟನೆಗೆ ಕಾರಣವಾದ ಬೋಟ್ ಪ್ರವಾಸೋದ್ಯಮದಲ್ಲಿ ಪ್ರವಾಸಿಗರ ವಿಹಾರಕ್ಕೆ ಸೂಕ್ತವಾಗಿದೆ ಎಂಬ ಬಗ್ಗೆ ಯಾವುದೇ ಧೃಢೀಕೃರಣ ಪತ್ರವನ್ನು ಹೊಂದದೇ ಇರುವುದು ಕಂಡುಬಂದಿದೆ. ಈ ಬೋಟ್ ಪ್ರವಾಸಿಗರ ವಿಹಾರಕ್ಕೆ ಸೂಕ್ತವಾಗಿರುವ ಬೋಟ್ ಕೂಡ ಅಲ್ಲವೆಂದು ತನಿಖೆಯಿಂದ ತಿಳಿದುಬಂದಿದೆ. ಅಲ್ಲದೆ ಬೋಟ್ನಲ್ಲಿ ಪ್ರವಾಸಿಗರನ್ನು ಕರೆದು ಕೊಂಡು ಹೋಗುವಾಗ ಲೈಫ್ ಜಾಕೆಟ್ನಂತಹ ಯಾವುದೇ ಮಂಜಾಗ್ರತಾ ಕ್ರಮಗಳನ್ನು ಅನುಸರಿಸದೇ ಇರುವುದು ಕೂಡ ತನಿಖೆಯಲ್ಲಿ ಕಂಡು ಬಂದಿದೆ ಎಂದು ಅವರು ತಿಳಿಸಿದ್ದಾರೆ. ಈ ಘಟನೆ ನಡೆದ ಸ್ಥಳವು ಕೋಟ ಠಾಣೆ ವ್ಯಾಪ್ತಿಗೆ ಬರುವುದರಿಂದ ಈ ಪ್ರಕರಣವನ್ನು ಮಲ್ಪೆ ಠಾಣೆಯಿಂದ ಕೋಟ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅದರಂತೆ ಕೋಟ ಠಾಣೆಯಲ್ಲಿ ಈ ಘಟನೆಯು ಆರೋಪಿಗಳ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ನಡೆದಿರುವುದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಲಬುರಗಿ | ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ ಆತ್ಮಹತ್ಯೆ
ಕಲಬುರಗಿ : ಕಲಬುರಗಿ ನಗರದ ಹೊರವಲಯದ ಅಷ್ಟಗಾ ಗ್ರಾಮದ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಪತ್ರಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದ ಮೂಲ ನಿವಾಸಿ, ಸದ್ಯ ಕಲಬುರಗಿ ನಗರದ ಬಸ್ ಡಿಪೊ–2ರ ಸಮೀಪ ವಾಸಿಸುತ್ತಿದ್ದ ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ (52) ಎಂದು ಗುರುತಿಸಲಾಗಿದೆ. ಪ್ರಭುಲಿಂಗ ನೀಲೂರೆ ಅವರು ವಿಜಯ ಕರ್ನಾಟಕ ಪತ್ರಿಕೆಯ ಕಲಬುರಗಿ ಸ್ಥಾನಿಕ ಕಚೇರಿಯಲ್ಲಿ ಮುಖ್ಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಅಪಾರ ಆಸಕ್ತಿ ಹೊಂದಿದ್ದ ಅವರು, ಅನೇಕ ಕೃತಿಗಳನ್ನು ರಚಿಸಿ ಹೆಸರು ಗಳಿಸಿದ್ದರು. ಎರಡು ವರ್ಷಗಳ ಹಿಂದೆ ನಡೆದಿದ್ದ ಆಳಂದ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದರು. ಮೃತರು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತ ಪತ್ರಕರ್ತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಪ್ರಭುಲಿಂಗ ನೀಲೂರೆ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಿರಿಯ ಪತ್ರಕರ್ತರು, ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಮೈಸೂರಿನಲ್ಲಿ ಕ್ಲೀನಿಂಗ್ ಕೆಮಿಕಲ್ ಘಟಕದ ಹೆಸರಲ್ಲಿ ಡ್ರಗ್ಸ್ ಲ್ಯಾಬ್ ಪತ್ತೆ: 10 ಕೋಟಿ ರೂ. ಮೌಲ್ಯದ ಮಾದಕ ವಶ
ಮೈಸೂರು: ಕ್ಲೀನಿಂಗ್ ಕೆಮಿಕಲ್ ತಯಾರಿಕಾ ಘಟಕದ ನೆಪದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೂರ್ಣ ಪ್ರಮಾಣದ ಅಕ್ರಮ ಮಾದಕ ವಸ್ತು ತಯಾರಿಕಾ ಲ್ಯಾಬೊರೇಟರಿಯನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಮೈಸೂರಿನಲ್ಲಿ ಪತ್ತೆಹಚ್ಚಿದೆ. ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಉತ್ಪಾದನಾ ಘಟಕದಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಬಳಸಿ, ಸಿಂಥೆಟಿಕ್ ಡ್ರಗ್ಸ್ ತಯಾರಿಸಲಾಗುತ್ತಿತ್ತು ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್ನ ಸೂರತ್ನಲ್ಲಿ ಸುಳಿವು ಈ
CJ Roy Car Collection: ಸಿಜೆ ರಾಯ್ ಕಾರುಗಳ ಕಲೆಕ್ಸನ್ ಹಾಗೂ ಅವುಗಳ ಬೆಲೆ ಕೇಳಿದ್ರೆ ದಂಗಾಗೋದು ಗ್ಯಾರಂಟಿ
CJ Roy Car Collection: ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ. ರಾಯ್ ಅವರು ಭಾರತದ ಅಗ್ರ ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಪ್ರಮುಖ ವ್ಯಕ್ತಿ. ಸಾಮಾನ್ಯ ಹಿನ್ನೆಲೆಯಿಂದ ಬಂದು ಉದ್ಯಮ ಜೀವನವನ್ನು ಆರಂಭಿಸಿದ ಅವರು, ಮೊದಲಿಗೆ ಮಾರುತಿ 800 ಕಾರಿನಿಂದಲೇ ತಮ್ಮ ಪ್ರಯಾಣ ಆರಂಭಿಸಿದ್ದರು. ಹಾಗಾದ್ರೆ ಇವರ ಬಳಿ ಯಾವೆಲ್ಲಾ ಕಾರುಗಳ ಕಲೆಕ್ಷನ್ ಇದೆ ಎನ್ನುವ
ವಾಡಿ | ಹೊಲಿಗೆ ಯಂತ್ರಗಳು ನೀಡುವಲ್ಲಿ ತಾರತಮ್ಯ ಆರೋಪ :ಎಸಿಸಿ ಕಂಪನಿ ವಿರುದ್ಧ ಮಹಿಳೆಯರಿಂದ ಪ್ರತಿಭಟನೆ
ವಾಡಿ: ಇಂಗಳಗಿ ಗ್ರಾಮದಲ್ಲಿ ಮಹಿಳೆಯರಿಗೆ ಗಾರ್ಮೆಂಟ್ಸ್ ಉದ್ಯೋಗ ಆರಂಭಿಸಲು ಎಸಿಸಿ ಸಿಮೆಂಟ್ ಕಂಪನಿ (ಅದಾನಿ ಗ್ರೂಪ್)ನ ಸಕ್ಷಮ ಸ್ಕಿಲ್ ಡೆವೆಲಪ್ಮೆಂಟ್ ವತಿಯಿಂದ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ ಎಂಬ ಕಂಪನಿ ಅಧಿಕಾರಿಗಳ ಸುಳ್ಳು ಹೇಳಿಕೆಯನ್ನು ಖಂಡಿಸಿ, ಕಂಪನಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನೂರಾರು ಮಹಿಳೆಯರು ಇಂಗಳಗಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು. ಇಂಗಳಗಿ ಗ್ರಾಮದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಮಾತೋಶ್ರಿ ರಾಮಾಬಾಯಿ ಅಂಬೇಡ್ಕರ್ ಮಹಿಳಾ ಒಕ್ಕೂಟಕ್ಕೆ 10 ಹೊಲಿಗೆ ಯಂತ್ರಗಳನ್ನು ನೀಡಲಾಗಿದೆ ಎಂದು ಎಸಿಸಿ ಅದಾನಿ ಕಂಪನಿಯ ಸಿಎಸ್ಆರ್ ವಿಭಾಗದ ಮುಖ್ಯಸ್ಥ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ. ಆದರೆ ಈ ಕುರಿತು ಒಕ್ಕೂಟದ ಸದಸ್ಯರನ್ನು ಪ್ರಶ್ನಿಸಿದಾಗ, ಯಾವುದೇ ಅಧಿಕೃತ ಮಾಹಿತಿ ಅಥವಾ ಯಂತ್ರಗಳ ವಿತರಣೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಂಪನಿಯು ಮಹಿಳಾ ಒಕ್ಕೂಟಕ್ಕೆ ಸಂಬಂಧಿಸದ ಕೆಲ ಸಂಘಗಳಿಗೆ ಹೊಲಿಗೆ ಯಂತ್ರಗಳನ್ನು ನೀಡಿ, ಮಹಿಳೆಯರ ನಡುವೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಇಂಗಳಗಿ ಗ್ರಾಮ ಅಭಿವೃದ್ಧಿ ಹೋರಾಟ ಸಮಿತಿಯ ಗೌರವಾಧ್ಯಕ್ಷ ಡಾ. ಸಾಯಬಣ್ಣಾ ಗುಡುಬಾ ಆರೋಪಿಸಿದರು. ಇಂಗಳಗಿ ಗ್ರಾಮದಲ್ಲಿನ ಮಾತೋಶ್ರಿ ರಾಮಾಬಾಯಿ ಅಂಬೇಡ್ಕರ್ ಮಹಿಳಾ ಒಕ್ಕೂಟದಲ್ಲಿ ಸುಮಾರು 35 ಮಹಿಳಾ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಎಸಿಸಿ ಅದಾನಿ ಕಂಪನಿ ಈ ಸಂಘಗಳ ಮಹಿಳೆಯರೊಂದಿಗೆ ಯಾವುದೇ ಸಭೆ ನಡೆಸಿಲ್ಲ. ಗಾರ್ಮೆಂಟ್ಸ್ ಉದ್ಯೋಗ ಆರಂಭಿಸುವ ಕುರಿತು ಒಕ್ಕೂಟದ ಸದಸ್ಯರಿಗೆ ಯಾವುದೇ ಮಾಹಿತಿ ನೀಡಿಲ್ಲ, ಸಂಘಕ್ಕೆ ಸಂಬಂಧವಿಲ್ಲದವರ ಮಾತು ಕೇಳಿ ತಮಗೆ ಬೇಕಾದ ಸಂಘಕ್ಕೆ ಮಾತ್ರ ಉದ್ಯೋಗದ ಜವಾಬ್ದಾರಿ ನೀಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲವು ಆಯ್ದ ಮಹಿಳೆಯರಿಗೆ ಮಾತ್ರ ಅವಕಾಶ ದೊರೆಯುತ್ತಿದ್ದು, ಉಳಿದ ಮಹಿಳೆಯರನ್ನು ಉದ್ಯೋಗ ಅವಕಾಶದಿಂದ ವಂಚಿಸಲಾಗುತ್ತಿದೆ ಎಂದು ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಶಿಲ್ಲಾ ತೆಳಗೆರಿ ಹಾಗೂ ಖಜಾಂಚಿ ಗಿಡ್ಡಮ್ಮ ಪವಾರ್ ಆರೋಪಿಸಿದರು. ಪ್ರತಿಭಟನೆಯಲ್ಲಿ ಶಿಲ್ಪಾ ತೆಳಗೆರಿ, ನಾಗಮ್ಮ ಪೂಜಾರಿ, ಮಲ್ಲಮ್ಮ ನಾಲವಾರ, ಯಲ್ಲಮ್ಮ ಕಟ್ಟಿಮನಿ, ಹೇಮಾ ಚನ್ನಗುಂಡ, ಮಮತಾ ನಾಟೀಕಾರ, ಸುನೀತಾ ಮುತ್ತಿಗಿ, ರಿಜವಾನಾ ಬೇಗಂ, ಸುನೀತಾ ಪವಾರ್, ಸೋನಾ ಪವಾರ್, ಜೀವಮ್ಮ ತೆಳಗೆರಿ ಸೇರಿದಂತೆ ಅನೇಕ ಮಹಿಳೆಯರು ಭಾಗವಹಿಸಿದ್ದರು. ಪಂಚಾಯತ್ ಕಾರ್ಯದರ್ಶಿ ಸಂಗಮೇಶ ಹೀರೆಮಠ ಅವರು ಮಹಿಳೆಯರ ಮನವಿ ಪತ್ರವನ್ನು ಸ್ವೀಕರಿಸಿ, ಕಂಪನಿಗೆ ಪತ್ರ ಬರೆದು ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಜಗತ್ತಿನ ಎಲ್ಲೆಡೆ ಗಾಂಧಿ ಜೀವಂತ: ಪ್ರೊ.ವರದೇಶ್ ಹಿರೇಗಂಗೆ
ಕುಂದಾಪುರ, ಜ.31: ಗಾಂಧಿ ಸಂದೇಶಗಳಾದ ಸ್ವಾತಂತ್ರ್ಯ, ಸಮಾನತೆ ಭ್ರಾತೃತ್ವ ಇಂದು ವಿಶ್ವದ ಹಲವು ದೇಶಗಳ ಸಂವಿಧಾನದಲ್ಲಿ ಅವಕಾಶ ಪಡೆದಿದ್ದು ಅಲ್ಲೆಲ್ಲ ಕಡೆ ಗಾಂಧಿ ಜೀವಂತವಾಗಿದ್ದಾರೆ. ಸತ್ಯ, ವಿವೇಕಕ್ಕೆ ಶಕ್ತಿ ಇದೆ. ಅದಕ್ಕೆ ಅಳಿವಿಲ್ಲ ಎಂದು ಮಣಿಪಾಲ ಗಾಂಧಿ ಕೇಂದ್ರದ ಸ್ಥಾಪಕ ನಿರ್ದೇಶಕ ಪ್ರೊ.ವರದೇಶ್ ಹಿರೇಗಂಗೆ ಅಭಿಪ್ರಾಯಪಟ್ಟಿದ್ದಾರೆ. ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಗಾಂಧಿ ಹುತಾತ್ಮರಾದ ದಿನದ ಪ್ರಯುಕ್ತ ಶುಕ್ರವಾರ ಸಂಜೆ ನಡೆದ ’ಮಹಾತ್ಮ ಹುತಾತ್ಮ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಗಾಂಧಿ ಒಬ್ಬ ಸನಾತನವಾದಿ ಹಿಂದೂ ಆಗಿದ್ದರು. ಎಲ್ಲಾ ಮತಗಳನ್ನು ಗೌರವಿಸುವ ತಾತ್ವಿಕತೆ ಹೊಂದಿರುವ ಹಿಂದೂ ಆಗಿದ್ದರು. ನನ್ನ ಧರ್ಮವೇ ಶ್ರೇಷ್ಠ ಎನ್ನುವುದು ಇದಕ್ಕೆ ವಿರುದ್ಧವಾಗಿದೆ. ಅಮೆರಿಕದ ಟ್ರಂಪ್ ಮಾದರಿ ಅಭಿವೃದ್ಧಿ ಇಂದು ನಮ್ಮ ದೇಶದಲ್ಲಿ ಅನುಸರಿಸಲಾಗುತ್ತಿದೆ. ಪರಿಸರ ನಾಶ ಸಂಪನ್ಮೂಲ ಲೂಟಿ ಖಾಸಗಿಕರಣದ ಅಭಿವೃದ್ಧಿ ಕೆಲವರ ಅಭಿವೃದ್ಧಿಯಾಗಿದೆ ಎಂದು ಅವರು ಆರೋಪಿಸಿದರು. 1949ರಲ್ಲಿ ಗಾಂಧೀಜಿಯ ಹತ್ಯೆ ನಡೆದಿದ್ದು ಇಂದಿಗೂ ಕೂಡ ಅವರ ಸಿದ್ಧಾಂತದ ಹತ್ಯೆ ನಡೆಯುತ್ತಲೇ ಇದೆ. ಗಾಂಧೀಜಿಗೆ ಇತರ ಸಿದ್ಧಾಂತದ ಬಗ್ಗೆ ಭಿನ್ನಾಭಿಪ್ರಾಯ ಇದ್ದರು ಎಂದಿಗೂ ದ್ವೇಷ ಇರಲಿಲ್ಲ. ಗಾಂಧಿ ಹತ್ಯೆಗೆ ದ್ವೇಷ ಕಾರಣವಾದರೂ ಎಂದಿಗೂ ಪ್ರೀತಿ, ಶಾಂತಿ ಸಹಬಾಳ್ವೆ ಗೆಲ್ಲುತ್ತದೆ. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹೆಸರು ಬದಲಿಸಿ ವಿಬಿಜಿ ರಾಮ್ ಜಿ ಯೋಜನೆ ಮೂಲಕ ಉದ್ಯೋಗ ನಿರಾಕರಣೆ ಯಾರೂ ಕೂಡ ಒಪ್ಪಲಾರದ್ದಾ ಗಿದೆ. ಇಂದಿನ ಭಾರತದ ಅಭಿವೃದ್ಧಿ ವಿನಾಶಕಾರಿ ಅಭಿವೃದ್ಧಿ ಯಾಗಿದೆ. ಈ ಅಭಿವೃದ್ಧಿ ಪ್ರಶ್ನಾರ್ಹವಾಗಿದೆ ಎಂದರು. ಕುಂದಾಪುರದ ಪ್ರಗತಿಪರ ಚಿಂತಕ ಪ್ರೊ.ಹಯವದನ ಮೂಡುಸಗ್ರಿ ಮಾತನಾಡಿದರು. ಭಾರತ ಜ್ಞಾನ ವಿಜ್ಞಾನ ಸಮಿತಿ ಕುಂದಾಪುರ ಘಟಕದ ಆಶಾ ಕರ್ವಾಲೋ ತಂಡದವರು ಸೌಹಾರ್ದ ಗೀತೆಗಳನ್ನು ಪ್ರಸ್ತುತ ಪಡಿಸಿದರು.
Bidar | ಪೇಂಟಿಂಗ್ನಲ್ಲಿ ಬಳಸುವ ಕೆಮಿಕಲ್ನಿಂದಾಗಿ ಸ್ಪೋಟ ಸಂಭವಿಸಿದೆ : ಎಸ್ಪಿ ಪ್ರದೀಪ್ ಗುಂಟಿ
ಬೀದರ್ : ಹುಮನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಪೇಂಟಿಂಗ್ನಲ್ಲಿ ಶೈನಿಂಗ್ಗಾಗಿ ಬಳಸುವ ಕೆಮಿಕಲ್ ತುಂಬಿದ್ದ ಬ್ಯಾರೆಲ್ ಅನ್ನು ಅಲುಗಾಡಿಸುವ ವೇಳೆ ಸ್ಫೋಟ ಸಂಭವಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಿಗ್ಗೆ 8.30ರ ಸುಮಾರಿಗೆ ಸ್ಫೋಟ ಸಂಭವಿಸಿದ ಬಗ್ಗೆ ಮಾಹಿತಿ ಲಭಿಸಿತು. ಬ್ಯಾರೆಲ್ನಲ್ಲಿ ಕೆಮಿಕಲ್ ಇರುವ ಪೇಂಟ್ ಹಾಕಿ ಅಲುಗಾಡಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಅವರು ತಿಳಿಸಿದರು. ಈ ಸ್ಫೋಟದಲ್ಲಿ ಒಟ್ಟು 8 ಮಂದಿ ಗಾಯಗೊಂಡಿದ್ದು, ಅವರಲ್ಲಿ 6 ಮಕ್ಕಳು ಮತ್ತು 2 ವಯಸ್ಕರು ಸೇರಿದ್ದಾರೆ. ಮಕ್ಕಳಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ವಯಸ್ಕರನ್ನು ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್ ಹಾಗೂ ಸೊಲ್ಲಾಪುರಕ್ಕೆ ರವಾನಿಸಲಾಗಿದೆ ಎಂದು ಎಸ್ಪಿ ವಿವರಿಸಿದರು. ಘಟನಾ ಸ್ಥಳಕ್ಕೆ ಪೊಲೀಸ್ ಹಾಗೂ ಫಾರೆನ್ಸಿಕ್ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿವೆ. ಪ್ರಾಥಮಿಕ ಮಾಹಿತಿ ಪ್ರಕಾರ, ಗ್ರಾಮದಲ್ಲಿ ಕೆಲವರು ಪೇಂಟಿಂಗ್ ಹಾಗೂ ಫೈಬರ್ ಡೋಸ್ ಸಂಬಂಧಿತ ಕೆಲಸಗಳನ್ನು ಮಾಡುತ್ತಿದ್ದು, ಮನೆಗಳಲ್ಲಿ ಪೇಂಟ್ ರೆಸಿಡ್ಯೂ ಹಾಗೂ ವಿವಿಧ ಕೆಮಿಕಲ್ಸ್ ಸಂಗ್ರಹಿಸಿದ್ದನ್ನು ಪತ್ತೆ ಹಚ್ಚಲಾಗಿದೆ. ಅವಧಿ ಮೀರಿದ ಕೆಮಿಕಲ್ಗಳನ್ನು ಸಂಗ್ರಹಿಸಿದ್ದರಿಂದ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಫಾರೆನ್ಸಿಕ್ ತಂಡವು ಶಂಕೆ ವ್ಯಕ್ತಪಡಿಸಿದೆ. ಈ ಸ್ಫೋಟಕ್ಕೆ ಕೆಮಿಕಲ್ಗಳೇ ಕಾರಣ ಎಂಬುದು ಪ್ರಾಥಮಿಕವಾಗಿ ತಿಳಿದು ಬಂದಿದ್ದು, ಘಟನೆಯ ಕುರಿತು ಇನ್ನೂ ತನಿಖೆ ಮುಂದುವರಿದಿದೆ. ಸಂಪೂರ್ಣ ತನಿಖಾ ವರದಿ ಮುಂದಿನ ದಿನಗಳಲ್ಲಿ ಲಭ್ಯವಾಗಲಿದೆ ಎಂದು ಎಸ್ಪಿ ಪ್ರದೀಪ್ ಗುಂಟಿ ಹೇಳಿದರು.
Afzalpur | ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಅರುಣಕುಮಾರ್ ಪಾಟೀಲ್
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
1,051 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ : ಜಿಲ್ಲೆಯ ಪ್ರತಿ ಹಳ್ಳಿಗೂ ಹಾಗೂ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದರ ಜೊತೆಗೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಗ್ಯಾರಂಟಿ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ . ಜಿಲ್ಲೆಯಲ್ಲಿ ವಿವಿಧ ತಾಲೂಕುಗಳಲ್ಲಿ 1,051.5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಕಾಮಗಾರಿಗಳು ನಡೆಯುತ್ತಿವೆ ಎಂದರು. ಅಫಜಲಪುರ ತಾಲ್ಲೂಕಿನಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಹಸರಗುಂಡಗಿ ಹಾಗೂ ಇತರೆ 6 ಗ್ರಾಮಗಳು ಮತ್ತು ಮಾರ್ಗ ಮಧ್ಯದ 5 ಗ್ರಾಮಗಳಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಸೇಡಂ ತಾಲ್ಲೂಕಿನಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಕಚೂರು ಗ್ರಾಮ ಹಾಗೂ ಇತರೆ 9 ಗ್ರಾಮಗಳಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಚಿಂಚೋಳಿ ತಾಲ್ಲೂಕಿನಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಸಲಗರ ಬಸಂತಪುರ ಹಾಗೂ ಇತರೆ 9 ಗ್ರಾಮಗಳಲ್ಲಿ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು. 260 ಕೋಟಿ ರೂ. ವೆಚ್ಚದಲ್ಲಿ ಕಾಳಗಿ, ಚಿತ್ತಾಪುರ, ಚಿಂಚೋಳಿ ಹಾಗೂ ಕಲಬುರಗಿ ತಾಲ್ಲೂಕುಗಳಲ್ಲಿ ಡಿಬಿಒಟಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಇದರಡಿ ಬೆಡಸೂರು ಹಾಗೂ ಇತರೆ 95 ಜನವಸತಿ ಪ್ರದೇಶಗಳು ಮತ್ತು ಕಾಳಗಿ ಪಟ್ಟಣದಲ್ಲಿ ಕಾಮಗಾರಿಗಳು ಸಾಗುತ್ತಿವೆ. 185 ಕೋಟಿ ರೂ. ವೆಚ್ಚದಲ್ಲಿ ಚಿತ್ತಾಪುರ ತಾಲ್ಲೂಕಿನ ಸನ್ನತಿ ಹಾಗೂ ಇತರೆ 75 ಜನವಸತಿ ಪ್ರದೇಶಗಳು, ಕಲಬುರಗಿ ತಾಲ್ಲೂಕಿನ ಕುಸ್ನೂರು ಹಾಗೂ ಇತರೆ ಗ್ರಾಮಗಳಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದರು. ಆಳಂದ ತಾಲ್ಲೂಕಿನಲ್ಲಿ 36 ಕೋಟಿ ರೂ. ವೆಚ್ಚದಲ್ಲಿ ಕೊರಳ್ಳಿ ಹಾಗೂ ಇತರೆ 4 ಗ್ರಾಮಗಳ 9 ಜನವಸತಿ ಪ್ರದೇಶಗಳು ಮತ್ತು ಮಾರ್ಗ ಮಧ್ಯದ 5 ಜನವಸತಿಗಳಲ್ಲಿ ಕಾಮಗಾರಿಗಳು ನಡೆಯುತ್ತಿವೆ. 85 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ತಾಲ್ಲೂಕಿನ ಫರಹತಾಬಾದ್ ಹಾಗೂ ಇತರೆ 8 ಗ್ರಾಮಗಳ 22 ಜನವಸತಿ ಪ್ರದೇಶಗಳಲ್ಲಿ ಯೋಜನೆಗಳು ಪ್ರಗತಿಯಲ್ಲಿವೆ. 265 ಕೋಟಿ ರೂ. ವೆಚ್ಚದಲ್ಲಿ ಜೇವರ್ಗಿ ತಾಲ್ಲೂಕಿನ 22 ಗ್ರಾಮಗಳ 33 ಜನವಸತಿಗಳು ಮತ್ತು ಯಡ್ರಾಮಿ ತಾಲ್ಲೂಕಿನ ಆಲೂರು ಸೇರಿದಂತೆ ಇತರೆ 58 ಗ್ರಾಮಗಳ 66 ಜನವಸತಿ ಪ್ರದೇಶಗಳಲ್ಲಿ ಕಾಮಗಾರಿಗಳು ನಡೆಯುತ್ತಿವೆ. 27 ಕೋಟಿ ರೂ. ವೆಚ್ಚದಲ್ಲಿ ಜೇವರ್ಗಿ ತಾಲ್ಲೂಕಿನ ಕೂಡಿ ಹಾಗೂ ಇತರೆ 11 ಗ್ರಾಮಗಳಲ್ಲಿ ಯೋಜನೆ ಕಾರ್ಯಗತಗೊಳ್ಳುತ್ತಿದೆ ಎಂದು ವಿವರಿಸಿದರು. ಇನ್ನೂ 71.5 ಕೋಟಿ ರೂ. ವೆಚ್ಚದಲ್ಲಿ ಆಳಂದ ಹಾಗೂ ಕಮಲಾಪುರ ತಾಲ್ಲೂಕಿನ ವಿಕೆ ಸಲಗರ್ ಸೇರಿದಂತೆ 16 ಗ್ರಾಮಗಳ 23 ಜನವಸತಿ ಪ್ರದೇಶಗಳಲ್ಲಿ ಹಾಗೂ 79 ಕೋಟಿ ರೂ. ವೆಚ್ಚದಲ್ಲಿ ಜೇವರ್ಗಿ ತಾಲ್ಲೂಕಿನ ಯಾಳವಾರ ಹಾಗೂ ಇತರೆ 20 ಗ್ರಾಮಗಳ 24 ಜನವಸತಿ ಪ್ರದೇಶಗಳಲ್ಲಿ ಕಾಮಗಾರಿಗಳು ಪ್ರಗತಿಯ ಹಂತದಲ್ಲಿವೆ ಎಂದರು. ಈ ಎಲ್ಲಾ ಯೋಜನೆಗಳಿಗೆ ಈಗಾಗಲೇ ಒಟ್ಟು 887.81 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಭವಿಷ್ಯದಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮ ಕೈಗೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.
ಸರಕಾರಿ ಕಾರ್ಯಕ್ರಮಗಳಲ್ಲಿ ನಂದಿನಿ ತಿನಿಸುಗಳ ಬಳಕೆಗೆ ಸಿಎಂ ನಿರ್ದೇಶನ
ಬೆಂಗಳೂರು : ರಾಜ್ಯಾದ್ಯಂತ ಸರಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಸುವಂತೆ ಹಾಗೂ ರಾಜ್ಯ ಸರಕಾರದ ಎಲ್ಲ ಕಾರ್ಯಕ್ರಮಗಳು, ಕಚೇರಿಗಳ ಸಭೆಗಳಲ್ಲಿ ಕೆಎಂಎಫ್ನ ‘ನಂದಿನಿ’ ತಿನಿಸುಗಳನ್ನು ಬಳಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ಶನಿವಾರ ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಕಾರ್ಯದರ್ಶಿ ಮೂಲಕ ಸರಕಾರದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದಶಿಗಳು, ವಿಧಾನಸಭೆ ಹಾಗೂ ಪರಿಷತ್ತಿನ ಕಾರ್ಯದರ್ಶಿಗಳು, ಕೆಪಿಎಸ್ಸಿ ಕಾರ್ಯದರ್ಶಿ, ದಿಲ್ಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಎಲ್ಲ ವಿವಿಗಳ ಕುಲಸಚಿವರು, ಎಲ್ಲ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಒಗಳು, ಇಲಾಖಾ ಮುಖ್ಯಸ್ಥರಿಗೆ ಸುತ್ತೋಲೆ ಮೂಲಕ ತಿಳಿಸಲಾಗಿದೆ.

19 C