2026ರ ಟಿ-20 ವಿಶ್ವಕಪ್ ಟೂರ್ನಿ: ಟಿಕೆಟ್ ಗಳ ಮಾರಾಟ ಆರಂಭಿಸಿದ ICC; ಟಿಕೆಟ್ ಬೆಲೆ ಎಷ್ಟು ಗೊತ್ತಾ?
ಹೊಸದಿಲ್ಲಿ, ಡಿ.11: ಮುಂದಿನ ವರ್ಷ ನಡೆಯಲಿರುವ ಪುರುಷರ ಟಿ-20 ವಿಶ್ವಕಪ್ ಟೂರ್ನಿಗಾಗಿ ಟಿಕೆಟ್ ಗಳ ಮಾರಾಟ ಆರಂಭವಾಗಿದೆ ಎಂದು ಅಂತರ್ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ಗುರುವಾರ ಪ್ರಕಟಿಸಿದೆ. ಪಂದ್ಯಾವಳಿಗೆ ಹೆಚ್ಚಿನ ಜನರು ಆಗಮಿಸುವಂತಾಗಲು ಆರಂಭಿಕ ಹಂತದ ಟಿಕೆಟ್ ದರವನ್ನು ಕಡಿಮೆಗೊಳಿಸಲಾಗಿದೆ. ಟಿಕೆಟ್ ಮಾರಾಟವು ಗುರುವಾರ ಸಂಜೆ 6:45ರಿಂದ ಆರಂಭವಾಗಿದೆ. ಟಿಕೆಟ್ ದರಗಳು ಭಾರತದಲ್ಲಿ 100 ರೂ. ಹಾಗೂ ಶ್ರೀಲಂಕಾದಲ್ಲಿ 1,000 ಎಲ್ಕೆಆರ್ನಿಂದ ಆರಂಭವಾಗಲಿದೆ ಎಂದು ಐಸಿಸಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. 10ನೇ ಆವೃತ್ತಿಯ ಟಿ-20 ಪಂದ್ಯಾವಳಿಯು ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7ರಿಂದ ಮಾರ್ಚ್ 8ರ ತನಕ ಎಂಟು ತಾಣಗಳಲ್ಲಿ ನಡೆಯಲಿದೆ. ಕೊಲಂಬೊದಲ್ಲಿ ಫೆಬ್ರವರಿ 7ರಂದು ನೆದರ್ಲ್ಯಾಂಡ್ಸ್ ಹಾಗೂ ಪಾಕಿಸ್ತಾನ ತಂಡಗಳು ಸ್ಪರ್ಧಾವಳಿಯ ಆರಂಭಿಕ ಪಂದ್ಯವನ್ನು ಆಡಲಿವೆ. ಆ ನಂತರ ಬಾಂಗ್ಲಾದೇಶ ತಂಡವು ಕೋಲ್ಕತಾದಲ್ಲಿ ವೆಸ್ಟ್ಇಂಡೀಸ್ ವಿರುದ್ಧ ಹಾಗೂ ಸಹ ಆತಿಥ್ಯವಹಿಸಿರುವ ಭಾರತ ತಂಡವು ಅಮೆರಿಕ ಕ್ರಿಕೆಟ್ ತಂಡವನ್ನು ಮುಂಬೈನಲ್ಲಿ ಮುಖಾಮುಖಿಯಾಗಲಿದೆ. ಅಮೆರಿಕ ಹಾಗೂ ವೆಸ್ಟ್ಇಂಡೀಸ್ ನಲ್ಲಿ 2024ರಲ್ಲಿ ನಡೆದಿದ್ದ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವ ಭಾರತ ತಂಡವು ಸದ್ಯ ಹಾಲಿ ಚಾಂಪಿಯನ್ ಆಗಿದೆ. ‘‘ಟಿಕೆಟ್ ಮಾರಾಟದ ಮೊದಲ ಹಂತವು ಒಂದು ಪ್ರಮುಖ ಮೈಲಿಗಲ್ಲು. ಮೊದಲ ಹಂತದ ಟಿಕೆಟ್ ಬೆಲೆಗಳನ್ನು ಕಡಿಮೆ ಮಾಡಿದ್ದೇವೆ. 100 ರೂ. ಹಾಗೂ 1,000 ಎಲ್ಕೆಆರ್ನಿಂದ ಟಿಕೆಟ್ ದರ ಆರಂಭವಾಗಲಿದೆ. 2 ಮಿಲಿಯನ್ಗಿಂತಲೂ ಹೆಚ್ಚು ಟಿಕೆಟ್ಗಳು ಲಭ್ಯವಿದೆ. ಪ್ರೇಕ್ಷಕರಿಗೆ ಕ್ರೀಡಾಂಗಣದೊಳಗಿನ ಅನುಭವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದೇವೆ. 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಗಾಗಿ ನಮ್ಮ ದೃಷ್ಟಿಕೋನ ಸ್ಪಷ್ಟವಾಗಿದೆ’’ ಎಂದು ಐಸಿಸಿ ಸಿಇಒ ಸಂಜೋಗ್ ಗುಪ್ತಾ ತಿಳಿಸಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ 20 ತಂಡಗಳು ಭಾಗವಹಿಸಲಿದ್ದು, 55 ಪಂದ್ಯಗಳು ನಡೆಯಲಿದೆ. ಗ್ರೂಪ್ ಹಂತದ ಪಂದ್ಯಗಳ ಮೂಲಕ ಟೂರ್ನಿಯು ಆರಂಭವಾಗಲಿದೆ. ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ, ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣ, ಹೊಸದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂ. ಮುಂಬೈನ ವಾಂಖೆಡೆ ಸ್ಟೇಡಿಯಂ, ಕೋಲ್ಕತಾದ ಈಡನ್ ಗಾರ್ಡನ್ಸ್, ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂ, ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಗ್ರೌಂಡ್ ಹಾಗೂ ಕ್ಯಾಂಡಿಯ ಪಲ್ಲೆಕೆಲೆ ಇಂಟರ್ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂಗಳಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿವೆ.
ಬೆಂಗಳೂರಿನಿಂದ ಮತ್ತೆ 60 ವಿಮಾನಗಳ ಹಾರಾಟ ರದ್ದುಪಡಿಸಿದ ಇಂಡಿಗೊ
ಹೊಸದಿಲ್ಲಿ,ಡಿ.11: ಇಂಡಿಗೊ ವಿಮಾನ ಪ್ರಯಾಣಿಕರ ಗೋಳಾಟ ಮುಂದುವರಿದಿದ್ದು, ಗುರುವಾರ ಬೆಂಗಳೂರು ವಿಮಾನನಿಲ್ದಾಣದಲ್ಲಿ 60 ವಿಮಾನಗಳ ಹಾರಾಟವನ್ನು ಇಂಡಿಗೊ ವಾಯುಯಾನ ಸಂಸ್ಥೆ ರದ್ದುಗೊಳಿಸಿದೆ. ನೂತನ ಪೈಲಟ್ ಹಾಗೂ ಇತರ ಸಿಬ್ಬಂದಿಯ ಕರ್ತವ್ಯದ ನಿಯಮಾವಳಿಗಳ ಅನುಷ್ಠಾನಕ್ಕೆ ತರುವಲ್ಲಿ ವೈಫಲ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ವ್ಯಾಪಕವಾಗಿ ಇಂಡಿಗೋ ಸಂಸ್ಥೆಯ ವಿಮಾನಗಳ ಸೇವೆಯಲ್ಲಿ ಅಡಚರಣೆ ಉಂಟಾಗಿದೆ. ನಾಗರಿಕ ವಾಯುಯಾನ ಮಹಾನಿರ್ದೇಶನಾಲಯ(ಡಿಜಿಸಿಎ)ವು ಗುರುವಾರ 1950 ವಿಮಾನಗಳ ಹಾರಾಟವನ್ನು ಪರಿಶೀಲನೆಗೊಳಿಪಡಿಸಿದರೂ, ಈ ವಿಮಾನಗಳ ಹಾರಾಟ ರದ್ದುಗೊಂಡಿದೆ. ಇಂಡಿಗೊ ವಾಯುಯಾನ ಸಂಸ್ಥೆಯು 60 ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ. ಬೆಂಗಳೂರಿನ ಆಗಮಿಸುವ 32 ವಿಮಾನಗಳು ಹಾಗೂ ನಿರ್ಗಮಿಸುವ 28 ವಿಮಾನಯಾನಗಳನ್ನು ರದ್ದುಪಡಿಸಲಾಗಿದೆ. ಈ ಮಧ್ಯೆ, ಇತ್ತೀಚೆಗೆ ವಿಮಾನಗಳ ನಿರ್ವಹಣೆಯಲ್ಲಿ ಉಂಟಾಗಿರುವ ಇಂಡಿಗೊ ಸಂಸ್ಥೆಯ ಸಿಇಓ ಪೀಟರ್ ಎಲ್ಬರ್ಸ್ ಅವರಿಗೆ ದತ್ತಾಂಶ ಸೇರಿದಂತೆ ಸಮಗ್ರ ವರದಿಯೊಂದನ್ನು ಸಲ್ಲಿಸುವಂತೆ ಹಾಗೂ ಗುರುವಾರ ಸಂಜೆ 3 ಗಂಟೆಯ ಒಳಗೆ ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಗುರುವಾರದಂದು ತನ್ನ 1950 ವಿಮಾನಗಳು ಕಾರ್ಯನಿರ್ವಹಿಸುವುದನ್ನು ನಿರೀಕ್ಷಿಸುವುದಾಗಿ ಇಂಡಿಗೋ ಸಂಸ್ಥೆ ಹೇಳಿಕೆಯೊಂದರಲ್ಲಿ ತಿಳಿಸಿತ್ತು. ಪ್ರಸಕ್ತ ಇಂಡಿಗೋ ಏರ್ಲೈನ್ಸ್ ದಿನಂಪ್ರತಿ, ಹಾಲಿ ಚಳಿಗಾಲದಲ್ಲಿ 2200 ವಿಮಾನಯಾನಗಳನ್ನು ನಿರ್ವಹಿಸಬೇಕಾಗಿತ್ತು. ಆದರೆ ಆ ಸಂಸ್ಥೆಯ ಕಾರ್ಯನಿರ್ವಹಣೆಯನ್ನು ಸುಸ್ಥಿರಗೊಳಿಸಲು ಹಾಗೂ ವಿಮಾನಯಾನಗಳ ರದ್ದತಿಯನ್ನು ಕನಿಷ್ಠಗೊಳಿಸುವುದಕ್ಕಾಗಿ ವಿಮಾನಹಾರಾಟವನ್ನು ಸರಕಾರವು ಶೇ.10ರಷ್ಟು ಕಡಿಮೆಗೊಳಿಸಿದೆ. ಬುಧವಾರದಂದು ಇಂಡಿಗೋ ದಿಲ್ಲಿ, ಬೆಂಗಳೂರು ಹಾಗೂ ಮುಂಬೈ ವಿಮಾನನಿಲ್ದಾಣಗಳಿಂದ 220 ವಿಮಾನಯಾನಗಳ ಹಾರಾಟವನ್ನು ರದ್ದುಪಡಿಸಿತ್ತು ದಿಲ್ಲಿಯಲ್ಲಿ ಅತ್ಯಧಿಕ 137 ವಿಮಾನಗಳ ಹಾರಾಟವು ರದ್ದುಗೊಂಡಿದ್ದವು.
ಮಂಗಳೂರು | ಹಣ ಹೂಡಿಕೆ ಹೆಸರಿನಲ್ಲಿ ವಂಚನೆ: ಪ್ರಕರಣ ದಾಖಲು
ಮಂಗಳೂರು,ಡಿ.11: ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ವ್ಯಕ್ತಿ ಹೇಳಿದ್ದನ್ನು ನಂಬಿ ತಾನು 7.37 ಲಕ್ಷ ರೂ. ಕಳೆದುಕೊಂಡಿರುವುದಾಗಿ ವಂಚನೆಗೊಳಗಾದವರು ಸೆನ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. 2023ರಲ್ಲಿ ಇನ್ಸ್ಟಾಗ್ರಾಂ ಮೂಲಕ ಮುಹಮ್ಮದ್ ಫೈಝಾನ್ ಎಂಬಾತನ ಪರಿಚಯವಾಗಿತ್ತು. ಆತ ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ 2-3 ವರ್ಷದಲ್ಲಿ ಹೂಡಿಕೆ ಮಾಡಿದ ಹಣದೊಂದಿಗೆ ಹೆಚ್ಚಿನ ಲಾಭಾಂಶ ನೀಡುವುದಾಗಿ ತಿಳಿಸಿದ್ದ. ಅದನ್ನು ನಂಬಿ ತಾನು ಮತ್ತು ತನ್ನ ತಂದೆಯ ಖಾತೆಯಿಂದ 2023ರ ಮಾ.3ರಿಂದ ಮೇ 15ರವರೆಗೆ ಹಂತ ಹಂತವಾಗಿ 5.30 ಲಕ್ಷ ರೂ. ವರ್ಗಾಯಿಸಿದ್ದೆವು. ಬಳಿಕ ತನ್ನ ಸ್ನೇಹಿತ ಕೂಡಾ 2023ರ ಫೆ.15ರಿಂದ 19ರವರೆಗೆ 2.07 ಲಕ್ಷ ರೂ. ವರ್ಗಾಯಿಸಿದ್ದ. 2026ಕ್ಕೆ ಹೂಡಿಕೆ ಮಾಡಿದ ಹಣದ ಮೆಚ್ಯೂರಿಟಿ ಹತ್ತಿರವಾಗುತ್ತಿರವ ಹಿನ್ನೆಲೆಯಲ್ಲಿ ಫೈಝಾನ್ ಗೆ ಕರೆ ಮಾಡಿದಾಗ ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇನ್ಸ್ಟಾಗ್ರಾಂ ಖಾತೆಯೂ ಬ್ಲಾಕ್ ಆಗಿರುವ ಕಾರಣ ಆತ ವಂಚಿಸಿರುವ ಬಗ್ಗೆ ಸಂಶಯವಾಗಿದೆ ಎಂದು ತಿಳಿಸಿದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
Pakistan | ISI ಮಾಜಿ ಮುಖ್ಯಸ್ಥ ಹಮೀದ್ ಗೆ 14 ವರ್ಷ ಜೈಲು ಶಿಕ್ಷೆ
ಇಸ್ಲಾಮಾಬಾದ್, ಡಿ.11: ಪಾಕಿಸ್ತಾನದ ಇಂಟರ್- ಸರ್ವಿಸಸ್ ಇಂಟೆಲಿಜೆನ್ಸ್(ಐಎಸ್ಐ) ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಗೆ ಗುರುವಾರ ಮಿಲಿಟರಿ ನ್ಯಾಯಾಲಯ 14 ವರ್ಷ ಜೈಲುಶಿಕ್ಷೆ ವಿಧಿಸಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿರುವುದು ಮತ್ತು ಅಧಿಕೃತ ರಹಸ್ಯ ಕಾಯ್ದೆಯ ಉಲ್ಲಂಘನೆ ಸೇರಿದಂತೆ ಹಲವು ಆರೋಪಗಳಲ್ಲಿ ಹಮೀದ್ ಗೆ ಶಿಕ್ಷೆ ವಿಧಿಸಿರುವುದಾಗಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ನ ಹೇಳಿಕೆ ತಿಳಿಸಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಿಕಟ ವಲಯದಲ್ಲಿ ಗುರುತಿಸಿಕೊಂಡಿದ್ದ ಹಮೀದ್ರನ್ನು ಕಳೆದ ವರ್ಷ `ಟಾಪ್ ಸಿಟಿ ಯೋಜನೆ'ಯ ಹಗರಣಕ್ಕೆ ಸಂಬಂಧಿಸಿ ಬಂಧಿಸಲಾಗಿತ್ತು. 2019ರಲ್ಲಿ ಆಸಿಮ್ ಮುನೀರ್ ರನ್ನು (ಪ್ರಸ್ತುತ ಪಾಕ್ ಸೇನಾ ಮುಖ್ಯಸ್ಥ) ಪದಚ್ಯುತಗೊಳಿಸಿ ಹಮೀದ್ರನ್ನು ನೇಮಕಗೊಳಿಸಿದ್ದು ಅವರು 2021ರವರೆಗೆ ಕಾರ್ಯ ನಿರ್ವಹಿಸಿದ್ದರು.
ಕೇವಲ ₹20 ಕೊಟ್ಟರೆ ನಿಮ್ಮ ಕುಟುಂಬಕ್ಕೆ ₹2 ಲಕ್ಷ ಭದ್ರತೆ – PMSBY ಯೋಜನೆಯ ಸಂಪೂರ್ಣ ವಿವರ.
ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರ ಮಹತ್ವದ ಯೋಜನೆಯೊಂದನ್ನು(PMSBY – Pradhan Mantri Suraksha Bima Yojana) ಜಾರಿ ಮಾಡಿ ಹಲವು ದಿನಗಳಾಗಿದೆ. ಅಪಘಾತ ವಿಮೆಗಾಗಿ ಕೇಂದ್ರ ಸರಕಾರ ಎರಡು ಲಕ್ಷದ ವರೆಗೆ ವಿಮೆ ಪ್ರಯೋಜನ ನೀಡುತ್ತಿದೆ. ಬ್ಯಾಂಕ್ ಖಾತೆ ಹೊಂದಿರುವ ಪ್ರತಿಯೊಬ್ಬ ನಾಗರಿಕರೂ ಈ ಸೌಲಭ್ಯವನ್ನು ಪಡೆಯಬಹುದು. ಇದು ಯಾವುದೇ ಆದಾಯಕ್ಕೆ ಸೀಮಿತವಾದ ಯೋಜನೆ ಅಲ್ಲ. ಹಾಗಿದ್ರೆ ಯಾರು ಇದರ ಸದುಪಯೋಗ ಮಾಡಿಕೊಳ್ಳಬಹುದು? ಅರ್ಜಿ ಸಲ್ಲಿಸುವುದು ಹೇಗೆ? ಇದರ ಪ್ರಯೋಜನೆಗಳೇನು? ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ... Read more The post ಕೇವಲ ₹20 ಕೊಟ್ಟರೆ ನಿಮ್ಮ ಕುಟುಂಬಕ್ಕೆ ₹2 ಲಕ್ಷ ಭದ್ರತೆ – PMSBY ಯೋಜನೆಯ ಸಂಪೂರ್ಣ ವಿವರ. appeared first on Karnataka Times .
US Gold Card ಅನಾವರಣಗೊಳಿಸಿದ ಟ್ರಂಪ್
ವಾಷಿಂಗ್ಟನ್, ಡಿ.11: ಶ್ರೀಮಂತ ವಲಸಿಗರಿಗೆ ಅಮೆರಿಕಾದ ಪೌರತ್ವ ಒದಗಿಸುವ `ಯುಎಸ್ ಗೋಲ್ಡ್ ಕಾರ್ಡ್' ಅನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನಾವರಣಗೊಳಿಸಿದ್ದು ಗೋಲ್ಡ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಶ್ವೇತಭವನದಲ್ಲಿ ಬುಧವಾರ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. 1 ಮಿಲಿಯ ಅಮೆರಿಕನ್ ಡಾಲರ್ ಪಾವತಿಸಿದವರು ಗೋಲ್ಡ್ ಕಾರ್ಡ್ ಪಡೆದು ಅಮೆರಿಕಾದ ಪೌರತ್ವ ಗಳಿಸುವ ಯೋಜನೆಯಿದಾಗಿದೆ. `ಅಮೆರಿಕಾದಲ್ಲಿ ಪದವಿ ಪಡೆದ ಬಳಿಕ ಭಾರತ, ಚೀನಾ ಇತ್ಯಾದಿ ವಿದೇಶಗಳ ವಿದ್ಯಾರ್ಥಿಗಳು ಮನೆಗೆ ಮರಳಬೇಕಾಗುತ್ತದೆ. ಇದು ಬೇಸರದ ಮತ್ತು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಈ ಸಂದರ್ಭ ಟ್ರಂಪ್ ಹೇಳಿದ್ದಾರೆ. ಅಮೆರಿಕಾಕ್ಕೆ ಗಣನೀಯ ಪ್ರಯೋಜನವನ್ನು ಒದಗಿಸುವ ವಲಸಿಗರಿಗೆ ರೂಪಿಸಲಾಗಿರುವ ಈ ವೀಸಾವು ಪೌರತ್ವಕ್ಕೆ ಹೊಸ ಮಾರ್ಗವನ್ನು ಸೃಷ್ಟಿಸುತ್ತದೆ. ಗೋಲ್ಡ್ ಕಾರ್ಡ್ ವೆಬ್ ಸೈಟ್ ಚಾಲನೆಯಲ್ಲಿದೆ ಮತ್ತು ಕಂಪೆನಿಗಳು ಅಮೆರಿಕಾದ ಉನ್ನತ ಕಂಪನಿಗಳಿಂದ ನೇಮಿಸಿಕೊಳ್ಳುವ ವಿದ್ಯಾರ್ಥಿಗಳನ್ನು ಗೋಲ್ಡ್ ಕಾರ್ಡ್ ಅನ್ನು ಖರೀದಿಸುವ ಮೂಲಕ ಅಮೆರಿಕಾದಲ್ಲೇ ಇರಿಸಿಕೊಳ್ಳಬಹುದು. ಇದು ಗ್ರೀನ್ ಕಾರ್ಡ್ ನ ಮತ್ತೊಂದು ರೂಪವಾಗಿದೆ. ಆದರೆ ಅದಕ್ಕಿಂತ ಉತ್ತಮ, ಹೆಚ್ಚು ಶಕ್ತಿಶಾಲಿ ಮತ್ತು ಮತ್ತು ಪೌರತ್ವಕ್ಕೆ ಬಲಿಷ್ಠ ಮಾರ್ಗ ಕಲ್ಪಿಸುವ ವ್ಯವಸ್ಥೆ. ನಮ್ಮ ದೇಶಕ್ಕೆ ಉತ್ತಮ ವ್ಯಕ್ತಿಗಳು ಬರುವುದು ಒಂದು ಕೊಡುಗೆಯಾಗಿದೆ, ಯಾಕೆಂದರೆ ಇವರು ಪ್ರಚಂಡ ವ್ಯಕ್ತಿಗಳಾಗಿರುತ್ತಾರೆ. ಕಂಪೆನಿಗಳು ಈಗ ಗೋಲ್ಡ್ ಕಾರ್ಡ್ ನ ಪ್ರಯೋಜನ ಪಡೆಯಬಹುದು. ಇದು ಅಮೆರಿಕಾದಲ್ಲಿ ಶಾಶ್ವತ ನಿವಾಸ ಕಲ್ಪಿಸುವ ಗ್ರೀನ್ ಕಾರ್ಡ್ ಗಿಂತಲೂ ಹೆಚ್ಚಿನ ಪ್ರಯೋಜನವನ್ನು ಹೊಂದಿರುತ್ತದೆ ಎಂದು ಟ್ರಂಪ್ ಹೇಳಿದ್ದಾರೆ.
ಮಂಗಳೂರು | ಗ್ರೀನ್ ವೀವ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ
ಮಂಗಳೂರು : ಜಮೀಯ್ಯತುಲ್ ಫಲಾಹ್ ಗ್ರೀನ್ ವೀವ್ ವಿದ್ಯಾಸಂಸ್ಥೆ ಅಡ್ಕರೆಪಡ್ಪುವಿನಲ್ಲಿ ವಾರ್ಷಿಕ ಕ್ರೀಡಾಕೂಟ 2025 ಕಾರ್ಯಕ್ರಮವನ್ನು ಮಂಗಳೂರು ನಗರ ಪೊಲೀಸ್ ಸಹಾಯಕ ಆಯುಕ್ತರಾದ ನಜ್ಮಾ ಫಾರೂಕಿ ಅವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ ಹಾಗೂ ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೋಭಾವ ಬೆಳೆಸಿದಲ್ಲಿ ನಮ್ಮ ಗುರಿಯನ್ನು ತಲುಪಲು ಸಹಕಾರಿಯಾಗುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾನೂನನ್ನು ಅರಿತುಕೊಳ್ಳುವುದರ ಜೊತೆಗೆ ತಂದೆ, ತಾಯಿ ಮತ್ತು ಶಿಕ್ಷಕರೊಂದಿಗೆ ಗೌರವದಿಂದ ನಡೆದುಕೊಂಡಾಗ ಮಾತ್ರ ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಧ್ವಜಾರೋಹಣವನ್ನು ಕೊಣಾಜೆ ಪಂಚಾಯತ್ ಅಧ್ಯಕ್ಷೆಯಾದ ಗೀತಾ ಕುಂದರ್ ರವರು ನಿರ್ವಹಿಸಿದರು. ವಿದ್ಯಾರ್ಥಿಗಳ ಪಥಸಂಚಲನ ಗೌರವ ವಂದನೆಯನ್ನು ಜಮೀಯ್ಯತುಲ್ ಫಲಾಹ್ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಕೋಡಿಜಾಲ್ ಸ್ವೀಕರಿಸಿದರು. ಕೋಶಾಧಿಕಾರಿ ವಿ.ಇಬ್ರಾಹೀಂ ನಡುಪದವು ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ವೇದಿಕೆಯಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂಚಲಾಕ್ಷಿ, ಸದಸ್ಯರಾದ ಹೈದರ್, ಝೊಹರಾ, ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷರಾದ ಜಾಫರ್, ಎಸ್.ಬಿ.ಸಿ ಅಧ್ಯಕ್ಷರಾದ ಅಸೈನಾರ್ ಎ.ಬಿ, ಉಪಾಧ್ಯಕ್ಷರಾದ ಮಾಲತಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ನಮಿತಾ ಬಿ.ಎನ್, ಪ್ರಾಥಮಿಕ ಶಾಲಾ ಶಿಕ್ಷಕಿಯಾದ ಸಿಂಧಿಯಾ ಲೂಸಿ ಮಸ್ಕರೇನಸ್ ಉಪಸ್ಥಿತರಿದ್ದರು. ಸಂಸ್ಥೆಯ ಸಂಚಾಲಕರಾದ ಪರ್ವೇಜ್ ಅಲಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಾಂಶುಪಾಲರಾದ ಅಬೂಬಕ್ಕರ್ ಕೆ. ವಂದಿಸಿದರು. ಗಣಿತ ಶಿಕ್ಷಕಿ ರಶ್ಮಿ ಎಸ್. ಕಾರ್ಯಕ್ರಮವನ್ನು ನಿರೂಪಿಸಿದರು.
ಮೌಖಿಕ ಸೂಚನೆ ನೀಡಿ ಠಾಣೆಗೆ ರೌಡಿಶೀಟರ್ ಕರೆಸಿಕೊಳ್ಳಲು ಬ್ರೇಕ್! ಪೊಲೀಸ್ ಇಲಾಖೆಗೆ ಹೈಕೋರ್ಟ್ ಮಹತ್ವದ ಸೂಚನೆ
ಮೌಖಿಕ ಆದೇಶದ ಮೂಲಕ ರೌಡಿಶೀಟರ್ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ತಡೆ ನೀಡಿದೆ. ಸರಕಾರ ಸೂಕ್ತ ಪ್ರಕ್ರಿಯೆ ನಿಗದಿಪಡಿಸುವವರೆಗೆ, ಎಸ್ಎಂಎಸ್ ಅಥವಾ ವಾಟ್ಸ್ಆ್ಯಪ್ ಮೂಲಕ ಸೂಚನೆ ನೀಡಬಹುದು ಎಂದು ನ್ಯಾಯಾಲಯ ಆದೇಶಿಸಿದೆ. ಯಾವುದೇ ಅಪರಾಧದಲ್ಲಿ ಭಾಗಿಯಾಗದಿದ್ದರೆ, ಕೇವಲ ರೌಡಿಶೀಟ್ ಕಾರಣಕ್ಕೆ ಆಗಾಗ್ಗೆ ಕರೆಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.
ಪ್ರವಾಹದಲ್ಲಿ ಮುಳುಗಿದ ಗಾಝಾದ ಡೇರೆ: ಶಿಶು ಮೃತ್ಯು
ಸಾವಿರಾರು ಮಂದಿ ಸ್ಥಳಾಂತರ: ವರದಿ
ಸುಲಿಗೆಕೋರರ ಹಾವಳಿ | ಹೆದ್ದಾರಿಗಳಲ್ಲಿ ಸಂಚರಿಸುವ ವೇಳೆ ಎಚ್ಚರ ವಹಿಸಿ ಎಂದ ಗೃಹ ಇಲಾಖೆ
ಬೆಳಗಾವಿ(ಸುವರ್ಣವಿಧಾನಸೌಧ): ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸ್ವಂತ ವಾಹನಗಳಲ್ಲಿ ಪ್ರಯಾಣ ಮಾಡುವ ವೇಳೆ ಎಚ್ಚರಿಕೆಯಿಂದ ಇರಬೇಕು. ನಿರ್ಜನ ಪ್ರದೇಶಗಳಲ್ಲಿ ಯಾರಾದರೂ ಕಾರು ನಿಲ್ಲಿಸಲು ಕೋರಿದರೆ ಎಚ್ಚರ ವಹಿಸಬೇಕು. ಹೆದ್ದಾರಿಗಳಲ್ಲಿ ದರೋಡೆ ಮತ್ತು ಸುಲಿಗೆಕೋರರ ಹಾವಳಿ ಇದ್ದು, ಕಳೆದ ಮೂರು ವರ್ಷಗಳಲ್ಲಿ 403 ಹೆದ್ದಾರಿ ದರೋಡೆ ಪ್ರಕರಣಗಳು ವರದಿಯಾಗಿವೆ ಎಂದು ಗೃಹ ಇಲಾಖೆ ತಿಳಿಸಿದೆ. ಗುರುವಾರ ಸದಸ್ಯರೊಬ್ಬರು ಕೇಳಿದ ಚುಕ್ಕೆಗುರುತಿಲ್ಲದ ಪ್ರಶ್ನೆಗೆ ಉತ್ತರ ನೀಡಿರುವ ಗೃಹ ಇಲಾಖೆ, ‘2023ರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ 81 ಸುಲಿಗೆ ಹಾಗೂ 23 ದರೋಡೆ ಪ್ರಕರಣ ವರದಿಯಾಗಿದೆ. 2024ರಲ್ಲಿ 66 ಸುಲಿಗೆ ಹಾಗೂ 16 ದರೋಡೆ ಪ್ರಕರಣ ನಡೆದಿದೆ. 2025ರ ನವೆಂಬರ್ 15ರ ವರೆಗಿನ ಮಾಹಿತಿಯ ಪ್ರಕಾರ 51 ಸುಲಿಗೆ ಮತ್ತು 14 ದರೋಡೆ ಪ್ರಕರಣಗಳು ವರದಿಯಾಗಿವೆ ಎಂದು ಉಲ್ಲೇಖಿಸಲಾಗಿದೆ. ರಾಜ್ಯ ಹೆದ್ದಾರಿಯಲ್ಲಿ 2023ರಲ್ಲಿ 39 ಸುಲಿಗೆ, 17 ದರೋಡೆ ನಡೆದರೆ, 2024ರಲ್ಲಿ 35 ಸುಲಿಗೆ, 22 ದರೋಡೆಗಳು ನಡೆದಿವೆ. 2025ರಲ್ಲಿ 20 ಸುಲಿಗೆ ಪ್ರಕರಣ ಮತ್ತು 19 ದರೋಡೆ ಪ್ರಕರಣ ನಡೆದಿವೆ. ದರೋಡೆ ಪ್ರಕರಣಗಳನ್ನು ನಿಯಂತ್ರಣ ಮಾಡುವುದು ಪೊಲೀಸರಿಗೆ ಸವಾಲಿನ ಸಂಗತಿಯಾಗಿದೆ ಎಂದು ತಿಳಿಸಲಾಗಿದೆ. ನಿಯಮಿತ ತಪಾಸಣೆ: ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಹಾಯ್ದು ಹೋಗುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ, ಸಂಶಯಾಸ್ಪದ ವ್ಯಕ್ತಿಗಳನ್ನು ಹಾಗೂ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಅಲ್ಲದೆ, ರಾತ್ರಿ ಗಸ್ತು ಕರ್ತವ್ಯಕ್ಕೆ ಪ್ರತಿ ಠಾಣೆಗಳಿಗೆ ದ್ವಿಚಕ್ರ ವಾಹನಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ವಾಹನಗಳಿಗೆ ಅಳವಡಿಸಲಾದ ಸೈರನ್ ಹಾಗೂ ರೆಡ್ಲೈಟ್ಗಳನ್ನು ಹಾಕಿಕೊಂಡು ರಾತ್ರಿ ಗಸ್ತನ್ನು ಮಾಡಲು ಸೂಚಿಸಲಾಗಿದೆ.
‘ಒಂದು ದೇಶ, ಒಂದು ಚುನಾವಣೆ’ ಮಸೂದೆ | ಪರಿಶೀಲನಾ ಸಮಿತಿಯ ಅಧಿಕಾರಾವಧಿ ವಿಸ್ತರಣೆ
ಹೊಸದಿಲ್ಲಿ, ಡಿ. 11: ಲೋಕಸಭೆ ಹಾಗೂ ವಿಧಾನಸಭೆಗೆ ಏಕ ಕಾಲದಲ್ಲಿ ಚುನಾವಣೆ ನಡೆಸುವುದನ್ನು ಪರಿಚಯಿಸಲು ಕೋರುವ ಮಸೂದೆಯನ್ನು ಪರಿಶೀಲಿಸುವ ಸಂಸದೀಯ ಸಮಿತಿಯ ಅಧಿಕಾರಾವಧಿಯನ್ನು ಲೋಕಸಭೆ ಗುರುವಾರ ವಿಸ್ತರಿಸಿದೆ. 2026ರ ಬಜೆಟ್ ಅಧಿವೇಶನದ ಕೊನೆಯ ವಾರದ ಮೊದಲ ದಿನದ ವರೆಗೆ ಸಾಂವಿಧಾನಿಕ (129ನೇ ತಿದ್ದುಪಡಿ) ಮಸೂದೆ, 2024 ಹಾಗೂ ಕೇಂದ್ರಾಡಾಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ ಕುರಿತ ಜಂಟಿ ಸಮಿತಿ ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಕೋರುವ ನಿರ್ಣಯವನ್ನು ಸಮಿತಿಯ ಅಧ್ಯಕ್ಷರಾದ ಪಿ.ಪಿ. ಚೌಧರಿ ಮಂಡಿಸಿದರು. ಈ ನಿರ್ಣಯವನ್ನು ಲೋಕಸಭೆ ಧ್ವನಿ ಮತದ ಮೂಲಕ ಅಂಗೀಕರಿಸಿತು. ಕಳೆದ ಡಿಸೆಂಬರ್ನಲ್ಲಿ ರೂಪುಗೊಂಡ ಬಳಿಕ ಈ ಸಮಿತಿ ಸಂವಿಧಾನ ಪರಿಣತರು, ಅರ್ಥಶಾಸ್ತ್ರಜ್ಞರು, ಕಾನೂನು ಆಯೋಗದ ಅಧ್ಯಕ್ಷ ದಿನೇಶ್ ಮಹೇಶ್ವರಿ ಹಾಗೂ ಇತರರನ್ನು ಭೇಟಿಯಾಗಿದೆ.
1996ರ ಮಾದಕ ವಸ್ತು ಇರಿಸಿದ ಪ್ರಕರಣ | ಸಂಜೀವ್ ಭಟ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ, ಡಿ. 11: 1996ರ ಮಾದಕ ವಸ್ತು ಇರಿಸಿದ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರಿಗೆ ವಿಧಿಸಲಾದ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿರಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಇದರಿಂದ ಸಂಜೀವ್ ಭಟ್ ಅವರಿಗೆ ತೀವ್ರ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಹಾಗೂ ವಿಜಯ್ ಬಿಷ್ಣೋಯಿ ನೇತೃತ್ವದ ಸುಪ್ರೀಂ ಕೋರ್ಟ್ನ ಇಬ್ಬರು ನ್ಯಾಯಾಧೀಶರ ಪೀಠ, ‘‘ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿದ ಅವರ ಅರ್ಜಿಯನ್ನು ಪರಿಗಣಿಸಲು ನಾವು ಸಿದ್ಧರಿಲ್ಲ’’ ಎಂದು ಹೇಳಿತು. ಗುಜರಾತ್ ನ್ಯಾಯಾಲಯ ಕಳೆದ ವರ್ಷ ಎನ್ಡಿಪಿಎಸ್ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ನಿಯಮಗಳ ಅಡಿಯಲ್ಲಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಸಂಜೀವ್ ಭಟ್ ಅವರು ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು 2018ರಲ್ಲಿ ಬಂಧಿಸಲಾಗಿತ್ತು. 1990ರಲ್ಲಿ ನಡೆದ ಪ್ರಭುದಾಸ್ ವೈಷ್ಣನಿ ಎಂಬವರ ಕಸ್ಟಡಿ ಸಾವಿಗೆ ಸಂಬಂಧಿಸಿದ ಇನ್ನೊಂದು ಪ್ರಕರಣದಲ್ಲಿ ಸಂಜೀವ್ ಭಟ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.
ಅಮೆರಿಕದ ಕೇಂದ್ರೀಯ ಬ್ಯಾಂಕ್ನಿಂದ ಬಡ್ಡಿ ದರ ಕಡಿತ, ಭಾರತದ ಮೇಲೆ ಏನು ಪರಿಣಾಮ?
ಅಮೆರಿಕದ ಫೆಡರಲ್ ರಿಸರ್ವ್ ಸತತ ಮೂರನೇ ಬಾರಿ ಬಡ್ಡಿದರವನ್ನು ಶೇಕಡಾ 0.25ರಷ್ಟು ಇಳಿಸಿದೆ. ಹಣದುಬ್ಬರ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದ ಆರ್ಥಿಕತೆಗೆ ಬೆಂಬಲ ನೀಡುವುದು ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದು ಇದರ ಉದ್ದೇಶವಾಗಿದೆ. ಮುಂದಿನ ವರ್ಷವೂ ಬಡ್ಡಿದರ ಕಡಿತವಾಗುವ ನಿರೀಕ್ಷೆಯಿದೆ.
2 ವರ್ಷಗಳಲ್ಲಿ ವಿಮಾನಗಳ GPS ಮೇಲೆ ಸೈಬರ್ ದಾಳಿಯ 1900ಕ್ಕೂ ಅಧಿಕ ಘಟನೆಗಳು ವರದಿ: ಲೋಕಸಭೆಗೆ ತಿಳಿಸಿದ ಕೇಂದ್ರ ಸರಕಾರ
ಹೊಸದಿಲ್ಲಿ, ಡಿ. 11: 2023 ನವೆಂಬರ್ನಿಂದ ಎರಡು ವರ್ಷಗಳ ಕಾಲ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಜಿಪಿಎಸ್ ಮೇಲೆ ಸೈಬರ್ ದಾಳಿ ನಡೆದ 1,951ಕ್ಕೂ ಅಧಿಕ ಘಟನೆಗಳು ವರದಿಯಾಗಿವೆ ಎಂದು ಸರಕಾರ ಗುರುವಾರ ತಿಳಿಸಿದೆ. ನಾಗರಿಕ ವಿಮಾನ ಯಾನ ಖಾತೆಯ ಸಹಾಯಕ ಸಚಿವ ಮುರಳೀಧರ ಮೊಹೋಲ್ ಲೋಕಸಭೆಗೆ ನೀಡಿದ ಲಿಖಿತ ಪ್ರತಿಕ್ರಿಯೆಯಲ್ಲಿ, ‘‘ಡಿಜಿಸಿಎ ಸುತ್ತೋಲೆ ಪ್ರಕಟಿಸಿದ ಬಳಿಕ ವರದಿಯಾದ (2023 ನವೆಂಬರ್ನಿಂದ 2025 ನವೆಂಬರ್)ಜಿಪಿಎಸ್ ಹಸ್ತಕ್ಷೇಪದ ಒಟ್ಟು ಪ್ರಕರಣಗಳು 1,951’’ ಎಂದು ಹೇಳಿದ್ದಾರೆ. ವಾಯು ಪ್ರದೇಶದಲ್ಲಿ ಜಿಎನ್ಎಸ್ಎಸ್ನ ಮೇಲೆ ಸೈಬರ್ ದಾಳಿಗೆ ಸಂಬಂಧಿಸಿ ನಾಗರಿಕ ವಿಮಾನ ಯಾನ ಪ್ರಧಾನ ನಿರ್ದೇಶನಾಲಯ (ಡಿಜಿಸಿಎ) 2023 ನವೆಂಬರ್ನಲ್ಲಿ ಸಲಹಾ ಸುತ್ತೋಲೆ ಪ್ರಕಟಿಸಿದ ಬಳಿಕ ಜಿಪಿಎಸ್ ಮೇಲೆ ಸೈಬರ್ ದಾಳಿಯ ಬಗ್ಗೆ ವರದಿಯಾಗಲು ಆರಂಭವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಜಿಪಿಎಸ್ನ ಮೇಲೆ ದಾಳಿ ನಡೆಸಿದ ಘಟನೆಗಳು ದಿಲ್ಲಿ, ಮುಂಬೈ, ಕೋಲ್ಕತಾ, ಅಮೃತಸರ, ಹೈದರಾಬಾದ್, ಬೆಂಗಳೂರು ಹಾಗೂ ಚೆನ್ನೈ ವಿಮಾನ ನಿಲ್ದಾಣಗಳಲ್ಲಿ ವರದಿಯಾಗಿವೆ.
ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಮೋದಿ ಮಾತುಕತೆ; ಜಾಗತಿಕ ಶಾಂತಿ, ವ್ಯಾಪಾರ ಒಪ್ಪಂದಕ್ಕೆ ಆದ್ಯತೆ
ರಷ್ಯಾದಿಂದ ತೈಲ ಖರೀದಿ ಬೆನ್ನಲ್ಲೇ ಭಾರತದ ಮೇಲೆ ಅಮೆರಿಕದ ಟ್ರಂಪ್ ಸರ್ಕಾರ ಶೇ.50ಸುಂಕ ವಿಧಿಸಿತ್ತು. ಆ ಬಿಕ್ಕಟ್ಟಿನ ಮಧ್ಯೆ ಕೆಲ ದಿನಗಳ ಹಿಂದೆ ಪುಟಿನ್ ಭಾರತಕ್ಕೆ ಬಂದಿದ್ದರೂ ಈ ಗೊಂದಲಗಳ ಮಧ್ಯೆ ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷರ ಜೊತೆ ಆತ್ಮೀಯ ಮಾತುಕತೆ ನಡೆಸಿದ್ದಾಗಿ ಎಕ್ಸ್ನಲ್ಲಿ ಟ್ವೀಟ್ ಹಂಚಿಕೊಂಡಿದ್ದಾರೆ. ಜಾಗತಿಕ ಶಾಂತಿ ಮತ್ತು ಪ್ರಾದೇಶಿಕ ಬೆಳವಣಿಗೆಗಳ ಚರ್ಚಿಸಲಾಗಿದೆ ಎನ್ನಲಾಗುತ್ತಿದೆ
2026ರ ಟಿ-20 ವಿಶ್ವಕಪ್ ಟೂರ್ನಿಯ ಟಿಕೆಟ್ ಗಳ ಮಾರಾಟ ಆರಂಭ
ಹೊಸದಿಲ್ಲಿ, ಡಿ.11: ಮುಂಬರುವ 2026ರ ಆವೃತ್ತಿಯ ಟಿ-20 ವಿಶ್ವಕಪ್ ಟೂರ್ನಿಗಾಗಿ ಟಿಕೆಟ್ಗಳ ಮಾರಾಟ ಆರಂಭವಾಗಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ಗುರುವಾರ ಪ್ರಕಟಿಸಿದೆ. ಕ್ರಿಕೆಟ್ ಅಭಿಮಾನಿಗಳು ಗುರುವಾರ ಸಂಜೆ 6:45ರಿಂದ ಪಂದ್ಯಗಳ ಟಿಕೆಟ್ಗಳನ್ನು ಖರೀದಿಸಲು ಆರಂಭಿಸಬಹುದು ಎಂದು ಐಸಿಸಿ ಸಾಮಾಜಿಕ ಮಾಧ್ಯಮದಲ್ಲಿ ನೀಡಿರುವ ಹೇಳಿಕೆಯೊಂದರಲ್ಲಿ ತಿಳಿಸಿದೆ. 10ನೇ ಆವೃತ್ತಿಯ ಟಿ-20 ಪಂದ್ಯಾವಳಿಯು ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7ರಿಂದ ಮಾರ್ಚ್ 8ರ ತನಕ ನಡೆಯಲಿದೆ. ಕೊಲಂಬೊದಲ್ಲಿ ಫೆಬ್ರವರಿ 7ರಂದು ನೆದರ್ಲ್ಯಾಂಡ್ಸ್ ಹಾಗೂ ಪಾಕಿಸ್ತಾನ ತಂಡಗಳು ಸ್ಪರ್ಧಾವಳಿಯ ಆರಂಭಿಕ ಪಂದ್ಯವನ್ನು ಆಡಲಿವೆ. ಆ ನಂತರ ಬಾಂಗ್ಲಾದೇಶ ತಂಡವು ವೆಸ್ಟ್ಇಂಡೀಸ್ ವಿರುದ್ಧ ಹಾಗೂ ಸಹ ಆತಿಥ್ಯವಹಿಸಿರುವ ಭಾರತ ತಂಡವು ಅಮೆರಿಕ ಕ್ರಿಕೆಟ್ ತಂಡವನ್ನು ಮುಖಾಮುಖಿಯಾಗಲಿದೆ. ಅಮೆರಿಕ ಹಾಗೂ ವೆಸ್ಟ್ಇಂಡೀಸ್ನಲ್ಲಿ 2024ರಲ್ಲಿ ನಡೆದಿದ್ದ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವ ಭಾರತ ತಂಡವು ಸದ್ಯ ಹಾಲಿ ಚಾಂಪಿಯನ್ ಆಗಿದೆ.
SIR | ಮತದಾರರ ಪಟ್ಟಿಯಿಂದ ಒಂದು ಅರ್ಹ ಹೆಸರು ತೆಗೆದರೂ ಧರಣಿ: ಮಮತಾ ಬ್ಯಾನರ್ಜಿ ಎಚ್ಚರಿಕೆ
ಕೋಲ್ಕತಾ, ಡಿ. 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ, ಒಬ್ಬ ಅರ್ಹ ಮತದಾರನ ಹೆಸರನ್ನು ಅಳಿಸಿ ಹಾಕಿದರೂ ನಾನು ಧರಣಿ ನಡೆಸುತ್ತೇನೆ ಎಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ. ನಾನು ಈವರೆಗೆ ನನ್ನ ಮತದಾರ ಅರ್ಜಿಯನ್ನು ಸಲ್ಲಿಸಿಲ್ಲ ಎಂದು ಅವರು ಹೇಳಿದರು. ‘‘ನಾನು ನನ್ನ ಪೌರತ್ವವನ್ನು ಗಲಭೆಕೋರರ ಪಕ್ಷಕ್ಕೆ ಸಾಬೀತುಪಡಿಸಬೇಕಾದ ಅಗತ್ಯವಿದೆಯೇ?’’ ಎಂದು ಅವರು ಪ್ರಶ್ನಿಸಿದರು. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮಬಂಗಾಳದ ಆಡಳಿತಾರೂಢ ಪಕ್ಷ ತೃಣಮೂಲ ಕಾಂಗ್ರೆಸ್ ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದೆ. ಬಿಜೆಪಿಗೆ ಲಾಭ ಮಾಡಿಕೊಡುವುದಕ್ಕಾಗಿ ಭಾರತೀಯ ಚುನಾವಣಾ ಆಯೋಗವು ಈ ಕಸರತ್ತು ನಡೆಸುತ್ತಿದೆ ಎಂದು ಆರೋಪಿಸಿದೆ. ಕೃಷ್ಣಾನಗರ್ ನಲ್ಲಿ ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ವಿಶೇಷ ತೀವ್ರ ಪರಿಷ್ಕರಣೆಯ ವಿಚಾರಣೆಯ ವೇಳೆ, ಜಿಲ್ಲಾಧಿಕಾರಿಗಳ ಕಾರ್ಯದ ಮೇಲ್ವಿಚಾರಣೆಗಾಗಿ ದಿಲ್ಲಿಯಿಂದ ಬಿಜೆಪಿ ಪರವಾಗಿ ಇರುವ ಅಧಿಕಾರಿಗಳನ್ನು ಚುನಾವಣಾ ಆಯೋಗವು ಕಳುಹಿಸುತ್ತಿದೆ ಎಂದು ಹೇಳಿದರು. ಪಶ್ಚಿಮಬಂಗಾಳದಲ್ಲಿ 2026ರ ಮೊದಲಾರ್ಧದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ‘‘ಬಂಗಾಳಿಗಳನ್ನು ಬಾಂಗ್ಲಾದೇಶಿಗಳು ಎಂಬುದಾಗಿ ಕರೆದು ಅವರನ್ನು ಬಂಧನ ಶಿಬಿರಗಳಿಗೆ ಕಳುಹಿಸಲು ಕೇಂದ್ರ ಗೃಹ ಸಚಿವರು ಏನು ಬೇಕಾದರೂ ಮಾಡಬಹುದು’’ ಎಂದು ಅವರು ಹೇಳಿದರು. ಚುನಾವಣಾ ಆಯೋಗವು ಈ ಕಸರತ್ತನ್ನು ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಅಸ್ತ್ರವಾಗಿ ನಡೆಸುತ್ತಿದೆ ಎಂದು ಅವರು ಆರೋಪಿಸಿದರು. ‘‘ಒಬ್ಬನೇ ಒಬ್ಬ ಅರ್ಹ ಮತದಾರನ ಹೆಸರು ಅಳಿಸಿಹೋದರೂ ನಾನು ಧರಣಿ ಮಾಡುತ್ತೇನೆ. ಪಶ್ಚಿಮಬಂಗಾಳದಲ್ಲಿ ಬಂಧನ ಕೇಂದ್ರಗಳಿರುವುದಿಲ್ಲ. ಅವರು ಮತಗಳಿಗಾಗಿ ಎಷ್ಟು ಹಪಹಪಿಸುತ್ತಿದ್ದಾರೆ ಎಂದರೆ, ಚುನಾವಣೆಗೆ ಎರಡು ತಿಂಗಳುಗಳು ಇರುವಾಗ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆ ಮಾಡುತ್ತಿದ್ದಾರೆ’’ ಎಂದು ಮುಖ್ಯಮಂತ್ರಿ ಹೇಳಿದರು.
ಸಂತ್ರಸ್ತ ಪ್ರಯಾಣಿಕರಿಗೆ 10,000 ರೂ. ಪ್ರಯಾಣ ವೋಚರ್: ಇಂಡಿಗೊ ಘೋಷಣೆ
ಹೊಸದಿಲ್ಲಿ, ಡಿ. 11: ಡಿಸೆಂಬರ್ 3 ಮತ್ತು 4ರ ನಡುವಿನ ಅವಧಿಯಲ್ಲಿ ವಿಮಾನ ನಿಲ್ದಾಣಗಳಲ್ಲಿ ಸಿಕ್ಕಿಹಾಕಿಕೊಂಡ ಪ್ರಯಾಣಿಕರಿಗೆ ಇಂಡಿಗೊ ಏರ್ಲೈನ್ಸ್ 10,000 ರೂ. ಮೌಲ್ಯದ ಪ್ರಯಾಣ ವೋಚರ್ ಗಳನ್ನು ನೀಡಲಿದೆ ಎಂದು ವಿಮಾನಯಾನ ಕಂಪೆನಿಯು ಗುರುವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ. ಈ ವೋಚರ್ 12 ತಿಂಗಳುಗಳ ವಾಯಿದೆ ಹೊಂದಿರುತ್ತವೆ. ‘‘2025 ಡಿಸೆಂಬರ್ 3, 4 ಮತ್ತು 5ರಂದು ಪ್ರಯಾಣ ಮಾಡಬೇಕಾಗಿದ್ದ ನಮ್ಮ ಗ್ರಾಹಕರ ಪೈಕಿ ಹಲವರು ವಿವಿಧ ವಿಮಾನ ನಿಲ್ದಾಣಗಳಲ್ಲಿ ಹಲವು ತಾಸುಗಳವರೆಗೆ ಸಿಕ್ಕಿಹಾಕಿಕೊಂಡಿರುವುದನ್ನು ಇಂಡಿಗೊ ವಿಷಾದಪೂರ್ವಕವಾಗಿ ಒಪ್ಪಿಕೊಳ್ಳುತ್ತದೆ. ಅವರ ಪೈಕಿ ಹೆಚ್ಚಿನವರು ಜನಜಂಗುಳಿಯಿಂದಾಗಿ ತೀವ್ರ ಸಂಕಷ್ಟಕ್ಕೊಳಗಾದರು. ಇಂಥ ತೀವ್ರ ಸಂಕಷ್ಟಕ್ಕೊಳಗಾಗಿರುವ ಪ್ರಯಾಣಿಕರಿಗೆ ನಾವು 10,000 ರೂ. ಮೌಲ್ಯದ ಪ್ರಯಾಣ ವೋಚರ್ ಗಳನ್ನು ನೀಡುತ್ತಿದ್ದೇವೆ. ಈ ವೋಚರ್ ಗಳನ್ನು ಮುಂದಿನ 12 ತಿಂಗಳುಗಳ ಅವಧಿಯಲ್ಲಿ ಇಂಡಿಗೊ ವಿಮಾನಗಳಲ್ಲಿ ಪ್ರಯಾಣಿಸಲು ಬಳಸಿಕೊಳ್ಳಬಹುದಾಗಿದೆ’’ ಎಂದು ವಿಮಾನಯಾನ ಕಂಪೆನಿ ತಿಳಿಸಿದೆ. ಈ ವೋಚರ್ ಗಳು ವಿಮಾನ ಟಿಕೆಟ್ ಗಳ ದರ ಮರುಪಾವತಿ ಮತ್ತು ಸರಕಾರದ ಆದೇಶದಂತೆ ನೀಡಲಾಗುತ್ತಿರುವ ರೂ. 5,000- 10,000 ಪರಿಹಾರಕ್ಕೆ ಹೆಚ್ಚುವರಿಯಾಗಿದೆ ಎಂದು ಅದು ತಿಳಿಸಿದೆ.
ವಿವಿಧ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ಸಿಎಂ ಸಿದ್ದರಾಮಯ್ಯ
ಬೆಳಗಾವಿ(ಸುವರ್ಣವಿಧಾನಸೌಧ): ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ.3ರಷ್ಟು, ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರಕಾರ ಒಲಂಪಿಕ್ಸ್, ಪ್ಯಾರಾ-ಒಲಂಪಿಕ್ಸ್, ಕಾಮನ್ವೆಲ್ತ್, ಏಶಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ಸೈಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದರು. ಅಲ್ಲದೇ, ಅರಣ್ಯ ಇಲಾಖೆಯಲ್ಲಿ ಶೇ.3ರಷ್ಟು, ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
Ind Vs SA T20 | ಭಾರತಕ್ಕೆ 214 ರನ್ ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ
ಮುಲ್ಲನಪುರ: ಇಲ್ಲಿನ ಮಹಾರಾಜ ಯದವೀಂದ್ರ ಸಿಂಗ್ ಪಿಸಿಬಿ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾವು ಭಾರತಕ್ಕೆ 214 ರನ್ ಗಳ ಗುರಿ ನೀಡಿದೆ.
ಐಷಾರಾಮಿ ಕಟ್ಟಡದ ಫೋಟೋ ಹಾಕಿ, ಗೆಸ್ ಮಾಡಿ ನೋಡೋಣ ಎಂದ ಪ್ರಿಯಾಂಕ್ ಖರ್ಗೆ : ಯಾವುದಿದು ಬಿಲ್ಡಿಂಗ್?
RSS Delhi Office : ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕಟ್ಟಡದ ಫೋಟೋ ಜೊತೆ ರಾಜ್ಯ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಈ ಫೋಟೋ ನೋಡಿ ಮಿಸ್ಟೇಕ್ ಮಾಡಿಕೊಳ್ಳಬೇಡಿ ಎಂದು ಎಕ್ಸ್ ಮೂಲಕ ವ್ಯಂಗ್ಯವಾಡಿದ್ದಾರೆ.
ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದುಗೊಳಿಸಿದ ಹೈಕೋರ್ಟ್, ರಾಜ್ಯ ಸರಕಾರಕ್ಕೆ ಭಾರಿ ಹಿನ್ನಡೆ
ರಾಜ್ಯದ ಸರಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸರಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಬಡವರಿಗೆ ಕಡಿಮೆ ಬೆಲೆಗೆ ಔಷಧಿ ನೀಡುವಲ್ಲಿ ಸರಕಾರದ ವಿಭಾಗ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದು ಸರಕಾರಕ್ಕೆ ಹಿನ್ನಡೆಯಾಗಿದ್ದು, ಜನೌಷಧಿ ಕೇಂದ್ರಗಳು ಸಾರ್ವಜನಿಕರ ಆರೋಗ್ಯ ಹಕ್ಕಿಗೆ ಪೂರಕವಾಗಿವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಕುಂದಾಪುರ ಯುಜಿಡಿ ಸಮಸ್ಯೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ; ಸಾರ್ವಜನಿಕರೊಂದಿಗೆ ಚರ್ಚೆ
ಕುಂದಾಪುರ, ಡಿ.11: ಸುಮಾರು 11 ವರ್ಷದಿಂದ ಕುಂಟುತ್ತಾ ಸಾಗುತ್ತಿರುವ ಯುಜಿಡಿ ಕಾಮಗಾರಿಯಿಂದ ಬಹಳಷ್ಟು ಸಮಸ್ಯೆಗಳಾಗುತ್ತಿವೆ ಎಂಬ ದೂರಿಗೆ ಸ್ಪಂದಿಸಿರುವ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಸ್ಥಳ ಪರಿಶೀಲನೆಗಾಗಿ ಗುರುವಾರ ಕುಂದಾಪುರದ ಪುರಸಭಾ ವ್ಯಾಪ್ತಿಯ ಹುಂಚಾರಬೆಟ್ಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಂಚಾರುಬೆಟ್ಟು ಎಂಬಲ್ಲಿ ನಿರ್ಮಿಸಲುದ್ದೇಶಿಸಿರುವ ಯುಜಿಡಿ ಕಾಮಗಾರಿಯ ಎಸ್ಟಿಪಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭೇಟಿ ನೀಡಿದ ಬಳಿಕ ಪುರಸಭೆಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಕರೆದ ಸಭೆಯಲ್ಲಿ ಯುಜಿಡಿ ಕಾಮಗಾರಿ, ಎಸ್ಟಿಪಿ ರಚನೆ ಸಮಸ್ಯೆಗಳ ಕುರಿತಂತೆ ಸಾಕಷ್ಟು ಪ್ರಸ್ತಾಪಗಳು ಕೇಳಿಬಂದವು. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಹುಂಚಾರಬೆಟ್ಟು ಎಂಬಲ್ಲಿನ ಜನನಿಬೀಡ ಪ್ರದೇಶದಲ್ಲಿ ಯುಜಿಡಿ ಕಾಮಗಾರಿ ಎಸ್ಟಿಪಿ ಘಟಕ ತೆರೆಯುವುದು ಸೂಕ್ತವಲ್ಲ. ಘನ ತ್ಯಾಜ್ಯ ವಿಲೇವಾರಿ ಘಟಕ ಮಾಡುವುದಕ್ಕೆ ವಿರೋಧವಿಲ್ಲ. ಆದರೆ ಜನವಸತಿ ಪ್ರದೇಶಕ್ಕಿಂತ 500 ಮೀ. ದೂರದಲ್ಲಿ ನಿರ್ಮಿಸಿದಲ್ಲಿ ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಯುಜಿಡಿ ಕಾಮಗಾರಿ ಅನುಷ್ಠಾನದ ಸಮಯದಿಂದಲೂ ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ. ತರಾತುರಿ ನಿರ್ಧಾರಗಳು ಜನರನ್ನು ಹೈರಾಣಾಗಿಸಿದೆ ಎಂದವರು ಸ್ಥಳೀಯರ ಅಭಿಪ್ರಾಯಗಳನ್ನು ಜಿಲ್ಲಾಡಳಿತದ ಮುಂದಿರಿಸಿದರು. ಪುರಸಭೆ ಮಾಜಿ ಸದಸ್ಯ ಚಂದ್ರಶೇಖರ್ ಖಾರ್ವಿ ಮಾತನಾಡಿ, 23 ವಾರ್ಡ್ಗಳ ತ್ಯಾಜ್ಯದ ನೀರನ್ನು ಪಂಚಗಂಗಾವಳಿ ಹೊಳೆಗೆ ಬಿಡಲಾಗುತ್ತಿದ್ದು, ಆ ವಾರ್ಡ್ನಿಂದ ಗೆದ್ದು ಸ್ಥಳೀಯ ಜನರ ಕಷ್ಟಕ್ಕೆ ಸ್ಪಂದಿಸಲಾಗದೆ, ಉತ್ತರವನ್ನೂ ನೀಡಲಾಗುತ್ತಿಲ್ಲ. ಸಮಸ್ಯೆಗಳನ್ನು ತಕ್ಷಣ ಸರಕಾರ, ಜಿಲ್ಲಾಡಳಿತ ಬಗೆಹರಿಸಬೇಕೆಂದು ಒತ್ತಾಯಿಸಿದರು. ಮಾಜಿ ಪುರಸಭಾ ಸದಸ್ಯ ಶ್ರೀಧರ್ ಮಾತನಾಡಿ, ಯುಜಿಡಿ ಕಾಮಗಾರಿ ಸಲುವಾಗಿ ಅಗೆದ ರಸ್ತೆಗಳು ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದರು. ಮಾಜಿ ಸದಸ್ಯೆ ದೇವಕಿ ಸಣ್ಣಯ್ಯ, ನಾಗರಿಕರಾದ ಸುನೀಲ್ ಪೂಜಾರಿ ಕೋಡಿ ಯುಜಿಡಿ ಕಾಮಗಾರಿಯಿಂದ ಆಗುತ್ತಿರುವ ವಿವಿಧ ಸಮಸ್ಯೆಗಳ ಕುರಿತಂತೆ ಮಾತನಾಡಿದರು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಕುಂದಾಪುರದ 23 ವಾರ್ಡ್ಗಳ ಪೈಕಿ 5-6 ವಾರ್ಡ್ಗಳನ್ನು ಯುಜಿಡಿ ಯೋಜನೆ ಇನ್ನೂ ತಲುಪಿಲ್ಲ. ಹಾಗಿದ್ದರೆ ಎಲ್ಲ ವಾರ್ಡ್, ಎಲ್ಲ ಮನೆಗಳನ್ನು ಇದು ತಲುಪುವ ಬಗೆ ಹೇಗೆ ಎಂದು ಪ್ರಶ್ನಿಸಿದರಲ್ಲದೇ, ಲಭ್ಯ ಅನುದಾನದಲ್ಲಿ ಕಾಮಗಾರಿ ಮಾಡಬೇಕಿದೆ. ಹುಂಚಾರಬೆಟ್ಟಿನಲ್ಲಿ ಎಸ್ಟಿಪಿ ನಿರ್ಮಾಣಕ್ಕೆ ವಿರೋಧ ಇದೆ. ಪುರಸಭೆ ವ್ಯಾಪ್ತಿಯ ಯುಜಿಡಿ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಶಾಸಕರು, ಯುಜಿಡಿ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಎಂದು ಹೇಳಿದರು. ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪ್ರಭಾಕರ ವಿ. ಮಾತನಾಡಿ, ಪುರಸಭೆ ವ್ಯಾಪ್ತಿಗೊಳಪಡುವ ಮೂರು ವಿದ್ಯಾರ್ಥಿನಿಲಯಗಳ ತ್ಯಾಜ್ಯಗಳನ್ನು ಅಂಬೇಡ್ಕರ್ ನಗರದ ಕಾಲನಿ ಬಳಿ ಬಿಡುತ್ತಿದ್ದು, ಇಡೀ ನಗರ ಸ್ವಚ್ಚಗೊಳಿಸುವ ಪೌರಕಾರ್ಮಿಕರ ಕುಟುಂಬಕ್ಕೆ ಹೀಗಾದರೆ ಹೇಗೆ ಎಂದು ಅಲ್ಲಿನ ಸಮಸ್ಯೆಯ ಗಂಭೀರತೆಯನ್ನು ಸಭೆಯ ಮುಂದಿಟ್ಟರು. ದಸಂಸ ಮುಖಂಡ ವಿಜಯ್ ಕೆ.ಎಸ್. ಮಾತನಾಡಿ, ಕುಂದಾಪುರ ಅಂಬೇಡ್ಕರ್ ಭವನ ಶಿಥಿಲಾವಸ್ಥೆಯಲ್ಲಿದ್ದು, ಕೂಡಲೇ ದುರಸ್ಥಿಮಾಡಿ ಎಂದು ಆಗ್ರಹಿಸಿದರು. ಕೊಲ್ಲೂರಿನಿಂದ ಬಂದ ವಿಶೇಷಚೇತನ ಮಹಿಳೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನೋವು ತೋಡಿಕೊಂಡರು. ಕುಂದಾಪುರ ಉಪವಿಭಾಗಾಧಿಕಾರಿ ರಶ್ಮೀ, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಪುರಸಭೆ ಮುಖ್ಯಾಧಿಕಾರಿ ಆನಂದ್ ಜೆ. ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.
IND vs SA T20 | ಒಂದೇ ಓವರ್ ನಲ್ಲಿ 7 ವೈಡ್; ಅರ್ಷದೀಪ್ ಅನಗತ್ಯ ದಾಖಲೆ!
ಮುಲ್ಲನಪುರ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತೀಯ ವೇಗಿ ಅರ್ಷದೀಪ್ ಸಿಂಗ್ ಅವರು ಬೇಡದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಇನಿಂಗ್ಸ್ ನ 11ನೇ ಓವರ್ ನಲ್ಲಿ ಬೌಲಿಂಗ್ ಗೆ ಬಂದ ಅರ್ಷದೀಪ್, ಒಂದೇ ಓವರ್ ನಲ್ಲಿ 7 ವೈಡ್ಗಳನ್ನು ಎಸೆದು ಗಮನಸೆಳೆದರು. ಇದರಿಂದ ಟಿ20 ಕ್ರಿಕೆಟ್ ನಲ್ಲಿ ಒಂದೇ ಓವರ್ ನಲ್ಲಿ ಅತಿಹೆಚ್ಚು ವೈಡ್ ಹಾಕಿದ ಬೌಲರ್ ಎಂಬ ಅಪ್ರತಿಷ್ಠಿತ ದಾಖಲೆಯು ಅವರಿಗೆ ಸೇರಿತು. ಜೊತೆಗೆ, ಒಂದೇ ಓವರ್ನಲ್ಲಿ 13 ಎಸೆತಗಳ ಬೌಲಿಂಗ್ ಮಾಡಿದ ದಾಖಲೆಯನ್ನು ಅವರು ಅಫ್ಗಾನಿಸ್ತಾನದ ನವೀನ್ ಉಲ್ ಹಕ್ ಅವರೊಂದಿಗೆ ಹಂಚಿಕೊಂಡಿದ್ದಾರೆ. 2024ರಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಪಂದ್ಯದಲ್ಲಿ ನವೀನ್ ಇದೇ ಮಾದರಿಯಲ್ಲಿ 13 ಎಸೆತಗಳನ್ನು ಹಾಕಿದ್ದರು. ಪಾಕಿಸ್ತಾನ ವಿರುದ್ಧ 2021ರಲ್ಲಿ 12 ಎಸೆತ ಹಾಕಿದ ದಕ್ಷಿಣ ಆಫ್ರಿಕಾದ ಸಿಸಂಡಾ ಮಗಲ ಈ ಪಟ್ಟಿಯಲ್ಲಿ ಮುಂದಿದ್ದಾರೆ.
ಸರ್ಕಾರಿ ಆಸ್ಪತ್ರೆ ಆವರಣದ ಜನೌಷಧಿ ಕೇಂದ್ರಗಳ ಸ್ಥಗಿತ ಆದೇಶ ರದ್ದು; ರಾಜ್ಯ ಸರ್ಕಾರಕ್ಕೆ ಹಿನ್ನಡೆ
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ನಿರ್ದೇಶಿಸಿ ಕಳೆದ ಮೇ 14ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಧಾರವಾಡ ಪೀಠ ರದ್ದುಪಡಿಸಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಎಲ್. ರಾಕೇಶ್ ಮಹಾಲಿಂಗಪ್ಪ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರದ ಆದೇಶವನ್ನು ರದ್ದುಪಡಿಸಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ತೀರ್ಪು ಪ್ರಕಟಿಸಿದ ಬಳಿಕ ನ್ಯಾಯಪೀಠ, ಬಡವರಿಗೆ ನೀಡಲಾಗುವ ಔಷಧಿಗಳನ್ನು ಉಚಿತವಾಗಿ ಅಥವಾ ಕಡಿಮೆ ಬೆಲೆಗೆ ನೀಡುತ್ತಿರಲಿ, ಅದರಲ್ಲಿ ಸರ್ಕಾರದ ಒಂದು ವಿಭಾಗವು ಹಸ್ತಕ್ಷೇಪ ಮಾಡಲು ನ್ಯಾಯಾಲಯ ಅನುಮತಿ ನೀಡುವುದಿಲ್ಲ ಎಂದು ಮೌಖಿಕವಾಗಿ ನುಡಿಯಿತು. ಅರ್ಜಿದಾರರ ವಾದ: ವಿಚಾರಣೆ ವೇಳೆ ವಾದ ಮಂಡಿಸಿದ್ದ ಅರ್ಜಿದಾರರ ಪರ ವಕೀಲರು, ಜನೌಷಧಿ ಕೇಂದ್ರಗಳ ಮಾಲೀಕರ ಜತೆ ಸಮಾಲೋಚಿಸದೆ ಅಥವಾ ಪೂರ್ವ ಎಚ್ಚರಿಕೆ ನೀಡದೆ ತರಾತುರಿಯಲ್ಲಿ ಸರ್ಕಾರ ಈ ಆದೇಶ ಜಾರಿಗೊಳಿಸಿದೆ. ಇದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಒಂದು ಸಣ್ಣ ಕೇಂದ್ರವು ಉಚಿತ ಔಷಧ ವಿತರಣೆಗೆ ಅಡ್ಡಿಯಾಗುತ್ತಿದೆ ಎಂದು ಸರ್ಕಾರ ಹೇಳುವುದನ್ನು ಒಪ್ಪಲಾಗದು. ಸರ್ಕಾರ ಮೊದಲಿಂದಲೂ ಉಚಿತವಾಗಿ ಔಷಧ ನೀಡುತ್ತಿದೆ. ಜನೌಷಧಿ ಕೇಂದ್ರಗಳಿಂದ ಸರ್ಕಾರದ ಉದ್ದೇಶಕ್ಕೆ ಅಡ್ಡಿಯಾಗುತ್ತಿಲ್ಲ, ಸರ್ಕಾರ ಮತ್ತು ಅರ್ಜಿದಾರರಿಬ್ಬರೂ ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿವೆ ಎಂದು ವಿವರಿಸಿದ್ದರು. ಮೂಲಸೌಕರ್ಯ ಅಭಿವೃದ್ಧಿ, ಔಷಧ ದಾಸ್ತಾನು, ಉಪಕರಣಗಳು ಮತ್ತು ಪೀಠೋಪಕರಣಗಳು, ಸಿಬ್ಬಂದಿ ವೇತನಗಳು, ಜನೌಷಧಿ ಕೇಂದ್ರ ನಡೆಸುವ ಉದ್ದೇಶಕ್ಕಾಗಿ ಅಗತ್ಯ ಪರವಾನಗಿ ಹಾಗೂ ಅನುಮತಿ ಪಡೆಯಲು ಅರ್ಜಿದಾರರು ಸಾಕಷ್ಟು ಹಣ ವ್ಯಯ ಮಾಡಿದ್ದಾರೆ. ಸರ್ಕಾರದ ವಿವಾದಿತ ಆದೇಶವು ಸಂವಿಧಾನದ ಪರಿಚ್ಛೇದ 19(1)(ಜಿ) ಅಡಿಯ ಅರ್ಜಿದಾರರ ಜೀವನೋಪಾಯದ ಹಕ್ಕು ಮತ್ತು ಸಂವಿಧಾನದ ಪರಿಚ್ಛೇದ 21ರ ಅಡಿಯ ಜೀವಿಸುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಆಕ್ಷೇಪಿಸಿದ್ದರು. ಅರ್ಜಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರದ ಪರ ವಕೀಲರು, ರಾಜ್ಯ ಸರ್ಕಾರವೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧವನ್ನು ಪೂರೈಸಲು ನಿರ್ಧರಿಸಿದೆ. ಆದ್ದರಿಂದ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳ ಕಾರ್ಯಾಚರಣೆ ಅನಿವಾರ್ಯವಲ್ಲ. ಔಷಧಿ ಕೇಂದ್ರಗಳು ಹೊರಗೆ ಕಾರ್ಯನಿರ್ವಹಿಸುವುದಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ, ಸರ್ಕಾರಿ ಆಸ್ಪತ್ರೆ ಆವರಣದೊಳಗಿನ ಸರ್ಕಾರಿ ಭೂಮಿಯಲ್ಲಿ ಮಾತ್ರ ಕೇಂದ್ರಗಳ ಕಾರ್ಯಾಚರಣೆ ನಿಲ್ಲಿಸಲು ಆದೇಶಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು. ಆಕ್ಷೇಪವೇನು? ಜನೌಷಧಿ ಕೇಂದ್ರಗಳು ಶೇ 50-90 ರಿಯಾಯಿತಿ ದರದಲ್ಲಿ ಜೆನೆರಿಕ್ ಔಷಧಿಗಳನ್ನು ಒದಗಿಸುತ್ತವೆ. ಇದರಿಂದಾಗಿ ಬಡತನ ರೇಖೆಗಿಂತ ಕೆಳಗಿರುವವರು, ಸ್ಥಿರ ಆದಾಯ ಹೊಂದಿರುವ ಹಿರಿಯ ನಾಗರಿಕರು, ದಿನಗೂಲಿ ಕಾರ್ಮಿಕರು ಮತ್ತು ಔಷಧಿಗಳ ಅಗತ್ಯವಿರುವ ದೀರ್ಘಕಾಲದ ರೋಗಿಗಳಿಗೆ ಆರೋಗ್ಯ ಸೇವೆ ಲಭ್ಯವಾಗುತ್ತದೆ. ಆದ್ದರಿಂದ, ಇದು ಯಾವುದೇ ರೀತಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ಮೇಲೆ ಪರಿಣಾಮ ಬೀರುವುದಿಲ್ಲ. ಬದಲಿಗೆ ಜನೌಷಧಿ ಕೇಂದ್ರಗಳನ್ನು ಮುಚ್ಚುವುದು ನಾಗರಿಕರ ಆರೋಗ್ಯದ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು.
ಡಾಲರ್ಗೆ 90.48ಕ್ಕೆ ಕುಸಿತ: ಇನ್ನೊಂದು ಸಾರ್ವಕಾಲಿಕ ದಾಖಲೆ
ಉಡುಪಿ | ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಸಂಶೋಧನೆಗೆ ಅವಕಾಶವಿದೆ : ಡಾ.ಗುರುಬಸವರಾಜ
ಉದ್ಯಾವರ ಎಸ್ಡಿಎಂ ಕಾಲೇಜಿನಲ್ಲಿ ಶಿಷ್ಯೋಪನಯನ ಸಂಸ್ಕಾರ
ಭಾರತದಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ: ಪವನ್ ಕಲ್ಯಾಣ್
ತಮಿಳುನಾಡಿನ ದೇವಸ್ಥಾನವೊಂದರ ದೀಪ ಬೆಳಗುವ ವಿಚಾರದಲ್ಲಿ ಹಿಂದೂಗಳ ಪರ ತೀರ್ಪು ನೀಡಿದ ನ್ಯಾಯಮೂರ್ತಿಯ ಪದಚ್ಯುತಿಗೆ ಸಂಸದರು ಯತ್ನಿಸುತ್ತಿರುವುದನ್ನು ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಪ್ರಶ್ನಿಸಿದ್ದಾರೆ. ಜಾತಿ, ಪ್ರಾದೇಶಿಕ ಭೇದಗಳಿಂದಾಗಿ ಹಿಂದೂಗಳು ಬಹುಸಂಖ್ಯಾತರು ಎಂಬುದು ಒಂದು ಮಿಥ್ಯೆಯಾಗಿದೆ ಎಂದಿರುವ ಅವರು, ಸನಾತನ ಧರ್ಮ ರಕ್ಷಣಾ ಮಂಡಳಿ ಸ್ಥಾಪನೆಗೆ ಕರೆ ನೀಡಿದ್ದಾರೆ.
ಬ್ರಹ್ಮಾವರ | ದೇಶದ ಆರ್ಥಿಕಾಭಿವೃದ್ಧಿಗೆ ಗ್ರಾಮೀಣ ಭಾರತದ ಅಭಿವೃದ್ಧಿ ಮುಖ್ಯ : ಟಿ.ಎಸ್.ಎನ್.ಪೂರ್ಣಾನಂದ
ಬ್ರಹ್ಮಾವರ ರುಡ್ಸೆಟ್ನಲ್ಲಿ ಬ್ಯಾಂಕ್ ಮಿತ್ರ ತರಬೇತಿಗೆ ಚಾಲನೆ
ಮಲ್ಪೆ | ಕನ್ನಡೇತರರಿಗೆ ಕನ್ನಡ ಕಲಿಕಾ ತರಬೇತಿ ಉದ್ಘಾಟನೆ
ಮಲ್ಪೆ, ಡಿ.11: ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನ ಸಹಯೋಗದಲ್ಲಿ ನಡೆಯುವ ಮೂರು ತಿಂಗಳ ಕನ್ನಡೇತರರಿಗೆ ಕನ್ನಡ ಕಲಿಕಾ ತರಬೇತಿ ಶಿಬಿರ ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್ ನ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಕನ್ನಡೇತರರಿಗೆ ಕನ್ನಡ ಕಲಿಕಾ ತರಬೇತಿಯು ಕನ್ನಡ ಕಲಿಕಾ ಆಸ್ತಕರಿಗೆ ಉತ್ತಮ ಅವಕಾಶವಾಗಿದ್ದು, ಪ್ರತಿಯೊಬ್ಬರು ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮವನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ ಉದ್ಘಾಟಿಸಿದರು. ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿಕುಮಾರ್ ಎ., ಮುಖ್ಯ ಹಣಕಾಸು ಅಧಿಕಾರಿ ಶಂಕರ್ ನಟರಾಜ್, ಉಪಪ್ರಧಾನ ವ್ಯವಸ್ಥಾಪಕ ಎಂ.ಅಂಬಲವನನ್, ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ, ಶಿಕ್ಷಕಿ ದೀಪಿಕಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರೇಣುಕಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಹಾಡನ್ನು ದೇಶ ವಿಭಜಿಸಲು ಬಳಸಲಾಗುತ್ತಿದೆ: ನಟ ಕಿಶೋರ್ ಕುಮಾರ್
ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಮತ್ತು ಭಾರತದಾದ್ಯಂತ ಜನರನ್ನು ಒಗ್ಗೂಡಿಸಿದ(ವಂದೇ ಮಾತರಂ) ಹಾಡನ್ನು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು, ತಮ್ಮ ರಾಜಕೀಯ ಲಾಭಕ್ಕೆ ಬಳಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಟ ಕಿಶೋರ್ ಕುಮಾರ್ ಖಂಡಿಸಿದ್ದಾರೆ. ಗುರುವಾರ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ‘ಲೋಕಸಭೆಯ ಚರ್ಚೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿಯ ಚಿತ್ರ’ವನ್ನು ‘ಜೈ ಶ್ರೀರಾಮ್ ನಿಂದ ವಂದೇ ಮಾತರಂವರೆಗೆ’ ಎಂದು ಶೀರ್ಷಿಕೆ ನೀಡಿ, ಅವರು ಪೋಸ್ಟ್ ಮಾಡಿದ್ದಾರೆ. ಇತರರನ್ನು ಪ್ರೀತಿಯಿಂದ ಸ್ವಾಗತಿಸಲು ಬಳಸುತ್ತಿದ್ದ ಅಭಿವ್ಯಕ್ತಿಯನ್ನು ಹೇಗೆ ಸ್ವಾಧೀನಪಡಿಸಿಕೊಂಡು ಅದನ್ನು ಯುದ್ಧಘೋಷವಾಗಿ, ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ, ಅಧಿಕಾರ ಹಿಡಿಯುವ ಸುಲಭ ಸಾಧನವಾಗಿ ಪರಿವರ್ತಿಸಲಾಗಿದೆಯೋ, ಹಾಗೆಯೇ, ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರವಿಲ್ಲದ, ನಿಜವಾದ ದೇಶಭಕ್ತರು ನಿರ್ಮಿಸಿದ ಎಲ್ಲವನ್ನೂ ಮಾರುತ್ತಿರುವ ಅಧಿಕಾರದಲ್ಲಿರುವ ನಿಷ್ಪ್ರಯೋಜಕ ಜನರು, ಈಗ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಬಳಸಿದ ಹಾಡನ್ನು ರಾಜಕೀಯ ಲಾಭಕ್ಕೆ ಬಳಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ. ಕುಸಿಯುತ್ತಿರುವ ರೂಪಾಯಿ ಮೌಲ್ಯ, ಆರ್ಥಿಕತೆ ಮತ್ತು ಕುಸಿಯುತ್ತಿರುವ ಪ್ರಜಾಪ್ರಭುತ್ವದ ಸಂಸ್ಥೆಗಳು, ನಕಲಿ ಜಿಡಿಪಿ ಮತ್ತು ರೈತರಿಗೆ ನೀಡಿದ ನಕಲಿ ಭರವಸೆಗಳು, ಆರೋಗ್ಯ ಮತ್ತು ನಿರುದ್ಯೋಗ, ಅಮೆರಿಕ ಮತ್ತು ಚೀನಾ, ಮಣಿಪುರ ಮತ್ತು ಲಡಾಖ್, ವಿಜ್ಞಾನಿಗಳು ಮತ್ತು ವಿದ್ವಾಂಸರ ಅಕ್ರಮ ಬಂಧನಗಳು ಮುಂತಾದ ಎಲ್ಲ ಅಗತ್ಯ ಮತ್ತು ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಹೊತ್ತಿಗೆ ಈ ಮೂರ್ಖರಿಂದ ಏನನ್ನೂ ನಿಭಾಯಿಸಲು ಸಾಧ್ಯವಿಲ್ಲವೆಂದು ನಾವು ಅರ್ಥಮಾಡಿಕೊಂಡಿರಬೇಕಿತ್ತು. ಅವರು ಮಾಡಬಹುದಾದದ್ದು ಇಷ್ಟೇ ‘ವಿಭಜಿಸು ಇಲ್ಲ, ದಿಕ್ಕು ತಪ್ಪಿಸು’ ಎಂದು ನಟ ಕಿಶೋರ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ಅಮಿತ್ ಶಾ, ಇಂದು ನಡ್ಡಾ; ರಾಜ್ಯಸಭೆಯಲ್ಲಿ ಅಬ್ಬರಿಸಿದ ಬಿಜೆಪಿ ಅಧ್ಯಕ್ಷ! ಸಂಸತ್ ಕಲಾಪದ ಪ್ರಮುಖಾಂಶಗಳು
ಸಂಸತ್ತಿನ ಚಳಿಗಾಲದ ಅಧಿವೇಶನದ 9ನೇ ದಿನವಾದ ಗುರುವಾರ, ಲೋಕಸಭೆಯು ಪ್ರಮುಖ ಆರ್ಥಿಕ ವಿಷಯಗಳತ್ತ ಗಮನಹರಿಸಿದರೆ, ರಾಜ್ಯಸಭೆಯು ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. ಲೋಕಸಭೆಯಲ್ಲಿ 2025-26ರ ಸಾಲಿನ ಪೂರಕ ಅನುದಾನಗಳ ಕುರಿತು ಚರ್ಚೆ ನಡೆದರೆ, ರಾಜ್ಯಸಭೆಯಲ್ಲಿ 'ವಂದೇ ಮಾತರಂ' ಗೀತೆಯ ಮೇಲಿನ ಚರ್ಚೆಯನ್ನು ಜೆ.ಪಿ. ನಡ್ಡಾ ಅವರು ಕಾಂಗ್ರೆಸ್ ವಿರುದ್ಧದ ವಾಗ್ದಾಳಿಯೊಂದಿಗೆ ಮುಕ್ತಾಯಗೊಳಿಸಿದರು. ಇದೇ ವೇಳೆ 'ಒಂದು ರಾಷ್ಟ್ರ, ಒಂದು ಚುನಾವಣೆ' ವರದಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
50% Tariffs: ಅಮೇರಿಕಾದ ನಂತರ ಮತ್ತೊಂದು ದೇಶದಿಂದ ಭಾರತದ ಮೇಲೆ ಶೇ 50% ಸುಂಕ!
ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಒಂದೊಂದೇ ಸುಂಕವನ್ನು ಭಾರತದ ಮೇಲೆ ವಿಧಿಸುತ್ತಿರುವಾಗಲೇ ಭಾರತಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಭಾರತದಿಂದ ಆಮದು ಆಗುವ ವಸ್ತುಗಳ ಮೇಲೆ ಅಮೇರಿಕಾ ಶೇ.50 ರಷ್ಟು ಸುಂಕ ವಿಧಿಸಿದ ನಂತರ ಇದೀಗ ಮೆಕ್ಸಿಕೊದ ಸೆನೆಟ್ ಭಾರತದ ಮೇಲೆ ದುಬಾರಿ ಶೇ 50 ರಷ್ಟು ತೆರಿಗೆ ವಿಧಿಸುವುದಕ್ಕೆ ಮುಂದಾಗಿದೆ. ಜಾಗತಿಕ ವ್ಯಾಪಾರ ಯುದ್ಧದ ನಡುವೆ
ತಿರುಪತಿ ತಿಮ್ಮಪ್ಪನಿಗೆ 4 ನಾಮ! ಭಕ್ತರಿಗೆ ರೇಷ್ಮೆ ಶಲ್ಯದ ಶಾಕ್; ಲಡ್ಡು ಆಯ್ತು, ಈಗ ರೇಷ್ಮೆ ಸರದಿ - ಏನಿದು ಹಗರಣ?
ತಿರುಪತಿ ತಿರುಮಲ ದೇವಸ್ಥಾನದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗೆ, ಶುದ್ಧ ರೇಷ್ಮೆಯ ಬದಲಿಗೆ ಶೇ.100ರಷ್ಟು ಪಾಲಿಸ್ಟರ್ ದುಪಟ್ಟಾಗಳನ್ನು ದೇವಸ್ಥಾನಕ್ಕೆ ಪೂರೈಸಲಾಗಿದೆ. ಈ ವಂಚನೆಯಲ್ಲಿ ವಿಆರ್ಎಸ್ ಎಕ್ಸ್ಪೋರ್ಟ್ಸ್ ಸಂಸ್ಥೆ ಪ್ರಮುಖ ಪಾತ್ರ ವಹಿಸಿದ್ದು, ಕೋಟ್ಯಂತರ ರೂಪಾಯಿ ವಂಚನೆ ನಡೆಸಿದೆ. ಪ್ರಕರಣವನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಒಪ್ಪಿಸಲಾಗಿದೆ.
ಕನ್ನಡಿಗರ ಆರ್ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಜೊತೆ ಹಾರ್ದಿಕ್ ಪಾಂಡ್ಯ 2ನೇ ಮದುವೆ ಬಗ್ಗೆ... Smriti Mandhana
ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ನಾಯಕಿ ಆಗಿರುವ ಸ್ಮೃತಿ ಮಂಧಾನ ಬದುಕಿನಲ್ಲಿ ಭಾರಿ ದೊಡ್ಡ ಬಿರುಗಾಳಿ ಎದ್ದಿದ್ದು, ಸ್ಮೃತಿ ಮಂಧಾನ ಮದುವೆ ಆಗಬೇಕಿದ್ದ ಹುಡುಗ ಮೋಸ ಮಾಡಿ ಬೇರೆ ಹುಡುಗಿ ಜೊತೆಗೆ ಸಂಬಂಧ ಹೊಂದಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಅದರಲ್ಲೂ ಈ ನಡುವೆ ಸ್ಟಾರ್ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅವರ ಮಾಜಿ ಹೆಂಡತಿ ಜೊತೆಗೆ ಸ್ಮೃತಿ
ದ.ಕ.ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ : ಸಿಎಂಗೆ ಉಸ್ತುವಾರಿ ಸಚಿವರ ಮನವಿ
ಮಂಗಳೂರು,ಡಿ.1: ದ.ಕ.ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ ಸ್ಥಾಪಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ದ.ಕ.ಜಿಲ್ಲೆಯಲ್ಲಿ ಇತ್ತೀಚೆಗೆ ಅಸಾಂಕ್ರಾಮಿಕ ರೋಗಗಳಾದ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಗಳ ಸಂಖ್ಯೆ ಹೆಚ್ಚುತ್ತಿದೆ. ತಾನು ಜಿಲ್ಲೆಗೆ ಭೇಟಿ ನೀಡುತ್ತಿರುವ ಸಂದರ್ಭಗಳಲ್ಲಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಗಳ ಅಗತ್ಯ ಚಿಕಿತ್ಸೆಗೆ ಪ್ರತ್ಯೇಕವಾಗಿ ಸರಕಾರಿ ಆಸ್ಪತ್ರೆಗಳನ್ನು ಪ್ರಾರಂಭಿಸಲು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಕೋರಿದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಹೊರವಲಯದ ಮೂಡುಶೆಡ್ಡೆಯ ಕ್ಷಯರೋಗಗಳ ಆಸ್ಪತ್ರೆಯ ಆವರಣದಲ್ಲಿ ಲಭ್ಯರುವ ಜಾಗದಲ್ಲಿ ಶ್ರೀಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗಳ ಒಂದೊಂದು ಘಟಕಗಳನ್ನು ಸ್ಥಾಪಿಸಲು ಕ್ರಮ ವಹಿಸಬೇಕು ಎಂದು ಮನವಿಯಲ್ಲಿ ವಿವರಿಸಿದ್ದಾರೆ.
ಉಡುಪಿ | ಡಿ.14ರಂದು ಶೀರೂರು ಪರ್ಯಾಯದ ಧಾನ್ಯ ಮುಹೂರ್ತ
ಉಡುಪಿ, ಡಿ.11: 2026ರ ಜ.18ರಂದು ನಡೆಯುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಅವರ ಪ್ರಥಮ ಪರ್ಯಾಯದ ಪೂರ್ವ ಸಿದ್ಧತೆಗಳಲ್ಲಿ ಕೊನೆಯದಾದ ಧಾನ್ಯ ಮುಹೂರ್ತ ಡಿ.14ರ ರವಿವಾರ ಮುಂಜಾನೆ 7:45ಕ್ಕೆ ನಡೆಯಲಿದೆ ಎಂದು ಶೀರೂರು ಮಠದ ದಿವಾನರಾದ ಡಾ.ಉದಯ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ. ರಥಬೀದಿಯಲ್ಲಿರುವ ಶೀರೂರು ಮಠದಲ್ಲಿ ಇಂದು ಕರೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಪರ್ಯಾಯ ಅವಧಿಯಲ್ಲಿ ದೇವರ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಅನ್ನ ಪ್ರಸಾದ ಉಣಬಡಿಸಲು ಅಕ್ಕಿಗಾಗಿ ಭತ್ತದೊಂದಿಗೆ ಬೇಳೆಕಾಳುಗಳನ್ನು ಸಂಗ್ರಹಿಸಿಡುವುದೇ ಈ ಮುಹೂರ್ತದ ಉದ್ದೇಶ ಎಂದರು. ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಜ.18ರ ಬೆಳಗಿನ ಜಾವ ಸರ್ವಜ್ಞ ಪೀಠಾರೋಹಣ ಮಾಡಿ ಶ್ರೀಕೃಷ್ಣಪೂಜಾ ದೀಕ್ಷೆಯನ್ನು ಸ್ವೀಕರಿಸಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ವಿವಿಧ ಕ್ಷೇತ್ರಗಳ ತೀರ್ಥ ಯಾತ್ರೆಯಲ್ಲಿರುವ ಶ್ರೀಗಳು ಜನವರಿ ಮೊದಲ ವಾರ ಪುರಪ್ರವೇಶ ಮಾಡಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪರ್ಯಾಯ ಸ್ವಾಗತ ಸಮಿತಿಯ ಮಟ್ಟಾರು ರತ್ನಾಕರ ಹೆಗ್ಡೆ, ಸುಪ್ರಸಾದ್ ಶೆಟ್ಟಿ ಬೈಕಾಡಿ, ಮಧುಕರ ಮುದ್ರಾಡಿ, ನಂದನ್ ಜೈನ್ ಹಾಗೂ ಮೋಹನ ಭಟ್ ಉಪಸ್ಥಿತರಿದ್ದರು.
ಸದನ ಹೈಲೈಟ್ಸ್: ಸಿದ್ದು ದಾಖಲೆ, ಕಾಣದ ಕುರ್ಚಿಗೆ ಹಂಬಲಿಸೋ ಮನ! ಯತ್ನಾಳ್, ಸುನೀಲ್ ಸ್ವಾರಸ್ಯದ ಮಾತು, ಕಾಗೆ ಖಡಕ್ ನುಡಿ
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನಾಲ್ಕನೇ ದಿನವಾದ ಇಂದು ಡಿ.11ರಂದು ಉತ್ತರ ಕರ್ನಾಟಕದ ಚರ್ಚೆಯ ವೇಳೆ ಬಿಜೆಪಿ ಮತ್ತು ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಸಚಿವರ ನಡುವೆ ಮಾತುಕತೆ ನಡೆಯಿತು. ಡಿಕೆ ಶಿವಕುಮಾರ್ ಅವರ ಕುರ್ಚಿ ಆಸೆ ಮತ್ತು ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿ ಕುರಿತು ಬಿಜೆಪಿ ನಾಯಕರು ವ್ಯಂಗ್ಯವಾಡಿದರು. ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಕಾಂಗ್ರೆಸ್ ಶಾಸಕ ರಾಜು ಕಾಗೆ ಸದನದಲ್ಲಿ ಪ್ರಸ್ತಾಪಿಸಿ, ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಕುಂದಾಪುರ | ಹೈನುಗಾರಿಕೆ ಸ್ಥಳೀಯ ಆರ್ಥಿಕತೆಗೆ ವರದಾನ : ಜಯಕರ ಶೆಟ್ಟಿ ಇಂದ್ರಾಳಿ
ಕುಂದಾಪುರ, ಡಿ.11: ಬೇರೆಲ್ಲ ಕ್ಷೇತ್ರ, ಉದ್ಯಮಗಳಲ್ಲಿ ಹಳ್ಳಿಯ ಹಣ ಪಟ್ಟಣಕ್ಕೆ ಹೋಗುತ್ತವೆ. ಆದರೆ ಹೈನುಗಾರಿಕೆಯಿಂದ ಮಾತ್ರ ಪಟ್ಟಣದ ಹಣ ಹಳ್ಳಿಗೆ ಬರುತ್ತಿದೆ. ಹೈನುಗಾರಿಕೆ ನಮ್ಮ ಸ್ಥಳೀಯ ಆರ್ಥಿಕತೆಗೆ ವರದಾನವಾಗಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ. ಗುರುವಾರ ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ರಾಜ್ಯ ಸಹಕಾರ ಮಹಾಮಂಡಲ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜಿಲ್ಲಾ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ನಡೆದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎನ್. ಮಂಜಯ್ಯ ಶೆಟ್ಟಿ ಮಾತನಾಡಿ, ನಮ್ಮಲ್ಲಿ ಹಾಲಿಗೆ 42 ರೂ. ಇದ್ದು, ಬೇರೆ ರಾಜ್ಯಗಳಲ್ಲಿ 50 ರೂ.ಗಿಂತ ಹೆಚ್ಚಿದೆ. ಹೈನುಗಾರರಿಗೆ ಸರಕಾರದ 5 ರೂ. ಸಬ್ಸಿಡಿ ನಿಯಮಿತವಾಗಿ ಸಿಗುತ್ತಿಲ್ಲ. ಒಂದೋ ಸಬ್ಸಿಡಿ ನಿರಂತರ ಕೊಡಬೇಕು. ಇಲ್ಲದಿದ್ದರೆ ಹಾಲಿನ ದರವನ್ನು ಕನಿಷ್ಠ 52 ರೂ.ಗೆ ಏರಿಸಬೇಕು ಎಂದವರು ಒತ್ತಾಯಿಸಿದರು. ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಮಮತಾ ಆರ್. ಶೆಟ್ಟಿ ಮಾತನಾಡಿದರು. ಬಳಿಕ ಸಂಪನ್ಮೂಲ ವ್ಯಕ್ತಿಗಳಾದ ಡಾ. ಶಿವರಾಮ ಕಾರಂತ ಟ್ರಸ್ಟ್ ನ ಅಧ್ಯಕ್ಷ ಗಣನಾಥ ಶೆಟ್ಟಿ ಎಕ್ಕಾರು ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಹಕಾರ ಚಳುವಳಿ ಕುರಿತು ಹಾಗೂ ಪಶು ವೈದ್ಯ, ಒಕ್ಕೂಟದ ನಿವೃತ್ತ ಉಪ ವ್ಯವಸ್ಥಾಪಕ ಡಾ. ಅನಿಲ್ ಕುಮಾರ್ ಶೆಟ್ಟಿ ಆಧುನಿಕ ಹೈನುಗಾರಿಕೆ ಮತ್ತು ಹಾಲಿನ ಗುಣಮಟ್ಟದ ಬಗ್ಗೆ ಉಪನ್ಯಾಸ ನೀಡಿದರು. ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉದಯ ಕುಮಾರ್ ಹಟ್ಟಿಯಂಗಡಿ ಉಪಸ್ಥಿತರಿದ್ದರು. ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Siddaramaiah: ಸಿದ್ದರಾಮಯ್ಯ ಹೆಲಿಕಾಪ್ಟರ್ ಹಾರಾಟ ಬಲು ದುಬಾರಿ! ಸರ್ಕಾರದಿಂದ ಖರ್ಚಾಗಿದ್ದೆಷ್ಟು ಗೊತ್ತಾ?
ಬೆಳಗಾವಿ, ಡಿಸೆಂಬರ್ 11: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರವಾಸದ ವೆಚ್ಚ ತೀವ್ರ ಅಚ್ಚರಿ ಮೂಡಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಈವರೆಗೆ ಅಂದರೆ ಎರಡೂವರೆ ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣ ವೆಚ್ಚದ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ. ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚಾಗಿ ಯಾವ ಸ್ಥಳಕ್ಕೆ ಪ್ರವಾಸ ಕೈಗೊಂಡರು ಹೆಚ್ಚಾಗಿ ಹೆಲಿಕಾಪ್ಟರ್ನಲ್ಲೇ
ಉಡುಪಿ | ಡಿ.13ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ
ಉಡುಪಿ, ಡಿ.11: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಡಿ.13ರ ಶನಿವಾರ ಸಂಜೆ 5:45ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ ಎಂದು ಉಡುಪಿ ಘಟಕದ ಜೊತೆ ಕಾರ್ಯದರ್ಶಿ ಹಾಗೂ ಸಂಘಟನಾ ಕಾರ್ಯದರ್ಶಿ ಮುರುಳಿ ಕಡೆಕಾರ್ ತಿಳಿಸಿದ್ದಾರೆ. ಉಡುಪಿ ಪತ್ರಿಕಾ ಭವನದಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಾರಂಭಿಕ 45 ನಿಮಿಷಗಳ ಕಾಲ ನಡೆಯುವ ಸಭಾ ಕಾರ್ಯಕ್ರಮವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದು, ಕಿರಿಯ ಯತಿಗಳಾದ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿರುವರು ಎಂದರು. ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಎಲ್ಲಾ ಸ್ತರಗಳ ಪ್ರಮುಖರು, ಗಣ್ಯರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಮಾಜಿ ಸಚಿವ ಡಾ.ವಿ.ಎಸ್.ಆಚಾರ್ಯರಿಗೆ ಅರ್ಪಿಸಲಾಗಿದೆ ಎಂದು ಮುರಳಿ ಕಡೆಕಾರ್ ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ- ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ, ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೂ ಮುನ್ನ ಆಳ್ವಾಸ್ ವಿದ್ಯಾರ್ಥಿಗಳಿಂದ ಸಿಂಗಾರಿ ಮೇಳ ಫ್ಯೂಷನ್ ನಡೆಯಲಿದೆ. ಬೊಂಬೆ ವಿನೋದಾವಳಿಯೊಂದಿಗೆ ಆಕರ್ಷಕ ಸಿಡಿಮದ್ದಿನ ಪ್ರದರ್ಶನವಿರಲಿದೆ. ಪ್ರೇಕ್ಷಕರಿಗಾಗಿ 15,000ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ. ಎಲ್ಲಾ ಕಾರ್ಯಕ್ರಮಗಳು ಕ್ಲಪ್ತ ಸಮಯಕ್ಕೆ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯ ಗೊಳ್ಳಲಿದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಗೌರವಾಧ್ಯಕ್ಷ ವಿ.ಜಿ.ಶೆಟ್ಟಿ, ಕಾರ್ಯದರ್ಶಿ ಭುವನಪ್ರಸಾದ್ ಹೆಗ್ಡೆ, ಕಾರ್ಯಕ್ರಮ ಸಂಘಟಕರಾದ ನಿದೀಶ್ ತೋಳಾರ್, ಅಂಬರೀಷ್, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ, ಸುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಬೆಳಗಾವಿ (ಸುವರ್ಣ ವಿಧಾನಸೌಧ): ‘ಅಧಿಕಾರಿಗಳು ತಪ್ಪು ಮಾಡಿದ್ದಾರೆಂದು ಕ್ರಮ ಕೈಗೊಳ್ಳುತ್ತಾ ಹೋದರೆ ವಿಧಾನಸಭೆಯಲ್ಲಿನ ಅಧಿಕಾರಿಗಳ ಗ್ಯಾಲರಿಯೇ ಖಾಲಿ ಖಾಲಿಯಾಗಲಿದೆ’ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು, ಸದಸ್ಯರೊಬ್ಬರ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿದ ಪ್ರಸಂಗ ನಡೆಯಿತು. ಗುರುವಾರ ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ಶರಣಗೌಡ ಕಂದಕೂರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಕಾರಿಗಳು ‘ವಿಧಾನಸಭೆ ಬದಲಿಗೆ ವಿಧಾನ ಪರಿಷತ್’ ಎಂದು ತಪ್ಪಾಗಿ ನಮೂದಿಸಿ ಉತ್ತರ ನೀಡಿದ್ದರು. ಇದರಿಂದ ಆಕ್ರೋಶಿತರಾದ ಶರಣಗೌಡ ಕಂದಕೂರ್, ನಾನು ವಿಧಾನಸಭೆ ಸದಸ್ಯ. ಆದರೆ, ಅಧಿಕಾರಿಗಳು ವಿಧಾನ ಪರಿಷತ್ ಎಂದು ತಪ್ಪಾಗಿ ಉತ್ತರ ನೀಡಿದ್ದಾರೆಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ, ನನಗೆ ನೀಡಿದ ಉತ್ತರದಲ್ಲಿ ವಿಧಾನಸಭೆ ಎಂದು ಇದೆ. ಆ ಪ್ರತಿಯನ್ನು ತಮಗೆ ಕಳುಹಿಸುತ್ತೇನೆ ಎಂದರು. ತಪ್ಪಾಗಿ ಉತ್ತರ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶರಣಗೌಡ ಕಂದಕೂರ್ ಆಗ್ರಹಿಸಿದರು. ಆಗ ಮಧ್ಯಪ್ರವೇಶಿಸಿದ ಸ್ಪೀಕರ್ ಖಾದರ್, ತಪ್ಪಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡದರೆ ಅಧಿಕಾರಿಗಳ ಗ್ಯಾಲರಿ ಖಾಲಿಯಾಗಲಿದೆ ಎಂದು ಪ್ರತಿಕ್ರಿಯೆ ನೀಡಿದರು.
30,000 ಅಡಿಗಳಷ್ಟು ಮೇಲೆ ವಿಮಾನ ಸಿಬ್ಬಂದಿ ಜೀವ ಉಳಿಸಿದ ಇಬ್ಬರು ಭಾರತೀಯ ವೈದ್ಯರು
ಇಥಿಯೋಪಿಯಾದಿಂದ ಭಾರತಕ್ಕೆ ಹೊರಟಿದ್ದ ಇಥಿಹಾದ್ ಏರ್ಲೈನ್ಸ್ ವಿಮಾನದಲ್ಲಿ ಸೇವಾ ಸಿಬ್ಬಂದಿಯೊಬ್ಬರು 30,000 ಅಡಿ ಎತ್ತರದಲ್ಲಿ ಅಸ್ವಸ್ಥರಾದರು. ಡಾ. ಗೋಪಿನಾಥನ್ ಮತ್ತು ಡಾ. ಸುದರ್ಶನ್ ಬಾಲಾಜಿ ಅವರು ತಕ್ಷಣವೇ ಸ್ಪಂದಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅವರ ಪ್ರಾಣ ಕಾಪಾಡಿದರು. ಚೆನ್ನೈಗೆ ವಿಮಾನ ತಲುಪಿದ ನಂತರ, ಅವರನ್ನು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಯಿತು. ವೈದ್ಯರ ಸಮಯೋಚಿತ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
IND Vs SA- ಯಾವ ಸ್ಪೆಷಲ್ ಟ್ರಿಕ್ಸ್ ಅನ್ನೂ ಮಾಡದ ಸೂರ್ಯಕುಮಾರ್ ಯಾದವ್! ಟಾಸ್ ಗೆದ್ದಿದ್ದಕ್ಕೆ ಖುಷಿಯೋ ಖುಷಿ!
ಕಳೆದೆರಡು ವರ್ಷಗಳಿಂದ ಭಾರತಕ್ಕೆ ಅಂಟಿದ್ದ ಟಾಸ್ ಕಳಂಕ ನಿಧಾನಕ್ಕೆ ಕಳಚುವ ಲಕ್ಷಣ ತೋರುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರು ಟಾಸ್ ಗೆದ್ದ ಮೇಲೆ ಇದೀಗ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಸಹ ಟಾಸ್ ಗೆದ್ದಿದ್ದಾರೆ. ನ್ಯೂ ಚಂಡೀಗಢದಲ್ಲಿ ಗುರುವಾರ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಫೀಲ್ಡಿಂಗ್ ಆನ್ನು ಆಯ್ದುಕೊಂಡಿತು. ಕೆಎಲ್ ರಾಹುಲ್ ಅವರು ಎಡಗೈಯಲ್ಲಿ ಟಾಸ್ ಎಸೆದೆ ಯಶಸ್ಸು ಸಿಕ್ಕಿತ್ತು. ಅದೇ ತಂತ್ರವನ್ನು ತಾನೂ ಅಳವಡಿಸಿಕೊಳ್ಳುವುದಾಗಿ ಅವರು ಕಳೆದ ಪಂದ್ಯಕ್ಕೂ ಮುನ್ನ ತಿಳಿಸಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಅವರು ಟಾಸ್ ಗೆಲ್ಲುವ ಸಲುವಾಗಿ ಯಾವ ಹೊಸ ಟ್ರಿಕ್ಸ್ ಅನ್ನೂ ಅಳವಡಿಸಲಿಲ್ಲ. ನಾಣ್ಯವನ್ನು ಹಿಡಿದು ಸ್ವಲ್ಪ ಬಗ್ಗಿ ಬಲಗೈನಲ್ಲೇ ಎತ್ತರಕ್ಕೆ ಹಾರಿಸಿದರಷ್ಟೇ. ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಐಡನ್ ಮಾರ್ಕಂ ಅವರು ಟೇಲ್ ಎಂದು ಹೇಳಿದರು. ಆದರೆ ಬಿದ್ದಿದ್ದು ಹೆಡ್ ಆಗಿದ್ದರಿಂದ ಭಾರತ ತಂಡದ ನಾಯಕನ ಮುಖದಲ್ಲಿ ಸಂತಸ ಅರಳಿತು. ಈ ವೇಳೆ ಕಾಮೆಂಟ್ರಿ ಮಾಡುತ್ತಿದ್ದ ಟೀಂ ಇಂಡಿಯಾ ಮಾಜಿ ಕೋಚ್ ರವಿ ಶಾಸ್ತ್ರಿ ಅವರು ಸರ್ ಪ್ರೈಸ್ ಸರ್ ಪ್ರೈಸ್ ಎಂದು 2 ಬಾರಿ ಉದ್ಗಾರ ತೆಗೆದರು. ಟಾಸ್ ಗೆದ್ದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಅವರು ಸಂತಸ ವ್ಯಕ್ತಪಡಿಸಿದರು. ಜೊತೆಗೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸುತ್ತಿರುವುದಾಗಿ ಮಾಹಿತಿ ನೀಡಿದರು. ಹೀಗಾಗಿ ಅವರನ್ನು ಈ ಪಂದ್ಯದಿಂದಲೂ ಹೊರಗಿಡಲಾಗಿದೆ. ಭಾರತ ಪ್ಲೇಯಿಂಗ್ ಇಲೆವೆನ್ ಸೂರ್ಯಕುಮಾರ್ ಯಾದವ್ (ನಾಯಕ),, ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್. ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಐಡೆನ್ ಮಾರ್ಕಂ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೆರಾ, ಜಾರ್ಜ್ ಲಿಂಡೆ, ಮಾರ್ಕೊ ಜಾನ್ಸೆನ್, ಲುಥೋ ಸಿಪಾಮ್ಲಾ, ಲುಂಗಿ ಎನ್ಗಿಟ್ನೆ ಬಾರ್ಟ್ಡಿ
ಭಾರತದ ಮೇಲೆ 50% ಸುಂಕ ಹೇರಿದ ಅಮೆರಿಕ ನೆರೆ ರಾಷ್ಟ್ರ, ಆತಂಕದಲ್ಲಿ ₹9,000 ಕೋಟಿ ಮೌಲ್ಯದ ರಫ್ತು!
ಅಮೆರಿಕದ ನಂತರ ಇದೀಗ ಮೆಕ್ಸಿಕೋ ಸರ್ಕಾರ ಕೂಡ ಭಾರತದ ರಫ್ತು ವಹಿವಾಟಿಗೆ ಭಾರೀ ಆಘಾತ ನೀಡಿದೆ. ಮೆಕ್ಸಿಕೋ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದ ಹೊಂದಿರದ ಭಾರತ, ಚೀನಾ, ದಕ್ಷಿಣ ಕೊರಿಯಾದಂತಹ ರಾಷ್ಟ್ರಗಳಿಂದ ಆಮದಾಗುವ ಆಯ್ದ ವಸ್ತುಗಳ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸಲು ಮೆಕ್ಸಿಕೋ ನಿರ್ಧರಿಸಿದೆ. ಇದರಿಂದಾಗಿ ಭಾರತದ ವಾಹನ ರಫ್ತು ಉದ್ಯಮಕ್ಕೆ ದೊಡ್ಡ ಮಟ್ಟದ ನಷ್ಟ ಉಂಟಾಗುವ ಸಾಧ್ಯತೆಯಿದ್ದು, ಮಾರುತಿ ಸುಜುಕಿ, ವೋಕ್ಸ್ವ್ಯಾಗನ್ ಮತ್ತು ಹ್ಯುಂಡೈನಂತಹ ಕಂಪನಿಗಳ ರಫ್ತು ವಹಿವಾಟಿನ ಮೇಲೆ ನೇರ ಪರಿಣಾಮ ಬೀರಲಿದೆ.
ಕಾರ್ಕಳ | ಕೆ.ಎಮ್.ಇ.ಎಸ್. ಸಂಸ್ಥೆಯಲ್ಲಿ ವಿಜ್ಞಾನ ಮಾದರಿ ಪ್ರದರ್ಶನ, ವಾಣಿಜ್ಯ ಉತ್ಸವ
ಕಾರ್ಕಳ : ಕಾರ್ಕಳ ಕುಕ್ಕುಂದೂರು ಕೆ.ಎಮ್.ಇ.ಎಸ್. ವಿದ್ಯಾ ಸಂಸ್ಥೆಯಲ್ಲಿ ಇತ್ತೀಚೆಗೆ ಕಾಲೇಜಿನ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ವಿದ್ಯಾರ್ಥಿಗಳು ಕೈಯಿಂದ ತಯಾರಿಸಿದ ವಿಜ್ಞಾನ ಉಪಕರಣಗಳ ಮಾದರಿ ಪ್ರದರ್ಶನ ನಡೆಯಿತು. ಕಾಲೇಜಿನ ವಿಜ್ಞಾನದ ವಿದ್ಯಾರ್ಥಿ ಮುಹಮ್ಮದ್ ಮುವಾಝ್ ತನ್ನ ಹತ್ತು ಮಂದಿ ವಿದ್ಯಾರ್ಥಿಗಳ ತಂಡದೊಂದಿಗೆ ರಚಿಸಿದ ಮುವತ್ತೊಂದು ಬಗೆ ಬಗೆಯ ವಿಜ್ಞಾನದ ಉಪಕರಣಗಳು ರೋಚಕವಾಗಿ ಕಂಡು ಬಂದಿದ್ದು, ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಇಮ್ತಿಯಾಜ್ ರವರು ಕಾರ್ಯಕ್ರಮವನ್ನು ಉದ್ಗಾಟಿಸುತ್ತಾಕೆ.ಎಂ.ಇ.ಎಸ್ ವಿದ್ಯಾ ಸಂಸ್ಥೆಯು ಸಮಾಜದಲ್ಲಿ ವೈದ್ಯರು, ಇಂಜಿನಿಯರ್ , ಬ್ಯಾಂಕಿನ ಉದ್ಯೋಗಿ, ಐ.ಎ.ಎಸ್, ಐ ಪಿ ಎಸ್ ಆಫಿಸರ್, ವಿಜ್ಞಾನಿ, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು,ಮೇಲಾಗಿ ಉತ್ತಮ ವ್ಯಕ್ತಿಗಳ ನಿರ್ಮಾಣವನ್ನುಂಟು ಮಾಡುವಲ್ಲಿ ದಾಪುಗಾಲು ಹಾಕಿಕೊಂಡು ಮುಂದುವರಿಯುತ್ತಿದೆ. ಇಂದು ವಿದ್ಯಾಥಿಗಳು ತಯಾರಿಸಿದ ಮಾದರಿ ಉಪಕರಣಗಳ ಬೆಲೆ ಕಟ್ಟಲು ಸಾಧ್ಯವಿಲ್ಲ. ವಾಣಿಜ್ಯ ಉತ್ಸವದಲ್ಲಿ ನಿರೀಕ್ಷೆಗೆ ಮೀರಿದಷ್ಟು ಸುಮಾರು ಮುವತ್ತೈದಕ್ಕಿಂತ ಹೆಚ್ಚಿನ ಅಂಗಡಿ ಮಳಿಗೆಗಳನ್ನು ರಚಿಸಿ ವ್ಯಾಪಾರ ಮಾಡಿ ವಿದ್ಯಾರ್ಥಿಗಳು ತಮ್ಮ ವ್ಯವಹಾರ ಜ್ಞಾನದ ಪ್ರತಿಭೆಯನ್ನು ಮೆರೆದಿದ್ದಾರೆ. ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಸ್ಥೆಯು ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದರು. ಸಂಸ್ಥೆಯ ಪ್ರಿನ್ಸಿಪಾಲ್ ಕೆ. ಬಾಲಕೃಷ್ಣ ರಾವ್ ರವರು ಪ್ರಾಸ್ತವಿಕ ಭಾಷಣ ಮಾಡಿದರು. ಸಂಸ್ಥೆಯ ಕಾರ್ಯನಿರ್ವಾಹಕ ಸಮತಿಯ ಸದಸ್ಯ ಮುಖ್ಯ ಅತಿಥಿಯಾಗಿ ಮುಹಮ್ಮದ್ ನವಾಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅತಿಥಿಗಳಾಗಿ ಸಂಸ್ಥೆಯ ಪೂರ್ವ ಶಿಕ್ಷಕಿ ವಿಜಯಲಷ್ಮೀ, ಶಿವಾನಂದ ಶೆಟ್ಟಿ, ಅನುಷಾ ಭಟ್, ಅನಂತೇಶ್ ಅಡಿಗ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲೊಲಿಟ ಡಿ'ಸಿಲ್ವ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶ್ರಿಮತಿ ವೇದಿಕೆಯಲ್ಲಿದ್ದರು. ಶಿಕ್ಷಕಿ ಶೃತಿ ಸ್ವಾಗತಿಸಿದರು. ಉಪನ್ಯಾಸಕಿ ಪದ್ಮಪ್ರಿಯ ಧನ್ಯವಾದ ಸಮರ್ಪಣೆಗೈದರು. ಉಪನ್ಯಾಸಕಿ ಪೂಜಾ ಕಾರ್ಯಕ್ರಮ ನಿರ್ವಹಿಸಿದರು.
ಮಂಗಳೂರು ಪ್ರೆಸ್ಕ್ಲಬ್ : ʼವರ್ಷದ ಸಾಧಕರು ಪ್ರಶಸ್ತಿʼಗೆ ಅರ್ಜಿ ಆಹ್ವಾನ
ಮಂಗಳೂರು,ಡಿ.11: ಮಂಗಳೂರು ಪ್ರೆಸ್ಕ್ಲಬ್ನಿಂದ ದ.ಕ.ಜಿಲ್ಲೆಯ ಸಾಧಕರಿಗೆ ನೀಡಲಾಗುವ ಮಂಗಳೂರು ಪ್ರೆಸ್ಕ್ಲಬ್ ನ 2025ನೇ ಸಾಲಿನ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾಜಿಕ ಕ್ಷೇತ್ರ ಸಹಿತ ವಿವಿಧ ಕ್ಷೇತ್ರಗಳಲ್ಲಿ ಅಪರೂಪದ, ಅನುಪಮ ಸಾಧನೆಗೈದ ದ.ಕ. ಜಿಲ್ಲೆಯ ಸಾಧಕರನ್ನು ಮಂಗಳೂರು ಪ್ರೆಸ್ಕ್ಲಬ್ ಪ್ರಶಸ್ತಿಗೆ ಶಿಫಾರಸು ಮಾಡಬಹುದಾಗಿದೆ. ಈವರೆಗೂ ಪ್ರಶಸ್ತಿ ಪಡೆಯದ ಎಲೆಮರೆಯ ಕಾಯಿಯಂತಿರುವ ಹಿರಿಯ ಸಾಧಕರಿಗೆ ಆದ್ಯತೆ ನೀಡಲಾಗುವುದು. ಶಿಫಾರಸಿನಲ್ಲಿ ಸಾಧಕರ ಹೆಸರು, ಫೋಟೋ, ವಿಳಾಸ, ವೃತ್ತಿ, ವಯಸ್ಸು, ದೂರವಾಣಿ ಸಂಖ್ಯೆ ಮತ್ತಿತರ ಮಾಹಿತಿಗಳಿರಬೇಕು. ಶಿಫಾರಸು ಪತ್ರದೊಂದಿಗೆ ಸಾಧಕರ ಸಾಧನೆಯ ಬಗ್ಗೆ 200 ಶಬ್ದಗಳಿಗೆ ಮೀರದಂತೆ ಪರಿಚಯ ಹಾಗೂ ಸಂಪೂರ್ಣ ಮಾಹಿತಿಯೊಂದಿಗೆ ಮುಚ್ಚಿದ ಲಕೋಟೆಯಲ್ಲಿ 2025ರ ಡಿ.31ರೊಳಗೆ ಪ್ರಧಾನ ಕಾರ್ಯದರ್ಶಿ, ಮಂಗಳೂರು ಪ್ರೆಸ್ಕ್ಲಬ್, ಪತ್ರಿಕಾ ಭವನ ಕಟ್ಟಡ, ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು-6 ಈ ವಿಳಾಸಕ್ಕೆ ಕಳುಹಿಸಬೇಕು. ಒಬ್ಬರಿಗೆ ಇಬ್ಬರು ಸಾಧಕರನ್ನು ಶಿಫಾರಸು ಮಾಡುವ ಅವಕಾಶ ಇದೆ. ತಜ್ಞರ ಸಮಿತಿಯು ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ಪ್ರಶಸ್ತಿಗೆ ಆಯ್ಕೆಯಾದ ಸಾಧಕರಿಗೆ ಪ್ರೆಸ್ಕ್ಲಬ್ ದಿನಾಚರಣೆ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಪ್ರೆಸ್ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಜನರಿಗೆ ಮತ್ತೊಂದು ಗುಡ್ನ್ಯೂಸ್ ಕೊಟ್ಟ ಡಿ.ಕೆ ಶಿವಕುಮಾರ್!
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಜನರಿಗೆ ಮತ್ತೊಂದು ಗುಡ್ನ್ಯೂಸ್ ಕೊಟ್ಟಿದ್ದಾರೆ. ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲಿಯೇ ರಾಜ್ಯದ ಜನರಿಗೆ ಮತ್ತೊಂದು ಗುಡ್ನ್ಯೂಸ್ ಕೊಟ್ಟಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಕನ್ನಡಿಗರಿಗೆ ಮತ್ತೊಂದು ಭರ್ಜರಿ ಗುಡ್ನ್ಯೂಸ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ ಮೇಲೆ ಇದೀಗ ಅವರು
ಗೋವಾ ಲೆಜೆಂಡ್ಸ್ ಪ್ರೊ ಟಿ20 ಲೀಗ್ನಲ್ಲಿ ಕರ್ನಾಟಕದ ಇನ್ನಿಬ್ಬರು ಮಾಜಿ ಕಲಿಗಳು; ವಿಂಡೀಸ್ ನಿಂದ ಕ್ರಿಸ್ ಗೆಲ್!
ಲೆಜೆಂಡ್ಸ್ ಪ್ರೊ T20 ಲೀಗ್ ನಲ್ಲಿ ಕರ್ನಾಟಕದ ವಿನಯ್ ಕುಮಾರ್ ಅವರು ಆಡುವುದು ಈಗಾಗಲೇ ಪಕ್ಕಾ ಆಗಿತ್ತು. ಇದೀಗ ಅವರೊಂದಿಗೆ ರಾಬಿನ್ ಉತ್ತಪ್ಪ ಮತ್ತು ಸ್ಟುವರ್ಟ್ ಬಿನ್ನಿ ಸಹ ಸೇರಿಕೊಳ್ಳಲಿದ್ದಾರೆ. ಜೊತೆಗೆ ಆರ್ ಸಿಬಿ ಅಭಿಮಾನಿಗಳ ನೆಚ್ಚಿನ ಕ್ರಿಸ್ ಗೇಲ್ ಅವರು ಸಹ ಭಾಗವಹಿಸಲದ್ದಾರೆ. ಜಾಕ್ವೆಸ್ ಕಾಲಿಸ್, ಅಂಬಟಿ ರಾಯುಡು ಸೇರಿದಂತೆ ಹಲವು ಕ್ರಿಕೆಟ್ ತಾರೆಯರನ್ನು ಒಂದುಗೂಡಿಸುತ್ತಿದೆ. ವರ್ಷಗಳ ಹಿಂದೆ ಜೊತೆಯಾಗಿ ಆಡಿದವರು, ಎದುರಾಳಿಗಳಾಗಿದ್ದವರು ಈಗ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಶೀಘ್ರವೇ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಕಾಸರಗೋಡು ಸ್ಥಳೀಯಾಡಳಿತ ಚುನಾವಣೆ : ಶೇ.73.28ರಷ್ಟು ಮತದಾನ
ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಸಂಜೆ 6 ಗಂಟೆ ತನಕ 73.28ಶೇಕಡಾ ಮತದಾನವಾಗಿದೆ. ಆರು ಗಂಟೆಗೆ ಮತದಾನ ಪ್ರಕ್ರಿಯೆ ಮುಗಿಯಬೇಕಿದ್ದರೂ ಮತದಾನ ವಿಳಂಬವಾಗಿ ಸಾಗುತ್ತಿದೆ .ಕೆಲ ಮತಗಟ್ಟೆಗಳಲ್ಲಿ 6 ಗಂಟೆ ನಂತರವೂ ಸರದಿ ಸಾಲು ಕಂಡುಬಂದಿದೆ. 11,12,190 ಮಂದಿಯಲ್ಲಿ 8,14,997 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ದೇಲಂಪಾಡಿ ಹಾಗೂ ಕಾಞಂಗಾಡ್ ನಲ್ಲಿ ಕೆಲ ಘಟನೆ ಬಿಟ್ಟರೆ ಮತದಾನ ಶಾಂತಿಯುತವಾಗಿತ್ತು. ನಕಲಿ ಮತದಾನದ ಬಗ್ಗೆ ಅಲ್ಲಲ್ಲಿ ವರದಿಗಳು ಬಂದಿವೆ. ಜಿಲ್ಲಾ, ಬ್ಲಾಕ್ , ಗ್ರಾಮ ಪಂಚಾಯತ್ ಹಾಗೂ ಮೂರು ನಗರಸಭೆ ಸೇರಿದಂತೆ 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಮತದಾನ ನಡೆದಿದೆ. ಡಿ.13 ರಂದು ಫಲಿತಾಂಶ ಹೊರಬೀಳಲಿದೆ.
ಭಾರತ ಸಂಪತ್ತು ಮತ್ತು ಆದಾಯದಲ್ಲಿ ಅತಿ ಅಸಮಾನತೆ ಹೊಂದಿರುವ ದೇಶ
ಶೇ 10ರಷ್ಟು ಅಗರ್ಭ ಶ್ರೀಮಂತರು ಜಾಗತಿಕ ಆದಾಯದ ಶೇ 53ರಷ್ಟನ್ನು ಹೊಂದಿದ್ದರೆ, ಜಾಗತಿಕ ಆಸ್ತಿಯಲ್ಲಿ ಅವರ ಪಾಲು ಶೇ 75. ಕಡು ಬಡವರಲ್ಲಿ ಬರುವ ಶೇ 50ರಷ್ಟು ಮಂದಿಯ ಜಾಗತಿಕ ಆದಾಯದ ಪಾಲು ಶೇ 8 ಆಗಿದ್ದರೆ, ಜಾಗತಿಕ ಆಸ್ತಿಯಲ್ಲಿನ ಪಾಲು ಶೇ 2ರಷ್ಟಿದೆ. ಭಾರತದಲ್ಲಿ ಶ್ರೀಮಂತ 10 ಮಂದಿ ಶೇ 65ರಷ್ಟು ಆಸ್ತಿ ಹೊಂದಿದ್ದರೆ ಕೆಳಸ್ತರದಲ್ಲಿರುವವರು ಶೇ 6ರಷ್ಟು ಆಸ್ತಿಯನ್ನಷ್ಟೇ ಹೊಂದಿದ್ದಾರೆ. ಹಾಗೆಯೇ, ಭಾರತದಲ್ಲಿ ಟಾಪ್ 10ರಷ್ಟು ಮಂದಿ ಶೇ 58ರಷ್ಟು ಆದಾಯ ಗಳಿಸಿದರೆ ಕೆಳಸ್ತರದ ಅರ್ಧದಷ್ಟು ಮಂದಿ ಶೇ 15ರಷ್ಟು ಆದಾಯ ಗಳಿಸುತ್ತಾರೆ. ಜಗತ್ತಿನ ಅತಿ ಶ್ರೀಮಂತ ಶೇ 10ರಷ್ಟು ಮಂದಿ ಮುಕ್ಕಾಲು ಪಾಲು ವೈಯಕ್ತಿಕ ಸಂಪತ್ತಿನ ಮಾಲೀಕರಾಗಿದ್ದಾರೆ ಎಂದು ಹೊಸದಾಗಿ ಬಿಡುಗಡೆಯಾದ ವಿಶ್ವ ಅಸಮಾನತೆಯ ವರದಿ ಹೇಳಿದೆ. ಆದಾಯದಲ್ಲೂ ಹೆಚ್ಚು ವ್ಯತ್ಯಾಸವಿಲ್ಲ, ವಿಶ್ವದಲ್ಲಿ ಅತಿ ಶ್ರೀಮಂತ ಶೇ 50ರಷ್ಟು ಮಂದಿ ಶೇ 90ರಷ್ಟು ಪಾಲನ್ನು ಮನೆಗೊಯ್ದರೆ, ಉಳಿದ ಅರ್ಧದಷ್ಟು ಮಂದಿ ಒಟ್ಟು ಆದಾಯದ ಶೇ 10ರಷ್ಟು ಪಾಲನ್ನು ಮಾತ್ರ ಹೊಂದಿದ್ದಾರೆ. 2018ರಿಂದ ವಾರ್ಷಿಕವಾಗಿ ಪ್ರಕಟವಾಗುವ ವರದಿ ಹೇಳಿರುವ ಪ್ರಕಾರ, 2026 ಬಹಳ ನಿರ್ಣಾಯಕ ಘಟ್ಟದಲ್ಲಿದೆ. ಜಾಗತಿಕವಾಗಿ ಬಹಳಷ್ಟು ಮಂದಿಗೆ ಜೀವನ ಗುಣಮಟ್ಟ ಜಡವಾಗಿ ಹೋಗಿದ್ದರೆ, ಆಸ್ತಿ ಮತ್ತು ಅಧಿಕಾರ ಸ್ಥಿತಿವಂತರಲ್ಲಿ ಶೇಖರವಾಗುತ್ತಿವೆ. ಸಂಪತ್ತು ಮತ್ತು ಆದಾಯದಲ್ಲಿ ಅಸಮಾನತೆ ಆಸ್ತಿ ಮತ್ತು ಆದಾಯ ಯಾವಾಗಲೂ ಜೊತೆಗೂಡಿ ಸಾಗುವುದಿಲ್ಲ. ಶ್ರೀಮಂತರೇ ಅತಿ ಹೆಚ್ಚು ಆದಾಯ ಹೊಂದಿರಬೇಕೆಂದಿಲ್ಲ. ಜನರ ಆದಾಯ ಮತ್ತು ಅವರ ಆಸ್ತಿಯಲ್ಲಿ ನಿರಂತರ ವ್ಯತ್ಯಾಸವಿದೆ. ಸಂಪತ್ತು ಎಂದರೆ ಸಾಲವನ್ನು ತೆಗೆದು ಹಾಕಿದರೆ ವ್ಯಕ್ತಿಯ ಬಳಿಯಲ್ಲಿರುವ ಉಳಿತಾಯ, ಹೂಡಿಕೆ ಅಥವಾ ಆಸ್ತಿಯ ಒಟ್ಟು ಮೌಲ್ಯ ಒಳಗೊಂಡಿದೆ. 2025ರಲ್ಲಿ ವಿಶ್ವದ ಜನಸಂಖ್ಯೆಯ ಶೇ 10ರಷ್ಟು ಶ್ರೀಮಂತರು ಶೇ 75ರಷ್ಟು ಜಾಗತಿಕ ಸಂಪತ್ತಿನ ಒಡೆಯರಾಗಿದ್ದಾರೆ. ಮಧ್ಯದ ಶೇ 40ರಷ್ಟು ಮಂದಿ ಶೇ 23ರಷ್ಟು ಮತ್ತು ಕೆಳಸ್ತರದಲ್ಲಿರುವವರು ಶೇ 2ರಷ್ಟು ಸಂಪತ್ತಿನ ಒಡೆಯರಾಗಿದ್ದಾರೆ. 1990ರಿಂದ ಕೋಟ್ಯಾಧಿಪತಿಗಳು ಮತ್ತು ಶತ ಕೋಟ್ಯಾಧಿಪತಿಗಳ ಆಸ್ತಿ ಪ್ರತಿ ವರ್ಷ ಶೇ 8ರಷ್ಟು ಏರಿಕೆಯಾಗಿದೆ. ಕೆಳಸ್ತರದಲ್ಲಿರುವ ಅರ್ಧದಷ್ಟು ಮಂದಿ ಬೆಳೆದ ದುಪ್ಪಟ್ಟು ಪ್ರಮಾಣದಲ್ಲಿ ಮೇಲ್ಸ್ತರದಲ್ಲಿರುವವರು ಬೆಳೆದಿದ್ದಾರೆ. ಅಗರ್ಭ ಶ್ರೀಮಂತ 0.001ರಷ್ಟು ಮಂದಿ, ಅಂದರೆ 60,000 ಬಹುಕೋಟ್ಯಾಧಿಪತಿಗಳು ಅರ್ಧದಷ್ಟು ಮಾನವರಿಗಿಂತ ಮೂರು ಪಟ್ಟು ಹೆಚ್ಚು ಸಂಪತ್ತನ್ನು ನಿಯಂತ್ರಿಸುತ್ತಿದ್ದಾರೆ. 1995ರಲ್ಲಿ ಅವರ ಒಟ್ಟು ಪಾಲು ಶೇ 4ರಷ್ಟಿದ್ದರೆ, ಈಗ ಅದು ಶೇ 6ಕ್ಕೆ ಏರಿದೆ. ಕಡುಬಡವರು ಸಣ್ಣ ಮಟ್ಟಿನ ಬೆಳವಣಿಗೆ ಕಂಡಿದ್ದಾರೆ. ಕೋಟ್ಯಂತರ ಜನ ಇನ್ನೂ ಕನಿಷ್ಠ ಆರ್ಥಿಕ ಭದ್ರತೆಯನ್ನು ಹೊಂದಲು ಹೋರಾಡುತ್ತಿದ್ದರೆ, ಅಲ್ಪ ಮಂದಿಯ ಬಳಿ ಅಸಾಧಾರಣ ಹಣಕಾಸು ಅಧಿಕಾರವಿದೆ. ಆದಾಯವನ್ನು ಪಿಂಚಣಿ ಮತ್ತು ನಿರುದ್ಯೋಗ ವಿಮೆ ಕೊಡುಗೆಗಳನ್ನು ಪರಿಗಣಿಸಿ ತೆರಿಗೆ ಪೂರ್ವ ಗಳಿಕೆಯನ್ನು ಬಳಸಿ ಅಳೆಯಲಾಗಿದೆ. 2025ರಲ್ಲಿ ಶೇ 10ರಷ್ಟು ಜಗತ್ತಿನ ಅಗರ್ಭ ಶ್ರೀಮಂತರು ಜಾಗತಿಕ ಆದಾಯದ ಶೇ 53ರಷ್ಟನ್ನು ಸ್ವೀಕರಿಸಿದ್ದಾರೆ. ಮಧ್ಯದಲ್ಲಿರುವ ಶೇ 40ರಷ್ಟು ಮಂದಿ ಶೇ 38ರಷ್ಟು ಮತ್ತು ಕೆಳಸ್ತರಲ್ಲಿರುವ ಶೇ 50ರಷ್ಟು ಮಂದಿ ಶೇ 8ರಷ್ಟು ಆದಾಯ ಗಳಿಸಿದ್ದಾರೆ. ಜಗತ್ತಿನಲ್ಲಿ ಹತ್ತು ಮಂದಿ ಇದ್ದು, ಜಾಗತಿಕ ಆದಾಯವನ್ನು ರೂ 100 ಎಂದು ಭಾವಿಸಿದರೆ, ಅಗರ್ಭ ಶ್ರೀಮಂತ ವ್ಯಕ್ತಿ 53 ರೂಪಾಯಿ ಸ್ವೀಕರಿಸಿದರೆ, ಶ್ರೀಮಂತ ನಾಲ್ಕು ಮಂದಿ 38 ರೂಪಾಯಿ ಮತ್ತು ಉಳಿದ ಐದು ಮಂದಿ ರೂ 8ನ್ನು ಪಡೆಯುತ್ತಾರೆ. ಯಾವ ದೇಶಗಳಲ್ಲಿ ಅತಿ ಹೆಚ್ಚು ಅಸಮಾನತೆ ಇದೆ? ಜಾಗತಿಕವಾಗಿ ದಕ್ಷಿಣ ಆಫ್ರಿಕಾದಲ್ಲಿ ಅತ್ಯಧಿಕ ಮಟ್ಟಿಗೆ ಆದಾಯ ಅಸಮಾನತೆ ಇದೆ. ಶೇ 10ರಷ್ಟು ಮಂದಿ ಆದಾಯದ ಶೇ 66ರಷ್ಟು ಗಳಿಸುತ್ತಾರೆ. ಕೆಳಸ್ತರದಲ್ಲಿರುವ ಅರ್ಧದಷ್ಟು ಮಂದಿ ಶೇ 6ರಷ್ಟನ್ನು ಪಡೆಯುತ್ತಾರೆ. ಏಷ್ಯಾದಲ್ಲಿ, ಬಾಂಗ್ಲಾದೇಶ ಮತ್ತು ಚೀನಾದಲ್ಲಿ ಹೆಚ್ಚು ಸಮತೋಲಿತ ಸ್ಥಿತಿ ಇದ್ದರೆ. ಭಾರತ, ಥಾಯ್ಲಂಡ್ ಮತ್ತು ಟರ್ಕಿಯಲ್ಲಿ ಶ್ರೀಮಂತ ಶೇ 10ರಷ್ಟು ಮಂದಿ ಅರ್ಧಕ್ಕಿಂತ ಹೆಚ್ಚು ಆದಾಯ ಗಳಿಸುತ್ತಾರೆ. ಭಾರತದಲ್ಲಿ ಟಾಪ್ 10ರಷ್ಟು ಮಂದಿ ಶೇ 58ರಷ್ಟು ಆದಾಯ ಗಳಿಸಿದರೆ ಕೆಳಸ್ತರದ ಅರ್ಧದಷ್ಟು ಮಂದಿ ಶೇ 15ರಷ್ಟು ಆದಾಯ ಗಳಿಸುತ್ತಾರೆ. ಲ್ಯಾಟಿನ್ ಅಮೆರಿಕ ದೇಶಗಳಾದ ಬ್ರೆಜಿಲ್, ಮೆಕ್ಸಿಕೊ, ಚಿಲಿ ಮತ್ತು ಕೊಲಂಬಿಯದಲ್ಲೂ ಇಂತಹುದೇ ಸ್ಥಿತಿಯಿದೆ. ಯುರೋಪಿಯನ್ ದೇಶಗಳಲ್ಲಿ ಹೆಚ್ಚು ಸಮತೋಲಿತ ಸ್ಥೀತಿಯಿದೆ. ಸ್ವೀಡನ್ ಮತ್ತು ನಾರ್ವೆಯಲ್ಲಿ ಕೆಳಸ್ತರದ ಶೇ 50ರಷ್ಟು ಮಂದಿ ಒಟ್ಟು ಆದಾಯದ ಶೇ 25ರಷ್ಟು ಗಳಿಸುತ್ತಾರೆ. ಟಾಪ್ 10ರಷ್ಟು ಮಂದಿ ಶೇ 30ಕ್ಕಿಂತಲೂ ಕಡಿಮೆ ಆದಾಯ ಗಳಿಸುತ್ತಾರೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಾದ ಆಸ್ಟ್ರೇಲಿಯ, ಕೆನಡಾ, ಜರ್ಮನಿ, ಜಪಾನ್ ಮತ್ತು ಯುಕೆ ಮಧ್ಯದ ರಾಷ್ಟ್ರಗಳಲ್ಲಿ ಬರುತ್ತವೆ. ಇಲ್ಲಿ ಟಾಪ್ 10ರಷ್ಟು ಮಂದಿ ಶೇ 33-47ರಷ್ಟು ಗಳಿಸಿದರೆ, ಕೆಳಸ್ತರದವರು ಶೇ 16-21ರಷ್ಟು ಗಳಿಸುತ್ತಾರೆ. ಸಂಪತ್ತು ಅಸಮಾನತೆ ಯಾವ ದೇಶದಲ್ಲಿ ಹೆಚ್ಚಿದೆ? ಸಂಪತ್ತಿನ ಅಸಮಾನತೆಯನ್ನು ಪರಿಗಣಿಸಿದರೂ ದಕ್ಷಿಣ ಆಫ್ರಿಕಾ ಪಟ್ಟಿಯಲ್ಲಿ ಮೇಲಿದೆ. ಅಲ್ಲಿ ಟಾಪ್ 10 ಮಂದಿ ಶ್ರೀಮಂತರು ಶೇ 85ರಷ್ಟು ಆಸ್ತಿಯನ್ನು ಕ್ರೂಢೀಕರಿಸಿದರೆ, ಕೆಳಸ್ತರದಲ್ಲಿರುವ ಶೇ 50 ಮಂದಿ ಋಣಾತ್ಮಕ ಪಾಲನ್ನು ಹೊಂದಿದ್ದಾರೆ. ಅಂದರೆ ಸಾಲವೇ ಆಸ್ತಿಯನ್ನು ಮೀರಿಸಿರುತ್ತದೆ. ಏಷ್ಯಾದಲ್ಲಿ ಚೀನಾ, ಭಾರತ ಮತ್ತು ಥಾಯ್ಲಂಡ್ನಂತಹ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಬಹಳ ಅಸಮಾನತೆಯಿದೆ. ಶ್ರೀಮಂತ 10ರಷ್ಟು ಮಂದಿ ಶೇ 65-68ರಷ್ಟು ಆಸ್ತಿ ಹೊಂದಿದ್ದಾರೆ. ಭಾರತದಲ್ಲಿ ಶ್ರೀಮಂತ 10 ಮಂದಿ ಶೇ 65ರಷ್ಟು ಆಸ್ತಿ ಹೊಂದಿದ್ದರೆ ಕೆಳಸ್ತರದಲ್ಲಿರುವವರು ಶೇ 6ರಷ್ಟು ಆಸ್ತಿಯನ್ನಷ್ಟೇ ಹೊಂದಿದ್ದಾರೆ. ರಷ್ಯಾ, ಮೆಕ್ಸಿಕೊ, ಬ್ರೆಜಿಲ್ ಮತ್ತು ಕಾಂಬೊಡಿಯದಲ್ಲಿ ಶ್ರೀಮಂತ ಶೇ 10 ಮಂದಿ ಶೇ 70ರಷ್ಟು ಆಸ್ತಿಯನ್ನು ಹೊಂದಿದ್ದರೆ, ಕೆಳಸ್ತರದಲ್ಲಿರುವ ಶೇ 50ರಷ್ಟು ಮಂದಿ ಶೇ 2-3ರಷ್ಟು ಆಸ್ತಿ ಹೊಂದಿದ್ದಾರೆ. ಅಮೆರಿಕ, ಯುಕೆ, ಆಸ್ಟ್ರೇಲಿಯ ಮತ್ತು ಜಪಾನ್ನಲ್ಲಿಶೇ 10ರಷ್ಟು ಮಂದಿ ಅರ್ಧಕ್ಕೂ ಹೆಚ್ಚು ಸಂಪತ್ತನ್ನು ಹೊಂದಿದ್ದರೆ, ಕೆಳಸ್ತರದ ಅರ್ಧದಷ್ಟು ಮಂದಿ ಶೇ 1-5ರಷ್ಟು ಆಸ್ತಿ ಹೊಂದಿದ್ದಾರೆ. ಯುರೋಪಿಯನ್ ದೇಶಗಳಲ್ಲಿ ಮುಖ್ಯವಾಗಿ ಇಟಲಿ, ಡೆನ್ಮಾರ್ಕ್, ನಾರ್ವೆ ಮತ್ತು ನೆದರ್ಲ್ಯಾಂಡ್ಗಳಲ್ಲಿ ಮಧ್ಯಮ ವರ್ಗದವರು ಶೇ 40ರಷ್ಟು ಮತ್ತು ಕೆಳಸ್ತರದವರು ಶೇ 10ರಷ್ಟು ಆಸ್ತಿ ಹೊಂದಿದ್ದಾರೆ.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು 30 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಹೊಸ ಆಶಾಕಿರಣವಾಗಿದೆ. 23 ಲಕ್ಷಕ್ಕೂ ಅಧಿಕ ಮಂದಿ ಕೌಶಲ್ಯ ತರಬೇತಿ ಪಡೆದಿದ್ದು, 22 ಕೋಟಿ ರೂ. ಮಾರುಕಟ್ಟೆ ಪ್ರೋತ್ಸಾಹಧನವನ್ನು ನೇರವಾಗಿ ಡಿಜಿಟಲ್ ಮೂಲಕ ಪಡೆದಿದ್ದಾರೆ. ಆನ್ಲೈನ್ ಮಾರಾಟ ಮತ್ತು ವ್ಯಾಪಾರ ಮೇಳಗಳಲ್ಲಿ ಭಾಗವಹಿಸುವ ಅವಕಾಶಗಳೊಂದಿಗೆ, ಸಾಲ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ನಿಮ್ಮ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು 'ಚಾಂಪಿಯನ್ಸ್ ಪೋರ್ಟಲ್' ಸದಾ ಸಿದ್ಧವಿದೆ ಎಂದು ಸಂಸತ್ತಿಗೆ ಮಾಹಿತಿಯನ್ನು ಒದಗಿಸಲಾಗಿದೆ. ಈ ಕುರಿತ ವಿವರಗಳು ಇಲ್ಲಿವೆ.
ರಾಜ್ಯದ ಜನತೆಗೆ ಗುಡ್ ನ್ಯೂಸ್; ಆಹಾರ ಧಾನ್ಯ ಹಂಚಿಕೆ ಬಗ್ಗೆ ಕೆ.ಹೆಚ್.ಮುನಿಯಪ್ಪ ಮಾಹಿತಿ
ಬೆಳಗಾವಿ, ಡಿಸೆಂಬರ್ 11: ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ
6 ರಾಜ್ಯಗಳಿಗೆ ಎಸ್ಐಆರ್ ಗಡುವು ವಿಸ್ತರಿಸಿದ ಚುನಾವಣಾ ಆಯೋಗ, ಪಶ್ಚಿಮ ಬಂಗಾಳಕ್ಕಿಲ್ಲ ವಿನಾಯಿತಿ!
ಕೇಂದ್ರ ಚುನಾವಣಾ ಆಯೋಗವು ತಮಿಳುನಾಡು, ಗುಜರಾತ್, ಮಧ್ಯಪ್ರದೇಶ, ಛತ್ತೀಸ್ಗಢ, ಉತ್ತರ ಪ್ರದೇಶ ಮತ್ತು ಅಂಡಮಾನ್ ನಿಕೋಬಾರ್ಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಗಡುವನ್ನು ವಿಸ್ತರಿಸಿದೆ. ಆದರೆ ಪಶ್ಚಿಮ ಬಂಗಾಳಕ್ಕೆ ಈ ವಿನಾಯಿತಿ ನೀಡಿಲ್ಲ. ಅಕ್ರಮ ವಲಸಿಗರು ಮತ್ತು ಮೃತ ವ್ಯಕ್ತಿಗಳ ಹೆಸರಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆಯಲು ಆಯೋಗ ಈ ಕಠಿಣ ಕ್ರಮ ಕೈಗೊಂಡಿದೆ. ಬಂಗಾಳದಲ್ಲಿ ಸುಮಾರು 57.52 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲು ಗುರುತಿಸಲಾಗಿದ್ದು, ಇದರಲ್ಲಿ 24 ಲಕ್ಷಕ್ಕೂ ಹೆಚ್ಚು ಮೃತ ವ್ಯಕ್ತಿಗಳಿದ್ದಾರೆ.
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಗುಲಾಬಿ ಮತ್ತು ನೀಲಿ ಮಾರ್ಗಗಳಿಗಾಗಿ ಬಿಇಎಂಎಲ್ ಸಿದ್ಧಪಡಿಸಿದ ಹೊಸ ಚಾಲಕರಹಿತ ರೈಲು ಮಾದರಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 318 ಮೆಟ್ರೋ ಕಾರುಗಳನ್ನು ಪೂರೈಸುವ ಈ ಯೋಜನೆಯು 15 ವರ್ಷಗಳ ನಿರ್ವಹಣೆಯನ್ನು ಒಳಗೊಂಡಿದೆ. ಗುಲಾಬಿ ಮಾರ್ಗವು 2026ರ ಮೇ ವೇಳೆಗೆ, ನೀಲಿ ಮಾರ್ಗವು 2026ರ ಡಿಸೆಂಬರ್ಗೆ ಆರಂಭವಾಗುವ ನಿರೀಕ್ಷೆಯಿದೆ.
ಕಲಬುರಗಿ | ಸರಣಿ ಅಪಘಾತ : ಸ್ಥಳದಲ್ಲೇ ಮೂವರು ಮೃತ್ಯು
ಕಲಬುರಗಿ: ಜೀಪ್ ಹಾಗೂ ಬಸ್ ಗಳ ಮಧ್ಯೆ ನಡೆದ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿಯಿಂದ ಅಫಜಲ್ಪುರ ಮಧ್ಯೆ ಇರುವ ಹಡಗಿಲ್ ಹಾರುತಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಅಫಜಲಪುರ ತಾಲೂಕಿನ ಮೂಲದವರೆಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ಸಂಚಾರಿ ಪೊಲೀಸ್ ಠಾಣೆ 1 ವ್ಯಾಪ್ತಿಯಲ್ಲಿ ನಡೆದಿದೆ.
ರಾಷ್ಟ್ರೀಯ ತಂಡಕ್ಕಿಂತ ದೊಡ್ಡದು ಯಾವುದೂ ಇಲ್ಲ: IPLಗೆ ಒತ್ತು ನೀಡುತ್ತಿರುವ ಯುವ ಕ್ರಿಕೆಟಿಗರಿಗೆ ಕಪಿಲ್ ದೇವ್ ತರಾಟೆ
Kapil Dev On IPL- ಯುವ ಕ್ರಿಕೆಟಿಗರು ಹಣಕ್ಕಾಗಿ ರಾಷ್ಟ್ರೀಯ ತಂಡಕ್ಕಿಂತಲೂ ಐಪಿಎಲ್ ಗೆ ಹೆಚ್ಚು ಒತ್ತು ನೀಡುತ್ತಿರುವುದರ ಬಗ್ಗೆ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಐಪಿಎಲ್ ನಿಂದ ಹಣ ಬರಬಹುದು, ಆದರೆ ದೇಶಕ್ಕಾಗಿ ಆಡುವುದೇ ಅತ್ಯಂತ ದೊಡ್ಡ ಗೌರವ ಎಂದು ಅವರು ಹೇಳಿದ್ದಾರೆ. ಫ್ರಾಂಚೈಸಿ ಕ್ರಿಕೆಟ್ ನಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಹಾನಿಯಾಗುತ್ತಿರುವ ಈ ಸಂದರ್ಭದಲ್ಲಿ ಅವರು ಮಾತುಗಳ ಮಹತ್ವ ಪಡೆದಿವೆ.
Property: ಬೆಂಗಳೂರು ನಂತರ ಕರ್ನಾಟಕದ ಈ ಆರು ನಗರಗಳಲ್ಲಿ ಭೂಮಿಗೆ ಬಂಗಾರದ ಬೆಲೆ ನಿರೀಕ್ಷೆ!
ಬೆಂಗಳೂರಿನ ನಂತರ ಕರ್ನಾಟಕದ ಮತ್ತೊಂದು ಪ್ರಮುಖ ನಗರದಲ್ಲಿ ಭೂಮಿಗೆ ಬಂಗಾರದ ಬೆಲೆ ಬರುವ ನಿರೀಕ್ಷೆ ಹೆಚ್ಚಾಗಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರಾಜ್ಯದ ಮತ್ತೊಂದು ಪ್ರಮುಖ ನಗರದಲ್ಲಿ ಐಟಿ ಪಾರ್ಕ್ ವಾಣಿಜ್ಯ ಕಚೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ. ಡಿಸೆಂಬರ್ 15 ರಂದು ಟೆಂಡರ್ ಬಿಡ್ ತರೆಯಲಾಗುತ್ತದೆ. ನಂತರ ಅಗತ್ಯಬಿದ್ದರೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಟೆಂಡರ್
ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನಿನಲ್ಲಿರುವ ಷರತ್ತುಗಳೇನು?
ಮಂಗಳೂರು : ಮುಸ್ಲಿಂ ಮಹಿಳೆಯರು ಮತ್ತು ಮಕ್ಕಳ ವಿರುದ್ದ ಅವಹೇಳನಕಾರಿ ಧ್ವೇಷ ಭಾಷಣ ಮಾಡಿದ್ದ ಆರೋಪ ಎದುರಿಸುತ್ತಿದ್ದ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಡಿಸೆಂಬರ್ 10 ರಂದು ನಿರಿಕ್ಷಣಾ ಜಾಮೀನು ನೀಡಿದ್ದು, ಹಲವು ಷರತ್ತುಗಳನ್ನು ವಿಧಿಸಿದೆ. ನಿರೀಕ್ಷಣಾ ಜಾಮೀನು ಪಡೆದುಕೊಂಡಿರುವ ಕಲ್ಲಡ್ಕ ಪ್ರಭಾಕರ ಭಟ್ ಪ್ರತೀ ಗುರುವಾರ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕಬೇಕಿದೆ. ಇಲ್ಲದೇ ಇದ್ದರೆ ಜಾಮೀನು ರದ್ದಾಗಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನ್ಯಾಯಾಲಯ ವಿಧಿಸಿದ ಷರತ್ತುಗಳ ಸಾರಾಂಶ ಇಲ್ಲಿದೆ: ಆರೋಪಿ ಪ್ರಭಾಕರ ಭಟ್ BNSS ಕಲಂ 482 ಅಡಿಯಲ್ಲಿ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಲಾಗಿದೆ. ಪುತ್ತೂರು ಗ್ರಾಮಾಂತರ ಠಾಣೆಯ ಕ್ರೈಂ ನಂ.118/2025 ಪ್ರಕರಣದಲ್ಲಿ ಆರೋಪಿ ಹಾಜರಾಗಿ ಬಂಧನ ಪ್ರಕ್ರಿಯೆ ನಡೆಸಿ ಬಿಡುಗಡೆಗೊಳಿಸುವಾಗ 50,000 ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಒಬ್ಬ ಜಾಮೀನುದಾರರನ್ನು ಪಡೆದುಕೊಂಡು ಬಿಡುಗಡೆ ಮಾಡಬೇಕು. ಆರೋಪಿಯು 20 ದಿನಗಳಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ಮುಂದೆ ಶರಣಾಗಬೇಕು. ಆರು ತಿಂಗಳ ಅವಧಿಗೆ, ಪ್ರತೀ ಗುರುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ತನಿಖಾ ಅಧಿಕಾರಿಯ ಮುಂದೆ ಹಾಜರಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು. ದೂರುದಾರರನ್ನು ಅಥವಾ ಇತರ ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಬೆದರಿಸಬಾರದು ಹಾಗೂ ನೇರ ಅಥವಾ ಪರೋಕ್ಷವಾಗಿ ಸಾಕ್ಷ್ಯ ತೊಂದರೆಗೊಳಿಸಬಾರದು. ನ್ಯಾಯಾಲಯದಲ್ಲಿ ಎಲ್ಲಾ ದಿನಾಂಕಗಳಿಗೆ ನಿಯಮಿತವಾಗಿ ಹಾಜರಾಗಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಇನ್ನು ಮುಂದೆ ಇದೇ ರೀತಿಯ ಅಪರಾಧಗಳಲ್ಲಿ ತೊಡಗಿಸಿಕೊಳ್ಳಬಾರದು. ಈ ಆದೇಶ ಹೊರಟ ದಿನದಿಂದ 20 ದಿನಗಳೊಳಗೆ ಸ್ವಯಂ ಬಾಂಡ್ ಮತ್ತು ಜಾಮೀನಿದಾರರನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ನಿಖಾ ಅಧಿಕಾರಿ ಹಾಗೂ ನ್ಯಾಯಾಲಯಕ್ಕೆ ವಿಳಾಸದ ಗುರುತು ಪತ್ರವನ್ನು ಸಲ್ಲಿಸಬೇಕು. ಈ ಮೇಲಿನ ಯಾವುದೇ ಷರತ್ತು ಉಲ್ಲಂಘನೆಯಾದಲ್ಲಿ ಜಾಮೀನು ರದ್ದಾಗುತ್ತದೆ. ಇನ್ನು ಮುಂದೆ ಆರು ತಿಂಗಳು ಪ್ರತೀ ಗುರುವಾಗ ಠಾಣೆಗೆ ಹಾಜರಾಗದಿದ್ದಲ್ಲಿ ಜಾಮೀನು ರದ್ದಾಗಲಿದೆ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಈವರೆಗೆ 12 ದ್ವೇಷ ಭಾಷಣ ಪ್ರಕರಣಗಳು ದಾಖಲಾಗಿದೆ. ಪ್ರಕರಣವೇನು? ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಧ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ಜನವಾದಿ ಮಹಿಳಾ ಸಂಘಟನೆಯ ಈಶ್ವರಿ ಪದ್ಮುಂಜರವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪ್ರಭಾಕರ ಭಟ್ ಮತ್ತು ದೀಪೋತ್ಸವ ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಬಿಎನ್ಎಸ್-2023ರ ಸೆಕ್ಷನ್ 79, 196, 299, 302 ಹಾಗೂ 3(5) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ದೂರುದಾರರಾಗಿರುವ ಈಶ್ವರಿ ಪದ್ಮುಂಜ ಪರವಾಗಿ ಆರೋಪಿ ಪ್ರಭಾಕರ ಭಟ್ ಜಾಮೀನು ಅರ್ಜಿಗೆ ತಕರಾರು ಅರ್ಜಿ ಸಲ್ಲಿಸಲು ಮತ್ತು ವಾದ ಮಾಡಲು ಅವಕಾಶ ಕೊಡಬೇಕು’ ಎಂದು ಹಿರಿಯ ವಕೀಲ ಸತೀಶನ್ ಅವರು ಬಿಎನ್ಎಸ್ಎಸ್ ಸೆಕ್ಷನ್ 338 - 339 ಅರ್ಜಿ ಹಾಕಿದ್ದರು. ಅರ್ಜಿಯನ್ನು ಪುರಸ್ಕರಿಸಿದ್ದ ನ್ಯಾಯಾಲಯವು ಸತೀಶನ್ ಅವರಿಗೆ ವಾದ ಮಾಡಲು ಮತ್ತು ಜಾಮೀನು ಅರ್ಜಿಗೆ ತಕರಾರು ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಈ ಮಧ್ಯೆ ಸರ್ಕಾರಿ ವಕೀಲರು ಪ್ರಭಾಕರ ಭಟ್ ಅವರ ಜಾಮೀನು ಅರ್ಜಿಗೆ ತಕರಾರು ಅರ್ಜಿ ಸಲ್ಲಿಸಿದರು. ದೂರುದಾರರಾಗಿರುವ ಈಶ್ವರಿ ಪದ್ಮುಂಜ ಅವರ ವಕೀಲರು ಪ್ರಭಾಕರ ಭಟ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿ ಹತ್ತಾರು ಪುಟಗಳ ಸುಧೀರ್ಘ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಪ್ರಭಾಕರ ಭಟ್ ಮೇಲಿದ್ದ 13 ಪ್ರಕರಣಗಳ ಇತಿಹಾಸ, ಸುಪ್ರಿಂ ಕೋರ್ಟ್ ತೀರ್ಪುಗಳನ್ನು ಹಿರಿಯ ವಕೀಲ ಸತೀಶನ್ ನ್ಯಾಯಾಲಯಕ್ಕೆ ಒದಗಿಸಿದ್ದರು. ಇದರ ಆಧಾರದಲ್ಲಿ ಹಲವು ಷರತ್ತುಗಳನ್ನು ವಿಧಿಸಿ ಪ್ರಭಾಕರ ಭಟ್ ಗೆ ನ್ಯಾಯಾಲಯ ಜಾಮೀನು ನೀಡಿದೆ.
ಪರಿಭಾವಿತ(ಡೀಮ್ಡ್) ಅರಣ್ಯ ವೀಸ್ತಿರ್ಣ ಪುನರ್ ಪರಿಶೀಲನೆಗೆ ಸಮಿತಿ: ಸಚಿವ ಈಶ್ವರ್ ಖಂಡ್ರೆ
ಬೆಳಗಾವಿ (ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಮೂರು ವರ್ಷದ ವರದಿ ಅನ್ವಯ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇದ್ದು, ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಎಸ್.ಎನ್.ನಾರಾಯಣಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 2022ರಲ್ಲಿ ವರದಿ ಅನ್ವಯ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ.ಇದರೊಂದಿಗೆ ಅರಣ್ಯ ಇಲಾಖೆ ಜಾಗ ಗುರುತಿಸಲು ಅನುಕೂಲವಾಗುವಂತೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ನಡೆಸಲು ಆದೇಶ ಮಾಡಲಾಗಿದೆ ಎಂದರು. ಪರಿಭಾವಿತ ಅರಣ್ಯ ಪ್ರದೇಶದ ವಿಸ್ತೀರ್ಣ ಪುನರ್ ಪರಿಶೀಲಿಸಲು ನೇಮಿಸಿರುವ ಸಮಿತಿ 6 ತಿಂಗಳಿನಲ್ಲಿ ತನ್ನ ವರದಿ ನೀಡಲಿದೆ. ಇದಕ್ಕೂ ಮುನ್ನ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಪರಿಭಾವಿತ ಅರಣ್ಯ ವಿಸ್ತೀರ್ಣ ಕುರಿತು ಜಿಲ್ಲಾ ಕೆಡಿಪಿ ಸಭೆಯಲ್ಲಿ ವರದಿ ಮಂಡಿಸಿ, ಎಲ್ಲ ಶಾಸಕರಿಗೂ ಮಾಹಿತಿ ನೀಡುವಂತೆ ಇಲಾಖೆಯಿಂದ ಆದೇಶ ನೀಡಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಒಕ್ಕಲೆಬ್ಬಿಸಿ ತೊಂದರೆ ನೀಡಿಲ್ಲ: ಕೋಲಾರ ಜಿಲ್ಲೆಯಲ್ಲಿ 36992 ಹೆಕ್ಟೇರ್ ಮೀಸಲು, 545.65 ಹೆಕ್ಟೇರ್ ಗ್ರಾಮ, 2885.59 ಹೆಕ್ಟೇರ್ ರಕ್ಷಿತ, ಸೆಕ್ಷೆನ್ 04 ಅಡಿ 1047.55 ಹೆಕ್ಟೇರ್, 5529.89 ಹೆಕ್ಟೇರ್ ವರ್ಗೀಕರಿಸಿದ ಹಾಗೂ 4986.70 ಹೆಕ್ಟೇರ್ ಪರಿಭಾವಿತ ಅರಣ್ಯವಿದೆ. ಒಟ್ಟಾರೆ ಜಿಲ್ಲೆಯಲ್ಲಿ 51987 ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಕಂದಾಯ, ಮೋಜಿಣಿ ಮತ್ತು ಅರಣ್ಯ ಇಲಾಖೆಗಳು ಜಂಟಿ ಮೋಜಿಣಿ ಕಾರ್ಯಕೈಗೊಂಡು ಅಕ್ರಮ ಅರಣ್ಯ ಒತ್ತುವರಿ ಪ್ರದೇಶವನ್ನು ಗುರುತಿಸಿದ್ದಾರೆ. ಕರ್ನಾಟಕ ಅರಣ್ಯ ಕಾಯಿದೆ 1964ರ ಕಲಂ 64(ಎ) ಅನ್ವಯ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿದೆ. ಒಮ್ಮೆ ಪಹಣಿಯಲ್ಲಿ ಅರಣ್ಯ ಎಂದು ನಮೂದಾರೆ ಯಾವುದೇ ಕಾರಣಕ್ಕೂ ಅರಣ್ಯ ಇಲಾಖೆ ಅನುಮತಿ ಪಡೆಯದೆ ಸಂಬಂಧಿಸಿದ ಜಮೀನನ್ನು ಯಾರಿಗೂ ಮಂಜೂರು ಮಾಡಲು ಬರುವುದಿಲ್ಲ. ಸರ್ವೋಚ್ಛ ನ್ಯಾಯಾಲಯವು ಸಹ ಒಮ್ಮೆ ಅರಣ್ಯ ಎಂದರೆ ಸದಾ ಅರಣ್ಯ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ಖಾಸಗಿ ಹಾಗೂ ಪಟ್ಟಾ ಜಮೀನು ಹೊಂದಿರವ ಯಾರನ್ನು ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಿ ತೊಂದರೆ ನೀಡಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಬಂಗಾರಪೇಟೆ ತಾಲೂಕಿನ ಇಂದಿರಾಗಾಂಧಿ ಪಾರ್ಕ್ ಅಭಿವೃದ್ಧಿ ಪಡಿಸಲು 2016-17 ರಿಂದ 2025-26 ರವರೆಗೆ 2.37 ಕೋಟಿ ರೂ., ಅನುದಾನ ನೀಡಲಾಗಿದೆ. ಅಗತ್ಯವಿದ್ದಲ್ಲಿ ಶಾಸಕರ ಬೇಡಿಕೆ ಮೇರೆಗೆ ಅನುದಾನ ಒದಗಿಸಲಾಗುವುದು. ಮಾಲೂರು ವ್ಯಾಪ್ತಿಯಲ್ಲಿ ಆನೆಗಳ ಹಾವಳಿ ತಡೆಗಟ್ಟಲು 74.43 ಕಿ.ಮೀ. ಸೋಲಾರ್ ತಂತಿಬೇಲಿ ಅಳವಡಿಸಲಾಗಿದೆ. ತಂತಿಬೇಲಿ ನಿರ್ವಹಣೆ ಅಗತ್ಯ ಇರುವ ಅನುದಾನವನ್ನು ಸಹ ನೀಡುವುದಾಗಿ ಅವರು ತಿಳಿಸಿದರು. ಶಾಸಕರ ಗಮನಕ್ಕೆ ತರಬೇಕು: ರಾಜ್ಯದ ಎಲ್ಲೆಡೆ ಪರಿಭಾವಿತ ಅರಣ್ಯ ವಿಸ್ತೀರ್ಣದ ಗೊಂದಲ ನಿವಾರಣೆ ಸರ್ಕಾರ ಸಮಿತಿ ರಚಿಸಿರುವುದು ಸ್ವಾಗತಾರ್ಹ ಕಾರ್ಯವಾಗಿದೆ. ಸಮಿತಿ ರಚಿಸುವ ವರದಿಯನ್ನು ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು. ಜಂಟಿ ಸರ್ವೇಕಾರ್ಯ ಮುಗಿಯುವವರೆಗೆ ಜನರನ್ನು ಒಕ್ಕಲೆಬ್ಬಿಸಬಾರದು ಎಂದು ಸದಸ್ಯರಾದ ಸಿ.ಸಿ.ಪಾಟೀಲ್, ಸುನೀಲ್ಕುಮಾರ್, ಅರಗಜ್ಞಾನೇಂದ್ರ, ಭಾಗೀರತಿ ಮರುಳ್ಯ ಸೇರಿದಂತೆ ಹಲವರು ಸಚಿವರಲ್ಲಿ ಮನವಿ ಮಾಡಿದರು.
ಸಹೋದರಿಯ ಮದುವೆಗೆ ಹಾಜರಾಗಲು ಉಮರ್ ಖಾಲಿದ್ಗೆ ಮಧ್ಯಂತರ ಜಾಮೀನು
ಹೊಸದಿಲ್ಲಿ: 2020 ರ ಈಶಾನ್ಯ ದಿಲ್ಲಿ ಗಲಭೆಯ ಪಿತೂರಿ ಆರೋಪದಲ್ಲಿ ಬಂಧನದಲ್ಲಿರುವ ಜೆಎನ್ಯುನ ಹಳೇ ವಿದ್ಯಾರ್ಥಿ ಹಾಗೂ ಹೋರಾಟಗಾರ ಉಮರ್ ಖಾಲಿದ್ ಅವರಿಗೆ ತಮ್ಮ ಸಹೋದರಿಯ ಮದುವೆಗೆ ಹಾಜರಾಗಲು ಕರ್ಕಾರ್ಡೂಮಾ ನ್ಯಾಯಾಲಯವು ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಡಿ. 16 ರಿಂದ 29 ರವರೆಗೆ ಜಾಮೀನು ಅನ್ವಯವಾಗಲಿದ್ದು, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜ್ಪೇಯಿ ಅವರು 20,000 ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಎರಡು ಶ್ಯೂರಿಟಿಗಳೊಡನೆ ಜಾಮೀನು ನೀಡುವಂತೆ ನಿರ್ದೇಶಿಸಿದ್ದಾರೆ. ಜಾಮೀನು ಅವಧಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿ ಅಥವಾ ವ್ಯಕ್ತಿಯನ್ನು ಸಂಪರ್ಕಿಸಬಾರದೆಂದು ಖಾಲಿದ್ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತನಿಖಾ ಅಧಿಕಾರಿಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಒದಗಿಸುವುದು ಹಾಗೂ ಅದು ಸಕ್ರಿಯವಾಗಿರಬೇಕೆಂಬ ಶರತ್ತನ್ನೂ ವಿಧಿಸಲಾಗಿದೆ. ಸಾಮಾಜಿಕ ಮಾಧ್ಯಮ ಬಳಕೆ ಮೇಲೆ ಸಂಪೂರ್ಣ ನಿಷೇಧ ಹೇರಿರುವ ನ್ಯಾಯಾಲಯ, ಖಾಲಿದ್ ಅವರು ಕುಟುಂಬದ ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರನ್ನು ಮಾತ್ರ ಭೇಟಿಯಾಗಲು ಅವಕಾಶ ನೀಡಿದೆ. ಅವರು ತಮ್ಮ ಮನೆಯಲ್ಲಿ ಅಥವಾ ವಿವಾಹ ಸಮಾರಂಭ ನಡೆಯುವ ಸ್ಥಳದಲ್ಲಿಯೇ ಇರಬೇಕು ಎಂದು ಆದೇಶಿಸಲಾಗಿದೆ. ಜಾಮೀನು ಅವಧಿ ಪೂರ್ಣಗೊಳ್ಳುವ ಡಿಸೆಂಬರ್ 29ರ ಸಂಜೆ, ಖಾಲಿದ್ ಅವರು ಸಂಬಂಧಿಸಿದ ಜೈಲಿನ ಸೂಪರಿಂಟೆಂಡೆಂಟ್ ಮುಂದೆ ಶರಣಾಗಬೇಕು ಎಂದು ಸೂಚಿಸಲಾಗಿದೆ. ಈಗಾಗಲೇ 2022 ಮತ್ತು 2023 ರಲ್ಲೂ ಕುಟುಂಬದ ಮದುವೆಗಳಿಗೆ ಹಾಜರಾಗುವ ಸಲುವಾಗಿ ಅವರಿಗೆ ಮಧ್ಯಂತರ ಜಾಮೀನು ಮಂಜೂರಾಗಿತ್ತು. ನಿಯಮಿತ ಜಾಮೀನು ನೀಡುವ ಕುರಿತು ವಿಚಾರಣಾ ನ್ಯಾಯಾಲಯ ಹಾಗೂ ದಿಲ್ಲಿ ಹೈಕೋರ್ಟ್ ಮೊದಲು ನಿರಾಕರಿಸಿತ್ತು. ಯುಎಪಿಎ ಸೇರಿದಂತೆ ಹಲವು ಗಂಭೀರ ಕಲಂಗಳ ಅಡಿಯಲ್ಲಿ ದಾಖಲಾದ ಎಫ್ಐಆರ್ 59/2020ರಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ನತಾಶಾ ನರ್ವಾಲ್ ಸೇರಿದಂತೆ 18 ಮಂದಿ ಆರೋಪಿಗಳು ಎಂದು ಹೆಸರಿಸಲಾಗಿದೆ. ಇಡೀ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಲಿದ್ ಸೇರಿದಂತೆ ಹಲವರ ಜಾಮೀನು ಅರ್ಜಿಗಳ ಮೇಲಿನ ತೀರ್ಪು ಸುಪ್ರೀಂ ಕೋರ್ಟ್ನಲ್ಲಿ ಕಾಯ್ದಿರಿಸಲಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಬಿಗಿಗೊಳಿಸಲು ಕ್ರಮ: ಡಾ. ಜಿ. ಪರಮೇಶ್ವರ್
ಬೆಳಗಾವಿ(ಸುವರ್ಣವಿಧಾನಸೌಧ): ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಗುರುವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು. ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 111 ಅನ್ನು ಅಳವಡಿಸಿ ನಿಯಮಾನುಸಾರ ಅಗತ್ಯವಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕ್ರಮದ ಮೂಲಕ ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಅಡ್ಡಿ ಉಂಟಾಗುವಂತೆ ಹಾಗೂ ವಾಹನ ಕಳವು ಪ್ರಕರಣಗಳ ಪತ್ತೆ ಮತ್ತು ತಡೆಗಟ್ಟುವಿಕೆಯಲ್ಲಿ ಪರಿಣಾಮಕಾರಿ ಕ್ರಮ ಜರುಗುವಂತೆ ನೋಡಿಕೊಳ್ಳಲಾಗಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು. ಆರೋಪಿಗಳಿಗೆ ಸುಲಭವಾಗಿ ಜಾಮೀನು ದೊರೆಯದಂತೆ ಕಠಿಣ ಕಾನೂನು ಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಆರೋಪಿಗಳ ಮೇಲಿನ ನಿಗಾವನ್ನು ಮತ್ತಷ್ಟು ಬಲಪಡಿಸಲಾಗಿದೆ. ಕಳವು ಪ್ರಕರಣಗಳನ್ನು ನಿಯಂತ್ರಿಸಲು ರಾತ್ರಿ ರೌಂಡ್ ಹಾಗೂ ರಸ್ತೆ ಗಸ್ತು ಕರ್ತವ್ಯವನ್ನು ಬಿಗಿಗೊಳಿಸಿ, ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳು, ಕಂಡುಬಂದಲ್ಲಿ ಅಂತಹವರ ವಿಚಾರಣೆಯನ್ನು ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅಧಿಕಾರಿ ಸಿಬ್ಬಂದಿಯವರಿಗೆ ಸೂಚಿಸಲಾಗಿದೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು. ಡೋರ್ ಲಾಕ್ ಹೌಸ್ಗಳಿದ್ದಲ್ಲಿ ಅಂತಹ ಮನೆಗಳ ಕುರಿತು ಠಾಣೆಯಲ್ಲಿ ಮಾಹಿತಿಯನ್ನು ಸಂಗ್ರಹಿಸಿ, ಠಾಣಾ ವ್ಯಾಪ್ತಿಯ ಮನೆಗಳಲ್ಲಿ ಸಾರ್ವಜನಿಕರು ಹೆಚ್ಚಿನ ದಿನಗಳು ಮನೆಗೆ ಬೀಗ ಹಾಕಿ ಹೋಗುವ ಸಮಯದಲ್ಲಿ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿಯನ್ನು ನೀಡುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು. ಗಸ್ತು ವಾಹನಗಳ ಹಾಗೂ ಹೊಯ್ಸಳ ವಾಹನದ ಅಧಿಕಾರಿಗಳು ರೌಂಡ್ಸ್ ಕರ್ತವ್ಯದಲ್ಲಿರುವ ಸಮಯದಲ್ಲಿ ಡೋರ್ ಲಾಕ್ ಹೌಸ್ಗಳ ಮೇಲೆ ನಿಗಾಯಿಟ್ಟು, ಸದರಿ ಪ್ರದೇಶದಲ್ಲಿ ಓಡಾಡುವ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆಯನ್ನು ನಡೆಸಿ ಅಪರಾಧಗಳ ಪತ್ತೆ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು. ವಾಹನ ಕಳವು ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಹಾಗೂ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲು ಸಾರ್ವಜನಿಕರಲ್ಲಿ ವಾಹನಗಳನ್ನು ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸುವ ಸಮಯದಲ್ಲಿ ಸರಿಯಾಗಿ ಹ್ಯಾಂಡ್ ಲಾಕ್ ಮಾಡುವಂತೆ ಅರಿವು ಮೂಡಿಸುವ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು. ಠಾಣಾ ವ್ಯಾಪ್ತಿಯಲ್ಲಿ ಸ್ವತ್ತು ಕಳವು ಪ್ರಕರಣವು ಹೆಚ್ಚಾಗಿ ವರದಿಯಾಗುವ ಸ್ಥಳಗಳನ್ನು ಗುರುತಿಸಿ ರಾತ್ರಿ ಪಾಳಿಯ ಕರ್ತವ್ಯದ ಅಧಿಕಾರಿಗಳು ಹಾಗೂ ರಾತ್ರಿ ಗಸ್ತು ಕರ್ತವ್ಯದ ಸಿಬ್ಬಂದಿಗಳು ಪದೇ ಪದೇ ಭೇಟಿ ಮಾಡಿ ಪರಿಶೀಲನೆಯನ್ನು ನಡೆಸಲಾಗುತ್ತಿದೆ ಎಂದು ಡಾ.ಜಿ.ಪರಮೇಶ್ವರ್ ವಿವರಿಸಿದರು. ಇದೇ ಸಂದರ್ಭದಲ್ಲಿ ಸಚಿವ ಡಾ.ಜಿ.ಪರಮೇಶ್ವರ್ ಅವರು ರಾಜ್ಯದಲ್ಲಿ ಹಿಂದಿನ 3 ವರ್ಷಗಳಲ್ಲಿ ದಾಖಲಾಗಿರುವ ಪ್ರಕರಣಗಳ ವಿವರವನ್ನು ಸದನದ ಗಮನಕ್ಕೆ ತಂದರು.
ಉತ್ತರ ಕರ್ನಾಟಕದ ಶಾಸಕರು ಬೆಂಗಳೂರಿಗೆ ಬಂದು ಭಿಕ್ಷೆ ಬೇಡಬೇಕಾದ ಪರಿಸ್ಥಿತಿ ಇದೆ. ಭಿಕುಕರಂತೆ ಬೇಡಿಕೊಂಡರು ಸಿಗೋದು ಪೈಸೆ ಹಣವಷ್ಟೇ ಎಂದು ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದರು. ಅಭಿವೃದ್ಧಿಗೆ ಅನುದಾನ ನೀಡುವಂತೆ ಅವರು ಮನವಿ ಮಾಡಿದರು. ಪ್ರತ್ಯೇಕ ರಾಜ್ಯದ ಬೇಡಿಕೆಗೆ ಬದ್ಧನಾಗಿರುವೆ. ಸರ್ಕಾರ ವಿರುದ್ಧ ಮಾತನಾಡಿದ್ರೆ ಅದೇ ದೊಡ್ಡ ವಿಚಾರ ಮಾಡ್ತಾರೆ ಆದರೆ ಸಮಸ್ಯೆ ಯಾರಿಗೆ ಹೇಳ್ಕೋಬೇಕು ಎಂದು ಕಿಡಿಕಾರಿದರು.
ತಾಯಿಯನ್ನು ಕೊಲ್ಲುವಂತೆ ಸಲಹೆ ನೀಡಿದ A.I. - ಅದಾದ ಮೇಲೆ ನಡೆದಿದ್ದೇ ಘೋರ!
ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಚಾಟ್ ಜಿಪಿಟಿ ತಾಯಿಯನ್ನು ಕೊಲ್ಲುವಂತೆ ಸೂಚಿಸಿದ್ದರಿಂದ ಮಗನೊಬ್ಬ ತಾಯಿಯನ್ನು ಹತ್ಯೆಗೈದಿದ್ದಾನೆ. ನಂತರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ತಂತ್ರಜ್ಞಾನದ ಅತಿಯಾದ ಅವಲಂಬನೆಯ ದುಷ್ಪರಿಣಾಮವನ್ನು ತೋರಿಸುತ್ತದೆ. ಮೃತ ಸುಝೇನ್ ಅವರ ಕಂಪನಿ ಚಾಟ್ ಜಿಪಿಟಿ ವಿರುದ್ಧ ಪ್ರಕರಣ ದಾಖಲಿಸಿದೆ. ಇದು ಕೃತಕ ಬುದ್ಧಿಮತ್ತೆಯ ವಿರುದ್ಧ ದಾಖಲಾದ ಮೊದಲ ಪ್ರಕರಣವಾಗಿದೆ.
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಯಾವಾಗ? ಮಹತ್ವದ ಅಪ್ಡೇಟ್ ನೀಡಿದ ಮುಖ್ಯ ಆರ್ಥಿಕ ಸಲಹೆಗಾರ ನಾಗೇಶ್ವರನ್
ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಅವರ ಪ್ರಕಾರ, ಭಾರತ ಮತ್ತು ಅಮೆರಿಕ ನಡುವಿನ ಬಹುತೇಕ ವ್ಯಾಪಾರ ಬಿಕ್ಕಟ್ಟುಗಳು ಬಗೆಹರಿದಿದ್ದು, ಮಾರ್ಚ್ ತಿಂಗಳಾಂತ್ಯಕ್ಕೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಬೀಳುವ ಸಾಧ್ಯತೆ ಇದೆ. ಭೌಗೋಳಿಕ ರಾಜಕೀಯ ಕಾರಣಗಳಿಂದ ಒಪ್ಪಂದದಲ್ಲಿ ತುಸು ವಿಳಂಬವಾಗಿದ್ದರೂ, ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ಇದು ಕಾರ್ಯರೂಪಕ್ಕೆ ಬರಲಿದೆ. ಇದೇ ವೇಳೆ, ಅಮೆರಿಕದ ನಿಯೋಗ ದಿಲ್ಲಿಯಲ್ಲಿದ್ದು, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಪ್ರವೇಶದ ಕುರಿತು ತೀವ್ರ ಮಾತುಕತೆ ನಡೆಸುತ್ತಿದೆ.
ಸಿಎಂ ಹೆಲಿಕಾಪ್ಟರ್ ಪ್ರಯಾಣ ಇಷ್ಟೊಂದು ದುಬಾರಿನಾ?; 2025ರ ನವೆಂಬರ್ವರೆಗೆ ಖರ್ಚಾಗಿದ್ದು47.38 ಕೋಟಿ ರೂ.
ಮುಖ್ಯಮಂತ್ರಿಯವರು ಅಧಿಕಾರ ವಹಿಸಿಕೊಂಡ 2023ರಿಂದ 2025ರ ನವೆಂಬರ್ ವರೆಗೆ ದೆಹಲಿ, ಕರ್ನಾಟಕದ ಹಲವು ಜಿಲ್ಲೆಗೆ ತೆರಳಲು ಸರ್ಕಾರದ ಬೊಕ್ಕಸದಿಂದ ಅವರ ಹೆಲಿಕಾಪ್ಟರ್ ಹಾಗೂ ವಿಶೇಷ ವಿಮಾನಯಾನಕ್ಕಾಗಿ ಬರೋಬ್ಬರಿ 47 ಕೋಟಿಗೂ ಅಧಿಕ ಹಣ ಖರ್ಚು ಮಾಡಿದ್ದಾರೆ ಎನ್ನಲಾಗಿದೆ. ವಿಧಾನ ಪರಿಷತ್ನಲ್ಲಿ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಸರ್ಕಾರ ಈ ಉತ್ತರ ನೀಡಲಾಗಿದೆ.
ಶುಭಮನ್ ಗಿಲ್ ಟಿ20 ಕಂಬ್ಯಾಕ್ ಡ್ರಾಮಾದಲ್ಲಿ ಸಂಜು ಸ್ಯಾಮ್ಸನ್ ಅವಕಾಶಕ್ಕೆ ಕೊಳ್ಳಿ! ಇದು ಎಷ್ಟರಮಟ್ಟಿಗೆ ಸರಿ?
India T20 Team Selection Criteria- ಶುಭಮನ್ ಗಿಲ್ ಅವರನ್ನು ಟೀಂ ಇಂಡಿಯಾದ ಮೂರೂ ಮಾದರಿಗಳಿಗೂ ನಾಯಕನನ್ನಾಗಿ ಮಾಡಬೇಕೆಂಬ ಆತುರದಲ್ಲಿರುವ ಬಿಸಿಸಿಐ ಈ ನಿಟ್ಟಿನಲ್ಲಿ ಸಂಜು ಸ್ಯಾಮ್ಸನ್ ಅವರ ಅವಕಾಶಕ್ಕೇ ಕೊಡಲಿಯೇಟು ಹಾಕಿದೆ. ಗಿಲ್ ಅವರಿಗೆ ಆರಂಭಿಕನ ಸ್ಥಾನ ಕಲ್ಪಿಸುವ ಸಲುವಾಗಿ ಕಳೆದ ವರ್ಷದ ಯಶಸ್ವಿ ಆರಂಭಿಕ ಸಂಜು ಸ್ಯಾಮ್ಸನ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಳುಹಿಸಲಾಗಿತ್ತು. ಅಲ್ಲಿ ಅವರು ಯಶಸ್ವಿಯಾಗಲಿಲ್ಲ ಎಂಬ ಕಾರಣಕ್ಕೆ ಇದೀಗ ತಂಡದಿಂದಲೇ ಕಿತ್ತೊಗೆದು ಜಿತೇಶ್ ಶರ್ಮಾ ಅವರನ್ನು ಪ್ಲೇಯಿಂಗ್ ಇಲೆವೆನ್ ಇಲೆವೆನ್ ನಲ್ಲಿ ಆಡಿಸುತ್ತಿದೆ.
ಪಡುಬಿದ್ರಿ | ಅದಾನಿ ಪವರ್: ಉಚ್ಚಿಲ ಬಡಾ ಗ್ರಾಪಂ ವ್ಯಾಪ್ತಿಯಲ್ಲಿ 37 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಪಡುಬಿದ್ರಿ: ಇಲ್ಲಿಗೆ ಸಮೀಪದ ಎಲ್ಲೂರು ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಪವರ್ ಲಿಮಿಟೆಡ್ನ ಸಿಎಸ್ಆರ್ ನಿಧಿಯಲ್ಲಿ ಉಚ್ಚಿಲ ಬಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 37 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಅದಾನಿ ಸಂಸ್ಥೆಯು ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ ಬಡಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ನಿರ್ಮಿಸಿದ 17 ಲಕ್ಷ ರೂ.ಗಳ ನೂತನ ಮಾರುಕಟ್ಟೆ ಸಂಕೀರ್ಣ ಹಾಗೂ 20 ಲಕ್ಷ ರೂ.ನಲ್ಲಿ ಮಾರುಕಟ್ಟೆ ವಿಸ್ತರಣೆ, ಸಾರ್ವಜನಿಕ ಶೌಚಾಲಯ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಕಾಮಗಾರಿಗೆ ಚಾಲನೆ ನೀಡಿದ ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಗ್ರಾಮೀಣ ಸಮುದಾಯಗಳನ್ನು ಸಬಲೀಕರಿಸುವುದು ಸಂಸ್ಥೆಯ ಪ್ರಮುಖ ಗುರಿಯಾಗಿದ್ದು, ಕೃಷಿ ಮೂಲಸೌಕರ್ಯವನ್ನು ಬಲಪಡಿಸುವುದು ಗ್ರಾಮೀಣ ಆರ್ಥಿಕತೆಯ ಅಭಿವೃದ್ಧಿಗೆ ಅವಶ್ಯಕ. ಹೊಸ ಮಾರುಕಟ್ಟೆ ರೈತರಿಗೆ ಹೆಚ್ಚು ಆದಾಯ ಮತ್ತು ಪಾರದರ್ಶಕ ಮಾರಾಟ ವ್ಯವಸ್ಥೆಯನ್ನು ಒದಗಿಸುವ ಮೂಲಕ ಮಹತ್ವದ ಪ್ರಯೋಜನ ನೀಡಲಿದೆ ಎಂದರು. ಬಡಾಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇದುವರೆಗೆ 1.51 ಕೋಟಿ ರೂ. ಮೌಲ್ಯದ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಗ್ರಾಮಸ್ಥರ ಉಪಯೋಗಕ್ಕೆ ಸಮರ್ಪಿಸಲಾಗಿದೆ ಎಂದರು. ಬಡಾಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್ ಮಾತನಾಡಿದರು. ಪಂಚಾಯತ್ ಸದಸ್ಯರಾದ ಇಂದಿರಾ ಶೆಟ್ಟಿ, ಅಬ್ದುಲ್ ಮಜೀದ್, ಶಕುಂತಲಾ, ನಿರ್ಮಲಾ, ರಜಾಕ್, ಮೋಹಿನಿ ಸುವರ್ಣ, ಕಲಾವತಿ, ತಾಲೂಕು ಪಂಚಾಯತ್ ಮಾಜಿ ಸದ್ಯಸ್ಯ ಯು.ಸಿ. ಶೇಕಬ್ಬ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ, ಪಂಚಾಯತ್ ಸಿಬ್ಬಂಧಿ ಶಶಿಕಾಂತ್ ಕುಮಾರ್, ಸ್ಥಳೀಯರು ಹಾಗೂ ಅದಾನಿ ಪವರ್ ಲಿಮಿಟೆಡ್ನ ರವಿ ಆರ್. ಜೇರೆ ಮತ್ತು ಅದಾನಿ ಫೌಂಡೇಷನ್ನ ಅನುದೀಪ್ ಉಪಸ್ಥಿತರಿದ್ದರು.
ವಿಟ್ಲ | ಡಿ.14ರಂದು ದುಲ್ ಫುಖಾರ್ ಸೇವಾ ಟ್ರಸ್ಟ್ ಕನ್ಮಾನ ಬೆಳ್ಳಿಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ
ವಿಟ್ಲ : ಬಡ ಮತ್ತು ಅನಾಥರ ಸೇವೆಯ ಗುರಿಯೊಂದಿಗೆ ಜನ್ಮ ತೆತ್ತು ಹುಟ್ಟು ದ್ಯೇಯದಲ್ಲಿ ಮುನ್ನಡೆಯುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದುಲ್ ಫುಖಾರ್ ಸೇವಾ ಟ್ರಸ್ಟ್ ಚೆಡವು ಕನ್ಯಾನ ಇದರ ಸಿಲ್ವರ್ ಜ್ಯುಬಿಲಿ ಮಹಾ ಸಮ್ಮೇಳನ ಡಿ.24 ಮತ್ತು 25 ರಂದು ಕನ್ಯಾನ ಕೇಂದ್ರ ಜುಮಾ ಮಸೀದಿಯಲ್ಲಿ ನಡೆಯಲಿದ್ದು, ಇದರ ಪ್ರಯುಕ್ತ ಡಿ.14ರಂದು ರಕ್ತದಾನ ಶಿಬಿರ ನಡೆಯಲಿದೆ. ಆ ಪ್ರಯುಕ್ತ ಹಮ್ಮಿಕೊಂಡ ಹಲವು ಯೋಜನೆಗಳಲ್ಲೊಂದಾದ ರಕ್ತದಾನ ಶಿಬಿರವು ಮಂಗಳೂರು ಎ.ಜೆ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಡಿ.14ರ ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಕನ್ಯಾನ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕೆಂದು ಸಂಘಟಕರು ತಿಳಿಸಿದ್ದಾರೆ
ಭಾರತ ಸರ್ಕಾರದ ಟ್ರೆಜರಿ ಬಿಲ್ಗಳು ಸುರಕ್ಷಿತ ಹೂಡಿಕೆಗಳಾಗಿವೆ. ಇವು ಅಲ್ಪಾವಧಿಗೆ ಲಭ್ಯವಿದ್ದು, 91, 182, 364 ದಿನಗಳ ಅವಧಿಯಲ್ಲಿ ಬರುತ್ತವೆ. ರಿಯಾಯಿತಿ ದರದಲ್ಲಿ ಖರೀದಿಸಿ, ಮುಖಬೆಲೆಗೆ ಮರಳಿಸುವ ಮೂಲಕ ಲಾಭ ಗಳಿಸಬಹುದು. ವ್ಯಕ್ತಿಗಳು ಮತ್ತು ಸಂಸ್ಥೆಗಳು ಆರ್ಬಿಐ ರೀಟೇಲ್ ಡೈರೆಕ್ಟ್ ಸ್ಕೀಮ್ ಅಥವಾ ಸ್ಟಾಕ್ ಎಕ್ಸ್ಚೇಂಜ್ಗಳ ಮೂಲಕ ಹೂಡಿಕೆ ಮಾಡಬಹುದು. ಇದು ಸುಲಭವಾಗಿ ಹಣ ಪಡೆಯಲು ಅನುಕೂಲಕರವಾಗಿದೆ.
ಕೊಣಾಜೆ | ಭಾಷೆ ಬೆಳೆದರೆ ಸಂಸ್ಕೃತಿ ಉಳಿಯುತ್ತದೆ : ಡಾ.ಸುಧೀರ್ ರಾಜ್. ಕೆ.
ಭಾರತೀಯ ಭಾಷಾ ದಿನಾಚರಣೆ ಕಾರ್ಯಕ್ರಮ
8th Pay Commission : ಕೇಂದ್ರ ಸರ್ಕಾರಿ ನೌಕರಿಗೆ ಶುಭಸುದ್ದಿ ಯಾವತ್ತಿಂದ - ಸರ್ಕಾರದ ಪ್ರತಿಕ್ರಿಯೆ
MoS for Finance responds - 8th Pay Commission : ಕೇಂದ್ರ ಸರ್ಕಾರಿ ನೌಕರರು ಕಾತುರದಿಂದ ಕಾಯುತ್ತಿರುವ ಎಂಟನೇ ವೇತನ ಆಯೋಗ ಜಾರಿಯಾಗುವುದು ಯಾವಾಗ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿದೆ. ಹಣಕಾಸು ಸಚಿವಾಲಯದಿಂದ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ
ಬೆಳಗಾವಿ (ಸುವರ್ಣ ವಿಧಾನಸೌಧ), ಡಿ.11: ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರ ವ್ಯಾಪ್ತಿಯಲ್ಲಿನ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ವ್ಯಾಪ್ತಿಯಲ್ಲಿ ಸರಕಾರಿ ಪ್ರೌಢಶಾಲೆ ಅವಶ್ಯಕತೆ ಇರುವುದು ಸರಕಾರದ ಗಮನಕ್ಕೆ ಬಂದಿದ್ದು, ಅಮರಾಪುರ ಕ್ರಾಸ್ ಅಥವಾ ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆಯೊಂದನ್ನು ಮಂಜೂರು ಮಾಡುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯೆ ಕರೆಮ್ಮ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇವದುರ್ಗದ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ಶಾಲೆಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಸರಕಾರಿ ಅಥವಾ ಅನುದಾನಿತ ಪ್ರೌಢಶಾಲೆಗಳು ಇರುವುದಿಲ್ಲ. ಆದುದರಿಂದ ಈ ಎರಡು ಶಾಲೆಗಳ ಪೈಕಿ ಒಂದನ್ನು ಪ್ರೌಢಶಾಲೆಯಾಗಿ ಉನ್ನತಿಕರಿಸಲು ಸರಕಾರ ಮಂಜೂರಾತಿ ನೀಡಲಿದೆ. ಇದರಿಂದ ನವಿಲಗುಡ್ಡ, ಬಾಗೂರು, ನೀಲವಂಜಿ, ಕರಡಿಗುಡ್ಡ, ಮಂಡಲಗುಡ್ಡ ಮತ್ತು ಹೇರುಂಡಿ ಶಾಲೆಗಳ ಮಕ್ಕಳಿಗೆ ಅನುಕೂಲವಾಗಲಿದೆ. ಮಲ್ಲೇಗೌಡರ ದೊಡ್ಡಿ ಗ್ರಾಮದಲ್ಲಿ ಕೆಕೆಆರ್ ಡಿಬಿ ಅನುದಾನದಲ್ಲಿ ಶಾಲಾ ಕಟ್ಟಡಗಳು ಹಾಗೂ ಶೌಚಾಲಯಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇಲ್ಲಿ ಶಿಕ್ಷಕರನ್ನು ನಿಯೋಜಿಸಿ ತಾತ್ಕಾಲಿಕವಾಗಿ ಶಾಲೆ ತೆರೆಯಲಾಗಿದೆ. ಮಲ್ಲೇಗೌಡರ ದೊಡ್ಡಿಯಲ್ಲಿ ನಿಯಮಾನುಸಾರ ಪ್ರಾಥಮಿಕ ಶಾಲೆ ಮಂಜೂರು ಮಾಡಲು ಪರಿಶೀಲನೆ ನಡೆಸುವುದಾಗಿ ಅವರು ಹೇಳಿದರು.
ವಿಧಾನಸಭೆಯಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ’ ವಿಧೇಯಕ ಮಂಡನೆ
‘ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿಪಡಿಸಿದರೂ ಗರಿಷ್ಠ 3 ವರ್ಷ ಜೈಲು ಶಿಕ್ಷೆ, 1ಲಕ್ಷ ರೂ. ದಂಡ’
ಪ್ರಜ್ವಲ್ ರೇವಣ್ಣ ಪ್ರಕರಣ: ವಿಚಾರಣೆ ವರ್ಗಾವಣೆ ಮನವಿಗೆ ಸುಪ್ರೀಂ ಕೋರ್ಟ್ ತಿರಸ್ಕಾರ
ಹೊಸದಿಲ್ಲಿ, ಡಿ.11: ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂಬ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಹಿಂದಿನ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಇದೇ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದರಿಂದ ತಟಸ್ಥತೆಗೆ ಅಡ್ಡಿಯಾಗಬಹುದು ಎಂಬ ವಾದವನ್ನು ರೇವಣ್ಣ ಪರ ವಕೀಲರು ಮಂಡಿಸಿದ್ದರು. ಆದರೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠ, ವಿಚಾರಣಾ ದಾಖಲೆಗಳ ಆಧಾರದಲ್ಲಿ ನ್ಯಾಯಾಧೀಶರು ಮಾಡಿದ ಅವಲೋಕನಗಳನ್ನು ಪಕ್ಷಪಾತದ ಸೂಚನೆ ಎಂದು ಕರೆಯಲು ಆಧಾರವಿಲ್ಲ ಎಂದು ಸ್ಪಷ್ಟಪಡಿಸಿತು. “ಹಿಂದಿನ ಪ್ರಕರಣದಲ್ಲಿನ ಪ್ರಕರಣಗಳನ್ನು ಪರಿಗಣಿಸಲಾಗುವುದಿಲ್ಲ. ಈಗಿನ ವಿಚಾರಣೆ ಸಂಪೂರ್ಣವಾಗಿ ದಾಖಲೆಯಲ್ಲಿರುವ ಸಾಕ್ಷ್ಯಾಧಾರಗಳ ಮೇಲೇ ನಿರ್ಧಾರವಾಗಲಿದೆ,” ಎಂದು ಸಿಜೆಐ ಕಾಂತ್ ಆದೇಶದಲ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ನಲ್ಲಿ ಈ ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದರಿಂದ, ರೇವಣ್ಣ ಸುಪ್ರೀಂ ಕೋರ್ಟ್ ಮೊರೆಹೋದಿದ್ದರು. ಐಪಿಸಿ ಸೆಕ್ಷನ್ 376(2)(n), 354A, 354B, 354C, 506, 201 ಹಾಗು ಐಟಿ ಕಾಯ್ದೆಯ ಸೆಕ್ಷನ್ 66ಇ ಅಡಿಯಲ್ಲಿ ರೇವಣ್ಣ ವಿರುದ್ಧ ಆರೋಪಗಳು ಬಾಕಿ ಇದ್ದು, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ತೋರಿಸುವ 2,900 ಕ್ಕೂ ಹೆಚ್ಚು ವೀಡಿಯೊಗಳು ಹೊರಬಂದ ನಂತರ ದಾಖಲಾಗಿದ್ದ ನಾಲ್ಕು ಪ್ರಕರಣಗಳಲ್ಲಿ ಇವು ಎರಡನೆಯದು. ಈ ವರ್ಷದ ಆಗಸ್ಟ್ನಲ್ಲಿ, ಕುಟುಂಬದ ಮನೆ ಕೆಲಸದಾಕೆಯ ಮೇಲೆ ಪದೇಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರು. ಆ ತೀರ್ಪಿನ ಮೇಲ್ಮನವಿ ಹೈಕೋರ್ಟ್ನಲ್ಲಿ ಬಾಕಿ ಇದೆ. ವಿಚಾರಣಾ ನ್ಯಾಯಾಧೀಶರ ಕೆಲವು ಅವಲೋಕನಗಳ ವಿರುದ್ಧ ರೇವಣ್ಣ ಪರ ಹಿರಿಯ ವಕೀಲರು ಆಕ್ಷೇಪ ವ್ಯಕ್ತಪಡಿಸಿದಾಗ, ಸಿಜೆಐ ಸೂರ್ಯಕಾಂತ್, “ನ್ಯಾಯಾಲಯದಲ್ಲಿ ಹಲವಾರು ಕಾಲ್ಪನಿಕ ಸನ್ನಿವೇಶಗಳನ್ನು ಉದಾಹರಣೆಗೆ ಹೇಳಲಾಗುತ್ತದೆ. ಅದನ್ನು ನ್ಯಾಯಾಧೀಶರ ವಿರುದ್ಧದ ಆರೋಪಗಳಾಗಿ ಪರಿವರ್ತಿಸುವುದು ಸರಿಯಲ್ಲ. ತಪ್ಪುಗಳಾಗಿದೆಯಾದರೆ ನಾವು ಸ್ವತಃ ತಿದ್ದಿಕೊಳ್ಳುತ್ತೇವೆ,” ಎಂದು ಹೇಳಿದರು. ವಕೀಲರ ಬದಲಾವಣೆಯನ್ನು ಉಲ್ಲೇಖಿಸಿ ವಿಚಾರಣಾ ನ್ಯಾಯಾಲಯ ಮಾಡಿದ ಟಿಪ್ಪಣಿಗಳನ್ನು ರದ್ದುಪಡಿಸುವ ಮನವಿಯನ್ನೂ ಪೀಠ ನಿರಾಕರಿಸಿತು. “ವಕೀಲರನ್ನು ಗದರಿಸುವ ಉದ್ದೇಶ ನ್ಯಾಯಾಲಯಕ್ಕೆ ಇಲ್ಲ. ಆದರೆ ವೃತ್ತಿಪರ ನೈತಿಕತೆಯ ಪಾಲನೆಯೂ ಅವಶ್ಯ. ಅಗತ್ಯವಿದ್ದರೆ ಹೈಕೋರ್ಟ್ ಮುಂದೆ ಕ್ಷಮೆಯಾಚಿಸಬಹುದು,” ಎಂದು ನ್ಯಾಯಾಲಯ ಸೂಚನೆ ನೀಡಿತು.
ಡೆವಿಲ್ ಸಿನಿಮಾಗೆ ರೇಟಿಂಗ್ ನೀಡುವ ಆಯ್ಕೆಯೇ ಇಲ್ಲ! ಬುಕ್ಮೈ ಶೋನಲ್ಲಿ ವಿಮರ್ಶೆಗೆ ಬ್ರೇಕ್; ಕಾರಣವೇನು?
ಡೆವಿಲ್ ಸಿನಿಮಾ ವೀಕ್ಷಕರಿಗೆ ಬುಕ್ಮೈ ಶೋನಲ್ಲಿ ಅಚ್ಚರಿ ಕಾದಿದೆ. ಆಪ್ನಲ್ಲಿ ಸಿನಿಮಾದ ರೇಟಿಂಗ್ ನೀಡುವ ಆಯ್ಕೆಯನ್ನು ಸ್ಥಗಿತಗೊಳಿಸಲಾಗಿದೆ. ಕೋರ್ಟ್ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಹಣ ಕೊಟ್ಟು ನೆಗೆಟಿವ್ ವಿಮರ್ಶೆ ಬರೆಸುವ ಪ್ರವೃತ್ತಿ ಸಿನಿಮಾ ಸಂಸ್ಕೃತಿಗೆ ಹಾನಿ ಮಾಡುತ್ತಿದೆ ಎಂದು ನಿರ್ದೇಶಕ ದಿನಕರ್ ತೂಗುದೀಪ ಹೇಳಿದ್ದಾರೆ. ಈ ನಿರ್ಧಾರದಿಂದ ಪ್ರೇಕ್ಷಕರಿಗೆ ನಿರಾಸೆಯಾಗಿದೆ.
The Devil Review: ಇದು ದರ್ಶನ್ ವಿರುದ್ಧ ದರ್ಶನ್ ತೊಡೆ ತಟ್ಟಿ ನಿಲ್ಲುವ ಸಿನಿಮಾ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ ಇಂದು (ಡಿಸೆಂಬರ್ 11) ತೆರೆಗೆ ಬಂದಿದೆ. ದರ್ಶನ್ ಡಬಲ್ ಆಕ್ಟಿಂಗ್ ಮಾಡಿರುವ ‘ದಿ ಡೆವಿಲ್’ ಚಿತ್ರ ಹೇಗಿದೆ? ಅಭಿಮಾನಿಗಳಿಗೆ ‘ದಿ ಡೆವಿಲ್’ ಇಷ್ಟವಾಗುತ್ತಾ? ಇಲ್ಲಿದೆ ಓದಿ ‘ದಿ ಡೆವಿಲ್’ ವಿಮರ್ಶೆ..
ಸಾಮಾಜಿಕ ಬಹಿಷ್ಕಾರದ ವಿರುದ್ಧ ಕಠಿಣ ಕಾನೂನು, 3 ವರ್ಷ ಜೈಲು, 1 ಲಕ್ಷ ದಂಡ! ವಿಧಾನಸಭೆಯಲ್ಲಿ ಮಸೂದೆ ಮಂಡನೆ
ಸಾಮಾಜಿಕ ಬಹಿಷ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ. ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ ಮಸೂದೆ-2025 ಅನ್ನು ಸಚಿವ ಮಹದೇವಪ್ಪ ಅವರು ಮಂಡಿಸಿದರು. ಈ ಕಾನೂನಿನಡಿ ಏನೆಲ್ಲ ಕ್ರಮ ಕೈಗೊಳ್ಳಲಾಗುತ್ತದೆ. ಬಹಿಷ್ಕಾರ ಹಾಕಿದವರ ವಿರುದ್ಧ ಕ್ರಮವೇನು ಯಾರಿಗೆಲ್ಲ ಶಿಕ್ಷಯಾಗುತ್ತದೆ. ಎಂತಹ ವಿಚಾರದಲ್ಲಿ ಬಹಿಷ್ಕಾರ ಹಾಕಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಕ್ಕೆ ಮಾಹಿತಿ ಈ ಲೇಖನದಲ್ಲಿ ಇದೆ.
ತೊಂದರೆಗೊಳಗಾದ ಪ್ರಯಾಣಿಕರಿಗೆ ಪರಿಹಾರ ಘೋಷಿಸಿದ ಇಂಡಿಗೋ
ಇಂಡಿಗೋ ವಿಮಾನಯಾನ ಸಂಸ್ಥೆಯು ಸಿಬ್ಬಂದಿ ಕೊರತೆಯಿಂದಾಗಿ ಡಿಸೆಂಬರ್ 3 ರಿಂದ 5 ರವರೆಗೆ ವಿಮಾನಗಳು ರದ್ದಾಗಿ ತೊಂದರೆಗೊಳಗಾದ ಪ್ರಯಾಣಿಕರಿಗೆ ಪರಿಹಾರ ಘೋಷಿಸಿದೆ. ಸಾವಿರಾರು ಮಂದಿ ಪ್ರಯಾಣಿಕರು ಗಂಟೆಗಟ್ಟಲೆ ಪರದಾಡಿದ್ದರು. ಈ ಸಮಸ್ಯೆಗೆ ಪರಿಹಾರವಾಗಿ, ಇಂಡಿಗೋ ₹10,000 ಮೌಲ್ಯದ ಟ್ರಾವೆಲ್ ವೋಚರ್ಗಳನ್ನು ನೀಡುತ್ತಿದೆ. ಈ ವೋಚರ್ಗಳನ್ನು ಮುಂದಿನ 12 ತಿಂಗಳೊಳಗೆ ಬಳಸಬಹುದು. ಹಣ ಹಿಂದಿರುಗಿಸುವ ಪ್ರಕ್ರಿಯೆಯೂ ಆರಂಭವಾಗಿದೆ.
ಕೊಣಾಜೆ | ಕ್ರೀಡೆಯಲ್ಲಿ ಸಾಧನೆ ಮಾಡಲು ಕಠಿಣ ಪರಿಶ್ರಮ ಮುಖ್ಯ : ಅರುಣ್ ಕುಮಾರ್ ಗಟ್ಟಿ
ಕೊಣಾಜೆ: ಕ್ರೀಡೆಯಲ್ಲಿ ಸಾಧನೆ ಮಾಡಲು ಕಠಿಣ ಪರಿಶ್ರಮ, ಬದ್ಧತೆ, ಸಮಯ ಪ್ರಜ್ಞೆ,ತಾಳ್ಮೆ, ಆತ್ಮವಿಶ್ವಾಸ ಗುಣಗಳೇ ಮುಖ್ಯ. ಆದರೆ, ಬಡತನ ಎನ್ನುವುದು ಕ್ರೀಡಾ ಸಾಧನೆಗೆ ಅಡ್ಡಿ ಬರುವುದಿಲ್ಲ, ವಿಶ್ವ ಕಪ್ ಕಬಡ್ಡಿ ಪಂದ್ಯಾಟದಲ್ಲಿ ವಿಜೇತರಾಗಿರುವ ಧನಲಕ್ಷ್ಮೀ ಪೂಜಾರಿ ಅವರು ಕಡು ಬಡತನದಲ್ಲಿ ಹುಟ್ಟಿ ಇಂದು ವಿಶ್ವದಲ್ಲೇ ತನ್ನ ಹೆಸರನ್ನು ದಾಖಲಿಸಿಕೊಂಡದ್ದು ನಮಗೆಲ್ಲ ಉದಾಹರಣೆ. ಸೋಲು ಮತ್ತು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಅದನ್ನು ಸಮಾನವಾಗಿ ಸ್ವೀಕರಿಸಿದಾಗ ಕ್ರೀಡಾ ಜೀವನದಲ್ಲಿ ಅದ್ಭುತವಾದ ಯಶಸ್ಸುಗಳಿಸಲು ಸಾಧ್ಯ ಎಂದು ರಾಜ್ಯ ಮಟ್ಟದ ಮಾಜಿ ಕ್ರೀಡಾಪಟು ಆಗಿರುವ ಅರುಣ್ ಕುಮಾರ್ ಗಟ್ಟಿ ಅಗರಿಮಾರ್ ಅಭಿಪ್ರಾಯ ಪಟ್ಟರು. ಅವರು ಹರೇಕಳ ಶ್ರೀ ರಾಮಕೃಷ್ಣಅನುದಾನಿತ ಪ್ರೌಢಶಾಲೆಯ ಶಾಲಾ ಅಂತರ್ಗತ ಪಂದ್ಯಾಟ - ಕ್ರೀಡಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಮೋಹಿನಿ ಅವರು ವಹಿಸಿ ಮಕ್ಕಳು ಪ್ರತಿನಿತ್ಯ ಕ್ರೀಡೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಾಗ ಉತ್ತಮ ಅರೋಗ್ಯ ಸಾಧ್ಯ , ಇಂದು ಮೊಬೈಲ್ ಗೆ ದಾಸರಾಗುವ ಮಕ್ಕಳು ಯಾವುದಾದರೂ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಮಾನಸಿಕ, ಬೌದ್ಧಿಕ ಅರೋಗ್ಯ ವೃದ್ಧಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಸಾಧಕ ಅರುಣ್ ಕುಮಾರ್ ಗಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಲತಾ, ಶಾಲಾ ನಾಯಕಿ ಫಾತಿಮ ರಫೀದ, ಚೈತನ್ಯ ಕ್ರೀಡಾ ಸಂಘದ ನಾಯಕ ಅನ್ವಿತ್ ಮುಂತಾದವರು ಉಪಸ್ಥಿತರಿದ್ದರು.ಶಿಕ್ಷಕರಾದ ಕೃಷ್ಣ ಶಾಸ್ತ್ರೀ, ಸ್ಮಿತಾ ಸಹಕರಿಸಿದರು. ಹಿರಿಯ ಶಿಕ್ಷಕರಾದ ರವಿಶಂಕರ್ ಸರ್ವರನ್ನು ಸ್ವಾಗತಿಸಿದರು, ಶಿಕ್ಷಕ ಶಿವಕುಮಾರ್ ಧನ್ಯವಾದವಿತ್ತರು. ಕಾರ್ಯಕ್ರಮ ಸಯ್ಯೋಜಕರು, ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಮ್ ಹರೇಕಳ ನಿರೂಪಿಸಿದರು.
ಸತತ 3 ದಿನಗಳ ಕುಸಿತದ ನಂತರ ಪುಟಿದೆದ್ದ ಷೇರುಪೇಟೆ, ದಿಢೀರ್ ಏರಿಕೆ ಇಲ್ಲಿವೆ 6 ಕಾರಣಗಳು
ಸತತ ಮೂರು ದಿನಗಳ ಕುಸಿತದ ನಂತರ ಗುರುವಾರ ಷೇರು ಮಾರುಕಟ್ಟೆಯಲ್ಲಿ ಗಮನಾರ್ಹ ಚೇತರಿಕೆ ಕಂಡುಬಂತು. ಸೆನ್ಸೆಕ್ಸ್ 426 ಅಂಕಗಳಷ್ಟು ಏರಿಕೆಯಾಗಿ 84,818 ಅಂಕಗಳನ್ನು ತಲುಪಿದರೆ, ನಿಫ್ಟಿ 140 ಅಂಕಗಳ ಗಳಿಕೆಯೊಂದಿಗೆ 25,898 ಅಂಕಗಳಲ್ಲಿ ವಹಿವಾಟು ಕೊನೆಗೊಳಿಸಿತು. ಮಾಹಿತಿ ತಂತ್ರಜ್ಞಾನ, ಲೋಹ ಮತ್ತು ಬ್ಯಾಂಕಿಂಗ್ ವಲಯಗಳಲ್ಲಿ ಮೌಲ್ಯವರ್ಧಿತ ಖರೀದಿ, ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಸಕಾರಾತ್ಮಕ ಸೂಚನೆಗಳು, ಫೆಡರಲ್ ರಿಸರ್ವ್ ದರ ಕಡಿತ ಈ ಚೇತರಿಕೆಗೆ ಪ್ರಮುಖ ಕಾರಣಗಳಾಗಿವೆ.
ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ್ ಖರ್ಗೆ: ಪತ್ರದಲ್ಲೇನಿದೆ?
ಬೆಂಗಳೂರು, ಡಿಸೆಂಬರ್ 11: ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಸಮಗ್ರ ಬಹುಗ್ರಾಮ ಕುಡಿಯುವ ನೀರು ಒದಗಿಸುವ ಯೋಜನೆಗಾಗಿ ಅನುಮೋದನೆ ಹಾಗೂ ಜಲ್ ಜೀವನ್ ಮೀಷನ್ ಯೋಜನೆಯಡಿಯಲ್ಲಿ 50% ಕೇಂದ್ರ ಸರ್ಕಾರದ ಹೊಂದಾಣಿಕೆ ಅನುದಾನ ಬಿಡುಗಡೆ ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಈ ಕುರಿತು
ಸೌಕೂರು ಏತ ನೀರಾವರಿ ಯೋಜನೆಯ ರೈತರ ಸುಗ್ಗಿ ಬೆಳೆಗೆ ನೀರು ಒದಗಿಸಲು ಡಿಸಿಎಂಗೆ ಪತ್ರ ಬರೆದ ಎಂಎಲ್ಸಿ ಭಂಡಾರಿ
‘ವಾರ್ತಾಭಾರತಿ’ ವರದಿ ಉಲ್ಲೇಖ
ರಣವೀರ್ ಸಿಂಗ್ ‘ಧುರಂಧರ್’ಗೆ ಹೃತಿಕ್ ರೋಷನ್ ಶ್ಲಾಘನೆ; ರಾಜಕೀಯ ದೃಷ್ಟಿಕೋನ ಕುರಿತು ಪ್ರಶ್ನಿಸಿದ ನಟ
ಮುಂಬೈ: ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಚಿತ್ರಕ್ಕೆ ಬಾಲಿವುಡ್ ನಟ ಹೃತಿಕ್ ರೋಷನ್ ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಚಿತ್ರದ ರಾಜಕೀಯ ದೃಷ್ಟಿಕೋನದ ಬಗ್ಗೆ ನನಗೆ ಒಪ್ಪಿಗೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರ ಡಿಸೆಂಬರ್ 5ರಂದು ಬಿಡುಗಡೆಯಾಗಿದ್ದು, 2000ರ ದಶಕದ ಉತ್ತರಾರ್ಧದ ಭಯೋತ್ಪಾದನಾ ಹಿನ್ನೆಲೆಯ ಕಥಾಹಂದರವನ್ನು ಕಲ್ಪನಾತ್ಮಕ ರೂಪದಲ್ಲಿ ತೆರೆಮೇಲೆ ತಂದಿದ್ದಾರೆ. ಚಿತ್ರದಲ್ಲಿ ರಣವೀರ್ ಸಿಂಗ್ ಹಂಝಾ ಎಂಬ ಭಾರತೀಯ ಗುಪ್ತಚರನಾಗಿ ನಟಿಸಿದ್ದು, ಪಾಕಿಸ್ತಾನ ಮೂಲದ ರೆಹಮಾನ್ ಡಕಾಯತ್ ಗ್ಯಾಂಗ್ಗೆ ನುಸುಳುವ ಕಾರ್ಯಾಚರಣೆಯ ಸುತ್ತ ಕಥೆ ಸಾಗುತ್ತದೆ. ಬೇಹುಗಾರಿಕೆ, ಅಪರಾಧ ಜಾಲ ಮತ್ತು ಗುಪ್ತಚರ ಕಾರ್ಯಗಳ ಸಂಕೀರ್ಣತೆಯನ್ನು ಚಿತ್ರವು ಆಳವಾಗಿ ಬಿಚ್ಚಿಡುತ್ತದೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿರುವ ಹೃತಿಕ್, “ಸದಾ ಯೋಚನೆಗಳಲ್ಲಿ ಸಿಲುಕುವ ಪಾತ್ರಗಳನ್ನು ನಾನು ಪ್ರೀತಿಸುತ್ತೇನೆ. ಕಥೆಯನ್ನು ಹಿಡಿದು ಗಿರಕಿ ಹೊಡೆಸುವವ ನಿರ್ದೇಶಕರ ಕೈಚಳಕ ‘ಧುರಂಧರ್’ನಲ್ಲಿ ಸ್ಪಷ್ಟವಾಗಿ ಕಾಣುತ್ತದೆ. ಸಿನಿಮಾ ಹೇಳುವ ವಿಧಾನ ಅದ್ಭುತ” ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಮುಂದುವರಿದು, “ಅದರಲ್ಲಿರುವ ರಾಜಕೀಯ ಒಳನೋಟಗಳನ್ನು ನಾನು ಒಪ್ಪದೆ ಇರಬಹುದು ಮತ್ತು ನಾವು ಜಾಗತಿಕ ಪ್ರಜೆಗಳಾಗಿ ಸಿನಿಮಾ ನಿರ್ದೇಶಕರಾಗಿ ಹೊರಬೇಕಾದ ಜವಾಬ್ದಾರಿಯ ಬಗ್ಗೆ ಚರ್ಚಿಸಲು ಬಯಸುತ್ತೇನೆ. ಆದರೆ ಸಿನಿಮಾದ ವಿದ್ಯಾರ್ಥಿಯಾಗಿ ಇದನ್ನು ನಾನು ಎಷ್ಟು ಇಷ್ಟಪಟ್ಟೆ ಮತ್ತು ಏನು ಕಲಿತಿದ್ದೇನೆ ಎನ್ನುವುದನ್ನು ಅಲಕ್ಷಿಸಲು ಸಾಧ್ಯವಿಲ್ಲ. ಅತ್ಯದ್ಭುತ” ಎಂದು ಬರೆದಿದ್ದಾರೆ. ಇದಕ್ಕೂ ಮೊದಲು ಅಕ್ಷಯ್ ಕುಮಾರ್ ಕೂಡ ಚಿತ್ರದ ಕಥಾಹಂದರವನ್ನು ಹೊಗಳುತ್ತಾ, “ಎಂತಹ ಆಕರ್ಷಕ ಕಥೆ! ಅದನ್ನು ಆದಿತ್ಯ ಧರ್ ಅದ್ಭುತವಾಗಿ ಹೇಳಿಕೊಂಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದರು. ನಟಿ, ರಾಜಕಾರಣಿಯಾಗಿರುವ ಸ್ಮೃತಿ ಇರಾನಿ ಅವರು ಸಿನಿಮಾ ನಿಜ ಜೀವನದ ಅನುಭವಗಳನ್ನು ಪ್ರತಿಬಿಂಬಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಣವೀರ್ ಜೊತೆಗೆ ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಂಜಯ್ ದತ್ ಸೇರಿದಂತೆ ಹಲವು ನಟರು ಪಾತ್ರವಹಿಸಿರುವ ಈ ಚಿತ್ರದ ಮುಂದುವರಿದ ಭಾಗ ಮುಂದಿನ ವರ್ಷದ ಮಾರ್ಚ್ 19ರಂದು ಬಿಡುಗಡೆಯಾಗಲಿದೆ.
ಮದುವೆ ಮಾತುಕತೆಗೆಂದು ಕರೆಸಿ ಯುವಕನ ಹತ್ಯೆ; ಬ್ಯಾಟ್ನಿಂದಲೇ ಹೊಡೆದು ಕೊಂದ ಯುವತಿ ಕುಟುಂಬ
ತೆಲಂಗಾಣದಲ್ಲಿ ಬಿಟೆಕ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬರನ್ನು ಆತನ ಪ್ರೇಯಸಿಯ ಕುಟುಂಬವು ಕ್ರಿಕೆಟ್ ಬ್ಯಾಟ್ನಿಂದ ಹಿಗ್ಗಾಮುಗ್ಗ ಥಳಿಸಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಜ್ಯೋತಿ ಶ್ರವಣ್ ಸಾಯಿ ಎಂಬ ಯುವಕ ಶ್ರೀಜಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಇದಕ್ಕೆ ಪೋಷಕರ ವಿರೋಧವಿತ್ತು ಹಲವು ಬಾರಿ ಬೇಡ ಎಂದು ಕಿವಿಮಾತು ಹೇಳಿದರು. ಸಂಬಂಧ ಮುಂದುವರೆಸಿದ ಹಿನ್ನೆಲೆ, ಸಿಟ್ಟಾಗಿ ಮದುವೆ ಮಾತುಕತೆ ನೆಪದಲ್ಲಿ ಮನೆಗೆ ಕರೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಸರ್ಕಾರ ಸುಮಾರು 2 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಬೇಕಿದೆ. ಶಿರೂರು ಏತ ನೀರಾವರಿ ಯೋಜನೆ ಪ್ರಗತಿಯಲ್ಲಿದ್ದು, ಅನುಮೋದನೆ ಬಳಿಕ ಕಾಮಗಾರಿ ಆರಂಭವಾಗಲಿದೆ.
ಕಾನೂನು ಸಚಿವ ಎಚ್.ಕೆ. ಪಾಟೀಲ್ ವಿರುದ್ಧವೇ ಹೋರಾಡಿ ಗೆದ್ದ ಜಕ್ಕವ್ವ ಯಾರು? ಈ ಪ್ರಕರಣದ ಹಿಂದಿದೆ 135 ವರ್ಷಗಳ ಇತಿಹಾಸ!
ಹುಬ್ಬಳ್ಳಿಯ ಸ್ಥಿರಾಸ್ತಿಯವರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಕುಟುಂಬದ ವಿರುದ್ಧ ಧೈರ್ಯದಿಂದ ಹೋರಾಡಿದ ಸಾವಕ್ಕ ಸುಳ್ಳದ ಮತ್ತು ಜಕ್ಕವ್ವ ಸಹೋದರಿಯರು 15 ಗುಂಟೆ ಜಾಗವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಜಾಗವನ್ನು ಈ ಸಹೋದರಿಯರ ತಂದೆ 1894ರಲ್ಲೇ ಗುತ್ತಿಗೆ ನೀಡಿದ್ದರು. ಆ ಗುತ್ತಿಗೆಯ ಜಾಗದಲ್ಲಿ ಎಚ್ ಕೆ ಪಾಟೀಲರ ತಂದೆ ಉಪ ಗುತ್ತಿಗೆದಾರರಾಗಿ ಆಗಮಿಸಿದ್ದರು. ಸುಮಾರು 69 ವರ್ಷಗಳಿಂದ ಅವರ ವಶದಲ್ಲಿದ್ದ ಜಾಗ ಈಗ ನ್ಯಾಯಾಲಯದ ತೀರ್ಪಿನಿಂದ ಜಕ್ಕವ್ವ - ಸಾವಕ್ಕನವರ ಪಾಲಾಗಿದೆ.
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ!
ಬೆಳಗಾವಿ, ಡಿಸೆಂಬರ್ 11: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ

19 C