ಜಿಬಿಎ ವ್ಯಾಪ್ತಿಯಲ್ಲಿ ವಾರ್ಡ್ವಾರು ಕರಡು ಮತದಾರರ ಪಟ್ಟಿ ಪ್ರಕಟ; ಐದು ನಗರ ಪಾಲಿಕೆಗಳಲ್ಲಿ 88,91,411 ಮತದಾರರು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಚುನಾವಣೆ ನಡೆಸುವ ಸಲುವಾಗಿ ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ಪಟ್ಟಿಯಲ್ಲಿ 88,91,411 ಮತದಾರರಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್ ಸಂಗ್ರೇಶಿ ಹೇಳಿದ್ದಾರೆ. ಸೋಮವಾರ ಇಲ್ಲಿನ ಜಿಬಿಎ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಬಿಎನ ಐದು ನಗರ ಪಾಲಿಕೆಗಳ 369 ವಾರ್ಡ್ಗಳಲ್ಲಿ 45,69,193 ಪುರುಷ ಮತದಾರರು, 43,20,583 ಮಹಿಳಾ ಮತದಾರರು ಹಾಗೂ 1,635 ಇತರೆ ಮತದಾರರು ಸೇರಿದಂತೆ, ಒಟ್ಟು 88,91,411 ಮತದಾರರಿದ್ದಾರೆ ಎಂದರು. ಬೆಂಗಳೂರು ಕೇಂದ್ರ ಪಾಲಿಕೆಯಲ್ಲಿ 14,25,483, ಉತ್ತರ ಪಾಲಿಕೆಯಲ್ಲಿ 19,54,206, ದಕ್ಷಿಣ ಪಾಲಿಕೆಯಲ್ಲಿ 17,44,270, ಪೂರ್ವ ಪಾಲಿಕೆಯಲ್ಲಿ 10,41,738 ಮತ್ತು ಪಶ್ಚಿಮ ಪಾಲಿಕೆಯಲ್ಲಿ 27,25,714 ಮತದಾರರಿದ್ದಾರೆ. ಪ್ರಾಧಿಕಾರ ವ್ಯಾಪ್ತಿಯಲ್ಲಿ ಒಟ್ಟು 8,044 ಮತಗಟ್ಟೆಗಳಿವೆ ಎಂದು ಅವರು ವಿವರಿಸಿದರು. ಮತದಾರರ ಸಹಾಯವಾಣಿ: ಮತದಾರರ ಅನುಕೂಲಕ್ಕಾಗಿ ಐದು ನಗರ ಪಾಲಿಕೆಗಳ ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದ್ದು, ಬೆಂಗಳೂರು ಕೇಂದ್ರ 080-22975803, ಬೆಂಗಳೂರು ಉತ್ತರ 080-22975936, ಬೆಂಗಳೂರು ದಕ್ಷಿಣ 9480685704, ಬೆಂಗಳೂರು ಪೂರ್ವ 9480685706 ಮತ್ತು ಬೆಂಗಳೂರು ಪಶ್ಚಿಮ ಪಾಲಿಕೆಗೆ ಸಂಬಂಧಿಸಿ 9480685703 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಅವರು ಹೇಳಿದರು. ನಮೂನೆಗಳ(ಫಾರಂ) ಮೂಲಕ ಅರ್ಜಿ ಸಲ್ಲಿಕೆ: ಅಂತಿಮ ಮತದಾರರ ಪಟ್ಟಿ ಸಿದ್ಧತೆಗೆ, ಆಯೋಗದಿಂದ ನೇಮಕಗೊಂಡ ಮತದಾರರ ನೋಂದಣಾಧಿಕಾರಿ / ಸಹಾಯಕ ಮತದಾರರ ನೋಂದಣಾಧಿಕಾರಿ / ಬಿ.ಎಲ್.ಓ ಅವರ ಬಳಿ ನಿಗಧಿತ ನಮೂನೆಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಮತದಾರರ ಹೆಸರು ಸೇರ್ಪಡೆಗೆ ನಮೂನೆ–4, ಹೆಸರು ಸೇರ್ಪಡೆಗೆ ಆಕ್ಷೇಪಣೆ ಸಲ್ಲಿಸಲು ನಮೂನೆ–5, ಹೆಸರು ತಿದ್ದುಪಡಿಗೆ ನಮೂನೆ–6, ಸ್ಥಳ ಬದಲಾವಣೆಗೆ ನಮೂನೆ–7, ಹೆಸರು ತೆಗೆದು ಹಾಕಲು ನಮೂನೆ–8 ಅನ್ನು ಸಲ್ಲಿಸಬೇಕು ಎಂದು ಅವರು ವಿವರಿಸಿದರು. ಸುದ್ದಿಗೋಷ್ಟಿಯಲ್ಲಿ ನಗರ ಪಾಲಿಕೆಗಳ ಆಯುಕ್ತರುಗಳಾದ ರಾಜೇಂದ್ರ ಚೋಳನ್, ಪೆÇಮ್ಮಲ ಸುನೀಲ್ ಕುಮಾರ್, ರಮೇಶ್ ಡಿ.ಎಸ್., ಡಾ: ರಾಜೇಂದ್ರ ಕೆ.ವಿ, ಚುನಾವಣಾ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಯಾದ ಸೆಲ್ವಮಣಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ʼಇದು ಎಸ್ಐಆರ್ ಅಲ್ಲʼ ಈಗ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗವು ಪ್ರಕಟಿಸಿದ್ದು, ಇದಕ್ಕೆ ಅರ್ಹ ಮತದಾರರನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಅಲ್ಲ. ಕೇಂದ್ರ ಚುನಾವಣಾ ಆಯೋಗವೇ ಎಸ್ಐಆರ್ ಅನ್ನು ನಡೆಸಲಿದೆ. - ಜಿ.ಎಸ್ ಸಂಗ್ರೇಶಿ, ರಾಜ್ಯ ಚುನಾವಣಾ ಆಯೋಗದ ಆಯುಕ್ತ ಫೆ.3ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಮಾ.16ರಂದು ಅಂತಿಮ ಪಟ್ಟಿ ಪ್ರಕಟ ಕರಡು ಮತದಾರರ ಪಟ್ಟಿಯನ್ನು ಜಿಬಿಎ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಜ.20ರಿಂದ ಫೆ.3 ರವರೆಗೆ ಬೂತ್ ಲೆವಲ್ ಅಧಿಕಾರಿಗಳು(ಬಿಎಲ್ಓ) ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ಅವಧಿಯಲ್ಲಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹಕ್ಕು ಹಾಗೂ ಆಕ್ಷೇಪಣೆಗಳ ವಿಲೇವಾರಿಯು ಫೆ.4 ರಿಂದ ಫೆ.18ರವರೆಗೆ ನಡೆಯಲಿದ್ದು, ಮಾ.16ರಂದು ಮತದಾರರ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಅಂತಿಮ ಪಟ್ಟಿಯ ನಂತರವೂ ಪೂರಕ ಪಟ್ಟಿಗೆ ಅರ್ಹ ಮತದಾರರನ್ನು ಸೇರ್ಪಡೆ ಮಾಡಲಾಗುವುದು. - ಆರ್. ರಾಮಚಂದ್ರನ್, ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ
ಸೋಮವಾರಪೇಟೆ: ಗುಂಡು ಹೊಡೆದುಕೊಂಡು ವೃದ್ದ ಆತ್ಮಹತ್ಯೆ
ಸೋಮವಾರಪೇಟೆ: ಗುಂಡು ಹೊಡೆದುಕೊಂಡು ವೃದ್ದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಯ ನಡ್ಲುಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ. ಕೃಷಿಕ ಟಿ.ಕೆ. ಸುಬ್ಬಯ್ಯ(78) ಮೃತಪಟ್ಟವರು. ಅನಾರೋಗ್ಯದಿಂದ ಬಳಲುತ್ತಿದ್ದ ಸುಬ್ಬಯ್ಯ ಅವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ. ಬೆಳಿಗ್ಗೆ ಸುಮಾರು ಆರು ಗಂಟೆಯ ವೇಳೆಗೆ ತಮ್ಮ ಮನೆಯ ಸಮೀಪವೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯ ಮಾಹಿತಿ ಪಡೆದ ಸೋಮವಾರಪೇಟೆ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಗಲ್ಫ್ ಬೆಳವಣಿಗೆಗಳ ನಡುವೆ ರಕ್ಷಣಾ ಸಹಕಾರ ವಿಸ್ತರಣೆಗೆ ಭಾರತ–ಯುಎಇ ಒಪ್ಪಿಗೆ
ಹೊಸದಿಲ್ಲಿ: ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ರಕ್ಷಣಾ ಒಪ್ಪಂದದಿಂದ ಗಲ್ಫ್ ಪ್ರದೇಶದಲ್ಲಿ ಉಂಟಾಗಿರುವ ರಾಜತಾಂತ್ರಿಕ ಚರ್ಚೆಗಳ ನಡುವೆಯೇ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕಾರ್ಯತಂತ್ರದ ರಕ್ಷಣಾ ಪಾಲುದಾರಿಕೆಯನ್ನು ಗಟ್ಟಿಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿವೆ. ಉಭಯ ರಾಷ್ಟ್ರಗಳು ಸೋಮವಾರ ರಕ್ಷಣಾ ಸಹಕಾರ ಒಪ್ಪಂದವನ್ನು ಅಂತಿಮಗೊಳಿಸುವ ಉದ್ದೇಶ ಪತ್ರಕ್ಕೆ (LoI) ಸಹಿ ಹಾಕಿವೆ. ಪ್ರಧಾನಿ ನರೇಂದ್ರ ಮೋದಿ ಅವರು, ಎರಡು ಗಂಟೆಗಳಿಗಿಂತ ಕಡಿಮೆ ಅವಧಿಯ ಹೊಸದಿಲ್ಲಿ ಭೇಟಿಗೆ ಆಗಮಿಸಿದ್ದ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು. ಸಭೆಯ ಬಳಿಕ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ, ಪರಸ್ಪರ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಹಾಗೂ ಕಾರ್ಯತಂತ್ರದ ಸ್ವಾಯತ್ತತೆಯ ಮಹತ್ವವನ್ನು ಇಬ್ಬರೂ ನಾಯಕರು ಒತ್ತಿ ಹೇಳಿದ್ದಾರೆ. ಭಾರತ–ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭವಾಗಿ ಬಲಿಷ್ಠ ಹಾಗೂ ಸ್ಥಿರ ದ್ವಿಪಕ್ಷೀಯ ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ಗುರುತಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಉಭಯ ದೇಶಗಳ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸೇವಾ ಮುಖ್ಯಸ್ಥರ ಪರಸ್ಪರ ಭೇಟಿಗಳು ಹಾಗೂ ದ್ವಿಪಕ್ಷೀಯ ಮಿಲಿಟರಿ ಅಭ್ಯಾಸಗಳು ಈ ಸಹಕಾರಕ್ಕೆ ವೇಗ ನೀಡಿವೆ ಎಂದು ತಿಳಿಸಲಾಗಿದೆ. ಇಂಧನ ಕ್ಷೇತ್ರದಲ್ಲಿಯೂ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮತ್ತು ಯುಎಇಯ ADNOC ಗ್ಯಾಸ್ ನಡುವೆ 2028ರಿಂದ ಆರಂಭವಾಗುವಂತೆ ವರ್ಷಕ್ಕೆ ಅರ್ಧ ಮಿಲಿಯನ್ ಟನ್ ದ್ರವೀಕೃತ ನೈಸರ್ಗಿಕ ಅನಿಲ (LNG) ಪೂರೈಕೆಗೆ 10 ವರ್ಷಗಳ ಒಪ್ಪಂದ ನಡೆದಿದೆ. ಇದಲ್ಲದೆ, ನಾಗರಿಕ ಪರಮಾಣು ಸಹಕಾರ ವಿಸ್ತರಣೆಯ ಭಾಗವಾಗಿ, ದೊಡ್ಡ ಪರಮಾಣು ರಿಯಾಕ್ಟರ್ಗಳು, ಸಣ್ಣ ಮಾಡ್ಯುಲರ್ ರಿಯಾಕ್ಟರ್ಗಳು (SMR), ಪರಮಾಣು ವಿದ್ಯುತ್ ಸ್ಥಾವರಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಹಾಗೂ ಪರಮಾಣು ಸುರಕ್ಷತಾ ಕ್ಷೇತ್ರಗಳಲ್ಲಿ ಸಹಕಾರ ಅನ್ವೇಷಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ. ಗಮನಾರ್ಹವಾಗಿ, ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವೆ, ಭಾರತ–ಪಾಕಿಸ್ತಾನ ಗಡಿಯಾಚೆಗಿನ ಮಿಲಿಟರಿ ಉದ್ವಿಗ್ನತೆಯ ಕೆಲವೇ ತಿಂಗಳ ಬಳಿಕ ಒಪ್ಪಂದ ನಡೆದಿತ್ತು. ಈ ಹಿನ್ನೆಲೆಯಲ್ಲಿ, ಭಾರತ ಮತ್ತು ಯುಎಇ ನಡುವಿನ ಕಾರ್ಯತಂತ್ರದ ರಕ್ಷಣಾ ಪಾಲುದಾರಿಕೆಯನ್ನು ಗಲ್ಫ್ ಪ್ರದೇಶದ ಬದಲಾಗುತ್ತಿರುವ ರಾಜತಾಂತ್ರಿಕ ಸಮೀಕರಣಗಳ ನಡುವೆ ಮಹತ್ವದ ಹೆಜ್ಜೆಯಾಗಿ ನೋಡಲಾಗುತ್ತಿದೆ. ಆದರೆ, ಈ ಒಪ್ಪಂದವು ಯಾವುದೇ ಮೂರನೇ ದೇಶದ ವಿರುದ್ಧ ಪರಸ್ಪರ ಸೇನಾ ರಕ್ಷಣೆಗೆ ಬದ್ಧವಾಗುವುದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸಲಹೆ ಪರಿಗಣಿಸದೆ ಸರಕಾರ ಹಣ ವ್ಯರ್ಥ ಮಾಡುತ್ತಿದೆ: ಬಿ.ಆರ್. ಪಾಟೀಲ್
ಬೆಂಗಳೂರು: ಸರಕಾರವು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸಲಹೆಗಳನ್ನು ಪರಿಗಣಿಸದೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಹೀಗಾಗಿ ಹಣ ವ್ಯರ್ಥವಾಗುತ್ತಿದ್ದು, ಜನರಿಗೂ ಉಪಯೋಗವಾಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ಸೋಮವಾರ ಇಲ್ಲಿನ ಗಾಂಧಿಭವನದಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಅಗತ್ಯ ಪುರಾವೆ ಮತ್ತು ಫಲಿತಾಂಶ ಆಧಾರಿತ ನೀತಿ ಮತ್ತು ಯೋಜನೆ’ ಎಂಬ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೇಕಾಬಿಟ್ಟಿಯಾಗಿ ಯೋಜನೆಗಳನ್ನು ಹಾಕಿಕೊಳ್ಳುವುದರಿಂದ ಹಣ ವ್ಯರ್ಥವಾಗುತ್ತಿದೆ. ಅಲ್ಲದೆ ಜನರಿಗೂ ಉಪಯೋಗವಾಗುವುದಿಲ್ಲ. ಹೀಗಾಗಿ ಸರಕಾರದ ಅನೇಕ ಯೋಜನೆಗಳು ವಿಫಲವಾಗುತ್ತಿವೆ. ಯಾವುದೇ ಯೋಜನೆಗಳನ್ನು ತರುವಾಗ ಪ್ರತಿಯೊಂದು ವಿಷಯವನ್ನು ಕೂಲಂಕುಶವಾಗಿ ಅಧ್ಯಯನ ಮಾಡದಿದ್ದರೆ, ಅನವಶ್ಯಕವಾಗಿ ದುಂದು ವೆಚ್ಚವಾಗುತ್ತದೆ ಎಂದು ಅವರು ಹೇಳಿದರು. ಈ ಬಾರಿ ನಾವು ಯೋಜನೆಗಳನ್ನು ರೂಪಿಸುವಲ್ಲಿ ಒಂದು ಹಂತಕ್ಕೆ ಮುಟ್ಟುವ ಪ್ರಯತ್ನ ಮಾಡಿದ್ದೇವೆ. ಆದರೂ ನೂರಕ್ಕೆ ನೂರು ಸಂಪೂರ್ಣವಾಗಿ ಯಶಸ್ಸು ಹೊಂದಲು ಸಾಧ್ಯವಾಗಿಲ್ಲ. ಅಧಿಕಾರಿಗಳು ಮತ್ತು ರಾಜಕಾರಣಿಗಳು ಯೋಜನಾ ಆಯೋಗವನ್ನು ಮರೆತಿರುವುದೇ ಇದಕ್ಕೆ ಕಾರಣ ಎಂದು ಅವರು ಆರೋಪಿಸಿದರು. ತಳಮಟ್ಟದಿಂದ ಬಂದಿರುವ ಬೇಡಿಕೆಗಳನ್ನು ಈಡೇರಿಸಬೇಕೆಂಬ ಉದ್ದೇಶದಿಂದ ಜ.25ರೊಳಗಾಗಿ ಎಲ್ಲಾ ಜಿಲ್ಲಾಮಟ್ಟದ ಸಭೆಗಳ ವರದಿಯನ್ನು ತರಸಿಕೊಳ್ಳಲೇಬೇಕು ಎಂದು ನಿರ್ಧರಿಸಿದ್ದೇವೆ. ಸಮಯದ ಅಭಾವ ಇರುವ ಕಾರಣ ಈ ಬಾರಿಯ ಬಜೆಟ್ನಲ್ಲಿ ಶಿಕ್ಷಣ ಮತ್ತು ಕೌಶಲ್ಯ, ಆರೋಗ್ಯ, ನೈರ್ಮಲ್ಯ, ನೀರು ಸರಬರಾಜು, ಪರಿಸರ, ಕೃಷಿ, ಮಹಿಳಾ ಮತ್ತು ಮಕ್ಕಳ, ಕಾರ್ಮಿಕ, ಸಮಾಜ ಕಲ್ಯಾಣ ಇಲಾಖೆಗಳಿಗೆ ಮಾತ್ರ ಆದ್ಯತೆ ಕೊಟ್ಟು ಯೋಜನೆಗಳನ್ನು ಸೇರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ನೀತಿ ಮತ್ತು ಯೋಜನಾ ಆಯೋಗದ ಪರಿಕಲ್ಪನೆಯು ಪಂಡಿತ್ ಜವಾಹರಲಾಲ್ ನೆಹರು ಅವರದಾಗಿತ್ತು. ಸುಭಾಷ್ ಚಂದ್ರ ಭೋಸ್ ಅವರು ಇದಕ್ಕೆ ರೂಪುರೇಷೆಯನ್ನು ನೀಡಿದರು. ಆಯೋಗವು ಬಹಳ ವ್ಯವಸ್ಥಿತವಾಗಿ, ನಿಯಮ ಬದ್ಧವಾಗಿ ಎಲ್ಲಾ ರಾಜ್ಯಗಳನ್ನು ಒಳಗೊಂಡು ಕೆಲಸ ಮಾಡುತ್ತಿತ್ತು. ಆದರೆ ಈಗ ಇರುವ ಕೇಂದ್ರ ಸರಕಾರದ ನಿಲುವಿನಿಂದ ನೆಹರು ಅವರ ಕಾಲಕ್ಕೆ ಇದ್ದ ಮಹತ್ವ ಇಂದು ಉಳಿದಿಲ್ಲ ಎಂದು ಅವರು ತಿಳಿಸಿದರು. ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾತನಾಡಿ, ಆಯವ್ಯಯದಲ್ಲಿ ನಿಗದಿಪಡಿಸುವ ಹಣ ಪರಿಣಾಮಕಾರಿಯಾಗಿ ಯೋಜನೆಗಳಲ್ಲಿ ಅನುಷ್ಠಾನಗೊಳ್ಳಲು ಫಲಿತಾಂಶ ಆಧಾರಿತ ಯೋಜನೆಗಳನ್ನು ರೂಪಿಸುವುದು ಅತ್ಯಂತ ಅವಶ್ಯಕ ಎಂದರು. ಯೋಜನೆ ಹಾಗೂ ಬಜೆಟ್ ರೂಪಿಸುವಾಗ ನಾವು ಸ್ಥಳೀಯ ಜನರ ಬೇಡಿಕೆ ಅನುಗುಣವಾಗಿ ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳನ್ನು ಕ್ರೋಢೀಕರಿಸಿ ಯೋಜನೆ ರೂಪಿಸುವುದಕ್ಕೆ ಆದ್ಯತೆ ನೀಡಬೇಕು. ಗ್ರಾಮ, ತಾಲೂಕು, ಜಿಲ್ಲೆಗಳಲ್ಲಿನ ಸ್ವತ್ತುಗಳು ಹಾಗೂ ಸ್ಥಳೀಯ ಸಾಮರ್ಥ್ಯದ ಮೇಲೆ ಆದ್ಯತಾ ವಲಯವನ್ನು ಗುರುತಿಸಿ ಹಣವನ್ನು ವಿನಿಯೋಗ ಮಾಡಿದಾಗ ರಾಜ್ಯವು ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದುತ್ತದೆ ಎಂದು ಅವರು ತಿಳಿಸಿದರು. ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ಮಾತನಾಡಿ, ಸಮಯದ ಅಭಾವ ಇರುವ ಕಾರಣ ಈ ಬಾರಿಯ ಬಜೆಟ್ನಲ್ಲಿ ಕೆಲವು ಇಲಾಖೆಗಳಿಗೆ ಮಾತ್ರ ಆದ್ಯತೆಯನ್ನು ನೀಡಲಾಗಿದೆ. 2027-28ನೇ ಯೋಜನೆಗಳಾದರೂ ಜನರ ಯೋಜನೆಗಳಾಗಿರಲಿ ಎಂದು ಆಶಿಸುತ್ತೇನೆ ಎಂದರು. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರಕಾರದ ಕಾರ್ಯದರ್ಶಿಗಳಾದ ರಮಣ್ ದೀಪ್ ಚೌಧರಿ, ಮನೋಜ್ ಜೈನ್, ನಿರ್ದೇಶಕ ಬಸವರಾಜು, ಕರ್ನಾಟಕ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ನಾರಾಯಣಸ್ವಾಮಿ, ಮಾಜಿ ರಾಜ್ಯಸಭಾ ಸದಸ್ಯ ಪ್ರೊ. ರಾಜೀವ್ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಯಾರಾಗ್ತಾರೆ ಮುಂಬೈ ಮೇಯರ್? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ಇತ್ತೀಚೆಗೆ ನಡೆದ 227 ಸದಸ್ಯ ಬಲದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಚುನಾವಣೆಯಲ್ಲಿ ಬಿಜೆಪಿ 89 ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ 29 ಸೀಟುಗಳನ್ನು ಗೆದ್ದಿದ್ದು, ಮಹಾಯುತಿ ಮೈತ್ರಿಕೂಟ ಸ್ಪಷ್ಟ ಬಹುಮತವನ್ನು ಗಳಿಸಿದೆ. ಶಿವಸೇನಾ (UBT) 65 ಸ್ಥಾನಗಳನ್ನು ಗೆದ್ದಿದ್ದು, ಅದರ ಮಿತ್ರ ಪಕ್ಷ ಎಂಎನ್ಎಸ್ ಆರು ಸ್ಥಾನಗಳಲ್ಲಿ ಜಯಗಳಿಸಿದೆ. ಚುನಾವಣೆ ಮುಗಿದ ಬೆನ್ನಲ್ಲೇ ಮುಂಬೈನ ಹೊಸ ಮೇಯರ್ ಯಾರಾಗಬೇಕು ಎಂಬ ವಿಚಾರದಲ್ಲಿ ಮಹಾಯುತಿಯೊಳಗೇ ಹಗ್ಗಜಗ್ಗಾಟ ಆರಂಭವಾಗಿದೆ. ಮಹಾಯುತಿ ಮೈತ್ರಿಕೂಟದಲ್ಲಿ ಮೇಯರ್ ಸ್ಥಾನಕ್ಕಾಗಿ ನಡೆಯುತ್ತಿರುವ ಗುದ್ದಾಟ ಇನ್ನೂ ಅಂತಿಮ ಹಂತ ತಲುಪದಿರುವುದರಿಂದ ಆಯ್ಕೆ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ. ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾಗವಹಿಸಿದ ಬಳಿಕ ಜನವರಿ 24ರಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ದಾವೋಸ್ನಿಂದ ಮರಳಿದ ನಂತರವೇ ಈ ವಿಷಯದ ಕುರಿತು ತೀರ್ಮಾನವಾಗುವ ಸಾಧ್ಯತೆ ಇದೆ. ಮುಂಬೈ ಮೇಯರ್ ಆಯ್ಕೆ ಹೇಗೆ? ಭಾರತದಲ್ಲಿನ ನಗರ ಸ್ಥಳೀಯ ಸಂಸ್ಥೆಗಳು ಪ್ರಾಥಮಿಕವಾಗಿ 1992ರ 74ನೇ ಸಾಂವಿಧಾನಿಕ ತಿದ್ದುಪಡಿ ಕಾಯ್ದೆಯಿಂದ ನಿಯಂತ್ರಿಸಲ್ಪಡುತ್ತವೆ. ಈ ತಿದ್ದುಪಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ಸಾಂವಿಧಾನಿಕ ಸ್ಥಾನಮಾನವನ್ನು ನೀಡುವುದರೊಂದಿಗೆ, ನಾಯಕತ್ವ ಸ್ಥಾನಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸಿದೆ. ಪ್ರತಿ ವಾರ್ಡ್ನ ಕಾರ್ಪೊರೇಟರ್ಗಳನ್ನು ಮತದಾರರು ನೇರವಾಗಿ ಆಯ್ಕೆ ಮಾಡುತ್ತಾರೆ. ಆದರೆ ಮೇಯರ್ ಅನ್ನು ಕಾರ್ಪೊರೇಟರ್ಗಳು ಆಯ್ಕೆ ಮಾಡುತ್ತಾರೆ. ಮೇಯರ್ ಹುದ್ದೆ ಸರದಿ ಮೂಲಕ ಮೀಸಲಾತಿಗೆ ಒಳಪಟ್ಟಿರುತ್ತದೆ. ಇದನ್ನು ಚೀಟಿ ಎತ್ತುವ ಮೂಲಕ ನಿರ್ಧರಿಸಲಾಗುತ್ತದೆ. ಸರದಿ ಮೂಲಕ ಮೀಸಲಾತಿ ವ್ಯವಸ್ಥೆ ಎಂದರೇನು? ಸರದಿ ಮೂಲಕ ಮೀಸಲಾತಿ ವ್ಯವಸ್ಥೆಯಡಿ ಅಂಚಿನಲ್ಲಿರುವ ಸಮುದಾಯಗಳ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಮೇಯರ್ ಹುದ್ದೆಯನ್ನು ವಿವಿಧ ವರ್ಗಗಳಿಗೆ ಸರದಿಯಂತೆ ನೀಡಲಾಗುತ್ತದೆ. ಈ ಮೀಸಲಾತಿಯನ್ನು ನಗರಾಭಿವೃದ್ಧಿ ಇಲಾಖೆ ಚೀಟಿ ಎತ್ತುವ ಮೂಲಕ ನಿರ್ಧರಿಸುತ್ತದೆ. ಈ ಪ್ರಕ್ರಿಯೆ ಮುಗಿದು, ಯಾವ ವರ್ಗಕ್ಕೆ ಮೀಸಲಾತಿ ಎಂಬುದನ್ನು ಅಧಿಕೃತವಾಗಿ ಘೋಷಿಸಿದ ನಂತರವೇ ಮೇಯರ್ ಆಯ್ಕೆ ಪ್ರಕ್ರಿಯೆ ಆರಂಭವಾಗುತ್ತದೆ. ಮಹಾರಾಷ್ಟ್ರದಲ್ಲಿ ಮೇಯರ್ ಹುದ್ದೆಯ ಮೀಸಲಾತಿ ವ್ಯವಸ್ಥೆಯನ್ನು ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆಯ ಮೂಲಕ ಜಾರಿಗೆ ತರಲಾಗಿದ್ದು, ಇದು ಒಬಿಸಿ ವರ್ಗಕ್ಕೂ ಮೀಸಲಾತಿಯನ್ನು ವಿಸ್ತರಿಸುತ್ತದೆ. ಈ ಪ್ರಕ್ರಿಯೆಗೆ ಸಮಯ ಬೇಕಾಗುವುದರಿಂದ ಈ ವಾರ ಮುಂಬೈಗೆ ಮೇಯರ್ ಸಿಗುವ ಸಾಧ್ಯತೆ ಕಡಿಮೆ. ರಾಜ್ಯದಲ್ಲಿನ ಎಸ್ಸಿ, ಎಸ್ಟಿ ಹಾಗೂ ಒಬಿಸಿ ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮೀಸಲಾತಿಯನ್ನು ನಿರ್ಧರಿಸಲಾಗುತ್ತದೆ. 2011ರ ಜನಗಣತಿಯನ್ನು ಮೀಸಲಾತಿ ನಿರ್ಧಾರಕ್ಕೆ ಬಳಸಲಾಗುತ್ತದೆ. ಚೀಟಿ ಎತ್ತುವ ಪ್ರಕ್ರಿಯೆ ಹೇಗೆ ನಡೆಸಲಾಗುತ್ತದೆ? ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸುವುದರೊಂದಿಗೆ ಚೀಟಿ ಎತ್ತುವ ಪ್ರಕ್ರಿಯೆ ಆರಂಭವಾಗುತ್ತದೆ. ಅಧಿಕಾರಿಗಳು ಹಿಂದಿನ ಅವಧಿಗಳ ಆಧಾರದ ಮೇಲೆ ಅರ್ಹ ವರ್ಗಗಳ ಸರದಿ ಪಟ್ಟಿಯನ್ನು ಸಿದ್ಧಪಡಿಸುತ್ತಾರೆ. ಸಾರ್ವಜನಿಕವಾಗಿ ಚೀಟಿ ಎತ್ತಿ ಮೀಸಲಾತಿ ವರ್ಗವನ್ನು ಔಪಚಾರಿಕವಾಗಿ ಘೋಷಿಸಲಾಗುತ್ತದೆ. ಇದರ ನಂತರ ಬಿಎಂಸಿ ಮೇಯರ್ ಆಯ್ಕೆಗಾಗಿ ಕಾರ್ಪೊರೇಟರ್ಗಳ ವಿಶೇಷ ಸಭೆಯನ್ನು ಕರೆಯುತ್ತದೆ. ಮೇಯರ್ ಅನ್ನು ಎರಡೂವರೆ ವರ್ಷಗಳ ಅವಧಿಗೆ ಸರಳ ಬಹುಮತದಿಂದ ಆಯ್ಕೆ ಮಾಡಲಾಗುತ್ತದೆ. ಅಂದರೆ, 227 ಸದಸ್ಯರ ಮುಂಬೈ ಸದನದಲ್ಲಿ 114ಕ್ಕಿಂತ ಹೆಚ್ಚು ಕಾರ್ಪೊರೇಟರ್ಗಳ ಬೆಂಬಲ ಅಗತ್ಯವಿರುತ್ತದೆ. ಮುಂಬೈ ಮೇಯರ್ಗೆ ಯಾವ ಅಧಿಕಾರಗಳಿವೆ? ಸಂವಿಧಾನ ಮತ್ತು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆಯ ಪ್ರಕಾರ, ಮೇಯರ್ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ನ ವಿಧ್ಯುಕ್ತ ಮುಖ್ಯಸ್ಥರಾಗಿರುತ್ತಾರೆ. ಮೇಯರ್ ಅವರನ್ನು ಕಾರ್ಪೊರೇಟರ್ಗಳು ಎರಡೂವರೆ ವರ್ಷಗಳ ಅವಧಿಗೆ ಆಯ್ಕೆ ಮಾಡುತ್ತಾರೆ. ಮೇಯರ್ ಪಾತ್ರವು ಮುಖ್ಯವಾಗಿ ಸಾಮಾನ್ಯ ಸಭೆಗಳ ಅಧ್ಯಕ್ಷತೆ ವಹಿಸುವುದು, ಚರ್ಚೆಗಳ ವೇಳೆ ಸುವ್ಯವಸ್ಥೆ ಕಾಪಾಡುವುದು ಹಾಗೂ ಸಮಬಲ ಉಂಟಾದಲ್ಲಿ ನಿರ್ಣಾಯಕ ಮತ ಚಲಾಯಿಸುವ ಹಕ್ಕನ್ನು ಬಳಸುವುದಕ್ಕೆ ಸೀಮಿತವಾಗಿರುತ್ತದೆ. ಮೇಯರ್ ನಗರದ “ಮೊದಲ ಪ್ರಜೆ”ಯಾಗಿ ಅಧಿಕೃತ ಕಾರ್ಯಕ್ರಮಗಳಲ್ಲಿ ಮುಂಬೈಯನ್ನು ಪ್ರತಿನಿಧಿಸುತ್ತಾರೆ. ಆದರೆ ನಾಗರಿಕ ಇಲಾಖೆಗಳು ಅಥವಾ ಹಣಕಾಸಿನ ನೇರ ನಿಯಂತ್ರಣ ಇವರ ಬಳಿ ಇರುವುದಿಲ್ಲ. ಆ ಅಧಿಕಾರಗಳು ರಾಜ್ಯ ಸರ್ಕಾರದಿಂದ ನೇಮಿಸಲ್ಪಟ್ಟ ಐಎಎಸ್ ಅಧಿಕಾರಿ ಆಗಿರುವ ಮುನ್ಸಿಪಲ್ ಆಯುಕ್ತರ ಬಳಿ ಇರುತ್ತವೆ. ಶಿವಸೇನೆಯ ಬೇಡಿಕೆಗಳೇನು? ಜನವರಿ 23ರಂದು ಪಕ್ಷದ ಸಂಸ್ಥಾಪಕ ಬಾಳಾ ಠಾಕ್ರೆ ಅವರ ಜನ್ಮ ಶತಮಾನೋತ್ಸವ. ಹೀಗಾಗಿ ಅಧಿಕಾರದ ಮೊದಲ ವರ್ಷ ಮೇಯರ್ ಸ್ಥಾನವನ್ನು ಶಿವಸೇನಾಗೆ ನೀಡಿದರೆ ಅದು ಬಾಳಾಸಾಹೇಬರಿಗೆ ನೀಡುವ ಗೌರವವಾಗುತ್ತದೆ ಎಂದು ಶಿವಸೇನಾ ವಾದಿಸಿದೆ. ಇದಕ್ಕೂ ಮುನ್ನ ಶಿವಸೇನಾ ಮೇಯರ್ ಅಧಿಕಾರಾವಧಿಯನ್ನು ಸಮಾನವಾಗಿ ವಿಭಜಿಸಲು ಕೋರಿತ್ತು. ಐದು ವರ್ಷಗಳ ಅವಧಿಯನ್ನು ಬಿಜೆಪಿ ಮತ್ತು ಶಿವಸೇನಾ ನಡುವೆ ತಲಾ ಎರಡೂವರೆ ವರ್ಷಗಳಂತೆ ಹಂಚಿಕೊಳ್ಳುವ ಪ್ರಸ್ತಾವವನ್ನೂ ಮುಂದಿಟ್ಟಿತ್ತು. ಆದರೆ ಈ ಬೇಡಿಕೆ ಸ್ವೀಕೃತವಾಗುವ ಸಾಧ್ಯತೆ ಕಡಿಮೆ ಎಂದು ಅರಿತುಕೊಂಡ ನಂತರ, ಪಕ್ಷ ತನ್ನ ನಿಲುವನ್ನು ಪರಿಷ್ಕರಿಸಿ ಮೊದಲ ವರ್ಷ ಮಾತ್ರ ತಮ್ಮ ಪಾಲಾಗಬೇಕು ಎಂದು ಹೇಳಿದೆ. ಕೇಂದ್ರ ಹಾಗೂ ಮಹಾರಾಷ್ಟ್ರದಲ್ಲಿ ರಾಜಕೀಯವಾಗಿ ಸವಾಲಿನ ಸಂದರ್ಭದಲ್ಲಿ ಶಿವಸೇನಾ ನೀಡಿದ ಬೆಂಬಲವನ್ನು ಬಿಜೆಪಿ ನೆನಪಿಸಿಕೊಳ್ಳಬೇಕು ಎಂದು ಪಕ್ಷ ಒತ್ತಾಯಿಸಿದೆ. ಬಾಳಾ ಠಾಕ್ರೆ ಅವರ 100ನೇ ಜನ್ಮ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ, ಮೊದಲ ವರ್ಷ ಶಿವಸೇನೆಯ ಮೇಯರ್ ಅಧಿಕಾರದಲ್ಲಿರಬೇಕು, ನಂತರ ಉಳಿದ ನಾಲ್ಕು ವರ್ಷಗಳ ಕಾಲ ಬಿಜೆಪಿ ಆ ಹುದ್ದೆಯನ್ನು ನಿರ್ವಹಿಸಬಹುದು ಎಂದು ಶಿವಸೇನಾ ಹೇಳಿದೆ. ಕಾರ್ಪೊರೇಟರ್ಗಳಿಗೆ ಬಿಜೆಪಿ ಆದೇಶ ಈ ನಡುವೆ ಹೊಸದಾಗಿ ಆಯ್ಕೆಯಾದ ತಮ್ಮ ಕಾರ್ಪೊರೇಟರ್ಗಳಿಗೆ ಮುಂದಿನ 10 ದಿನಗಳ ಕಾಲ ನಗರವನ್ನು ಬಿಟ್ಟು ಹೋಗಬಾರದೆಂದು ಮುಂಬೈ ಬಿಜೆಪಿ ಸೂಚನೆ ನೀಡಿದೆ. ತುರ್ತು ಪ್ರಯಾಣ ಅಗತ್ಯವಿದ್ದರೆ ಪಕ್ಷದ ಹಿರಿಯ ನಾಯಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕೆಂದು ಕಾರ್ಪೊರೇಟರ್ಗಳಿಗೆ ನಿರ್ದೇಶನ ನೀಡಲಾಗಿದೆ. ಮುಂಬರುವ ಮೇಯರ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಮೇಯರ್ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಎಲ್ಲ ಕಾರ್ಪೊರೇಟರ್ಗಳು ಮುಂಬೈಯಲ್ಲೇ ಇರುವಂತೆ ಖಚಿತಪಡಿಸಿಕೊಳ್ಳಲು ಬಿಜೆಪಿ ಬಯಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಈವರೆಗೆ ಏನೇನಾಯ್ತು? ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ ಪಕ್ಷದ 29 ಕಾರ್ಪೊರೇಟರ್ಗಳನ್ನು ಹೋಟೆಲ್ಗೆ ಸ್ಥಳಾಂತರಿಸಿದ ಸಂದರ್ಭದಿಂದಲೇ ಎಲ್ಲ ಊಹಾಪೋಹಗಳು ಆರಂಭವಾಗಿದ್ದವು. ಮುಂಬೈಗೆ ಮಹಾಯುತಿ ಮೇಯರ್ ಇರುತ್ತಾರೆ ಎಂದು ಹೇಳುವ ಮೂಲಕ ಶಿಂಧೆ ಭಾನುವಾರ ಈ ಊಹಾಪೋಹಗಳಿಗೆ ಅಂತ್ಯ ಹಾಡಲು ಪ್ರಯತ್ನಿಸಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಪಕ್ಷ ನಾಗರಿಕ ಸಂಸ್ಥೆಯಲ್ಲಿ ಸ್ಪಷ್ಟ ಹಾಗೂ ಗೌರವಯುತ ಅಧಿಕಾರದ ಪಾಲನ್ನು ಬಯಸುತ್ತದೆ. ಶಿವಸೇನಾ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ: ಐದು ವರ್ಷಗಳ ಅವಧಿಯಲ್ಲಿ ಅರ್ಧ ಅವಧಿಗೆ ಮೇಯರ್ ಹುದ್ದೆ ಹಣಕಾಸು ಹಾಗೂ ಪ್ರಮುಖ ಅನುಮೋದನೆಗಳನ್ನು ನಿಯಂತ್ರಿಸುವ ಕಾರಣ ಬಿಎಂಸಿಯಲ್ಲಿ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಡುವ ಸ್ಥಾಯಿ ಸಮಿತಿಯ ನಿಯಂತ್ರಣ. ಮುಂಬೈಗೆ ಮಹಾಯುತಿ ಮೇಯರ್ ಇರುತ್ತಾರೆ. ಕಲ್ಯಾಣ್–ಡೊಂಬಿವಲಿ ಸೇರಿದಂತೆ ನೆರೆಯ ನಗರಗಳಲ್ಲಿಯೂ ಮಹಾಯುತಿ ಮೇಯರ್ಗಳೇ ಅಧಿಕಾರದಲ್ಲಿರುತ್ತಾರೆ” ಎಂದು ಅವರು ಹೇಳಿದ್ದಾರೆ. ಐಷಾರಾಮಿ ಹೋಟೆಲ್ನಲ್ಲಿ ಕಾರ್ಪೊರೇಟರ್ಗಳನ್ನು ನಿಗಾದಲ್ಲಿ ಇರಿಸಲಾಗಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ ಶಿಂಧೆ, “ಶಿವಸೇನಾ ನಿರ್ಭೀತವಾಗಿದೆ. ಹೊಸ ಕಾರ್ಪೊರೇಟರ್ಗಳಿಗೆ ಹೋಟೆಲ್ನಲ್ಲಿ ಸಂವಹನ ನಡೆಸಲು ಸಾಮಾನ್ಯ ವೇದಿಕೆ ಸಿಗುತ್ತದೆ. ಕೊಂಕಣ ವಿಭಾಗೀಯ ಆಯುಕ್ತರ ಬಳಿ 29 ಕಾರ್ಪೊರೇಟರ್ಗಳ ಗುಂಪನ್ನು ನೋಂದಾಯಿಸುತ್ತಿರುವುದರಿಂದ ಅವರನ್ನು ಭೇಟಿ ಮಾಡಲು ಬಯಸಿದ್ದೆ” ಎಂದರು. ಬಿಜೆಪಿ ಮೇಯರ್ ಬೇಕಾಗಿಲ್ಲ: ರಾವತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟವಾಗಿ ಕಣಕ್ಕಿಳಿದಿದೆ. ಪ್ರತಿಯೊಂದು ಪಕ್ಷವೂ ಪ್ರಮುಖ ಹುದ್ದೆಗಳನ್ನು ಬಯಸುವುದು ಸಹಜ. ಬಾಳ್ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷವು ಈ ಬೇಡಿಕೆಗೆ ವಿಭಿನ್ನ ಆಯಾಮವನ್ನು ನೀಡುತ್ತದೆ ಎಂದು ಶಿವಸೇನಾ ನಾಯಕ ಹಾಗೂ ಸಚಿವ ಉದಯ್ ಸಮಂತ್ ಹೇಳಿದ್ದಾರೆ. ಅದೇ ವೇಳೆ, ಹಲವು ಹೊಸ ಕಾರ್ಪೊರೇಟರ್ಗಳು ಮೂಲತಃ ಶಿವಸೈನಿಕರು (ಅವಿಭಜಿತ ಶಿವಸೇನೆಯವರು). ನಮಗೆ ತಿಳಿದಂತೆ ಬಿಜೆಪಿ ಮೇಯರ್ ಆಯ್ಕೆಯಾಗಬಾರದೆಂದು ಅವರು ಬಯಸುತ್ತಾರೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ. “ಶಿಂಧೆ ಈಗಾಗಲೇ ತಮ್ಮ ಕಾರ್ಪೊರೇಟರ್ಗಳನ್ನು ಪಂಚತಾರಾ ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ನನಗೆ ದೊರೆತ ಮಾಹಿತಿಯ ಪ್ರಕಾರ ಬಿಜೆಪಿ ತನ್ನ ಕಾರ್ಪೊರೇಟರ್ಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಯೋಜಿಸುತ್ತಿದೆ. ಯಾರು ಯಾರಿಗೆ ಹೆದರುತ್ತಿದ್ದಾರೆ?” ಎಂದು ರಾವತ್ ಪ್ರಶ್ನಿಸಿದ್ದಾರೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಈಗ ತಮ್ಮ ರಾಜಕೀಯ ಅಸ್ತಿತ್ವವನ್ನು ರಕ್ಷಿಸಲು ಹೋರಾಟ ನಡೆಸುತ್ತಿದ್ದಾರೆ. ಬಿಜೆಪಿ ತನ್ನದೇ ಮಿತ್ರಪಕ್ಷಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಡಿಜಿಟಲ್ ಮುಕ್ತ ವಿಶ್ವವಿದ್ಯಾನಿಲಯಗಳ ನೀತಿಗೆ ಪಂಜಾಬ್ ಸರ್ಕಾರ ಅನುಮೋದನೆ; ಈ ವಿವಿಗಳು ಹೇಗೆ ಕಾರ್ಯನಿರ್ವಹಿಸುತ್ತವೆ?
ಆಮ್ ಆದ್ಮಿ ಪಕ್ಷ (AAP) ನೇತೃತ್ವದ ಪಂಜಾಬ್ ಸರ್ಕಾರ ಗುರುವಾರ (ಜನವರಿ 15) ಪಂಜಾಬ್ ಖಾಸಗಿ ಡಿಜಿಟಲ್ ಮುಕ್ತ ವಿಶ್ವವಿದ್ಯಾಲಯಗಳ ನೀತಿ–2026 ಅನ್ನು ಪ್ರಕಟಿಸಿದ್ದು, ಇದು ಭಾರತದಲ್ಲೇ ಮೊದಲನೆಯದು ಎಂದು ಹೇಳಿಕೊಂಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, “ಆನ್ಲೈನ್ ಮತ್ತು ಮುಕ್ತ ದೂರಶಿಕ್ಷಣ (ODL) ಕಾರ್ಯಕ್ರಮಗಳನ್ನು ನೀಡುವ ಖಾಸಗಿ ಡಿಜಿಟಲ್ ಮುಕ್ತ ವಿಶ್ವವಿದ್ಯಾಲಯಗಳನ್ನು ನಿಯಂತ್ರಿಸಲು ಮತ್ತು ಉತ್ತೇಜಿಸಲು ಪಂಜಾಬ್ ಖಾಸಗಿ ಡಿಜಿಟಲ್ ಮುಕ್ತ ವಿಶ್ವವಿದ್ಯಾಲಯಗಳ ನೀತಿ–2026”ಗೆ ಅನುಮೋದನೆ ನೀಡಲಾಗಿದೆ. ಈ ನೀತಿಯು ರಾಜ್ಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಒದಗಿಸುವುದರೊಂದಿಗೆ ಉದ್ಯೋಗಾವಕಾಶಗಳನ್ನು ತೆರೆಯುವ ಗುರಿಯನ್ನು ಹೊಂದಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಈ ನೀತಿಯ ಮೂಲಕ ಖಾಸಗಿ ವಲಯವು ಪಂಜಾಬ್ನಲ್ಲಿ “ಡಿಜಿಟಲ್ ವಿಶ್ವವಿದ್ಯಾಲಯಗಳನ್ನು” ಸ್ಥಾಪಿಸಲು ಅವಕಾಶ ದೊರೆಯಲಿದೆ. ಅಂದರೆ, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದೇ ಆನ್ಲೈನ್ ಶಿಕ್ಷಣದ ಮೂಲಕವೇ ತಮ್ಮ ಪದವಿಯನ್ನು ಮನೆಯಿಂದಲೇ ಪೂರ್ಣಗೊಳಿಸಬಹುದಾಗಿದೆ. ದೇಶದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಇದು “ಐತಿಹಾಸಿಕ ಸುಧಾರಣೆ” ಎಂದು ಎಎಪಿ ಸರ್ಕಾರ ಹೇಳಿದೆ. ಡಿಜಿಟಲ್, ಆನ್ಲೈನ್, ದೂರ ಅಥವಾ ಮುಕ್ತ ವಿಧಾನಗಳ ಮೂಲಕ ಉನ್ನತ ಶಿಕ್ಷಣದಲ್ಲಿ ಬೋಧನೆ ಮತ್ತು ತರಬೇತಿಯನ್ನು ಒದಗಿಸುವುದು ಖಾಸಗಿ ಡಿಜಿಟಲ್ ಮುಕ್ತ ವಿಶ್ವವಿದ್ಯಾಲಯಗಳ ಉದ್ದೇಶವಾಗಿದೆ. ಈ ವಿಶ್ವವಿದ್ಯಾಲಯಗಳು ಆನ್ಲೈನ್ ತರಗತಿಗಳು, ಡಿಜಿಟಲ್ ಮೌಲ್ಯಮಾಪನಗಳು, ವರ್ಚುವಲ್ ಲ್ಯಾಬ್ಗಳು ಹಾಗೂ ಇತರ ತಂತ್ರಜ್ಞಾನ–ಸಕ್ರಿಯ ಪರಿಕರಗಳ ಮೂಲಕ ಪದವಿಪೂರ್ವ, ಸ್ನಾತಕೋತ್ತರ ಮತ್ತು ವೃತ್ತಿಪರ ಹಂತಗಳ ಅಧ್ಯಯನ ಕಾರ್ಯಕ್ರಮಗಳನ್ನು ನೀಡಲಿವೆ. ಇಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇಂಟರ್ನೆಟ್ ಮೂಲಕವೇ ಪರಸ್ಪರ ಸಂಪರ್ಕ ಸಾಧಿಸುತ್ತಾರೆ. ಪಂಜಾಬ್ ಸರ್ಕಾರದ ಅಧಿಕೃತ ಟಿಪ್ಪಣಿಯ ಪ್ರಕಾರ, ಡಿಜಿಟಲ್ ತಂತ್ರಜ್ಞಾನಗಳಿಂದ ಚಾಲಿತವಾಗಿರುವ ಮತ್ತು ವೇಗವಾಗಿ ವಿಕಸನಗೊಳ್ಳುತ್ತಿರುವ ಶೈಕ್ಷಣಿಕ ಭೂದೃಶ್ಯ ಹಾಗೂ ಹೊಂದಿಕೊಳ್ಳುವ ಕಲಿಕೆಯ ಆಯ್ಕೆಗಳ ಅಗತ್ಯತೆಯಿಂದಾಗಿ ಈ ನೀತಿಯನ್ನು ಪರಿಚಯಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯು ಪಂಜಾಬ್ನಲ್ಲಿ ಖಾಸಗಿ ಡಿಜಿಟಲ್ ಮುಕ್ತ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಈಗಾಗಲೇ ಸ್ವೀಕರಿಸಲು ಪ್ರಾರಂಭಿಸಿದೆ. ಮನೆಯಿಂದಲೇ ತಮ್ಮ ಅಧ್ಯಯನವನ್ನು ಪುನರಾರಂಭಿಸಲು ಬಯಸುವ ಮಹಿಳೆಯರಿಗೆ ಈ ನೀತಿ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ ಎಂದು ಸರ್ಕಾರ ಹೇಳಿದೆ. ಖಾಸಗಿ ಡಿಜಿಟಲ್ ಮುಕ್ತ ವಿಶ್ವವಿದ್ಯಾಲಯಗಳನ್ನು ನಿಯಂತ್ರಿಸಲು, ಉತ್ತೇಜಿಸಲು ಮತ್ತು ಹೊಂದಿಕೊಳ್ಳುವ ಶಿಕ್ಷಣಕ್ಕೆ ಪ್ರವೇಶವನ್ನು ವಿಸ್ತರಿಸಲು ಈ ನೀತಿಯನ್ನು ಅನುಮೋದಿಸಲಾಗಿದೆ. ಆದಾಗ್ಯೂ, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ 2020ರ ನಿಯಮಗಳ ಅಡಿಯಲ್ಲಿ ಈಗಾಗಲೇ ಡಿಜಿಟಲ್ ಮತ್ತು ಆನ್ಲೈನ್ ವಿಶ್ವವಿದ್ಯಾಲಯಗಳಿಗೆ ಅನುಮತಿ ನೀಡುತ್ತಿದೆ. ಆದರೆ ಅಸ್ತಿತ್ವದಲ್ಲಿರುವ ಪಂಜಾಬ್ ಖಾಸಗಿ ವಿಶ್ವವಿದ್ಯಾಲಯಗಳ ನೀತಿ–2010ರಲ್ಲಿ ಡಿಜಿಟಲ್ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ನಿಯಮಗಳು ಒಳಗೊಂಡಿಲ್ಲ. ಡಿಜಿಟಲ್ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಪಂಜಾಬ್ ಸರ್ಕಾರ ಹಣ ನೀಡುತ್ತದೆಯೇ? ಇಲ್ಲ. ಪಂಜಾಬ್ನಲ್ಲಿ ಡಿಜಿಟಲ್ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಆಸಕ್ತಿ ಹೊಂದಿರುವ ಖಾಸಗಿ ಸಂಸ್ಥೆಗಳೇ ಸಂಪೂರ್ಣ ಹೂಡಿಕೆಯನ್ನು ಮಾಡಬೇಕು ಎಂದು ನೀತಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ರಾಜ್ಯದ ಮೇಲೆ ಯಾವುದೇ ಆರ್ಥಿಕ ಹೊರೆಯಿಲ್ಲದೆ ಆನ್ಲೈನ್ ಶಿಕ್ಷಣದಲ್ಲಿ ಗುಣಮಟ್ಟದ ಖಾಸಗಿ ಹೂಡಿಕೆಯನ್ನು ಆಕರ್ಷಿಸುವುದೇ ಈ ನೀತಿಯ ಗುರಿಯಾಗಿದೆ. ಸಂಪೂರ್ಣವಾಗಿ ಸ್ವ-ನಿಧಿ ಹೊಂದಿರುವ ವಿಶ್ವವಿದ್ಯಾಲಯಗಳು ಪ್ರಕ್ರಿಯೆಗಾಗಿ ವಿಧಿಸುವ ಶುಲ್ಕದ ಮೂಲಕ ಯಾವುದೇ ಹಣಕಾಸಿನ ಹೊರೆಯಿಲ್ಲದೆ ಉನ್ನತ ಶಿಕ್ಷಣ ಇಲಾಖೆಗೆ ಆದಾಯವನ್ನು ತಂದುಕೊಡಲಿವೆ. ಖಾಸಗಿ ಸಂಸ್ಥೆಗಳು ಪೂರೈಸಬೇಕಾದ ಷರತ್ತುಗಳು ಯಾವುವು? ಆಸಕ್ತ ಖಾಸಗಿ ಸಂಸ್ಥೆಗಳು ಡಿಜಿಟಲ್ ವಿಶ್ವವಿದ್ಯಾಲಯ ಆರಂಭಿಸಬೇಕಾದರೆ ಆನ್ಲೈನ್ ಕಲಿಕೆಯಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರಬೇಕು. ಕನಿಷ್ಠ 20 ಕೋಟಿ ರೂ.ಗಳ ಕಾರ್ಪಸ್ ನಿಧಿಯನ್ನು ನಿರ್ವಹಿಸಬೇಕು. ಅರ್ಜಿಯೊಂದಿಗೆ 5 ಲಕ್ಷ ರೂ.ಗಳ ಪ್ರಾಸೆಸಿಂಗ್ ಶುಲ್ಕವನ್ನು ಪಂಜಾಬ್ ಉನ್ನತ ಶಿಕ್ಷಣ ಇಲಾಖೆಗೆ ಸಲ್ಲಿಸಬೇಕು. ಅನುಮೋದನೆ ದೊರೆತ ಬಳಿಕ ಸರ್ಕಾರಕ್ಕೆ 20 ಲಕ್ಷ ರೂ.ಗಳನ್ನು ಪಾವತಿಸಬೇಕಾಗುತ್ತದೆ. ವಿಶ್ವವಿದ್ಯಾಲಯದಲ್ಲಿ ಕನಿಷ್ಠ 15% ಸೀಟುಗಳನ್ನು ಪಂಜಾಬ್ ಸ್ಥಳೀಯ ವಿದ್ಯಾರ್ಥಿಗಳಿಗೆ ಮೀಸಲಿಡಬೇಕು. ಖಾಸಗಿ ಸಂಸ್ಥೆಗಳು ಯುಜಿಸಿ ಅಥವಾ ಇತರ ನಿಯಮಗಳನ್ನು ಉಲ್ಲಂಘಿಸಿದರೆ, ಪಂಜಾಬ್ ಸರ್ಕಾರವು 25 ಲಕ್ಷ ರೂ.ಗಳವರೆಗೆ ದಂಡ ವಿಧಿಸಬಹುದು ಎಂದು ನೀತಿಯಲ್ಲಿ ಉಲ್ಲೇಖಿಸಲಾಗಿದೆ. ಡಿಜಿಟಲ್ ವಿಶ್ವವಿದ್ಯಾಲಯಗಳಿಗೆ ಕ್ಯಾಂಪಸ್ಗಳಿರುತ್ತವೆಯೇ? ಡಿಜಿಟಲ್ ವಿಶ್ವವಿದ್ಯಾಲಯಗಳು ಕ್ಯಾಂಪಸ್ಗಳನ್ನು ಹೊಂದಿರುತ್ತವೆ. ಆದರೆ ಅವು ಆಡಳಿತಾತ್ಮಕ ಉದ್ದೇಶಗಳಿಗೆ ಮಾತ್ರ ಸೀಮಿತವಾಗಿರುತ್ತವೆ. ಇಲ್ಲಿ ಪ್ರಧಾನ ಕಚೇರಿ ಕಾರ್ಯನಿರ್ವಹಿಸಲಿದೆ. ಕ್ಯಾಂಪಸ್ಗಳಲ್ಲಿ ಯಾವುದೇ ತರಗತಿಗಳನ್ನು ನಡೆಸಲು ಅವಕಾಶವಿಲ್ಲ ಎಂದು ನೀತಿ ಹೇಳುತ್ತದೆ. ಸಂಸ್ಥೆಗಳು ಡಿಜಿಟಲ್ ವಿಶ್ವವಿದ್ಯಾಲಯ ಆರಂಭಿಸಲು ಪ್ರಧಾನ ಕಚೇರಿಗೆ ಸಂಬಂಧಿಸಿದ ಪ್ರಸ್ತಾವಿತ ಸ್ಥಳ ಹಾಗೂ ಭೂ ಮಾಲೀಕತ್ವದ ವಿವರಗಳನ್ನು ಘೋಷಿಸಬೇಕು. ಕಚೇರಿ, ಡಿಜಿಟಲ್ ಕಂಟೆಂಟ್ ಸ್ಟುಡಿಯೋ, ಕಲಿಕಾ ಬೆಂಬಲ ಕೇಂದ್ರಗಳು ಮತ್ತು ಇತರ ತಾಂತ್ರಿಕ ಮೂಲಸೌಕರ್ಯಗಳಿಗಾಗಿ ಕನಿಷ್ಠ ಮೂರು ಎಕರೆ ಭೂಮಿಯನ್ನು ಹೊಂದಿರಬೇಕು. ಈ ನೀತಿಯ ಅಡಿಯಲ್ಲಿ ಸೂಚಿಸಲಾದ ಭೌತಿಕ ಮೂಲಸೌಕರ್ಯವು ಸಂಪೂರ್ಣವಾಗಿ ಆಡಳಿತಾತ್ಮಕ ಹಾಗೂ ಡಿಜಿಟಲ್ ಉತ್ಪಾದನೆಗೆ ಮಾತ್ರ ಉದ್ದೇಶಿತವಾಗಿದ್ದು, ತರಗತಿ ಆಧಾರಿತ ಬೋಧನೆಗೆ ಸಂಬಂಧಪಟ್ಟುದಲ್ಲ. ಅರ್ಜಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಶೈಕ್ಷಣಿಕ ಹಾಗೂ ಡಿಜಿಟಲ್ ಮೂಲಸೌಕರ್ಯ, ವರ್ಚುವಲ್ ಲ್ಯಾಬ್ ವಿನ್ಯಾಸಗಳು, ಡಿಜಿಟಲ್ ಪ್ರೊಕ್ಟರ್ಡ್ ಪರೀಕ್ಷಾ ವ್ಯವಸ್ಥೆಗಳು, ಕ್ಲೌಡ್ ಹೋಸ್ಟಿಂಗ್, ಕೃತಕ ಬುದ್ಧಿಮತ್ತೆ (AI) ಆಡಳಿತ ಸೇರಿದಂತೆ ಎಲ್ಲ ವಿವರಗಳನ್ನು ಒದಗಿಸಬೇಕು. ಅಧ್ಯಾಪಕರು ಯುಜಿಸಿ ಮಾನದಂಡಗಳ ಪ್ರಕಾರ ಅರ್ಹತೆ ಹೊಂದಿರಬೇಕು. ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಪರಿಹರಿಸಲು ವಿಶ್ವವಿದ್ಯಾಲಯವು “ಡಿಜಿಟಲ್ ಒಂಬುಡ್ಸ್ಮನ್” ಅನ್ನು ನೇಮಿಸಬೇಕು. ಈ ಕುರಿತು ಪಂಜಾಬ್ ಸರ್ಕಾರಕ್ಕೆ ಬದ್ಧತಾ ಪತ್ರವನ್ನು ಸಲ್ಲಿಸಬೇಕಾಗುತ್ತದೆ ಎಂದು ನೀತಿಯಲ್ಲಿ ಹೇಳಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಮುಂದೇನು? ಉನ್ನತ ಶಿಕ್ಷಣ ಇಲಾಖೆಯು ಪ್ರಸ್ತಾವನೆಯ ಪ್ರಾಥಮಿಕ ಪರಿಶೀಲನೆ ನಡೆಸುತ್ತದೆ. ನಂತರ ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತ ಕಾರ್ಯದರ್ಶಿ (ಉನ್ನತ ಶಿಕ್ಷಣ) ನೇತೃತ್ವದಲ್ಲಿ ಐದು ಸದಸ್ಯರ ಉಪಸಮಿತಿಯನ್ನು ರಚಿಸಲಾಗುತ್ತದೆ. ಈ ಉಪಸಮಿತಿಯಲ್ಲಿ ರಾಜ್ಯ ವಿಶ್ವವಿದ್ಯಾಲಯದ ಉಪಕುಲಪತಿಯನ್ನು ಸದಸ್ಯರಾಗಿ ಸೇರಿಸಲಾಗುತ್ತದೆ. ಉಪಸಮಿತಿಯ ಅನುಮೋದನೆಯ ನಂತರ ಪ್ರಸ್ತಾವನೆಯನ್ನು ಮುಖ್ಯ ಕಾರ್ಯದರ್ಶಿಯ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಮುಂದೆ ಇಡಲಾಗುತ್ತದೆ. ಅಂತಿಮ ಅನುಮೋದನೆ ಮುಖ್ಯಮಂತ್ರಿ ಅಥವಾ ಸಚಿವ ಸಂಪುಟದಿಂದ ದೊರೆಯುತ್ತದೆ. ಅಧಿಸೂಚಿತ ನೀತಿಯ ಪ್ರಕಾರ, ಖಾಸಗಿ ಸಂಸ್ಥೆಯು ಉನ್ನತ ಶಿಕ್ಷಣ ಇಲಾಖೆಗೆ 20 ಲಕ್ಷ ರೂ.ಗಳನ್ನು ಪಾವತಿಸಿದ ನಂತರವೇ ಅನುಮೋದನಾ ಪತ್ರ ನೀಡಲಾಗುತ್ತದೆ. ಡಿಜಿಟಲ್ ವಿಶ್ವವಿದ್ಯಾಲಯಗಳು ಇತರ ದೂರಶಿಕ್ಷಣ ಕೇಂದ್ರಗಳನ್ನು ತೆರೆಯಬಹುದೇ? ವಿಶ್ವವಿದ್ಯಾಲಯವು ಅದರ ಆಡಳಿತ ಕೇಂದ್ರವನ್ನು ಒಳಗೊಂಡಿರುವ ಒಂದೇ ಅಧಿಸೂಚಿತ ಡಿಜಿಟಲ್ ಕ್ಯಾಂಪಸ್ನಿಂದ ಮಾತ್ರ ಕಾರ್ಯನಿರ್ವಹಿಸಬೇಕು. ಅದೇ ಪ್ರಾಯೋಜಕ ಸಂಸ್ಥೆಯ ಒಡೆತನದಲ್ಲಿರುವ ಯಾವುದೇ ಕಾಲೇಜುಗಳು, ಕೇಂದ್ರಗಳು ಅಥವಾ ಸಂಸ್ಥೆಗಳನ್ನು ಸಂಯೋಜಿಸುವಂತಿಲ್ಲ. ಹಾಗೆಯೇ, ವಿಶ್ವವಿದ್ಯಾಲಯವು ಯಾವುದೇ ಕ್ಯಾಂಪಸ್ ಹೊರಗಿನ ಕೇಂದ್ರವನ್ನು ಸ್ಥಾಪಿಸುವಂತಿಲ್ಲ. ನಿಯಮ ಉಲ್ಲಂಘನೆಯಾದರೆ ಯಾವ ಕ್ರಮ? ರಾಜ್ಯ ಸರ್ಕಾರವು ವಿಶ್ವವಿದ್ಯಾಲಯದ ಮಾನ್ಯತೆಯನ್ನು ಅಮಾನತುಗೊಳಿಸಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರ ಹೊಂದಿರುತ್ತದೆ. ವಿಶ್ವವಿದ್ಯಾಲಯವು ಯುಜಿಸಿ ಹಾಗೂ ಅನ್ವಯಿಸುವಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಯಿಂದ ಮಾನ್ಯತೆ ಪಡೆದ ಕಾರ್ಯಕ್ರಮಗಳನ್ನು ಮಾತ್ರ ನೀಡಬೇಕು. ಪ್ರತಿ ಕಾರ್ಯಕ್ರಮದಲ್ಲಿ ಅನುಮೋದಿತ ಪ್ರವೇಶದ ಕನಿಷ್ಠ 15% ಪಂಜಾಬ್ ರಾಜ್ಯದಲ್ಲಿ ನೆಲೆಸಿರುವ ಅಭ್ಯರ್ಥಿಗಳಿಗೆ ಮೀಸಲಿಡಬೇಕು. ಶುಲ್ಕ ರಚನೆಯನ್ನು ವಿಶ್ವವಿದ್ಯಾಲಯವೇ ನಿರ್ಧರಿಸಬಹುದು, ಆದರೆ ಅದು ಪಾರದರ್ಶಕವಾಗಿಯೂ ಕೈಗೆಟುಕುವಂತಾಗಿಯೂ ಇರಬೇಕು. ಯಾವುದೇ ದೂರು ಬಂದಲ್ಲಿ ಅಥವಾ ಸ್ವಯಂ ಪ್ರೇರಿತವಾಗಿ ಸರ್ಕಾರ ತನಿಖೆ ನಡೆಸಬಹುದು. ನಿಯಮ ಉಲ್ಲಂಘನೆಯಾದರೆ ಸರ್ಕಾರವು 25 ಲಕ್ಷ ರೂ.ಗಳವರೆಗೆ ದಂಡ ವಿಧಿಸಬಹುದು ಹಾಗೂ ಹೊಸ ಪ್ರವೇಶಗಳ ಮೇಲೆ ನಿರ್ಬಂಧ ವಿಧಿಸಬಹುದು ಎಂದು ನೀತಿಯಲ್ಲಿ ಹೇಳಲಾಗಿದೆ. NIELIT ಡಿಜಿಟಲ್ ವಿಶ್ವವಿದ್ಯಾಲಯ ವೇದಿಕೆ 2025ರಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹೊಸದಿಲ್ಲಿಯಲ್ಲಿ NIELIT ಡಿಜಿಟಲ್ ವಿಶ್ವವಿದ್ಯಾಲಯ (NDU) ವೇದಿಕೆಯನ್ನು ಉದ್ಘಾಟಿಸಿದರು. ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ NIELIT ಒಂದು ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾಗಿದೆ. ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ, ದತ್ತಾಂಶ ವಿಜ್ಞಾನ, ಸೆಮಿಕಂಡಕ್ಟರ್ಗಳು ಹಾಗೂ ಸಂಬಂಧಿತ ಪ್ರಮುಖ ತಂತ್ರಜ್ಞಾನಗಳಲ್ಲಿ ಉದ್ಯಮ–ಕೇಂದ್ರಿತ ಕಾರ್ಯಕ್ರಮಗಳನ್ನು ನೀಡುವುದು ಈ ವೇದಿಕೆಯ ಉದ್ದೇಶವಾಗಿದೆ. ವಿಶ್ವದರ್ಜೆಯ, ಕೈಗೆಟುಕುವ ಹಾಗೂ ಉದ್ಯೋಗ–ಆಧಾರಿತ ಡಿಜಿಟಲ್ ಕಲಿಕಾ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ದೃಷ್ಟಿಕೋನದೊಂದಿಗೆ ಈ ವೇದಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ಉತ್ತಮ ಗುಣಮಟ್ಟದ ಡಿಜಿಟಲ್ ಶಿಕ್ಷಣಕ್ಕೆ ಪ್ರವೇಶವನ್ನು ಪ್ರಜಾಪ್ರಭುತ್ವಗೊಳಿಸುವುದು, ಡಿಜಿಟಲ್ ಇಂಡಿಯಾ, NEP–2020 ಮತ್ತು ಸ್ಕಿಲ್ ಇಂಡಿಯಾ ಗುರಿಗಳನ್ನು ಬೆಂಬಲಿಸುವುದು ಇದರ ಆಶಯವಾಗಿದೆ. 2030ರ ವೇಳೆಗೆ ಸುಮಾರು 40 ಲಕ್ಷ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ದೇಶಾದ್ಯಂತ ಕಲಿಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಗುರಿಯನ್ನು ಈ ವೇದಿಕೆ ಹೊಂದಿದೆ
ಪ್ಯಾರಿಸ್ನಲ್ಲಿ ‘ಜೈ ಮಹಾರಾಷ್ಟ್ರ’ ಘೋಷಣೆ: ಭಾರತೀಯ ಪ್ರವಾಸಿಗರ ವರ್ತನೆಗೆ ಟೀಕೆ
ಮುಂಬೈ: ಫ್ರಾನ್ಸ್ ನ ರಾಜಧಾನಿ ಪ್ಯಾರಿಸ್ ನ ಜನದಟ್ಟಣೆಯ ಮಾಂಟ್ಮಾರ್ಟ್ರೆ ಪ್ರದೇಶದಲ್ಲಿ ಬೀದಿ ಮೈಮ್ ಕಲಾವಿದನೊಬ್ಬನ ಬಳಿ ಭಾರತೀಯ ಪ್ರವಾಸಿಗರ ಗುಂಪು ‘ಜೈ ಮಹಾರಾಷ್ಟ್ರ’, ‘ಜೈ ಶಿವಸೇನೆ’ ಮತ್ತು ‘ಛತ್ರಪತಿ ಶಿವಾಜಿ ಮಹಾರಾಜ್ ಕಿ ಜೈ’ ಎಂಬ ಘೋಷಣೆಗಳನ್ನು ಕೂಗಿರುವ ದೃಶ್ಯಗಳಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿದೆ. ವೀಡಿಯೊದಲ್ಲಿ ಕಲಾವಿದನು ಶಾಂತವಾಗಿ ತನ್ನ ಪ್ರದರ್ಶನ ನೀಡುತ್ತಿದ್ದ ವೇಳೆ, ಒಬ್ಬ ವ್ಯಕ್ತಿ ಅವನ ಸುತ್ತ ಕೈ ಹಾಕಿ ಜೋರಾಗಿ ಘೋಷಣೆಗಳನ್ನು ಕೂಗುವುದು ಕಾಣಿಸುತ್ತದೆ. ನಂತರ ಇತರರೂ ಸೇರಿಕೊಂಡು ಹಾಗೆಯೇ ಮುಂದುವರಿಸುತ್ತಾರೆ. ಕಲಾವಿದನು ನಿಲ್ಲಿಸಲು ಸನ್ನೆ ಮಾಡಿದರೂ, ಆ ಮನವಿಯನ್ನು ನಿರ್ಲಕ್ಷಿಸಿರುವುದು ದೃಶ್ಯಗಳಲ್ಲಿ ಸ್ಪಷ್ಟವಾಗಿದೆ. ಈ ಘಟನೆ ವಿದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರವಾಸಿಗರ ನಡವಳಿಕೆ, ನಾಗರಿಕ ಪ್ರಜ್ಞೆ ಹಾಗೂ ರಾಷ್ಟ್ರೀಯ ಅಥವಾ ರಾಜಕೀಯ ಘೋಷಣೆಗಳ ಸೂಕ್ತತೆ ಕುರಿತು ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ವೀಡಿಯೊದಲ್ಲಿ ಕಾಣುವ ವ್ಯಕ್ತಿ ಫೋಟೋ ತೆಗೆದುಕೊಳ್ಳುವ ನೆಪದಲ್ಲಿ ಘೋಷಣೆಗಳನ್ನು ಕೂಗುತ್ತಾನೆ. ಕಲಾವಿದನು ಮೌನವಾಗಿರಲು ಸೂಚಿಸಿದರೂ, ಆ ವ್ಯಕ್ತಿ ಇನ್ನಷ್ಟು ಉತ್ಸಾಹದಿಂದ ಹಾಗೆಯೇ ಮಾಡುತ್ತಲೇ ಇರುತ್ತಾನೆ. ಗುಂಪಿನ ಇತರರು ಅದೇ ರೀತಿ ಮಾಡುವುದು ಕಂಡು ಬಂದಿದೆ. ಘೋಷಣೆಗಳಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೆಸರನ್ನೂ ಉಲ್ಲೇಖಿಸಿರುವುದು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಊಹಾಪೋಹಗಳು ಹರಡಿವೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಘಟನೆಯನ್ನು ‘ಅನಾಚಾರ’ ಹಾಗೂ ‘ಅವಮಾನಕಾರಿ ವರ್ತನೆ’ ಎಂದು ಟೀಕಿಸಿದ್ದಾರೆ. ಬೀದಿ ಕಲಾವಿದನ ಮನವಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದೇ ಹೆಚ್ಚು ಕಳವಳಕಾರಿ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವತ್ತು ಇಡೀ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವನ್ನು 'ಮ್ಯಾನ್ ಆಫ್ ದ ಮ್ಯಾಚ್' ಎಂದು ಘೋಷಿಸಿದ್ದಕೆ ರೆಫರಿ?
1998-99ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ವೆಸ್ಟ್ ಇಂಡೀಸ್ ತಂಡವು ಭಾರಿ ಮುಖಭಂಗ ಅನುಭವಿಸಿತು. ಆತಿಥೇಯ ದಕ್ಷಿಣ ಆಫ್ರಿಕಾ ತಂಡವು ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು. ಏಳು ಏಕದಿನ ಪಂದ್ಯಗಳ ಸರಣಿಯಲ್ಲೂ 6-1 ಅಂತರದ ಗೆಲುವು ದಾಖಲಿಸಿತು. ಅಂತಿಮ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ಎಲ್ಲ ಆಟಗಾರರನ್ನು 'ಪ್ಲೇಯರ್ ಆಫ್ ದಿ ಮ್ಯಾಚ್' ಎಂದು ಘೋಷಿಸಲಾಯಿತು.
PSL Vs IPL ವೇತನ ಹೋಲಿಕೆಯೇ ಅಸಾಧ್ಯ! ಅಲ್ಲಿನ ಇಡೀ ತಂಡ ವೆಚ್ಚವೇ ರಿಷಬ್ ಪಂತ್ ಗಳಿಕೆಯ ಅರ್ಧಕ್ಕರ್ಧ!
IPL Vs PSL- ಪಾಕಿಸ್ತಾನ ಸೂಪರ್ ಲೀಗ್(PSL) 2026ರ ಆವೃತ್ತಿಗೆ ತನ್ನ ವೇತನ ಮಿತಿಯನ್ನು ಹೆಚ್ಚಿಸಿದೆ. ಜೊತೆಗೆ ಇದೇ ಮೊದಲ ಬಾರಿಗೆ ಐಪಿಎಲ್ ಮಾದರಿಯ ಹರಾಜು ಪದ್ಧತಿಯನ್ನು ಅಳವಡಿಸಿಕೊಳ್ಳುತ್ತಿದೆ. ಆದರೂ ಐಪಿಎಲ್ ಜೊತೆ ಹೋಲಿಸಿದರೆ ಪಿಎಸ್ಎಲ್ ಆಟಗಾರರ ವೇತನ ಬಹಳ ಕಡಿಮೆ ಇದೆ.ಈ ಬಗ್ಗೆಯೇ ಇದೀಗ ಭಾರೀ ಚರ್ಚೆ ನಡೆಯುತ್ತಿದೆ. ಐಪಿಎಲ್ ನ ಇಬ್ಬರು ಸ್ಟಾರ್ ಆಟಗಾರರ ವೇತನ ಪಿಎಸ್ಎಲ್ ತಂಡದ ಒಟ್ಟು ವೇತನಕ್ಕಿಂತ ಅಧಿಕ!. ಇದು ಐಪಿಎಲ್ ಮತ್ತು ಪಿಎಸ್ಎಲ್ ನಡುವಿನ ಆರ್ಥಿಕ ಅಂತರ ದೊಡ್ಡದಾಗಿದೆ.
ಮರಾಠಿಯಲ್ಲಿ ಮಾತು ಆರಂಭಿಸಿದ ಶಾಸಕ ಹಲಗೇಕರಗೆ ವೇದಿಕೆಯಲ್ಲೇ ʼಕನ್ನಡ ಪಾಠʼ ಮಾಡಿದ ಸಿಎಂ ಸಿದ್ದರಾಮಯ್ಯ!
ಬೆಳಗಾವಿ: ಮರಾಠಿಯಲ್ಲಿ ಭಾಷಣ ಆರಂಭಿಸಿದ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆಯಲ್ಲೇ ಕನ್ನಡ ಕಲಿಯುವಂತೆ ಕಿವಿಮಾತು ಹೇಳಿದ ಘಟನೆ ನಂದಗಡದಲ್ಲಿ ನಡೆದ ʼವೀರಭೂಮಿʼ ಉದ್ಘಾಟನಾ ಸಮಾರಂಭದಲ್ಲಿ ಗಮನ ಸೆಳೆಯಿತು. ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸೋಮವಾರ ಸಂಗೊಳ್ಳಿ ರಾಯಣ್ಣನ ವಸ್ತು ಸಂಗ್ರಹಾಲಯ ʼವೀರಭೂಮಿʼ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಕಲಿಯುವಂಥ ವಾತಾವರಣ ನಿರ್ಮಾಣ ಮಾಡಬೇಕು. ಯಾರು ಎಲ್ಲಿಂದ ಬಂದಿರಲಿ, ಕನ್ನಡ ನೆಲದ ಹೆಸರು ಹೇಳುವ ಮುನ್ನ ಕನ್ನಡ ಕಲಿಯಬೇಕು. ಅದನ್ನು ಅನಿವಾರ್ಯ ಮಾಡಬೇಕು. ಆಗ ಮಾತ್ರ ಕರ್ನಾಟಕ ಏಕೀಕರಣಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದು ಹೇಳಿದರು. ಮರಾಠಿ ಭಾಷಣಕ್ಕೆ ಜನರಿಂದ ವಿರೋಧ ಇದಕ್ಕೂ ಮುನ್ನ ಅಧ್ಯಕ್ಷೀಯ ಭಾಷಣಕ್ಕೆ ನಿಂತ ಶಾಸಕ ವಿಠ್ಠಲ ಹಲಗೇಕರ ಮರಾಠಿಯಲ್ಲಿ ಮಾತು ಆರಂಭಿಸುತ್ತಿದ್ದಂತೆ ಜನಸ್ತೋಮದಿಂದ ʼಕನ್ನಡ,ಕನ್ನಡʼ ಎಂಬ ಘೋಷಣೆಗಳು ಮೊಳಗಿದವು. ಕೂಗಾಟ ಹೆಚ್ಚಾದಾಗ ಅವರು, ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ ಎಂಬುದು ನಿಮಗೆ ಗೊತ್ತು. ಸಿದ್ದರಾಮಯ್ಯ ಅವರಿಗೆ ಮರಾಠಿ ಅರ್ಥವಾಗುವುದಿಲ್ಲ ಎಂಬುದು ನನಗೂ ಗೊತ್ತು. ನನ್ನ ಮನವಿಗಳನ್ನು ಕನ್ನಡದಲ್ಲೇ ಬರೆಸಿ ತಂದಿದ್ದೇನೆ. ಖಾನಾಪುರದಲ್ಲಿ ಕನ್ನಡ-ಮರಾಠಿ ಎಂಬ ಭೇದವಿಲ್ಲ, ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂದು ಮರಾಠಿಯಲ್ಲೇ ಪ್ರತಿಕ್ರಿಯಿಸಿದರು. ಗಲಾಟೆ ತೀವ್ರಗೊಂಡ ಹಿನ್ನೆಲೆಯಲ್ಲಿ ಅವರು ನಂತರ ಕನ್ನಡದಲ್ಲೇ ಮನವಿ ಓದಿದರು. ಕನ್ನಡದ ಅನ್ನ ಉಂಡಮೇಲೆ ಕನ್ನಡ ಕಲಿಯಿರಿ ಉದ್ಘಾಟನಾ ಭಾಷಣದಲ್ಲಿ ಮುಖ್ಯಮಂತ್ರಿ, ಏನಯ್ಯ ವಿಠ್ಠಲ, ಕನ್ನಡ ಅರ್ಥವಾಗುತ್ತದೆಯೇ? ಎಂದು ಪ್ರಶ್ನಿಸಿದರು. ಅರ್ಥವಾಗುತ್ತದೆ ಸರ್ ಎಂದು ಹಲಗೇಕರ ಉತ್ತರಿಸಿದರು. ಆಗ ಸಿದ್ದರಾಮಯ್ಯ,ಇಲ್ಲಿರುವವರು ಮಾತ್ರವಲ್ಲ, ಯಾರು ಎಲ್ಲೇ ಇರಲಿ, ಕನ್ನಡದ ಅನ್ನ ಉಂಡಮೇಲೆ ಕನ್ನಡ ಕಲಿಯಲೇಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಚಿವರು, ಜನಪ್ರತಿನಿಧಿಗಳು ಹಾಗೂ ಸಾವಿರಾರು ಜನ ಭಾಗವಹಿಸಿದ್ದರು. ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ರಾಜ್ಯದಲ್ಲಿ ಕನ್ನಡ ಕಲಿಯದೆಯೇ ಬದುಕಬಹುದಾದ ವಾತಾವರಣವಿದೆ. ಕನ್ನಡ ಕಲಿಯಲೇಬೇಕಾದ ಅನಿವಾರ್ಯತೆ ಇಲ್ಲ. ಬೇರೆ ಭಾಷೆಯಲ್ಲಿ ಮಾತನಾಡುವವರೊಂದಿಗೆ ನಾವು ಕನ್ನಡದಲ್ಲಿಯೇ ಮಾತನಾಡಬೇಕು. pic.twitter.com/WPDeLd8F6n — Siddaramaiah (@siddaramaiah) January 19, 2026
ತೆಲಂಗಾಣ | ಸಾರ್ವಜನಿಕ ಸ್ಥಳದಲ್ಲೇ ಇರಿದು ಕರ್ನಾಟಕ ಮೂಲದ ವ್ಯಕ್ತಿಯ ಕೊಲೆ
ಹೈದರಾಬಾದ್,ಜ.19: ಸಾರ್ವಜನಿಕರ ಕಣ್ಣೆದುರೇ ಚಿನ್ನದ ಕೆಲಸಗಾರನೋರ್ವನನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ರವಿವಾರ ರಾತ್ರಿ ಛತ್ರಿನಾಕದಲ್ಲಿಯ ಮದ್ಯದಂಗಡಿಯೊಂದರ ಸಮೀಪ ನಡೆದಿದೆ. ಮೃತ ಸತೀಶ ಕರ್ನಾಟಕ ಮೂಲದವರಾಗಿದ್ದು, ಕೆಲವು ವರ್ಷಗಳ ಹಿಂದೆ ತನ್ನ ತಂದೆ ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ಹೈದರಾಬಾದ್ಗೆ ತೆರಳಿ ಅಲ್ಲಿ ನೆಲೆಸಿದ್ದಾರೆ. ರವಿವಾರ ರಜಾದಿನವಾಗಿದ್ದರಿಂದ ಗೆಳೆಯ ಜೈಚಂದ್ ಜೊತೆ ಛತ್ರಿನಾಕದ ಮದ್ಯದಂಗಡಿಗೆ ತೆರಳಿದ್ದರು. ಮದ್ಯ ಸೇವಿಸುತ್ತಿದ್ದಾಗ ಹಿಂದಿನ ಹಣಕಾಸು ವ್ಯವಹಾರಗಳ ಬಗ್ಗೆ ಇಬ್ಬರೂ ಜಗಳವಾಡಿದ್ದು, ಅವರ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಸತೀಶ ಮಾಡಿದ್ದ ನಿಂದನೆಗಳಿಂದ ಸಿಟ್ಟಿಗೆದ್ದಿದ್ದ ಜೈಚಂದ್ ಮನೆಗೆ ತೆರಳಿ ತನ್ನ ಸ್ನೇಹಿತ ಮಹೇಶ್ ಜೊತೆ ಚೂರಿ ಹಿಡಿದುಕೊಂಡು ಬಂದು ಸತೀಶ್ ಅವರ ಕುತ್ತಿಗೆ, ಹೊಟ್ಟೆ ಮತ್ತು ಮುಖಕ್ಕೆ ಇರಿದಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೋಲಿಸರು ಗಂಭೀರವಾಗಿ ಗಾಯಗೊಂಡಿದ್ದ ಸತೀಶರನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಛತ್ರಿನಾಕ ಎಸಿಪಿ ಸಿ.ಚಂದ್ರಶೇಖರ್ ತಿಳಿಸಿದರು. ಈ ಕುರಿತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೋಲಿಸರು ಜೈಚಂದ್ನನ್ನು ಬಂಧಿಸಿದ್ದಾರೆ.
RCB ಗೆಲುವನ್ನು ತಡೆಯೋರು ಯಾರೂ ಇಲ್ಲ! ಸತತ 6 ಜಯದೊಂದಿಗೆ WPLನಲ್ಲಿ ಇತಿಹಾಸ ನಿರ್ಮಿಸಿದ ಸ್ಮೃತಿ ಮಂದಾನ ಪಡೆ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ 2026ರ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು ನಿರಂತರ ಐದನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮೊದಲ ತಂಡವಾಗಿ ಪ್ಲೇ ಆಫ್ ಹಂತಕ್ಕೆ ಅರ್ಹತೆ ಪಡೆದಿದೆ. ಕಳೆದ ಆವೃತ್ತಿಯನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಆರ್ ಸಿಬಿ ಗೆದ್ದಿತ್ತು. ಇದೀಗ ಈ ಆವೃತ್ತಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 61 ರನ್ ಗಳ ಗೆಲುವು ಸಾಧಿಸುವ ಮೂಲಕ ನಿರಂತರ ಐದು ಪಂದ್ಯಗಳನ್ನು ಜಯಿಸಿದೆ.. ಹೀಗಾಗಿ ನಿರಂತರ ಆರು ಪಂದ್ಯಗಳನ್ನು ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ವಡೋದರಾ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಗೆಲುವು ಸಾಧಿಸಿದ ಮೊದಲ ತಂಡ ಸಹ ಎಂಬ ಗೌರವಕ್ಕೂ ಭಾಜನವಾಗಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನಿಗದಿತ 20 ಓವರ್ ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತ್ತು. ಇದಕ್ಕುತ್ತರವಾಗಿ ಗುಜರಾತ್ ಜೈಂಟ್ಸ್ ಅಷ್ಟೇ ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 117 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ಆಕರ್ಷಕ ಅರ್ಧಶತಕ ಗಳಿಸಿದ ಆರ್ ಸಿಬಿಯ ಗೌತಮಿ ನಾಯಕ್ ಅವರು ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದರು. ಆ್ಯಶ್ಲೆ ಗಾರ್ಡನರ್ ಏಕಾಂಗಿ ಸಾಹಸ ಸವಾಲಿನ ಮೊತ್ತ ಬೆಂಬತ್ತಿ ಹೊರಟ ಗುಜರಾತ್ ಜೈಂಟ್ಸ್ ಪರ ನಾಯಕಿ ಆಶ್ಲೆ ಗಾರ್ಡನರ್ ಅವರನ್ನು ಹೊರತುಪಡಿಸಿದರೆ ಬೇರೆ ಯಾವ ಆಟಗಾರ್ತಿಯೂ ಆರ್ ಸಿಬಿ ಬೌಲರ್ ಗಳೆದುರು ಹೆಚ್ಚು ಹೊತ್ತು ಕ್ರೀಸಿನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಗಾರ್ಡನರ್ ಅವರು 43 ಎಸೆತಗಳಿಂದ 5 ಬೌಂಡರಿ ಮತ್ತು 1 ಸಿಕ್ಸರ್ ಗಳನ್ನು ಒಳಗೊಂಡ 54 ರನ್ ಗಳಿಸಿದರು. ಆರ್ ಸಿಬಿ ಪರ ಸಯಾಲಿ ಸತ್ಗರೆ ಅವರು 3 ವಿಕೆಟ್, ಅವರು 2 ವಿಕೆಟ್ ಕಬಳಿಸಿದರು. ಉಳಿದ ಮೂರು ವಿಕೆಟ್ ಗಳು ಲಾರೆನ್ ಬೆಲ್, ರಾಧಾ ಯಾದವ್ ಮತ್ತು ಶ್ರೇಯಾಂಕಾ ಪಾಟೀಲ್ ಪಾಲಾಯಿತು. ಈ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಈ ಬಾರಿಯೂ ಉತ್ತಮ ಪ್ರದರ್ಶನ ನೀಡಿದರು. ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿ 9 ರನ್ ಗಳಾಗುವಷ್ಟರಲ್ಲೇ ಗ್ರೇಸ್ ಹ್ಯಾರಿಸ್(1) ಮತ್ತು ಜಾರ್ಜಿಯಾ ವೋಲ್(1) ಅವರ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ನಾಯಕಿ ಸ್ಮೃತಿ ಮಂದಾನ ಅವರನ್ನು ಕೂಡಿಕೊಂಡ ಗೌತಮಿ ನಾಯಕ್ ಅವರು ತಂಡವನ್ನು ಕುಸಿತದಿಂದ ಪಾರು ಮಾಡಿದರು. ಕಳೆದ ಪಂದ್ಯದಲ್ಲಿ 96 ರನ್ ಗಳಿಸಿದ್ದ ಸ್ಮೃತಿ ಅವರು ಈ ಪಂದ್ಯದಲ್ಲಿ 4 ಬೌಂಡರಿಗಳಿದ್ದ 26 ರನ್ ಗಳಿಸಿ ಔಟಾದರು. ಆ ಬಳಿಕ ಗೌತಮಿ ನಾಯಕ್ ಅವರು ರಿಚಾ ಘೋಷ್(20 ಎಸೆತದಲ್ಲಿ 27) ಅವರೊಂದಿಗೆ ಮತ್ತೊಂದು ಉತ್ತಮ ಜೊತೆಯಾಟವಾಡಿದರು. ಗೌತಮಿ ಅವರು 55 ಎಸೆತಗಳಲ್ಲಿ 7 ಬೌಂಡರಿ ಮತ್ತ 1 ಸಿಕ್ಸರ್ ಗಳನ್ನು ಒಳಗೊಂಡ 73 ರನ್ ಗಳಿಸಿದರು. ಸ್ಲಾಗ್ ಓವರ್ ಗಳಲ್ಲಿ ರಾಧಾ ಯಾದವ್ ಅವರು 8 ಎಸೆತಗಳಿಂದ 17 ರನ್ ಗಳಿಸಿದ್ದರಿಂದ ಆರ್ ಸಿಬಿ ಸ್ಪರ್ಧಾತ್ಮಕ ಮೊತ್ತ ಗಳಿಸಲು ಸಹಾಯಕವಾಯಿತು. ಸಂಕ್ಷಿಪ್ತ ಸ್ಕೋರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ ಗಳಲ್ಲಿ 178/6, ಗೌತಮಿ ನಾಯಕ್ 73(55), ಸ್ಮೃತಿ ಮಂದಾನ 26(23), ರಿಚಾ ಘೋಷ್ 27(20), ಕಾಶ್ವಿ ಗೌತಮ್ 38ಕ್ಕೆ 2, ಆಶ್ಲೆ ಗಾರ್ಡನರ್ 43ಕ್ಕೆ 2. ಗುಜರಾತ್ ಜೈಂಟ್ಸ್ 20 ಓವರ್ ಗಳಲ್ಲಿ 117/8, ಆ್ಯಶ್ಲೆ ಗಾರ್ಡನರ್ 54(43), ಅನುಷ್ಕಾ ಶರ್ಮಾ 18(20), ಭಾರತಿ ಫುಲ್ಮಲಿ 14(15), ಸಯಾಲಿ ಸತ್ಗರ 21ಕ್ಕೆ 3, ನಾಡಿನ್ ಡಿ ಕ್ಲಾರ್ಕ್ 17ಕ್ಕೆ 2.
ನಮ್ಮದು ಬೂಟಾಟಿಕೆಯ ಗೋರಕ್ಷಣೆಯಲ್ಲ, ನಿಜವಾದ ಗೋರಕ್ಷಣೆ : ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಭಯಾನಕವಾಗಿ ಕಾಡುವ ಕಾಲುಬಾಯಿ ರೋಗದ ಲಸಿಕಾಕರಣದಲ್ಲಿ ಶೇ.96 ರಷ್ಟು ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಇದು ನಮ್ಮ ನೈಜ ಗೋರಕ್ಷಣೆ, ಬೂಟಾಟಿಕೆಯ ಗೋರಕ್ಷಣೆಯಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರೈತಾಪಿ ವರ್ಗದ ಜೀವನಾಡಿಯಾಗಿರುವ ಜಾನುವಾರುಗಳನ್ನು ರಕ್ಷಿಸಿದರೆ ರೈತರನ್ನು ರಕ್ಷಿಸಿದಂತೆ, ಈ ಪ್ರಜ್ಞೆಯೊಂದಿಗೆ ನಮ್ಮ ಸರ್ಕಾರ ಕೆಲಸ ಮಾಡುತ್ತದೆಯೇ ಹೊರತು ರಾಜಕೀಯ ಹಿತರಕ್ಷಣೆಗಾಗಿ ಬೂಟಾಟಿಕೆಯ ಗೋರಕ್ಷಣೆ ನಮ್ಮದಲ್ಲ ಎಂದು ಬರೆದುಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕಾಕರಣದಲ್ಲಿ ಶೇ.96ರಷ್ಟು ಪ್ರಗತಿ ಸಾಧಿಸುವ ಮೂಲಕ ಜಾನುವಾರುಗಳ ರಕ್ಷಣೆಯಲ್ಲಿ ಮಹತ್ವದ ಹೆಜ್ಜೆಯನ್ನು ಇಡಲಾಗಿದೆ. ಜಿಲ್ಲೆಯಲ್ಲಿನ ಒಟ್ಟು 3,55, 653 ಜಾನುವಾರುಗಳ ಪೈಕಿ 3,41,136 ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕೆ ನೀಡಲಾಗಿದೆ. ಗರ್ಭ ಕಟ್ಟಿದ ಮತ್ತು ಇತರ ರೋಗಗಳಿರುವ ಜಾನುವಾರುಗಳಿಗೆ ಲಸಿಕೆ ಹಾಕುವಂತಿಲ್ಲ, ಈ ಕಾರಣಕ್ಕಾಗಿ 14,500 ಜಾನುವಾರುಗಳು ಲಸಿಕಾಕರಣದಿಂದ ಹೊರಗುಳಿದಿವೆ ಎಂದು ತಿಳಿಸಿದ್ದಾರೆ. ಪಶುವೈದ್ಯಕೀಯ ಸಿಬ್ಬಂದಿ ಪ್ರತಿ ಹಳ್ಳಿಗಳಿಗೂ ತೆರಳಿ, ರೈತರಲ್ಲಿ ಜಾಗೃತಿ ಮೂಡಿಸಿದರ ಪರಿಣಾಮ ಈ ಪ್ರಮಾಣದ ಯಶಸ್ಸು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. 2022ಕ್ಕೂ ಮೊದಲು ರಾಜ್ಯದಲ್ಲಿ ಕಾಲುಬಾಯಿ ರೋಗದ ಲಸಿಕೆಯ ತೀವ್ರ ಕೊರತೆ ದಾಖಲಾಗಿತ್ತು, ಕಾಲುಬಾಯಿ ರೋಗಕ್ಕೆ ರಾಜ್ಯದ ಜಾನುವಾರುಗಳ ಸಾವು ತೀವ್ರ ಏರಿಕೆ ಕಂಡಿತ್ತು ಎಂಬ ಸಂಗತಿ ಈಗ ಇತಿಹಾಸ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬರೆದುಕೊಂಡಿದ್ದಾರೆ.
ಗುಜರಾತ್| ಕೆಮ್ಮಿನ ಸಿರಪ್ ಕುಡಿದು 5 ವರ್ಷದ ಬಾಲಕಿ ಮೃತ್ಯು
ಅಹ್ಮದಾಬಾದ್, ಜ. 19: ಶೀತ ಹಾಗೂ ಕೆಮ್ಮಿನ ಸಿರಪ್ ಕುಡಿದು 5 ವರ್ಷದ ಬಾಲಕಿಯೋರ್ವಳು ಮೃತಪಟ್ಟ ಘಟನೆ ಗುಜರಾತ್ನ ವಡೋದರಾದಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಧ್ಯಾನಿ ಥಕ್ಕರ್ ಎಂದು ಗುರುತಿಸಲಾಗಿದೆ. ಧ್ಯಾನಿ ಥಕ್ಕರ್ ಸಾವಿನ ಹಿನ್ನೆಲೆಯಲ್ಲಿ ಆಕೆಯ ಚಿಕ್ಕಮ್ಮ ಔಷಧದ ಸುರಕ್ಷತೆ ಬಗ್ಗೆ ಪ್ರಶ್ನೆ ಎತ್ತಿದ್ದಾರೆ ಹಾಗೂ ನ್ಯಾಯ ನೀಡುವಂತೆ ಆಗ್ರಹಿಸಿದ್ದಾರೆ. ಧ್ಯಾನಿ ಚಿಕ್ಕ ಪ್ರಾಯದಲ್ಲೇ ತಾಯಿ ಹಾಗೂ ತಂದೆಯನ್ನು ಕಳೆದುಕೊಂಡಿದ್ದಳು. ಆಕೆಯನ್ನು ಅಜ್ಜಿ, ಅಜ್ಜ ಹಾಗೂ ಸಂಬಂಧಿಕರು ಪೋಷಿಸುತ್ತಿದ್ದರು. ಆಕೆಯ ಚಿಕ್ಕಪ್ಪ ಮೆಡಿಕಲ್ವೊಂದರಿಂದ ತಂದ ಶೀತ ಹಾಗೂ ಕೆಮ್ಮಿನ ಸಿರಪ್ ಅನ್ನು ಧ್ಯಾನಿಗೆ ನೀಡಲಾಗಿತ್ತು. ಸಿರಪ್ ಕುಡಿದ ಕೂಡಲೇ ಆಕೆಯ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ಕೂಡಲೇ ಧ್ಯಾನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಬಾದಾಮಿ ಚಾಲುಕ್ಯ ಉತ್ಸವಕ್ಕೆ ₹1 ಕೋಟಿ ಹೆಚ್ಚುವರಿ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ
ಬಾಗಲಕೋಟೆ: ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪ, ಸಂಸ್ಕೃತಿ ಹಾಗೂ ಆಡಳಿತ ವೈಖರಿಯ ಮಹತ್ವವನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಚಾಲುಕ್ಯ ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ₹1 ಕೋಟಿ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬಾದಾಮಿಯ ಇಮ್ಮಡಿ ಪುಲಿಕೇಶಿ ವೇದಿಕೆಯಲ್ಲಿ ಬುಧವಾರ ಸಂಜೆ ನಡೆದ ಚಾಲುಕ್ಯ ಉತ್ಸವ-2026ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ
ಫೆಲೆಸ್ತೀನ್| ಹೆಬ್ರಾನ್ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ ಆರಂಭಿಸಿದ ಇಸ್ರೇಲ್ ಸೇನೆ
ಹೆಬ್ರಾನ್ (ಫೆಲೆಸ್ತೀನ್), ಜ. 19: ಫೆಲೆಸ್ತೀನ್ನ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಹೆಬ್ರಾನ್ ನಗರದ ಮೇಲೆ ಇಸ್ರೇಲ್ ಸೇನೆ ಭಾರೀ ಪ್ರಮಾಣದಲ್ಲಿ ಸೇನಾ ಕಾರ್ಯಾಚರಣೆ ಆರಂಭಿಸಿದೆ. ಅದು ನೂರಾರು ಸೈನಿಕರು ಮತ್ತು ಬೃಹತ್ ಯಂತ್ರಗಳನ್ನು ನಿಯೋಜಿಸಿದ್ದು, ನಗರದ ದಕ್ಷಿಣದ ಜಿಲ್ಲೆಗಳಲ್ಲಿ ಜನಜೀವನ ಸ್ಥಗಿತಗೊಂಡಿದೆ. ಇಸ್ರೇಲ್ ಸೇನೆ ಮತ್ತು ಆಂತರಿಕ ಭದ್ರತಾ ಸೇವೆ ‘ಶಿನ್ ಬೆಟ್’ ಸೋಮವಾರ ಜಂಟಿ ಹೇಳಿಕೆಯೊಂದನ್ನು ನೀಡಿದ್ದು, ಸೇನಾ ಕಾರ್ಯಾಚರಣೆಯನ್ನು ಖಚಿತಪಡಿಸಿದೆ. ಸೇನಾ ಕಾರ್ಯಾಚರಣೆಯು ಹಲವು ದಿನಗಳ ಕಾಲ ನಡೆಯಲಿದೆ ಎಂಬ ಎಚ್ಚರಿಕೆಯನ್ನು ಸೇನೆ ನೀಡಿದೆ. ಹೆಬ್ರಾನ್ ನಗರದಲ್ಲಿ ಸಂಪೂರ್ಣ ಲಾಕ್ಡೌನ್ ಪರಿಸ್ಥಿತಿ ಇದೆ ಎಂದು ‘aljazeera’ ವರದಿ ಮಾಡಿದೆ. ‘‘ನಾವೀಗ ದಕ್ಷಿಣದ ಹೆಬ್ರಾನ್ ನಗರದಲ್ಲಿದ್ದೇವೆ. ನಗರದಲ್ಲಿ ಬೆಳಗ್ಗಿನಿಂದ ಕರ್ಫ್ಯೂ ವಿಧಿಸಲಾಗಿದೆ. ಭಾರೀ ಪ್ರಮಾಣದಲ್ಲಿ ಆಕ್ರಮಣಕಾರಿ ಪಡೆಗಳನ್ನು ನಿಯೋಜಿಸಲಾಗಿದೆ. ಬುಲ್ಡೋಝರ್ಗಳ ಮತ್ತು ಶಸ್ತ್ರಸಜ್ಜಿತ ವಾಹನಗಳು ಓಡಾಡುತ್ತಿವೆ’’ ಎಂದು ಅದರ ವರದಿಗಾರರು ಹೇಳಿದ್ದಾರೆ. ‘‘ಅವರು ಕಬ್ಬಿಣದ ದ್ವಾರಗಳನ್ನು ತಂದಿದ್ದಾರೆ. ಇದು ಅಪಾಯಕಾರಿ. ಅವರು ಈಗಾಗಲೇ ವಿಭಜನೆಗೊಂಡಿರುವ ನಗರವನ್ನು ಮತ್ತಷ್ಟು ವಿಭಜಿಸುವುದಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಅನಿಸುತ್ತದೆ’’ ಎಂದು aljazeera ಹೇಳಿದೆ. ಕನಿಷ್ಠ ಏಳು ಮಂದಿಯನ್ನು ಇಸ್ರೇಲ್ ಸೇನೆ ಬಂಧಿಸಿದೆ ಎಂದು ಫೆಲೆಸ್ತೀನ್ನ ಸುದ್ದಿ ಸಂಸ್ಥೆ ವಫಾ ಹೇಳಿದೆ.
ಸ್ಪೇನ್ನಲ್ಲಿ ರೈಲುಗಳು ಢಿಕ್ಕಿ; ಮೃತರ ಸಂಖ್ಯೆ 39ಕ್ಕೆ ಏರಿಕೆ
ಮ್ಯಾಡ್ರಿಡ್, ಜ. 19: ದಕ್ಷಿಣ ಸ್ಪೇನ್ನಲ್ಲಿ ರವಿವಾರ ಸಂಜೆ ಎರಡು ಅಧಿಕ ವೇಗದ ರೈಲುಗಳು ಢಿಕ್ಕಿಯಾಗಿ 39 ಮಂದಿ ಮೃತಪಟ್ಟಿದ್ದಾರೆ ಹಾಗೂ 120ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇದು ಒಂದು ದಶಕಕ್ಕೂ ಹೆಚ್ಚಿನ ಅವಧಿಯಲ್ಲಿ ದೇಶದಲ್ಲಿ ನಡೆದಿರುವ ಅತ್ಯಂತ ಭೀಕರ ರೈಲು ಅಪಘಾತ ಇದಾಗಿದೆ. ಇದು 2013ರ ಬಳಿಕ ಸ್ಪೇನ್ನಲ್ಲಿ ನಡೆದ ಅತ್ಯಂತ ಭೀಕರ ರೈಲು ಅಪಘಾತವಾಗಿದೆ. 2013ರಲ್ಲಿ ಸಾಂಟಿಯಾಗೊ ಡಿ ಕೊಂಪೆಸ್ಟೆಲ ಎಂಬ ನಗರದಲ್ಲಿ ನಡೆದ ಅಪಘಾತದಲ್ಲಿ, ರೈಲೊಂದು ತಿರುವಿನಲ್ಲಿ ಹಳಿ ತಪ್ಪಿ 80 ಮಂದಿ ಮೃತಪಟ್ಟಿದ್ದರು. ರವಿವಾರ ಸಂಜೆ, ಇರ್ಯೊ ರೈಲು ಕಂಪೆನಿಗೆ ಸೇರಿದ ರೈಲು ಮಲಗದಿಂದ ಮ್ಯಾಡ್ರಿಡ್ಗೆಡ್ಗೆ ಹೋಗುತ್ತಿದ್ದಾಗ ಆ್ಯಡಮಝ್ ಎಂಬಲ್ಲಿ ಹಳಿ ತಪ್ಪಿತು. ಬಳಿಕ ಅದು ಇನ್ನೊಂದು ಹಳಿಯನ್ನು ಪ್ರವೇಶಿಸಿ ಎದುರಿನಿಂದ ಬರುತ್ತಿದ್ದ ರೈಲೊಂದಕ್ಕೆ ಢಿಕ್ಕಿ ಹೊಡೆಯಿತು. ಢಿಕ್ಕಿಯ ರಭಸಕ್ಕೆ ಆ ರೈಲು ಕೂಡ ಹಳಿ ತಪ್ಪಿತು. ಈ ಅಪಘಾತದಲ್ಲಿ ಕನಿಷ್ಠ 39 ಮಂದಿ ಮೃತಪಟ್ಟಿದ್ದಾರೆ ಹಾಗೂ 123 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಪೇನ್ನ ಆಂತರಿಕ ಸಚಿವಾಲಯ ತಿಳಿಸಿದೆ.
‘ತಾರ್ಕಿಕ ವ್ಯತ್ಯಾಸ’ಗಳಡಿ ನೋಟಿಸ್ ಪಡೆದ ಮತದಾರರ ಹೆಸರುಗಳ ಬಿಡುಗಡೆಗೆ ಆದೇಶ
ತೆಲಂಗಾಣ| ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆ ಮಾತುಕತೆ
ಹೈದರಾಬಾದ್,ಜ.19: ‘ತೆಲಂಗಾಣ ಜಾಗೃತಿ ’ ಹೆಸರಿನಲ್ಲಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಮುಂದಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯೆ ಕೆ.ಕವಿತಾ ಅದಕ್ಕಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಕವಿತಾ ಸಾಂಸ್ಕೃತಿಕ ಸಂಘಟನೆಯಾಗಿರುವ ತೆಲಂಗಾಣ ಜಾಗೃತಿಯ ಅಧ್ಯಕ್ಷೆಯಾಗಿದ್ದಾರೆ. ಪ್ರಶಾಂತ್ ಕಿಶೋರ್ ಇತ್ತೀಚಿಗೆ ಹೈದರಾಬಾದ್ಗೆ ಐದು ದಿನಗಳ ಭೇಟಿ ನೀಡಿದ್ದ ಸಂದರ್ಭದಲ್ಲಿ ಕವಿತಾ ಅವರೊಂದಿಗೆ ಮಾತುಕತೆಗಳನ್ನು ನಡೆಸಿದ್ದಾರೆ. ತನ್ನ ಹೊಸ ಪಕ್ಷದ ಸ್ಥಾಪನೆ, ತೆಲಂಗಾಣದಲ್ಲಿ ಅದಕ್ಕೆ ರಾಜಕೀಯ ನೆಲೆ ಮತ್ತು ಇತರ ಸಂಬಂಧಿತ ವಿಷಯಗಳ ಬಗ್ಗೆ ಅವರು ಚರ್ಚಿಸಿದ್ದಾರೆ ಎಂದೂ ಮೂಲಗಳು ತಿಳಿಸಿವೆ. ಬಿಆರ್ಎಸ್ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾರನ್ನು ಸೆಪ್ಟಂಬರ್ 2025ರಲ್ಲಿ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ತನ್ನ ಅಮಾನತಿನ ಬೆನ್ನಲ್ಲೇ ಕವಿತಾ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪರಿಷತ್ನ ಸಭಾಪತಿ ಗುಖಾ ಸುಖೇಂದ್ರ ರೆಡ್ಡಿ ಅವರು ಈ ತಿಂಗಳ ಆರಂಭದಲ್ಲಿ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಗುಜರಾತ್ನ ಮೀನುಗಾರ ಪಾಕಿಸ್ತಾನದ ಕಾರಾಗೃಹದಲ್ಲಿ ಮೃತ್ಯು
ಹೊಸದಿಲ್ಲಿ: 2022ರಲ್ಲಿ ಶಿಕ್ಷೆ ಪೂರ್ಣಗೊಂಡ ಹೊರತಾಗಿಯೂ ಪಾಕಿಸ್ತಾನದ ಕರಾಚಿಯ ಕಾರಾಗೃಹದಲ್ಲಿದ್ದ ಗುಜರಾತ್ನ ಮೀನುಗಾರರೊಬ್ಬರು ಜನವರಿ 16ರಂದು ಮೃತಪಟ್ಟಿದ್ದಾರೆ ಎಂದು ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಜತಿನ್ ದೆಸಾಯಿ ತಿಳಿಸಿದ್ದಾರೆ. 2022ರ ಆರಂಭದಲ್ಲಿ ಅವರು ಹಾಗೂ 7ರಿಂದ 8 ಮಂದಿ ಮೀನುಗಾರರು ಪಾಕಿಸ್ತಾನದ ಜಲಭಾಗವನ್ನು ಪ್ರವೇಶಿಸಿದ್ದರು. ಈ ಸಂದರ್ಭ ಪಾಕಿಸ್ತಾನದ ನೌಕಾ ಪಡೆ ಅವರನ್ನು ಬಂಧಿಸಿತ್ತು. ಇವರಲ್ಲಿ ಒಬ್ಬರು ಮೀನುಗಾರರು ಜನವರಿ 16ರಂದು ಮೃತಪಟ್ಟಿದ್ದಾರೆ. ಉಳಿದ 7ರಿಂದ 8 ಮಂದಿ ಮೀನುಗಾರರು ಅದೇ ಕಾರಾಗೃಹದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ಪಾಕಿಸ್ತಾನದ ಜಲ ಭಾಗದಲ್ಲಿ ಬಂಧಿತರಾಗಿರುವ ಭಾರತದ ಮೀನುಗಾರರ ಹಲವು ವರ್ಷಗಳಿಂದ ಹೋರಾಡುತ್ತಿರುವ ಶಾಂತಿ ಹೋರಾಟಗಾರ ದೇಸಾಯಿ ಮೃತಪಟ್ಟ ಮೀನುಗಾರನ ಹೆಸರನ್ನು ಬಹಿರಂಗಪಡಿಸಿಲ್ಲ. ಕಾನ್ಸುಲರ್ ನೆರವು ನೀಡುವುದಕ್ಕೆ ಸಂಬಂಧಿಸಿ ಭಾರತ ಹಾಗೂ ಪಾಕಿಸ್ತಾನ ನಡುವೆ 2008ರಲ್ಲಿ ದ್ವಿಪಕ್ಷೀಯ ಒಪ್ಪಂದ ಏರ್ಪಟ್ಟಿವೆ. ಈ ಒಪ್ಪಂದದ ಪ್ರಕಾರ ಬಂಧಿತ ವ್ಯಕ್ತಿಗಳನ್ನು ಅವರ ರಾಷ್ಟ್ರೀಯತೆ ದೃಢಪಟ್ಟ ನಂತರ ಮತ್ತು ಅವರ ಶಿಕ್ಷೆ ಪೂರ್ಣಗೊಂಡ ಒಂದು ತಿಂಗಳೊಳಗೆ ಬಿಡುಗಡೆ ಮಾಡಿ ಅವರ ದೇಶಕ್ಕೆ ಕಳುಹಿಸಬೇಕು ಎಂದು ದೇಸಾಯಿ ಗಮನ ಸೆಳೆದಿದ್ದಾರೆ. ‘‘ಈ ಒಪ್ಪಂದದ ಪ್ರಕಾರ ಈ ಮೀನುಗಾರನನ್ನು ಮೊದಲೇ ಬಿಡುಗಡೆ ಮಾಡಬೇಕಿತ್ತು. ಆದರೆ, ಬಿಡುಗಡೆ ಮಾಡಿಲ್ಲ. ಆದುದರಿಂದ ಈ ಪ್ರಕ್ರಿಯೆ ಕಾರ್ಯರೂಪಕ್ಕೆ ಬರಬೇಕಾದರೆ, ಈ ಒಪ್ಪಂದವನ್ನು ಸಂಪೂರ್ಣವಾಗಿ ಹಾಗೂ ಪ್ರಾಮಾಣಿಕವಾಗಿ ಜಾರಿಗೆ ತರಬೇಕು’’ ಎಂದು ಹೇಳಿದ್ದಾರೆ. ಕರಾಚಿಯ ಮಾಲಿರ್ ಕಾರಾಗೃಹದಲ್ಲಿ ಪ್ರತಿವರ್ಷ ಮೂರರಿಂದ ನಾಲ್ಕು ಮಂದಿ ಭಾರತೀಯ ಮೀನುಗಾರರು ಮೃತಪಟ್ಟಿದ್ದಾರೆ ಎಂದು ಪತ್ರರ್ಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಜತಿನ್ ದೇಸಾಯಿ ತಿಳಿಸಿದ್ದಾರೆ.
ಕಲಬುರಗಿ | ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಯಾದಾಗ ಸುಸ್ಥಿರ ಅಭಿವೃದ್ಧಿ ಸಾಧ್ಯ : ಭಂವರ್ ಸಿಂಗ್ ಮೀನಾ
ಜಿಲ್ಲಾ ಮಾನವ ಅಭಿವೃದ್ಧಿ ತಯಾರಿಕೆಗೆ ತರಬೇತಿ ಕಾರ್ಯಾಗಾರ
ಬಸ್ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ
ಬಸ್ನಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಕೇರಳದಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋವಿಂದಪುರಂ ನಿವಾಸಿಯಾದ 41 ವರ್ಷದ ದೀಪಕ್ ಅವರು ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳವನ್ನೇ ಬೆಚ್ಚಿಬೀಳಿಸಿದೆ. ಬಸ್ಸಿನಲ್ಲಿ ಅಶ್ಲೀಲ ವರ್ತನೆ ನಡೆಸಿದ್ದಾರೆ ಎಂಬ ಆರೋಪದೊಂದಿಗೆ ಯೂಟ್ಯೂಬರ್ವೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ
ಭದ್ರತಾ ಮಂಡಳಿಯಲ್ಲಿ ಸುಧಾರಣೆಗೆ ಕರೆ ನೀಡಿದ ವಿಶ್ವಸಂಸ್ಥೆ ಮುಖ್ಯಸ್ಥ; ಭಾರತಕ್ಕೆ ಖಾಯಂ ಸದಸ್ಯತ್ವ ಪಕ್ಕಾ?
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳಲು ಭಾರತ ದಶಕಗಳಿಂದ ಪ್ರಯತ್ನಿಸುತ್ತಿದೆ. ಭಾರತಕ್ಕೆ ಸೆಕ್ಯೂರಿಟಿ ಕೌನ್ಸಿಲ್ನಲ್ಲಿ ಖಾಯಂ ಸದಸ್ಯತ್ವ ಸಿಗಬೇಕು ಎಂಬುದು ಜಗತ್ತಿನ ಬಬಹುತೇಕ ರಾಷ್ಟ್ರಗಳ ಬಯಕೆ ಕೂಡ ಹೌದು. ಆದರೆ ಕೆಲವು ಪಟ್ಟಭದ್ರ ಶಕ್ತಿಗಳ ಕಾರಣದಿಂದಾಗಿ ಇದುವರೆಗೂ ಅದು ಈಡೇರಿಲ್ಲ. ಆದರೆ ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೊ ಗುಟೆರೆಸ್ ಅವರು ಭದ್ರತಾ ಮಂಡಳಿಯ ಸುಧಾರಣೆಗೆ ಕರೆ ನೀಡಿದ್ದು, ಅವರ ಹೇಳಿಕೆ ಭಾರತಕ್ಕೆ ಆಶಾಕಿರಣವಾಗಿ ಕಾಣುತ್ತಿದೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.
ಬೀದರ್ | ಆಮ್ ಆದ್ಮಿ ಪಕ್ಷದ ಬೀದರ್ ಜಿಲ್ಲಾಧ್ಯಕ್ಷರಾಗಿ ಸಿದ್ದು ಫುಲಾರಿ ನೇಮಕ
ಬೀದರ್ : ಆಮ್ ಆದ್ಮಿ ಪಕ್ಷ ಕರ್ನಾಟಕ ಘಟಕದ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಬೀದರ್ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಸಿದ್ದು ಫುಲಾರಿ ಅವರು ನೇಮಕವಾಗಿದ್ದಾರೆ. ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರ ಅನುಮೋದನೆಯೊಂದಿಗೆ ಬೀದರ್ ಜಿಲ್ಲಾಧ್ಯಕ್ಷರಾಗಿ ಸಿದ್ದು ಫುಲಾರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ ಸಹಾನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೈಕಂಬ: ಗ್ರಾಮಕರಣಿಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಗ್ರಾಮಸ್ಥರು
ಕೈಕಂಬ: ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯೊಬ್ಬರಿಗೆ 2018ರಲ್ಲಿ ನಕಲಿ ಹಕ್ಕು ಪತ್ರ ನೀಡಲಾಗಿದೆ ಎಂಬ ಆರೋಪ ಸಂಬಂಧ ಗ್ರಾಮಕರಣೀಕರು ಕಚೇರಿಯ ಸಿಬ್ಬಂದಿಯನ್ನು ಹೊರಗೆ ಹಾಕಿ ಬೀಗ ಜಡಿದಿರುವ ಘಟನೆ ವರದಿಯಾಗಿದ್ದು, ಇದರಿಂದ ಆಘಾತಕ್ಕೊಳಗಾದ ಸಿಬ್ಬಂದಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದು, ಇದನ್ನರಿತ ಗ್ರಾಮಸ್ಥರು ಏಕಾಏಕಿ ಗ್ರಾಮಕರಣಿಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಸೋಮವಾರ ಬೆಳಗ್ಗೆ ವರದಿಯಾಗಿದೆ. 2018ರಲ್ಲಿ ಸ್ಥಳೀಯರೊಬ್ಬರಿಗೆ ನಕಲಿ ಹಕ್ಕು ಪತ್ರ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಕಚೆರಿಗೆ ಬಂದ ಗ್ರಾಮಕರಣಿಕರ ಮುತ್ತಪ್ಪ ಅವರು ಕಚೇರಿಯಲ್ಲಿದ್ದ ಸಿಬ್ಬಂದಿ ರಜನಿ ಅವರನ್ನು ಕಚೇರಿಯಿಂದ ಹೊರ ಕಳುಹಿಸಿ ಬೀಗ ಜಡಿದಿದ್ದರು. ನಕಲಿ ಹಕ್ಕುಪತ್ರ ಪ್ರಕರಣದಲ್ಲಿ ನನ್ನನ್ನು ಬಲಿ ಪಶುಮಾಡಲಾಗುತ್ತಿದೆ ಎಂದು ಆತಂಕಕ್ಕೀಡಾದ ರಜನಿ ಅವರು ಕುಸಿದು ಬಿದ್ದು ಅಸ್ವಸ್ಥರಾದರು. ಈ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಗ್ರಾಮಕರಣಿಕರರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಕಲಿ ಹಕ್ಕು ಪತ್ರ ವಿತರಣಾ ಹಗರಣದಲ್ಲಿ ಮುಚ್ಚಿ ಹಾಕುವ ಹುನ್ನಾರ ನಡೆಸಲಾಗುತ್ತಿದ್ದು, ಈ ಕುರಿತಾಗಿ ಶೀಘ್ರ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಗ್ರಾಮಸ್ಥರ ಪ್ರತಿಭಟನೆಯ ಮಾಹಿತಿ ತಿಳಿದು ಸ್ಥಳಕ್ಕೆಬಂದ ಗುರುಪುರ ಹೋಬಳಿ ಉಪ ತಹಶೀಲ್ದಾರ್ ಸ್ಟೀಪನ್, ಕಂದಾಯ ನಿರೀಕ್ಷಕ ಪೂರ್ಣಚಂದ್ರ, ಗ್ರಾಮಕರಣಿಕರ ಮುತ್ತಪ್ಪ ಅವರ ಜೊತೆ ತೀವ್ರ ವಾಗ್ವಾದ ನಡೆಸಿದರು. ನಕಲಿ ಹಕ್ಕು ಪತ್ರ ಪ್ರಕರಣ ಮುಚ್ಚಿ ಹಾಕಲು ಗ್ರಾಮಕರಣಿಕರರಿಗೆ ಒತ್ತಡ ಇದ್ದು, ಇದೇ ಕಾರಣಕ್ಕಾಗಿ ಸಿಬ್ಬಂದಿಯನ್ನು ಕಚೇರಿಯಿಂದ ಹೊರಕಳುಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿ ಗ್ರಾಮಕರಣಿಕರ ಮುತ್ತಪ್ಪ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ವೇಳೆ ಆಕ್ರೋಶಿತ ಗ್ರಾಮಸ್ಥರನ್ನು ಸಮಾಧಾನಪಡಿಸಿ ಮಾತನಾಡಿದ ಉಪ ತಹಶೀಲ್ದಾರ್ ಸ್ಟೀಪನ್ ಅವರು, ನಕಲಿ ಹಕ್ಕುಪತ್ರದ ಕುರಿತಂತೆ ಈಗಾಗಲೇ ತನಿಖೆ ಪ್ರಾರಂಭ ಮಾಡಿದ್ದೇವೆ. ಸಿಬ್ಬಂದಿ ಮತ್ತು ಗ್ರಾಮಕರಣಿಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿರಬಹುದು. ಈ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸುಲಾಗುವುದು ಎಂದು ಭರವಸೆ ನೀಡಿದರು. ಅವರ ಭರವಸೆ ಮೇರೆಗೆ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದುಕೊಂಡರು. ಪ್ರತಿಭಟನೆಯಲ್ಲಿ ಕುಪ್ಪೆಪದವು ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು. ಬಜಪೆ ಪೊಲೀಸರು ಸ್ಥಳದಲ್ಲಿ ಹಾಜರಿದ್ದು ಭದ್ರತೆ ಒದಗಿಸಿದರು. ನಕಲಿ ಹಕ್ಕುಪತ್ರದ ಬಗ್ಗೆ ತನಿಖೆಯಾಗಬೇಕು. ಈ ಬಗ್ಗೆ ಈಗಾಗಲೇ ಶಾಸಕರ ಗಮನಕ್ಕೆ ತರಲಾಗಿದೆ. ಪಂಚಾಯತ್ ಸಾಮಾನ್ಯ ಸಭೆಯಲ್ಲಿಯೂ ತನಿಖೆ ನಡೆಸುವ ಭರವಸೆ ನೀಡಿದ್ದಾರೆ. ರಜನಿಯವರು ಆತ್ಮಹತ್ಯೆ ಮಾಡುವ ಬಗ್ಗೆ ನಮಗೆ ಮೊಬೈಲ್ ಕರೆ ಮೂಲಕ ತಿಳಿಸಿದ ಮೇರೆಗೆ ನಾವು ಸ್ಥಳಕ್ಕೆ ದಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪ್ರತಿಭಟನೆ ನಡೆಸಿದ್ದೇವೆ. ಅಧಿಕಾರಿಗಳ ಭರವಸೆ ಮೇರೆಗೆ ಪ್ರತಿಭಟನೆ ನಿಲ್ಲಿಸಿದ್ದೇವೆ. ನಕಲಿ ಹಕ್ಕುಪತ್ರದ ಬಗ್ಗೆ ಸಂಪೂರ್ಣ ತನಿಖೆ ನಡೆಸದಿದ್ದಲ್ಲಿ ಗ್ರಾಮಸ್ಥರು ಮತ್ತೆ ಪ್ರತಿಭಟನೆ ನಡೆಸುಲಿದ್ದೇವೆ. - ವಿಶ್ವನಾಥ ಪಾಕಜೆ, ಸ್ಥಳೀಯರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಣ್ಣೀರಿಟ್ಟ ಸಿಬ್ಬಂದಿ... ಭರವಸೆ ನೀಡಿ ಪ್ರತಿಭಟನೆಯನ್ನು ನಿಲ್ಲಿಸಿದ ಬಳಿಕ ಅಧಿಕಾರಿಗಳು ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಿಬ್ಬಂದಿ ರಜನಿ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ರಜನಿ, ‘ತಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ. ಹೀಗೆ ಆದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಧಿಕಾರಿಗಳ ಸಮ್ಮುಖದಲ್ಲಿ ಕಣ್ಣೀರಿಟ್ಟರು.
ರಾಯಚೂರು | ಅಸಮರ್ಪಕ ದೇವದಾಸಿ ಸರ್ವೆ ಖಂಡಿಸಿ ಪ್ರತಿಭಟನೆ
ರಾಯಚೂರು : ದಾಖಲೆಗಳ ನೆಪವೊಡ್ಡಿ ದೇವದಾಸಿ ಮಹಿಳೆಯರನ್ನು ಗಣತಿಯಿಂದ ಹೊರಗಿಡುತ್ತಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಹಾಗೂ ಅಸಮರ್ಪಕ ಸರ್ವೆಯನ್ನು ಸರಿಪಡಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಮಕ್ಕಳ ಹೋರಾಟ ಸಮಿತಿಯ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು. ವಯೋಮಿತಿ ಭೇದವಿಲ್ಲದೆ ಎಲ್ಲಾ ಮಾಜಿ ದೇವದಾಸಿ ಮಹಿಳೆಯರ ಸಮಗ್ರ ಸರ್ವೆ ನಡೆಸಬೇಕು. ಮುಂಬರುವ 2026ರ ಬಜೆಟ್ನಲ್ಲಿ ಮಾಜಿ ದೇವದಾಸಿಯರಿಗೆ ನೀಡುವ ಮಾಸಿಕ ಪಿಂಚಣಿಯನ್ನು 10 ಸಾವಿರಕ್ಕೆ ಏರಿಸಬೇಕು. ಅಲ್ಲದೆ, ಅವರ ಮಕ್ಕಳಿಗೆ ಉದ್ಯೋಗ ನೀಡಬೇಕು ಅಥವಾ ಪ್ರತಿ ತಿಂಗಳು 10 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಭೂಸ್ವಾಧೀನ ಪ್ರಕ್ರಿಯೆಯ ಮೂಲಕ ಎಲ್ಲ ದೇವದಾಸಿ ಮಹಿಳೆಯರಿಗೆ ನಿವೇಶನ, ಮನೆ ಹಾಗೂ ಕೃಷಿ ಭೂಮಿಯನ್ನು ಒದಗಿಸಬೇಕು ಎಂದು ಒತ್ತಾಯಿಸಲಾಯಿತು. ನರೇಗಾ ಯೋಜನೆಯಡಿ ಕೂಲಿ ದಿನಗಳನ್ನು 200ಕ್ಕೆ ಹೆಚ್ಚಿಸಿ, ಪ್ರತಿದಿನ 1,000 ರೂ. ಕೂಲಿ ನೀಡಬೇಕು. ಜೀ ರಾಮ್ಜೀ ಬಿಲ್ ರದ್ದುಪಡಿಸಬೇಕು ಹಾಗೂ 2025ರ ಹೊಸ ವಿದ್ಯುತ್ ಮಸೂದೆಯನ್ನು ವಾಪಸ್ ಪಡೆಯಬೇಕು ಎಂದು ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದವು. ತಾಲೂಕಿನ 196 ಮಾಜಿ ದೇವದಾಸಿ ಮಹಿಳೆಯರಿಗಾಗಿ ಕಳೆದ 5 ವರ್ಷಗಳಿಂದ ನಡೆಯುತ್ತಿರುವ ಮನೆಗಳ ನಿರ್ಮಾಣ ಕಾರ್ಯವು ಅತ್ಯಂತ ಮಂದಗತಿಯಲ್ಲಿ ಸಾಗುತ್ತಿದೆ. ಇದನ್ನು ತ್ವರಿತವಾಗಿ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಅಧಿಕಾರಿಗಳನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷೆ ಹೆಚ್.ಪದ್ಮಾ, ತಾಲೂಕು ಅಧ್ಯಕ್ಷೆ ಮಹಾದೇವಿ, ಗೌರವಾಧ್ಯಕ್ಷ ಜಿ.ವೀರೇಶ, ಡಿ.ಎಸ್.ಶರಣಬಸವ, ಹೂಳೆಮ್ಮ ಕವಿತಾಳ, ರೇಣುಕಮ್ಮ ಮಾನವಿ, ಹೊಸೂರಮ್ಮ ಸಿರವಾರ, ಮುತ್ತಮ್ಮ ಲಿಂಗಸೂಗುರು, ಸರೋಜಮ್ಮ ಮಸ್ಕಿ, ಬಡೆಮ್ಮ, ನರಸಮ್, ನರಸಿಂಹ, ಲಾಕಮ್ಮ, ಸಣ್ಣ ಯಲ್ಲಮ್ಮ, ಮುದುಕಮ್ಮ, ಶರಣಪ್ಪ, ಬಸಂತಿ, ಕೆಂಚವಮ್ಮ, ಹುಸೇನಮ್ಮ, ಸೇರಿದಂತೆ ಅನೇಕರು ಇದ್ದರು.
ಭಟ್ಕಳ| ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪ: ವಿದ್ಯಾರ್ಥಿ ಸೆರೆ
ಭಟ್ಕಳ: ಇನ್ಸ್ಟಾಗ್ರಾಂನಲ್ಲಿ ಮಹಿಳೆಯರಿಗೆ ಬೆದರಿಕೆ ಹಾಕಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಆರೋಪದ ಮೇಲೆ ಭಟ್ಕಳ ಟೌನ್ ಪೊಲೀಸರು ಒಬ್ಬ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೆಹ್ರಾನ್ ಮೆಹ್ತಾಬ್ ಶಾಬಂದ್ರಿ (19) ಎಂದು ಗುರುತಿಸಲಾಗಿದ್ದು, ಈತ ಕುಮಟಾದ ತುಳಸಿ ಕಟ್ಟೆ ನಿವಾಸಿಯಾಗಿದ್ದಾನೆ. ಮೂಲತಃ ಭಟ್ಕಳಕ್ಕೆ ಸಮೀಪದ ಮಂಕಿ (ಹೊನ್ನಾವರ ತಾಲ್ಲೂಕು) ಮೂಲದವನಾಗಿರುವ ಈತ, ಪ್ರಸ್ತುತ ಕುಮಟಾದಲ್ಲಿ ವಾಸವಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಮೆಹ್ರಾನ್ ಮಂಗಳೂರು ನಗರದ ಖಾಸಗಿ ಕಾಲೇಜೊಂದರಲ್ಲಿ ಬಿಸಿಎ (BCA) ವ್ಯಾಸಂಗ ಮಾಡುತ್ತಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಾರವಾರ ಜೈಲಿಗೆ ರವಾನಿಸಲಾಗಿದೆ. ತನಿಖೆಯ ವೇಳೆ ಆರೋಪಿಯು 18ಕ್ಕೂ ಹೆಚ್ಚು ನಕಲಿ ಇಮೇಲ್ ಖಾತೆಗಳನ್ನು ಹೊಂದಿರುವುದು ಪತ್ತೆಯಾಗಿದೆ. ಆತ ಅಪರಿಚಿತರ ವಿವಾಹ ಸಮಾರಂಭಗಳಿಗೆ ಹಾಜರಾಗಿ, ಅಲ್ಲಿ ಮಹಿಳೆಯರ ಫೋಟೋಗಳನ್ನು ಗುಪ್ತವಾಗಿ ಮೊಬೈಲ್ನಲ್ಲಿ ಸಂಗ್ರಹಿಸಿಕೊಂಡು, ನಂತರ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದನು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಭಟ್ಕಳದ ಒಬ್ಬ ಮಹಿಳೆ ಮೊದಲಿಗೆ ಈ ಸಂಬಂಧ ಭಟ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಪ್ರಕರಣವನ್ನು ಸೈಬರ್ ಕ್ರೈಂ ಸೆಲ್ಗೆ ವರ್ಗಾಯಿಸಲಾಗಿದ್ದು, ತನಿಖೆಯ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಭಟ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ದಿವಾಕರ್ ಅವರ ಮೇಲ್ವಿಚಾರಣೆಯಲ್ಲಿ ಮುಂದಿನ ತನಿಖೆ ಮುಂದುವರಿದಿದೆ.
ಜಗದೀಶ್ಚಂದ್ರ ಅಂಚನ್ಗೆ ಕನ್ನಡ ಪಯಸ್ವಿನಿ ಪ್ರಶಸ್ತಿ ಪ್ರದಾನ
ಮಂಗಳೂರು: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ’ ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026 ಅಂತರ್ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ರವಿವಾರ ಪ್ರದಾನ ಮಾಡಲಾಯಿತು. ಎಸ್. ಜಗದೀಶ್ಚಂದ್ರ ಅಂಚನ್ ಕಾಸರಗೋಡು ನುಳ್ಳಿಪ್ಪಾಡಿಯಲ್ಲಿ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಕೆ.ವಾಮನ್ ರಾವ್, ನಿರ್ದೇಶಕ ಕೆ.ಎನ್.ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು , ಚುಟುಕು ಸಾಹಿತ್ಯ ಪರಿಷತ್ ಮೈಸೂರು ಜಿಲ್ಲಾಧ್ಯಕ್ಷೆ ರತ್ನಾ ಹಾಲಪ್ಪ ಗೌಡ , ಕನ್ನಡ ಭವನದ ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್, ಕಾರ್ಯದರ್ಶಿ ವಸಂತ್ ಕೆರೆಮನೆ ಮೊದಲಾದವರು ಉಪಸ್ಥಿತರಿದ್ದರು.
ವಿಶೇಷ ಪ್ರೋತ್ಸಾಹಧನ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
ಮಂಗಳೂರು, ಜ.19: ಪ್ರಸಕ್ತ (2025-26ನೇ) ಸಾಲಿನಲ್ಲಿ National Council for Teacher Education ನಿಂದ ಮಾನ್ಯತೆ ಪಡೆದಿರುವ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ 25,000 ರೂ. ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 31ರವರೆಗೆ ವಿಸ್ತರಿಸಲಾಗಿದೆ. ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಲಾಗುವುದು. ಆಸಕ್ತ ಅಲ್ಪ ಸಂಖ್ಯಾತರ ಸಮುದಾಯದ ಬಿಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಪೋರ್ಟಲ್ https://sevasindhuservices. karnataka.gov.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು (0824-2433078), ಬಂಟ್ವಾಳ (0825-5232470), ಬೆಳ್ತಂಗಡಿ (0826-295335), ಪುತ್ತೂರು (0825-1237078), ಸುಳ್ಯ (0825-7230666) ಹಾಗೂ ಇಲಾಖೆಯ ವೆಬ್ಸೈಟ್ https://dom.karnataka.gov.in ಸಹಾಯವಾಣಿ: 8277799990ಗೆ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದೆ.
ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್ ಬೆಂಬಲಿಗ 40 ಶಾಸಕರ ನಡೆ; ಅಧಿವೇಶನಕ್ಕೆ ಮುನ್ನಾದಿನ ಸಭೆಗೆ ನಡೆದಿದೆ ತಯಾರಿ!
ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು, ಅಧಿಕಾರ ಹಸ್ತಾಂತರ ವಿಚಾರದಲ್ಲಿ ಹೈಕಮಾಂಡ್ ಸಂದೇಶಕ್ಕಾಗಿ ಒತ್ತಡ ತೀವ್ರಗೊಳಿಸಲು ವಿಧಾನಮಂಡಲ ಅಧಿವೇಶನಕ್ಕೆ ಮುನ್ನ ಮಹತ್ವದ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸುಮಾರು 40-45 ಶಾಸಕರನ್ನು ಸೇರಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆಶಿ ಹಕ್ಕೊತ್ತಾಯಕ್ಕೆ ಬೆಂಬಲ ಸೂಚಿಸುವ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರಲು ಈ ಸಭೆ ಏರ್ಪಾಡಾಗಿದೆ.
ನೀರವ್ ಮೋದಿಗೆ ಮತ್ತೆ ಸಂಕಷ್ಟ| ವಂಚನೆ ಪ್ರಕರಣದಲ್ಲಿ ದಿಲ್ಲಿ ಹೈಕೋರ್ಟ್ ನೆರವು ಕೋರಿದ ಬ್ರಿಟನ್ ನ್ಯಾಯಾಲಯ
ಹೊಸದಿಲ್ಲಿ, ಜ. 19: ಪರಾರಿಯಾಗಿರುವ ವಜ್ರೋದ್ಯಮಿ ನೀರವ್ ಮೋದಿ ಹಾಗೂ ಅವರ ಕಂಪೆನಿಗಳ ವಿರುದ್ಧ ಸಿವಿಲ್ ಮೊಕದ್ದಮೆಯಲ್ಲಿ ಬ್ಯಾಂಕ್ ಆಫ್ ಇಂಡಿಯಾ ಸಾಕ್ಷಿಯ ಹೇಳಿಕೆಯನ್ನು ದಾಖಲಿಸಲು ನೆರವು ನೀಡುವಂತೆ ಬ್ರಿಟನ್ ನ್ಯಾಯಾಲಯವೊಂದು ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ವಿನಂತಿಸಿದೆ. ಬ್ರಿಟನ್ನ ಸರ್ವೋಚ್ಛ ನ್ಯಾಯಾಲಯದ ಕಿಂಗ್ಸ್ ಬೆಂಚ್ ವಿಭಾಗದ ಪರವಾಗಿ ಕೇಂದ್ರ ಕಾನೂನು ಸಚಿವಾಲಯದ ಮೂಲಕ ರವಾನಿಸಲಾದ ವಿನಂತಿಯನ್ನು ಪರಿಗಣಿಸಲು ದಿಲ್ಲಿ ಉಚ್ಚ ನ್ಯಾಯಾಲಯ ಒಪ್ಪಿಕೊಂಡಿದೆ. ವಂಚನೆಯ ಒಪ್ಪಂದ ಪತ್ರ ಸೇರಿದಂತೆ ಪಾವತಿಸದ ಸಾಲದ ಆರೋಪವನ್ನು ಪರಿಹರಿಸುವ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಫೈರ್ಸ್ಟಾರ್ ಡೈಮಂಡ್ ಎಫ್ಝಡ್ಝಿ, ಫೈರ್ಸ್ಟಾರ್ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಹಾಗೂ ನೀರವ್ ಮೋದಿ ವಿರುದ್ಧ ಬ್ಯಾಂಕ್ ಆಫ್ ಇಂಡಿಯಾ ಬ್ರಿಟನ್ನಲ್ಲಿ ಕ್ರಮ ಕೈಗೊಳ್ಳುತ್ತಿದೆ. ನೀರವ್ ಮೋದಿ ನೇತೃತ್ವದ ಕಂಪೆನಿಗಳು ಸಾಲ ಮರು ಪಾವತಿಸಲು ವಿಫಲವಾಗಿವೆ ಎಂದು ಬ್ಯಾಂಕ್ ಆರೋಪಿಸಿದೆ. ಸಾಕ್ಷ್ಯಗಳ ಸಂಗ್ರಹಣಾ ಪ್ರಕ್ರಿಯೆಯ ಭಾಗವಾಗಿ ಈ ಪ್ರಕರಣದಲ್ಲಿ ಪ್ರಮುಖ ಪುರಾವೆ ನೀಡುವ ಸಾಕ್ಷಿಯನ್ನು ಬ್ರಿಟನ್ ನ್ಯಾಯಾಲಯ ಗುರುತಿಸಿದೆ. ದಿಲ್ಲಿ ಮೂಲದ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಅನಿಮೇಶ್ ಬರುವಾ ಅವರು ಈ ಮೊಕದ್ದಮೆಯಲ್ಲಿ ಪ್ರಮುಖ ಸಾಕ್ಷಿಯ ಹೆಸರನ್ನು ಉಲ್ಲೇಖಿಸಿದೆ. ಬರುವಾ ಅವರು ಉಚ್ಚ ನ್ಯಾಯಾಲಯದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವುದರಿಂದ ಬ್ರಿಟನ್ನ ವಿನಂತಿಯನ್ನು ಭಾರತೀಯ ಅಧಿಕಾರಿಗಳಿಗೆ ಕಳುಹಿಸಿಕೊಡಲಾಗಿದೆ. ಭಾರತದಲ್ಲಿ ಅವರ ಹೇಳಿಕೆಯನ್ನು ದಾಖಲಿಸಿ ಬ್ರಿಟನ್ ನ್ಯಾಯಾಲಯಕ್ಕೆ ಕಳುಹಿಸಿವುದು ಗುರಿಯಾಗಿದೆ.
ರಾಯಚೂರು: ಸರ್ಕಾರಿ ಶಾಲೆಗಳಿಗೆ ತರಕಾರಿ ಮತ್ತು ಹಣ್ಣುಗಳನ್ನು ಸರಬರಾಜು ಮಾಡುವ ಜವಾಬ್ದಾರಿಯನ್ನು ಸ್ವ-ಸಹಾಯ ಗುಂಪುಗಳಿಗೆ ನೀಡುವ ಜಿಲ್ಲಾ ಪಂಚಾಯತ್ ನಿರ್ಧಾರವನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದ (ಸಿಐಟಿಯು) ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಜಮಾಯಿಸಿದ ನೌಕರರು, ಸರ್ಕಾರದ ನಿರ್ಧಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾ ಪಂಚಾಯತ್ ಕಚೇರಿಯ ಸ್ಥಾನಿಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ಮಾಡುತ್ತಿರುವ ನೌಕರರು ಈವರೆಗೂ ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಊಟ ನೀಡುವಲ್ಲಿ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಮುಖ್ಯ ಅಡುಗೆಯವರೇ ಖುದ್ದಾಗಿ ತಾಜಾ ತರಕಾರಿಗಳನ್ನು ಖರೀದಿಸಿ ಅಡುಗೆ ಮಾಡುತ್ತಿದ್ದಾರೆ. ನೌಕರರೇ ತಮ್ಮ ಹಣದಿಂದ ತರಕಾರಿ ಖರೀದಿಸಿ ನಂತರ ಎಸ್ಡಿಎಂಸಿ ಖಾತೆಯಿಂದ ಹಣ ಪಡೆಯುವ ಪದ್ಧತಿ ಮೊದಲಿನಿಂದಲೂ ಜಾರಿಯಲ್ಲಿದೆ. ಹೀಗಿರುವಾಗ ಹೊಸದಾಗಿ ಸ್ವ-ಸಹಾಯ ಗುಂಪುಗಳಿಗೆ ಈ ಜವಾಬ್ದಾರಿ ನೀಡುವ ಅಗತ್ಯವಿಲ್ಲ ಎಂದು ಪ್ರತಿಭಟನಾಕಾರರು ಪ್ರತಿಪಾದಿಸಿದರು. ಬಿಸಿಯೂಟ ನೌಕರರ ಸಾಮರ್ಥ್ಯ ಮತ್ತು ಕಾಳಜಿಯನ್ನು ಪರಿಗಣಿಸದೆ, ಜಿಲ್ಲಾ ಪಂಚಾಯತ್ ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದು ಅವೈಜ್ಞಾನಿಕವಾಗಿದೆ. ಇದು ಬಿಸಿಯೂಟ ನೌಕರರಿಗೆ ಮಾಡುವ ಅನ್ಯಾಯವಾಗಿದೆ. ಸರ್ಕಾರವು ಹಂತ ಹಂತವಾಗಿ ಈ ಯೋಜನೆಯನ್ನು ಖಾಸಗೀಕರಣಗೊಳಿಸಲು ಹುನ್ನಾರ ನಡೆಸುತ್ತಿದೆ ಎಂದು ನೌಕರರು ಆಪಾದಿಸಿದರು. ಎಸ್ಡಿಎಂಸಿ ಖಾತೆಯಿಂದ ಬಿಸಿಯೂಟ ನೌಕರರನ್ನು ದೂರವಿಡುವ ಸರ್ಕಾರದ ನೌಕರ ವಿರೋಧಿ ನೀತಿಯನ್ನು ಕೈಬಿಡಬೇಕು ಮತ್ತು ಹಣ್ಣು-ತರಕಾರಿ ಸರಬರಾಜು ಮಾಡುವ ಜವಾಬ್ದಾರಿಯನ್ನು ಮೊದಲಿನಂತೆಯೇ ಅಡುಗೆ ನೌಕರರಿಗೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಅಧ್ಯಕ್ಷೆ ರೇಣುಕಮ್ಮ, ಕಾರ್ಯದರ್ಶಿ ಮರಿಯಮ್ಮ, ಖಜಾಂಜಿ ಮುಹಮ್ಮದ್ ಹನೀಫ್, ಡಿಎಸ್.ಶರಣಬಸವ, ಕೆ.ಜಿ.ವೀರೇಶ ಸೇರಿದಂತೆ ಅನೇಕರು ಇದ್ದರು.
ಹುಣಸಗಿ | ವಿಶೇಷಚೇತನರ ಸಮನ್ವಯ ಸಭೆ
ಹುಣಸಗಿ : ನಾರಾಯಣಪುರ ಗ್ರಾಮ ಪಂಚಾಯತಿಯಲ್ಲಿ ಸರಕಾರದ ಹಾಗೂ ಗ್ರಾಮ ಪಂಚಾಯತ್ನ ಶೇ.5 ರಷ್ಟು ಅನುದಾನವನ್ನು ವಿವಿಧ ಕೆಲಸ ಕಾರ್ಯಗಳಿಗೆ ಸದ್ಬಳಕೆ ಮಾಡಲಾಗುತ್ತಿದ್ದು, ಇದರೊಟ್ಟಿಗೆ ಅಂಗವಿಕಲರ ಹಿತವೂ ಅಡಗಿದೆ ಎಂದು ಪಿಡಿಓ ಸಂತೋಷಕುಮಾರ ಹೇಳಿದರು. ಸ್ಥಳಿಯ ಗ್ರಾ.ಪಂ ಯಲ್ಲಿ ವಿಶೇಷಚೇತನರ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು. ಅರ್ಹರ ವಿಕಲಚೇತನರಿಗೆ ಯುಡಿಐಡಿ ನೋಂದಣೆ, ಜಾಬ್ ಕಾರ್ಡ್ ಹಾಗೂ ಗ್ರಾ.ಪಂ ವ್ಯಾಪ್ತಿಗೊಳಪಡುವ ವಿಕಲಚೇತನರ ಸ್ವಸಹಾಯ ಸಂಘಗಳನ್ನು ಸೇರ್ಪಡೆ ಹಾಗೂ ಹೊಸ ಸಂಘಗಳ ರಚನೆ ಕುರಿತು ಮಾಹಿತಿ ನೀಡಲಾಗುವುದು ಎಂದರು. ಈ ವೇಳೆ ರಮೇಶಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಗ್ರಾ.ಪಂ ಅಧ್ಯಕ್ಷರಾದ ಮುತ್ತು ಕಬಡರ್ ಎಪಿಡಿ ಸಿಬ್ಬಂದಿ ರಮೇಶಕುಮಾರ, ಸಂಗಮೇಶ, ವಿಆರ್ಡಬ್ಲು ಬಸವರಾಜ, ಆಂಜನೇಯ ದೊರೆ,ರಮೇಶ ಕೋಳೂರ, ದುರಗಪ್ಪ ರೋಡಲಬಂಡಾ, ವೀರೇಶ ಗಣಾಚಾರಿ, ಗೌಸ್ಮೋಹದೀನ್, ಚಂದಪ್ಪ ಹಾಗೂ ವಿಕಲಚೇತನರಿದ್ದರು.
ನರೇಂದ್ರ ಮೋದಿ ಆಹ್ವಾನದ ಮೇರೆಗೆ 3 ಗಂಟೆಗಳ ಕಾಲ ಭಾರತಕ್ಕೆ ಭೇಟಿ ನೀಡಿದ ಯುಎಇ ಅಧ್ಯಕ್ಷ; ಶಾರ್ಟ್ ಟ್ರಿಪ್ ಕಾರಣ?
ಭಾರತ-ಯುಎಇ ರಾಜತಾಂತ್ರಿಕ ಸಂಬಂಧದಲ್ಲಿ ಅತ್ಯಂತ ಪ್ರಮುಖ ಬೆಳವಣಿಗೆಯಾಗಿ, ಇಂದು (ಜ.19-ಸೋಮವಾರ) ಯುಇಎ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು, ಕೇವಲ ಮೂರು ಗಂಟೆಗಳ ಭಾರತ ಪ್ರವಾಸ ಕೈಗೊಂಡಿದ್ದರು. ತಮ್ಮ ಆಹ್ವಾನವನ್ನು ಮನ್ನಿಸಿ ಭಾರತಕೆ ಬಂದಿದ್ದ ಯುಎಇ ಅಧ್ಯಕ್ಷರನ್ನು ನವದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಮಧ್ಯಪ್ರಾಚ್ಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಭೇಟಿಯನ್ನು ಅತ್ಯಂತ ಮಹತ್ವದ್ದು ಎಂದು ಬಣ್ಣಿಸಲಾಗಿದೆ. ಇಲ್ಲಿದೆ ಮಾಹಿತಿ.
ವಿವೇಕಾನಂದರ ಚಿಂತನೆಗಳು ಬಹುತ್ವದ ಸಂಕೇತ: ಡಾ.ನಿಕೇತನ
ಉಡುಪಿ, ಜ.19: ಬಹುತ್ವ ಎಂದರೆ ಎಲ್ಲಾ ಧರ್ಮಗಳ ನಿಜವಾದ ಸಾರವನ್ನು ಅರ್ಥಮಾಡಿಕೊಂಡು ಸಮನ್ವಯತೆ ಯಿಂದ ಬದುಕುವುದು. ಸ್ವಾಮಿ ವಿವೇಕಾನಂದರು ಈ ತತ್ವವನ್ನು ದೇಶ-ವಿದೇಶಗಳಲ್ಲಿ ಹರಡುವ ಮೂಲಕ ನಮ್ಮ ದೇಶದ ಘನತೆಯನ್ನು ಹೆಚ್ಚಿಸಿದ್ದಾರೆ ಎಂದು ಲೇಖಕಿ ಮತ್ತು ಚಿಂತಕಿ ಡಾ. ನಿಕೇತನ ಹೇಳಿದ್ದಾರೆ. ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆ ತೋನ್ಸೆ ಸಾಲಿಹಾತ್ ಬಾಲಕಿಯರ ಪದವಿ ಪೂರ್ವ ಕಾಲೇಜು ಹೂಡೆ, ಸಾಲಿಹಾತ್ ಅಂಗ್ಲ ಮಾಧ್ಯಮ ಪ್ರೌಢಶಾಲೆ ಹೂಡೆ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಂದು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ವಿಶೇಷ ಉಪನ್ಯಾಸ ನೀಡುತ್ತಿದ್ದರು. ನಮ್ಮ ಸಂವಿಧಾನದ ಮೂಲತತ್ವ ಸಹ ಇದೇ ಆಗಿದೆ. ಈ ದೃಷ್ಟಿಯಿಂದ ವಿವೇಕಾನಂದರ ಚಿಂತನೆಗಳು ಈ ದೇಶದ ಬಹುತ್ವದ ಅಡಿಪಾಯವಾಗಿದೆ ಎಂದವರು ಅಭಿಪ್ರಾಯಪಟ್ಟರು. ಸಾಲಿಹಾತ್ ಶಿಕ್ಷಣ ಅಕಾಡೆಮಿಯ ಮುಖ್ಯಸ್ಥರಾದ ಹಾಸೀಬ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಮ್ಮ ಹಿರಿಯರು ಕಾಯ್ದು ಕೊಂಡು ಬಂದ ಧರ್ಮ ಸಮನ್ವಯತೆ ಮತ್ತು ಅಹಿಂಸೆಯನ್ನು ನಾವು ಪಾಲಿಸಬೇಕಾಗಿದೆ ಎಂದರು. ಕಾಲೇಜಿನ ಪ್ರಾಂಶುಪಾಲೆ ದಿವ್ಯಾ ಪೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಶಮೀನಾ ಪ್ರಾರ್ಥಿಸಿದರು. ರೆಡ್ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಸ್ವಾಗತಿಸಿದರು. ರೆಡ್ಕ್ರಾಸ್ ಖಜಾಂಚಿ ರಮಾದೇವಿ ಉಪಸ್ಥಿತರಿದ್ದರು. ಸಾಲಿಹಾತ್ ಅಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಸುನಂದ ವಂದಿಸಿದರೆ, ಶಿಕ್ಷಕಿ ಮಮತ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ: ಕೃಷ್ಣ ಮಠದಲ್ಲಿನ್ನು ವಸ್ತ್ರಸಂಹಿತೆ ಕಡ್ಡಾಯ
ಉಡುಪಿ, ಜ.19: ರವಿವಾರ ಮುಂಜಾನೆ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಡ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್ರ ಸಂಹಿತೆ (ಡ್ರೆಸ್ ಕೋಡ್)ಯನ್ನು ಕಡ್ಡಾಯಗೊಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮಹಾಪೂಜೆ ನಡೆಯುವ ಅಪರಾಹ್ನದವರೆಗೆ ಜಾರಿಯಲ್ಲಿದ್ದ ವಸ್ತ್ರಸಂಹಿತೆಯನ್ನು ಇದೀಗ ದಿನ ಪೂರ್ತಿ ಜಾರಿ ಗೊಳಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕೃಷ್ಣ, ಮುಖ್ಯಪ್ರಾಣರ ದರ್ಶನಕ್ಕಾಗಿ ಮಠ ಪ್ರವೇಶಿ ಸುವ ಮುನ್ನ ಪುರುಷರು ಅಂಗಿಯನ್ನು ತೆಗೆಯಬೇಕಾಗಿದೆ. ಬರ್ಮುಡ, ಹಾಫ್ ಪ್ಯಾಂಟ್ಗಳನ್ನು ಧರಿಸುವಂತಿಲ್ಲ. ಶಾಲನ್ನು ಧರಿಸಿ ಮಠದೊಳಗೆ ಬರಬಹುದಾಗಿದೆ ಎಂದು ಶೀರೂರು ಮಠದ ದಿವಾನರಾದ ಡಾ.ಉದಯಕುಮಾರ್ ಸರಳತ್ತಾಯ ಸ್ವಾಮೀಜಿ ಆದೇಶವನ್ನು ಪ್ರಕಟಿಸುತ್ತಾ ತಿಳಿಸಿದರು. ಕೃಷ್ಣ ಮಠಕ್ಕೆ ಆಗಮಿಸುವ ಮಹಿಳಾ ಭಕ್ತರೂ ಸಹ ಸಭ್ಯ ಉಡುಪುಗಳನ್ನು ಧರಿಸಬೇಕು.ಜೀನ್ಸ್ ಪ್ಯಾಂಟ್, ಟಿಶರ್ಟ್, ಸ್ಲೀವ್ಲೆಸ್ ಉಡುಪುಗಳನ್ನು ಧರಿಸಿ ಬರುವಂತಿಲ್ಲ. ಸಂಜೆಯ ಬಳಿಕವೂ ಕೃಷ್ಣನಿಗೆ ತೊಟ್ಟಿಲು ಪೂಜೆ ಸೇರಿದಂತೆ ಹಲವು ಪೂಜೆಗಳೊಂದಿಗೆ ಸದಾ ವೇದಘೋಷಗಳು ನಡೆಯುತ್ತಿರುವುದರಿಂದ ಕೃಷ್ಣ ಭಕ್ತರಾಗಿ ಎಲ್ಲರೂ ಮಠಕ್ಕೆ ಆಗಮಿಸಬೇಕು ಎಂದು ಡಾ.ಸರಳತ್ತಾಯ ತಿಳಿಸಿದ್ದಾರೆ.
ಏರ್ ಇಂಡಿಯಾ ವಿಮಾನ ಹತ್ತಿ, ಭಾರತೀಯರ ಬಗ್ಗೆ, ವಿಮಾನದ ಬಗ್ಗೆ ಟೀಕೆ ಮಾಡಿದ ಜಪಾನ್ ಯುಟ್ಯೂಬರ್ - ಜಪಾನೀಯರಿಂದಲೇ ಖಂಡನೆ
ಜಪಾನ್ ನಿಂದ ಭಾರತಕ್ಕೆ ಇದೇ ಮೊದಲ ಬಾರಿಗೆ ಪ್ರಯಾಣ ಬೆಳೆಸಿದ್ದ ಅಲ್ಲಿನ ಯುಟ್ಯೂಬರ್ ಇಕೆಚಾನ್ ಎಂಬ ಯುವತಿಯು ತನ್ನ ವಿಡಿಯೋದ ಥಂಬ್ ನೇಲ್ ನಲ್ಲಿ ಭಾರತವನ್ನು ಟೀಕಿಸುವಂತೆ ಹಾಕಿರುವ ವಾಕ್ಯಗಳು ವಿವಾದದ ಕಿಡಿ ಹೊತ್ತಿಸಿವೆ. ಆ ವಿಡಿಯೋದಲ್ಲಿ ಆಕೆ, ಈಗಾಗಲೇ ಕೆಟ್ಟ ಹೆಸರು ಪಡೆದಿರುವ ಏರ್ ಇಂಡಿಯಾ ವಿಮಾನದಲ್ಲಿ ನಾನು ಭಾರತಕ್ಕೆ ಹೊರಟಿದ್ದೇನೆ. ಈ ವಿಮಾನದಲ್ಲಿ ಭಾರತೀಯರೇ ತುಂಬಿ ತುಳುಕುತ್ತಿದ್ದಾರೆ ಎಂಬ ವಾಕ್ಯಗಳನ್ನು ಹಾಕಿದ್ದರು. ಇದನ್ನು ಜಪಾನೀಯರೇ ಖಂಡಿಸಿದ್ದಾರೆ.
ಸರಕಾರಿ ಜಾಗ ಅತಿಕ್ರಮಿಸಿ ಆವರಣಗೋಡೆ ನಿಮಾ೯ಣ ಆರೋಪ: ದೂರು ದಾಖಲು
ಮೂಡುಬಿದಿರೆ: ರಸ್ತೆ ಸಹಿತ ಸರಕಾರಿ ಜಾಗವನ್ನು ಅತಿಕ್ರಮಿಸಿ ಆವರಣ ಗೋಡೆಯನ್ನು ನಿಮಾ೯ಣ ಮಾಡುತ್ತಿರುವು ದರಿಂದ ಸಾವ೯ಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ನೀಡಿದ ದೂರಿಗೆ ಸ್ಪಂದಿಸಿದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಂಡ ಘಟನೆ ಸೋಮವಾರ ನಡೆದಿದೆ. ತಾಲೂಕಿನ ತಾಕೋಡೆ ನಿವಾಸಿ ಬೆನೆಡಿಕ್ಟಾ ಎಂಬವರು ಪ್ರಾಂತ್ಯ ಗ್ರಾಮದ ಪೇಪರ್ ಮಿಲ್ ಬಳಿಯ ಕೊಟ್ಟಾರಿ ಕಾಂಪೌಂಡ್ ಬಳಿಯಲ್ಲಿರುವ ರಸ್ತೆ ಸಹಿತ ಸರಕಾರಿ ಜಾಗವನ್ನು ಅತಿಕ್ರಮಿಸಿ ಆವರಣಗೋಡೆಯನ್ನು ನಿಮಿ೯ಸುತ್ತಿ ದ್ದರು. ಅಲ್ಲಿ ರಸ್ತೆ ಅತ್ಯಂತ ಅಗಲ ಕಿರಿದಾಗಿದ್ದು ಇದೀಗ ಅತಿಕ್ರಮಣದಿಂದಾಗಿ ಎರಡು ಫೀಟುಗಳಿಗೂ ಕಡಿಮೆ ಅಗಲವನ್ನು ಹೊಂದಿರುತ್ತದೆ. ಆದುದರಿಂದ ರಸ್ತೆಯ ಅತಿಕ್ರಮಣವನ್ನು ನಿಲ್ಲಿಸುವಂತೆ ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್ ಹಾಗೂ ಇತರ ಸ್ಥಳೀಯರೊಂದಿಗೆ ಠಾಣೆಗೆ ತೆರಳಿ ಸರಕಾರಿ ಜಾಗವನ್ನು ಅತಿಕ್ರಮಣಗೊಳಿಸು ವುದನ್ನು ತಡೆಯುವಂತೆ ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು. ದೂರು ನೀಡಿದ ಸಂದಭ೯ ಸಂಬಂಧಪಟ್ಟ ಅತಿಕ್ರಮಣಕಾರರು ಒಮ್ಮೆ ಕೆಲಸವನ್ನು ನಿಲ್ಲಿಸಿದಂತೆ ಮಾಡಿ ಮತ್ತೆ ಅರ್ಧ ಗಂಟೆಯಲ್ಲಿ ಕೆಲಸವನ್ನು ಮುಂದುವರಿಸಲು ಆರಂಭಿಸಿದಾಗ ತಕ್ಷಣ ನಿರೀಕ್ಷಕರಲ್ಲಿ ವಿಷಯವನ್ನು ತಿಳಿಸಿದಾಗ ಸ್ವತ: ತಾನೇ ಸ್ಥಳಕ್ಕೆ ಆಗಮಿಸಿ ಕಾಮಗಾರಿಯನ್ನು ನಿಲ್ಲಿಸಿದರು.
ಹೊಸಪೇಟೆ | ದೇವದಾಸಿಯರ ಸಮರ್ಪಕ ಸರ್ವೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ವಿಜಯನಗರ (ಹೊಸಪೇಟೆ): ದೇವದಾಸಿಯರ ಸಮರ್ಪಕ ಸರ್ವೆ ನಡೆಸಿ ಹಕ್ಕುಪತ್ರ ಹಾಗೂ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಮಕ್ಕಳ ಹೋರಾಟ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ನೂರಾರು ಮಹಿಳೆಯರು ಬೃಹತ್ ಪ್ರತಿಭಟನೆ ನಡೆಸಿದರು. 1982ರಲ್ಲಿ ನಡೆದ ಸರ್ವೆಯಲ್ಲಿ ಆಗಿನ ದೇವದಾಸಿ ಮಹಿಳೆಯರನ್ನು ಮಾತ್ರ ಪರಿಗಣಿಸಲಾಗಿತ್ತು. ಆದರೆ ಸೂಕ್ತ ದಾಖಲೆಗಳಿಲ್ಲದ ಕಾರಣ ಹಾಗೂ ಆನಂತರ ಹುಟ್ಟಿದವರನ್ನು ಅಧಿಕಾರಿಗಳು ಗಣತಿಯಿಂದ ಹೊರಗಿಟ್ಟಿದ್ದಾರೆ. ಇದರಿಂದಾಗಿ ಸುಮಾರು 10 ಸಾವಿರ ಕುಟುಂಬಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿವೆ. ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶಿಸಿ ಈ ಲೋಪ ಸರಿಪಡಿಸಬೇಕು ಹಾಗೂ ಕುಟುಂಬದ ಮೂರು ತಲೆಮಾರಿನ ಸದಸ್ಯರನ್ನು ಗಣತಿಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಅಂಗೀಕರಿಸಲಾದ ಹೊಸ ವಿಧೇಯಕವು ಹಳೆಯ ಕಾಯ್ದೆಗಳನ್ನು ರದ್ದುಪಡಿಸಿದೆ. ಆದರೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ರದ್ದುಗೊಂಡ ಹಳೆಯ ಕಾಯ್ದೆಗಳನ್ನೇ ತೋರಿಸಿ ಹೊಸ ಅರ್ಜಿಗಳನ್ನು ತಳ್ಳಿಹಾಕುತ್ತಿದ್ದಾರೆ. ಈ ತಾರತಮ್ಯ ನಿಲ್ಲಿಸಿ ಹೊಸ ಪಟ್ಟಿ ಸಿದ್ಧಪಡಿಸಬೇಕು ಎಂದು ಸಂಘಟನೆಯ ಮುಖಂಡರು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಗ್ರೇಟರ್ ಬೆಂಗಳೂರು 5 ಪಾಲಿಕೆ ಚುನಾವಣೆ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಾಯವಾಣಿ ಆರಂಭ; ಮನೆಗಳ ಭೇಟಿ ಯಾವಾಗ?
ಸುಪ್ರೀಂ ಕೋರ್ಟ್ ಆದೇಶದಂತೆ, ಬೆಂಗಳೂರಿನ ಐದು ನಗರ ಪಾಲಿಕೆಗಳಿಗೆ ಮೇ 25ರ ನಂತರ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಈ ಬಾರಿ ಮತಪತ್ರಗಳ ಮೂಲಕ ಚುನಾವಣೆ ನಡೆಯಲಿದ್ದು, 88,91,411 ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಅಂತಿಮ ಮತದಾರರ ಪಟ್ಟಿ ಮಾರ್ಚ್ 16ರಂದು ಪ್ರಕಟವಾಗಲಿದೆ.
ಛತ್ತೀಸ್ಗಢದಲ್ಲಿ ಐಇಡಿ ಸ್ಫೋಟ; ಯುವಕ ಮೃತ್ಯು
ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲೀಯರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು 20 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಉಸೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ತೂರಿಪಾಡ್ ಗ್ರಾಮದ ನಿವಾಸಿ ಆಯತ ಕುಹರಾಮಿ ರವಿವಾರ ಸಮೀಪದ ಕಾಡಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆತ ಐಇಡಿ ಮೇಲೆ ಕಾಲಿರಿಸಿದ. ಪರಿಣಾಮ ಐಇಡಿ ಸ್ಫೋಟಗೊಂಡಿತು ಹಾಗೂ ಆತನ ಕಾಲುಗಳಿಗೆ ತೀವ್ರ ಗಾಯಗಳಾಯಿತು. ಗಾಯಗೊಂಡ ಆತನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅನಂತರ ಆತ ಮೃತಪಟ್ಟಿದ್ದಾನೆ ಎಂದು ಅವರು ಹೇಳಿದ್ದಾರೆ. ಅರಣ್ಯ ಹಾಗೂ ದುರ್ಗಮ ಪ್ರದೇಶಗಳಿಗೆ ಹೋಗುವಾಗ ತೀವ್ರ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಗ್ರಾಮ ನಿವಾಸಿಗಳಲ್ಲಿ ಮನವಿ ಮಾಡಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತುಗಳು, ಚಟುವಟಿಕೆಗಳು ಅಥವಾ ಸಾಮಗ್ರಿಗಳು ಕಂಡು ಬಂದರೆ, ಸಮೀಪದ ಪೊಲೀಸ್ ಠಾಣೆಗೆ ಅಧವಾ ಭದ್ರತಾ ಶಿಬಿರಕ್ಕೆ ಕೂಡಲೇ ಮಾಹಿತಿ ನೀಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಲಕ್ನೋದಲ್ಲಿ 86ನೇ ಅಖಿಲ ಭಾರತ ಸ್ಪೀಕರ್ಗಳ ಸಮ್ಮೇಳನ ಆರಂಭ; ಸ್ಪೀಕರ್ ಯು.ಟಿ. ಖಾದರ್ ಭಾಗಿ
ಲಕ್ನೋ: 86ನೇ ಅಖಿಲ ಭಾರತ ಸ್ಪೀಕರ್ಗಳ ಸಮ್ಮೇಳನ (AIPOC) ಉತ್ತರ ಪ್ರದೇಶದ ಲಕ್ನೋದಲ್ಲಿ ಸೋಮವಾರ ಆರಂಭವಾಯಿತು. ಸಮ್ಮೇಳನದಲ್ಲಿ ಕರ್ನಾಟಕದ ಸ್ಪೀಕರ್ ಯುಟಿ ಖಾದರ್ ಭಾಗವಹಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರ ಭಾಷಣದೊಂದಿಗೆ ಆರಂಭವಾದ ಸಮ್ಮೇಳನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಉದ್ಘಾಟನಾ ಭಾಷಣ ಮಾಡಿದ್ದಾರೆ. ಸಮ್ಮೇಳನ ಜನವರಿ 21ರವೆರೆಗೆ ನಡೆಯಲಿದೆ.
Nitin Nabin: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ
ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ (Nitin Nabin) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಿತಿನ್ ನಬಿನ್ ಅವರ ಪರವಾಗಿ ಒಟ್ಟು 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬಿಜೆಪಿ ಅಧಿಕೃತವಾಗಿ ತಿಳಿಸಿದೆ. ಹೀಗಾಗಿ ನಬಿನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜೆ.ಪಿ.ನಡ್ಡಾ ಅವರ
ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ ಹಂಪಿ ಉತ್ಸವವು ಫೆ.13 ರಿಂದ 15 ರವರೆಗೆ ನಡೆಯಲಿದ್ದು, ಈ ಬಾರಿ ಸ್ಥಳೀಯ ಕಲಾವಿದರು, ಸಂಗೀತ, ಸಾಂಸ್ಕೃತಿಕ ತಂಡಗಳು ಹಾಗೂ ವಿವಿಧ ಕಲಾ ಪ್ರಕಾರಗಳಿಗೆ ಸಮಾನ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸ್ಥಳೀಯ ಕಲಾವಿದರು ಹಾಗೂ ಸಂಘ-ಸಂಸ್ಥೆಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿಯ ಉತ್ಸವವನ್ನು ಕಳೆದ ವರ್ಷಕ್ಕಿಂತಲೂ ವಿಭಿನ್ನವಾಗಿ ಮತ್ತು ಅದ್ದೂರಿಯಾಗಿ ಆಯೋಜಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು. ಸಭೆಯಲ್ಲಿ ಭಾಗವಹಿಸಿದ್ದ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಮಾತನಾಡಿ, ಹಿಂದೆ ಸೌಲಭ್ಯಗಳು ಕಡಿಮೆ ಇದ್ದರೂ ಉತ್ಸವ ಅರ್ಥಪೂರ್ಣವಾಗಿ ನಡೆಯುತ್ತಿತ್ತು. ಆದರೆ ಇಂದು ಕೇವಲ ಸಿನಿಮಾ ತಾರೆಯರಿಗೆ ಮತ್ತು ಖ್ಯಾತನಾಮರಿಗೆ ಮಾತ್ರ ಮುಖ್ಯ ವೇದಿಕೆಯಲ್ಲಿ ಅವಕಾಶ ನೀಡಲಾಗುತ್ತಿದೆ. ಈ ಭೇದಭಾವ ತೊರೆದು ಸ್ಥಳೀಯ ಕಲಾವಿದರಿಗೂ ಮುಖ್ಯ ವೇದಿಕೆಯಲ್ಲಿ ಸಮಾನ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ವಿಶೇಷ ಚೇತನರಿಗಾಗಿ ಪಾರ್ಕಿಂಗ್ ಮತ್ತು ಮುಖ್ಯ ವೇದಿಕೆಗೆ ತೆರಳಲು ಸಾರಿಗೆ ಸೌಲಭ್ಯ ಕಲ್ಪಿಸಬೇಕು ಹಾಗೂ ವಿಶೇಷ ಚೇತನ ಮತ್ತು ಅಂಧ ಕಲಾವಿದರಿಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಇಡಿ ಪರದೆ ಅಳವಡಿಕೆ ಮತ್ತು ಸಾರಿಗೆ ವ್ಯವಸ್ಥೆಯ ಬಗ್ಗೆ ಗಮನಹರಿಸುವುದಾಗಿ ತಿಳಿಸಿದರು. ಕಲಾವಿದರಿಗೆ ಮುಂಗಡ ಸಂಭಾವನೆ ನೀಡುವ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು, ಉತ್ಸವಕ್ಕಾಗಿ ಸರ್ಕಾರಕ್ಕೆ 22 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತುತ ಅನುದಾನದ ಕೊರತೆಯಿರುವುದರಿಂದ ಮುಂಗಡ ಪಾವತಿ ಸಾಧ್ಯವಿಲ್ಲ. ಸರ್ಕಾರದಿಂದ ಹಣ ಬಿಡುಗಡೆಯಾದ ತಕ್ಷಣ ಸಂಪೂರ್ಣ ಸಂಭಾವನೆಯನ್ನು ಏಕಕಂತಿನಲ್ಲಿ ಪಾವತಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ನಶಿಸಿ ಹೋಗುತ್ತಿರುವ ತೊಗಲು ಬೊಂಬೆಯಾಟ, ಸೂತ್ರದ ಬೊಂಬೆಯಾಟ ಮತ್ತು ಶಾಸ್ತ್ರೀಯ ಸಂಗೀತಕ್ಕೆ ಪ್ರತ್ಯೇಕ ವೇದಿಕೆ ಒದಗಿಸಬೇಕು ಹಾಗೂ ಸಾವಯವ ಕೃಷಿ ಪ್ರದರ್ಶನ ಆಯೋಜಿಸಬೇಕು ಎಂಬ ಸಲಹೆಗಳು ಸಭೆಯಲ್ಲಿ ಕೇಳಿಬಂದವು. ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಹಾಗೂ ನೈರ್ಮಲ್ಯಕ್ಕೆ ಆದ್ಯತೆ ನೀಡುವಂತೆ ಸದಸ್ಯರು ಆಗ್ರಹಿಸಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ಸಭೆಯಲ್ಲಿ ವ್ಯಕ್ತವಾದ ಎಲ್ಲಾ ನೈಜ ಸಲಹೆಗಳನ್ನು ಪರಿಗಣಿಸಿ, ಸರ್ಕಾರದ ಮಿತಿಯೊಳಗೆ ಅತ್ಯುತ್ತಮವಾಗಿ ಉತ್ಸವ ನಡೆಸುವ ಭರವಸೆ ನೀಡಿದರು. ಸಭೆಯಲ್ಲಿ ಜಿ.ಪಂ. ಸಿಇಓ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಂ ಷಾ, ಉಪವಿಭಾಗಾಧಿಕಾರಿ ವಿವೇಕಾನಂದ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೋಟಿನಿಂದ ನದಿಗೆ ಬಿದ್ದು ಮೀನುಗಾರ ನಾಪತ್ತೆ
ಗಂಗೊಳ್ಳಿ, ಜ.19: ಮೀನುಗಾರಿಕೆ ಮುಗಿಸಿ ವಾಪಾಸ್ಸು ಬರುತ್ತಿದ್ದ ಬೋಟಿನಿಂದ ಮೀನುಗಾರರೊಬ್ಬರು ಗಂಗೊಳ್ಳಿ ಪಂಚಗಂಗಾವಳಿ ನದಿಯ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಜ.19ರಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ಕುಂಭಾಶಿ ಗ್ರಾಮದ ಕೊರವಡಿ ನಿವಾಸಿ ಶೀನಾ ಮರಕಾಲ ಎಂಬವರ ಮಗ ಸಂತೋಷ(38) ಎಂದು ಗುರುತಿಸಲಾಗಿದೆ. ಇವರು ಗಂಗೊಳ್ಳಿ ಶಾರದ ಖಾರ್ವಿ ಅವರ ಗುರು ಜಟ್ಟಿಗೇಶ್ವರ ಎಂಬ ಬೋಟಿನಲ್ಲಿ ಮೀನುಗಾರಿಕೆ ಮುಗಿಸಿ ವಾಪಾಸು ಬಂದರಿಗೆ ಬರುತ್ತಿದ್ದು, ಈ ವೇಳೆ ಅವರು ಬೋಟಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಪಂಚ ಗಂಗಾವಳಿ ನದಿಯ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಎಲ್ಲರೂ ಸೇರಿ ಹುಡುಕಾಡಿದರೂ ಇನ್ನು ಅವರ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ಯ ಮಾರಾಟ ಪರವಾನಗಿಗೆ ಲಂಚ ಕೇಳಿದ ಪ್ರಕರಣ: ಅಬಕಾರಿ ಸಚಿವ, ಅವರ ಪುತ್ರನ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಮದ್ಯ ಮಾರಾಟದ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಅವರ ಪುತ್ರನ ಪಾತ್ರದ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸೋಮವಾರ(ಜ.19) ಲಕ್ಷ್ಮೀನಾರಾಯಣ್ ಎಂಬವರು ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಪುತ್ರ ಮತ್ತು ಅಬಕಾರಿ ಇಲಾಖೆಯ ಉಪ ಆಯುಕ್ತ(ಡಿಸಿ) ಜಗದೀಶ್ ನಾಯ್ಕ್ ಅವರ ಪಾತ್ರದ ಕುರಿತು ನಿಷ್ಪಕ್ಷಪಾತವಾಗಿ ಸೂಕ್ತ ತನಿಖೆ ನಡೆಸಬೇಕೆಂದು ದೂರು ಸಲ್ಲಿಕೆ ಮಾಡಿದ್ದಾರೆ. ದೂರು ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮೀನಾರಾಯಣ್, ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಈಗಾಗಲೇ ಮೂವರ ಬಂಧನವಾಗಿದೆ. ಬಿಡುಗಡೆಯಾದ ಆಡಿಯೋದಲ್ಲಿ ಸಚಿವರಿಗೆ ಎಷ್ಟು ಹಣ ಕೊಡಬೇಕಿದೆ ಎಂದು ಅಬಕಾರಿ ಡಿಸಿಯವರು ಬಹಿರಂಗವಾಗಿ ಪ್ರಸ್ತಾಪಿಸಿದ್ದರು. ಆದ್ದರಿಂದ ಸಚಿವರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ದೂರು ನೀಡಿದ್ದೇನೆ ಎಂದರು. ನಾನು ಸರಕಾರಕ್ಕೆ ಪಾವತಿಸಬೇಕಿರುವ ಎಲ್ಲ ಶುಲ್ಕವನ್ನು ಪಾವತಿಸಿದ್ದರೂ ಸಹ ಲಂಚಕ್ಕೆ ಬೇಡಿಕೆಯಿಟ್ಟು, ಪರವಾನಗಿಯನ್ನು ಕೊಟ್ಟಿರಲಿಲ್ಲ. ಟ್ರ್ಯಾಪ್ ಆಗುವ ಐದು ನಿಮಿಷಗಳಿಗೂ ಮುಂಚೆ ಡಿಸಿ ಮಾತಾಡಿರುವ ಆಡಿಯೋ ನನ್ನ ಬಳಿ ಇದೆ. ಆ ಆಡಿಯೋ ಸೇರಿದಂತೆ ಸೂಕ್ತ ದಾಖಲೆಗಳನ್ನು ಲೋಕಾಯುಕ್ತ ಎಸ್ಪಿಯವರಿಗೆ ನೀಡಿದ್ದೇನೆ. ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ, ಬೇರೆ ಕಾನೂನು ಮಾರ್ಗಗಳ ಬಗ್ಗೆ ಪರಿಶೀಲಿಸುತ್ತೇವೆ ಎಂದು ದೂರುದಾರ ಲಕ್ಷ್ಮೀನಾರಾಯಣ್ ತಿಳಿಸಿದರು. ಪ್ರಕರಣದ ಹಿನ್ನೆಲೆ: ದೂರುದಾರ ಲಕ್ಷ್ಮೀನಾರಾಯಣ ತಮ್ಮ ಮಗನಿಗಾಗಿ ಮದ್ಯದಂಗಡಿ ತೆರೆಯುವ ಸಲುವಾಗಿ ಸಿಎಲ್-7 ಮತ್ತು ಮೈಕ್ರೋ ಬ್ರೈವರಿ ಪರವಾನಗಿ ಪಡೆಯಲು ಸರಕಾರಿ ಶುಲ್ಕ 21 ಲಕ್ಷ ರೂ. ಪಾವತಿಸಿದ್ದರು. ಆದರೆ, ಈ ಎರಡು ಪರವಾನಗಿಗಳನ್ನು ಕೊಡಲು ಲಕ್ಷ್ಮೀನಾರಾಯಣ ಅವರಿಗೆ ಬೆಂಗಳೂರು ನಗರ ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಬರೋಬ್ಬರಿ 2.30 ಕೋಟಿ ರೂ. ಲಂಚ ಕೇಳಿದ್ದಾರೆ. ಅದರಲ್ಲಿ 50 ಲಕ್ಷ ರೂ. ಮುಂಗಡ ಕೊಡಲು ಹೇಳಿದ್ದರು ಎನ್ನಲಾದ ಆಡಿಯೋ ಸಂಭಾಷಣೆಗಳು ಬಿಡುಗಡೆಯಾಗಿದ್ದವು. ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮೀನಾರಾಯಣ ನೇರವಾಗಿ ಲೋಕಾಯುಕ್ತ ಪೊಲೀಸರ ಮೊರೆಹೋದರು. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದ ತಂಡ ಅಬಕಾರಿ ಡಿಸಿ ಜಗದೀಶ್ ನಾಯ್ಕ್, ಎಸ್ಪಿ ತಮ್ಮಣ್ಣ ಮತ್ತು ಕಾನ್ಸ್ಟೇಬಲ್ ಲಕ್ಕಪ್ಪ ಗಣಿಗೆ ಎಂಬವರನ್ನು ಜ.17ರಂದು ಬಂಧಿಸಿತ್ತು. ಇದೀಗ ಲಕ್ಷ್ಮೀನಾರಾಯಣ ಅವರು ಅಬಕಾರಿ ಸಚಿವರು ಹಾಗೂ ಅವರ ಪುತ್ರನ ವಿರುದ್ಧ ಮತ್ತೊಂದು ದೂರು ನೀಡಿದ್ದಾರೆ.
ಉಡುಪಿ ಪರಿವಾರ್ ಗ್ರೂಪ್ಸ್ನ ಸ್ಥಾಪಕ ಕೆ.ಗೋಪಾಲ ನಿಧನ
ಕೋಟ: ಉಡುಪಿಯ ಪ್ರತಿಷ್ಠಿತ ಪರಿವಾರ್ ಬೇಕರಿ ಗ್ರೂಪ್ನ ಸ್ಥಾಪಕರು, ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಮಾಜಿ ಅಧ್ಯಕ್ಷ, ಕಿನ್ನಿಮುಲ್ಕಿ ನಿವಾಸಿ ಕೆ.ಗೋಪಾಲ(86) ಅನಾರೋಗ್ಯದಿಂದ ಜ.19ರಂದು ನಿಧನರಾದರು. ಇವರು ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷರಾಗಿ 24ವರ್ಷ ಸೇವೆ ಸಲ್ಲಿಸಿ ಸಮಾಜವನ್ನು ಸಂಘಟಿಸುವುದರ ಜತೆಗೆ ಬಾರ್ಕೂರಿನಲ್ಲಿರುವ ಗಾಣಿಗ ಸಮಾಜದ ಕುಲದೇವರಾದ ವೇಣು ಗೋಪಾಲಕೃಷ್ಣ ದೇಗುಲವನ್ನು ಸಮಗ್ರವಾಗಿ ಪುನಃ ನಿರ್ಮಾಣ ಮಾಡುವಲ್ಲಿ ಸೇವೆ ಸಲ್ಲಿಸಿದ್ದರು. ಸಮಾಜದ ಸಂಘಟನೆಗೆ ಪೂರಕವಾಗಿ ವೇಣು ಗೋಪಾಲಕೃಷ್ಣ ಎಜುಕೇಶನ್ ಸೊಸೈಟಿ ಸ್ಥಾಪನೆ, ಅಶಕ್ತ ಯಕ್ಷಗಾನ ಕಲಾವಿದರಿಗೆ ಯಕ್ಷನಿಧಿ ಸ್ಥಾಪನೆ, ಯುವ ಸಂಘಟನೆಗಳ ಸ್ಥಾಪನೆ, ವಲಯಗಳ ರಚನೆ, ಅನ್ನಪೂರ್ಣೇಶ್ವರಿ ಮಹಿಳಾ ಬಳಗ ಸ್ಥಾಪನೆ ಸೇರಿದಂತೆ ದೇಗುಲದ ಅಭಿವೃದ್ಧಿಗೆ ಸಮಗ್ರವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಹಾಗೂ ಪುತ್ರರಾದ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಪ್ರಸ್ತುತ ಅಧ್ಯಕ್ಷ ಉದಯ ಕೆ. ಹಾಗೂ ಬಾರ್ಕೂರು ವೇಣುಗೋಪಾಲ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಿಜಯ ಕೆ. ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಲೋಕೇಶ್ ಅಂಕದಕಟ್ಟೆ ‘ನಮ್ಮೂರ ಪ್ರಶಸ್ತಿ’ ಆಯ್ಕೆ
ಕೋಟ, ಜ.19: ಬೀಜಾಡಿ-ಗೋಪಾಡಿ ಮಿತ್ರ ಸಂಗಮದ 29ನೇ ವಾರ್ಷಿಕೋತ್ಸವ ಜ.24ರಂದು ಶನಿವಾರ ಸಂಜೆ 7ಗಂಟೆಗೆ ಬೀಜಾಡಿ ಮಿತ್ರಸೌಧ ವಠಾರ ಜರುಗಲಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ, ಕೋಟೇಶ್ವರ ಗ್ರಾಪಂ ಸದಸ್ಯ ಲೋಕೇಶ್ ಅಂಕದಕಟ್ಟೆ ಅವರಿಗೆ ಸಂಸ್ಥೆಯ ವತಿಯಿಂದ ಪ್ರತಿವರ್ಷ ಕೊಡಮಾಡುವ ಊರ ಗೌರವದ ನಮ್ಮೂರ ಪ್ರಶಸ್ತಿ ಪ್ರದಾನ ಮಾಡ ಲಾಗುವುದು. ಸಾಧಕರಾದ ಉಡುಪಿ ಜಿಲ್ಲಾ ಶಿಕ್ಷಕ ತರಬೇತಿ ಕೇಂದ್ರ ನಿವೃತ್ತ ಉಪನ್ಯಾಸಕ ಪ್ರಭಾಕರ ಮಿತಂತ್ಯಾಯ, ಬೀಜಾಡಿ ಗ್ರಾಪಂ ಅಧ್ಯಕ್ಷ ಪ್ರಕಾಶ ಪೂಜಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ, ಕ್ರೀಡಾಪಟುಗಳಾದ ರಚಿತಾ ಹತ್ವಾರ್, ಜನನಿ, ಅನನ್ಯ, ಯಶಸ್ ವೈ ಆಚಾರ್ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಮಹೇಶ್ ಮೊಗವೀರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ
ಕುಂದಾಪುರ, ಜ.19: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಮರವಂತೆ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪ್ರಥಮ ವರ್ಷದ ಹಗ್ಗ ಜಗ್ಗಾಟ ಸ್ಪರ್ಧೆ ‘ಬ್ರಹ್ಮಶ್ರೀ ನಾರಾಯಣ ಗುರು ಟ್ರೋಫಿ’ಯು ಶನಿವಾರ ಮರವಂತೆಯ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಎದುರು ನಡೆಯಿತು. ಸ್ಪರ್ಧೆಯ ಮಹಿಳಾ ವಿಭಾಗದಲ್ಲಿ ಸ್ವಾಮಿ ಫ್ರೆಂಡ್ಸ್ ಪ್ರಥಮ, ಸಿದ್ಧಿ ವಿನಾಯಕ ಗೋಳಿಹೊಳೆ ತಂಡ ದ್ವಿತೀಯ, ವನದುರ್ಗಾ ಕೆರ್ಗಾಲು ತೃತೀಯ ಮತ್ತು ಪುರುಷರ ವಿಭಾಗಲ್ಲಿ ಪೊಲಿಪು ವೀರಾಂಜನೇಯ ತಂಡದ ಎ. ತಂಡ ಪ್ರಥಮ, ಸಿ ತಂಡ ದ್ವಿತೀಯ ಹಾಗೂ ಬಿ ತಂಡ ತೃತೀಯ ಬಹುಮಾನ ಗೆದ್ದುಕೊಂಡಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಶುಭಕೋರಿದರು. ಈ ಸಂದರ್ಭದಲ್ಲಿ ಉಡುಪಿ ಜಿಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಉದ್ಯಮಿ ಗೋವಿಂದ ಬಾಬು ಪೂಜಾರಿ, ತಾಪಂ ಮಾಜಿ ಸದಸ್ಯ ಮಹೇಂದ್ರ ಪೂಜಾರಿ, ಗಂಗೊಳ್ಳಿ ಠಾಣಾಧಿಕಾರಿ ಪವನ್ ನಾಯಕ್, ಮರವಂತೆ -ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಕ್ಕಾಡಿ ಜಗದೀಶ್ ಪೂಜಾರಿ, ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷೆ ಅನಿತಾ ಆರ್.ಕೆ., ಪ್ರಮುಖರಾದ ಪುಟ್ಟಯ್ಯ ಬಿಲ್ಲವ, ಸಂಜೀವ ಪೂಜಾರಿ, ಶಂಕರ ಪೂಜಾರಿ, ಮರವಂತೆ ಗ್ರಾಪಂ ಅಧ್ಯಕ್ಷ ನಾಗರಾಜ್ ಪಟಗಾರ್, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘ ಮರ ವಂತೆಯ ಅಧ್ಯಕ್ಷ ಗಣೇಶ್ ಪೂಜಾರಿ, ಉಪಾಧ್ಯಕ್ಷ ಚಂದ್ರ ಬಿಲ್ಲವ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಶ್ಯಾಮಲಾ ಬಿಲ್ಲವ ಸ್ವಾಗತಿಸಿದರು. ಕೋಶಾಧಿಕಾರಿ ಸೋಮಯ್ಯ ಬಿಲ್ಲವ ವಂದಿಸಿದರು. ಕಿರಣ್ ಪೂಜಾರಿ, ಯಶೋದಾ, ಕಿಶೋರ್ ಕಾರ್ಯಕ್ರಮ ನಿರೂಪಿಸಿದರು
ಶೇ.50 ರಿಯಾಯತಿಯಲ್ಲಿ ಡಯಾಲಿಸಿಸ್ ಚಿಕಿತ್ಸೆ: ಜ.25ರಂದು ಎರಡನೇ ಯೋಜನೆಗೆ ಚಾಲನೆ
ಉಡುಪಿ, ಜ.19: ಮೂತ್ರಪಿಂಡ ವೈಫಲ್ಯದಿಂದ ನರಳುತ್ತಿರುವ, ದ.ಕ. ಜಿಲ್ಲೆಯ ಅರ್ಹ ಬಡರೋಗಿಗಳಿಗಾಗಿ ಶೇ.50 ರಿಯಾಯತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ನಿಟ್ಟಿನಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಸೊಸೈಟಿ ಆಫ್ ವಿನ್ಸೆಂಟ್ ದಿ ಪೌಲ್ ಸಂಘಟನೆ ತನ್ನ ಶತಮಾನೋತ್ಸವ ಆಚರಣೆಯ ಪ್ರಯುಕ್ತ ಜೋಸೆಫ್ ಮಿನೇಜಸ್ ಸಾಸ್ತಾನ ನೇತೃತ್ವದಲ್ಲಿ ಮತ್ತು ಫ್ರೀಡಾ ರೇಗೊ ಮತ್ತು ಜಾನೆಟ್ ಫೆರ್ನಾಂಡಿಸ್ ಸಹಕಾರದೊಂದಿಗೆ ಟ್ರಿನಿಟಿ ಮೆಡಿಕೇರ್ ಸರ್ವಿಸ್ ಎರಡನೇ ಯೋಜನೆಯ ಉದ್ಘಾಟನೆ ಮಂಗಳೂರು ಫಾರ್ದ ಮುಲ್ಲರ್ಸ್ ಕನ್ವೆಶ್ನನ್ ಸೆಂಟರ್ನಲ್ಲಿ ಜ.25ರಂದು ಬೆಳಗ್ಗೆ 10.50ಕ್ಕೆ ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಪವಿತ್ರ ಬಲಿಪೂಜೆ ನಡೆಯಲಿದ್ದು, ಬಳಿಕ ಫಾದರ್ ಮುಲ್ಲರ್ಸ್ ಕನ್ವೆಶನ್ ಸೆಂಟರ್ನಲ್ಲಿ ಯೋಜನೆಗೆ ಚಾಲನೆ ದೊರಕಲಿದ್ದು ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಪೀಟರ್ ಪೌಲ್ ಸಲ್ಡಾನಾ ವಹಿಸಲಿರುವರು. ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಯೋಜನೆ ಆರಂಭವಾಗಿದ್ದು ಕಿಡ್ನಿ ಡಯಾಲಿಸ್ ಪ್ರಯೋಜನ ವನ್ನು ರೋಗಿಗಳು ಪಡೆಯುತ್ತಿದ್ದಾರೆ. ದಕ ಜಿಲ್ಲಾ ವ್ಯಾಪ್ತಿಯಲ್ಲಿ ಡಯಾಲಿಸಿಸ್ ಅಗತ್ಯವಿರುವ ಬಡ ರೋಗಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸ ಬಹುದು. ಈ ಯೋಜನೆ ಎಲ್ಲಾ ಧರ್ಮ ಮತ್ತು ವರ್ಗದವರಿಗೂ ಕೂಡ ಲಭ್ಯವಾಗಿದ್ದು ಸ್ಥಳೀಯ ಚರ್ಚಿನ ವಿನ್ಸೆಂಟ್ ದಿ ಪೌಲ್ ಘಟಕದ ಶಿಫಾರಸು ಅರ್ಜಿಯೊಂದಿಗೆ ಯೋಜನೆಯ ಪ್ರಯೋಜನ ಪಡೆಯಲು ಅವಕಾಶವಿದೆ. ಡಯಾಲಿಸಿಸ್ ರೋಗಿಗಳಿಗೆ ಯೋಜನೆಗೆ ನೊಂದಣಿಯಾದ ಬಳಿಕ ಅಧಿಕೃತ ಗುರುತು ಪತ್ರ ನೀಡಲಾಗುತ್ತಿದ್ದು ಅದರ ಆಧಾರದಲ್ಲಿ ನಿರಂತರವಾಗಿ ಶೇ.50 ರಿಯಾಯತಿ ದರದಲ್ಲಿ ಚಿಕಿತ್ಸೆಯನ್ನು ನಿಗದಿಪಡಿಸಿದ ಆಸ್ಪತ್ರೆಯಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿಗಳಿಗೆ ನಿರಂತರ ವಿದ್ಯುತ್ ಒದಗಿಸಿ ಸಿಎಂಗೆ ‘ಹೊಯ್ಸಳ’ ದೀಪೇಶ್ ಶೆಣೈ ಮನವಿ
ಉಡುಪಿ, ಜ.19: ಈ ಬಾರಿ ಮಾರ್ಚ್-ಎಪ್ರಿಲ್ ತಿಂಗಳಲ್ಲಿ ನಡೆಯುವ 2026ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ರಾಜ್ಯದ ಲಕ್ಷಾಂತರ ಮಂದಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ಪರೀಕ್ಷಾ ಕಲಿಕೆಗಾಗಿ ನಿರಂತರ ವಿದ್ಯುತ್ ಒದಗಿಸುವಂತೆ 2025ನೇ ಸಾಲಿನಲ್ಲಿ ರಾಜ್ಯ ಸರಕಾರ ನೀಡುವ ಹೊಯ್ಸಳ ಶೌರ್ಯ ಪ್ರಶಸ್ತಿ ಪಡೆದಿರುವ ದೀಪೇಶ್ ದೀಪಕ್ ಶೆಣೈ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಉಡುಪಿ ಕುಂಜಿಬೆಟ್ಟಿನ ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ದೀಪೇಶ್ ದೀಪಕ್ ಶೆಣೈ, ತಾವಿರುವ ಪ್ರದೇಶದಲ್ಲಿ ಅನಿಯಮಿತ ಹಾಗೂ ಅಘೋಷಿತ ವಿದ್ಯುತ್ ಕಡಿತವಾಗುತಿದ್ದು, ಇದರಿಂದ ಪರೀಕ್ಷೆಗೆ ತಯಾರಿ ನಡೆಸಲು ಅಡಚಣೆಯಾ ಗುತ್ತಿದೆ. ಇದರ ಕುರಿತು ತಕ್ಷಣವೇ ಕ್ರಮಕ್ಕೆ ಮನವಿ ಸಲ್ಲಿಸಿದ್ದಾರೆ. ಪದೇ ಪದೇ ಆಗುತ್ತಿರುವ ವಿದ್ಯುತ್ ಕಡಿತಗಳಿಂದ ಅಧ್ಯಯನಕ್ಕೆ ತೊಂದರೆಯಾಗುತ್ತಿದೆ. ಇದರೊಂದಿಗೆ ಆನ್ಲೈನ್ ಅಧ್ಯಯನ, ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳು ಹಾಗೂ ಸಾಧನಗಳ ಚಾರ್ಜಿಂಗ್ಗೂ ಅಡಚಣೆ ಉಂಟಾಗುತ್ತಿದೆ ಎಂದು ದೂರಿದ್ದಾರೆ. ದೀಪೇಶ್ ಶೆಣೈ ಅವರು ತಮ್ಮ ನಾಗರಿಕ ಧೈರ್ಯ ಮತ್ತು ಸಮಯಪ್ರಜ್ಞೆ, ಜಾಗೃತಿ ಕಾರ್ಯಕ್ಕಾಗಿ ಕಳೆದ ನವೆಂಬರ್ ತಿಂಗಳಲ್ಲಿ ರಾಜ್ಯ ಸರಕಾರ ನೀಡುವ ಹೊಯ್ಸಳ ಶೌರ್ಯ ಪ್ರಶಸ್ತಿಯನ್ನು ಪಡೆದಿದ್ದರು.
Maharashtra | ಭಿವಂಡಿಯಲ್ಲಿ ಬಿಜೆಪಿ- ಕೆವಿಎ ಕಾರ್ಯಕರ್ತರ ನಡುವೆ ಘರ್ಷಣೆ
ಭಿವಂಡಿ (ಥಾಣೆ ಜಿಲ್ಲೆ): ಪವರ್ ಲೂಮ್ ಗಳಿಗೆ ಹೆಸರುವಾಸಿಯಾದ ಹಾಗೂ ದೇಶದ ಪ್ರಮುಖ ಗೋದಾಮು–ಲಾಜಿಸ್ಟಿಕ್ಸ್ ಕೇಂದ್ರಗಳಲ್ಲೊಂದಾದ ಭಿವಂಡಿ ಪಟ್ಟಣದಲ್ಲಿ ಬಿಜೆಪಿ ಮತ್ತು ಕೊನಾರ್ಕ್ ವಿಕಾಸ್ ಅಘಾಡಿ (ಕೆವಿಎ) ಕಾರ್ಯಕರ್ತರ ನಡುವೆ ರವಿವಾರ ಸಂಜೆ ಘರ್ಷಣೆ ನಡೆದಿದ್ದು, ಕೆಲಕಾಲ ಉದ್ವಿಗ್ನತೆ ಉಂಟಾಯಿತು. ಪೊಲೀಸರು ಮಧ್ಯಪ್ರವೇಶಿಸಿ ಗುಂಪುಗಳನ್ನು ಚದುರಿಸಿದ್ದು, ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ನಾಯಕರ ಬೆಂಬಲಿಗರ ನಡುವೆ ಗಲಾಟೆ ಸಂಭವಿಸಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಪ್ರಸ್ತುತ ಶಾಂತಿ ಸ್ಥಾಪನೆಯಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ವಲಯ–II) ಶಶಿಕಾಂತ್ ಬೊರಾಟೆ ಸೋಮವಾರ ತಿಳಿಸಿದ್ದಾರೆ. ಘಟನೆಯಲ್ಲಿ ಭಾಗಿಯಾದ ಕೆಲವರನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ. 23 ವಾರ್ಡ್ಗಳು ಮತ್ತು 90 ಸ್ಥಾನಗಳನ್ನು ಹೊಂದಿರುವ ಭಿವಂಡಿ–ನಿಝಾಂಪುರ ಮಹಾನಗರ ಪಾಲಿಕೆ (ಬಿಎನ್ಎಂಸಿ)ಗೆ ಹೊಸ ಆಡಳಿತ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಚುನಾವಣಾ ಫಲಿತಾಂಶಗಳಂತೆ ಕಾಂಗ್ರೆಸ್ 30 ಸ್ಥಾನಗಳನ್ನು ಪಡೆದು ಅಗ್ರಸ್ಥಾನದಲ್ಲಿದ್ದರೆ. ಬಿಜೆಪಿ 20, ಶಿವಸೇನೆ 12, ಎನ್ಸಿಪಿ (ಎಸ್ಪಿ) 12, ಸಮಾಜವಾದಿ ಪಕ್ಷ 6, ಕೊನಾರ್ಕ್ ವಿಕಾಸ್ ಅಘಾಡಿ 4, ಭಿವಂಡಿ ವಿಕಾಸ್ ಅಘಾಡಿ 3 ಹಾಗೂ ಸ್ವತಂತ್ರ ಅಭ್ಯರ್ಥಿ 1 ಸ್ಥಾನಗಳನ್ನು ಗೆದ್ದಿದ್ದಾರೆ. ಭಿವಂಡಿ ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್ನಲ್ಲಿ ಘರ್ಷಣೆ ತೀವ್ರಗೊಂಡಿತು. ರವಿವಾರ ಸಂಜೆ ಮಾಜಿ ಮೇಯರ್ ಹಾಗೂ ಕಾರ್ಪೊರೇಟರ್ ಆಗಿ ಆಯ್ಕೆಯಾದ ಕೆವಿಎ ನಾಯಕ ವಿಲಾಸ್ ಪಾಟೀಲ್ ಅವರ ಬಂಗಲೆಯ ಮೇಲೆ ದಾಳಿ ನಡೆದ ಬಳಿಕ ಉದ್ವಿಗ್ನತೆ ಆರಂಭವಾಯಿತು. ಈ ದಾಳಿಗೆ ಭಿವಂಡಿ ಪಶ್ಚಿಮದ ಬಿಜೆಪಿ ಶಾಸಕ ಮಹೇಶ್ ಚೌಗುಲೆ ಅವರ ಪುತ್ರ ಮೀಟ್ ಚೌಗುಲೆ ಕಾರಣರಾಗಿದ್ದಾರೆ ಎಂದು ಪಾಟೀಲ್ ಆರೋಪಿಸಿದ್ದಾರೆ. “ನನ್ನ ಮನೆಯ ಮೇಲೆ ದಾಳಿ ನಡೆದಿದೆ. ಮನೆಯಲ್ಲಿ ಚಿಕ್ಕ ಮಕ್ಕಳು ಇದ್ದರು. ಈ ವಿಚಾರದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗಮನ ಹರಿಸಬೇಕು,” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಚೌಗುಲೆ, ಚುನಾವಣೆ ಬಳಿಕವೂ ತಮ್ಮ ಬೆಂಬಲಿಗರು ಹಾಗೂ ಕಚೇರಿಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ
ಉಡುಪಿ, ಜ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಸರಕಾರಿ ನೌಕರರು ಸಮಯದ ಚೌಕಟ್ಟಿನಲ್ಲಿ ದುಡಿಯುವ ಸಂದರ್ಭದಲ್ಲಿ ಹೆಚ್ಚಿನ ಒತ್ತಡವನ್ನು ಅನುಭವಿಸುತಿದ್ದು, ದೈಹಿಕ ಹಾಗೂ ಮಾನಸಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ನಿಯಮಿತವಾದ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದರು. ಕೆಲಸ-ಕಾರ್ಯಗಳಲ್ಲಿ ಸಹಜ ಒತ್ತಡವಿದ್ದಾಗ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಆಗಾಗ ಕ್ರೀಡೆ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಮನಸ್ಸು ಚೇತೋಹಾರಿಯಾಗಿರುತ್ತದೆ. ಸರಕಾರಿ ನೌಕರರ ಸಂಘ ಸದಸ್ಯರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಇದಕ್ಕಾಗಿ ಆಗಾಗ ಇಂಥ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು. ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಸರಕಾರಿ ನೌಕರರು ದುಡಿಯುತಿದ್ದಾರೆ. ಇವರು ತಮ್ಮ ದಿನನಿತ್ಯದ ಜಂಜಾಟಗಳ ಮಧ್ಯೆಯೂ ಆಟೋಟ ಗಳಲ್ಲಿ ತೊಡಗಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಕ್ರೀಡೆ ಮೂಲಕ ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಸರಕಾರಿ ಕಚೇರಿ ಗಳಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಸರಕಾರಿ ನೌಕರರು ನೂರು ಪ್ರತಿಶತದಷ್ಟು ಕಾರ್ಯದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಾರೆ. ಈ ಸಂದರ್ಭದಲ್ಲಿ ಒತ್ತಡಕ್ಕೊಳ ಗಾಗುವುದು ಸಹಜ. ಒತ್ತಡವನ್ನು ನಿಭಾಯಿಸಲು ಕಡ್ಡಾಯವಾಗಿ ದಿನನಿತ್ಯ ಒಂದು ಗಂಟೆ ಕ್ರೀಡೆ ಅಥವಾ ವ್ಯಾಯಾಮ ದಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೇಹದ ಆರೋಗ್ಯದ ಜೊತೆಗೆ ಮಾನಸಿಕವಾಗಿಯೂ ಸದೃಢರಾಗಿರಲು ಸಾಧ್ಯ ಎಂದರು. ಸಂಘದ ಕ್ರೀಡಾ ಕಾರ್ಯದರ್ಶಿ ದಿನಕರ್ ನಾಯ್ಕ್ ಹಾಗೂ ದೀಪಾ ಕ್ರೀಡಾ ಪ್ರತಿಜ್ಷಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತಣ್ಣ, ಜಿಲ್ಲಾ ಖಜಾಂಜಿ ದಯಾನಂದ ಬೆನ್ನೂರು, ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಸ್ವಾಗತಿಸಿ, ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಹಾಗೂ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Solar Panel Subsidy: ಮನೆ ಛಾವಣಿಗೆ ಸೋಲಾರ್: ಸರ್ಕಾರದಿಂದ ಸಿಗಲಿದೆ ₹78,000 ಹಣ
ಪ್ರಸ್ತುತ ದಿನಗಳಲ್ಲಿ ಏರುತ್ತಿರುವ ವಿದ್ಯುತ್ ದರಗಳು (Electricity Rates) ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿವೆ. ಪ್ರತಿ ತಿಂಗಳು ಬರುವ ಕರೆಂಟ್ ಬಿಲ್ ನೋಡಿ ಮಧ್ಯಮ ವರ್ಗದ ಜನರು ಕಂಗಾಲಾಗಿದ್ದಾರೆ. ಆದರೆ, ಈ ಸಮಸ್ಯೆಗೆ ಶಾಶ್ವತ ಪರಿಹಾರವೊಂದು ಕೇಂದ್ರ ಸರ್ಕಾರದ ಬಳಿ ಇದೆ. ಕೇವಲ ಪರಿಹಾರವಷ್ಟೇ ಅಲ್ಲ, ವಿದ್ಯುತ್ ಬಿಲ್ ಅನ್ನು ಸಂಪೂರ್ಣವಾಗಿ ‘ಶೂನ್ಯ’ಗೊಳಿಸುವ ಮತ್ತು ಸರ್ಕಾರದ ಕಡೆಯಿಂದಲೇ ಹಣ ಪಡೆಯುವ ಸುವರ್ಣಾವಕಾಶವಿದು. 2026 ನೇ ಸಾಲಿನಲ್ಲಿ ಯಾರೆಲ್ಲಾ ತಮ್ಮ ಮನೆಯ ಮೇಲೆ ಸೋಲಾರ್ ಘಟಕಗಳನ್ನು ಅಳವಡಿಸಿಕೊಳ್ಳುತ್ತಾರೋ, ಅವರಿಗೆ ... Read more The post Solar Panel Subsidy: ಮನೆ ಛಾವಣಿಗೆ ಸೋಲಾರ್: ಸರ್ಕಾರದಿಂದ ಸಿಗಲಿದೆ ₹78,000 ಹಣ appeared first on Karnataka Times .
Greenland Row: ಡೊನಾಲ್ಡ್ ಟ್ರಂಪ್ ನ್ಯಾಟೋ ಚರಮಗೀತೆ ಬರೆಯುತ್ತಿದ್ದಾರೆ; ಯರೇಷಿಯಾ ಗ್ರೂಪ್ ಮುಖ್ಯಸ್ಥ ಎಚ್ಚರಿಕೆ!
ದೇಶಗಳ ಮೇಲೆ ದಂಡೆತ್ತಿ ಹೋಗುವುದನ್ನು ರೂಢಿ ಮಾಡಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಗ್ರೀನ್ಲ್ಯಾಂಡ್ ವಶಕ್ಕೆ ಯೋಜನೆ ಹಾಕಿಕೊಂಡು ಕೂತಿದ್ದಾರೆ. ಟ್ರಂಪ್ ಅವರ ಈ ಭೂಕಬಳಿಕೆ ವಿರುದ್ಧ ಯುರೋಪಿಯನ್ ರಾಷ್ಟ್ರಗಳು ಧ್ವನಿ ಎತ್ತಲಾರಂಭಿಸಿದ್ದು, ನ್ಯಾಟೋ ಸದಸ್ಯ ರಾಷ್ಟ್ರಗಳೇ ಗ್ರೀನ್ಲ್ಯಾಂಡ್ನ್ನು ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು ಅಮೆರಿಕಕ್ಕೆ ಸಂದೇಶ ಕಳುಹಿಸಿವೆ. ನ್ಯಾಟೋದಲ್ಲಿ ಉಂಟಾಗಿರುವ ಈ ಬಿರುಕು ಗಂಭೀರ ಸ್ವರೂಪದ್ದಾಗಿದ್ದು, ಟ್ರಂಪ್ ನ್ಯಾಟೋ ಅಂತ್ಯಕ್ಕೆ ಕಾರಣವಾಗಲಿದ್ದಾರೆ ಎಂದು ಯರೇಷಿಯಾ ಗ್ರೂಪ್ ಮುಖ್ಯಸ್ಥ ಇಯಾನ್ ಬ್ರೆಮ್ಮರ್ ಎಚ್ಚರಿಸಿದ್ದಾರೆ.
ಟಿ-20 ವಿಶ್ವಕಪ್ಗಿಂತ ಮೊದಲು ಕಮಿನ್ಸ್, ಮ್ಯಾಕ್ಸ್ವೆಲ್, ಹೇಝಲ್ವುಡ್ಗೆ ವಿಶ್ರಾಂತಿ
ಮೆಲ್ಬರ್ನ್: ಟಿ-20 ವಿಶ್ವಕಪ್ ಟೂರ್ನಿಗಿಂತ ಮೊದಲು ಪಾಕಿಸ್ತಾನ ತಂಡದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಗೆ ಆಸ್ಟ್ರೇಲಿಯ ತಂಡವು ಪ್ಯಾಟ್ ಕಮಿನ್ಸ್, ಗ್ಲೆನ್ ಮ್ಯಾಕ್ಸ್ವೆಲ್ ಸಹಿತ ಐವರು ಅಗ್ರ ಆಟಗಾರರಿಗೆ ವಿಶ್ರಾಂತಿ ನೀಡಿದೆ. ಈ ವಿಚಾರವನ್ನು ಆಯ್ಕೆಗಾರರು ಸೋಮವಾರ ದೃಢಪಡಿಸಿದ್ದಾರೆ. ಜೋಶ್ ಹೇಝಲ್ವುಡ್, ಟಿಮ್ ಡೇವಿಡ್ ಹಾಗೂ ನಾಥನ್ ಎಲ್ಲಿಸ್ ಕೂಡ ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ಸರಣಿಯಿಂದ ಹೊರಗುಳಿಯಲಿದ್ದಾರೆ. ಪ್ರಮುಖ ಆಟಗಾರರ ಅನುಪಸ್ಥಿತಿಯು ಶಾನ್ ಅಬೊಟ್, ಮಹ್ಲಿ ಬೀಯರ್ಡ್ಮನ್, ಬೆನ್ ಡ್ವಾರ್ಶುಯಿಸ್, ಜಾಕ್ ಎಡ್ವರ್ಡ್ಸ್, ಮಿಚ್ಚ್ ಓವೆನ್, ಜೋಶ್ ಫಿಲಿಪ್ ಹಾಗೂ ಮ್ಯಾಟ್ ರೆನ್ಶಾ ಅವರಿಗೆ 17 ಸದಸ್ಯರ ತಂಡದಲ್ಲಿ ಅವಕಾಶ ಕಲ್ಪಿಸಿದೆ. ಗಾಯದಿಂದ ಚೇತರಿಸಿಕೊಂಡು ವಾಪಸಾದವರು ಹಾಗೂ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಐವರು ಆಟಗಾರರಿಗೆ ಫೆಬ್ರವರಿ 7ರಿಂದ ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ಗಿಂತ ಮೊದಲು ವಿಶ್ರಾಂತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿಯ ಮುಖ್ಯಸ್ಥ ಜಾರ್ಜ್ ಬೈಲಿ ಹೇಳಿದ್ದಾರೆ. ಆಸ್ಟ್ರೇಲಿಯ ತಂಡವು ಪಾಕಿಸ್ತಾನದ ವಿರುದ್ಧ ಲಾಹೋರ್ನಲ್ಲಿ ಜನವರಿ 29 ಹಾಗೂ 31, ಫೆಬ್ರವರಿ 1ರಂದು ಆಡಲಿದೆ. ಆ ನಂತರ ಫೆಬ್ರವರಿ 11ರಂದು ಕೊಲಂಬೊದಲ್ಲಿ ಐರ್ಲ್ಯಾಂಡ್ ತಂಡದ ವಿರುದ್ಧ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿದೆ. ಪಾಕಿಸ್ತಾನದ ವಿರುದ್ಧ ಟಿ-20 ಸರಣಿಗಾಗಿ ಆಸ್ಟ್ರೇಲಿಯ ತಂಡ ಮಿಚೆಲ್ ಮಾರ್ಷ್(ನಾಯಕ), ಶಾನ್ ಅಬೊಟ್, ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬೀಯರ್ಡ್ಮನ್, ಕೂಪರ್ ಕೊನೊಲ್ಲಿ, ಬೆನ್ ಡ್ವಾರ್ಶುಯಿಸ್, ಜಾಕ್ ಎಡ್ವರ್ಡ್ಸ್, ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚ್ ಓವೆನ್, ಜೋಶ್ ಫಿಲಿಪ್, ಮ್ಯಾಥ್ಯೂ ರೆನ್ಶಾ, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೋನಿಸ್, ಆ್ಯಡಮ್ ಝಂಪಾ. ಟಿ-20 ವಿಶ್ವಕಪ್ ಆರಂಭಿಕ ಪಂದ್ಯಕ್ಕೆ ಪ್ಯಾಟ್ ಕಮಿನ್ಸ್ ಅಲಭ್ಯ: ಬೈಲಿ ವಿಶ್ವಕಪ್ ಟೂರ್ನಿಗೆ ಪ್ಯಾಟ್ ಕಮಿನ್ಸ್, ಜೋಶ್ ಹೇಝಲ್ವುಡ್ ಹಾಗೂ ಟಿಮ್ ಡೇವಿಡ್ ಲಭ್ಯತೆ ಕುರಿತಂತೆ ಆಸ್ಟ್ರೇಲಿಯದ ಆಯ್ಕೆ ಸಮಿತಿಯ ಮುಖ್ಯಸ್ಥ ಜಾರ್ಜ್ ಬೈಲಿ ಮಾಹಿತಿ ನೀಡಿದ್ದಾರೆ. ಟೆಸ್ಟ್ ಹಾಗೂ ಏಕದಿನ ತಂಡದ ನಾಯಕ ಪ್ಯಾಟ್ ಕಮಿನ್ಸ್ ಪಂದ್ಯಾವಳಿಯ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದು, ಅಲ್ಪ ಮಟ್ಟಿನ ಗಾಯದಿಂದ ಚೇತರಿಕೆಯ ಹಾದಿಯಲ್ಲಿರುವ ಟಿಮ್ ಡೇವಿಡ್ ಲಭ್ಯ ಇರಲಿದ್ದಾರೆ ಎಂದು ಬೈಲಿ ತಿಳಿಸಿದ್ದಾರೆ. ಮುಂಬರುವ ಪಾಕಿಸ್ತಾನ ತಂಡ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಯಿಂದ ವಿಶ್ರಾಂತಿ ಪಡೆದಿರುವ ಕಮಿನ್ಸ್ ವಿಶ್ವಕಪ್ಗಾಗಿ ಶ್ರೀಲಂಕಾಕ್ಕೆ ತೆರಳುವುದಿಲ್ಲ. ಆಸ್ಟ್ರೇಲಿಯ ತಂಡವು ಫೆಬ್ರವರಿ 13ರಂದು ಝಿಂಬಾಬ್ವೆ ವಿರುದ್ಧ ಎರಡನೇ ಗ್ರೂಪ್ ಪಂದ್ಯವನ್ನು ಆಡಿದ ನಂತರವೇ ವೇಗದ ಬೌಲರ್ ಕಮಿನ್ಸ್ ತಂಡವನ್ನು ಸೇರ್ಪಡೆಯಾಗಲಿದ್ದಾರೆ. ಹೇಝಲ್ವುಡ್ ಅವರು ಪಂದ್ಯಾವಳಿಯ ಆರಂಭಿಕ ಪಂದ್ಯಕ್ಕೆ ಲಭ್ಯವಿರುವ ನಿರೀಕ್ಷೆ ಇದೆ ಎಂದು ಬೈಲಿ ಹೇಳಿದ್ದಾರೆ. ಆ್ಯಶಸ್ ಸರಣಿಯ ವೇಳೆ ಕೇವಲ ಒಂದು ಪಂದ್ಯದಲ್ಲಿ ಕಾಣಿಸಿಕೊಂಡ ನಂತರ ಕಮಿನ್ಸ್ ಸಕ್ರಿಯ ಕ್ರಿಕೆಟ್ನಿಂದ ದೂರ ಉಳಿದಿದ್ದರು. ಕಮಿನ್ಸ್ ಅವರು ಅಡಿಲೇಡ್ನಲ್ಲಿ ಆಸ್ಟ್ರೇಲಿಯ ತಂಡದ ಗೆಲುವಿಗೆ ನಿರ್ಣಾಯಕ ಪಾತ್ರವಹಿಸಿದ್ದರು. ಆಸ್ಟ್ರೇಲಿಯ ತಂಡಕ್ಕೆ ವಿಶ್ವಕಪ್ ಟೂರ್ನಿಗಾಗಿ ತನ್ನ ತಂಡವನ್ನು ಅಂತಿಮಗೊಳಿಸಲು ಜನವರಿ 31ರ ತನಕ ಸಮಯಾವಕಾಶವಿದೆ. ಪಂದ್ಯಾವಳಿಗೆ ಮೀಸಲು ಆಟಗಾರರನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ. ಟಿಮ್ ಡೇವಿಡ್ ಕಳೆದ ವಾರ ಪುನಶ್ಚೇತನ ಶಿಬಿರದಲ್ಲಿದ್ದಾಗ ಅಲ್ಪಮಟ್ಟಿನ ಗಾಯವಾಗಿತ್ತು. ಇದರಿಂದಾಗಿ ಅವರು ರನ್ನಿಂಗ್ ಸೆಶನ್ ಪೂರ್ಣಗೊಳಿಸಿರಲಿಲ್ಲ. ಸ್ಕ್ಯಾನಿಂಗ್ನಲ್ಲಿ ಯಾವುದೇ ಹಾನಿಯಾಗಿರುವುದು ಕಂಡುಬಂದಿಲ್ಲ ಎಂದು ಬೈಲಿ ಖಚಿತಪಡಿಸಿದರು. ಬಾಕ್ಸಿಂಗ್ ಡೇಯಂದು ಹೊಬರ್ಟ್ ಹ್ಯೂರಿಕೇನ್ಸ್ ಪರ ಬ್ಯಾಟಿಂಗ್ ಮಾಡುವಾಗ ಮೊಣಕಾಲು ನೋವಿಗೆ ಒಳಗಾಗಿದ್ದ ಡೇವಿಡ್ ಅವರ ಬಿಬಿಎಲ್ ಅಭಿಯಾನ ಮೊಟಕುಗೊಂಡಿತ್ತು. ಶೀಫೀಲ್ಡ್ ಶೀಲ್ಡ್ನಲ್ಲಿ ನ್ಯೂ ಸೌತ್ ವೇಲ್ಸ್ ಪರ ಬೌಲಿಂಗ್ ಮಾಡುವಾಗ ಗಾಯಗೊಂಡಿದ್ದ ಹೇಝಲ್ವುಡ್ ನವೆಂಬರ್ ಆದಿಯಿಂದ ಯಾವುದೇ ಪಂದ್ಯವನ್ನು ಆಡಿಲ್ಲ.
Udupi : ಶ್ರೀಕೃಷ್ಣಮಠಕ್ಕೆ ಬರುವ ಭಕ್ತರಿಗೆ ಹೊಸ ’ಡ್ರೆಸ್ ಕೋಡ್’ ಪದ್ದತಿ, ತಕ್ಷಣದಿಂದಲೇ ಜಾರಿ
Dress Code In Krishna Math : ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶ್ರೀರೂರು ಮಠದ ವೇದವರ್ಧನ ತೀರ್ಥರು ಪರ್ಯಾಯ ಪೀಠವನ್ನೇರಿದ ಬೆನ್ನಲ್ಲೇ, ವಸ್ತ್ರ ಸಂಹಿತೆಯನ್ನು ಜಾರಿಗೆ ತಂದಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ, ಈ ಪದ್ದತಿಯನ್ನು ಜಾರಿಗೆ ತರಲಾಗಿದೆ ಎಂದು ಮಠದ ದಿವಾನರಾದ ಡಾ.ಸರಳತ್ತಾಯ ಅವರು ಹೇಳಿದ್ದಾರೆ.
ತಮಿಳುನಾಡು ಸರಕಾರದಿಂದ ಹಿಂದಿಯೇತರ 7 ಭಾಷೆಗಳಿಗೆ ಸಾಹಿತ್ಯ ಪ್ರಶಸ್ತಿ ಘೋಷಣೆ
ಚೆನ್ನೈ: ಹಿಂದಿಯೇತರ ಭಾರತೀಯ ಭಾಷೆಗಳ ಸಾಹಿತ್ಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು 7 ಭಾಷೆಗಳಿಗೆ ವಾರ್ಷಿಕ ಹೊಸ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ಇದೇ ವೇಳೆ, ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳಲ್ಲಿ ರಾಜಕೀಯ ಹಸ್ತಕ್ಷೇಪ ನಡೆದಿದೆ ಎಂದು ಆರೋಪಿಸಿ ಅವರು ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಚೆನ್ನೈ ಅಂತಾರಾಷ್ಟ್ರೀಯ ಪುಸ್ತಕ ಮೇಳ–2026ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸ್ಟಾಲಿನ್, ಇತ್ತೀಚೆಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳ ಘೋಷಣೆಯನ್ನು ರದ್ದುಗೊಳಿಸಿರುವುದು ಅತ್ಯಂತ ನಿರಾಶಾದಾಯಕ ಬೆಳವಣಿಗೆಯಾಗಿದೆ. ಕೇಂದ್ರ ಸಂಸ್ಕೃತಿ ಸಚಿವಾಲಯದ ಹಸ್ತಕ್ಷೇಪದಿಂದಾಗಿ ಈ ಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದರು. ಕಲೆ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿಯೂ ರಾಜಕೀಯ ಹಸ್ತಕ್ಷೇಪಗಳು ಅಪಾಯಕಾರಿ ಎಂದು ಎಚ್ಚರಿಸಿದರು. ಈ ಹಿನ್ನೆಲೆಯಲ್ಲಿ, ತಮಿಳುನಾಡು ಸರಕಾರದ ಆಶ್ರಯದಲ್ಲಿ ಪ್ರತಿ ವರ್ಷ ಆಯ್ದ ಭಾರತೀಯ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಗಳಿಗೆ ‘ಸೆಮ್ಮೋಳಿ ಇಲ್ಲಕಿಯ ವಿರುದು’ (ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ) ಎಂಬ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು. ಪ್ರತಿ ಭಾಷೆಗೆ ರೂ.5 ಲಕ್ಷ ನಗದು ಬಹುಮಾನ ಇರಲಿದೆ ಎಂದು ತಿಳಿಸಿದರು. ಮೊದಲ ಹಂತದಲ್ಲಿ ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಬಂಗಾಳಿ ಹಾಗೂ ಮರಾಠಿ ಭಾಷೆಗಳಲ್ಲಿನ ಅತ್ಯುತ್ತಮ ಸಾಹಿತ್ಯ ಕೃತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಹಸ್ತಕ್ಷೇಪವಿಲ್ಲದೇ ಸ್ವತಂತ್ರ ತಜ್ಞರಿಗೆ ವಹಿಸಲಾಗುವುದು. ಪ್ರತಿ ಭಾಷೆಗೆ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದ್ದು, ಅವುಗಳಲ್ಲಿ ಖ್ಯಾತ ಬರಹಗಾರರು ಹಾಗೂ ಸಾಹಿತ್ಯ ತಜ್ಞರು ಸದಸ್ಯರಾಗಿರುತ್ತಾರೆ ಎಂದು ಹೇಳಿದರು. ತಮಿಳುನಾಡು ಸರಕಾರ 'ಪೋಷಕ ಪಾತ್ರ' ವನ್ನು ಮಾತ್ರ ನಿರ್ವಹಿಸಲಿದೆ, ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇರುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಸಾಹಿತ್ಯ ಕೃತಿಗಳ ಗುಣಮಟ್ಟ ಮತ್ತು ಪಾರದರ್ಶಕತೆಯನ್ನು ಕಾಪಾಡುವುದೇ ಸರಕಾರದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ, ತಮ್ಮ ನೇತೃತ್ವದ ದ್ರಾವಿಡ ಮಾದರಿ ಸರಕಾರ ಜ್ಞಾನವನ್ನು ಪ್ರತಿಯೊಂದು ಮನೆಗೂ ತಲುಪಿಸಲು ಹಲವು ಉಪಕ್ರಮಗಳನ್ನು ಕೈಗೊಂಡಿದ್ದು, ಪುಸ್ತಕ ಮೇಳವು ಅದರಲ್ಲೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು. ಈ ಪುಸ್ತಕ ಮೇಳದಲ್ಲಿ ಅನುವಾದ ಕೃತಿಗಳು ಹಾಗೂ ಹಕ್ಕುಸ್ವಾಮ್ಯ ವಿನಿಮಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಜಿಲ್ಲಾ ಮಾನವ ಅಭಿವೃದ್ಧಿ-2025 ವರದಿಗೆ ಸಿದ್ಧತೆ ಆರಂಭ: ಉಡುಪಿ ಡಿಸಿ ಸ್ವರೂಪ ಟಿ.ಕೆ
ಉಡುಪಿ, ಜ.19: ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಪ್ರಮುಖ ದಾಖಲೆಯಾಗಿರುವ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031ರ ವರದಿ ತಯಾರಿಗೆ ಸಿದ್ಧತೆಗಳು ಪ್ರಾರಂಭಗೊಂಡಿವೆ. ಈ ವರದಿ ಸಿದ್ಧ ಪಡಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ನಿಖರ ದತ್ತಾಂಶ ವನ್ನು ಕಾಲಮಿತಿಯೊಳಗೆ ಒದಗಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ನಿರ್ದೇಶನ ನೀಡಿದ್ದಾರೆ. ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸುವ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯ ಸಮಗ್ರ ಮಾಹಿತಿಗಳು, ದತ್ತಾಂಶಗಳು ನಿಖರವಾಗಿ, ಒಂದೇ ಕಡೆ ದೊರೆಯುವ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031ರ ವರದಿ ಅತೀ ಪ್ರಮುಖ ದಾಖಲೆಯಾಗಿರುತ್ತದೆ. ಇದರ ತಯಾರಿಯಲ್ಲಿ ಎಲ್ಲಾ ಇಲಾಖಾಧಿಕಾರಿಗಳು ಇದರ ತಯಾರಿಕೆಯ ಪ್ರಕ್ರಿಯೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸುವುದರೊಂದಿಗೆ ಗ್ರಾಮ ಪಂಚಾಯತ್ ಹಂತದಿಂದಲೇ ಮಾನವ ಅಭಿವೃದ್ಧಿಗೆ ಒತ್ತು ನೀಡುವಂತಿರಬೇಕು ಎಂದರು. ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಗಾಗಿ ಹಲವು ಅಂಶಗಳ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಶಿಕ್ಷಣ, ಆರೋಗ್ಯ, ಪೋಷಣಾಸ್ಥಿತಿ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ ಹಾಗೂ ಪರಿಸರದ ಸುಸ್ಥಿರತೆ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು ಈ ವರದಿಗಳ ಪ್ರಮುಖ ಗುರಿಯಾಗಿದೆ ಎಂದು ಸ್ವರೂಪ ಟಿ.ಕೆ. ತಿಳಿಸಿದರು. ಅಧಿಕಾರಿಗಳು, ದತ್ತಾಂಶ ಸಂಗ್ರಹ, ವಿಶ್ಲೇಷಣೆ, ಇಲಾಖಾವಾರು ಸಹಕಾರದೊಂದಿಗೆ ಎಲ್ಲಾ ಮಾಹಿತಿಗಳನ್ನು ಸಂಬಂಧಿತರಿಗೆ ಒದಗಿಸಬೇಕು. ಜಿಲ್ಲೆಯ ಸಮಗ್ರ ಹಾಗೂ ಸಮತೋಲನೆಯ ಅಭಿವೃದ್ಧಿಗೆ ಇಲಾಖೆಗಳ ನಡುವೆ ಪರಸ್ಪರ ಸಮನ್ವಯತೆಯ ಅಗತ್ಯವಿದೆ ಎಂದವರು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿ ನೀಡುವಾಗ ಎಲ್ಲಾ ಇಲಾಖೆಗಳು ಸಂಬಂಧಪಟ್ಟ ಮಾಹಿತಿಯೊಂದಿಗೆ ಭಾಗವಹಿಸಬೇಕು. ಇದರೊಂದಿಗೆ ಫೀಡ್ಬ್ಯಾಕ್ಗಳನ್ನು ಸಹ ನೀಡಬೇಕು ಎಂದರು. ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಇತ್ತೀಚೆಗೆ ಹೆಚ್ಚಿನ ಬೇಡಿಕೆ ಇದ್ದು, ಇದು ಭವಿಷ್ಯದ ಯೋಜನೆಗಳನ್ನು ರೂಪಿಸಲು ರೆಫರ್ ಮಾಡಬಹುದಾಗಿದೆ. ಈ ಸಾಲಿನ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಭಿನ್ನವಾಗಿದ್ದು, ಸುಸ್ಥಿರ ಅಭಿವೃದ್ಧಿ ಬೆಳವಣಿಗೆ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಜನಸಾಮಾನ್ಯರಿಗೆ ಅವರ ಕೈಗೆಟುವ ಹಾಗೆ ಹೆಚ್ಚಿನ ಆಯ್ಕೆಗಳಿದ್ದಲ್ಲಿ ಮಾನವ ಅಭಿವೃದ್ಧಿ ಸಾಧ್ಯವಾಗಲಿದೆ. ಶಿಕ್ಷಣ, ಆರೋಗ್ಯ ವಿಷಯಗಳಲ್ಲಿ ಜನರ ಜೀವನ ಮಟ್ಟದ ಮೇಲೆ ಅಭಿವೃದ್ಧಿಯ ಅಂಶಗಳು ಆಧಾರಿತವಾಗಿವೆ ಎಂದು ಪ್ರತೀಕ್ ಬಾಯಲ್ ನುಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಜಂಟಿ ನಿರ್ದೇಶಕ (ನಿವೃತ್ತ) ಶ್ರೀನಿವಾಸ್ ರಾವ್ ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಅತ್ಯಂತ ಮಹತ್ವದ ಮೌಲ್ಯವಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅಚ್ಚುಕಟ್ಟಾಗಿ ಸ್ಪಷ್ಟ ಮಾಹಿತಿ ನೀಡಿದಲ್ಲಿ ಇದು ಜಿಲ್ಲೆಯು ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಯೋಜನೆ ರೂಪಿಸುವಾಗ ಎದುರಾಗುವ ಸಮಸ್ಯೆಗಳನ್ನು ಸಹ ತಿಳಿಸಬಹುದು. ಹೊಸ ನೂತನ ಯೋಜನೆಗಳನ್ನೂ ಸಹ ಗುರುತಿಸಿ, ಮಾಹಿತಿ ನೀಡಬಹುದು. ಜೊತೆಗೆ ವರದಿಯೊಂದಿಗೆ ಜನರನ್ನು ಆರ್ಕಸುವಂತಹ ಸ್ಥಳೀಯ ಕಲೆ, ಸಂಸ್ಕೃತಿ, ವೇಷಭೂಷಣಗಳನ್ನು ಒಳಗೊಂಡ ಛಾಯಾಚಿತ್ರಗಳನ್ನು ನೀಡಿದ್ದಲ್ಲಿ ವರದಿಗೆ ಹೆಚ್ಚಿನ ಮಹತ್ವ ದೊರೆಯಲಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ಕುಮಾರ್, ಯೋಜನೆಯ ಅನುಷ್ಠಾನಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹರಪನಹಳ್ಳಿ | ಗೋಕಟ್ಟೆಯಲ್ಲಿ ಈಜಲು ಹೋದ ಬಾಲಕ ಮೃತ್ಯು
ಹರಪನಹಳ್ಳಿ: ತಾಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ಭಾನುವಾರ ಗೋಕಟ್ಟೆಗೆ ಈಜಲು ಹೋದ 11 ವರ್ಷದ ಬಾಲಕನೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಾಗಿಮಸಲವಾಡ ಗ್ರಾಮದ ನಿವಾಸಿ ಸಿದ್ದಾರ್ಥ (11) ಮೃತಪಟ್ಟ ಬಾಲಕ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಗ್ರಾಮದ ಹೊರವಲಯದಲ್ಲಿರುವ ಗೋಕಟ್ಟೆಗೆ ಈಜಲು ಹೋದ ವೇಳೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸಿದ್ದಾರ್ಥನ ಜೊತೆಗಿದ್ದ ಇನ್ನುಳಿದ ಇಬ್ಬರು ಬಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹಲುವಾಗಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೊಬೆಲ್ ಶಾಂತಿ ಪ್ರಶಸ್ತಿ ಸಿಗದಿರುವುದಕ್ಕೆ ಪ್ರತೀಕಾರವಾಗಿ ಗ್ರೀನ್ಲ್ಯಾಂಡ್ ವಶಕ್ಕೆ ಮುಂದಾದ ಟ್ರಂಪ್!
ವಾಶಿಂಗ್ಟನ್: ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗದಿರುವುದಕ್ಕೆ ಪ್ರತೀಕಾರವಾಗಿ ಗ್ರೀನ್ಲ್ಯಾಂಡ್ ವಶಪಡಿಸಿಕೊಳ್ಳಲು ಮುಂದಾಗಿದ್ದೇನೆ ಎಂದು ನಾರ್ವೆ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಅವರಿಗೆ ಬರೆದ ಪತ್ರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ‘‘ಎಂಟಕ್ಕಿಂತಲೂ ಹೆಚ್ಚಿನ ಯುದ್ಧಗಳನ್ನು ನಾನು ನಿಲ್ಲಿಸಿದ್ದೇನೆ. ಆದರೂ ನಿಮ್ಮ ದೇಶ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ನಿರಾಕರಿಸಿದೆ. ಹಾಗಾಗಿ, ಸಂಪೂರ್ಣವಾಗಿ ಶಾಂತಿಯ ಬಗ್ಗೆ ಯೋಚಿಸಬೇಕಾದ ಯಾವ ಬದ್ಧತೆಯೂ ಈಗ ನನಗಿಲ್ಲ’’ ಎಂಬುದಾಗಿ ಟ್ರಂಪ್ ತನ್ನ ಪತ್ರದಲ್ಲಿ ಬರೆದಿದ್ದಾರೆ ಎಂದು ‘ಬ್ಲೂಮ್ಬರ್ಗ್’ ವರದಿ ಮಾಡಿದೆ. ‘‘ಅಮೆರಿಕಕ್ಕೆ ಯಾವುದು ಉತ್ತಮ ಮತ್ತು ಸರಿ ಎನ್ನುವುದನ್ನು ಯೋಚಿಸುವುದು ಯಾವತ್ತೂ ನಮ್ಮ ಆದ್ಯತೆಯಾಗಿದೆಯಾದರೂ, ಈಗ ನಾನು ಅದರ ಬಗ್ಗೆ ಯೋಚಿಸಬಹುದಾಗಿದೆ’’ ಎಂದು ಟ್ರಂಪ್ ತನ್ನ ಪತ್ರದಲ್ಲಿ ಹೇಳಿದ್ದಾರೆ. ‘‘ಗ್ರೀನ್ಲ್ಯಾಂಡ್ ಮೇಲೆ ಸಂಪೂರ್ಣ ನಿಯಂತ್ರಣವನ್ನು ನಾವು ಹೊಂದದ ಹೊರತು ಜಗತ್ತು ಸುರಕ್ಷಿತವಲ್ಲ’’ ಎಂದು ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ. ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡುವುದು ನಾರ್ವೆ ಸರಕಾರವಲ್ಲ. ಸ್ವತಂತ್ರ ಸಮಿತಿಯೊಂದು ಅದನ್ನು ನೀಡುತ್ತಿದೆ. ‘‘ನೊಬೆಲ್ ಶಾಂತಿ ಪ್ರಶಸ್ತಿಯ ವಿಷಯದಲ್ಲಿ, ಎಲ್ಲರಿಗೂ ಗೊತ್ತಿರುವ ಸಂಗತಿಯನ್ನು ನಾನು ಟ್ರಂಪ್ಗೆ ಹಲವು ಬಾರಿ ಸ್ಪಷ್ಟವಾಗಿ ವಿವರಿಸಿದ್ದೇನೆ. ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡುವುದು ಒಂದು ಸ್ವತಂತ್ರ ಸಮಿತಿಯೇ ಹೊರತು ನಾರ್ವೆ ಸರಕಾರವಲ್ಲ’’ ಎಂದು ಬ್ಲೂಮ್ಬರ್ಗ್ಗೆ ನೀಡಿರುವ ಹೇಳಿಕೆಯೊಂದರಲ್ಲಿ ನಾರ್ವೆ ಅಧ್ಯಕ್ಷ ಸ್ಟೋರ್ ಹೇಳಿದ್ದಾರೆ.
ಇದು AI ವಿಡಿಯೋ, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ: ರಾಸಲೀಲೆ ಆರೋಪ ಕುರಿತು ಡಿಜಿಪಿ ರಾಮಚಂದ್ರರಾವ್ ಪ್ರತಿಕ್ರಿಯೆ
ಗೃಹ ಇಲಾಖೆಗೆ ವರದಿ ಕೇಳಿದ ಸಿಎಂ!
ಬೀದರ್ | ಯುವಕನಿಂದ ಕಿರಕುಳ ಆರೋಪ : ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆ
ಬೀದರ್ (ಭಾಲ್ಕಿ): ಯುವಕನೊಬ್ಬನ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತು ಹದಿನೈದು ವರ್ಷದ ಬಾಲಕಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲೂಕಿನ ಲಾಧಾ ಗ್ರಾಮದಲ್ಲಿ ಸೋಮವಾರ ನಡೆದಿದೆ. ಭಾಲ್ಕಿ ತಾಲೂಕಿನ ಲಾಧಾ ಗ್ರಾಮದ ನಿವಾಸಿ ಭಾಗ್ಯಲಕ್ಷ್ಮಿ (15) ಮೃತಪಟ್ಟ ಬಾಲಕಿ ಹಾಗೂ ಇದೇ ಗ್ರಾಮದ ನಿವಾಸಿ ಕೃಷ್ಣ (23) ಎಂಬ ಯುವಕನೇ ಬಾಲಕಿಯ ಸಾವಿಗೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಆರೋಪಿ ಕೃಷ್ಣ ಬಾಲಕಿಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ. ಈ ವಿಷಯವನ್ನು ಬಾಲಕಿ ಮನೆಯಲ್ಲಿ ತಿಳಿಸಿದಾಗ, ಪೋಷಕರು ಯುವಕನಿಗೆ ಬುದ್ಧಿವಾದ ಹೇಳಿದ್ದರು. ಆಗ ಆತ ಕಿರುಕುಳ ನೀಡುವುದಿಲ್ಲ ಎಂದು ಒಪ್ಪಿಕೊಂಡಿದ್ದರೂ, ತನ್ನ ಚಾಳಿ ಮುಂದುವರಿಸಿದ್ದನು. ಬಾಲಕಿಯ ಮೊಬೈಲ್ಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದನು ಎಂದು ತಿಳಿದು ಬಂದಿದೆ. ಯುವಕನ ಈ ವರ್ತನೆಯಿಂದ ತೀವ್ರ ಮನನೊಂದಿದ್ದ ಬಾಲಕಿ ಭಾನುವಾರ (ಜ. 18) ಮನೆಯಿಂದ ಹೊರಹೋಗಿದ್ದಳು. ಗ್ರಾಮದಲ್ಲಿ ಜಾತ್ರೆ ನಡೆಯುತ್ತಿದ್ದರಿಂದ ಬಾಲಕಿ ಅಲ್ಲಿಗೆ ಹೋಗಿರಬಹುದೆಂದು ಕುಟುಂಬಸ್ಥರು ಹುಡುಕಾಡಿದ್ದಾರೆ. ಆದರೆ ಸೋಮವಾರ ಬೆಳಿಗ್ಗೆ ಗ್ರಾಮದ ಬಾವಿಯೊಂದರಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ನನ್ನ ಮಗಳ ಸಾವಿಗೆ ಯುವಕ ಕೃಷ್ಣನೇ ನೇರ ಕಾರಣ. ಆತನ ವಿರುದ್ಧ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೃತ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮೆಹಕರ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಎರಡು ಮದುವೆ, ಖ್ಯಾತ ನಟಿಯ ಮಲತಂದೆ, ಡಿಜಿಪಿ ರಾಮಚಂದ್ರ ರಾವ್ ಹಿನ್ನೆಲೆ, ಹಿಂದಿನ ವಿವಾದಗಳೇನು?
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರರಾವ್ ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆ ಸರಸವಾಡಿದ್ದಾರೆ ಎನ್ನಲಾದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಈ ರಾಸಲೀಲೆಯ ವಿಡಿಯೋ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿರುವ ಕೆ.ರಾಮಚಂದ್ರ ರಾವ್ ಅವರ ಕೌಟುಂಬಿಕ ಹಿನ್ನೆಲೆ, ಈ ಹಿಂದಿನ ವಿವಾದಗಳು ಕೂಡ ಚರ್ಚೆಗೆ ಬಂದಿವೆ. ರಾಮಚಂದ್ರ ರಾವ್ ಅವರಿಗೆ ಎರಡು
ಬ್ರಸೆಲ್ಸ್: ಗ್ರೀನ್ಲ್ಯಾಂಡ್ ವಶಪಡಿಸಿಕೊಳ್ಳುವ ತನ್ನ ಯೋಜನೆಯನ್ನು ವಿರೋಧಿಸುವ ದೇಶಗಳ ಮೇಲೆ ಹೆಚ್ಚುವರಿ ಸುಂಕಗಳನ್ನು ವಿಧಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆಯನ್ನು ಯುರೋಪಿಯನ್ ದೇಶಗಳ ನಾಯಕರು ಖಂಡಿಸಿದ್ದಾರೆ. ಅಮೆರಿಕ ಅಧ್ಯಕ್ಷರ ಈ ಕ್ರಮವು ಅಟ್ಲಾಂಟಿಕ್ ಸಾಗರದ ಆಚೆಗಿನ ದೇಶಗಳ ನಡುವಿನ ಸಂಬಂಧವನ್ನು ಅಪಾಯಕಾರಿ ಕೆಳಮಟ್ಟಕ್ಕೆ ಒಯ್ಯುವ ಅಪಾಯವನ್ನು ಒಡ್ಡಿದೆ ಎಂಬುದಾಗಿ ಎಚ್ಚರಿಸಿದ್ದಾರೆ. ಟ್ರಂಪ್ ಅವರ ಸುಂಕ ಬೆದರಿಕೆಯನ್ನು ಎದುರಿಸುತ್ತಿರುವ ಎಂಟು ಯುರೋಪಿಯನ್ ದೇಶಗಳು ರವಿವಾರ ಜಂಟಿ ಹೇಳಿಕೆಯೊಂದನ್ನು ನೀಡಿ, ತಾವು ಡೆನ್ಮಾರ್ಕ್ ಮತ್ತು ಡೆನ್ಮಾರ್ಕ್ ಅರೆ-ಸ್ವಾಯತ್ತ ಭೂಭಾಗ ಗ್ರೀನ್ಲ್ಯಾಂಡ್ನ ಜನತೆಯೊಂದಿಗೆ ದೃಢವಾಗಿ ನಿಲ್ಲುವುದಾಗಿ ಘೋಷಿಸಿವೆ. ‘‘ಕಳೆದ ವಾರ ಆರಂಭಗೊಂಡಿರುವ ಮಾತುಕತೆ ಪ್ರಕ್ರಿಯೆಯನ್ನು ಮುಂದಕ್ಕೆ ಒಯ್ಯಲು ನಾವು ನಿರ್ಧರಿಸಿದ್ದೇವೆ. ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯ ತತ್ವಗಳ ಆಧಾರದಲ್ಲಿ ಮಾತುಕತೆಯಲ್ಲಿ ತೊಡಗಲು ನಾವು ಸಿದ್ಧರಿದ್ದೇವೆ’’ ಎಂದು ಡೆನ್ಮಾರ್ಕ್, ಫಿನ್ಲ್ಯಾಂಡ್, ಫ್ರಾನ್ಸ್, ಜರ್ಮನಿ, ನೆದರ್ಲ್ಯಾಂಡ್ಸ್, ನಾರ್ವೆ, ಸ್ವೀಡನ್ ಮತ್ತು ಬ್ರಿಟನ್ ಹೇಳಿಕೆಯಲ್ಲಿ ತಿಳಿಸಿವೆ. ‘‘ಹೆಚ್ಚುವರಿ ಸುಂಕದ ಬೆದರಿಕೆಗಳು ಅಟ್ಲಾಂಟಿಕ್ ದೇಶಗಳ ನಡುವಿನ ಸಂಬಂಧವನ್ನು ದುರ್ಬಲಗೊಳಿಸುತ್ತವೆ ಹಾಗೂ ಅಪಾಯಕಾರಿ ಎನಿಸುವಷ್ಟು ಕೆಳಮಟ್ಟಕ್ಕೆ ತಳ್ಳುವ ಅಪಾಯವನ್ನು ಒಡ್ಡಿವೆ. ಒಗ್ಟಟ್ಟಿನ ಮತ್ತು ಸಮನ್ವಯದ ಪ್ರತಿಕ್ರಿಯೆ ನೀಡುವುದನ್ನು ನಾವು ಮುಂದುವರಿಸುತ್ತೇವೆ. ನಮ್ಮ ಸಾರ್ವಭೌಮತೆಯನ್ನು ಎತ್ತಿಹಿಡಿಯುವುದಕ್ಕೆ ನಾವು ಬದ್ಧರಾಗಿದ್ದೇವೆ’’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಗ್ರೀನ್ಲ್ಯಾಂಡ್ನ ಭವಿಷ್ಯಕ್ಕೆ ಸಂಬಂಧಿಸಿ ಟ್ರಂಪ್ ಹೆಚ್ಚುತ್ತಿರುವ ಒತ್ತಡಕ್ಕೆ ಸರ್ವಾನುಮತದ ಪ್ರತಿಕ್ರಿಯೆಯೊಂದನ್ನು ರೂಪಿಸಲು ಯುರೋಪಿಯನ್ ದೇಶಗಳು ತುರ್ತು ಮಾತುಕತೆಗೆ ಸಿದ್ಧತೆ ನಡೆಸುತ್ತಿರುವಂತೆಯೇ ಆ ದೇಶಗಳು ಈ ಕಠಿಣ ಎಚ್ಚರಿಕೆಯನ್ನು ನೀಡಿವೆ. ರಾಷ್ಟ್ರೀಯ ಸಾರ್ವಭೌಮತೆಯನ್ನು ಎತ್ತಿಹಿಡಿಯಲು ಮತ್ತು ಯಾವುದೇ ರೀತಿಯ ಬಲವಂತದ ವಿರುದ್ಧ ನಮ್ಮನ್ನು ರಕ್ಷಿಸಿಕೊಳ್ಳಲು ಐರೋಪ್ಯ ಒಕ್ಕೂಟವು ಒಗ್ಗಟ್ಟಿನಿಂದಿದೆ ಎಂದು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟ ರವಿವಾರ ಹೇಳಿದರು. ಟ್ರಂಪ್ ಆರ್ಥಿಕ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಹಲವು ಆಯ್ಕೆಗಳ ಬಗ್ಗೆ ಚರ್ಚಿಸಲು ಐರೋಪ್ಯ ಒಕ್ಕೂಟದ ದೇಶಗಳು ಸಭೆ ನಡೆಸಲಿವೆ ಎಂಬುದಾಗಿ ನಿರೀಕ್ಷಿಸಲಾಗಿದೆ. ಪ್ರತೀಕಾರದ ಸುಂಕಗಳು ಮತ್ತು ಅಮೆರಿಕದ ಕಂಪೆನಿಗಳಿಗೆ ಮಾರುಕಟ್ಟೆ ನಿರ್ಬಂಧಿಸುವುದು ಈ ಆಯ್ಕೆಗಳಲ್ಲಿ ಸೇರಿವೆ. ಈ ಎಂಟು ದೇಶಗಳಿಗೆ ಫೆಬ್ರವರಿ ಒಂದರಿಂದ 10 ಶೇಕಡ ಸುಂಕ ವಿಧಿಸಲಾಗುವುದು ಎಂಬುದಾಗಿ ಟ್ರಂಪ್ ಶನಿವಾರ ಘೋಷಿಸಿದ್ದಾರೆ. ಬಳಿಕ, ಜೂನ್ ಒಂದರಿಂದ ಅದನ್ನು 25 ಶೇಕಡಕ್ಕೆ ಹೆಚ್ಚಿಸಲಾಗುವುದು. ಅಮೆರಿಕಕ್ಕೆ ಗ್ರೀನ್ಲ್ಯಾಂಡ್ ಖರೀದಿಸಲು ಅವಕಾಶ ನೀಡುವ ಒಪ್ಪಂದವೊಂದು ಸಿದ್ಧಗೊಳ್ಳುವವರೆಗೆ ಈ ಸುಂಕ ಮುಂದುವರಿಯುವುದು ಎಂದು ಟ್ರಂಪ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರತಿಭಟನೆ ನಡೆಸಿದವು. ಹರಿಹರ ಶಾಸಕ ಬಿ.ಪಿ. ಹರೀಶ್ ಮೇಲೆ ಪೊಲೀಸರು ಜಾತಿ ನಿಂದನೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು ಆರೋಪಿಸಿದರು. ಸಚಿವರ ಸೂಚನೆ ಮೇರೆಗೆ ಪೊಲೀಸರು ಕೆಲಸ ಮಾಡುತ್ತಿದ್ದು, ಶಾಸಕರನ್ನು ರಾಜಕೀಯವಾಗಿ ಹತ್ತಿಕ್ಕುವ ದುರುದ್ದೇಶ ಇದರ ಹಿಂದಿದೆ ಎಂದು ದೂರಿದರು. ಮಟ್ಕಾ, ಇಸ್ಪೀಟ್, ಡ್ರಗ್ಸ್ ದಂಧೆ ವ್ಯಾಪಕವಾಗಿದೆ ಎಂದು ಆರೋಪಿಸಿದರು. ಶಾಸಕ ಬಿಪಿ ಹರೀಶ್ ಮೇಲೆ ಹಾಕಿರುವ ಸುಳ್ಳು ಕೇಸು ಕೂಡಲೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಯಾದಗಿರಿ | ಯುವಜನತೆ ಸ್ವತಂತ್ರ ಆಲೋಚನೆ, ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಲಿ: ಡಾ.ಜಿ.ಶಶಿಕುಮಾರ್
ಯಾದಗಿರಿ: ದೇಶದ ಯುವಜನತೆ ಸ್ವತಂತ್ರವಾಗಿ ಆಲೋಚಿಸುವ ಹಾಗೂ ಸಮಾಜದಲ್ಲಿನ ತಪ್ಪುಗಳನ್ನು ಪ್ರಶ್ನಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಎಐಡಿವೈಓ (AIDYO) ಅಖಿಲ ಭಾರತ ಉಪಾಧ್ಯಕ್ಷರಾದ ಡಾ.ಜಿ.ಶಶಿಕುಮಾರ್ ಅವರು ಕರೆ ನೀಡಿದರು. ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಭಾನುವಾರ (ಜ.18) ಎಐಡಿವೈಓ 60ನೇ ಸಂಸ್ಥಾಪನಾ ವರ್ಷಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನರ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ, ‘ತಾರುಣ್ಯದ ತಲ್ಲಣಗಳು: ಬಗೆಹರಿಸಿಕೊಳ್ಳುವ ಬಗೆ’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಭಾರತದಲ್ಲಿ ಇಂದು 60 ಕೋಟಿಗೂ ಅಧಿಕ ಯುವಜನರಿದ್ದಾರೆ. ಆದರೆ, ಈ ಬೃಹತ್ ಮಾನವ ಶಕ್ತಿಯನ್ನು ಸಮಾಜದ ಪ್ರಗತಿಗೆ ಬಳಸಿಕೊಳ್ಳುವಲ್ಲಿ ಆಳುವ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಯುವಜನರನ್ನು ಕುಡಿತ, ಮಾದಕ ವ್ಯಸನ ಹಾಗೂ ಅಶ್ಲೀಲ ಸಾಹಿತ್ಯದತ್ತ ತಳ್ಳಲಾಗುತ್ತಿದೆ. ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಜಾತಿ-ಕೋಮು ಆಧಾರದಲ್ಲಿ ಯುವಕರನ್ನು ವಿಭಜಿಸುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಸಮಾಜದಲ್ಲಿನ ಅನ್ಯಾಯ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಬೇಕು ಎಂದು ಕರೆ ನೀಡಿದ ಅವರು, ಯೌವನದ ಭಾವನೆಗಳನ್ನು ಪ್ರಬುದ್ಧತೆಯಿಂದ ನಿರ್ವಹಿಸಬೇಕು. ಪ್ರೀತಿ-ಪ್ರೇಮವು ಕೇವಲ ಆಕರ್ಷಣೆಯಾಗಿರದೆ, ಪರಸ್ಪರ ಗೌರವ ಹಾಗೂ ಘನತೆಯಿಂದ ಕೂಡಿರಬೇಕು. ನಿರಂತರ ಅಧ್ಯಯನದ ಮೂಲಕ ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಐಡಿವೈಓ ರಾಜ್ಯ ಅಧ್ಯಕ್ಷ ಶರಣಪ್ಪ ಉದ್ಬಾಳ್ ಅವರು ‘ಕ್ರಾಂತಿಕಾರಿಗಳು ಕಂಡ ಕನಸಿನ ಭಾರತ’ ವಿಷಯದ ಕುರಿತು ಮಾತನಾಡಿ, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ ಆಜಾದ್ ಸೇರಿದಂತೆ ಅನೇಕ ಕ್ರಾಂತಿಕಾರಿಗಳು ಶೋಷಣಾರಹಿತ ಸಮಾಜದ ಕನಸು ಕಂಡಿದ್ದರು. ಆ ಕನಸನ್ನು ನನಸಾಗಿಸಲು ಯುವಜನರು ಸಂಘಟಿತರಾಗಬೇಕು ಎಂದರು. ಸಂಘಟನೆಯ ರಾಜ್ಯ ಉಪಾಧ್ಯಕ್ಷ ಚನ್ನಬಸವ ಜಾನೇಕಲ್ ಮಾತನಾಡಿದರು. ಸ್ಥಳೀಯ ಸದಸ್ಯರಾದ ಎಂ.ಎಸ್.ಕೋಟಗೇರಾ, ಮಲ್ಲು ರಾಂಪುರ, ವೆಂಕಟೇಶ್ ಕೆ., ಮಲ್ಲೇಶ್ ಕೊಂಕಲ್, ಮಾರುತಿ, ರಮೇಶ್, ನರಸಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ʼಕಾಫಿ ಡೇʼ ಸಿಇಒ ಮಾಳವಿಕಾ ಹೆಗ್ಡೆ ವಿರುದ್ಧದ ಫೆಮಾ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು: ಮಾರಿಷಸ್ ದೇಶದ ವಿವಿಧ ಕಂಪನಿಗಳಿಂದ ಪಡೆದಿರುವ 960 ಕೋಟಿ ರೂ. ಹೂಡಿಕೆ ಹಣವನ್ನು ಭಾರತದ ಕಂಪನಿಗಳಲ್ಲಿ ಷೇರು ಖರೀದಿಸಲು ವಿನಿಯೋಗಿಸಿದ ಆರೋಪ ಪ್ರಕರಣದಲ್ಲಿ 'ಕಾಫಿ ಡೇ ಎಂಟರ್ಪ್ರೈಸಸ್ ಲಿಮಿಟೆಡ್' (ಸಿಡಿಇಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾಳವಿಕಾ ಹೆಗ್ಡೆ ಅವರಿಗೆ ಜಾರಿ ನಿರ್ದೇಶನಾಲಯ (ಈಡಿ) ನೀಡಿರುವ ಶೋಕಾಸ್ ನೋಟಿಸ್ಗೆ ಹೈಕೋರ್ಟ್ ತಡೆ ನೀಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿ 2022ರ ನವೆಂಬರ್ 3ರ ದೂರು ಮತ್ತು ನವೆಂಬರ್ 23ರಂದು ಜಾರಿ ಮಾಡಿರುವ ಶೋಕಾಸ್ ನೋಟಿಸ್ ರದ್ದು ಕೋರಿ ಮಾಳವಿಕಾ ಹೆಗ್ಡೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಅರ್ಜಿದಾರರ ಪತಿ ಸಿದ್ಧಾರ್ಥ ಅವರು 2019ರಲ್ಲಿ ನಿಧನರಾಗಿದ್ದು, ಅವರ ವಾರಸುದಾರರು ಎಂದು ಮಾಳವಿಕಾಗೆ ಫೆಮಾ ಸೆಕ್ಷನ್ 16ರ ಅಡಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಮೃತಪಟ್ಟಿರುವವರ ವಿರುದ್ಧದ ಪ್ರಕರಣವನ್ನು ಅವರ ವಾರಸುದಾರರ ವಿರುದ್ಧ ಮುಂದುವರಿಸಲು ಕಾನೂನಿನ ಅಡಿ ಅವಕಾಶವಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದಾರೆ. ಈ ವಾದವನ್ನು ಆಲಿಸಿ ಅರ್ಜಿದಾರರಿಗೆ ಸೀಮಿತವಾಗಿ 2022ರ ನವೆಂವರ್ 23ರ ಶೋಕಾಸ್ ನೋಟಿಸ್ ಮತ್ತು ಅದರಡಿಯ ಮುಂದಿನ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಎಂದು ನ್ಯಾಯಾಲಯ ಮಧ್ಯಂತರ ಆದೇಶ ಮಾಡಿತು. ಇದಕ್ಕೂ ಮುನ್ನ ಮಾಳವಿಕಾ ಪರ ಹಿರಿಯ ವಕೀಲ ಸಜನ್ ಪೂವಯ್ಯ ವಾದ ಮಂಡಿಸಿ, ಕೆಫೆ ಕಾಫಿ ಡೇ ಅನ್ನು ವಿ.ಜಿ. ಸಿದ್ಧಾರ್ಥ ಅವರು ಆರಂಭಿಸಿ, ಮುನ್ನಡೆಸುತ್ತಿದ್ದರು. 2010ರಲ್ಲಿ ಕಂಪನಿಯಲ್ಲಿ ವಿದೇಶಿ ಹೂಡಿಕೆ ನಡೆದಿತ್ತು. ಈ ಸಂಬಂಧ 2022ರ ನವೆಂಬರ್ 3ರಂದು ಇಡಿ ದೂರು ದಾಖಲಿಸುವ ವೇಳೆಗೆ ಸಿದ್ಧಾರ್ಥ ಅವರು ನಿಧನರಾಗಿದ್ದರು. ಸಿದ್ಧಾರ್ಥ ಅವರ ವಾರಸುದಾರರು ಎಂದು ಮಾಳವಿಕಾ ವಿರುದ್ಧ ದೂರು ದಾಖಲಿಸಲಾಗದು ಎಂದರು. ಕಂಪನಿಯ ವಿರುದ್ಧ ದೂರು ಇದ್ದು, ಸಿದ್ಧಾರ್ಥ ಅವರ ಪತ್ನಿ ಹಾಗೂ ವಾರಸುದಾರೆ ಎಂದು ಅವರನ್ನೂ ಎಳೆದು ತರಲಾಗಿದೆ. ಆರೋಪಿತ ಅಕ್ರಮ ನಡೆದ ಸಂದರ್ಭದಲ್ಲಿ ಸಿದ್ಧಾರ್ಥ ಅವರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದರು. ಫೆಮಾ ಸೆಕ್ಷನ್ 43ರ ಅಡಿ ಸಿದ್ಧಾರ್ಥ ಅವರ ವಿರುದ್ಧ ಕ್ರಮ ಜರುಗಿಸಬಹುದಿತ್ತು. ಸಿದ್ಧಾರ್ಥ ಅವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಪ್ರಕ್ರಿಯೆ ನಡೆಸಲಾಗದು ಎಂದರು. ಸಿದ್ಧಾರ್ಥ ಅವರ ವಾರಸುದಾರರಾಗಿ ಬಂದು ಪ್ರತಿಕ್ರಿಯಿಸಬೇಕು ಎಂದು 2010ರಲ್ಲಿ ನಡೆದಿದೆ ಎನ್ನಲಾದ ಆರೋಪಕ್ಕೆ ಮಾಳವಿಕಾಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಇದರ ಬಗ್ಗೆ ಮಾಳವಿಕಾಗೆ ಏನು ಗೊತ್ತಿದೆ? ಈ ಪ್ರಕ್ರಿಯೆಯನ್ನು ಮಾಳವಿಕಾ ಎದುರಿಸಬೇಕು ಎನ್ನಲಾಗದು. ಆದ್ದರಿಂದ, ಶೋಕಾಸ್ ನೋಟಿಸ್ಗೆ ತಡೆ ನೀಡಬೇಕು ಎಂದು ಕೋರಿದರು. ಪ್ರಕರಣವೇನು? 2010ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಮಾರಿಷಸ್ನ ಸ್ಟ್ಯಾಂಡರ್ಡ್ ಚಾರ್ಟರ್ಡ್ ಪ್ರೈವೇಟ್ ಈಕ್ವಿಟಿ, ಕೆಕೆಆರ್ ಮಾರಿಷಸ್ ಪಿಇ ಇನ್ವೆಸ್ಟ್ಮೆಂಟ್, ಅರ್ಡ್ಯೋನೊ ಹೋಲ್ಡಿಂಗ್ಸ್ ಲಿಮಿಟೆಡ್ ಮತ್ತು ಎನ್ಎಸ್ಆರ್ ಪಿಇ ಮಾರಿಷಸ್ ಎಲ್ಎಲ್ಸಿಯಿಂದ ಒಟ್ಟಾರೆ 960 ಕೋಟಿ ರೂ. ವಿದೇಶಿ ನೇರ ಹೂಡಿಕೆಯ ಹಣವನ್ನು ಸಿಡಿಇಎಲ್ ಪಡೆದಿತ್ತು. ಇದನ್ನು ಭಾರತದ ಬೇರೆ ಕಂಪನಿಗಳಲ್ಲಿ ಷೇರು ಖರೀದಿಸಲು ಬಳಕೆ ಮಾಡಿದೆ ಎಂದು ಈಡಿ ಆರೋಪಿಸಿದೆ. ಹಣ ವರ್ಗಾವಣೆ ನಡೆದು 12 ವರ್ಷಗಳ ಬಳಿಕ ದೂರು ದಾಖಲಿಸಿರುವ ಇಡಿ, ಮಾಳವಿಕಾ ಅವರಿಗೆ ಶೋಕಾಸ್ ನೋಟಿಸ್ ಮತ್ತು ನೋಟಿಸ್ಗಳನ್ನು ಜಾರಿ ಮಾಡಿದೆ. ಇದನ್ನು ಮಾಳವಿಕಾ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ.
ಸಂಸತ್ತು ವಿಸರ್ಜಿಸಿ ಮಧ್ಯಂತರ ಚುನಾವಣೆಗೆ ಕರೆ ನೀಡಿದ ಜಪಾನ್ ಪ್ರಧಾನಿ
ಟೋಕಿಯೊ: ತಾನು ಶುಕ್ರವಾರ ಸಂಸತ್ತನ್ನು ವಿಸರ್ಜಿಸುತ್ತೇನೆ ಹಾಗೂ ತನ್ನ ವೆಚ್ಚ ಯೋಜನೆಗಳು ಮತ್ತು ಇತರ ನೀತಿಗಳಿಗೆ ಜನರ ಬೆಂಬಲವನ್ನು ಕೋರಿ ಮಧ್ಯಂತರ ಚುನಾವಣೆಗೆ ಕರೆ ನೀಡುತ್ತೇನೆ ಎಂದು ಜಪಾನ್ ಪ್ರಧಾನಿ ಸನಯೆ ಟಕಯೀಚಿ ಸೋಮವಾರ ಘೋಷಿಸಿದ್ದಾರೆ. ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಅವರು ಅಧಿಕಾರ ವಹಿಸಿಕೊಂಡ ಕೇವಲ ಮೂರು ತಿಂಗಳುಗಳಲ್ಲಿ ಮಧ್ಯಂತರ ಚುನಾವಣೆಯ ಘೋಷಣೆಯಾಗಿದೆ. ‘‘ಜನವರಿ 23ರಂದು ಕೆಳಮನೆಯನ್ನು ವಿಸರ್ಜಿಸುವುದಾಗಿ ಇಂದು ಪ್ರಧಾನಿಯಾಗಿ ನಾನು ನಿರ್ಧರಿಸಿದ್ದೇನೆ’’ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟಕಯೀಚಿ ಹೇಳಿದರು. ಸಂಸತ್ನ ಕೆಳಮನೆಯ ಎಲ್ಲಾ 465 ಸ್ಥಾನಗಳಿಗೆ ಫೆಬ್ರವರಿ 8ರಂದು ಮಧ್ಯಂತರ ಚುನಾವಣೆಯು ನಡೆಯಲಿದೆ. ಇದು ಪ್ರಧಾನಿಯಾದ ಬಳಿಕ ಟಕಯೀಚಿಯ ಮೊದಲ ಚುನಾವಣಾ ಪರೀಕ್ಷೆಯಾಗಿದೆ. ತನ್ನ ಪ್ರಬಲ ಜನ ಬೆಂಬಲವನ್ನು ಬಳಸಿಕೊಂಡು ಆಡಳಿತಾರೂಢ ಪಕ್ಷ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (ಎಲ್ಡಿಪಿ)ಯ ಮೇಲಿನ ಹಿಡಿತವನ್ನು ಬಲಪಡಿಸಲು ಹಾಗೂ ತನ್ನ ಮೈತ್ರಿಕೂಟದ ಅಲ್ಪ ಬಹುಮತವನ್ನು ಹೆಚ್ಚಿಸಲು ಈ ಚುನಾವಣೆಯು ಅವರಿಗೆ ಸಹಾಯ ಮಾಡಲಿದೆ. ಹೆಚ್ಚುತ್ತಿರುವ ಜೀವನ ವೆಚ್ಚವು ಜನರ ಪ್ರಧಾನ ಕಳವಳವಾಗಿರುವಾಗ ಅಗಾಧ ವೆಚ್ಚದ ಯೋಜನೆಗಳಿಗೆ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಚುನಾವಣೆಯು ಪತ್ತೆ ಹಚ್ಚಲಿದೆ. ಸರಕಾರಿ ಟೆಲಿವಿಶನ್ ಎನ್ಎಚ್ಕೆ ಕಳೆದ ವಾರ ನಡೆಸಿದ ಸಮೀಕ್ಷೆಯೊಂದರಲ್ಲಿ, ಬೆಲೆ ಏರಿಕೆಯು ತಮ್ಮ ಮುಖ್ಯ ಚಿಂತೆಯಾಗಿದೆ ಎಂಬುದಾಗಿ 45 ಶೇಕಡ ಮಂದಿ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರು,ಜ.19: ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ (ಜ.19) ಶಅಬಾನ್ ತಿಂಗಳ ಪ್ರಥಮ ಚಂದ್ರದರ್ಶನವಾಗಿದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತಿಳಿಸಿದ್ದಾರೆ. ಫೆ.2ರ ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಬರಾಅತ್ ರಾತ್ರಿ ಆಗಿರುತ್ತದೆ ಎಂದು ಖಾಝಿ ತಿಳಿಸಿರುವುದಾಗಿ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
`ಹರ್ಷಿತ್ ರಾಣಾ ಗೇಮ್ ಚೇಂಜರ್'; ಅಂದು ಬೇಕಾಬಿಟ್ಟಿ ಟೀಕಿಸಿದ್ದ ಕೃಷ್ಣಮಾಚಾರಿ ಶ್ರೀಕಾಂತ್ ಇಂದು ಪ್ಲೇಟ್ ಚೇಂಜ್!
Krishnamachari Srikkanth On Harshit Rana- ಟೀಕೆಗಳಿಗೆ ಪ್ರದರ್ಶನವೇ ಉತ್ತರವಾಗಬೇಕು. ಹರ್ಷಿತ್ ರಾಣಾ ಅವರು ಮಾಡಿದ್ದೂ ಅದನ್ನೇ. ಆಲ್ರೌಂಡರ್ ನ ರೂಪದಲ್ಲಿ ಅವರನ್ನು ತಂಡಕ್ಕೆ ತೆಗೆದುಕೊಂಡಿರುವ ಕ್ರಮ ಬಹಳ ಟೀಕೆಗೊಳಗಾಗಿತ್ತು. ಪ್ರಧಾನ ಕೋಚ್ ಗೌತಮ್ ಗಂಭೀರ್ ಅವರು ಸಹ ಈ ವಿಚಾರದಲ್ಲಿ ವಿರೋಧವನ್ನು ಎದುರಿಸಬೇಕಾಯ್ತು. ಇದೀಗ ನ್ಯೂಜಿಲೆಂಡ್ ವಿರುದ್ಧ 3ನೇ ಪಂದ್ಯದಲ್ಲಿ ಹರ್ಷಿತ್ ರಾಣಾ ಅವರ ಬ್ಯಾಟಿಂಗ್ ನೋಡಿದ ಮೇಲೆ ವಿರೋಧಿಗಳೂ ಅವರ ಅಭಿಮಾನಿಗಳಾಗಿದ್ದಾರೆ. ಅವರ ಬಗ್ಗೆ ಟೀಕಾಪ್ರಹಾರವನ್ನೇ ನಡೆಸಿದ್ದ ಕೃಷ್ಣಮಾಚಾರಿ ಶ್ರೀಕಾಂತ್ ಕೂಡ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ!
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ
ಜ. 20ರಂದು ಅಧಿಕಾರ ಸ್ವೀಕಾರ; ಪ್ರಧಾನಿ ಮೋದಿ ಭಾಗಿ
ಔರಾದ್ | ಹಕ್ಕುಪತ್ರಕ್ಕಾಗಿ ಅಲೆಮಾರಿ ಜನಾಂಗದವರ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭ
ಬೀದರ್ (ಔರಾದ್): ನಿವೇಶನ ಮಂಜೂರಾಗಿದ್ದರೂ ಹಕ್ಕುಪತ್ರ ನೀಡದೆ ವಿಳಂಬ ಮಾಡುತ್ತಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸಿ, ಔರಾದ್ (ಬಾ) ತಾಲೂಕಿನ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಸೋಮವಾರದಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಔರಾದ್ ಪಟ್ಟಣದ ಎಪಿಎಂಸಿ ಮತ್ತು ಸರ್ಕಾರಿ ಗೈರಾಣು ಭೂಮಿಯಲ್ಲಿ ಕಳೆದ 40 ವರ್ಷಗಳಿಂದ 750ಕ್ಕೂ ಹೆಚ್ಚು ಅಲೆಮಾರಿ ಕುಟುಂಬಗಳು ವಾಸಿಸುತ್ತಿವೆ. ಇವರಿಗೆ ಭೂಮಿ ಮಂಜೂರಾಗಿದ್ದರೂ ಸಹ ಇದುವರೆಗೂ 'ಫಾರಂ ನಂ. 10'ರ ಅಡಿ ಹಕ್ಕುಪತ್ರ ನೀಡಿಲ್ಲ ಹಾಗೂ ಜಾಗದ ಹದ್ದುಬಸ್ತ್ ಮಾಡಿಕೊಟ್ಟಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ವೆ ನಂ. 183ರ 40 ಎಕರೆ 30 ಗುಂಟೆ ಜಮೀನಿನಲ್ಲಿ 2 ಎಕರೆ ಹಾಗೂ ಸರ್ವೆ ನಂ. 205ರ 50 ಎಕರೆ 11 ಗುಂಟೆ ಜಮೀನಿನಲ್ಲಿ 2 ಎಕರೆ ಭೂಮಿಯನ್ನು ಈ ಜನಾಂಗದವರಿಗಾಗಿ ಈಗಾಗಲೇ ಮಂಜೂರು ಮಾಡಲಾಗಿದೆ. ದಾಖಲೆಗಳಲ್ಲಿ ಭೂಮಿ ಮಂಜೂರಾಗಿದ್ದರೂ, ವಾಸ್ತವದಲ್ಲಿ ಅಧಿಕಾರಿಗಳು ಯಾವುದೇ ಪ್ರಗತಿ ತೋರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಧರಣಿ ಸತ್ಯಾಗ್ರಹಕ್ಕೆ ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ದಿಲೀಪಕುಮಾರ್ ವರ್ಮಾ ಅವರು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ಧರಣಿಯಲ್ಲಿ ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜಶೇಖರ್ ಶೇರಿಕಾರ್, ಔರಾದ್ ತಾಲೂಕು ಅಧ್ಯಕ್ಷ ಪ್ರವೀಣ್ ಕಾರಂಜೆ, ಸಂಪತ್ತ ಸಕ್ಪಾಲ್, ಸಂತೋಷ ಸೂರ್ಯವಂಶಿ, ಸುಂದರ ಮೇತ್ರೆ, ಪ್ರೇಮ ಗೋಡಬೋಲೆ, ದಿನೇಶ ಶಿಂಧೆ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಹುಲ್ ವಿ. ಖಂದಾರೆ ಸೇರಿದಂತೆ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಜನರು ಉಪಸ್ಥಿತರಿದ್ದರು.
ಬುಡಕಟ್ಟು ಬಾಲಕಿಯ ಸಂಕಷ್ಟದ ವೀಡಿಯೋ ವೈರಲ್ ಬೆನ್ನಲ್ಲೆ ಎಚ್ಚೆತ್ತ ಆಡಳಿತ: ದಿಲ್ ಕುಮಾರಿಗೆ ಆರೋಗ್ಯ ನೆರವು
ಅಜ್ಜ ರಾಮ್ ಬ್ರಿಜ್ ಗ್ರಾಮದ ಸರ್ಪಂಚ್ ಬಳಿ ಪದೇ ಪದೆ ನೆರವು ಕೇಳಿದ್ದರು. ಸ್ಥಳೀಯ ಪ್ರತಿನಿಧಿಗಳ ಬಳಿಯೂ ನೆರವು ಯಾಚಿಸಿದ್ದರು. ಪಂಚಾಯತ್ ಮಟ್ಟದಲ್ಲೂ ನೆರವು ಕೇಳಿದ್ದರು. ಆದರೆ ಯಾವುದೇ ನೆರವು ಸಿಗದ ಕಾರಣ ಬಾಲಕಿಯ ಸ್ಥಿತಿ ಶೋಚನೀಯವಾಗಿ ಬದಲಾಗಿದೆ. ಸಿಂಗ್ರೌಲಿ ಜಿಲ್ಲೆಯ 11 ವರ್ಷ ಪ್ರಾಯದ ವಿಶೇಷಚೇತನ ಬುಡಕಟ್ಟು ಬಾಲಕಿಯ ಹೃದಯ ವಿದ್ರಾವಕ ವೀಡಿಯೊ ಒಂದು ವೈರಲ್ ಆಗಿದೆ. ಬಾಲಕಿ ತನ್ನ ಅಜ್ಜಿ-ತಾತಂದಿರಿಗೆ ಚಳಿಯಾಗುತ್ತದೆ ಎಂದು ನಡುಗುವ ಚಳಿಯಲ್ಲಿ ಅರ್ಧ ಬಟ್ಟೆ ತೊಟ್ಟು ತಲೆ ಮೇಲೆ ಕಟ್ಟಿಗೆ ಹೊತ್ತುಕೊಂಡು ಅಂಬೆಗಾಲಿಕ್ಕುತ್ತಾ ರಸ್ತೆಯಲ್ಲಿ ಸಾಗುತ್ತಿರುವ ವೀಡಿಯೊ ಕರುಳು ಹಿಂಡುವಂತಿದೆ. ಬಾಲಕಿಗೆ ಹುಟ್ಟಿನಿಂದಲೇ ಕಾಲುಗಳಿರಲಿಲ್ಲ. ವೀಡಿಯೋ ವೈರಲ್ ಆದ ನಂತರ ಆಡಳಿತ ಮುಂದೆ ಬಂದು ವೈದ್ಯಕೀಯ ನೆರವು ನಿಡುತ್ತಿದೆ. ಛತ್ತೀಸ್ಗಢ ಗಡಿಭಾಗದಲ್ಲಿರುವ ಸಿಂಗ್ರೌಲಿಯ ಬರಹಪನ್ ಗ್ರಾಮದ ಬಾಲಕಿ ತನ್ನ ಮೊಣಕಾಲಿನಲ್ಲಿ ತೆಗಳುತ್ತಾ ತಲೆ ಮೇಲೆ ಕಟ್ಟಿಗೆ ಹೊತ್ತು ಸಾಗುತ್ತಿದ್ದಳು. ಚಳಿಗಾಲದಲ್ಲಿ ಅವರ ಕುಟುಂಬಕ್ಕೆ ಕಟ್ಟಿಗೆಯ ಅಗತ್ಯವಿತ್ತು. 11 ವರ್ಷದ ದಿಲ್ ಕುಮಾರಿ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಹುಟ್ಟಿನಿಂದಲೇ ಕಾಲುಗಳಿಗೆ ಶಕ್ತಿ ಇಲ್ಲದೆ ನಿಲ್ಲಲು ತ್ರಾಸಪಡುತ್ತಿದ್ದಳು. ಆಕೆಯ ಸ್ಥಿತಿಯ ಹೊರತಾಗಿಯೂ ತನ್ನ ಕುಟುಂಬಕ್ಕೆ ದೈನಂದಿನ ಚಟುವಟಿಕೆಗಳಲ್ಲಿ ಆಕೆ ನೆರವು ನೀಡುತ್ತಿದ್ದಳು. ದಿಲ್ ಕುಮಾರಿ ತನ್ನ ತಾಯಿಯ ಕಡೆಯ ಸಂಬಂಧಿ ರಾಮ್ ಬ್ರಿಜ್ ಬೈಗ ಮತ್ತು ಸೋನಮತಿ ಬೈಗ ಅವರ ಜೊತೆಗೆ ನೆಲೆಸಿದ್ದಾಳೆ. ಬಾಲಕಿಯ ತಾಯಿ ಉರ್ಮಿಳಾ ಬೈಗಗೆ ನಾಲ್ಕು ಮಕ್ಕಳು. ದಿಲ್ ಕುಮಾರಿಯ ಕಾಲುಗಳಲ್ಲಿ ಶಕ್ತಿ ಇಲ್ಲದ ಕಾರಣ ಅಜ್ಜಿ-ತಾತಂದಿರೇ ಆಕೆಯ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದರು. ವೀಡಿಯೋ ಬಗ್ಗೆ ಮಾತನಾಡುವಾಗ ಅಜ್ಜ ರಾಮ್ ಬ್ರಿಜ್ ಬಹಳ ಭಾವನಾತ್ಮಕವಾಗಿ ಪರಿಸ್ಥಿತಿಯನ್ನು ವಿವರಿಸಿದರು. ಅವರು ಮೊಮ್ಮಗಳನ್ನು ಕಾಡಿಗೆ ಕಳುಹಿಸಿರಲಿಲ್ಲ. ಆಕೆ ಸ್ವತಃ ಚಳಿಯ ಸಮಯದಲ್ಲಿ ಕಟ್ಟಿಗೆಯ ಅಗತ್ಯವಿದೆ ಎಂದುಕೊಂಡು ಕಟ್ಟಿಗೆ ತರಲು ಕಾಡಿಗೆ ಹೋಗಿದ್ದಾಳೆ. ರಾಮ್ ಬ್ರಿಜ್ ಗ್ರಾಮದ ಸರ್ಪಂಚ್ ಬಳಿ ಪದೇಪದೆ ನೆರವು ಕೇಳಿದ್ದರು. ಸ್ಥಳೀಯ ಪ್ರತಿನಿಧಿಗಳ ಬಳಿಯೂ ನೆರವು ಯಾಚಿಸಿದ್ದರು. ಪಂಚಾಯತ್ ಮಟ್ಟದಲ್ಲೂ ನೆರವು ಕೇಳಿದ್ದರು. ಆದರೆ ಯಾವುದೇ ನೆರವು ಸಿಗದ ಕಾರಣ ಬಾಲಕಿಯ ಸ್ಥಿತಿ ಶೋಚನೀಯವಾಗಿ ಬದಲಾಗಿದೆ. ವೀಡಿಯೊ ವೈರಲ್ ಆದ ನಂತರ ಕಾಂಗ್ರೆಸ್ ನಾಯಕರಾದ ಸೂರ್ಯ ದ್ವಿವೇದಿ ನೆರವಿಗೆ ಬಂದಿದ್ದಾರೆ. ಸರಕಾರ ನೆರವು ನೀಡದೆ ಇದ್ದರೆ ವೈಯಕ್ತಿಕವಾಗಿ ನೆರವು ನೀಡುವುದಾಗಿ ಅವರು ಹೇಳಿರುವುದಾಗಿ ಕುಟುಂಬ ತಿಳಿಸಿದೆ. ದೈನಿಕ್ ಬಾಸ್ಕರ್ ಮಾಧ್ಯಮದಲ್ಲಿ ವೀಡಿಯೊ ವೈರಲ್ ಆದ ನಂತರ ಜಿಲ್ಲಾ ಕೇಂದ್ರದಿಂದ ಕುಟುಂಬಕ್ಕೆ ಕರೆ ಬಂದಿದೆ. ರೆಡ್ ಕ್ರಾಸ್ ಸೊಸೈಟಿ ಆಕೆಗೆ ಚಲಿಸಲು ಟ್ರೈಸಿಕಲ್ ನೀಡುವುದಾಗಿ ಹೇಳಿದೆ. ಜಿಲ್ಲಾ ಪಂಚಾಯತ್ ಹೆಚ್ಚುವರಿ ಸಿಇಒ ಐಬಿ ದಾಮೋರ್ ಬಾಲಕಿಯ ಆರೋಗ್ಯ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಬಾಲಕಿಯ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಸರಕಾರಿ ಯೋಜನೆಗಳ ಅಡಿಯಲ್ಲಿ ದಿಲ್ ಕುಮಾರಿಗೆ ಸಾಧ್ಯವಾದ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ಒಂದೇ ಬಾರಿಗೆ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಆದರೆ, ಒಂದೇ ಬಾರಿಗೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು, ಪಾಲಿಕೆ ಚುನಾವಣೆಗಳು ಯಾವಾಗ ನಡೆಯಬಹುದು ಎಂದು ಸೋಮವಾರ ಸದಾಶಿನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. ಜಿಬಿಎ ಪಾಲಿಕೆಗಳ ಚುನಾವಣೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರಕಾರ ಸಂವಿಧಾನದ 73, 74ನೇ ತಿದ್ದುಪಡಿಗೆ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಅಧಿಕಾರಕ್ಕೆ ಬರಬೇಕು. ಈಗ ಐದು ಪಾಲಿಕೆಗಳಿಂದ 369 ವಾರ್ಡ್ ಗಳನ್ನು ರಚಿಸಲಾಗಿದೆ. ಇನ್ನು ಬೆಂಗಳೂರಿನ ಹೊರವಲಯವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಶಿವಕುಮಾರ್ ಹೇಳಿದರು. ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ನಡೆಸಲು ನಮ್ಮ ಸರಕಾರ ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯ್ತಿ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಒಂದೇ ಬಾರಿಗೆ ಎಲ್ಲ ಚುನಾವಣೆಗಳನ್ನು ನಡೆಸಲು ಚಿಂತನೆ ನಡೆಯುತ್ತಿದೆ ಎಂದು ಅವರು ಹೇಳಿದರು. ಈ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮತಯಂತ್ರ ಹೊರತಾಗಿ ಮತಪತ್ರ ಬಳಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ನನಗೂ ಈ ಬಗ್ಗೆ ಮಾಹಿತಿ ಬಂದಿದೆ. ಇದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಯಾವ ರೂಪದಲ್ಲಿ ಚುನಾವಣೆ ನಡೆಸಲಾಗುವುದು ಎಂಬುದಕ್ಕಿಂತ ಮತದಾನ ನಡೆಯುವುದು ಬಹಳ ಮುಖ್ಯ ಎಂದು ತಿಳಿಸಿದರು. ಈಗ ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ನಾವು ಈಗಾಗಲೇ ಬಿಎಲ್ಎಗಳ ಸಿದ್ಧತೆ ಮಾಡಿಕೊಂಡಿದ್ದೇವೆ. ಯಾವುದೇ ಮತದಾರರ ಹೆಸರು ಪಟ್ಟಿಯಲ್ಲಿ ಬಿಟ್ಟುಹೋಗಿದ್ದರೆ ಅವರಿಗೆ ಮತ್ತೆ ಅವಕಾಶ ಕಲ್ಪಿಸಬೇಕು ಹಾಗೂ ಅವರ ಹಕ್ಕನ್ನು ಅವರಿಗೆ ನೀಡಬೇಕು. ಅಧಿಕಾರಿಗಳ ಕಾರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಅದಕ್ಕಾಗಿಯೇ ಇರುವ ಕಾನೂನು ಚೌಕಟ್ಟಿನಲ್ಲಿ ಚುನಾವಣಾ ಆಯೋಗ ಕೆಲಸ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು. ಕೇಂದ್ರ ಚುನಾವಣಾ ಆಯೋಗದ ಮೇಲಿನ ಅನುಮಾನದಿಂದ ಮತಪತ್ರ ಬಳಸಲಾಗುತ್ತಿದ್ದೆಯೇ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆ ಮಾಡಲು ನಾವ್ಯಾರು? ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗ. ರಾಜ್ಯ ಚುನಾವಣಾ ಆಯೋಗ ನಮ್ಮ ಸರಕಾರದ ನಿಯಂತ್ರಣಕ್ಕೆ ಬರುವುದಿಲ್ಲ. ಅವರೇ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಕನ್ನಡಕ್ಕೆ ಸರ್ವಜ್ಞನಂತೆ ತೆಲುಗಿಗೆ ವೇಮನರು ಮಹಾನ್ ವಚನಕಾರರು : ಶಾಸಕ ಅಲ್ಲಮಪ್ರಭು ಪಾಟೀಲ್
ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಣೆ
Government Schools: ಅಗತ್ಯವಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಬದಲಿಗೆ ಚಪ್ಪಲಿ ವಿತರಣೆ
ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಣೆಗೆಂದು ಒಟ್ಟು 06 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಸರ್ಕಾರ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಅಗತ್ಯವಿರುವ ಕಡೆಗಳಲ್ಲಿ ಶೂಗಳಿಗೆ ಬದಲಾಗಿ ಚಪ್ಪಲಿ ನೀಡಲು ಮುಂದಾಗಿದೆ. 2026-27ನೇ ಸಾಲಿನ ವಿತರಣೆಗೆ ಶಿಕ್ಷಣ ಇಲಾಖೆಯು ಸಿದ್ಧತೆ ನಡೆಸಿದ್ದು ಖರೀದಿ, ಎಷ್ಟು ಮಕ್ಕಳಿದ್ದಾರೆ, ಶಾಲೆಗಳ ದಾಖಲಾತಿ
ವೇಟ್ & ವಾಚ್; ಕೇವಲ 6 ಸ್ಥಾನಗಳು ಬೇಕಾಗಿವೆ, ಮುಂಬಯಿ ಮೇಯರ್ ಪಟ್ಟದ ಲೆಕ್ಕಾಚಾರ ಬದಲಿಸಿದ ಸಂಜಯ್ ರಾವತ್!
ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗಳು ಮುಗಿದು ಮೂರೂ ದಿನಗಳು ಕಳೆದರೂ ಮುಂಬಯಿಗೆ ಇನ್ನು ನೂತನ ಮೇಯರ್ ಸಿಕ್ಕಿಲ್ಲ. ಬಿಜೆಪಿ ಮತ್ತು ಶಿಂಧೆ ಬಣದ ಶಿವಸೇನೆ ನಡುವೆಯೇ ಮೇಯರ್ ಪಟ್ಟಕ್ಕಾಗಿ ಸ್ಪರ್ಧೆ ಏರ್ಪಟ್ಟಿದೆ. ಈ ಮಧ್ಯೆ ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ಮುಂಬಯಿ ಮೇಯರ್ ಪಟ್ಟವನ್ನು ಪಡೆಯಲು ತಮ್ಮ ಪಕ್ಷಕ್ಕೆ ಕೇವಲ ಆರು ಸ್ಥಾನಗಳ ಕೊರತೆ ಇದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಲ್ಲಿದೆ ಮಾಹಿತಿ.
Bescome Power Cut: ಬೆಂಗಳೂರಿನ 100 ಕ್ಕೂ ಅಧಿಕ ಬಡಾವಣೆಗಳಲ್ಲಿ ಬುಧವಾರ (ಜ.21) ವಿದ್ಯುತ್ ಕಡಿತ! ಎಲ್ಲೆಲ್ಲಿ?
ಬೆಂಗಳೂರಿನ 100 ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ನಡೆಸಲಿದೆ. ಎಚ್ಆರ್ಬಿಆರ್ ಲೇಔಟ್, ಕಮ್ಮನಹಳ್ಳಿ, ಹೊರಮಾವು, ಹೆಣ್ಣೂರು, ರಾಮಮೂರ್ತಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ಈ ಬಗ್ಗೆ ಮಾಹಿತಿ ನೀಡಿದೆ.
ವ್ಯಕ್ತಿತ್ವ ವಿಕಸನಕ್ಕೆ ಮೃದು ಕೌಶಲ್ಯಗಳು ಬಹಳ ಮುಖ್ಯ : ಪ್ರೊ.ಬಟ್ಟು ಸತ್ಯನಾರಾಯಣ
ಮೃದು ಕೌಶಲ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಮುಖ್ಯಮಂತ್ರಿ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸೋಮವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಮುಖ್ಯಮಂತ್ರಿ ಏನು ಮಾತನಾಡಿದ್ದೇವೆ ಎಂದು ನಿಮಗೆ ಗೊತ್ತಿದೆಯಾ? ಎಂದು ಪ್ರಶ್ನಿಸಿದರು. ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಶಿವಕುಮಾರ್ ತಿಳಿಸಿದರು. ದಿಲ್ಲಿಗೆ ಭೇಟಿ ನೀಡಿದ್ದರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ದಿಲ್ಲಿಗೆ ಹೋಗುವುದೇ ರಾಜಕೀಯ, ಪಕ್ಷ ಹಾಗೂ ಸರಕಾರದ ಕೆಲಸಗಳಿಗೆ. ಮಾಧ್ಯಮಗಳು ರಾಹುಲ್ ಗಾಂಧಿ ಭೇಟಿಯಾಗಿಲ್ಲ ಎಂದು ಬರೆದಿದ್ದೀರಿ. ಒಂದು ದಿನ ನಾವು ಜೊತೆಯಲ್ಲಿ ಕೂತು ಚರ್ಚೆ ಮಾಡಿರುವ ಫೋಟೋ ವರದಿ ಮಾಡಿದ್ದೀರಿ, ಮರುದಿನ ಭೇಟಿಯೆ ಆಗಿಲ್ಲ ಎಂದು ಹೇಳುತ್ತಿದ್ದೀರಿ. ಈ ವಿಚಾರದಲ್ಲಿ ಕಾಲ ಉತ್ತರ ನೀಡಲಿದೆ ಎಂದು ಹೇಳಿದ್ದೇನೆ. ಇದರ ಹೊರತಾಗಿ ನಾನು ಬೇರೆ ವಿಚಾರ ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು. ಹೈಕಮಾಂಡ್ ಒಳ್ಳೆಯ ಸುದ್ದಿ ನೀಡಲಿದೆ ಎಂದು ನಿಮ್ಮ ಸಹೋದರ ಹೇಳಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ತಮ್ಮ, ನಮ್ಮ ಕಾರ್ಯಕರ್ತರು, ಮಾಧ್ಯಮಗಳು ಕೂಡ ಹೇಳುತ್ತಿವೆ” ಎಂದರು. ರಾಜಕೀಯಕ್ಕಾಗಿ ದಾವೋಸ್ ಪ್ರವಾಸ ಕೈಬಿಟ್ಟಿರುವುದು ಸರಿಯಲ್ಲ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಅವರ ಮಾತಿನಲ್ಲಿ ಅರ್ಥವಿದೆ. ತಪ್ಪು ಎಂದು ನಾನು ಹೇಳುವುದಿಲ್ಲ. ನಾಳೆ ಬೆಳಗ್ಗೆ ಈ ಪ್ರಶ್ನೆ ಕೇಳಿ” ಎಂದು ಶಿವಕುಮಾರ್ ಉತ್ತರಿಸಿದರು.
Kerala | ಕಾಸರಗೋಡು–ಮಲಪ್ಪುರಂ ಚುನಾವಣಾ ಫಲಿತಾಂಶಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಸಾಜಿ ಚೆರಿಯನ್
ಆಲಪ್ಪುಳ (ಕೇರಳ): ಕಾಸರಗೋಡು ಮತ್ತು ಮಲಪ್ಪುರಂ ಜಿಲ್ಲೆಗಳ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ ಕೇರಳದ ಮೀನುಗಾರಿಕಾ ಸಚಿವ ಸಾಜಿ ಚೆರಿಯನ್ ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ವಿವಾದಕ್ಕೆ ಕಾರಣವಾಗಿದೆ. ಆಲಪ್ಪುಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳ ಚುನಾವಣಾ ಪ್ರವೃತ್ತಿಗಳ ಬಗ್ಗೆ ಪ್ರಶ್ನೆ ಎತ್ತುತ್ತಾ, “ಮಲಪ್ಪುರಂ ಮತ್ತು ಕಾಸರಗೋಡಿನಲ್ಲಿ ಗೆದ್ದವರ ಹೆಸರುಗಳನ್ನು ನೋಡಿ” ಎಂದು ಹೇಳಿದ್ದಾರೆ. ಒಂದು ನಿರ್ದಿಷ್ಟ ಸಮುದಾಯವೇ ನಿರ್ಣಾಯಕ ಮತದಾರರಾಗುವುದು, ಅದರ ಆಧಾರದ ಮೇಲೆ ಮಾತ್ರ ಚುನಾವಣಾ ಗೆಲುವು ನಿರ್ಧಾರವಾಗುವಂತಹ ಸ್ಥಿತಿ ಕೇರಳದಲ್ಲಿ ನಿರ್ಮಾಣವಾಗಬಾರದು ಎಂದು ಚೆರಿಯನ್ ಅಭಿಪ್ರಾಯಪಟ್ಟರು. ವಿರೋಧ ಪಕ್ಷದ ನಾಯಕ ವಿ.ಡಿ. ಸತೀಸನ್ ಹಾಗೂ ಕಾಂಗ್ರೆಸ್ ಪಕ್ಷವು ಚುನಾವಣಾ ಲಾಭಕ್ಕಾಗಿ ಕೋಮು ಭಾವನೆಗಳನ್ನು ಕೆರಳಿಸುತ್ತಿದ್ದು, ಅಲ್ಪಸಂಖ್ಯಾತ ಕೋಮುವಾದವನ್ನು ಉತ್ತೇಜಿಸುತ್ತಿದೆ ಎಂದು ಅವರು ಆರೋಪಿಸಿದರು. ಉತ್ತರ ಜಿಲ್ಲೆಗಳಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಅನುಸರಿಸುತ್ತಿರುವ ಚುನಾವಣಾ ತಂತ್ರಗಳ ಮೇಲೂ ಅವರು ವಾಗ್ದಾಳಿ ನಡೆಸಿದರು. ಸಿಪಿಎಂ ಹಾಗೂ ಎಲ್ಡಿಎಫ್ ಸರಕಾರ ಸದಾ ಕೋಮುವಾದದ ವಿರುದ್ಧ ದೃಢ ನಿಲುವು ಹೊಂದಿದೆ ಎಂದು ಚೆರಿಯನ್ ಹೇಳಿದರು. ಕಳೆದ ಹತ್ತು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಪ್ರಮುಖ ಕೋಮು ಗಲಭೆಗಳು ಸಂಭವಿಸಿಲ್ಲ ಎಂದು ಅವರು ಹೇಳಿ, ಹಿಂದಿನ ಯುಡಿಎಫ್ ಆಡಳಿತದ ಅವಧಿಯಲ್ಲಿ ಮರಾಡ್ ಗಲಭೆಗಳು ಸೇರಿದಂತೆ ಅಶಾಂತ ಘಟನೆಗಳು ನಡೆದಿದ್ದುದನ್ನು ನೆನಪಿಸಿದರು. ಕೋಮು ಧ್ರುವೀಕರಣದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇತ್ತೀಚಿನ ಚುನಾವಣಾ ಮಾದರಿಗಳಲ್ಲಿಯೇ ಅದರ ಸೂಚನೆಗಳು ಗೋಚರಿಸುತ್ತಿವೆ ಎಂದರು. ಈ ಪ್ರವೃತ್ತಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಕಳವಳ ವ್ಯಕ್ತಪಡಿಸಿದರು. ವಿರೋಧ ಪಕ್ಷದ ಕೆಲ ನಾಯಕರು ಇತ್ತೀಚೆಗೆ ನೀಡಿರುವ ಹೇಳಿಕೆಗಳು ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುವಂತಿವೆ ಎಂದು ಚೆರಿಯನ್ ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸತೀಸನ್, ಸಚಿವರ ಹೇಳಿಕೆಗಳು ಸಂವಿಧಾನ ಹಾಗೂ ಅಧಿಕಾರ ಸ್ವೀಕರಿಸುವಾಗ ಪ್ರಮಾಣವಚನ ಸ್ವೀಕರಿಸುವಾಗಿನ ಪ್ರತಿಜ್ಞೆಗೆ ವಿರುದ್ಧವಾಗಿವೆ ಎಂದು ಟೀಕಿಸಿದರು. ಕೋಮು ವಿಚಾರಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದರು. ನಂತರ ತಮ್ಮ ಹೇಳಿಕೆಗಳ ಕುರಿತು ಸ್ಪಷ್ಟನೆ ನೀಡಿದ ಸಾಜಿ ಚೆರಿಯನ್, ತಮ್ಮ ಮಾತುಗಳನ್ನು ತಿರುಚಲಾಗಿದೆ ಹಾಗೂ ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದರು. ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಮುಸ್ಲಿಂ ಲೀಗ್ ಮತ್ತು ಹಿಂದೂ ಬಹುಸಂಖ್ಯಾತ ಪ್ರದೇಶಗಳಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸುವಂತಹ ಸ್ಥಿತಿ ಕೇರಳದಲ್ಲಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ಉದ್ದೇಶ ಎಂದು ಅವರು ಸ್ಪಷ್ಟಪಡಿಸಿದರು. ರಾಜ್ಯ ಸರಕಾರ ಎಲ್ಲ ಧರ್ಮಗಳು ಮತ್ತು ನಂಬಿಕೆಗಳನ್ನು ಸಮಾನವಾಗಿ ರಕ್ಷಿಸಲು ಬದ್ಧವಾಗಿದೆ ಎಂದು ಹೇಳಿದರು.
ಆಳಂದ : ಸಂತ ವೇಮನರ ಕವಿತೆಗಳು ನಮ್ಮ ಸಮಾಜದಲ್ಲಿ ಇಂದಿಗೂ ಪ್ರಸ್ತುತವಾಗಿವೆ. ಅವರು ಸಾಮಾಜಿಕ ಅಸಮಾನತೆ, ಅಜ್ಞಾನ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಇಂದಿನ ಯುವಕರು ಅವರ ತತ್ವಗಳನ್ನು ಅಳವಡಿಸಿಕೊಂಡು ಸಮಾಜವನ್ನು ಮುನ್ನಡೆಸಬೇಕು ಎಂದು ರೆಡ್ಡಿ ಸಮಾಜದ ಅಧ್ಯಕ್ಷ ಹಾಗೂ ರಾಜಶೇಖರ್ ಮಹಾಸ್ವಾಮಿಗಳ ಬಿಎಡ್ ಕಾಲೇಜಿನ ಪ್ರಾಚಾರ್ಯ ಅಶೋಕ ರೆಡ್ಡಿ ಹೇಳಿದರು. ಪಟ್ಟಣದ ಹೊರವಲಯದ ತಾಲೂಕು ಆಡಳಿತ ಸೌಧದಲ್ಲಿ ಸಂತ ಹಮ್ಮಿಕೊಂಡ ಸಂತ ವೇಮನ ಜಯಂತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತಹಶೀಲ್ದಾರ್ ಅಣ್ಣಾರಾವ್ ಪಾಟೀಲ್ ಅವರ ಮಾತನಾಡಿ, ಸಂತ ವೇಮನರ ಆದರ್ಶಗಳು ಸಮಾಜದ ಏಕತೆಗೆ ಮಾರ್ಗದರ್ಶನ ನೀಡುತ್ತವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪುಂಡಲಿಕ ಸಾಧು, ರೈತ ಶಿವಾನಂದ ರೆಡ್ಡಿ, ಮಲ್ಲಿಕಾರ್ಜುನ್ ಕುಸೇ, ಭೀಮರಾವ್ ಪಡಸಾವಳಗಿ, ಅಶೋಕ ರೆಡ್ಡಿ, ಸಾಧು ಚಂದ್ರಶೇಖರ್ ರೆಡ್ಡಿ, ಯಲ್ಲಾಲಿಂಗ ಪಾಟೀಲ್, ಸುದರ್ಶನ್ ರೆಡ್ಡಿ, ಸಿದ್ದಲಿಂಗ ರೆಡ್ಡಿ, ಸಾಧು ಶರಣಗೌಡ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಕಲಬುರಗಿ | ಜ.21 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ
ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಜ.21 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ್ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ.ನಮೋಶಿ, ಡಾ.ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ್, ತಿಮ್ಮಣ್ಣಪ್ಪ ಕಮಕನೂರ, ಸುನೀಲ್ ವಲ್ಲ್ಯಾಪುರೆ, ಡಾ. ತಳವಾರ ಸಾಬಣ್ಣ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಬೂಬ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಪಾಂಡ್ವೆ ರಾಹುಲ್ ತುಕಾರಾಮ್, ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಚಿತ್ತಾಪುರ | ಕೋಲಿ ಸಮಾಜದ ಸಂಘಟನೆಗೆ ಒಗ್ಗಟ್ಟು ಅಗತ್ಯ: ಭೀಮಣ್ಣ ಸಾಲಿ
ಚಿತ್ತಾಪುರ: ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿಯನ್ನು ಈ ಬಾರಿ ಅತ್ಯಂತ ಸರಳ ಹಾಗೂ ಶಿಸ್ತುಬದ್ಧವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಕೋಲಿ ಸಮಾಜದ ಸಂಘಟನೆ ಹಾಗೂ ಬಲವರ್ಧನೆಗೆ ಎಲ್ಲರ ಒಗ್ಗಟ್ಟು ಅತಿ ಅಗತ್ಯವಾಗಿದೆ ಎಂದು ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ಹೇಳಿದರು. ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ರಾಜ್ಯದ ವಿವಿಧೆಡೆ ಭಿನ್ನವಾಗಿ ಜಯಂತಿ ಆಚರಿಸಲಾಗಿತ್ತು. ಆದರೆ ಈ ಬಾರಿ ಸಮಾಜದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಿ ಆಚರಿಸಲು ದೃಢಸಂಕಲ್ಪ ಮಾಡಿದ್ದೇವೆ. ಸಮಾಜದಲ್ಲಿ ಮೇಲು-ಕೀಳು ಎನ್ನದೆ, ಎಲ್ಲರೂ ಸಮಾನರು ಎಂಬ ಭಾವನೆಯೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು. ಜ.21ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಲಾಡ್ಜಿಂಗ್ ಕ್ರಾಸ್ನಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಗುವುದು. ತದನಂತರ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದ ಆವರಣದಲ್ಲಿಯೂ ಧ್ವಜಾರೋಹಣ ನಡೆಯಲಿದೆ. ಇದೇ ವೇಳೆ ತಾಲೂಕು ಆಡಳಿತದ ವತಿಯಿಂದ ಪ್ರಜಾ ಸೌಧದ ಆವರಣದಲ್ಲಿ ಆಯೋಜಿಸಲಾಗಿರುವ ಅಧಿಕೃತ ಕಾರ್ಯಕ್ರಮದಲ್ಲಿ ಸಮಾಜದ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷರಾದ ನಿಂಗಣ್ಣ ಹೆಗಲೇರಿ, ಶಿವಕುಮಾರ ಯಾಗಾಪುರ, ಮುಖಂಡರಾದ ಹಣಮಂತ ಸಂಕನೂರ್, ಗುಂಡು ಐನಾಪುರ, ಸಾಬಣ್ಣ ಭರಾಟೆ, ಪ್ರಭು ಹಲಕರ್ಟಿ, ಸುರೇಶ ಬೆನಕನಳ್ಳಿ, ರಾಜೇಶ ಹೋಳಿಕಟ್ಟಿ, ಮಲ್ಲಿಕಾರ್ಜುನ ಅಲ್ಲೂರಕರ್, ಲಕ್ಷ್ಮೀಕಾಂತ ಸಾಲಿ ಸೇರಿದಂತೆ ಇತರರು ಇದ್ದರು.
New Airport ಹೊಸೂರು ಏರ್ಪೋರ್ಟ್ ಪ್ರಸ್ತಾವನೆ ತಿರಸ್ಕಾರ; ಕರ್ನಾಟಕದ 2ನೇ ವಿಮಾನ ನಿಲ್ದಾಣ ನಿರ್ಮಾಣದ ಹಾದಿ ಸುಗಮ
ಚೆನ್ನೈ: ಬೆಂಗಳೂರಲ್ಲಿ ಎರಡನೇ ಏರ್ಪೋರ್ಟ್ ಸುದ್ದಿ ಹಬ್ಬಿದಾಗಿನಿಂದಲೂ ನೆರೆಯ ರಾಜ್ಯ ತಮಿಳುನಾಡು ಹಾಗೂ ಕರ್ನಾಟಕದ ಮಧ್ಯೆ ಮುಸುಕಿನ ಗುದ್ಧಾಟ ನಡೆಯುತ್ತಲೇ ಇತ್ತು. ಅಲ್ಲದೇ ಸ್ಥಳ ಫೈನಲ್ ಮಾಡುವುದಕ್ಕಾಗಿ ಎರಡು ರಾಜ್ಯಗಳ ಮಧ್ಯೆ ಪೈಪೋಟಿ ಶುರುವಾಗಿತ್ತು, ಕೊನೆಗೂ ತಮಿಳುನಾಡು ಏರ್ಪೋರ್ಟ್ ಘೋಷಣೆ ಮಾಡುವ ಮೂಲಕ ಕರ್ನಾಟಕಕ್ಕೆ ಟಕ್ಕರ್ ಕೊಟ್ಟಿತ್ತು. ಬೆಂಗಳೂರಿನ ಹೊಸೂರಿನಲ್ಲಿ ಬೃಹತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವುದಾಗಿ
ಹುಣಸೂರು ಚಿನ್ನದ ಅಂಗಡಿ ಡರೋಡೆ ಪ್ರಕರಣ | ಬಿಹಾರ ಮೂಲದ ಇಬ್ಬರು ಆರೋಪಿಗಳ ಬಂಧನ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ
ಮೈಸೂರು: ಮೈಸೂರು ಜಿಲ್ಲೆ ಹುಣಸೂರಿನ ಸ್ಕೈಗೋಲ್ಡ್ ಅಂಡ್ ಡೈಮಂಡ್ ಚಿನ್ನದ ಅಂಗಡಿಯಲ್ಲಿ ನಡೆದ ಡರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ರಿಷಿಕೇಶ್ ಅಲಿಯಾಸ್ ಚೋಟಾ ಸಿಂಗ್ ಮತ್ತು ಪಂಕಜ್ ಕುಮಾರ್ ಎಂಬ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ನಗರದ ಎಸ್ಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.28 ರಂದು ಹುಣಸೂರು ನಗರದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಶಾಪ್ ಚಿನ್ನದ ಅಂಗಡಿಗೆ ಮಧ್ಯಾಹ್ನ 2.04 ಗಂಟೆ ಸಮಯದಲ್ಲಿ ಐವರು ಮುಖಕ್ಕೆ ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸಿ ಕೈಗಳಲ್ಲಿ ಪಿಸ್ತೂಲ್ ಗಳನ್ನು ಹಿಡಿದು ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವರನ್ನು ಹೆದರಿಸಿ ಅಂಗಡಿಯಲ್ಲಿದ್ದ 450 ವಿವಿಧ ಮಾದರಿಯ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬೆನ್ನತ್ತಿದ ನಮ್ಮ ಪೊಲೀಸರು ತಾಂತ್ರಿಕ ವಿಧಾನ ಅನುಸರಿಸಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು. ಆರೋಪಿಗಳಿಂದ 12.5 ಗ್ರಾಂ ಚಿನ್ನ, 92 ಸಾವಿರ ನಗದು ಮತ್ತು ಒಂದು ಬುಲೆಟ್ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು. ಯಾರೂ ಮೊಬೈಲ್ ಬಳಸದ ಹಿನ್ನೆಲೆಯಲ್ಲಿ ದರೋಡೆ ಪ್ರಕರಣ ಬೇಧಿಸಲು ಕಷ್ಟವಾಗಿತ್ತು. ಬಿಹಾರ ಸೇರಿ ಇತರೆ ರಾಜ್ಯಗಳಲ್ಲಿ ಎರಡು ವಾರದಿಂದ ಶೋಧ ಕಾರ್ಯ ನಡೆಸಿದ್ದೆವು. ಈ ವೇಳೆ ಅಲ್ಲಿಯ ಪೊಲೀಸರ ಸಹಾಯದಿಂದ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದೇವೆ. ದಿಲ್ಲಿಯ ಜೇತ್ ಪುರ್ ಜಿಲ್ಲೆಯ ಹರಿನಗರ ಬಡಾವಣೆಯ ರಿಷಿಕೇಶ್ ಕುಮಾರ್ ಸಿಂಗ್ (ವಿಜಯಕುಮಾರ್ ಸಿಂಗ್) ಹಾಗೂ ಬಿಹಾರದ ಬಾಗಲ್ ಪುರ ಜಿಲ್ಲೆಯ ಪಂಕಜ್ ಕುಮಾರ್ (ರಾಮನಾಥ್ ಪ್ರಸಾದ್ ಸಿಂಗ್) ವಶಕ್ಕೆ ಪಡೆದಿದ್ದೇವೆಂದರು. ಬಂಧಿತರಲ್ಲಿ ಪಂಕಜ್ ಕುಮಾರ್ ಸಿಂಗ್ ಹಿಂದೆಯೂ 27 ಕೊಲೆ, ಕಳವು ಪ್ರಕರಣಗಳಲ್ಲಿ ಭಾಗಯಾಗಿದ್ದನು. ಚೋಟು ಸಿಂಗ್ 4 ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಇವರೂ ಕಳ್ಳತನವನ್ನೇ ಗುರಿಯಾಗಿಸಿಕೊಂಡಿದ್ದು, ಕಳವಿಗೆ ಸೂಕ್ತ ಜಾಗ ನೋಡುತ್ತಾರೆ. ಈ ಘಟನೆಗೂ ಮುನ್ನ ಹಾಸನ, ತುಮಕೂರು, ಕೊಡಗಿನಲ್ಲಿಯೂ ಹೊಂಚು ಹಾಕಿದ್ದರು. ಅಂತಿಮವಾಗಿ ಹುಣಸೂರು ಅಂಗಡಿ ಆಯ್ಕೆ ಮಾಡಿಕೊಂಡರು. ಯಾವ ಕಾರಣಕ್ಕೆ ಆ ಅಂಗಡಿ ಆಯ್ಕೆ ಮಾಡಿಕೊಂಡರು ಎಂಬಿತ್ಯಾದಿ ಅಂಶ ಪೂರ್ಣ ತನಿಖೆಯಿಂದಷ್ಟೇ ಹೊರಬರಬೇಕಿದೆ ಎಂದು ಹೇಳಿದರು. ಇನ್ನೂ 10ಕ್ಕೂ ಹೆಚ್ಚು ಮಂದಿ ಆರೋಪಿಗಳಿರುವ ಸಂಶಯವಿದೆ. ವಿಡಿಯೋದಲ್ಲಿನ ಮುಖ ಚಹರೆ ಹಾಗೂ ಇವರ ಮೇಲಿನ ಹಳೆಯ ಪ್ರಕರಣಗಳಿಂದ ಇವರನ್ನು ಪತ್ತೆ ಹಚ್ಚಲು ಸಾಧ್ಯವಾಯಿತು. ಸದರಿ ಗ್ಯಾಂಗ್ ಜೈಲಿನಲ್ಲಿ ಬೇರೆ ಬೇರೆ ಆರೋಪಿತರ ಸಂಪರ್ಕ ಆಗಿರಬಹುದು ಎಂಬಿತ್ಯಾದಿ ಸಂಶಯವಿದೆ. ಎಲ್ಲರ ಬಂಧನ ಬಳಿಕ ಅದು ತಿಳಿಯಲಿದೆ. ಕೇರಳ, ಆಂದ್ರ ಪ್ರದೇಶದಲ್ಲಿಯೂ ಇಂತಹ ದರೋಡೆ ಪ್ರಕರಣಗಳು ನಡೆದಿವೆ. ಕೆಲವು ಪ್ರಕರಣ ಇದುವರೆಗೂ ಪತ್ತೆ ಮಾಡಲಾಗಿಲ್ಲ. ಇನ್ನೂ ಕೆಲವು ಪ್ರಕರಣಗಳಲ್ಲಿ ಪೂರ್ಣ ಆರೋಪಿಗಳನ್ನು ಬಂದಿಸಲಾಗಿಲ್ಲ. ಹೀಗಿರುವಾಗ ರಾಜ್ಯದಲ್ಲಿ ನಡೆಸಿದ ಮೊದಲ ಪ್ರಯತ್ನದಲ್ಲೇ ನಮ್ಮ ಪೊಲೀಸರ ತಂಡ ಅವರನ್ನು ಪತ್ತೆ ಹಚ್ಚಿದ್ದು, ಉಳಿದವರನ್ನು ಶೀಘ್ರ ಬಂದಿಸಲಿದ್ದೇವೆ ಎಂದು ಹೇಳಿದರು. ಘಟನೆಗೂ ಮುನ್ನ ಮೂರು ನಾಲ್ಕು ದಿನಗಳಿಂದ ಸ್ಥಳೀಯ ಲಾಡ್ಜ್ ಗಳಲ್ಲಿ ಸುಳ್ಳು ಆಧಾರ್, ಮೊಬೈಲ್ ನಂಬರ್ ನೀಡಿ ವಾಸ್ತವ್ಯ ಹೂಡಿದ್ದರು. ಇವರ ಸೆರೆಹಿಡಿಯಲು 50 ಮಂದಿಯ ಪೊಲೀಸರ ತಂಡ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು. ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಅಪರ ಪೊಲೀಸ್ ಅಧೀಕ್ಷಕ ಎಲ್. ನಾಗೇಶ್, ಸಿ. ಮಲ್ಲಿಕ್, ಹುಣಸೂರು ಉಪವಿಭಾಗದ ಡಿವೈಎಸ್ ಪಿ ರವಿ ಡಿವೈಎಸ್ಪಿ, ಸೈಬರ್ ಠಾಣೆ ಡಿಎಸ್ ಪಿ ಶ್ರೀಕಾಂತ್ ಸೈಬರ್ ಕ್ರೈಂ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಆರ್. ಸಂತೋಷ್ ಕಶ್ಯಪ್, ದೀಪಕ್, ಪುನೀತ್ ಪ್ರಸನ್ನಕುಮಾರ್, ಗಂಗಾಧರ್, ಎಸ್.ಪಿ.ಸುನೀಲ್, ಪಿ.ಎಸ್.ಐ.ಗಳಾದ ಅಜಯ್ ಕುಮಾರ್,ಜಗದೀಶ, ರವಿ ಕುಮಾರ್, ಚಂದ್ರಹಾಸ ನಾಯಕ, ಸಿಬ್ಬಂದಿಗಳಾದ ಎಚ್.ಎನ್.ಅರುಣ ಹೆಚ್.ಎನ್, ಆರ್. ಪ್ರಭಾಕರ, ಶ್ರೀನಿವಾಸ್ ಪ್ರಸಾದ್, ಡಿ.ಎ. ಇರ್ಫಾನ್, ವಿಜಯ್ ಪವಾರ್, ಸತೀಶ್, ಪುನೀತ್, ಚಂದು, ಮಹೇಂದ್ರ ಸಂಜಯ್ ಹಾಗೂ ಜಿಲ್ಲಾ ಬೆಕ್ನಿಕಲ್ ವಿಭಾಗದ ಎ.ಎಸ್.ಐ ವಸಂತ್ ಕುಮಾರ್, ಲೋಕೇಶ್, ಪೀರ್ ಖಾನ್, ಸುನಿತಾ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು. ಸುದ್ದಿಗೋಷ್ಠಿಯಲ್ಲಿ ಅಡಿಷನಲ್ ಎಸ್ಪಿ ಎಲ್.ನಾಗೇಶ್ ಉಪಸ್ಥಿತರಿದ್ದರು.
Davos World Economic Forum : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸ್ವಿಜರ್ಲ್ಯಾಂಡ್’ನಲ್ಲಿರುವ ದಾವೋಸ್’ಗೆ ಪ್ರಯಾಣಿಸಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯಲ್ಲಿ, ಭಾರತ ಸರ್ಕಾರವನ್ನು ಪ್ರಲ್ಹಾದ ಜೋಶಿ ಪ್ರತಿನಿಧಿಸುತ್ತಿದ್ದಾರೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ದು ಅವರೂ ದಾವೋಸ್ ಗೆ ತೆರಳಿದ್ದಾರೆ.
ಕಲಬುರಗಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಪ್ರತಿಭಟನೆ
ಕಲಬುರಗಿ: ಹುಬ್ಬಳ್ಳಿಯ ಇನಾಮ ವೀರಪೂರ ಗ್ರಾಮದ ಮಾನ್ಯಾ ಎಂಬ ಬಾಲಕಿಯ ಕೊಲೆ ಹಾಗೂ ವಿವೇಕಾನಂದ ಎಂಬುವವರ ಕುಟುಂಬದ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಬಿಜೆಪಿ ಎಸ್.ಸಿ. ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ್ ಜೀನಕೇರಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ತಮಟೆ ಬಾರಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮಾನ್ಯಳನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಸಂತ್ರಸ್ತ ಕುಟುಂಬಕ್ಕೆ ತಕ್ಷಣವೇ 1 ಕೋಟಿ ರೂ. ಪರಿಹಾರ ಘೋಷಿಸಬೇಕು. ದೌರ್ಜನ್ಯಕ್ಕೊಳಗಾದ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಹಾಗೂ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದಲಿತರ ಹಾಗೂ ದಲಿತ ಮಹಿಳೆಯರ ಮೇಲೆ ಹಲ್ಲೆ, ಕಗ್ಗೋಲೆಗಳು ನಿರಂತರವಾಗಿ ನಡೆಯುತ್ತಿವೆ. ದಲಿತರ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ ಎಂದು ದೂರಿದರು. ಅಲ್ಲದೆ, ಎಸ್ಇಪಿ ಮತ್ತು ಎಸ್ಟಿಪಿ (SEP/STP) ಯೋಜನೆಗಳ ಅಡಿಯಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಗ್ರಾಮೀಣ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ, ಬಿಜೆಪಿ ಮುಖಂಡರಾದ ಅಂಬಾರಾಯ ಅಷ್ಟಗಿ, ಅವಣ್ಣ ಮ್ಯಾಕೇರಿ, ರಾಜು ವಾಡೇಕರ್, ಗೀತಾ ವಾಡೇಕಾರ, ಡಾ.ಸುಧಾ ಹಾಲಕಾಯಿ, ರಮೇಶ ವಾಡೇಕರ್, ಬಸವರಾಜ ಬೆಣ್ಣೂರ, ಗೋಪಾಲರಾವ ಕಟ್ಟಿಮನಿ, ರಾಜು ಕಟ್ಟಿಮನಿ, ಪ್ರದೀಪ ಭಾವೆ, ರಂಜಿತ ಮೂಲಿಮನಿ, ಬಂಡೇಶ ರಟ್ನಡಗಿ, ಮಲ್ಲಿಕಾರ್ಜುನ ಸರಡಗಿ, ಅಂಬಾರಾಯ ಬೆಳಕೋಟಾ, ವಿನೋದ ಓಂಕಾರ, ಅಮೃತ ಸಾಗರ, ರವಿ ಸಿಂಗೆ, ಸುರೇಶ ಹೊಸಮನಿ, ನಾಗರಾಜ ಸೋಲಾಪೂರ, ಅನೀಲ ಬೆಳಕೇರಿ, ಮಂಜುನಾಥ ನಾಲವಾರಕರ್, ಅಭಿ ಹಾದಿಮನಿ, ಪ್ರದೀಪ ಬಾಚನಾಳ, ಮನೋಹರ ಬಿರನೂರ, ಪ್ರಹ್ಲಾದ ಹಡಗಿಲಕರ್, ಸಿದ್ರಾಮ ಹೊಸಮನಿ, ಗುಂಡೇಶ ಶಿವನೂರ, ಗುಂಡು ಸಂಗವಾರ, ಹರಿಶ್ಚಂದ್ರ ದೊಡ್ಡಮನಿ, ಧರ್ಮಣ್ಣಾ ಇಟಗಾ, ಆನಂದ ಚವ್ಹಾಣ, ಹಣಮಂತ ರಾಠೋಡ, ಅನೀಲ ಜಾಧವ, ರವಿ ರಾಜಾಪೂರ, ಶ್ರೀನಿವಾಸ ದೇಸಾಯಿ, ಹಣಮಂತ ವಚ್ಚಾ, ಬಾಲರಾಜ, ದತ್ತು ದುಲಾರೆ. ಮೋಹನ ಹೊನಗುಂಟಾ, ಮಹೇಶ ಮೂಲಿಮನಿ, ರಾಜು ಹದನೂರ, ಮೋಹನ ಹಯ್ಯಾಳಕರ್, ಹಣಮಂತ ರತ್ನಡಗಿ, ರಾಜು ತೇಲಂಗಿ, ಮಲ್ಲಪ್ಪಾ ಮಾದರ, ಪೃಥ್ವಿರಾಜ ರಾಮಪೂರೆ, ರಾಕೇಶ ವಾಡೇಕರ್, ಶರಣು ಟೈಗರ, ರವಿಚಂದ್ರ ಕಂಠಿಕರ್, ಶಿವರಾಜ ಕೋರಳ್ಳಿ ಸಚೀನ ಕಟ್ಟಿಮನಿ, ಚಂದು ಕಟ್ಟಿಮನಿ, ಜಾನ ಶಿವನೂರ, ಆನಂದ ಕೊಳ್ಳೂರ, ರಾಜು ಮುಕ್ಕಣ್ಣ, ದೀಪಕ ಹೊಸೂರಕರ್, ಶ್ರೀಶೈಲ ಎಂ.ಜಿ., ಭೀಮು ಹಳ್ಳಿ, ಅಮೃತ ಕೋರಳ್ಳಿ ಸೇರಿದಂತೆ ಹಲವರು ಇದ್ದರು.
ಕಾಬೂಲ್ನ ಹೋಟೆಲ್ವೊಂದರಲ್ಲಿ ಬಾಂಬ್ ಸ್ಫೋಟ: ಹಲವರು ಮೃತಪಟ್ಟಿರುವ ಶಂಕೆ
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಶಹರ್ ಎ ನಾವ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವರು ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಆಂತರಿಕ ಸಚಿವಾಲಯ ತಿಳಿಸಿದೆ. ಸ್ಪೋಟದಲ್ಲಿ ಹಲವರು ಮೃತಪಟ್ಟಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ಮತೀನ್ ಖಾನಿ ತಿಳಿಸಿದ್ದಾರೆ. ಶಹರೆ ಎ ನಾವ್ ಪ್ರದೇಶವು ಕಾಬೂಲ್ನಲ್ಲಿ ಅತ್ಯಂತ ಸುರಕ್ಷಿತ ಪ್ರದೇಶಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಗುಲ್ಫರೋಶಿ ಸ್ಟ್ರೀಟ್ನಲ್ಲಿರುವ ಹೋಟೆಲ್ನಲ್ಲಿ ಸ್ಫೋಟ ಸಂಭವಿಸಿದ್ದು, ಸಾವುನೋವುಗಳು ಸಂಭವಿಸಿವೆ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ.

19 C