SENSEX
NIFTY
GOLD
USD/INR

Weather

23    C
...

ಒಳಮೀಸಲಾತಿ ಅನ್ವಯ ನೇಮಕಾತಿಗೆ ಒತ್ತಾಯ | ಮಾದಿಗ ಸಮುದಾಯ ಕರೆ ನೀಡಿದ್ದ ‘ದಾವಣಗೆರೆ ಬಂದ್’ಗೆ ಉತ್ತಮ ಪ್ರತಿಕ್ರಿಯೆ

ದಾವಣಗೆರೆ : ನ್ಯಾ.ನಾಗಮೋಹನದಾಸ್ ವರದಿಯಂತೆ ಒಳಮೀಸಲಾತಿ ಕಲ್ಪಿಸಬೇಕು, ಅದರಂತೆ ಸರಕಾರಿ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯ ಶುಕ್ರವಾರ ಕರೆ ನೀಡಿದ್ದ ‘ದಾವಣಗೆರೆ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಬೀದಿಗೆ ಇಳಿದ ಮಾದಿಗ ಸಮುದಾಯ ಅಂಗಡಿಗಳನ್ನು ಮುಚ್ಚಿ ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿದರು. ನಗರದ ಪ್ರಮುಖ ವೃತ್ತಗಳಲ್ಲಿ ವ್ಯಾಪಾರ ವಹಿವಾಟು ಬಂದ್ ಆಗಿತ್ತು. ನಂತರ ಬೈಕ್‌ಗಳ ಮೂಲಕ ಸಂಚರಿಸಿ ಘೋಷಣೆಗಳನ್ನು ಕೂಗಿದರು. ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಬಸ್‌ಗಳನ್ನು ತಡೆದು ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಹೋರಾಟ ಮಾಡುತ್ತಿದ್ದೇವೆ, ಬೆಂಬಲ ನೀಡಿ ಎಂದರು. ಗಾಂಧಿ ವೃತ್ತವನ್ನು ನಾಲ್ಕು ತಾಸಿಗೂ ಹೆಚ್ಚು ಕಾಲ ಬಂದ್ ಮಾಡಲಾಯಿತು. ಈ ವೇಳೆ ವಾಹನ ಸವಾರರು ಪರದಾಡಿದ ಘಟನೆಗಳು ಕಂಡು ಬಂದವು. ಜಯದೇವ ವೃತ್ತ, ಅಂಬೇಡ್ಕರ್ ವೃತ್ತ, ಮಹಾನಗರ ಪಾಲಿಕೆ, ಖಾಸಗಿ ಬಸ್ ನಿಲ್ದಾಣಗಳ ಬಳಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು. ವಿದ್ಯಾರ್ಥಿ ಭವನ, ಸಂಗೊಳ್ಳಿ ರಾಯಣ್ಣ ವೃತ್ತ, ಶಾಮನೂರು ಸೇರಿ ವಿವಿಧೆಡೆ ಅಂಗಡಿಗಳನ್ನು ಬಂದ್ ಮಾಡಿಸಿದರು. ನಂತರ ಎಸಿ ಕಚೇರಿ ಬಳಿ ಪ್ರತಿಭಟನಾಕಾರರು ಪ್ರತಿಕೃತಿ ದಹಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಈ ವೇಳೆ ಮುಖಂಡ ಆಲೂರು ನಿಂಗರಾಜ ಮಾತನಾಡಿ, ಮಾದಿಗ ಸಮಾಜ 35 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸಿಕೊಂಡು ಬರುತ್ತಿದೆ. ಸಮಾಜದ ಹೋರಾಟ ಪರಿಗಣಿಸಿ ನಾಗಮೋಹನದಾಸ್ ವರದಿಯಂತೆ ಮೀಸಲಾತಿ ನೀಡಬೇಕು. ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 56 ಸಾವಿರ ಹುದ್ದೆಗಳನ್ನು ರಾಜ್ಯ ಸರಕಾರ ಒಳಮೀಸಲಾತಿಯಡಿ ನೇಮಕಾತಿ ಮಾಡಬೇಕು. ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ. 17ಕ್ಕೆ ಏರಿಕೆ ಮಾಡಿ ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಇಲ್ಲವೇ ಶೇ.15ರ ಮಿತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು. ಒಂದು ವೇಳೆ ಸರಕಾರ ಕಡೆಗಣಿಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಮಾದಿಗ ದಂಡೋರ ಸಮಿತಿಯ ಎಚ್.ಸಿ.ಗುಡ್ಡಪ್ಪಮಾತನಾಡಿ, ನ್ಯಾ.ನಾಗಮೋಹನದಾಸ್ ಅವರ ವರದಿಯಂತೆ ನೇಮಕಾತಿ ನಡೆಯಬೇಕು. ಮುಖ್ಯಮಂತ್ರಿಯವರು ಸಚಿವರಾದ ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಪರಮೇಶ್ವರ ಅವರ ಮಾತು ಕೇಳಿದರೆ ಅಥವಾ ಒತ್ತಡಕ್ಕೆ ಒಳಗಾದರೆ ನಿಮ್ಮ ವಿರುದ್ಧವೇ ಹೋರಾಟಕ್ಕೆ ಇಳಿಯುತ್ತೇವೆ ಎಂದು ಎಚ್ಚರಿಸಿದರು. ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಮಾತನಾಡಿ, ಸಾಮಾಜಿಕ ನ್ಯಾಯದಂತೆ ಎಲ್ಲ ಸಮುದಾಯಗಳಿಗೂ ಮೀಸಲಾತಿ ಸಿಗಬೇಕು. ನಮ್ಮ ಸಮುದಾಯ ಬಹಳ ಹಿಂದುಳಿದ ಸಮುದಾಯವಾಗಿದೆ. ನಮಗೆ ನ್ಯಾಯಸಿಗಬೇಕು. ಈಗ ಶಾಂತಿಯುತ ಹೋರಾಟ ನಡೆಸುತ್ತಿದ್ದೇವೆ. ಸರಕಾರ ಎಚ್ಚೆತ್ತುಕೊಂಡು ಒಳಮೀಸಲಾತಿ ಜಾರಿ ಮಾಡಬೇಕು ಎಂದರು. ಲಿಂಗರಾಜ ಗಾಂಧಿನಗರ ಮಾತನಾಡಿದರು. ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾದಿಗ ಸಮುದಾಯ ಕರೆ ನೀಡಿದ್ದ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ರಾಜ್ಯ ಸರಕಾರ ಕೂಡಲೇ ಒಳಮೀಸಲಾತಿ ಅಡಿಯಲ್ಲಿ ನೇಮಕಾತಿ ನಡೆಸಿ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಮಾದಿಗ ದಂಡೋರ ಸಮಿತಿ, ದಲಿತ ಸಮುದಾಯ ದಾವಣಗೆರೆ ಬಂದ್‌ಗಾಗಿ ಕರೆ ನೀಡಿದ್ದವು. ಅದರಂತೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲು ನೋಟಿಸ್ ನೀಡಲಾಗಿತ್ತು. ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು. ಭದ್ರತೆಗೆ ಕೆಎಸ್‌ಆರ್‌ಪಿ, ಡಿಎಸ್‌ಆರ್ ತುಕಡಿ ನೇಮಕ ಮಾಡಲಾಗಿತ್ತು. -ಶೇಖರ್ ಎಚ್.ಟಿ., ಎಸ್ಪಿ ದಾವಣಗೆರೆ

ವಾರ್ತಾ ಭಾರತಿ 7 Mar 2026 12:35 am

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ. ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ; ವರದಿ

ಹೊಸದಿಲ್ಲಿ: ಸುಮಾರು ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರದಿಂದ ಅವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ ಎಂದು maktoobmedia.com ವರದಿ ಮಾಡಿದೆ. ಓಸೊಫಾಗೋಫಾರಿಂಜಿಯಲ್ ಕಾರ್ಸಿನೋಮಾ ಶಸ್ತ್ರಚಿಕಿತ್ಸೆಯ ನಂತರ ದೀರ್ಘ ವಿಶ್ರಾಂತಿಯಲ್ಲಿದ್ದ ಹಿರಿಯ ಮುಸ್ಲಿಂ ನಾಯಕ ಅಬೂಬಕರ್ ಅವರನ್ನು 2022ರ ಸೆಪ್ಟೆಂಬರ್ 22ರಂದು ಮುಂಜಾನೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅವರ ಮನೆಯಿಂದ ಬಂಧಿಸಿತ್ತು. ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ ಮಗಳು ಲೀನಾ ಥಬಾಸುಮ್, ಕಳೆದ ಎರಡು ದಿನಗಳಿಂದ ಅವರ ಸ್ಥಿತಿಯಲ್ಲಿ ಯಾವುದೇ ಗಮನಾರ್ಹ ಸುಧಾರಣೆ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಕುಟುಂಬದ ಪ್ರಕಾರ, ಅಬೂಬಕರ್ ಅವರು ಎದೆ ಸೋಂಕು ಹಾಗೂ ತೀವ್ರ ಕೆಮ್ಮಿನಿಂದ ಬಳಲುತ್ತಿದ್ದಾರೆ. ಜೊತೆಗೆ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಏರಿಳಿತಗಳು ಕಂಡುಬರುತ್ತಿವೆ. ಅವರ ರಕ್ತದಲ್ಲಿನ ಆಮ್ಲಜನಕದ ಮಟ್ಟವೂ ಕುಸಿದಿದ್ದು, ಆರೋಗ್ಯದ ಬಗ್ಗೆ ಕುಟುಂಬದವರಲ್ಲಿ ಆತಂಕ ಮೂಡಿಸಿದೆ. ಜೈಲು ಅಧಿಕಾರಿಗಳು ಅವರನ್ನು ಹೊಸದಿಲ್ಲಿಯ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಿದ್ದರು. ಅಬೂಬಕರ್ ಅವರ ಅಳಿಯ ಮುನೀಬ್ ಟಿ.ಟಿ. ಅವರ ಹೇಳಿಕೆಯಂತೆ, ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಅವರನ್ನು ಶುಕ್ರವಾರ ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಈ ಬೆಳವಣಿಗೆ ಕುಟುಂಬದಲ್ಲಿ ಮತ್ತಷ್ಟು ಆತಂಕ ಉಂಟುಮಾಡಿದೆ. ಅವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಜಾಮೀನು ಕೋರಿ ನ್ಯಾಯಾಲಯವನ್ನು ಸಂಪರ್ಕಿಸಲು ಕುಟುಂಬ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. 74 ವರ್ಷದ ಅಬೂಬಕರ್ ಅವರು ವಿಚಾರಣಾಧೀನ ಕೈದಿಯಾಗಿದ್ದು, ಇನ್ನೂ ವಿಚಾರಣೆ ಪ್ರಾರಂಭವಾಗಿಲ್ಲ. ತನಿಖೆ ಮುಂದುವರಿದಿರುವುದಾಗಿ ವರದಿಯಾಗಿದೆ. ತನಿಖಾ ಸಂಸ್ಥೆಯ ಪ್ರಕಾರ, “ಇಲ್ಲಿಯವರೆಗೆ ನಡೆದ ಅತಿದೊಡ್ಡ ತನಿಖಾ ಪ್ರಕ್ರಿಯೆ” ಎಂದು ಹೇಳಲಾದ ಕಾರ್ಯಾಚರಣೆಯಲ್ಲಿ ಅದೇ ದಿನ 10 ರಾಜ್ಯಗಳಲ್ಲಿ ಸುಮಾರು 100 ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಲಾಗಿತ್ತು ಅಥವಾ ವಶಕ್ಕೆ ಪಡೆಯಲಾಗಿತ್ತು. ಅಬೂಬಕರ್ ಅವರ ಬಂಧನದ ಒಂದು ವಾರದ ನಂತರ ಭಾರತ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಹಲವಾರು ಅಂಗಸಂಸ್ಥೆಗಳನ್ನು ನಿಷೇಧಿಸಿತು. ಇದರಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ರಿಹ್ಯಾಬ್ ಇಂಡಿಯಾ ಫೌಂಡೇಶನ್, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ಸ್, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಹಾಗೂ ರಿಹ್ಯಾಬ್ ಫೌಂಡೇಶನ್ ಕೇರಳ ಸೇರಿವೆ. ದಿಲ್ಲಿ ಹೈಕೋರ್ಟ್ ಹಾಗೂ ಭಾರತದ ಸುಪ್ರೀಂ ಕೋರ್ಟ್ ಎರಡೂ ಈ ಹಿಂದೆ ಅಬೂಬಕರ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿವೆ. ಬಂಧನದಲ್ಲಿರುವ ಅವಧಿಯಲ್ಲಿ ಅವರ ಆರೋಗ್ಯ ದಿನೇ ದಿನೇ ಹದಗೆಡುತ್ತಿದೆ ಎಂದು ಕುಟುಂಬ ಹೇಳಿದೆ. “ಅವರು ದಿನದಿಂದ ದಿನಕ್ಕೆ ದುರ್ಬಲರಾಗುತ್ತಿದ್ದಾರೆ. ಅವರ ಆರೋಗ್ಯಕ್ಕೆ ತಕ್ಕ ಆಹಾರ ಲಭ್ಯವಾಗದೆ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಸ್ಮರಣಶಕ್ತಿ ನಷ್ಟದ ಸಮಸ್ಯೆಯೂ ಕಾಣಿಸುತ್ತಿದೆ” ಎಂದು ಅವರ ಪತ್ನಿ ಅಮಿನಾ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲು ಏಮ್ಸ್‌ ನಿಂದ 10 ವೈದ್ಯರ ವೈದ್ಯಕೀಯ ಮಂಡಳಿಯನ್ನು ರಚಿಸಲಾಗಿತ್ತು. ಆದರೆ ಮಂಡಳಿ ಸಲ್ಲಿಸಿದ ವರದಿ ಅವರ ನಿಜವಾದ ಆರೋಗ್ಯ ಸ್ಥಿತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ಕುಟುಂಬ ಆರೋಪಿಸಿದೆ. ಈ ವರದಿಯನ್ನೇ ಆಧಾರವನ್ನಾಗಿ ಮಾಡಿಕೊಂಡು ಸುಪ್ರೀಂ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ ಎಂದು ಕುಟುಂಬ ಹೇಳಿದೆ. ಬಳಿಕ ದೆಹಲಿಯ ಏಮ್ಸ್ ಆಸ್ಪತ್ರೆಯ ಮೇಲಿನ ವಿಶ್ವಾಸಾರ್ಹತೆಯ ಕೊರತೆಯನ್ನು ವ್ಯಕ್ತಪಡಿಸಿದ ಅಬೂಬಕರ್ ಅವರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ಪತ್ರ ಬರೆದು ಕೆಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ಕುಟುಂಬ ತಿಳಿಸಿದೆ. 2020ರಲ್ಲಿ ಅಬೂಬಕರ್ ಅವರು ಕ್ಯಾನ್ಸರ್‌ ಗೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಅವರು ಹೆಚ್ಚಾಗಿ ಮನೆಯಲ್ಲಿಯೇ ಕುಟುಂಬ ಸದಸ್ಯರ ತೀವ್ರ ನಿಗಾದಲ್ಲಿದ್ದರು ಎನ್ನಲಾಗಿದೆ. ಕುಟುಂಬದ ಪ್ರಕಾರ, ಅವರಿಗೆ ರೆಟಿನೋಪಥಿಯೊಂದಿಗೆ ಡಯಾಬಿಟಿಕ್ ಮೆಲ್ಲಿಟಸ್, ಅಧಿಕ ರಕ್ತದೊತ್ತಡ, ಇಡಿಯೋಪಥಿಕ್ ಪಾರ್ಕಿನ್ಸನ್ ಕಾಯಿಲೆ, Coronary Artery Disease, ಶಸ್ತ್ರಚಿಕಿತ್ಸೆಯ ನಂತರದ ಅನ್ನನಾಳ ಕ್ಯಾನ್ಸರ್ ಹಾಗೂ ಬೆನಿಗ್ನ್ ಪ್ರಾಸ್ಟೇಟ್ ಹೈಪರ್ಪ್ಲಾಸಿಯಾ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿವೆ.

ವಾರ್ತಾ ಭಾರತಿ 7 Mar 2026 12:18 am

ಕಾರ್ಪೊರೇಟ್ ಪರ ಬಜೆಟ್: ಕೆ.ನೀಲಾ ಟೀಕೆ

ಕಲಬುರಗಿ: ರಾಜ್ಯ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ ಜನಪರತೆಯ ಮುಖವಾಡ ಧರಿಸಿದರೂ ವಾಸ್ತವದಲ್ಲಿ ಖಾಸಗಿ ಮತ್ತು ಕಾರ್ಪೊರೇಟ್ ಬಂಡವಾಳಿಗರಿಗೆ ಅನುಕೂಲ ಮಾಡಿಕೊಡುವಂತಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಕರ್ನಾಟಕ ರಾಜ್ಯ ಸಮಿತಿ ತೀವ್ರ ಟೀಕೆ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ, ರಾಜ್ಯ ಸರ್ಕಾರ ಮಂಡಿಸಿರುವ ಸುಮಾರು 4.48 ಲಕ್ಷ ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ 1.34 ಲಕ್ಷ ಕೋಟಿ ರೂಪಾಯಿಗಳಷ್ಟು ಸಾಲವನ್ನು ಮತ್ತೆ ಹೊರಿಸಲಾಗಿದೆ. 2024–25ರಲ್ಲಿ ಸುಮಾರು 5 ಲಕ್ಷ ಕೋಟಿ ರೂಪಾಯಿಗಳಷ್ಟಿದ್ದ ರಾಜ್ಯದ ಒಟ್ಟು ಸಾಲ ಈಗ ಅಂದಾಜು 8 ಲಕ್ಷ ಕೋಟಿ ರೂಪಾಯಿಗಳನ್ನು ದಾಟುವ ಸಾಧ್ಯತೆ ಇದೆ. ಸರ್ಕಾರದ ವೆಚ್ಚಗಳನ್ನು ನಿರ್ವಹಿಸಲು ಸಾಲವೇ ಪ್ರಮುಖ ಆಧಾರವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೈಗಾರಿಕಾವೃದ್ಧಿ ಪ್ರಮುಖವಾದರೂ, ಹೊಸ ಕೈಗಾರಿಕಾ ದೃಷ್ಟಿಕೋನ ಅಥವಾ ಗೌರವಯುತ ಆದಾಯದ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಸ್ಪಷ್ಟ ಯೋಜನೆಗಳು ಬಜೆಟ್‌ನಲ್ಲಿ ಕಾಣುತ್ತಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆಗಳ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಸ್ಪಷ್ಟ ನಿಲುವು ತೋರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಾದ ಮನರೇಗಾ ಸಂಬಂಧವೂ ಬಜೆಟ್‌ನಲ್ಲಿ ಸಮರ್ಪಕ ಪ್ರಯತ್ನ ಕಾಣುತ್ತಿಲ್ಲ. ಕಳೆದ ಸಾಲಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 26,735 ಕೋಟಿ ರೂಪಾಯಿ ಮೀಸಲಿದ್ದರೆ, ಈ ಬಾರಿ 26,559 ಕೋಟಿ ರೂಪಾಯಿ ಮಾತ್ರ ಮೀಸಲಿಟ್ಟು 176 ಕೋಟಿ ರೂ. ಕಡಿತ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿಯೂ ಹಲವು ಸಮಸ್ಯೆಗಳಿದ್ದರೂ ಅವುಗಳಿಗೆ ಸ್ಪಷ್ಟ ಪರಿಹಾರ ಕ್ರಮಗಳು ಕಾಣುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ಈಡೇರಿಸಿಲ್ಲ ಎಂದು ದೂರಿದ್ದಾರೆ. ವೃದ್ಧರು, ವಿಧವೆಯರು, ಅಂಗವಿಕಲರು ಹಾಗೂ ದೇವದಾಸಿಯರಾಗಿದ್ದ ಮಹಿಳೆಯರ ಕಲ್ಯಾಣಕ್ಕಾಗಿ ಯಾವುದೇ ಪ್ರಮುಖ ಘೋಷಣೆಗಳಿಲ್ಲದಿರುವುದರಿಂದ ಇದು ಜನಪರತೆ ಇಲ್ಲದ ನೀರಸ ಬಜೆಟ್ ಎಂದು ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ಅಭಿಪ್ರಾಯಪಟ್ಟಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 7 Mar 2026 12:08 am

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ | ಗುಣಾತ್ಮಕ ಚಲನಚಿತ್ರಗಳಿಗೆ ಸಹಾಯಧನ ನೀಡಲು 20 ಕೋಟಿ ರೂ. ಮೀಸಲು

ಬೆಂಗಳೂರು : ಗುಣಾತ್ಮಕ ಚಲನಚಿತ್ರಗಳಿಗೆ ನೀಡಲಾಗುತ್ತಿದ್ದ ಸಹಾಯಧನವು ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, 2025-26ನೇ ಸಾಲಿನಲ್ಲಿ ಮೂರು ವರ್ಷಗಳ ಚಲನಚಿತ್ರಗಳನ್ನು ಗುರುತಿಸಿ ಸಹಾಯಧನ ನೀಡಲಾಗಿದೆ. ಪ್ರಸಕ್ತ ಸಾಲಿಗೆ ಉಳಿದ ಮೂರು ವರ್ಷಗಳ ಚಲನಚಿತ್ರಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಸಹಾಯಧನ ನೀಡಲು 20 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮಹಾತ್ಮ ಗಾಂಧೀಜಿ ವಿಚಾರಧಾರೆಗಳನ್ನು ಯುವಜನರಿಗೆ ತಿಳಿಸಲು ಮತ್ತು ಜಿಲ್ಲಾ ಗಾಂಧಿ ಭವನಗಳನ್ನು ಪುನಃಶ್ಚೇತನಗೊಳಿಸಲು ‘ಮಹಾತ್ಮಾ ಗಾಂಧಿ ಜನ ಶಿಕ್ಷಣ ಕೇಂದ್ರ’ ಯೋಜನೆಯನ್ನು ರೂಪಿಸಿ ಜಾರಿಗೊಳಿಸುವುದು. ಇಲಾಖೆಯಲ್ಲಿ ಲಭ್ಯವಿರುವ ಛಾಯಾಚಿತ್ರಗಳು ಹಾಗೂ ವೀಡಿಯೊ ಡಾಕ್ಯುಮೆಂಟರಿಗಳನ್ನು ಡಿಜಿಟಲ್ ಮಾದರಿಗೆ ಪರಿವರ್ತಿಸಿ, ‘ಡಿಜಿಟಲ್ ದೃಶ್ಯ ಕರ್ನಾಟಕ’ ಎಂಬ ವೇದಿಕೆಯೊಂದನ್ನು ಕಲ್ಪಿಸಲಾಗುವುದು. ಇದಕ್ಕಾಗಿ ಐದು ಕೋಟಿ ರೂ.ಗಳನ್ನು ಒದಗಿಸುವುದು ಎಂದರು. ರಾಜ್ಯದಲ್ಲಿ ಚಲನಚಿತ್ರ ಹಾಗೂ ಇತರೆ ಚಿತ್ರೀಕರಣಗಳಿಗೆ ಅಗತ್ಯವಿರುವ ವಿವಿಧ ಇಲಾಖೆಗಳ ಅನುಮತಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಲ್ಲಿ ಒಂದೇ ವೇದಿಕೆಯಲ್ಲಿ ನೀಡುವ ಸಲುವಾಗಿ ‘ಸಿನಿ ಮಿತ್ರ’ ಎಂಬ ಆನ್‍ಲೈನ್ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೊಳಿಸುವುದು. ರಾಜ್ಯದ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು ಮತ್ತು ಚಿತ್ರೀಕರಣ ಸ್ಥಳಗಳ ಮಾಹಿತಿಯನ್ನು ಒಳಗೊಂಡ ‘ಕರ್ನಾಟಕ ಫಿಲ್ಮ್ ಲೊಕೇಷನ್ ಡಿಜಿಟಲ್ ಮ್ಯಾಪ್’ನ್ನು ಒಂದು ಕೋಟಿ ರೂ. ಗಳಲ್ಲಿ ಅಭಿವೃದ್ಧಿಪಡಿಸುವುದು ಎಂದು ಅವರು ತಿಳಿಸಿದರು. ಮೈಸೂರು ಫಿಲ್ಮ್ ಸಿಟಿಯನ್ನು ಸ್ಥಾಪಿಸಲು ಈ ಮೊದಲು 500 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿತ್ತು. ಫಿಲ್ಮ್ ಸಿಟಿ ಸೌಲಭ್ಯಗಳನ್ನು ಒಳಗೊಂಡಂತೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ಥೀಮ್ ಪಾರ್ಕ್, ಸ್ಟಾರ್ ಹೊಟೇಲ್ ಮತ್ತು ರೆಸ್ಟೋರೆಂಟ್‍ಗಳನ್ನು ಒಳಗೊಂಡು ಪಿಪಿಪಿ ಮಾದರಿಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿ ವ್ಯವಹಾರ ವಹಿವಾಟುದಾರರನ್ನು ನೇಮಿಸಲಾಗಿದೆ. ದಿವಂಗತ ಪುಟ್ಟಣ್ಣ ಕಣಗಾಲ್ರವರ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು. ಗಾಂಧೀಜಿ ಭೇಟಿ ಕೊಟ್ಟ ರಾಜ್ಯದ ವಿವಿಧ ಸ್ಥಳಗಳಲ್ಲಿ ಅವರ ಸ್ಮರಣಾರ್ಥ ಗಾಂಧಿ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

ವಾರ್ತಾ ಭಾರತಿ 7 Mar 2026 12:08 am

ಕೋರ್ಟ್ ಕಟ್ಟಡ, ನ್ಯಾಯಾಧೀಶರ ವಸತಿ ಗೃಹಕ್ಕಾಗಿ 175 ಕೋಟಿ ರೂ.

ಎಸ್‍ಟಿ ಆಯೋಗ ರಚನೆ, 50 ಕೋಟಿ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ

ವಾರ್ತಾ ಭಾರತಿ 7 Mar 2026 12:04 am

ವಿದ್ಯುತ್ ಚಾಲಿತ, ಡೀಸೆಲ್ ಸೇರಿ 5 ಸಾವಿರ ಹೊಸ ಬಸ್

ಬೆಂಗಳೂರ : 2026-27ನೆ ಸಾಲಿನಲ್ಲಿ ವಿದ್ಯುತ್ ಚಾಲಿತ, ಡೀಸೆಲ್ ಬಸ್ಸುಗಳು ಸೇರಿದಂತೆ ಒಟ್ಟಾರೆ 5 ಸಾವಿರ ಹೊಸ ಬಸ್‍ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಪ್ರಕಟಿಸಿದ್ದಾರೆ. ವಿಶ್ವಬ್ಯಾಂಕ್ ನೆರವಿನೊಂದಿಗೆ 2,000 ಕೋಟಿ ರೂ.ಗಳ ಮೊತ್ತದ ಕೆಇಬಿಪಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಇದರಡಿ ಬಿಎಂಟಿಸಿ ಸಂಸ್ಥೆಯ 32 ಹಾಗೂ ಇತರೆ ರಸ್ತೆ ಸಾರಿಗೆ ನಿಗಮಗಳ 62 ಎಲೆಕ್ಟ್ರಿಕ್ ಬಸ್ ಡಿಪೋಗಳನ್ನು ಅಭಿವೃದ್ಧಿಪಡಿಸುವುದರೊಂದಿಗೆ 4,000 ವಿದ್ಯುತ್ ಚಾಲಿತ ಬಸ್ಸುಗಳನ್ನು ಒದಗಿಸಲಾಗುವುದು. ಅದೇ ರೀತಿ, ಕಳೆದ ವರ್ಷ ಘೋಷಿಸಿರುವಂತೆ 2,000 ಡೀಸೆಲ್ ಬಸ್ಸುಗಳನ್ನು ನೇರ ಖರೀದಿ ಮೂಲಕ ಒದಗಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಇದೂ ಸೇರಿದಂತೆ 2026-27ನೆ ಸಾಲಿನಲ್ಲಿ 1,000 ಡೀಸೆಲ್ ಬಸ್ಸುಗಳನ್ನು ಒದಗಿಸಲಾಗುವುದು ಎಂದು ಘೋಷಿಸಿದರು. ಮಹಿಳಾ ಸಬಲೀಕರಣದ ಸದುದ್ದೇಶದಿಂದ ಜಾರಿಗೊಳಿಸಿರುವ ಸರಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಇದುವರೆಗೆ 684 ಕೋಟಿ ಟ್ರಿಪ್‍ಗಳಲ್ಲಿ ಮಹಿಳಾ ಫಲಾನುಭವಿಗಳು ಪ್ರಯಾಣ ಸೌಲಭ್ಯ ಪಡೆದಿದ್ದು, ಈ ಯೋಜನೆಯ ಅನುಷ್ಠಾನಕ್ಕಾಗಿ 2026-27ನೆ ಸಾಲಿಗೆ 5,300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಹೇಳಿದರು. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಅಪಘಾತ ಸ್ಥಳಗಳನ್ನು ಗುರುತಿಸಲು ಮತ್ತು ಅವುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಐಐಟಿ. ಮದ್ರಾಸ್ ಮತ್ತು ಎನ್‍ಐಸಿ ಸಹಯೋಗದೊಂದಿಗೆ ಡ್ಯಾಶ್ ಬೋರ್ಡ್ ಒಳಗೊಂಡ ಆಧುನಿಕ ತಂತ್ರಾಂಶವನ್ನು 5 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದಲ್ಲಿ ಸ್ವಂತ ಕಟ್ಟಡ ಹೊಂದಿರುವ 25 ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಡ್ರೈವಿಂಗ್ ಟ್ರ್ಯಾಕ್‍ಗಳು ಹಾಗೂ ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್ ಕಟ್ಟಡಗಳ ಮೇಲ್ಛಾವಣಿಯಲ್ಲಿ 10 ಕೋಟಿ ರೂ.ಗಳ ವೆಚ್ಚದಲ್ಲಿ ರೂಫ್ ಟಾಪ್ ಸೋಲಾರ್ ಅಳವಡಿಸುವ ಯೋಜನೆಯನ್ನು ಜಾರಿಗೊಳಿಸಲಾಗುವುದು. ತುಮಕೂರಿನಲ್ಲಿ 5 ಕೋಟಿ ರೂ.ಗಳ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್ ಅನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಚಿಕ್ಕಮಗಳೂರು ಹಾಗೂ ತುಮಕೂರಿನಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು 12 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ರಾಮದುರ್ಗ, ಹೊನ್ನಾಳಿ ಮತ್ತು ಗದಗದಲ್ಲಿ ನೂತನ ಬಸ್ಸು ನಿಲ್ದಾಣಗಳನ್ನು ಹಾಗೂ ತರೀಕೆರೆಯಲ್ಲಿ ಬಸ್ಸು ಡಿಪೋ ಅನ್ನು ನಿರ್ಮಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು. ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆಗೆ ನಿಶ್ಚಯ: ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿಗಗಳ ವೇತನ ಪರಿಷ್ಕರಣೆ ಬಾಕಿ ಬೇಡಿಕೆಯನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗಿದ್ದು, ವೇತನವನ್ನು ಪರಿಷ್ಕರಿಸಲು ನಮ್ಮ ಸರಕಾರ ನಿಶ್ಚಯಿಸಿದೆ. ಸದ್ಯ ವೇತನ ಬಾಕಿ ಪಾವತಿಗಾಗಿ 1,271 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಾರ್ತಾ ಭಾರತಿ 7 Mar 2026 12:01 am

ಉದ್ಯೋಗ ಸೃಷ್ಠಿಗೆ ಒತ್ತು ನೀಡದ ಬಜೆಟ್: ಡಿವೈಎಫ್ಐ

ಕಲಬುರಗಿ: ಮುಖ್ಯಮಂತ್ರಿ ಮಂಡಿಸಿದ 4.48 ಲಕ್ಷ ಕೋಟಿ ರೂಪಾಯಿಯ 2026-27 ನೇ ಸಾಲಿನ ಆಯವ್ಯಯ (ಬಜೆಟ್) ದಲ್ಲಿ ಯುವಜನರಿಗೆ ಅತ್ಯಗತ್ಯವಿರುವ ಉದ್ಯೋಗ ಸೃಷ್ಠಿಸಿ, ಉದ್ಯೋಗ ಖಾತ್ರಿಗೊಳಿಸದೇ ಯುವಜನರಿಗೆ ನಿರಾಸೆಯನ್ನು ಮೂಡಿಸಿದ ಬಜೆಟ್ ಆಗಿದೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಸಂಘಟನೆಯ ರಾಜ್ಯಾಧ್ಯಕ್ಷೆ ಲವಿತ್ರ ವಸ್ತ್ರದ್, ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇವೆ ಎಂಬ ಬಜೆಟ್ ನಲ್ಲಿರುವ ಅಂಶ ಕೇವಲ ಕಾಗದದ ಮೇಲಿನ ಘೋಷಣೆಯಾಗಿದೆ. ಲಕ್ಷಾಂತರ ಯುವಜನರು ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ಈ ಪ್ರಸಕ್ತ ಸನ್ನಿವೇಶದಲ್ಲಿ ಮುಖ್ಯಮಂತ್ರಿಗಳು ಉದ್ಯೋಗ ನೀತಿ ಜಾರಿಗೊಳಿಸಿ ಉದ್ಯೋಗ ಭರವಸೆ ನೀಡುತ್ತಾರೆಂದು ಭಾವಿಸಿದ್ದರು. ಆದರೆ ಯುವಕರ ನಿರೀಕ್ಷೆ ಹುಸಿ ಮಾಡಿದ್ದಾರೆ ಎಂದರು. 15 ಸಾವಿರ ಬೋಧಕ ಹುದ್ದೆಗಳನ್ನು ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುವುದು ಒಳಗೊಂಡಂತೆ 56,432 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂಬ ಒಂದಂಶ ಹೊರತುಪಡಿಸಿದರೆ, ರಾಜ್ಯ ಸರಕಾರದಡಿ ಖಾಲಿಯಿರುವ 2.80 ಲಕ್ಷ ಹುದ್ದೆಗಳ ಭರ್ತಿಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೇ ರಾಜ್ಯಕ್ಕೆ ಅಗತ್ಯವಿರುವ ಯುವ ನೀತಿಯನ್ನೂ ಕೂಡ ಜಾರಿ ಮಾಡಲು ಮುಂದಾಗಿಲ್ಲ ಎಂದು ದೂರಿದರು. ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ 'ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ'ವನ್ನು ನಿಲ್ಲಿಸಲು 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೆ ತರುವುದನ್ನು ಸಂಘಟನೆ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಮೋದ ಪಾಂಚಾಳ, ಸಲ್ಮಾನ್ ಖಾನ್, ಗಿಡ್ಡಮ್ಮ, ಶಾಂತಕುಮಾರ, ಸಾನಿಯಾ ಇದ್ದರು.

ವಾರ್ತಾ ಭಾರತಿ 6 Mar 2026 11:52 pm

ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಹೆಚ್ಚುವರಿ 50 ರೂ.ಗಳನ್ನು ಪಾವತಿಸಲು 300 ಕೋಟಿ ರೂ. ಮೀಸಲು

ಬೆಂಗಳೂರು : ರೈತರ ಹಿತದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ಒಂದು ಬಾರಿಯ ಕ್ರಮವಾಗಿ ಆರ್ಥಿಕ ನೆರವು ನೀಡಲು ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 50 ರೂ.ಗಳನ್ನು ಪಾವತಿಸಲು 300 ಕೋಟಿ ರೂ. ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಕರ್ನಾಟಕ ತೈಲ ಮಾರುಕಟ್ಟೆ ಕಂಪೆನಿಗಳಿಗೆ ನಿಗದಿಪಡಿಸಲಾದ ಎಥೆನಾಲ್ ಖರೀದಿ ಪ್ರಮಾಣವು ರಾಜ್ಯದ ಉತ್ಪಾದನಾ ಸಾಮಥ್ರ್ಯಕ್ಕಿಂತ ಕಡಿಮೆಯಾಗಿರುವುದಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರೂ ಪರಿಗಣನೆಯಾಗದೇ ಇರುವುದರಿಂದ, ನಮ್ಮ ರೈತರು ಮಾರುಕಟ್ಟೆ ಏರಿಳಿತಗಳು ಮತ್ತು ಬೆಲೆ ಅನಿಶ್ಚಿತತೆಗೆ ಒಳಗಾಗಿರುತ್ತಾರೆ. ಆದುದರಿಂದ ರಾಜ್ಯ ಸರಕಾರದ ಕೋಟಾವನ್ನು ಹೆಚ್ಚಿಸಲು ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದರು. ಜಿಲ್ಲಾ ಮಟ್ಟದಲ್ಲಿ ಕಾರ್ಖಾನೆವಾರು ಪ್ರತ್ಯೇಕ ತಂಡಗಳ ಮುಖಾಂತರ 2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಕನಿಷ್ಟ ತಿಂಗಳಿಗೆ ಎರಡು ಬಾರಿ ಸಕ್ಕರೆ ಇಳುವರಿಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ‘ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್’ನಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರಕಾರವು 390 ಕೋಟಿ ರೂ.ಗಳನ್ನು ಅನುಮೋದಿಸಿದ್ದು, ಈ ಯೋಜನೆಗಾಗಿ 2026-27ನೇ ಸಾಲಿಗೆ 75 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. ಮುಖ್ಯಾಂಶಗಳು: ► ನೇಕಾರರ ಸಮ್ಮಾನ್ ಯೋಜನೆಯಡಿ ಒಟ್ಟು 1.30 ಲಕ್ಷ ನೇಕಾರರಿಗೆ ವಾರ್ಷಿಕ 5 ಸಾವಿರ ರೂ.ಗಳ ಆರ್ಥಿಕ ನೆರವು. ► ವಿದ್ಯುತ್ ಸಹಾಯಧನ ಯೋಜನೆಯಡಿ 1 ರಿಂದ 10 ಎಚ್‍ಪಿ ವರೆಗೆ ಉಚಿತವಾಗಿ ಮತ್ತು 10 ರಿಂದ 20 ಎಚ್‍ಪಿ ವರೆಗಿನ ಘಟಕಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸುವುದು. ► ಎಸ್‍ಸಿ, ಎಸ್‍ಟಿಗಳಿಗೆ 20 ಎಚ್‍ಪಿಯಿಂದ 200 ಎಚ್‍ಪಿ ವರೆಗಿನ ವಿದ್ಯುತ್ ಮಗ್ಗ ನೇಕಾರರಿಗೆ ಪ್ರತಿ ಯೂನಿಟ್‍ಗೆ ಶೇ.50ರಷ್ಟು ಸಹಾಯಧನ ನೀಡುವ ಯೋಜನೆ. ► ನೇಕಾರರ ಏಳಿಗೆಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆಯಾಗಿ 225 ಕೋಟಿ ರೂ. ಅನುದಾನವ. ► ರಾಜ್ಯದಲ್ಲಿರುವ ಸಹಕಾರಿ ನೂಲಿನ ಗಿರಣಿಗಳನ್ನು ಪ್ರೋ ತ್ಸಾಹಿಸಲು ಪ್ರತಿ ಯೂನಿಟ್‍ಗೆ 3 ರೂ. ರಂತೆ ವಿದ್ಯುತ್ ಸಹಾಯಧನ.

ವಾರ್ತಾ ಭಾರತಿ 6 Mar 2026 11:49 pm

Karnataka Budget 2026 | ಮನೆ ನಿರ್ಮಾಣ ಸಹಾಯ ಧನ ಏರಿಕೆ, ರಿಯಾಯತಿ ದರದಲ್ಲಿ ನಿವೇಶನ ಹಂಚಿಕೆ

ಬೆಂಗಳೂರು : ಸರ್ವರಿಗೂ ಸೂರು ಕಲ್ಪಿಸುವ ಉದ್ದೇಶದಿಂದ ಫಲಾನುಭವಿಗಳಿಗೆ ನೀಡುವ ಸಹಾಯಧನ ಮೊತ್ತವನ್ನು ರಾಜ್ಯ ಸರಕಾರ ಈ ಬಜೆಟ್‍ನಲ್ಲಿ ಏರಿಕೆ ಮಾಡಿದೆ. ಜತೆಗೆ, ನಮ್ಮ ಮನೆ ಯೋಜನೆಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇಶನಗಳನ್ನು ರಿಯಾಯತಿ ದರದಲ್ಲಿ ವಿತರಿಸುವುದಾಗಿ ಘೋಷಣೆ ಮಾಡಿದೆ. ರಾಜ್ಯದ ವಿವಿಧ ವಸತಿ ಯೋಜನೆಗಳಡಿ ಬಿಎಲ್‍ಸಿ ಆಧಾರಿತ ಒಂದು ಲಕ್ಷ ಮನೆಗಳ ಹೊಸ ಗುರಿಯನ್ನು ಮಂಜೂರು ಮಾಡಲಾಗುವುದು. ಸದರಿ ಗುರಿಯಡಿ ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ನೀಡುವ ಸಹಾಯಧನವನ್ನು 1.20 ಲಕ್ಷ ರೂ. ಗಳಿಂದ 2 ಲಕ್ಷ ರೂ.ಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 2 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ವಿವಿಧ ವಸತಿ ಯೋಜನೆಗಳಡಿಯಲ್ಲಿ 7,328 ಕೋಟಿ ರೂ.ಗಳ ಮೊತ್ತದಲ್ಲಿ ಒಟ್ಟಾರೆ 4,19,454 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಹಿಂದಿನ ಸರಕಾರವು ಅನುದಾನ ನೀಡದೇ ಮಂಜೂರಾತಿ ನೀಡಿರುವ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ನಮ್ಮ ಸರಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ. ರಾಜ್ಯ ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು ಆನ್‍ಲೈನ್ ಲಾಟರಿ ಮೂಲಕ ಗ್ರಾಮ ಸಭೆಗಳಲ್ಲಿ ಆಯ್ಕೆಗೊಳಿಸಲಾಗುವುದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ಎಎಚ್‍ಪಿ) 1.29 ಲಕ್ಷ ಮನೆಗಳ ನಿರ್ಮಾಣ ಕಾರ್ಯವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಸರಕಾರದಿಂದ 1,136 ಕೋಟಿ ರೂ.ಗಳ ಅನುದಾನವನ್ನು ಹೆಚ್ಚುವರಿಯಾಗಿ ಫಲಾನುಭವಿಗಳ ವಂತಿಕೆಗೆ ಎದುರಾಗಿ ಒದಗಿಸಿ 2025-26ನೆ ಸಾಲಿಗೆ ಒಟ್ಟಾರೆ 79,134 ಮನೆಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಿಂದ ಕೊಳಗೇರಿ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಿದಂತಾಗಿದೆ ಎಂದು ತಿಳಿಸಿದರು. ಆನೇಕಲ್‍ನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ: ಕೆಎಚ್‍ಬಿ ಸೂರ್ಯ ಕ್ರೀಡಾ ಗ್ರಾಮ ಎಂಬ ಹೆಸರಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ 80ಸಾವಿರ ಆಸನ ಸಾಮಥ್ರ್ಯವುಳ್ಳ ಕ್ರಿಕೆಟ್ ಕ್ರೀಡಾಂಗಣ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ನಡೆಸಲು ಅನುಕೂಲವಾಗುವಂತೆ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಪ್ರಕಟಿಸಿದ್ದಾರೆ.

ವಾರ್ತಾ ಭಾರತಿ 6 Mar 2026 11:44 pm

Kalaburagi | ಹೋಳಿ ಹಬ್ಬ ಆಚರಣೆ ವೇಳೆ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಆರೋಪ: ಪ್ರಕರಣ ದಾಖಲು

ಕಲಬುರಗಿ: ಹೋಳಿ ಹಬ್ಬ ಆಚರಣೆ ವೇಳೆ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯನೋರ್ವ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿದ್ದಾನೆ ಎಂಬ ಆರೋಪದಲ್ಲಿ ಇಲ್ಲಿನ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಳಂದ ಕಾಲೋನಿಯ ನಿವಾಸಿ ಆಗಿರುವ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಸದಸ್ಯ ನಾಗರಾಜ್ ಜಯಪ್ರಕಾಶ್ ಸಾಗರೆ ಎಂಬಾತ ಮುಸ್ಲಿಂ ಸಮುದಾಯಕ್ಕೆ ಅವಹೇಳನಕಾರಿಯಾಗಿ ನಿಂದಿಸಿದ್ದಾನೆ. ಈ ಹೇಳಿಕೆಯಿಂದಾಗಿ ಮುಸ್ಲಿಂ ಸಮುದಾಯದವರಿಗೆ ನೋವು ಉಂಟಾಗಿರುತ್ತದೆ. ಹಾಗಾಗಿ ನಾಗರಾಜ್ ಸಾಗರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಬಸವರಾಜ ಮಾಲಿಪಾಟೀಲ್ ಅವರು ದೂರು ನೀಡಿದ್ದರು. ಬಸವರಾಜ ಮಾಲಿಪಾಟೀಲ್ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 6 Mar 2026 11:39 pm

84,432 ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾ. 6: ‘ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ಹುದ್ದೆಗಳು ಸೇರಿದಂತೆ ಒಟ್ಟು 84 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದು ಬಜೆಟ್ ಭಾಷಣದಲ್ಲಿ ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು ಸೇರಿದಂತೆ 2500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು. ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 2500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದೇ ವೇಳೆ ಗೃಹ ಇಲಾಖೆಯಲ್ಲಿ ಖಾಲಿ ಇರುವ 8000 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಒಟ್ಟು 84,432 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ವಾರ್ತಾ ಭಾರತಿ 6 Mar 2026 11:39 pm

Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ

ಬೆಂಗಳೂರು: ಕರ್ನಾಟಕ ಸರ್ಕಾರ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ 1,846 ಕಿಲೋ ಮೀಟರ್ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸುವುದಾಗಿ ಬಜೆಟ್ 2026 ನಲ್ಲಿ ಘೋಷಿಸಿದೆ. ರಸ್ತೆ, ಮೇಲ್ಸೇತುವೆ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿ ಬಗ್ಗೆಯು ಉಲ್ಲೇಖಿಸಿದೆ. ಈ ಮೂಲಕ ಪ್ರಸ್ತಕ ಸಾಲಿನಲ್ಲೂ ರಾಜ್ಯ ಹೆದ್ದಾರಿ ರಸ್ತೆ ಮೂಲಸೌಕರ್ಯಕ್ಕೆ ಆದ್ಯತೆ ನೀಡಿರುವುದಾಗಿ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2026-27

ಒನ್ ಇ೦ಡಿಯ 6 Mar 2026 11:38 pm

ಗ್ರಾ.ಪಂ. ʻಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್‌ʼ ಆಗಿ ನಾಮಕರಣ

► ಮೈಸೂರು, ಕಲಬುರ್ಗಿಯಲ್ಲಿ ತಲಾ 16 ಕೋಟಿ ರೂ.ವೆಚ್ಚದಲ್ಲಿ ಸ್ಕ್ನೈಡರ್ ಇಲೆಕ್ಟ್ರಿಕ್ ಯೂತ್ ಇಂಪ್ಯಾಕ್ಟ್ ಕೇಂದ್ರ ಸ್ಥಾಪನೆ► ಕಲ್ಯಾಣ ಪಥ ಯೋಜನೆಯಡಿಯಲ್ಲಿನ 1,125ಕಿ.ಮೀ ರಸ್ತೆ ಕಾಮಗಾರಿ ಪೂರ್ಣ

ವಾರ್ತಾ ಭಾರತಿ 6 Mar 2026 11:34 pm

ಕಲಬುರಗಿ ಓಪನ್ ಮಹಿಳಾ ಟೆನಿಸ್ ಟೂರ್ನಿ: ವೈಷ್ಣವಿ, ರೈನಾ ಜೋಡಿ ಸಿಂಗಲ್ಸ್‌- ಡಬಲ್ಸ್ ನಲ್ಲಿ ಮೋಡಿ

ಫೈನಲ್ ತಲುಪಿದ ಸೋಹಾ ಸಾದಿಕ್‌, ಆಕಾಂಕ್ಷಾ ದಿಲೀಪ್‌ ಜೋಡಿ

ವಾರ್ತಾ ಭಾರತಿ 6 Mar 2026 11:32 pm

ಭಟ್ಕಳ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಭಟ್ಕಳ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನೆಗದ್ದೆ ಎಂಬಲ್ಲಿ ಶುಕ್ರವಾರ ನಡೆದಿದೆ. ಆತ್ಮಹತ್ಯಗೈದ ವಿದ್ಯಾರ್ಥಿಯನ್ನು ಕೌಶಿಕ್ ಸುಬ್ರಾಯ ನಾಯ್ಕ(18) ಎಂದು ಗುರುತಿಸಲಾಗಿದೆ.  ವಿದ್ಯಾರ್ಥಿಯ ಈ ಸಾವಿಗೆ ಪರೀಕ್ಷಾ ಒತ್ತಡ ಕಾರಣವೇ ಅಥವಾ ಬೇರೆ ಯಾವುದಾದರೂ ಸಮಸ್ಯೆಗಳಿದ್ದವೇ ಎಂಬ ಬಗ್ಗೆ ನಿಖರವಾದ ಕಾರಣಗಳು ಇನ್ನು ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ತಂದೆ ಸುಬ್ರಾಯ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಾರ್ತಾ ಭಾರತಿ 6 Mar 2026 11:30 pm

ಜನಪರ ಹಾಗೂ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ರಾಜ್ಯ ಬಜೆಟ್: ಬಾಬುರಾವ್ ಚಿಂಚನಸೂರ್

ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಹುನಿರೀಕ್ಷಿತ ರಾಜ್ಯ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಜನರ ಅಗತ್ಯಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ರೂಪಿಸಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ. ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದ ಎಲ್ಲಾ ವರ್ಗಗಳು, ಎಲ್ಲ ಪ್ರದೇಶಗಳು ಹಾಗೂ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಿರುವುದು ಐತಿಹಾಸಿಕ ಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಯಾದಗಿರಿ ಜಿಲ್ಲೆಯ ಕಕ್ಕೇರಾ ಗ್ರಾಮದಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲು ನಿರ್ಧರಿಸಿರುವುದು ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡಲಿದೆ ಎಂದು ಹೇಳಿದರು. ಇದರ ಜೊತೆಗೆ ಯಾದಗಿರಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಿರುವುದು ಜಿಲ್ಲೆಯ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅವರು ತಿಳಿಸಿದರು. ರಾಜ್ಯದ ನಗರಗಳ ಸ್ವಚ್ಛತೆ ಹಾಗೂ ಮೂಲಸೌಕರ್ಯ ಸುಧಾರಣೆಗೆ ಒತ್ತು ನೀಡಲಾಗಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಯಾದಗಿರಿ ಹಾಗೂ ಸುರಪುರ ಪಟ್ಟಣಗಳಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳುವುದು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಯಾದಗಿರಿ ಜಿಲ್ಲೆಯಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ತಾರಾಲಯ ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದರು. ಯಾದಗಿರಿ ಜಿಲ್ಲೆಯ ಕರ್ನಾಳ್ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಹಾಗೂ ಸಣ್ಣ ನೀರಾವರಿ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿರುವುದು ರೈತರಿಗೆ ಅನುಕೂಲವಾಗಲಿದೆ. ಕಕ್ಕೇರಾ ಪಟ್ಟಣದಲ್ಲಿ ಹೊಸ ಪೊಲೀಸ್ ಠಾಣೆ ಆರಂಭಿಸುವ ನಿರ್ಧಾರ ಕೈಗೊಂಡಿರುವುದು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು. ಇದಲ್ಲದೆ ಶಹಾಪುರ, ಸುರಪುರ ಹಾಗೂ ಗುರುಮಠಕಲ್ ತಾಲೂಕುಗಳಲ್ಲಿ 6ರಿಂದ 12ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ 2025–26ನೇ ಸಾಲಿನಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಬಜೆಟ್ ನಲ್ಲಿ ಅನುಮೋದಿಸಲಾಗಿದೆ ಎಂದು ತಿಳಿಸಿದರು. ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, 3,900 ಕೋಟಿ ರೂಪಾಯಿ ಅನುದಾನದಲ್ಲಿ ‘ಉತ್ತಮ ಕಲಿಕೆ–ಉಜ್ವಲ ಭವಿಷ್ಯ’ ಯೋಜನೆಯಡಿ ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸುವ ಯೋಜನೆ ರೂಪಿಸಲಾಗಿದೆ. ಇದರ ಮೂಲಕ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಸರ್ಕಾರ ಹೊಸ ಮೈಲಿಗಲ್ಲು ಸ್ಥಾಪಿಸಲು ಬದ್ಧವಾಗಿದೆ ಎಂದು ಅವರು ಹೇಳಿದರು. ರಾಜ್ಯದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಜನಪರ ಬಜೆಟ್ ಮಂಡಿಸಿದೆ ಎಂದು ಬಾಬುರಾವ್ ಚಿಂಚನಸೂರ್ ಅಭಿಪ್ರಾಯಪಟ್ಟರು.

ವಾರ್ತಾ ಭಾರತಿ 6 Mar 2026 11:01 pm

ಉತ್ತರ ಪ್ರದೇಶದ ರಾಜ್ಯಪಾಲರನ್ನು ಭೇಟಿಯಾದ ಕರ್ನಾಟಕ, ತ್ರಿಪುರದ ಪತ್ರಕರ್ತರ‌ ಅಧ್ಯಯನ ತಂಡ

ಲಕ್ನೋ‌, ಮಾ.6: ಉತ್ತರ ಪ್ರದೇಶಕ್ಕೆ ಅಧ್ಯಯನ ಪ್ರವಾಸ ಕೈಗೊಂಡಿರುವ ಕರ್ನಾಟಕ ಮತ್ತು ತ್ರಿಪುರದ ಪತ್ರಕರ್ತರು ಶುಕ್ರವಾರ ಗುಜರಾತ್ ನ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು‌ ಲಕ್ನೋದ ರಾಜಭವನದಲ್ಲಿ‌ ಭೇಟಿಯಾದರು. ಪಿಐಬಿ ಆಯೋಜಿಸಿರುವ ಅಧ್ಯಯನ ‌ಪ್ರವಾಸದಲ್ಲಿ‌ ಪತ್ರಕರ್ತರು ರಾಜ್ಯಪಾಲರೊಂದಿಗೆ ಸಂವಾದ ನಡೆಸಿದರು. ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಅವರು ತಮ್ಮ ಆಡಳಿತಾತ್ಮಕ ಅನುಭವಗಳು ಮತ್ತು ರಾಜ್ಯದಲ್ಲಿ ‌ಶಿಕ್ಚಣ ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡರು. ಉತ್ತರ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ರಾಜ್ಯ ಸರಕಾರ ಅನುಷ್ಠಾನ ಗೊಳಿಸಿರುವ ಯೋಜನೆಗಳು, ಮಹಿಳಾ ಸಬಲೀಕರಣ ಯೋಜನೆಗಳ ಬಗ್ಗೆ ವಿವರಿಸಿದರು. ಆರು ದಿನಗಳ ಉತ್ತರ ಪ್ರದೇಶದ ಅಧ್ಯಯನ ಪ್ರವಾಸದ ಕೊನೆಯಲ್ಲಿ ರಾಜ್ಯಪಾಲರನ್ನು ಭೇಟಿಯಾಗಲು ತೆರಳಿದ ಕರ್ನಾಟಕದ 10 ಮಂದಿ ಪತ್ರಕರ್ತರ ನಿಯೋಗದೊಂದಿಗೆ ತ್ರಿಪುರದ‌ ಪತ್ರಕರ್ತರು ಸಾಥ್ ನೀಡಿದರು. ಉಭಯ ರಾಜ್ಯಗಳ ಪತ್ರಕರ್ತರು ವಿಚಾರ ವಿನಿಮಯ ನಡೆಸಿದರು. ರಾಜಭವನದ ಅಧಿಕಾರಿಗಳು, ಪಿಐಬಿ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 6 Mar 2026 11:01 pm

“ಇರಾನಿಯನ್ನರಿಗೆ ಕೊನೆಯ ಗುಂಡು ಇರುವವರೆಗೂ ಹೋರಾಡುವ ಗುಂಡಿಗೆಯಿದೆ”: RAW ದ ಮಾಜಿ ಮುಖ್ಯಸ್ಥ ವಿಕ್ರಮ್ ಸೂದ್

ಹೊಸದಿಲ್ಲಿ: ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ವಿರುದ್ಧ ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಅಮೆರಿಕ ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತದ ಗುಪ್ತಚರ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (R&AW) ನ ಮಾಜಿ ಮುಖ್ಯಸ್ಥ ವಿಕ್ರಮ್ ಸೂದ್ ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರ ಸುದ್ದಿಸಂಸ್ಥೆ ANI ಜೊತೆ ಮಾತನಾಡಿದ ಅವರು, ಇರಾನ್ ಪ್ರತೀಕಾರಾತ್ಮಕ ದಾಳಿಗಳನ್ನು ಮುಂದುವರಿಸುತ್ತಿದ್ದು, ಅದು ಅಮೆರಿಕಕ್ಕಿಂತ ಭಿನ್ನವಾಗಿ “ಸಾಯಲು ಸಿದ್ಧವಾಗಿರುವ ರಾಷ್ಟ್ರ” ಎಂದು ಹೇಳಿದರು. “ಈ ಸಂಘರ್ಷ ಎಷ್ಟು ಕಾಲ ಮುಂದುವರಿಯುತ್ತದೆ ಎಂದು ಹೇಳುವುದು ಕಷ್ಟ. ಆದರೆ ಅಮೆರಿಕ ಯೋಚಿಸಿದ್ದಕ್ಕಿಂತ ಇದು ಹೆಚ್ಚು ಕಾಲ ಸಾಗುವ ಸಾಧ್ಯತೆ ಇದೆ. ಅಮೆರಿಕವು ಸಣ್ಣ ಹಾಗೂ ತೀಕ್ಷ್ಣ ದಾಳಿಯಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ ಎಂದು ನಿರೀಕ್ಷಿಸಿತ್ತು. ಆದರೆ ಇರಾನ್ ವಿಭಿನ್ನ ರೀತಿಯ ತಂತ್ರವನ್ನು ಅನುಸರಿಸುತ್ತಿದೆ. ಅದು ಅಮೆರಿಕದ ಮಿತ್ರ ರಾಷ್ಟ್ರಗಳ ಮೇಲೆಯೇ ದಾಳಿ ನಡೆಸುತ್ತಿದೆ. ಇದರಿಂದ ಅಮೆರಿಕದ ವಿರುದ್ಧ ಅಶಾಂತಿ ಉಂಟಾಗುವ ಸಾಧ್ಯತೆ ಇದೆ. ನೆನಪಿಡಿ, ಇರಾನಿಯನ್ನರು ಸಾಯಲು ಸಿದ್ಧರಾಗಿದ್ದಾರೆ, ಆದರೆ ಅಮೆರಿಕನ್ನರು ಸಾಯಲು ಸಿದ್ಧರಾಗಿರುವುದಿಲ್ಲ” ಎಂದು ಸೂದ್ ಹೇಳಿದರು. ಈ ನಡುವೆ ಇರಾನ್ ಉಪ ವಿದೇಶಾಂಗ ಸಚಿವ ಸಯೀದ್ ಖತೀಬ್ಝಾದೆ, ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ “ಆಕ್ರಮಣ”ದ ವಿರುದ್ಧ ಟೆಹ್ರಾನ್ “ವೀರೋಚಿತ ರಾಷ್ಟ್ರೀಯ ರಕ್ಷಣಾ ಹೋರಾಟ” ನಡೆಸುತ್ತಿದೆ ಎಂದು ಹೇಳಿದ್ದಾರೆ. ದೇಶವು “ಕೊನೆಯ ಗುಂಡು ಮತ್ತು ಕೊನೆಯ ಸೈನಿಕ”ವರೆಗೂ ಪ್ರತಿರೋಧ ತೋರಿಸುವುದಾಗಿ ಅವರು ಪ್ರತಿಜ್ಞೆ ಮಾಡಿದ್ದಾರೆ. “ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದ್ದು, ಗರಿಷ್ಠ ಹಾನಿ ಉಂಟುಮಾಡಲು ಪ್ರಯತ್ನಿಸುತ್ತಿವೆ. ನಾವು ಮಾತನಾಡುತ್ತಿರುವಾಗಲೇ ನನ್ನ ನಾಗರಿಕರು ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ನಿರಂತರ ಕಾರ್ಪೆಟ್ ಬಾಂಬ್ ದಾಳಿಗೆ ಒಳಗಾಗುತ್ತಿದ್ದಾರೆ. ಟೆಹ್ರಾನ್ ನಗರ ನಿರಂತರ ದಾಳಿಗೆ ಒಳಗಾಗಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮ ಬಳಿ ಇರುವ ಕೊನೆಯ ಗುಂಡು ಹಾಗೂ ಕೊನೆಯ ಸೈನಿಕನ ವರೆಗೆ ಪ್ರತಿರೋಧ ತೋರಿಸುವುದನ್ನು ಬಿಟ್ಟು ನಮಗೆ ಬೇರೆ ಮಾರ್ಗವಿಲ್ಲ” ಎಂದು ಖತೀಬ್ಝಾದೆ ಹೇಳಿದರು. ಈ ಸಂಘರ್ಷವನ್ನು ಬಾಹ್ಯ ದೌರ್ಜನ್ಯಗಳ ವಿರುದ್ಧದ ಅಗತ್ಯ ಹೋರಾಟವೆಂದು ಅವರು ವಿವರಿಸಿದರು. “ಇದು ನಮಗೆ ಅತ್ಯಂತ ವೀರೋಚಿತ ರಾಷ್ಟ್ರೀಯತಾವಾದಿ ಯುದ್ಧವಾಗಿದೆ. ಆಕ್ರಮಣಕಾರರನ್ನು ತಡೆಯುವುದು ಈಗ ನಮ್ಮ ಮೊದಲ ಆದ್ಯತೆ. ಅಂತರರಾಷ್ಟ್ರೀಯ ಕಾನೂನಿನ ತತ್ವಗಳ ಮೇಲೆಯೇ ದಾಳಿ ನಡೆದಿದೆ. ಈಗ ಅಂತರರಾಷ್ಟ್ರೀಯ ಕಾನೂನು ಮತ್ತು ಇರಾನ್ ಎರಡೂ ದಾಳಿಗೆ ಒಳಗಾಗಿವೆ. ಈ ದೌರ್ಜನ್ಯಗಳ ವಿರುದ್ಧ ಜಾಗತಿಕ ಸಮುದಾಯ ಒಟ್ಟಾಗಿ ನಿಲ್ಲಬೇಕು” ಎಂದು ಅವರು ಹೇಳಿದರು. ಫೆಬ್ರವರಿ 28ರಂದು ಇರಾನ್ ಭೂಪ್ರದೇಶದ ಮೇಲೆ ಅಮೆರಿಕ–ಇಸ್ರೇಲ್ ಜಂಟಿ ಸೈನಿಕ ದಾಳಿ ನಡೆದಿದ್ದು, ಅದರಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಾಮಿನೈ ಸೇರಿದಂತೆ ಹಲವು ಹಿರಿಯ ನಾಯಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಬಳಿಕ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಪ್ರತಿಕಾರವಾಗಿ ಇರಾನ್ ಹಲವು ಅರಬ್ ದೇಶಗಳತ್ತ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳ ಅಲೆಗಳನ್ನು ಆರಂಭಿಸಿದೆ. ಸಂಘರ್ಷ ಈಗ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಈ ದಾಳಿಗಳು ಮುಖ್ಯವಾಗಿ ಆ ಪ್ರದೇಶದಲ್ಲಿರುವ ಅಮೆರಿಕದ ಸೈನಿಕ ನೆಲೆಗಳು ಮತ್ತು ಇಸ್ರೇಲ್‌ಗೆ ಸಂಬಂಧಿಸಿದ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ನಡೆದಿವೆ.

ವಾರ್ತಾ ಭಾರತಿ 6 Mar 2026 11:00 pm

ಮೂಡುಬಿದಿರೆ| ಮಹಿಳೆಗೆ ಹಲ್ಲೆ, ಜಾತಿ ನಿಂದನೆ: ಪ್ರಕರಣ ದಾಖಲು

ಮೂಡುಬಿದಿರೆ : ಪುರಸಭಾ ವ್ಯಾಪ್ತಿಯ ಕೋಟೆಬಾಗಿಲಿನಲ್ಲಿ ಮಹಿಳೆಯೋವ೯ರ ಮೇಲೆ ಹಲ್ಲೆ ನಡೆಸಿ , ಜಾತಿ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಮಾರ್ಪಾಡಿ ಗ್ರಾಮದ ಪಡುಕೊಣಾಜೆ ನಿವಾಸಿ ಪವಿತ್ರ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಾರ್ಚ್‌ 5ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕೋಟೆಬಾಗಿಲು ಮಾರಿಗುಡಿ ಸಮೀಪ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನಲ್ಲಿ ನೀಡಿರುವ ಮಾಹಿತಿಯಂತೆ, ಆಸಿಫ್ ಎಂಬಾತನು ಮಹಿಳೆಯೊಂದಿಗೆ ವಾಗ್ವಾದ ನಡೆಸಿ ಮಹಿಳೆ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆ ಮಾಡುವ ಉದ್ದೇಶದಿಂದ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪವಿತ್ರ ಅವರು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ 2023ರ ಸಂಬಂಧಿತ ಕಲಂಗಳು ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಮೇಲಿನ ಅಟ್ಟಹಾಸ ತಡೆ ಕಾಯ್ದೆಯಡಿ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 6 Mar 2026 10:59 pm

ಕೊಳ್ನಾಡು| ಸೈಕಲ್‌ ನಿಂದ ಬಿದ್ದು ಬಾಲಕ ಮೃತ್ಯು

ವಿಟ್ಲ: ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್‌ (12) ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಇಂದು ಸಂಜೆ ಸಂಭವಿಸಿದೆ. ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಳಿತ್ತನೂಜಿಯ ವಿದ್ಯಾರ್ಥಿಯಾಗಿದ್ದ ಆಸಿಪ್ ಶಾಲೆಯ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ಬಾಲಕನಾಗಿದ್ದನು ಎಂದು ತಿಳಿದುಬಂದಿದೆ. ತಾಯಿಗೆ ಏಕೈಕ ಮಗನಾಗಿದ್ದ ಆಸಿಪ್‌ನ ಅಕಾಲಿಕ ನಿಧನವು ಕುಟುಂಬದವರನ್ನು ತೀವ್ರ ಆಘಾತಕ್ಕೆ ಗುರಿಮಾಡಿದ್ದು, ಬಂಧುಬಳಗ ಹಾಗೂ ಗ್ರಾಮಸ್ಥರಲ್ಲೂ ದುಃಖದ ವಾತಾವರಣ ನಿರ್ಮಾಣವಾಗಿದೆ. ಬಾಲಕನ ನಿಧನಕ್ಕೆ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.

ವಾರ್ತಾ ಭಾರತಿ 6 Mar 2026 10:55 pm

ಸುದ್ದಿ ವಾಹಿನಿಗಳ TRP ರೇಟಿಂಗ್‌ಗೆ ಬ್ರೇಕ್: ಕೇಂದ್ರ ಸರ್ಕಾರದಿಂದ ದಿಢೀರ್ ಆದೇಶ ಹೊರಬಿದ್ದಿದ್ದೇಕೆ?

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಂಡಿದೆ. ಯುಎಸ್‌ ಮತ್ತು ಇಸ್ರೇಲ್-ಇರಾನ್ ಮಧ್ಯೆ ಸಂಘರ್ಷ ನಡೆಯುತ್ತಿರುವ ನಡುವೆ ಕೆಲವು ಸುದ್ದಿ ವಾಹಿನಿಗಳು ಅನಗತ್ಯ ಸಂವೇದನೆ ಮತ್ತು ಊಹಾತ್ಮಕ ವಿಷಯವನ್ನು ಪ್ರಸಾರ ಮಾಡುತ್ತಿರುವೆ. ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿರುವ ಭಾರತದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಮುಂದಿನ 4 ವಾರಗಳ ಕಾಲ ಟಿವಿ ರೇಟಿಂಗ್‌ಗಳನ್ನು ಸ್ಥಗಿತಗೊಳಿಸಲು ಖಾಸಗಿ ಸಂಸ್ಥೆ ಬಾರ್ಕ್‌ಗೆ ನಿರ್ದೇಶಿಸಿದೆ.

ಒನ್ ಇ೦ಡಿಯ 6 Mar 2026 10:53 pm

ಸುರಪುರ: ಉದ್ಯೋಗ ನೇಮಕದಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

ಸುರಪುರ: ಸರ್ಕಾರ ಉದ್ಯೋಗಗಳ ನೇಮಕಾತಿಯಲ್ಲಿ ಒಳ ಮೀಸಲು ಅನುಗುಣವಾಗಿ ನೇಮಕಗೊಳಿಸುವಂತೆ ಆಗ್ರಹಿಸಿ ಮಾದಿಗ ಸಮಾಜದ ವಿವಿಧ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಿದರು. ಪಟ್ಟಣದ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರ ಗೃಹ ಕಚೇರಿಯ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿದ ಒಕ್ಕೂಟದ ಮುಖಂಡರು, ಉದ್ಯೋಗಗಳ ನೇಮಕಾತಿಯಲ್ಲಿ ಒಳಮೀಸಲಾತಿ ಜನಗಣತಿ ಅನುಗುಣವಾಗಿ ಮಾಡಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಬಜೆಟ್ ನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಜಾರಿ ಮಾಡಬೇಕು, ರಾಜ್ಯದಲ್ಲಿ ಕೊಲೆ ಸುಲಿಗೆ ಮಹಿಳೆಯರ ಮೇಲೆ ಅತ್ಯಾಚಾರ ಶೋಷಣೆಗೆ ಒಳಗಾದ ಕುಟುಂಬಸ್ಥರಿಗೆ ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಿ ಸೂಕ್ತ ರಕ್ಷಣೆ ನೀಡಬೇಕು, ರಾಜ್ಯದಲ್ಲಿನ ಬಡ ವಿದ್ಯಾರ್ಥಿಗಳಿಗೆ ತರಗತಿ ವರು ಶಿಷ್ಯವೇತನವನ್ನು ಹೆಚ್ಚಿಸಬೇಕು ಹಾಗೂ ರಾಜ್ಯದಲ್ಲಿರುವ ಎಸ್.ಸಿ,ಎಸ್.ಟಿ ಬಡ ಕುಟುಂಬಗಳಿಗೆ ವಸತಿ ಯೋಜನೆಯಲ್ಲಿ ಮನೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕಲ್ಪಿಸಬೇಕೆಂದು ಆಗ್ರಹಿಸಿದರು. ಅಲ್ಲದೆ ಕಳೆದ ಕೆಲವು ವರ್ಷಗಳಲ್ಲಿ 40,000ಕ್ಕೂ ಹೆಚ್ಚು ಉದ್ಯೋಗ ನೇಮಕಾತಿಗಳು ವರ್ಗೀಕರಣವಿಲ್ಲದೆ ನಡೆದಿವೆ ಈಗ ಕರ್ನಾಟಕ ರಾಜ್ಯದಲ್ಲಿ 2.85 ಲಕ್ಷ ಹುದ್ದೆಗಳು ಖಾಲಿ ಇವೆ ಇದರಲ್ಲಿ 56,432 ಹುದ್ದೆಗಳನ್ನು ಹಳೆ ಮೀಸಲಾತಿ ಅನುಸರಿಸಿ ನೇಮಕ ಮಾಡುವಲ್ಲಿ ಮೋಸ ವಂಚಿಸುವ ರಾಜಕೀಯ ನಡೆದಿದ್ದು ಇದರಿಂದ ಒಳಮೀಸಲಾತಿಯಲ್ಲಿ ಬರುವ ಪರಿಶಿಷ್ಟ ಜಾತಿಯವರಿಗೆ ತುಂಬಾ ಅನ್ಯಾಯವಾಗುತ್ತದೆ ಆದ್ದರಿಂದ ಇದನ್ನು ಸರಿಪಡಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ನಂತರ ಮುಖ್ಯಮಂತ್ರಿ ಗೆ ಬರೆದ ಮನವಿ ಶಾಸಕರ ಆಪ್ತ ಸಹಾಯಕ ಶಿವರಾಜ ನಾಯಕ ಮೂಲಕ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಸಾಮೂಹಿಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ದಾನಪ್ಪ ಕಡಿಮೆ,ಜಾಂಬವ ಯುವ ಸೇನೆ ಜಿಲ್ಲಾಧ್ಯಕ್ಷ ಹಣಮಂತ ಬಿಲ್ಲವ್, ಕಾಂಗ್ರೆಸ್ ಪಕ್ಷದ ಎಸ್ ಸಿ ಮೋರ್ಚಾ ತಾಲೂಕ ಅಧ್ಯಕ್ಷ ಮರೆಪ್ಪ, ಹಣಮಂತ ಕಟ್ಟಿಮನಿ, ದೇವೇಂದ್ರಪ್ಪ ಶಾಂತಗೇರಿ, ಪರಮಣ್ಣ ಕೋಳಿ, ಚಂದ್ರು ದಿವಳಗುಡ್ಡ, ಮಲ್ಲಪ್ಪ ಕೋಟೆ, ಹುಲಗಪ್ಪ ಶೆಳ್ಳಗಿ, ಬಸವರಾಜ ಮುಷ್ಠಹಳ್ಳಿ, ನಾಗರಾಜ ಓಕಳಿ, ಅಂಬ್ಲಪ್ಪ ಅರಳಹಳ್ಳಿ, ಮಲ್ಲಿಕಾರ್ಜುನ ಕಟ್ಟಿಮನಿ,ಕೃಷ್ಣ ಕಡಿಮನಿ, ಜಟ್ಟೆಪ್ಪ ಸತ್ಯಂಪೇಟ, ಭೀಮಣ್ಣ ದೀವಳ ಗುಡ್ಡ, ಸಾಹೇಬಣ್ಣ ದೇವರ ಗೋನಾಲ, ಪರಮಣ್ಣ ಹುಣಸಗಿ, ಭೀಮಾಶಂಕರ,ಮಲ್ಲು ಬಿಲ್ಲವ್,ನಾಗಪ್ಪ,ಆದಪ್ಪ ಅರಳಹಳ್ಳಿ, ನಿಂಗಪ್ಪ ದೇವರಗೋನಾಲ, ಸಿದ್ದಪ್ಪ ಮಾವಿನಮಟ್ಟಿ,ದೇವಪ್ಪ ಯಡಳ್ಳಿ,ನಿಂಗಪ್ಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವಾರ್ತಾ ಭಾರತಿ 6 Mar 2026 10:41 pm

Karnataka Budget 2026- ಜಿಎಸ್‌ಟಿ ತರ್ಕಬದ್ಧಗೊಳಿಸಿದ್ದರಿಂದ 10 ಸಾವಿರ ಕೋಟಿ ನಷ್ಟ: ಕೇಂದ್ರ ಅಸಹಕಾರದ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪ

ಕೇಂದ್ರ ಸರಕಾರದ ಅಸಹಕಾರದ ಬಗ್ಗೆ ಈ ಬಾರಿಯ ಬಜೆಟ್‌ನಲ್ಲೂ ಪ್ರಸ್ತಾಪಿಸಿರುವ , ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆಯಿಂದ 10 ಸಾವಿರ ಕೋಟಿ ರೂ. ನಷ್ಟವಾಗಿದ್ದು, ಇದನ್ನು ಕೇಂದ್ರ ಸರಿದೂಗಿಸಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.''ಆರ್ಥಿಕ ವರ್ಷದ ಮಧ್ಯದಲ್ಲಿ ಅನಿರೀಕ್ಷಿತವಾಗಿ ಜಿಎಸ್‌ಟಿ ದರ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯದ ರಾಜಸ್ವ ಸಂಗ್ರಹ ಇಳಿಕೆಯಾಗಿದೆ. ಈ ನಿರ್ಧಾರಕ್ಕೆ ಮುನ್ನ 2025-26ನೇ ಸಾಲಿನಲ್ಲಿಮಾಸಿಕ ಜಿಎಸ್‌ಟಿ ರಾಜಸ್ವ (ನಿವ್ವಳ ಮರುಪಾವತಿ) ಸಂಗ್ರಹಣೆ ಶೇ.10ರ ಬೆಳವಣಿಗೆ ದಾಖಲಿಸಿತ್ತು. ಜಿಎಸ್‌ಟಿ ದರ ತರ್ಕಬದ್ಧವಾದ ಬಳಿಕ ಈ ಬೆಳವಣಿಗೆ ಶೇ.4ಕ್ಕೆ ಕಡಿಮೆಯಾಗಿದೆ. ಇದರಿಂದ ಅಂದಾಜು 10 ಸಾವಿರ ಕೋಟಿ ರೂ. ನಷ್ಟವಾಗಿದೆ. ಮುಂದಿನ ವರ್ಷ 15 ಸಾವಿರ ಕೋಟಿ ರೂ. ನಷ್ಟವಾಗುವ ಅಂದಾಜಿದೆ. ಜಿಎಸ್‌ಟಿ ದರ ತರ್ಕಬದ್ಧ ಮಾಡುವುದನ್ನು ರಾಜ್ಯ ಸರಕಾರ ತಾತ್ವಿಕವಾಗಿ ಬೆಂಬಲಿಸುತ್ತದೆ. ಆದರೆ, ಇದರಿಂದ ರಾಜ್ಯಗಳಿಗೆ ಉಂಟಾಗುವ ರಾಜಸ್ವ ನಷ್ಟ ಪರಿಹಾರ, ರಾಜ್ಯಗಳ ಹಿತಾಸಕ್ತಿ ಕಾಪಾಡಲು ಕೋರಿ ಇತರ 7 ರಾಜ್ಯಗಳೊಂದಿಗೆ ಜಿಎಸ್‌ಟಿ ಮಂಡಳಿಗೆ ಜಂಟಿ ಜ್ಞಾಪಕ ಪತ್ರ ಸಲ್ಲಿಸಲಾಗಿತ್ತು. ಈ ಕುರಿತ ಒತ್ತಾಯ ಮುಂದುವರಿಯಲಿದೆ,'' ಎಂದು ಮಂಡನೆ ವೇಳೆ ಸ್ಪಷ್ಟ ಪಡಿಸಿದ್ದಾರೆ.''ರಾಷ್ಟ್ರ ಮಟ್ಟದಲ್ಲೂಜಿ ಎಸ್‌ಟಿ ಸಂಗ್ರಹಣೆ ನಿರಾಶಾದಾಯಕವಾಗಿದೆ. 2025-26ರ ಕೇಂದ್ರದ ಆಯವ್ಯಯದ ಅಂದಾಜಿಗೆ ಹೋಲಿಸಿದರೆ ಪರಿಷ್ಕೃತ ಅಂದಾಜಿನಲ್ಲಿಜಿಎಸ್‌ಟಿ ಸಂಗ್ರಹದಲ್ಲಿಶೇ.11ರಷ್ಟು ಇಳಿಕೆಯಾಗಿದೆ. 2026-27ರ ಕೇಂದ್ರ ಬಜೆಟ್‌ನಲ್ಲಿಇದು ಶೇ.13.4ಕ್ಕೆ ಇಳಿಕೆಯಾಗಿದೆ. ಹಾಗಾಗಿ ದೇಶದ ಜಿಎಸ್‌ಟಿ ಸಂಗ್ರಹಣೆಯಲ್ಲಿಪ್ರಸಕ್ತ ಸಾಲಿನಲ್ಲಿ1.3 ಲಕ್ಷ ಕೋಟಿ ರೂ. ಮತ್ತು ಮುಂದಿನ ವರ್ಷ 2 ಲಕ್ಷ ಕೋಟಿ ರೂ. ಕೊರತೆಯಾಗಲಿದೆ. ಇದರ ಪರಿಣಾಮವಾಗಿ ರಾಜ್ಯಗಳಿಗೆ ಹಂಚಿಕೆಯಾಗುವ ತೆರಿಗೆಯೂ ಕಡಿಮೆಯಾಗಲಿದೆ. ಇಂಥ ಪರಿಸ್ಥಿತಿಯಲ್ಲಿಮಾದಕ ವಸ್ತುಗಳು, ಐಶಾರಾಮಿ ವಸ್ತುಗಳ ಮೇಲೆ ಸೆಸ್‌, ಇತರ ತೆರಿಗೆ ವಿಧಿಸುತ್ತಿರುವ ಕೇಂದ್ರ ಸರಕಾರ ರಾಜಸ್ವ ಸಂಗ್ರಹಿಸುತ್ತಿದೆ. ಇದರ ಸಂಪೂರ್ಣ ಮೊತ್ತ ಕೇಂದ್ರದ ಬೊಕ್ಕಸಕ್ಕೆ ಸೇರಲಿದೆ,'' ಎಂಬ ಆಕ್ಷೇಪಣೆ ದಾಖಲಿಸಿದ್ದಾರೆ. 16ನೇ ಹಣಕಾಸು ಆಯೋಗದ ಹಂಚಿಕೆಗೆ ಸ್ವಾಗತ 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿರುವುದು ಗಮನಾರ್ಹ. ಆಯೋಗವು ರಾಜ್ಯಕ್ಕೆ ಶೇ.4.131ರಷ್ಟು ತೆರಿಗೆ ಪಾಲು ಶಿಫಾರಸು ಮಾಡಿದೆ. ಇದರಿಂದ 15ನೇ ಹಣಕಾಸು ಆಯೋಗ ಮಾಡಿದ್ದಕ್ಕಿಂತ ಶೇ.13ರಷ್ಟು ಹೆಚ್ಚಳವಾಗಿದೆ. ಶೇ.4.713 ಪಾಲು ನಿರೀಕ್ಷಿಸಿದ್ದರೂ ಈ ಹಿಂದೆ ಆಗಿದ್ದ ಅನ್ಯಾಯವನ್ನು ಈ ಆಯೋಗ ಭಾಗಶಃ ಪರಿಹರಿಸಿದೆ ಎಂದು ಸಿಎಂ ಪ್ರಸ್ತಾಪಿಸಿದ್ದಾರೆ. ಹಾಗೆಯೇ 15ನೇ ಹಣಕಾಸು ಆಯೋಗದಿಂದ 65 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ 5,495 ಕೋಟಿ ರೂ. ವಿಶೇಷ ಅನುದಾನವನ್ನು ನೀಡಿಲ್ಲ. ರಾಜ್ಯ ಕೇಂದ್ರಿತ ಅನುದಾನ 6,000 ಕೋಟಿ ರೂ. ಬಿಡುಗಡೆ ಮಾಡಿಲ್ಲಎಂದು ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಬಿ-ಜಿ ರಾಮ್‌ಜಿಗೆ ವಿರೋಧ ಕೇಂದ್ರದ ವಿಬಿ-ಜಿ ರಾಮ್‌ಜಿ ಯೋಜನೆ ವಿರುದ್ಧದ ಸದನದಲ್ಲೇ ನಿರ್ಣಯ ಪಾಸು ಮಾಡಿದ್ದ ರಾಜ್ಯ ಸರಕಾರ, ಬಜೆಟ್‌ನಲ್ಲೂಆಕ್ಷೇಪಿಸಿದೆ. ಮನರೇಗಾವನ್ನು ಕೇಂದ್ರ ಸರಕಾರ ವ್ಯವಸ್ಥಿತವಾಗಿ ದುರ್ಬಲಗೊಳಿಸಿದ್ದರಿಂದ ಜನರ ಉದ್ಯೋಗದ ಹಕ್ಕು ಮೊಟಕಾಗಲಿದೆ. ರಾಜ್ಯಗಳ ಆರ್ಥಿಕ ಹೊರೆ ಇನ್ನಷ್ಟು ಹೆಚ್ಚಲಿದೆ. ಹಾಗಾಗಿ ರಾಜ್ಯಗಳ ಹಿತಾಸಕ್ತಿಗಾಗಿ ಪಕ್ಷಾತೀತವಾಗಿ ಎಲ್ಲರೂ ಕೇಂದ್ರದ ಮೇಲೆ ಒತ್ತಡ ತರಬೇಕಿದೆ ಎಂದು ಬಜೆಟ್‌ ಭಾಷಣದಲ್ಲಿದಾಖಲಿಸಲಾಗಿದೆ. ಯೋಜನೆ ಕಥೆಯೇನು? ಆದರೆ, ಮನರೇಗಾ ಮುಂದುವರಿಸುವ ನಿಲುವನ್ನು ರಾಜ್ಯ ಸರಕಾರ ತಳೆಯಲಿದೆಯೇ ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗೆಯೇ ಹೊಸ ರಾಮ್‌ಜೀ ಯೋಜನೆಗೆ ರಾಜ್ಯದ ಪಾಲಿನ ಶೇ.40ರಷ್ಟು ಪಾಲು ಭರಿಸಲಾಗುತ್ತದೆಯೇ ಎಂಬ ಬಗ್ಗೆಯೂ ಖಚಿತವಾಗಿ ಏನನ್ನೂ ಹೇಳಿಲ್ಲ.

ವಿಜಯ ಕರ್ನಾಟಕ 6 Mar 2026 10:41 pm

ಇರಾನ್‌ನೊಂದಿಗೆ ಮಾತುಕತೆಯನ್ನು ನಿರಾಕರಿಸಿದ ಟ್ರಂಪ್: ಬೇಷರತ್ ಶರಣಾಗತಿಗೆ ಪಟ್ಟು

ಇರಾನ್ ಅನ್ನು ಮತ್ತೆ ಶ್ರೇಷ್ಠವಾಗಿಸುತ್ತೇನೆ ಎಂದ ಅಮೆರಿಕ ಅಧ್ಯಕ್ಷ

ವಾರ್ತಾ ಭಾರತಿ 6 Mar 2026 10:17 pm

Maharashtra | ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 11 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಶುಕ್ರವಾರ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಬಹುತೇಕರು ಕಾರ್ಮಿಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈನಿಂದ ಸುಮಾರು 250 ಕಿಮೀ ದೂರದಲ್ಲಿರುವ ಲೋಟೆ ಪರುಶುರಾಮ್ ಎಂಐಡಿಸಿ (ರಾಸಾಯನಿಕ ವಲಯ)ಯಲ್ಲಿರುವ ಡಾ. ಖಾನ್ ಇಂಡಸ್ಟ್ರಿಯಲ್ ಕನ್ಸಲ್ಟೆಂಟ್ಸ್ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಡಾ. ಖಾನ್ ಇಂಡಸ್ಟ್ರಿಯಲ್ ಕನ್ಸಲ್ಟೆಂಟ್ಸ್ ಸಿಲಿಕಾ ಮೂಲದ ವಿಶೇಷ ರಾಸಾಯನಿಕಗಳು ಹಾಗೂ ರಾಸಾಯನಿಕ ಮಧ್ಯವರ್ತಿಗಳನ್ನು ತಯಾರಿಸುವುದರಲ್ಲಿ ಮುಂಚೂಣಿಯಲ್ಲಿದ್ದು, ಉಕ್ಕು, ಜವಳಿ, ಪೇಂಟ್ ಹಾಗೂ ಇಲೆಕ್ಟ್ರಾನಿಕ್ಸ್‌ ನಂತಹ ವೈವಿಧ್ಯಮಯ ಉದ್ಯಮಗಳಿಗೆ ತನ್ನ ರಾಸಾಯನಿಕಗಳನ್ನು ಪೂರೈಸುತ್ತದೆ. ಈ ಸ್ಫೋಟದಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸ್ಫೋಟಕ್ಕೆ ಕಾರಣವೇನು ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 6 Mar 2026 10:15 pm

ದೇಶಾದ್ಯಂತ ಇರುವ ಬಂದರುಗಳ ಭದ್ರತೆಯ ಮೇಲೆ CISF ನಿಗಾ ವಹಿಸಲಿದೆ: ಅಮಿತ್ ಶಾ

ಮುಂಬೈ: ದೇಶಾದ್ಯಂತ ಇರುವ ವಿವಿಧ ಸಾಗರ ಬಂದರುಗಳ ಭದ್ರತೆಯ ಮೇಲ್ವಿಚಾರಣೆಯನ್ನು ಇನ್ನು ಮುಂದೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೋಡಿಕೊಳ್ಳಲಿದೆ ಎಂದು ಶುಕ್ರವಾರ ಅಮಿತ್ ಶಾ ಘೋಷಿಸಿದರು. ಇಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 57ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ 71 ವಿಮಾನ ನಿಲ್ದಾಣಗಳು, ಸಂಸತ್ ಸಂಕೀರ್ಣ ಹಾಗೂ ಗುಜರಾತ್‌ನ ಕೆವಾಡಿಯಾ ಬಳಿ ಇರುವ ಐಕ್ಯತೆಯ ಪ್ರತಿಮೆ ಸೇರಿದಂತೆ 361 ಮಹತ್ವದ ಸಂಸ್ಥೆಗಳನ್ನು ಈಗಾಗಲೇ ರಕ್ಷಿಸುತ್ತಿದೆ ಎಂದು ಹೇಳಿದರು. “ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಂತಹ ವಿಭಿನ್ನ ಸವಾಲುಗಳನ್ನು ಕೈಗೆತ್ತಿಕೊಳ್ಳಲಿದೆ. ನೀವು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭವ್ಯ ಸ್ಮಾರಕವನ್ನು ರಕ್ಷಿಸುತ್ತಿದ್ದೀರಿ. ನೀವು ನಮ್ಮ ದೇಶದ ಪ್ರಜಾಪ್ರಭುತ್ವದ ಬೃಹತ್ ಪಂಚಾಯಿತಿಯಾದ ಸಂಸತ್ ಸಂಕೀರ್ಣವನ್ನು ರಕ್ಷಿಸುತ್ತಿದ್ದೀರಿ. ಹಾಗೆಯೇ ಬೇರೆಡೆ ಅಣೆಕಟ್ಟುಗಳು ಹಾಗೂ ಮಹತ್ವದ ರೈಲ್ವೆ ಸಂಸ್ಥೆಗಳನ್ನು ರಕ್ಷಿಸುತ್ತಿದ್ದೀರಿ” ಎಂದು ಅವರು ಶ್ಲಾಘಿಸಿದರು. ಈ ಸಾಂಸ್ಥಿಕ ಪಾತ್ರಗಳೊಂದಿಗೆ ದೇಶದ ಬಂದರುಗಳನ್ನು ರಕ್ಷಿಸುವ ಹೊಣೆಗಾರಿಕೆಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯನ್ನು ಸೇರ್ಪಡೆ ಮಾಡಲು ಸರ್ಕಾರ ಕೆಲಸ ಮಾಡಿದೆ ಎಂದು ಹೇಳುವ ಮೂಲಕ ಸಾಗರ ಹಾಗೂ ವಾಯು ರಕ್ಷಣೆಯಲ್ಲಿ ಆಗಿರುವ ವ್ಯೂಹಾತ್ಮಕ ಸ್ಥಿತ್ಯಂತರದ ಕುರಿತು ಅವರು ವಿವರಿಸಿದರು. ಇದೇ ವೇಳೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯನ್ನು ಡ್ರೋನ್ ಭದ್ರತೆಯ ನೋಡಲ್ ಏಜೆನ್ಸಿಯಾಗಿ ನಿಯೋಜಿಸಲಾಗಿದೆ ಎಂದು ಘೋಷಿಸಿದ ಅಮಿತ್ ಶಾ, ಈ ಉದ್ದೇಶಕ್ಕಾಗಿ ಹೊಸ ಲಂಬ ವ್ಯವಸ್ಥೆಯನ್ನು ಸೃಷ್ಟಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ ಎಂದೂ ಪ್ರಕಟಿಸಿದರು.

ವಾರ್ತಾ ಭಾರತಿ 6 Mar 2026 10:13 pm

Uttar Pradesh | ತರಗತಿ ಕೊಠಡಿಯಲ್ಲೇ ಶಾಲಾ ಮಕ್ಕಳಿಂದ ಬಾಡಿ ಮಸಾಜ್ ಮಾಡಿಸಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೊ ವೈರಲ್

ಚಿತ್ರಕೂಟ್: ಉತ್ತರ ಪ್ರದೇಶದ ಚಿತ್ರಕೂಟ್ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯಿನಿಯೊಬ್ಬರು ತರಗತಿಯ ಕೊಠಡಿಯಲ್ಲೇ ಶಾಲಾ ವಿದ್ಯಾರ್ಥಿಗಳಿಂದ ಬಾಡಿ ಮಸಾಜ್ ಮಾಡಿಸಿಕೊಂಡಿದ್ದು, ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದರ ಬೆನ್ನಿಗೇ ಶಿಕ್ಷಣ ವ್ಯವಸ್ಥೆಯಲ್ಲಿನ ವರ್ತನೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ನಗರಸಭೆ ಒಡೆತನದ ಶಾಲೆಯೊಂದರ ಮುಖ್ಯೋಪಾಧ್ಯಾಯಿನಿಯೊಬ್ಬರು ನೆಲದ ಮೇಲೆ ಮಲಗಿ ಎಳೆಯ ಶಾಲಾ ವಿದ್ಯಾರ್ಥಿಗಳಿಂದ ಬಾಡಿ ಮಸಾಜ್ ಮಾಡಿಸಿಕೊಳ್ಳುತ್ತಿರುವುದು ಹಾಗೂ ಈ ವೇಳೆ ಮೊಬೈಲ್ ಫೋನ್ ಬಳಸುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊ ತುಣುಕಿನಲ್ಲಿ ಸೆರೆಯಾಗಿದೆ. ಈ ಘಟನೆ ಜಿಲ್ಲಾ ಮುಖ್ಯ ಕಚೇರಿಯ ಬಿಆರ್‌ಸಿ ಕ್ಯಾಂಪಸ್‌ನಲ್ಲಿರುವ ನಯಾ ಬಝಾರ್ ಪಾರ್ಟ್-1ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮುಖ್ಯೋಪಾಧ್ಯಾಯಿನಿಗೆ ಮಸಾಜ್ ಮಾಡುವಾಗ ಹಲವಾರು ಎಳೆಯ ಬಾಲಕಿಯರು ಆಕೆಯನ್ನು ಸುತ್ತುವರಿದಿರುವುದನ್ನು ಈ ವಿಡಿಯೊದಲ್ಲಿ ನೋಡಬಹುದಾಗಿದೆ. ಈ ವಿಡಿಯೊ ತುಣುಕಿಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಹಾಗೂ ಸ್ಥಳೀಯ ನಿವಾಸಿಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಶಾಲಾ ಮಕ್ಕಳ ಸುರಕ್ಷತೆ ಮತ್ತು ಘನತೆಯನ್ನು ಖಾತರಿಗೊಳಿಸಬೇಕಾದ ಶಾಲಾ ವಾತಾವರಣದಲ್ಲಿ ಇಂತಹ ಘಟನೆ ನಡೆದಿರುವುದನ್ನು ಅವರೆಲ್ಲ ಪ್ರಶ್ನಿಸಿದ್ದಾರೆ. ವಲಯ ಶಿಕ್ಷಣಾಧಿಕಾರಿ (ಬಿಇಒ) ಅತುಲ್ ದತ್ ಕಾರ್ಯನಿರ್ವಹಿಸುವ ಕಚೇರಿ ಇರುವ ಆವರಣದಲ್ಲೇ ಈ ಶಾಲೆಯೂ ಇದ್ದು, ಇದರಿಂದ ಆಡಳಿತಾತ್ಮಕ ಉಪೇಕ್ಷೆಯ ಬಗ್ಗೆ ಮತ್ತಷ್ಟು ಕಳವಳ ವ್ಯಕ್ತವಾಗಿದೆ. ಸೂಕ್ತ ನಿಗಾವಣೆ ಇದ್ದಿದ್ದರೆ ಇಂತಹ ಘಟನೆಗಳು ಗಮನಕ್ಕೆ ಬಾರದೆ ಹೋಗುತ್ತಿವೆಯೇ ಎಂದು ಟೀಕಾಕಾರರು ಪ್ರಶ್ನಿಸಿದ್ದಾರೆ. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಿಗೇ, ಈ ಘಟನೆಯ ಬಗ್ಗೆ ನಮಗೆ ಅರಿವಿರಲಿಲ್ಲ. ಈ ವಿಷಯ ನಮ್ಮ ಗಮನಕ್ಕೆ ಬಂದ ನಂತರ ಈ ಆರೋಪಗಳ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಈ ಘಟನೆಯ ಕುರಿತು ವಿಸ್ತೃತ ತನಿಖೆ ನಡೆಸಲಾಗುವುದು ಹಾಗೂ ಆರೋಪಗಳು ನಿಜವೆಂದು ದೃಢಪಟ್ಟರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ನಡುವೆ ಈ ಘಟನೆಯ ಕುರಿತು ಸ್ಥಳೀಯ ನಿವಾಸಿಗಳು ಹಾಗೂ ಪೋಷಕರು ಟೀಕಾಪ್ರಹಾರ ನಡೆಸಿದ್ದು, ಈ ಕುರಿತು ನ್ಯಾಯಯುತ ಮತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಶಾಲಾ ಸ್ಥಳಗಳು ವಿದ್ಯಾರ್ಥಿಗಳ ಪಾಲಿಗೆ ಸುರಕ್ಷಿತವಾಗಿ ಉಳಿಯುವಂತೆ ಹಾಗೂ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುವುದು ಅಧಿಕಾರಿಗಳು ಖಾತರಿಪಡಿಸಬೇಕು ಮತ್ತು ಅವರ ಶೈಕ್ಷಣಿಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 6 Mar 2026 10:10 pm

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ : ಸಿದ್ದರಾಮಯ್ಯ

► ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ 'ಸಮಗ್ರ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ನೀತಿ’► ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ವಿತರಿಸುವ ಗುರಿ

ವಾರ್ತಾ ಭಾರತಿ 6 Mar 2026 10:09 pm

ಲೆಬನಾನ್‍ ಮೇಲೆ ವೈಮಾನಿಕ ದಾಳಿ ಮುಂದುವರಿಸಿದ ಇಸ್ರೇಲ್‌

ಬೈರೂತ್, ಮಾ.6: ಉತ್ತರ ಇಸ್ರೇಲ್‍ನತ್ತ ಹಿಜ್ಬುಲ್ಲಾ ಗುಂಪು ನಡೆಸಿದ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಬೈರೂತ್ ಹಾಗೂ ದಕ್ಷಿಣ ಲೆಬನಾನ್‍ನ ಮೇಲೆ ಇಸ್ರೇಲ್‍ನ ವೈಮಾನಿಕ ದಾಳಿ ಶುಕ್ರವಾರವೂ ಮುಂದುವರಿದಿದ್ದು ಹಲವು ಮನೆಗಳು, ವಸತಿ ಕಟ್ಟಡಗಳು ನೆಲಸಮಗೊಂಡಿರುವುದಾಗಿ ವರದಿಯಾಗಿದೆ. ಗುರುವಾರ ತಡರಾತ್ರಿಯಿಂದ ಇಸ್ರೇಲ್ ಬೈರೂತ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಜ್ಬುಲ್ಲಾದ ಸುಮಾರು 115 ಗುರಿಗಳ ಮೇಲೆ ವೈಮಾನಿಕ ದಾಳಿ ನಡೆಸಿರುವುದಾಗಿ ಇಸ್ರೇಲ್ ಮಿಲಿಟರಿ ಹೇಳಿದೆ. ಈ ಮಧ್ಯೆ, ಇಸ್ರೇಲ್‍ನ ವೈಮಾನಿಕ ದಾಳಿ ಆರಂಭಗೊಂಡ ಬಳಿಕ ಸಾವಿರಾರು ಮಂದಿ ದಕ್ಷಿಣ ಲೆಬನಾನ್‍ನಿಂದ ಸ್ಥಳಾಂತರಗೊಂಡಿರುವುದಾಗಿ ಲೆಬನಾನ್‍ನ ಮಾಧ್ಯಮಗಳು ವರದಿ ಮಾಡಿವೆ.

ವಾರ್ತಾ ಭಾರತಿ 6 Mar 2026 10:03 pm

ಭಾರತದಿಂದ ನಿರ್ಗಮನ ವಿಳಂಬ: ಬೇಸರ ವ್ಯಕ್ತಪಡಿಸಿದ ವಿಂಡೀಸ್ ಆಟಗಾರ

ಹೊಸದಿಲ್ಲಿ, ಮಾ.6: ಟಿ-20 ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿದ ನಂತರ ಭಾರತದಿಂದ ಸ್ವದೇಶಕ್ಕೆ ತಂಡದ ನಿರ್ಗಮನ ವಿಳಂಬವಾಗುತ್ತಿರುವುದಕ್ಕೆ ವೆಸ್ಟ್‌ಇಂಡೀಸ್ ಸ್ಪಿನ್ನರ್ ಅಕೀಲ್ ಹುಸೇನ್ ಸಾಮಾಜಿಕ ಮಾಧ್ಯಮದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ‘ನಮ್ಮನ್ನು ರಕ್ಷಿಸಿ’ ಎಂದು ಫುಟ್ಬಾಲ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊಗೆ ವಿನಂತಿಸಿರುವ ಹುಸೇನ್ ನಗೆ ಚಟಾಕಿಯನ್ನು ಹಾರಿಸಿದರು. ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ತಲೆದೋರಿರುವ ಹಿನ್ನೆಲೆಯಲ್ಲಿ ಅಂತರ್‌ರಾಷ್ಟ್ರೀಯ ಪ್ರಯಾಣವು ವ್ಯತ್ಯಯವಾಗಿದ್ದು, ಪಶ್ಚಿಮ ಏಶ್ಯದ ಹಲವು ಏರ್‌ಪೋರ್ಟ್‌ಗಳಲ್ಲಿ ಕಟ್ಟೆಚ್ಚರವಹಿಸಲಾಗಿದ್ದು, ವಿಮಾನಗಳನ್ನು ರದ್ದುಪಡಿಸಲಾಗಿದೆ. ಭಾರತ ಹಾಗೂ ಶ್ರೀಲಂಕಾದಲ್ಲಿ ತನ್ನ ಟಿ-20 ವಿಶ್ವಕಪ್ ಅಭಿಯಾನವನ್ನು ಅಂತ್ಯಗೊಳಿಸಿರುವ ವೆಸ್ಟ್‌ಇಂಡೀಸ್ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಪಶ್ಚಿಮ ಏಶ್ಯದ ಉದ್ವಿಗ್ನ ಪರಿಸ್ಥಿತಿಯ ಕಾರಣ ಸ್ವದೇಶಕ್ಕೆ ವಾಪಸಾಗಲು ಸಾಧ್ಯವಾಗದೆ ಸಮಸ್ಯೆಗೆ ಸಿಲುಕಿದ್ದಾರೆ. 24 ಗಂಟೆಗಳೊಳಗೆ ಸ್ವದೇಶಕ್ಕೆ ಕರೆದೊಯ್ಯಲು ವಿಶೇಷ ವಿಮಾನ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕಾರ್ಯನಿರತವಾಗಿದ್ದೇವೆೆ ಎಂದು ಕ್ರಿಕೆಟ್ ವೆಸ್ಟ್‌ಇಂಡೀಸ್ ಗುರುವಾರ ಪ್ರಕಟಿಸಿದ ಬೆನ್ನಿಗೆ ಈ ಬೆಳವಣಿಗೆ ನಡೆದಿದೆ. ‘‘ಈ ಹಂತದಲ್ಲಿ ನನ್ನನ್ನು ರಕ್ಷಿಸಲು ಬರುವಂತೆ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಕೇಳಿಕೊಳ್ಳುವುದು ಉತ್ತಮ’’ ಎಂದು ಹುಸೇನ್ ಎಕ್ಸ್‌ನಲ್ಲಿ ಬರೆದಿದ್ದಾರೆ. ಕಳೆದ ರವಿವಾರ ಈಡನ್‌ಗಾರ್ಡನ್ಸ್‌ನಲ್ಲಿ ಭಾರತ ವಿರುದ್ಧ ಐದು ವಿಕೆಟ್‌ಗಳಿಂದ ಸೋತ ನಂತರ ಕೆರಿಬಿಯನ್ ತಂಡವು ಕೋಲ್ಕತಾದಲ್ಲೇ ಉಳಿದುಕೊಂಡಿದೆ. ತಂಡದ ಪ್ರಯಾಣದ ಯೋಜನೆಗೆ ಕುರಿತು ಸ್ಪಷ್ಟನೆ ನೀಡುವಂತೆ ವೆಸ್ಟ್‌ಇಂಡೀಸ್ ಮುಖ್ಯ ಕೋಚ್ ಡರೆನ್ ಸಮ್ಮಿ ಐಸಿಸಿಯಿಂದ ಗುರುವಾರ ಸ್ಪಷ್ಟನೆ ಕೇಳಿದ್ದರು. ತಂಡದ ಮರಳಿಕೆಗೆ ಸಂಬಂಧಿಸಿ ವ್ಯವಸ್ಥೆ ಮಾಡಲು ಪ್ರಯತ್ನ ಮುಂದುವರಿದಿದೆ ಎಂದು ವಿಂಡೀಸ್ ಕ್ರಿಕೆಟ್ ಮಂಡಳಿ ಹೇಳಿಕೆಯಲ್ಲಿ ಪ್ರತಿಕ್ರಿಯಿಸಿತ್ತು. ತಕ್ಷಣವೇ ಸ್ವದೇಶಕ್ಕೆ ವಾಪಸಾಗಲು ಸಾಧ್ಯವಾಗದೆ ಇರುವ ಹಲವು ವಿಂಡೀಸ್ ಆಟಗಾರರು ಮುಂಬರುವ ಐಪಿಎಲ್‌ನಲ್ಲಿ ಸಂಬಂಧಿತ ಫ್ರಾಂಚೈಸಿಗಳನ್ನು ಸೇರಿಕೊಳ್ಳಲು ಭಾರತದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ.

ವಾರ್ತಾ ಭಾರತಿ 6 Mar 2026 10:01 pm

ಏಕೈಕ ಟೆಸ್ಟ್ | ಜೆಮಿಮಾ ರೋಡ್ರಿಗ್ಸ್ ಅರ್ಧಶತಕ : ಭಾರತ ಮಹಿಳಾ ತಂಡದ ವಿರುದ್ಧ ಆಸ್ಟ್ರೇಲಿಯಕ್ಕೆ ಅಲ್ಪ ಮುನ್ನಡೆ

ಪರ್ತ್, ಮಾ.6: ಭಾರತ ಮಹಿಳಾ ಕ್ರಿಕೆಟ್ ತಂಡದ ವಿರುದ್ಧ ಶುಕ್ರವಾರ ವಾಕಾ ಮೈದಾನದಲ್ಲಿ ಆರಂಭವಾದ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ 3 ವಿಕೆಟ್‌ಗಳ ನಷ್ಟಕ್ಕೆ 96 ರನ್ ಗಳಿಸಿ 102 ರನ್ ಹಿನ್ನಡೆಯಲ್ಲಿರುವ ಆಸ್ಟ್ರೇಲಿಯ ತಂಡ ಅಲ್ಪ ಮೇಲುಗೈ ಸಾಧಿಸಿದೆ. ಮೊದಲ ದಿನದಾಟದಲ್ಲಿ ಒಟ್ಟು 13 ವಿಕೆಟ್‌ಗಳು ಪತನಗೊಂಡಿವೆ. ತನ್ನ ಕೊನೆಯ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯದ ನಾಯಕಿ ಅಲಿನಾ ಹೀಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಭಾರತವು 198 ರನ್ ಗಳಿಸಿ ಆಲೌಟಾಯಿತು. ಸ್ಮತಿ ಮಂಧಾನ(4 ರನ್)ವಿಕೆಟನ್ನು ಬೇಗನೆ ಕೆಡವಿದ ಲೂಸಿ ಹ್ಯಾಮಿಲ್ಟನ್ ತನ್ನ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದರು. ಶೆಫಾಲಿ ವರ್ಮಾ(35 ರನ್) ಹಾಗೂ ಪ್ರತಿಕಾ ರಾವಲ್(18 ರನ್) ತಂಡದ ಸ್ಕೋರನ್ನು 50ರ ಗಡಿ ದಾಟಿಸಿದರು. ಆಲ್‌ರೌಂಡರ್ ಅನಬೆಲ್ ಸದರ್‌ಲ್ಯಾಂಡ್ 46 ರನ್‌ಗೆ ನಾಲ್ಕು ವಿಕೆಟ್‌ಗಳನ್ನು ಉರುಳಿಸಿದರು. ಆಗ ಭಾರತವು 107 ರನ್‌ಗೆ ಐದು ವಿಕೆಟ್ ಕಳೆದುಕೊಂಡಿತು. ಜೆಮಿಮಾ ರೋಡ್ರಿಗ್ಸ್ ತನ್ನ ನಾಲ್ಕನೇ ಟೆಸ್ಟ್ ಅರ್ಧಶತಕ (52 ರನ್, 84 ಎಸೆತ, 7 ಬೌಂಡರಿ) ಗಳಿಸಿದ್ದಲ್ಲದೆ ರಿಚಾ ಘೋಷ್(11 ರನ್) ಅವರೊಂದಿಗೆ ಆರನೇ ವಿಕೆಟ್‌ಗೆ 43 ರನ್ ಜೊತೆಯಾಟ ನಡೆಸಿದರು. ಆದರೆ ಇಬ್ಬರು ಬ್ಯಾಟರ್‌ಗಳು ಸತತ ಓವರ್‌ಗಳಲ್ಲಿ ವಿಕೆಟ್ ಒಪ್ಪಿಸಿದರು. ಕಾಶ್ವೀ ಗೌತಮ್ ಔಟಾಗದೆ 34 ರನ್ ಗಳಿಸಿದರು. ಅಂತಿಮವಾಗಿ ಭಾರತ ಮೊದಲ ಇನಿಂಗ್ಸ್‌ನಲ್ಲಿ 198 ರನ್‌ಗೆ ಆಲೌಟಾಯಿತು. ಸದರ್‌ಲ್ಯಾಂಡ್ ನಾಲ್ಕು ವಿಕೆಟ್ ಪಡೆದರೆ, ಹ್ಯಾಮಿಲ್ಟನ್(3-31) ಹಾಗೂ ಡಾರ್ಸಿ ಬ್ರೌನ್(2-41)ಒಟ್ಟಿಗೆ ಐದು ವಿಕೆಟ್ ಪಡೆದರು. ಆಸ್ಟ್ರೇಲಿಯ ತಂಡದ ಎಲ್ಲಿಸ್ ಪೆರ್ರಿ(43 ರನ್)ಹಾಗೂ ಸದರ್‌ಲ್ಯಾಂಡ್(20 ರನ್)ಕ್ರೀಸ್ ಕಾಯ್ದುಕೊಂಡಿದ್ದಾರೆ. ಭಾರತದ ಸಯಾಲಿ 24 ರನ್‌ಗೆ ಎರಡು ವಿಕೆಟ್‌ಗಳನ್ನು ಪಡೆದಿದ್ದಾರೆ.

ವಾರ್ತಾ ಭಾರತಿ 6 Mar 2026 9:57 pm

ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯ ಕಲಿಕೆ ಅಗತ್ಯ: ಪ್ರೊ.ಅಕ್ಕಿ ಮಾರುತಿ

ಗಂಗಾವತಿ: ಯಾವುದೇ ಕ್ಷೇತ್ರದಲ್ಲೂ ಇಂದು ಕೌಶಲ್ಯಗಳಿಗೆ ಪ್ರಾಧಾನ್ಯತೆ ಇದೆ. ಹಾಗಾಗಿ ಕಾಲೇಜು ಶಿಕ್ಷಣದಲ್ಲೂ ಕೌಶಲ್ಯಾಧಾರಿಕ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್‌ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಅಕ್ಕಿ ಮಾರುತಿ ಹೇಳಿದರು. ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್‌ 6ರಂದು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಡಿ ನಡೆದ ಆನ್‌ಲೈನ್‌ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಾಣಿಜ್ಯಶಾಸ್ತ್ರ, ಅರ್ಥಶಾಸ್ತ್ರ ಮತ್ತು ನಿರ್ವಹಣಾಶಾಸ್ತ್ರದಲ್ಲಿ ಕೌಶಲ್ಯ ತರಬೇತಿ ಇಂದು ಅಗತ್ಯವಾಗಿದೆ. ವಿದ್ಯಾರ್ಥಿಗಳು ಕೌಶಲ್ಯಗಳ ಕಲಿಕೆಯಲ್ಲಿ ಶ್ರದ್ಧೆ ವಹಿಸಿದರೆ ಭವಿಷ್ಯದ ದಿನಗಳು ಮತ್ತಷ್ಟು ಉತ್ತಮವಾಗಲಿವೆ ಎಂದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಧಾರವಾಡದ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಮತಿ ಪೂರ್ಣಿಮಾ ಡಿ.ಕಾಂಬ್ಳೆ ಅವರು ವಿವಿಧ ಕ್ಷೇತ್ರಗಳಲ್ಲಿರುವ ಕೌಶಲ್ಯಗಳ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ಇಂಥ ವಿಶೇಷ ಉಪನ್ಯಾಸಗಳ ಮೂಲಕ ಕಲಿಕಾಸಕ್ತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇಂದಿನ ದಿನಗಳಲ್ಲಿ ಉದ್ಯಮ ಮತ್ತು ಉದ್ಯೋಗಗಳಲ್ಲೂ ಕೌಶಲ್ಯಗಳಿಗೆ ವಿಶೇಷ ಸ್ಥಾನ-ಮಾನಗಳಿವೆ ಎಂದು ತಿಳಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮೆಹತಾಜ್‌ ಅಂಜುಮ್ ಕಾರ್ಯಕ್ರಮ ನಿರ್ವಹಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಮಂಜುನಾಥ, ಸಹ ಸಂಚಾಲಕ ಅನಿಲ್‌ಕುಮಾರ್‌ ಉಪಸ್ಥಿತರಿದ್ದರು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ವಿಶೇಷ ಉಪನ್ಯಾಸ ಕಾರ್ಯಕ್ರಮದ ಪ್ರಯೋಜನ ಪಡೆದರು.

ವಾರ್ತಾ ಭಾರತಿ 6 Mar 2026 9:53 pm

ಪಾಕ್ ಬ್ಯಾಟರ್ ಇರ್ಫಾನ್ ನಿಯಾಝಿ ವಯಸ್ಸೆಷ್ಟು ಎಂದು ವ್ಯಂಗ್ಯವಾಡಿದ ಶಾಹಿದ್ ಅಫ್ರಿದಿಗೆ ನೆಟ್ಟಿಗರ ತರಾಟೆ

ತಾನು ಕಳ್ಳ ಪರರ ನಂಬ ಎಂಬ ಗಾದೆ ಮಾತು ಶಾಹಿದ್ ಅಫ್ರಿದಿಗೆ ಹೇಳಿ ಮಾಡಿಸಿದಂತಿದೆ. ಅವರ ವಯಸ್ಸಿನ ವಿಚಾರ ಅವರು ಕ್ರಿಕೆಟ್ ಆಡುತ್ತಿದ್ದ ಬಹಳ ಚರ್ಚೆಗೆ ಗ್ರಾಸವಾಗಿತ್ತು. ಹೀಗಿರುವಾಗ ಅವರು ಇದೀಗ ಪಾಕಿಸ್ತಾನ ತಂಡದ ಆಟಗಾರ ಇರ್ಫಾನ್ ಖಾನ್ ನಿಯಾಝಿ ಅವರ ವಯಸ್ಸಿನ ಕುರಿತು ವ್ಯಂಗ್ಯವಾಡಿರುವುರು ತಮಾಷೆಗೆ ಕಾರಣವಾಗಿದೆ. ಇದು ನಡೆದದ್ದು ಪಾಕಿಸ್ತಾನದ ಟಿವಿ ಶೋ ಒಂದರಲ್ಲಿ. ಪಾಕಿಸ್ತಾನ ಕ್ರಿಕೆಟ್ ತಂಡದ ವಿಶ್ಲೇಷಣೆ ನಡೆಸುತ್ತಿದ್ದ ಶಾಹಿದ್ ಅಫ್ರಿದಿ ಅವರು, ನಿಯಾಝಿ ಅವರ ಬಗ್ಗೆ ಮಾತನಾಡುವಾಗ, `` ಈಗಾಗಲೇ ನೀವು ಅವರಿಗೆ(ಇರ್ಫಾನ್ ನಿಯಾಝಿ) ಬಹಳಷ್ಟು ಅವಕಾಶಗಳನ್ನು ಕೊಟ್ಟು ನೋಡಿದ್ದೀರಿ. ಅವರು 4 ಅಥವಾ 5ನೇ ಕ್ರಮಾಂಕದಲ್ಲಿ ಆಡುವ ಹಿಟ್ಟರ್. ಅಂದ ಹಾಗೆ ಅವರ ವಯಸ್ಸೆಷ್ಟು?'' ಎಂದು ಪ್ರಶ್ನಿಸಿದರು. ಹಾಗಿದ್ರೆ ನನಗೆ ಈಗ 30ರಿಂದ 35 ವರ್ಷ! ಈ ವೇಳೆ ತನ್ನ ಮುಂದಿದ್ದ ಕಂಪ್ಯೂಟರ್ ನಲ್ಲಿ ನಿಯಾಝಿ ಅವರ ವಯಸ್ಸನ್ನು ಹುಡುಕಿ ಪತ್ತೆ ಮಾಡಿದ ಟಿವಿ ಆ್ಯಂಕರ್, ``ಅವರಿಗೆ ಈಗ 23 ವರ್ಷ ವಯಸ್ಸು'' ಎಂದು ಹೇಳಿದರು. ಅದಕ್ಕೆ ಅಫ್ರಿದಿ ``ಏನು? ಕೇವಲ 23 ಅಷ್ಟೇ'' ಎಂದು ಅಚ್ಚರಿ ವ್ಯಕ್ತಪಡಿಸಿದರು. ಟಿವಿ ಆ್ಯಂಕರ್ ``ಅಧಿಕೃತವಾಗಿ ದಾಖಲೆಗಳ ಪ್ರಕಾರ ಅವರಿಗೆ 23'' ಎಂದರು. ಈ ವೇಳೆ 51 ವರ್ಷದ ಅಫ್ರಿದಿ ಅವರು, ``ಸರಿ ಹಾಗಾದರೆ ನಾನು ಈಗ 30ರಿಂದ 35 ವರ್ಷ ಎಂದು ಹೇಳಬೇಕಷ್ಟೇ.'' ಎಂದು ನಗುತ್ತಾ ಕಟಕಿಯಾಡಿದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ತೀವ್ರ ಚರ್ಚೆಗೀಡಾಗಿದೆ. ಶಾಹಿದ್ ಅಫ್ರಿದಿ ಅವರ ವಯಸ್ಸಿನ ಬಗ್ಗೆ ಅವರು ಕ್ರಿಕೆಟ್ ಆಡುವಾಗಲೇ ಅನುಮಾನವಿತ್ತು. ಅವರು ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದಾಗ ಅವರಿಗೆ 16 ವರ್ಷ ವಯಸ್ಸು ಎಂದು ಹೇಳಲಾಗಿತ್ತು. ಆದರೆ ಅವರು ವಯಸ್ಸಿಗಿಂತ ದೊಡ್ಡದಾಗಿ ಕಾಣುತ್ತಿದ್ದುದು ಮತ್ತು ವಯಸ್ಸಿಗೆ ಮೀರಿದ ಹೊಡೆತಗಳನ್ನು ಹೊಡೆಯುತ್ತಿದ್ದ ಕಾರಣ ಚರ್ಚೆಯ ವಸ್ತುವಾಗಿದ್ದರು. ಅಫ್ರಿದಿ ಆತ್ಮಚರಿತ್ರೆಯಲ್ಲಿ ಗೊಂದಲ ಇನ್ನು ಅವರು ನಿವೃತ್ತಿ ಆದ ಬಳಿಕ ಬರೆದ ತಮ್ಮ ನಲ್ಲಿ ತಾವು ಪಾಕಿಸ್ತಾನ ತಂಡಕ್ಕೆ ಪದಾರ್ಪಣೆ ಮಾಡಿದ ಸಂದರ್ಭ ತಮಗೆ 16 ವರ್ಷ ಅಲ್ಲ, 19 ವರ್ಷವಾಗಿತ್ತು ಎಂದು ಬರೆದುಕೊಂಡಿದ್ದಾರೆ. ತಾವು 1975ರಲ್ಲಿ ಜನಿಸಿರುವದಾಗಿ ಅವರು ತಿಳಿಸಿದ್ದರು. ಒಂದು ವೇಳೆ ಅರು ಅದೇ ಇಸವಿಯಲ್ಲಿ ಅವರು ಹುಟ್ಟಿದ್ದಾದಲ್ಲಿ ಲೆಕ್ಕಾಚಾರದ ಪ್ರಕಾರ ಅವರು 21 ವರ್ಷ ವಯಸ್ಸಿಗೆ ಪದಾರ್ಪಣೆ ಮಾಡಿದಂತಾಗುತ್ತದೆ. ಹೀಗಾಗಿ ಅವರ ಹೇಳಿಕೆ ಬಹಳ ಗೊಂದಲ ಸೃಷ್ಟಿಸಿತ್ತು. ಈ ವಿಚಾರವಾಗಿ ಅವರು 2020ರಲ್ಲಿ ಶಾಹಿದ್ ಅಫ್ರಿದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹೀಗಿರುವಾಗ ಇದೀಗ ಶಾಹಿದ್ ಅಫ್ರಿದಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ನೆಟ್ಟಿಗರು ``ಒಬ್ಬ ಮೋಸಗಾರ ಮತ್ತೊಬ್ಬ ಮೋಸಗಾರನ ಬಗ್ಗೆ ಮಾತನಾಡುತ್ತಿದ್ದಾನೆ'' ಎಂದು ಟ್ರೋಲ್ ಮಾಡುತ್ತಿದ್ದಾರೆ. 1996ರಲ್ಲಿ ನೈರೋಬಿಯಲ್ಲಿ ಕೀನ್ಯಾ ವಿರುದ್ಧ ಅವರು ಪದಾರ್ಪಣೆ ಪಂದ್ಯವನ್ನಾಡಿದ್ದರು. 2009ರ ಟಿ20 ವಿಶ್ವಕಪ್ ವಿಜೇತ ಪಾಕಿಸ್ತಾನ ತಂಡದ ಸದಸ್ಯರಾಗಿದ್ದರು. ಒಟ್ಟಾರೆ 27 ಟೆಸ್ಟ್, 398 ಏಕದಿನ ಮತ್ತು 99 ಟಿ20 ಪಂದ್ಯಗಳಲ್ಲಿ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ್ದರು. ಆಕ್ರಮಣಕಾರಿ ಬ್ಯಾಟಿಂಗ್ ಗೆ ಹೆಸರುವಾಸಿಯಾಗಿದ್ದ ಅವರು ಉಪಯುಕ್ತ ಸ್ಪಿನ್ನರ್ ಸಹ ಆಗಿದ್ದರು. ಸದಾ ವಿವಾದಗಳ ಸುತ್ತವೇ ಇರುತ್ತಿದ್ದ ಅವರು ಎರಡು ಬಾರಿ ನಿವೃತ್ತಿ ಘೋಷಿಸಿ ಸುದ್ದಿಯಾಗಿದ್ದರು.

ವಿಜಯ ಕರ್ನಾಟಕ 6 Mar 2026 9:53 pm

2026-27ನೇ ಸಾಲಿನ ಆಯವ್ಯಯದಲ್ಲಿ ಕೊಪ್ಪಳಕ್ಕೆ ಸಿಕ್ಕಿದೇನು ?

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೊಪ್ಪಳ ಜಿಲ್ಲೆಗೆ ಕೆಲವೊಂದು ಕೊಡುಗೆಗಳನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ. ಅವುಗಳೆಂದರೆ ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ 33 ಗೇಟ್ ಗಳನ್ನು ಬದಲಾಯಿಸಿ ಹೊಸ ಗೇಟ್ ಗಳನ್ನು ಅಳವಡಿಸುವುದು, ಜಲಾಶಯದಲ್ಲಿ ಹೂಳಿನ ಶೇಖರಣೆಯಿಂದ ನೀರಿನ, ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸಲು ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣ ಸೇರಿದಂತೆ ಇತರೆ ಪರ್ಯಾಯ ಮಾರ್ಗೋಪಾಯಗಳ ಕುರಿತು ಅವುಗಳಲ್ಲಿ ಸಮಯೋಚಿತ ಪರ್ಯಾಯ ಮಾರ್ಗದ ಕುರಿತು ಆಂಧ್ರ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ ತುಂಗಭದ್ರಾ ಮಂಡಳಿಯ ಸಹಮತಿಯೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ತೀವ್ರ ಪ್ರಯತ್ನಿಸಲಾಗುವುದು ಎಂದು ಘೋಷಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಅಂತರ್ಜಲ ಹೆಚ್ಚಿಸಲು ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕ್- ಅಪ್ ಹಾಗೂ ಚೆಕ್ ಡ್ಯಾಂ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಬಜೆಟ್ ಘೋಷಿಸಿದ್ದಾರೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು, ಜಿಲ್ಲೆಯ ಬೇವೂರು ಗ್ರಾಮದಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು 18 ಕೋಟಿ ರೂ.ವೆಚ್ಚದಲ್ಲಿ ಸ್ಥಾಪಿಸುವುದು, ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್- ಟಿ.ಬಿ.ಡ್ಯಾಂನಲ್ಲಿ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಜಿಲ್ಲೆಯಲ್ಲಿರುವ ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯಗಳನ್ನು ಉನ್ನತೀಕರಿಸುವುದು, ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಹಾಗೂ 23 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು 125 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯದ ಜಿಲ್ಲೆಯಲ್ಲಿ ನಾಲ್ಕು ಕೋಟಿ ವೆಚ್ಚದಲ್ಲಿ ತಾರಾಲಯ ನಿರ್ಮಾಣ ಮತ್ತು ಕುಕನೂರಿನಲ್ಲಿ ಎರಡು ಕೋಟಿ ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣ ಹಾಗೂ ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು 100 ಕೋಟಿ ವೆಚ್ಚದ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ವಾರ್ತಾ ಭಾರತಿ 6 Mar 2026 9:50 pm

ಬಜೆಟ್ ನಲ್ಲಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ 1,500 ಕೋಟಿ ರೂ.: ಸಚಿವ ಈಶ್ವರ್ ಖಂಡ್ರೆ ಸ್ವಾಗತ

ಬೀದರ್ : 2026-27ನೇ ಸಾಲಿನ ಬಜೆಟ್ ನಲ್ಲಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಿಸಲು 1,500 ಕೋಟಿ ರೂ. ಘೋಷಿಸಿದ್ದು, ಈ ವರ್ಷ 269 ಕೋಟಿ ಮೀಸಲಿಟ್ಟಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆಯ 17ನೇ ಬಜೆಟ್ ಸರ್ವಸ್ಪರ್ಶಿಯಾಗಿದ್ದು, ಬಡವರ, ಮಧ್ಯಮವರ್ಗದವರ ಏಳಿಗೆಗೆ ಸಮರ್ಪಿತವಾಗಿದೆ. ಮಿಗಿಲ್ಗಿ ವನ್ಯಜೀವಿ ಮಾನವ ಸಂಘರ್ಷ ನಿಗ್ರಹಕ್ಕೆ ಒತ್ತು ನೀಡಿದೆ. ಇದರ ಜೊತೆಗೆ ಈಗಾಗಲೇ ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಪ್ರದೇಶದ ಅಭಿವೃದ್ಧಿಗೆ ಕ್ರಮ ಕೈಗೊಂಡಿರುವುದು, ಬೆಂಗಳೂರು ಮಹಾನಗರದಲ್ಲಿ ಶ್ವಾಸತಾಣ ಸಂರಕ್ಷಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಚಿರತೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪಿಸುತ್ತಿರುವುದೂ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. 2026-27ರ ಸಾಲಿನಲ್ಲಿ ಅರಣ್ಯ ಇಲಾಖೆಯ ವಿವಿಧ ವೃಂದದಲ್ಲಿ ಖಾಲಿ ಇರುವ ಸುಮಾರು 2 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತಿದ್ದು, ಇದು ಕೂಡ ಇಲಾಖೆಯ ಸಮಗ್ರ ಕಾರ್ಯವೈಖರಿಯ ಸುಧಾರಣೆಗೆ ಚೈತನ್ಯ ತುಂಬಲಿದೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ಮೈಸೂರು ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಪ್ರಕೃತಿ ನಿರೂಪಣಾ ಕೇಂದ್ರ ಸ್ಥಾಪನೆಯ ಕ್ರಮವೂ ಸ್ವಾಗತಾರ್ಹವಾಗಿದೆ ಎಂದ ಅವರು, ಜಾಗತಿಕ ತಾಪಮಾನ ಏರಿಕೆ ಹಾಗೂ ಹವಾಮಾನ ಬದಲಾವಣೆಯ ಪ್ರತೀಕೂಲ ಪರಿಣಾಮ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಶೇ.10ಕ್ಕಿಂತ ಕಡಿಮೆ ಅರಣ್ಯ ಇರುವ ಜಿಲ್ಲೆಗಳಲ್ಲಿ ಸುಮಾರು 75,000 ಹೆಕ್ಟೇರ್ ನಲ್ಲಿ ಅರಣ್ಯೀಕರಣ ಚಟುವಟಿಕೆಗಳಿಗೆ ಕೆ ಕೆ ಆರ್ ಡಿ ಬಿಯ 50 ಕೋಟಿ ರೂ. ಸೇರಿದಂತೆ 150 ಕೋಟಿ ರೂ. ಹಂಚಿಕೆ ಮಾಡಿರುವುದನ್ನು ಈಶ್ವರ್ ಖಂಡ್ರೆ ಅವರು ಸ್ವಾಗತಿಸಿದ್ದಾರೆ. ರಾಜ್ಯದ ಜನರಿಗೆ ಶುದ್ಧ ಗಾಳಿಯ ಖಾತ್ರಿಗಾಗಿ ಕರ್ನಾಟಕದಾದ್ಯಂತ 15 ಹೊಸ ಪರಿವೇಷ್ಠಿಕ ನಿರಂತರ ವಾಯು ಗುಣಮಟ್ಟದ ಮಾಪನ ಕೇಂದ್ರಗಳನ್ನು ಸ್ಥಾಪಿಸುತ್ತಿರುವುದು ಅತ್ಯಂತ ಅಗತ್ಯ ಹಾಗೂ ಮಹತ್ವದ ಹೆಜ್ಜೆಯಾಗಿದೆ. ಮಾಗಡಿಯ ಹುಲಿಕಲ್-ಕುದೂರು ಗ್ರಾಮದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಸ್ಮಾರಕ ನಿರ್ಮಿಸುತ್ತಿರುವುದು ಪರಿಸರ ಪ್ರೇಮಿಗಳಿಗೆ ಸ್ಫೂರ್ತಿಯ ತಾಣವಾಗಲಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 6 Mar 2026 9:45 pm

ಸಿಎಂ ಜತೆ ಗುತ್ತಿಗೆದಾರರ ಸಭೆ ಏರ್ಪಾಡು : ಡಿ.ಕೆ.ಶಿವಕುಮಾರ್

ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನಾನು ಸೇರಿ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಗುತ್ತಿಗೆದಾರರ ಸಭೆ ಮಾಡಿ, ಅವರ ಬಿಲ್ ಬಾಕಿ ಸಂಬಂಧ ಸಮಸ್ಯೆ ಪರಿಹಾರ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಶುಕ್ರವಾರ ಇಲ್ಲಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನಾನಿರತ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುತ್ತಿಗೆದಾರರು ರಾಜ್ಯದ ಬದುಕಿಗೆ ಸಹಾಯ ಮಾಡುತ್ತಿದ್ದೀರಿ. ನಮ್ಮ ಸರಕಾರ ತಂದಿದ್ದೀರಿ ಎಂಬ ಅರಿವು ನಮಗಿದೆ. ನಿಮಗೆ ಹಣ ಪಾವತಿ ಮಾಡಬಾರದು ಎಂಬುದು ನಮ್ಮ ಉದ್ದೇಶವಲ್ಲ ಎಂದರು. ಜಲಸಂಪನ್ಮೂಲ ಇಲಾಖೆಯಲ್ಲಿ 13 ಸಾವಿರ ಕೋಟಿ ರೂ., ಸಣ್ಣ ನೀರಾವರಿ ಇಲಾಖೆಯಲ್ಲಿ 3 ಸಾವಿರ ಕೋಟಿ ರೂ.ಸೇರಿದಂತೆ ಸುಮಾರು 37ಸಾವಿರ ಕೋಟಿ ರೂ.ಬಿಲ್ ಬಾಕಿ ಇದೆ. ನಿಮ್ಮ ನೋವು ನಮಗೆ ಗೊತ್ತಿದೆ. ನಾನು ಚುನಾವಣೆಗೂ ಆರು ತಿಂಗಳು ಮುಂಚಿತವಾಗಿ ಹೇಳಿದ್ದೆ. ಇಲಾಖೆಗಳಲ್ಲಿ ಹಣವಿಲ್ಲದೆ ಯಾವುದೇ ಗುತ್ತಿಗೆ ಕಾಮಗಾರಿ ತಗೆದುಕೊಳ್ಳಬೇಡಿ ಎಂದು ಎಚ್ಚರಿಸಿದ್ದೆ ಎಂದು ಅವರು ಸ್ಮರಿಸಿದರು. ಬಿಜೆಪಿ ಅವಧಿಯಲ್ಲಿ ಹಣ ಇರಲಿ, ಬಿಡಲಿ, ಕಾಮಗಾರಿ ಕೊಟ್ಟಿದ್ದೇ ಕೊಟ್ಟದ್ದು. ಗುತ್ತಿಗೆದಾರರು ಕೆಲಸ ತೆಗೆದುಕೊಂಡು ನಮ್ಮ ಎದೆ ಮೇಲೆ ಕೂತಿದ್ದೀರಿ. ಇದಕ್ಕೆ ಒಂದು ರೂಪ ನೀಡಬೇಕಿದೆ. ಇದಕ್ಕೆ ಸುಮಾರು 50 ಸಾವಿರ ಕೋಟಿ ರೂ.ಗಳಷ್ಟು ಬಿಲ್ ಬಾಕಿ ಇದ್ದು, ಬಾಂಡ್ ಅಥವಾ ಇತರೆ ಮಾರ್ಗ ಹುಡುಕಬೇಕು. ಆಗ ಮಾತ್ರ ಈ ಸಮಸ್ಯೆ ಬಗೆಹರಿಯಲಿದೆ ಎಂದರು. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ನೆರವು ನೀಡಲು ಗ್ಯಾರಂಟಿ ಯೋಜನೆ ನೀಡಿದ್ದು, ಇದಕ್ಕಾಗಿ ಸುಮಾರು 52 ಸಾವಿರ ಕೋಟಿ ರೂ.ವಾರ್ಷಿಕವಾಗಿ ವೆಚ್ಟ ಮಾಡಲಾಗುತ್ತಿದೆ. ಆದರೂ ನಮ್ಮ ರಾಜ್ಯದಲ್ಲಿ ಉತ್ತಮ ಬಜೆಟ್ ನೀಡುತ್ತಿದ್ದೇವೆ. ಇವತ್ತು ಸಿಎಂ ಸರಿದೂಗಿಸಿ ಬಜೆಟ್ ಮಂಡಿಸಿದ್ದಾರೆ. ಬಿಜೆಪಿಯವರು ನಿನ್ನೆಯೇ ಖಾಲಿ ಚೊಂಬು ತೆಗೆದುಕೊಂಡಿದ್ದಾರೆ. ಕೇಂದ್ರ ಬಜೆಟ್‍ನಲ್ಲಿ ನಮಗೆ ಅವರು ಏನು ಕೊಟ್ಟರು? ಖಾಲಿ ಬಿಂದಿಗೆ ಕೊಟ್ಟರು ಎಂದು ಅವರು ಟೀಕಿಸಿದರು. ಬೆಂಗಳೂರು ಅಭಿವೃದ್ಧಿಗೆ ನಮ್ಮ ಕರ್ತವ್ಯ ನಾವು ಮಾಡಬೇಕು. ನೀವು ನಮ್ಮನ್ನು ಬಿಡಂಗಿಲ್ಲ, ನಾವು ನಿಮ್ಮನ್ನು ಬಿಡಂಗಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದನ್ನು ಬಿಡಿ. ನೀವು ಹೇಳಿಕೆ ನೀಡಿದರೆ ಅದು ಒಂದು ದಿನದ ಸುದ್ದಿಯಾಗಬಹುದು, ಯಾವುದೇ ಪ್ರಯೋಜನವಿಲ್ಲ. ನೀವು ನಮ್ಮ ಬಳಿ ಬಂದು ಚರ್ಚೆ ಮಾಡಿ, ಯಾವ ರೀತಿ ಹಣ ಹೊಂದಿಸಿ ಸಮಸ್ಯೆ ಬಗೆಹರಿಸಬೇಕು ನೋಡೋಣ. ನಿಮ್ಮ ಜತೆ ನಾವಿದ್ದೇವೆ ಎಂದು ಅವರು ಭರವಸೆ ನೀಡಿದರು.

ವಾರ್ತಾ ಭಾರತಿ 6 Mar 2026 9:43 pm

ಅರಣ್ಯ ಇಲಾಖೆಯಲ್ಲಿನ 2,000 ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅರಣ್ಯ ಇಲಾಖೆಯಲ್ಲಿನ ವಿವಿಧ ವೃಂದಗಳಲ್ಲಿನ 2,000 ಹುದ್ದೆಗಳನ್ನು 2026-27ನೇ ಆರ್ಥಿಕ ವರ್ಷದಲ್ಲಿ ಭರ್ತಿ ಮಾಡುವ ಮೂಲಕ ಇಲಾಖೆಯನ್ನು ಸಬಲೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2026-27ನೆಯ ಸಾಲಿನ ಬಜೆಟ್ ಮಂಡಿಸಿದ ಅವರು, ಉದ್ಯಾನ ನಗರಿ ಬೆಂಗಳೂರಿನ ಹೆಸರಘಟ್ಟ ಹುಲ್ಲುಗಾವಲಿನ ಒಟ್ಟು 5,676 ಎಕರೆ ವಿಸ್ತೀರ್ಣದ ಪ್ರದೇಶವನ್ನು ‘ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು’ ಎಂದು ಘೋಷಿಸಿದ್ದು, ಈ ಪ್ರದೇಶದ ಆವಾಸಸ್ಥಾನ ಸಂರಕ್ಷಣೆ ಮತ್ತು ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು ಎಂದರು. ಮಾನವ–ವನ್ಯಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡುವ ಉದ್ದೇಶದಿಂದ ‘ಕರ್ನಾಟಕ ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣಾ ಕಾರ್ಯತಂತ್ರ ಯೋಜನೆ’ಯನ್ನು ಅನುಷ್ಠಾ ನಗೊಳಿಸಲು ಮುಂದಿನ ಐದು ವರ್ಷದಲ್ಲಿ 1,500 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 269 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಮುಖ್ಯಾಂಶಗಳು...! * ಬನ್ನೇರುಘಟ್ಟದಲ್ಲಿ ಐದು ಕೋಟಿ ರೂ.ಗಳ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ. * ಮೈಸೂರು ಮೃಗಾಲಯ ಹಾಗೂ ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರವಾಸಿಗರ ಅನುಕೂಲತೆಗಾಗಿ ಪಿಪಿಪಿ ಮಾದರಿಯಲ್ಲಿ ಪ್ರಕೃತಿ ನಿರೂಪಣಾ ಕೇಂದ್ರ ಸ್ಥಾಪನೆ. * ಕಲ್ಯಾಣ ಕರ್ನಾಟಕ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ವಿಶೇಷ ಆದ್ಯತೆ ನೀಡಿ, 75,000 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯೀಕರಣ ಕಾರ್ಯ, ಇದಕ್ಕಾಗಿ 150 ಕೋಟಿ ರೂ. ಅನುದಾನ ಮೀಸಲು. * ಬೆಂಗಳೂರು ಉತ್ತರ ತಾಲೂಕಿನ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶವನ್ನು ಶ್ವಾಸತಾಣವನ್ನಾಗಿ ಪರಿವರ್ತಿಸಿ, ‘ಸಾಂಸ್ಕೃಕ ನಾಯಕ ಬಸವಣ್ಣ ಜೈವಿಕ ವೈವಿಧ್ಯ ಉದ್ಯಾನ’ ನಿರ್ಮಾಣ. * 15 ಹೊಸ ನಿರಂತರ ಪರಿವೇಷ್ಠಿಕ ವಾಯು ಗುಣಮಟ್ಟ ಮಾಪನ ಕೇಂದ್ರಗಳ ಸ್ಥಾಪನೆ. * ಪರಿಸರವಾದಿ ‘ಸಾಲುಮರದ ತಿಮ್ಮಕ್ಕ’ ಅವರ ಸ್ಮರಣಾರ್ಥ ಹುಲಿಕಲ್-ಕುದೂರು ಹತ್ತಿರ ಸ್ಮಾರಕ ನಿರ್ಮಾಣ.

ವಾರ್ತಾ ಭಾರತಿ 6 Mar 2026 9:36 pm

ನಿತೀಶ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಸಜ್ಜಾಗುತ್ತಿದ್ದಂತೆ ಉತ್ತರ ಪ್ರದೇಶದ ಬಿಜೆಪಿ ನಾಯಕರಲ್ಲಿ ಹೆಚ್ಚಿದ ನಿರೀಕ್ಷೆ; ಏನಿದು ಲೆಕ್ಕಾಚಾರ?

ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಬಿಹಾರವು ತನ್ನ ಮೊದಲ ಬಿಜೆಪಿ ಮುಖ್ಯಮಂತ್ರಿಯನ್ನು ಪಡೆಯಲು ದಾರಿ ಮಾಡಿಕೊಡುವ ಮೂಲಕ ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳುತ್ತಿರುವಾಗ, ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ನೆರೆಯ ಉತ್ತರ ಪ್ರದೇಶದಲ್ಲಿ ಇದು ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕರು ಭಾವಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಮುಖ್ಯಮಂತ್ರಿಯನ್ನು ನೇಮಿಸುವುದರಿಂದ ಹಿಂದುಳಿದ ವರ್ಗ OBC ಸಮುದಾಯಗಳಿಂದ ಹೆಚ್ಚಿನ ಮತಗಳನ್ನು ಗಳಿಸಲು ಪಕ್ಷಕ್ಕೆ ಸಹಾಯವಾಗುತ್ತದೆ ಎಂದು ಉತ್ತರ ಪ್ರದೇಶದ ಬಿಜೆಪಿ ನಾಯಕರು ನಂಬಿದ್ದಾರೆ. ಈ ಕ್ರಮವು ಬಿಹಾರದೊಂದಿಗೆ ಸಾಮಾಜಿಕ ಮತ್ತು ರಾಜಕೀಯ ಸಂಬಂಧಗಳನ್ನು ಹೊಂದಿರುವ ಪೂರ್ವ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಹೆಚ್ಚು ಜನಪ್ರಿಯಗೊಳಿಸುತ್ತದೆ ಎಂಬುದು ಅವರ ಲೆಕ್ಕಾಚಾರ. ಬಿಹಾರಕ್ಕೆ ಸರಿಯಾದ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದರಿಂದ ಉತ್ತರ ಪ್ರದೇಶದಲ್ಲಿ ಪಕ್ಷದ ಇಮೇಜ್ ಸಮತೋಲನಗೊಳ್ಳುತ್ತದೆ ಎಂದು ಕೆಲವು ಬಿಜೆಪಿ ಸದಸ್ಯರು ನಂಬುತ್ತಾರೆ. ಪ್ರಸ್ತುತ ಯುಪಿ ಮುಖ್ಯಮಂತ್ರಿ ಆದಿತ್ಯನಾಥ ಅವರು ಮೇಲ್ಜಾತಿಯ ಹಿನ್ನೆಲೆಯಿಂದ (ಠಾಕೂರ್) ಬಂದಿರುವುದರಿಂದ, ಬಿಹಾರದಲ್ಲಿ ಹಿಂದುಳಿದ ವರ್ಗದ ನಾಯಕನನ್ನು ನೇಮಿಸುವುದರಿಂದ ಅಲ್ಲಿ ಪಕ್ಷಕ್ಕೆ ಲಾಭವಾಗಲಿದೆ. ಎರಡೂ ರಾಜ್ಯಗಳಲ್ಲಿ ಅತ್ಯಂತ ಶಕ್ತಿಶಾಲಿ ಜಾತಿ ಗುಂಪುಗಳು ಒಂದೇ ಆಗಿರುವುದರಿಂದ, ಯುಪಿಯಲ್ಲಿ ಒಬ್ಬ ಮೇಲ್ಜಾತಿಯ ನಾಯಕ ಮತ್ತು ಬಿಹಾರದಲ್ಲಿ ಒಬ್ಬ ಒಬಿಸಿ ನಾಯಕ ಇರುವುದು ಬಿಜೆಪಿಗೆ ಪ್ರದೇಶದಾದ್ಯಂತ ಎಲ್ಲಾ ರೀತಿಯ ಮತದಾರರನ್ನು ಆಕರ್ಷಿಸಲು ಸಹಾಯ ಮಾಡುತ್ತದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಉತ್ತರ ಪ್ರದೇಶದಲ್ಲಿ ಕುಶ್ವಾಹರು, ಮೌರ್ಯರು, ಸೈನಿಗಳು ಮತ್ತು ಶಾಕ್ಯರು ಸಾಮಾನ್ಯವಾಗಿ ಒಬಿಸಿ ಗುಂಪಿನಲ್ಲಿದ್ದು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಪ್ರಭಾವ ಹೊಂದಿದ್ದಾರೆ. ಪಶ್ಚಿಮ ಯುಪಿಯಲ್ಲಿ ಸೈನಿಗಳು ಪ್ರಭಾವಶಾಲಿಯಾಗಿದ್ದರೆ, ಮಧ್ಯ ಮತ್ತು ಪೂರ್ವ ಯುಪಿಯಲ್ಲಿ ಕುಶ್ವಾಹರು ಮತ್ತು ಮೌರ್ಯರು, ಬುಂದೇಲ್‌ಖಂಡ್ ಮತ್ತು ಬ್ರಜ್ ಪ್ರದೇಶಗಳಲ್ಲಿ ಶಾಕ್ಯರು ಇದ್ದಾರೆ. 2017ರಿಂದ ಬಿಜೆಪಿ ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿದೆ. ಸುಮಾರು ಒಂದು ದಶಕದ ಆಡಳಿತ ವಿರೋಧಿ ಅಲೆಯ ಹೊರತಾಗಿ, ಸಮಾಜವಾದಿ ಪಕ್ಷ SP-ಕಾಂಗ್ರೆಸ್ ಮೈತ್ರಿ ಮತ್ತು ಬ್ರಾಹ್ಮಣ ಮತದಾರರಲ್ಲಿನ ಭಿನ್ನತೆಯಿಂದಾಗಿ 2024ರ ಲೋಕಸಭಾ ಚುನಾವಣೆಯಲ್ಲಿನ ಹಿನ್ನಡೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಳವಳಕಾರಿ ವಿಷಯಗಳಾಗಿವೆ ಎಂದು ಉತ್ತರ ಪ್ರದೇಶದ ಮತ್ತೊಬ್ಬ ಬಿಜೆಪಿ ನಾಯಕರು ಹೇಳಿದರು. ಬಿಜೆಪಿ ಮತ್ತು ಜೆಡಿಯು ಎರಡೂ ಪಕ್ಷಗಳ ನಾಯಕರು ನಿತೀಶ್ ಅವರ ಸ್ಥಾನಕ್ಕೆ ಕುರ್ಮಿ, ಕುಶ್ವಾಹ ಅಥವಾ ಅತ್ಯಂತ ಹಿಂದುಳಿದ ವರ್ಗಗಳ EBC ನಾಯಕರು ಬರಬಹುದೆಂದು ನಿರೀಕ್ಷಿಸುತ್ತಾರೆ. ಇದು ಕುಶ್ವಾಹ ಸಮುದಾಯದ ಪ್ರಮುಖ ನಾಯಕರಾಗಿರುವ ಪ್ರಸ್ತುತ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಲು ಪ್ರಮುಖ ಆಯ್ಕೆಯಾಗಿದ್ದಾರೆ ಎಂಬ ಬಲವಾದ ವದಂತಿಗಳಿಗೆ ಕಾರಣವಾಗಿದೆ. ಪೂರ್ವ ಉತ್ತರ ಪ್ರದೇಶ ಬಿಹಾರದೊಂದಿಗೆ ದೀರ್ಘ ಗಡಿಯನ್ನು ಹಂಚಿಕೊಂಡಿರುವ ಪೂರ್ವ ಉತ್ತರ ಪ್ರದೇಶವು ಗಡಿಯಾಚೆಗಿನ ರಾಜಕೀಯ ಬೆಳವಣಿಗೆಗಳಿಗೆ ವಿಶೇಷವಾಗಿ ಸೂಕ್ಷ್ಮವಾಗಿದೆ ಎಂದು ಪರಿಗಣಿಸಲಾಗಿದೆ. ಮಹಾರಾಜಗಂಜ್, ಕುಶಿನಗರ, ಡಿಯೋರಿಯಾ, ಬಲ್ಲಿಯಾ, ಘಾಜಿಪುರ, ಚಂದೌಲಿ ಮತ್ತು ಸೋನ್‌ಭದ್ರ ಸೇರಿದಂತೆ ಈ ಪ್ರದೇಶದ ಜಿಲ್ಲೆಗಳು ಒಟ್ಟಾಗಿ 41 ವಿಧಾನಸಭಾ ಸ್ಥಾನಗಳನ್ನು ಹೊಂದಿವೆ. 2022ರ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ನಿಶಾದ್ ಪಾರ್ಟಿ ಈ ಸ್ಥಾನಗಳಲ್ಲಿ 27 ಸ್ಥಾನಗಳನ್ನು ಗೆದ್ದರೆ, ಎಸ್‌ಪಿ ಮತ್ತು ಅದರ ಮಿತ್ರ ಪಕ್ಷವಾದ ಸುಹೇಲ್‌ದೇವ್ ಭಾರತೀಯ ಸಮಾಜ್ ಪಾರ್ಟಿ 12 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತು ಬಿಎಸ್‌ಪಿ ತಲಾ ಒಂದು ಸ್ಥಾನ ಗಳಿಸಿತ್ತು. 2024ರ ಚುನಾವಣೆಯ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿತು. ಸಮಾಜವಾದಿ ಪಕ್ಷವು ಬಲ್ಲಿಯಾ, ಘಾಜಿಪುರ, ಚಂದೌಲಿ, ರಾಬರ್ಟ್ಸ್‌ಗಂಜ್ ಮತ್ತು ಸಲೇಂಪುರ – ಈ ಐದು ಪ್ರಮುಖ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಇವುಗಳಲ್ಲಿ ಸುಮಾರು 40 ಸಣ್ಣ ಮತಗಟ್ಟೆಗಳು ಸೇರಿವೆ. ಏತನ್ಮಧ್ಯೆ, ಬಿಜೆಪಿ ಕುಶಿನಗರ, ಮಹಾರಾಜಗಂಜ್ ಮತ್ತು ಡಿಯೋರಿಯಾ ಮೂರು ಸ್ಥಾನಗಳಲ್ಲಿ ತೃಪ್ತಿಪಡಬೇಕಾಯಿತು. ಬಿಹಾರ ಮತ್ತು ಪೂರ್ವ ಉತ್ತರ ಪ್ರದೇಶದ ನಡುವಿನ ಬಲವಾದ ರಾಜಕೀಯ ಸಮನ್ವಯವು ಬಿಜೆಪಿ ಕಳೆದುಹೋದ ನೆಲೆಯನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಾರೆ. ಬಿಹಾರದಿಂದ ಯಾವುದೇ ಹಿರಿಯ ಒಬಿಸಿ ನಾಯಕನ ಪ್ರಭಾವ ಈ ಜಿಲ್ಲೆಗಳಲ್ಲಿ ಒಬಿಸಿಗಳು ಮತ್ತು ಮೇಲ್ಜಾತಿಯ ಮತದಾರರ ಬೆಂಬಲವನ್ನು ಮರಳಿ ಗಳಿಸಲು ನಮಗೆ ಸಹಾಯ ಮಾಡುತ್ತದೆ ಎಂದು ಪೂರ್ವ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರು ಹೇಳಿದರು. ಎರಡು ರಾಜ್ಯಗಳ ನಡುವಿನ ಜನರ ನಿರಂತರ ಚಲನೆಯು ಬಲವಾದ ರಾಜಕೀಯ ಸಂಪರ್ಕವನ್ನು ಸೃಷ್ಟಿಸುತ್ತದೆ. ಬಿಹಾರದ ಅನೇಕ ಜನರು ಪೂರ್ವ ಉತ್ತರ ಪ್ರದೇಶಕ್ಕೆ, ವಿಶೇಷವಾಗಿ ಗೋರಖ್‌ಪುರ ಮತ್ತು ವಾರಣಾಸಿಗೆ, ಅಲ್ಲಿನ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಬಳಸಲು ಪ್ರಯಾಣಿಸುತ್ತಾರೆ. ಈ ಹಂಚಿಕೆಯ ಆರೋಗ್ಯ ಸೇವೆಗಳು, ನಿಕಟ ಕುಟುಂಬ ಸಂಬಂಧಗಳು ಮತ್ತು ವ್ಯಾಪಾರ ಸಂಪರ್ಕಗಳ ಕಾರಣದಿಂದಾಗಿ, ಎರಡೂ ರಾಜ್ಯಗಳ ಜನರು ನಿಯಮಿತವಾಗಿ ಪರಸ್ಪರ ಸಂವಹನ ನಡೆಸುತ್ತಿದ್ದಾರೆ. ಇದು ಪರಸ್ಪರರ ರಾಜಕೀಯ ದೃಷ್ಟಿಕೋನಗಳ ಮೇಲೆ ಪ್ರಭಾವ ಬೀರುವುದಕ್ಕೆ ಕಾರಣವಾಗಿದೆ. ಬಂಗಾಳದ ಮೇಲೆ ಪರಿಣಾಮ? ಬಿಹಾರದಲ್ಲಿ ಬಿಜೆಪಿ ಮುಖ್ಯಮಂತ್ರಿ ಇರುವುದು ಮುಂಬರುವ ಪಶ್ಚಿಮ ಬಂಗಾಳದ ಚುನಾವಣೆಗಳಲ್ಲಿ ಪಕ್ಷಕ್ಕೆ ಸಹಾಯ ಮಾಡುತ್ತದೆ ಎಂದು ಕೆಲವು ಬಿಜೆಪಿ ನಾಯಕರು ನಂಬುತ್ತಾರೆ. ಏಕೆಂದರೆ ಪಶ್ಚಿಮ ಬಂಗಾಳದ ಹಲವಾರು ಜಿಲ್ಲೆಗಳು – ಡಾರ್ಜಿಲಿಂಗ್, ಉತ್ತರ ದಿನಾಜ್‌ಪುರ ಮತ್ತು ಮಾಲ್ಡಾ – ಬಿಹಾರದ ಗಡಿಯನ್ನು ಹೊಂದಿವೆ. ಈ ಜಿಲ್ಲೆಗಳು ಒಟ್ಟಾಗಿ 26 ವಿಧಾನಸಭಾ ಸ್ಥಾನಗಳನ್ನು ಹೊಂದಿವೆ. ಅಲ್ಲಿ ವಾಸಿಸುವ ಅನೇಕ ಜನರು ಬಿಹಾರದಿಂದ ವಲಸೆ ಬಂದವರು ಅಥವಾ ಅಲ್ಲಿ ಕುಟುಂಬ ಸಂಬಂಧಗಳನ್ನು ಹೊಂದಿರುವುದರಿಂದ, ಬಿಹಾರದ ರಾಜಕೀಯ ಸ್ಥಿತಿಯು ಅವರು ಮತ ಚಲಾಯಿಸುವ ವಿಧಾನವನ್ನು ಹೆಚ್ಚಾಗಿ ಪ್ರಭಾವಿಸುತ್ತದೆ. 2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಈ ಸ್ಥಾನಗಳಲ್ಲಿ 15 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 11 ಸ್ಥಾನಗಳನ್ನು ಗೆದ್ದಿತು. ಗಡಿ ಜಿಲ್ಲೆಗಳು ಮತ್ತು ಹಿಂದಿ ಮಾತನಾಡುವ ನಗರ ಕೇಂದ್ರಗಳಲ್ಲಿ ವಾಸಿಸುವ ಬಿಹಾರದಿಂದ ವಲಸೆ ಬಂದ ಜನಸಂಖ್ಯೆಯು ಬಿಹಾರದಲ್ಲಿನ ರಾಜಕೀಯ ಬೆಳವಣಿಗೆಗಳಿಂದ ಪ್ರಭಾವಿತವಾಗಿರುತ್ತದೆ ಎಂದು ಪಕ್ಷದ ನಾಯಕರು ಹೇಳಿಕೊಳ್ಳುತ್ತಾರೆ. ಆದರೆ ಉತ್ತರ ಪ್ರದೇಶಕ್ಕೆ ಹೋಲಿಸಿದರೆ ಇದರ ಪರಿಣಾಮ ಸೀಮಿತವಾಗಿರುತ್ತದೆ. ಬಿಹಾರ ಸಿಎಂ ಸ್ಥಾನ: ಮುಂಚೂಣಿಯಲ್ಲಿ ಯಾರಿದ್ದಾರೆ? 243 ಸದಸ್ಯರಿರುವ ವಿಧಾನಸಭೆಯಲ್ಲಿ ಬಿಜೆಪಿ 89 ಶಾಸಕರನ್ನು ಹೊಂದುವ ಮೂಲಕ ಸದ್ಯ ಅತಿದೊಡ್ಡ ಪಕ್ಷವಾಗಿದೆ. ಜೆಡಿಯು ಶಾಸಕರ ಸಂಖ್ಯೆ 85. ಈಗ ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ರಾಜ್ಯಸಭೆ ಪ್ರವೇಶಿಸಲು ಸಜ್ಜಾಗಿರುವಾಗ ಬಿಹಾರದ ಮುಂದಿನ ಸಿಎಂ ಯಾರು? ಎಂಬ ಚರ್ಚೆ ಜೋರಾಗಿದೆ. ಬಿಹಾರದಲ್ಲಿ ಬಿಜೆಪಿ ಈವರೆಗೂ ತನ್ನ ಮುಖ್ಯಮಂತ್ರಿಯನ್ನು ಹೊಂದಿಲ್ಲ. ಸಿಎಂ ಸ್ಥಾನಕ್ಕೆ ಈಗಿರುವ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಕೇಂದ್ರ ಸಚಿವ ನಿತ್ಯಾನಂದ ರಾಯ್ ಮತ್ತು ಇತರರ ಹೆಸರುಗಳು ಕೇಳಿಬರುತ್ತಿವೆ. ಆದರೆ ಹೊಸ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಸೂಚನೆಗಳು ಮತ್ತು ದೃಷ್ಟಿಕೋನಗಳನ್ನು ಸಂಪೂರ್ಣವಾಗಿ ಅನುಸರಿಸುವ ವ್ಯಕ್ತಿಯಾಗಿರಬೇಕು. ಬಿಜೆಪಿ ನಾಯಕತ್ವವು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಒಡಿಶಾದ ಪ್ರಸ್ತುತ ಮುಖ್ಯಮಂತ್ರಿಗಳಂತೆ ಹಿರಿಯ ನಾಯಕರಿಗಿಂತ ಹೆಚ್ಚು ಪ್ರಸಿದ್ಧರಾಗಲು ಪ್ರಯತ್ನಿಸದ ನಾಯಕನನ್ನು ಬಯಸುತ್ತದೆ. ಹೊಸ ಮುಖ್ಯಮಂತ್ರಿಯ ಪ್ರಮುಖ ಕೆಲಸವೆಂದರೆ ನಿತೀಶ್ ಕುಮಾರ್ ಬಿಟ್ಟುಹೋದ ರಾಜಕೀಯ ಪ್ರಭಾವವನ್ನು ತೆಗೆದುಹಾಕುವುದು. ವರ್ಷಗಳಿಂದ ನಿತೀಶ್ ಅವರ ನೀತಿಗಳು ಸಮಾಜವಾದಿ ಮತ್ತು ಜಾತ್ಯತೀತ ಮೌಲ್ಯಗಳ ಮೇಲೆ ಕೇಂದ್ರೀಕರಿಸಿದ್ದು, ಇದು ಬಿಜೆಪಿಯ “ಹಿಂದುತ್ವ” ದೃಷ್ಟಿಕೋನಕ್ಕೆ ವಿರುದ್ಧವಾಗಿದೆ. ಹೊಸ ನಾಯಕರು ಬಿಹಾರದ ಸರ್ಕಾರವನ್ನು ನಿತೀಶ್ ಅವರ ಹಳೆಯ ಶೈಲಿಯಿಂದ ದೂರವಿಟ್ಟು ಬಿಜೆಪಿಯ ಮೂಲ ಧಾರ್ಮಿಕ ಮತ್ತು ರಾಜಕೀಯ ನಂಬಿಕೆಗಳೊಂದಿಗೆ ಹೆಚ್ಚು ನಿಕಟವಾಗಿ ಜೋಡಿಸುವ ನಿರೀಕ್ಷೆಯಿದೆ. ನಿತೀಶ್ ಕುಮಾರ್ ಬಡವರಿಗೆ ಸಹಾಯ ಮಾಡುವುದು ಮತ್ತು ಅಲ್ಪಸಂಖ್ಯಾತರನ್ನು ರಕ್ಷಿಸುವ ಕಾರ್ಯವನ್ನು ಮಾಡಿದ್ದರು. ಅವರು ಅತ್ಯಂತ ಹಿಂದುಳಿದ ಗುಂಪುಗಳು ಮತ್ತು ಮಹಿಳೆಯರಿಗೆ ವಿಶೇಷ ಉದ್ಯೋಗ, ಹುಡುಗಿಯರ ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಪ್ರಮುಖ ಕಾರ್ಯಕ್ರಮಗಳನ್ನು ಪ್ರಾರಂಭಿಸಿದರು. ಮದರಸಾ ಶಿಕ್ಷಕರಿಗೆ ಬೆಂಬಲ ನೀಡುವ ಮೂಲಕ, ಸ್ಮಶಾನಗಳನ್ನು ರಕ್ಷಿಸುವ ಮೂಲಕ ಮತ್ತು ಗಲಭೆ ಸಂತ್ರಸ್ತರಿಗೆ ಪಿಂಚಣಿ ನೀಡುವ ಮೂಲಕ ಮುಸ್ಲಿಂ ಸಮುದಾಯಗಳು ಸುರಕ್ಷಿತವಾಗಿರುವಂತೆ ಅವರು ನೋಡಿಕೊಂಡರು. ಬಿಜೆಪಿಯೊಂದಿಗೆ ಕೆಲಸ ಮಾಡುವಾಗಲೂ, ಎಲ್ಲರನ್ನೂ ಸಮಾನವಾಗಿ ನಡೆಸಿಕೊಳ್ಳುವ ತಮ್ಮ ನಂಬಿಕೆಗೆ ನಿತೀಶ್ ಬದ್ಧವಾಗಿದ್ದರು. ಬಡತನ ಮತ್ತು ಅನ್ಯಾಯದ ವಿರುದ್ಧ ಹೋರಾಡುವಾಗ ರಸ್ತೆಗಳು ಮತ್ತು ವಿದ್ಯುತ್ ನಿರ್ಮಾಣಕ್ಕೆ ಅವರು ಆದ್ಯತೆ ನೀಡಿದರು. ತಮ್ಮ ವೃತ್ತಿಜೀವನದುದ್ದಕ್ಕೂ ಅವರು ಮುಸ್ಲಿಮರನ್ನು “ಹೊರಗಿನವರು” ಅಥವಾ ಶತ್ರುಗಳೆಂದು ಪರಿಗಣಿಸಲು ನಿರಾಕರಿಸಿದರು. ಅವರು ಎಲ್ಲದರಲ್ಲೂ ಸಮಾಜವಾದ ಮತ್ತು ಜಾತ್ಯತೀತತೆಯ ವೈಯಕ್ತಿಕ ಮೌಲ್ಯಗಳಿಗೆ ದೃಢವಾಗಿ ಬದ್ಧರಾಗಿದ್ದರು. ಧ್ರುವೀಕರಣದ ರಾಜಕೀಯ ಮೋದಿ–ಶಾ ಅವರ ಆದ್ಯತೆಗಳು ನಿತೀಶ್ ಅವರ ಆದ್ಯತೆಗಳಿಗಿಂತ ಸಂಪೂರ್ಣವಾಗಿ ಭಿನ್ನ ಮತ್ತು ವಿರುದ್ಧವಾಗಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೀಮಾಂಚಲ್ ಪ್ರದೇಶದ ಮೇಲೆ ಹೆಚ್ಚಿನ ಗಮನ ಹರಿಸಿದ್ದಾರೆ. ಇದರಲ್ಲಿ ಪೂರ್ಣಿಯಾ, ಕಿಶನ್‌ಗಂಜ್, ಕಟಿಹಾರ್ ಮತ್ತು ಅರಾರಿಯಾ ಜಿಲ್ಲೆಗಳು ಸೇರಿವೆ. ಈ ಪ್ರದೇಶಗಳಲ್ಲಿ ಶೇ.30ರಿಂದ 50ರವರೆಗೆ ಮುಸ್ಲಿಂ ಜನಸಂಖ್ಯೆ ಇದೆ. ಗೃಹ ಸಚಿವರು ಈ ಪ್ರದೇಶದಲ್ಲಿ ಅಕ್ರಮ ಒಳನುಸುಳುವಿಕೆ ಬಿಹಾರ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದು ಹೇಳಿದ್ದಾರೆ. 2026 ಫೆಬ್ರವರಿ 28ರಂದು ಅಮಿತ್ ಶಾ ಸೀಮಾಂಚಲ್ ಗಡಿ ಪ್ರದೇಶದಲ್ಲಿ ಭದ್ರತಾ ಪರಿಶೀಲನೆ ನಡೆಸಿ, ಅಕ್ರಮ ನಿವಾಸಿಗಳು, ಅತಿಕ್ರಮಣಕಾರರು ಮತ್ತು ಅನಧಿಕೃತ ಕಟ್ಟಡಗಳಿಗೆ “ಶೂನ್ಯ ಸಹಿಷ್ಣುತೆ” ನೀತಿಯನ್ನು ಘೋಷಿಸಿದರು. ಅವರ ಸಚಿವಾಲಯವು ನಿಜವಾದ ನುಸುಳುಕೋರರ ಬಗ್ಗೆ ಯಾವುದೇ ಡೇಟಾವನ್ನು ಬಿಡುಗಡೆ ಮಾಡದಿದ್ದರೂ, 2025ರ ಚುನಾವಣೆಗೆ ಮುಂಚಿತವಾಗಿ ನಡೆಸಲಾದ ವಿಶೇಷ ತೀವ್ರ ಪರಿಷ್ಕರಣೆ (SIR) ಒಳನುಸುಳುವವರ ಕುರಿತು ಯಾವುದೇ ಅಂಕಿಅಂಶಗಳನ್ನು ನೀಡದಿದ್ದರೂ, ಅವರು ಇದನ್ನು ಪ್ರಮುಖ ಆದ್ಯತೆಯನ್ನಾಗಿ ಮಾಡುತ್ತಲೇ ಇದ್ದರು. ಬಿಹಾರದ ರಾಜಕೀಯ ವಲಯಗಳಲ್ಲಿ, ಈ ವಿಷಯದ ಬಗ್ಗೆ ಬಿಜೆಪಿಯ ಭಾರೀ ಗಮನವು ರಾಜಕೀಯ ಲಾಭಕ್ಕಾಗಿ ಹಿಂದೂ ಮತ್ತು ಮುಸ್ಲಿಂ ಮತದಾರರ ನಡುವೆ ವಿಭಜನೆಯನ್ನು ಸೃಷ್ಟಿಸುವ ತಂತ್ರವಾಗಿದೆ ಎಂದು ಹಲವರು ನಂಬುತ್ತಾರೆ.

ವಾರ್ತಾ ಭಾರತಿ 6 Mar 2026 9:34 pm

ಸಣ್ಣ ನೀರಾವರಿ : ಏತ ನೀರಾವರಿ, ಚೆಕ್ ಡ್ಯಾಂ, ಕೆರೆಗಳ ಪುನಃಶ್ಚೇತನ ಸಹಿತ 112 ಕಾಮಗಾರಿಗಳಿಗೆ 1,793 ಕೋಟಿ ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ

ಬೆಂಗಳೂರು, ಮಾ.6: 2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏತ ನೀರಾವರಿ, ಚೆಕ್ ಡ್ಯಾಂ, ಕೆರೆಗಳ ಪುನಃಶ್ಚೇತನ ಅಭಿವೃದ್ಧಿ ಮುಂತಾದ 112 ಕಾಮಗಾರಿಗಳನ್ನು 1,793 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2026-27ನೆಯ ಸಾಲಿನ ಬಜೆಟ್ ಮಂಡಿಸಿದ ಅವರು, ಹೆಬ್ಬಾಳ-ನಾಗವಾರ ಕಣಿವೆಯ ಮೂರನೇ ಹಂತದಲ್ಲಿ ಶಿಡ್ಲಘಟ್ಟದ ಅಮಾನಿಕೆರೆಯಿಂದ ಶಿಡ್ಲಘಟ್ಟ ತಾಲೂಕಿನ 45 ಕೆರೆಗಳಿಗೆ ಮತ್ತು ಚಿಂತಾಮಣಿ ತಾಲೂಕಿನ 119 ಕೆರೆಗಳೂ ಸೇರಿ ಒಟ್ಟಾರೆ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು 237 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು. ಹೊಸಕೋಟೆ ತಾಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಎಚ್.ಎನ್. ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಯನ್ನು 140 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರಿನಿಂದ 259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲೂಕಿನ 119 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯನ್ನು 650 ಕೋಟಿ ರೂ.ಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. ರಾಜ್ಯಾದ್ಯಂತ ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ಸಂರಕ್ಷಿಸಲು ಕೆರೆ ಬಳಕೆದಾರರ ಸಂಘಗಳನ್ನು ಬಲವರ್ಧನೆಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅಂತರ್ಜಲ ಹೆಚ್ಚಿಸಲು ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕ್-ಅಪ್ ಹಾಗೂ ಚೆಕ್ ಡ್ಯಾಂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ವಾರ್ತಾ ಭಾರತಿ 6 Mar 2026 9:33 pm

ಕೆಕೆಆರ್‌ಡಿಬಿ ಮೂಲಕ ಕಲಬುರಗಿಗೆ ಹಲವು ಯೋಜನೆಗಳು: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಈ ಬಾರಿಯ ಆಯವ್ಯದಲ್ಲಿ ಹಲವಾರು ನೂತನ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಾಲೆಡ್ಜ್‌ ಪಾರ್ಕ ಸ್ಥಾಪನೆ ಮಾಡಲಾಗುತ್ತದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೈಕ್ರೊ ಅನುದಾನದ ನೆರವಿನೊಂದಿಗೆ ಕಲಬುರಗಿ ಜಿಲ್ಲೆಯ ಆಳಂದ, ಅಫಜಲ್‌ಪುರ, ಚಿತ್ತಾಪುರ, ಯಾದಗಿರಿ, ಜೇವರ್ಗಿ ಪಟ್ಟಣಗಳಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಖರ್ಗೆ ತಿಳಿಸಿದ್ದಾರೆ. ಹೊಸ ಕೈಗಾರಿಕಾ ನೀತಿ: ಹೊಸ ಕೈಗಾರಿಕಾ ನೀತಿ 2025-30ರ ಅಡಿ ಪ್ರಪ್ರಥಮ ಬಾರಿಗೆ ಅತಿ ಹಿಂದುಳಿದ ಪ್ರದೇಶಗಳಿಗೆ ಶೇ.5ರಷ್ಟು ಹಾಗೂ ಹಿಂದುಳಿದ ಪ್ರದೇಶಗಳಿಗೆ ಶೇ.3ರಷ್ಟು ಹೆಚ್ಚುವರಿ ಪ್ರೋತ್ಸಾಹವನ್ನು ನೀಡುವ ಮೂಲಕ ಬೆಂಗಳೂರಿನಿಂದಾಚೆಯೂ ಕೈಗಾರಿಕಾಭಿವೃದ್ಧಿಯನ್ನು ಉತ್ತೇಜಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಅನುಗುಣವಾಗಿ ಕಲಬುರಗಿ ಜಿಲ್ಲೆಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್‌ನಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು 390 ಕೋಟಿ ರೂ.ಗಳನ್ನು ಅನುಮೋದಿಸಿದೆ. ಈ ಯೋಜನೆಗಾಗಿ 2026-27ನೇ ಸಾಲಿಗೆ 75 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ. ವಾಗ್ಧರಿ- ರಿಬ್ಬನಪಲ್ಲಿ ರಸ್ತೆ ವಿಸ್ತರಣೆ: 400 ಕೋಟಿ ರೂ. ಅಂದಾಜು ಮೊತ್ತದ 135 ಕಿ.ಮೀ. ಉದ್ದದ ವಾಗ್ದಾರಿ-ರಿಬ್ಬನ್‌ಪಲ್ಲಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಯನ್ನು ಕೆ.ಕೆ.ಆರ್.ಡಿ.ಬಿ ವತಿಯಿಂದ ಶೇ.50 ರಷ್ಟು ಅನುದಾನ ಒದಗಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು ಹಾಗೂ ರಾಜ್ಯದ ಒಟ್ಟು ರಾಜ್ಯ ದೇಶಿಯ ಉತ್ಪನ್ನ ( GSDP ) ಗೆ ಕಲ್ಯಾಣ ಕರ್ನಾಟಕದ ಕೊಡುಗೆಯನ್ನು ಹೆಚ್ಚಿಸುವ ಗುರಿಯೊಂದಿಗೆ ವಿವಿಧ ವಲಯಗಳಲ್ಲಿ ನೀತಿಗಳನ್ನು ರೂಪಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಈ ಉದ್ದೇಶ ಸಾಧನೆಗಾಗಿ ಪ್ರತ್ಯೇಕ ಯೋಜನೆ, ನೀತಿ ಮತ್ತು ದತ್ತಾಂಶ ವಿಶ್ಲೇಷಣಾ ವಿಭಾಗವನ್ನು ಸ್ಥಾಪಿಸಲಾಗುವುದು ಎಂದೂ ಸಚಿವರು ವಿವರಿಸಿದ್ದಾರೆ. ಕಲ್ಯಾಣ ಕರ್ನಾಟಕದ ರಸ್ತೆ ಅಭಿವೃದ್ಧಿಗಾಗಿ ʻಕಲ್ಯಾಣ ಪಥʼ ಯೋಜನೆಯಡಿ 1,000 ಕೋಟಿ ರೂ.ಗಳ ವೆಚ್ಚದಲ್ಲಿ 1,125 ಕಿ.ಮೀ ಉದ್ದದ ರಸ್ತೆ ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ವಿವಿಧ ಹಂತದ ಪ್ರಗತಿಯಲ್ಲಿರುತ್ತವೆ. ಇದುವರೆಗೆ ಈ ಉದ್ದೇಶಕ್ಕಾಗಿ 238 ಕೋಟಿ ರೂ.ಗಳ ವೆಚ್ಚ ಭರಿಸಿದ್ದು, ಉಳಿಕೆ ಕಾಮಗಾರಿಗಳನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಆಯವ್ಯಯದಲ್ಲಿ ಪ್ರಕಟಿಸಲಾಗಿದೆ ಎಂದು ಅವರು ಹೇಳಿದ್ದಾರೆ. ರಾಷ್ಟ್ರೀಯ ಅರಣ್ಯ ನೀತಿಯಂತೆ ರಾಜ್ಯದ ಶೇ.10 ಕ್ಕಿಂತ ಕಡಿಮೆ ಅರಣ್ಯ ಹೊದಿಕೆ ಹೊಂದಿರುವ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ವಿಶೇಷ ಆದ್ಯತೆ ನೀಡಿ, 75,000 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯೀಕರಣ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಕೆಕೆಆರ್ ಡಿಬಿ ವತಿಯಿಂದ 50 ಕೋಟಿ ರೂ. ಸೇರಿದಂತೆ ಒಟ್ಟು 150 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ವಾರ್ತಾ ಭಾರತಿ 6 Mar 2026 9:28 pm

ಅಮೆರಿಕದ ಸಹವಾಸ ಸಾಕು ಎಂದು ನಿರ್ಧಾರ ತಳೆದ ಗಲ್ಫ್ ರಾಷ್ಟ್ರಗಳು?

ಅಮೆರಿಕದಲ್ಲಿನ ಹೂಡಿಕೆಗಳಿಂದ ಹಿಂದೆ ಸರಿಯುವ ಕುರಿತು ಗಲ್ಫ್ ರಾಷ್ಟ್ರಗಳ ಚರ್ಚೆ: ವರದಿ

ವಾರ್ತಾ ಭಾರತಿ 6 Mar 2026 9:27 pm

ಘೋಷಣೆಯಾಗದ ಎನ್ನಾರೈ ಸಚಿವಾಲಯ; ನಮಗೆ ತೀವ್ರ ನಿರಾಶೆಯಾಗಿದೆ: ಝಕರಿಯ ಜೋಕಟ್ಟೆ

ದುಬೈ: ನಾವು ಡಾ.ರೊನಾಲ್ಡ್ ಕೊಲಾಸೊ ಅವರ ನೇತೃತ್ವದಲ್ಲಿ 30 ದೇಶಗಳ ಪ್ರತಿನಿಧಿಗಳು ಸರಕಾರದ ಬಳಿ ಹೋಗಿ ಅನಿವಾಸಿ ಸಚಿವಾಲಯ ಪ್ರಾರಂಭಿಸಲು ಆಗ್ರಹಿಸಿದ್ದೆವು. ಸರಕಾರ ನಮ್ಮ ಮನವಿಗೆ ಧನಾತ್ಮಕವಾಗಿ ಪ್ರತಿಕ್ರಿಯಿಸಿ ಖಂಡಿತ ಪ್ರತ್ಯೇಕ ಸಚಿವಾಲಯ ಮಾಡುತ್ತೇವೆ ಎಂದು ಭರವಸೆ ನೀಡಿತ್ತು ಆದರೆ ನಮ್ಮ ಬೇಡಿಕೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಖೇದಕರ. ಇದು ಇಡೀ ಅನಿವಾಸಿ ಕನ್ನಡಿಗ ಸಮುದಾಯಕ್ಕೆ ತೀವ್ರ ನೋವುಂಟು ಮಾಡಿದೆ ಎಂದು ಸೌದಿ ಅರೇಬಿಯಾದ ಖ್ಯಾತ ಅನಿವಾಸಿ ಕನ್ನಡಿಗ, ಉದ್ಯಮಿ, ರಾಜ್ಯೋತ್ಸವ ಪುರಸ್ಕೃತ ಝಕರಿಯ ಜೋಕಟ್ಟೆ ಹೇಳಿದ್ದಾರೆ. ನಾವು ಎಲ್ಲ ವಿಷಯಗಳನ್ನು ಸರಕಾರದ ಮುಂದೆ ಇಟ್ಟಿದ್ದೆವು. ಸಿಎಂ, ಡಿಸಿಎಂ ಇಬ್ಬರೂ ಎನ್ನರೈ ಸಚಿವಾಲಯ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಈಗ ಸರಕಾರ ನಮ್ಮನ್ನು ಕಡೆಗಣಿಸಿದೆ ಎಂಬ ಭಾವನೆ ಅನಿವಾಸಿ ಕನ್ನಡಿಗರಲ್ಲಿ ಬಂದಿದೆ. ಈ ಸರಕಾರದಿಂದ ನಾವಿದನ್ನು ನಿರೀಕ್ಷಿಸಿರಲಿಲ್ಲ ಎಂದು ಝಕರಿಯ ಜೋಕಟ್ಟೆ ಹೇಳಿದ್ದಾರೆ.

ವಾರ್ತಾ ಭಾರತಿ 6 Mar 2026 9:25 pm

ಮಾ. 8ಕ್ಕೆ ಚಿತ್ತಾಪುರಕ್ಕೆ ಮುಖ್ಯಮಂತ್ರಿ: ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಕಲಬುರಗಿ ಜಿಲ್ಲಾಧಿಕಾರಿ ಸೂಚನೆ

ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಇದೇ ಮಾರ್ಚ್ 8 ರಂದು ಸಾವಿರಾರು ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಾಲೂಕಾ ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಪೂರ್ವ ಸಿದ್ಧತೆ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಗೆ ಬಿ.ಫೌಝಿಯಾ ತರನ್ನುಮ್ ಸೂಚನೆ ನೀಡಿದರು. ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನೊಳಗೊಂಡ ರಚಿಸಲಾದ ವಿವಿಧ ಸಮಿತಿ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ ಪ್ರದೇಶದ ಸಚಿವರುಗಳು, ಶಾಸಕರು, ಸಂಸದರು ಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಶಿಷ್ಠಾಚಾರದಂತೆ ಮತ್ತು ಎಲ್ಲಿಯೂ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನೆರವೇರಿಸಬೇಕೆಂದರು. ಕಾರ್ಯಕ್ರಮಕ್ಕೆ ತಾಲುಕಿನ ವಿವಿಧ ಭಾಗಗಳಿಂದ ಸುಮಾರು 10 ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ಆಸನ ವ್ಯವಸ್ಥೆ, ಸಂಒಊರ್ಣ ಶಾಮುಯಾನ ಇರುವಂತೆ ನೊಡಿಕೊಳ್ೞಬೇಕು. ಕುಡಿಯುವ ನೀರಿನ ವ್ಯವಸ್ಥೆ, ಮೋಬೈಲ್ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ವಿಶೇಷವಾಗಿ ಸಾರ್ವಜನಿಕರಿಗೆ ನೂಕು ನುಗ್ಗಲು ಆಗದಂತೆ ಊಟಕ್ಕೆ ಹೆಚ್ಚಿನ ಕೌಂಟರ್ ತೆರೆಯಬೇಕು. ಇನ್ನು ತಾಲೂಕಿನಿಂದ ವಿವಿಧ ಕಡೆಯಿಂದ ಜನರು ಆಗಮಿಸುವುದರಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು. ಬೇಸಿಗೆ ಸಮಯ ಇದಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರಿನ ಸೌಲಭ್ಯ ಇರುವಂತೆ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗುವುದರಿಂದ ಪೊಲೀಸ್ ಇಲಾಖೆಯು ಸೂಕ್ತ ಪೊಲೀಸ್ ಭದ್ರತೆ ಮತ್ತು ಪಾರ್ಕಿಂಗ್ ವ್ಯವಸ್ಥೆ ಸುಗಮವಾಗಿ ನಿರ್ವಹಣೆ ಮಾಡಬೇಕು. ಇನ್ನು ಕಾರ್ಯಕ್ರಮ ಯಶಸ್ಸಿಗೆ ವಿವಿಧ ಸಮಿತಿಗಳು ರಚಿಸಲಾಗಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಆಯಾ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಡಿಸಿ ನಿರ್ದೇಶನ ನೀಡಿದರು. ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚಿನ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಯಲಿದೆ. ಹೀಗಾಗಿ ಆಯಾ ಇಲಾಖೆಯ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನು ಶಿಷ್ಠಾಚಾರದಂತೆ ಮುದ್ರಿಸಿ ಚುನಾಯಿತ ಜನಪ್ರತಿನಿಧಿಗಳಿಗೆ ಮತ್ತು ಇಲಾಖೆಯ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ತಲುಪಿಸಬೇಕು. ಸಚಿವರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಿದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಲೈಸನ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತರಾದ ಸಾಹಿತ್ಯಾ ಆಲದಕಟ್ಟಿ, ಪ್ರಭುರೆಡ್ಡಿ, ಚಿತ್ತಾಪುರ ತಹಶೀಲ್ದಾರ ನಾಗಯ್ಯ ಹಿರೇಮಠ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಾರ್ತಾ ಭಾರತಿ 6 Mar 2026 9:22 pm

ಜಲಸಂಪನ್ಮೂಲ | ಶೀಘ್ರವೇ ಮೇಕೆದಾಟು ಯೋಜನೆಯ ಡಿಪಿಆರ್ : ಕೇಂದ್ರ ಸರಕಾರಕ್ಕೆ ಪ್ರಸ್ತಾವ

ಬೆಂಗಳೂರು : ಕರ್ನಾಟಕದ ಬಹುನಿರೀಕ್ಷಿತ ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು(ಡಿಪಿಆರ್) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2026-27ನೆಯ ಸಾಲಿನ ಬಜೆಟ್ ಮಂಡಿಸಿದ ಅವರು, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಎರಡನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ. ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲೂಕಿನ ವಡೇರಹಳ್ಳಿ ಸಮೀಪ 1.2 ಟಿಎಂಸಿ ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು ಎಂದರು. ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಸರಕಾರದ ವತಿಯಿಂದ 11,343 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಜ್ಜಂಪುರ ತಾಲೂಕಿನ ಅಬ್ಬಿನಹೊಳಲು ಗ್ರಾಮದ ಭೂಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದರಿಂದಾಗಿ 135 ಕಿ.ಮೀ. ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಇದರಡಿ ಬರುವ ಫೀಡರ್ ಕಾಮಗಾರಿಗಳನ್ನು 2027ನೇ ಸಾಲಿನಲ್ಲಿ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು. ಮುಖ್ಯಾಂಶಗಳು...! * ಆಲಮಟ್ಟಿ ಅಣೆಕಟ್ಟು ಕಾಮಗಾರಿಗೆ ಮುಳುಗಡೆಗೊಳ್ಳುವ ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂ. ಹಾಗೂ ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂ. ನಿಗದಿ, ಜಮೀನು ಸ್ವಾಧೀನಪಡಿಸುವ ಪ್ರಕ್ರಿಯೆ ಪ್ರಾರಂಭ. * ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ 33 ಗೇಟುಗಳನ್ನು ಬದಲಾಯಿಸಿ ಮುಂಗಾರು ಪೂರ್ವದಲ್ಲಿ ಹೊಸ ಗೇಟುಗಳ ಅಳವಡಿಕೆ ಪೂರ್ಣ. * ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಶೇಖರಣೆಯಿಂದ ನೀರಿನ ಸಂಗ್ರಹಣಾ ಸಾಮರ್ಥ್ಯದ ಕೊರತೆ ನೀಗಿಸಲು ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಸೇರಿದಂತೆ ಇತರೆ ಪರ್ಯಾಯ ಮಾರ್ಗೋಪಾಯಗಳ ಕುರಿತು ಚಿಂತನೆ. * ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ ತುಂಗಭದ್ರಾ ಮಂಡಳಿಯ ಸಹಮತಿಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲು ಪ್ರಯತ್ನ. * ಮಹದಾಯಿ ಕಣಿವೆಯ ಕಳಸಾ-ಬಂಡೂರಾ ನಾಲಾ ಯೋಜನೆಗಳಡಿ ಅರಣ್ಯ ತೀರುವಳಿ ದೊರೆತ ಕೂಡಲೇ ಕಾಮಗಾರಿಗಳು ಪ್ರಾರಂಭ. * ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು 490 ಕೋಟಿ ರೂ. ಮೊತ್ತದಲ್ಲಿ ಉಡುತೊರೆಹಳ್ಳ ಯೋಜನೆ. * ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿ.ಎಂ.ಸಿ ಸಾಮರ್ಥ್ಯ ದ ಸಂಗ್ರಹಣಾ ಜಲಾಶಯವನ್ನು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ. * ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನಾಲ್ಕು ನಿಗಮಗಳಡಿ ಪೂರ್ಣಗೊಳ್ಳುವ ಹಂತದಲ್ಲಿನ 12 ನೀರಾವರಿ ಯೋಜನೆಗಳು, 22 ಕೆರೆ ತುಂಬುವ ಯೋಜನೆಗಳು ಮತ್ತು ಮೂರು ಆಧುನೀಕರಣ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ 1.16 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ. * ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ 8,045 ಕೋಟಿ ರೂ. ಮೊತ್ತದ 75 ನೀರಾವರಿ ಕಾಮಗಾರಿಗಳ ಅನುಷ್ಠಾ ನ . * ರಾಜ್ಯದ ಕಾಡಾ ಪ್ರಾಧಿಕಾರದಡಿ ಹತ್ತಿಕುಣಿ ಹಾಗೂ ತುಂಗಭದ್ರಾ ಎಡದಂಡೆ ಶಾಖಾ ಕಾಲುವೆಯಡಿ ಬರುವ 4,745 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ಬಳಕೆಯ ದಕ್ಷತೆ ಹೆಚ್ಚಿಸಲು ಕ್ರಮ.

ವಾರ್ತಾ ಭಾರತಿ 6 Mar 2026 9:21 pm

ದ.ಕ.ಜಿಲ್ಲೆ: ನೂತನ ಪೊಲೀಸ್ ಠಾಣೆಯ ವ್ಯಾಪ್ತಿ ಸಂಯೋಜನೆ

ಮಂಗಳೂರು, ಮಾ.6: ದ.ಕ.ಜಿಲ್ಲಾ ಪೊಲೀಸ್ ಘಟಕದಲ್ಲಿ ನೂತನವಾಗಿ ಕಾರ್ಯಾರಂಭಗೊಳ್ಳಲಿರುವ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿ ಪ್ರದೇಶವನ್ನು ಸಂಯೋಜಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದು ಜಿಲ್ಲಾ ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. *ಸಜಿಪನಡು ಪೊಲೀಸ್ ಠಾಣೆ: ಮಂಚಿ, ಇರಾ, ಸಜಿಪ ನಡು,ಸಜಿಪ ಪಡು, ಚೇಳೂರು, ಬೋಳಂತೂರು, ವೀರಕಂಬ, ಕೊಳ್ನಾಡು, ಸಾಲೆತ್ತೂರು, ಸಜಿಪ ಮೂಡ, ಸಜಿಪ ಮುನ್ನೂರು. *ಮಾಣಿ ಪೊಲೀಸ್ ಠಾಣೆ: ಶಂಭೂರು, ಬರಿಮಾರು, ಕಡೆಶೀವಾಲಯ, ನೆಟ್ಲಮಡ್ನೂರು, ಅನಂತಾಡಿ, ಇಡ್ಕಿದು, ಮಾಣಿ, ಪೆರಾಜೆ, ಬಾಳ್ತಿಲ, ಗೋಳ್ತಮಜಲು, ಕೊಡಿಪ್ಪಾಡಿ, ಕಬಕ, ಕೆದಿಲ.

ವಾರ್ತಾ ಭಾರತಿ 6 Mar 2026 9:19 pm

ವಿಟ್ಲ| ಕಂಬಳಬೆಟ್ಟು ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ

ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟ ಗೊಂಡ ಘಟನೆ ನಡೆದಿತ್ತು. ಈ ಘಟನೆಯಿಂದ ಆಸುಪಾಸಿನ ಮನೆಗಳಿಗೆ, ಮರ ಗಿಡಗಳಿಗೆ ಹಾನಿಯಾಗಿತ್ತು. ಅಲ್ಲದೆ ಕಳೆದ ಸುಮಾರು ವರ್ಷಗಳ ಹಿಂದೆ ನೂಜಿ ಎಂಬಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟ  ಘಟನೆ ಬೆಚ್ಚಿ ಬೀಳಿಸಿತ್ತು. ಇದೀಗ ಮತ್ತೆ ಅದೇ ಪರಿಸರದಲ್ಲಿ ಭಾರಿ ಪ್ರಮಾಣದ ಸ್ಫೋಟದ ಶಬ್ದ ಕೇಳಿಸಿಕೊಂಡಿದ್ದು, ಜನರು ಭಯ ಭೀತರಾಗಿದ್ದಾರೆ. ಸ್ಫೋಟಗೊಂಡು ವಾತಾವರಣದ ತುಂಬಾ ಬಾನೆತ್ತರದಲ್ಲಿ ಹೊಗೆ ಆವರಿಸಿದೆ. ಕಂಬಳಬೆಟ್ಟು ನಿವಾಸಿ ಗಫೂರ್ ಎಂಬವರು ದೇವಸ್ಥಾನದ ಜಾತ್ರೋತ್ಸವಕ್ಕೆ ಪಟಾಕಿ ತಯಾರಿಸಿ, ಶೇಖರಣೆ ಮಾಡಿದ್ದರು. ಮಧ್ಯಾಹ್ನದ ವೇಳೆಗೆ ಬಿಸಿಲಿಗೆ ಇದ್ದಕ್ಕಿಂದಂತೆ ಪಟಾಕಿ ಸ್ಫೋಟಗೊಂಡಿದೆ. ಸ್ಥಳದಲ್ಲಿ ಕಾರ್ಮಿಕರು ಹಾಗೂ ಜನರು ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 2017ರಲ್ಲಿ ಗಫೂರ್ ಎಂಬವರ ಮನೆ ಸಮೀಪ ಪಟಾಕಿ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಇನ್ನೂ ಪ್ರಕರಣ ಇತ್ಯಾರ್ಥಗೊಂಡಿಲ್ಲ. ಇದೀಗ ಅದರ ಸಮೀಪವೇ ಮತ್ತೊಂದು ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ರವಿ , ವಿಟ್ಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ , ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ಪಟಾಕಿ ತಯಾರಿಸಲು ಯಾವುದೇ ಅನುಮತಿ ಪಡೆದಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ವಾರ್ತಾ ಭಾರತಿ 6 Mar 2026 9:16 pm

ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ರೂ. ಭರಪೂರ ಘೋಷಣೆ

ಬೆಂಗಳೂರು : 2025-26ನೇ ಸಾಲಿನಲ್ಲಿ ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರಕಾರ ನೀಡುತ್ತಿದ್ದ 3,000 ಕೋಟಿ ರೂ.ಅನುದಾನವನ್ನು 7 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿಯೂ ಈ ಅನುದಾನವನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ನಡೆದ ಬಜೆಟ್ ಮಂಡಿಸಿದ ಅವರು, ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ 1,255 ಕೋಟಿ ರೂ.ಗಳ ಮೊತ್ತದ ವಾರ್ಡ್ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ. 1,700 ಕೋಟಿ ರೂ.ಗಳ ಮೊತ್ತದಲ್ಲಿ 158 ಕಿ.ಮೀ. ಉದ್ದದ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 1,936 ಕೋಟಿ ರೂ.ಗಳ ಮೊತ್ತದ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಅಭಿವೃದ್ಧಿ. ಸಿಲ್ಕ್‌ ಬೋರ್ಡ್ ಜಂಕ್ಷನ್‍ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರ ವರ್ತುಲ ರಸ್ತೆಯನ್ನು ಅಭಿವೃದ್ಧಿಪಡಿಸುವ 450 ಕೋಟಿ ರೂ.ಗಳ ಯೋಜನೆ. 273 ಕೋಟಿ ರೂ. ಅಂದಾಜು ಮೊತ್ತದಲ್ಲಿ ರಾಜಕಾಲುವೆಗಳ ಮೇಲ್ದರ್ಜೆಗೇರಿಸುವುದು ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳು ನಡೆಸಲಾಗುವುದು ಎಂದು ಹೇಳಿದರು. ರಸ್ತೆಗಳ ದೀರ್ಘ ಕಾಲದ ಬಾಳಿಕೆಗಾಗಿ ಮುಂದಿನ ಮೂರು ವರ್ಷಗಳಲ್ಲಿ 450 ಕಿ.ಮೀಗೂ ಹೆಚ್ಚು ಉದ್ದದ ರಸ್ತೆಗಳನ್ನು 3,000 ಕೋಟಿ ರೂ.ಗಳ ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡಲಾಗುವುದು. ಬೆಂಗಳೂರು ನಗರ ಪಾಲಿಕೆಗಳ ಸ್ವಂತ ಸಂಪನ್ಮೂಲದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 175 ಜಂಕ್ಷನ್‍ಗಳ ಸೌಂದರ್ಯೀಕರಣ, 500 ಕಿ.ಮೀ. ಉದ್ದದ ಪಾದಚಾರಿ ಮಾರ್ಗವನ್ನು ಮೇಲ್ದರ್ಜೆಗೇರಿಸಲು ಮತ್ತು 100 ಸ್ಕೈ ವಾಕ್‍ಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ವಿಶ್ವಬ್ಯಾಂಕ್ ನೆರವಿನ ಜಲ ಭದ್ರತೆ ಮತ್ತು ವಿಪತ್ತು ನಿರೋಧಕ ಕಾರ್ಯಕ್ರಮದ ಕ್ರಿಯಾ ಯೋಜನೆಯಡಿ ರಾಜಕಾಲುವೆಗಳ ಅಭಿವೃದ್ಧಿ, ಮೇಲ್ದರ್ಜೆಗೇರಿಸುವ ಕಾಮಗಾರಿಗಳನ್ನು ಒಟ್ಟು 2,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಲಾಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯ ಐದು ಮಹಾನಗರ ಪಾಲಿಕೆಗಳು ತಮ್ಮ ಬ್ಯಾಲೆನ್ಸ್ ಶೀಟ್ ಆಧಾರದಲ್ಲಿ ‘ಮುನಿಸಿಪಲ್ ಬಾಂಡ್’ಗಳನ್ನು ಹೊರಡಿಸುವ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ ಸಂಪನ್ಮೂಲವನ್ನು ಕ್ರೋಢೀಕರಿಸಲಾಗುವುದು ಎಂದರು. 2027ರ ಅಂತ್ಯದೊಳಗೆ ಬೆಂಗಳೂರಿಗೆ ಹೊಸ ಪರಿಷ್ಕೃತ ಮಾಸ್ಟರ್ ಪ್ಲಾನ್-2041 ಅನ್ನು (ಆರ್‌ಎಂಪಿ)ಜಾರಿಗೊಳಿಸಲಾಗುವುದು. ಇದರ ಜೊತೆಗೆ ಸಮಗ್ರ ಮೊಬಿಲಿಟಿ ಯೋಜನೆಯನ್ನು (ಸಿಎಂಪಿ)ಆರು ತಿಂಗಳೊಳಗೆ ರೂಪಿಸಲಾಗುವುದು ಎಂದು ಹೇಳಿದರು. ಪ್ರಮುಖ ಅಂಶಗಳು: * 2026–27ರ ಹಣಕಾಸು ವರ್ಷದಲ್ಲಿ ಒಟ್ಟು 41ಕಿ.ಮೀ. ಹೆಚ್ಚುವರಿ ಮೆಟ್ರೋ ಮಾರ್ಗಗಳನ್ನು ಪೂರ್ಣಗೊಳಿಸಲುಯೋಜಿಸಲಾಗಿದೆ. ಇದರಿಂದ ದಿನಕ್ಕೆ 15 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ. * ಹೊರ ವರ್ತುಲ ರಸ್ತೆಯ ಮೆಟ್ರೋ ವಯಾಡಕ್ಟ್ ಉದ್ದಕ್ಕೂ 9 ಕಿ.ಮೀ ಪಾದಚಾರಿ ನಡಿಗೆ ಮಾರ್ಗವನ್ನು ಅಂದಾಜು 160 ಕೋಟಿ ರೂ.ಗಳ ವೆಚ್ಚದಲ್ಲಿ ಹೊರ ವರ್ತುಲ ಕಂಪೆನಿಗಳ ಸಂಘದ ಪ್ರಾಯೋಜಕತ್ವದಲ್ಲಿ ನಿರ್ಮಿಸಲಾಗುವುದು. * ಬೆಂಗಳೂರು ನಗರದ ಸುಮಾರು 1.40 ಕೋಟಿ ಜನರಿಗೆ ಕುಡಿಯುವ ನೀರು ಪೂರೈಸಲು ಕಾವೇರಿ ನೀರು ಸರಬರಾಜು ಯೋಜನೆಯ 1ರಿಂದ 5ನೇ ಹಂತಗಳ ಮೂಲಕ ಒಟ್ಟು 2,225 ಎಂಎಲ್‍ಡಿ ನೀರು ಪೂರೈಸಲಾಗುತ್ತಿದೆ. ಇದೀಗ ಜೆಐಸಿಎ ನೆರವಿನಿಂದ 6,939 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿಯಾಗಿ ಆರು ಟಿಎಂಸಿ ನೀರನ್ನು ಪೂರೈಸಲು ಕಾವೇರಿ 6ನೇ ಹಂತದ ಯೋಜನೆಯನ್ನು ರೂಪಿಸಲಾಗಿದೆ. * ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ತುಮಕೂರು ರಸ್ತೆಯಿಂದ ಹೊಸೂರು ರಸ್ತೆಯವರೆಗೆ 73 ಕಿ.ಮೀ ಉದ್ದದ ಬೆಂಗಳೂರು ಬಿಸ್ನೆಸ್ ಕಾರಿಡಾರ್ ಭಾಗ-1 ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ರೈತರಿಗೆ ಸಮರೋಪಾದಿಯಲ್ಲಿ ಪರಿಹಾರ ವಿತರಿಸಲಾಗುತ್ತಿದೆ. ಈ ರಸ್ತೆಯನ್ನು ನಾಲ್ಕು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. * ಹೆಬ್ಬಾಳ ಜಂಕ್ಷನ್‍ನಿಂದ ಎಚ್‍ಎಸ್‍ಆರ್ ಲೇಔಟ್ ಸಿಲ್ಕ್ ಬೋರ್ಡ್ ವರೆಗಿನ ಉತ್ತರ-ದಕ್ಷಿಣ ಕಾರಿಡಾರ್ ಯೋಜನೆ ಹಾಗೂ ಕೆ.ಆರ್.ಪುರಂ ನಿಂದ ಮೈಸೂರು ರಸ್ತೆಯವರೆಗಿನ ಪೂರ್ವ-ಪಶ್ಚಿಮ ಕಾರಿಡಾರ್ ಯೋಜನೆಯ ಒಟ್ಟಾರೆ 40 ಕಿ.ಮಿ. ಉದ್ದದ ಸುರಂಗ ಮಾರ್ಗವನ್ನು 40,000 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ‘ಬಿಒಒಟಿ’ ಮಾದರಿಯಲ್ಲಿ ಕೈಗೊಳ್ಳಲು ಅನುಮೋದಿಸಲಾಗಿದೆ. ಮೊದಲನೇ ಹಂತದಲ್ಲಿ 17ಕಿ.ಮಿ. ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ಯೋಜನೆಯನ್ನು 17,780 ಕೋಟಿ ರೂ.ಗಳ ಮೊತ್ತಕ್ಕೆ ಟೆಂಡರ್ ಕರೆಯಲಾಗಿದೆ. * ಹೆಬ್ಬಾಳ ಜಂಕ್ಷನ್‍ನಿಂದ ಮೇಖ್ರಿ ಸರ್ಕಲ್ ವರೆಗೆ ಸುರಂಗ ಮಾರ್ಗ ಹಾಗೂ ಮೇಲು ಸೇತುವೆ ರಸ್ತೆಯನ್ನು 2,250ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಲಾಗುವುದು. * ಬೆಂಗಳೂರು ನಗರದ ದಟ್ಟಣೆಯನ್ನು ಕಡಿಮೆ ಮಾಡಲು ನೆಲಮಂಗಲ-ತಾವರೆಕೆರೆ-ಬಿಡದಿ ಮಧ್ಯಂತರ ವರ್ತುಲ ರಸ್ತೆಯನ್ನು ಃಒಖಆಂ ಹಾಗೂ ಸ್ಥಳೀಯ ಯೋಜನಾ ಪ್ರಾಧಿಕಾರಗಳ ಆರ್ಥಿಕ ಸಂಪನ್ಮೂಲಗಳಿಂದ ನಿರ್ಮಿಸಲಾಗುವುದು. * ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ ಹಂತ-4ರಡಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು 3,885 ಕೋಟಿ ರೂ.ಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇಲ್ಲಿಯವರೆಗೂ ರಾಜ್ಯ ಸರಕಾರದಿಂದ 1,716 ಕೋಟಿ ರೂ.ಗಳನ್ನು ಬಿಡುಗಡೆಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 500 ಕೋಟಿ ರೂ.ಗಳನ್ನು ಒದಗಿಸಲಾಗುವುದು. * ರಾಜ್ಯದ ನಗರಗಳ ಸ್ವಚ್ಛತೆಯನ್ನು ಕಾಪಾಡುವ ದೃಷ್ಟಿಯಿಂದ ಒಳಚರಂಡಿ ಕಾಮಗಾರಿಗಳನ್ನು ಅಣ್ಣಿಗೇರಿ, ಗುಂಡ್ಲುಪೇಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಭದ್ರಾವತಿ, ದೇವನಹಳ್ಳಿ ಮತ್ತು ಮೈಸೂರಿನ ಕೆಲವು ಭಾಗಗಳಲ್ಲಿ ಕೈಗೊಳ್ಳಲಾಗುವುದು. ಜೊತೆಗೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದ ನೆರವಿನೊಂದಿಗೆ ಆಳಂದ, ಅಫ್ಜಲ್ಪುರ, ಚಿತ್ತಾಪುರ, ಯಾದಗಿರಿ, ಹರಪನಹಳ್ಳಿ, ಜೇವರ್ಗಿ ಹಾಗೂ ಸುರಪುರ ಪಟ್ಟಣಗಳಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. * ಹೊಸದಾಗಿ ಮೇಲ್ದರ್ಜೆಗೇರಿಸಲಾದ ರಾಯಚೂರು, ಬೀದರ್ ಮತ್ತು ಹಾಸನ ಮಹಾನಗರ ಪಾಲಿಕೆಗಳಿಗೆ ಮಹಾತ್ಮಾಗಾಂಧಿ ನಗರ ವಿಕಾಸ್ ಯೋಜನೆ 2.0ರಡಿ 2026-27ನೇ ಸಾಲಿನಲ್ಲಿ ತಲಾ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು. * ಧಾರವಾಡದಲ್ಲಿ ನಾಲ್ಕು ಹಾಗೂ ಬೆಂಗಳೂರಿನಲ್ಲಿ ಎರಡು ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‍ಗಳನ್ನು ಪ್ರಾರಂಭ. ಕಲಬುರಗಿ ನಗರಕ್ಕೆ ದಿನ 24ಗಂಟೆಗಳ ಕಾಲ ಶಾಶ್ವತವಾಗಿ ಗುಣಮಟ್ಟದ ನೀರನ್ನು ಒದಗಿಸಲು ಅಂದಾಜು 1,863 ಕೋಟಿ ರೂ. ವೆಚ್ಚದ ಕಾಮಗಾರಿಗೆ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು. * ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುತ್ತಿರುವ ವಿವಿಧ ಭಾಗಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಒದಗಿಸಲಾಗುವುದು.

ವಾರ್ತಾ ಭಾರತಿ 6 Mar 2026 9:12 pm

Farmer Mall: ಕೋಲಾರದಲ್ಲಿ ರೈತ ಮಾಲ್ ಸ್ಥಾಪನೆ: ಕೃಷಿ ಸಹಾಯವಾಣಿಗೆ ಎಐ ತಂತ್ರಜ್ಞಾನದ ಸ್ಪರ್ಶ

ಬೆಂಗಳೂರು: ರಾಜ್ಯದ ರೈತರ ಆದಾಯ ಹೆಚ್ಚಿಸಲು ಹಾಗೂ ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯನ್ನು ವಿಸ್ತರಿಸಲು ಕರ್ನಾಟಕ ಬಜೆಟ್ 2026ರಲ್ಲಿ ಮಹತ್ವದ ಘೋಷಣೆಗಳನ್ನು ಸರ್ಕಾರ ಮಾಡಿದೆ. ಕೋಲಾರದಲ್ಲಿ ರೈತರಿಗೆ ನೇರ ಮಾರುಕಟ್ಟೆ ಸೌಲಭ್ಯ ಒದಗಿಸುವ ಉದ್ದೇಶದಿಂದ 'ರೈತ ಮಾಲ್' ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಕೃಷಿ ಮಾಹಿತಿಗಾಗಿ ಇರುವ ಸಹಾಯವಾಣಿಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಸೇರಿಸುವ ಯೋಜನೆಯನ್ನೂ

ಒನ್ ಇ೦ಡಿಯ 6 Mar 2026 9:11 pm

ಮಂಗಳೂರು - ಮೂಡುಜೆಪ್ಪು ನೂತನ ಸರಕಾರಿ ಬಸ್‌ಗೆ ಶಾಸಕ ಭರತ್ ಶೆಟ್ಟಿ ಚಾಲನೆ

ಮಂಗಳೂರು : ಮಂಗಳೂರು- ಮೂಡುಜೆಪ್ಪು ಸರಕಾರಿ ನಗರ ಸಾರಿಗೆ ಬಸ್ಸಿಗೆ ಶಾಸಕ ಭರತ್ ಶೆಟ್ಟಿ ಮಂಗಳೂರು ಬಸ್‌ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸುರೇಂದ್ರ ಕಂಬಳಿ, ಗ್ಯಾರೆಂಟಿ ಸಮಿತಿಯ ಸದಸ್ಯರು, ಕೆಎಸ್‌ಆರ್‌ಟಿಸಿಯ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ಡಿಟಿಓ - ಕಮಲ್‌ ಕುಮಾರ್, ಡಿಎಂಇ-ವಿನಯ್ ಕೆಎಸ್‌ಆರ್‌ಟಿಸಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು. ಬಸ್ಸು ಮಂಗಳೂರು ಬಸ್ಸು ನಿಲ್ದಾಣದಿಂದ 07.05, 09.00, 11.15, 13.30, 15.10, 17.00 ಗಂಟೆಗೆ ಮಲ್ಲಿಕಟ್ಟೆ, ನಂತೂರು, ಕುಡುಪು, ವಾಮಂಜೂರು, ಉಳಾಯಿಬೆಟ್ಟು ಮಾರ್ಗವಾಗಿ ಮೂಡುಜೆಪ್ಪುವಿಗೆ ಹಾಗೂ ಮರು ಪ್ರಯಾಣದಲ್ಲಿ ಮೂಡುಜೆಪ್ಪುವಿನಿಂದ ಮಂಗಳೂರಿಗೆ 08.00, 10.00, 12.15, 14.20, 16.00, 18.00 ಗಂಟೆಗೆ ಕಾರ್ಯಾಚರಣೆಯಾಗಲಿದೆ. ಈ ಸಂದರ್ಭ ಶಾಸಕರು, ಜನತೆಯ ಬಹು ಬೇಡಿಕೆಯ ಸುರತ್ಕಲ್ - ಪರಂಗಿಪೇಟೆ ಮತ್ತು ಆಕಾಶಭವನ - ಪಡೀಲ್ ನೂತನ ಬಸ್ ಸಂಚಾರವನ್ನು ಕೂಡಲೇ ಆರಂಭಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.

ವಾರ್ತಾ ಭಾರತಿ 6 Mar 2026 9:11 pm

ಮೂಡುಬಿದಿರೆ: ‘ಅಲೋಕ 2026’ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ: ಡಾ.ಮೋಹನ ಆಳ್ವರಿಗೆ ಗೌರವ

ಮೂಡುಬಿದಿರೆ: ಆಯುರ್ವೇದ ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ ಸಮಾಜಕ್ಕೆ ಉಪಯೋಗವಾಗುವ ಹಾಗೆಯೂ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಡುವಂತೆಯೂ ರೂಪುಗೊಳ್ಳ ಬೇಕು ಎಂದು ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಲಕ್ಷ್ಮೀ ನಾರಾಯಣ ಶೆಣೈ ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಆಯುರ್ವೇದ ಕಾಲೇಜಿನ ಆತ್ಮ ಸಂಶೋಧನಾ ಕೇಂದ್ರ ಹಾಗೂ ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ‘ಅಲೋಕ 2026’ ಅನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಎಂ. ಮೋಹನ ಆಳ್ವ, ಆಯುರ್ವೇದ ಕ್ಷೇತ್ರದಲ್ಲಿ ನಡೆಯುತ್ತಿ ರುವ ಸಂಶೋಧನೆಗಳನ್ನು ದಾಖಲೆಗಳ ಮೂಲಕ ವಿಶ್ವಕ್ಕೆ ಪರಿಚಯಿಸುವುದರ ಜೊತೆಗೆ ಅವುಗಳನ್ನು ವ್ಯಾಪಾರ ಕ್ಷೇತ್ರಕ್ಕೂ ತಲುಪಿಸುವುದು ಅಗತ್ಯವಿದೆ ಎಂದು ಹೇಳಿದರು. ಕೇಂದ್ರ ಸರ್ಕಾರವು ಈ ವರ್ಷದ ಬಜೆಟ್‌ನಲ್ಲಿ ಆಯುರ್ವೇದ ಕ್ಷೇತ್ರಕ್ಕೆ 4000 ಕೋಟಿಗೂ ಅಧಿಕ ಅನುದಾನ ಘೋಷಿಸಿರುವುದು ಆಯುರ್ವೇದದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ವತಿಯಿಂದ ಡಾ. ಎಂ. ಮೋಹನ ಆಳ್ವರನ್ನು ಗೌರವಿಸಲಾಯಿತು. ನಂತರ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ವಿವಿಧ ಅಧಿವೇಶನಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಸುಶೀಲ ಶೆಟ್ಟಿ, ಮೈಸೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನ ಮುಖ್ಯಸ್ಥ ಪ್ರೊ. ಶ್ರೀನಾಥ್ ರಾಮಮೂರ್ತಿ, ಆತ್ಮ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಸುಬ್ರಹ್ಮಣ್ಯ ಪದ್ಮನಾಭ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಮಂಜುನಾಥ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಗೀತಾ ಮಾರ್ಕಂಡೇಯ ನಿರೂಪಿಸಿ, ಡಾ. ಸುಮಂತ ಶೆಣೈ ವಂದಿಸಿದರು.

ವಾರ್ತಾ ಭಾರತಿ 6 Mar 2026 9:08 pm

ದ.ಕ. ಜಿಲ್ಲೆ| ರಾಜ್ಯ ಬಜೆಟ್ - 2026: ಗಣ್ಯರ ಪ್ರತಿಕ್ರಿಯೆಗಳು...

ಕರಾವಳಿಯ ಅಭಿವೃದ್ಧಿಗೆ ಮಹತ್ವ ರಾಜ್ಯ ಸರಕಾರ ಮಂಡಿಸಿದ ಬಜೆಟ್ ಜನಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರಿಗೆ ನೀಡಿದ ಯೋಜನೆಗಳು ಸ್ವಾಗತಾರ್ಹ. ಕರಾವಳಿಯ ಪ್ರವಾಸೋದ್ಯಮ, ಮೀನುಗಾರಿಕೆ, ಪೊಲೀಸ್ ಠಾಣೆಗಳ ಬಲವರ್ಧನೆ, ಕೃಷಿ, ಅರಣ್ಯ, ಆರೋಗ್ಯ, ಮುಜರಾಯಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ, ವಸತಿ, ಶಿಕ್ಷಣ ಕ್ಷೇತ್ರ ಸಹಿತ ಎಲ್ಲಾ ವರ್ಗದ ಕಲ್ಯಾಣಕ್ಕಾಗಿ ವಿಶೇಷ ಆದ್ಯತೆ ನೀಡಿರುವುದು ಸಂತಸ ಸಂಗತಿಯಾಗಿದೆ. ರಾಜ್ಯದ ಸಮಗ್ರ ಹಾಗು ಕರಾವಳಿ ಅಭಿವೃದ್ಧಿಗೆ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ. -ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರು, ಕರ್ನಾಟಕ ಸರಕಾರ ತಂತ್ರಜ್ಞಾನ ಆಧಾರಿತ ಬೆಳವಣಿಗೆಗೆ ಒತ್ತು ರಾಜ್ಯ ಬಜೆಟ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ತಂತ್ರಜ್ಞಾನ ಆಧಾರಿತ ಬೆಳವಣಿಗೆಗೆ ಒತ್ತು ನೀಡಲಾಗಿರುವು ದನ್ನು ಕೆಸಿಸಿಐ ಸ್ವಾಗತಿಸುತ್ತದೆ. ಮಂಗಳೂರು ಮೀನುಗಾರಿಕಾ ಕಾಲೇಜಿನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆಗೆ ಮುಂದಾಗಿರುವುದು, ಮೀನುಗಾರರ ಕಿಟ್‌ಗಳಿಗೆ ಸಬ್ಸಿಡಿ ಹೆಚ್ಚಳದ ಮೂಲಕ ಮೀನುಗಾರಿಕಾ ಕ್ಷೇತ್ರಕ್ಕೆ ಗಮನ ಹರಿಸಲಾಗಿದೆ. ಪ್ರಮುಖ ಜಿಲ್ಲೆಗಳಲ್ಲಿ ಮತ್ಸ್ಯದರ್ಶಿನಿಯನ್ನು ವಿಸ್ತರಿಸಲು ಮುಂದಾಗಿರುವುದು ಶ್ಲಾಘನೀಯ. ಆದರೆ ಕೆಸಿಸಿಐ ತನ್ನ ಪೂರ್ವಬಜೆಟ್ ಮನವಿ ಪತ್ರದಲ್ಲಿ ಪ್ರಸ್ತಾಪಿಸಿರುವ ಮಂಗಳೂರು ಬಂದರು ಆಧುನೀಕರಣ, ಕರಾವಳಿ ಹೆದ್ದಾರಿ ವಿಸ್ತರಣೆ, ತೋಟಗಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡುವಂತಹ ಪ್ರಸ್ತಾವನೆಗಳಿಗೆ ಬಜೆಟ್‌ನಲ್ಲಿ ಮನ್ನಣೆ ನೀಡಿಲ್ಲ. - ಪಿ.ಬಿ. ಅಹ್ಮದ್ ಮುದಸ್ಸರ್, ಅಧ್ಯಕ್ಷರು, ಕೆಸಿಸಿಐ-ಮಂಗಳೂರು *ಹೊಸ ಭಾಷ್ಯ ಬರೆದ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವಂತಿದೆ. ಇದು ಕೇವಲ ಅಂಕಿ-ಅಂಶಗಳ ಬಜೆಟ್ ಆಗಿರದೆ, ದೂರದೃಷ್ಟಿಯ ’ಅಭಿವೃದ್ಧಿ ಪತ್ರ’ವಾಗಿದೆ. ಮೀನುಗಾರಿಕೆಯ ಅಭಿವೃದ್ಧಿಗೆ ಅತ್ಯಾಧುನಿಕ ’ಸೆಂಟರ್ ಆಫ್ ಎಕ್ಸಲೆನ್ಸ್’ ಸ್ಥಾಪಿಸಲು ಮುಂದಾಗಿರುವುದು ಸ್ವಾಗ ತಾರ್ಹ. ಕರಾವಳಿಯ ಪ್ರವಾಸೋದ್ಯಮಕ್ಕೆ ವೇಗ ನೀಡಲು ’ಸೀ ಪ್ಲೇನ್’ ಮತ್ತು ’ಹೆಲಿ ಟ್ಯಾಕ್ಸಿ’ಗಳಂತಹ ಆಧುನಿಕ ಸಾರಿಗೆ ಸೌಲಭ್ಯಗಳನ್ನು ಘೋಷಿಸಿರುವುದು ಜಾಗತಿಕ ಮಟ್ಟದಲ್ಲಿ ಮಂಗಳೂರನ್ನು ಪ್ರವಾಸಿ ತಾಣವಾಗಿ ಗುರುತಿ ಸಲು ಸಹಕಾರಿಯಾಗಲಿದೆ. ಮಾಣಿ ಮತ್ತು ಸಜಿಪನಡುವಿನಲ್ಲಿ ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಸರಕಾರದ ನಿರ್ಧಾರವು ಶ್ಲಾಘನೀಯ, -ಮಂಜುನಾಥ ಭಂಡಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು ಸಾಲದ ಹೊರೆ ಹೆಚ್ಚಿಸಿದ ಬಜೆಟ್ ಹಿಂದಿನ ಬಜೆಟ್‌ನಂತೆ ಈ ಬಜೆಟ್ ಕೂಡಾ ಕೇವಲ ಘೋಷಣೆಗೆ ಸೀಮಿತವಾಗಿದೆ. ಬಜೆಟ್ ಗಾತ್ರ ಹಿಗ್ಗಿದೆ. ಜತೆಗೆ ಸಾಲದ ಹೊರೆಯೂ ಇಮ್ಮಡಿಯಾಗಿದೆ. ಅಬಕಾರಿ ಇಲಾಖೆ ಮೂಲಕ ಸರಕಾರ ಹೆಚ್ಚಿನ ರಾಜಸ್ವ ನಿರೀಕ್ಷಿಸಿರುವುದು ರಾಜ್ಯದ ಜನತೆಯ ದುರಂತ. ಸಾಲದಲ್ಲಿ ಮುಳುಗಿರುವ ಈ ಸರಕಾರ ಬಜೆಟ್‌ನ ಶೇ.25ರಷ್ಟು ಘೋಷಣೆಗಳನ್ನು ಕೂಡಾ ಕಾರ್ಯಗತ ಮಾಡುವುದು ಸಾಧ್ಯವಿಲ್ಲ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿರುವುದೇ ಬಜೆಟ್‌ನ ದೊಡ್ಡ ಸಾಧನೆ. ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಪುತ್ತೂರು ಮೆಡಿಕಲ್ ಕಾಲೇಜ್‌ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. -ನಳಿನ್ ಕುಮಾರ್ ಕಟೀಲ್, ಮಾಜಿ ಸಂಸದರು, ದ.ಕ. ಪ್ರಗತಿ ಶೂನ್ಯ ಬಜೆಟ್ ರಾಜ್ಯದಲ್ಲಿ 17 ಬಾರಿ ಬಜೆಟ್ ಮಂಡಿಸಿ ಅಪಾರ ಆರ್ಥಿಕ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ನಿರಾಸದಾಯಕ ಮತ್ತು ಪ್ರಗತಿ ಶೂನ್ಯವಾಗಿದೆ. ಇದು ಕೇವಲ ಅಂಕಿ-ಅಂಶಗಳ ಕಸರತ್ತಾಗಿದ್ದು, ರಾಜ್ಯದ ಜನತೆಯನ್ನು ಇನ್ನಷ್ಟು ಸಾಲದ ಸುಳಿಯಲ್ಲಿ ಸಿಲುಕಿಸುವುದರಲ್ಲಿ ಅನುಮಾನವಿಲ್ಲ. ರಾಜ್ಯದ ಒಟ್ಟು ಸಾಲವು 8.24 ಲಕ್ಷ ಕೋ.ರೂ.ದಾಟುತ್ತಿರುವುದು ಆತಂಕಕಾರಿಯಾಗಿದೆ. ಇಂತಹ ’ಆರ್ಥಿಕ ಪಾಂಡಿತ್ಯ’ಕ್ಕೆ ರಾಜ್ಯದ ಜನತೆ ಬೆಚ್ಚಿಬಿದ್ದಿದ್ದು ಇದು ಸರಕಾರದ ಆರ್ಥಿಕ ಶಿಸ್ತಿನ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಯಾವುದೇ ಮಹತ್ವಾಕಾಂಕ್ಷೆಯ ಅಥವಾ ಉದ್ಯೋಗ ಸೃಷ್ಟಿಸುವ ಯೋಜನೆಗಳನ್ನು ಘೋಷಣೆ ಮಾಡದಿರುವುದು ಖೇದಕರ. ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಯಾವುದೇ ಹೊಸ ಯೋಜನೆಗಳನ್ನು ಘೋಷಿಸದೆ ಜಿಲ್ಲೆಯನ್ನು ಸರಕಾರ ಸಂಪೂರ್ಣ ವಾಗಿ ನಿರ್ಲಕ್ಷ್ಯ ಮಾಡಿದೆ. -ಬ್ರಿಜೇಶ್ ಚೌಟ, ಸಂಸದರು, ದ.ಕ.  ಅಭಿವೃದ್ಧಿಗೆ ಪೂರಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ. ಸಮಾಜದ ಎಲ್ಲಾ ವರ್ಗಗಳ ಜನರನ್ನು ಒಳಗೊಂಡ ಜನಪರ ಬಜೆಟ್ ಇದಾಗಿದೆ. ರಾಜ್ಯದ ಅನೇಕ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡುವ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಮೂಲಕ ಜನಸಾಮಾನ್ಯರಿಗೆ ನ್ಯಾಯ ಒದಗಿಸುವ ಕೆಲಸವನ್ನು ಸರಕಾರ ಮಾಡಿದೆ. ಜಿಲ್ಲೆಯ ಅಭಿವೃದ್ಧಿಗೆ ಅನೇಕ ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕೊಲ್ಲೂರು ಮೂಕಾಂಬಿಕ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ಗಳನ್ನು ರಚಿಸುವ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹವಾಗಿದೆ. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಅಭಿವೃದ್ಧಿಗೆ ಅನುದಾನ ನೀಡಲಾಗಿದ್ದು, ಮೆಡಿಕಲ್ ಕಾಲೇಜಿನ ಕಾಮಗಾರಿಯನ್ನು ಪ್ರಾರಂಭಿಸಲು ಬಜೆಟ್‌ನಲ್ಲಿ ತಿಳಿಸಲಾಗಿದೆ. -ಐವನ್ ಡಿಸೋಜ, ಶಾಸಕರು, ವಿಧಾನ ಪರಿಷತ್ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ಈ ಬಜೆಟ್ ಭವಿಷ್ಯದ ತಂತ್ರಜ್ಞಾನ ಮೂಲಸೌಕರ್ಯವನ್ನು ನಿರ್ಮಿಸುವ ಮತ್ತು ಬೆಂಗಳೂರನ್ನು ಹೊರತುಪಡಿಸಿ ಇತರ ಪ್ರದೇಶಗಳಿಗೂ ಹೊಸ ಆವಿಷ್ಕಾರ ಸಾಧ್ಯತೆಯನ್ನು ವಿಸ್ತರಿಸುವ ಬದ್ಧತೆಯನ್ನು ರಾಜ್ಯ ಸರಕಾರ ಸಾರಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡ್ರೋನ್ ಪರೀಕ್ಷಾ ಸೌಲಭ್ಯದ ಘೋಷಣೆ, ಹೊಸ ಎಐ ಸೆಂಟರ್ ಆಫ್ ಎಕ್ಸಲೆನ್ಸ್‌ಗಳು ಹಾಗೂ ಕೌಶಲಾಭಿವೃದ್ಧಿ ಮತ್ತು ಸುಧಾರಿತ ತಂತ್ರಜ್ಞಾನಗಳಲ್ಲಿನ ಹೂಡಿಕೆಗಳು, ಮುಂದಿನ ಪೀಳಿಗೆಯ ಆವಿಷ್ಕಾರ ಮೂಲಸೌಕರ್ಯವನ್ನು ನಿರ್ಮಿಸುವ ಸರಕಾರದ ಗುರಿಯನ್ನು ಪ್ರತಿಬಿಂಬಿಸುತ್ತವೆ. -ಬಿ.ವಿ. ನಾಯ್ಡು, ಅಧ್ಯಕ್ಷರು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಇದು ಬಿಳಿ ಹಾಳೆಯ ಬಜೆಟ್ ಕಳೆದ ಬಾರಿ ಬಜೆಟ್ ಮಂಡಿಸುವಾಗ ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿನ ಎಷ್ಟು ಘೋಷಣೆಗಳನ್ನು ಕರಾವಳಿ ಭಾಗದಲ್ಲಿ ಸಾಕಾರಗೊಳಿಸಿದ್ದಾರೆ ಎಂಬುದನ್ನು ಬಹಿ ರಂಗಪಡಿಸಿದಾಗ ಮಾತ್ರ ಇಂದಿನ ಬಜೆಟ್‌ಗೆ ತೂಕ ಬರುತ್ತದೆ. ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಬಂಟ ನಿಗಮಕ್ಕೆ ಈ ಬಾರಿಯೂ ಅನ್ಯಾಯವೆಸಗಲಾಗಿದೆ. ಕರಾವಳಿಯ ಪಾಲಿಗೆ ಇದು ನೀರಸ ಬಜೆಟ್ ಆಗಿದೆ. ಒಟ್ಟಾರೆಯಾಗಿ ಇದು ಕೇವಲ ಬಿಳಿ ಹಾಳೆ ಅಷ್ಟೇ ಆಗುತ್ತದೆ. -ವೇದವ್ಯಾಸ ಕಾಮತ್, ಶಾಸಕರು, ಮಂಗಳೂರು ನಗರ ದಕ್ಷಿಣ ನಿರಾಶಾದಾಯಕ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ರಾಜ್ಯದ ಜನತೆಗೆ ಸಾಲದ ಹೊರೆಯ ಭಾಗ್ಯ ನೀಡಿದೆ. ಅಭಿವೃದ್ಧಿಗೆ ಬೇಕಾದ ಚಿಂತನೆಯೇ ಇಲ್ಲದ ಬಜೆಟ್ ಇದಾಗಿದ್ದು, ಕರ್ನಾಟಕವನ್ನು ಸಾಲದತ್ತ ತಳ್ಳಲಿದೆ. ಯುವಕರ ಕೈ ಬಲ ಪಡಿಸುವ ಯೋಜನೆಯಿಲ್ಲ. ಮೀನುಗಾರರನ್ನು ನಿರ್ಲಕ್ಷಿಸಲಾಗಿದೆ. ಪ್ರವಾಸೋದ್ಯಮವನ್ನು ಸರಕಾರ ಮರೆ ತಿದೆ. ಪ್ರಗತಿಗೆ ಕೊಡುಗೆ ನೀಡದ ಇದೊಂದು ನೀರಸ ಬಜೆಟ್ ಆಗಿದೆ. -ಡಾ. ಭರತ್ ಶೆಟ್ಟಿ, ಶಾಸಕರು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮತೋಲಿತ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ 4.48 ಲಕ್ಷ ಕೋ.ರೂ. ಗಾತ್ರದ ಈ ಬಜೆಟ್‌ನಲ್ಲಿ ಜನಪ್ರಿಯ ಗ್ಯಾರಂಟಿ ಯೋಜನೆ ಗಳು ಮತ್ತು ತಾಂತ್ರಿಕ ಅಭಿವೃದ್ಧಿಯ ನಡುವೆ ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ ಮಾಡಲಾಗಿದೆ. ಇದು ಸಿದ್ದರಾಮಯ್ಯ ಅವರ ಅನುಭವದ ಬಜೆಟ್ ಆಗಿದ್ದು, ಬಡವರ ಹಿತ ಕಾಯುವ ಜೊತೆಗೆ ರಾಜ್ಯವನ್ನು ತಾಂತ್ರಿಕವಾಗಿ ಮುನ್ನಡೆಸುವ ದೂರದೃಷ್ಟಿ ಹೊಂದಿದೆ. -ಪದ್ಮರಾಜ್ ಆರ್. ಪೂಜಾರಿ, ಕಾಂಗ್ರೆಸ್ ಮುಖಂಡರು ಅಲ್ಪಸಂಖ್ಯಾತರ ಶಿಕ್ಷಣ ಕ್ಷೇತ್ರಕ್ಕೆ ಒತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡಿಸಿದ್ದಾರೆ. 25 ಹೊಸ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿ ಸುವುದು, 10 ಹೊಸ ವಸತಿ ಶಾಲೆಗಳನ್ನು ಸಿಬಿಎಎಸ್‌ಇ ಪಠ್ಯಕ್ರಮದೊಂದಿಗೆ ಆರಂಭಿಸುವುದು, 117 ಮೌಲಾನಾ ಆಝಾದ್ ಉರ್ದು ಶಾಲೆಗಳನ್ನು ಕೆಪಿಎಸ್ ಮಾದರಿಯಲ್ಲಿ ಉನ್ನತೀಕರಿಸುವುದು, ಅಲ್ಪಸಂಖ್ಯಾತರ ವಸತಿ ಶಾಲೆ ಗಳಲ್ಲಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು 4 ವಸತಿ ಶಾಲೆ, ಅಲ್ಪಸಂಖ್ಯಾತ ಸಮುದಾಯದ 5000 ಬಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಉನ್ನತ ಶಿಕ್ಷಣಕ್ಕಾಗಿ ಲ್ಯಾಪ್‌ಟಾಪ್ ಖರೀದಿಸಲು ತಲಾ 50,000 ರೂ. ಸಹಾಯಧನ ನೀಡುವುದು ಇತ್ಯಾದಿ ಹಲವು ಉತ್ತಮ ಯೋಜನೆಗಳನ್ನು ಪ್ರಕಟಿಸಿದ್ದಕ್ಕಾಗಿ ರಾಜ್ಯ ಸರಕಾರ ವನ್ನು ಅಭಿನಂದಿಸುತ್ತೇವೆ. -ಮೂಸಬ್ಬ ಪಿ. ಬ್ಯಾರಿ, ಅಧ್ಯಕ್ಷರು, ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಸಮಿತಿ, ಮಂಗಳೂರು  ಖಾಸಗಿ ಮೆಡಿಕಲ್ ಕಾಲೇಜಿಗೆ ಸರಕಾರ ಮಣಿದಿದೆ ಕ್ಯಾನ್ಸರ್, ಹೃದಯದ ಆಸ್ಪತ್ರೆಗಳ ಘೋಷಣೆ ಇಲ್ಲ, ಹೊಸ ತಾಲೂಕುಗಳಿಗೆ ಆಸ್ಪತ್ರೆಗಳು ಇಲ್ಲ, ಸಮುದಾಯ ಆಸ್ಪತ್ರೆಗಳ ಸ್ಥಾಪನೆಯೂ ಇಲ್ಲ, ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುದಾನ ಇಲ್ಲ. ಒಟ್ಟಾರೆ ಸರಕಾರ ಖಾಸಗಿ ಮೆಡಿಕಲ್ ಕಾಲೇಜು, ಆಸ್ಪತ್ರೆಗಳ ಲಾಬಿಗೆ ರಾಜ್ಯ ಸರಕಾರ ಮಣಿದಿದೆ. ಬೆಳಗಾವಿ ಅದಿವೇಶನದಲ್ಲಿ ದ.ಕ. ಜಿಲ್ಲೆಗೆ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆ ಮಂಜೂರು ಮಾಡುವ, ಸುರತ್ಕಲ್ ಮತ್ತಿತರ ಕಡೆ ಸಮುದಾಯ ಆಸ್ಪತ್ರೆ ಸ್ಥಾಪನೆ ಮಾಡುವ ಭರವಸೆ ನೀಡಲಾಗಿತ್ತು. ಪುತ್ತೂರಿಗೆ ಘೋಷಿಸಲಾಗಿರುವ ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಅನುದಾನ ಮಂಜೂರು ಮಾಡುವ, ವೆನ್ಲಾಕ್ ಜಿಲ್ಲಾಸ್ಪತ್ರೆಯನ್ನು ಮಲ್ಟಿ ಸ್ಪೆಷಾಲಿಟಿ ಪ್ರಾದೇಶಿಕ ಆಸ್ಪತ್ರೆಯಾಗಿಸಿ ಮೇಲ್ದರ್ಜೆಗೆ ಏರಿಸುವ ಹೇಳಿಕೆ ನೀಡಲಾಗಿತ್ತು. ಆದರೆ ಅದ್ಯಾವುದನ್ನೂ ಈಡೇರಿಸದೆ ನಿರಾಶೆಗೊಳಿಸಲಾಗಿದೆ. -ಮುನೀರ್ ಕಾಟಿಪಳ್ಳ, ಸಂಚಾಲಕರು, ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ದ.ಕ.ಜಿಲ್ಲೆ  ದ.ಕ. ಜಿಲ್ಲೆಯ ಆರೋಗ್ಯ ಕ್ಷೇತ್ರ ಕಡೆಗಣಿಸಿದ ಬಜೆಟ್ ಈ ಸಾಲಿನ ಆಯವ್ಯಯ ಬಜೆಟ್‌ನಲ್ಲಿ ಕರಾವಳಿಯ ಜಿಲ್ಲೆಗಳಿಗೆ ಮತ್ತು ಯುವಜನರಿಗೆ ಯಾವೊಂದು ಕೊಡುಗೆ ಗಳನ್ನು ನೀಡಿಲ್ಲ. ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿ, ಜಯದೇವ, ಕಿದ್ವಾಯಿ ಆಸ್ಪತ್ರೆ ಸ್ಥಾಪನೆಯ ಯಾವೊಂದು ಪ್ರಸ್ತಾಪವಿಲ್ಲ. ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕು ಎಂಬ ಈ ಭಾಗದ ಜನರ ಬೇಡಿಕೆಯನ್ನು ಈ ಬಾರಿಯೂ ಕಡೆಗಣಿಸಲಾಗಿದೆ. ಹಿಂದೆ ಕಾಲೇಜು ಸ್ಥಾಪನೆಯ ಘೋಷಣೆ ಮಾಡಿ ವರ್ಷಗಳು ಉರುಳಿದ ನಂತರ ಈ ಬಾರಿ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆ ನಿರ್ಮಿಸಲು ಅನುಮೋದನೆ ಯನ್ನಷ್ಟೇ ನೀಡಲಾಗಿದೆಯೇ ಹೊರತು ಮೆಡಿಕಲ್ ಕಾಲೇಜು ಸ್ಥಾಪನೆಗೆ ಬಿಡಿಗಾಸನ್ನೂ ಈ ಬಜೆಟ್‌ನಲ್ಲೂ ಮೀಸಲಿ ಟ್ಟಿಲ್ಲ. ಒಟ್ಟಾರೆಯಾಗಿ ಈ ಬಜೆಟ್ ದ.ಕ. ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಬಜೆಟ್ ಆಗಿದೆ. -ಸಂತೋಷ್ ಬಜಾಲ್, ಕಾರ್ಯದರ್ಶಿ, ಡಿವೈಎಫ್‌ಐ ದ.ಕ. ಜಿಲ್ಲೆ  ಸಾರ್ವಜನಿಕ ಶಿಕ್ಷಣದ ವ್ಯವಸ್ಥಿತ ಅವನತಿ ಉನ್ನತ ಶಿಕ್ಷಣದ ಪರಿವರ್ತನೆ ಮತ್ತು ಗುಣಮಟ್ಟದ ಕಲಿಕೆ ಎಂಬ ಆಕರ್ಷಕ ಪದಗಳ ಮುಸುಕಿನಲ್ಲಿದ್ದರೂ ವಾಸ್ತವ ದಲ್ಲಿ ಇದು ಸಾರ್ವಜನಿಕ ಶಿಕ್ಷಣ ಮೂಲಸೌಕರ್ಯವನ್ನು ಕೇಂದ್ರೀಕೃತಗೊಳಿಸುವ ಮತ್ತು ನಿರ್ಲಕ್ಷಿಸುವ ಒಂದು ವ್ಯವಸ್ಥಿತ ಸಂಚಾಗಿದೆ. ಈ ಪ್ರಕ್ರಿಯೆಯ ಹಿಂದೆ ವಿವಾದಾತ್ಮಕ ಕೆಪಿಎಸ್ ನೀತಿಯ ಪ್ರಬಲ ಪ್ರಭಾವವಿದೆ. ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಲಾದ ಪಾಲನ್ನು ಗಮನಿಸಿದರೆ, ಒಟ್ಟಾರೆ ಬಜೆಟ್ ಪ್ರಮಾಣದಲ್ಲಿ ಶಿಕ್ಷಣದ ಪಾಲು ಕಳೆದ ವರ್ಷಕ್ಕಿಂತ ಕುಸಿದಿರುವುದು ಆತಂಕಕಾರಿ ಸಂಗತಿಯಾಗಿದೆ. ಇದು ಸರಕಾರಕ್ಕೆ ಸಾರ್ವಜನಿಕ ಶಿಕ್ಷಣದ ಮೇಲಿರುವ ಬದ್ಧತೆಯ ಕೊರತೆಯನ್ನು ಎತ್ತಿ ತೋರಿಸುತ್ತದೆ. -ವಿನಯ್ ಚಂದ್ರ, ಎಐಡಿಎಸ್‌ಒ-ಸಂಚಾಲಕರು, ದ.ಕ.ಜಿಲ್ಲೆ

ವಾರ್ತಾ ಭಾರತಿ 6 Mar 2026 9:04 pm

5 ಕೋಟಿ ರೂ.ವೆಚ್ಚದಲ್ಲಿ ರಾಯಚೂರಿನಲ್ಲಿ ಎಐ ಶ್ರೇಷ್ಠತಾ ಕೇಂದ್ರ ಸ್ಥಾಪನೆ

ಮಂಗಳೂರಿನಲ್ಲಿ ಐಟಿ ಪಾರ್ಕ್; ಮೈಸೂರು ನಗರವನ್ನು ರಾಜ್ಯದ ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿ

ವಾರ್ತಾ ಭಾರತಿ 6 Mar 2026 9:03 pm

ರಾಜ್ಯ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಸಿಕ್ಕಿದ್ದೇನು?

ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿಗೆ ಐತಿಹಾಸಿಕ ಬಜೆಟ್ ಮಂಡಿಸಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ಕೆಕೆಆರ್ ಡಿಬಿ ಮಂಡಳಿಗೆ 5,000 ಕೋಟಿ ರೂ.ಗಳ ಅನುದಾನ ಹಾಗೂ ಕ್ರಿಯಾ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಘೋಷಿಸಲಾಗಿದೆ. ಮಂಡಳಿಯ ವಿವೇಚನಾ ಹಾಗೂ ಮ್ಯಾಕ್ರೋ ಅನುದಾನಗಳಲ್ಲಿ ಶೇ.40ರಷ್ಟು ಮೊತ್ತವನ್ನು ಆರೋಗ್ಯ, ಶಿಕ್ಷಣ ಹಾಗೂ ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಗಳಿಗೆ ಮೀಸಲಿಡಲಾಗಿದೆ. ರಾಯಚೂರಿನಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹ ನಿರ್ಮಾಣ ಮಾಡಲಾಗುವುದರ ಜೊತೆಗೆ ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಯಾದಗಿರಿ, ಕೊಪ್ಪಳ ಹಾಗೂ ಬೀದರ್ ಜಿಲ್ಲೆಗಳಲ್ಲಿ ಒಟ್ಟು 24 ಕೋಟಿ ರೂ. ವೆಚ್ಚದಲ್ಲಿ ಆರು ಹೊಸ ತಾರಾಲಯಗಳನ್ನು ಸ್ಥಾಪಿಸಲಾಗುವುದು. ಕಲಬುರಗಿಯಲ್ಲಿ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್‌ಗೆ 390 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು, ಈ ಆರ್ಥಿಕ ವರ್ಷದಲ್ಲಿ 75 ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ. ಅಲ್ಲದೇ 400 ಕೋಟಿ ರೂ. ಅಂದಾಜು ವೆಚ್ಚದಲ್ಲಿ 135 ಕಿ.ಮೀ ಉದ್ದದ ವಾಗ್ದಾರಿ–ರಿಬ್ಬನ್‌ಪಳ್ಳಿ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯನ್ನು ಕೆಕೆಆರ್‌ಡಿಬಿ ವತಿಯಿಂದ ಶೇ.50ರಷ್ಟು ಅನುದಾನ ಒದಗಿಸಿಕೊಂಡು ಕೈಗೆತ್ತಿಕೊಳ್ಳಲಾಗುತ್ತದೆ. ಬೀದರ್ ಮಹಾನಗರ ಪಾಲಿಕೆಗೆ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ 200 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಕಲಬುರಗಿ ನಗರಕ್ಕೆ 24x7 ಗುಣಮಟ್ಟದ ಕುಡಿಯುವ ನೀರು ಒದಗಿಸುವ ಕಾಮಗಾರಿಗಳಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಉದ್ಯಮ–ಶಿಕ್ಷಣ ಸಹಭಾಗಿತ್ವದ LEAP “Super 100 Industry–Academia Adoption Program” ಹಾಗೂ ಕೆ-ಕಾಂಬಿನೇಟರ್ ವೇಗವರ್ಧಕ ಕಾರ್ಯಕ್ರಮ ಜಾರಿಗೆ ತರಲಾಗುತ್ತದೆ. ಕಲಬುರಗಿ, ಹೊಸಕೋಟೆ ಮತ್ತು ಮೈಸೂರಿನಲ್ಲಿ ಪ್ಲಗ್-ಅಂಡ್-ಪ್ಲೇ ಸೌಲಭ್ಯ ಹೊಂದಿದ ‘ಲೀಪ್ ಲ್ಯಾಬ್’ಗಳನ್ನು ಸ್ಥಾಪಿಸಲಾಗುತ್ತದೆ. ಕೆಕೆಆರ್‌ಡಿಬಿ ಹಾಗೂ ರಾಜ್ಯ ಸರ್ಕಾರದ ನೆರವಿನಿಂದ ಆಳಂದ, ಅಫಜಲಪುರ, ಚಿತ್ತಾಪುರ, ಯಾದಗಿರಿ, ಹರಪನಹಳ್ಳಿ, ಜೇವರ್ಗಿ ಮತ್ತು ಸುರಪುರ ಪಟ್ಟಣಗಳಲ್ಲಿ ಒಳಚರಂಡಿ ವ್ಯವಸ್ಥೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಜೇವರ್ಗಿಯಲ್ಲಿ ಕೆಕೆಆರ್‌ಡಿಬಿ ಅನುದಾನದಡಿ ನಾಲೆಡ್ಜ್ ಪಾರ್ಕ್ ಸ್ಥಾಪಿಸಲಾಗುತ್ತದೆ ಎಂದರು. ರಾಜ್ಯದ ಜಿಎಸ್‌ಡಿಪಿಗೆ ಕಲ್ಯಾಣ ಕರ್ನಾಟಕದ ಕೊಡುಗೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಪ್ರತ್ಯೇಕ ಯೋಜನೆ, ನೀತಿ ಮತ್ತು ದತ್ತಾಂಶ ವಿಶ್ಲೇಷಣಾ ವಿಭಾಗ ಸ್ಥಾಪನೆ ಮಾಡಲಾಗುತ್ತದೆ. ಬೀದರ್‌ನ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಕಲಬುರಗಿ ಮತ್ತು ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಭೇಟಿ ನೀಡಿದ ಕಲಬುರಗಿ, ವಿಜಯಪುರ, ಬೆಳಗಾವಿ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ ಸಿಬಿಎಸ್‌ಇ ಪಠ್ಯಕ್ರಮದ ನಾಲ್ಕು ಕ್ರೈಸ್ ವಸತಿ ಶಾಲೆಗಳು ಆರಂಭವಾಗಲಿವೆ ಎಂದು ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗಾಗಿ ಬೆಂಗಳೂರು, ಮೈಸೂರು ಸೇರಿದಂತೆ ಕಲಬುರಗಿಯಲ್ಲಿ 10 ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲಾಗುತ್ತದೆ. ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐವಿಎಫ್ ಕೇಂದ್ರ ಸ್ಥಾಪನೆಗೆ ಒಂದು ಕೋಟಿ ರೂ. ಅನುದಾನ ನೀಡಲಾಗುತ್ತದೆ. ಯಾದಗಿರಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುತ್ತದೆ ಎಂದು ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರು ಹೇಳಿದರು. ಗಣಿ ಬಾಧಿತ ಜಿಲ್ಲೆಗಳಾದ ಬಳ್ಳಾರಿ ಸೇರಿದಂತೆ ಇತರೆ ಜಿಲ್ಲೆಗಳ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗುತ್ತದೆ. ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ 25 ಎಕರೆ ಜಮೀನು ನೀಡಲಾಗುತ್ತದೆ. ಖ್ವಾಜಾ ಬಂದೇನವಾಜ್ ಕುರಿತು ಅಹೋರಾತ್ರಿ ನಾಟಕ ಪ್ರದರ್ಶನವೂ ಆಯೋಜಿಸಲಾಗುತ್ತದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪದವಿ ಕಾಲೇಜು, 23 ಪಾಲಿಟೆಕ್ನಿಕ್ ಹಾಗೂ 5 ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ ಎಂದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾದಲ್ಲಿ ಅಂತರ್ಜಲ ಹೆಚ್ಚಿಸಲು ಕೆರೆಗಳ ಆಧುನೀಕರಣ, ಅಣೆಕಟ್ಟು ಹಾಗೂ ಚೆಕ್‌ಡ್ಯಾಂ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು 25 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರಗಾ ಗ್ರಾಮದಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲಾಗುತ್ತದೆ. ಹಜ್ ಯಾತ್ರಿಕರಿಗಾಗಿ ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು. ಕುರಿ ಮತ್ತು ಮೇಕೆ ಸಾಕಾಣಿಕೆ ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25ರಷ್ಟು ಸಹಾಯಧನದಲ್ಲಿ ಘಟಕಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ. ಹೈನುಗಾರಿಕೆಗೆ ಉತ್ತೇಜನ ನೀಡಲು ಆಯ್ದ 10,000 ಫಲಾನುಭವಿಗಳಿಗೆ ಹಸು ಅಥವಾ ಎಮ್ಮೆ ಖರೀದಿಸಲು ಶೇ.25ರಷ್ಟು ಸಹಾಯಧನ ನೀಡಲಾಗುತ್ತದೆ. ಈ ಯೋಜನೆಗಳಿಗೆ ಪ್ರಸಕ್ತ ಸಾಲಿನಲ್ಲಿ 40 ಕೋಟಿ ರೂ. ಮೀಸಲು ಇಡಲಾಗಿದೆ. 2026–27ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 62 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸುವ ಉದ್ದೇಶವಿದ್ದು, ಕಲಬುರಗಿ ಜಿಲ್ಲೆಯ ಚಿತ್ತಾಪುರ, ಆಳಂದ ಮತ್ತು ಅಫಜಲಪುರದಲ್ಲಿ ಶಾಲೆಗಳು ಆರಂಭವಾಗಲಿವೆ ಎಂದು ಹೇಳಿದರು. ಕಲಬುರಗಿಯಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ ಯೂತ್ ಇಂಪ್ಯಾಕ್ಟ್ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಇದರಿಂದ ಪ್ರತಿವರ್ಷ ಸುಮಾರು 2,000 ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಉದ್ಯೋಗಾವಕಾಶ ದೊರೆಯಲಿದೆ. ಇದಲ್ಲದೆ ಲೋಕೋಪಯೋಗಿ ಇಲಾಖೆಯ ಮೂಲಕ ಚಡಚಣ–ಗಾಣಗಾಪುರ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಮೂಲಕ ಗದಗ–ವಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದರು.

ವಾರ್ತಾ ಭಾರತಿ 6 Mar 2026 9:01 pm

ವಾಣಿಜ್ಯ ಮತ್ತು ಕೈಗಾರಿಕೆ: ‘ಧಾರವಾಡ ಕೈಗಾರಿಕಾ ನೋಡ್’ಗೆ ಭೂಸ್ವಾಧೀನಕ್ಕೆ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಮೀಸಲು

ಬೆಂಗಳೂರು, ಮಾ.6: ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ಯೋಜನೆಯಡಿ 30 ಸಾವಿರ ಕೋಟಿ ರೂ.ಗಳ ಹೂಡಿಕೆಯನ್ನು ಆಕರ್ಷಿಸುವುದರೊಂದಿಗೆ 75 ಸಾವಿರ ಉದ್ಯೋಗಾವಕಾಶವನ್ನು ಕಲ್ಪಿಸುವ ಸದುದ್ದೇಶದಿಂದ ‘ಧಾರವಾಡ ಕೈಗಾರಿಕಾ ನೋಡ್’ಗೆ ಸಂಬಂಧಿಸಿದಂತೆ ಸಾವಿರ ಎಕರೆಯನ್ನು ಭೂಸ್ವಾಧೀನ ಮಾಡಲು 600 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಎಂಎಸ್‍ಎಂಇ ಗಳನ್ನು ಪ್ರೋತ್ಸಾಹಿಸಲು ಕೆಎಸ್‍ಎಸ್‍ಐಡಿಸಿ ಮೂಲಕ ವಿವಿಧ ಜಿಲ್ಲೆಗಳಲ್ಲಿ ಎಂಟು ಕೈಗಾರಿಕಾ ವಸಾಹತುಗಳನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 10 ಕೈಗಾರಿಕಾ ವಸಾಹತುಗಳಲ್ಲಿ 1,500 ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದರು. ಕರ್ನಾಟಕ ನಿರಪರಾಧೀಕರಣ (ಉಪಬಂಧಗಳ ತಿದ್ದುಪಡಿ) ಅಧಿನಿಯಮ, 2025ನ್ನು ಜಾರಿಗೆ ತರುವ ಮೂಲಕ ರಾಜ್ಯದ ಒಟ್ಟು 13 ಅಧಿನಿಯಮಗಳಡಿಯಲ್ಲಿನ 278 ಅನುಚ್ಛೇದಗಳನ್ನು ಕ್ರಿಮಿನಲ್ ಅಪರಾಧ ವ್ಯಾಪ್ತಿಯಿಂದ ಹೊರತುಪಡಿಸಲಾಗಿದೆ. ಜೀವಿತಾವಧಿ ಮುಗಿದ ವಾಹನಗಳನ್ನು ವಿಲೇವಾರಿ ಮಾಡಲು ಕೆಐಎಡಿಬಿ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯ ಘಟಕವನ್ನು ಸ್ಥಾಪಿಸಲಾಗುವುದು. ‘ಅತ್ಯಾಧುನಿಕ ನಿರ್ಮಾಣ ಮತ್ತು ಮೂಲಸೌಕರ್ಯ ಸಲಕರಣೆಗಳ ಪರೀಕ್ಷಾ ಘಟಕ’ ಸ್ಥಾಪಿಸಲು ರಾಜ್ಯ ಸರಕಾರದಿಂದ 100 ಎಕರೆ ಜಮೀನನ್ನು ನೀಡುವುದು ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು. ಮುಖ್ಯಾಂಶಗಳು: •ಕೆಐಎಡಿಬಿ ಏರೋಸ್ಪೇಸ್ ಪಾರ್ಕ್‍ನಲ್ಲಿ ಏರೋಸ್ಪೇಸ್ ಕಾಮನ್ ಫೆಸಿಲಿಟಿ ಸೆಂಟರ್‌ ಅನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು, ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನ ಮೀಸಲು. •ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮೈಸೂರು ಲ್ಯಾಂಪ್ ವರ್ಕ್ಸ್‌ ಲಿಮಿಟೆಡ್‍ನ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶ ಕೇಂದ್ರ ಸಂಕೀರ್ಣವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದು. •ಆರ್ಥಿಕ ಅಭಿವೃದ್ಧಿ ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸುವುದು. •ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು ಕೆಐಎಡಿಬಿ ವತಿಯಿಂದ ಅಭಿವೃದ್ಧಿಪಡಿಸುವುದು. •ಟ್ರೀ ಪಾರ್ಕ್ ಯೋಜನೆಯ ಮೊದಲನೆಯ ಹಂತವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆ ಮಾಡುವುದು. ಎರಡನೇ ಹಂತದಡಿ ಸಾಂಸ್ಕೃತಿ ಕ ಮತ್ತು ಕ್ರೀಡಾ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಕೈಗೆತ್ತಿಕೊಳ್ಳುವುದು. •ಎಂಎಸ್‍ಎಂಇ ಕೈಗಾರಿಕೆಗಳನ್ನು ಪ್ರೋ ತ್ಸಾಹಿಸಲು, ಉದ್ಯೋಗಾವಕಾಶವನ್ನು ಕಲ್ಪಿಸಲು ಎಂಎಸ್‍ಇ-ಸಿಡಿಪಿ ಯೋಜನೆಯಡಿ 2026-27ನೇ ಸಾಲಿಗೆ 10 ಕ್ಲಸ್ಟರ್ಗಳನ್ನು 15 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ವಾರ್ತಾ ಭಾರತಿ 6 Mar 2026 8:56 pm

ಟ್ರಂಪ್ ವೆನೆಝುವೆಲಾದಲ್ಲಿ ಮಡುರೊ ಪದಚ್ಯುತಗೊಳಿಸಿದ ಹಾದಿಯನ್ನೇ ಬಿಹಾರದಲ್ಲಿ ನಿತೀಶ್ ಗೆ ಅನುಸರಿಸಿದ ಮೋದಿ: ಜೈರಾಮ್ ರಮೇಶ್ ಆರೋಪ

ಹೊಸದಿಲ್ಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳುವ ನಿರ್ಧಾರವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತೀವ್ರವಾಗಿ ಟೀಕಿಸಿದ್ದು, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೆನೆಝುವೆಲಾದ ನಾಯಕ ನಿಕೋಲಸ್ ಮಡುರೊಗೆ ಮಾಡಿದ್ದನ್ನೇ ಪ್ರಧಾನಿ ನರೇಂದ್ರ ಮೋದಿ ನಿತೀಶ್ ಕುಮಾರ್ ಅವರಿಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಹಾರದ ದೀರ್ಘಕಾಲ ಸೇವೆ ಸಲ್ಲಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ಬಳಿಕ ಶುಕ್ರವಾರ ರಮೇಶ್ ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಿದ ಜೈರಾಮ್ ರಮೇಶ್, “ಟ್ರಂಪ್ ಮಡುರೊಗೆ ಮಾಡಿದ್ದನ್ನು ಮೋದಿ ಅವರು ನಿತೀಶ್ ಕುಮಾರ್ ಅವರಿಗೆ ಮಾಡಿದ್ದಾರೆ. ಇದು ಒಂದು ದಂಗೆ” ಎಂದು ಹೇಳಿದ್ದಾರೆ. ಅಮೆರಿಕದ ಸೇನೆಯು ಜನವರಿ 3ರಂದು ಮಡುರೊ ಹಾಗೂ ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಕ್ಯಾರಕಾಸ್‌ ನಲ್ಲಿರುವ ಅವರ ಮನೆಯಿಂದ ವಶಕ್ಕೆ ಪಡೆದುಕೊಂಡು, ಫೆಡರಲ್ ಮಾದಕವಸ್ತು ಕಳ್ಳಸಾಗಣೆ ಆರೋಪಗಳ ಮೇಲೆ ನ್ಯೂಯಾರ್ಕ್‌ ಗೆ ಕರೆದೊಯ್ದ ಘಟನೆಗೆ ಅವರು ಹೋಲಿಕೆ ಮಾಡಿದ್ದಾರೆ. ಸುದ್ದಿಮಾಧ್ಯಮಗಳೊಂದಿಗೆ ಮಾತನಾಡಿದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ರಮೇಶ್, ತಮ್ಮ ಟೀಕೆಗೆ ಒತ್ತು ನೀಡಲು ಅಂತರರಾಷ್ಟ್ರೀಯ ಸಾದೃಶ್ಯಗಳನ್ನು ಬಳಸಿದರು. ಪಾಟ್ನಾದಲ್ಲಿ ಬಿಜೆಪಿ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆಗಳ ನಡುವೆ ಈ ಬದಲಾವಣೆ ನಡೆಯುತ್ತಿರುವುದು, ಕೆಲವೇ ತಿಂಗಳುಗಳ ಹಿಂದೆ ನಿತೀಶ್ ಕುಮಾರ್ ಅವರನ್ನು ಮತ್ತೆ ಅಧಿಕಾರಕ್ಕೆ ತಂದ ಮತದಾರರಿಗೆ ಮಾಡಿದ ದ್ರೋಹವಾಗಿದೆ ಎಂದು ಅವರು ಆರೋಪಿಸಿದರು. “ಜಿ2 ಆಯೋಜಿಸಿದ ನಾಯಕತ್ವದ ದಂಗೆ ಮತ್ತು ಆಡಳಿತ ಬದಲಾವಣೆ ನಡೆದಿದೆ. ಇದು ಜನರ ಜನಾದೇಶಕ್ಕೆ ಮಾಡಿದ ದೊಡ್ಡ ದ್ರೋಹ” ಎಂದು ರಮೇಶ್ ಹೇಳಿದ್ದಾರೆ. ವಿರೋಧ ಪಕ್ಷದ ಹಲವಾರು ನಾಯಕರು ಕೂಡ ರಮೇಶ್ ಅವರ ಅಭಿಪ್ರಾಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಿತೀಶ್ ಕುಮಾರ್ ಅವರ ಅಚ್ಚರಿಯ ನಿರ್ಧಾರವನ್ನು ಪ್ರಶ್ನಿಸಿರುವ ಅವರು, ಇದನ್ನು ರಾಜಕೀಯ ಅನುಕೂಲತೆಗೆ ತೆಗೆದುಕೊಂಡ ಕ್ರಮವೆಂದು ಟೀಕಿಸಿದ್ದಾರೆ. ಕೆಲವರು ಈ ಬೆಳವಣಿಗೆಯನ್ನು ರಾಜಕೀಯವಾಗಿ ಬದಿಗೆ ಸರಿಸುವ ಕ್ರಮಕ್ಕೆ ಹೋಲಿಸಿದ್ದು, NDA ದಲ್ಲಿ ಬಿಜೆಪಿಯ ಪ್ರಾಬಲ್ಯದಿಂದ ನಾಯಕತ್ವ ಬದಲಾವಣೆಗೆ ಒತ್ತಡ ಬಂದಿದೆ ಎಂದು ಆರೋಪಿಸಿದ್ದಾರೆ. ಎರಡು ದಶಕಗಳಿಗೂ ಹೆಚ್ಚು ಕಾಲ ಬಿಹಾರವನ್ನು ಹಲವು ಅವಧಿಗಳಲ್ಲಿ ಮುನ್ನಡೆಸಿರುವ ಅನುಭವಿ ರಾಜಕಾರಣಿ ನಿತೀಶ್ ಕುಮಾರ್, ತಮ್ಮ ನಿರ್ಧಾರದ ಬಗ್ಗೆ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಮೇಲ್ಮನೆಗೆ ತೆರಳಿದ ನಂತರವೂ ರಾಜ್ಯದ ಅಭಿವೃದ್ಧಿಗಾಗಿ ಸೇವೆ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ. “ಎರಡು ದಶಕಗಳಿಗೂ ಹೆಚ್ಚು ಕಾಲ ನೀವು ನನ್ನ ಮೇಲೆ ನಂಬಿಕೆ ಮತ್ತು ಬೆಂಬಲ ತೋರಿದ್ದೀರಿ. ಅದರಿಗಾಗಿ ನಾನು ಕೃತಜ್ಞನಾಗಿದ್ದೇನೆ. ಮುಂದಿನ ದಿನಗಳಲ್ಲೂ ಬಿಹಾರದ ಅಭಿವೃದ್ಧಿಗೆ ನನ್ನ ಸೇವೆ ಮುಂದುವರಿಯುತ್ತದೆ” ಎಂದು ಅವರು ಬರೆದಿದ್ದಾರೆ. ಆದರೆ ಬಿಹಾರದ ಜನರು ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಮತ ನೀಡಿದ್ದರು. ಅವರು ಮತ ನೀಡಿದ್ದು ಬಿಜೆಪಿ ನೇತೃತ್ವದ ನಾಯಕತ್ವ ಬದಲಾವಣೆಗೆ ಅಥವಾ ಅವರ ಹುದ್ದೆಯಿಂದ ನಿರ್ಗಮಿಸಲು ಅಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಎಂದು ಅವರು ಪುನರುಚ್ಚರಿಸಿದ್ದಾರೆ. ಈ ನಿರ್ಧಾರದ ರಾಜಕೀಯ ಪರಿಣಾಮಗಳು ತಳಮಟ್ಟದಲ್ಲೂ ಗೋಚರಿಸುತ್ತಿವೆ. ನಿತೀಶ್ ಕುಮಾರ್ ಅವರ ಪಕ್ಷವಾದ ಜನತಾದಳ ಯುನೈಟೆಡ್ ಬೆಂಬಲಿಗರಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಕೆಲವರು ಪಾಟ್ನಾದಲ್ಲಿರುವ ಪಕ್ಷದ ಕಚೇರಿಗಳ ಎದುರು ಪ್ರತಿಭಟನೆ ನಡೆಸಿದ್ದಾರೆ. ಬಿಹಾರ ವಿಧಾನಸಭೆಯಲ್ಲಿ ಕಡಿಮೆ ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಪಕ್ಷ, ಈ ಬೆಳವಣಿಗೆಯನ್ನು ಮತದಾರರ ವಿಶ್ವಾಸವನ್ನು ದುರ್ಬಲಗೊಳಿಸುವ ರಾಜಕೀಯಕ್ಕೆ ಉದಾಹರಣೆಯೆಂದು ಟೀಕಿಸಿದೆ. ಇಂತಹ ರಾಜಕೀಯ ಬದಲಾವಣೆಗಳನ್ನು ನಿಯಂತ್ರಿಸದಿದ್ದರೆ ಇದೇ ರೀತಿಯ ಘಟನೆಗಳು ಇತರ ರಾಜ್ಯಗಳಲ್ಲಿಯೂ ಸಂಭವಿಸಬಹುದು ಎಂದು ಜೈರಾಮ್ ರಮೇಶ್ ಕಳವಳ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 6 Mar 2026 8:56 pm

ಮಾ.10ರಿಂದ ಬೆಂಗಳೂರು-ಮಂಗಳೂರು ಮಧ್ಯೆ ವಿಮಾನ ಸಂಚಾರ ಆರಂಭ

ಮಂಗಳೂರು, ಮಾ.6: ಬೆಂಗಳೂರು-ಮಂಗಳೂರು ಮಧ್ಯೆ ಮಾ.10ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಡರಾತ್ರಿ ದೈನಂದಿನ ವಿಮಾನ ಸಂಚಾರ ಆರಂಭಿಸಲಿದೆ. ಐಎಕ್ಸ್ 5971 ಬೆಂಗಳೂರಿನಿಂದ ರಾತ್ರಿ 9:25ಕ್ಕೆ ಹೊರಟು ರಾತ್ರಿ 10:40ಕ್ಕೆ ಮಂಗಳೂರಿಗೆ ತಲುಪಲಿದೆ. ಐಎಕ್ಸ್ 5972 ಮಂಗಳೂರಿನಿಂದ ರಾತ್ರಿ 11:10ಕ್ಕೆ ಹೊರಟು ರಾತ್ರಿ 12:20ಕ್ಕೆ ಬೆಂಗಳೂರು ತಲುಪಲಿದೆ. ಈ ವಿಮಾನ ಸಂಚಾರ ಮಾ.28ರವರೆಗೆ ಇರುತ್ತದೆ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ವಾರ್ತಾ ಭಾರತಿ 6 Mar 2026 8:52 pm

ಬೈಂದೂರು: ಮನೆಗೆ ನುಗ್ಗಿ ನಗ ನಗದು ಕಳವು

ಬೈಂದೂರು, ಮಾ.6: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಯ ಮೌಲ್ಯದ ನಗ ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಪಡುವರಿ ಗ್ರಾಮದಲ್ಲಿರುವ ಗುರುಕಿರಣ್(42) ಎಂಬವರ ಮನೆಗೆ ಮಾ.5ರಂದು ಬೆಳಗ್ಗೆ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಗೊಡ್ರೇಜ್‌ನಲ್ಲಿ ಇರಿಸಿದ್ದ ಒಟ್ಟು ಸುಮಾರು 63 ಗ್ರಾಂ ತೂಕದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಚೈನ್ ರಿಂಗ್ ಕೀ ಒಲೆ ಬ್ರಾಸ್ ಲೈಟ್ ಪೆಂಡೆಂಟ್ ಮತ್ತು ನಗದು 20000ರೂ. ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸೊತ್ತಿನ ಒಟ್ಟು ಮೌಲ್ಯ 520000ರೂ. ಅಂದಾಜಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 6 Mar 2026 8:50 pm

ಚಿಕ್ಕೋಡಿಯ ಕಿರಣ್‌ ಕಮತೆಗೆ ಯುಪಿಎಸ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹತ್ತರವಾಟ ಗ್ರಾಮದ ಕಿರಣ್‌ ಸಣ್ಣಪ್ಪ ಕಮತೆ (29) ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 53ನೇ ರ‍್ಯಾಂಕ್ ಮತ್ತು ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಮಹತ್ವದ ಸಾಧನೆ ಮೆರೆದಿದ್ದಾರೆ. ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ಪದವಿ ಪಡೆದಿರುವ ಕಿರಣ್‌ ಕಮತೆ, ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಿರಣ್‌ ಅವರ ತಂದೆ ಡಾ.ಸಣ್ಣಪ್ಪ ಕಮತೆ ನಿಡಸೋಸಿಯ ಹೀರಾ ಶುಗರ್ಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ರುಕ್ಮಿಣಿ ಗೃಹಿಣಿಯಾಗಿಯಾಗಿದ್ದಾರೆ. ಕಿರಣ್‌ ಅವರ ವಿದ್ಯಾಭ್ಯಾಸದ ಹಾದಿ ವೈವಿಧ್ಯಮಯವಾಗಿದೆ. ಅವರು 1 ಮತ್ತು 2ನೇ ತರಗತಿಯನ್ನು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬೆಜೋಗಾಯಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿದ್ದಾರೆ. 3 ರಿಂದ 8ನೇ ತರಗತಿಯನ್ನು ಹುಬ್ಬಳ್ಳಿಯ ಎಂ.ಆರ್. ಸಾಖರೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತರು. 9 ಮತ್ತು 10ನೇ ತರಗತಿಯನ್ನು ಗದಗದ ಕೆಎಲ್ಇ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ನಿಪ್ಪಾಣಿಯ ಜಿ.ಐ. ಬಾಗೇವಾಡಿ ಕಾಲೇಜಿನಲ್ಲಿ ಪಿಯುಸಿ ಸೈನ್ಸ್ ಮುಗಿಸಿದರು. ಗೋಗಟೆ ಕಾಲೇಜಿನಲ್ಲಿ ಬಿಇ ಸಿವಿಲ್ ಪದವಿ ಪಡೆದ ಅವರು, 2023ರಲ್ಲಿ ಪಿಡಬ್ಲುಡಿಯಲ್ಲಿ ಸಹಾಯಕ ಎಂಜಿನಿಯರ್ ಆಗಿ ನೇಮಕಾತಿ ಹೊಂದಿದ್ದರು. ಯುಪಿಎಸ್‌ಸಿ ಸಾಧಕ ಕಿರಣ್‌ ಕಮತೆ ಅವರು ಮಾತನಾಡಿ, ಇದು ನನ್ನ ಕೊನೆಯ ಅವಕಾಶವಾಗಿತ್ತು. ಕೆಲಸ ಮಾಡುತ್ತಲೇ ದಿನಕ್ಕೆ ಐದಾರು ಗಂಟೆ ಓದುತ್ತಿದ್ದೆ. ಏನಾದರೂ ಆಗಲಿ ಈ ಸಲ ಪಾಸ್ ಆಗಲೇಬೇಕು ಎಂದುಕೊಂಡು ಪರೀಕ್ಷೆ ಬರೆದಿದ್ದೆ. 250 ರ‍್ಯಾಂಕ್ ಒಳಗೆ ಬರುವ ನಿರೀಕ್ಷೆ ಇತ್ತು. ಆದರೆ 53ನೇ ರ್ಯಾಂಕ್ ಬಂದಿರುವುದು, ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಸಿಕ್ಕಿರುವುದಕ್ಕೆ ಬಹಳಷ್ಟು ಖುಷಿಯಾಗುತ್ತಿದೆ ಎಂದು ಸಂತಸ ಹಂಚಿಕೊಂಡರು. ಬಾಲ್ಯದಲ್ಲಿ ತಂದೆಯವರು ಯುಪಿಎಸ್‌ಸಿ ಕನಸು ಬಿತ್ತಿದ್ದರು. ಕಳೆದ ಆರು ವರ್ಷಗಳಿಂದ ಸತತವಾಗಿ ಪ್ರಯತ್ನಿಸಿದ್ದೆ. ತಂದೆ-ತಾಯಿಗೆ ಈ ಸಾಧನೆಯನ್ನು ಅರ್ಪಿಸುತ್ತೇನೆ. ಪತ್ನಿ ಲೋಚನಾ ಅವರ ಸಹಕಾರವೂ ಇತ್ತು. ಸಹೋದರಿ, ಸಂಬಂಧಿಕರು, ಸ್ನೇಹಿತರು, ಸಹೋದ್ಯೋಗಿಗಳು ಸೇರಿ ಎಲ್ಲರೂ ಪ್ರೋತ್ಸಾಹಿಸಿದ್ದರು. ಅವರೆಲ್ಲರಿಗೂ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಕಿರಣ್‌ ಭಾವುಕರಾಗಿ ತಿಳಿಸಿದರು. ಕಿರಣ್ ಅವರ ತಂದೆ ಡಾ. ಸಣ್ಣಪ್ಪ ಕಮತೆ ಅವರು ಮಾತನಾಡಿ, ಶಿಕ್ಷಕರ ಮಕ್ಕಳು, ಸಾಮಾನ್ಯ ಕುಟುಂಬದಿಂದ ಬಂದಿರುವ ಮನೆಯ ಮಕ್ಕಳು ಸಾಧನೆ ಮಾಡುವುದು ಅತ್ಯಂತ ಹೆಮ್ಮೆಯ ಸಂಗತಿ. ಇದು ಇತರರಿಗೂ ಪ್ರೇರಣೆಯಾಗುತ್ತದೆ. ನಮ್ಮ ಮಗನ ಕಠಿಣ ಪರಿಶ್ರಮಕ್ಕೆ ಇಂದು ಫಲ ಸಿಕ್ಕಿದೆ. ಬಹಳ ಖುಷಿಯಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 6 Mar 2026 8:49 pm

ಮಾದಕ ವಸ್ತುಗಳ ಸೇವನೆಯಲ್ಲಿ ಹೆಣ್ಣುಮಕ್ಕಳೇ ಹೆಚ್ಚು: ಡಾ. ಭಗವಾನ್ ಬಿ.ಸಿ.

ನಶಾಮುಕ್ತ ಅಭಿಯಾನಕ್ಕೆ ಚಾಲನೆ

ವಾರ್ತಾ ಭಾರತಿ 6 Mar 2026 8:47 pm

15 ವರ್ಷಗಳಿಂದ ತಲೆಮರೆಸಿಕೊಂಡಿದ್ದ 10 ಪ್ರಕರಣಗಳ ಆರೋಪಿಯ ಬಂಧನ

ಉಡುಪಿ, ಮಾ.6: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 15ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ಕುಂಭಾಶಿ ಕೊರವಾಡಿ ರಸ್ತೆಯ ಮೂಲದ, ಪ್ರಸ್ತುತ ಬೆಂಗಳೂರು ಆರ್‌ಕೆ ಮಠ ಲೇಔಟ್ ಬಾಡಿಗೆಮನೆ ನಿವಾಸಿ ವಿಘ್ನೇಶ್ವರ ಐತಾಳ್(56) ಎಂದು ಗುರುತಿಸಲಾಗಿದೆ. ಈತ ಪ್ರಕರಣ ದಾಖಲಾದ ಬಳಿಕ ಅಂದರೆ 2011ರಿಂದ ತಲೆಮರೆಸಿಕೊಂಡಿದ್ದು, ಆತನ ವಿರುದ್ಧದ ಎಲ್ಲಾ ಪ್ರಕರಣಗಳಲ್ಲಿ ದೋಷರೋಪಣಾ ಪತ್ರ ತಯಾರಿಸಿ ನ್ಯಾಯಾಲಯಕ್ಕೆ ನಿವೇದಿಸಲಾಗಿತ್ತು. ಆರೋಪಿ ವಿಘ್ನೇಶ್ವರ ಐತಾಳ್ ನ್ಯಾಯಾಲಯಕ್ಕೆ ಹಾಜರಾಗದೇ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದು ಸುಮಾರು 10ಕ್ಕಿಂತಲೂ ಹೆಚ್ಚು ಬಾರಿ ವಾರೆಂಟ್ ಹೊರಡಿಸಲಾಗಿತ್ತು. ಬಳಿಕ ನ್ಯಾಯಾಲಯವು ಆತನ ವಿರುದ್ಧ ತಲೆಮರೆಸಿಕೊಂಡ ಆರೋಪಿ ಎಂದು ಘೋಷಿಸಿತ್ತು. ಈತನನ್ನು ಉಡುಪಿ ನಗರ ಪೊಲೀಸ್ ಠಾಣಾ ಪ್ರಭಾರ ನಿರೀಕ್ಷಕ ಮಹೇಶ ಪ್ರಸಾದ್ ಮಾರ್ಗದರ್ಶನದಲ್ಲಿ, ಉಡುಪಿ ನಗರ ಠಾಣಾ ಎಸ್ಸೈ ಭರತೇಶ ಕಂಕಣವಾಡಿ, ಸಿಬ್ಬಂದಿ ಪ್ರಸನ್ನ ಸಿ., ರಮೇಶ, ಆನಂದ ಅವರ ತಂಡ ಮಾ.5ರಂದು ಬೆಂಗಳೂರಿನ ತಲಘಟ್ಟಪುರದಲ್ಲಿ ಪತ್ತೆ ಹಚ್ಚಿ, ವಶಕ್ಕೆ ಪಡೆದುಕೊಂಡಿದೆ. ಮಾ.6ರಂದು ನ್ಯಾಯಲಯದ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ವಾರ್ತಾ ಭಾರತಿ 6 Mar 2026 8:47 pm

ರಾಷ್ಟ್ರೀಯ ಹೆದ್ದಾರಿ ಇಲಾಖೆ ಎಇಇ ಮಂಜುನಾಥ್ ನಾಯಕ್ ನಿಧನ

ಕಾರ್ಕಳ, ಮಾ.6: ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಎಇಇ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರ್ಕಳ ಕುಕ್ಕುಂದೂರು ನಿವಾಸಿ ಮಂಜುನಾಥ್ ನಾಯಕ್(52) ಗುರುವಾರ ಶೃಂಗೇರಿಯಲ್ಲಿ ಹೃದಯಾಘಾತದಿಂದ ನಿಧನರಾದರು. ಕಳೆದ 20 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಇವರು, ಪ್ರಸ್ತುತ ಶೃಂಗೇರಿ ಉಪ ವಿಭಾಗದಲ್ಲಿ ಎಇಇ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಸುದೀರ್ಘ ಸೇವಾವಧಿಯಲ್ಲಿ ತೀರ್ಥ ಹಳ್ಳಿ, ಶೃಂಗೇರಿ, ಹೆಬ್ರಿ, ಉಡುಪಿ-ಮಲ್ಪೆ ಹಾಗೂ ಕಾರ್ಕಳ-ಮಾಳ ಭಾಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗಳ ಅನುಷ್ಠಾನದಲ್ಲಿ ಅತ್ಯಂತ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ವಾರ್ತಾ ಭಾರತಿ 6 Mar 2026 8:45 pm

ಇರಾನ್ ಯುದ್ದವನ್ನು ಟ್ರಂಪ್ ಆಡಳಿತ ನಿಭಾಯಿಸುವ ಬಗ್ಗೆ ಗಲ್ಫ್ ರಾಷ್ಟ್ರಗಳ ಅತೃಪ್ತಿ

ಅಬುಧಾಬಿ, ಮಾ.6: ಅಮೆರಿಕದ ಮಿಲಿಟರಿ ವ್ಯವಸ್ಥೆಗಳಿಗೆ ನೆಲೆ ಒದಗಿಸಿರುವ ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಯನ್ನು ಇರಾನ್ ತೀವ್ರಗೊಳಿಸುತ್ತಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತವು ಯುದ್ದವನ್ನು ನಿಭಾಯಿಸುವ ಬಗ್ಗೆ ಪ್ರದೇಶದ ಮಿತ್ರರಾಷ್ಟ್ರಗಳು ತೀವ್ರ ಅತೃಪ್ತಿ ಸೂಚಿಸಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಇರಾನ್‍ನ ದಾಳಿಗೆ ತಯಾರಾಗಲು ತಮಗೆ ಸಾಕಷ್ಟು ಸಮಯವನ್ನು ನೀಡಲಾಗಿಲ್ಲ. ಇರಾನ್‍ನ ವಿರುದ್ದ ಅಮೆರಿಕ-ಇಸ್ರೇಲ್ ದಾಳಿಗಳ ಬಗ್ಗೆ ಮುಂಚಿತವಾಗಿ ಸೂಚನೆ ನೀಡಲಾಗಿಲ್ಲ. ಯುದ್ದವು ಪ್ರದೇಶದಲ್ಲಿ ವಿನಾಶಕಾರಿ ಪರಿಣಾಮಕ್ಕೆ ಕಾರಣವಾಗುತ್ತದೆ ಎಂಬ ತಮ್ಮ ಎಚ್ಚರಿಕೆಯನ್ನು ಅಮೆರಿಕ ಕಡೆಗಣಿಸಿದೆ ಎಂದು ಗಲ್ಫ್ ರಾಷ್ಟ್ರಗಳು ದೂರಿವೆ. ಯುದ್ಧ ಪ್ರಾರಂಭವಾದಾಗಿನಿಂದ ಯುಎಇ, ಖತರ್, ಕುವೈತ್ ಸೇರಿದಂತೆ ಐದು ಅರಬ್ ರಾಷ್ಟ್ರಗಳನ್ನು ಗುರಿಯಾಗಿಸಿ ಇರಾನ್ ಕನಿಷ್ಠ 380 ಕ್ಷಿಪಣಿಗಳು ಮತ್ತು 1,480ಕ್ಕೂ ಹೆಚ್ಚು ಡ್ರೋನ್‍ಗಳನ್ನು ಪ್ರಯೋಗಿಸಿವೆ. ಈ ದಾಳಿಗಳಲ್ಲಿ ಕನಿಷ್ಠ 13 ಜನರು ಮೃತಪಟ್ಟಿರುವುದಾಗಿ ಸ್ಥಳೀಯ ಮೂಲಗಳು ಹೇಳಿವೆ. ಈ ಮಧ್ಯೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಾದೇಶಿಕ ಮಿತ್ರರ ಜೊತೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಶ್ವೇತಭವನ ಹೇಳಿದೆ. ಇರಾನ್‍ನ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗಳು 90%ದಷ್ಟು ಕಡಿಮೆಯಾಗಿದೆ. ತನ್ನ ನೆರಹೊರೆಯ ಮೇಲೆ ಇರಾನ್ ನಡೆಸುತ್ತಿರುವ ದಾಳಿಯು ನಮ್ಮ ದೇಶ ಮತ್ತು ಮಿತ್ರರಾಷ್ಟ್ರಗಳಿಗೆ ಈ ಬೆದರಿಕೆಯನ್ನು ತೊಡೆದುಹಾಕಲು ಅಧ್ಯಕ್ಷ ಟ್ರಂಪ್ ನಡೆಸುತ್ತಿರುವ ಪ್ರಯತ್ನದ ಮಹತ್ವವನ್ನು ಸಾಬೀತುಪಡಿಸಿದೆ ಎಂದು ಶ್ವೇತಭವನದ ವಕ್ತಾರೆ ಅನ್ನಾ ಕೆಲ್ಲಿ ಪ್ರತಿಪಾದಿಸಿದ್ದಾರೆ. ಇರಾನ್‍ನಲ್ಲಿನ ಯುದ್ದಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ಬೆಳವಣಿಗೆಗಳು: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಆಕ್ರಮಣ ಮತ್ತು ಅದಕ್ಕೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕದ ನೆಲೆಗಳ ಮೇಲೆ ಇರಾನ್ ನಡೆಸಿದ ದಾಳಿಗೆ ಸಂಬಂಧಿಸಿದ ಕೆಲವು ಮಹತ್ವದ ಬೆಳವಣಿಗೆಗಳು: ►  ಈಗ ನಡೆಯುತ್ತಿರುವ ಪ್ರಾದೇಶಿಕ ಘರ್ಷಣೆಯಲ್ಲಿ ಇರಾನ್ ಮಿಲಿಟರಿ ದಾಳಿಗಳನ್ನು ಎಚ್ಚರಿಕೆಯಿಂದ ಅಮೆರಿಕದ ಗುರಿಗಳತ್ತ ನಿರ್ದೇಶಿಸಲಾಗಿದೆ. ನೆರೆಯ ಅರಬ್ ರಾಷ್ಟ್ರಗಳಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಇರಾನ್‍ನ ವಿದೇಶಾಂಗ ಇಲಾಖೆ ಪ್ರತಿಪಾದಿಸಿದೆ. ►  ಕುವೈತ್‌ ನಗರದ ಅಲಿ ಅಲ್-ಸಲೇಮ್ ವಾಯುನೆಲೆಯ(ಅಮೆರಿಕ ವಾಯುಪಡೆಯ ತುಕಡಿ ಇರುವ ಸೌಲಭ್ಯ) ಮೇಲೆ ಶುಕ್ರವಾರ ಮತ್ತೆ ಇರಾನ್ ದಾಳಿ ನಡೆಸಿದ್ದು ದಟ್ಟ ಹೊಗೆ ಆಗಸಕ್ಕೆ ವ್ಯಾಪಿಸಿರುವ ವೀಡಿಯೊ ವೈರಲ್ ಆಗಿದೆ. ►  ಇರಾನ್ ಮೇಲೆ ಇಸ್ರೇಲ್‍ನ ವೈಮಾನಿಕ ದಾಳಿ. ಟೆಹ್ರಾನ್ ನಗರದಲ್ಲಿ ಇರಾನ್ ಆಡಳಿತದ ಮೂಲಸೌಕರ್ಯವನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಫೆಬ್ರವರಿ 28ರಂದು ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದ ಇರಾನ್‍ನ ಪರಮೋಚ್ಛ ನಾಯಕ ಖಾಮಿನೈ ಅವರ ಭೂಗತಃ ಬಂಕರ್ ಮೇಲೆ 50 ಜೆಟ್‍ಗಳು ದಾಳಿ ನಡೆಸಿವೆ. ಈ ಬಂಕರ್ ಅನ್ನು ಇರಾನ್‍ನ ಹಿರಿಯ ಅಧಿಕಾರಿಗಳು ಬಳಸುತ್ತಿದ್ದರು ಎಂದು ಇಸ್ರೇಲ್ ಹೇಳಿದೆ. ►  ಮಧ್ಯಪ್ರಾಚ್ಯ ಸಂಘರ್ಷ ವಿಸ್ತರಿಸುತ್ತಿದ್ದು ಇರಾನ್ ವಿರುದ್ಧ ದಾಳಿ ನಡೆಸುವಂತೆ ಇರಾಕ್‍ನಲ್ಲಿರುವ ಇರಾನ್‍ನ ಕುರ್ದಿಶ್ ಪಡೆಗಳಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಹುರಿದುಂಬಿಸಿದ್ದಾರೆ. ►  ಶುಕ್ರವಾರ ವಾಯು ರಕ್ಷಣಾ ವ್ಯವಸ್ಥೆಯು 9 ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು 109 ಡ್ರೋನ್‍ಗಳನ್ನು ಹೊಡೆದುರುಳಿಸಿದೆ. 3 ಡ್ರೋನ್‍ಗಳು ಯುಎಇ ಪ್ರದೇಶದೊಳಗೆ ಬಿದ್ದಿವೆ ಎಂದು ಯುಎಇ ರಕ್ಷಣಾ ಇಲಾಖೆ ಹೇಳಿದೆ. ►  ಮಧ್ಯ ಪ್ರಾಚ್ಯ ಯುದ್ದ ಶುಕ್ರವಾರ 7ನೇ ದಿನಕ್ಕೆ ಮುಂದುವರಿದಿರುವಂತೆಯೇ, ಯುದ್ದದಲ್ಲಿ 2,100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇರಾನ್‍ನ 16 ನಗರಗಳ ಮೇಲೆ ದಾಳಿ ನಡೆದಿರುವುದಾಗಿ ವರದಿಯಾಗಿದೆ. ►  ಇರಾನ್ ಬೇಷರತ್ ಶರಣಾಗಬೇಕು. ರಾಜತಾಂತ್ರಿಕ ಪ್ರಯತ್ನಗಳಿಗೆ ಬಾಗಿಲು ಮುಚ್ಚಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಘೋಷಿಸಿದ್ದಾರೆ.

ವಾರ್ತಾ ಭಾರತಿ 6 Mar 2026 8:29 pm

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು, ಮಾ.6: ಅಧಿಕ ಬಡ್ಡಿ ಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂದರ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರಿನ ಲಕ್ಕು ಕೊಂಡಾ ರೆಡ್ಡಿ (46) ಬಂಧಿತ ಆರೋಪಿಯಾಗಿದ್ದಾನೆ. ಈತ 2015ರಲ್ಲಿ ಮೈತ್ರಿ ಪ್ಲಾಂಟೇಶನ್ ಆ್ಯಂಡ್ ಹಾರ್ಟಿಕಲ್ಚರ್ ಪ್ರೈ.ಲಿ. ಇದರ ಹೆಸರಿನಲ್ಲಿ ಅಧಿಕ ಬಡ್ಡಿ ಕೊಡುವುದಾಗಿ ಹೇಳಿ ಸಾರ್ವಜನಿಕ ರಿಂದ ಹಣ ಸಂಗ್ರಹಿಸಿ ಬಳಿಕ ವಂಚಿಸಿದ್ದ. 2018ರ ಬಳಿಕ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಕೊಂಡಿದ್ದ. ಈತನ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಬಂದರ್ ಪೊಲೀಸರು ಗುರುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಾರ್ತಾ ಭಾರತಿ 6 Mar 2026 8:21 pm

ಯುದ್ಧದ ನಡುವೆ ಟ್ರಂಪ್‌ ಗಾಗಿ ಪಾದ್ರಿಗಳಿಂದ ಶ್ವೇತಭವನದಲ್ಲಿ ಪ್ರಾರ್ಥನೆ

ದೇಶದ ವಿವಿಧ ಭಾಗಗಳಿಂದ ಪಾದ್ರಿಗಳ ಗುಂಪನ್ನು ಶ್ವೇತಭವನಕ್ಕೆ ಆಹ್ವಾನಿಸಿ ವಿಶೇಷ ಪ್ರಾರ್ಥನೆ

ವಾರ್ತಾ ಭಾರತಿ 6 Mar 2026 8:21 pm

ಮಂಗಳೂರು ಜೈಲಿನಲ್ಲಿ ಬೀಡಿಗಾಗಿ ಕೂಗಾಟ: 8 ಮಂದಿ ಕೈದಿಗಳ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಮಾ.6: ನಗರದ ಜೈಲಿನಲ್ಲಿ ಬೀಡಿ ಬೇಕು ಎಂದು ಕೂಗಾಡಿ ದಾಂಧಲೆ ಎಸಗಿದ ಘಟನೆ ಬುಧವಾರ ನಡೆದಿದ್ದು, ಈ ಬಗ್ಗೆ ಜೈಲು ಅಧೀಕ್ಷಕ ಶರಣಬಸಪ್ಪ ನೀಡಿದ ದೂರಿನಂತೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ವಿಚಾರಣಾಧೀನ ಕೈದಿ ಪ್ರದೀಪ ಪೂಜಾರಿ ಎಂಬಾತ ಕಚೇರಿಯ ಮುಂದೆ ಬಂದು ಜೋರಾಗಿ ಕೂಗಾಡುತ್ತಾ ಕಬ್ಬಿಣದ ಸರಳುಗಳಿಗೆ ಬಡಿಯುತ್ತಾ ಕಲ್ಲನ್ನು ಎಸೆಯುತ್ತ ತನಗೆ ಬೀಡಿ ಬೇಕು ಎಂದು ಗಲಾಟೆ ಮಾಡತೊಡಗಿದ. ತಕ್ಷಣ ತಾನು ಬುದ್ಧಿವಾದ ಹೇಳಿದರೂ ಕೇಳದೆ ಕಚೇರಿಗೆ ನುಗ್ಗಿ ದಾಂಧಲೆ ಮಾಡಲು ಪ್ರಯತ್ನಿಸಿದ. ಆವಾಗ ಕರ್ತವ್ಯ ನಿರತ ಸಿಬ್ಬಂದಿ ಪ್ರದೀಪ ಪೂಜಾರಿಯನ್ನು ತಡೆದರು. ಬಳಿಕ ಎಲ್ಲಾ ಕೈದಿಗಳನ್ನು ಎ ಮತ್ತು ಬಿ ವಿಭಾಗಗಳ ಹತ್ತಿರ ಕರೆದುಕೊಂಡು ಹೋಗಿ ಅವರಿರುವ ಕೊಠಡಿಗಳಿಗೆ ಹೋಗುವಂತೆ ತಿಳಿಸಿದರೂ ಕೇಳಲಿಲ್ಲ. ಪ್ರದೀಪ ಪೂಜಾರಿಯ ಜೊತೆ  ಸಯ್ಯದ್,  ಅರ್ಫಾಝ್, ಇಮ್ರಾನ್ ಯಾನೆ ಇಂಭಾ,  ಆಫ್ರೀದ್, ಶೇಖ್ ತಹೀಮ್, ವಾಜಿದ್ ಯಾನೆ ವಾಜಿ,  ನಾಸೀರ್ ಯಾನೆ ಶಾಖಿರ್ ಯಾನೆ ಚಾಕಿ ಕೂಡ ಸೇರಿಕೊಂಡು ಸೇದಲು ಬೀಡಿ ಕೊಡದಿದ್ದರೆ ನಾವು ಕೊಠಡಿಗಳಿಗೆ ಹೋಗುವುದಿಲ್ಲ ಎಂದು ಜೋರಾಗಿ ಕೂಗಾಡಿ ಸಿಸಿಟಿವಿ ಕ್ಯಾಮರಾವನ್ನು ಮೇಲ್ಬಾಗದ ದಿಕ್ಕಿಗೆ ತಿರುಗಿಸಿ ಬೀಗಮುದ್ರೆ ಮಾಡದಂತೆ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ಅಧೀಕ್ಷಕರು ದೂರಿನಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 6 Mar 2026 8:18 pm

2025ರ UPSC ಅಂತಿಮ ಫಲಿತಾಂಶ | ಕರ್ನಾಟಕಕ್ಕೆ ಕಿರಣ್ ಕಾಮತೆ ಟಾಪರ್, ರಾಜ್ಯದ 22 ಅಭ್ಯರ್ಥಿಗಳು ತೇರ್ಗಡೆ

ಬೆಂಗಳೂರು, ಮಾ.6: ಈ ಸಾಲಿನ ನಾಗರಿಕ ಸೇವಾ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದ 22 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ 53 ರ‍್ಯಾಂಕ್ ಗಳಿಸಿರುವ ಕಿರಣ್ ಕಾಮತೆ ಅವರು ಕರ್ನಾಟಕ ರಾಜ್ಯದ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 82ನೇ ರ‍್ಯಾಂಕ್ ಗಳಿಸಿರುವ ಸಂದೀಪ್ ಬಾಡದ್ ಅವರು ,ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಈ ಸಲದ ನಾಗರಿಕ ಸೇವಾ ಪರೀಕ್ಷಾ ಫಲಿತಾಂಶದಲ್ಲಿ ಬೆಂಗಳೂರಿನ ಕೋಚಿಂಗ್ ಸೆಂಟರ್ ‘ಇಂಡಿಯಾ 4 ಐಎಎಸ್ ಅಕಾಡಮಿ’ಯ ಅಮೋಘ ಸಾಧನೆ ಮಾಡಿದೆ. ರಾಜ್ಯದಲ್ಲಿ ಯುಪಿಎಸ್‌ಸಿ ಉತ್ತೀರ್ಣರಾದ 22 ಮಂದಿ ಅಭ್ಯರ್ಥಿಗಳ ಪೈಕಿ 19 ಮಂದಿ ಈ ಕೋಚಿಂಗ್ ಸೆಂಟರ್‌ನಲ್ಲಿ ತರಬೇತಿ ಪಡೆದವರಾಗಿದ್ದಾರೆ.

ವಾರ್ತಾ ಭಾರತಿ 6 Mar 2026 8:18 pm

4.54 ಕೋಟಿ ಮಂದಿಗೆ ಪ್ರತಿ ತಿಂಗಳು ‘ಇಂದಿರಾ ಆಹಾರ ಕಿಟ್’ ಘೋಷಣೆ

ಬೆಂಗಳೂರು : ರಾಜ್ಯದ ಜನರ ಆರೋಗ್ಯ ಹಾಗೂ ಪೌಷ್ಟಿಕಾಂಶಕ್ಕೆ ಒತ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‍ನಲ್ಲಿ ‘ಇಂದಿರಾ ಆಹಾರ ಕಿಟ್’ ಘೋಷಣೆ ಮಾಡಿದ್ದಾರೆ. ನಮ್ಮ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಮೂರು ವರ್ಷಗಳಲ್ಲಿ ಈ ಯೋಜನೆಗಾಗಿ 17,167 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸ್ತುತ ನೀಡಲಾಗುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ತಿಂಗಳು ಪೌಷ್ಟಿಕಾಂಶವುಳ್ಳ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಣೆ ಮಾಡಲಾಗುವುದು. ಇದಕ್ಕಾಗಿ 2026-27ನೆ ಸಾಲಿನಲ್ಲಿ 6,200 ಕೋಟಿ ರೂ. ಗಳನ್ನು ಮೀಸಲಿರಿಸಲಾಗಿದೆ ಎಂದು ಪ್ರಕಟಿಸಿದ್ದಾರೆ. ಆಹಾರ ಧಾನ್ಯಗಳ ವಿತರಣೆಗಾಗಿ ನೀಡಲಾಗುವ ಚಿಲ್ಲರೆ ಹಾಗೂ ಸಗಟು ಲಾಭಾಂಶದ ಪಾವತಿಯಲ್ಲಿ ವಿಳಂಬವನ್ನು ನಿವಾರಿಸಲು ಫಸ್ಟ್ ಅಪ್ಲಿಕೇಷನ್ ಮೂಲಕ ಲಾಭಾಂಶ ನೇರವಾಗಿ ಪಾವತಿಸಲಾಗುವುದು. ಪ್ರಸ್ತುತ ಜಾರಿಯಲ್ಲಿರುವ ಇಲಾಖೆಯ ಸಹಾಯವಾಣಿ (1967) ವ್ಯವಸ್ಥೆಯನ್ನು ಸ್ವಯಂ ಚಾಲಿತ ದೂರು ಕೇಂದ್ರ, ಧ್ವನಿ ಚಾಟ್ಬಾಟ್ ಮತ್ತು ಲೈವ್ ಕರೆ ವರ್ಗಾವಣೆ ವ್ಯವಸ್ಥೆಗಳನ್ನು ಒಳಗೊಂಡ ಎಐ ಆಧಾರಿತ ಸ್ಮಾರ್ಟ್ ಅನ್ನವಾಣಿ’ ಆಗಿ ಪರಿವರ್ತಿಸಲಾಗುವುದು ಎಂದು ಅವರು ಉಲ್ಲೇಖಿಸಿದರು. ದಾಸೋಹ ಯೋಜನೆಯಡಿ ಈಗಾಗಲೇ ರಾಜ್ಯದಾದ್ಯಂತ 274 ಕಲ್ಯಾಣ ಸಂಸ್ಥೆಗಳ 32,059 ಫಲಾನುಭವಿಗಳಿಗೆ 14 ಕೋಟಿ ರೂ. ವೆಚ್ಚದಲ್ಲಿ ಆಹಾರ ಭದ್ರತೆಯನ್ನು ಒದಗಿಸಲಾಗುತ್ತಿದ್ದು, ಪ್ರಸಕ್ತ ವರ್ಷದಲ್ಲಿ 34 ಹೊಸ ಕಲ್ಯಾಣ ಸಂಸ್ಥೆಗಳಲ್ಲಿ ಇರುವ 6,701 ಫಲಾನುಭವಿಗಳಿಗೂ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.

ವಾರ್ತಾ ಭಾರತಿ 6 Mar 2026 8:15 pm

ರಾಜಿ ಮಾಡಿಕೊಂಡಿರುವ ವ್ಯಕ್ತಿಯ ಬಾಹ್ಯ ಒತ್ತಡದ ನಿರ್ಧಾರಗಳೇ ಭಾರತದ ವಿದೇಶಾಂಗ ನೀತಿ : ರಾಹುಲ್ ಗಾಂಧಿ ಟೀಕೆ

ಹೊಸದಿಲ್ಲಿ, ಮಾ. 6: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ತನ್ನ ವಾಗ್ದಾಳಿಯನ್ನು ತೀವ್ರಗೊಳಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ರಾಜಿ ಮಾಡಿಕೊಂಡಿರುವ ವ್ಯಕ್ತಿಯೋರ್ವ ಬಾಹ್ಯ ಒತ್ತಡಕ್ಕೆ ಒಳಗಾಗಿ ತೆಗದುಕೊಳ್ಳುವ ನಿರ್ಧಾರಗಳೇ ಈಗಿನ ಭಾರತದ ವಿದೇಶ ನೀತಿಯಾಗಿದೆ ಎಂದು ಹೇಳಿದ್ದಾರೆ. ರಶ್ಯ ತೈಲವನ್ನು ಖರೀದಿಸಲು ಭಾರತೀಯ ತೈಲ ಶುದ್ಧೀಕರಣ ಘಟಕಗಳಿಗೆ ಅಮೆರಿಕವು ತಾತ್ಕಾಲಿಕ ಅನುಮೋದನೆ ನೀಡಿದ ಬಳಿಕ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ರಾಜತಾಂತ್ರಿಕ ಚಟುವಟಿಕೆಗಳು ನಿರಂತರವಾಗಿ ಕ್ಷೀಣಿಸುತ್ತಿರುವುದನ್ನು ಮತ್ತು ಸರಕಾರದ ವಿದೇಶ ನೀತಿಯನ್ನು ಖಂಡಿಸಿ ಕಾಂಗ್ರೆಸ್ ಮತ್ತು ಅದರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತ್ಯೇಕ ಸಾಮಾಜಿಕ ಮಾಧ್ಯಮ ಸಂದೇಶಗಳನ್ನು ಹಾಕಿದ್ದಾರೆ. ‘‘ಭಾರತೀಯ ವಿದೇಶ ನೀತಿಯು ನಮ್ಮ ಜನರ ಸಾಮೂಹಿಕ ಇಚ್ಛೆಯಾಗಿದೆ. ನಮ್ಮ ವಿದೇಶ ನೀತಿಗೆ ನಮ್ಮ ಇತಿಹಾಸ, ನಮ್ಮ ಭೂಗೋಳ ಹಾಗೂ ಸತ್ಯ ಮತ್ತು ಅಹಿಂಸೆ ಆಧಾರಿತ ನಮ್ಮ ಆಧ್ಯಾತ್ಮಿಕ ಮೌಲ್ಯಗಳು ಆಧಾರವಾಗಿರಬೇಕು’’ ಎಂದು ರಾಹುಲ್ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಹಾಕಿದ ಸಂದೇಶದಲ್ಲಿ ಹೇಳಿದ್ದಾರೆ. ‘‘ಆದರೆ, ನಾವು ಇಂದು ನೋಡುತ್ತಿರುವುದು ವಿದೇಶ ನೀತಿಯಲ್ಲ. ಅದು ರಾಜಿ ಮಾಡಿಕೊಂಡಿರುವ ವ್ಯಕ್ತಿಯೊಬ್ಬ ಒತ್ತಡಕ್ಕೊಳಗಾಗಿ ತೆಗೆದುಕೊಳ್ಳುತ್ತಿರುವ ನಿರ್ಧಾರಗಳಾಗಿವೆ’’ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹೇಳಿದರು. ಫೆಬ್ರವರಿ 11ರಂದು ಬಜೆಟ್ ಕುರಿತ ಚರ್ಚೆಯ ವೇಳೆ ತಾನು ಲೋಕಸಭೆಯಲ್ಲಿ ಮಾಡಿದ ಭಾಷಣವನ್ನೂ ಅವರು ಈ ಸಂದೇಶದ ಜೊತೆಗೆ ಹಂಚಿಕೊಂಡಿದ್ದಾರೆ. ಭಾರತದ ಇಂಧನ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲಾಗುತ್ತಿದೆ ಎಂಬುದಾಗಿ ಅವರು ತನ್ನ ಭಾಷಣದಲ್ಲಿ ಹೇಳಿದ್ದರು. ‘‘ನಾವು ಯಾರಿಂದ ತೈಲ ಖರೀದಿಸಬೇಕು ಅಥವಾ ಖರೀದಿಸಬಾರದು ಎನ್ನುವುದನ್ನು ಅಮೆರಿಕ ನಮಗೆ ಹೇಳುತ್ತದೆ. ರಶ್ಯದಿಂದ ಖರೀದಿಸಬೇಕೇ, ಇರಾನ್‌ನಿಂದ ಖರೀದಿಸಬೇಕೇ ಅಥವಾ ಖರೀದಿಸಬಾರದೇ ಎನ್ನುವುದನ್ನು ಅಮೆರಿಕ ನಿರ್ಧರಿಸುತ್ತದೆ. ಅದನ್ನು ನಮ್ಮ ಪ್ರಧಾನಿ ನಿರ್ಧರಿಸುವುದಿಲ್ಲ’’ ಎಂದು ರಾಹುಲ್ ಹೇಳಿದ್ದರು. ‘‘ಅದಕ್ಕೆ ಪುರಾವೆ ಈಗ ನಮ್ಮೆದುರಿಗೆ ಇದೆ. ಈ ವಿಷಯದಲ್ಲಿ ನಮ್ಮ ರಾಜಿ ಮಾಡಿಕೊಂಡ ಪ್ರಧಾನಿಯ ಮೌನವು ನಾಚಿಕೆಗೇಡಿನ ಸಂಗತಿಯಾಗಿದೆ’’ ಎಂದು ಅವರು ತನ್ನ ಸಂದೇಶದಲ್ಲಿ ಬರೆದಿದ್ದಾರೆ. ಮೋದಿಗೆ ಬ್ಲ್ಯಾಕ್‌ಮೇಲ್: ಖರ್ಗೆ ಭಾರತದ ರಕ್ಷಣಾ ಸ್ವಾಯತ್ತೆ ಮತ್ತು ರಾಷ್ಟ್ರೀಯ ಸಮಗ್ರತೆಯು ತೀವ್ರ ಬೆದರಿಕೆಗೆ ಒಳಗಾಗಿದೆ, ಯಾಕೆಂದರೆ, ಎಪ್‌ಸ್ಟೀನ್ ಫೈಲ್‌ಗಳು ಮತ್ತು ಅದಾನಿ ವಿರುದ್ಧದ ಮೊಕದ್ದಮೆಯನ್ನು ಇಟ್ಟುಕೊಂಡು ಪ್ರಧಾನಿ ಮೋದಿಯನ್ನು ಅಮೆರಿಕವು ಬ್ಲ್ಯಾಕ್‌ಮೇಲ್ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. 30 ದಿನಗಳ ಕಾಲ ರಶ್ಯದಿಂದ ತೈಲ ಖರೀದಿಸಲು ಅಮೆರಿಕವು ಭಾರತಕ್ಕೆ ‘‘ಅನುಮೋದನೆ’’ ನೀಡಿರುವುದು, ಮೋದಿ ಸರಕಾರವು ನಿರಂತರವಾಗಿ ಅಮೆರಿಕದ ಗುಲಾಮನಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಸ್ಪಷ್ಟವಾಗಿ ಸಾಬೀತುಪಡಿಸಿದೆ ಎಂದು ಹೇಳಿದರು. ‘‘ಅಮೆರಿಕ ಬಳಸಿರುವ ಭಾಷೆಯು ನಿರ್ಬಂಧಗಳಿಗೆ ಒಳಗಾದ ದೇಶಗಳಿಗೆ ಬಳಸುವ ಭಾಷೆಯಾಗಿದೆ, ಭಾರತಕ್ಕೆ ಅಲ್ಲ. ಭಾರತವು ಜಾಗತಿಕ ವ್ಯವಸ್ಥೆಯಲ್ಲಿ ಜವಾಬ್ದಾರಿಯುತ ಮತ್ತು ಸಮಾನ ಪಾಲುದಾರನಾಗಿದೆ’’ ಎಂದು ಕಾಂಗ್ರೆಸ್ ಮುಖ್ಯಸ್ಥರು ತನ್ನ ಸಂದೇಶದಲ್ಲಿ ಹೇಳಿದ್ದಾರೆ.

ವಾರ್ತಾ ಭಾರತಿ 6 Mar 2026 8:14 pm

ಮಂಗಳೂರು| ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ, ದಂಡ

ಮಂಗಳೂರು, ಮಾ.6: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಲ್ಲದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗೌರೀಶ್ ಯಾನೆ ಸುಜಿತ್ ಎಂಬಾತನಿಗೆ 2 ವರ್ಷ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಜಪ್ಪಿನಮೊಗರು ಬಳಿ ಆರೋಪಿ ಗೌರೀಶ್ ಯಾನೆ ಸುಜಿತ್ ಕಾರಿನಲ್ಲಿ ಮಾರಕಾಯುಧಗಳೊಂದಿಗೆ ತಿರುಗಾಡುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಎಸ್ಸೈ ಕಬ್ಬಾಳ್‌ರಾಜ್ ಆರೋಪಿಯನ್ನು ವಶಕ್ಕೆ ಪಡೆಯಲು ಹೋದಾಗ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಯತ್ನಿಸಿದ್ದ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಮಾರುತಿ ಕಮತೆ ವಾದ, ಪ್ರತಿವಾದಗಳನ್ನು ಆಲಿಸಿ ಆರೋಪಿಗೆ ಭಾರತೀಯ ದಂಡ ಸಂಹಿತೆ ಕಲಂ 353ಕ್ಕೆ 2 ವರ್ಷಗಳ ಸಾದಾ ಕಾರಾಗೃಹ ವಾಸದ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ಕಲಂ 307ರಡಿ 2 ವರ್ಷಗಳ ಸಾದಾ ಕಾರಾಗೃಹವಾಸ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ಆಯುಧಗಳ ಅಧಿನಿಯಮ ಕಲಂ 25ಕ್ಕೆ 2 ವರ್ಷಗಳ ಸಾದಾ ಕಾರಾಗೃಹವಾಸದ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಎಲ್ಲ ಶಿಕ್ಷೆಗಳನ್ನು ಏಕಕಾಲಕ್ಕೆ ಅನುಭವಿಸಲು ಆದೇಶದಲ್ಲಿ ತಿಳಿಸಲಾಗಿದೆ. ಕಂಕನಾಡಿ ಪೊಲೀಸ್ ನಿರೀಕ್ಷಕರಾಗಿದ್ದ ಅಶೋಕ್ ಪಿ. ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ನ್ಯಾಯಾಲ ಯಕ್ಕೆ ಸಲ್ಲಿಸಿದ್ದರು. ಸರಕಾರದ ಪರವಾಗಿ ಚೌಧರಿ ಮೋತಿಲಾಲ ವಾದ ಮಂಡಿಸಿರುತ್ತಾರೆ.

ವಾರ್ತಾ ಭಾರತಿ 6 Mar 2026 8:11 pm

ಬೇಡಿಕೆ ಈಡೇರಿಸಲು ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ

ಮಂಗಳೂರು: ಕನಿಷ್ಟ ವೇತನ ಪರಿಷ್ಕರಣೆಯ ಅಂತಿಮ ಅಧಿಸೂಚನೆಯನ್ನು ತಕ್ಷಣ ಹೊರಡಿಸಬೇಕು, ವೈಜ್ಞಾನಿಕ ವಾಗಿ ಕನಿಷ್ಟಕೂಲಿ ಜಾರಿಗೊಳಿಸಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಎಐಟಿಯುಸಿ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ವಿ.ಸೀತಾರಾಂ ಬೇರಿಂಜ, ಉಪಾಧ್ಯಕ್ಷ ಬಿ.ಶೇಖರ್ ಮಾತನಾಡಿದರು. ಸಹ ಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ ಸ್ವಾಗತಿಸಿದರು. ಶಮಿತ ಬಿಸಿ ರೋಡ್ ವಂದಿಸಿದರು. ಎಐಟಿಯುಸಿ ಜಿಲ್ಲಾ ಕೋಶಾಧಿಕಾರಿ ಎ.ಪ್ರಭಾಕರ್ ರಾವ್, ಮಾಜಿ ಅಧ್ಯಕ್ಷ ವಿ.ಕುಕ್ಯಾನ್, ಸಹ ಕಾರ್ಯದರ್ಶಿ ಕರುಣಾಕರ್ ಮಾರಿಪಲ್ಲ, ಹರ್ಷಿತ್ ಬಂಟ್ವಾಳ, ಕೃಷ್ಣಪ್ಪ ಪಿಲಿಕುಲ, ಸುಧಾಕರ್ ಕಲ್ಲೂರು, ಗೀತಾ ಬಜಾಲ್, ರೇವತಿ ಎಳಿಂಜೆ, ಮೀನಾಕ್ಷಿ ಶಾಂತಿಪಲ್ಕೆ, ವಾರಿಜ ಬರ್ವ, ಭಾರತಿ ಪ್ರಶಾಂತ್, ಮೋಹನ ಅರಳ, ಕುಸುಮ ಕಲ್ಲಿಗೆ, ಮೋಹಿನಿ, ಜಯಂತ, ಎಂ.ಬಿ.ಭಾಸ್ಕರ್ ನೇತೃತ್ವ ವಹಿಸಿದರು. *ಮಣಿಪಾಲದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕಾರ್ಮಿಕ ನಿರೀಕ್ಷಕರ ಮೂಲಕ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ವಿ.ಸೀತಾರಾಂ ಬೇರಿಂಜ, ಬಿ.ಶೇಖರ್, ಸುರೇಶ್ ಕುಮಾರ್, ವಿ.ಕುಕ್ಯಾನ್, ಕರುಣಾಕರ್, ಉಡುಪಿಯ ಎಐಟಿಯುಸಿ ನಾಯಕರಾದ ಶಿವಾನಂದ, ಶಶಿಕಲ ಗಿರೀಶ್, ಸುಚಿತ್ರ ಶೆಟ್ಟಿ, ಅಪ್ಪಿ, ಭೂಪೇಶ್ ಪಾಲನ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 6 Mar 2026 8:06 pm

ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಪೇ ಪಾರ್ಕಿಂಗ್ ವ್ಯವಸ್ಥೆ!

ಪುರಸಭೆಯ ನಡೆ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ

ವಾರ್ತಾ ಭಾರತಿ 6 Mar 2026 8:03 pm

ಕೋಡಿ ಬ್ಯಾರೀಸ್‌ನಲ್ಲಿ ನೂತನ ಬಿಎಡ್ ಪ್ರಶಿಕ್ಷಣಾರ್ಥಿಗಳ ಪರಿಚಯಾತ್ಮಕ ಕಾರ್ಯಕ್ರಮ

ಕುಂದಾಪುರ, ಮಾ.6: ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ 2025-26ರ ಬಿ.ಎಡ್ ಪ್ರಶಿಕ್ಷಣಾರ್ಥಿಗಳ ಪರಿಚಯಾತ್ಮಕ ಕಾರ್ಯಕ್ರಮ ವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ತ ಮಂಡಳಿಯ ಸದಸ್ಯ ಡಾ.ಆಸೀಫ್ ಬ್ಯಾರಿ ಮಾತನಾಡಿ, ಶಿಕ್ಷಣವು ಜೀವನವನ್ನು ನಿರ್ಧರಿಸುತ್ತದೆ ಮತ್ತು ಮುಂದಿನ ಮಕ್ಕಳ ಭವಿಷ್ಯವನ್ನು ರೂಪಿಸುತ್ತದೆ. ಶಿಕ್ಷಕರಾಗುವ ನೀವು ಸಮಾಜಕ್ಕೆ ಮಾದರಿಯಾಗಿರಬೇಕು. ಅಲ್ಲದೆ ಸಮಾಜಕ್ಕಾಗಿ ಮೌಲ್ಯಭರಿತ ಆದರ್ಶ ವಿದ್ಯಾರ್ಥಿ ಗಳನ್ನು ರೂಪಿಸುವ ಶ್ರೇಷ್ಠ ಶಿಕ್ಷಕರಾಗಬೇಕು ಎಂದು ತಿಳಿಸಿದರು. ಬ್ಯಾರೀಸ್ ಸಮೂಹ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಶೆಟ್ಟಿ ಮಾತನಾಡಿ, ಕನಸುಗಳನ್ನು ಪೂರೈಸಲು ನಿಮ್ಮನ್ನು ನೀವು ಮೊದಲು ಸಿದ್ಧಪಡಿಸಿಕೊಳ್ಳಬೇಕು. ನೀವು ವಿದ್ಯಾರ್ಥಿಗಳಿಗೆ ಪ್ರೀತಿಯ ಗುರುಗಳಾಗುವ ಪ್ರಯತ್ನವನ್ನು ಮಾಡ ಬೇಕು. ಪ್ರತಿದಿನ ಹೊಸ ಹೊಸ ಕನಸುಗಳನ್ನು ಗುರಿಗಳನ್ನು ಹೊಂದಿಕೊಂಡು ಈ ಸಂಸ್ಥೆಗೆ ಬರಬೇಕು. ಸಮಾಜ ವನ್ನು ಉತ್ತಮವಾಗಿ ರೂಪಿಸುವ ಕಡೆಗೆ ಚಿಂತಿಸಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಬ್ಯಾರೀಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಅಬ್ದುಲ್ ರೆಹಮಾನ್ ಬ್ಯಾರಿ ಮಾತನಾಡಿ, ನೀವು ಶಿಕ್ಷಕರಾಗಿ ಮಕ್ಕಳ ಭವಿಷ್ಯವನ್ನು ರೂಪಿಸಬೇಕು. ದೇಶಕ್ಕೆ ಉತ್ತಮ ಪ್ರಜೆಯನ್ನು ನೀಡುವ ಜವಾಬ್ದಾರಿಯನ್ನು ಶಿಕ್ಷಕರು ಹೊಂದಿದ್ದಾರೆ ಎಂದು ತಿಳಿಸಿದರು. ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಫಿರ್ದೋಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲ ಪ್ರವೀಣ್ ಕುಮಾರ್ ಕೆ.ಪಿ. ಕಾಲೇಜಿನ ಶಿಸ್ತು ರೀತಿ-ನೀತಿಗಳ ಕುರಿತು ತಿಳಿಸಿದರು. ಪ್ರಾಧ್ಯಾಪಕ ಡಾ.ವೆಂಕಟೇಶ್ ಎಸ್. ಸ್ವಾಗತಿಸಿದರು. ಶಂಶಾದ್ ವಂದಿಸಿದರು. ಅನಂತ ಭಟ್ ಕಾರ್ಯಕ್ರಮ ನಿರೂಪಿಸಿದರು

ವಾರ್ತಾ ಭಾರತಿ 6 Mar 2026 7:57 pm

ಕೋಡಿ: ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯಕ್ಕೆ ದ್ವಿತೀಯ ರ‍್ಯಾಂಕ್

ಕುಂದಾಪುರ, ಮಾ.6: ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ 2022-24ನೇ ಶೈಕ್ಷಣಿಕ ಸಾಲಿನ ಪ್ರಶಿಕ್ಷಣಾರ್ಥಿಯಾದ ಅನುಪಮಾ ಸಿ.ಶೆಟ್ಟಿ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಫೆಬ್ರವರಿ 2025ರಲ್ಲಿ ನಡೆಸಲ್ಪಟ್ಟ ಬಿ.ಎಡ್ ವಾರ್ಷಿಕ ಪರೀಕ್ಷೆಯಲ್ಲಿ ಶೇ.92.79 ಅಂಕ ಗಳಿಸುವ ಮೂಲಕ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ. ಇವರ ಅಮೋಘ ಶೈಕ್ಷಣಿಕ ಸಾಧನೆಯನ್ನು ಪ್ರಶಂಶಿಸಿ ಬ್ಯಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ, ಸಂಚಾಲಕ ಸಯ್ಯದ್ ಮೊಹಮ್ಮದ್ ಬ್ಯಾರಿ, ಟ್ರಸ್ಟಿಗಳಾದ ಡಾ.ಆಸೀಫ್ ಬ್ಯಾರಿ, ನಿರ್ದೇಶಕಿ ಅಶ್ವಿನಿ ಶೆಟ್ಟಿ, ಪ್ರಾಂಶುಪಾಲೆ ಡಾ.ಫಿರ್ದೋಸ್, ಉಪಪ್ರಾಂಶುಪಾಲ ಪ್ರವೀಣ್ ಕುಮಾರ್ ಕೆ.ಪಿ., ಪ್ರಾಧ್ಯಾಪಕ ವೃಂದ, ಬೋಧಕೇತರ ವೃಟದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಾರ್ತಾ ಭಾರತಿ 6 Mar 2026 7:55 pm

ಇಎಸ್‌ಐ ಆಸ್ಪತ್ರೆಗೆ ಖಾಯಂ ತಜ್ಞ ವೈದ್ಯರು ಸಹಿತ ವಿವಿಧ ಬೇಡಿಕೆಗೆ ಆಗ್ರಹಿಸಿ ಧರಣಿ

ಕುಂದಾಪುರ, ಮಾ.6: ಕಾರ್ಮಿಕರ ರಾಜ್ಯ ವಿಮಾ ಯೋಜನೆ(ಇಎಸ್‌ಐ) ಉಳಿಸುವಂತೆ, ಖಾಯಂ ತಜ್ಞ ವೈದ್ಯರನ್ನು ನೇಮಕ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಶುಕ್ರವಾರ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ(ಸಿಐಟಿಯು) ವತಿಯಿಂದ ಕುಂದಾಪುರದ ಇಎಸ್‌ಐ ಕಚೇರಿ ಎದುರು ಧರಣಿ ನಡೆಸಲಾಯಿತು. ಜಿಲ್ಲಾ ಹಂಚು ಕಾರ್ಮಿಕರ ಸಂಘದ ಅಧ್ಯಕ್ಷ ವಿ.ನರಸಿಂಹ ಮಾತನಾಡಿ, ಕುಂದಾಪುರದ ಇಎಸ್‌ಐ ಡಿಸ್ಪೆನ್ಸರಿ ವ್ಯಾಪ್ತಿ ಯಲ್ಲಿ 15 ಸಾವಿರದಷ್ಟು ವಿಮಾ ದಾರರು, ಕುಟುಂಬದವರಿದ್ದಾರೆ. 11 ವರ್ಷಗಳಿಂದ ಖಾಯಂ ವೈದ್ಯರಿಲ್ಲದೆ, ಈಗ ವೈದ್ಯರೊಬ್ಬರನ್ನು ನೀಡಿದ್ದಾರೆ. ಇದರೊಂದಿಗೆ ಇನ್ನೋರ್ವ ವೈದ್ಯರ ಅಗತ್ಯವಿದೆ. ತುರ್ತು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಅವಕಾಶ ಒದಗಿಸ ಬೇಕಾಗಿದೆ. ಖಾಲಿ ಇರುವ ಹುದ್ದೆಯನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಅವರು ಆಗ್ರಹಿಸಿದರು. ಪ್ರಧಾನ ಕಾರ್ಯದರ್ಶಿ ಎಚ್.ನರಸಿಂಹ ಮಾತನಾಡಿ, ಇಲ್ಲಿ ಔಷಧಿ ಕೊರತೆಯಿದ್ದು, ಎಲ್ಲಿಂದಲೋ ಪೂರೈಕೆ ಮಾಡಲು ಸಿಬಂದಿ ಕಷ್ಟ ಪಡುತ್ತಿದ್ದಾರೆ. ನೂರು ಬೆಡ್‌ನ ಇಎಸ್‌ಐ ಜಿಲ್ಲಾಸ್ಪತ್ರೆ ಮಂಜೂರಾಗಿ 4 ವರ್ಷ ಕಳೆದರೂ, ಇನ್ನೂ ಯಾವುದೇ ಕಾಮಗಾರಿ ಶುರುವಾಗಿಲ್ಲ. ಇದು ಖಾಸಗಿ ಲಾಬಿಯೋ ಅಥವಾ ಆಳುವ ವರ್ಗಕ್ಕೆ ಇಚ್ಚಾಶಕ್ತಿ ಇಲ್ಲವೋ ಎಂದು ಪ್ರಶ್ನಿಸಿದರು. ಕುಂದಾಪುರ ಡಿಸ್ಪೆನ್ಸರಿ ಮೊದಲ ಮಹಡಿ ಕಟ್ಟಡದಿಂದ ಸಮಸ್ಯೆ ಯಾಗುತ್ತಿದ್ದು, ನೆಲ ಮಾಳಿಗೆಯಲ್ಲಿ ಕಾರ್ಯನಿರ್ವ ಹಿಸುವಂತೆ, ಸ್ಥಳೀಯ ಇಎಸ್‌ಐ ಕಚೇರಿ ಮಂಜೂರು, ಕಾರ್ಮಿಕರ ರಾಜ್ಯ ವಿಮಾ ಯೋಜನೆ ಉಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೆಂಚು ಕಾರ್ಮಿಕರ ಸಂಘದ ಉಪಾಧ್ಯಕ್ಷ ಜಿ.ಡಿ. ಪಂಜು, ಪ್ರಮುಖರಾದ ಚಂದ್ರಶೇಖರ್, ಸುರೇಂದ್ರ ಎಚ್., ಚಂದ್ರ ಪೂಜಾರಿ, ಪ್ರಕಾಶ್ ಕೋಣಿ, ಮಹಾಬಲ ವಡೇರಹೋಬಳಿ, ಆನಂದ ಶೆಟ್ಟಿ, ಲಕ್ಷ್ಮಣ ಮೊದಲಾದವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 6 Mar 2026 7:51 pm

ಕೊಲ್ಲೂರು ಮೂಕಾಂಬಿಕಾ ದೇವಾಲಯ ಪ್ರಾಧಿಕಾರ ರಚನೆಯನ್ನು ಸ್ವಾಗತಿಸಿದ ಬಾಬು ಶೆಟ್ಟಿ ಕೊಲ್ಲೂರು

ಉಡುಪಿ, ಮಾ.6: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದಿನ ಬಜೆಟ್ ಮಂಡನೆ ವೇಳೆ ಪ್ರಕಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆಯ ಘೋಷಣೆಯನ್ನು ಕೊಲ್ಲೂರಿನ ಶ್ರೀಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷ ಬಾಬುಇ ಶೆಟ್ಟಿ ತೆಗ್ಗರ್ಸೆ ಸ್ವಾಗತಿಸಿದ್ದಾರೆ. ಇದೊಂದು ತುಂಬಾ ಒಳ್ಳೆಯ ನಿರ್ಧಾರವಾಗಿದ್ದು, ಇದರಿಂದ ರಾಜ್ಯದ ಅಗ್ರಗಣ್ಯ ತೀರ್ಥಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅಭಿವೃದ್ಧಿಗೆ ಅವಕಾಶವಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಇದುವರೆಗೆ ದೇವಾಲಯದಲ್ಲಿ ಸಂಗ್ರಹವಾದ ಹಣದಿಂದಲೇ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿತ್ತು. ಪ್ರಾಧಿಕಾರ ರಚನೆಯ ಸರಕಾರದ ನಿರ್ಧಾರದಿಂದ ಇನ್ನು ಮುಂದೆ ಸರಕಾರವೂ ಕೊಲ್ಲೂರಿನ ಅಭಿವೃದ್ಧಿಗೆ ಕೈಜೋಡಿಸಲಿದೆ ಎಂದರು. ಸಾರ್ವಜನಿಕರ ಹಿತದೃಷ್ಟಿ, ಭಕ್ತಾದಿಗಳು ಹಾಗೂ ದೇವಸ್ಥಾನದ ಹಿತದೃಷ್ಟಿಯಿಂದ ಸರಕಾರ ಪ್ರಾಧಿಕಾರ ರಚನೆಯ ಒಳ್ಳೆಯ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಬಾಬು ಶೆಟ್ಟಿ ಹೇಳಿದರು.

ವಾರ್ತಾ ಭಾರತಿ 6 Mar 2026 7:50 pm

ಮಂಗಳೂರಿಗೆ ಮತ್ತೊಂದು ಹೊಸ ಎಕ್ಸ್‌ಪ್ರೆಸ್‌ ರೈಲು; ಕರ್ನಾಟಕ ಕರಾವಳಿಯಿಂದ ತಮಿಳುನಾಡಿಗೆ ಸಂಪರ್ಕ

ಕರ್ನಾಟಕ ಕರಾವಳಿ ಭಾಗದ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ. ಮತ್ತೊಂದು ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭ ಮಾಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ಹೊಸ ರೈಲು ಮಂಗಳೂರು - ತಿರುನಲ್ವೇಲಿ ನಡುವೆ ಸಂಚಾರ ನಡೆಸಲಿದೆ. ಇದರ ಜತೆಗೆ ತಮಿಳುನಾಡಿಗೆ 4 ಹೊಸ ರೈಲುಗಳನ್ನು ಕೂಡ ನೀಡಲಾಗಿದೆ. ಈ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ವಿಜಯ ಕರ್ನಾಟಕ 6 Mar 2026 7:48 pm

ರಾಜ್ಯದಲ್ಲಿ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಮನೋವೈದ್ಯ ಡಾ.ಪಿ.ವಿ.ಭಂಡಾರಿ ಸ್ವಾಗತ

ಉಡುಪಿ, ಮಾ.6: ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ವಿಧಾನಸೌಧ ದಲ್ಲಿ ದಾಖಲೆಯ 17ನೇ ಬಜೆಟ್ ಮಂಡಿಸಿ ಮಾಡಿದ ಭಾಷಣದ ವೇಳೆ ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರುವ ನಿರ್ಧಾರ ಪ್ರಕಟಿಸಿರುವುದನ್ನು ನಾಡಿನ ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಸ್ವಾಗತಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಮಕ್ಕಳ ಶೈಕ್ಷಣಿಕ ಕಲಿಕೆಗೆ ಮೊಬೈಲ್ ಬಳಸಲು ಅವಕಾಶ ನೀಡಿದ ಬಳಿಕ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳ ಮೇಲಾಗುತ್ತಿರುವ ಅಡ್ಡ ಪರಿಣಾಮ ಗಳ ಕುರಿತು ವ್ಯಾಪಕ ಜನಜಾಗೃತಿ ಮೂಡಿಸುತ್ತಿರುವ ಡಾ.ಭಂಡಾರಿ ಅವರು ಇದೀಗ ಸರಕಾರ ರಾಜ್ಯದಲ್ಲಿ ಡಿಜಿಟಲ್ ಪಾಲಿಸಿ ರೂಪಿಸಲು ಮುಂದಾಗಿರುವ ಕ್ರಮವನ್ನು ಸ್ವಾಗತಾರ್ಹ ಕ್ರಮ ಎಂದು ಬಣ್ಣಿಸಿದ್ದಾರೆ. ಒಬ್ಬ ಮನೋವೈದ್ಯನಾಗಿ ನಾನು ಸರಕಾರದ ಈ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳ ಮೇಲೆ ಗಂಭೀರ ಪರಿಣಾಮಗಳಾಗುತ್ತಿವೆ. ಆಸ್ಪತ್ರೆಯ ವಾರ್ಡ್‌ ನಲ್ಲಿ ಪ್ರತಿದಿನವೆಂಬಂತೆ ಇಬ್ಬರು 18 ವರ್ಷದೊಳಗಿನ ಮಕ್ಕಳು ಮಾನಸಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ದಾಖಲಾಗು ತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಅಪರಿಚಿತರಿಂದ ಮೋಸ ಹೋಗುವ ಮಕ್ಕಳ ಸಂಖ್ಯೆಯೂ ಹೆಚ್ಚುತ್ತಿದೆ. ಆದ್ದರಿಂದ ಸರ್ಕಾರದ ಈ ನಿರ್ಧಾರ ಸಮಯೋಚಿತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಈ ನಿಯಮವನ್ನು ಜಾರಿಗೆ ತರುವುದು ಸುಲಭವಲ್ಲ. 18 ವರ್ಷದೊಳಗಿನವರಿಗೆ ಬೀಡಿ-ಸಿಗರೇಟು ಮಾರಾಟ ನಿಷೇಧಿ ಸುವ ಕಾನೂನು ಇದ್ದರೂ ಅದು ಎಷ್ಟು ಮಟ್ಟಿಗೆ ಜಾರಿಯಾಗಿದೆ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ ಎಂದರು. ಅದೇ ರೀತಿ ಮೊಬೈಲ್ ಫೋನ್ ಸಹ ಖಾಸಗಿ ಸ್ವತ್ತು ಆಗಿರುವುದರಿಂದ ಮಕ್ಕಳು ಅದರಲ್ಲಿ ಏನು ನೋಡುತ್ತಾರೆ ಎಂಬುದನ್ನು ನಿಯಂತ್ರಿಸುವುದು ಕಷ್ಟ. ಈ ಸಮಸ್ಯೆಯನ್ನು ನಿಯಂತ್ರಿಸಲು ಪೋಷಕರು ಹಾಗೂ ಶಾಲಾ ಆಡಳಿತದ ಸಹಕಾರ ಅತ್ಯಗತ್ಯ. ಈಗಾಗಲೇ ಕೆಲವು ಪ್ರತಿಷ್ಠಿತ ಶಾಲೆಗಳು ಮೊಬೈಲ್ ಫೋನ್‌ಗಳನ್ನು ಶಾಲೆಗೆ ತರಲು ಅವಕಾಶ ನೀಡುತ್ತಿಲ್ಲ. ಸರಕಾರಿ ಶಾಲೆಗಳಲ್ಲೂ ಶಾಲಾ ಅವಧಿಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆದರೆ ಶಾಲೆಯ ಹೊರಗಡೆ ನಿಯಂತ್ರಣ ಹಾಕುವುದು ಸವಾಲಿನ ಸಂಗತಿಯಾಗಿದೆ ಎಂದು ಅವರು ಹೇಳಿದ್ದಾರೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದರೆ ಮುಂದಿನ ತಲೆಮಾರಾದರೂ ಮೊಬೈಲ್ ನಿಯಂತ್ರಣಕ್ಕೆ ಒಳಪಡಬಹುದು. ಈಗಿನ ಹದಿಹರೆಯದವರನ್ನು ನಿಯಂತ್ರಿಸುವುದು ಕಷ್ಟವಾದರೂ, 10-12 ವರ್ಷದ ಮಕ್ಕಳನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ಮನೋವೈದ್ಯರಾಗಿ ಅವರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಯುವಜನರು ಆತಂಕ ಹಾಗೂ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಅತಿಯಾದ ಮೊಬೈಲ್ ಬಳಕೆಯಿಂದ ಅದನ್ನು ಬಿಡಲಾಗದ ಸ್ಥಿತಿಗೆ ತಲುಪಿದ್ದಾರೆ. ಇದರಿಂದ ಶಾಲೆ ಹಾಗೂ ಕಾಲೇಜುಗಳನ್ನು ತೊರೆಯುವ ಪ್ರಕರಣಗಳೂ ಹೆಚ್ಚುತ್ತಿದೆ. ಭವಿಷ್ಯದ ಸಮಾಜದ ಹಿತದೃಷ್ಟಿ ಯಿಂದ ಸರಕಾರ ತೆಗೆದುಕೊಂಡಿರುವ ಈ ಜನಪರ ನಿರ್ಧಾರವನ್ನು ಸ್ವಾಗತಿಸಬೇಕು ಎಂದು ಡಾ. ಪಿ.ವಿ.ಭಂಡಾರಿ ಹೇಳಿದ್ದಾರೆ.

ವಾರ್ತಾ ಭಾರತಿ 6 Mar 2026 7:48 pm

ಲೋಕಸಭಾ ಸ್ಪೀಕರ್ ಓಂ ಬಿರ್ಲಾರನ್ನು ವಜಾಗೊಳಿಸುವಂತೆ ಕೋರಿರುವ ನಿರ್ಣಯ ನಿಯಮಗಳಿಗೆ ಅನುಗುಣವಾಗಿದೆ, ಚರ್ಚೆ ನಡೆಯಲೇಬೇಕು: ಕಾಂಗ್ರೆಸ್

ಹೊಸದಿಲ್ಲಿ,ಮಾ.6: ಸ್ಪೀಕರ್ ಓಂ ಬಿರ್ಲಾರ ಪದಚ್ಯುತಿಯನ್ನು ಕೋರಿ ಸಲ್ಲಿಸಲಾಗಿರುವ ನೋಟಿಸ್‌ನ್ನು ಲೋಕಸಭೆಯು ಮುಂದಿನ ವಾರ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಈ ನಡುವೆ, ಕಾಂಗ್ರೆಸ್ ಪಕ್ಷವು ನಿರ್ಣಯವು ನಿಯಮಗಳು ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿದ್ದು, ಪ್ರತಿಪಕ್ಷ ಸದಸ್ಯರು ಸ್ಪೀಕರ್ ಅವರ ‘ಪಕ್ಷಪಾತದ ನಡವಳಿಕೆ’ಯ ನಿರ್ದಿಷ್ಟ ನಿದರ್ಶನಗಳನ್ನು ನೀಡಿದ್ದಾರೆ. ಇದು ಚರ್ಚೆಯನ್ನು ಅಗತ್ಯವಾಗಿಸಿದೆ ಎಂದು ಹೇಳಿದೆ. ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಮಾ.9ರಿಂದ ಆರಂಭಗೊಳ್ಳಲಿದೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್‌ ರಮೇಶ್‌ ಅವರು, ಟಿಎಂಸಿಯನ್ನು ಹೊರತು ಪಡಿಸಿ ಇತರ ಎಲ್ಲ ಪ್ರತಿಪಕ್ಷಗಳ 118 ಸಂಸದರು ಸ್ಪೀಕರ್ ಪದಚ್ಯುತಿ ಕೋರಿರುವ ನಿರ್ಣಯಕ್ಕೆ ಸಹಿ ಮಾಡಿದ್ದಾರೆ. ನೋಡೋಣ, ಅದನ್ನು ಮಾ.9ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ ಎಂದು ಹೇಳಿದರು. ‘ಇದು ಆರೋಗ್ಯಕರ, ಪ್ರಜಾಪ್ರಸತ್ತಾತ್ಮಕ ಪದ್ಧತಿಯಾಗಿದೆ. ನಾವು ನಿಯಮಗಳು ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿ ನಿರ್ಣಯವೊಂದನ್ನು ಸಲ್ಲಿಸಿದ್ದೇವೆ. ಈ ಹಿಂದೆಯೂ ಸ್ಪೀಕರ್ ಪದಚ್ಯುತಿಗಾಗಿ ನಿರ್ಣಯ ಸಲ್ಲಿಸಿದ್ದ ನಿದರ್ಶನಗಳಿವೆ. ಉದಾಹರಣೆಗೆ 1954ರಲ್ಲಿ 489 ಸದಸ್ಯ ಬಲದ ಸಂದನದಲ್ಲಿ ಸಂಯೋಜಿತ ಪ್ರತಿಪಕ್ಷ ಬಲವು ಕೇವಲ 50ರಷ್ಟಿತ್ತು ಮತ್ತು ಕಾಂಗ್ರೆಸ್ 364 ಸಂಸದರನ್ನು ಹೊಂದಿತ್ತು. ಆಗ ಸ್ಪೀಕರ್ ಜಿ.ವಿ.ಮಾವಲಂಕರ್ ವಿರುದ್ಧ ಅವಿಶ್ವಾಸ ಸೂಚನೆಯನ್ನು ಸಲ್ಲಿಸಲಾಗಿತ್ತು’ ಎಂದು ಹೇಳಿದ ರಮೇಶ್‌, ‘ಇವೆಲ್ಲ ಸಂಸದೀಯ ಪ್ರಜಾಪ್ರಭುತ್ವದ ಸಾಧನಗಳಾಗಿವೆ. ಪ್ರತಿಪಕ್ಷಕ್ಕೆ ಎಲ್ಲ ಹಕ್ಕುಗಳೂ ಇವೆ. ನಾವು ಚರ್ಚಿಸುತ್ತೇವೆ, ಅದರ ಬಳಿಕ ಏನಾಗುತ್ತದೆ ಎಂದು ನೋಡೋಣ’ ಎಂದರು. ‘ಸ್ಪೀಕರ್ ಅವರ ಪಕ್ಷಪಾತದ ನಡವಳಿಕೆಯ ನಿದರ್ಶನಗಳನ್ನು ನಾವು ನೀಡಿದ್ದೆವು. ಪ್ರತಿಪಕ್ಷ ಸದಸ್ಯರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಗಿತ್ತು. ನಾವು ನಿರ್ಣಯದಲ್ಲಿ ಸಂದರ್ಭಗಳನ್ನು ಉಲ್ಲೇಖಿಸಿದ್ದೇವೆ ಮತ್ತು ಚರ್ಚೆ ನಡೆಯಲೇಬೇಕು’ ಎಂದು ರಮೇಶ್‌ ಹೇಳಿದರು.

ವಾರ್ತಾ ಭಾರತಿ 6 Mar 2026 7:44 pm

ಮಧ್ಯಪ್ರಾಚ್ಯದಲ್ಲಿ ಸಂಘರ್ಷ | ನಮ್ಮ ಮೇಲಲ್ಲ, ಅಮೆರಿಕದ ಮೇಲೆ ಒತ್ತಡ ಹಾಕಿ: ಮಧ್ಯವರ್ತಿಗಳಿಗೆ ಇರಾನ್ ಸಲಹೆ

ಟೆಹ್ರಾನ್, ಮಾ.6: ಮಧ್ಯಪ್ರಾಚ್ಯ ಸಂಘರ್ಷವನ್ನು ಕೊನೆಗೊಳಿಸಲು ನಡೆಯುತ್ತಿರುವ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಪ್ರಯತ್ನಗಳು ಇರಾನ್ ಅನ್ನು ಅಲ್ಲ, ಅಮೆರಿಕ ಮತ್ತು ಇಸ್ರೇಲನ್ನು ಕೇಂದ್ರೀಕರಿಸಬೇಕು ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಶುಕ್ರವಾರ ಹೇಳಿದ್ದಾರೆ. ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಬಯಸುವ ಯಾವುದೇ ರಾಷ್ಟ್ರವೂ ಸಂಘರ್ಷ ಪ್ರಾರಂಭಿಸಿದವರ ಮೇಲೆ ಒತ್ತಡ ಹಾಕಬೇಕು. ಇರಾನ್‍ನ ಮೇಲೆ ಅಲ್ಲ. ಈ ಪ್ರದೇಶದಲ್ಲಿ ಶಾಶ್ವತ ಶಾಂತಿಗೆ ನಾವು ಬದ್ಧರಾಗಿದ್ದೇವೆ, ಆದರೆ ನಮ್ಮ ದೇಶದ ಘನತೆ ಮತ್ತು ಅಧಿಕಾರವನ್ನು ರಕ್ಷಿಸಲು ನಮಗೆ ಯಾವುದೇ ಹಿಂಜರಿಕೆಯಿಲ್ಲ. ಇರಾನ್ ಜನರನ್ನು ಕೀಳಂದಾಜಿಸುವ ಮೂಲಕ ಬೆಂಕಿಯನ್ನು ಹುಟ್ಟುಹಾಕಿದವರು ಮಧ್ಯಸ್ಥಿಕೆಯ ಗುರಿಯಾಗಬೇಕು' ಎಂದವರು `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಾರ್ತಾ ಭಾರತಿ 6 Mar 2026 7:42 pm

America | ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ರನ್ನು ವಜಾಗೊಳಿಸಿದ ಟ್ರಂಪ್

ವಾಷಿಂಗ್ಟನ್, ಮಾ.6: ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್‍ರನ್ನು ಹುದ್ದೆಯಿಂದ ತೆರವುಗೊಳಿಸಿ ಆ ಸ್ಥಾನಕ್ಕೆ ರಿಪಬ್ಲಿಕನ್ ಸೆನೆಟರ್ ಮಾರ್ಕ್‍ವೆಯ್ನ್ ಮುಲಿನ್‍ರನ್ನು ನೇಮಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಪಶ್ಚಿಮ ಗೋಳಾರ್ಧದ ಮೇಲೆ ಕೇಂದ್ರೀಕೃತವಾಗಿರುವ ಹೊಸ ಭದ್ರತಾ ಉಪಕ್ರಮಕ್ಕಾಗಿ ವಿಶೇಷ ಪ್ರತಿನಿಧಿಯಾಗಿ ನೋಯೆಮ್ ಅವರನ್ನು ಮರು ನಿಯೋಜಿಸುವುದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಬದಲಾವಣೆ ಮಾರ್ಚ್ 31ರಿಂದ ಅನ್ವಯಿಸಲಿದೆ ಎಂದವರು ಹೇಳಿದ್ದಾರೆ.

ವಾರ್ತಾ ಭಾರತಿ 6 Mar 2026 7:37 pm

ಟಿ-20 ವಿಶ್ವಕಪ್‌ | ‘ಸರಣಿಶ್ರೇಷ್ಠ’ ಪ್ರಶಸ್ತಿ ಸ್ಪರ್ಧೆಯಲ್ಲಿರುವ ಭಾರತದ ಏಕೈಕ ಆಟಗಾರ ಸಂಜು ಸ್ಯಾಮ್ಸನ್

ಹೊಸದಿಲ್ಲಿ, ಮಾ.6: ಈಗ ನಡೆಯುತ್ತಿರುವ ಟಿ-20 ವಿಶ್ವಕಪ್‌ನ ಆರಂಭದಲ್ಲಿ ಸಂಜು ಸ್ಯಾಮ್ಸನ್ ಭಾರತ ತಂಡದ ಆಡುವ 11ರ ಬಳಗದ ಖಾಯಂ ಆಟಗಾರನಾಗಿರಲಿಲ್ಲ. ಪ್ರಮುಖ ಸಂದರ್ಭದಲ್ಲಿ ನಿರ್ಣಾಯಕ ಪ್ರದರ್ಶನ ನೀಡಿರುವ ಕೇರಳದ ಬ್ಯಾಟರ್ ಪಂದ್ಯಾವಳಿಯನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. 31ರ ಹರೆಯದ ಬಲಗೈ ಬ್ಯಾಟರ್ ವೆಸ್ಟ್‌ಇಂಡೀಸ್ ಕ್ರಿಕೆಟ್ ತಂಡದ ವಿರುದ್ಧ ಸೂಪರ್-8ರಲ್ಲಿ ಔಟಾಗದೆ 97 ರನ್ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡದ ವಿರುದ್ಧ ಸೆಮಿ ಫೈನಲ್‌ನಲ್ಲಿ 89 ರನ್ ಗಳಿಸಿದ್ದರು. ಇತ್ತೀಚೆಗೆ ವೀರೋಚಿತ ಪ್ರದರ್ಶನ ನೀಡಿದ ಹೊರತಾಗಿಯೂ ಸ್ಯಾಮ್ಸನ್ ಅವರು ಗ್ರೂಪ್ ಹಂತದಲ್ಲಿ ಭಾರತದ ಮೊದಲ ಆಯ್ಕೆಯ ಆಟಗಾರನಾಗಿರಲಿಲ್ಲ. ವಿಶ್ವಕಪ್ ಟೂರ್ನಿಗಿಂತ ಮೊದಲು ನಡೆದಿದ್ದ ನ್ಯೂಝಿಲ್ಯಾಂಡ್ ವಿರುದ್ಧದ ಸರಣಿಯಲ್ಲಿ ಸ್ಯಾಮ್ಸನ್ ಉತ್ತಮ ಫಾರ್ಮ್‌ನಲ್ಲಿರಲಿಲ್ಲ. ಅಭಿಷೇಕ್ ಶರ್ಮಾ ಅನಾರೋಗ್ಯದಿಂದಾಗಿ ಆಡುವ 11ರ ಬಳಗದಿಂದ ಹೊರಗುಳಿದ ಕಾರಣ ಹೊಸದಿಲ್ಲಿಯಲ್ಲಿ ನಡೆದಿದ್ದ ನಮೀಬಿಯಾ ತಂಡದ ವಿರುದ್ಧ ಪಂದ್ಯದಲ್ಲಿ ಸ್ಯಾಮ್ಸನ್ ಆಡುವ ಅವಕಾಶ ಪಡೆದಿದ್ದರು. ಸ್ಯಾಮ್ಸನ್‌ಗೆ ಸೂಪರ್-8ರ ಹಂತದಲ್ಲಿ ಟರ್ನಿಂಗ್‌ಪಾಯಿಂಟ್ ಲಭಿಸಿತು. ಆಫ್ ಸ್ಪಿನ್ನರ್‌ಗಳು ಅಭಿಷೇಕ್ ಹಾಗೂ ಇಶಾನ್ ಕಿಶನ್‌ಗೆ ಸಮಸ್ಯೆಯೊಡ್ಡುತ್ತಿದ್ದಾಗ ಟೀಮ್ ಮ್ಯಾನೇಜ್‌ಮೆಂಟ್ ಸ್ಯಾಮ್ಸನ್‌ಗೆ ಮತ್ತೊಮ್ಮೆ ಅವಕಾಶ ನೀಡಿತು. ಆಡುವ ಬಳಗಕ್ಕೆ ವಾಪಸಾದ ನಂತರ ಸ್ಯಾಮ್ಸನ್ ಅವರು ಪರಿಣಾಮಕಾರಿ ಪ್ರದರ್ಶನ ನೀಡಿದ್ದು, ಸ್ಪರ್ಧಾವಳಿಯಲ್ಲಿ ಭಾರತದ ಓರ್ವ ಅತ್ಯಂತ ಉತ್ತಮ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ತನ್ನ ಶ್ರೇಷ್ಠಫಾರ್ಮ್‌ನಿಂದಾಗಿ ಪಂದ್ಯಾವಳಿಯಲ್ಲಿ ‘ಸರಣಿಶ್ರೇಷ್ಠ’ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಅಂತಿಮ ಪಟ್ಟಿಯಲ್ಲಿರುವ ಭಾರತದ ಏಕೈಕ ಆಟಗಾರನಾಗಿದ್ದಾರೆ. ವಿಲ್ ಜಾಕ್ಸ್, ಸಾಹಿಬ್‌ಝದಾ ಫರ್ಹಾನ್, ಲುಂಗಿ ಗಿಡಿ, ಮರ್ಕ್ರಮ್, ರಚಿನ್ ರವೀಂದ್ರ ಹಾಗೂ ಟಿಮ್ ಸೀಫರ್ಟ್ ಸ್ಪರ್ಧೆಯಲ್ಲಿದ್ದಾರೆ. ಭಾರತ ತಂಡ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದ್ದ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಏಳು ರನ್‌ನಿಂದ ರೋಚಕವಾಗಿ ಗೆದ್ದ ನಂತರ ಐಸಿಸಿ, ಸರಣಿಶ್ರೇಷ್ಠರ ಕಿರು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸೆಮಿ ಫೈನಲ್ ಪಂದ್ಯದಲ್ಲಿ ಸ್ಯಾಮ್ಸನ್ 15 ರನ್ ಗಳಿಸಿದ್ದಾಗ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಜೀವದಾನ ನೀಡಿದ್ದರು. ಈ ಜೀವದಾನವು ಇಂಗ್ಲೆಂಡ್‌ಗೆ ದುಬಾರಿಯಾಗಿ ಪರಿಣಮಿಸಿದ್ದು, ಭಾರತದ ಬ್ಯಾಟರ್ ಕೇವಲ 42 ಎಸೆತಗಳಲ್ಲಿ ಏಳು ಸಿಕ್ಸರ್‌ಗಳ ಸಹಿತ 89 ರನ್ ಗಳಿಸಿದ್ದರು. ಪಂದ್ಯಾವಳಿಯಲ್ಲಿ ಒಟ್ಟು 15 ಸಿಕ್ಸರ್‌ಗಳನ್ನು ಸಿಡಿಸಿ ರೋಹಿತ್ ಶರ್ಮಾರ ದಾಖಲೆ(15)ಯನ್ನು ಮುರಿದಿದ್ದಾರೆ. ಸ್ಯಾಮ್ಸನ್ ಈ ತನಕ ಪಂದ್ಯಾವಳಿಯಲ್ಲಿ ಒಟ್ಟು 232 ರನ್ ಗಳಿಸಿದ್ದಾರೆ. ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್‌ ನಂತರ ಭಾರತದ ಮೂರನೇ ಗರಿಷ್ಠ ರನ್ ಸ್ಕೋರರ್ ಆಗಿದ್ದಾರೆ. ಸ್ಯಾಮ್ಸನ್ ಸತತ ಎರಡು ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೆಮಿ ಫೈನಲ್ ಗೆಲುವಿನ ನಂತರ ಪ್ರತಿಕ್ರಿಯಿಸಿದ ಸ್ಯಾಮ್ಸನ್, ‘‘ಸುಮಾರು 500 ರನ್ ಹರಿದು ಬಂದಿರುವ ಗರಿಷ್ಠ ಮೊತ್ತದ ಸ್ಪರ್ಧೆಯಲ್ಲಿ ತನ್ನ ನಾಲ್ಕು ಓವರ್‌ಗಳಲ್ಲಿ ಕೇವಲ 33 ರನ್ ಬಿಟ್ಟುಕೊಟ್ಟಿರುವ ವೇಗದ ಬೌಲರ್ ಜಸ್‌ಪ್ರಿತ್ ಬುಮ್ರಾಗೆ ಈ ಗೌರವ ಸಲ್ಲಬೇಕಾಗಿತ್ತು’’ ಎಂದು ಹೇಳಿದ್ದಾರೆ.

ವಾರ್ತಾ ಭಾರತಿ 6 Mar 2026 7:34 pm

IPL 2026 | ನೂತನ ಜೆರ್ಸಿ ಅನಾವರಣಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈ, ಮಾ.6: ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಮಾರ್ಚ್ 28ರಿಂದ ಆರಂಭವಾಗಲಿರುವ 2016ರ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಗಾಗಿ ತನ್ನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಮುಂಬೈ ಇಂಡಿಯನ್ಸ್ ತಂಡವು ಶುಕ್ರವಾರ ಬಿಡುಗಡೆ ಮಾಡಿರುವ ತನ್ನ ಹೊಸ ಜೆರ್ಸಿಯಲ್ಲಿ ಸಾಂಪ್ರದಾಯಿಕ ನೀಲಿ ಹಾಗೂ ಚಿನ್ನದ ಬಣ್ಣದ ಪ್ಯಾಲೆಟನ್ನು ಉಳಿಸಿಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡವು 2013, 2015, 2017, 2019 ಹಾಗೂ 2020ರಲ್ಲಿ ಐದು ಬಾರಿ ಪ್ರಶಸ್ತಿಗಳನ್ನು ಜಯಿಸಿತ್ತು. 2010ರಲ್ಲಿ ಮಾತ್ರ ರನ್ನರ್ಸ್ ಅಪ್ ಆಗಿತ್ತು. ಐಪಿಎಲ್‌ನಲ್ಲಿ ಗರಿಷ್ಠ ಟ್ರೋಫಿಗಳನ್ನು ಗೆದ್ದುಕೊಂಡು ಚೆನ್ನೈ ಸೂಪರ್ ಕಿಂಗ್ಸ್‌ನೊಂದಿಗೆ ತನ್ನ ದಾಖಲೆ ಹಂಚಿಕೊಂಡಿದೆ. ಸಿಎಸ್‌ಕೆ ಇತ್ತೀಚೆಗಷ್ಟೇ ತನ್ನ ಜೆರ್ಸಿಯನ್ನು ಅನಾವರಣಗೊಳಿಸಿತ್ತು. ಕಳೆದ ವರ್ಷ ಮುಂಬೈ ತಂಡವು ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಲೀಗ್ ಹಂತದಲ್ಲಿ ನಾಲ್ಕನೇ ಸ್ಥಾನ ಪಡೆದ ನಂತರ ಪ್ಲೇ ಆಫ್‌ಗೆ ತೇರ್ಗಡೆಯಾಗಿತ್ತು. ಆದರೆ ಎಲಿಮಿನೇಟರ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿತ್ತು. ಪಂಜಾಬ್ ತಂಡ 20125ರಲ್ಲಿ ರನ್ನರ್ಸ್ ಅಪ್ ಆಗಿತ್ತು. 2026ರ ಋತುವಿನ ತಯಾರಿಯ ಭಾಗವಾಗಿ ಶಾರ್ದುಲ್ ಠಾಕೂರ್ ಹಾಗೂ ದೀಪಕ್ ಚಹಾರ್‌ರಂತಹ ಆಟಗಾರರು ಡಿ.ವೈ.ಪಾಟೀಲ್ ಟಿ-20 ಕಪ್‌ನಲ್ಲಿ ಭಾಗವಹಿಸಿದ್ದಾರೆ. ಮುಂಬೈ ತಂಡವು ಮಾ.12ರಿಂದ 15ರ ತನಕ ತನ್ನ ತರಬೇತಿ ಶಿಬಿರವನ್ನು ಆರಂಭಿಸುವ ನಿರೀಕ್ಷೆ ಇದೆ. ಟಿ-20 ವಿಶ್ವಕಪ್ ಟೂರ್ನಿ ಮುಗಿದ ನಂತರ ವಿದೇಶಿ ಆಟಗಾರರು ಇದರಲ್ಲಿ ಭಾಗವಹಿಸಲಿದ್ದಾರೆ.

ವಾರ್ತಾ ಭಾರತಿ 6 Mar 2026 7:32 pm

ಹೈಕಮಾಂಡ್ ಸೂಚನೆವರೆಗೂ ಬಜೆಟ್ ಮಂಡಿಸ್ತೇನೆ : ನಾಯಕತ್ವ ಬದಲಾವಣೆ ಚರ್ಚೆಗೆ ಟ್ವಿಸ್ಟ್ ನೀಡಿದ ಸಿದ್ದರಾಮಯ್ಯ

ಹೈಕಮಾಂಡ್ ಸೂಚನೆವರೆಗೂ ಬಜೆಟ್ ಮಂಡಿಸ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರು ನಾಯಕತ್ವ ಬದಲಾವಣೆ ಚರ್ಚೆಗೆ ಮತ್ತೊಂದು ಟ್ವಿಸ್ಟ್ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಬಜೆಟ್ ಕುರಿತಾಗಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮುಂದೆ ಎಷ್ಟು ಬಾರಿ ಬಜೆಟ್ ಮಂಡಿಸುತ್ತೀರಿ? ಎಂಬ ಪ್ರಶ್ನೆಗೆ ಹೈಕಮಾಂಡ್ ಹೇಳುವವರೆಗೂ ಬಜೆಟ್ ಮಂಡನೆ ಮಾಡುತ್ತಿರುತ್ತೇ ಎಂದು ಉತ್ತರ ನೀಡಿದರು. ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.

ವಿಜಯ ಕರ್ನಾಟಕ 6 Mar 2026 7:30 pm

ಲೋಕೋಪಯೋಗಿ ಇಲಾಖೆ : ಮಲೆನಾಡು-ಕರಾವಳಿ ಪ್ರದೇಶಗಳಲ್ಲಿ 300 ಕಾಲುಸಂಕಗಳ ನಿರ್ಮಾಣ ಘೋಷಣೆ

ಬೆಂಗಳೂರು : ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಮತ್ತು ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲು ಸಂಕಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ರಾಜ್ಯದ 2025-26ನೇ ಸಾಲಿನ ಬಜೆಟ್‍ನಲ್ಲಿ 216 ಸೇತುವೆಗಳ ನಿರ್ಮಾಣ, 288 ಸೇತುವೆ ದುರಸ್ತಿ ಹಾಗೂ 386 ಕಾಲುಸಂಕಗಳ ನಿರ್ಮಾಣ ಕಾಮಗಾರಿಗಳನ್ನು 2 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ಅನುಮೋದಿಸಲಾಗಿದೆ. ಈ ಕಾರ್ಯಕ್ರಮವನ್ನು ಮುಂದುವರೆಸಿ ಸೇತುವೆಗಳ ನಿರ್ಮಾಣಕ್ಕಾಗಿ ಮುಂದಿನ ಎರಡು ವರ್ಷಗಳಲ್ಲಿ 2 ಸಾವಿರ ಕೋಟಿ ರೂ. ಮೊತ್ತವನ್ನು ಒದಗಿಸಲಾಗುವುದು ಎಂದರು. 400 ಕೋಟಿ ರೂ. ಅಂದಾಜು ಮೊತ್ತದ 135 ಕಿ.ಮೀ. ಉದ್ದದ ವಾಗ್ದಾರಿ-ರಿಬ್ಬನ್‍ಪಲ್ಲಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಯನ್ನು ಕೆಕೆಆರ್‍ಡಿಬಿ ಯಿಂದ ಶೇ.50 ರಷ್ಟು ಅನುದಾನ ಒದಗಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು. ಇಲಾಖೆಯ ಅಧೀನದ ಆಸ್ತಿ ದಾಖಲೆಗಳನ್ನು ಲ್ಯಾಂಡ್ ಪ್ಲಾನ್ ಸರ್ವೇ ಮಾಡಿ ಡಿಜಿಟೈಸೇಷನ್ ಹಾಗೂ ರೆಕಾರ್ಡ್ ರೂಮ್ ನಿರ್ಮಾಣವನ್ನು ಒಟ್ಟಾರೆ ಐದು ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ-5 ಘಟ್ಟ-1 ರಡಿ 1,512 ಕಿ.ಮೀ ಉದ್ದದ ರಸ್ತೆಯನ್ನು 4 ಸಾವಿರ ಕೋಟಿ ರೂ. ಮೊತ್ತದಲ್ಲಿ ಈಗಾಗಲೇ ಕೈಗೆತ್ತಿಕೊಂಡಿದ್ದು, ಮುಂದುವರೆದು, ಘಟ್ಟ-2 ರಡಿ 1,846 ಕಿ.ಮೀ ಉದ್ದದ ರಸ್ತೆಯನ್ನು 5 ಸಾವಿರ ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುವುದು. ರಾಯಚೂರು ಜಿಲ್ಲೆಯ ಕಲ್ಮಲಾ-ಸಿಂಧನೂರು ರಸ್ತೆಯ ಒಟ್ಟು 77 ಕಿ.ಮೀ ಉದ್ದದ ಪೈಕಿ 60 ಕಿ.ಮೀ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಈಗಾಗಲೇ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿಸಿದ್ದು, ಉಳಿದ 17 ಕಿ.ಮೀ ಉದ್ದದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದರು. 2026-27ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಮುಂದುವರೆದ ಯೋಜನೆಗಳಡಿ 2,200 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ಹಾಗೂ 3,500 ಕಿ.ಮೀ ಉದ್ದದ ಜಿಲ್ಲಾ ರಸ್ತೆಗಳನ್ನು 5,776 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಕೆಎಸ್‍ಎಚ್‍ಐಪಿ-4 ಅಡಿಯಲ್ಲಿ ಎಡಿಬಿ ನೆರವಿನೊಂದಿಗೆ ಒಟ್ಟು ವೆಚ್ಚ 5,736 ಕೋಟಿ ರೂ. ಯೋಜನಾ ವೆಚ್ಚದಲ್ಲಿ ರಾಜ್ಯದಾದ್ಯಂತ ಸುಮಾರು 875 ಕಿ.ಮೀ ಉದ್ದದ ರಸ್ತೆ ಕಾಮಗಾರಿಗಳ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಅನುಮೋದನೆ ಪಡೆದು ಟೆಂಡರ್ ಆಹ್ವಾನಿಸಲು ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು. ರಾಜ್ಯದ ವಿವಿಧ ಇಲಾಖೆಗಳಡಿ ನಿರ್ಮಿಸಲಾಗುವ ಕಟ್ಟಡಗಳ ವಿನ್ಯಾಸ ಮತ್ತು ವೆಚ್ಚದಲ್ಲಿ ಏಕರೂಪತೆಯನ್ನು ತರಲು ಒಂದು ತಜ್ಞರ ಸಮಿತಿ ರಚಿಸಲಾಗುವುದು. ಎಲ್ಲ ಇಲಾಖೆಗಳಡಿಯಲ್ಲಿನ ಕಟ್ಟಡಗಳ ವಿನ್ಯಾಸ ಮತ್ತು ಅಂದಾಜುಗಳನ್ನು ಸದರಿ ಸಮಿತಿಯ ಶಿಫಾರಸ್ಸಿನಂತೆ ಅಂತಿಮಗೊಳಿಸಲಾಗುವುದು. ರಾಜ್ಯಪಾಲರ ಕಚೇರಿಯ ಆವರಣದಲ್ಲಿನ ಆಡಳಿತಾತ್ಮಕ ಬ್ಲಾಕ್, ಒಳಾಂಗಣ ಕ್ರೀಡಾಂಗಣ ಹಾಗೂ ಅಧಿಕಾರಿಗಳ ವಸತಿ ಗೃಹಗಳನ್ನು 27 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

ವಾರ್ತಾ ಭಾರತಿ 6 Mar 2026 7:27 pm

ಕತಾರ್‌ನಲ್ಲಿರುವ ಭಾರತೀಯರಿಗೆ ತುರ್ತು ಸಲಹೆ: ಸುರಕ್ಷಿತ ಸ್ಥಳದಲ್ಲೇ ಉಳಿಯಲು ಭಾರತೀಯ ರಾಯಭಾರಿ ಕಚೇರಿ ಸೂಚನೆ

ಮಧ್ಯಪ್ರಾಚ್ಯದಲ್ಲಿ ಯುದ್ಧೋನ್ಮಾದ ಹೆಚ್ಚಾಗುತ್ತಿದ್ದು, ಕತಾರ್‌ನಲ್ಲಿರುವ ಭಾರತೀಯರಿಗೆ ಭಾರತೀಯ ರಾಯಭಾರಿ ಕಚೇರಿ ತುರ್ತು ಸಲಹೆ ನೀಡಿದೆ. ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ, ತೆರೆದ ಪ್ರದೇಶಗಳಿಂದ ದೂರ ಇರುವಂತೆ ಮಾರ್ಗಸೂಚಿ ಪ್ರಕಟಿಸಿದೆ. ಕತಾರ್ ವಾಯುಪ್ರದೇಶ ಬಂದ್ ಆಗಿದ್ದು, ಸೌದಿ ಅರೇಬಿಯಾಕ್ಕೆ ಹೋಗುವವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ವಿಜಯ ಕರ್ನಾಟಕ 6 Mar 2026 7:23 pm

ಕರ್ನಾಟಕ ಬಜೆಟ್ 2026: ಹೆಚ್.ಡಿ.ಕುಮಾರಸ್ವಾಮಿ ಟೀಕೆ: ಸಿದ್ದರಾಮಯ್ಯ ಬಜೆಟ್‌ ರಾಜ್ಯದ ಆರ್ಥಿಕತೆಗೆ ಅಪಾಯ

ಬೆಂಗಳೂರು:ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕ ಬಜೆಟ್‌ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ರಾಜ್ಯದ ಆರ್ಥಿಕತೆಯನ್ನು ಅಪಾಯದ ದಿಕ್ಕಿನತ್ತ ಕೊಂಡೊಯ್ಯುತ್ತಿದೆ ಎಂದು ಆರೋಪಿಸಿದ ಅವರು, ಹೆಚ್ಚುತ್ತಿರುವ ಸಾಲದ ಹೊರೆ ಮತ್ತು ಆರ್ಥಿಕ ನಿರ್ವಹಣೆಯ ಬಗ್ಗೆ ಗಂಭೀರ ಆತಂಕ

ಒನ್ ಇ೦ಡಿಯ 6 Mar 2026 7:22 pm

ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ | ಗೃಹಲಕ್ಷ್ಮಿ ಯೋಜನೆ ನಿಲ್ಲದು, ಗರ್ಭಿಣಿ-ಬಾಣಂತಿಯರಿಗೆ ಮತ್ತೆ ಬಿಸಿಯೂಟ..!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಪ್ರಮುಖವಾಗಿದ್ದು, ಈ ಯೋಜನೆಯಡಿ ಇಲ್ಲಿಯವರೆಗೂ ಎಲ್ಲ ಅರ್ಹ ಫಲಾನುಭವಿಗಳಿಗೆ ಒಟ್ಟು 62,345ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗಿದ್ದು, ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 28,608 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದಾರೆ. ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ‘ಅಕ್ಕಪಡೆ ಯೋಜನೆ’ಯನ್ನು ಗೃಹ ಇಲಾಖೆಯ ಸಹಯೋಗದೊಂದಿಗೆ ಪ್ರತಿಯೊಂದು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರವನ್ನು ವಿತರಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಮಾಜಿ ದೇವದಾಸಿಯರ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು, ಪುನರ್ವಸತಿ ಕಲ್ಪಿಸಲು ಮತ್ತು ಸರಕಾರದ ಸೌಲಭ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಅವರ ನಿಖರ ಮಾಹಿತಿ ಸಂಗ್ರಹಿಸುವುದಕ್ಕಾಗಿ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವುದರ ಜೊತೆಗೆ ಹೆಣ್ಣುಮಕ್ಕಳಿಗೆ ಸ್ವಯಂ ಉದ್ಯೋಗ ಹಾಗೂ ವೈಯಕ್ತಿಕ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯ ಆರ್ಥಿಕ ಸಹಾಯ ನೀಡುವ ಕಾರ್ಯಕ್ರಮವನ್ನು ರೂಪಿಸಿ ಜಾರಿಗೊಳಿಸಲು 5 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದರು. ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ಪ್ರಸಕ್ತ ನೀಡಲಾಗುತ್ತಿರುವ 30 ಸಾವಿರ ರೂ.ಗಳ ಪ್ರೋ ತ್ಸಾಹಧನವನ್ನು 45ಸಾವಿರ ರೂ.ಗಳಿಗೆ ಹೆಚ್ಚಳ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣವನ್ನು ಬಲಪಡಿಸಲು ಈ ಭಾಗದ ಜಿಲ್ಲೆಗಳಲ್ಲಿ ಲಭ್ಯವಿರುವ 1,668 ನಿವೇಶನಗಳಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು 200ಕೋಟಿ ರೂ.ಗಳ ವೆಚ್ಚದಲ್ಲಿ ಕೆಕೆಆರ್‍ಡಿಬಿ ಅನುದಾನದಿಂದ ಕೈಗೊಳ್ಳಲಾಗುವುದು ಎಂದೂ ಉಲ್ಲೇಖಿಸಿದರು. 2026–27ನೆ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿಯಾಗಿ 20 ಹೊಸ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ 1 ಕೋಟಿ ರೂ. ಅನುದಾನ. ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿ ರಚನೆ ಸೇರಿದಂತೆ 2026-27ನೆ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63,135 ಕೋಟಿ ರೂ. ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663 ಕೋಟಿ ರೂ. ಒದಗಿಸಲಾಗಿದೆ ಎಂದು ಸಿಎಂ ಹೇಳಿದರು. ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ: ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡದ ಡಿಮ್ಹಾನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ‘ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ’ಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದಾರೆ. ಗರ್ಭಿಣಿ, ಬಾಣಂತಿಯರಿಗೆ ಮತ್ತೆ ಬಿಸಿಯೂಟ: ನಮ್ಮ ಸರಕಾರದ ಹಿಂದಿನ ಅವಧಿಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯು ಅವರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗಿತ್ತು. ತದನಂತರದಲ್ಲಿ, ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಮನೆ ಬಾಗಿಲಿಗೆ ಪಡಿತರಕ್ಕೆ ಒತ್ತು ನೀಡಲಾಗಿ, ಯೋಜನೆಯ ಮೂಲ ಉದ್ದೇಶ ಹಳಿತಪ್ಪಿದಂತಾಗಿತ್ತು. ಇದನ್ನು ಮನಗಂಡು ಎಲ್ಲ ಫಲಾನುಭವಿಗಳಿಗೂ ಹಿಂದಿನಂತೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪ್ರತಿದಿನ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ಮರುಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಪ್ರಕಟಿಸಿದ್ದಾರೆ.

ವಾರ್ತಾ ಭಾರತಿ 6 Mar 2026 7:15 pm

Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ

ಇರಾನ್-ಯುಎಸ್-ಇಸ್ರೇಲ್ ಸಂಘರ್ಷದ ಮಧ್ಯೆ ಅಮೆರಿಕವು ಇತ್ತೀಚೆಗೆ ಹೆಚ್ಚಿಸಿದ್ದ ಸುಂಕವನ್ನು ಕಡಿಮೆಗೊಳಿಸುವ ಮೂಲಕ ಭಾರತದ ಮೇಲಿನ ಸುಂಕ ಒತ್ತಡ ಸಡಿಲಿಸಿದೆ. ಇದರಿಂದ ಭಾರತವು ಯಾವುದೇ ಅಡತಡೆ ಇಲ್ಲದೇ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಲು ಅವಕಾಶ ದೊರೆತಿದೆ. ಯುದ್ಧ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಮಾಸ್ಕೋದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ ವಾಷಿಂಗ್ಟನ್‌ನಿಂದ ಅನುಮತಿ ಬೇಕು ಎಂದು ದೂರಿದ್ದರು. ಇದಕ್ಕೆ ತಿರುಗೇಟು

ಒನ್ ಇ೦ಡಿಯ 6 Mar 2026 7:07 pm

ಬಜೆಟ್ ವಿರುದ್ದ ‘ಖಾಲಿ ಚೊಂಬು’ ಹಿಡಿದು ಬಿಜೆಪಿ ಪ್ರತಿಭಟನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026-27ನೆ ಸಾಲಿನ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಕಿವಿ ಮೇಲೆ ಹೂವು ಇಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಸದಸ್ಯರು ವಿಧಾನಸೌಧದಲ್ಲಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರು, ಶಾಸಕರು, ಪರಿಷತ್ ಸದಸ್ಯರು, ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಮುಖಂಡರು, ‘ಕನ್ನಡಿಗರಿಗೆ ಈ ಸರಕಾರವು ಬಜೆಟ್‍ನಲ್ಲಿ ಖಾಲಿ ಚೊಂಬು ನೀಡಿದೆ, ಯುವಕರಿಗೆ ಉದ್ಯೋಗ ನೀಡದೆ ಮೋಸ ಮಾಡಿದೆ. 3 ವರ್ಷದಲ್ಲಿ ಮೂರೂವರೆ ಲಕ್ಷ ಕೋಟಿ ರೂ.ಸಾಲ ಮಾಡಿದ್ದು, ಬಜೆಟ್‍ನಲ್ಲಿಯೂ ಖಾಲಿ ಖಾಲಿಯಾಗಿದೆ. ರೈತರಿಗೆ ಯಾವುದೇ ಯೋಜನೆ ನೀಡಿಲ್ಲ ಎಂದು ದೂರಿದರು.

ವಾರ್ತಾ ಭಾರತಿ 6 Mar 2026 7:00 pm