Dubai | ವೈಮಾನಿಕ ದಾಳಿಯ ಅವಶೇಷ ವಾಹನದ ಮೇಲೆ ಬಿದ್ದು ವ್ಯಕ್ತಿ ಮೃತ್ಯು
ದುಬೈ, ಮಾ. 8: ದುಬೈ ನಗರದ ಬರ್ಷಾ ಪ್ರದೇಶದಲ್ಲಿ ವೈಮಾನಿಕ ದಾಳಿಯ ಅವಶೇಷಗಳು ವಾಹನದ ಮೇಲೆ ಬಿದ್ದ ಪರಿಣಾಮ ಪಾಕಿಸ್ತಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು Aljazeera ವರದಿ ಮಾಡಿದೆ. ಅವಶೇಷಗಳು ವಾಹನದ ಮೇಲೆ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ, ದುಬೈ ಮರೀನಾ ಪ್ರದೇಶದಲ್ಲಿರುವ ಗೋಪುರಗಳಲ್ಲಿ ಒಂದರ ಮುಂಭಾಗಕ್ಕೂ ದಾಳಿಯ ಅವಶೇಷಗಳು ಬಿದ್ದ ಘಟನೆ ನಡೆದಿದೆ. ಈ ಘಟನೆಯನ್ನು ಅಧಿಕಾರಿಗಳು ಯಶಸ್ವಿಯಾಗಿ ನಿಭಾಯಿಸಿದ್ದು, ಇದು ವೈಮಾನಿಕ ದಾಳಿಯ ಪರಿಣಾಮವಾಗಿರಬಹುದು ಎಂದು ದುಬೈ ಮಾಧ್ಯಮ ಕಚೇರಿ ತಿಳಿಸಿದೆ. ಈ ಘಟನೆಯಿಂದ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮರೀನಾ ಪ್ರದೇಶದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೆ ನೀಡಿದೆ. سقوط شظايا صاروخية على أحد الأبراج في منطقة دبي مارينا بدولة الإمارات مساء السبت، ما تسبّب في تصاعد ألسنة الدخان. pic.twitter.com/aGCekfzo2n — قناة الجزيرة (@AJArabic) March 7, 2026
ಇಸ್ರೇಲ್ ಗಾಗಿ ಬೇಹುಗಾರಿಕೆ ಆರೋಪ; ಕುದ್ಸ್ ಪಡೆ ಮುಖ್ಯಸ್ಥ ಇಸ್ಮಾಯಿಲ್ ಖಾನಿಗೆ ಗಲ್ಲು: ವರದಿ
ಟೆಹ್ರಾನ್, ಮಾ.7: ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕುಡ್ಸ್ ಪಡೆಯ ಮುಖ್ಯಸ್ಥ ಬ್ರಿಗೇಡಿಯರ್ ಜನರಲ್ ಇಸ್ಮಾಯಿಲ್ ಖಾನಿಯನ್ನು ಇಸ್ರೇಲ್ ಪರವಾಗಿ ಬೇಹುಗಾರಿಕೆ ನಡೆಸಿದ್ದ ಆರೋಪದಲ್ಲಿ ಬಂಧಿಸಿ ಗಲ್ಲಿಗೇರಿಸಲಾಗಿದೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮ ಹಾಗೂ ಕೆಲವು ಅರಬ್ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆದರೆ ಈ ಕುರಿತು ಟೆಹ್ರಾನ್ ಧೃಡಪಡಿಸಿಲ್ಲ. ಅರಬ್ ಮಾಧ್ಯಮ ವರದಿಗಳ ಪ್ರಕಾರ, ಖಾನಿಯನ್ನು ಬೇಹುಗಾರಿಕೆಯ ಶಂಕೆಯಲ್ಲಿ IRGC ಬಂಧಿಸಿ ಗಲ್ಲಿಗೇರಿಸಿರಬಹುದು ಎಂದು ಹೇಳಲಾಗಿದೆ. ಎಮಿರೇಟ್ಸ್ ಮೂಲದ ‘ದಿ ನ್ಯಾಷನಲ್’ ಮಾಧ್ಯಮವು ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಹೇಳಿಕೆಗಳು ಹರಿದಾಡುತ್ತಿರುವುದಾಗಿ ವರದಿ ಮಾಡಿದೆ. ಕುದ್ಸ್ ಪಡೆ ಮುಖ್ಯಸ್ಥರಾಗಿರುವ ಖಾನಿ ಕಳೆದ ಹಲವು ವರ್ಷಗಳಿಂದ ವಿವಿಧ ವದಂತಿಗಳ ಕೇಂದ್ರಬಿಂದುವಾಗಿದ್ದಾರೆ. ತನ್ನ ಸುತ್ತಲಿನ ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡ ಅನೇಕ ಹತ್ಯೆ ಪ್ರಯತ್ನಗಳಿಂದ ಬದುಕುಳಿದಿರುವುದರಿಂದ ಅವರಿಗೆ ‘ಒಂಭತ್ತು ಜನರ ಜೀವಗಳನ್ನು ಬಲಿ ಪಡೆದ ವ್ಯಕ್ತಿ’ ಎಂಬ ಹೆಸರೂ ಪ್ರಚಲಿತದಲ್ಲಿದೆ ಎಂದು ವರದಿಗಳು ಹೇಳುತ್ತವೆ. ಇತ್ತೀಚೆಗೆ ಇರಾನ್ ನ ಸರ್ವೋಚ್ಚ ನಾಯಕ ಆಯತಲ್ಲಾ ಅಲಿ ಖಾಮಿನೈ ಹಾಗೂ ಹಲವು ಹಿರಿಯ ಸರ್ಕಾರಿ ಅಧಿಕಾರಿಗಳು ಸಾವಿಗೀಡಾದ ದಾಳಿಯಲ್ಲಿ ಖಾನಿ ಮೃತಪಟ್ಟಿಲ್ಲ ಎಂಬ ವರದಿಗಳು ಹೊರಬಂದಿದ್ದವು. ಮಾಹಿತಿಗಳ ಪ್ರಕಾರ, ದಾಳಿ ಸಂಭವಿಸುವ ಕೆಲವೇ ನಿಮಿಷಗಳ ಮೊದಲು ಅವರು ಆ ಸ್ಥಳವನ್ನು ತೊರೆದಿದ್ದರು ಎಂದು ಹೇಳಲಾಗಿದೆ. ಖಾನಿ ದಾಳಿಗಳಿಂದ ಪಾರಾಗಿರುವುದು ಇದೇ ಮೊದಲಲ್ಲ. ಕಳೆದ ಹಲವು ವರ್ಷಗಳಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಸಾವಿಗೀಡಾದ ಅನೇಕ ಉನ್ನತ ನಾಯಕರೊಂದಿಗೆ ಅವರು ನಿಕಟ ಸಂಪರ್ಕ ಹೊಂದಿದ್ದರಿಂದ ಅವರ ಬಗ್ಗೆ ಅನುಮಾನಗಳು ಹೆಚ್ಚಾಗಿದ್ದವು. ಅಕ್ಟೋಬರ್ 2024ರಲ್ಲಿ ಖಾನಿ ಸಾವಿಗೀಡಾದರೆಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದರೂ, ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತಿ ಹೊರಬಂದಿತ್ತು. ನಂತರ ಅವರು ಇರಾನ್ ನ ರಾಷ್ಟ್ರೀಯ ಟಿವಿಯಲ್ಲಿ ಕಾಣಿಸಿಕೊಂಡಿದ್ದರು. 2025ರಲ್ಲಿ ನಡೆದ 12 ದಿನಗಳ ಯುದ್ಧದ ವೇಳೆಯೂ ಹಲವಾರು ಮಾಧ್ಯಮಗಳು ಖಾನಿ ಸಾವಿಗೀಡಾಗಿದ್ದಾರೆ ಎಂದು ವರದಿ ಮಾಡಿದ್ದವು. ಆದರೆ ಬಳಿಕ ಅವರು ಮತ್ತೆ ರಾಷ್ಟ್ರೀಯ ಟಿವಿಯಲ್ಲಿ ಕಾಣಿಸಿಕೊಂಡು ಆ ವರದಿಗಳಿಗೆ ತೆರೆ ಎಳೆದಿದ್ದರು. ಇಸ್ರೇಲಿ ಕ್ಷಿಪಣಿಗಳ ದಾಳಿಗೆ ಗುರಿಯಾದ ಕೆಲವು ಸ್ಥಳಗಳಲ್ಲಿ ಖಾನಿ ಅಪಾಯವಿಲ್ಲದೆ ಪಾರಾಗಿರುವ ಘಟನೆಗಳೂ ನಡೆದಿವೆ. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳಿಗೆ ತನ್ನ ನಿರಪರಾಧಿತ್ವವನ್ನು ಅವರು ಮನವರಿಕೆ ಮಾಡಿಕೊಟ್ಟಿದ್ದರು ಎಂದು ವರದಿಗಳು ಹೇಳುತ್ತವೆ. ಇದರ ನಡುವೆ, ಮೊಸಾದ್ ನೇಮಕ ಮಾಡಿಕೊಂಡ ಆಂತರಿಕ ಏಜೆಂಟ್ ಒಬ್ಬರು ಖಾಮಿನೈ ಮೃತದೇಹದ ವಿಡಿಯೊವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕಳುಹಿಸಿದ್ದಾನೆ ಎಂಬ ಹೇಳಿಕೆಗಳೂ ಕೇಳಿಬಂದಿದ್ದವು. ಈ ಘಟನೆ ಬಳಿಕ ಖಾನಿ ಕುರಿತು ಮತ್ತಷ್ಟು ಊಹಾಪೋಹಗಳು ಹೆಚ್ಚಾಗಿದ್ದವು. 2025ರಲ್ಲಿ ಮೊಸಾದ್ಗೆ ಸಂಬಂಧಿಸಿದೆ ಎನ್ನಲಾದ ಖಾತೆಯೊಂದರಿಂದ ಪ್ರಕಟವಾದ ಚಿತ್ರದಲ್ಲಿ ಖಾನಿ ರಹಸ್ಯ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂಬ ಸುಳಿವು ನೀಡಲಾಗಿತ್ತು. ಚಿತ್ರಕ್ಕೆ ಲಗತ್ತಿಸಲಾದ ಶೀರ್ಷಿಕೆಯಲ್ಲಿ ಅವರು ಇಸ್ರೇಲಿ ಗುಪ್ತಚರ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಅನುಮಾನ ವ್ಯಕ್ತಪಡಿಸಲಾಗಿತ್ತು. ಆದರೆ ಖಾನಿ ಈ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿ, ತನ್ನ ಸ್ಥಳವನ್ನು ಪತ್ತೆಹಚ್ಚಲು ಇಸ್ರೇಲ್ ನಡೆಸಿದ ಪ್ರಯತ್ನಗಳ ಭಾಗವಾಗಿಯೇ ಈ ಆರೋಪಗಳು ಹರಡಲಾಗುತ್ತಿವೆ ಎಂದು ಹೇಳಿದ್ದಾರೆ. ಮೊಸಾದ್ ಗೆ ಸಂಬಂಧಿಸಿದೆ ಎನ್ನಲಾದ ಮತ್ತೊಂದು ಸಾಮಾಜಿಕ ಮಾಧ್ಯಮ ಖಾತೆಯು ಕೂಡ ಅದೇ ವರ್ಷ ಖಾನಿ ಗೂಢಚಾರನಲ್ಲ ಎಂದು ಹೇಳಿಕೊಂಡಿತ್ತು. ಇದೀಗ ಇಸ್ರೇಲ್ ಹೆಜ್ಬೊಲ್ಲಾ ನಾಯಕತ್ವದ ವಿರುದ್ಧ ಕ್ರಮ ಕೈಗೊಂಡ ಬಳಿಕ ಸಂಭವನೀಯ ಭದ್ರತಾ ಉಲ್ಲಂಘನೆಗಳ ಕುರಿತು ಇರಾನ್ ಅಧಿಕೃತ ತನಿಖೆ ಆರಂಭಿಸಿದೆ ಎಂಬ ವರದಿಗಳು ಹೊರಬಂದಿವೆ. ಈ ಹಿನ್ನೆಲೆಯಲ್ಲಿ ಖಾನಿಯನ್ನು ಮೊಸಾದ್ ಏಜೆಂಟ್ ಎಂಬ ಅನುಮಾನದಲ್ಲಿ ಐಆರ್ಜಿಸಿ ಬಂಧಿಸಿ ಗಲ್ಲಿಗೇರಿಸಿದೆ ಎಂಬ ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಲು ಆರಂಭಿಸಿವೆ. ಆದರೆ ಈ ಎಲ್ಲ ಹೇಳಿಕೆಗಳನ್ನು ಟೆಹ್ರಾನ್ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ. ಅಮೆರಿಕ 2020ರ ಜನವರಿಯಲ್ಲಿ ಕುದ್ಸ್ ಪಡೆಯ ಹಿಂದಿನ ಮುಖ್ಯಸ್ಥ ಖಾಸಿಮ್ ಸುಲೈಮಾನಿಯನ್ನು ಹತ್ಯೆ ಮಾಡಿದ ಬಳಿಕ ಇಸ್ಮಾಯಿಲ್ ಖಾನಿ ಕುಡ್ಸ್ ಪಡೆಯ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು.
ಇರಾನ್ ನಿಂದ ಕ್ಷಿಪಣಿ–ಡ್ರೋನ್ ದಾಳಿ ಬೆದರಿಕೆ: ಯುಎಇ ವಾಯು ರಕ್ಷಣಾ ವ್ಯವಸ್ಥೆ ಸಕ್ರಿಯ
ನಿವಾಸಿಗಳಿಗೆ ಸಾಮಾನ್ಯ ಚಟುವಟಿಕೆ ಪುನರಾರಂಭಿಸಬಹುದು ಎಂದು ಅಲರ್ಟ್ ಸಂದೇಶ
ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ: ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ
ಮೈಸೂರು: ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು HD ಕೋಟೆಯ ಶಿರಮಹಳ್ಳಿಯಲ್ಲಿ ಶ್ರೀ ಲಕ್ಷ್ಮಿ ದೇವಿ ಅಮ್ಮನವರ ನೂತನ ದೇವಾಲಯವನ್ನು ಉದ್ಘಾಟಿಸಿ ಮಾತನಾಡಿದರು. HD ಕೋಟೆಯ ಶಿರಮಹಳ್ಳಿಯ ಜನರು ದೈವಭಕ್ತರು. ದೇಗುಲದಲ್ಲಿ ಸ್ಥಾಪಿಸುವ ಪ್ರತಿಮೆಯಲ್ಲಿ ದೇವರನ್ನು ಕಾಣುವುದು ನಮ್ಮ ನಂಬಿಕೆ. ಬಸವಾದಿ ಶರಣರು, ದೇವರು ಎಲ್ಲೆಡೆಯೂ , ಎಲ್ಲರಲ್ಲಿಯೂ ಇದ್ದಾನೆ ಎಂದಿದ್ದರು. ನಮ್ಮ ಪ್ರಾರ್ಥನೆಯಲ್ಲಿ ಇತರರ ಒಳಿತನ್ನೂ ಕೇಳಬೇಕಾಗಿದ್ದು, ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಯಾವ ಜಾತಿಧರ್ಮಗಳು ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆಂದೇ ತಿಳಿಸುತ್ತದೆ ಎಂದರು. ಜಾತಿಧರ್ಮಗಳ ಮರೆತು ಜನರು ಒಗ್ಗಟ್ಟಾಗಬೇಕು: ಸಮಾಜದ ಪಟ್ಟಭದ್ರಹಿತಾಸಕ್ತಿಗಳು , ಸಮಾಜದ ಜಾತಿವ್ಯವಸ್ಥೆ ಹಾಗೂ ಅಸಮಾನತೆಗಳನ್ನು ಬೆಂಬಲಿಸುತ್ತಾರೆ. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಕುಶಕ್ತಿಗಳ ಬಗ್ಗೆ ನಾವು ಜಾಗೃತರಾಗಿರಬೇಕು. ಇಂದು ಲಕ್ಷ್ಮೀ ದೇಗುಲದ ಉದ್ಘಾಟನೆಯನ್ನು ಜಾತ್ರೆಯ ರೀತಿಯಲ್ಲಿ ಆಯೋಜಿಸಿರುವುದು ಸಂತಸದ ವಿಚಾರ. ಜಾತಿಧರ್ಮಗಳ ಬೇಧ ಮರೆದು ಜನರು ಒಗ್ಗಟ್ಟಾಗುವ ಅವಶ್ಯಕತೆ ಹಿಂದಿಂದೆಗಿಂತಲೂ ಹೆಚ್ಚಿದೆ ಎಂದರು. ಜನರ ಆಶೀರ್ವಾದದಿಂದ ಹೆಚ್ಚು ಆಯವ್ಯಯಗಳನ್ನು ಮಂಡಿಸಿದ್ದೇನೆ: ಶಿರಮಳ್ಳಿಯ ಜನರ ಪ್ರೀತಿಯಿಂದ ನನ್ನನ್ನು ಬೆಂಬಲಿಸುತ್ತಿರುವುದಕ್ಕೆ ಅಭಿನಂದನೆಗಳು. ಶಿರಮಳ್ಳಿ ಗ್ರಾಮ ಸೇರಿದಂತೆ ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯದ ಜನರ ಆಶೀರ್ವಾದದಿಂದ ಕರ್ನಾಟಕದ ಇತಿಹಾಸದಲ್ಲಿ ಹೆಚ್ಚು ಆಯವ್ಯಯವನ್ನು ಮಂಡಿಸಿದ ಸಾಧನೆ ಸಾಧ್ಯವಾಗಿದೆ. ಶಿರಮಳ್ಳಿ ಶ್ರೀ ಲಕ್ಷ್ಮಿ ದೇವಿ ಅಮ್ಮನವರು ರಾಜ್ಯದ ಜನರಿಗೆ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ಚಿತ್ತಾಪುರ | ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಬೇಕು : ಪಾಟೀಲ್
ಚಿತ್ತಾಪುರ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದರ ಮೂಲಕ ಸಂಸ್ಕಾರ ನೀಡಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು. ಪಟ್ಟಣದ ಹೊರವಲಯದ ಮಳಖೇಡ ರಸ್ತೆಯಲ್ಲಿರುವ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಗ್ರೇಟ್ ಇಂಡಿಯಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಶಿಕ್ಷರರು ನೀಡುತ್ತಾರೆ. ಅದರ ಜೊತೆಗೆ ಮನೆಯಲ್ಲಿ ಪಾಲಕರಾದವರು ಕೂಡ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವುದು ಅಷ್ಟೇ ಮುಖ್ಯ ಎಂದರು. ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಉಪ ಕುಲಪತಿ ಡಾ.ಮಹಾಂತಗೌಡ ಪಾಟೀಲ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಒತ್ತು ನೀಡಬೇಕು. ಗುರುಗಳು ಕಲಿಸಿದ ವಿದ್ಯೆಯನ್ನು ವಿದ್ಯಾರ್ಥಿಗಳು ಚಾಚು ತಪ್ಪದೇ ಕಲಿಯಬೇಕು ಎಂದರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮಲ್ಲಣ್ಣ ಮಡಿವಾಳ ಮಾತನಾಡಿದರು.ಇದೇ ವೆಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಉಪ-ನಿರ್ದೇಶಕ ಕಚೇರಿಯ ವಿ.ಎಂ.ಪತ್ತಾರ್, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಶರಣಪ್ಪ ಬನ್ನಿಕಟ್ಟಿ, ಕರಬಸಪ್ಪ ಮಾಲಿ ಪಾಟೀಲ್, ನಿವೃತ ಮುಖ್ಯಗುರು ಯಶವಂತರಾವ್ ಬಿರಾದಾರ್, ಸಂಸ್ಥೆಯ ಸಂಸ್ಥಾಪಕ ವಿಜಯಕುಮಾರ ಹಂಚಿನಾಳ, ಅಧ್ಯಕ್ಷ ಪ್ರಕಾಶ ಹಂಚಿನಾಳ, ಸಂಸ್ಥೆ ಕಾರ್ಯದರ್ಶಿ ಪ್ರಶಾಂತ್ ಪಾಟೀಲ್, ಆಡಳಿತಾಧಿಕಾರಿ ಶೃತಿ ಪಾಟೀಲ್, ಮುಖ್ಯಗುರ ಗುರುರಾಜ ರಾವೂರ ವೇದಿಕೆಯಲ್ಲಿದ್ದರು. ಕಾರ್ಯಮಕ್ರದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ರವಿಂದ್ರ ಸಜ್ಜನಶೇಟ್ಟಿ, ರಮೇಶ ಬಟಗೇರಿ, ಶಿವಮುದ್ರಪ್ಪ ಸಣ್ಣೂರಕರ, ಡಿ.ಕೆ.ಪಾಟೀಲ್, ಡಾ.ದಾವೂದ ಪಟೇಲ್, ರಾಜಶೇಖರ ತಿಮ್ಮನಾಯಕ್, ರಾಜಶೇಖರ ಬಳ್ಳಾ, ರವಿ ಅಬ್ಬಿಗೇರಿ, ವಿರಸಂಗಪ್ಪ ಸುಲೇಗಾಂವ, ಶೃತಿ ಡಿ. ಹೆಬ್ಬಾಳ, ಕಾವೇರಿ ದರಪುರ್ ಇದ್ದರು. ಶಿಕ್ಷಕ ಜೋಸೇಫ್ ನಿರೂಪಿಸಿದರು. ನಾಗರತ್ನ ವಂದಿಸಿದರು.
ಬಿಡಿಎ ಅಧಿಕಾರಿಗೆ 4 ಪ್ರತ್ಯೇಕ ಪ್ರಕರಣಗಳಲ್ಲಿ 1ಲಕ್ಷ ರೂ.ದಂಡ ವಿಧಿಸಿದ ಮಾಹಿತಿ ಆಯೋಗ
ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿದ್ದ ಅರ್ಜಿದಾರರಿಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ತೋರಿದ್ದ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ಬಿಡಿಎ)ದ ಅಧಿಕಾರಿಗೆ ಕರ್ನಾಟಕ ಮಾಹಿತಿ ಆಯೋಗ 4 ಪ್ರತ್ಯೇಕ ಪ್ರಕರಣಗಳಲ್ಲಿ 1 ಲಕ್ಷ ರೂ. ದಂಡ ವಿಧಿಸಿದೆ. ಅದೇ ರೀತಿ ಮತ್ತೊಬ್ಬ ಅಧಿಕಾರಿಗೆ ಪ್ರಕರಣವೊಂದರಲ್ಲಿ ಮಾಹಿತಿ ನೀಡದಿದ್ದಕ್ಕಾಗಿ 25ಸಾವಿರ ರೂ ದಂಡ ವಿಧಿಸಿದೆ. ಬಿಡಿಎ ಉಪಕಾರ್ಯದರ್ಶಿ-1 ಉಮೇಶ್ ಅವರೇ ಮಾಹಿತಿ ಆಯೋಗದಿಂದ 1ಲಕ್ಷ ರೂ.ದಂಡನೆಗೆ ಒಳಗಾದ ಅಧಿಕಾರಿ. ಅದೇ ರೀತಿ ಬಿಡಿಎ ಕಾರ್ಯದರ್ಶಿ ಸಿ.ಎಲ್.ಶಿವಕುಮಾರ್ಗೆ ಪ್ರತ್ಯೇಕ ಪ್ರಕರಣವೊಂದರಲ್ಲಿ ಆಯೋಗ 25 ಸಾವಿರ ರೂ.ದಂಡ ಹಾಕಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಎಲ್ಲ ಸಾರ್ವಜನಿಕ ಪ್ರಾಧಿಕಾರಗಳು ಕಾಯ್ದೆಯ ಕಲಂ 4ರ ಅನ್ವಯ ತಮ್ಮ ಪ್ರಾಧಿಕಾರಗಳ ಹೊಣೆಗಾರಿಕೆಯನ್ನು ಕಾಲಕಾಲಕ್ಕೆ ನಿರ್ವಹಿಸಿದ ಕುರಿತು ತಮ್ಮ ವೆಬ್ಸೈಟ್ನಲ್ಲಿ ಅಧಿಕೃತವಾಗಿ ಪ್ರಕಟಿಸಬೇಕು ಮತ್ತು ನಿರ್ವಹಿಸಿರಬೇಕು. ಈ ಬಗ್ಗೆ ದೇಶದ ಸುಪ್ರೀಂ ಕೋರ್ಟ್ ಮಾಹಿತಿ ಹಕ್ಕು ಕಾಯ್ದೆಯ ಕಲಂ 4ನ್ನು ಜಾರಿಗೊಳಿಸಿ, ನಿರ್ವಹಿಸಬೇಕು, ಕಾಲಕಾಲಕ್ಕೆ ಪರಿಷ್ಕರಿಸಿ ತಮ್ಮ ಅಧಿಕೃತ ಜಾಲತಾಣಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ತೀರ್ಪು ನೀಡಿತ್ತು. ಕಾಯ್ದೆ ಜಾರಿಯಾಗಿ 20ವರ್ಷ ಕಳೆದರೂ ಇನ್ನೂ ಹಲವು ಪ್ರಾಧಿಕಾರಗಳು ಮಾಹಿತಿ ಹಕ್ಕು ಕಾಯ್ದೆಯ ಕಲಂ 4 (1)(ಎ)ಮತ್ತು (ಬಿ)ಯನ್ನು ನಿರ್ವಹಿಸುತ್ತಿಲ್ಲ ಎಂಬ ಕಾರಣಕ್ಕಾಗಿ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿತ್ತು. ಅದನ್ನು ಪಾಲಿಸುವುದು ಕಡ್ಡಾಯ ಆಗಿದ್ದರೂ ಇನ್ನೂ ಅಧಿಕಾರಿಗಳು ಪಾಲಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಮಾಹಿತಿ ಆಯೋಗ ಅಧಿಕಾರಿಗೆ ದಂಡ ವಿಧಿಸಿದೆ. ಬಿಡಿಎ ಉಪಕಾರ್ಯದರ್ಶಿಗೆ ಕಚೇರಿಯಲ್ಲಿ ಆರ್ಟಿಐ ಕಾಯ್ದೆಯ ಕಲಂ 4ರ ನಿರ್ವಹಣೆ ಕುರಿತಂತೆ ನಾಲ್ವರು ಅರ್ಜಿದಾರರು ತಮ್ಮ ಪ್ರತ್ಯೇಕ ಅರ್ಜಿಗಳಲ್ಲಿ ಮಾಹಿತಿ ಕೋರಿದ್ದರು. ಅರ್ಜಿದಾರರು ಸಲ್ಲಿಸಿದ ಕೋರಿಕೆಗೆ ಯಾವುದೇ ಮಾಹಿತಿ ನೀಡದೇ, ಉಪಕಾರ್ಯದರ್ಶಿ ಉಮೇಶ್ ನಿರ್ಲಕ್ಷ್ಯ ತೋರಿದ್ದರು. ಈ ಬಗ್ಗೆ ಅರ್ಜಿದಾರರಾದ ತಕ್ಷಕ್, ತನ್ವಿತಾ ಗೌರ್, ಅಶ್ವಿಜಾ ಪಿ. ಮತ್ತು ಬಾಲಚಂದ್ರ ರಾವ್ ಎಂಬುವರು ಮಾಹಿತಿ ಹಕ್ಕು ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ ಮಾಹಿತಿ ಆಯೋಗ, ಉಮೇಶ್ಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಆದರೂ, ಸದರಿ ಅಧಿಕಾರಿಯವರು ಅರ್ಜಿದಾರರಿಗೆ ಮಾಹಿತಿ ಒದಗಿಸಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಮಾಹಿತಿ ಆಯೋಗ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ತಲಾ 25ಸಾವಿರ ರೂ.ನಂತೆ 1 ಲಕ್ಷ ರೂ.ದಂಡ ವಿಧಿಸಿದೆ. ಅಲ್ಲದೇ, ಮಾಹಿತಿ ಹಕ್ಕು ಕಾಯ್ದೆಯನ್ನು ನಿರ್ಲಕ್ಷಿಸಿರುವ ಉಮೇಶ್ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಸರಕಾರಕ್ಕೆ ಏಕೆ ಶಿಫಾರಸು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ಮತ್ತೊಂದು ಪ್ರಕರಣದಲ್ಲಿ, ಬಿಡಿಎ ಹೆಚ್ಚುವರಿ ಭೂ ಸ್ವಾಧೀನಾಧಿಕಾರಿಗಳ ಅಧಿಕಾರ ವ್ಯಾಪ್ತಿಯ ಕುರಿತಂತೆ ಸರಕಾರದ ಆದೇಶದ ಪ್ರತಿಯನ್ನು ಕೋರಿ, ಸುರೇಶ್ ಚಂದ್ರ ಬಾಬು ಎಂಬುವರು, ಬಿಡಿಎ ಕಾರ್ಯದರ್ಶಿ ಶಿವಕುಮಾರ್ಗೆ ಅರ್ಜಿ ಸಲ್ಲಿಸಿದ್ದರು. ಶಿವಕುಮಾರ್ ಕೂಡ ಅರ್ಜಿದಾರರು ಕೋರಿರುವ ದಾಖಲೆ ಒದಗಿಸಿಲ್ಲ. ಹೀಗಾಗಿ ಅರ್ಜಿದಾರರು ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಾಹಿತಿ ಆಯೋಗ, ಮಾಹಿತಿ ನೀಡದ ಶಿವಕುಮಾರ್ಗೆ 25ಸಾವಿರ ರೂ.ದಂಡ ವಿಧಿಸಿದೆ. ಒಂದು ವೇಳೆ ಅರ್ಜಿದಾರರು ಕೋರಿರುವ ದಾಖಲೆಯನ್ನು ತಕ್ಷಣ ನೀಡದಿದ್ದಲ್ಲಿ ಶಿವಕುಮಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸರಕಾರಕ್ಕೆ ಶಿಫಾರಸು ಮಾಡುವುದು ಎಂದು ಎಚ್ಚರಿಕೆ ನೀಡಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಆಯೋಗವು ತಿಳಿಸಿದೆ.
ಅನ್ನ ಮತ್ತು ನೀರು ಸಿಗದ ಪರಿಸ್ಥಿತಿಯಲ್ಲಿ ಅರಬ್ ದೇಶಗಳು, ಸೂಪರ್ ಮಾರ್ಕೆಟ್ ಖಾಲಿ ಖಾಲಿ | Operation Roaring Lion
ಇರಾನ್ ಸರ್ವಾಧಿಕಾರಿ ಖಮೇನಿ ಹತ್ಯೆ ನಂತರ ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ರೊಚ್ಚಿಗೆದ್ದು ಇಡೀ ಮಧ್ಯಪ್ರಾಚ್ಯ ಪ್ರದೇಶವನ್ನೇ ಸ್ಮಶಾನ ಮಾಡುತ್ತಿದೆ ಇರಾನ್ನ ಸೇನೆ. ಅದರಲ್ಲೂ ಪೆಟ್ರೋಲ್ &ಡೀಸೆಲ್ ಮಾರಾಟ ಮಾಡಿಕೊಂಡು ಲಕ್ಷಾಂತರ ಕೋಟಿ ರೂಪಾಯಿ ಹಣ ಸಂಪಾದನೆ ಮಾಡಿ, ಜಗತ್ತಿನ ಅತ್ಯಂತ ಶ್ರೀಮಂತ ದೇಶಗಳಲ್ಲಿ ಒಂದಾಗಿವೆ ಅರಬ್ ದೇಶಗಳು. ಆದರೆ ದಿಢೀರ್ ಇರಾನ್ ವಿರುದ್ಧ ಇಸ್ರೇಲ್
2ನೇ ವಾರಕ್ಕೆ ಕಾಲಿಟ್ಟ ಮಧ್ಯಪ್ರಾಚ್ಯ ಸಂಘರ್ಷ: ಅಮೆರಿಕದಿಂದ ಇಸ್ರೇಲ್ಗೆ 12 ಸಾವಿರ ಬಾಂಬ್ ಮಾರಾಟ
Middle East War- ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಸಮರ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಸಾವುನೋವುಗಳ ಸಂಖ್ಯೆ 1,600 ದಾಟಿದೆ. ಏತನ್ಮಧ್ಯೆ ಇಸ್ರೇಲ್ಗೆ ತುರ್ತಾಗಿ 12 ಸಾವಿರ ವೈಮಾನಿಕ ಬಾಂಬ್ಗಳನ್ನು ಪೂರೈಸಲು ಅಮೆರಿಕದ ಟ್ರಂಪ್ ಆಡಳಿತ ಅನುಮೋದನೆ ನೀಡಿದೆ. ಇತ್ತ ಇರಾನ್ನ ಪರಮಾಣು ಕೇಂದ್ರ ಹಾಗೂ ಲೆಬನಾನ್ನ ಹೆಜ್ಬೊಲ್ಲಾ ನೆಲೆಗಳ ಮೇಲೆ ಇಸ್ರೇಲ್ ಭೀಕರ ದಾಳಿ ನಡೆಸಿದೆ. ಪ್ರತಿಯಾಗಿ ಇರಾನ್ ಯುಎಇ ಮತ್ತು ಸೌದಿಯಲ್ಲಿರುವ ಅಮೆರಿಕದ ವಾಯುನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ.
ಬ್ಯಾಂಕ್ನಲ್ಲಿ ಗ್ರಾಹಕನ ಕೊಂದು 15 ಲಕ್ಷ ದರೋಡೆ ಮಾಡಿದ್ದ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್
2012ರಲ್ಲಿ ಕಾರ್ಪೋರೇಷನ್ ಬ್ಯಾಂಕಿನ ಚಿಕ್ಕಬಾಣಾವರ ಶಾಖೆಯಲ್ಲಿ ನಡೆದಿದ್ದ ಘಟನೆ
2026ರ ಟಿ20 ವಿಶ್ವಕಪ್ ಫೈನಲ್ ಬಳಿಕ ಸೂರ್ಯಕುಮಾರ್ ಯಾದವ್ ನಿವೃತ್ತಿ?: ಸಾಮಾಜಿಕ ಜಾಲತಾಣಗಳಲ್ಲಿ ವದಂತಿ!
ICC T20 World Cup 2026 - ಅಹ್ಮದಾಬಾದ್ ನಲ್ಲಿ ಮಾರ್ಚ್ 8ರಂದು ನಡೆಯಲಿರುವ ಭಾರತ Vs ನ್ಯೂಜಿಲೆಂಡ್ ಫೈನಲ್ ಬಳಿಕ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಏಕದಿನ ಮತ್ತು ಟೆಸ್ಟ್ ತಂಡದಲ್ಲಿ ಸ್ಥಾನವಿಲ್ಲದಿರುವುದು, ವಯಸ್ಸು, ಫಾರ್ಮ್ ಸಮಸ್ಯೆ, ಯುವ ಆಟಗಾರರ ಪೈಪೋಟಿ ಕಾರಣಗಳಿಂದಾಗಿ ತಂಡದಲ್ಲಿ ಸ್ಥಾನ ನೀಡುವುದು ಬಿಸಿಸಿಐಗೆ ಸಹ ಕಷ್ಟವಾಗಬಹುದು. ಈ ಕಾರಣಕ್ಕಾಗಿ ಅವರು ನಿವೃತ್ತಿ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಏನಿದ್ದರೂ ಫೈನಲ್ ಪಂದ್ಯದ ಬಳಿಕವೇ ತಿಳಿಯಲಿದೆ.
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಆರೋಪ: ಸಂತ್ರಸ್ತೆಯನ್ನು ತಾಯಿಯ ಸುಪರ್ದಿಗೆ ವಹಿಸಲು ಹೈಕೋರ್ಟ್ ನಕಾರ
ಬೆಂಗಳೂರು: ಸ್ವಂತ ಮಗಳನ್ನು ತಾಯಿಯೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಆರೋಪ ಹಿನ್ನೆಲೆಯಲ್ಲಿ ವೇಶ್ಯಾವಾಟಿಕೆ ಜಾಲದಿಂದ ರಕ್ಷಿಸಲ್ಪಟ್ಟ ಸಂತ್ರಸ್ತೆಯನ್ನು ತಾಯಿಯ ಸುಪರ್ದಿಗೆ ವಹಿಸಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ವ್ಯಾಜ್ಯದ ವಿಷಯವು ಅಪರಾಧದ ಬಗ್ಗೆ ಅಥವಾ ಸರ್ಕಾರ ಸಲ್ಲಿಸಿರುವ ದೋಷಾರೋಪ ಪಟ್ಟಿಗೆ ಸಂಬಂಧಿಸಿದ್ದಲ್ಲ. ಬದಲಿಗೆ, ಸಂತ್ರಸ್ತೆ ಮತ್ತು ಇತರರ ಹೇಳಿಕೆಗಳು ತಾಯಿಯೇ ತನ್ನ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ್ದಾಳೆ ಎಂಬುದನ್ನು ಮೇಲ್ನೋಟಕ್ಕೆ ಸೂಚಿಸುತ್ತವೆ. ವೇಶ್ಯಾವಾಟಿಕೆ ದಂಧೆಯಿಂದ ಸಂತ್ರಸ್ತೆಯನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಕೇಂದ್ರದ ವಶದಲ್ಲಿರಿಸಿದ್ದರೆ, ತಾಯಿಯೇ ತನ್ನ ಮಗಳನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದಾಳೆ ಎಂಬ ಆರೋಪಗಳಿವೆ. ಇಂಥ ಸಂದರ್ಭದಲ್ಲಿ ಮಗುವನ್ನು ತಾಯಿಯ ವಶಕ್ಕೆ ನೀಡಬಾರದು ಎಂಬ ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರ ವಾದ ಸರಿಯಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ. ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಸುವಾಗ ತಾಯಿಯ ಹೆಸರನ್ನು ಹೇಗೆ ಕೈಬಿಡಲಾಗಿದೆ ಎಂಬುದು ಅರ್ಥವಾಗದ ವಿಷಯವಾಗಿದೆ. ಮೇಲ್ನೋಟಕ್ಕೆ ಆಕೆ ತನ್ನ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ್ದಾಳೆ ಎಂಬ ಬಲವಾದ ಅನುಮಾನವಿದ್ದರೂ ಸಹ, ದೋಷಾರೋಪ ಪಟ್ಟಿಯಲ್ಲಿ ಆಕೆಯ ಹೆಸರನ್ನು ಪೊಲೀಸರು ಹೇಗೆ ಬಿಡಲು ಸಾಧ್ಯ ಎಂದು ಪ್ರಶ್ನಿಸಿರುವ ಹೈಕೋರ್ಟ್, ಸಂತ್ರಸ್ತೆಯನ್ನು ಅರ್ಜಿದಾರರ ವಶಕ್ಕೆ ನೀಡುವ ಬದಲು ಆಕೆಗೆ ಸುರಕ್ಷಿತ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದೆ. ಮಾನವ ಕಳ್ಳ ಸಾಗಣೆ ಪ್ರಕರಣಗಳಲ್ಲಿ ರಕ್ಷಿಸಲ್ಪಟ್ಟ ವ್ಯಕ್ತಿಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದಾಗ, ಅನೈತಿಕ ಸಾಗಣೆ (ತಡೆ) ಕಾಯ್ದೆ ಸೆಕ್ಷನ್ 17(2)ರ ಅಡಿಯಲ್ಲಿ ವಿಚಾರಣೆ ನಡೆಸಲು ಅವಕಾಶವಿದೆ. ರಕ್ಷಿಸಲ್ಪಟ್ಟ ವ್ಯಕ್ತಿಯ ವಯಸ್ಸು, ನಡತೆ, ಹಿನ್ನೆಲೆ ಮತ್ತು ಆ ವ್ಯಕ್ತಿಯ ಪಾಲನೆಯನ್ನು ವಹಿಸಿಕೊಳ್ಳಲು ಅವರ ಪೋಷಕರು, ಪೋಷಕರು ಅಥವಾ ಪತಿ ಸೂಕ್ತವೇ ಎಂಬುದನ್ನು ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಸಬೇಕಾಗುತ್ತದೆ. ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಅವರ ಪೋಷಕರು, ಪತಿ ಅಥವಾ ಪೋಷಕರಿಗೆ ಒಪ್ಪಿಸುವ ಆದೇಶವನ್ನು ಹೊರಡಿಸುವ ಮೊದಲು ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಸುವುದನ್ನು ಸೆಕ್ಷನ್ 17ಎ ಕಡ್ಡಾಯಗೊಳಿಸುತ್ತದೆ ಎಂದು ಹೈಕೋರ್ಟ್ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ. ದೆಹಲಿ ಮತ್ತು ಬಾಂಬೆ ಹೈಕೋರ್ಟ್ಗಳ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಾಲಯ, ರಕ್ಷಿಸಲ್ಪಟ್ಟ ವ್ಯಕ್ತಿಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದಾಗ, ಮ್ಯಾಜಿಸ್ಟ್ರೇಟ್ ಅವರು ಸೆಕ್ಷನ್ 17(2)ರ ಅಡಿಯಲ್ಲಿ ಮೊದಲ ಬಾರಿಗೆ ಹಾಜರುಪಡಿಸಿದಾಗಲೇ ಅವರ ವಯಸ್ಸನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಆ ವ್ಯಕ್ತಿ 18 ವರ್ಷದೊಳಗಿನವರಾಗಿದ್ದು, ಕಾನೂನಿನ ಸಂಘರ್ಷಕ್ಕೊಳಪಟ್ಟ ಬಾಲಾಪರಾಧಿಯಾಗಿದ್ದರೆ ಬಾಲನ್ಯಾಯ ಮಂಡಳಿಗೆ ಅಥವಾ ಆ ವ್ಯಕ್ತಿಯು ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಗುವಾಗಿದ್ದರೆ ಮಕ್ಕಳ ಕಲ್ಯಾಣ ಸಮಿತಿಗೆ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಹೇಳಿದೆ. ಮೇಲಿನ ತೀರ್ಪುಗಳ ಆಧಾರದಲ್ಲಿ, ತನ್ನ ಮಗಳನ್ನೇ ವೇಶ್ಯಾವಾಟಿಕೆ ದಂದೆಯಲ್ಲಿ ಬಳಸಿಕೊಳ್ಳುತ್ತಿದ್ದಾಳೆ ಎಂದು ಆರೋಪಿಸಲಾದ ತಾಯಿಗೆ ಮಗುವನ್ನು ಹಸ್ತಾಂತರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಯಾವುದೇ ವಿಚಾರಣಾ ಅರ್ಹತೆ (ಮೆರಿಟ್) ಹೊಂದಿರದ ಕಾರಣ ಅರ್ಜಿ ವಜಾಗೊಳಿಸಲಾಗುತ್ತಿದೆ ಎಂದು ಆದೇಶಿಸಿದೆ. ಪ್ರಕರಣದ ಹಿನ್ನೆಲೆ: ಅರ್ಜಿದಾರ ಮಹಿಳೆ ಸಂತ್ರಸ್ತೆಯ ತಾಯಿಯಾಗಿದ್ದು, ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಒಂದರಿಂದ ಸಂತ್ರಸ್ತೆಯನ್ನು ರಕ್ಷಿಸಲಾಗಿತ್ತು. ಸರ್ಕಾರ ಆಕೆಯನ್ನು ಮಕ್ಕಳ ಕಲ್ಯಾಣ ಕೇಂದ್ರದಲ್ಲಿ ಇರಿಸಿತ್ತು. ಈ ಮಧ್ಯೆ, ಮಗಳಿಗೆ 18 ವರ್ಷ ತುಂಬಿರುವುದರಿಂದ ಆಕೆಯನ್ನು ತನ್ನ ಸುಪರ್ದಿಗೆ ವಹಿಸುವಂತೆ ಕೋರಿ ಆಕೆಯ ತಾಯಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. 18 ವರ್ಷ ತುಂಬಿದವರನ್ನು ಮಕ್ಕಳ ಕಲ್ಯಾಣ ಕೇಂದ್ರದಲ್ಲಿ ಇರಿಸಲು ಸಾಧ್ಯವಿಲ್ಲ. ಆದ್ದರಿಂದ, ಮಗಳನ್ನು ತನ್ನ ವಶಕ್ಕೆ ಒಪ್ಪಿಸಬೇಕು ಎಂಬುದು ತಾಯಿಯ ವಾದವಾಗಿತ್ತು. ಆದರೆ, ತಾಯಿಯೇ ತನ್ನ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ್ದಳು ಎಂಬ ಆರೋಪದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ಆಕೆಯ ಅರ್ಜಿ ತಿರಸ್ಕರಿಸಿತ್ತು. ಇದರಿಂದ, ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು.
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ
ಚಿನ್ನ.. ಚಿನ್ನ.. ಅಂತಾ ಚಿನ್ನದ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಹೊಂದಿದ್ದ ಆಭರಣ ಪ್ರಿಯರು ಈಗ ಚಿನ್ನ ಖರೀದಿ ಮಾಡುವುದು ಬಿಡಿ ಬಂಗಾರ ಕನಸಲ್ಲಿ ಬಂದರೂ ಭಯಪಡುವ ವಾತಾವರಣ ನಿರ್ಮಾಣ ಆಗಿದೆ. ಏಕೆಂದರೆ ಚಿನ್ನದ ಬೆಲೆ ಭಾರಿ ದೊಡ್ಡ ಪ್ರಮಾಣದಲ್ಲಿ ಏರಿಕೆ ಕಾಣುತ್ತಾ ಸಾಗಿದ್ದು, ಇನ್ನೇನು ಬರೋಬ್ಬರಿ 2,00,000 ರೂಪಾಯಿ ತಲುಪುವ ಸಾಧ್ಯತೆ ಕೂಡ ದಟ್ಟವಾಗಿದೆ. ಇದೇ ಕಾರಣಕ್ಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಆರೋಪಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ. ಆರೋಪಿಗಳಾದ ಪುಟ್ಟಸ್ವಾಮಿ ಅಲಿಯಾಸ್ ಪವನ್, ಧನರಾಜ್, ನಂದೀಶ್ ಮತ್ತು ವಿ. ವಿನಯ್ಗೆ ಜಾಮೀನು ಮಂಜೂರು ಮಾಡಿ ನಗರದ 56ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ 2024ರ ಡಿಸೆಂಬರ್ 23ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು (ರಾಜ್ಯ ಸರ್ಕಾರ) ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ (ಮಾರ್ಚ್ 6) ವಿಚಾರಣೆ ನಡೆಸಿತು. ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿ, ಪ್ರಕರಣವು ಅತ್ಯಂತ ಹೀನವಾಗಿದೆ. ನಟ ದರ್ಶನ್, ಪವಿತ್ರಾಗೌಡ ಸೇರಿ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಇದರಿಂದ, ಆ ಏಳು ಮಂದಿ ಆರೋಪಿಗಳು ಮರಳಿ ಜೈಲು ಸೇರಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ಈ ನಾಲ್ವರು ಆರೋಪಿಗಳಿಗೆ ಮಂಜೂರಾಗಿರುವ ಜಾಮೀನು ರದ್ದುಪಡಿಸಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸುಪ್ರಿಂಕೋರ್ಟ್ ಆದೇಶವಿರುವುದು ನಿಜ. ಆದರೆ, ಅರ್ಜಿದಾರರಿಗೆ ಜಾಮೀನು ರದ್ದುಪಡಿಸಬೇಕೆಂಬ ಪ್ರಾಸಿಕ್ಯೂಷನ್ ಮನವಿ ಕುರಿತಂತೆ ಪರಿಶೀಲನೆ ನಡೆಸಬೇಕಿದೆ. ಅರ್ಜಿ ಸಂಬಂಧ ಆರೋಪಿಗಳ ಪರ ವಕೀಲರು ತಮ್ಮ ಆಕ್ಷೇಪಣೆ ಸಲ್ಲಿಸಲಿ ಎಂದು ಹೇಳಿತು. ಮುಂದುವರಿದು, ಕೊಲೆ ಪ್ರಕರಣಗಳಲ್ಲಿ ಭಾಗಿಯಾದ ಮಾತ್ರಕ್ಕೆ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದೇನಿಲ್ಲ. ಕೋರ್ಟ್ ಮೆಟ್ಟಿಲೇರಿದ ಎಲ್ಲ ಕೊಲೆ ಪ್ರಕರಣಗಳನ್ನು ಒಂದೇ ರೀತಿ ತಾಳೆ ಹಾಕಲಾಗದು. ಯಾರೋ ಒಬ್ಬರನ್ನು ಗುರಿಯಾಗಿಸಿಕೊಂಡು ಜಾಮೀನು ರದ್ದುಪಡಿಸಿದರೆ, ಸಂವಿಧಾನದಲ್ಲಿ ಕೊಡಮಾಡಲಾಗಿರುವ ಮೂಲಭೂತ ಹಕ್ಕಿಗೆ ಚ್ಯುತಿಯಾಗುವುದಿಲ್ಲವೇ? ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು ಇರುತ್ತದೆ. ಜಾಮೀನು ರದ್ದತಿ ವಿಚಾರವವು ಮೂಲಭೂತ ಹಕ್ಕು ಆದ ಜೀವಿಸುವ ಹಕ್ಕಿಗೆ ಸಂಬಂಧಪಟ್ಟಿರುತ್ತದೆ ಎಂದು ನ್ಯಾಯಪೀಠ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು. ಜಾಮೀನು ಅರ್ಜಿಗಳ ಕುರಿತು ವಿವೇಚನೆ ಬಳಸಿ ತೀರ್ಮಾನ ಕೈಗೊಳ್ಳುವ ಅಧಿಕಾರ ಹೈಕೋರ್ಟ್ಗೆ ಇರುತ್ತದೆ. ಆದ ಮಾತ್ರಕ್ಕೆ ಈ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರಾತಿ ಆದೇಶ ಎತ್ತಿಹಿಡಿಯಲಾಗುತ್ತದೆ ಎಂದರ್ಥವಲ್ಲ. ವಿಶೇಷವಾಗಿ ಈ ಪ್ರಕರಣ ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದ್ದು, ನ್ಯಾಯಾಲಯವೂ ಅದರ ಪ್ರಭಾವಕ್ಕೂ ಒಳಗಾಗಬೇಕಿಲ್ಲ ಎಂದು ಮೌಖಿಕವಾಗಿ ಹೇಳಿತು. ಅಂತಿಮವಾಗಿ ಅರ್ಜಿ ಕುರಿತು ಲಿಖಿತ ಆಕ್ಷೇಪಣೆ/ ವಾದಾಂಶ ಸಲ್ಲಿಸುವಂತೆ ಪ್ರತಿವಾದಿಯಾಗಿರುವ ನಾಲ್ವರೂ ಆರೋಪಿಗಳಿಗೆ ನಿರ್ದೇಶಿಸಿದ ಪೀಠ, ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು.
ಮುಂದಿನ ಚುನಾವಣೆಯಲ್ಲಿ ರಮಾನಾಥ ರೈ ಅಭ್ಯರ್ಥಿ, ಅವರನ್ನು ಮತ್ತೆ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ
ಮೂಡೂರು - ಪಡೂರು ಜೋಡುಕರೆ ಕಂಬಳ
ಬಂಗಾಳದಲ್ಲಿ ಮತುವಾ-ಮುಸ್ಲಿಂ ಮತದಾರರ ಅಳಿಸುವಿಕೆ: ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸಮರ ಸಾರಿದ ಮಮತಾ ಬ್ಯಾನರ್ಜಿ
ಚುನಾವಣಾ ಆಯೋಗದ (EC) ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಪಶ್ಚಿಮ ಬಂಗಾಳದ ಅಂತಿಮ ಮತದಾರರ ಪಟ್ಟಿಯಲ್ಲಿ 63 ಲಕ್ಷಕ್ಕೂ ಹೆಚ್ಚು ಅಥವಾ ಒಟ್ಟು ಮತದಾರರಲ್ಲಿ 9% ರಷ್ಟು ಅಳಿಸುವಿಕೆಗಳು ಕಂಡುಬಂದಿದ್ದು, 60 ಲಕ್ಷಕ್ಕೂ ಹೆಚ್ಚು ಮತದಾರರನ್ನು (8.5%) ‘ವಿಚಾರಣಾ ಹಂತ’ ಎಂಬ ವರ್ಗದಲ್ಲಿ ಇರಿಸಲಾಗಿದೆ. ಏಪ್ರಿಲ್ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ವಿಷಯವು ರಾಜ್ಯದಲ್ಲಿ ಪ್ರಮುಖ ರಾಜಕೀಯ ವಿವಾದವಾಗಿ ಮಾರ್ಪಟ್ಟಿದೆ. ಮತುವಾ ಮತದಾರರು ಹೆಚ್ಚಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಏತನ್ಮಧ್ಯೆ, ಹೆಚ್ಚಿನ ಮತದಾರರು ಮುಸ್ಲಿಮರಾಗಿರುವ ಪ್ರದೇಶಗಳಲ್ಲಿ ಅವರಿಗೆ ಇನ್ನೂ ಮತ ಚಲಾಯಿಸಲು ಅವಕಾಶವಿದೆಯೇ ಎಂಬುದನ್ನು ನಿರ್ಧರಿಸಲು ನ್ಯಾಯಾಂಗ ಅಧಿಕಾರಿಗಳು ಅನೇಕ ಜನರ ಹೆಸರುಗಳನ್ನು ಪರಿಶೀಲಿಸುತ್ತಿದ್ದಾರೆ. ಬಂಗಾಳದಲ್ಲಿ ನಡೆದ ಎರಡನೇ ಮತ್ತು ಅಂತಿಮ ಹಂತದ ಎಸ್ಐಆರ್ ಪ್ರಕ್ರಿಯೆ ಬಳಿಕ ಫೆಬ್ರವರಿ 28ರಂದು ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿತು. ಇದು ಎಸ್ಐಆರ್ನ ಕರಡು ಪಟ್ಟಿಯಲ್ಲಿ ಮೊದಲ ಹಂತದ ನಂತರ ಕಂಡುಬಂದ ಮತುವಾ ಪ್ರದೇಶಗಳಲ್ಲಿ ಹೆಚ್ಚಿನ ಅಳಿಸುವಿಕೆಗಳ ಮಾದರಿಯನ್ನು ಪ್ರತಿಬಿಂಬಿಸುತ್ತದೆ. ಅಂತಿಮ ಮತದಾರರ ಪಟ್ಟಿಗಳ ಕುರಿತು ಇಂಡಿಯನ್ ಎಕ್ಸ್ಪ್ರೆಸ್ ನಡೆಸಿದ ವಿಶ್ಲೇಷಣೆಯು ದಬ್ಗ್ರಾಮ್-ಫುಲ್ಬರಿ, ಬಾಗ್ಡಾ ಮತ್ತು ಕಲ್ಯಾಣಿ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಅಳಿಸುವಿಕೆ ಸಂಭವಿಸಿರುವುದನ್ನು ತೋರಿಸುತ್ತದೆ. ಈ ಸ್ಥಾನಗಳಲ್ಲಿ ಮತುವಾಗಳು ಬಹುಸಂಖ್ಯಾತರಾಗಿದ್ದಾರೆ. ಎರಡನೇ ಹಂತದಲ್ಲಿ ವಿಚಾರಣೆಗೆ ಹಾಜರಾಗದವರ ಹೆಸರುಗಳನ್ನು ಅಳಿಸುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಈ ಪ್ರವೃತ್ತಿಯ ಅರ್ಥವೇನೆಂದರೆ, ಈ ಮತದಾರರು ಸರಿಯಾದ ದಾಖಲೆಗಳನ್ನು ಸಲ್ಲಿಸುವಷ್ಟು ವಿಶ್ವಾಸ ಹೊಂದಿರಲಿಲ್ಲ ಮತ್ತು ಅದಕ್ಕಾಗಿಯೇ ಅವರು ವಿಚಾರಣೆಗಳನ್ನು ತಪ್ಪಿಸಿಕೊಂಡರು ಎಂಬುದಾಗಿದೆ ಎಂದು ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಸ್ಐಆರ್ಗೂ ಮೊದಲು ಪಶ್ಚಿಮ ಬಂಗಾಳದಲ್ಲಿ 7.66 ಕೋಟಿ ಮತದಾರರಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ 63.67 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ತೋರಿಸಲಾಗಿದೆ. ಇನ್ನೂ 60.07 ಲಕ್ಷ ಹೆಸರುಗಳನ್ನು ‘ವಿಚಾರಣಾ ಹಂತ’ ಎಂಬ ವರ್ಗದಲ್ಲಿ ಇರಿಸಲಾಗಿದೆ. 1.88 ಲಕ್ಷ ಹೊಸ ಹೆಸರುಗಳನ್ನು ಸೇರಿಸಲಾಗಿದ್ದರೂ ರಾಜ್ಯದ ಒಟ್ಟು ಮತದಾರರ ಸಂಖ್ಯೆ ಈಗ 7.04 ಕೋಟಿಯಾಗಿದೆ. ಮತುವಾ ಮತದಾರರ ಅಳಿಸುವಿಕೆ ಮತುವಾ ಸಮುದಾಯವು ಪೂರ್ವ ಬಾಂಗ್ಲಾದೇಶದಲ್ಲಿ ರೈತರಾಗಿ ಕೆಲಸ ಮಾಡುತ್ತಿತ್ತು. 1950ರ ನಂತರ ಅವರು ಪಶ್ಚಿಮ ಬಂಗಾಳಕ್ಕೆ ವಲಸೆ ಹೋಗಲು ಪ್ರಾರಂಭಿಸಿದರು. ಸುಮಾರು ಎರಡು ದಶಕಗಳ ವಲಸೆಯ ಬಳಿಕ ಅವರು ರಾಜ್ಯದ ಎರಡನೇ ಅತಿದೊಡ್ಡ ಪರಿಶಿಷ್ಟ ಜಾತಿ (SC) ಸಮುದಾಯವಾಗಿ ರೂಪುಗೊಂಡರು. ಮತುವಾ ಸಮುದಾಯವು ಹೆಚ್ಚಾಗಿ ಉತ್ತರ 24 ಪರಗಣ ಜಿಲ್ಲೆಯ ಠಾಕೂರ್ ನಗರದ ಸುತ್ತಮುತ್ತ ವಾಸಿಸುತ್ತಿದೆ. ಅವರ ಪ್ರಧಾನ ಕಚೇರಿ ಠಾಕೂರ್ಬರಿಯಲ್ಲಿದ್ದು, ಹೆಚ್ಚಿನ ರಾಜಕೀಯ ಪ್ರಭಾವ ಹೊಂದಿರುವ ಠಾಕೂರ್ ಕುಟುಂಬದ ನೇತೃತ್ವದಲ್ಲಿದೆ. ಮತುವಾಗಳು ರಾಜ್ಯದ ಒಟ್ಟು ಮತದಾರರಲ್ಲಿ ಸುಮಾರು 17% ರಷ್ಟಿದ್ದು, 30 ವಿಧಾನಸಭಾ ಸ್ಥಾನಗಳಲ್ಲಿ ಗಮನಾರ್ಹ ಉಪಸ್ಥಿತಿಯನ್ನು ಹೊಂದಿದ್ದಾರೆ ಎಂದು ಸರ್ಕಾರ ಅಂದಾಜಿಸಿದೆ. ಸಮುದಾಯದ ಅಂದಾಜಿನ ಪ್ರಕಾರ ಅವರ ಮತ ಬ್ಯಾಂಕ್ ಸುಮಾರು 20% ರಷ್ಟಿದ್ದು, 40–45 ಸ್ಥಾನಗಳಲ್ಲಿ ನೇರ ಪರಿಣಾಮ ಬೀರುತ್ತದೆ. ಬಾಗ್ಡಾ, ಬಂಗಾಂವ್ ಉತ್ತರ ಮತ್ತು ಬಂಗಾಂವ್ ದಕ್ಷಿಣ ಕ್ಷೇತ್ರಗಳು ಸೇರಿದಂತೆ ಈ ಪ್ರದೇಶಗಳು ಎಸ್ಐಆರ್ನ ಮೊದಲ ಮತ್ತು ಎರಡನೇ ಹಂತಗಳಲ್ಲಿ ಗಮನಾರ್ಹ ಅಳಿಸುವಿಕೆಗಳನ್ನು ಕಂಡಿವೆ. ಉತ್ತರ ಬಂಗಾಳದ ಮತುವಾ ಪ್ರಾಬಲ್ಯದ ಪ್ರದೇಶಗಳಾದ ಮತಿಗರಾ–ನಕ್ಸಲ್ಬರಿ ಮತ್ತು ದಬ್ಗ್ರಾಮ್–ಫುಲ್ಬರಿ ಕ್ಷೇತ್ರಗಳಲ್ಲಿಯೂ ಹೆಚ್ಚಿನ ಸಂಖ್ಯೆಯ ಅಳಿಸುವಿಕೆಗಳು ಕಂಡುಬಂದಿವೆ. ಮುಸ್ಲಿಂ ಮತದಾರರು ‘ವಿಚಾರಣಾ ಹಂತದಲ್ಲಿ’ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣಗಳು ಮತ್ತು ಉತ್ತರ 24 ಪರಗಣಗಳಂತಹ ಮುಸ್ಲಿಂ ಪ್ರಾಬಲ್ಯದ ಜಿಲ್ಲೆಗಳಲ್ಲಿನ ಅನೇಕ ವಿಧಾನಸಭಾ ಕ್ಷೇತ್ರಗಳಲ್ಲಿ 100 ಕ್ಕಿಂತ ಕಡಿಮೆ ಮತದಾರರ ಹೆಸರುಗಳನ್ನು ಮಾತ್ರ ಅಳಿಸಲಾಗಿದೆ. ಅಲ್ಪಸಂಖ್ಯಾತರ ಪ್ರಾಬಲ್ಯದ ಜಿಲ್ಲೆಗಳಲ್ಲಿ ‘ವಿಚಾರಣಾ ಹಂತ’ದಲ್ಲಿ ಇರಿಸಲಾದ ಮತದಾರರ ಸಂಖ್ಯೆ ದೊಡ್ಡದಾಗಿದೆ. ವಿಚಾರಣಾ ಹಂತದಲ್ಲಿ ಇರಿಸಲಾಗಿದೆ ಎಂದರೆ ಮುಂಬರುವ ವಾರಗಳಲ್ಲಿ ಅವರ ಅರ್ಹತೆಯನ್ನು ಕಾನೂನು ಪರಿಶೀಲನೆಯ ಮೂಲಕ ನಿರ್ಧರಿಸಲಾಗುತ್ತದೆ. ಅದಕ್ಕಾಗಿಯೇ ಆ ಜಿಲ್ಲೆಗಳಲ್ಲಿ ಅಳಿಸಬೇಕಾದ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹಿರಿಯ ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಪ್ರಾಬಲ್ಯದ ಮುರ್ಷಿದಾಬಾದ್, ಮಾಲ್ಡಾ, ದಕ್ಷಿಣ 24 ಪರಗಣಗಳು, ಉತ್ತರ 24 ಪರಗಣಗಳು, ಹೌರಾ ಮತ್ತು ಉತ್ತರ ದಿನಾಜ್ಪುರ ಜಿಲ್ಲೆಗಳಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಈ ವರ್ಗದಲ್ಲಿದ್ದಾರೆ ಎಂದು ಡೇಟಾ ತೋರಿಸುತ್ತದೆ. ರಾಜಕೀಯ ಪರಿಣಾಮ ಮತುವಾ ಸಮುದಾಯವನ್ನು ಮುನ್ನಡೆಸುವ ಪ್ರಬಲ ಠಾಕೂರ್ ಕುಟುಂಬವು ಆಡಳಿತಾರೂಢ ಟಿಎಂಸಿ ಮತ್ತು ಪ್ರಮುಖ ವಿರೋಧ ಪಕ್ಷ ಬಿಜೆಪಿ ಎರಡರಲ್ಲೂ ಪ್ರಮುಖ ಸದಸ್ಯರನ್ನು ಹೊಂದಿದೆ. ಮತದಾರರ ಪಟ್ಟಿ ನವೀಕರಣ (SIR) ಸಮಯದಲ್ಲಿ ಎರಡೂ ಪಕ್ಷಗಳು ಮತುವಾ ಮತದಾರರಿಗೆ ಸಹಾಯ ಮಾಡಲು ಶಿಬಿರಗಳನ್ನು ನಡೆಸಿದ್ದವು. ಆದರೆ ಪಶ್ಚಿಮ ಬಂಗಾಳದಾದ್ಯಂತ ಹಿಂದೂ ಮತದಾರರನ್ನು ಒಗ್ಗೂಡಿಸುವ ಯೋಜನೆಯ ಕೇಂದ್ರ ಭಾಗವಾಗಿ ಬಿಜೆಪಿ ನಿರ್ದಿಷ್ಟವಾಗಿ ಮತುವಾ ಸಮುದಾಯವನ್ನು ನೋಡುತ್ತಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಂಗಾಳದ 42 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆಲ್ಲಲು ಬಿಜೆಪಿಗೆ ಸಹಾಯ ಮಾಡುವಲ್ಲಿ ಮತುವಾ ಸಮುದಾಯವು ಪ್ರಮುಖ ಪಾತ್ರ ವಹಿಸಿತು. ಆದರೆ ಹೊಸ ಮತದಾರರ ಪಟ್ಟಿಗಳ ಮೊದಲ ಕರಡು ಬಿಡುಗಡೆಯಾದಾಗಿನಿಂದ ಪಕ್ಷವು ಸಮುದಾಯದಿಂದ ಸಾಕಷ್ಟು ಟೀಕೆಗಳನ್ನು ಎದುರಿಸಿದೆ. ಮತುವಾಗಳಲ್ಲಿ ತನ್ನ ಬೆಂಬಲಿಗರನ್ನು ಬಲಪಡಿಸಲು ಬಿಜೆಪಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನ್ನು ಎತ್ತಿ ತೋರಿಸುತ್ತಿದೆ. ಬಿಜೆಪಿ ಮತ ಬ್ಯಾಂಕ್ ರಾಜಕೀಯವನ್ನು ಬಯಸುವುದಿಲ್ಲ; ದೇಶಕ್ಕೆ ಒಳ್ಳೆಯದು ಎಂಬ ಕಾರಣಕ್ಕೆ ಎಸ್ಐಆರ್ ಪರವಾಗಿ ನಿಂತಿದೆ ಎಂದು ಪಕ್ಷ ಹೇಳಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉದ್ದೇಶಪೂರ್ವಕವಾಗಿ ಮತುವಾ ಸಮುದಾಯದಲ್ಲಿ ಭಯ ಹುಟ್ಟಿಸಿ ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸದಂತೆ ಮಾಡಿದ್ದಾರೆ. ಅವರು ಸಿಎಎಗೆ ಅರ್ಜಿ ಸಲ್ಲಿಸಿದ್ದರೆ ಅವರಿಗೆ ಈಗಾಗಲೇ ಭಾರತದ ಪೌರತ್ವ ಸಿಗುತ್ತಿತ್ತು ಎಂದು ಬಿಜೆಪಿ ಹೇಳಿದೆ. ಟಿಎಂಸಿ ಪಕ್ಷವು ಮತದಾರರ ಪಟ್ಟಿ ನವೀಕರಣವನ್ನು ಟೀಕಿಸಿದ್ದು, ಬಿಜೆಪಿ ಮತ್ತು ಚುನಾವಣಾ ಆಯೋಗ ಮುಸ್ಲಿಂ ಮತದಾರರಲ್ಲಿ ಟಿಎಂಸಿಯ ಬೆಂಬಲವನ್ನು ಹಾಳು ಮಾಡಲು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದೆ. ಆರಂಭದಿಂದಲೂ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಸಮುದಾಯಗಳು ಹೆಚ್ಚು ತೊಂದರೆ ಅನುಭವಿಸುತ್ತಿವೆ. ಚುನಾವಣಾ ಆಯೋಗವು ಅನೇಕ ಮುಸ್ಲಿಂ ಮತದಾರರನ್ನು ಅಳಿಸಲು ಯೋಜಿಸಿತ್ತು. ಆದರೆ ಮಮತಾ ಬ್ಯಾನರ್ಜಿ ಈ ವಿಷಯವನ್ನು ಸುಪ್ರೀಂ ಕೋರ್ಟ್ಗೆ ಕೊಂಡೊಯ್ದ ನಂತರ ಅದನ್ನು ನಿಲ್ಲಿಸಲಾಯಿತು. ಈಗ ಆ ಪ್ರಕರಣಗಳನ್ನು ನ್ಯಾಯಾಂಗ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇದು ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲು ಬಿಜೆಪಿ ಮತ್ತು ಚುನಾವಣಾ ಆಯೋಗ ಕೈಗೊಂಡ ಉದ್ದೇಶಪೂರ್ವಕ ನಡೆ ಎಂದು ಟಿಎಂಸಿ ವಕ್ತಾರ ಅರೂಪ್ ಚಕ್ರವರ್ತಿ ಹೇಳಿದ್ದಾರೆ. ಮಮತಾ ಧರಣಿ ಎಸ್ಐಆರ್ ವಿರುದ್ಧ ಕೋಲ್ಕತ್ತಾದಲ್ಲಿ ಶುಕ್ರವಾರ ಧರಣಿ ನಡೆಸುವ ಒಂದು ದಿನ ಮೊದಲು ಮತುವಾ ಪ್ರಾಬಲ್ಯದ ಪ್ರದೇಶಗಳಲ್ಲಿ “ಹೆಚ್ಚಿನ ಮತದಾರರ ಅಳಿಸುವಿಕೆ” ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಮೇಲೆ ದಾಳಿ ನಡೆಸಿದ್ದಾರೆ. ಗುರುವಾರ ಮತುವಾ ನಾಯಕಿ ಬಿನಾಪಾಣಿ ದೇವಿ ಅವರ ಪುಣ್ಯತಿಥಿಯಂದು ಮಮತಾ ಬ್ಯಾನರ್ಜಿ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಕೇಂದ್ರ ಸರ್ಕಾರದ ಕ್ರಮಗಳು ಮತುವಾ ಸಮುದಾಯವನ್ನು ಗೊಂದಲಮಯ ಹಾಗೂ ಅಸ್ಥಿರ ಸ್ಥಿತಿಗೆ ತಳ್ಳಿವೆ ಎಂದು ಹೇಳಿದ್ದಾರೆ. ಬಿಜೆಪಿ ಪೌರತ್ವದೊಂದಿಗೆ ರಾಜಕೀಯ ಮಾಡುತ್ತಿದೆ. ಇದು ಈಗಾಗಲೇ ಭಾರತದ ದೀರ್ಘಕಾಲೀನ ನಾಗರಿಕರಾಗಿರುವ ಜನರ ಗುರುತನ್ನು ಪ್ರಶ್ನಿಸುತ್ತಿದೆ. ಮತದಾರರ ಪಟ್ಟಿ ನವೀಕರಣದ ಮೂಲಕ ಉದ್ದೇಶಪೂರ್ವಕವಾಗಿ ಮತುವಾ ಸಮುದಾಯವನ್ನು ಪಟ್ಟಿಯಿಂದ ಹೊರಹಾಕಲಾಗುತ್ತಿದೆ. ಇದು ಸರ್ಕಾರವನ್ನು ಆಯ್ಕೆ ಮಾಡುವ ಜನರಲ್ಲಿ ಅನಿಶ್ಚಿತತೆಯನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ. ಈ “ಅನ್ಯಾಯದ” ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದ ಮಮತಾ, ಬಂಗಾಳದ ಜನರು ಹಾಗೂ ಅವರ ಮತುವಾ ಸಹೋದರರ ಹಕ್ಕುಗಳನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನದ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. ಶುಕ್ರವಾರ ಕೋಲ್ಕತ್ತಾದ ಎಸ್ಪ್ಲೇನೇಡ್ ಮೆಟ್ರೋ ಚಾನೆಲ್ನಲ್ಲಿ ಧರಣಿ ಆರಂಭಿಸಿದ ಮಮತಾ ಬ್ಯಾನರ್ಜಿ, ಮತದಾರರ ಹಕ್ಕುಗಳನ್ನು ಕಸಿದುಕೊಳ್ಳಲು ಬಿಜೆಪಿ ಮತ್ತು ಚುನಾವಣಾ ಆಯೋಗ ಪಿತೂರಿ ನಡೆಸುತ್ತಿವೆ. ಇವರ ಮುಖವಾಡ ಕಳಚುತ್ತೇನೆ. ಹಲವು ಮತದಾರರು ಮೃತಪಟ್ಟಿದ್ದಾರೆ ಎಂದು ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ತಪ್ಪಾಗಿ ನಮೂದಿಸಲಾಗಿದೆ. ಅಂತಹ ಮತದಾರರನ್ನು ಮಾಧ್ಯಮ ಮತ್ತು ಚುನಾವಣಾ ಆಯೋಗದ ಮುಂದೆ ಹಾಜರುಪಡಿಸಲು ನಾನು ಸಿದ್ಧವಿದ್ದೇನೆ ಎಂದು ಹೇಳಿದ್ದಾರೆ.
ಮಾ.8ರಿಂದ ಮಂಗಳೂರು - ಜಿದ್ದಾ - ಮಸ್ಕತ್ ವಿಮಾನ ಯಾನ ಪುನರಾರಂಭ
ಮಂಗಳೂರು, ಮಾ.7: ಮಂಗಳೂರು - ಜೆದ್ದಾ ಮತ್ತು ಮಂಗಳೂರು - ಮಸ್ಕತ್ ಮಧ್ಯೆ ಮಾ.8ರಿಂದ ವಿಮಾನ ಯಾನ ಪುನರಾರಂಭಗೊಳ್ಳಲಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. ಮಂಗಳೂರಿನಿಂದ ಜೆದ್ದಾಕ್ಕೆ ಐಎಕ್ಸ್ 845 ವಿಮಾನ ಮುಂಜಾವ 5:20ಕ್ಕೆ ನಿಗದಿಯಾಗಿತ್ತು. ಆದರೆ ಅದು ಬೆಳಗ್ಗೆ 9ಕ್ಕೆ ನಿರ್ಗಮಿಸುವ ಸಾಧ್ಯತೆ ಇದೆ. ಐಎಕ್ಸ್ 846 ವಿಮಾನವು ಜೆದ್ದಾದಿಂದ ಹೊರಟು ಮಂಗಳೂರಿಗೆ ಸಂಜೆ 6:20ಕ್ಕೆ ತಲುಪುವ ಬಗ್ಗೆ ಸಮಯ ನಿಗದಿಯಾಗಿದ್ದರೂ ಅದು ರಾತ್ರಿ 10ಕ್ಕೆ ಮಂಗಳೂರು ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾ.8ರಂದು ಬೆಳಗ್ಗೆ 9:25ಕ್ಕೆ ಮಂಗಳೂರಿನಿಂದ ಮಸ್ಕತ್ಗೆ ಏರ್ಇಂಡಿಯಾ ವಿಮಾನ ತೆರಳಲಿದೆ. ಮಸ್ಕತ್ನಿಂದ ಮಂಗಳೂರಿಗೆ ಸಂಜೆ 5:25ಕ್ಕೆ ಏರ್ಇಂಡಿಯಾ ವಿಮಾನ ಆಗಮಿಸಲಿದೆ. *ಮಾ.8ರಂದು ರಾತ್ರಿ 8ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಚರಿಸಲಿದೆ. *ಮಾ.8ರ ಮಂಗಳೂರು-ದುಬೈ (ಐಎಕ್ಸ್ 831), ದುಬೈ-ಮಂಗಳೂರು (ಐಎಕ್ಸ್ 832), ಮಂಗಳೂರು -ದುಬೈ (ಐಎಕ್ಸ್ 813), ಮಾ.9ರ ದುಬೈ-ಮಂಗಳೂರು (ಐಎಕ್ಸ್ 814), ಮಾ.8ರ ಮಂಗಳೂರು-ಬಹರೈನ್ (ಐಎಕ್ಸ್ 841), ಮಾ.9ರ ಬಹರೈನ್- ಮಂಗಳೂರು (ಐಎಕ್ಸ್ 842), ಮಾ.8ರ ಮಂಗಳೂರು-ಅಬುಧಾಬಿ (ಐಎಕ್ಸ್815), ಮಾ.9ರ ಅಬುಧಾಬಿ-ಮಂಗಳೂರು (ಐಎಕ್ಸ್ 816) ವಿಮಾನಗಳ ಸಂಚಾರ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.
ದ್ವೇಷ ರಾಜಕೀಯದ ವಿರುದ್ಧ ಮಹಿಳಾ ಚಳವಳಿ ಬಲಗೊಳ್ಳಲಿ: ತೀಸ್ತಾ ಸೆಟಲ್ವಾಡ್
ಹಾಸನ: ಸಮಾಜದಲ್ಲಿ ಹೆಚ್ಚುತ್ತಿರುವ ದ್ವೇಷ ರಾಜಕೀಯ ಹಾಗೂ ದೌರ್ಜನ್ಯಗಳ ವಿರುದ್ಧ ಮಹಿಳಾ ಚಳವಳಿಗಳು ಇನ್ನಷ್ಟು ಬಲವಾಗಿ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಕರೆ ನೀಡಿದ್ದಾರೆ. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ದೌರ್ಜನ್ಯ ವಿರೋಧಿ ಒಕ್ಕೂಟ ಆಯೋಜಿಸಿದ್ದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಮಹಿಳಾ ಚಳವಳಿಗಳು ಹಲವು ಸವಾಲುಗಳನ್ನು ಎದುರಿಸುತ್ತಾ ಮುಂದುವರಿಯುತ್ತಿವೆ. ಜಾತಿಯ ಹೆಸರಿನಲ್ಲಿ ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವುದು ಹಾಗೂ ಮುಸ್ಲಿಮ್ ಮಹಿಳೆಯರ ವಿರುದ್ಧ ಅವಮಾನಕಾರಿ ನಡೆಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು. ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಮೇಲೂ ದಾಳಿಗಳು ಹೆಚ್ಚುತ್ತಿರುವುದಾಗಿ ಅವರು ಉಲ್ಲೇಖಿಸಿದರು. ಜಾಗತಿಕ ಮಟ್ಟದಲ್ಲಿಯೂ ಯುದ್ಧ ಹಾಗೂ ಸಾಮ್ರಾಜ್ಯಶಾಹಿ ರಾಜಕೀಯದ ಪರಿಣಾಮವಾಗಿ ಸಾಮಾನ್ಯ ಜನರು, ವಿಶೇಷವಾಗಿ ಮಕ್ಕಳು ಬಲಿಯಾಗುತ್ತಿರುವುದು ದುಃಖಕರ ಸಂಗತಿ ಎಂದು ಹೇಳಿದರು. ರಮಝಾನ್ ಸಂದರ್ಭದಲ್ಲಿ ಮುಸ್ಲಿಮ್ ವ್ಯಕ್ತಿಯೊಬ್ಬನ ಹತ್ಯೆ ನಡೆದಿರುವ ಘಟನೆ ಉಲ್ಲೇಖಿಸಿದ ಅವರು, ಇಂತಹ ದ್ವೇಷಪರ ಘಟನೆಗಳ ವಿರುದ್ಧ ಮಹಿಳಾ ಚಳವಳಿಗಳು ದೃಢವಾಗಿ ಹೋರಾಟ ಕಟ್ಟಬೇಕು ಎಂದು ಕರೆ ನೀಡಿದರು. ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಗ್ರಾಮೀಣ ಮಹಿಳೆಯರಿಗೆ ಸ್ವತಂತ್ರವಾಗಿ ದುಡಿಯಲು ಹಾಗೂ ಪ್ರಶ್ನಿಸಲು ಮಹಾತ್ಮಾ ಗಾಂಧಿ ನ್ಯಾಷನಲ್ ರೂರಲ್ ಎಂಪ್ಲಾಯ್ ಮೆಂಟ್ ಗ್ಯಾರಂಟಿ ಆಕ್ಟ್ ಯೋಜನೆ ಮಾನಸಿಕ ಬಲ ನೀಡಿತ್ತು. ಆದರೆ ಈಗ ವಿವಿಧ ಕಾರಣಗಳಿಂದ ಈ ಯೋಜನೆಯನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಸಬಿತಾ ಬನ್ನಾಡಿ, ಅನುಪಮ ಮಾತನಾಡಿದರು. ತೀಸ್ತಾ ಸೆಟಲ್ವಾಡ್ ಅವರಿಗೆ ಕೌದಿ ಹೊದಿಸಿ ಗೌರವಿಸಲಾಯಿತು. ಸಮಾವೇಶಕ್ಕೂ ಮುನ್ನ ಹಾಸನ ನಗರದ ಪ್ರಮುಖ ಬೀದಿಗಳಲ್ಲಿ ನೂರಾರು ಮಹಿಳೆಯರು ಮೆರವಣಿಗೆ ನಡೆಸಿ ಕೋಲಾಟ ಹಾಗೂ ಡೊಳ್ಳು ಬಾರಿಸುವ ಮೂಲಕ ಗಮನ ಸೆಳೆದರು. ಇದೇ ವೇಳೆ ‘ಹಾಸನ ಮಣ್ಣಿನ ಹೆಣ್ಣು ಧ್ವನಿಗಳು’ ಎಂಬ ಪುಸ್ತಕವೂ ಬಿಡುಗಡೆಗೊಂಡಿತು. ಸಮಾವೇಶದ ಅಧ್ಯಕ್ಷತೆಯನ್ನು ಸಾಹಿತಿ ರೂಪ ಹಾಸನ್ ವಹಿಸಿದ್ದರು. ವೇದಿಕೆಯಲ್ಲಿ ಮಮತಾ ನಿರಂಜನ, ಬಾ.ಹ. ರಮಾ, ಅರ್ಚನಾ ಜಯಂತ್, ಪ್ರಭಾವತಿ ದೇಸಾಯಿ, ಸುಜಾತ ಕುಮಾರಸ್ವಾಮಿ, ಶಾನು ಸುಹಾನ ಸಹಿ ಅನೇಕ ಮಹಿಳಾ ನಾಯಕಿಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ.ಶಬಾನ ಮೈಸೂರು ಮತ್ತು ಕೆ.ಬಿ.ಮನು ನಿರ್ವಹಿಸಿದರು. ಮಾಧ್ಯಮಗಳ ಕಾರ್ಪೊರೇಟೀಕರಣದಿಂದ ಅಲ್ಪಸಂಖ್ಯಾತರ ಪ್ರಶ್ನೆಗಳು ಹಿಮ್ಮೆಟ್ಟುತ್ತಿವೆ ಎಂದು ಆರೋಪಿಸಿದ ಅವರು, ಕೆಲವು ಮಾಧ್ಯಮಗಳು ಮುಸ್ಲಿಮ್ ಮಹಿಳೆಯರನ್ನು ತಪ್ಪಾಗಿ ಚಿತ್ರಿಸುವ ಮೂಲಕ ಸಮಾಜದಲ್ಲಿ ತಪ್ಪು ಕಲ್ಪನೆಗಳನ್ನು ಮೂಡಿಸುತ್ತಿವೆ. ದಾಖಲೆಗಳ ಹೆಸರಿನಲ್ಲಿ ದಲಿತ, ಆದಿವಾಸಿ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. -ತೀಸ್ತಾ ಸೆಟಲ್ವಾಡ್, ನಾಗರಿಕ ಹಕ್ಕುಗಳ ಹೋರಾಟಗಾರ್ತಿ
ಸಮಾಜದ ಕಟ್ಟಕಡೆಯ ಜನಸಮುದಾಯ ಮುಖ್ಯವಾಹಿನಿಗೆ ಬರಬೇಕು ಎನ್ನುವುದು ಸರಕಾರದ ಗುರಿ: ಸಿಎಂ ಸಿದ್ದರಾಮಯ್ಯ
ಮೂಡೂರು-ಪಡೂರು ಜೋಡುಕರೆ ಕಂಬಳಕ್ಕೆ ಮುಖ್ಯಮಂತ್ರಿ ಆಗಮನ
2023ರ ಗಲಭೆ ಪ್ರಕರಣ | ತೆಹ್ರಿಕೆ ಇನ್ಸಾಫ್ ಪಕ್ಷದ 47 ಮಂದಿಗೆ 10 ವರ್ಷ ಜೈಲು
ಇಸ್ಲಾಮಾಬಾದ್, ಮಾ.7: 2023ರ ಮೇ 9ರಂದು ನಡೆದ ಹಿಂಸಾಚಾರ ಹಾಗೂ ದೊಂಬಿ ಪ್ರಕರಣದಲ್ಲಿ ಶಾಮೀಲಾದ ಆರೋಪದಲ್ಲಿ ಇಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವೊಂದು ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರಿಕೆ ಇನ್ಸಾಫ್ ಪಕ್ಷದ 47 ನಾಯಕರು ಹಾಗೂ ಅವರ ಬೆಂಬಲಿಗರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 5 ಲಕ್ಷ ಪಾಕ್ ರೂ. ದಂಡವನ್ನು ವಿಧಿಸಿದೆ. ಪಕ್ಷದ ಸಂಸ್ಥಾಪಕ ಇಮ್ರಾನ್ ಖಾನ್ ಅವರ ಬಂಧನದ ಬಳಿಕ ಪಿಟಿಐ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಾಕ್ನಾದ್ಯಂತ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಉದ್ರಿಕ್ತ ಪ್ರತಿಭಟನಕಾರರು ರಾವಲ್ಪಿಂಡಿಯಲ್ಲಿ ಸೇನಾ ವರಿಷ್ಠರ ಮಹಾಕಾರ್ಯಾಲಯದ ಮೇಲೆ ದಾಳಿಗೂ ಪ್ರಯತ್ನಿಸಿದ್ದರು. ಘಟನೆ ನಡೆದ ಬೆನ್ನಲ್ಲೇ ರಾವಲ್ಪಿಂಡಿಯ ಆರ್.ಎ. ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಟಿಐ ಬೆಂಬಲಿಗರ ವಿರುದ್ಧ ದಂಗೆ, ಮುತ್ತಿಗೆ ಹಾಕುವಿಕೆ, ದಾಂಧಲೆ, ಪೊಲೀಸರ ಮೇಲೆ ದಾಳಿ ಹಾಗೂ ಸರಕಾರಿ ಸೊತ್ತಿಗೆ ಹಾನಿ, ಅದರಲ್ಲೂ ಸೇನಾ ವರಿಷ್ಠರ ಪ್ರಧಾನ ಕಾರ್ಯಾಲಯದ ಪ್ರವೇಶದ್ವಾರ, ಹಂಝಾ ಕ್ಯಾಂಪ್, ಸೇನಾ ಮ್ಯೂಜಿಯಂ ಹಾಗೂ ಮೆಟ್ರೋ ನಿಲ್ದಾಣದ ಮೇಲೆ ದಾಳಿ ನಡೆಸಿದ ಆರೋಪಗಳನ್ನು ಹೊರಿಸಲಾಗಿತ್ತು. ಈ 47 ಆರೋಪಿಗಳನ್ನು ಈಗಾಗಲೇ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿತ್ತು.
ಹತ್ತನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆ: ಮಮತಾ ಬ್ಯಾನರ್ಜಿ ಘೋಷಣೆ
ಕೋಲ್ಕತಾ, ಮಾ. 7: ಹತ್ತನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಪ್ರತಿ ತಿಂಗಳು 1,500 ರೂ. ಭತ್ಯೆ ನೀಡಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಮುನ್ನ ಮಮತಾ ಬ್ಯಾನರ್ಜಿ ಈ ಘೋಷಣೆ ಮಾಡಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಂದರ್ಭ ಚುನಾವಣಾ ಆಯೋಗ ಮತದಾರರ ಹೆಸರನ್ನು ದೊಡ್ಡ ಸಂಖ್ಯೆಯಲ್ಲಿ ಅಳಿಸಿರುವುದನ್ನು ವಿರೋಧಿಸಿ ನಡೆಸಿದ ಧರಣಿಯಲ್ಲಿ ಅವರು ಈ ಘೋಷಣೆ ಮಾಡಿದರು. ಹತ್ತನೇ ತರಗತಿ ಉತ್ತೀರ್ಣರಾದ 21 ರಿಂದ 40 ವರ್ಷಗಳ ನಡುವಿನ ಯುವಕರು ಹಾಗೂ ಯುವತಿಯರು ಇಂದಿನಿಂದ (ಮಾರ್ಚ್ 7ರಿಂದ) ತಿಂಗಳಿಗೆ 1,500 ರೂ. ಭತ್ಯೆ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದರು. ಈ ನೆರವು ಎಪ್ರಿಲ್ನಲ್ಲಿ ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಅದು ಈಗ ತತ್ಕ್ಷಣ ಪ್ರಾರಂಭಿಸಲಾಗಿದೆ ಎಂದು ಬ್ಯಾನರ್ಜಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿಗಾಗಿ ಸಾಲ ಮಾಡಿದ್ದಾರೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮ್ಮನೆ ಸಾಲ ಮಾಡಿಲ್ಲ, ರಾಜ್ಯದ ಅಭಿವೃದ್ಧಿಗಾಗಿ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ರಾಜ್ಯ ಬಜೆಟ್ ಕುರಿತು ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು. ಸಿದ್ದರಾಮಯ್ಯ ಅವರು ಮಂಡಿಸಿರುವ 2026-27 ನೇ ಸಾಲಿನ ಬಜೆಟ್ ದೂರ ದೃಷ್ಟಿ ಇರುವ ಬಜೆಟ್. ಬಡವರು, ಹಿಂದುಳಿದವರು, ದಲಿತರ ಪರವಾಗಿ ಇರುವ ಬಜೆಟ್ ಎಂದು ಹೇಳಿದರು. ಸಿದ್ದರಾಮಯ್ಯ ಅವರು ಸಾಲ ಮಾಡಿರೋದೇ ಸಾಧನೆ ಅಂತಾ ಹೇಳ್ತೀರಲ್ಲ. ನಿಮ್ಮ ವಿಶ್ವಗುರು ನರೇಂದ್ರ ಮೋದಿ ಮಾಡಿರೋದೇನು? ಸಿದ್ದರಾಮಯ್ಯ ಅವರು ಮಾಡಿರೋ ಸಾಲ 2.86 ಲಕ್ಷ ಕೋಟಿ. ಆದರೆ 4 ವರ್ಷದಲ್ಲಿ ಬಿಜೆಪಿ ಮಾಡಿದ ಸಾಲ 4 ಲಕ್ಷ 48 ಸಾವಿರ ಕೋಟಿ. ಸಿದ್ದರಾಮಯ್ಯ ಅವರು ಸುಮ್ಮನೆ ಸಾಲ ಮಾಡಿಲ್ಲ. ರಾಜ್ಯದ ಅಭಿವೃದ್ಧಿಗಾಗಿ ಸಾಲ ಮಾಡಿದ್ದಾರೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಬಜೆಟ್ ಮಂಡನೆಯಾದರೆ ಅತ್ತ ವಿರೋಧ ಪಕ್ಷದ ನಾಯಕರುಗಳಾದ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಖಾಲಿ ಚೊಂಬು ಹಿಡಿದುಕೊಂಡು ಪ್ರತಿಭಟನೆ ಮಾಡುತ್ತಾರೆ. ಅವರು ತೋರಿಸಿರೋ ಚೊಂಬು ಕೇಂದ್ರ ಬಜೆಟ್ ವಿರುದ್ಧ ಎಂದು ಲಕ್ಷ್ಮಣ್ ಟೀಕಿಸಿದರು. ಮೈಸೂರಿಗೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸುತ್ತಾರಲ್ವಾ? ಈ ಬಾರಿ ಮೈಸೂರಿಗೆ 27 ಯೋಜನೆ ಕೊಟ್ಟಿದ್ದಾರೆ. ತಾಲೂಕುವಾರು 15 ಯೋಜನೆ ಕೊಟ್ಟಿದ್ದಾರೆ. ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಕೊಟ್ಟಿದ್ದಾರೆ ಎಂದರು. ರಾಜ್ಯಕ್ಕೆ ನಯಾ ಪೈಸೆ ತರುವ ಯೋಗ್ಯತೆ ಬಿಜೆಪಿಯವರಿಗೆ ಇಲ್ಲ. ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ತಲೆ ಬುಡ ಇಲ್ಲದೇ ಮಾತಾಡ್ತಾರೆ. ವಿರೋಧ ಪಕ್ಷದ ನಾಯಕರನ್ನು ರಾಜ್ಯದ ಜನರು ಜೋಕರ್ ಮಾಡಿಕೊಂಡು ಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡರುಗಳಾದ ಬಿ.ಎಂ.ರಾಮು, ಶಿವಣ್ಣ, ಗಿರೀಶ್, ಮಾಧ್ಯಮ ವಕ್ತಾರ ಎಂ.ಮಹೇಶ್ ಉಪಸ್ಥಿತರಿದ್ದರು.
ಇದು ಮಾನವೀಯ ಕೆಲಸ; ಇರಾನ್ ನ ಹಡಗು ನಿಲ್ಲಲು ಭಾರತ ಅವಕಾಶ ನೀಡಿರುವುದನ್ನು ಸಮರ್ಥಿಸಿಕೊಂಡ ಜೈಶಂಕರ್
ಹೊಸದಿಲ್ಲಿ, ಮಾ. 7: ಹಿಂದೂ ಮಹಾಸಾಗರದಲ್ಲಿ ತಾಂತ್ರಿಕ ಸಮಸ್ಯೆ ವರದಿಯಾದ ಬಳಿಕ ಇರಾನ್ ನೌಕಾಪಡೆಯ ಹಡಗಿಗೆ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಲು ಭಾರತ ಅನುಮತಿ ನೀಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶನಿವಾರ ಹೇಳಿದ್ದಾರೆ. ಈ ವಲಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಈ ನಿರ್ಧಾರವನ್ನು ಮಾನವೀಯ ಪ್ರತಿಕ್ರಿಯೆ ಎಂದು ಅವರು ವಿವರಿಸಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ ‘ರೈಸಿನಾ ಡಯಲಾಗ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇರಾನ್ ನೆರವು ಕೋರಿದ ಬಳಿಕ ಇರಾನ್ನ ಹಡಗು ಐರಿಸ್ ಲಾವನ್ಗೆ ಲಂಗರು ಹಾಕಲು ಭಾರತ ಅನುಮತಿ ನೀಡಿದೆ ಎಂದು ವಿವರಿಸಿದರು. ಫೆಬ್ರವರಿ 15ರಿಂದ ಫೆಬ್ರವರಿ 26ರ ವರೆಗೆ ನಡೆದ ‘ಅಂತರರಾಷ್ಟ್ರೀಯ ಹಡಗು ಪರಿಶೀಲನೆ’ ಹಾಗೂ ಮಿಲನ್ 2026ರಲ್ಲಿ ಇರಾನ್ನ ಪಾಲ್ಗೊಳ್ಳುವಿಕೆಯ ಭಾಗವಾಗಿ ಈ ಹಡಗು ಈ ವಲಯದಲ್ಲಿ ಕಾರ್ಯಾಚರಿಸುತ್ತಿತ್ತು. ಜೈಶಂಕರ್ ಅವರ ಪ್ರಕಾರ, ಐರಿಸ್ ಲಾವನ್ ಭಾರತದ ಜಲಭಾಗದಲ್ಲಿ ಸಂಚರಿಸುತ್ತಿದ್ದಾಗ ತೊಂದರೆ ಎದುರಿಸಿದೆ. ಈ ಹಿನ್ನೆಲೆಯಲ್ಲಿ ಇರಾನ್ ಭಾರತವನ್ನು ಸಂಪರ್ಕಿಸಿದೆ. ಭಾರತ ಈ ಮನವಿಗೆ ಮಾರ್ಚ್ 1ರಂದು ಒಪ್ಪಿಗೆ ನೀಡಿದೆ. ಎಂದು ಬ್ಯಾನರ್ಜಿ ಹೇಳಿದರು.
ಆಳಂದ | 47.50 ಕೋಟಿ ರೂ. ವೆಚ್ಚದ ಸಣ್ಣ ನೀರಾವರಿ ಕಾಮಗಾರಿಗಳಿಗೆ ಸಚಿವ ಭೋಸರಾಜು ಅಡಿಗಲ್ಲು
ಆಳಂದ: ತಾಲೂಕಿನ ರೈತರ ಕೃಷಿಗೆ ನೀರಿನ ಸಿಂಚನ ಒದಗಿಸುವ ಮಹತ್ವದ ಹೆಜ್ಜೆಯಾಗಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ 2025–26ನೇ ಸಾಲಿನ 4702 ಎಪಿಬಿ ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಐದು ಪ್ರಮುಖ ಕಾಮಗಾರಿಗಳಿಗೆ ಒಟ್ಟು 47.50 ಕೋಟಿ ರೂ. ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಸಣ್ಣ ನೀರಾವರಿ ಇಲಾಖೆಯ ಸಚಿವ ಎನ್.ಎಸ್.ಭೋಸರಾಜು ಚಾಲನೆ ನೀಡಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ಯೋಜನೆಗೂ ಸುಮಾರು 9.50 ಕೋಟಿ ರೂ. ವೆಚ್ಚ ನಿಗದಿಪಡಿಸಲಾಗಿದ್ದು, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗಳು ಜಾರಿಗೊಳ್ಳಲಿವೆ ಎಂದರು. ಈ ಯೋಜನೆಗಳ ಅನುಷ್ಠಾನದಿಂದ ಸುಮಾರು 2,000 ಹೆಕ್ಟೇರ್ ಕೃಷಿಭೂಮಿ ನೀರಾವರಿ ಸೌಲಭ್ಯಕ್ಕೆ ಒಳಪಡುವುದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ಮಹತ್ತರ ಉತ್ತೇಜನ ಸಿಗಲಿದೆ ಎಂದು ಸಚಿವರು ತಿಳಿಸಿದರು. ಯೋಜನೆಯಡಿ ಅಣೆಕಟ್ಟು ನಿರ್ಮಾಣ, ನಾಲೆಗಳ ಅಗೆತ ಹಾಗೂ ನೀರಿನ ಹರಿವು ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಖಂಡಾಳ ಗ್ರಾಮದಿಂದ ಮಟಕಿ ನಾಲೆಯವರೆಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣ, ಬಿಸಿಐಗಳ ನಿರ್ಮಾಣ ಮತ್ತು ನಾಲೆ ಅಗೆತ ಕಾಮಗಾರಿ ನಡೆಯಲಿದೆ. ಇದರಿಂದ ಮಧ್ಯಭಾಗದ ರೈತರಿಗೆ ತಕ್ಷಣದ ಪ್ರಯೋಜನ ದೊರೆಯಲಿದೆ ಎಂದು ಹೇಳಿದರು. ಇದೇ ವೇಳೆ ನಿರಗುಡಿ–ಪಡಸಾವಳಿ ನಾಲೆಯವರೆಗೆ ಐಸಿಐಗಳ ನಿರ್ಮಾಣದೊಂದಿಗೆ ನೀರಿನ ಹರಿವು ಸುಧಾರಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬಸವಂತವಾಡಿ ಗ್ರಾಮದಿಂದ ನಿಂಬರ್ಗಾ ನಾಲೆಯವರೆಗೆ ಅಣೆಕಟ್ಟು ನಿರ್ಮಾಣದ ಮೂಲಕ ದಕ್ಷಿಣ ಭಾಗದ ರೈತರ ಭೂಮಿಗಳಿಗೆ ನೀರಿನ ಲಭ್ಯತೆ ಹೆಚ್ಚಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು ಹಾಗೂ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ಒದಗಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ. ರೈತರಿಗೆ ನೀರಾವರಿ ದೊರೆತರೆ ಅದಕ್ಕಿಂತ ದೊಡ್ಡ ನೆರವು ಇನ್ನಿಲ್ಲ ಎಂದು ಹೇಳಿದರು. ಜಿಡಗಾ ಶ್ರೀಮಠದ ಕೆರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ 25 ಕೋಟಿ ರೂ. ಅನುದಾನ ಘೋಷಿಸಿರುವುದನ್ನು ಉಲ್ಲೇಖಿಸಿದ ಅವರು, ಅಂತರ್ಜಲ ಮಟ್ಟ ಹೆಚ್ಚಿಸಲು ಇನ್ನೂ 100 ಕೋಟಿ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪಟ್ಟಣದಲ್ಲಿ ರೈತರ ಬೆಳೆ ಸಂರಕ್ಷಣೆಗೆ ಶೀತಗೃಹ (ಕೋಲ್ಡ್ ಸ್ಟೋರೇಜ್) ನಿರ್ಮಿಸಬೇಕು. ಜೊತೆಗೆ ಎಪಿಎಂಸಿ ಮಾರುಕಟ್ಟೆಯ ಅಭಿವೃದ್ಧಿ ಹಾಗೂ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು. ಮಾದನಹಿಪ್ಪರಗಾ ಶ್ರೀ ಶಿವಲಿಂಗೇಶ್ವರ ವಿರಕ್ತ ಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಿಂದ 20 ಮಹಿಳೆಯರಿಗೆ ಹೊಲಿಗೆ ಯಂತ್ರಗಳು ಹಾಗೂ 30 ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ಸಚಿವರು ಹಾಗೂ ಶಾಸಕರು ವಿತರಿಸಿದರು. ಇಲಾಖೆ ರಾಜ್ಯ ಕಾರ್ಯದರ್ಶಿ ಬಿ.ಕೆ. ಪವಿತ್ರಾ, ಮುಖ್ಯ ಇಂಜಿನಿಯರ್ ಹೆಚ್ ಎಲ್. ವೆಂಕಟೇಶ, ಅಧೀಕ್ಷಕ ಸುಭಾಷ ಎಲ್. ಶಿಕ್ಷಣಕರ್, ಅಭಿಯಂತರ ನಾಗನಗೌಡ ವಾಯ್. ಭಾವಿ ಮತ್ತು ಸಹಾಯಕ ಅಭಿಯಂತರ ಶಾಂತಪ್ಪ ಎಸ್. ಜಾಧವ, ಗುತ್ತಿಗೆದಾರ ಎನ್.ವಿ.ಕುಲಕರ್ಣಿ ಆಗಮಿಸಿದ್ದರು. ವೇದಿಕೆಯಲ್ಲಿ ಪಂಚಗ್ಯಾರೆoಟಿ ಸಮಿತಿ ಅಧ್ಯಕ್ಷ ಶಿವುಪುತ್ರಪ್ಪ ಪಾಟೀಲ, ಡಿಸಿಸಿ ನಿರ್ದೇಶಕ ಅಶೋಕ ಸಾವಳೇಶ್ವರ, ತಾಪಂ ಮಾಜಿ ಅಧ್ಯಕ್ಷ ಬಸವರಾಜ ಪವಾಡಶೆಟ್ಟಿ, ಮೋಹನಗೌಡ ಪಾಟೀಲ, ಹಾಪ್ಕಾಮ್ ಅಧ್ಯಕ್ಷ ಗುರುಶಾಂತ ಪಾಟೀಲ ನಿಂಬಾಳ, ಕೃಷಿಕ ಸಮಾಜ ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ, ತುಕಾರಾಮ ವಗ್ಗೆ, ಶಂಕರರಾವ್ ದೇಶಮುಖ, ಶರಣು ಭೂಸನೂರ, ಮಲ್ಲಪ್ಪ ಹತ್ತರಕಿ, ರಾಜಶೇಖರ ಪಾಟೀಲ ಚಿತಲಿ, ದಯಾನಂದ ಶೇರಿಕಾರ, ಪಾಶಾ ಗುತ್ತೇದಾರ, ಸುಭಾಷ ಫೌಜಿ, ಇಒ ಮಾನಪ್ಪ ಕಟ್ಟಿಮನಿ, ಡಿವೈಎಸ್ಪಿ ತಮರಾಮ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು. ಜಿಪಂ ಮಾಜಿ ಸದಸ್ಯ ಸಿದ್ಧರಾಮ ಪ್ಯಾಟಿ ಸ್ವಾಗತಿಸಿದರು. ರಾಜಶೇಖರ ಪಾಟೀಲ ನಿರೂಪಿಸಿದರು.
ಭಾರತಕ್ಕಿಲ್ಲ ಇನ್ನು ಇಂಧನ ಕೊರತೆ ಭೀತಿ: ಆಸ್ಪ್ರೇಲಿಯಾ, ಕೆನಡಾದಿಂದ ಹೆಚ್ಚುವರಿ ಕಚ್ಚಾತೈಲ ಪೂರೈಸುವ ಭರವಸೆ
Middle East Conflict- ಮಧ್ಯಪ್ರಾಚ್ಯ ಬಿಕ್ಕಟ್ಟು ಮತ್ತು ಹರ್ಮುಜ್ ಜಲಸಂಧಿ ಬಂದ್ ಆಗಿದ್ದರೂ, ಭಾರತದ ಇಂಧನ ಭದ್ರತೆಗ ಯಾವುದೇ ರೀತಿಯ ಧಕ್ಕೆ ಎದುರಾಗಿಲ್ಲ. ಆಸ್ಟ್ರೇಲಿಯಾ, ಕೆನಡಾ ಸೇರಿದಂತೆ 40ಕ್ಕೂ ಹೆಚ್ಚು ದೇಶಗಳೊಂದಿಗೆ ಭಾರತ ಪೂರೈಕೆ ಜಾಲವನ್ನು ಇದೀಗ ವಿಸ್ತರಿಸಿಕೊಂಡಿದೆ. ನೆರೆರಾಷ್ಟ್ರ ಪಾಕಿಸ್ತಾನ, ಜರ್ಮನಿ ಸೇರಿದಂತೆ ಜಾಗತಿಕವಾಗಿ ಪೆಟ್ರೋಲ್ ಬೆಲೆ ಗಗನಕ್ಕೇರಿದ್ದರೂ, ಭಾರತದಲ್ಲಿ ತೈಲ ಬೆಲೆ ಸ್ಥಿರವಾಗಿರುವುದು ವಿಶೇಷ. ಆದರೆ ಕೇಂದ್ರ ಸರ್ಕಾರದ ದೂರದೃಷ್ಟಿಯ ಕ್ರಮಗಳಿಂದಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿಲ್ಲ.
Shubman Gill: ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ವಿವಾಹ ಸಮಾರಂಭಕ್ಕೆ ಟೀಂ ಇಂಡಿಯಾ ತಂಡದ ನಾಯಕ ಶುಭ್ಮನ್ ಗಿಲ್ ಹಾಜರಾಗದಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಸ್ವರೂಪ ಪಡೆದುಕೊಂಡಿದ್ದು, ನೆಟ್ಟಿಗರು ಹಲವು ರೀತಿಯಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. ಅರ್ಜುನ್ ತೆಂಡೂಲ್ಕರ್ ಅವರ ವಿವಾಹ ಸಮಾರಂಭ
ಎಎಫ್ಸಿ ಮಹಿಳಾ ಫುಟ್ಬಾಲ್ ಏಶ್ಯನ್ ಕಪ್ ಪಂದ್ಯಾವಳಿ | ಭಾರತವನ್ನು 11–0 ಗೋಲಿನಿಂದ ಸೋಲಿಸಿದ ಜಪಾನ್
ಪರ್ತ್ (ಆಸ್ಟ್ರೇಲಿಯ), ಮಾ. 7: ಎಎಫ್ಸಿ ಮಹಿಳಾ ಫುಟ್ಬಾಲ್ ಏಶ್ಯನ್ ಕಪ್ ಪಂದ್ಯಾವಳಿಯಲ್ಲಿ ಶನಿವಾರ ಜಪಾನ್ ತಂಡವು ಭಾರತವನ್ನು 11–0 ಗೋಲುಗಳ ಅಂತರದಿಂದ ಸೋಲಿಸಿದೆ. ಆಸ್ಟ್ರೇಲಿಯದ ಪರ್ತ್ ರೆಕ್ಟಾಂಗ್ಯುಲರ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಭಾರತೀಯ ಮಹಿಳೆಯರು ಯಾವುದೇ ಪ್ರತಿರೋಧ ತೋರಿಸಲು ವಿಫಲರಾದರು. ಇದು ಈ ಪಂದ್ಯಾವಳಿಯ ಇತಿಹಾಸದಲ್ಲಿ ಭಾರತೀಯ ಮಹಿಳೆಯರ ಎರಡನೇ ಅತಿ ದೊಡ್ಡ ಸೋಲಾಗಿದೆ. ಇದಕ್ಕೂ ಮೊದಲು, 2003ರ ಆವೃತ್ತಿಯಲ್ಲಿ ಚೀನಾ ಮಹಿಳೆಯರು ಭಾರತವನ್ನು 12–0 ಗೋಲುಗಳ ಅಂತರದಿಂದ ಸೋಲಿಸಿದ್ದರು. ಮ್ಯಾಂಚೆಸ್ಟರ್ ಯುನೈಟೆಡ್ ತಂಡದ ಆಟಗಾರ್ತಿ ಹಿನಟ ಮಿಯಝಾವ ಮತ್ತು ವೆಸ್ಟ್ ಹ್ಯಾಮ್ ಯುನೈಟೆಡ್ ತಂಡದ ಆಟಗಾರ್ತಿ ರಿಕೊ ಯೂಕಿ ಹ್ಯಾಟ್ರಿಕ್ ಗೋಲುಗಳನ್ನು ಬಾರಿಸಿದರು. ಜಪಾನ್ ತಂಡದ ನಾಯಕಿ ಯೂ ಹಸೆಗವ ಮತ್ತು ಕಿಕೊ ಸೈಕೆ ತಲಾ ಅವಳಿ ಗೋಲುಗಳನ್ನು ಬಾರಿಸಿದರು. ಮಾಯಾ ಹಿಜಿಕಟ ಒಂದು ಗೋಲು ದಾಖಲಿಸಿದರು. 2011ರ ಫಿಫಾ ವಿಶ್ವಕಪ್ ಚಾಂಪಿಯನ್ ಜಪಾನ್ 78 ಶೇಕಡಾ ಸಮಯ ಚೆಂಡಿನ ಮೇಲೆ ನಿಯಂತ್ರಣ ಹೊಂದಿತ್ತು. ಅದು ಗೋಲುಗಳಿಗಾಗಿ 36 ಪ್ರಯತ್ನಗಳನ್ನು ಮಾಡಿತು. ಭಾರತ ಗೋಲಿಗಾಗಿ ಒಂದೂ ಪ್ರಯತ್ನವನ್ನು ಮಾಡಲಿಲ್ಲ.
ಇಂಗ್ಲೆಂಡ್, ದಕ್ಷಿಣ ಆಫ್ರಿಕ ಮತ್ತು ವೆಸ್ಟ್ ಇಂಡೀಸ್ ತಂಡಗಳ ಸ್ವದೇಶ ಪ್ರಯಾಣಕ್ಕೆ ವಿಶೇಷ ವಿಮಾನ
ಮುಂಬೈ, ಮಾ. 7: ಪಶ್ಚಿಮ ಏಶ್ಯದಲ್ಲಿ ನೆಲೆಸಿರುವ ಸಂಘರ್ಷ ಪರಿಸ್ಥಿತಿಯಿಂದಾಗಿ ವಿಮಾನಗಳ ಹಾರಾಟ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ, ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಇಂಗ್ಲೆಂಡ್, ದಕ್ಷಿಣ ಆಫ್ರಿಕ ಮತ್ತು ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡಗಳ ಸ್ವದೇಶ ಪ್ರಯಾಣಕ್ಕೆ ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯು ವಿಶೇಷ ವಿಮಾನಗಳ ಏರ್ಪಾಡು ಮಾಡಿದೆ. ಈ ತಂಡಗಳು ವಾರಾಂತ್ಯದಲ್ಲಿ ತಮ್ಮ ದೇಶಗಳಿಗೆ ಪ್ರಯಾಣಿಸಲಿವೆ. ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ನಡೆಸುತ್ತಿರುವ ವಾಯು ದಾಳಿಗಳು ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ತನ್ನ ನೆರೆ ದೇಶಗಳ ಮೇಲೆ ನಡೆಸುತ್ತಿರುವ ಕ್ಷಿಪಣಿ ದಾಳಿಗಳಿಂದಾಗಿ ಪಶ್ಚಿಮ ಏಶ್ಯ ತತ್ತರಿಸಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಇಂಗ್ಲೆಂಡ್ ತಂಡದ ಸದಸ್ಯರು ಶನಿವಾರ ಸಂಜೆ ವಿಶೇಷ ವಿಮಾನವೊಂದರಲ್ಲಿ ಸ್ವದೇಶಕ್ಕೆ ಪ್ರಯಾಣಿಸಲಿದ್ದಾರೆ ಎಂಬುದಾಗಿ ಮೂಲವೊಂದನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಗುರುವಾರ ನಡೆದ ಎರಡನೇ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ತಂಡವು ಭಾರತದ ವಿರುದ್ಧ ಸೋಲನುಭವಿಸಿತ್ತು. ಟಿ20 ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕ ತಂಡಗಳ ಅಭಿಯಾನ ಕೊನೆಗೊಂಡಿದ್ದರೂ, ವಿಮಾನ ಹಾರಾಟ ಸ್ಥಗಿತದ ಹಿನ್ನೆಲೆಯಲ್ಲಿ ಅವುಗಳೂ ಭಾರತದಲ್ಲೇ ಉಳಿದುಕೊಂಡಿವೆ. ಕೋಲ್ಕತಾದಲ್ಲಿ ರವಿವಾರ ನಡೆದ ಸೂಪರ್ ಎಂಟು ಪಂದ್ಯದಲ್ಲಿ ಭಾರತದ ವಿರುದ್ಧ ಸೋಲುವ ಮೂಲಕ ವೆಸ್ಟ್ ಇಂಡೀಸ್ನ ಅಭಿಯಾನ ಕೊನೆಗೊಂಡಿತ್ತು. ಬುಧವಾರ ನಡೆದ ಮೊದಲ ಸೆಮಿಫೈನಲ್ನಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಸೋತ ಬಳಿಕ ದಕ್ಷಿಣ ಆಫ್ರಿಕದ ಅಭಿಯಾನ ಕೊನೆಗೊಂಡಿತ್ತು. ದಕ್ಷಿಣ ಆಫ್ರಿಕ ಮತ್ತು ವೆಸ್ಟ್ ಇಂಡೀಸ್ ಆಟಗಾರರು ಇನ್ನೊಂದು ವಿಶೇಷ ವಿಮಾನದಲ್ಲಿ ಕೋಲ್ಕತಾದಿಂದ ಜೊತೆಯಾಗಿ ಪ್ರಯಾಣಿಸಲಿದ್ದಾರೆ. ಎರಡು ತಂಡಗಳು ಮೊದಲು ಜೊಹಾನ್ಸ್ಬರ್ಗ್ಗೆ ಪ್ರಯಾಣಿಸಲಿವೆ. ಅಲ್ಲಿಂದ ವೆಸ್ಟ್ ಇಂಡೀಸ್ ಆಟಗಾರರು ಆಂಟಿಗಾಗೆ ಪ್ರಯಾಣವನ್ನು ಮುಂದುವರಿಸಲಿದ್ದಾರೆ. ಈ ವಿಮಾನವು ರವಿವಾರ ಕೋಲ್ಕತಾದಿಂದ ಹೊರಡುವ ನಿರೀಕ್ಷೆಯಿದೆ.
38ನೇ ಕಳ್ತೂರು ಸಂತೆಕಟ್ಟೆಯಲ್ಲಿ ಸುಸಜ್ಜಿತ ಸಾರ್ವಜನಿಕ ರುದ್ರಭೂಮಿ ನಿರ್ಮಾಣ: ಮಾ.8ರಂದು ಲೋಕಾರ್ಪಣೆ
ಉಡುಪಿ, ಮಾ.7: ಹೆಬ್ರಿಗೆ ಸಮೀಪದ ಗ್ರಾಮೀಣ ಪ್ರದೇಶವಾದ 38ನೇ ಕಳ್ತೂರು ಸಂತೆಕಟ್ಟೆಯಲ್ಲಿ ದಾನಿಗಳ ನೆರವಿನಿಂದಲೇ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ಮಾಣ ಗೊಂಡಿದ್ದು ಮಾ.8ರಂದು ರವಿವಾರ ಇದು ಲೋಕಾರ್ಪಣೆಗೊಳ್ಳಲಿದೆ. ಕಳ್ತೂರು ಸಂತೆಕಟ್ಟೆಯಲ್ಲಿ ಈ ಮೊದಲು ಸ್ಮಶಾನ ಇದ್ದಿರಲಿಲ್ಲ. ದೂರದ ಕೊಕ್ಕರ್ಣೆ, ಹೆಬ್ರಿಗೆ ಇದಕ್ಕಾಗಿ ಹೋಗ ಬೇಕಿತ್ತು. ಕಳ್ತೂರು ಸಂತೆಕಟ್ಟೆಯಲ್ಲೂ ಸುಸಜ್ಜಿತವಾದ ರುದ್ರಭೂಮಿಯನ್ನು ನಿರ್ಮಿಸುವ ಸಂಕಲ್ಪ ಈಗ ಈಡೇರಿದೆ. ‘ನಮ್ಮೂರಿನ ಜನರಲ್ಲಿ ಇನ್ನೂ ಕೂಡ ಸ್ಮಶಾನದ ಬಗೆಗೆ ಭಯವಿದೆ. ಹಾಗಾಗಿ ಸ್ಮಶಾನ ಪುಣ್ಯದ ಭೂಮಿ ಎಂಬ ಪರಿಕಲ್ಪನೆಯಲ್ಲಿ ಜನರ ಭಯ ದೂರವಾಗಿಸಲು ಭವ್ಯವಾಗಿ ಸಕಲ ವ್ಯವಸ್ಥೆಯೊಂದಿಗೆ ರುದ್ರಭೂಮಿಯನ್ನು ಎಲ್ಲರ ಸಹಕಾರದೊಂದಿಗೆ ನಿರ್ಮಾಣ ಮಾಡಿದ್ದೇವೆ’ ಎಂದು 38ನೇ ಕಳ್ತೂರು ಸಂತೆಕಟ್ಟೆಯ ಸ್ಮಶಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರುಧ್ರಭೂಮಿ ನಿರ್ಮಾಣದ ರೂವಾರಿ ಬಿ.ಚಂದ್ರಶೇಖರ ಶೆಟ್ಟಿ ತಿಳಿಸಿದರು. 78 ಸೆನ್ಸ್ ಜಾಗವನ್ನು ಸಾರ್ವಜನಿಕ ಹಿಂದೂ ರುದ್ರಭೂಮಿಗಾಗಿಯೇ ಕಾದಿರಿಸಿ ಆದೇ ಜಾಗದಲ್ಲಿ ಸಾರ್ವಜನಿಕ ಹಿಂದೂ ಭೂಮಿಯನ್ನು ನಿರ್ಮಿಸ ಲಾಗಿದೆ. 2005ರಿಂದ 2010 ರ ತನಕ ಗ್ರಾಮ ಪಂಚಾಯಿತಿ ಸದಸ್ಯನಾಗಿ ಸ್ಮಶಾನ ನಿರ್ಮಾಣದ ಕನಸು ಕಂಡಿದ್ದೆ. 2021ರಲ್ಲಿ ಸದಸ್ಯನಾಗಿ ಸ್ಮಶಾನ ನಿರ್ಮಾಣಕ್ಕೆ ವಿಶೇಷ ಯೋಜನೆಯನ್ನು ಸಿದ್ಧಪಡಿಸಿ ದಾನಿಗಳಲ್ಲಿ ಮೂಲಕ ಈ ಯೋಜನೆ ಇದೀಗ ಕಾರ್ಯಗತಗೊಂಡಿರುವುದು ಸಂತೋಷ ತಂದಿದೆ ಎಂದು ಚಂದ್ರಶೇಖರ ಶೆಟ್ಟಿ ನುಡಿದರು. ಸಂತೇಕಟ್ಟೆಯ ಉದ್ಯಮಿಗಳಾದ ಎ.ಪ್ರಶಾಂತ್ ಕಾಮತ್ ಮತ್ತು ಮಾಧವ ಕಾಮತ್ ಅವರು ತಂದೆ ಆರ್ಬೆಟ್ಟು ವೆಂಕಟೇಶ ಕಾಮತ್ರ ನೆನಪಿನಲ್ಲಿ ಸುಸಜ್ಜಿತ ಹಿಂದೂ ರುದ್ರಭೂಮಿಯನ್ನು ನಿರ್ಮಿಸಿಕೊಟ್ಟಿದ್ದಾರೆ. ಕಳ್ತೂರು ಗ್ರಾಪಂ ವತಿಯಿಂದ ಜಾಗದ ಸಮತಟ್ಟು ಕಾರ್ಯ ಮತ್ತು ನೀರಿನ ವ್ಯವಸ್ಥೆ ಯನ್ನು ಮಾಡಲಾಗಿದೆ. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ 2 ಲಕ್ಷ ರೂ. ಅನುದಾನ ನೀಡಿದ್ದಾರೆ. ರುದ್ರಭೂಮಿಯಲ್ಲಿ ಈಗಾಗಲೇ ಒಂದು ಸಿಲಿಕಾನ್ ಛೇಂಬರ್ ಶೆಡ್ನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಮತ್ತೊಂದು ಸಿಲಿಕಾನ್ ಛೇಂಬರ್ ಶೆಡ್ನ್ನು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ನಿರ್ಮಿಸಲಾಗುತ್ತದೆ. ಯೋಜನೆಯ ಹೆಬ್ರಿ ತಾಲ್ಲೂಕು ಯೋಜನಾಧಿಕಾರಿಯವರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದಾರೆ. ಅತೀ ಶೀಘ್ರವಾಗಿ ಇದು ನಿರ್ಮಾಣಗೊಳ್ಳಲಿದೆ. ವಿಶಾಲ ಜಾಗದಲ್ಲಿ ದಿ.ಆರ್ಬೆಟ್ಟು ವೆಂಕಟೇಶ ಕಾಮತ್ ಹಿಂದೂ ರುದ್ರಭೂಮಿ ನಿರ್ಮಾಣಗೊಂಡಿದೆ. ಆವರಣ ಗೋಡೆ, ಸುತ್ತಲು ಗಿಡಗಳನ್ನು ನೆಡಲಾಗಿದೆ. ನೀರಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯ ಸೇರಿ ಸಕಲ ವ್ಯವಸ್ಥೆಯನ್ನು ನಿರ್ಮಾಣ ಮಾಡಲಾಗಿದೆ. ಧಾರ್ಮಿಕ ಕೇಂದ್ರದ ಪರಿಕಲ್ಪನೆಯಲ್ಲೇ ರುದ್ರಭೂಮಿಯ ನಿರ್ಮಾಣ ವಾಗಿದೆ. ರುದ್ರಭೂಮಿಯ ಪ್ರವೇಶದ್ವಾರದಲ್ಲಿ ಕಾವಲುಗಾರನ ಪ್ರತಿಮೆ ನಿರ್ಮಿಸಲಾಗಿದೆ. ಎಡಬದಿ ಯಲ್ಲಿ ಶಿವನ ಮೂರ್ತಿಯನ್ನು ನಿರ್ಮಿಸಲಾಗಿದೆ. ಸ್ಮಶಾನ ಅಭಿವೃದ್ಧಿ ಸಮಿತಿ ನಿರ್ವಹಣೆ: ಸ್ಮಶಾನ ಅಭಿವೃದ್ಧಿ ಸಮಿತಿಯನ್ನು ನಿಯಮನುಸಾರ ನೊಂದಾವಣೆ ಮಾಡಲಾಗಿದ್ದು 38ನೇ ಕಳ್ತೂರು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಸಮಿತಿಯೇ ಸ್ಮಶಾನವನ್ನು ನಿರ್ವಹಣೆ ಮಾಡಲಿದೆ ಎಂದು ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ತಿಳಿಸಿದ್ದಾರೆ. ಮಾರ್ಚ್ 8 ಲೋಕಾರ್ಪಣೆ: 38ನೇ ಕಳ್ತೂರು ಗ್ರಾಮ ಪಂಚಾಯಿತಿ ಮತ್ತು ಸ್ಮಶಾನ ಅಭಿವೃದ್ಧಿ ಸಮಿತಿ ಸಹಯೋಗ ದೊಂದಿಗೆ ಕಳ್ತೂರು ಸಂತೆಕಟ್ಟೆ ಕೊಂಬೆ ರಸ್ತೆಯಲ್ಲಿ ನಿರ್ಮಾಣಗೊಂಡ ಆರ್ಬೆಟ್ಟು ವೆಂಕಟೇಶ ಕಾಮತ್ ಸಾರ್ವಜನಿಕ ಹಿಂದೂ ರುದ್ರಭೂಮಿಯ ಉದ್ಘಾಟನೆ ಮಾರ್ಚ್ 8ರಂದು ಸಂಜೆ 4 ಗಂಟೆಗೆ ನಡೆಯಲಿದೆ. ದಾನಿಗಳು, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು, ಸಂಘಸಂಸ್ಥೆಗಳ ಪ್ರಮುಖರು, ಗ್ರಾಮಸ್ಥರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರು ಭಾಗವಹಿಸುವರು ಎಂದು ಸಮಿತಿ ತಿಳಿಸಿದೆ.
Thane | ಸಾಮಾಜಿಕ ಮಾಧ್ಯಮ ಪ್ರಭಾವಿಯ ಹೌಸಿಂಗ್ ಸೊಸೈಟಿ ಮೇಲೆ ಗುಂಡಿನ ದಾಳಿ, ಓರ್ವನ ಬಂಧನ
ಥಾಣೆ, ಮಾ. 7: ಉದ್ಯಮಿ ಹಾಗೂ ಸಾಮಾಜಿಕ ಮಾಧ್ಯಮ ಪ್ರಭಾವಿಯೊಬ್ಬರ ಹೌಸಿಂಗ್ ಸೊಸೈಟಿ ಮೇಲೆ ಶನಿವಾರ ಮುಂಜಾನೆ ದುಷ್ಕರ್ಮಿಗಳು ಗುಂಡು ಹಾರಿಸಿದ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶಹಬಾದ್ ಅಲಿಯಾಸ್ ಶಂಭು ಮುನ್ನಾ ಶಂಶದ್ ಖುರೇಶಿ (28)ಯನ್ನು ಬಂಧಿಸಿದ್ದಾರೆ. ಪೊಲೀಸರ ತಂಡ ಶಿಲ್ ದಾಯಿಗಡ್ ಬೀದಿಯಲ್ಲಿ ಬೆನ್ನಟ್ಟಿದಾಗ ಆತ ಐದು ಸುತ್ತು ಗುಂಡು ಹಾರಿಸಿದ್ದಾನೆ. ಇದರಿಂದ ಬೀದಿಯಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಖುರೇಶಿ ಹಾಗೂ ಇನ್ನೋರ್ವ ಆರೋಪಿ ಮುಂಬ್ರಾದ ಕೌಸಾ ಪ್ರದೇಶದಲ್ಲಿ ವಾಸಿಸುತ್ತಿರುವ ಉದ್ಯಮಿ ಹಾಗೂ ಸಾಮಾಜಿಕ ಮಾಧ್ಯಮ ಪ್ರಭಾವಿ ನದೀಮ್ ಮೊಯಿನುದ್ದೀನ್ ಖಾನ್ (45) ಅಲಿಯಾಸ್ ಬಾಬಾ ಖಾನ್ ಅವರ ಹೌಸಿಂಗ್ ಸೊಸೈಟಿ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ಗುಂಡುಗಳು ಖಾನ್ ಅವರ ಕಾರನ್ನು ಹಾನಿಗೊಳಿಸಿವೆ. ಗಾಳಿಯಲ್ಲಿ ಒಂದು ಗುಂಡು ಹಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದ ಕೂಡಲೇ ತನಿಖಾ ತಂಡ ಕಾರ್ಯಾಚರಣೆ ಆರಂಭಿಸಿತು ಹಾಗೂ ಖುರೇಶಿಯನ್ನು ಬಂಧಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಖಿಲ ಭಾರತ ಅಂತರ್ ವಿವಿ ದೇಹದಾರ್ಢ್ಯ ಸ್ಪರ್ಧೆ: ಮಂಗಳೂರು ವಿ.ವಿ ಚಾಂಪಿಯನ್
ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ಚಿನ್ನದ ಪದಕ, ಪ್ರಥಮ್ ಪೂಜಾರಿಗೆ ಬೆಳ್ಳಿಯ ಪದಕ
ರೋಗ ಗುರುತಿಸುವಿಕೆ ಹಾಗೂ ಚಿಕಿತ್ಸೆ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಅಗತ್ಯ: ಡಾ. ಆಶಾ ಕಿಶೋರ್
ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ
Assam | ಬಾಂಗ್ಲಾದೇಶಿ ವಲಸಿಗ, ವಿದೇಶಿ ಎಂದು ಘೋಷಿಸಲಾಗಿದ್ದ ಮಹಿಳೆಗೆ CAA ಮೂಲಕ ಪೌರತ್ವ!
ಗುವಾಹಟಿ, ಮಾ. 7: ಅಸ್ಸಾಂನ ಕಛಾರ್ ಜಿಲ್ಲೆಯಲ್ಲಿ ವಿದೇಶಿ ಎಂದು ಘೋಷಿಸಿದ ಬಳಿಕ ಎರಡು ವರ್ಷಗಳ ಕಾಲ ಬಂಧನದಲ್ಲಿದ್ದ ಮಹಿಳೆಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಈ ಮಹಿಳೆಯನ್ನು 59 ವರ್ಷದ ದೀಪಾಲಿ ದಾಸ್ ಎಂದು ಗುರುತಿಸಲಾಗಿದೆ. ಇವರು ಧೊಲಾಯಿ ವಿಧಾನಸಭಾ ಕ್ಷೇತ್ರದ ಹವಾಯ್ತಾಂಗ್ ಪ್ರದೇಶದ ನಿವಾಸಿ. ಇವರನ್ನು 2019ರ ಫೆಬ್ರವರಿಯಲ್ಲಿ ವಿದೇಶಿಗರ ನ್ಯಾಯಮಂಡಳಿ (ಎಫ್ಟಿ) ಅಕ್ರಮ ವಲಸಿಗರೆಂದು ಘೋಷಿಸಿತ್ತು. ಅಸ್ಸಾಂನಲ್ಲಿ ದೀಪಾಲಿ ಅವರನ್ನು ಮೊಟ್ಟಮೊದಲು ವಿದೇಶಿ ಎಂದು ಘೋಷಿಸಲಾಗಿತ್ತು. ನ್ಯಾಯಮಂಡಳಿ ಘೋಷಿಸಿದ ಬಳಿಕ ಪೊಲೀಸರು ಅವರನ್ನು ಬಂಧಿಸಿದ್ದರು. ಅದೇ ವರ್ಷ ಮೇ 10ರಂದು ಅವರನ್ನು ಸಿಲ್ಚಾರ್ ಬಂಧನ ಕೇಂದ್ರಕ್ಕೆ ಕಳುಹಿಸಿದ್ದರು. ಸುಪ್ರೀಂ ಕೋರ್ಟ್ನ ಆದೇಶದ ಹಿನ್ನೆಲೆಯಲ್ಲಿ 2021ರ ಮೇ 17ರಂದು ಜಾಮೀನಿನಲ್ಲಿ ಬಿಡುಗಡೆಯಾಗುವವರೆಗೆ ಎರಡು ವರ್ಷಗಳ ಕಾಲ ಅವರು ಬಂಧನ ಕೇಂದ್ರದಲ್ಲಿದ್ದರು ಎಂದು ಅವರ ವಕೀಲ ಧರ್ಮಾನಂದ ದೇಬ್ ತಿಳಿಸಿದ್ದಾರೆ. ದೀಪಾಲಿ ಅವರು ಮೂಲತಃ ಬಾಂಗ್ಲಾದೇಶದ ಸಿಲೆಟ್ ಜಿಲ್ಲೆಯ ಧಿರೈ ಪೊಲೀಸ್ ಠಾಣಾ ವ್ಯಾಪ್ತಿಯ ದಿಪ್ಪುರ್ ಗ್ರಾಮದ ನಿವಾಸಿ. ಅವರು ಹಬಿಗಂಜ್ ಜಿಲ್ಲೆಯ ಬನಿಯಾಚೋಂಗ್ ಪೊಲೀಸ್ ಠಾಣಾ ವ್ಯಾಪ್ತಿಯ ಪರಾಯಿ ಗ್ರಾಮದ ಅಭಿಮನ್ಯು ದಾಸ್ ಅವರನ್ನು 1987ರಲ್ಲಿ ವಿವಾಹವಾಗಿದ್ದರು. ಈ ದಂಪತಿ 1988ರಲ್ಲಿ ಭಾರತ ಪ್ರವೇಶಿಸಿದ್ದರು. ಕಛಾರ್ ಜಿಲ್ಲೆಗೆ ತೆರಳಿದ್ದರು. ಅನಂತರ ಅವರು ಅಲ್ಲೇ ವಾಸಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ನೋಂದಣಿಯಾದ ಸ್ಟಾರ್ಟಪ್ ಗಳು 4000 ಕ್ಕೂ ಅಧಿಕ, ಸೃಷ್ಟಿಯಾದ ಉದ್ಯೋಗ 8190
ರಾಜ್ಯದಲ್ಲಿ ಸ್ಟಾರ್ಟಪ್ ಉದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ. ಒಂದು ಕಡೆಯಲ್ಲಿ ಯುವಜನರಲ್ಲಿ ನಿರುದ್ಯೋಗ ದೊಡ್ಡ ಪ್ರಮಾಣದಲ್ಲಿದೆ. ಸರ್ಕಾರಿ ನೇಮಕಾತಿಗಳು ಆಗುತ್ತಿಲ್ಲ. ಈ ನಡುವೆ ರಾಜ್ಯದಲ್ಲಿ ನೋಂದಣಿಯಾದ ಸ್ಟಾರ್ಟಪ್ ಗಳು 4000 ಕ್ಕೂ ಅಧಿಕ ಇವೆ. ಸ್ಟಾರ್ಟ್ ಅಪ್ ಗಳಿಂದ 8,190 ರಷ್ಟು ಉದ್ಯೋಗ ಸೃಷ್ಟಿಯಾಗಿವೆ ಎಂದು ಸರ್ಕಾರ ಮಾಹಿತಿ ನೀಡಿದೆ. ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಅಧೀನದಲ್ಲಿ 4000 ಕ್ಕೂ ಹೆಚ್ಚು ಸ್ಟಾರ್ಟಪ್ ಗಳು ನೋಂದಾಣಿ ಆಗಿವೆ. ನೋಂದಣಿ ಮಾಡಲು ಕೆಲವೊಂದು ಮಾನದಂಡಗಳು ಇವೆ. ಹಾಗಾದರೆ ಯಾವ ಜಿಲ್ಲೆಯಲ್ಲಿ ಎಷ್ಟು ಉದ್ಯೋಗ ಸೃಷ್ಟಿಯಾಗಿವೆ ಸ್ಟಾರ್ಟ್ ಅಪ್ ಗಳಿಂದ? ಇಲ್ಲಿದೆ ಮಾಹಿತಿ.
ಕಲಬುರಗಿ | ಎಮ್.ಎನ್.ದೇಸಾಯಿ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕಾರ್ಯಾಗಾರ
ಕಲಬುರಗಿ : ನಗರದ ಎಮ್.ಎನ್.ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ 'ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ತಂತ್ರಜ್ಞಾನ' ಎಂಬ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕ ಮತ್ತು ಸಿಇಒ ಯತೀಶ್ ಕೆ.ಎಸ್. ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಯುಗದಲ್ಲಿ ಎಐ ಕೇವಲ ಇಂಜಿನಿಯರ್ಗಳಿಗೆ ಸೀಮಿತವಾಗಿಲ್ಲ, ಎಲ್ಲರಿಗೂ ಸಂಬಂಧಿಸಿದ್ದಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಯತಿಕಾರ್ಪ್ ನ ನೂತನ ಎಐ ಕಾರ್ಡ್ ಅನ್ನು ಪರಿಚಯಿಸಲಾಯಿತು. ಯಾವುದೇ ತಾಂತ್ರಿಕ ಹಿನ್ನೆಲೆ ಇಲ್ಲದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕೆಲವೇ ಗಂಟೆಗಳಲ್ಲಿ ತಮ್ಮದೇ ಆದ ಸ್ವಂತ ವೆಬ್ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ಗಳನ್ನು ಯಶಸ್ವಿಯಾಗಿ ರೂಪಿಸಿ ಪ್ರದರ್ಶಿಸಿದರು. ಕೋಡಿಂಗ್ ಜ್ಞಾನವಿಲ್ಲದಿದ್ದರೂ (ಎಐ) ತಂತ್ರಜ್ಞಾನವನ್ನು ಬಳಸಿ ಹೇಗೆ ಸೃಜನಶೀಲವಾಗಿ ಬೆಳೆಯಬಹುದು ಎಂಬುದನ್ನು ವಿದ್ಯಾರ್ಥಿಗಳು ಸಾಬೀತುಪಡಿಸಿದರು. ಕಾರ್ಯಕ್ರಮದಲ್ಲಿ ಯತಿಕಾರ್ಪ್ ನಿರ್ದೇಶಕರಾದ ಪ್ರಖ್ಯಾತ ರೈ, ಜನರಲ್ ಮ್ಯಾನೇಜರ್ ಕೃಪಾ ಕೆ., ಮತ್ತು ಜೆಸ್ಕಾಮ್ನ ಹಿರಿಯ ಕೌಶಲ್ಯ ತರಬೇತಿ ಸಂಯೋಜಕ ರವಿ ಸಂಗಶೆಟ್ಟಿ, ಕಾಲೇಜಿನ ಅಧ್ಯಕ್ಷರಾದ ಸಂದೀಪ್ ದೇಸಾಯಿ ಮತ್ತು ಜಗನ್ನಾಥ್ ನಾಗೂರ್, ಮಂಜುನಾಥ್ ಬನ್ನೂರ್, ನಾಗರಾಜ್ ಪಟ್ಟಣಕರ್, ಶಿವಶರಣಪ್ಪ ಪೂಜಾರಿ, ಅಮರ್ ಹಾಗರಗ, ದೇವೇಂದ್ರಪ್ಪ ಸಜ್ಜನ್, ರಾಧಿಕಾ ಗುತ್ತೇದಾರ್, ಶ್ರೀದೇವಿ ಹಿರೇಮಠ, ಗುರುಬಾಯಿ ವಾಡಿ, ಅಂಬಿಕಾ ಪಟನೆ, ಜ್ಯೋತಿ ಹಂಗರಗಿ, ರೇಷ್ಮಾ ರಾಥೋಡ್, ಜೈಶ್ರೀ ದೇಶಮುಖ್, ಶಿಲ್ಪ ಚೆಟ್ಟಿ, ಗೀತಾ ಇಂಗಿನ್, ಸಂತೋಷ್ ಲಸ್ಕರ್, ಕಾಶಿಬಾಯಿ ವಗ್ಗೆ ಹಾಗೂ ನೂರಾರು ವಿದ್ಯಾರ್ಥಿಗಳು ಇದ್ದರು.
ಹವ್ಯಕ ಭಾಷಾ ಅಕಾಡೆಮಿಯ ರಚನೆಯ ತೀರ್ಮಾನಕ್ಕೆ ಸ್ವಾಗತ: ಎಂ.ಜಿ.ಹೆಗ್ಡೆ
ಮಂಗಳೂರು, ಮಾ.7; ಹವ್ಯಕ ಭಾಷಾ ಅಕಾಡೆಮಿ ರಚನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದು ಸ್ವಾಗತಾರ್ಹ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗ್ಡೆ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಹವ್ಯಕ ಭಾಷೆಗೆ ನೂರಾರು ವರುಷಗಳ ಇತಿಹಾಸ ಇದೆ. ಉತ್ತರ ಕನ್ನಡ, ಶಿವಮೊಗ್ಗ, ದ.ಕ, ಕಾಸರಗೋಡು ಹಾಗೂ ಇತರ ಜಿಲ್ಲೆ ಗಳು ಸೇರಿದಂತೆ ಸುಮಾರು ಆರೂವರೆ ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಧಾರ್ಮಿಕ ಪರಿಷತ್ತಿನ ಸದಸ್ಯ ಲಕ್ಷ್ಮೀಶ ಗಬ್ಲ ಲಡ್ಕ ಅವರು ಪ್ರಯತ್ನ ಸ್ಮರಿಸಬೇಕಾಗಿದೆ ಎಂದು ಎಂ.ಜಿ.ಹೆಗ್ಡೆ ತಿಳಿಸಿದ್ದಾರೆ. ಈ ರೀತಿಯ ಅಕಾಡೆಮಿಯ ರಚನೆಯಿಂದ ಭಾಷೆಯ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪದಾಧಿಕಾ ರಿಗಳಾದ ಪ್ರಕಾಶ್ ಸಾಲ್ಯಾನ್,ಯೋಗೀಶ್ ನಾಯ್ಕ್ , ಶುಭೋದಯ ಆಳ್ವ, ನಮಿತಾ ಡಿ ಆಳ್ವ, ಚಂದ್ರಕಲಾ ಮೊದಲಾದವರು ಉಪಸ್ಥಿತರಿದ್ದರು.
ಕಲಬುರಗಿ | ರಾಜ್ಯ ಬಜೆಟ್ ವಿರುದ್ಧ ಸಿಪಿಐಎಂ ಪ್ರತಿಭಟನೆ
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್ ಬಂಡವಾಳ ಪರವಾಗಿದ್ದು, ಉದ್ಯೋಗ ಖಾತ್ರಿ ಯೋಜನೆಗೆ ಸಮರ್ಪಕ ಅನುದಾನ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐಎಂ) ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, ಸಮಾಜವಾದಿ ಎನ್ನಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ಗಂಟೆಗಳ ಕಾಲ ಬಜೆಟ್ ಭಾಷಣ ಮಾಡಿದರೂ ಸಾಮಾನ್ಯ ಜನರ ಆರ್ಥಿಕ ಮಟ್ಟ ಹೆಚ್ಚಿಸುವುದು ಹಾಗೂ ನಿರುದ್ಯೋಗ ನಿವಾರಣೆಗೆ ಅಗತ್ಯವಾದ ಘೋಷಣೆಗಳನ್ನು ಮಾಡಲಿಲ್ಲ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಎರಡು ದಿನಗಳ ಹಿಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಯೋಜನೆಯ ಹೆಸರನ್ನು ಬದಲಾಯಿಸಿ “ವಿಬಿ ಗ್ರಾಮ್ ಜಿ” ಯೋಜನೆ ಜಾರಿಗೆ ತಂದು ಕಾರ್ಮಿಕರ ಉದ್ಯೋಗ ಅವಕಾಶಗಳನ್ನು ಕಡಿಮೆ ಮಾಡಿದೆ. ಈ ಕ್ರಮವನ್ನು ಕಾಂಗ್ರೆಸ್ ವಿರೋಧಿಸಿದರೂ, ಬಡ ಕೃಷಿ ಕಾರ್ಮಿಕರ ಉದ್ಯೋಗ ಭದ್ರತೆಗೆ ರಾಜ್ಯ ಬಜೆಟ್ನಲ್ಲಿ ಯಾವುದೇ ಭರವಸೆ ನೀಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಜೆಟ್ ಮಂಡಿಸಿರುವ ಸಾಧನೆಯನ್ನು ಹೇಳಿಕೊಂಡರೂ ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚಿನ ಅನುದಾನ ನೀಡಿಲ್ಲ. ಕೇಂದ್ರ ಸರ್ಕಾರ ತಂದಿರುವ ಹೊಸ ಕಾಯ್ದೆಯಿಂದ ಹಿಂದಿನ ಉದ್ಯೋಗ ಖಾತ್ರಿ ಯೋಜನೆ ದುರ್ಬಲಗೊಂಡಿದ್ದು, ಕಾಂಗ್ರೆಸ್ ಸರ್ಕಾರವೂ ಅದೇ ದಾರಿಯಲ್ಲಿ ನಡೆಯುತ್ತಿರುವುದು ವಿಷಾದನೀಯ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಕೆ. ನೀಲಾ, ಮೀನಾಕ್ಷಿ ಬಾಳಿ, ಸುಧಾಮ ಧನ್ನಿ, ಪಾಂಡುರಂಗ ಮಾವಿನಕರ, ಗೌರಮ್ಮ, ಸರ್ವೇಶ್, ಭೀಮಶೆಟ್ಟಿ ಯಂಪಳ್ಳಿ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.
ನಾಳೆ(ಮಾ.8) ಐಸಿಸಿ ಟಿ20 ವಿಶ್ವಕಪ್ ಫೈನಲ್; ಸತತ 2ನೇ ಪ್ರಶಸ್ತಿಯ ಮೇಲೆ ಆತಿಥೇಯರ ಕಣ್ಣು
ಪ್ರಶಸ್ತಿಗಾಗಿ ಭಾರತ–ನ್ಯೂಝಿಲ್ಯಾಂಡ್ ಹಣಾಹಣಿ
ಸರಕಾರದ ಯೋಜನೆಗಳಿಗೆ ಕಟ್ಟಡ ಕಾರ್ಮಿಕರ ನಿಧಿ ಬಳಕೆಗೆ ವಿರೋಧ
ಉಡುಪಿ, ಮಾ.7: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 600 ಕೋಟಿ ರೂ.ವೆಚ್ಚದಲ್ಲಿ ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸಲು ಬಜೆಟ್ನಲ್ಲಿ ಪ್ರಸ್ತಾಪಿಸಿರುವುದನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತೀವ್ರವಾಗಿ ವಿರೋಧಿಸಿದೆ. ತರಬೇತಿ ಕೇಂದ್ರಗಳ ಸ್ಥಾಪನೆ ರಾಜ್ಯ ಸರಕಾರದ ಕೆಲಸ. ಜೊತೆಗೆ ಈ ತರಬೇತಿ ಕೇಂದ್ರಗಳಲ್ಲಿ ಕೇವಲ ಕಟ್ಟಡ ಕಾರ್ಮಿಕರ ಮಕ್ಕಳು ಮಾತ್ರವಲ್ಲದೇ ಎಲ್ಲರಿಗೂ ಪ್ರವೇಶಾವಕಾಶವಿದೆ. ಆದ್ದರಿಂದ ಕಲ್ಯಾಣ ಮಂಡಳಿಯಿಂದ 600 ಕೋಟಿ ರೂ. ವೆಚ್ಚ ಮಾಡುವ ನಿರ್ಧಾರವು ಕಟ್ಟಡ ಕಾರ್ಮಿಕರಿಗೆ ಬಗೆಯುವ ದ್ರೋಹವಾಗಿರುತ್ತದೆ ಎಂದು ಫೆಡರೇಷನ್ನ ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಶ್ರಮಿಕ ವಸತಿ ಶಾಲೆಗಳ ನಿರ್ಮಾಣ ಹಾಗೂ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೌಶಲ್ಯ ಅಭಿವೃದ್ಧಿ ಅಕಾಡೆಮಿಗಳನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿಯನ್ನು ಬಳಸಿ ನಿರ್ಮಾಣ ಮಾಡುವ ಪ್ರಸ್ತಾಪವು 1996ರ ಕಟ್ಟಡ ಕಾರ್ಮಿಕರ ಕಾಯ್ದೆಯ ಉದ್ದೇಶವನ್ನೇ ಬುಡಮೇಲು ಮಾಡಲಿದೆ ಎಂದವರು ಅಭಿಪ್ರಾಯಪಟ್ಟರು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯು ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಸೇರಿದಂತೆ ಕಾರ್ಮಿಕರ ಆರೋಗ್ಯ ಸುರಕ್ಷತೆ ಹಾಗೂ ಶಿಕ್ಷಣದ ಅಗತ್ಯತೆಗಳಿಗಾಗಿ ಬಳಸಬೇಕು ಮತ್ತು ಇದನ್ನು ಹೊರತು ಪಡಿಸಿ ಇತರೆ ಯಾವುದೇ ಉದ್ದೇಶಗಳಿಗೆ ಬಳಸಬಾರದೆಂದು ಕಾಯ್ದೆ ಹೇಳುತ್ತದೆ. ಸುಪ್ರೀಂ ಕೋರ್ಟ್ ಸಹ ಇದನ್ನೇ ಎತ್ತಿ ಹಿಡಿದಿದೆ ಎಂದವರು ಹೇಳಿಕೆಯಲ್ಲಿ ಪ್ರತಿಪಾದಿಸಿದ್ದಾರೆ. ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಸರಕಾರದ ಈ ಮೂರು ಬಜೆಟ್ ಪ್ರಸ್ತಾಪಗಳನ್ನು ತೀವ್ರವಾಗಿ ವಿರೋಧಿಸುತ್ತದೆ. ಹಾಗೂ ಇದನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದೆ. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಇದರ ವಿರುದ್ಧ ತೀವ್ರ ಪ್ರತಿಭಟನೆಗಳನ್ನು ನಡೆಸುವ ಎಚ್ಚರಿಕೆಯನ್ನೂ ನೀಡಿದೆ.
ಮಾ.13ಕ್ಕೆ ಎಚ್.ಪಿ.ವಿ. ಲಸಿಕಾ ಅಭಿಯಾನಕ್ಕೆ ಚಾಲನೆ: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಮಾ.7: ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರನ್ನು ತಡೆಗಟ್ಟಲು 14 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ರಾಷ್ಟ್ರೀಯ ಎಚ್ಪಿವಿ ಲಸಿಕಾ ಅಭಿಯಾನ (ವ್ಯಾಕ್ಸಿನೇಶನ್ ಕ್ಯಾಂಪೇನ್) ಕಾರ್ಯಕ್ರಮವನ್ನು ಆರಂಭಿಸಿದ್ದು, ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣ ದಲ್ಲಿ ನಡೆದ ಎಚ್ಪಿವಿ ಚುಚ್ಚುಮದ್ದು ಲಸಿಕಾ ಕಾರ್ಯಕ್ರಮದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಈ ಲಸಿಕೆ ಗರ್ಭಕಂಠದ ಕ್ಯಾನ್ಸರ್ನಿಂದ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡಲಿದೆ ಎಂದು ಅವರು ಹೇಳಿದರು. 14 ವಷರ್ ಪೂರ್ಣಗೊಂಡ ಆದರೆ 15 ವಷರ್ದೊಳಗಿನ ಹೆಣ್ಣು ಮಕ್ಕಳಿಗೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾ ಗುವುದು. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದಾದ ರೋಗವಾಗಿದ್ದು, ಎಚ್ಪಿವಿ ಚುಚ್ಚುಮದ್ದು ಪಡೆದು ಕೊಳ್ಳುವು ದರಿಂದ ಮಹಿಳೆಯರಲ್ಲಿ ಈ ಕ್ಯಾನ್ಸರ್ನ್ನು ತಡೆಗಟ್ಟಬಹುದು ಎಂದರು. ಜಿಲ್ಲೆಯಲ್ಲಿ 11,274 ಮಕ್ಕಳಿಗೆ ಈ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಲಸಿಕೆಯ 0.5ಎಂಎಲ್ನ ಒಂದು ಡೋಸ್ನ್ನು ನೀಡಲಾ ಗುತ್ತದೆ. ಇದು ಸ್ವಯಂ ಪ್ರೇರಿತವಾಗಿದ್ದು, ಪೋಷಕರು ಅಥವಾ ಪಾಲಕರ ಒಪ್ಪಿಗೆ ಕಡ್ಡಾಯ ವಾಗಿದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಹಾಗೂ ತಾಯಿ- ಮಕ್ಕಳ ಆಸ್ಪತ್ರೆಯಲ್ಲಿ ಮೂರು ತಿಂಗಳ ಕಾಲ ಲಸಿಕೆ ನೀಡಲಾಗುವುದು ಎಂದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮಾ.13ರಂದು ಬೆಳಗ್ಗೆ ಉಡುಪಿ ಬೋರ್ಡ್ ಹೈಸ್ಕೂಲ್ನಲ್ಲಿ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. ಈ ಲಸಿಕೆ ಶೇ.93ರಷ್ಟು ಪರಿಣಾಮಕಾರಿಯಾಗಿದ್ದು ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಅವರು ಮನವಿ ಮಾಡಿದರು. ಎಚ್ಪಿವಿ ಲಸಿಕಾ ಅಭಿಯಾನಕ್ಕೆ ಫೆ.28ರಂದೇ ರಾಷ್ಟ್ರಮಟ್ಟದಲ್ಲಿ ಚಾಲನೆ ನೀಡಲಾಗಿದೆ.ಮುಂದಿನ ಮೂರು ತಿಂಗಳ ಅವಧಿಯಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಸೇರಿದಂತೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಅವಕಾಶವಿದೆ ಎಂದರು. ಮೊದಲ ಹಂತದಲ್ಲಿ 14 ವರ್ಷ ಮೇಲ್ಪಟ್ಟು, 15ವರ್ಷದೊಳಗಿನ ಹೆಣ್ಣು ಮಕ್ಕಳು ಲಸಿಕೆ ಪಡೆಯಲು ಅರ್ಹರಿದ್ದು, ಮುಂದಿನ ಹಂತದಲ್ಲಿ ವಯಸ್ಸಿನ ಪರಿಷ್ಕರಣೆ ನಡೆಯಲಿದೆ. ಎಚ್ಪಿವಿ ವೈರಸ್ನಿಂದ ಬರಬಹುದಾದ ಗರ್ಭಕಂಠ ಕ್ಯಾನ್ಸರ್ನ್ನು ಈ ಲಸಿಕೆಯಿಂದ ನಿಯಂತ್ರಿಸಬಹುದಾಗಿದ್ದು, ಮಧ್ಯ ವಯಸ್ಸಿನ ಮಹಿಳೆಯರಿಗೆ ಆರೋಗ್ಯ ತಪಾಸಣಾಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸಲಾಗುತ್ತದೆ. ಇದರ ಪ್ರಯೋಜನವನ್ನು ಎಲ್ಲಾ ಹೆಣ್ಣುಮಕ್ಕಳು ಪಡೆಯಬೇಕು ಎಂದು ಕೋಟ ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್, ಕಾದ್ರೋಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಸವರಾಜ್ ಜಿ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ.ಅಶೋಕ್, ಆರ್.ಸಿ.ಎಚ್ ಅಧಿಕಾರಿ ಜ್ಯೋತ್ಸ್ನಾ ಬಿ.ಕೆ ಮತ್ತಿತರರು ಉಪಸ್ಥಿತರಿದ್ದರು.
ದೇಶದಲ್ಲಿ ಮೊದಲ ಬಾರಿ ಡಿಜಿಟಲ್ ರೂಪದಲ್ಲಿ ಜನಗಣತಿ: ಉಡುಪಿ ಡಿಸಿ ಸ್ವರೂಪ ಟಿ.ಕೆ.
ಉಡುಪಿ, ಮಾ.7: ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸ್ವಯಂ-ಗಣತಿ ಆಯ್ಕೆಯೂ ಇದರಲ್ಲಿ ಲಭ್ಯವಿದೆ. ಮೊದಲ ಹಂತದಲ್ಲಿ ಎಪ್ರಿಲ್ 16ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ. ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2027ರ ಜನಗಣತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಎರಡನೇ ಹಂತದಲ್ಲಿ ಜನಸಂಖ್ಯಾ ಎಣಿಕೆ ಕಾರ್ಯ 2027ರ ಫೆಬ್ರವರಿಯಿಂದ ಪ್ರಾರಂಭಗೊಳ್ಳಲಿದೆ ಎಂದವರು ತಿಳಿಸಿದರು. ಸರಕಾರದ ಮಾರ್ಗಸೂಚಿಯಂತೆ ಗಣತಿ ಕಾರ್ಯ ಕೈಗೊಳ್ಳಲು ಅಗತ್ಯ ವಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇಮಕ ಕಾರ್ಯಗಳನ್ನು ಮಾಡಿಕೊಳ್ಳಬೇಕು. ಮನೆಗಳ ಪಟ್ಟಿ, ದತ್ತಾಂಶ ಸಂಗ್ರಹಣೆ, ಪರಿಶೀಲನೆ ಮತ್ತು ಮೇಲ್ವಿಚಾರಣೆಗಾಗಿ ಮೊಬೈಲ್ ಅಪ್ಲಿಕೇಶನ್ ಮತ್ತು ಕೇಂದ್ರ ಪೋರ್ಟಲ್ ಬಳಸಲಾಗುವುದು ಎಂದು ಅವರು ವಿವರಿಸಿದರು. ಮೊದಲು ಮನೆ ಗಣತಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಗಣತಿಗಾಗಿ ತರಬೇತುದಾರರ ಅಂತಿಮಗೊಳಿಸುವಿಕೆ, ಜಿಲ್ಲಾ ಜನಗಣತಿ ಅಧಿಕಾರಿಗಳಿಗೆ ತರಬೇತಿ ಮತ್ತು ಕ್ಷೇತ್ರ ಕಾರ್ಯಕರ್ತರ ನೇಮಕಾತಿ ಕುರಿತು ಚರ್ಚಿಸಿ ಅಂತಿಮ ಪಟ್ಟಿ ಸಿದ್ಧಗೊಳಿಸಲು ಸೂಚಿಸಿದರು. ಜಿಪಿಎಸ್ ಆಧಾರಿತ ಮ್ಯಾಪಿಂಗ್ ಪೂರ್ಣಗೊಳಿಸಬೇಕು. ಎಲ್ಲ ಅಗತ್ಯ ಕ್ರಮಗಳನ್ನು ಕಾಲಮಿತಿಯಲ್ಲೇ ನಡೆಸಬೇಕು. ಇದಕ್ಕಾಗಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಉದಯಕುಮಾರ್ ಶೆಟ್ಟಿ, ಸಹಾಯಕ ಮಿಷನರ್ ರಶ್ಮಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗೆ ನುಗ್ಗಿ 14.67 ಲಕ್ಷ ರೂ. ಮೌಲ್ಯದ ನಗನಗದು ಕಳವು: ಪ್ರಕರಣ ದಾಖಲು
ಬ್ರಹ್ಮಾವರ, ಮಾ.7: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಬಾರಕೂರು ಹೇರಾಡಿ ಎಂಬಲ್ಲಿ ಮಾ.6ರಂದು ರಾತ್ರಿ ವೇಳೆ ನಡೆದಿದೆ. ಮಂಜುನಾಥ ರಾವ್ ಎಂಬವರು ತನ್ನ ಪತ್ನಿ ಜೊತೆ ಮನೆಗೆ ಬೀಗ ಹಾಕಿ ಬಾರಕೂರುನಲ್ಲಿ ನಡೆಯುತ್ತಿದ್ದ ನಾಗಮಂಡಲ ಕಾರ್ಯಕ್ರಮಕ್ಕೆ ಹೋಗಿದ್ದರು. ಈ ವೇಳೆ ಮನೆಯ ಎದುರು ಬಾಗಿಲು ಒಡೆದು ಒಳನುಗ್ಗಿದ ಕಳ್ಳರು, ಕಾಪಾಟಿನಲ್ಲಿದ್ದ 1 ಚಿನ್ನದ ಮುತ್ತಿನ ಸರ ಮತ್ತು ಪೆಂಡೆಂಟ್, ಎರಡು ಚಿನ್ನದ ಬಳೆ, ಒಂದು ಜೋತೆ ಚಿನ್ನದ ಬೆಂಡೋಲೆ, 4 ಚಿನ್ನದ ಉಂಗುರ, 3 ಚಿನ್ನದ ಬೆಂಡೋಲೆ, ಬೆಳ್ಳಿಯ ಹರಿವಾಣ ಮತ್ತು ಕವಳಿಗೆ ಹಾಗೂ 49,000ರೂ. ನಗದು ಕಳವು ಮಾಡಿಕೊಂಡು ಹೋಗಿದ್ದಾರೆಂದು ದೂರಲಾಗಿದೆ. ಕಳವಾದ ಒಟ್ಟು ಸೊತ್ತುಗಳ ಒಟ್ಟು ಮೌಲ್ಯ 14,67,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಲ್ಫ್ ಪ್ರವೇಶಿಸುವ ಅಮೆರಿಕನ್ ಹಡಗು ಸಮುದ್ರದ ತಳಕ್ಕೆ ಹೋಗಲಿದೆ: ಇರಾನ್ ಎಚ್ಚರಿಕೆ
ತೇಹ್ರಾನ್: ಗಲ್ಫ್ ಪ್ರದೇಶಕ್ಕೆ ಪ್ರವೇಶಿಸುವ ಯಾವುದೇ ಅಮೆರಿಕನ್ ಹಡಗು ಸಮುದ್ರದ ತಳಕ್ಕೆ ಹೋಗಲಿದೆ ಎಂದು ಇರಾನ್ ಮಿಲಿಟರಿ ವಕ್ತಾರರು ಕಠಿಣ ಎಚ್ಚರಿಕೆ ನೀಡಿದ್ದಾರೆ ಎಂದು Aljazeera ವರದಿ ಮಾಡಿದೆ. ಗಲ್ಫ್ ಪ್ರವೇಶಿಸುವ ಅಮೆರಿಕದ ನೌಕಾಪಡೆಯ ಹಡಗುಗಳನ್ನು ಮುಳುಗಿಶಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರದೇಶದಲ್ಲಿ ಅಮೆರಿಕದ ಸೈನಿಕ ಚಟುವಟಿಕೆಗಳನ್ನು ಇರಾನ್ ತೀವ್ರವಾಗಿ ವಿರೋಧಿಸುತ್ತಿದ್ದು, ಇಂತಹ ಕ್ರಮಗಳು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ವಕ್ತಾರರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಈ ಹೇಳಿಕೆ ಹೊರಬಂದಿದೆ. ಗಲ್ಫ್ ಪ್ರದೇಶದ ಭದ್ರತೆ ಮತ್ತು ಸಮುದ್ರ ಮಾರ್ಗಗಳ ಮೇಲೆ ನಡೆಯುತ್ತಿರುವ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲೂ ಗಮನ ಸೆಳೆದಿವೆ. ಈ ವಾರದ ಆರಂಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ತೈಲ ಟ್ಯಾಂಕರ್ಗಳಿಗೆ ಯುಎಸ್ ನೌಕಾಪಡೆಯು ಸಾಧ್ಯವಾದಷ್ಟು ಬೇಗ ಬೆಂಗಾವಲು ನೀಡಲು ಆರಂಭಿಸಲಿದೆ ಎಂದು ಹೇಳಿದ್ದರು. ಈ ಕ್ರಮವು ಪ್ರದೇಶದಲ್ಲಿ ಸಾಗುವ ವಾಣಿಜ್ಯ ಹಡಗುಗಳ ಭದ್ರತೆಯನ್ನು ಖಚಿತಪಡಿಸಲು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಹಾರ್ಮುಜ್ ಜಲಸಂಧಿ ಜಾಗತಿಕ ತೈಲ ಸಾಗಣೆಯ ಪ್ರಮುಖ ಸಮುದ್ರ ಮಾರ್ಗವಾಗಿದ್ದು, ಇಲ್ಲಿ ಯಾವುದೇ ಮಿಲಿಟರಿ ಉದ್ವಿಗ್ನತೆ ಉಂಟಾದರೆ ಜಾಗತಿಕ ತೈಲ ಮಾರುಕಟ್ಟೆಗೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಗಲ್ಫ್ ಪ್ರದೇಶದ ಭದ್ರತೆ ಕುರಿತ ಆತಂಕಗಳು ಹೆಚ್ಚುತ್ತಿವೆ.
ಐಎಂಎ ಹಗರಣದ ಸಂತ್ರಸ್ತರಿಗೆ 80 ಕೋಟಿ ರೂ. ಮರುಪಾವತಿ: ಶಾಸಕ ರಿಝ್ವಾನ್ ಅರ್ಶದ್
ಬೆಂಗಳೂರು: ಐಎಂಎ ಹಗರಣದಲ್ಲಿ ವಂಚನೆಗೊಳಗಾದ ಸಂತ್ರಸ್ತರಿಗೆ ನ್ಯಾಯಾಲಯದ ಮಾರ್ಗಸೂಚಿಯನ್ವಯ ಮುಂದಿನ ವಾರ ಸಕ್ಷಮ ಪ್ರಾಧಿಕಾರವು 80 ಕೋಟಿ ರೂ.ಗಳನ್ನು ಮರು ಪಾವತಿ ಮಾಡಲಿದೆ ಎಂದು ಶಾಸಕ ರಿಝ್ವಾನ್ ಅರ್ಶದ್ ತಿಳಿಸಿದರು. ಶನಿವಾರ ಇಲ್ಲಿನ ವಸಂತ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಗರಣದಿಂದಾಗಿ ಬಹುಪಾಲು ಬಡ ಹಾಗು ಮಧ್ಯಮ ವರ್ಗದ ಕುಟುಂಬಗಳೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಂತಾಯಿತು ಎಂದು ಹೇಳಿದರು. ಕಳೆದ ವರ್ಷ 112 ಕೋಟಿ ರೂ.ಗಳನ್ನು ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿತ್ತು. ಈಗ 80 ಕೋಟಿ ರೂ.ಗಳನ್ನು ಮರು ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಗರಿಷ್ಠ ಪ್ರಮಾಣದಲ್ಲಿ ಸಂತ್ರಸ್ತರಿಗೆ ನೆರವು ನೀಡಲು ಸರಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ರಿಝ್ವಾನ್ ಅರ್ಶದ್ ತಿಳಿಸಿದರು. ಐಎಂಎ ಸಂಸ್ಥೆಯ ಆಸ್ತಿಗಳು ಕೆಳಹಂತದ ನ್ಯಾಯಾಲಯ, ಜಾರಿ ನಿರ್ದೇಶನಾಲಯ(ಈ.ಡಿ)ದಲ್ಲಿ ಸಿಲುಕಿದ್ದರಿಂದ ಅವುಗಳನ್ನು ಬಿಡಿಸಿಕೊಂಡು, ಹರಾಜು ಹಾಕುವ ಪ್ರಕ್ರಿಯೆ ನಡೆಸಲು ಹೆಚ್ಚಿನ ಸಮಯ ತಗುಲಿತು. ಆದರೆ, ಸಕ್ಷಮ ಪ್ರಾಧಿಕಾರವು ತನ್ನ ನಿರಂತರ ಪ್ರಯತ್ನದಿಂದ ಆ ಆಸ್ತಿಗಳನ್ನು ಹರಾಜು ಹಾಕಿ, ಸಂತ್ರಸ್ತರಿಗೆ ಅವರ ಹಣವನ್ನು ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು. ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ರಾಜಕಾರಣಿಗಳ ನೆರವು ಇಲ್ಲದೆ, ಇಂತಹ ವಂಚನೆಗಳು ನಡೆಯಲು ಸಾಧ್ಯವಿಲ್ಲ. ಆದುದರಿಂದ, ಜನಸಾಮಾನ್ಯರು ಯಾವುದೆ ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡುವ ಬದಲು ಅದರ ಪೂರ್ವಾಪರವನ್ನು ಕೂಲಂಕಷವಾಗಿ ಪರಿಶೀಲಿಸಿಕೊಳ್ಳುವುದು ಉತ್ತಮ ಎಂದು ರಿಝ್ವಾನ್ ಅರ್ಶದ್ ಸಲಹೆ ನೀಡಿದರು.
ಚಾಳಿ ಬಿಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ ಕರ್ನಾಟಕ ಮಾಹಿತಿ ಆಯೋಗ,ಬಿಡಿಎ ಇಬ್ಬರು ಅಧಿಕಾರಿಗಳಿಗೆ 1.25 ಲಕ್ಷ ರೂ ದಂಡ
ಕರ್ನಾಟಕ ಮಾಹಿತಿ ಆಯೋಗ,ಬಿಡಿಎ ಇಬ್ಬರು ಅಧಿಕಾರಿಗಳಿಗೆ ಒಟ್ಟು 1.25 ಲಕ್ಷ ರೂ ದಂಡ ವಿಧಿಸಿದೆ. ಇಬ್ಬರು ಅಧಿಕಾರಿಗಳ ವಿರುದ್ಧ ಅರ್ಜಿದಾರರು ಮಾಹಿತಿ ಹಕ್ಕುಗಳ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಾಹಿತಿ ಆಯೋಗ, ಮಾಹಿತಿ ನೀಡದ ಶಿವಕುಮಾರ್ ಅವರಿಗೆ 25 ಸಾವಿರ ರೂ ದಂಡ ವಿಧಿಸಿ, ಬಿಸಿ ಮುಟ್ಟಿಸಿದೆ. ಒಂದು ವೇಳೆ ಅರ್ಜಿದಾರರು ಕೋರಿರುವ ದಾಖಲೆಯನ್ನು ತಕ್ಷಣ ನೀಡದಿದ್ದಲ್ಲಿ ಶಿವಕುಮಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ದುಬೈ, ಮಾ.7: ಇರಾನ್ ನೊಂದಿಗೆ ನಡೆಯುತ್ತಿರುವ ಮಿಲಿಟರಿ ಸಂಘರ್ಷಕ್ಕೆ ಗಲ್ಫ್ ಹಾಗೂ ಮಧ್ಯಪ್ರಾಚ್ಯ ಪ್ರದೇಶವನ್ನು ಎಳೆಯುತ್ತಿರುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಯುಎಇ ಮೂಲದ ಕೋಟ್ಯಧಿಪತಿ ಉದ್ಯಮಿ ಖಲಾಫ್ ಅಹ್ಮದ್ ಅಲ್ ಹಬ್ತೂರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಮ್ಮ ಪ್ರದೇಶವನ್ನು ಯುದ್ಧಭೂಮಿಯನ್ನಾಗಿ ಮಾಡಲು ನಿಮಗೆ ಅಧಿಕಾರ ನೀಡಿದವರು ಯಾರು?” ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ. ಅಲ್ ಹಬ್ತೂರ್ ಗ್ರೂಪ್ನ ಸಂಸ್ಥಾಪಕರಾದ ಖಲಾಫ್ ಅಲ್ ಹಬ್ತೂರ್ ಗುರುವಾರ ಅಮೆರಿಕ ಅಧ್ಯಕ್ಷರಿಗೆ ಮುಕ್ತ ಪತ್ರ ಬರೆದು, ಅದನ್ನು ಅರೇಬಿಕ್ ಭಾಷೆಯಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಈ ಯುದ್ಧಕ್ಕೆ ಹೋಗುವ ನಿರ್ಧಾರ ಟ್ರಂಪ್ ಅವರ ಸ್ವಂತದ್ದೇ ಅಥವಾ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಪ್ರಭಾವದಿಂದ ಆಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಕಳೆದ ಶನಿವಾರ ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್ ವಿರುದ್ಧ ದಾಳಿ ನಡೆಸಿ ದೇಶದ ನಾಯಕತ್ವ ಮತ್ತು ಮಿಲಿಟರಿ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡಿದ್ದವು. ಈ ದಾಳಿಯ ನಂತರ ಇರಾನ್ ಯುಎಇ ಸೇರಿದಂತೆ ಗಲ್ಫ್ ಪ್ರದೇಶದ ಕೆಲವು ರಾಷ್ಟ್ರಗಳತ್ತ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ನಡೆಸಿತು. ಈ ಹಿನ್ನೆಲೆದಲ್ಲಿ ಯುಎಇ ಹಾಗೂ ಅದರ ನೆರೆಯ ರಾಷ್ಟ್ರಗಳು ಸಂಘರ್ಷವನ್ನು ತಕ್ಷಣ ಕೊನೆಗೊಳಿಸಿ ಶಾಂತಿ ಮಾತುಕತೆ ಆರಂಭಿಸಲು ಉಭಯ ಪಕ್ಷಗಳಿಗೆ ಕರೆ ನೀಡಿವೆ. “ನೀವು ಗಲ್ಫ್ ಸಹಕಾರ ಮಂಡಳಿ ಮತ್ತು ಅರಬ್ ರಾಷ್ಟ್ರಗಳನ್ನು ಅವರು ಆಯ್ಕೆ ಮಾಡದ ಅಪಾಯದ ಕೇಂದ್ರದಲ್ಲಿ ನಿಲ್ಲಿಸಿದ್ದೀರಿ. ದೇವರಿಗೆ ಧನ್ಯವಾದಗಳು, ನಾವು ಬಲಿಷ್ಠರಾಗಿದ್ದು ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಸಾಮರ್ಥ್ಯ ಹೊಂದಿದ್ದೇವೆ. ನಮ್ಮ ತಾಯ್ನಾಡುಗಳನ್ನು ರಕ್ಷಿಸುವ ಸೈನ್ಯ ಹಾಗೂ ರಕ್ಷಣಾ ಪಡೆಗಳು ನಮ್ಮಲ್ಲಿವೆ. ಆದರೆ ಪ್ರಶ್ನೆ ಇನ್ನೂ ಉಳಿದಿದೆ: ನಮ್ಮ ಪ್ರದೇಶವನ್ನು ಯುದ್ಧಭೂಮಿಯನ್ನಾಗಿ ಮಾಡಲು ನಿಮಗೆ ಯಾರು ಅನುಮತಿ ನೀಡಿದರು?” ಎಂದು ಅಲ್ ಹಬ್ತೂರ್ ಪ್ರಶ್ನಿಸಿದ್ದಾರೆ. ಇರಾನ್ ವಿರುದ್ಧ ಯುದ್ಧ ಮಾಡುವ ಅಮೆರಿಕದ ನಿರ್ಧಾರವು ಈ ಪ್ರದೇಶದ ಜನರ ಜೊತೆಗೆ ಅಮೆರಿಕದ ಜನರಿಗೂ ಆತಂಕ ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ. “ಅಮೆರಿಕದ ಜನರಿಗೆ ಶಾಂತಿ ಮತ್ತು ಸಮೃದ್ಧಿಯ ಭರವಸೆ ನೀಡಲಾಗಿತ್ತು. ಆದರೆ ಈಗ ಅವರು ತಮ್ಮ ಹಣ ಮತ್ತು ತೆರಿಗೆಗಳಿಂದ ನಿಧಿ ಸಂಗ್ರಹಗೊಂಡ ಯುದ್ಧದಲ್ಲಿ ತಾವು ಸಿಲುಕಿಕೊಂಡಿದ್ದಾರೆ,” ಎಂದು ಅವರು ಟೀಕಿಸಿದ್ದಾರೆ. ಇನ್ಸ್ಟಿಟ್ಯೂಟ್ ಫಾರ್ ಪಾಲಿಸಿ ಸ್ಟಡೀಸ್ ವರದಿ ಪ್ರಕಾರ, ಈ ಯುದ್ಧದ ನೇರ ಮಿಲಿಟರಿ ಕಾರ್ಯಾಚರಣೆಗಳಿಗೆ 40ರಿಂದ 65 ಶತಕೋಟಿ ಡಾಲರ್ ವೆಚ್ಚವಾಗಬಹುದು. ಸಂಘರ್ಷ ನಾಲ್ಕು ಅಥವಾ ಐದು ವಾರಗಳವರೆಗೆ ಮುಂದುವರಿದರೆ ಆರ್ಥಿಕ ಪರಿಣಾಮಗಳು ಹಾಗೂ ಪರೋಕ್ಷ ನಷ್ಟಗಳನ್ನು ಸೇರಿಸಿ ಸುಮಾರು 210 ಶತಕೋಟಿ ಡಾಲರ್ ತನಕ ವೆಚ್ಚವಾಗುವ ಸಾಧ್ಯತೆಯಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಯುದ್ಧಗಳಲ್ಲಿ ಭಾಗಿಯಾಗುವುದಿಲ್ಲ ಎಂಬ ತಮ್ಮ ಭರವಸೆಯನ್ನು ಟ್ರಂಪ್ ಮುರಿದಿದ್ದಾರೆ ಎಂದು ಅಲ್ ಹಬ್ತೂರ್ ಆರೋಪಿಸಿದ್ದಾರೆ. “ನಿಮ್ಮ ಎರಡನೇ ಅವಧಿಯಲ್ಲಿ ಸೊಮಾಲಿಯಾ, ಇರಾಕ್, ಯೆಮೆನ್, ನೈಜೀರಿಯಾ, ಸಿರಿಯಾ, ಇರಾನ್ ಮತ್ತು ವೆನೆಝುವೆಲಾ ಸೇರಿ ಏಳು ದೇಶಗಳಲ್ಲಿ ವಿದೇಶಿ ಮಿಲಿಟರಿ ಕಾರ್ಯಾಚರಣೆಗೆ ಆದೇಶ ನೀಡಿದ್ದೀರಿ. ಕೆರಿಬಿಯನ್ ಹಾಗೂ ಪೂರ್ವ ಪೆಸಿಫಿಕ್ ಮಹಾಸಾಗರ ಪ್ರದೇಶಗಳಲ್ಲಿಯೂ ನೌಕಾ ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲೇ 658ಕ್ಕೂ ಹೆಚ್ಚು ವಿದೇಶಿ ವೈಮಾನಿಕ ದಾಳಿಗಳನ್ನು ನಿರ್ದೇಶಿಸಿದ್ದೀರಿ,” ಎಂದು ಅವರು ಹೇಳಿದ್ದಾರೆ. ಈ ಕ್ರಮಗಳ ಪರಿಣಾಮವಾಗಿ ಕೇವಲ 400 ದಿನಗಳಲ್ಲೇ ಅಮೆರಿಕ ಅಧ್ಯಕ್ಷರ ಅನುಮೋದನೆ ಪ್ರಮಾಣವು ಸುಮಾರು ಒಂಭತ್ತು ಶೇಕಡಾ ಇಳಿಕೆಯಾಗಿದೆ ಎಂದು ಅಲ್ ಹಬ್ತೂರ್ ಹೇಳಿದ್ದಾರೆ. ಅಮೆರಿಕದೊಳಗೇ ಹೊಸ ಯುದ್ಧಕ್ಕೆ ಎಳೆಯಲ್ಪಡುವ ಬಗ್ಗೆ ಆತಂಕ ಹೆಚ್ಚುತ್ತಿದೆ. ಇದರಿಂದ ಅಮೆರಿಕನ್ನರ ಜೀವಿತ, ಅವರ ಆರ್ಥಿಕತೆ ಮತ್ತು ಭವಿಷ್ಯ ಅನಗತ್ಯ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಸಂದೇಶದಲ್ಲಿ, ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದ ಗಲ್ಫ್ ಹಾಗೂ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಹಾನಿಗೆ ಯಾರು ಹೊಣೆಗಾರರು ಎಂದು ಅವರು ಪ್ರಶ್ನಿಸಿದ್ದಾರೆ. “ನಮ್ಮ ಯಾವುದೇ ಪಾತ್ರವಿಲ್ಲದ ಈ ಸಂಘರ್ಷದಿಂದ ಉಂಟಾದ ಉದ್ವಿಗ್ನತೆಗೆ ಯಾರು ಬೆಲೆ ಕಟ್ಟುತ್ತಾರೆ? ನಮ್ಮ ಆರ್ಥಿಕತೆಗಳು, ನಮ್ಮ ಭದ್ರತೆ ಮತ್ತು ನಮ್ಮ ಜನರ ಸ್ಥಿರತೆ ಮಹಾಶಕ್ತಿಗಳ ನಡುವೆ ಅಂಕಗಳನ್ನು ಇತ್ಯರ್ಥಪಡಿಸುವ ವೇದಿಕೆಗಳಲ್ಲ,” ಎಂದು ಅವರು ಹೇಳಿದ್ದಾರೆ. “ನಾವು ಸ್ಥಿರತೆ ಮತ್ತು ಶಾಂತಿಯ ಪರವಾಗಿದ್ದೇವೆ. ಈ ಸಂಘರ್ಷದ ಭಾಗವಾಗಲು ನಾವು ಆಯ್ಕೆ ಮಾಡಿಲ್ಲ. ಆದರೆ ನಾವು ಸೃಷ್ಟಿಸದ ಉದ್ವಿಗ್ನತೆಗೆ ಬೆಲೆ ಕಟ್ಟುವ ಪರಿಸ್ಥಿತಿ ಎದುರಾಗಿದೆ. ಇತರರ ಸಂಘರ್ಷದಿಂದ ಪ್ರದೇಶದ ದೇಶಗಳು ಮತ್ತು ಜನರು ಅನುಭವಿಸಿದ ನಷ್ಟಗಳಿಗೆ ಯಾರು ಜವಾಬ್ದಾರರು, ಯಾರು ಪರಿಹಾರ ನೀಡುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಬೇಕು,” ಎಂದು ಅಲ್ ಹಬ್ತೂರ್ ಹೇಳಿದ್ದಾರೆ. “ಈ ಪ್ರದೇಶಕ್ಕೆ ಶಾಂತ ಮನಸ್ಸಿನ ಅಗತ್ಯವಿದೆ; ಯುದ್ಧದ ಜ್ವಾಲೆಗಳನ್ನು ಇನ್ನಷ್ಟು ಹೆಚ್ಚಿಸುವ ಪ್ರತಿಕ್ರಿಯೆಗಳ ಅಗತ್ಯವಿಲ್ಲ,” ಎಂದು ಅವರು ಹೇಳಿದ್ದಾರೆ.
ನಿರ್ಬಂಧಿತ ವಲಯ ಪ್ರವೇಶಿಸಿ ಇರಾನಿನ ಹಡಗಿನ ದೃಶ್ಯ ಸೆರೆಹಿಡಿಯಲು ಯತ್ನ: ರಿಪಬ್ಲಿಕ್ ಟಿವಿಯ ವರದಿಗಾರ ಸೇರಿ ಮೂವರ ಬಂಧನ
ಕೊಚ್ಚಿ, ಮಾ.7: ಕೊಚ್ಚಿಯ ದಕ್ಷಿಣ ನೌಕಾ ನೆಲೆಯಲ್ಲಿ ನಿಲುಗಡೆಗೊಂಡಿರುವ ಇರಾನಿನ ಹಡಗು ಐರಿಸ್ ಲಾವನ್ನ ದೃಶ್ಯಗಳನ್ನು ಸೆರೆಹಿಡಿಯಲು ನಿರ್ಬಂಧಿತ ವಲಯಕ್ಕೆ ಪ್ರವೇಶಿಸಿದ ಆರೋಪದಲ್ಲಿ ಪತ್ರಕರ್ತ ಸೇರಿದಂತೆ ಮೂವರನ್ನು CISF ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಲ್ಲಿ ರಿಪಬ್ಲಿಕ್ ಟಿವಿಯ ವರದಿಗಾರ, ಕ್ಯಾಮೆರಾಮನ್ ಮತ್ತು ಅವರು ಪ್ರಯಾಣಿಸುತ್ತಿದ್ದ ದೋಣಿಯ ಚಾಲಕ ಸೇರಿದ್ದಾರೆ. ಅಮೆರಿಕದಿಂದ ಸಂಭವನೀಯ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಈ ಹಡಗು ಕೊಚ್ಚಿಗೆ ಆಗಮಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಡಗಿನ ದೃಶ್ಯಗಳನ್ನು ಸೆರೆಹಿಡಿಯಲು ಮಾಧ್ಯಮ ತಂಡವು ಮೆರೈನ್ ಡ್ರೈವ್ನಿಂದ ದೋಣಿಯನ್ನು ಬಾಡಿಗೆಗೆ ಪಡೆದು ಸಮುದ್ರ ಮಾರ್ಗವಾಗಿ ತೆರಳಿತ್ತು. ಈ ವೇಳೆ ಅವರು ನಿರ್ಬಂಧಿತ ವಲಯಕ್ಕೆ ಪ್ರವೇಶಿಸಿದುದನ್ನು ಗಮನಿಸಿದ CISF ಅಧಿಕಾರಿಗಳು ಅವರನ್ನು ತಡೆದು ವಶಕ್ಕೆ ಪಡೆದರು. ಬಳಿಕ ಮೂವರನ್ನೂ ಪೊಲೀಸರಿಗೆ ಒಪ್ಪಿಸಲಾಯಿತು. ಪತ್ರಕರ್ತರ ಕ್ಯಾಮೆರಾಗಳನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇಸ್ಲಾಮಿಕ್ ಗಣರಾಜ್ಯದ ಕೋರಿಕೆಯ ಮೇರೆಗೆ ಬುಧವಾರ ಇರಾನಿನ ಯುದ್ಧನೌಕೆಗೆ ಕೊಚ್ಚಿಯಲ್ಲಿ ಆಶ್ರಯ ನೀಡಲಾಗಿತ್ತು. ಭಾರತೀಯ ನೌಕಾಪಡೆಯ ಭದ್ರತೆಯಲ್ಲಿ ಹಡಗಿನಲ್ಲಿದ್ದ 183 ನಾವಿಕರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಇದಕ್ಕೂ ಮೊದಲು ಶ್ರೀಲಂಕಾ ಸಮೀಪದಲ್ಲಿ ಇರಾನಿಗೆ ಸೇರಿದ ಐರಿಸ್ ದೇನಾ ಹಡಗನ್ನು ಅಮೆರಿಕ ನೌಕಾಪಡೆಯು ಟಾರ್ಪಿಡೊ ಮೂಲಕ ದಾಳಿ ಮಾಡಿತ್ತು. ಹಿಂದೂ ಮಹಾಸಾಗರ ಪ್ರದೇಶದಲ್ಲಿದ್ದ ಐರಿಸ್ ಲಾವನ್ ಮೇಲೂ ದಾಳಿ ನಡೆಯುವ ಸಾಧ್ಯತೆ ಇರುವ ಭೀತಿಯ ಹಿನ್ನೆಲೆಯಲ್ಲಿ ಇರಾನ್ ಫೆಬ್ರವರಿ 28ರಂದು ಭಾರತದಿಂದ ಆಶ್ರಯ ಕೋರಿತ್ತು ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ಹಡಗಿಗೆ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ಎಂಎಸ್ಸಿ ಪರೀಕ್ಷೆಯಲ್ಲಿ ಅಭಿಜ್ಞಾಗೆ ಪ್ರಥಮ ರ್ಯಾಂಕ್
ಉಡುಪಿ, ಮಾ.7: ಉಡುಪಿಯ ಎಂ.ಜಿ.ಎಂ ಕಾಲೇಜಿನ 2023-25ನೇ ಸಾಲಿನ ಎಂ.ಎಸ್ಸಿ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಅಭಿಜ್ಞಾ ಎಸ್.ಎಸ್. 9.26 ಸಿಜಿಪಿಎ(ಶೇ.90.34) ಅಂಕಗಳೊಂದಿಗೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಇವರು ಪರ್ಕಳ - ಹೆರ್ಗದ ಲೋಲಾಕ್ಷಿ ಎಸ್. ಮತ್ತು ಸೀತಾರಾಮ ಶೆಟ್ಟಿರ್ಗಾ ದಂಪತಿಯ ಸುಪುತ್ರಿಯಾಗಿದ್ದು ಪ್ರಸ್ತುತ ವ್ಯಾಸಂಗ ಮಾಡಿದ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಜೀವನವನ್ನು ನಡೆಸುತ್ತಿದ್ದಾರೆ.
ವಿಜಯನಗರ | ಜಿಲ್ಲಾ ಕೇಂದ್ರದಲ್ಲಿ ದೇವರದಾಸಿಮಯ್ಯ, ಅಗ್ನಿಬನ್ನಿರಾಯ, ಮಹಾವೀರ ಜಯಂತಿ ಆಚರಣೆ
ವಿಜಯನಗರ (ಹೊಸಪೇಟೆ): ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿ, ಮಾರ್ಚ್ 28ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾರ್ಚ್ 31ರಂದು ಶ್ರೀ ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಜಯಂತಿಗಳ ಆಚರಣೆ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿಯನ್ನು ನಗರದಲ್ಲಿ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾರ್ಯಕ್ರಮದ ಸ್ಥಳ ಹಾಗೂ ದಾಸಿಮಯ್ಯನವರ ಕುರಿತು ಸಂದೇಶ ನೀಡಲು ಉಪನ್ಯಾಸಕರ ಆಯ್ಕೆ ಕುರಿತು ಚರ್ಚಿಸಿ ನಂತರ ತಿಳಿಸಲಾಗುವುದು ಎಂದು ಸಮಾಜದ ಮುಖಂಡರು ತಿಳಿಸಿದರು. ಮಾರ್ಚ್ 28ರಂದು ಅಗ್ನಿಬನ್ನಿರಾಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೌಹಾರ್ದಯುತವಾಗಿ ಆಚರಿಸಲು ನಿರ್ಧರಿಸಲಾಯಿತು. ಇದೇ ವೇಳೆ ಮಾರ್ಚ್ 31ರಂದು ಶ್ರೀ ಮಹಾವೀರ ಜಯಂತಿಯನ್ನು ನಗರದ ಬಳ್ಳಾರಿ ರಸ್ತೆಯ ಜೆ.ಪಿ.ನಗರದಲ್ಲಿರುವ ಶ್ರೀ ಪಾರ್ಶ್ವನಾಥ ದಿಗಂಬರ ಜೈನ ಮಂದಿರದಲ್ಲಿ ಆಚರಿಸಲಾಗುವುದು. ಜಯಂತಿ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾ ತಂಡಗಳೊಂದಿಗೆ ವಿಜೃಂಭಣೆಯ ಮೆರವಣಿಗೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸರ್ಕಾರದ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಬೇಕು. ಮಹನೀಯರ ತತ್ವ ಹಾಗೂ ಆದರ್ಶಗಳನ್ನು ಇಂದಿನ ಪೀಳಿಗೆಗೆ ಮುಟ್ಟಿಸುವ ನಿಟ್ಟಿನಲ್ಲಿ ಗೀತಗಾಯನ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ, ದೇವಾಂಗ ಸಮುದಾಯದ ಮುಖಂಡರು, ಜೈನ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ʼಬೆಲೆ ಏರಿಕೆಯಿಂದ ನೆಲಕ್ಕೆ ಬಿದ್ದವನಿಗೆ ಒದ್ದಂತೆʼ: ಸಿಲಿಂಡರ್ ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಟೀಕೆ
ಬೆಂಗಳೂರು: ‘ಭಾರತದ ಬಡ-ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿರುವ ಸಮಯದಲ್ಲಿಯೇ ಪ್ರಧಾನಿ ಮೋದಿ ಸರಕಾರ, ಎಲ್ಪಿಜಿ ಸಿಲಿಂಡರ್ ದರ 60ರೂ.ಗಳನ್ನು ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ಗೃಹ ಬಳಕೆಯ ಸಿಲಿಂಡರ್ಗಳ ಬೆಲೆಯನ್ನು ಸುಮಾರು 60 ರೂ.ಗಳರಷ್ಟು ಹೆಚ್ಚಿಸಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನನಿರ್ವಹಣೆಯ ವೆಚ್ಚ ದುಬಾರಿಯಾಗಲಿದೆ. ಈ ಏರಿಕೆ ಅನಿವಾರ್ಯ ಕ್ರಮವೇನಲ್ಲ, ಇದು ಶರಣಾಗತಿಯನ್ನೇ ದೇಶದ ಕಾರ್ಯತಂತ್ರವೆಂದು ತಪ್ಪಾಗಿ ತಿಳಿದುಕೊಂಡ ವಿದೇಶಾಂಗ ನೀತಿಯ ಫಲವಾಗಿದೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಅವರು ಅಮೆರಿಕದ ಮಾತುಗಳಿಗೆ ಮೂಕರಂತೆ ತಲೆಯಾಡಿಸುವ ಮೂಲಕ ಭಾರತದ ವ್ಯೂಹಾತ್ಮಕ ಸ್ವಾತಂತ್ರ್ಯವನ್ನು ಬೇರೊಂದು ರಾಷ್ಟ್ರದ ಪಾದದಡಿ ಇಟ್ಟಿದ್ದಾರೆ ಮತ್ತು ರಷ್ಯಾ ಹಾಗೂ ಇರಾನ್ನಂತಹ ದೇಶಗಳೊಂದಿಗಿನ ಭಾರತದ ದೀರ್ಘಕಾಲೀನ ಇಂಧನ ಸಹಭಾಗಿತ್ವವನ್ನು ಹಾಳುಗೆಡವಿದ್ದಾರೆ. ಇವು ಹಲವು ದಶಕಗಳಿಂದ ಭಾರತೀಯರಿಗೆ ಇಂಧನ ಸ್ಥಿರತೆಯನ್ನು ಖಾತ್ರಿಪಡಿಸಿದ ರಾಷ್ಟ್ರಗಳು ಎಂಬುದನ್ನು ಪ್ರಧಾನಿ ಮರೆತಂತಿದೆ ಎಂದು ಅವರು ಟೀಕಿಸಿದ್ದಾರೆ. ‘ನೆಹರೂರವರ ಪ್ರಕಾರ ‘ವಿದೇಶಾಂಗ ನೀತಿಯು ಆರ್ಥಿಕ ನೀತಿಯ ಪರಿಣಾಮವಾಗಿದೆ’ ನೆಹರೂ ಅವರು ಏಳೆಂಟು ದಶಕಗಳ ಹಿಂದೆಯೇ ನೀಡಿದ್ದ ಎಚ್ಚರಿಕೆ ಇಂದು ಅಕ್ಷರಶಃ ಸತ್ಯವಾಗಿದೆ. ರಾಜತಾಂತ್ರಿಕತೆ ಎನ್ನುವುದು ಕಾರ್ಯತಂತ್ರವಾಗದೆ, ಪ್ರದರ್ಶನದ ವಸ್ತುವಾಗಿ ಮಾರ್ಪಟ್ಟಾಗ, ಅದಕ್ಕೆ ಅನಿವಾರ್ಯವಾಗಿ ಬಡವರು ಮತ್ತು ಮಧ್ಯಮ ವರ್ಗದ ಜನರು ಬಲಿಯಾಗುತ್ತಾರೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ತಮ್ಮ ಪುಸ್ತಕದಲ್ಲಿ ಮಾಜಿ ಸೇನಾಧಿಕಾರಿ ಜನರಲ್ ಎಂ.ಎಂ. ನರವಣೆ ಅವರು ಭಾರತದ ವಿದೇಶಾಂಗ ನೀತಿ ನಿರ್ಧಾರಗಳಲ್ಲಿ ಸಾಂಸ್ಥಿಕ ಸಮಾಲೋಚನೆ ಮತ್ತು ವ್ಯೂಹಾತ್ಮಕ ತಿಳುವಳಿಕೆಯ ಕೊರತೆಯ ಬಗ್ಗೆ ಆತಂಕಗಳನ್ನು ಎತ್ತಿದ್ದರು. ಇದು ಪ್ರಧಾನಿಗೆ ರಾಜತಾಂತ್ರಿಕ ನಿಲುವು ಮತ್ತು ಅದರ ಆರ್ಥಿಕ ಪರಿಣಾಮಗಳ ಮೂಲಭೂತ ತಿಳುವಳಿಕೆಯ ಕೊರತೆ ಇದೆ ಎಂಬ ಅನುಮಾನವನ್ನು ಖಚಿತಪಡಿಸುವಂತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಭಾರತದ ಇಂದಿನ ವಿದೇಶಾಂಗ ನೀತಿಯ ವೈಫಲ್ಯವು ಪ್ರಧಾನಿ ಮೋದಿ ಅವರಿಗೆ ಎಫ್ಸ್ಟೀನ್ ಫೈಲ್ಸ್ ನ ಬಗೆಗಿನ ಭಯ ಮತ್ತು ರಾಜತಾಂತ್ರಿಕ ತೀರ್ಮಾನಗಳಲ್ಲಿನ ಅಜ್ಞಾನವನ್ನು ತೋರುತ್ತದೆ. ಪ್ರಧಾನಿಗಳು ತಮ್ಮ ರಾಜತಾಂತ್ರಿಕ ವೈಫಲ್ಯಕ್ಕೆ ಕೋಟ್ಯಂತರ ಭಾರತೀಯರು ಯಾಕೆ ಬೆಲೆ ತೆರಬೇಕು ಎನ್ನುವುದನ್ನು ತಿಳಿಸಲಿ. ಜಾಗತಿಕ ಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿಯವರು ಬಹಿರಂಗವಾಗಿ ದೇಶದ ಜನರ ಕ್ಷಮೆಯಾಚಿಸಲಿ ಮತ್ತು ರಾಜೀನಾಮೆ ನೀಡಲಿ ಎಂದು ಅವರು ಆಗ್ರಹಿಸಿದ್ದಾರೆ. ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿರುವ ಸಮಯದಲ್ಲಿಯೇ ಪ್ರಧಾನಿ @narendramodi ಅವರ ಸರ್ಕಾರ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ. ಗೃಹ ಬಳಕೆಯ ಸಿಲಿಂಡರ್ಗಳ ಬೆಲೆಯನ್ನು ಸುಮಾರು ₹60ರಷ್ಟು ಹೆಚ್ಚಿಸಿರುವುದರಿಂದ ಬಡ ಮತ್ತು ಮಧ್ಯಮ… pic.twitter.com/Bbm5w9JugR — Siddaramaiah (@siddaramaiah) March 7, 2026
ಭಾರತದ ಪ್ರಮುಖ ಕೈಗಾರಿಕೆಗಳ ಮೇಲೆ ಪಶ್ಚಿಮ ಏಷ್ಯಾ ಸಂಘರ್ಷ ಯಾವ ರೀತಿ ಪರಿಣಾಮ ಬೀರುತ್ತಿದೆ?
ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಜಾಗತಿಕ ತೈಲ ಮತ್ತು ಅನಿಲ ಮಾರುಕಟ್ಟೆಗಳ ಮೇಲೆ ಮಾತ್ರವಲ್ಲ, ಭಾರತದ ಹಲವಾರು ಪ್ರಮುಖ ಕೈಗಾರಿಕೆಗಳ ಮೇಲೂ ಪ್ರಭಾವ ಬೀರುತ್ತಿದೆ. ಉಕ್ಕು, ರಸಗೊಬ್ಬರ, ಸಿಮೆಂಟ್ ಮತ್ತು ವಿದ್ಯುತ್ ಪ್ರಸರಣದಂತಹ ಕ್ಷೇತ್ರಗಳು ಪಶ್ಚಿಮ ಏಷ್ಯಾದಿಂದ ಅಗತ್ಯ ಕಚ್ಚಾ ವಸ್ತುಗಳ ಆಮದಿನ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಅವಲಂಬಿತವಾಗಿವೆ. ಭಾರತವು ಸುಣ್ಣದ ಕಲ್ಲು, ಗಂಧಕ, ಜಿಪ್ಸಮ್, ಕಬ್ಬಿಣ (DRI) ಮತ್ತು ತಾಮ್ರದ ತಂತಿಗಳಂತಹ ಪ್ರಮುಖ ಕೈಗಾರಿಕಾ ವಸ್ತುಗಳ ಪೂರೈಕೆಯ ಅರ್ಧಕ್ಕಿಂತ ಹೆಚ್ಚುವನ್ನು ಈ ಪ್ರದೇಶದಿಂದಲೇ ಪಡೆಯುತ್ತದೆ. ಪಶ್ಚಿಮ ಏಷ್ಯಾ ಪ್ರದೇಶವು ವಿಶಾಲವಾಗಿ ಆರು ಗಲ್ಫ್ ಸಹಕಾರ ಮಂಡಳಿ (GCC) ದೇಶಗಳಾದ ಬಹರೇನ್, ಕುವೈತ್, ಒಮಾನ್, ಖತರ್, ಸೌದಿ ಅರೇಬಿಯಾ ಮತ್ತು ಯುಎಇ ಜೊತೆಗೆ ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಲೆಬನಾನ್, ಸಿರಿಯಾ ಮತ್ತು ಯೆಮೆನ್ನಂತಹ ಇತರ ಪ್ರಾದೇಶಿಕ ಆರ್ಥಿಕತೆಗಳನ್ನೂ ಒಳಗೊಂಡಿದೆ. ಈ ಪ್ರದೇಶದಲ್ಲಿ ಸಂಘರ್ಷ ಮುಂದುವರೆದಿದ್ದು, ಕೊಲ್ಲಿಯಾದ್ಯಂತ ಹಲವಾರು ಇಂಧನ ಮತ್ತು ಲಾಜಿಸ್ಟಿಕ್ಸ್ ಸೌಲಭ್ಯಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ನಡೆಯುತ್ತಿವೆ. ಇದರಿಂದ ಪೂರೈಕೆ ಅಡಚಣೆಗಳ ಭಯ ತೀವ್ರಗೊಂಡಿದೆ. ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮತ್ತು ವ್ಯಾಪಾರ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಸಾಧ್ಯತೆ ಜಾಗತಿಕ ಇಂಧನ ಪೂರೈಕೆ ಆಘಾತದ ಕಳವಳವನ್ನು ಹೆಚ್ಚಿಸಿದೆ. ಭಾರತಕ್ಕೆ ಈ ಪ್ರದೇಶವು ಇಂಧನ ಮತ್ತು ಕೈಗಾರಿಕಾ ವಸ್ತುಗಳ ಪ್ರಮುಖ ಪೂರೈಕೆದಾರವಾಗಿದೆ. ಹೊಸದಿಲ್ಲಿ ಮೂಲದ ವ್ಯಾಪಾರ ಚಿಂತಕರ ಚಾವಡಿ GTRI ವರದಿಯ ಪ್ರಕಾರ, ಭಾರತವು 2025ರಲ್ಲಿ ಈ ಪ್ರದೇಶದಿಂದ 98.7 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿದೆ. ಆದ್ದರಿಂದ ಈ ಪ್ರದೇಶದಲ್ಲಿನ ಯಾವುದೇ ಅಶಾಂತಿ ಅಥವಾ ಹಾರ್ಮುಜ್ ಜಲಸಂಧಿಯಂತಹ ಹಡಗು ಮಾರ್ಗಗಳಿಗೆ ಅಡ್ಡಿಯು ತೈಲ ಮತ್ತು ಅನಿಲವನ್ನು ಮೀರಿದಂತೆ ಅನೇಕ ಭಾರತೀಯ ಕೈಗಾರಿಕೆಗಳ ಮೇಲೂ ತ್ವರಿತವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ. ತೈಲ, ಅನಿಲವನ್ನು ಮೀರಿದ ವಲಯಗಳು ಜಗತ್ತಿಗೆ ತೈಲ ಮತ್ತು ಅನಿಲದ ಪ್ರಮುಖ ಪೂರೈಕೆದಾರವಾಗಿರುವ ಪಶ್ಚಿಮ ಏಷ್ಯಾದಲ್ಲಿನ ಯಾವುದೇ ಅಶಾಂತಿ ಜಾಗತಿಕ ಇಂಧನ ಮಾರುಕಟ್ಟೆಗಳನ್ನು ತಕ್ಷಣವೇ ದುರ್ಬಲಗೊಳಿಸುತ್ತದೆ. ಭಾರತವೂ ಇದಕ್ಕೆ ಹೊರತಾಗಿಲ್ಲ. ಯುದ್ಧದ ಪರಿಣಾಮಗಳು ಈಗಾಗಲೇ ಕಾಣಿಸಿಕೊಳ್ಳಲು ಪ್ರಾರಂಭಿಸಿವೆ. ಭಾರತದಲ್ಲಿ ಸುಮಾರು ಒಂದು ತಿಂಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ ಮಾತ್ರ ಸಂಗ್ರಹವಾಗಿರುವುದರಿಂದ ಭಾರತೀಯ ಸಂಸ್ಕರಣಾಗಾರಗಳು ರಷ್ಯಾದಿಂದ ಹೆಚ್ಚಿನ ರಿಯಾಯಿತಿ ದರದಲ್ಲಿ ತೈಲವನ್ನು ಖರೀದಿಸಲು ಪ್ರಾರಂಭಿಸಿವೆ. ಅದೇ ಸಮಯದಲ್ಲಿ ಖತರ್ನಿಂದ ದ್ರವೀಕೃತ ನೈಸರ್ಗಿಕ ಅನಿಲ (LNG) ಸಾಗಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳಿಗೆ ಸರಬರಾಜು ಕಡಿತಗೊಳಿಸುವ ಬಗ್ಗೆ ಅನಿಲ ಕಂಪನಿಗಳು ಯೋಚಿಸುತ್ತಿವೆ. ಆದಾಗ್ಯೂ, ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಗೆ ಅಡಚಣೆಗಳು ಒಂದು ವಾರಕ್ಕಿಂತ ಹೆಚ್ಚು ಕಾಲ ಮುಂದುವರಿದರೆ ಪರಿಣಾಮವು ಇಂಧನ ವಲಯಕ್ಕೆ ಮಾತ್ರ ಸೀಮಿತವಾಗುವುದಿಲ್ಲ. ಜಿಟಿಆರ್ಐ ವರದಿಯ ಪ್ರಕಾರ ರಸಗೊಬ್ಬರ ಪೂರೈಕೆ, ಉತ್ಪಾದನಾ ಒಳಹರಿವು, ನಿರ್ಮಾಣ ಸಾಮಗ್ರಿಗಳು ಮತ್ತು ವಜ್ರಗಳಂತಹ ರಫ್ತು ಕೈಗಾರಿಕೆಗಳಲ್ಲಿಯೂ ಇದರ ಪರಿಣಾಮ ಕಾಣಿಸಬಹುದು. ಸಂಘರ್ಷ ಮುಂದುವರಿದರೆ ಈ ಪ್ರದೇಶದಿಂದ ಖನಿಜ ಆಮದನ್ನು ಅವಲಂಬಿಸಿರುವ ನಿರ್ಮಾಣ ವಲಯದ ಮೇಲೂ ಪರಿಣಾಮ ಬೀರುತ್ತದೆ. GTRI ವರದಿಯ ಪ್ರಕಾರ ಭಾರತವು ಪಶ್ಚಿಮ ಏಷ್ಯಾದಿಂದ 483 ಮಿಲಿಯನ್ ಡಾಲರ್ ಮೌಲ್ಯದ ಸುಣ್ಣದ ಕಲ್ಲನ್ನು ಆಮದು ಮಾಡಿಕೊಂಡಿದೆ, ಇದು ಅದರ ಒಟ್ಟು ಆಮದಿನ 68.5% ರಷ್ಟಾಗಿದೆ. ಅದೇ ವೇಳೆ 129 ಮಿಲಿಯನ್ ಡಾಲರ್ ಮೌಲ್ಯದ ಜಿಪ್ಸಮ್ ಅನ್ನು ಆಮದು ಮಾಡಿಕೊಂಡಿದ್ದು, ಇದು ಆಮದುಗಳಲ್ಲಿ 62.1% ರಷ್ಟಾಗಿದೆ. ನಿರ್ಮಾಣ ಪರಿಸರ ವ್ಯವಸ್ಥೆಗೆ ಈ ಎರಡೂ ಖನಿಜಗಳು ನಿರ್ಣಾಯಕವಾಗಿವೆ. ಸಿಮೆಂಟ್ ಉತ್ಪಾದನೆಗೆ ಸುಣ್ಣದ ಕಲ್ಲು ಪ್ರಮುಖ ವಸ್ತುವಾಗಿದ್ದು, ಜಿಪ್ಸಮ್ ಅನ್ನು ಸಿಮೆಂಟ್ ಹಾಗೂ ಇತರ ನಿರ್ಮಾಣ ಸಾಮಗ್ರಿಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಪೂರೈಕೆಯಲ್ಲಿ ಯಾವುದೇ ಅಡಚಣೆ ಉಂಟಾದರೆ ಸಿಮೆಂಟ್ ಬೆಲೆಗಳು ಏರಬಹುದು ಮತ್ತು ಮೂಲಸೌಕರ್ಯ ಯೋಜನೆಗಳು ವಿಳಂಬಗೊಳ್ಳಬಹುದು. ಭಾರತವು ಪಶ್ಚಿಮ ಏಷ್ಯಾದಿಂದ 420 ಮಿಲಿಯನ್ ಡಾಲರ್ ಮೌಲ್ಯದ ಸಲ್ಫರ್ ಅನ್ನು ಆಮದು ಮಾಡಿಕೊಂಡಿದೆ, ಇದು ಅದರ ಆಮದುಗಳಲ್ಲಿ 65.8% ರಷ್ಟಾಗಿದೆ. ರಸಗೊಬ್ಬರಗಳು ಹಾಗೂ ಹಲವು ರಾಸಾಯನಿಕ ಕೈಗಾರಿಕೆಗಳಿಗೆ ಅಗತ್ಯವಾದ ಗಂಧಕವನ್ನು ಸಲ್ಫ್ಯೂರಿಕ್ ಆಮ್ಲ ಉತ್ಪಾದನೆಗೆ ಬಳಸಲಾಗುತ್ತದೆ. ಅದೇ ರೀತಿ ಭಾರತವು ಈ ಪ್ರದೇಶದಿಂದ 190 ಮಿಲಿಯನ್ ಡಾಲರ್ ಮೌಲ್ಯದ ಡೈರೆಕ್ಟ್ ರೆಡ್ಯೂಸ್ಡ್ ಕಬ್ಬಿಣ (DRI) ಅನ್ನು ಆಮದು ಮಾಡಿಕೊಂಡಿದ್ದು, ಇದು ಅದರ ಆಮದುಗಳಲ್ಲಿ 59.1% ಅನ್ನು ಪ್ರತಿನಿಧಿಸುತ್ತದೆ. DRI ಉಕ್ಕು ತಯಾರಿಕೆಯಲ್ಲಿ ಬಳಸುವ ಪ್ರಮುಖ ವಸ್ತುವಾಗಿದೆ. ಭಾರತವು ಪಶ್ಚಿಮ ಏಷ್ಯಾದಿಂದ 869 ಮಿಲಿಯನ್ ಡಾಲರ್ ಮೌಲ್ಯದ ತಾಮ್ರದ ತಂತಿಯನ್ನೂ ಆಮದು ಮಾಡಿಕೊಂಡಿದೆ, ಇದು ಅದರ ಒಟ್ಟು ಸರಕುಗಳ ಆಮದಿನ 50.7% ರಷ್ಟಾಗಿದೆ. ತಾಮ್ರದ ತಂತಿ ವಿದ್ಯುತ್ ಪ್ರಸರಣ ಜಾಲಗಳು, ವಿದ್ಯುತ್ ಉಪಕರಣಗಳು ಹಾಗೂ ನವೀಕರಿಸಬಹುದಾದ ಇಂಧನ ಮೂಲಸೌಕರ್ಯಗಳಲ್ಲಿ ಪ್ರಮುಖ ಅಂಶವಾಗಿದೆ. ಆದ್ದರಿಂದ ಈ ವಲಯವು ಈ ಪ್ರದೇಶದಿಂದ ಪೂರೈಕೆಯಲ್ಲಿ ಉಂಟಾಗುವ ಯಾವುದೇ ಅಡಚಣೆಗೆ ಗುರಿಯಾಗುವ ಸಾಧ್ಯತೆ ಇದೆ. ಸಂಘರ್ಷವು ಭಾರತದ ವಜ್ರ ಸಂಸ್ಕರಣಾ ಉದ್ಯಮದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ದೇಶವು ತನ್ನ ಕಚ್ಚಾ ವಜ್ರಗಳಲ್ಲಿ ಶೇಕಡಾ 40 ಕ್ಕಿಂತ ಹೆಚ್ಚು ಪಶ್ಚಿಮ ಏಷ್ಯಾದಿಂದ ಆಮದು ಮಾಡಿಕೊಳ್ಳುತ್ತದೆ. ನಂತರ ಅವುಗಳನ್ನು ಭಾರತದ ವಜ್ರ ಕತ್ತರಿಸುವ ಮತ್ತು ಹೊಳಪು ನೀಡುವ ಕೇಂದ್ರಗಳಲ್ಲಿ ಬಳಸಲಾಗುತ್ತದೆ. ವಿಶೇಷವಾಗಿ ಗುಜರಾತ್ನ ಸೂರತ್ನಲ್ಲಿ ಸಂಸ್ಕರಿಸಿ ಜಾಗತಿಕ ಮಾರುಕಟ್ಟೆಗಳಿಗೆ ಪಾಲಿಶ್ ಮಾಡಿದ ವಜ್ರಗಳಾಗಿ ರಫ್ತು ಮಾಡಲಾಗುತ್ತದೆ. ಉಕ್ಕಿನ ವಲಯದ ಮೇಲೆ ಒತ್ತಡ ಕೆಲವು ಕಚ್ಚಾ ವಸ್ತುಗಳಿಗೆ ಪರ್ಯಾಯ ಮೂಲಗಳು ಲಭ್ಯವಿದ್ದರೂ, ಹೆಚ್ಚುತ್ತಿರುವ ಇಂಧನ ವೆಚ್ಚಗಳು ದೊಡ್ಡ ಕಳವಳವನ್ನು ಉಂಟುಮಾಡುತ್ತವೆ ಎಂದು ಕೈಗಾರಿಕಾ ತಜ್ಞರು ಹೇಳುತ್ತಾರೆ. ಸುಣ್ಣದ ಕಲ್ಲು ಮತ್ತು ಡಿಆರ್ಐನಂತಹ ವಸ್ತುಗಳಿಗೆ ಪರ್ಯಾಯ ಮೂಲಗಳು ಲಭ್ಯವಿದ್ದರೂ, ನಿಜವಾದ ಸವಾಲು ತೈಲ ಮತ್ತು ಅನಿಲ ಬೆಲೆಗಳ ಏರಿಳಿತವಾಗಿದೆ. “ಸುಣ್ಣದ ಕಲ್ಲನ್ನು ಥೈಲ್ಯಾಂಡ್ ಮತ್ತು ವಿಯೆಟ್ನಾಂನಂತಹ ದೇಶಗಳಿಂದ ಪಡೆಯಬಹುದು. ಅಗತ್ಯವಿದ್ದರೆ ಡಿಆರ್ಐ ಲಿಬಿಯಾ ಅಥವಾ ಮಲೇಷ್ಯಾದಂತಹ ಸ್ಥಳಗಳಿಂದಲೂ ಪಡೆಯಬಹುದು. ಆದರೆ ತೈಲ ಮತ್ತು ಅನಿಲ ಬೆಲೆಗಳ ಚಲನೆಯೇ ನಿಜವಾದ ಸವಾಲು” ಎಂದು ತಜ್ಞರೊಬ್ಬರು ಹೇಳಿದ್ದಾರೆ. ಭಾರತದಲ್ಲಿನ ಉಕ್ಕಿನ ಉದ್ಯಮವು ತನ್ನ ಡಿಕಾರ್ಬೊನೈಸೇಶನ್ ಪ್ರಯತ್ನಗಳ ಭಾಗವಾಗಿ ಅನಿಲವನ್ನು ಅವಲಂಬಿಸಿದೆ. ಇದರಿಂದ ಅದು ಜಾಗತಿಕ ಅನಿಲ ಮಾರುಕಟ್ಟೆಯ ಏರಿಳಿತಗಳಿಗೆ ಗುರಿಯಾಗುತ್ತದೆ. ಉಕ್ಕಿನ ಉದ್ಯಮವು ಅಗತ್ಯ ವಸ್ತುಗಳು ಮತ್ತು ಇಂಧನವನ್ನು ಪಡೆಯಲು ಈಗಾಗಲೇ ಸವಾಲು ಎದುರಿಸುತ್ತಿದೆ. ಹೆಚ್ಚಿನ ಉಕ್ಕು ಸ್ಥಾವರಗಳು ಕಾರ್ಯನಿರ್ವಹಿಸಲು LPG ಮತ್ತು LNG ನಂತಹ ಇಂಧನಗಳನ್ನು ಅವಲಂಬಿಸಿವೆ. ಆದರೆ ಸ್ಥಿರವಾದ ಪೂರೈಕೆಯನ್ನು ಪಡೆಯುವುದು ನಿಜವಾದ ಸಮಸ್ಯೆಯಾಗಿದೆ ಎಂದು ಎಂಜಿನಿಯರಿಂಗ್ ರಫ್ತು ಉತ್ತೇಜನ ಮಂಡಳಿಯ (EEPC) ಅಧ್ಯಕ್ಷ ಪಂಕಜ್ ಚಡ್ಡಾ ತಿಳಿಸಿದ್ದಾರೆ. ಆದಾಗ್ಯೂ, ರಸಗೊಬ್ಬರ ವಲಯವು ತಕ್ಷಣವೇ ಪರಿಣಾಮ ಅನುಭವಿಸುವುದಿಲ್ಲ. ಆದರೆ ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಅಡಚಣೆಗಳು ಮುಂದುವರಿದರೆ ಪರಿಣಾಮ ಬೀರುವ ಸಾಧ್ಯತೆ ಇದೆ. ICRA ಲಿಮಿಟೆಡ್ನ ಕಾರ್ಪೊರೇಟ್ ರೇಟಿಂಗ್ಸ್ ವಿಭಾಗದ ಹಿರಿಯ ಉಪಾಧ್ಯಕ್ಷ ಪ್ರಶಾಂತ್ ವಶಿಷ್ಠ ಅವರ ಪ್ರಕಾರ, ಎಲ್ಎನ್ಜಿ ಮತ್ತು ಸಲ್ಫರ್ನಂತಹ ರಸಗೊಬ್ಬರ ಉತ್ಪಾದನೆಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಉಂಟಾಗುವ ಅಡಚಣೆಗಳು ಭಾರತದಲ್ಲಿ ರಸಗೊಬ್ಬರ ಬಳಕೆಯ ಮೇಲೆ ತಕ್ಷಣದ ಪರಿಣಾಮ ಬೀರುವುದಿಲ್ಲ. ಆದರೆ ಎಲ್ಎನ್ಜಿ ಪೂರೈಕೆಯಲ್ಲಿ ಅಡಚಣೆಗಳು ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಮುಂದುವರಿದರೆ ಮುಂಬರುವ ಋತುವಿನಲ್ಲಿ ದೇಶೀಯ ಯೂರಿಯಾ ಉತ್ಪಾದನೆ ಮತ್ತು ಲಭ್ಯತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆ ರಸಗೊಬ್ಬರ ಉದ್ಯಮವು ಸಲ್ಫರ್ಗಾಗಿ ಆಗ್ನೇಯ ಏಷ್ಯಾದಂತಹ ಇತರ ಪೂರೈಕೆದಾರರನ್ನು ಹುಡುಕುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅನಿಲ ಮತ್ತು ಅಡುಗೆ ಇಂಧನ ಭಾರತದ ದ್ರವೀಕೃತ ನೈಸರ್ಗಿಕ ಅನಿಲ (LNG) ಆಮದುಗಳಲ್ಲಿ ಪಶ್ಚಿಮ ಏಷ್ಯಾ 68% ಕ್ಕಿಂತ ಹೆಚ್ಚು ಪಾಲನ್ನು ಹೊಂದಿದೆ. ಇದನ್ನು ರಸಗೊಬ್ಬರ ಸ್ಥಾವರಗಳು, ಅನಿಲ ಆಧಾರಿತ ವಿದ್ಯುತ್ ಕೇಂದ್ರಗಳು ಹಾಗೂ CNG ಮತ್ತು ಪೈಪ್ಡ್ ಅಡುಗೆ ಅನಿಲವನ್ನು ಪೂರೈಸುವ ನಗರ ಅನಿಲ ವಿತರಣಾ ಜಾಲಗಳಲ್ಲಿ ಬಳಸಲಾಗುತ್ತದೆ. ಅಡಚಣೆ ಈಗಾಗಲೇ ಪರಿಣಾಮ ತೋರಿಸಲು ಪ್ರಾರಂಭಿಸಿದೆ. ಹಡಗು ಸಂಚಾರದ ಮೇಲಿನ ನಿರ್ಬಂಧಗಳ ಕಾರಣದಿಂದ ಖತರ್ನ ಪೆಟ್ರೋನೆಟ್ LNG ಸಂಸ್ಥೆ 2026 ಮಾರ್ಚ್ 4ರಿಂದ GAIL ಗೆ ಎಲ್ಎನ್ಜಿ ಸರಬರಾಜನ್ನು ನಿಲ್ಲಿಸಿದೆ. ಅಡುಗೆ ಇಂಧನದ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ. ಭಾರತದ LPG ಆಮದುಗಳಲ್ಲಿ ಸುಮಾರು 47% ಪಶ್ಚಿಮ ಏಷ್ಯಾದಿಂದ ಬರುತ್ತವೆ. ದೇಶೀಯ ಸಂಗ್ರಹವು ಕೇವಲ ಎರಡು ವಾರಗಳ ಬಳಕೆಗೆ ಮಾತ್ರ ಸಾಕಾಗುವ ಹಿನ್ನೆಲೆ, ದೀರ್ಘಕಾಲದ ಅಡಚಣೆ ಉಂಟಾದರೆ ಲಕ್ಷಾಂತರ ಮನೆಗಳಿಗೆ ಅಡುಗೆ ಅನಿಲ ಲಭ್ಯತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದಲ್ಲದೆ ಭಾರತವು ಪಶ್ಚಿಮ ಏಷ್ಯಾದಿಂದ 1.9 ಶತಕೋಟಿ ಡಾಲರ್ ಮೌಲ್ಯದ ಸಂಸ್ಕರಿಸಿದ ಇಂಧನಗಳನ್ನು ಆಮದು ಮಾಡಿಕೊಂಡಿದ್ದು, ಇದು ಆಮದುಗಳಲ್ಲಿ 19.7% ಅನ್ನು ಪ್ರತಿನಿಧಿಸುತ್ತದೆ. ಅದೇ ವೇಳೆ 1.3 ಶತಕೋಟಿ ಡಾಲರ್ ಮೌಲ್ಯದ ಪೆಟ್ರೋಲಿಯಂ ಕೋಕ್ ಅನ್ನು ಆಮದು ಮಾಡಿಕೊಂಡಿದೆ, ಇದು ಆಮದುಗಳಲ್ಲಿ 37.3% ರಷ್ಟಾಗಿದೆ. ಪೆಟ್ರೋಲಿಯಂ ಕೋಕ್ ಅನ್ನು ಸಿಮೆಂಟ್ ಸ್ಥಾವರಗಳು, ಅಲ್ಯೂಮಿನಿಯಂ ಕರಗಿಸುವ ಘಟಕಗಳು ಹಾಗೂ ವಿದ್ಯುತ್ ಉತ್ಪಾದನೆಯಲ್ಲಿ ಇಂಧನವಾಗಿ ವ್ಯಾಪಕವಾಗಿ ಬಳಸಲಾಗುತ್ತದೆ. ಪೂರೈಕೆಯಲ್ಲಿ ಕೊರತೆ ಉಂಟಾದರೆ ಈ ವಲಯಗಳಲ್ಲಿ ಉತ್ಪಾದನಾ ವೆಚ್ಚ ಹೆಚ್ಚುವ ಸಾಧ್ಯತೆ ಇದ್ದು, ನಿರ್ಮಾಣ ಮತ್ತು ಮೂಲಸೌಕರ್ಯ ಯೋಜನೆಗಳು ನಿಧಾನಗೊಳ್ಳಬಹುದು.
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ
T20 World Cup Final 2026: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ಮಾರ್ಚ್ 8) ನಡೆಯುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ-ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿವೆ. ಈ ಕ್ಷಣಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಈ ಮಹತ್ವದ ಪಂದ್ಯಕ್ಕೆ ಮಳೆ ಅಡ್ಡಿಯಾದ್ರೆ ಏನಾಗಲಿದೆ ಎನ್ನುವ ಕುತೂಹಲ ಬಹುತೇಕ ಮಂದಿಯ ತಲೆಯಲ್ಲಿದೆ. ಹಾಗಾದ್ರೆ, ಇದೆಲ್ಲದಕ್ಕೂ ಉತ್ತರವನ್ನು ಇಲ್ಲಿ
ದೋಷಪೂರಿತ ನಂಬರ್ ಪ್ಲೇಟ್ ವಾಹನಗಳ ವಿರುದ್ಧ ವಿಜಯನಗರ ಪೊಲೀಸರ ವಿಶೇಷ ಕಾರ್ಯಾಚರಣೆ : 288 ಪ್ರಕರಣಗಳು ದಾಖಲು
ವಿಜಯನಗರ: ದೋಷಪೂರಿತ ಹಾಗೂ ನಿಯಮಬಾಹಿರ ನಂಬರ್ ಪ್ಲೇಟ್ ಅಳವಡಿಸಿಕೊಂಡ ವಾಹನಗಳ ವಿರುದ್ಧ ವಿಜಯನಗರ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಾಹನ ಪರಿಶೀಲನೆ ನಡೆಸಿ ನಿಯಮ ಉಲ್ಲಂಘಿಸಿದ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಐಎಂವಿ (IMV) ಕಾಯ್ದೆ ಅನ್ವಯ ದೋಷಪೂರಿತ ಅಥವಾ ನಿಯಮಬಾಹಿರ ನಂಬರ್ ಪ್ಲೇಟ್ ಹೊಂದಿದ್ದ ವಾಹನಗಳ ವಿರುದ್ಧ ಕ್ರಮ ಕೈಗೊಂಡು ಒಟ್ಟು 288 ಪ್ರಕರಣಗಳನ್ನು ದಾಖಲಿಸಲಾಗಿದೆ. ಉಪವಿಭಾಗವಾರು ದಾಖಲಾಗಿರುವ ಪ್ರಕರಣಗಳು : • ಹೊಸಪೇಟೆ ಉಪವಿಭಾಗ: 65 ಪ್ರಕರಣಗಳು • ಕೂಡ್ಲಿಗಿ ಉಪವಿಭಾಗ: 73 ಪ್ರಕರಣಗಳು • ಹರಪನಹಳ್ಳಿ ಉಪವಿಭಾಗ: 150 ಪ್ರಕರಣಗಳು ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದು, ವಾಹನ ಚಾಲನೆ ಮಾಡುವಾಗ ಡ್ರೈವಿಂಗ್ ಲೈಸೆನ್ಸ್ (DL), ರಿಜಿಸ್ಟ್ರೇಷನ್ ಸರ್ಟಿಫಿಕೇಟ್ (RC), ಇನ್ಶುರೆನ್ಸ್ ಹಾಗೂ ಮಾಲಿನ್ಯ ಪ್ರಮಾಣಪತ್ರ (PUC) ಸೇರಿದಂತೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ತಿಳಿಸಿದೆ. ವಾಹನಗಳಲ್ಲಿ ನಿಯಮಾನುಸಾರ ನಂಬರ್ ಪ್ಲೇಟ್ ಅಳವಡಿಸಿಕೊಂಡು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
‘ಅನ್ವೇಷಣಾ’ ರಾಷ್ಟ್ರ ಮಟ್ಟದ ಸಂಶೋಧನಾ ವಿಚಾರ ಸಂಕಿರಣ
ಉಡುಪಿ, ಮಾ.7: ಉದ್ಯಾವರದ ಎಸ್ಡಿಎಂ ಆಯುರ್ವೇದ ಕಾಲೇಜಿನಲ್ಲಿ ಮಾ.6ರಂದು ಒಂದು ದಿನದ ರಾಷ್ಟ್ರಮಟ್ಟದ ಸಂಶೋಧನಾ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ಅಧೀಕ್ಷಕ ಡಾ.ಲಕ್ಷ್ಮೀನಾರಾಯಣ ಶೆಣೈ ಮಾತನಾಡಿ, ಪ್ರಕೃತಿಯ ಪರಿ ವೀಕ್ಷಣೆಯೇ ಎಲ್ಲಾ ಸಂಶೋಧನೆಗಳ ಮೂಲ ಹಾಗೂ ಕೃತಕ ಬುದ್ಧಿಮತ್ತೆಯ ಪ್ರಾಮಾಣಿಕತೆಯ ಪರಿಶೀಲನೆ ಚರ್ಚಾಸ್ಪದವಾಗಿದೆ ಎಂದು ಹೇಳಿದರು. ಮೈಸೂರಿನ ರಾಷ್ಟ್ರೀಯ ಎಂಜಿನಿಯರಿಂಗ್ ಸಂಸ್ಥೆಯ ಪ್ರಾಧ್ಯಾಪಕ ಡಾ. ಶ್ರೀನಾಥ್ ರಾಮ್ ಪುರೆ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ವಹಿಸಿದ್ದರು. ಸಮ್ಮೇಳನದ ಮುಖ್ಯ ಸಂಘಟಕ ಡಾ.ಅಶೋಕ್ ಕುಮಾರ್ ಬಿ.ಎನ್. ಸ್ವಾಗತಿಸಿದರು. ಸಂಸ್ಥೆಯ ಬಾಲರೋಗ ವಿಭಾಗದ ಸಹ ಪ್ರಾಧ್ಯಾಪಕ ಸಹನಾ ಶಂಕರಿ ವಂದಿಸಿದರು, ಸಹಾಯಕ ಪ್ರಾಧ್ಯಾಪಕ ಡಾ.ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ಮಣಿಪಾಲದ ಮುನಿಯಾಲ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್, ಕ್ಲಿನಿಕಲ್ ಸ್ಟಡಿ ಡಿಸೈನ್ ವಿಷಯವಾಗಿ ಉಪನ್ಯಾಸ ನೀಡಿದರು. ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ಅಧೀಕ್ಷಕ ಡಾ.ಲಕ್ಷ್ಮೀನಾರಾಯಣ ಶೆಣೈ ಬಯೋ ಸ್ಟ್ಯಾಟಿಸ್ಟಿಕ್ಸ್ ಇನ್ ಆಯುರ್ವೇದ ವಿಷಯವನ್ನು ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜಿನ ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ್ ಎಲ್.ಹೆಗ್ಡೆ, ಸಂಸ್ಥೆಯ ಅಗದತಂತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ರವಿಕೃಷ್ಣ ಎಸ್. ಹಾಗೂ ಇಂಟೆಗ್ರೇಟೆಡ್ ಹೆಲ್ತ್ ಆಂಡ್ ಟ್ರಾನ್ಸಿಷನಲ್ ರಿಸರ್ಚ್ ವಿಭಾಗದ ಮುಖ್ಯಸ್ಥ ಡಾ.ಸಂದೇಶ್ ಕುಮಾರ್ ಉಪನ್ಯಾಸ ನೀಡಿದರು. ಸಮಾರೋಪ ಸಮಾರಂಭ: ಸಂಕಿರಣದ ಉಪನ್ಯಾಸಗಳ ಮೇಲ್ವಿಚಾರಕ ಡಾ.ನವೀನ್ ಚಂದ್ರ ಎನ್.ಎಚ್. ಸಮ್ಮೇಳನದ ಸಾರಾಂಶವನ್ನು ವಿವರಿಸಿ ದರು. ಕಾರ್ಯಕ್ರಮದ ಮುಖ್ಯ ರೂವಾರಿ ಡಾ.ಲಕ್ಷ್ಮೀನಾರಾಯಣ ಶೆಣೈ ಅವರನ್ನು ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಉಪಪ್ರಾಂಶುಪಾಲ ಡಾ.ನಾಗರಾಜ್ ಎಸ್. ವಹಿಸಿದ್ದರು. ವೈದ್ಯಕೀಯ ಅಧೀಕ್ಷಕ ಡಾ.ಜಯಕೃಷ್ಣ ನಾಯಕ್, ಸಮ್ಮೇಳನದ ಮುಖ್ಯ ಸಂಘಟಕ ಡಾ.ಅಶೋಕ್ ಕುಮಾರ್ ಬಿ.ಎನ್. ಉಪಸ್ಥಿತರಿದ್ದರು. ಕಾರ್ಯಕ್ರಮದ ಉಪ ಕಾರ್ಯದರ್ಶಿ ಹಾಗೂ ಇಂಟೆಗ್ರೇಟೆಡ್ ಹೆಲ್ತ್ ಆಂಡ್ ಟ್ರಾನ್ಸಿಷನಲ್ ರಿಸರ್ಚ್ ವಿಭಾಗದ ಮುಖ್ಯಸ್ಥ ಡಾ.ಸಂದೇಶ್ ಕುಮಾರ್ ವಂದಿಸಿದರು. ಸಂಸ್ಥೆಯ ಕಾಯಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಮೇಘನಾ ರಾವ್ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ| ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳವು ಪ್ರಕರಣ: ಇಬ್ಬರು ಕುಖ್ಯಾತ ಅಂತರ್ರಾಜ್ಯ ಕಳವು ಆರೋಪಿಗಳ ಬಂಧನ
ಕಾಪು: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.30ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ರಾಜ್ಯದ ತಿರುನಲ್ವೇಲಿ ತಿರುಕ್ಕುರುಂಕುಡಿಯ ಎಸಾಕ್ಕಿ ರಾಜ (28) ಹಾಗೂ ಆತನ ಸಹಚರ ನಂಬಿ ರಾಜ (23) ಬಂಧಿತ ಆರೋಪಿಗಳು. ಕಾಪು ದಿವಾಕರ ಶೆಟ್ಟಿ ಕುಟುಂಬದವರು ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆಯಲ್ಲಿರುವ ಮನೆಗೆ ಬೀಗ ಹಾಕಿ ಮುಂಬಯಿಗೆ ಹೋಗಿದ್ದು, ಈ ಸಂದರ್ಭದಲ್ಲಿ ಮನೆಯ ಮುಖ್ಯ ಬಾಗಿಲ ಬೀಗವನ್ನು ಒಡೆದು ನುಗ್ಗಿದ ಕಳ್ಳರು, ದೇವರ ಕೋಣೆಯಲ್ಲಿದ್ದ ಮತ್ತು ಬೆಡ್ರೂಂನ ಕಪಾಟಿನಲ್ಲಿದ್ದ ಬೆಳ್ಳಿ ಹಾಗೂ 30 ಗ್ರಾಂ ತೂಕದ ಕರಗಿಸಿದ ಗಟ್ಟಿ ಚಿನ್ನ, ವಾಚ್ ಹಾಗೂ ನಗದು ಸೇರಿ ಒಟ್ಟು 19,05,000ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಕುಖ್ಯಾತ ಅಂತರ್ ರಾಜ್ಯ ಕಳ್ಳವು ಆರೋಪಿ ಎಸಾಕ್ಕಿ ರಾಜಾ ಮತ್ತು ಆತನ ಸಹಚರ ನಂಬಿ ರಾಜ ಎಂಬಾತನನ್ನು ಬಂಧಿಸಿದರು. ಈ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉಳಿದ ಪ್ರಮುಖ ಮೂರು ಆರೋಪಿಗಳು ಭಾಗಿಯಾಗಿದ್ದು, ಇವರನ್ನು ಪತ್ತೆ ಹಚ್ಚಿ, ಸೊತ್ತು ವಶಪಡಿಸಿಕೊಳ್ಳಲು ಬಾಕಿ ಇದೆ. ಈ ಆರೋಪಿಗಳ ವಿರುದ್ಧ ಕೇರಳ ಮತ್ತು ತಮಿಳುನಾಡು ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾ ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಸುಧಾಕರ ಎಸ್.ನಾಯ್ಕ, ಕಾರ್ಕಳ ಡಿವೈಎಸ್ಪಿ ಎಸ್.ವಿಜಯಪ್ರಸಾದ್ ನೇತೃತ್ವದಲ್ಲಿ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕ ಅಝಮತ್ ಅಲಿ ಜಿ. ಹಾಗೂ ಕಾಪು ಪೊಲೀಸ್ ಎಸ್ಸೈಗಳಾದ ತೇಜಸ್ವಿ ಟಿ.ಐ., ಶುಭಕರ, ಮತ್ತು ಸಿಬ್ಬಂದಿ ಮಹಮ್ಮದ್ ರಫೀಕ್, ನಾರಾಯಣ, ಮೋಹನ ಚಂದ್ರ, ರಘು, ಪಡುಬಿದ್ರಿ ಠಾಣೆಯ ಎಎಎಸ್ಸೈ ರಾಜೇಶ್, ಶಿರ್ವ ಠಾಣೆಯ ದಯಾನಂದ ಪ್ರಭು ಮತ್ತು ಅನ್ವರ್ ಆಲಿ ಹಾಗೂ ಕಾಪು ವೃತ್ತ ಕಛೇರಿಯ ಸಿಬ್ಬಂದಿ ಶರಣಪ್ಪ ಹಾಗೂ ಜೀವನ್ ಮತ್ತು ಜೀಪು ಚಾಲಕರಾದ ಜಗದೀಶ್ ಹಾಗೂ ಸಿಡಿಆರ್ ವಿಭಾಗದ ದಿನೇಶ್ ಮತ್ತು ನಿತಿನ್ ಈ ಕಾರ್ಯಾಚರಣೆ ನಡೆಸಿದ್ದಾರೆ.
ಸುರಪುರ | ಟ್ರ್ಯಾಕ್ಟರ್ ಢಿಕ್ಕಿ : ಬೈಕ್ ಸವಾರ ಮೃತ್ಯು
ಸುರಪುರ: ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಟ್ರ್ಯಾಕ್ಟರ್ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಮಹಾತ್ಮ ಗೌತಮ್ ಬುದ್ಧ ವೃತ್ತದ ಬಳಿಯ ಗ್ರಂಥಾಲಯ ಮುಂಭಾಗದಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ ಮಹಾತ್ಮ ಗಾಂಧಿ ವೃತ್ತದ ಕಡೆಯಿಂದ ರಂಗಂಪೇಟೆ ಕಡೆಗೆ ಟ್ರ್ಯಾಕ್ಟರ್ ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ತಾಲೂಕಿನ ಅಡ್ಡೊಡಗಿ ಗ್ರಾಮದ ಶರ್ಮುದ್ದಿನ್ ಲವಾರಿ (40) ಅವರಿಗೆ ಗುದ್ದಿದ ಪರಿಣಾಮ ಬೈಕ್ ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿಕೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಮತ್ತೋರ್ವ ವ್ಯಕ್ತಿಯಾದ ಯಾದಗಿರಿ ಜಿಲ್ಲೆಯ ಶಾಂತಿನಗರ ನಿವಾಸಿ ಅಬ್ದುಲ್ ಅಲಿ ಶಹಾನ್ ಅವರಿಗೂ ಟ್ರ್ಯಾಕ್ಟರ್ ಗುದ್ದಿದ ಪರಿಣಾಮ ಅವರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟ್ರ್ಯಾಕ್ಟರ್ ಗುದ್ದಿದ ರಭಸಕ್ಕೆ ಅನೇಕ ವಾಹನಗಳು ಪರಸ್ಪರ ತಾಗಿಕೊಂಡು ಕೆಲವು ವಾಹನಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸುರಪುರ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದಣ್ಣ ಯಡ್ರಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಉಮೇಶ ಎಂ. ನಾಯಕ ತಿಳಿಸಿದ್ದಾರೆ.
Ind Vs Eng- `ಹೊಸದೇನಾದ್ರೂ ಹೇಳಿ': ಮಿಚೆಲ್ ಸ್ಯಾಂಟ್ನರ್ ಮೈಂಡ್ ಗೇಮ್ ಹೇಳಿಕೆಗೆ ಸೂರ್ಯಕುಮಾರ್ ಯಾದವ್ ವ್ಯಂಗ್ಯ
ಅಹ್ಮದಾಬಾದ್: 2026 ಫೈನಲ್ ಪಂದ್ಯಕ್ಕೂ ಮುನ್ನ ಭಾರತದ ವಿರುದ್ಧ ಮೈಂಡ್ ಗೇಮ್ ಆಡಲು ಹೊರಟ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಅವರಿಗೆ ಇದೀಗ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ತಿರುಗೇಟು ನೀಡಿದ್ದಾರೆ. ``ಮೋದಿ ಕ್ರೀಡಾಂಗಣದಲ್ಲಿ ಭಾರತೀಯ ಪ್ರೇಕ್ಷಕರನ್ನು ಮೌನವಾಗಿಸುತ್ತೇವೆ ಎಂಬ ಹೇಳಿಕೆಗೆ `ಎಲ್ಲರೂ ಇದೇ ಲೈನ್ ಅನ್ನು ಕಾಪಿ ಮಾಡುತ್ತಿದ್ದಾರೆ, ಏನಾದರೂ ಹೊಸದಾಗಿ ಹೇಳಿ' ಎಂದು ವ್ಯಂಗ್ಯವಾಡಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಅವರು ನಮ್ಮ ಗುರಿ ಮೈದಾನದಲ್ಲಿರುವ ಪ್ರೇಕ್ಷಕರನ್ನು ಸುಮ್ಮನಾಗಿಸುವುದು. ತವರಿನಲ್ಲಿ ಗೆಲ್ಲಲೇಬೇಕಾದ ಹೆಚ್ಚಿನ ಒತ್ತಡ ಭಾರತದ ಮೇಲಿದೆ ಎಂದು ಹೇಳಿದ್ದರು. ಕಮಿನ್ಸ್- ಕರ್ರನ್ ಇದೇ ಮಾತು 2023ರಲ್ಲಿ ಇದೇ ಮೈದಾನದಲ್ಲಿ ನಡೆದ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಮುನ್ನ ಆಸ್ಟ್ರೇಲಿಯಾದ ವಿಶ್ವಕಪ್ ಪ್ಯಾಟ್ ಕಮಿನ್ಸ್ ಇವರು ಇದೇ ಮಾತನ್ನು ಹೇಳಿದ್ದರು. ಆ ಪಂದ್ಯವನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ವಿಶ್ವಚಾಂಪಿಯನ್ ಆಗಿತ್ತು. ಭಾರತ ತಂಡ ಆಸ್ಟ್ರೇಲಿಯಾಗೆ ಹೇಳಿದ್ದರು. ಇನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಟಿ20 ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ನ ಆಲ್ರೌಂಡರ್ ಸ್ಯಾಮ್ ಕರ್ರನ್ ಅವರು ಸಹ ಭಾರತದ ಅಭಿಮಾನಿಗಳನ್ನು ಮೌನವಾಗಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಪಂದ್ಯದ ಬಳಿಕ ಅವರ ಈ ಹೇಳಿಕೆ ವಿಪರೀತ ಟ್ರೋಲ್ ಆಗಿತ್ತು. ಇದೀಗ ಮಿಚೆಲ್ ಸ್ಯಾಂಟ್ನರ್ ಅವರು ಸಹ ಇದೇ ರೀತಿಯ ಹೇಳಿಕೆ ನೀಡಿರುವ ಬಗ್ಗೆ ಫೈನಲ್ ಪಂದ್ಯಕ್ಕೂ ಪೂರ್ವಭಾವಿಯಾಗಿ ಸೂರ್ಯಕುಮಾರ್ ಅವರನ್ನು ಪತ್ರಕರ್ತರು ಪ್ರಶ್ನಿಸಿದಾಗ ಸಬ್ ಹೀ ಸೇಮ್ ಲೈನ್ ಚಿಪ್ಕಾ ರಹೇ ಹೈ, ಕುಚ್ ತೋ ನಯಾ ಬೋಲೋ (ಎಲ್ಲರೂ ಇದೇ ಸಾಲನ್ನು ನಕಲು ಮಾಡುತ್ತಿದ್ದಾರೆ, ಹೊಸದು ಏನಾದರಿದ್ದರೆ ಹೇಳಿ) ಎಂದು ಲೇವಡಿ ಮಾಡಿದರು. ಎದುರಾಳಿ ತಂಡದ ಆಟಗಾರರು, ನಾಯಕರು ಒಂದೇ ರೀತಿಯ ಮಾನಸಿಕ ತಂತ್ರ(Mind Game) ಬಳಸುತ್ತಿರುವುದನ್ನು ಅವರು ಈ ಮೂಲಕ ತಳ್ಳಿಹಾಕಿದರು. ತಂಡದಲ್ಲಿ ಸಕಾರಾತ್ಮಕ ವಾತಾವರಣ ಇನ್ನು ಮಿಚೆಲ್ ಸ್ಯಾಂಟ್ನರ್ ಅವರು ಭಾರತ ತಂಡಕ್ಕೆ ತವರಿನಲ್ಲಿ ಕಪ್ ಗೆಲ್ಲಬೇಕಾದ ಒತ್ತಡ ಇದೆ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು, ತಂಡದಲ್ಲಿ ತುಂಬಾ ಸಕಾರಾತ್ಮಕ ವಾತಾವರಣವಿದೆ. ಇದೊಂದು ವಿಶೇಷ ಅನುಭವವಾಗಿದ್ದು ನಾವೆಲ್ಲರೂ ಪಂದ್ಯವನ್ನು ಎಂಜಾಯ್ ಮಾಡುವುದನ್ನು ಇಷ್ಟಪಡುತ್ತೇವೆ. ಈ ದೊಡ್ಡ ಪಂದ್ಯಕ್ಕಾಗಿ ಎಲ್ಲರೂ ಕಾತುರದಿಂದ ಕಾಯುತ್ತಿದ್ದೇವೆ ಎಂದು ಹೇಳಿದರು. ಇನ್ನು ನಾಯಕನಾಗಿ ಖಂಡಿತವಾಗಿಯೂ ನನ್ನ ಮೇಲೆ ಒತ್ತಡ ಇದೆ. ಅದನ್ನು ಅಲ್ಲಗೆಳೆಯುವಂತಿಲ್ಲ ಎಂದು ತಿಳಿಸಿದರು. ಇನ್ನು ತಂಡದ ಯಶಸ್ಸಿನ ಬಗ್ಗೆ ಮಾತನಾಡಿ. ಕೋಚ್ ಗೌತಮ್ ಗಂಭೀರ್ ಅವರು ವೈಯಕ್ತಿಕ ಮೈಲಿಗಲ್ಲುಗಳಿಗಿಂತ ತಂಡದ ಕೊಡುಗೆಗೆ ಹೆಚ್ಚು ಪ್ರಾಮುಖ್ಯತೆ ನೀಡುವ ಸಂಸ್ಕೃತಿಯನ್ನು ಬೆಳೆಸಿದ್ದಾರೆ ಎಂದು ಸೂರ್ಯಕುಮಾರ್ ಯಾದವ್ ಅವರು ಶ್ಲಾಘಿಸಿದರು.
ಮಕ್ಕಳ ಕಳ್ಳರ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕ್ರಮ: ಎಸ್ಪಿ ಹರಿರಾಂ ಶಂಕರ್
ಉಡುಪಿ, ಮಾ.7: ಅಲೆವೂರು, ಬೆಳ್ಳೆ, ಕುಂತಳನಗರ ವ್ಯಾಪ್ತಿಯಲ್ಲಿ ಮಕ್ಕಳ ಕಳ್ಳರಿದ್ದಾರೆಂಬುದಾಗಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ‘ಮಕ್ಕಳ ಕಳ್ಳರು ಮುಸುಕು ಹಾಕಿಕೊಂಡು ಅಲೆವೂರು, ಬೆಳ್ಳೆ, ಕುಂತಳನಗರ ವ್ಯಾಪ್ತಿಯಲ್ಲಿ ತಿರುಗುತ್ತಿದ್ದಾರೆ. ದಯವಿಟ್ಟು ಮಕ್ಕಳು ಬೆಳಗ್ಗೆ ರಿಕ್ಷಾ ಹತ್ತುವಾಗ ಮತ್ತು ಸಾಯಂಕಾಲ ಇಳಿಯುವಾಗ ಪೋಷಕರು ಕಡ್ಡಾಯವಾಗಿ ಇರಲೇ ಬೇಕು. ಮಕ್ಕಳನ್ನು ಜೋಪಾನವಾಗಿ ಕಾಪಾಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಇದು ಸುಳ್ಳು ಸುದ್ದಿ. ಇಂತಹ ಸಂದೇಶಗಳನ್ನು ಯಾರಾದರೂ ಹರಡುತ್ತಿರುವುದು ಗಮನಕ್ಕೆ ಬಂದರೆ ನಮಗೆ ತಿಳಿಸಿ. ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಲಾಗುವುದು’ ಎಂದು ಎಸ್ಪಿ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
Bengaluru | ಅಕ್ರಮವಾಗಿ ನೆಲೆಸಿದ್ದ 200 ವಿದೇಶಿಗರು ಪತ್ತೆ
ಬೆಂಗಳೂರು: ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟಾರೆ 200ಕ್ಕೂ ಹೆಚ್ಚು ವಿದೇಶಿಗರನ್ನು ಪತ್ತೆಹಚ್ಚಿದ್ದಾರೆ. ಅಕ್ರಮವಾಗಿ ನೆಲೆಸಿದವರ ಪೈಕಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರೇ ಹೆಚ್ಚು ಇದ್ದು, ಈ ಸಂಬಂಧ ಪರಿಶೀಲನೆ ಕಾರ್ಯ ಮುಂದುವರೆದಿದೆ ಎಂದು ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ. ಕಳೆದ ಎರಡು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಿ ನಗರದಲ್ಲಿ ಅಕ್ರಮವಾಗಿ ವಾಸಿಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿದ್ದಾರೆ. ಪತ್ತೆಯಾದ ಅಕ್ರಮ ವಲಸಿಗರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (ಎಫ್ಆರ್ಆರ್ಓ) ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕಾರ್ಯ ಈಗಾಗಲೇ ಆರಂಭವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಹೇಳಿದ್ದಾರೆ.
ಮಂಗಳೂರು| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ: ಇಬ್ಬರ ಬಂಧನ
ಮಂಗಳೂರು, ಮಾ.7: ನಗರದ ಉರ್ವ ಮಾರಿಗುಡಿ ಬಳಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಠಾಣೆಯ ಪೊಲೀಸರು ಬಂಧಿಸಿ ಅವರಿಂದ ಒಟ್ಟು 12.46 ಗ್ರಾಂ ತೂಕದ 1,24,600 ರೂ. ಅಂದಾಜು ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಗೋಳ್ತಮಜಲಿನ ಅಶೋಕನಗರ ವೇಲ್ಸ್ಪೇಟೆಯ ತಿಲಕ್ರಾಜ್ (31) ಮತ್ತು ಬಜಪೆ ಭಟ್ರಕೆರೆ ಮೂಲದ ಕುದ್ರೋಳಿ ನಡುಪಳ್ಳಿ ಬಳಿಯ ಶೇಕ್ ಹಾರಿಸ್ ಯಾನೆ ಜಿಗರ್ (32) ಬಂಧಿತ ಆರೋಪಿಗಳಾಗಿದ್ದಾರೆ. ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ದಾಳಿ ನಡೆಸಿ ಈ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಂಜೇಶ್ವರ ಮೂಲದ ವ್ಯಕ್ತಿಯೊಬ್ಬನಿಂದ ಕಡಿಮೆ ಬೆಲೆಗೆ ಎಂಡಿಎಂಎ ಪಡೆದು ಪ್ಲಾಸ್ಟಿಕ್ ಕವರ್ನಲ್ಲಿ ತುಂಬಿಸಿ ಹೆಚ್ಚಿನ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡಲು ಬಂದಿರು ವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಬಳಸುತ್ತಿದ್ದ ಸ್ಕೂಟರ್ನಲ್ಲಿದ್ದ ಮೂರು ಕವರ್ಗಳಲ್ಲಿ ಎಂಡಿಎಂಎ ಪತ್ತೆಯಾಗಿದೆ. ಆರೋಪಿಗಳಿಂದ 5 ಸಾವಿರ ರೂ. ಮೌಲ್ಯದ ಮೊಬೈಲ್, ಎರಡು ಸ್ಕೂಟರ್ ಸಹಿತ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆಳಂದ | ಮಕ್ಕಳ ಸ್ನೇಹಿ ಸಮಾಜ ನಿರ್ಮಾಣಕ್ಕೆ ಜ್ಞಾನಕ್ಕಿಂತ ಕೌಶಲ್ಯ ಅಗತ್ಯ : ಕುಲಪತಿ ಪ್ರೊ.ಬಟ್ಟು ಸತ್ಯಾನಾರಾಯಣ
ಆಳಂದ : ಪ್ರಸ್ತುತ ಕಾಲದಲ್ಲಿ ಸಮಾಜ ಅಭಿವೃದ್ಧಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ಬದಲಾದ ಕಾನೂನು-ಕಾಯಿದೆಗಳು ಹಾಗೂ ಸರ್ಕಾರದ ಹೊಸ ನೀತಿಗಳನ್ನು ನಿರಂತರವಾಗಿ ಕಲಿಯುತ್ತಿರಬೇಕು. ಅದಾಗಿಯೇ ಅವರು ತಮ್ಮ ಕಾರ್ಯಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯಾನಾರಾಯಣ ಅಭಿಪ್ರಾಯಪಟ್ಟರು. ತಾಲೂಕಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧ ಆಂದೋಲನ, ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಬೆಂಗಳೂರು, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದಕ್ಷಿಣ ಕನ್ನಡ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸ್ನಾತ್ತಕೊತ್ತರ ಸಮಾಜ ಕಾರ್ಯ ವಿಭಾಗ ಹಾಗೂ ಐ.ಎಲ್.ಪಿ ಮತ್ತು ಎಫ್.ಸಿ.ಡಬ್ಲ್ಯೂ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಮೂರು ದಿನಗಳ “ಮಕ್ಕಳ ಸ್ನೇಹಿ ಸಮಾಜ ಸೃಷ್ಟಿಯತ್ತ ಬದಲಾವಣೆಯ ಹರಿಕಾರರ ಕರ್ನಾಟಕ ರಾಜ್ಯ ಮಟ್ಟದ ಸಶಕ್ತೀಕರಣ ತರಬೇತಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಪರಿಸ್ಥಿತಿಯಲ್ಲಿ ಸಮಾಜ ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ಮಾಡುವುದು ಸುಲಭದ ವಿಷಯವಲ್ಲ. ಕಾರ್ಯಕರ್ತರು ವಿವಿಧ ರೀತಿಯ ಸವಾಲುಗಳು ಮತ್ತು ಸಮಸ್ಯೆಗಳನ್ನು ಎದುರಿಸಲು ಸದಾ ಸಿದ್ಧರಾಗಿರಬೇಕು. ಕೇವಲ ಜ್ಞಾನವಿದ್ದರೆ ಸಾಕಾಗುವುದಿಲ್ಲ. ಅದರೊಂದಿಗೆ ಅಗತ್ಯವಾದ ಕೌಶಲ್ಯಗಳು ಕೂಡ ಪ್ರತಿಯೊಬ್ಬರಲ್ಲೂ ಬೆಳೆಸಿಕೊಳ್ಳಬೇಕು. ಈ ತರಬೇತಿ ಶಿಬಿರವು ಪರಿಣಾಮಕಾರಿಯಾಗಿ ನಡೆಯಲಿ, ಶಿಬಿರಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ತರಬೇತಿಯ ಸಂಪೂರ್ಣ ಪ್ರಯೋಜನ ಪಡೆದು ಅದನ್ನು ತಮ್ಮ ತಮ್ಮ ಕಾರ್ಯಕ್ಷೇತ್ರದಲ್ಲಿ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸ್ನಾತ್ತಕೊತ್ತರ ಸಮಾಜ ಕಾರ್ಯ ವಿಭಾಗದ ಪ್ರೊ. ಚೆನ್ನವೀರ ಆರ್.ಎಂ., ಡೀನ್ ಪ್ರೊ. ಪವಿತ್ರಾ ಆರ್. ಆಲೂರ, ಸಿವಿಕ್ ಸಂಸ್ಥೆ ಬೆಂಗಳೂರು ಕಾರ್ಯಕಾರಿ ನಿರ್ದೇಶಕಿ ಕಾತ್ಯಾಯಿನಿ ಚಾಮರಾಜನ್, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದಕ್ಷಿಣ ಕನ್ನಡದ ಸಂಚಾಲಕ ರೆನ್ನಿ ಡಿ’ಸೋಜ ಹಾಗೂ ಮಾರ್ಗದರ್ಶಿ ಸಂಸ್ಥೆ ಕಲಬುರ್ಗಿ ನಿರ್ದೇಶಕ ಆನಂದ್ ರಾಜ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ (ಏಅಖಔ) ಬೆಂಗಳೂರು ಸಂಚಾಲಕ ಡಾ. ಎನ್.ವಿ. ವಾಸುದೇವ ಶರ್ಮಾ ತರಬೇತಿಯ ಉದ್ದೇಶ ಹಾಗೂ ಗುರಿಗಳ ಕುರಿತು ಪ್ರಾಸ್ತಾವಿಕವಾಗಿ ವಿವರಿಸಿದರು. ಸಿಎಸಿಎಲ್ಕೆ ರಾಜ್ಯ ಸಂಚಾಲಕಿ ಸರಸ್ವತಿ ಸ್ವಾಗತಿಸಿದರು. ಸಹ ಸಂಚಾಲಕ ಸಂಪತ್ ಕಾರ್ಯಕ್ರಮ ನಿರೂಪಿಸಿದರು. ರಾಜ್ಯದ 31 ಜಿಲ್ಲೆಗಳಿಂದ ಆಗಮಿಸಿದ ಸುಮಾರು 55 ಶಿಬಿರಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಅನುಭವ ಹೊಂದಿರುವ ನುರಿತ ಸಂಪನ್ಮೂಲ ವ್ಯಕ್ತಿಗಳು ವಿವಿಧ ವಿಷಯಗಳ ಕುರಿತು ವಿಚಾರ ಮಂಡನೆ ಮಾಡಿದರು.
ಒಳಮೀಸಲಾತಿ ವಿವಾದ: ರಾಜ್ಯ ಸರ್ಕಾರದ ನಡೆಯಿಂದ ಜಾತಿ ಸಂಘರ್ಷಕ್ಕೆ ಕುಮ್ಮಕ್ಕು: ಛಲವಾದಿ ನಾರಾಯಣಸ್ವಾಮಿ
ಒಳಮೀಸಲಾತಿ ವಿವಾದದ ಮೂಲಕ ರಾಜ್ಯ ಸರ್ಕಾರ ಜಾತಿ ಸಂಘರ್ಷಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ವಿಧಾನಪರಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಈ ಕುರಿತಾಗಿ ಬೆಂಗಳೂರಿನಲ್ಲಿ ಅವರು ಮಾತನಾಡಿದ ಅವರು, ಒಳ ಮೀಸಲಾತಿ ಕುರಿತಾಗಿ ನೀವ್ಯಾಕೆ ರಾಜ್ಯಪಾಲರ ಅಂಕಿತ ತೆಗೆದುಕೊಂಡಿರಿ? ಎಂದು ಪ್ರಶ್ನಿಸಿದರು. ಒಳಮೀಸಲಾತಿಯ ಬಗ್ಗೆ ಗೊಂದಲ ಸೃಷ್ಟಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು, ಜಾತಿ ಸಂಘರ್ಷಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಛಲವಾದಿ ನಾರಾಯಣ ಸ್ವಾಮಿ ಆರೋಪ ಮಾಡಿದರು. ಒಳಮೀಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದರೂ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ. ಹೀಗಾಗಿ ಗೊಂದಲ ಮುಂದುವರಿದಿದೆ.
ಕಲಬುರಗಿ | ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆಯಿಂದ 2025-26ನೇ ಸಾಲಿನ ಎಸ್.ಎಫ್.ಸಿ. (ಮುಕ್ತನಿಧಿ) ಯಡಿ ಕಲಬುರಗಿ ಜಿಲ್ಲಾಧಿಕಾರಿಗಳಿಂದ ಅನುಮೋದನೆಗೊಂಡಿರುವ ಶೇ. 7.25ರ ಕ್ರಿಯಾ ಯೋಜನೆಯಡಿ ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ನಿಗದಿಪಡಿಸಿದ ಕಾರ್ಯಕ್ರಮದಡಿ ಉನ್ನತ ವ್ಯಾಸಂಗಕ್ಕಾಗಿ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದ ಪಿ.ಹೆಚ್.ಡಿ. /ಪೋಸ್ಟ್ ಡಾಕ್ಟರೇಟ್ ವಿದ್ಯಾರ್ಥಿಗಳಿಗೆ (30,000 ರೂ. ಮೀರದಂತೆ) 11 ವಿದ್ಯಾರ್ಥಿಗಳಿಗೆ ಮಾತ್ರ ಸಹಾಯಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಆಡಳಿತ) ಅವರು ತಿಳಿಸಿದ್ದಾರೆ. ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಕಲಬುರಗಿ ನಗರದ ನಿವಾಸಿಯಾಗಿರಬೇಕು. ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು. ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಕಡ್ಡಾಯವಾಗಿ ಲಗತ್ತಿಸಬೇಕು. ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಆವಕ ಶಾಖೆಯಿಂದ ಕಚೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2026ರ ಮಾರ್ಚ್ 10 ರಿಂದ ಏ.10ರ ಸಂಜೆ 5.30 ಗಂಟೆಯೊಳಗಾಗಿ ಸದರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಶೇ. 7.25ರ ಶಾಖೆಯನ್ನು ಹಾಗೂ ಪಾಲಿಕೆಯ http://www.kalaburagicity.mrc.gov ವೆಬ್ಸೈಟ್ನ್ನು ಸಂಪರ್ಕಿಸಲು ಕೋರಲಾಗಿದೆ.
Bidar | ಮಾ. 25 ರಂದು ಈದ್ ಮಿಲನ್ ಸದ್ಭಾವನಾ ಕಾರ್ಯಕ್ರಮ
ವಿಸ್ಡ್ಂ ಕಾಲೇಜಿನಲ್ಲಿ ನಡೆದ ಜಿಲ್ಲಾ ಸದ್ಭಾವನಾ ಮಂಚ್ ಸಭೆಯಲ್ಲಿ ನಿರ್ಧಾರ
ಸ್ತ್ರೀವಾದಿ ಇತಿಹಾಸತಜ್ಞೆ ಉಮಾ ಚಕ್ರವರ್ತಿ ಉಪನ್ಯಾಸ ರದ್ದುಗೊಳಿಸಿದ ಮುಂಬೈನ ಎಸ್ ಎನ್ ಡಿ ಟಿ ವಿವಿ
ಮುಂಬೈ, ಮಾ.7: ಇಲ್ಲಿಯ ಶ್ರೀಮತಿ ನಾಥಿಬಾಯಿ ದಾಮೋದರ ಠಾಕರಸಿ (ಎಸ್ಎನ್ಡಿಟಿ) ಮಹಿಳಾ ವಿವಿಯು ಮಾ.14ರಂದು ನಿಗದಿಯಾಗಿದ್ದ ತನ್ನ 16ನೇ ನೀರಾ ದೇಸಾಯಿ ಸ್ಮಾರಕ ಉಪನ್ಯಾಸವನ್ನು ರದ್ದುಗೊಳಿಸಿದೆ. ಸ್ತ್ರೀವಾದಿ ಇತಿಹಾಸ ತಜ್ಞೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಉಮಾ ಚಕ್ರವರ್ತಿಯವರು ಉಪನ್ಯಾಸ ನೀಡಬೇಕಿತ್ತು ಎಂದು ಸುದ್ದಿಸಂಸ್ಥೆ ಶನಿವಾರ ವರದಿ ಮಾಡಿದೆ. ವಿವಿಯ ಕುಲಪತಿ ಉಜ್ವಲಾ ಚಕ್ರದೇವ ಅವರು ತನಗೆ ಕಾರ್ಯಕ್ರಮದ ಬಗ್ಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ. ಸಂಸ್ಥೆಯ ಪ್ರಾಧ್ಯಾಪಕಿ ಪುತುಲ್ ಸಾಠೆ ಅವರು ತಾಂತ್ರಿಕ ಕಾರಣಗಳಿಂದ ಉಪನ್ಯಾಸವನ್ನು ರದ್ದುಗೊಳಿಸಲಾಗಿದೆ ಎಂದು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಎಸ್ಎನ್ಡಿಟಿ ವಿವಿಯ ಮಹಿಳಾ ಸಂಶೋಧನಾ ಕೇಂದ್ರವು ಮಹಾರಾಷ್ಟ್ರ ಸ್ತ್ರೀ ಮುಕ್ತಿ ಪರಿಷದ್ (ಎಂಎಸ್ಎಂಪಿ) ಸಹಯೋಗದಲ್ಲಿ ಉಪನ್ಯಾಸವನ್ನು ಆಯೋಜಿಸಿತ್ತು. ಲಿಂಗ, ಜಾತಿ ಮತ್ತು ಸಾಮಾಜಿಕ ಇತಿಹಾಸ ಕುರಿತು ತನ್ನ ಕೆಲಸಕ್ಕಾಗಿ ಗುರುತಿಸಲ್ಪಟ್ಟಿರುವ ಚಕ್ರವರ್ತಿ ‘ಸ್ತ್ರೀವಾದಿಯೋರ್ವರ ಹಿನ್ನೋಟ: ಸುದೀರ್ಘ ಪಯಣದ ನಾಲ್ಕು ದಶಕಗಳು’ ಶೀರ್ಷಿಕೆಯ ಉಪನ್ಯಾಸವನ್ನು ನೀಡಬೇಕಿತ್ತು. ಕಾರ್ಯಕ್ರಮದಲ್ಲಿ ಚಕ್ರವರ್ತಿ ನಿರ್ದೇಶನದ ‘ವೋ ಸುಬಹ್ ಹಮೀ ಸೆ ಆಯೇಗಿ’ ಚಿತ್ರದ ಪ್ರದರ್ಶನವೂ ನಿಗದಿಯಾಗಿತ್ತು. ಚಕ್ರವರ್ತಿಯವರನ್ನು ಆಹ್ವಾನಿಸಿದ್ದಕ್ಕಾಗಿ ವಿವಿಯು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗಳಿಗೆ ಗುರಿಯಾಗಿತ್ತು. ಈ ಬೆಳವಣಿಗೆ ಕುರಿತು ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ ಚಕ್ರವರ್ತಿ, ‘ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಶುಕ್ರವಾರ ಬೆಳಿಗ್ಗೆ ನನಗೆ ಮಾಹಿತಿ ನೀಡಲಾಗಿತ್ತು. ಐತಿಹಾಸಿಕವಾಗಿ ಮಹಿಳೆಯರ ಶಿಕ್ಷಣ ಮತ್ತು ಅಭಿವ್ಯಕ್ತಿಗೆ ವೇದಿಕೆಯಾದ ಮಹಿಳಾ ವಿವಿಯು ತನ್ನದೇ ಮಹಿಳಾ ಅಧ್ಯಯನ ಕೇಂದ್ರವು ಕಾರ್ಯಕ್ರಮವನ್ನು ಆಯೋಜಿಸಿರುವ ಬಗ್ಗೆ ಆತಂಕಗೊಂಡಿರುವುದು ನನಗೆ ಅಚ್ಚರಿಯನ್ನುಂಟು ಮಾಡಿದೆ’ ಎಂದು ಹೇಳಿದ್ದಾರೆ. ಕಾರ್ಯಕ್ರಮದ ರದ್ದತಿಗೆ ಆಯೋಜಕರು ಯಾವುದೇ ಅಧಿಕೃತ ಕಾರಣವನ್ನು ನೀಡಿಲ್ಲ ಎಂದು ಎಂಎಸ್ಎಂಪಿ ಸದಸ್ಯೆ ಕುಂದಾ ಪಿ.ಎನ್. ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಆದರೆ ಚಕ್ರವರ್ತಿ ಬ್ರಾಹ್ಮಣ ಪಿತೃಪ್ರಭುತ್ವ ಮತ್ತು ಜಾತಿ ವ್ಯವಸ್ಥೆಯನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ಮಹಿಳಾ ವಿಮೋಚನೆಯ ಕುರಿತು ಬಲಪಂಥೀಯರ ದಬ್ಬಾಳಿಕೆಯ ನಿಲುವನ್ನೂ ಅವರು ಟೀಕಿಸುತ್ತಿದ್ದಾರೆ ಎಂದು ಬೆಟ್ಟುಮಾಡಿದ ಕುಂದಾ, ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ವಿವಿ ಕ್ಯಾಂಪಸ್ಗಳಲ್ಲಿ ಶೈಕ್ಷಣಿಕ ಚರ್ಚೆಗೆ ಅಪಾಯಕಾರಿ ಎಂದು ಬಣ್ಣಿಸಿದ್ದಾರೆ.
Bidar | 9 ಕೋಟಿ ರೂ. ವೆಚ್ಚದಲ್ಲಿ 9 ಕಿ.ಮೀ ರಸ್ತೆ ನಿರ್ಮಾಣಕ್ಕೆ ಸಂಸದ ಸಾಗರ್ ಖಂಡ್ರೆ ಚಾಲನೆ
ಬೀದರ್: ಲೋಕಸಭಾ ಕ್ಷೇತ್ರದ ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಭಾಲ್ಕಿ ತಾಲೂಕಿನ ಇಂಚೂರ್–ಲಾಧಾ–ಕುಂಟೆಗಾವ್–ಮೊರಂಬಿ ಗ್ರಾಮಗಳನ್ನು ಸಂಪರ್ಕಿಸುವ ಸುಮಾರು 9 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಸಂಸದ ಸಾಗರ್ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಸುಮಾರು 9 ಕೋಟಿ ರೂ. ಅನುದಾನದಡಿ ಗ್ರಾಮ ರಸ್ತೆಯನ್ನು ಎಂಡಿಆರ್ ರಸ್ತೆಯಾಗಿ ಪರಿವರ್ತಿಸಿ, ಏಕಮಾರ್ಗ ರಸ್ತೆಯನ್ನು ಎರಡು ಮಾರ್ಗದ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಇಂಚೂರ್ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಉತ್ತಮ ರಸ್ತೆ ಸಂಪರ್ಕ ಅತ್ಯಂತ ಅಗತ್ಯವಾಗಿದೆ. ಈ ರಸ್ತೆ ಅಭಿವೃದ್ಧಿಯಿಂದ ಇಂಚೂರ್, ಲಾಧಾ, ಕುಂಟೆಗಾವ್, ಮೊರಂಬಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುಗಮ ಸಂಚಾರ ಸೌಲಭ್ಯ ದೊರೆಯಲಿದೆ. ಕೃಷಿ ಉತ್ಪನ್ನಗಳ ಸಾಗಣೆ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ದಿನನಿತ್ಯದ ಸಂಚಾರಕ್ಕೂ ಈ ರಸ್ತೆ ಬಹಳ ಸಹಕಾರಿಯಾಗಲಿದೆ ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Uttar Pradesh | ಉಪಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಕ್ನೋದಲ್ಲಿ ತುರ್ತು ಭೂಸ್ಪರ್ಶ
ಲಕ್ನೋ, ಮಾ.7: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಕ್ನೋದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಬಲ್ಲ ಮೂಲಗಳು ಶನಿವಾರ ತಿಳಿಸಿವೆ. ಮೌರ್ಯ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹೆಲಿಕಾಪ್ಟರ್ ಮೂಲಕ ಕೌಶಾಂಬಿಗೆ ಪ್ರಯಾಣಿಸುತ್ತಿದ್ದರು ಎಂದು ಬಿಜೆಪಿ ನಾಯಕರೋರ್ವರು ತಿಳಿಸಿದ್ದಾರೆ. ಮೌರ್ಯ, ಅವರ ಸಹಾಯಕ ವಿವೇಕ ಮತ್ತು ಇಬ್ಬರು ಪೈಲಟ್ಗಳು ಸೇರಿದಂತೆ ಐವರು ಇದ್ದ ಹೆಲಿಕಾಪ್ಟರ್ ಲಕ್ನೋದ ಲಾ ಮಾರ್ಟಿನಿಯರ್ ಕಾಲೇಜು ಮೈದಾನದ ಹೆಲಿಪ್ಯಾಡ್ನಿಂದ ಟೇಕ್ಆಫ್ ಆಗಿತ್ತು. ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್ನೊಳಗೆ ಹೊಗೆ ಕಾಣಿಸಿಕೊಂಡ ಬಳಿಕ ಪೈಲಟ್ಗಳು ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶಕ್ಕೆ ನಿರ್ಧರಿಸಿದರು ಎಂದು ಅವರು ತಿಳಿಸಿದ್ದಾರೆ. ಬಳಿಕ ಮೌರ್ಯ ಇನ್ನೊಂದು ಹೆಲಿಕಾಪ್ಟರ್ ನಲ್ಲಿ ಕೌಶಾಂಬಿಗೆ ತೆರಳಿದರು.
ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆಯಲ್ಲಿ ಕುಸಿತ: ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅಸಮಾಧಾನ
ಮಂಗಳೂರು, ಮಾ.7: ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ತುಂಬಾ ಕಡಿಮೆ ಆಗುತ್ತಿದೆ. ತಿಂಗಳಿಗೆ ನಾಲ್ಕರಿಂದ ಐದಷ್ಟೇ ಆಗುತ್ತಿದ್ದು, ಇದು ಉತ್ತಮ ಸಂದೇಶವಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅಸಮಾದಾನ ವ್ಯಕ್ತಪಡಿಸಿದ್ದಾರೆ. ದ.ಕ. ಜಿಲ್ಲಾ ಭೇಟಿಯಲ್ಲಿರುವ ಅವರು ಶನಿವಾರ ಜಿಲ್ಲಾ ಪಂಚಾಯತ್ನಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಂದ ಅಹವಾಲು ಸ್ವೀಕರಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಬಳಿಕ ಸುದಿಗೋಷ್ಟಿಯಲ್ಲಿ ಮಾತನಾಡಿದರು. ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರು, ಅರವಳಿಕೆ ತಜ್ಞರ ಹುದ್ದೆ ಖಾಲಿ ಇದೆ. ಹಾಗಾಗಿ ಅಲ್ಲಿ ಸಹಜ ಹೆರಿಗೆಗೆ ಯಾರೂ ಬರುತ್ತಿಲ್ಲ, ಬದಲಾಗಿ ಮಂಗಳೂರಿನ ಲೇಡಿಗೋಶನ್ಗೆ ಹೋಗುತ್ತಾರೆಂಬ ಕಾರಣ ನೀಡಲಾಗಿದೆ. ಆದರೆ ಬಂಟ್ವಾಳದಿಂದ ಸುಮಾರು 25 ಕಿ.ಮೀ. ದೂರದ ಮಂಗಳೂರಿನ ಲೇಡಿಗೋಶನ್ಗೆ ಹೆರಿಗೆಗಾಗಿ ಗರ್ಭಿಣಿ ಯರು ಬರಬೇಕಾಗುತ್ತದೆ. ಅಗತ್ಯ ವೈದ್ಯರು , ವ್ಯವಸ್ಥೆಯನ್ನು ತಾಲೂಕು ಆಸ್ಪತ್ರೆಗಳಲ್ಲಿ ಒದಗಿಸಿದರೆ ಜನ ಯಾಕೆ ಬರುವುದಿಲ್ಲ ಎಂದು ಪ್ರಶ್ನಿಸಿದಾಗ, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು. ಕಾವೂರು ಪೊಲೀಸ್ ಠಾಣಾಧಿಕಾರಿ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸುವುದಲ್ಲದೆ, ಮಹಿಳೆಯರ ಉಡುಪಿನ ಮೇಲೂ ಕಾಮೆಂಟ್ ಮಾಡುತ್ತಾರೆ ಎಂಬ ದೂರು ವ್ಯಕ್ತವಾಗಿದ್ದು, ಈ ಬಗ್ಗೆ ಸಭೆಯಲ್ಲಿದ್ದ ಎಸಿಪಿಯನ್ನು ವಿಚಾರಿಸಿ ದಾಗ ಅವರು ನೋಟೀಸು ನೀಡಿರುವುದಾಗಿ ತಿಳಿಸಿದ್ದಾರೆ. ಆದರೆ ಈ ಬಗ್ಗೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾ ಗಿದೆ. ಮಹಿಳಾ ಸ್ನೇಹಿ ವ್ಯವಸ್ಥೆ ಪೊಲೀಸ್ ಠಾಣೆಗಳಲ್ಲಿ ಇರಬೇಕು. ಲಿಂಗ ಸೂಕ್ಷ್ಮತೆಯ ಬಗ್ಗೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮನವರಿಕೆ ಮಾಡಲು ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇಂತಹ ಪ್ರಕರಣಗಳ ಸಂದರ್ಭ ವರಿಷ್ಟ ಅಧಿಕಾರಿಗಳ ಬಳಿ ಹೋಗಬೇಕು. ಜಿಲ್ಲೆಯಲ್ಲಿ ಕಾರ್ಯಾಚರಿಸುವ ದಕ್ಷ ಅಧಿಕಾರಿಗಳು ಇಂತಹದ್ದಕ್ಕೆ ಅವಕಾಶ ನೀಡುವುದಿಲ್ಲ. ಆದರೆ ಹಲವು ಬಾರಿ ಇಂತಹ ಪ್ರಕರಣಗಳು ಅವರ ಗಮನಕ್ಕೆ ಬಂದಿರುವುದಿಲ್ಲ ಎಂದು ಅವರು ಹೇಳಿದರು. ಕೋಟೆಕಾರು ಮಡ್ಯಾರಿನ ಹಿಂದುಳಿದ ವರ್ಗಗಳ ವಸತಿ ನಿಲಯದಿಂದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆ ಇಲ್ಲದೆ 100 ರೂ. ವ್ಯಯಿಸಬೇಕಾಗುತ್ತದೆ ಎಂಬ ದೂರು ವ್ಯಕ್ತವಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಸರಿಪಡಿಸುವ ಭರವಸೆ ನೀಡಿದ್ದಾರೆ ಎಂದರು. ಒಣಮೀನು ಮಾರಾಟಗಾರ ಮಹಿಳೆಯರಿಗೆ ಸೆಂಟ್ರಲ್ ಮಾರುಕಟ್ಟೆಯಲ್ಲಿ ನಿರ್ಮಿಸಲಾದ ಹವಾನಿಯಂತ್ರಿತ ಮಾರುಕಟ್ಟೆಯಲ್ಲಿ ಜಾಗದ ಕೊರತೆ, ಬಾಡಿಗೆ ದುಬಾರಿಯ ದೂರು ಬಂದಿದೆ. ಮಾರುಕಟ್ಟೆಗಳು ಅದೆಷ್ಟು ಸುವ್ಯವಸ್ಥಿತ, ಹವಾನಿಯಂತ್ರಿತವಾಗಿದ್ದರೂ ಅದನ್ನು ಬಳಕೆ ಮಾಡುವವರಿಗೆ ಅದು ಹೊಂದಿಕೆಯಾಗಬೇಕು, ಸಬ್ಸಿಡಿ ದರದಲ್ಲಿ ದೊರೆಯಬೇಕು. ಅದಲ್ಲದೆ ಹಾಲಿ ಒಣ ಮೀನು ಮಾರುಕಟ್ಟೆ ಮಳೆಗಾಲದಲ್ಲಿ ಸೋರಿಕೆಯಾಗುತ್ತಿದ್ದು ಅದಕ್ಕೆ ಸೂಕ್ತ ವ್ಯವಸ್ಥೆ ಆಗಬೇಕಾಗಿದೆ. ಈ ಬಗ್ಗೆ ಪಾಲಿಕೆಯ ಆಯುಕ್ತರು ಕ್ರಮ ವಹಿಸುವುದಾಗಿ ತಿಳಿಸಿದ್ದು, ಕೈಗೊಳ್ಳುವ ಕ್ರಮದ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಡಾ. ನಾಗಲಕ್ಷ್ಮಿ ಹೇಳಿದರು. ಇಂದು ಸುಮಾರು 50ರಷ್ಟು ಅಹವಾಲುಗಳುಸಲ್ಲಿಕೆಯಾಗಿದ್ದು, ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿ 38 ದೂರುಗಳು ಬಂದಿದ್ದು, ಎಲ್ಲದಕ್ಕೂ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗಿದೆ ಎಂದರು. ಬಜೆಟ್ನಲ್ಲಿ ಮಹಿಳಾ ಪರ ಬೇಡಿಕೆಗಳು ಈಡೇರಿವೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಾ. ನಾಗಲಕ್ಷ್ಮಿ ಚೌಧರಿ, ಮಹಿಳಾ ಆಯೋಗಕ್ಕೆ ಕಾಲ್ ಸೆಂಟರ್ನ ಬೇಡಿಕೆ ಇರಿಸಲಾಗಿತ್ತು. ಸಂತ್ರಸ್ತೆ ತಾನಿರುವ ಸ್ಥಳದಲ್ಲೇ ಆಯೋಗದ ಕಾಲ್ ಸೆಂಟರ್ಗೆ ದೂರು ನೀಡುವ ವ್ಯವಸ್ಥೆ ಹಾಗೂ ದೂರು ಯಾವ ಹಂತದಲ್ಲಿದೆ ಎಂಬುದನ್ನು ಆಕೆ ಖುದ್ದು ಗಮ ನಿಸುವಂತಾಗಬೇಕು. ಅಂತಹ ವ್ಯವಸ್ಥೆಗಾಗಿ ಸರಕಾರದಿಂದ ಹಣಕಾಸಿನ ನೆರವನ್ನು ಕೋರಲಾಗಿದ್ದು, ನೀಡುವ ಆಶ್ವಾಸನೆ ಇದೆ ಎಂದರು. ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಬೆಳ್ತಂಗಡಿಯಲ್ಲಿ ಅಡುಗೆ ಮನೆ ಪ್ರವೇಶಕ್ಕೆ ಅವಕಾಶ ಇಲ್ಲದ (ಋತುಮಾಸ) ಹಿನ್ನೆಲೆಯಲ್ಲಿ ಪತಿಯಲ್ಲಿ ಊಟ ಕೇಳಿ ದಾಗ ಕುಡಿತದ ಅಮಲಿನಲ್ಲಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಆ್ಯಸಿಡ್ ದಾಳಿಯಿಂದ ಸಂತ್ರಸ್ತೆಯ ಕೆನ್ನೆ, ಎದೆಭಾಗ, ಕೈ ಭಾಗ ಸುಟ್ಟು ಹೋಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಳಗ್ಗೆ ಸಂತ್ರಸ್ತೆಯನ್ನು ಭೇಟಿ ಮಾಡಿದ್ದೇನೆ. ಅವರಿಗೆ ಸೂಕ್ತ ಪರಿಹಾರ, ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಒದಗಿಸಬೇಕಾ ಗಿದೆ. ಜಿಲ್ಲೆಯಲ್ಲಿ ಈ ಹಿಂದಿನ ಮೂರು ಆ್ಯಸಿಡ್ ದಾಳಿ ಪ್ರಕರಣಗಳಲ್ಲಿಯೂ ಪರಿಹಾರಕ್ಕೆ ಸೂಚಿಸಲಾಗಿದೆ. ಒಬ್ಬ ಸಂತ್ರಸ್ತೆಗೆ ನಾಲ್ಕು ಬಾರಿಯ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗಿದ್ದು, ಐದನೇ ಸರ್ಜರಿಗೆ ಸೂಚಿಸಲಾ ಗಿದೆ. ಆಕೆ ಒಡವೆ ಅಡವಿಟ್ಟು ಶಸ್ತ್ರ ಚಿಕಿತ್ಸೆ ಮಾಡಿಸಿರುವುದಾಗಿ ತಿಳಿಸಿದ್ದು, ಈ ಶಸ್ತ್ರ ಚಿಕಿತ್ಸೆಯನ್ನೂ ಸರಕಾರದಿಂದ ಉಚಿತವಾಗಿ ಮಾಡಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಸೂಚಿಸಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.
Bihar ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ನಾಳೆ ಜೆಡಿಯುಗೆ ಸೇರ್ಪಡೆ
ಪಾಟ್ನಾ, ಮಾ.7: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರು ಶನಿವಾರ ಇಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಯುವ ಶಾಸಕರೊಂದಿಗೆ ಚರ್ಚೆಗಳನ್ನು ನಡೆಸಿದರು. ನಿಶಾಂತ್ ನೂತನ ಸಂಪುಟದಲ್ಲಿ ರಾಜ್ಯದ ಮುಂದಿನ ಉಪಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿದೆ. ಇತ್ತೀಚಿನ ಕೆಲವು ತಿಂಗಳುಗಳ ಹಿಂದಿನವರೆಗೂ ರಾಜಕೀಯಕ್ಕೆ ಸೇರುವುದರಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರದಿದ್ದ ನಿಶಾಂತ್, ತಾನು ರಾಜ್ಯ ರಾಜಕೀಯ ರಂಗವನ್ನು ಪ್ರವೇಶಿಸಲು ಸಿದ್ಧ ಎಂಬ ಸಾಕಷ್ಟು ಸುಳಿವುಗಳನ್ನು ನೀಡಿದ್ದಾರೆ. ಆರ್ಜೆಡಿಯ ತೇಜಸ್ವಿ ಪ್ರಸಾದ್ ಯಾದವ್, ಎಲ್ಜೆಪಿ (ರಾಮ್ ವಿಲಾಸ್) ಯ ಚಿರಾಗ್ ಪಾಸ್ವಾನ್ ಮತ್ತು ಜನ ಸುರಾಜ್ ಪಾರ್ಟಿಯ ಪ್ರಶಾಂತ್ ಕಿಶೋರ್ ಅವರು ಈಗಾಗಲೇ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗಿರುವಾಗ, ನಿಶಾಂತ್ ತನಗಾಗಿ ಸ್ಥಾನವನ್ನು ರೂಪಿಸಿಕೊಳ್ಳಬೇಕಿದೆ. ಇಲ್ಲಿ ಜೆಡಿಯು ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ನಾಯಕರು ನಿಶಾಂತ್ ಗೆ ಪಕ್ಷದಲ್ಲಿ ಪ್ರಮುಖ ಜವಾಬ್ದಾರಿಯನ್ನು ವಹಿಸಲಾಗುವುದು ಎಂದು ತಿಳಿಸಿದರು. ಈ ನಡುವೆ ರಾಜ್ಯ ಜೆಡಿಯು ಕಚೇರಿಯ ಹೊರಗೆ ನಿಶಾಂತ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಪೋಸ್ಟರ್ಗಳು ಕಾಣಿಸಿಕೊಂಡಿವೆ. ನಿಶಾಂತ್ ಮಾ.8ರಂದು ಜೆಡಿಯುಗೆ ಸೇರ್ಪಡೆಗೊಳ್ಳುವ ಮೂಲಕ ವಿಧ್ಯುಕ್ತವಾಗಿ ರಾಜಕೀಯ ಪ್ರವೇಶಿಸಲಿದ್ದಾರೆ. ಸಾಫ್ಟ್ವೇರ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿರುವ ಅವರು ಯಾವಾಗಲೂ ಹೆಚ್ಚು ಪ್ರಚಾರ ಬಯಸಿದವರಲ್ಲ; ಆಧ್ಯಾತ್ಮಿಕತೆಯಲ್ಲಿ ಹೆಚ್ಚಿನ ಒಲವು ಹೊಂದಿದ್ದಾರೆ. ಜೆಡಿಯುಗೆ ನಿಶಾಂತ್ ಅವರ ಪ್ರಸ್ತಾವಿತ ಪ್ರವೇಶವು ವಂಶಪಾರಂಪರ್ಯ ರಾಜಕಾರಣದ ವಿರುದ್ಧ ನಿತೀಶ ಅವರ ಆಕ್ರೋಶಕ್ಕೆ ವ್ಯತಿರಿಕ್ತವಾಗಿದೆ. ಗುರುವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮೂಲಕ ನಿತೀಶ್ ಸಕ್ರಿಯ ರಾಜಕಾರಣಕ್ಕೆ ಪುತ್ರನ ಪ್ರವೇಶವನ್ನು ಸುಗಮಗೊಳಿಸಿದ್ದಾರೆ. ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ನಿಶಾಂತ್ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಕೈಗೊಳ್ಳಲಿದ್ದಾರೆ.
ಸುರತ್ಕಲ್ : ಕೊಲೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಸೆರೆ
ಸುರತ್ಕಲ್ : ವಿವಿಧ ಅಪರಾಧ ಪ್ರಕರಣಗಳು ಸೇರಿ ಲೆಫ್ಟಿ ಸಫ್ವಾನ್ ಗೆ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಭಾಗಿಯಾಗಿ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಸಫ್ವಾನ್ ಹುಸೈನ್ ಸಹಚರನೋರ್ವವನ್ನು ಸಿಸಿಬಿ ಪೊಲೀಸರು ಬಂಧಿಸಿ ಸುರತ್ಕಲ್ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಬಂಧಿತನನ್ನು ಬಳ್ಳಾರಿ ಜಿಲ್ಲೆಯ ಸದ್ಯ ಬೆಂಗಳೂರಿನ ಶ್ಯಾಮ್ ಪುರ ಬೇಕರಿ ಬಳಿಯ ನಿವಾಸಿ ಸುಫಿಯಾನ್ ಹುಸೈನ್ ಯಾನೆ ಕೊಟ್ರೇಶಿ (31) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ಗುಲ್ಬರ್ಗಾ, ಬಳ್ಳಾರಿ , ಮುಂಬೈ ಆಂಧ್ರ ಪ್ರದೇಶದಲ್ಲಿ ತಲೆ ಮರೆಸಿಕೊಂಡು ಬಳಿಕ ಬೆಂಗಳೂರಿನಲ್ಲಿ ಹುಸೈನ್ ಎಂದು ಬದಲಿಸಿ ಆಧಾರ್ ಕಾರ್ಡ್, ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಪಡೆದು ಅಲ್ಲಿನ ಹುಡುಗಿಯನ್ನು ಮದುವೆಯಾಗಿ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಳಿಕ ವೃದ್ಧೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಆಕೆಯನ್ನು ಕೊಲೆಗೈದ ಪ್ರಕರಣದಲ್ಲಿ ಜೈಲು ಸೇರಿದ್ದ. ಈ ವೇಳೆ ತನ್ನ ಹೆಸರನ್ನು ಸೂಫೀಯಾನ್ ಎಂದು ಪರಿಚಯಿಸಿಕೊಂಡು ರೌಡಿ ಶೀಟರ್ ಸಫ್ವಾನ್ ಹುಸೈನ್ ನ ಗ್ಯಾಂಗ್ ಸೇರಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತನ ಬಗ್ಗೆ ಮಾಹಿತಿ ಕಲೆಹಾಕಿಕೊಂಡ ಮಂಗಳೂರು ನಗರ ಸಿಸಿಬಿ ಪೊಲೀಸರು ಬೆಂಗಳೂರಿನ ಡಿ.ಜೆ. ಹಳ್ಳಿಯ ಶ್ಯಾಮ್ ಪುರ್ ರೈಲ್ವೇ ಗೇಟ್ ಬಳಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯ ವಿರುದ್ಧ ಸುರತ್ಕಲ್, ಬಜ್ಪೆ, ಬಳ್ಳಾರಿ, ಹೊಸಪೇಟೆಯಲ್ಲಿ ಕೊಲೆ, ಕಳವು, ಸುಳಿಗೆ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಈತನನ್ನು ಸುರತ್ಕಲ್ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
MS Dhoni: ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶದ ಹಿಂದಿದೆ ನಂಬರ್ '7' ಲಿಂಕ್: ಇಲ್ಲಿದೆ ಅಚ್ಚರಿ ಸಂಖ್ಯಾಶಾಸ್ತ್ರ
MS Dhoni Jersey Number Trend: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಟಿ20 ವಿಶ್ವಕಪ್ 2026ರ ಸೆಮಿಫೈನಲ್ ಪಂದ್ಯದಲ್ಲಿ, ಭಾರತವು ಇಂಗ್ಲೆಂಡ್ ತಂಡವನ್ನು 7 ರನ್ಗಳ ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿತು. ಈ ಪಂದ್ಯ ನೋಡಲು ಕ್ರಿಕೆಟ್ ದಿಗ್ಗಜರು, ಸಿನಿ ತಾರೆಯಾರು, ರಾಯಕೀಯ ನಾಯಕರು ಹಾಗೂ ಉದ್ಯಮಿಗಳ ದಂಡೇ ಆಗಮಿಸಿತ್ತು. ಭಾರತ ತಂಡದ ಮಾಜಿ ನಾಯಕ
Gujarat | ದೇವಸ್ಥಾನದ ಸ್ನಾನಗೃಹದಲ್ಲಿ ವಿದ್ಯಾರ್ಥಿನಿಯರಿಬ್ಬರು ಶವವಾಗಿ ಪತ್ತೆ
ಸೂರತ್, ಮಾ.7: ಇಲ್ಲಿಯ ಸ್ವಾಮಿನಾರಾಯಣ ದೇವಸ್ಥಾನ ಸಂಕೀರ್ಣದ ಸ್ನಾನಗೃಹದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆಯಾಗಿವೆ. ಅವರು ವಿಷಕಾರಿ ಔಷಧಿಗಳ ಚುಚ್ಚುಮದ್ದನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆ ಸೂಚಿಸಿದೆ. ಅವರಿಬ್ಬರೂ ಶುಕ್ರವಾರ ಬೆಳಿಗ್ಗೆ ಕಾಲೇಜಿಗೆಂದು ಮನೆಯಿಂದ ಹೊರಬಿದ್ದಿದ್ದರು. ಆದರೆ ಅಪರಾಹ್ನವಾದರೂ ಮರಳಿರಲಿಲ್ಲ ಎಂದು ಪೋಲಿಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯರ ನಾಪತ್ತೆ ಕುರಿತು ಪೋಲಿಸರಿಗೆ ಮಾಹಿತಿ ನೀಡಿದ ಬಳಿಕ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಅವರ ಮೊಬೈಲ್ ಫೋನ್ ಗಳ ಕೊನೆಯ ಲೊಕೇಷನ್ ಗಳ ಆಧಾರದ ಮೇಲೆ ಅವರು ದೇವಸ್ಥಾನ ಸಂಕೀರ್ಣದಲ್ಲಿದ್ದರು ಎನ್ನುವುದನ್ನು ಪೋಲಿಸರು ಪತ್ತೆ ಹಚ್ಚಿದ್ದರು. ಶನಿವಾರವೂ ಶೋಧ ಕಾರ್ಯಾಚರಣೆ ಮುಂದುವರಿದಾಗ ಸಂಕೀರ್ಣದ ಆವರಣದಲ್ಲಿ ನಿಲ್ಲಿಸಲಾಗಿದ್ದ ವಿದ್ಯಾರ್ಥಿನಿಯರ ಸ್ಕೂಟರ್ಗಳು ಪತ್ತೆಯಾಗಿದ್ದವು. ವಿದ್ಯಾರ್ಥಿನಿಯರು ಸ್ನಾನಗೃಹದತ್ತ ನಡೆದುಕೊಂಡು ಹೋಗುತ್ತಿರುವುದು ದೇವಸ್ಥಾನ ಸಂಕೀರ್ಣದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪೋಲಿಸರು ಸ್ಥಳಕ್ಕೆ ತಲುಪಿದಾಗ ಸ್ನಾನಗೃಹವನ್ನು ಒಳಗಿನಿಂದ ಭದ್ರಪಡಿಸಲಾಗಿತ್ತು. ಪೋಲಿಸರು ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆಯಾಗಿದ್ದು, ಬಳಿಯಲ್ಲಿ ವಿಷಕಾರಿ ಔಷಧಿಗಳ ಮೂರು ಬಾಟ್ಲಿಗಳು ಮತ್ತು ಸಿರಿಂಜ್ ಬಿದ್ದಿದ್ದವು. ವಿದ್ಯಾರ್ಥಿನಿಯರು AI ವೇದಿಕೆಯೊಂದರಲ್ಲಿ ‘ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ’ ಎಂಬ ಕುರಿತು ಹುಡುಕಾಟ ನಡೆಸಿದ್ದರು ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ. ಪೋಲಿಸರು ವಿದ್ಯಾರ್ಥಿನಿಯರ ಮೊಬೈಲ್ ಫೋನ್ಗಳು, ಸಿರಿಂಜ್ ಮತ್ತು ಔಷಧಿಗಳ ಬಾಟ್ಲಿಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ. ದಿಂಡೋಲಿ ಠಾಣೆ ಪೋಲಿಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಮತ್ತು ವಿಧಿವಿಜ್ಞಾನ ಪರೀಕ್ಷೆಗಳು ಪೂರ್ಣಗೊಂಡ ಬಳಿಕ ಸಾವಿಗೆ ನಿಖರವಾದ ಕಾರಣ ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಕ್ಷಗಾನ ಕಲಾವಿದರಿಗೆ ಆರ್ಥಿಕ ರಕ್ಷಣೆ ಬೇಕು: ದಯಾನಂದ ಪೈ
ಮಂಗಳೂರು ವಿವಿಯಲ್ಲಿ ಸಾಧಕರಿಗೆ ಯಕ್ಷಮಂಗಳ ಪ್ರಶಸ್ತಿ ಪ್ರದಾನ
ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಉಡುಪಿ, ಮಾ.7: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ರೋಗಿಗಳ ಸೇವೆಗಾಗಿ ಕೊಡುಗೆಯಾಗಿ ನೀಡಿದ ಎಕ್ಸ್ ರೇ ಯಂತ್ರದ ಉದ್ಘಾಟನೆಯನ್ನು ಸಂಸ್ಥೆಯ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಜಿಲ್ಲಾಸ್ಪತ್ರೆಯಲ್ಲಿ ಎಕ್ಸ್ ರೇ ಸೇವೆಯಲ್ಲಿ ವ್ಯತ್ಯಯದಿಂದ ರೋಗಿಗಳಿಗೆ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಸರ್ಜನ್ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ನೂತನ ಎಕ್ಸ್ ರೇ ಯಂತ್ರವನ್ನು ನೀಡಿದ್ದು, ಇದರಿಂದ ಜಿಲ್ಲಾಸ್ಪತ್ರೆಯಲ್ಲಿ ದಿನನಿತ್ಯ ಚಿಕಿತ್ಸೆಗೆ ಬರುವ ನೂರಾರು ರೋಗಿಗಳಿಗೆ ಸಹಕಾರಿಯಾಗಲಿದೆ ಎಂದರು. ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಅಶೋಕ್ ಮಾತನಾಡಿದರು. ಈ ಸಂದರ್ಭದಲ್ಲಿ ಫೆಡರೇಷನ್ ಉಪಾಧ್ಯಕ್ಷ ದೇವಪ್ಪ ಕಾಂಚನ್, ನಿರ್ದೇಶಕ ರಾದ ರಾಮಚಂದ್ರ ಕುಂದರ್, ಸುರೇಶ್ ಸಾಲ್ಯಾನ್, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸದಸ್ಯರಾದ ರಶ್ಮಿ ಸಿ.ಭಟ್, ಸುಂದರ ಕಲ್ಮಾಡಿ, ಯೋಗೀಶ್ ಸಾಲ್ಯಾನ್, ಟಿ.ಜಿ.ಹೆಗ್ಡೆ, ಹರೀಶ್ ಶೆಟ್ಟಿ, ಎಡ್ಲಿನ್ ಕರ್ಕಡ, ಮೀನುಗಾರ ಮುಖಂಡರಾದ ದಯಾನಂದ ಸುವರ್ಣ, ಜಗನ್ನಾಥ ಕಡೆಕಾರ್, ಸುಭಾಷ್ ಮೆಂಡನ್, ಸತೀಶ್ ಕುಂದರ್, ಉಡುಪಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ವಾಸುದೇವ, ವೈದ್ಯರಾದ ಡಾ. ಆಮ್ನ ಮೊದಲಾದವರು ಉಪಸ್ಥಿತರಿದ್ದರು.
ಲಿಂಗಸುಗೂರು | ಕನಿಷ್ಟ ವೇತನ ಜಾರಿಗೆ ಒತ್ತಾಯಿಸಿ ಶಾಸಕರಿಗೆ ಮನವಿ
ಲಿಂಗಸುಗೂರು: ಲಕ್ಷಾಂತರ ದುರ್ಬಲ ಕಾರ್ಮಿಕ ವರ್ಗಕ್ಕೆ ಆರ್ಥಿಕ ಸ್ವಾವಲಂಬನೆ ಖಾತರಿಪಡಿಸುವ ಕನಿಷ್ಠ ವೇತನವನ್ನು ಜಾರಿಗೆ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಸಿಐಟಿಯು ಕಾರ್ಯಕರ್ತರು ಶನಿವಾರ ಶಾಸಕ ಮಾನಪ್ಪ ವಜ್ಜಲ್ ಅವರಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಅಸಂಘಟಿತ, ಸಣ್ಣ ಹಾಗೂ ಮಧ್ಯಮ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಕಾರ್ಮಿಕರಲ್ಲಿ ಕನಿಷ್ಠ ವೇತನದ ಪುನರ್ವಿಮರ್ಶೆ ಕುರಿತು ಸರ್ಕಾರ ಆರಂಭಿಸಿದ್ದ ಪ್ರಕ್ರಿಯೆ ಭರವಸೆಯನ್ನು ಮೂಡಿಸಿದ್ದರೂ ಅದು ಇನ್ನೂ ನಿರೀಕ್ಷೆಯಲ್ಲಿಯೇ ಉಳಿದಿದೆ ಎಂದು ಕಾರ್ಯಕರ್ತರು ತಿಳಿಸಿದರು. ಕೇಂದ್ರ ಸರ್ಕಾರವು ಕೈಗಾರಿಕಾ ಬಾಂಧವ್ಯ ಸಂಹಿತೆ–2020ರ ಕಲಂ 104(1ಎ) ಅನ್ವಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಕಾರ್ಮಿಕ ಕಾಯ್ದೆಗಳ ಸಂಹಿತೆ ಜಾರಿಗೆ ಬಂದಿದ್ದರೂ ಹೊಸ ಔದ್ಯೋಗಿಕ ನ್ಯಾಯಾಧೀಕರಣ ಹಾಗೂ ಇತರ ಪ್ರಾಧಿಕಾರಗಳನ್ನು ರಚಿಸುವ ತನಕ ಹಾಲಿ ವ್ಯವಸ್ಥೆಯೇ ಮುಂದುವರೆಯಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ನವೆಂಬರ್ 2025ರಲ್ಲಿ ಹೊರಡಿಸಿದ ಅಧಿಸೂಚನೆಗೆ ರಾಷ್ಟ್ರಪತಿಯವರ ಅಂಕಿತ ದೊರೆತಿದ್ದು, ಅದರಿಂದ ಅದಕ್ಕೆ ಕಾನೂನಾತ್ಮಕ ಬಲ ದೊರೆತಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊಸ ಕಾರ್ಮಿಕ ಸಂಹಿತೆಯ ಅನ್ವಯ ರಾಜ್ಯ ನಿಯಮಾವಳಿಗಳನ್ನು ರೂಪಿಸಿ, ಹೊಸ ಔದ್ಯೋಗಿಕ ನ್ಯಾಯಾಧೀಕರಣ ಮತ್ತು ಇತರ ಪ್ರಾಧಿಕಾರಗಳನ್ನು ರಚಿಸುವ ತನಕ ಹಾಲಿ ನ್ಯಾಯಾಧೀಕರಣ ಹಾಗೂ ಕಾರ್ಮಿಕ ಇಲಾಖೆಯ ಪ್ರಾಧಿಕಾರಗಳು ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದರು. ಈ ವಿಚಾರವನ್ನು ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಪ್ರಕಟಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಸಿಐಟಿಯು ಕಾರ್ಯಕರ್ತರು ಶಾಸಕ ಮಾನಪ್ಪ ವಜ್ಜಲ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಮುಹಮ್ಮದ್ ಹನೀಫ್, ನಿಂಗಪ್ಪ ವೀರಾಪುರ, ಅಲ್ಲಾಭಕ್ಷ, ಪೆಂಚಲಯ್ಯ, ಶ್ರೀಧರ್, ಕಮಲ ಮುದಗಲ್, ಆಂಜಿನೆಯ್ಯ, ವೆಂಕಟೇಶ, ಶೈನಾಜ್ಬೇಗಂ, ಸಿದ್ದಮ್ಮ, ಬಾಬಾಜಾನಿ ಸೇರಿ ಇತರರು ಇದ್ದರು.
ಜಗತ್ತಿನಲ್ಲಿ ಸಂಬಟಧ ಕಟ್ಟಿಕೊಟ್ಟದ್ದೇ ಜನಪದ: ಗೊಲ್ಲಹಳ್ಳಿ ಶಿವಪ್ರಸಾದ್
ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ
ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಸಿಎಂ ಸಿದ್ಧರಾಮಯ್ಯ
ಮೈಸೂರು: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ತಾಲ್ಲೂಕು ಪಿಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 1978 ರಲ್ಲಿ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ದಿಸಿದಾಗ ಇಲ್ಲಿನ ಜನರ ಆಶೀರ್ವಾದ ನನಗೆ ದೊರೆತಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಜನರ ಸಹಕಾರ ದೊರೆಯಿತು. ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಈವರೆಗೆ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಪಿಲ್ಲಹಳ್ಳಿ ಜನರ ಪ್ರೀತಿಯಿಂದಾಗಿ ಇಲ್ಲಿನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದೇನೆ. 1978 ರಿಂದ ಇಂದಿನವರೆಗೂ ಹಾಗೂ ಮುಂದೆಯೂ ಈ ಭಾಗದ ಜನರ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು. ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ: ಶ್ರೀ ದಂಡಿಮಾರಮ್ಮ ದೇವಸ್ಥಾನಕ್ಕೆ ಬಾಲ್ಯದಿಂದಲೂ ಭೇಟಿ ನೀಡುತ್ತಿದ್ದ ನೆನಪನ್ನು ಮೆಲುಕು ಹಾಕಿದ ಮುಖ್ಯಮಂತ್ರಿಗಳು, ದೇವರನ್ನು ಕಷ್ಟ ಬಂದಾಗ ನೆನಪಿಸಿಕೊಳ್ಳದೇ, ಎಲ್ಲ ಸಂದರ್ಭದಲ್ಲಿಯೂ ಸ್ಮರಿಸಬೇಕು ಎಂದರು. ‘ದೇವನೊಬ್ಬ ನಾಮ ಹಲವು’ ಎಂದು ನಂಬಿ, ದೇವರು ನಮ್ಮೊಳಗೂ ಸೇರಿದಂತೆ ಎಲ್ಲ ಕಡೆಯೂ ಇದ್ದಾನೆ. ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ. ಯಾವೊಂದು ಧರ್ಮ ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು. ಸಮಾನತೆ ಸ್ಥಾಪಿಸುವುದೇ ಸರ್ಕಾರದ ಯೋಜನೆಗಳ ಗುರಿ: ಸಮಾಜದ ಅಸಮಾನತೆ ಕಡಿಮೆಯಾಗಬೇಕು. ಸಮಾನತೆಯ ಸ್ಥಾಪಿಸುವ ಉದ್ದೇಶವನ್ನು ಸರ್ಕಾರದ ಎಲ್ಲ ಯೋಜನೆಗಳು ಹೊಂದಿವೆ. ಸಮಾಜದ ಎಲ್ಲ ಜಾತಿ ಧರ್ಮ, ವರ್ಗಗಳಿಗೆ ಆರ್ಥಿಕ ಸಾಮಾಜಿಕ ಶಕ್ತಿ ದೊರೆಯಬೇಕು. ಲಿಂಗ ತಾರತಮ್ಯ ಹೋಗಲಾಡಿಸಿ, ಮಹಿಳೆಯರಿಗೆ ಶಕ್ತಿ ತುಂಬಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳು ದೊರೆತಾಗ ಮಾತ್ರ ಸಮಾಜಿಕ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದರು.
ಯಾದಗಿರಿ | ಜಿಲ್ಲಾಡಳಿತ–ಸಾರ್ವಜನಿಕರ ನಡುವೆ ಸಂವಹನ ಕೊರತೆ: ಕರವೇ ಜಿಲ್ಲಾಧ್ಯಕ್ಷ ಭೀಮುನಾಯಕ ಆರೋಪ
ಯಾದಗಿರಿ: ಸಾರ್ವಜನಿಕರೊಂದಿಗೆ ಜಿಲ್ಲಾಡಳಿತದ ಸಂಪರ್ಕ ಮತ್ತು ಸಂವಹನ ಕಡಿಮೆಯಾಗಿರುವುದರಿಂದ ಜನರು ಹಾಗೂ ಅಧಿಕಾರಿಗಳ ನಡುವೆ ದೊಡ್ಡ ಅಂತರ ಉಂಟಾಗಿ ಜಿಲ್ಲೆಯಲ್ಲಿ ಅಕ್ರಮಗಳು ಹಾಗೂ ಅರಾಜಕತೆ ಹೆಚ್ಚಲು ಕಾರಣವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಆರೋಪಿಸಿದರು. ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದೆ ಜಿಲ್ಲಾಡಳಿತವು ಸಂಘ ಸಂಸ್ಥೆಗಳೊಂದಿಗೆ ಸಭೆ ನಡೆಸಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಿತ್ತು. ಆದರೆ ಇತ್ತೀಚೆಗೆ ಇಂತಹ ಸಭೆಗಳು ನಡೆಯದ ಕಾರಣ ಸಂವಹನದ ಕೊರತೆ ಉಂಟಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜನಪ್ರತಿನಿಧಿಗಳೂ ಸಾಥ್ ನೀಡುತ್ತಿರುವಂತೆ ಕಾಣುತ್ತಿದೆ. ಸಂಘ ಸಂಸ್ಥೆಗಳ ಅಭಿಪ್ರಾಯಗಳನ್ನು ಪರಿಗಣಿಸದೇ ದಿವ್ಯ ನಿರ್ಲಕ್ಷ್ಯ ತೋರಿರುವುದರಿಂದ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಟೀಕಿಸಿದರು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ನಗರದಲ್ಲಿ ‘ಸ್ಪಾ’ ಹೆಸರಿನಲ್ಲಿ ಮಸಾಜ್ ಕೇಂದ್ರಗಳ ಮೂಲಕ ಇಸ್ಪೀಟ್ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಸಂಬಂಧಿತ ಇಲಾಖೆಗಳ ಅನುಮತಿ ಇಲ್ಲದೇ ಇಂತಹ ಧಂದೆಗಳು ನಡೆಯುತ್ತಿದ್ದರೂ ಅಧಿಕಾರಿಗಳು ಜಾಣಕುರುಡುತನ ತೋರಿಸುತ್ತಿದ್ದಾರೆ. ಇಂತಹ ಅಕ್ರಮಗಳನ್ನು ತಡೆಯಲು ಜಿಲ್ಲಾಡಳಿತವು ಜನರು ಹಾಗೂ ಸಂಘ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುವುದು ಅಗತ್ಯ ಎಂದು ಹೇಳಿದರು. ಕರವೇ ಕಾರ್ಯಕರ್ತರು ಇಂತಹ ಅಕ್ರಮಗಳ ವಿರುದ್ಧ ದನಿ ಎತ್ತಬೇಕು. ಜೊತೆಗೆ ಸ್ಥಳೀಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ರೂಪಿಸಬೇಕು ಎಂದು ಸಲಹೆ ನೀಡಿದರು. ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಬಲಪಡಿಸಲು ಕಾರ್ಯಕರ್ತರು ಮುಂದಾಗಬೇಕು. ತಾಲ್ಲೂಕು ಹಾಗೂ ಗ್ರಾಮ ಮಟ್ಟದ ಸಮಸ್ಯೆಗಳನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ದು ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ನಾಡು-ನುಡಿ ರಕ್ಷಣೆಗೆ ಸದಾ ಸಿದ್ಧರಿರಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕರೆ : ಮಾರ್ಚ್ 29ರಂದು ಬೆಂಗಳೂರಿನಲ್ಲಿ ಕರವೇ ವತಿಯಿಂದ ಕರ್ನಾಟಕ ಪದ್ಮಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅಲ್ಲದೇ ಜೂನ್ 10ರಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಇವುಗಳಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ತಿಳಿಸಿದರು. ಪದಾಧಿಕಾರಿಗಳ ನೇಮಕ : ಈ ಸಂದರ್ಭದಲ್ಲಿ ದಿಲಿಪ್ ಕುಮಾರ ಸೈದಾಪೂರ (ಜಿಲ್ಲಾ ಉಪಾಧ್ಯಕ್ಷ), ಶರಣಪ್ಪ ತಿಂಥಿಣಿ (ಸಂಚಾಲಕರು), ಭೀಮಾಶಂಕರ ಹತ್ತಿಕುಣಿ (ಯುವ ಘಟಕದ ಜಿಲ್ಲಾಧ್ಯಕ್ಷ), ನಿಂಗಪ್ಪ ಗುಡಗುಡಿ (ರೈತ ಘಟಕದ ಜಿಲ್ಲಾಧ್ಯಕ್ಷ) ಸೇರಿದಂತೆ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಸಂತೋಷ ಕುಮಾರ ನಿರ್ಮಲಕರ್, ಮಲ್ಲು ಮಾಳಿಕೇರಿ, ಅಂಬ್ರೇಷ್ ಹತ್ತಿಮನಿ, ಅಬ್ದುಲ್ ಚಿಗಾನೂರ, ಶರಣಬಸಪ್ಪ ಯಲ್ಹೇರಿ, ವೆಂಕಟೇಶ ನಾಯಕ ಬೈರಿಮಡ್ಡಿ, ಚೆನ್ನಬಸಪ್ಪ ತಳವಾರ, ಅಂಬ್ರೇಷ್ ಕಟ್ಟಿಮನಿ, ವಿಶ್ವರಾಜ ಪಾಟೀಲ್, ಸಿದ್ದಪ್ಪ ಕ್ಯಾಸಪನಳ್ಳಿ, ಭೀಮರಾಯ ರಾಮಸಮುದ್ರ, ಅನಿಲ್ ದಾಸನಕೇರಿ, ವಿಜಯಕುಮಾರ ರಾಠೋಡ, ಬಸವರಾಜ ಜಗನ್ನಾಥ, ಅಶೋಕ ನಾಯಕ, ಹಣಮಂತ ತೇಕರಾಳ, ಸುರೇಶ ಬೆಳಗುಂದಿ, ಮಲ್ಲಿಕಾರ್ಜುನ ಕನ್ನಡಿ, ಮಹೇಶ ಠಾಣಗುಂದಿ, ಸೈದಪ್ಪ ಬಾಂಬೆ, ಸಾಗರ ಹುಲೆರಿ, ಮೌನೇಶ ಮಾಧ್ವಾರ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ವಿವಿಧ ಪದಾಧಿಕಾರಿಗಳು ಇದ್ದರು.
ಶರಣಾಗತಿ ಪ್ರಸ್ತಾವ ತಿರಸ್ಕರಿಸಿದ ಇರಾನ್: ಅಮೆರಿಕದಿಂದ 'ಭೀಕರ ದಾಳಿ'ಯ ಎಚ್ಚರಿಕೆ: ಇಂದಿನ ಪ್ರಮುಖಾಂಶಗಳು
War Update Today: ಮಧ್ಯಪ್ರಾಚ್ಯದಲ್ಲಿ ಯುದ್ಧ ನಿಲ್ಲುವ ಸ್ಥಿತಿ ಇನ್ನೂವರೆಗೂ ಕಂಡು ಬರುತ್ತಿಲ್ಲ. ಇಂದು (ಮಾರ್ಚ್ 7) ಎಂಟನೇ ದಿನವೂ ಯುದ್ಧ ಸಂಘರ್ಷ ಮುಂದುವರಿದಿದೆ. ಯುಎಸ್ ಶರಣಾಗತಿ ಆಗ್ರಹವನ್ನು ಇರಾನ್ ತಿರಸ್ಕರಿಸಿದೆ. ಪರಸ್ಪರ ದೇಶಗಳ ಮಧ್ಯೆ ಮತ್ತೆ ದಾಳಿ ನಡೆಯುವ ಲಕ್ಷಣಗಳು ಕಾಣುತ್ತಿವೆ. ಇನ್ನೂ ಜಾಗತಿಕವಾಗಿ ತೈಲ ಪೂರೈಕೆ, ಆಮದಿನ ಮೇಲೆ ಒತ್ತಡ ಹೆಚ್ಚಾಗಿದೆ. ರಷ್ಯಾದಿಂದ ಭಾರತವು
ಶಾಸಕರ ಆಸ್ತಿ ಖರೀದಿ ಶೀಘ್ರದಲ್ಲೇ ಬಿಚ್ಚಿಡುವೆ : ಹರತಾಳು ಹಾಲಪ್ಪ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಪರೋಕ್ಷವಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ವಾಗ್ದಾಳಿ ನಡೆಸಿದರು. ಈಗ ಎಷ್ಟು ಆಸ್ತಿ ಖರೀದಿ ಮಾಡಿದ್ದಾರೆಂಬುದನ್ನು ಶೀಘ್ರದಲ್ಲೇ ಜನರೆದುರು ಬಿಚ್ಚಿಡುವೆ. ನನ್ನ ಬಳಿ ಅಗತ್ಯ ದಾಖಲೆಗಳಿವೆ ಎಂದು ಗುಡುಗಿದ್ದಾರೆ. ಬಿಜೆಪಿ ಮತ್ತು ಹರತಾಳು ಹಾಲಪ್ಪ ಅಭಿಮಾನಿಗಳಿಂದ ಆಯೋಜಿಸಿದ್ದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪತ್ರಕರ್ತ ಹೆಸರಿನಲ್ಲಿನ ಬ್ಲಾಕ್ಮೇಲ್ ದಂಧೆಗೆ ಕಡಿವಾಣ ಅಗತ್ಯ: ಶಿವಾನಂದ ತಗಡೂರು
ಉಡುಪಿ ಜಿಲ್ಲೆ -ತಾಲೂಕು ಪತ್ರಕರ್ತರ ಸಂಘಗಳ ಪದಗ್ರಹಣ
Bidar | ಮಾದಕ ವಸ್ತು, ಡಿಜಿಟಲ್ ಅಡಿಕ್ಷನ್ ವಿರುದ್ಧ ಸರ್ಕಾರದ ಕ್ರಮ ಸ್ವಾಗತ : ಡಾ.ಅಬ್ದುಲ್ ಖದೀರ್
ಬೀದರ್: ಕರ್ನಾಟಕ ಸರ್ಕಾರವು ರಾಜ್ಯ ಬಜೆಟ್ನಲ್ಲಿ ಮಾದಕ ವಸ್ತುಗಳ ಅಡಿಕ್ಷನ್ ಹಾಗೂ ಡಿಜಿಟಲ್ ಅಡಿಕ್ಷನ್ ವಿರುದ್ಧ ಕೈಗೊಂಡಿರುವ ಕ್ರಮಗಳನ್ನು ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಹಾಗೂ ಜಿಲ್ಲೆಯ ವಿವಿಧ ನಾಗರಿಕ ಸಂಘಟನೆಗಳು ಸ್ವಾಗತಿಸಿವೆ ಎಂದು ಸಮಿತಿಯ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಹೇಳಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಬೀದರ್ ಸನ್ಮಾರ್ಗ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ ಬಳಕೆ ಮತ್ತು ಡಿಜಿಟಲ್ ಅಡಿಕ್ಷನ್ ಇಂದಿನ ಸಮಾಜದಲ್ಲಿ ಗಂಭೀರ ಸಾಮಾಜಿಕ ಹಾಗೂ ಸಾರ್ವಜನಿಕ ಆರೋಗ್ಯದ ಸಮಸ್ಯೆಗಳಾಗಿ ರೂಪುಗೊಂಡಿವೆ ಎಂದು ತಿಳಿಸಿದರು. ಯುವಕರು, ವಿದ್ಯಾರ್ಥಿಗಳು ಹಾಗೂ ಕುಟುಂಬಗಳನ್ನು ವ್ಯಾಪಕವಾಗಿ ಪರಿಣಾಮಗೊಳಿಸುತ್ತಿರುವ ಈ ಸಮಸ್ಯೆಗಳನ್ನು ಸರ್ಕಾರ ಗುರುತಿಸಿ ಕ್ರಮ ಕೈಗೊಂಡಿರುವುದು ಸಮಯೋಚಿತ ಹಾಗೂ ಶ್ಲಾಘನೀಯ ಹೆಜ್ಜೆಯಾಗಿದೆ. ಯುವಜನತೆಯಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ವಿಶೇಷವಾಗಿ ಕೃತಕ (ಸಿಂಥೆಟಿಕ್) ಮಾದಕ ವಸ್ತುಗಳು ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಯೂ ಸುಲಭವಾಗಿ ಲಭ್ಯವಾಗುತ್ತಿರುವುದು ಪೋಷಕರು ಹಾಗೂ ಶಿಕ್ಷಣ ತಜ್ಞರಲ್ಲಿ ಚಿಂತೆ ಹೆಚ್ಚಿಸಿದೆ ಎಂದು ಹೇಳಿದರು. ಮೊಬೈಲ್ ಫೋನ್, ಸಾಮಾಜಿಕ ಜಾಲತಾಣಗಳು ಹಾಗೂ ಆನ್ಲೈನ್ ಗೇಮಿಂಗ್ಗಳ ಅತಿಯಾದ ಬಳಕೆಯಿಂದ ಉಂಟಾಗುವ ಡಿಜಿಟಲ್ ಅಡಿಕ್ಷನ್ ಮಕ್ಕಳ ಮತ್ತು ಕಿಶೋರರ ನಡುವೆ ವೇಗವಾಗಿ ಹೆಚ್ಚುತ್ತಿರುವ ಸಮಸ್ಯೆಯಾಗಿದೆ. ದೀರ್ಘಕಾಲ ಪರದೆ ಬಳಕೆಯಿಂದ ಗಮನದ ಕೊರತೆ, ಆತಂಕ, ನಿದ್ರಾಹೀನತೆ, ಕಣ್ಣು ನೋವು, ತಲೆನೋವು ಹಾಗೂ ಸಾಮಾಜಿಕ ದೂರವಾಗುವಿಕೆ ಮುಂತಾದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದರು. ಶಾಲೆ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಡೆಯುವ ಮಾದಕ ವಸ್ತುಗಳ ಮಾರಾಟ ಮತ್ತು ಸಂಬಂಧಿತ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸಿವೆ. ವಿದ್ಯಾರ್ಥಿಗಳನ್ನು ರಕ್ಷಿಸಲು ಕಠಿಣ ಕಾನೂನು ಕ್ರಮಗಳು ಹಾಗೂ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿದರು. ಸಮಿತಿಯ ಕಾರ್ಯದರ್ಶಿ ಅಶೋಕ ವಡಗಾವೆ ಮಾತನಾಡಿ, ಯುವಜನತೆಯನ್ನು ಮಾದಕ ವಸ್ತುಗಳ ದುರುಪಯೋಗ ಮತ್ತು ಅತಿಯಾದ ಡಿಜಿಟಲ್ ಬಳಕೆಯಿಂದ ರಕ್ಷಿಸುವುದು ಕರ್ನಾಟಕದ ಭವಿಷ್ಯವನ್ನು ಸುರಕ್ಷಿತಗೊಳಿಸಲು ಅತ್ಯಂತ ಮುಖ್ಯವಾಗಿದೆ. ಈ ಸಂಬಂಧ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ಹಾಗೂ ಸಮುದಾಯ ಮಟ್ಟದ ಚಟುವಟಿಕೆಗಳಲ್ಲಿ ಸರ್ಕಾರದೊಂದಿಗೆ ಸಹಕರಿಸಲು ಸಂಘಟನೆಗಳು ಸಿದ್ಧವಾಗಿವೆ ಎಂದು ತಿಳಿಸಿದರು. ಸಮಿತಿಯ ಉಪಾಧ್ಯಕ್ಷ ಡಾ. ರಾಜಶೇಖರ್ ಸೇಡಂಕರ್ ಮಾತನಾಡಿ, ವ್ಯಸನಮುಕ್ತ, ಭಿಕ್ಷಾಟನೆ ಮುಕ್ತ ಮತ್ತು ಸರಳ ವಿವಾಹ ಪ್ರೋತ್ಸಾಹಿಸುವ ಬೀದರ್ ಜಿಲ್ಲೆಯನ್ನಾಗಿ ರೂಪಿಸುವುದು ಸಮಿತಿಯ ಗುರಿಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಬಸವರಾಜ್ ಮಾಳಗೆ, ಸುರೇಶ್ ಚನಶೆಟ್ಟಿ, ಶಂಭುಲಿಂಗ್ ವಾಲ್ದೊಡ್ಡಿ ಸೇರಿದಂತೆ ಇತರರು ಇದ್ದರು.
ಉಡುಪಿ ಜಿಲ್ಲೆಯ ವಿವಿಧೆಡೆ ಖಾದಿ ಉಡುಪುಗಳ ತಾತ್ಕಾಲಿಕ ಮಾರಾಟ ಮಳಿಗೆ ಪ್ರಾರಂಭ
ಉಡುಪಿ, ಮಾ.7: ರಾಜ್ಯ ಸರಕಾರ ಖಾದಿ ಉಡುಪುಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಸಂಸ್ಥೆಗಳು, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳ ಅಧಿಕಾರಿ ಹಾಗೂ ನೌಕರರು ಸ್ವಯಂಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಬಟ್ಟೆ ಧರಿಸುವಂತೆ ಹಾಗೂ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದೆ. ಅದರಂತೆ ಸರಕಾರಿ ನೌಕರರಿಗೆ ತಕ್ಷಣದ ಖಾದಿ ಬಟ್ಟೆಗಳನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಾರ್ಚ್ 9ರಿಂದ 14ರವರೆಗೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಜಿಲ್ಲೆಯ ಈ ಕೆಳಕಂಡ ಸ್ಥಳಗಳಲ್ಲಿ ರೂರಲ್ ರಿಸೋರ್ಸಸ್ ಡೆವಲಪ್ಮೆಂಟ್ ಅಸೋಸಿಯೇಷನ್ ಬೆಂಗಳೂರು ಸಂಸ್ಥೆಯ ವತಿಯಿಂದ ತಾತ್ಕಾಲಿಕ ಮಳಿಗೆ ಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸಲು ವ್ಯವಸ್ಥೆ ಮಾಡಲಾಗಿದೆ. ಮಾ.9 ಮತ್ತು 10 ರಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಮಾ.11ರಂದು ಬ್ರಹ್ಮಾವರ ಬಿ.ಆರ್.ಸಿ ಕಚೇರಿ ಆವರಣ, ಮಾ.12 ರಂದು ಕುಂದಾಪುರ ಸರ್ಕಾರಿ ನೌಕರರ ಭವನ, ಮಾ.13 ರಂದು ಕಾರ್ಕಳ ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ಕಾರಿ ನೌಕರರ ಭವನ ಹಾಗೂ ಮಾ.14ರಂದು ಬೈಂದೂರು ತಾಲೂಕು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಮಳಿಗೆ ಗಳನ್ನು ತೆರೆಯಲಾಗುತ್ತಿದೆ. ತಾತ್ಕಾಲಿಕ ವ್ಯವಸ್ಥೆಯ ಉಪಯೋಗ ಪಡೆದು, ಖಾದಿ ಉದ್ದಿಮೆಯನ್ನು ಉತ್ತೇಜಿಸು ವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
Bidar | ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸಲು ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಿ: ಡಾ. ಲಕ್ಷ್ಮಣ ದಸ್ತಿ
ಬೀದರ್: ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಕಾರಂಜಾ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಭೂಮಿ ನೀಡಿದ ರೈತ ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸಲು ಹಾಗೂ ಆದಷ್ಟು ಶೀಘ್ರ ಮುಖ್ಯಮಂತ್ರಿಗಳ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗುವಂತೆ ಹಿರಿಯ ಹೋರಾಟಗಾರ ಡಾ.ಲಕ್ಷ್ಮಣ ದಸ್ತಿ ಅವರ ನೇತೃತ್ವದ ಕಾರಂಜಾ ಸಂತ್ರಸ್ತರ ತಂಡ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಆಗ್ರಹಿಸಿದೆ. ಕಾರಂಜಾ ನೀರಾವರಿ ಯೋಜನೆಗೆ ಭೂಮಿ ನೀಡಿದ ರೈತರು ದೀರ್ಘಕಾಲದಿಂದ ಸಮರ್ಪಕ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದು, ಮಾನವೀಯತೆ ಮತ್ತು ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಸೂಕ್ತ ಪರಿಹಾರ ನೀಡಬೇಕು ಎಂಬುದು ಸಂತ್ರಸ್ತರ ಪ್ರಮುಖ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾರಂಜಾ ಸಂತ್ರಸ್ತರ ಹೋರಾಟ ಸಮಿತಿಯು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದ ವೇಳೆ ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸಿ ಉನ್ನತ ಮಟ್ಟದ ತಾಂತ್ರಿಕ ಸಮಿತಿಯನ್ನು ರಚಿಸಲು ಆದೇಶಿಸಿದ್ದರು. ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ರಚನೆಯಾದ ಈ ಸಮಿತಿಯು ಸುಮಾರು ಎರಡು ತಿಂಗಳ ಹಿಂದೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ ಈ ವರದಿಯ ಮೇಲೆ ಇನ್ನೂ ಕ್ರಮ ಕೈಗೊಳ್ಳದಿರುವುದರಿಂದ ಸಂತ್ರಸ್ತರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಹಿರಿಯ ಹೋರಾಟಗಾರರು ಹಾಗೂ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಡಾ. ಲಕ್ಷ್ಮಣ ದಸ್ತಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಸಚಿವ ರಹೀಂ ಖಾನ್ ಅವರನ್ನು ಭೇಟಿ ಮಾಡಿ ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಈ ವೇಳೆ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಲು ವಿಶೇಷ ಪ್ರಯತ್ನ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸಚಿವ ರಹೀಂ ಖಾನ್, ಕಾರಂಜಾ ಸಂತ್ರಸ್ತರ ಮುಳುಗಡೆ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಹೊಚಕನಳ್ಳಿ, ವಿನಯ್ ಮಾಳಗೆ, ರೋಹನಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೀದಿನಾಯಿಗಳ ಆಶ್ರಯ ತಾಣಕ್ಕೆ ಜಿಲ್ಲೆಯ 6 ಕಡೆ ಜಾಗದ ಗುರುತು: ಉಡುಪಿ ಡಿಸಿ ಸ್ವರೂಪಾ ಟಿ.ಕೆ.
‘ಸುಪ್ರೀಂ ಕೋರ್ಟ್ನ ಆದೇಶ ಮಾನವೀಯ ನೆಲೆಯಲ್ಲಿ ಅನುಷ್ಠಾನ’
Bidar | ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಭಾಲ್ಕಿಯಲ್ಲಿ ಬೃಹತ್ ಪ್ರತಿಭಟನೆ
ಬೀದರ್: ಪರಿಶಿಷ್ಟ ಜಾತಿಯ ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಭಾಲ್ಕಿಯಲ್ಲಿ ಎಸ್ಸಿ ಬಲಗೈ ಒಳ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರದ ಭಾಲ್ಕೆಶ್ವರ್ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆ ಬೊಮ್ಮಗೊಂಡೇಶ್ವರ ವೃತ್ತ, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ ಹಾಗೂ ಬಸವೇಶ್ವರ ವೃತ್ತದ ಮೂಲಕ ಸಾಗಿಬಂದು ಮತ್ತೆ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಗೊಂಡಿತು. ಬಳಿಕ ಪ್ರತಿಭಟನಾಕಾರರು ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ವಿಠಲದಾಸ್ ಪ್ಯಾಗೆ, ಬಲಗೈ ಸಮಾಜ ಯಾರ ವಿರುದ್ಧವೂ ಕೆಲಸ ಮಾಡಿಲ್ಲ. ಎಲ್ಲರಿಗೂ ನ್ಯಾಯ ಸಿಗುವಂತೆ ಕೆಲಸ ಮಾಡುತ್ತಿದ್ದೇವೆ. ಆದರೆ ಎಡಗೈ ಸಮುದಾಯದವರು ನಮ್ಮನ್ನು ವೈರಿಗಳಂತೆ ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದರು. ಬಲಗೈ ಸಮುದಾಯದವರು ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಎಡಗೈ ಸಮುದಾಯದವರು ಉದ್ದೇಶಪೂರ್ವಕವಾಗಿ ಆರೋಪಿಸುತ್ತಿದ್ದಾರೆ. ಇದನ್ನು ನಾವು ಒಪ್ಪುವುದಿಲ್ಲ. ಆದರೆ ಒಳ ಮೀಸಲಾತಿ ಜಾರಿಯಲ್ಲಿ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಈ ರೀತಿಯ ರೋಸ್ಟರ್ ಪದ್ಧತಿಯನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು. ಒಳ ಮೀಸಲಾತಿ ಜಾರಿಯಾದ ಬಳಿಕ ರೋಸ್ಟರ್ ಬಿಂದುಗಳ ನಿಗದಿಯಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಪ್ರವರ್ಗ-ಎ ಅನ್ನು 1ನೇ ಸ್ಥಾನದಲ್ಲಿ, ಪ್ರವರ್ಗ-ಬಿ ಅನ್ನು 9ನೇ ಸ್ಥಾನದಲ್ಲಿ ಹಾಗೂ ಪ್ರವರ್ಗ-ಸಿ ಅನ್ನು 15ನೇ ಸ್ಥಾನದಲ್ಲಿ ನಿಗದಿಪಡಿಸಿರುವುದು ಪ್ರಾಯೋಗಿಕವಾಗಿ ಸಮಾನ ಅವಕಾಶ ಒದಗಿಸುತ್ತದೆಯೇ ಎಂಬ ಪ್ರಶ್ನೆ ಮೂಡಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ರೋಸ್ಟರ್ ಬಿಂದುಗಳನ್ನು ಮರುಪರಿಶೀಲನೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ವಿಲಾಸ್ ಮೊರೆ, ವಿಶ್ವನಾಥ್ ಮೊರೆ, ಪ್ರಕಾಶ್ ಭಾವಿಕಟ್ಟೆ, ಕಾಶೀನಾಥ್ ಚೆಲ್ವಾ, ಅಶೋಕ್ ಗಾಯಕವಾಡ್, ಮಾರುತಿ ಭಾವಿಕಟ್ಟೆ, ಕೈಲಾಶ್ ಭಾವಿಕಟ್ಟೆ, ಓಂಕಾರ್ ಮೊರೆ, ರಾಜಕುಮಾರ್ ಮೊರೆ, ಗಗನ್ ಫುಲೆ, ಕಪಿಲ್ ಗೋಡಬೋಲೆ, ನಾಗಾರ್ಜುನ್, ಪ್ರಕಾಶ್ ರಾವಣ, ಲೊಕೇಶ್ ಕಾಂಬ್ಳೆ, ಸಂಜು ಭಾವಿಕಟ್ಟಿ, ಶಿವಕುಮಾರ್ ಮೇತ್ರೆ, ಪ್ರಶಾಂತ್ ಕೋಟಗೇರಾ, ಪ್ರವೀಣ್ ಮೊರೆ, ರಾಜಕುಮಾರ್ ಬೌದ್ದೆ, ಸುರೇಶ್ ಕಾಣೆಕರ್, ಮಹೇಶ್ ಗೋರನಾಳಕರ್ ಹಾಗೂ ಸಮತಾ ಸೈನಿಕ ದಳದವರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.
T20 World Cup- ಭಾರತ Vs ನ್ಯೂಜಿಲೆಂಡ್ ಫೈನಲ್ ಪೈಪೋಟಿಗೂ ಮುನ್ನ ನಡೆಯಲಿದೆ ಆಕರ್ಷಕ ಸಮಾರೋಪ; ಇಲ್ಲಿದೆ ವಿವರ
ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾರ್ಚ್ 8, ಭಾನುವಾರದಂದು ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಅದ್ದೂರಿ ಸಮಾರೋಪ ಸಮಾರಂಭ ನಡೆಯಲಿದೆ. ಒಂದು ತಿಂಗಳ ಕಾಲ ನಡೆದ ಕ್ರಿಕೆಟ್ ಹಬ್ಬಕ್ಕೆ ತೆರೆ ಬೀಳುವ ಈ ಕ್ಷಣದಲ್ಲಿ ಭಾರತ ಮತ್ತು ಶ್ರೀಲಂಕಾದ ಸಂಸ್ಕೃತಿಯನ್ನು ಬಿಂಬಿಸುವ ನೃತ್ಯ ರೂಪಕಗಳು ಅನಾವರಣಗೊಳ್ಳಲಿವೆ. ಜೊತೆಗೆ ಜಾಗತಿಕ ಮಟ್ಟದ ಕಲಾವಿದರಾದ ರಿಕಿ ಮಾರ್ಟಿನ್, ಸುಖ್ಬೀರ್ ಮತ್ತು ಫಲ್ಗುಣಿ ಪಾಠಕ್ ಪ್ರದರ್ಶನ ನೀಡಲಿದ್ದಾರೆ.
ಸಕಲೇಶಪುರ: ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು
ಸಕಲೇಶಪುರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಓಂನಗರದಲ್ಲಿ ಶನಿವಾರ ಸಂಭವಿಸಿದೆ. ಮೃತರನ್ನು ಭರತ್ (18) ಮತ್ತು ಮಿಥುನ್ (19) ಎಂದು ಗುರುತಿಸಲಾಗಿದೆ. ಇವರು ಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮಿಥುನ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಭರತ್ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದನು. ನಾಲ್ವರು ಸ್ನೇಹಿತರು ಸಮೀಪದ ಪ್ರಕಾಶ್ ಎಂಬವರ ಕಾಫಿ ತೋಟದಲ್ಲಿರುವ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಭರತ್ ಮತ್ತು ಮಿಥುನ್ ಕೆರೆಯೊಳಗಿನ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ. ಇಬ್ಬರು ಮುಳುಗುತ್ತಿರುವುದನ್ನು ಕಂಡ ಉಳಿದ ಇಬ್ಬರು ವಿದ್ಯಾರ್ಥಿಗಳು ಭಯಗೊಂಡು ಕೆರೆಯಿಂದ ಹೊರಬಂದಿದ್ದಾರೆ. ನಂತರ ಸ್ಥಳೀಯರು ಕೆರೆಯಲ್ಲಿ ಶೋಧ ಕಾರ್ಯ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದರು. ಘಟನೆಯ ಮಾಹಿತಿ ತಿಳಿದು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ
ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯು ಎರಡು ವರ್ಷಗಳ ಬಳಿಕ ವಂದೇ ಭಾರತ್ ರೈಲಿನ ಬೋಗಿಗಳನ್ನು ಹೆಚ್ಚಳ ಮಾಡಿದೆ. ಅದರೊಂದಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಹಾಲಿ ಮಾರ್ಗದಲ್ಲಿ ಲೋಕಾರ್ಪಣೆ ಮಾಡಲಾಗಿದೆ. ಇದು 42ನೇ ವಂದೇ ಭಾರತ್ ರೈಲಾಗಿದ್ದು, ಒಟ್ಟು 20 ಬೋಗಿಗಳೊಂದಿಗೆ ಸಂಪರ್ಕ ಸೇವೆ ಆರಂಭಿಸಲು ಸಜ್ಜಾಗಿದೆ. ಯಾವ ಮಾರ್ಗದಲ್ಲಿ ಈ ರೈಲು ಕಾರ್ಯಾಚರಣೆ ಮಾಡಲಿದೆ, ವೇಳಾಪಟ್ಟಿ
ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಬರೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ ಎಂದು ಸಿದ್ದರಾಮಯ್ಯ ಕಿಡಿ
ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡುವ ಮೂಲಕ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಬರೆ ಹಾಕಿದೆ. ಇದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತಾಗಿ ಅವರು ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಮಾತುಗಳಿಗೆ ಮೂಕರಂತೆ ತಲೆಯಾಡಿಸುತ್ತಿದ್ದಾರೆ. ಈ ಮೂಲಕ ಭಾರತದ ವ್ಯೂಹಾತ್ಮಕ ಸ್ವಾತಂತ್ರ್ಯವನ್ನು ಬೇರೊಂದು ರಾಷ್ಟ್ರದ ಪಾದದಡಿಯಲ್ಲಿ ಇಟ್ಟಿದ್ದಾರೆ ಎಂದು ಅವರು ಆರೋಪ ಮಾಡಿದ್ದಾರೆ. ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ
ಮಂಗಳೂರು: ಕರ್ನಾಟಕ ಕರಾವಳಿಗೆ ಬೆಂಗಳೂರು ಭಾಗದಿಂದ ರೈಲು ಸೇವೆ ಸುಧಾರಿಸುವಲ್ಲಿ ರೈಲ್ವೆ ಇಲಾಖೆ ಮುಂದಾಗಿದ್ದರ ಬೆನ್ನಲ್ಲೆ ತಡರಾತ್ರಿ ವಿಮಾನಯಾನ ಸಂಚಾರವು ಲಭಿಸುತ್ತಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುವವರಿಗೆ, ಇಲ್ಲವೇ ವಿದೇಶಕ್ಕೆ ತೆರಳುವ ಕರಾವಳಿ ಮಂದಿಗೆ ಬಂಪರ್ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರವೇ ಬೆಂಗಳೂರು-ಮಂಗಳೂರು ಮಧ್ಯೆ ತಡರಾತ್ರಿಯು ನಿತ್ಯ ವಿಮಾನ ಸೇವೆ ಆರಂಭವಾಗಲಿದೆ. ಹೌದು, ಇದೇ ತಿಂಗಳು ಮಾರ್ಚ್ 6

23 C