ಬಂಗಾಳಕೊಲ್ಲಿ ವಾಯುಭಾರ ಕುಸಿತ ಪರಿಣಾಮ: ಈ ಜಿಲ್ಲೆಗಳಲ್ಲಿ ಮಳೆ, ಕರ್ನಾಟಕದಲ್ಲಿ ಹೆಚ್ಚಾಯ್ತು ಚಳಿ
ಬಂಗಾಳ ಕೊಲ್ಲಿಯಲ್ಲಿ ಭಾರೀ ವಾಯುಭಾರ ಕುಸಿತವುಂಟಾಗಿದ್ದು, ಕರ್ನಾಟಕ ಹಾಗೂ ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಮೇಲೆ ಪರಿಣಾಮ ಬೀರಿದೆ. ಆದರೆ, ವಾಯುಭಾರ ಕುಸಿತವು ಚಂಡಮಾರುತ ಸ್ವರೂಪವನ್ನು ಪಡೆದುಕೊಂಡಿಲ್ಲ. ವಾಯುಭಾರ ಕುಸಿತದ ಪ್ರಭಾವವು ತೀವ್ರವಾಗಿದೆ. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಸೋಮವಾರ ಸಂಜೆ ಮಳೆಯಾಗಿದ್ದು, ಮಂಗಳವಾರವೂ ಮಳೆ ಆಗುವ ನಿರೀಕ್ಷೆ
ನಾಟಿಕೋಳಿ ಮೊಟ್ಟೆಗೆ ಡಿಮ್ಯಾಂಡ್; ಮೊಟ್ಟೆಯೊಂದಕ್ಕೆ 15 ರಿಂದ 20 ರೂ. ಆದರೂ ಖರೀದಿಸಲು ಬಿಡದ ಜನ
ಆರೋಗ್ಯಕ್ಕೆ ಉತ್ತಮವೆಂದು ಪರಿಗಣಿಸಲಾಗುವ ನಾಟಿಕೋಳಿ ಮೊಟ್ಟೆಗೆ ಸದ್ಯ ಮಾರುಕಟ್ಟೆಗಳಲ್ಲಿ ಭಾರಿ ಬೇಡಿಕೆ ಹೆಚ್ಚಿದೆ. ಫಾರಂ ಕೋಳಿ ಮೊಟ್ಟೆಗಿಂತ ಎರಡರಿಂದ ಎರಡೂವರೆ ಪಟ್ಟು ಹೆಚ್ಚು ದರಕ್ಕೆ ಮಾರಾಟವಾಗುತ್ತಿದ್ದರೂ ಸಹ ಜಜನರು ಅದನ್ನು ಕೊಂಡುಕೊಳ್ಳುವುದನ್ನು ಬಿಟ್ಟಿಲ್ಲ. ಮೂಳೆಗಳ ಬಲವರ್ಧನೆಗೆ ನಾಟಿಕೋಳಿ ಮೊಟ್ಟೆ ಉತ್ತಮವೆಂದು ವೈದ್ಯರು ಸೂಚಿಸುತ್ತಿದ್ದು, ಔಷಧ ರೂಪದಲ್ಲೂ ಇದರ ಬಳಕೆ ಹೆಚ್ಚಾಗಿದೆ. ಫಾರಂ ಕೋಳಿ ಮೊಟ್ಟೆ ದರವೂ ಸ್ಥಿರತೆ ಸಾಧಿಸಿದೆ.
Vande Bharat Sleeper: ಕನ್ಫರ್ಮ್ ಟಿಕೆಟ್ ಇದ್ದವರಿಗಷ್ಟೇ ಪ್ರಯಾಣ, 400 ಕಿಮೀಗೆ ಕನಿಷ್ಠ ದರ, ಟಿಕೆಟ್ ದರಗಳು
ನವದೆಹಲಿ: ಭಾರತದ ಅತೀ ವೇಗದ ರೈಲು, ಬಹುನಿರೀಕ್ಷೆಯ ವಂದೇ ಭಾರತ್ ಸ್ಲೀಪರ್ ಎಕ್ಸ್ಪ್ರೆಸ್ ರೈಲು ಇದೇ ಜನವರಿ 17ರಂದು ಕಾರ್ಯಾಚರಣೆ ಆರಂಭಿಸಲಿದೆ. ಪ್ರಧಾನಿ ಮೋದಿಯವರು ಸಂಚಾರಕ್ಕೆ ಹಸಿರುವ ನಿಶಾನೆ ತೋರಿಸಲಿದ್ದಾರೆ. 400 ಕಿಲೋ ಮೀಟರ್ ದೂರದವರೆಗೂಕನಿಷ್ಠ ದರ ವಿಧಿಸಲಾಗಿದೆ. ವೇಟಿಂಗ್ ಲಿಸ್ಟ್, ಆರ್ಎಸಿ ಇದರಲ್ಲಿ ಲಭ್ಯವಿಲ್ಲ. ಇತರ ರೈಲುಗಳಿಗಿಂತ ಈ ರೈಲಿನ ಟಿಕೆಟ್ ದರ ಹೆಚ್ಚು ಎಂದು
ಭೂ-ಗರ್ಭದಲ್ಲಿಉಕ್ಕಿ ಹರಿಯುತ್ತಿದೆ ಉಪ್ಪು ನೀರು! ವಿಜಯಪುರದ ಹಲವು ಗ್ರಾಮಗಳ ನೀರಲ್ಲಿ ಕ್ಲೋರೈಡ್ ಅಂಶ ಪತ್ತೆ
ವಿಜಯಪುರ ಜಿಲ್ಲೆಯ ಹಲವು ಗ್ರಾಮಗಳ ಬೋರ್ವೆಲ್ ನೀರಿನಲ್ಲಿಅತಿಯಾದ ಕ್ಲೋರೈಡ್ ಅಂಶ ಪತ್ತೆಯಾಗಿದೆ. ಈ ನೀರು ಕುಡಿಯಲು ಹಾಗೂ ಕೃಷಿಗೆ ಯೋಗ್ಯವಲ್ಲ ಎಂದು ವರದಿ ಬಹಿರಂಗಪಡಿಸಿದೆ. ಇದರಿಂದ ರೈತರ ಶ್ರಮ ವ್ಯರ್ಥವಾಗುತ್ತಿದ್ದು, ಆರೋಗ್ಯ ಮತ್ತು ಭೂಮಿಯ ಫಲವತ್ತತೆಗೂ ಕಂಟಕ ಎದುರಾಗಿದೆ.
ಉಡುಪಿ: ಮನೆಬಿಟ್ಟು ಬಂದ ಹಳೆಬೀಡಿನ ಬಾಲಕಿಯ ರಕ್ಷಣೆ
ಉಡುಪಿ: ಅಸಹಾಯಕ ಸ್ಥಿತಿಯಲ್ಲಿದ್ದ ಅಪ್ರಾಪ್ತ ಬಾಲಕಿಯನ್ನು ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಕ್ಷಿಸಿರುವ ಬಗ್ಗೆ ವರದಿಯಾಗಿದೆ. ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಾರ್ಥಿಯಾಗಿ ತೆರಳಿದ್ದ, ಆದಿಉಡುಪಿಯ ಪ್ರೇಮ ರಾಮಚಂದ್ರ ಎಂಬವರಿಗೆ ಬಾಲಕಿ ಕಂಡು ಬಂದಿದ್ದು, ಆಕೆಯ ಚಲನ ವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬಾಲಕಿ ಮನನೊಂದು ಮನೆ ಬಿಟ್ಟು ಬಂದಿರುವುದಾಗಿ ತಿಳಿದುಬಂದಿದೆ. ತಕ್ಷಣ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಿದ್ದು, ಒಳಕಾಡು ನಗರ ಪೋಲಿಸ್ ಠಾಣೆಗೆ ಮಾಹಿತಿ ನೀಡಿ, ಬಾಲಕಿಯನ್ನು ರಕ್ಷಿಸಿ, ದೊಡ್ಡಣಗುಡ್ಡೆಯ ಬಾಲಕಿಯರ ಬಾಲ ಮಂದಿರದಲ್ಲಿ ಪುರ್ನವಸತಿ ಕಲ್ಪಿಸಲಾಗಿದೆ. ಈ ಕಾರ್ಯಾಚರಣೆಗೆ ಹರೀಶ್ ಪೂಜಾರಿ ಉದ್ಯಾವರ ಸಹಕರಿಸಿದರು. ಬಾಲಕಿ ನಾಪತ್ತೆಯಾದ ಬಗ್ಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಳೇಬೀಡು ಪೋಲಿಸರು ಬಾಲಕಿ ಉಡುಪಿಯಲ್ಲಿ ಪತ್ತೆಯಾಗಿರುವ ಮಾಹಿತಿ ತಿಳಿದು ಬಾಲಕಿಯ ತಾಯಿಯೊಂದಿಗೆ ಬಂದಿದ್ದಾರೆ. ಅದರಂತೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಬಾಲಕಿಯನ್ನು ಹಳೇಬೀಡಿನ ಪೋಲಿಸರಿಗೆ ಒಪ್ಪಿಸಿದರು. ತಾಯಿಯೊಂದಿಗೆ ತೆರಳಲು ಒಪ್ಪದ ಕಾರಣದಿಂದ ಬಾಲಕಿಗೆ ಚಿಕ್ಕಮಗಳೂರು ಬಾಲಕಿಯರ ಬಾಲ ಮಂದಿರದಲ್ಲಿ ಪುರ್ನವಸತಿ ಕಲ್ಪಿಸುವ ಪ್ರಕ್ರಿಯೆ ಮುಂದುವರಿದಿದೆ.
Mulki | ಹಣಕ್ಕೆ ಬೇಡಿಕೆಯಿಟ್ಟು ಕೃಷಿಕನ ಮೇಲೆ ದಾಳಿ: ಆರೋಪಿಗಳ ಮೇಲೆ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು
ಮುಲ್ಕಿ: ಇಲ್ಲಿನ ಅಂಗಾರಗುಡ್ಡೆಯ ಕೃಷಿಕರೊಬ್ಬರ ಮೇಲೆ ಹಣ ಸುಲಿಗೆ ಮಾಡುವ ಸಲುವಾಗಿ ದಾಳಿ ಮಾಡಿದ್ದ ಪ್ರಕರಣದ ಮೂವರು ಆರೋಪಿಗಳ ವಿರುದ್ಧ ಮುಲ್ಕಿ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಲ್ಕಿ ಕೆರೆಕಾಡು ನಿವಾಸಿ ಶ್ಯಾಮ್ ಸುಂದರ್ ಶೆಟ್ಟಿ, ಆಕಾಶ್ ಪೂಜಾರಿ ಹಾಗೂ ಸುವೀನ್ ಎಂಬವರ ಮೇಲೆ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಸುವೀನ್ ಮೇಲೆ 1 ಕೊಲೆ ಪ್ರಕರಣ, 2 ಕೊಲೆಯತ್ನಗಳು, 1 ಡಕಾಯಿತಿ ಮತ್ತು ಗಾಂಜಾ ಸಂಬಂಧ ಒಂದು ಪ್ರಕರಣಗಳು ದಾಖಲಾಗಿತ್ತು. ಮತ್ತೋರ್ವ ಆರೋಪಿ ಆಕಾಶ್ ವಿರುದ್ಧ ಕೊಲೆಯತ್ನ, ಜಾತಿ ನಿಂದನೆ, ಸರಕಾರಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಗಳು ದಾಖಲಾಗಿತ್ತು. ಇವರ ಮೇಲಿನ ಹಲವು ಪ್ರಕರಣ ಬಾಕಿ ಇದ್ದವು. ಆರೋಪಿಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುವ ಕಾರಣ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳ ಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಜ.1ರಂದು ಆರೋಪಿಗಳು ಕಂಬಳದ ಕೋಣಗಳ ಮಾಲಕರಾಗಿರುವ ಅಂಗಾರ ಗುಡ್ಡೆಯ ಶಂಸು ಸಾಹೇಬ್ ಎಂಬರ ಕೋಣಗಳನ್ನು ಕಟ್ಟಲಾಗಿದ್ದ ನೆರೆಮನೆಯ ಮೇಲೆ ದಾಳಿ ಮಾಡಿ 50 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಅವರು ಹಣ ನೀಡಲು ನಿರಾಕರಿಸಿದಾಗ ಶಂಸು ಸಾಹೇಬ್ ಮತ್ತು ಮಗನ ಮೇಲೆ ದಾಳಿ ಮಾಡಿದ್ದರು. ಈ ಸಂಬಂಧ ಶಂಸು ಸಾಹೇಬ್ ಅವರ ಮಗ ಸಹಾಬುದ್ದೀನ್ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ತೀವ್ರ ತನಿಖೆ ಕೈಗೊಂಡ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂಸೆ ಗ್ರಾಮದಲ್ಲಿ ಮರೀಚಿಕೆಯಾದ ಸ್ವಚ್ಛತೆ | ಕ್ರಮ ಕೈಗೊಳ್ಳುವಲ್ಲಿ ಗ್ರಾಪಂ ನಿರ್ಲಕ್ಷ್ಯ: ಆರೋಪ
ಚಿಕ್ಕಮಗಳೂರು, ಜ.12: ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮದಲ್ಲಿ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ ಎಲ್ಲೆಡೆ ಕಸದ ರಾಶಿಗಳು ಕಂಡು ಬರುತ್ತಿದ್ದು, ತ್ಯಾಜ್ಯದ ರಾಶಿಗಳನ್ನು ತೆರವುಗೊಳಿಸಿ ಗ್ರಾಮದಲ್ಲಿ ಶುಚಿತ್ವ ಕಾಪಾಡಬೇಕಾದ ಸ್ಥಳೀಯ ಗ್ರಾಮ ಪಂಚಾಯತ್ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಂಸೆ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಸದ ರಾಶಿಗಳನ್ನು ತೆರವು ಮಾಡದ ಪರಿಣಾಮ ಸದ್ಯ ಇಡೀ ಗ್ರಾಮ ಅಶುಚಿತ್ವದ ಬೀಡಾಗಿ ಮಾರ್ಪಟ್ಟಿದೆ. ಕಸ, ತ್ಯಾಜ್ಯದ ರಾಶಿಗಳಿಂದಾಗಿ ಇಡೀ ಗ್ರಾಮ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಆತಂಕ ಗ್ರಾಮಸ್ಥರದ್ದಾಗಿದೆ. ಕಸದ ರಾಶಿಗಳನ್ನು ಪ್ರತಿದಿನ ತೆರವು ಮಾಡಬೇಕಾದ ಗ್ರಾಪಂ ಆಡಳಿತ ಇದಕ್ಕೂ ತನಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದು, ಕಸ ತೆರವಿಗೆ ಮನವಿ ಮಾಡಿದರೂ ಗ್ರಾಪಂ ಆಡಳಿತ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಚಾಯತ್ ಇನ್ನಾದರೂ ಗ್ರಾಮದಲ್ಲಿ ಎಲ್ಲೆಂದರಲ್ಲಿ ಹರಡಿಕೊಂಡು ಬಿದ್ದಿರುವ ಕಸದ ರಾಶಿಗಳನ್ನು ಕೂಡಲೇ ತೆರವು ಮಾಡಬೇಕು, ತಪ್ಪಿದಲ್ಲಿ ಸಾರ್ವಜನಿಕರು ಸೇರಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರೋಗಗಳಿಗೆ ತುತ್ತಾಗುವ ಭೀತಿ ಕಸ, ತ್ಯಾಜ್ಯದ ರಾಶಿಗಳಿಂದಾಗಿ ಎಲ್ಲೆಡೆ ಗಬ್ಬು ವಾಸನೆ ಬೀರುತ್ತಿದ್ದು, ಸಾರ್ವಜನಿಕರು ಮೂಗುಮುಚ್ಚಿ ಕೊಂಡು ತಿರುಗಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಸರಕಾರಿ ಶಾಲೆ ಎದುರು ಕಳೆದೊಂದು ವಾರದಿಂದ ಕಸದ ರಾಶಿ ಹರಡಿಕೊಂಡು ಬಿದ್ದಿದ್ದು, ಪರಿಣಾಮ ಶಾಲಾ ಮಕ್ಕಳಲ್ಲೂ ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ.
ತೆಂಗಿನ ಸಂಸ್ಕರಣಾ ಘಟಕ, ಉತ್ಪನ್ನ, ಮಾರುಕಟ್ಟೆಗಾಗಿ ಸಂಘಟಿತ ಪ್ರಯತ್ನ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಕೋಟೇಶ್ವರ: ತೆಂಗು ಬೆಳೆ ಮಾಹಿತಿ ಕಾರ್ಯಗಾರ
ಅಂತೂ ಐರಿಷ್ ಚೆಲುವೆ ಜೊತೆ ಶಿಖರ್ ಧವನ್ ವಿವಾಹ ನಿಶ್ಚಿತಾರ್ಥ; ಇನ್ ಸ್ಟಾಗ್ರಾಂನಲ್ಲಿ ಗಬ್ಬರ್ ಹೇಳಿದ್ದೇನು?
Shikhar Dhawan- Sophie Shine Engagement - ಕಳೆದ ವರ್ಷ ದುಬೈ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕಳೆದ ವರ್ಷ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆ ಶಿಖರ್ ಧವನ್ ಅವರು ಒಬ್ಬಾಕೆ ಸುಂದರಿಯೊಂದಿಗೆ ಕಾಣಿಸಿಕೊಂಡದ್ದು ನೆನಪಿದೆಯಾ? ಇದೀಗ ಅದೇ ಯುವತಿಯನ್ನು ಶಿಖರ್ ವಿವಾಹವಾಗಲು ಸಜ್ಜಾಗಿದ್ದಾರೆ. ಐರಿಷ್ ಮೂಲದ ಸೋಫಿ ಶೈನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇನ್ ಸ್ಟಾಂ ಗ್ರಾಂ ಪೋಸ್ಟ್ ಹಾಕುವ ಮೂಲಕ ಖಚಿತಪಡಿಸಿದ್ದಾರೆ. ವಿವಾಹದ ದಿನಾಂಕ ಇನ್ನೂ ತಿಳಿದು ಬಂದಿಲ್ಲ.
ಕಡೆಗೂ 'ಲಕ್ಕುಂಡಿ ನಿಧಿ ವಿವಾದ' ಇತ್ಯರ್ಥ - ನಿಧಿ ಒಪ್ಪಿಸಿದ ಕುಟುಂಬಕ್ಕೆ ಕಾನೂನಿನ ಪ್ರಕಾರ ಸಿಗಲಿದೆ ಪಾಲು! ಎಷ್ಟು?
ಗದಗ/ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನಾಭರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಾತತ್ವ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. 1962ರ ನಿಯಮದಂತೆ ಭೂಮಿಯಲ್ಲಿ ಸಿಕ್ಕ ಯಾವುದೇ ವಸ್ತು ಸರ್ಕಾರಕ್ಕೆ ಸೇರಿದ್ದು, ಶೇ.20ರಷ್ಟು ಹಣ ನಿಧಿ ಪತ್ತೆಯಾದ ಕುಟುಂಬಕ್ಕೆ ನೀಡಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು. ಶಾಸಕ ಸಿ.ಸಿ. ಪಾಟೀಲ ಪ್ರಾಮಾಣಿಕತೆ ಮೆಚ್ಚಿ ಕುಟುಂಬವನ್ನು ಸನ್ಮಾನಿಸಿದರು.
ಕಾರ್ಕಳ: ಡಿಜಿಟಲ್ ಇ ಸ್ಟ್ಯಾಂಪ್ ಕುರಿತ ಕಾರ್ಯಾಗಾರ
ಕಾರ್ಕಳ: ನೋಂದಣಿ ಮತ್ತು ಮುದ್ರಾಂಕ ಇಲಾಖಾ ವತಿಯಿಂದ ಡಿಜಿಟಲ್ ಇ ಸ್ಟ್ಯಾಂಪ್ ಕುರಿತು ದಸ್ತಾವೇಜು ಬರಹಗಾರರು, ವಕೀಲರು, ಸಹಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಸೋಮವಾರ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ನೋಂದಣಿ ಸಂಬಂಧಿತ ಚಟುವಟಿಕೆಗಳಿಗೆ ಹಾಗೂ ಇನ್ನಿತರ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಡಿಜಿಟಲ್ ಇ ಸ್ಟ್ಯಾಂಪ್ ಪಡೆಯುವ ಬಗೆಗಿನ ಕಾರ್ಯವಿಧಾನಗಳು ಮತ್ತು ಇತರ ಅವಶ್ಯಕ ವಿಷಯಗಳ ಬಗ್ಗೆ ಇಲಾಖಾ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಯವರು ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ವಕೀಲರು, ದಸ್ತಾವೇಜು ಬರಹಗಾರರು, ಸಾರ್ವಜನಿಕರು, ಸಹಕಾರಿ ಸಂಘಗಳ ವ್ಯವಸ್ಥಾಪಕರು ಹಾಗೂ ಕಾರ್ಕಳ ಉಪನೋಂದಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಧಾನಿ ಕಚೇರಿ ಇನ್ಮುಂದೆ 'ಸೇವಾ ತೀರ್ಥ'!
ಮಕರ ಸಂಕ್ರಾತಿಗೆ ಹೊಸ ಕಚೇರಿಗೆ ಶಿಫ್ಟ್ ಆಗಲಿದ್ದಾರೆ ಪಿಎಂ ಮೋದಿ
ಮೂಡುಬಿದಿರೆ: 85ನೇ ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ಗೆ ಚಾಲನೆ
ಮೊದಲ ದಿನ ಚಿನ್ನ ಮುಡಿಗೇರಿಸಿದ ‘ಆಳ್ವಾಸ್’
ಮುಂಭಡ್ತಿಗೆ ತಡೆ ಆರೋಪ : ರಾಜ್ಯಪಾಲರಿಗೆ ದೂರು ಸಲ್ಲಿಸಿದ ಅರಣ್ಯಾಧಿಕಾರಿ
ಬೆಂಗಳೂರು, ಜ.12: ಹದಿನಾಲ್ಕು ವರ್ಷ ಸೇವಾವಧಿ ಪೂರ್ಣಗೊಳಿಸಿದ್ದರೂ ಉದ್ದೇಶ ಪೂರಕವಾಗಿ ಮುಂಭಡ್ತಿ ತಡೆಹಿಡಿಯಲಾಗುತ್ತಿದೆ ಎಂದು ಆರೋಪಿಸಿ ಮಹಿಳಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯೊಬ್ಬರು ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಯವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ದೊರೆ ಸಾನಿಪಾಳ್ಯದ ಅರಣ್ಯ ಇಲಾಖೆ ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸಿಎಫ್ ಎಚ್. ಸೀಮಾ, ಸೇವಾ ನಿಯಮಗಳ ಅನ್ವಯ ಮುಂಭಡ್ತಿಗೆ ಅರ್ಹರಿದ್ದರೂ ವಿನಾಕಾರಣ ತಡೆಹಿಡಿಯಲಾಗಿದೆ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. 2011-13ನೇ ಸಾಲಿನಲ್ಲಿ ನೇರ ನೇಮಕಾತಿ ಮೂಲಕ ಎಸಿಎಫ್ ಆಗಿ ಇಲಾಖೆಗೆ ಸೇರಿದ್ದೆ. ಐದು ವರ್ಷ ಸೇವೆ ಸಲ್ಲಿಸಿದ ಬಳಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆ ಮುಂಭಡ್ತಿ ನೀಡಬೇಕು ಎಂಬ ನಿಯಮವನ್ನು ಉಲ್ಲಂಘಿಸಲಾಗಿದೆ. ಯಾವುದೇ ಪ್ರಕರಣದಲ್ಲಿ ಇಲಾಖಾ ವಿಚಾರಣೆ ಬಾಕಿ ಇಲ್ಲದಿದ್ದರೂ ಉದ್ದೇಶ ಪೂರ್ವಕವಾಗಿಯೇ ನನ್ನ ಮುಂಭಡ್ತಿ ತಡೆ ಹಿಡಿಯಲಾಗಿದೆ. ನನಗಿಂತ ಸೇವಾಕಿರಿತನ ಹೊಂದಿದವರಿಗೆ ಮುಂಭಡ್ತಿ ನೀಡಿ ಅನ್ಯಾಯ ಮಾಡಲಾಗಿದೆ ಎಂದು ಎಸಿಎಫ್ ಎಚ್.ಸೀಮಾ ಆರೋಪಿಸಿದ್ದಾರೆ. 2022ರಲ್ಲಿ ಕರ್ನಾಟಕ ಆಡಳಿತಾತ್ಮಕ ಮಂಡಳಿಯು ‘ಸೀಲ್ಡ್ ಕವರ್’ ತೆಗೆದು ಮುಂಭಡ್ತಿ ನೀಡುವಂತೆ ನಿರ್ದೇಶನ ನೀಡಿದೆ. ಜತೆಗೆ, ವಾರ್ಷಿಕ ಕಾರ್ಯ ನಿರ್ವಹಣಾ ವರದಿಯೂ ಲಭ್ಯವಿದೆ. ಇಷ್ಟಾದರೂ ಮುಂಭಡ್ತಿ ನೀಡದೆ ವಂಚಿಸಲಾಗುತ್ತಿದೆ. ಅದರಲ್ಲೂ, ನನ್ನ ಮುಂಭಡ್ತಿ ಕಡತಗಳನ್ನು ಹಿರಿಯ ಅಧಿಕಾರಿಗಳಿಗೆ ಸಲ್ಲಿಸದೆ ಅರಣ್ಯ ಇಲಾಖೆ ಅಧೀನ ಕಾರ್ಯದರ್ಶಿ ಗೀತಾ ಎಂ. ಪಾಟೀಲ, ಇವರ ಹಿರಿಯ ಸಹಾಯಕಿ ಪ್ರೇಮಾ ವಿಳಂಬ ಮಾಡುತ್ತಿದ್ದಾರೆ ಎಂದು ಎಸಿಎಫ್ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
Rajasthan | 12ನೇ ತರಗತಿ ವಿದ್ಯಾರ್ಥಿನಿಯ ಅಪಹರಣ; ಚಲಿಸುತ್ತಿರುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ
ಜೈಪುರ, ಜ. 12: ಹನ್ನೆರಡನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಚಲಿಸುತ್ತಿರುವ ಕಾರಿನೊಳಗೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದ ಬಿಕೇನರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ನಪಸರ್ ಪ್ರದೇಶದಲ್ಲಿ ಜನವರಿ 6ರಂದು ಸಂಭವಿಸಿದೆ. ಆದರೆ ಯುವತಿಯ ಕುಟುಂಬ ದೂರು ನೀಡಿದ ಬಳಿಕ ಜನವರಿ 11ರಂದು ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಜನವರಿ 6ರಂದು ಬೆಳಗ್ಗೆ ಯುವತಿ ಮನೆಯಿಂದ ಶಾಲೆಗೆ ತೆರಳುತ್ತಿದ್ದಳು. ಈ ಸಂದರ್ಭ ಇಬ್ಬರು ಯುವಕರು ಆಕೆಯನ್ನು ತಡೆದು ಕಾರಿನಲ್ಲಿ ಅಪಹರಿಸಿ ದೂರಕ್ಕೆ ಕರೆದುಕೊಂಡು ಹೋಗಿದ್ದಾರೆ. ಆರೋಪಿಗಳು ಹಲವು ಗಂಟೆಗಳ ಕಾಲ ಕಾರನ್ನು ಚಲಾಯಿಸಿದ್ದಾರೆ. ಚಲಿಸುತ್ತಿರುವ ಕಾರಿನಲ್ಲೇ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಆಕೆಗೆ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಂತರ ಕಾರು ಸಮೀಪದ ಗ್ರಾಮವೊಂದಕ್ಕೆ ಪ್ರವೇಶಿಸಿದಾಗ ಸ್ಥಳೀಯರಿಗೆ ಅನುಮಾನ ಉಂಟಾಯಿತು. ಅವರು ಕಾರನ್ನು ತಡೆದು ನಿಲ್ಲಿಸಿದರು. ಯುವತಿಯನ್ನು ಕಾರಿನಿಂದ ಬಲವಂತವಾಗಿ ಇಳಿಸಿದರು. ಈ ಸಂದರ್ಭ ಆರೋಪಿಗಳು ಸ್ಥಳದಿಂದ ಪರಾರಿಯಾದರು. ಗ್ರಾಮಸ್ಥರು ಯುವತಿಯ ಕುಟುಂಬಕ್ಕೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ಬಂದು ಯುವತಿಯನ್ನು ಮನೆಗೆ ಕರೆದುಕೊಂಡು ಹೋದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ನಪಸರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಗಂಗಾಶಹರ್ ಸರ್ಕಲ್ ಅಧಿಕಾರಿ ಹಿಮಾಂಶು ಶರ್ಮಾ ತಿಳಿಸಿದ್ದಾರೆ. ವಿದ್ಯಾರ್ಥಿನಿಯ ವಯಸ್ಸು 18 ವರ್ಷವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಶಬರಿಮಲೆ ಯಾತ್ರೆಗೆ ತೆರಳಿದ್ದ ಉಳ್ಳಾಲದ ವೃತಧಾರಿ ಎರಿಮಲೆಯಲ್ಲಿ ಹೃದಯಾಘಾತದಿಂದ ನಿಧನ
ಉಳ್ಳಾಲ: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತಪಟ್ಟವರು. ಚಂದ್ರಹಾಸ್ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ, ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಯನ್ನು ತ್ವರಿತವಾಗಿ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್ ಅವರು ಕೇರಳದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಂಗಳವಾರ ಬೆಳಿಗ್ಗೆ ಪಾರ್ಥಿವ ಶರೀರವು ಉಳ್ಳಾಲ ತಲುಪಲಿದೆ. ಮೃತ ಚಂದ್ರಹಾಸ್ ಅವರು ಮೂಲತ: ಬಾಕ್ರಬೈಲ್ ನಿವಾಸಿಯಾಗಿದ್ದು, ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು. ಕಳೆದ ಹತ್ತು ವರುಷದ ಹಿಂದೆ ಪಿಲಾರಿನಲ್ಲೇ ಮನೆ ನಿರ್ಮಿಸಿ ವಾಸವಾಗಿದ್ದರು. ಮೃತರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.
ಹಾವೇರಿ | ಶಾಲಾ ಕಟ್ಟಡ ಒತ್ತುವರಿ ಪ್ರಕರಣ; ಶಾಲೆಗೆ ಬೀಗ ಹಾಕಿದ ದೂರುದಾರ : ಬಿಸಿಲಲ್ಲೇ ಕುಳಿತ ಮಕ್ಕಳು
ಹಾವೇರಿ : ಸರಕಾರಿ ಶಾಲೆಯ ಜಾಗಕ್ಕೆ ಸಂಬಂಧಿಸಿದ ವಿವಾದ ಶಾಲೆಯ ಬಾಗಿಲಿಗೆ ಬೀಗ ಹಾಕುವ ಹಂತಕ್ಕೆ ಬಂದಿರುವ ಘಟನೆ ಮಲ್ಲೂರು ಗ್ರಾಮದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈರಪ್ಪ ಕುಲಕರ್ಣಿ ಎಂಬ ವ್ಯಕ್ತಿ ಮಲ್ಲೂರು ಗ್ರಾಮದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯ ಗೇಟಿಗೆ ಬೀಗ ಹಾಕಿದ್ದರಿಂದ ಶಾಲಾ ಮಕ್ಕಳು ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದೆ, ಶಾಲೆಯ ಹೊರ ಗಡೆ ಬಿಸಿಲಲ್ಲೇ ಕುಳಿತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ. ವಿವಾದದ ಹಿನ್ನೆಲೆ : ಈರಪ್ಪ ಕುಲಕರ್ಣಿ ತಂದೆ ಶಂಕ್ರಪ್ಪ ಕುಲಕರ್ಣಿ ಅವರು ಐದು ಗುಂಟೆ ಜಾಗವನ್ನು ಉರ್ದು ಶಾಲೆಗಾಗಿ ದಾನವಾಗಿ ನೀಡಿದ್ದರು. ಆದರೆ ಶಾಲೆ ಕಟ್ಟುವ ವೇಳೆ ದಾನವಾಗಿ ನೀಡಿದ ಜಾಗಕ್ಕಿಂತ ಹೆಚ್ಚುವರಿ ಜಾಗವನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಲಾಗಿದೆ ಎಂದು ಈರಪ್ಪಕುಲಕರ್ಣಿ ಆರೋಪಿಸಿದ್ದರು. ಈ ವ್ಯಾಜ್ಯ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದು, ಜಾಗ ಒತ್ತುವರಿ ಕುರಿತಂತೆ ಈಗಾಗಲೇ ವ್ಯಾಜ್ಯ ನಡೆಯುತ್ತಿದೆ. ಒತ್ತುವರಿ ಮಾಡಿಕೊಂಡಿರುವ ಹೆಚ್ಚುವರಿ ಜಾಗವನ್ನು ಬಿಟ್ಟುಕೊಡಬೇಕು ಎಂದು ಈರಪ್ಪಕುಲಕರ್ಣಿ ಸೋಮವಾರ ರೊಚ್ಚಿಗೆದ್ದು ಶಾಲೆಯ ಬಾಗಿಲಿಗೆ ಬೀಗ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬ್ಯಾಡಗಿ ತಹಶೀಲ್ದಾರ್ ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ಅವಲೋಕಿಸಿ ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲು ಮುಂದಾದರು. ನಮ್ಮ ತಂದೆ ಶಾಲೆಗೆ ಐದು ಗುಂಟೆ ಜಾಗ ನೀಡುವುದಾಗಿ ಹೇಳಿದ್ದು ಸತ್ಯ. ಆದರೆ ಆ ಖರಾಬ್ ಜಾಗದಲ್ಲಿ ನಮ್ಮ ಹೆಸರು ದಾಖಲಾಗಿದೆ. ಸಮಸ್ಯೆ ಬಗೆಹರಿಯದಿದ್ದರೆ ಮತ್ತೆ ಶಾಲೆಗೆ ಬೀಗ ಹಾಕುವ ಪರಿಸ್ಥಿತಿ ಬರುತ್ತದೆ. ಆದರೂ ನಾವು ಮಕ್ಕಳಿಗೆ ಅನ್ಯಾಯ ಮಾಡುವುದಿಲ್ಲ. ನಾವು ಮೂರು ಜನ ಅಣ್ಣ ತಮ್ಮಂದಿರು ಒಪ್ಪಂದದಂತೆ ಎಂಟು ಗುಂಟೆ ಜಾಗವನ್ನು ಶಾಲೆಗೆ ನೀಡಲು ಸಿದ್ಧರಿದ್ದೇವೆ. ಆದರೆ ನಮಗೆ ಅನ್ಯಾಯವಾಗಿದೆ. ಅದಕ್ಕಾಗಿಯೇ ಬೀಗ ಹಾಕಬೇಕಾಯಿತು. -ಈರಪ್ಪಕುಲಕರ್ಣಿ
ಅಕ್ರಮ ಪಂಪ್ಸೆಟ್ ಗಳಿಗೆ ಸಕ್ರಮ ಭಾಗ್ಯ - ನಾಲ್ಕೂವರೆ ಲಕ್ಷ ರೈತರಿಗೆ ಅನುಕೂಲ - ಇಂಧನ ಸಚಿವ ಕೆಜೆ ಜಾರ್ಜ್ ಭರವಸೆ
ತರೀಕೆರೆಯಲ್ಲಿ ನೂತನ ವಿದ್ಯುತ್ ಉಪಕೇಂದ್ರ ಉದ್ಘಾಟನೆ ಹಾಗೂ ಸೌರ ವಿದ್ಯುತ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿತು. ಅಕ್ರಮ ಪಂಪ್ಸೆಟ್ಗಳನ್ನು ಸಕ್ರಮಗೊಳಿಸಲು ಸರಕಾರ ಸಿದ್ಧವಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಕುಸುಮ್ ಸಿ ಯೋಜನೆಯಡಿ ರೈತರಿಗೆ ಸಮರ್ಪಕ ವಿದ್ಯುತ್ ನೀಡಲು ಉದ್ದೇಶಿಸಲಾಗಿದೆ. ಶಾಸಕ ಜಿ.ಎಚ್.ಶ್ರೀನಿವಾಸ ತಾಲೂಕಿನ ಅಭಿವೃದ್ಧಿಗೆ ಹಲವು ಪ್ರಸ್ತಾವನೆಗಳನ್ನು ಮುಂದಿಟ್ಟರು.
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್: ಶಾಸಕಿ ನಯನಾ ಆಕ್ರೋಶ
ಚಿಕ್ಕಮಗಳೂರು, ಜ.12: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಹಾಕುವವರ ವಿರುದ್ಧ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಯನಾ ಮೋಟಮ್ಮ ಅವರು ರಾಜಕೀಯ ಮತ್ತು ವೈಯಕ್ತಿಕ ವಿಚಾರಗಳಿಗೆ ಇನ್ಸ್ಟಾಗ್ರಾಮ್ನಲ್ಲಿ ಪ್ರತ್ಯೇಕ ಎರಡು ಖಾತೆಗಳನ್ನು ತೆರೆದಿದ್ದು, ಪ್ರವಾಸ ಹಾಗೂ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಫೋಟೊಗಳನ್ನು ಹಂಚಿಕೊಂಡಿರುವ ಖಾತೆಯಲ್ಲಿ ಕಿಡಿಗೇಡಿಗಳು ಅವರ ಬಟ್ಟೆಯ ವಿಚಾರವಾಗಿ ಅಸಭ್ಯ ಸಂದೇಶಗಳನ್ನು ರವಾನಿಸಿದ್ದಾರೆ. ಈ ವಿಚಾರವಾಗಿ ಆಕ್ರೋಶಭರಿತರಾಗಿರುವ ಶಾಸಕಿ ನಯನಾ ಮೋಟಮ್ಮ ಅವರು, ಡ್ರೆಸ್, ಪ್ಯಾಂಟ್, ಜೀನ್ಸ್ ಅಥವಾ ಸ್ಲೀವ್ಲೆಸ್ ಬಟ್ಟೆಗಳನ್ನು ಧರಿಸಿದಾಗ ಕೆಲಸ ಮಾಡದ ರಾಜಕಾರಣ, ರಸ್ತೆಗಳ ಗುಂಡಿ ಮುಚ್ಚದ ಶಾಸಕರು, ತೆರಿಗೆದಾರರ ಹಣದಲ್ಲಿ ಬದುಕುವವರು ಎಂದು ಟೀಕಿಸಲಾಗುತ್ತಿದೆ ಎಂದು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ. ಪುರುಷ ರಾಜಕಾರಣಿಗಳ ಉಡುಪಿನ ಬಗ್ಗೆ ಯಾರೂ ಎಂದಿಗೂ ಪ್ರಶ್ನೆ ಮಾಡುವುದಿಲ್ಲ. ಆದರೆ ಮಹಿಳೆಯರ ವಿಚಾರದಲ್ಲಿ ಇಂತಹ ಮನೋಭಾವವೇಕೆ ಎಂದು ಅವರು ಪ್ರಶ್ನಿಸಿದ್ದಾರೆ. ಕಮೆಂಟ್ ಮಾಡುವವರಲ್ಲಿ ಹೆಚ್ಚಿನವರು ಡಿಪಿ ಇಲ್ಲದ ಹಾಗೂ ಫೇಕ್ ಪ್ರೊಫೈಲ್ಗಳನ್ನು ಹೊಂದಿದ್ದಾರೆ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. 2025ರಲ್ಲಿಯೂ ನಯನಾ ಮೋಟಮ್ಮ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ ಆರೋಪದ ಮೇರೆಗೆ ರಾಮನಗರ ಜಿಲ್ಲೆ ಮೂಲದ ಯಕ್ಷಿತ್ ರಾಜ್ ಎಂಬಾತನನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದರು. ಸೋಮವಾರ ಈ ಸಂಬಂಧ ಸುದ್ದಿಗಾರರೊಂದಿಗೆ ನಯನಾ ಮೋಟಮ್ಮ ಮಾತನಾಡಿ, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ನಲ್ಲಿ ವೈಯಕ್ತಿಕ ಖಾತೆ ಮತ್ತು ರಾಜಕೀಯಕ್ಕೆ ಸಂಬಂಧಿಸಿದ ಖಾತೆಯನ್ನು ಹೊಂದಿದ್ದು, ವೈಯಕ್ತಿಕ ವಿಚಾರ ಖಾತೆಯನ್ನು ಯಾವುದೇ ಸೆಕ್ಯೂರಿಟಿ ಇಟ್ಟುಕೊಳ್ಳದೆ ಪಬ್ಲಿಕ್ ಆಗಿ ಇಟ್ಟುಕೊಂಡಿದ್ದೇನೆ. ರಾಜಕೀಯ ಪ್ರವೇಶಕ್ಕೂ ಮುಂಚೆ ಹೇಗಿದ್ದೆನೋ ಅದೇ ರೀತಿಯಾಗಿ ಇರಲು ಪ್ರಯತ್ನಿಸುತ್ತಿದ್ದೇನೆ ಎಂದರು. ನಿಮ್ಮ ಜನಪ್ರತಿನಿಧಿಗಳು ಯಾವ ರೀತಿ ಇರಬೇಕು ಎಂದು ಯುವ ಪೀಳಿಗೆ ನಿರ್ಧಾರ ಮಾಡಬೇಕು. ಎಲ್ಲದಕ್ಕೂ ಚೌಕಟ್ಟು ಹಾಕಿದರೆ ಹೇಗೆ? ಜನಪ್ರತಿನಿಧಿಗಳಿಗೂ ವೈಯಕ್ತಿಕ ಜೀವನ ಇಲ್ಲವೇ? ಮಹಿಳೆಯರು ರಾಜಕಾರಣಕ್ಕೆ ಬರುವುದು ಕಡಿಮೆ ಇದೆ. ಅದರಲ್ಲೂ ರಾಜಕಾರಣಕ್ಕೆ ಬಂದ ಮಹಿಳೆಯರ ಬಗ್ಗೆ ಹೀಗೆ ಕಾಮೆಂಟ್ ಮಾಡಿದರೆ ಹೇಗೆ? ಚಲನಚಿತ್ರ ನಟಿಯರಿಗೂ ಈ ರೀತಿಯಾಗುತ್ತಿತ್ತು. ಈಗ ಮಹಿಳಾ ರಾಜಕಾರಣಿಯನ್ನು ಟಾರ್ಗೆಟ್ ಮಾಡಿದ್ದೀರಾ. ಅಸಭ್ಯವಾದ ಪದ ಬಳಕೆಯಿಂದ ಅವರ ಮನಸ್ಸಿನ ಮೇಲೆ ಏನು ಪ್ರಭಾವ ಬೀರಬಹುದು ಯೋಚಿಸಬೇಕಲ್ಲವೇ? ಎಂದ ಅವರು, ರಾಜಕಾರಣಿಗಳ ಪರ ಹಾಗೂ ವಿಶೇಷವಾಗಿ ಮಹಿಳೆಯರ ಪರವಾಗಿ ನಾನು ಧ್ವನಿ ಎತ್ತುತ್ತಿದ್ದೇನೆ ಎಂದು ಹೇಳಿದರು.
ಯಾದಗಿರಿ | ಮೈಲಾರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರಂತರ ಪ್ರಯತ್ನ : ಶಾಸಕ ಚೆನ್ನಾರೆಡ್ಡಿ
ಯಾದಗಿರಿ, ಜ.12: ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತಂತೆ ಸರಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನಿಸುತ್ತಿರುವುದಾಗಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಹೇಳಿದ್ದಾರೆ. ಮೈಲಾರಲಿಂಗೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ, ಕಾರ್ಯನಿರ್ವಾಹಕ ಅಧಿಕಾರಿಗಳ ನೂತನ ದೇವಸ್ಥಾನ ಕಾರ್ಯಾಲಯ ಉದ್ಘಾಟಿಸಿ, ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಶ್ರೀ ಮೈಲಾಪುರ ಜಾತ್ರೆಗೆ ಲಕ್ಷಾಂತರ ಜನ ಆಗಮಿಸು ವುದರಿಂದ ಆರಂಭ ಹಾಗೂ ಜಾತ್ರಾ ಕೊನೆಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಬೇಕು. ವಿಶೇಷವಾಗಿ ಸರಪಳಿ ಹರಿಯುವ ಪದ್ಧತಿ ಸಂದರ್ಭದಲ್ಲಿ, ಜಾತ್ರೆ ವ್ಯಾಪ್ತಿಯಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್, ಆರೋಗ್ಯ, ಅಗ್ನಿಶಾಮಕ ಇಲಾಖೆ,ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಂದ ಅವಶ್ಯಕ ಕ್ರಮ, ಶೌಚಾಲಯಗಳ ಸೂಕ್ತ ವ್ಯವಸ್ಥೆ ಮಾಡುವಂತೆ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್, ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಧರಣೇಶ್, ಡಿವೈಎಸ್ ಪಿ ಭರತ ತಳವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀ ತಿಪ್ಪಣ್ಣ ಶಿರಸಗಿ, ತಹಸೀಲ್ದಾರ ಸುರೇಶ್ ಅಂಕಲಗಿ, ಧರ್ಮದತ್ತಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ, ಮಹದೇವಪ್ಪ ಪೂಜಾರಿ ಉಪಸ್ಥಿತರಿದ್ದರು.
ಬಂದಿದ್ದನ್ನು ಎದುರಿಸುತ್ತೇವೆ; ಅಮೆರಿಕ ಜೊತೆಗೆ ಮಾತುಕತೆ ಆಯ್ಕೆ ತಿರಸ್ಕರಿಸಿದ ಕ್ಯೂಬಾ! ಮುಂದೇನು?
ವೆನೆಜುವೆಲಾ ರೀತಿ ಅಮೆರಿಕವನ್ನು ಎದುರು ಹಾಕಿಕೊಳ್ಳದೇ ಒಪ್ಪಂದ ಮಾಡಿಕೊಳ್ಳಿ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಯನ್ನು, ಕ್ಯೂಬಾ ಸ್ಪಷ್ಟವಾಗಿ ತಿರಸ್ಕರಿಸಿದೆ. ಈ ಕುರಿತು ಮಾತನಾಡಿರುವ ಕ್ಯೂಬಾ ಅಧ್ಯಕ್ಷ ಮಿಗುಯೆಲ್ ಡಯಾಜ್-ಕ್ಯಾನೆಲ್, ಸರ್ವಾಧಿಕಾರಿ ಮತ್ತು ಸಾಮ್ರಾಜ್ಯಶಾಹೀ ಟ್ರಂಪ್ ಆಡಳಿತದೊಂದಿಗೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಮೆರಿಕದಂತಹ ದೈತ್ಯ ಶಕ್ತಿಯನ್ನು ಎದುರಿಸುವುದಾಗಿ ಈ ಪುಟ್ಟ ಕೆರಿಬಿಯನ್ ದ್ವೀಪ ರಾಷ್ಟ್ರ ಘೋಷಿಸಿದೆ. ಹಾಗಿದ್ದರೆ ಡೊನಾಲ್ಡ್ ಟ್ರಂಪ್ ಕ್ಯೂಬಾ ಮೇಲೂ ದಾಳಿ ಮಾಡುತ್ತಾರಾ? ಇಲ್ಲಿದೆ ಮಾಹಿತಿ.
WPL 2026- ಯುಪಿ ವಾರಿಯರ್ಸ್ ವಿರುದ್ಧ ಗ್ರೇಸ್ ಹ್ಯಾರಿಸ್- ಸ್ಮೃತಿ ಮಂದಾನ ಸವಾರಿ; RCBಗೆ ಸತತ 2ನೇ ಜಯಭೇರಿ!
RCB W Beat UPW W- ಗ್ರೇಸ್ ಹ್ಯಾರಿಸ್ ಮತ್ತು ಸ್ಮೃತಿ ಮಂದಾನ ಅವರ ಬಿರುಗಾಳಿ ಬ್ಯಾಟಿಂಗ್ ನಿಂದಾಗಿ ಯುಪಿ ವಾರಿಯರ್ಸ್ ತಂಡವನ್ನು ಇನ್ನೂ 47 ಎಸೆತಗಳು ಬಾಕಿ ಉಳಿದಿರುವಂತೆ ಸೋಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಉತ್ತಮ ರನ್ ಧಾರಣೆಯೊಂದಿಗೆ ಅಂಕಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿದೆ. ಈ ಬಾರಿಯ ಉದ್ಘಾಟನಾ ಪಂದ್ಯದಲ್ಲಿ ಸ್ಮೃತಿ ಮಂದಾನ ಪಡೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಶುಭಾರಂಭ ಮಾಡಿತ್ತು. ಇದೀಗ ಯುಪಿ ವಾರಿಯರ್ಸ್ ವಿರುದ್ಧ 9 ವಿಕೆಟ್ ಗಳ ಗೆಲುವು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.
ಹಕ್ಕಿ ಬಡಿತ: ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಶ
ಹೊಸದಿಲ್ಲಿ, ಜ.12: ರವಿವಾರ ಸಂಜೆ 216 ಪ್ರಯಾಣಿಕರೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ಹಕ್ಕಿ ಬಡಿತದ ಪರಿಣಾಮ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ಸಂಜೆ 6:25ಕ್ಕೆ ಗೋರಖ್ ಪುರ ವಿಮಾನ ನಿಲ್ದಾಣದಿಂದ ಹೊರಟಿತ್ತು. ಟೇಕ್ಆಫ್ ನ ಸುಮಾರು 15 ನಿಮಿಷಗಳ ಬಳಿಕ, ವಿಮಾನವು 16,000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ ಜೌನಪುರದ ಬಳಿ ಹಕ್ಕಿಯೊಂದು ಅದಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ವಾರಣಾಸಿ ಏರ್ ಟ್ರಾಫಿಕ್ ಕಂಟ್ರೋಲ್ ಅನ್ನು ಸಂಪರ್ಕಿಸಿದ ಪೈಲಟ್, ವಿಮಾನವನ್ನು ವಾರಣಾಸಿಯತ್ತ ತಿರುಗಿಸಿ ಸಂಜೆ 6:56ಕ್ಕೆ ಅಲ್ಲಿನ ಲಾಲ್ ಬಹಾದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದರು. ವಿವರಗಳ ಪ್ರಕಾರ, ಹಕ್ಕಿ ಬಡಿತದಿಂದ ವಿಮಾನದ ಮುಂಭಾಗಕ್ಕೆ ಹಾನಿಯಾಗಿದೆ. ರಾತ್ರಿ 8:40ರ ವೇಳೆಗೆ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದ್ದು, ಮುಂದಿನ ಪ್ರಯಾಣವನ್ನು ರದ್ದುಗೊಳಿಸಿದ ಇಂಡಿಗೋ ಸಂಸ್ಥೆ ಪ್ರಯಾಣಿಕರಿಗೆ ಸ್ಥಳೀಯ ಹೋಟೆಲ್ಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಿತು.
ಆರೋಗ್ಯದಲ್ಲಿ ಏರುಪೇರು: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಆಸ್ಪತ್ರೆಗೆ ದಾಖಲು
ಹೊಸದಿಲ್ಲಿ, ಜ.12: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಸೋಮವಾರ ಅವರನ್ನು ಇಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮನೆಯಲ್ಲಿನ ವಾಷ್ರೂಮ್ಗೆ ತೆರಳಿದ್ದ ವೇಳೆ ಧನ್ಕರ್ ಅವರು ಎರಡು ಸಲ ಪ್ರಜ್ಞಾಹೀನರಾಗಿದ್ದರು. ಇಂದು ಅವರು ತಪಾಸಣೆಗೆ ಏಮ್ಸ್ಗೆ ತೆರಳಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯರು ಸೂಚಿಸಿದ್ದರು ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಕುರಿತು ಧನ್ಕರ್ ಅಥವಾ ಅವರ ಕುಟುಂಬವು ಅಧಿಕೃತವಾಗಿ ಇನ್ನೂ ದೃಢಪಡಿಸಿಲ್ಲ. ಧನ್ಕರ್ ಅವರು ಹಿಂದೆ ಉಪರಾಷ್ಟ್ರಪತಿಯಾಗಿದ್ದಾಗ ಹಲವಾರು ಸಂದರ್ಭಗಳಲ್ಲಿ ಬವಳಿಗೆ ಒಳಗಾಗಿದ್ದರು. ಧನ್ಕರ್ ಅವರು ಆರೋಗ್ಯ ಕಾರಣವನ್ನು ಉಲ್ಲೇಖಿಸಿ ಕಳೆದ ವರ್ಷದ ಜು.21ರಂದು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.
ಸೇಡಂನಲ್ಲಿ ಬೇಳೆ ಕಾಳು ಅಭಿವೃದ್ಧಿ ಸಂಸ್ಥೆ ಸ್ಥಾಪಿಸಲು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮನವಿ
ಕಲಬುರಗಿ: ಕಲಬುರಗಿ ಜಿಲ್ಲೆಯ ಒಟ್ಟಾರೆ ಬೇಳೆಕಾಳು ಉತ್ಪಾದನೆಯಲ್ಲಿ ಶೇ.50 ರಷ್ಟು ಪಾಲನ್ನು ಹೊಂದಿರುವ ಸೇಡಂ ಉಪವಿಭಾಗದಲ್ಲಿ, ಮಳೆ ವೈಪರೀತ್ಯದಿಂದ ಉತ್ಪಾದಕತೆ ಕುಸಿಯುತ್ತಿದೆ. ಇದನ್ನು ಸುಧಾರಿಸಲು ಬೆಳೆ ನಿರ್ವಹಣೆ ಹಾಗೂ ದಾಲ್ ಸಂಸ್ಕರಣೆ ಕುರಿತು ಸಂಶೋಧನೆ ನಡೆಸಲು ಸೇಡಂನಲ್ಲಿ 'ಬೇಳೆಕಾಳು ಅಭಿವೃದ್ಧಿ ಸಂಸ್ಥೆ'ಯನ್ನು ಸ್ಥಾಪಿಸಬೇಕು, ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೇಡಿಕೆ ಸಲ್ಲಿಸಿದರು. ಸೋಮವಾರ ಸೇಡಂ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೆಕೆಆರ್ಡಿಬಿ ಸಂಯುಕ್ತಾಶ್ರಯದಲ್ಲಿ ನಡೆದ ಸುಮಾರು 688 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಚಾಲನಾ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇಡಂ ಉಪವಿಭಾಗದ ವ್ಯಾಪ್ತಿಗೆ ಬರುವ ಸೇಡಂ, ಚಿತ್ತಾಪುರ, ಚಿಂಚೋಳಿ, ಕಾಳಗಿ ಮತ್ತು ಶಹಾಬಾದ್ ತಾಲೂಕುಗಳು ಜಿಲ್ಲೆಯ ಪ್ರಮುಖ ಬೇಳೆಕಾಳು ಬೆಳೆಯುವ ಪ್ರದೇಶಗಳಾಗಿವೆ. ಈ ಭಾಗದ ಮಣ್ಣಿನಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಶ್ ಅಂಶ ಹೆಚ್ಚಾಗಿದ್ದು, ನೀರನ್ನು ಹಿಡಿದಿಟ್ಟುಕೊಳ್ಳುವ ವಿಶಿಷ್ಟ ಸಾಮರ್ಥ್ಯ ಹೊಂದಿದೆ. ಉಪವಿಭಾಗದ ಒಟ್ಟು ಸಾಗುವಳಿ ಪ್ರದೇಶದ ಶೇ. 85 ರಷ್ಟು ಭಾಗದಲ್ಲಿ ಬೇಳೆಕಾಳುಗಳನ್ನೇ ಬೆಳೆಯಲಾಗುತ್ತಿದೆ, ಎಂದು ಸಚಿವರು ವಿವರಿಸಿದರು. ಇಡೀ ರಾಜ್ಯದ ಶೇ. 45 ರಷ್ಟು ತೊಗರಿಯನ್ನು ಕಲಬುರಗಿ ಜಿಲ್ಲೆಯಲ್ಲೇ ಬೆಳೆಯಲಾಗುತ್ತದೆ. ಅದರಲ್ಲೂ ಅರ್ಧದಷ್ಟು ಪಾಲು ಸೇಡಂ ಉಪವಿಭಾಗದ್ದಾಗಿದೆ. ಬೆಳಗಾವಿಯ ಸಕ್ಕರೆ ಸಂಸ್ಥೆಯ ಮಾದರಿಯಲ್ಲಿಯೇ, ಸೇಡಂ ಅನ್ನು ಕೇಂದ್ರಸ್ಥಾನವಾಗಿಸಿಕೊಂಡು ಬೇಳೆಕಾಳು ಅಭಿವೃದ್ಧಿ ಸಂಸ್ಥೆ ಸ್ಥಾಪಿಸಿದರೆ ರೈತಾಪಿ ಜನರಿಗೆ ಹಾಗೂ ದಾಲ್ ಸಂಸ್ಕರಣಾ ಉದ್ಯಮಕ್ಕೆ ಹೆಚ್ಚಿನ ಅನುಕೂಲವಾಗಲಿದೆ, ಎಂದು ಸಚಿವರು ಸಿಎಂಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬಿಎಂಐಸಿ ಯೋಜನೆ ಮರು ಪರಿಶೀಲಿಸಿ; ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು : ಬೆಂಗಳೂರು-ಮೈಸೂರು ಮೂಲ ಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಯನ್ನು ಮರು ಪರಿಶೀಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಎಂಐಸಿ ಯೋಜನೆಗಾಗಿ ವಶಪಡಿಸಿಕೊಂಡ ತಮ್ಮ ಜಮೀನಿಗೆ ಪರಿಹಾರ ವಿತರಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಮಾರಪ್ಪ ಗಾರ್ಡನ್ ನಿವಾಸಿ ಚಂದ್ರಿಕಾ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಹಾಗೂ ನ್ಯಾಯಮೂರ್ತಿ ಟಿ.ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ. ಬಿಎಂಐಎಸಿ ಯೋಜನೆಯಡಿ ಯೋಜನಾ ನಿರ್ಮಾಣಕಾರರು ಪೆರಿಫೆರಲ್ (ಬಾಹ್ಯ) ರಸ್ತೆಗಳು ಮತ್ತು ಟೋಲ್ ಪ್ಲಾಜಾಗಳನ್ನು ನಿರ್ಮಿಸುವ ಮೂಲಕ ಭಾರಿ ಸುಂಕ ಸಂಗ್ರಹಿಸುತ್ತಿದ್ದಾರೆ. ಅದಾಗ್ಯೂ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಮತ್ತು ಮೂಲಸೌಕರ್ಯ ಕಾರಿಡಾರ್ ಕೇವಲ ಕಾಗದಗಳಲ್ಲಿ ಮಾತ್ರ ಉಳಿದಿದೆ. ಯೋಜನಾ ನಿರ್ಮಾಣ ಮಾಡಬೇಕಿರುವವರು ದೊಡ್ಡ ಪ್ರಮಾಣದಲ್ಲಿ ಭೂಮಿಯನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡಿದ್ದಾರೆ. ಆದರೆ, ಬೆಂಗಳೂರು ಮೈಸೂರು-ಎಕ್ಸ್ಪ್ರೆಸ್ ಮಾರ್ಗ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಿಸಿಲ್ಲ. ಭವಿಷ್ಯದಲ್ಲಿ ಅದನ್ನು ನಿರ್ಮಿಸುವ ಯಾವುದೇ ಸೂಚನೆಯಿಲ್ಲ. ಅದಕ್ಕೆ ಕಾರಣ ಭೂಮಿಯು ಸರಿಯಾಗಿ ಬಳಕೆಯಾಗಿಲ್ಲ. ಆದ್ದರಿಂದ, ಯೋಜನೆಯನ್ನು ಮರುಪರಿಶೀಲಿಸಬೇಕು ಮತ್ತು ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುಬೇಕು ಎಂದು ರಾಜ್ಯ ಸರಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ. ಉತ್ತಮ ನಾಗರಿಕ ಸೌಲಭ್ಯಗಳು ಮತ್ತು ವ್ಯಾಪಾರ ಮತ್ತು ವೃತ್ತಿಪರರಿಗೆ ಉತ್ತಮ ಅವಕಾಶಗಳೊಂದಿಗೆ ನಗರದ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಬಿಎಂಐಸಿ ನಿರ್ಮಾಣ ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಈ ಉದ್ದೇಶವು ದೂರದ ಕನಸಾಗಿಯೇ ಉಳಿದಿದೆ. ವಾಸ್ತವವಾಗಿ ಟೋಲ್ ಪ್ಲಾಜಾ, ಪೆರಿಫೆರಲ್ ರಸ್ತೆಗಳನ್ನು ಹೊರತುಪಡಿಸಿ ಸುಮಾರು 25 ವರ್ಷಗಳಲ್ಲಿ ಕೇವಲ ಒಂದು ಕಿ.ಮೀ. ಎಕ್ಸ್ಪ್ರೆಸ್ ಮಾರ್ಗವನ್ನು ನಿರ್ಮಿಸಲಾಗಿದೆ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಪಿಟಿಆರ್ ಅಡಿಯಲ್ಲಿ ಕಲ್ಪಿಸಲಾದ ನಗರದ ಜನದಟ್ಟಣೆಯನ್ನು ಕಡಿಮೆ ಮಾಡುವ ಸುಂದರ ಮತ್ತು ಭವಿಷ್ಯದ ಪರಿಕಲ್ಪನೆಯನ್ನು ಯೋಜನೆಯ ವಿರೋಧಿಗಳು ನಾಶಪಡಿಸಿದ್ದಾರೆ. ವಾಸ್ತವವಾಗಿ ಈ ಪರಿಕಲ್ಪನೆ ಮತ್ತು ಒಪ್ಪಂದ ವಿಫಲವಾಗಿದೆ. 25 ವರ್ಷಗಳಿಗೂ ಅಧಿಕ ಅವಧಿಯಲ್ಲಿ ಕೇವಲ ಒಂದು ಕಿಲೋ ಮೀಟರ್ ಮಾತ್ರ ನಿರ್ಮಿಸಲಾಗಿರುವಾಗ, ಯೋಜನೆಯನ್ನು ಜೀವಂತವಾಗಿಡುವ ಯಾವುದೇ ಉದ್ದೇಶ ಈಡೇರುವುದಿಲ್ಲ. ನಗರ, ನಾಗರಿಕರು, ಪರಿಸರ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಯೋಜನೆಯನ್ನು ಮರುಪರಿಶೀಲಿಸಬೇಕಿದೆ. ಹಳೆಯ ಯೋಜನೆಯನ್ನು ತ್ಯಜಿಸಿ ಹೊಸ ಯೋಜನೆಗೆ ಸೂಕ್ತ ಕ್ರಮ ಕೈಗೊಳ್ಳುವುದು ಒಳ್ಳೆಯದು ಎಂದು ಪೀಠ ಹೇಳಿದೆ. ನಗರದ ಜನಸಂಖ್ಯೆ 1.40 ಕೋಟೂ ಅಧಿಕವಿದೆ. ದಿನನಿತ್ಯದ ಸಂಚಾರ ದಟ್ಟಣೆ ಸಾಮಾನ್ಯವಾಗಿದ್ದು, ನಗರದಲ್ಲಿ ಸ್ವಲ್ಪ ದೂರ ಪ್ರಯಾಣಿಸಲು ಗಂಟೆಗಳು ಬೇಕಾಗುತ್ತದೆ. ಮೂಲಸೌಕರ್ಯ ಸೌಲಭ್ಯಗಳು ಕುಸಿಯುತ್ತಿವೆ. ಪರಿಸರ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಆದ್ದರಿಂದ, ರಾಜ್ಯ ಸರ್ಕಾರ ನಗರದ ಜೀವನ ಪರಿಸ್ಥಿತಿಗಳನ್ನು ಸುಧಾರಿಸಲು ಹೊಸ ಯೋಜನೆಗೆ ಅಗತ್ಯವಾದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿರುವ ನ್ಯಾಯಪೀಠ, ಅಂತಿಮವಾಗಿ ಪ್ರಕರಣದಲ್ಲಿ ಅರ್ಜಿದಾರರು ಈಗಾಗಲೇ ಪರಿಹಾರ ಪಡೆದಿರುವುದರಿಂದ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
KSRTC: ಕೆಎಸ್ಆರ್ಟಿಸಿ ಟಿಕೆಟ್ ಬುಕಿಂಗ್ ಇನ್ನೂ ಸುಲಭ: 'ಬೆಂಗಳೂರು-ಓನ್-ಕರ್ನಾಟಕ-ಓನ್' ಗೂ ವಿಸ್ತರಣೆ
ಬೆಂಗಳೂರು: ರಾಜ್ಯದ ಎಲ್ಲ ಕರ್ನಾಟಕ ರಾಜ್ಯ ರಸ್ತೆ, ಸಾರಿಗೆ ನಿಗಮ (KSRTC) ಪ್ರಯಾಣಿಕರಿಗೆ ಮಹತ್ವದ ಗುಡ್ ನ್ಯೂಸ್ ಸಿಕ್ಕಿದೆ. ಸಂಸ್ಥೆಯ ಅಧಿಕೃತ ವೆಬ್ಸೈಟ್ ಹಾಗೂ ಇತರ ಆನ್ಲೈನ್ ವೇದಿಕೆಗಳ ಮೂಲಕ ಬಸ್ ಬುಕ್ ಮಾಡುವ ವಿಧಾನಗಳ ಜೊತೆಗೆ ಇನ್ನು ಮುಂದೆ 'ಬೆಂಗಳೂರು-ಓನ್' ಮತ್ತು 'ಕರ್ನಾಟಕ-ಓನ್ ಕೇಂದ್ರ'ಗಳ ಮೂಲಕವೀ ಮುಂಗಡ ಟಿಕೆಟ್ ಕಾಯ್ದಿರಿಸುವುದನ್ನು ಸಾರಿಗೆ ಇಲಾಖೆ ಜಾರಿಗೊಳಿಸಿದೆ. ಕರ್ನಾಟಕ
ಅಬಕಾರಿ ಸನ್ನದು ಇ-ಹರಾಜು ಪ್ರಕ್ರಿಯೆಗೆ ನೀಡಿದ್ದ ತಡೆ ತೆರವಿಗೆ ಹೈಕೋರ್ಟ್ ನಕಾರ
ಬೆಂಗಳೂರು : ರಾಜ್ಯದಲ್ಲಿ 569 ಅಬಕಾರಿ ಸನ್ನದುಗಳನ್ನು ಇ-ಹರಾಜು ಮಾಡಲು ಅಬಕಾರಿ ಇಲಾಖೆ ಡಿಸೆಂಬರ್ 19ರಂದು ಹೊರಡಿಸಿದ್ದ ಅಧಿಸೂಚನೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಇದರಿಂದ ಜನವರಿ 13 ರಿಂದ ರಾಜ್ಯಾದ್ಯಂತ ನಡೆಯಬೇಕಿದ್ದ ನವೀಕರಣವಾಗದ, ಸ್ಥಗಿತಗೊಂಡಿದ್ದ 477 ಸಿಎಲ್-2ಎ ಚಿಲ್ಲರೆ ಮದ್ಯ ಮಾರಾಟ ಮಳಿಗೆ ಮತ್ತು 92 ಸಿಎಲ್-9ಎ ರಿಫ್ರೆಶ್ ರೂಮ್ ಸನ್ನದುಗಳ ಹರಾಜು ಪ್ರಕ್ರಿಯೆಗೆ ತಡೆ ಬಿದ್ದಂತಾಗಿದೆ. ಅಬಕಾರಿ ಇಲಾಖೆಯ ಅಧಿಸೂಚನೆ ಪ್ರಶ್ನಿಸಿ ಹುಬ್ಬಳ್ಳಿಯ ಶಾಂತಾಬಾಯಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಸೋಮವಾರ ವಿಚಾರಣೆ ನಡೆಸಿತು. ಸರಕಾರದ ಪರ ಹಾಜರಾದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, 25-30 ವರ್ಷಗಳಿಂದ ನವೀಕರಣವಾಗದ ಮತ್ತು ಸ್ಥಗಿತಗೊಂಡಿರುವ ಪರವಾನಗಿಗಳನ್ನು ಸರಕಾರ ಆದಾಯ ಸಂಗ್ರಹಣೆ ದೃಷ್ಟಿಯಿಂದ ಇ-ಹರಾಜು ಮಾಡಲು ಹೊರಟಿದೆ. ಆನಂತರ ಒಬ್ಬೊಬ್ಬರೇ ಲೈಸೆನ್ಸ್ ನವೀಕರಣಕ್ಕೆ ಅರ್ಜಿ ಸಲ್ಲಿಸಿ ನ್ಯಾಯಾಲಯದ ಮೊರೆ ಹೋಗುತ್ತಿದ್ದಾರೆ. ಆದ್ದರಿಂದ, ಈ ಲೈಸನ್ಸ್ಗಳ ಮೇಲೆ ಅರ್ಜಿದಾರರು ಹಕ್ಕು ಮಂಡಿಸಲಾಗದು. ಮಂಗಳವಾರದಿಂದಲೇ ಇ-ಹರಾಜು ನಿಗದಿಯಾಗಿರುವುದರಿಂದ ತಡೆಯಾಜ್ಞೆ ತೆರವು ಕೋರಿ ಸರಕಾರ ಸಲ್ಲಿಸಿರುವ ಮಧ್ಯಂತರ ಅರ್ಜಿ ಮಾನ್ಯ ಮಾಡಬೇಕು ಎಂದು ಕೋರಿದರು. ಇದನ್ನು ಆಕ್ಷೇಪಿಸಿದ ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು, ಹಲವು ವರ್ಷಗಳಿಂದ ನವೀಕರಣ ಮಾಡಿಕೊಳ್ಳಲಾಗದ ಲೈಸೆನ್ಸ್ಗಳನ್ನು ಇದೀಗ ಇ-ಹರಾಜು ಮಾಡಲು ಇಲಾಖೆ ಮುಂದಾಗಿದೆ. ಆದರೆ, ಅವುಗಳನ್ನು 2008ರಲ್ಲಿ ಎಂಎಸ್ಐಎಲ್ಗೆ ಸರಕಾರ ನೀಡಿದ್ದರಿಂದ ಅರ್ಜಿದಾರರ ಲೈಸೆನ್ಸ್ ಊರ್ಜಿತದಲ್ಲಿಲ್ಲವೆಂದು ಸುಮ್ಮನಾಗಿದ್ದರು. ಆದರೆ, ಇದೀಗ ಮತ್ತೆ ಅದೇ ಲೈಸನ್ಸ್ಗಳಿಗೆ ಜೀವ ನೀಡಿ ಮತ್ತೆ ಹರಾಜು ಹಾಕಲು ಮುಂದಾಗಿರುವುದರಿಂದ ಅರ್ಜಿದಾರರ ಕಾನೂನು ಬದ್ಧ ಹಕ್ಕು ಕಸಿದುಕೊಂಡಂತಾಗಿದೆ ಎಂದರು. ಮುಂದುವರಿದು, ಸರಕಾರ ನಡೆಸಲು ಉದ್ದೇಶಿಸಿರುವ ಇ-ಹರಾಜು ಪ್ರಕ್ರಿಯೆಯಲ್ಲಿ ಹಲವು ಪ್ರವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಅದಕ್ಕೆ ಯಾವುದೇ ಮಾನದಂಡ ಅನುಸರಿಸಿಲ್ಲ. ಆ ಬಗ್ಗೆ ಅಧಿಸೂಚನೆಯಲ್ಲೂ ಉಲ್ಲೇಖಿಸಲಾಗಿಲ್ಲ. ಆ ರೀತಿ ಮೀಸಲು ಒದಗಿಸಲು ಶಾಸನಾತ್ಮಕ ಬೆಂಬಲವೂ ಇಲ್ಲ. ಆ ಮೂಲಕ ಸರಕಾರ ಅರ್ಜಿದಾರರ ಸಾಂವಿಧಾನಿಕ ಹಕ್ಕು ಕಸಿದುಕೊಳ್ಳುತ್ತಿದೆ. ಆದ್ದರಿಂದ, ಯಾವುದೇ ಕಾರಣಕ್ಕೂ ಮಧ್ಯಂತರ ತಡೆ ತೆರವುಗೊಳಿಸಬಾರದು, ಇ-ಹರಾಜು ಪ್ರಕ್ರಿಯೆಗೆ ಅವಕಾಶ ಮಾಡಿಕೊಡಬಾರದು ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ತಡೆ ತೆರವು ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ತಿರಸ್ಕರಿಸಿತಲ್ಲದೆ, ಇ-ಹರಾಜು ಪ್ರಕ್ರಿಯೆಗೆ ಡಿಸೆಂಬರ್ 26ರಂದು ನೀಡಿದ್ದ ತಡೆಯಾಜ್ಞೆಯನ್ನು ವಿಸ್ತರಿಸಿ, ವಿಚಾರಣೆಯನ್ನು ಫೆಬ್ರವರಿ 11ಕ್ಕೆ ಮುಂದೂಡಿತು.
ಕೆಇಎ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳ ಪ್ರಕಟ
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜ.10 ಮತ್ತು ಜ.11ರಂದು ನಡೆದ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಕಟಿಸಿದೆ. https://cetonline.karnataka.gov.in/KEA ವೆಬ್ ಸೈಟ್ ನಲ್ಲಿ ಕೀ ಉತ್ತರಗಳನ್ನು ಪ್ರಕಟಿದ್ದು, ಈ ಬಗ್ಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ಜ.14ರ ಬೆಳಗ್ಗೆ 11 ಗಂಟೆ ಒಳಗೆ ಸಲ್ಲಿಸಬೇಕು. ಇದನ್ನು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ರಾಯಚೂರು | ಕನ್ನಡ ಧ್ವಜದ ಕಟ್ಟೆ ಧ್ವಂಸ, ಸಾವರ್ಕರ್ ಪ್ರತಿಮೆ ಅಭಿವೃದ್ಧಿ
ರಾಯಚೂರು, ಜ.12: ನಗರದ ಐತಿಹಾಸಿಕ ಮಾವಿನಕೆರೆಯ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗಿರುವ ನಡುವೆ ಕೆರೆಗೆ ಹೊಂದಿಕೊಂಡ ಜಾಗದಲ್ಲಿದ್ದ ಕನ್ನಡದ ಧ್ವಜ ಕಟ್ಟೆ, ಛತ್ರಪತಿ ಶಿವಾಜಿಯ ನಾಮಫಲಕದ ಕಟ್ಟೆ ಧ್ವಂಸಗೊಳಿಸಲಾಗಿದೆ. ಆದರೆ ಸಾವರ್ಕರ್ ಪ್ರತಿಮೆಗೆ ದೊಡ್ಡದಾದ ಕಟ್ಟೆ ಮಾಡಿ ಅಭಿವೃದ್ಧಿಗೊಳಿಸಲು ಮುಂದಾಗಿರುವ ಸ್ಥಳೀಯ ಆಡಳಿತ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ. ಹಲವು ಹೋರಾಟಗಳ ಫಲವಾಗಿ ಅನೇಕ ವರ್ಷಗಳಿಂದ ಒತ್ತುವರಿಯಾಗುತ್ತಿದ್ದ ಮಾವಿನಕೆರೆ ಜಾಗವನ್ನು ಸಂರಕ್ಷಿಸಿ ಪ್ರವಾಸಿ ತಾಣ ಮಾಡಲು ಆಡಳಿತ ಸರಕಾರ ಮುಂದಾಗಿದೆ. ಆದರೆ ಅಭಿವೃದ್ಧಿಯ ನೆಪದಲ್ಲಿ, ಕರವೇ ನಿರ್ಮಿಸಿದ್ದ ಧ್ವಜಾರೋಹಣದ ಕಟ್ಟೆ, ಶಿವಾಜಿಯ ನಾಮಫಲಕ ತೆರವುಗೊಳಿಸಲಾಗಿತ್ತು. ಆದರೆ ಇದೆಲ್ಲದರ ನಡುವೆ ಸಾವರ್ಕರ್ ಪ್ರತಿಮೆಯನ್ನು ತೆರವುಗೊಳಿಸದೆ ದೊಡ್ಡ ಕಟ್ಟೆ ಮಾಡಿ ಉದ್ಯಾನ ಮಾಡಿ ಅಲಂಕಾರಗೊಳಿಸಲಾಗುತ್ತಿದೆ. ಇದು ಪ್ರಗತಿಪರರ ಆಕ್ರೋಶಕ್ಕೆ ಕಾರಣವಾಗಿದೆ. ‘ಸಾವರ್ಕರ್ ವಿವಾದಿತ ವ್ಯಕ್ತಿ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾವರ್ಕರ ವಿಚಾರದ ವಿರುದ್ಧವಾಗಿದ್ದಾರೆ. ಕೆಲ ಸ್ಥಳೀಯ ಕಾಂಗ್ರೆಸ್ ನಾಯಕರು ಗಾಂಧಿ ಸಿದ್ಧಾಂತಕ್ಕೆ ತಿಲಾಂಜಲಿ ಇಟ್ಟು ಬ್ರಿಟಿಷರ ಓಲೈಸಿದ ವ್ಯಕ್ತಿಯ ಪ್ರತಿಮೆ ಅಭಿವೃದ್ಧಿ ಗೊಳಿಸುವ ಮೂಲಕ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಕೂಡಲೇ ಪ್ರತಿಮೆ ತೆರವುಗೊಳಿಸಿ ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ್ಮಾ ಗಾಂಧಿ, ಬಸವಣ್ಣ, ಅಥವಾ ಬುದ್ಧನ ಪ್ರತಿಮೆ ನಿರ್ಮಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಸಿಪಿಐಎಂಎಲ್ ಲಿಬರೇಶನ್ ಪಕ್ಷದ ಜಿಲ್ಲಾ ಮುಖಂಡ ಅಜೀಜ್ ಜಾಗೀರದಾರ್ ಹೇಳಿದ್ದಾರೆೆ.
Dharwad | ಸಾಮೂಹಿಕ ಅತ್ಯಾಚಾರ ಪ್ರಕರಣ; ವರದಿ ಸಲ್ಲಿಸಲು ರಾಜ್ಯ ಮಹಿಳಾ ಆಯೋಗ ನಿರ್ದೇಶನ
ಬೆಂಗಳೂರು : ಇತ್ತೀಚೆಗೆ ಧಾರವಾಡದಲ್ಲಿ ದುಷ್ಕರ್ಮಿಗಳು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಬೇಕು ಎಂದು ರಾಜ್ಯ ಮಹಿಳಾ ಆಯೋಗವು ಧಾರವಾಡ ಜಿಲ್ಲೆಯ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಸೋಮವಾರ ಆಯೋಗದ ಕಾರ್ಯದರ್ಶಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಧಾರವಾಡದಲ್ಲಿರುವ ಹೆಗ್ಗೇರಿ ಮೈದಾನದ ಬಳಿ ಮಹಿಳೆಯನ್ನು ಆಟೋದಲ್ಲಿ ಕರೆದೊಯ್ದು, ಆಕೆಗೆ ಮದ್ಯಪಾನ ಮಾಡಿಸಿ, ಸಾಮೂಹಿಕ ಅತ್ಯಾಚಾರ ನಡೆಸಿರುವುದು ವರದಿಯಾಗಿದೆ. ಅಲ್ಲದೆ, ಅತ್ಯಾಚಾರ ನಡೆಸಿರುವುದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಅಮಾನುಷ ಕೃತ್ಯದ ಬಗ್ಗೆಯೂ ವರದಿಯಾಗಿದೆ ಎಂದಿದ್ದಾರೆ. ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಬೇಕು. ಇದಕ್ಕೆ ಕಾರಣಕರ್ತರಾದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ನೀಡಬೇಕು ಎಂದು ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಯಾದಗಿರಿ | ಬಸವ ಗೀತೆ 9 ಸಂಪುಟ ಬಿಡುಗಡೆ
ಲೌಕಿಕ ಭೋಗ ಹಿತಾಸಕ್ತಿಗಳತ್ತ ಬದುಕಿನ ಪಯಣ : ಬಸವರಾಜಸ್ವಾಮಿ
ಶಹಾಪುರ | ಜಯಮ್ಮ ಸಂಶಯಾಸ್ಪದ ಸಾವು ಪ್ರಕರಣ : ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಧರಣಿ
ಶಹಾಪುರ : ಗೋಗಿ (ಕೆ) ಗ್ರಾಮದ ಮಹಿಳೆ ಜಯಮ್ಮ ಎಂಬವರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಅತ್ಯಾಚಾರ ನಡೆಸಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಧರಣಿ ನಡೆಸಲಾಯಿತು. ಜಿಲ್ಲಾ ಸಂಚಾಲಕ ನಿಂಗಣ್ಣ ಎಂ. ಗೋನಾಲ ಮಾತನಾಡಿ, ಜಯಮ್ಮ ಅವರು ತಮ್ಮ ಗಂಡ ಹಾಗೂ ಮೂವರು ಪುತ್ರರೊಂದಿಗೆ ಕೂಲಿ ನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. 2025ರ ಡಿ. 23ರಂದು ಮಧ್ಯಾಹ್ನ 12:30ರ ಸುಮಾರಿಗೆ ಹಣ ವಿದ್ಡ್ರಾ ಮಾಡಿಕೊಂಡು ಬರುತ್ತೇನೆ ಎಂದು ಹೇಳಿ ಶಹಾಪುರಕ್ಕೆ ಬಂದ ಜಯಮ್ಮ ಮನೆಗೆ ಹಿಂದಿರುಗಲಿಲ್ಲ. ಮರುದಿನ ಅಂದರೆ ಡಿ.24ರಂದು ಬೆಳಗ್ಗೆ ಶಹಾಪುರ ನಗರದ ಇಂದಿರಾನಗರ ಹೊರವಲಯದಲ್ಲಿ ಜಾಲಿ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ, ಅದು ಜಯಮ್ಮ ಅವರದ್ದೇ ಎಂಬುದು ದೃಢಪಟ್ಟಿತು. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಜಯಮ್ಮನ ಸಾವಿನ ಬಗ್ಗೆ ಅನುಮಾನಗಳು ಮೂಡಿವೆ ಎಂದರು. ಜಾಲಿ ಗಿಡದ ಕೊಂಬೆಗಳು ಬಲಿಷ್ಠವಾಗಿಲ್ಲ, ಶವದ ಕುತ್ತಿಗೆ ಮೇಲ್ಭಾಗದಲ್ಲಿ ಗುರುತುಗಳಿದ್ದು, ಕಾಲುಗಳು ನೆಲಕ್ಕೆ ಸಮೀಪದಲ್ಲಿದ್ದವು. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಜಯಮ್ಮರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಬಳಿಕ ನೇಣು ಬಿಗಿದಂತೆ ತೋರಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ ಎಂದು ನಿಂಗಣ್ಣ ಹೇಳಿದರು. ಈ ಬಗ್ಗೆ ಡಿ.30ರಂದು ಶಹಾಪುರ ಪೊಲೀಸ್ ಠಾಣೆಯ ಆರಕ್ಷಕ ನೀರೀಕ್ಷಕರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಅವರು ಸಮರ್ಪಕ ಉತ್ತರ ನೀಡಿಲ್ಲ. ಜೊತೆಗೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ನಿಂಗಣ್ಣ ಆರೋಪಿಸಿದರು. ಆದ್ದರಿಂದ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ದುಷ್ಕರ್ಮಿಗಳನ್ನು ಬಂಧಿಸಿ, ಕರ್ತವ್ಯ ಲೋಪ ತೋರಿದ ಶಹಾಪುರ ಪೊಲೀಸ್ ಠಾಣಾಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಚೆನ್ನಪ್ಪ ಆನೆಗುಂದಿ, ಎಸ್.ಎಂ. ಸಾಗರ, ದಾವಲ್ ಸಾಬ್ ನದಾಫ್, ಮಾದೇವಪ್ಪ ದಿಗ್ಗಿ, ಶಿವಕುಮಾರ್ ದೊಡ್ಡಮನಿ, ಮಾನಪ್ಪ ಮುದ್ರಿಕಿ, ಭೀಮಶಂಕರ್ ಕಟ್ಟೆಮನಿ, ದುರ್ಗಮ್ಮ ಕಟ್ಟಿಮನಿ, ರಮೇಶ್ ಗಾಂಜಿ, ಹಣಮಂತ ಕಟ್ಟಿಮನಿ, ತಾಯಪ್ಪ ಕನ್ನಳ್ಳಿ, ಬಸವರಾಜ ನಾಟೇಕರ, ಧರ್ಮಣ್ಣ ಧೀವಳಗುಡ್ಡ, ಭೀಮರಾಯ ರಾಜಾಪುರ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹತ್ತು ಪಿಜಿಗಳಿಗೆ ಬೀಗ
ಬೆಂಗಳೂರು : ಸೋಮವಾರದಂದು ಇಲ್ಲಿನ ಜಯನಗರ, ಬೆಂಗಳೂರು ದಕ್ಷಿಣ, ಬಿಟಿಎಂ ಲೇಔಟ್ ಬೊಮ್ಮನಹಳ್ಳಿ ಕ್ಷೇತ್ರಗಳಲ್ಲಿ ಶುಚಿತ್ವ ಇಲ್ಲದೆ ನಡೆಯುತ್ತಿದ್ದ 10 ಪೇಯಿಂಗ್ ಗೆಸ್ಟ್ ಗಳಿಗೆ(ಪಿ.ಜಿ.) ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಬೀಗ ಹಾಕಿದ್ದಾರೆ. ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು ಎಫ್ಎಸ್ಎಸ್ಎಐನ ಆಹಾರ ಸುರಕ್ಷತಾ ಪ್ರಮಾಣ ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಒಟ್ಟು 66 ಪಿಜಿಗಳನ್ನು ತಪಾಸಣೆ ನಡೆಸಲಾಗಿದೆ. ತಪಾಸಣೆ ನಡೆಸಿದ ಪಿ.ಜಿ. ಉದ್ದಿಮೆಗಳಲ್ಲಿ ಕಂಡು ಬಂದ ನ್ಯೂನ್ಯತೆಗಳಿಗೆ 22,500 ರೂ.ಗಳ ದಂಡವನ್ನು ವಿಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.
ಇರಾನ್ ಆಡಳಿತವನ್ನು ಪ್ರಶ್ನಿಸಿ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಎರಡನೇ ವಾರವೂ ಮುಂದುವರಿದಿದ್ದು, ಸಾವಿನ ಸಂಖ್ಯೆ 544ಕ್ಕೆ ತಲುಪಿದೆ. ಈ ಪೈಕಿ 162 ಮಂದಿ ಪ್ರತಿಭಟನಕಾರರು, 41 ಮಂದಿ ಭದ್ರತಾ ಸಿಬ್ಬಂದಿ ಎಂದು ಮಾಧ್ಯಮಗಳು ವರದಿ ಮಾಡಿವೆ. ದೇಶಾದ್ಯಂತ ಇಂಟರ್ನೆಟ್ ಸ್ಥಗಿತ ಹಾಗೂ ಫೋನ್ ಲೈನ್ಗಳನ್ನು ಕಡಿತಗೊಳಿಸಿದ್ದರೂ ಪ್ರತಿಭಟನೆಗಳು ಹೆಚ್ಚುತ್ತಲೇ ಇವೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ ತಿಳಿಸಿದೆ. 10,681ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ನಡುವೆ, ಏರ್ ಫೋರ್ಸ್ ಒನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಮಾತುಕತೆ ನಡೆಸಲು ಬಯಸುತ್ತಿದೆ ಎಂದು ಹೇಳಿದ್ದಾರೆ. ಇದೇ ವೇಳೆ, ಇರಾನ್ನಲ್ಲಿ ವ್ಯಾಪಕವಾದ ಪ್ರತಿಭಟನೆಗಳ ಪರಿಣಾಮಗಳು ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ನಲ್ಲಿ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಹಾಕುತ್ತಿರುವುದನ್ನು ಇಸ್ರೇಲ್ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ನಲ್ಲಿ ಅಶಾಂತಿ ಮುಂದುವರಿದಿರುವ ಸಂದರ್ಭದಲ್ಲಿ ವಾಷಿಂಗ್ಟನ್ ಮಿಲಿಟರಿ ಹಸ್ತಕ್ಷೇಪ ಮಾಡಿದರೆ, ಅಮೆರಿಕದ ಮಿಲಿಟರಿ ಹಾಗೂ ವಾಣಿಜ್ಯ ನೆಲೆಗಳನ್ನು ಪ್ರತೀಕಾರಕ್ಕಾಗಿ ಕಾನೂನುಬದ್ಧ ಗುರಿಗಳಾಗಿ ಟೆಹ್ರಾನ್ ಪರಿಗಣಿಸುತ್ತದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಕರ್ ಖಲೀಬಾಫ್ ಎಚ್ಚರಿಸಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಇರಾನ್ ಅಧಿಕಾರಿಗಳು ಗರಿಷ್ಠ ಸಂಯಮ ವಹಿಸಬೇಕು ಮತ್ತು ದೇಶದಲ್ಲಿ ಮಾಹಿತಿಗೆ ಪ್ರವೇಶವನ್ನು ಪುನಃ ಸಕ್ರಿಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಇರಾನ್ ನಲ್ಲಿ ಏನಾಗುತ್ತಿದೆ? ಡಿಸೆಂಬರ್ 28ರಂದು ಇರಾನಿನ ಕರೆನ್ಸಿ ರಿಯಾಲ್ ಕುಸಿತ ಮತ್ತು ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆಗಳು ಆರಂಭವಾಗಿವೆ. ಇರಾನ್ನ ವಿವಾದಿತ ಪರಮಾಣು ಕಾರ್ಯಕ್ರಮದ ಮೇಲೆ ಹೇರಲಾದ ಅಂತರರಾಷ್ಟ್ರೀಯ ನಿರ್ಬಂಧಗಳಿಂದ ಆರ್ಥಿಕತೆ ಒತ್ತಡಕ್ಕೆ ಒಳಗಾಗಿದ್ದು, ಟೆಹ್ರಾನ್ನ ಕರೆನ್ಸಿ ಯುಎಸ್ ಡಾಲರ್ಗೆ 1.4 ಮಿಲಿಯನ್ ರಿಯಾಲ್ಗಳಿಗಿಂತ ಹೆಚ್ಚಿನ ಮಟ್ಟಕ್ಕೆ ಕುಸಿದಿದೆ. ಟೆಹ್ರಾನ್, ಮಶಾದ್ ಸೇರಿದಂತೆ ಹಲವು ನಗರಗಳಲ್ಲಿ ರಾತ್ರಿಯಿಡೀ ಪ್ರತಿಭಟನಾಕಾರರು ಬೀದಿಗಿಳಿದು ಘೋಷಣೆ ಕೂಗುತ್ತಾ, ಚಪ್ಪಾಳೆ ತಟ್ಟುತ್ತಾ ಮತ್ತು ಮೊಬೈಲ್ ಫೋನ್ ಟಾರ್ಚ್ ಬೆಳಗಿಸಿ ಪ್ರತಿಭಟನೆ ನಡೆಸಿದ್ದಾರೆ. ಬಹುತೇಕ ಶಿಯಾ ಸಮುದಾಯವೇ ಇರುವ ಇರಾನ್ನಲ್ಲಿ ಧಾರ್ಮಿಕ ಪ್ರಭುತ್ವ ಆಡಳಿತವಿದೆ. ಇಲ್ಲಿನ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ. ಮೊದಲ ಬಾರಿಗೆ ಅಲ್ಲಿನ ಜನರು ದೇವಪ್ರಭುತ್ವದ ವಿರುದ್ಧ ದೊಡ್ಡ ಮಟ್ಟದಲ್ಲಿ ಬೀದಿಗಿಳಿದಿದ್ದಾರೆ. ರಾಜಕೀಯ ಸ್ವಾತಂತ್ರ್ಯದ ಕೊರತೆ, ಆರ್ಥಿಕ ಕುಸಿತ ಮತ್ತು ಭ್ರಷ್ಟಾಚಾರವೇ ಜನಾಕ್ರೋಶಕ್ಕೆ ಕಾರಣಗಳೆಂದು ಹೇಳಲಾಗುತ್ತಿದ್ದು, ಸರ್ಕಾರವನ್ನು ಕಿತ್ತೊಗೆಯುವುದೇ ತಮ್ಮ ಗುರಿ ಎಂದು ಪ್ರತಿಭಟನಾಕಾರರು ಘೋಷಿಸಿದ್ದಾರೆ. ಇತ್ತ ಖಮೇನಿ ಪ್ರತಿಭಟನಾಕಾರರನ್ನು ದೊಂಬಿಕೋರರು ಎಂದು ಹೇಳಿದ್ದು, ಅಮೆರಿಕವನ್ನು ಮೆಚ್ಚಿಸಲು ಇವರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಎಎಫ್ಪಿ ಸುದ್ದಿ ಸಂಸ್ಥೆ ದೃಢೀಕರಿಸಿದ ವೀಡಿಯೊವೊಂದರಲ್ಲಿ, ಟೆಹ್ರಾನ್ನ ದಕ್ಷಿಣದಲ್ಲಿರುವ ಕಹ್ರಿಜಾಕ್ನ ಶವಾಗಾರದ ಹೊರಗೆ ಡಜನ್ಗಟ್ಟಲೆ ಶವಗಳಿರುವುದು ಕಾಣಿಸಿದೆ. ಈ ಹಿಂದೆ ಇರಾನ್ನ ಮಾನವ ಹಕ್ಕುಗಳ ಕೇಂದ್ರ (CHRI) ಅನ್ನು ಉಲ್ಲೇಖಿಸಿ ಎಎಫ್ಪಿ ವರದಿಯೊಂದು, ಪ್ರಸ್ತುತ ಇಂಟರ್ನೆಟ್ ಸ್ಥಗಿತದ ಸಮಯದಲ್ಲಿ ಇರಾನ್ನಾದ್ಯಂತ ನೂರಾರು ಪ್ರತಿಭಟನಾಕಾರರು ಸಾವನ್ನಪ್ಪಿರುವ ವಿಶ್ವಾಸಾರ್ಹ ವರದಿಗಳು ಲಭ್ಯವಾಗಿವೆ ಎಂದು ಹೇಳಿದೆ. ಇರಾನ್ನಲ್ಲಿ ಹತ್ಯಾಕಾಂಡ ನಡೆಯುತ್ತಿದೆ. ಮತ್ತಷ್ಟು ಜೀವಹಾನಿಯನ್ನು ತಡೆಯಲು ಜಗತ್ತು ಈಗಲೇ ಕಾರ್ಯನಿರ್ವಹಿಸಬೇಕು ಎಂದು CHRI ಹೇಳಿದೆ. ಮಿಲಿಟರಿ ದಾಳಿ ಬೆದರಿಕೆ ಹಾಕಿದ ಟ್ರಂಪ್ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ, ಪ್ರತಿಭಟನಾಕಾರರ ಮೇಲೆ ದಮನಕ್ಕಾಗಿ ಇಸ್ಲಾಮಿಕ್ ಗಣರಾಜ್ಯದ ಮೇಲೆ ಮಿಲಿಟರಿ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ ಬಳಿಕ ಇರಾನ್ ಮಾತುಕತೆಗಳನ್ನು ಪ್ರಸ್ತಾಪಿಸಿದೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಲಿಟರಿ ಆಯ್ಕೆಗಳನ್ನು ಪರಿಶೀಲಿಸಲಾಗುತ್ತಿದೆ. “ನಾವು ಕೆಲವು ಬಲವಾದ ಆಯ್ಕೆಗಳನ್ನು ನೋಡುತ್ತಿದ್ದೇವೆ” ಎಂದು ಭಾನುವಾರ ರಾತ್ರಿ ಏರ್ ಫೋರ್ಸ್ ಒನ್ನಲ್ಲಿ ವರದಿಗಾರರಿಗೆ ಟ್ರಂಪ್ ತಿಳಿಸಿದ್ದಾರೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ. ಇರಾನ್ನ ಪ್ರತೀಕಾರದ ಬೆದರಿಕೆಗಳ ಬಗ್ಗೆ ಕೇಳಿದಾಗ, “ಅವರು ಹಾಗೆ ಮಾಡಿದರೆ, ನಾವು ಅವರ ಮೇಲೆ ಹಿಂದೆಂದೂ ದಾಳಿ ಮಾಡದ ಮಟ್ಟದಲ್ಲಿ ದಾಳಿ ಮಾಡುತ್ತೇವೆ” ಎಂದು ಟ್ರಂಪ್ ಹೇಳಿದ್ದಾರೆ. ಟೆಹ್ರಾನ್ ಜೊತೆ ಸಭೆ ನಡೆಸಲು ತಮ್ಮ ಆಡಳಿತ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ. “ಅವರು ಅಮೆರಿಕದಿಂದ ಹೊಡೆತ ತಿನ್ನುವುದರಿಂದ ಬೇಸತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಇರಾನ್ ಮಾತುಕತೆ ನಡೆಸಲು ಬಯಸುತ್ತದೆ” ಎಂದು ಟ್ರಂಪ್ ಹೇಳಿದ್ದಾರೆ. ಟ್ರಂಪ್ ಮಂಗಳವಾರ ಹಿರಿಯ ಸಲಹೆಗಾರರನ್ನು ಭೇಟಿಯಾಗಿ ಮಿಲಿಟರಿ ದಾಳಿ, ಸೈಬರ್ ಕಾರ್ಯಾಚರಣೆ, ಕಠಿಣ ನಿರ್ಬಂಧಗಳು ಹಾಗೂ ಸರ್ಕಾರ ವಿರೋಧಿ ಗುಂಪುಗಳಿಗೆ ಆನ್ಲೈನ್ ಬೆಂಬಲ ಸೇರಿದಂತೆ ಹಲವು ಆಯ್ಕೆಗಳನ್ನು ಚರ್ಚಿಸುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಸ್ಟಾರ್ಲಿಂಕ್ ಮೂಲಕ ಇರಾನ್ನಲ್ಲಿ ಇಂಟರ್ನೆಟ್ ಪ್ರವೇಶವನ್ನು ಮರುಸ್ಥಾಪಿಸುವ ಕುರಿತು ಎಲೋನ್ ಮಸ್ಕ್ ಜೊತೆ ಮಾತನಾಡುವುದಾಗಿ ಟ್ರಂಪ್ ಹೇಳಿದ್ದಾರೆ. ನಾವು ಯುದ್ಧದಾಹಿಗಳಲ್ಲ: ಇರಾನ್ ಅಮೆರಿಕದೊಂದಿಗೆ ಸಂವಹನಕ್ಕೆ ಸಿದ್ಧವಾಗಿದ್ದೇವೆ. ನಾವು ಮುಖಾಮುಖಿ ಅಥವಾ ಸಂವಾದಕ್ಕೆ ಸಿದ್ಧ ಎಂದು ಇರಾನ್ ವಿದೇಶಾಂಗ ಸಚಿವರು ಸೋಮವಾರ ಹೇಳಿದ್ದಾರೆ. “ನಾವು ಯುದ್ಧದಾಹಿಗಳಲ್ಲ, ಆದರೆ ಯುದ್ಧಕ್ಕೆ ಸಿದ್ಧ. ಸಮಾನ ಹಕ್ಕುಗಳು ಮತ್ತು ಪರಸ್ಪರ ಗೌರವದೊಂದಿಗೆ ನ್ಯಾಯಯುತ ಮಾತುಕತೆಗಳಿಗೆ ಸಿದ್ಧ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ಇರಾನ್ನಲ್ಲಿನ ರಾಯಭಾರಿಗಳ ಸಭೆಯಲ್ಲಿ ಹೇಳಿದ್ದಾರೆ. ಟೆಹ್ರಾನ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ, “ಸಂವಹನಕ್ಕೆ ನಾವು ಮುಕ್ತವಾಗಿದ್ದೇವೆ. ಅಗತ್ಯವಿದ್ದಾಗ ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ. ಆದರೆ ಆ ಮಾತುಕತೆಗಳು ಪರಸ್ಪರ ಹಿತಾಸಕ್ತಿಗಳು ಮತ್ತು ಕಾಳಜಿಗಳ ಸ್ವೀಕಾರವನ್ನು ಆಧರಿಸಿರಬೇಕು; ಏಕಪಕ್ಷೀಯ ಅಥವಾ ಆಜ್ಞಾಧಾರಿತ ಮಾತುಕತೆಗಳಾಗಿರಬಾರದು” ಎಂದು ಹೇಳಿದ್ದಾರೆ. ಇರಾನ್ ಶಾಸಕರ ಎಚ್ಚರಿಕೆ ಇರಾನ್ ಮೇಲೆ ದಾಳಿ ನಡೆದರೆ, ಆಕ್ರಮಿತ ಪ್ರದೇಶಗಳು ಮತ್ತು ಈ ಪ್ರದೇಶದಲ್ಲಿನ ಎಲ್ಲಾ ಅಮೆರಿಕನ್ ಮಿಲಿಟರಿ ಕೇಂದ್ರಗಳು, ನೆಲೆಗಳು ಹಾಗೂ ಹಡಗುಗಳು ನಮ್ಮ ಕಾನೂನುಬದ್ಧ ಗುರಿಗಳಾಗಿರುತ್ತವೆ ಎಂದು ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಕರ್ ಖಲೀಬಾಫ್ ಹೇಳಿದ್ದಾರೆ ಎಂದು ಇರಾನ್ ಇಂಟರ್ನ್ಯಾಷನಲ್ ವರದಿ ಮಾಡಿದೆ. “ನಾವು ಕ್ರಮದ ನಂತರ ಪ್ರತಿಕ್ರಿಯಿಸುವುದಕ್ಕೆ ಮಾತ್ರ ಸೀಮಿತವಿಲ್ಲ; ಬೆದರಿಕೆಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತೇವೆ” ಎಂದು ಅವರು ಹೇಳಿದ್ದಾರೆ. ಇರಾನ್ ಮೇಲೆ ಹೆಚ್ಚಿನ ನಿರ್ಬಂಧಗಳಿಗೆ ಯುರೋಪಿಯನ್ ಒಕ್ಕೂಟ ಸಿದ್ಧ ಅಗತ್ಯವಿದ್ದರೆ ಇರಾನ್ ಮೇಲೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಲು ಸಿದ್ಧ ಎಂದು ಯುರೋಪಿಯನ್ ಒಕ್ಕೂಟ ಹೇಳಿದೆ. ಪ್ರತಿಭಟನಾಕಾರರ ಮೇಲಿನ ಹಿಂಸಾತ್ಮಕ ದಮನದ ಹಿನ್ನೆಲೆಯಲ್ಲಿ ಹೊಸ ಮತ್ತು ಹೆಚ್ಚು ಕಠಿಣ ನಿರ್ಬಂಧಗಳನ್ನು ಪ್ರಸ್ತಾಪಿಸಲು ನಾವು ಸಿದ್ಧ ಎಂದು ವಕ್ತಾರ ಅನೌರ್ ಎಲ್ ಅನೌನಿ ಹೇಳಿದ್ದಾರೆ. ಮಾನವ ಹಕ್ಕುಗಳಿಂದ ಹಿಡಿದು ಪರಮಾಣು ಚಟುವಟಿಕೆಗಳವರೆಗೆ ಹಲವು ವಿಷಯಗಳ ಕುರಿತು ಇರಾನ್ ಮೇಲೆ ಈಗಾಗಲೇ ನಿರ್ಬಂಧಗಳು ಜಾರಿಯಲ್ಲಿವೆ. ರಾಜಧಾನಿಯಲ್ಲಿ ಪ್ರಮುಖ ರ್ಯಾಲಿಯಲ್ಲಿ ಭಾಗವಹಿಸಿದ ಇರಾನ್ ಅಧ್ಯಕ್ಷರು ಟೆಹ್ರಾನ್ನಲ್ಲಿ ನಡೆದ ದೊಡ್ಡ ರ್ಯಾಲಿ ಸೇರಿದಂತೆ ವಿವಿಧ ನಗರಗಳಲ್ಲಿ ಸರ್ಕಾರಿ ಪರ ರ್ಯಾಲಿಗಳ ದೃಶ್ಯಗಳನ್ನು ಇರಾನಿನ ಮಾಧ್ಯಮಗಳು ಪ್ರಸಾರ ಮಾಡಿವೆ. ಸಾವಿರಾರು ಜನರು ಈ ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ರಾಜಧಾನಿಯಲ್ಲಿ ನಡೆದ ರ್ಯಾಲಿಯಲ್ಲಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಭಾಗವಹಿಸಿದ್ದ ವೀಡಿಯೊವನ್ನು ರಾಜ್ಯ ಸ್ವಾಮ್ಯದ ಮಾಧ್ಯಮಗಳು ಪ್ರಸಾರ ಮಾಡಿವೆ. ಎರಡು ವಾರಗಳ ಹಿಂದೆ ಆರಂಭವಾದ ಮಾರಕ ಹಿಂಸಾಚಾರವನ್ನು ಖಂಡಿಸಲು ಸೋಮವಾರ ನಡೆದ “ರಾಷ್ಟ್ರೀಯ ಪ್ರತಿರೋಧ ಮೆರವಣಿಗೆ”ಯಲ್ಲಿ ಭಾಗವಹಿಸಲು ಪೆಜೆಶ್ಕಿಯಾನ್ ಇರಾನಿಯನ್ನರನ್ನು ಒತ್ತಾಯಿಸಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಕುಂದುಕೊರತೆಗಳನ್ನು ಪರಿಹರಿಸುವುದಾಗಿ ಅವರು ಪ್ರತಿಜ್ಞೆ ಮಾಡಿದ್ದು, ತಮ್ಮ ಸರ್ಕಾರ ಪ್ರತಿಭಟನಾಕಾರರ ಮಾತುಗಳನ್ನು ಕೇಳಲು ಸಿದ್ಧವಿದೆ ಎಂದು ಹೇಳಿದ್ದಾರೆ. ಗಲಭೆಕೋರರು ಹಾಗೂ ಭಯೋತ್ಪಾದಕ ಶಕ್ತಿಗಳು ನಾಶನಷ್ಟ ಉಂಟುಮಾಡುವುದನ್ನು ತಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಹೊರಗಿನ ಹಸ್ತಕ್ಷೇಪ ವಿರೋಧಿಸಿದ ಚೀನಾ ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಬಲಪ್ರಯೋಗವನ್ನು ವಿರೋಧಿಸುತ್ತೇವೆ. ಅಲ್ಲಿನ ಸರ್ಕಾರ ಮತ್ತು ಜನರು ಪ್ರಸ್ತುತ ತೊಂದರೆಗಳನ್ನು ನಿವಾರಿಸಲು ಹಾಗೂ ರಾಷ್ಟ್ರೀಯ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಮರ್ಥರಾಗಿದ್ದಾರೆ ಎಂದು ಚೀನಾ ಹೇಳಿದೆ. ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಸೋಮವಾರ ಬೀಜಿಂಗ್ನಲ್ಲಿ ಮಾತನಾಡಿ, “ಇತರ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪವನ್ನು ಚೀನಾ ಯಾವಾಗಲೂ ವಿರೋಧಿಸುತ್ತದೆ. ಎಲ್ಲಾ ದೇಶಗಳ ಸಾರ್ವಭೌಮತ್ವ ಮತ್ತು ಭದ್ರತೆಯನ್ನು ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಸಂಪೂರ್ಣವಾಗಿ ರಕ್ಷಿಸಬೇಕು. ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಬಲಪ್ರಯೋಗ ಅಥವಾ ಅದರ ಬೆದರಿಕೆಯನ್ನು ಚೀನಾ ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.
ಯಾದಗಿರಿ | ಫೇಸ್ಬುಕ್ನಲ್ಲಿ ದಲಿತರ ನಿಂದನೆ ಆರೋಪ : ಆರೋಪಿಯ ಬಂಧನಕ್ಕೆ ಒತ್ತಾಯ
ಯಾದಗಿರಿ, ಜ.12: ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತರಿಗೆ ಅವಮಾನ ಮಾಡುವ ರೀತಿಯಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡುತ್ತಿರುವ ‘ಗುಲಾಮರ ಅಪ್ಪ’ ಎನ್ನುವ ಫೇಸ್ಬುಕ್ ಕಿಡಿಗೇಡಿಯನ್ನು ಬಂಧಿಸಬೇಕೆಂದು ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾಧ್ಯಕ್ಷ ವಿಶ್ವ ನಾಟೇಕಾರ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಿಡಿಗೇಡಿಯೊಬ್ಬ ‘ಗುಲಾಮರ ಅಪ್ಪ’ ಎಂಬ ನಕಲಿ ಖಾತೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಮತ್ತು ದಲಿತ ಸಮುದಾಯವನ್ನು ಅತ್ಯಂತ ಕೆಟ್ಟ ಪದಗಳಲ್ಲಿ ನಿಂದಿಸುತ್ತಿದ್ದರೂ ಅಧಿಕಾರದಲ್ಲಿರುವವರು ಅದರ ಬಗ್ಗೆ ತಲೆಕೆಡಸಿಕೊಳ್ಳುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ, ಪ್ರಿಯಾಂಕ್ ಖರ್ಗೆಯವರನ್ನು ಅಶ್ಲೀಲವಾಗಿ ಬೈದ ಅನ್ನೋ ಕಾರಣಕ್ಕೆ ದಿನಾ ಬೆಳಗಾಗುವುದರೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಾರೆ. ಆದರೆ ಅಂಬೇಡ್ಕರ್, ಬುದ್ಧ ಹಾಗೂ ದಲಿತರನ್ನು ಪ್ರತಿನಿತ್ಯ ನಿಂದಿಸುವ ದುಷ್ಕರ್ಮಿಗಳು ಕಣ್ಣಿಗೆ ಬೀಳುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಳೆ ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿರುವ ಸಿಎಂ, ಡಿಸಿಎಂ
ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ‘ನಾಯಕತ್ವ ಬದಲಾವಣೆ’ಯ ಸುತ್ತ ಚರ್ಚೆ ನಡೆಯುತ್ತಿದ್ದು, ಬೆಂಬಲಿಗರ ಪರ-ವಿರೋಧ ಹೇಳಿಕೆಗಳು ಬಿರುಸುಗೊಂಡಿವೆ. ಈ ಮಧ್ಯೆ ನಾಳೆ (ಜ.13) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಕಸಭೆ ಪ್ರತಿಪಕ್ಷ ನಾಯಕರೂ ಆಗಿರುವ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ತಮಿಳುನಾಡಿನ ನೀಲಗಿರಿಸ್ ಜಿಲ್ಲೆಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮ ನಿಮಿತ್ತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನಾಳೆ(ಜ.13) ಮಧ್ಯಾಹ್ನ 1:30ರ ಸುಮಾರಿಗೆ ಮೈಸೂರಿಗೆ ಆಗಮಿಸುತ್ತಿದ್ದು, ಸಿಎಂ ಹಾಗೂ ಡಿಸಿಎಂ ಅವರು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಹಾಗೂ ‘ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ ಬದಲಾವಣೆ ಮಾಡಿರುವ ಕೇಂದ್ರ ಸರಕಾರದ ವಿರುದ್ಧ ಹೋರಾಟ ರೂಪಿಸುವ ಸಂಬಂಧ ರಾಹುಲ್ ಗಾಂಧಿ ಅವರೊಂದಿಗೆ ಉಭಯ ನಾಯಕರು ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಆ ಹಿನ್ನೆಲೆಯಲ್ಲಿಯೇ ನಾಳೆ(ಜ.13) ಮಧ್ಯಾಹ್ನ 1ಗಂಟೆಯ ಸುಮಾರಿಗೆ ಇಲ್ಲಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 1:30ರ ಸುಮಾರಿಗೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ಇದೇ ವೇಳೆ ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ ಹಾಗೂ ಡಿಸಿಎಂ ಅವರು, ಸಂಜೆ 6:30ರ ಸುಮಾರಿಗೆ ಮೈಸೂರಿನಿಂದ ವಿಶೇಷ ವಿಮಾನ ನಿಲ್ದಾಣ ರಾಜಧಾನಿ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಗೊತ್ತಾಗಿದೆ.
‘ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಕ್ಯಾಂಪಸ್ : 4 ವಿಷಯಗಳಲ್ಲಿ ಪದವಿ, 1 ವಿಷಯದಲ್ಲಿ ಸ್ನಾತಕೋತ್ತರ ಪದವಿ’
ATP ರ್ಯಾಂಕಿಂಗ್: ಅಗ್ರ ಎರಡು ಸ್ಥಾನ ಕಾಯ್ದುಕೊಂಡ ಅಲ್ಕರಾಝ್, ಸಿನ್ನರ್
ಪ್ಯಾರಿಸ್, ಜ.12: ಕಾರ್ಲೊಸ್ ಅಲ್ಕರಾಝ್ ಹಾಗೂ ಜನ್ನಿಕ್ ಸಿನ್ನರ್ ಸೋಮವಾರ ಬಿಡುಗಡೆಯಾದ ಎಟಿಪಿ ರ್ಯಾಂಕಿಂಗ್ನಲ್ಲಿ ಅಗ್ರ ಎರಡು ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ. 2026ರ ಆಸ್ಟ್ರೇಲಿಯನ್ ಓಪನ್ಗಿಂತ ಮೊದಲು ನಡೆಯುವ ಡ್ರಾ ಕಾರ್ಯಕ್ರಮದಲ್ಲಿ ಆಟಗಾರರ ಈ ರ್ಯಾಂಕಿಂಗ್ ಅನ್ನು ಪರಿಗಣಿಸಲಾಗುತ್ತದೆ. ಹಿಂದಿನ ನಾಲ್ಕು ಗ್ರ್ಯಾನ್ಸ್ಲಾಮ್ ಟೂರ್ನಿಗಳಂತೆಯೇ ಮೆಲ್ಬರ್ನ್ನಲ್ಲಿ ಈ ಬಾರಿ ನಡೆಯಲಿರುವ ಡ್ರಾ ಕಾರ್ಯಕ್ರಮದಲ್ಲಿ ಅಲ್ಕರಾಝ್ ಹಾಗೂ ಸಿನ್ನರ್ ಪರಸ್ಪರ ವಿರುದ್ಧ ಗುಂಪಿನಲ್ಲಿ ಸ್ಥಾನ ಪಡೆಯಬಹುದು. ಈ ವರ್ಷದ ಗ್ರ್ಯಾನ್ಸ್ಲಾಮ್ ಟೂರ್ನಿಯ ಡ್ರಾ ಕಾರ್ಯಕ್ರಮವು ಗುರುವಾರ ನಡೆಯಲಿದೆ. ಅಲ್ಕರಾಝ್ ಹಾಗೂ ಎರಡು ಬಾರಿಯ ಹಾಲಿ ಚಾಂಪಿಯನ್ ಸಿನ್ನರ್ ಈ ಋತುವಿನಲ್ಲಿ ಯಾವುದೇ ಸ್ಪರ್ಧಾತ್ಮಕ ಪಂದ್ಯವನ್ನಾಡದೆ ಮೆಲ್ಬರ್ನ್ ಗೆ ತಲುಪಿದ್ದಾರೆ. ಶನಿವಾರ ದಕ್ಷಿಣ ಕೊರಿಯಾದ ಇಂಚಿಯೊನ್ನಲ್ಲಿ ನಡೆಯಲಿರುವ ಪ್ರದರ್ಶನ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಮುಖಾಮುಖಿಯಾಗಲಿದ್ದಾರೆ. ಹಾಂಕಾಂಗ್ ಓಪನ್ ಫೈನಲ್ ನಲ್ಲಿ ಇಟಲಿಯ ಲೊರೆಂರೊ ಮುಸೆಟ್ಟಿ ವಿರುದ್ಧ ನೇರ ಸೆಟ್ಗಳ ಅಂತರದಿಂದ ಜಯಶಾಲಿಯಾಗಿರುವ ಅಲೆಕ್ಸಾಂಡರ್ ಬಬ್ಲಿಕ್ ಇದೇ ಮೊದಲ ಬಾರಿ ಅಗ್ರ-10ರಲ್ಲಿ ಸ್ಥಾನ ಪಡೆದಿದ್ದಾರೆ. ತನ್ನ ವೃತ್ತಿಜೀವನದಲ್ಲಿ ಒಂಭತ್ತನೇ ಪ್ರಶಸ್ತಿಯನ್ನು ಗೆದ್ದ ನಂತರ 28ರ ಹರೆಯದ ಕಝಕ್ ಆಟಗಾರ ಬಬ್ಲಿಕ್ ಒಂದು ಸ್ಥಾನ ಮೇಲಕ್ಕೇರಿದ್ದಾರೆ. ಎಟಿಪಿ ಟೂರ್ನಲ್ಲಿ ಸತತ ಏಳನೇ ಪ್ರಶಸ್ತಿಯನ್ನು ಕಳೆದುಕೊಂಡ ಹೊರತಾಗಿಯೂ ಮುಸೆಟ್ಟಿ ಕೆನಡಾದ ಫೆಲಿಕ್ಸ್ ಅಗುರ್-ಅಲಿಸಿಮ್ರನ್ನು ಹಿಂದಿಕ್ಕಿ ಎರಡು ಸ್ಥಾನ ಭಡ್ತಿ ಪಡೆದಿದ್ದಾರೆ. ಐದನೇ ಸ್ಥಾನ ಪಡೆದು ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ. ಬ್ರಿಸ್ಬೇನ್ನಲ್ಲಿ ವೃತ್ತಿಜೀವನದ ತನ್ನ 22ನೇ ಪ್ರಶಸ್ತಿಯನ್ನು ಗೆದ್ದಿರುವ ರಶ್ಯದ ಡೇನಿಯಲ್ ಮೆಡ್ವೆಡೆವ್ ಒಂದು ಸ್ಥಾನ ಮೇಲಕ್ಕೇರಿ 12ನೇ ಸ್ಥಾನ ತಲುಪಿದ್ದಾರೆ. ರನ್ನರ್-ಅಪ್ ಬ್ರೆಂಡನ್ ನಕಶಿಮಾ ನಾಲ್ಕು ಸ್ಥಾನ ಭಡ್ತಿ ಪಡೆದು ಜೀವನಶ್ರೇಷ್ಠ 29ನೇ ಸ್ಥಾನಕ್ಕೇರಿದ್ದಾರೆ. ಗಾಯದಿಂದ ಚೇತರಿಸಿಕೊಂಡು ದೀರ್ಘ ಸಮಯದ ನಂತರ ವಾಪಸಾಗಿರುವ ಪೋಲ್ಯಾಂಡ್ನ ಹ್ಯೂಬರ್ಟ್ ಹರ್ಕಾಝ್ ತನ್ನ ತಂಡ ಯುನೈಟೆಡ್ ಕಪ್ ಜಯಿಸುವಲ್ಲಿ ನೆರವಾಗಿದ್ದರು. ಈ ಹಿನ್ನೆಲೆಯಲ್ಲಿ ರ್ಯಾಂಕಿಂಗ್ನಲ್ಲಿ 30 ಸ್ಥಾನ ಮೇಲಕ್ಕೇರಿ 53ನೇ ಸ್ಥಾನ ತಲುಪಿದ್ದಾರೆ. ಹಾಲಿ ಎಟಿಪಿ ರ್ಯಾಂಕಿಂಗ್ ನಲ್ಲಿ ಭಾರತದ ಆಟಗಾರರ ಪೈಕಿ ಯೂಕಿ ಭಾಂಬ್ರಿ ಡಬಲ್ಸ್ನಲ್ಲಿ 21ನೇ ಸ್ಥಾನದಲ್ಲಿದ್ದಾರೆ. ಶ್ರೀರಾಮ್ ಬಾಲಾಜಿ ಒಂದು ಸ್ಥಾನ ನಷ್ಟ ಅನುಭವಿಸಿ 82ನೇ ರ್ಯಾಂಕಿನಲ್ಲಿದ್ದಾರೆ. ‘ಕೊಡಗಿನ ಕುವರ’ ನಿಕಿ ಪೂಣಚ 7 ಸ್ಥಾನಗಳಲ್ಲಿ ಭಡ್ತಿ ಪಡೆದು 145ನೇ ಸ್ಥಾನ ತಲುಪಿದ್ದಾರೆ. ಸಿಂಗಲ್ಸ್ ರ್ಯಾಂಕಿಂಗ್ನಲ್ಲಿ ಆರ್ಯನ್ ಶಾ 4 ಸ್ಥಾನಗಳಲ್ಲಿ ಹಾಗೂ ದಕ್ಷಿಣೇಶ್ವರ ಸುರೇಶ್ 53 ಸ್ಥಾನಗಳಲ್ಲಿ ಭಡ್ತಿ ಪಡೆದಿದ್ದಾರೆ.
ರಾಯಚೂರು | ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ರಾಯಚೂರು : ಇಲ್ಲಿನ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯ ಅಸ್ಕಿಹಾಳ ನಿವಾಸಿ ಆಂಜನೇಯ (62) ಅವರು ಸೆ.14ರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಊಟ ಮಾಡಿ ಹೊರಗೆ ಹೋದವನ್ನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು ಠಾಣಾ ಅಪರಾಧ ಸಂಖ್ಯೆ: 128/2025 ಕಲಂ ಮನುಷ್ಯ ಕಾಣೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ: ಕಾಣೆಯಾದ ಆಂಜನೇಯ ಅವರು 5.6 ಎತ್ತರ, ತೆಳ್ಳನೆಯ ಮೈಕಟ್ಟು, ಗೋಧಿ ಮೈಬಣ್ಣ, ಉದ್ದನೆಯ ಮುಖ, ತಲೆಯಲ್ಲಿ ಕಪ್ಪು ಕೂದಲು ಹೊಂದಿದ್ದು, ಬಿಳಿ ಪಂಚೆ, ಬಿಳಿ ಜುಬ್ಬ ಹಾಗೂ ಹಸಿರು ಟಾವೆಲ್ ಬಟ್ಟೆಗಳನ್ನು ಧರಿಸಿರುತ್ತಾರೆ. ಕನ್ನಡ, ತೆಲುಗು, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಈ ವ್ಯಕ್ತಿಯ ಬಗ್ಗೆ ಸುಳಿವು ಕಂಡುಬಂದಲ್ಲಿ ಪಶ್ಚಿಮ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08532-232570, ಪಿ.ಎಸ್.ಐ ಮೊಬೈಲ್ ಸಂಖ್ಯೆ: 9480803847, ಪಶ್ಚಿಮ ವೃತ್ತ ಸಿ.ಪಿ.ಐ ಮೊಬೈಲ್ ಸಂಖ್ಯೆ: 9480803831, ಜಿಲ್ಲಾ ನಿಸ್ತಂತು ಘಟಕ ರಾಯಚೂರು ದೂರವಾಣಿ ಸಂಖ್ಯೆ: 08532-235635, 9480803800ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಪಶ್ಚಿಮ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟೆನಿಸ್ ಗೆ ವಿದಾಯ ಹೇಳಿದ ಕೆನಡಾದ ಮಿಲೊಸ್ ರಾವೊನಿಕ್
ಸಿಡ್ನಿ, ಜ.12: ಕೆನಡಾದ ಮಾಜಿ ವಿಶ್ವದ ನಂ.3 ಆಟಗಾರ ಮಿಲೊಸ್ ರಾವೊನಿಕ್ ರವಿವಾರ 15ಕ್ಕೂ ಅಧಿಕ ವರ್ಷಗಳ ಟೆನಿಸ್ ವೃತ್ತಿಜೀವನಕ್ಕೆ ವಿದಾಯ ಹೇಳಿದರು. ಪವರ್ಫುಲ್ ಸರ್ವ್ಗಾಗಿ ಪ್ರಸಿದ್ಧರಾಗಿದ್ದ ಹಾಗೂ ‘ಮಿಸೈಲ್’ ಎಂಬ ಅಡ್ಡಹೆಸರಿನಿಂದ ಕರೆಯಲ್ಪಡುತ್ತಿದ್ದ ರಾವೊನಿಕ್, ತಮ್ಮ ವೃತ್ತಿಜೀವನದಲ್ಲಿ 8 ಎಟಿಪಿ ಟೂರ್ ಪ್ರಶಸ್ತಿಗಳನ್ನು ಹಾಗೂ 20 ಮಿಲಿಯನ್ ಅಮೆರಿಕನ್ ಡಾಲರ್ಗಿಂತ ಹೆಚ್ಚಿನ ಬಹುಮಾನ ಮೊತ್ತವನ್ನು ಗಳಿಸಿದ್ದಾರೆ. 2016ರಲ್ಲಿ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಸೆಮಿಫೈನಲ್ ಹಾಗೂ ವಿಂಬಲ್ಡನ್ ಚಾಂಪಿಯನ್ಶಿಪ್ ನಲ್ಲಿ ಫೈನಲ್ಗೆ ತಲುಪಿದ್ದ ರಾವೊನಿಕ್, ಅದೇ ವರ್ಷ ತಮ್ಮ ವೃತ್ತಿಜೀವನದ ಉಚ್ಚ್ರಾಯ ಸ್ಥಿತಿಗೆ ತಲುಪಿದ್ದರು. ಈ ಎರಡೂ ಪಂದ್ಯಗಳಲ್ಲಿ ಅವರು ಬ್ರಿಟನ್ನ ಆ್ಯಂಡಿ ಮರ್ರೆಗೆ ಸೋಲನುಭವಿಸಿದ್ದರು. ‘‘ನಿಮಗೆ ಗೊತ್ತಿರುವಂತೆ, ಈ ಕ್ಷಣವು ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನದಲ್ಲೂ ಬರುತ್ತದೆ. ಆದರೆ ಕೆಲವರು ಅದಕ್ಕೆ ಸಿದ್ಧರಾಗಿರುವುದಿಲ್ಲ. ಟೆನಿಸ್ ನನ್ನ ಜೀವಾಳ. ಜೀವನದಲ್ಲಿ ನಾನು ಅತ್ಯಂತ ಪ್ರೀತಿಸುವ ಕ್ರೀಡೆ ಇದು. ನನ್ನ ಕನಸುಗಳನ್ನು ನನಸು ಮಾಡಿಕೊಂಡಿರುವೆ ಎಂಬುದಕ್ಕೆ ನಾನು ಅದೃಷ್ಟಶಾಲಿ. ಪ್ರತಿದಿನವೂ ಇನ್ನಷ್ಟು ಉತ್ತಮವಾಗಿ ಆಡಲು ಪ್ರಯತ್ನಿಸಿದ್ದೇನೆ,’’ ಎಂದು ರಾವೊನಿಕ್ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಬರೆದಿದ್ದಾರೆ. ರಾವೊನಿಕ್ ಅವರು ಹಿಂದಿನ ಯುಗೋಸ್ಲಾವಿಯಾದಲ್ಲಿ ಜನಿಸಿದ್ದರು. 1990ರ ಆರಂಭದಲ್ಲಿ ತಮ್ಮ ದೇಶದಲ್ಲಿ ಹಿಂಸಾಚಾರ ಭುಗಿಲೆದ್ದಾಗ, ರಾವೊನಿಕ್ ಹಾಗೂ ಅವರ ಕುಟುಂಬ ಕೆನಡಾಕ್ಕೆ ವಲಸೆ ಹೋಗಿದ್ದು, ಆಗ ಅವರಿಗೆ ಮೂರು ವರ್ಷ ವಯಸ್ಸಾಗಿತ್ತು. 2008ರಲ್ಲಿ ವೃತ್ತಿಪರ ಟೆನಿಸ್ಗೆ ಪಾದಾರ್ಪಣೆ ಮಾಡಿದ ರಾವೊನಿಕ್, ಮೂರು ವರ್ಷಗಳ ಬಳಿಕ ಪೆಸಿಫಿಕ್ ಕೋಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಫೆರ್ನಾಂಡೊ ವೆರ್ಡಾಸ್ಕೊರನ್ನು ಮಣಿಸಿ ತಮ್ಮ ಮೊದಲ ಎಟಿಪಿ ಪ್ರಶಸ್ತಿಯನ್ನು ಗೆದ್ದಿದ್ದರು. 2013ರಿಂದ 2020ರ ನಡುವೆ ರಾವೊನಿಕ್ ನಾಲ್ಕು ಮಾಸ್ಟರ್ಸ್–1000 ಫೈನಲ್ ಪಂದ್ಯಗಳನ್ನು ಆಡಿದ್ದು, ಎಲ್ಲದಲ್ಲೂ ಸೋಲನುಭವಿಸಿದ್ದರು. ಕೆನಡಾ ಓಪನ್ನಲ್ಲಿ ರಫೆಲ್ ನಡಾಲ್ ವಿರುದ್ಧ ಹಾಗೂ ಉಳಿದ ಮೂರು ಫೈನಲ್ಗಳಲ್ಲಿ ನೊವಾಕ್ ಜೊಕೊವಿಕ್ ವಿರುದ್ಧ ಅವರು ಪರಾಭವಗೊಂಡಿದ್ದರು. 2020ರ ಸಿನ್ಸಿನಾಟಿ ಮಾಸ್ಟರ್ಸ್ನಲ್ಲಿ ಜೊಕೊವಿಕ್ ವಿರುದ್ಧ ಸೋತ ಬಳಿಕ ಅವರು ಮತ್ತೆ ಎಟಿಪಿ ಫೈನಲ್ನಲ್ಲಿ ಕಾಣಿಸಿಕೊಂಡಿರಲಿಲ್ಲ. 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಜರ್ಮನಿಯ ಡೊಮಿನಿಕ್ ಕೊಫೆರ್ ವಿರುದ್ಧ ಮೊದಲ ಸುತ್ತಿನಲ್ಲೇ ಸೋಲನುಭವಿಸಿದ್ದು, ಅದೇ ಅವರ ಕೊನೆಯ ಪಂದ್ಯವಾಗಿತ್ತು.
Mangaluru | ಪೆಡ್ಲರ್ಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆ ಸೆರೆ
ಮಂಗಳೂರು: ನಗರದ ಪೆಡ್ಲರ್ಗಳಿಗೆ ಬೆಂಗಳೂರಿನಿಂದ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಉಗಾಂಡ ಮೂಲದ ಜಲಿಯಾ ಝಲ್ವಾಂಗೊ ಎಂಬ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಈಕೆಯಿಂದ ಸುಮಾರು 4 ಕೋಟಿ ರೂ. ಮೌಲ್ಯದ 4 ಕೆ.ಜಿ. ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಮಂಗಳೂರಿನ ಆರು ಮಂದಿ ಮಾದಕ ವಸ್ತು ಪೆಡ್ಲರ್ಗಳು ಈಕೆಯಿಂದ ಎಂಡಿಎಂಎ ಖರೀದಿಸಿ ಮಂಗಳೂರಿನ ವಿದ್ಯಾರ್ಥಿಗಳು, ಯುವಕರು, ನಾಗರಿಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಕಳೆದ ಡಿಸೆಂಬರ್ನಲ್ಲಿ ಮುಲ್ಕಿ ಠಾಣಾ ಪೊಲೀಸರು ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಮುಹಮ್ಮದ್ ಶಿಯಾಬ್ ಯಾನೆ ಶಿಯಾಬ್ (22), ಮಂಜನಾಡಿ ಸಮೀಪದ ನರಿಂಗಾನದ ಮುಹಮ್ಮದ್ ನೌಷಾದ್ ಯಾನೆ ನೌಷಾದ್ (29), ಮಂಗಳೂರು ಕಸಬಾ ಬೆಂಗ್ರೆಯ ಇಮ್ರಾನ್ ಯಾನೆ ಇಂಬು (27), ಬಂಟ್ವಾಳದ ರಾಮಲ್ ಕಟ್ಟೆಯ ನಿಸಾರ್ ಅಹ್ಮದ್ (36) ಎಂಬವರನ್ನು ಬಂಧಿಸಿ 524 ಗ್ರಾಂ. ಎಂಡಿಎಂಎ ವಶ ಪಡಿಸಿಕೊಂಡಿದ್ದರು.
ರಾಯಚೂರು | ಯುವಕ ಕಾಣೆ : ಪತ್ತೆಗೆ ಮನವಿ
ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮದ ಶಿವಮೂರ್ತಿ ತಂದೆ ನಿಂಗಣ್ಣ (20) ಎಂಬ ಯುವಕ ರಾಯಚೂರಿನ ಯರಮರಸ್ ಕ್ಯಾಂಪಿನಲ್ಲಿರುವ ಬಿಸಿಎಂ ಇಲಾಖೆಯ ಡಿ. ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕರ ವಸತಿಗೃಹದಲ್ಲಿ ವಾಸವಾಗಿದ್ದು, ಯುವಕನು 2025ರ ಎ.13ರಂದು ಬೆಳಿಗ್ಗೆ 9.30 ಗಂಟೆ ಸುಮಾರಿಗೆ ಹಾಸ್ಟೇಲ್ನಿಂದ ತನ್ನ ಸ್ನೇಹಿತರೊಂದಿಗೆ ಯರಮರಸ್ ಕ್ಯಾಂಪಿನವರೆಗೆ ಹೋಗಿದ್ದು, ಬಳಿಕ “ರಾಯಚೂರಿಗೆ ಹೋಗಿ ಬರುತ್ತೇನೆ” ಎಂದು ಹೇಳಿ ಹೊರಟವನು ಇಲ್ಲಿಯವರೆಗೆ ವಸತಿಗೃಹಕ್ಕೆ ಮರಳಿಲ್ಲ. ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 57/2025ರಡಿ ಕಾಣೆಯಾದ ಪ್ರಕರಣ ದಾಖಲಿಸಲಾಗಿದೆ. ಕಾಣೆಯಾದ ಯುವಕನ ಚಹರೆ ವಿವರ: ವಯಸ್ಸು 20 ವರ್ಷ, ಜಾತಿ ಕುರುಬರು, ಉದ್ಯೋಗ ವಿದ್ಯಾರ್ಥಿ, ಗೋಧಿ ಬಣ್ಣದ ಮೈಬಣ್ಣ, ದುಂಡನೆಯ ಮುಖ, ತಲೆಯ ಮೇಲೆ ಕಪ್ಪು ಕೂದಲು. ಬಿಳಿ ಬಣ್ಣದ ಲೈನ್ ಫುಲ್ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದ. ಕೊರಳಲ್ಲಿ ಗುಲಾಬಿ ಬಣ್ಣದ ಟವೆಲ್ ಇತ್ತು. ಕನ್ನಡ ಮತ್ತು ಇಂಗ್ಲಿಷ್ ಭಾಷೆ ಮಾತನಾಡುತ್ತಾನೆ. ಈ ಯುವಕನ ಕುರಿತು ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮೊಬೈಲ್ ಸಂಖ್ಯೆ 9480803850 ಅಥವಾ ಗ್ರಾಮೀಣ ವೃತ್ತದ ಸಿಪಿಐ ಮೊಬೈಲ್ ಸಂಖ್ಯೆ 9480803832 ಗೆ ಸಂಪರ್ಕಿಸುವಂತೆ ರಾಯಚೂರು ಗ್ರಾಮೀಣ ವೃತ್ತ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ತಲೆ ಎತ್ತಲಿವೆ ಜರ್ಮನಿಯ ವಿಶ್ವವಿದ್ಯಾಲಯಗಳು - ಭಾರತೀಯ ವಿದ್ಯಾರ್ಥಿಗಳಿಗೇನು ಅನುಕೂಲ?
ಭಾರತಕ್ಕೆ ಭೇಟಿ ನೀಡಿದ ಜರ್ಮನಿ ಚಾನ್ಸೆಲರ್ ಫ್ರೆಡರಿಚ್ ಮೆಜ್ರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ವೇಳೆ 19 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಭಾರತೀಯರಿಗೆ ವೀಸಾ ಮುಕ್ತ ಟ್ರಾನ್ಸಿಟ್ ಸೌಲಭ್ಯ ಘೋಷಣೆಯಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಹಕಾರ ಹೆಚ್ಚಿಸಲು ಭಾರತದಲ್ಲಿ ಕ್ಯಾಂಪಸ್ ತೆರೆಯಲು ಜರ್ಮನಿ ವಿವಿಗಳಿಗೆ ಆಹ್ವಾನ ನೀಡಲಾಯಿತು. ಉಗ್ರವಾದದ ವಿರುದ್ಧ ಹೋರಾಟಕ್ಕೆ ಜಾಗತಿಕ ಒಗ್ಗಟ್ಟಿನ ಅಗತ್ಯವಿದೆ ಎಂದು ಉಭಯ ನಾಯಕರು ಪ್ರತಿಪಾದಿಸಿದರು.
ಕಾರ್ಟೂನ್ ಮೂಲಕ ಟ್ರಂಪ್ ಅಣಕಿಸಿದ ಖಾಮಿನೈ
ಟೆಹ್ರಾನ್, ಜ.12: ಇರಾನ್ ಮತ್ತು ಅಮೆರಿಕಾ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಇರಾನಿನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಣಕಿಸುವ ಕಾರ್ಟೂನ್ ಅನ್ನು ಪೋಸ್ಟ್ ಮಾಡಿದ್ದಾರೆ. ಕಾರ್ಟೂನ್ ನಲ್ಲಿ ಟ್ರಂಪ್ ಅವರನ್ನು ಪ್ರಾಚೀನ ಈಜಿಪ್ಟ್ ಶೈಲಿಯ ಕಲ್ಲಿನ ಶವಪೆಟ್ಟಿಗೆಯೊಳಗೆ ಇರುವ ಮಮ್ಮಿ (ಶುಷ್ಕದೇಹ) ಎಂದು ಚಿತ್ರಿಸಲಾಗಿದ್ದು, ‘ಇದನ್ನೂ ಸಹ ಉರುಳಿಸಲಾಗುವುದು’ ಎಂಬ ಸಂದೇಶವನ್ನು ಹೊಂದಿದೆ. ಇದರ ಜೊತೆಗಿನ ಪೋಸ್ಟ್ನಲ್ಲಿ, ‘ಅಹಂಕಾರ ಮತ್ತು ಹೆಮ್ಮೆಯಿಂದ ಆಳುವ ನಾಯಕರು ಇಡೀ ಪ್ರಪಂಚದ ಮೇಲೆ ತೀರ್ಪು ನೀಡುತ್ತಾರೆ. ಐತಿಹಾಸಿಕ ನಿರಂಕುಶಾಧಿಕಾರಿಗಳಿಗೆ ಆದ ಗತಿ ಇವರಿಗೂ ಆಗಲಿದೆ. ಇಡೀ ಜಗತ್ತನ್ನು ನಿರ್ಣಯಿಸುತ್ತಾ ಹೆಮ್ಮೆ ಮತ್ತು ಅಹಂಕಾರದಿಂದ ಅಲ್ಲಿ ಕುಳಿತಿರುವ ಆ ಪಿತಾಮಹನು—ಸಾಮಾನ್ಯವಾಗಿ ಫರೋ (ಪ್ರಾಚೀನ ಈಜಿಪ್ಟ್ನ ರಾಜ), ನಿಮ್ರೋಡ್, ರೆಝಾ ಖಾನ್, ಮೊಹಮ್ಮದ್ ರೆಝಾ ಮತ್ತು ಅವರಂತರವರು ತಮ್ಮ ದುರಹಂಕಾರದ ಉತ್ತುಂಗದಲ್ಲಿದ್ದಾಗ ಉರುಳಿ ಹೋದಂತೆ—ತಾನೂ ಉರುಳಿಹೋಗುತ್ತೇನೆ ಎಂಬುದನ್ನು ತಿಳಿದಿರಬೇಕು’ ಎಂದು ಉಲ್ಲೇಖಿಸಲಾಗಿದೆ.
ಕರೂರು ಕಾಲ್ತುಳಿತ ಪ್ರಕರಣ | CBI ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್
ಹೊಸದಿಲ್ಲಿ, ಜ.12: ಕರೂರು ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿ ಟಿವಿಕೆ ವರಿಷ್ಠ ಹಾಗೂ ನಟ ವಿಜಯ್ ದಿಲ್ಲಿಯಲ್ಲಿರುವ ಸಿಬಿಐ ಕಚೇರಿಯಲ್ಲಿ ಸೋಮವಾರ ವಿಚಾರಣೆಗೆ ಹಾಜರಾದರು. ಸಿಬಿಐ ಅಧಿಕಾರಿಗಳು ವಿಜಯ್ ಅವರನ್ನು ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದರು. 41 ಜನರು ಸಾವನ್ನಪ್ಪಲು ಕಾರಣವಾದ ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ತಮ್ಮ ಪಕ್ಷ ಹೊಣೆಗಾರ ಅಲ್ಲ ಎಂದು ವಿಜಯ್ ಅವರು ಸಿಬಿಐ ಅಧಿಕಾರಿಗಳಿಗೆ ತಿಳಿಸಿದ್ದಾರೆ. “ಟಿವಿಕೆ ಜವಾಬ್ದಾರವಲ್ಲ. ಮತ್ತಷ್ಟು ದುರಂತವನ್ನು ತಪ್ಪಿಸಲು ಅವರು ಸ್ಥಳದಿಂದ ಹೊರಟು ಹೋಗಿದ್ದರು” ಎಂದು ವಿಜಯ್ ಅವರು ಸಿಬಿಐ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಕರೆಯಲಾಗುವುದು. ಅವರ ಹೇಳಿಕೆಯನ್ನು ಪೊಲೀಸರ ಹೇಳಿಕೆಯೊಂದಿಗೆ ಹೋಲಿಸಿ ಪರಿಶೀಲಿಸಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. “ವಿಜಯ್ ಅವರ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ. ಪೊಂಗಲ್ ಹಬ್ಬವನ್ನು ಉಲ್ಲೇಖಿಸಿ ಅವರು ವಿಚಾರಣೆ ಮುಂದೂಡುವಂತೆ ಕೋರಿದ್ದಾರೆ. ಆದ್ದರಿಂದ ಅವರನ್ನು ಮಂಗಳವಾರ ವಿಚಾರಣೆಗೆ ಕರೆಯಲಾಗುವುದಿಲ್ಲ. ಪೊಂಗಲ್ ಹಬ್ಬದ ಬಳಿಕ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ವಿಜಯ್ ಅವರ ರಾಜಕೀಯ ರ್ಯಾಲಿ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿತ್ತು.
ಯುದ್ಧ, ಮಾತುಕತೆ ಎರಡಕ್ಕೂ ನಾವು ಸಿದ್ಧ: ಇರಾನ್
ಪರಿಸ್ಥಿತಿ ನಿಯಂತ್ರಣದಲ್ಲಿ: ವರದಿ
ಯುವ ಪೀಳಿಗೆಯ ಪ್ರತಿಭೆ ನನಗೆ ಪ್ರೇರಣೆ; ಭಾರತದ ಉಜ್ವಲ ಭವಿಷ್ಯ ರೂಪಿಸುವಂತೆ ನರೇಂದ್ರ ಮೋದಿ ಕರೆ
ದೇಶದ ಯುವ ಸಾಮರ್ಥ್ಯವು ಭಾರತದ ಭವಿಷ್ಯ ಬರೆಯಲಿದ್ದು, ಈ ಯುವ ಸಮುದಾಯದ ಪ್ರತಿಭೆ ಮೇಲೆ ತಮಗೆ ಅಪಾರ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ವಿಕಸಿತ ಭಾರತ ಯುವ ನಾಯಕರ ಸಂವಾದ 2026ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ ಸರ್ಕಾರ ಯುವ ಜನರ ಸಾಮರ್ಥ್ಯವನ್ನು ದೇಶದ ಅಭಿವೃದ್ಧಿಗಾಗಿ ಸಂಪೂರ್ಣವಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದರು. ಇದೇ ವೇಳೆ ಸಾಮಿ ವಿವೇಕಾನಂದರನ್ನು ಸ್ಮರಿಸಿದ ಪ್ರಧಾನಿ ಮೋದಿ ,ಅವರ ಆದರ್ಶಗಳು ಪ್ರತಿಯೊಬ್ಬ ಯುವಕ/ಯುವತಿಯರ ಜೀವನಕ್ಕೆ ದಾರಿದೀಪವಾಗಲಿ ಎಂದು ಹಾರೈಸಿದರು.
Chhattisgarh | ಪ್ರಶ್ನೆ ಪತ್ರಿಕೆಯಲ್ಲಿ ನಾಯಿಯ ಹೆಸರಿಗೆ ಆಯ್ಕೆಗಳಲ್ಲಿ ‘ರಾಮ’; ಮುಖ್ಯೋಪಾಧ್ಯಾಯಿನಿ ಅಮಾನತು
ರಾಯಪುರ, ಜ.12: ನಾಲ್ಕನೇ ತರಗತಿಯ ಇಂಗ್ಲಿಷ್ ಪ್ರಶ್ನೆಪತ್ರಿಕೆಯಲ್ಲಿ ವ್ಯಕ್ತಿಯೋರ್ವರ ನಾಯಿಯ ಹೆಸರಿನ ಕುರಿತು ಕೇಳಿದ ಪ್ರಶ್ನೆಗೆ ಸಂಭಾವ್ಯ ಉತ್ತರಗಳಲ್ಲಿ ‘ರಾಮ’ ಅನ್ನು ಪಟ್ಟಿ ಮಾಡಿದ್ದಕ್ಕಾಗಿ ರಾಯಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಲಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ‘ರಾಮು (Ramu)’ ಅನ್ನು ಒಂದು ಆಯ್ಕೆಯಾಗಿ ಬರೆಯಲು ತಾನು ಉದ್ದೇಶಿಸಿದ್ದೆ, ಆದರೆ ಕಣ್ತಪ್ಪಿನಿಂದ ‘u’ ಅಕ್ಷರವನ್ನು ಬಿಟ್ಟುಬಿಟ್ಟಿದ್ದೆ ಎಂದು ಮುಖ್ಯೋಪಾಧ್ಯಾಯಿನಿ ಶಿಖಾ ಸೋನಿ ಒಪ್ಪಿಕೊಂಡಿದ್ದಾರೆ. ಕಾಣೆಯಾಗಿದ್ದ ಅಕ್ಷರವನ್ನು ಪತ್ತೆಹಚ್ಚಲು ತಾನು ವಿಫಲಗೊಂಡಿದ್ದೆ ಎಂದು ಪ್ರಶ್ನೆಪತ್ರಿಕೆಯನ್ನು ಪರಿಶೀಲಿಸಿದ್ದ ಗುತ್ತಿಗೆ ಆಧಾರದ ಸಹಾಯಕ ಶಿಕ್ಷಕಿ ನಮ್ರತಾ ವರ್ಮಾ ಕೂಡ ಹೇಳಿದ್ದು, ವಿವಾದದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ವಜಾಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಯಪುರ ಜಿಲ್ಲೆಯ ಟಿಲ್ಡಾ ಬ್ಲಾಕ್ ನ ನಕ್ತಿಯಲ್ಲಿರುವ ಶಾಲೆಯಲ್ಲಿ ಈ ಘಟನೆ ನಡೆದಿದೆ. ತಾವು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶ ಹೊಂದಿರಲಿಲ್ಲ ಎಂದು ಸಮರ್ಥಿಸಿಕೊಂಡಿರುವ ಸೋನಿ ಮತ್ತು ವರ್ಮಾ ತಮ್ಮ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ. ಆದಾಗ್ಯೂ, ವಿಹಿಂಪ ಮತ್ತು ಭಜರಂಗ ದಳ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ದೂರು ಸಲ್ಲಿಸಿದ ಬಳಿಕ ಪ್ರಕರಣ ದಾಖಲಾಗಿದೆ. ಜಿಲ್ಲಾ ಶಿಕ್ಷಣಾಧಿಕಾರಿ ಹಿಮಾಂಶು ಭಾರ್ತಿಯಾ ಅವರು ಈ ಕುರಿತು ವಿಚಾರಣೆಯನ್ನು ಆರಂಭಿಸಿದ್ದು, ದೂರಿನ ತನಿಖೆಗಾಗಿ ಐವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.
ಬಿಜೆಪಿ ಆಡಳಿತ ಜಾತಿ, ಧರ್ಮದ ಆಧಾರದಲ್ಲಿ ದ್ವೇಷ ಹರಡುತ್ತಿದೆ: ಕಾಂಗ್ರೆಸ್
Uttar Pradeshನಲ್ಲಿ ದಲಿತ ಮಹಿಳೆಯ ಹತ್ಯೆ ಪ್ರಕರಣ
Uttar Pradesh | ಪ್ರೇಮಿಗಳ ಥಳಿಸಿ ಹತ್ಯೆ
ಎಟಾ, ಜ. 12: ಇಪ್ಪತ್ತು ವರ್ಷದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಆಕೆಯ ಕುಟುಂಬವೇ ಥಳಿಸಿ ಹತ್ಯೆಗೈದ ಘಟನೆ ಉತ್ತರಪ್ರದೇಶದ ಎಟಾ ಜಿಲ್ಲೆಯಲ್ಲಿ ರವಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನು ಶಿವಾನಿ (20) ಹಾಗೂ ಆಕೆಯ ಪ್ರಿಯಕರ ದೀಪಕ್ (25) ಎಂದು ಗುರುತಿಸಲಾಗಿದೆ. ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು. ಈ ಘಟನೆ ಗರಹಿಯಾ ಸುಹಾಗಪುರ ಗ್ರಾಮದಲ್ಲಿ ನಡೆದಿದೆ. ದೀಪಕ್ ರಾತ್ರಿ ಸುಮಾರು 8.30ಕ್ಕೆ ಆಕೆಯ ಮನೆಗೆ ತೆರಳಿ ಭೇಟಿಯಾಗಿದ್ದ. ಈ ಸಂದರ್ಭ ದೀಪಕ್ ಹಾಗೂ ಶಿವಾನಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಇದ್ದುದನ್ನು ಆಕೆಯ ಕುಟುಂಬದ ಸದಸ್ಯರು ನೋಡಿದ್ದಾರೆ. ಆಕ್ರೋಶಗೊಂಡ ಅವರು ಇಬ್ಬರಿಗೂ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶಿವಾನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ದೀಪಕ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಯುವತಿಯ ಕುಟುಂಬದ ಕೆಲವು ಸದಸ್ಯರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎಸ್ಎಸ್ಪಿ ಶ್ಯಾಮ್ ನಾರಾಯಣ ಸಿಂಗ್ ತಿಳಿಸಿದ್ದಾರೆ.
I-PAC ಮೇಲೆ ದಾಳಿ | ತನಿಖೆಗೆ ಅಡ್ಡಿ, ಸಾಕ್ಷ್ಯಗಳ ನಾಶ: ಸುಪ್ರೀಂನಲ್ಲಿ ಸಿಎಂ ಬ್ಯಾನರ್ಜಿ ವಿರುದ್ಧ ED ಆರೋಪ
ಹೊಸದಿಲ್ಲಿ, ಜ. 12: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಹಾಗೂ ಕೋಲ್ಕತ್ತಾ ಪೊಲೀಸ್ ಆಯುಕ್ತರ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. I-PAC ವಿರುದ್ಧದ ಬಹುರಾಜ್ಯ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಹಾಗೂ ನಾಶಪಡಿಸಿದ ಆರೋಪವನ್ನು ಜಾರಿ ನಿರ್ದೇಶನಾಲಯ ಇವರ ಮೇಲೆ ಹೊರಿಸಿದೆ. ಎಫ್ಐಆರ್ ದಾಖಲಿಸುವುದು ಅಗತ್ಯ ಎಂದು ಪ್ರತಿಪಾದಿಸಿರುವ ಜಾರಿ ನಿರ್ದೇಶನಾಲಯ, ಕಾನೂನಿನ ರಕ್ಷಕರು ಗಂಭೀರ ಅಪರಾಧದ ಭಾಗವಾಗಿದ್ದಾರೆ ಎಂದು ಆರೋಪಿಸಿದೆ. ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಬೆದರಿಸಿದ್ದಾರೆ. ದೋಷಾರೋಪಣೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಒಳಗೊಂಡ ಫೈಲ್ಗಳು ಹಾಗೂ ಎಲೆಕ್ಟ್ರಾನಿಕ್ ಪುರಾವೆಗಳನ್ನು ಕಸಿದುಕೊಂಡಿದ್ದಾರೆ ಎಂದು ಅದು ಹೇಳಿದೆ. ಘಟನೆಯ ಕುರಿತು ಸಿಬಿಐ ತನಿಖೆ ಕೋರಿ ಕಲ್ಕತ್ತಾ ಉಚ್ಚ ನ್ಯಾಯಾಲಯಕ್ಕೆ ಮೊರೆ ಹೋಗಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ಆದರೆ ಮುಖ್ಯಮಂತ್ರಿ ಹಾಗೂ ಅವರ ಬೆಂಬಲಿಗರು ನ್ಯಾಯಾಲಯದಲ್ಲಿ ಗದ್ದಲ ಸೃಷ್ಟಿಸಿದರು. ಇದರಿಂದಾಗಿ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಬೇಕಾಯಿತು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್ ಪೊಲಿಟಿಕಲ್ ಆ್ಯಕ್ಷನ್ ಕಮಿಟಿ (I-PAC)ಯ ಕೋಲ್ಕತ್ತಾದಲ್ಲಿರುವ ಕೇಂದ್ರ ಕಚೇರಿ ಹಾಗೂ ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದಲ್ಲಿ ನಡೆದ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮಬಂಗಾಳ ಸರಕಾರ ಹಸ್ತಕ್ಷೇಪ ನಡೆಸಿ ಅಡ್ಡಿ ಉಂಟು ಮಾಡಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಶನಿವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಜಾರಿ ನಿರ್ದೇಶನಾಲಯದ ಈ ನಡೆಯ ಬಳಿಕ ರಾಜ್ಯ ಸರಕಾರ ಯಾವುದೇ ಪ್ರತಿಕೂಲ ಆದೇಶ ನೀಡುವ ಮುನ್ನ ತಮ್ಮ ಅಭಿಪ್ರಾಯ ಆಲಿಸಲು ಅವಕಾಶ ನೀಡುವಂತೆ ಕೋರಿ ಕೇವಿಯಟ್ ಸಲ್ಲಿಸಿತ್ತು.
Udupi: ಕುಂದಬಾರಂದಾಡಿಯಲ್ಲಿ ಅಪರೂಪದ ಪುರಾತನ ಮಷಮರ್ಧಿನಿ ಶಿಲ್ಪ ಪತ್ತೆ
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಕುಂದಬಾರಂದಾಡಿಯಲ್ಲಿ ಅತ್ಯಂತ ಜೀರ್ಣಾವಸ್ಥೆಯಲ್ಲಿರುವ ದೇವಾಲಯದಲ್ಲಿ ಒಂದು ಅಪರೂಪದ ಮಷಮರ್ಧಿನಿಯ ಶಿಲ್ಪ ಕಂಡುಬಂದಿದೆ ಎಂದು ಪುರಾತತ್ವ ಸಂಶೋಧಕ, ವಿದ್ವಾಂಸ ಹಾಗೂ ಉಡುಪಿಯ ಆದಿಮ ಕಲಾ ಟ್ರಸ್ಟ್ನ ಸ್ಥಾಪಕ ಸಂಚಾಲಕ ಪ್ರೊ. ಟಿ.ಮುರುಗೇಶಿ ತಿಳಿಸಿದ್ದಾರೆ. ಕುಂದಬಾರಂದಾಡಿ ದೇವಾಲಯದ ಮಷಮರ್ಧಿನಿಯು, ಆರು ಕೈಗಳನ್ನು ಹೊಂದಿದ್ದು, ಬಲಭಾಗದ ಮೊದಲ ಕೈಯಲ್ಲಿ ತ್ರಿಶೂಲ, ಎರಡನೇ ಕೈಯಲ್ಲಿ ಖಡ್ಗ, ಮೂರನೇ ಕೈಯಲ್ಲಿ ಗಧೆಯನ್ನು ಹಿಡಿದಿದ್ದಾಳೆ. ಎಡಭಾಗದ ಮೊದಲ ಕೈಯನ್ನು ಮಹಿಷನ ಬೆನ್ನಿನ ಮೇಲೆ ಇರಿಸಲಾಗಿದೆ. ಎರಡನೇ ಕೈ ತುಂಡಾಗಿದ್ದು, ಮೂರನೇ ಕೈಯಲ್ಲಿ ಬಿಲ್ಲನ್ನು ಹಿಡಿದಿದ್ದಾಳೆ. ತನ್ನ ಬಲಗಾಲನ್ನು ಮಹಿಷನ ತಲೆಯ ಮೇಲೆ ಇಟ್ಟು ಮೆಟ್ಟಿ ತ್ರಿಶೂಲದಿಂದ ಆಳವಾಗಿ ಮಹಿಷನ ದೇಹವನ್ನು ಇರಿದಂತೆ ಚಿತ್ರಿಸಲಾಗಿದೆ. ಮಹಿಷಮರ್ಧಿನಿಯ ಮುಖಭಾವ ಶಿಷ್ಠವಾಗಿದೆ. ದಪ್ಪ ತುಟಿ, ದಪ್ಪನೆಯ ಮೂಗು, ಉಬ್ಬಿಕೊಂಡಿರುವ ಕಣ್ಣಾಲಿಗಳು ಅಗಲವಾದ ಮುಖ ಸ್ಥಳೀಯ ಭೂತಾರಾಧನೆಯ ದೈವಗಳ ಮುಖಭಾವವನ್ನು ನೆನಪಿಸುತ್ತದೆ. ಕರಂಡ ಮುಕುಟವನ್ನು ಧರಿಸಿರುವ ದೇವಿಯು ಸ್ಥಳೀಯ ಸಂಸ್ಕೃತಿ ಮತ್ತು ಭಾರತೀಯ ಶಿಲ್ಪ ಶೈಲಿಯ ಸುಂದರ ಸಂಯೋಜನೆಯಾಗಿದೆ. ದೇವಿಯ ಗದೆಯ ಕೆಳಭಾಗದಲ್ಲಿ ಒಂದು ಚಿಕ್ಕ ಸ್ತ್ರೀ ಶಿಲ್ಪವಿದ್ದು ಅದು ಬಹುಶಃ ಮಹಿಷನ ಪತ್ನಿಯ ಶಿಲ್ಪವಾಗಿರಬಹುದು ಎಂದು ಪ್ರೊ.ಮುರುಗೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಬಾರಂದಾಡಿಯಮಹಿಷಮರ್ಧಿನಿ ದೇವಾಲಯ ದಕ್ಷಿಣ ದಕ್ಕಿನಲ್ಲಿದೆ. ಉತ್ತರ, ಪೂರ್ವ ಮತ್ತು ಪಶ್ಚಿಮದಲ್ಲಿ ಇನ್ನು ಮೂರು ಮಹಿಷಮರ್ಧಿನಿ ದೇವಾಲಯಗಳಿವೆ. ಐದನೆಯದು ಪುರುಷ ಶಕ್ತಿ ಅಂದರೆ ಶಿವ ದೇವಾಲಯ. ಆದ್ದರಿಂದ ಕುಂದಬಾರಂದಾಡಿ ಮಷಮರ್ಧಿನಿ ದೇವಾಲಯಗಳು ಪಂಚದುರ್ಗಾ ಪರಂಪರೆಗೆ ಸೇರಿದ ದೇವಾಲಯಗಳ ಗುಚ್ಛವಾಗಿದ್ದು, ನಿಸರ್ಗದ ಪಂಚತತ್ವದ ಸಂಕೇತವಾಗಿವೆ. ಕುಂದಬಾರಂದಾಡಿ ಮಷಮರ್ಧಿನಿ ದಕ್ಷಿಣ ದಿಕ್ಕಿನಲ್ಲಿರುವುದರಿಂದ ಆಕೆ, ರಾಕ್ಷಸೀ ಸತ್ವದ ಸಂಕೇತವಾಗಿದ್ದಾಳೆ. ಶಿಲ್ಪದ ಶೈಲಿಯು 15ನೇ ಶತಮಾನಕ್ಕೆ ಸರಿ ಹೊಂದುತ್ತದೆ ಎಂದು ಅವರು ಹೇಳಿದ್ದಾರೆ. ತಮ್ಮ ಈ ಸಂಶೋಧನೆಗೆ ಸಹಾಯ ಮಾಡಿದ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ನಾಗೇಂದ್ರ ಪೂಜಾರಿ, ಕಾರ್ಯದರ್ಶಿ ರಘುರಾಮ ಪೂಜಾರಿ ಅಲ್ಲದೇ ಸೀತಾರಾಮ ಪೂಜಾರಿ, ಸಂಜೀವ ಬಿಲ್ಲವ ಹಾಗೂ ಅರ್ಚಕರಾದ ಚೆನ್ನಕೇಶವ ಉಪಾಧ್ಯಾಯ, ತಂತ್ರಿಗಳಾದ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಹಾಗೂ ಆದಿಮ ಕಲಾ ಸಂಶೋಧನಾ ತಂಡದ ಮುರುಳೀಧರ ಹೆಗಡೆ, ಶ್ರೇಯಸ್, ಗೌತಮ್ ಮತ್ತು ಭಾನುಮತಿಯವರಿಗೆ ಆಭಾರಿಯಾಗಿರುವುದಾಗಿ ಅವರು ತಿಳಿಸಿದ್ದಾರೆ. ಕರಾವಳಿಯಲ್ಲಿ ಪುರಾತನ ಮಾತೃ ಆರಾಧನಾ ಪಂಥ ಮಾತೃ ಆರಾಧನೆ, ಜಗತ್ತಿನ ಅತ್ಯಂತ ಪುರಾತನ ಆರಾಧನಾ ಪಂಥ. ಉಡುಪಿ ಜಿಲ್ಲೆಯೂ ಅತ್ಯಂತ ಪುರಾತನ ಶಾಕ್ತ ಆರಾಧನೆಯ ಕೇಂದ್ರ. ಜಿಲ್ಲೆಯ ಅವಲಕ್ಕಿಪಾರೆಯಲ್ಲಿ ಪ್ರಾಗೈತಿಹಾಸಿಕ ಕಾಲದ ಮಾತೃದೇವತೆಯ ಆದಿಮ ಕಲೆಯ ಚಿತ್ರವಿದೆ. ಮಾತೃದೇವತೆಯನ್ನು ವಿವಿಧ ರೂಪಗಳಲ್ಲಿ ಭಾರತದಲ್ಲಿ ಆರಾಧಿಸಲಾಗುತ್ತದೆ. ಮಹಿಷಮರ್ಧಿನಿ ಪಂಥವು ಪಶ್ಚಿಮ ಭಾರತದಲ್ಲಿ ಕ್ರಿಸ್ತ ಶಕಾರಂಭದಲ್ಲಿ ಆರಂಭವಾಗಿ, ದಕ್ಷಿಣ ಭಾರತದಲ್ಲಿಯೂ ಜನಪ್ರಿಯವಾಯಿತು. ಉಡುಪಿ ಮಹಿಷಮರ್ದಿನಿ ಪಂಥದ ಪ್ರಮುಖ ಕೇಂದ್ರ. ಜಿಲ್ಲೆಯ ಬೆಳ್ಮಣ್ಣಿನ ಮಹಿಷಮರ್ಧಿನಿ ದೇವಾಲಯವು ಜಿಲ್ಲೆಯ ಅತ್ಯಂತ ಪ್ರಾಚೀನ ದೇವಾಲಯ. ಇಲ್ಲಿ ಸಿಕ್ಕಿದ ಎರಡನೇ ಆಳುವರಸನ ಬೆಳ್ಮಣ್ ತಾಮ್ರಪಟ ಕನ್ನಡದ ಅತ್ಯಂತ ಪುರಾತನ ತಾಮ್ರಪಟವೆನಿಸಿದ್ದು ಈ ಶಾಸನದಲ್ಲಿ ಬೆಳ್ಮಣ್ನ ದೇವಿಯನ್ನು ವಿಂಧ್ಯವಾಸಿನಿ ಹಾಗೂ ಮಹಾಮುನಿ ಸೇವಿತೆ ಎಂದು ಕೊಂಡಾಡಲಾಗಿದೆ ಎಂದು ಪ್ರೊ.ಮುರುಗೇಶಿ ತಿಳಿಸಿದ್ದಾರೆ.
Karur stampede : ಸಿಬಿಐ ಸತತ 6 ಗಂಟೆ ಡ್ರಿಲ್’ಗೆ ದಳಪತಿ ವಿಜಯ್ ಸುಸ್ತು - ಹೊರಗೆ ಬಂದು ಹೇಳಿದ್ದೇನು?
CBI Questioning TVK Chief Vijay : ಕರೂರ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಟಿವಿಕೆ ಪಾರ್ಟಿಯ ಮುಖ್ಯಸ್ಥ ವಿಜಯ್ ಅವರನ್ನು ಸಿಬಿಐ ಇಂದು ವಿಚಾರಣೆಗೆ ಕರೆಸಿತ್ತು. ಸತತ ಆರು ಗಂಟೆಗಳ ವಿಜಯ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಯನ್ನು ನಡೆಸಿದ್ದಾರೆ. ದೆಹಲಿಯ ಸಿಬಿಐ ಕೇಂದ್ರ ಕಚೇರಿಯಲ್ಲಿ ಈ ವಿಚಾರಣೆ ನಡೆದಿದೆ.
ಹರಪನಹಳ್ಳಿ | 6.33 ಕೋಟಿ ರೂ. ವೆಚ್ಚದ ಮೊರಾರ್ಜಿ ವಸತಿ ನಿಲಯಕ್ಕೆ ಶಾಸಕಿ ಎಂ.ಪಿ.ಲತಾ ಶಂಕುಸ್ಥಾಪನೆ
ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಬದ್ಧ : ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ
ಯುವ ಜನರೇ ದೇಶದ ಆಸ್ತಿ: ಯು.ಟಿ. ಖಾದರ್
ಮಂಗಳೂರಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ಚಿತ್ತಾಪುರ | ಕಣ್ಣಿನ ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ : ಡಾ.ನವನೀತಾ ರೆಡ್ಡಿ
ಚಿತ್ತಾಪುರ : ಮನುಷ್ಯನ ಅಂಗಾಂಗಗಳಲ್ಲಿ ಕಣ್ಣು ಅತ್ಯಂತ ಮಹತ್ವದ್ದು ಮತ್ತು ಅಮೂಲ್ಯವಾದದ್ದು, ಕಣ್ಣಿನ ಆರೋಗ್ಯ ಸಮಸ್ಯೆ ಕಂಡು ಬಂದರೇ ನಿರ್ಲಕ್ಷ್ಯ ಮಾಡದೇ ತಕ್ಷಣ ವೈದ್ಯರನ್ನು ಭೇಟಿ ಮಾಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಯಾದಗಿರಿಯ ವೇಧಾ ಕಣ್ಣಿನ ಆಸ್ಪತ್ರೆಯ ನೇತ್ರ ವೈದ್ಯರಾದ ಡಾ.ನವನೀತಾ ರೆಡ್ಡಿ ಅವರು ಜನರಿಗೆ ಹೇಳಿದರು. ತಾಲೂಕಿನ ಕಮರವಾಡಿ ಗ್ರಾಮದ ಸಮಾಜ ಸೇವಕ, ಬೆಂಗಳೂರಿನ ಪ್ರತಿಷ್ಠಿತ ಮಣಿಪಾಲ ಆಸ್ಪತ್ರೆಯ ಸೇವಾ ಪುರಸ್ಕೃತ ದಿ.ಶಾಂತಪ್ಪ ಇಂದೂರ ಅವರ ಪ್ರಥಮ ಪುಣ್ಯಸ್ಮರಣೆ ಪ್ರಯುಕ್ತ ಇಂದೂರ ಕುಟುಂಬದಿಂದ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ, ಕನ್ನಡಕ ವಿತರಣೆ ಶಿಬಿರದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ವಯಸ್ಕರು ಕಣ್ಣಿನ ಸಮಸ್ಯೆಯಿಂದ ಬಳಲುವುದು ಕಂಡು ಬರುವುದು ಸಾಮಾನ್ಯವಾಗಿದೆ. ಕಣ್ಣಿನ ಆರೋಗ್ಯ ಸಮಸ್ಯೆ ಕುರಿತು ಸಕಾಲಕ್ಕೆ ಚಿಕಿತ್ಸೆ ಪಡೆಯದ ಕಾರಣ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಬಡವರ್ಗದ ನೇತ್ರ ಸಮಸ್ಯೆಯನ್ನು ಗುರುತಿಸಿ ಶಿಬಿರ ಆಯೋಜಿಸುವ ಮೂಲಕ ಇಂದೂರು ಪರಿವಾರ ಜನಪರ ಕಾಳಜಿ ಮೆರೆದಿರುವುದು ಶ್ಲಾಘನೀಯ ಎಂದು ಅವರು ಶ್ಲಾಘಸಿದರು. ಗ್ರಾಮದ ಯುವಕ ಮುಖಂಡ, ಶಿಬಿರದ ಆಯೋಜಕ ಭೀಮಾಶಂಕರ ಇಂದೂರ ಮಾತನಾಡಿ, ದಿ.ಶಾಂತಪ್ಪ ಇಂದೂರ ಅವರು ವೈದ್ಯಕೀಯ ಸೇವೆ ಮಾಡುವ ಮೂಲಕ ವಿವಿಧ ಗ್ರಾಮಗಳ ಬಡವರ ಆರೋಗ್ಯ ಕಾಳಜಿ ಮೆರೆದಿದ್ದರು. ಸದಾ ನೊಂದವರ ಪರ ಕಳಕಳಿ ಹೊಂದಿದ್ದರು. ಅವರ ಆಶಯಕ್ಕೆ ಪೂರಕವಾಗಿ ನೇತ್ರ ತಪಾಸಣೆ ಹಾಗೂ ಉಚಿತ ಚಿಕಿತ್ಸಾ ಶಿಬಿರ ಆಯೋಜನೆ ಮಾಡಿದ್ದೇವೆ. ಬಡ ವಯೋವೃದ್ಧರ ಬಾಳಿಗೆ ಬೆಳಕು ಹರಿಸುವ ಸಣ್ಣ ಪ್ರಯತ್ನ ಮಾಡಿರುವುದು ತೃಪ್ತಿ ತಂದಿದೆ ಎಂದರು. ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಎಸ್. ಬುಳ್ಳಾ, ಹಿರಿಯ ನಿರೀಕ್ಷಣಾಧಿಕಾರಿ ಕಿರಣಕುಮಾರ ಧನವಡಕರ್, ಆಪ್ತ ಸಮಾಲೋಚಕಿ ಮಂಜೂಳಾ ಗುಡುಬಾ, ಜಗದೇವಿ, ರಕ್ತ ತಪಾಸಣೆ ಅಧಿಕಾರಿ ಕೃಷ್ಣಾ, ಯಾದಗಿರಿ ವೇದಾ ಆಸ್ಪತ್ರೆಯ ಸಹಾಯಕ ವ್ಯವಸ್ಥಾಪಕ ನಾಗೇಂದ್ರ ರೆಡ್ಡಿ, ಸಿಬ್ಬಂದಿ ಮಲ್ಲೆಶಿ ಮಡಿವಾಳ, ರೇಶ್ಮಾ ಬೇಗಂ, ಮಾಜಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಮಲ್ಲಿನಾಥ ಇಂದೂರ, ಬಿಜೆಪಿ ಮುಖಂಡ ವಿಠ್ಠಲ್ ವಾಲ್ಮೀಕಿ ನಾಯಕ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೊಪಸೇನ್, ಜಗದೇವ ದಿಗ್ಗಾವಂಕರ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ, ಗ್ರಾಪಂ ಸದಸ್ಯ ಪ್ರೇಮನಾಥ್ ದ್ಯಾವಕರ, ಮುಖಂಡರಾದ ವೀರಣ್ಣ ಸುಲ್ತಾಪುರ, ನಾಗರಾಜ ರೇಶ್ಮಿ, ಶಿವಶರಣಪ್ಪ ಯರಗಲ್, ಶಿವಶರಣಪ್ಪ ಶಿರವಾಳ, ಅಣ್ಣಪ್ಪಗೌಡ ಪೋ.ಪಾಟೀಲ್, ದೇವಪ್ಪಗೌಡ ಖ್ಯಾಮನೊರ, ಈಶಪ್ಪಗೌಡ ಪಾಟೀಲ, ಧೂಳಪ್ಪ ಯರಗಲ್, ಬಸವರಾಜಗೌಡ ದೇಶಮುಖ, ಅಯ್ಯಣ್ಣಗೌಡ ಪಾಟೀಲ, ಮಲ್ಲು ಇಂದೂರ, ಹರಿಸಿಂಗ್ ಚವ್ಹಾಣ, ಖದೀರ ಮುಲ್ಲಾ, ಮಲ್ಲಿನಾಥ ಕಾಶೇಟ್ಟಿ, ಮಲ್ಲಿನಾಥ ಮಡಿವಾಳ, ದ್ಯಾವಣ್ಣ ತಳವಾರ, ಗಣೇಶ ಗುತ್ತೇದಾರ, ಮಹಾದೇವಪ್ಪ ಕರಕನೋರ, ಬಾಬುರಾವ್ ಅಣಿಕೇರಿ, ಚಂದ್ರಪ್ಪ ಕೊಟಗಾರ, ಮರೆಪ್ಪ ಮಾಂಗ ಸೇರಿದಂತೆ ಇತರರು ಇದ್ದರು. ಇದೇ ವೇಳೆ ಒಟ್ಟು 278 ಜನರಿಗೆ ನೇತ್ರ ತಪಾಸಣೆ ನಡೆಸಲಾಯಿತು. 91 ಜನರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. 63 ಜನರ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಶಿಬಿರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ತುಳುಕೂಟದ 24ನೇ ಕೆಮ್ತೂರು ತುಳು ನಾಟಕ ಸ್ಪರ್ಧೆ; ಸುಮನಸಾ ಕೊಡವೂರು ‘ಯೇಸ’ಕ್ಕೆ ಕೆಮ್ತೂರು ದೊಡ್ಡಣ ಶೆಟ್ಟಿ ಪ್ರಶಸ್ತಿ
ಉಡುಪಿ: ತುಳುಕೂಟ ಉಡುಪಿ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಭಾಗಿತ್ವದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ 24ನೇ ವರ್ಷದ ಕೆಮ್ತೂರು ತುಳುನಾಟಕ ಸ್ಪರ್ಧೆಯಲ್ಲಿ ಸುಮನಸಾ ಕೊಡವೂರು ತಂಡದ ‘ಯೇಸ’ ನಾಟಕ ಪ್ರಥಮ ಸ್ಥಾನದೊಂದಿಗೆ ಕೆಮ್ತೂರು ದೊಡ್ಡಣ ಶೆಟ್ಟಿ ಸ್ಮಾರಕ ಟ್ರೋಪಿಯನ್ನು ಗೆದ್ದುಕೊಂಡಿದೆ. ಜ.5ರಿಂದ 11ರವರೆಗೆ ನಡೆದ ಈ ಬಾರಿಯ ಸ್ಪರ್ಧೆಯಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಿದ್ದು, ಮಣಿಪಾಲದ ಸಂಗಮ ಕಲಾವಿದರು ತಂಡದ ‘ಮಾಯೊಕದ ಮಣ್ಣಕರ’ ನಾಟಕ ದ್ವಿತೀಯ ಶ್ರೇಷ್ಠ ನಾಟಕ ಪ್ರಶಸ್ತಿ ಹಾಗೂ ಮುಂಬಯಿಯ ರಂಗಮಿಲನ ತಂಡದ ‘ನಾಗಸಂಪಿಗೆ’ ನಾಟಕ ತೃತೀಯ ಶ್ರೇಷ್ಠ ನಾಟಕ ಪ್ರಶಸ್ತಿಯನ್ನು ಪಡೆದುಕೊಂಡಿವೆ. ಶ್ರೇಷ್ಠ ನಿರ್ದೇಶಕ ವೈಯಕ್ತಿಕ ಪ್ರಶಸ್ತಿ ಸುಮನಸಾ ಕೊಡವೂರು ತಂಡದ ‘ಯೇಸ’ ನಾಟಕದ ನಿರ್ದೇಶಕ ವಿದ್ದು ಉಚ್ಚಿಲ್ ಪಡೆದರೆ, ಸಂಗಮ ಕಲಾವಿದರು ಮಣಿಪಾಲ ತಂಡದ ‘ಮಾಯಕೊದ ಮಣ್ಣಕರ’ ನಿರ್ದೇಶಕ ರಮೇಶ್ ಕೆ ಬೆಣಕಲ್ಗೆ ದ್ವಿತೀಯ ಮತ್ತು ನಾಗಸಂಪಿಗೆ ನಾಟಕದ ನಿರ್ದೇಶಕ ಮನೋಹರ ಶೆಟ್ಟಿ ನಂದಳಿಕೆ ಇವರಿಗೆ ತೃತೀಯ ಸ್ಥಾನ ಲಭಿಸಿದೆ. ಶ್ರೇಷ್ಠ ನಟರಾಗಿ ಮಾಯೊಕದ ಮಣ್ಣಕರ ನಾಟಕದ ‘ಅಡ್ಕ’ ಪಾತ್ರಧಾರಿ ಸಂತೋಷ್ ಶೆಟ್ಟಿ ಹಿರಿಯಡ್ಕ ಪ್ರಥಮ, ಮುಗಿಯಂದಿ ಕಥೆ ನಾಟಕದ ‘ವಿಜಯ’ ಪಾತ್ರಧಾರಿ ಮಂಜುನಾಥ್ ಆಚಾರ್ಯ ಕುಂಜೂರು ದ್ವಿತೀಯ ಹಾಗೂ ಯೇಸ ನಾಟಕದ ‘ಸಜ್ಜನ ಹೇಮಂತ್’ ಪಾತ್ರಧಾರಿ ಕಿರಣ್ ಭಟ್ ತೃತೀಯ ಸ್ಥಾನ ಪಡೆದಿದ್ದಾರೆ. ಶ್ರೇಷ್ಠ ನಟಿಯಾಗಿ ಯೇಸ ನಾಟಕದ ‘ಸತ್ಯಶ್ರೀ’ ಪಾತ್ರಧಾರಿಣಿ ಸೌಭಾಗ್ಯ ಲಕ್ಷ್ಮೀ ಪ್ರಥಮ, ಮುಗಿಯಂದಿ ಕಥೆ ನಾಟಕದ ಕುಸುಮಾ ಪಾತ್ರಧಾರಿಣಿ ಕುಸುಮಾ ಕಾಮತ್ ಕರ್ವಾಲ್ ದ್ವಿತೀಯ ಹಾಗೂ ಮಾಯೊಕದ ಮಣ್ಣಕರ ನಾಟಕದ ಮುಡ್ಕ ಪಾತ್ರಧಾರಿಣಿ ವೈಷ್ಣವಿ ಭಂಡಾರ್ಕರ್ ತೃತೀಯ ಸ್ಥಾನ ಪಡೆದಿದ್ದಾರೆ. ಶ್ರೇಷ್ಠ ರಂಗಪರಿಕರ/ಪ್ರಸಾದನದಲ್ಲಿ ಸಂಗಮ ಕಲಾವಿದೆರ್ ಮಣಿಪಾಲ ಪ್ರಥಮ, ಸುಮನಸಾ ಕೊಡವೂರು ಉಡುಪಿ ದ್ವಿತೀಯ ಹಾಗೂ ಪಟ್ಲ ಭೂಮಿಗೀತ ಸಾಂಸ್ಕೃತಿಕ ವೇದಿಕೆ (ನೆಲ ನೀರ್ದ ದುನಿಪು) ತೃತೀಯ ಸ್ಥಾನ ಪಡೆದಿದೆ. ಶ್ರೇಷ್ಠ ಬೆಳಕಿನಲ್ಲಿ ಯೇಸ ನಾಟಕದ ನಿಖಿಲ್ ಮೈಂದನ್ ಪ್ರಥಮ, ನೆಲ ನೀರ್ದ ದುನಿಪು ನಾಟಕದ ಪ್ರಥ್ವಿನ್ ಕೆ ಉಡುಪಿ ದ್ವಿತೀಯ, ನಾಗಸಂಪಿಗೆ ನಾಟಕದ ನಿತಿನ್ ಪೆರಂಪಳ್ಳಿ ತೃತೀಯ ಸ್ಥಾನಿಯಾಗಿದ್ದಾರೆ. ಶ್ರೇಷ್ಠ ಸಂಗೀತದಲ್ಲಿ ಯೇಸ ನಾಟಕದ ಶೋಧನ್ ಎರ್ಮಾಳ್ ಪ್ರಥಮ, ಮಾಯೊಕದ ಮಣ್ಣಕರ ನಾಟಕದ ಶುಭಕರ ಪುತ್ತೂರು ದ್ವಿತೀಯ, ನಾಗ ಸಂಪಿಗೆ ನಾಟಕದ ದಿವಾಕರ್ ಕಟೀಲ್ ಇವರಿಗೆ ತೃತೀಯ ಬಹುಮಾನಗಳು ದೊರೆತಿವೆ. ತೀರ್ಪುಗಾರರ ಮೆಚ್ಚುಗೆ ಪಡೆದ ನಟ/ನಟಿಯರು: ದಿನೇಶ್ ಅಮೀನ್ ಕದಿಕೆ ‘ಪಿಲಿ’ ನಾಟಕದ ಮಾರ + ಅಜೈರ್ ಪಾತ್ರಧಾರಿ, ಕಾಶೀತೀರ್ಥ ನಾಟಕದ ಎಂಎಲ್ಎ ಭರತ್ರಾಜ್ ಪಾತ್ರಧಾರಿ ಶಿವಪ್ಪ ಬಿರುವ ಗುರುವಾಯನಕೆರೆ, ನಾಗಸಂಪಿಗೆ ನಾಟಕದ ಕಾಳಿಂಗ ಪಾತ್ರಧಾರಿ ಸಚಿನ್ ಬಿವಂಡಿ, ನೆಲ ನೀರ್ದ ದುನಿಪು ನಾಟಕದ ಚೋಮ ಪಾತ್ರಧಾರಿ ಅನಿಲ್ ಕುಮಾರ್ ಶಂಕರಪುರ, ಯೇಸ ನಾಟಕದ ಹೇಮಂತ್ ಪಾತ್ರಧಾರಿ ಕಾರ್ತಿಕ್ ಪ್ರಭು, ಮಾಯೊಕದ ಮಣ್ಣಕರ ನಾಟಕದ ಕೇಶವ ಆಚಾರ್ಯ, ರೈತ, ಪೊಲಿಟಿಷಿಯನ್, ಬಾರ್ಕುಡ್ಕ, ಕಾನ್ಸ್ಟೇಬಲ್ ಪಾತ್ರಧಾರಿ ಭುವನ್ ಮಣಿಪಾಲ್, ನಾಗಸಂಪಿಗೆ ನಾಟಕದ ಸಂಪಿಗೆ ಪಾತ್ರಧಾರಿಣಿ ದೀಕ್ಷಾ ದೇವಾಡಿಗ, ಮುಗಿಯಂದಿ ಕತೆ ನಾಟಕದ ಚಂದ್ರ ಪಾತ್ರಧಾರಿಣಿ ಚಂದ್ರಕಲಾ ರಾವ್ ಕದಿಕೆ, ಯೇಸ ನಾಟಕದ ರೋಜಿ ಪಾತ್ರಧಾರಿಣಿ ವಸುಪ್ರದ, ಮಾಯೊಕದ ಮಣ್ಣಕರ ನಾಟಕದ ತಿಮ್ಮ, ತಿಮ್ಮದೇವ, ಕಾಗೆ ಪಾತ್ರಧಾರಿಣಿ ನಮ್ರತಾ. ತೀರ್ಪುಗಾರರ ಮೆಚ್ಚುಗೆ ಪಡೆದ ಬಾಲನಟ/ನಟಿಯರು: ಪಿಲಿ ನಾಟಕದ ಸುಬ್ಬು ಪಾತ್ರಧಾರಿ ಪ್ರಣವ್ ಆಚಾರ್ಯ, ಪಿಲಿ ನಾಟಕದ ನೀಲಾ ಪಾತ್ರಧಾರಿಣಿ ಪ್ರಾಪ್ತಿ ಆಚಾರ್ಯ, ಯೇಸ ನಾಟಕದ ಹೋರಾಟಗಾರ ಮೃಣಾಲ್ ಪ್ರಕಾಶ್, ಮಾಯೊಕದ ಮಣ್ಣಕರ ನಾಟಕದ ನಾಯಿ ಪಾತ್ರಧಾರಿ ವಿಶಾಂತ್ ಇವರು ಪ್ರಶಸ್ತಿ ಪಡೆದಿದ್ದಾರೆ. 24ನೇ ವರ್ಷದ ಕೆಮ್ತೂರು ತುಳುನಾಟಕ ಸ್ಪರ್ಧೆಯ ತೀರ್ಪುಗಾರರಾಗಿ ಖ್ಯಾತ ರಂಗಕರ್ಮಿಗಳಾದ ಮೋಹನ್ ಶೇಣಿ, ಗಂಗಾಧರ ಪಣಿಯೂರು, ಡಾ. ಸುಕನ್ಯ ಮೇರಿ ಮಾರ್ಟಿಸ್ ಸಹಕರಿಸಿದ್ದರು. ನಾಟಕ ಸ್ಪರ್ಧೆಯ ಪ್ರಶಸ್ತಿ ಪ್ರಧಾನ ಸಮಾರಂಭ ಫೆಬ್ರವರಿ 8ರಂದು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಜರಗಲಿದೆ. ಅಂದು ಪ್ರಥಮ ಪ್ರಶಸ್ತಿ ವಿಜೇತ ನಾಟಕದ ಮರುಪ್ರದರ್ಶನ ಸಹ ನಡೆಯಲಿದೆ ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಕೆಮ್ತೂರು ನಾಟಕ ಸ್ಪರ್ಧೆಯ ಸಂಚಾಲಕ ಬಿ. ಪ್ರಭಾಕರ ಭಂಡಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Big Bash League 2026- ಇದೇ ಮೊದಲ ಬಾರಿಗೆ ಬಿಗ್ ಬ್ಯಾಷ್ ಲೀಗ್ನಲ್ಲಿ ಕಾಣಿಸಿಕೊಂಡಿರುವ ಪಾಕಿಸ್ತಾನದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಅವರು ರನ್ ಗಳಿಸಲು ಒದ್ದಾಡುತ್ತಿದ್ದಾರೆ. ಇದೀಗ ಸೋಮವಾರ ನಿಧಾನಗತಿಯ ಬ್ಯಾಟಿಂಗ್ಗಾಗಿ 'ರಿಟೈರ್ಡ್ ಔಟ್' ಆಗಿ ಮುಜುಗರಕ್ಕೀಡಾಗಿದ್ದಾರೆ. ಲೀಗ್ ನಲ್ಲಿ ಈ ರೀತಿ ಔಟಾದ ಮೊದಲ ವಿದೇಶಿ ಆಟಗಾರ ಎಂಬ ಕೆಟ್ಟ ದಾಖಲೆಯೂ ಅವರ ಹೆಸರಿಗೆ ಈಗ ಅಂಟಿಕೊಂಡಿದೆ. ಮೆಲ್ಬರ್ನ್ ರೆನೆಗೇಡ್ಸ್ ತಂಡದ ಪರ ಆಡುತ್ತಿರುವ ರಿಜ್ವಾನ್ 23 ಎಸೆತಗಳಲ್ಲಿ ಕೇವಲ 26 ರನ್ ಗಳಿಸಿದ್ದರಿಂದ ತಂಡದ ಮ್ಯಾನೇಜ್ ಮೆಂಟ್ ಈ ನಿರ್ಧಾರಕ್ಕೆ ಬಂತು.
ಲಾಲ್ಬಾಗ್ ಫ್ಲವರ್ ಶೋ 2026: ತೇಜಸ್ವಿ ವಿಸ್ಮಯ ಅನಾವರಣ; ನಾಟಕಗಳೂ ಪ್ರದರ್ಶನ; ದಿನಾಂಕವೇನು? ಟಿಕೆಟ್ ದರ ಎಷ್ಟು?
ಬೆಂಗಳೂರಿನ ಲಾಲ್ಬಾಗ್ನಲ್ಲಿ ಜನವರಿ 15 ರಿಂದ 26 ರವರೆಗೆ 219ನೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ ಕುರಿತ 'ತೇಜಸ್ವಿ ವಿಸ್ಮಯ' ಈ ಬಾರಿಯ ಪ್ರದರ್ಶನದ ಮುಖ್ಯ ವಿಷಯವಾಗಿದೆ. ಗಾಜಿನ ಮನೆಯಲ್ಲಿ ತೇಜಸ್ವಿ ಅವರ ನೆಚ್ಚಿನ ಕಾಡಿನ ಮಾದರಿಯನ್ನು ನಿರ್ಮಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಈ ಪ್ರದರ್ಶನದಲ್ಲಿ ಹಲವು ಆಕರ್ಷಣೆಗಳಿದ್ದು, ಒಟ್ಟಾರೆ 3 ಕೋಟಿ ರೂ.ಗೂ ಅಧಿಕ ಹಣ ಖರ್ಚು ಮಾಡಲಾಗುತ್ತಿದೆ.
ಸಣ್ಣದೊಂದು ತಪ್ಪಿಗೆ 'ಗೂಗಲ್' ಕಂಪನಿಯ ಕೆಲ್ಸ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!
ಬೆಂಗಳೂರಿನ ಗೂಗಲ್ ಸಾಫ್ಟ್ವೇರ್ ಇಂಜಿನಿಯರ್ ಅರ್ಪಿತ್ ಭಾಯಾನಿ ಅವರು ತಮ್ಮ ಆನ್ಲೈನ್ ಕೋರ್ಸ್ಗಳು ಮತ್ತು ಯೂಟ್ಯೂಬ್ ಚಟುವಟಿಕೆಗಳಿಂದಾಗಿ ಕಂಪನಿ ತೊರೆದಿದ್ದಾರೆ. ಕಾನೂನು ಇಲಾಖೆ ಮಧ್ಯಪ್ರವೇಶಿಸಿದಾಗ ಅವರಿಗೆ ಬೇರೆ ದಾರಿಯಿರಲಿಲ್ಲ. ಇದು ಅವರಿಗೆ ಕಹಿ ಅನುಭವ ನೀಡಿದೆ. ತಮ್ಮ ನೆಚ್ಚಿನ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಬಿಡಬೇಕಾದ್ದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.
ಬಾಲಿವುಡ್ ಸಿನಿಮಾದಲ್ಲಿ ಶಾರುಖ್ ಜೊತೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ ಹಾಲಿವುಡ್ ನಟ ವಿಲ್ ಸ್ಮಿತ್
ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರೊಂದಿಗೆ ಹಿಂದಿ ಸಿನಿಮಾದಲ್ಲಿ ನಟಿಸುವ ಅವಕಾಶ ದೊರಕಲಿ ಎಂಬ ಆಶಯವಿದೆ ಎಂದು ಹಾಲಿವುಡ್ ನಟ ವಿಲ್ ಸ್ಮಿತ್ ಹೇಳಿದ್ದಾರೆ. ಹಾಲಿವುಡ್ ನಟ ವಿಲ್ ಸ್ಮಿತ್ ಮತ್ತೊಮ್ಮೆ ಬಾಲಿವುಡ್ ನಲ್ಲಿ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ತಾವು ನಟಿಸಿರುವ ಮುಂಬರುವ ಸೀರೀಸ್ ‘ಪೋಲ್ ಟು ಪೋಲ್’ನ ಮಧ್ಯಪ್ರಾಚ್ಯದ ಪ್ರೀಮಿಯರ್ ಸಂದರ್ಭದಲ್ಲಿಯೇ ಅವರು ಈ ಆಶಯವನ್ನು ಬಹಿರಂಗಪಡಿಸಿದ್ದಾರೆ. Will Smith is asking Shah Rukh Khan to cast him in a Bollywood movie. He said there were talks of him working with Salman Khan and Amitabh Bachchan earlier but it didn't work out. pic.twitter.com/M8BMvlmY1d — sohom (@AwaaraHoon) January 11, 2026 ‘ಪೋಲ್ ಟು ಪೋಲ್’ನ ಮಧ್ಯಪ್ರಾಚ್ಯದ ಪ್ರೀಮಿಯರ್ಗೆ ದುಬೈಗೆ ಭೇಟಿ ನೀಡಿದ್ದ ವೇಳೆ, ನಟ ಹಿಂದಿ ಸಿನಿಮಾದ ಖ್ಯಾತ ನಟರೊಂದಿಗೆ ಅಭಿನಯಿಸುವ ಆಸಕ್ತಿಯನ್ನು ಮತ್ತೆ ವ್ಯಕ್ತಪಡಿಸಿದ್ದಾರೆ. ಗಲ್ಫ್ ನ್ಯೂಸ್ ನೊಂದಿಗೆ ಮಾತನಾಡಿದ ವಿಲ್ ಸ್ಮಿತ್ ಶಾರುಖ್ ಖಾನ್ ಕುರಿತು ಮಾತನಾಡುತ್ತ, ಹಿಂದಿ ಸಿನಿಮಾಗಳೊಂದಿಗೆ ಸೃಜನಶೀಲ ಬಂಧವನ್ನು ಬೆಸೆಯುವ ತಮ್ಮ ಆಶಯವನ್ನು ಪುನರುಚ್ಚರಿಸಿದ್ದಾರೆ. “ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರು ನನಗೆ ಹಿಂದಿ ಸಿನಿಮಾದಲ್ಲಿ ನಟಿಸುವ ಅವಕಾಶ ನೀಡಲಿ ಎಂಬುದು ನನ್ನ ಬಯಕೆ” ಎಂದು ವಿಲ್ ಸ್ಮಿತ್ ಹೇಳಿದ್ದಾರೆ. ಇದರೊಂದಿಗೆ, ಶಾರುಖ್ ಖಾನ್ ಮತ್ತು ವಿಲ್ ಸ್ಮಿತ್ ಭವಿಷ್ಯದಲ್ಲಿ ಒಟ್ಟಾಗಿ ಸಿನಿಮಾ ಮಾಡಬಹುದೆಂಬ ಊಹಾಪೋಹಗಳಿಗೆ ಮತ್ತೆ ರೆಕ್ಕೆ ಬಂದಿದೆ. ಇತ್ತ ಶಾರುಖ್ ಖಾನ್ ಸದ್ಯ ಸಿದ್ಧಾರ್ಥ್ ಆನಂದ್ ನಿರ್ಮಾಣದ ‘ಕಿಂಗ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಸುಹಾನಾ ಖಾನ್ ಹಾಗೂ ಅಭಿಷೇಕ್ ಬಚ್ಚನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ವರ್ಷದ ಅಂತ್ಯದ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಸಲ್ಮಾನ್ ಖಾನ್ ಮತ್ತು ಅಮಿತಾಬ್ ಬಚ್ಚನ್ ಅವರೊಂದಿಗೆ ಕೂಡ ಹಿಂದಿ ಸಿನಿಮಾದಲ್ಲಿ ನಟಿಸುವ ಆಸಕ್ತಿ ವ್ಯಕ್ತಪಡಿಸಿದ್ದಾಗಿ ವಿಲ್ ಸ್ಮಿತ್ ತಿಳಿಸಿದ್ದಾರೆ. ಈ ಹಿಂದೆ ಸಲ್ಮಾನ್ ಖಾನ್–ಆಟ್ಲಿ ಕಾಂಬಿನೇಷನ್ ಸಿನಿಮಾದಲ್ಲಿ ವಿಲ್ ಸ್ಮಿತ್ ನಟಿಸುವ ಬಗ್ಗೆ ಸುದ್ದಿಗಳು ಹರಡಿದ್ದವು. ಆದರೆ ಆ ಸಿನಿಮಾ ನಂತರ ಸೆಟ್ಟೇರಿರಲಿಲ್ಲ. ವಿಲ್ ಸ್ಮಿತ್ ‘ಬ್ಯಾಡ್ ಬಾಯ್ಸ್’, ‘ಮೆನ್ ಇನ್ ಬ್ಲ್ಯಾಕ್’ ಹಾಗೂ ‘ಐ ರೋಬೊಟ್’ ಸೇರಿದಂತೆ ಹಲವು ಚಿತ್ರಗಳ ಮೂಲಕ ಭಾರತದಲ್ಲೂ ಜನಪ್ರಿಯರಾಗಿದ್ದಾರೆ.
Kerala | Mission 2026ಗೆ ಚಾಲನೆ ನೀಡಿದ ಅಮಿತ್ ಶಾ; ಕೇರಳ ರಾಜಕೀಯದಲ್ಲಿ ಈ ಭೇಟಿ ಯಾಕೆ ಪ್ರಾಮುಖ್ಯತೆ ವಹಿಸುತ್ತದೆ?
ರವಿವಾರ (ಜನವರಿ 11) ಕೇರಳಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿರುವನಂತಪುರಂನಲ್ಲಿ ನಡೆದ ಕೇರಳ ಕೌಮುದಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಅಭಿವೃದ್ಧಿ ಹೊಂದಿದ ಕೇರಳ, ಸುರಕ್ಷಿತ ಕೇರಳ ಮತ್ತು ಪ್ರತಿಯೊಬ್ಬರ ನಂಬಿಕೆಯನ್ನು ಗೌರವಿಸುವ ಕೇರಳವನ್ನು ನಿರ್ಮಿಸುವುದೇ ನಮ್ಮ ಉದ್ದೇಶ ಎಂದು ಅವರು ಹೇಳಿದರು. ಕೇರಳದ ಸಂಸ್ಕೃತಿ, ಸಾಹಿತ್ಯ ಮತ್ತು ಶಿಕ್ಷಣದ ಮೇಲಿನ ಉತ್ಸಾಹವು ಈ ರಾಜ್ಯವನ್ನು ಇಡೀ ದೇಶದ ಉನ್ನತ ರಾಜ್ಯಗಳಲ್ಲಿ ಒಂದಾಗಿ ರೂಪಿಸಿದೆ. ಇಡೀ ಭಾರತ ಇದರಲ್ಲಿ ನಂಬಿಕೆ ಹೊಂದಿದೆ. ಆಯುರ್ವೇದದಿಂದ ಐಟಿಯವರೆಗೆ, ಕ್ರೀಡೆಯಿಂದ ಸ್ಟಾರ್ಟ್ಅಪ್ಗಳವರೆಗೆ, ಹಿನ್ನೀರಿನಿಂದ ಬೌದ್ಧಿಕ ಚರ್ಚೆಗಳವರೆಗೆ ಎಲ್ಲವೂ ಇಲ್ಲಿದೆ. ಕೇರಳವು ಈ ಎಲ್ಲ ಕ್ಷೇತ್ರಗಳಲ್ಲಿ ಇಡೀ ದೇಶದಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ. ಆದರೆ ಕೇರಳದಲ್ಲಿ ಎರಡು ವಿರೋಧ ಪಕ್ಷಗಳ ಮೈತ್ರಿಕೂಟಗಳ ನಡುವಿನ ಅಧಿಕಾರ ಪರ್ಯಾಯ ಚಕ್ರವು ರಾಜಕೀಯದಲ್ಲಿ ಒಂದು ರೀತಿಯ ನಿಶ್ಚಲತೆಯನ್ನು ತಂದಿದೆ. ಇತ್ತೀಚೆಗೆ ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಈ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸಿವೆ. ಹೊಸ ಕಲ್ಪನೆ, ಹೊಸ ರಕ್ತ ಮತ್ತು ಹೊಸ ರೀತಿಯ ರಾಜಕೀಯಕ್ಕಾಗಿ ಕೇರಳದ ಜನರಿಗೆ ಮನವಿ ಮಾಡಲು ನಾನು ಬಂದಿದ್ದೇನೆ. ನಮ್ಮ ಪಕ್ಷ ಮತ್ತು ನಮ್ಮ ಮೈತ್ರಿಕೂಟ ಮಾತ್ರ ಕೇರಳದ ಅಗತ್ಯಗಳನ್ನು ಪೂರೈಸಲು ಸಾಧ್ಯ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಅಭಿವೃದ್ಧಿ ಹೊಂದಿದ ಕೇರಳದ ದೃಷ್ಟಿಕೋನವನ್ನು ನಾವು ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಸಾಕಾರಗೊಳಿಸಬಹುದು ಎಂದು ಅಮಿತ್ ಶಾ ಹೇಳಿದರು. ಕೇರಳದಲ್ಲಿ Mission 2026ಗೆ ಚಾಲನೆ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದ ಬಿಜೆಪಿಯ ಚುನಾಯಿತ ಪ್ರತಿನಿಧಿಗಳ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಶಾ, ತಿರುವನಂತಪುರಂ ಕಾರ್ಪೊರೇಷನ್ನಲ್ಲಿನ ಗೆಲುವು ರಾಜ್ಯದಲ್ಲಿ ಸರ್ಕಾರ ರಚಿಸುವ ಅಂತಿಮ ಗುರಿಯತ್ತ ಮೊದಲ ಹೆಜ್ಜೆಯಾಗಿದೆ ಎಂದು ಹೇಳಿದರು. ಈ ವೇಳೆ ಮುಂಬರುವ ವಿಧಾನಸಭಾ ಚುನಾವಣೆಗೆ “ಮಿಷನ್ 2026” ಅಭಿಯಾನಕ್ಕೆ ಅವರು ಅಧಿಕೃತ ಚಾಲನೆ ನೀಡಿದರು. “ನಮಗೆ ಅಭಿವೃದ್ಧಿ ಹೊಂದಿದ ಕೇರಳ ಬೇಕು (ವಿಕಸಿತ ಕೇರಳ)” ಎಂಬ ಬಿಜೆಪಿಯ ಅಭಿಯಾನದ ಮೂರು ಅಂಶಗಳ ಕಾರ್ಯಸೂಚಿಯನ್ನು ಘೋಷಿಸಿದ ಅವರು, ಅಭಿವೃದ್ಧಿ ಹೊಂದಿದ ಕೇರಳ, ಸುರಕ್ಷಿತ ಕೇರಳ ಮತ್ತು ನಂಬಿಕೆಯ ರಕ್ಷಣೆ ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದರು. ‘ಮಾರಾತ್ತದ್ ಇನಿ ಮಾರುಮ್’ (ಬದಲಾಗದೇ ಇದ್ದದ್ದು ಇನ್ಮುಂದೆ ಬದಲಾಗುತ್ತದೆ) ಎಂಬ ಘೋಷಣೆಯೊಂದಿಗೆ ಮಿಷನ್ 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮತಪಾಲು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂಬುದು ಸ್ಪಷ್ಟವಾಗಿದೆ. ಕೇರಳದಲ್ಲಿನ ಈ ಬದಲಾವಣೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿಲ್ಲ. ನಾವು 30 ಗ್ರಾಮ ಪಂಚಾಯತ್ಗಳನ್ನು ಗೆದ್ದಿದ್ದೇವೆ. 79ರಲ್ಲಿ ಎರಡನೇ ಸ್ಥಾನ ಪಡೆದಿದ್ದೇವೆ. ತಿರುವನಂತಪುರಂ ಕಾರ್ಪೊರೇಷನ್ ಮತ್ತು ಎರಡು ಪುರಸಭೆಗಳನ್ನು ಗೆದ್ದಿದ್ದೇವೆ. ಇಂದು ಬಿಜೆಪಿ ತಿರುವನಂತಪುರಂನಲ್ಲಿ ಮೇಯರ್ ಸ್ಥಾನವನ್ನು ಹೊಂದಿದೆ. ನಾಳೆ ನಾವು ಕೇರಳದಲ್ಲಿ ಬಿಜೆಪಿ ಮುಖ್ಯಮಂತ್ರಿಯನ್ನು ಹೊಂದುತ್ತೇವೆ ಎಂದು ಶಾ ಹೇಳಿದರು. ನಮ್ಮ ಗೆಲುವು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಅಥವಾ ಜೈಲಿನಲ್ಲಿ ವರ್ಷಗಳನ್ನು ಕಳೆದ ಸಾವಿರಾರು ಕಾರ್ಯಕರ್ತರ ತ್ಯಾಗದ ಮೇಲೆ ನಿರ್ಮಿತವಾಗಿದೆ. ನಮ್ಮ ಮತ ಹಂಚಿಕೆ 2014ರಲ್ಲಿ 11% ಇತ್ತು. ಅದು 2019ರಲ್ಲಿ 16%ಕ್ಕೆ, 2024ರಲ್ಲಿ 20%ಕ್ಕೆ ಏರಿಕೆಯಾಗಿದೆ. ಈಗಿರುವ 20% ಮತಪಾಲು ಶೇ 30 ಅಥವಾ 40ಕ್ಕೆ ಹೆಚ್ಚಾಗಲು ಹೆಚ್ಚು ಸಮಯ ಬೇಕಾಗುವುದಿಲ್ಲ. 1984ರಲ್ಲಿ ನಾವು ಲೋಕಸಭೆಯಲ್ಲಿ ಕೇವಲ ಎರಡು ಸ್ಥಾನಗಳಿಂದ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಂತೆಯೇ, 2026ರಲ್ಲಿ ಕೂಡಾ ಇದು ಸಂಭವಿಸುತ್ತದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಅಧಿಕಾರದಿಂದ ಹೊರಡುವ ಸಮಯ ಬಂದಿದೆ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಅಮಿತ್ ಶಾ ಹೇಳಿದರು. ಕಮ್ಯುನಿಸ್ಟ್ ಪಕ್ಷಗಳು ಪ್ರಪಂಚದಾದ್ಯಂತ ಕಣ್ಮರೆಯಾಗಿವೆ. ಕಾಂಗ್ರೆಸ್ ಪಕ್ಷವೂ ದೇಶಾದ್ಯಂತ ಮರೆಯಾಗುತ್ತಿದೆ. ಈಗ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಮಾತ್ರ ಕೇರಳವನ್ನು ಅಭಿವೃದ್ಧಿಯ ಹಾದಿಯತ್ತ ಕೊಂಡೊಯ್ಯಬಲ್ಲದು ಎಂದು ಅವರು ಹೇಳಿದರು. ರಾಜ್ಯ ಮತ್ತು ದೇಶದ ಹೊರಗೆ ದುಡಿಯುವ ಯುವಕರ ಶ್ರಮದ ಹಣದ ಮೇಲೆ ಆಧಾರಿತ ಅಭಿವೃದ್ಧಿಗೆ ಬದಲಾಗಿ, ಬಿಜೆಪಿ ಕೇರಳದ ಪ್ರತಿಯೊಬ್ಬ ನಾಗರಿಕನಿಗೂ ಪ್ರಯೋಜನಕಾರಿಯಾದ ಸಮಗ್ರ ಅಭಿವೃದ್ಧಿ ಕಾರ್ಯಕ್ರಮವನ್ನು ಭರವಸೆ ನೀಡುತ್ತದೆ. ಜಮಾತ್-ಎ-ಇಸ್ಲಾಮಿ ಹಿಂದ್, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವಿಭಜಕ ಕಾರ್ಯಸೂಚಿಯಿಂದ ಎಲ್ಡಿಎಫ್ ಅಥವಾ ಯುಡಿಎಫ್ ಕೇರಳವನ್ನು ರಕ್ಷಿಸಲು ಸಾಧ್ಯವಿಲ್ಲ. ಏಕೆಂದರೆ ಅವು ಅವರೊಂದಿಗೆ ಮೈತ್ರಿ ಮಾಡಿಕೊಂಡಿವೆ. ಎರಡೂ ರಂಗಗಳು ಓಲೈಕೆಯನ್ನು ನೀತಿಯಾಗಿ ಒಪ್ಪಿಕೊಂಡಿವೆ. ನೀವು ಓಲೈಕೆಯನ್ನು ನೀತಿಯಾಗಿ ಸ್ವೀಕರಿಸಿದಾಗ ಯಾರಿಗೂ ನ್ಯಾಯ ನೀಡಲು ಸಾಧ್ಯವಿಲ್ಲ. ಬಿಜೆಪಿಯ ನೀತಿ ಎಲ್ಲರಿಗೂ ನ್ಯಾಯ – ಯಾರನ್ನೂ ಓಲೈಕೆ ಮಾಡದೇ ಇರುವುದು ಎಂದು ಶಾ ಹೇಳಿದರು. ಶಬರಿಮಲೆ ಅಯ್ಯಪ್ಪ ದೇವಸ್ಥಾನ ಪ್ರಕರಣ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನದ ಕಲಾಕೃತಿಗಳ ಕಳ್ಳತನ ಆರೋಪವು ಅಭಿಯಾನದ ಪ್ರಮುಖ ಕೇಂದ್ರಬಿಂದುವಾಗಿದೆ ಎಂದು ಶಾ ಹೇಳಿದರು. ತನಿಖೆಯನ್ನು ತಟಸ್ಥ ಸಂಸ್ಥೆಗೆ ಹಸ್ತಾಂತರಿಸುವವರೆಗೆ ಬಿಜೆಪಿ ಕೇರಳದ ಪ್ರತಿಯೊಂದು ಹಳ್ಳಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದರು. ಶಬರಿಮಲೆಯಲ್ಲಿ ನಡೆದ ತಪ್ಪುಗಳು ಕೇವಲ ಕೇರಳಕ್ಕೆ ಸೀಮಿತವಾದ ವಿಷಯವಲ್ಲ. ಇದು ದೇಶಾದ್ಯಂತದ ಜನರ ನಂಬಿಕೆಗೆ ಸಂಬಂಧಿಸಿದ ವಿಷಯವಾಗಿದೆ. ನಾನು ಎಫ್ಐಆರ್ ಅನ್ನು ನೋಡಿದ್ದೇನೆ. ಇದರಲ್ಲಿ ಕೆಲವು ಜನರನ್ನು ಉಳಿಸಲು ಪ್ರಯತ್ನಿಸಲಾಗಿದೆ. ಇಬ್ಬರು ಸಚಿವರ ಮೇಲೆ ಅನುಮಾನವಿದೆ. ಆರೋಪಿಗಳೊಂದಿಗೆ ಫೋಟೋಗಳಲ್ಲಿ ಅವರ ನಾಯಕರು ಕಾಣಿಸಿಕೊಂಡಿರುವುದರಿಂದ ಯುಡಿಎಫ್ ಕೂಡಾ ವಿಶ್ವಾಸಾರ್ಹ ತನಿಖೆಯ ಭರವಸೆ ನೀಡಲು ಸಾಧ್ಯವಿಲ್ಲ. ತನಿಖೆಯನ್ನು ತಟಸ್ಥ ಸಂಸ್ಥೆಗೆ ಹಸ್ತಾಂತರಿಸಬೇಕು ಎಂದು ಶಾ ಒತ್ತಾಯಿಸಿದರು. ದೊಡ್ಡ ರಾಜಕೀಯ ಗುರಿ ಬಿಜೆಪಿಯಿಂದ ಆಯ್ಕೆಯಾದ 2,000ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಶಾ, ಪಕ್ಷದ ದೀರ್ಘಕಾಲೀನ ಗುರಿಯನ್ನು ವಿವರಿಸಿದರು. ಬಿಜೆಪಿ ಕೇವಲ ಮತಪಾಲು ಹೆಚ್ಚಿಸಲು ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿಲ್ಲ. ಕೇರಳದಲ್ಲಿ ಬಿಜೆಪಿ ಮುಖ್ಯಮಂತ್ರಿ ಇರುವ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದೆ ಎಂದರು. ಎಲ್ಡಿಎಫ್ ಮತ್ತು ಯುಡಿಎಫ್ ನಡುವಿನ “ಮ್ಯಾಚ್ ಫಿಕ್ಸಿಂಗ್” ಕಾರಣದಿಂದ ಅಭಿವೃದ್ಧಿ ಕುಂಠಿತವಾಗಿದೆ. ಅಧಿಕಾರ ಪರ್ಯಾಯವಾಗುತ್ತಿದ್ದರೂ ಆಡಳಿತದ ಆದ್ಯತೆಗಳು ಬದಲಾಗದೆ ಉಳಿದಿವೆ. ಇದರ ಪರಿಣಾಮವಾಗಿ ಮೂಲಸೌಕರ್ಯ ಯೋಜನೆಗಳು, ನೀತಿ ಜಾರಿ ವಿಳಂಬವಾಗುತ್ತಿದ್ದು ಆರ್ಥಿಕ ಅವಕಾಶಗಳು ಕಳೆದುಹೋಗುತ್ತಿವೆ ಎಂದು ಅವರು ಹೇಳಿದರು. ಕೇರಳದಲ್ಲಿ ಬಿಜೆಪಿಯ ಮತಗಳಲ್ಲಿ ಹೆಚ್ಚಳ ಕೇರಳದಲ್ಲಿ ಎನ್ಡಿಎಯ ಮತಪಾಲು ಕ್ರಮೇಣ ಏರಿಕೆಯಾಗುತ್ತಿದೆ. 2001ರಲ್ಲಿ ಸುಮಾರು 3% ಇದ್ದ ಮತಪಾಲು, 2016 ಮತ್ತು 2021ರ ನಡುವೆ 12–15%ಕ್ಕೆ ಏರಿಕೆಯಾಗಿದೆ ಎಂದು ಚುನಾವಣಾ ದತ್ತಾಂಶಗಳು ಸೂಚಿಸುತ್ತವೆ. ಈ ಬೆಳವಣಿಗೆ ಅಸೆಂಬ್ಲಿ ಸ್ಥಾನಗಳಲ್ಲಿ ಇನ್ನೂ ಪ್ರತಿಬಿಂಬಿಸದಿದ್ದರೂ, ಪುನರಾವರ್ತಿತ ಸೋಲುಗಳ ನಡುವೆಯೂ ಪಕ್ಷದ ಸಾಂಸ್ಥಿಕ ನೆಲೆ ಬಲವಾಗಿ ಉಳಿದಿದೆ. ತಿರುವನಂತಪುರಂ ಕಾರ್ಪೊರೇಷನ್ನಲ್ಲಿ ಕಳೆದ ಎರಡು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಇತ್ತೀಚಿನ ಚುನಾವಣೆಯಲ್ಲಿ 101 ವಾರ್ಡ್ಗಳಲ್ಲಿ 50ರಲ್ಲಿ ಗೆಲುವು ಸಾಧಿಸುವ ಮೂಲಕ ಇದೇ ಮೊದಲ ಬಾರಿ ಮೇಯರ್ ಸ್ಥಾನವನ್ನು ಪಡೆದುಕೊಂಡಿದೆ. ಆರು ಪುರಸಭೆಗಳಲ್ಲಿ ಬಿಜೆಪಿ–ಎನ್ಡಿಎ ಒಕ್ಕೂಟವು 23%ಕ್ಕೂ ಅಧಿಕ ಸಂಯುಕ್ತ ಮತಪಾಲು ಗಳಿಸಿದೆ. 79 ಗ್ರಾಮ ಪಂಚಾಯತ್ಗಳಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಇದು ಬಿಜೆಪಿ ಕೇವಲ ನಗರ ಕೇಂದ್ರಿತ ಪಕ್ಷವಲ್ಲ ಎಂಬುದನ್ನು ತೋರಿಸುತ್ತದೆ ಎಂದು ಶಾ ಹೇಳಿದರು. ಶಬರಿಮಲೆ ವಿಷಯದ ರಾಜಕೀಯ ಪ್ರಭಾವ ಶಬರಿಮಲೆ ವಿಷಯವು ಕೇರಳ ರಾಜಕೀಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿ ಮುಂದುವರಿದಿದೆ. ಚುನಾವಣಾ ಫಲಿತಾಂಶಗಳು ಪ್ರದೇಶದಿಂದ ಪ್ರದೇಶಕ್ಕೆ ಬದಲಾಗುತ್ತಿದ್ರೂ, ವಿಶೇಷವಾಗಿ ದಕ್ಷಿಣ ಕೇರಳದಲ್ಲಿ ಹಿಂದೂ ಮತದಾರರೊಂದಿಗೆ ಸಂಪರ್ಕ ಬಲಪಡಿಸಲು ಈ ವಿಷಯ ಸಹಕಾರಿಯಾಗಿದೆ ಎಂದು ಬಿಜೆಪಿ ನಂಬಿದೆ. ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣಾ ದತ್ತಾಂಶಗಳು ಸಾಂಪ್ರದಾಯಿಕವಾಗಿ ಎಡಪಕ್ಷಗಳತ್ತ ಒಲವು ಹೊಂದಿದ್ದ ಈಳವ ಒಬಿಸಿ ಸಮುದಾಯದ ಕೆಲವು ವಿಭಾಗಗಳಲ್ಲಿ ಮತಬದಲಾವಣೆಯನ್ನು ಸೂಚಿಸುತ್ತವೆ. ಇಂತಹ ಸೀಮಿತ ಚಲನೆಯೇ ನಿಕಟ ಹೋರಾಟದ ಕ್ಷೇತ್ರಗಳಲ್ಲಿ ನಿರ್ಣಾಯಕವಾಗುತ್ತದೆ. ಒಬಿಸಿ ಸಮುದಾಯವು ಹಿಂದೂ ಸಮುದಾಯದ ಸುಮಾರು 26% ಅನ್ನು ಹೊಂದಿದೆ. ಬಿಜೆಪಿಯ ಪ್ರಮುಖ ನಾಯಕರಾದ ಕೆ. ಸುರೇಂದ್ರನ್, ವಿ. ಮುರಳೀಧರನ್ ಮತ್ತು ಶೋಭಾ ಸುರೇಂದ್ರನ್ ಒಬಿಸಿ ಸಮುದಾಯದವರಾಗಿದ್ದಾರೆ. ಅಲ್ಪಸಂಖ್ಯಾತ ಸಂಪರ್ಕದ ಮೂಲಕ ಮತ ಬೇಟೆ ಮೊದಲ ಬಾರಿಗೆ ಬಿಜೆಪಿಯು ಪಕ್ಷದ ಉನ್ನತ ಶ್ರೇಣಿಯಲ್ಲಿ ಇಬ್ಬರು ಕ್ರಿಶ್ಚಿಯನ್ ನಾಯಕರನ್ನು ಸೇರಿಸಿಕೊಂಡಿದೆ. ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಶೋನ್ ಜಾರ್ಜ್ ಮತ್ತು ಅನೂಪ್ ಆಂಟನಿ ಅಲ್ಪಸಂಖ್ಯಾತ ಸಮುದಾಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಜಾರ್ಜ್ ಕುರಿಯನ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಿರುವುದೂ ಅಲ್ಪಸಂಖ್ಯಾತ ಮತಗಟ್ಟೆಗಳ ದೃಷ್ಟಿಯಿಂದ ಮಹತ್ವದ್ದಾಗಿದೆ. ಉತ್ತರ ಕೇರಳದಲ್ಲಿ ಕಾಸರಗೋಡಿನ ಮಂಜೇಶ್ವರ ಕ್ಷೇತ್ರವನ್ನು ಬಿಜೆಪಿ ಪ್ರಮುಖ ಗುರಿಯಾಗಿ ಗುರುತಿಸಿದೆ. ಹಿಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಸುರೇಂದ್ರನ್ ಕೇವಲ 80 ಮತಗಳ ಅಂತರದಿಂದ ಸೋತಿದ್ದರು. ಅಷ್ಟೇ ಕಡಿಮೆ ಅಂತರ ಇರುವುದರಿಂದ ಈ ಬಾರಿ ಗೆಲುವಿನ ಸಾಧ್ಯತೆ ಇದೆ ಎಂದು ಪಕ್ಷ ನಂಬಿದೆ. ತ್ರಿಶೂರ್ ವಿಜಯ ಮತ್ತು ಕ್ರಿಶ್ಚಿಯನ್ ಮತಗಟ್ಟೆ ಕೇರಳದ ಜನಸಂಖ್ಯೆಯಲ್ಲಿ ಸುಮಾರು 48% ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಇದ್ದಾರೆ. ಅಲ್ಪಸಂಖ್ಯಾತ ಸಂಪರ್ಕ ಬಿಜೆಪಿಯ ಕಾರ್ಯತಂತ್ರದ ಪ್ರಮುಖ ಅಂಶವಾಗಿದೆ. ಈ ಹಿನ್ನೆಲೆಯಲ್ಲೇ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಅವರ ಗೆಲುವನ್ನು ಮಹತ್ವದ ಯಶಸ್ಸಾಗಿ ಪರಿಗಣಿಸಲಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸುರೇಶ್ ಗೋಪಿ ಅವರು 4,12,338 ಮತಗಳು (37.8% ಮತಪಾಲು) ಪಡೆದು 74,686 ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಈ ಗೆಲುವನ್ನು ಜಾತಿಯನ್ನು ಮೀರಿ ನಡೆದ ಹಿಂದೂ ಬಲವರ್ಧನೆಯ ಉದಾಹರಣೆಯಾಗಿ ಬಿಜೆಪಿ ನೋಡಿದೆ. ದೇಶದ ಇತರೆ ಭಾಗಗಳಲ್ಲಿ ಕ್ರಿಶ್ಚಿಯನ್ನರ ಮೇಲಿನ ದಾಳಿಗಳಿಗೆ ಸಂಬಂಧಿಸಿದ ಘಟನೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆಯುಂಟುಮಾಡಿದ್ದರೂ, ರಾಜೀವ್ ಚಂದ್ರಶೇಖರ್ ಅವರಂತಹ ನಾಯಕರ ನೇತೃತ್ವದ ಕೇರಳ ಬಿಜೆಪಿ ನಾಯಕತ್ವವು ಚರ್ಚ್ ಮುಖಂಡರೊಂದಿಗೆ ನಿರಂತರ ಸಂಪರ್ಕವನ್ನು ಕಾಯ್ದುಕೊಂಡಿದ್ದು, ಅಭಿವೃದ್ಧಿಯೇ ಮೊದಲ ಆದ್ಯತೆ ಎಂಬ ಸಂದೇಶವನ್ನು ಮುಂದಿಟ್ಟಿದೆ. 35 ‘ಎ–ಶ್ರೇಣಿ’ ಕ್ಷೇತ್ರಗಳು ಕೇರಳದಲ್ಲಿ ಬಿಜೆಪಿ ಸುಮಾರು 35 “ಎ–ಶ್ರೇಣಿ” ವಿಧಾನಸಭಾ ಕ್ಷೇತ್ರಗಳನ್ನು ಗುರುತಿಸಿದೆ. ತಿರುವನಂತಪುರಂ ಜಿಲ್ಲೆಯಲ್ಲಿ ನೇಮಮ್, ವಟ್ಟಿಯೂರ್ಕಾವು, ಕಝಕೂಟಂ ಮತ್ತು ಅಟ್ಟಿಂಗಲ್ ಕ್ಷೇತ್ರಗಳು ಪ್ರಮುಖವಾಗಿವೆ. ಅಟ್ಟಿಂಗಲ್ ಕ್ಷೇತ್ರದಲ್ಲಿ ಇತ್ತೀಚಿನ ಚುನಾವಣೆಯಲ್ಲಿ ಪಕ್ಷದ ಮತಪಾಲು 24.97%ರಿಂದ 31.64%ಕ್ಕೆ ಏರಿಕೆಯಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಮಂಜೇಶ್ವರ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಅಭಿವೃದ್ಧಿ ನಿಧಿಗಳ ಲೆಕ್ಕಾಚಾರ ಕೇರಳ ಕೌಮುದಿ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, 2004ರಿಂದ 2014ರವರೆಗೆ ಅಧಿಕಾರದಲ್ಲಿದ್ದ ಕೇಂದ್ರ ಸರ್ಕಾರವು ಕೇರಳಕ್ಕೆ 72,000 ಕೋಟಿ ರೂ. ನೀಡಿದ್ದರೆ, 2014ರಿಂದ 2024ರವರೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 3.13 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ನಿಧಿಯನ್ನು ಒದಗಿಸಿದೆ ಎಂದು ಹೇಳಿದರು. ಮೂಲಸೌಕರ್ಯ ಅಭಿವೃದ್ಧಿಗೆ 22,000 ಕೋಟಿ ರೂ., ರಸ್ತೆ ಅಭಿವೃದ್ಧಿಗೆ 4,000 ಕೋಟಿ ರೂ., ರೈಲ್ವೆ ಮತ್ತು ವಿಮಾನ ನಿಲ್ದಾಣಗಳಿಗೆ 17,000 ಕೋಟಿ ರೂ.ಗಳನ್ನು ಪ್ರತ್ಯೇಕವಾಗಿ ಹಂಚಿಕೆ ಮಾಡಲಾಗಿದೆ. ನಗರಾಭಿವೃದ್ಧಿಗೆ ಮಾತ್ರವೇ 22,000 ಕೋಟಿ ರೂ. ನೀಡಲಾಗಿದೆ. ಅಮೃತ್ ಯೋಜನೆಯಡಿ ಆಲಪ್ಪುಳ, ಕಣ್ಣೂರು, ಕೊಚ್ಚಿ, ಕೊಲ್ಲಂ, ಕೋಝಿಕೋಡ್, ಪಾಲಕ್ಕಾಡ್, ತಿರುವನಂತಪುರಂ, ತ್ರಿಶೂರ್ ಮತ್ತು ಗುರುವಾಯೂರು ನಗರಗಳಲ್ಲಿ ಮೇಲ್ದರ್ಜೆಗೇರಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ತಿರುವನಂತಪುರಂ ಮತ್ತು ಕೊಚ್ಚಿಯನ್ನು ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಸೇರಿಸಲಾಗಿದೆ. ಜನ ವಿಕಾಸ್ ಕಾರ್ಯಕ್ರಮದಡಿ, ಮೋದಿ ಸರ್ಕಾರವು 130 ಕೋಟಿ ರೂ.ಗಳ ನೆರವಿನೊಂದಿಗೆ ಸುಮಾರು 19 ಸಮುದಾಯ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದೆ. ಕೇರಳಕ್ಕೆ ಅನ್ಯಾಯ ಮಾಡಿರುವುದು ನರೇಂದ್ರ ಮೋದಿ ಸರ್ಕಾರವಲ್ಲ, ಕೇರಳ ಸರ್ಕಾರವೇ. ನವ ಕೇರಳ ನಿರ್ಮಾಣವಾದಾಗ ಮಾತ್ರ ನವ ಭಾರತ ಹೊರಹೊಮ್ಮುತ್ತದೆ. ಅಭಿವೃದ್ಧಿ ಹೊಂದಿದ ಕೇರಳದಿಂದ ಮಾತ್ರ ಅಭಿವೃದ್ಧಿ ಹೊಂದಿದ ಭಾರತ ಸಾಧ್ಯ ಎಂದು ಶಾ ಹೇಳಿದರು. ಕೇಂದ್ರ ನೀತಿಗಳ ವಿರುದ್ಧ ಎಲ್ಡಿಎಫ್ ಪ್ರತಿಭಟನೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕೇರಳದ ಎಲ್ಡಿಎಫ್ ನೇತೃತ್ವದಲ್ಲಿ ಸೋಮವಾರ ತಿರುವನಂತಪುರಂನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ. ಹಣಕಾಸಿನ ಸಂಪನ್ಮೂಲಗಳು ಮತ್ತು ಬೆಂಬಲದ ನ್ಯಾಯಸಮ್ಮತ ಪಾಲನ್ನು ನಿರಾಕರಿಸಲಾಗುತ್ತಿದೆ. ಇದು ಉಳಿವಿಗಾಗಿ ನಡೆಸುವ ಹೋರಾಟ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು. ಕೇಂದ್ರವು ಕೇರಳದ ಬಗ್ಗೆ ಪಕ್ಷಪಾತ ಮತ್ತು ಸೇಡಿನ ಮನೋಭಾವ ಹೊಂದಿದೆ. ರಾಜ್ಯವು ಸಾಂವಿಧಾನಿಕವಾಗಿ ಅರ್ಹವಾಗಿರುವುದನ್ನೇ ಕೇಳುತ್ತಿದೆ. ತನ್ನ ನೀತಿಗಳ ಮೂಲಕ ಕೇಂದ್ರವು ರಾಜ್ಯದ ಪ್ರಗತಿಯನ್ನು ತಡೆಯಲು ಪ್ರಯತ್ನಿಸುತ್ತಿದೆ ಎಂದು ಪಿಣರಾಯಿ ಆರೋಪಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಪಿಣರಾಯಿ ವಿಜಯನ್, ಕೇರಳದಲ್ಲಿ ಶಾ ಅವರ ಕನಸುಗಳು ನನಸಾಗುವುದಿಲ್ಲ ಎಂದರು. 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇರಳದ ತೆರಿಗೆ ಪಾಲು, 14ನೇ ಹಣಕಾಸು ಆಯೋಗದ ಅವಧಿಗಿಂತ ಕಡಿಮೆಯಾಗಿದೆ. 14ನೇ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಕಡಿತಗೊಳಿಸಲು ಮೋದಿ ಸರ್ಕಾರ ಪ್ರಯತ್ನಿಸಿದೆ ಎಂಬ ನೀತಿ ಆಯೋಗದ ಸಿಇಒ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಇನ್ನೂ ಖಂಡಿಸಿಲ್ಲ. ಈ ಬಗ್ಗೆ ಅಮಿತ್ ಶಾ ಸ್ಪಷ್ಟನೆ ನೀಡಬೇಕಿತ್ತು ಎಂದು ಪಿಣರಾಯಿ ಹೇಳಿದರು. ಈ ಭೇಟಿ ಏಕೆ ಮುಖ್ಯ? ಅಮಿತ್ ಶಾ ಅವರ ಈ ಭೇಟಿ ಕೇವಲ ಚುನಾವಣಾ ಭರವಸೆಗಳಿಗೆ ಸೀಮಿತವಾಗದೇ, ಪಕ್ಷದ ಸಂಘಟನಾತ್ಮಕ ಬಲವರ್ಧನೆಗೆ ಹೆಚ್ಚು ಮಹತ್ವ ನೀಡಿದ ಭೇಟಿ ಎಂದು ವಿಶ್ಲೇಷಿಸಲಾಗಿದೆ. ಕಳೆದ ಮೂರು ಚುನಾವಣೆಗಳಿಂದ ಸಂಗ್ರಹಿಸಿದ ದತ್ತಾಂಶವನ್ನು ಆಧರಿಸಿ, ಎನ್ಡಿಎ ನಾಯಕರು ಮತ್ತು ರಾಜ್ಯದ ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದವು ಅಭ್ಯರ್ಥಿಗಳ ಆಯ್ಕೆ, ಕಾರ್ಯತಂತ್ರ ರೂಪಣೆ ಮತ್ತು ಬೂತ್ ಮಟ್ಟದ ಯೋಜನೆಗಳನ್ನು ಬಲಪಡಿಸುವ ನಿರೀಕ್ಷೆ ಇದೆ. ಈ ಮಹತ್ವಾಕಾಂಕ್ಷೆ ಚುನಾವಣಾ ಸ್ಥಾನಗಳಾಗಿ ರೂಪಾಂತರಗೊಳ್ಳುತ್ತದೆಯೇ ಎಂಬುದನ್ನು ಮುಂದಿನ ದಿನಗಳು ತೋರಿಸಬೇಕಿದೆ.
ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಕಲಬುರಗಿ: ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಅಷ್ಟೇ ಅಲ್ಲದೇ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಆಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಯಡ್ರಾಮಿಯಲ್ಲಿ ನಡೆದ ವಿವಿಧ ಶಂಕುಸ್ಥಾಪನೆ, ಕಾಮಗಾರಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದು ಯಡ್ರಾಮಿಯಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದೆ. ನಾವು ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ನಡೆದಿದ್ದು, ನಿಮ್ಮ ಋಣ ತೀರಿಸಲು ಬಂದಿದ್ದೇವೆ. ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಅತಿ ಹೆಚ್ಚು ವಿಧಾನಸಭೆ ಸದಸ್ಯರು ಹಾಗೂ ಲೋಕಸಭೆ ಸದಸ್ಯರನ್ನು ಆಯ್ಕೆ ಮಾಡಿದ್ದೀರಿ. ಆಮೂಲಕ ರಾಜ್ಯದಲ್ಲಿ ನಮಗೆ ದೊಡ್ಡ ಶಕ್ತಿ ನೀಡಿದ್ದು, ನಿಮಗೆ ನಮಿಸುತ್ತೇನೆ. 1 ಸಾವಿರ ಕೋಟಿ ರೂ. ಹಣವನ್ನು ಈ ಒಂದು ಕ್ಷೇತ್ರಕ್ಕೆ ಮಾತ್ರ ನೀಡಲಾಗಿದೆ. ಇತ್ತೀಚೆಗೆ ನಾಲ್ಕೈದು ಬಾರಿ ನಾನು ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂದಿದ್ದೇನೆ. ಈ ಭಾಗದ ಅಭಿವೃದ್ಧಿಗೆ ಸಾವಿರಾರು ಕೋಟಿ ಮೊತ್ತದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಬೀದರ್ ನಲ್ಲಿ 2 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗೆ ಚಾಲನೆ, ಕಲ್ಯಾಣ ಪಥ ಯೋಜನೆಗೆ ಚಾಲನೆ ಸೇರಿದಂತೆ ಅನೇಕ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಪ್ರತಿ ವರ್ಷ 5 ಸಾವಿರ ಕೋಟಿ ರೂ. ಮೊತ್ತವನ್ನು ಈ ಭಾಗದ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದನ್ನು ನೋಡಿದರೆ ನಮ್ಮ ಕ್ಷೇತ್ರ ಕೂಡ ಈ ಭಾಗದಲ್ಲೇ ಇದ್ದಿದ್ದರೆ ನಮಗೂ ಇಷ್ಟು ದೊಡ್ಡ ಮಟ್ಟದ ಅನುದಾನ ಸಿಗುತ್ತಿತ್ತು ಎಂದು ಭಾವಿಸುತ್ತೇನೆ. ನಾನು ಡಿಸಿಎಂ ಆಗಿದ್ದರು ನನ್ನ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಕಾಮಗಾರಿ ಕೈಗೊಳ್ಳಲು ಆಗಿಲ್ಲ. ನೀವು ಅದೃಷ್ಟವಂತರು ಎಂದರು. ಇಂದು ಕೆಪಿಎಸ್ ಶಾಲೆಗಳು, ಪ್ರಜಾಸೌಧಗಳ ಚಾಲನೆಗೆ ನಾವು ಬಂದಿದ್ದೇವೆ. ಈ ಕ್ಷೇತ್ರದ ಜನಪ್ರಿಯ ಶಾಸಕರಾದ ಅಜಯ್ ಸಿಂಗ್ ಅವರು ಎಲ್ಲರ ಮೇಲೆ ಒತ್ತಡ ತಂದು ಸಾವಿರಾರು ಕೋಟಿ ಅನುದಾನ ತಂದು ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಕೆಲಸ ಮಾಡುತ್ತಿದ್ದಾರೆ. ಇಂತಹ ಶಾಸಕರು ಸಿಕ್ಕಿರುವುದು ನಿಮ್ಮ ಭಾಗ್ಯ. ಧರಂ ಸಿಂಗ್ ಅವರಿಗಿಂತ ಒಂದು ಕೈ ಹೆಚ್ಚಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. “ಕಲ್ಯಾಣ ಕರ್ನಾಟಕದಲ್ಲಿ ಕೆಪಿಎಸ್ ಶಾಲೆಗಳ ಪ್ರಾರಂಭ ನೋಡಿದಾಗ, ಒಂದು ಮಾತು ನೆನಪಾಗುತ್ತಿದೆ. ರುಪರಪಹರಿಸದ, ದಾಯಾದಿ ದಕ್ಕಿಸದ, ನೀರಿನಲ್ಲಿ ನೆನೆಯದ, ಅಗ್ನಿಯಲ್ಲಿ ಸುಡದ ಗುಪ್ತ ನಿಧಿ ವಿದ್ಯೆ. ನಮ್ಮ ಸರ್ಕಾರ ಬಂದ ನಂತರ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಗಳು ನನ್ನನ್ನು ಸಿಎಸ್ಆರ್ ಶಾಲೆಗಳ ಸಮಿತಿ ಜವಾಬ್ದಾರಿ ನೀಡಿದ್ದಾರೆ. ರಾಜ್ಯದಲ್ಲಿ 2 ಸಾವಿರ ಕೆಪಿಎಸ್ ಶಾಲೆಗಳನ್ನು ಸಿಎಸ್ಆರ್ ಅನುದಾನದ ಅಡಿ ನಿರ್ಮಿಸಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ಮನಮೋಹನ್ ಸಿಂಗ್ ಅವರ ಸರ್ಕಾರ ಖಾಸಗಿ ಉದ್ಯಮಗಳು ಶೇ.2ರಷ್ಟು ಸಿಎಸ್ಆರ್ ನಿಧಿ ನೀಡಬೇಕು ಎಂದು ತೀರ್ಮಾನ ಮಾಡಿದರು. ಈ ನಿಧಿಯನ್ನು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ತೀರ್ಮಾನವನ್ನು ಬೇರೆ ಯಾವುದೇ ರಾಜ್ಯಗಳ ಮಾಡಿಲ್ಲ. ಅಜಯ್ ಸಿಂಗ್ ಅವರು ನೀರಾವರಿ ವಿಚಾರವಾಗಿ ಮಲ್ಲಾಬಾದ್ ಏತ ನೀರಾವರಿ ಯೋಜನೆ ಆಗಲೇಬೇಕು ಎಂದು ಪಟ್ಟು ಹಿಡಿದು, 360 ಕೋಟಿ ರೂ. ಅನುದಾನವನ್ನು ಪಡೆದಿದ್ದಾರೆ. ಇದಕ್ಕೆ ಕಳೆದ ಡಿ.30ರಂದು ನಮ್ಮ ಸಭೆಯಲ್ಲಿ ಅನುಮೋದನೆ ನೀಡಿದ್ದೇವೆ. ಈ ಯೋಜನೆ ಕಾಮಗಾರಿ ಕೆಲಸ ಪ್ರಾರಂಭವಾಗಿದೆ ಎಂದು ವಿವರಿಸಿದರು. ಇಲ್ಲಿ ಅನೇಕ ಮಹಿಳೆಯರು ಬಂದಿದ್ದೀರಿ. ನಮ್ಮ ಸರ್ಕಾರ ನಿಮಗೆ ಗ್ಯಾರಂಟಿ ಯೋಜನೆ ನೀಡುವ ಮೂಲಕ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಇದೇ ಜಿಲ್ಲೆಯಲ್ಲಿ ನಾವು ಗೃಹಜ್ಯೋತಿ ಯೋಜನೆ ಉದ್ಘಾಟಿಸಿದೆವು. ಎಲ್ಲಾ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಇಂತಹ ಸರ್ಕಾರ, ಶಾಸಕರಿಗೆ ಹಾಗೂ ಇಲ್ಲಿನ ಸಂಸದರಿಗೆ ನಿಮ್ಮ ಆಶೀರ್ವಾದ ಹೀಗೆ ಮುಂದುವರಿಯಲಿ ಎಂದು ಮನವಿ ಮಾಡಿದರು. ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧೀಜಿ ಅವರು ಅಲಂಕರಿಸಿದ್ದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಇದ್ದಾರೆ. ಎಲ್ಲಾ ಸಚಿವರು, ಶಾಸಕರು ಒಟ್ಟಾಗಿ ಸೇರಿ ನಿಮ್ಮ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. ನಾವು ನಿಮ್ಮ ಜೊತೆ ಸದಾ ಇದ್ದೇವೆ. ನಿನ್ನೆ ಅಜಯ್ ಸಿಂಗ್ ಅವರು ಕಾಂಗ್ರೆಸ್ ಪಕ್ಷಕ್ಕೆ 1 ಎಕರೆ ಜಮೀನನ್ನು ದಾನವಾಗಿ ಬರೆದುಕೊಟ್ಟಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಕೆಕೆಆರ್ಡಿಬಿ ಅಧ್ಯಕ್ಷ, ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಭಾಗದಲ್ಲಿ ಡಾ.ನಂಜುಂಡಪ್ಪ ವರದಿ ಪ್ರಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿರುವುದನ್ನು ಅರಿತು ಅಕ್ಷರ ಆವಿಷ್ಕಾರ ಯೋಜನೆ ಜಾರಿಗೆ ತರುವ ಮೂಲಕ ಒತ್ತು ನೀಡಲಾಗಿದೆ. ಛಾಯಾ ದೇವಗಾಂಕರ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಶಿಕ್ಷಣದ ವರದಿ ನೀಡಿದ್ದೇವೆ, ಈಗಾಗಲೇ ನಮ್ಮ ಭಾಗಕ್ಕೆ 300 ಕೆ.ಪಿ.ಎಸ್ ಶಾಲೆಗಳು ಮಂಜೂರು ನೀಡಿದ್ದಾರೆ ಎಂದರು. ಮಲ್ಲಾಬಾದ್ ಏತ ನೀರಾವರಿ ಯೋಜನೆ ಟೆಂಡರ್ ಪ್ರಕ್ರಿಯೆ ಮುಗಿದಿದೆ, ಕಡಕೋಳ ಮಡಿವಾಳಪ್ಪನವರ ತತ್ವಪದ ಅಧ್ಯಯನ ಕೇಂದ್ರ ಸ್ಥಾಪನೆ ಆಗಬೇಕು. ಈ ವರ್ಷ 6 ಸಾವಿರ ಕೋಟಿ ರೂ. ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.
ರಾಯಚೂರು | ಅಭಿವೃದ್ಧಿ ಬಗ್ಗೆ ಪ್ರಶ್ನಿಸಿದರೆ ಶಾಸಕಿ ಬೆಂಬಲಿಗರಿಂದ ಜೀವ ಬೆದರಿಕೆ : ವಿಶ್ವನಾಥ ಬಲ್ಲಿದವ ಆರೋಪ
ರಾಯಚೂರು: ದೇವದುರ್ಗ ಕ್ಷೇತ್ರದಲ್ಲಿ ಸಾರ್ವಜನಿಕ ಸಮಸ್ಯೆಗಳಿಗೆ ಶಾಸಕಿ ಕರೆಮ್ಮ ನಾಯಕ ಅವರು ಸ್ಪಂದಿಸುತ್ತಿಲ್ಲ. ಅಕ್ರಮ ಮರಳು ಸಾಗಾಟ ಮತ್ತು ಅಭಿವೃದ್ಧಿ ಕುಂಠಿತವಾಗಿರುವ ಕುರಿತು ಧ್ವನಿ ಎತ್ತಿದರೆ, ಶಾಸಕಿಯ ಬೆಂಬಲಿಗರು ಜೀವ ಬೆದರಿಕೆ ಕರೆ ಹಾಗೂ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ಭೀಮ್ ಆರ್ಮಿಯ ದೇವದುರ್ಗ ತಾಲೂಕು ಅಧ್ಯಕ್ಷ ವಿಶ್ವನಾಥ ಬಲ್ಲಿದವ ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2023-24ನೇ ಸಾಲಿನ ಅನೇಕ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಪೂರ್ಣಗೊಂಡಿರುವ ಕೆಲವು ಕಾಮಗಾರಿಗಳೂ ಅತ್ಯಂತ ಕಳಪೆ ಮಟ್ಟದ್ದಾಗಿವೆ. ದೇವದುರ್ಗ ತಾಲೂಕಿನ ಹತ್ತಾರು ಗ್ರಾಮಗಳಲ್ಲಿ ಇಂದಿಗೂ ಶೌಚಾಲಯಗಳ ವ್ಯವಸ್ಥೆಯಿಲ್ಲದೆ ಮಹಿಳೆಯರು ಪರದಾಡುವಂತಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಶಾಸಕಿಯ ಬೆಂಬಲಿಗರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿಸಿದರು. ತಮಗೆ ಬರುತ್ತಿರುವ ಜೀವ ಬೆದರಿಕೆ ಕರೆಗಳ ಕುರಿತು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP), ಡಿಜಿಪಿ ಹಾಗೂ ವಿಧಾನಸಭಾ ಅಧ್ಯಕ್ಷರಿಗೆ ಲಿಖಿತ ದೂರು ನೀಡಲಾಗಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಜನರಿಗೆ ನೀಡಿದ ಭರವಸೆಗಳು ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಅವರು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ದೀಪಕ್ ಭಂಡಾರಿ, ಬಾಬಾಖಾನ್, ಎಚ್.ಎಂ. ಬಾಬು ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ | ಜ.30ರಿಂದ ಫೆ.1ರ ವರೆಗೆ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ 2025-26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜ.30,31 ಮತ್ತು ಫೆ.1ರಂದು ಬೆಂಗಳೂರು, ಕಲಬುರಗಿ, ಚಾಮರಾಜನಗರ, ಚಿಕ್ಕಮಗಳೂರು, ದೋಣಿಮಲೈ, ಧಾರವಾಡ, ಬಂಗಾರಪೇಟೆ, ಬಾಗಲಕೋಟೆ, ಬೀದರ್, ಮೂಡುಬಿದರೆ, ಮೈಸೂರು, ಶಿವಮೊಗ್ಗ, ಹಾಸನ ಸೇರಿ ಒಟ್ಟು 13 ಕೇಂದ್ರಗಳಲ್ಲಿ ನಡೆಯಲಿವೆ ಎಂದು ಪರಿಷತ್ನ ವ್ಯವಸ್ಥಾಪಕ ಪಾಶ್ರ್ವನಾಥ ತಿಳಿಸಿದ್ದಾರೆ. ಸೋಮವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಕನ್ನಡಿಗರಲ್ಲಿ ಅದರಲ್ಲಿಯೂ ಯುವಜನರಲ್ಲಿ ಕನ್ನಡ ಭಾಷೆಯ ಕುರಿತು ಆಸಕ್ತಿ ಬೆಳೆಸುವ ದೃಷ್ಟಿಯಿಂದ ಆಚಾರ್ಯ ಬಿ.ಎಂ.ಶ್ರೀಕಂಠಯ್ಯ ಅವರು ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಮಾಡಿದ ವ್ಯವಸ್ಥೆಯೇ ಕನ್ನಡ ಪರೀಕ್ಷೆಗಳಾಗಿದ್ದು, 1940ರಿಂದಲೂ ಪರೀಕ್ಷೆಗಳು ನಿರಂತರವಾಗಿ ನಡೆದು ಕೊಂಡು ಬರುತ್ತಿವೆ. ಪರೀಕ್ಷೆಯ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗುವುದು. ಜ.22ರ ನಂತರವೂ ಪ್ರವೇಶ ಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ವಿಚಾರಿಸಬೇಕು. ಅಥವಾ ದೂ: 080-26612991, 26623584, 26523867 ಹಾಗೂ ಮೊ: 8618296186ಕ್ಕೆ ಸಂಪರ್ಕಿಸಬಹುದು. ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು www.kasapa.in ವೆಬ್ಸೈಟ್ನಲ್ಲಿಯೂ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ದಯಾನಂದ ಬಳೆಗಾರ ಅವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ
ಉಡುಪಿ: ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ ವತಿಯಿಂದ ಯಕ್ಷಗಾನ ರಂಗದಲ್ಲಿ ಸಾಧನೆಗೈದ ಹಿರಿಯ ಕಲಾವಿದರಿಗೆ ಕಳೆದ 28 ವರ್ಷಗಳಿಂದ ನೀಡುತ್ತಿರುವ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿಗೆ ಈ ಬಾರಿ ಹಿರಿಯ ಯಕ್ಷಗಾನ ಕಲಾವಿದ ದಯಾನಂದ ಬಳೆಗಾರ ನಾಗೂರು ಆಯ್ಕೆಯಾಗಿದ್ದಾರೆ. ಇವರು ಐದು ದಶಕಗಳ ಕಾಲ ಇಡಗುಂಜಿ, ಗುಂಡಬಾಳ, ಸಾಲಿಗ್ರಾಮ, ಮಂದಾರ್ತಿ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಕಲಾಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿವೆ. ಮುಂದಿನ ತಿಂಗಳ ಫೆ.8ರಂದು ಯಕ್ಷಗಾನ ಕಲಾಕ್ಷೇತ್ರದ 75ನೇ ವಾರ್ಷಿಕೋತ್ಸವ ಸಮಾರಂಭ ದಲ್ಲಿ ದಯಾನಂದ ಬಳೆಗಾರ ನಾಗೂರು ಇವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಗಡಿಪಾರು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿಗಳು
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರು ಹಿಂದೆ ಸರಿದಿದ್ದಾರೆ. ಪುತ್ತೂರು ಉಪ ವಿಭಾಗಾಧಿಕಾರಿ 2025ರ ಡಿಸೆಂಬರ್ 17ರಂದು ಹೊರಡಿಸಿರುವ ಆದೇಶ ರದ್ದುಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿತ್ತು. ಈ ವೇಳೆ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯಿಂದ ತಾವು ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರಲ್ಲದೆ, ರಿಟ್ ಅರ್ಜಿಯನ್ನು ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದರು. ಪ್ರಕರಣದ ಹಿನ್ನೆಲೆ: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು 2025ರ ನವೆಂಬರ್ 17ರಂದು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಗಡಿಪಾರು ಆದೇಶ ಹೊರಡಿಸುವ ಮುನ್ನ ತಿಮರೋಡಿ ಅವರಿಗೆ ವಿವರಣೆ ಹಾಗೂ ಮನವಿ ಸಲ್ಲಿಸಲು ಸೂಕ್ತ ಅವಕಾಶ ನೀಡದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ, ಗಡಿಪಾರು ಆದೇಶ ರದ್ದುಪಡಿಸಲಾಗುತ್ತಿದೆ ಎಂದು ಆದೇಶಿಸಿತ್ತು. ಜತೆಗೆ, ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿದ್ದ ನ್ಯಾಯಾಲಯ, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ಅಹವಾಲನ್ನೂ ಆಲಿಸಿ, ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿತ್ತು. ಹೈಕೋರ್ಟ್ ನಿರ್ದೇಶನದಂತೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಡಿಸೆಂಬರ್ 17ರಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ತಿಮರೋಡಿ ಮತ್ತೊಮ್ಮೆ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಬ್ಲಿಂಕಿಟ್ ಬಾಯ್ ಆಗಿ ಡೆಲಿವರಿ ಕೆಲಸ ಮಾಡಿದ ಸಂಸದ ರಾಘವ್ ಚಡ್ಡಾ
ನವದೆಹಲಿ: ರಾಜ್ಯಸಭಾ ಸಂಸದ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು ವಿಭಿನ್ನ ಹೆಜ್ಜೆ ಇಟ್ಟಿದ್ದಾರೆ. ಕಾರ್ಪೊರೇಟ್ ಬೋರ್ಡ್ರೂಮ್ಗಳಿಂದ ದೂರ ಸರಿದು, ಅವರು ಸ್ವತಃ ಡೆಲಿವರಿ ರೈಡರ್ ಆಗಿ ಬದಲಾಗಿದ್ದಾರೆ. ಗಿಗ್ ಕಾರ್ಮಿಕರ ಸಮಸ್ಯೆಗಳನ್ನು ದೇಶದ ಗಮನಕ್ಕೆ ತರಲು ಈ ಹೆಜ್ಜೆ ಇಟ್ಟಿದ್ದು, ಈ ಸಂಬಂಧ ಚಡ್ಡಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ
ಕೇರಳದ ವಿರುದ್ದ ಕರ್ನಾಟಕ ಸಿಎಂ ಹೇಳಿಕೆ ವಾಸ್ತವಕ್ಕೆ ವಿರುದ್ಧ: ಕೆ. ಆರ್. ಜಯಾನಂದ
ಮಂಜೇಶ್ವರ: ಮಲಯಾಳಂ ಭಾಷಾ ಮಸೂದೆ ಹೆಸರಲ್ಲಿ ಕರ್ನಾಟಕ ಮುಖ್ಯಮಂತ್ರಿ ಹಾಗೂ ಕರ್ನಾಟಕದ ಸಚಿವರು ಮಸೂದೆಯಲ್ಲೇನಿದೆ ಎಂಬುವುದನ್ನು ಅರಿಯದೆ ಕೇರಳ ಮತ್ತು ಮಲಯಾಳಂ ಬಗ್ಗೆ ವಾಸ್ತವದ ವಿರುದ್ಧ ಹೇಳಿಕೆ ನೀಡಿದ್ದು ಸರಿಯಲ್ಲ. ಈ ಹೇಳಿಕೆಯು ಕೇರಳ ವಿರೋಧಿ ಧೋರಣೆ ತಳೆಯುತ್ತಿದ್ದಾರೆ ಎಂಬುವುದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಸಿಪಿಐಎಂ ಮಂಜೇಶ್ವರ ಏರಿಯಾ ಕಾರ್ಯದರ್ಶಿ ಕೆ ಆರ್ ಜಯಾನಂದ ಹೇಳಿದ್ದಾರೆ. ಮಲಯಾಳಂ ಭಾಷಾ ಮಸೂದೆಯನ್ನು ಕೇರಳ ಸರಕಾರ ವರ್ಷದ ಹಿಂದೆಯೇ ಮಂಡಿಸಿ ಅಂಗೀಕರಿಸಿತ್ತು. ಆದರೆ ಅಂದು ಇದಕ್ಕೆ ರಾಷ್ಟ್ರಪತಿ ಅಂಕಿತ ಹಾಕದೇ ಮರಳಿಸಿದ್ದರು. ಪರಿಷ್ಕೃತ ಮಸೂದೆಯಲ್ಲಿ ಕೇರಳದ ಮತ್ತು ತಮಿಳು ಭಾಷಾ ಅಲ್ಪಸಂಖ್ಯಾತರಿಗೆ ಅವರವರ ಮಾತೃಭಾಷೆಯಲ್ಲಿ ಕಲಿಯುವ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಅವರು ಬಯಸಿದಲ್ಲಿ ಮಲಯಾಳಂ ಕಲಿಕೆಗೂ ಅವಕಾಶವಿದೆ ಎಂದಿದೆ. ಕೇರಳ ಸರಕಾರ ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ಕಸಿಯುತ್ತಿಲ್ಲ, ಬದಲಾಗಿ ಸಂರಕ್ಷಿಸುತ್ತಿದೆ. ಈ ವಾಸ್ತವಗಳನ್ನು ಅರಿಯದೆ ಮಸೂದೆಯನ್ನೇ ಓದದೆ ಕರ್ನಾಟಕ ಮುಖ್ಯಮಂತ್ರಿ ಹಾಗೂ ಸಚಿವರು ಬಹಿರಂಗ ಹೇಳಿಕೆ ನೀಡುತ್ತಿರುವುದು ಅಸಮಂಜಸವಾಗಿದೆ ಎಂದು ಅವರು ಹೇಳಿದರು. ಭಾಷಾ ಮಸೂದೆಯ ಕುರಿತು ಕರ್ನಾಟಕ ಸಿಎಂ ಕೇರಳ ಜೊತೆ ಮಾತುಕತೆ ನಡೆಸಿ ವಿಷಯವೇನೆಂದು ತಿಳಿಯಬಹುದಿತ್ತು. ಆದರೆ ಹಾಗೆ ಮಾಡದೆ ಬಹಿರಂಗವಾಗಿ ಹೇಳಿಕೆ ನೀಡುವುದು ಉಭಯ ರಾಜ್ಯಗಳ ಸಂಬಂಧಕ್ಕೆ ಹಾನಿ ಉಂಟುಮಾಡುವಂತಿದೆ. ಕೇರಳ ಕರ್ನಾಟಕದ ಜೊತೆ ಭಾಷಾ ಸಂಘರ್ಷದ ಸಮರ ಬಯಸುತ್ತಿಲ್ಲ ಮತ್ತು ಸೌಹಾರ್ದ ಸಂಬಂಧವನ್ನೇ ಬಯಸುತ್ತಿದೆ. ವಾಸ್ತವ ಅರಿಯದೆ ಕರ್ನಾಟಕವು ಕೇರಳವನ್ನು ಟೀಕಿಸುವಾಗ ಕೇರಳದ ಕಾಂಗ್ರೆಸ್ಸಿಗರು ಸುಮ್ಮನಿರುವುದು ಸಂಶಯಾಸ್ಪದವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಭಾಷಾ ಮಸೂದೆ 2025 ಸೆಕ್ಷನ್ 6/1 ರ ಪ್ರಕಾರ ಕೇರಳದಲ್ಲಿನ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 10ನೇ ತರಗತಿಯವರೆಗೆ ಮಲಯಾಳಂ ಕಡ್ಡಾಯ ಮೊದಲ ಭಾಷೆಯಾಗಿದೆ. ಸೆಕ್ಷನ್ 6/3 ರಲ್ಲಿ ಮಾತೃಭಾಷೆ ಮಲಯಾಳಂ ಹೊರತಾದ ಯಾವುದೇ ಭಾಷೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಭಾಷೆಯ ಜೊತೆಗೆ ಮಲಯಾಳಂ ಎರಡನೇ ಪಠ್ಯವಾಗಿ ಅಧ್ಯಯನ ಮಾಡುವ ಅವಕಾಶ ನೀಡಲಾಗಿದೆ. ಕೇರಳದಲ್ಲಿ ತಮಿಳು ಮತ್ತು ಕನ್ನಡ ಭಾಷೆ ಅಲ್ಪಸಂಖ್ಯಾತರು ಎಂಬ ಘೋಷಣೆ ಮಾಡಲಾದ ಪ್ರದೇಶದಲ್ಲಿರುವ ರಾಜ್ಯ ಸರಕಾರದ ಕಾರ್ಯಾಲಯ ಇಲಾಖೆಯ ಮುಖ್ಯಸ್ಥರು ರಾಜ್ಯ ಸರ್ಕಾರದ ಎಲ್ಲಾ ಸ್ಥಳೀಯ ಕಚೇರಿಗಳೊಂದಿಗೆ ತಮ್ಮ ಪತ್ರ ವ್ಯವಹಾರವನ್ನು ತಮ್ಮ ತಮ್ಮ ಮಾತೃಭಾಷೆಯಲ್ಲಿ (ಕನ್ನಡ, ತಮಿಳು) ನಡೆಸಬಹುದು. ಉತ್ತರವೂ ಅವರವರ ಭಾಷೆಯಲ್ಲಿ ನೀಡಬೇಕು. ಕೇರಳದ ಮಾತೃಭಾಷೆ ಯಾಗಿರುವ ಮಲಯಾಳಂ ವಿದ್ಯಾರ್ಥಿಗಳು ರಾಷ್ಟ್ರೀಯ ಶಿಕ್ಷಣ ಪಠ್ಯಕ್ರಮದ ಅನುಸಾರವಾಗಿ ರಾಜ್ಯದ ಶಾಲೆಗಳಲ್ಲಿ ಲಭ್ಯವಿರುವ ತಮ್ಮ ಭಾಷೆಗಳಲ್ಲಿ ಅಧ್ಯಯನ ಮುಂದುವರಿಸಲು ಅವಕಾಶವಿದೆ. ಕೇರಳದಲ್ಲಿ ಅಧ್ಯಯನ ಮಾಡುವ ಮಾತೃಭಾಷೆ ಮಲಯಾಳಂ ಅಲ್ಲದವರಿಗೆ 9ನೇ ಹತ್ತನೇ ತರಗತಿ ಹಾಗೂ ಹಿರಿಯ ಪ್ರಾಥಮಿಕ ಮಟ್ಟದ ಪರೀಕ್ಷೆಗಳಲ್ಲಿ ಮಲಯಾಳಂ ಪರೀಕ್ಷೆ ಬರೆಯುವ ಕಡ್ಡಾಯದಿಂದ ವಿನಾಯಿತಿ ಇದೆ ಎಂದು ಅವರು ಹೇಳಿದರು. ಭಾರತದ ಸಂವಿಧಾನದ ಅಡಿಯಲ್ಲಿ ಸತ್ಯ ಪ್ರತಿಜ್ಞೆ ಮಾಡಿ ಅಧಿಕಾರಕ್ಕೆ ಏರಿದ ಹಿರಿಯ ರಾಜಕೀಯ ಮುಖಂಡರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೀಡುವ ಹೇಳಿಕೆಗಳು ಭಾಷೆಯ ಹೆಸರಲ್ಲಿ ಕೇರಳದಲ್ಲಿ ಗಲಭೆ ಎಬ್ಬಿಸುವ ಹುನ್ನಾರವಾಗಿದೆ. ಕರ್ನಾಟಕದ ಗಡಿ ಪ್ರದೇಶವಾದ ದಕ್ಷಿಣ ಕನ್ನಡದಲ್ಲಿರುವ ಮಲಯಾಳಂ ಮಾತೃ ಭಾಷೆಯವರಿಗೆ ಅಲ್ಲಿ ಮಲಯಾಳಂನಲ್ಲಿ ಕಲಿಯುವ ಅವಕಾಶ ನೀಡಲು ಇವರು ತಯಾರಿದ್ದಾರೆಯೇ ಎಂದು ಸ್ಪಷ್ಟ ಪಡಿಸಬೇಕು ಎಂದು ಕೆ ಆರ್ ಜಯಾನಂದ ಹೇಳಿದ್ದಾರೆ.
ಚಿರಂಜೀವಿ, ವೆಂಕಟೇಶ್ ಅಭಿನಯದ ಈ ಹೊಸ ತೆಲುಗು ಚಿತ್ರದಲ್ಲಿ ಕನ್ನಡ ಡೈಲಾಗ್ಸ್ - ಥಿಯೇಟರ್ ನಲ್ಲಿ ಶಿಳ್ಳೆ, ಚಪ್ಪಾಳೆ
ತೆಲುಗಿನ 'ಮನ ಶಂಕರವರಪ್ರಸಾದ್ ಗಾರು' ಚಿತ್ರವು ಜನವರಿ 12ರಂದು ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಚಿರಂಜೀವಿ ಮತ್ತು ವಿಕ್ಟರಿ ವೆಂಕಟೇಶ್ ನಟಿಸಿದ್ದಾರೆ. ಚಿತ್ರದ ಒಂದು ದೃಶ್ಯದಲ್ಲಿ ಕನ್ನಡ ಸಂಭಾಷಣೆಗಳಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಥಿಯೇಟರ್ ನಲ್ಲಿ ಕನ್ನಡ ಪ್ರೇಕ್ಷಕರು ಈ ಸಂಭಾಷಣೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಚಿತ್ರದ ಮೇಲೆ ತೆಲುಗು ಚಿತ್ರರಂಗ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದೆ.
SSLC Exam: ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ 6 ಶಿಕ್ಷಕರ ಬಂಧನ, ₹200-500ಗೆ ಮಾರಾಟ
ಬೆಂಗಳೂರು: ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಸ್ಕ್ಯಾಮ್ನಲ್ಲಿ ಭಾಗಿಯಾಗಿದ್ದರವರ ಪೈಕಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲದೇ ಹೇಗೆಲ್ಲ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ಲಾನ್ ಮಾಡಲಾಗಿತ್ತು. ಎಷ್ಟು ಹಣಕ್ಕೆ ಹಂಚಲಾಗಿದೆ ಎಂಬುದೆಲ್ಲ ಸಂಗತಿಗಳು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿವೆ. ಬೆಂಗಳೂರಿನ ಉತ್ತರ ವಿಭಾಗದ ಸೈಬರ್
ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ಸಾಮಾಜಿಕ ಬಹಿಷ್ಕಾರ ವಿಧಿಸುವ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
ಕರ್ನಾಟಕ ಗೃಹ ಮಂಡಳಿಯಿಂದ ದೇವನಹಳ್ಳಿ ಬಳಿ 593 ಎಕರೆ ಜಮೀನಲ್ಲಿ ಬೃಹತ್ ವಸತಿ ಯೋಜನೆ; 4 ಗ್ರಾಮದಲ್ಲಿ ಭೂಸ್ವಾಧೀನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ 593 ಎಕರೆ ಜಮೀನನ್ನು ಕರ್ನಾಟಕ ಗೃಹ ಮಂಡಳಿ ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಫಾಕ್ಸ್ಕಾನ್ನಂತಹ ಕೈಗಾರಿಕೆಗಳ ಸ್ಥಾಪನೆಯಿಂದ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಮನೆಗಳ ಬೇಡಿಕೆಯನ್ನು ಪೂರೈಸಲು ಈ ವಸತಿ ಯೋಜನೆ ರೂಪಿಸಲಾಗಿದೆ. ಭೂಮಾಲೀಕರು 60 ದಿನಗಳೊಳಗೆ ಆಕ್ಷೇಪಣೆ ಸಲ್ಲಿಸಬಹುದು.
Blinkit ಗಿಗ್ ಕಾರ್ಮಿಕರೊಂದಿಗೆ ದಿನ ಕಳೆದ ರಾಜ್ಯಸಭಾ ಸಂಸದ
ಹೊಸದಿಲ್ಲಿ: ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಒಂದು ದಿನದ ಮಟ್ಟಿಗೆ ಬ್ಲಿಂಕಿಟ್ ವಿತರಣಾ ರೈಡರ್ ಆಗಿ ಕೆಲಸ ಮಾಡುವ ಅನುಭವವನ್ನು ಪಡೆದಿದ್ದಾರೆ. ಈ ಸಂಬಂಧ ಅವರು ತಮ್ಮ ಎಕ್ಸ್ ಖಾತೆಯಲ್ಲಿ ‘ಸ್ಟೇ ಟ್ಯೂನ್ಡ್’ ಎಂಬ ಸಂದೇಶದೊಂದಿಗೆ ಟೀಸರ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ. Away from boardrooms, at the grassroots. I lived their day. Stay tuned! pic.twitter.com/exGBNFGD3T — Raghav Chadha (@raghav_chadha) January 12, 2026 ವೀಡಿಯೊದಲ್ಲಿ ಬ್ಲಿಂಕಿಟ್ ಟಿ–ಶರ್ಟ್ ಹಾಗೂ ಜಾಕೆಟ್ ಧರಿಸಿರುವ ಚಡ್ಡಾ, ವಿತರಣಾ ರೈಡರ್ ಔನಿಂದ ಡೆಲಿವರಿ ಬ್ಯಾಗ್ ಸ್ವೀಕರಿಸುವುದು ಕಾಣುತ್ತದೆ. ಬಳಿಕ ಅವರು ವಿತರಣಾ ಪಾಲುದಾರರೊಂದಿಗೆ ಸ್ಕೂಟರ್ನಲ್ಲಿ ಹಿಂಬದಿ ಸವಾರಿ ಮಾಡುತ್ತಾರೆ. ವಸ್ತುಗಳನ್ನು ಸಂಗ್ರಹಿಸಲು ಅಂಗಡಿಯಲ್ಲಿ ನಿಲ್ಲುವುದು, ನಂತರ ವಿತರಣಾ ಸ್ಥಳದತ್ತ ತೆರಳುವ ದೃಶ್ಯಗಳೂ ವೀಡಿಯೊದಲ್ಲಿವೆ. ಗ್ರಾಹಕರ ಮನೆ ಬಾಗಿಲಿನ ಬಳಿ ರೈಡರ್ ಲಿಫ್ಟ್ನಿಂದ ಹೊರಬಂದು ಕರೆಗಂಟೆ ಒತ್ತುವಾಗ ಚಡ್ಡಾ ಅವರನ್ನು ನಿಕಟವಾಗಿ ಹಿಂಬಾಲಿಸುತ್ತಾರೆ. ವೀಡಿಯೊ ‘ಸ್ಟೇ ಟ್ಯೂನ್ಡ್’ ಎಂಬ ಪದಗಳೊಂದಿಗೆ ಕ್ಲಿಫ್ಹ್ಯಾಂಗರ್ನಲ್ಲಿ ಅಂತ್ಯಗೊಳ್ಳುತ್ತದೆ. ಈ ಪೋಸ್ಟ್ಗೆ ಚಡ್ಡಾ, “ಬೋರ್ಡ್ ರೂಮ್ಗಳಿಂದ ದೂರ, ತಳಮಟ್ಟದಲ್ಲಿ. ನಾನು ಅವರೊಂದಿಗೆ ಒಂದು ದಿನ ಕಳೆದೆ. ಟ್ಯೂನ್ ಆಗಿರಿ,” ಎಂದು ಶೀರ್ಷಿಕೆ ನೀಡಿದ್ದಾರೆ. ಗಿಗ್ ಹಾಗೂ ಡೆಲಿವರಿ ಪ್ಲಾಟ್ಫಾರ್ಮ್ ಕಾರ್ಮಿಕರು ಎದುರಿಸುತ್ತಿರುವ ಕಡಿಮೆ ವೇತನ, ದೀರ್ಘ ಕೆಲಸದ ಅವಧಿ ಮತ್ತು ಸಾಮಾಜಿಕ ಭದ್ರತೆಯ ಕೊರತೆ ಕುರಿತು ಚಡ್ಡಾ ಇತ್ತೀಚೆಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ್ದರು. ಈ ಹಿನ್ನೆಲೆಯಲ್ಲೇ ಅವರ ಈ ಕ್ರಮ, ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಡಿಸೆಂಬರ್ 2025ರಲ್ಲಿ ಬ್ಲಿಂಕಿಟ್ ವಿತರಣಾ ಕಾರ್ಯನಿರ್ವಾಹಕರೊಬ್ಬರು ತಮ್ಮ ಆದಾಯದ ಕುರಿತು ಹಂಚಿಕೊಂಡ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದ ನಂತರ, ಉತ್ತರಾಖಂಡದ ಥಪ್ಲಿಯಾಲ್ ಜಿ ಎಂದು ಗುರುತಿಸಲಾದ ಡೆಲಿವರಿ ಬಾಯ್ ಅವರನ್ನು ಚಡ್ಡಾ ತಮ್ಮ ನಿವಾಸಕ್ಕೆ ಊಟಕ್ಕೆ ಆಹ್ವಾನಿಸಿದ್ದರು.
ಉಡುಪಿ: ಕಾಪು ತಾಲೂಕು ನಡ್ಸಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಲ್ಲಿಕಾ (34) ಎಂಬ ಮಹಿಳೆ ಜನವರಿ 05 ರಂದು ತನ್ನ ತಾಯಿ ಮನೆಯಾದ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋದವರು, ತಾಯಿ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು, ಮರಾಠಿ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ: 9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ. ಸಂಖ್ಯೆ;0820-2525444ಅನ್ನು ಸಂಪರ್ಕಿಸಬಹುದು ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆ ತಿಳಿಸಿದೆ.
ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಇತಿಹಾಸ ನಿರ್ಮಿಸಿದ ದೇವದತ್ ಪಡಿಕ್ಕಲ್; ಸೆಮಿಪೈನಲ್ ಗೇರಿದ ಕರ್ನಾಟಕ!
Karnataka Vs Mumbai VHT Match- ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮುಂಬೈಯನ್ನು ಪರಾಭವಗೊಳಿಸಿದ ಕರ್ನಾಟಕ ಸೆಮಿಫೈನಲ್ ತಲುಪಿದೆ. ಪಂದ್ಯದಲ್ಲಿ ಅಜೇಯ 81 ರನ್ ಗಳಿಸಿದ ಕರ್ನಾಟಕದ ದೇವದತ್ ಪಡಿಕ್ಕಲ್ ಅವರು ಟೂರ್ನಿಯಲ್ಲಿ 2 ಬಾರಿ 700 ರನ್ ಗಳ ಗಡಿ ದಾಟಿದ ಮೊದಲ ಆಟಗಾರರಾಗಿ ಇತಿಹಾಸ ನಿರ್ಮಿಸಿದ್ದಾರೆ. ಮಳೆ ಮತ್ತು ಕಡಿಮೆ ಬೆಳಕಿನಿಂದಾಗಿ ವಿಜೆಡಿ ನಿಯಮದ ಅನ್ವಯ ಕರ್ನಾಟಕವನ್ನು 55 ರನ್ ಗಳಿಂದ ವಿಜಯಿ ಎಂದು ಘೋಷಿಸಲಾಯಿತು.
ಬೆಂಗಳೂರು : ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಮಂಗಳೂರು ಮೂಲದ ಯುವತಿ ಶರ್ಮಿಳಾ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ನಿಗೂಢ ಸಾವು ಎಂದು ಪರಿಗಣಿಸಲಾಗಿದ್ದ ಈ ಪ್ರಕರಣ, ಪೊಲೀಸರ ತನಿಖೆ ವೇಳೆ ಹತ್ಯೆಯೆಂದು ದೃಢಪಟ್ಟಿದೆ. ಶರ್ಮಿಳಾ ಕೊಲೆಯಾಗಿರುವುದು ತನಿಖೆಯಿಂದ ದೃಢಪಟ್ಟಿದ್ದು, ಕರ್ಣಲ್ ಕುರೈ(18) ಎಂಬಾತನೇ ಈ ಕೃತ್ಯ ಎಸಗಿರುವುದಾಗಿ ಬಯಲಾಗಿದೆ. ಸುಬ್ರಮಣ್ಯ ಲೇಔಟ್ನಲ್ಲಿ ಶರ್ಮಿಳಾ ವಾಸವಿದ್ದ ಮನೆಯ ಎದುರು ಮನೆಯಲ್ಲಿ ನೆಲೆಸಿದ್ದ ಕರ್ಣಲ್ ಕುರೈ, ಶರ್ಮಿಳಾರನ್ನು ಪ್ರೀತಿಸುತ್ತಿದ್ದ. ಆದರೆ, ಈ ವಿಷಯ ಶರ್ಮಿಳಾಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಜನವರಿ 3ರಂದು ರಾತ್ರಿ 9 ಗಂಟೆಗೆ ಶರ್ಮಿಳಾರ ಮನೆಗೆ ಕರ್ಣಲ್ ನುಗ್ಗಿದ್ದಾನೆ. ಮನೆಯೊಳಗೆ ಪ್ರವೇಶಿಸುತ್ತಿದ್ದಂತೆ ಆತ ಏಕಾಏಕಿ ಶರ್ಮಿಳಾಳನ್ನು ತಬ್ಬಿಕೊಂಡು ಅನುಚಿತವಾಗಿ ವರ್ತಿಸಲಾರಂಭಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಶರ್ಮಿಳಾ, ಆತನನ್ನು ತಳ್ಳಿ ದೂರ ಸರಿಯಲು ಯತ್ನಿಸಿದ್ದಾರೆ. ಅದಕ್ಕೆ ಕೋಪಗೊಂಡ ಆರೋಪಿ, ಶರ್ಮಿಳಾ ಮೇಲೆ ಹಲ್ಲೆ ನಡೆಸಿ, ಬಳಿಕ ತಲೆದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಯಾರಿಗೂ ಅನುಮಾನ ಬಾರದಂತೆ ಮೃತ ಶರ್ಮಿಳಾ ಮಲಗಿದ್ದ ಬೆಡ್ ರೂಂಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಮೊದಲಿಗೆ ಕೊಲೆ ಎನ್ನುವ ರೀತಿ ಯಾವುದೇ ಅನುಮಾನ ಬಂದಿರಲಿಲ್ಲ. ಆದರೆ, ಶರ್ಮಿಳಾ ಮೃತಪಟ್ಟ ಮೂರು ದಿನಗಳ ಬಳಿಕ ಆಕೆಯ ಮೊಬೈಲ್ ಆನ್ ಆಗಿತ್ತು. ಆ ಮೊಬೈಲ್ನ ಟವರ್ ಲೊಕೇಶನ್ ಪರಿಶೀಲಿಸಿದಾಗ ಶರ್ಮಿಳಾ ವಾಸವಿದ್ದ ಮನೆಯ ಪಕ್ಕದ ಮನೆ ತೋರಿಸಿತ್ತು. ತಕ್ಷಣ ಆರೋಪಿ ಕರ್ಣಲ್ ಕುರೈನನ್ನು ವಶಕ್ಕೆ ಪಡೆದು, ತೀವ್ರ ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ. ಮಂಗಳೂರು ಮೂಲದ ಶರ್ಮಿಳಾ, ಎರಡು ವರ್ಷಗಳಿಂದ ರಾಮಮೂರ್ತಿ ನಗರದ ಸುಬ್ರಮಣ್ಯ ಲೇಔಟ್ನಲ್ಲಿ ವಾಸವಾಗಿದ್ದರು. ಅವರು ನಗರದ ಖಾಸಗಿ ಕಂಪೆನಿಯೊಂದರಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆರಂಭದಲ್ಲಿ, ಮನೆಗೆ ಬೆಂಕಿ ಬಿದ್ದಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿತ್ತು.
ಬಳ್ಳಾರಿ | ಜ.12ರಿಂದ ವಾಣಿಜ್ಯ ಪರೀಕ್ಷೆ; ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಆದೇಶ
ಬಳ್ಳಾರಿ, ಜ.12 : ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜನವರಿ 12ರಿಂದ 20ರವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳ ಸುಸೂತ್ರ ಹಾಗೂ ಪಾರದರ್ಶಕ ನಿರ್ವಹಣೆಯ ದೃಷ್ಟಿಯಿಂದ, ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಸೆಂಟರ್ಗಳು ಹಾಗೂ ಇಂಟರ್ನೆಟ್ ಸೆಂಟರ್ಗಳನ್ನು ಪರೀಕ್ಷಾ ಅವಧಿಯಲ್ಲಿ ಕಾರ್ಯನಿರ್ವಹಿಸದಂತೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ, ನಿಷೇಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ ಈ ಆದೇಶವು ಪರೀಕ್ಷಾ ಮೇಲ್ವಿಚಾರಣಾ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಬೂತ್ ಮಟ್ಟದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ: ಸಂಸದ ಜಿ.ಕುಮಾರ ನಾಯಕ ವಿರುದ್ಧ ರಂಗಪ್ಪ ಗೋಸಲ್ ಆರೋಪ
ದೇವದುರ್ಗ : ಲೋಕಸಭಾ ಚುನಾವಣೆಯಲ್ಲಿ ಬೂತ್ ಮಟ್ಟದಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಿದ ಕಾರ್ಯಕರ್ತರನ್ನು ಸಂಸದ ಜಿ. ಕುಮಾರ ನಾಯಕ ಅವರು ಕಡೆಗಣಿಸುತ್ತಿರುವ ನಡೆ ಬಹುತೇಕರಲ್ಲಿ ಬೇಸರ ಮೂಡಿಸಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ರಂಗಪ್ಪ ಗೋಸಲ್ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿರುವ ಕೆಲ ದಲ್ಲಾಳಿಗಳ ಮಾತು ಕೇಳಿಕೊಂಡು ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ ಮುಖಂಡರನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು. ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಲ್ಲಿಯೇ ಎಸ್ಸಿ ಹಾಗೂ ಎಸ್ಟಿ ಸಮುದಾಯದ ಮುಖಂಡರಿಗೆ ಅನ್ಯಾಯವಾಗುತ್ತಿದ್ದು, ಲಿಂಗಾಯತ ಸಮುದಾಯದವರಿಗೆ ಮಾತ್ರ ಹುದ್ದೆಗಳು ನೀಡಲಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಟಿಎಪಿಎಂಸಿ, ಕೃಷಿ ಮಾರುಕಟ್ಟೆ, ಪಿಎಲ್ಡಿ ಬ್ಯಾಂಕ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಮಣೆ ಹಾಕಿ, ಹಿಂದುಳಿದ ಸಮುದಾಯದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಹೇಳಿದರು. ಲೋಕಸಭಾ ಚುನಾವಣೆಗೂ ಮೊದಲು ಹಿಂದುಳಿದ ವರ್ಗದ ಗಂಗಪಯ್ಯ ಪೂಜಾರಿ ಮನಸಗಲ್ ಅವರಿಗೆ ಎಪಿಎಂಸಿ ಅಧ್ಯಕ್ಷ ಸ್ಥಾನ ಲಭಿಸಿತ್ತು. ಆದರೆ ಕೆಲ ದಲ್ಲಾಳಿ ಮುಖಂಡರು ಜಿಲ್ಲಾಧ್ಯಕ್ಷರಿಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದರಿಂದ ಸಿಕ್ಕ ಅವಕಾಶ ಕೈತಪ್ಪಿತು ಎಂದು ಹೇಳಿದರು. ಪಕ್ಷ ಸಂಘಟನೆಗೆ ಒತ್ತು ನೀಡದೆ, ಅಧಿಕಾರಕ್ಕಾಗಿ ಇನ್ನೊಬ್ಬರ ಬಗ್ಗೆ ಸುಳ್ಳು ಹೇಳುವುದೇ ಕೆಲವರ ಕಾಯಕವಾಗಿದೆ ಎಂದು ಆರೋಪಿಸಿದರು. ತಾಲೂಕಿನ ಮುಖಂಡರ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹಾಗೂ ಜಿಲ್ಲಾಧ್ಯಕ್ಷರ ಅನುಮತಿ ಪಡೆಯದೇ ಪದಾಧಿಕಾರಿಗಳ ಆಯ್ಕೆ ನಡೆಯುತ್ತಿದೆ. ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಜಿಲ್ಲಾಧ್ಯಕ್ಷರ ಅನುಮತಿ ಇಲ್ಲದೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಾಡಿರುವುದನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಜಿಲ್ಲಾ ಉಪಾಧ್ಯಕ್ಷ ಎಕ್ಬಲ್ ಹೌದೊಡ್ಡಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡದೇ ಇರುವುದರಿಂದ ಮುಂಬರುವ ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದರು. ಸಂಸದ ಜಿ. ಕುಮಾರ ನಾಯಕ ಅವರು ಗೆದ್ದ ಬಳಿಕ ತಾಲೂಕಿನಲ್ಲಿ ಒಂದೇ ಒಂದು ಕಾರ್ಯಕರ್ತರ ಸಭೆಯನ್ನೂ ನಡೆಸಿಲ್ಲ ಎಂದು ಟೀಕಿಸಿದರು. ರಾಜವಾಸುದೇವ ನಾಯಕ ಮತ್ತು ಮರಿಲಿಂಗಪ್ಪ ವಕೀಲ ಮಾತನಾಡಿದರು. ಈ ಸಂದರ್ಭದಲ್ಲಿ ಶಿವರಾಜ ವಕೀಲ, ಡಿಸಿಸಿ ಜಿಲ್ಲಾ ಸದಸ್ಯ ಸುಲ್ತಾನಬಾಬು ಕೊಪ್ಪರು, ಮಾನಪ್ಪ ಮೇಸ್ತ್ರೀ, ಚಂದಪಾಷ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೈಕೋರ್ಟ್ ಕಟ್ಟಡಕ್ಕೆ ಭೂಮಿ ಮಂಜೂರಾತಿಗೆ ಕೋರಿ ಪಿಐಎಲ್; ರಾಜ್ಯ ಸರಕಾರ, ರಿಜಿಸ್ಟ್ರಾರ್ ಜನರಲ್ಗೆ ನೋಟಿಸ್
ಬೆಂಗಳೂರು : ರಾಜ್ಯ ಹೈಕೋರ್ಟ್ನ ಹೊಸ ಕಟ್ಟಡ ಸಂಕೀರ್ಣ ನಿರ್ಮಾಣಕ್ಕಾಗಿ ನಗರದ ಕೇಂದ್ರ ಭಾಗದಲ್ಲಿ 30 ಎಕರೆ ಅಥವಾ ಅದಕ್ಕಿಂತ ಅಧಿಕ ಭೂಮಿ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ರಿಜಿಸ್ಟ್ರಾರ್ ಜನರಲ್ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರಿನ ಶರಣ್ ದೇಸಾಯಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಿತು. ಇದಕ್ಕೂ ಮುನ್ನ ಖುದ್ದು ವಾದ ಮಂಡಿಸಿದ ಅರ್ಜಿದಾರರು, ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ನ ನೂತನ ಸಂಕೀರ್ಣ ನಿರ್ಮಾಣ ಮಾಡಲು ನಗರದ ಸೆಂಟ್ರಲ್ ಬಿಸಿನೆಸ್ ಜಿಲ್ಲೆಯಲ್ಲಿ(ಸಿಬಿಡಿ) ಭೂಮಿ ಮಂಜೂರು ಮಾಡುವ ಬಗ್ಗೆ ಹೇಳಿಕೆ ನೀಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಕಬ್ಬನ್ ಪಾರ್ಕ್ನಲ್ಲಿ 2025ರ ಅಕ್ಟೋಬರ್ 26ರಂದು ನಡೆದ 'ವಾಕ್ ವಿತ್ ಬೆಂಗಳೂರು' ನಾಗರಿಕ ಸಂಪರ್ಕ ಕಾರ್ಯಕ್ರಮದ ಸಂದರ್ಭದಲ್ಲಿ ಶಿವಕುಮಾರ್ ಅವರು ಪ್ರಸ್ತುತ ಹೈಕೋರ್ಟ್ ಆವರಣದಲ್ಲಿ ಸ್ಥಳಾವಕಾಶದ ಕೊರತೆ ಇದೆ. ಆದ್ದರಿಂದ, ಕರ್ನಾಟಕ ಹೈಕೋರ್ಟನ್ನು ಹೊಸ ಮತ್ತು ದೊಡ್ಡ ಸ್ಥಳಕ್ಕೆ ಸ್ಥಳಾಂತರಿಸುವ ಸಾಧ್ಯತೆಯನ್ನು ಸರಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದರೆಂದು ವರದಿಯಾಗಿತ್ತು.
ಬಳ್ಳಾರಿ | ದೇಶದ ಪ್ರಗತಿ ಯುವ ಸಮುದಾಯದ ಕೊಡುಗೆಯ ಮೇಲೆ ಅವಲಂಬಿತ : ಜಯಚಂದ್ರ ರೆಡ್ಡಿ
ಬಳ್ಳಾರಿ, ಜ.12: ಯಾವುದೇ ಒಂದು ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಯು ಅಲ್ಲಿನ ಯುವ ಸಮುದಾಯದ ಕೊಡುಗೆಯನ್ನು ಅವಲಂಬಿಸಿರುತ್ತದೆ ಎಂದು ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಜಯಚಂದ್ರ ರೆಡ್ಡಿ ಅವರು ಅಭಿಪ್ರಾಯಪಟ್ಟರು. ಭಾರತ ಸರ್ಕಾರದ 'ಮೇರಾ ಯುವ ಭಾರತ' ಹಾಗೂ ಐಡಿಪಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ಕಾಲೇಜು ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 'ಸ್ವಾಮಿ ವಿವೇಕಾನಂದರ 164ನೇ ಜಯಂತಿ' ಹಾಗೂ 'ರಾಷ್ಟ್ರೀಯ ಯುವ ದಿನ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗಲು ಯುವಶಕ್ತಿ ಬಹಳ ಮುಖ್ಯ. ಯುವ ಸಮೂಹದ ಶಕ್ತಿ ಮತ್ತು ಸಾಮರ್ಥ್ಯದ ಬಗ್ಗೆ ಇಡೀ ವಿಶ್ವಕ್ಕೆ ಸಾರಿ ಹೇಳಿದವರಲ್ಲಿ ಸ್ವಾಮಿ ವಿವೇಕಾನಂದರು ಮೊದಲಿಗರು. ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎಂದು ಅವರು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ತಿಪ್ಪಾರೆಡ್ಡಿ ಮಾತನಾಡಿ, ದೇಶದ ಉನ್ನತಿ ಯುವಕರಿಂದ ಮಾತ್ರ ಸಾಧ್ಯ ಎಂದು ನಂಬಿದ್ದ ವಿವೇಕಾನಂದರು, ತಮ್ಮ ಚಿಂತನೆಗಳ ಮೂಲಕ ಯುವಕರನ್ನು ಒಗ್ಗೂಡಿಸಲು ಶ್ರಮಿಸಿದರು. ಯುವಕರ ಪಾಲಿನ ಸ್ಫೂರ್ತಿಯ ಚಿಲುಮೆಯಾಗಿರುವ ಅವರ ಜನ್ಮದಿನದ ಸವಿ ನೆನಪಿಗಾಗಿ ಪ್ರತಿವರ್ಷ ಜನವರಿ 12 ರಂದು 'ರಾಷ್ಟ್ರೀಯ ಯುವ ದಿನ'ವನ್ನು ಆಚರಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಐಡಿಪಿಎಸ್ ಕಾಲೇಜಿನ ಶಿವಪ್ರಸಾದ್, ಎ.ಜಿ.ಎಂ ವೆಂಕಟಕೃಷ್ಣ ಸೇರಿದಂತೆ ಕಾಲೇಜಿನ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಈ ಹೆದ್ದಾರಿಗೆ ಬೆಂಗಳೂರು-ಅಮರಾವತಿ ಎಕ್ಸ್ಪ್ರೆಸ್ ಎಂದು ಹೆಸರಿಡಲು ಆಂಧ್ರ ಸಿಎಂ ಮನವಿ
ಬೆಂಗಳೂರು-ಕಡಪ-ವಿಜಯವಾಡ ಎಕನಾಮಿಕ್ ಕಾರಿಡಾರ್ ಹೆದ್ದಾರಿ ಯೋಜನೆಯು ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ನಾಲ್ಕು ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. ಈ ಸಾಧನೆಯ ಹಿನ್ನೆಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ವರ್ಚುವಲ್ ಮೂಲಕ ಭಾಗವಹಿಸಿ ಯೋಜನೆಗೆ ಕೈಜೋಡಿಸಿದ ಎಲ್ಲ ಅಧಿಕಾರಿಗಳು, ಇಂಜಿನಿಯರ್ಗಳು
ಕೇಂದ್ರ ಸರಕಾರದಿಂದ ನರೇಗಾ ಕಾಯ್ದೆ ವಿರೂಪಗೊಳಿಸುವ ಹುನ್ನಾರ : ಸಂಸದ ಜಿ.ಕುಮಾರ ನಾಯಕ
ರಾಯಚೂರು : ನರೇಗಾ ಕಾಯ್ದೆಯನ್ನು ವಿರೂಪಗೊಳಿಸಿರುವ ಕೇಂದ್ರ ಸರ್ಕಾರ ಕೂಲಿ ಕಾರ್ಮಿಕರ ದುಡಿಯುವ ಹಕ್ಕನ್ನು ಕಸಿದುಕೊಂಡಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಸಂಸದ ಜಿ.ಕುಮಾರನಾಯಕ ದೂರಿದರು. ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರು ದಿನ ಉದ್ಯೋಗ ಖಾತ್ರಿ ಯೋಜನೆಯನ್ನು 125 ದಿನಗಳಿಗೆ ಹೆಚ್ಚಿಸುವುದಾಗಿ ಸಮರ್ಥಿಸಿಕೊಳ್ಳುವ ಕೇಂದ್ರ ಸರ್ಕಾರ ವರ್ಷವಿಡಿ ಉದ್ಯೋಗ ದೊರೆಯುವುದನ್ನು ತಡೆದಿದೆ. ಅಲ್ಲದೇ ಬೇಡಿಕೆ ಆಧಾರದ ಯೋಜನೆಯನ್ನು ಅವಶ್ಯಕತೆ ಆಧಾರದ ಮೇಲೆ ರೂಪಿತಗೊಳಿಸಿರುವುದು ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಇಲ್ಲದಂತೆ ಮಾಡಿದೆ ಎಂದರು. ಸಂಸದೀಯ ಮಂಡಳಿಯ ಶಿಫಾರಸ್ಸುಗಳನ್ನು ಕಡೆಗಣಿಸಿ ಹೊಸ ಮಸೂದೆ ರೂಪಿಸಿ ಉದ್ಯೋಗ ಖಾತ್ರಿ ಯೋಜನೆಗೆ ಇದ್ದ ಘನತೆಗೆ ಕುಂದು ತರುವ ಪ್ರಯತ್ನವಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು ಕಾಯ್ದೆಯನ್ನು ರೂಪಿಸಿರುವ ಕ್ರಾಂತಿಕಾರಿ ಹೆಜ್ಜೆಯನ್ನು ಎನ್ಡಿಎ ಸರ್ಕಾರ ದಿಕ್ಕುತಪ್ಪಿಸುವ ಕಾರ್ಪೋರೇಟ್ ವಲಯಕ್ಕೆ ಪೂರಕವಾಗುವ ಚಿಂತನೆ ಹೊಂದಿದೆ. ರಾಮನ ಕುರಿತು ತುಟಿ ಪ್ರೀತಿ ತೋರಿಸುವ ಸರ್ಕಾರ ಜನರ ಹೃದಯದಲ್ಲಿರುವ ರಾಮನನ್ನು ಕಡೆಗಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮುಹಮ್ಮದ್ ಶಾಲಂ, ಪಾಲಿಕೆಯ ಸದಸ್ಯ ಜಯಣ್ಣ, ಕಾಂಗ್ರೆಸ್ ಮುಖಂಡ ರವಿಬೋಸರಾಜ, ಕೆ.ಶಾಂತಪ್ಪ, ಜಯವಂತರಾವ ಪತಂಗೆ, ಎನ್.ಶ್ರೀನಿವಾಸರೆಡ್ಡಿ, ಜಿ.ಶಿವಮೂರ್ತಿ, ಅಮರೇಗೌಡ ಹಂಚಿನಾಳ, ಯುವ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ ಗಟ್ಟುಬಿಚ್ಚಾಲಿ ಸೇರಿದಂತೆ ಅನೇಕರಿದ್ದರು.
ಜನಾರ್ದನ ರೆಡ್ಡಿ ಜತೆ ಬಿಜೆಪಿ ಕೈಜೋಡಿಸಿದ್ದೇಕೆ? : ಎಂ.ಬಿ.ಪಾಟೀಲ್
ಬೆಂಗಳೂರು : ‘ಅಕ್ರಮ ಗಣಿಗಾರಿಕೆಯ ಮೂಲಕ ಕುಖ್ಯಾತಿ ಗಳಿಸಿದಂತಹ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಹೊರ ಹಾಕಿತ್ತು. ಇದೀಗ ಅವರ ಜೊತೆಯಲ್ಲೆ ಕೈಜೋಡಿಸಿದ್ದು ಏಕೆ?. ರೆಡ್ಡಿ ಬಳಿ ಇರುವ ದುಡ್ಡಿಗಾಗಿಯೇ? ಅಥವಾ ಅಕ್ರಮ ಗಣಿಗಾರಿಕೆಯ ಪಾಲುದಾರಿಕೆಗಾಗಿಯೇ?’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಮತ್ತವರ ಬೆಂಬಲಿಗರು ಆಕ್ರಮ ಗಣಿಗಾರಿಕೆ ಮಾಡಿದ್ದಕ್ಕಾಗಿ ಬಿಜೆಪಿ ಅವರನ್ನು ಹೊರ ಹಾಕಿತ್ತು. ಈಗ ರೆಡ್ಡಿಯ ಬೆಂಬಲಕ್ಕೆ ಬಿಜೆಪಿ ನಾಯಕರು ನಿಲ್ಲುತ್ತಿದ್ದು, ಇದರ ಗೂಡಾರ್ಥ ಜನರಿಗೆ ಅರ್ಥವಾಗುತ್ತದೆ ಎಂದು ಟೀಕಿಸಿದರು. ಈ ಹಿಂದೆ ಅಕ್ರಮ ಗಣಿಗಾರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಬೆಂಗಳೂರಿನಿಂದ ಬಳ್ಳಾರಿಯ ವರೆಗೂ ಪಾದಯಾತ್ರೆ ಮಾಡಿತ್ತು. ಈಗ ಬಿಜೆಪಿ ಯಾವ ಕಾರಣಕ್ಕೂ ಪಾದಯಾತ್ರೆ ಮಾಡುತ್ತಿದೆ. ಬಳ್ಳಾರಿ ಬ್ಯಾನರ್ ಗಲಾಟೆ ಇಬ್ಬರು ವ್ಯಕ್ತಿಗಳ ನಡುವಿನ ಜಗಳ. ಅದಕ್ಕಾಗಿ ಪಾದಯಾತ್ರೆ ಮಾಡುವುದು ಉಚಿತವೇ? ಎಂದು ಎಂ.ಬಿ.ಪಾಟೀಲ್ ಕೇಳಿದರು. ಜನಾರ್ದನ ರೆಡ್ಡಿ ಸಚಿವರಾಗಿದ್ದಾಗ ತಮ ದುರಾಸೆಗಾಗಿ ‘ರಿಪಬ್ಲಿಕ್ ಆಫ್ ಬಳ್ಳಾರಿ’ ಮಾಡಿಕೊಂಡಿದ್ದರು. ರಾಜ್ಯದ ಗಡಿಯನ್ನೇ ಧ್ವಂಸ ಮಾಡಿ ಅಕ್ರಮ ಗಣಿಗಾರಿಕೆ ಮಾಡಿದ್ದರು. ಗಣಿಗಾರಿಕೆ ನಡೆಸುವವರಿಂದ ಪಾಲು ಪಡೆಯುತ್ತಿದ್ದರು. ಅರಣ್ಯದಲ್ಲೂ ಗಣಿಗಾರಿಕೆ ಮಾಡಿದ ಅರೋಪಕ್ಕೆ ಗುರಿಯಾಗಿದ್ದರು ಎಂದು ಅವರು ವಾಗ್ದಾಳಿ ನಡೆಸಿದರು. ಉದ್ಯೋಗ ಖಾತರಿ ಯೋಜನೆ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಬಹಿರಂಗ ಚರ್ಚೆಗೆ ಬರಲಿ. ಯಾವುದಾದರೂ ಸಭಾಂಗಣದಲ್ಲಿ ಚರ್ಚೆ ನಡೆಯಲಿ. ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲು ಸಿದ್ದರಿದ್ದಾರೆಯೇ? ಎಂದು ಪಾಟೀಲ್ ಸವಾಲು ಹಾಕಿದರು.
ಬಳ್ಳಾರಿ | ವಿವೇಕಾನಂದರು ಇಡೀ ವಿಶ್ವಕ್ಕೆ ಮಾದರಿ: ಪ್ರೊ.ರಾಬರ್ಟ್ ಜೋಸ್
164ನೇ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ
Mangaluru | ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಸಿಐಟಿಯು ಅಗ್ರಹ
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಬಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ನಡೆದ ಜನಾಂಗೀಯ ಹಲ್ಲೆಯನ್ನು ಸಿಐಟಿಯು ದ.ಕ ಜಿಲ್ಲಾ ಸಮಿತಿ ಖಂಡಿಸಿದೆ. ಸಂಘ ಪರಿವಾರ ದೇಶದಲ್ಲಿ ಹಬ್ಬಿಸುವ ಸುಳ್ಳು ಸುದ್ದಿಗಳನ್ನು ಸಂಘಿ ಮನಸ್ಥಿತಿಯ ತಳಮಟ್ಟದ ಕಾರ್ಯಕರ್ತರು ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೆ ಎಂಬುದಕ್ಕೆ ಕೂಳೂರಿನ ಈ ಘಟನೆ ಸಾಕ್ಷಿಯಾಗಿದೆ. ತಕ್ಷಣ ಪೊಲೀಸ್ ಇಲಾಖೆಯು ಜನಾಂಗೀಯ ದಾಳಿ ನಡೆಸಿದ ಹಲ್ಲೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಸರಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಲಸೆ ಕಾರ್ಮಿಕರನ್ನು ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಒತ್ತಾಯಿಸಿದ್ದಾರೆ.
ಟೆಕ್ಕಿಗಳಿಗೆ ಶಾಕ್ ನೀಡಿದ ಟಾಟಾ ಕಂಪನಿ, ಮೂರೇ ತಿಂಗಳಲ್ಲಿ 11,151 ಉದ್ಯೋಗಿಗಳಿಗೆ ಗೇಟ್ಪಾಸ್!
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಡಿಸೆಂಬರ್ ತ್ರೈಮಾಸಿಕದಲ್ಲಿ 11,151 ಉದ್ಯೋಗಿಗಳನ್ನು ಕಡಿತಗೊಳಿಸಿದೆ. ತಂತ್ರಜ್ಞಾನ ಬದಲಾವಣೆ ಮತ್ತು ವೆಚ್ಚ ಕಡಿತದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದಾಗ್ಯೂ, ಇದೇ ವೇಳೆ ಎಚ್ಸಿಎಲ್ ಟೆಕ್ 261 ಹೊಸ ಉದ್ಯೋಗಿಗಳನ್ನು ಸೇರಿಸಿಕೊಂಡಿದೆ.
ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ಬುಕ್ ಮಾಡಲು ಅವಕಾಶ
ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುವವರು ಮುಂಗಡ ಬಸ್ ಟಿಕೆಟ್ಗಳನ್ನು ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಬುಕ್ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. ಕೆಎಸ್ಸಾರ್ಟಿಸಿ ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ. ಕೆಎಸ್ಆರ್ಟಿಸಿ ವೆಬ್ಸೈಟ್, ಮೊಬೈಲ್ ಆಪ್, ಇಲಾಖಾ ಕೌಂಟರ್ಗಳು ಹಾಗೂ ಫ್ರಾಂಚೈಸಿ ಕೌಂಟರ್ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಮುಂಗಡ ಬಸ್ ಟಿಕೆಟ್ಗಳನ್ನು ಬುಕ್ ಮಾಡಬಹುದು. ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶನಾಲಯವು ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಕಾರ್ಯಗತಗೊಳಿಸಲಾಗಿದೆ. ಈ ಸೇವೆ ಬೆಂಗಳೂರು ನಗರದಲ್ಲಿರುವ 161 ಬೆಂಗಳೂರು-ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ 1021 ಕರ್ನಾಟಕ-ಒನ್ ಕೇಂದ್ರಗಳಲ್ಲಿ ಲಭ್ಯವಿದೆ. ಟಿಕೆಟ್ ಕಾಯ್ದಿರಿಸುವಿಕೆ ಅಥವಾ ಯಾವುದೇ ಸಹಾಯಕ್ಕಾಗಿ, ಪ್ರಯಾಣಿಕರು ಕೆಎಸ್ಸಾರ್ಟಿಸಿ ಕರೆ ಕೇಂದ್ರವನ್ನು 080-2625 2625 ಅಥವಾ 77609 90034, 77609 90035 ಅಥವಾ ಬೆಂಗಳೂರು-ಒನ್ ಕರೆ ಕೇಂದ್ರ 080-4920 3888 ಸಂಪರ್ಕಿಸಬಹುದು ಎಂದು ಹೇಳಿದೆ.
ಹೊಸದಿಲ್ಲಿ, ಜ.12: ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಅವರ ‘ರಸ್ಮಲೈ’ ಟೀಕೆಗೆ ಪ್ರತಿಕ್ರಿಯಿಸಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕೆ. ಅಣ್ಣಾಮಲೈ, “ಮುಂಬೈಗೆ ಬರುತ್ತೇನೆ; ನನ್ನ ಕಾಲುಗಳನ್ನು ಕತ್ತರಿಸಲು ಪ್ರಯತ್ನಿಸಿ” ಎಂದು ಸವಾಲು ಹಾಕಿದ್ದಾರೆ. ಚೆನ್ನೈನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈಗೆ ಬಂದರೆ ಕಾಲು ಕತ್ತರಿಸುವುದಾಗಿ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. “ನನ್ನನ್ನು ಬೆದರಿಸಲು ಆದಿತ್ಯ ಠಾಕ್ರೆ ಮತ್ತು ರಾಜ್ ಠಾಕ್ರೆ ಯಾರು? ನಾನು ರೈತನ ಮಗನಾಗಿರುವುದಕ್ಕೆ ಹೆಮ್ಮೆಪಡುತ್ತೇನೆ. ಇಂತಹ ಬೆದರಿಕೆಗಳಿಗೆ ನಾನು ಹೆದರಿದ್ದರೆ ಹಳ್ಳಿಯಲ್ಲಿಯೇ ಉಳಿದಿರುತ್ತಿದ್ದೆ. ನಾನು ಮುಂಬೈಗೆ ಬರುತ್ತೇನೆ,” ಎಂದು ಅಣ್ಣಾಮಲೈ ಹೇಳಿದರು. “ಕಾಮರಾಜ್ ಭಾರತದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದರೆ ಅವರು ತಮಿಳರಲ್ಲವೇ? ಮುಂಬೈ ವಿಶ್ವದರ್ಜೆಯ ನಗರ ಎಂದರೆ ಮಹಾರಾಷ್ಟ್ರೀಯರು ಅದನ್ನು ನಿರ್ಮಿಸಲಿಲ್ಲವೇ? ಇಂತಹ ಮಾತುಗಳು ಅಜ್ಞಾನವನ್ನು ತೋರಿಸುತ್ತವೆ,” ಎಂದರು. ಇದಕ್ಕೂ ಒಂದು ದಿನ ಮೊದಲು ಮುಂಬೈನಲ್ಲಿ ನಡೆದ ಯುಬಿಟಿ–ಎಂಎನ್ಎಸ್ ಜಂಟಿ ರ್ಯಾಲಿಯಲ್ಲಿ ರಾಜ್ ಠಾಕ್ರೆ, “ತಮಿಳುನಾಡಿನಿಂದ ಒಬ್ಬ ‘ರಸ್ಮಲೈ’ ಬಂದಿದ್ದಾನೆ. ಇಲ್ಲಿಗೂ ನಿಮಗೂ ಏನು ಸಂಬಂಧ?” ಎಂದು ವ್ಯಂಗ್ಯವಾಡಿದ್ದರು. ಇದೇ ವೇಳೆ 1960–70ರ ದಶಕಗಳಲ್ಲಿ ತಮ್ಮ ಚಿಕ್ಕಪ್ಪ ಬಾಲ್ ಠಾಕ್ರೆ ನೀಡಿದ್ದ ‘ಹಟಾವೊ ಲುಂಗಿ, ಬಜಾವೊ ಪುಂಗಿ’ ಘೋಷಣೆಯನ್ನು ಅವರು ಉಲ್ಲೇಖಿಸಿದ್ದರು. ಇದಲ್ಲದೆ, ಬಿಹಾರ ಮತ್ತು ಉತ್ತರ ಪ್ರದೇಶದಿಂದ ಬಂದವರು ಹಿಂದಿಯನ್ನು ಹೇರಲು ಯತ್ನಿಸಿದರೆ “ಒದೆಯುತ್ತೇನೆ” ಎಂದು ರಾಜ್ ಠಾಕ್ರೆ ಹೇಳಿರುವುದಾಗಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ. “ಭಾಷೆಯನ್ನು ದ್ವೇಷಿಸುವುದಿಲ್ಲ; ಆದರೆ ಹೇರಿಕೆ ಸಹಿಸುವುದಿಲ್ಲ. ಭೂಮಿ ಮತ್ತು ಭಾಷೆ ಹೋದರೆ ಎಲ್ಲವೂ ಮುಗಿಯುತ್ತದೆ,” ಎಂದು ಅವರು ಹೇಳಿದ್ದಾರೆ. ಈ ರ್ಯಾಲಿಯಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ, ಬಿಜೆಪಿಯ ‘ನಕಲಿ ಹಿಂದುತ್ವ’ ವಿರುದ್ಧ ಜಂಟಿ ದಾಳಿ ನಡೆಸಿದರು. ಮುಂಬೈ ಎದುರಿಸುತ್ತಿರುವ ‘ಅಪಾಯ’ವೇ ತಾವು ರಾಜಕೀಯವಾಗಿ ಸಮೀಪವಾಗಿ ಕಾರಣ ಎಂದು ಅವರು ಹೇಳಿದರು. ಮರಾಠಿ ಮನುಷ್ಯ, ಹಿಂದೂಗಳು ಹಾಗೂ ಮಹಾರಾಷ್ಟ್ರದ ಹಿತಾಸಕ್ತಿಗಾಗಿ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟಿದ್ದೇವೆ ಎಂದು ಉದ್ಧವ್ ಹೇಳಿದರು. ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು ರಾಜ್ಯದಾದ್ಯಂತ 29 ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಿಸಿದೆ. ಬೃಹನ್ಮುಂಬೈ ಮಹಾನಗರ ಪಾಲಿಕೆ, ಪುಣೆ ಮಹಾನಗರ ಪಾಲಿಕೆ ಹಾಗೂ ಪಿಂಪ್ರಿ-ಚಿಂಚ್ವಾಡ್ ಮಹಾನಗರ ಪಾಲಿಕೆ ಸೇರಿ ವಿವಿಧ ಪಾಲಿಕೆಗಳಿಗೆ ಜನವರಿ 15ರಂದು ಮತದಾನ ನಡೆಯಲಿದ್ದು, ಜನವರಿ 16ರಂದು ಮತಎಣಿಕೆ ನಡೆಯಲಿದೆ.

18 C