Jasprit Bumrah Magical Spell- ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ಕಂಡದ್ದು ಅಕ್ಷರಶಃ ಬ್ಯಾಟರ್ ಗಳ ಆರ್ಭಟ. ಸಂಜು ಸ್ಯಾಮ್ಸನ್ ಅವರು ಭಾರತದ ಇನ್ನಿಂಗ್ಸ್ ಕಟ್ಟಿದರೆ, ಜಾಕೋಬ್ ಬೆಥೆಲ್ ಅವರು ಇಂಗ್ಲೆಂಡ್ ತಂಡವನ್ನು ಗೆಲುವಿನ ಬಾಗಿಲಿವರೆಗೂ ತಂದು ನಿಲ್ಲಿಸಿದ್ದರು. ಈ ಹಂತದಲ್ಲಿ ಭಾರತದ ನೆರವಿಗೆ ನಿಂತು ಇಡೀ ಪಂದ್ಯವನ್ನು ತಿರುಗಿಸಿದ್ದು ಜಸ್ಪ್ರೀತ್ ಬುಮ್ರಾ ಅವರ ಮ್ಯಾಜಿಕ್ ಸ್ಪೆಲ್. ಅವರೆಸೆದ 18ನೇ ಓವರ್ ಇಂಗ್ಲೆಂಡ್ ತಂಡದ ಟಿ20 ವಿಶ್ವಕಪ್ ಫೈನಲ್ ಆಸೆಗೆ ತಣ್ಣೀರೆರಚಿತು.
Bengaluru | ಮನರೇಗಾ ಯೋಜನೆ ಬಲಪಡಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ
ಬೆಂಗಳೂರು : ವಿಬಿ-ಜಿ ರಾಮ್ಜಿ ಯೋಜನೆಯನ್ನು ಹಿಂಪಡೆದು, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯನ್ನು ಬಲಪಡಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಲಾಯಿತು. ನಗರ ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಬೇಕು. ದಿನಗೂಲಿಯನ್ನು 600 ರೂ.ಗಳಿಗೆ ಹೆಚ್ಚಿಸಬೇಕು ಹಾಗೂ ವರ್ಷಕ್ಕೆ ಕನಿಷ್ಠ 200 ದಿನಗಳ ಕೆಲಸ ನೀಡಬೇಕು. ಬಜೆಟ್ ಅಧಿವೇಶನದಲ್ಲಿಯೇ ಮರ್ಯಾದೆಗೇಡು ಹತ್ಯೆ ನಿಷೆಧ ಮಸೂದೆಯನ್ನು ಮಂಡಿಸಿ, ಅಂಗೀಕರಿಸಿ ಕಾಯ್ದೆಯಾಗಿ ಜಾರಿಗೊಳಿಸಬೇಕು ಎಂದು ಧರಣಿನಿರತ ಮಹಿಳೆಯರು ಒತ್ತಾಯಿಸಿದರು. ನ್ಯಾಯಮೂರ್ತಿ ವರ್ಮಾ ಆಯೋಗ ಹಾಗೂ ಕರ್ನಾಟಕ ರಾಜ್ಯದ ಉಗ್ರಪ್ಪ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು. ಧರ್ಮಸ್ಥಳದ ಅತ್ಯಾಚಾರ, ಕೊಲೆ, ಅಸಹಜ ಸಾವು, ಭೂ ಕಬಳಿಕೆ, ಸ್ವ-ಸಹಾಯ ಸಂಘಗಳ ಮೇಲಿನ ದೌರ್ಜನ್ಯ ಸೇರಿದಂತೆ ಎಲ್ಲ ಪ್ರಕರಣಗಳನ್ನು ಎಸ್ಐಟಿ ಮೂಲಕ ತನಿಖೆಗೆ ಒಳಪಡಿಸಬೇಕು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಡೆಗಟ್ಟಿ, ದುಬಾರಿ ಬಡ್ಡಿ ಹಾಗೂ ವಾರದ ಕಂತು ಕಟ್ಟುವಂತೆ ಕಿರುಕುಳ ನೀಡುತ್ತಿರುವ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಸ್ವ-ಸಹಾಯ ಗುಂಪುಗಳಿಗೆ ಶೇ.4ರಷ್ಟು ಬಡ್ಡಿ ದರದಲ್ಲಿ ಬ್ಯಾಂಕ್ ಸಾಲ ನೀಡಬೇಕು. ಮಹಿಳೆಯರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರಿಸರ್ವ್ ಬ್ಯಾಂಕ್ ನಿರ್ದೇಶನದಂತೆ ಜಾಮೀನು ರಹಿತವಾಗಿ ಕನಿಷ್ಠ ಎರಡು ಲಕ್ಷ ರೂ. ವರೆಗೆ ಸಾಲ ಮಂಜೂರು ಮಾಡಬೇಕು. ಸಂಜೀವಿನಿ ಒಕ್ಕೂಟಕ್ಕೆ ಒಂದು ಕೋಟಿ ರೂ. ಹಣ ಬಿಡುಗಡೆ ಮಾಡಿ ಎಸ್ಎಚ್ಜಿ ಗುಂಪುಗಳಿಗೆ ತರಬೇತಿ, ಕಚ್ಚಾ ವಸ್ತುಗಳು ಮತ್ತು ತರಬೇತಿ ನೀಡಿ, ತಯಾರಿಸಿದ ವಸ್ತುಗಳಿಗೆ ಸರಕಾರ ಮಾರುಕಟ್ಟೆ ವ್ಯವಸ್ಥೆ ಒದಗಿಸಬೇಕು ಎಂದು ಆಗ್ರಹಿಸಿದರು. ನಿವೇಶನ ರಹಿತರಿಗೆ ನಿವೇಶನ ನೀಡಿ, ವಸತಿ ನಿರ್ಮಿಸಿಕೊಳ್ಳಲು ಕನಿಷ್ಠ ಐದು ಲಕ್ಷ ರೂ. ನೀಡಬೇಕು. ಸಾಮಾಜಿಕ ಭದ್ರತಾ ಯೋಜನೆಯಡಿ ನೀಡುವ ಮಾಸಿಕ ವೇತನವನ್ನು ವಯಸ್ಸಿನ ಮಿತಿ ಇಲ್ಲದೇ ಒಂಟಿ ಮಹಿಳೆ, ವಿಧವಾ ಮಹಿಳೆ, ಪರಿತ್ಯಕ್ತ ಮಹಿಳೆಯರು ಹಾಗೂ ವಿಕಲ ಚೇತನರಿಗೆ 5 ಸಾವಿರ ರೂ. ಮಾಸಿಕ ವೇತನ ನೀಡಬೇಕು. ರೇಷನ್ ಕಾರ್ಡ್ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಿ ಎಲ್ಲ ಹಳ್ಳಿಗಳಲ್ಲಿ ಪಡಿತರ ವಿತರಣ ಉಪ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ರಾಜ್ಯದ ಎಲ್ಲ ಕಡೆ ಜನತಾ ಬಜಾರ್ ಮಾದರಿಯ ಸರಕಾರಿ ಮಳಿಗೆಗಳನ್ನು ತೆರೆದು ರಿಯಾಯಿತಿ ದರದಲ್ಲಿ ಗುಣಮಟ್ಟದ ದಿನಸಿ ಸಾಮಗ್ರಿಗಳನ್ನು ವಿತರಿಸಬೇಕು. ಇಂದಿರಾ ಕ್ಯಾಂಟೀನ್ಗಳಲ್ಲಿ ನಂದಿನಿ ಹಾಲು ಮತ್ತು ಕಾಫಿ, ಟೀಗಳನ್ನು ರಿಯಾಯಿತಿ ದರದಲ್ಲಿ ಪೂರೈಕೆ ಮಾಡಬೇಕು. ಇಂದಿರಾ ಕ್ಯಾಂಟೀನ್ಗಳಲ್ಲಿ ಶುಚಿತ್ವ, ಊಟ ಉಪಹಾರಗಳ ಗುಣಮಟ್ಟವನ್ನು ಖಾತ್ರಿ ಮಾಡಬೇಕು. ಕರ್ನಾಟಕ ರಾಜ್ಯದ ಎಲ್ಲ ಗ್ರಾಮಗಳಿಗೂ ಸಾರಿಗೆ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24ಗಂಟೆಗಳ ಕಾಲ ವೈದ್ಯರು, ನರ್ಸ್, ಆಂಬುಲೆನ್ಸ್ ವ್ಯವಸ್ಥೆ ಇರಬೇಕು. ರಕ್ತ ಪರೀಕ್ಷೆ ಹಾಗೂ ಎಲ್ಲ ರೀತಿಯ ಚಿಕಿತ್ಸೆ ನೀಡುವಂತಾಗಬೇಕು ಎಂದು ಆಗ್ರಹಿಸಿದರು. ಧರಣಿಯಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಂದ್ರಕುಮಾರಿ, ಪ್ರದಾನ ಕಾರ್ಯದರ್ಶಿ ದೇವಿ, ಉಪಾಧ್ಯಕ್ಷರಾದ ಗೌರಮ್ಮ, ಕೆ.ಎಸ್.ಲಕ್ಷ್ಮಿ, ರೇಷ್ಮಾ, ಸಹ ಕಾರ್ಯದರ್ಶಿ ಸುಶೀಲಾ ಬಸಮ್ಮ, ರೇಣುಕಾ, ಹೋರಾಟಗಾರರಾದ ಕೆ.ಎಸ್. ವಿಮಲಾ, ಶೋಭಾ, ವರಲಕ್ಷ್ಮೀ ಮತ್ತಿತರರು ಹಾಜರಿದ್ದರು.
ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಸರಿಯಲ್ಲ : ಬಿಎಸ್ವೈ, ವಿಜಯೇಂದ್ರ ವಿರುದ್ಧ ಶಾಸಕ ಹರೀಶ್ ಆಕ್ರೋಶ
ದಾವಣಗೆರೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೋದ ಬಂದಲ್ಲಿ 2028ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದು ಸರಿಯಲ್ಲ ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಜಿಎಂಐಟಿಯಲ್ಲಿ ಸಭೆ ಮಾಡಿಲ್ಲ. ನಿಷ್ಠಾವಂತ ಕಾರ್ಯಕರ್ತರು ತಮ್ಮ ನೋವು ಹೇಳಿಕೊಳ್ಳಲು ಇಲ್ಲಿಗೆ ಬಂದಿದ್ದಾರೆ. ಮಾಜಿ ಸಂಸದರು ನನ್ನ ಜೊತೆ ನೋವು ಹಂಚಿಕೊಂಡಿದ್ದಾರೆ. ಸಮಸ್ಯೆಗಳನ್ನು ಆಲಿಸಿದ್ದು, ಕಾರ್ಯಕರ್ತರಿಗೆ ಸಮಾಧಾನ ಮಾಡುತ್ತೇವೆ. ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಬಂದಿದೆ. ಇಂತಹ ಹೊತ್ತಿನಲ್ಲಿ ಈ ಬೆಳವಣಿಗೆ ನಡೆಯಬಾರದಿತ್ತು ಎಂದು ಹೇಳಿದರು. ಹೊನ್ನಾಳಿಯಲ್ಲಿ ನಡೆದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಜನ್ಮ ದಿನಾಚರಣೆಯಂದು ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎರಡೂವರೆ ವರ್ಷ ಇರುವಾಗಲೇ ವಿಧಾನಸಭೆ ಚುನಾವಣಾ ಅಭ್ಯರ್ಥಿಗಳೆಂದು ಘೋಷಿಸುವುದು ಔಚಿತ್ಯವಾದರೂ ಏನಿತ್ತು ಎಂಬುದು ಮುಖಂಡರು ಮತ್ತು ಕಾರ್ಯಕರ್ತರ ಪ್ರಶ್ನೆ. ಮತ್ತೆ ಕೆಜೆಪಿ ಪಕ್ಷ ಕಟ್ಟಿದಂತೆ ಕಟ್ಟಲು ಯಡಿಯೂರಪ್ಪ ಮತ್ತು ಅವರ ಪುತ್ರ ಹೊರಟಿದ್ದಾರೆಯೋ ಎಂಬ ಅನುಮಾನ ಕಾಡುತ್ತಿದೆ. ಹಾಗಾಗಿ, ಬಿಜೆಪಿ ನಿಷ್ಠಾವಂತ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿಗೆ ಬಂದು ಆಕ್ರೋಶ ಹೊರ ಹಾಕಿದ್ದಾರೆ. ನಾವು ನಿಷ್ಠಾವಂತ ಬಿಜೆಪಿ ಕಾರ್ಯಕರ್ತರ ಪರ ನಿಲ್ಲುತ್ತೇವೆ ಎಂದು ಹರೀಶ್ ಹೇಳಿದರು. ಯಡಿಯೂರಪ್ಪ ಮತ್ತು ವಿಜಯೇಂದ್ರರ ಮನಸ್ಸಿನಲ್ಲಿ ಪ್ರಾದೇಶಿಕ ಪಕ್ಷ ಮಾಡಬೇಕೆಂಬುವುದು ಅವರ ಮಾತಿನ ನಡವಳಿಕೆಯಿಂದ ತಿಳಿದು ಬರುತ್ತದೆ. ಕೆಲವರಿಗೆ ಟಿಕೆಟ್ ಘೋಷಣೆ ಮಾಡಿ ಗೆಲ್ಲಿಸಿ ಎಂದು ಹೇಳಿದ್ದೂ ಅಲ್ಲದೆ ಸಚಿವ ಸಂಪುಟವನ್ನೂ ರೆಡಿ ಮಾಡಿ ಬಿಟ್ಟಿದ್ದಾರೆ. ಹೊನ್ನಾಳಿಯಲ್ಲಿ ಇರುವವನನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬುದನ್ನು ಈಗಾಗಲೇ ಹೇಳಿ ಬಿಟ್ಟಿದ್ದಾರೆ ಎಂದು ಹರೀಶ್ ವ್ಯಂಗ್ಯವಾಡಿದರು.
ಪಕ್ಷದ ಗೊಂದಲ, ಸಮಸ್ಯೆ ಬಗೆಹರಿಸುತ್ತೇವೆ : ಬಿ.ವೈ.ವಿಜಯೇಂದ್ರ
ದಾವಣಗೆರೆ : ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿರುವ ಎಲ್ಲಾ ಗೊಂದಲ ಹಾಗೂ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಗುರುವಾರ ನಗರದ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ಎಂ.ಪಿ.ರೇಣುಕಾಚಾರ್ಯ ಬಣದ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಸಣ್ಣ-ಪುಟ್ಟ ಗೊಂದಲ-ಸಮಸ್ಯೆಗಳು ಇದ್ದು, ಎರಡು ಬಣಗಳ ಜೊತೆ ಕುರಿತು ಚರ್ಚಿಸಿ ಶೀಘ್ರವಾಗಿ ಬಗೆಹರಿಸಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಾಗುವುದು ಎಂದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಈಗಾಗಲೇ 8-10 ಅಕಾಂಕ್ಷಿಗಳು ಸಿದ್ಧತೆ ನಡೆಸಿದ್ದಾರೆ. ಅದರಲ್ಲಿ ಸೂಕ್ತ ಅಭ್ಯರ್ಥಿ ಯಾರು ಎಂದು ಪಕ್ಷದ ಎಲ್ಲರೂ ಕುಳಿತು ಒಮ್ಮತದ ಅಭ್ಯರ್ಥಿ ತೀರ್ಮಾನ ಮಾಡಲಾಗುವುದು. ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅವರ ಜೊತೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕಾರ್ಯಕರ್ತರ ಜೊತೆ ಸಭೆ ನಡೆಸಿ, ಉತ್ಸಾಹ ತುಂಬಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ 150 ವಿಸ್ತಾರಕರು ಈಗಾಗಲೇ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ. ಬೂತ್ಮಟ್ಟದಲ್ಲಿ ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಎಲ್ಲವನ್ನು ಸರಿಪಡಿಸಿಕೊಂಡು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವ ಪಣ ತೊಟ್ಟಿದ್ದೇವೆ ಎಂದು ವಿಜಯೇಂದ್ರ ಹೇಳಿದರು. ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ, ನಮ್ಮ ಕುಟುಂಬ ದವರಾಗಲಿ, ನಾನಾಗಲಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿಲ್ಲಲ್ಲ. ಪಕ್ಷದ ಕಾರ್ಯಕರ್ತರಿಗೆ ನೀಡುವಂತೆ ಕೇಳಿದ್ದೇವೆ. ಉನ್ನತಮಟ್ಟದಲ್ಲಿ ಚರ್ಚೆ ನಡೆದ ನಂತರ ಪಕ್ಷ ಘೋಷಣೆ ಮಾಡಲಿದೆ. ರಾಜ್ಯದ ನಾಯಕರಿಗೆ ಇಲ್ಲಿನ ಮಾಹಿತಿ ನೀಡುವೆ ಎಂದರು.
ಎಸ್ಐಆರ್ ವಿರುದ್ಧ ಬೃಹತ್ ಆಂದೋಲನದ ಅಗತ್ಯವಿದೆ : ಶಿವಸುಂದರ್
‘ಎಸ್ಐಆರ್ ಪೌರತ್ವದ ಪ್ರಶ್ನೆ: ಪ್ರಭುತ್ವದ ಹುನ್ನಾರಗಳು’ ಸಂವಾದ ಗೋಷ್ಠಿ
Chikkamagaluru | ಬಾಬಾ ಬುಡಾನ್ ದರ್ಗಾದಲ್ಲಿ ಉರೂಸ್ ವೇಳೆ ತಾರತಮ್ಯ: ಆರೋಪ
ಜಿಲ್ಲಾಡಳಿತದ ವಿರುದ್ಧ ‘ಎದ್ದೇಳು ಕರ್ನಾಟಕ’ ಪ್ರತಿಭಟನೆ
ಬಾಬಾ ಬುಡಾನ್ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ಗೆ ಅನುಮತಿ ನೀಡಲು ಆಗ್ರಹಿಸಿ ಸಿಎಂಗೆ ಪತ್ರ
ಬೆಂಗಳೂರು : ‘ಚಿಕ್ಕಮಗಳೂರಿನ ಬಾಬಾ ಬುಡಾನ್ಗಿರಿಯ ಸೌಹಾರ್ದ ಪರಂಪರೆಯನ್ನು ಸಂರಕ್ಷಿಸಲು ಹಾಗೂ ಸಂಪ್ರದಾಯದಂತೆ ಉರೂಸ್ ನಡೆಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು’ ಎಂದು ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಗುರುವಾರ ಈ ಕುರಿತು ಹಿರಿಯ ಪತ್ರಕರ್ತೆ ಡಾ.ವಿಜಯಮ್ಮ, ನಟ ಪ್ರಕಾಶ್ ರಾಜ್, ಎದ್ದೇಳು ಕರ್ನಾಟಕದ ತಾರಾರಾವ್, ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್, ಕೆ.ಎಲ್.ಅಶೋಕ್, ಶಾಂತಿಗಾಗಿ ನಾಗರಿಕರ ವೇದಿಕೆಯ ಪ್ರೊ.ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ್, ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್, ಶಿಕ್ಷಣ ತಜ್ಞರಾದ ಶ್ರೀಪಾದ್ ಭಟ್, ಪ್ರೊ.ನಿರಂಜನಾರಾಧ್ಯ, ಒಳಮೀಸಲಾತಿ ಹೋರಾಟಗಾರರಾದ ಬಸವರಾಜ್ ಕೌತಾಳ್, ಕರಿಯಪ್ಪ ಗುಡಿಮನಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ಕುಮಾರ್ ಸಮತಳ, ಸ್ವರಾಜ್ ಇಂಡಿಯಾ ಖಲೀಂಉಲ್ಲಾ, ಹೋರಾಟಗಾರರಾದ ಗೌಸ್ ಮೊಹಿಯುದ್ಧೀನ್ ಸಹಿತ ಹಲವರು ಪತ್ರದಲ್ಲಿ ಸಹಿ ಹಾಕಿದ್ದಾರೆ. ‘ಸೌಹಾರ್ದ ತಾಣವಾದ ಬಾಬಾಬುಡಾನ್ಗಿರಿ ಉಳಿವಿಗೋಸ್ಕರ ಕರ್ನಾಟಕದ ಎಲ್ಲ ಪ್ರಗತಿಪರ ಮನಸ್ಸುಗಳು ಅನೇಕ ದಶಕಗಳ ಕಾಲ ಹೋರಾಟ ಮಾಡಿದ್ದ ಇತಿಹಾಸ ನಮಗೆಲ್ಲರಿಗೂ ಗೊತ್ತೇ ಇದೆ. ಅದರಾಚೆಗೂ ಸಂಘಪರಿವಾರದ ಒತ್ತಡಕ್ಕೆ ಮಣಿದ ಕಾಂಗ್ರೆಸ್ ಸರಕಾರ ಒಂದು ರಾಜಿ ಸೂತ್ರವನ್ನು ಮುಂದಿಟ್ಟಿತ್ತು. ಅದರ ಪ್ರಕಾರ ಉರೂಸ್ ಹಾಗೂ ದತ್ತಪೂಜೆ ಎರಡನ್ನೂ ನಡೆಸಲು ಅವಕಾಶ ಇರಬೇಕು. ಎರಡನ್ನೂ ಜಿಲ್ಲಾಡಳಿತ ಮೇಲ್ವಿಚಾರಣೆ ಮಾಡಬೇಕು ಎನ್ನುವ ತೀರ್ಮಾನಕ್ಕೆ ಇದಾಗಿತ್ತು’ ಎಂದಿದ್ದಾರೆ. ‘ದತ್ತ ಪೂಜೆಯ ಹೆಸರಿನಲ್ಲಿ ಸಂಘಪರಿವಾರಕ್ಕೆ ಬ್ರಾಹ್ಮಣೀಯ ಆಚರಣೆಯನ್ನು ತುರುಕಲು ಇದು ಅವಕಾಶ ನೀಡುವುದಾಗಿದ್ದರೂ, ಒಂದು ರೀತಿಯಲ್ಲಿ ಈಗಾದರೂ ಈ ಸಂಘರ್ಷ ಮುಕ್ತಾಯಗೊಳ್ಳಲಿ ಎಂದು ಅದನ್ನು ಬೆಂಬಲಿಸಿದ ಜನರೂ ಇದ್ದರು. ಆದರೆ ಇದು ಇಬ್ಬರಿಗೂ ಅವಕಾಶ ಮಾಡಿಕೊಡುವ ಜಾತ್ಯಾತೀತ ನಿಲುವಲ್ಲ. ಸಂಘಪರಿವಾರಕ್ಕೆ ಮಣೆ ಹಾಕಿ, ಸೂಫಿ ಪರಂಪರೆಯನ್ನು ನಿಷೇಧಿಸುವ ತಂತ್ರಗಾರಿಕೆ ಎಂಬುದು ಬಯಲಾಗಿದೆ’ ಎಂದು ಹೇಳಿದ್ದಾರೆ. ಬಾಬಾ ಬುಡಾನ್ಗಿರಿಯನ್ನು ಕೇಸರಿಮಯಗೊಳಿಸಿ ಸಂಘಪರಿವಾರದ ನೇತೃತ್ವದಲ್ಲಿ ದತ್ತ ಜಯಂತಿ ನಡೆಯಿತು. ಆದರೆ ಅದೇ ಸಂದರ್ಭದಲ್ಲಿ ಮಾ.4, ಮಾ.5 ಮತ್ತು ಮಾ.6 ದರ್ಗಾ ಸಮಿತಿ ಕಡೆಯಿಂದ ಉರೂಸ್ ಆಯೋಜನೆಗೊಂಡಿತ್ತು. ಆದರೆ ಜಿಲ್ಲಾಡಳಿತ ಉರೂಸ್ ನಡೆಯದಂತೆ ತಡೆಯೊಡ್ಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹಲವು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು, ಲೆಫ್ಟಿನೆಂಟ್ ಗವರ್ನರ್ಗಳನ್ನು ನೇಮಿಸಿ ಆದೇಶ ಹೊರಡಿಸಿದ ರಾಷ್ಟ್ರಪತಿ
ತಮಿಳುನಾಡಿನ ಆರ್.ಎನ್. ರವಿ ಪಶ್ಚಿಮ ಬಂಗಾಳಕ್ಕೆ, ದಿಲ್ಲಿಯ ಸಕ್ಸೇನಾ ಲಡಾಖ್ ಗೆ
Hassan | ಪಾಲಿಕೆ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ; 6.82 ಕೋಟಿ ರೂ.ಮೌಲ್ಯದ ಆಸ್ತಿ ಪತ್ತೆ
ಹಾಸನ : ಹಾಸನ ಮಹಾನಗರ ಪಾಲಿಕೆಯ ಇಂಜಿನಿಯರ್ ಸತ್ಯನಾರಾಯಣ ಅವರ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸುಮಾರು 6 ಕೋಟಿ 82 ಲಕ್ಷ 54 ಸಾವಿರ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಗುರುವಾರ ಬೆಳಗ್ಗೆಯಿಂದ ಆರಂಭವಾದ ಶೋಧ ಕಾರ್ಯವು ಸುಮಾರು 12 ಗಂಟೆಗಳ ಕಾಲ ಮುಂದುವರಿದಿದ್ದು, ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇನ್ನು ಕೂಡ ಪರಿಶೀಲನೆ ಮುಂದುವರಿದಿದೆ. ಪಾಲಿಕೆ ಇಂಜಿನಿಯರ್ ಸತ್ಯನಾರಾಯಣ ಅವರಿಗೆ ಸಂಬಂಧಿಸಿದಂತೆ 7 ಕಡೆಗಳಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ಆದಾಯಕ್ಕಿಂತ ಶೇಕಡಾ 200.74ರಷ್ಟು ಹೆಚ್ಚುವರಿ ಆಸ್ತಿ ಹೊಂದಿರುವ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ದಾಳಿಯ ವೇಳೆ 52 ಲಕ್ಷ ರೂ.ಮೌಲ್ಯದ 7 ನಿವೇಶನಗಳು, 5 ಕೋಟಿ 30 ಲಕ್ಷ ರೂ.ಮೌಲ್ಯದ ಮೂರು ಮನೆಗಳು ಹಾಗೂ 3 ಎಕರೆ 33 ಗುಂಟೆ ಕೃಷಿ ಜಮೀನು ಸೇರಿದಂತೆ ಒಟ್ಟು 5 ಕೋಟಿ 98 ಲಕ್ಷ 35 ಸಾವಿರ ರೂ. ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ. ಜೊತೆಗೆ 1 ಕೆಜಿ 36 ಗ್ರಾಂ ಚಿನ್ನ (ಸುಮಾರು 90 ಲಕ್ಷ 75 ಸಾವಿರ ರೂ.ಮೌಲ್ಯ) ಹಾಗೂ 11 ಕೆಜಿ 208 ಗ್ರಾಂ ಬೆಳ್ಳಿ ಆಭರಣಗಳು (18 ಲಕ್ಷ 22 ಸಾವಿರ ರೂ.ಮೌಲ್ಯ) ಕೂಡ ಪತ್ತೆಯಾಗಿವೆ. ಇದರೊಂದಿಗೆ 15 ಲಕ್ಷ ರೂ.ನಗದು, 22 ಲಕ್ಷ ರೂ.ಮೌಲ್ಯದ ಎರಡು ಕಾರುಗಳು ಸೇರಿ ಒಟ್ಟು 1 ಕೋಟಿ 46 ಲಕ್ಷ 73 ಸಾವಿರ ರೂ. ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. ಹೆಚ್ಚುವರಿಯಾಗಿ ಸುಮಾರು 25 ಲಕ್ಷ ರೂ.ಮೌಲ್ಯದ ಇತರ ಆಸ್ತಿಗಳು ಹಾಗೂ ಎರಡು ಲಾಕರ್ಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ಹಾಸನದ ರಕ್ಷಣಾಪುರಂನಲ್ಲಿರುವ ಮನೆ ಮೇಲೆ ದಾಳಿ ಆರಂಭವಾದಾಗ ಸತ್ಯನಾರಾಯಣ ಅವರು ಸುಮಾರು ಮೂರುವರೆ ಗಂಟೆಗಳ ಕಾಲ ಮನೆ ಬಾಗಿಲು ತೆರೆಯದೇ ಅಧಿಕಾರಿಗಳನ್ನು ಕಾಯಿಸಿಟ್ಟಿದ್ದರೆಂಬ ಮಾಹಿತಿ ದೊರೆತಿದೆ. ನಂತರ ಅಧಿಕಾರಿಗಳು ಮನೆಯ ಒಳಗೆ ಪ್ರವೇಶಿಸಿ ಶೋಧನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಜಯನಗರ | ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಂಜಾಗ್ರತಾ ಕ್ರಮ ಪಾಲಿಸಿ : ಡಿಸಿ ಕವಿತಾ ಎಸ್.ಮನ್ನಿಕೇರಿ
ವಿಜಯನಗರ (ಹೊಸಪೇಟೆ): ಪೂರ್ವ ಮುಂಗಾರು ಅವಧಿಯಲ್ಲಿ ವಿಜಯನಗರ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಹಾಗೂ ಗಾಳಿ ಮಳೆಯಿಂದ ಸಾಕಷ್ಟು ಸಾವು-ನೋವು ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ವಿಶೇಷವಾಗಿ ರೈತರು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲಿನ ಶಬ್ದ ಕೇಳಿಸಿದ ತಕ್ಷಣ ತೆರೆದ ಮೈದಾನ, ಗದ್ದೆ ಅಥವಾ ಗುಡ್ಡಗಾಡು ಪ್ರದೇಶದಲ್ಲಿದ್ದರೆ ಕೂಡಲೇ ಸುರಕ್ಷಿತ ಕಟ್ಟಡದ ಒಳಗೆ ಆಶ್ರಯ ಪಡೆಯಬೇಕು. ಒಂಟಿ ಮರ ಅಥವಾ ಎತ್ತರದ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಮೊಬೈಲ್, ಟಿವಿ, ಫ್ರಿಡ್ಜ್ ಸೇರಿದಂತೆ ವಿದ್ಯುತ್ ಉಪಕರಣಗಳ ಬಳಕೆಯನ್ನು ತಪ್ಪಿಸಬೇಕು. ಸಿಡಿಲಿನ ಮುನ್ಸೂಚನೆ ಪಡೆಯಲು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ‘ದಾಮಿನಿ’ ಆಪ್ ಬಳಸುವುದು ಸೂಕ್ತ ಎಂದು ತಿಳಿಸಿದರು. ರೈತರು ಗುಡುಗು-ಮಿಂಚು ಆರಂಭವಾದಾಗ ಜಾನುವಾರುಗಳನ್ನು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳಿಗೆ ಕಟ್ಟದೆ ಸುರಕ್ಷಿತವಾದ ಶೆಡ್ ಅಥವಾ ಕೊಟ್ಟಿಗೆಯಲ್ಲಿ ಕಟ್ಟಬೇಕು. ಮಳೆ ಬರುವ ಮುನ್ಸೂಚನೆ ಇದ್ದಾಗ ಹೊಲ-ಗದ್ದೆಗಳಲ್ಲಿ ಕೆಲಸ ಮಾಡುತ್ತಿದ್ದರೆ ತಕ್ಷಣ ನಿಲ್ಲಿಸಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಸಲಹೆ ನೀಡಿದರು. ಗಾಳಿ ಮಳೆಯಿಂದ ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಅಂತಹ ಘಟನೆ ಕಂಡುಬಂದಲ್ಲಿ ತಕ್ಷಣ ಜೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಳೆ ವೇಳೆ ವಾಹನ ಚಾಲನೆ ಮಾಡುವವರು ರಸ್ತೆ ಬದಿಯ ಮರಗಳ ಕೆಳಗೆ ವಾಹನ ನಿಲ್ಲಿಸದೆ ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಬೇಕು ಎಂದು ತಿಳಿಸಿದರು. ಯಾವುದೇ ಆಕಸ್ಮಿಕ ಘಟನೆ ಸಂಭವಿಸಿದಲ್ಲಿ ತಕ್ಷಣ ಹತ್ತಿರದ ತಹಶೀಲ್ದಾರ್ ಕಚೇರಿ ಅಥವಾ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 1077 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಸಹಾಯಕ ಆಯುಕ್ತ ವಿವೇಕಾನಂದ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ತಿಪಟೂರು : ತಾಲೂಕಿನ ಕಸಬಾ ಹೋಬಳಿಯ ಜೈಪುರ ರಸ್ತೆ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಗುಜರಿ ವ್ಯಾಪಾರಿಯ ಕೊಲೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತನನ್ನು ತಿಪಟೂರು ನಗರದ ಆರ್ಸಿಸಿ ಟ್ಯಾಂಕ್ ರಸ್ತೆ 3ನೇ ಕ್ರಾಸ್ ನಿವಾಸಿ ಮನ್ಸೂರ್ (32) ಎಂದು ಗುರುತಿಸಲಾಗಿದೆ. ಮೃತ ಮನ್ಸೂರ್ ಅವರು ಕೇವಲ2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ. ಮಾರ್ಚ್ 4ರಂದು ಗುಜರಿ ವ್ಯಾಪಾರಕ್ಕಾಗಿ ಹಳ್ಳಿಗೆ ತೆರಳಿದ್ದ ಮನ್ಸೂರ್ ಮಧ್ಯಾಹ್ನವಾದರೂ ಮನೆಗೆ ಮರಳದ ಕಾರಣ, ಪತ್ನಿ ಮತ್ತು ತಾಯಿ ಅವರ ಮೊಬೈಲ್ಗೆ ಹಲವು ಬಾರಿ ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಕುಟುಂಬದವರು ಮತ್ತು ಸ್ನೇಹಿತರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದಾಗ ರಂಗಾಪುರ ರಸ್ತೆ ಜೈಪುರ ರಸ್ತೆ ಚಿಕ್ಕಕೊಟ್ಟಗಿಹಳ್ಳಿ ಬಳಿಯ ರಸ್ತೆ ಸಮೀಪ ಮನ್ಸೂರ್ ಅವರಿಗೆ ಸೇರಿದ ಗುಜರಿ ವ್ಯಾಪಾರದ ಆಟೊ ರಿಕ್ಷಾ ಪತ್ತೆಯಾಗಿದೆ. ಆಟೊ ನಿಂತಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲೇ ರಾಜಮ್ಮ ಎಂಬವವರ ಆಡಿಕೆ ತೋಟದದಲ್ಲಿ ಮನ್ಸೂರ್ ಅವರ ಮೃತದೇಹ ಪತ್ತೆಯಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಕರಣವನ್ನು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು?
ಬೆಂಗಳೂರು: ರಾಜ್ಯದಲ್ಲಿ ನೋಂದಣಿಯಾಗಿ ಚಾಲ್ತಿಯಲ್ಲಿರುವ ವಾಣಿಜ್ಯ (ಸಾರಿಗೆ) ವಾಹನಗಳ ಅರ್ಹತಾ (ಫಿಟ್ನೆಸ್) ಪ್ರಮಾಣಪತ್ರ ವಿತರಣೆಯಲ್ಲಿ ನಡೆಯುತ್ತಿದ್ದ ದೋಷಪೂರಿತ ಕ್ರಮಗಳನ್ನು ತಡೆಯಲು ಸರ್ಕಾರ ಮುಂದಾಗಿದೆ. ಸಾರಿಗೆ ಇಲಾಖೆಯು 'ಜಿಯೋ-ಫೆನ್ಸಿಂಗ್' (ಸ್ಥಳ) ಆಧಾರಿತ 'ಎಂವಾಹನ್' (Geo-fencing mVahan) ಫಿಟ್ನೆಸ್ ಮೊಬೈಲ್ ಅಪ್ಲಿಕೇಷನ್ ಅನುಷ್ಠಾನಕ್ಕೆ ತಂದಿದೆ. ವಾಹನ ಸವಾರರು ಇನ್ನುಮುಂದೆ ಫಿಟ್ನೆಸ್ ಪ್ರಮಾಣಪತ್ರವನ್ನು ಯಾವ ತೊಂದರೆ ಇಲ್ಲದೇ ಪಡೆಯಲು ಈ ಆಪ್
ವಿಜಯನಗರ | ವ್ಯಾಸನತಾಂಡದಲ್ಲಿ ಮೂಲಭೂತ ಸೌಲಭ್ಯಗಳಿಗೆ ಕ್ರಮ ಕೈಗೊಳ್ಳಿ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ
ವಿಜಯನಗರ/ ಹರಪನಹಳ್ಳಿ: ವ್ಯಾಸನತಾಂಡಕ್ಕೆ ಸ್ವಚ್ಛತೆ, ಸಮರ್ಪಕ ಕುಡಿಯುವ ನೀರು ಪೂರೈಕೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವತ್ತ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಸೂಚಿಸಿದರು. ತಾಲೂಕಿನ ವ್ಯಾಸನತಾಂಡ ಮತ್ತು ಹಲುವಾಗಲು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗಗಳಿಗೆ ಸುಗಮ ಸಂಚಾರ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ರಸ್ತೆ ನಿರ್ಮಿಸಲಾಗುತ್ತಿದೆ. ವ್ಯಾಸನತಾಂಡದಿಂದ ವ್ಯಾಸನತಾಂಡ ಕ್ರಾಸ್ವರೆಗೆ ರಸ್ತೆ ಹಾಳಾಗಿರುವುದರಿಂದ, ಅದನ್ನು ಸಿಸಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ ಎಂದು ಹೇಳಿದರು. ಕೆ.ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಹಳ್ಳಿಗಳಲ್ಲೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು. ಪ್ರತಿಯೊಂದು ಹಳ್ಳಿಯಲ್ಲೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಪಿಡಿಒಗೆ ಅವರು ಸೂಚನೆ ನೀಡಿದರು. ಇದೇ ವೇಳೆ ತಾಲೂಕಿನ ಹಲುವಾಗಲು ಗ್ರಾಮದಿಂದ ಕುಂಚೂರು ಕೆರೆ ತಾಂಡದವರೆಗೆ ಅಂದಾಜು 75 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಗ್ಯಾರಂಟಿ ಸಮಿತಿ ಅಧ್ಯಕ್ಷ ಉದಯ್ ಶಂಕರ್, ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣ ನಾಯ್ಕ್, ಮತ್ತೂರು ಬಸವರಾಜ್, ನೀಲಗುಂದ ಸಹಕಾರ ಸಂಘದ ನಿರ್ದೇಶಕ ತಿರುಪತಿ ನಾಯ್ಕ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ನಾಯ್ಕ್, ಬಸವರಾಜ್ ನಾಯ್ಕ್, ಷಣ್ಮುಖ ನಾಯ್ಕ್, ಕೊಟ್ರೇಶ್ ನಾಯ್ಕ್, ಲ್ಯಾಂಡ್ ಆರ್ಮಿ ಎಇಇ ಶಂಕರ್ ನಾಯ್ಕ್, ನೂತನ ಸೇರಿದಂತೆ ಇತರರು ಉಪಸ್ಥಿತರಿದ್ದರು.
Digital gold | 100 ಕೋಟಿ ರೂ.ಗೂ ಹೆಚ್ಚಿನ ವ್ಯವಹಾರ : ಹೈಕೋರ್ಟ್ ಆತಂಕ; ತನಿಖೆಗೆ ಅಸ್ತು
ಬೆಂಗಳೂರು : ಕಾನೂನು ಬಾಹಿರವಾಗಿ ಡಿಜಿಟಲ್ ಗೋಲ್ಡ್ ಹೂಡಿಕೆಗಳನ್ನು ಸ್ವೀಕರಿಸಿ ಅಂತಹ ಹೂಡಿಕೆಗಳನ್ನು ನೇರವಾಗಿ ಚಿನ್ನದ ರೂಪದಲ್ಲಿ ಉಳಿಸಿಕೊಂಡಿರುವ ಆರೋಪ ಎದುರಿಸುತ್ತಿರುವ, ‘ಜಾರ್ ಡಿಜಿಟಲ್ ಪ್ರೈವೇಟ್ ಲಿಮಿಟೆಡ್’ ಮತ್ತು ’ಜಾರ್ಫಿನ್ ರಿಟೈಲ್ ಪ್ರೈವೇಟ್ ಲಿಮಿಟೆಡ್ ಕಂಪೆನಿ’ಗಳ ವಿರುದ್ಧದ ದೂರನ್ನು ವಜಾಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ‘ನಮ್ಮ ವಿರುದ್ಧ ಕೋರಮಂಗಲ ಠಾಣೆ ಪೊಲೀಸರು ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಎಫ್ಐಆರ್ ಮತ್ತು ಇದಕ್ಕೆ ಸಂಬಂಧಿಸಿ ದಂತೆ ಬೆಂಗಳೂರು ನಗರದ ಪ್ರಧಾನ ಸೆಷನ್ಸ್ ನ್ಯಾಯಾಲಯದಲ್ಲಿನ ನ್ಯಾಯಿಕ ವಿಚಾರಣೆ ರದ್ದುಗೊಳಿಸಬೇಕು’ ಎಂದು ಕೋರಿ ಕಂಪೆನಿಗಳ ನಿರ್ದೇಶಕ ನಿಶ್ಚಯ ಬಾಬು ಅರಕಲಗೂಡು ಮತ್ತು ‘ಜಾರ್ ಗೋಲ್ಡ್ ರಿಟೈಲ್ ಪ್ರವೇಟ್ ಲಿಮಿಟೆಡ್ ಕಂಪೆನಿ’ ಪ್ರತಿನಿಧಿ ಅವಿನಾಶ್ ವಸಂತ ದೇಶಪಾಂಡೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾ ಮಾಡಿದೆ. ಪ್ರಾಸಿಕ್ಯೂಷನ್ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಅನಿಯಂತ್ರಿತ ಠೇವಣಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಸಾರ್ವಜನಿಕರು ಹೂಡಿಕೆ ಮಾಡಿದ ಹಣವನ್ನು ಅರ್ಜಿದಾರರು ಲೂಟಿ ಮಾಡಲು ಬಿಡಬಾರದು. ಆ ಕಾರಣಕ್ಕಾಗಿ ಕನಿಷ್ಠ ತನಿಖೆಯನ್ನು ಮುಂದುವರಿಸಲು ಅನುಮತಿ ನೀಡಬೇಕು’ ಎಂಬ ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿದೆ. ‘ಗ್ರಾಹಕರು ಖರೀದಿ ಪೂರ್ಣಗೊಳಿಸಿದ ನಂತರ ಚಿನ್ನದ ಗಟ್ಟಿಯ ಯಾವುದೇ ಮಾಲಕತ್ವ ಅಥವಾ ಭೌತಿಕ ಸ್ವಾಧೀನವನ್ನು ಉಳಿಸಿಕೊಳ್ಳುವುದಿಲ್ಲ’ ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ತಿರಸ್ಕರಿಸಿರುವ ನ್ಯಾಯಪೀಠ, ‘ಡಿಜಿಟಲ್ ಚಿನ್ನವು ವಾಣಿಜ್ಯ ಪರಿಕಲ್ಪನೆಯಾಗಿ ವಿಕಸನ ಹೊಂದಿದೆ ಎಂಬುದು ನಿರ್ವಿವಾದ. ಆದರೆ, ದಾಖಲೆಯಲ್ಲಿರುವ ಅಂಶಗಳು ಗಂಭೀರ ಆರೋಪಗಳನ್ನು ಬಹಿರಂಗಪಡಿಸುತ್ತವೆ. ಅಂತೆಯೇ, ಅರ್ಜಿದಾರರಿಗೆ ಈ ಹಂತದಲ್ಲಿ ರಕ್ಷಣೆ ಒದಗಿಸಿದರೆ ಅಪರಾಧ ಪತ್ತೆಗೆ ಅದರ ಆರಂಭಿಕ ಹಂತದಲ್ಲೇ ಅಡ್ಡಿ ಉಂಟು ಮಾಡಿದಂತಾಗುತ್ತದೆ’ ಎಂದು ಸ್ಪಷ್ಟಪಡಿಸಿದೆ. ‘ಪೊಲೀಸರು ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ದೂರು ಅಥವಾ ಎಫ್ಐಆರ್ ತನಿಖೆಗೆ ಅರ್ಹವಲ್ಲ ಅಥವಾ ಅದು ಎಷ್ಟು ಸರಿ ಎಂಬ ಅಸ್ಪಷ್ಟ ಸಂಗತಿಗಳ ಆಧಾರದ ಮೇಲೆ ನ್ಯಾಯಪೀಠ ಯಾವುದಾದರೂ ತೀರ್ಮಾನ ತೆಗೆದುಕೊಳ್ಳುವುದು ಅಕಾಲಿಕ ಎನಿಸುತ್ತದೆ. ಅಷ್ಟೇ ಅಲ್ಲ ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
ವಿಜಯನಗರ | ಸಿರುಗುಪ್ಪ ತಾಲೂಕಿನಲ್ಲಿ ಬಿಜೆಪಿಯಿಂದ ಜನಜಾಗೃತಿ ಪಾದಯಾತ್ರೆ
ವಿಜಯನಗರ / ಸಿರುಗುಪ್ಪ: ತಾಲೂಕಿನ ಹಚ್ಚೊಳ್ಳಿ ಹಾಗೂ ಅಗಸನೂರು ಗ್ರಾಮಗಳಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ “ವಿಕಸಿತ ಭಾರತ” ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಕುರಿತು ಜನಜಾಗೃತಿ ಮೂಡಿಸಲು ಪಾದಯಾತ್ರೆ ಹಮ್ಮಿಕೊಳ್ಳಲಾಯಿತು. ಈ ಪಾದಯಾತ್ರೆಗೆ ಮಾಜಿ ಸಚಿವ ಬಿ. ಶ್ರೀರಾಮುಲು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ, ಬಳ್ಳಾರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು, ಸಿರುಗುಪ್ಪ ತಾಲೂಕು ಅಧ್ಯಕ್ಷ ಕೆ. ಮಲ್ಲಿಕಾರ್ಜುನ ಸ್ವಾಮಿ, ಎಸ್ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ದರಪ್ಪ ನಾಯಕ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಂ.ಎಸ್. ಸಿದ್ದಪ್ಪ, ರೈತ ಮೋರ್ಚಾ ಅಧ್ಯಕ್ಷ ವೀರನಗೌಡ ಸೇರಿದಂತೆ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಹಚ್ಚೊಳ್ಳಿ ಗ್ರಾಮದ ಬಸ್ ನಿಲ್ದಾಣದಿಂದ ಮಾರೆಮ್ಮ ದೇವಿ ದೇವಸ್ಥಾನದವರೆಗೆ ಪಾದಯಾತ್ರೆ ನಡೆಯಿತು. ಅಗಸನೂರು ಗ್ರಾಮದಲ್ಲಿ ಜಗನ್ನಾಥ್ ರೆಡ್ಡಿ ಅವರ ಮನೆಯಿಂದ ಶೇಷಮ್ಮ ಕಟ್ಟೆವರೆಗೆ ಜನಜಾಗೃತಿ ಪಾದಯಾತ್ರೆ ನಡೆಸಲಾಯಿತು. ಈ ಪಾದಯಾತ್ರೆಯಲ್ಲಿ ಎಂ.ಆರ್. ಗೌಡ, ಎಂ. ವೀರೇಶ್, ಶಿವರಾಮಗೌಡ, ದೊಡ್ಡ ಹುಲಗಪ್ಪ, ಹನುಮಂತರೆಡ್ಡಿ, ಶೇಖರಗೌಡ, ಸಿದ್ದಯ್ಯ ಸ್ವಾಮಿ, ಶರಣಬಸವ, ವೀರೇಂದ್ರ, ಅಯ್ಯಪ್ಪ, ರಾಮನಾಯಕ, ಚಿದಾನಂದಗೌಡ, ಮೋಹನ್ ರೆಡ್ಡಿ, ಮಹಾದೇವಪ್ಪ, ರಾಮಕೃಷ್ಣ, ಬಸವರಾಜ, ಚನ್ನಬಸವನಗೌಡ, ಕುಮಾರಪ್ಪ, ನಾಗರಾಜ, ವೀರೇಶ್ ಸೇರಿದಂತೆ ಗ್ರಾಮಸ್ಥರು ಹಾಗೂ ಇತರರು ಭಾಗವಹಿಸಿದರು.
ಸಿರುಗುಪ್ಪ | ಉಚಿತ ಆರೋಗ್ಯ ತಪಾಸಣಾ ಶಿಬಿರ
ಬಳ್ಳಾರಿ : ಸಿರುಗುಪ್ಪ ಪಟ್ಟಣದಲ್ಲಿ ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಅನುಕೂಲವಾಗಿದ್ದು, ಇದರಿಂದ ಜನರಿಗೆ ಆರ್ಥಿಕ ಉಳಿತಾಯವಾಗುತ್ತದೆ ಎಂದು ಹರಗಿನಡೋಣಿ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಶಿವಶಕ್ತಿ ಸಾಂಸ್ಕೃತಿಕ ಭವನದಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆ, ಸಿರುಗುಪ್ಪ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಹಾಗೂ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶ್ರಮದಿಂದ ಬದುಕು ಕಟ್ಟಿಕೊಂಡಿರುವವರು ಸಮಾಜದ ಬಗ್ಗೆ ಕಾಳಜಿ ಹೊಂದಿದ್ದು, ಇಂತಹ ಉಚಿತ ಆರೋಗ್ಯ ಕಾರ್ಯಕ್ರಮಗಳನ್ನು ಆಯೋಜಿಸುವುದು ಅವರ ಸಾಮಾಜಿಕ ಬದ್ಧತೆಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು. ಈ ವೇಳೆ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚೊಕ್ಕ ಬಸವನಗೌಡ ಮಾತನಾಡಿದರು. ಸಿರುಗುಪ್ಪದ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಮಾರ್ಗದರ್ಶನ ನೀಡಲಾಗಿದ್ದು, ಸುಮಾರು 200ಕ್ಕೂ ಹೆಚ್ಚು ಜನರು ತಪಾಸಣೆ ಮಾಡಿಸಿಕೊಂಡು ಔಷಧಿ ಪಡೆದರು. ಕಾರ್ಯಕ್ರಮದಲ್ಲಿ ಗುರು ಬಸವ ಮಠದ ಬಸವಭೂಷಣ ಸ್ವಾಮೀಜಿ, ವೈದೇಹಿ ಆಸ್ಪತ್ರೆಯ ಮಲ್ಲಿಕಾರ್ಜುನ, ಪಿಎಲ್ಡಿ ಬ್ಯಾಂಕ್ ವ್ಯವಸ್ಥಾಪಕ ತಿಪ್ಪಣ್ಣ ಬನಸೋಡಿ, ಉಪಾಧ್ಯಕ್ಷ ಡಿ.ಆರ್. ಚಂದ್ರರೆಡ್ಡಿ, ನಿರ್ದೇಶಕರಾದ ಪಿ. ತಿಮ್ಮಪ್ಪ, ಶಿವರಾಮಗೌಡ, ಬಿ.ಎಂ. ಜಡೆಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದಲ್ಲದೆ ವೈದ್ಯರಾದ ನವೀನ್ ಕುಮಾರ್, ನಾಗಪ್ರಿಯಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ, ರಾಷ್ಟ್ರೀಯ ಸಾಕ್ಷರತಾ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸದಸ್ಯ ಅಬ್ದುಲ್ ನಬಿ, ಡಿ ಫಾರ್ಮಸಿ ಕಾಲೇಜಿನ ಉಪನ್ಯಾಸಕಿ ಅರುಣಾ, ಆರೋಗ್ಯ ಆಪ್ತ ಸಮಾಲೋಚಕ ಮಲ್ಲೇಶಪ್ಪ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ನಾರೇಶ್, ಪ್ರಿಯಾಂಕ, ವಿಜಯಕುಮಾರ್, ಭವಾನಿ ಸೇರಿದಂತೆ ವೈದ್ಯರ ತಂಡ ಶಿಬಿರದಲ್ಲಿ ಭಾಗವಹಿಸಿದ್ದರು.
ವಿಜಯನಗರ | ಕೊಟ್ಟೂರು ತಾಲೂಕು ಕಚೇರಿ ಬಳಿ ಚಿರತೆ ಪ್ರತ್ಯಕ್ಷ !
ವಿಜಯನಗರ : ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ತಾಲೂಕು ಕಚೇರಿ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ಆತಂಕ ಉಂಟಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಪಟ್ಟಣದ ತಾಲೂಕು ಕಾರ್ಯಾಲಯದ ಪ್ರವೇಶ ದ್ವಾರಗಳ ಬಳಿ ಬೆಳಿಗ್ಗೆ ಸುಮಾರು 6 ಗಂಟೆ ಸುಮಾರಿಗೆ ಚಿರತೆ ಕಂಡುಬಂದಿದೆ ಎಂದು ಕೆಲವರು ಹೇಳಿದ್ದರಿಂದ ಈ ವಿಷಯ ಚರ್ಚೆಗೆ ಗ್ರಾಸವಾಯಿತು. ಈ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ನಸರುಲ್ಲಾ, ಎಂಜಿನಿಯರ್ ಪ್ರಭು ಬಿರಾದಾರ್ ಹಾಗೂ ಆರೋಗ್ಯ ನಿರೀಕ್ಷಕಿ ಅನುಷಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಈ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಈ ಕುರಿತು ಮಾತನಾಡಿದ ಮುಖ್ಯಾಧಿಕಾರಿ ಎಂ. ನಸರುಲ್ಲಾ, ಚಿರತೆ ಕಂಡುಬಂದಿದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಆ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದೆ. ಆದರೆ ಯಾವುದೇ ರೀತಿಯ ಚಿರತೆ ಕಾಣಿಸಿಕೊಂಡಿರುವ ಸುಳಿವು ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ. ಆದರೂ ಮುನ್ನೆಚ್ಚರಿಕೆಯಾಗಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತರಲಾಗಿದೆ ಎಂದು ಅವರು ಹೇಳಿದರು.
ಬೆಂಗಳೂರು : ಹದಿನೇಳು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ಐಐಎಸ್ಸಿ ನಿವೃತ್ತ ಪ್ರೊಫೆಸರ್ ಪುರುಷೋತ್ತಮ ಲಾಲ್ ಸಚ್ದೇವ್ ಮತ್ತವರ ಪತ್ನಿ ಹಾಗೂ ಪುತ್ರನ ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಪಶ್ಚಿಮ ಬಂಗಾಳ ಮೂಲದ ನಾಲ್ವರು ವಲಸೆ ಕಾರ್ಮಿಕರಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಇದೇ ವೇಳೆ, ಇತ್ತೀಚೆಗೆ ವಲಸೆ ಕಾರ್ಮಿಕರು ಮನೆಗೆಲಸದ ನೆಪದಲ್ಲಿ ಮನೆಗಳನ್ನು ಸೇರಿ ಅಪರಾಧ ಕೃತ್ಯಗಳಲ್ಲಿ ತೊಡಗುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರ ಮೇಲೆ ನಿಗಾ ಇಡಲು ವಲಸೆ ಕಾರ್ಮಿಕ ಮತ್ತು ಕ್ರಿಮಿನಲ್ ನಿಯಂತ್ರಣ ಕಾರ್ಯತಂತ್ರಗಳಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ. ತ್ರಿವಳಿ ಕೊಲೆ ಪ್ರಕರಣದ ಆರೋಪಿಗಳಾಗಿದ್ದ ನಾಲ್ವರು ವಲಸೆ ಕಾರ್ಮಿಕರನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹಾಗೂ ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ. ಆರೋಪಿಗಳನ್ನು ಖುಲಾಸೆಗೊಳಿಸಿ 2016ರ ಫೆಬ್ರವರಿ 29ರಂದು ಬೆಂಗಳೂರಿನ 64ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಪಶ್ಚಿಮ ಬಂಗಾಳ ಮೂಲದ ದೀಪಕ್ ಹಲ್ದಾರ್ ಹಾಗೂ ಪತ್ನಿ ಸುಚಿತ್ರಾ ಹಲ್ದಾರ್, ಬಿಹಾರ ಮೂಲದ ಮೊಹಮ್ಮದ್ ಸರ್ಬಾಲ್ ಮತ್ತು ಬೆಂಗಳೂರಿನಲ್ಲಿ ನೆಲೆಸಿದ್ದ ಮತ್ತೊಬ್ಬ ವಲಸೆ ಕಾರ್ಮಿಕ ಬಿದನ್ ಶಿಕಾರಿ ಅವರನ್ನು ಅಪರಾಧಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಹೈಕೋರ್ಟ್ ಆದೇಶವೇನು? ಸುಪ್ರೀಂಕೋರ್ಟ್ ತೀರ್ಪಿನಂತೆ ಇದು ಅಪರೂಪದಲ್ಲಿ ಅಪರೂಪ ಪ್ರಕರಣವಾಗುವುದಿಲ್ಲ. ಆದರೆ, ಆರೋಪಿಗಳು ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆಗೆ ಕಂಟಕರಾಗಿದ್ದರು. ಹಣ ಹಾಗೂ ಚಿನ್ನಾಭರಣಗಳಿಗಾಗಿ ಮೂವರನ್ನು ಹತ್ಯೆ ಮಾಡಿರುವ ಅವರ ಕೃತ್ಯ ಸಮಾಜಕ್ಕೆ ದೊಡ್ಡ ಕಂಟಕವಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ. ಆರೋಪಿಗಳು ಮೂವರನ್ನು ಕತ್ತು ಹಿಸುಕಿ ಕೊಂದು ನಗದು, ಒಡವೆ ವಸ್ತುಗಳನ್ನು ದೋಚಿದ್ದಾರೆ. ಮೊದಲನೇ ಆರೋಪಿ ದೀಪಕ್ ಹಲ್ದಾರ್ ಮತ್ತು ಎರಡನೇ ಆರೋಪಿ ಸುಚಿತ್ರಾ ಹಲ್ದಾರ್ ಕೊಲೆಯಾದ ಮನೆಯಲ್ಲಿ ಮನೆಗೆಲಸದವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಕ್ರಿಮಿನಲ್ ಪಿತೂರಿ ನಡೆಸಿ ಇತರ ಆರೋಪಿಗಳ ಜತೆ ಸೇರಿ ತ್ರಿವಳಿ ಕೊಲೆ ಮಾಡಿದ್ದಾರೆ. ಪ್ರಾಸಿಕ್ಯೂಷನ್ ಘಟನಾವಳಿಯನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ ಎಂದಿರುವ ಹೈಕೋರ್ಟ್, ಸದ್ಯ ಹೊರಗಿರುವ ನಾಲ್ವರೂ ಆರೋಪಿಗಳು 2 ವಾರಗಳಲ್ಲಿ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಬೇಕು. ಉಳಿದ ಅವಧಿಯ ಶಿಕ್ಷೆ ಪೂರೈಸಲು ಅವರನ್ನು ಕಾರಾಗೃಹಕ್ಕೆ ಕಳುಹಿಸಬೇಕು ಎಂದು ಆದೇಶಿಸಿದೆ. ಮಾರ್ಗಸೂಚಿ ಹೊರಡಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ: ಇತ್ತೀಚಿನ ವರ್ಷಗಳಲ್ಲಿ ಮನೆಕೆಲಸದ ನೆಪದಲ್ಲಿ ಮನೆಗಳನ್ನು ಸೇರುವ ವಲಸೆ ಕಾರ್ಮಿಕರು ಅಪರಾಧ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ಅಂಥವರ ಮೇಲೆ ನಿಗಾ ಇಡಲು ವಲಸೆ ಕಾರ್ಮಿಕ ಮತ್ತು ಕ್ರಿಮಿನಲ್ ನಿಯಂತ್ರಣ ಕಾರ್ಯತಂತ್ರಗಳಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬಹುತೇಕ ಪ್ರಕರಣಗಳಲ್ಲಿ ಮನೆ ಮಾಲೀಕರು ಅಥವಾ ಉದ್ಯೋಗದಾತರು ವಲಸೆ ಕಾರ್ಮಿಕರ ಹಿನ್ನೆಲೆ ಹಾಗೂ ಗುರುತು ಪರಿಶೀಲಿಸುವ ಗೋಜಿಗೇ ಹೋಗುವುದಿಲ್ಲ. ಆದ್ದರಿಂದ, ಕೆಲ ವಲಸಿಗರು ಅಪರಾಧ ಕೃತ್ಯಗಳನ್ನೆಸಗಿ ಪರಾರಿಯಾಗುತ್ತಾರೆ. ಇಂತಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಮಿಕ ಮತ್ತು ಅಪರಾಧ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ವಲಸೆ ಕಾರ್ಮಿಕರ ಹಿನ್ನೆಲೆಯನ್ನು ಪೊಲೀಸರು ಕಡ್ಡಾಯವಾಗಿ ಪರಿಶೀಲನೆ ಮಾಡಬೇಕು. ಅವರ ನೋಂದಣಿಗೆ ಪೋರ್ಟಲ್ ವ್ಯವಸ್ಥೆ ಮಾಡಬೇಕು ಹಾಗೂ ಆ ಮಾಹಿತಿ ಸುಲಭವಾಗಿ ಜನರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣದಲ್ಲಿ ವಲಸೆ ಕಾರ್ಮಿಕರು ಉದ್ಯೋಗ ಅರಸಿ ಬೆಂಗಳೂರಿಗೆ ಬಂದು ಮನೆಕೆಲಸದವರಾಗಿ ಸೇರಿ ಆನಂತರ ಪಿತೂರಿ ನಡೆಸಿ ಅಪರಾಧವೆಸಗಿದ್ದಾರೆ. ಘಟನೆ ನಡೆದ 20 ತಿಂಗಳ ನಂತರ ಅವರ ಬಂಧನವಾಗಿದೆ. ಆದ್ದರಿಂದ, ವಲಸೆ ಕಾರ್ಮಿಕರ ನಿಯಮಗಳನ್ನು ಬಿಗಿಗೊಳಿಸಲು ಇದು ಸಕಾಲವಾಗಿದ್ದು, ಸರಕಾರ ಆ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಆದೇಶಿಸಿರುವ ಹೈಕೋರ್ಟ್, ನ್ಯಾಯಾಲಯದ ಈ ನಿರ್ದೇಶನಗಳನ್ನು ಜಾರಿಗೆ ತರಲು ಕ್ರಮ ಕೈಗೊಳ್ಳುವ ಸಲುವಾಗಿ ಆದೇಶದ ಪ್ರತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನಿಸುವಂತೆ ರಿಜಿಸ್ಟ್ರಿಗೆ ಸೂಚನೆ ನೀಡಿದೆ. ಪ್ರಕರಣವೇನು? ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ನಿವೃತ್ತ ಪ್ರೊಫೆಸರ್ ಹಾಗೂ ಖ್ಯಾತ ಗಣಿತಶಾಸ್ತ್ರಜ್ಞರಾದ ಪುರುಷೋತ್ತಮ ಲಾಲ್ ಸಚ್ದೇವ್ ಅವರು ಪತ್ನಿ ರೀಟಾ ಹಾಗೂ ಪುತ್ರ ಮುನ್ನಾ ಜತೆ ಆರ್.ಟಿ. ನಗರದ 80 ಅಡಿ ರಸ್ತೆಯಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದರು. ಅವರ ಮನೆ ಕೆಲಸಕ್ಕೆ ಮೊದಲು ಸೇರಿದ ಸುಚಿತ್ರಾ, ನಂತರ ತನ್ನ ಪತಿಯನ್ನೂ ಕರೆ ತಂದಿದ್ದಳು. ಇಬ್ಬರೂ ಔಟ್ಹೌಸ್ನಲ್ಲಿಯೇ ನೆಲೆಸಿದ್ದರು. ಬಳಿಕ ಇತರರೊಂದಿಗೆ ಸಂಚು ರೂಪಿಸಿ 2009ರ ಫೆಬ್ರವರಿ 16ರಂದು ಮನೆಯಲ್ಲಿದ್ದ ಮೂವರನ್ನೂ ಕತ್ತು ಹಿಸುಕಿ ಕೊಂದು ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದರು. ಆನಂತರ, ತ್ರಿವಳಿ ಕೊಲೆಯ ಸಂಗತಿ ಬಯಲಾಗಿತ್ತು.
Nagpur | ತನ್ನ ಮೇಲೆ ಬಣ್ಣ ಎರಚಿದ್ದಕ್ಕೆ ಕೋಪಗೊಂಡು ನಾಲ್ಕು ವರ್ಷದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಅಜ್ಜಿ
ನಾಗ್ಪುರ: ತನ್ನ ಮೇಲೆ ಬಣ್ಣ ಎರಚಿದ ಕಾರಣಕ್ಕೆ ಕೋಪಗೊಂಡ ಅಜ್ಜಿ, ನಾಲ್ಕು ವರ್ಷದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ನಡೆದಿದೆ. ಇದರಿಂದ ಬಾಲಕನಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 3ರಂದು ಅರಾಮ್ಶಿನ್ ಪ್ರದೇಶದ ವಾರ್ಡ್ ಸಂಖ್ಯೆ 2ರಲ್ಲಿ ಈ ಘಟನೆ ನಡೆದಿದ್ದು, ಅದರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. What a MONSTER B!TCH Goes Full Psycho; Pours boiling Hot Water on 5yr Old kid because he wanted to play Holi with her pic.twitter.com/1LuFLcrwcW — Mihir Jha (@MihirkJha) March 4, 2026 ಪೊಲೀಸರ ಪ್ರಕಾರ, ಓಂ ಹರೀಶ್ ವಾಂಗೆ (4) ತನ್ನ ಮನೆಯ ಹೊರಭಾಗದಲ್ಲಿ ಬಣ್ಣ ತುಂಬಿದ ಸ್ಪ್ರೇ ಬಾಟಲಿಯೊಂದಿಗೆ ಆಟವಾಡುತ್ತಿದ್ದ. ಈ ವೇಳೆ ಹೋಳಿ ಹಬ್ಬದ ಹಿನ್ನೆಲೆಯಲ್ಲಿ, ಬಿಸಿಮಾಡಿದ ನೀರನ್ನು ಬಕೆಟ್ನಲ್ಲಿ ತುಂಬುತ್ತಿದ್ದ ತನ್ನ ಅಜ್ಜಿ ಸಿಂಧು ಠಾಕ್ರೆ ಮೇಲೆ ಬಾಲಕ ಆಕಸ್ಮಿಕವಾಗಿ ಬಣ್ಣ ಎರಚಿದ್ದಾನೆ. ಇದರಿಂದ ಕೋಪಗೊಂಡ ಸಿಂಧು ಠಾಕ್ರೆ, ಬಾಲಕನ ಮೇಲೆ ಕುದಿಯುವ ನೀರನ್ನು ಸುರಿದರೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ಪರಿಣಾಮ ಓಂ ನ ಸೊಂಟದ ಕೆಳಭಾಗದಲ್ಲಿ ತೀವ್ರ ಸುಟ್ಟ ಗಾಯಗಳಾಗಿದ್ದು, ಆತನನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಬಾಲಕನಿಗೆ ಸುಮಾರು ಶೇಕಡಾ 45 ರಷ್ಟು ಸುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಸಿಂಧು ಠಾಕ್ರೆ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿದ್ದರಾಮಯ್ಯ ಸರಕಾರದಿಂದ ದಲಿತರಿಗೆ ಮೋಸ : ಅರವಿಂದ ಬೆಲ್ಲದ್
ಬೆಂಗಳೂರು : ಪರಿಶಿಷ್ಟರ ಕಲ್ಯಾಣಕ್ಕಾಗಿ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಮೀಸಲಿಟ್ಟ ಹಣವನ್ನು ಗ್ಯಾರಂಟಿಗಳಿಗೆ ವಿನಿಯೋಗಿಸಿ ಸಿದ್ದರಾಮಯ್ಯ ನೇತೃತ್ವದ ಸರಕಾರ ದಲಿತರಿಗೆ ಮೋಸ ಮಾಡಿದೆ. ಈ ಸರಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ. ಗುರುವಾರ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಲಿತರು ಮತ್ತು ಹಿಂದುಳಿದವರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರಕಾರ 3 ವರ್ಷಗಳಿಂದ ಎಸ್ಸಿಪಿ-ಟಿಎಸ್ಪಿ ಯೋಜನೆಯ 38,859ಕೋಟಿ ರೂ.ಹಣವನ್ನು ಗ್ಯಾರಂಟಿಗಳಿಗೆ ಬಳಸಿದೆ. 2023-24ರಲ್ಲಿ 11144 ಕೋಟಿ ರೂ., 2024-25ರಲ್ಲಿ 14,282 ಕೋಟಿ ರೂ. ಹಾಗೂ 2025-26ರಲ್ಲಿ 13,433 ಕೋಟಿ ರೂ.ಗಳನ್ನು ಗ್ಯಾರಂಟಿಗೆ ಬಳಸಿದ್ದಾರೆ ಎಂದು ವಿವರಿಸಿದರು. ಆದುದರಿಂದ ಈ ಬಾರಿಯ ಬಜೆಟ್ನಲ್ಲಿ ದಲಿತರ ಹಣ ಬಳಸಿರುವುದನ್ನು ವಾಪಸ್ ಕೊಡಬೇಕು. ಇದರೊಂದಿಗೆ ದಲಿತರಿಗೆ ಹೊಸದಾಗಿಯೂ ಹಣ ಕೊಡಬೇಕು. ಪರಿಶಿಷ್ಟರ ಕಲ್ಯಾಣ ಯೋಜನೆಗಳಿಗೆ 1 ಸಾವಿರ ಕೋಟಿ ರೂ. ನೀಡಬೇಕು. ಎಸ್ಸಿಪಿ-ಟಿಎಸ್ಪಿಯ 7ಸಿ ಮೂಲಕ ದುರ್ಬಳಕೆಯಾಗುವುದನ್ನು ತಡೆಯಲು ಅದನ್ನು ತೆಗೆಯಬೇಕು. ದಲಿತರ ಹಣವನ್ನು ಗ್ಯಾರಂಟಿಗಳಿಗೆ ಬಳಸುವುದಿಲ್ಲ ಎಂಬ ವಾಗ್ದಾನ ನೀಡಬೇಕು ಎಂದು ಅವರು ಆಗ್ರಹಿಸಿದರು. ಮೀಸಲಾತಿ ಬಗ್ಗೆ ಸ್ಪಷ್ಟತೆಯೇ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿಗೆ ಸರಕಾರ ಮುಂದಾಗಿದೆ. ದಲಿತರ ಬಗ್ಗೆ ನಿಜವಾದ ಕಾಳಜಿ ಇಲ್ಲದೇ ಇದ್ದರೆ ಹೀಗೆ ಡೋಂಗಿತನವನ್ನು ಬಿಡಬೇಕು. ನೇಮಕಾತಿ ಯಾವಾಗ ಮಾಡುತ್ತೀರಿ, ಅಧಿಸೂಚನೆ ಯಾವಾಗ ಹೊರಡಿಸುತ್ತೀರಿ, ಹೆಂಗೆ ಮಾಡಲಾಗುವುದು ಎಂಬ ಸ್ಪಷ್ಟತೆ ಕೊಡಬೇಕು ಎಂದು ಅವರು ಒತ್ತಾಯಿಸಿದರು.
ಮುಂಬೈ: ರಮಝಾನ್ ತಿಂಗಳಲ್ಲಿ ಮುಂಬೈ ವಿಮಾನ ನಿಲ್ದಾಣದ ಸಮೀಪದಲ್ಲಿದ್ದ ತಾತ್ಕಾಲಿಕ ಶೆಡ್ ತೆರವುಗೊಳಿಸಿದ ಸ್ಥಳದಲ್ಲಿ ನಮಾಝ್ ಸಲ್ಲಿಸಲು ಅವಕಾಶ ಕೋರಿ ಟ್ಯಾಕ್ಸಿ ಮತ್ತು ಆಟೋ ಚಾಲಕರು ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಪರಿಹಾರ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಭದ್ರತೆ ಧರ್ಮಕ್ಕಿಂತ ಮೇಲು ಎಂದು ಅಭಿಪ್ರಾಯ ಪಟ್ಟಿದೆ. ನ್ಯಾಯಮೂರ್ತಿಗಳಾದ ಬಿ ಪಿ ಕೊಲಬವಲ್ಲ ಮತ್ತು ಫಿರ್ದೋಶ್ ಪೂನಿವಲ್ಲ ಅವರಿದ್ದ ಪೀಠವು, ರಮಝಾನ್ ಇಸ್ಲಾಂ ಧರ್ಮದ ಅವಿಭಾಜ್ಯ ಅಂಗವಾದರೂ, ಯಾವುದೇ ಸ್ಥಳದಲ್ಲಿ, ವಿಶೇಷವಾಗಿ ವಿಮಾನ ನಿಲ್ದಾಣದಂತಹ ಭದ್ರತಾ ಅತಿಸೂಕ್ಷ್ಮ ಪ್ರದೇಶದ ಸುತ್ತಮುತ್ತ ನಮಾಝ್ ಮಾಡುವುದನ್ನು ಧಾರ್ಮಿಕ ಹಕ್ಕು ಎಂದು ವಾದಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ವಿಮಾನ ನಿಲ್ದಾಣದ ಭದ್ರತೆ ಅತೀ ಮಹತ್ವದ ವಿಷಯವಾಗಿದೆ. ಈ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ತಾತ್ಕಾಲಿಕ ಶೆಡ್ ಅನ್ನು ಕಳೆದ ವರ್ಷ ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಿ ಟ್ಯಾಕ್ಸಿ-ರಿಕ್ಷಾ, ಓಲಾ-ಉಬರ್ ಚಾಲಕರ ಒಕ್ಕೂಟ(Taxi-Rickshaw Ola-Uber Men's Union) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ. ಅರ್ಜಿಯಲ್ಲಿ ತಾತ್ಕಾಲಿಕ ಶೆಡ್ ಬಳಿ ನಮಾಝ್ಗೆ ಅವಕಾಶ ನೀಡಬೇಕು ಅಥವಾ ಪರ್ಯಾಯ ಸ್ಥಳವನ್ನು ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿತ್ತು.
ತೇಲುವ ಸಿಎನ್ ಜಿ ಸ್ಟೇಷನ್ : ಗಂಗಾನದಿಯಲ್ಲಿ ದೋಣಿಗಳಿಂದಾಗುವ ಮಾಲಿನ್ಯಕ್ಕೆ ಕಡಿವಾಣ
ವಾರಣಾಸಿ: ವಾರಣಾಸಿಯ ನಮೋ ಘಾಟ್ ಮತ್ತು ರವಿದಾಸ್ ಘಾಟ್ ನಲ್ಲಿ ಗಂಗಾನದಿಯ ಕಿನಾರೆಯಲ್ಲಿ ಸ್ಥಾಪನೆಗೊಂಡಿರುವ ನೈಸರ್ಗಿಕ ಅನಿಲ್ (ಸಿಎನ್ ಜಿ) ಸ್ಥಾವರಗಳ ಸ್ಥಾಪನೆಯಿಂದಾಗಿ ದೋಣಿಗಳಿಗೆ ಕಡಿಮೆ ಖರ್ಚಿನಲ್ಲಿ ಸುಲಭವಾಗಿ ಇಂಧನ ದೊರೆಯುವಂತಾಯಿತು. ತೇಲುವ ಸಿಎನ್ ಸ್ಟೇಷನ್ ಸ್ಥಾಪನೆಯಿಂದಾಗಿ ಗಂಗಾ ನದಿಯಲ್ಲಿ ಡಿಸೇಲ್ ಇಂಜಿನ್ ದೋಣಿಗಳಿಂದಾಗಿ ಉಂಟಾಗು ತ್ತಿದ್ದ ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ವನ್ನು ಕಡಿಮೆಯಾಗಿದೆ. ಗೇಲ್ ಇಂಡಿಯಾ ಲಿಮಿಟೆಡ್ ನ ತೇಲುವ ಸಿಎನ್ ಜಿ ಸ್ಟೇಷನ್ ರವಿದಾಸ್ ಘಾಟ್ ನಲ್ಲಿ 2023 ,ನ.23ರಂದು ಆರಂಭಗೊಂಡಿತ್ತು. ನಮೋಘಾಟ್ ನಲ್ಲಿ ಡಿ.2021 ರಲ್ಲಿ ಸಿಎನ್ ಜಿ ಸ್ಟೇಷನ್ ಸ್ಥಾಪನೆಯಾಗಿದ್ದು, ಇದು ದೇಶದ ಮೊದಲ ತೇಲುವ ಸಿಎನ್ ಜಿ ಸ್ಟೇಷನ್ ಆಗಿದೆ. ಹಳೆಯ ಡಿಸೇಲ್ ಇಂಜಿನ್ ಗಳ ಬದಲಿಗೆ ಸಿಎನ್ ಜಿ ಕಿಟ್ ಅಳವಡಿಸುವುದರಿಂದದೋಣಿಯವರು ಶೇ 35ರಿಂದ 40ರಷ್ಟು ಅಧಿಕ ಮೈಲೇಜ್ ಪಡೆಯುತ್ತಿದ್ದಾರೆ. ಡಿಸೇಲ್ ದೋಣಿಗಳಿಂದಾಗಿ ಗಂಗಾನದಿಯಲ್ಲಿ ಆಗುತ್ತಿದ್ದ ಮಾಲಿನ್ಯ ಕಡಿಮೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಾರಣಾಸಿಯ ತೇಲುವ ಸಿಎನ್ ಜಿ ಸ್ಟೇಷನ್ ಗಳನ್ನು ಸುಮಾರು 17.5 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಅಧ್ಯಯನ ಪ್ರವಾಸ ಕೈಗೊಂಡಿರುವ ಕರ್ನಾಟಕದ ಪತ್ರಕರ್ತರು ವಾರಣಾಸಿಯ ತೆಲುವ ಸಿಎನ್ ಜಿ ಸ್ಟೇಷನ್ ಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಪ್ರವಾಸ ಆಯೋಜಿಸಿರುವ ಪಿಐಬಿ ಅಧಿಕಾರಿಗಳು ಪತ್ರಕರ್ತರಿಗೆ ಸಹಕಾರ ನೀಡಿದರು. ವಾರಣಾಸಿ ನಗರ ನಿಗಮದಲ್ಲಿ ನೋಂದಾಯಿತವಾಗಿರುವ ಬಹುತೇಕ ದೋಣಿಗಳನ್ನು ಗೇಲ್ ನ ಸಿಎಸ್ ಆರ್ ಯೋಜನೆಯಡಿ ಸಿಎನ್ ಜಿಗೆ ಪರಿವರ್ತಿಸಲಾಗಿದೆ. ನಮೋಘಾಟ್ ನ ಸ್ಟೇಷನ್ ನಿಂದ ದಿನಕ್ಕೆ 1000- 1500 ದೋಣಿಗಳಿಗೆ ಮತ್ತು ರವಿದಾಸ್ ಘಾಟ್ ನ ಸ್ಟೇಷನ್ 300-400 ದೋಣಿಗಳಿಗೆ ಇಂಧನ ಪೂರೈಕೆ ಸಾಮಥ್ರ್ಯ ಹೊಂದಿವೆ. ನಮೋಘಾಟ್ ನಿಂದ ನೈಸರ್ಗಿಕ ಇಂಧನವನ್ನು ಜಲ ಮಾರ್ಗದ ಮೂಲಕ ರವಿದಾಸ್ ಘಾಟ್ ಸ್ಟೇಷನ್ ಗೆ ಸಾಗಿಸಲಾಗುತ್ತದೆ. ಈ ಎರಡು ನಿಲ್ದಾಣ ಗಳ ನಿರ್ಮಾಣದ ಯಶಸ್ಸು ದೇಶದ ಇತರ ಭಾಗಗಳಲ್ಲಿ ಇಂತಹ ಸ್ಟೇಷನ್ ನಿರ್ಮಾಣ ಹಾದಿಯಲ್ಲಿ ಚಿಂತನೆ ಮಾಡಿಕೊಟ್ಟಂತಾಗಿದೆ.
ಬಯಲು ಶಾಲೆಯ ಶಿಕ್ಷಣ ಬದುಕಿನ ನಿಜವಾದ ಕಲಿಕೆ: ಉಮಾನಾಥ ಕೋಟ್ಯಾನ್
ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಎಂಥುಸಿಯಾ’
ಕೊನೆವರೆಗೂ ಕಾಡಿ ಎಡವಿದ ಜಾಕೋಬ್ ಬೆಥೆಲ್: ರೋಮಾಂಚಕ ಪಂದ್ಯದಲ್ಲಿ ಗೆದ್ದ ಭಾರತ ಟಿ20 ವಿಶ್ವಕಪ್ ಫೈನಲ್ ಗೆ ಲಗ್ಗೆ!
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್ಗಳಿಂದ ಸೋಲಿಸಿದ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸಂಜು ಸ್ಯಾಮ್ಸನ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 253 ರನ್ ಪೇರಿಸಿತು. ಗುರಿ ಬೆನ್ನಟ್ಟಿ ಹೊರಟ ಇಂಗ್ಲೆಂಡ್ ಜಾಕೋಬ್ ಬೆಥೆಲ್ ಅವರ ಅದ್ಭುತ ಶತಕದ ನೆರವಿನಿಂದ ಗೆಲುವಿನ ಸನಿಹ ಬಂದಿತ್ತು. ಆದರೆ ಅಂತಿಮ ಓವರ್ ಗಳಲ್ಲಿ ಭಾರತದ ಬೌಲರ್ ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ . ಪಾಂಡ್ಯ ಉತ್ತಮ ದಾಳಿ ಸಂಘಟಿಸಿದ ಕಾರಣ ಭಾರತ ತಂಡ ಪಂದ್ಯದಲ್ಲಿ ಹಿಡಿತ ಸಾಧಿಸಲು ಕಾರಣವಾಯಿತು.
ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ: ಪ್ರಕರಣ ದಾಖಲು
ಮಂಗಳೂರು, ಮಾ.5: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28,46,688 ರೂ. ಸೈಬರ್ ವಂಚನೆ ಮಾಡಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 68ರ ಹರೆಯದ ತಾನು ನಿವೃತ್ತಿಯಿಂದ ಬಂದ ಹಣವನ್ನು ಬ್ಯಾಂಕ್ನಲ್ಲಿರಿಸಿದ್ದೆ. ಮಾ.3ರಂದು ರಾತ್ರಿ 9.30ರ ವೇಳೆಗೆ ತನ್ನ ಮೊಬೈಲ್ ಹ್ಯಾಕ್ ಆಗಿದ್ದು, ಮೆಸೇಜ್ಗಳನ್ನು ಪರಿಶೀಲಿಸಿದಾಗ 4 ಬ್ಯಾಂಕ್ ಖಾತೆಗಳಿಂದ 28,46,688 ರೂ.ವನ್ನು ನನ್ನ ಗಮನಕ್ಕೆ ಬಾರದೆ ವಿದ್ಡ್ರಾ ಮಾಡಲಾಗಿದೆ. ಬಳಿಕ ತಾನು ಬ್ಯಾಂಕ್ ಹೆಲ್ಪ್ಲೈನ್ ನಂಬರ್ಗೆ ಕರೆ ಮಾಡಿದಾಗ ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡ್ ನ್ನು ಫ್ರೀಜ್ ಮಾಡಿಸಿರುವುದಾಗಿ ಸೈಬರ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಬ್ರಹ್ಮಾವರ, ಮಾ.5: ಶಿರಿಯಾರದ ಎಸ್.ಯೋಗೀಶ್ ಎಂಬವರ ಮಾಲಕತ್ವದ ವಿಶ್ವಂಬರ ಕ್ಯಾಶ್ಯೂ ಇಂಡಸ್ಟ್ರೀಸ್ನಲ್ಲಿ ಲೆಕ್ಕಪತ್ರ ಕಾರ್ಯನಿರ್ವಹಣೆ ಹಾಗೂ ದಾಸ್ತಾನು ಮೇಲ್ವಿಚಾರಕ ಹುದ್ದೆಯಲ್ಲಿದ್ದ ರತೀಶ್, ರಾಜೇಶ್ ಹಾಗೂ ಸುಮಂತ್ ಇವರು ಇತರ ಆರೋಪಿಗಳೊಂದಿಗೆ ಸೇರಿ 2023ರ ಎ.1ರಿಂದ 2025ರ ಮೇ 18ರ ಮಧ್ಯಾವಧಿಯಲ್ಲಿ ಸಂಸ್ಥೆಗೆ ಸಂಬಂಧಿಸಿದ 1,61,74,500ರೂ.ಗಳನ್ನು ಸ್ವಂತಕ್ಕೆ ಬಳಸಿಕೊಂಡು ವಂಚಿಸಿದ್ದಾರೆ ಎಂದು ಅವರ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷ ಸೇವಿಸಿ ಡಿಪ್ಲೋಮಾ ವಿದ್ಯಾರ್ಥಿ ಮೃತ್ಯು
ಕೊಲ್ಲೂರು, ಮಾ.5: ಫೆ.16ರಂದು ಕಳೆನಾಶಕ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕೊಳಲಗಿರಿ ಜಿಟಿಟಿಸಿ ಕಾಲೇಜಿನಲ್ಲಿ ಡಿಪ್ಲೋಮಾ ವಿದ್ಯಾಭ್ಯಾಸ ಮಾಡುತಿದ್ದ ಕೆರಾಡಿ ಹೊಸಮನೆಯ ಮಂಜುನಾಥ ಎಂಬವರ ಮಗ ಮನೀಷ್ (16) ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾನೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಜೆಟ್ಗೂ ಮುನ್ನಾದಿನ ಕರ್ನಾಟಕ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. ಒಳಮೀಸಲು ಬಗ್ಗೆ ಯಾವುದೇ ಸ್ಪಷ್ಟ ನಿರ್ಣಯ ತೆಗೆದುಕೊಂಡಿದೆ. ಬದಲಾಗಿ, ವಿಶೇಷ ಸಭೆ ಕರೆಯಲು ತೀರ್ಮಾನಿಸಲಾಗಿದೆ. ಜತೆಗೆ ಕೆಎಸ್ಆರ್ಟಿಸಿಗೆ ಹೊಸ ಬಸ್ ಖರೀದಿಗೆ ಅನುಮೋದನೆ ಸೇರಿದಂತೆ ಹಲವು ತೀರ್ಮಾನಗಳನ್ನು ಸರ್ಕಾರ ಮಾಡಿದೆ.
ಅಟೋ ಢಿಕ್ಕಿ; ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು
ಕೋಟ, ಮಾ.5: ಶಿರಿಯಾರ ಗ್ರಾಮದ ಸಾಹೇಬ್ರಕಟ್ಟೆ ಶನೀಶ್ವರ ದೇವಸ್ಥಾನದ ಬಳಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಅತಿವೇಗದಿಂದ ಬಂದ ಅಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡು ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರನ್ನು ಯಡ್ತಾಡಿ ಗ್ರಾಮದ ಹಟ್ಟಿಕೊಟ್ಟಿಗೆ ಮನೆಯ ಸಂಜೀವ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಫೆ.22ರಂದು ಮಗ ಪ್ರವೀಣ ಪೂಜಾರಿಯೊಂದಿಗೆ ಕಾಜ್ರಳ್ಳಿ ದೇವಸ್ಥಾನಕ್ಕೆ ಹೋಗಿ ಮನೆಗೆ ಬರುವಾಗ ಈ ಘಟನೆ ನಡೆದಿದೆ. ಸಂಜೀವ ಪೂಜಾರಿ ಅವರನ್ನು ಕೂಡಲೇ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಅಜ್ಜರ ಕಾಡಿನ ಜಿಲ್ಲಾಸ್ಪತ್ರೆಗೆ ವರ್ಗಾ ಯಿಸಲಾಗಿತ್ತು. ಅಲ್ಲಿ ಅವರು ಇಂದು ಮುಂಜಾನೆ ನಿಧನರಾದರು. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೆಂದೂ ಭಾರತ ಸರಕಾರ ಇಷ್ಟು ಪುಕ್ಕಲಾಗಿರಲಿಲ್ಲ: ಕೇಂದ್ರ ಸರಕಾರವನ್ನು ಟೀಕಿಸಿದ ಜೈರಾಮ್ ರಮೇಶ್
ಇರಾನ್ ಯುದ್ಧನೌಕೆಯ ಮೇಲೆ ಅಮೆರಿಕ ದಾಳಿಯ ಬಗ್ಗೆ ಸರಕಾರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕ
ಕೆನಡಾದಲ್ಲಿ ಭಾರತೀಯ ಮೂಲದ ಯೂಟ್ಯೂಬರ್ ನ್ಯಾನ್ಸಿ ಹತ್ಯೆ
ಒಟ್ಟಾವ: ಪಂಜಾಬ್ ಮೂಲದ ಯೂಟ್ಯೂಬರ್, 25 ವರ್ಷದ ನ್ಯಾನ್ಸಿ ಗ್ರೆವಾಲ್ರನ್ನು ಕೆನಡಾದ ಒಂಟಾರಿಯೊದಲ್ಲಿ ಇರಿದು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಮಂಗಳವಾರ ರಾತ್ರಿ ಒಂಟಾರಿಯೋದ ಟಾಡ್ಲೇನ್ ಬ್ಲಾಕ್ನಲ್ಲಿ ಮಹಿಳೆಯೊಬ್ಬರು ಚೂರಿ ಇರಿತದಿಂದ ಗಂಭೀರ ಗಾಯಗೊಂಡಿರುವ ಮಾಹಿತಿಯಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳು ನ್ಯಾನ್ಸಿ ಗ್ರೆವಾಲ್ರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗ್ರೆವಾಲ್ ಖಾಲಿಸ್ತಾನ್ ಪರ ಗುಂಪುಗಳ ವಿರುದ್ಧ ಮಾತನಾಡುತ್ತಿದ್ದರು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅವರನ್ನು ಟೀಕಿಸುತ್ತಿದ್ದರು. ಸ್ಥಳೀಯ ಸಿಸಿ ಟಿವಿಗಳನ್ನು ಆಧರಿಸಿ ತನಿಖೆ ಮುಂದುವರಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಅಸ್ಸಾಂನಲ್ಲಿ ರಾಡಾರ್ ನಿಂದ ಸಂಪರ್ಕ ಕಳೆದುಕೊಂಡ ಸುಖೋಯ್ ಯುದ್ಧ ವಿಮಾನ; ಶೋಧ ಕಾರ್ಯಾಚರಣೆ ಆರಂಭ
ಜೋರ್ಹತ್ (ಅಸ್ಸಾಂ): ಭಾರತೀಯ ವಾಯುಪಡೆಯ ಸುಖೋಯ್ ಸು–30ಎಂಕೆಐ ಯುದ್ಧ ವಿಮಾನವು ಗುರುವಾರ ಸಂಜೆ ಅಸ್ಸಾಂನಲ್ಲಿ ರಾಡಾರ್ ಸಂಪರ್ಕವನ್ನು ಕಳೆದುಕೊಂಡಿದ್ದು, ಅದರ ಪತ್ತೆಗಾಗಿ ವಾಯುಪಡೆ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ವರದಿಯಾಗಿದೆ. ಅಸ್ಸಾಂನ ಜೋರ್ಹತ್ ವಾಯುನೆಲೆಯಿಂದ ಹಾರಿದ್ದ ಈ ಯುದ್ಧ ವಿಮಾನವು ಸಂಜೆ 7.42ರವರೆಗೆ ರಾಡಾರ್ ಸಂಪರ್ಕದಲ್ಲಿದ್ದು, ನಂತರ ಸಂಪರ್ಕ ಕಡಿತಗೊಂಡಿದೆ ಎಂದು ವಾಯುಪಡೆ ತಿಳಿಸಿದೆ. ವಿಮಾನವನ್ನು ಪತ್ತೆಹಚ್ಚಲು ಶೋಧ–ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ನೀಡಿರುವ ಭಾರತೀಯ ವಾಯುಪಡೆ, “ಐಎಎಫ್ ಸು–30ಎಂಕೆಐ ಯುದ್ಧ ವಿಮಾನವು ಅಸ್ಸಾಂನ ಜೋರ್ಹತ್ನಿಂದ ಹಾರಿತ್ತು ಮತ್ತು ಸಂಜೆ 7.42ರವರೆಗೆ ಸಂಪರ್ಕದಲ್ಲಿತ್ತು. ಬಳಿಕ ಸಂಪರ್ಕ ಕಳೆದುಕೊಂಡಿದೆ. ಶೋಧ–ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ” ಎಂದು ತಿಳಿಸಿದೆ. ಸುಖೋಯ್ ಸು–30ಎಂಕೆಐ ಯುದ್ಧ ವಿಮಾನವು ಭಾರತೀಯ ವಾಯುಪಡೆಯ ಪ್ರಮುಖ ಮುಂಚೂಣಿಯ ಯುದ್ಧ ವಿಮಾನಗಳಲ್ಲಿ ಒಂದಾಗಿದೆ. 2000ರ ದಶಕದ ಆರಂಭದಲ್ಲಿ ಈ ವಿಮಾನಗಳನ್ನು ವಾಯುಪಡೆಗೆ ಸೇರಿಸಲಾಯಿತು. ಅವಳಿ ಎಂಜಿನ್ ಹೊಂದಿರುವ ಈ ಯುದ್ಧ ವಿಮಾನವನ್ನು ರಷ್ಯಾ ಅಭಿವೃದ್ಧಿಪಡಿಸಿದ್ದು, ಇದರಲ್ಲಿ ಭಾರತೀಯ, ಫ್ರೆಂಚ್ ಹಾಗೂ ಇಸ್ರೇಲಿ ತಂತ್ರಜ್ಞಾನಗಳ ಏವಿಯಾನಿಕ್ಸ್ ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಗಳ ಸಂಯೋಜನೆ ಇದೆ. ಥ್ರಸ್ಟ್–ವೆಕ್ಟರಿಂಗ್ ಎಂಜಿನ್ಗಳು ಹಾಗೂ ಸುಧಾರಿತ ಹಾರಾಟ ನಿಯಂತ್ರಣ ವ್ಯವಸ್ಥೆಗಳ ನೆರವಿನಿಂದ ಈ ವಿಮಾನವು ಸಂಕೀರ್ಣ ವೈಮಾನಿಕ ಕುಶಲತೆಗಳನ್ನು ಪ್ರದರ್ಶಿಸಲು ಸಮರ್ಥವಾಗಿದೆ. ಇದನ್ನು ಭಾರತೀಯ ವಾಯುಪಡೆಯ ಅತ್ಯಂತ ಸಾಮರ್ಥ್ಯವುಳ್ಳ ಯುದ್ಧ ವಿಮಾನಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.
ಕಾಂಗೋ: ಗಣಿ ಕುಸಿದು ಕನಿಷ್ಠ 200 ಮಂದಿ ಸಾವು
ಕಿನ್ಷಾಸ: ಪೂರ್ವ ಕಾಂಗೋದ ಕೋಲ್ಟನ್(ಮಂದ ಕಪ್ಪು ಅದಿರು) ಗಣಿಗಾರಿಕೆ ಪ್ರದೇಶದಲ್ಲಿ ಗಣಿಯೊಂದು ಕುಸಿದು ಕನಿಷ್ಠ 200 ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಎಂ23 ಬಂಡುಕೋರ ಗುಂಪಿನ ನಿಯಂತ್ರಣದಲ್ಲಿರುವ ರುಬಯಾ ಗಣಿಯಲ್ಲಿ ಮಂಗಳವಾರ ದುರಂತ ಸಂಭವಿಸಿದೆ. ಕನಿಷ್ಠ 200 ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಇನ್ನೂ ಕೆಲವರು ನಾಪತ್ತೆಯಾಗಿರುವ ಮಾಹಿತಿಯಿದೆ ಎಂದು ಕಾಂಗೋದ ಗಣಿ ಇಲಾಖೆ ಹೇಳಿದೆ. ಇದನ್ನು ಸ್ಥಳೀಯರೂ ದೃಢಪಡಿಸಿದ್ದಾರೆ. ಆದರೆ ಈ ಹೇಳಿಕೆಯನ್ನು ತಿರಸ್ಕರಿಸಿರುವ ಎಂ23 ಬಂಡುಕೋರ ಗುಂಪು, ಗಣಿಕುಸಿತ ಸಂಭವಿಸಿಲ್ಲ. ಬಾಂಬ್ ದಾಳಿಯಿಂದ ಸಾವು ಸಂಭವಿಸಿದೆ. ಕೇವಲ ಐದು ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರತಿಪಾದಿಸಿದೆ.
ಬೆಂಗಳೂರು : ನೇರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಬದ್ಧತೆಯಿದೆ. ಆದರೆ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿದ್ದು, ಮತ್ತೊಮ್ಮೆ ಸಭೆ ಸೇರಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 56 ಸಾವಿರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶಕ್ಕೆ ಇಂದಿನ ಸಭೆಯಲ್ಲಿ ಕೈಗೊಂಡ ನಿರ್ಧಾರದಿಂದ ಯಾವುದೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದರು. ಒಳ ಮೀಸಲಾತಿ ಕುರಿತು ಸ್ವಲ್ಪ ಕಾಲ ಸಂಪುಟ ಸಭೆಯಲ್ಲಿ ಚರ್ಚೆಯಾಯಿತು. ಆದರೆ, ಅಪೂರ್ಣವಾಯಿತು. ಇನ್ನು ಹಲವು ಸಚಿವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕಿದೆ. ಆದುದರಿಂದ, ಈ ಕುರಿತು ಚರ್ಚಿಸಲು ಮುಂದಿನ ಸಭೆಯನ್ನು ಯಾವಾಗ ಕರೆಯಬೇಕು ಎಂಬುದರ ಕುರಿತು ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಸಚಿವ ಸಂಪುಟವು ಮುಖ್ಯಮಂತ್ರಿಗೆ ನೀಡಿದೆ. ಇತರ ನಿರ್ಣಯಗಳು : ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 144 ಬಿಎಸ್-6 ನಗರ ಸಾರಿಗೆ ಡೀಸೆಲ್ ಬಸ್ಸುಗಳನ್ನು 62 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ವ್ಯಾಪ್ತಿಯ ವಿರಿಜಾ, ದೇವರಾಯ, ಆರ್.ಬಿ.ಎಲ್.ಎಲ್ ಮತ್ತು ಬಂಗಾರದೊಡ್ಡಿ ನಾಲೆಗಳ ವಿತರಣಾ ನಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು 60 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು. ಬೀದರ್ ಜಿಲ್ಲೆಯಲ್ಲಿ ಮಾಂಜ್ರಾ ನದಿಗೆ ಅಡ್ಡಲಾಗಿ ಭಾಲ್ಕಿ ತಾಲೂಕಿನಲ್ಲಿ ನಿರ್ಮಿಸಿರುವ ಜೀರಗಿಯಾಳ್, ಮಾಣಿಕೇಶ್ವರ ಮತ್ತು ಚಂದಾಪುರ ಹಾಗೂ ಔರಾದ್ ತಾಲೂಕಿನಲ್ಲಿ ನಿರ್ಮಿಸಿರುವ ಹಾಲಹಳ್ಳಿ ಒಟ್ಟು ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ಗಳ ಪುನಶ್ಚೇತನ ಕಾಮಗಾರಿಗಳನ್ನು 151.70 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. ‘ಕರ್ನಾಟಕ ಪುರಸಭೆಗಳ ಕಾಯ್ದೆ-1964’ ಹಾಗೂ ‘ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ-1976’ರ ಕೆಲವು ಪ್ರಕರಣಗಳಿಗೆ ತಿದ್ದುಪಡಿ ಮಾಡಲು ನಿರ್ಧರಿಸಲಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಧರಣಿ ಮಾಡುತ್ತಿರುವ ವೈದ್ಯರು ಹಾಗೂ ಇತರ ಸಿಬ್ಬಂದಿಗಳ ಪ್ರತಿನಿಧಿಗಳನ್ನು ಕರೆದು ಮಾತುಕತಡೆ ನಡೆಸುವಂತೆ ಸಚಿವ ಸಂಪುಟ ಆರೋಗ್ಯ ಸಚಿವರಿಗೆ ಸೂಚನೆ ನೀಡಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು. ಮುಂದಿನ ದಿನಗಳಲ್ಲಿ ಒಳ ಮೀಸಲಾತಿ ಕುರಿತು ವಿಸ್ತತೃತವಾಗಿ ಚರ್ಚೆ ಮಾಡಿ, ತೀರ್ಮಾನ ಕೈಗೊಂಡು, ಸಮಸ್ಯೆಯನ್ನು ಪರಿಹಾರ ಮಾಡಿಕೊಳ್ಳುತ್ತೇವೆ. ಮೀಸಲಾತಿ ವಿಚಾರದಲ್ಲಿ ಕೆಲವರು ನ್ಯಾಯಾಲಯದ ಮೊರೆ ಹೋಗಿರುವುದರಿಂದ, ಇದು ಸದ್ಯಕ್ಕೆ ಸ್ಥಗಿತವಾಗಿದೆಯೆ ಹೊರತು, ನೇಮಕಾತಿ ಪ್ರಕ್ರಿಯೆಗೆ ಅಡ್ಡಿಯಾಗಿಲ್ಲ. ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೊನ್ ಜೊತೆ ದೂರವಾಣಿ ಮಾತುಕತೆ ನಡೆಸಿದ್ದು, ಪಶ್ಚಿಮ ಏಶ್ಯದಲ್ಲಿ ಭುಗಿಲೆದ್ದಿರುವ ಭೀಕರ ಸಂಘರ್ಷದ ಬಗ್ಗೆ ಕಳವಳ ವ್ಯಕ್ತಪಡಿಸಿದರು, ಮಾತುಕತೆ ಹಾಗೂ ರಾಜತಾಂತ್ರಿಕತೆಗೆ ಮರಳುವ ಮೂಲಕ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಸ್ಥಾಪಿಸುವ ಅಗತ್ಯವನ್ನು ಅವರು ಪ್ರತಿಪಾದಿಸಿದರು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ‘‘ ಇಂದು ನಾನು ನನ್ನ ಗೆಳೆಯ ಇಮ್ಯಾನುಯೆಲ್ ಮ್ಯಾಕ್ರೊನ್ ಜೊತೆಗೆ ಮಾತನಾಡಿದ್ದೇನೆ. ಪಶ್ಚಿಮ ಏಶ್ಯಾದ ಪರಿಸ್ಥಿತಿಯ ಬಗ್ಗೆ ನಮಗಿರುವ ಸಮಾನವಾದ ಕಳವಳಗಳ ಬಗ್ಗೆ ಚರ್ಚಿಸಿದೆವು. ಆ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಸಾಧ್ಯವಾದಷ್ಟು ಬೇಗನೇ ಮರುಸ್ಥಾಪಿಸಲು ನಾವು ನಿಕಟವಾಗಿ ಮಾತುಕತೆ ನಡೆಸಲಿದ್ದೇವೆ ಹಾಗೂ ಸಮನ್ವಯ ಪ್ರಯತ್ನಗಳನ್ನು ನಡೆಸಲಿದ್ದೇವೆ’’ ಎಂದರು. ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಜಂಟಿ ದಾಳಿಗಳು ಆರಂಭಗೊಂಡ ಬಳಿಕ ಪ್ರಧಾನಿ ಮೋದಿ ಅವರು ಪಶ್ಚಿಮ ಏಶ್ಯಾದ ಎಂಟು ರಾಷ್ಟ್ರಗಳ ನಾಯಕರ ಜೊತೆ ಮಾತುಕತೆ ನಡೆಸಿದ್ದರು.
ಒಳಮೀಸಲಾತಿ ಕುರಿತು ಗುಂಪುಗಾರಿಕೆ ಅನಾರೋಗ್ಯಕರ : ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಚಾರವಾಗಿ ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಎರಡು, ಮೂರು ಗುಂಪುಗಳು ಸೃಷ್ಟಿಯಗಿದ್ದು, ಈ ಬೆಳವಣಿಗೆ ಅನಾರೋಗ್ಯಕರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬುಧವಾರ ನಗರದ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಏರ್ಪಡಿಸಲಾಗಿದ್ದ ಸ್ವಾಭಿಮಾನಿ ಜನತಾ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೀಸಲಾತಿ ವಿಷಯ ಕೆದಕಿ ರಾಜಕೀಯ ಲಾಭ ಮಾಡಿಕೊಳ್ಳುವ ಪರಿಪಾಠ ಹೆಚ್ಚಾಗಿದೆ. ಸಾಮಾಜಿಕವಾಗಿ ಅಶಾಂತಿ, ಸಂಘರ್ಷ, ಅಪನಂಬಿಕೆ ಸೃಷ್ಟಿಸುವ ಕೆಲಸ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಇವತ್ತು ಸಂಪುಟದಲ್ಲಿ ಮೀಸಲಾತಿ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಒಳ ಮೀಸಲು ಬಗ್ಗೆ ಸಂಪುಟದಲ್ಲಿ ಎರಡು ಮೂರು ಗುಂಪುಗಳು ಆಗಿವೆ. ಇದು ಅನಾರೋಗ್ಯಕರ ಎಂದರು. ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಎಂಟು ವರ್ಷಗಳಿಂದ ಮುಖ್ಯಮಂತ್ರಿ ಆಗಿದ್ದಾರೆ. ದೇವರಾಜು ಅರಸು ಅವರ ದಾಖಲೆ ಮುರಿದಿದ್ದಾರೆ. ಅಹಿಂದಾ ನಾಯಕರು ಎಂದು ಹೇಳಿಕೊಳ್ಳುತ್ತಾರೆ. ಜಾತಿ ಜಾತಿಯ ಹೆಸರು ಹೇಳಿಕೊಂಡು ರಾಜಕೀಯ ಲಾಭ ಮಾಡಿಕೊಂಡಿದ್ದಾರೆ. ಆದರೂ ಈವರೆಗೆ ಒಳ ಮೀಸಲಾತಿ ಬಗ್ಗೆ ನಿರ್ಧಾರ ಕೈಗೊಳ್ಳುವುದು ಅವರಿಂದ ಸಾಧ್ಯವಾಗಿಲ್ಲ ಎಂದು ಅವರು ಟೀಕಿಸಿದರು. ಸಾಮಾಜಿಕ ನ್ಯಾಯ ಎನ್ನುವ ಅವರು ಚುನಾವಣೆ ಬಂದಾಗ ಅಥವಾ ರಾಜಕೀಯ ಆಪತ್ತು ಬಂದಾಗ ಅಷ್ಟೇ ಅಹಿಂದಾ ನೆನಪಾಗುತ್ತದೆ. ಆಮೇಲೆ ಅವರೆಲ್ಲೋ, ಅಹಿಂದಾ ಎಲ್ಲೋ? ಇದನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕು ಎಂದ ಅವರು, ರಾಜ್ಯದ ಎಲ್ಲ ಸಮುದಾಯಗಳಿಗೆ ನಾನು ಒಂದು ಕರೆ ನೀಡಲು ಬಯಸುತ್ತೇನೆ. ಜನಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಐದು ವರ್ಷಗಳ ಸರಕಾರಕ್ಕೆ ಆಶೀರ್ವಾದ ಮಾಡಿ. ಇವರು ಮಾಡಿರುವ ಅನ್ಯಾಯ ಎಲ್ಲವನ್ನೂ ಸರಿ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹೂಡಿ ವಿಜಯಕುಮಾರ್ ಅವರು ತಮ್ಮ ಸ್ವಾಭಿಮಾನಿ ಜನತಾ ಪಕ್ಷವನ್ನು ಜೆಡಿಎಸ್ನಲ್ಲಿ ವಿಲೀನ ಮಾಡಿದಲ್ಲದೆ, ಅವರ ಪಕ್ಷದ ನೂರಾರು ಮುಖಂಡರು, ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾದರು. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೋಲಾರ ಲೋಕಸಭೆ ಸದಸ್ಯ ಮಲ್ಲೇಶ್ ಬಾಬು, ಶಾಸಕ ವೆಂಕಟಶಿವರೆಡ್ಡಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪ್ರಮುಖರಿದ್ದರು.
ಇರಾನಿನ ಯುದ್ಧನೌಕೆ ‘ಐಆರ್ಐಎಸ್ ದೇನಾ’ಯಿಂದ ಬಂದ ಸಂಕಷ್ಟದ ಕರೆಗೆ ಸ್ಪಂದಿಸಿದ್ದೇವೆ: ಭಾರತೀಯ ನೌಕಾಪಡೆ
ಹೊಸದಿಲ್ಲಿ: ಶ್ರೀಲಂಕಾ ಕರಾವಳಿಯ ಸಮೀಪ ಇರಾನಿನ ಯುದ್ಧನೌಕೆ ‘ಐಆರ್ಐಎಸ್ ದೇನಾ’ಯಿಂದ ಬಂದ ಸಂಕಷ್ಟದ ಕರೆಗೆ ಸ್ಪಂದಿಸಿ ಭಾರತೀಯ ನೌಕಾಪಡೆ ಶೋಧ–ರಕ್ಷಣಾ (ಎಸ್ಎಆರ್) ಕಾರ್ಯಾಚರಣೆ ಆರಂಭಿಸಿದೆ ಎಂದು ನೌಕಾಪಡೆ ಗುರುವಾರ ತಿಳಿಸಿದೆ. ವಿಶಾಖಪಟ್ಟಣದಲ್ಲಿ ನಡೆದ ‘ಮಿಲನ್’ ನೌಕಾ ಕವಾಯತು ಹಾಗೂ ಅಂತರರಾಷ್ಟ್ರೀಯ ಫ್ಲೀಟ್ ರಿವ್ಯೂನಲ್ಲಿ ಭಾಗವಹಿಸಿ ಇರಾನ್ ಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಮೆರಿಕದ ಜಲಾಂತರ್ಗಾಮಿ ನೌಕೆಯಿಂದ ಟಾರ್ಪಿಡೊ ದಾಳಿಗೆ ಒಳಗಾದಿರಬಹುದೆಂದು ಹೇಳಲಾಗುತ್ತಿರುವ ‘ಐಆರ್ಐಎಸ್ ದೇನಾ’ಯಿಂದ ತುರ್ತು ಕರೆ ಬಂದಿತ್ತು. ನೌಕಾಪಡೆಯ ಹೇಳಿಕೆಯ ಪ್ರಕಾರ, ಮಾರ್ಚ್ 4ರ ಮುಂಜಾನೆ ಕೊಲಂಬೊದಲ್ಲಿರುವ ಸಮುದ್ರ ರಕ್ಷಣಾ ಸಮನ್ವಯ ಕೇಂದ್ರಕ್ಕೆ (ಎಂಆರ್ಸಿಸಿ) ‘ಐಆರ್ಐಎಸ್ ದೇನಾ’ಯಿಂದ ಸಂಕಷ್ಟದ ಸಂದೇಶ ಬಂದಿದೆ. ಈ ಯುದ್ಧನೌಕೆ ಶ್ರೀಲಂಕಾದ ವ್ಯಾಪ್ತಿಯಲ್ಲಿರುವ ಶೋಧ–ರಕ್ಷಣಾ ಪ್ರದೇಶದ ಗ್ಯಾಲೆ ನಗರದಿಂದ ಸುಮಾರು 20 ನಾಟಿಕಲ್ ಮೈಲುಗಳಷ್ಟು ಪಶ್ಚಿಮಕ್ಕೆ ಕಾರ್ಯನಿರ್ವಹಿಸುತ್ತಿತ್ತು. ಕರೆ ಬಂದ ತಕ್ಷಣ ಭಾರತೀಯ ನೌಕಾಪಡೆ ಶೋಧ–ರಕ್ಷಣಾ ಕಾರ್ಯಾಚರಣೆಗಳನ್ನು ಆರಂಭಿಸಿದೆ. ಶ್ರೀಲಂಕಾ ಈಗಾಗಲೇ ಆರಂಭಿಸಿದ್ದ ಶೋಧ ಕಾರ್ಯವನ್ನು ಬಲಪಡಿಸಲು ಬುಧವಾರ ಬೆಳಿಗ್ಗೆ 10 ಗಂಟೆಗೆ ದೀರ್ಘ ಶ್ರೇಣಿಯ ಕಡಲ ಗಸ್ತು ವಿಮಾನ ‘ಪಿ–8ಐ’ ಅನ್ನು ನಿಯೋಜಿಸಲಾಯಿತು. ಏರ್ಡ್ರಾಪ್ ಮಾಡಬಹುದಾದ ಲೈಫ್ ರಾಫ್ಟ್ಗಳನ್ನು ಹೊಂದಿರುವ ಮತ್ತೊಂದು ವಿಮಾನವನ್ನು ಕೂಡ ತಕ್ಷಣದ ನಿಯೋಜನೆಗಾಗಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ. ಇದಲ್ಲದೆ, ಆ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಐಎನ್ಎಸ್ ತರಂಗಿಣಿ’ ಹಡಗನ್ನು ರಕ್ಷಣಾ ಕಾರ್ಯಾಚರಣೆಗಳಿಗೆ ಸಹಾಯ ಮಾಡಲು ನಿಯೋಜಿಸಲಾಗಿದ್ದು, ಅದು ಬುಧವಾರ ಸಂಜೆ 4 ಗಂಟೆಗೆ ಶೋಧ ಪ್ರದೇಶವನ್ನು ತಲುಪಿದೆ. ಹೆಚ್ಚುವರಿಯಾಗಿ, ‘ಐಎನ್ಎಸ್ ಇಕ್ಷಾಕ್’ ಹಡಗು ಕೊಚ್ಚಿಯಿಂದ ಹೊರಟಿದ್ದು, ಹಡಗು ದುರಂತದಲ್ಲಿ ಕಾಣೆಯಾಗಿರುವ ಸಿಬ್ಬಂದಿಯನ್ನು ಹುಡುಕುವ ಮಾನವೀಯ ಕಾರ್ಯಾಚರಣೆಗೆ ನೆರವಾಗಲು ಆ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ನೌಕಾಪಡೆ ತಿಳಿಸಿದೆ. ಶೋಧ–ರಕ್ಷಣಾ ಕಾರ್ಯಾಚರಣೆಗಳಲ್ಲಿ ಶ್ರೀಲಂಕಾ ನೌಕಾಪಡೆ ಹಾಗೂ ಇತರ ಸಂಸ್ಥೆಗಳೊಂದಿಗೆ ಸಮನ್ವಯ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಿ20 ವಿಶ್ವಕಪ್ 2026 ಸೆಮಿಫೈನಲ್: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್
Sanju Samson: ಟಿ20 ವಿಶ್ವಕಪ್ 2026 ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಈ ನಿರ್ಣಾಯಕ ಪಂದ್ಯದಲ್ಲಿ ಕೇವಲ 42 ಎಸೆತಗಳಲ್ಲಿ 89 ರನ್ ಸಿಡಿಸಿ ಗಮನ ಸೆಳೆದರು. ಸಂಜು 16 ರನ್ ಗಳಿಸಿದ್ದಾಗ ಹ್ಯಾರಿ ಬ್ರೂಕ್ ಕೈಚೆಲ್ಲಿದ ಕ್ಯಾಚ್ ಪಂದ್ಯಕ್ಕೆ ತಿರುವು ನೀಡಿತು. ಇದೇ ಅವಕಾಶವನ್ನು ಸಂಜು
ಕುಂದಾಪುರ ವಲಯದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ದಿನಾಚರಣೆ
ಕುಂದಾಪುರ, ಮಾ.5: ಕುಂದಾಪುರ ತಾಲೂಕಿನ ವಿವಿಧ ಚರ್ಚ್ಗಳಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ದಿನಾಚರಣೆಯನ್ನು ತ್ತೀಚೆಗೆ ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು. ಕುಂದಾಪುರ ರೋಜರಿ ಮಾತಾ ಇಗರ್ಜಿಯಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ ಯಲ್ಲಿ ಚರ್ಚಿನ ಧರ್ಮಗುರುಗಳಾದ ವಂ. ಪಾವ್ಲ್ ರೇಗೊ ನೀತಿ ಶಿಕ್ಷಣ ಪಡೆಯುವ ಮಕ್ಕಳು ಹಾಗೂ ಶಿಕ್ಷಕರು ಪ್ರಾರ್ಥನ ವಿಧಿಯೊಂದಿಗೆ ಪವಿತ್ರ ಬಲಿದಾನ ವನ್ನು ಅರ್ಪಿಸಿದರು. ಕ್ರೈಸ್ತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು, ಬಲಿದಾನದ ಪ್ರಾರ್ಥನ ವಿಧಿಗಳಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ನೀತಿ ಶಿಕ್ಷಣದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಬಹುಮಾನ ವಿತರಿಸಿ, ಶಿಕ್ಷಕರಿಗೆ ಸನ್ಮಾನಿಸಿ ನೆನಪಿನ ಕಾಣಿಕೆಯನ್ನು ನೀಡಿದರು. 1ರಿಂದ 10 ನೇ ತರಗತಿ ಮಕ್ಕಳಿಂದ ನೃತ್ಯ, ಪ್ರಹಸನ, ಕಾರ್ಯಕ್ರಮಗಳು ನಡೆದವು. ನೀತಿ ಶಿಕ್ಷಣ ಶಿಕ್ಷಕರ ಸಂಚಾಲಕಿ ವೀಣಾ ಡಿಸೋಜಾ ವರದಿಯನ್ನು ವಾಚಿಸಿದರು, ಸಂಚಾಲಿಕೆಯಾಗಿ 9 ವರ್ಷಗಳ ಸೇವೆಯನ್ನು ಗುರುತಿಸಿ ಅವರನ್ನು ಸನ್ಮಾನಿಸಲಾಯಿತು. ಪಡುಕೋಣೆ: ಪಡುಕೋಣೆಯ ಸಂತ ಅಂತೋನಿ ಚರ್ಚ್ನಲ್ಲಿ ಧರ್ಮ ಗುರು ವಂ. ಪ್ರಾನ್ಸಿಸ್ ಕರ್ನೆಲಿಯೊ ಮತ್ತು ಡೊನ್ ಬೊಸ್ಕೊ ಸಂಸ್ಥೆಯ ಆಡಳಿತಾಧಿಕಾರಿ ವಂ.ಅರ್ನೊಲ್ಡ್ ಮಥಾಯಸ್ ಬಲಿಪೂಜೆ ಅರ್ಪಿಸಿ ಸಂದೇಶ ನೀಡಿದರು. ದೇವಪೀಠದ ಮಕ್ಕಳು, ಕ್ರೈಸ್ತ ಶಿಕ್ಷಣದ ಮಕ್ಕಳು ಪ್ರಾರ್ಥನಾ ವಿಧಿಯಲ್ಲಿ ಭಾಗಿಯಾದರು. ಸಭಾ ಕಾರ್ಯಕ್ರಮದಲ್ಲಿ ನೀತಿ ಶಿಕ್ಷಣದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಬಹುಮಾನ ವಿತರಿಸಿ, ಶಿಕ್ಷಕರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು 1 ರಿಂದ 10ನೇ ತರಗತಿ ಮಕ್ಕಳಿಂದ ನೃತ್ಯ, ಪ್ರಹಸನ, ಕಾರ್ಯಕ್ರಮಗಳು ನಡೆದವು. ಕ್ರೆಸ್ತ ಶಿಕ್ಷಣದ ಸಂಯೋಜಕಿ ಶಾಂತಿ ಡಿ’ಸಿಲ್ವಾ ಉಪಸ್ಥಿತರಿದ್ದರು. ತಲ್ಲೂರು: ತಲ್ಲೂರಿನ ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಕ್ರೈಸ್ತ ಶಿಕ್ಷಣ ಆಯೋಗದ ನೇತೃತ್ವ ದಲ್ಲಿ ಮಂಗಳೂರು ಧರ್ಮಪ್ರಾಂತದ ವೈಸಿಎಸ್ ನಿರ್ದೇಶಕರಾದ ವಂ.ರೋಷನ್ ಡಿಸೋಜಾ ಪ್ರಧಾನ ಯಾಜಕ ರಾಗಿ ಬಲಿ ಪೂಜೆ ಅರ್ಪಿಸಿ ಸಂದೇಶ ನೀಡಿದರು. ಚರ್ಚಿನ ಧರ್ಮಗುರು ವಂ.ಎಡ್ವಿನ್ ಡಿಸೋಜಾ ದಿವ್ಯ ಬಲಿಪೂಜೆ ಯಲ್ಲಿ ಭಾಗಿಯಾದರು. ನೀತಿ ಶಿಕ್ಷಣದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಬಹುಮಾನ ವಿತರಿಸಿ, ಶಿಕ್ಷಕರಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ: ಹಲವು ಸರಕಾರಿ ಅಧಿಕಾರಿಗಳ ನಿವಾಸ-ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು : ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ, ನಗದು ಮತ್ತು ಚರ-ಸ್ಥಿರ ಆಸ್ತಿಗಳನ್ನು ಪತ್ತೆ ಹಚ್ಚಿದ್ದಾರೆ. ಬೆಂಗಳೂರು, ಹಾಸನ, ಮಂಡ್ಯ, ಧಾರವಾಡ ಸೇರಿದಂತೆ 30ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಾಸನ ನಗರದ ರಕ್ಷಣಾಪುರಂನಲ್ಲಿರುವ ಮಹಾನಗರ ಪಾಲಿಕೆಯ ಎಇಇ ಎಂ.ಸಿ.ಸತ್ಯನಾರಾಯಣ, ಬೆಂಗಳೂರಿನ ಕೆಆರ್ಐಡಿಎಲ್ ಮುಖ್ಯ ಇಂಜಿನಿಯರ್ ವಸಂತ್ ವಿ. ನಾಯಕ್ ಹಾಗೂ ಅವರ ಸಹೋದರ ಭೀಮಸಿಂಗ್ ನಾಯಕ್, ರೈತ ಸೇವಾ ಸಹಕಾರ ಸಂಘದ ಸಿಇಒ ಶಶಿಧರ್, ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಇಂದ್ರೇಶ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಆರ್ ಎಫ್ಓ ಡಾಲೇಶ್, ಯಾದಗಿರಿಯ ವಿದ್ಯುತ್ ಇಲಾಖೆಯ ಉಪ ವಿದ್ಯುತ್ ಪರಿವೀಕ್ಷಕ ವೀರೇಶ್ ಹಿರೇಮಠ, ಧಾರವಾಡದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಕೆ.ಸುರಕೋಡ, ಮಂಡ್ಯದ ಲೋಕೋಪಯೋಗಿ ಇಲಾಖೆ ಉಪವಿಭಾಗದ ಎಎಇ ಎಸ್.ಸತೀಶ್, ಮೈಸೂರಿನ ಜಲ ಭವನದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಎಇ ಮತ್ತು ಇಇ ಆಸಿಫ್ ಇಕ್ಬಾಲ್ ಹಾಗೂ ವಿಜಯಪುರದ ಕೃಷ್ಣಾ ಭಾಗ್ಯ ಜಲ ನಿಗಮದಲ್ಲಿ ಕಿರಿಯ ಇಂಜಿನಿಯರ್ ಆಗಿರುವ ಪ್ರಕಾಶ್ ಪಿ.ಜಿ. ಅವರ ನಿವಾಸ ಮತ್ತು ಕಚೇರಿಗಳಲ್ಲಿ ತಪಾಸಣೆ ಮಾಡಿದ್ದಾರೆ. ಈ ತಪಾಸಣೆಯಲ್ಲಿ ಅಧಿಕಾರಿಗಳಿಗೆ ಸಂಬಂಧಿಸಿದ ಆಸ್ತಿ ದಾಖಲೆ, ಗೋದಾಮು, ನಿವೇಶನಗಳು, ವಾಣಿಜ್ಯ ಕಟ್ಟಡಗಳು, ನಗದು, ಚಿನ್ನಾಭರಣ ಸೇರಿದಂತೆ ಹಲವು ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿದ್ದು, ಎಲ್ಲವನ್ನೂ ವಶಕ್ಕೆ ಪಡೆದುಕೊಂಡಿ ತನಿಖೆ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಒಮಾನ್ ಕೊಲ್ಲಿಯಲ್ಲಿ ತೈಲ ಟ್ಯಾಂಕರ್ಗೆ ಡ್ರೋನ್ ದಾಳಿ: ಭಾರತದ ಇಬ್ಬರು ನಾವಿಕರು ಮೃತ್ಯು
ಹೊಸದಿಲ್ಲಿ: ಇರಾನ್ ಹಾಗೂ ಇಸ್ರೇಲ್-ಅಮೆರಿಕ ಸಂಘರ್ಷದ ಭುಗಿಲೆದ್ದ ಬೆನ್ನಲ್ಲೇ ಒಮಾನ್ ಕೊಲ್ಲಿಯಲ್ಲಿ ತೈಲ ಟ್ಯಾಂಕರ್ ‘ಸ್ಕೈಲೈಟ್’ ಮೇಲೆ ನಡೆದ ದಾಳಿಯ ಬಳಿಕ ನಾಪತ್ತೆಯಾಗಿದ್ದ ಇಬ್ಬರು ನಾವಿಕರು ಸಾವನ್ನಪ್ಪಿರುವುದಾಗಿ ಎನ್ಡಿಟಿವಿ ಸುದ್ದಿಸಂಸ್ಥೆ ವರದಿ ಮಾಡಿದೆ. ಮೃತ ನಾವಿಕರನ್ನು ಬಿಹಾರದ ಕ್ಯಾಪ್ಟನ್ ಆಶೀಶ್ ಕುಮಾರ್ ಹಾಗೂ ರಾಜಸ್ಥಾನ ಮೂಲದ ನಾವಿಕ ದಲೀಪ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ವರದಿ ತಿಳಿಸಿದೆ. ಮಾರ್ಚ್ 1ರಂದು, 15 ಮಂದಿ ಭಾರತೀಯ ಪ್ರಜೆಗಳು ಹಾಗೂ 5 ಮಂದಿ ಇರಾನಿ ನಾವಿಕರಿದ್ದ ಪಲಾವು ರಾಷ್ಟ್ರಧ್ವಜವಿರುವ ತೈಲಟ್ಯಾಂಕರ್ ಸ್ಕೈಲೈಟ್ ಮೇಲೆ ಒಮಾನ್ನ ಮುಸಾಂಡಮ್ ಪರ್ಯಾಯದ್ವೀಪದ ದುಖ್ವಾಂ ಬಂದರಿನ ಬಳಿ ಡ್ರೋನ್ ದಾಳಿಗೆ ತುತ್ತಾಗಿತ್ತು. ತೈಲ ಟ್ಯಾಂಕರ್ನಲ್ಲಿದ್ದ ಇತರ ಎಲ್ಲಾ ನಾವಿಕರನ್ನು ತೆರವುಗೊಳಿಸಲಾಗಿತ್ತು. ಸಾವನ್ನಪ್ಪಿದವರಿಬ್ಬರ ಮೃತದೇಹಗಳು ಸುಟ್ಟುಕರಕಲಾಗಿದ್ದವು. ಆಶೀಶ್ ಕುಮಾರ್ ಅವರ ಮೃತದೇಹದ ಅವಶೇಷಗಳು, ಕ್ಯಾಪ್ಟನ್ ಕ್ಯಾಬಿನ್ನಲ್ಲಿ ಪತ್ತೆಯಾಗಿವೆ. ಮೃತಪಟ್ಟ ಇನ್ನೋರ್ವ ನಾವಿಕ ದಲೀಪ್ ಸಿಂಗ್, ರಾಜಸ್ಥಾನದ ನಗೌರ್ನ ಖಿನ್ವಾತನ ಗ್ರಾಮದ ನಿವಾಸಿಯಾಗಿದ್ದು, ಜನವರಿ 22ರಂದು ಅವರು ಕರ್ತವ್ಯವನ್ನು ಆರಂಭಿಸಿದ್ದರು.
ಬಿಹಾರ: ಬಿಜೆಪಿ ನಾಯಕ ಸಾಮ್ರಾಟ್ ಚೌಧುರಿಗೆ ಸಿಎಂ ಪಟ್ಟ?
ಪಾಟ್ನಾ: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ನಾಮಪತ್ರಗಳನ್ನು ಸಲ್ಲಿಸುವ ಮೂಲಕ ಎರಡು ದಶಕಗಳ ಬಳಿಕ ರಾಷ್ಟ್ರರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ್ದಾರೆ. ರಾಜ್ಯಸಭೆ ಪ್ರವೇಶಿಸುವ ನಿತೀಶ್ ಅವರ ನಿರ್ಧಾರದೊಂದಿಗೆ, ಬಿಹಾರದ ಮುಖ್ಯಮಂತ್ರಿ ಸ್ಥಾನವು ಬಿಜೆಪಿ ಪಾಲಾಗುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. ಮುಖ್ಯಮಂತ್ರಿ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಗಳ ಪೈಕಿ ಹಾಲಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಸಾಮ್ರಾಟ್ ಚೌಧುರಿ ಮುಂಚೂಣಿಯಲ್ಲಿದ್ದಾರೆ. ಈ ನಡುವೆ ಕೇಂದ್ರ ಸಹಾಯಕ ಗೃಹ ಸಚಿವ ನಿತ್ಯಾನಂದರಾಯ್ ಅವರ ಹೆಸರೂ ಕೂಡಾ ಕೇಳಿಬರುತ್ತಿದೆ. ರಾಜ್ಯದ ಬಿಜೆಪಿ ನಾಯಕರಾದ ರಾಮಕೃಪಾಲ್ ಯಾದವ್, ಕೇಂದ್ರ ಸಚಿವ ಗಿರಿರಾಜ್ ಕಿಶೋರ್ ಹಾಗೂ ಕೈಗಾರಿಕಾ ಸಚಿವ ದಿಲೀಪ್ ಜೈಸ್ವಾಲ್ ಕೂಡಾ ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದ್ದಾರೆ ಎನ್ನಲಾಗಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ 89 ಶಾಸಕರನ್ನು ಹೊಂದಿರುವ ಬಿಜೆಪಿ ಏಕೈಕ ಅತಿ ದೊಡ್ಡ ಪಕ್ಷವಾಗಿದೆ. ಎನ್ಡಿಎ ಮೈತ್ರಿಕೂಟದ ಅಂಗಪಕ್ಷವಾದ ಜೆಡಿಯು 85 ಸದಸ್ಯರನ್ನು ಹೊಂದಿದೆ.
ಹಾರ್ಮುಜ್ ಬಳಿ 1,100 ಭಾರತೀಯ ನಾವಿಕರು ಅತಂತ್ರ ಸ್ಥಿತಿಯಲ್ಲಿ: ವರದಿ
ಟೆಹ್ರಾನ್: ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವಂತೆಯೇ ಕನಿಷ್ಠ 37 ಭಾರತೀಯ ಧ್ವಜ ಹೊಂದಿದ ಹಡಗುಗಳು ಮತ್ತು ಸುಮಾರು 1,100 ಸಿಬ್ಬಂದಿಗಳು ಹೊರ್ಮುಜ್ ಜಲಸಂಧಿಯಲ್ಲಿ ಸಿಕ್ಕಿಬಿದ್ದಿದ್ದು ಅತಂತ್ರ ಸ್ಥಿತಿಯಲ್ಲಿರುವುದಾಗಿ ವರದಿಯಾಗಿದೆ. ಈ ಹಡಗುಗಳು ಪರ್ಶಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿಯಲ್ಲಿವೆ. ಕೆಲವು ಹಡಗುಗಳು ಸರಕುಗಳಿಗಾಗಿ ಕಾಯುತ್ತಿದ್ದರೆ, ಇನ್ನು ಕೆಲವು ಈಗಾಗಲೇ ಸಂಪೂರ್ಣವಾಗಿ ಲೋಡ್ ಆಗಿವೆ ಎಂದು ವರದಿ ಹೇಳಿದೆ. ಕಚ್ಛಾ ತೈಲ, ಖಾದ್ಯ ವಸ್ತುಗಳು, ರಾಸಾಯನಿಕ ಸೇರಿದಂತೆ ಭಾರತದ ಆಮದುಗಳ ಸುಮಾರು 20%ದಷ್ಟು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಿ ಬರುತ್ತದೆ.
ದಕ್ಷಿಣ ಲೆಬನಾನ್ನಿಂದ 80,000ಕ್ಕೂ ಹೆಚ್ಚು ಮಂದಿ ಸ್ಥಳಾಂತರ
ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಕನಿಷ್ಠ 72 ಮಂದಿ ಸಾವು
Dubai | ತಾಯ್ನಾಡಿಗೆ ವಾಪಸಾದ 60 ಮಂದಿ ಹಿರಿಯ ಕನ್ನಡಿಗರು
ದುಬೈ ಕನ್ನಡಿಗರ ಕೂಟದಿಂದ ನೆರವು
ಚಿಕ್ಕೋಡಿ ಜಿಲ್ಲೆ ಮಾಡುವ ಬಗ್ಗೆ ಶೀಘ್ರ ತೀರ್ಮಾನ : ಡಿ.ಕೆ.ಶಿವಕುಮಾರ್
ಬೆಳಗಾವಿ : ಚಿಕ್ಕೋಡಿ ಜಿಲ್ಲೆ ಆಗಬೇಕು ಎಂಬ ಆಸೆ ನನಗೂ ಇದೆ. ಆದಷ್ಟು ಬೇಗ ನಾವು ತೀರ್ಮಾನ ಮಾಡುತ್ತೇವೆ. ಪ್ರಕಾಶ್ ಹುಕ್ಕೇರಿ ಹಾಗೂ ಗಣೇಶ್ ಹುಕ್ಕೇರಿ ಈ ಭಾಗದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಟ್ಟಿರುವ ಎಲ್ಲ ಬೇಡಿಕೆ ಈಡೇರಿಸಲು ನಾನು ಬದ್ಧನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಗುರುವಾರ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದ ವೀರಶೈವ ಲಿಂಗಾಯತ ಧರ್ಮೋತ್ಥಾನ ಸಮ್ಮೇಳನ ಹಾಗೂ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭಾಗ ಅಭಿವೃದ್ಧಿಯಾಗಬೇಕು ಹಾಗೂ ಇಲ್ಲಿನ ರೈತರನ್ನು ಕಾಪಾಡುವ ಕೆಲಸ ಮಾಡಲಾಗುವುದು. ನಿಮ್ಮ ಆಶೀರ್ವಾದ ನನ್ನ ಮೇಲೆ, ನಮ್ಮ ಸರಕಾರದ ಮೇಲೆ ಇರಲಿ ಎಂದು ಮನವಿ ಮಾಡಿದರು. ರಂಭಾಪುರಿ, ಉಜ್ಜಯಿನಿ, ಕಾಶೀ, ಶ್ರೀಶೈಲ ಸೇರಿದಂತೆ ನಮ್ಮ ಪಂಚ ಪೀಠದ ಶ್ರೀಗಳು ಇಡೀ ದೇಶಕ್ಕೆ ಶಕ್ತಿ ನೀಡುತ್ತಾ ಬಂದಿದ್ದಾರೆ. ಸಮಾಜಕ್ಕೆ ಈ ಪೀಠಗಳ ಮಾರ್ಗದರ್ಶನ ಅಗತ್ಯವಿದ್ದು, ನಾವು ಈ ಮಠಗಳಿಗೆ ಪ್ರೋ ತ್ಸಾಹ ನೀಡಬೇಕು. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು ಎಂದು ಕರೆ ನೀಡಿದರು. ದೇವರು ವರ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಆ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಬಹಳ ಮುಖ್ಯ. ಈ ಭಾಗದ ಶಾಸಕರಾದ ಪ್ರಕಾಶ್ ಹುಕ್ಕೇರಿ ಹಾಗೂ ಅವರ ಸುಪುತ್ರ ಗಣೇಶ್ ಹುಕ್ಕೇರಿ ಈ ಭಾಗದ ಅಭಿವೃದ್ಧಿಗೆ ಶ್ರೀಗಳ ಮಾರ್ಗದರ್ಶನದಲ್ಲಿ ಈ ಧರ್ಮ ಕ್ಷೇತ್ರದ ಕಲ್ಯಾಣ ಮಾಡಿಕೊಂಡು ಬರುತ್ತಿದ್ದಾರೆ ಎಂದು ಅವರು ನುಡಿದರು. ಬಜೆಟ್ನಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಸಂಬಂಧಿಸಿದಂತೆ ನಾವು ಈಗಾಗಲೇ ಮಾಡಿರುವ ತೀರ್ಮಾನ, ಐತಿಹಾಸಿಕವಾದದ್ದು. ಕೃಷ್ಣ ಮೇಲ್ದಂಡೆ ಯೋಜನೆ ಮುಳುಗಡೆ ಪ್ರದೇಶದ ಜನರಿಗೆ ಪರಿಹಾರವಾಗಿ 70 ಸಾವಿರ ಕೋಟಿ ರೂ.ನೀಡಲು ತೀರ್ಮಾನಿಸಿದ್ದೇವೆ ಎಂದ ಅವರು, ಈ ಯೋಜನೆಗೆ ಮಹಾರಾಷ್ಟ್ರ ಹಾಗೂ ಆಂಧ್ರ ಅಡ್ಡಿಪಡಿಸುತ್ತಿದ್ದು, ಈ ಬಗ್ಗೆ ದಿಲ್ಲಿಯಲ್ಲಿ ಸಭೆ ಮಾಡುತ್ತೇನೆ ಎಂದು ತಿಳಿಸಿದರು.
ಚಿಕಿತ್ಸೆಯನ್ನು ನಿರ್ಧರಿಸುವ ಹಕ್ಕು ರೋಗಿಗಿದೆ: ಡಾ.ಶ್ಯಾನುಭಾಗ್
ಉಡುಪಿ, ಮಾ.5: ತನಗೆ ಬಂದ ರೋಗ, ಪಡೆವ ಚಿಕಿತ್ಸೆ, ಪರಿಣಾಮದ ಮಾಹಿತಿ ಪಡೆಯೋದು ಮಾತ್ರವಲ್ಲ, ತನಗೆ ಚಿಕಿತ್ಸೆ ಬೇಕೇ- ಬೇಡವೇ ಎಂದು ನಿರ್ಧರಿಸುವ ಹಕ್ಕು ಸಹ ಪ್ರತಿಯೊಬ್ಬ ರೋಗಿಗಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರನಾಥ ಶ್ಯಾನುಭಾಗ್ ಹೇಳಿದ್ದಾರೆ. ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ‘ಘನತೆಯಿಂದ ಸಾಯುವ ಹಕ್ಕು: ಒಂದು ಮೂಲಭೂತ ಹಕ್ಕು’ ವಿಷಯವಾಗಿ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡುತಿದ್ದರು. ನಮಗೆ ಯಾವ ಕಾನೂನು ಬೇಕೆಂದು ನಾವು (ಪ್ರಜೆಗಳು) ನಿರ್ಧರಿಸಬೇಕೇ ಹೊರತು ರಾಜಕಾರಣಿಗಳಲ್ಲ, ಅಧಿಕಾರಿಗಳಲ್ಲ. ಆದರೆ ಘನತೆಯಿಂದ ಸಾಯುವ ಹಕ್ಕಿಗೆ ಸಂಬಂಧಿಸಿದ ಕರಡು ಕಾಯಿದೆ 2018ರಲ್ಲಿ ಸಂಸತ್ತಿನಲ್ಲಿ ಮಂಡನೆಯಾಗಿದ್ದು ಯಾವುದೇ ಪ್ರಗತಿ ಕಂಡಿಲ್ಲ ಎಂದವರು ವಿಷಾಧಿಸಿದರು. ಸಂವಿಧಾನ ಪ್ರಕಾರ ಘನತೆಯಿಂದ ಬದುಕುವುದು ಮಾತ್ರವಲ್ಲ, ಅರುಣಾ ಶಾನುಭಾಗ್ ಹಾಗೂ ಕಾಮನ್ ಕಾಸ್ ಪ್ರಕರಣ(2018) ಹಿನ್ನೆಲೆಯಲ್ಲಿ ಘನತೆಯಿಂದ ಸಾಯುವ ಹಕ್ಕನ್ನು ನೀಡುವ ಬಗ್ಗೆ ಸುಪ್ರೀಂಕೋರ್ಟು ಪ್ರಸ್ತಾಪಿಸಿದೆ. ಆದರೆ ಅದಕ್ಕಿನ್ನೂ ಕಾನೂನಿನ ಅಂಗೀಕಾರ ದೊರೆತಿಲ್ಲ ಎಂದು ಡಾ.ಶ್ಯಾನುಭಾಗ್ ನುಡಿದರು. ಜೀವನ್ಮರಣದ ಅಸಹಾಯಕತೆಗೆ ಸ್ವಯಂಕೃತ ಅಪರಾಧ, ಮಾನವ ನಿರ್ಮಿತ ಅಪರಾಧ, ಪ್ರಕೃತಿದತ್ತ ಕಾರಣ ಗಳಿದ್ದು ಈ ಬಗ್ಗೆ ಜನಜಾಗೃತಿ, ನ್ಯಾಯಾಲಯದಿಂದ ಪರಿಹಾರ ಹಾಗೂ ಸ್ವಯಂ ಸೇವಾ ಸಂಘಗಳ ಸ್ಥಾಪನೆ ಮುಖ್ಯ ವಾಗುತ್ತದೆ. ಕೇರಳದಲ್ಲಿ 13,000 ಹಾಗೂ ಕರ್ನಾಟಕದಲ್ಲಿ 8,000ಕ್ಕೂ ಅಧಿಕ ಎಂಡೋಸಲ್ಛಾನ್ ಸಂತ್ರಸ್ಥ ಮಕ್ಕಳಿದ್ದಾರೆ ಎಂದು ಡಾ. ಶ್ಯಾನುಭಾಗ್ ವಿವರಿಸಿದರು.
ಸುಮನಸಾ ‘ಈದಿ’ ನಾಟಕಕ್ಕೆ ರಂಗಭೂಮಿ ಕನ್ನಡ ನಾಟಕ ಪ್ರಶಸ್ತಿ
ಉಡುಪಿ, ಮಾ.5: ಕಳೆದ ಡಿಸೆಂಬರ್ 4ರಿಂದ 15ರವರೆಗೆ ನಡೆದ ರಂಗಭೂಮಿ ಉಡುಪಿ ಇವರ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಸುಮನಸಾ ಕೊಡವೂರು ತಂಡ ‘ಈದಿ’ ನಾಟಕಕ್ಕೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿತು. ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ವತಿಯಿಂದ ನಡೆದಿರುವ ರಂಗಭೂಮಿ ರಂಗೋತ್ಸವದ ಎರಡನೇ ದಿನದಲ್ಲಿ ಡಾ. ಟಿಎಂಎ ಪೈ, ಎಸ್. ಎಲ್.ನಾರಾಯಣ ಭಟ್ ಹಾಗೂ ಮಲ್ಪೆ ಮಧ್ವರಾಜ್ ಸ್ಮಾರಕ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ವಿವಿಧ ಪ್ರಶಸ್ತಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಂಗ ಶಿಕ್ಷಣವನ್ನು ಉಡುಪಿಯ 25 ಶಾಲೆಗಳಿಗೆ ವಿಸ್ತರಿಸುವ ಯೋಜನೆಯಿದೆ. ಇದಕ್ಕೆ ಸಂಘ ಸಂಸ್ಥೆಗಳ ಪ್ರೋತ್ಸಾಹ ಅಗತ್ಯ ಎಂದರು. ಬಹುಮಾನ ವಿತರಿಸಿ ಹಿರಿಯ ರಂಗಕರ್ಮಿ, ನಿವೃತ್ತ ಪ್ರಾಂಶುಪಾಲ ನಟರಾಜ ದೀಕ್ಷಿತ್ ಮಾತನಾಡಿ, ಜೀವನದಲ್ಲಿ ನಾಟಕ ಮಾಡುವುದಕ್ಕಿಂತ ನಾಟಕದಲ್ಲಿ ಜೀವನ ಹುಡುಕುವುದು ಇಂದಿನ ಅಗತ್ಯವಾಗಿದೆ ಎಂದರು. ನಂದಿಕೂರಿನ ಅದಾನಿ ಪವರ್ ಕಂಪನಿಯ ಮುಖ್ಯಸ್ಥ ಕಿಶೋರ್ ಆಳ್ವ ಮುಖ್ಯಅತಿಥಿಯಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಎಂಜಿಎಂ ಕಾಲೇಜಿನ ಉಪ ಪ್ರಾಂಶುಪಾಲ ಡಾ. ವಿಶ್ವನಾಥ ಪೈ ಎಂ. , ರಂಗಭೂಮಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ಚಂದ್ರ ಕುತ್ಪಾಡಿ ಉಪಸ್ತಿತರಿದ್ದರು. ಸಂಸ್ಥೆಯ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು ಸ್ವಾಗತಿಸಿದರು. ಪ್ರಭಾಕರ ಜಿ.ತುಮರಿ ಕಾರ್ಯಕ್ರಮ ನಿರೂಪಿಸಿ, ಸುಬ್ರಹ್ಮಣ್ಯ ಶೇರಿಗಾರ್ ವಂದಿಸಿದರು. ಸಭಾ ಕಾರ್ಯಕ್ರಮ ಬಳಿಕ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಸುಮನಾಸಾ ಕೊಡವೂರು ತಂಡದ ‘ಈದಿ’ ನಾಟಕದ ಮರು ಪ್ರದರ್ಶನ ನಡೆಯಿತು.
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭ, ರೈತರ ಸಾಲ ಮನ್ನಾ ಮಾಡಲು ಆಗ್ರಹ
ಬೀದರ್ : ಜಿಲ್ಲೆಯ ಹಳ್ಳಿಖೇಡ (ಬಿ) ಗ್ರಾಮದ ಸಮೀಪವಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸರ್ಕಾರ ವಶಕ್ಕೆ ಪಡೆದು ಪುನರಾರಂಭ ಮಾಡಬೇಕು ಹಾಗೂ ರೈತರ ಎಲ್ಲಾ ವಿಧದ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವರು, ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪೌರಾಡಳಿತ ಹಾಗೂ ಹಜ್ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. 2025-26ನೇ ಹಂಗಾಮಿನಲ್ಲಿ ಕಾರ್ಖಾನೆಯನ್ನು ಪ್ರಾರಂಭಿಸುವ ಬಗ್ಗೆ ಈ ಹಿಂದೆ ನಿರ್ಧಾರ ಕೈಗೊಳ್ಳಲಾಗಿದ್ದರೂ ಅದು ಜಾರಿಗೆ ಬಂದಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಧರಣಿ ಸತ್ಯಾಗ್ರಹ ನಡೆಸಿ ಸರ್ಕಾರದ ಗಮನ ಸೆಳೆದಿದ್ದರು ಎಂದು ತಿಳಿಸಲಾಗಿದೆ. 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಕಾರ್ಖಾನೆ ಪುನರಾರಂಭಕ್ಕೆ ಅಗತ್ಯ ಅನುದಾನ ಕಾಯ್ದಿರಿಸಬೇಕು. ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಬೇಕು. ಸಹಕಾರ ಸಂಸ್ಥೆಗಳಲ್ಲಿ ಸರ್ಕಾರದ ಅಧಿಕಾರಿಯನ್ನು ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಬೇಕು. ಕಬ್ಬಿನ ಬಾಕಿ ಹಣವನ್ನು ನಿಗದಿತ ಅವಧಿಯಲ್ಲಿ ಪಾವತಿಸದಿದ್ದರೆ ಶೇ.18ರ ಬಡ್ಡಿಯೊಂದಿಗೆ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಇದೇ ವೇಳೆ ಸಕ್ಕರೆ ಕಾರ್ಖಾನೆಗಳಲ್ಲಿ ರಿಕವರಿ ಅಧಿಕಾರಿ ನೇಮಕ ಮಾಡುವುದು, ಕರ್ನಾಟಕ ಕಬ್ಬು ಖರೀದಿ ಮತ್ತು ಪೂರೈಕೆ ನಿಯಂತ್ರಣ ಕಾಯ್ದೆ–2013ರಲ್ಲಿ ತಿದ್ದುಪಡಿ ಮಾಡಿ ಜಿಲ್ಲಾ ಮಟ್ಟದಲ್ಲಿ ಸುಗರ್ ಕಂಟ್ರೋಲ್ ಬೋರ್ಡ್ ಸ್ಥಾಪಿಸುವುದನ್ನೂ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ. ಮಾರ್ಚ್ 6ರಂದು ಮಂಡನೆಯಾಗುವ ರಾಜ್ಯ ಬಜೆಟ್ನಲ್ಲಿ ಈ ಬೇಡಿಕೆಗಳನ್ನು ಪರಿಗಣಿಸದಿದ್ದರೆ ಮಾರ್ಚ್ 7ರಿಂದ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಚಳುವಳಿ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈ ಸಂದರ್ಭದಲ್ಲಿ ಎಸ್ಕೆಎಂ ಸಂಚಾಲಕ ಬಾಬುರಾವ್ ಹೊನ್ನಾ, ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಹಾಗೂ ಬಸವರಾಜ್ ಅಷ್ಟೂರೆ ಉಪಸ್ಥಿತರಿದ್ದರು.
Bidar | ಮದರಸಾ ಶಿಕ್ಷಕರ ಮೇಲೆ ಹಲ್ಲೆ ಪ್ರಕರಣ : 18 ಮಂದಿಯ ಬಂಧನ
ಬೀದರ್ : ಬಸವಕಲ್ಯಾಣದಲ್ಲಿ ಮದರಸಾ ಶಿಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ಮಾಡಿದ ಆರು ಮಂದಿ ಸೇರಿದಂತೆ ಒಟ್ಟು 18 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ 12 ಜನರನ್ನೂ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮಾರ್ಚ್ 3ರ ರಾತ್ರಿ ಸುಮಾರು 8 ಗಂಟೆಗೆ ಬಸವಕಲ್ಯಾಣದ ಪ್ರವಾಸಿ ಮಂದಿರದ ಹತ್ತಿರ ಕೆಲ ಯುವಕರು ಕುಡಿದ ಅಮಲಿನಲ್ಲಿ ಗಲಾಟೆ ಮಾಡುತ್ತಿದ್ದರು. ಅವರನ್ನು ಸಮಾಧಾನಪಡಿಸಲು ಹೋದ ಇಬ್ಬರು ಮದರಸಾ ಶಿಕ್ಷಕರೊಂದಿಗೆ ವಾಗ್ವಿವಾದ ಉಂಟಾಗಿ, ಯುವಕರು ಅವರ ಮೇಲೆ ಹಲ್ಲೆ ನಡೆಸಿದರು. ಗಾಯಗೊಂಡ ಶಿಕ್ಷಕರು ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಂದಾದಾಗ, ಠಾಣೆ ಮುಂದೆ ಒಂದು ಸಮುದಾಯದ ಜನರು ಸೇರಿಕೊಂಡು ವಾಹನಗಳಿಗೆ ಅಡ್ಡಿ ಉಂಟುಮಾಡಿ ಕಾರ್ಯಾಚರಣೆಗೆ ತೊಂದರೆ ನೀಡಿದ್ದಾರೆ. ಅವರನ್ನು ಶಾಂತಿಯುತವಾಗಿ ತೆರಳಿಸಲು ಪ್ರಯತ್ನಿಸಿದರೂ ಸಹಕರಿಸದ ಹಿನ್ನೆಲೆ, ಅವರ ವಿರುದ್ಧವೂ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಶಿಕ್ಷಕರ ಮೇಲೆ ಹಲ್ಲೆ ಮಾಡಿದ ಐದು ಆರೋಪಿಗಳನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರನೇ ಆರೋಪಿಯನ್ನು ಬಂಧಿಸಲಾಗಿದ್ದು, ಆತನನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ. ಎರಡನೇ ಪ್ರಕರಣದಲ್ಲಿ ಭಾಗಿಯಾದವರನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸ್ಪಿ ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಬಸವಕಲ್ಯಾಣದಲ್ಲಿ ಶಾಂತಿ ವಾತಾವರಣವಿದ್ದು, ಜನತೆ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು. ಸಂಪೂರ್ಣ ಮಾಹಿತಿ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವ ಖಾತೆಗಳ ಮೇಲೆ ಕಣ್ಣಿಟ್ಟಿದ್ದೇವೆ. ವದಂತಿ ಹರಡುವುದು ಅಥವಾ ಹಿಂಸೆಗೆ ಪ್ರಚೋದನೆ ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Arsikere | ವಿಷಕಾರಿ ಮೇವು ತಿಂದು 20ಕ್ಕೂ ಹೆಚ್ಚು ಕುರಿಗಳ ಸಾವು
ಅರಸೀಕೆರೆ : ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ವಿಷಕಾರಿ ಮೇವು ತಿಂದು ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲ್ಲೂಕಿನ ಜಾವಗಲ್ ಹೋಬಳಿ ವ್ಯಾಪ್ತಿಯ ದೊಡ್ಡಘಟ್ಟ ಗ್ರಾಮದ ಸಮೀಪ ಈ ಘಟನೆ ಸಂಭವಿಸಿದೆ. ತುಮಕೂರು ಜಿಲ್ಲೆಯ ಶಿರಾ ಪಟ್ಟಣದಿಂದ ಮೇವು ಅರಸಿ ಸುಮಾರು 800 ಕುರಿಗಳ ಮಂದೆಯನ್ನು ಮೇಯಿಸಲು ಕುರಿಗಾಹಿಗಳು ಈ ಭಾಗಕ್ಕೆ ಬಂದಿದ್ದರು. ರಾಜಣ್ಣ, ರಾಮಣ್ಣ, ಭಾಗ್ಯಮ್ಮ, ರಂಗನಾಥ್ ಸೇರಿದಂತೆ ಹಲವರು ತಮ್ಮ ಕುರಿಗಳೊಂದಿಗೆ ಇಲ್ಲಿ ತಂಗಿದ್ದರು. ಈ ವೇಳೆ ಕುರಿಗಳು ಮೇಯುತ್ತಿದ್ದ ಸಂದರ್ಭದಲ್ಲಿ ವಿಷಕಾರಿ ಮೇವು ತಿಂದು ಅಸ್ವಸ್ಥಗೊಂಡು ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.
ದಾವಣಗೆರೆ ಕ್ಷೇತ್ರಕ್ಕೆ ಕೆ. ಅಬ್ದುಲ್ ಜಬ್ಬಾರ್ಗೆ ಕಾಂಗ್ರೆಸ್ನಿಂದ ಟಿಕೆಟ್ ನೀಡಲು ಒತ್ತಾಯ
ಯಾದಗಿರಿ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕು ಎಂದು ಯಾದಗಿರಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಖಂಡರು ಒತ್ತಾಯಿಸಿದ್ದಾರೆ. ನಗರದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಂದಿ ಮುಲ್ಲಾ ಇನಾಂದರ್ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಕಾಂಗ್ರೆಸ್ ಪಕ್ಷವು ಬಸವಣ್ಣನವರ ಸಮಾನತೆಯ ತತ್ವದಡಿ ಸರ್ವಜನಾಂಗದ ಶಾಂತಿಯ ತೋಟವಾಗಿದ್ದು, ಆ ತತ್ವದ ಅನುಸರಣೆಯಲ್ಲಿ ಕೆ. ಅಬ್ದುಲ್ ಜಬ್ಬಾರ್ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತ ಸಮುದಾಯದ ಕೊಡುಗೆ ಮಹತ್ತರವಾಗಿದೆ. ಈ ಹಿನ್ನೆಲೆಯಲ್ಲಿ ಸಮುದಾಯದ ಪ್ರಬಲ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು. ಈ ಹಿಂದೆ ಜೆಡಿಎಸ್ ಬೆಂಬಲಿಸಿದ್ದ ಅಲ್ಪಸಂಖ್ಯಾತ ಮತಗಳನ್ನು ಕಾಂಗ್ರೆಸ್ ಕಡೆಗೆ ಸೆಳೆಯುವಲ್ಲಿ ಜಬ್ಬಾರ್ ಅವರ ಪಾತ್ರ ಗಮನಾರ್ಹವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದೇ ವೇಳೆ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ಕ್ಷೇತ್ರದಲ್ಲಿ ತಮ್ಮ ನಂತರ ಅಲ್ಪಸಂಖ್ಯಾತರಿಗೆ ಬೆಂಬಲ ನೀಡುವುದಾಗಿ ಘೋಷಿಸಿರುವುದರಿಂದ ಜಬ್ಬಾರ್ ಅವರಿಗೆ ಮತ್ತಷ್ಟು ಬಲ ದೊರೆತಿದೆ ಎಂದು ತಿಳಿಸಿದರು. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಅವರಿಗೆ ದಾವಣಗೆರೆ ಕ್ಷೇತ್ರದ ಟಿಕೆಟ್ ನೀಡುವಂತೆ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ ಜಬ್ಬಾರ್ ಅವರು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಬಡವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವುದು ಶ್ಲಾಘನೀಯ ಎಂದು ಮುಖಂಡರು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಮೈನುದ್ದೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಫೀಸ್ ಪಟೇಲ್, ನಾಸಿರ್ ಅಹಮದ್, ಹಫೀಸ್ ಮುಸ್ತಾಕ್, ಎಂ.ಕೆ. ಸಲೀಂ ಹುಂಡೇಕಾರ್, ಅಕ್ತರ್ ಪ್ಯಾರೆ, ಎಂಡಿ ಜಲಾಲ್ ಉದ್ದೀನ್, ಡಾ. ಮಹಮೂದ್, ಇನಾಯತುರ್ ರೆಹಮಾನ್, ಲಾಳೆ ಪಟೇಲ್, ಮುನಿರ್ ಅಹಮದ್, ಶೊಹೇಬ್ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು : ಬಿಜೆಪಿ ಮುಖಂಡರ ಚಿತ್ರಗಳನ್ನು ಆಕ್ಷೇಪಾರ್ಹ ಹೇಳಿಕೆಗಳೊಂದಿಗೆ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಹಾಗೂ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (42ನೇ ಎಸಿಎಂಎಂ ಕೋರ್ಟ್) ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಡಿ.ಕೆ. ಶಿವಕುಮಾರ್ ಅವರಿಗೆ ಸೀಮಿತವಾಗಿ ಪ್ರಕರಣಕ್ಕೆ ತಡೆಯಾಜ್ಞೆ ನೀಡಿತಲ್ಲದೆ, ಪ್ರತಿವಾದಿಗಳಾದ ಹೈಗ್ರೌಂಡ್ಸ್ ಠಾಣೆ ಪೊಲೀಸರು ಹಾಗೂ ಖಾಸಗಿ ದೂರುದಾರರಾದ ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೊಡಾಘಟ್ಟ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ವಾದವೇನು? ವಿಚಾರಣೆ ವೇಳೆ ಡಿ.ಕೆ. ಶಿವಕುಮಾರ್ ಪರ ವಕೀಲ ಎಚ್.ವಿ. ಪ್ರವೀಣ್ ಕುಮಾರ್ ವಾದ ಮಂಡಿಸಿ, ಬಿಜೆಪಿ ನಾಯಕರು ಆರ್ಟಿಜಿಎಸ್ ಮೂಲಕ ಲಂಚ ಪಡೆದಿದ್ದಾರೆ ಎಂಬ ಒಕ್ಕಣೆಯನ್ನು ಒಳಗೊಂಡ ಚಿತ್ರವನ್ನು ಕಾಂಗ್ರೆಸ್ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪ್ರಿಯಾಂಕಾ ಶ್ರೀವಾಸ್ತವ ಪ್ರಕರಣವನ್ನು ಉಲ್ಲೇಖಿಸಿ, ಪ್ರಕರಣ ದಾಖಲಿಸಲು ವಿಚಾರಣಾ ನ್ಯಾಯಾಲಯ ಆದೇಶಿಸಿದೆ. ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಲು ಮೇಲ್ನೋಟಕ್ಕೆ ಪ್ರಕರಣ ಇದೆಯೇ ಎಂಬ ಅಂಶಗಳನ್ನು ಉಲ್ಲೇಖಿಸದೇ ಆದೇಶ ಮಾಡಲಾಗಿದೆ. ಪ್ರಕ್ರಿಯೆ ಅಗತ್ಯತೆ ಬಗ್ಗೆ ಮಾತ್ರ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಅಪರಾಧದ ಸಂತೃಪ್ತಿಯ ಬಗ್ಗೆ ಆದೇಶದಲ್ಲಿ ಏನನ್ನೂ ಹೇಳಿಲ್ಲ ಎಂದು ಆಕ್ಷೇಪಿಸಿದರು. ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಪ್ರಿಯಾಂಕಾ ಶ್ರೀವಾಸ್ತವ ಪ್ರಕರಣದ ಆದೇಶವನ್ನು ವಿಚಾರಣಾ ನ್ಯಾಯಾಲಯ ಸಂಪೂರ್ಣವಾಗಿ ಪಾಲಿಸಿಲ್ಲ. 2024ರ ಜನವರಿ 6ರಂದು ಪೊಲೀಸರಿಗೆ ನೀಡಿರುವ ದೂರನ್ನು ಪರಿಶೀಲಿಸಬಹುದು. ಮೊದಲಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅದಾದ 5 ದಿನಗಳ ಬಳಿಕ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಜನವರಿ 21ರಂದು ದೂರುದಾರರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಪ್ರಿಯಾಂಕಾ ಶ್ರೀವಾಸ್ತವ ಪ್ರಕರಣವನ್ನು ಲಲಿತಾ ಕುಮಾರಿ ಪ್ರಕರಣದಲ್ಲಿನ ತೀರ್ಪಿನ ಜತೆ ಓದಬೇಕಾಗುತ್ತದೆ. ಪೊಲೀಸ್ ಅಧಿಕಾರಿಗೆ ಸೂಕ್ತ ಕಾಲಾವಕಾಶ ನೀಡಬೇಕು. ಪೊಲೀಸರ ನಿರ್ಧಾರದ ಬಗ್ಗೆ ತಿಳಿದುಕೊಳ್ಳುವವರೆಗೆ ದೂರುದಾರರು ಆತುರ ಮಾಡಲಾಗದು ಎಂದರು. ಪ್ರಕರಣವೇನು? ಮೂರು ದಶಕಗಳ ಹಿಂದೆ ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಡೆ ಖಂಡಿಸಿ ಬಿಜೆಪಿಯು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಆ ಸಂದರ್ಭದಲ್ಲಿ ಬಿಜೆಪಿ ನಾಯಕರು ನಾನೂ ಕರಸೇವಕ; ನನ್ನನ್ನೂ ಬಂಧಿಸಿ ಎಂಬ ಒಕ್ಕಣೆ ಹೊಂದಿದ್ದ ಭಿತ್ತಿಪತ್ರ ಹಿಡಿದು ಅಭಿಯಾನ ನಡೆಸಿದ್ದರು. ಇದನ್ನು ಟೀಕಿಸುವ ಉದ್ದೇಶದಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧಿಕೃತ ಫೇಸ್ಬುಕ್ ಪೇಜ್ನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಫೋಟೊ ಬಳಸಿ ನಾನು ಆರ್ಟಿಜಿಎಸ್ ಮೂಲಕ ಲಂಚ ಪಡೆದಿದ್ದೇನೆ. 40,000 ಕೋಟಿ ಅಕ್ರಮದಲ್ಲಿ ಪಾಲುದಾರ ನನ್ನನ್ನು ಬಂಧಿಸಿ ಎಂದೂ, ಶಾಸಕ ವಿ. ಸುನೀಲ್ ಕುಮಾರ್ ಫೋಟೊ ಬಳಸಿ ನಾನು ಪರಶುರಾಮ ಮೂರ್ತಿ ಕಂಚನ್ನು ಕದ್ದಿದ್ದೇನೆ; ಸಿಮೆಂಟ್ ಕದ್ದಿದ್ದೇನೆ ನನ್ನನ್ನೂ ಬಂಧಿಸಿ ಎಂಬ ಒಕ್ಕಣೆಯ ಚಿತ್ರಗಳನ್ನು ಪೋಸ್ಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಯೂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಬಿ.ಆರ್. ನಾಯ್ಡು ವಿರುದ್ಧ ಬಿಜೆಪಿಯ ಕಾನೂನು ಘಟಕದ ಸಂಚಾಲಕ ಯೋಗೇಂದ್ರ ಹೊಡಾಘಟ್ಟ ನೀಡಿದ್ದ ಖಾಸಗಿ ದೂರು ಆಧರಿಸಿ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
India Vs England- ಭಾರತದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಸತತ ಎರಡನೇ ಅರ್ಧಶತಕ ಹೊಡೆದಿದ್ದಾರೆ. ಪರಿಣಾಮ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ಕೇವಲ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಸಂಜು ಸ್ಯಾಮ್ಸನ್ ಅವರು ಔಟಾಗುವ ಮುನ್ನ 42 ಎಸೆತಗಳಿಂದ 89 ರನ್ ಗಳಿಸಿದರು. ಇಶಾನ್ ಕಿಶನ್, ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಅವರೂ ಉಪಯುಕ್ತ ಕೊಡುಗೆ ನೀಡಿದರು.
IND Vs ENG T20 ವಿಶ್ವಕಪ್ | ಮತ್ತೆ ಅಬ್ಬರಿಸಿದ ಸಂಜು; ಫೈನಲ್ ಟಿಕೆಟ್ ಗೆ ಇಂಗ್ಲೆಂಡ್ ಗೆ ಬೇಕು 254 ರನ್
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳ ಬೃಹತ್ ಮೊತ್ತ ಕಟ್ಟಿದೆ. ಕಳೆದ ಪಂದ್ಯದ ಹೀರೊ ಸಂಜು ಸ್ಯಾಮ್ಸನ್ ಈ ಬಾರಿಯೂ ಅಬ್ಬರಿಸಿದರು. 42 ಎಸೆತ ಎದುರಿಸಿದ ಅವರು 8 ಬೌಂಡರಿ 7 ಸಿಕ್ಸರ್ ಸಹಿತ 89 ರನ್ ಗಳಿಸಿದರು.
ಇರಾಕ್ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ನಿಂದ ದಾಳಿ : ವರದಿ
ಟೆಹ್ರಾನ್ : ಇರಾಕ್ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಸೇನೆ ಹೇಳಿದೆ. ಉತ್ತರ ಇರಾಕ್ನ ಎರ್ಬಿಲ್ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇರಾನ್ ಸೇನೆ ತಿಳಿಸಿದೆ ಎಂದು Tasnim news agency ವರದಿ ಮಾಡಿದೆ. ದಾಳಿಯಲ್ಲಿ ಗಮನಾರ್ಹವಾದ ಹಾನಿ ಸಂಭವಿಸಿರುವ ಸಾಧ್ಯತೆ ಇದೆ ಎಂದು ವರದಿಯು ಉಲ್ಲೇಖಿಸಿದೆ.
ಬೆಳ್ತಂಗಡಿ : ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಆರೋಪ; ಪ್ರಕರಣ ದಾಖಲು
ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಆರೋಪದಲ್ಲಿ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಸೊತ್ತುಗಳನ್ನು ವಶಕ್ಕೆ ಪಡೆದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಗುಡ್ಡೆ ನಿವಾಸಿ ನಿಝಾಮುದ್ದೀನ್ (47) ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ಹನೀಫ್ (44) ಎಂಬವರು ಟಿಪ್ಪರ್ ಲಾರಿಯಲ್ಲಿ ಯಾವುದೇ ಸರಕಾರದ ಅನುಮತಿ ಇಲ್ಲದೆ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು ಎಂದು ದೂರಲಾಗಿದೆ. ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳದಿಂದ 3 ಲಕ್ಷದ 50 ರೂಪಾಯಿ ಮೌಲ್ಯದ ಒಂದು ಲಾರಿ, 6,500 ರೂಪಾಯಿ ಮೌಲ್ಯದ ಮರಳು, ಮರಳನ್ನು ಲಾರಿಗೆ ತುಂಬಿಸಲು ಉಪಯೋಗಿಸಿದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳಾದ ನಿಝಾಮುದ್ದೀನ್ ಮತ್ತು ಹನೀಫ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಕುಶಾಲಪ್ಪ ನಾಯ್ಕ್ ಅವರು ಮಾ.4 ರಂದು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ
ಮಾ.10: ಮದರ್ ತೆರೇಸಾ ವಿಚಾರ ವೇದಿಕೆಯಿಂದ ಸೌಹಾರ್ದ ಇಫ್ತಾರ್ ಕೂಟ
ಮಂಗಳೂರು, ಮಾ.5: ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ, ರಮಝಾನ್ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವನ್ನು ಮಾ.10ರಂದು ಸಂಜೆ 5:15ಕ್ಕೆ ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ತಿಳಿಸಿದ್ದಾರೆ. ಅತಿಥಿಗಳಾಗಿ ಚೊಕ್ಕಬೆಟ್ಟು ಮಸೀದಿಯ ಖತೀಬ್ ಮೌಲಾನಾ ಯು.ಕೆ. ಅಬ್ದುಲ್ ಅಝೀಝ್ ದಾರಿಮಿ, ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಯ ಸಹ ಉಪಕುಲಪತಿ ಡಾ.ಮೆಲ್ವಿನ್ ಡಿಕುನ್ನಾ, ಹಿರಿಯ ಲೇಖಕಿ ಬಿ.ಎಂ. ರೋಹಿಣಿ, ಝೀನತ್ ಭಕ್ಷ್ ಜುಮಾ ಮಸ್ಜಿದ್ನ ಉಪಾಧ್ಯಕ್ಷ ಕೆ. ಆಶ್ರಫ್ ಭಾಗವಹಿಸಲಿದ್ದಾರೆ. ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು| ಲೈಂಗಿಕ ಕಿರುಕುಳ ಆರೋಪ: ನೈರ್ಮಲ್ಯ ನಿರೀಕ್ಷಕನ ವಿರುದ್ಧ ಪ್ರಕರಣ ದಾಖಲು
ಮಂಗಳೂರು, ಮಾ.5: ಮಂಗಳೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕೆಗೆ ನೈರ್ಮಲ್ಯ ನಿರೀಕ್ಷಕ ಲೈಂಗಿಕ ಕಿರುಕುಳ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಕಂಕನಾಡಿಯ ವಾರ್ಡ್ನಲ್ಲಿ ಖಾಯಂ ಪೌರ ಕಾರ್ಮಿಕೆಯಾಗಿದ್ದು, 10 ದಿನ ರಜೆ ಬೇಕು ಎಂದು ಮನಪಾ ನೈರ್ಮಲ್ಯ ನಿರೀಕ್ಷಕ ಭಾಸ್ಕರ ಎಂಬಾತನ ಬಳಿ ಕೇಳಿದಾಗ 2025ರ ಜೂ.22ರಂದು ಬೆಳಗ್ಗೆ 10ಕ್ಕೆ ಕಚೇರಿಗೆ ಬರಲು ತಿಳಿಸಿದ್ದು, ಅದರಂತೆ ಆ ದಿನ ತಾನು ಕಚೇರಿಗೆ ಹೋದಾಗ ನನ್ನ ಕೈಗೆ 1 ಸಾವಿರ ರೂ. ತುರುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ಸಂತು ನಾಯ್ಕ ಎಂಬಾತ ನೋಡಿದ ಕೂಡಲೆ ತನ್ನನ್ನು ಬಿಟ್ಟಿದ್ದಾನೆ. ಆ ಬಳಿಕ ತನ್ನನ್ನು ಬೇರೆ ಬೇರೆ ಕಡೆ ಕರೆದಿದ್ದು, ಕೆಲಸ ಮಾಡುವಲ್ಲಿಗೂ ಬಂದು ಕಿರುಕುಳ ನೀಡಿದ್ದಾನೆ. ನಂತರ ಇತರ ಕಾರ್ಮಿಕರ ಸಮ್ಮುಖ ನನಗೆ ಅವಾಚ್ಯ ಶಬ್ದದಿಂದ ಬೈದು, ರಜೆ ಮಾಡಿದರೆ ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಸಿದ್ದಾನೆ ಎಂದು 38ರ ಹರೆಯದ ಪೌರ ಕಾರ್ಮಿಕೆ ಮಹಿಳಾ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Finn Allen: ಆರ್ಸಿಬಿಯಲ್ಲಿ ಅವಕಾಶ ವಂಚಿತರಾಗಿ ಬೆಂಚ್ ಕಾದಿದ್ದ ಫಿನ್ ಅಲೆನ್ ವಿಶ್ವದಾಖಲೆ
Finn Allen RCB: ಟಿ20 ವಿಶ್ವಕಪ್ 2026ರ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ಅಬ್ಬರದ ಬ್ಯಾಟಿಂಗ್ ಮಾಡಿ ತಂಡ ಫೈನಲ್ ಪ್ರವೇಶಿಸಲು ಪ್ರಮುಖ ಪಾತ್ರವಹಿಸಿದರು. ಅಷ್ಟೇ ಅಲ್ಲದೆ, ಹೊಸ ದಾಖಲೆಯೊಂದನ್ನು ಸಹ ಮಾಡಿದರು. ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಮೂಡಿಸಿದರು. ಇದರ ಬೆನ್ನಲ್ಲೇ ಆರ್ಸಿಬಿ ಹೆಸರು ಮುನ್ನೆಲೆಗೆ
War 6 Day Update: ಅಣುಬಾಂಬ್ ದಾಳಿ ಎಚ್ಚರಿಕೆ ನೀಡಿದ ಟ್ರಂಪ್; ಶಾಂತಿ ಸಂಧಾನಕ್ಕೆ ಮುಂದಾದ ಇರಾನ್, 10 ಪ್ರಮುಖಾಂಶಗಳು
ಇರಾನ್ ಮೇಲೆ ದಾಳಿ ನಡೆಸಿದ ಇಸ್ರೇಲ್ ಮತ್ತು ಯುಎಸ್ ರಾಷ್ಟ್ರಗಳ ಪೈಕಿ ಅಮೆರಿಕಾಗೆ ಉಕ್ರೇನ್ ದೇಶ ತನ್ನ ಬೆಂಬಲ ನೀಡುವುದಾಗಿ ಘೋಷಿಸಿದೆ. ಎರಡು ದೇಶಗಳ ನಿರಂತರ ಕ್ಷಿಪಣಿ ದಾಳಿಗೆ ಇರಾನ್ ನೆಲ ಸ್ಮಶಾನವಾಗಿ ಮಾರ್ಪಟ್ಟಿದೆ. ಯುಎಸ್ ಜಲಾಂತರ್ಗಾಮಿ ನೌಕೆಯು ಇರಾನ್ ಯುದ್ಧನೌಕೆಯನ್ನು ಮುಳುಗಿಸಿತ್ತು. ಇದನ್ನು ಖಂಡಿಸಿದ ಇರಾನ್ ಪ್ರತೀಕಾರ ಎಂಬಂತೆ ಕೊಲ್ಲಿಯಲ್ಲಿ ಯುಎಸ್ನ ತೈಲ ಹಡಗುಗಳ ಮೇಲೆ
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಅಪರಾಧಿ ಎಂದು ಘೋಷಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿದ್ದ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ಆದೇಶ ಹಾಗೂ ಆ ಆದೇಶವನ್ನು ಎತ್ತಿಹಿಡಿದಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ರದ್ದುಕೋರಿ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ. ವಿಸ್ತೃತ ತೀರ್ಪು ಇನ್ನಷ್ಟೇ ಪ್ರಕಟವಾಗಬೇಕಿದೆ. ಪ್ರಕರಣದ ಹಿನ್ನೆಲೆ: ದೂರುದಾರ ಹೂವಪ್ಪ ಗೌಡ ಮತ್ತು ಕುಮಾರಸ್ವಾಮಿ ಪರಿಚಿತರಾಗಿದ್ದು, ಬೇರೆ ಬೇರೆ ದಿನಾಂಕಗಳಂದು ಕುಮಾರಸ್ವಾಮಿ ಅವರು ವೈಯಕ್ತಿಕ ತುರ್ತಿಗಾಗಿ ಒಟ್ಟು 1,66,70,000 ರೂ. ಸಾಲ ಪಡೆದಿದ್ದರು. ಇದಕ್ಕಾಗಿ 2017ರ ಸೆಪ್ಟೆಂಬರ್ 8 (80 ಲಕ್ಷ ರೂ.), ಸೆಪ್ಟೆಂಬರ್ 12 (85 ಲಕ್ಷ ರೂ.) ಹಾಗೂ ಸೆಪ್ಟೆಂಬರ್ 15 (1.7 ಲಕ್ಷ ರೂ.) ಚೆಕ್ಗಳನ್ನು ಹೂವಪ್ಪ ಗೌಡರಿಗೆ ನೀಡಿದ್ದರು. ನಿರ್ದಿಷ್ಟ ದಿನಾಂಕದಂದು ನಗದು ಮಾಡಲು ಚೆಕ್ಗಳನ್ನು ಬ್ಯಾಂಕ್ಗೆ ಹಾಕಿದಾಗ ಅವು ಅಮಾನ್ಯಗೊಂಡಿದ್ದವು. ಇದರಿಂದ, ಹೂವಪ್ಪ ಗೌಡ ಅವರು ಕುಮಾರಸ್ವಾಮಿ ಅವರಿಗೆ ಡಿಮ್ಯಾಂಡ್ ನೋಟಿಸ್ ನೀಡಿದ್ದರು. ಕುಮಾರಸ್ವಾಮಿ ಅವರು ಹಣ ಹಿಂದಿರುಗಿಸಲು ಸಿದ್ಧವಾಗಿರುವುದಾಗಿ ತಿಳಿಸಿದ್ದರಾದರೂ ಹಣ ಹಿಂದಿರುಗಿಸದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹೂವಪ್ಪ ಗೌಡ ಮೂರು ಖಾಸಗಿ ದೂರು ದಾಖಲಿಸಿದ್ದರು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಮಾಜಿ ಶಾಸಕರಾಗಿದ್ದರು. ಇದೇ ವೇಳೆಗೆ 2018ರ ವಿಧಾನಸಭೆ ಚುನಾವಣೆ ಬಂದ ಹಿನ್ನೆಲೆಯಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕುಮಾರಸ್ವಾಮಿ ಮುಂದಾಗಿ, ಸದ್ಯ 1.40 ಕೋಟಿ ರೂ. ಪಾವತಿಸಲಾಗುವುದು. ಉಳಿದ ಹಣವನ್ನು ಬಳಿಕ ನೀಡುವುದಾಗಿ ತಿಳಿಸಿ ಹಣ ಪಾವತಿ ಮಾಡಿದ್ದರು. ಆದ್ದರಿಂದ, ಹೂವಪ್ಪ ಗೌಡ ತಾವು ಹೂಡಿದ್ದ ದಾವೆಗಳನ್ನು ಹಿಂಪಡೆದಿದ್ದರು. ಆನಂತರ, ಕುಮಾರಸ್ವಾಮಿ ಅವರು ಹೂವಪ್ಪ ಗೌಡರನ್ನು ಸಂಪರ್ಕಿಸಿ, ನನಗೆ ತುರ್ತು ಹಣದ ಅಗತ್ಯವಿದ್ದು 68 ಲಕ್ಷ ರೂ. ಸಾಲ ನೀಡುವಂತೆ ಕೋರಿದ್ದರಲ್ಲದೆ, ಸಾಲದ ಹಣಕ್ಕೆ ಮಾಸಿಕ ಶೇ. 2 ಬಡ್ಡಿ ಪಾವತಿಸುವುದಾಗಿ ತಿಳಿಸಿದ್ದರು. ಜತೆಗೆ, ಹಿಂದಿನ ಬಾಕಿ 26.70 ಲಕ್ಷ ರೂ.ಗಳನ್ನು ಪಾವತಿಸುವುದಾಗಿ ತಿಳಿಸಿದ್ದರು. ಇದನ್ನು ನಂಬಿದ ಹೂವಪ್ಪ ಗೌಡ 68 ಲಕ್ಷ ರೂ.ಗಳನ್ನು ಚೆಕ್ ಮೂಲಕ ಕುಮಾರಸ್ವಾಮಿಗೆ ಸಂದಾಯ ಮಾಡಿದ್ದರು. ಬಳಿಕ ಎರಡೂ ಬಾಕಿಗಳನ್ನು ಪಾವತಿಸುವಂತೆ ಹೂವಪ್ಪ ಗೌಡ ಸೂಚಿಸಿದ್ದ ಹಿನ್ನೆಲೆಯಲ್ಲಿ ಆರೋಪಿ ಕುಮಾರಸ್ವಾಮಿ ಅವರು 47 ಲಕ್ಷ, 2.50 ಲಕ್ಷ, 2 ಲಕ್ಷ, 2.50 ಲಕ್ಷ, 30 ಲಕ್ಷ, 2.5 ಲಕ್ಷ, 2 ಲಕ್ಷ, 48 ಲಕ್ಷ ರೂ. ಮೊತ್ತ ಉಲ್ಲೇಖಿಸಿ ಪ್ರತ್ಯೇಕವಾಗಿ ಎಂಟು ಚೆಕ್ಗಳನ್ನು ವಿಭಿನ್ನ ದಿನಾಂಕ ಉಲ್ಲೇಖಿಸಿ ನೀಡಿದ್ದರು. ಕುಮಾರಸ್ವಾಮಿ ಖಾತೆಯಲ್ಲಿ ಹಣದ ಕೊರತೆಯಾಗಿ ಚೆಕ್ಗಳು ಬೌನ್ಸ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಹೂವಪ್ಪ ಗೌಡ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ 8 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ದೋಷಿ ಎಂದು ತೀರ್ಮಾನಿಸಿದ್ದ ಕೋರ್ಟ್: ಪ್ರಕರಣದ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಕುಮಾರಸ್ವಾಮಿ ಅವರನ್ನು ದೋಷಿ ಎಂದು ತೀರ್ಮಾನಿಸಿತ್ತಲ್ಲದೆ, ಪ್ರತ್ಯೇಕ ಎಂಟು ಪ್ರಕರಣಗಳಲ್ಲಿ ಒಟ್ಟು 1.38 ಕೋಟಿ ರೂ.ಗಳನ್ನು ದೂರುದಾರ ಹೂವಪ್ಪ ಪಾವತಿಸಬೇಕು. ಇಲ್ಲವಾದಲ್ಲಿ ಪ್ರತಿ ಪ್ರಕರಣಕ್ಕೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು 2023ರ ಫೆಬ್ರವರಿ 13ರಂದು ಆದೇಶಿಸಿತ್ತು. ಪ್ರತ್ಯೇಕ ಆದೇಶಗಳಲ್ಲಿ 47.30 ಲಕ್ಷ, 2.75 ಲಕ್ಷ, 2.25 ಲಕ್ಷ, 2.75 ಲಕ್ಷ, 30.25 ಲಕ್ಷ, 2.75 ಲಕ್ಷ, 2.30 ಲಕ್ಷ, 48.30 ಲಕ್ಷ ರೂ. ಪಾವತಿಸುವಂತೆ ನ್ಯಾಯಾಲಯ ಕುಮಾರಸ್ವಾಮಿ ಅವರಿಗೆ ಆದೇಶಿಸಿತ್ತು. ಇದರಲ್ಲಿ ಪ್ರತಿ ಪ್ರಕರಣದಲ್ಲಿ ತಲಾ 5 ಸಾವಿರ ರೂ.ಗಳಂತೆ ಸರ್ಕಾರಕ್ಕೆ ವೆಚ್ಚದ ರೂಪದಲ್ಲಿ ಒಟ್ಟು 40 ಸಾವಿರ ರೂ. ಪಾವತಿಸಬೇಕು ಎಂದು ನ್ಯಾಯಾಲಯ ಆದೇಶ ಮಾಡಿತ್ತು. ಇದರಲ್ಲಿ ಹೂವಪ್ಪ ಗೌಡ ಅವರಿಗೆ ಕುಮಾರಸ್ವಾಮಿ ಅವರು 1,38,25,000 ರೂ. ಪಾವತಿಸಬೇಕಿತ್ತು. ಈ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯ 2023ರ ಜುಲೈ 19ರಂದು ಎತ್ತಿಹಿಡಿದಿತ್ತು. ಇದರಿಂದ, ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಕಲಬುರಗಿ ಐಟಿಎಫ್ ಮಹಿಳಾ ಟೆನಿಸ್ ಟೂರ್ನಿ : ಕ್ವಾರ್ಟರ್ ಫೈನಲ್ಗೆ ವೈಷ್ಣವಿ ಅಡ್ಕರ್, ಅಂಕಿತಾ ರೈನಾ
ಸೋಹಾ ಸಾದಿಕ್, ಆಕಾಂಕ್ಷಾ ದಿಲೀಪ್ ನಿಟ್ಟುರೆ ಜೋಡಿಗೆ ಜಯ; ಸ್ನಿಗ್ಧ ಕಾಂತಾ, ಹರ್ಷಿಣಿ ನಾಗರಾಜ್ ಜೋಡಿಗೆ ನಿರಾಶೆ
ಮತದಾರರ ಪಟ್ಟಿಗಳಿಂದ ಸಾವಿರಾರು ಹೆಸರುಗಳು ಮಾಯ: ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ತರಾಟೆ
ಕೋಲ್ಕತಾ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ವೇಳೆ, ಪಶ್ಚಿಮ ಬಂಗಾಳದಾದ್ಯಂತ ಮುಖ್ಯವಾಗಿ ಮತುವಾ ಸಮುದಾಯಕ್ಕೆ ಸೇರಿದ ಸಾವಿರಾರು ಮತದಾರರ ಹೆಸರುಗಳನ್ನು ಅಳಿಸಿಹಾಕಿರುವುದರ ವಿರುದ್ಧ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಕೆಂಡ ಕಾರಿದ್ದಾರೆ. ಮತುವಾ ಸಮುದಾಯದ ಮಾತೆ ಬಿನಪಾನಿ ದೇವಿಯ ಪುಣ್ಯತಿಥಿಯ ಸಂದರ್ಭದಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮಮತಾ, ದೇಶದ ಪೌರತ್ವವನ್ನು ಕೊಡುವ ನೆವದಲ್ಲಿ ಬಿಜೆಪಿಯು ಮತುವಾ ಜನರನ್ನು ‘‘ಅನಿಶ್ಚಿತತೆ ಮತ್ತು ಗೊಂದಲದಲ್ಲಿ ಕೆಡವಿದೆ’’ ಎಂದು ಆರೋಪಿಸಿದರು. ಉತ್ತರ 24 ಪರಗಣ, ನಾದಿಯ, ಜಲ್ಪಾಯಿಗುರಿ ಮತ್ತು ಬರ್ದಮಾನ್ ಜಿಲ್ಲೆಗಳ ಸಾವಿರಾರು ಮತುವಾ ಜನರ ಹೆಸರುಗಳನ್ನು ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ ಫೆಬ್ರವರಿ 28ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ‘‘ಈ ಸಮುದಾಯದ ಜನರ ಗುರುತಿಗೆ ಸಂಬಂಧಿಸಿ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಎಸ್ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಗಳಿಂದ ಅವರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಿಹಾಕಲಾಗುತ್ತಿದೆ. ಈ ಜನರು ತಲೆಮಾರುಗಳಿಂದ ಭಾರತದ ನಾಗರಿಕರಾಗಿದ್ದಾರೆ. ಅವರ ಮತಗಳಿಂದ ಸರಕಾರಗಳು ರಚನೆಯಾಗುತ್ತಿವೆ. ಈಗ ಅವರನ್ನು ಅನಿಶ್ಚಿತತೆ ಮತ್ತು ಗೊಂದಲಕ್ಕೆ ಕೆಡವಲಾಗುತ್ತಿದೆ’’ ಎಂದು ಅವರು ಆರೋಪಿಸಿದರು.
ನಾಳೆ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ʼಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರʼ
ಬೆಳ್ತಂಗಡಿ: ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರು ಕುಂಬಳಗೋಡು, ಗೇರುಪಾಳ್ಯ ನಿವಾಸಿ ವೆಂಕಟೇಶ್ ಡಾಬರ್ ವೆಂಕಟೇಶ್ (38) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ತುಮಕೂರು ಜಿಲ್ಲೆಯ ತಿಪಟೂರ್ ಎಂಬಲ್ಲಿಂದ ಮಾ.4 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಮಾ.5 ರಂದು ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಸೂಕ್ತ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ಮಧ್ಯ ಪ್ರಾಚ್ಯದಲ್ಲಿನ ಬಿಕ್ಕಟ್ಟು | ಕೊನೆಗೂ ಸ್ವದೇಶಕ್ಕೆ ಪ್ರಯಾಣ ಬೆಳೆಸಿದ ಝಿಂಬಾಬ್ವೆ ಕ್ರಿಕೆಟ್ ತಂಡ
ಹೊಸದಿಲ್ಲಿ: ಐಸಿಸಿ ಆಯೋಜಿತ ಪುರುಷರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿದ ನಂತರ ಭಾರತದಲ್ಲೇ ಸಿಲುಕಿಕೊಂಡಿದ್ದ ಝಿಂಬಾಬ್ವೆ ಕ್ರಿಕೆಟ್ ತಂಡವು ಕೊನೆಗೂ ಸ್ವದೇಶಕ್ಕೆ ಪ್ರಯಾಣ ಬೆಳೆಸಿದೆ. ಸ್ವತಃ ಝಿಂಬಾಬ್ವೆ ಕ್ರಿಕೆಟ್ ಮಂಡಳಿಯು ಬುಧವಾರ ಇದನ್ನು ಖಚಿತಪಡಿಸಿದೆ. ಪಶ್ಚಿಮ ಏಶ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ವಾಯುಪ್ರದೇಶದಲ್ಲಿ ನಿರ್ಬಂಧ ಹೇರಿದ ಕಾರಣ ಝಿಂಬಾಬ್ವೆ ತಂಡ ಸ್ವದೇಶಕ್ಕೆ ವಾಪಸಾಗಲು ಸಾಧ್ಯವಾಗಿರಲಿಲ್ಲ. ಇದೀಗ ಅಂತರ್ರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯು(ಐಸಿಸಿ)ಝಿಂಬಾಬ್ವೆ ಕ್ರಿಕೆಟ್ ತಂಡ ವಾಪಸಾಗಲು ಪರ್ಯಾಯ ವಿಮಾನಗಳ ವ್ಯವಸ್ಥೆ ಮಾಡಿದೆ. ‘ಇತ್ತೀಚೆಗೆ ವಿಮಾನ ಪ್ರಯಾಣದಲ್ಲಿ ಉಂಟಾದ ಅಡೆತಡೆಯ ನಂತರ ಅಂತರ್ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಪರ್ಯಾಯ ಪ್ರಯಾಣದ ವ್ಯವಸ್ಥೆಗಳನ್ನು ಮಾಡಿದ್ದು, ಐಸಿಸಿ ಆಯೋಜಿತ ಪುರುಷರ ಟಿ-20 ವಿಶ್ವಕಪ್ನಲ್ಲಿ ಭಾಗವಹಿಸಿದ್ದ ಝಿಂಬಾಬ್ವೆಯ ಹಿರಿಯರ ಪುರುಷರ ತಂಡವು ಭಾರತದಿಂದ ಸ್ವದೇಶಕ್ಕೆ ವಾಪಸಾಗುತ್ತಿದೆ’ ಎಂದು ಝಿಂಬಾಬ್ವೆ ಕ್ರಿಕೆಟ್ ಎಕ್ಸ್ನಲ್ಲಿ ದೃಢಪಡಿಸಿದೆ. ವಿಮಾನ ಲಭ್ಯವಾದ ಕಾರಣ, ಪರಿಷ್ಕೃತ ಮಾರ್ಗದಲ್ಲಿ ತಂಡವು ಬೇರೆ ಬೇರೆ ಗುಂಪುಗಳಾಗಿ ಹರಾರೆಗೆ ವಾಪಸಾಗುತ್ತಿವೆ. ಆಟಗಾರರ ಮೊದಲ ಗುಂಪು ಬುಧವಾರ ನಿರ್ಗಮಿಸಿದೆ. ಕೊನೆಯ ಗುಂಪು ಶುಕ್ರವಾರ ಮಧ್ಯಾಹ್ನ ಹೊರಡಲಿದೆ. ಅಗತ್ಯವಿದ್ದರೆ ಹೆಚ್ಚಿನ ಮಾಹಿತಿ ನೀಡಲಾಗುತ್ತದೆ ಎಂದು ಝಿಂಬಾಬ್ವೆ ಕ್ರಿಕೆಟ್ ಮಂಡಳಿಯು ಪ್ರಕಟನೆಯಲ್ಲಿ ತಿಳಿಸಿದೆ. ಝಿಂಬಾಬ್ವೆ ಕ್ರಿಕೆಟ್ ತಂಡವು ರವಿವಾರ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಪಂದ್ಯಾವಳಿಯಲ್ಲಿ ತನ್ನ ಕೊನೆಯ ಪಂದ್ಯವನ್ನು ಆಡಿತ್ತು. ತಂಡವು ಸೋಮವಾರದಂದು ದುಬೈ ಮೂಲಕ ಹರಾರೆಗೆ ವಾಪಸಾಗಲು ಈ ಮೊದಲು ಯೋಜಿಸಿತ್ತು. ಆಟಗಾರರು ಹಾಗೂ ಸಿಬ್ಬಂದಿ ದಿಲ್ಲಿಯಿಂದ ದುಬೈಗೆ, ಆ ನಂತರ ಹರಾರೆಗೆ ತೆರಳಲು ಎಮಿರೇಟ್ಸ್ ವಿಮಾನಗಳನ್ನು ಬುಕ್ ಮಾಡಿದ್ದರು. ಪಶ್ಚಿಮ ಏಶ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದ ನಂತರ ಹಲವಾರು ದೇಶಗಳು ತಮ್ಮ ವಾಯು ಪ್ರದೇಶಗಳನ್ನು ಮುಚ್ಚಿದ ಕಾರಣ ಏರ್ಲೈನ್ಸ್ಗಳು ತಮ ವಿಮಾನಗಳನ್ನು ರದ್ದುಪಡಿಸಿದವು, ಕೆಲವು ಮಾರ್ಗಗಳನ್ನು ಬದಲಿಸಿದವು. ಇದರಿಂದ ಝಿಂಬಾಬ್ವೆ ತಂಡದ ಯೋಜನೆಯು ಬದಲಾಗಿದೆ. ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವೆ ಕ್ಷಿಪಣಿ ದಾಳಿ ಹೆಚ್ಚಾದ ನಂತರ ವಿಮಾನ ಹಾರಾಟ ವ್ಯತ್ಯಯವಾಯಿತು. ಈ ಪರಿಸ್ಥಿತಿಯಿಂದಾಗಿ ದುಬೈ ಮೂಲಕ ಪ್ರಯಾಣಿಸುವ ಹಲವಾರು ಅಂತರ್ರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ಪರಿಣಾಮಬೀರಿವೆ.
ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲು ಅಮೆರಿಕ ನೌಕಾಪಡೆ ಸಿದ್ಧ: ಶ್ವೇತಭವನ
ವಾಷಿಂಗ್ಟನ್: ಅಗತ್ಯವಿದ್ದರೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ತೈಲ ಟ್ಯಾಂಕರ್ ಗಳಿಗೆ ಅಮೆರಿಕ ನೌಕಾಪಡೆ ಬೆಂಗಾವಲು ನೀಡಲು ಸಿದ್ಧವಾಗಿದೆ ಎಂದು ಶ್ವೇತಭವನ ತಿಳಿಸಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಗತ್ಯವಿದ್ದಲ್ಲಿ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಟ್ಯಾಂಕರ್ಗಳಿಗೆ ಸುರಕ್ಷತಾ ಬೆಂಗಾವಲು ಒದಗಿಸುವ ಕಾರ್ಯವನ್ನು ಅಮೆರಿಕ ನೌಕಾಪಡೆಗೆ ವಹಿಸುವುದಾಗಿ ಹೇಳಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ತಿಳಿಸಿದ್ದಾರೆ. ಯುದ್ಧದ ಪರಿಸ್ಥಿತಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಈ ಆಯಕಟ್ಟಿನ ಜಲಮಾರ್ಗವನ್ನು ಮುಚ್ಚಲಾಗಿದೆ ಎಂದು ಘೋಷಿಸಿದೆ. ಅಲ್ಲಿಂದ ಹಾದುಹೋಗುವ ಹಡಗುಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ. ಗಲ್ಫ್ ಪ್ರದೇಶದಲ್ಲಿ ಅಥವಾ ಅದರ ಸಮೀಪ ಸಂಚರಿಸುವ ಕಚ್ಚಾ ತೈಲ ಸಾಗಣೆ ಟ್ಯಾಂಕರ್ಗಳು ಮತ್ತು ಸರಕು ಹಡಗುಗಳಿಗೆ ಯುನೈಟೆಡ್ ಸ್ಟೇಟ್ಸ್ ಡೆವಲಪ್ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಮೂಲಕ ‘ಬಹಳ ಸಮಂಜಸವಾದ ಬೆಲೆಯಲ್ಲಿ’ ರಾಜಕೀಯ ಅಪಾಯ ವಿಮೆ ಪಡೆಯುವ ಅವಕಾಶ ಲಭ್ಯವಾಗಲಿದೆ ಎಂದು ಅಧ್ಯಕ್ಷ ಟ್ರಂಪ್ ಘೋಷಿಸಿದ್ದಾರೆ ಎಂದು ಲೀವಿಟ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ 93 ಗ್ರಾಪಂ, 24 ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಸಾಧ್ಯತೆ: ಉಡುಪಿ ಡಿಸಿ
► ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ► ಸದ್ಯಕ್ಕೆ ನೀರಿಗಿಲ್ಲ ಸಮಸ್ಯೆ; ನೀರಿನ ಮೂಲದ ವರದಿ ನೀಡಲು ಸೂಚನೆ
ಕಲಬುರಗಿ | 24.96 ಲಕ್ಷ ರೂ. ಮೌಲ್ಯದ ಸ್ವತ್ತು ವಶ; 7 ಆರೋಪಿಗಳ ಬಂಧನ: ಡಾ.ಶರಣಪ್ಪ ಎಸ್.ಡಿ.
ಕಲಬುರಗಿ : ನಗರದ ನಾಲ್ಕು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ, ಬೈಕ್ ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳನ್ನು ಪತ್ತೆ ಹಚ್ಚಿ ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಿ 24.96 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ರಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಮೈಂದರ್ಗಿ ನಿವಾಸಿ ಸುರೇಶ್ ಅಲಿಯಾಸ್ ಗಂಗಾರಾಮ ಡೌಲತ್ ಚವ್ಹಾಣನನ್ನು ಬಂಧಿಸಿ 6.75 ಲಕ್ಷ ರೂ. ಮೌಲ್ಯದ 45 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಲ್ಲಿ ಕಳ್ಳತನವಾಗಿದ್ದ ಬೈಕ್ಗಳನ್ನು ಪತ್ತೆ ಹಚ್ಚಲಾಗಿದ್ದು, ಅಂತಾರಾಜ್ಯ ಹಾಗೂ ಅಂತರ್ ಜಿಲ್ಲಾ ಅಪರಾಧಿಯಾಗಿದ್ದ ಶೇಖ್ ನಿಸಾರ್ ಅಹಮದ್ನನ್ನು ಬಂಧಿಸಿ ₹3.90 ಲಕ್ಷ ಮೌಲ್ಯದ 8 ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಅದೇ ರೀತಿ ಸ್ಟೇಷನ್ ಬಝಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 8.20 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು, ಕಾಳಗಿ ತಾಲೂಕಿನ ಕೋರವಾರ ನಿವಾಸಿ ರಾಮಚಂದ್ರ ಹೊಸಮನಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೂ ಎಂ.ಬಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ 5 ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಕುಖ್ಯಾತ ದರೋಡೆಕೋರರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 6.11 ಲಕ್ಷ ರೂ. ಮೌಲ್ಯದ ಮೊಬೈಲ್ ಫೋನ್ಗಳು, ಬಂಗಾರದ ಆಭರಣಗಳು, ಬೈಕ್, ವ್ಯಾನಿಟಿ ಬ್ಯಾಗ್ ಸೇರಿದಂತೆ ಇತರೆ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಜಾದಪುರದ ಅಬ್ಬು ಶೇಖ್, ಬಿಲಾಲಬಾದ ಕಾಲೋನಿಯ ಮಾಜಿದ್ ಅಲಿಯಾಸ್ ಮಟಕಾ ಮಾಜೀದ್, ಸೋನಿಯಾ ಗಾಂಧಿ ಕಾಲೋನಿಯ ಶೇಖ್ ಹುಸೇನ್ ಹಾಗೂ ಮಿಲ್ಲತ್ ನಗರದ ಮಹಮದ್ ಆರೀಫ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಪ್ರವೀಣ್ ನಾಯಕ, ಎಸಿಪಿಗಳಾದ ಶಿವನಗೌಡ ಪಾಟೀಲ್, ಶರಣಬಸಪ್ಪ ಸುಬೇದಾರ್, ವಾಜೀದ್ ಪಟೇಲ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ | ʼಆನ್ಲೈನ್ ಎಂಪಿʼ ಎಂದು ರಾಧಾಕೃಷ್ಣ ದೊಡ್ಡಮನಿಗೆ ಉಮೇಶ್ ಜಾಧವ್ ಟೀಕೆ
ಕಲಬುರಗಿ : ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರು ಕಳೆದ ಎರಡುವರೆ ವರ್ಷಗಳಲ್ಲಿ ಒಂದೇ ಒಂದು ಸಭೆ ನಡೆಸದೆ, ಇತ್ತೀಚೆಗೆ ದಿಶಾ ಸಭೆಯನ್ನು ಆನ್ಲೈನ್ ಮೂಲಕ ನಡೆಸಿ “ಕಲಬುರಗಿಯ ಆನ್ಲೈನ್ ಎಂಪಿ” ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ ಎಂದು ಮಾಜಿ ಸಂಸದ ಡಾ. ಉಮೇಶ್ ಜಾಧವ್ ಲೇವಡಿ ಮಾಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿಗಾಗಿ ಫೆಬ್ರವರಿ 28ರಂದು ತರಾತುರಿಯಲ್ಲಿ ದಿಶಾ ಸಭೆ ಕರೆಯಲಾಗಿದ್ದು, ಸ್ವತಃ ಲೋಕಸಭಾ ಸದಸ್ಯರು ಗೈರು ಹಾಜರಾಗಿ ವೀಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದಾರೆ ಎಂದು ಆರೋಪಿಸಿದರು. ದಿಶಾ ಸಭೆಯನ್ನು ಆನ್ಲೈನ್ ಮೂಲಕ ನಡೆಸಿರುವುದು ಭಾರತದ ಇತಿಹಾಸದಲ್ಲೇ ಪ್ರಥಮ ಎಂದು ಟೀಕಿಸಿದರು. ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿ ಕ್ಷೇತ್ರದ ಅಭಿವೃದ್ಧಿ ಕೈಗೊಳ್ಳಬೇಕಾದ ಎಂಪಿ ಮತದಾರರಿಗೆ ಲಭ್ಯವಾಗದ ಪರಿಸ್ಥಿತಿ ಉಂಟಾಗಿದೆ. ತಾನು ಎಂಪಿ ಆಗಿದ್ದಾಗ ಸುಳ್ಳು ಹೇಳಿ ಆಯ್ಕೆಯಾಗಿದ್ದಾರೆ ಎಂದು ಆರೋಪಿಸಿ, ಈಗ ಅವರ ಸ್ಥಿತಿ ಹುಡುಕಬೇಕಾಗಿದೆ ಎಂದರು. ಎಂಪಿ, ಎಂಎಲ್ಎ ಹಾಗೂ ಸಚಿವ ಸ್ಥಾನಗಳು ಖರ್ಗೆ ಮನೆತನದಲ್ಲೇ ಇರಬೇಕು ಎಂಬ ಸ್ವಾರ್ಥ ರಾಜಕಾರಣದಿಂದ ಕಲಬುರಗಿಯ ಪರಿಸ್ಥಿತಿ ಹದಗೆಟ್ಟಿದೆ ಎಂದು ಅವರು ಕಟುವಾಗಿ ಆರೋಪಿಸಿದರು. ಕಲಬುರಗಿ ವಿಮಾನ ನಿಲ್ದಾಣ ಬಂದ್ ಆದರೂ ಲೋಕಸಭಾ ಸದಸ್ಯರು ಕೇಂದ್ರಕ್ಕೆ ಕೇವಲ ಒಂದು ಪತ್ರ ಬರೆದು ಮೌನವಾಗಿರುವುದು ವಿಷಾದಕರ ಸಂಗತಿ ಎಂದು ಹೇಳಿದರು. ಕೊರೋನಾ ಅವಧಿಯಲ್ಲಿ ವಿಮಾನ ಹಾರಾಟ ನಡೆದಿದ್ದರೂ, ಈಗ ಶ್ರೀಮಂತರ ವಿಮಾನ ಮಾತ್ರ ಇಳಿಯುವ ನಿಲ್ದಾಣವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದರು. ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯಬೇಕಾದ ಬ್ಯಾಂಕರ್ಸ್ ಸಭೆಯನ್ನೂ ನಡೆಸದೆ ಅಭಿವೃದ್ಧಿ ಯೋಜನೆಗಳ ಬಗ್ಗೆ ನಿರಾಸಕ್ತಿ ತೋರಿದ್ದಾರೆ. ಪ್ರಸ್ತುತ ಲೋಕಸಭಾ ಸದಸ್ಯರ ವಿರುದ್ಧ ತೀವ್ರ ಜನಾಕ್ರೋಶ ವ್ಯಕ್ತವಾಗುತ್ತಿದೆ ಎಂದು ಡಾ. ಉಮೇಶ್ ಜಾಧವ್ ದೂರಿದರು. ಎಂಎಲ್ಸಿ ಶಶಿಲ್ ಜಿ ನಮೋಶಿ, ಶಾಸಕ ಬಸವರಾಜ ಮತ್ತಿಮಡು , ರಾಜಕುಮಾರ್ ಪಾಟೀಲ್ ತೆಲ್ಕೂರ, ಅಶೋಕ್ ಬಗಲಿ, ಶರಣಪ್ಪ ತಳವಾರ, ಶಿವರಾಜ್ ಪಾಟೀಲ್ ರದ್ದೇವಾಡಗಿ, ಮಹೇಂದ್ರ ಪೂಜಾರಿ ಚಂದ್ರಶೇಖರ ಪರಸರೆಡ್ಡಿ, ನರಸಪ್ಪಗೌಡ, ಬಾಬುರಾವ್ ಹಾಗರಗುಂಡಗಿ, ಸೇರಿದಂತೆ ಹಲವರು ಇದ್ದರು. ಬಾಕ್ಸ್... ದಲಿತರ ಹಣ ಗ್ಯಾರಂಟಿ ಯೋಜನೆಗಳ ಪಾಲು: ತೆಲ್ಕೂರ್ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಬಂದಾಗಿನಿಂದಲೂ ದಲಿತರ ಹಣವನ್ನು ಲೂಟಿಯಾಡುತ್ತಿದೆ. ಎರಡೂವರೆ ವರ್ಷದಲ್ಲಿ 38,859 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಇದರಿಂದ ಅಂಬೇಡ್ಕರ್, ಅಡಿಜಾಂಬವ, ವಾಲ್ಮೀಕಿ, ತಾಂಡಾ, ಲಿಡ್ಕರ್ ಅಭಿವೃದ್ಧಿ ನಿಗಮಗಳು ಹಣವಿಲ್ಲದೆ ಸೊರಗಿವೆ. ಇತ್ತ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಕೂಡ ಕೊಡುತ್ತಿಲ್ಲ ಎಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಆರೋಪಿಸಿದರು.
ತಮಿಳುನಾಡು: ಕಾಂಗ್ರೆಸ್ಗೆ 28, ಒಂದು ರಾಜ್ಯಸಭಾ ಸ್ಥಾನ
ಚೆನ್ನೈ: ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಮ್ (ಡಿಎಮ್ಕೆ) ಮತ್ತು ಕಾಂಗ್ರೆಸ್ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸ್ಥಾನ ಹೊಂದಾಣಿಕೆ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದದ ಪ್ರಕಾರ, ಕಾಂಗ್ರೆಸ್ಗೆ 28 ವಿಧಾನಸಭಾ ಸ್ಥಾನಗಳನ್ನು ನೀಡಲಾಗಿದೆ. ಇದು 2021ರಲ್ಲಿ ಅದು ಪಡೆದ ಸ್ಥಾನಗಳಿಗಿಂತ ಮೂರು ಅಧಿಕವಾಗಿದೆ. ಜೊತೆಗೆ, ಮುಂಬರುವ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ ಅದು ಒಂದು ಸ್ಥಾನವನ್ನೂ ಪಡೆಯಲಿದೆ. ಒಪ್ಪಂದಕ್ಕೆ ಚೆನ್ನೈನಲ್ಲಿರುವ ಡಿಎಮ್ಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್ ಮತ್ತು ತಮಿಳುನಾಡು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಸಹಿ ಹಾಕಿದರು.
ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆ ನಿರ್ಬಂಧಿಸುವ ಕುರಿತು ಸರಕಾರ ಚಿಂತನೆ ನಡೆಸಿದೆ : ದಿನೇಶ್ ಗುಂಡೂರಾವ್
‘ಕ್ಲಿನಿಕಲ್ ನ್ಯೂರೋ ಸೈಕೋಲಾಜಿ ಮತ್ತು ಕಾಗ್ನಿಟಿವ್ ನ್ಯೂರೋ ವಿಜ್ಞಾನ ಅಂತರಾಷ್ಟ್ರೀಯ ಸಮ್ಮೇಳನʼ
ಕಲಬುರಗಿ | ಎಸೆಸೆಲ್ಸಿ ಪರೀಕ್ಷೆ: ಮಾ.6ರಂದು ಫೋನ್-ಇನ್-ಕಾರ್ಯಕ್ರಮ
ಕಲಬುರಗಿ: ಕಲಬುರಗಿ ಆಕಾಶವಾಣಿ ವತಿಯಿಂದ ಪ್ರಸಾರವಾಗುವ ಜನಪ್ರಿಯ ‘ಕಲ್ಯಾಣ ವಾಣಿ’ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೆ ಸಹಾಯಕವಾಗುವ ವಿಶೇಷ ನೇರ ಫೋನ್-ಇನ್ ಕಾರ್ಯಕ್ರಮವು ಇದೇ ಮಾ.6 ರಂದು ಬೆಳಿಗ್ಗೆ 11ಕ್ಕೆ ನಡೆಯಲಿದ್ದು, ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕಲಬುರಗಿ ಆಕಾಶವಾಣಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷಾ ಸಿದ್ಧತೆ, ಪ್ರಶ್ನಾಪತ್ರಿಕೆಯ ಮಾದರಿ, ಸಮಯ ನಿರ್ವಹಣೆ ಹಾಗೂ ಅಂಕ ಗಳಿಸುವ ಸೂತ್ರಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ತಜ್ಞರಿಂದ ನೇರವಾಗಿ ಮಾರ್ಗದರ್ಶನ ಪಡೆಯಬಹುದು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಲಿದ್ದಾರೆ.
Abhishek Sharma: ಟೀಂ ಇಂಡಿಯಾ ಟಿ20 ಸ್ಪೆಷಲಿಸ್ಟ್ ಮತ್ತೆ ಫ್ಲಾಪ್: ಆಂಗ್ಲರಿಗೆ ಶರಣಾದ ಅಭಿಷೇಕ್ ಶರ್ಮಾ
Abhishek Sharma: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2026 ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಭಾರತ ಮುಖಾಮುಖಿಯಾಗಿವೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಟೀಂ ಇಂಡಿಯಾಗೆ ಆರಂಭದಲ್ಲೇ ಆಘಾತ ಎದುರಾಗಿದೆ. ಓಪನರ್ ಆಗಿ ಕಣಕ್ಕಳಿದ ಅಭಿಷೇಕ್ ಶರ್ಮಾ ಕೇವಲ 9 ರನ್ಗಳಿಗೆ ಕ್ಯಾಚ್ ನೀಡಿ ಪೆವಿಲಿಯನ್ನತ್ತ ನಡೆದರು. ಟಾಸ್ ಸೋತ
ಎಐಸಿಸಿ ಕರ್ನಾಟಕ ರಾಜ್ಯ ಕ್ಷಿಪ್ರ ಪ್ರತಿಕ್ರಿಯೆ ಪಡೆಯ ಸದಸ್ಯರಾಗಿ ಆಸೀಫ್ ಅಲಿ ಎಸ್. ನೇಮಕ
ನವದೆಹಲಿ : ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್ಟಿಐ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ರಾಜ್ಯಕ್ಕಾಗಿ ಕ್ಷಿಪ್ರ ಪ್ರತಿಕ್ರಿಯೆ ಪಡೆಯ ಹಿರಿಯ ಸದಸ್ಯರಾಗಿ ಎಸ್. ಆಸೀಫ್ ಅಲಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್ಟಿಐ ಇಲಾಖೆಯ ಅಧ್ಯಕ್ಷ ಅಭಿಷೇಕ್ ಸಿಂಘ್ವಿ ಅವರು, ಕರ್ನಾಟಕದಲ್ಲಿ ಅಗತ್ಯವಿರುವ ಸಂದರ್ಭದಲ್ಲಿ ಕಾನೂನು ಬೆಂಬಲ ಒದಗಿಸಿ, ರಾಜ್ಯ-ನಿರ್ದಿಷ್ಟ ಅವಶ್ಯಕತೆಗಳನ್ನು ಪರಿಹರಿಸಬೇಕೆಂದು ಸೂಚಿಸಿದ್ದಾರೆ. ಎಸ್. ಆಸೀಪ್ ಅಲಿ ಅವರು ರಾಷ್ಟ್ರೀಯ ಸಂಯೋಜಕರಾದ ಒಮರ್ ಹೊಡಾ ಹಾಗೂ ಕರ್ನಾಟಕ ರಾಜ್ಯ ಕಾನೂನು, ಮಾನವ ಹಕ್ಕುಗಳು ಮತ್ತು ಆರ್ಟಿಐ ಇಲಾಖೆಯ ಅಧ್ಯಕ್ಷರಾದ ಸಿ.ಎಂ. ಧನಂಜಯ ಅವರಿಗೆ ವರದಿ ಮಾಡಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. “ನೀವು ನಿಮ್ಮ ಪಾತ್ರವನ್ನು ಅತ್ಯಂತ ವೃತ್ತಿಪರತೆ ಮತ್ತು ಸಮರ್ಪಣೆಯೊಂದಿಗೆ ನಿರ್ವಹಿಸುವಿರಿ ಎಂಬ ವಿಶ್ವಾಸವಿದೆ” ಎಂದು ಆದೇಶ ಪತ್ರದಲ್ಲಿ ಅಭಿಷೇಕ್ ಸಿಂಘ್ವಿ ತಿಳಿಸಿದ್ದಾರೆ.
ಬೆಂಗಳೂರು : ಮಾದಕ ಪದಾರ್ಥಗಳ ಮಾರಾಟ ಮತ್ತು ಸೇವನೆಯ ವಿರುದ್ಧದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ಪಶ್ಚಿಮ ವಿಭಾಗದ ಆರು ಶಿಕ್ಷಣ ಸಂಸ್ಥೆಗಳು ಹಾಗೂ ಎರಡು ವಸತಿ ನಿಲಯಗಳಲ್ಲಿ ಗುರುವಾರ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ಶಿಕ್ಷಣ ಸಂಸ್ಥೆಗಳು ಹಾಗೂ ವಸತಿ ನಿಲಯಗಳ ವ್ಯವಸ್ಥಾಪಕರ ಅನುಮತಿಯೊಂದಿಗೆ 1,200 ವಿದ್ಯಾರ್ಥಿಗಳಿಂದ ಸ್ಯಾಂಪಲ್ಸ್ ಪಡೆಯಲಾಗಿದ್ದು, 585 ವಿದ್ಯಾರ್ಥಿಗಳ ಸ್ಯಾಂಪಲ್ಸ್ ಪರಿಶೀಲನೆ ನಡೆಸಿದಾಗ 31 ವಿದ್ಯಾರ್ಥಿಗಳು ಮಾದಕ ಪದಾರ್ಥ ಸೇವಿಸಿರುವುದು ದೃಢಪಟ್ಟಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ ಮಾದಕ ವಸ್ತು ಸೇವನೆ ದೃಢಪಟ್ಟ ವಿದ್ಯಾರ್ಥಿಗಳನ್ನು ವ್ಯಸನ ಮುಕ್ತಗೊಳಿಸಲು ‘ಸನ್ಮಿತ್ರ’ ಯೋಜನೆಯಡಿ ಪೋಷಕರಿಗೆ ನೆರವು ನೀಡಲಾಗುವುದು. ವ್ಯಸನಿಗಳನ್ನು ಸಮಾಲೋಚನೆಗೆ ಒಳಪಡಿಸಿ, ಅವರು ಯಾವ ಕಾರಣದಿಂದ ಮಾದಕ ಪದಾರ್ಥಗಳಿಗೆ ದಾಸರಾಗಿದ್ದಾರೆ? ಮಾದಕ ಪದಾರ್ಥಗಳು ಸಿಗುತ್ತಿರುವುದು ಹೇಗೆ? ಎಂಬುದನ್ನು ತಿಳಿದುಕೊಳ್ಳಲಾಗುತ್ತದೆ. ಅವರನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಪ್ರಯತ್ನಿಸಲಾಗುತ್ತದೆ. ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ನಿಗಾವಹಿಸಲಾಗುವುದು ಮತ್ತು ಅವರ ಗೌಪ್ಯತೆಯನ್ನು ಕಾಪಾಡಲಾಗುತ್ತದೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಜಾಗೃತಿ ಕಾರ್ಯಕ್ರಮದ ತಪಾಸಣೆಗೆ ಆರು ಪ್ರತಿಷ್ಠಿತ ಶಿಕ್ಷಣ ಸಂಸ್ಥೆ, ಎರಡು ವಸತಿ ನಿಲಯಗಳ ಆಡಳಿತ ಮಂಡಳಿಗಳು ಹಾಗೂ ನಗರದ ಪುಣ್ಯ ಆಸ್ಪತ್ರೆ, ಪದ್ಮದೇವಯ್ಯ ಆಸ್ಪತ್ರೆ, ಕಾಡೆ ಆಸ್ಪತ್ರೆ, ಶರಾವತಿ ಆಸ್ಪತ್ರೆ, ಶ್ರೀಲಕ್ಷ್ಮೀ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಕಾಂಗರೂ ಕೇರ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಸಹಕಾರ ಒದಗಿಸಿದ್ದಾರೆ. ಮಾದಕ ಪದಾರ್ಥಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ಮನವರಿಕೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮೆರಿಕಾ - ಇರಾನ್ ಯುದ್ಧ: ಹೊರ್ಮುಜ್ ಜಲಸಂಧಿ ಎಂದರೇನು, ಜಾಗತಿಕವಾಗಿ ಇದರ ಮಹತ್ವವೇನು?
ಅಮೆರಿಕಾ - ಇರಾನ್ ಯುದ್ಧದ ಸಂದರ್ಭದಲ್ಲಿ ಹೊರ್ಮುಜ್ ಜಲಸಂಧಿ ಸಾಕಷ್ಟು ಚರ್ಚೆಗೆ ಬರುತ್ತಿದೆ. ಹೊರ್ಮುಜ್ ಜಲಸಂಧಿ ಬಿಕ್ಕಟ್ಟು ಮುಂದುವರಿದರೆ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೆ ಏರುವ ಸಾಧ್ಯತೆ ಇದೆ. ಹಾಗಾಗಿ ಈ ಜಲಸಂಧಿ ಬಿಕ್ಕಟ್ಟು ಜಾಗತಿಕವಾಗಿ ಮಹತ್ವ ಪಡೆದುಕೊಂಡಿದೆ. ಸದ್ಯ ಇದರ ಸಂಪೂರ್ಣ ನಿಯಂತ್ರಣ ತನ್ನ ಬಳಿಯೇ ಇದೆ ಎಂದು ಇರಾನ್ ಹೇಳಿಕೊಂಡಿದೆ. ಆದರೆ ಅಮೆರಿಕಾ ಮತ್ತು ಇಸ್ರೇಲ್ ಸೇನೆ ತನ್ನ ಪ್ರಾಬಲ್ಯ ಸಾಧಿಸಲು ಪ್ರಯತ್ನ ನಡೆಸುತ್ತಿದೆ.
ಕನಕಗಿರಿ | ಪತ್ರಕರ್ತರ ಮೇಲೆ ಹಲ್ಲೆ ಆರೋಪ : ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹ
ಕನಕಗಿರಿ: ಪಟ್ಟಣ ಪಂಚಾಯಿತಿ ಸದಸ್ಯ ಅನಿಲಕುಮಾರ ಬಿಜ್ಜಳ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷೆಯ ಪತಿ ಟಿ.ಜೆ. ರಾಮಚಂದ್ರ ಮತ್ತು ಅವರ ಬೆಂಬಲಿಗರ ಮಧ್ಯೆ ನಡೆದ ಗಲಾಟೆಯನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ತಮ್ಮ ಮೊಬೈಲ್ ನಲ್ಲಿ ವಿಡಿಯೋ, ಪೋಟೋ ತೆಗೆಯುವ ಸಮಯದಲ್ಲಿ ಗಲಾಟೆಯ ನಿರತ ಗುಂಪಿನವರು ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸಂಘದ ಅಧ್ಯಕ್ಷ ಸೋಮಶೇಖರಯ್ಯ ಎಂ.ಹಿರೇಮಠ ಅವರು ತಿಳಿಸಿದರು. ಹಲ್ಲೆ ಘಟನೆಯನ್ನು ಖಂಡಿಸಿ ಇಲ್ಲಿನ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಅನಿತಾ ಇಂಡಿ ಅವರಿಗೆ ಮನವಿ ಸಲ್ಲಿಸಿದ ನಂತರ ಅವರು ಮಾತನಾಡಿದರು. ಗಲಾಟೆ ನಡೆಯುತ್ತಿದ್ದ ಘಟನೆಯನ್ನು ಮೊಬೈಲ್ನಲ್ಲಿ ವಿಡಿಯೋ ಹಾಗೂ ಪೋಟೋ ತೆಗೆಯುವಾಗ ಗಲಾಟೆ ನಿರತರು ಪತ್ರಕರ್ತರಾದ ಮಧುಸೂದನರೆಡ್ಡಿ, ಪ್ರಹ್ಲಾದರೆಡ್ಡಿ ಹಾಗೂ ಶ್ರೀನಿವಾಸ ಪೂಜಾರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ. ಅಲ್ಲದೆ ಮೊಬೈಲ್ ಕಸಿದುಕೊಂಡು ಪೋಟೋ, ವಿಡಿಯೋ ಅಳಿಸಿಹಾಕಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗಿದೆ. ಅಲ್ಲದೆ ಪತ್ರಿಕಾ ಸ್ವಾತಂತ್ರ್ಯ ವನ್ನು ಹತ್ತಿಕ್ಕುವ ಕುತಂತ್ರ ಅಡಗಿದೆ ಎಂದು ದೂರಿದರು. ಘಟನೆಯ ಸ್ಥಳದಲ್ಲಿ ಪೊಲೀಸರು ಇದ್ದರೂ ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವುದು ತೀವ್ರ ಖಂಡನೀಯ ಎಂದರು. ಘಟನೆಯನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಹಲ್ಲೆ ಮತ್ತು ದೌರ್ಜನ್ಯಕ್ಕೆ ಒಳಗಾದ ಪತ್ರಕರ್ತರಿಗೆ ನ್ಯಾಯ ಕೊಡಿಸಬೇಕೆಂದು ಎಂದು ಆಗ್ರಹಿಸಿದ್ದಾರೆ. ಪತ್ರಕರ್ತರಾದ ವಿಜಯಭಾಸ್ಕರರೆಡ್ಡಿ, ಪ್ರಹ್ಲಾದರೆಡ್ಡಿ ಮಾದಿನಾಳ, ಮಧುಸೂದನರೆಡ್ಡಿ, ಶ್ರೀನಿವಾಸ ಪೂಜಾರ, ಹೊನ್ನೂರುಹುಸೇನ ಬೇಲ್ದಾರ್, ಹುಲಗಪ್ಪ ಉಪ್ಪಾರ, ಚೇತನ ಯಾದವ,ಮಹಾಂತೇಶ, ಅಯ್ಯಪ್ಪ ಇತರರು ಇದ್ದರು.
ಇರಾನ್-ಇಸ್ರೇಲ್ ಯುದ್ಧವು ಭಾರತೀಯ ಆರ್ಥಿಕತೆಗೆ ಅಲ್ಪಾವಧಿ ಸವಾಲುಗಳನ್ನೊಡ್ಡಿದೆ: ಆರ್ಬಿಐ
ಹೊಸದಿಲ್ಲಿ: ಪಶ್ಚಿಮ ಏಶ್ಯಾದಲ್ಲಿಯ ಸಂಘರ್ಷವು ಭಾರತೀಯ ಆರ್ಥಿಕತೆಗೆ ಕೆಲವು ತಕ್ಷಣದ ಸವಾಲುಗಳನ್ನು ಒಡ್ಡಿದೆ,ಆದರೆ ದೀರ್ಘಾವಧಿಯ ಆರ್ಥಿಕ ಬೆಳವಣಿಗೆಯನ್ನು ಕುಂಠಿತಗೊಳಿಸುವ ಸಾಧ್ಯತೆಯಿಲ್ಲ ಎಂದು ಆರ್ಬಿಐನ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಬಾಹ್ಯ ಸದಸ್ಯ ನಾಗೇಶ್ ಕುಮಾರ್ ಹೇಳಿದ್ದಾರೆ. ಒಟ್ಟು ದೇಶಿಯ ಉತ್ಪನ್ನದ (ಜಿಡಿಪಿ) ಬೆಳವಣಿಗೆಯನ್ನು ಹೆಚ್ಚಿಸಲು ಆರ್ಥಿಕ ಮತ್ತು ಹಣಕಾಸು ನೀತಿಗಳು ಸಂಘಟಿತವಾಗಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ಅವರು PTI ಸುದ್ದಿಸಂಸ್ಥೆಗೆ ನೀಡಿದ ಇ-ಮೇಲ್ ಸಂದರ್ಶನದಲ್ಲಿ ತಿಳಿಸಿದ್ದಾರೆ. ಪ್ರಸಕ್ತ ಸನ್ನಿವೇಶದಲ್ಲಿ ತೈಲ ಬೆಲೆಗಳಲ್ಲಿ ಏರಿಕೆ, ರಫ್ತು ವ್ಯತ್ಯಯಗಳು ಮತ್ತು ಹಣರವಾನೆ ಮೇಲೆ ಪರಿಣಾಮಗಳನ್ನು ಬೆಳವಣಿಗೆಗೆ ಎದುರಾಗಿರುವ ತಕ್ಷಣದ ಸವಾಲುಗಳು ಎಂದು ಗುರುತಿಸಲಾಗಿದೆ. ಅಲ್ಲದೆ ಈ ಸಂಘರ್ಷವು ಪ್ರದೇಶದಲ್ಲಿನ ಭಾರತೀಯ ಸಮುದಾಯದ ಸುರಕ್ಷತೆಗೆ ಬೆದರಿಕೆಗಳನ್ನೂ ಒಡ್ಡಿದೆ ಎಂದ ಅವರು,ಅಮೆರಿಕ-ಇಸ್ರೇಲ್ ದಾಳಿಗಳು ಹೆಚ್ಚುತ್ತಿದ್ದು,ಸದ್ಯವೇ ತೈಲ ಬೆಲೆಗಳು ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. ಈ ಪ್ರದೇಶದಲ್ಲಿ ಜಗತ್ತು ಹೊಂದಿರುವ ಹೆಚ್ಚಿನ ಹಿತಾಸಕ್ತಿಗಳನ್ನು ಪರಿಗಣಿಸಿದರೆ ಬಿಕ್ಕಟ್ಟು ಶೀಘ್ರವೇ ಬಗೆಹರಿಯುವ ಭರವಸೆಯಿದೆ ಎಂದರು. ತೈಲ ಮೂಲಗಳ ವೈವಿಧ್ಯೀಕರಣವು ಅಪಾಯವನ್ನು ಕಡಿಮೆ ಮಾಡಲು ನೆರವಾಗಬಹುದು ಎಂದ ಅವರು,ಭಾರತಕ್ಕೆ ವೆನೆಜುವೆಲಾದಿಂದ ತೈಲ ಪೂರೈಕೆ ಆರಂಭಗೊಳ್ಳುತ್ತಿರುವುದು ಸಹ ನೆರವಾಗಬಹುದು. ಮಧ್ಯಪ್ರಾಚ್ಯದ ಬಿಕ್ಕಟ್ಟು ಶೀಘ್ರವೇ ಕೊನೆಗೊಂಡರೆ ಮತ್ತು ಇರಾನ್ ಮೇಲಿನ ನಿರ್ಬಂಧಗಳು ಹಿಂದೆಗೆಯಲ್ಪಟ್ಟರೆ ಅಗ್ಗದ ತೈಲ ಪೂರೈಕೆಯಿಂದ ಭಾರತಕ್ಕೆ ಲಾಭವಾಗಬಹುದು ಎಂದು ಹೇಳಿದರು. ಭೂರಾಜಕೀಯ ಉದ್ವಿಗ್ನತೆಗಳ ಹೊರತಾಗಿಯೂ ಹಣದುಬ್ಬರದ ಮುನ್ನೋಟವು ಮಿತಿಯಲ್ಲಿದೆ ಎಂದು ಪ್ರತಿಪಾದಿಸಿದ ಅವರು,ಮುಖ್ಯ ಗ್ರಾಹಕ ಬೆಲೆ ಸೂಚ್ಯಂಕವು ಡಿ.2025ರಲ್ಲಿ ಶೇ.1.3ರಷ್ಟಿತ್ತು ಮತ್ತು ಹೊಸ ಸರಣಿ ದತ್ತಾಂಶಗಳ ಅಡಿಯಲ್ಲಿಯೂ ಅದು ವಿತ್ತವರ್ಷ 2026ರಲ್ಲಿ ಸುಮಾರು ಶೇ.2.5ರಷ್ಟಿರಬಹುದು ಎಂದು ಅಂದಾಜಿಸಲಾಗಿದೆ ಎಂದರು.
ಮಹಿಳೆಯ ಮಾನಹಾನಿ ಪ್ರಕರಣ: ದ್ವಿಚಕ್ರ ವಾಹನ ಸವಾರನಿಗೆ ಶಿಕ್ಷೆ
ಮಂಗಳೂರು, ಮಾ.5:ಮಹಿಳೆಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿ ಮಾನಹಾನಿ ಮಾಡಿದ ಆರೋಪಿ ಸವಾರ ಪ್ರವೀಣ್ ಯಾನೆ ಸಂತೋಷ್ ಎಂಬಾತನಿಗೆ 7ನೇ ಜೆಎಂಎಫ್ಸಿ ನ್ಯಾಯಾಲಯವು 1 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದೆ. ಉಳ್ಳಾಲ ತಾಲೂಕಿನ ಕೋಟೆಕಾರು ಗ್ರಾಮದ ಪನೀರ್ ಚರ್ಚ್ ಬಳಿ ಪ್ರವೀಣ್ ಯಾನೆ ಸಂತೋಷ್ ಎಂಬಾತ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ಅವಾಚ್ಯ ಶಬ್ಧಗಳಿಂದ ಬೈದು, ಕೈ ಹಿಡಿದು ಎಳೆದು ಮಾನಹಾನಿ ಮಾಡಿದ್ದಾನೆ ಎಂದು ಆರೋಪಿಸಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ 7ನೇ ಜೆಎಂಎಫ್ಸಿ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶ ಚಿರಾಗ್ ಸಿ. ಈ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ 9 ಮಂದಿ ಸಾಕ್ಷಿ ನುಡಿದಿದ್ದರು. 6 ದಾಖಲೆಗಳನ್ನು ಗುರುತಿಸಲಾಗಿತ್ತು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಇಬ್ರಾಹಿಂ ಬಾತಿಷ ಯು.ಕೆ. ವಾದ ಮಂಡಿಸಿದ್ದಾರೆ.
ಕೊಪ್ಪಳ | ಕ್ರೀಡೆಗಳ ಮೂಲಕ ಬೆಳೆಕಿಗೆ ಬನ್ನಿ : ಅಬ್ದುಲ್ ರಜಾಕ್
ಕೊಪ್ಪಳ: ಕ್ರೀಡೆಗಳ ಮೂಲಕ ವಿದ್ಯಾರ್ಥಿಗಳು ಬೆಳಕಿಗೆ ಬರಬೇಕು ಎಂದು ಭಾರತೀಯ ಪೆಂಕಾಕ್ ಸೀಲಾತ್ ಸಂಸ್ಥೆಯ ತಾಂತ್ರಿಕ ನಿರ್ದೇಶಕರಾದ ಅಬ್ದುಲ್ ರಾಜಾಕ್ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ, ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಅಂತರ ಮಹಾವಿದ್ಯಾನಿಲಯಗಳ ಪೆಂಕಾಕ್ ಸೀಲಾತ್ ಪಂದ್ಯಾವಳಿ ಮತ್ತು ವಿಶ್ವವಿದ್ಯಾಲಯ ತಂಡದ ಆಯ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸ್ಪರ್ಧೆ ಇದ್ದರೂ ಪೆಂಕಾಕ್ ಸೀಲಾತ್ ಕ್ರೀಡೆಯಲ್ಲಿ ಸ್ಪರ್ಧೆ ಕಡಿಮೆ ಇದೆ. ಉತ್ತಮ ಪ್ರದರ್ಶನ ನೀಡಿದರೆ ಬಹುಮಾನ ಗಳಿಸುವ ಅವಕಾಶಗಳು ಹೆಚ್ಚು. ಸರ್ಕಾರದಿಂದ ಕ್ರೀಡೆಗಳಿಗೆ ದೊರೆಯುವ ಅನುದಾನವನ್ನು ಸದುಪಯೋಗಪಡಿಸಿಕೊಂಡು ಕ್ರೀಡೆಗಳ ಮೂಲಕ ಬೆಳವಣಿಗೆ ಸಾಧಿಸಬೇಕು ಎಂದು ಅವರು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪ್ರೊ. ಅಲ್ಲಮ ಪ್ರಭು ಬೆಟ್ಟದೂರು ಮಾತನಾಡಿ, ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ. ಗೆಲುವು-ಸೋಲು ಮುಖ್ಯವಲ್ಲ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದೇ ಮುಖ್ಯ. ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತ ಮತ್ತು ಕ್ರೀಡೆಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಸಂಘಟನಾ ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರಾದ ಪ್ರದೀಪ್ ಕುಮಾರ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸಿಗುತ್ತದೆ. ಸರ್ಕಾರಿ ಹುದ್ದೆಗಳಲ್ಲಿ ಕ್ರೀಡಾ ಮೀಸಲಾತಿ ಸೌಲಭ್ಯ ಇರುವುದರಿಂದ ಅದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಕ್ರೀಡೆಗಳು ಮಾನಸಿಕ, ದೈಹಿಕ ಮತ್ತು ಆರ್ಥಿಕ ಸದೃಢತೆಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಮಾತನಾಡಿ, ವಿದ್ಯಾರ್ಥಿಗಳು ಹೊಸ ಕ್ರೀಡೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು. ಆಧುನಿಕ ಕಾಲದಲ್ಲಿ ಕ್ರೀಡೆಗಳು ಆರೋಗ್ಯ ವೃದ್ಧಿಗೆ ಅತ್ಯಂತ ಅಗತ್ಯವೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬಿ. ಜಿ ಕರಿಗಾರ, ವಿಠಲ ಬಿ ಜಾಬ ಗೌಡರ್, ಎ ಬಸವರಾಜ, ಮಂಜುನಾಥ್ ಅರೇಂಟುನೂರು, ಗವಿಸಿದ್ದಪ್ಪ ಮುತ್ತಾಳ, ಮಂಜುನಾಥ್ ಗೊಂಡಬಾಳು, ವಿನೋದು, ವಿಶ್ವನಾಥ್ ನಡುಕಟ್ಟಿ, ಶುಭ, ಸುಮಿತ್ರಾ ಹಾಗೂ ಸುಮಯ್ಯ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ಹುಲಿಗೆಮ್ಮ ಅವರು ನಿರೂಪಿಸಿದರು. ಡಾ. ನರಸಿಂಹ ಸ್ವಾಗತಿಸಿ ವಂದಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಹಾಡಿದರು.
ಉಡುಪಿ: ಮಾ.11ರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯರು ಸೇರಿ ಆರೋಗ್ಯ ಇಲಾಖೆ ನೌಕರರ ಮುಷ್ಕರದ ಎಚ್ಚರಿಕೆ
ಮಾ.16ರಿಂದ ಆಸ್ಪತ್ರೆ ಸೇರಿ ಎಲ್ಲವೂ ಸಂಪೂರ್ಣ ಬಂದ್
ರಾಜ್ಯದಲ್ಲಿ ‘ಯುವಜನ ಆಯೋಗ ಸ್ಥಾಪನೆ’ಗಾಗಿ ಯುವಜನ ಸಂಘಟನೆಗಳಿಂದ ನಿರ್ಣಯ
ಬೆಂಗಳೂರು : ಕರ್ನಾಟಕದಲ್ಲಿ ರಾಜ್ಯ ಯುವಜನ ಆಯೋಗ ಸ್ಥಾಪನೆ ಮಾಡಬೇಕು ಎಂದು ವಿವಿಧ ಯುವಜನ ಸಂಘಟನೆಗಳಿಂದ ನಿರ್ಣಯ ಕೈಗೊಳ್ಳಲಾಯಿತು. ಗುರುವಾರ ಶಿವಾಜಿನಗರದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯದ ವಿವಿಧ ಯುವಜನ ಸಂಘಟನೆಗಳ ಮುಖಂಡರು ಸಂಯುಕ್ತ ನಿರ್ಣಯ ಕೈಗೊಂಡರು. ರಾಜ್ಯದ ಒಟ್ಟು ಜನಸಂಖ್ಯೆಯ ದೊಡ್ಡ ಭಾಗ ಯುವಜನರಿಂದ ಕೂಡಿದ್ದು, ಅವರು ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿ, ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ಪ್ರಾತಿನಿಧ್ಯ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವಜನರ ಸಮಸ್ಯೆಗಳಿಗೆ ಸಮಗ್ರ ಮತ್ತು ವ್ಯವಸ್ಥಿತ ಪರಿಹಾರ ಒದಗಿಸಲು ಕರ್ನಾಟಕ ರಾಜ್ಯ ಯುವ ಆಯೋಗದ ಸ್ಥಾಪನೆ ಅನಿವಾರ್ಯವಾಗಿದೆ ಎಂದು ಯುವಜನ ಸಂಘಟನೆಗಳ ಮುಖಂಡರು ತಿಳಿಸಿದರು. ಸಭೆಯಲ್ಲಿ ಬಹು ಜನ ವಿದ್ಯಾರ್ಥಿ ಸಂಘಟನೆಯ ಭೀಮ್ರಾವ್, ಸೋಲಿಡಾರಿಟಿ ಯೂಥ್ ಮೂವ್ಮೆಂಟ್ನ ಡಾ.ನಸೀಮ್ ಅಹ್ಮದ್, ಸಾಮಾಜಿಕ ಕಾರ್ಯಕರ್ತ ಜನಾರ್ಧನ್ ಕೆಸರಗದ್ದೆ, ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ನ ಅರಾತ್ರಿಕಾ, ಸಾಮಾಜಿಕ ಕಾರ್ಯಕರ್ತ ಡಾ.ಹಕೀಮ್, ಎಸ್ಐಒನ ಮಹಮ್ಮದ್ ಹಯ್ಯಾನ್, ಮಹಮ್ಮದ್ ಪೀರ್ ಮತ್ತಿತರರು ಭಾಗವಹಿಸಿದ್ದರು. ಪ್ರಮುಖ ನಿರ್ಣಯಗಳು: ಮುಂದಿನ ಬಜೆಟ್ ಅಧಿವೇಶನದಲ್ಲಿ ಯುವ ಆಯೋಗ ಸ್ಥಾಪನೆಗೆ ಸಂಬಂಧಿಸಿದ ಸರಕಾರಿ ಅಧಿಸೂಚನೆ ಹೊರಡಿಸಲಾಗದಿದ್ದರೆ ರಾಜ್ಯವ್ಯಾಪಿ ಪ್ರತಿಭಟನೆ, ಮೆರವಣಿಗೆ ಮತ್ತು ಧರಣಿ ಕೈಗೊಳ್ಳಲಾಗುವುದು. ರಾಜ್ಯವ್ಯಾಪಿ ಜಾಗೃತಿ ಅಭಿಯಾನಗಳು ನಡೆಯಲಿದ್ದು, ಸಹಿ ಸಂಗ್ರಹ ಅಭಿಯಾನ, ಸಿಎಂಗೆ ಪತ್ರ ಕಳುಹಿಸುವ ಅಭಿಯಾನ, ಉಪಮುಖ್ಯಮಂತ್ರಿಗೆ ಮನವಿ ಸಲ್ಲಿಕೆ, ಸಾಮಾಜಿಕ ಜಾಲತಾಣ ಅಭಿಯಾನ ಹಾಗೂ ವಿದ್ಯಾರ್ಥಿ-ಯುವ ಸಮಾವೇಶಗಳ ಆಯೋಜನೆ. ಎಲ್ಲಾ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಯುವ ಆಯೋಗದ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸುವಂತೆ ಒತ್ತಾಯಿಸುವುದು ಸೇರಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಯಿತು.
Ind Vs Eng Highlights- ಅಭಿಷೇಕ್ ಶರ್ಮಾ ಮತ್ತೆ ವಿಫಲ: ಆಂಗ್ಲರ ಬಲೆಗೆ ಸುಲಭದಲ್ಲಿ ಬಿದ್ದ ಭಾರತದ ಓಪನರ್!
ICC T20
ಸಿಎಂ, ಡಿಸಿಎಂ ಇಬ್ಬರು ಪಕ್ಷದ ನಾಯಕತ್ವಕ್ಕೆ ಬದ್ದ : ಡಿ.ಕೆ.ಸುರೇಶ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಟ್ಟಾಗಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಇಬ್ಬರೂ ಪಕ್ಷದಲ್ಲಿದ್ದು ಸಿದ್ಧಾಂತ-ನಾಯಕತ್ವಕ್ಕೆ ಬದ್ಧರಾಗಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಬ್ಬರು ನಾಯಕರೂ ಒಗ್ಗಟ್ಟು ಪ್ರದರ್ಶಿಸುತ್ತಿರುವ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಆದರೆ ಇಬ್ಬರೂ ನಾಯಕರು ಒಟ್ಟಾಗಿಯೇ ಕೆಲಸ ಮಾಡುತ್ತಿದ್ದಾರೆ. ಈ ಮೊದಲು ವಿಪಕ್ಷದಲ್ಲಿ ಇದ್ದಾಗಿನಿಂದಲೂ ಜೊತೆಯಾಗಿಯೇ ಕೆಲಸ ಮಾಡಿದ್ದಾರೆ, ಚುನಾವಣೆಗಳಲ್ಲಿ ಒಟ್ಟಾಗಿ ದುಡಿದಿದ್ದಾರೆ ಎಂದರು. ತಾವು ಮತ್ತು ಡಿ.ಕೆ.ಶಿವಕುಮಾರ್ ಹಾಲು-ಜೇನಿನಂತೆ ಇದ್ದೇವೆಂದು ಸಿದ್ದರಾಮಯ್ಯ ಹೇಳಿರುವ ಬಗ್ಗೆ ನನಗೆ ಗೊತ್ತಿಲ್ಲ. ಹಾಲು ಬೇಕಾದರೆ ಡೈರಿ ಸರ್ಕಲ್ಗೆ ಬನ್ನಿ. ಜೇನಿನ ಬಗ್ಗೆ ನನಗೆ ಮಾಹಿತಿಯಿಲ್ಲ. ಅದು ಕೊಡಗು ಹಾಗೂ ಮಳೆನಾಡು ಭಾಗದಲ್ಲಿ ದೊರೆಯುತ್ತದೆ. ಮೈಸೂರು ಪಾಕ್ ಅಥವಾ ಇನ್ಯಾವುದಾದರೂ ಸಿಹಿ ಬೇಕಾದರೆ ಕೆಎಂಎಫ್ಗೆ ಬನ್ನಿ ತಿನ್ನಿಸುತ್ತೇನೆ ಎಂದು ನುಡಿದರು.
ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಸಿದ್ದರಾಮಯ್ಯ 17 ನೇ ಬಜೆಟ್ ನೇರ ಪ್ರಸಾರ! ಏನಿದರ ಉದ್ದೇಶ
ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಹೊಸತೊಂದು ದಾಖಲೆ ನಿರ್ಮಾಣ ಮಾಡಲಿದ್ದಾರೆ. 16 ಬಜೆಟ್ ಮಂಡನೆ ಮಾಡುವ ಮೂಲಕ ಅವರು ದಾಖಲೆ ನಿರ್ಮಿಸಿದ್ದರು. ಇದೀಗ 17 ನೇ ಬಜೆಟ್ ಶುಕ್ರವಾರ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಜೆಟ್ ಭಾಷಣ ರಾಜ್ಯದ ಜನರಿಗೆ ತಲುಪಬೇಕು ಎಂಬ ನಿಟ್ಟಿನಲ್ಲಿ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಇರಲಿದೆ. ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ಈ ನೇರ ಪ್ರಸಾರವನ್ನು ಹಮ್ಮಿಕೊಂಡಿದೆ.
ದ್ವಿತೀಯ ಪಿಯುಸಿ: ಇತಿಹಾಸ ಪರೀಕ್ಷೆಗೆ 41 ಮಂದಿ ಗೈರು
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿಯ ಇತಿಹಾಸ ಪರೀಕ್ಷೆಯಲ್ಲಿ ಒಟ್ಟು 41 ಮಂದಿ ಗೈರುಹಾಜರಾ ಗಿದ್ದರು. ಪರೀಕ್ಷೆಗಾಗಿ ನೊಂದಾಯಿಸಿಕೊಂಡಿದ್ದ 3298 ಮಂದಿ ವಿದ್ಯಾರ್ಥಿ ಗಳಲ್ಲಿ ಇಂದು 3257 ಮಂದಿ ಹಾಜರಾಗಿದ್ದರು ಎಂದು ಡಿಡಿಪಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬುಧವಾರ ನಡೆದ ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್ ಭಾಷಾ ಪರೀಕ್ಷೆಯಲ್ಲಿ ಹೆಸರು ನೊಂದಾಯಿಸಿಕೊಂಡಿದ್ದ 2393 ವಿದ್ಯಾರ್ಥಿಗಳ ಪೈಕಿ 2392 ಮಂದಿ ಪರೀಕ್ಷೆ ಬರೆದಿದ್ದು, ಓರ್ವ ಮಾತ್ರ ಗೈರುಹಾಜರಾಗಿದ್ದಾರೆ ಎಂದು ಡಿಡಿಪಿಯು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಭೇಟಿ: ಈ ನಡುವೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಕೆ.ಟಿ. ಹಾಗೂ ಕುಂದಾಪುರದ ಸಹಾಯಕ ಕಮಿಷನರ್ ರಶ್ಮಿ ಅವರು ಇಂದು ಕಾರ್ಕಳದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಕೆಲವು ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರಕ್ಕೆ ಭೇಟಿ ನೀಡಿದ ಡಿಸಿ, ದೋಷರಹಿತವಾಗಿ ಯಾವುದೇ ಅಡಚಣೆಗಳಿಲ್ಲದೇ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
`ಬ್ರೊ ಸ್ವಲ್ಪವಾದರೂ ನಗಿ, ಇದು ನಿಮ್ಮದೇ ಮದುವೆ': ಗಂಭೀರ ವದನದ ಅರ್ಜುನ್ ತೆಂಡೂಲ್ಕರ್ ಗೆ ನೆಟ್ಟಿಗರ ಮನವಿ
Arjun Tendulkar- Saaniya Chandok Wedding- ಸದಾ ಗಂಭೀರವಾಗಿರುವ ಅರ್ಜುನ್ ತೆಂಡೂಲ್ಕರ್ ನಗುವುದು ಸ್ವಲ್ಪ ಕಡಿಮೆಯೇ. ಇದೀಗ ಮದುವೆ ಮಂಟಪದಲ್ಲೂ ಅವರು ಗಂಭೀರ ವದನರಾಗಿ ನಿಂತಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅವರ ಮೆಹೆಂದಿ ಕಾರ್ಯಕ್ರಮದಲ್ಲಿ ಅತಿಥಿಯೊಬ್ಬರು ಹಾಡುತ್ತಿದ್ದ ವೇಳೆ ಸಾನಿಯಾ ಮುಗುಳ್ನಗುತ್ತಾ ಸಂತಸ ವ್ಯಕ್ತಪಡಿಸಿದ್ದರೆ, ಅರ್ಜುನ್ ಮಾತ್ರ ಗಂಭೀರ ವದನರಾಗಿ ನಿಂತಿದ್ದರು. ಈ ಬಗ್ಗೆ ನೆಟ್ಚಿಗರು ಇದು ನಿಮ್ಮದೇ ಮದುವೆ, ಇಂದಾದರೂ ಸ್ಲಲ್ಪ ನಗಿ ಎಂದು ಕಾಲೆಳೆದಿದ್ದಾರೆ.
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರದ ವಿವರ
ಬೆಂಗಳೂರು: ಕರ್ನಾಟಕ ರಾಜ್ಯದ ಜನರ ಚಿತ್ತ ಪ್ರಸಕ್ತ ಸಾಲಿನ 'ಕರ್ನಾಟಕ ಬಜೆಟ್ 2026-27' (Karnataka Budget 2026) ಮೇಲೆ ನೆಟ್ಟಿದೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ನಾಳೆ ಶುಕ್ರವಾರ ಬೆಳಗ್ಗೆ 11ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಯಶಸ್ಸು ಸಿಕ್ಕಿದೆ

22 C