ಬಂದ್ಯೋಡು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬಂದ್ಯೋಡು: ಬಳಿಯ ಹಳೆ ಸರ್ವೀಸ್ ಕಟ್ಟಡದಲ್ಲಿ ಮಂಗಳವಾರ ಸಂಜೆ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಸುಮಾರು 50 ವರ್ಷ ಪ್ರಾಯ ಅಂದಾಜಿಸಲಾಗಿದ್ದು, ಮೂರು ದಿನಗಳ ಹಿಂದೆ ಮೃತಪಟ್ಟಿರ ಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರು ಕರ್ನಾಟಕ ಮೂಲದ ನಿವಾಸಿ ಎಂದು ಶಂಕಿಸಲಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಯಂತೆ ಕುಂಬಳೆ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕುಂಬಳೆ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಿಳೆಯ ಚಿಕಿತ್ಸೆಗೆ ನೆರವಾಗಲು ಮನವಿ
ಮಂಗಳೂರು, ಜು.15: ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ನಿವಾಸಿ ಸುಮಿತ್ರಾ (46) ಅವರ ಚಿಕಿತ್ಸೆಗೆ ನೆರವಾಗುವಂತೆ ಅವರ ಪುತ್ರ ಶ್ರೇಯಸ್ ಕೆ.ಬಿ. ಮನವಿ ಮಾಡಿದ್ದಾರೆ. ಜು.3ರಂದು ಕೆಲಸಕ್ಕೆಂದು ಕುಲ್ಕುಂದದಿಂದ ಮರ್ಧಾಳ ಕಡೆಗೆ ಆಟೊ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕೈಕಂಬ ಬಳಿ ರಿಕ್ಷಾ ಪಲ್ಟಿಯಾಗಿ ಸುಮಿತ್ರಾರ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಪುತ್ತೂರು ಸಿಟಿ ಆಸ್ಪತ್ರೆಗೆ ಕರೆದೊಯ್ಯಲಾ ಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಚಿಕಿತ್ಸೆಗೆ 15 ಲಕ್ಷ ರೂ.ಗೂ ಹೆಚ್ಚು ಆಗಬಹುದೆಂದು ವೈದ್ಯರು ತಿಳಿಸಿದ್ದಾರೆ. ಹಾಗಾಗಿ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ನೆರವು ನೀಡುವವರು ಸುಮಿತ್ರಾರ ಪುತ್ರಿ ಶ್ರೇಯಾ ಕೆ.ಬಿ. ಅವರ Bank of Baroda ಸುಬ್ರಹ್ಮಣ್ಯ ಶಾಖೆಯ ಖಾತೆಗೆ ಅಕೌಂಟ್ ನಂಬರ್: 70570100004654 IFSC: BARB0VJSUBR ಗೂಗಲ್ ಪೇ ನಂಬರ್: 9743203656 ಹಣ ಕಳುಹಿಸಬಹುದು. ಮಾಹಿತಿಗೆ ಶ್ರೇಯಸ್ (ದೂ. 9108243172) ಅವರನ್ನು ಸಂಪರ್ಕಿಸಬಹುದು.
ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಲೋಕಾಯುಕ್ತರಿಗೆ ಸೂಚನೆ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮುಡಾ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ ಮುನ್ನ ಲೋಕಾಯುಕ್ತ ತನಿಖಾಧಿಕಾರಿ ಈವರೆಗಿನ ತನಿಖಾ ಪ್ರಗತಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ವೇಳೆ, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಪರಿಗಣಿಸಿಲ್ಲ. ದಾಖಲೆ ಪರಿಗಣಿಸದೇ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಅವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹೀಗಾಗಿ ತನಿಖಾಧಿಕಾರಿ ವಿರುದ್ಧ ಕ್ರಮ ಕೋರಿರುವ ಅರ್ಜಿಗಳನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದರು. ಎಲ್ಲ ದಾಖಲೆಗಳನ್ನು ಪರಿಗಣಿಸಲಾಗಿದೆ ಎಂದು ಲೋಕಾಯುಕ್ತ ಎಸ್ಪಿಪಿ ಪೀಠಕ್ಕೆ ತಿಳಿಸಿದರು. ನ್ಯಾಯಾಲಯ ಜುಲೈ 28ರಂದು ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ಕಲಬುರಗಿ | ಚಿಂಚೋಳಿಯಲ್ಲಿ ಹೆಚ್ಚಿದ ಕಾಡು ಹಂದಿಗಳ ಹಾವಳಿ; ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ
ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಜಮೀನುಗಳಲ್ಲಿ ರೈತರು ಬೆಳೆದಿರುವ ಬೆಳೆಗಳನ್ನು ಕಾಡು ಹಂದಿಗಳು ನಾಶಪಡಿಸಿದ್ದು, ಸ್ಥಳಕ್ಕೆ ಜಿಲ್ಲೆಯ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಲಬುರಗಿಯ ಡಿ.ಎಫ್.ಓ. ಸುಮಿತ್, ಚಿಂಚೋಳಿಯ ಆರ್.ಎಫ್.ಓ ಸಂಜು ಚವ್ಹಾಣ್ ಸೇರಿದಂತೆ ಇತರ ಅಧಿಕಾರಿಗಳು ಶಾದಿಪುರ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿದ್ದಾರೆ. ಶಾದಿಪುರ ಗ್ರಾಮದಲ್ಲಿ ಸುಮಾರು 120 ಎಕರೆ ಪ್ರದೇಶದಲ್ಲಿ ಬೆಳೆದಿರುವ ಕಬ್ಬು ಬೆಳೆಯನ್ನು ಕಾಡು ಹಂದಿಗಳು ನಾಶಪಡಿಸಿವೆ. ಈ ಹಾವಳಿಯಿಂದಾಗಿ ಬಡ ರೈತರಿಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ. ಈ ಕುರಿತು ಸರಕಾರ ಕೂಡಲೇ ಪರಿಹಾರ ಘೋಷಿಸಬೇಕೆಂದು ವಿವಿಧ ಸಂಘಟನೆ, ರೈತರು ಆಗ್ರಹಿಸಿದ್ದರು. ಸ್ಥಳೀಯರ ಮನವಿ ಮೇರೆಗೆ ಜಿಲ್ಲೆಯ ಹಲವು ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಹಾರ ಒದಗಿಸುವಲ್ಲಿ ಶ್ರಮಿಸುವುದಾಗಿ ರೈತರಿಗೆ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆ ಚಿಂಚೋಳಿ ತಾಲ್ಲೂಕು ಅಧ್ಯಕ್ಷ ಲಿಂಬಾಜಿ ಚವ್ಹಾಣ್, ಬಸವರಾಜ್ ಬಾಗೋಡಿ, ರಾಮ್ದುಚಂದ್ರಪ್ಪ, ರಾಮಚಂದ್ರ ಕಾರ್ಬಾರಿ, ಖುಬಸಿಂಗ್ ಸಿ ರಾಠೋಡ್, ದಶರಥ ಕಾವಲ್, ಪತ್ತಿನಾರಾಯಣ, ಜಿತೂ ರಾಠೋಡ್, ಪಾಂಡು ಪವಾರ್, ವೀರಪ್ಪ ತಳವಾರ್, ವಸಂತ್ ಸಿ ರಾಠೋಡ್, ಶರಣಪ್ಪ ಬಗರಿ, ರವಿ ಚವಾಣ್, ಪ್ರೇಮ್ ರಾಠೋಡ್, ರಮೇಶ್ ಪವಾರ್, ರಮೇಶ್ ಚವ್ಹಾಣ್, ತಪ್ಸಿರಾಮ್ ರಾಠೋಡ್ ಸೇರಿದಂತೆ ಮತ್ತಿತರರು ಇದ್ದರು.
ಗಾಳಿ ಆಂಜನೇಯಸ್ವಾಮಿ ಸುಪರ್ದಿ: ಹೈಕೋರ್ಟ್ನಿಂದ ಜು. 16ರಂದು ಮಧ್ಯಂತರ ಆದೇಶ ಸಾಧ್ಯತೆ
ಬೆಂಗಳೂರಿನ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆದಿದೆ. ಈ ಆದೇಶಕ್ಕೆ ತಡೆ ಕೋರಿ ದೇವಸ್ಥಾನದ ಟ್ರಸ್ಟ್ ಹೈಕೋರ್ಟ್ ಮೆಟ್ಟಿಲೇರಿದೆ. ನ್ಯಾಯಾಲಯವು ಬುಧವಾರ ಮಧ್ಯಂತರ ಆದೇಶವನ್ನು ಕಾಯ್ದಿರಿಸಿದೆ. ಟ್ರಸ್ಟ್ ಹಣ ದುರುಪಯೋಗದ ಆರೋಪಗಳನ್ನು ನಿರಾಕರಿಸಿದೆ. ಸರ್ಕಾರವು ಹಣಕಾಸು ಅವ್ಯವಹಾರದ ಬಗ್ಗೆ ವರದಿ ಸಲ್ಲಿಸಿದೆ. ಹುಂಡಿ ಹಣ ಕಳ್ಳತನದ ದೃಶ್ಯಗಳನ್ನು ನ್ಯಾಯಾಲಯಕ್ಕೆ ತೋರಿಸಲಾಗಿದೆ. ಆಡಳಿತ ಮಂಡಳಿಯ ಹೊಂದಾಣಿಕೆ ಕೊರತೆಯಿಂದ ತೊಂದರೆಯಾಗಿದೆ ಎಂದು ವರದಿಯಾಗಿದೆ.
ಪೂರ್ವ ಲೆಬನಾನ್ ನಲ್ಲಿ ಹಿಝ್ಬುಲ್ಲಾ ನೆಲೆಗಳ ಮೇಲೆ ದಾಳಿ: ಇಸ್ರೇಲ್ ಸೇನೆ
ಜೆರುಸಲೇಮ್: ಪೂರ್ವ ಲೆಬನಾನ್ ನಲ್ಲಿರುವ ಹಿಝ್ಬುಲ್ಲಾದ ರದ್ವಾನ್ ಪಡೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವುದಾಗಿ ಇಸ್ರೇಲ್ ಸೇನೆ ಮಂಗಳವಾರ ತಿಳಿಸಿದೆ. ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹಿಝ್ಬುಲ್ಲಾ ನಡುವೆ ಯುದ್ಧವಿರಾಮ ಜಾರಿಯಲ್ಲಿರುವ ಹೊರತಾಗಿಯೂ ಈ ದಾಳಿ ನಡೆಯುತ್ತಿದೆ. ‘‘ಲೆಬನಾನ್ ನ ಬೆಕಾ ಪ್ರದೇಶದಲ್ಲಿರುವ ಹಿಝ್ಬುಲ್ಲಾ ನೆಲೆಗಳನ್ನು ಗುರಿಯಾಗಿಸಿ ಹಲವಾರು ದಾಳಿಗಳನ್ನು ನಡೆಸಲಾಗಿದೆ’’ ಎಂದು ಇಸ್ರೇಲ್ ಸೇನೆ ಹೇಳಿಕೆಯೊಂದರಲ್ಲಿ ತಿಳಿಸಿದೆ. ‘‘ಇಸ್ರೇಲ್ ಸೈನಿಕರು ಮತ್ತು ಇಸ್ರೇಲ್ ದೇಶದ ಮೇಲೆ ಭಯೋತ್ಪಾದಕ ದಾಳಿಗಳನ್ನು ನಡೆಸಲು ಭಯೋತ್ಪಾದಕರಿಗೆ ತರಬೇತಿ ನೀಡಲು ಹಿಝ್ಬುಲ್ಲಾ ಬಳಸುತ್ತಿದ್ದ ಸೇನಾ ಆವರಣಗಳನ್ನು ಧ್ವಂಸಗೊಳಿಸಲಾಗಿದೆ’’ ಎಂದು ಅದು ಹೇಳಿದೆ. 2024 ಸೆಪ್ಟಂಬರ್ನಲ್ಲಿ ಇಸ್ರೇಲ್ ಸೇನೆ ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಬೈರೂತ್ ಮತ್ತು ದಕ್ಷಿಣ ಲೆಬನಾನ್ ನಲ್ಲಿದ್ದ ರದ್ವಾನ್ ಪಡೆ ಕಮಾಂಡರ್ಗಳನ್ನು ‘‘ನಿವಾರಿಸಿಕೊಳ್ಳಲಾಗಿತ್ತು’’, ಆದರೆ, ಅಂದಿನಿಂದ ತನ್ನ ಚಟುವಟಿಕೆಗಳನ್ನು ಪುನರಾರಂಭಿಸಲು ಆ ಘಟಕಗಳಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದು ಅದು ಹೇಳಿದೆ. ಇಸ್ರೇಲ್ ಮತ್ತು ಹಿಝ್ಬುಲ್ಲಾ ನಡುವಿನ ಒಂದು ವರ್ಷಕ್ಕೂ ಅಧಿಕ ಅವಧಿಯ ಸಂಘರ್ಷವನ್ನು ಕೊನೆಗೊಳಿಸಲು ಕಳೆದ ವರ್ಷದ ನವೆಂಬರ್ ನಲ್ಲಿ ಯುದ್ಧವಿರಾಮ ಜಾರಿಗೆ ಬಂದಿರುವ ಹೊರತಾಗಿಯೂ ಇಸ್ರೇಲ್ ಲೆಬನಾನ್ ಮೇಲೆ ಪದೇ ಪದೇ ಬಾಂಬ್ ದಾಳಿಗಳನ್ನು ನಡೆಸುತ್ತಿವೆ. ಈ ಯುದ್ಧವಿರಾಮದ ಪ್ರಕಾರ, ಹಿಝ್ಬುಲ್ಲಾವು ಇಸ್ರೇಲ್ ಗಡಿಯಿಂದ 30 ಕಿಲೋಮೀಟರ್ ದೂರದಲ್ಲಿರುವ ಲಿಟನಿ ನದಿಯ ಉತ್ತರ ಭಾಗದಿಂದ ತನ್ನ ಹೋರಾಟಗಾರರನ್ನು ವಾಪಸ್ ಕರೆಸಿಕೊಳ್ಳಬೇಕಾಗಿತ್ತು. ಮತ್ತು ಇಸ್ರೇಲ್ ಲೆಬನಾನ್ನಿಂದ ತನ್ನ ಸೇನೆಯನ್ನು ಸಂಪೂರ್ಣವಾಗಿ ಹಿಂದಕ್ಕೆ ಪಡೆದುಕೊಳ್ಳಬೇಕಾಗಿತ್ತು. ಆದರೆ, ಲೆಬನಾನ್ ನ ಐದು ಸ್ಥಳಗಳಲ್ಲಿ ಅದು ಸೇನೆಯನ್ನು ಉಳಿಸಿಕೊಂಡಿದೆ.
ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ದೂರು
ಸುಳ್ಯ: ಕೆಂಪು ಕಲ್ಲು ಮತ್ತು ಮರಳು ಅಭಾವದ ವಿರುದ್ಧ ಸುಳ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಏಕವಚನ ಬಳಸಿ ಮಾತನಾಡಿದ್ದಾರೆ, ಕಾಂಗ್ರೆಸ್ ಕಾರ್ಯಕರ್ತರನ್ನು ನಿಂದಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ಸುಳ್ಯ ಪೊಲೀಸರಿಗೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ. ಜು. 14ರಂದು ಸುಳ್ಯ ಖಾಸಗಿ ಬಸ್ಸು ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ಹಾಗೂ ಇನ್ನಿತರ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರು ಹಾಗೂ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಯಾಗಿ ಮಾತನಾಡಿದ್ದಾರೆ. ಆದುರಿಂದ ತಾವು ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ತಿಳಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ನಾಯಕರಾದ ರಾಧಾಕೃಷ್ಣ ಬೊಳ್ಳೂರು, ಕೆ.ಎಂ.ಮುಸ್ತಫ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಕೆ.ಗೋಕುಲ್ ದಾಸ್, ಶಾಫಿ ಕುತ್ತಮೊಟ್ಟೆ, ರಾಜು ಪಂಡಿತ್, ರಾಧಾಕೃಷ್ಣ ಪರಿವಾರಕಾನ, ಸುರೇಶ್ ಎಂ.ಹೆಚ್., ಚೇತನ್ ಕಜೆಗದ್ದೆ, ಶಶಿಧರ ಎಂ.ಜೆ, ಭವಾನಿಶಂಕರ ಕಲ್ಮಡ್ಕ, ಶಿವಕುಮಾರ್ ಕಂದಡ್ಕ, ಮೊದಲಾದವರು ಇದ್ದರು.
ಸುರತ್ಕಲ್: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಸುರತ್ಕಲ್ : ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಇಂದ್ರಾಳಿ ಬಳಿಯ ನಿವಾಸಿ ಸದ್ಯ ಧಾರವಾಡ ಜಿಲ್ಲೆಯ ಟೋಲ್ ನಾಕ ನಿವಾಸಿ ರಾಜೇಶ್ ನಾಯ್ಕ್ ಯಾನೆ ರಾಜ್ ಯಾನೆ ರಾಜು ಪಮಾಡಿ (48) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತನ ಮೇಲೆ ಮಂಗಳೂರು ನಗರ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಧಾರವಾಡ ಹಾಗೂ ವಿವಿಧ ಕಡೆಗಳಲ್ಲಿ ಕೊಲೆ ಯತ್ನ, ಕಳವು, ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಗಳಲ್ಲಿ ಭಾಗಿ ಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ. ಈತನ ವಿರುದ್ದ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 4 ಕಳವು ಪ್ರಕರಣ, ಮುಲ್ಕಿ ಪೊಲೀಸ್ ಠಾಣೆಯಲ್ಲಿ 4 ಕಳವು ಪ್ರಕರಣ, ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಸಹ ಖೈದಿಗಳಿಗೆ ಹಾಗೂ ಜೈಲ್ ಸಿಬ್ಬಂದಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ 2 ಪ್ರಕರಣಗಳು ಬರ್ಕೆ ಠಾಣೆಯಲ್ಲಿ ದಾಖಲಾಗಿವೆ. ಅಲ್ಲದೇ ಉಡುಪಿ ಜಿಲ್ಲೆಯ ಮಣಿಪಾಲ, ಹಿರಿಯಡ್ಕ, ಬೈಂದೂರು, ಉಡುಪಿ ನಗರ, ಕುಂದಾಪುರ, ಗಂಗೋಳ್ಳಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಹೊನ್ನಾವರ, ಧಾರವಾಡ ಜಿಲ್ಲೆಯ ಉಪನಗರ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ಸೇರಿದಂತೆ ಒಟ್ಟು 21 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈತನ ಮೇಲೆ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 10 ವಾರಂಟ್ ಜಾರಿಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆಳಂದ | ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕ್ಷಯರೋಗಿಗಳಿಗೆ ಪ್ರೋಟಿನ್ ಆಹಾರ ವಿತರಣೆ
ಕಲಬುರಗಿ: ಆಳಂದ ತಾಲೂಕಿನ ಕಡಗಂಚಿ ಬಳಿಯ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಆಶ್ರಯದಲ್ಲಿ ತಾಲೂಕಿನ 19 ಕ್ಷಯರೋಗಿಗಳಿಗೆ ಪ್ರೋಟಿನ್ ಆಹಾರ ವಿತಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸುಶೀಲ್, ತಾಲೂಕು ಕ್ಷಯರೋಗಾಧಿಕಾರಿ ವಿಶಾಲ್, ಸನ್ನಿಧಿ ಸುಪೀರಿಯರ್ ಫಾ.ದೀಪಕ್ ಥೋಮಸ್ ಹಾಗೂ ಟ್ರಸ್ಟ್ ನ ಕಾರ್ಯದರ್ಶಿ ಫಾ.ವಿಲಿಯಂ ಮಿರಾಂಡಾ ಉಪಸ್ಥಿತರಿದ್ದರು. ಆರೋಗ್ಯಾಧಿಕಾರಿ ಡಾ.ಸುಶೀಲ್ಕುಮಾರ ಅಂಬುರೆ ಅವರು ಮಾತನಾಡಿ, ಕ್ಷಯರೋಗದ ಬಗ್ಗೆ ಜಾಗೃತಿ ಮೂಡಿಸುವ ಮಾತುಗಳನ್ನು ಆಡಿದರು. ಸಮಯಕ್ಕೆ ಸರಿಯಾದ ಚಿಕಿತ್ಸೆ ಮತ್ತು ಪೌಷ್ಟಿಕ ಆಹಾರವೇ ಕ್ಷಯರೋಗವನ್ನು ಜಯಿಸುವ ಪ್ರಮುಖ ಅಸ್ತ್ರಗಳು ಎಂದು ಒತ್ತಿ ಹೇಳಿದರು. ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಈ ಕಾರ್ಯಕ್ರಮವು ಕ್ಷಯರೋಗಿಗಳಿಗೆ ಆರೋಗ್ಯದ ಜೊತೆಗೆ ಭರವಸೆಯನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ.
ಕೊಣಾಜೆ: ಮಂಚಿ ಸಮೀಪದ ಕುಕ್ಕಾಜೆ ಬಾಕಿಮಾರು ನಿವಾಸಿ ಇಸ್ಮಾಯಿಲ್ ಕುಕ್ಕಾಜೆ (64) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು. ಇವರು ಪತ್ನಿ, ಇಬ್ಬರು ಗಂಡು, ಮೂವರು ಪುತ್ರಿಯರು ಹಾಗೂ ಇರಾ ಪಂಚಾಯತ್ ಮಾಜಿ ಅಧ್ಯಕ್ಷ ರಝಾಕ್ ಕುಕ್ಕಾಜೆ ಸೇರಿದಂತೆ ನಾಲ್ವರು ಸಹೋದರರನ್ನು ಅಗಲಿದ್ದಾರೆ. ಗ್ರಾಮದಲ್ಲಿ ಯಾರಾದರೂ ಮರಣ ಹೊಂದಿದರೆ ಅವರ ದಫನ ಕಾರ್ಯದಲ್ಲಿ ಸಹರಿಸುತ್ತಿದ್ದರು.
ಅನನ್ಯ ಭಟ್ ನಾಪತ್ತೆ ಪ್ರಕರಣ: ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ ತಾಯಿ ಸುಜಾತ ಭಟ್
ಬೆಳ್ತಂಗಡಿ : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್(20) ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಾಯಿ ಸುಜಾತ ಭಟ್(60) ಜುಲೈ 15 ರಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾದ ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ವಕೀಲರ ಜೊತೆ ಬಂದು ದೂರು ನೀಡಿದ್ದಾರೆ. ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರಾದ ಮಂಜುನಾಥ್.ಎನ್ ಜೊತೆಯಲ್ಲಿ ಜುಲೈ 15 ರಂದು ಬಂದು ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ಮಾಹಿತಿ ನೀಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದರು. ಅದರಂತೆ ದೂರು ನೀಡಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಕಳುಹಿಸಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಸಮರ್ಥ್.ಆರ್.ಗಾಣಿಗೇರ ಮುಂದೆ ರಾತ್ರಿ 8 ಗಂಟೆಗೆ ಬಂದು ದೂರು ಅರ್ಜಿ ನೀಡಿದ್ದಾರೆ. ಅದರಂತೆ ಪೊಲೀಸರು ದೂರು ಸ್ವೀಕರಿಸಿಕೊಂಡಿದ್ದು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ. ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್(20) ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಇಬ್ಬರು ಸ್ನೇಹತರ ಜೊತೆ ಬಂದಿದ್ದು, ನಿಗೂಢವಾಗಿ ನಾಪತ್ತೆಯಾಗಿದ್ದರು. ಇತ್ತೀಚೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತದೇಹ ಹೂತಿರುವುದಾಗಿ ದೂರು ನೀಡಿದ ವ್ಯಕ್ತಿ ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದರು. ಈ ಘಟನೆಯನ್ನು ಯೂಟ್ಯೂಬ್ ನಲ್ಲಿ ನೋಡಿ ವಕೀಲರನ್ನು ಸಂಪರ್ಕಿಸಿ ಎಸ್ಪಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ಮಗಳ ಅಸ್ಥಿಪಂಜರದ ಕಳೇಬರಹ ಹುಡುಕಿಕೊಡಬೇಕು. ಡಿಎನ್ಎ ಮಾಡಿ ಕಳೇಬರವನ್ನು ನನಗೆ ನೀಡಬೇಕು ಬಳಿಕ ಹಿಂದೂ ಸಂಪ್ರದಾಯದಂತೆ ಕಾರ್ಯ ಮಾಡಿ ಮುಕ್ತಿ ಸಿಗುಬೇಕು. ಬೇರೆ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ಯಾರ ಮೇಲೂ ದೂರು ನೀಡಿಲ್ಲ, ನನಗೆ ಬೇರೆ ಏನೂ ಬೇಡ ಎಂದು ಮಾಧ್ಯಮಗಳಿಗೆ ಸುಜಾತ ಭಟ್ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಿಳಿಸಿದರು.
ನ.13 ರಿಂದ ಬೆಂಗಳೂರು ಕೃಷಿ ವಿವಿಯಲ್ಲಿ ಮೇಳ; ಸಮೃದ್ಧ ಕೃಷಿ -ವಿಕಸಿತ ಭಾರತ: ನೆಲ, ಜಲ, ಬೆಳೆ' ಶೀರ್ಷಿಕೆಯಡಿ ಸಿದ್ಧತೆ!
ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 60ನೇ ವರ್ಷದ ಕೃಷಿ ಮೇಳವನ್ನು ನವೆಂಬರ್ 13 ರಿಂದ 16 ರವರೆಗೆ ಆಯೋಜಿಸಲಿದೆ. ಈ ಬಾರಿ 'ಸಮೃದ್ಧ ಕೃಷಿ - ವಿಕಸಿತ ಭಾರತ' ಎಂಬ ಶೀರ್ಷಿಕೆಯಡಿ ಮೇಳ ನಡೆಯಲಿದೆ. ಕೃಷಿ ಪ್ರವಾಸೋದ್ಯಮ ಪರಿಚಯ, ವಸ್ತು ಪ್ರದರ್ಶನ, ಬೆಳೆ ಪ್ರಾತ್ಯಕ್ಷಿಕೆಗಳು ಇರಲಿವೆ. ಚರ್ಚಾ ಗೋಷ್ಠಿಗಳು, ಸಲಹಾ ಸೇವೆಗಳು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಆಯೋಜನೆಯಾಗಲಿವೆ.
ಆಳಂದ | ಗ್ರಾಪಂಗಳಲ್ಲಿನ ವಾಸ್ತವ್ಯ ಅರಿತು ಸಮಸ್ಯೆ ನಿವಾರಣೆಗೆ ಇಓ ಕಟ್ಟಿಮನಿ ಸೂಚನೆ
ಕಲಬುರಗಿ: ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕೇಂದ್ರಸ್ಥಾನಕ್ಕೆ ತೆರಳಿ ವಾಸ್ತವ್ಯ ಅರಿತು ಸಮಸ್ಯೆಗಳ ನಿವಾರಣೆಗೆ ಮುಂದಾಗಬೇಕು ಎಂದು ಆಳಂದ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಆಳಂದ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯತ್ಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಅವರು, ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಹತ್ವದ ಸೂಚನೆಗಳನ್ನು ನೀಡಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸರಬರಾಜು, ಶೌಚಾಲಯ ನಿರ್ಮಾಣ, ತೆರಿಗೆ ಸಂಗ್ರಹಣೆ, ವಿದ್ಯುತ್ ಶುಲ್ಕ ಪಾವತಿ, ಶಾಲೆಗಳ ದಾಖಲಾತಿ ಮತ್ತು ರೋಗ ನಿರೋಧಕ ಚುಚ್ಚುಮದ್ದು ಕಾರ್ಯಕ್ರಮಗಳ ಕುರಿತು ಮಾಹಿತಿಯನ್ನು ಆಲಿಸಿದರು. ಅಲ್ಲದೆ ಸಭೆಯಲ್ಲಿ ಹಾಜರಿದ್ದ ಸಿಬ್ಬಂದಿಗಳಿಗೆ ಗ್ರಾಮ ಪಂಚಾಯತ್ಗಳು ತಮಗೆ ನಿಗದಿಪಡಿಸಿದ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ವಿಳಂಬವಾದ ಕಾಮಗಾರಿಗಳಿಗೆ ಕಾರಣಗಳನ್ನು ಗುರುತಿಸಿ, ತಕ್ಷಣ ಪರಿಹಾರ ಕಂಡುಕೊಳ್ಳಲು ಅವರು ಸೂಚಿಸಿದರು. ಪ್ರತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಕನಿಷ್ಠ 40 ಲೀಟರ್ ದೈನಂದಿನ ನೀರು ಸರಬರಾಜು ಖಾತರಿಪಡಿಸುವಂತೆ ಮತ್ತು ವೈಯಕ್ತಿಕ ಹಾಗೂ ಸಾಮುದಾಯಿಕ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಹಿಂದೇಟು ಹಾಕಬಾರದು. ಗ್ರಾಪಂಗಳ ಆದಾಯ ವೃದ್ಧಿಗಾಗಿ ತೆರಿಗೆ, ಶುಲ್ಕ ಮತ್ತು ದರಗಳ ಸಂಗ್ರಹಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಗ್ರಾಮ ಸಭೆಗಳನ್ನು ನಿಯಮಿತವಾಗಿ ಆಯೋಜಿಸಿ, ಸಾರ್ವಜನಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವಂತೆ ಮಾಡಿ ಅರ್ಹ ಫಲಾನುಭವಿಗಳ ಆಯ್ಕೆಯಾಗಬೇಕು ಇದರಿಂದ ಯೋಜನೆಗಳ ಯಶಸ್ಸಿಗೆ ಸ್ಥಳೀಯರ ಸಹಕಾರ ದೊರೆಯುತ್ತದೆ ಎಂದರು. ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ಗಳ ಅಭಿವೃದ್ಧಿ ಅಧಿಕಾರಿಗಳು, ಕಂಪ್ಯೂಟರ್ ಆಪರೇಟರ್ ಸಿಬ್ಬಂದಿಗಳು ಸೇರಿದಂತೆ ರುದ್ರವಾಡಿ ಪಿಡಿಒ ಬಸವರಾಜ ಮಲಶೆಟ್ಟಿ, ಮುನ್ನೊಳ್ಳಿ ಪಿಡಿಓ ನಾಗೇಶ ಮೂರ್ತಿ, ನರೇಗಾ ವಿನೋಧ ಕಲಕೇರಿ, ದಣ್ಣೂರ, ಸುಂಟನೂರ ಪಿಡಿಓ ಪ್ರವೀಣ ಉಡಗಿ, ಭೂಸನೂರ ಪಿಡಿಒ ಧರ್ಮಣ್ಣಾ, ಮಾಡಿಯಾಳ ಪಿಡಿಓ ಶಿವಾನಂದ ಮಾನಿಂಗ, ಉಷಾ ಪಾಟೀಲ, ಸುಕನ್ಯ ಇತರರು ಇದ್ದರು ಅಲ್ಲದೆ ಕೆಲವು ಪಿಡಿಓಗಳ ಗೈರು ಹಾಜರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಇಓ ಸೂಚನೆ ನೀಡಿದರು.
ವಿದೇಶಿ ತೊಗರಿ ಆಮದು ಒಪ್ಪಂದಕ್ಕೆ ಕೇಂದ್ರದ ಒಪ್ಪಿಗೆ - ಭುಗಿಲೆದ್ದ ರೈತರ ಅಕ್ರೋಶ
ಕಲಬುರಗಿ: ರಾಜ್ಯದಲ್ಲಿ ತೊಗರಿ ಉತ್ಪಾದನೆ ಹೆಚ್ಚಿದ್ದರೂ, ವಿದೇಶದಿಂದ ಆಮದು ಮಾಡಿಕೊಳ್ಳುವ ಕೇಂದ್ರದ ನಿರ್ಧಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕವು ಅತಿ ಹೆಚ್ಚು ತೊಗರಿ ಬೆಳೆಯುವ ರಾಜ್ಯವಾಗಿದ್ದು, ಕಲಬುರಗಿ ಜಿಲ್ಲೆಯು ಶೇ.40 ರಷ್ಟು ಉತ್ಪಾದನೆ ಮಾಡುತ್ತದೆ. ಕೇಂದ್ರ ಸರ್ಕಾರವು ಕೇವಲ ಶೇ.10 ರಷ್ಟು ಮಾತ್ರ ಸಂಗ್ರಹಿಸಿದೆ. ಇದರಿಂದ ರೈತರು ನಷ್ಟ ಅನುಭವಿಸಿದ್ದಾರೆ. ಕೇಂದ್ರದ ಈ ನಡೆಯಿಂದ ರೈತರಿಗೆ ತೊಂದರೆಯಾಗಿದೆ ಎಂದು ಅವರು ಹೇಳಿದ್ದಾರೆ.
ವಿಜಯನಗರ | ಜಿಲ್ಲೆಯ ಪೊಲೀಸ್ ಅಧೀಕ್ಷಕರಾಗಿ ಜಾನ್ಹವಿ ಅಧಿಕಾರ ಸ್ವೀಕಾರ
ವಿಜಯನಗರ (ಹೊಸಪೇಟೆ) : ಜಿಲ್ಲೆಯ ಮೂರನೇ ಪೊಲೀಸ್ ಅಧೀಕ್ಷಕರಾಗಿ 2019ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ ಜಾನ್ಹವಿ ಅಧಿಕಾರ ಸ್ವೀಕಾರಿಸಿದರು. ಬಿ.ಎಲ್.ಶ್ರೀಹರಿಬಾಬು ಅವರಿಂದ ಅಧಿಕಾರವನ್ನು ಸ್ವೀಕಾರಿಸಿದರು. ಮೈಸೂರಿನಲ್ಲಿ ಡಿಸಿಪಿಯಾಗಿದ್ದ ಜಾನ್ಹವಿ ಅವರು ವಿಜಯನಗರ ಜಿಲ್ಲಾ ಹೊಸ ಎಸ್ಪಿ ಆಗಿ ನೇಮಕಗೊಂಡಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷ ಒಂಬತ್ತು ತಿಂಗಳಿನಿಂದ ಎಸ್ ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ ಎಲ್ ಶ್ರೀ ಹರಿಬಾಬು ಅವರು ಬೆಂಗಳೂರಿನ ಸಿಸಿಬಿ ಡಿಸಿಪಿಯಾಗಿ ನಿಯೋಜನೆಗೊಂಡಿದ್ದಾರೆ.
ಶರಾವತಿ ಪಂಪ್ಡ್ ಸ್ಟೋರೇಜ್ನಿಂದ ವಿದ್ಯುತ್ ಸಮಸ್ಯೆ ನಿವಾರಣೆ : ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ರಾಜ್ಯ ಸರಕಾರ ಸಿದ್ಧವಾಗಿದೆ. ಇದಕ್ಕಾಗಿ 8,644 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಇದು ಭವಿಷ್ಯದ ವಿದ್ಯುತ್ ಸಮಸ್ಯೆಯನ್ನು ನಿವಾರಣೆ ಮಾಡುವ ಬಹುದೊಡ್ಡ ಯೋಜನೆಯಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಕೂಡ ಸಮ್ಮತಿ ನೀಡಿದೆ. ಮುಂದಿನ ದಿನಗಳಲ್ಲಿ ಅಣೆಕಟ್ಟುಗಳನ್ನು ಕಟ್ಟುವುದು ಬಹಳ ಕಷ್ಟ. ಆದ್ದರಿಂದ ಪಂಪ್ಡ್ ಸ್ಟೋರೇಜ್ ಮೂಲಕವೇ ವಿದ್ಯುತ್ ಉತ್ಪಾದಿಸಬಹುದಾಗಿದೆ. ಈ ಯೋಜನೆಗೆ ಕೆಲವರು ವಿರೋಧಿಸಬಹುದು. ಅರಣ್ಯ ನಾಶ ಎಂದು ಹೇಳಲುಬಹುದು. ಆದರೆ, ಒಂದು ಒಳ್ಳೆಯ ಉದ್ದೇಶಕ್ಕೆ ಸ್ವಲ್ಪ ಮಟ್ಟಿಗೆ ಅರಣ್ಯ ನಾಶವಾದರೆ ತೊಂದರೆ ಇಲ್ಲ. ಇಲ್ಲಿ ಕೇವಲ 8.32 ಎಕರೆ ಮಾತ್ರ ನಷ್ಟವಾಗುತ್ತದೆ. ಇದಕ್ಕಾಗಿ ಈಗಾಗಲೇ ರೈತರ ಜೊತೆ ಮಾತುಕತೆ ನಡೆಸಲಾಗುತ್ತಿದೆ ಎಂದರು. ಶರಾವತಿ ಸೇತುವೆ ಉದ್ಘಾಟನೆಗೆ ಸಂಬಂಧಿಸಿದಂತೆ ಮಾತನಾಡಿದ ಶಾಸಕರು, ಉದ್ಘಾಟನೆ ಆಗಿರುವುದು ಸ್ವಾಗತದ ವಿಷಯ. ಆದರೆ, ಮುಖ್ಯಮಂತ್ರಿಯನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದು, ಸರಿಯಾದ ಸಮಯಕ್ಕೆ ತಿಳಿಸದೇ ಇರುವುದು ಸರಿಯಲ್ಲ. ಸಂಸದ ರಾಘವೇಂದ್ರ ಅವರು ಇದು ನಾನೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಕೇಂದ್ರ ಸರಕಾರದ ಹಣವೇ ಆಗಿರಬಹುದು. ಆದರೆ, ರಾಜ್ಯ ಸರಕಾರದ ಪಾಲೂ ಇರುತ್ತದೆ. ಯಾವುದೇ ಅಭಿವೃದ್ಧಿ ಯೋಜನೆಗಳು ಯಾರಪ್ಪನ ಮನೆಯಿಂದ ತಂದು ಮಾಡುವುದಲ್ಲ. ರಾಜ್ಯದ ಜನರು ಕಟ್ಟಿದ ತೆರಿಗೆ ಹಣವನ್ನು ಇದು ಒಳಗೊಂಡಿರುತ್ತದೆ ಎಂದರು. ಸರಕಾರದ ಕೆಲವು ಸಚಿವರ ಬದಲಾವಣೆಯಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಒಂದು ಸುತ್ತು ಶಾಸಕರನ್ನು ಭೇಟಿ ಮಾಡಿ ವಿಷಯ ಸಂಗ್ರಹಿಸಿದ್ದಾರೆ. ಮತ್ತೊಮ್ಮೆ ಸಚಿವರ ಜೊತೆ ಕೂಡ ಮಾತನಾಡುತ್ತಾರೆ. ನನ್ನನ್ನೂ ಮಾತನಾಡಿಸಿದರು. ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದೇನೆ ಎಂದರು. ಸಿಗಂದೂರಿನ ಲಾಂಚ್ಗಳನ್ನು ತೇಲುವ ಹೋಟೆಲ್ಗಳಾಗಿ ಪರಿವರ್ತಿಸುವ ಯೋಜನೆ ನನ್ನ ಮುಂದಿದೆ. ಸೇತುವೆ ಆದ ನಂತರ ಲಾಂಚ್ಗಳು ಮೂಲೆಗುಂಪಾಗುವ ಸಾಧ್ಯತೆಗಳಿವೆ. ಆದ್ದರಿಂದ ಇದನ್ನು ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಎರಡು ಲಾಂಚ್ಗಳನ್ನು ಹೋಟೆಲ್ಗಳನ್ನಾಗಿ ಪರಿವರ್ತಿಸಿ ಅಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರವಾಸಿಗರು ಬೋಟ್ ಮೂಲಕ ಹೋಗಿ ಹೋಟೆಲ್ಗಳಲ್ಲಿ ತಿನಿಸುಗಳನ್ನು ತಿನ್ನಬಹುದು. ಶಾಖಾಹಾರಿ ಮತ್ತು ಮಾಂಸಹಾರಿ ಎರಡು ವಿಭಾಗಗಳನ್ನಾಗಿ ಮಾಡುವ ಯೋಜನೆ ಇದೆ ಮತ್ತು ನಡುಗಡ್ಡೆ ಬಳಸಿಕೊಂಡು ದ್ವೀಪದ ರೀತಿಯನ್ನಾಗಿ ಪರಿವರ್ತಿಸಬಹುದು. ಈ ಯೋಜನೆಗೆ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ಅನುಮೋದನೆ ನೀಡುತ್ತಾರೆ ಎಂಬ ಭರವಸೆ ನನಗಿದೆ. ಈಗಾಗಲೇ ಅವರು ಒಪ್ಪಿದ್ದಾರೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಶಿ.ಜು.ಪಾಶಾ ಇದ್ದರು.
ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮ | ರಾಜ್ಯ ಸರಕಾರದ ಬಹಿಷ್ಕಾರಕ್ಕೆ ಮಧು ಬಂಗಾರಪ್ಪ ಕಾರಣ : ಹಾಲಪ್ಪ ಆರೋಪ
ಶಿವಮೊಗ್ಗ: ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಬಹಿಷ್ಕಾರ ಹಾಕಿ ಒಕ್ಕೂಟ ವ್ಯವಸ್ಥೆಗೆ ಅಸಹಕಾರ ಮನೋಭಾವವನ್ನು ತೋರಿದೆ. ಈ ಬೆಳವಣಿಗೆಯ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರ ಪಾತ್ರವಿದೆ ಎಂದು ಮಾಜಿ ಸಚಿವ ಎಚ್.ಹಾಲಪ್ಪ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾಗರಕ್ಕೆ ಆಗಮಿಸಿದ್ದ ಸಚಿವ ಸತೀಶ್ ಜಾರಕಿಹೋಳಿ ಕೊನೆಯ ವೇಳೆ ವಾಪಸ್ ಹೋಗಿದ್ದು ಒಳ್ಳೆಯ ಬೆಳವಣಿಗೆ ಅಲ್ಲ. ಕಾರ್ಯಕ್ರಮಕ್ಕೆ ರಾಜ್ಯ ಸರಕಾರದ ಸಚಿವರು, ಅಧಿಕಾರಿಗಳು ಭಾಗವಹಿಸದೆ ಇರುವುದಕ್ಕೆ ಮುಖ್ಯಮಂತ್ರಿಯ ಪಾತ್ರವೇನಿಲ್ಲ. ಜಿಲ್ಲಾ ಸಚಿವ ಮಧು ಬಂಗಾರಪ್ಪ ಸೇತುವೆ ಕೆಲಸದಲ್ಲಿ ತಮ್ಮದೇನು ಪಾತ್ರವಿಲ್ಲ ಎಂದು ಕಸಿವಿಸಿಯಾಗಿ ಕೀಳಿರಿಮೆಯಿಂದ ಬಹಿಷ್ಕರಿಸಿದ್ದಾರೆ ಎಂದು ಆರೋಪಿಸಿದರು. ಸೇತುವೆಗೆ ಯಾರಪ್ಪನ ದುಡ್ಡೂ ಹಾಕಿಲ್ಲ. ಸರಕಾರದ ದುಡ್ಡು. ಕಾಂಗ್ರೆಸ್ ಸರಕಾರವಿದ್ದಾಗಲೇ ಯಾಕೆ ಸೇತುವೆ ಮಾಡಬಾರದಿತ್ತು. ಅಸಂಬದ್ಧ ಮಾತುಗಳನ್ನು ಬಿಡಬೇಕು. ಯಡಿಯೂರಪ್ಪ ಮತ್ತು ಮಕ್ಕಳು ಯಾವತ್ತೂ ಅಭಿವೃದ್ಧಿಗೆ ವಿರೋಧ ಮಾಡಿಲ್ಲ. ಸೇತುವೆ ಉದ್ಘಾಟನೆಯಲ್ಲಿ ಯಾವುದೇ ಶಿಷ್ಟಾಚಾರದ ಲೋಪ ಆಗಿಲ್ಲವೆಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ವ್ಯಕ್ತಿ. ನಮ್ಮ ಪಕ್ಷ ಸಿದ್ಧಾಂತ ಏನೇ ಇದ್ದರೂ ಅವರನ್ನು ಗೌರವಿಸುತ್ತೇವೆ. ಆದರೆ ಅವರು ಜಿಲ್ಲಾ ಮಂತ್ರಿ, ಶಾಸಕರ ಮಾತು ಕೇಳಿಕೊಂಡು ಕಾರ್ಯಕ್ರಮಕ್ಕೆ ಬಾರದೆ ಇರುವ ಸಣ್ಣತನ ತೋರಬಾರದಿತ್ತು. ಹಸಿರುಮಕ್ಕಿ ಸೇತುವೆಗೆ ಬಿಜೆಪಿ ಸರಕಾರ ಇರುವಾಗ 50 ಕೋ.ರೂ. ಬಿಡುಗಡೆ ಮಾಡಿತ್ತು. ಈಗ ಕಾಂಗ್ರೆಸ್ ಸರಕಾರವೇ ಇದೆ. ಜಿಲ್ಲಾ ಮಂತ್ರಿ ಮಧುಬಂಗಾರಪ್ಪ ಹಣ ತಂದು ಸೇತುವೆ ಪೂರ್ಣಗೊಳಿಸಲಿ ಎಂದು ಸವಾಲು ಹಾಕಿದರು. ಸುದ್ಧಿಗೋಷ್ಠಿಯಲ್ಲಿ ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಡಿ.ಎಸ್.ಅರುಣ್, ಶಿವರಾಜು, ಹರಿಕೃಷ್ಣ, ಅಣ್ಣಪ್ಪ, ಮಾಲತೇಶ ಉಪಸ್ಥಿತರಿದ್ದರು.
ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಮಂಗಳೂರು, ಜು.15: ದ.ಕ.ಜಿಲ್ಲೆಯಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ. ಮುಂದಿನ ಕೆಲವು ದಿನಗಳ ಕಾಲ ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಬುಧವಾರ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಸೊಮವಾರ ತಡರಾತ್ರಿಯಿಂದಲೇ ಮಳೆ ಸುರಿಯತೊಡಗಿದ್ದು, ಮಂಗಳವಾರ ನಿರಂತರವಾಗಿ ಮಳೆ ಸುರಿದಿದೆ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ಬಂಟ್ವಾಳ, ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಅಂಗನ ವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿತ್ತು. ನಗರದ ಹಲವು ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ಹರಿದ ಪರಿಣಾಮ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು. *ದ.ಕ ಜಿಲ್ಲೆಯಲ್ಲಿ 54.2 ಮಿ.ಮೀ ಮಳೆಯಾಗಿದೆ. ಕೆಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಜಿಲ್ಲೆಯಲ್ಲಿ 10ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಮಂಗಳೂರು ಮನಪಾ ವ್ಯಾಪ್ತಿಯಲ್ಲಿ 8ಕ್ಕೂ ಅಧಿಕ ಆವರಣ ಗೋಡೆಗಳು ಕುಸಿದಿರುವುದಾಗಿ ವರದಿಯಾಗಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ 30ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಕಡಲು ಪ್ರಕ್ಷುಬ್ಧವಾಗಿರುವ ಕಾರಣ ಮುಂದಿನ ನಾಲ್ಕೈದು ದಿನಗಳ ಕಾಲ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ. *ಮಂಗಳೂರಿನಲ್ಲೇ ಹೆಚ್ಚು ಮಳೆ ಜಿಲ್ಲೆಯಲ್ಲಿ 24 ಗಂಟೆಯಲ್ಲಿ ಬಿದ್ದ ಮಳೆಯಲ್ಲಿ 92.1 ಮಿ.ಮೀ ಮಳೆ ಮಂಗಳೂರಿನಲ್ಲೇ ಸುರಿದಿದೆ. ಉಳಿದಂತೆ ಮೂಡುಬಿದಿರೆಯಲ್ಲಿ 77.4 ಮಿ.ಮೀ, ಉಳ್ಳಾಲದಲ್ಲಿ 75.3 ಮಿ.ಮೀ, ಬೆಳ್ತಂಗಡಿಯಲ್ಲಿ 39.9 ಮಿ.ಮೀ, ಬಂಟ್ವಾಳದಲ್ಲಿ 65.8 ಮಿ.ಮೀ, ಪುತ್ತೂರಿನಲ್ಲಿ 46.5 ಮಿ.ಮೀ, ಸುಳ್ಯದಲ್ಲಿ 49.1 ಮಿ.ಮೀ, ಕಡಬದಲ್ಲಿ 45.1 ಮಿ.ಮೀ, ಮೂಲ್ಕಿಯಲ್ಲಿ 65.5 ಮಿ.ಮೀ ಮಳೆ ಸುರಿದಿದೆ.
ಬ್ರಹ್ಮಾವರ| ಬ್ಯಾಂಕ್ ಅಧಿಕಾರಿಗಳ ಹೆಸರಿನಲ್ಲಿ ಆನ್ಲೈನ್ ವಂಚನೆ: ಪ್ರಕರಣ ದಾಖಲು
ಬ್ರಹ್ಮಾವರ, ಜು.15: ಬ್ಯಾಂಕ್ ಅಧಿಕಾರಿಗಳೆಂದು ಕರೆ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ರೂ. ಹಣವನ್ನು ವರ್ಗಾಯಿಸಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೀಲಾವರ ಗ್ರಾಮದ ಶೈಲಜಾ(35) ಎಂಬವರಿಗೆ ಜು.11ರಂದು ಅಕ್ಸಿಸ್ ಬ್ಯಾಂಕಿನಿಂದ ಕರೆ ಮಾಡುವು ದಾಗಿ ಹೇಳಿ ಮಾತನಾಡಿದ ಅಪರಿಚಿತರು ತಮ್ಮ ಖಾತೆಯಲ್ಲಿ ಹಣ ಇಲ್ಲದೆ ಇರುವುದರಿಂದ ಕ್ಲೋಸ್ ಮಾಡಲಾಗುವುದು ಎಂದು ತಿಳಿಸಿದ್ದನು. ಅದಕ್ಕೆ ನಿಮ್ಮ ಬೇರೆ ಖಾತೆಯಲ್ಲಿರುವ ಹಣವನ್ನು ಈ ಖಾತೆಗೆ ಜಮೆ ಮಾಡುವಂತೆ ತಿಳಿಸಿದ್ದನು. ಅದನ್ನು ನಂಬಿದ ಶೈಲಜಾ, ಹಣ ವನ್ನು ಖಾತೆಗೆ ವರ್ಗಾವಣೆ ಮಾಡುವಾಗ ಅವರ ಎರಡೂ ಖಾತೆಗಳಿಂದ ಒಟ್ಟು 1,22,392ರೂ. ಹಣವನ್ನು ಆರೋಪಿಗಳು ಪಡೆದು ವಂಚಿಸಿರುವುದಾಗಿ ದೂರಲಾಗಿದೆ.
ಅಂಗಡಿಗೆ ನುಗ್ಗಿ ಸೊತ್ತು ಕಳವು: ಪ್ರಕರಣ ದಾಖಲು
ಕುಂದಾಪುರ, ಜು.15: ಕುಂದಾಪುರ ಸಂತೆ ಮಾರ್ಕೆಟ್ ಬಳಿಯ ಅಂಗಡಿ ಕೋಣೆಗೆ ಜು.14ರಂದು ನಸುಕಿನ ವೇಳೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಕೋಡಿಯ ಮಹಮ್ಮದ್ ಅಬ್ರಾರ್ ಎಂಬವರ ಅಂಗಡಿಯ ಶಟರ್ನ ಬಾಗಿಲ ಬೀಗವನ್ನು ಒಡೆದು ಒಳಗೆ ಪ್ರವೇಶಿಸಿದ ಕಳ್ಳರು, 95,000ರೂ. ಮೌಲ್ಯದ ತಾಮ್ರದ ವಯರ್ ಹಾಗೂ ಹಿತ್ತಾಳೆಯ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಜಾತಿ ಗಣತಿ ಮಾಡಿಸಿಯೇ ತೀರುತ್ತೇವೆ’ ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ : ಅಶೋಕ್ ಗೆಹ್ಲೋಟ್
ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಡಕ್ಕೆ ಮಣಿದು ಕೇಂದ್ರ ಸರಕಾರವು ಘೋಷಿಸಿರುವ ಜಾತಿ ಗಣತಿ ಸಮೀಕ್ಷೆಯನ್ನು ಮಾಡಲೇಬೇಕು. ಇದು ನಮ್ಮ ಪಕ್ಷದ ಸಂಕಲ್ಪ, ಬದ್ಧತೆಯಾಗಿದೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದರು. ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಸಲಹಾ ಮಂಡಳಿಯ ಮೊದಲನೆ ಸಭೆಯ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.90ರಷ್ಟು ಪಾಲು ಹೊಂದಿರುವ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ವ್ಯವಸ್ಥೆಯ ಎಲ್ಲ ಸ್ತರಗಳಲ್ಲಿಯೂ ಸಮಾನ ಅವಕಾಶಗಳು ಸಿಗಬೇಕು. ಆದುದರಿಂದಲೇ, ಯಾರ ಜನಸಂಖ್ಯೆ ಎಷ್ಟಿದೆಯೇ ಅವರಿಗೆ ಅಷ್ಟು ಪ್ರಮಾಣದಲ್ಲಿ ಅವಕಾಶಗಳು ಸಿಗಬೇಕು ಎಂದು ರಾಹುಲ್ ಗಾಂಧಿ ಒಂದು ಅಭಿಯಾನ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದರು. ಸರಕಾರದ ಸಚಿವಾಲಯಗಳು, ನ್ಯಾಯಾಂಗ, ಮಾಧ್ಯಮಗಳು ಸೇರಿದಂತೆ ಎಲ್ಲ ವಲಯಗಳಲ್ಲಿ ಒಬಿಸಿಗಳಿಗೆ ಎಷ್ಟು ಪ್ರಮಾಣದಲ್ಲಿ ಅವಕಾಶಗಳು ಸಿಕ್ಕಿವೆ ಎಂಬುದನ್ನು ದೇಶದ ಮುಂದೆ ಇರಿಸಬೇಕಿದೆ. ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾದರೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ಪೃಶ್ಯತೆ ಜೀವಂತವಾಗಿದೆ. ಮನುಷ್ಯ, ಮತ್ತೊಬ್ಬ ಮನುಷ್ಯನ್ನು ಮುಟ್ಟಲು ಹಿಂಜರಿಯುವಂತಹ ಪರಿಸ್ಥಿತಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಶೋಕ್ ಗೆಹ್ಲೋಟ್ ಹೇಳಿದರು. ದಲಿತ ವರ್ಗದವರು, ಆದಿವಾಸಿಗಳು, ಒಬಿಸಿಗಳ ಸಮಸ್ಯೆಗಳು ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ರೀತಿಯಿವೆ. ಹಿಂದುಳಿದ ವರ್ಗಗಳು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿವೆ. ಆದರೆ, ಅವರಿಗೆ ಅಗತ್ಯವಿರುವ ಅವಕಾಶಗಳು ಸಿಗದಂತೆ ಆಗಿದೆ. ಆದುದರಿಂದ, ಈ ಜಾತಿ ಗಣತಿಯಲ್ಲಿ ಅವರ ಪರಿಸ್ಥಿತಿ ತಿಳಿಯಲಿದೆ. ಅವರ ಕಲ್ಯಾಣಕ್ಕಾಗಿ ಏನೆಲ್ಲ ಮಾಡಬಹುದು ಎಂಬುದರ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಅವರು ತಿಳಿಸಿದರು. ಬಿಹಾರದಲ್ಲಿ ಮೊದಲು ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಲಾಯಿತು. ಈಗ ಅಲ್ಲಿ ಚುನಾವಣೆ ಬರಲಿದೆ. ಕೇಂದ್ರ ಸರಕಾರ ಒಬಿಸಿಗಳಿಗೆ ಕಣ್ಣೊರೆಸುವ ತಂತ್ರವಾಗಿ ಜಾತಿ ಗಣತಿ ಮಾಡುವ ನಿರ್ಧಾರವನ್ನು ಬಳಸಿಕೊಳ್ಳಬಾರದು. ವಾಸ್ತವವಾಗಿ ಜಾತಿ ಗಣತಿ ಆಗಲೇಬೇಕು. ಅದನ್ನು ನಾವು ಮಾಡಿಸಿಯೇ ತೀರುತ್ತೇವೆ ಎಂದು ಅಶೋಕ್ ಗೆಹ್ಲೋಟ್ ತಿಳಿಸಿದರು. ಎಐಸಿಸಿ ಒಬಿಸಿ ವಿಭಾಗದ ಅಧ್ಯಕ್ಷ ಹಾಗೂ ಸಲಹಾ ಮಂಡಳಿಯ ಸಂಚಾಲಕ ಡಾ.ಅನಿಲ್ ಜೈಹಿಂದ್ ಮಾತನಾಡಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಮೊದಲನೆ ಸಭೆ ನಡೆಸಲಾಗಿದೆ. ನಮ್ಮ ಪಕ್ಷದ ಹಿರಿಯ ನಾಯಕರು ಈ ಮಂಡಳಿಯ ಸದಸ್ಯರಾಗಿದ್ದಾರೆ. ಹಲವು ವಿಚಾರಗಳ ಬಗ್ಗೆ ನಾವು ಚರ್ಚೆಗಳನ್ನು ಮಾಡಿದ್ದೇವೆ. ಬುಧವಾರ ನಡೆಯಲಿರುವ ಸಮಾರೋಪ ಸಭೆಯ ಬಳಿಕ ಎರಡು ದಿನಗಳ ಕಾಲ ನಡೆದಿರುವ ಚರ್ಚೆಗೆ ಸಂಬಂಧಿಸಿದ ನಿರ್ಣಯಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದರು. ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಇಂದು ನಡೆದ ಸಭೆಯು ಅಪೂರ್ಣವಾಗಿದೆ. ನಾಳೆ ಇನ್ನೂ ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡಲಿದ್ದೇವೆ. ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಏನೆಲ್ಲ ಮಾಡಬಹುದು ಎಂಬುದರ ಕುರಿತು ನಾವು ಪ್ರಸ್ತಾವ ಮಾಡಿದ್ದೇವೆ ಎಂದು ಹೇಳಿದರು. ಬಿಜೆಪಿ ಯಾವತ್ತೂ ಕೂಡ ಮೀಸಲಾತಿ, ಸಾಮಾಜಿಕ ನ್ಯಾಯದ ಪರವಾಗಿ ಇರಲಿಲ್ಲ. ನಾವು ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಗೆ ಆದ್ಯತೆ ನೀಡುತ್ತೇವೆ. ಕಾಂಗ್ರೆಸ್ ನವರು ಸಾಮಾಜಿಕ ನ್ಯಾಯ ಒದಗಿಸಲು ಮುಂದಾದ ಸಂದರ್ಭದಲ್ಲೆಲ್ಲ ಬಿಜೆಪಿಯವರು ವಿರೋಧಿಸಿರುವುದಕ್ಕೆ ಇತಿಹಾಸದಲ್ಲಿನ ಅನೇಕ ಘಟನೆಗಳೆ ಸಾಕ್ಷಿಯಾಗಿವೆ. ಜನಸಂಖ್ಯೆಗೆ ಅನುಗುಣವಾಗಿ ಹಿಂದುಳಿದ ವರ್ಗಗಳಿಗೆ ನ್ಯಾಯ ಕಲ್ಪಿಸಿಕೊಡುವ ಬದ್ಧತೆಯನ್ನು ಹೇಗೆ ಅನುಷ್ಠಾನ ಮಾಡಬಹುದು ಎಂಬುದರ ಕುರಿತು ಚರ್ಚೆಗಳನ್ನು ನಡೆಸುತ್ತೇವೆ ಎಂದು ಅವರು ಹೇಳಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಮಾತನಾಡಿ, ದೇಶದಲ್ಲಿ ಹಿಂದುಳಿದವರ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಯಾವ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬುದರ ಬೇರೆ ಬೇರೆ ರಾಜ್ಯಗಳಲ್ಲಿ ನಾಯಕರು ವಿಷಯಗಳನ್ನು ಪ್ರಸ್ತಾವಿಸಿದ್ದಾರೆ. ಅದರ ಜೊತೆಗೆ ಜಾತಿ ಗಣತಿ ಕುರಿತು ಚರ್ಚೆಗಳನ್ನು ಮಾಡಿದ್ದೇವೆ. ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದ ಅಶೋಕ್ ಗೆಹ್ಲೋಟ್, ಪಾಂಡಿಚೇರಿಯ ಮುಖ್ಯಮಂತ್ರಿಯಾಗಿದ್ದ ನಾರಾಯಣಸ್ವಾಮಿ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಈ ಸಭೆಯಲ್ಲಿ ಮಾತನಾಡಿದ್ದಾರೆ ಎಂದು ಹೇಳಿದರು. ಹಿಂದುಳಿದ ವರ್ಗಗಳು ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಯಾವ ಸ್ಥಿತಿಯಲ್ಲಿದ್ದಾರೆ ಎಂಬುದರ ಕುರಿತು ಚರ್ಚಿಸಿ, ಸುಮಾರು ಮೂರು ನಿರ್ಣಯಗಳನ್ನು ಅಂಗೀಕರಿಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ವಿ.ಹನುಮಂತ ರಾವ್, ಸಂಸದರಾದ ಅಡೂರು ಪ್ರಕಾಶ್, ಜ್ಯೋತಿ ಮಣಿ ಮತ್ತಿತರರು ಭಾಗವಹಿಸಿದ್ದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಆ.5ರಿಂದ ಕರ್ನಾಟಕ ಸಾರಿಗೆ ನೌಕರರ ಮುಷ್ಕರ!
ಸಾರಿಗೆ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದ ಕಾರಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದರೂ, ಈವರೆಗೆ ಸಭೆ ನಡೆಸದ ಕಾರಣ ಮುಷ್ಕರಕ್ಕೆ ನಿರ್ಧರಿಸಲಾಗಿದೆ.
ದೋಣಿ ದುರಂತ: ಹೆಲಿಕಾಪ್ಟರ್ ಕಾರ್ಯಾಚರಣೆಗೆ ಸಂಸದ ರಾಘವೇಂದ್ರ ಮನವಿ
ಗಂಗೊಳ್ಳಿ, ಜು.15: ಗಂಗೊಳ್ಳಿಯ ದೋಣಿ ದುರಂತ ಪ್ರದೇಶಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಂಗಳವಾರ ಸಂಜೆ ಭೇಟಿ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿದ ಸಂಸದ ಬಿ.ವೈ.ರಾಘವೇಂದ್ರ, ಕಡಲು ಪ್ರಕ್ಷುಬ್ಧವಾಗಿರುವುದರಿಂದ ನಾಪತ್ತೆಯಾಗಿರುವ ಮೀನುಗಾರರು ಪತ್ತೆ ಕಾರ್ಯಾ ಚರಣೆಗೆ ತೊಡಕಾಗಿರುವುದರಿಂದ, ಕ್ಷಿಪ್ರ ಕಾರ್ಯಾಚರಣೆಗೆ ಅನುಕೂಲ ವಾಗಲು ಬುಧವಾರ ಬೆಳಗ್ಗೆಯಿಂದಲೇ ಹೆಲಿಕಾಪ್ಟರ್ ಮೂಲಕ ಕಾರ್ಯಾ ಚರಣೆ ನಡೆಸಲು ರಾಜ್ಯ ಸರಕಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್, ಕರಾವಳಿ ಕಾವಲು ಪಡೆ ಎಸ್ಪಿ ಮಿಥುನ್ ಅವರಿಂದ ಮಾಹಿತಿ ಪಡೆದರು. ಈ ವೇಳೆ ಮುಳುಗುತಜ್ಞ ಈಶ್ವರ್ ಮಲ್ಪೆ ಹಾಜರಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮೊದ ಲಾದವರು ಉಪಸ್ಥಿತರಿದ್ದರು.
ಗುಹೆಯಲ್ಲಿ ಪತ್ತೆಯಾದ ಮಹಿಳೆಯೊಂದಿಗಿದ್ದ ಮಕ್ಕಳ ತಂದೆ ಇಸ್ರೇಲ್ ಉದ್ಯಮಿ : ಅಧಿಕಾರಿಗಳಿಂದ ಮಾಹಿತಿ
ಹೊಸದಿಲ್ಲಿ : ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಕರ್ನಾಟಕದ ಗುಹೆಯೊಂದರಲ್ಲಿ ಪತ್ತೆಯಾದ ರಷ್ಯಾದ ಮಹಿಳೆ ಗೋವಾದ ಗುಹೆಯಲ್ಲಿದ್ದಾಗ ಒಂದು ಮಗುವಿಗೆ ಜನ್ಮ ನೀಡಿರುವುದಾಗಿ ಹೇಳಿಕೊಂಡಿದ್ದಾಳೆ. ಈ ಮಧ್ಯೆ ಮಹಿಳೆ ಮಕ್ಕಳ ತಂದೆ ಎಂದು ಹೇಳಿರುವ ಇಸ್ರೇಲ್ ಉದ್ಯಮಿಯನ್ನು ಸಂಪರ್ಕಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿ ಜುಲೈ 9ರಂದು ಗುಹೆಯಲ್ಲಿ ನೀನಾ ಕುಟಿನಾ(40) ಮತ್ತು ಆರು ಮತ್ತು ನಾಲ್ಕು ವರ್ಷದ ಆಕೆಯ ಇಬ್ಬರು ಹೆಣ್ಣುಮಕ್ಕಳು ಪತ್ತೆಯಾಗಿದ್ದರು. ಅವರ ವೀಸಾ ಅವಧಿ 2017ರಲ್ಲಿ ಮುಗಿದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೀನಾ ಈಗ ಬೆಂಗಳೂರಿನಲ್ಲಿರುವ ಬಂಧನ ಕೇಂದ್ರದಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ್ದ ನೀನಾ, ನಾನು ಬಹಳ ಹಿಂದೆಯೇ ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಧ್ಯಾನಕ್ಕಾಗಿ ಗೋಕರ್ಣಕ್ಕೆ ಬಂದಿಲ್ಲ ಎಂದು ಹೇಳಿದರು. ಎಫ್ಆರ್ಆರ್ಒ ಅಧಿಕಾರಿಯೊಬ್ಬರು ಈ ಕುರಿತು ಪ್ರತಿಕ್ರಿಯಿಸಿ, ಮಕ್ಕಳ ತಂದೆ ಇಸ್ರೇಲ್ ಪ್ರಜೆಯಾಗಿದ್ದು, ಅವರು ವ್ಯಾಪಾರ ವೀಸಾದಲ್ಲಿ ಭಾರತದಲ್ಲಿರುವುದನ್ನು ಪತ್ತೆಹಚ್ಚಿದ್ದೇವೆ. ನೀನಾ ಮತ್ತು ಮಕ್ಕಳಿಗೆ ಟಿಕೆಟ್ ವ್ಯವಸ್ಥೆ ಬಗ್ಗೆ ಮಕ್ಕಳ ತಂದೆ ಎಂದು ಹೇಳಲಾದ ಇಸ್ರೇಲ್ ವ್ಯಕ್ತಿ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಆರಂಭದಲ್ಲಿ ನೀನಾ ಮಕ್ಕಳ ತಂದೆಯ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆಕೆಗೆ ಕೌನ್ಸಿಲಿಂಗ್ ನಡೆಸಿದ ಬಳಿಕ ಇಸ್ರೇಲ್ ಪ್ರಜೆಯ ಬಗ್ಗೆ ವಿವರಗಳನ್ನು ನೀಡಿದ್ದಾಳೆ ಎಂದು ಮೂಲಗಳು ತಿಳಿಸಿದೆ. FRRO ಅಧಿಕಾರಿಗಳು ರಷ್ಯಾದ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿದ್ದಾರೆ. ಎಲ್ಲಾ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಮಹಿಳೆ ಮತ್ತು ಮಕ್ಕಳನ್ನು ರಷ್ಯಾಕ್ಕೆ ಕಳುಹಿಸಲು ಸುಮಾರು ಒಂದು ತಿಂಗಳು ತೆಗೆದುಕೊಳ್ಳುತ್ತದೆ. ಆಕೆಗೆ ರಷ್ಯಾದಲ್ಲಿ ಮತ್ತೊಂದು ಮಗುವಿದೆ. ನಾವು ಚೆನ್ನೈನಲ್ಲಿರುವ ರಷ್ಯಾದ ರಾಭಾರಿ ಕಚೇರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ʼನಾನು ಮಕ್ಕಳೊಂದಿಗೆ ಕಾಡಿನಲ್ಲಿ ಸಂತೋಷವಾಗಿದ್ದೆ, ನನ್ನ ಮಕ್ಕಳು ಮೊದಲ ಬಾರಿಗೆ ಆಸ್ಪತ್ರೆ ಮತ್ತು ವೈದ್ಯರನ್ನು ನೋಡಿದರು. ನಮಗೆ ಕಾಡಿನಲ್ಲಿ ವಾಸ ಮಾಡಿ ಅನುಭವವಿದೆ. ನಾವು ಸಾಯುತ್ತಿರಲಿಲ್ಲ. ಅವರು ಕಾಡಿನಲ್ಲಿ ತುಂಬಾ ಸಂತೋಷದಲ್ಲಿದ್ದರು. ಅವರು ಜಲಪಾತದಲ್ಲಿ ಈಜುತ್ತಿದ್ದರು. ಮಲಗಲು ತುಂಬಾ ಒಳ್ಳೆಯ ಸ್ಥಳವಿತ್ತು. ಜೇಡಿಮಣ್ಣು ಮತ್ತು ಚಿತ್ರಕಲೆ ಬಳಸಿ ಕಲಾಕೃತಿ ರಚಿಸುವ ಬಗ್ಗೆ ಬಹಳಷ್ಟು ಪಾಠಗಳನ್ನು ಕಲಿತರು. ನಾವು ರುಚಿಕರವಾದ ಆಹಾರವನ್ನು ಬೇಯಿಸಿ ತಿನ್ನುತ್ತಿದ್ದೆವು. ನಾನು ಕನಿಷ್ಠ 20 ದೇಶಗಳಿಗೆ ಪ್ರಯಾಣಿಸಿದ್ದೇನೆ. ವಿವಿಧ ಕಾಡುಗಳಲ್ಲಿ ವಾಸಿಸಿದ್ದೇನೆ. ಏಕೆಂದರೆ ನಾವು ಪ್ರಕೃತಿಯನ್ನು ಪ್ರೀತಿಸುತ್ತೇವೆ. ಆ ಗುಹೆ ದಟ್ಟವಾದ ಕಾಡಿನೊಳಗೆ ಇರಲಿಲ್ಲ ಮತ್ತು ಅದು ಚಿಕ್ಕದಾಗಿರಲಿಲ್ಲʼ ಎಂದು ಹೇಳಿದ್ದಾರೆ.
ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲ ಚಿತ್ರ ಮಂದಿರಗಳಲ್ಲಿಯೂ ಗರಿಷ್ಠ ದರ 200 ರೂ. ನಿಗದಿಪಡಿಸಿ ಸರಕಾರದಿಂದ ಆದೇಶ
ಬೆಂಗಳೂರು : ಮಲ್ಟಿಫ್ಲೆಕ್ಸ್ಗಳಲ್ಲಿ ದುಬಾರಿ ಮೊತ್ತದ ಸಿನೆಮಾ ಟಿಕೆಟ್ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರಕಾರ ಮುಂದಾಗಿದ್ದು, ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲ ಚಿತ್ರ ಮಂದಿರಗಳಲ್ಲಿಯೂ ಗರಿಷ್ಠ ದರ 200 ರೂಪಾಯಿ ನಿಗದಿ ಮಾಡಿ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲ ಸಿನಿಮಾ ಮಂದಿರ ಹಾಗೂ ಮಲ್ಟಿಫ್ಲೆಕ್ಸ್ಗಳಲ್ಲಿ ಟಿಕೆಟ್ ದರವು ಮನೋರಂಜನಾ ತೆರಿಗೆ ಸೇರಿ 200 ರೂ.ಗಳನ್ನು ಗಡಿದಾಟುವಂತಿಲ್ಲ. ಈ ದರವು ಕನ್ನಡ ಮಾತ್ರವಲ್ಲದೇ, ರಾಜ್ಯದಲ್ಲಿ ಬಿಡುಗಡೆಯಾಗುವ ಅನ್ಯ ಭಾಷೆಯ ಎಲ್ಲ ಚಿತ್ರಗಳಿಗೂ ಅನ್ವಯವಾಗತ್ತದೆ ಎಂದು ತಿಳಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಚಿತ್ರಮಂದಿರಗಳೇ ಕಡಿಮೆಯಾಗುತ್ತಿದ್ದು, ಮಲ್ಟಿಫ್ಲೆಕ್ಸ್ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಮಲ್ಟಿಫ್ಲೆಕ್ಸ್ಗಳಲ್ಲಿ ಸಿನೆಮಾ ಟಿಕೆಟ್ ದರ ಬಹಳ ದುಬಾರಿಯಾಗುತ್ತಿದ್ದು, ಸಿನಿಮಾ ಪ್ರೇಕ್ಷಕರ ಜೇಬಿಗೆ ಕತ್ತರಿ ಬೀಳುತ್ತಿತ್ತು. ಸದ್ಯ ಗರಿಷ್ಠ ಟಿಕೆಟ್ ದರ ನಿಗದಿ ಮಾಡಿದ್ದು, ಪ್ರೇಕ್ಷಕರಿಗೆ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
GST ನೋಟಿಸ್ ವಿರುದ್ಧ ಬೇಕರಿ, ಕಾಂಡಿಮೆಂಟ್ಸ್ ಮಾಲೀಕರ ಸಮರ; ಜು.23ರಿಂದ ಮೂರು ದಿನ ಬಂದ್; ಏನಿರುತ್ತೆ? ಏನಿರಲ್ಲ?
ಬೆಂಗಳೂರಿನಲ್ಲಿ ಯುಪಿಐ ವಹಿವಾಟಿಗೆ ಸಂಬಂಧಿಸಿದಂತೆ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಇದರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜುಲೈ 23 ರಿಂದ 25 ರವರೆಗೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಾಲು ಮಾರಾಟ, ಗುಟ್ಕಾ ಸಿಗರೇಟ್ ಮತ್ತು ಬೇಕರಿ ಸೇರಿದಂತೆ ಸಣ್ಣ ಪುಟ್ಟ ಅಂಗಡಿಗಳು ಬಂದ್ ಆಗಲಿವೆ. ಈ ಕ್ರಮವು ವಾಣಿಜ್ಯ ತೆರಿಗೆ ಇಲಾಖೆಯ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಲು ಕೈಗೊಂಡಿದೆ.
ಕಲಬುರಗಿ | ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಕಲಬುರಗಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಜೇವರ್ಗಿ ತಾಲ್ಲೂಕಿನ ಮಾರಡಗಿ ಎಸ್ಸೆ ಗ್ರಾಮದಲ್ಲಿ ನಡೆದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಮಕ್ಕಳಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಒಟ್ಟು 117 ವಿದ್ಯಾರ್ಥಿಗಳಲ್ಲಿ 68 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದ್ದಾರೆ. ಅದರಲ್ಲಿ 22 ವಿದ್ಯಾರ್ಥಿಗಳಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಅಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಎಲ್ಲಾ ಮಕ್ಕಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನದ ಉಪಹಾರ ಸೇವಿಸಿದ ನಂತರ ಈ ರೀತಿಯ ಘಟನೆ ನಡೆದಿದ್ದು, ಕಳಪೆ ಗುಣಮಟ್ಟದ ತೊಗರಿ ಬೇಳೆಯ ಬಳಕೆಯಿಂದ ಈ ಘಟನೆ ನಡೆದಿದೆ ಎಂದು ಪೋಷಕರು ಆರೋಪಿಸಿದ್ದಾರೆ. ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ತಾಲ್ಲೂಕು ವೈದ್ಯಾಧಿಕಾರಿ ಡಾ.ಉಮೇಶ್ ಶರ್ಮಾ, ಪಿಎಸ್ಐ ಗಜಾನನ ಬಿರಾದಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಸೇರಿದಂತೆ ತಾಲೂಕಿನ ವಿವಿಧ ರಾಜಕೀಯ ಮುಖಂಡರು, ಹೋರಾಟಗಾರರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ಮಂಗಳೂರು, ಜು.15: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಅವರ ಹೆತ್ತವರು ದೂರು ನೀಡಿದ್ದಾರೆ. ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ. 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜುಲೈ 15ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆಗಮಿಸಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ. ಅಸ್ಥಿ ಸಿಕ್ಕಿದರೆ ಸಂಪ್ರದಾಯ ಪ್ರಕಾರ ಅಂತ್ಯ ಸಂಸ್ಕಾರ: ಸಾಯುವುದಕ್ಕಿಂತ ಮೊದಲು ಮಗಳ ಮೃತದೇಹದ ಅಸ್ಥಿ ಏನಾದರೂ ದೊರೆತರೆ, ಸನಾತನ ಹಿಂದೂ ಧರ್ಮದ ಸಂಪ್ರದಾಯ ಪ್ರಕಾರ ಅಂತ್ಯಕ್ರಿಯೆ ನಡೆಸುವ ಆಲೋಚನೆಯಲ್ಲಿ ಹೊರಟಿರುವೆನು. ನನಗೆ ಈಗ ಬೇರೆ ಏನು ಉಳಿದಿಲ್ಲ. ಮಗಳು ನಾಪತ್ತೆ ಪ್ರಕರಣದಲ್ಲಿ ನ್ಯಾಯ ದೊರಕಬೇಕು ಎಂದು ತಾಯಿ ಸುಜಾತ ಭಟ್ ತಿಳಿಸಿದ್ದಾರೆ. ಅನನ್ಯಾ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡುವ ಕಾರಣಕ್ಕಾಗಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿದ್ದೇವೆ. ಅವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಸುಜಾತ ಭಟ್ ಪರ ವಕೀಲರಾದ ಮಂಜುನಾಥ್ ಎನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಾಚಿಗುಡ, ಗದ್ವಾಲ್ ರೈಲುಗಳನ್ನು ಗುಂತಕಲ್ಲುವರೆಗೂ ವಿಸ್ತರಿಸುವಂತೆ ಸಂಸದರಿಗೆ ಮನವಿ
ರಾಯಚೂರು: ಕಾಚಿಗುಡ ಹಾಗೂ ಗದ್ವಾಲ್ ನಿಂದ ರಾಯಚೂರು ನಗರಕ್ಕೆ ಬಂದು ನಿಲುಗಡೆಯಾಗುವ ರೈಲುಗಳನ್ನು ಗುಂತಕಲ್ಲುವರೆಗೂ ವಿಸ್ತರಿಸುವಂತೆ ಮರ್ಚೆಟ್ಹಾಳ ಗ್ರಾಮದ ಸ್ಥಳೀಯ ನಾಗರೀಕರು ಹಾಗೂ ಗ್ರಾಮ ಪಂಚಾಯತ್ ಸದಸ್ಯರ ನಿಯೋಗ ಸಂಸದ ಜಿ.ಕುಮಾರ್ ನಾಯಕ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ನಿಯೋಗದಲ್ಲಿ ಸಮಾಜ ಸೇವಕರಾದ ದಾದಾಪೀರ್, ವೆಂಕನಗೌಡ, ಗೋವರ್ಧನ್ ಯಾದವ್ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಶರಣಪ್ಪ ನಾಯಕ, ವಾಟರ್ ಮ್ಯಾನ್ ನಾಗರಾಜ್ ಇತರರು ಇದ್ದರು. ದಕ್ಷಿಣ ಮಧ್ಯೆ ರೈಲ್ವೆಯ ರೈಲು ಗಾಡಿ ಸಂಖ್ಯೆ (67784) ಕಾಚಿಗುಡ-ರಾಯಚೂರು ಮೆಮು ಎಕ್ಸ್ ಪ್ರೆಸ್ ಹಾಗೂ ರೈಲು ಗಾಡಿ ಸಂಖ್ಯೆ (67784) ಗದ್ವಾಲ್- ರಾಯಚೂರು ಮೆಮು ಎಕ್ಸ್ ಪ್ರೆಸ್ ಗಾಡಿಯು ಗದ್ವಾಲ್ ರಾಯಚೂರು ನಗರಕ್ಕೆ ಪ್ರತಿನಿತ್ಯ ಓಡಾಟ ನಡೆಸುತ್ತಿದೆ. ಈ ರೈಲು ಗಾಡಿಗಳನ್ನು ಗುಂತಕಲ್ಲುವರೆಗೂ ವಿಸ್ತರಿಸಿದರೆ ನಿತ್ಯ ಸಂಚಾರ ಮಾಡುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಒತ್ತಾಯಿಸಿದರು. ರಾಯಚೂರು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಮರ್ಚೆಟ್ಹಾಳ ರೈಲ್ವೆ ನಿಲ್ದಾಣವು ಮೇಲ್ದರ್ಜೆಗೆ ಏರಿಸಿರುವುದರಿಂದ ಈ ನಿಲ್ದಾಣವನ್ನು ಅವಲಂಬಿಸಿರುವ ಸುತ್ತಮುತ್ತಲಿನ ಗ್ರಾಮಗಳಾದ ಉಡುಮಗಲ್ ಖಾನಪುರ, ದಿನ್ನಿ ಇನ್ನಿತರ ಊರುಗಳ ಗ್ರಾಮೀಣ ಪ್ರದೇಶದ ಜನರಿಗೆ ನಿತ್ಯದ ವ್ಯಾಪಾರ ವಹಿವಾಟು, ಕೃಷಿ ಚಟುವಟಿಕೆಗಳಿಗೆ ಆಂಧ್ರಪ್ರದೇಶದ ಪ್ರಮುಖ ಕೇಂದ್ರ ಮಂತ್ರಾಲಯ, ಕೊಸಗಿ, ಅದೋನಿ, ಗುಂತಕಲ್ಲಿಗೆ ತೆರಳಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಮರ್ಚೆಟ್ಹಾಳ ಗ್ರಾಮದ ನಿವಾಸಿ ದಾದಾಪೀರ್ ಹೇಳಿದರು. ಸಂಪರ್ಕದ ಪ್ರಮುಖ ಕೊಂಡಿಯಂತಿರುವ ರೈಲ್ವೆ ಮಾರ್ಗವು ಗ್ರಾಮೀಣ ಪ್ರದೇಶವಾದ ಮರ್ಚೆಟ್ಹಾಳ, ಮಾಟಮಾರಿ, ಹನುಮಪೂರು ಮೂಲಕ ಆಂಧ್ರಪ್ರದೇಶದ ಅದೋನಿ, ಗುಂತಕಲ್ಲಿಗೆ ಸೇರುತ್ತದೆ. ಈ ಮಾರ್ಗದಲ್ಲಿ ಎಕ್ಸಪ್ರೆ ಸ್ ರೈಲುಗಳಿದ್ದರೂ ಈ ನಿಲ್ದಾಣಗಳಲ್ಲಿ ನಿಲ್ಲಲು ಅವಕಾಶ ಕೊಟ್ಟಿರುವುದಿಲ್ಲ. ರಾಯಚೂರು- ಗುಂತಕಲ್ಲು ಮಾರ್ಗದ ಪ್ಯಾಸೆಂಜರ್ ರೈಲು ಮಾತ್ರ ಗ್ರಾಮಾಂತರ ಊರುಗಳಿಗೆ ಆಸರೆಯಾಗಿದೆ. ಆದರೆ ಪ್ಯಾಸೆಂಜರ್ ರೈಲುಗಳು ಸಮಯಕ್ಕೆ ಇರುವುದಿಲ್ಲ. ಬೆಳಿಗ್ಗೆ ಮತ್ತು ರಾತ್ರಿ ಸಮಯವಲ್ಲದ ಸಮಯದಲ್ಲಿ ಸಂಚಾರ ಮಾಡುತ್ತವೆ. ಇದರಿಂದ ಪ್ರಯಾಣಿಕರಿಗೆ ತೊಂದರೆ ಎನಿಸಿದೆ. ಅದ್ದರಿಂದ ಕಾಚಿಗುಡ ಹಾಗೂ ಗದ್ವಾಲ್ ರೈಲುಗಳನ್ನು ಗುಂತಕಲ್ಲು ಮಾರ್ಗಕ್ಕೂ ವ್ಯಾಪಿಸಿದರೆ ಅನುಕೂಲವಾಗುತ್ತದೆ ಎಂದು ಗ್ರಾಮ ಪಂಚಾಯತ್ ಸದಸ್ಯ ಶರಣಪ್ಪ ನಾಯಕ ಸಂಸದರಲ್ಲಿ ಮಾನವಿ ಮಾಡಿದರು.
ಎಸ್ವೈಎಸ್ ವತಿಯಿಂದ ದ.ಕ. ಜಿಲ್ಲೆಯಲ್ಲಿ 'ಸೌಹಾರ್ದ ಸಂಚಾರ'
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು 'ಹೃದಯ ಹೃದಯಗಳನ್ನು ಬೆಸೆಯೋಣ' ಎಂಬ ಧ್ಯೇಯ ವಾಕ್ಯದೊಂದಿಗೆ ಎಲ್ಲ ಜಾತಿ ಮತಗಳ ಜನರನ್ನು ಸೇರಿಸಿ ನಡೆಸುವ 'ಸೌಹಾರ್ದ ಸಂಚಾರ'ವು ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆಯಲ್ಲಿ ದ.ಕ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯಿತು. ಬಪ್ಪೆನಾಡಿನಿಂದ ಮುಲ್ಕಿ ತನಕ ಸೌಹಾರ್ದ ಕಾಲ್ನಡಿಗೆ ಜಾಥಾ ನಡೆದು, ಮುಲ್ಕಿಯಲ್ಲಿ ಸಂದೇಶ ಭಾಷಣ ನಡೆಯಿತು. ರಾಜ್ಯ ಕಾರ್ಯದರ್ಶಿ ಹಮೀದ್ ಮುಸ್ಲಿಯಾರ್ ಮುಖ್ಯ ಭಾಷಣ ಮಾಡಿದರು. ಅಶ್ರಪ್ ಸಖಾಫಿ ಮಾಡಾವು, ರೆ.ಫಾ ಜೋಕಿಮ್ ಪೆರ್ನಾಂಡಿಸ್, ರೆ.ಫಾ ಪಾವಲ್ ಸಿಕ್ವೇರ, ರೆ.ಫಾ ಆ್ಯಂಟನಿ ಸೇರಾ ಮಾತನಾಡಿದರು. ಎ.ಪಿ ಅಬ್ದುಲ್ಲಾ ಮದನಿ, ಅಶ್ರಫ್ ಸಖಾಫಿ ಕನ್ನಂಗಾರ್ ಉಪಸ್ಥಿತರಿದ್ದರು. ಅಶ್ರಫ್ ಸಖಾಫಿ ಸ್ವಾಗತಿಸಿದರು. ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಕಾರ್ಯಕ್ರಮ ನಿರೂಪಿಸಿದರು. ಟಿ.ಕೆ ಅಬ್ದುಲ್ ಖಾದರ್ ಅದ್ದಿ ವಂದಿಸಿದರು. ಸುರತ್ಕಲ್ ಕೇಂದ್ರ ಗೋವಿಂದದಾಸ್ ಕಾಲೇಜು ಕಡೆಯಿಂದ ಸುರತ್ಕಲ್ ಜಂಕ್ಷನ್ ತನಕ ಕಾಲ್ನಡಿಗೆ ನಡೆದು, ಸುರತ್ಕಲ್ ಜಂಕ್ಷನ್ ನಲ್ಲಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬೂ ಸುಫ್ಯಾನ್ ಮದನಿ ಮುಖ್ಯ ಪ್ರಭಾಷಣ ಮಾಡಿದರು. ಫಾದರ್ ಸಂತೋಷ್ ಲೋಬೋ, ಮನ್ಸೂರ್ ಅಲಿ ಕೋಟಗದ್ದೆ ಮಾತನಾಡಿದರು. ಮೌಲಾನಾ ಅಬ್ದುರ್ರಶೀದ್ ಝೈನಿ, ಶ್ರೀ ವಿನೋದ್ ಆಚಾರ್ಯ ಹೊಸಬೆಟ್ಟು, ಫಾದರ್ ಸಂತೋಷ್ ಲೋಬೊ ಇಂಫೆನ್ಟ್ ಮೇರಿ ಚರ್ಚ್ ಕಾಟಿಪಳ್ಳ, ಶ್ರೀ ರಾಘವೇಂದ್ರ ರಾವ್, ಉದ್ಯಮಿ ಸುರತ್ಕಲ್, ಸದಾಶಿವ ಶೆಟ್ಟಿ ಇಂಟಕ್ ಅಧ್ಯಕ್ಷ, ವಿಠ್ಠಲ್ ಶೆಟ್ಟಿಗಾರ್ ಮೊದವಾದವರು ಉಪಸ್ಥಿತರಿದ್ದರು. ಎಂ ಅಬ್ದುಲ್ ಖಯ್ಯೂಮ್ ಕಾಟಿಪಳ್ಳ ಸ್ವಾಗತಿಸಿದರು. ಮುಹಮ್ಮದ್ ಆಸಿಫ್ ಹಾಜಿ ಕೃಷ್ಣಾಪುರ ಕಾರ್ಯಕ್ರಮ ನಿರೂಪಿಸಿದರು. ಮನ್ಸೂರ್ ಅಲ ರಯ್ಯಾನ್ ಕೃಷ್ಣಾಪುರ ವಂದಿಸಿದರು. ಮಂಗಳೂರು ಕೇಂದ್ರ ಬಾವುಟಗುಡ್ಡೆಯಿಂದ ಕ್ಲಾಕ್ ಟವರ್ ತನಕ ಕಾಲ್ನಡಿಗೆ ಜಾಥಾ ನಡೆದು, ಮಂಗಳೂರು ಕ್ಲಾಕ್ ಟವರ್ ನಲ್ಲಿ ಸಭಣ ಕಾರ್ಯಕ್ರಮ ನಡೆಯಿತು. ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಶಾಫಿ ಸಅದಿ ಬೆಂಗಳೂರು ಮುಖ್ಯ ಪ್ರಭಾಷಣ ಮಾಡಿದರು. ಬೆಂಗಳೂರು ಈಡಿಗ ಮಠದ ವಿಖ್ಯಾತ ಸ್ವಾಮಿ, ಮಂಗಳೂರು ಚರ್ಚ್ ಪಾದರ್ ರೊಯಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಅವರು ಸೌಹಾರ್ದ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಐವನ್ ಡಿಸೋಜ, ಪದ್ಮರಾಜ್ ಆರ್ ಪೂಜಾರಿ, ನಾಸಿರ್ ಲಕ್ಕಿಸ್ಟಾರ್, ಹೈದರ್ ಪರ್ತಿಪ್ಪಾಡಿ, ಮುನೀರ್ ಕಾಟಿಪಳ್ಳ, ಹನೀಫ್ ಹಾಜಿ ಉಳ್ಳಾಲ, ಜಲೀಲ್ ಮೋಂಟುಗೋಳಿ, ಸುಹೈಲ್ ಕಂದಕ್, ಎನ್ ಎಸ್ ಕರೀಂ ಹಾಜಿ ನೆಕ್ಕರೆ, ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷರುಗಳಾದ ಸೈಯದ್ ಇಲ್ಯಾಸ್ ತಂಙಳ್ ಎಮ್ಮೆಮಾಡು, ಸೈಯದ್ ಶಾಫೀ ನಈಮೀ ತಂಙಳ್ ಮಾರ್ನಹಳ್ಳಿ, ಸೈಯದ್ ಹಾಮಿಮ್ ತಂಙಳ್ ಚಿಕ್ಕಮಂಗಳೂರು, ಇಬ್ರಾಹಿಂ ಸಖಾಫಿ ಪಯೋಟ, ಇಸ್ಹಾಖ್ ಝುಹ್ರಿ ಕಾನಕೆರೆ, ಮಹ್ಬೂಬ್ ಸಖಾಫಿ ಕಿನ್ಯ, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್, ಅಶ್ರಫ್ ಎಮ್ಮೆಮಾಡು, ಅತ್ತಾವುಳ್ಳ ಮೈಸೂರು, ಇಬ್ರಾಹಿಂ ಮೂಡಿಗೆರೆ, ಸಲೀಂ ಕನ್ಯಾಡಿ, ಕಲಂದರ್ ಕಕ್ಕೆಪದವು, ಯಾಕೂಬ್ ಸಅದಿ ನಾವೂರು, ನವಾಝ್ ಸಖಾಫಿ ಅಡ್ಯಾರ್, ಫಾರೂಕ್ ಶೇಡಿಗುರಿ, ರಝಾಕ್ ಭಾರತ್, ರಶೀದ್ ಹಾಜಿ ವಗ್ಗ, ಇಬ್ರಾಹಿಂ ಸಖಾಫಿ ಸೆರ್ಕಳ ಮೊದಲಾದವರು ಉಪಸ್ಥಿತರಿದ್ದರು. ಹನೀಫ್ ಹಾಜಿ ಉಳ್ಳಾಲ ಸ್ವಾಗತಿಸಿದರು, ಅಶ್ರಫ್ ಕಿನಾರ ಕಾರ್ಯಕ್ರಮ ನಿರೂಪಿಸಿದರು, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ವಂದಿಸಿದರು. ಬಿಸಿ ರೋಡ್ ಕೇಂದ್ರ ಕೈಕಂಬದಿಂದ ಬಿಸಿರೋಡ್ ತಾಲೂಕು ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆದು, ಬಿಸಿರೋಡ್ ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ರಾಜ್ಯ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಮುಖ್ಯ ಪ್ರಭಾಷಣ ಮಾಡಿದರು. ಅಮ್ಟೂರು ಚರ್ಚ್ ಫಾ ನವೀನ್ ಪ್ರಕಾಶ್ ಪಿಂಟೋ, ಹಸೈನಾರ್ ಅನೆಮಹಲ್, ಮಾತನಾಡಿದರು. ಎಂ.ಎಸ್ ಮಹಮ್ಮದ್, ಮುಹಿಯ್ಯದ್ದೀನ್ ಕಾಮಿಲ್ ಸಖಾಪಿ ಮೊದಲಾದವರು ಉಪಸ್ಥಿತರಿದ್ದರು. ಅಕ್ಬರ್ ಅಲಿ ಮದನಿ ಸ್ವಾಗತಿಸಿದರು, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಕ್ರಮ ನಿರೂಪಿಸಿದರು, ಇರ್ಷಾದ್ ಹಾಜಿ ಗೂಡಿನಬಳಿ ವಂದಿಸಿದರು. ಕಲ್ಲಡ್ಕ ಕೇಂದ್ರ ಕಲ್ಲಡ್ಕ ಕೆಸಿರೋಡ್ ನಿಂದ ಕಲ್ಲಡ್ಕ ಜಂಕ್ಷನ್ ತನಕ ಕಾಲ್ನಡಿಗೆ ಜಾಥಾ ನಡೆದು, ಕಲ್ಲಡ್ಕ ಜಂಕ್ಷನ್ ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಮುಖ್ಯ ಪ್ರಭಾಷಣ ಮಾಡಿದರು. ಅಮ್ಟೂರು ಚರ್ಚ್ ಫಾದರ್ ನವೀನ್ ಪ್ರಕಾಶ್ ಪಿಂಟೋ, ಸಮಾಜ ಸೇವಕ ರಾಮಣ್ಣ ಶೆಟ್ಟಿ ವಿಟ್ಲ, ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ತೋಕೆ, ಮಹಮ್ಮದಲಿ ಸಖಾಫಿ ಅಶ್ಅರಿಯ್ಯಾ ಮಾತನಾಡಿದರು. ಖಲೀಲ್ ಮಾಲಿಕಿ ಸ್ವಾಗತಿಸಿದರು, ಕರೀಂ ಕೆದ್ಕಾರ್ ವಂದಿಸಿದರು.
ಕಲಬುರಗಿ | ಫ.ಗು.ಹಳಕಟ್ಟಿ ಪ್ರಶಸ್ತಿ ಪುರಸ್ಕೃತ ಮರಿಯಪ್ಪ ಹಳ್ಳಿ ಅವರಿಗೆ ಸನ್ಮಾನ
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಚನ ಪಿತಾಮಹ ಫ.ಗು.ಹಳಕಟ್ಟಿ ಪ್ರಶಸ್ತಿ ಪುರಸ್ಕೃತರಾದ ದಸಂಸ ರಾಜ್ಯ ಸಂ.ಸಂಚಾಲಕ ಮರಿಯಪ್ಪ ಹಳ್ಳಿಯವರಿಗೆ ಅಭಿಮಾನಿ ಬಳಗದವರು ಸನ್ಮಾನಿಸಿ ಗೌರವಿಸಿದರು. ಕಸಾಪ ಮಾಜಿ ಅಧ್ಯಕ್ಷ ನಾಗಣ್ಣ ರಾಂಪೂರೆ, ಉಪನ್ಯಾಸಕ ಪಿ.ಎಸ್.ಮೇತ್ರಿ ಮಾತನಾಡಿದರು. ಈ ಸಂದರ್ಭದಲ್ಲಿ ಮಲ್ಲಿನಾಥ ಪಾಟೀಲ, ಪ್ರವೀಣ ರಾಜನ್, ನರಸಿಂಹಲೂ ರಾಯಚೂರಕರ್, ಸಿದ್ದು ಕಣದಾಳ, ವಿಶ್ವನಾಥಸ್ವಾಮಿ ಸೇರಿದಂತೆ ಅನೇಕರು ಇದ್ದರು.
ಶಾಲೆಗಳಲ್ಲಿ ‘ಗಣಿತ ಗಣಕ’ ಕಾರ್ಯಕ್ರಮ ಅನುಷ್ಟಾನಕ್ಕೆ 6ಕೋಟಿ ರೂ. ಮಂಜೂರು
ಬೆಂಗಳೂರು : ರಾಜ್ಯ ಸರಕಾರವು ಸರಕಾರಿ ಶಾಲೆಗಳಲ್ಲಿ 3 ರಿಂದ 5ನೇ ತರಗತಿಗಳ ಮಕ್ಕಳಿಗೆ ಮೂಲ ಗಣಿತ ವಿಷಯದ ಪರಿಕಲ್ಪನೆಯನ್ನು ಅರ್ಥೈಸುವ ‘ಗಣಿತ ಗಣಕ’ ಕಾರ್ಯಕ್ರಮಕ್ಕೆ 6 ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡಿದೆ. 2025-26ನೇ ಸಾಲಿನಲ್ಲಿ ರಾಜ್ಯದ 13,51,642 ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಿಂದ ಅನುಕೂಲವಾಗಲಿದೆ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಾರ್ಯಕ್ರಮದಡಿ ಮೂಲ ಗಣಿತ ವಿಷಯ ಪರಿಕಲ್ಪನೆಗಳನ್ನು ಶಿಕ್ಷಕರಿಂದ ಮಕ್ಕಳಿಗೆ ಶಾಲಾ ಅವಧಿಯ ನಂತರ ಫೋನ್ ಕರೆಗಳ ಮೂಲಕ(ರಿಮೋಟ್ ಟ್ಯೂಟರಿಂಗ್) ಅರ್ಥೈಸಲಾಗುತ್ತದೆ. ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು, ಶಿಕ್ಷಕರಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಿ ಶಿಕ್ಷಕರಲ್ಲಿ ಅಗತ್ಯ ಕೌಶಲ್ಯಗಳನ್ನು ವೃದ್ಧಿಸಿ ಕಾರ್ಯಕ್ರಮವನ್ನು ನಿರ್ವಹಿಸಲು ಉದ್ದೇಶಿಸಲಾಗಿದೆ.
ಜು.20: ಕುಂದಾಪುರ ಕಲಾಕ್ಷೇತ್ರದಿಂದ ಗ್ರಾಮೀಣ ಕ್ರೀಡಾ ಸಡಗರ ‘ಲಗೋರಿ’
ಉಡುಪಿ, ಜು.15: ಕಳೆದ 15 ವರ್ಷಗಳಿಂದ ಕುಂದಾಪುರದಲ್ಲಿ ಸಾಂಸ್ಕೃತಿಕ, ಪಾರಂರಿಕ ಕಾರ್ಯಕ್ರಮ ಗಳ ಸಂಘಟನೆ ಮೂಲಕ ಜನಪ್ರೀತಿ ಪಡೆದಿರುವ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇದೇ ಜು.20ರಂದು ಕುಂದಾಪುರ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ‘ಲಗೋರಿ’ ಗ್ರಾಮೀಣ ಕ್ರೀಡಾ ಸಡಗರವನ್ನು ಆಯೋಜಿಸಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಕ್ರೀಡೆ ನಡೆಯುತ್ತಿರುವುದನ್ನು ನೋಡಿದ್ದೇವೆ. ಆದರೆ ನಮ್ಮ ಟ್ರಸ್ಟ್ ಕುಂದ್ರಾಪ ಕನ್ನಡ ಭಾಷೆಯ ಹೆಸರಿನಲ್ಲಿ ಕ್ರೀಡೆಯನ್ನು ನಡೆಸುತ್ತಿದೆ ಹಾಗೂ ಈ ಮೂಲಕ ಜಾತಿ-ಧರ್ಮಗಳನ್ನು ಮೀರಿ ಸಮಾಜವನ್ನು ಒಗ್ಗೂಡಿಸುವ ಕೆಲಸವನ್ನು ಮಾಡುತಿದ್ದೇವೆ ಎಂದರು. ಇದೇ ಜು.20ರ ಕರ್ಕಾಟಕ ಅಮಾವಾಸ್ಯೆ ದಿನ ಎಲ್ಲರೂ ಕುಂದ್ರಾಪ ಕನ್ನಡ ದಿನಾಚರಣೆಯನ್ನು ಆಚರಿಸಿ ದರೆ, ನಮ್ಮ ಟ್ರಸ್ಟ್ ಕಳೆದೆರಡು ವರ್ಷಗಳಿಂದ ಭಾಷೆಯ ಹೆಸರಿನಲ್ಲಿ ‘ಲಗೋರಿ’ ಎಂಬ ಗ್ರಾಮೀಣ ಕ್ರೀಡಾ ಕೂಟವನ್ನು ಆಯೋಜಿಸುತ್ತಿದೆ. ಇಂದಿನ ತಲೆಮಾರು ನೋಡದ, ಆಡದ ಆಟಗಳನ್ನು ಭಾಷಾ ಪ್ರೇಮಿ ಗಳನ್ನು ಒಗ್ಗೂಡಿಸಿ ಆಡುತಿದ್ದು, ಈ ಮೂಲಕ ಜನ ಮರೆತಿರುವ, ತೆರೆಮರೆಗೆ ಸರಿದಿರುವ ಹಲವು ಆಟ ಗಳನ್ನು ಮತ್ತೆ ಮುನ್ನೆಲೆ ತರುವ ಪ್ರಯತ್ನ ಮಾಡಲಿದ್ದೇವೆ ಎಂದರು. ಗ್ರಾಮೀಣ ಆಟಗಳ ವೈಯಕ್ತಿಕ ವಿಭಾಗದಲ್ಲಿ ಉಪ್ಪುಮುಡಿ, ಗೋಣಿಚೀಲ ಓಟ, ಗೂಟಸುತ್ತಿ ಓಟ, ಸೈಕಲ್ ಟಯರ್ ಓಟ, ಕಂಬಳ, ಚಕ್ರವ್ಯೆಹ, ಗುರಿ ಇಟ್ಟು ಹೊಡೆಯುವುದು, ಮಡಿಕೆ ಒಡೆಯುವುದು ಸೇರಿದ್ದರೆ, ಗುಂಪು ಆಟಗಳಲ್ಲಿ ಲಗೋರಿ, ಚೆಂಡಾನ್ ಚೆಂಡು, ಹಗ್ಗಜಗ್ಗಾಟ, ಚೆನ್ಚೆಂಡು, ಡೊಂಕಾಲು, ಥ್ರೋಬಾಲ್ ಸೇರಿವೆ ಎಂದರು. ಗುಂಪು ಸ್ಪರ್ಧೆಗಳು ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆದರೆ, ವೈಯಕ್ತಿಕ ಆಟಗಳು 12 ವರ್ಷದೊಳಗಿನ ಬಾಲಕ-ಬಾಲಕಿಯರಿಗೆ, 17 ವರ್ಷದೊಳಗಿನ ಬಾಲಕ-ಬಾಲಕಿಯರಿಗೆ ಹಾಗೂ ಪುರುಷ ಮತ್ತು ಮಹಿಳೆಯರಿಗೆ ಮುಕ್ತ ವಿಬಾಗಗಳಲ್ಲಿ ನಡೆಯಲಿವೆ. ವಿಜೇತರಿಗೆ ಆಕರ್ಷಕ ನಗದು ಸೇರಿದಂತೆ ವಿವಿಧ ಬಹುಮಾನಗಳಿವೆ. ಸ್ಪರ್ದೆಗಳು ‘ಹಂಬಕ್ ಮಾಡುಕಿಲ್ಲ’ ಎಂಬ ಟ್ಯಾಗ್ಲೈನ್ನೊಂದಿಗೆ ಬೆಳಗ್ಗೆ 9:00ಗಂಟೆಗೆ ಪ್ರಾರಂಭ ಗೊಳ್ಳಲಿದೆ. ಸಂಜೆ ಬಹುಮಾನ ವಿತರಣೆ ನಡೆಯಲಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು. ಚೆನ್ನೆಮಣೆ, ಗುಡ್ನ ಹಾಗೂ ಗೋಲಿ ಆಟಗಳು ಪ್ರದರ್ಶನ ಕ್ರೀಡೆಗಳಾಗಿ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಳಿಗೆ ಮೊ.ನಂ.: 9844783053, ನೊಂದಣಿಗೆ: 9448172177ನ್ನು ಸಂಪರ್ಕಿಸಬಹುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟಿಗಳಾದ ರಾಜೇಶ್ ಕಾವೇರಿ, ಕೆ.ಆರ್.ನಾಯಕ್, ಶ್ರೀಧರ ಸುವರ್ಣ, ರಾಮಚಂದ್ರ ಬಿ.ಎನ್.ಉಪಸ್ಥಿತರಿದ್ದರು.
ಮಹಿಳೆಯರ ಐಸಿಸಿ ಟಿ20 ರ್ಯಾಂಕಿಂಗ್; ಅಗ್ರ-10ರಲ್ಲಿ ಸ್ಥಾನ ಪಡೆದ ಶೆಫಾಲಿ ವರ್ಮಾ
ಹೊಸದಿಲ್ಲಿ: ಭಾರತದ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಮಂಗಳವಾರ ಬಿಡುಗಡೆಯಾಗಿರುವ ಮಹಿಳೆಯರ ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ ಟಾಪ್-10 ಬ್ಯಾಟರ್ ಗಳ ಪಟ್ಟಿಗೆ ಮರಳಿದ್ದಾರೆ. ಇಂಗ್ಲೆಂಡ್ ತಂಡದ ವಿರುದ್ಧದ 5 ಪಂದ್ಯಗಳ ಟ್ವೆಂಟಿ20 ಸರಣಿಯಲ್ಲಿ ಶೆಫಾಲಿ ಅವರು 158.56ರ ಸ್ಟ್ರೈಕ್ ರೇಟ್ ನಲ್ಲಿ ಒಟ್ಟು 176 ರನ್ ಗಳಿಸಿದ್ದರು. ಸಹ ಆರಂಭಿಕ ಆಟಗಾರ್ತಿ ಸ್ಮತಿ ಮಂಧಾನ ನಂತರ 2ನೇ ಗರಿಷ್ಠ ರನ್ ಸ್ಕೋರರ್ ಆಗಿದ್ದರು. ಬ್ಯಾಟಿಂಗ್ ಆರಂಭಿಸುತ್ತಿರುವ 21ರ ಹರೆಯದ ಶೆಫಾಲಿ ಅವರು ಭಾರತ ಕೊನೆಯ ಎಸೆತದಲ್ಲಿ ಸೋತ ಪಂದ್ಯದಲ್ಲಿ ಅಗ್ರ ಸ್ಕೋರರ್(75 ರನ್)ಆಗಿದ್ದರು. ಇದೀಗ ಅವರು 655 ಅಂಕದೊಂದಿಗೆ 4 ಸ್ಥಾನ ಭಡ್ತಿ ಪಡೆದು 9ನೇ ಸ್ಥಾನ ಪಡೆದರು. ಭಾರತೀಯ ತಂಡವು ಸರಣಿಯನ್ನು 3-2 ಅಂತರದಿಂದ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಇನ್ನೋರ್ವ ಆಟಗಾರ್ತಿ ಅರುಂಧತಿ ರೆಡ್ಡಿ ಆರು ವಿಕೆಟ್ ಗಳನ್ನು ಪಡೆದಿದ್ದು, ಬೌಲಿಂಗ್ ರ್ಯಾಂಕಿಂಗ್ನಲ್ಲಿ 4 ಸ್ಥಾನ ಭಡ್ತಿ ಪಡೆದು 39ನೇ ರ್ಯಾಂಕಿಗೆ ತಲುಪಿದ್ದಾರೆ. ಆಲ್ರೌಂಡರ್ ಗಳ ರ್ಯಾಂಕಿಂಗ್ನಲ್ಲಿ 26 ಸ್ಥಾನಗಳನ್ನು ಪಡೆದು 80ನೇ ರ್ಯಾಂಕಿನಲ್ಲಿದ್ದಾರೆ. ಭಾರತದ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ 23 ರನ್ ಗೆ 3 ವಿಕೆಟ್ ಗಳನ್ನು ಪಡೆದಿದ್ದ ಇಂಗ್ಲೆಂಡ್ ಸ್ಪಿನ್ನರ್ ಚಾರ್ಲಿ ಡೀನ್ ಬೌಲಿಂಗ್ ರ್ಯಾಂಕಿಂಗ್ನಲ್ಲಿ ಅಗ್ರ-10ರಲ್ಲಿ ಸ್ಥಾನ ಪಡೆದಿದ್ದಾರೆ. 8 ಸ್ಥಾನ ಮೇಲಕ್ಕೇರಿ ನಶ್ರಾ ಸಂಧು ಹಾಗೂ ಜಾರ್ಜಿಯಾ ವರೇಹ್ಯಾಮ್ರೊಂದಿಗೆ 6ನೇ ಸ್ಥಾನ ಹಂಚಿಕೊಂಡಿದ್ದಾರೆ. ಒಟ್ಟು 151 ರನ್ ಗಳಿಸಿ ಇಂಗ್ಲೆಂಡ್ ನ ಟಾಪ್ ಸ್ಕೋರರ್ ಎನಿಸಿಕೊಂಡಿದ್ದ ಸೋಫಿಯಾ ಡಂಕ್ಲೆ 9 ಅಂಕ ಗಳಿಸಿ ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ 19ನೇ ಸ್ಥಾನಕ್ಕೇರಿದ್ದಾರೆ.
ಬೀದರ್ | ಯುವಕನಿಂದ ಕಿರಕುಳ ಆರೋಪ; ಪತ್ರ ಬರೆದಿಟ್ಟು ಬಾಲಕಿ ಆತ್ಮಹತ್ಯೆ
ಬೀದರ್ : ಯುವಕನೊರ್ವ ಕಿರಕುಳ ನೀಡುತ್ತಿದ್ದ ಎಂದು ಪತ್ರ ಬರೆದಿಟ್ಟು ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲ್ಲೂಕಿನ ಮುಡಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಯುವಕನೊರ್ವ ನನಗೆ ಸದಾ ಪೀಡಿಸುತಿದ್ದು, ನನಗೆ ತುಂಬಾ ತೊಂದರೆಯಾಗಿತ್ತಿದೆ. ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಎಂದು ಪತ್ರ ಬರೆದಿಟ್ಟು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಜಾಲ ಭೇದಿಸಲಾಗಿದೆ. ಕೋರಮಂಗಲದಲ್ಲಿ ಎಂ.ಎ ಪದವೀಧರ ಆಂಥೋಣಿ 1 ಕೆಜಿ ಗಾಂಜಾ ಸಹಿತ ಸೆರೆ ಸಿಕ್ಕಿದ್ದಾನೆ. ಆತ ಕೇರಳದಿಂದ ಗಾಂಜಾ ತರಿಸಿ ಮಾರುತ್ತಿದ್ದ. ಯಲಹಂಕದಲ್ಲಿ ವೀಸಾ ಮುಗಿದರೂ ಅಕ್ರಮವಾಗಿ ನೆಲೆಸಿದ್ದ ಆಫ್ರಿಕಾದ ಪ್ರಜೆಗಳಾದ ಬ್ರೈಟ್ ಮತ್ತು ಕೋಫಿ ಎಂಬುವವರನ್ನು ಬಂಧಿಸಲಾಗಿದೆ. ಅವರಿಂದ 10 ಲಕ್ಷ ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಮಂಗಳೂರು| ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಡುಪುವಿನಲ್ಲಿ ಗುಂಪು ಹಲ್ಲೆಯಿಂದ ಹತ್ಯೆಗೀಡಾದ ಅಶ್ರಫ್ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿದೆ. ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ಎ.24ರಂದು ಅಪರಾಹ್ನ 3ಕ್ಕೆ ಕ್ರಿಕೆಟ್ ಪಂದ್ಯ ನಡೆಯುತ್ತಿರುವ ವೇಳೆ ಗುಂಪು ಹಲ್ಲೆ ನಡೆಸಿದ ಪರಿಣಾಮ ಕೇರಳ ವಯನಾಡಿನ ಅಶ್ರಫ್ ಕೊಲೆಯಾಗಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 37/2025 ಕಲಂ: 189 (2), 191 (1) (3), 115 (2), 103 (2), 240, ಜತೆಗೆ 190 ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 21 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ಹೈಕೋರ್ಟ್ಗೆ ಜಾಮೀನಿಗೆ ಸಲ್ಲಿಸಿದ್ದ ಐವರ ಅರ್ಜಿಯ ವಿಚಾರಣೆ ನಡೆಸಲಾಗಿದೆ. ಆರೋಪಿಗಳಿಗೆ ಜಾಮೀನು ಲಭಿಸಿಲ್ಲ. ವಿಚಾರಣೆ ಮುಂದೂಡಿಕೆಯಾಗಿದೆ. ಸರಕಾರದ ಪರವಾಗಿ ನೇಮಿಸಲಾಗಿರುವ ವಿಶೇಷ ಸರಕಾರಿ ಅಭಿಯೋಜಕರು ವಾದ ಮಂಡಿಸಿದ್ದಾರೆ.
ಬೀದರ್ : ಜಿಲ್ಲೆಯ ರೈತರು ಕೃಷಿಯ ಜೊತೆಯಲ್ಲಿ ವೈಜ್ಞಾನಿಕ ಪಶುಪಾಲನೆಯಂತಹ ಉಪಕಸುಬುಗಳನ್ನು ಕೈಗೆತ್ತಿಕೊಂಡರೆ ಆರ್ಥಿಕವಾಗಿ ಸಬಲರಾಗುತ್ತಾರೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ ಅವರು ತಿಳಿಸಿದರು. ಇಂದು ನಗರದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜಾನುವಾರು ಸಂಶೋಧನೆ ಮತ್ತು ಮಾಹಿತಿ ಕೇಂದ್ರ (ದೇವಣಿ) ಕಟ್ಟಿತುಗಾಂವ್ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ, ಪಶುಪಾಲಕರಿಗಾಗಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಪ್ರಾಯೋಜಿಸಿರುವ ವೈಜ್ಞಾನಿಕ ಪಶುಪಾಲನೆಯಿಂದ ಆರ್ಥಿಕ ಅಭಿವೃದ್ದಿ ಮತ್ತು ಸುಸ್ಥಿರತೆ ಕುರಿತು ಜು.15 ರಿಂದ 18 ರವರೆಗೆ ನಡೆಯುವ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯವು ಪಶುಪಾಲನೆಗೆ ತುಂಬಾ ಪೂರಕವಾದ್ದರಿಂದ ರೈತರು ಇವುಗಳಲ್ಲಿ ತೊಡಗಿ ಹೆಚ್ಚಿನ ಆದಾಯ ಪಡೆಯಬೇಕು. ಅಷ್ಟೇ ಅಲ್ಲದೇ, ಲಭ್ಯವಿರುವ ವಿವಿಧ ತಜ್ಞರ ಸಲಹೆ ಪಡೆದು ವೈಜ್ಞಾನಿಕವಾಗಿ ಪಶುಪಾಲನೆ ಕೈಗೊಂಡು ಮೌಲ್ಯವರ್ಧನೆಯಿಂದ ಹೆಚ್ಚಿನ ಲಾಭ ಪಡೆಯಿರಿ ಎಂದು ರೈತರಿಗೆ ಸಲಹೆ ನೀಡಿದರು. ಪಶುಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ನರಸಪ್ಪ ಅವರು ಮಾತನಾಡಿ, ರೈತರು ಆತ್ಮವಿಶ್ವಾಸ ಹಾಗೂ ಸಹನೆಯಿಂದ ಪಶುಪಾಲನೆಯಲ್ಲಿ ತೊಡಗಿಸಿಕೊಂಡರೆ ಆರ್ಥಿಕ ಅಭಿವೃದ್ಧಿ ಮತ್ತು ಸುಸ್ಥಿರತೆ ಖಂಡಿತ ಸಾಧ್ಯವಿದೆ. ಆದ್ದರಿಂದ ರೈತರು ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಪ್ರೋಜೆಕ್ಟ್ ಇಂಜಿನಿಯರ್ ಗಂಗಾಧರಪ್ಪ ಆರ್., ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಬಿ.ವಿ.ಶಿವಪ್ರಕಾಶ್, ವಿಸ್ತರಣಾ ನಿರ್ದೇಶಕ ಡಾ. ಬಸವರಾಜ್ ಅವಟಿ, ಮಹಾವಿದ್ಯಾಲಯದ ಪ್ರಭಾರಿ ಡೀನ್ ಡಾ.ಆರ್.ಜಿ.ಬಿಜುರಕರ್, ಡಾ.ಪ್ರಕಾಶಕುಮಾರ್ ರಾಠೋಡ್, ಡಾ.ವಿದ್ಯಾಸಾಗರ್ ಹಾಗೂ ಡಾ.ಕೊಟ್ರೇಶ್ ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗಾಝಾದಲ್ಲಿ ಪ್ರತಿ 10ರಲ್ಲಿ 1 ಮಗುವಿಗೆ ಅಪೌಷ್ಟಿಕತೆ: ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ
ಜಿನೀವ: ಗಾಝಾದಲ್ಲಿ ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್ಆರ್ಡಬ್ಲ್ಯುಎ) ನಡೆಸುತ್ತಿರುವ ಕ್ಲಿನಿಕ್ ಗಳಲ್ಲಿ ತಪಾಸಣೆಗೊಳಗಾಗಿರುವ ಪ್ರತಿ 10 ಮಕ್ಕಳಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ ಎಂದು ಸಂಸ್ಥೆಯು ಮಂಗಳವಾರ ತಿಳಿಸಿದೆ. ‘‘ನಾಲ್ಕು ತಿಂಗಳ ಹಿಂದೆ ಗಾಝಾದ ಮೇಲಿನ ಮುತ್ತಿಗೆಯನ್ನು ಇಸ್ರೇಲ್ ಸೈನಿಕರು ಬಿಗಿಗೊಳಿಸಿದ ಬಳಿಕ, ಗಾಝಾದಲ್ಲಿ ಅಪೌಷ್ಟಿಕತೆ ಪ್ರಮಾಣ ಹೆಚ್ಚುತ್ತಿರುವುದನ್ನು ನಮ್ಮ ಆರೋಗ್ಯ ತಂಡಗಳು ಪತ್ತೆಹಚ್ಚಿವೆ’’ ಎಂದು ಯುಎನ್ಆರ್ಡಬ್ಲ್ಯುಎಯ ಸಾರ್ವಜನಿಕ ಸಂಪರ್ಕಗಳ ನಿರ್ದೇಶಕಿ ಜೂಲಿಯಟ್ ಟೌಮ ಹೇಳಿದರು. ಅವರು ಜೋರ್ಡಾನ್ ನ ಅಮ್ಮಾನ್ನಿಂದ ವೀಡಿಯೊ ಲಿಂಕ್ ಮೂಲಕ ಪತ್ರಕರ್ತರೊಂದಿಗೆ ಮಾತನಾಡುತ್ತಾ ಈ ಮಾಹಿತಿಯನ್ನು ನೀಡಿದ್ದಾರೆ. 2024ರ ಜನವರಿಯ ಬಳಿಕ, ಗಾಝಾದಲ್ಲಿರುವ ತನ್ನ ಐದು ಕ್ಲಿನಿಕ್ ಗಳಲ್ಲಿ, ಐದು ವರ್ಷಕ್ಕಿಂತ ಕೆಳಗಿನ 2,40,000ಕ್ಕೂ ಅಧಿಕ ಗಂಡು ಮತ್ತು ಹೆಣ್ಣು ಮಕ್ಕಳನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಜೂಲಿಯಟ್ ತಿಳಿಸಿದರು. ಯುದ್ಧಕ್ಕಿಂತ ಮೊದಲು, ಗಾಝಾ ಪಟ್ಟಿಯಲ್ಲಿ ತೀವ್ರ ಅಪೌಷ್ಟಿಕತೆ ಅಪರೂಪವಾಗಿತ್ತು ಎಂದು ಅವರು ನುಡಿದರು. ‘‘ಹಿಂದೆ, ಇಂಥ ಅಪೌಷ್ಟಿಕತೆಯ ಪ್ರಕರಣಗಳನ್ನು ತಾನು ಪಠ್ಯಪುಸ್ತಕಗಳು ಮತ್ತು ಸಾಕ್ಷ್ಯಚಿತ್ರಗಳಲ್ಲಿ ಮಾತ್ರ ನೋಡಿರುವುದಾಗಿ ನಾವು ಮಾತನಾಡಿದ ಓರ್ವ ನರ್ಸ್ ಹೇಳಿದ್ದಾರೆ’’ ಎಂದು ಅವರು ಹೇಳಿದರು. ‘‘ಔಷಧ, ಪೌಷ್ಟಿಕ ಆಹರ, ಸ್ವಚ್ಛತಾ ಸಲಕರಣೆಗಳು, ಇಂಧನ ಎಲ್ಲವೂ ಕ್ಷಿಪ್ರವಾಗಿ ಮುಗಿಯುತ್ತಿದೆ’’ ಎಂದು ಅವರು ತಿಳಿಸಿದರು. ಗಾಝಾದ ಮೇಲಿನ 11 ವಾರಗಳ ದಿಗ್ಬಂಧನವನ್ನು ಇಸ್ರೇಲ್ ಮೇ 19ರಂದು ತೆರವುಗೊಳಿಸಿದೆ. ಆ ಮೂಲಕ, ವಿಶ್ವಸಂಸ್ಥೆಯಿಂದ ಸೀಮಿತ ಪ್ರಮಾಣದ ಸರಬರಾಜುಗಳಿಗೆ ಅವಕಾಶ ನೀಡಿದೆ. ಆದರೆ, ಯುಎನ್ಆರ್ಡಬ್ಲ್ಯುಎ ಗಾಝಾಕ್ಕೆ ನೆರವು ತರುವುದನ್ನು ನಿಷೇಧಿಸಿದೆ.
ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು
ಲಕ್ನೋ: ಮಾನನಷ್ಟ ಪ್ರಕರಣವೊಂದರಲ್ಲಿ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. ಈ ಪ್ರಕರಣ 2022ರಲ್ಲಿ ‘ಭಾರತ್ ಜೋಡೊ ಯಾತ್ರೆ’ ಸಂದರ್ಭ ಭಾರತೀಯ ಯೋಧರ ವಿರುದ್ಧ ನೀಡಿದ ಮಾನ ಹಾನಿಕರ ಹೇಳಿಕೆಯ ಆರೋಪಕ್ಕೆ ಸಂಬಂಧಿಸಿದೆ ಎಂದು ರಾಹುಲ್ ಗಾಂಧಿ ಅವರ ವಕೀಲ ಪ್ರಾಂಶು ಅಗರ್ವಾಲ್ ತಿಳಿಸಿದ್ದಾರೆ. ರಾಹುಲ್ ಗಾಂಧಿ ಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರನ್ನು ಜಾಮೀನಲ್ಲಿ ಬಿಡುಗಡೆ ಮಾಡಿತು. ರಾಹುಲ್ ಗಾಂಧಿ ಅವರು ನ್ಯಾಯಾಲಯದ ನಿರ್ದೇಶನದಂತೆ ಜಾಮೀನು ಬಾಂಡ್ ಹಾಗೂ ಶ್ಯೂರಿಟಿ ಸಲ್ಲಿಸಿದ ಬಳಿಕ ಜಾಮೀನು ನೀಡಿತು. ಮಾನನಷ್ಟ ದೂರನ್ನು ವಿಚಾರಣೆಗೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯ ರಾಹುಲ್ ಗಾಂಧಿಗೆ ಆರೋಪಿಯಾಗಿ ಹಾಜರಾಗಲು ಸಮನ್ಸ್ ನೀಡಿತ್ತು. ರಾಹುಲ್ ಗಾಂಧಿ ಅವರು ಈ ಹಿಂದೆ ಜಾಮೀನು ಕೋರಿ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ, ಅವರು ಅಲ್ಲಿ ಯಶಸ್ವಿಯಾಗಿರಲಿಲ್ಲ.
ಬೆಂಗಳೂರು | ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಗೆ ಬೆದರಿಕೆ : ನಾಲ್ವರ ಬಂಧನ
ಬೆಂಗಳೂರು : ಉದ್ಯಮಿಗೆ ಕರೆ ಮಾಡಿ ಬೆದರಿಸಿದ್ದ ಪ್ರಕರಣದಡಿ ನಾಲ್ವರು ಆರೋಪಿಗಳನ್ನು ಇಲ್ಲಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಮೊಹಮ್ಮದ್ ರಫೀಕ್, ಉತ್ತರ ಪ್ರದೇಶ ಮೂಲದ ಶಿಶುಪಾಲ್ ಸಿಂಗ್, ವಂಶ್ ಸಚ್ದೇವ್ ಹಾಗೂ ಅಮಿತ್ ಚೌಧರಿ ಎಂಬುವರು ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಒಂದು ಕಾರು, ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉದ್ಯಮಿಯೊಬ್ಬರಿಗೆ ಜುಲೈ 8ರಂದು ರಾತ್ರಿ ಕರೆ ಮಾಡಿದ್ದ ಆರೋಪಿಗಳು, ಲಾರೆನ್ಸ್ ಬಿಷ್ಣೋ ಯ್ ಗ್ಯಾಂಗ್ ಸದಸ್ಯರ ಹೆಸರಿನಲ್ಲಿ ಬೆದರಿಸಿ ಒಂದು ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು. ‘ಇಲ್ಲವಾದರೆ ನಿನ್ನ ಮಗನನ್ನು ಅಪಹರಿಸುತ್ತೇವೆ’ ಎಂದು ಬೆದರಿಸಿರುವುದಾಗಿ ಉದ್ಯಮಿಯ ಪುತ್ರ ನೀಡದ್ದ ದೂರಿನಲ್ಲಿ ಆರೋಪಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ತನಿಖೆಗಾಗಿ ಕೇಂದ್ರ ವಿಭಾಗ ಮತ್ತು ಸಿಸಿಬಿಯ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡವನ್ನು ರಚಿಸಿದ್ದರು. ಅದರಂತೆ ಪ್ರಕರಣದ ತನಿಖೆ ಕೈಗೊಂಡ ತಂಡ ಜೆ.ಸಿ.ರಸ್ತೆಯಲ್ಲಿ ಕಾರ್ ಸೌಂಡ್ ಆಕ್ಸೆಸರೀಸ್ಗಳನ್ನು ವ್ಯಾಪಾರ ಮಾಡುತ್ತಿದ್ದ ಮೊಹಮ್ಮದ್ ರಫೀಕ್ನನ್ನು ಬಂಧಿಸಿದ್ದರು. ಆತ ನೀಡಿದ ಮಾಹಿತಿಯನ್ವಯ ಉತ್ತರ ಪ್ರದೇಶ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಷ್ಣೋ ಯ್ ಗ್ಯಾಂಗ್ಗೂ ಆರೋಪಿತರಿಗೂ ಸಂಬಂಧವಿಲ್ಲ: ಪ್ರಕರಣವೊಂದರಲ್ಲಿ ದಿಲ್ಲಿ ಪೊಲೀಸರಿಂದ ಬಂಧನವಾಗಿದ್ದ ಮೊಹಮ್ಮದ್ ರಫೀಕ್, ಕೆಲಕಾಲ ತಿಹಾರ್ ಜೈಲಿನಲ್ಲಿ ಕಳೆದಿದ್ದ. ಆ ಸಂದರ್ಭದಲ್ಲಿ ಉತ್ತರ ಪ್ರದೇಶ ಮೂಲದ ಉಳಿದ ಮೂವರು ಆರೋಪಿಗಳ ಪರಿಚಯವಾಗಿತ್ತು. ಲಾರೆನ್ಸ್ ಬಿಷ್ಣೋ ಯ್ ಗ್ಯಾಂಗ್ಗೂ ಆರೋಪಿತರಿಗೂ ಯಾವುದೇ ಸಂಬಂಧವಿಲ್ಲ ಎಂದು ಶೇಷಾದ್ರಿಪುರಂ ಠಾಣೆ ಪೊಲೀಸರು ತಿಳಿಸಿದ್ದಾರೆ.
ಗುಜರಾತ್ | ಸೇತುವೆ ದುರಸ್ತಿ ವೇಳೆ ಸ್ಲ್ಯಾಬ್ ಕುಸಿತ ; ಎಂಟು ಜನರು ಪವಾಡಸದೃಶ ಪಾರು
ಅಹ್ಮದಾಬಾದ್: 21 ಜೀವಗಳನ್ನು ಬಲಿ ತೆಗೆದುಕೊಂಡಿದ್ದ ವಡೋದರಾ ಮತ್ತು ಆನಂದ ನಡುವಿನ ಗಂಭೀರಾ ಸೇತುವೆ ಕುಸಿತದ ನೆನಪು ಇನ್ನೂ ಹಸಿರಾಗಿರುವಾಗಲೇ ಮಂಗಳವಾರ ಜುನಾಗಡದ ಮಂಗ್ರೋಲ್ ತಾಲೂಕಿನಲ್ಲಿ ಇನ್ನೊಂದು ಸೇತುವೆ ಅವಘಡ ಸಂಭವಿಸಿರುವುದು ಗುಜರಾತ್ ನ್ನು ತಲ್ಲಣಗೊಳಿಸಿದೆ. ಅಜಾಕ್ ಗ್ರಾಮದಲ್ಲಿ ಶಿಥಿಲಗೊಂಡಿದ್ದ ಸೇತುವೆಯ ಭಾಗವು ಕುಸಿದ ಪರಿಣಾಮ ಎಂಟು ಜನರು ನದಿಗೆ ಬಿದ್ದಿದ್ದರು. ಜೊತೆಗೆ ಬ್ರೆಕರ್ ಯಂತ್ರವೂ ನದಿಗೆ ಉರುಳಿತ್ತು. ಪವಾಡಸದೃಶವಾಗಿ ಎಲ್ಲ ಎಂಟೂ ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆತಂಕ-ಭೀತಿ ಎಲ್ಲೆಡೆ ಹರಡುತ್ತಿದ್ದಂತೆ ಜುನಾಗಡ ಜಿಲ್ಲೆಯ ಕಾರ್ಯ ನಿರ್ವಾಹಕ ಇಂಜನಿಯರ್, ಸೇತುವೆ ಕುಸಿದಿರಲಿಲ್ಲ, ದುರಸ್ತಿಗಾಗಿ ಅದನ್ನು ಸುರಕ್ಷಿತವಾಗಿ ಕಳಚಲಾಗುತ್ತಿತ್ತು ಎಂದು ಸಮಜಾಯಿಷಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಶೇ.43ರಷ್ಟು ಅಧಿಕ ಮಳೆ; ಅಪಾರ ಹಾನಿಯ ಅಂದಾಜು: ಡಿಸಿ ಸ್ವರೂಪ ಟಿ.ಕೆ.
ಉಡುಪಿ, ಜು.15: ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ ವಾಡಿಕೆಗಿಂತ ಶೇ.43ರಷ್ಟು ಅಧಿಕ ಮಳೆಯಾಗಿದೆ. ಇಂದಿನವರೆಗಿನ ಜಿಲ್ಲೆಯ ವಾಡಿಕೆ ಮಳೆ 1959ಮಿ.ಮೀ. ಆಗಿದ್ದರೆ, ಪ್ರಸ್ತುತ ವರ್ಷದಲ್ಲಿ ಈವರೆಗೆ 2803 ಮಿ.ಮೀ ನಷ್ಟು ಮಳೆ ಬಿದ್ದಿದೆ. ಮುಂಬರುವ ದಿನಗಳಲ್ಲಿಯೂ ಸಹ ಹೆಚ್ಚು ಮಳೆಯಾಗಬಹುದೆಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ಹವಾಮಾನ ಇಲಾಖೆ ಪ್ರತಿದಿನವೂ ನೀಡುವ ಮುನ್ಸೂಚನೆಗಳನ್ನು, ಮಾಹಿತಿಗಳನ್ನು ಸಾರ್ವಜನಿಕರಿಗೆ ಹಾಗೂ ಮೀನುಗಾರರಿಗೆ ತಲುಪಿಸ ಬೇಕು. ಇದರಿಂದ ಆಗುವ ಮಾನವ ಜೀವಹಾನಿ ಹಾಗೂ ಪ್ರಾಣಿಗಳ ಜೀವಹಾನಿ ಯನ್ನು ತಪ್ಪಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಇದುವರೆಗೆ ಬಿದ್ದಿರುವ ಹೆಚ್ಚಿನ ಮಳೆಯಿಂದಾಗಿ ಮೂಲಸೌಕರ್ಯಗಳಾದ ರಾಜ್ಯಹೆದ್ದಾರಿ 9.8 ಕಿ.ಮೀ., ಜಿಲ್ಲಾ ಮುಖ್ಯ ರಸ್ತೆಗಳು 15 ಕಿ.ಮೀ. ಹಾಗೂ 904.70 ಕಿ.ಮೀ.ನಷ್ಟು ಗ್ರಾಮೀಣ ರಸ್ತೆಗಳು ಹಾಳಾಗಿವೆ. ಇದರೊಂದಿಗೆ 24 ಸೇತುವೆಗಳಿಗೂ ಹಾನಿಯುಂಟಾಗಿದೆ.30ಕ್ಕೂ ಹೆಚ್ಚು ಶಾಲೆ, ಅಂಗನವಾಡಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡಗಳಿಗೆ ಹಾನಿ ಯುಂಟಾಗಿವೆ. ಇವುಗಳ ದುರಸ್ಥಿಗೆ ಅಗತ್ಯವಿ ರುವ ಅಂದಾಜು ನಷ್ಟವನ್ನು ಕ್ರೋಢೀಕರಿಸಿ ಕೂಡಲೇ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಅತಿವೃಷ್ಟಿ, ನೈಸರ್ಗಿಕ ವಿಕೋಪಗಳು ಉಂಟಾದಾಗ ಕೂಡಲೇ ಸ್ಪಂದಿಸಿ, ಪರಿಹಾರ ಕಾರ್ಯ ಗಳನ್ನು ಕೈಗೊಂಡು ಹಾನಿಗೊಳಗಾದವರಿಗೆ ನಷ್ಟ ಪರಿಹಾರವನ್ನು ಆದಷ್ಟು ತ್ವರಿತವಾಗಿ ನೀಡಬೇಕು ಎಂದೂ ಅವರು ತಿಳಿಸಿದರು. ಶಾಲಾ ಕಟ್ಟಡ ಹಾಗೂ ಕೊಠಡಿಗಳ ಸದೃಢತೆಯ ಬಗ್ಗೆ ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆಗಳ ಅಭಿಯಂತರರು, ಶಿಕ್ಷಣ ಇಲಾಖೆ ಅಧಿಕಾರಿಗಳು ಒಟ್ಟಾಗಿ ಪರಿಶೀಲನೆ ಮಾಡಿ, ಸುರಕ್ಷತಾ ಪ್ರಮಾಣ ಪತ್ರವನ್ನು ಪಡೆಯಬೇಕು ಎಂದರು. ಒಂದೊಮ್ಮೆ ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದಲ್ಲಿ ಬಳಕೆಗೆ ಯೋಗ್ಯವಲ್ಲದಿದ್ದಲ್ಲಿ ಅಂತಹ ಕೊಠಡಿ ಗಳಲ್ಲಿ ತರಗತಿಗಳನ್ನು ನಡೆಸದೇ ಬದಲೀ ವ್ಯವಸ್ಥೆಯನ್ನು ಮಾಡಬೇಕು. ಶಾಲಾ ವಿದ್ಯಾರ್ಥಿಗಳು ಅಂತಹ ಕಟ್ಟಡಗಳ ಬಳಿ ಹೋಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕಾಲುಸಂಕಗಳ ನಿರ್ಮಾಣ ಕಾಮಗಾರಿ ಗಳನ್ನು ಕೈಗೊಳ್ಳಲು ಸರಕಾರ ಈಗಾಗಲೇ 5 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಈ ಸಂಬಂಧ ಟೆಂಡರ್ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಜೊತೆಗೆ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ಅವರು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಯಾವುದೇ ರಸ್ತೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಾಗ ಮಣ್ಣು ಕುಸಿತ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರು, ಖಾಸಗಿಯವರು ಮನೆಗಳನ್ನು ನಿರ್ಮಾಣ ಮಾಡುವಾಗಲೂ ಸಹ ಮಣ್ಣು ಕುಸಿತ ಉಂಟಾಗುವ ಸಾಧಕ- ಬಾಧಕಗಳನ್ನು ನೋಡಿ, ಅನುಮತಿ ನೀಡಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯ ಶಿರೂರಿನಿಂದ ಹೆಜಮಾಡಿಯವರೆಗೆ ಕಡಲ ಕೊರೆತ ಉಂಟಾಗುವ ಸಂಭಾವ್ಯ ಪ್ರದೇಶಗಳನ್ನು ಈಗಾಗಲೇ ಗುರುತಿಸ ಲಾಗಿದೆ. ಕಡಲಕೊರೆತ ತಡೆ ಕಾಮಗಾರಿಗಳನ್ನು ಇಲಾಖಾ ವತಿಯಿಂದಲೇ ಕಲ್ಲುಕೋರೆಗಳ ಅನುಮತಿ ಪಡೆದು ಕಾಮಗಾರಿಗಳನ್ನು ಕೈಗೊಂಡಲ್ಲಿ ಹೆಚ್ಚು ಪ್ರದೇಶದಲ್ಲಿ ಕಲ್ಲು ತಡೆಗೋಡೆಗಳನ್ನು ರಚಿಸಲು ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಮಟ್ಟದ ಅಧಿಕಾರಿಗಳು ವೀಡಿಯೋ ಕಾನ್ಫ್ರೆನ್ಸ್ ಮೂಲಕ ಭಾಗವಹಿಸಿದ್ದರು. ‘ಬಜೆ ಅಣೆಕಟ್ಟಿನಲ್ಲಿ ಬಿರುಕು; ಸಾರ್ವಜನಿಕರಿಂದ ದೂರು’ ಸ್ವರ್ಣಾ ನದಿಗೆ ಬಜೆ ಬಳಿ ನಿರ್ಮಿಸಲಾಗಿರುವ ಅಣೆಕಟ್ಟಿನಲ್ಲಿ ಬಿರುಕು ಉಂಟಾಗಿದೆ ಎಂದು ಸಾರ್ವಜನಿಕ ರಿಂದ ದೂರು ಕೇಳಿಬರುತ್ತಿದೆ. ಕೂಡಲೇ ಈ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡುವಂತೆ ಜಿಲ್ಲಾದಿಕಾರಿ ಸ್ವರೂಪ ಟಿ.ಕೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕಸಭೆಯಲ್ಲಿ ನೂತನ ಹಾಜರಾತಿ ವ್ಯವಸ್ಥೆಯಿಂದ ಪ್ರಧಾನಿ, ಸಚಿವರಿಗೇಕೆ ವಿನಾಯಿತಿ?: ಪ್ರಶ್ನಿಸಿದ ಕಾಂಗ್ರೆಸ್ ಸಂಸದ
ಹೊಸದಿಲ್ಲಿ: ಮುಂಬರುವ ಮಳೆಗಾಲದ ಅಧಿವೇಶನದಿಂದ ಬಹು ಮಾಧ್ಯಮ ಸಾಧನ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲು ಲೋಕಸಭೆ ಸಜ್ಜಾಗಿದ್ದು, ಇದೊಂದು ‘ದೋಷಪೂರಿತ’ ಕ್ರಮ ಎಂದು ಮಂಗಳವಾರ ಬಣ್ಣಿಸಿರುವ ಕಾಂಗ್ರೆಸ್ ಸಚೇತಕ ಮಾಣಿಕಂ ಟಾಗೋರ್ ಅವರು, ಉತ್ತರದಾಯಿತ್ವವನ್ನು ಖಚಿತಪಡಿಸುವುದು ಗುರಿಯಾಗಿದ್ದರೆ ಪ್ರಧಾನಿ ಮತ್ತು ಸಚಿವರಿಗೆ ಏಕೆ ವಿನಾಯಿತಿಯನ್ನು ನೀಡಲಾಗಿದೆ ಎಂದು ಪ್ರಶ್ನಿಸಿದ್ದಾರೆ. ನೂತನ ವ್ಯವಸ್ಥೆಯಲ್ಲಿ ಸಂಸದರು ತಮಗೆ ಹಂಚಿಕೆಯಾದ ಆಸನಗಳಿಂದ ವಿದ್ಯುನ್ಮಾನ ರೂಪದಲ್ಲಿ ತಮ್ಮ ಉಪಸ್ಥಿತಿಯನ್ನು ದಾಖಲಿಸಬೇಕಾಗುತ್ತದೆ. ಇದು ಲಾಬಿಯಲ್ಲಿ ಹಾಜರಿ ಪುಸ್ತಕದಲ್ಲಿ ಸಹಿ ಹಾಕುವ ಈಗಿನ ಪದ್ಧತಿಯನ್ನು ಬದಲಿಸಲಿದೆ. ಲಾಬಿಯಲ್ಲಿ ಹಲವೊಮ್ಮೆ ಸಂಸದರ ದಟ್ಟಣೆಯಿರುವುದರಿಂದ ನೂತನ ಕ್ರಮವು ಸಮಯವನ್ನು ಉಳಿಸುತ್ತದೆ ಎಂದು ತಿಳಿಸಿದ ಅಧಿಕಾರಿಗಳು,ಕೆಲವು ಸಂಸದರು ಹಾಜರಿ ಪುಸ್ತಕದಲ್ಲಿ ಸಹಿ ಹಾಕಿದರೂ ಕಲಾಪಗಳಿಗೆ ಹಾಜರಾಗದೆ ಹೊರಟು ಹೋಗುತ್ತಾರೆ ಎಂದು ತಿಳಿಸಿದರು. ಆದರೆ,ಟಾಗೋರ್ ಎಕ್ಸ್ ಪೋಸ್ಟ್ ನಲ್ಲಿ ವಕ್ಫ್ ಮಂಡಳಿ ಮೇಲೆ ಮತದಾನದ ಸಂದರ್ಭದಲ್ಲಿ ವ್ಯವಸ್ಥೆ ವಿಫಲಗೊಂಡಿದ್ದ ಹಿಂದಿನ ನಿದರ್ಶನವನ್ನು ಉಲ್ಲೇಖಿಸಿ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ. ದೋಷಪೂರಿತ ವ್ಯವಸ್ಥೆಯ ಪುನರಾವರ್ತನೆ ಏಕೆ ಎಂದು ಪ್ರಶ್ನಿಸಿದ್ದಾರೆ. ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹಾಜರಾತಿ ದಾಖಲಿಸುವಿಕೆಯ ಉದ್ದೇಶವಾಗಿದ್ದರೆ ಪ್ರಧಾನಿ ಮತ್ತು ಸಚಿವರಿಗೇಕೆ ವಿನಾಯಿತಿ ನೀಡಲಾಗಿದೆ ಎಂದು ಪ್ರಶ್ನಿಸಿರುವ ಅವರು,ಪ್ರಧಾನಿ ಸಾಮಾನ್ಯವಾಗಿ ಅಧಿವೇಶನದಲ್ಲಿ 18ರಿಂದ 28 ದಿನಗಳಲ್ಲಿ ಕೇವಲ 3-4 ದಿನಗಳಷ್ಟೇ ಉಪಸ್ಥಿತರಿರುತ್ತಾರೆ. ಪ್ರಧಾನಿ ಪ್ರಕ್ರಿಯೆಗಿಂತ ಮೇಲಿರುವ ಬದಲು ಮಾದರಿಯಾಗಿ ಮುನ್ನಡೆಸಬೇಕಲ್ಲವೇ ಎಂದು ಹೇಳಿದ್ದಾರೆ. ವಾಡಿಕೆಯಂತೆ ಸಚಿವರು ಮತ್ತು ಪ್ರತಿಪಕ್ಷ ನಾಯಕರು ಹಾಜರಿ ಪುಸ್ತಕದಲ್ಲಿ ಸಹಿ ಹಾಕುವ ಅಗತ್ಯವಿಲ್ಲ ಎನ್ನುವುದನ್ನು ಇಲ್ಲಿ ಗಮನಿಸಬಹುದಾಗಿದೆ. ಅಧಿವೇಶನಗಳ ಸಂದರ್ಭದಲ್ಲಿ ಸಂಸರು ತಮ್ಮ ದೈನಂದಿನ ಭತ್ತೆಯನ್ನು ಸ್ವೀಕರಿಸಲು ಹಾಜರಿಯನ್ನು ದಾಖಲಿಸುವುದು ಕಡ್ಡಾಯವಾಗಿದೆ. ಸಂಸತ್ತಿನ ಮಳೆಗಾಲದ ಅಧಿವೇಶನವು ಜು.21ರಿಂದ ಆ.21ರವರೆಗೆ ನಡೆಯಲಿದೆ.
2 ವಾರಗಳ ಹಿಂದೆ ಮೋದಿ ಕ್ಯಾಬಿನೆಟ್ ಅನುಮೋದನೆ ನೀಡಿದ ಬಹುದೊಡ್ಡ ಯೋಜನೆ: ವಿವರ ಬಹಿರಂಗ
Modi Cabinet Approval : ಸಂಶೋಧನೆ ಮತ್ತು ಅಭಿವೃದ್ದಿ ಯೋಜನೆಯನ್ನು ಅನುಮೋದನೆ ನೀಡಲು ನಿರ್ಧರಿಸಿದೆ. ಇದಕ್ಕಾಗಿ 1.27 ಲಕ್ಷ ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಐಐಟಿ ಬಾಂಬೆ ನಿರ್ದೇಶಕ ಪ್ರೊ. ಶಿರೀಶ್ ಕೇದಾರೆ, ಎನ್ಸಿಪಿಆರ್ಇ ಪ್ರಧಾನ ತನಿಖಾಧಿಕಾರಿಗಳು (ಪಿಐಗಳು) ಪ್ರೊ.ಬೇಲಾನ್ ಜಿ.ಫರ್ನಾಂಡಿಸ್ ಮತ್ತು ಪ್ರೊ.ಚೇತನ್ ಸಿಂಗ್ ಸೋಲಂಕಿ, ಎಆರ್ಟಿ-ಪಿವಿ ಇಂಡಿಯಾ ಸಹ-ಸಂಸ್ಥಾಪಕ ಪ್ರೊ.ದಿನೇಶ್ ಕಬ್ರಾ ಉಪಸ್ಥಿತರಿದ್ದರು.
ತಮಿಳು ಸ್ಟಂಟ್ ಕಲಾವಿದನ ಮೃತ್ಯು | ನಿರ್ದೇಶಕ ಪಾ.ರಂಜಿತ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು
ಚೆನ್ನೈ: ರವಿವಾರ ‘ವೆಟ್ಟುವನ್’ ಚಿತ್ರಕ್ಕಾಗಿ ಅಪಾಯಕಾರಿ ದೃಶ್ಯದ ಚಿತ್ರೀಕರಣ ಸಂದರ್ಭದಲ್ಲಿ ಸ್ಟಂಟ್ ಕಲಾವಿದ ಎಸ್.ಎಂ.ರಾಜು ಅವರ ಸಾವಿಗೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಪಾ.ರಂಜಿತ್, ನೀಲಂ ಪ್ರೊಡಕ್ಷನ್ಸ್ನ ಕಾರ್ಯ ನಿರ್ವಾಹಕ ರಾಜಕಮಲ್,ಸ್ಟಂಟ್ ಕಲಾವಿದ ವಿನೋದ ಮತ್ತು ಚಿತ್ರೀಕರಣದಲ್ಲಿ ಬಳಸಲಾಗಿದ್ದ ಕಾರಿನ ಮಾಲಿಕ ಪ್ರಭಾಕರನ್ ವಿರುದ್ಧ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಬುಡಮೇಲಾಗಿ ಬೀಳುವ ದೃಶ್ಯದ ಚಿತ್ರೀಕರಣಕ್ಕಾಗಿ ರಾಜು ಅವರು ರ್ಯಾಂಪ್ ಮೇಲೆ ವೇಗವಾಗಿ ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದರು.
ಮುಂಬೈ ಶೇರು ವಿನಿಮಯ ಕಚೇರಿಗೆ ಬಾಂಬ್ ಬೆದರಿಕೆ
ಮುಂಬೈ: ದಕ್ಷಿಣ ಮುಂಬೈಯಲ್ಲಿರುವ ಬಾಂಬೆ ಶೇರು ವಿನಿಮಯ (ಬಿಎಸ್ಇ) ಕಚೇರಿ ಬಾಂಬ್ ಬೆದರಿಕೆಯ ಈ ಮೇಲ್ ಸ್ವೀಕರಿಸಿದೆ. ಆದರೆ, ಕಚೇರಿಯ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಅದು ಹುಸಿ ಬಾಂಬ್ ಕರೆ ಎಂಬುದು ತಿಳಿದು ಬಂತು ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ದಕ್ಷಿಣ ಭಾರತದ ರಾಜಕೀಯ ನಾಯಕರೊಬ್ಬರ ಹೆಸರನ್ನು ಉಲ್ಲೇಖಿಸಿದ ಇಮೇಲ್ ಐಡಿಯಿಂದ ಬಿಎಸ್ಇಯ ಉದ್ಯೋಗಿಯೊಬ್ಬರು ರವಿವಾರ ಇಮೇಲ್ ಸ್ವೀಕರಿಸಿದ್ದರು ಎಂದು ಅವರು ತಿಳಿಸಿದ್ದಾರೆ. ಇಮೇಲ್ನಲ್ಲಿ ಬಿಎಸ್ಇ ಕಚೇರಿಯಲ್ಲಿ ನಾಲ್ಕು ಆರ್ಡಿಎಕ್ಸ್ ಐಇಡಿಗಳನ್ನು ಇರಿಸಲಾಗಿದೆ ಎಂದು ಪ್ರತಿಪಾದಿಸಲಾಗಿತ್ತು. ಸೋಮವಾರ ಅಪರಾಹ್ನ 3 ಗಂಟೆಗೆ ಸ್ಫೋಟ ಸಂಭವಿಸಲಿದೆ ಎಂದು ಅದು ಎಚ್ಚರಿಸಿತ್ತು ಎಂದು ಅವರು ಹೇಳಿದ್ದಾರೆ. ಬಿಎಸ್ಇ ಉದ್ಯೋಗಿ ಶೇರು ವಿನಿಮಯ ಕಚೇರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅಧಿಕಾರಿಗಳು ಮುಂಬೈ ಪೊಲೀಸರನ್ನು ಸಂಪರ್ಕಿಸಿದರು. ಮುಂಬೈ ಪೊಲೀಸ್ನ ತಂಡ, ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ (ಬಿಡಿಡಿಎಸ್) ಬಿಎಸ್ಇ ಕಚೇರಿಗೆ ಧಾವಿಸಿತು ಹಾಗೂ ಶೋಧ ಕಾರ್ಯಾಚರಣೆ ನಡೆಸಿತು. ಆದರೆ, ಯಾವುದೇ ಸಂಶಯಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಇಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.
‘ಮಾಧ್ಯಮ ಸಂಜೀವಿನಿ ಯೋಜನೆ’ ಎಲ್ಲ ಪತ್ರಕರ್ತರಿಗೆ ವಿಸ್ತರಿಸಿ : ಸಿಎಂಗೆ ಶಿವಾನಂದ ತಗಡೂರು ಪತ್ರ
ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತುಗಳನ್ನು ಸರಳೀಕರಣ ಮಾಡಿ, ಎಲ್ಲ ಪತ್ರಕರ್ತರಿಗೂ ಯೋಜನೆಯನ್ನು ವಿಸ್ತರಿಸಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯನ್ನು ಸೀಮಿತ ಮಾಡಿರುವುದರಿಂದ ಅನೇಕ ಪತ್ರಕರ್ತರು ಯೋಜನೆಯಿಂದ ವಂಚಿತರಾಗುತ್ತಾರೆ. ಆದ್ದರಿಂದ ವಾರ್ತಾ ಇಲಾಖೆಯಲ್ಲಿ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲ ಪತ್ರಕರ್ತರಿಗೂ ಯೋಜನೆಯನ್ನು ವಿಸ್ತರಿಸಬೇಕು ಎಂದು ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆಯನ್ನು ಜಾರಿಗೆ ತರಬೇಕು ಎನ್ನುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಹಕ್ಕೊತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದು, ಬಜೆಟ್ನಲ್ಲಿಯೂ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಪಾತ್ರವೂ ಪ್ರಾಮುಖ್ಯವಾಗಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಜಸ್ಥಾನದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, 12 ಮಂದಿ ಮೃತ್ಯು
ಜೈಪುರ: ರಾಜಸ್ಥಾನದಾದ್ಯಂತ ಸೋಮವಾರ ಸುರಿದ ಭಾರೀ ಮಳೆಯಿಂದ ಕೋಟಾ, ಪಾಲಿ, ಜಾಲೋರೆ ಹಾಗೂ ಧೋಲ್ಪುರ ಜಿಲ್ಲೆಗಳು ತೀವ್ರ ಪೀಡಿತವಾಗಿವೆ. ಮಳೆ ಸಂಬಂಧಿ ದುರ್ಘಟನೆಗಳಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಪಾಲಿಯಲ್ಲಿ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಶಾಲೆಗಳಿಗೆ ರಜೆ ಸಾರಲಾಗಿದೆ. ಪಾಲಿ ನಗರದ ರಾಮ್ ದೇವ್ ರಸ್ತೆ, ಸಿಂಧಿ ಕಾಲನಿ, ಜೈನಗರ, ಶೇಖಾವತ್ ನಗರ್, ಗಾಂಧಿ ನಗರ್ ಹಾಗೂ ನ್ಯೂ ಪ್ರತಾಪ್ ನಗರಗಳು ಜಲಾವೃತವಾಗಿವೆ. ಜಾಲೂರು ಹಾಗೂ ಜೋಧಪುರದ ಮರ್ವಾರ್ ಜಂಕ್ಷನ್ ಹಾಗೂ ಲುನಿ ನಡುವಿನ ಕೆಲವು ರೈಲು ಮಾರ್ಗಗಳು ಜಲಾವೃತವಾಗಿದ್ದು, ರೈಲುಗಳ ವೇಳಾ ಪಟ್ಟಿಯನ್ನು ಬದಲಾಯಿಸಲಾಗಿತ್ತು. ಪಾಲಿ ಹಾಗೂ ಮರ್ವಾರ್ ಜಂಕ್ಷನ್ ನಡುವಿನ ಮಾರ್ಗದಲ್ಲಿ ಕೂಡ ರೈಲು ಸಂಚಾರಕ್ಕೆ ಅಡ್ಡಿ ಉಂಟಾಯಿತು. ಕೋಟಾ ಅಣೆಕಟ್ಟಿನಿಂದ 2 ಲಕ್ಷ ಕ್ಯೂಸೆಕ್ಗಳಿಗೂ ಅಧಿಕ ನೀರು ಬಿಡುಗಡೆ ಮಾಡಿದ ಬಳಿಕ ಚಂಬಲ್ ನದಿ ಉಕ್ಕಿ ಹರಿದ ಪರಿಣಾಮ ಹಲವು ಕಾಲನಿಗಳು ಜಲಾವೃತವಾದವು. ಇದರಿಂದ ಸುಮಾರು 10 ಸಾವಿರ ನಿವಾಸಿಗಳು ತಮ್ಮ ಮನೆಯಲ್ಲಿ ಸಿಲುಕಿಕೊಂಡಿದ್ದಾರೆ. ಚಂಬಲ್ ನದಿಗೆ ಮೀನು ಹಿಡಿಯಲು ಹೋಗಿದ್ದ 7 ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವನನ್ನು ರಕ್ಷಿಸಲಾಗಿದೆ. ಅನಂತಪುರ, ರಣ್ಪುರ, ದೇವ್ಲಿ ಆರಬ್ ಹಾಗೂ ಕೋಟಿಲ್ಯಾ ನಗರದಲ್ಲಿ ರಕ್ಷಣಾ ಕಾರ್ಯಾಚರಣೆಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ನಿಯೋಜಿಸಲಾಗಿದೆ. ಜಲಾವೃತವಾದ ಈ ಕಾಲನಿಗಳಿಂದ 150ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ. ಇತರ ನೆರೆ ಸಂತ್ರಸ್ತ ಜಿಲ್ಲೆಗಳಲ್ಲಿ ಕೂಡ ಎಸ್ ಡಿ ಆರ್ ಎಫ್ ತಂಡವನ್ನು ನಿಯೋಜಿಸಲಾಗಿದೆ.
ಹೊಸದಿಲ್ಲಿ: ಜು.11ರಂದು ಆರಂಭಗೊಂಡಿರುವ ಕನ್ವರ್ ಯಾತ್ರೆ ಮಾರ್ಗದಲ್ಲಿಯ ಅಂಗಡಿಗಳ ಮಾಲಿಕರು ತಮ್ಮ ಗುರುತಿನೊಂದಿಗೆ ಕ್ಯೂಆರ್ ಕೋಡ್ ಅನ್ನು ಪ್ರದರ್ಶಿಸಬೇಕೆಂಬ ನಿರ್ದೇಶನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರಕಾರಗಳಿಗೆ ನೋಟಿಸ್ ಗಳನ್ನು ಹೊರಡಿಸಿದ್ದು, ಮುಂದಿನ ವಿಚಾರಣಾ ದಿನಾಂಕವಾದ ಜು.22ರೊಳಗೆ ಉತ್ತರಿಸುವಂತೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ ಮತ್ತು ಎನ್.ಕೋಟೀಶ್ವರ ಸಿಂಗ್ ಅವರ ಪೀಠವು ದಿಲ್ಲಿ ವಿವಿಯ ಪ್ರೊಫೆಸರ್ ಅಪೂರ್ವಾನಂದ ಝಾ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಅಂಗಡಿಗಳಲ್ಲಿ ಮಾಲಿಕರ ವಿವರಗಳಿರುವ ಕ್ಯೂಆರ್ ಕೋಡ್ ಪ್ರದರ್ಶಿಸಬೇಕೆಂಬ ನಿರ್ದೇಶನವು ಕನ್ವರ್ ಯಾತ್ರೆ ಮಾರ್ಗದಲ್ಲಿಯ ವ್ಯಾಪಾರಿಗಳು ತಮ್ಮ ಗುರುತುಗಳನ್ನು ಬಹಿರಂಗಗೊಳಿಸುವಂತೆ ಬಲವಂತ ಮಾಡುವಂತಿಲ್ಲ ಎನ್ನುವುದನ್ನು ಎತ್ತಿ ಹಿಡಿದಿದ್ದ ಸರ್ವೋಚ್ಚ ನ್ಯಾಯಾಲಯದ 2024ರ ಆದೇಶಕ್ಕೆ ವಿರುದ್ಧವಾಗಿದೆ ಎಂದು ಪ್ರೊ.ಝಾ ಸಲ್ಲಿಸಿರುವ ಅರ್ಜಿಯಲ್ಲಿ ವಾದಿಸಲಾಗಿದೆ. ಮಾಲಿಕರು ಮತ್ತು ಉದ್ಯೋಗಿಗಳ ಹೆಸರುಗಳನ್ನು ಅಂಗಡಿ,ಧಾಬಾ ಅಥವಾ ರೆಸ್ಟೋರಂಟ್ ನ ಹೊರಗೆ ಪ್ರಮುಖ ಸ್ಥಳದಲ್ಲಿ ಪ್ರದರ್ಶಿಸಬೇಕೆಂಬ ನಿರ್ದೇಶನವು ಸಂವಿಧಾನದ 14,15,17,19 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಬೆಟ್ಟು ಮಾಡಲಾಗಿದೆ. ನಿರ್ದೇಶನವನ್ನು ತಕ್ಷಣ ಹಿಂದೆಗೆದುಕೊಳ್ಳಬೇಕು ಮತ್ತು ಸರ್ವೋಚ್ಚ ನ್ಯಾಯಾಲಯದ ಹಿಂದಿನ ಆದೇಶಗಳನ್ನು ಅನುಸರಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಕನ್ವರ್ ಯಾತ್ರೆಯು 2025, ಆ.9ರವರೆಗೆ ನಡೆಯುತ್ತದೆ.
ಒಡಿಶಾ ವಿದ್ಯಾರ್ಥಿನಿಯ ಸಾವು ವ್ಯವಸ್ಥೆಯಿಂದಾದ ಕೊಲೆ: ಪ್ರಧಾನಿ ಮೌನವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ
ಹೊಸದಿಲ್ಲಿ: ಪ್ರಾಧ್ಯಾಪಕರ ಲೈಂಗಿಕ ಕಿರುಕುಳದಿಂದ ಬೇಸತ್ತು ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಒಡಿಶಾದ ಕಾಲೇಜೊಂದರ ವಿದ್ಯಾರ್ಥಿನಿ ಸೋಮವಾರ ರಾತ್ರಿ ಭುವನೇಶ್ವರದ ಏಮ್ಸ್ನಲ್ಲಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಮಂಗಳವಾರ ಬಿಜೆಪಿಯನ್ನು ತೀವ್ರ ತರಾಟೆಗೆತ್ತಿಕೊಂಡಿದೆ. ದೇಶಕ್ಕೆ ಉತ್ತರಗಳು ಬೇಕಿವೆ, ಪ್ರಧಾನಿ ನರೇಂದ್ರ ಮೋದಿಯವರ ಮೌನವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಬಾಲಾಸೋರ್ ನ ಫಕೀರ ಮೋಹನ್(ಸ್ವಾಯತ್ತ) ಕಾಲೇಜಿನಲ್ಲಿ ಮೂರನೇ ವರ್ಷದ ಬಿಇ ಓದುತ್ತಿದ್ದ ವಿದ್ಯಾರ್ಥಿನಿ ಮೂರು ದಿನಗಳಿಂದಲೂ ಜೀವನ್ಮರಣ ಹೋರಾಟ ನಡೆಸುತ್ತಿದ್ದಳು. ದೂರು ನೀಡಿದ್ದರೂ ಕಾಲೇಜಿನ ಆಡಳಿತ ಮಂಡಳಿಯು ಪ್ರಾಧ್ಯಾಪಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ್ದರಿಂದ ಆಕೆ ಶನಿವಾರ ಕಾಲೇಜಿನ ಆವರಣದಲ್ಲಿಯೇ ಮೈಗೆ ಬೆಂಕಿ ಹಚ್ಚಿಕೊಂಡಿದ್ದು,ಶೇ.95ರಷ್ಟು ಸುಟ್ಟ ಗಾಯಗಳಾಗಿದ್ದವು. ಒಡಿಶಾದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಹೆಣ್ಣುಮಗಳ ಸಾವು ಬಿಜೆಪಿ ವ್ಯವಸ್ಥೆಯಿಂದ ನೇರ ಕೊಲೆಯಾಗಿದೆ ಎಂದು ಎಕ್ಸ್ ಪೋಸ್ಟ್ನಲ್ಲಿ ಹೇಳಿರುವ ರಾಹುಲ್,‘ಆ ಧೈರ್ಯಶಾಲಿ ವಿದ್ಯಾರ್ಥಿನಿ ಲೈಂಗಿಕ ಶೋಷಣೆಯ ವಿರುದ್ಧ ಧ್ವನಿಯೆತ್ತಿದ್ದಳು, ಆದರೆ ಆಕೆಗೆ ನ್ಯಾಯವನ್ನು ಒದಗಿಸುವ ಬದಲು ಪದೇ ಪದೇ ಬೆದರಿಕೆ,ಕಿರುಕುಳಗಳನ್ನು ಒಡ್ಡಲಾಗಿತ್ತು,ಅವಮಾನ ಮಾಡಲಾಗಿತ್ತು. ಆಕೆಯನ್ನು ರಕ್ಷಿಸಬೇಕಿದ್ದವರೇ ಆಕೆಯ ಮೇಲೆ ದಬ್ಬಾಳಿಕೆ ನಡೆಸುತ್ತಲೇ ಇದ್ದರು. ಪ್ರತಿಸಲದಂತೆ ಬಿಜೆಪಿ ವ್ಯವಸ್ಥೆಯು ಈ ಸಲವೂ ಆರೋಪಿಗಳನ್ನು ರಕ್ಷಿಸುತ್ತಲೇ ಇತ್ತು ಮತ್ತು ಅಮಾಯಕ ಹೆಣ್ಣುಮಗಳು ಮೈಗೆ ಬೆಂಕಿ ಹಚ್ಚಿಕೊಳ್ಳುವಂತೆ ಮಾಡಿತ್ತು. ಇದು ಆತ್ಮಹತ್ಯೆಯಲ್ಲ,ಇದು ವ್ಯವಸ್ಥೆಯಿಂದ ನಡೆದ ಸಂಘಟಿತ ಕೊಲೆ ’ಎಂದು ಆರೋಪಿಸಿದ್ದಾರೆ. ‘ಮೋದಿಜಿ, ಒಡಿಶಾ ಆಗಿರಲಿ ಅಥವಾ ಮಣಿಪುರ ಆಗಿರಲಿ...ದೇಶದ ಹೆಣ್ಣುಮಕ್ಕಳು ಸಾಯುತ್ತಿದ್ದಾರೆ. ಆದರೆ ನೀವು ಮೌನವಾಗಿ ಕುಳಿತಿದ್ದೀರಿ.ದೇಶಕ್ಕೆ ನಿಮ್ಮ ಮೌನ ಬೇಕಿಲ್ಲ,ಅದಕ್ಕೆ ಉತ್ತರಗಳು ಬೇಕಿವೆ. ಭಾರತದ ಹೆಣ್ಣುಮಕ್ಕಳು ಭದ್ರತೆ ಮತ್ತು ನ್ಯಾಯವನ್ನು ಬಯಸುತ್ತಿದ್ದಾರೆ’ ಎಂದು ರಾಹುಲ್ ಕಿಡಿಕಾರಿದ್ದಾರೆ. ಬಿಜೆಪಿ ಸರಕಾರದಿಂದ ನ್ಯಾಯದ ಭರವಸೆಯನ್ನು ತೊರೆದಿದ್ದ ಒಡಿಶಾದ ಹೆಣ್ಣುಮಗಳು ಈ ಲೋಕವನ್ನೂ ತೊರೆದಿದ್ದಾಳೆ ಎಂದು ಎಕ್ಸ್ ಪೋಸ್ಟ್ನಲ್ಲಿ ವಿಷಾದ ವ್ಯಕ್ತಪಡಿಸಿರುವ ಕಾಂಗ್ರೆಸ್ ಪ್ರ.ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್ ಅವರು, ಆಕೆಗೆ ಕೇವಲ 20 ವರ್ಷ ವಯಸ್ಸಾಗಿತ್ತು. ಆ ಹುಡುಗಿ ಏನೇನನ್ನು ಅನುಭವಿಸಿರಬೇಕು ಎಂಬ ಯೊಚನೆಯ ಮಾತ್ರದಿಂದಲೇ ಬೆನ್ನುಹುರಿಯಲ್ಲಿ ನಡುಕ ಮೂಡುತ್ತದೆ. ತನ್ನದೇ ಕ್ಯಾಂಪಸ್ ನಲ್ಲಿ ಆಕೆ ಎಷ್ಟೊಂದು ಅಸಹಾಯಕಳಾಗಿದ್ದಳು. ಬಿಜೆಪಿಯ ಕೊಳೆತ ವ್ಯವಸ್ಥೆಯು ಆಕೆ ಮೈಗೆ ಬೆಂಕಿ ಹಚ್ಚಿಕೊಳ್ಳುವಷ್ಟು ಆಕೆಯನ್ನು ಹತಾಶಳಾಗಿಸಿತ್ತು. ಆಕೆ ನೆರವಿಗಾಗಿ ಕಾಲೇಜು ಪ್ರಾಂಶುಪಾಲರಿಂದ ಹಿಡಿದು ಸಂಸದ,ಮುಖ್ಯಮಂತ್ರಿಯವರೆಗೂ ಪ್ರತಿಯೊಬ್ಬರನ್ನೂ ಬೇಡಿಕೊಂಡಿದ್ದಳು. ಆದರೆ ಅವಳ ಮೊರೆ ಯಾರಿಗೂ ಕೇಳಿಸಲೇ ಇಲ್ಲ ಎಂದಿದ್ದಾರೆ. ‘ಬಿಜೆಪಿ ಸರಕಾರದಲ್ಲಿ ಅಪರಾಧದ ಬಲಿಪಶುಗಳಾದ ಮಹಿಳೆಯರ ಧ್ವನಿಗಳನ್ನು ಕೇಳುವವರೇ ಇಲ್ಲ. ಅವರನ್ನು ರಕ್ಷಿಸಬೇಕಾದವರೇ ಈಗ ದಬ್ಬಾಳಿಕೆಗಾರರೊಂದಿಗೆ ಕೈಜೋಡಿಸಿರುವಾಗ ಅದು ಹೇಗೆ ಸಾಧ್ಯ?’ ಎಂದು ಅವರು ಪ್ರಶ್ನಿಸಿದ್ದಾರೆ.
ಬಾಂಗ್ಲಾದೇಶದಿಂದ 34 ಬಂಗಾಳಿ ಮೀನುಗಾರರ ಬಂಧನ
ಕೋಲ್ಕತಾ: ಪಶ್ಚಿಮ ಬಂಗಾಳದ 34 ಮೀನುಗಾರರನ್ನು ಬಾಂಗ್ಲಾದೇಶದ ಅಧಿಕಾರಿಗಳು ಸಮುದ್ರ ಗಡಿಯಲ್ಲಿ ಬಂಧಿಸಿದ್ದಾರೆ ಎಂದು ಅವರ ಒಕ್ಕೂಟವು ಮಂಗಳವಾರ ಹೇಳಿದೆ. ಈ ಮೀನುಗಾರರು ನಮ್ಖಾನಾದಿಂದ ಎರಡು ಟ್ರಾಲರ್ ಗಳಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದರು. ಅವರ ಬಂಧನದ ಕುರಿತು ದಕ್ಷಿಣ 24 ಪರಗಣಗಳ ಜಿಲ್ಲಾಡಳಿತಕ್ಕೆ ತಿಳಿಸಲಾಗಿದೆ ಎಂದು ಸುಂದರಬನ ಸಮುದ್ರಿಕ ಮತ್ಸ್ಯಜೀವಿ ಶ್ರಮಿಕ ಒಕ್ಕೂಟದ ಕಾರ್ಯದರ್ಶಿ ಸತಿನಾಥ ಪಾತ್ರಾ ತಿಳಿಸಿದರು. ಎಫ್ಬಿ ಝಾರ್ ಮತ್ತು ಎಫ್ ಬಿ ಮಂಗಲಚಾಂದಿ ಹೆಸರಿನ ಎರಡು ಟ್ರಾಲರ್ ಗಳನ್ನು ಜು.13ರಂದು ಬಾಂಗ್ಲಾದೇಶದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ ಪಾತ್ರಾ,ಬಂಗಾಳ ಕೊಲ್ಲಿಯಲ್ಲಿನ ಸಮುದ್ರ ಗಡಿಯಲ್ಲಿ ಉಭಯ ದೇಶಗಳ ಮೀನುಗಾರರು ಅಕ್ಕಪಕ್ಕದಲ್ಲಿಯೇ ಮೀನುಗಾರಿಕೆಯನ್ನು ನಡೆಸುತ್ತಾರೆ ಎಂದು ತಿಳಿಸಿದರು. ‘ನಮ್ಮ ಸರಕಾರವು ಅವರನ್ನು ಮರಳಿ ಕರೆತರಲು ಅಗತ್ಯವಿರುವ ಎಲ್ಲವನ್ನೂ ಮಾಡುತ್ತದೆ ಎಂದು ನಾವು ಆಶಿಸಿದ್ದೇವೆ’ ಎಂದರು. ಈ ಘಟನೆಯು ದೃಢಪಟ್ಟಿಲ್ಲ ಎಂದು ರಕ್ಷಣಾ ಅಧಿಕಾರಿಯೋರ್ವರು ತಿಳಿಸಿದರು.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು: ಪ್ರಸಕ್ತ (2025ನೇ) ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಪ್ರಶಸ್ತಿ (ಆಫ್ಲೈನ್), ರಾಜ್ಯ ಮತ್ತು ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ (ಆನ್ಲೈನ್) ನೀಡಿ ಗೌರವಿಸಲು ಆಯ್ಕೆ ಮಾಡುವ ಬಗ್ಗೆ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆಯಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಆನೆಪಥ, ಆವಾಸಸ್ಥಾನ ರಕ್ಷಣೆಗೆ ಐಐಎಸ್ಸಿ-ಅರಣ್ಯ ಇಲಾಖೆ ಐತಿಹಾಸಿಕ ಒಡಂಬಡಿಕೆ : ಈಶ್ವರ್ ಖಂಡ್ರೆ
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್ಸಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಐಐಎಸ್ಸಿಯ ಪ್ರೊ.ರಮನ್ ಸುಕುಮಾರ್ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ ಸಹಿ ಹಾಕಿ ಒಡಂಬಡಿಕೆ ವಿನಿಮಯ ಮಾಡಿಕೊಂಡ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮಾತನಾಡಿದ ಅವರು, ಹಾಸನ, ಕೊಡಗು ಭಾಗದಲ್ಲಿ ಹೆಚ್ಚಾಗಿ ಆನೆ-ಮಾನವ ಸಂಘರ್ಷವಿದ್ದು, ಜೀವಹಾನಿ, ಬೆಳೆ ಹಾನಿ ಸಂಭವಿಸುತ್ತಿದೆ ಇದರ ನಿಯಂತ್ರಣಕ್ಕೆ ಎಲ್ಲ ಸಾಧ್ಯ ಕ್ರಮಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದರು. ಮಾನವ-ಆನೆ ಸಂಘರ್ಷ ಇತರ ಪ್ರದೇಶಕ್ಕೂ ವಿಸ್ತರಿಸುತ್ತಿದ್ದು, ಪರಿಸರ ಸಂಶೋಧನೆ ಮತ್ತು ಕ್ಷೇತ್ರ ಅನುಷ್ಠಾನವನ್ನು ಸಮನ್ವಯಗೊಳಿಸುವ ಮೂಲಕ, ಆನೆಪಥ, ಆವಾಸಸ್ಥಾನಗಳ ಸಂರಕ್ಷಣೆಗೆ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆಗಾಗಿ ಐದು ವರ್ಷಗಳ ಸಹಯೋಗದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಈಶ್ವರ್ ಖಂಡ್ರೆ ವಿವರಿಸಿದರು. ಸ್ಯಾಟಲೈಟ್ ಟೆಲಿಮೆಟ್ರಿ, ಕ್ಯಾಮೆರಾ ಟ್ರಾಪ್ ಗಳು ಮತ್ತು ಜಿ.ಐ.ಎಸ್. ಮಾದರಿಗಳನ್ನು ಬಳಸಿಕೊಂಡು ಆನೆ ಕಾರಿಡಾರ್ ಗಳನ್ನು ಗುರುತಿಸುವುದು ಮತ್ತು ಆನೆಗಳ ಸುಗಮ ಸಂಚಾರಕ್ಕೆ ಎದುರಾಗಿರುವ ಅಡೆತಡೆಗಳನ್ನು ಗುರುತಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಆನೆ ಲದ್ದಿಯಲ್ಲಿರುವ ಹಾರ್ಮೋನ್ ಗಳ ಪರೀಕ್ಷೆ ನಡೆಸುವ ಮೂಲಕ ಆನೆಗಳ ದೇಹದ ಸ್ಥಿತಿ ಮತ್ತು ಒತ್ತಡ ಸೂಚಕಗಳನ್ನು ಅಂದಾಜು ಮಾಡಲಾಗುತ್ತದೆ. ಅದೇ ರೀತಿ ಬೆಳೆ ನಾಶದ ಮಾದರಿಗಳ ಅಧ್ಯಯನ, ಸಂಘರ್ಷದ ಹಾದಿ ತುಳಿದ ಆನೆಗಳ ಅಧ್ಯಯನ-ವಿಶ್ಲೇಷಣೆ ಮಾಡಿ ರೈತರಿಗೆ ಅರಿವು ಮೂಡಿಸುವುದೂ ಈ ಯೋಜನೆಯ ಭಾಗವಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು. ಆನೆಗಳು ನಾಡಿನತ್ತ ಬಂದಾಗ ಮುನ್ನೆಚ್ಚರಿಕೆಯ ಗಂಟೆ ಮೊಳಗಿಸುವ ವ್ಯವಸ್ಥೆ ರೂಪಿಸುವ ಹಾಗೂ ಸ್ವಯಂ ಚಾಲಿತ ಧ್ವನಿಯಂತ್ರಗಳ ಮೂಲಕ ಆನೆಗಳನ್ನು ಹಿಮ್ಮೆಟ್ಟಿಸುವ ಬಗ್ಗೆಯೂ ಅಧ್ಯಯನ ನಡೆಸಲಾಗುವುದು. ಅರಣ್ಯ ಇಲಾಖೆ ಮತ್ತು ಭಾರತೀಯ ವಿಜ್ಞಾನ ಮಂದಿರದ ತಜ್ಞರು, ಅಧ್ಯಯನಿಗಳು ಆನೆಗಳ ವರ್ತನೆ, ಸ್ವಭಾವದ ದತ್ತಾಂಶ ಕ್ರೋಢೀಕರಿಸಿ ಆನೆಪಥ (ಕಾರಿಡಾರ್) ಹಾಗೂ ಮುಂದಿನ 10 ವರ್ಷಗಳಲ್ಲಿ ಎದುರಾಗಬಹುದಾದ ಭವಿಷ್ಯದ ಸಂಘರ್ಷ ಪ್ರದೇಶ ಗುರುತಿಸಲೂ ಈ ಅಧ್ಯಯನ ನೆರವಾಗಲಿದೆ ಎಂದು ಅವರು ಹೇಳಿದರು. ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಅಧ್ಯಯನ: ಮೈಸೂರು ಆನೆ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಪ್ರಮುಖ ಅರಣ್ಯ ವಿಭಾಗಗಳು ಹಾಗೂ ಸಂರಕ್ಷಿತ ಪ್ರದೇಶಗಳು ಅಂದರೆ ಹುಲಿ ಸಂರಕ್ಷಿತ ಪ್ರದೇಶಗಳು, ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳು ಹಾಗೂ ಮಾನವ ವಾಸವಿರುವ ಕೃಷಿ ಪ್ರದೇಶಗಳಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು. ಸಂಶೋಧನಾ ಚಟುವಟಿಕೆಗಳನ್ನು ಭಾರತೀಯ ವಿಜ್ಞಾನ ಮಂದಿರದ (ಐಐಎಸ್ಸಿ) ಪರಿಸರ ಶಾಸ್ತ್ರ ಕೇಂದ್ರ ಹಾಗೂ ಏಷಿಯನ್ ನೇಚರ್ ಕನ್ಸರ್ವೇಷನ್ ಫೌಂಡೇಶನ್, ಫೌಂಡೇಶನ್ ಫಾರ್ ಇಕಲಾಜಿಕಲ್ ರಿಸರ್ಚ್, ಅಡ್ವಕಸಿ ಅಂಡ್ ಲರ್ನಿಂಗ್, ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಸಹಯೋಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು. ಸ್ಥಳಾಂತರಗೊಂಡ ಆನೆಗಳಿಗಾಗಿ ಮೃದು ಬಿಡುಗಡೆ ಶಿಷ್ಟಾ ಚಾರ, ಝ್ಯಾಪ್ ಕಾಲರ್ ಗಳು, ಬಜರ್ ಗಳು ಮತ್ತು ಸಮುದಾಯ ಬೆಂಬಲಿತ ಬೇಲಿಗಳಂತಹ ನವೀನ ಉಪಕರಣಗಳ ಅಭಿವೃದ್ಧಿಗೂ ಈ ಯೋಜನೆ ಸಹಕಾರಿಯಾಗಲಿದೆ ಎಂದು ಈಶ್ವರ್ ಖಂಡ್ರೆ ಮಾಹಿತಿ ನೀಡಿದರು. ಪ್ರೊ.ರಮನ್ ಸುಕುಮಾರ್ ಮಾತನಾಡಿ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ನಾವು ಕಾರಣಗಳನ್ನು ತಿಳಿಯುವುದು ಇಂದಿನ ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ಈ ಒಡಂಬಡಿಕೆ ಮಹತ್ವಪೂರ್ಣವಾದುದಾಗಿದೆ. ಈ ಅಧ್ಯಯನದಿಂದ ಅಥವಾ ಯೋಜನೆಯ ಅನುಷ್ಠಾ ನದಿಂದ ಸಂಪೂರ್ಣವಾಗಿ ಮಾನವ-ಆನೆ ಸಂಘರ್ಷ ನಿರ್ಮೂಲನೆ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಪರಿಣಾಮಕಾರಿಯಾಗಿ ಸಂಘರ್ಷ ತಗ್ಗಿಸಬಹುದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಮತ್ತಿತರರು ಉಪಸ್ಥಿತರಿದ್ದರು.
ಸೋಲಾರ್ ಸೂರ್ಯ ಘರ್ ಯೋಜನೆಗೆ 13 ಗ್ರಾಮಗಳ ಆಯ್ಕೆ
ಮಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ದ.ಕ. ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವನ್ನು ಆಯ್ಕೆ ಮಾಡುವ ಸಲುವಾಗಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ನೆಲ್ಯಾಡಿ, ಬೆಳ್ಳಾರೆ, ಕೆಯ್ಯೂರು, ಒಳಮೊಗ್ರು, ನರಿಮೊಗ್ರು, ಉಜಿರೆ, ನರಿಕೊಂಬು, ತೆಂಕಮಿಜಾರು, ಪುತ್ತಿಗೆ, ಬೆಳುವಾಯಿ, ಅಡ್ಡೂರು, ಮೂಳೂರು, ತಲಪಾಡಿ ಗ್ರಾಮಗಳು ಸೋಲಾರ್ ಸೂರ್ಯಘರ್ ಯೋಜನೆಗೆ ಆಯ್ಕೆಯಾಗಿವೆ. ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ಸೋಲಾರ್ ಅಳವಡಿಸುವಂತೆ ಗ್ರಾಮ ಮಟ್ಟದಲ್ಲಿ ಜನರಿಗೆ ಉತ್ತೇಜನ ನೀಡುವಂತೆ ಸೂಚಿಸಲಾಗಿದೆ. ಸ್ಪರ್ಧೆಯ ಕಾಲಾವಧಿಯು ಜುಲೈ 1ರಿಂದ ಡಿಸೆಂಬರ್ 31ರವರೆಗೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ.
ಬೆಂಗಳೂರು : ಚಿಲ್ಡ್ರನ್ಸ್ ಇಸ್ಲಾಮಿಕ್ ಆರ್ಗನೈಸೇಶನ್(ಸಿಐಒ) ವತಿಯಿಂದ ಜೂ.25 ರಿಂದ ಜು.25ರವರೆಗೆ ‘ಕೈ ಮಣ್ಣಿನಲ್ಲಿ-ಹೃದಯದಲ್ಲಿ ಭಾರತ’ ಎಂಬ ಧ್ಯೇಯ ವಾಕ್ಯದೊಂದಿಗೆ ದೇಶಾದ್ಯಂತ 10 ಲಕ್ಷ ಸಸಿಗಳನ್ನು ನೆಡುವ ಗುರಿ ಹಮ್ಮಿಕೊಳ್ಳಲಾಗಿದೆ ಎಂದು ಸಿಐಒ ಆರ್.ಟಿ.ನಗರ ವಿಭಾಗದ ವಿದ್ಯಾರ್ಥಿನಿ ಮುಸ್ಕಾನ್ ಫಾತಿಮಾ ತಿಳಿಸಿದರು. ಮಂಗಳವಾರ ನಗರದ ದಾರುಸ್ಸಲಾಮ್ ಕಟ್ಟಡದಲ್ಲಿರುವ ಬಿಫ್ಟ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಮಕ್ಕಳಲ್ಲಿ ಗಿಡ ನೆಡುವುದು ಮತ್ತು ಪರಿಸರ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ಇದಲ್ಲದೇ, ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಆಸಕ್ತಿಯನ್ನು ಉತ್ತೇಜಿಸಲು, ಚಿತ್ರಕಲೆ, ಪ್ರಬಂಧ, ಕವನ ಮತ್ತು ಸಾಮಾಜಿಕ ಮಾಧ್ಯಮ ರೀಲ್ಸ್ ಸ್ಪರ್ಧೆಗಳನ್ನು ಶಾಲೆಗಳಲ್ಲಿ ಆಯೋಜಿಸಲಾಗುವುದು. ಪೋಷಕರು, ಮಾರ್ಗದರ್ಶಕರು ಮತ್ತು ಮಕ್ಕಳಿಗಾಗಿ ಬೆಂಗಳೂರಿನ ದೊಡ್ಡನಗುಡ್ಡೆಯಲ್ಲಿ ಪರಿಸರ ಸ್ನೇಹಿ ಕೈತೋಟ ಕಾರ್ಯಾಗಾರವನ್ನು ನಡೆಸಲಾಗುವುದು ಎಂದು ಮುಸ್ಕಾನ್ ಫಾತಿಮಾ ಹೇಳಿದರು. ಸಿಐಒ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಪರಿಸರದ ಕುರಿತು ಜಾಗೃತಿ ಮೂಡಿಸುತ್ತಾರೆ. ಹಸಿರು ಸೆಲ್ಫಿ ಅಭಿಯಾನ ನಡೆಸಲಾಗುವುದು. ಅಲ್ಲದೇ, ಕನಿಷ್ಠ 50 ಸ್ಥಳಗಳಲ್ಲಿ ಮಕ್ಕಳು ತಮ್ಮ ಸ್ಥಳೀಯ ಸಮುದಾಯ ಕೇಂದ್ರಗಳು, ಮಸೀದಿಗಳು ಇತ್ಯಾದಿಗಳೊಂದಿಗೆ ಸೇರಿ ಗಿಡ ನೆಡುವ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಿವಿಧ ಶಾಲೆಯ ಮಕ್ಕಳು, ಶಾಲಾ ಶಿಕ್ಷಕರು ಭಾಗವಹಿಸಿದ್ದರು.
ಮಂಗಳೂರು ನೂತನ ಡಿಸಿಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ
ಮಂಗಳೂರು: ನಗರ ಪೊಲೀಸ್ ಆಯುಕ್ತಾಲಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ (ಉಪಾಯುಕ್ತ) ಸಿದ್ದಾರ್ಥ ಗೋಯಲ್ ಅವರನ್ನು ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಜಿತೇಂದ್ರ ಕುಮಾರ್ ದಯಾಮ ಅವರನ್ನು ಸರಕಾರ ನೇಮಿಸಿ ಆದೇಶ ಹೊರಡಿಸಿದೆ. ಸಿದ್ದಾರ್ಥ ಗೋಯೆಲ್ ಅವರನ್ನು ಬಾಗಲಕೋಟೆಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ನಕ್ಸಲ್ ನಿಗ್ರಹ ಪಡೆಯ ಎಸ್ಪಿಯಾಗಿ ಉಡುಪಿಯಲ್ಲಿ ಕಾರ್ಯನಿರ್ವಹಿಸಿದ್ದ ಜಿತೇಂದ್ರ ಕುಮಾರ್ ದಯಾಮ 2019ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಸಿನಿಮಾ ಪ್ರಿಯರಿಗೆ ಗುಡ್ನ್ಯೂಸ್: ಮಲ್ಟಿಫೆಕ್ಸ್ಗಳ ದುಬಾರಿ ಟಿಕೆಟ್ಗೆ ಕಡಿವಾಣ! 200 ರೂ. ದಾಟುವಂತಿಲ್ಲ
ಕರ್ನಾಟಕ ಸರ್ಕಾರವು ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ್ದು, ಮಲ್ಟಿಫ್ಲೆಕ್ಸ್ಗಳ ದುಬಾರಿ ಟಿಕೆಟ್ ದರಕ್ಕೆ ಕಡಿವಾಣ ಹಾಕಿದೆ. ರಾಜ್ಯದ ಎಲ್ಲಾ ಚಿತ್ರಮಂದಿರ, ಮಲ್ಟಿಫ್ಲೆಕ್ಸ್ಗಳಲ್ಲಿ ಗರಿಷ್ಠ ಟಿಕೆಟ್ ದರವನ್ನು 200 ರೂಪಾಯಿಗಳಿಗೆ ನಿಗದಿಪಡಿಸಿ ಆದೇಶ ಹೊರಡಿಸಿದೆ. ಈ ದರವು ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ಸಿನಿಮಾಗಳಿಗೂ ಅನ್ವಯವಾಗಲಿದೆ. ಇದರಿಂದ ಸಿನಿಮಾ ಪ್ರೇಕ್ಷಕರಿಗೆ ಅನುಕೂಲವಾಗಲಿದೆ.
ಬೆಂಗಳೂರು | ನಕಲಿ ದಾಖಲೆಗಳ ಮೂಲಕ ಶೂರಿಟಿ ನೀಡುತ್ತಿದ್ದ ಪ್ರಕರಣ: ಎಂಟು ಮಂದಿ ಬಂಧನ
ಬೆಂಗಳೂರು : ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ನಕಲಿ ಶೂರಿಟಿ ನೀಡುತ್ತಿದ್ದ ಪ್ರಕರಣದಡಿ ಎಂಟು ಮಂದಿ ಆರೋಪಿಗಳನ್ನು ಇಲ್ಲಿನ ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ರಫಿ, ಪ್ರವೀಣ್ ಕುಮಾರ್, ಅಭಿಷೇಕ್, ಗೋವಿಂದ ನಾಯ್ಕ್ ಮತ್ತು ದೊರೆರಾಜು ಹಾಗೂ ಮತ್ತೊಂದು ಪ್ರಕರಣದಲ್ಲಿ ಅಬೀದ್, ವಾಸಿಂ ಅಹಮ್ಮದ್ ಮತ್ತು ಗೋವಿಂದರಾಜು ಎಂಬವರನ್ನು ಬಂಧಿಸಲಾಗಿದ್ದು, ಅವರಿಂದ 47 ಆಧಾರ್ ಕಾರ್ಡ್ಸ್, 122 ದಾಖಲಾತಿಗಳು, 7 ಮೊಬೈಲ್ ಫೋನ್ಗಳು, 1 ಪೆನ್ ಡ್ರೈವ್, ನಕಲಿ ಸೀಲ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಆರೋಪಿಗಳು ವಿವಿಧ ಪ್ರಕರಣಗಳಲ್ಲಿ ಜಾಮೀನು ಪಡೆಯಲು ನಕಲಿ ಶೂರಿಟಿಗಳನ್ನು ನೀಡುತ್ತಿದ್ದರು. ಭೂಮಿ ಆ್ಯಪ್ನ ಮೂಲಕ ಬೇರೆ ಬೇರೆಯವರ ಪಹಣಿಯ ವಿವರ ಪಡೆದುಕೊಳ್ಳುತ್ತಿದ್ದ ಆರೋಪಿಗಳು, ಅದರಲ್ಲಿನ ವಿಳಾಸಕ್ಕೆ ಹೊಂದಿಕೆಯಾಗುವಂತೆ ನಕಲಿ ಆಧಾರ್ ಕಾರ್ಡ್ ಮಾದರಿ ಸೃಷ್ಟಿಸುತ್ತಿದ್ದರು. ಆ ಆಧಾರ್ಗೆ ಯಾವುದೋ ಒಂದು ನಂಬರ್ ನಮೂದಿಸಿ, ಶೂರಿಟಿ ನೀಡಲು ಹೋಗುವವರ ಫೋಟೋ ಸೇರಿಸುತ್ತಿದ್ದರು ಎಂದು ಎಂದು ಪೊಲೀಸರು ತಿಳಿಸಿದ್ದಾರೆ ಪ್ರಕರಣವೊಂದರಲ್ಲಿ ನ್ಯಾಯಾಲಯದ ಕಲಾಪ ಪ್ರಕ್ರಿಯೆ ನಡೆಯುವಾಗ ಆರೋಪಿಗಳ ವಂಚನೆ ಬಯಲಾಗಿತ್ತು. ಕೂಡಲೇ 4ನೇ ಎಸಿಜೆಎಂ ನ್ಯಾಯಾಲಯದ ಶಿರಸ್ತೇದಾರರು ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಂಗೊಳ್ಳಿ ಸಮುದ್ರದಲ್ಲಿ ನಾಡದೋಣಿ ದುರಂತ: ಮೂವರು ಮೀನುಗಾರರು ಸಮುದ್ರಪಾಲು, ಓರ್ವನ ರಕ್ಷಣೆ
ಕುಂದಾಪುರ, ಜು.15: ಸಮುದ್ರದ ಅಲೆಗಳ ಅಬ್ಬರಕ್ಕೆ ನಾಡದೋಣಿ ಯೊಂದು ಮಗುಚಿ ಬಿದ್ದ ಪರಿಣಾಮ ಮೂವರು ಮೀನುಗಾರರು ನೀರು ಪಾಲಾಗಿದ್ದು, ಓರ್ವನನ್ನು ರಕ್ಷಿಸಿದ ಘಟನೆ ಮಂಗಳವಾರ ಬೆಳಗ್ಗೆ 8ಗಂಟೆ ಸುಮಾರಿಗೆ ಗಂಗೊಳ್ಳಿ ಸೀವಾಕ್ ಬಳಿ ನಡೆದಿದೆ. ನಾಪತ್ತೆಯಾದ ಮೀನುಗಾರರನ್ನು ಗಂಗೊಳ್ಳಿ ನಿವಾಸಿಗಳಾದ ಸುರೇಶ್ ಖಾರ್ವಿ(48), ಜಗನ್ನಾಥ ಖಾರ್ವಿ(50), ಲೋಹಿತ್ ಖಾರ್ವಿ(39) ಎಂದು ಗುರುತಿಸಲಾಗಿದೆ. ಸಂತೋಷ್ ಖಾರ್ವಿ(35) ಎಂಬವರನ್ನು ರಕ್ಷಿಸುವ ಮೂಲಕ ಅಪಾಯದಿಂದ ಪಾರಾಗಿದ್ದಾರೆ. ಇವರು ಬೆಳಿಗ್ಗೆ 6 ಗಂಟೆ ಸುಮಾರಿಗೆ ಶ್ರೀಹಕ್ರೇಮಠ ಯಕ್ಷೇಶ್ವರಿ ಎಂಬ ಗಿಲ್ನೆಟ್ ದೋಣಿಯಲ್ಲಿ ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ಮುಗಿಸಿಕೊಂಡು ವಾಪಾಸ್ಸು ಗಂಗೊಳ್ಳಿ ಬಂದರು ಕಡೆ ಬರುತ್ತಿರುವಾಗ ಏಕಾಏಕಿ ಜೋರಾದ ಗಾಳಿ ಮಳೆಯಿಂದ ಬಲವಾದ ಅಲೆಯೊಂದು ದೋಣಿಗೆ ಅಪ್ಪಳಿಸಿತ್ತೆನ್ನಲಾಗಿದೆ. ಇದರ ಪರಿಣಾಮ ದೋಣಿಯಲ್ಲಿದ್ದ ನಾಲ್ವರೂ ದೋಣಿ ಸಮೇತ ಸಮುದ್ರದ ನೀರಿನಲ್ಲಿ ಮುಳುಗಿದರು. ಅದರಲ್ಲಿ ಸಂತೋಷ ಖಾರ್ವಿ ಈಜಿಕೊಂಡು ಬಂದಿದ್ದು, ಬಳಿಕ ಅಲ್ಲೇ ಸಮೀಪದಲ್ಲಿರುವ ದೋಣಿಯವರು ಅವರನ್ನು ರಕ್ಷಣೆ ಮಾಡಿದರು. ಆದರೆ ಉಳಿದ ಮೂವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿ ದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರು, ಮೀನುಗಾರರು ದೌಡಾಯಿಸಿ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಸಮುದ್ರ ಪ್ರಕ್ಷುಬ್ಧವಾಗಿರುವುದ ರಿಂದ ಶೋಧ ಕಾರ್ಯಕ್ಕೆ ತೊಡಕು ಉಂಟಾಯಿತು. ಆದರೂ ನಾಪತ್ತೆ ಯಾದ ವರಿಗಾಗಿ ಹುಡುಕುವ ಕಾರ್ಯವನ್ನು ಮುಂದುವರೆಸಲಾಗಿದೆ. ರಾತ್ರಿಯವರೆಗೂ ಮೂವರ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತದಲ್ಲಿ ದೋಣಿ ಸಮುದ್ರ ಪಾಲಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ದೂರಲಾಗಿದೆ. ‘ಬೆಳಗ್ಗೆಯಿಂದಲೇ ಭಾರೀ ಗಾಳಿಮಳೆಯಾಗುತ್ತಿದ್ದು, ಇದರಿಂದ ಸಮುದ್ರ ದಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿದ್ದವು. ಇದರ ಪರಿಣಾಮ ನಾಪತ್ತೆ ಯಾದವರು ಶೋಧ ಕಾರ್ಯಾಚರಣೆಗೆ ತೊಡಕಾಗಿದೆ’ ಎಂದು ಸ್ಥಳೀಯ ಮೀನುಗಾರ ಮುಖಂಡ ರಾಮಪ್ಪಖಾರ್ವಿ ತಿಳಿಸಿದರು. ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಖಾರ್ವಿ, ನಾಪತ್ತೆಯಾದವರ ಕುಟುಂಬಕ್ಕೆ ಸರಕಾರ ತಕ್ಷಣ ಸ್ಪಂದಿಸಿ, ಸಾಂತ್ವನದ ನೆರವು ನೀಡಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಕುಂದಾಪುರ ಎಸಿ ರಶ್ಮಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷ ಸುಧಾಕರ್ ನಾಯ್ಕ್, ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ, ಗಂಗೊಳ್ಳಿ ಎಸ್ಸೈ ಪವನ್ ನಾಯ್ಕ್, ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಆಶಾ ಮೊದಲಾದವರು ಭೇಟಿ ನೀಡಿದ್ದಾರೆ. ಮೂರು ಜನ ಮೀನುಗಾರರು ನಾಪತ್ತೆಯಾಗಿರುವ ದುರಂತ ನೋವು ತಂದಿದೆ. ಬೈಂದೂರು ವ್ಯಾಪ್ತಿ ಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದೆ. ಹವಾಮಾನ ವೈಪರೀತ್ಯದಿಂದ ಇಂತಹ ದುರ್ಘಟನೆಗಳಾ ಗುತ್ತಿದ್ದು ಇಂತಹ ದುಸ್ಸಾಹಸ ಮಾಡಬಾರದು. ಉಪ್ಪುಂದ, ಮಲ್ಪೆ, ಮಂಗಳೂರಿನಲ್ಲಿ ಇಂತಹ ಘಟನೆ ಗಳಾಗಿದ್ದು ಮೀನುಗಾರರು ಎಚ್ಚೆತ್ತುಕೊಳ್ಳಬೇಕು. ಆ.1ರವರೆಗೆ ಕಡ್ಡಾಯವಾಗಿ ಸಮುದ್ರಕ್ಕೆ ತೆರಳಲೇ ಬಾರದು. ಈ ಬಗ್ಗೆ ಇಲಾಖೆ, ಸರಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಮೀನುಗಾರ ಸಂಘಟನೆಗಳು ಅರಿವು ಮೂಡಿಸಬೇಕು -ಗೋಪಾಲ ಪೂಜಾರಿ, ಮಾಜಿ ಶಾಸಕರು, ತೀವ್ರ ಶೋಧಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ. ಮೂವರನ್ನು ಸುರಕ್ಷಿತವಾಗಿ ಕರೆ ತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೂ ಸೂಚನೆ ನೀಡಲಾಗಿದೆ. ಹವಾಮಾನ ವೈಪರೀತ್ಯದ ಸಂದರ್ಭ ದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ತುರ್ತು ಪರಿಹಾರಕ್ಕೆ ಶಾಸಕ ಗಂಟಿಹೊಳೆ ಆಗ್ರಹ ದೋಣಿ ದುರಂತದಲ್ಲಿ ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮಕ್ಕೆ ಈಗಾಗಲೇ ನಿರ್ದೇಶಿಸಲಾಗಿದೆ. ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ ಅಗತ್ಯ ಪರಿಹಾರ ಒದಗಿಸಲು ಶಾಸಕರಾದ ಯಶ್ ಪಾಲ್ ಸುವರ್ಣ ಸಹಿತ ಜಿಲ್ಲೆಯ ಶಾಸಕರ ಮೂಲಕ ಮೀನುಗಾರಿಕೆ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ. ಇಲಾಖೆಯಿಂದ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ತುರ್ತಾಗಿ ಒದಗಿಸುವ ವ್ಯವಸ್ಥೆ ಆಗಿದೆ. ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಜೋರಾಗಿರುತ್ತದೆ. ಹೀಗಾಗಿ ನಾಡದೋಣಿ, ಟ್ರಾಲ್ ದೋಣಿ ಮೀನುಗಾರರು ವಿಶೇಷ ಎಚ್ಚರಿಕೆ ವಹಿಸಬೇಕು ಮತ್ತು ಲೈಫ್ ಜಾಕೇಟ್ ಬಳಸುವುದನ್ನು ಆದಷ್ಟು ಕಡ್ಡಾಯ ಮಾಡಿಕೊಳ್ಳುವುದು ಉತ್ತಮ ಎಂದು ಪ್ರಕಟಣೆಯಲ್ಲಿ ಅವರು ಮನವಿ ಮಾಡಿದ್ದಾರೆ.
ಯಾದಗಿರಿ | ವೇಣುಗೋಪಾಲ ನಾಯಕರಿಗೆ ಧಾರವಾಡ ವಿವಿಯಿಂದ ಸನ್ಮಾನ
ಸುರಪುರ: ಕೇಂದ್ರ ಸರಕಾರ ನಡೆಸುವ ಎನ್.ಇ.ಟಿ- ಜೆ.ಆರ್.ಎಫ್ ನಲ್ಲಿ ಎ.ಐ.ಆರ್- 196ನೇ ರ್ಯಾಂಕ್ ಪಡೆದ ವಿದ್ಯಾರ್ಥಿ ವೇಣುಗೋಪಾಲ ನಾಯಕ ಅವರಿಗೆ ಧಾರವಾಡ ವಿಶ್ವವಿದ್ಯಾಲಯದಿಂದ ಸನ್ಮಾನಿಸಿ ಗೌರವಿಸಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಪರಿಶಿಷ್ಟ ಪಂಗಡ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಘ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಪರಿಶಿಷ್ಟ ಪಂಗಡ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ, ಕರ್ನಾಟಕ ಸರಕಾರದ ಕಾರ್ಮಿಕ ಸಚಿವ ಸಂತೋಷ ಲಾಡ್, ಧಾರವಾಡ ವಿವಿಯ ಸಿಂಡಿಕೇಟ್ ಸದಸ್ಯ ಡಾ.ಕಲ್ಮೇಶ ಸೇರಿದಂತೆ ವಿಶ್ವವಿದ್ಯಾಲಯದ ಅನೇಕ ವಿಭಾಗಗಳ ಮುಖ್ಯಸ್ಥರು ಭಾಗವಹಿಸಿ ಸನ್ಮಾನಿಸಿ ಗೌರವಿಸಿದರು. ಸಾಧಕ ವೇಣುಗೋಪಾಲ ನಾಯಕ ಅವರ ಸಾಧನೆಗೆ ಅವರ ಅಭಿಮಾನಿಗಳ ವೇದಿಕೆ ಅಧ್ಯಕ್ಷ ಬಸವರಾಜ ಕೆ.ಹರ್ಷ ವ್ಯಕ್ತಪಡಿಸಿದ್ದಾರೆ. ವೇಣುಗೋಪಾಲ ನಾಯಕ ಅವರು ದೇಶದಲ್ಲಿಯೇ 196ನೇ ರ್ಯಾಂಕ್ ಪಡೆಯುವ ಮೂಲಕ ಕಲ್ಯಾಣ ಕರ್ನಾಟಕದ ಜೊತೆಗೆ ನಮ್ಮ ಸುರಪುರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅವರ ತಂದೆ ವೆಂಕೋಬ ದೊರೆ ಒಬ್ಬ ಹೋರಾಟಗಾರರು ಅವರ ಮಗನ ಸಾಧನೆ ನಮ್ಮ ಭಾಗದ ಎಲ್ಲ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎನ್ನುವ ಉದ್ದೇಶ ದಿಂದ ಇಲ್ಲಿಯೂ ಒಂದು ಬೃಹತ್ ಕಾರ್ಯಕ್ರಮ ಹಮ್ಮಿಕೊಂಡು ವೇಣುಗೋಪಾಲ ನಾಯಕ ಅವರಿಗೆ ಅಭಿನಂದಿಸಲಾಗುವುದು ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
Bandh: ಮೂರು ದಿನ ಹಾಲು, ಸಿಗರೇಟ್, ಗುಟ್ಕಾ ಸಿಗಲ್ಲ! ರಾಜ್ಯಾದ್ಯಂತ ಬಂದ್ಗೆ ಕರೆ, ಕಾರಣವೇನು?
ರಾಜ್ಯದಲ್ಲಿ ಬೃಹತ್ ಮಟ್ಟದ್ದಲ್ಲಿ ಮತ್ತೊಂದು ಬಂದ್ಗೆ ಕರೆ ನೀಡಲಾಗಿದೆ. ಈ ಹಿಂದೆ ಒಂದು ದಿನ ಮಾತ್ರವೇ ಅಖಂಡ ಕರ್ನಾಟಕ ಬಂದ್ ನಡೆಯುತ್ತಿತ್ತು. ಆದರೆ ಈ ಬಾರಿ ಸತತ ಮೂರು ದಿನಗಳ ಕಾಲ ಬಂದ್ಗೆ ಕರೆ ನೀಡಲಾಗಿದೆ. ಇದೇ ತಿಂಗಳಿನಲ್ಲಿ ಬಂದ್ ನಡೆಯಲಿದ್ದು, ಮುಖ್ಯವಾಗಿ ದಿನನಿತ್ಯದ ಅಗತ್ಯ ವಸ್ತು ಹಾಲು ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಇದರೊಂದಿಗೆ ಗುಟ್ಕಾ,
ಕಾರಲ್ಲಿ ಕೂತಿದ್ದ ತೆಲಂಗಾಣದ ಕಾಂಗ್ರೆಸ್ ದಲಿತ ನಾಯಕನಿಗೆ ಗುಂಡೇಟು; ದುಷ್ಕರ್ಮಿಗಳಿಗಾಗಿ ಶೋಧ!
ತೆಲಂಗಾಣದಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನಾಯಕ ಅನಿಲ್ ಮಾರೆಲ್ಲಿಯವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಹೈದರಾಬಾದ್ನಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿನ ವೈಷಮ್ಯದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ ಮತ್ತು ತನಿಖೆ ಮುಂದುವರೆದಿದೆ.
ಉದ್ಯಾವರ: ಮೃತ ಮೀನುಗಾರ ಕುಟುಂಬಕ್ಕೆ ಸಚಿವರಿಂದ 10 ಲಕ್ಷ ಪರಿಹಾರ ಧನ ವಿತರಣೆ
ಉಡುಪಿ, ಜು.15: ಕಳೆದ ಶುಕ್ರವಾರ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸೈಂಟ್ ಮೇರೀಸ್ ದ್ವೀಪದ ಬಳಿ ಬೃಹತ್ ತೆರೆ ಬಡಿದು ದೋಣಿ ಮಗುಚಿ ನಡೆದ ದುರಂತದಲ್ಲಿ ಮೃತಪಟ್ಟ ಉದ್ಯಾವರ ಸಮೀಪದ ಪಿತ್ರೋಡಿಯ ಮೀನುಗಾರ ನೀಲಾಧರ ಜಿ.ತಿಂಗಳಾಯರ ಮನೆಗೆ ಇಂದು ಅಪರಾಹ್ನ ಭೇಟಿ ನೀಡಿದ ರಾಜ್ಯ ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ಅವರು ಮೃತರ ಕುಟುಂಬಕ್ಕೆ ಸರಕಾರದ ವತಿಯಂದ 10 ಲಕ್ಷ ರೂ.ಗಳ ಪರಿಹಾರದ ಚೆಕ್ನ್ನು ವಿತರಿಸಿದರು. ಮುರ್ಡೇಶ್ವರದಿಂದ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ಅಪರಾಹ್ನ ಉಡುಪಿಗೆ ಆಗಮಿಸಿದ ಸಚಿವ ವೈದ್ಯ ನೇರವಾಗಿ ಪಿತ್ರೋಡಿಯಲ್ಲಿರುವ ಮೃತ ಮೀನುಗಾರರ ಪುಟ್ಟ ಮನೆಗೆ ಬಂದು ಹೆಂಡತಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿಗೆ ಸಾಂತ್ವನ ಹೇಳಿ, ದೈರ್ಯ ತುಂಬಿ ಪರಿಹಾರದ ಚೆಕ್ನ್ನು ವಿತರಿಸಿದರು. ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಮೃತ ಮೀನುಗಾರರ ಕುಟುಂಬಕ್ಕೆ ಇದುವರೆಗೆ ಸಿಗುತಿದ್ದ 6 ಲಕ್ಷ ರೂ. ಪರಿಹಾರದ ಮೊತ್ತವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ವಿಶ್ವ ಮೀನುಗಾರಿಕಾ ದಿನದಂದು 10 ಲಕ್ಷ ರೂ.ಗಳಿಗೆ ಏರಿಸುವ ಘೋಷಣೆ ಮಾಡಿದ್ದಾರೆ. ಇದೀಗ ಪ್ರಥಮ ವಾಗಿ ನೀಲಾಧರ ತಿಂಗಳಾಯರ ಕುಟುಂಬಕ್ಕೆ ಈ ಮೊತ್ತದ ಚೆಕ್ನ್ನು ನೀಡಲಾಗಿದೆ ಎಂದರು. ಇದರೊಂದಿಗೆ ಇದೇ ಪ್ರಥಮ ಬಾರಿಗೆ ದುರಂತದಲ್ಲಿ ಮೀನುಗಾರಿಕಾ ದೋಣಿ ಹಾಗೂ ಬಲೆ ಸೇರಿದಂತೆ ವಿವಿಧ ಮೀನುಗಾರಿಕಾ ಪರಿಕರಗಳಿಗೆ ಉಂಟಾಗುವ ನಷ್ಟವನ್ನೂ ಭರಿಸುವ ನಿರ್ಧಾರ ಮಾಡಲಾಗಿದೆ. ಅದರಂತೆ ಈ ದೋಣಿಯ ಎಂಜಿನ್ ಹಾಗೂ ಬಲೆಗಳಿಗೆ ಆಗಿರುವ ನಷ್ಟಕ್ಕೆ ಐದು ಲಕ್ಷ ರೂ.ಗಳ ಪರಿಹಾರದ ಚೆಕ್ನ್ನು ಮೀನುಗಾರ ಮುಖಂಡರಿಗೆ ನೀಡಲಾಗಿದೆ. ಇದರಲ್ಲಿ ಉಳಿಯುವ ಹಣವನ್ನು ತಿಂಗಳಾಯರ ಕುಟುಂಬಕ್ಕೆ ನೀಡುವಂತೆ ತಿಳಿಸಲಾಗಿದೆ ಎಂದರು. ಕೆಲಸಮಯದಿಂದ ಅನಾರೋಗ್ಯದ ಕಾರಣದಿಂದ ಮೀನುಗಾರಿಕಾ ವೃತ್ತಿಗೆ ಹೋಗಲು ಅಸಾಧ್ಯವಾಗಿರುವ ನೀಲಾಧರರ ಪತ್ನಿ ವಸಂತಿ, ಮಕ್ಕಳಾದ ಫ್ಯಾಶನ್ ಡಿಸೈನಿಂಗ್ ಕೋರ್ಸ್ ಮಾಡುತ್ತಿರುವ ಪುತ್ರಿ ಲಿಶಾ ಹಾಗೂ ಪಿಯುಸಿಯಲ್ಲಿ ಓದುತ್ತಿರುವ ತ್ರಿಶಾರನ್ನು ಸಂತೈಸಿದ ಸಚಿವರು, ಮುಂದೆ ಅಗತ್ಯದ ಎಲ್ಲಾ ಸಹಾಯ ಮಾಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸೇರಿದಂತೆ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ವಿವಿಧ ಪಕ್ಷಗಳ ನಾಯಕರು ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
ದಾದಿಯರ ನೋಂದಣಿಗಾಗಿ ವಿಶೇಷ ಡಿಜಿ ಲಾಕರ್ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕರ್ನಾಟಕ ರಾಜ್ಯ ಶುಶ್ರೂಷಕ ಪರಿಷತ್ತು ವತಿಯಿಂದ ದಾದಿಯರ(ನರ್ಸ್) ನೋಂದಣಿಗಾಗಿ ವಿಶೇಷ ಡಿಜಿಲಾಕರ್ ಆಧಾರಿತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದು, ದೇಶದಲ್ಲಿ ಮೊದಲ ಬಾರಿಗೆ ಈ ತಂತ್ರಜ್ಞಾನವನ್ನು ನಮ್ಮ ರಾಜ್ಯದಲ್ಲೇ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಇಲ್ಲಿನ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿದ್ದ ‘ವಿಶ್ವ ಯುವ ಕೌಶಲ್ಯ ದಿನಾಚರಣೆ’ ಅಂಗವಾಗಿ ‘ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಸನ್ಮಾನ’ ಹಾಗೂ ಕರ್ನಾಟಕ ರಾಜ್ಯ ಶುಶ್ರೂಷಕ ಪರಿಷತ್ತು ವತಿಯಿಂದ ‘ನರ್ಸ್ಗಳಿಗೆ ಡಿಜಿಲಾಕರ್ ನೋಂದಣಿ ಪ್ರಮಾಣಪತ್ರ ವಿತರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನರ್ಸ್ಗಳಿಗೆ ಆಧಾರ್ ಆಧಾರಿತ ಡಿಜಿಲಾಕರ್ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುವ ಹೊಸ ತಂತ್ರಜ್ಞಾನವನ್ನು ಪರಿಚಯಿಸಲಾಗಿದೆ. ಈ ವ್ಯವಸ್ಥೆಯನ್ನು ಯುಐಡಿಎಐ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ(ಆರ್ಜಿಯುಎಚ್ಎಸ್) ಮತ್ತು ಕರ್ನಾಟಕ ರಾಜ್ಯ ಶುಶ್ರೂಷಕ ಪರಿಷತ್ತಿನ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಇ-ಕೆವೈಸಿ ಮೂಲಕ ಆಧಾರ್ ಸರ್ವರ್ನಿಂದ ದಾದಿಯರ ವೈಯಕ್ತಿಕ ಡೇಟಾ, ವಿಳಾಸ, ಫೋಟೋ ಮತ್ತು ಇತರ ವಿವರಗಳನ್ನು ನೇರವಾಗಿ ಪಡೆಯಬಹುದು. ಈ ಹಿಂದೆ, ವಿವಿಧ ಜಿಲ್ಲೆಗಳ ನರ್ಸಿಂಗ್ ಅಭ್ಯರ್ಥಿಗಳು ನೋಂದಣಿಗಾಗಿ ಬೆಂಗಳೂರಿನಲ್ಲಿರುವ ಕೌನ್ಸಿಲ್ನ ಕೇಂದ್ರ ಕಚೇರಿಗೆ ಪ್ರಯಾಣಿಸಬೇಕಾಗಿತ್ತು. ಈಗ ಡಿಜಿಲಾಕರ್ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೇರವಾಗಿ ದಾದಿಯರಿಗೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಓದುತ್ತಿರುವ ಮಕ್ಕಳಿಗೆ ಜಾಗತಿಕ ಮಟ್ಟದಲ್ಲಿ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಪ್ರಯತ್ನ ನಡೆಸುತ್ತಿದ್ದು, ಶಿಕ್ಷಣ ಜೊತೆಗೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು. ರಾಜ್ಯದ ಯುವಕರಿಗೆ ವೃತ್ತಿ ಕೌಶಲ್ಯವನ್ನು ಒದಗಿಸಲು ನಮ್ಮ ಸರಕಾರವು ಬದ್ದವಾಗಿದ್ದು, ಮಲ್ಟಿ ಸ್ಕಿಲ್ ಡೆವೆಲಪ್ವೆಂಟ್ ಸೆಂಟರ್ ಸ್ಥಾಪಿಸುವ ಮೂಲಕ ಯುವರಿಗೆ ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತಿದೆ. ಸೆಂಟರ್ನಲ್ಲಿ ಈಗಾಗಲೇ 2,90,000 ಪದವೀಧರರು ಹಾಗೂ ಡಿಪ್ಲೋಮಾ ಶಿಕ್ಷಣ ಮುಗಿಸಿದವರು ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ 2,18,000 ಯುವಕರು ಯುವನಿಧಿಯನ್ನು ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ನಾವು ಪದವೀಧರರಿಗೆ ಹಣವನ್ನು ನೀಡಿದರೆ ಸಾಲದು, ಅವರಿಗೆ ಕೌಶಲ್ಯವನ್ನು ನೀಡಬೇಕು. ಹೀಗಾಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡುತ್ತಿದ್ದೇವೆ. ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡು ವಿದೇಶದಲ್ಲಿ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುತ್ತಿದ್ದೇವೆ. ಇದರಿಂದ ನಮ್ಮ ಮಕ್ಕಳಿಗೆ ವಿದೇಶದಲ್ಲಿಯೂ ಕೆಲಸ ದೊರೆಯುವಂತಾಗುತ್ತದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೋಷಿನ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ವಿಶ್ವ ಕೌಶಲ್ಯ ದಿನದಂದು ಸಾಧಕರಿಗೆ ಸನ್ಮಾನ: ಇದೇ ವೇಳೆ ಫ್ರಾನ್ಸ್ ನ ಲಿಯಾನ್ನಲ್ಲಿ ನಡೆದ ವರ್ಲ್ಡ್ ಸ್ಕಿಲ್ಸ್ ಸ್ಪರ್ಧೆಯಲ್ಲಿ ಶ್ರೇಷ್ಠತೆಯ ಪದಕಗಳನ್ನು ಗೆದ್ದ ಕರ್ನಾಟಕದ ನಾಲ್ವರು ಸ್ಪರ್ಧಿಗಳನ್ನು ಸೇರಿ ದಿಲ್ಲಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪದಕಗಳನ್ನು ಗೆದ್ದ ರಾಜ್ಯದ 48 ಮಂದಿ ಸ್ಪರ್ಧಿಗಳನ್ನು ಸನ್ಮಾನಿಸಲಾಯಿತು.
ಮೀನುಗಾರರ ಜೀವ ಮುಖ್ಯ, ಹವಾಮಾನ ಮುನ್ಸೂಚನೆ ಪಾಲಿಸಿ: ಕರಾವಳಿ ಭಾಗದ ಮೀನುಗಾರ ಬಂಧುಗಳಿಗೆ ಸಚಿವರ ಮನವಿ
ಉಡುಪಿ: ಮೀನುಗಾರರ ಬದುಕು ಪ್ರಕೃತಿಯೊಂದಿಗೆ ಸೆಣಸಾಟ ಹೌದು. ಆದರೆ ಮೀನುಗಾರರ ಜೀವ, ಬದುಕು ಅತಿ ಮುಖ್ಯ. ಹೀಗಾಗಿ ಮಳೆಗಾಲದ ಸಂದರ್ಭದಲ್ಲಿ ಅಪಾಯವನ್ನು ತೆಗೆದುಕೊಂಡು ಮೀನುಗಾರಿಕೆಗೆ ಇಳಿಯಬೇಡಿ. ಕಾಲಕಾಲಕ್ಕೆ ಹವಾಮಾನ ಇಲಾಖೆ ನೀಡುವ ಮುನ್ಸೂಚನೆ ಗಳನ್ನು ದಯವಿಟ್ಟು ಎಲ್ಲಾ ಮೀನುಗಾರರು ಪಾಲಿಸುವಂತೆ ರಾಜ್ಯ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಮನವಿ ಮಾಡಿದ್ದಾರೆ. ಇತ್ತೀಚೆಗೆ ಮೀನುಗಾರಿಕೆ ವೇಳೆ ದೋಣಿ ಮಗುಚಿ ನಡೆದ ದುರಂತದಲ್ಲಿ ಮೃತಪಟ್ಟ ಪಿತ್ರೋಡಿಯ ನೀಲಾಧರ ತಿಂಗಳಾಯರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಬಳಿಕ ಸಚಿವರು ಸುದ್ದಿಗಾರ ರೊಂದಿಗೆ ಮಾತನಾಡುತಿದ್ದರು. ಈ ವರ್ಷ ಕಳೆದ ಕೆಲವು ದಿನಗಳಿಂದ ಮೀನುಗಾರರಿಕೆ ಸಂದರ್ಭದಲ್ಲಿ ಹಲವು ದುರಂತಗಳು ಸಂಭವಿ ಸಿದ್ದು, ಹಲವಾರು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಮೊದಲು ಉಡುಪಿಯಲ್ಲಿ, ನಂತರ ಭಟ್ಕಳ ಹಾಗೂ ಮುರ್ಡೇಶ್ವರಗಳಲ್ಲಿ, ಇದೀಗ ಇಂದು ಗಂಗೊಳ್ಳಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ ಮೂವರು ನಾಪತ್ತೆಯಾಗಿರುವ ಮಾಹಿತಿ ಬಂದಿದೆ. ಇಂಥ ಘಟನೆಗಳು ಮತ್ತೆ ಮತ್ತೆ ಸಂಭವಿಸುತ್ತಿರು ವುದು ಅತೀವ ನೋವು ತಂದಿದೆ ಈ ಎಲ್ಲಾ ಮೀನುಗಾರ ಕುಟುಂಬಗಳಿಗೆ ಸರಕಾರದ ವತಿಯಿಂದ ಎಲ್ಲಾ ರೀತಿಯ ಸಹಾಯ ಮಾಡಲಾಗುವುದು ಎಂದರು. ನೀಲಾಧರರು ಇದ್ದ ದೋಣಿ ಮಗುಚಿ ಬಿದ್ದು ಅವರನ್ನು ತಕ್ಷಣ ಮೇಲಕ್ಕೆತ್ತಿ ತತ್ಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರೂ ಉಳಿಸಿಕೊಳ್ಳಲಾಗಲ್ಲಿಲ್ಲ. ಜನಪ್ರತಿನಿ ಧಿಗಳು ಹಾಗೂ ಅಧಿಕಾರಿಗಳು ಮೃತರ ಮನೆಗೆ ಭೇಟಿ ನೀಡಿ ಅಗತ್ಯ ಸಹಕಾರ ನೀಡಿದ್ದಾರೆ. ಮುಂದೆಯೂ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದರು. ಮುರ್ಡೇಶ್ವರದಲ್ಲಿ ಇತ್ತೀಚೆಗೆ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಪ್ರಾಕೃತಿಕ ವಿಕೋಪದ ವೇಳೆ ಮೀನುಗಾರರಿಗೆ ನೀಡುವ ಪರಿಹಾರದ ಮೊತ್ತವನ್ನು 6 ಲಕ್ಷ ರೂ.ನಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಿದ್ದಾರೆ. ಅದೇ ರೀತಿ ದುರಂತದಿಂದ ಹಾನಿಗೊಳಗಾಗುವ ದೋಣಿ ಹಾಗೂ ಇತರ ಪರಿಕರಗಳಿಗೂ ಪರಿಹಾರದ ಘೋಷಣೆ ಮಾಡಿದ್ದಾರೆ. ಇಲ್ಲಿ ಅದನ್ನು ಪ್ರಥಮ ಬಾರಿಗೆ ವಿತರಿಸಲಾಗಿದೆ ಎಂದರು. ರಾಜ್ಯ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ತೀರ ಭಾಗದಲ್ಲಿ ಇಂತಹ ದುರಂತ ಮತ್ತೆ ಮರುಕಳಿಸದಂತೆ ಮೀನುಗಾರರು ಎಚ್ಚರಿಕೆಯಿಂದ ಇರಬೇಕು. ಕಾಲಕಾಲಕ್ಕೆ ಹವಾಮಾನ ಇಲಾಖೆ ಯಿಂದ ನೀಡಲಾಗುವ ಮುನ್ಸೂಚನೆಗಳನ್ನು ಪಾಲಿಸಬೇಕು ಎಂದ ಅವರು, ಸಮುದ್ರ ಪ್ರಕ್ಷಬ್ಧವಾಗಿರು ವುದರಿಂದ ಕರಾವಳಿ ಭಾಗದ ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ಇಳಿಯದಂತೆ ಮನವಿ ಮಾಡಿದರು.
ಕಾಪು| ಎಸ್ವೈಎಸ್ 'ಸೌಹಾರ್ದ ಸಂಚಾರ'
ಕಾಪು: ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು 'ಹೃದಯ ಹೃದಯಗಳನ್ನು ಬೆಸೆಯೋಣ' ಎಂಬ ಧ್ಯೇಯ ವಾಕ್ಯದೊಂದಿಗೆ ಎಲ್ಲ ಜಾತಿ, ಮತಗಳ ಜನರನ್ನು ಸೇರಿಸಿ ನಡೆಸುವ 'ಸೌಹಾರ್ದ ಸಂಚಾರ'ವು ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆಯಲ್ಲಿ ಕಾಪುವಿನಲ್ಲಿ ನಡೆಯಿತು. ಕಾಪುನಲ್ಲಿ ನಡೆದ ಜಾಥಾ ಮತ್ತು ಸಾರ್ವಜನಿಕ ಸಭೆಯಲ್ಲಿ ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಸಂದೇಶ ಭಾಷಣ ಮಾಡಿದರು. ಶೈಖುನಾ ಅಹ್ಮದ್ ಮುಸ್ಲಿಯಾರ್ ಕಾಪು ಖಾಝಿ, ರೆ.ಫಾ. ಅನಿಲ್ ರೋಡ್ರಿಗಸ್ ಸಾವೂದ್ ಮಾಯ್ ಚರ್ಚ್ ಶಿರ್ವ, ದೇವಿಪ್ರಸಾದ್ ಶೆಟ್ಟಿ ಬೆಳಪು, ಬಂಟರ ಸಂಘ ಪಡುಬಿದ್ರೆ ಅಧ್ಯಕ್ಷ, ಯೋಗೀಶ್ ಶೆಟ್ಟಿ ಕಾಪು ಅಧ್ಯಕ್ಷರು, ಜನತಾದಳ ಉಡುಪಿ ಜಿಲ್ಲೆ, ಮೊಹಿದ್ದೀನ್ ಪಡುಬಿದ್ರೆ ನಿವೃತ್ತ ಬಿ.ಎಸ್.ಎಫ್. ಯೋಧರು, ಸಾದಿಕ್ ಕೆ.ಪಿ. ಎಸ್.ಡಿ.ಪಿ.ಐ. ಮಲ್ಲಾರು ಅಧ್ಯಕ್ಷರು ಮೊದಲಾದವರು ಮಾತನಾಡಿದರು. ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಫಾರೂಕ್ ಚಂದ್ರನಗರ, ಭಾಸ್ಕರ್ ಕುಮಾರ್ ಮಜೂರು ಗ್ರಾಮ ಪಂಚಾಯತ್, ರವೀಂದ್ರ ಮಲ್ಲಾರ್ ರಾಣೆಯಾರ್ ಸಮಾಜ ಮುಖಂಡರು, ದೀಪಕ್ ಕುಮಾರ್ ಎರ್ಮಾಳು ಸಮಾಜ ಸೇವಕರು, ಶರ್ಪುದ್ದೀನ್ ಶೇಖ್ ಅಧ್ಯಕ್ಷರು ಅಲ್ಪಸಂಖ್ಯಾತರ ಘಟಕ ಉಡುಪಿ ಜಿಲ್ಲೆ, ಎಂ.ಎ. ಗಫೂರ್ ಮೂಳೂರು, ಉದ್ಯಮಿ ನಾಸೀರ್, ನಿಯಾಝ್ ಪಡುಬಿದ್ರಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷರುಗಳಾದ ಸೈಯದ್ ಇಲ್ಯಾಸ್ ತಂಙಳ್ ಎಮ್ಮೆಮಾಡು, ಸೈಯದ್ ಶಾಫೀ ನಈಮೀ ತಂಙಳ್ ಮಾರ್ನಹಳ್ಳಿ, ಸೈಯದ್ ಹಾಮಿಮ್ ತಂಙಳ್ ಚಿಕ್ಕಮಂಗಳೂರು, ಇಬ್ರಾಹಿಂ ಸಖಾಫಿ ಪಯೋಟ, ಇಸ್ಹಾಖ್ ಝುಹ್ರಿ ಕಾನಕೆರೆ, ಮಹ್ಬೂಬ್ ಸಖಾಫಿ ಕಿನ್ಯ, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್, ಅಶ್ರಫ್ ಎಮ್ಮೆಮಾಡು, ಅತ್ತಾವುಳ್ಳ ಮೈಸೂರು, ಇಬ್ರಾಹಿಂ ಮೂಡಿಗೆರೆ, ಸಲೀಂ ಕನ್ಯಾಡಿ, ಕಲಂದರ್ ಕಕ್ಕೆಪದವು, ಯಾಕೂಬ್ ಸಅದಿ ನಾವೂರು, ನವಾಝ್ ಸಖಾಫಿ ಅಡ್ಯಾರ್, ಫಾರೂಕ್ ಶೇಡಿಗುರಿ ಮೊದಲಾದವರು ಉಪಸ್ಥಿತರಿದ್ದರು. ಎಂ.ಸಲೀಂ ಪಕೀರ್ಣಕಟ್ಟೆ ಸ್ವಾಗತಿಸಿದರು. ಕೆ.ಎ ಅಬ್ದುರ್ರಹ್ಮಾನ್ ರಝ್ವಿ ಕಾರ್ಯಕ್ರಮ ನಿರೂಪಿಸಿದರು. ಎಂ.ಕೆ ಇಬ್ರಾಹಿಂ ಮಜೂರು ವಂದಿಸಿದರು.
ಯಾದಗಿರಿ | ಜು.18ರಂದು ದಲಿತರ ಭೂಮಿ, ವಸತಿ ಹಕ್ಕಿಗಾಗಿ ಹೋರಾಟ : ಮಾಳಪ್ಪ ಕಿರದಳ್ಳಿ
ಸುರಪುರ: ರಾಜ್ಯ ಮತ್ತು ದೇಶದಲ್ಲಿನ ಎಲ್ಲ ದಲಿತರಿಗೆ ಭೂಮಿ ಹಾಗೂ ವಸತಿ ಹಕ್ಕಿಗಾಗಿ ನಮ್ಮ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳ ತಹಶೀಲ್ದಾರ್ ಕಚೇರಿ ಮುಂದೆ ಜು.18 ರಂದು ಒಂದು ದಿನದ ಧರಣಿಯನ್ನು ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನೆಯ ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಸರಕಾರ ಒಬ್ಬ ವ್ಯಕ್ತಿ ಎಷ್ಟು ಭೂಮಿಯನ್ನು ಹೊಂದಬೇಕು ಮತ್ತು ಅದಕ್ಕಿಂತ ಹೆಚ್ಚಿನ ಭೂಮಿಯನ್ನು ದಲಿತರಿಗೆ ಹಂಚಿಕೆ ಮಾಡಬೇಕು ಎಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರರು ಹೇಳಿದ್ದಾರೆ. ಆದರೆ ಇಂದು ಎಲ್ಲವೂ ನಮಗೆ ಇರಲಿ ಎನ್ನುವಂತೆ ದೊಡ್ಡ ದೊಡ್ಡ ಬಂಡವಾಳ ಶಾಹಿಗಳು ಎಲ್ಲ ಭೂಮಿಯನ್ನು ನುಂಗುತ್ತಿದ್ದು, ಇದರಿಂದ ದಲಿತರಿಗೆ ಭೂಮಿ ಇಲ್ಲದಂತಾಗಿದೆ .ಇದನ್ನು ವಿರೋಧಿಸಿ ಧರಣಿ ನಡೆಯಲಿದೆ ಎಂದರು. ಈ ವೇಳೆ ಹೋರಾಟದ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆ ತಾಲೂಕು ಸಂಚಾಲಕ ಶರಣಪ್ಪ ತಳವಾರಗೇರ, ಹುಣಸಗಿ ತಾಲೂಕು ಸಂಚಾಲಕ ಸಿದ್ರಾಮಪ್ಪ ಚೆನ್ನೂರ, ಗೊಲ್ಲಾಳಪ್ಪ ಕಟ್ಟಿಮನಿ, ಪರಶುರಾಮ ಸಾಸನೂರ ವಕೀಲ, ಪ್ರಕಾಶ ಕಟ್ಟಿಮನಿ ವಕೀಲ, ಸಾಹೇಬಗೌಡ ಟಣಕೇದಾರ, ಕೆಂಚಪ್ಪ ಕಟ್ಟಿಮನಿ, ಹೊನ್ನಪ್ಪ ಕಟ್ಟಿಮನಿ, ಮರೆಪ್ಪ ಕಟ್ಟಿಮನಿ, ಹಣಮಂತ ಅಂಬಲಿಹಾಳ ಕಿರದಳ್ಳಿ ಉಪಸ್ಥಿತರಿದ್ದರು. ದೇವನಹಳ್ಳಿಯಲ್ಲಿ ರೈತರ ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳಲು ಬಂಡವಾಳ ಶಾಹಿಗಳ ಜೊತೆ ಸೇರಿ ಸರಕಾರ ಮುಂದಾಗಿತ್ತು. ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರು ಅಲ್ಲಿಯ ಹೋರಾಟದಲ್ಲಿ ಭಾಗವಹಿಸಿ ಸರಕಾರಕ್ಕೆ ಭೂಮಿ ನೀಡುವುದಿಲ್ಲ ಎಂದು ಹೋರಾಟ ಮಾಡಿದ್ದರಿಂದ ಸರಕಾರ ಇಂದು ಭೂಮಿ ಪಡೆಯುವ ಯೋಚನೆ ಕೈಬಿಟ್ಟಿರುವುದು ಸಂತೋಷ ತಂದಿದೆ. ಎಲ್ಲ ಹೋರಾಟಗಾರರಿಗೆ ಮತ್ತು ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. - ರಾಮಣ್ಣ ಕಲ್ಲದೇವನಹಳ್ಳಿ ರಾಜ್ಯ ಸಂ.ಸಂಚಾಲಕರು ಕೆಡಿಎಸ್ಎಸ್ (ಅಂಬೇಡ್ಕರ್ ವಾದ)
ಮಹಾನಗರ ಪಾಲಿಕೆ ನೌಕರರೊಂದಿಗೆ ಸಂಧಾನ ಸಭೆ ಯಶಸ್ವಿ: ಮುಷ್ಕರ ವಾಪಸ್
ಬೆಂಗಳೂರು : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಅವರು ಮಹಾನಗರ ಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮತ್ತು ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ಪದಾಧಿಕಾರಿಗಳೊಂದಿಗೆ ಸಚಿವ ಬಿ.ಎಸ್.ಸುರೇಶ್ ಸಭೆ ನಡೆಸಿದರು. ಮಹಾನಗರ ಪಾಲಿಕೆಗಳ ಸಾಮಾನ್ಯ ನೇಮಕಾತಿ ನಿಯಮಗಳು 2011ಕ್ಕೆ ಸಮಗ್ರ ತಿದ್ದುಪಡಿ ಮಾಡುವುದು, ಮಹಾನಗರ ಪಾಲಿಕೆ ನೌಕರರನ್ನು ಪೂರ್ಣ ಪ್ರಮಾಣದಲ್ಲಿ ಸರಕಾರಿ ನೌಕರರೆಂದು ಪರಿಗಣಿಸುವುದು, ಸರಕಾರಿ ನೌಕರರ ರೀತಿಯಲ್ಲಿ ಮಹಾನಗರ ಪಾಲಿಕೆಗಳ ಅಧಿಕಾರಿಗಳು, ನೌಕರರಿಗೂ ಕೆಜಿಐಡಿ, ಜಿಐಎಸ್ ಮತ್ತು ಜಿಪಿಎಫ್ ಸೌಲಭ್ಯಗಳನ್ನು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನೌಕರರ ಸಂಘಗಳು ಸರಕಾರದ ಮುಂದಿಟ್ಟಿದ್ದವು. ಈ ಬಗ್ಗೆ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್, ಪಾಲಿಕೆ ನೌಕರರಿಗೆ ಸಕಾಲಕ್ಕೆ ವೇತನ ನೀಡುವುದು, ಸಿ ಅಂಡ್ ಆರ್ ನಿಯಮಗಳಿಗೆ ತಿದ್ದುಪಡಿ ತರುವ ಕುರಿತು ಆರ್ಥಿಕ ಇಲಾಖೆ ಅನುಮೋದನೆ ಪಡೆಯುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು. ಪೌರಾಡಳಿತ ಆಯುಕ್ತರ ಹುದ್ದೆಗಳನ್ನು ಸೃಜಿಸುವಂತೆ ನೌಕರರು ಬೇಡಿಕೆ ಇಟ್ಟಿದ್ದರು. ಆದರೆ, ಕಾನೂನು ಪರಿಮಿತಿಯೊಳಗೆ ವಲಯ ಆಯುಕ್ತರ ಹುದ್ದೆ ಸೃಜಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಆರ್ಥಿಕ ಇಲಾಖೆ ಅಭಿಪ್ರಾಯ ಬಂದ ತಕ್ಷಣ ಕ್ರಮ ವಹಿಸುವುದಾಗಿ ಭರವಸೆ ನೀಡಿರುವುದಾಗಿ ಅವರು ಹೇಳಿದರು. ಪರಿಸರ ಇಂಜಿನಿಯರ್ ನೇಮಕಕ್ಕೆ ಸೂಚನೆ: ಮಹಾನಗರ ಪಾಲಿಕೆಗಳಲ್ಲಿ ಸಾಕಷ್ಟು ಪರಿಸರ ಇಂಜಿನಿಯರ್ ಗಳ ಹುದ್ದೆಗಳು ಖಾಲಿ ಇವೆ. ಇದರಿಂದ ದೈನಂದಿನ ಕರ್ತವ್ಯಕ್ಕೆ ಅಡ್ಡಿಯಾಗುತ್ತಿದೆ ಎಂಬ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಮಂಜೂರಾಗಿರುವ ಪರಿಸರ ಇಂಜಿನಿಯರ್ ಗಳ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ತಿಳಿಸಿದರು. ಪಾಲಿಕೆ ನೌಕರರಿಗೆ ಗುಂಪು ವಿಮೆ: ಸರಕಾರಿ ನೌಕರರ ಮಾದರಿಯಲ್ಲಿ ಪಾಲಿಕೆ ನೌಕರರಿಗೂ ಗುಂಪು ವಿಮೆ ಯೋಜನೆ (ಜಿಐಎಸ್) ಜಾರಿಗೆ ತರುವ ಬಗ್ಗೆ ಸರಕಾರ ಮುಕ್ತ ಮನಸ್ಸು ಹೊಂದಿದೆ. ವಿಮಾ ಕಂತಿನ ಮೊತ್ತದಲ್ಲಿ ನೌಕರರು ತಮ್ಮ ಪಾಲಿನ ಮೊತ್ತವನ್ನು ಪಾವತಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಲಿಕೆಗಳು ನೌಕರರ ಗುಂಪು ವಿಮೆ ಯೋಜನೆಗೆ ಉಳಿದ ಮೊತ್ತವನ್ನು ಭರಿಸುವುದಾದರೆ ಆಗಬಹುದಾದ ಆರ್ಥಿಕ ಹೊರೆಯನ್ನು ಗಮನಿಸಿ ಅಂತಿಮ ನಿರ್ಧಾರ ಕೈಗೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಸುರೇಶ್ ಹೇಳಿದರು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗೆ ಪ್ರೋತ್ಸಾಹ : ಪ್ರತಿ ವರ್ಷ ಪಾಲಿಕೆಗಳ ನೌಕರರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಆರ್ಥಿಕ ಹೊರೆಯಾಗದ ರೀತಿಯಲ್ಲಿ ಪಾಲಿಕೆಗಳಿಂದಲೇ ವೆಚ್ಚ ಭರಿಸಲು ಸೂಚನೆ ನೀಡಲಾಗಿದ್ದು, ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ನೌಕರರ ಇನ್ನಿತರ ಬೇಡಿಕೆಗಳನ್ನು ಹಂತ-ಹಂತವಾಗಿ ಈಡೇರಿಸುವ ಭರವಸೆ ನೀಡಲಾಗಿದೆ ಎಂದು ಸುರೇಶ್ ತಿಳಿಸಿದರು. ಪಾಲಿಕೆಗಳಿಗೂ ಜ್ಯೋತಿ ಸಂಜೀವಿನಿ: ಸರಕಾರಿ ನೌಕರರಿಗೆ ಜಾರಿಗೆ ತಂದಿರುವ ಜ್ಯೋತಿ ಸಂಜೀವಿನಿ ಆರೋಗ್ಯ ವಿಮೆಯನ್ನು ಪಾಲಿಕೆ ನೌಕರರಿಗೂ ವಿಸ್ತರಣೆ ಮಾಡುವ ಬಗ್ಗೆ ಸಹಮತ ವ್ಯಕ್ತಪಡಿಸಲಾಗಿದೆ. ಈ ಯೋಜನೆಯಡಿ ನೌಕರರು ತಮ್ಮ ಪಾಲಿನ ವಿಮಾ ಮೊತ್ತ ಮತ್ತು ಅದಕ್ಕೆ ಸಮಾನವಾದ ಮೊತ್ತವನ್ನು ಪಾಲಿಕೆಗಳು ಭರಿಸುವ ಸಾಧಕ-ಭಾದಕಗಳ ಬಗ್ಗೆ ಪರಿಶೀಲಿಸಲಾಗುತ್ತದೆ. ಇದಲ್ಲದೇ, ನೌಕರರ ಚಿಕಿತ್ಸಾ ವೆಚ್ಚವನ್ನು ಮಂಜೂರು ಮಾಡುವ ಅಧಿಕಾರವನ್ನು ಆಯಾ ಪಾಲಿಕೆಗಳ ಆಯುಕ್ತರಿಗೆ ನೀಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಪ್ರಕಟಿಸಿದರು. ಈ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಮತ್ತು ಪೌರಾಡಳಿತ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು. ಮುಷ್ಕರ ವಾಪಸ್: ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ನಗರಾಭಿವೃದ್ಧಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಷಷಕ್ಷರಿ ಮತ್ತು ಅಮೃತರಾಜ್ ಅವರು ಮುಷ್ಕರವನ್ನು ವಾಪಸ್ ಪಡೆದಿರುವುದಾಗಿ ಘೋಷಿಸಿದರಲ್ಲದೇ, ಸಚಿವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಬೀದರ್ : ಔರಾದ್ ಪಟ್ಟಣದ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯ ಹಿನ್ನಲೆ ಜಿಲ್ಲೆಯ ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ ಮನೋವೈದ್ಯರ ಮೂಲಕ ಪ್ರತಿ ವಾರ ಸಮಾಲೋಚನೆ ನಡೆಸಲು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅವರು ಅಧಿಕಾರಿಗೆ ನಿರ್ದೇಶನ ನೀಡಿದರು. ಇಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ್ ನಿರಗುಡೆ ಮತ್ತು ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಕಿರಣ ಪಾಟೀಲ್ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳ ಜತೆ ತುರ್ತು ಸಭೆ ನಡೆಸಿ ಅಗತ್ಯ ಸಲಹೆಗಳು ನೀಡಿದ್ದಾರೆ. ಜಿಲ್ಲೆಯ ಸಿಎಚ್ಸಿ ಮತ್ತು ಪಿಎಚ್ಸಿ ಕೇಂದ್ರಗಳಲ್ಲಿನ ವೈದ್ಯಾಧಿಕಾರಿಗಳು ಪ್ರತಿ ವಾರಕ್ಕೊಮ್ಮೆ ತಮ್ಮ ವ್ಯಾಪ್ತಿಯ ವಸತಿ ನಿಲಯಗಳಿಗೆ ಭೇಟಿ ನೀಡಬೇಕು. ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ಅವರ ಚಲನವಲನಗಳಲ್ಲಿ ವ್ಯತ್ಯಾಸ, ಖಿನ್ನತೆಯಂತಹ ವಿಷಯಗಳು ಕಂಡುಬಂದಲ್ಲಿ ವೈದ್ಯರು ಹಾಗೂ ನಿಲಯ ಪಾಲಕರು ತಮ್ಮ ಇಲಾಖೆಯ ಮುಖ್ಯಸ್ಥರಿಗೆ ಮಾಹಿತಿ ನೀಡಬೇಕು. ಈ ಮೂಲಕ ಮಕ್ಕಳ ಆರೋಗ್ಯದ ಸ್ಥಿರತೆ ಕಾಪಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ್ ನಿರಗುಡೆ ಅವರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಮತ್ತು ನಿಲಯ ಪಾಲಕರ ಮಾಹಿತಿಯನ್ನು ಅಧಿಕಾರಿಗಳು ಒಂದೆರಡು ದಿನದಲ್ಲಿ ನೀಡಬೇಕು. ಹಾಸ್ಟೆಲ್ ಗಳಿಗೆ ಆಯಾ ವ್ಯಾಪ್ತಿಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಮನೋವೈದ್ಯರಾದ ಡಾ.ಅಮಲ್ ಮತ್ತು ಡಾ.ರಾಘವೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಾಯ್ಡು ಸರ್ಕಾರ ಇಳಿಸಿದ ಎಣ್ಣೆ ಕಿಕ್ಗೆ ಮದ್ಯಪ್ರಿಯರ ದಿಲ್ ಖುಷ್ : ಇಲ್ಲೂ ಯಾವಾಗ ಸ್ವಾಮಿ ಅಂತಿದ್ದಾರೆ!
Liquor price cut down in Andhra Pradesh : ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಸರ್ಕಾರ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ನನಗೆ ಮದ್ಯದಿಂದ ಬರುವ ಆದಾಯ ಅಷ್ಟು ಮುಖ್ಯವಲ್ಲ, ಜನರ ಹಿತ ಮುಖ್ಯ ಎಂದು, ಲೋಕಲ್ ಎಣ್ಣೆಯನ್ನು ಬಂದ್ ಮಾಡಲು ಸೂಚಿಸಿದ್ದಾರೆ. ಅದಾದ ಮೇಲೂ, ತಿಂಗಳಿಗೆ ನೂರಾರು ಕೋಟಿ ರೂಪಾಯಿ ಸರ್ಕಾರಕ್ಕೆ ಹಣ ಹರಿದು ಬರುತ್ತಿದೆ.
Karnataka Rains: ಚಂಡಮಾರುತ ಪ್ರಸರಣ: 3 ದಿನ ರಾಜ್ಯಕ್ಕೆ ಭಾರೀ ಮಳೆ, ಆರೆಂಜ್ ಅಲರ್ಟ್! ಶಾಲೆಗಳಿಗೆ ರಜೆ ನಿರೀಕ್ಷೆ
ಬೆಂಗಳೂರು, ಜುಲೈ 15: ಭೂಮಿ ಮೇಲ್ಮೈ ಹಾಗೂ ಸಮುದ್ರ ಮೇಲ್ಮೈನಲ್ಲಿ ತೀವ್ರ ರೂಪದ ಹವಾಮಾನ ವೈಪರೀತ್ಯಗಳು ಉಂಟಾಗಿವೆ. ಈ ಕಾರಣದಿಂದಾಗಿ ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರಿಯಿಂದ ಧಾರಾಕಾರ ಮಳೆ ಆಗುವ ಸಾಧ್ಯತೆ. ಹೀಗಾಗಿ ಕರಾವಳಿ ಹಾಗೂ ಒಳನಾಡು ಸೇರಿ 07 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ
ದೇವನಹಳ್ಳಿ ಹೋರಾಟ ಇತಿಹಾಸ ದಾಖಲಿಸಿದೆ : ಬಡಗಲಪುರ ನಾಗೇಂದ್ರ
ಬೆಂಗಳೂರು : ದೇವನಹಳ್ಳಿ-ಚನ್ನರಾಯಪಟ್ಟಣ ರೈತರ ಹೋರಾಟ ಇತಿಹಾಸ ದಾಖಲಿಸಿದೆ. ರಾಜ್ಯದಲ್ಲಿ ಮುಂದಿನ ಯಾವುದೇ ಭೂ ಹೋರಾಟಗಳಿಗೆ ದೇವನಹಳ್ಳಿಯ ರೈತರ ಹೋರಾಟ ಮಾದರಿಯಾಗಿದೆ ಎಂದು ಸಂಯುಕ್ತ ಹೋರಾಟ-ಕರ್ನಾಟಕದ ಮುಖಂಡ ಬಡಗಲಪುರ ನಾಗೇಂದ್ರ ತಿಳಿಸಿದರು. ಮಂಗಳವಾರ ನಗರದ ಗಾಂಧಿಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೂ ಭೂಮಿಗೂ ಬಿಡಿಸಲಾಗದ ಸಂಬಂಧವಿದೆ. ಅದನ್ನು ಯಾವ ಸರಕಾರ, ಕಾರ್ಪೋರೇಟ್ ಕುಳಗಳೂ ದೂರ ಮಾಡಲು ಸಾಧ್ಯವಿಲ್ಲ ಎಂದರು. ಕರ್ನಾಟಕದ ಸಮಸ್ತ ಚಳುವಳಿಗಳು, ಹೋರಾಟಗಾರರು, ಕಾರ್ಮಿಕರು, ಬುದ್ಧಿಜೀವಿಗಳು, ಕಲಾವಿದರು ಸೇರಿದಂತೆ ಹಲವಾರು ಮಂದಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ದೇವನಹಳ್ಳಿಯ ರೈತರ ಹೋರಾಟದ ಪರವಾಗಿ ಕೆಲಸ ಮಾಡಿದ್ದರಿಂದ ಜಯವನ್ನು ಸಾಧಿಸಲು ಕಾರಣವಾಗಿದೆ. ಮುಂದೆ ಕರ್ನಾಟಕದ ಅಭಿವೃದ್ಧಿ ಮಾದರಿಗೆ ನಾವು ಶಿಬಿರವನ್ನು ಮಾಡಬೇಕು. ಈ ಮೂಲಕ ರಾಜ್ಯದ ನೆಲ-ಜಲವನ್ನು ಉಳಿಸುವ ಕೆಲಸವಾಗಬೇಕು ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು. ಮಾತು ಉಳಿಸಿಕೊಂಡ ಸಿದ್ದರಾಮಯ್ಯ: 2022ರ ಸೆಪ್ಟೆಂಬರ್ನಲ್ಲಿ ಸರಕಾರ ಭೂಮಿ ಹೋರಾಟವನ್ನು ದಮನಿಸಲು ನಡೆಸಿದ ಪೊಲೀಸ್ ದೌರ್ಜನ್ಯ ವಿರೋಧಿಸಿ, ಕೃಷಿ ಭೂಮಿ ಸ್ವಾಧೀನ ಖಂಡಿಸಿ ಫ್ರೀಡಂ ಪಾರ್ಕ್ನಲ್ಲಿ ಧರಣಿ ಆಯೋಜಿಸಿತ್ತು. ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ರೈತರು ಸರಕಾರದ ಗಮನ ಸೆಳೆದಿದ್ದರು. ಆ ವೇಳೆ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರು ಹೋರಾಟದ ಸ್ಥಳಕ್ಕೆ ಭೇಟಿ ನೀಡಿ, ‘ರೈತರ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ಮಾಡಬಾರದು, ಚನ್ನರಾಯಪಟ್ಟಣದ ರೈತರು ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದೆ. ಆದುದರಿಂದ ನಾನು ಮತ್ತು ನಮ್ಮ ಪಕ್ಷ ರೈತರನ್ನು ಬೆಂಬಲಿಸುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಭೂಸ್ವಾಧೀನ ಕೈಬಿಡುತ್ತೇನೆ’ ಎಂದು ಮಾತುಕೊಟ್ಟಿದ್ದರು. ಇಂದು ಭೂಸ್ವಾಧೀನ ಪ್ರಕ್ರಿಯೆ ಕೈಬಿಡುಡುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ’ ಒಗ್ಗೂಡಿದರೆ ಮಾತ್ರವೇ ಹೋರಾಟಕ್ಕೆ ಯಶಸ್ಸು : ‘ಹಸಿರು, ನೀಲಿ ಮತ್ತು ಕೆಂಪು ಬಾವುಟಗಳು ಒಟ್ಟಾದ ಕಾರಣಕ್ಕೆ ದೇವನಹಳ್ಳಿ ರೈತ ಹೋರಾಟಕ್ಕೆ ಜಯ ಸಿಕ್ಕಿದೆ. ಎಲ್ಲ ಚಳುವಳಿಗಳು ಒಗ್ಗಟ್ಟಾಗಬೇಕು ಆಗ ಮಾತ್ರ ಒಂದು ಹೋರಾಟ ಯಶಸ್ಸು ಕಾರಣ ಸಾಧ್ಯ’ -ಎಸ್.ವರಲಕ್ಷ್ಮೀ, ಹೋರಾಟಗಾರ್ತಿ, ಸಂಯುಕ್ತ ಹೋರಾಟ-ಕರ್ನಾಟಕ. ಕೆಂಪು ನನ್ನ ರಕ್ತ, ಹಸಿರು ನನ್ನ ಉಸಿರು: ‘ನಾನು ದಲಿತರ ಹುಡುಗ. ನನ್ನ ನಾಯಕತ್ವವನ್ನು ಯಾರು ಒಪ್ಪುತ್ತಿದ್ದರೋ, ಇಲ್ಲವೋ ಗೊತ್ತಿಲ್ಲ.…ಆದರೆ, ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದಲ್ಲಿ ಎಲ್ಲ ಸಮುದಾಯದವರು ನನ್ನ ನಾಯಕತ್ವವನ್ನು ಒಪ್ಪಿಕೊಂಡರು. ಇದು ಈ ನಾಡಿನ ಜನಚಳವಳಿಯ ವಿಜಯ. ಈ ನಾಡಿನ ಜನಚಳವಳಿ ನಿಜವಾಗಿಯೂ ಗೆದ್ದಿದೆ. ಈ ಗೆಲುವನ್ನು ಇನ್ನಷ್ಟು ದಿನ ಕಾಪಿಟ್ಟುಕೊಳ್ಳಬೇಕಿದೆ. ನನ್ನೊಳಗೆ ‘ನೀಲಿ’ ಮಾತ್ರ ಇತ್ತು, ಈಗ ‘ಕೆಂಪು’ ನನ್ನ ರಕ್ತವಾಗಿದೆ, ಹಸಿರು ನನ್ನ ಉಸಿರಾಗಿದೆ’ -ಕಾರಳ್ಳಿ ಶ್ರೀನಿವಾಸ್ ಮುಖಂಡರು, ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸುಳ್ಳು ಮೊಕದ್ದಮೆ ಹಿಂಪಡೆಯಿರಿ: ‘ಚನ್ನರಾಯಪಟ್ಟಣ ರೈತರ ನ್ಯಾಯಬದ್ಧ ಹಾಗೂ ಕಾನೂನು ಬದ್ದ ಹಕ್ಕೊತ್ತಾಯಗಳನ್ನು ಈಡೇರಿಸಲು ಮೀನಮೇಷ ಎಣಿಸುತ್ತಿದ್ದ ಸಿದ್ದರಾಮಯ್ಯ ನೇತೃತ್ವದ ಸರಕಾರ ಕೊನೆಗೂ ಐಕ್ಯ ಹೋರಾಟಕ್ಕೆ ಮಣಿದು ಭೂಸ್ವಾಧೀನ ಸಂಪೂರ್ಣವಾಗಿ ರದ್ದುಪಡಿಸುವ ಘೋಷಣೆ ಮಾಡಿದೆ. ಪಟ್ಟು ಬಿಡದ ಹೋರಾಟ ಅಂತಿಮವಾಗಿ ಜಯಗಳಿಸುತ್ತದೆ ಎಂಬ ವಿಶ್ವಾಸವನ್ನು ವೃದ್ದಿಸಿದೆ. ಈ ರೈತರ ಮೇಲೆ ಹಾಕಿರುವ ಎಲ್ಲ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯಬೇಕು. ಹೋರಾಟದಲ್ಲಿ ಭಾಗವಹಿಸುವ ವೇಳೆ ಅಪಘಾತದಿಂದ ನಿಧನರಾದ ರೈತ ಅಂಜನಪ್ಪ ಹಾಗೂ ಹೃದಯಾಘಾತದಿಂದ ಸಾವನ್ನಪ್ಪಿದ ಗುಂಡ್ಲುಪೇಟೆ ತಾಲೂಕಿನ ಈಶ್ವರಪ್ಪ ಕುಟುಂಬಕ್ಕೆ ಪರಿಹಾರ ನೀಡಬೇಕು’ -ಯು.ಬಸವರಾಜ್ ಅಧ್ಯಕ್ಷರು ಕರ್ನಾಟಕ ಪ್ರಾಂತ ರೈತ ಸಂಘ ಕುಣಿದು ಕುಪ್ಪಳಿಸಿದ ಮುಖಂಡರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಭೂಮಿ ಸ್ವಾಧೀನ ಪ್ರಕ್ರಿಯೆ ರದ್ದುಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಗಾಂಧಿ ಭವನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭೂ ಸ್ವಾಧೀನ ವಿರೋಧಿ ಹೋರಾಟಗಾರರು, ವಿವಿಧ ಸಂಘಟನೆಗಳ ಮುಖಂಡರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಅಲ್ಲದೆ, ತಮಟೆ ಸದ್ದಿಗೆ ಹೆಜ್ಜೆ ಹಾಕಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಉಡುಪಿ, ಜು.15: ಭಾರತೀಯ ಹವಾಮಾನ ಇಲಾಖೆಯ ತಿರುವನಂತಪುರ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ಲಕ್ಷದ್ವೀಪ, ಕೇರಳ ಹಾಗೂ ಕರ್ನಾಟಕ ವ್ಯಾಪ್ತಿಯ ಅರಬ್ಬಿ ಸಮುದ್ರದಲ್ಲಿ 40-50, ಕೆಲವೊಮ್ಮೆ ಗಂಟೆಗೆ 60ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜುಲೈ 18ರವರೆಗೆ ಕರಾವಳಿ ತೀರದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಅಲ್ಲದೇ ಸಾಂಪ್ರದಾಯಿಕ ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ತಮ್ಮ ದೋಣಿ ಮತ್ತು ಬಲೆಗಳನ್ನು ಸುರಕ್ಷಿತ ಸ್ಥಳದಲ್ಲಿ ಇಟ್ಟುಕೊಳ್ಳುವಂತೆ ಅದು ತಿಳಿಸಿದೆ. ನಾಡದೋಣಿ, ಸಣ್ಣ ಮತ್ತು ಮಧ್ಯಮ ಗಾತ್ರದ ದೋಣಿಗಳು ಮೀನುಗಾರಿಕೆಗೆ ತೆರಳದಂತೆ ಹಾಗೂ ಮುಂದಿನ ದಿನಗಳಲ್ಲಿ ಮೀನುಗಾರಿಕೆಗೆ ತೆರಳುವಾಗ ಕಡ್ಡಾಯವಾಗಿ ಜೀವರಕ್ಷಕ ಸಾಧನಗಳನ್ನು ಬಳಸಿ ಸುರಕ್ಷಿತ ಮೀನುಗಾರಿಕೆಯನ್ನು ಕೈಗೊಳ್ಳುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಕರಾವಳಿಯ ಬಂದರುಗಳಲ್ಲಿ -ಕಾರವಾರ, ಮಂಗಳೂರು, ಪಣಂಬೂರು, ಹೊನ್ನಾವರ, ಭಟ್ಕಳ, ಗಂಗೊಳ್ಳಿ, ಮಲ್ಪೆ- ಸ್ಥಳೀಯವಾಗಿ ನಂ.2 ಎಚ್ಚರಿಕೆಯ ಸೂಚನೆಯನ್ನು ಹಾರಿಸುವಂತೆಯೂ ಹವಾಮಾನ ಇಲಾಖೆ ತಿಳಿಸಿದೆ. ಬಿರುಸುಗೊಂಡ ಮಳೆ: ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು ಮುಂಗಾರು ಮಳೆ ತೀವ್ರಗೊಂಡಿದೆ. ಬೆಳಗಿನಿಂದ ಆಗಾಗ ಜೋರಾದ ಮಳೆ ಸುರಿಯುತಿದೆ. ಆದರೆ ಸದ್ಯಕ್ಕೆ ಇದರೊಂದಿಗೆ ಗಾಳಿ ಬೀಸುತ್ತಿಲ್ಲವಾದ ಕಾರಣ ಹೆಚ್ಚಿನ ಅಪಾಯದ ಮುನ್ಸೂಚನೆ ಗೋಚರಿಸಿಲ್ಲ. ಇಂದು ಬೆಳಗ್ಗೆ 8:30ರವರೆಗೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ 74.9ಮಿ.ಮೀ. ಮಳೆ ಜಿಲ್ಲೆಯಲ್ಲಿ ಬಿದ್ದಿದೆ. ಕುಂದಾಪುರದಲ್ಲಿ ಅತ್ಯಧಿಕ 97.4ಮಿ.ಮೀ. ಮಳೆಯಾದರೆ, ಬ್ರಹ್ಮಾವರದಲ್ಲಿ 93.9ಮಿ.ಮೀ.ಮಳೆ ಬಿದ್ದಿದೆ. ಹೆಬ್ರಿಯಲ್ಲಿ 81ಮಿ.ಮೀ.ಮಳೆಯಾಗಿದೆ. ಇಂದು ಎರಡು ಮನೆಗಳಿಗೆ ಹಾನಿಯಾದ ವರದಿ ಬಂದಿದೆ. ಕಾಪು ತಾಲೂಕು ಕಳತ್ತೂರಿನ ಗೋಪ ಮುಖರಿ ಎಂಬವರ ಮನೆ ಮೇಲೆ ಮರ ಬಿದ್ದು 20ಸಾವಿರ ರೂ.ಗಳಿಗೂ ಅಧಿಕ ಹಾನಿ ಸಂಭವಿಸಿದ್ದರೆ, ಕುಂದಾಪುರ ತಾಲೂಕು ಮೊಳಹಳ್ಳಿಯಲ್ಲಿ ಸಾದಮ್ಮ ಶೆಟ್ಟಿ ಎಂಬವರ ಮನೆ ಮೇಲೆ ಮರ ಬಿದ್ದು 25ಸಾವಿರ ರೂ.ನಷ್ಟದ ಅಂದಾಜು ಮಾಡಲಾಗಿದೆ.
ಭೂಸ್ವಾಧೀನ ಹಿಂಪಡೆದ ರಾಜ್ಯ ಸರಕಾರ : ದೇವನಹಳ್ಳಿ ರೈತರ ವಿಜಯೋತ್ಸವ, ಹರ್ಷೋದ್ಘಾರ
ಬೆಂಗಳೂರು : ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಸರಕಾರ ಘೋಷಿಸುತ್ತಿದ್ದಂತೆ ಗಾಂಧಿಭವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ, ಸಮಾನ ಮನಸ್ಕರ ವೇದಿಕೆ ಹಾಗೂ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ನಡೆದ ರೈತ ಸಮಾವೇಶದಲ್ಲಿ ದೇವನಹಳ್ಳಿ ರೈತರು ಕುಣಿದು ಕುಪ್ಪಳ್ಳಿ ವಿಜಯೋತ್ಸವದ ನಡುವೆ ಹರ್ಷೋದ್ಘಾರ ವ್ಯಕ್ತಪಡಿಸಿದರು. ಸತತ 1,198 ದಿನಗಳಿಂದಲೂ ತಮ್ಮ ಪೂರ್ವಜರ ಮಣ್ಣಿಗಾಗಿ ನಡೆಸುತ್ತಿದ್ದ ಹೋರಾಟಕ್ಕೆ ಈಗ ಐತಿಹಾಸಿಕ ಜಯ ಸಿಕ್ಕಿದೆ. ‘ಇಂದು ಕರ್ನಾಟಕ ಗೆದ್ದಿದೆ! ನಮ್ಮ ಹಿರಿಯರ ಮಣ್ಣನ್ನು ನಾವು ಮಾರಾಟ ಮಾಡುವುದಿಲ್ಲ ಎಂಬ ನಮ್ಮ ಅಚಲ ಸಂಕಲ್ಪಕ್ಕೆ ಕೊನೆಗೂ ಫಲ ಸಿಕ್ಕಿದೆ’ ಎಂದು ದೇವನಹಳ್ಳಿ ರೈತರು ತಿಳಿಸಿದರು. ಇದೇ ವೇಳೆಯಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಕಾರಳ್ಳಿ ಶ್ರೀನಿವಾಸ್ ಮಾತನಾಡಿ, ‘ನಾನು ದಲಿತರ ಹುಡುಗ. ದಲಿತ ಸಂಘರ್ಷ ಸಮಿತಿ ನನ್ನ ಸಂಘಟನೆ. ನನ್ನ ನಾಯಕತ್ವವನ್ನು ಯಾರು ಒಪ್ಪುತ್ತಿದ್ದರೋ ಗೊತ್ತಿಲ್ಲ. ಆದರೆ, ಈ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದಲ್ಲಿ ಎಲ್ಲ ಸಮುದಾಯದ ಜನಾಂಗದವರು ಒಪ್ಪಿಕೊಂಡರು. ನಾನು ಆ ಎಲ್ಲ ಜನಾಂಗದ ಜನವರ್ಗಗಳ ರೈತಾಪಿ ಕುಟುಂಬಗಳನ್ನು ಇಲ್ಲಿ ಸ್ಮರಿಸುತ್ತೇನೆ ಎಂದು ಭಾವುಕರಾಗಿ ನುಡಿದರು. ಈ ಗೆಲುವು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ನಾನು ಈ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಚಳುವಳಿಯ ಗೆಲುವು ಈ ನಾಡಿನ ಜನಚಳವಳಿಯ ಗೆಲುವು ಎಂದು ಹೇಳಿದ್ದೆ. ಈಗ ಈ ವಿಜಯೋತ್ಸವದ ಸಂದರ್ಭದಲ್ಲಿ, ಈ ನಾಡಿನ ಜನಚಳವಳಿ ನಿಜವಾಗಿಯೂ ಗೆದ್ದಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಕಾರಳ್ಳಿ ಶ್ರೀನಿವಾಸ್ ಹೇಳಿದರು. ಈ ಹೋರಾಟ ಗೆದ್ದಿದೆ. ಈ ಗೆಲುವನ್ನು ಮತ್ತಷ್ಟು ದಿನ ಕಾಪಿಟ್ಟುಕೊಳ್ಳೋಣ. ಜನ ಚಳವಳಿಗಳಿಗೆ ಗೆಲುವಾಗಲಿ. ನನ್ನೊಳಗಡೆ ನೀಲಿ ಮಾತ್ರ ಇತ್ತು, ಈಗ ಕೆಂಪು ನನ್ನ ರಕ್ತವಾಗಿದೆ, ಹಸಿರು ಉಸಿರಾಗಿದೆ. ಈ ಗೆಲುವು ಮತ್ತಷ್ಟು ಕಾವನ್ನು ಪಡೆಯಲಿ, ಜನ ಚಳವಳಿಗಳು ರಾಜ್ಯ, ದೇಶದಲ್ಲಿ ಮತ್ತೆ ಉಚ್ರ್ಛಾಯ ಸ್ಥಿತಿಗೆ ತಲುಪಲಿ, ಅದಕ್ಕೆ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟಗಾರರು ನಿಮ್ಮ ಜೊತೆ ಇರುತ್ತಾರೆ ಎಂದು ಕಾರಳ್ಳಿ ಶ್ರೀನಿವಾಸ್ ತಿಳಿಸಿದರು. ಚನ್ನರಾಯಪಟ್ಟಣದ ರೈತ ಮಹಿಳೆ ನಾರಾಯಣಮ್ಮ ಮಾತನಾಡಿ, ಅನ್ನರಾಮಯ್ಯ ಎನ್ನಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಟ್ಟ ಮಾತನ್ನು ಉಳಿಸಿಕೊಂಡರು. ನಾವು ಕೃಷಿಯನ್ನು ಬಿಡುವುದಿಲ್ಲ. ಇಡೀ ಕರ್ನಾಟಕದ ಜನ ಸಂಘಟನೆಗಳು ಹಾಗೂ ನಾಗರಿಕರೆಲ್ಲಾ ಒಗ್ಗೂಡಿ ನಮಗೆ ಬೆಂಬಲ ಕೊಟ್ಟರು. ಅದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇವೆ. ಈಗ ನಮ್ಮ ಭೂಮಿ ನಮ್ಮ ಕೈಲಿದೆ, ಅದರಲ್ಲಿ ಬೆಳೆಯನ್ನು ಬೆಳೆದು ಜೀವನ ನಡೆಸುತ್ತೇವೆ ಎಂದು ಹೇಳಿದರು. ಮತ್ತೋರ್ವ ಯುವ ರೈತ ಮುಟ್ಟಬಾರ್ಲು ರವಿ ಮಾತನಾಡಿ, ಇದು ಜನ ಚಳುವಳಿಗಳ ಒಗ್ಗಟ್ಟಿನ ಹೋರಾಟಕ್ಕೆ ಸಂದ ಸಮಷ್ಟಿ ಜಯವಾಗಿದೆ. ಈ ಐಕ್ಯತೆಯನ್ನು ಹೀಗೇ ಮುಂದುವರೆಸುತ್ತೇವೆ. ಜನರ ನೋವಿಗೆ ದನಿಯಾಗಿ ಮತ್ತು ಆಳುವವರನ್ನು ಪ್ರಶ್ನಿಸುವ ಜನದನಿಯಾಗಿ ಕೆಲಸ ಮಾಡುತ್ತೇವೆ. ಜನ ಚಳವಳಿಗಳ ಐಕ್ಯತೆ ಚಿರಾಯುವಾಗಬೇಕು. ಬಲವಂತದ ಭೂಸ್ವಾಧೀನಗಳು ಕೊನೆಯಾಗಬೇಕು ಎಂದು ತಿಳಿಸಿದರು. ಸಮಾವೇಶದಲ್ಲಿ ಎಲ್ಲರೂ ರೈತ ಗೀತೆಗಳನ್ನು ಹಾಡುವ ಮೂಲಕ ಕುಣಿದು ಸಂಭ್ರಮಿಸಿದರು. ಏನಿದು ದೇವನಹಳ್ಳಿ ರೈತರ ಹೋರಾಟ?: ಅತ್ಯಾಧುನಿಕ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್ ಸ್ಥಾಪನೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರಲ್ಲಿ ಪ್ರಾಥಮಿಕ ಅಧಿಸೂಚನೆ, 2022ರಲ್ಲಿ ಅಂತಿಮ ಆದೇಶ ಹೊರಡಿಸಲಾಗಿತ್ತು. ಭೂಸ್ವಾಧೀನ ವಿರೋಧಿಸಿ ಅಂದಿನಿಂದಲೂ ರೈತರು ಹೋರಾಟ ಮಾಡುತ್ತಾ ಬಂದಿದ್ದಾರೆ. ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿಗಳಲ್ಲಿನ ನೀರಾವರಿ, ಕೃಷಿ ಮತ್ತು ಜನವಸತಿಗಳನ್ನು ಪರಿಗಣಿಸಿ, 231.23 ಎಕರೆ, 185.18 ಎಕರೆ ಮತ್ತು 78.21 ಎಕರೆ ಸೇರಿ 495 ಎಕರೆ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವುದಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಜೂನ್ 24ರಂದು ಘೋಷಿಸಿದ್ದರು. ಆದರೆ, ರೈತರು ಸರಕಾರದ ನಿರ್ಧಾರವನ್ನು ಒಪ್ಪದೇ ಎಲ್ಲ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರೈತರು ಹೋರಾಟ ಮುಂದುವರಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 5ರಂದು ರೈತ ಸಂಘದ ಮುಖಂಡರು, ಹೋರಾಟಗಾರರು, ಸ್ಥಳೀಯ ರೈತರ ಸಭೆ ಕರೆದಿದ್ದರು. ಕಾನೂನು ತೊಡಕುಗಳಿದ್ದು, ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲು 10 ದಿನಗಳ ಸಮಯ ಕೇಳಿದ್ದರು. ಅದರಂತೆ ರೈತರು, ರೈತ ಸಂಘದ ಮುಖಂಡರು, ಹೋರಾಟಗಾರರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸಭೆ ನಡೆಸಿ ಐತಿಹಾಸಿಕ ನಿರ್ಣಯ ಪ್ರಕಟಿಸಿದರು.
ನಿಮಿಷಾ ಪ್ರಿಯಾಗೆ ಬಿಡುಗಡೆ ಮಾಡುವುದಾದರೆ 11 ಕೋಟಿ ʼಬ್ಲಡ್ ಮನಿʼ ನೀಡುವ ಭರವಸೆ ನೀಡಿದ ಟ್ರಸ್ಟ್
ಹೊಸದಿಲ್ಲಿ : ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹ್ದಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದೆ. ಕ್ಷಮಾದಾನ ಮತ್ತು ಬ್ಲಡ್ ಮನಿ ಕುರಿತು ಕೂಡ ಮಾತುಕತೆ ನಡೆಯುತ್ತಿದೆ. ಈ ಮಧ್ಯೆ ಸೌದಿ ಅರೇಬಿಯಾದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಬ್ದುಲ್ ರಹೀಮ್ ಬಿಡುಗಡೆಗೆ ಸಹಾಯಾರ್ಥವಾಗಿ ನಿರ್ಮಿಸಿದ್ದ ಟ್ರಸ್ಟ್ ಈಗ ಸಂತ್ರಸ್ತ ಕುಟುಂಬವು ʼಬ್ಲಡ್ ಮನಿʼ ಸ್ವೀಕರಿಸಲು ಒಪ್ಪಿದರೆ 11 ಕೋಟಿ ರೂ.ನೀಡುವುದಾಗಿ ತಿಳಿಸಿದೆ. ಮಾಧ್ಯಮದ ಜೊತೆ ಮಾತನಾಡಿದ ನಿಮಿಷಾ ಪ್ರಿಯಾ ಪರ ವಕೀಲ ಮತ್ತು ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್ ಪ್ರತಿನಿಧಿ ವಕೀಲ ಸುಭಾಷ್ ಚಂದ್ರನ್ ಕೆ ಆರ್, ʼಮರಣದಂಡನೆಯನ್ನು ಮುಂದೂಡುವುದು ಮತ್ತು ಹೆಚ್ಚಿನ ಮಾತುಕತೆಗಳಿಗೆ ಅವಕಾಶ ಕಲ್ಪಿಸುವುದು ತಕ್ಷಣದ ಆದ್ಯತೆಯಾಗಿದೆ. ಆ ಬಳಿಕ ಬ್ಲಡ್ ಮನಿ ಸ್ವೀಕರಿಸಲು ಸಂಸತ್ರಸ್ತ ಕುಟುಂಬ ಒಪ್ಪಿದರೆ ಆಕೆಯ ಬಿಡುಗಡೆ ಸಾಧ್ಯ ಎಂದು ನಾವು ಭಾವಿಸುತ್ತೇವೆʼ ಎಂದು ಹೇಳಿದ್ದಾರೆ. ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯಸ್ಥಿಕೆ ಬಳಿಕ ಪ್ರಸಿದ್ಧ ಸೂಫಿ ವಿದ್ವಾಂಸ ಹಬೀಬ್ ಉಮರ್ ಬಿನ್ ಹಫೀಳ್ ನೇತೃತ್ವದಲ್ಲಿ ತಲಾಲ್ ಅಬ್ದೋ ಮಹ್ದಿ ಅವರ ಸಹೋದರ ಮತ್ತು ಕುಟುಂಬಸ್ಥರ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಸುಭಾಷ್ ಹೇಳಿದ್ದಾರೆ. ಸೌದಿ ಅರೇಬಿಯಾದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಅಬ್ದುಲ್ ರಹೀಮ್ ಬಿಡುಗಡೆಗೆ ಸಹಾಯಾರ್ಥವಾಗಿ ರಚಿಸಲಾದ ಟ್ರಸ್ಟ್, ನಿಮಿಷಾ ಪ್ರಿಯಾ ಬಿಡೆಗಡೆಗೆ 11 ಕೋಟಿಯವರೆಗೆ ಬಳಕೆಯಾಗದ ಹಣವನ್ನು ನೀಡುವುದಾಗಿ ಹೇಳಿದೆ ಎಂದು ಸುಭಾಷ್ ಹೇಳಿದ್ದಾರೆ. ಇದಲ್ಲದೆ ಉದ್ಯಮಿಗಳಾದ ಎಂ ಎ ಯೂಸುಫ್ ಅಲಿ ಮತ್ತು ಬಾಬಿ ಚೆಮ್ಮನೂರು ಕೂಡ ಯಾವುದೇ ಸಂಭಾವ್ಯ ಇತ್ಯರ್ಥಕ್ಕಾಗಿ ತಲಾ 1 ಕೋಟಿ ರೂ. ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನಿಮಿಷಾ ಪ್ರಿಯಾರನ್ನು ಬಿಡುಗಡೆ ಮಾಡುವುದಾದರೆ 11 ಕೋಟಿ ʼಬ್ಲಡ್ ಮನಿʼ ನೀಡುವ ಭರವಸೆ ನೀಡಿದ ಟ್ರಸ್ಟ್
ಹೊಸದಿಲ್ಲಿ : ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹ್ದಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದೆ. ಕ್ಷಮಾದಾನ ಮತ್ತು ಬ್ಲಡ್ ಮನಿ ಕುರಿತು ಕೂಡ ಮಾತುಕತೆ ನಡೆಯುತ್ತಿದೆ. ಈ ಮಧ್ಯೆ ಸೌದಿ ಅರೇಬಿಯಾದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಬ್ದುಲ್ ರಹೀಮ್ ಬಿಡುಗಡೆಗೆ ಸಹಾಯಾರ್ಥವಾಗಿ ನಿರ್ಮಿಸಿದ್ದ ಟ್ರಸ್ಟ್ ಈಗ ಸಂತ್ರಸ್ತ ಕುಟುಂಬವು ʼಬ್ಲಡ್ ಮನಿʼ ಸ್ವೀಕರಿಸಲು ಒಪ್ಪಿದರೆ 11 ಕೋಟಿ ರೂ.ನೀಡುವುದಾಗಿ ತಿಳಿಸಿದೆ. ಮಾಧ್ಯಮದ ಜೊತೆ ಮಾತನಾಡಿದ ನಿಮಿಷಾ ಪ್ರಿಯಾ ಪರ ವಕೀಲ ಮತ್ತು ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್ ಪ್ರತಿನಿಧಿ ವಕೀಲ ಸುಭಾಷ್ ಚಂದ್ರನ್ ಕೆ ಆರ್, ʼಮರಣದಂಡನೆಯನ್ನು ಮುಂದೂಡುವುದು ಮತ್ತು ಹೆಚ್ಚಿನ ಮಾತುಕತೆಗಳಿಗೆ ಅವಕಾಶ ಕಲ್ಪಿಸುವುದು ತಕ್ಷಣದ ಆದ್ಯತೆಯಾಗಿದೆ. ಆ ಬಳಿಕ ಬ್ಲಡ್ ಮನಿ ಸ್ವೀಕರಿಸಲು ಸಂತ್ರಸ್ತ ಕುಟುಂಬ ಒಪ್ಪಿದರೆ ಆಕೆಯ ಬಿಡುಗಡೆ ಸಾಧ್ಯ ಎಂದು ನಾವು ಭಾವಿಸುತ್ತೇವೆʼ ಎಂದು ಹೇಳಿದ್ದಾರೆ. ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯಸ್ಥಿಕೆ ಬಳಿಕ ಪ್ರಸಿದ್ಧ ಸೂಫಿ ವಿದ್ವಾಂಸ ಹಬೀಬ್ ಉಮರ್ ಬಿನ್ ಹಫೀಳ್ ನೇತೃತ್ವದಲ್ಲಿ ತಲಾಲ್ ಅಬ್ದೋ ಮಹ್ದಿ ಅವರ ಸಹೋದರ ಮತ್ತು ಕುಟುಂಬಸ್ಥರ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಸುಭಾಷ್ ಹೇಳಿದ್ದಾರೆ. ಸೌದಿ ಅರೇಬಿಯಾದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಅಬ್ದುಲ್ ರಹೀಮ್ ಬಿಡುಗಡೆಗೆ ಸಹಾಯಾರ್ಥವಾಗಿ ರಚಿಸಲಾದ ಟ್ರಸ್ಟ್, ನಿಮಿಷಾ ಪ್ರಿಯಾ ಬಿಡೆಗಡೆಗೆ 11 ಕೋಟಿಯವರೆಗೆ ಬಳಕೆಯಾಗದ ಹಣವನ್ನು ನೀಡುವುದಾಗಿ ಹೇಳಿದೆ ಎಂದು ಸುಭಾಷ್ ಹೇಳಿದ್ದಾರೆ. ಇದಲ್ಲದೆ ಉದ್ಯಮಿಗಳಾದ ಎಂ ಎ ಯೂಸುಫ್ ಅಲಿ ಮತ್ತು ಬಾಬಿ ಚೆಮ್ಮನೂರು ಕೂಡ ಯಾವುದೇ ಸಂಭಾವ್ಯ ಇತ್ಯರ್ಥಕ್ಕಾಗಿ ತಲಾ 1 ಕೋಟಿ ರೂ. ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬನ್ನಂಜೆ 90 ಉಡುಪಿ ನಮನ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ, ಜು.15: ವಿದ್ಯಾವಾಚಸ್ಪತಿ ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ಅವರ 90ನೇ ಜನ್ಮ ದಿನಾಚರಣೆ ಅಂಗವಾಗಿ ಉಡುಪಿ ಅಭಿಮಾನಿಗಳ ವತಿಯಿಂದ ಆ.3ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿರುವ ಬನ್ನಂಜೆ 90 ಉಡುಪಿ ನಮನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ರವಿವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಬನ್ನಂಜೆ ಉಡುಪಿ ನಮನ ಕಾರ್ಯಕ್ರಮದ ಆಯೋಜನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಆಸ್ಟ್ರೋ ಮೋಹನ್, ಸಂಚಾಲಕರಾದ ಜನಾರ್ದನ ಕೊಡವೂರು, ರವಿರಾಜ್ ಎಚ್.ಪಿ., ಕೋಶಾಧಿಕಾರಿ ಪ್ರೊ. ಸದಾಶಿವ್ ರಾವ್, ಉಪಾಧ್ಯಕ್ಷರಾದ ಪ್ರೊಫೆಸರ್ ಶಂಕರ್, ನಾರಾಯಣ ಮಡಿ, ಡಾ.ಭಾರ್ಗವಿ ಐತಾಳ್, ಡಾ.ರಾಮ ಚಂದ್ರ ಐತಾಳ್, ಕಾರ್ಯದರ್ಶಿಗಳಾದ ರಾಜೇಶ್ ಭಟ್ ಪಣಿಯಾಡಿ, ಪೂರ್ಣಿಮಾ ಜನಾರ್ದನ್, ಪ್ರಭಾಕರ ತುಮರಿ, ಹಿರಿಯರಾದ ಪ್ರಭಾವತಿ ವಿಶ್ವನಾಥ್ ಶೆಣೈ, ಭಾಸ್ಕರ್ ರಾವ್ ಸಮಿತಿಯ ಸದಸ್ಯರಾದ ರಾಘವೇಂದ್ರ ಪ್ರಭು ಕರ್ವಾಲು, ಸುಶಾಂತ್ ಕೆರೆಮಠ, ಮಹೇಶ್ ಠಾಕೂರ್, ಸತೀಶ್ ಕೊಡವೂರು, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಜಯಶ್ರೀ ಉಡುಪಿ, ಸುಮಿತ್ರ ಕೆರೆಮಠ, ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯ, ಡಾ.ಗಣೇಶ್ ಪ್ರಸಾದ್ ನಾಯಕ್, ರಾಮಾಂಜಿ ಉಪಸ್ಥಿತರಿದ್ದರು.
ಕಾಸರಗೋಡು| ಲಾರಿ ಢಿಕ್ಕಿ: ಇಬ್ಬರು ಕಾರ್ಮಿಕರು ಮೃತ್ಯು, ಓರ್ವನಿಗೆ ಗಂಭೀರ ಗಾಯ
ಕಾಸರಗೋಡು: ಲಾರಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟು , ಓರ್ವ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಕುಂಜತ್ತೂರು ನಲ್ಲಿ ನಡೆದಿದೆ. ಬಿಹಾರ ಮೂಲದ ರಾಜಕುಮಾರ್ ಮಾಥುರ್ (25) ಹಾಗೂ ರಾಜಸ್ಥಾನದ ಗಣಪತಿ ರಾಯ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಕಾರ್ಮಿಕರಾಗಿದ್ದರು. ಕಾಸರಗೋಡು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಕಾರ್ಮಿಕರಿಗೆ ಢಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪಿಕಪ್ ವಾಹನ ನಿಲ್ಲಿಸಿ ಕೆಲಸ ನಿರ್ವಹಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ತಲಪಿಸಿದರೂ ಇಬ್ಬರು ಮೃತಪಟ್ಟರು. ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋವಿಡ್ ಲಸಿಕೆಗೂ ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ - ವೈದ್ಯಕೀಯ ಶಿಕ್ಷಣ ಸಚಿವ
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಆತಂಕ ಬೇಡ, ಕೋವಿಡ್ ಲಸಿಕೆಗೂ ಇದಕ್ಕೂ ಸಂಬಂಧವಿಲ್ಲ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಹಾಸನದಲ್ಲಿನ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದ್ದು, ಹೃದಯಾಘಾತದ ಲಕ್ಷಣಗಳಿದ್ದರೆ ಮಾತ್ರ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಿ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯಕರ ಜೀವನಶೈಲಿ ಮತ್ತು ಯೋಗದ ಮಹತ್ವವನ್ನು ಹೇಳಿದರು.
ಬೆಂಗಳೂರಿನ ರಸ್ತೆಗೆ ಸರೋಜಾದೇವಿ ಹೆಸರು : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಬಿ.ಸರೋಜಾದೇವಿ ಒಬ್ಬ ಮೇರು ನಟಿ ಆಗಿದ್ದು, ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ. ಅವರ ಹೆಸರನ್ನು ಬೆಂಗಳೂರಿನ ರಸ್ತೆವೊಂದಕ್ಕೆ ನಾಮಕರಣ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಮಲ್ಲೇಶ್ವರಂನಲಿ ಸರೋಜದೇವಿ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರೋಜಾದೇವಿಯವರ ಹೆಸರನ್ನು ಅವರು ವಾಸಿಸುತ್ತಿದ್ದ ರಸ್ತೆಗೆ ಇಡಬೇಕೆಂಬ ಆಸೆಯಿತ್ತು. ಈ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದೊಂದಿಗೆ ಚರ್ಚಿಸುವುದಾಗಿ ಹೇಳಿದರು. ಬಹುಭಾಷಾ ನಟಿ ಬಿ.ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿಸಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ಅಭಿನವ ಸರಸ್ವತಿ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು. ಎಲ್ಲ ಭಾಷೆಯ ಹೆಸರಾಂತ ನಟರೊಂದಿಗೆ ನಟಿಸಿದ್ದರು. ಸೂಪರ್ ಸ್ಟಾರ್ಗಳಾದ ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ದೇವ್ ಆನಂದ್, ಎಂಜಿಆರ್, ಎನ್ಟಿಆರ್, ಶಿವಾಜಿ ಗಣೇಶನ್, ಡಾ.ರಾಜ್ ಕುಮಾರ್ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದರು ಎಂದರು. ಯಾವುದೇ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಖಾಸಗಿ ಜೀವನದಲ್ಲಿಯೂ ಶಿಸ್ತುಬದ್ಧ ಜೀವನವನ್ನು ನಡೆಸಿದವರು. ಕನ್ನಡ ಚಿತ್ರರಂಗ ಬೆಳೆಯಲು ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಅವರ ಸಾವಿನಿಂದ ಚಿತ್ರರಂಗಕ್ಕೆ ಅಪಾರವಾದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಸಾವಿನಿಂದಾದ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದರು. ಅನೇಕ ಬಾರಿ ಸರೋಜಾದೇವಿಯವರನ್ನು ಭೇಟಿ ಮಾಡಿದ್ದೇನೆ. ಎಲ್ಲರೊಂದಿಗೆ ಆತ್ಮೀಯವಾಗಿ, ಪ್ರೀತಿಯಿಂದ ಮಾತನಾಡುತ್ತಿದ್ದರು. ದೊಡ್ಡ ವ್ಯಕ್ತಿತ್ವವಿದ್ದ ನಟಿ. ಅವರ ಸಿನಿಮಾಗಳಲ್ಲಿ ಮಲ್ಲಮ್ಮನ ಪವಾಡ, ಕಿತ್ತೂರು ಚೆನ್ನಮ್ಮ, ಭಾಗ್ಯವಂತರು, ಬಬ್ರುವಾಹನ, ನ್ಯಾಯವೇ ದೇವರು ಸೇರಿದಂತೆ ಅನೇಕ ಚಿತ್ರಗಳನ್ನು ನೋಡಿರುವುದಾಗಿ ಇದೇ ಸಂದರ್ಭದಲ್ಲಿ ನುಡಿದರು.
ಸಕಲ ಸರಕಾರಿ ಗೌರವದೊಂದಿಗೆ ನೆರವೇರಿದ ಬಿ.ಸರೋಜಾದೇವಿ ಅಂತ್ಯಸಂಸ್ಕಾರ
ಬೆಂಗಳೂರು : ಕನ್ನಡದ ಮೊಟ್ಟ ಮೊದಲ ಸೂಪರ್ ಸ್ಟಾರ್ ನಟಿ ಪ್ರತಿಷ್ಠಿತ ಪದಭೂಷಣ ಪ್ರಶಸ್ತಿ ಪುರಸ್ಕೃತೆ, ಅಭಿನಯ ಸರಸ್ಪತಿ ಬಿ.ಸರೋಜಾದೇವಿ ಅವರು ಪಂಚಭೂತಗಳಲ್ಲಿ ಮಂಗಳವಾರ ಲೀನವಾದರು. ವಯೋಸಹಜತೆಯಿಂದ ನಿಧನರಾಗಿದ್ದ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸ್ವಗ್ರಾಮ ದಶವಾರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿಸಲಾಯಿತು. ಅವರ ಪುತ್ರ ಗೌತಮ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿಕೊಟ್ಟರು. ಸರೋಜದೇವಿಯವರ ಕೊನೆಯಾಸೆಯಂತೆ ಹುಟ್ಟೂರಿನಲ್ಲೇ ನನ್ನ ದೇಹ ಮಣ್ಣಾಗಬೇಕೆಂಬ ಇಚ್ಛೆಯಂತೆ ದಶವಾರದಲ್ಲಿರುವ ಅವರ ತೋಟದ ಮನೆಯಲ್ಲಿ ತಾಯಿ ರುದ್ರಮ್ಮಾ ಅವರ ಸಮಾಧಿ ಪಕ್ಕದಲೇ ಅಂತ್ಯಕ್ರಿಯೆ ಜರುಗಿಸಲಾಯಿತು. ಈ ಸಂದರ್ಭದಲ್ಲಿ ಚನ್ನಪಟ್ಟಣ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಗೆ ಸಾಕ್ಷಿಯಾದರು. ಮಂಗಳವಾರ ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಝಮೀರ್ ಅಹ್ಮದ್ ಖಾನ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಅಗಲಿದ ಅಭಿನಯ ಸರಸ್ವತಿಗೆ ಭಾವಪೂರ್ಣ ಶ್ರದ್ದಾಂಜಲಿ ಅರ್ಪಿಸಿದರು. ನಂತರ ಅವರ ನಿವಾಸದಿಂದ ವಿಶೇಷ ವಾಹನದಲ್ಲಿ ಮೆರವಣಿಗೆ ಮೂಲಕ ಹುಟ್ಟೂರಿಗೆ ಕೊಂಡಯ್ಯಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಪಾರ್ಥೀವ ಶರೀರ ಬರುತ್ತಿದ್ದಂತೆ ಅಭಿಮಾನಿಗಳು ಅಂತಿಮ ವಿದಾಯ ಹೇಳಿದರು. ವಾಹನವು ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಸಂಚರಿಸಿ ರಾಮನಗರ ತಲುಪಿತು. ನಂತರ ಅಲ್ಲಿಂದ ಚನ್ನಪಟ್ಟಣಕ್ಕೆ ಬಂದಾಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಲ್ಲಿನ ಸ್ಥಳೀಯರು ಮೇರುನಟಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದ ದೃಶ್ಯ ಕಂಡಿತು. ನಂತರ ಹುಟ್ಟೂರು ದಶವಾರಕ್ಕೆ ಮಧ್ಯಾಹ್ನದ ವೇಳೆಗೆ ಆಗಮಿಸುತ್ತಿದ್ದಂತೆ ಗಾಂಧಿಭವನದಲ್ಲಿ ಒಂದು ಗಂಟೆ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ನಂತರ ಸಕಲ ಸರಕಾರಿ ಗೌರವಗಳೊಂದಿಗೆ ಮೇರುನಟಿಗೆ ಪೊಲೀಸರು ಗಾಳಿಯಲ್ಲಿ ಮೂರು ಸುತ್ತಿನ ಕುಶಾಲು ತೋಪು ಸಿಡಿಸಿ ಅಂತಿಮ ನಮನ ಸಲ್ಲಿಸಿದರು. ವಯೋಸಜಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿ.ಸರೋಜಾದೇವಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದರು. ಸುಮಾರು 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿರುವ ಸರೋಜಾದೇವಿ ಅವರು ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ನಟಿಸಿದ್ದರು. 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ, ಬಬ್ರುವಾಹನ, ಭಾಗ್ಯವಂತರು, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಕನ್ನಡ ಚಿತ್ರರಂಗದ ಕಿತ್ತೂರು ರಾಣಿ ಚೆನ್ನಮ ಅಂತಲೇ ಎಲ್ಲರ ಮನದಲ್ಲಿ ಮನೆ ಮಾಡಿದ್ದ ಸರೋಜಾದೇವಿ ಅವರು ತಮ ನಿವಾಸದಲ್ಲಿ ಉಸಿರು ಚೆಲ್ಲಿದ್ದಾರೆ. ಹಿರಿಯ ನಟಿಯ ನಿಧನಕ್ಕೆ ಸಿನಿಮಾರಂಗದ ಗಣ್ಯರು, ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ. ಬೆಳಕಾದ ಸರೋಜದೇವಿ..! ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ನೇತ್ರ ದಾನ ಮಾಡುವ ಮೂಲಕ ಅಂಧರಿಗೆ ದೃಷ್ಟಿ ನೀಡಿ ಅವರ ಬಾಳಿಗೆ ಬೆಳಕಾಗಿದ್ದಾರೆ. ಬೆಂಗಳೂರಿನ ನಾರಾಯಣ ನೇತ್ರಾಲಯಕ್ಕೆ ನೇತ್ರದಾನ ಮಾಡಿದ್ದರು. ಅದರಂತೆ ವೈದ್ಯರ ತಂಡ ಮಲ್ಲೇಶ್ವರಂನಲ್ಲಿರುವ ಮನೆಗೆ ಆಗಮಿಸಿ ನೇತ್ರದಾನ ಪ್ರಕ್ರಿಯೆಯನ್ನ ಪೂರ್ಣಗೊಳಿಸಿದರು. ಸರೋಜಾದೇವಿ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ:ಡಿಸಿಎಂ ಬಿ.ಸರೋಜಾದೇವಿ ಅವರ ಕಲಾಸೇವೆಗಾಗಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಸರಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ಸರೋಜಾದೇವಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಅವರು, ಸರೋಜಾದೇವಿ ಅವರು ನನಗೆ ಸಣ್ಣ ವಯಸ್ಸಿನಿಂದಲೂ ಬಹಳ ಪರಿಚಯ. ನಾನು ಆರಂಭದಲ್ಲಿ ಸಚಿವನಾದಾಗ, ನನ್ನನ್ನು ಕರೆದು ನೀನು ಸಿನಿಮಾಗಳಲ್ಲಿ ನಟನೆ ಮಾಡಬೇಕು ಎಂದು ಹೇಳಿದ್ದರು. ಅವರು ನಮ್ಮ ಜಿಲ್ಲೆಯವರು. ಅವರ ಅಂತಿಮ ಸಂಸ್ಕಾರವನ್ನು ಇಲ್ಲಿ ಮಾಡುತ್ತಿದ್ದೇವೆ ಎಂದು ಹೇಳಿದರು.
ಪ್ರಿಯಕರನ ಮನೇಲಿದ್ದ ಹೆಂಡ್ತಿ ಜೊತೆ ಜಗಳ; ಪತಿ ಮೇಲಿನ ಸಿಟ್ಟಿಗೆ ಕಂದನನ್ನೇ ಕೊಂದ ಹೆತ್ತಮ್ಮ!
ಲಕ್ನೋದಲ್ಲಿ ರೋಶಿ ಖಾನ್ ಎಂಬ ಮಹಿಳೆ ತನ್ನ ಐದು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿದ್ದಾಳೆ. ಆಕೆ ತನ್ನ ಪ್ರಿಯಕರನ ಜೊತೆ ವಾಸಿಸುತ್ತಿದ್ದಳು. ಕೊಲೆ ಮಾಡಿ ಗಂಡನ ಮೇಲೆ ಆರೋಪ ಹೊರಿಸಲು ಪ್ರಯತ್ನಿಸಿದಳು. ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ತನಿಖೆಯಲ್ಲಿ ಆಕೆ ಸುಳ್ಳು ಹೇಳಿದ್ದು ಗೊತ್ತಾಗಿದೆ. ಪ್ರೇಮ ಸಂಬಂಧದಿಂದಾಗಿ ಮಗಳನ್ನು ಕೊಂದಿರುವುದು ಆಘಾತಕಾರಿ ಎಂದು ಡಿಸಿಪಿ ವಿಶ್ವಜೀತ್ ಶ್ರೀವಾಸ್ತವ ಹೇಳಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ | ಜಿಲ್ಲಾ ಕ್ರೀಡಾಂಗಣಕ್ಕೆ ಕ್ರೀಡಾ ಇಲಾಖೆ ಆಯುಕ್ತ ಆರ್.ಚೇತನ್ ಭೇಟಿ
ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಆರ್.ಚೇತನ್ ಅವರು ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಿದರು. ಕ್ರೀಡಾಂಗಣದಲ್ಲಿರುವ ವಿದ್ಯಾರ್ಥಿಗಳ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ನಂತರ ಕ್ರೀಡಾಂಗಣ ಬ್ಯಾಡ್ಮಿಂಟನ್ ಕೋರ್ಟ್ ಸೇರಿದಂತೆ ವಿವಿಧ ಕಡೆಗಳಲ್ಲಿ ತೆರಳಿ ಸ್ಥಳಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಇಲಾಖೆ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ತರಬೇತುದಾರರಾದ ಸಂಜಯ ಬಾಣದ್, ರಾಜ ಬಾಬು ಚೌಹಾನ್, ಪ್ರವೀಣಕುಮಾರ ಪುಣೆ, ಸಂಗಮೇಶ್ ಕೊಂಬಿನ, ಸ್ಟೀವನ್ ಸ್ವಾಗತ, ಅಶೋಕ್ ಎಂ. ಹಾಗೂ ಇಲಾಖೆಯ ಸಿಬ್ಬಂದಿಯರು ಇದ್ದರು.
ಯಡ್ರಾಮಿ | ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಡಾ.ಅಜಯ್ ಸಿಂಗ್
ಕಲಬುರಗಿ: ಯಡ್ರಾಮಿ ಪಟ್ಟಣದ ಬಸ್ ನಿಲ್ದಾಣ ಹಾಗೂ ಡಾ.ಅಂಬೇಡ್ಕರ್ ವೃತ್ತದ ಸಮೀಪದಲ್ಲಿರುವ ಇಂದಿರಾ ಕ್ಯಾಂಟಿನ್ ಅನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಡವರಿಗೆ, ಕೂಲಿಕಾರರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟಿನ್ ಮಾಡಲಾಗಿದೆ. ಕ್ಯಾಂಟೀನ್ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಎಚ್ಚರಿಕೆ ವಹಿಸಲಾಗಿದೆ ಎಂದರು. ಇಂದಿರಾ ಕ್ಯಾಂಟೀನ್ ಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದೆ. ನಮ್ಮದು ಬಡವರ ಪರ ಇರುವ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಇಂದಿರಾ ಕ್ಯಾಂಟೀನ್ ಸ್ಥಗಿತಗೊಳಿಸಲಾಗಿತ್ತು. ಈಗ ಸಾಮಾನ್ಯ ಜನರಿಗೆ ಅನುಕೂಲವಾಗುವ ಪ್ರದೇಶದಲ್ಲಿ ಆದ್ಯತೆ ನೀಡುತ್ತಿರುವ ಈ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ಪ.ಪಂ ಮುಖ್ಯಾಧಿಕಾರಿ ಶ್ಯಾಮ್ ಭಜಂತ್ರಿ, ಶಾಂತಪ್ಪ ಕೂಡಲಗಿ, ಶೌಕತ್ ಅಲಿ ಆಲೂರು ಸೇರಿದಂತೆ ತಾಲ್ಲೂಕು ಅಧಿಕಾರಿಗಳು, ಮತ್ತಿತರ ಮುಖಂಡರು ಇದ್ದರು.
ರಾಯಚೂರು | ಜಿಲ್ಲಾಡಳಿತದ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜು.15ರಂದು ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಿಸಲಾಯಿತು. ಜಯಂತ್ಯುತ್ಸವ ನಿಮಿತ್ತ ಬೆಳಗ್ಗೆ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಚಾಲನೆ ನೀಡಿದರು. ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ರಂಗಮಂದಿರಕ್ಕೆ ಬಂದು ಸೇರಿತು. ಸಮಾಜದ ಮುಖಂಡರು, ಅಧಿಕಾರಿಗಳು ಮತ್ತು ನಾಗರಿಕರು ರಂಗಮಂದಿರದವರೆಗೆ ಮೆರವಣಿಗೆಯಲ್ಲಿ ಸಾಲಾಗಿ ಸಾಗಿ ಮೆರವಣಿಗೆಯ ಕಳೆ ಹೆಚ್ಚಿಸಿದರು. ರಂಗಮಂದಿರದಲ್ಲಿ ನಡೆದ ವೇದಿಕೆಯ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆಯ ಉಪಾಧ್ಯಕ್ಷರು ಆಗಿರುವ ಪ್ರಭಾರ ಅಧ್ಯಕ್ಷರಾದ ಜೆ.ಸಾಜಿದ್ ಸಮೀರ್ ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಟ್ಟಿ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯರಾದ ಕಮಲಾಬಾಯಿ ಅವರು ಶ್ರೀ ಶಿವಶರಣ ಹಡಪದ ಅಪ್ಪಣ್ಣ ಅವರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಸಾಧಕರಿಗೆ ಸನ್ಮಾನ: ಎಸೆಸೆಲ್ಸಿ, ಪಿಯುಸಿಯಲ್ಲಿ ಯಶಸ್ಸು ಸಾಧಿಸಿದ ಹಡಪದ ಅಪ್ಪಣ್ಣ ಸಮಾಜದ ವಿದ್ಯಾರ್ಥಿಗಳಿಗೆ, ಸರ್ಕಾರಿ ಸೇವೆಯಲ್ಲಿದ್ದು ನಿವೃತ್ತರಾದವರಿಗೆ ಸನ್ಮಾನಿಸಿ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸದ ಕಾರಣ ಸಮಾಜದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪರಶುರಾಮ್, ಹಡಪದ ಅಪ್ಪಣ್ಣ ಸಮಾಜದ ಗದ್ದೆಪ್ಪ ಎಂ., ಮಹಾಬಲೇಶ್ವರಪ್ಪ, ಕರಿಬಸವ ಗಟ್ಟಿಬಿಚ್ಚಾಲೆ, ನಾಗರಾಜ್ ಸರ್ಜಾಪುರ, ಧನಂಜಯ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶಿವಣ್ಣ, ಮುಖಂಡರಾದ ಮರಿಸ್ವಾಮಿ ಗಟ್ಟಿಬಿಚ್ಚಾಳಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ
ರಾಯಚೂರು: ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಂಚಾರದ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ಈ ವಿಶೇಷ ರೈಲು ತನ್ನ ಹಿಂದಿನ ನಿಗದಿತ ನಿಲ್ದಾಣವಾದ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ ಮತ್ತು ಅಲ್ಲಿಂದಲೇ ತನ್ನ ಹಿಮ್ಮುಖ ಪ್ರಯಾಣವನ್ನು ಪ್ರಾರಂಭಿಸಲಿದೆ. ಆದಾಗ್ಯೂ, ಈ ರೈಲುಗಳು ಪ್ರಸ್ತುತ ಇರುವ ಸಂಯೋಜನೆ, ಸಮಯ ಮತ್ತು ನಿಲುಗಡೆಗಳೊಂದಿಗೆ ತಮ್ಮ ಸಂಚಾರವನ್ನು ಮುಂದುವರಿಸಲಿವೆ. ಜು.6ರವರೆಗೆ ಸಂಚರಿಸಬೇಕಿದ್ದ 07355 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಈಗ ಆಗಸ್ಟ್ 9 ರಿಂದ 30 ರವರೆಗೆ ನಾಲ್ಕು ಹೆಚ್ಚುವರಿ ಟ್ರಪ್ಗಳಿಗೆ ವಿಸ್ತರಿಸಲಾಗಿದೆ. ಈ ರೈಲು ರಾಮೇಶ್ವರಂ ಬದಲು ರಾಮನಾಥಪುರಂನಲ್ಲಿ ತನ್ನ ಸಂಚಾರವನ್ನು ಮೊಟಕುಗೊಳಿಸಲಿದೆ. ಜು.27ರವರೆಗೆ ಸಂಚರಿಸಬೇಕಿದ್ದ 07356 ಸಂಖ್ಯೆಯ ರಾಮೇಶ್ವರಂ –ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಈಗ ಆಗಸ್ಟ್ 10 ರಿಂದ 31ರವರೆಗೆ ನಾಲ್ಕು ಹೆಚ್ಚುವರಿ ಟ್ರಿಪ್ಗಳಿಗೆ ವಿಸ್ತರಿಸಲಾಗಿದೆ. ಈ ರೈಲು ರಾಮೇಶ್ವರಂ ಬದಲು ರಾಮನಾಥಪುರಂನಿಂದ ತನ್ನ ಸಂಚಾರವನ್ನು ಪ್ರಾರಂಭಿಸಲಿದೆ ಎಂದು ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಪರಶುರಾಮಮೂರ್ತಿ ಕಂಚೊ, ಹಿತ್ತಾಳೆಯೋ ಎಂಬ ಚರ್ಚೆ ಮಾಡಲ್ಲ: ಶಾಸಕ ಸುನೀಲ್ ಕುಮಾರ್
ಉಡುಪಿ, ಜು.15: ಬೈಲೂರು ಪರಶುರಾಮ ಥೀಂ ಪಾರ್ಕ್ನಲ್ಲಿ ನಿರ್ಮಿಸಲಾದ ಪರಶುರಾಮ ಮೂರ್ತಿ ವಿಚಾರದಲ್ಲಿ ವಾದ ವಿವಾದ ಅಗತ್ಯವಿಲ್ಲ. ಮೂರ್ತಿ ಹಿತ್ತಾಳೆಯೊ ಅಥವಾ ಕಂಚಿನದ್ದೊ ಎಂಬುದರ ಬಗ್ಗೆ ನಾನು ಚರ್ಚೆಗೆ ಹೋಗಲ್ಲ. ಯಾಕೆಂದರೆ ನಾನು ಲೋಹತಜ್ಞ ಅಲ್ಲ. ಗುಣಮಟ್ಟದಲ್ಲಿ ವ್ಯತ್ಯಾಸ ಆಗಿದ್ದರೆ ತನಿಖೆ ಮಾಡಲಿ ಎಂದು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಹೇಳಿದ್ದಾರೆ. ಪರಶುರಾಮ ಮೂರ್ತಿ ವಿಚಾರಕ್ಕೆ ಸಂಬಂಧಿಸಿ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ ಕುರಿತು ಅವರು ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪರಶುರಾಮ ಮೂರ್ತಿ ಕಂಚಿನದ್ದೊ ಅಥವಾ ಹಿತ್ತಾಳೆಯದ್ದೋ ಎಂಬುದಕ್ಕೆ ಅಧಿಕಾರಿಗಳು ಉತ್ತರ ಕೊಡಬೇಕು. ಈ ಕುರಿತು ಒಪ್ಪಂದ(ಅಗ್ರಿಮೆಂಟ್) ಮಾಡಿಕೊಂಡಿರುವುದು ನಿರ್ಮಿತಿ ಕೇಂದ್ರ ಮತ್ತು ಜಿಲ್ಲಾಧಿಕಾರಿಗಳು. ಒಪ್ಪಂದದಲ್ಲಿ ಯಾವುದೇ ವ್ಯಾತ್ಯಾಸ ಆಗಿದ್ದರೆ ತನಿಖೆ ಆಗಲಿ. ಈ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ ಎಂದರು. ಹೊಸ ಪರಿಕಲ್ಪನೆಯೊಂದಿಗೆ ಥೀಮ್ ಪಾರ್ಕ್ ನಿರ್ಮಾಣ ಮಾಡಿದ್ದೆವು. ದ್ವೇಷದ ರಾಜಕಾರಣಕ್ಕೆ ಕಾಂಗ್ರೆಸ್ ವಿನಾಕಾರಣ ಆರೋಪ ಮಾಡಿದೆ. ಪರಶುರಾಮನ ಮೂರ್ತಿಯನ್ನು ಫೈಬರ್ ಎಂದು ಸುಳ್ಳು ಹೇಳಿದರು. ಮೂರ್ತಿಯನ್ನು ಮೊದಲು ಸಿಮೆಂಟ್ ಎಂದು ಹೇಳಿದರು. ಆಮೇಲೆ ಪ್ಲಾಸ್ಟಿಕ್ ಅಂದರು. ನಂತರ ಫೈಬರ್ ಎಂದು ಹೇಳಿದರು. ಮತ್ತೆ ಜಿಎಸ್ಟಿ ಸರಿ ಇಲ್ಲ ಎಂದರು. ಹೀಗೆ ಕಾಂಗ್ರೆಸ್ ಎರಡು ವರ್ಷ ಕಾಲ ಹರಣ ಮಾಡಿದೆ. ಚಾರ್ಜ್ ಶೀಟ್ ಸಲ್ಲಿಸುವ ಮೂಲಕ ಎಲ್ಲವೂ ಸ್ಪಷ್ಟವಾಗಿದೆ. ಕಾಂಗ್ರೆಸ್ನ ಫೈಬರ್ ಎಂಬ ಆರೋಪ ಸುಳ್ಳಾಗಿದೆ. ಫೈಬರ್ ಅಲ್ಲ ಹಿತ್ತಾಳೆ ಎಂಬುದು ತನಿಖೆಯಿಂದ ಸ್ಪಷ್ಟಪಡಿಸಲಾಗಿದೆ ಎಂದು ಅವರು ತಿಳಿಸಿದರು. ಕಾರ್ಕಳದ ಪ್ರವಾಸೋದ್ಯಮವನ್ನು ವ್ಯವಸ್ಥಿತವಾಗಿ ಕಾಂಗ್ರೆಸ್ ಹಾಳು ಮಾಡಿದೆ. ಸ್ಥಳೀಯ ನಾಯಕರ ಆರೋಪ ಕೇಳಿ ಕಾಂಗ್ರೆಸ್ ರಾಜ್ಯ ನಾಯಕರು ಕೂಡ ಈ ಕುರಿತು ಟೀಕಿಸಿದರು. ಕಟ್ಟುಕಥೆಗಳನ್ನು ಸೃಷ್ಟಿಸುವ ಪ್ರಯತ್ನಗಳಿಗೆ ಸೋಲಾಗಿದೆ. ಸಿದ್ದರಾಮಯ್ಯ ಸರಕಾರ ವಿಪಕ್ಷಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತ ಬಂದಿದೆ. ತನಿಖೆ ನೆಪದಲ್ಲಿ ಟಾರ್ಗೆಟ್ ಮಾಡುವ ಪ್ರಯತ್ನ ಇಡೀ ರಾಜ್ಯದಲ್ಲಿ ನಡೆದಿದೆ ಎಂದು ಅವರು ಆರೋಪಿಸಿದರು. ಎಲ್ಲ ವಿಚಾರಗಳು ನ್ಯಾಯಾಲಯದಲ್ಲಿ ತನಿಖೆ ಮಾಡಲಿ. ಸರಕಾರ ಬಾಕಿ ಉಳಿಸಿಕೊಂಡ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಮೂರ್ತಿಯ ಕಾಮಗಾರಿ ಪೂರ್ಣಗೊಳಿಸಿ ಪ್ರವಾಸೋದ್ಯಮ ಇಲಾಖೆಗೆ ಬಿಟ್ಟುಕೊಡಬೇಕು. ಆದರೆ ಕಾಂಗ್ರೆಸ್ ಈ ವಿಚಾರವನ್ನು ಜೀವಂತವಾಗಿ ಇಡುವ ಪ್ರಯತ್ನ ಮಾಡಿದೆ ಎಂದು ಅವರು ಟೀಕಿಸಿದರು.
ಬೀದರ್ | ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಬೀದರ್ : ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳು ಮಾತ್ರ ಈ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸಿ, ಎಸ್ಟಿ ಮತ್ತು ಪ್ರವರ್ಗ-1 ಕ್ಕೆ ಸೇರಿದ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯದ ಮಿತಿ 2.50 ಲಕ್ಷ ರೂ. ಇರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗದವರ ಆದಾಯ ಮಿತಿ 1 ಲಕ್ಷ ರೂ. ನಿಗದಿಪಡಿಸಲಾಗಿದೆ. ವಿದ್ಯಾರ್ಥಿಗಳು https://shp.karnataka.gov.in/bcwd ನ್ನು ಸಂಪರ್ಕಿಸಿ ಆನ್ಲೈನ್ ಮೂಲಕ ಆ.8 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಗೆ, ಇ-ಮೇಲ್ ತಿಳಿಸಬಹುದು. ಇಲ್ಲದಿದ್ದರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲ್ಲೂಕು ಅಧಿಕಾರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು ಎಂದು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 80507 70004 ಮತ್ತು 80507 70005 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಾಪತ್ತೆಯಾಗಿರುವ ಅನನ್ಯ ಭಟ್ ತಾಯಿಯಿಂದ ದ.ಕ. ಜಿಲ್ಲಾ ಎಸ್ಪಿಗೆ ದೂರು
ಮಂಗಳೂರು, ಜು.15: ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ತಾಯಿ ಇಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿಯಾದರು. ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು. ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢ ವಾಗಿ ನಾಪತ್ತೆಯಾಗಿದ್ದರು.