ಬಂಗಾರದ ಬೆಲೆಗೆ ರೆಕ್ಕೆ! 2026ಕ್ಕೆ ಚಿನ್ನದ ಬೆಲೆ ₹1,90,000? ಮಾರುಕಟ್ಟೆ ತಜ್ಞರ ಸುಳಿವು!
ಸದ್ಯ ಭಾರತದಲ್ಲಿ ಚಿನ್ನದ ಬೆಲೆ ಕೇಳಿದರೆ ಸಾಕು, ಎಂಥವರಿಗೂ ಎದೆಯಲ್ಲಿ ನಡುಕ ಹುಟ್ಟುವಂತಿದೆ. ಈಗಾಗಲೇ 10 ಗ್ರಾಂ (24 Karat) ಚಿನ್ನದ ದರ 1,40,000 ಲಕ್ಷದ ಗಡಿ ದಾಟಿ ಮುನ್ನುಗ್ಗುತ್ತಿದೆ. “ಇಷ್ಟೊಂದು ಬೆಲೆ ಏರಿಕೆ ಯಾಕೆ?” ಎಂದು ಜನ ಸಾಮಾನ್ಯರು ತಲೆ ಮೇಲೆ ಕೈ ಹೊತ್ತು ಕುಳಿತಿರುವಾಗಲೇ, ಮಾರುಕಟ್ಟೆ ತಜ್ಞರು ಮತ್ತೊಂದು ಆಘಾತಕಾರಿ ವಿಷಯವನ್ನು ಹೊರಹಾಕಿದ್ದಾರೆ. ಮುಂದಿನ ವರ್ಷಗಳಲ್ಲಿ ಚಿನ್ನದ ಬೆಲೆ ಎಲ್ಲಿಗೆ ತಲುಪಬಹುದು ಎಂಬ ಲೆಕ್ಕಾಚಾರಗಳು ಈಗ ಹೊರಬಿದ್ದಿದ್ದು, ಈ ಸಂಖ್ಯೆಗಳನ್ನು ನೋಡಿದರೆ ನಿಮಗೆ ನಂಬಲು ... Read more The post ಬಂಗಾರದ ಬೆಲೆಗೆ ರೆಕ್ಕೆ! 2026ಕ್ಕೆ ಚಿನ್ನದ ಬೆಲೆ ₹1,90,000? ಮಾರುಕಟ್ಟೆ ತಜ್ಞರ ಸುಳಿವು! appeared first on Karnataka Times .
ಸಮಸ್ಯೆಗಳ ನಡುವೆಯೂ ಕೃಷಿಕರಿಂದ ಸಾಧನೆ : ಚಲುವರಾಯಸ್ವಾಮಿ
ರಾಷ್ಟ್ರೀಯ ರೈತ ದಿನಚಾರಣೆ ಕಾರ್ಯಕ್ರಮ
ಕೇಂದ್ರ, ರಾಜ್ಯ ಸರಕಾರಗಳು ರೈತ ವಿರೋಧಿ : ಬಡಗಲಪುರ ನಾಗೇಂದ್ರ
ಕೆ.ಎಸ್.ಪುಟ್ಟಣ್ಣಯ್ಯ 76ನೇ ಜನ್ಮದಿನಾಚರಣೆ, ರೈತ ಸಮಾವೇಶ
ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು : ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೋಮುದ್ವೇಷ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 2024ರ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಪರೀಕ್ಷೆಯೊಂದನ್ನು ಬೆಳಗಿನ ಸಮಯದ ಬದಲಿಗೆ ಮಧ್ಯಾಹ್ನ ನಿಗದಪಡಿಸಿದ್ದಕ್ಕೆ ‘ನಮಾಝ್ಗೆ ಸಮಯ’ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಇಡೀ ಪ್ರಕ್ರಿಯೆ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ರಜಾಕಾಲದ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಎಸೆಸೆಲ್ಸಿ ಪರೀಕ್ಷಾ ವೇಳಾ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲ ಪರೀಕ್ಷೆಗಳು ಬೆಳಗಿನ ಸಮಯದಲ್ಲಿ ನಿಗದಿ ಮಾಡಲಾಗಿದೆ. ಶುಕ್ರವಾರ ಏಕೆ? ಓಹ್.. ‘ನಮಾಝ್ಗೆ ಸಮಯ’ ಎಂದು ಸೂಲಿಬೆಲೆ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಕೋಮು ದ್ವೇಷ ಏನಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿತಲ್ಲದೆ, ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೆ ತಡೆ ನೀಡಿ ಆದೇಶಿಸಿತು. ಜತೆಗೆ, ಪ್ರತಿವಾದಿ ರಾಜ್ಯ ಸರಕಾರ ಆಕ್ಷೇಪ ಸಲ್ಲಿಸಲು ಮತ್ತು ಮಧ್ಯಂತರ ತಡೆ ತೆರವು ಕೋರುವ ಸ್ವಾತಂತ್ರ್ಯ ಹೊಂದಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.
ಕೇಂದ್ರ ಸರಕಾರದಿಂದ ಮನರೇಗಾ ಯೋಜನೆಯ ಹತ್ಯೆ : ಡಿ.ಕೆ.ಶಿವಕುಮಾರ್
ಹೊಸದಿಲ್ಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಧ್ಯಯನ ನಡೆಸಿ ಯುಪಿಎ ಸರಕಾರದ ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಜಾರಿಗೆ ತಂದಿದ್ದರು. ಆದರೆ, ನರೇಂದ್ರ ಮೋದಿ ಸರಕಾರ ಗಾಂಧೀಜಿ ಹೆಸರನ್ನು ಬದಲಾವಣೆ ಮಾಡುವಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಸರಕಾರ ಮನರೇಗಾ ಯೋಜನೆಯನ್ನು ಸಂವಿಧಾನ ಬದ್ಧವಾಗಿ ಜಾರಿಗೆ ತಂದಿತ್ತು. ಉದ್ಯೋಗ ಖಾತರಿಯನ್ನು ಸಂವಿಧಾನಿಕ ಹಕ್ಕಾಗಿ ನೀಡಿತ್ತು ಎಂದು ತಿಳಿಸಿದರು. ಮಹಾತ್ಮಾ ಗಾಂಧಿ ಅವರ ಹೆಸರು ಬದಲಾವಣೆ ಮಾಡುತ್ತಿರುವುದು ನೋಡಿದರೆ ಕೇಂದ್ರ ಸರಕಾರದ ಅಂತಿಮ ದಿನಗಳ ಆರಂಭ ಎನ್ನಬಹುದು. ಕೇಂದ್ರ ಸರಕಾರ ಈ ಯೋಜನೆಯನ್ನು ಹತ್ಯೆ ಮಾಡುತ್ತಿದೆ. ಈ ಯೋಜನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಪಾಲಿನ ಅನುಪಾತವನ್ನು 60:40ಕ್ಕೆ ಬದಲಾಯಿಸಿದ್ದು, ಬಿಜೆಪಿ ಆಡಳಿತ ರಾಜ್ಯ ಸರಕಾರಗಳು ಸೇರಿದಂತೆ ಯಾವುದೇ ರಾಜ್ಯ ಸರಕಾರಗಳು ಇದನ್ನು ಭರಿಸುವುದಿಲ್ಲ. ಇದರಿಂದಾಗಿ ಭವಿಷ್ಯದಲ್ಲಿ ಈ ಯೋಜನೆ ಸಂಪೂರ್ಣ ವಿಫಲವಾಗಲಿದೆ ಎಂದರು. ವಿಜಯ್ ಹಜಾರೆ ಟ್ರೋಫಿ; ಪಂದ್ಯಕ್ಕೆ ಅನುಮತಿ ನಿರಾಕರಣೆ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯಕ್ಕೆ ಪೊಲೀಸರ ಅನುಮತಿ ನಿರಾಕರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ನನಗೆ ಆ ವಿಚಾರ ಗೊತ್ತಿಲ್ಲ. ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಬೇಕು, ಗೌರವ ಉಳಿಯಬೇಕು ಎಂದು ಬಯಸುವವನು ನಾನು. ಮುಂದೆ ಮತ್ತೆ ಅನಾಹುತ ಆಗದಂತೆ ನೋಡಿಕೊಳ್ಳಲು ಯಾವ ಮಾನದಂಡ ನಿಗದಿ ಮಾಡಬಹುದು ಎಂದು ಚರ್ಚಿಸಲಾಗುವುದು. ಈ ವಿಚಾರವಾಗಿ ಗೃಹ ಸಚಿವರೊಂದಿಗೆ ಚರ್ಚಿಸುತ್ತೇನೆ. ಅವರು ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷರಾಗಿದ್ದವರು, ಅವರಿಗೂ ಅನುಭವವಿದೆ ಎಂದರು.
ದಾವಣಗೆರೆ | ಡ್ರಗ್ಸ್ ದಂಧೆ: ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ
ದಾವಣಗೆರೆ : ಇಲ್ಲಿನ ವಿದ್ಯಾನಗರದಲ್ಲಿ ಡ್ರಗ್ಸ್ ದಂಧೆ ಪತ್ತೆ ಹಚ್ಚಿರುವ ವಿದ್ಯಾನಗರ ಪೊಲೀಸರು ಕಾಂಗ್ರೆಸ್ ಮುಖಂಡ ಸೇರಿ ನಾಲ್ವರನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ರಾಜಸ್ಥಾನ ಮೂಲದ ರಾಮ್ ಸ್ವರೂಪ್, ದೊನಾರಮ್, ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ದೇವಿಲಾಲ್ ಹಾಗೂ ಕಾಂಗ್ರೆಸ್ ಮುಖಂಡ ರಿಯಲ್ ಎಸ್ಟೇಟ್ ಉದ್ಯಮಿ ಶಾಮನೂರು ವೇದಮೂರ್ತಿ ಬಂಧಿತರು. ಇನ್ನು ಮೂವರು ಆರೋಪಿಗಳು ಪರಾರಿಯಾಗಿದ್ದು ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ವಿದ್ಯಾನಗರ ಪೊಲೀಸರು ದಾಳಿ ನಡೆಸಿದ ವೇಳೆ ಡ್ರಗ್ಸ್ ಜಾಲ ಪತ್ತೆಯಾಗಿದೆ. ದಾಳಿಯಲ್ಲಿ 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 90 ಗ್ರಾಂ ಬ್ರೌನ್ ಶುಗರ್ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನದಿಂದ ಡ್ರಗ್ಸ್ ತಂದು ಉದ್ಯಮಿಗಳು, ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಮಾತನಾಡಿದ ಎಸ್ಪಿ ಉಮಾ ಪ್ರಶಾಂತ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 90 ಗ್ರಾಂ ಬ್ರೌನ್ ಶುಗರ್ ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನದಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿದ್ದಾರೆ. ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಹೇಳಿದರು.
ಪಿಜಿ ವೈದ್ಯಕೀಯ: ಎರಡನೆ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ
ಬೆಂಗಳೂರು : ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ ಎರಡನೆ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದ್ದು, ಎಂಸಿಸಿಯಲ್ಲಿ ಸೀಟು ಸಿಕ್ಕಿರುವವರು ಮೂಲ ದಾಖಲೆಗಳನ್ನು ಹಿಂಪಡೆಯಲು ಡಿ.24ರಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಮಂಗಳವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ಒಟ್ಟು 3,164 ಅಭ್ಯರ್ಥಿಗಳಿಗೆ ಈ ಸುತ್ತಿನಲ್ಲಿ ಸೀಟು ಹಂಚಿಕೆ ಮಾಡಿದ್ದು, ಸದರಿ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ. ತಾತ್ಕಾಲಿಕ ಫಲಿತಾಂಶ ಪ್ರಕಟಣೆ ನಂತರ ಕೆಲವರು ಎಂಸಿಸಿ ಯಲ್ಲಿ ಸೀಟು ಸಿಕ್ಕಿದ್ದು, ಅಲ್ಲಿಯದೇ ಇಷ್ಟ ಎನ್ನುವವರು ಮೂಲ ದಾಖಲೆಗಳ ಸಮೇತ ಕೆಇಎ ಸೀಟು ಬಿಟ್ಟು ಹೊರ ಹೋಗುವುದಕ್ಕೆ ಅವಕಾಶ ನೀಡಲಾಗಿದೆ. ಇದಕ್ಕೆ ಕಟ್ಟಿರುವ ಶುಲ್ಕದಲ್ಲಿ 25 ಸಾವಿರ ರೂಪಾಯಿ ಕಡಿತ ಮಾಡಿಕೊಳ್ಳಲಾಗುವುದು. ಡಿ.23 ಬೆಳಿಗ್ಗೆ 11 ಗಂಟೆಯೊಳಗೆ ಮೂಲ ದಾಖಲೆ ವಾಪಸ್ ಪಡೆದವರನ್ನು ಬಿಟ್ಟು ಹೊಸದಾಗಿ ಸೀಟು ಹಂಚಿಕೆ ಮಾಡಿ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದರು. ಸೇವಾ ನಿರತ ಅಭ್ಯರ್ಥಿಗಳ ಫಲಿತಾಂಶ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಸೇವಾ ನಿರತ ಅಭ್ಯರ್ಥಿಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದ್ದು, ಶುಲ್ಕ ಪಾವತಿಸಿದವರು ಡಿ.24ರೊಳಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸಬೇಕು. ಬಳಿಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಡಿ.26ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು. ಒಟ್ಟು 59 ಸೇವಾ ನಿರತ ಅಭ್ಯರ್ಥಿಗಳಿಗೆ ವಿವಿಧ ಕೋರ್ಸ್ ಗಳಿಗೆ ಸೀಟು ಹಂಚಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಶಹಾಪುರ ಡಿಗ್ರಿ ಕಾಲೇಜು ಜಾಗದಲ್ಲೇ ಪ್ರಜಾಸೌಧ ನಿರ್ಮಿಸಲು ಡಿಎಸ್ಎಸ್ ಆಗ್ರಹ
ಶಹಾಪುರ: ಡಿಗ್ರಿ ಕಾಲೇಜು ವ್ಯಾಪ್ತಿಗೆ 84 ಎಕರೆ ಜಾಗವಿದ್ದು, ಅದರಲ್ಲಿ ಟೌನ್ ಹಾಲ್, ವಿವಿಧ ನಾಯಕರ ಮೂರ್ತಿಗಳು ನಿರ್ಮಾಣ, ಆಟದ ಮೈದಾನ ಸೇರಿದಂತೆ ಹಲವು ಕಾಮಗಾರಿಗಳು ಮಾಡಿದ್ದಾರೆ. ಆದರೆ ಕೇವಲ 4 ಎಕರೆ ಜಾಗದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಜನರು ತಡೆಯೊಡ್ಡಬಾರದು ಎಂದು ಆಗ್ರಹಿಸಿದರು. ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ನಾಗಣ್ಣ ಬಡಿಗೇರ, ಪ್ರಜಾಸೌಧ ನಿರ್ಮಾಣದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎನ್ನುವುದು ತಪ್ಪು ತಿಳುವಳಿಕೆ. ವಿವಿಧ ಇಲಾಖೆಗಳ ಕಚೇರಿಗಳು ಒಂದೇ ಸೂರಿನಲ್ಲಿ ಬರುವುದರಿಂದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗುತ್ತದೆ. ಅಲೆದಾಡುವ ಅವಶ್ಯಕತೆ ಇರುವುದಿಲ್ಲ ಎಂದರು. ಟೌನ್ ಹಾಲ್ ನಿರ್ಮಾಣಕ್ಕಾಗಿ 4 ಎಕರೆ ಬಳಸಿ ನಿರ್ಮಿಸುವಾಗ ಪ್ರಶ್ನೆ ಮಾಡಲಿಲ್ಲ, ಡಿಗ್ರಿ ಕಾಲೇಜು ವಿದ್ಯಾರ್ಥಿಗಳು ಅವರ ವಸತಿ ನಿಲಯಗಳು ಡಿಗ್ರಿ ಕಾಲೇಜಿನಿಂದ 6 ಕಿಲೋ ಮೀಟರ್ ದೂರದಿಂದ ನಡೆದುಕೊಂಡೇ ಕಾಲೇಜಿಗೆ ಬರುತ್ತಾರೆ ಅದು ಪ್ರತಿಭಟನೆಕಾರರಿಗೆ ಕಾಣಿಸಲಿಲ್ಲವೇಕೆ ಎಂದು ಅವರು ಪ್ರಶ್ನಿಸಿದರು. ಸಾರ್ವಜನಿಕರ ಅನುಕೂಲಕ್ಕೆ ಇರುವ ಯೋಜನೆಯು ಎಲ್ಲರಿಗೂ ತಲುಪಲಿ ಎನ್ನುವುದು ನಮ್ಮ ಆಶಯ. ಆದ್ದರಿಂದ ಪ್ರಜಾಸೌಧ ಡಿಗ್ರಿ ಕಾಲೇಜು ಜಾಗದಲ್ಲೇ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಭೀಮರಾಯ ಹೊಸಮನಿ, ಶಿವಪುತ್ರ ಜವಳಿ, ಮರೆಪ್ಪ ಕ್ರಾಂತಿ, ಮರೆಪ್ಪ ಕನ್ಯಾಕೋಳೂರು, ಶರಬಣ್ಣ ದೋರನಹಳ್ಳಿ, ಮರೆಪ್ಪ ಸಲಾದಾಪುರ, ಚಂದ್ರಕಾಂತ ಇಜೇರಿ, ಜಯರಡ್ಡಿ ಹೊಸಮನಿ, ಶರಣಪ್ಪ ಮದ್ದರಕಿ, ಮಾಲಪ್ಪ ಸಲಾದಾಪುರ, ಪುರುಷೋತ್ತಮ ಬಬಲಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಗತಿಪರರು ವಿಘಟಿತರಾಗಿದ್ದೇವೆ, ಜನವಿರೋಧಿಗಳು ಒಗ್ಗಟ್ಟಿನಿಂದ ಇದ್ದಾರೆ : ಎಲ್.ಹನುಮಂತಯ್ಯ
ಸಿಪಿಐ ಶತಮಾನೋತ್ಸವ ಸಮಾರೋಪ ಸಮಾರಂಭ
ಕರ್ನಾಟಕ ಜಾನಪದ ಅಕಾಡೆಮಿ ವಿವಿಧ ಪ್ರಶಸ್ತಿ ಪುರಸ್ಕೃತರ ಆಯ್ಕೆಪಟ್ಟಿ ಪ್ರಕಟ
ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ನೀಡುವ 2025ನೆ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ ಮತ್ತು 2024ನೆ ಸಾಲಿನ ಪುಸ್ತಕ ಬಹುಮಾನ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ಕೊರಗರ ಡೋಲು ಕಲಾ ಪ್ರಕಾರದಲ್ಲಿ ಸುಮತಿ ಕೊರಗ ಸೇರಿ ಜಾನಪದ ವಿವಿಧ ಪ್ರಕಾರಗಳಲ್ಲಿ 30 ಮಂದಿ ಸಾಧಕರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳವಾರದಂದು ಅಕಾಡೆಮಿಯು ಪ್ರಕಟನೆ ಹೊರಡಿಸಿದ್ದು, ಉತ್ತರ ಕನ್ನಡದ ಗೌರಿ ನಾಗಪ್ಪ ನಾಯ್ಕ(ಸುಗ್ಗಿ ಹಾಡು) ದಕ್ಷಿಣ ಕನ್ನಡದ ಸುಮತಿ ಕೊರಗ(ಕೊರಗರ ಡೋಲು), ಉಡುಪಿಯ ಗುಲಾಬಿ ಗೌಡ್ತಿ(ನಾಟಿ ವೈದ್ಯ), ಕೊಡಗು ಜಿಲ್ಲೆಯ ಅಮ್ಮಣಿ(ಸೂಲಗಿತ್ತಿ ಹಾಗೂ ಕುಡಿಯ ಜನಾಂಗದ ಹಾಡುಗಾರಿಕೆ) ಅವರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ. ಬೆಂಗಳೂರು ನಗರದ ಸಿದ್ದರಾಜು(ನೀಲಗಾರರ ಪದ ಮತ್ತು ತಂಬೂರಿಪದಗಳು), ಬೆಂಗಳೂರು ಗ್ರಾಮಾಂತರದ ಬಚ್ಚಮ್ಮ(ಸೋಬಾನೆ ಪದ), ಬೆಂಗಳೂರು ದಕ್ಷಿಣ ಜಿಲ್ಲೆಯ ಬಿ. ಸಿದ್ದರಾಜಯ್ಯ(ಜಾನಪದ ಗಾಯನ), ಕೋಲಾರದ ಸೀತಮ್ಮ(ತತ್ವಪದ), ಚಿಕ್ಕಬಳ್ಳಾಪುರದ ಕೆ.ಎಂ. ನಾರಾಯಣ ಸ್ವಾಮಿ(ಕೀಲು ಕುದುರೆ) ತುಮಕೂರಿನ ರೇವಣ್ಣ(ಅಲಗು ಕುಣಿತ), ದಾವಣಗೆರೆಯ ಜಿ. ಪರಮೇಶ್ವರಪ್ಪ ಕತ್ತಿಗೆ(ತತ್ವಪದ) ಅವರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಚಿತ್ರದುರ್ಗದ ಜಿ.ಎನ್. ವಿರೂಪಾಕ್ಷಪ್ಪ(ಜಾನಪದ ಸಂಗೀತ), ಶಿವಮೊಗ್ಗದ ಕೆ.ಎಸ್. ಲಿಂಗಪ್ಪ(ಅಂಟಿಕೆ ಪಿಂಟಿಕೆ), ಮೈಸೂರು ಜಿಲ್ಲೆಯ ಚನ್ನಾಜಮ್ಮ(ಸೋಬಾನೆ ಪದ) ಮಂಡ್ಯದ ಹೊನ್ನಯ್ಯ(ಕೋಲಾಟ), ಹಾಸನದ ಯೋಗೇಂದ್ರ ದುದ್ದು(ಗೀಗೀ ಪದ), ಚಿಕ್ಕಮಗಳೂರಿನ ರವಿ ಎಚ್.ಎಂ.(ವೀರಗಾಸೆ), ಚಾಮರಾಜನಗರದ ಬಸವರಾಜು(ಗೊರುಕನ ನೃತ್ಯ) ಅವರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಳಗಾವಿಯ ಭೀಮಪ್ಪ ಸಿದ್ಧಪ್ಪ ಮುತ್ನಾಳ್(ಪುರವಂತಿಕೆ), ಧಾರವಾಡ ಜೈಭೀಮನಗರದ ಪ್ರಕಾಶ ಮಲ್ಲಿಗವಾಡ(ಜಾನಪದ ನೃತ್ಯ), ವಿಜಯಪುರದ ಜ್ಯೋತಿರ್ಲಿಂಗ ಹೂನಕಟ್ಟಿ(ಜಾನಪದ ಗಾಯನ), ಬಾಗಲಕೋಟೆಯ ಚಂದ್ರಲಿಂಪ್ಪ ನಿಂಗಪ್ಪ ಬಸರಕೋಡ(ಪುರುವಂತಿಕೆ) ಅವರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾವೇರಿಯ ಬಿಕ್ಷಾಪತಿ ಮೋತಿ(ಹಗಲುವೇಷ), ಗದಗದ ಕಾಶಿಮಸಾಬ ಹುಸೇನಸಾಬ(ಹೆಜ್ಜೆ ಮೇಳ), ಕಲಬುರಗಿಯ ಭಾಗಪ್ಪ(ತತ್ವಪದ), ಬೀದರ್ನ ಇಂದ್ರಮ್ಮ(ಮೋಹರಂ ಪದ), ರಾಯಚೂರಿನ ಯಂಕನಗೌಡ(ತತ್ವಪದ), ಕೊಪ್ಪಳದ ರಾಮಣ್ಣ(ಹಗಲು ವೇಶ), ವಿಜಯನಗರದ ಕಿಂಡ್ರಿ ಲಕ್ಷ್ಮೀಪತಿ(ಸುಡುಗಾಡು ಸಿದ್ದರು) ಹಾಗೂ ಯಾದಗಿರಿಯ ಹಣಮಂತ(ತತ್ವಪದ) ಅವರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜಾನಪದ ತಜ್ಞ ಪ್ರಶಸ್ತಿ: ತುಮಕೂರಿನ ಗಡಿನಾಡು ಜಾನಪದ ಕೇಂದ್ರದ ಡಾ. ಚಿಕ್ಕಣ್ಣ ಯಣ್ಣೆಕಟ್ಟೆ ಅವರನ್ನು ಡಾ. ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿಗೆ, ಕಲಬುರಗಿ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಹಾಗೂ ಪ್ರಾಧ್ಯಾಪಕರಾದ ಡಾ. ಎಚ್.ಟಿ.ಪೋತೆ ಅವರನ್ನು ಡಾ. ಬಿ.ಎಸ್. ಗದ್ದಿಗಿಮಠ ಜಾನಪದ ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2024ನೆ ಸಾಲಿನ ಪುಸ್ತಕ ಬಹುಮಾನ: ವಿಚಾರ ವಿಮರ್ಶೆ ಪ್ರಕಾರದಡಿ ಕನ್ನಡ ಪ್ರಾಧ್ಯಾಪಕ ಡಾ. ವೀರಾಸಾಬಿಹಳ್ಳಿ ಶಿವಣ್ಣ ಅವರ ‘ಕಡುಗೊಲ್ಲರ ಸಂಸ್ಕೃತಿ ಮತ್ತು ಕಾವ್ಯಗಳು’ ಪುಸ್ತಕವನ್ನು ಹಾಗೂ ಸಂಶೋಧನೆ ಪ್ರಕಾರದಡಿ ವಿಜಯನಗರದ ಕೂಡ್ಲಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಡಾ. ಇಮಾಮ್ ಸಾಹೇಬ್ ಹಡಗಲಿ ಅವರು ಬರೆದ ‘ಕನಕಗಿರಿ ಸೀಮೆಯ ಸ್ಥಳನಾಮಗಳು’ ಪುಸ್ತಕವನ್ನು 2024ನೆ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಆಯ್ಕೆ ಮಾಡಲಾಗಿದೆ. ವಾರ್ಷಿಕ ಗೌರವ ಪ್ರಶಸ್ತಿ ತಲಾ 25 ಸಾವಿರ ರೂ., ಜಾನಪದ ತಜ್ಞ ಪ್ರಶಸ್ತಿ ತಲಾ 50 ಸಾವಿರ ರೂ. ಹಾಗೂ ಪುಸ್ತಕ ಬಹುಮಾನ ಪ್ರಶಸ್ತಿ ತಲಾ 25 ಸಾವಿರ ರೂ. ಮೊತ್ತದ ಜೊತೆಗೆ ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ಒಳಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರಾಯಚೂರು| ಡಿ.28ಕ್ಕೆ ಯರಗೇರಾ ಬಡೇಸಾಬ್ ಉರೂಸ್
ರಾಯಚೂರು : ಯರಗೇರಾ ಗ್ರಾಮದ ಹಜರತ್ ಬಡೇಸಾಹೇಬ್ ಅವರ 127ನೇ ವರ್ಷದ ಉರೂಸ್ ಎ ಷರೀಪ್ ಕಾರ್ಯಕ್ರಮ ಡಿ.28ರಂದು ನಡೆಯಲಿದೆ ಎಂದು ದರ್ಗಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಿಜಾಮುದ್ದಿನ್ ಹೇಳಿದರು. ಈ ಕುರಿತು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಹಮ್ಮದ್ ನಿಜಾಮುದ್ದಿನ್, ಉರೂಸ್ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು, ಹಿಂದಿನ ಸಂಪ್ರಾದಾಯದಂತೆ ಎಳ್ಳ ಅಮವಾಸ್ಯೆಯ ನಂತರದ ಮೊದಲ ಅಥವಾ ಎರಡನೇ ರವಿವಾರ ಬಡೇಸಾಬ್ ದರ್ಗಾದ ಉರೂಸ್ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೇವೆ. ಈ ಬಾರಿ ಡಿ.27ರಂದು ರಾತ್ರಿ 10.30ಗಂಟೆಯಿಂದ ಡಿ.28ರ ಮುಂಜಾನೆ 5 ಗಂಟೆಯವರೆಗೆ ಸಂದಲ್ ಷರೀಫ್ ಗಂಧ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು. ಡಿ.28ರ ಬೆಳಿಗ್ಗೆ 5 ಗಂಟೆಗೆ ಸೈಯದ್ ಹಫೀಜುಲ್ಲಾ ಖಾದ್ರಿಯವರಿಂದ ಫಾತಿಯಾ ಕಾರ್ಯಕ್ರಮ ನೆರವೇರಿಸುವ ಮೂಲಕ 127ನೇ ಬಡೇಸಾಬ್ ಉರುಸ್ಗೆ ಚಾಲನೆ ನೀಡಲಾಗುವುದು. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೇ ನೆರೆಯ ತೆಲಂಗಾಣ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಭಕ್ತರು ಆಗಮಿಸಿ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸಿಕೊಳ್ಳಲಿದ್ದಾರೆ ಎಂದು ಹೇಳಿದರು. ಡಿ.29ರಂದು ಝಿಯಾರತ್ ಕಾರ್ಯಕ್ರಮ ನಡೆಯಲಿದ್ದು, ಉರೂಸ್ ಕಾರ್ಯಕ್ರಮಕ್ಕೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಸಂಸದ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ, ಮಾಜಿ ಸಂಸದ ಬಿ.ವಿ.ನಾಯಕ, ಬಸವರಾಜ ಪಾಟೀಲ್ ಇಟಗಿ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಹೆಬೂಬ್ ಪಟೇಲ್, ಬಂಡಾರಿ ಫಕ್ರುದ್ದಿನ್ ಪಟೇಲ್, ಆಜೀಮ್ ಅಲಂ, ಮಹ್ಮದ್ ರಫೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಜಯ್ ಹಜಾರೆ ಟ್ರೋಫಿ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಅನುಮತಿ ನಿರಾಕರಣೆ
ಬೆಂಗಳೂರು : ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿ.24ರಂದು ನಡೆಯಬೇಕಿದ್ದ ದೇಶೀಯ ಕ್ರಿಕೆಟ್ ಪಂದ್ಯ ‘ವಿಜಯ್ ಹಜಾರೆ ಟ್ರೋಫಿ’ಗೆ ಅನುಮತಿ ನೀಡಲು ನಗರ ಪೊಲೀಸರು ನಿರಾಕರಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪ ಇರುವ ಸೆಂಟರ್ ಆಫ್ ಎಕ್ಸೆಲೆನ್ಸ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ ಎಂದು ವರದಿಯಾಗಿದೆ. ಜೂನ್ನಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಹೊರಭಾಗದಲ್ಲಿಯೇ ಕಾಲ್ತುಳಿತ ದುರಂತ ಸಂಭವಿಸಿತ್ತು. ಬಳಿಕ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಯಿತು. ಆದರೆ ಪ್ರೇಕ್ಷಕರಿಗೆ ಅವಕಾಶ ಇಲ್ಲದೇ ಪಂದ್ಯ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮುಖ್ಯಸ್ಥ ವೆಂಕಟೇಶ್ ಪ್ರಸಾದ್ ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದರು. ಪಂದ್ಯ ನಡೆಸುವ ಸಂಬಂಧ ಸೋಮವಾರ ಬೆಂಗಳೂರು ಆಯುಕ್ತ ಸೀಮಂತ್ ಕುಮಾರ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಅಗ್ನಿಶಾಮಕ ದಳದ ಅಧಿಕಾರಿಗಳು ಕ್ರೀಡಾಂಗಣಕ್ಕೆ ಆಗಮಿಸಿ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದ್ದರು. ಪರಿಶೀಲನೆಯ ಬಳಿಕ ಈ ತಂಡ ಸರಕಾರಕ್ಕೆ ವರದಿ ನೀಡಿತ್ತು. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಕ್ಕೆ ಅಂತಿಮವಾಗಿ ಬೆಂಗಳೂರು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜ.2ರಂದು ಶುಕ್ರವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಮಾದಕ ವಸ್ತುಗಳ ಅಕ್ರಮ ಸಾಗಣೆ: ವಿದೇಶಿ ಮಹಿಳೆ ಸೇರಿ ಮೂವರ ಬಂಧನ
ಬೆಂಗಳೂರು : ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ಸಾಗಣೆ ಮಾಡುತ್ತಿದ್ದ ಒಬ್ಬ ವಿದೇಶಿ ಮಹಿಳೆ ಸೇರಿ ಮೂವರನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 1.47 ಕೋಟಿ ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ವಿದೇಶಿ ಮಹಿಳೆ 2024ರಲ್ಲಿ ದಿಲ್ಲಿಯಲ್ಲಿ ವ್ಯಾಸಂಗಕ್ಕಾಗಿ ವಿದ್ಯಾರ್ಥಿ ವೀಸಾ ಪಡೆದು ಭಾರತಕ್ಕೆ ಬಂದಿದ್ದಾಳೆ. ಆದರೆ, ಕಾಲೇಜಿಗೆ ದಾಖಲಾಗದೆ ಮುಂಬೈನ ಗಾಲಾ ನಗರ, ಅಂಬವಾಡಿ ವಾಸವಾಗಿದ್ದಳು. ಮುಂಬೈನಲ್ಲಿರುವ ಆಕೆಯ ಸ್ನೇಹಿತನಿಂದ ಕೊಕೇನ್ ಪಡೆದು, ಆತನ ಸೂಚನೆಯ ಮೇರೆಗೆ ಬೆಂಗಳೂರಿಗೆ ಸಾಗಣೆ ಮಾಡುತ್ತಿದ್ದಳೆಂದು ತನಿಖೆಯಲ್ಲಿ ತಿಳಿದುಬಂದಿದೆ.
ಲಿಂಗಸುಗೂರು: ತಾಲೂಕಿನ ಹಟ್ಟಿ ಪಟ್ಟಣದ ಹೊರವಲಯದಲ್ಲಿ ಸೋಮವಾರ ಅನುಮಾನಾಸ್ಪದವಾಗಿ ಯುವತಿಯೋರ್ವಳ ಮೃತದೇಹ ಪತ್ತೆಯಾಗಿತ್ತು. ಇದೀಗ ಯುವತಿಯ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಜ್ಯೋತಿ ಎಂಬ ಯುವತಿಯ ಮೃತದೇಹ ಸೋಮವಾರ ಅನುಮಾನಾಸ್ಪದವಾಗಿ ಪತ್ತೆಯಾಗಿತ್ತು. ಜ್ಞಾನಮೂರ್ತಿ ಹಾಗೂ ಅವರ ಕುಟುಂಬಸ್ಥರೇ ಕೊಲೆ ನಡೆಸಿದ್ದಾರೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬದ ಸದಸ್ಯರು ಸೇರಿದಂತೆ ನೂರಾರು ಗ್ರಾಮಸ್ಥರು ಮಂಗಳವಾರ ಸಂಜೆ ಪೊಲೀಸ್ ಠಾಣೆ ಆವರಣದಲ್ಲಿ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು, ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು. ಇದರಿಂದಾಗಿ ಠಾಣೆ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಕುಟುಂಬಸ್ಥರು ಹಾಗೂ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪರಿಸ್ಥಿತಿ ಶಾಂತವಾಗಿದೆ. ಪೊಲೀಸರ ಭರವಸೆ ಬಳಿಕ ಮೃತದೇಹವನ್ನು ಠಾಣೆಯ ಆವರಣದಿಂದ ಹೊರತೆಗೆದು, ಕುಟುಂಬಸ್ಥರು ಅಂತ್ಯಸಂಸ್ಕಾರ ನಡೆಸಿದ್ದಾರೆ.
ಚಾಮರಾಜನಗರ; 5 ಹುಲಿಗಳ ಸೆರೆಗೆ ಬೋನು, ಅರವಳಿಕೆ ಕಾರ್ಯಾಚರಣೆಗೆ ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು : ಚಾಮರಾಜನಗರದ ನಂಜೆದೇವಪುರದಲ್ಲಿ ಕಾಣಿಸಿಕೊಂಡಿರುವ 5 ಹುಲಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಮೊದಲಿಗೆ ಬೋನುಗಳನ್ನು ಅಳವಡಿಸಲು ಮತ್ತು ಅಗತ್ಯ ಬಿದ್ದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಹುಲಿಗಳು ಖಾಸಗಿ ಜಮೀನಿನಲ್ಲಿ ಕಾಣಿಸಿಕೊಂಡಿರುವ ಕಾರಣ ಜನರು ಭಯಭೀತರಾಗಿದ್ದು, ಅಮೂಲ್ಯವಾದ ಜೀವಹಾನಿ ಆಗದ ರೀತಿಯಲ್ಲಿ ಮತ್ತು ವನ್ಯಜೀವಿಗಳಿಗೂ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಹುಲಿಗಳ ಚಲನವಲನದ ಮೇಲೆ ಸತತ ನಿಗಾ ಇಡುವುದು ಅತ್ಯಗತ್ಯವಾಗಿದ್ದು, ಡ್ರೋನ್ ಕ್ಯಾಮರಾಗಳು, ಥರ್ಮಲ್ ಕ್ಯಾಮರಾಗಳನ್ನು ಬಳಸಿ ಹುಲಿಗಳು ಎಲ್ಲಿವೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ಗ್ರಾಮಸ್ಥರಿಗೆ ಕೂಡಲೆ ಮಾಹಿತಿ ನೀಡಬೇಕು ಮತ್ತು ಅಲ್ಲಿಗೆ ಅರಣ್ಯ ಇಲಾಖೆಯ ತಂಡಗಳನ್ನು ಕಳುಹಿಸಿ ಯಾವುದೆ ಅನಾಹುತ ಆಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು. 5 ಹುಲಿಗಳ ಕಾರ್ಯಾಚರಣೆ ಸುಲಭದ ಕಾಯಕವಲ್ಲ ಎಂಬುದು ತಮಗೂ ಅರಿವಿದೆ. ಹುಲಿಗಳನ್ನು ಹಿಡಿಯುವಾಗ ಹುಲಿಗಳು ಕಾರ್ಯಾಚರಣೆ ತಂಡದ ಮೇಲೆ ದಾಳಿ ಮಾಡದಂತೆ ಮತ್ತು ಬಡಗಲಪುರದಲ್ಲಿ ಹುಲಿ ರಕ್ಷಣೆ ಕಾರ್ಯಾಚರಣೆ ವೇಳೆ ವ್ಯಕ್ತಿಯ ಮೇಲೆ ದಾಳಿ ಆದಂತಹ ಪ್ರಕರಣಗಳು ಮರುಕಳಿಸದಂತೆ ಹಿರಿಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಅವರು ಸೂಚಿಸಿದರು. ಹೆಚ್ಚುವರಿ ಆನೆ, ಪಶುವೈದ್ಯರ ನಿಯೋಜನೆಗೂ ಸೂಚನೆ: ಹುಲಿಗಳ ರಕ್ಷಣೆ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲ ಸಲಕರಣೆ, ಹೆಚ್ಚುವರಿ ಪಶುವೈದ್ಯರು, ಶಾರ್ಪ್ ಶೂಟರ್ ಗಳನ್ನು ನಿಯೋಜನೆ ಮಾಡುವಂತೆ ಹಾಗೂ ಹೆಚ್ಚುವರಿಯಾಗಿ ಆನೆಗಳನ್ನು ತಕ್ಷಣವೇ ತರಿಸಿಕೊಳ್ಳುವಂತೆಯೂ ಈಶ್ವರ್ ಖಂಡ್ರೆ ಸ್ಪಷ್ಟವಾಗಿ ತಿಳಿಸಿದರು. ಜನರ ಜೀವ ಪರಮೋಚ್ಚ: ಜನರ ಜೀವದ ಸುರಕ್ಷತೆ ಅತ್ಯಂತ ಪರಮೋಚ್ಚವಾದದ್ದು, ಅದೇ ವೇಳೆ ವನ್ಯಜೀವಿಗಳ ರಕ್ಷಣೆಯೂ ಅಷ್ಟೇ ಮುಖ್ಯ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಚರಣೆ ನಡೆಸಬೇಕು, ಸಿಬ್ಬಂದಿಯ ಸುರಕ್ಷತೆಗೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಜೊತೆಗೆ ಜನರು ಯಾರೂ ಕಾರ್ಯಾಚರಣೆ ಸ್ಥಳಕ್ಕೆ ಬಾರದಂತೆ ಸೆಕ್ಷನ್ 144 ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಅವರು ಸೂಚಿಸಿದರು. ಇ-ಗಸ್ತು ಹೆಚ್ಚಿಸಬೇಕು: ಎಲ್ಲ ಅರಣ್ಯ ಗಸ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಮೊಬೈಲ್ ನಲ್ಲಿ ಇ- ಆ್ಯಪ್ ಅಳವಡಿಸಿ, ಗಸ್ತಿನ ಮೇಲೆ ಕೇಂದ್ರ ಕಚೇರಿಯಿಂದ ನಿಗಾ ಇಡಬೇಕು. ಗಸ್ತಿನಲ್ಲಿ ಯಾವುದೇ ಲೋಪ ಆಗದಂತೆ ಪೂರ್ಣ ಪ್ರಮಾಣದಲ್ಲಿ ಎಚ್ಚರಿಕೆ ವಹಿಸಬೇಕು ಹಾಗೂ ಕಮಾಂಡ್ ಕೇಂದ್ರಗಳನ್ನು ವಿಳಂಬವಿಲ್ಲದೆ ಎಲ್ಲೆಡೆ ಕಾರ್ಯಾರಂಭ ಮಾಡಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಅವರು ತಿಳಿಸಿದರು. ಈಗ ನಾವು ಕೈಗೊಳ್ಳುತ್ತಿರುವುದೆಲ್ಲವೂ ತಾತ್ಕಾಲಿಕ ಕ್ರಮಗಳಾಗಿದ್ದು, ವನ್ಯಜೀವಿಗಳು ಕಾಡಿನಿಂದ ನಾಡಿನತ್ತ ಬಾರದಂತೆ ಶಾಶ್ವತ ಪರಿಹಾರ ಏನು ಎಂಬ ಬಗ್ಗೆ ಅಧಿಕಾರಿಗಳು ತಜ್ಞರೊಂದಿಗೆ ಚರ್ಚಿಸಿ ರೂಪುರೇಶೆ ತಯಾರಿಸಿ ವರದಿ ಸಲ್ಲಿಸಲು ಈಶ್ವರ್ ಖಂಡ್ರೆ ಹೇಳಿದರು. ತುರುವೇಕೆರೆಯಲ್ಲಿ ಮಹಿಳೆಯ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆ, ಮಹಿಳೆಯ ದೇಹದ ಮಾಂಸ ಭಕ್ಷಣೆ ಮಾಡಿರುವ ಕಾರಣ ಅದನ್ನು ಸೆರೆ ಹಿಡಿದು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಹಿರಿಯ ಅಧಿಕಾರಿಗಳಾದ ಮನೋರ್ ರಾಜನ್, ಬಿಸ್ವಜಿತ್ ಮಿಶ್ರಾ ಮತ್ತು ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಮತ್ತಿತರರು ಪಾಲ್ಗೊಂಡಿದ್ದರು.
15 ಸೈಟ್, 71 ಎಕರೆ ಜಮೀನು, ಕೆಜಿ ಕೆಜಿ ಚಿನ್ನ... ಭ್ರಷ್ಟ ಅಧಿಕಾರಿಗಳ ಆಸ್ತಿ ಕಂಡು ದಂಗಾದ ಲೋಕಾಯುಕ್ತ ಅಧಿಕಾರಿಗಳು
ಲೋಕಾಯುಕ್ತ ಪೊಲೀಸರು ಆದಾಯ ಮಿತಿಗಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ನಾಲ್ವರು ಭ್ರಷ್ಟ ಸರಕಾರಿ ಅಧಿಕಾರಿಗಳು ಹಾಗೂ ಅವರ ಸಂಬಂಧಿಕರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ, ಸುಮಾರು 19.20 ಕೋಟಿ ರೂ. ಮೌಲ್ಯದ ನಗ-ನಾಣ್ಯ, ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ. ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ರಾಯಚೂರು ಜಿಲ್ಲೆಗಳ ಅಧಿಕಾರಿಗಳು ಹಾಗೂ ಅವರ ಸಂಬಂಧಿಕರ ಒಟ್ಟು 17 ಸ್ಥಳಗಳ ಮೇಲೆ ಏಕಕಾಲಕ್ಕೆ ಈ ಕಾರ್ಯಾಚರಣೆ ನಡೆದಿದೆ.
ಇಂಗ್ಲೆಂಡ್ ಕ್ರಿಕೆಟಿಗರು ಬೀಚ್ ರೆಸಾರ್ಟ್ ನಲ್ಲಿ ಫುಲ್ ಟೈಟ್; ತೂರಾಡುತ್ತಿದ್ದ ಬೆನ್ ಡಕೆಟ್! ಹಾಗಿದ್ದರೆ ಆಗಿದ್ದೇನು?
England Team Drinking Break- ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ಬಾಕಿ ಉಳಿದಿರುವಾಗಲೇ ಹೀನಾಯ ಸೋಲನುಭವಿಸಿರುವ ಇಂಗ್ಲೆಂಡ್ ತಂಡದ ಆಟಗಾರರು ಬೀಚ್ ರೆಸಾರ್ಟ್ ನಲ್ಲಿ ಅತಿಯಾಗಿ ಮದ್ಯಪಾನ ಮಾಡಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ. ಇದರೊಂದಿಗೆ ಬ್ಯಾಟರ್ ಬೆನ್ ಡಕೆಟ್ ಕುಡಿದು ತೂರಾಡುತ್ತಿರುವ ವಿಡಿಯೋ ವೈರಲ್ ಆಗಿರುವುದು ಈ ಆರೋಪಕ್ಕೆ ಪುಷ್ಟಿ ನೀಡವಂತಿದೆ. ಇದೀಗ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ಮುಜುಗರಕ್ಕೆ ಕಾರಣವಾಗಿದ್ದು ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
Mandya | ಅಪರಿಚಿತ ವಾಹನ ಢಿಕ್ಕಿ: ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತ್ಯು
ಮಂಡ್ಯ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮದ್ದೂರು ತಾಲೂಕಿನ ತುಮಕೂರು- ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ. ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿಯ ಹುಲ್ಕೆರೆ ಗ್ರಾಮದ ಮಂಚೇಗೌಡ ಅವರ ಪುತ್ರ ಶಂಕರ್(43) ಹಾಗೂ ಜೋಗಯ್ಯ ಅವರ ಪುತ್ರ ವೀರೇಂದ್ರ(46) ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. ಮೃತರು ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿ ಗ್ರಾಮದಲ್ಲಿ ಸಂಬಂಧಿಕರ ಉತ್ತರ ಕ್ರಿಯಾಧಿ ಕಾರ್ಯದಲ್ಲಿ ಪಾಲ್ಗೊಂಡು ವಾಪಸ್ಸು ಸ್ವಗ್ರಾಮದತ್ತ ತೆರಳುತ್ತಿದ್ದ ವೇಳೆ ಮದ್ದೂರು-ತುಮಕೂರು ಮಾರ್ಗದಲ್ಲಿ ಚಲಿಸುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತದಿಂದಾಗಿ ಮದ್ದೂರು- ತುಮಕೂರು ಹೆದ್ದಾರಿ ಸಂಚಾರ ಅಸ್ಥವ್ಯಸ್ಥಗೊಂಡು ಪ್ರಯಾಣಿಕರು ಪರದಾಡುವಂತಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ರವಾನಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆಹಚ್ಚಲು ಪೊಲೀಸರು ಸಿ.ಸಿ.ಕ್ಯಾಮರಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಮಳವಳ್ಳಿ ಡಿ.ವೈ.ಎಸ್.ಪಿ ಯಶವಂತ್ ಹಾಗೂ ಗ್ರಾಮಾಂತರ ವೃತ್ತ ನಿರೀಕ್ಷಕ ನಾರಾಯಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಒಗ್ಗಟ್ಟಿನಲ್ಲಿ ಮುನ್ನೆಡೆದರೆ ಸಾಮರಸ್ಯದ ಸಮಾಜ: ಸ್ಪೀಕರ್ ಯು.ಟಿ.ಖಾದರ್
ಕೊಣಾಜೆ: ಸೌಹಾರ್ದತೆಯ ಸಮಾಜವನ್ನು ಜನಪ್ರತಿನಿಧಿಗಳಿಂದ, ಆಡಳಿತ ವ್ಯವಸ್ಥೆಯಿಂದ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಜನರು ಪರಸ್ಪರ ಪ್ರೀತಿ ವಿಶ್ವಾಸದೊಂದಿಗೆ ಒಗ್ಗಟ್ಟಿನಿಂದ ಮುನ್ನಡೆದರೆ ಮಾತ್ರ ಇದು ಸಾಧ್ಯ. ನರಿಂಗಾನ ಸಾಮರಸ್ಯದ ಗ್ರಾಮವಾಗಿ ರೂಪುಗೊಂಡು ಇದೀಗ ಗ್ರಾಮಕ್ಕೆ ಪೂರಕವಾಗಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ನರಿಂಗಾನ ಗ್ರಾಮ ಪಂಚಾಯತ್ ವಠಾರದಲ್ಲಿ ಗಾಂಧಿ ಪ್ರತಿಮೆ ಅನಾವರಣ,ಗ್ರಾಮ ವ್ಯಾಪ್ತಿಯ ಬೋಳದಲ್ಲಿ ನಿರ್ಮಿಸಲಾದ ಸ್ವಚ್ಛ ಸಂಕೀರ್ಣ ಮತ್ತು ಮಲತ್ಯಾಜ್ಯ ಘಟಕ ಉದ್ಘಾಟನೆ,ಆಶಾ ಕಾರ್ಯಕರ್ತೆಯರಿಗೆ ಸ್ಕೂಟರ್ ಹಸ್ತಾಂತರ,ಹಕ್ಕುಪತ್ರ ವಿತರಣೆ,ನೀರಿನ ಟ್ಯಾಂಕ್ ಉದ್ಘಾಟನೆ,ವಿಶೇಷ ಚೇತನರಿಗೆ ಚೆಕ್ ವಿತರಣೆ ಸೇರಿದಂತೆ ನರಿಂಗಾನ ಗ್ರಾಮದಲ್ಲಿ ಐದು ಕೋಟಿ ಅನುದಾನದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಂಗಳವಾರದಂದು ಉದ್ಘಾಟಿಸಿ ಅವರು ಮಾತನಾಡಿದರು. ಉಳ್ಳಾಲ ಕ್ಷೇತ್ರದಲ್ಲಿ 20 ಕೋಟಿ ಅನುದಾನದಲ್ಲಿ ಸೈಬರ್ ಸೆಕ್ಯೂರಿಟಿ ಜಾರಿಗೆ ತರಲು ಯೋಚಿಸಲಾಗಿದ್ದು ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ.ಇದು ಜಾರಿಯಾದಲ್ಲಿ ಅಪರಾಧ ಸಹಿತ ಎಲ್ಲಾ ರೀತಿಯ ಸಮಸ್ಯೆಗಳಿಗೂ ಕಡಿವಾಣ ಹಾಕಲು ಸಾಧ್ಯ. ನರಿಂಗಾನ ಗ್ರಾಮಸ್ಥರಿಗೆ ಈ ಮೊದಲು ನೀಡಿದ ಭರವಸೆಯಂತೆ 24 ಗಂಟೆ ಕುಡಿಯುವ ನೀರು, ರಸ್ತೆ, ಶಿಕ್ಷಣ ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳು ನರಿಂಗಾನ ಗ್ರಾಮದಲ್ಲಿ ನಡೆದು ಗ್ರಾಮವು ಅಭಿವೃದ್ಧಿ ಹಂತಕ್ಕೆ ತಲುಪಿದೆ ಎಂದರು. ಗ್ರಾಮದಲ್ಲಿ ಜನಪ್ರತಿನಿಧಿಗಳು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದರೂ ಅದನ್ನು ಅನುಷ್ಟಾನಗೊಳಿಸಿ ಮುಂದೆಯೂ ಕಾಪಾಡಿಕೊಂಡು ಹೋಗುವ ಜವಬ್ಧಾರಿ ಗ್ರಾಮಸ್ಥರದ್ದು. ಆಶಾ ಕಾರ್ಯಕರ್ತೆಯರಿಗೆ ಉಚಿತವಾಗಿ ದ್ವಿಚಕ್ರ ವಾಹನ ಕೊಡಿಸುವ ವ್ಯವಸ್ಥೆಯನ್ನು ನರಿಂಗಾನ ಗ್ರಾಮ ಪಂಚಾಯತ್ ಮಾಡಿದ್ದು ಇದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದರು. ದುಶ್ಚಟ ಮುಕ್ತ ದ್ವೇಷ ಮುಕ್ತ, ಕಸಮುಕ್ತ ಗ್ರಾಮಗಳನ್ನಾಗಿ ರೂಪಿಸುವುದೇ ನಮ್ಮ ಉದ್ದೇಶವಾಗಿದೆ. ಜನಶಿಕ್ಷಣ ಟ್ರಸ್ಟ್ ಅವರ ಸಹಕಾರದೊಂದಿಗೆ ಅನೇಕ ಯೊಜನೆಗಳ ಅನುಷ್ಠಾನ ಕುರಿತು ಚರ್ಚಿಸಲಾಗಿದೆ ಎಂದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿಎಸ್ ಗಟ್ಟಿ ಅವರು ಮಾತನಾಡಿ, ಗ್ರಾಮಕ್ಕೆ ಪೂರಕವಾಗಿ ಯು.ಟಿ.ಖಾದರ್ ಅವರ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳು ನರಿಂಗಾನ ಗ್ರಾಮದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ ಎಂದರು. ಪಂಚಾಯಿತಿ ಅಧ್ಯಕ್ಷ ನವಾಝ್ ನರಿಂಗಾನ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ನವಾಝ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷೆ ಜ್ಯೋತಿ ಡಿಸೋಜ, ನರಿಂಗಾನ ಲವ ಕುಶ ಜೋಡುಕರೆ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಗ್ಯಾರಂಟಿ ಸಮಿತಿಯ ಜಿ.ಪಂ. ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಬೋಳಿಯಾರ್ ಗ್ರಾ.ಪಂ. ಮಾಜಿ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಮಂಗಳೂರು ತಾ.ಪಂ. ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಮಾಜಿ ಒಂಬುಡ್ಸ್ ಮೆನ್ ಶೀನ ಶೆಟ್ಟಿ, ಬೋಳ ಸಂತ ಲಾರೆನ್ಸ್ ದೇವಾಲಯದ ಧರ್ಮಗುರು ರೆ.ಪಾ.ಪೀಟರ್ ಡಿಸೋಜ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಲೋಕೋಪಯೋಗಿ ಇಲಾಖೆಯ ಅಧಿಕಾರಿ ವೀರೇಂದ್ರ, ಬಂಟ್ವಾಳ ಉಪವಿಭಾಗ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ತಾರನಾಥ ಸಾಲಿಯನ್ ಪಿ., ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಿಕಟಪೂರ್ವ ಪಿಡಿಓ ರಜನಿ ಉಪಸ್ಥಿತರಿದ್ದರು. ಪಿಡಿಒ ಶ್ವೇತಾ ಕೆ. ವಿ. ಸ್ವಾಗತಿಸಿದರು. ಕಾರ್ಯದರ್ಶಿ ಎ.ಕೆ.ನಳಿನಿ ಸನ್ಮಾನಪತ್ರ ವಾಚಿಸಿ, ವಂದಿಸಿದರು. ಪತ್ರಕರ್ತ ಸತೀಶ್ ಕುಮಾರ್ ಪುಂಡಿಕಾಯಿ ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯ ಮತ್ತು ಶೈಕ್ಷಣಿಕ ಹಬ್ ಎನಿಸಿರುವ ಮಣಿಪಾಲ ಮತ್ತು ಕೊಣಾಜೆ ನಡುವೆ ಈ ಹಿಂದೆ ರೂಪಿಸಲಾಗಿದ್ದ ನಾಲೇಜ್ ಕಾರಿಡಾರ್ ಯೋಜನೆಯಡಿ ಮುಂದಿನ ದಿನಗಳಲ್ಲಿ ಮೆಟ್ರೋ ಯೋಜನೆ ಅನುಷ್ಠಾನಗೊಳಿಸಲಾಗುವುದು. - ಯು.ಟಿ.ಖಾದರ್, ವಿಧಾನಸಭಾ ಅಧ್ಯಕ್ಷರು
ಬಂಟ್ವಾಳ: ತೌಹೀದ್ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ, ಕ್ರೀಡಾಕೂಟ ಹಾಗೂ ಮಿಲಾದ್ ಫೆಸ್ಟ್
ಬಂಟ್ವಾಳ : ಇಲ್ಲಿನ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ, ಕ್ರೀಡಾಕೂಟ ಹಾಗೂ ಮಿಲಾದ್ ಪೆಸ್ಟ್ ಕಾರ್ಯಕ್ರಮ ಇತ್ತೀಚೆಗೆ ಶಾಲಾ ಆವರಣದಲ್ಲಿ ನಡೆಯಿತು. ವಾರ್ಷಿಕ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಮ್ಮದ್ ಹನೀಫ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಂಟ್ವಾಳ ಅಗ್ನಿಶಾಮಕ ಠಾಣಾಧಿಕಾರಿ ಹರೀಶ್, ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಷನ್ ರಾಜ್ಯ ಕಾರ್ಯದರ್ಶಿ ಇಮ್ಮಿಯಾಝ್ ಗೋಳ್ತಮಜಲು ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಮಿಲಾದ್ ಪೆಸ್ಟ್ ಕಾರ್ಯಕ್ರಮವು ಶಾಲಾ ಸಂಚಾಲಕ ಹಾಜಿ ಅಬ್ದುಲ್ ರಹಮಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೌಲಾನ ಅಬ್ದುಲ್ ಸಲಾಂ ಯಾಮನಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮೌಲಾನ ಸಿರಾಜುದ್ದೀನ್ ಮದನಿ ಮಾತನಾಡಿ ಶುಭ ಹಾರೈಸಿದರು. ಮದ್ರಸ ಮುಖ್ಯ ಶಿಕ್ಷಕ ಅಬ್ದುಲ್ ಮಜೀದ್ ಪೈಝಿ ಉಪಸ್ಥಿತರಿದ್ದರು. ಶಾಲಾಡಳಿತ ಸಮಿತಿ ಅಧ್ಯಕ್ಷ ಅಡ್ವಕೇಟ್ ರಿಯಾಝ್ ಹುಸೈನ್ ರವರ ಅಧ್ಯಕ್ಷತೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ದಾರವಾಡ ವಿಶ್ವಾವಿದ್ಯಾಲಯದ ಉಪಕುಲಪತಿ ಎ.ಎಂ.ಖಾನ್ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಜಿ ಬಿ. ಎಚ್. ಖಾದರ್ ಬಂಟ್ವಾಳ, ಹಾಜಿ ಕಣಚೂರು ಮೋನು, ದುಬಾಯಿ ಉದ್ಯಮಿ ಇಬ್ರಾಹಿಂ ಗಡಿಯಾರ್, ರಿಯಾಝ್ ಫರಂಗಿಪೇಟೆ, ಶೈಕ್ಷಣಿಕ ಸಂಯೋಜಕಿ ಪ್ರತಿಮಾ, ಸಂಪನ್ಮೂಲ ಅಧಿಕಾರಿ ಸುರೇಖ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭ ಕರ್ನಾಟಕ ಬ್ಯಾಂಕ್ ವತಿಯಿಂದ ಶಾಲೆಗೆ ಕೊಡುಗೆಯಾಗಿ ನೀಡಲಾದ ಬಸ್ಸನ್ನು ಬ್ಯಾಂಕಿನ ಅಧಿಕಾರಿ ವಿಶ್ವನಾಥ್ ಅವರು ಹಸ್ತಾಂತರಿಸಿದರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಬಿ. ಎಚ್. ಖಾದರ್ ಬಂಟ್ವಾಳ ಇವರನ್ನು ಸನ್ಮಾನಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ 2024-25ನೇ ಸಾಲಿನ ಎಸ್.ಎಸ್.ಎಲ್.ಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ತಲಾ 5000 ರೂಪಾಯಿ ದೇಣಿಗೆಯಾಗಿ ನೀಡಿದ ಇಕ್ಬಾಲ್ ಬಾವ ಅವರನ್ನು ಸ್ಮರಿಸಲಾಯಿತು. ಶಾಲಾ ಆಡಳಿತ ಸಮಿತಿ ಕಾರ್ಯದರ್ಶಿ ಅಬ್ದುಲ್ ಖಾದರ್ ಮಾಸ್ಟರ್ ಸ್ವಾಗತಿಸಿ, ಶಾಲಾಡಳಿತ ಸಮಿತಿ ಸದಸ್ಯ, ಬಂಟ್ವಾಳ ಪುರಸಭೆಯ ನಿಕಟಪೂರ್ವ ಉಪಾಧ್ಯಕ್ಷ ಮೋನಿಸ್ ಆಲಿ ಪ್ರಸ್ತಾವನೆಗೈದರು. ಶಾಲಾ ಮುಖ್ಯ ಶಿಕ್ಷಕ ಇಬ್ರಾಹಿಂ ಸಲೀಂ ಪಿ ವಾರ್ಷಿಕ ವರದಿ ವಾಚಿಸಿದರು. ನಿಶ್ಮಿತಾ, ಸಲ್ಮಾ ಶಿರಿನ್ ಹಾಗೂ ಆಶಿಯಾ ಅಫ್ರಾ ವಿವಿಧ ಕಾರ್ಯಕ್ರಮ ನಿರೂಪಿಸಿದರು, ಸಹ ಮುಖ್ಯ ಶಿಕ್ಷಕಿ ರಚನಾ ವಂದಿಸಿದರು.
ಕಲಬುರಗಿ| ಗಾಳಿಯಲ್ಲಿ ಗುಂಡು ಹಾರಿಸಿದ ವೀಡಿಯೊ ವೈರಲ್ ಬೆನ್ನಲ್ಲೆ ಸ್ವಾಮೀಜಿಯ ಬಂಧನ
ಕಲಬುರಗಿ: ಅಫಜಲಪುರ ತಾಲೂಕಿನ ಉಡಚಾಣ ಗ್ರಾಮದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಉದ್ಧಟತನ ಮೆರೆದ ಶ್ರೀ ಶಾಂತಲಿಂಗ ಶಿವಾಚಾರ್ಯರನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ. ಶ್ರೀ ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಪೀಠಾಧಿಪತಿ ಶ್ರೀ ಶಾಂತಲಿಂಗ ಶಿವಾಚಾರ್ಯರು ಗಾಳಿಯಲ್ಲಿ ಗುಂಡು ಹಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಸ್ವಾಮೀಜಿಯನ್ನು ಆಯುಧ ಕಾಯ್ದೆ ನಿಯಮದಡಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಸ್ವಾಮೀಜಿ ಬಳಿ ಇದ್ದ ಲೈಸೆನ್ಸ್ ಗನ್ ಸೀಝ್ ಮಾಡಿದ್ದಾರೆ. ಇವರು ಕಳೆದ ವರ್ಷ ಇದೇ ಸ್ವಾಮೀಜಿ ಪಕ್ಕದ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಕಂಠಪೂರ್ತಿ ಮದ್ಯ ಸೇವಿಸಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡು ಮಠದಿಂದಲೇ ಪರಾರಿಯಾಗಿದ್ದರು. ಇದೇ ಸ್ವಾಮೀಜಿ ಇತ್ತೀಚೆಗೆ ಉಡಚಾಣ ಗ್ರಾಮದ ಶ್ರೀ ಶಂಕರಲಿಂಗೇಶ್ವರ ಮಠದ ಜಾತ್ರೆ ಇರುವ ಸಂದರ್ಭದಲ್ಲಿ ಈ ಮಠಕ್ಕೆ ನಾನೇ ಮಠಾಧಿಪತಿ, ಹೀಗಾಗಿ ಜಾತ್ರೆ ಸಂದರ್ಭದಲ್ಲಿ ಪೂಜೆ ಪುನಸ್ಕಾರಗಳು ನಡೆಸಿಕೊಡಲು ಅವಕಾಶ ನೀಡಬೇಕೆಂದು ಪೊಲೀಸ್ ಭದ್ರತೆಯೊಂದಿಗೆ ಗ್ರಾಮಕ್ಕೆ ಬಂದು ಜಾತ್ರೆಯ ವಿಧಿ ವಿಧಾನಗಳನ್ನು ಗ್ರಾಮಸ್ಥರ ವಿರೋಧದ ನಡುವೆಯೂ ನಡೆಸಿದ್ದರು.
ಡಿ.25: ಕಾರ್ಕಳ ಬಿಜೆಪಿ ವತಿಯಿಂದ 'ಅಟಲ್ ಸ್ಮರಣೆʼ
ಕಾರ್ಕಳ : ಕಾರ್ಕಳ ಬಿಜೆಪಿ ವತಿಯಿಂದ 'ಅಟಲ್ ಸ್ಮರಣೆ' ಕಾರ್ಯಕ್ರಮ ಡಿ.25ರಂದು ತಾಲೂಕು ಕಚೇರಿ ಬಳಿ ಅಟಲ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5ಕ್ಕೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಾಜಪೇಯಿ ಅವರ ಜೀವನ ಚರಿತ್ರೆಯನ್ನು ಬಿಂಬಿಸುವ ವಿಡಿಯೋ ಪ್ರದರ್ಶನ ಏರ್ಪಡಿಸಲಾಗಿದೆ. ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ದೇಶಭಕ್ತಿ ಬಿಂಬಿಸುವ ಸಮೂಹ ಗೀತೆಗಳ ಗಾಯನ ನಡೆಯಲಿದೆ. ಸಂಜೆ 4:30ಕ್ಕೆ ಪಾರ್ಕ್ನಲ್ಲಿರುವ ಅಟಲ್ ಅವರ ಮೂರ್ತಿಗೆ ಪುಷ್ಪಾರ್ಚನೆ ನಡೆಯಲಿದೆ. ಸಂಜೆ 5 ಗಂಟೆಗೆ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು, ವಿವಿಧ ಭಾವಭಕ್ತಿ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ಸೇರಿದಂತೆ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಕಾರ್ಕಳ ತಾಲೂಕು ವ್ಯಾಪ್ತಿಯ ಬೂತ್ ಮಟ್ಟದಿಂದ ಹಿಡಿದು ತಳಮಟ್ಟದ ಹಿರಿಯ ಕಾರ್ಯಕರ್ತರು ಈ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪರಿಸರ ಪ್ರೇಮಿಯಾಗಿದ್ದ ಅಟಲ್ ಅವರ ನೆನಪಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದ್ದು, ವರ್ಷಪೂರ್ತಿ ಈ ಅಭಿಯಾನ ಮುಂದುವರಿಯಲಿದೆ. ವಿಶೇಷವಾಗಿ 8ನೇ ತರಗತಿಯ ಹೈಸ್ಕೂಲು ವಿದ್ಯಾರ್ಥಿಗಳಿಗೆ ಗಿಡಗಳನ್ನು ನೀಡಿ, ಅವುಗಳನ್ನು ಪೋಷಿಸುವ ಜವಾಬ್ದಾರಿ ನೀಡಲಾಗುವುದು ಎಂದು ಮಾಹಿತಿ ನೀಡಿದರು. 2500ಕ್ಕೂ ಅಧಿಕ ಕಾರ್ಯಕರ್ತರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೋಸೆ ಕ್ಯಾಂಪ್ ಆಯೋಜಿಸಲಾ ಗಿದ್ದು, ಉಪಹಾರದಲ್ಲಿ ದೋಸೆಯನ್ನು ವಿತರಿಸಲಾಗುತ್ತದೆ ಎಂದು ನವೀನ್ ನಾಯಕ್ ತಿಳಿಸಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹವೀರ್ ಹೆಗ್ಡೆ, ಕಾರ್ಕಳ ಬಿಜೆಪಿ ಪ್ರಮುಖರಾದ ಬೋಳ ಸತೀಶ್ ಪೂಜಾರಿ, ವಿಖ್ಯಾತ್ ಶೆಟ್ಟಿ, ರಾಕೇಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.
ಕೊಪ್ಪಳದ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ; ಮುಖ್ಯ ಶಿಕ್ಷಕರ ಸ್ವಂತ ಖರ್ಚಿನಲ್ಲಿ ವ್ಯವಸ್ಥೆ
ಕೊಪ್ಪಳದ ಬಹದ್ದೂರಬಂಡಿ ಶಾಲೆಯ 24 ವಿದ್ಯಾರ್ಥಿಗಳು ಡಿ.26ರಂದು ವಿಮಾನದ ಮೂಲಕ ಬೆಂಗಳೂರಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಮುಖ್ಯಶಿಕ್ಷಕ ಬೀರಪ್ಪ ಅಂಡಗಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಈ ಕನಸನ್ನು ನನಸು ಮಾಡುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈ ಅವಕಾಶ ದೊರಕಿದೆ.
ದಾದ್ರಿ, ಡಿ.23: ದಾದ್ರಿಯಲ್ಲಿ ಮೊಹಮ್ಮದ್ ಅಖ್ಲಾಕ್ ಅವರನ್ನು ಗುಂಪು ಥಳಿತ ಮಾಡಿ ಹತ್ಯೆಗೈದ ಪ್ರಕರಣದಲ್ಲಿನ ಆರೋಪಿಗಳ ವಿರುದ್ಧದ ಪ್ರಾಸಿಕ್ಯೂಷನ್ ಪ್ರಕರಣವನ್ನು ಹಿಂಪಡೆಯಲು ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಗೌತಮ್ ಬುದ್ಧ ನಗರ ಜಿಲ್ಲೆಯ ಸೂರಜ್ ಪುರದಲ್ಲಿರುವ ತ್ವರಿತ ನ್ಯಾಯಾಲಯವು ಮಂಗಳವಾರ ಈ ಮಹತ್ವದ ಆದೇಶ ಹೊರಡಿಸಿದೆ. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸೌರಭ್ ದ್ವಿವೇದಿ ಅವರು, 14 ಆರೋಪಿಗಳ ವಿರುದ್ಧದ ಪ್ರಾಸಿಕ್ಯೂಷನ್ ಹಿಂಪಡೆಯುವಂತೆ ಕ್ರಿಮಿನಲ್ ಪ್ರೊಸೀಜರ್ ಕೋಡ್ ನ ಸೆಕ್ಷನ್ 321 ಅಡಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದರು. ಇದು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಅತ್ಯಂತ ಗಂಭೀರ ಪ್ರಕರಣವಾಗಿದ್ದು, ಇಂತಹ ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ ಆರೋಪಗಳನ್ನು ಹಿಂಪಡೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಪ್ರಕರಣದ ದೈನಂದಿನ ವಿಚಾರಣೆ ನಡೆಸಿ ಸಾಕ್ಷ್ಯಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವು ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆ 2026ರ ಜನವರಿ 6ರಂದು ನಡೆಯಲಿದೆ. ರಾಜ್ಯ ಸರ್ಕಾರವು ಕಳೆದ ಅಕ್ಟೋಬರ್ನಲ್ಲಿ ಈ ಪ್ರಕರಣವನ್ನು ಹಿಂಪಡೆಯುವುದಾಗಿ ಹೇಳಿತ್ತು. ಅದರಂತೆ, ಸರ್ಕಾರದ ನಿರ್ದೇಶನಗಳನ್ನು ಉಲ್ಲೇಖಿಸಿ ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಭಾಗ್ ಸಿಂಗ್ ಭಾಟಿ ಅವರು ಆಗಸ್ಟ್ 26, 2025ರಂದು ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಸರ್ಕಾರದ ಈ ನಿಲುವನ್ನು ನ್ಯಾಯಾಲಯ ಒಪ್ಪಲಿಲ್ಲ. 2015ರ ಸೆಪ್ಟೆಂಬರ್ 28ರಂದು ದಾದ್ರಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ದೇವಾಲಯದಿಂದ ‘ಗೋ ಹತ್ಯೆ’ ಆರೋಪದ ಘೋಷಣೆ ಕೇಳಿಬಂದ ನಂತರ ಅಖ್ಲಾಕ್ ಅವರ ಮನೆಯ ಮುಂದೆ ಜನಸಮೂಹ ಜಮಾಯಿಸಿತ್ತು. ಅಖ್ಲಾಕ್ ಮತ್ತು ಅವರ ಪುತ್ರ ದಾನಿಷ್ ಅವರನ್ನು ಮನೆಯಿಂದ ಹೊರಕ್ಕೆ ಎಳೆದುಕೊಂಡು ಹೋಗಿ ಪ್ರಜ್ಞೆ ತಪ್ಪುವವರೆಗೆ ಹಲ್ಲೆ ನಡೆಸಲಾಗಿತ್ತು. ಗಂಭೀರ ಗಾಯಗೊಂಡ ಅಖ್ಲಾಕ್ ಅವರನ್ನು ನೋಯ್ಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತಚ, ಅಲ್ಲಿ ಅವರು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಜಾರ್ಚಾ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಗಳು 302 (ಕೊಲೆ), 307 (ಕೊಲೆಗೆ ಪ್ರಯತ್ನ), 147, 148, 149 (ಗಲಭೆ), 323 (ಹಲ್ಲೆ), 504 (ಶಾಂತಿ ಕದಡಲು ಉದ್ದೇಶಪೂರ್ವಕ ಅವಮಾನ) ಸೇರಿದಂತೆ ಹಲವು ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಪೊಲೀಸರು 15 ಮಂದಿಯ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಸ್ಥಳೀಯ ಬಿಜೆಪಿ ನಾಯಕನ ಪುತ್ರ ವಿಶಾಲ್ ರಾಣಾ ಪ್ರಮುಖ ಆರೋಪಿ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ನ್ಯಾಯಾಲಯದ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸಿದೆ. “ಗುಂಪು ಹತ್ಯೆಯಂತಹ ಘೋರ ಅಪರಾಧದಲ್ಲಿ ಆರೋಪ ಹಿಂಪಡೆಯಲು ಸರ್ಕಾರ ಮುಂದಾಗಿರುವುದು ಅಪಾಯಕಾರಿ ಪ್ರವೃತ್ತಿ. ನ್ಯಾಯಾಲಯ ನೀಡಿರುವ ಆದೇಶ ನ್ಯಾಯದ ಪರವಾದ ಸ್ಪಷ್ಟ ಸಂದೇಶವಾಗಿದೆ,” ಎಂದು ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಅನಿಲ್ ಯಾದವ್ ಹೇಳಿದ್ದಾರೆ. ಪ್ರಕರಣದ ಸೂಕ್ಷ್ಮತೆಯನ್ನು ಗಮನಿಸಿ, ಆದೇಶ ನೀಡಿದ ನ್ಯಾಯಾಧೀಶರಿಗೆ ಸಮರ್ಪಕ ಭದ್ರತೆ ಒದಗಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
*ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮಹತ್ವದ ತೀರ್ಪು
ಸೌದಿಯಲ್ಲಿ ಹಿಮಧಾರೆ | ದೇಶದ ವಿವಿಧೆಡೆ ಹಿಮಾವೃತಗೊಂಡ ಬೆಟ್ಟಪ್ರದೇಶಗಳು
ರಿಯಾದ್,ಡಿ.25: ಅತಿಯಾದ ತಾಪಮಾನ ಹಾಗೂ ವಿಶಾಲವಾದ ಮರುಭೂಮಿಗಳಿಗೆ ಹೆಸರಾದ ಸೌದಿ ಆರೇಬಿಯವು ಪ್ರಸಕ್ತ ಚಳಿಗಾಲದಲ್ಲಿ ದೇಶಧ ವಿವಿದ ಭಾಗಗಳಲ್ಲಿ ಹಿಮಧಾರೆ, ಅಧಿಕ ಮಳೆ ಹಾಗೂ ಉಷ್ಣಾಂಶ ಇಳಿಕೆಗೆ ಸಾಕ್ಷಿಯಾಗಿದೆ. ಅಚ್ಚರಿಯೆಂಬಂತೆ ಸೋಮವಾರ ಉತ್ತರ ಸೌದಿ ಆರೇಬಿಯದ ತಬೂಕ್ ಪ್ರಾಂತದಲ್ಲಿ ಪರ್ವತ ಶ್ರೇಣಿಗಳಲ್ಲಿ ಹಿಮಸುರಿದಿದೆ. ಸಾಗರಮಟ್ಟದಿಂದ 2600 ಮೀಟರ್ ಎತ್ತರದಲ್ಲಿರುವ ಜೆಬೆಲ್ ಅಲ್ಲಾವಝ್ ಪ್ರದೇಶದಲ್ಲಿರುವ ಎತ್ತರಪ್ರದೇಶವಾದ ಟ್ರೊಜೆನಾವನ್ನು ಹಿಮ ಆವರಿಸಿದ್ದು, ಜೊತೆಗೆ ಲಘುವಾದ ಮಳೆ ಸುರಿದಿದೆ. ಹಾಯಿಲ್ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಹಿಮಸುರಿದಿರುವುದಾಗಿ ವರದಿಯಾಗಿದೆ. ಸೋಮವಾರ ಮುಂಜಾನೆಯ ತಾಸುಗಳಲ್ಲಿ ಕೆಲವೆಡೆ ತಾಪಮಾನವು ಶೂನ್ಯ ಸೆಂಟಿಗ್ರೇಡ್ ಗೆ ಇಳಿದಿದ್ದುದು, ಎತ್ತರದ ಪ್ರದೇಶಗಳಲ್ಲಿ ಹಿಮಹೆಪ್ಪುಗಟ್ಟುವುದಕ್ಕೆ ಅನುಕೂಲಕರ ವಾತಾವರಣವನ್ನು ನಿರ್ಮಿಸಿತ್ತೆಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಚಳಿಗಾಲದಲ್ಲಿ ಸೌದಿಯಲ್ಲಿ ಹಿಮಧಾರೆಯಾಗಿರುವ ಜೊತೆಗೆ ಯುಎಇನಲ್ಲಿ ಅನಿರೀಕ್ಷಿತ ಮಳೆ, ದಕ್ಷಿಣ ಏಶ್ಯದ ದಾಖಲೆಯ ಉಷ್ಣಮಾರುತದ ಹಾವಳಿ, ಮಧ್ಯಪ್ರಾಚ್ಯದ ರಾಷ್ಟ್ರಗಳಲ್ಲಿ ದಿಢೀರ್ ಪ್ರವಾಹ, ಯುರೋಪ್ ಹಾಗೂ ಉತ್ತರ ಆಫ್ರಿಕದ ಕೆಲವು ಭಾಗಗಳಲ್ಲಿ ಅಸಹಜವಾಗಿ ಹಿಮಧಾರೆಯಾಗಿರುವುದು, ಹವಾಮಾನ ಬದಲಾವಣೆಯಿಂದಾಗಿ ಜಗತ್ತಿನಾದ್ಯಂತ ಹವಾಮಾನ ಅನಿಶ್ಚಿತತೆಯೆಡೆಗೆ ತಿರುಗಿದೆ ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ.
ಟ್ರಂಪ್ ಕ್ರಿಸ್ಮಸ್ ಕೊಡುಗೆ | ಅಮೆರಿಕ ತೊರೆಯಬಯಸುವ ಅಕ್ರಮ ವಲಸಿಗರಿಗೆ 3 ಸಾವಿರ ಡಾಲರ್ ಪ್ರೋತ್ಸಾಹಧನ
ವಾಶಿಂಗ್ಟನ್,ಡಿ.23: ದೇಶವನ್ನು ಸ್ವಯಂಪ್ರೇರಿತವಾಗಿ ತೊರೆಯಲು ಬಯಸುವ ಅಕ್ರಮ ವಲಸಿಗರಿಗೆ ಕ್ರಿಸ್ಮಸ್ ಹಬ್ಬದ ಉಡುಗೊರೆಯಾಗಿ 3 ಸಾವಿರ ಡಾಲರ್ (ಸುಮಾರು 2.7 ಲಕ್ಷ ರೂ.) ಪ್ರೋತ್ಸಾಹಧನ ನೀಡಲಾಗುವುದೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಘೋಷಿಸಿದ್ದಾರೆ. ಅಕ್ರಮ ವಲಸಿಗರ ಸಾಮೂಹಿಕ ಗಡಿಪಾರು ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮತ್ತು ಅನುಷ್ಠಾನ ವೆಚ್ಚಗಳನ್ನು ಕಡಿತಗೊಳಿಸುವ ಪ್ರಯತ್ನವಾಗಿ ಟ್ರಂಪ್ ಈ ಉಡುಗೊರೆ ಘೋಷಿಸಿದ್ದಾರೆ. ವರ್ಷಾಂತ್ಯದೊಳಗೆ ಅಮೆರಿಕ ತೊರೆಯಲು ಒಪ್ಪಿಕೊಳ್ಳುವ ಅಕ್ರಮ ವಲಸಿಗರು, ಅವರ ತಾಯ್ನಾಡಿಗೆ ಉಚಿತ ವಿಮಾನಯಾನದ ಜೊತೆಗೆ 3 ಸಾವಿರ ರೂ.ಗಳ ಪ್ರೋತ್ಸಾಹಧನದ ಕೊಡುಗೆಯನ್ನು ಅಮೆರಿಕದ ಗೃಹ ಭದ್ರತಾ ಇಲಾಖೆಯು ಘೋಷಿಸಿದೆ. ಮೇ ತಿಂಗಳಲ್ಲಿ ಟ್ರಂಪ್ ಸರಕಾರವು ದೇಶವನ್ನು ತೊರೆಯಬಯಸುವ ಅಕ್ರಮ ವಲಸಿಗರಿಗೆ 1 ಸಾವಿರ ಡಾಲರ್ ಗಳ ಪರಿಹಾರವನ್ನು ಘೋಷಿಸಿತ್ತು. ಇದೀಗ ಮೊತ್ತವನ್ನು ಅದು ಮೂರು ಪಟ್ಟು ಹೆಚ್ಚಿಸಿದೆ. ‘‘ಸಿಬಿಪಿ ಹೋಮ್ ಆ್ಯಪ್ ಮೂಲಕ ಸ್ವಯಂ ಗಡಿಪಾರು ಕೋರುವುದು ಅಕ್ರಮ ವಲಸಿಗರು ಅವರಿಗೆ ಹಾಗೂ ಅವರ ಕುಟುಂಬಕ್ಕೆ ನೀಡುವ ಈ ರಜಾಕಾಲದ ಅತಿ ದೊಡ್ಡ ಉಡುಗೊರೆಯಾಗಿದೆ. ಇದೊಂದು ತ್ವರಿತ, ಉಚಿತ ಹಾಗೂ ಸುಲಭದ ಪ್ರಕ್ರಿಯೆಯಾಗಿದೆ. ಸಿಬಿಪಿ ಹೋಮ್ ಆ್ಯಪ್ ಡೌನ್ಲೋಡ್ ಮಾಡಿ ನಿಮ್ಮ ಮಾಹಿತಿ ನೀಡಿ. ನಿಮ್ಮ ತಾಯ್ನಾಡಿಗೆ ಮರಳಲು ಪ್ರಯಾಣದ ವ್ಯವಸ್ಥೆ ಹಾಗೂ ಪರಿಹಾರಧನ ಪಾವತಿ ಸೇರಿದಂತೆ ಉಳಿದುದನ್ನು ಆಂತರಿಕ ಭದ್ರತಾ ಇಲಾಖೆ (ಡಿಎಚ್ಎಸ್) ನೋಡಿಕೊಳ್ಳುತ್ತದೆ’’ ಎಂದು ಆಂತರಿಕ ಭದ್ರತಾ ಇಲಾಖೆಯ ಹೇಳಿಕೆ ತಿಳಿಸಿದೆ. ಈವರೆಗೆ 19 ಲಕ್ಷ ಮಂದಿ ಅಕ್ರಮ ವಲಸಿಗರು ಸ್ವಯಂಪ್ರೇರಿತವಾಗಿ ಗಡಿಪಾರುಗೊಂಡಿದ್ದಾರೆ. ಅವರಲ್ಲಿ ಸಾವಿರಾರು ಮಂದಿ ಸಿಬಿಪಿ ಹೋಮ್ ಆ್ಯಪ್ ಬಳಸಿದ್ದಾರೆಂದು ಡಿಎಚ್ಎಸ್ ಹೇಳಿಕೆ ತಿಳಿಸಿದೆ.
ನಾಲ್ಕನೇ ಅಂತರ್ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್: ಇಫ್ಝಾ ಖದೀಜಾ ಹಲೀಮಾಗೆ ಅವಳಿ ಚಿನ್ನ
ಮಂಗಳೂರು, ಡಿ.23: ಮಹಾರಾಷ್ಟ್ರದ ಅಂಧೇರಿ ಕ್ರೀಡಾ ಸಂಕೀರ್ಣದಲ್ಲಿ ಇತ್ತೀಚೆಗೆ ನಡೆದ 4ನೇ ಅಂತರ್ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ 7-9 ವರ್ಷ ತನಕದ (ಆರೇಂಜ್- ಗ್ರೀನ್ ಬೆಲ್ಟ್) ಬಾಲಕಿಯರ ಕಟಾ ಮತ್ತು ಕುಮಿಟಿ ವಿಭಾಗಗಳಲ್ಲಿ ಎರಡು ಚಿನ್ನದ ಪದಕಗಳನ್ನು ಜಯಿಸಿದ್ದಾರೆ. ಮಹಾರಾಷ್ಟ್ರ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಮತ್ತು ಸಿಎಂಎಎ ಆಯೋಜಿಸಿದ್ದ ಈ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ಸೈಂಟ್ ಅಲೋಶಿಯಸ್ ಗೊನ್ಜಾಗಾ ಸಿಬಿಎಸ್ಇ ಸ್ಕೂಲ್ನ ಇಫ್ಝಾ ಖದೀಜಾ ಹಲೀಮಾ ಅವರು ಭಾರತವನ್ನು ಪ್ರತಿನಿಧಿಸಿದ್ದರು. ಇಫ್ಝಾ ಖದೀಜಾ ಹಲೀಮಾ ಅವರು ಮಂಗಳೂರಿನ ಇಬ್ರಾಹೀಂ ಖಲೀಲ್ ಡಾ.ಆರಿಫಾ ಹಲೀಮಾ ದಂಪತಿಯ ಪುತ್ರಿ. ಕೋಚ್ ಕ್ಯೋಶ್ ಮುಹಮ್ಮದ್ ನದೀಮ್ ಅವರ ಶೋರಿನ್-ರ್ಯು ಇನ್ಸ್ಟ್ಟಿಟ್ಯೂಟ್ ಆಫ್ ಕರಾಟೆ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಈಕೆ ಈ ಹಿಂದೆ ಅವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಅವಳಿ ಚಿನ್ನದ ಪದಕಗಳನ್ನು ಜಯಿಸಿದ್ದರು.
ಷೇರು ಮಾರ್ಕೆಟಿಂಗ್ ಹೂಡಿಕೆ ಹೆಸರಿನಲ್ಲಿ ವಂಚನೆ: ಪ್ರಕರಣ ದಾಖಲು
ಮಂಗಳೂರು, ಡಿ.23: ನಕಲಿ ಷೇರು ಮಾರ್ಕೆಟಿಂಗ್ ಹೂಡಿಕೆಯ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಆನ್ಲೈನ್ ಮೂಲಕ 85,68,387 ರೂ. ವಂಚನೆ ಮಾಡಿರುವ ಕುರಿತು ಸೆನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಇನ್ಸ್ಟಾಗ್ರಾಂ ನೋಡುತ್ತಿರುವಾಗ ಷೇರು ಮಾರುಕಟ್ಟೆ ಆನ್ಲೈನ್ ಟ್ರೇಡಿಂಗ್ ಕ್ಲಾಸ್ಗೆ ಲಿಂಕ್ ಮೂಲಕ ಸೇರ್ಪಡೆಗೊಂಡೆ. ಅ.31ರಂದು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ತನ್ನ ಮೊಬೈಲ್ ನಂಬರ್ ಸೇರ್ಪಡೆಯಾಗಿದೆ. ಬಳಿಕ ಗ್ರೂಪ್ನಲ್ಲಿದ್ದ ಕಾವ್ಯ ಎಂಬಾಕೆ ಅಸಿಸ್ಟೆಂಟ್ ಆಗಿ ಕೆಲಸ ಮಾಡಿಕೊಂಡಿರುವುದಾಗಿ ಪರಿಚಯಿಸಿಕೊಂಡು ಷೇರು ಹೂಡಿಕೆ ಕುರಿತಂತೆ ವಿವಿಧ ಜಾಹೀರಾತುಗಳನ್ನು ಹಾಕಿ, ಹಣ ದುಪ್ಪಟ್ಟು ಮಾಡಬಹುದು ಎಂಬುದಾಗಿ ಮೇಸೆಜ್ ಕಳುಹಿಸಿದ್ದಳು. ಅದನ್ನು ನಂಬಿ ತಾನು ಸ್ಟಾಕ್ ಪರ್ಚೇಸ್ ಮಾಡಿದಾಗ ಸ್ವಲ್ಪಲಾಭಾಂಶವಾಗಿ ಹಣ ಬಂದಿದೆ. ಬಳಿಕ ತಾನು ನ.11ರಿಂದ ಡಿ.9ರ ವರೆಗೆ ಹಂತ ಹಂತವಾಗಿ 85,68,387 ರೂ. ಹೂಡಿಕೆ ಮಾಡಿದ್ದೆ. ಆದರೆ ಡಿ.10ರಂದು ಇನ್ನಷ್ಟು ಹಣ ಹೂಡಿಕೆ ಮಾಡುವಂತೆ ತಿಳಿಸಿದಾಗ ಈಗಾಗಲೇ ಹೂಡಿಕೆ ಮಾಡಿದ ಹಣ ವಾಪಾಸ್ ನೀಡುವಂತೆ ಕೇಳಿದೆ. ಅದಕ್ಕೆ ಸೇವಾ ತೆರಿಗೆ ಪಾವತಿಸುವಂತೆ ಅಪರಿಚಿತರು ಒತ್ತಾಯಿಸಿದಾಗ ಅನುಮಾನಗೊಂಡು ತಾನು ನಂತರ ಹೂಡಿಕೆ ಮಾಡಿಲ್ಲ. ಈ ಬಗ್ಗೆ ವಿಚಾರಿಸಿದಾಗ ತಾನು ಮೋಸ ಹೋಗಿರುವುದು ಹಣ ಕಳಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
ಬ್ರಹ್ಮಾವರ, ಡಿ.23: ಉಪ್ಪೂರು ಗ್ರಾಮದ ಅಣ್ಣಯ್ಯ ನಾಯ್ಕ ಎಂಬವರ ಮಗ ಸಂದೀಪ್ ಎ.(37) ಎಂಬವರು ಡಿ.20ರಂದು ಬೆಳಗ್ಗೆ ಕಚೇರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಸ್ಕೂಟರ್ನಲ್ಲಿ ಹೋದವರು ಈವರೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳ | ಮಕ್ಕಳ ಕ್ರಿಸ್ಮಸ್ ಕ್ಯಾರೊಲ್ ಗುಂಪಿನ ಮೇಲೆ ದಾಳಿ; ಬಿಜೆಪಿಗನ ಬಂಧನ
ಪಾಲಕ್ಕಾಡ್,ಡಿ.23: ಇಲ್ಲಿಯ ಪುದುಶ್ಶೇರಿಯಲ್ಲಿ ಮಕ್ಕಳನ್ನು ಒಳಗೊಂಡಿದ್ದ ಕ್ರಿಸ್ಮಸ್ ಕ್ಯಾರೊಲ್ ಗುಂಪಿನ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಬಿಜೆಪಿ-ಆರೆಸ್ಸೆಸ್ ಸದಸ್ಯನೋರ್ವನನ್ನು ಪೋಲಿಸರು ಬಂಧಿಸಿದ್ದಾರೆ. ಪುದುಶ್ಶೇರಿ ಇತ್ತೀಚಿಗೆ ಛತ್ತೀಸ್ಗಡದ ದಲಿತ ವಲಸೆ ಕಾರ್ಮಿಕನ ಬರ್ಬರ ಹತ್ಯೆ ನಡೆದ ವಲಯಾರ್ ನಿಂದ ಕೇವಲ ಒಂದು ಕಿ.ಮೀ.ಅಂತರದಲ್ಲಿದೆ. ಪುದುಶ್ಶೇರಿಯ ಕಲ್ಲಾಡಿಥರ ನಿವಾಸಿ,ಬಿಜೆಪಿ-ಆರೆಸ್ಸೆಸ್ನ ಸಕ್ರಿಯ ಸದಸ್ಯ ಅಶ್ವಿನ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಪುದುಶ್ಶೇರಿಯ ಸುರಭಿ ನಗರದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಇತರ ಇಬ್ಬರೊಂದಿಗೆ ಸೇರಿಕೊಂಡು ಸುಮಾರು 10 ಜನರಿದ್ದ ಕ್ಯಾರೊಲ್ ಗುಂಪಿನ ಮೇಲೆ ದಾಳಿ ನಡೆಸಿದ್ದ ರಾಜ್, ಪ್ರದೇಶದಲ್ಲಿ ಇಂತಹುದಕ್ಕೆ ಅವಕಾಶವಿಲ್ಲ ಎಂದು ಅಬ್ಬರಿಸಿದ್ದ ಎಂದು ಆರೋಪಿಸಲಾಗಿದೆ. ಗುಂಪು ಬಳಸಿದ್ದ ಡ್ರಮ್ನ ಮೇಲಿದ್ದ ‘ಸಿಪಿಐ(ಎಂ)’ ಪದದ ಕುರಿತು ವಾಗ್ವಾದದ ಬಳಿಕ ದಾಳಿ ನಡೆದಿದ್ದು, ಬ್ಯಾಂಡ್ ಸೆಟ್ ಮತ್ತು ಇತರ ಸಂಗೀತ ಉಪಕರಣಗಳಿಗೆ ಹಾನಿಯುಂಟಾಗಿದೆ ಎನ್ನಲಾಗಿದೆ. ಈ ಬಗ್ಗೆ ಕ್ಯಾರೊಲ್ ಗುಂಪು ಪೋಲಿಸ್ ದೂರನ್ನು ದಾಖಲಿಸಿತ್ತು. ಕ್ಯಾರೊಲ್ ಗುಂಪಿನಲ್ಲಿ 10ರಿಂದ 15 ವರ್ಷ ಪ್ರಾಯದ ಮಕ್ಕಳಿದ್ದರು. ಪ್ರತಿ ವರ್ಷದಂತೆ ಈ ವರ್ಷವೂ ಮಕ್ಕಳ ಮನವಿಯ ಮೇರೆಗೆ ಬ್ಯಾಂಡ್ ವ್ಯವಸ್ಥೆಯನ್ನು ಮಾಡಲಾಗಿತ್ತು ಎಂದು ಸ್ಥಳೀಯ ಸಿಪಿಎಂ ಸಮಿತಿಯ ನಾಯಕರು ಹೇಳಿದರು.
7ನೇ ತರಗತಿ ವಿದ್ಯಾರ್ಥಿಗೆ ಥಳಿಸಲು 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಆದೇಶ!
ಹೈದರಾಬಾದ್, ಡಿ. 23: ಹೈದರಾಬಾದ್ ನ ಕೊಂಪಳ್ಳಿ ಸರಕಾರಿ ಹೈಸ್ಕೂಲ್ನಲ್ಲಿ ಪ್ರಾಂಶುಪಾಲರ ಆದೇಶದಂತೆ 10ನೇ ತರಗತಿಯ ವಿದ್ಯಾರ್ಥಿಗಳ ಗುಂಪೊಂದು ಏಳನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ ಹೊಡೆದಿರುವ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಆರೋಪಿ ಪ್ರಾಂಶುಪಾಲ ಕೃಷ್ಣ, ದುಂಡಿಗಲ್ನ ಉಸ್ತುವಾರಿ ಮಂಡಲ ಶಿಕ್ಷಣಾಧಿಕಾರಿಯೂ ಆಗಿದ್ದಾರೆ. ವಿದ್ಯಾರ್ಥಿಗಳ ಹಕ್ಕುಗಳು ಮತ್ತು ಕ್ಷೇಮವನ್ನು ಖಾತರಿಪಡಿಸುವುದು ಈ ಹುದ್ದೆಯ ಜವಾಬ್ದಾರಿಯಾಗಿದೆ. ಹಾಗಾಗಿ, ಪ್ರಾಂಶುಪಾಲರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಶಾಲೆಯ ಸೈಕಲ್ ಸ್ಟ್ಯಾಂಡ್ನಲ್ಲಿ ಸೈಕಲ್ ಭಾಗಗಳನ್ನು ಕಳವುಗೈದಿರುವ ಮತ್ತು ಚಕ್ರಗಳ ಗಾಳಿ ತೆಗೆದ ಸಣ್ಣ ಪ್ರಕರಣಕ್ಕೆ ಸಂಬಂಧಿಸಿದ ವಿದ್ಯಮಾನ ಇದಾಗಿದೆ. ಸೋಮವಾರ, ಮಧು ಎಂಬ ಶಿಕ್ಷಕ ಏಳನೇ ತರಗತಿ ವಿದ್ಯಾರ್ಥಿ ಫಣೀಂದ್ರ ಸೂರ್ಯನನ್ನು ಸೈಕಲ್ ಗಳನ್ನು ಪರಿಶೀಲಿಸುವುದಕ್ಕಾಗಿ ಸೈಕಲ್ ಸ್ಟ್ಯಾಂಡ್ ಗೆ ಕಳುಹಿಸಿದ್ದರು ಎನ್ನಲಾಗಿದೆ. ಸೂರ್ಯ ಸೈಕಲ್ ಸ್ಟ್ಯಾಂಡ್ ನಲ್ಲಿರುವುದನ್ನು ಇನ್ನೋರ್ವ ಶಿಕ್ಷಕ ಚಾರಿ ನೋಡಿದರು. ಸೈಕಲ್ ಗಳ ಗಾಳಿ ತೆಗೆಯುವುದು ಸೂರ್ಯ ಎಂದು ಭಾವಿಸಿದ ಆ ಶಿಕ್ಷಕ ಸೂರ್ಯನನ್ನು ಹಿಡಿದು ಪ್ರಾಂಶುಪಾಲರ ಕಚೇರಿಗೆ ಕರೆದುಕೊಂಡು ಹೋದರು. ನ್ಯಾಯೋಚಿತ ವಿಚಾರಣೆ ನಡೆಸುವ ಬದಲು, ಪ್ರಾಂಶುಪಾಲ ಕೃಷ್ಣ 10ನೇ ತರಗತಿಯ ಒಂಭತ್ತು ವಿದ್ಯಾರ್ಥಿಗಳನ್ನು ಕರೆದು, ಶಿಕ್ಷೆಯಾಗಿ ಸೂರ್ಯನ ಬೆನ್ನಿಗೆ ಬೆತ್ತದಿಂದ ಹೊಡೆಯುವಂತೆ ಆದೇಶಿಸಿದರು ಎನ್ನಲಾಗಿದೆ. ಬಾಲಕನ ತಂದೆ ಶಿವರಾಮಕೃಷ್ಣ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಲ್ಲೆಯಲ್ಲಿ ಶಿಕ್ಷಕರಾದ ಮಧು ಮತ್ತು ಚಾರಿ ಹಾಗೂ ಪ್ರಾಂಶುಪಾರ ಪಾತ್ರದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಕಿರು ಮತ್ತು ದೀರ್ಘಾವಧಿಯ ಯುದ್ಧಗಳಿಗೆ ಭಾರತ ಸಿದ್ಧವಾಗಿರಬೇಕು: ಸಿಡಿಎಸ್ ಜನರಲ್ ಅನಿಲ್ ಚೌಹಾಣ್
ಹೊಸದಿಲ್ಲಿ, ಡಿ. 23: ಭಾರತವು ಭಯೋತ್ಪಾದನೆ ನಿಗ್ರಹಕ್ಕಾಗಿ ಕಿರು ಅವಧಿಯ ಗರಿಷ್ಠ ತೀವ್ರತೆಯ ಯುದ್ಧ ಹಾಗೂ ನೆರೆಯ ದೇಶಗಳೊಂದಿಗಿನ ಗಡಿ ವಿವಾದದ ಹಿನ್ನೆಲೆಯಲ್ಲಿ ದೀರ್ಘಾವಧಿಯ ಯುದ್ಧಗಳಿಗಾಗಿ ಸಿದ್ಧವಾಗಿರಬೇಕು ಎಂದು ಭಾರತೀಯ ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಸೋಮವಾರ ಹೇಳಿದ್ದಾರೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಯಾವ ರೀತಿಯ ಬೆದರಿಕೆಗಳಿಗೆ ಭಾರತ ಸಿದ್ಧವಾಗಬೇಕು ಎಂಬ ಬಗ್ಗೆ ವಿವರಣೆಗಳನ್ನು ನೀಡಿದರು. ಚೀನಾ ಮತ್ತು ಪಾಕಿಸ್ತಾನವನ್ನು ಅವರು ಹೆಸರಿಸದಿದ್ದರೂ, ಭಾರತವು ನೆರೆಯ ದೇಶಗಳೊಂದಿಗೆ ಭೂವಿವಾದಗಳನ್ನು ಹೊಂದಿದೆ ಎಂಬ ಸೂಚನೆಯನ್ನು ನೀಡಿದರು. ‘‘ಯಾವ ರೀತಿಯ ಬೆದರಿಕೆಗಳು ಮತ್ತು ಸವಾಲುಗಳಿಗೆ ಭಾರತ ಸಿದ್ಧವಾಗಿರಬೇಕು? ಇದು ಎರಡು ವಾಸ್ತವಗಳನ್ನು ಅವಲಂಬಿಸಿದೆ. ಎರಡೂ ನಮ್ಮ ಎದುರಾಳಿಗಳು. ಎರಡೂ ಪರಮಾಣು ಶಕ್ತ ದೇಶಗಳು. ಹಾಗಾಗಿ, ಈ ದೇಶಗಳ ವಿರುದ್ಧದ ನಮ್ಮ ತಡೆಯ ಮಟ್ಟವು ದುರ್ಬಲಗೊಳ್ಳಲು ನಾವು ಬಿಡಬಾರದು’’ ಎಂದು ಸೇನಾಧಿಕಾರಿ ಹೇಳಿದರು. ‘‘ಭಯೋತ್ಪಾದನೆಯನ್ನು ಹತ್ತಿಕ್ಕಲು ‘ಆಪರೇಶನ್ ಸಿಂಧೂರ್’ನಂಥ ಕಿರು ಅವಧಿಯ ಮತ್ತು ಗರಿಷ್ಠ ತೀವ್ರತೆಯ ಯುದ್ಧಗಳಿಗೆ ನಾವು ಸಿದ್ಧವಾಗಿರಬೇಕು. ನಾವು ಗಡಿ ವಿವಾದಗಳನ್ನು ಹೊಂದಿರುವುದರಿಂದ ಭೂಕೇಂದ್ರಿತ, ದೀರ್ಘಾವಧಿ ಯುದ್ಧಗಳಿಗೂ ನಾವು ತಯಾರಾಗಬೇಕು’’ ಎಂದು ಅವರು ಹೇಳಿದರು.
ಕೇರಳ ಕರಡು ಮತದಾರರ ಪಟ್ಟಿ ಪ್ರಕಟ: 24.08 ಲಕ್ಷ ಮತದಾರರಿಗೆ ಕೊಕ್!
ತಿರುವನಂತಪುರಂ: ಕೇರಳದಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಮುಕ್ತಾಯಗೊಂಡ ಬಳಿಕ, ಮಂಗಳವಾರ ಕರಡು ಮತದಾರರ ಪಟ್ಟಿ ಪ್ರಕಟಗೊಂಡಿದ್ದು, 24,08,503 ಮತದಾರರನ್ನು ವಿವಿಧ ಕಾರಣಗಳಿಗೆ ಕೈಬಿಡಲಾಗಿದೆ. ಆದರೆ, 2022ರ ಮತಪಟ್ಟಿಯಲ್ಲಿರುವ 19 ಲಕ್ಷ ಮತದಾರರನ್ನು ಗುರುತಿಸುವ ಕೆಲಸ ಇನ್ನೂ ಬಾಕಿ ಇದೆ. ಕರಡು ಮತದಾರರ ಪಟ್ಟಿ ಪ್ರಕಟಗೊಂಡ ನಂತರ, ಕೇರಳ ಮತದಾರರ ಒಟ್ಟು ಸಂಖ್ಯೆ 2,78,50,855ರಿಂದ 2,54,42,352ಕ್ಕೆ ಇಳಿಕೆಯಾಗಿದೆ. ಈ ಮತಪಟ್ಟಿಯು 1,23,83,341 ಪುರುಷ ಮತದಾರರು ಹಾಗೂ 1,30,58,731 ಮಹಿಳಾ ಮತದಾರರು ಹಾಗೂ 280 ಲಿಂಗಾಂತರಿ ಮತದಾರರಿದ್ದಾರೆ. ಮತಪಟ್ಟಿಯಿಂದ ಕೈಬಿಡಲಾಗಿರುವ 24,08,503 ಮತದಾರರ ಪೈಕಿ, ಸುಮಾರು 1,60,830 ಮತದಾರರು ತಮ್ಮ ಭರ್ತಿ ಮಾಡಿದ ಅರ್ಜಿಗಳನ್ನು ಮರಳಿಸಿಲ್ಲ ಅಥವಾ ಅರ್ಜಿಗಳನ್ನು ಸ್ವೀಕರಿಸಲು ಒಪ್ಪಿಗೆ ನೀಡಿಲ್ಲ. ಉಳಿದ 6,45,548 ಮತದಾರರ ಗುರುತನ್ನು ಪತ್ತೆ ಹಚ್ಚಬೇಕಿದೆ. ಕೈಬಿಟ್ಟಿರುವ ಇನ್ನುಳಿದ ಮತದಾರರ ಪೈಕಿ 6,49,885 ಮತದಾರರು ಮೃತಪಟ್ಟಿದ್ದರೆ, 8,16,221 ಮತದಾರರು ಸ್ಥಳಾಂತರಗೊಂಡಿದ್ದಾರೆ. ಉಳಿದ 1,36,029 ಮತದಾರರ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ನೋಂದಣಿಗೊಂಡಿದೆ. ಈ ಹಿಂದಿನ ಮತಪಟ್ಟಿಗೆ ಹೋಲಿಸಿದರೆ, ಕರಡು ಮತಪಟ್ಟಿಯಲ್ಲಿ ಒಟ್ಟು ಶೇ. 8.65 ಮತದಾರರನ್ನು ಕೈಬಿಡಲಾಗಿದೆ.
ಚಿನ್ನದಂಗಡಿಯಲ್ಲಿ140 ಕೆಜಿ, 3 ಕೋಟಿ ಮೌಲ್ಯದ ಬೆಳ್ಳಿ ದರೋಡೆ; ಸಿಸಿಟಿವಿ DVR ಬಿಡದ ಚಾಲಾಕಿ ಚೋರರು
ಚಿಕ್ಕಬಳ್ಳಾಪುರದ ಬಿ.ಬಿ. ರಸ್ತೆಯಲ್ಲಿರುವ ಎಯು ಜ್ಯುವೆಲ್ಲರ್ಸ್ನಲ್ಲಿ ಕಳ್ಳರು ಸುಮಾರು 3 ಕೋಟಿ ರೂ. ಮೌಲ್ಯದ 140 ಕೆ.ಜಿ. ಬೆಳ್ಳಿ ಆಭರಣಗಳನ್ನು ದೋಚಿ, 2 ಡಿವಿಆರ್ಗಳೊಂದಿಗೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಗರದ ಪ್ರಮುಖ ರಸ್ತೆಯಲ್ಲಿ ಭದ್ರತಾ ಲೋಪವನ್ನು ಎತ್ತಿ ತೋರಿಸಿದ್ದು, ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಗ್ರಾಪಂ ಆಹಾರ ಖಾತ್ರಿ ಸದಸ್ಯೆಗೆ ಬೆದರಿಕೆ: ಪ್ರಕರಣ ದಾಖಲು
ಕುಂದಾಪುರ, ಡಿ.23: ತಲ್ಲೂರು ಗ್ರಾಮ ಪಂಚಾಯತ್ನಲ್ಲಿ ಆಹಾರ ಖಾತ್ರಿಯ ಸದಸ್ಯರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಯೊಡ್ಡಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲ್ಲೂರು ಗ್ರಾಮ ಪಂಚಾಯತ್ನಲ್ಲಿ ಆಹಾರ ಖಾತ್ರಿಯ ಸದಸ್ಯರಾಗಿ ರುವ ಉಪ್ಪಿನಕುದ್ರು ಗ್ರಾಮದ ಲಕ್ಷ್ಮೀ(55) ಎಂಬವರು ಡಿ.22ರಂದು ಸಂಜೆ ಉಪ್ಪಿನಕುದ್ರು ನ್ಯಾಯಬೆಲೆ ಅಂಗಡಿಗೆ ರೇಷನ್ ತರಲು ಮನೆಯಿಂದ ಹೋಗುತಿದ್ದರು. ಆಗ ಆರೋಪಿಗಳಾದ ಗೀತಾ ಮತ್ತು ಮೀನಾಕ್ಷಿ ಎಂಬವರು ಲಕ್ಷ್ಮೀ ಅವರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿರುವುದು ದೂರಲಾಗಿದೆ.
ಕುರಿ ಕಳ್ಳತನ ತಡೆಯುವಂತೆ ಆಗ್ರಹಿಸಿ ಯಲಬುರ್ಗಾದಲ್ಲಿ ಕುರಿಗಾರರಿಂದ ಪ್ರತಿಭಟನೆ
ಯಲಬುರ್ಗಾ: ತಾಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿ ಕುರಿ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ, ಕಳ್ಳತನ ಮಾಡುವ ಸಂಘಟಿತ ಜಾಲವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕುರಿಗಾರರು ಯಲಬುರ್ಗಾ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಡಿ. 12ರಂದು ಮಧ್ಯರಾತ್ರಿ ಸುಮಾರು ಒಂದು ಗಂಟೆಯ ವೇಳೆಗೆ ಗ್ರಾಮ ಹೊರವಲಯದಲ್ಲಿ ಕುರಿ ಹಟ್ಟಿಗೆ ನುಗ್ಗಿದ ಕಳ್ಳರು, ಕುರಿಗಳ ಬಾಯಿಮುಚ್ಚಿ ಕೈ–ಕಾಲು ಕಟ್ಟಿ ಕಳ್ಳತನ ಮಾಡುವ ಪ್ರಯತ್ನ ನಡೆಸಿದ್ದಾರೆ. ಕಳ್ಳರನ್ನು ಬೆನ್ನುತ್ತಿದ ವೇಳೆ ಅವರು ಚಾಕು ಚೂರಿ ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಬೋಲೊರೋ ಗಾಡಿ ಹಾಗೂ ಮೊಬೈಲ್ ಫೋನ್ಗಳನ್ನು ಬಿಟ್ಟು ಕಳ್ಳರು ಪರಾರಿಯಾಗಿದ್ದರೂ, ಇದುವರೆಗೂ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಬೀರಲಿಂಗೇಶ್ವರ ಕುರಿ ಹಾಗೂ ಉಣ್ಣೆ ಉತ್ಪಾದಕರ ಸಹಕಾರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಶ್ರೀಭಕ್ತ ಕನಕದಾಸ ವೃತ್ತದಿಂದ ರಾಣಿ ಕಿತ್ತೂರ ಚೆನ್ನಮ್ಮ ವೃತ್ತದವರೆಗೆ ಶಾಂತಿಯುತ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಹಾಗೂ ಸಿಪಿಐ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಸವರಾಜ ಭಜಂತ್ರಿ, ಉಪಾಧ್ಯಕ್ಷ ಶಿವಪ್ಪ ದಂಡಿನ, ಕಾರ್ಯದರ್ಶಿ ದ್ಯಾಮಣ್ಣ ಪರಂಗಿ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ರಾಜಶೇಖರ ಶ್ಯಾಗೋಟಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ಅಧ್ಯಕ್ಷ ಶರಣಬಸಪ್ಪ ದಾನಕೈ, ಶೇಖರ ಗುರಾಣಿ, ಬಸವರಾಜ ಗುಳಗುಳಿ, ದೊಡ್ಡಯ್ಯ ಗುರುವಿನ, ಶಿವು ರಾಜೂರ, ದೇವಪ್ಪ ಬನಪ್ಪನವರ, ದೇವಪ್ಪ ಪರಂಗಿ, ರೇವಣಪ್ಪ ಹಿರೇಕುರಬರ, ನೀಲನಗೌಡ ತಳವಗೇರಿ ಹಾಗೂ ಇತರರು ಉಪಸ್ಥಿತರಿದ್ದರು.
ಭಾರತದಲ್ಲಿನ ಫ್ಯಾಸಿಸಂನ್ನು ಜನಸಂಘಟನೆಯಿಂದ ದುರ್ಬಲಗೊಳಿಸಲು ಸಾಧ್ಯ: ಕೆ.ಪಿ.ಸುರೇಶ್ ಕಂಜರ್ಪಣೆ
ಉಡುಪಿ, ಡಿ.23: ಭಾರತ ಇಂದು ಸಂಪೂರ್ಣ ಪ್ಯಾಸಿಸಂ ಪ್ರಭುತ್ವ, ರಾಷ್ಟ್ರವಾಗಿ ರೂಪಾಂತರಗೊಂಡಿದೆ. ಭಾರತದಲ್ಲಿರುವುದು ಪಾಶ್ಚಿಮಾತ್ಯ ಫ್ಯಾಸಿಸಂ ಅಲ್ಲ. ಆರ್ಎಸ್ಎಸ್ ಭಾರತದ ಗ್ರಾಮೀಣ ಪ್ರದೇಶದಲ್ಲಿದ್ದ ಉಳಿಗ ಮಾನ್ಯ ಪದ್ಧತಿಯನ್ನು ಅಖಂಡ ಭಾರತದಲ್ಲಿ ಜಾರಿ ಮಾಡಲು ಪ್ರಯತ್ನಿಸುತ್ತಿದೆ. ಈ ಫ್ಯಾಸಿಸಂನ್ನು ಜನರನ್ನು ಸಂಘಟಿಸುವ ಮೂಲಕ ಮಾತ್ರ ದುರ್ಬಲಗೊಳಿಸಲು ಸಾಧ್ಯ ಎಂದು ಹಿರಿಯ ಚಿಂತಕ ಕೆ.ಪಿ.ಸುರೇಶ್ ಕಂಜರ್ಪಣೆ ಹೇಳಿದ್ದಾರೆ. ಉಡುಪಿ ರಥಬೀದಿ ಗೆಳೆಯರು, ಸಹಬಾಳ್ವೆ, ಸೌಹಾರ್ದ ಕರ್ನಾಟಕ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ, ಉಡುಪಿ ಸಾಲಿಡಾರಿಟಿ ಯೂತ್ ಮೂಮ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ವಿಮಾ ನೌಕರರ ಸಭಾಭವನದಲ್ಲಿ ಮಂಗಳವಾರ ಆಯೋಜಿಸಲಾದ ವಿಚಾರಗೋಷ್ಠಿ ಮತ್ತು ಸಂವಾದದಲ್ಲಿ ಅವರು ‘ನಮ್ಮ ವರ್ತಮಾನ- ಭವಿಷ್ಯದ ಆತಂಕಗಳು’ ಕುರಿತು ವಿಚಾರ ಮಂಡಿಸಿದರು. ಪ್ರಜಾಪ್ರಭುತ್ವದ ಚುನಾವಣಾ ರಾಜಕೀಯ ಹಾಗೂ ಮುಖ್ಯವಾಹಿನಿಗಳ ರಾಜಕೀಯ ಪಕ್ಷಗಳ ಭ್ರಮೆಯಿಂದ ಹೊರಗಡೆ ಬಂದು, ದೇಶದಲ್ಲಿನ ಭಾವಾನಾತ್ಮಕ ಎಂಬ ವಿಭಜಕ ರಾಜಕಾರಣವನ್ನು ಹಸಿವು, ಶಿಕ್ಷಣ, ಉದ್ಯೋಗ ಎಂಬ ಭಾವನಾತ್ಮಕ ನೆಲೆಯಲ್ಲಿ ಸೋಲಿಸಬೇಕಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಭೂಸುಧಾರಣೆಯ ಭಾಗವಾಗಿ ಭೂಮಿ ಪಡೆದುಕೊಂಡವರ ಮಕ್ಕಳು ಮತ್ತು ಮೊಮ್ಮಕ್ಕಳೇ ಹಿಂದುತ್ವದ ಭಾಗ ವಾಗಿದ್ದಾರೆ. ಫ್ಯಾಸಿಸಂ ಆಡಳಿತವು ಮೊದಲು ಮಾನವ ಹಕ್ಕುಗಳನ್ನು ಧಮಿನಿ ಸುವ ಮೂಲಕ ಶುರುವಾಗುತ್ತದೆ. ದೇಶವನ್ನು ಮುಕ್ಕಿ ತಿನ್ನುವ ಭ್ರಷ್ಟಾಚಾರ, ಮತಗಳ್ಳತನ, ಬ್ಯಾಂಕ್ ಮುಳುಗಿಸು ವುದು ಇವರಿಗೆ ಮುಖ್ಯ ಆಗುವುದಿಲ್ಲ. ಈ ದೇಶದಲ್ಲಿ ಧರ್ಮ, ಜಾತಿ, ಜನಾಂಗದ ಹೆಸರಿನಲ್ಲಿ ಕಲ್ಪಿತ ಶತ್ರುವನ್ನು ಸೃಷ್ಠಿಸಲಾಗುತ್ತಿದೆ ಎಂದರು. ಪ್ರಜಾಪ್ರಭುತ್ವದಲ್ಲಿ ಧರ್ಮ ಮತ್ತು ಪ್ರಭುತ್ವ ಬಹುತೇಕವಾಗಿ ಪ್ರತ್ಯೇಕ ವಾಗಿರುತ್ತದೆ. ಆದರೆ ಫ್ಯಾಸಿಸಂ ಆಡಳಿತದಲ್ಲಿ ಅದು ಅವಿನಾಭವಾಗಿರುತ್ತದೆ. ಫ್ಯಾಸಿಸಂ ಆಡಳಿತವು ಕಾರ್ಮಿಕ ಶಕ್ತಿಯನ್ನು ಪಾರಂಪರಿಕ ಪೊಲೀಸ್, ಪ್ರಭುತ್ವ ಶಕ್ತಿ ಪ್ರದರ್ಶನದ ಬದಲು ಕಾನೂನು ಬದಲಾಯಿಸಿಕೊಂಡು ಧಮನ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ಬಿಜೆಪಿಗೆ ಕಾಂಗ್ರೆಸ್ ಪರ್ಯಾಯ ಶಕ್ತಿಯೇ ಅಲ್ಲ. ಹಿಂದುತ್ವದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಆಕ್ಷೇಪ ಇಲ್ಲ. ಬಂಡವಾಳಶಾಹಿಗಳ ತುಷ್ಠಿಕರಣವನ್ನು ಮೋದಿ ಜೊತೆ ಕಾಂಗ್ರೆಸ್ ಕೂಡೆ ಪೈಪೋಟಿ ನಡೆಸುತ್ತಿದೆ. ಆದುದರಿಂದ ಫ್ಯಾಸಿಸಂನ್ನು ಎದುರಿಸಲು ಕಾಂಗ್ರೆಸ್ ಜೊತೆ ನಿಂತು ಕೊಂಡು ಹೋರಾಡಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರು, ರಥಬೀದಿ ಗೆಳೆಯರು ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್, ಸಹ ಬಾಳ್ವೆ ಸಂಚಾಲಕ ಫಣಿರಾಜ್, ಸೌಹಾರ್ದ ಕರ್ನಾಟಕ ಜಿಲ್ಲಾ ಸಂಚಾಲಕ ಚಂದ್ರಶೇಖರ್ ವಿ., ಸಾಲಿಡಾರಿಟಿ ಯೂತ್ ಮೂವ್ಮೆಂಟ್ನ ಅಫ್ವಾನ್ ಬಿ.ಹೂಡೆ ಮೊದಲಾದವರು ಉಪಸ್ಥಿತರಿದ್ದರು. ಸಂತೋಷ್ ನಾಯಕ್ ಪಟ್ಲ ಕಾರ್ಯಕ್ರಮ ನಿರೂಪಿಸಿದರು.
ಕೊಪ್ಪಳ| ಎಫ್ ಐಆರ್ ಮಾಡಲು ದೂರುದಾರನಲ್ಲಿ ಪೇಪರ್ ತರಿಸಿದ ಹೆಡ್ ಕಾನ್ಸ್ಟೇಬಲ್ ಅಮಾನತು
ಕನಕಗಿರಿ: ನಾಪತ್ತೆ ದೂರು ದಾಖಲಿಸಲು ತೆರಳಿದ ವ್ಯಕ್ತಿಯಲ್ಲಿ ಎಫ್ ಐಆರ್ ಮಾಡಲು ಪೇಪರ್ ತರಿಸಿದ ಕನಕಗಿರಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ನನ್ನು ಅಮಾನತುಗೊಳಿಸಲಾಗಿದೆ. ಪರುಶುರಾಮ ಅಮಾನತಾದ ಹೆಡ್ ಕಾನ್ಸ್ಟೇಬಲ್. ಅರಳಹಳ್ಳಿ ನಿವಾಸಿ ವ್ಯಕ್ತಿಯೋರ್ವರು ತನ್ನ ಮಗಳು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲು ಕನಕಗಿರಿ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಹೆಡ್ ಕಾನ್ ಸ್ಟೇಬಲ್ (ರೈಟರ್) ದೂರುದಾರನಿಗೆ ಪೇಪರ್ ತರುವಂತೆ ಸೂಚಿಸಿದ್ದರು. ಈ ಕುರಿತ ವಿಡಿಯೋ ಮಂಗಳವಾರ ವೈರಲ್ ಆಗಿತ್ತು. ಇದರ ಬೆನ್ನಲ್ಲೆ ಕೊಪ್ಪಳ ಜಿಲ್ಲಾ ವರಿಷ್ಠಾಧಿಕಾರಿ ರಾಮ ಲಕ್ಷ್ಮಣ್ ಅರಸಿದ್ಧಿ ಅವರು ಪರಶುರಾಮ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಡಿ.25, ಡಿ.27ರಂದು ಬಿಜೆಪಿಯಿಂದ ’ಅಟಲ್ ಸ್ಮರಣೆ’: ಕುತ್ಯಾರು ನವೀನ್ ಶೆಟ್ಟಿ
ಉಡುಪಿ, ಡಿ.23: ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬೈಂದೂರಿನಲ್ಲಿ ಡಿ.25ರಂದು ಮಧ್ಯಾಹ್ನ 2ಗಂಟೆಗೆ ನಡೆಯಲಿರುವ ‘ಸಂಸದ್ ಖೇಲ್’ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯ ದರ್ಶಿ ಬಿ.ಎಲ್.ಸಂತೋಷ್ ಪಾಲ್ಗೊಂಡು, ಸಂಜೆ ಗಂಟೆ 5ಕ್ಕೆ ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ’ಅಟಲ್ ಸ್ಮರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಡಿ.27ರಂದು ಸಂಜೆ 7ಗಂಟೆಗ್ಕೆೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿ ಕಾಪು ಮಂಡಲದ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಕಡಲ ಕಿನಾರೆಯಲ್ಲಿ ನಡೆಯಲಿರುವ ’ಕಾಪು ಕಡಲ ಪರ್ಬ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಡಿ.28ರಂದು ಬಿಜೆಪಿ ಕಾರ್ಕಳ ಮಂಡಲದ ನೇತೃತ್ವದಲ್ಲಿ ಸಚ್ಚರಿಪೇಟೆಯಲ್ಲಿ ಪ್ರಧಾನಿ ಮೋದಿ ಅವರ ’ಮನ್ ಕೀ ಬಾತ್’ ಕಾರ್ಯಕ್ರಮದ ಅಧಿಕೃತ ನೇರ ಪ್ರಸಾರವನ್ನು ವೀಕ್ಷಿಸಲಿದ್ದಾರೆ ಡಿ.24ರಂದು ಸಂಜೆ 6ಗಂಟೆಗೆ ಬಿಜೆಪಿ ಉಡುಪಿ ನಗರ ಮಂಡಲದ ವತಿಯಿಂದ ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ ನೇತೃತ್ವದಲ್ಲಿ ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ಅಂತರ್ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಕೂಟ ’ಅಟಲ್ ಟ್ರೋಫಿ’ ನಡೆಯಲಿದೆ. ಬೆಳಿಗ್ಗೆ ಗಂಟೆ 9ರಿಂದ ಮಹಿಳಾ ವಿಭಾಗದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಕೂಟ ನಡೆಯಲಿದೆ. ಡಿ.25ರಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಉಡುಪಿ ಗ್ರಾಮಾಂತರ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬ್ರಹ್ಮಾವರ ನಂದಿಗುಡಿಯ ಬಳಿ ಪ.ಜಾ. ಸಮುದಾಯದ 14 ಮಕ್ಕಳ ಸಾಮೂಹಿಕ ಹುಟ್ಟು ಹಬ್ಬ ಆಚರಣೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳ ಸಹಿತ ಜ.17ರಂದು ನಡೆಯುವ ಕರಾವಳಿಯ ನಾಡಹಬ್ಬ ’ಉಡುಪಿ ಶೀರೂರು ಮಠದ ಪರ್ಯಾಯೋತ್ಸವ’ದ ಸಂಬಂಧಿತ ಎಲ್ಲ ಕಾರ್ಯಕ್ರಮಗಳಲ್ಲಿ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅವರು ಕರೆ ನೀಡಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸಹಿತ ಬಿಜೆಪಿ ಜಿಲ್ಲಾ ಪದಾಧಿಕಾರಿ ಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ
ಉಡುಪಿ, ಡಿ.23: ರೆಸಾರ್ಟ್ನಲ್ಲಿ ಅಕ್ರಮವಾಗಿ ವಿದೇಶಿ ವಲಸರಿಗೆ ಕೆಲಸ ನೀಡಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಂಗಳವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ ಸೇರಿದ ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾ ಅಕ್ರಮವಾಗಿ ದೇಶದೊಳಗೆ ಬಂದ ವಿದೇಶಿಗರನ್ನು ಸೇರಿಸಿ ಅವರಿಗೆ ಕಾನೂನು ಬಾಹಿರವಾಗಿ ಆಶ್ರಯ ಮತ್ತು ಉದ್ಯೋಗ ನೀಡುತ್ತಿರುವುದು ಹಲವು ಮೂಲಗಳಿಂದ ಕಂಡು ಬಂದಿದ್ದು ಈ ವಿಷಯವು ಅತ್ಯಂತ ಗಂಭೀರವಾಗಿದೆ. ಇದು ದೇಶದ ಭದ್ರತೆಗೆ ಅಪಾಯ ತರುವ ಸಾಧ್ಯತೆಗಳಿದ್ದು ಅಕ್ರಮ ನುಸುಳು ಕೋರರಾದ ವಿದೇಶಿಗರ ಹಾಗೂ ಅವರಿಗೆ ಆಶ್ರಯ ಕಲ್ಪಿಸಿ ಉದ್ಯೋಗ ನೀಡುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ಇಂತಹ ದುಷ್ಕೃತ್ಯವನ್ನು ಮಾಡುತ್ತಿರುವ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ತನಿಖೆ ನಡೆಸಿ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಚಂದ್ರಮೋಹನ್, ಸುಕೇಶ್ ಕುಂದರ್, ಕಾಂಗ್ರೆಸ್ ಪಕ್ಷದ ನಾಯಕರಾದ ಮಹಾಬಲ ಕುಂದರ್, ಮೀನಾಕ್ಷಿ ಮಾಧವ ಬನ್ನಂಜೆ, ಮ್ಯಾಕ್ಸಿಮ್ ಡಿಸೋಜ, ಹಸನ್ ಸಾಹೇಬ್, ಗಣೇಶ್ ನೆರ್ಗಿ, ನವೀನ್ ಶೆಟ್ಟಿ, ಲತಾ ಆನಂದ್ ಶೇರಿಗಾರ್, ಸುರೇಶ್ ಶೆಟ್ಟಿ ಬನ್ನಂಜೆ, ಸದಾನಂದ್ ಕುಲಾಲ್, ಮೊಹಮ್ಮದ್, ಶರತ್ ಶೆಟ್ಟಿ, ದಯಾನಂದ್, ಜೋಸ್ಸಿ ಪಿಂಟೋ, ಮನೋಜ್ ಕರ್ಕೇರ, ಸತೀಶ್ ಪುತ್ರನ್, ಹಮ್ಮದ್, ಕಿಶೋರ್, ಸಂಜಯ್ ಆಚಾರ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ದೇಶದ ಪ್ರಗತಿಯಲ್ಲಿ ಶಿಕ್ಷಣದ ಅಭಿವೃದ್ಧಿ ಕೂಡ ಮುಖ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಕುಂದಾಪುರ, ಡಿ.23: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ದುಡಿಯುತ್ತಿರುವ ಶಿಕ್ಷಣ ಸಂಸ್ಥೆಗಳ ಸೇವೆ ಅಭಿನಂದನೀಯ. ದೇಶದ ಪ್ರಗತಿಯಲ್ಲಿ ಶಿಕ್ಷಣದ ಅಭಿವೃದ್ಧಿಯೂ ಉಲ್ಲೆಖನೀಯ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಬಿಎಂಎಸ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಕುಂದಾಪುರ ಎಜುಕೇಷನ್ ಸೊಸೈಟಿಯ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಂಕಲ್ಪ ಈ ವಿದ್ಯಾ ಸಂಸ್ಥೆಗಳಲ್ಲಿ ಕಾಣುತ್ತಿದ್ದೇವೆ. ಸಾಮಾಜಿಕ ಕಾಳಜಿಯುಳ್ಳ ಮೌಲ್ಯಯುತ ಶಿಕ್ಷಣದ ಪ್ರತಿಬಿಂಬ ಕಾಣುತ್ತಿದ್ದೇವೆ. ಶಿಕ್ಷಣ ಹಾಗೂ ನೈತಿಕ ಶಿಕ್ಷಣದಿಂದ ಭಾರತ ಈ ಹಿಂದೆ ವಿಶ್ವ ಗುರುವಾಗಿತ್ತು. ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ಭಾರತ ವಿಶ್ವ ಮಾನ್ಯವಾಗಿದೆ. ಶಾರೀರಿಕ, ಮಾನಸಿಕ ಹಾಗೂ ಬೌದ್ಧಿಕ ವಿಕಸನಗಳು ದೇಶದ ಬೆಳವಣಿಗೆಗೆ ಪೂರಕವಾಗಿದೆ ಎಂದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಆಧ್ಯಾತ್ಮ ಚಿಂತಕ ಡಾ.ಬಾಲಕೃಷ್ಣ ಗುರೂಜಿ ತಿರುಪತಿ ಮಾತನಾಡಿದರು. ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಅರ್ಚಕ ಮೂರ್ತಿ ಕಾಳಿದಾಸ್ ಭಟ್, ಕುಂದಾಪುರ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ, ಎಚ್ಎಂಎಂ ಹಾಗೂ ವಿಕೆಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಡಾ.ಚಿಂತನಾ ರಾಜೇಶ್ ಉಪಸ್ಥಿತರಿದ್ದರು. ಕುಂದಾಪುರ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಬಿ.ಎಂ.ಸುಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಡಾ.ಉಮೇಶ್ ಶೆಟ್ಟಿ ಕೊತ್ತಾಡಿ, ಕುಂದಾಪುರ ಎಜುಕೇಷನ್ ಸೊಸೈಟಿ ಬೆಳೆದು ಬಂದ ಬಗೆ ವಿವರಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಸ್ವಾಗತಿಸಿದರು, ಉಪನ್ಯಾಸಕ ರಕ್ಷಿತ್ ರಾವ್ ಗುಜ್ಜಾಡಿ ಪರಿಚಯಿಸಿದರು. ಉಪನ್ಯಾಸಕಿ ಪ್ರಥ್ವಿಶ್ರೀ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಗಿರಿರಾಜ್ ವಂದಿಸಿದರು.
ಆರೋಗ್ಯ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ಕೈಬಿಡಲು ಆರೋಗ್ಯ ಸಚಿವರಿಗೆ ಮನವಿ
ಉಡುಪಿ, ಡಿ.23: ಜನಸಂಖ್ಯೆ ಆಧಾರದ ಮೇಲೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ನಿರ್ಧಾರದಿಂದ ಗ್ರಾಮೀಣ, ಅರಣ್ಯ ಪ್ರದೇಶ ಮತ್ತು ಹಿಂದುಳಿದ ಭಾಗದ ಸಾವಿರಾರು ಜನರು ಮೂಲ ಭೂತ ಆರೋಗ್ಯ ಸೇವೆಯಿಂದ ವಂಚಿತರಾಗುವ ಭೀತಿ ಉಂಟಾಗಿದ್ದು, ಆರೋಗ್ಯ ಇಲಾಖೆ ತಕ್ಷಣ ನಿರ್ಧಾರವನ್ನು ಹಿಂತೆಗೆದುಕೊಳ್ಳ ಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರ ಬರೆದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾವ್ ಅವರಿಗೆ ಮನವಿ ಮಾಡಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದ ಮಲ್ಪೆ ಬಂದರಿನಲ್ಲಿ ಪರ ಊರಿನಿಂದ ಬಂದಿರುವ ಸುಮಾರು 35,000 ಮೀನು ಕಾರ್ಮಿಕರು ಹಾಗೂ ಕ್ಷೇತ್ರದ ಕೆಲವೆಡೆ 25,000ಕ್ಕೂ ಅಧಿಕ ಕಟ್ಟಡ ನಿರ್ಮಾಣ ಕಾರ್ಮಿಕರು ಸೇರಿದಂತೆ 1 ಲಕ್ಷಕ್ಕೂ ಹೆಚ್ಚು ವಲಸಿಗರು ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದು ಉದ್ಯೋಗ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರು ಹೆಚ್ಚಿನ ಪ್ರಮಾಣದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳ ಮೇಲೆಯೇ ಅವಲಂಬಿತರಾಗಿದ್ದು, ಸ್ಥಳೀಯ ದಾಖಲೆಗಳಿಲ್ಲದೇ ಸ್ಥಳೀಯ ಜನಗಣತಿಯಲ್ಲಿ ಪರಿಗಣಿಸಲ್ಪಟ್ಟಿಲ್ಲ. ಜಿಲ್ಲೆಯ ಜನರ ಹಾಗೂ ವಲಸಿಗರ ಆರೋಗ್ಯ ಹಿತದೃಷ್ಟಿಯಿಂದ ಆರೋಗ್ಯ ಕೇಂದ್ರಗಳನ್ನು ವಿಲೀನಗೊಳಿಸುವ ಅಥವಾ ಮುಚ್ಚುವ ನಿರ್ಧಾರ ವನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಜೊತೆಗೆ, ಜಿಲ್ಲೆಯ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆ ಮಾಡಿ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಉಳಿದಿರುವ ವೈದ್ಯರು, ನರ್ಸ್ಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ಪಾಲ್ ಮನವಿಯಲ್ಲಿ ತಿಳಿಸಿದ್ದಾರೆ.
9 ದಿನವೂ ಮುಂದುವರೆದ ಕೊರಗರ ಧರಣಿ ಸತ್ಯಾಗ್ರಹ; ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ನಿಯೋಗದಿಂದ ಬೆಂಬಲ
ಉಡುಪಿ, ಡಿ.23: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಕಲ್ಪಿಸು ವಂತೆ ಆಗ್ರಹಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿರುವ ಅನಿಧಿಷ್ಠಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹವು 9ನೇ ದಿನವಾದ ಮಂಗಳವಾರವೂ ಮುಂದುವರೆದಿದೆ. ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನಿಯೋಗ ಭೇಟಿ ನೀಡಿ ಕೊರಗರ ಹೋರಾಟಕ್ಕೆ ಬೆಂಬಲ ಸೂಚಿಸಿತು. ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಯಾಸೀನ್ ಮಲ್ಪೆ ಮಾತನಾಡಿ, ಹೋರಾಟದಿಂದ ಮಾತ್ರ ತಮ್ಮ ಹಕ್ಕಗಳನ್ನು ಪಡೆಯಲು ಸಾಧ್ಯ. ಹಾಗಾಗಿ ಈ ಹೋರಾಟವನ್ನು ಯಾವುದೇ ಕಾರಣಕ್ಕೂ ಕೈ ಬಿಡಬಾರದು. ನ್ಯಾಯ ಸಿಗುವವರೆಗೂ ಮುಂದು ವರೆಸಬೇಕು ಎಂದು ತಿಳಿಸಿದರು. ಕೊರಗ ಸಮುದಾಯ ಅತ್ಯಂತ ತುಳಿಯಲ್ಪಟ್ಟ ಹಾಗೂ ನಿರ್ಲಕ್ಷ್ಯಕ್ಕೆ ಒಳ ಪಟ್ಟ ಸಮುದಾಯ. ಆದುದರಿಂದ ಸರಕಾರ ಈ ಸಮುದಾಯವನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಈ ಸಮುದಾಯದಲ್ಲಿ ಪ್ರತಿಭಾ ವಂತರು ಹಾಗೂ ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿರುವುದು ಸಂತೋಷದ ವಿಷಯ. ಇವರಿಗೆ ಸರಕಾರ ವಿವಿಧ ಇಲಾಖೆಯಲ್ಲಿ ನೇರ ನೇಮಕಾತಿಗಳ ಮೂಲಕ ಉದ್ಯೋಗ ನೀಡಬೇಕು ಎಂದರು. ಸಮುದಾಯ ನಡೆಸುತ್ತಿರುವ ಹೋರಾಟದಲ್ಲಿ ಒಕ್ಕೂಟ ಸದಾ ಬೆಂಬಲ ನೀಡುತ್ತದೆ. ನಾವು ನಿಮ್ಮ ಜೊತೆಯಲ್ಲಿ ಯಾವತ್ತೂ ಇದ್ದೇವೆ. ಈ ಸಮಾಜದ ಶೋಷಿತ ಎಲ್ಲ ಸಮುದಾಯಗಳು ಕೂಡ ಒಂದಾಗಿ ಹೋರಾಟ ಮಾಡಬೇಕು ಎಂದು ಅವರು ಹೇಳಿದರು. ನಿಯೋಗದಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್, ಕಾರ್ಯದರ್ಶಿ ಜಫ್ರುಲ್ಲಾ, ಜಿಲ್ಲಾ ಸಮಿತಿ ಸದಸ್ಯ ಇದ್ರೀಸ್ ಹೂಡೆ, ಬಿಜಾಪುರ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸಂಗಪ್ಪ ಮೊದಲಾದವರು ಉಪಸ್ಥಿತರಿದ್ದರು.
ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ ಆಡ್ತಾರೆ; ಆದ್ರೆ ಟಿವಿಯಲ್ಲಿ ನೋಡೋಕಾಗೊಲ್ಲ!
Rohit Sharma And Virat Kohli In VHT- ವಿಜಯ್ ಹಜಾರೆ ಟ್ರೋಫಿ ಟೂರ್ನಿ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಮುಂಬೈ ಪರ ಮತ್ತು ವಿರಾಟ್ ಕೊಹ್ಲಿ ದಿಲ್ಲಿ ಪರ ಆಡಲಿದ್ದಾರೆ ಎಂಬುದು ಅಭಿಮಾನಿಗಳಿಗೆ ಖುಷಿಯ ಸಂಗತಿ. ದೇಶೀಯ ಕ್ರಿಕೆಟ್ ನ ಪಂದ್ಯಗಳು ಇತ್ತೀಚಿನ ವರ್ಷಗಳಲ್ಲಿ ನೇರಪ್ರಸಾರ ಆಗುತ್ತಿದ್ದರೂ ಇವರು ಆಡುವ ಪಂದ್ಯಗಳ ನೇರ ಪ್ರಸಾರ ಇಲ್ಲದಿರುವುದು ಬೇಸರ ಮೂಡಿಸಿದೆ. ಬಿಸಿಸಿಐ ಕೇವಲ ಎರಡು ಕ್ರೀಡಾಂಗಣಗಳಲ್ಲಿ ಮಾತ್ರ ನೇರ ಪ್ರಸಾರದ ವ್ಯವಸ್ಥೆ ಅಳವಡಿಸಿರುವುದರಿಂದ ಅಭಿಮಾನಿಗಳು ರೋಹಿತ್ ಮತ್ತು ಕೊಹ್ಲಿ ಆಡುವ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಿಲ್ಲ.
ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ನಿಂದ ಕೊರಗರಿಗೆ 14 ಮನೆ ನಿರ್ಮಾಣ; ಡಿ.25ರಂದು ಲೋಕಾರ್ಪಣೆ
ಉಡುಪಿ, ಡಿ.23: ಸಮಾಜಸೇವಕ, ಉದ್ಯಮಿ ಡಾ.ಎಚ್.ಎಸ್.ಶೆಟ್ಟಿ ಸಾರಥ್ಯದಲ್ಲಿ ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಕುಂದಾಪುರ ತಾಲೂಕಿನ ಉಳ್ಳೂರು ಕೊರಗರ ಕಾಲೋನಿಯಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 14 ಮನೆಗಳ ಲೋಕಾರ್ಪಣೆ ಕಾರ್ಯ ಇದೇ ಡಿ.25ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ ಎಂದು ಡಾ.ಎಚ್.ಎಸ್.ಶೆಟ್ಟಿ ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಟ್ರಸ್ಟ್ ಈಗಾಗಲೇ ಬಿದ್ಕಲ್ಕಟ್ಟೆ ಸಮೀಪ ಕೊರಗರಿಗೆ 14 ಸುಸಜ್ಜಿತ ಮನೆಗಳನ್ನು ನಿರ್ಮಿಸಿ ಹಸ್ತಾಂತರ ಮಾಡಿತ್ತು. ಇದೀಗ 74 ಉಳ್ಳೂರು ಗ್ರಾಮದಲ್ಲಿ ಮತ್ತೆ 14 ಮನೆಗಳನ್ನು ನಿರ್ಮಿಸಿದೆ. ಮುಂದೆ ಅಮಾಸೆಬೈಲು ಹಾಗೂ ಮಂದಾರ್ತಿ ಗಳಲ್ಲಿ ಕೊರಗರ ಕಾಲೋನಿಯಲ್ಲಿ ತಲಾ 14 ಮನೆಗಳನ್ನು ನಿರ್ಮಿಸಲಾಗುತ್ತದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕೊರಗರಿಗಾಗಿ 100 ಮನೆಗಳನ್ನು ಟ್ರಸ್ಟ್ ಮೂಲಕ ನಿರ್ಮಿಸಿಕೊಡುವ ಗುರಿಯನ್ನು ಹಾಕಿಕೊಳ್ಳ ಲಾಗಿದೆ ಎಂದು ಅವರು ವಿವರಿಸಿದರು. ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಬೆಳಗ್ಗೆ 10:30ಕ್ಕೆ ಗೃಹಪೂಜೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಚಿತ್ರದುರ್ಗದ ಮಾರಾ ಚೆನ್ನಯ್ಯ ಗುರುಪೀಠದ ಶ್ರೀಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಮನೆಗಳ ಲೋಕಾರ್ಪಣೆಗೊಳಿಸಿ ಆಶಯ ಭಾಷಣ ಮಾಡಲಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರದಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಿದ್ದಾರೆ ಎಂದರು. ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ಕುಮಾರ್ ಕೊಡ್ಗಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ ಪಾಲ್ಗೊಳ್ಳುವರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಕರ್ನಾಟಕ ಮತ್ತು ಕೇರಳ ಕೊರಗಾಭಿವೃದ್ಧಿ ಸಂಸ್ಥೆಗಳ ಅಧ್ಯಕ್ಷ ಸುಶೀಲ ನಾಡ, ಉಳ್ಳೂರು ಗ್ರಾಪಂ ಅಧ್ಯಕ್ಷೆ ಕುಸುಮಾ ಶೆಟ್ಟಿ, ರೈತ ನಾಯಕ ಸಂಜೀವ ಶೆಟ್ಟಿ ಸಂಪಿಗೇಡಿ ಉಪಸ್ಥಿತರಿರುವರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ನ ಸಂಚಾಲಕ ಪ್ರಮೋದ್, ಉಳ್ಳೂರು ಗ್ರಾಪಂ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಕೃಷ್ಣ ಪೂಜಾರಿ, ಶ್ರೀನಿವಾಸ ಮುಂತಾದವರು ಉಪಸ್ಥಿತರಿದ್ದರು.
ಡಿ.26-28: ಕಾಪು ಬೀಚ್ನಲ್ಲಿ ಕಡಲ ಪರ್ಬ
ಕಾಪು, ಡಿ.23: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ಧಿ ಪ್ರಯುಕ್ತ ಕಾಪು ಮಂಡಲ ಬಿಜೆಪಿ ವತಿಯಿಂದ ಇದೇ 26ರಿಂದ ಮೂರು ದಿನಗಳ ಕಾಲ ಕಾಪು ಲೈಟ್ಹೌಸ್ ಬೀಚ್ನಲ್ಲಿ ಕಾಪು ಕಡಲ ಪರ್ಬವನ್ನು ಆಯೋಜಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ. ಕಾಪುವಿನಲ್ಲಿ ಮಂಗಳವಾರ ಕಡಲಪರ್ಬ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ಸವದಲ್ಲಿ ಬೀಚ್ ಉತ್ಸವ, ಆಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವಗಳು ನಡೆಯಲಿವೆ. ಕಡಲ ಪರ್ಬವನ್ನು ಡಿ.26ರಂದು ಸಂಜೆ 7ಗಂಟೆಗೆ ವಿಧಾನಪರಿಷತ್ನಲ್ಲಿ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಉದ್ಘಾಟಿಸಲಿದ್ದಾರೆ ಎಂದವರು ತಿಳಿಸಿದರು. ಡಿ.26ರ ಶುಕ್ರವಾರ ಸಂಜೆ 3 ಗಂಟೆಗೆ ಕಾಪು ಬೀಚ್ ಬಳಿಯ ಕೋಟ್ಯಾನ್ಕಾರ್ ಮೂಲಸ್ಥಾನದಲ್ಲಿ ‘ನಾ ಕಂಡಂತೆ ಅಟಲ್’ ವಿಷಯದಲ್ಲಿ ಪ್ರಬಂಧ ಸ್ಪರ್ಧೆ, 4 ಗಂಟೆಗೆ ಆತ್ಮ ನಿರ್ಭರ ಭಾರತ ವಿಷಯದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ, 6 ಗಂಟೆಗೆ ಪುತ್ತೂರು ಜಗದೀಶ ಆಚಾರ್ಯರಿಂದ ಸಂಗೀತ ಸಂಜೆ ನಡೆಯಲಿದೆ ಬಳಿಕ ಆಹಾರ ಮೇಳ ಉದ್ಘಾಟನೆಗೊಳ್ಳಲಿದೆ ಎಂದರು. 7 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಲಾಲಾಜಿ ಅರ್ ಮೆಂಡನ್ ವಹಿಸುವರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಕರಾವಳಿಯ ಶಾಸಕರೆಲ್ಲರೂ ಉಪಸ್ಥಿತರಿ ರುವರು ಎಂದರು. 27ರಂದು ಬೆಳಗ್ಗೆ 9:30ರಿಂದ ಉಚಿತ ನೇತ್ರ ತಪಾಸಣೆ, ಕನ್ನಡಕ ವಿತರಣೆ ಹಾಗೂ ದಂತ ಚಿಕಿತ್ಸಾ ಶಿಬಿರ, ಅಪರಾಹ್ನ 2:30ಕ್ಕೆ ಪುರುಷರು ಹಾಗೂ ಮಹಿಳೆಯರಿಗೆ ಬೀಚ್ ಹಗ್ಗಜಗ್ಗಾಟ, ಬೀಚ್ನಲ್ಲಿ ಮರಳು ಶಿಲ್ಪ ರಚನೆ ಸ್ಪರ್ಧೆ ನಡೆಯಲಿವೆ. ಸಂಜೆ 7 ಗಂಟೆಗೆ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಪ್ರಮುಖರು ಭಾಗವಹಿಸುವರು. ರಾತ್ರಿ 8 ಗಂಟೆಗೆ ರಘು ದೀಕ್ಷಿತ್ರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. 28ರಂದು ಬೆಳಗ್ಗೆ 9:30ರಿಂದ ಬೃಹತ್ ಆರೋಗ್ಯ ಶಿಬಿರ, 11:30ಕ್ಕೆ ಪುರುಷರ ವಾಲಿಬಾಲ್ ಹಾಗೂ ಮಹಿಳೆಯರ ಥ್ರೋಬಾಲ್ ಪಂದ್ಯಾಟ ಜರಗಲಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಸಂಜೆ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಸಹಿತ ಪ್ರಮುಖರು ಭಾಗವಹಿಸುವರು. ರಾತ್ರಿ 8 ಗಂಟೆಗೆ ಕುನಾಲ್ ಗಾಂಜಾವಾಲಾ ಅವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಗುರ್ಮೆ ಸುರೇಶ್ ಶೆಟ್ಟಿ ವಿವರಿಸಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜೆ.ಸುವರ್ಣ, ಡಾ. ವಿದ್ಯಾದರ್, ಡಾ. ದೇವದಾಸ್ ಕಾಮತ್ ಹಿರಿಯಡ್ಕ ಸಹಿತ ಐದು ಮಂದಿ ಸಾಧಕರಿಗೆ ಅಟಲ್ ಸಾಧನಾ ಪ್ರಶಸ್ತಿ, ವಿವಿಧ ಕ್ಷೇತ್ರದ ಸಾಧಕರಿಗೆ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಗುವುದು. ಪತ್ರಿಕಾಗೋಷ್ಠಿಯಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಶಿಲ್ಪಾ ಜಿ ಸುವರ್ಣ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣ್ಕುಮಾರ್ ಮಟ್ಟು ಮತ್ತು ಗೋಪಾಲಕೃಷ್ಣ ರಾವ್, ಕೃಷ್ಣ ರಾವ್ ಉಪಸ್ಥಿತರಿದ್ದರು.
ಕೊಪ್ಪಳ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ; ಎಂದಿನಿಂದ ಆರಂಭ, ಏನೆಲ್ಲ ವಿಶೇಷತೆ ಇರಲಿದೆ?
ಕೊಪ್ಪಳದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ ಅಂತಿಮ ಹಂತದಲ್ಲಿದೆ. ಜನವರಿ 5 ರಿಂದ ಅಮಾವಾಸ್ಯೆಯವರೆಗೆ ನಡೆಯುವ ಮಹಾದಾಸೋಹಕ್ಕಾಗಿ 6 ಎಕರೆ ವಿಸ್ತೀರ್ಣದಲ್ಲಿ 5-6 ಸಾವಿರ ಭಕ್ತರಿಗೆ ಏಕಕಾಲದಲ್ಲಿ ಪ್ರಸಾದ ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ. 76 ಕೌಂಟರ್ಗಳು, ಬೃಹತ್ ಅಡುಗೆ ಕೋಣೆಗಳು, ನೀರಿನ ವ್ಯವಸ್ಥೆ, ಹಾಗೂ ಭದ್ರತೆಗೆ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ.
Jio Offer: ₹35,000 ಮೌಲ್ಯದ ಸೇವೆ ಉಚಿತ! ಜಿಯೋ ಗ್ರಾಹಕರಿಗೆ ಬಂಪರ್ ಆಫರ್.
ಇಂದಿನ ಡಿಜಿಟಲ್ ಯುಗದಲ್ಲಿ ಪ್ರತಿಯೊಬ್ಬರಿಗೂ ಎರಡು ಪ್ರಮುಖ ಸಮಸ್ಯೆಗಳಿವೆ. ಒಂದು, ಫೋನ್ನಲ್ಲಿ ಸ್ಟೋರೇಜ್ (Storage) ಸಾಲುತ್ತಿಲ್ಲ ಎಂಬ ಚಿಂತೆ. ಇನ್ನೊಂದು, ಎಲ್ಲದಕ್ಕೂ ಕೃತಕ ಬುದ್ಧಿಮತ್ತೆ ಅಥವಾ ಎಐ (AI) ಬಳಸುವ ಕುತೂಹಲವಿದ್ದರೂ, ಅದಕ್ಕೆ ಸಾವಿರಾರು ರೂಪಾಯಿ ಪಾವತಿಸಬೇಕಲ್ಲ ಎಂಬ ಅಂಜಿಕೆ. ಸಾಮಾನ್ಯವಾಗಿ ಗೂಗಲ್ನ ಈ ಎಲ್ಲಾ ಪ್ರೀಮಿಯಂ ಟೂಲ್ಗಳನ್ನು (Premium Tools) ಪಡೆಯಬೇಕೆಂದರೆ ತಿಂಗಳಿಗೆ ಸುಮಾರು ₹1,950 ಪಾವತಿಸಬೇಕಾಗುತ್ತದೆ. ಅಂದರೆ ಒಂದೂವರೆ ವರ್ಷಕ್ಕೆ ಇದು ಬರೋಬ್ಬರಿ ₹35,000 ಕ್ಕೂ ಹೆಚ್ಚು ವೆಚ್ಚವಾಗುತ್ತದೆ. ಆದರೆ, ಈಗ ಈ ಎಲ್ಲಾ ... Read more The post Jio Offer: ₹35,000 ಮೌಲ್ಯದ ಸೇವೆ ಉಚಿತ! ಜಿಯೋ ಗ್ರಾಹಕರಿಗೆ ಬಂಪರ್ ಆಫರ್. appeared first on Karnataka Times .
ಗೃಹ ಲಕ್ಷ್ಮಿ ಯೋಜನೆಗೆ 51,000 ಫಲಾನುಭವಿಗಳ ತಾಂತ್ರಿಕ ಸಮಸ್ಯೆ ಶೀಘ್ರ ನಿವಾರಣೆ: ಎಚ್.ಎಂ .ರೇವಣ್ಣ
ಮಂಗಳೂರು: ರಾಜ್ಯ ಸರಕಾರ ಜನಸಾಮಾನ್ಯರ ಆರ್ಥಿಕ ಬದುಕಿಗೆ ಒತ್ತುಕೊಟ್ಟು, ಅವರನ್ನು ಆರ್ಥಿಕ ಸಬಲರನ್ನಾಗಿಸಿದೆ. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯಡಿ ಸೌಲಭ್ಯ ಪಡೆಯಲು ಜಿಎಸ್ಟಿ , ಆದಾಯ ತೆರಿಗೆ ಸೇರಿದಂತೆ ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವವರ ಪೈಕಿ 51, 000 ಮಂದಿಯ ಸಮಸ್ಯೆ ನಿವಾರಣೆಯಾಗಿ ಅವರಿಗೆ ಶೀಘ್ರದಲ್ಲೇ ಈ ಯೋಜನೆಯಡಿ ಸೌಲಭ್ಯ ದೊರೆಯಲಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ .ರೇವಣ್ಣ ತಿಳಿಸಿದ್ದಾರೆ. ನಗರದ ಪುರಭವನದಲ್ಲಿ ಮಂಗಳವಾರ ನಡೆದ ಕರ್ನಾಟಕ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಕಾರ್ಯಾಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಗೃಹ ಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದ್ದು, ಈ ಪೈಕಿ ಕೆಲವು ಮಂದಿ ನಿಧನರಾಗಿದ್ದರೂ ಅವರ ಖಾತೆಗೆ ಹಣ ಜಮೆಯಾಗಿರುವ ಪ್ರಕರಣಗಳು ಕಂಡು ಬಂದಿದ್ದು, ಅಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಹಣವನ್ನು ವಾಪಸ್ ಪಡೆಯಲಾಗುವುದು. ದ.ಕ. ಜಿಲ್ಲೆಯಲ್ಲಿ ಆ ರೀತಿಯ ಪ್ರಕರಣಗಳನ್ನು ಪತ್ತೆ ಹಚ್ಚಿ ವಾಪಸ್ ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಬೇಕು ಎಂದರು. 18 ಜಿಲ್ಲೆಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಕಾರ್ಯಾಗಾರ ನಡೆಸಲಾಗಿದೆ. ಮಂಗಳೂರಿನಲ್ಲಿ ಪಂಚ ಗ್ಯಾರಂಟಿ ಯೋಜನೆಯ ಯಕ್ಷಗಾನ ನೋಡಿ ಖುಶಿ ಕೊಟ್ಟಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಾಗೃತ ಕರ್ನಾಟಕ ಸಂಚಾಲಕ ಡಾ.ವಾಸು ಎಚ್.ವಿ. ಮಾತನಾಡಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಯಾಗುತ್ತದೆಯೇ ಹೊರತು ರಾಜ್ಯದ ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಅವರು ‘ ನಮ್ಮ ರಾಜ್ಯದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಜಾರಿಗೊಳಿಸಿದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾದವರು ಮುಂದೆ ಬರಲು ಹೆದರುತ್ತಿದ್ದಾರೆ. ಆದರೆ ಅವರು ಫಲಾನುಭವಿಗಳು ಎಂದು ಎದೆ ತಟ್ಟಿ ಹೇಳಬೇಕು. ಸರಕಾರ ನೀಡಿರುವುದು ಬಿಟ್ಟಿ ಭಾಗ್ಯವಲ್ಲ ಎಂದರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮೈಸೂರು ವಿಭಾಗದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ ಮಾತನಾಡಿ ‘ರಾಜ್ಯದಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮರ್ಪಕ ವಾಗಿ ಆಗಿದೆ. ಚುನಾವಣೆ ಮೊದಲು ನೀಡಿದ ಎಲ್ಲ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಿದೆ. ಆದರೆ ಮೀಸಲಾತಿ, ಪೆಟ್ರೋಲ್ ,ಡಿಸೇಲ್,ಗ್ಯಾಸ್ , ಚಿನ್ನ ಬೆಲೆ ಇಳಿಕೆ ಮಾಡುತ್ತೇವೆಂದು ಭರವಸೆ ನೀಡಿ ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದ ಬಿಜೆಪಿ ಏನನ್ನು ಮಾಡದೆ ಜನರಿಗೆ ಮೋಸ ಮಾಡಿದೆ ಎಂದು ಟೀಕಿಸಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ,ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂಎ. ಗಫೂರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿಎಂ ಶಹೀದ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಕೊಡವೂರು, ದ.ಕ.ಜಿ.ಪಂ ಸಿಇಒ ನರ್ವಾಡೆ ವಿನಾಯಕ ಕಾರ್ಬಾರಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ವಿವಿಧ ತಾಲೂಕು ಸಮಿತಿಗಳ ಅಧ್ಯಕ್ಷರುಗಳಾದ ಜಯಂತಿ ಬಿ.ಎ, ಉಮಾನಾಥ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಆಲ್ವಿನ್ ಕ್ಲೆಮೆಂಟ್ ಕುಟಿನ್ಹಾ , ಶಾಹುಲ್ ಹಮೀದ್, ಸುಧೀರ್ ಕುಮಾರ್ ಶೆಟ್ಟಿ, ಸುರೇಂದ್ರ ಬಿ. ಕಂಬಳಿ, ಅರುಣ್ ಕುಮಾರ್ ಶೆಟ್ಟಿ, ಎಸ್.ರಫೀಕ್ ಉಪಸ್ಥಿತರಿದ್ದರು. ಯುವನಿಧಿಯ ಫಲಾನುಭವಿ ಡಾ.ಸುಷ್ಮಾ ಪುತ್ತೂರು ಮತ್ತು ನಾಲ್ಕು ಯೋಜನೆಗಳ ಫಲಾನುಭವಿ ಪ್ಲೇವಿ ಡಿ ಸೋಜ ಅಡ್ಯಾರ್ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಹೊಸದಿಲ್ಲಿ, ಡಿ. 23: ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ನ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ಪೀಠ, 15 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಮೂರು ಶ್ಯೂರಿಟಿಗಳನ್ನು ಸಲ್ಲಿಸುವ ಷರತ್ತಿನೊಂದಿಗೆ ಸೆಂಗಾರ್ ನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ. ಸಂತ್ರಸ್ತೆಯ ಮನೆಗೆ ಐದು ಕಿಲೋಮೀಟರ್ ವ್ಯಾಪ್ತಿಯೊಳಗೆ ಪ್ರವೇಶಿಸಬಾರದು ಹಾಗೂ ಸಂತ್ರಸ್ತೆ ಅಥವಾ ಆಕೆಯ ತಾಯಿಗೆ ಯಾವುದೇ ರೀತಿಯ ಬೆದರಿಕೆ ಅಥವಾ ಸಂಪರ್ಕ ಸಾಧಿಸಬಾರದು ಎಂದು ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದೆ. ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಜಾಮೀನು ರದ್ದುಪಡಿಸಲಾಗುವುದು ಎಂದು ಪೀಠ ಎಚ್ಚರಿಸಿದೆ. 2017ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಸೆಂಗಾರ್ ನನ್ನು ದೋಷಿ ಎಂದು ತೀರ್ಪು ನೀಡಲಾಗಿತ್ತು. ಈ ಸಂಬಂಧ 2019ರಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಆತ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದನು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, 2019ರ ಆಗಸ್ಟ್ ನಲ್ಲಿ ಈ ಪ್ರಕರಣ ಹಾಗೂ ಸಂಬಂಧಿತ ಇತರೆ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದಿಲ್ಲಿಗೆ ವರ್ಗಾಯಿಸಲಾಗಿತ್ತು. ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗಾರ್ ಗೆ ವಿಧಿಸಲಾದ 10 ವರ್ಷಗಳ ಜೈಲು ಶಿಕ್ಷೆಗೆ ಸಂಬಂಧಿಸಿದ ಮೇಲ್ಮನವಿಯೂ ಇನ್ನೂ ವಿಚಾರಣೆಯಲ್ಲಿದೆ.
ಎಪ್ಸ್ಟೀನ್ ಫೈಲ್ಸ್ | ಟ್ರಂಪ್ ಕನಿಷ್ಠ 8 ಬಾರಿ ಎಪ್ಸ್ಟೀನ್ ನ ವಿಮಾನಗಳಲ್ಲಿ ಪ್ರಯಾಣಿಸಿದ್ದ ದಾಖಲೆಗಳು ಬಹಿರಂಗ
ವಾಷಿಂಗ್ಟನ್: ಮೃತ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಗೆ ಸಂಬಂಧಿಸಿದಂತೆ ಯುಎಸ್ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿರುವ ಹೊಸ ದಾಖಲೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರು ಕಾಣಿಸಿಕೊಂಡಿದೆ. ಎಪ್ಸ್ಟೀನ್ ನ ಖಾಸಗಿ ವಿಮಾನ ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ಟ್ರಂಪ್ ಕನಿಷ್ಠ ಎಂಟು ಬಾರಿ ಎಪ್ಸ್ಟೀನ್ ವಿಮಾನಗಳಲ್ಲಿ ಪ್ರಯಾಣಿಸಿದ್ದಾಗಿ ಉಲ್ಲೇಖಿಸಲಾಗಿದೆ. ಆದರೆ, ಈ ದಾಖಲೆಗಳ ಆಧಾರದಲ್ಲಿ ಟ್ರಂಪ್ ವಿರುದ್ಧ ಯಾವುದೇ ಅಪರಾಧದ ಆರೋಪಗಳಿಲ್ಲ ಎಂದು ಫೆಡರಲ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಮೆರಿಕ ಕಾಂಗ್ರೆಸ್ ಅಂಗೀಕರಿಸಿದ ಹೊಸ ಕಾನೂನಿನ ಅನ್ವಯವಾಗಿ ಮಂಗಳವಾರ ಬಿಡುಗಡೆಗೊಂಡ ಈ ದಾಖಲೆಗಳು ಸುಮಾರು 29 ಸಾವಿರ ಪುಟಗಳನ್ನು ಒಳಗೊಂಡಿವೆ. ಇದರಲ್ಲಿ ತನಿಖೆಗೆ ಸಂಬಂಧಿಸಿದ ಪತ್ರವ್ಯವಹಾರಗಳು, ಫೋಟೋಗಳು ಹಾಗೂ ಜೈಲಿನೊಳಗೆ ಚಿತ್ರೀಕರಿಸಲಾಗಿದೆ ಎನ್ನಲಾದ ಕೆಲವು ವೀಡಿಯೊ ದೃಶ್ಯಗಳೂ ಸೇರಿವೆ. ಎಪ್ಸ್ಟೀನ್ 2019ರಲ್ಲಿ ನ್ಯೂಯಾರ್ಕ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು. ದಾಖಲೆಗಳಲ್ಲಿ ಸೇರಿರುವ ಇಮೇಲ್ ಒಂದರಲ್ಲಿ, 2020ರ ಜನವರಿ 8ರಂದು ನ್ಯೂಯಾರ್ಕ್ ದಕ್ಷಿಣ ಜಿಲ್ಲಾ ಸಹಾಯಕ ಯುಎಸ್ ವಕೀಲರು, ಟ್ರಂಪ್ ಎಪ್ಸ್ಟೀನ್ ನ ಖಾಸಗಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿದ್ದಾಗಿ “ವರದಿಯಾಗಿದೆ ಅಥವಾ ತಿಳಿದಿದೆ” ಎಂದು ಉಲ್ಲೇಖಿಸಿದ್ದಾರೆ. ಇಮೇಲ್ ಕಳುಹಿಸಿದವರು ಮತ್ತು ಸ್ವೀಕರಿಸಿದವರ ವಿವರಗಳನ್ನು ನ್ಯಾಯಾಂಗ ಇಲಾಖೆ ಮರೆಮಾಚಿದೆ. ಒಂದು ವಿಮಾನ ಪ್ರಯಾಣದ ದಾಖಲೆಯಲ್ಲಿ ಟ್ರಂಪ್, ಎಪ್ಸ್ಟೀನ್ ಹಾಗೂ 20 ವರ್ಷದ ಮಹಿಳೆಯೊಬ್ಬರು ಮಾತ್ರ ಪ್ರಯಾಣಿಕರಾಗಿ ಪಟ್ಟಿ ಮಾಡಲಾಗಿದೆ. ಆ ಮಹಿಳೆಯ ಗುರುತಿನ ವಿವರಗಳನ್ನು ಮರೆಮಾಚಲಾಗಿದೆ. ಇನ್ನು ಎರಡು ವಿಮಾನಗಳಲ್ಲಿ ಪಟ್ಟಿ ಮಾಡಲಾದ ಮಹಿಳೆಯರು, ಎಪ್ಸ್ಟೀನ್ ಸಹಚರಿಯಾಗಿದ್ದ ಘಿಸ್ಲೇನ್ ಮ್ಯಾಕ್ಸ್ ವೆಲ್ ಪ್ರಕರಣದಲ್ಲಿ ಸಂಭಾವ್ಯ ಸಾಕ್ಷಿಗಳಾಗಿರಬಹುದೆಂದು ದಾಖಲೆಗಳು ಸೂಚಿಸುತ್ತವೆ. ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಎಪ್ಸ್ಟೀನ್ ಗೆ ಸಹಾಯ ಮಾಡಿದ ಆರೋಪದಲ್ಲಿ ಮ್ಯಾಕ್ಸ್ ವೆಲ್ ಗೆ 20 ವರ್ಷಗಳ ಜೈಲುಶಿಕ್ಷೆ ವಿಧಿಸಲಾಗಿದೆ. ಈ ನಡುವೆ, ನ್ಯಾಯಾಂಗ ಇಲಾಖೆ, ಕೆಲವು ದಾಖಲೆಗಳಲ್ಲಿ ಟ್ರಂಪ್ ವಿರುದ್ಧ ಮಾಡಲಾಗಿರುವ ಆರೋಪಗಳನ್ನು ಆಧಾರರಹಿತ ಎಂದು ಹೇಳಿದೆ. ಇವುಗಳಲ್ಲಿ ಕೆಲವು 2020ರ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಎಫ್ಬಿಐ ಗೆ ಸಲ್ಲಿಸಲಾದವು ಎಂದು ತಿಳಿಸಿದೆ. “ಈ ಆರೋಪಗಳಿಗೆ ಯಾವುದೇ ವಿಶ್ವಾಸಾರ್ಹತೆ ಇದ್ದಿದ್ದರೆ, ಈಗಾಗಲೇ ಅಧ್ಯಕ್ಷ ಟ್ರಂಪ್ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿತ್ತು,” ಎಂದು ಯುಎಸ್ ನ್ಯಾಯಾಂಗ ಇಲಾಖೆ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ. ದಾಖಲೆಗಳಲ್ಲಿ ಹೆಸರು ಕಾಣಿಸಿಕೊಂಡಿರುವುದರಿಂದ ಮಾತ್ರ ಅಪರಾಧ ಸಾಬೀತಾಗುವುದಿಲ್ಲ ಎಂದು ಅಧಿಕಾರಿಗಳು ಪುನರುಚ್ಚರಿಸಿದ್ದಾರೆ.
ಇಡೀ ದೇಶದ ರೈತರನ್ನು ಸರಕಾರ ಯಾಚಕ ವರ್ಗಕ್ಕೆ ತಂದು ನಿಲ್ಲಿಸಿದೆ: ಸುರೇಶ್ ಕಂಜರ್ಪಣೆ
ರಾಷ್ಟ್ರೀಯ ರೈತ ದಿನಾಚರಣೆ
ಹೈದರಾಬಾದ್: ಆಂಧ್ರ ರಾಜ್ಯದಲ್ಲಿ ಮುಸ್ಲಿಮೇತರ ಬಾಲಕರಲ್ಲಿ ಸುನ್ನತಿಯನ್ನು ಉತ್ತೇಜಿಸುತ್ತಿರುವ ಜಾಲವಿದೆ ಎಂದು ಮಾಜಿ ಸಿಬಿಐ ಮುಖ್ಯಸ್ಥ ನಾಗೇಶ್ವರ್ ರಾವ್ ಅವರು ಆಂಧ್ರಪ್ರದೇಶ ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್ ಅವರಿಗೆ ಪತ್ರ ಬರೆದಿದ್ದು, ಈ ಪತ್ರವನ್ನು ಅವರು ಎಕ್ಸ್ ನಲ್ಲೂ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಮಾಡಿದ ಕೇವಲ 30 ನಿಮಿಷಗಳೊಳಗೇ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್, ಈ ಆರೋಪಗಳ ಕುರಿತು ಇಲಾಖೆ ಪರಿಶೀಲಿಸಲಿದೆ ಎಂದು ಭರವಸೆ ನೀಡಿದ್ದಾರೆ. ಎನ್ಡಿಎ ಆಡಳಿತಾರೂಢ ರಾಜ್ಯವಾದ ಆಂಧ್ರಪ್ರದೇಶದಲ್ಲಿ ಮುಸ್ಲಿಮೇತರ ಬಾಲಕರೂ ಸೇರಿದಂತೆ ಬಾಲಕರಿಗೆ ಆಸ್ಪತ್ರೆಗಳಲ್ಲೇ ಸುನ್ನತಿಯನ್ನು ಮಾಡಲಾಗುತ್ತಿದೆ ಎಂದು ನಾಗೇಶ್ವರ್ ರಾವ್ ಅವರು ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ. ಸುನ್ನತಿ ಪ್ರಯೋಜನಕಾರಿ ವೈದ್ಯಕೀಯ ವಿಧಾನ ಎಂದು ಹಲವಾರು ವೈದ್ಯರಿಗೆ ಕಲಿಸಿರುವ ಅಥವಾ ಪ್ರಭಾವ ಬೀರಿರುವ ಕುರಿತು ನನಗೆ ವಿಶ್ವಾಸಾರ್ಹ ಮಾಹಿತಿ ಇದೆ ಎಂದೂ ಅವರು ಈ ಪತ್ರದಲ್ಲಿ ಹೇಳಿದ್ದಾರೆ. ಇದರ ಪರಿಣಾಮವಾಗಿ ಅವರು ಮುಸ್ಲಿಮೇತರ ಬಾಲಕರಿಗೂ ಸುನ್ನತಿಯ ಸಲಹೆ ನೀಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಇದರ ಹಿಂದೆ ಸಂಘಟಿತ ಜಾಲ ಜಾಲವಿರುವಂತಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಿದರೆ ಬೆಳಕಿಗೆ ಬರುವ ಸಾಧ್ಯತೆ ಇದೆ. ಈ ವಿಷಯವನ್ನು ಸಾರ್ವಜನಿಕ ಆರೋಗ್ಯ, ವೈದ್ಯಕೀಯ ನೈತಿಕತೆ ಹಾಗೂ ಕೋಮು ಸೌಹಾರ್ದತೆಯ ಹಿತಾಸಕ್ತಿಯ ದೃಷ್ಟಿಯಿಂದ ಈ ಸೂಕ್ಷ್ಮ ವಿಷಯವನ್ನು ಗಾಂಭೀರ್ಯ ಮತ್ತು ತುರ್ತಾಗಿ ನಿಭಾಯಿಸಬೇಕಿದೆ ಎಂದೂ 1986ರ ಒಡಿಶಾ ಕೇಡ ರ್ನ ಐಪಿಎಸ್ ಅಧಿಕಾರಿಯಾದ ನಾಗೇಶ್ವರ್ ರಾವ್ ಎಚ್ಚರಿಸಿದ್ದಾರೆ. ನಾಗೇಶ್ವರ್ ರಾವ್ ಅವರ ಪೋಸ್ಟ್ ಗೆ ಧನ್ಯವಾದ ಸಲ್ಲಿಸಿರುವ ಆಂಧ್ರ ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್, ಆಂಧ್ರ ಪ್ರದೇಶ ಸರಕಾರವು ಸಾಕ್ಷ್ಯಾಧಾರಿತ, ನೈತಿಕ ಮಾಪನಗಳು ಹಾಗೂ ಕೋಮು ಸೌಹಾರ್ದತೆ ಆಧಾರಿತ ವೈದ್ಯಕೀಯ ಪದ್ಧತಿಗೆ ಬದ್ಧವಾಗಿದೆ. ನಾನು ನಿಮ್ಮ ಕಳವಳವನ್ನು ಗಮನಕ್ಕೆ ತೆಗೆದುಕೊಂಡಿದ್ದು, ಅಸ್ತಿತ್ವದಲ್ಲಿರುವ ವೈದ್ಯಕೀಯ ಮಾರ್ಗಸೂಚಿ ಹಾಗೂ ಕಾನೂನಾತ್ಮಕ ಅವಕಾಶಗಳನ್ವಯ ಈ ವಿಷಯದ ಕುರಿತು ಆರೋಗ್ಯ ಇಲಾಖೆ ಪರಿಶೀಲಿಸಲಿದೆ. ಸೂಕ್ತ ಪರಾಮರ್ಶೆಯ ನಂತರ ಅಗತ್ಯ ಬಿದ್ದರೆ ಸಮರ್ಪಕ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಸೌಜನ್ಯ: theprint.in
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಗತ್ಯ ಕ್ರಮ: ಡಾ.ತಿಪ್ಪೇಸ್ವಾಮಿ
3 ವರ್ಷಗಳಲ್ಲಿ ಉಡುಪಿ ಜಿಲ್ಲೆಯ 9 ಪ್ರಕರಣಗಳಲ್ಲಿ ಶಿಕ್ಷೆ
ಲಂಡನ್ನಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ಬ್ರಿಟೀಶ್ ಏರ್ವೇಸ್ ವಿಮಾನಕ್ಕೆ ಬಾಂಬ್ ಬೆದರಿಕೆ
ಹೈದರಾಬಾದ್, ಡಿ. 23: ಲಂಡನ್ ನಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ಬ್ರಿಟೀಷ್ ಏರ್ವೇಸ್ ವಿಮಾನ ಬಾಂಬ್ ಬೆದರಿಕೆ ಸ್ವೀಕರಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಮಂಗಳವಾರ ತಿಳಿಸಿವೆ. ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ವಿಮಾನ ನಿಲ್ದಾಣದ ಅಧಿಕಾರಿಗಳು ಮಾದರಿ ಸುರಕ್ಷಾ ಶಿಷ್ಟಾಚಾರಗಳನ್ನು ಪ್ರಾರಂಭಿಸಿದರು ಎಂದು ಅವು ಹೇಳಿವೆ. ಇಲ್ಲಿನ ರಾಜೀವ್ ಗಾಂಧಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಗ್ರಾಹಕ ನೆರವು ಸೇವೆ ಮಂಗಳವಾರ ಸ್ವೀಕರಿಸಿದ ಇಮೇಲ್ನಲ್ಲಿ ಹೀಥ್ರೋದಿಂದ ಹೈದರಾಬಾದ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು ಎಂದು ಅವು ತಿಳಿಸಿವೆ. ‘‘ವಿಮಾನ ಸುರಕ್ಷಿತವಾಗಿ ವಿಮಾನ ನಿಲ್ದಾಣದಲ್ಲಿ ಇಳಿದಿದೆ. ಮಾದರಿ ಸುರಕ್ಷಾ ಶಿಷ್ಟಾಚಾರಗಳನ್ನು ಆರಂಭಿಸಲಾಗಿದೆ. ಅನಂತರ ವಿಮಾನ ಹೀಥ್ರೋಗೆ ಹಿಂದಿರುಗಿದೆ’’ ಎಂದು ಮೂಲಗಳು ತಿಳಿಸಿವೆ.
Telangana | ದಲಿತ ಯುವಕನ ಕಸ್ಟಡಿ ಸಾವು ಆರೋಪ; ವರದಿ ಕೇಳಿದ ತೆಲಂಗಾಣ ಮಾನವ ಹಕ್ಕುಗಳ ಆಯೋಗ
ಹೈದರಾಬಾದ್, ಡಿ. 23: ಚಿಲ್ಕೂರು ಪೊಲೀಸರಿಂದ ಬಂಧತನಾದ ಸೂರ್ಯಪೇಟ್ ನ ದಲಿತ ಯುವಕ ಕಾರ್ಲ ರಾಜೇಶ್ನ ಕಸ್ಟಡಿ ಸಾವಿನ ಆರೋಪದ ಕುರಿತು ವಿಸ್ತೃತ ವರದಿ ಸಲ್ಲಿಸುವಂತೆ ತೆಲಂಗಾಣ ಮಾನವ ಹಕ್ಕುಗಳ ಆಯೋಗ (ಟಿಜಿಎಚ್ಆರ್ಸಿ) ರಾಜ್ಯ ಗೃಹ ಇಲಾಖೆಗೆ ಸೋಮವಾರ ನಿರ್ದೇಶಿಸಿದೆ. ರಾಜೇಶ್ನ ತಾಯಿ ಕಾರ್ಲ ಲಲಿತಾ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್ಪಿಎಸ್) ಅಧ್ಯಕ್ಷ ಮಂಡ ಕೃಷ್ಣ ಮಾದಿಗ ಡಿಸೆಂಬರ್ 22ರಂದು ದೂರು ಸಲ್ಲಿಸಿದ್ದರು. ಚಿಲ್ಕೂರು ಪೊಲೀಸರು ನವೆಂಬರ್ 4ರಿಂದ 9ರ ವರೆಗೆ 6 ದಿನಗಳ ಕಾಲ ರಾಜೇಶ್ ನನ್ನು ಕಾನೂನು ಬಾಹಿರವಾಗಿ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದಾರೆ. ಆತನಿಗೆ ಚಿತ್ರ ಹಿಂಸೆ ನೀಡಿದ್ದಾರೆ ಹಾಗೂ ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ ಎಂದು ಲಲಿತಾ ದೂರಿನಲ್ಲಿ ಆರೋಪಿಸಿದ್ದಾರೆ. ಹಲವು ಬಾರಿ ಮನವಿ ಮಾಡಿದ ಹೊರತಾಗಿಯೂ ತನಗೆ ಪುತ್ರನನ್ನು ನೋಡಲು ಅವಕಾಶ ನೀಡಿಲ್ಲ. ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಮುನ್ನ ಆತನಿಗೆ ಹೈಕೋರ್ಟ್ ಇಂಜೆಕ್ಷನ್ ನೀಡಲಾಗಿದೆ. ಮ್ಯಾಜಿಸ್ಟ್ರೇಟ್ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು ಎಂದು ದೂರಿನಲ್ಲಿ ಹೇಳಲಾಗಿದೆ. ರಾಜೇಶ್ಗೆ ಆರೋಗ್ಯ ಸರಿ ಇಲ್ಲ ಎಂದು ನವೆಂಬರ್ 10ರಂದು ತಾನು ಹುಝುರ್ ನಗರ್ ಸಬ್ ಜೈಲಿನ ಕರೆ ಸ್ವೀಕರಿಸಿದ್ದೆ. ತಾನು ಜೈಲಿಗೆ ಭೇಟಿ ನೀಡಿದಾಗ ಆತನ ಸ್ಥಿತಿ ಚಿಂತಾಜನಕವಾಗಿತ್ತು. ಆತನನ್ನು ನವೆಂಬರ್ 14ರಂದು ಸೂರ್ಯಪೇಟ್ ಆಸ್ಪತ್ರೆಗೆ, ಅನಂತರ ಸಿಕಂದರಾಬಾದ್ನ ಗಾಂಧಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅಲ್ಲಿ ಆತ ನವೆಂಬರ್ 16ರಂದು ಸಾವನ್ನಪ್ಪಿದ್ದಾನೆ ಎಂದು ಲಲಿತಾ ದೂರಿನಲ್ಲಿ ಆರೋಪಿಸಿದ್ದಾರೆ. ರಾಜೇಶ್ನ ಅಕ್ರಮ ಬಂಧನ, ಕಸ್ಟಡಿಯಲ್ಲಿ ಚಿತ್ರಹಿಂಸೆ, ಕಸ್ಟಡಿಯಲ್ಲಿ ಸಾವಿನ ಕುರಿತ ತಾಯಿಯ ಆರೋಪವನ್ನು ತೆಲಂಗಾಣ ಮಾನವ ಹಕ್ಕುಗಳ ಆಯೋಗ ಗಂಭೀರವಾಗಿ ಪರಿಗಣಿಸಿದೆ ಹಾಗೂ ಈ ಸಂಬಂಧ ರಾಜ್ಯ ಗೃಹ ಇಲಾಖೆಗೆ ವರದಿ ನೀಡುವಂತೆ ಆದೇಶಿಸಿದೆ.
ಬೆಂಗಳೂರಿನಲ್ಲಿ ಸೈಟ್, ಮನೆ ಖರೀದಿಸೋಕೆ ಹೊರಟಿದ್ದೀರಾ? ಹಾಗಿದ್ದರೆ ಈ 5 ತಪ್ಪುಗಳನ್ನು ಮಾಡಲೇಬೇಡಿ
ಬೆಂಗಳೂರಿನಲ್ಲಿ ನಿವೇಶನ ಅಥವಾ ಸೈಟ್ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ, ಇಲ್ಲಿ ಬೆಲೆಗಿಂತ ಹೆಚ್ಚಾಗಿ ದಾಖಲೆಗಳೇ ಅತಿ ಮುಖ್ಯ. ವಿಶೇಷವಾಗಿ 'ಎ-ಖಾತಾ' ಮತ್ತು 'ಬಿ-ಖಾತಾ' ನಡುವಿನ ಗೊಂದಲದಲ್ಲಿ ಸಿಲುಕಿ ಅನೇಕರು ತಮ್ಮ ಜೀವನದ ಉಳಿತಾಯವನ್ನು ಕಳೆದುಕೊಳ್ಳುವ ಅಪಾಯವಿದೆ. ಬ್ಯಾಂಕ್ ಸಾಲ ಸಿಗದಿರುವುದು, ಕಟ್ಟಡ ನಿರ್ಮಾಣಕ್ಕೆ ಅನುಮತಿ ಇಲ್ಲದಿರುವುದು ಮತ್ತು ಭವಿಷ್ಯದ ಕಾನೂನು ತೊಡಕುಗಳನ್ನು ತಪ್ಪಿಸಲು, ಖರೀದಿದಾರರು ಗಮನಿಸಲೇಬೇಕಾದ 5 ಪ್ರಮುಖ ಎಚ್ಚರಿಕೆಗಳು ಇಲ್ಲಿವೆ.
ಹಿರಿಯ ಸಾಹಿತಿ ಚನ್ನವೀರ ಕಣವಿ, ಚಂಪಾರವರ ಸಮಗ್ರ ಸಂಪುಟಗಳ ಲೋಕಾರ್ಪಣೆ
ಕಲಬುರಗಿ: ಆಧುನಿಕ ತಂತ್ರಜ್ಞಾನದ ಬೆಳವಣಿಗೆಯಿಂದ ಮುದ್ರಣ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ ಸಾಧ್ಯವಾಗಿದೆ. ಇದರಿಂದ ಪುಸ್ತಕಗಳ ಆವೃತ್ತಿ, ಮರು ಮುದ್ರಣ, ಗ್ರಂಥಗಳ ಪುಟ ವಿನ್ಯಾಸ ಮತ್ತು ಆಕರ್ಷಕ ವ್ಯಂಗ್ಯ ಚಿತ್ರಗಳ ಬಳಕೆ ಸಾಧ್ಯವಾಗಿದೆ. ಆದರೆ, ಕನ್ನಡ ಭಾಷೆ ಮತ್ತು ಸಾಹಿತ್ಯ ಉಳಿಯಬೇಕಾದರೆ ಕನ್ನಡ ಪುಸ್ತಕಗಳನ್ನು ಹೆಚ್ಚು ಹೆಚ್ಚಾಗಿ ಓದುವ ಹವ್ಯಾಸ ಬೆಳೆಯಬೇಕು. ಜೊತೆಗೆ ಕನ್ನಡ ಓದಲು ಪ್ರೋತ್ಸಾಹಿಸಬೇಕಿದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಎಸ್. ಉಡಿಕೇರಿ ಅಭಿಪ್ರಾಯಪಟ್ಟರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಿರಿಯ ಸಾಹಿತಿಗಳಾದ ಚನ್ನವೀರ ಕಣವಿ ಹಾಗೂ ಪ್ರೊ. ಚಂದ್ರಶೇಖರ ಪಾಟೀಲ್ ಅವರಚಾಮಗರ ಸಂಪುಟಗಳ ಲೋಕಾರ್ಪಣೆ ಹಾಗೂ ಉಚಿತ ಪುಸ್ತಕಗಳ ವಿತರಣಾ ಸಮಾರಂಭ ಮತ್ತು ಮನೆಗೊಂದು ಗ್ರಂಥಾಲಯ ಕಲಬುರಗಿ ಜಿಲ್ಲಾ ಜಾಗೃತ ಸಮಿತಿ ಸದಸ್ಯರಿಗೆ ಅರ್ಹತಾ ಪ್ರಮಾಣ ಪತ್ರ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾಡಿನ ಸಾಕ್ಷಿಪ್ರಜ್ಞೆ, ಹಿರಿಯ ಸಾಹಿತಿಗಳಾದ ಚನ್ನವೀರ ಕಣವಿ ಮತ್ತು ಚಂಪಾ ಕನ್ನಡ ನಾಡು ಕಂಡ ಮೇರು ಕವಿಗಳಾಗಿದ್ದಾರೆ. ಅವರ ವೈಚಾರಿಕ ಸಾಹಿತ್ಯ, ಕಾವ್ಯ ಮತ್ತು ಕವಿತೆಗಳು ಸಮಗ್ರ ಸಂಪುಟಗಳಲ್ಲಿ ಲೋಕಾರ್ಪಣೆ ಆಗಿದ್ದು, ಓದುವ ಪರಿಪಾಟವನ್ನು ವಿದ್ಯಾರ್ಥಿಗಳಲ್ಲಿ ಬೆಳೆಯಬೇಕಿದೆ. ಪುಸ್ತಕ ಮುದ್ರಣ ವೇಗ ಬೆಳೆದಂತೆ ಮರು ಮುದ್ರಣ ಸಾಧ್ಯವಾಗುತ್ತಿದೆ ಎಂದು ಹೇಳಿದರು. ಯುವಕರಲ್ಲಿ ಮೊಬೈಲ್ ಬಳಕೆ ಕಡಿಮೆಯಾಗಬೇಕು. ಕನ್ನಡ ಭಾಷೆ, ವೈಚಾರಿಕ ಬರಹ, ಸಾಹಿತಿಗಳ ಬದುಕು ಮತ್ತು ಬರವಣಿಗೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಮೇರು ಕವಿಗಳಾದ ಕಣವಿ ಮತ್ತು ಚಂಪಾ ಅವರ ಕವಿತೆ, ಕಾವ್ಯ, ವಿಮರ್ಶೆ ಮತ್ತು ಕಾದಂಬರಿಗಳನ್ನು ಉತ್ಸುಕರಾಗಿ ಓದಬೇಕು. ಪುಸ್ತಕ ಕೊಂಡು ಓದುವ ಸಂಸ್ಕೃತಿ ರೂಢಿಸಿಕೊಳ್ಳಬೇಕು. ಅಂದಾಗ ಮಾತ್ರ ಕನ್ನಡ ಭಾಷೆ ಮತ್ತು ಸಾಹಿತ್ಯ ಬೆಳೆಯಲು ಸಾಧ್ಯವಾಗುತ್ತದೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಪುಸ್ತಕ ಪ್ರಾಧಿಕಾರದ ಮಳಿಗೆ ಸ್ಥಾಪನೆಗೆ ಅಗತ್ಯ ಸ್ಥಳವನ್ನು ನೀಡಲು ವಿಶ್ವವಿದ್ಯಾಲಯ ಸಿದ್ಧವಿದೆ. ಅದಕ್ಕೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಪ್ರಾಧಿಕಾರದ ಅಧ್ಯಕ್ಷರು ನೀಡಬೇಕು ಎಂದು ಕುಲಪತಿಗಳು ಮನವಿ ಮಾಡಿದರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಹಾಗೂ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಮುಖ್ಯ ಅತಿಥಿಯಾಗಿ ಮಾತನಾಡಿ, ಡಾ. ಬಿ ಆರ್ ಅಂಬೇಡ್ಕರ್ ಮಾತಿನಂತೆ ಎಲ್ಲರು ನಮ್ಮ ಕೈ ಬಿಟ್ಟರೂ ಪುಸ್ತಕಗಳು ನನ್ನ ಕೈ ಬಿಡಲಿಲ್ಲ. ಜಗತ್ತಿನಲ್ಲಿ ಅತಿ ಹೆಚ್ಚು ಪುಸ್ತಕ ಓದಿದವರು ಯಾರೆಂದು ನಡೆದ ಸಮೀಕ್ಷೆಯಲ್ಲಿ ಅತಿ ಹೆಚ್ಚಿನ ಪುಸ್ತಕಗಳನ್ನು ಓದಿದದವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಎಂಬುದನ್ನು ಜಾಗತಿಕ ತಜ್ಞರು ಒಪ್ಪಿದ್ದಾರೆ. ಡಾ.ಬಿ. ಆರ್. ಅಂಬೇಡ್ಕರ್ ಗ್ರಂಥಾಲಯದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದ್ದರು. ಅವರ ಸಾಧನೆ ಪ್ರತಿಯೊಬ್ಬ ವ್ಯಕ್ತಿಗೂ ಸ್ಫೂರ್ತಿಯಾಗಬೇಕು ಎಂದು ಹೇಳಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಕಟ್ಟಿದ ಮತ್ತು ಕನ್ನಡ ಸಾಹಿತ್ಯವನ್ನು ನದಿಯ ಹೊನಲಂತೆ ಹರಿಸಿದ ಕಣವಿ ಮತ್ತು ಚಂಪಾ ಅವರ ಸಾಹಿತ್ಯ ಪ್ರಜ್ಞೆ ಮತ್ತು ಸಾಂಸ್ಕೃತಿಕ ಪ್ರಜ್ಞೆಯನ್ನು ಈ ಕೃತಿಗಳ ಮೂಲಕ ಇಂದು ವಿಸ್ತಾರಗೊಂಡಿದೆ. ಹೃದಯ ಬೆಸೆಯುವ ಮತ್ತು ಸಹೃದಯ ಸಂಬಂಧಗಳು ಭಾಷೆ ಮತ್ತು ಸಾಹಿತ್ಯದಿಂದ ಬೆಳೆಯುತ್ತವೆ. ಬದುಕನ್ನು ಬದುಕುವಂತೆ ಕಲಿಸುವುದು ಕಲೆ ಅದ್ದರಿಂದ ಕಲೆ, ಸಾಹಿತ್ಯ, ಸಂಗೀತ ಮತ್ತು ಬಂಡಾಯ ಸಾಹಿತ್ಯ ಪ್ರತಿಯೊಬ್ಬರಿಗೂ ಜ್ಞಾನವನ್ನು ನೀಡುತ್ತವೆ ಎಂದು ಅಭಿಪ್ರಾಯಪಟ್ಟರು. ಹಿರಿಯ ಸಾಹಿತಿಗಳು ಹಾಗೂ ಪ್ರೊ. ಚಂದ್ರಕಾಂತ ಪಾಟೀಲ್ ಸಮಗ್ರ ಸಾಹಿತ್ಯ ಸಂಪುಟಗಳನ್ನು ಸಂಪಾದಿಸಿರುವ ಪ್ರೊ. ಎಸ್. ಜಿ ಸಿದ್ದರಾಮಯ್ಯ ಅವರು ಮಾತನಾಡಿ, ಕನ್ನಡ ದಿಗ್ಗಜರ ಬರಹಗಳನ್ನು ಸಂಪುಟ ಕೆಲಸದಲ್ಲಿ ಭಾಗವಹಿಸಿರುವುದು ನನ್ನ ಸೌಭಾಗ್ಯ. ಚಂಪಾ ಅವರು ಕೇವಲ ಸಾಹಿತ್ಯದಲ್ಲಷ್ಟೇ ಬೆಳೆಯಲಿಲ್ಲ. ಇಂಗ್ಲೀಷ್ ಪ್ರಾಧ್ಯಾಪಕರಾಗಿ ಕನ್ನಡ ನಾಡು, ನುಡಿ, ಭಾಷೆ ಸಿದ್ಧಾಂತಗಳಂತೆ ಬದುಕಿದರು. ಸಂಕ್ರಮಣ ಪ್ರಕಾಶನ ಆರಂಭಿಸಿ ಸುಮಾರು ನಾಲ್ಕು ದಶಕಗಳ ಕಾಲ ಸಾಹಿತ್ಯ ಸುಧೆಯನ್ನು ಎಲ್ಲಡೆ ಪಸರಿಸುವಂತೆ ಮಾಡಿದರು. ದೇಶ ವಿದೇಶಗಳ ಬರಹಗಾರರು ಮತ್ತು ಓದುಗರ ಬರಹಗಳು ಸಾಹಿತ್ಯಕ ಮೌಲ್ಯಗಳನ್ನು ಬಿತ್ತರಿಸಿದರು. ಸಂಸ್ಕೃತಿ ಮತ್ತು ಸಾಹಿತ್ಯವನ್ನು ಗಟ್ಟಿಯಾಗಿ ನೆಲೆಸುವಂತೆ ಮಾಡಿದರು, ಸಮಕಾಲೀನ ಚಿಂತನೆ ಮತ್ತು ಸಾಹಿತ್ಯದ ಮೌಲಿಕ ಸಂಪುಟಗಳು ಇಂದು ಹೊರಬಂದಿವೆ. ಓದುವ ಮೂಲಕ ಸಾಹಿತ್ಯವನ್ನು ಬೆಳೆಸಬೇಕು ಎಂದು ಹೇಳಿದರು. ಹಿರಿಯ ಸಾಹಿತಿಗಳಾದ ಡಾ. ಬಸವರಾಜ ಸಬರದ ಚೆನ್ನವೀರ ಕಣವಿ ಮತ್ತು ಪ್ರೊ.ಚಂದ್ರಕಾಂತ ಪಾಟೀಲ್ ಅವರ ಸಂಪುಟಗಳನ್ನು ಪರಿಚಯಿಸಿದರು. ಪ್ರೊ. ಎಸ್. ಜಿ ಸಿದ್ದರಾಮಯ್ಯ ಅವರು 25 ಶಾಲಾ ಕಾಲೇಜಿನ ಮುಖ್ಯಸ್ಥರಿಗೆ 15 ಸಾವಿರ ಮೌಲ್ಯದ ಚೆನ್ನವೀರ ಕಣವಿ, ಪ್ರೊ. ಚಂದ್ರಶೇಖರ್ ಪಾಟೀಲ್ ಅವರ ಕೃತಿಗಳನ್ನು ಒಳಗೊಂಡಂತೆ ಸಾಹಿತ್ಯ ಪುಸ್ತಕಗಳನ್ನು ವಿತರಿಸಿದರೆ, ಚೆನ್ನವೀರ ಕಣವಿ ಸಮಗ್ರ ಸಂಪುಟಗಳ ಸಂಪಾದಾಕರಾದ ಡಾ. ಜಿ. ಎಂ ಹೆಗಡೆಯವರು ಮನೆಗೊಂದು ಗ್ರಂಥಾಲಯ ಕಲಬುರಗಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರವನ್ನು ವಿತರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ವಿಶೇಷ ಅಧಿಕಾರಿ ಮತ್ತು ಆಡಳಿತ ಅಧಿಕಾರಿ ಕೆ. ಬಿ. ಕಿರಣಸಿಂಗ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ರಮೇಶ ಲಂಡನಕರ್, ಸಿಂಡಿಕೇಟ್ ಸದಸ್ಯ ಉದಯ ಬಿ. ಪಾಟೀಲ್, ಪ್ರೊ. ಚಂದ್ರಶೇಖರ್ ಪಾಟೀಲ್, ಸಮಗ್ರ ಸಾಹಿತ್ಯ ಸಂಪುಟಗಳ ಸಹ ಸಂಪಾದಕ ಡಾ. ಮಂಜುನಾಥ ಟಿ, ಸಮಗ್ರ ಸಾಹಿತ್ಯ ಸಂಪುಟಗಳ ಹಕ್ಕುದಾರರಾದ ನೀಲಾ ಪಾಟೀಲ್, ಚೆನ್ನವೀರ ಕಣವಿ ಸಮಗ್ರ ಸಾಹಿತ್ಯ ಸಂಪುಟಗಳ ಹಕ್ಕುದಾರರಾದ ಪ್ರಿಯದರ್ಶಿ ಕಣವಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಖ್ಯಾತ ಬರಹಗಾರರು, ಸಾಹಿತಿಗಳು, ಲೇಖಕರು, ಪ್ರಕಾಶಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಹಿರಿಯ ಪತ್ರಕರ್ತರು, ಅತಿಥಿ ಉಪನ್ಯಾಸಕರು, ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅರಾವಳಿ ವಿವಾದ | ಮೋದಿ ಸರಕಾರಕ್ಕೆ ಕಾಂಗ್ರೆಸ್ ತರಾಟೆ
ಹೊಸದಿಲ್ಲಿ, ಡಿ. 23: ಅರಾವಳಿ ಪರ್ವತ ಶ್ರೇಣಿಯ ಪರಿಸರದ ಸಮಗ್ರತೆಯನ್ನು ಮೋದಿ ಸರಕಾರ ದುರ್ಬಲಗೊಳಿಸುತ್ತಿದೆ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ. ಪ್ರಾಚೀನ ಅರಾವಳಿ ಬೆಟ್ಟಗಳ ಅಧಿಕೃತ ಸ್ಥಾನಮಾನವನ್ನು ಮರು ವ್ಯಾಖ್ಯಾನಿಸಲು ಸರಕಾರ ದೃಢ ನಿಶ್ಚಯ ತಳೆದಿರುವುದು ಏಕೆ ? ಇದರಿಂದ ಯಾರಿಗೆ ಲಾಭವಾಗುತ್ತದೆ ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ‘ಎಕ್ಸ್’ನ ಪೋಸ್ಟ್ ನಲ್ಲಿ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಅರಾವಳಿ ಭಾರತದ ನೈಸರ್ಗಿಕ ಪರಂಪರೆಯ ಭಾಗ. ಅದರ ಪುನರುಜ್ಜೀವನ ಹಾಗೂ ರಕ್ಷಣೆಯ ಅಗತ್ಯತೆ ಇದೆ. ತಾಂತ್ರಿಕ ಮರು ವ್ಯಾಖ್ಯಾನದ ಮೂಲಕ ದುರ್ಬಲಗೊಳಿಸಬಾರದು ಎಂದಿದ್ದಾರೆ. ‘‘ಅರಾವಳಿ ಪರ್ವತ ಶ್ರೇಣಿಗಳಿಗೆ ಶ್ರೇಷ್ಠ ಮೌಲ್ಯವಿದೆ. ಮೋದಿ ಸರಕಾರ ಅವುಗಳನ್ನು ಬದಲಾಯಿಸಲು ಯಾಕೆ ನಿರ್ಧರಿಸಿದೆ? ಯಾವ ಉದ್ದೇಶಕ್ಕಾಗಿ ಮತ್ತು ಯಾರ ಪ್ರಯೋಜನಕ್ಕಾಗಿ?’’ ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ. ಕೇಂದ್ರ ಪರಿಸರ ಸಚಿವ ಭೂಪೇಂದ್ರ್ ಯಾದವ್ ಅವರು ಇತ್ತೀಚೆಗೆ ನೀಡಿದ ಸ್ಪಷ್ಟನೆಯನ್ನು ಉಲ್ಲೇಖಿಸಿದ ಜೈರಾಮ್ ರಮೇಶ್, ಇದು ಹೆಚ್ಚು ಅನುಮಾನಕ್ಕೆ ಕಾರಣವಾಗಿದೆ ಎಂದಿದ್ದಾರೆ. 1.44 ಲಕ್ಷದ ಚದರ ಕಿ.ಮೀ. ಅರಾವಳಿ ಪ್ರದೇಶದಲ್ಲಿ ಕೇವಲ ಶೇ. 0.19 ಪ್ರದೇಶದಲ್ಲಿ ಮಾತ್ರ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಈ ಅಂಕಿ-ಅಂಶ ದಾರಿ ತಪ್ಪಿಸುವಂತಿದೆ ಎಂದು ಅವರು ತಿಳಿಸಿದ್ದಾರೆ. ಪರಸ್ಪರ ಸಂಬಂಧ ಹೊಂದಿರುವ ಪರಿಸರ ವ್ಯವಸ್ಥೆಯಾಗಿರುವ ಅರಾವಳಿ ಪರ್ವತ ಶ್ರೇಣಿಯನ್ನು ಮರು ವ್ಯಾಖ್ಯಾನಿಸುವ ಮತ್ತು ಛಿದ್ರಗೊಳಿಸುವ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು. ಇದು ಅದರ ಪರಿಸರ ಮೌಲ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ಅವರು ಹೇಳಿದರು.
ವಿಶ್ವಕಪ್ ಸೆಮಿಫೈನಲ್ ನಲ್ಲಿ ವೀರಾವೇಶದ ಆಟವಾಡಿದ್ದ ಜೆಮಿಮಾ ರೋಡ್ರಿಗಸ್ ಗೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಪಟ್ಟ!
Jemimah Rodrigues DC Captain- ಮೆಗ್ ಲ್ಯಾನಿಂಗ್ ಅವರು ಯುಪಿ ವಾರಿಯರ್ಸ್ ತಂಡದ ಪಾಲಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಯಾರು ಎಂಬ ಬಗ್ಗೆ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಕುತೂಹಲ ಮನೆಮಾಡಿತ್ತು. ಆ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ಫ್ರಾಂಚೈಸಿಯು 2026ರ ಮಹಿಳಾ ಪ್ರೀಮಿಯರ್ ಲೀಗ್ಗೆ ಜೆಮಿಮಾ ರೋಡ್ರಿಗಸ್ ಅವರನ್ನು ನೂತನ ನಾಯಕಿಯಾಗಿ ಆಯ್ಕೆ ಮಾಡಿದೆ. ತಂಡವು ಜನವರಿ 10ರಂದು ಮುಂಬೈ ಇಂಡಿಯನ್ಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.
ಬಾಂಗ್ಲಾದೇಶದ ರಾಜತಾಂತ್ರಿಕ ಕಚೇರಿಗಳ ಸುರಕ್ಷತೆ |ಭಾರತೀಯ ರಾಯಭಾರಿಯನ್ನು ಕರೆಸಿ ಕಳವಳ ವ್ಯಕ್ತಪಡಿಸಿದ ಢಾಕಾ ಸರಕಾರ
ಹೊಸದಿಲ್ಲಿ,ಡಿ.23: ಹಲವಾರು ನಗರಗಳಲ್ಲಿ ಸರಣಿ ಪ್ರತಿಭಟನೆಗಳು ಮತ್ತು ಕಾನ್ಸುಲರ್ ಸೇವೆಗಳ ಸ್ಥಗಿತದ ನಡುವೆ ಬಾಂಗ್ಲಾದೇಶದ ಸರಕಾರವು ಮಂಗಳವಾರ ಭಾರತೀಯ ರಾಯಭಾರಿ ಪ್ರಣಯ ವರ್ಮಾ ಅವರನ್ನು ಕರೆಸಿಕೊಂಡು ಭಾರತದಲ್ಲಿರುವ ತನ್ನ ರಾಜತಾಂತ್ರಿಕ ಕಚೇರಿಗಳ ಸುರಕ್ಷತೆ ಕುರಿತು ಔಪಚಾರಿಕವಾಗಿ ಕಳವಳಗಳನ್ನು ವ್ಯಕ್ತಪಡಿಸಿದೆ. ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿ ಅಸದ್ ಆಲಂ ಸಿಯಾಮ್ ಅವರು ಬೆಳಿಗ್ಗೆ ವರ್ಮಾರನ್ನು ಕರೆಸಿಕೊಂಡು ಹೊಸದಿಲ್ಲಿ, ಕೋಲ್ಕತಾ ಮತ್ತು ಅಗರ್ತಲಾಗಳಲ್ಲಿಯ ರಾಜತಾಂತ್ರಿಕ ಕಚೇರಿಗಳಲ್ಲಿ ‘ಅತೃಪ್ತಿಕರ ಭದ್ರತಾ ಸ್ಥಿತಿ’ಯ ಕುರಿತು ವಿವರಿಸಿದರು ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ. ಇತ್ತೀಚಿನ ಘಟನೆಗಳ ಕುರಿತು ಬಾಂಗ್ಲಾದೇಶದ ಗಂಭೀರ ಕಳವಳಗಳನ್ನು ವ್ಯಕ್ತಪಡಿಸಿದ ವಿದೇಶಾಂಗ ಕಾರ್ಯದರ್ಶಿಗಳು, ವಿಯೆನ್ನಾ ನಿರ್ಣಯದಡಿ ರಾಜತಾಂತ್ರಿಕ ಕಚೇರಿಗಳ ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಆತಿಥೇಯ ರಾಷ್ಟ್ರದ ಹೊಣೆಗಾರಿಕೆಯನ್ನು ಒತ್ತಿ ಹೇಳಿದರು ಎಂದು ಮೂಲಗಳು ತಿಳಿಸಿವೆ. ಹೊಸದಿಲ್ಲಿಯಲ್ಲಿಯ ಬಾಂಗ್ಲಾದೇಶ ರಾಯಭಾರ ಕಚೇರಿಯು ಸೋಮವಾರ ‘ಅನಿವಾರ್ಯ ಸಂದರ್ಭಗಳನ್ನು’ ಉಲ್ಲೇಖಿಸಿ ಭಾರತೀಯ ಪ್ರಜೆಗಳಿಗೆ ಎಲ್ಲ ವೀಸಾ ಮತ್ತು ಕಾನ್ಸುಲರ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ರಾಯಭಾರ ಕಚೇರಿಯ ಆವರಣದಲ್ಲಿ ಪ್ರದರ್ಶಿಸಿರುವ ನೋಟಿಸ್ನಲ್ಲಿ ಮುಂದಿನ ಸೂಚನೆಯವರೆಗೂ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಲಾಗಿದ್ದು,ಉಂಟಾಗಿರುವ ಯಾವುದೇ ಅನಾನುಕೂಲತೆಗೆ ವಿಷಾದವನ್ನು ವ್ಯಕ್ತಪಡಿಸಲಾಗಿದೆ.
ಜಿಲ್ಲಾಧಿಕಾರಿ ಡಿಜಿಟಲ್ ಸಹಿ ಪೋರ್ಜರಿ; 0.33 ಗುಂಟೆ ಭೂ ಪರಿವರ್ತನೆ ಮಾಡಿದವರ ವಿರುದ್ಧ FIR
ಚಿತ್ರದುರ್ಗ ಜಿಲ್ಲಾಧಿಕಾರಿಯ ಡಿಜಿಟಲ್ ಸಹಿಯನ್ನು ನಕಲು ಮಾಡಿ, ವಾಣಿಜ್ಯ ಉದ್ದೇಶದ ಭೂಮಿಯನ್ನು ವಾಸದ ಉದ್ದೇಶಕ್ಕೆ ಪರಿವರ್ತನೆ ಮಾಡಲಾಗಿದೆ. ಈ ಸಂಬಂಧ ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ನಕಲಿ ದಾಖಲೆ ಸೃಷ್ಟಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
Kerala | ಕಸ್ಟಡಿ ಆದೇಶದ ಬಳಿಕ ಮಕ್ಕಳನ್ನು ಕೊಂದು ತಂದೆ, ಅಜ್ಜಿ ಆತ್ಮಹತ್ಯೆ
ಕಣ್ಣೂರು,ಡಿ.23: ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಕೇರಳದ ಕಣ್ಣೂರಿನಲ್ಲಿಯ ಅವರ ಮನೆಯಲ್ಲಿ ಸೋಮವಾರ ರಾತ್ರಿ ಪತ್ತೆಯಾಗಿವೆ. ಕೌಟುಂಬಿಕ ನ್ಯಾಯಾಲಯದಲ್ಲಿಯ ವಿವಾದಕ್ಕೆ ಸಂಬಂಧಿಸಿದಂತೆ ಈ ಸಾವುಗಳು ಸಂಭವಿಸಿವೆ. ಮೃತರನ್ನು ಕಲಾಧರನ್ ಕೆ.ಟಿ.(36), ಅವರ ತಾಯಿ ಉಷಾ ಕೆ.ಟಿ.(56), ಮಕ್ಕಳಾದ ಹಿಮಾ (6) ಮತ್ತು ಕಣ್ಣನ್ (2) ಎಂದು ಗುರುತಿಸಲಾಗಿದೆ. ಕಲಾಧರನ್ ಮತ್ತು ಉಷಾ ಮಕ್ಕಳಿಗೆ ಕೀಟನಾಶಕ ಬೆರೆಸಿದ ಹಾಲನ್ನು ಕುಡಿಸಿ, ಬಳಿಕ ತಾವೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಪೋಲಿಸರ ಪ್ರಕಾರ ಕಲಾಧರನ್ ಮತ್ತು ಅವರ ಪತ್ನಿ ನಯನತಾರಾ ಪ್ರತ್ಯೇಕವಾಗಿ ವಾಸವಾಗಿದ್ದು, ವಿವಾದವು ಕೌಟುಂಬಿಕ ನ್ಯಾಯಾಲಯದಲ್ಲಿದೆ. ಮಕ್ಕಳನ್ನು ತಾಯಿಯ ವಶಕ್ಕೆ ನೀಡುವಂತೆ ನ್ಯಾಯಾಲಯವು ಇತ್ತೀಚಿಗೆ ಆದೇಶಿಸಿದ್ದ ಹಿನ್ನೆಲೆಯಲ್ಲಿ ನಯನತಾರಾ ಮಕ್ಕಳನ್ನು ತಕ್ಷಣ ತನಗೆ ಹಸ್ತಾಂತರಿಸುವಂತೆ ಕೋರಿ ಪೋಲಿಸರನ್ನು ಸಂಪರ್ಕಿಸಿದ್ದರು. ಪಯ್ಯಾನೂರಿನಲ್ಲಿ ರಿಕ್ಷಾ ಚಾಲಕರಾಗಿರುವ ಉಷಾರ ಪತಿ ಎ.ಕೆ.ಉಣ್ಣಿಕೃಷ್ಣನ್ ಅವರು ಸೋಮವಾರ ರಾತ್ರಿ ಒಂಭತ್ತು ಗಂಟೆಯ ಸುಮಾರಿಗೆ ಮನೆಗೆ ಮರಳಿದಾಗ ಮನೆಯ ಬಾಗಿಲುಗಳನ್ನು ಒಳಗಿನಿಂದ ಭದ್ರಪಡಿಸಲಾಗಿತ್ತು. ಸಿಟ್-ಔಟ್ ನಲ್ಲಿ ಆತ್ಮಹತ್ಯೆ ಚೀಟಿಯೊಂದು ಪತ್ತೆಯಾಗಿದ್ದು, ಪದೇ ಪದೇ ಕರೆದರೂ ಬಾಗಿಲು ತೆರೆಯದಿದ್ದಾಗ ಉಣ್ಣಿಕೃಷ್ಣನ್ ಪೋಲಿಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೋಲಿಸರು ಬಲಪ್ರಯೋಗದಿಂದ ಬಾಗಿಲು ತೆರೆದು ನೋಡಿದಾಗ ಉಷಾ ಮತ್ತು ಕಲಾಧರನ್ ಬೆಡ್ರೂಮ್ ನಲ್ಲಿ ನೇಣು ಬಿಗಿದುಕೊಂಡಿದ್ದರು ಮತ್ತು ಮಕ್ಕಳ ಮೃತದೇಹಗಳು ನೆಲದಲ್ಲಿ ಬಿದ್ದುಕೊಂಡಿದ್ದವು. ರವಿವಾರ ರಾತ್ರಿ ತಾವು ಕಲಾಧರನ್ಗೆ ಕರೆಯನ್ನು ಮಾಡಿ ನ್ಯಾಯಾಲಯದ ಆದೇಶದಂತೆ ಮಕ್ಕಳನ್ನು ಸೋಮವಾರದೊಳಗೆ ಹಸ್ತಾಂತರಿಸುವಂತೆ ಸೂಚಿಸಿದ್ದನ್ನು ಪೋಲಿಸರು ದೃಢಪಡಿಸಿದ್ದಾರೆ.
Uttar Pradesh | ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದು, ಮೃತದೇಹವನ್ನು ತುಂಡರಿಸಿ ಚರಂಡಿಗೆಸೆದ ಮಹಿಳೆ!
ಸಂಭಲ್ (ಉ.ಪ್ರದೇಶ),ಡಿ.23: ಮಹಿಳೆಯೋರ್ವಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದು ಬಳಿಕ ವುಡ್ ಗ್ರೈಂಡರ್ ನಿಂದ ಮೃತದೇಹವನ್ನು ಕತ್ತರಿಸಿ ಚರಂಡಿಯಲ್ಲೆಸೆದ ಘಟನೆ ಸಂಭಲ್ ಜಿಲ್ಲೆಯ ಚಂದೌಸಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ. ರೂಬಿ ಮತ್ತು ಗೌರವ್ ಆರೋಪಿಗಳಾಗಿದ್ದು,ಡಿ.20ರಂದು ಅವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಕೆ.ಕೆ.ಬಿಷ್ಣೋಯಿ ತಿಳಿಸಿದರು. ಪೋಲಿಸರ ಪ್ರಕಾರ ಚಂದೌಸಿಯ ಮೊಹಲ್ಲಾ ಚುನ್ನಿ ನಿವಾಸಿ ರೂಬಿ ತನ್ನ ಪತಿ ರಾಹುಲ್ (38) ನಾಪತ್ತೆಯಾಗಿದ್ದಾನೆ ಎಂದು ನ.18ರಂದು ಪೋಲಿಸ್ ದೂರು ಸಲ್ಲಿಸಿದ್ದಳು. ಡಿ.15ರಂದು ಪೋಲಿಸರು ಈದ್ಗಾ ಪ್ರದೇಶದ ಚರಂಡಿಯಲ್ಲಿ ಛಿದ್ರವಿಚ್ಛಿದ್ರಗೊಂಡಿದ್ದ ಶವವೊಂದನ್ನು ಪತ್ತೆ ಹಚ್ಚಿದ್ದರು. ಮೃತದೇಹದ ತಲೆ ಮತ್ತು ಕೈಕಾಲುಗಳು ಇರಲಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕ ವಿಧಿವಿಜ್ಞಾನ ತಂಡವು ವಿವರವಾದ ಪರೀಕ್ಷೆಯನ್ನು ನಡೆಸಿದ್ದು, ಡಿಎನ್ಎ ಸ್ಯಾಂಪಲ್ ಗಳನ್ನು ಸಂಗ್ರಹಿಸಲಾಗಿತ್ತು. ತನಿಖೆ ಸಂದರ್ಭದಲ್ಲಿ ಮೃತದೇಹದಲ್ಲಿ ‘ರಾಹುಲ್’ ಎಂಬ ಬರಹ ಪತ್ತೆಯಾಗಿತ್ತು. ಸಮೀಪದ ಪೋಲಿಸ್ ಠಾಣೆಗಳಲ್ಲಿ ದಾಖಲಾಗಿದ್ದ ನಾಪತ್ತೆ ದೂರುಗಳ ಪರಿಶೀಲನೆ ಮತ್ತು ತಾಂತ್ರಿಕ ವಿಶ್ಲೇಷಣೆಯಿಂದ ರಾಹುಲ್ ಮೊಬೈಲ್ ಫೋನ್ ನ.18ರಿಂದ ಸ್ವಿಚ್ ಆಫ್ ಆಗಿದ್ದು ಬೆಳಕಿಗೆ ಬಂದಿತ್ತು ಎಂದು ಬಿಷ್ಣೋಯಿ ತಿಳಿಸಿದರು. ಹೆಚ್ಚಿನ ತನಿಖೆಯ ವೇಳೆ ಪೋಲಿಸರು ಅಪರಾಧದಲ್ಲಿ ರೂಬಿ ಭಾಗಿಯಾಗಿರುವ ಬಗ್ಗೆ ಶಂಕಿಸಿದ್ದರು. ವಿಚಾರಣೆ ವೇಳೆ ತಾನು ಮತ್ತು ಗೌರವ ಅನೈತಿಕ ಸಂಬಂಧವನ್ನು ಹೊಂದಿದ್ದು ರಾಹುಲ್ ಗೆ ಗೊತ್ತಾದಾಗ ತಾವಿಬ್ಬರು ಸೇರಿ ಆತನನ್ನು ಕೊಲೆ ಮಾಡಿದ್ದನ್ನು ರೂಬಿ ಒಪ್ಪಿಕೊಂಡಿದ್ದಳು. ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಬಳಿಕ ವುಡ್ ಗ್ರೈಂಡರ್ ತಂದು ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿದ್ದರು ಎಂದರು. ಮೃತದೇಹದ ಒಂದು ಭಾಗವನ್ನು ಚರಂಡಿಗೆ ಮತ್ತು ಇತರ ಭಾಗಗಳನ್ನು ರಾಜಘಾಟ್ಗೆ ಒಯ್ದು ಗಂಗಾನದಿಯಲ್ಲಿ ಎಸೆದಿದ್ದರು ಎಂದು ಅವರು ತಿಳಿಸಿದರು. ಗ್ರೈಂಡರ್, ಕೊಲೆಗೆ ಬಳಸಿದ್ದ ಕಬ್ಬಿಣದ ಸುತ್ತಿಗೆ ಇತ್ಯಾದಿಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಮೃತ ವ್ಯಕ್ತಿಯ ಡಿಎನ್ಎ ಸ್ಯಾಂಪಲ್ ಗಳನ್ನು ಸಂರಕ್ಷಿಸಲಾಗಿದ್ದು, ಗುರುತನ್ನು ನಿಖರವಾಗಿ ನಿರ್ಧರಿಸಲು ಅವುಗಳನ್ನು ಆತನ ಮಕ್ಕಳ ಡಿಎನ್ಎ ಸ್ಯಾಂಪಲ್ಗಳೊಂದಿಗೆ ತಾಳೆ ಹಾಕಲಾಗುವುದು ಎಂದು ಬಿಷ್ಣೋಯಿ ತಿಳಿಸಿದರು.
ಕೋಗಿಲು ಬಡಾವಣೆ ತೆರವು : 400 ಕುಟುಂಬಗಳಿಗೆ ಶಾಶ್ವತ ಮನೆ ನಿರ್ಮಿಸಲು ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಆಗ್ರಹ
ಬೆಂಗಳೂರು : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಜಿಬಿಎ ಅಧಿಕಾರಿಗಳ ಸಂವಿಧಾನ ವಿರೋಧಿ ನಡೆಯಿಂದಾಗಿ ಬದುಕು ಕಳೆದುಕೊಂಡ 400ಕ್ಕೂ ಹೆಚ್ಚು ಕುಟುಂಬಗಳ ನಿರ್ಗತಿಕರಿಗೆ ರಾಜ್ಯ ಸರಕಾರ ಅದೇ ಸ್ಥಳದಲ್ಲಿ ಶಾಶ್ವತ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಆಗ್ರಹಿಸಿದೆ. ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಸಮಿತಿಯ ಕಾರ್ಯದರ್ಶಿ ಕುಮಾರ್ ಸಮತಳ, ಬೆಂಗಳೂರು ಉತ್ತರ, ಯಲಹಂಕ ತಾಲೂಕು, ಕೋಗಿಲು ಗ್ರಾಮದ ಸರ್ವೇ ನಂಬರ್ 99ರ ಸರಕಾರಿ ಭೂಮಿಯಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವಸತಿ ರಹಿತರು ವಾಸಕ್ಕಾಗಿ ಮನೆಗಳನ್ನು ಕಟ್ಟಿಕೊಂಡು ಸುಮಾರು 25-30 ವರ್ಷಗಳಿಂದ ವಾಸವಿದ್ದರು ಮತ್ತು ಸ್ಥಳದ ಮಂಜೂರಾತಿಗಾಗಿ 94ಸಿಸಿ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿ, ಸರಕಾರದಿಂದ ತಾತ್ಕಾಲಿಕ ಹಕ್ಕುಪತ್ರಗಳನ್ನು ಪಡೆದಿದ್ದರು ಎಂದು ಮಾಹಿತಿ ನೀಡಿದ್ದಾರೆ. ಈ ನಡುವೆ ಸುಳಿವು ನೀಡದೇ ನೀಡಿರುವ ತಾತ್ಕಾಲಿಕ ಹಕ್ಕುಪತ್ರಗಳನ್ನೂ ರದ್ದುಪಡಿಸಿದ್ದಾರೆ. ಅಲ್ಲಿನ ವಾಸಸ್ತರಿಗೆ ಮೂರು ತಿಂಗಳು ಮುಂಚಿತವಾಗಿ ಯಾವುದೇ ನೊಟೀಸನ್ನೂ ನೀಡದೇ, ಯಾವುದೇ ಮುನ್ಸೂಚನೆಯೂ ಇಲ್ಲದೆ, ಅಲ್ಲಿನ ಬಡ ಕುಟುಂಬಗಳು ಕೂಲಿನಾಲಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ ಆಹಾರ ಪದಾರ್ಥಗಳು, ಬಟ್ಟೆಬರೆ, ಗೃಹ ಬಳಕೆ ವಸ್ತುಗಳನ್ನು ತೆಗೆದುಕೊಳ್ಳಲೂ ಅವಕಾಶ ಕೊಡದೆ, ಉತ್ತರ ಪ್ರದೇಶದ ಬುಲ್ಡೋಜರ್ ಸರಕಾರದಂತೆ, ಜಿಬಿಎ ಅಧಿಕಾರಿಗಳು, ಪೊಲೀಸ್ ಬಲದೊಂದಿಗೆ ಏಕಾಏಕಿ ಮನೆಗಳನ್ನು ಧ್ವಂಸ ಮಾಡಿದ್ದಾರೆ ಎಂದು ಕುಮಾರ್ ಸಮತಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂದಾಯ ಸಚಿವರ ಸ್ವಕ್ಷೇತ್ರದಲ್ಲಿಯೇ ಇಂತಹ ಘೋರ ಹಾಗೂ ಅಮಾನವೀಯ ಕೃತ್ಯ ನಡೆದಿರುವುದು ಅತ್ಯಂತ ಶೋಚನೀಯ. ಈ ದುಷ್ಕೃತ್ಯದಿಂದಾಗಿ ನೆಲೆ ಕಳೆದುಕೊಂಡ ಬಡ ಕುಟುಂಬಗಳು ಮಕ್ಕಳು, ಮುದುಕರಾದಿಯಾಗಿ ಚಳಿ, ಗಾಳಿ, ಬಿಸಿಲೆನ್ನದೆ ಅಲ್ಲಿಯೇ ನಿರ್ವಸಿತರಾಗಿ ಪರಿತಪಿಸುವಂತಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಈ ದುರುದ್ದೇಶಪೂರಿತ, ಪೂರ್ವಯೋಜಿತ ದುಷ್ಕೃತ್ಯವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಬಲವಂತದ ತೆರವು ಕಾರ್ಯಾಚರಣೆಯಿಂದಾಗಿ ವಸತಿ ಕಳೆದುಕೊಂಡ ಎಲ್ಲ ಕುಟುಂಬಗಳಿಗೂ ಕೂಡಲೇ ವಾಸಯೋಗ್ಯ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿಕೊಟ್ಟು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ತಿಂಗಳಿಗಾಗುವಷ್ಟು ಆಹಾರ ಸಾಮಗ್ರಿಗಳನ್ನು ಪ್ರತಿ ತಿಂಗಳೂ ಸರಕಾರವೇ ಪೂರೈಸಬೇಕು ಎಂದು ಕುಮಾರ್ ಸಮತಳ ಆಗ್ರಹಿಸಿದ್ದಾರೆ.
ಕಲಬುರಗಿ| ಹುಬ್ಬಳ್ಳಿ ಮರ್ಯಾದಾ ಹತ್ಯೆ ಖಂಡಿಸಿ ಡಿವೈಎಫ್ಐ ಪ್ರತಿಭಟನೆ
ಕಲಬುರಗಿ: ಹುಬ್ಬಳ್ಳಿಯ ಗ್ರಾಮವೊಂದರಲ್ಲಿ ನಡೆದ ಮರ್ಯಾದಾ ಹತ್ಯೆಯನ್ನು ಖಂಡಿಸಿ ಡಿವೈಎಫ್ಐ ಕಲಬುರಗಿ ಜಿಲ್ಲಾ ಸಮಿತಿ ಮಂಗಳವಾರ ಪ್ರತಿಭಟನೆ ನಡೆಯಿತು. ನಮ್ಮ ಸಮಾಜದಲ್ಲಿರುವ ಪುರೋಹಿತ ಶಾಹಿ- ಚತುರ್ವರ್ಣ ವ್ಯವಸ್ಥೆಯನ್ನು ಮತ್ತೆ ಎತ್ತಿಡಿಯಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ. ಯುವಜನರ ಅದರಲ್ಲೂ ಮಹಿಳೆಯರ ಆಯ್ಕೆ ಸ್ವಾತಂತ್ರಕ್ಕೆ ಎಂದಿಗೂ ಈ ಸಮಾಜದಲ್ಲಿ ಮನ್ನಣೆ ಸಿಗುತ್ತಿಲ್ಲ. ಮಹಿಳೆಯನ್ನು ಕೀಳಾಗಿ ಕಾಣುವ ಮನುಸ್ಮೃತಿಯನ್ನು ನಮ್ಮೆಲ್ಲರ ಮೇಲೆ ಹೇರುವ ಪ್ರಯತ್ನ ನಡೆದಿದೆ. ಜಾತಿ ಹೆಸರಲ್ಲಿ ನಡೆಯುವ ಈ ಕೊಲೆಗಳು, ದೌರ್ಜನ್ಯಗಳು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಮರ್ಯಾದಾ ಹತ್ಯೆ ತಡೆಗಾಗಿ ನಿರ್ದಿಷ್ಟ ಕಾನೂನು ರೂಪಿಸಬೇಕು. ಯುವಜನರ ಆಯ್ಕೆ ಹಕ್ಕನ್ನು ಎತ್ತಿಹಿಡಿಯಲು ಸರಕಾರ ಕಾನೂನುಗಳನ್ನು ರಚಿಸಬೇಕು. ಹತ್ಯೆ ಮಾಡಿದ ಮತ್ತು ಯುವತಿಯ ಪತಿಯ ಮನೆಯವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕಾಶಗೌಡ ಪಾಟೀಲ್ ಮತ್ತು ಎಲ್ಲಾ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ DYFI ರಾಜ್ಯಾಧ್ಯಕ್ಷ ಲವಿತ್ರ ವಸ್ತ್ರದ, ಸಾನಿಯಾ, ಎಸ್ಎಫ್ಐ ಸಂಘಟನೆಯ ಸರ್ವೇಶ ಮಾವಿನಕರ್, ಸುಜಾತಾ ವೈ, ಸೌಮ್ಯ ಬಿರಾದಾರ, ಸ್ವರಾಜ, ತಾಯಣ್ಣ, ನಿತಿಷ್, ನೇಸಮಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Bengaluru | ಸಮಾರಂಭಗಳಲ್ಲಿ ಕಳ್ಳತನ ಮಾಡುತ್ತಿದ್ದ ಅತಿಥಿ ಉಪನ್ಯಾಸಕಿಯ ಬಂಧನ
ಬೆಂಗಳೂರು : ಸಮಾರಂಭಗಳಲ್ಲಿ ಚಿನ್ನಾಭರಣ, ನಗದು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಅತಿಥಿ ಉಪನ್ಯಾಸಕಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಒಟ್ಟು 32 ಲಕ್ಷ ರೂಪಾಯಿ ಮೌಲ್ಯದ 262 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಕೆ.ಆರ್.ಪುರಂ ನಿವಾಸಿಯಾಗಿರುವ ರೇವತಿ ಬಂಧಿತ ಆರೋಪಿಯಾಗಿದ್ದಾರೆ. ನ.25ರಂದು ಇದೇ ರೀತಿ ಬಸವನಗುಡಿಯ ದ್ವಾರಕನಾಥ ಕಲ್ಯಾಣ ಮಂಟಪದಲ್ಲಿ ಕಳ್ಳತನ ನಡೆದಿತ್ತು. ಈ ಕುರಿತು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಾಗ ರೇವತಿ ಸಿಕ್ಕಿಬಿದ್ದಿದ್ದಾಳೆ. ವಿಚಾರಣೆ ವೇಳೆ ಇನ್ನೂ ಮೂರು ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ರೇವತಿ ಬೆಳ್ಳಂದೂರಿನ ಖಾಸಗಿ ಕಾಲೇಜಿನಲ್ಲಿ ಕನ್ನಡ ಭಾಷೆಯ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ. ರವಿವಾರದಂದು ನಡೆಯುವ ಶುಭ ಸಮಾರಂಭಗಳಿಗೆ ಹೋಗಿ ಅಲ್ಲಿ ಸಿಕ್ಕವರ ಜೊತೆ ಸಂಬಂಧಿಕರಂತೆ ಆತ್ಮೀಯವಾಗಿ ಮಾತನಾಡಿ, ಬಳಿಕ ಚಿನ್ನಾಭರಣ, ಹಣ ಇಟ್ಟಿರುವ ಕೊಠಡಿಗಳನ್ನು ಪತ್ತೆ ಹಚ್ಚಿ, ಯಾರೂ ಇಲ್ಲದ ಸಮಯ ನೋಡಿಕೊಂಡು ಚಿನ್ನಾಭರಣ ತೆಗೆದುಕೊಂಡು ಪರಾರಿಯಾಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಕನಿಷ್ಟ ಬೆಂಬಲ ಬೆಲೆ ಕಾನೂನು ಬದ್ದವಾಗಿ ಜಾರಿಯಾಗಬೇಕು: ಕೋಡಿಹಳ್ಳಿ ಚಂದ್ರಶೇಖರ್
ಸಿಂಧನೂರು: ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕಾದರೆ ಕನಿಷ್ಟ ಬೆಂಬಲ ಬೆಲೆಯನ್ನು ಕಾನೂನು ಬದ್ದವಾಗಿ ಜಾರಿಗೆಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದ್ದಾರೆ. ನಗರದ ಎಪಿಎಂಸಿ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ, ಜೈ ಜವಾನ ಜೈ ಕಿಸಾನ ಸೇವಾ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಎಂಎಸ್ಪಿ ಜಾರಿಯಾದರೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಸಂದರ್ಭದಲ್ಲಿ ಸರಕಾರವೇ ರೈತರ ಉತ್ಪನ್ನಗಳನ್ನು ಖರೀದಿ ಮಾಡುತ್ತದೆ. ಇದರಿಂದ ರೈತರಿಗೆ ಕನಿಷ್ಟ ಬೆಲೆಯಾದರೂ ಸಿಗಲಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಸರಕಾರದ ವಿರುದ್ದ ಜನಾಂದೋಲನ ರೂಪಿಸಬೇಕು ಎಂದು ಹೇಳಿದರು. ತುಂಗಭದ್ರಾ ಈ ಭಾಗದ ಜೀವನಾಡಿ. ಸುಮಾರು 32 ಟಿಎಂಸಿಯಷ್ಟು ಹೂಳು ತುಂಬಿದ್ದರಿಂದ ನೀರಿನ ಸಮಸ್ಯೆ ಎದುರಾಗುತ್ತದೆ. ಸರಕಾರ ಈ ಬಗ್ಗೆ ಗಂಭೀರ ಚಿಂತನೆ ಮಾಡುವ ಅಗತ್ಯವಿದೆ. ಹೂಳೆ ತೆಗೆಸಬೇಕು. ಇಲ್ಲಿದಿದ್ದರೆ ನವಲಿ ಸಮನಾಂತರ ಜಲಾಶಯ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಎಲ್ಲಾ ವಸ್ತುಗಳ ಬೆಲೆಯನ್ನು ಉತ್ಪಾದಕರು ನಿರ್ಧರಿಸುತ್ತಾರೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಮಾತ್ರ ಬೆಲೆಯನ್ನು ವರ್ತಕರು ನಿರ್ಧರಿಸುತ್ತಾರೆ. ಬೆಲೆಯಿಲ್ಲದೇ ಅನ್ನದಾತನ ಬದುಕು ದುಸ್ತರವಾಗಿದೆ. ಯಾವುದೇ ಸರಕಾರಗಳು ಬಂದರೂ ರೈತರಿಗೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ. ರೈತಪರ ಸಂಘಟನೆಗಳು ಹೆಚ್ಚು ಬಲಗೊಳ್ಳಬೇಕಿದೆ ಎಂದು ಹೇಳಿದರು. ಈ ವೇಳೆ ರಂಭಾಪುರಿ ಕಾಸಾಶಾಖಾಮಠದ ಸೋಮನಾಥ ಶಿವಾಚಾರ್ಯರು ಮಾತನಾಡಿದರು. ತುರ್ವಿಹಾಳ ಅಮೋಘ ಸಿದ್ದೇಶ್ವರಮಠದ ಮಾದಯ್ಯ ಗುರುವಿನ್, ಬಂಗಾರಿ ಕ್ಯಾಂಪಿನ ಶರಣರು ಸಾನಿಧ್ಯ ವಹಿಸಿದ್ದರು. ಬಸವರಾಜ ಗೋಡಿಹಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಬಿಜೆಪಿ ಮುಖಂಡ ರಾಜೇಶ ಹಿರೇಮಠ, ತಿಮ್ಮಣ್ಣ ಸಾಹುಕಾರ, ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಾಗವೇಣಿ ಪಾಟೀಲ್, ಮಹಾದೇವಮ್ಮ, ಸುವರ್ಣ ಹಿರೇಮಠ, ಸಿಪಿಐಎಂನ ಎಂ.ಗಂಗಾಧರ, ಬಸವರಾಜ ಗೊರೇಬಾಳ, ಪರಶುರಾಮ, ರವಿಕುಮಾರ್, ವೀರೇಶ ದಿದ್ದಿಗಿ, ನಾರಾಯಣ ಬೆಳಗುರ್ಕಿ, ಸಿದ್ದನಗೌಡ ಗೋನವಾರ, ಮಾಳಪ್ಪ ಪೂಜಾರಿ, ದೊಡ್ಡನಗೌಡ ಕಲ್ಲೂರು, ಹನುಮಂತಪ್ಪ ಗೋಡಿಹಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹುಣಸಗಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸಹಕರಿಸಿ: ವೆಂಕಟಗಿರಿ ದೇಶಪಾಂಡೆ
ಕೊಡೇಕಲ್: ಜನವರಿ 9ರಂದು ಹುಣಸಗಿಯ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನವದಲ್ಲಿ ಹಮ್ಮಿಕೊಂಡಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಕನ್ನಡದ ಅಕ್ಷರದಮ್ಮನ ಜಾತ್ರೋತ್ಸವದ ರೂಪದಲ್ಲಿ ಆಚರಿಸಲು ಎಲ್ಲ ಸಾಹಿತ್ಯಿಕ ಮನಸ್ಸುಗಳ ಸಹಕಾರ ಅಗತ್ಯವಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ವೆಂಕಟಗಿರಿ ದೇಶಪಾಂಡೆ ಹೇಳಿದರು. ಸ್ಥಳೀಯ ಕಾಲಜ್ಞಾನಿ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕೊಡೇಕಲ್ಲ ವಲಯ ಮಟ್ಟದ ಪದಾಧಿಕಾರಿಗಳು, ಹಿರಿಯರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ವೆಂಕಟಗಿರಿ ದೇಶಪಾಂಡೆ, ಸಮ್ಮೇಳನಕ್ಕಾಗಿ ಈಗಾಗಲೇ ಹಲವಾರು ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಗಳು ಕಾರ್ಯ ನಿರ್ವಹಿಸುತ್ತಿವೆ. ಕೊಡೇಕಲ್ ವಲಯದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಅಭಿಮಾನಿಗಳು ಪಾಲ್ಗೊಳ್ಳುವುದು ಮುಖ್ಯ ಎಂದು ಹೇಳಿದರು. ಸಮ್ಮೇಳನದ ಪ್ರಚಾರ ಸಮಿತಿಯ ಭೀಮಶೇನರಾವ್ ಕುಲಕರ್ಣಿ ಮಾತನಾಡಿ, ಈಗಾಗಲೇ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಮ್ಮೇಳನದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆೆ ಎಂದು ಹೇಳಿದರು. ವಲಯ ಕಸಾಪ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಬಸವರಾಜ ಅಂಗಡಿ ಮಾತನಾಡಿ, ಹುಣಸಗಿ ತಾಲೂಕು ಕೇಂದ್ರ ಸ್ಥಳದೊಂದಿಗೆ ಸರ್ವ ಸಾಹಿತ್ಯಿಕ ರೂಪವಾಗಿ ಹುನಸೆ ಮರದಂತಿದ್ದು, ಸಧ್ಯದಲ್ಲೆ ನಡೆಯಲಿರುವ ತಾಲೂಕು ಪ್ರಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ‘ಹುಣಸೆ ಮರ ಮುಪ್ಪಾದರೂ, ಅದರ ಹುಳಿ ಮುಪ್ಪಾಗದಿರುವ ರೂಪದಲ್ಲಿ ಸಾಹಿತ್ಯ ಸಮ್ಮೇಳನ’ ನಡೆದು ಬಂದು ಜನಮಾನಸದಲ್ಲಿ ಮಾಸದ ನೆನಪಾಗಿ ಉಳಿದು ಬರುವಂತಿರಲಿ ಎಂದು ಆಶಯ ವ್ಯಕ್ತಪಡಿಸಿದರು. ಕಸಾಪ ವಲಯಾಧ್ಯಕ್ಷ ಕೋರಿಸಂಗಯ್ಯ ಗಡ್ಡದ ಮಾತನಾಡಿ, ನಮ್ಮ ವಲಯದಿಂದ ಎಲ್ಲ ರೀತಿಯಲ್ಲಿಯೂ ತನುಮನಧನದಿಂದ ಸೇವೆ ಸಲ್ಲಿಸಲಾಗುವದು. ಹಾಗೂ ಸಮ್ಮೇಳನದಲ್ಲಿ ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ನೆರವೇರಿಸಲಾಗುವುದು ಎಂದು ಹೇಳಿದರು. ಈ ವೇಳೆ ಹಿರಿಯ ಸಾಹಿತಿ, ನಿಕಟ ಪೂರ್ವ ಅಧ್ಯಕ್ಷ ಬಸಣ್ಣ ಗೊಡ್ರಿ, ಪ್ರಧಾನ ಕಾರ್ಯದರ್ಶಿ ಗುರು ಹುಲಕಲ್ಲ, ಶಿಕ್ಷಕರ ಸಂಘದ ಅಧ್ಯಕ್ಷ ಕೊಟ್ರೇಶ ಕೋಳುರು, ಅಶೋಕ ಕೋಳೂರು, ಸೇರಿದಂತೆ ಇತರರು ಮಾತನಾಡಿದರು. ಹಿರಿಯರಾದ ರಂಗನಾಥ ದೊರಿ, ವಿರಸಂಗಪ್ಪ ಹಾವೇರಿ, ಸೋಮನಿಂಗಪ್ಪ ದೊರಿ, ಬಸವರಾಜ ಭದ್ರಗೋಳ, ಬಿ.ಸಿ.ಪಾಟೀಲ್, ಮೋಹನ ಪಾಟೀಲ್, ಪತ್ರಕರ್ತ ರಾಘವೇಂದ್ರ ಕಾಮನಟಗಿ, ಕಾಂತೇಶ ಹಲಗಿಮನಿ, ಗುರು ಹುಲ್ಕಲ್, ನಾಗನಗೌಡ ಪಾಟೀಲ್, ಬಸವರಾಜ ಕೋಳಕೂರ, ಚಂದ್ರಶೇಖರ ಹೊಕ್ರಾಣ , ರಾಜಶೇಖರ ಹೋಳಿಕಟ್ಟಿ, ಸೋಮಶೇಖರ ಪಂಜಗಲ್ಲ, ಬಸವರಾಜ ಕೆಂಡದ, ಮೌನೇಶ ಹೂಗಾರ, ಪ್ರಕಾಶ ಬಾಚ್ಯಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಇಬ್ಬರು ಮೇಕಪ್ ಆರ್ಟಿಸ್ಟ್ಗಳು ಸಾಫ್ಟ್ವೇರ್ ಇಂಜಿನಿಯರ್ ಒಬ್ಬರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಎರಡು ಬಾರಿ ಹಣ ಲೂಟಿ ಮಾಡಿ ಹಲ್ಲೆ ನಡೆಸಿದ ಘಟನೆ ರಾಜರಾಜೇಶ್ವರಿ ನಗರದಲ್ಲಿ ಬೆಳಕಿಗೆ ಬಂದಿದೆ. ಸದ್ಯ ಇಬ್ಬರು ಮಹಿಳಾ ಮೇಕಪ್ ಆರ್ಟಿಸ್ಟ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ವಂಚನೆಯಾದರೂ ಸಹ ಸಂತ್ರಸ್ತ ದೂರು ಕೊಡದ ಹಿನ್ನೆಲೆ, ಅವರನ್ನೇ ಟಾರ್ಗೆಟ್ ಮಾಡಿದ್ದರು ಎನ್ನಲಾಗಿದೆ.
ಸಾಲಗಾರರಿಗೆ ಎಲ್ಐಸಿ ಹೌಸಿಂಗ್ ಫೈನಾನ್ಸ್ನಿಂದ ಸಿಹಿ ಸುದ್ದಿ: ಬಡ್ಡಿ ದರ ಕಡಿತ, ಎಸ್ಬಿಐಗಿಂತಲೂ ಕಡಿಮೆ! ಎಷ್ಟು?
ಮನೆ ಖರೀದಿಸಲು ಹಾಗೂ ಮನೆ ನಿರ್ಮಾಣಕ್ಕೆ ಯೋಚಿಸುತ್ತಿರುವ ಗ್ರಾಹಕರಿಗೆ ಎಲ್ಐಸಿ ಹೌಸಿಂಗ್ ಫೈನಾನ್ಸ್ ಸಿಹಿ ಸುದ್ದಿ ನೀಡಿದೆ. ಸಂಸ್ಥೆಯು ತನ್ನ ಗೃಹ ಸಾಲದ ಬಡ್ಡಿ ದರಗಳನ್ನು ಕಡಿತಗೊಳಿಸಿದ್ದು, ಹೊಸ ದರಗಳು ಶೇಕಡಾ 7.15ರಿಂದ ಆರಂಭವಾಗಲಿವೆ. ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ಗ್ರಾಹಕರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)ಗಿಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುವ ಮೂಲಕ ಎಲ್ಐಸಿ ಎಚ್ಎಫ್ಎಲ್ ಪೈಪೋಟಿಗೆ ಇಳಿದಿದೆ.
ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ: ಮೋಹನ ನಾಯ್ಕ ಅಧ್ಯಕ್ಷ
ಭಟ್ಕಳ: ತಾಲೂಕಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಂಗಸಂಸ್ಥೆಯಾದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ಮೋಹನ ನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಶೈಲೇಶ ವೈದ್ಯ ಅವರು ಪುನರಾಯ್ಕೆಯಾಗಿದ್ದಾರೆ. ಸೋಮವಾರ ಸಂಜೆ ನಡೆದ ಸಂಘದ ಮುಂದಿನ ಮೂರು ವರ್ಷಗಳ ಪದಾಧಿಕಾರಿಗಳ ಚುನಾವಣೆಯನ್ನು ಹಿರಿಯ ಪತ್ರಕರ್ತ ಹಾಗೂ ಸಂಘದ ಮಾಜಿ ಅಧ್ಯಕ್ಷ ಸತೀಶ ಕುಮಾರ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಅಧ್ಯಕ್ಷ ಹಾಗೂ ಕಾರ್ಯದರ್ಶಿ ಸ್ಥಾನಗಳಿಗೆ ತಲಾ ಒಂದೇ ಹೆಸರು ಸೂಚನೆಯಾಗಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಅತೀಕುರ್ ರಹಮಾನ್ ಶಾಬಂದ್ರಿ, ಖಜಾಂಚಿಯಾಗಿ ಫಯಾಜ್ ಮುಲ್ಲಾ ಅವರು ಆಯ್ಕೆಯಾದರು. ಸಂಘದ ಗೌರವಾಧ್ಯಕ್ಷರಾಗಿ ವಾರ್ತಾಭಾರತಿ ಹಿರಿಯ ವರದಿಗಾರ ನಿಕಟಪೂರ್ವ ಅಧ್ಯಕ್ಷ ಎಂ.ಆರ್. ಮಾನ್ವಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ಮಾಜಿ ಅಧ್ಯಕ್ಷರಾದ ರಾಘವೇಂದ್ರ ಹೆಬ್ಬಾರ್, ಭಾಸ್ಕರ ನಾಯ್ಕ, ಮನಮೋಹನ ನಾಯ್ಕ, ಇನಾಯತ್ಉಲ್ಲಾ ಗವಾಯಿ, ವಿಷ್ಣು ದೇವಡಿಗ, ರಿಜ್ವಾನ್ ಗಂಗಾವಳಿ, ಅಝರ್ ಬರ್ಮಾವರ್, ಪ್ರಸನ್ನ ಭಟ್ಟ, ಲೋಕೇಶ ನಾಯ್ಕ, ಈಶ್ವರ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಯಚೂರು ಮಹಾನಗರ ಪಾಲಿಕೆ, ಎಸ್ಬಿಐನಿಂದ ವಿಶೇಷ ಕಾರ್ಯಕ್ರಮ
ರಾಯಚೂರು: ರಾಯಚೂರು ಮಹಾನಗರ ಪಾಲಿಕೆಯಿಂದ ಲೀಡ್ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದೊಂದಿಗೆ ಪಿಎಂ ಬೀದಿ ಮಾರಾಟಗಾರರ ಸ್ವಾವಲಂಬಿ ನಿಧಿ (ಪಿಎಂ ಸ್ವನಿಧಿ) ಬೀದಿ ವ್ಯಾಪಾರಿಗಳಿಗೆ ವಿಶೇಷ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸಾಲ ಮೇಳವು ಡಿಸೆಂಬರ್ 23ರಂದು ಯಶಸ್ವಿಯಾಗಿ ನಡೆಯಿತು. ರಾಯಚೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಲೀಡ್ ಬ್ಯಾಂಕ್ ಹಾಗೂ ಎಸ್ಬಿಐ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸರಕಾರದ ಕಲ್ಯಾಣ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೀದಿ ವ್ಯಾಪಾರಿಗಳಿಗೆ ಸಲಹೆ ನೀಡಿದರು. ಸರಕಾರದ ಮಹತ್ವದ ಯೋಜನೆಯ ಬಗ್ಗೆ ರಾಯಚೂರು ಜನತೆಗೆ ಅರಿವು ಮೂಡಿಸಲು ನಗರದ ಎಸ್ಬಿಐ ಕೇಂದ್ರ ಬ್ಯಾಂಕ್ನಲ್ಲಿ ಸಂಘಟಿಸಿದ್ದ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳು ಹಾಗೂ ಸಣ್ಣ ವ್ಯಾಪಾರಿಗಳು ಸೇರಿದ್ದರು. ಈ ವೇಳೆ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಮಾತನಾಡಿ, ಸ್ವಾವಲಂಬಿ ಜೀವನೋಪಾಯಕ್ಕೆ ಅಗತ್ಯವಾದ ಆರ್ಥಿಕ ಸಹಾಯ ಒದಗಿಸುವ ಉದ್ದೇಶದೊಂದಿಗೆ ಹಮ್ಮಿಕೊಂಡ ಈ ಮೇಳಕ್ಕೆ ಬೆಳಿಗ್ಗೆಯಿಂದಲೇ ಉತ್ತಮ ಸ್ಪಂದನೆ ದೊರೆತಿದೆ, ಈ ಮೇಳದಿಂದ ನಮ್ಮಲ್ಲಿ ಉತ್ಸಾಹ ಮೂಡಿದೆ. ರಾಯಚೂರು ಮಹಾನಗರ ಪಾಲಿಕೆಯಿಂದ ಮುಂದಿನ ದಿನಗಳಲ್ಲಿಯು ಸಹ ಬೀದಿ ವ್ಯಾಪಾರಿಗಳ ಆರ್ಥಿಕ ಶಕ್ತೀಕರಣಕ್ಕಾಗಿ ಬ್ಯಾಂಕ್ಗಳು ಹಾಗೂ ವಿವಿಧ ಇಲಾಖೆಗಳೊಂದಿಗೆ ಸಮನ್ವಯದಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ತಿಳಿಸಿದರು. ಮೇಳದಲ್ಲಿ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು ಫಲಾನುಭವಿಗಳಿಗೆ ಯೋಜನೆಯ ವಿವರಗಳು, ಅರ್ಹತೆ, ದಾಖಲೆಗಳು ಹಾಗೂ ಸಾಲ ಪ್ರಕ್ರಿಯೆಗಳ ಕುರಿತು ಸ್ಥಳದಲ್ಲಿಯೇ ಮಾಹಿತಿ ನೀಡಿದರು. ಈ ವೇಳೆ, ಸುಮಾರು 50 ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಸಾಲ ಮಂಜೂರಿ ಮಾಡಿ ದೃಢೀಕರಿಸಲಾಯಿತು. ದಿನಾಂಕ 23ರಂದು ಸ್ವೀಕೃತಿಯಾದ ಎಲ್ಲಾ ಅರ್ಜಿಗಳಿಗೆ ದಿನಾಂಕ 24ರೊಳಗೆ ಸಾಲ ಮಂಜೂರಿ ಮಾಡಲಾಗುವುದು ಎಂದು ಎಸ್ಬಿಐ ಪ್ರಾದೇಶಿಕ ವ್ಯವಸ್ಥಾಪಕರಾದ ಸೀತಾಬಾಯಿ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳಾದ ಶ್ರೀ ಕೃಷ್ಣ ಶಾವಂತಗೇರಿ, ಸಂತೋಷ ರಾಣಿ, ಸುರೇಶ ವಿಭೂತಿಮಠ್, ರಸೂಲ್, ಲೀಡ್ ಬ್ಯಾಂಕ್ ಮ್ಯಾನೇಜರ್ ಸುಧೀಂದ್ರ, ಎಸ್.ಬಿ.ಐ ಬ್ಯಾಂಕ್ ಮ್ಯಾನೇಜರ್ ಆನಂದ ವಾಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಿಕ್ಲು ಶಿವ ಕೊಲೆ ಪ್ರಕರಣ; ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ, ಶಾಸಕರಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣದ 5ನೇ ಆರೋಪಿ ಬಿ.ಎ. ಬಸವರಾಜ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಮಂಗಳವಾರ ವಜಾಗೊಳಿಸಿದ್ದಾರೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಸೇರಿ ಐವರು ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (ಕೊಕಾ) ಅನ್ವಯಿಸಿದ್ದ ರಾಜ್ಯ ಸರಕಾರದ ಆದೇಶವನ್ನು ಇದೇ ಡಿಸೆಂಬರ್ 19ರಂದು ರದ್ದುಪಡಿಸಿದ್ದ ಹೈಕೋರ್ಟ್, ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಕೊಲೆ ಪ್ರಕರಣದಲ್ಲಿ ತನಿಖೆ ಇನ್ನಷ್ಟೇ ಪೂರ್ಣಗೊಳ್ಳಬೇಕಿದ್ದು, ಹೀನ ಕೃತ್ಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಆದ್ದರಿಂದ, ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿ ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿತ್ತು. ತೀರ್ಪು ಪ್ರಕಟಗೊಂಡ ಬಳಿಕ ಬೈರತಿ ಬಸವರಾಜ್ ಪರ ವಕೀಲರು, ಕೊಕಾ ಅನ್ವಯಿಸಿರುವ ಆದೇಶ ವಜಾಗೊಂಡಿರುವುದರಿಂದ ವಿಚಾರಣಾ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರುವವರೆಗೆ ರಕ್ಷಣೆ ಒದಗಿಸಬೇಕು ಎಂದು ಕೋರಿದ್ದರು. ಇದಕ್ಕೆ ಹೈಕೋರ್ಟ್ ನಿರಾಕರಿಸಿತ್ತು. ಇದೀಗ, ವಿಚಾರಣಾ ನ್ಯಾಯಾಲಯವೂ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ ಶಾಸಕ ಬೈರತಿ ಬಸವರಾಜ್ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ.
ಎಐ ಆಧಾರಿತ ಕ್ಯಾಮರಾ ಅಳಡಿಸಲು ಕ್ರಮ: ಡಿಜಿಪಿ ಅಲೋಕ್ ಕುಮಾರ್
ಮಂಗಳೂರು ಜೈಲಿಗೆ ಭೇಟಿ- ಪರಿಶೀಲನೆ
ಕಲಬುರಗಿ| ರಾಜಾಪೂರ ಗ್ರಾಪಂ ಅಧ್ಯಕ್ಷ ಪ್ರಕಾಶರೆಡ್ಡಿ ಸದಸ್ಯತ್ವ ಅನರ್ಹ
ಕಾಳಗಿ: ತಾಲೂಕಿನ ರಾಜಾಪೂರ ಗ್ರಾ.ಪಂ ಅಧ್ಯಕ್ಷ ಪ್ರಕಾಶರೆಡ್ಡಿ ಮಲ್ಲರೆಡ್ಡಿ ಅವರು ವ್ಯಕ್ತಿಯೊಬ್ಬರ ಖಾಲಿ ಜಾಗವನ್ನು ಡಿಸಿಬಿ ವಹಿಯಲ್ಲಿ ದಾಖಲಿಸಲು ಲಂಚ ಪಡೆದ ಆರೋಪ ಸಾಬೀತಾಗಿದ್ದರಿಂದ ಅವರನ್ನು ಗ್ರಾ.ಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ರಾಜಾಪೂರ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶರೆಡ್ಡಿ ಮಲ್ಲರೆಡ್ಡಿ ಅವರು ರಾಜಾಪೂರ ಗ್ರಾಪಂ ವ್ಯಾಪ್ತಿಯ ಮಳಗ(ಕೆ) ಗ್ರಾಮದ ಚಾಂದಸುಲ್ತಾನ ಅವರ ಜಾಗವನ್ನು ನಮೂದಿಸುವ ಕೆಲಸ ಮಾಡಿಸಿಕೊಡಲು 5000 ರೂ. ಲಂಚ ಸ್ವೀಕರಿಸಿದ ಆರೋಪ ಸಾಬೀತಾಗಿರುವುದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ಅಧಿನಿಯಮ-1993ರ ಪ್ರಕರಣ-43(ಎ) ಮತ್ತು 46(4)ರನ್ವಯ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ತೆಗೆದುಹಾಕಿ ಮತ್ತು ಪ್ರಕರಣ 43(ಎ)(2)ರನ್ವಯ ಮುಂದಿನ ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಆದೇಶ ಪ್ರಕಟಿಸಿದೆ.
ವಿಜಯನಗರ| ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ರೈತ ದಿನಾಚರಣೆ
ವಿಜಯನಗರ: ನಗರದ ಗಾಂಧಿಚೌಕ್ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚೌದ್ರಿಚರಣ್ ಸಿಂಗ್ ಅವರು ಹುಟ್ಟಿದ ದಿನದ ಹಿನ್ನಲೆ ರೈತರ ದಿನಾಚರಣೆ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಟಿ.ನಾಗರಾಜ್, ಯಾವುದೇ ಸರಕಾರ ಬಂದಲ್ಲಿ ರೈತರಿಗೆ ಅನಾನುಕೂಲಗಳೇ ಹೆಚ್ಚು. ರೈತರ ಪರವಾಗಿ ನಿಷ್ಠೆಯಿಂದ ಕೆಲಸ ಮಾಡುವುದು ಬಹಳಷ್ಟು ಕಡಿಮೆ. ಆದ್ದರಿಂದ ಮುಂದಿನ 2028ರ ಚುನಾವಣೆಯಲ್ಲಿ ರೈತರೇ ಅಧಿಕಾರಕ್ಕೆ ಬಂದಲ್ಲಿ ರೈತರಿಗೆ ಆಗುವ ತೊಂದರೆಗಳನ್ನು ತಪ್ಪಿಸಬಹುದು ಮತ್ತು ಸ್ಥಳಿಯ ಸಕ್ಕರೆ ಕಾರ್ಖಾನೆಯು 8-9 ವರ್ಷಗಳಿಂದ ಮುಚ್ಚಿದ್ದು, ಶಾಸಕರಿಗೂ, ಸಚಿವರಿಗೂ ಮತ್ತು ಮುಖ್ಯಮಂತ್ರಿಯವರಿಗೂ ಬಹಳಷ್ಟು ಬಾರಿ ಮನವಿ ಪತ್ರ ಸಲ್ಲಿಸಿದರು ಸಹ ಇಲ್ಲಿಯವರೆಗೂ ಯಾವುದೇ ಪ್ರಯೋಜನೆ ಆಗಿರುವುದಿಲ್ಲ ಎಂದು ಹೇಳಿದರು. ತಾಲೂಕು ಅಧ್ಯಕ್ಷರಾದ ಸಣ್ಣಕ್ಕಿ ರುದ್ರಪ್ಪ ಮಾತನಾಡಿ, ಚೌದ್ರಿ ಚರಣ್ ಸಿಂಗ್ 5ನೇ ಪ್ರಧಾನ ಮಂತ್ರಿಯಾಗಿ ರೈತರ ಪರವಾಗಿ ಅನೇಕ ರೀತಿಯ ಸೌಕರ್ಯಗಳನ್ನು ಕಲ್ಪಿಸಿದ್ದರು. ಕೃಷಿಯಲ್ಲಿ ಬದಲಾವಣೆ ತರುವಲ್ಲಿ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಕೃಷಿಜಮೀನ್ದಾರ್ ಪದ್ದತಿ ಮತ್ತು ಜೀತದಾಳು ಪದ್ದತಿಯನ್ನು ಹೋಗಲಾಡಿಸುವುದರಲ್ಲಿ ಯಶಸ್ಸನ್ನು ಕಂಡವರು ಎಂದು ಹೇಳಿದರು. ಜಿಲ್ಲಾ ಕಾರ್ಯಧ್ಯಕ್ಷರಾದ ಎಂ.ಜಡಿಯಪ್ಪ ಮಾತನಾಡಿ, ತಾಲೂಕು ಪಂಚಾಯಿತಿಗೆ ಬರುವಂತಹ ರೈತರಿಗೆ ಸರ್ಕಾರಿ ಸೌಲಭ್ಯಗಳ ಯಾವುದೇ ಮಾಹಿತಿ ಇರುವುದಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಪಿಡಿಓಗಳು ರೈತರಿಗೆ ಮಾಹಿತಿ ನೀಡಬೇಕು ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಬರುವಂತಹ ಸರಕಾರದ ಸೌಲತ್ತುಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷರಾದ ಖಾಜಾ ನಿಯಾಜ್, ಜಹಿರುದ್ದೀನ್, ಪದಾಧಿಕಾರಿಗಳಾದ ಟಿ.ನಾಗರಾಜ, ಸಣ್ಣಕ್ಕಿ ರುದ್ರಪ್ಪ, ಎಂ.ಜಡಿಯಪ್ಪ, ಆರ್.ಆರ್.ತಾಯಪ್ಪ, ವಿ.ಗಾಳೆಪ್ಪ, ಅಂಕ್ಲೇಶ್, ಬಸವರಾಜ, ಸುರೇಶ, ವೀರೇಶ್, ರಾಮಾಂಜಿನಿ, ಪಿ.ಕೆ.ಹಳ್ಳಿ ರಾಜಶೇಖರ, ಭುವನಹಳ್ಳಿ ಗೋವಿಂದಪ್ಪ, ಮತ್ತು ಅಧಿಕಾರಿಗಳಾದ ದಯಾನಂದ ಎ.ಇ.ಇ, ಕೃಷಿ ಸಹಾಯಕ ನಿರ್ದೇಶಕರು ಮನೋಹರ್ ಗೌಡ, ತೋಟಗಾರಿಕೆ ಸಹಾಯಕ ನಿರ್ದೇಶಕ ರಮೇಶ್, ತಾಲೂಕು ಪಂಚಾಯಿತಿ ಇ.ಓ ಮತ್ತು ರೈತರು ಉಪಸ್ಥಿತರಿದ್ದರು.
ಫೆಕ್ಸ್ ತೆರವು| ಮಂಗಳೂರು ಮನಪಾ ಅಧಿಕಾರಿಗಳಿಂದ ತಾರತಮ್ಯ: ಶಾಸಕ ಕಾಮತ್ ಆರೋಪ
ಮಂಗಳೂರು, ಡಿ.23: ನಗರದ ಗೂಡಂಗಡಿ ಹಾಗೂ ಫೆಕ್ಸ್ ತೆರವು ವಿಚಾರದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ. ನಗರದ ಅಟಲ್ ಸೇವಾ ಕೇಂದ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್, ಲೇಡಿಹಿಲ್ ಸೇರಿದಂತೆ ಬಹುತೇಕ ಕಡೆಗಳಲ್ಲಿ ಅಧಿಕಾರಿಗಳು ಗೂಡಂಗಡಿ ತೆರವುಗೊಳಿಸಿ ದ್ದಾರೆ. ಕಾಂಗ್ರೆಸ್ ಮುಖಂಡರು ಸೂಚಿಸಿದ ಕಡೆಗಳಲ್ಲಿ ಮಾತ್ರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಉಳಿದ ಕಡೆಗಳಲ್ಲಿ ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ. ಆ ಮೂಲಕ ಆಡಳಿತಾರೂಢ ಕಾಂಗ್ರೆಸ್ನ ಕೈಗೊಂಬೆಯಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂದರು. ಗೂಡಂಗಡಿಗಳನ್ನು ತೆರವುಗೊಳಿಸುವುದಿದ್ದರೆ ಎಲ್ಲವನ್ನೂ ತೆರವುಗೊಳಿಸಬೇಕು. ಇಲ್ಲದಿದ್ದರೆ ಯಾವುದನ್ನೂ ಮುಟ್ಟಬಾರದು. ಕಾಂಗ್ರೆಸ್ ಮುಖಂಡರ ಸೂಚನೆಯಂತೆ ನಡೆಯುವ ಪಾಲಿಕೆ ಅಧಿಕಾರಿಗಳ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ಇಂತಹ ಅನ್ಯಾಯಗಳಿಗೆ ಆಸ್ಪದ ಇರಲಿಲ್ಲ. ಈಗ ಆಡಳಿತಾಧಿ ಕಾರಿಗಳು ಕಾಂಗ್ರೆಸ್ ಮುಖಂಡರ ನಿರ್ದೇಶನದಂತೆ ನಡೆಯುತ್ತಿದ್ದಾರೆ ಕಮ್ಯುನಿಸ್ಟರು ಕೂಡ ಅವರ ಪಕ್ಷದವರನ್ನು ಹೊರತುಪಡಿಸಿ ಬೇರೆಯವರ ಗೂಡಂಗಡಿ ಎತ್ತಂಗಡಿ ಬಗ್ಗೆ ಮಾತನಾಡುತ್ತಿಲ್ಲ ಎಂದರು. ಫ್ಲೆಕ್ಸ್ಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎನ್ನುವ ಪಾಲಿಕೆಯ ಅಧಿಕಾರಿಗಳು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸಿದಾಗ, ಕಾಂಗ್ರೆಸ್ ಕಾರ್ಯಕ್ರಮಗಳು ನಡೆದಾಗ, ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಕ್ರೀಡೆಗಳು ನಡೆದಾಗ ಹಾಕಿವ ಬ್ಯಾನರ್, ಫ್ಲೆಕ್ಸ್ಗಳ ಮೇಲೆ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವೇದವ್ಯಾಸ್ ಕಾಮತ್ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಭಾಸ್ಕರಚಂದ್ರ ಶೆಟ್ಟಿ, ಲಲ್ಲೇಶ್ ಉಪಸ್ಥಿತರಿದ್ದರು.
ಕೊರೆವ ಚಳಿಯಲ್ಲಿ ರೈಲಿನ ಟಾಯ್ಲೆಟ್ ಬಳಿ ಕುಳಿತು ಒಡಿಶಾ ಕುಸ್ತಿಪಟುಗಳ ಪ್ರಯಾಣ; ಹೀಗಿದೆ ನಮ್ಮ ದೇಶದ ವ್ಯವಸ್ಥೆ!
Odisha Wreslers Train Travel Vedio- ಇದು ನಿಜಕ್ಕೂ ನಾಚಿಕೆಗೇಡು. ಕ್ರೀಡಾಪಟುಗಳನ್ನು ಈ ರೀತಿ ನಡೆಸುಕೊಳ್ಳುವುದೇ? ರಾಷ್ಟ್ರೀಯ ಕ್ರೀಡಾಕೂಟವೊಂದಕ್ಕೆ ಕ್ರೀಡಾಪಟುಗಳು ರೈಲಿನ ಶೌಚಾಲಯದ ಬಳಿ ಕೊರೆಯುವ ಚಳಿಯಲ್ಲಿ ಕುಳಿತು ಪ್ರಯಾಣಿಸಿದ ಅಮಾನವೀಯ ದೃಶ್ಯ ಒಡಿಶಾದಿಂದ ವರದಿಯಾಗಿದೆ. ಇದರ ವಿಡಿಯೋ ಇದೀಗ ವೈರಲ್ ಆಗಿದ್ದು ರಾಜ್ಯ ಸರ್ಕಾರದ ಕ್ರೀಡಾನೀತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿಪಕ್ಷಗಳಂತೂ ಸರ್ಕಾರದ ನಿರ್ಲಕ್ಷ್ಯವನ್ನು ತರಾಟೆಗೆ ತೆಗೆದುಕೊಂಡಿವೆ. ಹಾಗಿದ್ದರೆ ನಡೆದಿದ್ದೇನು? ಇಲ್ಲಿದೆ ಸಂಪೂರ್ಣ ವಿವರ.
ಬ್ಯಾರಿ ಅಕಾಡಮಿಯಿಂದ ದ.ಕ. ಜಿಲ್ಲಾ ಮಟ್ಟದ ದಫ್ ಸ್ಪರ್ಧೆ: ರೆಂಜಾಡಿಯ ತಾಜುಲ್ ಹುದಾ ತಂಡ ಪ್ರಥಮ
ಮಂಗಳೂರು, ಡಿ.23: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬೆಳ್ತಂಗಡಿ ತಾಲೂಕಿನ ಜೋಗಿಬೆಟ್ಟು ರಿಫಾಯಿ ಜುಮಾ ಮಸ್ಜಿದ್ ಆಡಳಿತ ಸಮಿತಿಯ ಸಹಯೋಗದೊಂದಿಗೆ ರಿಫಾಯಿ ಜುಮಾ ಮಸ್ಜಿದ್ ವಠಾರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ದ.ಕ. ಜಿಲ್ಲಾ ಮಟ್ಟದ ದಫ್ ಸ್ಪರ್ಧೆಯಲ್ಲಿ ಉಳ್ಳಾಲ ತಾಲೂಕಿನ ರೆಂಜಾಡಿಯ ತಾಜುಲ್ ಹುದಾ ದಫ್ ತಂಡ ಪ್ರಥಮ ಮತ್ತು ಮಂಗಳೂರು ತಾಲೂಕಿನ ಕೂಳೂರಿನ ಮುಹಿಯ್ಯುದ್ದೀನ್ ದಫ್ ತಂಡ ದ್ವಿತೀಯ ಹಾಗೂ ಉಳ್ಳಾಲ ತಾಲೂಕಿನ ಬರ್ವದ ಶಂಸುಲ್ ಹುದಾ ದಫ್ ತಂಡ ತೃತೀಯ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನಡೆದ ತಾಲೂಕು ಮಟ್ಟದ ದಫ್ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿತ್ತು. ಹಾರಿಸ್ ಮದನಿ ಪಾಟ್ರಕೋಡಿ, ಎ.ಐ. ಝಕರೀಯ ಕಡಬ, ಆರ್.ಕೆ.ಮದನಿ ಅಮ್ಮೆಂಬಳ ಸ್ಪರ್ಧೆಯ ತೀರ್ಪುಗಾರರಾಗಿದ್ದರು. ದ.ಕ. ಮತ್ತು ಉಡುಪಿ ಜಿಲ್ಲಾ ದಫ್ ಅಸೋಸಿಯೇಶನ್ ಅಧ್ಯಕ್ಷ ಅಬ್ದುಲ್ಲತೀಫ್ ನೇರಳಕಟ್ಟೆ ಸ್ಪರ್ಧೆಯನ್ನು ನಿರೂಪಿಸಿದರು. ಜಿಲ್ಲಾ ಮಟ್ಟದ ದಫ್ ಸ್ಪರ್ಧೆಯನ್ನು ರಿಫಾಯಿ ಜುಮಾ ಮಸ್ಟಿದ್ನ ಖತೀಬ್ ಅಲ್ಹಾಜ್ ಯು.ಕೆ.ಖಲಂದರ್ ಮದನಿ ಉದ್ಘಾಟಿಸಿದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು. ಎಚ್. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಿಫಾಯಿ ಜುಮಾ ಮಸ್ಜಿದ್ ಆಡಳಿತ ಸಮಿತಿಯ ಅಧ್ಯಕ್ಷ ಎಂ.ಜಿ. ಅಬೂಬಕರ್ ಪುತ್ತು, ಎಂ.ಫ್ರೆಂಡ್ಸ್ ಚಾರಿಟೆಬಲ್ ಟ್ರಸ್ಟ್ ಸ್ಥಾಪಕ ರಶೀದ್ ವಿಟ್ಲ, ಉದ್ಯಮಿಗಳಾದ ಉಮರ್ ಹಾಜಿ, ಅಬ್ದುಲ್ ಸಲೀಂ ದಾವೂದ್, ಅಶ್ರಫ್, ಜೋಗಿಬೆಟ್ಟು ಖುವ್ವತುಲ್ ಇಸ್ಲಾಂ ಯಂಗ್ಮೆನ್ಸ್ ಅಧ್ಯಕ್ಷ ಅಶ್ರಫ್ ಎಂ.ಜಿ. ಮತ್ತಿತರರು ಭಾಗವಹಿಸಿದ್ದರು. ಅಕಾಡಮಿಯ ಸದಸ್ಯರಾದ ಹಮೀದ್ ಹಸನ್ ಮಾಡೂರು, ಅಬೂಬಕ್ಕರ್ ಅನಿಲಕಟ್ಟೆ, ಶರೀಫ್ ಭಾರತ್ ಬಾಳಿಲ, ಅನ್ಸಾರ್ ಕಾಟಿಪಳ್ಳ ಉಪಸ್ಥಿತರಿದ್ದರು. ಸದಸ್ಯ ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.
ಸುದೀಪ್-ದರ್ಶನ್ ಫ್ಯಾನ್ಸ್ ವಾರ್: ಕಿಚ್ಚನ ಪರ ಬ್ಯಾಟಿಂಗ್ ಬೀಸಿದ ಮಾಜಿ ಸಿಎಂ
ಕಲಬುರಗಿ: ಸ್ಯಾಂಡಲ್ವುಡ್ನಲ್ಲಿ ಮತ್ತೆ ಯುದ್ಧಕಾಂಡ ಶುರುವಾಗಿದೆ. ಕಿಚ್ಚ ಸುದೀಪ್ ಮತ್ತು ದಾಸ ದರ್ಶನ್ ಅಭಿಮಾನಿಗಳು ನಡುವೆ ಫ್ಯಾನ್ಸ್ ವಾರ್ ಶುರುವಾಗಿದೆ. ಅಷ್ಟಕ್ಕೂ ಈ ಫ್ಯಾನ್ಸ್ ವಾರ್ಗೆ ಕಾರಣ ಆಗಿದ್ದು ಬೇರ್ರಾರೂ ಅಲ್ಲ ಖುದ್ದು ಕಿಚ್ಚ ಸುದೀಪ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮೀ ಆಡಿದ ಈ ಮಾತುಗಳು. ಇನ್ನೂ ಸುದೀಪ್- ದರ್ಶನ್ ನಡುವಿನ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ
Liquor: ವಿಸ್ಕಿ - ರಮ್ &ಬಿಯರ್ ಚಳಿಗಾಲದಲ್ಲಿ ಯಾವ ಮದ್ಯ ಬೆಸ್ಟ್
ಈ ಬಾರಿಯ ಚಳಿಗಾಲದ ಚಳಿಯು ಕಳೆದ ವರ್ಷಕ್ಕಿಂತಲೂ ತುಸು ಹೆಚ್ಚಾಗಿದೆ. ಈ ಬಾರಿಯ ಚಳಿಗಾಲದಲ್ಲಿ ಕೋಳಿ ಮತ್ತು ಕುರಿ ಮಾಂಸಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದು, ವಿವಿಧ ಪ್ರಾಣಿಗಳ ಮಾಂಸದ ಬೆಲೆಯೂ ಸಹ ಭರ್ಜರಿಯಾಗಿ ಹೆಚ್ಚಳವಾಗಿದೆ. ಇದರೊಂದಿಗೆ ಮದ್ಯ ಮಾರಾಟಕ್ಕೂ ಭರ್ಜರಿ ಬೇಡಿಕೆ ಇದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ವಿವಿಧ ಮದ್ಯಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಈ ರೀತಿ
ನಾಪತ್ತೆ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ,ಡಿ.23: ಜಿಲ್ಲೆಯಲ್ಲಿ ಹಲವೆಡೆ ಮಕ್ಕಳ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು, ಹಲವು ಪ್ರಕರಣಗಳಲ್ಲಿ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಇತ್ಯರ್ಥಪಡಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಹೇಳಿದರು. ಮಂಗಳವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರು, ಪ್ಯಾರಾಲೀಗಲ್ ವಾಲಂಟರ್ಸ್ ಗಳೊಂದಿಗೆ ಏರ್ಪಡಿಸಿದ್ದ ‘ನಾಪತ್ತೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿಯ ತ್ರೆಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅಪಹರಣ, ನಾಪತ್ತೆಯಾದ ಮಕ್ಕಳ ಬಗ್ಗೆ ವಿವಿಧ ಇಲಾಖೆಗಳೊಂದಿಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಇತ್ಯರ್ಥವಾಗದೇ ಬಾಕಿ ಇರುವ ಪ್ರಕರಣಗಳ ಮಾಹಿತಿಯನ್ನು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪ್ರತಿ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಕಾರ್ಯಪಡೆ ರಚಿಸಲಾಗಿದೆ. ನಾಪತ್ತೆಯಾದ, ಪತ್ತೆಯಾಗದ ಮಕ್ಕಳ ಪಟ್ಟಿ ಸಿದ್ಧಪಡಿಸಿಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಹಲವಾರು ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಪ್ರಕರಣಗಳನ್ನು ಪರಿಹರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ, ಜಿಲ್ಲಾ ಮಟ್ಟದ ವಿಶೇಷ ಅಭಿಯಾನಗಳನ್ನು ಪ್ರಾರಂಭಿಸಬೇಕು ಮತ್ತು ಮೇಲ್ವಿಚಾರಣೆ ಮಾಡಬೇಕು ಎಂದು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ ರವಿಕುಮಾರ್ ಅವರು ಮಾತನಾಡಿ, ಎಲ್ಲಾ ಠಾಣೆಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಿ ನಾಪತ್ತೆಯಾದ ಮಕ್ಕಳನ್ನು ಪತ್ತೆ ಹಚ್ಚಲು ಕ್ರಮವಹಿಸಬೇಕು. ಪೋಕ್ಸೋ ಘಟನೆ ಕಂಡುಬಂದಲ್ಲಿ ಯಾವುದೇ ವಿಳಂಬ ಇಲ್ಲದೇ ಕೂಡಲೇ ಎಫ್ಐಆರ್ ದಾಖಲಿಸಲು ಮುತುವರ್ಜಿ ವಹಿಸಬೇಕು ಎಂದು ಹೇಳಿದರು. ಪೊಲೀಸ್ ಇಲಾಖೆ ವತಿಯಿಂದ ತೆರೆದ ಮನೆ ಕಾರ್ಯಕ್ರಮವನ್ನು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಮಕ್ಕಳು ನಾಪತ್ತೆಯಾದ ಸಂದರ್ಭದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಅಥವಾ 112 ಕರೆ ಮಾಡಬೇಕು ಎಂದು ತಿಳಿಸಿದರು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಎಲ್ಲಾ ನಾಪತ್ತೆ ಪ್ರಕರಣಗಳನ್ನು ಅಪಹರಣ ಪ್ರಕರಣಗಳಾಗಿ ದಾಖಲಿಸಲಾಗುತ್ತದೆ ಮತ್ತು 18 ಮೇಲ್ಪಟ್ಟ ವಯಸ್ಸಿನ ನಾಪತ್ತೆ ಪ್ರಕರಣಗಳನ್ನು ನಾಪತ್ತೆ ಪ್ರಕರಣವಾಗಿ ಪರಿಗಣಿಸಲಾಗುತ್ತದೆ ಎಂದು ಮಹಿಳಾ ಪೊಲೀಸ್ ಠಾಣೆಯ ಸಿಪಿಐ ರಮೇಶ್ ಕುಲಕರ್ಣಿ ಅವರು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ಕೃಷ್ಣಪ್ಪ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ಗೌಸಿಯಾ, ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳಾದ ರೇಷ್ಮಾ, ಮಾರುತಿ, ರೀಡ್ಸ್ ಸಂಸ್ಥೆಯ ತಿಪ್ಪೇಸ್ವಾಮಿ, ರೀಚ್ ಸಂಸ್ಥೆಯ ಹನುಮಂತಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹೊನ್ನುರಪ್ಪ, ಮೋಹನ್ ರೆಡ್ಡಿ, ಮಂಜುನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಅಧಿಕಾರಿಗಳಿಂದ ತಪಾಸಣೆ: ಮೊಬೈಲ್ ಫೋನ್ಗಳು ಜಪ್ತಿ
ಬಳ್ಳಾರಿ,ಡಿ.23: ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಶನಿವಾರ ಅನಿರೀಕ್ಷಿತವಾಗಿ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳು ದೊರೆತಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದಾರೆ. ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರ ನಿರ್ದೇಶನದ ಮೇರೆಗೆ ‘ಕಾರಾಗೃಹ ಸುಧಾರಣಾ ಸಂಕಲ್ಪ' ಅಭಿಯಾನದಡಿ ಡಿ.20ರ ರಾತ್ರಿ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಜೈಲರ್, ಸಹಾಯಕ ಜೈಲರ್ ಹಾಗೂ ಸಿಬ್ಬಂದಿಗಳು ಧಿಡೀರ್ ತಪಾಸಣೆ ನಡೆಸಿದ್ದಾರೆ. ಈ ವೇಳೆ 6ಕೀ-ಪ್ಯಾಡ್ ಮೊಬೈಲ್ ಮತ್ತು 2 ಚಾರ್ಜರ್ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸಿದವರು, ಇದಕ್ಕೆ ಸಹಕರಿಸಿದವರು ಹಾಗೂ ನಿಷೇಧಿತ ವಸ್ತುಗಳನ್ನು ಉಪಯೋಗಿಸಿದವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ 2022ರ ಕಲಂ 42ರನ್ವಯ ಹಾಗೂ ಇತರ ಕಲಂಗಳಡಿ ಕ್ರಮ ಕೈಗೊಳ್ಳಲು ಬಳ್ಳಾರಿಯ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ತಪಾಸಣೆಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿರುವ ಡಿಜಿಪಿ ಅಲೋಕ್ ಕುಮಾರ್ ಅವರು, ತಂಡಕ್ಕೆ ರೂ.10,000 ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಅಂಗೀಕರಿಸದಂತೆ ರಾಜ್ಯಪಾಲರಿಗೆ ಮನವಿ: ಸಿ.ಕೆ.ರಾಮಮೂರ್ತಿ
ಬೆಂಗಳೂರು : ರಾಜ್ಯ ಸರಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೂ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ತಿಳಿಸಿದ್ದಾರೆ. ಮಂಗಳವಾರ ನಗರದ ಕೆ.ಜಿ.ರಸ್ತೆಯಲ್ಲಿರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗುರುವಾರ(ಡಿ.25)ದಂದು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗದಲ್ಲಿ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಭಾಗವಹಿಸುತ್ತಾರೆ ಎಂದು ತಿಳಿಸಿದರು. ಈ ವಿಧೇಯಕದ ವಿರುದ್ಧ ಇವತ್ತು ಇಲ್ಲಿ ಸಾಂಕೇತಿಕವಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇವತ್ತು ಹೋರಾಟ ನಡೆಸಲಾಗುತ್ತಿದೆ. ಮಸೂದೆ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ ಮಾಡಲಿದ್ದೇವೆ. ಕೇಂದ್ರ ಸರಕಾರಕ್ಕೂ ಪತ್ರ ಬರೆಯಲಿದ್ದೇವೆ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಹಾಗೂ ಜೈಲಿಗೆ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧ ರಾಷ್ಟ್ರಪತಿಯ ಗಮನವನ್ನು ಸೆಳೆಯಲಿದ್ದೇವೆ ಎಂದು ರಾಮಮೂರ್ತಿ ಹೇಳಿದರು. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಮಾತನಾಡಿ, ಅಂಬೇಡ್ಕರ್ ನೀಡಿದ ಸಂವಿಧಾನದಲ್ಲಿ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಎಂಬ 3 ಹಂತಗಳಿವೆ. ಇದೀಗ ವಾಕ್ ಸ್ವಾತಂತ್ರ್ಯದ ವಿರುದ್ಧವಾಗಿ ಹೊಸ ಕಾಯ್ದೆ ತಂದಿದ್ದಾರೆ. ನ್ಯಾಯಾಂಗದ ಅಧಿಕಾರವನ್ನು ಉಲ್ಲಂಘಿಸಿ ಡಿವೈಎಸ್ಪಿ ಮೇಲ್ಪಟ್ಟ ಅಧಿಕಾರಿ ಯಾರನ್ನಾದರೂ ಏಕಾಏಕಿ ಜೈಲಿಗೆ ಹಾಕುವ ಕಾನೂನು ತಂದಿದ್ದಾರೆ. ಈ ಮೂಲಕ ಮತ್ತೊಮ್ಮೆ ತುರ್ತು ಪರಿಸ್ಥಿತಿ ತಂದಿದ್ದಾರೆ ಎಂದು ಆಕ್ಷೇಪಿಸಿದರು. ತೆಲಂಗಾಣ, ಇತರ ಕಾಂಗ್ರೆಸ್ ಆಳ್ವಿಕೆಯ ರಾಜ್ಯಗಳು, ಇಂಡಿ ಒಕ್ಕೂಟದ ಆಡಳಿತ ಇರುವ ರಾಜ್ಯಗಳಲ್ಲಿ ಇಂಥ ಕಾನೂನು ತರಲು ಹೊರಟಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯ ಕಿತ್ತುಕೊಳ್ಳುವ ಈ ಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಹರೀಶ್ ತಿಳಿಸಿದರು. ನಮ್ಮ ಎಲ್ಲ ಸಂಸದರು, ಕೇಂದ್ರ ಸಚಿವರು ಇದರ ಕುರಿತು ರಾಷ್ಟ್ರಪತಿಯನ್ನು ಭೇಟಿ ಮಾಡಲಿದ್ದಾರೆ. ಇದಕ್ಕೆ ಅಂಕಿತ ಹಾಕದಂತೆ ಮನವಿ ನೀಡಲಿದ್ದಾರೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ಉತ್ತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ರಂಗಸ್ವಾಮಿ, ಬೆಂಗಳೂರು ಕೇಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಾಘವೇಂದ್ರ ರಾವ್, ಬೆಂಗಳೂರು ದಕ್ಷಿಣ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಆಶಾ ಎಸ್.ರಾವ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ದ್ವೇಷ ಭಾಷಣ ವಿರೋಧಿ ಕಾಯ್ದೆಯ ಮೂಲಕ ಸರ್ಕಾರದಿಂದ ತುರ್ತು ಪರಿಸ್ಥಿತಿ ಹೇರುವ ಸಂದರ್ಭ ಸೃಷ್ಟ: ವಿಜಯೇಂದ್ರ ಆರೋಪ
ದ್ವೇಷ ಭಾಷಣ ವಿರೋಧಿ ವಿಧೇಯಕದ ಮೂಲಕ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಲು ಹೊರಟಿದೆ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ. ವಿಪಕ್ಷಗಳ ಧ್ವನಿಯನ್ನೂ ದಮನ ಮಾಡಲು ಹೊರಟಿದ್ದಾರೆ. ಮುಂದಿನ ವಾರ ನಾನು, ವಿಪಕ್ಷ ನಾಯಕರು, ಶಾಸಕರು, ವಿಧಾನಪರಿಷತ್ ಸದಸ್ಯರು ಗೌರವಾನ್ವಿತ ರಾಜ್ಯಪಾಲರನ್ನೂ ಭೇಟಿ ಮಾಡಲಿದ್ದೇವೆ. ಸರಕಾರದ ಈ ಜನವಿರೋಧಿ ನಡೆಯನ್ನು ರಾಜ್ಯಪಾಲರ ಗಮನಕ್ಕೆ ತಂದು, ಮಧ್ಯಸ್ಥಿಕೆ ವಹಿಸಲು ಕೋರುತ್ತೇವೆ. ಕಾಂಗ್ರೆಸ್ ಸರಕಾರದ ಕಿವಿ ಹಿಂಡುವ ಕೆಲಸವನ್ನು ಮಾನ್ಯ ರಾಜ್ಯಪಾಲರು ಮಾಡಬೇಕೆಂಬ ಮನವಿ ಮಾಡಲಿದ್ದೇವೆ ಎಂದು ಹೇಳಿದರು.
ರಾಹುಲ್ ಗಾಂಧಿಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಪತ್ರ; ತನ್ನ ಹೇಳಿಕೆ ತಿರುಚಿ ವರದಿ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಂಗಳೂರು: ಮತಗಳ್ಳತನ ಕುರಿತ ತಮ್ಮ ಹೇಳಿಕೆಯನ್ನು ತಿರುಚಿ ತಪ್ಪಾದ ಅರ್ಥದಲ್ಲಿ ನಿಮಗೆ ವರದಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಬರೆದಿರುವ ಅವರು, ನನ್ನನ್ನು ಸಂಪುಟದಿಂದ ವಜಾ ಮಾಡಿರುವ ಸಂಬಂಧ ನಾನು ಕೆಲ ಸತ್ಯಾಂಶಗಳನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಮತಗಳ್ಳತನ ಅಭಿಯಾನಕ್ಕೆ ನಾನು ಮನಸಾರೆ ಬೆಂಬಲ ವ್ಯಕ್ತಪಡಿಸಿದ್ದೆ. ರಾಹುಲ್ ಗಾಂಧಿ ಬೆಂಗಳೂರಿಗೆ ಬಂದು ನಡೆಸಿದ ಪ್ರತಿಭಟನಾ ರ್ಯಾಲಿಯಲ್ಲಿ ನಾನೂ ಪಾಲ್ಗೊಂಡು ನನ್ನ ಸಂಪೂರ್ಣ ಬೆಂಬಲ ಸೂಚಿಸಿದ್ದೆ. ಈ ವಿಚಾರವಾಗಿ ನಿಮ್ಮ ಹೋರಾಟವನ್ನು ಹಾಗೂ ನಿಮ್ಮ ನಾಯಕತ್ವವನ್ನು ನಾನು ಬೆಂಬಲ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ. ನಾನು ಮತಗಳ್ಳತನದ ಬಗ್ಗೆ ನೀಡಿದ ಹೇಳಿಕೆಯಲ್ಲಿ ಕೆಪಿಸಿಸಿ ನಿಯೋಜಿಸಿದ್ದ ಬಿಎಲ್ಎಗಳು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಬಗ್ಗೆ ಒತ್ತಿ ಹೇಳುವುದಾಗಿತ್ತು. ಒಂದು ವೇಳೆ ನಮ್ಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಬಂಧಿತ ಅಧಿಕಾರಿಗಳು ಈ ಮತಪಟ್ಟಿ ಲೋಪದೋಷಗಳ ಬಗ್ಗೆ ಸರಿಯಾಗಿ ಗಮನ ಹರಿಸಿದ್ದರೆ, ಈ ಮತಗಳ್ಳತನವನ್ನು ತಪ್ಪಿಸಬಹುದಿತ್ತು. ಆ ಮೂಲಕ ಕಾಂಗ್ರೆಸ್ ರಾಜ್ಯದಲ್ಲಿ 8-10 ಕ್ಷೇತ್ರಗಳನ್ನು ಹೆಚ್ಚಿಗೆ ಗೆಲ್ಲಬಹುದಿತ್ತು ಎಂದು ವಿವರಿಸಿದ್ದಾರೆ. ಇತರ ರಾಜ್ಯಗಳಲ್ಲಿ ಈ ರೀತಿಯ ಲೋಪಗಳನ್ನು ತಪ್ಪಿಸಬಹುದಿತ್ತು. ಆ ಮೂಲಕ 30-40 ಸ್ಥಾನಗಳನ್ನು ಹೆಚ್ಚಿಗೆ ಗೆಲ್ಲಬಹುದಿತ್ತು. ಆಗ ನರೇಂದ್ರ ಮೋದಿ ಪ್ರಧಾನಿಯಾಗುತ್ತಿರಲಿಲ್ಲ. ಬದಲಾಗಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುತ್ತಿತ್ತು, ರಾಹುಲ್ ಗಾಂಧಿ ಪ್ರಧಾನಿಯಾಗುತ್ತಿದ್ದರು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ನಾನು ನೆಹರೂ ಕುಟುಂಬದ ನಿಷ್ಠಾವಂತ ಅಭಿಮಾನಿಯಾಗಿದ್ದೇನೆ. ಕರ್ನಾಟಕದಲ್ಲಿ ಇಂದಿರಾ ಗಾಂಧಿ ಮತ್ತು ದೇವರಾಜ್ ಅರಸು ಅವರ ನಾಯಕತ್ವದಲ್ಲಿ ಭೂ ಸುಧಾರಣೆಯ ಐತಿಹಾಸಿಕ ಕಾಯ್ದೆಯನ್ನು ಅನುಷ್ಠಾನ ಮಾಡಲಾಗಿತ್ತು. ಆ ವೇಳೆ ನಾನು ಭೂ ನ್ಯಾಯಾಧೀಕರಣದ ಸದಸ್ಯನಾಗಿ ಕರ್ತವ್ಯ ನಿರ್ವಹಿಸಿದ್ದೆ. ಇತ್ತೀಚಿನ ದಿನಗಳಲ್ಲಿ ಅಹಿಂದ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ 2013 ಮತ್ತು 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಸಿದ್ದರಾಮಯ್ಯ ಅವರು ದಣಿವರಿಯದೇ ಬಡವರು, ದುರ್ಬಲರು, ಒಬಿಸಿ, ಅಲ್ಪಸಂಖ್ಯಾತ ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಮತಗಳ್ಳತನ ಸಂಬಂಧ ನನ್ನ ಹೇಳಿಕೆಯ ಸತ್ಯಾಂಶ ಹಾಗೂ ವಾಸ್ತವಾಂಶವನ್ನು ತಮ್ಮ ಮುಂದಿಡಲು ನಾನು ಈ ಪತ್ರವನ್ನು ಬರೆದಿದ್ದೇನೆ. ನನ್ನ ಹೇಳಿಕೆಯನ್ನು ತಿರುಚಿ, ಅದನ್ನು ತಪ್ಪಾಗಿ ನಿಮ್ಮ ಗಮನಕ್ಕೆ ತಂದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾನು ತಮ್ಮಲ್ಲಿ ಮನವಿ ಮಾಡುತ್ತೇನೆ. ಈ ಬಗ್ಗೆ ಸವಿವರವಾಗಿ ಚರ್ಚಿಸುವ ಸಂಬಂಧ ತಮ್ಮ ಭೇಟಿಗೆ ನನಗೆ ಅವಕಾಶ ನೀಡುವಂತೆ ಕೋರುತ್ತೇನೆ ಎಂದು ಪತ್ರದಲ್ಲಿ ರಾಜಣ್ಣ ಮನವಿ ಮಾಡಿದ್ದಾರೆ.
ಕೊಪ್ಪಳ| 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ಕೊಪ್ಪಳ: ಚಾಕಲೇಟ್ ನೀಡಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲಪ್ಪ ತೋಳದ(37) ಬಂಧಿತ ಆರೋಪಿ. ಈತ 8ನೇ ತರಗತಿ ಓದಿತ್ತಿರುವ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಶಾಲೆಗೆ ರಜೆ ಇದ್ದ ಕಾರಣ ಮಗಳಿಗೆ ಅಂಗಡಿಯಲ್ಲಿ ಕೂರಿಸಿ ತಂದೆ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದಾನೆ. ಇದನ್ನು ಗಮನಿಸಿದ ಅರೋಪಿ ಮಲ್ಲಪ್ಪ ಅಂಗಡಿಗೆ ಬಂದು ಬಾಲಕಿಗೆ ಮತ್ತು ಬರಿಸುವ ಚಾಕಲೇಟ್ ನೀಡಿದ್ದಾನೆ. ಬಳಿಕ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿ ಗ್ರಾಮದಿಂದ ದೂರವಿರುವ ಜಮೀನಿನ ಶೆಡ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮಗಳು ಕಾಣಿಸುತ್ತಿಲ್ಲ ಎಂದು ಪಾಲಕರು ಗ್ರಾಮದಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ಬಾಲಕಿ ಸಿಗಲಿಲ್ಲ, ಸ್ವಲ್ಪ ಸಮಯದ ನಂತರ ಅಳುತ್ತಾ ಮನೆಗೆ ಬಂದ ಬಾಲಕಿ ನಡೆದ ಘಟನೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

15 C