ಬೆಂಗಳೂರು: ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಬಗ್ಗೆ ಮಾಹಿತಿ ನೀಡಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕೆ ನಾಲ್ಕು ಸಾರಿಗೆ ನಿಗಮಗಳಿಂದ ಉಚಿತ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಗುವುದು. ಸ್ಮಾರ್ಟ್ ಕಾರ್ಡ್ ತೋರಿಸಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು. ಈ ಮೂಲಕ ಮಹಿಳೆಯರು ಸಾರಿಗೆ ಬಸ್ ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ […]
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಸಂಕಷ್ಟ ತಂದ ಇಡಿ!
ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಸಂಕಷ್ಟ ತಂದಿದೆ. ಅವರನ್ನು ಬಂಧಿಸಿ, ಆಸ್ತಿ ಜಪ್ತಿ ಮಾಡಿದ್ದ ಇಡಿ ಈಗ ಜಾಮೀನು ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗಿದೆ. ಡಿಸೆಂಬರ್ 30ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕನ್ನಡದ ಹಿರಿಯ ನಟ ದೊಡ್ಡಣ್ಣ ಅಳಿಯ, ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಈ ಜಾಮೀನು ರದ್ದುಗೊಳಿಸುವಂತೆ ಕೋರಿ ಇಡಿ ಗುರುವಾರ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿಯಲ್ಲಿ […]
BREAKING NEWS: ಮಾ. 6ರಂದು ಸಿದ್ಧರಾಮಯ್ಯ ರಾಜ್ಯ ಬಜೆಟ್ ಮಂಡನೆ: ಮಾ. 27ರವರೆಗೆ ಬಜೆಟ್ ಅಧಿವೇಶನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 2026-27 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಖಾತೆಯನ್ನು ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡಿಸುವ ಬಗ್ಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮಾರ್ಚ್ 6ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ದಾಖಲೆಯ 16 ಬಜೆಟ್ ಮಂಡನೆ ಮಾಡಿದ್ದು, ಮಾರ್ಚ್ ನಲ್ಲಿ ಮಂಡಿಸುವ ಬಜೆಟ್ 17ನೇ ಬಜೆಟ್ ಆಗಿರುತ್ತದೆ. ಈಗಾಗಲೇ ಬಜೆಟ್ ಪೂರ್ವಭಾವಿಯಾಗಿ […]
ಶಿವಮೊಗ್ಗ: ಇನ್ನು ಮುಂದೆ ಪಹಣಿಯೊಂದಿಗೆ ಸ್ಕೆಚ್, ಆಕಾರ್ ಬಂದ್ ಮತ್ತು ಮ್ಯುಟೇಷನ್ ಸೇರಿದಂತೆ ಸಮಗ್ರ ದಾಖಲೆಗಳು ಜನರಿಗೆ ಲಭ್ಯವಾಗುವಂತಹ ಭೂ ಆಧಾರ್ ಎಂಬ ಯೋಜನೆಗೆ ನೀಲಿನಕ್ಷೆ ಹಾಕಿಕೊಳ್ಳಲಾಗಿದೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನನ್ನ ಭೂಮಿ ಹೆಸರಿನಲ್ಲಿ ದರಖಾಸ್ತು ಜಮೀನುಗಳ ಪೋಡಿ ಅಭಿಯಾನ ಶುರು ಮಾಡಿದ್ದು, ಹಿಂದೆ ಸರ್ಕಾರದಿಂದ ರೈತರಿಗೆ ಮಂಜೂರಾಗಿರುವ ಭೂಮಿಗೆ ಪಕ್ಕಾ […]
BREAKING: ಶಾಸಕ ಭೈರತಿ ಬಸವರಾಜ್ ಸಿಐಡಿ ಪೊಲೀಸರ ವಶಕ್ಕೆ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧನ ಭೀತಿಯಲ್ಲಿದ್ದ ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬೆನ್ನಲ್ಲೇ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಅಲ್ಲದೇ ಶರಣಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಶಾಸಕ ಭೈರತಿ ಬಸವರಾಜ್ ಅಹಮದಾಬಾದ್ ನಿಂದ ಬೆಂಗಳೂರುಗೆ ಆಗಮಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಸಿಐಡಿ ಪೊಲೀಸರು ಭೈರತಿ ಬಸವರಾಜ್ ಅವರನ್ನು ವಶಕ್ಕೆ […]
ಮಲೆ ಮಹದೇಶ್ವರ ಬೆಟ್ಟ ಮಹಾಶಿವರಾತ್ರಿ ಜಾತ್ರೆ: ಭಕ್ತರಿಗ ಬಿಗ್ ಅಪ್ಡೇಟ್
ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರೆ-2026ಕ್ಕೆ ಹೋಗುವ ಭಕ್ತರಿಗೆ ಮಹತ್ವದ ಸೂಚನೆ ಇದೆ. ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ. ಫೆಬ್ರವರಿ 13 ರಿಂದ 18, 2026ರ ತನಕ ಮಲೆ ಮಹದೇಶ್ವರ ಬೆಟ್ಟ ರಸ್ತೆ – ಹನೂರು ತಾಲ್ಲೂಕು ಜಾತ್ರೆ ಸಂದರ್ಭ ಭಕ್ತರ ಹೆಚ್ಚಿನ ಸಂಖ್ಯೆಯ ಜನರ ಆಗಮನ, ಅರಣ್ಯ ಪ್ರದೇಶದ ಕಡಿದಾದ ತಿರುವುಗಳು ಹಾಗೂ ವಾಹನ ದಟ್ಟಣೆ ಕಾರಣದಿಂದ ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು (ಆಟೋ ರಿಕ್ಷಾ & ಗೂಡ್ಸ್ […]
T20 World Cup 2026: ಸಹೋದರರ ಅಬ್ಬರಕ್ಕೆ ತಲೆಬಾಗಿದ ನೇಪಾಳ; ಮೊದಲ ಪಂದ್ಯ ಗೆದ್ದುಬೀಗಿದ ಇಟಲಿ
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 17ನೇ ಪಂದ್ಯದಲ್ಲಿ ಇಟಲಿ ನೇಪಾಳ ವಿರುದ್ಧ ಹತ್ತು ವಿಕೆಟ್ಗಳ ಗೆಲುವನ್ನು ದಾಖಲಿಸುವ ಮೂಲಕ ಇದೇ ಮೊದಲ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಪಂದ್ಯವನ್ನು ಗೆದ್ದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಇಟಲಿ ಬೌಲಿಂಗ್ ಆರಿಸಿಕೊಂಡು ನೇಪಾಳ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ನೇಪಾಳ 19.3 ಓವರ್ಗಳಲ್ಲಿ 123 ರನ್ಗೆ ಆಲ್ಔಟ್ ಆಗಿ ಇಟಲಿಗೆ 124 ರನ್ಗಳ ಗುರಿಯನ್ನು ನೀಡಿತ್ತು. ಈ […]
ಗುಡ್ ನ್ಯೂಸ್: ಕೃಷಿ ಚಟುವಟಿಕೆಗಳಿಗೆ ಕೆರೆ ಮಣ್ಣು ಬಳಸಲು ಅನುಮತಿ
ಚಿತ್ರದುರ್ಗ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳ ಅಭಿವೃದ್ಧಿಗಾಗಿ ರೈತರು ಕೆರೆಯ ಹೂಳು ಅಥವಾ ಮಣ್ಣನ್ನು ಬಳಸಿಕೊಳ್ಳಲು ಸಂಬಂಧಪಟ್ಟವರಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ಕುರಿತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದ್ದಾರೆ. ಗಣಿಗಾರಿಕೆ ಸಂಬಂಧಿಸಿದ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ರೈತರು ತಮ್ಮ ಜಮೀನಿನ ಕೃಷಿ ಉದ್ದೇಶಕ್ಕಾಗಿ ಮಣ್ಣು ಪಡೆಯುವ ಮೊದಲು ಕೆರೆಯ ಮಾಲೀಕತ್ವ ಹೊಂದಿರುವ ಸಣ್ಣ ನೀರಾವರಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಅಥವಾ ಗ್ರಾಮ ಪಂಚಾಯತಿಯಿಂದ […]
BREAKING: ಟಿಪ್ಪರ್ ಲಾರಿಯಲ್ಲಿ ಶಾಲಾ ವಿದ್ಯಾರ್ಥಿಗಳ ಪ್ರವಾಸ: ಮುಖ್ಯ ಶಿಕ್ಷಕ ಸಸ್ಪೆಂಡ್
ಮಂಗಳೂರು: ಟಿಪ್ಪರ್ ಲಾರಿಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕಿರಣ್ ಸಸ್ಪೆಂಡ್ ಆಗಿರುವ ಬಳೆಂಜ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳೆಂಜ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಟಿಪ್ಪರ್ ಲಾರಿಯಲ್ಲಿ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಶಿಕ್ಷಕರ ಬೇಜವಾಬ್ದಾರಿಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಡಿಡಿಪಿಐ ಶಶಿಧರ್, ಬಳೆಂಜ ಶಾಲೆಯ ಮುಖ್ಯ ಶಿಕ್ಷಕರನ್ನು ಅಮನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
Big News: ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಪ್ರೋತ್ಸಾಹ ಧನ, ಆದೇಶ
ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಗುಡ್ನ್ಯೂಸ್ ನೀಡಿದೆ. ಪ್ರೋತ್ಸಾಹಧನ ನೀಡುವ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದೆ. ಈ ಕುರಿತು ಆದೇಶವನ್ನು ಹೊರಡಿಸಲಾಗಿದೆ. ಆಯುಕ್ತರು ಕಂದಾಯ ಇಲಾಖೆ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಇ-ಪೌತಿ ತಂತ್ರಾಂಶದ ಮೂಲಕ ಮೃತ ಖಾತೆದಾರರ ವಾರಸುದಾರರಿಗೆ ಪಹಣಿ ದಾಖಲಿಸಲು ಕ್ರಮವಹಿಸಿರುವ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರಿಗೆ ಪ್ರೋತ್ಸಾಹಧನ ನೀಡುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಆಯವ್ಯಯ […]
ಇಂದು ( ಫೆಬ್ರವರಿ 12 ) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ನಮೀಬಿಯಾ ತಂಡಗಳ ನಡುವೆ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 18ನೇ ಪಂದ್ಯ ನಡೆಯಲಿದೆ. ಮೊದಲಿಗೆ ಉದ್ಘಾಟನೆಯ ದಿನ ವಾಂಖೆಡೆಯಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ವಿರುದ್ಧ ಗೆಲುವು ಸಾಧಿಸಿದ್ದ ಟೀಮ್ ಇಂಡಿಯಾ ಪಾಲಿಗೆ ಇದು ಎರಡನೇ ಪಂದ್ಯವಾಗಿದ್ದು, ಕಳೆದ ಪಂದ್ಯಕ್ಕೆ ಹೋಲಿಸಿದರೆ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಆಡುವ ಬಳಗದಲ್ಲಿ ಕೆಲ ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿದೆ. ಈ ಕುರಿತು […]
ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆಯ ಎಚ್ಚರಿಕೆ
ಮುಂಬೈ: ಭಾರತಕ್ಕೆ ಮರಳಿದರೆ ಮಾತ್ರ ಅರ್ಜಿ ವಿಚಾಅರಣೆ ನಡೆಸುವುದಾಗಿ ಬಾಂಬೆ ಹೈಕೋರ್ಟ್ ಉದ್ಯಮಿ ವಿಜಯ್ ಮಲ್ಯಗೆ ಕೊನೆ ಎಚ್ಚರಿಕೆ ನೀಡಿದೆ. ಬಾಂಬೆ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾಯಮೂರ್ತಿ ಗೌತಮ್ ಅಂಕಡ್ ಪೀಠ ಆರ್ಥಿಕ ಅಪರಾಧಿಗಳ ಕಾಯ್ದೆ ಸಾಂವಿಧಾನಿಕ ಸಿಂಧುತ್ವ ಮತ್ತು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸುವ ಪ್ರಕ್ರಿಯೆಯನ್ನು ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ವಿಜಯ್ ಮಲ್ಯ ಭಾರತಕ್ಕೆ ಬರಲು ಉದ್ದೇಶಿತರಾಗಿದ್ದಾರೆಯೇ ಎಂಬುದನ್ನು ಸ್ಪಷ್ಟಪಡಿಸಲು […]
Big News: ಬೆಂಗಳೂರು ನಗರಕ್ಕೆ ಕೇಂದ್ರದಿಂದ ಬಿಗ್ ಗಿಫ್ಟ್
ಕೇಂದ್ರ ಸರ್ಕಾರ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವ ಪ್ರಕ್ರಿಯೆಗೆ ವೇಗ ನೀಡಿದೆ. ವಿದ್ಯುತ್ ವಾಹನಗಳ ಉತ್ತೇಜನಕ್ಕಾಗಿಯೇ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈಗ ಈ ಯೋಜನೆ ಅಡಿಯಲ್ಲಿಯೇ ಕರ್ನಾಟಕದ ರಾಜಧಾನಿ ಬೆಂಗಳೂರು ನಗರಕ್ಕೆ ಬಿಗ್ ಗಿಫ್ಟ್ ನೀಡಲಾಗಿದೆ. ಪ್ರಧಾನಮಂತ್ರಿ ವಿದ್ಯುತ್ ಚಾಲನ ಕ್ರಾಂತಿ (ಪಿಎಂ-ಇ-ಡ್ರೈವ್) ಯೋಜನೆಯಡಿಯಲ್ಲಿ ಬಸ್, ಇ-ದ್ವಿಚಕ್ರ ವಾಹನ, ಇ-ತ್ರಿಚಕ್ರ ವಾಹನ, ಇ-ಆಂಬ್ಯುಲೆನ್ಸ್ ಮತ್ತು ಇ-ಟ್ರಕ್ಗಳು ಸೇರಿದಂತೆ ವಿದ್ಯುತ್ ವಾಹನಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಈಗ ಪಿಎಂ-ಇ-ಡ್ರೈವ್ ಯೋಜನೆಯ ಅನ್ವಯ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ […]
ಮಂತ್ರಾಲಯಕ್ಕೆ ಸರ್ಕಾರಿ ಬಸ್: ಭಕ್ತರಿಗೆ ಮಹತ್ವದ ಅಪ್ಡೇಟ್
ರಾಯಚೂರು-ಮಂತ್ರಾಲಯ ನಡುವೆ ರಾತ್ರಿ 9 ಗಂಟೆಯ ಬಳಿಕ ಸರ್ಕಾರಿ ಬಸ್ ಸೇವೆ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಿದ್ದವು. ಈ ಕುರಿತು ಚರ್ಚೆಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಲಾಗಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಪರವಾಗಿ ಹೊರಡಿಸಿರುವ ಪ್ರಕಟಣೆಯನ್ನು ಲಗತ್ತಿಸಿದ್ದಾರೆ. ಈ ಪ್ರಕಟಣೆ ರಾತ್ರಿ 9 ಗಂಟೆಯ ನಂತರ ರಾಯಚೂರಿನಿಂದ ಮಂತ್ರಾಲಯಕ್ಕೆ ಬಸ್ ಸೇವೆ ಇಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್-X […]
BREAKING: ಕಾಫಿ ತೋಟಕ್ಕೆ ನೀರು ಹಾಯಿಸುವಾಗ ದುರಂತ: ವಿದ್ಯುತ್ ತಂತಿ ತುಳಿದು ವ್ಯಕ್ತಿ ದುರ್ಮರಣ
ಕೊಡಗು: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಹಾಲುಗುಂದ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಈ ದುರಂತ ಸಂಭವಿಸಿದೆ. ಕೆ.ಜಿಮಮ್ (67) ಮೃತ ದುರ್ದೈವಿ. ಕಾಫಿ ತೋಟಕ್ಕೆ ನೀರು ಬಿಡಲೆಂದು ಹೋಗಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಿಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಜೀಮಮ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿತ್ರದುರ್ಗ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಚಿತ್ರದುರ್ಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಚಳ್ಳಕೆರೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮುಂಬರುವ ಶೈಕ್ಷಣಿಕ ಸಾಲಿಗೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಡಿಟಿಡಿಎಂ-ಯಾಂತ್ರಿಕ ಇಂಜಿನಿಯರಿಂಗ್ (ಬಿ.ಇ/ಎಂ.ಟೆಕ್-ಮೆಕಾನಿಕಲ್), ಡಿಎಂಸಿಹೆಚ್-ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ (ಬಿ.ಇ/ಎಂ.ಟೆಕ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ […]
ನಮ್ಮ ಇಲಾಖೆಯಿಂದ ಯಾರನ್ನೂ ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿಲ್ಲ: ಪಶುಸಂಗೋಪನಾ ಇಲಾಖೆ ಸಚಿವ ವೆಂಕಟೇಶ್ ಸ್ಪಷ್ಟನೆ
ಬೆಂಗಳೂರು: ಪಶುಸಂಗೋಪನಾ ಇಲಾಖೆಯಿಂದ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪಶುಸಂಗೋಪನಾ ಇಲಾಖೆ ಸಚಿವರೇ ಕೆಲ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ವೆಂಕಟೇಶ್, ನಮ್ಮ ಇಲಾಖೆಯಿಂದ ನಾವು ಯಾರನ್ನೂ ಪ್ರವಾಸಕ್ಕೆ ಕಳುಹಿಸುತ್ತಿಲ್ಲ. ಯಾವ ವಿದೇಶ ಪ್ರವಾಸಕ್ಕೂ ನಮ್ಮ ಇಲಾಖೆಯಿಂದ ಕಳುಹಿಸುತ್ತಿಲ್ಲ. ಶಾಸಕರ ವಿದೇಶ ಪ್ರವಾಸ ವಿಚಾರದಲ್ಲಿ ನಮ್ಮ ಇಲಾಖೆ ಹೆಸರು ಯಾಕೆ ಬಂತೋ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಅಧಿವೇಶನ ಸಂದರ್ಭದಲ್ಲಿ ವಿದೇಶ ಪ್ರವಾಸದ ಬಗ್ಗೆ ಚರ್ಚೆಯಾಗಿತ್ತು. ನೀವೂ ಬನ್ನಿ ಎಂದು ಕೆಲವರು […]
BIG NEWS: ಸಂಘರ್ಷವಿರುವುದು ಬಿಜೆಪಿಯಲ್ಲಿ ಹೊರತು ಕಾಂಗ್ರೆಸ್ ನಲ್ಲಿ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ನವದೆಹಲಿ: ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡಿಲ್ಲ. ಪಕ್ಷ ತನ್ನದೇ ಆದ ಗುರಿ ಹೊಂದಿದ್ದು, ಪಕ್ಷದ ಯಶಸ್ಸು ಹಾಗೂ ಪಕ್ಷದ ಹಿತಾಸಕ್ತಿ, ಕರ್ನಾಟಕ ಹಾಗೂ ದೇಶದ ಹಿತದೃಷ್ಟಿ ಆಧಾರದ ಮೇಲೆ ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಸೂಕ್ತ […]
ತುಂಗಾರತಿ ಮಹೋತ್ಸವ: ಬಾಗಿನ ಅರ್ಪಿಸಿದ ಜಮೀರ್ ಅಹ್ಮದ್ ಖಾನ್
ಕಂಪ್ಲಿ ಉತ್ಸವ-2026ರ ಅಂಗವಾಗಿ ಕಂಪ್ಲಿ ಪಟ್ಟಣದ ಸೋಮಪ್ಪನ ದೇವಾಲಯದ ಮುಂಭಾಗದಲ್ಲಿರುವ ಸೋಮಪ್ಪ ಕೆರೆಯಲ್ಲಿ ತುಂಗಭದ್ರಾ ಆರತಿ ಮಹೋತ್ಸವ ಹಾಗೂ ಬಾಗಿನ ಸಮರ್ಪಣೆಯ ಧಾರ್ಮಿಕ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ವಾರಾಣಸಿಯಿಂದ ಆಗಮಿಸಿದ್ದ 10ಕ್ಕೂ ಹೆಚ್ಚು ಅರ್ಚಕರು, ಗಂಗಾರತಿ ಮಾದರಿಯಲ್ಲಿ ತುಂಗಾರತಿಯನ್ನು ವೈಭವದಿಂದ ನಡೆಸಿಕೊಟ್ಟರು. ಧಾರ್ಮಿಕ ವಿಧಿ-ವಿಧಾನದೊಂದಿಗೆ ಸೋಮಪ್ಪ ಕೆರೆಯ ತಟದಲ್ಲಿ ವಿವಿಧ ಪೂಜಾ ಕಾರ್ಯಗಳು ತುಂಗಾರತಿ ಭಾಗವಾಗಿ ನಡೆದವು. ಬಾಗಿನ ಸಮರ್ಪಣೆ: ತುಂಗಾರತಿಗೂ ಮುನ್ನ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ […]
ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕ್ಯಾಂಟೀನ್ನಲ್ಲಿ ಕಾಫಿ ಬಿಲ್ ಕೇಳಿದ್ದಕ್ಕೆ ಪೊಲೀಸರೇ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಆವರಣದಲ್ಲಿರುವ ಕ್ಯಾಂಟೀನ್ ನಲ್ಲಿ ಈ ಘಟನೆ ನಡೆದಿದೆ. ಕೆಂಪೇಗೌಡ ಏರ್ ಪೋರ್ಟ್ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ – ಬಾಳಪ್ಪ, ಕುಮಾರ್ ಮತ್ತು ಗಂಗರಾಜು ಹಲ್ಲೆ ನಡೆಸಿದ ಆರೋಪಿಗಳು. ನೈಟ್ ಬೀಟ್ (ರಾತ್ರಿ ಗಸ್ತು) ಸಮಯದಲ್ಲಿ ಈ ಮೂವರು ಪೊಲೀಸರು ಕ್ಯಾಂಟೀನ್ಗೆ ಕಾಫಿ ಕುಡಿಯಲು […]
ಬಾಲಿವುಡ್ ಖ್ಯಾತ ನಟಿ ರಾಣಿ ಮುಖರ್ಜಿ ಅವರು ಬುಧವಾರ ಬೆಳಿಗ್ಗೆ ಕೋಲ್ಕತ್ತಾದ ಪ್ರಸಿದ್ಧ ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇತ್ತೀಚೆಗಷ್ಟೇ ಬಿಡುಗಡೆಯಾಗಿ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿರುವ ತಮ್ಮ ‘ಮರ್ದಾನಿ 3’ ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ಅವರು ದೇವಿಯ ಆಶೀರ್ವಾದ ಪಡೆದರು. ಚಿಕ್ಕಮ್ಮನ ಜೊತೆ ದೇವಸ್ಥಾನಕ್ಕೆ ಭೇಟಿ ಮುಂಬೈನಿಂದ ಕೋಲ್ಕತ್ತಾಗೆ ಆಗಮಿಸಿದ ರಾಣಿ ಮುಖರ್ಜಿ, ದೇವಸ್ಥಾನಕ್ಕೆ ನೇರವಾಗಿ ತೆರಳಿದರು. ಈ ಸಂದರ್ಭದಲ್ಲಿ ಅವರ ಜೊತೆಗೆ ಅವರ ಚಿಕ್ಕಮ್ಮ ಹಾಗೂ ಬಂಗಾಳಿ ಚಿತ್ರರಂಗದ ಖ್ಯಾತ […]
ಸಿನಿಮಾ ರಂಗಕ್ಕೆ ಕಾಲಿಟ್ಟ ಜೆಡಿಎಸ್ ನಾಯಕ ಸಾರಾ ಮಹೇಶ್
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಿನಿಮಾ ಕ್ಷೇತ್ರದ ಅನೇಕರು ರಾಜಕೀಯಕ್ಕೆ ಬಂದಿದ್ದಾರೆ. ರಾಜಕೀಯ, ಸಿನಿಮಾ ಎರಡೂ ಕಡೆ ಸಕ್ರಿಯವಾಗಿರುವವರು ಇದ್ದಾರೆ. ತಮಿಳುನಾಡಿನಲ್ಲಿ ನಟ ವಿಜಯ್ ಟಿವಿಕೆ ಪಕ್ಷವನ್ನು ಸ್ಥಾಪಿಸಿ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ. ಕರ್ನಾಟಕದಲ್ಲಿ ಮಾಜಿ ಸಚಿವ, ಜೆಡಿಎಸ್ ನಾಯಕ ಸಾರಾ ಮಹೇಶ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೌದು ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ರೀತಿಯಲ್ಲಿ ಅವರು ನಿರ್ಮಾಪಕರಾಗಿ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಮೈಸೂರು ಜಿಲ್ಲೆಯ ಪ್ರಭಾವಿ ನಾಯಕ, ಕೆ.ಆರ್.ನಗರ ಕ್ಷೇತ್ರದ ಮಾಜಿ ಶಾಸಕ ಸಾರಾ ಮಹೇಶ್ ಗೌರಿ ಆರ್ಟ್ಸ್ […]
ಪಾಟ್ನಾದಲ್ಲೇ ಉಳಿದ ಲಗೇಜ್, ಪುಣೆ ತಲುಪಿದ ಪ್ರಯಾಣಿಕರು ! ಏರ್ಲೈನ್ ಎಡವಟ್ಟು ಮಾಡಿದರೆ ಹೀಗೆ ಮಾಡಿ
ವಿಮಾನಯಾನ ಸಂಸ್ಥೆಯ ಕಡೆಯಿಂದ ಇತ್ತೀಚೆಗೆ ಒಂದು ದೊಡ್ಡ ಎಡವಟ್ಟು ನಡೆದಿದ್ದು, ಇದರಿಂದ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಪ್ರಯಾಣಿಕರು ಪಾಟ್ನಾದಿಂದ ಪುಣೆಗೆ ಸುರಕ್ಷಿತವಾಗಿ ತಲುಪಿದರೂ, ಅವರ ಲಗೇಜ್ಗಳನ್ನು ಏರ್ಲೈನ್ ಸಂಸ್ಥೆಯು ತರುವುದನ್ನೇ ಮರೆತಿತ್ತು. ಲಗೇಜ್ಗಳು ಪಾಟ್ನಾದಲ್ಲಿದ್ದರೆ, ಪ್ರಯಾಣಿಕರು ಪುಣೆಯಲ್ಲಿದ್ದರು. ಏರ್ಲೈನ್ನ ಈ ಬೇಜವಾಬ್ದಾರಿತನದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿಗದಿತ ಸಮಯಕ್ಕೆ ಪ್ರಯಾಣಿಕರು ತಲುಪಿದರೂ, ಅವರ ಲಗೇಜ್ಗಳನ್ನು ವಿಮಾನಕ್ಕೆ ಲೋಡ್ ಮಾಡಿರಲಿಲ್ಲ. ಪಾಟ್ನಾದಿಂದ ಪುಣೆಗೆ ಹೊರಟಿದ್ದ ಇಂಡಿಗೋ ವಿಮಾನ 6E-126 ಸಂಜೆ […]
BIG NEWS: ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗುತ್ತಿದ್ದ ಭಕ್ತ ಹೃದಯಾಘಾತದಿಂದ ಸಾವು
ಹಾಸನ: ಮಹಾಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ಸಾಗಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆಯುವವರ ಸಂಖ್ಯೆ ಹೆಚ್ಚು. ಹೀಗೆ ಪಾದಯತರೆ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಭಕ್ತರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 50 ವರ್ಷದ ಕೃಷ್ಣ ಹೃದಯಾಘಾತಕ್ಕೆ ಬಲಿಯಾದವರು. ಹಾಸನದ ಜಕ್ಕೇನಹಳ್ಳಿ ಗ್ರಾಮದವರು. ಕೃಷ್ಣ ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುತ್ತಿದ್ದರು. ಅವರ ಅಳಿಯ ದಿನೇಶ್ ಎಂಬುವವರು ಹಿಂದೇಯೇ ಸಾಗಿದ್ದರು. ಆದರೆ ಅಳಿಯನಿಂತ […]
BREAKING: ಒತ್ತುವರಿ ತೆರವು ವೇಳೆ ಬಿಡಿಎ ನೌಕರರ ಸಂಘದ ಅಧ್ಯಕ್ಷನಿಂದಲೇ ಅಧಿಕಾರಿಗಳಿಗೆ ಧಮ್ಕಿ; ಶೋಕಾಸ್ ನೋಟಿಸ್ ಜಾರಿ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ-ಬಿಡಿಎ ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಬಿಡಿಎ ನೌಕರರ ಸಂಘದ ಅಧ್ಯಕ್ಷನೇ ಅಧಿಕಾರಿಗಳಿಗೆ ಧಮ್ಕಿ ಹಾಕಿ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಎಂಬುವವರು ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಿಡಿಎ ಎಇಇ ಅಶೋಕ್ ಬಾಗಿ ಅವರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ, ಆಯುಕ್ತರ ಆದೇಶವನ್ನೇ ಪ್ರಶ್ನಿಸಿ ಮಂಜುನಾಥ್ ಗಲಾಟೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ […]
‘ರಾಜ್ಯ ಸರ್ಕಾರಿ’ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ |Govt Employee
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಕಚೇರಿ ನಡವಳಿಕೆ ಮತ್ತು ಶಿಸ್ತಿನ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DPAR) ಎಲ್ಲಾ ನೌಕರರಿಗೆ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ನಿಯಮ ಉಲ್ಲಂಘಿಸುವ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಸಿದೆ. ಹೊಸ ನಿಯಮಗಳ ಮುಖ್ಯಾಂಶಗಳು ಅಧಿಕಾರಿಗಳಿಗೆ ಸೂಚನೆ: ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಮತ್ತು ನೌಕರರು ನಗದು ಘೋಷಣೆ ಹಾಗೂ ಚಲನವಲನ ವಹಿಯನ್ನು ನಿರ್ವಹಿಸುತ್ತಿದ್ದಾರೆಯೇ ಎಂದು ಆಗಿಂದಾಗ್ಗೆ ಪರಿಶೀಲಿಸುವಂತೆ […]
ಉಡುಪಿ ವಿಮಾನ ನಿಲ್ದಾಣ ಯೋಜನೆ: ಅಪ್ಡೇಟ್
ಕರ್ನಾಟಕದಲ್ಲಿ ಹಲವಾರು ವಿಮಾನ ನಿಲ್ದಾಣ ಯೋಜನೆಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಬೆಂಗಳೂರು ನಗರದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಆಸಕ್ತಿ ತೋರಿದೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಲೋಕಾರ್ಪಣೆಯಾಗಲಿದೆ. ಹಾಸನ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಮೈಸೂರು ವಿಮಾನದ ರನ್ ವೇ ವಿಸ್ತರಣೆ ಕುರಿತು ಚರ್ಚೆಗಳು ಸಾಗಿವೆ. ಈಗ ಉಡುಪಿ ಜಿಲ್ಲೆಯ ವಿಮಾನ ನಿಲ್ದಾಣದ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಪ್ಡೇಟ್ ನೀಡಿದ್ದಾರೆ. ಸದ್ಯ ಉಡುಪಿಗೆ […]
ಮನೆ ಬಳಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ಹರಿದ ಕಾರು: ಕಂದಮ್ಮ ಸ್ಥಳದಲ್ಲೇ ಸಾವು
ಬೆಳಗಾವಿ: ಪುಟ್ಟ ಮಕ್ಕಳು ಆಟವಾಡುತ್ತಿದ್ದರೆ ಎಂದು ಪೋಷಕರು ಕೊಂಚ ನಿರ್ಲಕ್ಷ ಮಾಡಿದರೆ ಅಷ್ಟರಲ್ಲಿ ಅನಾಹುತಗಳನ್ನೇ ಮಾದಿಕೊಂಡು ಬಿಟ್ಟಿರುತ್ತಾರೆ. ಇಲ್ಲೊಂದು ಘಟನೆಯಲ್ಲಿ ಇಂತದ್ದೇ ಅನಾಹುತ ಸಂಭವಿಸಿ ಮಗು ಕಾರಿನ ಚಕ್ರಕ್ಕೆ ಸಿಲುಕಿ ಬಲಿಯಾಗಿದೆ. ಮನೆ ಮುಂದೆ ಆಟವಾಡುತ್ತಾ ಕುಳಿತಿದ್ದ ಮಗು ಮೇಲೆ ವೇಗವಾಗಿ ಬಂದ ಕಾರು ಹರಿದು ಹೋಗಿದ್ದು, ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವಾಟರೆ ಗ್ರಾಮದಲ್ಲಿ ನಡೆದಿದೆ. ಒಂದೂವರೆ ವರ್ಷದ ಮಗು ತ್ರಿಷಾ ಮೃತ ಕಂದಮ್ಮ. ರಸ್ತೆ ಪಕ್ಕದಲ್ಲಿಯೇ ಇದ್ದ […]
ಬೆಂಗಳೂರಿಗರೇ ಎಚ್ಚರ : ‘ಕಾವೇರಿ’ನೀರು ಪೋಲು ಮಾಡಿದ್ರೆ ಬೀಳುತ್ತೆ 5000 ರೂ. ದಂಡ.!
ಬೆಂಗಳೂರು : ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೀರಿನ ಅಭಾವ ಉಂಟಾಗದಂತೆ ತಡೆಯಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ . ಕುಡಿಯುವ ನೀರನ್ನು (ಕಾವೇರಿ ನೀರು) ಅತಿ ಅವಶ್ಯಕವಲ್ಲದ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸಿದರೆ ಮೊದಲ ಬಾರಿಗೆ ₹5,000 ದಂಡ ವಿಧಿಸಲಾಗುತ್ತದೆ. ಉಲ್ಲಂಘನೆ ಮುಂದುವರಿದರೆ ಪ್ರತಿದಿನಕ್ಕೆ ₹500 ಹೆಚ್ಚುವರಿ ದಂಡ ವಿಧಿಸಲಾಗುತ್ತದೆ. ಹೌದು, ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ಅಭಾವ ಉಂಟಾಗದಂತೆ ತಡೆಯಲು […]
ಐಫೋನ್ ಪ್ರಿಯರಿಗೆ ವ್ಯಾಲೆಂಟೈನ್ಸ್ ಡೇ ಗಿಫ್ಟ್: ಫ್ಲಿಪ್ಕಾರ್ಟ್ ನಲ್ಲಿ ಐಫೋನ್ 16 ಬೆಲೆ ಭಾರಿ ಇಳಿಕೆ
ಬೆಂಗಳೂರು: ನೀವು ಐಫೋನ್ ಖರೀದಿಸುವ ಪ್ಲಾನ್ ಮಾಡಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಸಿಹಿ ಸುದ್ದಿ ಇಲ್ಲಿದೆ. ಪ್ರೇಮಿಗಳ ದಿನಾಚರಣೆಯ (Valentine’s Day) ಅಂಗವಾಗಿ ಫ್ಲಿಪ್ಕಾರ್ಟ್ ಆಯೋಜಿಸಿರುವ ವಿಶೇಷ ಸೇಲ್ನಲ್ಲಿ ಐಫೋನ್ 16 (iPhone 16) ಬೆಲೆಯಲ್ಲಿ ಬರೋಬ್ಬರಿ ಕಡಿತ ಮಾಡಲಾಗಿದೆ. ಕಳೆದ ದೀಪಾವಳಿ ಸೇಲ್ ಬಳಿಕ ಇದೇ ಮೊದಲ ಬಾರಿಗೆ ಐಫೋನ್ 16 ಇಷ್ಟೊಂದು ಕಡಿಮೆ ದರಕ್ಕೆ ಲಭ್ಯವಾಗುತ್ತಿದೆ. ಎಷ್ಟು ಹಣ ಉಳಿಸಬಹುದು? (Price Drop Details) ಐಫೋನ್ 16 ಮಾರುಕಟ್ಟೆಗೆ ಬಂದಾಗ ಇದರ ಆರಂಭಿಕ ಬೆಲೆ […]
ತಲೆ ದಿಂಬಿನ ಬಳಿ ‘ಮೊಬೈಲ್’ಇಟ್ಟುಕೊಂಡು ಮಲಗಿದ್ರೆ ಕ್ಯಾನ್ಸರ್ ಬರುತ್ತಾ.? : ತಜ್ಞರಿಂದ ಅಸಲಿ ಸತ್ಯ ಬಯಲು
ಭಾರತದಲ್ಲಿ ಹೆಚ್ಚಿನ ಜನರು ಮಲಗುವ ಮುನ್ನ ಮೊಬೈಲ್ ಸ್ಕ್ರೋಲ್ ಮಾಡುತ್ತಾರೆ ಅಥವಾ ಫೋನ್ ಅನ್ನು ತಲೆಯ ಪಕ್ಕದಲ್ಲೇ (ದಿಂಬಿನ ಬಳಿ) ಇಟ್ಟುಕೊಂಡು ಮಲಗುತ್ತಾರೆ. ಈ ಅಭ್ಯಾಸವು ಸಾಮಾನ್ಯವಾಗಿದೆ, ಆದರೆ ಇದು ಆರೋಗ್ಯದ ಮೇಲೆ ಪರಿಣಾಮ ಬೀರಬಹುದೇ? ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನ ಅರಿವಳಿಕೆ ತಜ್ಞ (Anesthesiologist) ಡಾ. ಮೈರೋ ಫಿಗುರಾ ಅವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಅವರು ಏನು ಹೇಳಿದ್ದಾರೆ ಮತ್ತು ನಿಜವಾಗಿಯೂ ಇದರಿಂದ ಕ್ಯಾನ್ಸರ್ ಅಪಾಯವಿದೆಯೇ ಎಂಬ ವಿವರ ಇಲ್ಲಿದೆ. ನಿಜವಾಗಿಯೂ […]
ನಂದಿನಿ ಉತ್ಪನ್ನಗಳಿಗೆ ರಾಯಭಾರಿಯಾಗಿ ಸುಧಾರಾಣಿ ನೇಮಕ: ಬಮೂಲ್ ನಡೆಗೆ KMFನಿಂದ ತೀವ್ರ ಆಕ್ಷೇಪ
ಬೆಂಗಳೂರು: ಮೈಸೂರು ಸ್ಯಾಂಡಲ್ ಉತ್ಪನ್ನಗಳಿಗೆ ಖ್ಯಾತ ನಟಿ ತಮನ್ನಾ ಭಾಟಿಯಾರನ್ನು ರಾಯಭಾರಿಯನ್ನಾಗಿ ನೇಮಕ ಮಾಡಿದ್ದಕ್ಕೆ ಕೆಲ ದಿನಗಳ ಹಿಂದೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡದ ನಟಿಯರನ್ನು ಬಿಟ್ಟು ಪರಭಾಷಾ ನಟಿಯರಿಗೆ ಸರ್ಕಾರ ಮಣೆ ಹಾಕುತ್ತಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ಬೆಂಅಗ್ಳೂರು ಹಾಲೂ ಒಕ್ಕೂಟ-ಬಮೂಲ್ ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯನ್ನಾಗಿ ಕನ್ನಡದ ಖ್ಯಾತ ನಟಿ ಸುಧಾರಾಣಿ ಅವರನ್ನು ನೇಮಕ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ನಂದಿನಿ ಉತ್ಪನ್ನಗಳಿಗೆ ರಾಯಭಾರಿಯನ್ನಾಗಿ ಸುಧಾರಾಣಿ ಅವರನ್ನು ನೇಮಕ ಮಾಡುವ ಮೂಲಕ ಬಮೂಲ್ ಸ್ವತಂತ್ರ ನಿರ್ಧಾರ […]
T20 World Cup 2026: ವೇಗದ ಟಿ20 ಶತಕ ಬಾರಿಸಿದ ಶನಕ; ಟೂರ್ನಿಯಲ್ಲಿ ಅತ್ಯಧಿಕ ರನ್ ಬಾರಿಸಿದ ಲಂಕಾ
ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಟೂರ್ನಿಯ ಗ್ರೂಪ್ ಹಂತದ 16ನೇ ಪಂದ್ಯ ನಡೆಯುತ್ತಿದ್ದು, ಶ್ರೀಲಂಕಾ ಹಾಗೂ ಒಮನ್ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ಒಮನ್ ಶ್ರೀಲಂಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಶ್ರೀಲಂಕಾ ರನ್ ಮಳೆ ಸುರಿಸಿದ್ದು, 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 225 ರನ್ ಕಲೆಹಾಕಿ ಒಮನ್ಗೆ 226 ರನ್ಗಳ ಗುರಿಯನ್ನು ನೀಡಿದೆ. ಇದು ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೆ ದಾಖಲಾದ ಅತ್ಯಧಿಕ […]
ಆಕಾಶದಲ್ಲಿ ಅದ್ಭುತ ಬೆಂಕಿಯ ಉಂಗುರ: ಫೆ. 17ಕ್ಕೆ ವರ್ಷದ ಮೊದಲ ಸೂರ್ಯಗ್ರಹಣ
ಬೆಂಗಳೂರು: ಖಗೋಳ ಪ್ರಿಯರೇ ಗಮನಿಸಿ, 2026ರ ಮೊದಲ ಸೌರ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 17ರಂದು ಆಕಾಶದಲ್ಲಿ ರಿಂಗ್ ಆಫ್ ಫೈರ್(Ring of Fire) ಖ್ಯಾತಿಯ ಕಂಕಣ ಸೂರ್ಯಗ್ರಹಣ ಸಂಭವಿಸಲಿದೆ. ವಿಜ್ಞಾನಿಗಳು ಈ ವಿದ್ಯಮಾನವನ್ನು ವೀಕ್ಷಿಸಲು ಕಾತರರಾಗಿದ್ದರೆ, ಭಾರತದಲ್ಲಿ ಇದರ ಪರಿಣಾಮವೇನು ಎಂಬ ಚರ್ಚೆಗಳು ಶುರುವಾಗಿವೆ. ಏನಿದು ಕಂಕಣ ವಿಶೇಷ?ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಆದರೆ ಚಂದ್ರನು ಭೂಮಿಯಿಂದ ತುಸು ದೂರವಿದ್ದಾಗ, ಸೂರ್ಯನನ್ನು ಸಂಪೂರ್ಣವಾಗಿ ಮುಚ್ಚಲು ಅವನಿಗೆ ಸಾಧ್ಯವಾಗುವುದಿಲ್ಲ. ಈ ವೇಳೆ […]
ಆಳಂದದ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಅನುಮತಿ
ನವದೆಹಲಿ: ಕಲಬುರಗಿ ಜಿಲ್ಲೆಯ ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಕಲಬುರಗಿ ಹೈಕೋರ್ಟ್ ಪೀಠ ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ. ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಅವಕಾಶ ಕೊಡದಂತೆ ದರ್ಗಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶವನ್ನು ಪುರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ದರ್ಗಾದಲ್ಲಿ ಮಹಾಶಿವರಾತ್ರಿ ಪೂಜೆಗೆ ಇದ್ದ ಕಾನೂನು ತಿಡಕುಗಳು ನಿವಾರಣೆಯಾದಂತಾಗಿದೆ. ಫೆಬ್ರವರಿ 11ರಂದು ಕಲಬುರಗಿ ಹೈಕೋರ್ಟ್ ಪೀಠ ಶಿವರಾತ್ರಿ […]
ಹಾವೇರಿ: 4 ರೈಲು ಯೋಜನೆಗಾಗಿ ಕೇಂದ್ರ ಸಚಿವರಿಗೆ ಮನವಿ
ಹಾವೇರಿ ಜಿಲ್ಲೆಯ ವಿವಿಧ ರೈಲು ಯೋಜನೆಗಳ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಈ ಕುರಿತು ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಇಂದು ನವದೆಹಲಿಯಲ್ಲಿ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಈ ಕೆಳಕಂಡ ಬೇಡಿಕೆಯೊಳಗೊಂಡ ಮನವಿಯನ್ನು ಸಲ್ಲಿಸಿದೆನು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾವ-ಯಾವ ಯೋಜನೆಗಳು ಈ ಸಂದರ್ಭದಲ್ಲಿ ನಮ್ಮ ಮನವಿಯನ್ನು ಆಲಿಸಿದ ಸಚಿವರು ಶ್ರೀಘ್ರವಾಗಿ ಪರಿಶೀಲಿಸಿ, ಕ್ರಮಕೈಗೊಳ್ಳುವುದಾಗಿ […]
ರಾಜ್ಯದ ಮಡಿವಾಳ ಮಾಚಿದೇವ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳಲ್ಲಿ ಬರುವ […]
ತೂಕ ಇಳಿಸಬೇಕೇ? ಹಾಗಿದ್ದರೆ ನಿಮ್ಮ ದಿನಚರಿಯಲ್ಲಿರಲಿ ಬ್ಲ್ಯಾಕ್ ಕಾಫಿ: ಇಲ್ಲಿವೆ 5 ಬಲವಾದ ಕಾರಣಗಳು
ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಬ್ಲ್ಯಾಕ್ ಕಾಫಿ (Black Coffee) ಒಂದು ವರದಾನವಿದ್ದಂತೆ. ಹಾಲಿನ ಕಾಫಿಗೆ ಹೋಲಿಸಿದರೆ ಬ್ಲ್ಯಾಕ್ ಕಾಫಿ ಹೆಚ್ಚು ಆರೋಗ್ಯಕರ ಮಾತ್ರವಲ್ಲದೆ, ದೇಹದ ಕೊಬ್ಬನ್ನು ಕರಗಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಹಾರ್ವರ್ಡ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ನಡೆಸಿದ ಸಂಶೋಧನೆಯ ಪ್ರಕಾರ, ದಿನಕ್ಕೆ ನಾಲ್ಕು ಕಪ್ ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ದೇಹದ ಕೊಬ್ಬನ್ನು ಅಂದಾಜು ಶೇ. 4 ರಷ್ಟು ಕಡಿಮೆ ಮಾಡಬಹುದು. ಬ್ಲ್ಯಾಕ್ ಕಾಫಿ ತೂಕ ಇಳಿಕೆಗೆ ಹೇಗೆ ಸಹಕಾರಿ ಎಂಬುದಕ್ಕೆ ಇಲ್ಲಿವೆ 5 ಪ್ರಮುಖ […]

17 C