SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಹಾಂಗ್‌ಕಾಂಗ್‌ ಬೆಂಕಿ ದುರಂತ; ಸಾವಿನ ಸಂಖ್ಯೆ 130ಕ್ಕೆ ಏರಿಕೆ ….!

ವಿಕ್ಟೋರಿಯಾ: ಹಾಂಗ್ ಕಾಂಗ್‌ನಲ್ಲಿ ವಸತಿ ಕಟ್ಟಡವೊಂದರಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ ಮೂರು ದಿನಗಳ ನಂತರ ಸರ್ಕಾರ ಶುಕ್ರವಾರ ತನ್ನ ರಕ್ಷಣಾ ಪ್ರಯತ್ನಗಳನ್ನು ಪೂರ್ಣಗೊಳಿಸಿರುವುದಾಗಿ ಘೋಷಿಸಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಅಂತ್ಯಗೊಳ್ಳುತ್ತಿದ್ದಂತೆ, ಹಾಂಗ್ ಕಾಂಗ್ ಟವರ್ ಬೆಂಕಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 130 ದಾಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹಾಂಗ್ ಕಾಂಗ್ ಸರ್ಕಾರ, ಸಾವಿನ ಸಂಖ್ಯೆ 128 ಎಂದು ಹೇಳಿದೆ ಮತ್ತು ಸುಮಾರು 200 ಜನರು ಕಾಣೆಯಾಗಿದ್ದಾರೆ ಮತ್ತು […]

ಪ್ರಜಾ ಪ್ರಗತಿ 28 Nov 2025 3:29 pm

ಕಿಯಾರಾ ಅಡ್ವಾಣಿ –ಸಿದ್ಧಾರ್ಥ್ ಮಲ್ಹೋತ್ರಾ ಮಗಳ ಹೆಸರೇನು ಗೊತ್ತಾ …..? ಈ ಹೆಸರಿನ ಅರ್ಥ ಏನು?

ನವದೆಹಲಿ : ಬಾಲಿವುಡ್‌ನ ಕ್ಯೂಟ್‌ ಕಪಲ್‌ ಎಂದೇ ಕರೆಸಿಕೊಳ್ಳುವ ನಟಿ ಕಿಯಾರಾ ಅಡ್ವಾಣಿ ಮತ್ತು ನಟ ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಯು ನಾಲ್ಕು ತಿಂಗಳ ಹಿಂದೆ ಹೆಣ್ಣು ಮಗುವಿಗೆ ಪೋಷಕರಾಗಿದ್ದರು. ಇದೀಗ ಈ ದಂಪತಿಯು ತಮ್ಮ ಮುದ್ದಾದ ಮಗಳಿಗೆ ನಾಮಕರಣ ಮಾಡಿದ್ದಾರೆ. ಸರಾಯಾಹ್ (Saraayah) ಎಂಬ ಹೆಸರು ಹೀಬ್ರೂ ಭಾಷೆಯಿಂದ ಬಂದಿದ್ದು, ಇದರ ಅರ್ಥ ‘ದೈವಿಕ ರಾಜಕುಮಾರಿ’ ಅಥವಾ ʻರಾಜಕುಮಾರಿ’ ಎಂದಿದೆ. ಮಗಳ ಕಾಲು ಫೋಟೋವನ್ನು ಹಂಚಿಕೊಂಡಿರುವ ಕಿಯಾರಾ ಮತ್ತು ಸಿದ್ದಾರ್ಥ್‌, “ನಮ್ಮ ಪ್ರಾರ್ಥನೆಗಳಿಂದ, ನಮ್ಮ […]

ಪ್ರಜಾ ಪ್ರಗತಿ 28 Nov 2025 3:24 pm

5ನೇ ರಾಜ್ಯ ಹಣಕಾಸು ಆಯೋಗದಿಂದ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: 5ನೇ ರಾಜ್ಯ ಹಣಕಾಸು ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿಯನ್ನು ಗುರುವಾರ ಸಲ್ಲಿಸಿದೆ.2026-2030 ರವರೆಗಿನ ವರದಿಯನ್ನು ಆಯೋಗದ ಅಧ್ಯಕ್ಷ ಎ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಔಪಚಾರಿಕವಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆಯೋಗದ ಸದಸ್ಯರು ಉಪಸ್ಥಿತರಿದ್ದರು.ವರದಿ ಕುರಿತು ಪ್ರಶ್ನಿಸಿದಾಗ ಉತ್ತರಿಸಿದ ಪರ್ವೇಜ್ ಅವರು, ಮುಖ್ಯಮಂತ್ರಿಗಳ […]

ಪ್ರಜಾ ಪ್ರಗತಿ 28 Nov 2025 12:46 pm

ಏಕಾಏಕಿ ಗಗನಕ್ಕೇರಿದ ಟೊಮೆಟೋ ಬೆಲೆ : ಕಂಗಾಲಾದ ಗ್ರಾಹಕರು ……!

ನವದೆಹಲಿ: ದೇಶಾದ್ಯಂತ ಟೊಮೆಟೊ ಬೆಲೆಗಳು ಹಠಾತ್ತನೆ ಏರಿಕೆಯಾಗಿದ್ದು, ಇದು ಗ್ರಾಹಕರು ಕಂಗಾಲಾಗುವಂತೆ ಮಾಡಿದೆ.ನಿನ್ನೆಯವರೆಗೂ ಸಾಮಾನ್ಯ ದರದಲ್ಲಿ ಲಭ್ಯವಿದ್ದ ಟೊಮೆಟೊ, ಈಗ ಒಮ್ಮೆಲೇ ಗಗನಕ್ಕೆ ಏರಿಕೆಯಾಗಿದೆ. ಇದು ಗ್ರಾಹಕರು ಅಚ್ಚರಿಗೊಳ್ಳುವಂತೆ ಮಾಡಿದೆ. ಗ್ರಾಹಕ ವ್ಯವಹಾರಗಳ ಇಲಾಖೆಯ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ನವೆಂಬರ್ 26 ರ ಹೊತ್ತಿಗೆ ಟೊಮೆಟೊದ ಸರಾಸರಿ ಚಿಲ್ಲರೆ ಬೆಲೆ ಕೆಜಿಗೆ 52.87 ರೂ. ಆಗಿತ್ತು. ಒಂದು ತಿಂಗಳ ಹಿಂದೆ, ಇದು 37 ರೂ. ಆಗಿತ್ತು, ಆದರೆ ಕೇವಲ 30 ದಿನಗಳಲ್ಲಿ ದರ […]

ಪ್ರಜಾ ಪ್ರಗತಿ 28 Nov 2025 12:44 pm

ಮೂರನೇ ಜಗತ್ತಿನ ದೇಶಗಳಿಗೆ ಮತ್ತೊಂದು ಶಾಕ್ ನೀಡಿದ ಡೊನಾಲ್ಡ್ ಟ್ರಂಪ್!

ವಾಷಿಂಗ್ಟನ್: ಶ್ವೇತಭವನದ ಬಳಿ ಅಫ್ಘಾನ್ ಪ್ರಜೆಯೊಬ್ಬರು ಇಬ್ಬರು ರಾಷ್ಟ್ರೀಯ ಗಾರ್ಡ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ ಕೆಲವು ದಿನಗಳ ನಂತರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದು, “ಎಲ್ಲಾ ಮೂರನೇ ಜಗತ್ತಿನ ದೇಶಗಳಿಂದ ವಲಸೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಇಂತಹ ಕ್ರಮವು ಜಾಗತಿಕವಾಗಿ ಭಾರಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಉದ್ಯೋಗ, ಶಿಕ್ಷಣ ಮತ್ತು ತಮ್ಮ ದೇಶಗಳಲ್ಲಿ ಕಿರುಕುಳದಿಂದ ತಪ್ಪಿಸಿಕೊಳ್ಳಲು ಅಮೆರಿಕಕ್ಕೆ ವಲಸೆ ಹೋಗುವ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ. […]

ಪ್ರಜಾ ಪ್ರಗತಿ 28 Nov 2025 12:41 pm

ಹೊಸ ದಾಖಲೆ ಬರೆದ Hanuman Chalisa: 5 ಬಿಲಿಯನ್ ವೀಕ್ಷಣೆ ದಾಟಿದ ವೀಡಿಯೊ..!

ನವದೆಹಲಿ: ಭಾರತೀಯ ವಿಡಿಯೋವೊಂದು ಮೊದಲ ಬಾರಿಗೆ ಯುಟ್ಯೂಬ್‌ನಲ್ಲಿ 5 ಬಿಲಿಯನ್-‌ ಅಂದರೆ 500 ಕೋಟಿ ವೀಕ್ಷಣೆ ಪಡೆದು ಹೊಸ ದಾಖಲೆ ಮಾಡಿದೆ. ಆ ವಿಡಿಯೋ ಯಾವುದು ಅಂತೀರಾ ಬೇರ್ಯಾವುದೂ ಅಲ್ಲ, ‘ಶ್ರೀ ಹನುಮಾನ್ ಚಾಲೀಸಾ’ದ ವಿಡಿಯೋ.ದೇಶದ ಪ್ರಮುಖ ಸಂಗೀತ ಸಂಸ್ಥೆಯಾದ ಟಿ-ಸೀರೀಸ್‌ (T- Series) 14 ವರ್ಷಗಳ ಹಿಂದೆ ಹೊರತಂದಿದ್ದ ಆಲ್ಬಂನ ವಿಡಿಯೋ ಇದು. ಗುಲ್ಶನ್ ಕುಮಾರ್ ಅಭಿನಯದ ಮತ್ತು ಹರಿಹರನ್ ಹಾಡಿರುವ ಈ ಭಕ್ತಿಗೀತೆಯು ಜಾಗತಿಕವಾಗಿ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ವಿಡಿಯೋಗಳಲ್ಲಿ ಒಂದಾಗಿದೆ. […]

ಪ್ರಜಾ ಪ್ರಗತಿ 28 Nov 2025 12:39 pm

ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್‌ ಶೋ….!

ಉಡುಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶ್ರೀಕೃಷ್ಣನೂರು ಉಡುಪಿಗೆ ಆಗಮಿಸಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿದ್ದರೆ ಜನರು ಮೋದಿಯವರಿಗೆ ಹೂ ಮಳೆ ಸುರಿಸಿದ್ದಾರೆ. ಮೋದಿಯವರನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ನೆರೆದು ಅವರಿಗೆ ಸ್ವಾಗತ ಕೋರಿದರು. ಕರಾವಳಿಯ ಕಲೆಯಾದ ಯಕ್ಷಗಾನ ಸೇರಿದಂತೆ ಹಲವಾರು ಸಾಂಸ್ಕೃತಿಕ […]

ಪ್ರಜಾ ಪ್ರಗತಿ 28 Nov 2025 12:17 pm

ರೋಹಿತ್‌-ಕೊಹ್ಲಿ ಇದ್ದಾಗಲೂ ಸರಣಿ ಸೋತಿದ್ದೇವೆ : ಗವಾಸ್ಕರ್‌!

ಮುಂಬೈ ಭಾರತ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್‌ ಸರಣಿಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಟೀಮ್‌ ಇಂಡಿಯಾ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ಹಾಗೂ ಆಯ್ಕೆ ಸಮಿತಿ ವಿರುದ್ಧ ಅಸಮಧಾನ ವ್ಯಕ್ತವಾಗುತ್ತಿದೆ. ಆದರೆ, ಭಾರತ ತಂಡದ ಮಾಜಿ ಆಟಗಾರ ಸುನೀಲ್‌ ಗವಾಸ್ಕರ್‌ ಅವರು ಕೋಚ್‌ ಗೌತಮ್‌ ಗಂಭೀರ್‌ ಮತ್ತು ಆಯ್ಕೆ ಸಮಿತಿಯ ನಿರ್ಧಾರಗಳನ್ನು ಸಮರ್ಥಿಸಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ತಂಡದಲ್ಲಿದ್ದಾಗ ಉತ್ತಮ ಪ್ರದರ್ಶನ ಮೂಡಿಬರುತ್ತಿತ್ತು. ಉಭಯ ಆಟಗಾರರ ವಿದಾಯದ […]

ಪ್ರಜಾ ಪ್ರಗತಿ 28 Nov 2025 12:14 pm

ಮೀರತ್​ ಕೊಲೆ ಪ್ರಕರಣ : DNA ಪರೀಕ್ಷೆಗೆ ಸೌರಭ್ ಕುಟುಂಬಸ್ಥರ ಆಗ್ರಹ

ಮೀರತ್ ಪತಿ ಸೌರಭ್ ರಜಪೂತ್ ಅವರನ್ನು ಭೀಕರವಾಗಿ ಕೊಲೆ ಮಾಡಿ ಅವರ ದೇಹವನ್ನು ನೀಲಿ ಡ್ರಮ್‌ನಲ್ಲಿ ತುಂಬಿಸಿದ ಪ್ರಕರಣದಲ್ಲಿ ಮೀರತ್ ಜೈಲಿನಲ್ಲಿರುವ ಮುಸ್ಕಾನ್, ನವಜಾತ ಮಗಳಿಗೆ ರಾಧಾ ಎಂದು ಹೆಸರಿಟ್ಟಿದ್ದು, ಈ ನಡುವೆ ಸೌರಭ್ ಕುಟುಂಬಸ್ಥರು ಮಗುವಿನ ಡಿಎನ್‌ಎ ಪರೀಕ್ಷೆಗೆ ಒತ್ತಾಯಿಸಿದ್ದಾರೆ.ನವೆಂಬರ್ 24 ರಂದು ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜಿನಲ್ಲಿ ಮಗು ಜನಿಸಿದ್ದು, ಅದೇ ದಿನ ಸೌರಭ್ ಅವರ ಜನ್ಮದಿನವೂ ಆಗಿತ್ತು ಎಂದು ತಿಳಿದುಬಂದಿದೆ. ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಮುಖ್ಯಸ್ಥ […]

ಪ್ರಜಾ ಪ್ರಗತಿ 28 Nov 2025 11:47 am

ಬೆಳಗಾವಿ: ಖಾನಾಪುರದಲ್ಲಿ ತಹಶಿಲ್ದಾರ್ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ಕಚ್ಚಾಟ!

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆದಿರುವ ಬೆನ್ನಲ್ಲೇ ಖಾನಾಪುರದಲ್ಲಿ ತಹಶೀಲ್ದಾರ್‌ ಹುದ್ದೆಗೆ ಇಬ್ಬರು ಅಧಿಕಾರಿಗಳು ಗುದ್ದಾಟ ನಡೆಸಿದ್ದಾರೆ.ಈ ಹಿಂದೆ ದುಂಡಪ್ಪ ಕೋಮಾರ ಎಂಬುವರು ಖಾನಾಪುರ ತಹಶೀಲ್ದಾರ್‌ ಆಗಿ ಕೆಲಸ ಮಾಡುತ್ತಿದ್ದರು. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸರ್ಕಾರ ಅವರನ್ನು ವರ್ಗಾವಣೆ ಮಾಡಿ ಮಂಜುಳಾ ನಾಯಕ್ ಅವರನ್ನು ನೇಮಿಸಿತ್ತು. ಹೈಕೋರ್ಟ್ ಆದೇಶದಂತೆ ನ.13ರಂದು ಸರ್ಕಾರದ ಅಧೀನ ಕಾರ್ಯದರ್ಶಿ ಉಕ್ತಾರ್ ಪಾಷ ಅವರು ಖಾನಾಪುರದ ತೆರವಾದ ತಹಶೀಲ್ದಾರ್ ಸ್ಥಾನಕ್ಕೆ ಮಂಜುಳಾ ನಾಯಕ್ ಅವರನ್ನು ನೇಮಕ ಮಾಡಿ ಆದೇಶ […]

ಪ್ರಜಾ ಪ್ರಗತಿ 28 Nov 2025 11:41 am

‘ಪಾಂಚಜನ್ಯ’ಮೊಳಗಿಸಲು ಮೋದಿ ಬರ್ತಿದ್ದಾರೆ; ಸುನಿಲ್ ಕುಮಾರ್

ಉಡುಪಿ: ರಾಜ್ಯದಲ್ಲಿ ಎರಡು ತಿಂಗಳಿನಿಂದ ಶಾಸನ ಇಲ್ಲದ ದುಶ್ಯಾಸನ ಆಡಳಿತ ನಡೆಯುತ್ತಿದೆ. ಆಡಳಿತಕ್ಕಿಂತ ಹೆಚ್ಚಾಗಿ ಕುರ್ಚಿ ಕದನ ನಡೆಯುತ್ತಿದ್ದು ಶೇ. 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಹಾಗೂ ಡಿಸಿಎಂ ನವದೆಹಲಿಗೆ ಸೀಮಿತರಾಗಿದ್ದಾರೆ ಎಂದ ಶಾಸಕ ವಿ.ಸುನಿಲ್‌ ಕುಮಾರ್‌ ಆರೋಪಿಸಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲಾಗುವುದು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬಗ್ಗೆ ಯಾವುದೇ ವಿಶ್ವಾಸವಿಲ್ಲ. […]

ಪ್ರಜಾ ಪ್ರಗತಿ 28 Nov 2025 11:38 am

ಬಿಜೆಪಿಗೆ ಡಿ.ಕೆ ಶಿವಕುಮಾರ್ ಅವಶ್ಯಕತೆಯಿಲ್ಲ: ವಿ. ಸೋಮಣ್ಣ

ಚಿಕ್ಕಮಗಳೂರು: ಬಿಜೆಪಿಗೆ ಡಿ.ಕೆ ಶಿವಕುಮಾರ್ ಅವರ ಅವಶ್ಯಕತೆಯಿಲ್ಲ ಆ ಬಗ್ಗೆ ನಾವು ಯೋಚಿಸಿಯೂ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಡಿಕೆಶಿಗೆ ಬಿಜೆಪಿಯಿಂದ ಬೆಂಬಲದವಿದೆ ಎಂಬ ವದಂತಿ ಬಗ್ಗೆ ಪ್ರತಿಕ್ರಿಯಿಸಿದರು. ಅವರ ಅವಶ್ಯಕತೆ ನಮಗಿಲ್ಲ. ಅದರ ಬಗ್ಗೆ ನಾವು ಚಿಂತನೆಯನ್ನು ಕೂಡ ಮಾಡಿಲ್ಲ. ಬಿಜೆಪಿ ಬಲಿಷ್ಠವಾಗಿದೆ ಎಂದಿದ್ದಾರೆ. ಸೀಟಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಟಕವಾಡುತ್ತಿದ್ದು, ಜನಾದೇಶ ಧಿಕ್ಕರಿಸಿದ್ದಾರೆ. ಜನಾದೇಶಕ್ಕೆ […]

ಪ್ರಜಾ ಪ್ರಗತಿ 28 Nov 2025 11:37 am

ಐಶ್ವರ್ಯಾ ರೈ ಗಂಡನಿಂದ ದೂರಾದರೆ ಮತಾಂತರ ಮಾಡಿ ಮದುವೆ ಆಗುತ್ತೇನೆ: ಪಾಕಿಸ್ತಾನದ ಧಾರ್ಮಿಕ ಗುರು ಹೇಳಿಕೆ ವೈರಲ್

ಮುಂಬಯಿ: ಐಶ್ವರ್ಯಾ ರೈ ಗಂಡನಿಂದ ದೂರವಾದರೆ ಅವರನ್ನು ಮತಾಂತರ ಮಾಡಿ ಮದುವೆ ಆಗುತ್ತೀನಿ ಎಂದು ಪಾಕಿಸ್ತಾನದ ಧಾರ್ಮಿಕ ಗುರು ಮುಫ್ತಿ ಅಬ್ದುಲ್ ಖಾವಿ ಹೇಳಿದ್ದಾರೆ.ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಐಶ್ವರ್ಯಾ ಮತ್ತು ಅಭಿಷೇಕ್ ನಡುವೆ ಸಮಸ್ಯೆಗಳಿವೆ ಮತ್ತು ಅವರು ಬೇರೆಯಾಗುವ ಸಾಧ್ಯತೆ ಇದೆ ಎನ್ನುವ ಮಾತುಗಳನ್ನು ನಾನು ಕೇಳಿದ್ದೇನೆ. ಒಂದು ವೇಳೆ ಅವರು ಬೇರ್ಪಟ್ಟರೆ, ಐಶ್ವರ್ಯಾ ರೈ ನನಗೆ ಮದುವೆಯ ಪ್ರಸ್ತಾಪವನ್ನು ಕಳುಹಿಸುತ್ತಾರೆ ಎಂದಿದ್ದಾರೆ. ಮುಸ್ಲಿಮೇತರ ವ್ಯಕ್ತಿಯನ್ನು ನೀವು ಹೇಗೆ ಮದುವೆಯಾಗಬಹುದು ಎಂದು […]

ಪ್ರಜಾ ಪ್ರಗತಿ 28 Nov 2025 11:35 am

ನೀರಿನ‌ ಬಿಲ್ ಬಾಕಿ ಉಳಿಸಿಕೊಂಡ ಬೆಂಗಳೂರಿಗರಿಗೆ ಗುಡ್ ನ್ಯೂಸ್….! : ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ….!

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ನೀರಿನ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ಒನ್ ಟೈಂ ಪಾವತಿಗೆ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ಬಡ್ಡಿ ದಂಡ, ಇತರೆ ಶುಲ್ಕ ಶೇ.100 ರಷ್ಟು ಮನ್ನಾ ಮಾಡುವುದಾಗಿ ತಿಳಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, […]

ಪ್ರಜಾ ಪ್ರಗತಿ 28 Nov 2025 11:31 am

ಬಳ್ಳಾರಿ ಜಿಲ್ಲೆಯಲ್ಲಿ ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ!

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಮುದ್ದೇನೂರು ಗ್ರಾಮದ ಬಳಿ ವಿಜಯನಗರ ಪರಂಪರೆ ಪರಿಶೋಧನಾ ಗುಂಪಿನ ಸಂಶೋಧನಾ ತಂಡವು ಸೂರ್ಯ (ಸೂರ್ಯ ದೇವರು) ನ ಕಪ್ಪು ಶಿಲೆಯ ಶಿಲ್ಪ ಮತ್ತು ಬ್ರಹ್ಮನ ಅಪರೂಪದ ವಿಗ್ರಹವನ್ನು ಪತ್ತೆ ಹಚ್ಚಿದೆ. ಗ್ರಾಮಕ್ಕೆ ಹೋಗುವ ರಸ್ತೆಯ ಉದ್ದಕ್ಕೂ ಇರುವ ಮೌನೇಶ್ ಎಂಬುವವರಿಗೆ ಸೇರಿದ ಹೊಲದ ಅಂಚಿನಲ್ಲಿ ಈ ವಿಗ್ರಹಗಳು ಕಂಡುಬಂದಿವೆ. ಕಪ್ಪು ಕಲ್ಲಿನಿಂದ ಕೆತ್ತಿದ ಈ ಶಿಲ್ಪಗಳನ್ನು ಸ್ಥಳೀಯ ನಿವಾಸಿಗಳಾದ ಹನುಮಂತಪ್ಪ, ಜಡೇಶ್ ಮತ್ತು ಬಲ್ಕುಂಡಿ ಗ್ರಾಮದ ಕುಬೇರಪ್ಪ […]

ಪ್ರಜಾ ಪ್ರಗತಿ 28 Nov 2025 11:25 am

ಅತಿ ಹೆಚ್ಚಿನ ದರಕ್ಕೆ ಮಾರಾಟವಾದ ನಂಬರ್ ಪ್ಲೇಟ್…..! : ಪಡೆಯುವುದು ಹೇಗೆ ಗೊತ್ತಾ….?

ಬೆಂಗಳೂರು: ಸ್ವಂತ ಕಾರು ತೆಗೆದುಕೊಳ್ಳಬೇಕೆಂಬ ಆಸೆ ಪ್ರಯೋರ್ವರಿಗೂ ಇರುತ್ತದೆ.. ಅದರಲ್ಲೂ ಈ ಮಧ್ಯಮವರ್ಗದವರಿಗೆ ಇಂತಹ ಆಸೆಗಳು, ಕನಸುಗಳು ಜಾಸ್ತಿ. ಅದನ್ನು ಈಡೇರಿಸಿಕೊಳ್ಳಲು ಹಗಲು ರಾತ್ರಿಯನ್ನದೇ ದುಡಿಯುತ್ತಾರೆ ಕೂಡ. ಲಕ್ಷ ಕೊಟ್ಟು ಕಾರು ತೆಗೆದುಕೊಳ್ಳಲು ಏನೇನೂ ತ್ಯಾಗ ಮಾಡಿರುತ್ತಾರೆ. ಆದರೆ ಇಲ್ಲೊಬ್ಬ ಉದ್ಯಮಿ ಕೇವಲ ಕಾರಿನ ನೋಂದಣಿ ಸಂಖ್ಯೆಗೆ ಕೊಟ್ಟಿಗಟ್ಟಲೇ ಹಣ ಸುರಿದಿದ್ದಾನೆ. ಭಾರತದಲ್ಲಿ ಕಾರು ಕೊಳ್ಳುವುದು ಒಂದು ಕನಸು ಮತ್ತು ಒಂದು ಪ್ರಯತ್ನ ಹೇಗೋ, ಹಾಗೆಯೇ ಅದಕ್ಕೆ ಅದೃಷ್ಟದ ನಂಬರ್‌ ಪಡೆಯಲು […]

ಪ್ರಜಾ ಪ್ರಗತಿ 28 Nov 2025 11:20 am

ಇಂದು ಉಡುಪಿಗೆ ಮೋದಿ 40 ನಿಮಿಷ ಮೊದಲೇ ಆಗಮನ……!

ಉಡುಪಿ ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿಗೆ ಆಗಮಿಸಲಿದ್ದಾರೆ. ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯಲ್ಲಿ ಅವರ ರೋಡ್ ಶೋ ಇರುವುದಿಲ್ಲ ಎಂದು ತಿಳಿಸಲಾಗಿತ್ತು. ಆದರೆ, 40 ನಿಮಿಷ ಮುಂಚಿತವಾಗಿ ಉಡುಪಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಬೆಳಗ್ಗೆ ಒಂದೂವರೆ ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ವೀಕ್ಷಿಸಲು ಆಗಮಿಸುವವರು 9.30ರೊಳಗೆ ಆಗಮಿಸಬೇಕೆಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಕಾರ್ಕಳ ಮನವಿ ಮಾಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ 11.30ರವರೆಗೆ […]

ಪ್ರಜಾ ಪ್ರಗತಿ 28 Nov 2025 10:40 am

ಡಬ್ಲ್ಯುಪಿಎಲ್ ಮೆಗಾ ಹರಾಜು; ಆರ್‌ಸಿಬಿ ತೆಕ್ಕೆಗೆ ಸ್ಟಾರ್‌ ಆಲ್‌ರೌಂಡರ್‌

ಮುಂಬಯಿ ಮಹಿಳಾ ಐಪಿಎಲ್ ಖ್ಯಾತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ನಾಲ್ಕನೇ ಆವೃತ್ತಿಗೆ ಪೂರ್ವಭಾವಿಯಾಗಿ ನಡೆದ ಆಟಗಾರ್ತಿಯರ ಮೆಗಾ ಹರಾಜಿನಲ್ಲಿ ಭಾರತ ಕ್ರಿಕೆಟ್ ತಂಡದ ತಾರಾ ಆಲ್‌ರೌಂಡರ್ ದೀಪ್ತಿ ಶರ್ಮಾ ಅವರು ಅತ್ಯಧಿಕ ಮೊತ್ತ ಪಡೆದರು. ರೈಟ್ ಟು ಮ್ಯಾಚ್ ಕಾರ್ಡ್ ಬಳಕೆ ಮಾಡಿ 3.20 ಕೋಟಿಗೆ ಯುಪಿ ವಾರಿಯರ್ಸ್ ಮತ್ತೆ ತಂಡಕ್ಕೆ ಸೇರಿಸಿಕೊಂಡಿತು. ಆದರೆ ಆಸ್ಟ್ರೇಲಿಯಾದ ನಾಯಕಿ ಅಲಿಸ್ಸಾ ಹೀಲಿ ಅನ್‌ಸೋಲ್ಡ್‌ ಆದದ್ದು ಅಚ್ಚರಿ ಮೂಡಿಸಿತು. ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್‌ನಲ್ಲಿ […]

ಪ್ರಜಾ ಪ್ರಗತಿ 28 Nov 2025 10:07 am

ಹೆಡ್‌ ಕೋಚ್‌ ಸ್ಥಾನದಿಂದ ಗೌತಮ್‌ ಗಂಭೀರ್‌ರನ್ನು ಕಿತ್ತಾಕಿ : ಮನೋಜ್‌ ತಿವಾರಿ!

ನವದೆಹಲಿ: ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್‌ ಸರಣಿಯನ್ನು 0-2 ಅಂತರದಲ್ಲಿ ವೈಟ್‌ವಾಷ್‌ ಆಘಾತ ಅನುಭವಿಸಿದ ಬೆನ್ನಲ್ಲೆ ಹೆಡ್‌ ಕೋಚ್‌ ಸ್ಥಾನದಿಂದ ಗೌತಮ್‌ ಗಂಭೀರ್‌ ಅವರನ್ನು ತೆಗೆಯಬೇಕೆಂದು ಮಾಜಿ ಟೀಮ್‌ ಇಂಡಿಯಾ ಬ್ಯಾಟ್ಸ್‌ಮನ್‌ ಮನೋಜ್‌ ತಿವಾರಿ ಆಗ್ರಹಿಸಿದ್ದಾರೆ. ಭಾರತ ತಂಡ ಬುಧವಾರ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿಅಂತ್ಯವಾಗಿದ್ದ ಎರಡನೇ ಟೆಸ್ಟ್‌ ಪಂದ್ಯವನ್ನು 408 ರನ್‌ಗಳ ಭಾರಿ ಅಂತರದಲ್ಲಿ ಸೋತಿತ್ತು. ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿಯೇ ಇದು ಭಾರತ ತಂಡ ಅತ್ಯಂತ ದೊಡ್ಡ ಅಂತರದ ಸೋಲಾಗಿದೆ. […]

ಪ್ರಜಾ ಪ್ರಗತಿ 28 Nov 2025 10:04 am

ಆಗ್ನೇಯ ಪದವೀಧರ ಕ್ಷೇತ್ರ: ಕೊರಟಗೆರೆಯಲ್ಲಿ 2399 ಮತದಾರರ ನೋಂದಣಿ

‌ಕೊರಟಗೆರೆ :- ಆಗ್ನೇಯ ಪದವಿದಾರರ ಕ್ಷೇತ್ರದಲ್ಲಿ ಇಲ್ಲಿಯವರೆಗೆ 2399 ಪದವಿದಾರರು ನೋಂದಣಿಯಾಗಿದ್ದು , ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪದವೀಧರರು ನೋಂದಾಯಿಸಿಕೊಳ್ಳಬೇಕು ಜೊತೆಗೆ ಈವರೆಗಿನ ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆ ಕಂಡು ಬಂದಲ್ಲಿ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ತಹಸಿಲ್ದಾರ್ ಮಂಜುನಾಥ್ ತಿಳಿಸಿದ್ದರು. ಸೋಮವಾರ ತಾಲೂಕ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ವಿವಿಧ ಪಕ್ಷಗಳ ಮುಖಂಡರುಗಳ ಸಭೆಯಲ್ಲಿ ಮಾಹಿತಿ ನೀಡುತ್ತಾ ಈವರೆಗೆ 2399 ಪದವಿದಾರರು ನೋಂದಣಿಯಾಗಿದ್ದು , ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ನೋಂದಣಿ ಮಾಡಿಸಿಕೊಳ್ಳುವುದರ ಜೊತೆ […]

ಪ್ರಜಾ ಪ್ರಗತಿ 27 Nov 2025 9:26 pm

RSS ಕಾರ್ಯಕರ್ತನ ಕೊಲೆ ಪ್ರಕರಣ…ಹಂತಕನಿಗೆ ಪೊಲೀಸರಿಂದ ಗುಂಡೇಟು

ಫಿರೋಜ್‌ಪುರ: ಆರ್‌ಎಸ್‌ಎಸ್ ಕಾರ್ಯಕರ್ತ ನವೀನ್ ಅರೋರಾ ಹತ್ಯೆಯಲ್ಲಿ ಭಾಗಿಯಾಗಿದ್ದ ಎನ್ನಲಾದ ಪ್ರಮುಖ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಫಜಿಲ್ಕಾದಲ್ಲಿ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ನವೀನ್ ಅರೋರಾ ಎಂಬಾತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದರ ಪ್ರಮುಖ ಶೂಟರ್ ಬಾದಲ್ ಮೇಲೆ ಬುಧವಾರ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಬಾದಲ್ ಮತ್ತು ಹೆಡ್ ಕಾನ್‌ಸ್ಟೆಬಲ್‌ ಇಬ್ಬರಿಗೂ ತೀವ್ರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ಅರೋರಾ […]

ಪ್ರಜಾ ಪ್ರಗತಿ 27 Nov 2025 4:07 pm

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿರುದ್ದ ಮೊಹಮ್ಮದ್‌ ಸಿರಾಜ್‌ ಕಿಡಿ….!

ಗುವಾಹಟಿ: ಭಾರತ ತಂಡದ ವೇಗಿ ಮೊಹಮ್ಮದ್‌ ಸಿರಾಜ್‌ ಅವರಿಗೆ ಬುಧವಾರ ವಿಮಾನ ಪ್ರಯಾಣದ ವೇಳೆ ತೊಂದರೆ ಉಂಟಾಗಿದೆ. ಈ ಕುರಿತು ಸಿರಾಜ್‌ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಗುವಾಹಟಿಯಿಂದ ಹೈದರಾಬಾದ್‌ಗೆ ಹೊರಟಿದ್ದ ಸಿರಾಜ್‌ ಅವರ ವಿಮಾನ ಸಂಜೆ 7:25ಕ್ಕೆ ನಿರ್ಗಮಿಸಬೇಕಿತ್ತು. ಆದರೆ ವಿಮಾನ ಕೆಲ ತಾಂತ್ರಿಕ ಸಮಸ್ಯೆಗಳ ಕಾರಣ ಸೂಕ್ತ ಸಮಯಕ್ಕೆ ಹಾರಲು ಸಾಧ್ಯವಾಗಲಿಲ್ಲ. ಈ ಕುರಿತು ಮಾಹಿತಿ ಕೇಳಿದರೆ ವಿಮಾನಯಾನ ಸಂಸ್ಥೆ ಸ್ಪಷ್ಟ ವಿವರಣೆ ನೀಡಿಲ್ಲ. […]

ಪ್ರಜಾ ಪ್ರಗತಿ 27 Nov 2025 3:53 pm

ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ. ಪಾಟೀಲ್

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಹೊರಗುತ್ತಿಗೆ ಮೂಲಕ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಮ ಎಚ್.ಕೆ. ಪಾಟೀಲ್‌ ಅವರು ಬುಧವಾರ ಹೇಳಿದರು. ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿವಿ ಡಾ.ಅಂಬೇಡ್ಕರ್‌ ಅಧ್ಯಯನ ಕೇಂದ್ರ, ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ, ಸಂವಿಧಾನ ಸೈನಿಕರ ಸಮಾವೇಶ ಉದ್ಘಾಟಿಸಿ ಸಚಿವರುಮಾತನಾಡಿದರು. ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹತೆ […]

ಪ್ರಜಾ ಪ್ರಗತಿ 27 Nov 2025 12:24 pm

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ಚೆನ್ನೈ : ಎಐಎಡಿಎಂಕೆಯಿಂದ ಉಚ್ಚಾಟಿತರಾದ ಹಿರಿಯ ನಾಯಕ ಕೆ.ಎ. ಸೆಂಗೋಟ್ಟೈಯನ್, ಗೋಬಿಚೆಟ್ಟಿಪಾಳ್ಯಂ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು ಗುರುವಾರ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಔಪಚಾರಿಕವಾಗಿ ಸೇರ್ಪಡೆಗೊಂಡರು. ಟಿವಿಕೆ ರಚನೆಯಾದ ನಂತರ ಸೆಂಗೋಟ್ಟೈಯನ್ ಅವರ ಸೇರ್ಪಡೆಯನ್ನು ಅತ್ಯಂತ ಮಹತ್ವದ ಪಕ್ಷಾಂತರಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತಿದೆ. ಒಂಬತ್ತು ಬಾರಿ ಶಾಸಕರಾಗಿದ್ದ ಅವರು ತಮ್ಮ ರಾಜೀನಾಮೆ ಪತ್ರವನ್ನು ವಿಧಾನಸಭಾ ಸ್ಪೀಕರ್ ಎಂ. ಅಪ್ಪಾವು ಅವರಿಗೆ […]

ಪ್ರಜಾ ಪ್ರಗತಿ 27 Nov 2025 12:22 pm

ಸ್ವಯಂ ಘೋಷಿತ ದೇವಮಾನವ ಚೈತನ್ಯಾನಂದ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ: ಖಾಸಗಿ ಸಂಸ್ಥೆಯ ವಿದ್ಯಾರ್ಥಿಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಪ್ರಕರಣದಲ್ಲಿ ದೆಹಲಿ ಪೊಲೀಸರು ಸ್ವಯಂ ಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಮತ್ತು ಇತರ ನಾಲ್ವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.ತನಿಖೆ ಪೂರ್ಣಗೊಂಡ ನಂತರ 1,077 ಪುಟಗಳ ಆರೋಪಪಟ್ಟಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯದ ಮುಂದೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತನಿಖೆಯ ಸಮಯದಲ್ಲಿ ಒಟ್ಟು 43 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು. ಚೈತನ್ಯಾನಂದ ಸರಸ್ವತಿ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 75(2), […]

ಪ್ರಜಾ ಪ್ರಗತಿ 27 Nov 2025 12:17 pm

ಎಲ್ಲಾ ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ ; ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಸಂಘರ್ಷ ಶೀಘ್ರವೇ ಇತ್ಯರ್ಥವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ. ರಾಜ್ಯದ ನಾಯಕತ್ವ ವಿಚಾರ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೊತೆಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ […]

ಪ್ರಜಾ ಪ್ರಗತಿ 27 Nov 2025 12:05 pm

ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ನವದೆಹಲಿ : ಭಾರತೀಯ ಕಾಲಮಾನ ಪ್ರಕಾರ ನಿನ್ನೆ ಬುಧವಾರ ಅಮೆರಿಕಾದ ಶ್ವೇತಭವನದ ಬಳಿ ಇಬ್ಬರು ರಾಷ್ಟ್ರೀಯ ಗಾರ್ಡ್ ಸದಸ್ಯರ ಮೇಲೆ ನಡೆದ ಗುಂಡಿನ ದಾಳಿಯನ್ನು ಭಯೋತ್ಪಾದನಾ ಕೃತ್ಯ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. ಫ್ಲೋರಿಡಾದಲ್ಲಿ ಮಾತನಾಡಿದ ಅವರು, ದಾಳಿಯನ್ನು ಘೋರ, ದುಷ್ಟ ಮತ್ತು ದ್ವೇಷದ ಕೃತ್ಯ ಎಂದು ಕರೆದಿದ್ದಾರೆ. ಅಪರಾಧಿಯು ತುಂಬಾ ದುಬಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಳೆದ ಹಾರಿ ಜೋ ಬೈಡೆನ್ […]

ಪ್ರಜಾ ಪ್ರಗತಿ 27 Nov 2025 12:00 pm

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಕೈದಿಗಳ ಮೋಜು ಮಸ್ತಿಯ ತಾಣವಾಗಿ ಮಾರ್ಪಟ್ಟಿದೆ. ಜೈಲಲ್ಲೇ ರೌಡಿಗಳ ಹುಟ್ಟುಹಬ್ಬ ಆಚರಣೆ, ಗುಂಡು-ತುಂಡಿನ ಪಾರ್ಟಿಯ ಜೊತೆಗೆ ಉಗ್ರರ ಕೈನಲ್ಲೂ ಮೊಬೈಲ್​ ಇರುವ ಸಾಕಷ್ಟು ವಿಡಿಯೋಗಳು ಈಗಾಗಲೇ ಹೊರ ಬಂದಿವೆ. ಈ ನಡುವಲ್ಲೇ ಮತ್ತೊಂದು ಕರ್ಮಕಾಂಡದ ವಿಡಿಯೋ ವೈರಲ್ ಆಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮದ್ಯ ತಯಾರಿ ಮಾಡಿದ್ದಾರೆ ಎನ್ನಲಾದ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಆ್ಯಪಲ್, ದ್ರಾಕ್ಷಿಮತ್ತು ಪೈನ್ ಆ್ಯಪಲ್‌ಗಳನ್ನು ಬಳಸಿ […]

ಪ್ರಜಾ ಪ್ರಗತಿ 27 Nov 2025 11:53 am

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ : ಡಿ ಕೆ ಶಿವಕುಮಾರ್‌

ಬೆಂಗಳೂರು: ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಯಾಗಲಿ, ನಾನಾಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆಯಬೇಕೆಂದು ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದು, ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾನೂನು ಸಲಹೆಗಾರ ಪೊನ್ನಣ್ಣ ಅವರಿಗೆ ವರ್ಡ್ ಪವರ್ ಈಸ್ ವರ್ಲ್ಡ್ ಪವರ್ ಎಂದು ಹೇಳುತ್ತಿರುತ್ತೇನೆ. ಮಾತು ಕೊಡುತ್ತೇವೆ, ಆಡುತ್ತೇವೆ. ಅದನ್ನು […]

ಪ್ರಜಾ ಪ್ರಗತಿ 27 Nov 2025 11:48 am

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ : ಕೆ ಎನ್‌ ರಾಜಣ್ಣ

ಬೆಂಗಳೂರು: ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ್.ರಾಜಣ್ಣ ಮಾರ್ಮಿಕವಾಗಿ ನುಡಿದಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಬದಲಾವಣೆ ಮಾಡುವುದಿದ್ದರೆ ಸಿಎಲ್‌ಪಿ ಸಭೆಯಲ್ಲೇ ನಿರ್ಧಾರವಾಗಲಿ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಯಾರೂ ಹೇಳಿಲ್ಲ. 30–30 ತಿಂಗಳು ಅಧಿಕಾರ ಹಂಚಿಕೆ ಒಪ್ಪಂದವಾಗಿದೆ ಎಂದು ಸುಮ್ಮನೆ […]

ಪ್ರಜಾ ಪ್ರಗತಿ 27 Nov 2025 11:38 am

ಡಾ. ಶಾಹೀನ್ ಪ್ರೇಯಸಿಯಲ್ಲ…ಹೆಂಡತಿ : ಮುಝಮ್ಮಿಲ್!

ದೆಹಲಿ: ರಾಷ್ಟ್ರ ರಾಜಧಾನಿಯ ದೆಹಲಿ ಕೆಂಪುಕೋಟೆ ಕಾರು ಸ್ಫೋಟದ ತನಿಖೆಯಲ್ಲಿ ಮತ್ತೊಂದು ಹೊಸ ವಿಚಾರ ಬಹಿರಂಗವಾಗಿದೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬಳಾಗಿರುವ ಡಾ. ಶಾಹೀನ್ ಶಾಹಿದ್ ತನ್ನ ಗೆಳತಿಯಲ್ಲ, ಆಕೆ ತನ್ನ ಪತ್ನಿ ಎಂದು ಬಂಧಿತ ಆರೋಪಿ ಮುಝಮ್ಮಿಲ್ ಅಹ್ಮದ್ ಗನೈ ಹೇಳಿದ್ದಾನೆ. ಸೆಪ್ಟೆಂಬರ್ 2023 ರಲ್ಲಿ ಇಬ್ಬರೂ ಔಪಚಾರಿಕವಾಗಿ ವಿವಾಹವಾದರು ಎಂದು ಅವನು ಹೇಳಿಕೊಂಡಿದ್ದಾನೆ. ವರದಿಯ ಪ್ರಕಾರ, ಕಳೆದ ವರ್ಷ ಅಲ್-ಫಲಾಹ್ ವಿಶ್ವವಿದ್ಯಾಲಯದ ಬಳಿಯ ಮಸೀದಿಯಲ್ಲಿ ತಮ್ಮ ನಿಕಾಹ್ ಕಾರ್ಯಕ್ರಮ ನಡೆಸಿದ್ದರು […]

ಪ್ರಜಾ ಪ್ರಗತಿ 27 Nov 2025 11:00 am

ಥಾಣೆ: ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪತ್ತೆ; ಲಿವ್-ಇನ್ ಪಾರ್ಟನರ್ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತೊರೆಯ ದಡದಲ್ಲಿ ಸೂಟ್‌ಕೇಸ್‌ನಲ್ಲಿ ಯುವತಿಯೊಬ್ಬರ ಶವ ಪತ್ತೆಯಾಗಿದ್ದು, ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅವರ ಲಿವ್-ಇನ್ ಪಾರ್ಟನರ್ ಅನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.ನವೆಂಬರ್ 21 ರಂದು ಇಬ್ಬರ ನಡುವೆ ಜಗಳ ನಡೆದಿದ್ದು, ಆರೋಪಿಯು ಯುವತಿಯನ್ನು ಕೊಂದು ಮರುದಿನ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ, ತೊರೆಯ ಬಳಿ ಎಸೆದಿದ್ದಾರೆ ಎಂದು ಅವರು ಹೇಳಿದ್ದಾರೆ. ಸೋಮವಾರ ದೇಸಾಯಿ ಗ್ರಾಮದ ಬಳಿಯ ತೊರೆಯ ಸೇತುವೆಯ ಕೆಳಗೆ ಪ್ರಿಯಾಂಕಾ ವಿಶ್ವಕರ್ಮ(22) […]

ಪ್ರಜಾ ಪ್ರಗತಿ 26 Nov 2025 5:41 pm

ಅಂಬೇಡ್ಕರ್ ಸಂವಿಧಾನಕ್ಕೆ ಮೊದಲು ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ; ಸಿದ್ದರಾಮಯ್ಯ

ಬೆಂಗಳೂರು: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ […]

ಪ್ರಜಾ ಪ್ರಗತಿ 26 Nov 2025 5:40 pm

ಜೈಲಿನೊಳಗೆ ಹತ್ಯೆಗೀಡಾದ್ರಾ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌………?

ಇಸ್ಲಾಮಾಬಾದ್: ಕಳೆದ ಒಂದು ತಿಂಗಳಿನಿಂದ ತಮ್ಮ ಸಹೋದರನನ್ನು ಭೇಟಿ ಮಾಡಲು ಪಾಕಿಸ್ತಾನ ಸರ್ಕಾರ ಅವಕಾಶ ನೀಡಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೂವರು ಸಹೋದರಿಯರು ಆರೋಪಿಸಿದ್ದಾರೆ. ಈ ನಡುವೆಯೇ ಇಮ್ರಾನ್ ಖಾನ್ ಅವರು ಜೈಲಿನಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇಮ್ರಾನ್ ಖಾನ್ ಅವರನ್ನು ಭೇಟಿಯಾಗಲು ಹೋಗಿದ್ದ ಮೂವರು ಸಹೋದರಿಯರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇಮ್ರಾನ್ ಖಾನ್ ಅವರು ಜೈಲಿನಲ್ಲಿ ನಿಧನರಾಗಿದ್ದಾರೆ […]

ಪ್ರಜಾ ಪ್ರಗತಿ 26 Nov 2025 5:30 pm

ಆರೋಪಿಗಳನ್ನು ರಕ್ಷಿಸಲು ತನಿಖಾಧಿಕಾರಿಗಳು ಸರಿಯಾದ ದಾಖಲೆ ಸಲ್ಲಿಸಿರಲಿಲ್ಲ: ಒಡನಾಡಿ ಪರಶು

ಮೈಸೂರು: ತನಿಖಾಧಿಕಾರಿಗಳು ಸಾಕ್ಷಿಯನ್ನು ಕೊಡುವಲ್ಲಿ ಬಹಳಷ್ಟು ಎಡವಿದ್ದರು. ಆರೋಪಿಗಳನ್ನು ರಕ್ಷಿಸಲು ಸರಿಯಾದ ದಾಖಲೆಗಳನ್ನು ಸಲ್ಲಿಸಿರಲಿಲ್ಲ. ನಾವು ಪ್ರಶ್ನೆ ಮಾಡಿದ್ದಕ್ಕೆ ನಮ್ಮ ಮೇಲೆಯೇ ಷಡ್ಯಂತ್ರದ ಕೇಸ್‌ ಹಾಕಿದ್ದರು ಎಂದು ಒಡನಾಡಿ ಸಂಸ್ಥೆಯ ಪರಶು ಹೇಳಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಈಗ ನಾನು ಯಾರನ್ನು ದೂಷಿಸಲು ಹೋಗುವುದಿಲ್ಲ. ನ್ಯಾಯಾಲಯ ಏನು ಹೇಳಿದೆಯೋ ಆ ತೀರ್ಪನ್ನು ಓದಬೇಕು. ವಕೀಲರ ಜೊತೆ ಸೇರಿ ಚರ್ಚೆ […]

ಪ್ರಜಾ ಪ್ರಗತಿ 26 Nov 2025 5:05 pm

ಕರ್ನಾಟಕದ 9 ಜಿಲ್ಲೆಗಳನ್ನೊಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವ […]

ಪ್ರಜಾ ಪ್ರಗತಿ 26 Nov 2025 5:04 pm

ಕಟ್ಟಡ ನಕ್ಷೆ ಉಲ್ಲಂಘನೆ ತಡೆಗೆ GBA ಮಾರ್ಗಸೂಚಿ ಪ್ರಕಟ…..!

ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇದ್ದ ನಕ್ಷೆ ಮಂಜೂರಾತಿ ನೀಡುವ ಅಧಿಕಾರವನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ವರ್ಗಾಯಿಸಿದ ಬೆನ್ನಲ್ಲೇ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಕಟ್ಟಡ ನಕ್ಷೆ ಉಲ್ಲಂಘನೆ ತಡೆಯಲು ಮುಂದಾಗಿರುವ ಜಿಬಿಎ ತಳಪಾಯಕ್ಕೂ ಪ್ರಮಾಣ ಪತ್ರ ಪಡೆಯುವುದನ್ನ ಕಡ್ಡಾಯಗೊಳಿಸಿದೆ. ನಗರ ಯೋಜನೆ ಅಧಿಕಾರಿಗಳು ಕಡ್ಡಾಯವಾಗಿ ಈ ಕುರಿತು ಜವಾಬ್ದಾರಿ ಪಾಲಿಸಬೇಕು ಎಂದು ತಾಕೀತು ಮಾಡಿದೆ. ಇನ್ನೂ ಅನಧಿಕೃತ ಕಟ್ಟಡಗಳ ತಡೆಗೆ ಏನೆಲ್ಲ ಮಾರ್ಗಸೂಚಿ ಅನುಸರಿಸಬೇಕು ಅನ್ನೋದನ್ನ ನೋಡೋದಾದ್ರೆ… […]

ಪ್ರಜಾ ಪ್ರಗತಿ 26 Nov 2025 5:03 pm

ಅಲ್ ಫಲಾಹ್ ವಿವಿಗೆ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗುವ ಭೀತಿ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಆತ್ಮಾಹುತಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ ಫಲಾಹ್ ವಿಶ್ವವಿದ್ಯಾಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಸಹ ರದ್ದಾಗುವ ಭೀತಿ ಎದುರಾಗಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಯೋಗದಿಂದ ವಿಶ್ವವಿದ್ಯಾಲಯಕ್ಕೆ ಶೋಕಾಸ್ ನೋಟಿಸ್ ನೀಡಿದ್ದು, ಅಲ್ಪಸಂಖ್ಯಾತ ಸ್ಥಾನಮಾನವನ್ನು ಏಕೆ ರದ್ದುಗೊಳಿಸಬಾರದು ಎಂದು ಕೇಳಲಾಗಿದೆ. ಆಯೋಗವು ಡಿ.4 ರಂದು ಈ ಸೂಚನೆಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ವಿಶ್ವವಿದ್ಯಾಲಯದ ಕುಲಸಚಿವರು ಮತ್ತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ವಿಶೇಷ ಸ್ಥಾನಮಾನವನ್ನು […]

ಪ್ರಜಾ ಪ್ರಗತಿ 26 Nov 2025 4:56 pm