SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

BREAKING: ಶತಕ ವಂಚಿತ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ

ಗುಜರಾತ್ ನ ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್ ಗಳಿಂದ ರೋಚಕ ಜಯಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 300 ರನ್ ಗಳಿಸಿತು. 301 ಗೆಲುವಿನ ಗುರಿ ಪಡೆದ ಭಾರತ 49 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿ 4 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ವಿರಾಟ್ ಕೊಹ್ಲಿ 7 ರನ್‌ಗಳಿಂದ ಶತಕ ವಂಚಿತರಾದರು. […]

ಕನ್ನಡ ದುನಿಯಾ 11 Jan 2026 9:45 pm

ಶರಾವತಿ ಹಿನ್ನೀರಿನಲ್ಲಿ ಈಜಲು ಇಳಿದ ಪಶು ವೈದ್ಯಾಧಿಕಾರಿ ನೀರುಪಾಲು

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ಈಜಲು ಇಳಿದ ಪಶುವೈದ್ಯಾಧಿಕಾರಿ ನೀರು ಪಾಲಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಕ್ರೆಯ ಬಾಳೆಗೆರೆಯ ಸಮೀಪ ಘಟನೆ ನಡೆದಿದೆ. ಸೊರಬ ತಾಲೂಕಿನ ಹೊರಬೈಲಿನ ನಿವಾಸಿಯಾಗಿರುವ ಡಾ.ಸುನಿಲ್(38) ನೀರು ಪಾಲಾದವರು ಎಂದು ಗುರುತಿಸಲಾಗಿದೆ. ಕುಟುಂಬ ಸಮೇತರಾಗಿ ಶರಾವತಿ ಹಿನ್ನೀರಿಗೆ ಪ್ರವಾಸಕ್ಕೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಹಿನ್ನೀರಿನಲ್ಲಿ ಸುಮಾರು 20 ಮೀಟರ್ ದೂರ ಈಜಲು ವೈದ್ಯ ಸುನಿಲ್ ಹೋಗಿದ್ದಾರೆ. ಆದರೆ, ಹಿಂದಿರುಗಿ ಬರಲು ಪ್ರಯತ್ನಿಸುವಾಗ ಆಯಾಸದಿಂದ ಸಾಧ್ಯವಾಗಿರಲಿಲ್ಲ. ಪಶು ವೈದ್ಯ ಡಾ. ಸುನಿಲ್ ಶವವನ್ನು ಅಗ್ನಿಶಾಮಕ […]

ಕನ್ನಡ ದುನಿಯಾ 11 Jan 2026 9:38 pm

ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 2ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ವಿರಾಟ್ ಕೊಹ್ಲಿ: 2 ಐತಿಹಾಸಿಕ ದಾಖಲೆ ನಿರ್ಮಾಣ

ಭಾನುವಾರ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಎರಡು ಐತಿಹಾಸಿಕ ದಾಖಲೆಗಳನ್ನು ನಿರ್ಮಿಸಿದರು. ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಉದ್ಘಾಟನಾ ಪಂದ್ಯದಲ್ಲಿ ಭಾರತದ ದಂತಕಥೆ ಶ್ರೀಲಂಕಾದ ಐಕಾನ್ ಕುಮಾರ್ ಸಂಗಕ್ಕಾರ ಅವರನ್ನು ಹಿಂದಿಕ್ಕಿದರು. ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28000 ರನ್‌ಗಳನ್ನು ಪೂರೈಸಿದರು ಮತ್ತು ಸ್ವಲ್ಪ ಸಮಯದ ನಂತರ, ಶ್ರೀಲಂಕಾದ ಐಕಾನ್ ಅನ್ನು ಹಿಂದಿಕ್ಕಿದರು. ಪಂದ್ಯಕ್ಕೆ ಬರುವ ಮೊದಲು, ಕೊಹ್ಲಿ 28000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರ್ಣಗೊಳಿಸಲು 25 ರನ್‌ಗಳು ಮತ್ತು ಸಂಗಕ್ಕಾರ […]

ಕನ್ನಡ ದುನಿಯಾ 11 Jan 2026 9:28 pm

ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ ಟೆಕ್ಕಿ ಶರ್ಮಿಳಾ(34) ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ರಾಮಮೂರ್ತಿ ಪೊಲೀಸ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಅವರನ್ನು ಕೊಲೆ ಮಾಡಲಾಗಿದೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶರ್ಮಿಳಾ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್ ನಲ್ಲಿ ವಾಸವಾಗಿದ್ದರು. ಕೇರಳ ಮೂಲದ ಆರೋಪಿ ಕರ್ನಲ್ ಕುರೈ ಎಂಬುವನನ್ನು […]

ಕನ್ನಡ ದುನಿಯಾ 11 Jan 2026 8:06 pm

BREAKING: ಬೆಂಗಳೂರಿನಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕಾಲೇಜ್ ಪ್ರಾಂಶುಪಾಲ ಸೇರಿ 5 ಲೆಕ್ಚರರ್ಸ್ ವಿರುದ್ಧ ಎಫ್ಐಆರ್

ಬೆಂಗಳೂರು: ಬೆಂಗಳೂರಿನಲ್ಲಿ ಡೆಂಟಲ್ ಸ್ಟೂಡೆಂಟ್ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಪ್ರಾಂಶುಪಾಲ ಸೇರಿ 5 ಲೆಕ್ಚರರ್ಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯಶಸ್ವಿನಿಯ ತಾಯಿ ದೂರಿನ ಮೇರೆಗೆ ಸೂರ್ಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜನವರಿ 8ರಂದು ಚಂದಾಪುರದ ಮನೆಯಲ್ಲಿ ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದರು. ಆಕೆಯ ಆತ್ಮಹತ್ಯೆಗೆ ಕಾಲೇಜು ಉಪನ್ಯಾಸಕರ ಕಿರುಕುಳವೆಂಬ ಆರೋಪ ಕೇಳಿ ಬಂದಿತ್ತು. ಸಹಪಾಠಿಗಳ ಮುಂದೆ ಯಶಸ್ವಿನಿ ಬಣ್ಣ ಮತ್ತು ಉಡುಪು ಬಗ್ಗೆ ಟೀಕಿಸಲಾಗಿತ್ತು. ಕಪ್ಪು ಬಣ್ಣದ ನಿನಗೆ ಡಾಕ್ಟರ್ ಆಗಬೇಕಾ ಎಂದು ಟೀಕಿಸಿದ್ದರು. ವಿದ್ಯಾರ್ಥಿನಿ […]

ಕನ್ನಡ ದುನಿಯಾ 11 Jan 2026 7:52 pm

BREAKING: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗಂಗಾ ರಾಮ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ಸೋಂಕಿನಿಂದಾಗಿ ಶ್ವಾಸನಾಳದ ಆಸ್ತಮಾ ಉಲ್ಬಣಗೊಂಡ ಕಾರಣ ಸುಮಾರು ಒಂದು ವಾರದ ಹಿಂದೆ ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭಾನುವಾರ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ ಮತ್ತು ಉತ್ತಮ ಚೇತರಿಕೆ ಕಂಡಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಂದು ಸಂಜೆ 5 […]

ಕನ್ನಡ ದುನಿಯಾ 11 Jan 2026 7:38 pm

ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆಗೆ ಶರಣಾದ ಯುವತಿ

ತುಮಕೂರು: ಹೊಟ್ಟೆ ನೋವು ತಾಳಲಾರದೇ ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಬ್ಯಾತ ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಮೂಲದ ಕೀರ್ತನಾ (19) ಆತ್ಮಹತ್ಯೆಗೆ ಶರಣಾದ ಯುವತಿ. ಕಲಬುರಗಿಯ ಸಾಲಹಳ್ಳಿಯ ಕೀರ್ತನಾ ಕೆಲಸವನ್ನು ಹುಡುಕಿ ತೂಮಕೂರಿಗೆ ಬಂದು ಚಿಕ್ಕಪ್ಪನ ಮನೆಯಲ್ಲಿ ತಂಗಿದ್ದಳು. ಋತುಚಕ್ರದಿಂದಾಗಿ ಯುವತಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಹೊಟ್ಟೆನೋವು ತಾಳಲಾರದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು […]

ಕನ್ನಡ ದುನಿಯಾ 11 Jan 2026 7:12 pm

ಬಳ್ಳಾರಿ ಗಲಾಟೆ ವೇಳೆ ಶ್ರೀರಾಮುಲು ಮೇಲೆ ದಾಳಿಗೆ ಸಂಚು: ಜನಾರ್ದನ ರೆಡ್ಡಿ

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯ ವೇಳೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಬ್ಯಾನರ್ ಗಲಾಟೆಯ ವೇಳೆ ನಡೆದಿದೆ ಎನ್ನಲಾದ ವಿಡಿಯೋವನ್ನು ಬಿಡುಗಡೆ ಮಾಡಿದ ಅವರು, ಗಲಾಟೆ ನಡೆಯುವ ಮೊದಲು ಶ್ರೀರಾಮುಲು ಸ್ಥಳದಿಂದ ತೆರಳುವಂತೆ ಸತೀಶ್ ರೆಡ್ಡಿಗೆ ಸೂಚಿಸಿದ್ದರು. ಶ್ರೀರಾಮುಲು ಅವರ ಜಾತಿ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸತೀಶ್ ರೆಡ್ಡಿ, ಶ್ರೀರಾಮುಲು ಅವರನ್ನು ಹೊಡೆಯಿರಿ, ಮುಗಿಸಿರಿ, ಸಾಯಿಸಿರಿ ಎಂದು ಪ್ರಚೋದನೆ ನೀಡಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ […]

ಕನ್ನಡ ದುನಿಯಾ 11 Jan 2026 7:01 pm

BREAKING: ಸೌರವ್ ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ

ವಡೋದರಾ: ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಭಾರತ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ನಡೆದಿದೆ. ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಅವರಂತಹ ಆಟಗಾರರು ಈ ಪಂದ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯ ವಿರಾಟ್ ಕೊಹ್ಲಿ ಅವರ 309 ನೇ ಏಕದಿನ ಪಂದ್ಯವಾಗಿದೆ ಮತ್ತು ಈ ಮೂಲಕ ಅವರು ಪಟ್ಟಿಯಲ್ಲಿ ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ಹಿಂದಿಕ್ಕಿದ್ದಾರೆ. ಗಂಗೂಲಿ ಭಾರತ ತಂಡಕ್ಕಾಗಿ 308 ಏಕದಿನ ಪಂದ್ಯಗಳನ್ನು ಆಡಿದ್ದಾರೆ, […]

ಕನ್ನಡ ದುನಿಯಾ 11 Jan 2026 6:26 pm

ಸರ್ಕಾರಿ ಶಾಲೆ ಮುಚ್ಚುವುದು ಸರಿಯಲ್ಲ, ಬೇಕಾದ ವ್ಯವಸ್ಥೆ ಕಲ್ಪಿಸಬೇಕು: ರಿಷಬ್ ಶೆಟ್ಟಿ

ಬೆಂಗಳೂರು: ಮಕ್ಕಳ ಸಂಖ್ಯೆ ಇಲ್ಲವೆನ್ನುವ ಕಾರಣಕ್ಕೆ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಸರಿಯಲ್ಲ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಏಕೆ ಇಲ್ಲ ಎಂಬುದನ್ನು ಮನಗಂಡು ಅಗತ್ಯವಿರುವ ವ್ಯವಸ್ಥೆ ಕಲ್ಪಿಸಬೇಕು. ಶಿಕ್ಷಕರ ಕೊರತೆ ನೀಗಿಸೋಬೇಕು ಎಂದು ನಟ ರಿಷಬ್ ಶೆಟ್ಟಿ ಹೇಳಿದ್ದಾರೆ. ಯೂತ್ ಫಾರ್ ಸೇವಾ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಸ್ವಯಂಸೇವಕ ವರ್ಷದ ಉದ್ಘಾಟನಾ ಸಮಾರಂಭದಲ್ಲಿ ಯೂತ್ ಫಾರ್ ಸೇವಾ ರಾಯಭಾರಿಯೂ ಆಗಿರುವ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ನೀಡುವ ಗುಣಮಟ್ಟದ ಶಿಕ್ಷಣ ಪಡೆದವರು ಸಮಾಜದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಸರ್ಕಾರಿ […]

ಕನ್ನಡ ದುನಿಯಾ 11 Jan 2026 6:16 pm

BREAKING: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಮೆಂಟ್ ಕಾಟ

ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೂ ಕಿಡಿಗೇಡಿಗಳು ಅಶ್ಲೀಲ ಕಮೆಂಟ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೆ ಇನ್ ಸ್ಟಾ ಗ್ರಾಂ ನಲ್ಲಿ ಕಿಡಿಗೇಡಿಗಳು ಅಶ್ಲೀಲವಾಗಿ ಕಮೆಂಟ್ ಮಾಡಿದ್ದು, ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ನಯನಾ ಮೋಟಮ್ಮ ಅವರ ಬಟ್ಟೆ ಬಗ್ಗೆ ಕೆಟ್ಟದಾಗಿ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ. ನಯನಾ ಮೋಟಮ್ಮ, ಇನ್ ಸ್ಟಾ ಗ್ರಾಂ ನಲ್ಲಿ ಎರಡು ಅಧಿಕೃತ ಖಾತೆ ಹೊಂದಿದ್ದಾರೆ. ಒಂದು ರಾಜಕೀಯ ವಿಚಾರದ […]

ಕನ್ನಡ ದುನಿಯಾ 11 Jan 2026 5:58 pm

ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ರೈತ ಸಾವು: ಘಟನಾ ಸ್ಥಳಕ್ಕೆ ಸಚಿವ ಬೋಸರಾಜು ಭೇಟಿ

ರಾಯಚೂರು: ಟ್ರ್ಯಾಕ್ಟರ್ ಗೆ ಮರಳು ತುಂಬಿದ್ದ ಲಾರಿ ಡಿಕ್ಕಿಯಾಗಿ ರೈತ ಸಾವನ್ನಪ್ಪಿದ ಘಟನೆ ರಾಯಚೂರುನಲ್ಲಿ ನಡೆದಿದೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ಸಚಿವ ಬೋಸರಾಜು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಮೃತರನ್ನು ನಾಗರಾಜ್(50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಗೋರ್ಕಲ್ ಗ್ರಾಮದಿಂದ ರಾಯಚೂರಿಗೆ ಹತ್ತಿಯನ್ನು ಟ್ರ್ಯಾಕ್ಟರ್ ನಲ್ಲಿ ತೆಗೆದುಕೊಂಡು ಹೋಗುವಾಗ ರಾಯಚೂರು ಹೊರವಲಯದ ಬೈಪಾಸ್ ರಸ್ತೆಯಲ್ಲಿ ಹಿಂದಿನಿಂದ ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ಸಚಿವ ಬೋಸರಾಜು ಗಾಯಾಳು ಮಾತನಾಡಿಸಿ […]

ಕನ್ನಡ ದುನಿಯಾ 11 Jan 2026 5:53 pm

BREAKING: ಬಳ್ಳಾರಿ ಗಲಾಟೆ ಪ್ರಕರಣ: ಬಿಜೆಪಿ ಪಾದಯಾತ್ರೆ ಇಲ್ಲ, ಸಮಾವೇಶ ಮಾಡುತ್ತೇವೆ ಎಂದ ಆರ್.ಅಶೋಕ್

ಮೈಸೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣದ ಬೆನ್ನಲ್ಲೇ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ನಡೆಸಲು ಸಿದ್ಧತೆ ನಡೆಸಿದ್ದ ಪಾದಯಾತ್ರೆ ಪ್ಲಾನ್ ಕೊನೇ ಕ್ಷಣದಲ್ಲಿ ರದ್ದಾಗಿದೆ. ಬಳ್ಳಾರಿ ಗಲಾಟೆ ವಿಚಾರವಾಗಿ ಪಾದಯಾತ್ರೆ ಇಲ್ಲ, ಸಮಾವೇಶ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಆರ್.ಅಶೋಕ್, ಬಳ್ಳಾರಿ ಗಲಾಟೆ ವಿಚಾರವಾಗಿ ಪಾದಯಾತ್ರೆ ಮಾಡುವುದಿಲ್ಲ. ಬಿಜೆಪಿಯಿಂದ ಸಮಾವೇಶ ನಡೆಸಲಾಗುವುದು. ಬಳ್ಳಾರಿಯಲ್ಲಿ ಜನವರಿ 17 ರಂದು ಸಮಾವೇಶ ನಡೆಸುತ್ತೇವೆ ಎಂದು ತಿಳಿಸಿದರು. ಮೈಸೂರಿನಲ್ಲಿ ಜನವರಿ 31 […]

ಕನ್ನಡ ದುನಿಯಾ 11 Jan 2026 5:44 pm

BREAKING: ಮನೆಯಲ್ಲೇ ಶವವಾಗಿ ಪತ್ತೆಯಾದ ನಟ, ‘ಇಂಡಿಯನ್ ಐಡಲ್’ ವಿಜೇತ ಪ್ರಶಾಂತ್ ತಮಾಂಗ್: ಹೃದಯಾಘಾತ ಶಂಕೆ

ನವದೆಹಲಿ: 2007 ರಲ್ಲಿ ‘ಇಂಡಿಯನ್ ಐಡಲ್ ಸೀಸನ್ 3’ ಗೆದ್ದ ನಂತರ ರಾಷ್ಟ್ರೀಯ ಖ್ಯಾತಿಗೆ ಏರಿದ ಖ್ಯಾತ ಗಾಯಕ ಮತ್ತು ನಟ ಪ್ರಶಾಂತ್ ತಮಾಂಗ್ ಇಂದು ನವದೆಹಲಿಯಲ್ಲಿ ನಿಧನರಾಗಿದ್ದಾರೆ. ತಮಾಂಗ್ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ, ಹಠಾತ್ ಹೃದಯಾಘಾತದಿಂದ ಅವರು ಮೃತಪಟ್ಟಿರುವ ಶಂಕೆ ಇದೆ. ಆದರೂ ಅಧಿಕೃತ ವೈದ್ಯಕೀಯ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ಪ್ರಶಾಂತ್ ಇತ್ತೀಚೆಗೆ ಅರುಣಾಚಲ ಪ್ರದೇಶದಲ್ಲಿ ನೇರ ಪ್ರದರ್ಶನದ ನಂತರ ರಾಜಧಾನಿಗೆ ಮರಳಿದ್ದರು ಮತ್ತು ಯಾವುದೇ ಗಂಭೀರ ಆರೋಗ್ಯ ಸಮಸ್ಯೆಗಳನ್ನು […]

ಕನ್ನಡ ದುನಿಯಾ 11 Jan 2026 5:33 pm

BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 40 ವರ್ಷದ ವಿಚ್ಛೇದಿತ ಮಹಿಳೆ ಮೇಲೆ ಅತ್ಯಾಚಾರ: ಕೃತ್ಯವೆಸಗಿ ಹೆದ್ದಾರಿಯಲ್ಲಿ ಬಿಟ್ಟು ಹೋದ ದುರುಳರು

ಬಾಗಲಕೋಟೆ: ರಾಜ್ಯದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಮತ್ತೊಂದು ಹೇಯ ಘಟನೆ ನಡೆದಿದೆ. 40 ವರ್ಷದ ವಿಚ್ಛೇದಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಬಿಟ್ಟು ಹೋಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದಿದೆ. ಜನವರಿ 5 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ರಾಷ್ಟ್ರೀಯ ಹೆದ್ದಾರಿ ಬಳಿ ಮಹಿಳೆಯನ್ನು ಬಿಟ್ಟು ಹೋಗಿದ್ದರು. ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. […]

ಕನ್ನಡ ದುನಿಯಾ 11 Jan 2026 4:45 pm

BREAKING: ಮನ್ ರೇಗಾ ಯೋಜನೆ ಚರ್ಚೆ: ಡಿಬೆಟ್ ಯಾವಾಗ ಟೈಂ ಫಿಕ್ಸ್ ಮಾಡಿ ಹೇಳಿ ಚರ್ಚೆಗೆ ರೆಡಿಯಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು

ಬೆಂಗಳೂರು: ಮನ್ ರೇಗಾ ಯೋಜನೆ ವಿಚಾರವಾಗಿ ಓಪನ್ ಡಿಬೆಟ್ ಮಾಡಬೇಕು. ಚರ್ಚೆಗೆ ಬರಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಆಹ್ವಾನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವೀಕರಿಸಿದ್ದು, ಡಿಬೆಟ್ ಗೆ ಡೇಟ್ ಮತ್ತು ಟೈಂ ಫಿಕ್ಸ್ ಮಾಡಿ ಹೇಳಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ನೀಡಿರುವ ಪಂಥಾಹ್ವಾನ ಸ್ವೀಕರಿಸಿದ್ದೇನೆ. ಮನ್ ರೇಗಾ ಕುರಿತ ಚರ್ಚೆಗೆ ನಾನು ಸಿದ್ಧ. ಅವರು ಯಾವತ್ತು ಹೇಳ್ತಾರೋ ಅವತ್ತು ಸಾರ್ವಜನಿಕವಾಗಿ ಚರ್ಚೆಗೆ ಬರಲಿ. ಇಲ್ಲದಿದ್ದರೆ ವಿಧಾನಸಭೆಗೆ ಬರಲಿ […]

ಕನ್ನಡ ದುನಿಯಾ 11 Jan 2026 4:21 pm

ವರದಾ-ಬೆಡ್ತಿ ನದಿ ಜೋಡಣೆ ಯೋಜನೆ ವಿಚಾರ: ಹಾವೇರಿಯಲ್ಲಿ ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ವರದಾ-ಬೆಡ್ತಿ ನದಿ ಯೋಜನೆ ಜಾರಿಗೆ ಜನಜಾಗೃತಿ ಮೂಡಿಸಲು ಹಾವೇರಿ ಜಿಲ್ಲೆಯಲ್ಲಿ ಮಠಾಧೀಶರು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಜನರನ್ನು ಸೇರಿಸಿ ಜಾಗೃತಿ ಸಮಾವೇಶ ನಡೆಸಲಾಗುವುದು ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳನ್ನು ಉಳಿಸಿ, ವರದಾ – ಬೇಡ್ತಿ ವಿರೋಧಿಸಿ ಅಭಿಯಾನ ನಡೆಸುತ್ತಿರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಹಾವೇರಿಯಲ್ಲಿಯೂ ಜನಜಾಗೃತಿ ಸಭೆ ನಡೆಸಲಾಗುವುದು. ಗೊಂದಲ ನಿವಾರಣೆಗೆ ರಾಜ್ಯ ಸರ್ಕಾರ ಸಭೆ ಕರೆಯಲಿ ಎಂದು ಹೇಳಿದರು. ವರದಾ ಬೆಡ್ತಿ […]

ಕನ್ನಡ ದುನಿಯಾ 11 Jan 2026 3:52 pm

BIG NEWS: ಸ್ಯಾಂಡಲ್ ವುಡ್ ನಟಿ, ಉದ್ಯಮಿ ಅರವಿಂದ್ ರೆಡ್ಡಿ ನಂಟಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹಾಗೂ ಉದ್ಯಮಿ ಅರವಿಂದ್ ರೆಡ್ಡಿ ನಡುವಿನ ನಂಟು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಅರವಿಂದ್ ರೆಡ್ಡಿ ತಾನು ನಟಿಗೆ ಕೊಡಿಸಿರುವ ದುಬಾರಿ ಉಡುಗೊರೆಗಳ ಬಗ್ಗೆ ಹಾಗೂ ನಟಿಯೊಂದಿಗಿನ ಕೆಲ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಸ್ಯಾಂಡಲ್ ವುಡ್ ನಟಿ, ಉದ್ಯಮಿ ಅರವಿಂದ್ ರೆಡ್ದಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಕಿರುಕುಳ ಆರೋಪ ಮಾಡಿದ್ದರು. ಅಲ್ಲದೇ ಅವರು ನೀಡಿದ್ದ ಲಕ್ಷಾಂತರ ರೂಪಾಯಿ ಗಿಫ್ಟ್ ಗಳನ್ನು ಸಂಬಂಧ ಮುರಿದುಕೊಂಡಾಗಲೇ ವಾಪಸ್ ಕೊಟ್ಟಿದ್ದಾಗಿ ತಿಳಿಸಿದ್ದರು. ಈ ಪ್ರಕರಣ ಕೆಲ […]

ಕನ್ನಡ ದುನಿಯಾ 11 Jan 2026 3:32 pm

ಅಂಡಮಾನ್ ಪ್ರವಾಸಕ್ಕೆ ತೆರಳಿದ್ದಾಗ ದುರಂತ: ಕೆಸಿಡಿ ಕಾಲೇಜು ಪ್ರೊಫೆಸರ್ ಹೃದಯಾಘಾತದಿಂದ ಸಾವು

ಧಾರವಾಡ: ಪ್ರವಾಸಕ್ಕೆಂದು ಅಂಡಮಾನ್ ಗೆ ತೆರಳಿದ್ದ ಧಾರವಾಡದ ಪ್ರೊಫೆಸರ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಎಸ್.ಅನ್ನಪೂರ್ಣ ಮೃತ ಪ್ರೊಫೆಸರ್. ಧಾರವಾಡದ ಕೆಸಿಡಿ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೂರು ದಿನಗಳ ಹಿಂದೆ ಕುಟುಂಬದ ಜೊತೆ ಪ್ರವಾಸಕ್ಕೆ ಅಂಡಮಾನ್- ನಿಕೋಬಾರ್ ಗೆ ತೆರಳಿದ್ದರು. ಪೋರ್ಟ್ ಬ್ಲೇರ್ ಗೆ ಹೋಗಿದ್ದ ವೇಳೆ ಕಳೆದ ರಾತ್ರಿ ಅನ್ನಪೂರ್ಣ ಅಸ್ವಸ್ಥರಾಗಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಿಯೇ ಅವರು ಕೊನೆಯುಸಿರೆಳೆದಿದ್ದರು. ಹೃದಯಾಘಾತದಿಂದ ಅನ್ನಪೂರ್ಣ ಮೃತಪಟ್ಟಿದ್ದಾರೆ ಎಂದು […]

ಕನ್ನಡ ದುನಿಯಾ 11 Jan 2026 2:51 pm

BIG NEWS: ದ್ವೇಷ ಭಾಷಣ ಮಸೂದೆ: ರಾಜ್ಯಪಾಲರು ತಿರಸ್ಕರಿಸಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮಂಗಳೂರು: ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದ್ವೇಷ ಭಾಷಣ ಮಸೂದೆ ಅಂಗೀಕಾರವಾಗಿದೆ. ರಾಜ್ಯಪಾಲರು ಮಸೂದೆಯನ್ನು ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದರು. ಇನ್ನು ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ವಿಚಾರವಾಗಿ ಪಾದಯಾತ್ರೆ ಮಾಡುವುದಾದರೆ ಮಾಡಲಿ ಬಿಡಿ. ಏಕೆ ಮಾಡುತ್ತಾರೆ? ನಾವು ಹಿಂದೆ ಪಾದಯಾತ್ರೆ ಮಾಡಿದ್ದು, ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ […]

ಕನ್ನಡ ದುನಿಯಾ 11 Jan 2026 2:04 pm

BREAKING: ಶಾರ್ಟ್ ಬಟ್ಟೆ ಧರಿಸಿ ಓಡಾಟ: ಬುದ್ಧಿ ಹೇಳಿದ ಹೋಂ ಗಾರ್ಡ್ ಗೆ ಥಳಿಸಿ ಹಲ್ಲೆ ನಡೆಸಿದ ಯುವತಿ

ಬೆಂಗಳೂರು: ಬಟ್ಟೆ ವಿಚಾರಕ್ಕೆ ಬುದ್ಧಿ ಹೇಳಿದ ಹೋಂ ಗಾರ್ಡ್ ನನ್ನೇ ಯುವತಿ ಥಳಿಸಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೋಹಿನಿ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವತಿ. ಲಕ್ಷ್ಮೀನರಸಮ್ಮ ಹಲ್ಲೆಗೊಳಗಾದ ಹೋಂ ಗಾರ್ಡ್. ಬೆಂಗಳೂರಿನ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿ ಮೋಹಿನಿ ಶಾರ್ಟ್ ಬಟ್ಟೆಗಳನ್ನು ಧರಿಸಿ ಓಡಾಡುತ್ತಿದ್ದಳು. ಯುವತಿಯನ್ನು ನೋಡಿ ಕೆಲ ಯುವಕರು ಚುಡಾಯಿಸುತ್ತಿದ್ದರು. ರಸ್ತೆಯಲ್ಲಿ ಪುಂಡರು ಪೀಡಿಸುತ್ತಿರುವುದನ್ನು ಕಂಡು ಹೋಂಗಾರ್ಡ್ ಲಕ್ಷ್ಮೀನರಸಮ್ಮ ಯುವಿಗೆ ಕರೆದು ವಿಚಾರಿಸಿದ್ದಾರೆ. ಶಾರ್ಟ್ […]

ಕನ್ನಡ ದುನಿಯಾ 11 Jan 2026 1:53 pm

BIG NEWS: ಹುಬ್ಬಳ್ಳಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳನ್ನು ಹಿಡಿದು ಥಳಿಸಿದ ನಾಲ್ವರ ವಿರುದ್ಧವೂ ಕೇಸ್ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ವಿಡಿಯೋ ಹರಿಬಿಟ್ಟ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ಹಿಡಿದು ಥಳಿಸಿದವರ ಮೇಲೇಯೇ ಇದೀಗ ಕೇಸ್ ದಾಖಲಾಗಿದೆ. ಮಹಿಳೆಯನ್ನು ಆಟೋದಲ್ಲಿ ಕರೆದೊಯ್ದಿದ್ದ ಇಬ್ಬರು ಕಾಮುಕರು ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿ, ಕೃತ್ಯದ ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿರುವ ಘಟನೆ ಹಳೇ ಹುಬ್ಬಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 9ರಂದು ಈ ಘಟನೆ ನಡೆದಿದ್ದು, ಜನವರಿ 10 ರಂದು ಸಂತ್ರಸ್ತೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಆರೋಪಿಗಳಿಬ್ಬರನ್ನು ಹಿಡಿದು […]

ಕನ್ನಡ ದುನಿಯಾ 11 Jan 2026 1:30 pm

ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಹತ್ಯೆಗೆ ಸ್ಫೋಟಕ ತಿರುವು: ತನಿಖೆ ವೇಳೆ ಆರೋಪಿಯ ಬೆಚ್ಚಿ ಬೀಳಿಸುವ ಕ್ರೌರ್ಯ ಬಯಲು: ಅತ್ಯಾಚಾರವೆಸಗಿ ವೈರ್ ನಿಂದ ಕತ್ತು ಬಿಗಿದು ಕೊಲೆ

ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ 6 ವರ್ಷದ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯ ವೇಳೆ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗವಾಗಿದೆ. 6 ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದ ಆರೋಪಿ ಯುಸೂಫ್ ನನ್ನು ಬಂಧಿಸಿ ತನಿಖೆ ನಡೆಸಿದಾಗ ಆರೋಪಿ ಬಾಲಕಿಯನ್ನು ಅಪಹರಿಸಿ, ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ ಬಾಲಕಿ ಕತ್ತನ್ನು ವೈರ್ ನಿಂದ ಬಿಗಿದು ಕೊಲೆಗೈದಿದ್ದಾನೆ. ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಮೂಟೆಕಟ್ಟಿ ರಸ್ತೆ ಬದಿಯ ಚರಂಡಿಗೆ ಬಿಸಾಕಿದ್ದಾನೆ […]

ಕನ್ನಡ ದುನಿಯಾ 11 Jan 2026 12:35 pm

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ: ಹೂಡಿಕೆದಾರರಿಗೆ ಸರ್ಕಾರದಿಂದ ಎಲ್ಲಾ ರೀತಿ ಬೆಂಬಲ: ಸಿಎಂ ಸಿದ್ಧರಾಮಯ್ಯ

ಮಂಗಳೂರು: ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ “ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ -2026” ರಲ್ಲಿ ಅವರು ಮಾತನಾಡಿದರು. ಪ್ರವಾಸೋದ್ಯಮ ಸಮಾವೇಶ -2026 ರಲ್ಲಿ ಬಂಡವಾಳ ಹೂಡಿಕೆ ಮಾಡಲು ಲೆಟರ್ ಆಫ್ ಇಂಟೆಂಟ್ ಗೆ ಅನೇಕರು ಸಹಿ ಹಾಕಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಾಗುವವರಿಗೆ ಸರ್ಕಾರ ನೆರವಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶಗಳಿರುವ ಜಿಲ್ಲೆಗಳು ಎಂದರು. ನಮ್ಮ […]

ಕನ್ನಡ ದುನಿಯಾ 11 Jan 2026 12:04 pm

ಬೈಕ್ ನಲ್ಲಿ ಬಂದು ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡುತ್ತಿದ್ದ ಖದೀಮರು: ಇಬ್ಬರು ಆರೋಪಿಗಳು ಅರೆಸ್ಟ್

ಮಂಡ್ಯ: ಬೈಕ್ ನಲ್ಲಿ ಬಂದು ಮಹಿಳೆಯರ ಮಾಂಗಲ್ಯ ಸರ ಕದ್ದು ಪರಾರುಯಾಗುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಮಾಂಗಲ್ಯ ಸರ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ಮೈಸೂರಿನ ಶಾಂತಿನಗರ ನಿವಾಸಿ ಸದ್ದಾಂ ಹುಸೇನ್ ಅಲಿಯಾಸ್ ಸದ್ದಾಂ ಹಾಗೂ ರಾಜೀವ್ ನಗರದ ಸೈಯ್ಯದ್ ಅಯೂಬ್ ಎಂದು ಗುರುತಿಸಲಾಗಿದೆ. ಇಬ್ಬರೂ ಬೇರೆ ಬೇರೆ ಜಿಲ್ಲೆಗಳಲ್ಲಿ ಸರಗಳ್ಳತನ, ಮನೆಗಳ್ಳತನ ಮಾಡುತ್ತಿದ್ದರು. ಬಂಧಿತರಿಂದ 253 ಗ್ರಾಂ ಚಿನ್ನ, 178ಗ್ರಾಂ ಬೆಳ್ಳಿ ಹಾಗೂ ಕೃತ್ಯಕ್ಕೆ […]

ಕನ್ನಡ ದುನಿಯಾ 11 Jan 2026 12:02 pm

ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಶಿವಮೊಗ್ಗ: ರಸ್ತೆ ಅಪಘಾತದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕಟ್ಟೆ ಬಳಿ ಶುಕ್ರವಾರ ರಾತ್ರಿ ಬೈಕ್ ಸವಾರ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಚೇತನ್ ಮೊಗವೀರ ಮೃತಪಟ್ಟವರು. ಉಡುಪಿಯ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಹೊಸನಗರದಿಂದ ಸ್ವಗ್ರಾಮ ಮಾವಿನಕಟ್ಟೆಗೆ ಬೈಕ್ ನಲ್ಲಿ ತೆರಳುವಾಗ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಿಪ್ಪನ್ ಪೇಟೆ ಅರಸಾಳು ಗ್ರಾಪಂ ವ್ಯಾಪ್ತಿಯ 9ನೇ ಮೈಲಿಕಲ್ಲು ಸೂಡೂರು […]

ಕನ್ನಡ ದುನಿಯಾ 11 Jan 2026 11:51 am

ಕೊಡಗಿನಲ್ಲಿ ಕೆಲಸ ಖಾಲಿ ಇದೆ: ವೇತನ 25 ಮತ್ತು 20 ಸಾವಿರ ರೂ.ಗಳು

ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿ ಒಂದಿದೆ. ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಆರೋಗ್ಯ ಸೇವೆಗಳನ್ನು ಪಡೆಯಲು ಇರುವ ನ್ಯೂನ್ಯತೆ/ ಅಡೆತಡೆಗಳನ್ನು ನಿವಾರಿಸಿ ಹಾಗೂ ಉತ್ತಮ ಸೇವೆಯನ್ನು ದೊರೆಯುವಂತೆ ಮಾಡಲು ಟ್ರೈಬಲ್ ಹೆಲ್ತ್ ನ್ಯಾವಿಗೇಟರ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಂಬಂಧ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಂದ ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರು (1 ಹುದ್ದೆ) ಹಾಗೂ ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ(3 ಹುದ್ದೆ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕವಾಗಿ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲಾ ಆದಿವಾಸಿ ಆರೋಗ್ಯ […]

ಕನ್ನಡ ದುನಿಯಾ 11 Jan 2026 11:39 am

BREAKING: ಕೌಟುಂಬಿಕ ಕಲಹ: ತಂದೆಯನ್ನೇ ರಾಡ್ ನಿಂದ ಹೊಡೆದು ಕೊಂದ ಪುತ್ರ

ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ಘಟನೆ ನಡೆದಿದೆ. ರಾಡ್ ನಿಂದ ಹೊಡೆದು ಸತೀಶ್(60) ಅವರನ್ನು ಪುತ್ರ ರಂಜಿತ್ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದ ಪ್ರತ್ಯೇಕವಾಗಿ ತಾಯಿ ಮಗ ವಾಸವಾಗಿದ್ದರು. ಮೈಸೂರು ಜಿಲ್ಲೆ ಕೆಆರ್ ನಗರದಲ್ಲಿ ತಾಯಿ, ಮಗ ವಾಸವಾಗಿದ್ದರು. ಇದೇ ವಿಚಾರಕ್ಕೆ ತಂದೆಯ ಜೊತೆ ಆಗಾಗ ಜಗಳ ನಡೆಯುತ್ತಿತ್ತು. ನಿನ್ನೆ ಸಂಜೆ ಇದೇ ವಿಚಾರಕ್ಕೆ ತಂದೆ, ಮಗನ ನಡುವೆ ಜಗಳವಾಗಿದ್ದು, ಈ ವೇಳೆ ಸ್ಟೀಲ್ […]

ಕನ್ನಡ ದುನಿಯಾ 11 Jan 2026 11:39 am

BREAKING: ಲಿಫ್ಟ್ ನಲ್ಲಿ ಸಿಲುಕಿ ಪರದಾಡಿದ ಸಚಿವ ಕೆ.ಹೆಚ್.ಮುನಿಯಪ್ಪ, ಎಂಎಲ್ ಸಿ ಚಂದ್ರಪ್ಪ

ಬೀದರ್: ಕೆಲ ದಿನಗಳ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಲಿಫ್ಟ್ ನಲ್ಲಿ ಸಿಲುಕಿಕೊಂಡಿದ್ದ ಘಟನೆ ನಡೆದಿತ್ತು. ಇದೀಗ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಲಿಫ್ಟ್ ನಲ್ಲಿ ಸಿಲುಕಿಕೊಂಡು ಪರದಾಡಿದ ಘಟನೆ ನಡೆದಿದೆ. ಸಚಿವ ಈಶ್ವರ ಖಂಡ್ರೆ ಅವರ ತಂದೆ ಶತಾಯುಷಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಲೆಂದು ಬೀದರ್ ಆಸ್ಪತ್ರೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. 102 ವರ್ಷದ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೆಲ ದಿನಗಳಿಂದ ಬೀದರ್ ನ ಗುದಗೆ […]

ಕನ್ನಡ ದುನಿಯಾ 11 Jan 2026 11:37 am

BREAKING: ಸೋಮನಾಥ ಮಂದಿರದಲ್ಲಿ ‘ರುದ್ರಾಭಿಷೇಕ’ನೆರವೇರಿಸಿದ ಪ್ರಧಾನಿ ಮೋದಿ |ವಿಡಿಯೋ

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಭೇಟಿಯ ಎರಡನೇ ದಿನವಾದ ಭಾನುವಾರ ಸೋಮನಾಥ ದೇವಾಲಯವನ್ನು ರಕ್ಷಿಸುವಲ್ಲಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಯೋಧರನ್ನು ಗೌರವಿಸಲು ಆಯೋಜಿಸಲಾದ ಶೌರ್ಯ ಯಾತ್ರೆಯಲ್ಲಿ ಭಾಗವಹಿಸಿದ್ದರು. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿಕ ಮೆರವಣಿಗೆಯನ್ನು ಒಳಗೊಂಡಿತ್ತು. ನಂತರ, ಪ್ರಧಾನಿಯವರು ಸೋಮನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಿದರು. 1026 ರಲ್ಲಿ ಘಜ್ನಿಯ ಮಹಮೂದ್ ಸೋಮನಾಥ ದೇವಾಲಯದ ಮೇಲೆ ಆಕ್ರಮಣ ಮಾಡಿ 1,000 ವರ್ಷಗಳನ್ನು ಪೂರೈಸಿದ ನಂತರ ಈ […]

ಕನ್ನಡ ದುನಿಯಾ 11 Jan 2026 11:32 am

ಬೆಂಗಳೂರಿಗೆ 3 ಅಮೃತ್ ಭಾರತ್ ರೈಲು, ವೇಳಾಪಟ್ಟಿ

ಕೇಂದ್ರ ಸರ್ಕಾರ ಬೆಂಗಳೂರು ನಗರಕ್ಕೆ ಬಂಪರ್ ಕೊಡುಗೆ ನೀಡಿದೆ. ಪಶ್ಚಿಮ ಬಂಗಾಳ-ಬೆಂಗಳೂರು ನಗರ ಸಂಪರ್ಕಿಸುವ 3 ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸಲಾಗುತ್ತಿದೆ. ಇದರಿಂದಾಗಿ ಬೆಂಗಳೂರು ಮತ್ತು ಭಾರತದ ಪೂರ್ವ ಭಾಗದ ನಡುವಿನ ಪ್ರಯಾಣ ಸುಲಭವಾಗಲಿದೆ. ಈ ಹೊಸ ರೈಲುಗಳ ಬಗ್ಗೆ ತುಮಕೂರು ಸಂಸದ, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ಭಾರತದ ಪೂರ್ವ ಭಾಗಕ್ಕೆ ರೈಲ್ವೆ ಸಂಪರ್ಕ ಹೆಚ್ಚಳ ಎಂದು ಹೇಳಿದ್ದಾರೆ. […]

ಕನ್ನಡ ದುನಿಯಾ 11 Jan 2026 10:59 am

Good News: ಬೆಂಗಳೂರಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಪರೀಕ್ಷಾರ್ಥ ಸಂಚಾರ ಆರಂಭ

ಬೆಂಗಳೂರು ನಗರದ ಜನರಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ಕೊಟ್ಟಿದೆ. ಗುಲಾಬಿ ಮಾರ್ಗದಲ್ಲಿ ಭಾನುವಾರ ಪರೀಕ್ಷಾರ್ಥ ಸಂಚಾರ ಆರಂಭವಾಗಿದೆ. ಈ ಮಾರ್ಗವನ್ನು ಏಪ್ರಿಲ್ 2026ರಲ್ಲಿ ಸಂಚಾರಕ್ಕೆ ಪೂರ್ಣಗೊಳಿಸುವ ಗುರಿ ಇದೆ. ಕಾಳೇನ ಅಗ್ರಹಾರ-ತಾವರೆಕೆರೆ ತನಕದ ಗುಲಾಬಿ ಮಾರ್ಗದಲ್ಲಿ (ಸುಮಾರು 7.5 ಕಿಮೀ ಉದ್ದ) ರೋಲಿಂಗ್ ಸ್ಟಾಕ್ ಪರೀಕ್ಷೆಗಳನ್ನು ಭಾನುವಾರ ಆರಂಭವಾಗಲಿದೆ. ಏಪ್ರಿಲ್ 2026ರ ಮಧ್ಯಭಾಗದೊಳಗೆ ನಿಗಮವು ಇದನ್ನು ಪೂರ್ಣಗೊಳಿಸುವ ಯೋಜನೆ ಹೊಂದಿದೆ. ಈ ಮುಖ್ಯ ಪರೀಕ್ಷೆಗಳು (Main Line Testing) ವಾಣಿಜ್ಯ ಸಂಚಾರ ಮಾಡುವ ಮೊದಲು ಕೈಗೊಳ್ಳಲಾಗುವ ಅತ್ಯಂತ […]

ಕನ್ನಡ ದುನಿಯಾ 11 Jan 2026 10:38 am

BREAKING: ಚಿಕ್ಕಮಗಳೂರಿನಲ್ಲಿ ಕಾಫಿತೋಟದ ರಸ್ತೆಯಲ್ಲಿ ಸಿಂಗಲ್ ಬ್ಯಾರಲ್ ಬಂದೂಕು ಪತ್ತೆ: FIR ದಾಖಲು

ಚಿಕ್ಕಮಗಳೂರು: ಕಾಫಿತೋಟದ ರಸ್ತೆಯಲ್ಲಿ ಸಿಂಗಲ್ ಬ್ಯಾರಲ್ ಬಂದೂಕು ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಗೊಣಕಲ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಬಂದೂಕು ಹಿಡಿದು ನಾಲ್ವರು ಕಾಫಿತೋಟದ ರಸ್ತೆಯಲ್ಲಿ ಓಡಾಟ ನಡೆಸಿದ್ದರು. ಕಾರಿನ ಬೆಳಕು ಕಂಡು ಬಂದೂಕು ಎಸೆದು ಪರಾರಿಯಾಗಿದ್ದಾರೆ. ತೋಟದ ಮಾಲೀಕ ಮನದೀಪ್ ಎಂಬುವವರು ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಐಜಿಪಿ ಕುಟುಂಬಕ್ಕೆ ಸೇರಿದ ಕಾಫಿತೋಟದ ಸಿಬ್ಬಂದಿ ವಿರುದ್ಧ ಎಫ್ ಐ ಆರ್ […]

ಕನ್ನಡ ದುನಿಯಾ 11 Jan 2026 10:37 am

BREAKING: ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ: ಕೃತ್ಯದ ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್; ಕಾಮುಕರು ಅರೆಸ್ಟ್

ಹುಬ್ಬಳ್ಳಿ: ರಾಜ್ಯದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಕೃತ್ಯದ ವಿಡಿಯೋಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದೂ ಅಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ. ಮಹಿಳೆಗೆ ಪದೇ ಪದೇ ಬ್ಲ್ಯಾಕ್ ಮೇಲ್ ಮಾಡಿ […]

ಕನ್ನಡ ದುನಿಯಾ 11 Jan 2026 10:19 am

BREAKING: ಪರಶುರಾಮ ಥೀಮ್ ಪಾರ್ಕ್ ನಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ್ದ ಇಬ್ಬರು ಅರೆಸ್ಟ್

ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ತಾಮ್ರ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ನಿಂದ ತಾಮ್ರದ ಹೊದಿಕೆ ಕಳವು ಮಾಡಲಾಗಿತ್ತು. ಮಂಗಳೂರು ಮೂಲದ ಆರಿಫ್(37), ಅಬ್ದುಲ್ ಹಮೀದ್(32) ಅವರನ್ನು ಬಂಧಿಸಲಾಗಿದೆ. ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಛಾವಣಿಗೆ ಹಾಕಿದ್ದ ತಾಮ್ರದ ಹೊದಿಕೆ ಹಲವು ಮಾಡಿದ್ದ ಪ್ರಕರಣ ಗಂಭೀರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪೊಲೀಸರು ಮೂರು ತಂಡಗಳನ್ನು […]

ಕನ್ನಡ ದುನಿಯಾ 11 Jan 2026 10:02 am

BREAKING: ಖ್ಯಾತ ಮಕ್ಕಳ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ

ಬೆಳಗಾವಿ: ಖ್ಯಾತ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆಯಾಗಿದ್ದು, ವೈದ್ಯನನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವೈದ್ಯ ರಾಹುಲ್ ಬಂಟಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಹಿರೇಬಾಗೇವಾಡಿ ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ವೈದ್ಯನಾಗಿದ್ದ ಡಾ.ರಾಹುಲ್ ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ಪೊಲೀಸರುಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮಾಳಮಾರುತಿ ಠಾಣೆ ಪೊಲೀಸರು ವೈದ್ಯನ ಮನೆಯಾದ ಬೆಳಗಾವಿ ಶಿವಬಸವ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆಯಾಗಿದೆ. […]

ಕನ್ನಡ ದುನಿಯಾ 11 Jan 2026 9:54 am

SHOCKING: ಕಾರ್ ನಲ್ಲೇ ಬೆಂಕಿ ಹಚ್ಚಿಕೊಂಡು ಬಿಜೆಪಿ ಮುಖಂಡ ಆತ್ಮಹತ್ಯೆ

ದಾವಣಗೆರೆ: ಕೌಟುಂಬಿಕ ಕಲಹದಿಂದ ಮನನೊಂದು ಬಿಜೆಪಿ ಮುಖಂಡರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಬಿಜೆಪಿ ಮುಖಂಡ, ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ ಸಂಕೋಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ತಾಲೂಕಿನ ನಾಗನೂರು ಸಮೀಪ ತೋಟದಲ್ಲಿ ಘಟನೆ ನಡೆದಿದೆ. ಚಂದ್ರಶೇಖರ ಸಂಕೋಲ್ ಅವರ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದು, ಮಕ್ಕಳಿಗೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿದೆ. ಇದರಿಂದ ಮನನೊಂದು ಚಂದ್ರಶೇಖರ ಸಂಕೋಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, […]

ಕನ್ನಡ ದುನಿಯಾ 11 Jan 2026 9:54 am

BREAKING: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಸಮೀಪ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಅಪರಿಚಿತ ವಾಹನ ಡಿಕ್ಕಿಯಾಗಿ ಮಧುಸೂದನ್(21) ಸಾವನ್ನಪ್ಪಿದ್ದಾರೆ. ಮಾಗಡಿ ತಾಲೂಕಿನ ಬೈರಸಾಗರ ಗ್ರಾಮದ ನಿವಾಸಿಯಾಗಿರುವ ಮಧುಸೂದನ್ ಬೈಕ್ ನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕನ್ನಡ ದುನಿಯಾ 11 Jan 2026 9:43 am