BREAKING: ಬೆಂಗಳೂರಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರಿನ ಸೀಟ್ ಬೆಂಡ್ ಮಾಡಿ ಮಲಗಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೆಳಿಗ್ಗೆಯಿಂದ ರಸ್ತೆ ಬದಿ ನಿಂತಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬ ಮಲಗಿದ್ದ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಸಾಕಷ್ಟು ಬಾರಿ ಕರೆದಿದ್ದಾರೆ. ಆದರೆ ಮೇಲೆ ಎದ್ದಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು […]
BIG NEWS: ಜಿಎಸ್ಟಿ: ರಾಜ್ಯಕ್ಕೆ ಈ ವರ್ಷ 5 ರಿಂದ 6 ಸಾವಿರ ಕೋಟಿ ನಷ್ಟ: ಸಿಎಂ ಸಿದ್ದರಾಮಯ್ಯ ಮಾಹಿತಿ
ಹಾವೇರಿ: ಜಿಎಸ್ಟಿ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವರ್ಷ ಕರ್ನಾಟಕಕ್ಕೆ 5 ರಿಂದ 6 ಸಾವಿರ ಕೋಟಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರವೇ ಜಿಎಸ್ಟಿ ಜಾರಿಗೆ ತಂದು ಎಂಟು ವರ್ಷ 24% ತೆರಿಗೆ ಸುಲಿಗೆ ಮಾಡಿ ನಂತರ ನಾವು ತೆರಿಗೆ ಕಡಿಮೆ ಮಾಡಿದ್ದೇವೆ ಎಂದರು. ಕರ್ನಾಟಕ ರಾಜ್ಯವೊಂದಕ್ಕೆ ಒಂದು ವರ್ಷಕ್ಕೆ 10 ರಿಂದ 12 ಸಾವಿರ ಕೋಟಿ ರೂ.ಕಡಿಮೆಯಾಗಿದೆ. ಈ ವರ್ಷ 5 ರಿಂದ 6 ಸಾವಿರ […]
ನನ್ನ ಆಡಳಿತ ತೃಪ್ತಿ ತಂದಿದೆ: ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ
ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದೇನೆ. ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ಆಡಳಿತ ತೃಪ್ತಿ ತಂದಿದೆ. ಎಲ್ಲಿಯವರೆಗೆ ರಾಜಕೀಯದಲ್ಲಿರುತ್ತೇನೆ ಗೊತ್ತಿಲ್ಲ. ಜನರ ಆಶಿರ್ವಾದವಿರುವರೆರೆಗೂ ಇರುತ್ತೇನೆ ಎಂದು ತಿಳಿಸಿದರು . ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿಗಳು ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ […]
ಅಮೆರಿಕ ವೆನೆಜುವೆಲಾದಿಂದ ತೊಲಗು ಬೆಂಗಳೂರಲ್ಲಿ ಬೃಹತ್ ಪ್ರತಿಭನೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಅಮೆರಿಕದ ತೈಲ ಸಂಪದ್ಭರಿತ ರಾಷ್ಟ್ರ ವೆನೆಜುವೆಲಾ ಮೇಲೆ ದಾಳಿ ನಡೆಸಿರುವ ಅಮೆರಿಕ ಕ್ರಮ ಖಂಡಿಸಿ ಈ ಪ್ರತಿಭಟನೆ ಆಯೋಜಿಸಲಾಗಿದೆ. ಜನವರಿ 8ರ ಗುರುವಾರ ಸಂಜೆ 4 ಗಂಟೆಗೆ ಬೆಂಗಳೂರು ನಗರದ ಫ್ರೀಡಂಪಾರ್ಕ್ನಲ್ಲಿ ಎಡಪಕ್ಷಗಳು ಒಟ್ಟಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ. ವೆನೆಜುವೆಲಾ ಮೇಲೆ ಸಾಮ್ಯಾಜ್ಯಶಾಹಿ ಅಮೆರಿಕ ದಾಳಿ ಖಂಡಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ. ಯುದ್ಧಕೋರ ಅಮೆರಿಕ ವೆನೆಜುವೆಲಾದಿಂದ ತೊಲಗು ಎಂಬ ಶೀರ್ಷಿಕೆಯಡಿ ಪ್ರತಿಭಟನೆ ನಡೆಯಲಿದೆ. […]
ಮುಂಬೈ: ಮಹಾರಾಷ್ಟ್ರದ ಅಂಬರ್ನಾಥ್ ಪುರಸಭೆಯಲ್ಲಿ ಕಾಂಗ್ರೆಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡು, ಬಿಜೆಪಿಯ ತೇಜಶ್ರೀ ಕರಂಜುಲೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತವನ್ನಾಗಿ ಮಾಡುವುದಾಗಿ ಹೇಳುತ್ತಿದ್ದ ಬಿಜೆಪಿ ಅಧಿಕಾರದ ಆಸೆಗೆ ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೇರಿದ್ದು ರಾಷ್ಟ್ರಾದ್ಯಂತ ತೀರ್ವ ಚರ್ಚೆಗೆ ಗ್ರಾಸವಾಗಿರುವಾಗಲೇ ಕಾಂಗ್ರೆಸ್ ಕಾರ್ಯಕರ್ತರುಗೆ ಬಿಗ್ ಶಾಕ್ ಎದುರಾಗಿದೆ. ಅಂಬರ್ನಾಥ್ ಪುರಸಭೆ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೆನೆ 27, ಬಿಜೆಪಿ 16 ಹಾಗೂ ಕಾಂಗ್ರೆಸ್ 12 ಮತ್ತು ಎನ್ ಸಿಪಿ(ಅಜಿತ್ […]
ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಸಂಸದ ಬೊಮ್ಮಾಯಿ ಆಗ್ರಹ
ಹಾವೇರಿ: ಸುದೀರ್ಘ ಅವಧಿಯ ಅಧಿಕಾರದ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ದಾಖಲೆಯ ನೆನಪಿಗಾಗಿ ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸತ್ರೆ ಕೊಡುಗೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಇಂದು ಹಾವೇರಿಯ ದೇವಗಿರಿ – ಯಲ್ಲಾಪುರ ಬಳಿ ನೂತನವಾಗಿ ನಿರ್ಮಿಸಲಾದ ಹಾವೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದರು. ನಮ್ಮೆಲ್ಲ ಬಹುದಿನಗಳ ವೈದ್ಯಕೀಯ ಕಾಲೇಜು ಉದ್ಘಾಟನೆ ಆಗಿದೆ. ವೈದ್ಯಕೀಯ ಶಿಕ್ಷಣದ ಜೊತೆಗೆ ಹಾವೇರಿಯ ಆರೋಗ್ಯದ ಸಮಸ್ಯೆಗೆ […]
ಬಂದೂಕು ಹಿಡಿಯುವ ಕೈಗಳಲ್ಲಿ ಅಡಗಿದೆ ಕರುಣೆ: ಅಜ್ಜಿಯ ಎಲ್ಲಾ ಸಮೋಸಾ ಖರೀದಿಸಿ ಹೃದಯ ಗೆದ್ದ ಯೋಧರು ವಿಡಿಯೋ ವೈರಲ್
ಬೆಂಗಳೂರು: ಭಾರತೀಯ ಯೋಧರು ಕೇವಲ ಗಡಿಯಲ್ಲಿ ಶತ್ರುಗಳನ್ನಷ್ಟೇ ಸದೆಬಡಿಯುವುದಿಲ್ಲ, ದೇಶದ ಜನರ ಕಣ್ಣೀರನ್ನೂ ಒರೆಸಬಲ್ಲರು ಎಂಬುದಕ್ಕೆ ಈ ಒಂದು ಹೃದಯಸ್ಪರ್ಶಿ ಘಟನೆ ಸಾಕ್ಷಿಯಾಗಿದೆ. ರೈಲ್ವೆ ನಿಲ್ದಾಣವೊಂದರಲ್ಲಿ ವ್ಯಾಪಾರವಿಲ್ಲದೆ ಕಾಯುತ್ತಿದ್ದ ವೃದ್ಧೆಯೊಬ್ಬರ ನೆರವಿಗೆ ಧಾವಿಸಿದ ಸೈನಿಕರ ವಿಡಿಯೋ ಈಗ ಇಂಟರ್ನೆಟ್ನಲ್ಲಿ ಸಖತ್ ಸದ್ದು ಮಾಡುತ್ತಿದೆ. ವೈರಲ್ ವಿಡಿಯೋದಲ್ಲೇನಿದೆ? ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ ಮೇಲೆ ವೃದ್ಧೆಯೊಬ್ಬರು ಬುಟ್ಟಿಯಲ್ಲಿ ತಂದಿದ್ದ ಸಮೋಸಾಗಳನ್ನು ಮಾರುತ್ತಿದ್ದರು. ಅಂದು ವ್ಯಾಪಾರ ಅಷ್ಟೇನೂ ಚುರುಕಾಗಿರಲಿಲ್ಲ. ಅಷ್ಟರಲ್ಲಿ ಸಮವಸ್ತ್ರಧಾರಿ ಯೋಧರ (CISF/Army) ದೊಡ್ಡ ತಂಡವೊಂದು ಅಲ್ಲಿಗೆ ಆಗಮಿಸುತ್ತದೆ. ಅಜ್ಜಿಯ […]
BIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಇಬ್ಬರು ಸಾವು: 6 ಜನರ ಸ್ಥಿತಿ ಗಂಭೀರ
ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ದುರಂತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಮರಕುಂಬಿ ಗ್ರಾಮದ ಬಳಿ ಇರುವ ಇನಾಮ್ ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ವಿಕ್ರಮ್ ಇನಾಮದಾರ್ ಎಂಬುವವರಿಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ […]
BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರ ಕಾರು ಚಾಲಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಅಂಪ್ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ್, ಮೌನಪ್ಪ, ಸಂಪತ್ ಎಂದು ಗುರುತಿಸಲಾಗಿದೆ. ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕ ಬಸವಂತ್ ಕಡೋಲ್ಕರ್ ಎಂಬುವವರಿಗೆ ನಿನ್ನೆ ಮಂಗಳವಾರ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಚಾಕು […]
ಬಿಜೆಪಿ-ಕಾಂಗ್ರೆಸ್ ಮೈತ್ರಿ, ಮೇಯರ್ ಪಟ್ಟ: ಇದೆಂಥ ರಾಜಕೀಯ ಅಂದ್ರು ಜನ!
ಬಿಜೆಪಿ-ಕಾಂಗ್ರೆಸ್ ರಾಜಕೀಯ ಎದುರಾಳಿಗಳು. ಇಡೀ ಭಾರತ ಕಾಂಗ್ರೆಸ್ ಮುಕ್ತವಾಗಬೇಕು ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಆದರೆ ಮೇಯರ್ ಪಟ್ಟಕ್ಕಾಗಿ ಕಾಂಗ್ರೆಸ್-ಬಿಜೆಪಿ ಮೈತ್ರಿ ಮಾಡಿಕೊಂಡಿರುವ ರಾಜಕೀಯ ಬೆಳವಣಿಗೆ ನಡೆದಿದೆ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಮಾತು ಮಹಾರಾಷ್ಟ್ರ ರಾಜ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಪುಣೆ ಜಿಲ್ಲೆಯ ಅಂಬರ್ನಾಥ್ ನಗರಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿದ್ದು, ಈಗ ಚರ್ಚೆ, ವಿವಾದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ರಾಜ್ಯದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನೆಯನ್ನು ಅಧಿಕಾರದಿಂದ ದೂರ ಇಡಲು ಈ ಅಚ್ಚರಿಯ […]
2 ಉಪ ಚುನಾವಣೆ, 4 ಸೀಟು ಪರಿಷತ್ ಚುನಾವಣೆ: ತಯಾರಿಯಲ್ಲಿ ಬ್ಯುಸಿಯಾದ ಬಿಜೆಪಿ!
2026ರ ಪ್ರಾರಂಭದಲ್ಲಿಯೇ ಕರ್ನಾಟಕದ ಪ್ರತಿಪಕ್ಷ ಬಿಜೆಪಿ ನಾಯಕರು ಫುಲ್ ಬ್ಯುಸಿಯಾಗಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ಜೊತೆಗೆ 2 ಕ್ಷೇತ್ರದ ಉಪ ಚುನಾವಣೆ ಮತ್ತು 4 ಸೀಟುಗಳ ವಿಧಾನ ಪರಿಷತ್ ಚುನಾವಣೆಗೆ ತಯಾರಿ ಜೋರಾಗಿದೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕೋರ್ ಕಮಿಟಿ ಸಭೆಯನ್ನು ನಡೆಸಿ ಚುನಾವಣೆಗಳ ಕುರಿತು ಚರ್ಚೆ ನಡೆಸಲಾಗಿದೆ. ಆಡಳಿತ ಪಕ್ಷ ಕಾಂಗ್ರೆಸ್ ಚುನಾವಣೆಯನ್ನು ಗೆದ್ದು ಸರ್ಕಾರದ ಪ್ರತಿಷ್ಠೆ ಉಳಿಸಿಕೊಳ್ಳುವ ಉತ್ಸಾಹದಲ್ಲಿದ್ದರೆ, ಬಿಜೆಪಿ ಗೆದ್ದು ಆಡಳಿತ ಪಕ್ಷಕ್ಕೆ ಹಿನ್ನಡೆ ಉಂಟು ಮಾಡಲು […]
‘PM ಆವಾಸ್’ಯೋಜನೆಯಡಿ ಸಹಾಯಧನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ? ಆದಾಯ ಮಿತಿ ಎಷ್ಟು ತಿಳಿಯಿರಿ
ಕೇಂದ್ರ ಸರ್ಕಾರವು ದೇಶದ ಜನರಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರವು ಜಾರಿಗೆ ತಂದ ಯೋಜನೆಗಳಲ್ಲಿ ಒಂದು ಪ್ರಧಾನಮಂತ್ರಿ ಆವಾಸ್ ಯೋಜನೆ. ಇನ್ನೂ ಶಾಶ್ವತ ಮನೆ ನಿರ್ಮಿಸದ ನಗರ ಕುಟುಂಬಗಳಿಗೆ ಒಳ್ಳೆಯ ಸುದ್ದಿ ಇದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅರ್ಬನ್ 2.0 (PMAY-U 2.0) ಅಡಿಯಲ್ಲಿ, ನಗರ ಪ್ರದೇಶದ ಜನರಿಗೆ ಮನೆ ನಿರ್ಮಿಸಲು, ಖರೀದಿಸಲು ಅಥವಾ ಬಾಡಿಗೆಗೆ ನೀಡಲು ಸರ್ಕಾರವು ಆರ್ಥಿಕ ಸಹಾಯವನ್ನು ನೀಡುತ್ತಿದೆ. ಈ ಯೋಜನೆಯನ್ನು 2024 ರಿಂದ 2029 ರವರೆಗೆ ಐದು ವರ್ಷಗಳ ಕಾಲ […]
JOB ALERT : ಪದವೀಧರರಿಗೆ ಗುಡ್ ನ್ಯೂಸ್ : ‘SBI’ನಲ್ಲಿ 1,146 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI Recruitment
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ (SCO) ನೇಮಕಾತಿ 2025 ಅಧಿಸೂಚನೆಗೆ ತಿದ್ದುಪಡಿಯನ್ನು ಹೊರಡಿಸಿದ್ದು, ಖಾಲಿ ಹುದ್ದೆಗಳ ಸಂಖ್ಯೆಯನ್ನು ಪರಿಷ್ಕರಿಸಿದೆ ಮತ್ತು ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ವಿಸ್ತರಿಸಿದೆ. ಅಭ್ಯರ್ಥಿಗಳು ಈಗ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ಡಿಸೆಂಬರ್ 2, 2025 ರಿಂದ ಜನವರಿ 10, 2026 ರವರೆಗೆ ಅರ್ಜಿ ಶುಲ್ಕವನ್ನು ಪಾವತಿಸಬಹುದು. ಇದಕ್ಕೂ ಮೊದಲು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 23, 2025 ಆಗಿತ್ತು. ಪರಿಷ್ಕೃತ ಅಧಿಸೂಚನೆಯ ಪ್ರಕಾರ, […]
Big News: ಕಲಬುರಗಿಯಿಂದ ಮೈಸೂರು, ಚಿತ್ರದುರ್ಗಕ್ಕೆ ನಾನ್ ಎಸಿ ಸ್ಲೀಪರ್ ಬಸ್
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಹೊಸ ಮಾರ್ಗದಲ್ಲಿ ನಾನ್ ಎಸಿ ಬಸ್ಗಳ ಸಂಚಾರವನ್ನು ಘೋಷಣೆ ಮಾಡಿದೆ. ಕಲಬುರಗಿ ವಿಭಾಗ-1ರ ಕಲಬುರಗಿ ಘಟಕ-1ರಿಂದ ಈ ಬಸ್ಗಳು ಸಂಚಾರವನ್ನು ನಡೆಸಲಿವೆ. ಕಲಬುರಗಿ-ಮೈಸೂರು (ಅಮೋಘವರ್ಷ) ಮತ್ತು ಕಲಬುರಗಿ-ಚಿತ್ರದುರ್ಗ ನಾನ್ ಎ/ಸಿ ಸ್ಲೀಪರ್ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ-1 ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. ಬಸ್ ವೇಳಾಪಟ್ಟಿ: ಕಲಬುರಗಿ-ಮೈಸೂರು ಬಸ್ ಕಲಬುರಗಿ ಬಸ್ ನಿಲ್ದಾಣದಿಂದ ಸಂಜೆ 5 ಗಂಟೆಗೆ ನಿರ್ಗಮಿಸಿ […]
BREAKING : ಬೆಂಗಳೂರಲ್ಲಿ ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!
ಬೆಂಗಳೂರು : 16 ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ. ಮಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿಕ್ಷೇಪ್ ಬಂಗೇರಾ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಕ್ಷೇಪ್ ಬಂಗೇರಾ ತನ್ನ ತಂದೆ ತಾಯಿ ಜೊತೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದನು. ವಿದೇಶದಲ್ಲಿ ಇಂಜಿನಿಯರಿಂಗ್ ಮುಗಿಸಿ ವಾಪಸ್ ಆಗಿದ್ದ ನಿಕ್ಷೇಪ್ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನಾರೋಗ್ಯದಿಂದ ನಿಕ್ಷೇಪ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ […]
HEALTH TIPS : ನೀವು 100 ವರ್ಷ ಆರೋಗ್ಯವಾಗಿ ಬದುಕಬೇಕೆ..? ಈ 5 ಸರಳ ಸೂತ್ರಗಳನ್ನು ಪಾಲಿಸಿ
ಇಂದಿನ ವೇಗದ ಜೀವನದಲ್ಲಿ ನಾವು ನಮ್ಮ ಆರೋಗ್ಯವನ್ನು ನಿರ್ಲಕ್ಷಿಸುವುದು ಸಾಮಾನ್ಯವಾಗಿದೆ. ಸರಿಯಾದ ನಿದ್ರೆ, ಬಲವಾದ ಸಾಮಾಜಿಕ ಸಂಬಂಧಗಳು ಮತ್ತು ಮಾನಸಿಕ ಶಾಂತಿ ಕೇವಲ ಪದಗಳಲ್ಲ, ಅವು ನಿಮ್ಮ ಜೀವಿತಾವಧಿಯನ್ನು ಹೆಚ್ಚಿಸುವ ಮಂತ್ರಗಳಾಗಿವೆ. ತಜ್ಞರು ಶಿಫಾರಸು ಮಾಡಿದ ಈ ಐದು ತತ್ವಗಳನ್ನು ನೀವು ನಿಮ್ಮ ದೈನಂದಿನ ದಿನಚರಿಯ ಭಾಗವಾಗಿಸಿದರೆ ಆರೋಗ್ಯಕರ ಜೀವನ ನಡೆಸಬಹುದು. 1) ನಿದ್ರೆ : ಪ್ರತಿದಿನ 7 ರಿಂದ 8 ಗಂಟೆಗಳ ನಿದ್ರೆ ಅತ್ಯಗತ್ಯ. ನಿದ್ರೆಯ ಸಮಯದಲ್ಲಿ ನಮ್ಮ ದೇಹವು ತನ್ನನ್ನು ತಾನೇ ದುರಸ್ತಿ ಮಾಡಿಕೊಳ್ಳುತ್ತದೆ. […]
ರಾಜ್ಯದ ವಿಕಲಚೇತನರ ಗಮನಕ್ಕೆ : ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೆ ಸಾಲಿನ ಸಾಧನೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31, 2026 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in/…/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ […]
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಂಧಿಸಲಾದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತೆಯ ಮೇಲೆ ಕರ್ನಾಟಕ ಪೊಲೀಸರು ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಹುಬ್ಬಳ್ಳಿ ಪೊಲೀಸ್ ಆಯುಕ್ತ ಶಶಿ ಕುಮಾರ್ ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಆನ್ಲೈನ್ನಲ್ಲಿ ನಲ್ಲಿ ವೈರಲ್ ಆದ ವೀಡಿಯೊವೊಂದರಲ್ಲಿ ಮಹಿಳೆಯನ್ನು ಪುರುಷ ಮತ್ತು ಮಹಿಳಾ ಪೊಲೀಸರು ಸುತ್ತುವರೆದಿರುವ ದೃಶ್ಯವಿದೆ. ಪ್ರಕರಣವೊಂದರಲ್ಲಿ ಬಂಧನದ ಸಮಯದಲ್ಲಿ ಪೊಲೀಸ್ ಸಿಬ್ಬಂದಿ ಆಕೆಯ ಬಟ್ಟೆಗಳನ್ನು ಹರಿದು ಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಪಷ್ಟನೆಮಹಿಳೆಯೇ ಬಟ್ಟೆ ಬಿಚ್ಚಿ […]
Big News: ಸರ್ಕಾರಿ ನೌಕರರಿಗೆ ಅಪ್ಡೇಟ್, ಆಸ್ಪತ್ರೆಗಳಿಗೆ ಸುತ್ತೋಲೆ
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್) ರಾಜ್ಯ ಸರ್ಕಾರಿ ನೌಕರರಿಗಾಗಿ ಅಕ್ಟೋಬರ್ನಿಂದ ಜಾರಿಗೆ ಬಂದಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಯೋಜನೆಯನ್ನು ನಿರ್ವಹಣೆ ಮಾಡಲಾಗುತ್ತಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೋಂದಾಯಿತ ಆಸ್ಪತ್ರೆಗಳಿಗೆ ಸುತ್ತೋಲೆಯೊಂದನ್ನು ಹೊರಡಿಸಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಚಿಕಿತ್ಸೆ ನೀಡುವ ಕುರಿತು ಸುತ್ತೋಲೆಯಲ್ಲಿ ವಿವರಣೆ ನೀಡಲಾಗಿದೆ. ಈ ಸುತ್ತೋಲೆಯು ನೋಂದಾಯಿತ ಆಸ್ಪತ್ರೆಗಳು KASS ಯೋಜನೆಯಡಿಯಲ್ಲಿ ಚಿಕಿತ್ಸೆ ನೀಡುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರದ ಆದೇಶ 15/06/2020, 30 23/09/2025 ಉಲ್ಲೇಖಿಸಲಾಗಿದೆ. […]
Makar Sankranti 2026: ಮಕರ ಸಂಕ್ರಾಂತಿ ಯಾವಾಗ? ಹಬ್ಬದ ಮಹತ್ವ ಮತ್ತು ಶುಭ ಮುಹೂರ್ತಗಳ ಸಂಪೂರ್ಣ ಮಾಹಿತಿ
ಬೆಂಗಳೂರು: ಚಳಿಗಾಲದ ಮೈಕೊರೆಯುವ ಚಳಿಗೆ ಬ್ರೇಕ್ ಹಾಕಿ, ಬೆಚ್ಚಗಿನ ಸೂರ್ಯನ ಕಿರಣಗಳನ್ನು ಸ್ವಾಗತಿಸುವ ಸುಂದರ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ (Makar Sankranti) ಹೊಸ್ತಿಲಲ್ಲಿದೆ. ಸೂರ್ಯನು ದಕ್ಷಿಣದಿಂದ ಉತ್ತರ ಪಥಕ್ಕೆ ಚಲಿಸುವ ಉತ್ತರಾಯಣದ ಪುಣ್ಯಕಾಲ ಆರಂಭವಾಗುತ್ತಿದ್ದಂತೆ ದೇಶಾದ್ಯಂತ ಹಬ್ಬದ ಕಳೆ ಮನೆಮಾಡುತ್ತದೆ. ಕೇವಲ ಧಾರ್ಮಿಕವಾಗಿ ಮಾತ್ರವಲ್ಲದೆ, ರೈತಬಾಂದವರ ಪಾಲಿಗೆ ಈ ಹಬ್ಬ ಹೊಸ ಬದುಕು ಮತ್ತು ಸಂತೋಷದ ಸಂಕೇತ. ಸಂಕ್ರಾಂತಿ ಎಂದರೆ ಕೇವಲ ಎಳ್ಳು-ಬೆಲ್ಲ ತಿನ್ನುವುದಷ್ಟೇ ಅಲ್ಲ; ಇದು ಕತ್ತಲೆಯಿಂದ ಬೆಳಕಿನತ್ತ, ಶೀತದಿಂದ ಶಕ್ತಿಯತ್ತ ಸಾಗುವ ಸಂಕೇತ. […]
ಬೆಂಗಳೂರು : ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಕುರಿತು ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ ಸಿ.ಬಿ.ಎಸ್.ಇ. ಮಂಡಳಿಯಲ್ಲಿ ಕಂಪ್ಯೂಟರ್ಗಳನ್ನು ಬಳಸಿ 12ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶವಿದ್ದು, ಅದೇ ರೀತಿ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಿಂದ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ […]
JOB ALERT : ಕ್ರೀಡಾಪಟುಗಳಿಗೆ ಬಂಪರ್ ಸುದ್ದಿ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕ್ರೀಡಾಪಟುಗಳಿಗೆ ಬಂಪರ್ ಅವಕಾಶ..! ಕ್ರೀಡಾಪಟುಗಳಿಗೆ ಭಾರತೀಯ ರೈಲ್ವೇ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಗ್ನೇಯ ರೈಲ್ವೆ 54 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10 ನೇ ತರಗತಿ ಪಾಸಾದ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿಯು 10-01-2026 ರಂದು ಪ್ರಾರಂಭವಾಗುತ್ತದೆ ಮತ್ತು 09-02-2026 ರಂದು ಮುಕ್ತಾಯಗೊಳ್ಳುತ್ತದೆ. ಅಭ್ಯರ್ಥಿಗಳು ಆಗ್ನೇಯ ರೈಲ್ವೆ ವೆಬ್ಸೈಟ್ rrcser.co.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಆಗ್ನೇಯ ರೈಲ್ವೆ 54 ಕ್ರೀಡಾ ವ್ಯಕ್ತಿಗಳ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ […]
ಚಿನ್ನ–ಬೆಳ್ಳಿ ದರದಲ್ಲಿ ದಾಖಲೆ; ಬುಧವಾರ ಬೆಳ್ಳಿ ಬೆಲೆ ₹10,000 ಏರಿಕೆ
ಬೆಂಗಳೂರು: ದೇಶೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಈಗ ಗಗನಕ್ಕೇರಿದೆ, ಬಂಗಾರ ಕೊಳ್ಳೋಣ ಎಂದು ಕನಸು ಕಾಣುತ್ತಿದ್ದ ಮಧ್ಯಮ ವರ್ಗದ ಜನರಿಗೆ ಬೆಲೆ ಏರಿಕೆ ದೊಡ್ಡ ಶಾಕ್ ನೀಡಿದೆ. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯೂ ರಾಕೆಟ್ ವೇಗದಲ್ಲಿ ಏರುತ್ತಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳು, ರಾಜಕೀಯ ಅಸ್ಥಿರತೆ ಮತ್ತು ಪೂರೈಕೆಯಲ್ಲಿನ ಕೊರತೆ ಈ ಬೆಲೆ ಏರಿಕೆಗೆ ಮುಖ್ಯ ಕಾರಣ. ಅದರಲ್ಲೂ ವೆನೆಜುವೆಲಾ ಮೇಲಿನ ಯುಎಸ್ ದಾಳಿಯು ಬುಲಿಯನ್ ಮಾರುಕಟ್ಟೆಯಲ್ಲಿ ಕಂಪನ ಸೃಷ್ಟಿಸಿದೆ. […]
ಒಂದು ನಿಮಿಷದಲ್ಲಿ ‘ವಾಟ್ಸಾಪ್’ಮೂಲಕ ‘ಆಧಾರ್ ಕಾರ್ಡ್’ಡೌನ್ಲೋಡ್ ಮಾಡಬಹುದು.! ಜಸ್ಟ್ ಹೀಗೆ ಮಾಡಿ
ಆಧಾರ್ ಕಾರ್ಡ್ ಅತ್ಯಗತ್ಯ ದಾಖಲೆಯಾಗಿದೆ. ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೂ ಆಧಾರ್ ಕಾರ್ಡ್ ಅತ್ಯಗತ್ಯ. ನಿಮಗೆ ಅದು ಯಾವಾಗ ಬೇಕಾಗುತ್ತದೆ ಎಂದು ನಿಮಗೆ ತಿಳಿದಿರುವುದಿಲ್ಲ.ಅದಕ್ಕಾಗಿಯೇ ಪ್ರತಿಯೊಬ್ಬರೂ ಆಧಾರ್ ಅನ್ನು ತಮ್ಮ ಕೈಚೀಲ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ನಿಮಗೆ ಏನಾದರೂ ಅಗತ್ಯವಿದ್ದರೆ, ಅದನ್ನು ತಕ್ಷಣ ತೋರಿಸಿದರೆ ಕೆಲಸ ಬೇಗನೆ ಮುಗಿಯುತ್ತದೆ. ಜನರು ಬಳಸಲು ಸುಲಭವಾಗುವಂತೆ ಆಧಾರ್ ಕಾರ್ಡ್ ಮಾಡಲು UIDAI ಹಲವು ಹೊಸ ವಿಧಾನಗಳನ್ನು ಪರಿಚಯಿಸುತ್ತಿದೆ. ಆಧಾರ್ ಅನ್ನು ಡಿಜಿಟಲ್ ರೂಪದಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಅಗತ್ಯವಿದ್ದಾಗ ನೀವು ಅದನ್ನು […]
FACT CHECK : ‘ಬಿಯರ್’ಕುಡಿದ್ರೆ ‘ಕಿಡ್ನಿ ಸ್ಟೋನ್ ‘ಕರಗುತ್ತದೆಯೇ ? ಅಸಲಿ ಸತ್ಯ ತಿಳಿಯಿರಿ
ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೊಟ್ಟೆ ನೋವು ಮತ್ತು ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿಯುವಂತಹ ಲಕ್ಷಣಗಳು ಕಾಣಿಸಿಕೊಂಡಾಗ, ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ. ಬಿಯರ್ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ ಎಂಬುದನ್ನು ಜನ ನಂಬುತ್ತಾರೆ.. ವಾಸ್ತವದಲ್ಲಿ ಅದು ಎಷ್ಟು ನಿಜ? ಬಿಯರ್ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆಯೇ? ಇದು ನಿಜವೇ ಎಂಬುದರ ಕುರಿತು ಆರೋಗ್ಯ ತಜ್ಞರು ಏನು ಹೇಳುತ್ತಾರೆ ತಿಳಿಯಿರಿ. ಬಿಯರ್’ ಕುಡಿದ್ರೆ ‘ಕಿಡ್ನಿ ಸ್ಟೋನ್ ‘ ಕರಗುತ್ತದೆಯೇ ? […]
ಪಿಜ್ಜಾ ಬಿಸಿನೆಸ್ನಿಂದ ಲಕ್ಷಾಧಿಪತಿಯಾಗೋದು ಹೇಗೆ? ಡೊಮಿನೋಸ್ ಮಾಲೀಕರಾಗಲು ಜೇಬಲ್ಲಿ ಇಷ್ಟು ಕಾಸಿದ್ರೆ ಸಾಕು
ಬೆಂಗಳೂರು: ಪಿಜ್ಜಾ ಅಂದ್ರೆ ಸಾಕು ಎಲ್ಲರ ಬಾಯಲ್ಲೂ ‘ಥಟ್’ ಅಂತ ಬರೋ ಹೆಸರು ಡೊಮಿನೋಸ್ (Domino’s). ಹಳ್ಳಿ ಕಡೆಯಿಂದ ಹಿಡಿದು ಸಿಟಿವರೆಗೂ ಈ ಬ್ರ್ಯಾಂಡ್ ತನ್ನ ಸಾಮ್ರಾಜ್ಯ ವಿಸ್ತರಿಸಿದೆ. ಫಾಸ್ಟ್ ಡೆಲಿವರಿ ಮತ್ತು ಬಾಯಲ್ಲಿ ನೀರೂರಿಸೋ ಟೇಸ್ಟ್ನಿಂದಾಗಿ ಇದೊಂದು ಪವರ್ಫುಲ್ ಬ್ರ್ಯಾಂಡ್ ಆಗಿ ಬೆಳೆದಿದೆ. ಈಗ ಇದೇ ಬ್ರ್ಯಾಂಡ್ ಹೆಸರಲ್ಲಿ ದುಡ್ಡು ಮಾಡಲು ಉದ್ಯಮಿಗಳು ಕ್ಯೂ ನಿಂತಿದ್ದಾರೆ,ಪೆಪ್ಪಿ ಪನ್ನೀರ್ ಮತ್ತು ಅಚಾರಿ ದೋ ಪ್ಯಾಜಾದಂತಹ ಲೋಕಲ್ ರುಚಿಗಳನ್ನು ಪರಿಚಯಿಸಿ ಭಾರತೀಯರ ನಾಲಿಗೆಗೆ ರುಚಿ ಹಚ್ಚಿದ ಈ ಸಂಸ್ಥೆ, […]
BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ.!
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ನಲ್ಲೂರಹಳ್ಳಿಯಲ್ಲಿ ಈ ಕೊಲೆ ನಡೆದಿದೆ. ಮೃತ ಬಾಲಕಿಯನ್ನು ಕೋಲ್ಕತ್ತಾ ಮೂಲದ ಶಹಜಾನ್ ಕಥೂನ್ (6) ಎಂದು ಗುರುತಿಸಲಾಗಿದೆ. ಮಗುವನ್ನ ಕೊಂದ ದುಷ್ಕರ್ಮಿಗಳು ಶವವನ್ನು ಬ್ಯಾಗಿನಲ್ಲಿ ಹಾಕಿ ಪರಾರಿಯಾಗಿದ್ದಾರೆ. ಅಕ್ಕ ಪಕ್ಕದ ಮನೆಯವರು ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಬಾಲಕಿ ತಾಯಿ ಹಾಗೂ ಪಕ್ಕದ ಮನೆಯವರ ಜೊತೆ […]
GOOD NEWS : ರಾಜ್ಯದ Ph.D. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫೆಲೋಶಿಪ್’ಗೆ ಅರ್ಜಿ ಆಹ್ವಾನ
ಬೆಂಗಳೂರು : 2025-26 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10.02.2025ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್.ಡಿ ಪ್ರಾರಂಭಿಸಿರಬೇಕು. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-I, II(ಎ), III(ಎ) ಹಾಗೂ III(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿಗಳನ್ನು […]
ಜನಪ್ರಿಯ ಯೂಟ್ಯೂಬರ್, ಪತ್ರಕರ್ತೆ ಕೆ.ಎಲ್. ನಂದಿನಿಗೆ ಮೈಸೂರು ವಿವಿಯಿಂದ ಪಿಎಚ್ಡಿ ಪ್ರದಾನ
ಮೈಸೂರು: ಜನಪ್ರಿಯ ಯೂಟ್ಯೂಬರ್, ಪತ್ರಕರ್ತೆ ಕೆ.ಎಲ್ ನಂದಿನಿ ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ‘ಸಿನಿಮಾ ಮತ್ತು ರಾಜಕೀಯ ರಂಗಕ್ಕೆ ಖ್ಯಾತ ನಟ ಡಾ. ಅಂಬರೀಶ್ ಅವರ ಕೊಡುಗೆ ಒಂದು ಅಧ್ಯಯನ’ ವಿಷಯದಲ್ಲಿ ನಂದಿನಿ ಮಹಾ ಪ್ರಬಂಧ ಮಂಡಿಸಿದ್ದರು. ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಎನ್.ಮಮತಾ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಸಲ್ಲಿಕೆಯಾಗಿತ್ತು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ 106ನೇ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ […]
Breaking News: ಬಳ್ಳಾರಿಗೆ ಹೊಸ ಎಸ್ಪಿ ನೇಮಕ, ಐಜಿಪಿಯೂ ವರ್ಗಾವಣೆ
ಬಳ್ಳಾರಿ ಗಲಭೆ, ಗುಂಡೇಟು ಪ್ರಕರಣದ ಬಳಿಕ ಜನವರಿ 1ರ ಗುರುವಾರ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿತ್ತು. ಈಗ ಹೊಸ ಎಸ್ಪಿ ನೇಮಕ ಮಾಡಲಾಗಿದೆ. ಕರ್ನಾಟಕ ಸರ್ಕಾರ ಬುಧವಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಿದೆ. ಡಾ.ಸುಮನ್ ಡಿ.ಪಾನ್ನೇಕರ್, ಐಪಿಎಸ್ (ಕೆಎನ್ 2013) ಬಳ್ಳಾರಿ ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಬಳ್ಳಾರಿ ವಿಭಾಗದ ಐಜಿಪಿವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ […]
ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರನ್ನು ನಿಯೋಜಿಸಿ: ಆಡಳಿತಾಧಿಕಾರಿಗೆ ಮನವಿ
ಪಾವಗಡ ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರನ್ನು ನಿಯೋಜಿಸಬೇಕು ಹಾಗೂ ರಕ್ತ ಪರೀಕ್ಷೆ ಕೇಂದ್ರವನ್ನು ಮೊದಲ ಮಹಡಿಯಿಂದ ಕೆಳ ಮಹಡಿಗೆ ಸ್ಥಳಾಂತರಿಸಲು ಕೋರಿ ಆಸ್ಪತ್ರೆ ಆಡಳಿತಾಧಿಕಾರಿ ಗಣೇಶ್ ಬಾಬು ಅವರಿಗೆ ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಮನವಿ ಪತ್ರ ಸಲ್ಲಿಸಿದೆ. ಆಸ್ಪತ್ರೆಗೆ ತಾಲೂಕು ಸೇರಿ ನೆರೆಯ ಆಂಧ್ರಪ್ರದೇಶದ ಭಾಗದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಆಗಮಿಸುತ್ತಾರೆ. ರಾತ್ರಿ ಪಾಳಿಯಲ್ಲಿ ವೈದ್ಯರು ಹಾಗೂ ಅರಿವಳಿಕೆ (ಅನಸ್ತೇಶಿಯಾ) ತಜ್ಞರು ಇರದಿರುವುದಿರಿಂದ […]
ತಾಯಿ ಶಿಕ್ಷಕಿ, ಸೋದರ ಸಂಬಂಧಿ ಶಾಸಕ ಈತ ಬೆಂಗಳೂರಲ್ಲಿ ಲ್ಯಾಪ್ ಟಾಪ್ ಕಳ್ಳ!
ತಾಯಿ ಸರ್ಕಾರಿ ಶಾಲೆಯ ಶಿಕ್ಷಕಿ, ಸೋದರ ಸಂಬಂಧಿ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಶಾಸಕ ಆದರೆ ಈತ ಬೆಂಗಳೂರು ನಗರದಲ್ಲಿ ಲ್ಯಾಪ್ಟಾಪ್ ಕದಿಯುತ್ತಿದ್ದ ಕಳ್ಳ. ಹೌದು ಇದು 30 ವರ್ಷದ ಗೌತಮ್ ಕಥೆ. ಮೊದಲು ದುಬೈನಲ್ಲಿ ಕೆಲಸ ಮಾಡುತ್ತಿದ್ದ ಈತನನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯಲ್ಲಿನ ಪಿಜಿಗಳಲ್ಲಿ ಲ್ಯಾಪ್ಟಾಪ್ ಕಳ್ಳತನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ತಮಿಳುನಾಡು ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಗೌತಮ್ (30) ಮತ್ತು ಆಟೋ ಚಾಲಕ […]
BIG NEWS : ರಾಜ್ಯದ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಪೋಷಕರಿಗೆ ಇಲ್ಲಿದೆ ಮಾಹಿತಿ
ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು 173 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. 2026-27ನೇ ಸಾಲಿನಲ್ಲಿ […]
BIG NEWS : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್ ಗೆ ಬಿಗ್ ಟ್ವಿಸ್ಟ್ .!
ಹುಬ್ಬಳ್ಳಿ : ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ ಎಂದು ಹೇಳಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಜಿಲ್ಲಾ ಪೊಲೀಸ್ ಆಯುಕ್ತರು ಆಕೆಯೇ ತಮ್ಮ ಬಟ್ಟೆ ಹರಿದುಕೊಂಡು ನಗ್ನಳಾಗಿದ್ದಾಳೆ. ನಮ್ಮ ಪೊಲೀಸರು ಈ ಕೃತ್ಯ ಎಸಗಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಲು ಮುಂದಾಗಿದ್ದ ವೇಳೆ ಪೊಲೀಸರು ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಆದರೆ […]
Big News: ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು: ವಿಜಯ್ ಜೊತೆ ‘ಕೈ’ ಜೋಡಿಸಲಿದೆ ಕಾಂಗ್ರೆಸ್?
ಡಿಎಂಕೆ-ಕಾಂಗ್ರೆಸ್ ಮೈತ್ರಿಯ ನಡುವೆ ಅಪಸ್ವರ ಇದೆಯೇ?. ಹೌದು, ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಸೀಟು ಹಂಚಿಕೆ ಚರ್ಚೆಯಲ್ಲಿ ಒಮ್ಮತ ಮೂಡಿಲ್ಲ ಎಂಬ ಸುದ್ದಿ ಹಬ್ಬಿದೆ. 2021ರ ಚುನಾವಣೆಯಲ್ಲಿ 133 ಸೀಟುಗಳನ್ನು ಗೆದ್ದು ರಾಜ್ಯದಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪಕ್ಷದ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿಯಾಗಿದ್ದಾರೆ. 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ತಮಿಳುನಾಡು ಪ್ರಮುಖವಾಗಿದೆ. ಆದರೆ ರಾಜ್ಯದ ಚುನಾವಣಾ ಚಿತ್ರಣವನ್ನು ಬದಲಿಸಿರುವುದು ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ. ಆದ್ದರಿಂದ ಈ […]
ರಾಜವೈಭವದ ಸಪ್ತ ಅದ್ಭುತಗಳು: ವಿಶ್ವದ ಟಾಪ್ 7 ಬೃಹತ್ ಅರಮನೆಗಳ ಕಂಪ್ಲೀಟ್ ಡಿಟೇಲ್ಸ್
ವಿಶ್ವ ಇತಿಹಾಸದ ಪುಟಗಳನ್ನು ತಿರುವಿ ನೋಡಿದರೆ, ಅಲ್ಲಿನ ಭವ್ಯ ಅರಮನೆಗಳು ಮತ್ತು ಕೋಟೆಗಳು ಕೇವಲ ಇಟ್ಟಿಗೆ-ಗಾರೆಗಳ ಕಟ್ಟಡಗಳಾಗಿ ಕಾಣದೆ, ಅಂದಿನ ಕಾಲದ ರಾಜವಂಶಗಳ ಶಕ್ತಿ, ಸಾಂಸ್ಕೃತಿಕ ಪರಂಪರೆ ಮತ್ತು ವಾಸ್ತುಶಿಲ್ಪದ ವೈಭವದ ಸಾಕ್ಷಿಯಾಗಿ ನಿಂತಿವೆ. ಇಂದಿಗೂ ಜಗತ್ತಿನಾದ್ಯಂತ ಇರುವ ಇಂತಹ ಅನೇಕ ಬೃಹತ್ ಸಂಕೀರ್ಣಗಳು ತಮ್ಮ ವಿಸ್ತೀರ್ಣ ಮತ್ತು ಇತಿಹಾಸದ ಕಾರಣಕ್ಕೆ ಜನರಲ್ಲಿ ಅಚ್ಚರಿ ಮೂಡಿಸುತ್ತಿವೆ. ಐತಿಹಾಸಿಕವಾಗಿ, ಈ ವಿಸ್ತಾರವಾದ ಅರಮನೆಗಳನ್ನು ಕೇವಲ ರಾಜಮನೆತನದ ವಾಸಸ್ಥಳಗಳಾಗಿ ಮಾತ್ರವಲ್ಲದೆ, ಆಡಳಿತದ ಶಕ್ತಿ ಕೇಂದ್ರಗಳಾಗಿ, ಧಾರ್ಮಿಕ ವಿಧಿವಿಧಾನಗಳ ತಾಣವಾಗಿ ಮತ್ತು […]
BREAKING : ಮದುವೆಯಾಗಲು ಯುವತಿ ಒಪ್ಪದಿದ್ದಕ್ಕೆ ಮನನೊಂದು ಪುರೋಹಿತ ಆತ್ಮಹತ್ಯೆ.!
ಕಾರವಾರ : ಮದುವೆಯಾಗಲು ಯುವತಿ ಒಪ್ಪದಿದ್ದಕ್ಕೆ ಮನನೊಂದು ಪುರೋಹಿತ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲದಲ್ಲಿ ನಡೆದಿದೆ. ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪವನ್ ಭಟ್ (24) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪವನ್ ಭಟ್ ವೃತ್ತಿಯಲ್ಲಿ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅಲ್ಲದೇ ಊರಿನಲ್ಲಿ ಯುವತಿಯೊಬ್ಬಳನ್ನು ಪವನ್ ಲವ್ ಮಾಡುತ್ತಿದ್ದರು. ಆದರೆ ನಂತರ ಯುವತಿ ಮದುವೆಯಾಗಲು ನಿರಾಕರಿಸಿದ್ದಾಳೆ. ಪವನ್ ಮದುವೆಯಾಗುವಂತೆ ಎಷ್ಟೇ ದುಂಬಾಲು ಬಿದ್ದರೂ ಆಕೆ ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಪವನ್ […]
BREAKING : ಬೆಂಗಳೂರಿನ ಖಾಸಗಿ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat
ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು. ಜಯನಗರ 4 ನೇ ಬ್ಲಾಕ್ ನಲ್ಲಿರುವ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಮೊಹಮದ್ ಇಕ್ಬಾಲ್ ಎಂಬಾತ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.ಶಾಲೆಯ 4 ಕಡೆ ಬಾಂಬ್ ಇಡಲಾಗಿದೆ ಎಂದು ಈತ ಸಂದೇಶ ಕಳುಹಿಸಿದ್ದಾನೆ. ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆ ಆತಂಕಗೊಂಡ ಸಿಬ್ಬಂದಿಗಳು ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಖಾಸಗಿ […]

21 C