“ನಿಮ್ಮ BMW ಕಾರು ನಂದೇ ಅಲ್ವಾ?”: ಅಡುಗೆಯವ ದಿಲೀಪ್ ಮಾತು ಕೇಳಿ ಫರಾ ಖಾನ್ ಫುಲ್ ಶಾಕ್!
ಫರಾ ಖಾನ್ ಅವರ ಯೂಟ್ಯೂಬ್ ವ್ಲಾಗ್ಗಳಲ್ಲಿ ಈಗ ಫರಾ ಅವರಿಗಿಂತ ಅವರ ಅಡುಗೆಯವ ದಿಲೀಪ್ (Dilip Mukhiya) ಅವರೇ ಹೆಚ್ಚು ಜನಪ್ರಿಯರಾಗಿದ್ದಾರೆ. ಇತ್ತೀಚಿನ ವ್ಲಾಗ್ವೊಂದರಲ್ಲಿ ದಿಲೀಪ್ ಅವರು ಫರಾ ಖಾನ್ ಅವರ ಐಷಾರಾಮಿ BMW ಕಾರನ್ನು ತಮ್ಮ ಪ್ರಯಾಣಕ್ಕೆ ಬಳಸುತ್ತಿರುವುದಾಗಿ ಹೇಳಿರುವುದು ಫರಾ ಅವರನ್ನು ದಂಗಾಗಿಸಿದೆ. ನಡೆದಿದ್ದೇನು? ‘ಬಿಗ್ ಬಾಸ್ 19’ ಖ್ಯಾತಿಯ ಪ್ರಣೀತ್ ಮೋರೆ ಅವರ ಮನೆಗೆ ಫರಾ ಖಾನ್ ಮತ್ತು ದಿಲೀಪ್ ಭೇಟಿ ನೀಡಿದ್ದಾಗ ಈ ಪ್ರಸಂಗ ನಡೆದಿದೆ. ಪ್ರಣೀತ್ ಅವರ ತಂದೆ, “ಹಿಂದಿನ […]
BREAKING: ಕೆಂಪೇಗೌಡ ಏರ್ ಪೋರ್ಟ್ ಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ
ದೇವನಹಳ್ಳಿ: ಬೆಂಗಳೂರಿನ ಕೆಂಪ್ರೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ ಬಂದಿದೆ. ದುಷ್ಕರ್ಮಿಗಳು ವಿಮಾನ ನಿಲ್ದಾಣದ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಸಂದೇಶ ರವಾನಿಸಿದ್ದಾರೆ. ಮೂರು ಆರ್ ಡಿಎಕ್ಸ್, ಐಇಡಿ ಬಳಸಿ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ ಹಕಿದ್ದಾರೆ. gaina-ramesh@outlook.com ಹೆಸರಿನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಎಚ್ಚೆತ್ತ ಪೊಲೀಸರು, […]
ದಿನವೂ ಕಾಫಿ ಕುಡಿಯುವ ಅಭ್ಯಾಸವಿದೆಯೇ? ನಿಮ್ಮ ರಕ್ತದೊತ್ತಡದ ಮೇಲೆ ಇದು ಹೇಗೆ ಪರಿಣಾಮ ಬೀರುತ್ತೆ ನೋಡಿ!
ದಿನವೂ ಕಾಫಿ ಕುಡಿಯುವುದು ರಕ್ತದೊತ್ತಡದ (Blood Pressure) ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ಅನೇಕರ ಕುತೂಹಲ. ಸಂಶೋಧನೆಗಳ ಪ್ರಕಾರ, ಕಾಫಿಯಲ್ಲಿರುವ ಕೆಫೀನ್ ಅಂಶವು ರಕ್ತದೊತ್ತಡದಲ್ಲಿ ತಾತ್ಕಾಲಿಕ ಏರಿಕೆಯನ್ನು ಉಂಟುಮಾಡಬಹುದು. ಆದರೆ, ಮಿತವಾಗಿ ಸೇವಿಸಿದರೆ ಇದು ದೀರ್ಘಕಾಲದ ಅಪಾಯವನ್ನು ತರುವುದಿಲ್ಲ. ಕಾಫಿ ಮತ್ತು ರಕ್ತದೊತ್ತಡದ ನಡುವಿನ ಸಂಬಂಧ ಹಾಗೂ ಮುನ್ನೆಚ್ಚರಿಕೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ: ೧. ಕಾಫಿ ಮತ್ತು ಬಿಪಿ ನಡುವಿನ ಲಿಂಕ್ ೨. ಎಷ್ಟು ಕಾಫಿ ಸುರಕ್ಷಿತ? ಅಮೆರಿಕದ ಎಫ್ಡಿಎ (FDA) ಪ್ರಕಾರ, […]
ಭೂಮಿಯ ಮೇಲಿನ ಸ್ವರ್ಗ ಕೇರಳ: ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ 14 ಜಿಲ್ಲೆಗಳ ಅಚ್ಚರಿಯ ದೃಶ್ಯಗಳು ಇಲ್ಲಿವೆ
ಕೇರಳ ಎಂದರೆ ಕೇವಲ ಹಚ್ಚಹಸಿರಿನ ಪ್ರಕೃತಿಯಷ್ಟೇ ಅಲ್ಲ, ಅದು ಭರತಭೂಮಿಯ ಮೇಲಿರುವ ದೇವರಿಗೇ ಅಚ್ಚುಮೆಚ್ಚಿನ ನಾಡು. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಅರುಣ್ ಪಿ. ಜೋಸ್ ಎಂಬುವವರ 30 ಸೆಕೆಂಡ್ಗಳ ಡ್ರೋನ್ ವಿಡಿಯೋ, ಕೇರಳದ ಎಲ್ಲಾ 14 ಜಿಲ್ಲೆಗಳ ಸೌಂದರ್ಯವನ್ನು ಕಣ್ಣಿಗೆ ಕಟ್ಟುವಂತೆ ಸೆರೆಹಿಡಿದಿದೆ. ನೀವು ಈ ವರ್ಷ ಕೇರಳ ಪ್ರವಾಸದ ಯೋಜನೆಯಲ್ಲಿದ್ದರೆ, ಈ 14 ಜಿಲ್ಲೆಗಳ ವಿಶೇಷತೆಗಳು ಇಲ್ಲಿವೆ: ಕೇರಳದ 14 ಜಿಲ್ಲೆಗಳು ಮತ್ತು ಅಲ್ಲಿನ ಪ್ರಮುಖ ಆಕರ್ಷಣೆಗಳು: ಜಿಲ್ಲೆ ವಿಶೇಷತೆ ಕಾಸರಗೋಡು ಸುಂದರವಾದ […]
SHOCKING: ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ
ಅಹಮದಾಬಾದ್: ಪತಿ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್ ನ ಮೋಡಸಾದಲ್ಲಿ ನಡೆದಿದೆ. ಮೊಬೈಲ್ ಕೊಡಿಸಿಲ್ಲ ಎಂಬು ಸಣ್ಣವಿಚಾರವೇ ಇರಬಹುದು. ಆದರೆ ಹಲವು ಬಾರಿ ಕೇಳಿದರೂ ಪತಿ ಮೊಬೈಲ್ ಕೊಡಿಸಿಲ್ಲ ಎಂಬುದು ಪತ್ನಿಯ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಇದರಿಂದ ಮನನೊಂದು ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ಊರ್ಮಿಳಾ ಆತ್ಮಹತ್ಯೆಗೆ ಶರಣಾದ ಪತ್ನಿ. ನೇಪಾಳಿ ಮೂಲದ ದಂಪತಿ ಮೋಡಸಾದಲ್ಲಿ ಕೆಲಸಕ್ಕಾಗಿ ವಾಸವಾಗಿದ್ದರು. ಕೆಲ ದಿನಗಳ ಹಿಂದೆ ಪತ್ನಿ, ಪತಿಗೆ ತನಗೆ ಮೊಬೈಲ್ […]
BREAKING: 10 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ FDA ಲೋಕಾಯುಕ್ತ ಬಲೆಗೆ
ಕಲಬುರಗಿ: ತಹಶಿಲ್ದಾರ್ ಕಚೇರಿಯ ಎಫ್ ಡಿಎ ಓರ್ವರು ಲಂಚದ ಹಣದ ಸಮೇತ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಕಮಲಾಪುರ ತಹಶಿಲ್ದಾರ್ ಕಚೇರಿಯ ಎಫ್ ಡಿಎ ಶಶಿಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು. ಜಮೀನು ದಾಖಲೆ ನೀಡುವುದಕ್ಕೆ ಎಫ್ ಡಿಎ ಶಶಿಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಿಶನ್ ರಾಠೋಡ್ ಎಂಬುವವರ ಬಳಿ ಲಂಚದ ಹಣ ಕೇಳಿದ್ದರು. 10 ಸಾವಿರ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ […]
ಮಂಗನ ಕಾಯಿಲೆ ನಿಯಂತ್ರಣಕ್ಕೆ ಡೆಪಾ ತೈಲ ಖರೀದಿಗೆ ಅನುಮೋದನೆ
ಬೆಂಗಳೂರು: ಮಂಗನ ಕಾಯಿಲೆ(ಕ್ಯಾಸನೂರು ಫಾರೆಸ್ಟ್ ಡಿಸೀಸ್ -ಕೆಎಫ್ಡಿ) ನಿಯಂತ್ರಣಕ್ಕೆ ಅಗತ್ಯವಿರುವ ಡೆಪಾ ತೈಲ ಖರೀದಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೆಎಫ್ಡಿ ಸೋಂಕನ್ನು ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ. ಸೋಂಕಿನ ಅಪಾಯ ಕಡಿಮೆ ಮಾಡಲು ಡೆಪಾ ತೈಲ ಸಹಕಾರಿಯಾಗಿದೆ. ಸದ್ಯ 2.78 ಲಕ್ಷ ಡೆಪಾ ತೈಲದ ಬಾಟಲಿಗಳು ಲಭ್ಯವಿದೆ. ಈ ದಾಸ್ತಾನನ್ನು ಫೆಬ್ರವರಿ ಎರಡನೇ ವಾರದವರೆಗೆ ವಿತರಿಸಬಹುದಾಗಿದೆ. ಮಾರ್ಚ್ ನಿಂದ ಜೂನ್ ವರೆಗೆ ವಿತರಿಸಲು 5.74 ಲಕ್ಷ ಡೆಪಾ ತೈಲದ ಬಾಟಲಿಗಳು ಅಗತ್ಯವಿದ್ದು, ಅಷ್ಟು […]
ಬೈಕ್ ಸಮೇತ ಹಿನ್ನೀರಿಗೆ ಬಿದ್ದು ಸವಾರ ಸಾವು
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಸೇತುವೆ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಸವಾರ ಹಿನ್ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ನಿವೃತ್ತ ಶಿಕ್ಷಕ ಗಣೇಶ(61) ಮೃತಪಟ್ಟವರು. ಶಾಲಾ ಮುಖ್ಯ ಶಿಕ್ಷಕರಾಗಿದ್ದ ಇವರು ಕೆಲವು ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಬಸವನ ಬ್ಯಾಣದ ಕಡೆಗೆ ಬೈಕ್ ನಲ್ಲಿ ತೆರಳುವಾಗ ಘಟನೆ ನಡೆದಿದೆ. ಹಿನ್ನೀರಿನಲ್ಲಿ ಬಿದ್ದಿದ್ದ ಬೈಕ್ ಮತ್ತು ಮೃತದೇಹ ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. […]
BIG NEWS: ಲಕ್ಕುಂಡಿಯಲ್ಲಿ ಮೂರನೇ ದಿನದ ಉತ್ಖನನದ ವೇಳೆ ಬೃಹತ್ ಶಿವಲಿಂಗ ಪತ್ತೆ: ಸ್ಥಳದಲ್ಲಿ ಹಾವು ಓಡಾಟ
ಗದಗ: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ಎರಡನೇ ದಿನದ ಉತ್ಖನನದ ವೇಳೆ ಸ್ಥಳದಲ್ಲಿ ಶ್ವಲಿಂಗದ ಪೀಠದಂತಹ ಪುರಾತನ ವಸ್ತು ಪತ್ತೆಯಾಗಿತ್ತು. ಮೂರನೇ ದಿನದ ಉತ್ಖನನ ಕಾರ್ಯ ಮುಂದುವರೆದಿದ್ದು, ಸ್ಥಳದಲ್ಲಿ ಬೃಹತ್ ಶಿವಲಿಂಗವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೂರನೇ ದಿನದ ಉತ್ಖನನ ಕಾರ್ಯ ನಡೆಸುತ್ತಿದ್ದ ವೇಳೆ ಸ್ಥಳದಲ್ಲಿ ಬೃಹತ್ ಹಾವು ಪ್ರತ್ಯಕ್ಷವಾಗಿದೆ. ಇದು ಉತ್ಖನನ […]
ಬಾಗಲಕೋಟೆ: ಬಿಸಿಎ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆನ್ ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು, ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ಜಮಖಂಡಿ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದಲ್ಲಿ ಓದುತ್ತಿದ್ದ ರಮೇಶ್ ಬಂಟನೂರು(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆನ್ ಲೈನ್ ಬೆಟ್ಟಿಂಗ್ ನಿಂದಾಗಿ ಲಕ್ಷಾಂತರ ರೂಪಾಯಿ ಹಣ ಸಲಾ ಮಾಡಿಕೊಂಡಿದ್ದ. ಮಗ ಮಾಡಿದ ಸಾಲವನ್ನು ತಂದೆಯೇ ಎರಡು ಬಾರಿ ತೀರಿಸಿದ್ದರು. ಅಲ್ಲದೇ ಮಗನಿಗೆ ಬೆಟ್ಟಿಂಗ್ ಆಡದಂತೆ ಬೈದು ಬುದ್ಧಿವಾದ ಹೇಳಿದ್ದರು. […]
BIG NEWS: ಜೆಡಿಎಸ್ ನಾಯಕಿ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ: PSI ಸಸ್ಪೆಂಡ್
ಕಾರವಾರ: ಕಾರವಾರದ ಜೆಡಿಎಸ್ ನಾಯಕಿ ಚೈತ್ರಾ ಅವರ ಪುತ್ರನ ಕಿರುಕುಳಕ್ಕೆ ನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವರನ್ನು ಅಮಾಅನತು ಮಾಡಿರುವ ಘಟನೆ ನಡೆದಿದೆ. ಕಾರವಾರದ ಕದ್ರಾ ಠಾಣೆಯ ಪಿಎಸ್ ಐ ಸುನಿಲ್ ಬಂಡಿವಡ್ಡರ್ ಅಮಾನತುಗೊಂಡಿರುವ ಪಿಎಸ್ ಐ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸುವಲ್ಲಿ ವಿಫಲ, ನಿಷ್ಕಾಳಜಿ ಆರೋಪದಲ್ಲಿ ಪಿಎಸ್ ಐ ಅವರನ್ನು ಅಮಾನತುಗೊಳಿಸಿ ಆದೇಶ ಹೊರದಿಸಿದ್ದಾರೆ. ಜೆಡಿಎಸ್ ನಾಯಕಿಯ ಪುತ್ರ ಚಿರಾಗ್ ಎಂಬಾತ ರಿಶೆಲ್ ಡಿಸೋಜಾ ಎಂಬ ಯುವತಿಗೆ ಲೈಂಗಿಕ ಕಿರುಕುಳ […]
BREAKING: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪುತ್ರನ ವಿರುದ್ಧ ಅಕ್ರಮ ಆರೋಪ: ದೂರು ನೀಡಿದ ಜೆಡಿಎಸ್ ಶಾಸಕ
ಮಂಡ್ಯ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಜೆಡಿಎಸ್ ಶಾಸಕ ಹೆಚ್.ಟಿ. ಮಂಜು ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಸೇರಿ ಸಚಿವರು ಹಾಗೂ ಸಚಿವರ ಪುತ್ರ ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವ ಆರ್.ಬಿ.ತಿಮ್ಮಪುರ ಹಾಗೂ ಪುತ್ರನ ವಿರುದ್ಧ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್.ಟಿ.ಮಂಜು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಿಎಲ್-7 ಸನ್ನದು ಮಂಜೂರು ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದಿದ್ದಾರೆ. ಸಚಿವ ತಿಮ್ಮಾಪುರ ಹಾಗೂ ಅವರ […]
ಖಾಸಗಿ ಫೈನಾನ್ಸ್ ಸಿಬ್ಬಂದಿ ಅಟ್ಟಹಾಸಕ್ಕೆ ಬೀದಿಗೆ ಬಿದ್ದ ವೃದ್ಧ ದಂಪತಿ
ಹಾಸನ: ಖಾಸಗಿ ಫೈನಾನ್ಸ್ ಸಿಬ್ಬಂದಿ ಅಟ್ಟಹಾಸಕ್ಕೆ ವೃದ್ಧ ದಂಪತಿ ಬೀದಿಗೆ ಬಿದ್ದಿದ್ದಾರೆ. ಸಾಲ ಕಟ್ಟಿಲ್ಲವೆಂದು ವೃದ್ಧ ದಂಪತಿಯನ್ನು ಫೈನಾನ್ಸ್ ಸಿಬ್ಬಂದಿ ಮನೆಯಿಂದ ಹೊರಗೆ ಹಾಕಿದ್ದಾರೆ. ಇಕ್ವಿಟಾರ್ ಫೈನಾನ್ಸ್ ಸಿಬ್ಬಂದಿ ದೌರ್ಜನ್ಯದಿಂದ ದಂಪತಿ ಬೀದಿಗೆ ಬಿದ್ದಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊರಟಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸಣ್ಣಯ್ಯ(80), ಜಯಮ್ಮ(75) ಅವರನ್ನು ಮನೆಯಿಂದ ಹೊರಹಾಕಿ ಬೀಗ ಹಾಕಲಾಗಿದೆ. ಕೋರ್ಟ್ ಆದೇಶವಿದೆ ಎಂದು ಮನೆಗೆ ಖಾಸಗಿ ಫೈನಾನ್ಸ್ ಸಿಬ್ಬಂದಿ ಬೀಗ ಹಾಕಿದ್ದಾರೆ. ವೃದ್ಧ ದಂಪತಿಯ ಜಾನುವಾರು ಕೊಟ್ಟಿಗೆಗೂ ಬೀಗ ಹಾಕಲಾಗಿದೆ, […]
BREAKING: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಾ.ರಾ. ಮಹೇಶ್ ಸ್ಪರ್ಧೆ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಾ.ರಾ. ಮಹೇಶ್ ಸ್ಪರ್ಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, . ಮುಂದಿನ ಚುನಾವಣೆಯಲ್ಲಿ ಸಾ.ರಾ. ಮಹೇಶ್ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ. ಮಹೇಶ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಸಭೆ ಇದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಾ.ರಾ. ಮಹೇಶ್ ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಜಿ.ಟಿ. ದೇವೇಗೌಡ ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಮೋಸ ಮಾಡಿದ್ದಾರೆ. ಎಂಎಲ್ಸಿ […]
ಬಾಲಿವುಡ್ ನಲ್ಲಿ ಕೋಮು ತಾರತಮ್ಯ: AR ರೆಹಮಾನ್ ಹೇಳಿಕೆಗೆ ನಟಿ ಕಂಗನಾ ರನೌತ್ ತಿರುಗೇಟು
ಬಾಲಿವುಡ್ ನಲ್ಲಿ ಕಳೆದ ಎಂಟು ವರ್ಷಗಳಿಂದ ನನಗೆ ಅವಕಾಶ ಸಿಗುತ್ತಿಲ್ಲ. ಇತ್ತೀಚೆಗೆ ಬಾಲಿವುಡ್ ನಲ್ಲಿ ಅಧಿಕಾರದ ಬದಲಾವಣೆಯಾಗಿದೆ. ಸೃಜನಶೀಲತೆ ಇಲ್ಲದವರು ಎಲ್ಲವನ್ನು ನಿರ್ಣಯಿಸುತ್ತಿದ್ದಾರೆ. ಇದು ಕೋಮು ಮನಸ್ಥಿತಿಯೂ ಆಗಿರಬಹುದು ಎಂದು ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಅವರ ಹೇಳಿಕೆಯ ಕುರಿತಾಗಿ ಈಗಲೇ ಅನೇಕರು ಪ್ರತಿಕ್ರಿಯೆ ನೀಡಿದ್ದು, ಅವರ ಆರೋಪವನ್ನು ಅಲ್ಲಗಳೆದಿದ್ದಾರೆ. ಇದೀಗ ನಟಿ ಹಾಗೂ ಸಂಸದೆ ಕಂಗನಾ ರನೌತ್ ಕೂಡ ರೆಹಮಾನ್ ಹೇಳಿಕೆಯನ್ನು ನಿರಾಕರಿಸಿದ್ದಾರೆ. ಎ.ಆರ್. ರೆಹಮಾನ್ ಅವರನ್ನು […]
ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ‘ಆಸರೆ’ಯೋಜನೆಯಡಿ ಪೊಲೀಸ್ ಇಲಾಖೆ ನೆರವು
ಬೆಂಗಳೂರು: ಸಂಕಷ್ಟದಲ್ಲಿರುವ ಹಿರಿಯ ನಾಗರಿಕರ ನೆರವಿಗೆ ರಾಜ್ಯ ಪೊಲೀಸ್ ಇಲಾಖೆ ರೂಪಿಸಿದ ನೂತನ ಆಸರೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಚಾಲನೆ ನೀಡಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯ ಮನೆ ಮನೆಗೆ ಪೊಲೀಸ್ ಯೋಜನೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ರಾಜ್ಯ ಪೊಲೀಸ್ ಇಲಾಖೆ ನೊಂದಿರುವ ಹಿರಿಯ ನಾಗರಿಕರಿಗೆ ಆಸರೆಯಾಗಲು ಮುಂದಾಗಿದೆ. ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿರಿಯ ನಾಗರಿಕ ದಂಪತಿ ಮತ್ತು ಏಕಾಂಗಿಯಾಗಿರುವ ಹಿರಿಯ ನಾಗರಿಕರ ಬಗ್ಗೆ ಮಾಹಿತಿ ಕಲೆ ಹಾಕಲಾಗುವುದು. ನಂತರ ವೃದ್ಧರ ಸಂಕಷ್ಟಗಳಿಗೆ […]
ಸಿಂಥೆಟಿಕ್ ಡ್ರಗ್ಸ್ ಪೂರೈಕೆ: ಉದ್ಯಮಿ ಅರೆಸ್ಟ್
ದಾವಣಗೆರೆ: ಸಿಂಥೆಟಿಕ್ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದಡಿ ಉದ್ಯಮಿ ಶಿವರಾಜ್ ಅವರನ್ನು ದಾವಣಗೆರೆ ವಿದ್ಯಾನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಅಂತರ ರಾಜ್ಯ ಗಾಂಜಾ ವಹಿವಾಟು ನಡೆಸುತ್ತಿದ್ದ ಆರೋಪದಡಿ ಇತ್ತೀಚಿಗೆ ಉದ್ಯಮಿ ವೇದಮೂರ್ತಿ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು ಉದ್ಯಮಿ ಶಿವರಾಜ್ ಅವರನ್ನು ಕೂಡ ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಎಸ್.ಎಸ್. ಬಡಾವಣೆ ನಿವಾಸಿ ಉದ್ಯಮಿ ಶಿವರಾಜ್ ಆರ್.ಟಿ.ಒ. ಕಚೇರಿಯಲ್ಲಿ ಏಜೆಂಟ್ ಆಗಿದ್ದರು. ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದ ಅವರು ಪ್ರಭಾವಿ ಎಂದು ಬಿಂಬಿಸಿಕೊಳ್ಳಲು […]
ಮೈಲಾರಲಿಂಗೇಶ್ವರ ಜಾತ್ರೆ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು
ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕು ಮೈಲಾರ ಗ್ರಾಮದ ಶ್ರೀಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಶಿವಮೊಗ್ಗ ಜಿಲ್ಲೆ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಜನವರಿ 20 ರಿಂದ 30 ರವರೆಗೆ 500 ಕ್ಯೂಸೆಕ್ ನೀರು ಹರಿಸಲಾಗುವುದು. ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದು ಇತ್ಯಾದಿ ಮಾಡಬಾರದೆಂದು ದಾವಣಗೆರೆ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
14500 ಅತಿಥಿ ಉಪನ್ಯಾಸಕರ ನೇಮಕ, 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಅಂತಿಮ ಹಂತಕ್ಕೆ
ಹುಬ್ಬಳ್ಳಿ: ರಾಜ್ಯದಲ್ಲಿ 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಶೇಕಡ 60ರಷ್ಟು ಬೋಧಕರ ಕೊರತೆ ಇದೆ ಎಂದು ತಿಳಿಸಿದ್ದಾರೆ. ಬೋಧಕರ ಕೊರತೆ ಇರುವ ಕಾರಣ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 12,000, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 2500 ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿದೆ. ರಾಜಕೀಯ ಕಾರಣಕ್ಕಾಗಿ ಹೆಚ್ಚು ವಿವಿಗಳನ್ನು ಸ್ಥಾಪಿಸಿದ ಕಾರಣ ಅವುಗಳ ಸ್ಥಿತಿ […]
ಮಂಡ್ಯದಲ್ಲಿ ಮೃತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟಿ ಕೋಟಿ ಲೂಟಿ: ಭ್ರಷ್ಟರ ವಿರುದ್ಧ ಲೋಕಾಯುಕ್ತಕ್ಕೆ ದೂರು
ಮಂಡ್ಯ: ಮಂಡ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟಿ ಕೋಟಿ ಅಕ್ರಮ ನಡೆಸಿರುವ ಆರೋಪ ಕೇಳಿ ಬಂದಿದೆ. ಮೃತಪಟ್ಟವರ ಹೆಸರಲ್ಲಿಯೂ ಭ್ರಷ್ಟ ಅಧಿಕಾರಿಗಳು ಲೂಟಿ ಹೊಡೆದಿದ್ದಾರೆ. ಮಂಡ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗವಿಕಲರು, ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದ ಆರೋಪ ಕೇಳಿ ಬಂದಿದೆ. ಸ್ಥಗಿತಗೊಂಡಿದ್ದ ಸ್ವಯಂ ಸೇವಾ ಸಂಸ್ಥೆಯ ಹೆಸರು ಬಳಸಿಕೊಂಡು ಕೋಟಿ ಕೋಟಿ ಗುಳುಂ ಮಾಡಲಾಗಿದೆ. ಶ್ರೀರಂಗಪಟ್ಟಣದ ರಾಮೇಗೌಡ ಎಂಬುವರಿಗೆ ಸೇರಿದ್ದ ರಿವರ್ ವ್ಯಾಲಿ ಸಂಸ್ಥೆ ಹೆಸರು ಬಳಕೆ ಮಾಡಲಾಗಿದೆ. […]
BREAKING: ಸಹಾಯಕ ಜೈಲರ್ ಮೇಲೆ ಸಜಾಬಂಧಿ ಕೈದಿಗಳಿಂದ ಹಲ್ಲೆ, ದೂರು
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಪುಂಡಾಟ ನಡೆಸಿದ್ದಾರೆ. ಸಹಾಯಕ ಜೈಲರ್ ಮೇಲೆ ಸಜಾಬಂಧಿಗಳು ಹಲ್ಲೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಸಜಾಬಂಧಿಗಳಾದ ಆನಂದ್ ಮತ್ತು ಅಬ್ದುಲ್ ಘನಿ ಎಂಬುವವರಿಂದ ಕೃತ್ಯ ನಡೆದಿದೆ. ಅನಾವಶ್ಯಕವಾಗಿ ಸಜಾಬಂಧಿ ಕಚೇರಿಗೆ ನುಗ್ಗಲು ಕೈದಿಗಳು ಯತ್ನಿಸಿದ್ದಾರೆ. ಈ ವೇಳೆ ಕೈದಿಗಳನ್ನು ಸಹಾಯಕ ಜೈಲರ್ ತಡೆಯಲು ಮುಂದಾಗಿದ್ದಾರೆ. ಆಗ ಆರೋಪಿಗಳು ಜೈಲು ಸಿಬ್ಬಂದಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಕರ್ತವ್ಯ ನಿರ್ವಹಿಸಲು ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಪ್ರಭಾರ […]
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾಗದ ನೌಕರರಿಗೆ ಶಾಕ್
ಸರ್ಕಾರಿ ನೌಕರರು ಕಂಪ್ಯೂಟರ್ ಜ್ಞಾನ ಹೊಂದಿರಬೇಕೆಂಬುದು ಸರ್ಕಾರದ ಸೂಚನೆಯಾಗಿದೆ. ಆದರೆ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾಗದ ನೌಕರರಿಗೆ ಸಂಕಷ್ಟ ಎದುರಾಗಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾಗದ ಸರ್ಕಾರಿ ನೌಕರರಿಗೆ ಮುಂಬಡ್ತಿ ಮತ್ತು ವಾರ್ಷಿಕ ಇನ್ ಕ್ರಿಮೆಂಟ್ ಇಲ್ಲವಾಗಿದೆ. ಹೀಗಾಗಿ ಕಡ್ಡಾಯವಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಆಗಬೇಕಿದೆ. ಅನೇಕ ನೌಕರರಿಗೆ ಕಂಪ್ಯೂಟರ್ ಜ್ಞಾನ ಇಲ್ಲ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ ಜಾರಿಯಾದ ನಂತರ 3-4 ಬಾರಿ ಪ್ರಯತ್ನ ನಡೆಸಿದರೂ ಸಾವಿರಾರು ನೌಕರರು ಪಾಸ್ ಆಗಿಲ್ಲ. ಹೆಚ್ಚಿನ ನೌಕರರು […]
U19 ವಿಶ್ವಕಪ್ ನಲ್ಲಿ 22 ರನ್ ಗೆ 7 ವಿಕೆಟ್ ಕಳೆದುಕೊಂಡ ಬಾಂಗ್ಲಾದೇಶ: 18 ರನ್ ಗಳಿಂದ ಗೆದ್ದ ಭಾರತ
ಬುಲವಾಯೊ(ಜಿಂಬಾಬ್ವೆ): 2026 ರ U19 ವಿಶ್ವಕಪ್ನಲ್ಲಿ ಬಾಂಗ್ಲಾದೇಶ ಭಾರತದ ವಿರುದ್ಧ ಆರಾಮದಾಯಕ ಗೆಲುವಿನತ್ತ ಸಾಗುತ್ತಿತ್ತು, ಆದರೆ ಬುಲವಾಯೊದಲ್ಲಿ ನಡೆದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ಎಡವಿ ಬಿದ್ದು ಸೋತಿತು. ಮಳೆ ವಿರಾಮದ ನಂತರ ಭಾರತೀಯ ಬೌಲರ್ಗಳು, ವಿಶೇಷವಾಗಿ ವಿಹಾನ್ ಮಲ್ಹೋತ್ರಾ ಮಾರಕ ದಾಳಿ ನಡೆಸಿದರು. ಭಾರತಕ್ಕೆ ನಾಲ್ಕು ವಿಕೆಟ್ಗಳನ್ನು ಕಬಳಿಸಿ ಭಾರತಕ್ಕೆ ತಿರುವು ನೀಡಿದರು. ಅವರ ವೀರೋಚಿತ ಪ್ರದರ್ಶನದ ಮೂಲಕ, ಭಾರತವು 18 ರನ್ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. 29 ಓವರ್ಗಳಲ್ಲಿ 165 ರನ್ಗಳ ಪರಿಷ್ಕೃತ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ […]
ಕರ್ನಾಟಕದ ಕೈಗಾರಿಕಾ ಶಕ್ತಿಗೆ ಮತ್ತಷ್ಟು ಬಲ: 1.53 ಲಕ್ಷ ಕೋಟಿ ರೂ. ಹೊಸ ಹೂಡಿಕೆ
ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಜರುಗಿದ ಜಾಗತಿಕ ಹೂಡಿಕೆದಾರರ ಸಮಾವೇಶ(GIM2025)ದ ಬಳಿಕ 11 ತಿಂಗಳ ಅವಧಿಯಲ್ಲಿ ಸುಮಾರು 1.53 ಲಕ್ಷ ಕೋಟಿ ಹೊಸ ಕೈಗಾರಿಕಾ ಹೂಡಿಕೆಗಳನ್ನು ನಮ್ಮಸರ್ಕಾರ ಆಕರ್ಷಿಸಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಉತ್ಪಾದನೆ, ನವೀಕರಿಸಬಹುದಾದ ಇಂಧನ, ಡೇಟಾ ಸೆಂಟರ್ ಗಳು ಹಾಗೂ ಜಾಗತಿಕ ಸಾಮರ್ಥ್ಯ ಕೇಂದ್ರಗಳ ವಲಯಗಳಲ್ಲಿ (GCC) ದೇಶ-ವಿದೇಶದ ಅಗ್ರಗಣ್ಯ ಕಂಪನಿಗಳು ಕರ್ನಾಟಕದ ಮೇಲೆ ವಿಶ್ವಾಸ ವ್ಯಕ್ತಪಡಿಸಿರುವುದು ಐತಿಹಾಸಿಕ ಸಾಧನೆ ಎಂದು ಹೇಳಿದ್ದಾರೆ. ಟೊಯೋಟಾ, ಗೂಗಲ್, ಎನ್ಟಿಟಿ, ಎಸ್ಎಪಿ, ಎಟಿ&ಎಸ್, […]
ತಂದೆ ದಾನ ಮಾಡಿದ ಜಾಗದಲ್ಲಿ ನಿರ್ಮಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಪುತ್ರ ಸಾವು…!
ತುಮಕೂರು: ತಂದೆ ದಾನ ಮಾಡಿದ ಜಾಗದಲ್ಲಿ ನಿರ್ಮಿಸಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಪುತ್ರ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದಿದೆ. ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಸಾಧಿಕ್ ಭೂಮಿ ದಾನ ಮಾಡಿದ್ದರು. ಅವರ ಪುತ್ರ ಸೈಯದ್ ಅಕ್ರಂ(42) ಅವರಿಗೆ ಸೂಕ್ತ ಸಮಯಕ್ಕೆ ಪ್ರಥಮ ಚಿಕಿತ್ಸೆ ಮತ್ತು ಆಂಬುಲೆನ್ಸ್ ಸಿಗದೇ ಅದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಾಧಿಕ್ ಅವರು ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಲು ಕೋಟ್ಯಂತರ ರೂಪಾಯಿ ಮೌಲ್ಯದ ಜಾಗವನ್ನು ಸರ್ಕಾರಕ್ಕೆ ದಾನ ಮಾಡಿದ್ದರು. ಆದರೆ, […]
ಸ್ವಚ್ಛತಾ ಸಿಬ್ಬಂದಿಗೆ ಗುಡ್ ನ್ಯೂಸ್: ಹೋಟೆಲ್, ಮಾಲ್, ಬಂಕ್ ಗಳಲ್ಲಿ ಶೌಚಾಲಯ ಬಳಕೆಗೆ ಅನುಮತಿ
ಬೆಂಗಳೂರು: ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಮಾಲ್, ಪೆಟ್ರೋಲ್ ಬಂಕ್ ಮತ್ತು ವಾಣಿಜ್ಯ ಸಂಸ್ಥೆ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಸಿಬ್ಬಂದಿಗೆ ಕಡ್ಡಾಯವಾಗಿ ಶೌಚಾಲಯ ಬಳಕೆಗೆ ಅನುಮತಿ ನೀಡಬೇಕು ಎಂದು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಸೂಚಿಸಿದ್ದಾರೆ. ಸ್ವಚ್ಛತಾ ಸಿಬ್ಬಂದಿಗೆ ಶೌಚಾಲಯ ಬಳಕೆಗೆ ಅವಕಾಶ ನೀಡುತ್ತಿಲ್ಲ ಎಂದು ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಿಗೆ ದೂರು ನೀಡಿದ್ದರು. ಈ ಬಗ್ಗೆ ಅಧ್ಯಕ್ಷರು ಆಯುಕ್ತರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದರು. ಈ ಹಿನ್ನೆಲೆಯಲ್ಲಿ […]
ಬೆಂಗಳೂರು: ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೂಚನೆ ಮೇರೆಗೆ ಪಿಜಿನೀಟ್-2025 ರಲ್ಲಿ ಪಿಜಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಕನಿಷ್ಠ ಅರ್ಹತಾ ಅಂಕಗಳನ್ನು ಕಡಿಮೆಗೊಳಿಸಿ ಪರಿಷ್ಕರಿಸಿರುವುದರಿಂದ 3ನೇ ಸುತ್ತಿನ (ಮಾಪ್-ಅಪ್) ಸೀಟು ಹಂಚಿಕೆಗಾಗಿ ಅರ್ಹ ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಇದಕ್ಕಾಗಿ ಆನ್ ಲೈನ್ ನೋಂದಣಿ, ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗಾಗಿ ಪ್ರಾಧಿಕಾರದ ಪೋರ್ಟಲ್ ಅನ್ನು ಜ.18ರ ಬೆಳಿಗ್ಗೆ 11ರಿಂದ ಜ.26ರ ಬೆಳಿಗ್ಗೆ 11ರವರೆಗೆ ತೆರೆದಿರಲಾಗುತ್ತದೆ . 3ನೇ ಸುತ್ತಿನಲ್ಲಿ (ಮಾಪ್- ಅಪ್) ಲಭ್ಯವಾಗುವ […]
BIG NEWS : ರಾಜ್ಯದ ಶಾಲಾ ದಾಖಲಾತಿಯಲ್ಲಿ ‘ಜಾತಿ ತಿದ್ದುಪಡಿ’ : ‘ಶಿಕ್ಷಣ ಇಲಾಖೆ’ಮಹತ್ವದ ಆದೇಶ.!
ಬೆಂಗಳೂರು : ಶಾಲಾ ದಾಖಲಾತಿಯಲ್ಲಿ ‘ಜಾತಿ ತಿದ್ದುಪಡಿ’ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಶಾಲಾ ದಾಖಲಾತಿಗಳಲ್ಲಿ ಜಾತಿ ತಿದ್ದುಪಡಿ ಸಂಬಂಧ ಪದೇ ಪದೇ ಅನಾವಶ್ಯಕವಾಗಿ ಪತ್ರ ವ್ಯವಹಾರ ಮಾಡದೇ, ಶಾಲಾ ದಾಖಲಾತಿಯಲ್ಲಿ ಜಾತಿ ತಿದ್ದುಪಡಿ ಸಂಬಂಧ ಈ ಮೇಲಿನ ಸರಕಾರದ ಆದೇಶ/ ಸುತ್ತೋಲೆಗಳಲ್ಲಿ ನೀಡಿರುವ ಸ್ಪಷ್ಟಿಕರಣ /ನಿರ್ದೇಶನಗಳಂತೆ ಪರಿಶೀಲಿಸಿ ತಮ್ಮ ಹಂತದಲ್ಲಿಯೇ ನಿಯಮಾನುಸಾರ ಕ್ರಮವಹಿಸಲು ತಿಳಿಸಿದೆ. ಏನಿದೆ ಸುತ್ತೋಲೆಯಲ್ಲಿ.?ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (5) ಮತ್ತು ಉಲ್ಲೇಖ (6) ರ ಪತ್ರಗಳಲ್ಲಿ ಶಾಲಾ ದಾಖಲಾತಿಯಲ್ಲಿ […]
ನವದೆಹಲಿ: 2025ರ ಡಿಸೆಂಬರ್ ನಲ್ಲಿ ವ್ಯಾಪಕವಾದ ವಿಮಾನ ರದ್ದತಿ ಮತ್ತು ವಿಳಂಬಗಳಿಗೆ ಪ್ರತಿಕ್ರಿಯೆಯಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂಡಿಗೋಗೆ 22.2 ಕೋಟಿ ರೂ. ದಂಡ ವಿಧಿಸಿದೆ ಮತ್ತು ವಿಮಾನಯಾನ ಸಂಸ್ಥೆಗೆ 50 ಕೋಟಿ ರೂ. ಬ್ಯಾಂಕ್ ಗ್ಯಾರಂಟಿ ನೀಡುವಂತೆ ಆದೇಶಿಸಿದೆ. ಇಂಡಿಗೋ 2,507 ವಿಮಾನಗಳನ್ನು ರದ್ದುಗೊಳಿಸಿತು ಮತ್ತು 1,852 ವಿಮಾನಗಳನ್ನು ವಿಳಂಬಗೊಳಿಸಿತು, ಇದರಿಂದಾಗಿ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಿಲುಕಿಕೊಂಡರು. ಅವ್ಯವಸ್ಥೆಯು ಭಾರಿ ಅನಾನುಕೂಲತೆಯನ್ನು ಸೃಷ್ಟಿಸಿತು, ಪ್ರಯಾಣಿಕರು ಕಾಯುವ ಸಮಯ, ಗೊಂದಲ ಮತ್ತು […]
NHM ಸಿಬ್ಬಂದಿಗೆ ಆರೋಗ್ಯ ಸಚಿವರಿಂದ ಗುಡ್ ನ್ಯೂಸ್: ಇನ್ಮುಂದೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(ಎನ್.ಎಚ್.ಎಂ.) ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿ ವಿಳಂಬವಾಗಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರವು 2025–26ರ ಹಣಕಾಸು ವರ್ಷದ ಮಧ್ಯದಲ್ಲಿ SNA-SPARSH ಪಾವತಿ ವ್ಯವಸ್ಥೆಯನ್ನು ನವೀಕರಿಸುವ ನೀತಿಯನ್ನು ಜಾರಿಗೆ ತಂದಿತ್ತು. ಈ ನವೀಕರಣದ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎರಡೂ ಕಡೆ ಪಾವತಿ ಪ್ರಕ್ರಿಯೆ ಹಾಗೂ ತಾಂತ್ರಿಕ ವ್ಯವಸ್ಥೆಗಳಲ್ಲಿ ಬದಲಾವಣೆ ಮತ್ತು ಮರುಹೊಂದಾಣಿಕೆ ನಡೆಯಬೇಕಾಗಿತ್ತು. ಈ ಹೊಸ ವ್ಯವಸ್ಥೆಗೆ ಹೊಂದಿಕೊಳ್ಳುವ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ಆರೋಗ್ಯ […]
ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕ್ಷೇತ್ರದಲ್ಲಿ 1,17,603 ಮಹಿಳೆಯರು ಸೇರಿ ಒಟ್ಟು 2,31,158 ಮತದಾರರು
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದ್ದು, ನಿಗದಿತ ಅವಧಿಯಲ್ಲಿ ಹಕ್ಕು, ಆಕ್ಷೇಣೆಗಳಿದ್ದಲ್ಲಿ ಸಲ್ಲಿಸಲು ಸರ್ಕಾರದ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಡಾ. ಶಮ್ಲಾ ಇಕ್ಬಾಲ್ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಜನವರಿ 3 ರಂದು […]
BREAKING: ಅಸ್ಸಾಂನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಗುವಾಹಟಿ(ಅಸ್ಸಾಂ): ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಅಸ್ಸಾಂನಲ್ಲಿ ಸೆಮಿಕಂಡಕ್ಟರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ವಿರೋಧ ವ್ಯಕ್ತಪಡಿಸಿದ್ದರು. ಅಸ್ಸಾಂನಲ್ಲಿ ಸೆಮಿಕಂಡಕ್ಟರ್ ಏಕೆಂದು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದರು. ಇದು ಕಾಂಗ್ರೆಸ್ ಮನಸ್ಥಿತಿಯಾಗಿದೆ ಎಂದು ಅಸ್ಸಾಂನ ಗುವಾಹಟಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ನಾವು(ಬಿಜೆಪಿ) ಅಸ್ಸಾಂನ ಕಲೆ, ಸಂಸ್ಕೃತಿ ಮತ್ತು ಗುರುತನ್ನು ಗೌರವಿಸಿದಾಗ, ಕೆಲವು ರಾಜಕೀಯ ಜನರು ವಿರೋಧಿಸುತ್ತಾರೆ. ಭೂಪೇನ್ ಹಜಾರಿಕಾ ಅವರಿಗೆ ಭಾರತ ರತ್ನ ಪ್ರಶಸ್ತಿ ಸೇರಿದಂತೆ […]
ತಹಶೀಲ್ದಾರ್ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ FDA ಲೋಕಾಯುಕ್ತ ಬಲೆಗೆ
ಕಲಬುರಗಿ: ಕಲಬುರಗಿ ಜಿಲ್ಲೆ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರಥಮ ದರ್ಜೆ ಸಹಾಯಕ ಶಶಿಕಾಂತ್ ಜಂಜೀರ್ ಲೋಕಾಯುಕ್ತ ಬಲೆಗೆ ಬಿದ್ದ ನೌಕರ. ತಹಶೀಲ್ದಾರ್ ನಡೆಸಿದ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಆದೇಶ ಪ್ರತಿಯನ್ನು ಫಲಾನುಭವಿಗಳಿಗೆ ನೀಡಲು 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡಲು ಒತ್ತಾಯಿಸುತ್ತಿದ್ದರಿಂದ ಕಿಶನ್ ರಾಥೋಡ್ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶನಿವಾರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು […]
BBK 12 Finale: ಬರೋಬ್ಬರಿ 37 ಕೋಟಿ ವೋಟ್ಸ್ ಪಡೆದ ಸ್ಪರ್ಧಿ ಮೊದಲ ಸ್ಥಾನದಲ್ಲಿ; ವಿಷಯ ತಿಳಿದು ಬೆಚ್ಚಿಬಿದ್ದ ಮನೆಮಂದಿ
ನಾಳೆ ( ಜನವರಿ 18 ) ಭಾನುವಾರ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಈ ಮೂಲಕ ದೀರ್ಘ ಅವಧಿಯ ಬಿಗ್ಬಾಸ್ನಲ್ಲಿ ಗೆದ್ದವರಾರು, ರನ್ನರ್ ಅಪ್ ಆದವರಾರು ಎಂಬ ವಿಷಯ ಹೊರಬೀಳಲಿದೆ. ಈ ಬಾರಿಯ ಫಿನಾಲೆ ವಾರಕ್ಕೆ ಆರು ಸ್ಪರ್ಧಿಗಳು ಕಾಲಿಟ್ಟಿದ್ದು, ಅಶ್ವಿನಿ ಗೌಡ, ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಮ್ಯೂಟಂರ್ ರಘು, ಕಾವ್ಯ ಶೈವ ಹಾಗೂ ಧನುಷ್ ಫೈನಲಿಸ್ಟ್ಗಳಾಗಿದ್ದಾರೆ. ಈ ಆರು ಮಂದಿಯಲ್ಲಿ ಓರ್ವರು ವಿನ್ನರ್ ಪಟ್ಟವನ್ನು […]
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಈ ಮೂಲಕ ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಗೃಹ ಇಲಾಖೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA)ಗೆ ಒಪ್ಪಿಗೆ ನೀಡಿದೆ. ನ್ಯಾ. ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಗೃಹ ಇಲಾಖೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. […]
U19 ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ಮೂಲಕ ಹೊಸ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ
ಬುಲವಾಯೊ(ಜಿಂಬಾಬ್ವೆ): ಭಾರತದ ಅದ್ಭುತ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಹೆಗ್ಗುರುತು ಪ್ರದರ್ಶನವು ಶನಿವಾರ ಬುಲವಾಯೊದಲ್ಲಿ ಬಾಂಗ್ಲಾದೇಶ ವಿರುದ್ಧದ 19 ವರ್ಷದೊಳಗಿನವರ ವಿಶ್ವಕಪ್ 2026 ರ ಪಂದ್ಯದ ನಿರ್ಣಾಯಕ ಕ್ಷಣವಾಯಿತು. ಕೇವಲ 14 ವರ್ಷ ಮತ್ತು 296 ದಿನಗಳಲ್ಲಿ ವೈಭವ್ 67 ಎಸೆತಗಳಲ್ಲಿ 72 ರನ್ ಗಳಿಸುವ ಮೂಲಕ ಪಂದ್ಯಾವಳಿಯ ದಾಖಲೆ ಪುಸ್ತಕಗಳಲ್ಲಿ ತನ್ನ ಹೆಸರನ್ನು ಕೆತ್ತಿದರು, ಇದರಲ್ಲಿ ಆರು ಬೌಂಡರಿಗಳು ಮತ್ತು ಮೂರು ಸಿಕ್ಸರ್ಗಳು ಸೇರಿವೆ. ಆರಂಭದಿಂದಲೂ ಅವರ ಆಟ ದೃಢವಾಗಿತ್ತು ಮತ್ತು ಅವರು ಕೇವಲ 30 […]
BREAKING: ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಯುವಕನ ಬರ್ಬರ ಹತ್ಯೆ; ಕಾರು ಹತ್ತಿಸಿ ಕೊಲೆ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣ ಮುಂದುವರೆದಿದೆ. ಇಂದು ಮತ್ತೋರ್ವ ಹಿಂದೂ ಯುವಕನನ್ನು ಕಾರು ಹತ್ತಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಾಂಗ್ಲಾದ ರಾಜ್ ಬರಿ ಜಿಲ್ಲೆಯ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕಾರು ಹತ್ತಿಸಿ ಹತ್ಯೆ ಮಾಡಲಾಗಿದೆ. ಪೆಟ್ರೋಲ್ ಬಂಕ್ ಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದ ದುರುಳರು ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೇ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕಾರನ್ನು […]
ಬಸ್ ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವರಿಗೆ ಶಾಕ್: 8 ಲಕ್ಷ ರೂ. ದಂಡ ವಸೂಲಿ ಮಾಡಿದ ಕೆಎಸ್ಆರ್ಟಿಸಿ
ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವರಿಂದ ಕೆಎಸ್ಆರ್ಟಿಸಿ ಬರೋಬ್ಬರಿ 8.08 ಲಕ್ಷ ರೂ. ದಂಡ ವಸೂಲಿ ಮಾಡಿದೆ. ಬಸ್ ಗಳಲ್ಲಿ ಸಂಚರಿಸುವ ಕೆಲವು ಪ್ರಯಾಣಿಕರು ಟಿಕೆಟ್ ಪಡೆಯುವುದಿಲ್ಲ. ಪಾಸ್ ಇಟ್ಟುಕೊಳ್ಳುವಂತೆ, ಟಿಕೆಟ್ ಪಡೆದುಕೊಳ್ಳುವಂತೆ ನಿರ್ವಾಹಕರು ಹೇಳಿದರೂ ಟಿಕೆಟ್ ಪಡೆದುಕೊಳ್ಳುವುದಿಲ್ಲ. ಇಂತಹ ಪ್ರಯಾಣಿಕರಿಂದ ದಂಡ ವಸೂಲಿ ಮಾಡಲಾಗಿದೆ. ಕೆಎಸ್ಆರ್ಟಿಸಿ ಸಿಬ್ಬಂದಿ ಟಿಕೆಟ್ ಇಲ್ಲದ ಪ್ರಯಾಣಿಕರಿಗೆ ದಂಡ ಹಾಕುತ್ತಾರೆ. 2025ರ ಡಿಸೆಂಬರ್ ನಲ್ಲಿ 8,08,704 ರೂ. ದಂಡ ವಸೂಲಿ ಮಾಡಲಾಗಿದೆ. ಡಿಸೆಂಬರ್ ತಿಂಗಳಿನಲ್ಲಿ ಕೆಎಸ್ಆರ್ಟಿಸಿ 43,553 ವಾಹನಗಳನ್ನು ತನಿಖೆಗೊಳಪಡಿಸಿತ್ತು. ಇದರಲ್ಲಿ 4207 […]

26 C