SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಂದ ಜೈಲರ್ ಸೇರಿ ನಾಲ್ವರ ಮೇಲೆ ಹಲ್ಲೆ

ಕಾರವಾರ ಇಂದು ಮಧ್ಯಾಹ್ನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಜೈಲರ್ ಸೇರಿದಂತೆ ನಾಲ್ವರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.ಮಾದಕ ವಸ್ತುಗಳಾದ ತಂಬಾಕು ಮತ್ತು ಗಾಂಜಾ ಪೂರೈಕೆಗೆ ಅವಕಾಶ ನೀಡದ ಕಾರಣಕ್ಕೆ ಆಕ್ರೋಶಗೊಂಡಿದ್ದ ಕೈದಿಗಳೇ ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಕೌಶಿಕ್ ನಿಹಾಲ್, ಮೊಹಮ್ಮದ್ ಅಬ್ದುಲ್ ಫಯಾನ್ ಎಂಬ ಕೈದಿಗಳು ಹಲ್ಲೆ ನಡೆಸಿದವರಾಗಿದ್ದು ಇವರ ವಿರುದ್ಧ ಡಕಾಯತಿ, ಕೊಲೆ ಸೇರಿದಂತೆ […]

ಪ್ರಜಾ ಪ್ರಗತಿ 6 Dec 2025 4:14 pm

ಗಿಡ ಮರಗಳ ನಾಶದ ಜೊತೆ ಭೂಮಿಯ ಒಡಲು ಬಗೆಯುತ್ತಿರುವ ಅಕ್ರಮ ಮಣ್ಣು ದಂದೆ

ಶಿರಸಿ ವರದಿ: ಶ್ರೀನಿವಾಸ ಆಚಾರಿ ಶಿರಸಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮಣ್ಣು ಸಾಗಾಟ ದಂಧೆ. ಅರಣ್ಯ ಭೂಮಿ, ಕಂದಾಯ ಭೂಮಿ ಎಲ್ಲೆಂದರಲ್ಲಿ ಅಕ್ರಮವಾಗಿ ಮಣ್ಣು ಬಗೆದು ಅಲ್ಲಲ್ಲಿ ತಲೆ ಎತ್ತುತ್ತಿರುವ ಲೇ ಔಟ್ ಗಳಿಗೆ ಟಿಪ್ಪರ್ ಗಳಲ್ಲಿ ಸಾಗಿಸುತ್ತಿರುವ ದಂಧೆಕೋರರು ಹಾಗೂ ಕೆಲವು ಕಡೆ ತೋಟ ವಿಸ್ತರಣೆಗಾಗಿ ಬೆಟ್ಟವನ್ನು ಬಗೆದುಕೊಡುವುದಾಗಿ ಈ ಸಂದರ್ಭದಲ್ಲಿ ಯಾವುದೇ ಅಡ್ಡಿ ಬಾರದಂತೆ ನೋಡಿಕೊಳ್ಳುವುದಾಗಿ ಗ್ರಾಮೀಣ ಭಾಗದ ಜನರಿಗೆ ಭರವಸೆ ಮೂಡಿಸಿ ಮಣ್ಣನ್ನು […]

ಪ್ರಜಾ ಪ್ರಗತಿ 6 Dec 2025 4:10 pm

GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಜಿಎಸ್’ಟಿ ದರ ಬದಲಾವಣೆಯಿಂದಾಗಿ ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಜಿಎಸ್​​ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. ಜಿಎಸ್’ಟಿ ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ […]

ಪ್ರಜಾ ಪ್ರಗತಿ 6 Dec 2025 12:43 pm

ಸ್‌ಮಸ್‌, ಹೊಸವರ್ಷ ರಜೆ: ಯಶವಂತಪುರ- ಕಾರವಾರ ನಡುವೆ ವಿಶೇಷ ರೈಲು

ಬೆಂಗಳೂರು: ಈ ವರ್ಷಾಂತ್ಯ ಕ್ರಿಸ್ ಮಸ್, ಹೊಸವರ್ಷ ಎಂದು ಸಾಲುಸಾಲು ರಜೆ ಇರುವುದರಿಂದ ಊರು, ಪರವೂರುಗಳಿಗೆ, ಪ್ರವಾಸ ಹೋಗುವವರ ಸಂಖ್ಯೆ ಅಧಿಕವಾಗಿರುತ್ತದೆ.ಕ್ರಿಸ್‌ಮಸ್‌ ರಜೆಗೆ ಯಶವಂತಪುರ – ಉಡುಪಿ – ಕಾರವಾರ ನಡುವೆ 2 ಟ್ರಿಪ್ ವಿಶೇಷ ರೈಲು ಓಡಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಈ ರೈಲು ಹಬ್ಬದ ಆಸುಪಾಸಿನ ದಿನಗಳಂದು ಸಂಚಾರ ನಡೆಸಲಿದೆ. ಈ ಬಗ್ಗೆ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ […]

ಪ್ರಜಾ ಪ್ರಗತಿ 6 Dec 2025 12:41 pm

ರೈತನಿಗೆ ಪರಿಹಾರ ಪಾವತಿಯಲ್ಲಿ ವಿಳಂಬ; ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿ ಕೋರ್ಟ್‌ ಆದೇಶ

ಶಿವಮೊಗ್ಗ ರೈತನಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ಮಂಜೂರು ಮಾಡುವಲ್ಲಿ ವಿಳಂಬ ನೀತಿ ಅನುಸರಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ ಕಾರನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.1992ರಲ್ಲಿ ಶಿವಮೊಗ್ಗದ ಹರಮಘಟ್ಟದ ರೈತ ನಂದಾಯಪ್ಪ ಅವರ 1 ಎಕರೆ ಭೂಮಿಯನ್ನು ವಸತಿ ಯೋಜನೆಗಾಗಿ ಸರ್ಕಾರ ಸ್ವಾಧೀನಪಡಿಸಿಕೊಂಡಿತ್ತು. ಭೂಸ್ವಾಧೀನಕ್ಕೆ ಪರಿಹಾರವಾಗಿ 22 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿತ್ತು. ಆದರೆ, 9 ಲಕ್ಷ ರೂ.ಗಳನ್ನು ಮಾತ್ರವೇ ನೀಡಿದ್ದ ಸರ್ಕಾರ, ಉಳಿದ ಹಣವನ್ನು ಬಾಕಿ ಉಳಿಸಿಕೊಂಡಿತ್ತು ಎನ್ನಲಾಗಿದೆ.ಬಾಕಿ ಪರಿಹಾರಕ್ಕಾಗಿ ರೈತ […]

ಪ್ರಜಾ ಪ್ರಗತಿ 6 Dec 2025 12:38 pm

ಆದಾಯ ತೆರಿಗೆ ಪ್ರಕರಣ :ನಟನಿಗೆ ಹೈಕೋರ್ಟ್ ರಿಲೀಫ್..!

ಬೆಂಗಳೂರು: ಆದಾಯ ತೆರಿಗೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಬಿಗ್ ರಿಲೀಫ್ ನೀಡಿದೆ.ನಟ ಯಶ್ ಅವರ ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ನ್ಯಾಯಪೀಠ ನೋಟಿಸ್ ನ್ನು ರದ್ದು ಮಾಡಿದೆ. 2013-14ರಿಂದ 2018-19 ಅವಧಿಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ನೀಡಿದ್ದ ನೋಟಿಸ್ ಅನ್ನು ಯಶ್ ಹೈಕೋರ್ಟ್​ ಅಲ್ಲಿ ಪ್ರಶ್ನೆ ಮಾಡಿದ್ದರು. ಈ […]

ಪ್ರಜಾ ಪ್ರಗತಿ 6 Dec 2025 12:36 pm

ಮಿಥುನ್ ರೈ-ಐವಾನ್ ಡಿ’ಸೋಜಾಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್‌

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕಳೆದ ಕೆಲ ತಿಂಗಳಿಂದ ಸಿಎಂ ಗದ್ದುಗೆ ಗುದ್ದಾಟ ಮಿತಿಮೀರಿದೆ. ಸಿಎಂ-ಡಿಸಿಎಂ ಬ್ರೇಕ್‌ ಫಾಸ್ಟ್ ಸಭೆ ಮಾಡಿ ಸಂಧಾನ ಮಾಡಿದ್ರೂ ಇದು ನಿಲ್ಲದಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ ಸಿಎಂ ಘೋಷಣೆ ಕೂಗಿದ್ದವರಿಗೆ ಐಐಸಿಸಿ ಶಾಕ್ ನೀಡಿದೆ. ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿ ನಡುವಿನ ಸಂವಾದದ ಶತಮಾನೋತ್ಸವ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆ.ಸಿ.ವೇಣುಗೋಪಾಲ್ ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದರು. […]

ಪ್ರಜಾ ಪ್ರಗತಿ 6 Dec 2025 12:25 pm

ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿಗೆ ಇನ್ಸ್ಟಾದಲ್ಲಿ ಕಾಣಿಸಿಕೊಂಡ ಸ್ಮೃತಿ ಮಂಧಾನ!

ಮುಂಬೈ : ಬಾಲಿವುಡ್ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ಮುಂದೂಡಿದ ಬಳಿಕ ಮಹಿಳಾ ಕ್ರಿಕೆಟ್‌ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ಇನ್ಸಾಟಾಗ್ರಾಮ್ ನಲ್ಲಿ ಮೊದಲ ಪೋಸ್ಟ್‌ ಹಂಚಿಕೊಂಡಿದ್ದಾರೆ.ನವೆಂಬರ್ 23 ರಂದು ಅವರಿಬ್ಬರ ವಿವಾಹದ ದಿನದಂದು ಸ್ಮೃತಿ ಮಂಧಾನ ಅವರ ತಂದೆ ಶ್ರೀನಿವಾಸ್ ಅನಾರೋಗ್ಯದಿಂದ ಸಾಂಗ್ಲಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ವಿವಾಹ ಮುಂದೂಲ್ಪಟ್ಟಿತ್ತು. ಮಾರನೇ ದಿನ ಮುಚ್ಚಲ್ ಕೂಡಾ ಆಸ್ಪತ್ರೆ ಸೇರಿದ್ದರು. ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆದರೆ, ಹೊಸ ಮದುವೆ […]

ಪ್ರಜಾ ಪ್ರಗತಿ 6 Dec 2025 12:22 pm

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಯೋಜನೆ: ಸಚಿವ ಸೋಮಣ್ಣ ಭರವಸೆ

ಶಿರಸಿ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶಿರಸಿಯ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.ಶಿರಸಿಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು, ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಅವರೊಂದಿಗೆ ಸಂಭಾಷಿಸಿ, ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಯೋಜನೆಯ ಬಗ್ಗೆ ಮಹತ್ವದ ಹೇಳಿಕೆ ನೀಡಿದರು. ೧೬೫ ಕಿ.ಮೀ. ಉದ್ದದ ಈ ಯೋಜನೆಗೆ ಸಂಬಂಧಿಸಿದ ಸಮೀಕ್ಷೆ ಪೂರ್ಣಗೊಂಡಿದ್ದು, ವಿವರಣಾತ್ಮಕ ಯೋಜನಾ ವರದಿ (ಡಿಪಿಆರ್) ಜೂನ್ ೨೦೨೬ರೊಳಗೆ […]

ಪ್ರಜಾ ಪ್ರಗತಿ 6 Dec 2025 12:12 pm

ಶಿವಮೊಗ್ಗದ ಖ್ಯಾತ ತಜ್ಞೆ ಡಾ. ಜಯಶ್ರೀ ಹಾಗೂ ಪುತ್ರ ಆಕಾಶ್ ಆತ್ಮಹತ್ಯೆ

ಶಿವಮೊಗ್ಗ ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದ್ದು, ತಾಯಿ ಮತ್ತು ಮಗ ಇಬ್ಬರೂ ಪ್ರತ್ಯೇಕ ರೂಮ್‌ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ. ಜಯಶ್ರೀ (57) ಮತ್ತು ಮಗ ಆಕಾಶ್(32) ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿನೋಬನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಡೆತ್ […]

ಪ್ರಜಾ ಪ್ರಗತಿ 6 Dec 2025 11:28 am

ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ : ಡಿ.ಕೆ. ಶಿವಕುಮಾರ್‌

ಬೆಂಗಳೂರು ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಕೆಐಎಡಿಬಿಎ ನೂತನ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಅವರು ಪ್ರತಿಕ್ರಿಯೆ ನೀಡಿದರು. ಸತೀಶ್ ಜಾರಕಿಹೋಳಿ ಅವರ ಭೇಟಿ ಬಗ್ಗೆ ಕೇಳಿದಾಗ, ʼನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ […]

ಪ್ರಜಾ ಪ್ರಗತಿ 6 Dec 2025 11:23 am

ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಕಡ್ಡಾಯವಾಗಿ ನಿಯಮ ಪಾಲನೆಗೆ ಕ್ರಮ.

ವಿಜಯನಗರ ಜಿಲ್ಲೆಯಲ್ಲಿ 5 ಸರ್ಕಾರಿ ಮತ್ತು 75 ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿವೆ. ಪಿಸಿ&ಪಿಎನ್‌ಡಿಟಿ 1994 ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿರ್ಲಕ್ಷಿಸಿದರೇ ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೆಂಟರ್ ಮುಚ್ಚಲು ಕ್ರಮ ವಹಿಸಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಹೇಳಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, […]

ಪ್ರಜಾ ಪ್ರಗತಿ 6 Dec 2025 9:58 am

ಬಿಸಿಯೂಟದಿಂದ ಮಕ್ಕಳು ಅಸ್ವಸ್ಥ ಪ್ರಕರಣ : ಕಳಪೆ ಬೆಳೆ, ಬ್ಯಾಕ್ಟೀರಿಯ ಮಿಶ್ರಿತ ಸಾಂಬಾರ್ ಕಾರಣ

ಮುಂಡಗೋಡ : ಮುಂಡಗೋಡ ನಗರದ ಶಾಸಕರ ಮಾದರಿ ಶಾಲೆಯ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಕುರಿತಂತೆ ಮಕ್ಕಳು ಬಳಸಿದ್ದ ಆಹಾರ ಪದಾರ್ಥ ಹಾಗೂ ಅಡುಗೆಗೆ ಬಳಸಿದ ದಿನಸಿ ಪದಾರ್ಥಗಳನ್ನು ಪರೀಕ್ಷೆಗಾಗಿ ಬೆಳಗಾವಿಯ ಡಿವಿಜನಲ್ ಫುಡ್ ಲ್ಯಾಬೋರೇಟರಿ ಗೆ ಕಳುಹಿಸಿಕೊಡಲಾಗಿತ್ತು. ವಾರದ ಬಳಿಕ ಬಂದ ಲ್ಯಾಬ್ ರಿಪೋರ್ಟ್ ಬೆಚ್ಚಿ ಬೀಳಿಸುವಂತಿದ್ದು, ನಿಜಕ್ಕೂ ಮಕ್ಕಳ ವಿಷಯದಲ್ಲಿ ಸಂಬಂಧಪಟ್ಟವರ ನಿರ್ಲಕ್ಷಕ್ಕೆ ಪೋಷಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ನೂರಾರು ಮಕ್ಕಳು ಪ್ರತಿನಿತ್ಯ ಸೇವಿಸುವಂತ ಬಿಸಿಯೂಟ ತಯಾರಿಕೆಗೆ […]

ಪ್ರಜಾ ಪ್ರಗತಿ 6 Dec 2025 9:49 am

ದರ್ಶನ್ ಬೇಗ ಜೈಲಿಂದ ಹೊರಗೆ ಬರ್ತಾರೆ! ಭವಿಷ್ಯ ನುಡಿದ ನಟ ಝೈದ್ ಖಾನ್

ವಿಜಯನಗರ / ಹೊಸಪೇಟೆ : ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಿನಲ್ಲಿರುವಾಗಲೇ ಡೆವಿಲ್ ಸಿನಿಮಾದ ಟ್ರೈಲರ್ ಈಗಾಗಲೇ ರಿಲೀಸ್ ಆಗಿದೆ. ಇನ್ನೂ ಡೆವಿಲ್ ಅಬ್ಬರಿಸೋಕೆ ಕೆಲವೇ ದಿನಗಳು ಬಾಕಿ ಇದೆ. ಫ್ಯಾನ್ಸ್ ಅಂತೂ ಹಬ್ಬ ಮಾಡೋಕೆ ರೆಡಿ ಆಗಿ ನಿಂತಿದ್ದಾರೆ. ಇದೀಗ ಕಲ್ಟ್ ಸಿನಿಮಾ ಪ್ರಚಾರದಲ್ಲಿರುವ ಎಂದ ನಟ ಝೈದ್ ಖಾನ್ ದರ್ಶನ್ ಬಗ್ಗೆ ಮಾತನಾಡಿದ್ದಾರೆ. ಕಲ್ಟ್ ಪ್ರಚಾರದಲ್ಲಿ ಝೈದ್ ಖಾನ್ ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ […]

ಪ್ರಜಾ ಪ್ರಗತಿ 5 Dec 2025 8:22 pm

ವಾಚ್ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡುವೆ : ಛಲವಾದಿ ನಾರಾಯಣಸ್ವಾಮಿಗೆ ಡಿಕೆಶಿ ಸವಾಲ್

ಬೆಂಗಳೂರು “ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ…” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಡಿಸಿಎಂ ಗುರುವಾರ ಪ್ರತಿಕ್ರಿಯಿಸಿದರು. “ನಾರಾಯಣಸ್ವಾಮಿ ಅವರಿಗೆ ಇನ್ನೂ ಅನುಭವವಿಲ್ಲ. […]

ಪ್ರಜಾ ಪ್ರಗತಿ 5 Dec 2025 5:26 pm

ಲಂಡನ್‌ನ ‘ದಿ ಹಂಡ್ರೆಡ್’ಲೀಗ್‌ನಲ್ಲೂ ತಂಡ ಖರೀದಿಸಿದ ಮುಂಬೈ ಇಂಡಿಯನ್ಸ್‌

ಲಂಡನ್ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಂಗಸಂಸ್ಥೆಯಾದ ರಿಲಯನ್ಸ್ ಸ್ಟ್ರಾಟೆಜಿಕ್ ಬ್ಯುಸಿನೆಸ್ ವೆಂಚರ್ಸ್ ಲಿಮಿಟೆಡ್ ಮತ್ತು ಸರ್ರೆ ಕೌಂಟಿ ಕ್ರಿಕೆಟ್ ಕ್ಲಬ್, ಯುಕೆಯ ದಿ ಹಂಡ್ರೆಡ್‌ ನ ಐಕಾನಿಕ್ ಫ್ರಾಂಚೈಸಿ ಓವಲ್ ಇನ್ವಿನ್ಸಿಬಲ್ಸ್‌ ನಲ್ಲಿ ಪಾಲುದಾರಿಕೆಯನ್ನು ಘೋಷಿಸಿವೆ. ಈ ಒಪ್ಪಂದದ ಅಡಿಯಲ್ಲಿ, ಸರ್ರೆ ಶೇ. 51ರಷ್ಟು ಪಾಲನ್ನು ಮತ್ತು ರಿಲಯನ್ಸ್ ಶೇ.49ರಷ್ಟು ಪಾಲನ್ನು ಪಡೆದುಕೊಂಡಿದೆ. 2026ರಿಂದ ಪುರುಷ ಮತ್ತು ಮಹಿಳಾ ತಂಡಗಳು ದಿ ಹಂಡ್ರೆಡ್ ಲೀಗ್ನಲ್ಲಿ ‘ಎಂಐ ಲಂಡನ್’ ಎಂಬ ಹೆಸರಿನಲ್ಲಿ ಆಡಲಿವೆ. […]

ಪ್ರಜಾ ಪ್ರಗತಿ 5 Dec 2025 5:23 pm

ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ಸ್ಪಷ್ಟನೆ

ಬೆಂಗಳೂರು ರಾಜ್ಯದಲ್ಲಿ ‘ಶೇ. 63ರಷ್ಟು ಭ್ರಷ್ಟಾಚಾರವಿದೆ’ ಎಂಬ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾದ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಮಾತುಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ತಮ್ಮ ಹೇಳಿಕೆಯನ್ನು ರಾಜಕೀಯ ನಾಯಕರು ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನ್ಯಾಯಮೂರ್ತಿ ವೀರಪ್ಪ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು, ತಾವು ಯಾವುದೇ ನಿರ್ದಿಷ್ಟ ಸರ್ಕಾರ ಅಥವಾ ಅವಧಿಯನ್ನು ಉಲ್ಲೇಖಿಸಿಲ್ಲ. ಅಲ್ಲದೇ ನಾನು ಯಾವ ಸರ್ಕಾರವನ್ನೂ ಗಮನದಲ್ಲಿಟ್ಟುಕೊಂಡು ಹೇಳಿಲ್ಲ. ಇಂಡಿಯಾ ಕರಪ್ಷನ್ […]

ಪ್ರಜಾ ಪ್ರಗತಿ 5 Dec 2025 5:14 pm

ಒಡಹುಟ್ಟಿದವರ ಬಂಧ ಬೆಸೆಯಲು ಹೋಗುವ ‘ಆದಿ-ಲಕ್ಷ್ಮಿ’ಯ ಪುರಾಣ ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ

ಬೆಂಗಳೂರು ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2025 ನ್ನು ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ ಇಬ್ಬರ ಪ್ರಯಾಣ ‘ಆದಿ ಲಕ್ಷ್ಮಿ ಪುರಾಣ’ ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ಕಿರುತೆರೆಯಲ್ಲಿ ಸದ್ದು ಮಾಡಲು ಸಿದ್ದವಾಗಿರುವ ‘ಆದಿಲಕ್ಷ್ಮೀ ಪುರಾಣ’ ಸಂಪ್ರದಾಯ ಮತ್ತು ಆಧುನಿಕತೆಯ ಮಧ್ಯೆ ನಿರ್ಮಾಣವಾದ ಕಥೆಯಾಗಿದೆ. ಹಳ್ಳಿ ಹುಡುಗಿ […]

ಪ್ರಜಾ ಪ್ರಗತಿ 5 Dec 2025 4:07 pm