SENSEX
NIFTY
GOLD
USD/INR

Weather

17    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಕೊನೆಯ 4 ಎಸೆತದಲ್ಲಿ 18 ರನ್ ಬೇಕಿದ್ದಾಗ 6,4,6,4 ಚಚ್ಚಿದ ಡಿ ಕ್ಲೆರ್ಕ್; ಮುಂಬೈ ವಿರುದ್ಧ ಆರ್‌ಸಿಬಿಗೆ ರೋಚಕ ಜಯ

ನವಿಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 2026ರ ವುಮೆನ್ಸ್ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಪಂದ್ಯ ನಡೆದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಡೈನ್ ಡಿ ಕ್ಲೆರ್ಕ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕೊನೆಯ ಎಸೆತದಲ್ಲಿ ರೋಚಕ ಗೆಲುವು ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ […]

ಕನ್ನಡ ದುನಿಯಾ 9 Jan 2026 11:36 pm

BREAKING: ಮೈಸೂರು ಪಾಲಿಕೆಗೆ ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಎಂದು ಮರು ನಾಮಕರಣ ಮಾಡಿ ಸರ್ಕಾರ ಆದೇಶ: ಹಲವು ಪ್ರದೇಶ ಸೇರ್ಪಡೆ

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಗೆ ಮರು ನಾಮಕರಣ ಮಾಡಲಾಗಿದೆ. ಬೃಹತ್ ಮೈಸೂರು ಮಹಾನಗರ ಪಾಲಿಕೆ ಎಂದು ಮರು ನಾಮಕರಣ ಮಾಡಲಾಗಿದೆ. ಬೃಹತ್ ಮೈಸೂರು ಮಹಾನಗರ ಪಾಲಿಕೆ ಎಂದು ಮರು ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಾಲಿಕೆಯ ವ್ಯಾಪ್ತಿಗೆ ಹೂಟಗಳ್ಳಿ ನಗರಸಭೆ, ಶ್ರೀರಾಮಪುರ, ಕಡಕೊಳ, ರಮ್ಮನಹಳ್ಳಿ ಮತ್ತು ಬೋಗಾದಿ ಪಟ್ಟಣ ಪಂಚಾಯಿತಿಗಳನ್ನು ಸೇರ್ಪಡೆ ಮಾಡಲಾಗಿದೆ. ಚಾಮುಂಡಿ ಬೆಟ್ಟ ಸೇರಿ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ಕೂಡ ಸೇರ್ಪಡೆ ಮಾಡಲಾಗಿದೆ. ಮೈಸೂರು ಪಾಲಿಕೆಯ ಒಟ್ಟು ವಿಸ್ತೀರ್ಣ […]

ಕನ್ನಡ ದುನಿಯಾ 9 Jan 2026 9:09 pm

BIG NEWS: ಜ. 28ರಿಂದ ಸಂಸತ್ ಅಧಿವೇಶನ ಆರಂಭ: ಫೆ. 1 ಭಾನುವಾರ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಬಜೆಟ್ 2026 ಫೆಬ್ರವರಿ 1 ರ ಭಾನುವಾರ ಮಂಡನೆಯಾಗಲಿದೆ. ಸಂಸತ್ತಿನ ಅಧಿವೇಶನ ಜನವರಿ 28 ರಂದು ಆರಂಭವಾಗಲಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದು, ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28 ರಂದು ಪ್ರಾರಂಭವಾಗಿ ಏಪ್ರಿಲ್ 2 ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿವೇಶನವನ್ನು ಅನುಮೋದಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಭಾರತ ಸರ್ಕಾರದ ಶಿಫಾರಸಿನ ಮೇರೆಗೆ, ಗೌರವಾನ್ವಿತ ರಾಷ್ಟ್ರಪತಿ […]

ಕನ್ನಡ ದುನಿಯಾ 9 Jan 2026 8:53 pm

ಹಿಮಾಚಲ ಪ್ರದೇಶದಲ್ಲಿ ಬಸ್ ದುರಂತದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ: ಪ್ರಧಾನಿ ಮೋದಿ ಪರಿಹಾರ ಘೋಷಣೆ

ನವದೆಹಲಿ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಬಳಿ ಗುಡ್ಡಗಾಡು ರಸ್ತೆಯಿಂದ ಖಾಸಗಿ ಬಸ್ ಉರುಳಿ ಬಿದ್ದು ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕುಪ್ವಿಯಿಂದ ಶಿಮ್ಲಾಕ್ಕೆ ಬಸ್ ತೆರಳುತ್ತಿತ್ತು. ಹರಿಪುರ್ಧರ್ ಪ್ರದೇಶದ ಕಿರಿದಾದ ರಸ್ತೆಯಲ್ಲಿ ಸುಮಾರು 30 ರಿಂದ 35 ಪ್ರಯಾಣಿಕರನ್ನು ಬಸ್ ಹೊತ್ತೊಯ್ಯುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಬೆಟ್ಟದಿಂದ ಇಳಿಜಾರಿಗೆ ಉರುಳಿದೆ. ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ […]

ಕನ್ನಡ ದುನಿಯಾ 9 Jan 2026 8:21 pm

ಉದ್ಯೋಗಕ್ಕಾಗಿ ಭೂಮಿ ಹಗರಣ| ಲಾಲುಪ್ರಸಾದ್ ಕುಟುಂಬದ ವಿರುದ್ಧ ಭ್ರಷ್ಟಾಚಾರ, ವಂಚನೆ ಆರೋಪ ದಾಖಲಿಸಿದ ದಿಲ್ಲಿ ಕೋರ್ಟ್

File Photo: PTI ಹೊಸದಿಲ್ಲಿ,ಜ.9: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ ನ್ಯಾಯಾಲಯವು ಆರ್‌ಜೆಡಿ ವರಿಷ್ಠ ಹಾಗೂ ಮಾಜಿ ರೈಲ್ವೆ ಸಚಿವ ಲಾಲುಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಮಕ್ಕಳಾದ ತೇಜಸ್ವಿ ಯಾದವ್, ತೇಜ ಪ್ರತಾಪ್ ಯಾದವ್ ಹಾಗೂ ಮಿಸಾ ಭಾರತಿ ವಿರುದ್ಧ ಶುಕ್ರವಾರ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಕೊಂಡಿದೆ. ಈ ಪ್ರಕರಣದಲ್ಲಿ ಆರೋಪಿಗಳು ಭ್ರಷ್ಟಾಚಾರ, ವಂಚನೆ ಹಾಗೂ ಕ್ರಿಮಿನಲ್ ಸಂಚಿನಲ್ಲಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆಯೆಂದು ನ್ಯಾಯಾಲಯ ಪ್ರತಿಪಾದಿಸಿದೆ. ಲಾಲು ಪ್ರಸಾದ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳಡಿ ದೋಷಾರೋಪವನ್ನು ಹೊರಿಸಲಾಗಿದ್ದರೆ, ಅವರ ಕುಟುಂಬ ಸದಸ್ಯರು ಭಾರತೀಯ ದಂಡ ಸಂಹಿತೆಯಡಿ ವಂಚನೆ ಹಾಗೂ ಸಂಚಿನ ಆರೋಪಗಳನ್ನು ಎದುರಿಸಲಿದ್ದಾರೆ. ಲಾಲು ಪ್ರಸಾದ್ ಅವರು 2004 ಹಾಗೂ 2009ರ ನಡುವೆ ರೈಲ್ವೆ ಸಚಿವರಾಗಿದ್ದಾಗ, ಅವರ ಕುಟುಂಬ ಸದಸ್ಯರಿಗೆ ಅಥವಾ ಅವರು ನಂಟು ಹೊಂದಿರುವ ಸಂಸ್ಥೆಗಳಿಗೆ ಅತ್ಯಂತ ನಗಣ್ಯ ದರದಲ್ಲಿ ಜಮೀನುಗಳನ್ನು ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿನ ಗ್ರೂಪ್ ಡಿ ಹುದ್ದೆಗಳನ್ನು ನೇಮಕಾತಿ ಮಾಡಲಾಗಿತ್ತೆಂಬ ಆರೋಪಿಸಲಾಗಿದೆ. ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಅನುಸರಿಸಲಾಗಿಲ್ಲ ಹಾಗೂ ಉದ್ಯೋಗಕ್ಕಾಗಿ ಜಮೀನುಗಳನ್ನು ವರ್ಗಾಯಿಸಲಾಗಿತ್ತೆಂದು ತನಿಖಾಧಿಕಾರಿಗಳು ಆರೋಪಿಸಿದ್ದರು. ಪ್ರಕರಣದ ವಿಚಾರಣೆಯನ್ನು ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ನ್ಯಾಯಾಲಯ ತಳ್ಳಿಹಾಕಿದ್ದು, ಈ ಹಂತದಲ್ಲಿ ಇದು ಅನಪೇಕ್ಷಣೀಯವೆಂದು ತಿಳಿಸಿತ್ತು. ಪ್ರಕರಣದಲ್ಲಿ ಹೆಸರಿಸಲ್ಪಟ್ಟ 98 ಮಂದಿ ಜೀವಂತವಿರುವ ಆರೋಪಿಗಳ ಪೈಕಿ 46 ಮಂದಿಯ ವಿರುದ್ಧ ದೋಷಾರೋಪ ದಾಖಲಿಸಲಾಗಿದೆ. ತಮ್ಮ ಮೇಲಿನ ಆರೋಪವನ್ನು ಆರೋಪಿಗಳು ತಳ್ಳಿಹಾಕಿದ್ದಾರೆ ಹಾಗೂ ಈ ಪ್ರಕರಣವು ರಾಜಕೀಯ ಪ್ರೇರಿತವೆಂದು ಹೇಳಿದ್ದಾರೆ. ಈ ಮಧ್ಯೆ ಜಾರಿ ನಿರ್ದೇಶನಾಲಯವು ಪ್ರಕರಣದ ಜೊತೆ ನಂಟು ಹೊಂದಿರುವ ಕಪ್ಪುಹಣ ಬಿಳುಪು ಪ್ರಕರಣದ ತನಿಖೆಯನ್ನು ಕೂಡಾ ಮುಂದುವರಿಸಿದೆ ಹಾಗೂ ಅಪರಾಧದಿಂದ ಬಂದ ಆದಾಯವೆಂದು ಆರೋಪಿಸಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿದೆ.

ವಾರ್ತಾ ಭಾರತಿ 9 Jan 2026 8:07 pm

ಎಲ್ಲಾ ಜಿಲ್ಲೆಗಳಲ್ಲೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ಧರಾಮಯ್ಯ

ವಿಜಯಪುರ: ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆಗಳು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು. ವಿಜಯಪುರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ […]

ಕನ್ನಡ ದುನಿಯಾ 9 Jan 2026 8:06 pm

ಇಂಗ್ಲಿಷ್, ಗಣಿತ, ವಿಜ್ಞಾನ ಸೇರಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಸ್ಕೂಲ್ ಶಾಲೆಯ ಶಿಕ್ಷಕರ ಹುದ್ದೆಗಳಿಗೆ ಉತ್ಸಾಹಿ, ಸೃಜನಶೀಲ ಮತ್ತು ಅನುಭವಿ ಅಭ್ಯರ್ಥಿಗಳಿಂದ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಇಂಗ್ಲಿಷ್ 02(ಪಿಜಿಟಿ, ಟಿಜಿಟಿ ), ಶಿಕ್ಷಕರ ಹುದ್ದೆ, ಎಂ.ಎ(ಇಂಗ್ಲಿಷ್) ಜೊತೆಗೆ ಬಿ.ಎಡ್, ವಿದ್ಯಾರ್ಹತೆ, ಗಣಿತ ಶಿಕ್ಷಕರ 01(ಪಿಜಿಟಿ, ಟಿಜಿಟಿ ) ಹುದ್ದೆ, ಎಂ.ಎಸ್ಸಿ(ಪಿಸಿಎಂ) ಮತ್ತು ಬಿ.ಎಡ್ ವಿದ್ಯಾರ್ಹತೆ, ವಿಜ್ಞಾನ ಶಿಕ್ಷಕರ 01(ಪಿಜಿಟಿ, ಟಿಜಿಟಿ) ಹುದ್ದೆ, ಎಂ.ಎಸ್ಸಿ(ಸಿಬಿಝಡ್ ) ಮತ್ತು ಬಿ.ಎಡ್ ವಿದ್ಯಾರ್ಹತೆ, 2-5 ವರ್ಷಗಳ ಅನುಭವ, ಕಂಪ್ಯೂಟರ್ ಜ್ಞಾನ ಮಕ್ಕಳ ಸ್ನೇಹಿ ವಿಧಾನವನ್ನು ಹೊಂದಿರಬೇಕು. […]

ಕನ್ನಡ ದುನಿಯಾ 9 Jan 2026 7:12 pm

19 ಲಕ್ಷಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್, ಮುಟ್ಟಿನ ಕಪ್ ವಿತರಣೆ

ಬೆಂಗಳೂರು: ‘ಶುಚಿತ್ವದ ನಡಿಗೆ – ಹೆಣ್ಣುಮಕ್ಕಳ ಆತ್ಮವಿಶ್ವಾಸದ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಸರ್ಕಾರವು ಹೆಣ್ಣುಮಕ್ಕಳ ಸಬಲೀಕರಣಕ್ಕೆ ಬದ್ಧವಾಗಿದ್ದು, ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ ಅನುದಾನ ಬಿಡುಗಡೆ ಮಾಡುವ ಮೂಲಕ ‘ಶುಚಿ’ ಯೋಜನೆಗೆ ಮರುಚಾಲನೆ ನೀಡಿದೆ. ನಾಡಿನ ಸುಮಾರು 19 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಯೋಜನೆಯ ಫಲಾನುಭವಿಗಳು. ‘ಶುಚಿ’ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದ 2,35,74,084 ಸ್ಯಾನಿಟರಿ ಪ್ಯಾಡ್ ಯುನಿಟ್‌ಗಳ ವಿತರಣೆ ಮಾಡಲಾಗುತ್ತಿದೆ. 10,38,912 ಸುಸ್ಥಿರ ‘ಮುಟ್ಟಿನ ಕಪ್'(Menstrual […]

ಕನ್ನಡ ದುನಿಯಾ 9 Jan 2026 7:00 pm

BREAKING: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಬಿಗ್ ರಿಲೀಫ್: ಮಹಿಳಾ ಸಂಘಗಳಿಂದ ಅಧಿಕ ಬಡ್ಡಿ ವಸೂಲಿ ದೂರು ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಬಿಗ್ ರಿಲೀಫ್ ಸಿಕ್ಕಿದೆ. ಮಹಿಳಾ ಸಂಘಗಳಿಂದ ಅಧಿಕ ಬಡ್ಡಿ ವಸೂಲಿ ಆರೋಪದ ಮೇಲೆ ಡಿ. ವೀರೇಂದ್ರ ಹೆಗಡೆ ಮತ್ತು ಕುಟುಂಬದವರ ವಿರುದ್ಧದ ಪ್ರಕರಣ ರದ್ದು ಮಾಡಲಾಗಿದೆ. ರಂಜನ್ ರಾವ್ ಎರ್ಡೂಡು ಎಂಬುವವರ ಖಾಸಗಿ ದೂರನ್ನು ರದ್ದುಪಡಿಸಲಾಗಿದೆ. ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವೀರೇಂದ್ರ ಹೆಗಡೆ ಅವರ ಪರ ಹಿರಿಯ ವಕೀಲ ಬಿ.ಪಿ. ಹೆಗಡೆ ವಾದ ಮಂಡಿಸಿದ್ದರು. ಬ್ಯಾಂಕ್ ಗಳಿಂದ […]

ಕನ್ನಡ ದುನಿಯಾ 9 Jan 2026 6:52 pm

BIG NEWS: ಐಪಿಎಸ್ ಅಧಿಕಾರಿ ಹೆಸರಲ್ಲಿ ನಕಲಿ ವಾಟ್ಸಪ್ ಮೆಸೇಜ್: ವಂಚಕರಿಂದ ಹಣಕ್ಕೆ ಬೇಡಿಕೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳ್ಳ ಖದೀಮರಿಗೆ ಪೊಲೀಸರ ಭಯವೂ ಇಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲಿಯೇ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್ ತೆರೆದು ಹಣಕ್ಕೆ ಬೇಡಿಕೆ ಇಡುವ, ಬೆದರಿಕೆ ಹಾಕುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್.ಎಂ ಹೆಸರಲ್ಲಿ ನಕಲಿ ವಾಟ್ಸಪ್ ಅಕೌಂಟ್ ತೆರೆದು, ವಂಚಕರು ಮೆಸೇಜ್ ಕಳುಹಿಸುವ ಮೂಲಕ ಆನ್ ಲೈನ್ ಮೂಲಕ ವಂಚನೆಗೆ ಯತ್ನಿಸಿರುವ ಘಟನೆ ನಡೆದಿದೆ. ಐಪಿಎಸ್ ಅಧಿಕಾರಿ ಅಕ್ಷಯ್ […]

ಕನ್ನಡ ದುನಿಯಾ 9 Jan 2026 6:34 pm

BREAKING: ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತ: ಬೆಟ್ಟದಿಂದ ಬಸ್ ಉರುಳಿ 8 ಜನ ಸಾವು

ನವದೆಹಲಿ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಬಳಿ ಖಾಸಗಿ ಬಸ್ ಗುಡ್ಡಗಾಡು ರಸ್ತೆಯಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಪ್ವಿಯಿಂದ ಶಿಮ್ಲಾಕ್ಕೆ ಬಸ್ ಪ್ರಯಾಣಿಸುತ್ತಿತ್ತು. ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಪೊಲೀಸರ ಪ್ರಕಾರ, ದೂರದ ಹರಿಪುರ್ಧರ್ ಪ್ರದೇಶದ ಕಿರಿದಾದ ರಸ್ತೆಯಲ್ಲಿ ಅಪಘಾತ ಸಂಭವಿಸಿದಾಗ ಬಸ್ ಸುಮಾರು 30 ರಿಂದ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಬೆಟ್ಟದ ಇಳಿಜಾರಿಗೆ ಉರುಳುವ ಮೊದಲು ವಾಹನ ನಿಯಂತ್ರಣ […]

ಕನ್ನಡ ದುನಿಯಾ 9 Jan 2026 6:33 pm

BREAKING: ಶಬರಿಮಲೆ ಚಿನ್ನ ಕಳ್ಳತನ ಕೇಸ್: ತಂತ್ರಿ ಕಂದರರು ರಾಜೀವರು ಅರೆಸ್ಟ್

ಶಬರಿಮಲೆ: ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ದೇವಾಲಯದ ಮಾಜಿ ಪ್ರಧಾನ ಅರ್ಚಕ(ತಂತ್ರಿ) ಕಂದರರು ರಾಜೀವರು ಅವರನ್ನು ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಅವರೊಂದಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸಾಕ್ಷಿಗಳ ಸಾಕ್ಷ್ಯಗಳನ್ನು ಅನುಸರಿಸಿ ಬಂಧಿಸಿದೆ. ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ಸೇರಿದಂತೆ ಸಾಕ್ಷಿಗಳು, ಬೆಂಗಳೂರು ಮೂಲದ ಪ್ರಾಯೋಜಕ ಪೊಟ್ಟಿ ಅವರೊಂದಿಗೆ ರಾಜೀವರು ಅವರ ನಿಕಟ ಸಂಬಂಧವನ್ನು ಬಹಿರಂಗಪಡಿಸಿದ್ದಾರೆ, ತಂತ್ರಿ ಅನಧಿಕೃತ ಚಿನ್ನದ ಲೇಪನ ಕೆಲಸಗಳಿಗೆ ಅವರ […]

ಕನ್ನಡ ದುನಿಯಾ 9 Jan 2026 6:22 pm

BIG NEWS: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಜೀವ ಬೆದರಿಕೆ: Y ಭದ್ರತೆ ನೀಡುವಂತೆ ಒತ್ತಾಯ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೆ ಜೀವ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಈಶ್ವರಪ್ಪ ದೂರು ದಾಖಲಿಸಿದ್ದಾರೆ. ಕೆ.ಎಸ್.ಈಶ್ವರಪ್ಪ ಅವರಿಗೆ ಜನವರಿ 7ರಂದು ವಿದೇಶದಿಂದ ಕರೆಯೊಂದು ಬಂದಿದ್ದು, ಜೀವ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಇಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಈ ಹಿಂದೆ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಅವರಿಗೆ ಪೊಲೀಸ್ ಭದ್ರತೆ ಹಾಗೂ ಎಸ್ಕಾರ್ಟ್ ವ್ಯವಸ್ಥೆ ಒದಗಿಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರ […]

ಕನ್ನಡ ದುನಿಯಾ 9 Jan 2026 6:15 pm

ಕರ್ನಾಟಕ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ: ಶನಿವಾರ ಡಿಕೆಶಿ ಮಹತ್ವದ ಸಭೆ

ಕರ್ನಾಟಕದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶನಿವಾರ ಮಹತ್ವದ ಸಭೆ ನಡೆಯಲಿದೆ. 3 ಜಿಲ್ಲೆಗಳ ಎಲ್ಲಾ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು, ಉದ್ದಿಮೆದಾರರು ಭಾಗವಹಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಈ ಕುರಿತು ಮಾಹಿತಿ ನೀಡಿದ್ದಾರೆ. ರಾಜ್ಯದ ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜನವರಿ 10ರಂದು ಮಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ. […]

ಕನ್ನಡ ದುನಿಯಾ 9 Jan 2026 6:03 pm

ಸರ್ಕಾರಿ ನೌಕರರಿಗೆ 2026ರ ಗಳಿಕೆ ರಜೆ ನಗದೀಕರಣ ಕುರಿತು ಬಿಗ್‌ ಅಪ್‌ಡೇಟ್

ಕರ್ನಾಟಕದ ಸರ್ಕಾರಿ ನೌಕರರ ಆದ್ಯ ಗಮನಕ್ಕೆ ಪ್ರಮುಖ ಮಾಹಿತಿ ಒಂದಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಗಳಿಕೆ ರಜೆ ನಗದೀಕರಣಕ್ಕೆ ಸಂಬಂಧಿಸಿದ ವಿಚಾರ ಇದಾಗಿದೆ. 2026ನೇ ಸಾಲಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಸೌಲಭ್ಯ ಪಡೆಯುವ ಸಂಬಂಧ ಸರ್ಕಾರಿ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗಿತ್ತು ಎಂದು ಹೇಳಿದ್ದಾರೆ. ಸದರಿ ಕಡತವು ಚಾಲನೆಗೊಂಡು ಮಾನ್ಯ ಮುಖ್ಯಮಂತ್ರಿಗಳ […]

ಕನ್ನಡ ದುನಿಯಾ 9 Jan 2026 5:48 pm

BRERAKING: ದಳಪತಿ ವಿಜಯ್ ಗೆ ಮತ್ತೆ ಶಾಕ್: ‘ಜನ ನಾಯಗನ್’ಬಿಡುಗಡೆ ತನ್ನದೇ ಆದೇಶಕ್ಕೆ ತಡೆ ನೀಡಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ, ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ತಡೆ ನೀಡಿದೆ. ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಅವಕಶ ನೀಡಬೇಕು. ಸಿನಿಮಾಗೆ U/A ಪ್ರಮಾಣಪತ್ರ ನೀಡಬೇಕು ಎಂದು ಸಿಬಿಎಫ್ ಸಿಗೆ ಸೂಚನೆ ನೀಡಿ ಬೆಳಿಗ್ಗೆಯಷ್ಟೇ ಆದೇಶ ಹೊರಡಿಸಿದ್ದ ಮದ್ರಾಸ್ ಹೈಕೋರ್ಟ್, ಸಂಜೆ ವೇಳೆಗೆ ತನ್ನದೇ ಆದೇಶಕ್ಕೆ ತಡೆ ನೀಡಿದೆ. ಬೆಳಿಗ್ಗೆ ನೀಡಿದ್ದ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಮದ್ರಾಸ್ ಹೈಕೋರ್ಟ್ ಮರು ಆದೇಶ […]

ಕನ್ನಡ ದುನಿಯಾ 9 Jan 2026 5:32 pm

ರೈತರೇ ಮೆಕ್ಕೆಜೋಳ ಮಾರಾಟ ಮಾಡುವ ಮುನ್ನ ತಿಳಿಯಿರಿ

ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಮೆಕ್ಕೆಜೋಳ ಉತ್ಪನ್ನ ಖರೀದಿ ಕುರಿತಂತೆ ವಿವಿಧ ಎಪಿಎಂಸಿ ಮಾರುಕಟ್ಟೆಗಳಲ್ಲಿ ಆಗುವ ವಹಿವಾಟಿನ ಧಾರಣೆಯ ಆಧಾರದ ಮೇಲೆ ರೈತರಿಗೆ ಬೆಲೆ ವ್ಯೆತ್ಯಾಸದ ಮೊತ್ತವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತದೆ. ಸರ್ಕಾರದ ಆದೇಶ ದಿನಾಂಕ 04/01/2026ರಂತೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಮೆಕ್ಕೆಜೋಳವನ್ನು ವಿವಿಧ ಎಪಿಎಂಸಿ ಮಾರುಕಟ್ಟೆಗಳಲ್ಲಿ ಆಗುವ ವಹಿವಾಟಿನ ಧಾರಣೆಯ ಆಧಾರದ ಮೇಲೆ ರೈತರಿಗೆ ಬೆಲೆ ವ್ಯೆತ್ಯಾಸದ ಮೊತ್ತವನ್ನು ಡಿಬಿಟಿ ಮುಖಾಂತರ ಬ್ಯಾಂಕ್ ಖಾತೆಗೆ […]

ಕನ್ನಡ ದುನಿಯಾ 9 Jan 2026 5:31 pm

ಆಸ್ತಿಗಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ: ಕೆಸರು ಗದ್ದೆಯಲ್ಲಿ ಒಬ್ಬರನ್ನೊಬ್ಬರು ತುಳಿದು ಹೊಡೆದಾಟ!

ಹಾವೇರಿ: ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಜಮೀನಿನಲ್ಲಿಯೇ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದೆ. ಆಸ್ತಿ ವಿಚಾರವಾಗಿ ಕುಟುಂಬ ಸದಸ್ಯರು ಕೆಸರು ಗದ್ದೆಯಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಜಮೀನು ಕೆಲಸಕ್ಕೆಂದು ಗದ್ದಗೆ ಹೋಗಿದ್ದ ವೇಳೆ ಎರಡು ಕುಟುಂಬಗಳ ಸದಸ್ಯರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ತಾರಕಕ್ಕೇರಿದೆ. ಎರಡು ಕುಟುಬದವರು ಕೆಸರು ಗದ್ದೆಯಲ್ಲಿಯೇ ಬಡಿದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ ಗದ್ದೆಯಲ್ಲಿ ಕೆಡವಿ […]

ಕನ್ನಡ ದುನಿಯಾ 9 Jan 2026 5:11 pm

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಬುಕ್ 6 ಬಿಡುಗಡೆ: ವಿಶೇಷತೆಗಳು

ಇಂಟೆಲ್ 18ಎ ತಂತ್ರಜ್ಞಾನದ ಆಧಾರದ ಮೇಲೆ ನಿರ್ಮಿಸಲಾದ ಇಂಟೆಲ್ ಕೋರ್ ಅಲ್ಟ್ರಾ ಸೀರೀಸ್ 3 ಪ್ರೊಸೆಸರ್‌, ದೀರ್ಘಕಾಲ ಬಾಳಿಕೆ ಬರುವ ಬ್ಯಾಟರಿ ಮತ್ತು ಅತ್ಯಂತ ತೆಳುವಾದ ವಿನ್ಯಾಸವನ್ನು ಹೊಂದಿರುವ ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ ಬುಕ್ 6 ಸರಣಿಯು, ಪರ್ಸನಲ್ ಕಂಪ್ಯೂಟರ್‌ಗಳು ಹೆಚ್ಚು ನಿರೀಕ್ಷೆ ಹೊಂದುವಂತೆ ಮಾಡಿದೆ. ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಸಿಇಎಸ್ 2026 ಮೇಳದಲ್ಲಿ ಗ್ಯಾಲಕ್ಸಿ ಬುಕ್ 6 ಅಲ್ಟ್ರಾ, ಗ್ಯಾಲಕ್ಸಿ ಬುಕ್ 6 ಪ್ರೊ ಮತ್ತು ಗ್ಯಾಲಕ್ಸಿ ಬುಕ್ 6 ಅನ್ನು ಪರಿಚಯಿಸಿದೆ. ಇದುವರೆಗಿನ ಅತ್ಯಂತ ಸುಧಾರಿತ ಗ್ಯಾಲಕ್ಸಿ […]

ಕನ್ನಡ ದುನಿಯಾ 9 Jan 2026 5:06 pm

BREAKING: ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ: 25 ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 25 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ 42ನೇ ಎಸಿಜೆ ಎಂ ಕೋರ್ಟ್ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿಯ ಗನ್ ಮ್ಯಾನ್ ಗುರುಚರಣ ಸಿಂಗ್ ಸೇರಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟು 26 ಜನರನ್ನು ಬಂಧಿಸಲಾಗಿತ್ತು. ಇದೀಗ ಆರೋಪಿ ಗುರುಚರಣ ಸಿಂಗ್ […]

ಕನ್ನಡ ದುನಿಯಾ 9 Jan 2026 4:44 pm

ಮಹಿಳೆಯರಿಗೆ ಮೆಟ್ರೋ, ಬಸ್ ಪ್ರಯಾಣದಲ್ಲಿ ರಿಯಾಯಿತಿ ಘೋಷಣೆ ಮಾಡಿದ ಬಿಜೆಪಿ!

ಕರ್ನಾಟಕದಲ್ಲಿ ಕಾಂಗ್ರೆಸ್ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ನೀಡುತ್ತದೆ. ಈ ಯೋಜನೆಯನ್ನು ಸದಾ ಟೀಕಿಸುವ ಪ್ರತಿಪಕ್ಷ ಬಿಜೆಪಿ ಇದನ್ನು ನಕಲು ಮಾಡಲು ಹೊರಟಿದೆ. ಹೌದು, ಮಹಾರಾಷ್ಟ್ರ ರಾಜ್ಯದ ಪುಣೆ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದೆ. 41 ವಾರ್ಡ್‌ಗಳ, 165 ಕಾರ್ಪೊರೇಟರ್‌ಗಳ ಆಯ್ಕೆಗೆ ಜನವರಿ 15ರಂದು ಚುನಾವಣೆ ನಡೆಯಲಿದೆ. ಜನವರಿ 16ರಂದು ಫಲಿತಾಂಶ ಪ್ರಕಟವಾಗಲಿದೆ. ಪುಣೆ ಸಂಸದ ಮುರಳೀಧರ್ ಮೊಹಲ್, ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್ ಪಾಟೀಲ್ ಹಾಗೂ […]

ಕನ್ನಡ ದುನಿಯಾ 9 Jan 2026 4:43 pm

BREAKING: ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಬೈಕ್ ನಿಂದ ಆಯತಪ್ಪಿ ಕೆಳಗೆ ಬಿದ್ದವನ ಮೇಲೆ ಬಿಎಂಟಿಸಿ ಬಸ್ ಹರಿದು ಹೋದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸರಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ತ್ರಿಬಲ್ ರೈಡಿಂಗ್ ನಲ್ಲಿ ಬಕ್ ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಆಯ ತಪ್ಪಿ ಕೆಳಗೆ ಬಿದ್ದಿದ್ದಾನೆ. ಆತನ ತಲೆಯ ಮೇಲೆಯೇ ಬಸ್ ನ ಹಿಂಬದಿ ಚಕ್ರ ಹರಿದಿದೆ. ಸ್ಥಳದಲ್ಲೇ ಯುವಕ […]

ಕನ್ನಡ ದುನಿಯಾ 9 Jan 2026 4:36 pm

BREAKING: ಡೆಂಟಲ್ ಕಾಲೇಜು ಆಡಳಿತ ಮಂಡಳಿ ಕಿರುಕುಳ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ: ವಿದ್ಯಾರ್ಥಿಗಳಿಂದ ತೀವ್ರಗೊಂಡ ಪ್ರತಿಭಟನೆ

ಬೆಂಗಳೂರು: ಡೆಂಟಲ್ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ. 23 ವರ್ಷದ ಯಶಸ್ವಿನಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಸ್ನೇಹಿತರು ನ್ಯಾಯಕ್ಕಾಗಿ ಆಗ್ರಹಿಸಿ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಬೊಮ್ಮನಹಳ್ಳಿತ ಪ್ರತಿಷ್ಠಿತ ಖಾಸಗಿ ಡೇಂಟಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ಯಶಸ್ವಿನಿ ವ್ಯಾಸಂಗ ಮಾಡುತ್ತಿದ್ದಳು. ಸೆಮಿನಾರ್ ಗೆ […]

ಕನ್ನಡ ದುನಿಯಾ 9 Jan 2026 4:04 pm

ದೇವಾಲಯದ ಪ್ರವೇಶ ಶುಲ್ಕ ಏಕಾಏಕಿ ಭಾರೀ  ಏರಿಕೆ: ಸರ್ಕಾರದಿಂದ ಲೂಟಿ

ನಮ್ಮ ಮೆಟ್ರೋ, ಸರ್ಕಾರಿ ಬಸ್, ವಿದ್ಯುತ್, ಹಾಲು ಸೇರಿದಂತೆ ಅಗತ್ಯ ವಸ್ತುಗಳ ದರಗಳನ್ನು ಏರಿಕೆ ಮಾಡಿ ಈಗಾಗಲೇ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಈಗ ದೇವಾಲಯಗಳ ಪ್ರವೇಶ ಶುಲ್ಕವನ್ನು ದುಪ್ಪಟ್ಟು ಮಾಡಿದ್ದು, ಇದು ಸರ್ಕಾರದ ಲೂಟಿ ಎಂದು ಪ್ರತಿಪಕ್ಷ ಬಿಜೆಪಿ ದೂರಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ದೇವಸ್ಥಾನ ಪ್ರವೇಶ ಟಿಕೆಟ್ ನಲ್ಲಿಯೂ ಲೂಟಿ ಹೊಡೆಯಲು ಹೊರಟಿದೆ ಈ ಕಾಂಗ್ರೆಸ್ ಸರ್ಕಾರ’ ಎಂದು ಟೀಕಿಸಿದ್ದಾರೆ. ‘ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಾಲಯದಲ್ಲಿ […]

ಕನ್ನಡ ದುನಿಯಾ 9 Jan 2026 4:01 pm

ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ಮೈಸೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

ಬೆಂಗಳೂರು: ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಊರಿಗೆ ಹೋಗುವವರಿಗೆ ನೈಋತ್ಯ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಮತ್ತು ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ಮೂರು ಟ್ರಿಪ್‌ಗಳ ಸಂಚಾರ ನಡೆಸಲಿವೆ. ಜನವರಿ 13ರಿಂದ ರೈಲು ಸಂಚಾರ ಆರಂಭವಾಗಲಿದೆ. ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಮಯ ಹಾಗೂ ನಿಲುಗಡೆ ಮಾಹಿತಿ ಇಲ್ಲಿದೆ. ಮೈಸೂರು–ಬೆಳಗಾವಿ ವಿಶೇಷ ರೈಲು (ಸಂಖ್ಯೆ 06285): ಜನವರಿ 13, […]

ಕನ್ನಡ ದುನಿಯಾ 9 Jan 2026 3:44 pm

BREAKING : ಬೆಂಗಳೂರಿನ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ |Bomb Threat

ಬೆಂಗಳೂರು : ರಾಜ್ಯದಲ್ಲಿ ಬಾಂಬ್ ಬೆದರಿಕೆ (Bomb Threat) ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. ಶಾಲೆ, ಕಾಲೇಜು, ಸರ್ಕಾರಿ ಕಚೇರಿಗೆ ಬಾಂಬ್ ಬೆದರಿಕೆಯೊಡ್ಡುವ ಪ್ರಕರಣ ಹೆಚ್ಚುತ್ತಿದೆ. ಇದೀಗ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಬ್ಬಾಳದ ಕೇಂದ್ರೀಯ ವಿದ್ಯಾಲಯದ ಇಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಇಮೇಲ್ ನೋಡಿದ ಕೂಡಲೇ ಪ್ರಾಂಶುಪಾಲರು ಸದಾಶಿವನಗರ ಠಾಣೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಸಮೇತ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ […]

ಕನ್ನಡ ದುನಿಯಾ 9 Jan 2026 3:37 pm

ALERT : ಗ್ರಾಹಕರೇ ಎಚ್ಚರ : ಅಪ್ಪಿ ತಪ್ಪಿಯೂ ಈ 3 ವಿಚಾರಕ್ಕೆ ‘ಪರ್ಸನಲ್ ಲೋನ್’ತೆಗೆದುಕೊಳ್ಬೇಡಿ

ಉತ್ತಮ ಸಂಬಳ, ಉತ್ತಮ ಕ್ರೆಡಿಟ್ ಸ್ಕೋರ್ ಮತ್ತು ಕೆಲವು ಮೂಲಭೂತ ದಾಖಲೆಗಳೊಂದಿಗೆ ಬ್ಯಾಂಕುಗಳು ನಿಮಿಷಗಳಲ್ಲಿ ಸಾಲಗಳನ್ನು ಅನುಮೋದಿಸುತ್ತವೆ. ಯಾವುದೇ ಮೇಲಾಧಾರ ಅಥವಾ ಭದ್ರತೆ ಅಗತ್ಯವಿಲ್ಲ. ಅದಕ್ಕಾಗಿಯೇ ಇದು ಅಸುರಕ್ಷಿತ ಸಾಲಗಳ ವರ್ಗಕ್ಕೆ ಸೇರುತ್ತದೆ. ಆದರೆ ಈ ಅನುಕೂಲವು ಹೆಚ್ಚಾಗಿ ಜನರು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ನಿಮ್ಮ ವೈಯಕ್ತಿಕ ಸಾಲದ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು, ಅವುಗಳು ವೈಯಕ್ತಿಕ ಎಂದು ಭಾವಿಸುವುದು, ನಿಮ್ಮ ಆರ್ಥಿಕ ಪರಿಸ್ಥಿತಿಯ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತದೆ. ವೈಯಕ್ತಿಕ ಸಾಲವನ್ನು ತೆಗೆದುಕೊಳ್ಳುವಾಗ ನೀವು ಖಂಡಿತವಾಗಿಯೂ ತಪ್ಪಿಸಬೇಕಾದ […]

ಕನ್ನಡ ದುನಿಯಾ 9 Jan 2026 3:28 pm

ಭಾರತದಲ್ಲಿ ಉದ್ಯೋಗದ ಹುಡುಕಾಟ: ಲಿಂಕ್ಡ್‌ ಇನ್ ಹೇಳುವುದೇನು?

ಭಾರತದಲ್ಲಿನ ಉದ್ಯೋಗದ ಕುರಿತು ಲಿಂಕ್ಡ್‌ ಇನ್ ವರದಿಯೊಂದನ್ನು ಬಿಡುಗಡೆ ಮಾಡಿದೆ. ಶೇ 84 ರಷ್ಟು ವೃತ್ತಿಪರರು ತಾವು ಹೊಸ ಉದ್ಯೋಗ ಹುಡುಕಲು ಸಿದ್ಧರಿಲ್ಲ ಎಂದು ಭಾವಿಸುತ್ತಾರೆ. ಆದರೂ ಶೇ 72ರಷ್ಟು ಮಂದಿ 2026ರಲ್ಲಿ ಹೊಸ ಹುದ್ದೆಗಾಗಿ ಹುಡುಕಾಟ ನಡೆಸಿರುವುದಾಗಿ ಹೇಳುತ್ತಾರೆ ಎಂದು ತಿಳಿಸಿದೆ. ಲಿಂಕ್ಡ್ ಇನ್ ತನ್ನ ನೂತನ ವರದಿಯಲ್ಲಿ ಈ ಬದಲಾವಣೆಯು ನೇಮಕಾತಿ ಪ್ರಕ್ರಿಯೆಯಲ್ಲಿ ಎಐ ಬಳಕೆ ಹೆಚ್ಚಳ, ಇಂದಿನ ಉದ್ಯೋಗಗಳಿಗೆ ಬೇಕಾದ ಕೌಶಲ್ಯಗಳಲ್ಲಿ ಆಗಿರುವ ಬದಲಾವಣೆ ಮತ್ತು ಹೆಚ್ಚು ಸ್ಪರ್ಧಾತ್ಮಕವಾದ, ಬಹಳ ಎಚ್ಚರಿಕೆಯಿಂದ ಆರಿಸಿಕೊಳ್ಳುವ […]

ಕನ್ನಡ ದುನಿಯಾ 9 Jan 2026 3:23 pm

ಮಧ್ಯರಾತ್ರಿ ಬ್ಲಿಂಕಿಟ್’ನಲ್ಲಿ ಇಲಿ ಪಾಶಾಣ ಆರ್ಡರ್ ಮಾಡಿದ ಮಹಿಳೆ : ‘ಡೆಲಿವರಿ ಬಾಯ್’ ಮಾಡಿದ್ದೇನು..?

ಇತ್ತೀಚಿನ ದಿನಗಳಲ್ಲಿ ಬ್ಲಿಂಕಿಟ್ ಮತ್ತು ಜೊಮಾಟೊದಂತಹ ಡೆಲಿವರಿ ಬಾಯ್ ಗಳ ಬಗ್ಗೆ ಹಲವು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇತ್ತೀಚೆಗೆ ತಮಿಳುನಾಡಿನಲ್ಲಿ ಬ್ಲಿಂಕಿಟ್ ಡೆಲಿವರಿ ಬಾಯ್ ಒಬ್ಬ ಆರ್ಡರ್ ನಿರಾಕರಿಸಿ ಹೀರೋ ಆಗಿದ್ದಾನೆ. ಏನಿದು ಘಟನೆ ತಮಿಳುನಾಡಿನ ಬ್ಲಿಂಕಿಟ್ ಡೆಲಿವರ್ ಬಾಯ್ ಗೆ ಮಧ್ಯರಾತ್ರಿ ಆರ್ಡರ್ ಒಂದು ಬಂದಿತು. ಅವನಿಗೆ ಮೂರು ಪ್ಯಾಕೆಟ್ ಇಲಿ ವಿಷದ ಆರ್ಡರ್ ಬಂದಿತು. ತನ್ನ ಕೆಲಸ ಅಂದುಕೊಂಡು ಸವಾರ ಅವುಗಳನ್ನು ತೆಗೆದುಕೊಂಡು ವಿಳಾಸಕ್ಕೆ ಹೋದನು. ಅವನು ಕಾಲಿಂಗ್ ಬೆಲ್ ಒತ್ತಿದನು. ಆದರೆ ಅಲ್ಲಿ […]

ಕನ್ನಡ ದುನಿಯಾ 9 Jan 2026 3:20 pm

BREAKING: ಭೂ ಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿಗೆ ಬಿಗ್ ಶಾಕ್: ಕಾರು ಜಪ್ತಿ ಮಾಡಲು ಕೋರ್ಟ್ ಆದೇಶ

ಹಾಸನ: ಭೂ ಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಡಿಸಿ ಕಾರು ಜಪ್ತಿ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ಅಧಿಕಾರಿಗಳು ಹಾಗೂ ವಕೀಲರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಕಾರು ಜಪ್ತಿ ಮಾಡಿದ್ದು, ಡಿಸಿ ಕಚೇರಿ ಸಿಬ್ಬಂದಿಗಳು ಪೇಚಿಗೆ ಸಿಲುಕಿದ್ದಾರೆ. ಯಗಚಿ ನಾಲೆಗಾಗಿ ಸುಮಾರು 20 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡಿದ್ದ ರೈತರು ಸೂಕ್ತ ಪರಿಹಾರ ನೀಡಿಲ್ಲ ಎಂದು ಕೋರ್ಟ್ ಮೆಟ್ಟಿಲೇರಿದ್ದರು. ನಾಗಮ್ಮ, ಲಕ್ಷ್ಮೇ ಗೌಡ, ಜಗದೀಶ್ ಎಂಬುವವರು 11ಲಕ್ಷದ […]

ಕನ್ನಡ ದುನಿಯಾ 9 Jan 2026 3:13 pm

‘ಮನರೇಗಾ’ಮರುಜಾರಿಗಾಗಿ ನಿರ್ಣಯ ಅಂಗೀಕರಿಸಲು ವಿಧಾನಮಂಡಲ ವಿಶೇಷ ಅಧಿವೇಶನ : CM ಸಿದ್ದರಾಮಯ್ಯ

ಬೆಂಗಳೂರು : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದು, ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಬಲ ನೀಡಿದರು.ಮನರೇಗಾ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆಯ ಉದ್ದೇಶ. […]

ಕನ್ನಡ ದುನಿಯಾ 9 Jan 2026 2:18 pm

BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಎಲ್ಲಾ ವಾರ್ಡ್ ಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಘೋಷಣೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ಹಿನ್ನೆಲೆಯಲ್ಲಿ 5 ಪಾಲಿಕೆಗಳ ವಾರ್ಡ್ ಗಳ ಮೀಸಲಾತಿ ಪ್ರಕಟವಾಗಿದೆ. ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಘೋಷಣಿಸಲಾಗಿದೆ. 5 ಪಾಲಿಕೆಗಳ 369 ವಾರ್ಡ್ ಗಳ ಮೀಸಲಾತಿ ಪ್ರಕಟಗೊಂಡಿದ್ದು, ಎಲ್ಲಾ ವಾರ್ಡ್ ಗಳಲ್ಲಿ ಮಹಿಳೆಯರಿಗೆ. ಪ್ರತಿ ಜಾತಿಯಲ್ಲಿಯೂ 50% ಮೀಸಲಾತಿ ಘೋಷಿಸಲಾಗಿದೆ. ಒಂದು ವೇಳೆ ಆಕ್ಷೇಪಣೆ ಇದ್ದರೆ ಈ ಸಂಬಂಧ 15 ದಿನಗಳ ಒಳಗಾಗಿ ಆಕ್ಷೇಪಣೆ ಸಲ್ಲಿಸಬಹುದು. ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಜನವರಿ 23ರವರೆಗೆ ಅವಕಾಶವಿದೆ ಎಂದು ಗ್ರೇಟರ್ ಬೆಂಗಳುರು ಪ್ರಾಧಿಕಾರ ತಿಳಿಸಿದೆ.

ಕನ್ನಡ ದುನಿಯಾ 9 Jan 2026 2:13 pm

BIG NEWS : ಗರ್ಭಪಾತಕ್ಕೆ ಪತಿಯ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

ದುನಿಯಾ ಡಿಜಿಟಲ್ ಡೆಸ್ಕ್ : ಮಹಿಳೆಯೊಬ್ಬಳನ್ನು ಗರ್ಭಾವಸ್ಥೆಯನ್ನು ಮುಂದುವರಿಸಲು ಒತ್ತಾಯಿಸುವುದು ಆಕೆಯ ದೇಹದ ಮೇಲಿನ ಹಲ್ಲೆ, ಗರ್ಭಪಾತಕ್ಕೆ ಪತಿಯ ಅನುಮತಿ ಅಗತ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದು ಆಕೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅದು ಹೇಳಿದೆ. ತನ್ನ ಮಾತನ್ನು ಕೇಳದೆ ಪತ್ನಿಯ 14 ವಾರಗಳ ಗರ್ಭಧಾರಣೆಯನ್ನು ಅಂತ್ಯಗೊಳಿಸಿದ್ದಕ್ಕಾಗಿ ಪತಿ ದಾಖಲಿಸಿದ ಕ್ರಿಮಿನಲ್ ಪ್ರಕರಣವನ್ನು ಅದು ವಜಾಗೊಳಿಸಿದೆ. ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯ ಕಾಯ್ದೆಯಡಿಯಲ್ಲಿ, ಗರ್ಭಪಾತಕ್ಕೆ ಪತಿಯ ಒಪ್ಪಿಗೆ ಅಗತ್ಯವಿಲ್ಲ ಎಂದು […]

ಕನ್ನಡ ದುನಿಯಾ 9 Jan 2026 1:41 pm

ಹುಬ್ಬಳ್ಳಿ ಪ್ರಕರಣ: ಪೊಲೀಸ್ ಇಲಾಖೆ ಲಂಗು ಲಗಾಮು ಇಲ್ಲದೆ ನಡೆಯುತ್ತಿದೆ: ಕಮಿಷನರ್ ವರ್ಗಾವಣೆ ಮಾಡಬೇಕು: ಬೊಮ್ಮಾಯಿ ಆಗ್ರಹ

ಬೆಂಗಳೂರು: ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರ ಗೊಳಿಸಿ ಹಲ್ಲೆ ನಡೆಸಲಾಗಿದ್ದು, ಇದು ಅತ್ಯಂತ ಅಮಾನವೀಯ ಹಾಗೂ ಖಂಡನೀಯ. ಪ್ರಕರಣವನ್ನು ಮುಚ್ಚಿಹಾಕಲು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸಂಸದ ಬೊಮ್ಮಾಯಿ, ಲಂಗು ಲಗಾಮು ಇಲ್ಲದೆ ಪೊಲೀಸ್ ಇಲಾಖೆ ನಡೆಯುತ್ತಿದೆ. ಕೂಡಲೆ ಹುಬ್ಬಳ್ಳಿ ಧಾರವಾಡ ಪೊಲಿಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ಮಹಿಳೆಯ ವಿವಸ್ತ್ರ ಗೊಳಿಸಿರುವ ಪ್ರಕರಣ ಅತ್ಯಂತ ಕ್ರೂರವಾದದ್ದು. ಅದು ಪೊಲಿಸ್ […]

ಕನ್ನಡ ದುನಿಯಾ 9 Jan 2026 1:39 pm

BIG NEWS : ‘TCS’ಉದ್ಯೋಗಿಗಳಿಗೆ ಬಿಗ್ ಶಾಕ್ : ಕಚೇರಿಗೆ ಬಂದು ಕೆಲಸ ಮಾಡದಿದ್ರೆ ಸ್ಯಾಲರಿ ಹೈಕ್, ಬಡ್ತಿ ಇಲ್ಲ .!

ದೇಶದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿದ ಹಿನ್ನೆಲೆ ಅನೇಕ ಐಟಿ ಕಂಪನಿಗಳು ವರ್ಕ್ ಫ್ರಮ್ ಹೋಮ್ ನೀತಿಯನ್ನು ಜಾರಿಗೆ ತಂದಿತ್ತು.ಅನೇಕ ಕಂಪನಿಗಳು ಜಾರಿಗೆ ತಂದಿರುವ ವರ್ಕ್ ಫ್ರಮ್ ಹೋಮ್ ನೀತಿಯು ಈಗ ಉದ್ಯೋಗಿಗಳಿಗೆ ಸವಾಲಾಗಿ ಪರಿಣಮಿಸುತ್ತಿದೆ. ಮನೆಯಿಂದ ಕೆಲಸ ಮಾಡಲು ಒಗ್ಗಿಕೊಂಡಿರುವ ಐಟಿ ವೃತ್ತಿಪರರನ್ನು ಮತ್ತೆ ಕಚೇರಿಗಳಿಗೆ ಕರೆತರುವುದು ಕಂಪನಿಗಳಿಗೆ ಕಷ್ಟಕರವಾಗುತ್ತಿದೆ. ಅನೇಕ ಕಂಪನಿಗಳಿಗೆ ಮನೆಯಿಂದ ಕೆಲಸ ಮಾಡುವುದು ಹೊರೆಯಾಗಿರುವ ಸಮಯದಲ್ಲಿ, ದೇಶದ ಪ್ರಮುಖ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ತೆಗೆದುಕೊಂಡ ಇತ್ತೀಚಿನ ನಿರ್ಧಾರವು […]

ಕನ್ನಡ ದುನಿಯಾ 9 Jan 2026 1:25 pm

NRI ಆಸ್ತಿ ಮಾರಾಟ: ಕಾನೂನು ಸಂಕಷ್ಟ ತಪ್ಪಿಸಲು ಈ 10 ಪ್ರಮುಖ ದಾಖಲೆಗಳು ನಿಮ್ಮ ಬಳಿ ಇರಲಿ

NRI ಆಸ್ತಿ ಮಾರಾಟ ಮಾಡುವಾಗ ಭಾರತೀಯ ಆದಾಯ ತೆರಿಗೆ (ಐಟಿ) ಕಾನೂನುಗಳ ಪ್ರಕಾರ ಮಾಲೀಕರು ತಮ್ಮ ಸ್ಥಿರ , ಹಿಡುವಳಿ ಅವಧಿ ಮತ್ತು ಗಳಿಸಿದ ಲಾಭದ ಆಧಾರದ ಮೇಲೆ ಸರ್ಕಾರಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ಅನಿವಾಸಿ ಭಾರತೀಯರು (NRI) ಆಸ್ತಿ ಮಾರಾಟಕ್ಕೂ ಇದೇ ನಿಯಮ ಅನ್ವಯಿಸುತ್ತದೆ. ಅನಿವಾಸಿ ಭಾರತೀಯರು ಸಂಬಂಧಪಟ್ಟವರಿಗೆ ಪವರ್ ಆಫ್ ಅಟಾರ್ನಿ ನೀಡುವ ಮೂಲಕ ಮೂರನೇ ವ್ಯಕ್ತಿಗೆ ಆಸ್ತಿ ಮಾರಾಟ ಮಾಡಬಹುದು. ಇಂಥ ಸಂದರ್ಭದಲ್ಲಿ ಪವರ್ ಆಫ್ ಅಟಾರ್ನಿಯು ಭಾರತೀಯ ರಾಯಭಾರ ಕಚೇರಿಯಿಂದ ಸಹಿ ಮತ್ತು […]

ಕನ್ನಡ ದುನಿಯಾ 9 Jan 2026 1:19 pm

BIG NEWS: ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಆಕ್ರೋಶ

ಬೆಂಗಳೂರು: ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಂ ಭಾಷಾ ಮಸೂದೆ- 2025ರ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಕೇರಳದ‌ ಗಡಿ ಜಿಲ್ಲೆಯಲ್ಲಿ‌ ವಾಸ ಮಾಡುತ್ತಿರುವ ಜನರ ಮನಸ್ಸು ಸಂಪೂರ್ಣ ಕನ್ನಡ‌‌ ಭಾಷೆಯೊಂದಿಗೆ ಬೆರೆತು ಹೋಗಿದೆ. ಕೇರಳದಲ್ಲಿ ಸುಮಾರು 202 ಕನ್ನಡ ಮಾಧ್ಯಮ ಶಾಲೆಗಳಿವೆ. ನಾನೇ ಖುದ್ದಾಗಿ ಕಳೆದ ಒಂದೂವರೆ ವರ್ಷದ ಹಿಂದೆ ಎಡನೀರು ಮಠಕ್ಕೆ ಭೇಟಿ ನೀಡಿ, ಮಠ ನಿರ್ವಹಣೆ ಮಾಡುತ್ತಿರುವ ಕನ್ನಡ […]

ಕನ್ನಡ ದುನಿಯಾ 9 Jan 2026 1:11 pm

BREAKING : ಕೆಲಸದ ಒತ್ತಡ : ದೆಹಲಿ ಕೋರ್ಟ್ ಕಟ್ಟಡದಿಂದ ಜಿಗಿದು ವಿಕಲ ಚೇತನ ಗುಮಾಸ್ತ ಆತ್ಮಹತ್ಯೆ.!

ನವದೆಹಲಿ : ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದ ವಿಕಲ ಚೇತನ ಗುಮಾಸ್ತರೊಬ್ಬರು ಶುಕ್ರವಾರ ಕಟ್ಟಡದ ಮೇಲಿನ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲಸದ ಒತ್ತಡದಿಂದ ಮನನೊಂದು ಕಟ್ಟಡದ ಮೇಲಿನ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನಾನು ನನ್ನ ಆತ್ಮಹತ್ಯಾ ಆಲೋಚನೆಗಳನ್ನು ಯಾರೊಂದಿಗೂ ಹಂಚಿಕೊಳ್ಳಲಿಲ್ಲ. ನಾನು ಅವುಗಳನ್ನು ಜಯಿಸುತ್ತೇನೆ ಎಂದು ನಂಬಿದ್ದೆ, ಆದರೆ ನಾನು ವಿಫಲನಾದೆ. ನಾನು ಶೇಕಡಾ 60 ರಷ್ಟು ಅಂಗವಿಕಲ ವ್ಯಕ್ತಿ […]

ಕನ್ನಡ ದುನಿಯಾ 9 Jan 2026 1:08 pm