BREAKING: ಬೆಂಗಳೂರು ಮೆಟ್ರೋದಲ್ಲಿ ಯುವತಿ ಜೊತೆ ವ್ಯಕ್ತಿಯಿಂದ ಅಸಭ್ಯ ವರ್ತನೆ
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಜೊತೆ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ವಿಧಾನಸೌಧದಿಂದ ಮೆಟ್ರೋ ಹತ್ತಿದ್ದರು. ಈ ವೇಳೆ ಮೆಟ್ರೋದಲ್ಲಿ ಪ್ರಯಾಣಿಸುತ್ತುದ್ದ ವೇಳೆ ವ್ಯಕ್ತಿಯೋರ್ವ ಯುವತಿಯ ಮೈ-ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಮೆಟ್ರೋದಿಂದ ಇಳಿಯುತ್ತಿದ್ದಂತೆ ಯುವತಿ ಅಲ್ಲಿದ್ದ ಭದ್ರತಾ ಸಿಬ್ಬಂದಿಗಳಿಗೆ ದೂರು ನೀಡಿದ್ದಾರೆ. ತಕ್ಷಣ ವ್ಯಕ್ತಿಯನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ, ಆತನಿಕೆ ಬೈದು ಬುದ್ಧಿ ಹೇಳಿದ್ದಾರೆ. ಬೆಂಗಳೂರಿನ ಮೆಟ್ರೋದಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಮಹಿಳೆಯರಿಗೆ ಮೆಟ್ರೋ ಕೂಡ […]
ಶಿವಮೊಗ್ಗ: ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ಇಡೀ ಮನೆ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗದ ಸಿದ್ದೇಶ್ವರ ನಗರದಲ್ಲಿ ನಡೆದಿದೆ. ಮಹೇಶ್ ಹಾಗೂ ಮೋಹಿನಿ ದಂಪತಿಯ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ. ಘಟನೆ ವೇಳೆ ಮಹೇಶ್ ಹಾಗೂ ಮೋಹಿನಿ ಮನೆಯಲ್ಲಿ ಇರಲಿಲ್ಲವಾದ್ದರಿಂದ ಭಾರಿ ಅನಾಹುತ ತಪ್ಪಿದೆ. ಆದರೆ ಮನೆಯಲ್ಲಿದ್ದ 80 ಗ್ರಾಂ ಚಿನ್ನಾಭರಣ, ಧವಸ-ಧಾನ್ಯ, ಬಟ್ಟೆ, ಟಿವಿ, ಫ್ರಿಡ್ಜ್, ವಾಷಿಂಗ್ ಮಷಿನ್, ಪೀಠೋಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. […]
BIG NEWS: ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಹತ್ಯೆ ಪ್ರಕರಣ: ಸಹೋದ್ಯೋಗಿ ಅರೆಸ್ಟ್
ಬೆಂಗಳೂರು: ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಓರ್ವಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದ್ಯೋಗಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದು, ಬಂಧಿತನನ್ನು ಸುಧಾಕರ್ ಎಂದು ಗುರುತಿಸಲಾಗಿದೆ. ಈತ ಕೂಡ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯೊಂದರಲ್ಲಿ ಮಮತಾ (39) ಎಂಬ ನರ್ಸ್ ಬರ್ಬರವಾಗಿ ಹತ್ಯೆಯಾಗಿತ್ತು. ಆಕೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಸ್ನೇಹಿತೆಯೊಂದಿಗೆ […]
ಬೆಂಗಳೂರು ಸುತ್ತಮುತ್ತಲ ನಗರ ಸಂಪರ್ಕಕ್ಕೆ ‘ನಮೋ ಭಾರತ್’ರೈಲು
ಬೆಂಗಳೂರು ನಗರವನ್ನು ಸುತ್ತಮುತ್ತಲ ನಗರದಿಂದ ಸಂಪರ್ಕಿಸಲು ನಮ್ಮ ಮೆಟ್ರೋ, ಸಬ್ ಅರ್ಬನ್ ರೈಲು ಯೋಜನೆ ಕುರಿತು ಪ್ರಸ್ತಾವನೆ, ಕಾಮಗಾರಿಗಳು ನಡೆಯುತ್ತಿವೆ. ಬಸ್, ಖಾಸಗಿ ವಾಹನ ಸೇರಿ ಹಲವು ಮಾದರಿಯ ಸಂಚಾರ ವ್ಯವಸ್ಥೆ ಮೂಲಕ ಜನರು ಬೆಂಗಳೂರು ನಗರಕ್ಕೆ ಆಗಮಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ‘ನಮೋ ಭಾರತ್ ರೈಲು’ ಕುರಿತು ಚರ್ಚೆಗಳು ಆರಂಭವಾಗಿದೆ. ಈ ಕುರಿತು ಸಂಸತ್ನಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಮಾತನಾಡಿ, ಕೇಂದ್ರ ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ. ಬೆಂಗಳೂರು ನಗರಕ್ಕೆ ಆರ್ಆರ್ಟಿಎಸ್ ವ್ಯವಸ್ಥೆ ರೈಲುಗಳು […]
BIG NEWS: ಮೈಸೂರಿನಲ್ಲಿ ಸ್ಫೋಟ ಪ್ರಕರಣ: ವರದಿ ನೀಡಲು ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ್ ಸೂಚನೆ
ಮೈಸೂರು: ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಬಲೂನು ಮಾರಾಟಗಾರ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಅರಮನೆ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬಲೂನು ಮಾರುತ್ತಿದ್ದ ಲಕ್ನೋ ಮೂಲದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆತ ಬಲೂನು ಮಾರಿವವನಾಗಿದ್ದು, ಆತನ ಬಳಿ ಹೀಲಿಯಂ ಸಿಲಿಂಡರ್ ಹೇಗೆ ಬಂತು? ಎಲ್ಲಿ ಸಿಕ್ಕಿತು? ಎಂಬ ಬಗ್ಗೆ ಪರಿಶೀಲಿಸಬೇಕಿದೆ. ಸಣ್ಣಪುಟ್ಟ ವಸ್ತುಗಳನ್ನು […]
14 ವರ್ಷದ ವೈಭವ್ ಸೂರ್ಯವಂಶಿಗೆ ರಾಷ್ಟ್ರೀಯ ಬಾಲ ಪ್ರಶಸ್ತಿ
ಅತಿ ಕಿರಿಯ ವಯಸ್ಸಿಗೆ ಕ್ರಿಕೆಟ್ನಲ್ಲಿ ಭರ್ಜರಿ ಪ್ರದರ್ಶನ ನೀಡಿ, ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಭಾರತ ತಂಡವನ್ನು ಪ್ರತಿನಿಧಿಸಿ ಹಲವಾರು ದಾಖಲೆಗಳನ್ನು ಬರೆದು ವಿಶ್ವದಾದ್ಯಂತ ಹೆಸರು ಮಾಡಿರುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಗೆ ಮತ್ತೊಂದು ಗೌರವ ಲಭಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನು ವೈಭವ್ ಸೂರ್ಯವಂಶಿಗೆ ಪ್ರದಾನ ಮಾಡಿದ್ದಾರೆ. ವೈಭವ್ ಸೂರ್ಯವಂಶಿಗೆ ಸಿಕ್ಕ ಈ ಗೌರವಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳು ವ್ಯಕ್ತವಾಗಿವೆ. ಪ್ರತಿ ವರ್ಷ ಕೇಂದ್ರ ಮಕ್ಕಳ ಹಾಗೂ ಮಹಿಳಾ ಅಭಿವೃದ್ಧಿ ಸಚಿವಾಲಯ ಕ್ರೀಡೆ, ಕಲೆ, ಸಂಸ್ಕೃತಿ, […]
ಪಾರ್ಕಿಂಗ್: ಬೆಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಗುಡ್ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು ಪಾರ್ಕಿಂಗ್ ವಿಚಾರದಲ್ಲಿ ಗುಡ್ನ್ಯೂಸ್ ನೀಡಿದೆ. ಡಿಸೆಂಬರ್ 26ರಿಂದಲೇ ಜಾರಿಗೆ ಬರುವಂತೆ ಟರ್ಮಿನಲ್ 1ರಲ್ಲಿನ ಉಚಿತ ಪಾರ್ಕಿಂಗ್ ಸಮಯವನ್ನು ವಿಸ್ತರಣೆ ಮಾಡಿದೆ. ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕಾಗಿ ಟರ್ಮಿನಲ್ 1ರ ಆಗಮನ (Arrival) ವಿಭಾಗದಲ್ಲಿ ಉಚಿತ ಪಾರ್ಕಿಂಗ್ ಸಮಯವನ್ನು ವಿಸ್ತರಿಸಿದೆ. ಡಿಸೆಂಬರ್ 26ರಿಂದಲೇ ಜಾರಿಗೆ ಬರುವಂತೆ ಟರ್ಮಿನಲ್ 1ರ ಪಿಕ್-ಅಪ್ ವಲಯಗಳಾದ P3 ಮತ್ತು P4 ನಲ್ಲಿ ಉಚಿತ ಪಾರ್ಕಿಂಗ್ ಅವಧಿಯನ್ನು 10 ರಿಂದ 15 ನಿಮಿಷಗಳಿಗೆ […]
BIG NEWS: ಮತ್ತೊಂದು ಪೈಶಾಚಿಕ ಘಟನೆ: ಬಲವಂತವಾಗಿ ಮದ್ಯ ಕುಡಿಸಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ನವದೆಹಲಿ: ಅಪ್ರಾಪ್ತ ಬಾಲಕಿಯನ್ನು ಹೊತ್ತೊಯ್ದು ಆಕೆಗೆ ಬಲವಂತದಿಂದ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ಹೊರವಲಯದ ಸಮಯಪುರ್ ಬದ್ಲಿ ಎಂಬಲ್ಲಿ ಈ ಘಟನೆ ನಡೆದಿದೆ. ಬಾಲಕಿ ಹಾಗೂ ಆಕೆಯ ಕುಟುಂಬಕ್ಕೆ ಪರಿಚಿತರೇ ಆಗಿದ್ದ ಆರೋಪಿಗಳಿಂದ ಈ ಕೃತ್ಯ ನಡೆದಿದೆ. ಬಾಲಕಿಯನ್ನು ಕರೆದೊಯ್ದು ಬಲವಂತದಿಂದ ಮದ್ಯ ಕುಡಿಸಿ ಗ್ಯಾಂಗ್ ರೇಪ್ ನಡೆಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ. ನರೋತ್ತಮ್ ಅಲಿಯಾಸ್ ನೇತಾ (28) ಹಾಗೂ ರಿಷಬ್ ಝಾ (26) ಬಂಧಿತ […]
BIG NEWS: ಖಾಸಗಿ ಕಾರಿಗೆ ಪೊಲೀಸ್ ನಾಮಫಕ: ASIಗೆ ದಂಡ ವಿಧಿಸಿದ ಸ್ಥಳೀಯ ಪೊಲೀಸರು
ಚಿಕ್ಕಮಗಳೂರು: ಪೊಲೀಸ್ ಅಧಿಕಾರಿಯೊಬ್ಬ ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಪ್ರವಾಸ ತೆರಳಿದ್ದ ವೇಳೆ ಕ್ಖಾಸಗಿ ಕಾರಿಗೆ ಪೊಲೀಸ್ ಎಂದು ನಾಮಫಲಕ ಹಾಕಿಕೊಂಡು ತೆರಳಿದ್ದಾರೆ. ಇದನ್ನು ಗಮನಿಸಿದ ಪೊಲೀಸರು ದಂಡ ವಿಧಿಸಿರುವ ಘಟನೆ ನಡೆದಿದೆ. ಧಾರವಾಡ ಮೂಲದ ಎಎಸ್ಐ ತನ್ನ ಕುಟುಂಬದ ಜೊತೆ ತನ್ನದೇ ಸ್ವಂತ ಕಾರಿನಲ್ಲಿ ಪ್ರವಾಸಕ್ಕೆ ಹೋಗುವಾಗ ತನ್ನ ಕಾರಿಗೆ ಪೊಲೀಸ್ ನಾಮಫಲಕ ಅಳವಡಿಸಿಕೊಂಡಿದ್ದಾರೆ. ಚಿಕ್ಕಮಗಳೂರಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಸ್ಥಳೀಯ ಪೊಲೀಸರು ವಾಹನ ತಪಾಸಣೆ ವೇಳೆ ಇದನ್ನು ಗಮನಿಸಿದ್ದಾರೆ. ಪೊಲೀಸ್ ಅಧಿಕಾರಿ ಧಾರವಾಡದಿಂದ ಧರ್ಮಸ್ಥಳಕ್ಕೆ […]
ಈ ವರ್ಷ ಬಿಡುಗಡೆಯಾದ ಕನ್ನಡ ಚಿತ್ರಗಳ ಪೈಕಿ ಗೆಲುವಿಗಿಂತ ಸೋಲು ಕಂಡಿದ್ದೇ ಹೆಚ್ಚು. ಒಂದಷ್ಟು ಚಿತ್ರಗಳು ಒಳ್ಳೆಯ ವಿಮರ್ಶೆ ಪಡೆದುಕೊಂಡದ್ದು ಬಿಟ್ಟರೆ, ನೆಲಕಚ್ಚಿದ ಚಿತ್ರಗಳ ಸಂಖ್ಯೆಯೇ ಹೆಚ್ಚಿದೆ. ಇನ್ನು ಪರಭಾಷಾ ಚಿತ್ರಗಳ ಜತೆ ಕಾಂತಾರ ಬಿಟ್ಟರೆ ಇನ್ಯಾವ ಚಿತ್ರವೂ ಸಹ ಪೈಪೋಟಿಗೆ ಇಳಿಯಲಿಲ್ಲ. ಬೇರೆ ಇಂಡಸ್ಟ್ರಿಗಳಿಗೆ ಹೋಲಿಸಿದರೆ ಒಟಿಟಿಯಲ್ಲಿಯೂ ಸಹ ಕನ್ನಡ ಚಿತ್ರಗಳು ಹೆಚ್ಚೇನೂ ಸದ್ದು ಮಾಡಿಲ್ಲ. ಹೀಗೆ ಬೆರಳೆಣಿಕೆಯಷ್ಟು ಮಾತ್ರ ಬಾಕ್ಸ್ಆಫೀಸ್ ಸಕ್ಸಸ್ ಕಂಡ ಕನ್ನಡ ಚಿತ್ರರಂಗ ಮುಂದಿನ ವರ್ಷ ಒಳ್ಳೆಯ ಚಿತ್ರಗಳನ್ನು ನೀಡಿ ಪುಟಿದೇಳಲಿ […]
ಒಟ್ಟಿಗೆ ದಾವಣಗೆರೆಗೆ ಸಿದ್ದರಾಮಯ್ಯ, ಡಿಕೆಶಿ ಪ್ರಯಾಣ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಟ್ಟಿಗೆ ದಾವಣಗೆರೆಗೆ ತೆರಳಿದರು. ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಮೊದಲ ಬಾರಿಗೆ ಉಭಯ ನಾಯಕರು ಮುಖಾಮುಖಿಯಾಗುತ್ತಿದ್ದಾರೆ. ಶುಕ್ರವಾರ ಬೆಂಗಳೂರು ನಗರದ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ನಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಒಟ್ಟಿಗೆ ದಾವಣಗೆರೆಗೆ ತೆರಳಿದರು. ಉಭಯ ನಾಯಕರು ಸಂಜೆಯ ತನಕ ದಾವಣಗೆರೆಯಲ್ಲಿಯೇ ಇರಲಿದ್ದಾರೆ. ಶಾಮನೂರು ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ದಾವಣಗೆರೆಗೆ ಭೇಟಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ […]
ಹೈದರಾಬಾದ್: ಮಕ್ಕಳ ಮುಂದೆಯೇ ಪತ್ನಿಯನ್ನು ಬೆಂಕಿ ಹಚ್ಚಿ ಹತ್ಯೆಗೈದ ಪತಿ ಮಹಾಶಯ, ಬಳಿಕ ಅದೇ ಬೆಕಿಗೆ ಮಗಳನ್ನೂ ತಳ್ಳಿ ಕ್ರೌರ್ಯ ಮೆರೆದಿದ್ದಾರೆ. ಈ ಘಟನೆ ಹೈದರಾಬಾದ್ ನ ನಲ್ಲಕುಂಟಾ ಪ್ರದೇಶದಲ್ಲಿ ನಡೆದಿದೆ. ವೆಂಕಟೇಶ್, ಪತಿಯನ್ನೇ ಬೆಂಕಿ ಹಚ್ಚಿ ಕೊಂದ ಪತಿ. ತ್ರಿವೇಣಿ ಹತ್ಯೆಯಾದ ಪತ್ನಿ. ವೆಂಕಟೇಶ್ ಗೆ ಪತ್ನಿ ತ್ರಿವೇಣಿ ಮೇಲೆ ಸಂಶಯ. ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಸಂಶಯದಿಂದ ಮಕ್ಕಳ ಮುಂದೆಯೇ ಪತ್ನಿ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಬಳಿಕ ಆಕೆಯ ಮೇಲೆ […]
ಡಿಸೆಂಬರ್ ಕ್ರಾಂತಿ: ಡೆವಿಲ್ ಮೊದಲ ದಿನದ ಕಲೆಕ್ಷನ್ ಮುರಿಯುವಲ್ಲಿ ಸೋತ ಮಾರ್ಕ್, 45; ಇಲ್ಲಿದೆ ಕಲೆಕ್ಷನ್ ವರದಿ
ಪ್ರತಿ ವರ್ಷದ ಡಿಸೆಂಬರ್ ಹಾಗೆ ಈ ವರ್ಷವೂ ಸಹ ಚಂದನವನದ ಅಂಗಳದಲ್ಲಿ ಸ್ಟಾರ್ ಚಿತ್ರಗಳ ಹವಾ ಜೋರಾಗಿದೆ. ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ದಿ ಡೆವಿಲ್ ಬಿಡುಗಡೆಯಾದರೆ, ಸುದೀಪ್ ನಟನೆಯ ಮಾರ್ಕ್, ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ಮಲ್ಟಿಸ್ಟಾರರ್ 45 ಸಹ ಬಿಡುಗಡೆಯಾಗಿದೆ. ಹೀಗಾಗಿ ಬಾಕ್ಸ್ ಆಫೀಸ್ನಲ್ಲಿ ಕನ್ನಡ ಚಿತ್ರರಂಗ ಡಿಸೆಂಬರ್ನಲ್ಲಿ ಕ್ರಾಂತಿಯನ್ನೇ ಮಾಡಿದೆ ಎಂದು ಹೇಳಬಹುದು. ವರ್ಷವುದ್ದಕ್ಕೂ ಗೆಲುವಿಗಿಂತ ಸೋಲನ್ನೇ ಹೆಚ್ಚಾಗಿ ಕಂಡಿದ್ದ ಕನ್ನಡ ಚಿತ್ರರಂಗಕ್ಕೆ […]
ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಗುಂಡಿನ ದಾಳಿ…..!
ಟೊರೊಂಟೊ: ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೆನಡಾದ ಟೊರೊಂಟೊ ವಿಶ್ವವಿದ್ಯಾಲಯದ ಸ್ಕಾರ್ಬರೋ ಕ್ಯಾಂಪಸ್ ಬಳಿ ಡಿಸೆಂಬರ್ 23ರಂದು ಮಂಗಳವಾರ ನಡೆದಿದೆ. ಶಿವಂಕ್ ಅವಸ್ಥಿ ಗುಂಡಿಗೆ ಬಲಿಯಾದ ಭಾರತೀಯ ವಿದ್ಯಾರ್ಥಿ . ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲು ಪೊಲೀಸರು ಸಾರ್ವಜನಿಕರ ಸಹಾಯ ಕೋರಿದ್ದಾರೆ. ಈ ಘಟನೆಯು ಭಾರತೀಯ ಮತ್ತು ಅಂತಾರಾಷ್ಟ್ರೀಯ ವಿದ್ಯಾರ್ಥಿ ಸಮುದಾಯವನ್ನು ಬೆಚ್ಚಿ ಬೀಳಿಸಿದೆ. ಈ ಕುರಿತು ಬುಧವಾರ ಮಾಹಿತಿ ನೀಡಿರುವ ಪೊಲೀಸರು, ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದ ಶಿವಂಕ್ […]
2025ರ ಹಿನ್ನೋಟ: ಈ ವರ್ಷ ಅಗಲಿದ ಕರ್ನಾಟಕದ ಗಣ್ಯರು
2025ನೇ ವರ್ಷಕ್ಕೆ ವಿದಾಯ ಹೇಳುವ ಕಾಲ ಬಂದಿದೆ. 2026ರ ಸ್ವಾಗತಿಸಲು ಕೆಲವೇ ದಿನಗಳು ಬಾಕಿ ಇದೆ. ವರ್ಷದ ಹಿನ್ನೋಟ ನೋಡಿದರೆ ಕರ್ನಾಟಕದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಈ ವರ್ಷ ನಮ್ಮನ್ನು ಅಗಲಿದ್ದಾರೆ. ಸಾಹಿತಿ ಎಸ್.ಎಲ್.ಭೈರಪ್ಪ, ಶಾಸಕ ಶಾಮನೂರು ಶಿವಶಂಕರಪ್ಪ, ಎಚ್.ವೈ.ಮೇಟಿ, ಸಾಲು ಮರದ ತಿಮ್ಮಕ್ಕ, ಹಾಸ್ಯ ಕಲಾವಿದ ಉಮೇಶ್ ಸೇರಿದಂತೆ ಹಲವರು ಅಗಲಿದ್ದು, ಅವರ ನೆನಪನ್ನು ಬಿಟ್ಟು ಹೋಗಿದ್ದಾರೆ. ಶಾಮನೂರು ಶಿವಶಂಕರಪ್ಪ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಡಿಸೆಂಬರ್ 14ರಂದು ಬೆಂಗಳೂರಿನ […]
ವಿಜಯ್ ಹಜಾರೆ; ಕೊಹ್ಲಿ ಅರ್ಧಶತಕ, ರೋಹಿತ್ ಶರ್ಮ ‘ಗೋಲ್ಡನ್ ಡಕ್’
ಬೆಂಗಳೂರು ವಿಜಯ್ ಹಜಾರೆ ಟ್ರೋಫಿಯ ತನ್ನ ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರೆ, ರೋಹಿತ್ ಶರ್ಮ ಗೋಲ್ಡಕ್ ಡಕ್ ಸಂಕಟಕ್ಕೆ ಸಿಲುಕಿದರು. ಶುಕ್ರವಾರ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನ 1 ರಲ್ಲಿ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 77 ರನ್ ಗಳಿಸಿದರು. ಕಳೆದ ಆಂಧ್ರ ವಿರುದ್ಧದ ಮೊದಲ ಪಂದ್ಯದಲ್ಲಿ ಕೊಹ್ಲಿ ಭರ್ಜರಿ ಶತಕ ಬಾರಿಸಿದ್ದರು. ಉತ್ತರಾಖಂಡ ವಿರುದ್ಧದ ಪಂದ್ಯದಲ್ಲಿ ಆಡಲಿಳಿದ ರೋಹಿತ್ ಮೊದಲ ಎಸೆತದಲ್ಲೇ ಕ್ಯಾಚ್ […]
ಕೀರ್ತಿ ಸುರೇಶ್ ಸಖತ್ ಆಕ್ಷನ್ ಮೋಡ್: ಕ್ರಿಸ್ಮಸ್ ಅಂಗವಾಗಿ ಹೊರಬಂತು ‘ತೋಟ್ಟಂ’ಚಿತ್ರದ ಪವರ್ಫುಲ್ ಪೋಸ್ಟರ್!
ಕೀರ್ತಿ ಸುರೇಶ್ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿದ್ದು, ಅದರಲ್ಲಿ ಎರಡು ಕೈಗಳು ಗನ್ ಹಿಡಿದಿರುವುದು ಕಂಡುಬಂದಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಮೂಲಕ ಕೀರ್ತಿ ಮೊದಲ ಬಾರಿಗೆ ಮಲಯಾಳಂ ನಟ ಆಂಟೋನಿ ವರ್ಗೀಸ್ ಪೆಪೆ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರದ ಬಗ್ಗೆ ಪ್ರಮುಖ ಮಾಹಿತಿ: ಮುಂದಿನ ಸಿನಿಮಾಗಳು: ಕೀರ್ತಿ ಸುರೇಶ್ ಅವರು ಈ ಚಿತ್ರದ ಜೊತೆಗೆ ‘ರಿವಾಲ್ವರ್ ರೀಟಾ’ ಮತ್ತು ‘ಕಣ್ಣಿವೇಡಿ’ ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಇನ್ನು ಆಂಟೋನಿ ವರ್ಗೀಸ್ […]
‘ಬಾಡ್ ಮೇ ಜಾವೋ’ಎಂದ ಅಭಿಮಾನಿಗೆ ಹಾರ್ದಿಕ್ ಕೂಲ್ ರಿಯಾಕ್ಷನ್! ಪಾಂಡ್ಯ ಸಂಯಮಕ್ಕೆ ಫ್ಯಾನ್ಸ್ ಫಿದಾ
ಕ್ರಿಸ್ಮಸ್ ಸಂಭ್ರಮದ ಅಂಗವಾಗಿ ಹಾರ್ದಿಕ್ ಪಾಂಡ್ಯ ತಮ್ಮ ಗೆಳತಿ, ಖ್ಯಾತ ಮಾಡೆಲ್ ಮಹಿಕಾ ಶರ್ಮಾ ಅವರೊಂದಿಗೆ ನವದೆಹಲಿಯ ರೆಸ್ಟೋರೆಂಟ್ವೊಂದಕ್ಕೆ ಡಿನ್ನರ್ಗಾಗಿ ತೆರಳಿದ್ದರು. ಊಟ ಮುಗಿಸಿ ಹೊರಬರುವಾಗ ಹಾರ್ದಿಕ್ ಅವರನ್ನು ನೋಡಲು ಅಭಿಮಾನಿಗಳ ದಂಡೇ ನೆರೆದಿತ್ತು. ಹಾರ್ದಿಕ್ ಅವರು ತಾಳ್ಮೆಯಿಂದ ಕೆಲವರ ಜೊತೆ ಸೆಲ್ಫಿಗೆ ಫೋಸ್ ನೀಡಿದರು. ಆದರೆ, ಜನಸಂದಣಿ ಮತ್ತು ಭದ್ರತೆಯ ಕಾರಣದಿಂದ ಎಲ್ಲರಿಗೂ ಫೋಟೋ ನೀಡಲು ಸಾಧ್ಯವಾಗಲಿಲ್ಲ. ಈ ವೇಳೆ ಫೋಟೋ ಸಿಗದ ಸಿಟ್ಟಿನಲ್ಲಿ ಒಬ್ಬ ವ್ಯಕ್ತಿ ಹಾರ್ದಿಕ್ ಅವರಿಗೆ ಅಸಭ್ಯವಾಗಿ “ಬಾಡ್ ಮೇ ಜಾವೋ” […]
ಡಿಸೆಂಬರ್ 22 ರಂದು ಕೆನಡಾದ ಎಡ್ಮಂಟನ್ನಲ್ಲಿರುವ ‘ಗ್ರೇ ನನ್ಸ್ ಕಮ್ಯುನಿಟಿ ಹಾಸ್ಪಿಟಲ್’ನಲ್ಲಿ (Grey Nuns Community Hospital) ನಡೆದ ಈ ಘಟನೆ ಇಡೀ ಭಾರತೀಯ ಸಮುದಾಯವನ್ನು ಆಘಾತಕ್ಕೀಡುಮಾಡಿದೆ. ಅಸಲಿಗೆ ನಡೆದಿದ್ದೇನು? 44 ವರ್ಷದ ಪ್ರಶಾಂತ್ ಶ್ರೀಕುಮಾರ್ ಅವರು ಕೆಲಸದಲ್ಲಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿನ ಸಿಬ್ಬಂದಿಗೆ ತಮ್ಮ ನೋವಿನ ತೀವ್ರತೆ “10 ಕ್ಕೆ 15 ರಷ್ಟಿದೆ” ಎಂದು ಪ್ರಶಾಂತ್ ತಿಳಿಸಿದ್ದರು. ಆದರೂ ಅವರನ್ನು ತುರ್ತು ಚಿಕಿತ್ಸಾ ವಿಭಾಗದ ಕಾಯುವ ಕೋಣೆಯಲ್ಲಿ ಕುಳಿತುಕೊಳ್ಳುವಂತೆ […]
ಅಂತಾರಾಷ್ಟ್ರೀಯ ವೇದಿಕೆಯಾದ ‘ರೆಡ್ಡಿಟ್’ನಲ್ಲಿ ಮಹಿಳೆಯೊಬ್ಬರು ತಮ್ಮ ಜೀವನದಲ್ಲಿ ನಡೆದ ವಿಚಿತ್ರ ಘಟನೆಯನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಆಕೆಯ ಪತಿ ಡಿಎನ್ಎ ಪರೀಕ್ಷೆ ಮಾಡಿಸಿಕೊಂಡು ತಮ್ಮ ವಂಶಾವಳಿಯ ಬಗ್ಗೆ ತಿಳಿದುಕೊಂಡಿದ್ದರು. ಇದನ್ನು ನೋಡಿ ಕುತೂಹಲಗೊಂಡ ಮಹಿಳೆ, ತಾನೂ ಕೂಡ ಕೇವಲ ತಮಾಷೆಗಾಗಿ ಡಿಎನ್ಎ ಪರೀಕ್ಷೆ ಮಾಡಿಸಿಕೊಂಡಿದ್ದರು. ಆದರೆ ಅದರ ಫಲಿತಾಂಶ ಬಂದಾಗ ಅವರ ಕಾಲು ಕೆಳಗಿನ ನೆಲವೇ ಸರಿದಂತಾಯಿತು. ಕಹಿ ನೆನಪಿನ ಬಾಲ್ಯ: ಮಹಿಳೆಯ ತಾಯಿ ಚಿಕ್ಕ ವಯಸ್ಸಿನಲ್ಲೇ ತಾಯಿಯಾಗಿದ್ದರು ಮತ್ತು ಅವರು ಮಾದಕ ವ್ಯಸನ ಹಾಗೂ ಕಾನೂನು ಸಂಘರ್ಷಗಳಲ್ಲಿ […]
ಕೇಕ್ ತಿನ್ನಿಸುವ ವಿಷಯಕ್ಕೆ ಶುರುವಾಯ್ತು ಬರ್ತ್ಡೇ ಫೈಟ್: ಗೆಳತಿಯ ನಡೆಯಿಂದ ಕೆರಳಿದ ಯುವಕ; ವಿಡಿಯೋ ವೈರಲ್
ವೈರಲ್ ಆಗಿರುವ ವಿಡಿಯೋದಲ್ಲಿ, ಯುವಕನೊಬ್ಬ ತನ್ನ ಪ್ರೇಯಸಿಗೆ ಸರ್ಪ್ರೈಸ್ ನೀಡಲು ಬಲೂನ್ಗಳು, ಲೈಟ್ಗಳು ಮತ್ತು ಕೇಕ್ನೊಂದಿಗೆ ಸುಂದರವಾದ ವ್ಯವಸ್ಥೆ ಮಾಡಿರುತ್ತಾನೆ. ಗೆಳತಿ ಬಂದ ತಕ್ಷಣ ಕೇಕ್ ಕತ್ತರಿಸುವ ಸಂಭ್ರಮ ಶುರುವಾಗುತ್ತದೆ. ಆದರೆ, ಕೇಕ್ ಕತ್ತರಿಸಿದ ನಂತರ ಆ ಯುವತಿ ಮೊದಲ ತುತ್ತನ್ನು ಪಕ್ಕದಲ್ಲೇ ನಿಂತಿದ್ದ ತನ್ನ ಗಂಡು ಸ್ನೇಹಿತನಿಗೆ (Male Best Friend) ತಿನ್ನಿಸುತ್ತಾಳೆ. ಮೈಮೇಲೆ ದೆವ್ವ ಬಂದಂತೆ ಆಡಿದ ಯುವಕ: ತಾನು ಇಷ್ಟೆಲ್ಲಾ ಕಷ್ಟಪಟ್ಟು ತಯಾರಿ ನಡೆಸಿದ್ದರೂ, ತನಗೆ ಮೊದಲ ತುತ್ತು ನೀಡಲಿಲ್ಲ ಎಂಬ ಸಿಟ್ಟು […]
ನಾಂದೇಡ್: ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಒಂದೇ ದಿನ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ತಂದೆ-ತಾಯಿ ಮನೆಯಲ್ಲಿ ಹಾಗೂ ಇಬ್ಬರು ಮಕ್ಕಳು ರೈಲ್ವೆ ಹಳಿಗಳ ಮೇಲೆ ಶವವಾಗಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುದ್ಬೇಡ್ ತಹಶಿಲ್ ನ ಜವಾಲಾ ಮುರಾರ್ ನಲ್ಲಿ ಈ ಘಟನೆ ನಡೆದಿದೆ. ತಂದೆ-ತಾಯಿ ಮನೆಯಲ್ಲಿ ಸಾವನ್ನಪ್ಪಿದ್ದರೆ, ಅವರ ಇಬ್ಬರು ಪುತ್ರರು ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ರಮ್ರೇಶ್ ಸೋನಾಜಿ ಲಾಖೆ (51) ಹಾಗೂ ಪತ್ನಿ […]
ಹುಬ್ಬಳ್ಳಿ ವಿಮಾನ ನಿಲ್ದಾಣ ಪ್ರದೇಶದಲ್ಲಿ ಆತಂಕ ಮೂಡಿಸಿದ ಚಿರತೆ
ಚಿರತೆ, ಹುಲಿ, ಆನೆ ಹೀಗೆ ಕರ್ನಾಟಕದಲ್ಲಿ ಮಾನವ ಮತ್ತು ಪ್ರಾಣಿಗಳ ಸಂಘರ್ಷ ಪ್ರಕರಣಗಳು ಪ್ರತಿನಿತ್ಯ ವರದಿಯಾಗುತ್ತಿದೆ. ಈಗ ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳವನ್ನು ಪರಿಶೀಲನೆ ನಡೆಸಿದ್ದು, ಜನರಿಗೆ ಮುನ್ನೆಚ್ಚರಿಕೆ ಸಂದೇಶವನ್ನು ಸಹ ನೀಡಲಾಗಿದೆ. ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿದೆ. ಡಿಸೆಂಬರ್ 24ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ.ವಿ., […]
BREAKING: ಮರಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಸಾಫ್ಟ್ ವೇರ್ ಇಂಜಿನಿಯರ್ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ
ನೆಲಮಂಗಲ: ಜಮೀನು ನೋಡಿಕೊಂಡು ವಾಪಸ್ ಆಗುತ್ತಿದ್ದಾಗ ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್ ಹಾಗೂ ವೀರಭದ್ರ ಮೃತ ದುರ್ದೈವಿಗಳು. ಹರೀಶ್ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕುಟುಂಬ ಸಮೇತ ಕಾರಿನಲ್ಲಿ ಜಮೀನು ನೋಡಿಕೊಂಡು ಹಾಗೇ ಊರಿಗೆ ಹೋಗಿ ಬರಲೆಂದು ಹೊರಟಿದ್ದರು. ಜಮೀನು ನೋಡಿಕೊಂಡು ಊರಿಗೆ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ […]
ತುಮಕೂರು : ಬಾಳಿಗೊಂದು ಗುರಿ ಇರಲಿ: ಶ್ರೀ ರಂಭಾಪುರಿ ಜಗದ್ಗುರು
ತುಮಕೂರು ಯುವಶಕ್ತಿ ದೇಶದ ಬಲು ದೊಡ್ಡ ಶಕ್ತಿ ಮತ್ತು ಆಸ್ತಿ. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಬಲು ದೊಡ್ಡದು. ಬಾಳೆಗೊಂದು ಗೊನೆಯಿರುವಂತೆ ಯುವಕರ ಬಾಳಿಗೊಂದು ಗುರಿಯಿರಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ನಗರದ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ನಿಂದ ಸಂಘಟಿಸಿದ ಶ್ರೀ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜಾ-ಜನ ಜಾಗೃತಿ ಧರ್ಮ ಸಮಾರಂಭದ 3ನೇ ದಿನದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. […]
BREAKING: ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣ: ತನಿಖೆಗೆ NIA ಎಂಟ್ರಿ
ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಬಲೂನು ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಕೂಡ ತನಿಖೆಗೆ ಎಂಟ್ರಿಯಾಗಿದೆ. ಮೈಸೂರಿನ ಅರಮನೆಯ ಜಯಮಾರ್ತಾಂಡ ಗೇಟ್ ಬಳಿ ಡಿಸೆಂಬರ್ 25ರಂದು ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಬಲೂನು ಮಾರುತ್ತಿದ್ದ ಉತ್ತರ ಪ್ರದೇಶ ಮೂಲದ ಸಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಲೀಂ ವಾರದ ಹಿಂದಷ್ಟೇ ಮೈಸೂರಿಗೆ ಬಂದು ಬಲೂನು ಮಾರುತ್ತಿದ್ದ. ಹೀಲಿಯಂ ಗ್ಯಾಸ್ ಮೂಲಕ ಬಲೂನು ಊದಿಸಿ ಬಲೂನು […]
ತುಮಕೂರು :ಡಿ.27ಕ್ಕೆ ಸಂಸ್ಕೃತಿ ಚಿಂತನ ಚಾರಣ ಕಾರ್ಯಕ್ರಮ
ತುಮಕೂರು: ಕನಕದಾಸರ ಕೀರ್ತನೆ ತಲ್ಲಣಿಸದಿರುವ ಮನವೇ ಎಂಬ ಶೀರ್ಷಿಕೆಯೊಂದಿಗೆ ರಾಜ್ಯಾ ದ್ಯಂತ ವಿನೂತನ ಸಂಸ್ಕೃತಿ ಚಿಂತನ ಚಾರಣ ಕಾರ್ಯಕ್ರಮವನ್ನು ಇದೇ ಮೊದಲ ಬಾರಿಗೆ ನಗರ ದಲ್ಲಿ ಡಿ.27ರಂದು ಶನಿವಾರ ಶ್ರೀದೇವಿ ಮೆಡಿಕಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್ ತಿಳಿಸಿದರು. ಸುದ್ದಿಗೋಷ್ಠ್ಟಿಯಲ್ಲಿ ಮಾತನಾಡಿದ, ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಜಾತಿ, ವರ್ಗ, ವರ್ಣ, ಲಿಂಗ ಭೇದವಿಲ್ಲದೆ ಎಲ್ಲಾ ಸಮುದಾಯಗಳ, ಅದರಲ್ಲಿಯೂ ಹಿಂದುಳಿದ ಸಮುದಾಯಗಳ ಸಾಮಾಜಿಕ ಏಳಿಗೆಗೆ ನಿರಂತರವಾಗಿ ಪ್ರಯತ್ನಿಸುತ್ತಿದ್ದು […]
ಬೆಂಗಳೂರು : ಹನಿಮೂನ್ ಅರ್ಧಕ್ಕೇ ಮೊಟಕು, ನವವಿವಾಹಿತೆ ಆತ್ಮಹತ್ಯೆ!
ಬೆಂಗಳೂರು : ನವವಿವಾಹಿತ ಮಹಿಳೆಯೊಬ್ಬರು ಹನಿಮೂನ್ ಮೊಟಕುಗೊಳಿಸಿ ಮನೆಗೆ ವಾಪಸ್ ಆಗಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಿನ್ನೆ ವರದಿಯಾಗಿತ್ತು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಐಶ್ವರ್ಯಾ ಅವರು ಒಂದು ತಿಂಗಳ ಹಿಂದೆ ಬಾಬಣ್ಣ ಲೇಔಟ್ ನಿವಾಸಿ ಲಿಖಿತ್ ಅವರನ್ನು ಮದುವೆ ಆಗಿದ್ದರು. ಐಶ್ವರ್ಯಾ ಅವರು ಎಂಬಿಎ ಓದಿದ್ದರು. ಲಿಖಿತ್ ಡಿಪ್ಲೊಮಾ ಓದಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇದೀಗ ಐಶ್ವರ್ಯ ಸಾವಿಗೆ ಪತಿ ಹಾಗೂ ಕುಟುಂಬಸ್ಥರು ಕಾರಣ ಎಂದು ಆಕೆಯ ಮನೆಯವರು […]
BIG NEWS: ನೇಮೋತ್ಸವದಲ್ಲಿ ಕಳ್ಳಿಯರ ಕೈಚಳಕ: ಗಂಟೆ ಹೊಡೆಯುವ ನೆಪದಲ್ಲಿ ಬಂದು ವೃದ್ಧೆಯ ಸರ ಕದ್ದು ಎಸ್ಕೇಪ್
ಉಡುಪಿ: ಕಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡಿರುವ ಖದೀಮರಿಗೆ ದೇವರು-ದೈವ, ದೇವಸ್ಥಾನಗಳೆಂಬ ಭಯ-ಭಕ್ತಿಯಿಲ್ಲ. ಕಳ್ಳರಿಗೆ ಮನೆಯಾದರೇನು? ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ದೇವಾಲಯ, ಉತ್ಸವಗಳಾದರೇನು? ಕದ್ದು ಪರಾರಿಯಾಗುವುದೇ ಅವರ ಕೆಲಸ. ನೇಮೋತ್ಸವದಲ್ಲಿ ಭಕ್ತರಂತೆ ಬಂದ ಕಳ್ಳಿಯರಿಬ್ಬರು ವೃದ್ಧೆಯ ಚಿನ್ನದ ಸರ ಕದ್ದು ಪರಾರಿಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವದ ವೇಳೆ ಮೂವರು ಕಳ್ಳಿಯರು ವೃದ್ಧೆಯ ಚಿನ್ನದ ಸರ ಕದ್ದು ಎಸ್ಕೇಪ್ ಆಗಿದ್ದಾರೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರೆದು […]
ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಂಗಳೂರಿಗೆ?
ಮಂಗಳೂರು-ಮಡಗಾಂವ್ (ಗೋವಾ) ನಡುವೆ ವಂದೇ ಭಾರತ್ ರೈಲು ಸೇವೆ ಇದೆ. 2023ರ ಡಿಸೆಂಬರ್ನಲ್ಲಿ ಈ ರೈಲು ಸೇವೆ ಆರಂಭವಾಗಿದೆ. ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವೆ ವಂದೇ ಭಾರತ್ ರೈಲು ಬೇಕು ಎಂಬ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ರೈಲ್ವೆ ಸಚಿವರ ಮುಂದೆ ಹೊಸ ಬೇಡಿಕೆ ಇಡಲಾಗಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ […]
BIG NEWS: ದೆಹಲಿಯಲ್ಲಿ CWC ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು: ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ ಎಂದರು. ಇನ್ನು ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆ ವಿಚಾರವಾಗಿ, ನನ್ನನ್ನು ಕರೆದರೆ ಖಂಡಿತಾ […]
ಮಾರ್ಕ್ ಚಿತ್ರದ ಮೊದಲ ದಿನದ ಕಲೆಕ್ಷನ್ ಬಹಿರಂಗ; ಹೇಳಿಕೊಳ್ಳುವಂತಹ ಗಳಿಕೆಯಲ್ಲ!
ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ವಿಜಯ್ ಕಾರ್ತಿಕೇಯ ಕಾಂಬಿನೇಷನ್ನ ಎರಡನೇ ಚಿತ್ರ ಮಾರ್ಕ್ ನಿನ್ನೆ ಕ್ರಿಸ್ಮಸ್ ದಿನದಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಕಳೆದ ವರ್ಷ ಮ್ಯಾಕ್ಸ್ ಮೂಲಕ ಗೆದ್ದಿದ್ದ ಈ ಜೋಡಿ ಈ ಬಾರಿ ಅಂತಹದ್ದೇ ಪ್ರಯತ್ನವನ್ನು ಮಾಡಿದೆ. ಮ್ಯಾಕ್ಸ್ ರೀತಿಯೇ ಮೂಡಿಬಂದಿರುವ ಮಾರ್ಕ್ ಅಭಿಮಾನಿಗಳ ಪಾಲಿಗೆ ಇಷ್ಟವಾದರೆ ಸಾಮಾನ್ಯ ಪ್ರೇಕ್ಷಕರಿಗೆ ಒಂದೊಮ್ಮೆ ನೋಡಬಹುದು ಎನಿಸುತ್ತದೆ. ಹೀಗೆ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ಮಾರ್ಕ್ ರಾಜ್ಯಾದ್ಯಂತ ೨೦೦ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಅತ್ತ ತಮಿಳುನಾಡಿನಲ್ಲಿ ಮಾರ್ಕ್ ತಮಿಳು ಡಬಿಂಗ್ ಸಹ […]
BREAKING: ಬೆಂಗಳೂರಿನಲ್ಲಿ ಕತ್ತು ಕೊಯ್ದು ಸ್ಟಾಫ್ ನರ್ಸ್ ಬರ್ಬರ ಹತ್ಯೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಸ್ಟಾಫ್ ನರ್ಸ್ ಓರ್ವರನ್ನು ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. 39 ವರ್ಷದ ಮಮತಾ ಕೊಲೆಯಾಗಿರುವ ನರ್ಸ್. ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಮತಾ, ತನ್ನ ಸ್ನೇಹಿತೆ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಡಿಸೆಂಬರ್ 24ರಂದು ಸ್ನೇಹಿತೆ ಊರಿಗೆ ಹೋಗಿದ್ದಳು. ಈ ವೇಳೆ ಅಂದು […]
ಡಿ.ಕೆ.ಶಿವಕುಮಾರ್ ಬಳಿಕ ಈಗ ಸಿದ್ದರಾಮಯ್ಯ ದೆಹಲಿ ಪ್ರಯಾಣ!
ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಮುಗಿಸಿ ವಾಪಸ್ ಆಗಿದ್ದಾರೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ವಿಮಾನ ಏರುತ್ತಿದ್ದಾರೆ. ಆದರೆ ಈ ಬಾರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತೆ ದೆಹಲಿಗೆ ಹೋಗಲಿದ್ದಾರೆಯೇ? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ದೆಹಲಿ ಪ್ರವಾಸದಲ್ಲಿ ಇರುತ್ತಾರೆ. ಡಿಸೆಂಬರ್ 27ರ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಭೆಗೆ ಆಹ್ವಾನ ನೀಡಲಾಗಿದೆ. ದೆಹಲಿ ಭೇಟಿ ಬಳಿಕ ಮಾತನಾಡಿದ್ದ ಡಿ.ಕೆ.ಶಿವಕುಮಾರ್, “ಕಾಂಗ್ರೆಸ್ ಕಾರ್ಯಕಾರಿ ಸಮಿತಿ […]
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅವರು ಕೇವಲ ಬ್ಯಾಟಿಂಗ್ನಿಂದ ಮಾತ್ರವಲ್ಲ, ತಮ್ಮ ವಿನೋದಭರಿತ ನಡವಳಿಕೆಯಿಂದಲೂ ಸುದ್ದಿಯಾಗುತ್ತಾರೆ. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಸಿಕ್ಕಿಂ ವಿರುದ್ಧದ ವಿಜಯ್ ಹಜಾರೆ ಟ್ರೋಫಿ ಪಂದ್ಯದ ವೇಳೆ ಇಂತಹದ್ದೇ ಒಂದು ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ವಡಾ ಪಾವ್ ಮತ್ತು ರೋಹಿತ್: ಪಂದ್ಯದ ನಡುವೆ ರೋಹಿತ್ ಶರ್ಮಾ ಅವರು ಬೌಂಡರಿ ಲೈನ್ ಬಳಿ ಫೀಲ್ಡಿಂಗ್ ಮಾಡುತ್ತಿದ್ದಾಗ, ಅಲ್ಲಿದ್ದ ಅಭಿಮಾನಿಯೊಬ್ಬ ಕಾಲೆಳೆಯುವ ಉದ್ದೇಶದಿಂದಲೇ […]
ಬೆಂಗಳೂರು: ಆಧುನಿಕವಾಗಿ, ಶೈಕ್ಷಣಿಕವಾಗಿ ಜಗತ್ತು ಅದೇಷ್ಟೇ ಬೆಳೆದು ನಿಂತಿದ್ದರೂ ವರದಕ್ಷಿಣೆಯ ಪಿಡುಗು ಮಾತ್ರ ಇನ್ನೂ ನಿಂತಿಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಪತಿ ಹಾಗೂ ಮನೆಯವರ ವರದಕ್ಷಿಣೆ ಕಿರುಕುಳ, ಧನದಾಹಕ್ಕೆ ನವವಿವಾಹಿತೆಯರೇ ಬಲಿಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 58ದಿನಗಳ ಹಿಂದಷ್ಟೇ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದ ನವವಿವಾಹಿತೆ ಪತಿಯ ವರದಕ್ಷಿಣೆ ಕಿರುಕುಳ, ಅವಮಾನಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಮಮೂರ್ತಿ ನಗರದಲ್ಲಿ ಈ ಘಟನೆ ನಡೆದಿದೆ. ಗಾನವಿ ಮೃತ ನವವಿವಾಹಿತೆ. ಕೆಲ ದಿನಗಳ […]
ಲಂಡನ್ನ ಬೀದಿಗಳು ಈಗ ವಿಚಿತ್ರ ಕಾರಣಕ್ಕೆ ಸುದ್ದಿಯಲ್ಲಿವೆ. ಭಾರತ ಮತ್ತು ದಕ್ಷಿಣ ಏಷ್ಯಾದ ದೇಶಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಗುಟ್ಕಾ ಮತ್ತು ಪಾನ್ ಕಲೆಗಳು ಈಗ ಲಂಡನ್ನ ವೆಂಬ್ಲಿ (Wembley) ರಸ್ತೆಗಳನ್ನು ಅಸಹ್ಯಗೊಳಿಸುತ್ತಿವೆ. ಈ ಬಗ್ಗೆ ಲಂಡನ್ ಪತ್ರಕರ್ತೆ ಬ್ರೂಕ್ ಡೇವಿಡ್ ಹಂಚಿಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವರದಿಯ ಮುಖ್ಯಾಂಶಗಳು: 1. 30 ನಿಮಿಷದಲ್ಲಿ 50 ಕಲೆಗಳು: ಪತ್ರಕರ್ತೆ ಬ್ರೂಕ್ ಡೇವಿಡ್ ವೆಂಬ್ಲಿ ಬೀದಿಗಳಲ್ಲಿ ಕೇವಲ 30 ನಿಮಿಷಗಳ ಕಾಲ ನಡೆದಾಗ ಬರೋಬ್ಬರಿ […]
BREAKING: ಕ್ಷುಲ್ಲಕ ಕಾರಣಕ್ಕೆ ಜಗಳ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
ಕೋಲಾರ: ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರ ಜಿಲ್ಲೆಯ ವೇಮಗಲ್ ತಾಲೂಕಿನ ಕುರುಗಲ್ ಗೇಟ್ ಬಳಿ ನಡೆದಿದೆ. ಓಡಿಶಾ ಮೂಲದ ಯುವಕ ಸಂದೀಪ್ ಸಿಂಗ್ ಕೊಲೆಯಾದ ಯುವಕ. ಬೆಂಗಳೂರು ಮೂಲದ ಮನೋಜ್ ಹಾಗೂ ಬಳ್ಳಾರಿ ಮೂಲದ ರಾಜಾರೆಡ್ಡಿ ಎಂಬುವವರು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಒಟ್ಟಿಗೆ ಕುಳಿತು ಮದ್ಯ ಸೇವಿಸುತ್ತಿದ್ದಾಗ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಸಂದೀಪ್ ಜೊತೆ ಮನೋಜ್ ಹಾಗೂ ರಾಜಾರೆಡ್ಡಿ ಗಲಾಟೆ ಆರಂಭಿಸಿದ್ದಾರೆ. […]

25 C