ಕಾಶ್ಮೀರಿ ಬೆಡಗಿಗೆ ಮನಸೋತ ಟೀಮ್ ಇಂಡಿಯಾ ಆಲ್ರೌಂಡರ್
ಮುಂಬಯಿ ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಈಗ ತನ್ನ ವೈಯಕ್ತಿಕ ಜೀವನದ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮೂಲಗಳ ಪ್ರಕಾರ ಕ್ರೀಡಾ ನಿರೂಪಕಿ ಹಾಗೂ ಸಿನಿಮಾ ನಟಿ ಕಾಶ್ಮೀರ ಮೂಲದ ಸಾಹಿಬಾ ಬಾಲಿ ಅವರೊಂದಿಗೆ ವಾಷಿಂಗ್ಟನ್ ಸುಂದರ್ ಡೇಟಿಂಗ್ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಇವರಿಬ್ಬರು ಕಫೆಯೊಂದರಲ್ಲಿ ಇರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕ್ರಿಕೆಟ್ ಟೈಮ್ಸ್ ವರದಿಯ ಪ್ರಕಾರ, ವಾಷಿಂಗ್ಟನ್ ಸುಂದರ್ ಹಾಗೂ ಅವರ ಕುಟುಂಬ ವೈಯಕ್ತಿಕ ವಿಚಾರಗಳನ್ನು ಅತ್ಯಂತ ಖಾಸಗಿಯಾಗಿಟ್ಟಿದೆ ಎನ್ನಲಾಗಿದೆ. […]
ಹೊಳವನಹಳ್ಳಿ : ಕೃಷಿ ಇಲಾಖೆಯ ಗೋಡನ್ನಲ್ಲಿ ಶೇಖರಿಸಬೇಕಾದ ಕೃಷಿ ಉಪಕರಣಗಳು ಖಾಸಗಿ ಗೋಡನ್ನಲ್ಲಿ
ಕೊರಟಗೆರೆ:- ರೈತರ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಹಣ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುತ್ತಿದ್ದರೂ ಸಹ ಅಧಿಕಾರಗಳ ಹಣದಾಹಕ್ಕೆ ಯೋಜನೆಗಳು ಲೋಪ ಗೊಳ್ಳುತ್ತಿದ್ದು ಇದಕ್ಕೆ ತಾಜಾ ಉದಾಹರಣೆ ಎಂಬುವಂತೆ ಹೊಳವನಹಳ್ಳಿ ಕೃಷಿ ಇಲಾಖೆಯ ಗೋಡನ್ನಲ್ಲಿ ಶೇಖರಿಸಬೇಕಾದ ಕೃಷಿ ಉಪಕರಣಗಳು ಖಾಸಗಿ ಗೋಡನ್ನಲ್ಲಿ ಶೇಖರಣೆ ಗೊಳ್ಳುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ . ಕೊರಟಗೆರೆ ತಾಲೂಕಿನ ಕೃಷಿ ಇಲಾಖೆಯ ಉಪ ಕೇಂದ್ರ ಹೊಳವನಹಳ್ಳಿ ಕೃಷಿ ಇಲಾಖೆಯಲ್ಲಿ ರೈತರ ಬಳಕೆಗಾಗಿ ನೀಡಲಾದ ಸ್ಪಿಂಕ್ಲರ್ ಇದ್ದರೂ ಸಹ ಖಾಸಗಿ ಗೋಡನ್ […]
ಕೆ ಎಸ್ ಸಿ ಎ : ಕ್ರಿಕೆಟ್ ಸಲಹಾ ಸಮಿತಿ ರಚನೆ ….!
ಬೆಂಗಳೂರು : ದಂತಕಥೆಯಾದ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಹೊಸದಾಗಿ ಚುನಾಯಿತರಾದ ಆಡಳಿತ ಮಂಡಳಿಯ ಅಡಿಯಲ್ಲಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಈ ಕೆಳಗಿನ ಶ್ರೇಷ್ಠ ಸದಸ್ಯರೊಂದಿಗೆ ಕ್ರಿಕೆಟ್ ಸಲಹಾ ಸಮಿತಿಯನ್ನು (ಸಿಎಸಿ) ರಚಿಸಿದೆ: * ಅನಿಲ್ ಕುಂಬ್ಳೆ * ಜಾವಗಲ್ ಶ್ರೀನಾಥ್ * ಸುನಿಲ್ ಜೋಶಿ * ವಿಜಯ್ ಭಾರದ್ವಾಜ್ * ಜಯಶ್ರೀ ದೊರೈಸ್ವಾಮಿ ತನ್ನ ಮೊದಲ ಸಭೆಯಲ್ಲಿ, ಕ್ರಿಕೆಟ್ ಸಲಹಾ ಸಮಿತಿಯು ಪ್ರಸಕ್ತ […]
ಗ್ಲೌಸ್ ಧರಿಸದೆ ಬರಿಗೈಯಲ್ಲಿ ಗ್ರಾಹಕರಿಗೆ ರಾಗಿ ಮುದ್ದೆ ಬಡಿಸಿದ ರೆಸ್ಟೋರೆಂಟ್ ಸಿಬ್ಬಂದಿ: ನೆಟ್ಟಿಗರಿಂದ ಆಕ್ರೋಶ
ಬೆಂಗಳೂರು ಮನೆಯಲ್ಲೇ ತಯಾರಿಸಿದ ಆಹಾರ ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ. ಆದರೆ ಕೆಲವೊಮ್ಮೆ ಅನಿವಾರ್ಯವಾಗಿ ಊಟಕ್ಕಾಗಿ ಹೊಟೇಲ್, ರೆಸ್ಟೋರೆಂಟ್ ಮೊರೆ ಹೋಗಬೇಕಾಗುತ್ತದೆ. ಇತ್ತೀಚಿಗೆ ಕೆಲವು ಹೋಟೆಲ್ಗಳು ಸ್ವಚ್ಛತೆ ವಿಚಾರದಲ್ಲಿ ಎಡವುದು ಸಾಮಾನ್ಯ ಎಂಬಂತಾಗಿದೆ. ಈ ಬಗ್ಗೆ ಗ್ರಾಹಕರಿಂದಲೂ ದೂರುಗಳು ಕೇಳಿ ಬರುತ್ತಲೇ ಇರುತ್ತದೆ. ಅದೇ ರೀತಿ ಕರ್ನಾಟಕದ ರೆಸ್ಟೋರೆಂಟ್ ಒಂದರಲ್ಲಿ ಸಿಬ್ಬಂದಿಯೊಬ್ಬರು ಗ್ಲೌಸ್ ಬಳಸದೆ ಬರೀ ಕೈಯಲ್ಲಿ ರಾಗಿ ಮುದ್ದೆ ಉಂಡೆ ಮಾಡಿ ಗ್ರಾಹಕರಿಗೆ ಬಡಿಸುತ್ತಿರುವ ವಿಡಿಯೊ ವೈರಲ್ ಆಗಿದೆ. ರೆಸ್ಟೋರೆಂಟ್ ಸಿಬ್ಬಂದಿ ನೈರ್ಮಲ್ಯ […]
GPS tracker: ನೌಕಾನೆಲೆ ಬಳಿ ವಲಸೆ ಬಂದ ಹಕ್ಕಿಯಲ್ಲಿ ಜಿಪಿಎಸ್ ಟ್ರ್ಯಾಕರ್ ಪತ್ತೆ……!
ಕಾರವಾರ ಇಲ್ಲಿನ ಕಡಲ ತೀರ ಭಾಗದ ತಿಮ್ಮಕ್ಕ ಗಾರ್ಡನ್ ಹಿಂಭಾಗದಲ್ಲಿ ಕೂತಿದ್ದ ಸೀಗಲ್ ಹಕ್ಕಿಯ ಬೆನ್ನಿನ ಭಾಗದಲ್ಲಿ ಚೀನಾದ ಜಿಪಿಎಸ್ ಟ್ರ್ಯಾಕರ್ ಪತ್ತೆಯಾಗಿದೆ. ಇದರಿಂದ ಕಾರವಾರದ ನೌಕಾನೆಲೆಯ ಬಗ್ಗೆ ಚೀನಾ ಗೂಢಚರ್ಯೆ ನಡೆಸುತ್ತಿದೆಯೇ ಅನ್ನೋ ಶಂಕೆ ವ್ಯಕ್ತವಾಗಿದೆ. ನೋಡಲು ಭಿನ್ನವಾಗಿ ಕಂಡ ಈ ಹಕ್ಕಿಯನ್ನ ನೋಡಿದ ಸ್ಥಳೀಯರು ಅರಣ್ಯ ಇಲಾಖೆಯ ಮರೈನ್ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಹಕ್ಕಿಯನ್ನ ಹಿಡಿದು ಪರಿಶೀಲಿಸಿದ್ದಾರೆ. ಈ ವೇಳೆ ಸೀಗಲ್ನ ಬೆನ್ನಿನಲ್ಲಿದ್ದ […]
ಢಾಕಾ : ವೀಸಾ ಅರ್ಜಿ ಕೇಂದ್ರ ಮುಚ್ಚಿದ ಭಾರತ
ಢಾಕಾ ಉಗ್ರಗಾಮಿಗಳ ಬೆದರಿಕೆಗಳು ಮತ್ತು ಬಾಂಗ್ಲಾದೇಶದ ನಾಯಕರ ಪ್ರಚೋದನಕಾರಿ ಹೇಳಿಕೆಗಳ ನಂತರ ಹೆಚ್ಚುತ್ತಿರುವ ಭದ್ರತಾ ಅಪಾಯದ ನಡುವೆ ಭಾರತವು ಬುಧವಾರ ಢಾಕಾದಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಬಾಂಗ್ಲಾದೇಶದ ಢಾಕಾದ ಜಮುನಾ ಫ್ಯೂಚರ್ ಪಾರ್ಕ್ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರವು ಭಾರತೀಯ ವೀಸಾ ಸೇವೆಗಳಿಗೆ ಪ್ರಮುಖ ಕಚೇರಿ ಎನಿಸಿಕೊಂಡಿದೆ. ಭದ್ರತಾ ಅಪಾಯ ಇರುವುದರಿಂದ ಅಪರಾಹ್ನ 2 ಗಂಟೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಬುಧವಾರ ಅಪಾಯಿಂಟ್ಮೆಂಟ್ಗಳನ್ನು ಹೊಂದಿದ್ದ ಎಲ್ಲ ಅರ್ಜಿದಾರರನ್ನು ಮುಂದಿನ ದಿನಾಂಕಕ್ಕೆ ಮರು […]
ಬುರ್ಖಾ ಧರಿಸದೆ ಹೊರಗೆ ಹೋಗಿದ್ದಕ್ಕೆ ಪತ್ನಿ, ಮಕ್ಕಳನ್ನು ಗುಂಡಿಟ್ಟು ಕೊಂದ ಪಾಪಿ
ಲಖನೌ ಬುರ್ಖಾ ಧರಿಸದೆ ಹೊರಗೆ ಬಂದಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಫಾರೂಕ್ ಎಂಬ ವ್ಯಕ್ತಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳ ಮೇಲೆ ಗುಂಡು ಹಾರಿಸಿ ಕೊಂದಿದ್ದಾನೆ. ನಂತರ ಶವಗಳನ್ನು ಅಂಗಳದಲ್ಲಿ ಶೌಚಾಲಯಕ್ಕಾಗಿ ಅಗೆದ ಗುಂಡಿಯಲ್ಲಿ ಹೂತು ಕಾಂಕ್ರೀಟ್ನಿಂದ ಮುಚ್ಚಿದ್ದಾನೆ. ಆರೋಪಿ ಫಾರೂಕ್ನ ಪತ್ನಿ ಮತ್ತು ಹೆಣ್ಣುಮಕ್ಕಳ ಶವಗಳನ್ನು ಹೊರತೆಗೆಯಲು […]
ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವ ಕೇಂದ್ರದ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ!
ಬೆಳಗಾವಿ: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ ‘ದ್ವೇಷ ರಾಜಕೀಯ’ ನಡೆಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಬುಧವಾರ ಬೃಹತ್ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ ಸೌಧದ ಗಾಂಧಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.ಸುದ್ದಿಗಾರರೊಂದಿಗೆ ಮಾತನಾಡಿದ […]
ಫೋನ್ ಕರೆ ಸ್ವೀಕರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ: ಮುಖ್ಯ ಕಾರ್ಯದರ್ಶಿಗೆ ಹೊರಟ್ಟಿ ಪತ್ರ..!
ಬೆಂಗಳೂರು: ಅಧಿಕಾರಿಗಳು ಜನರ ಕರೆಗೆ, ಮನವಿಗೆ ಸ್ಪಂದಿಸದಿದ್ದಲ್ಲಿ ಅದು ಆಡಳಿತ ಯಂತ್ರದ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ, ಈ ಬಗ್ಗೆ ಸೂಕ್ತ ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ್ದಾರೆ. ಈ ಕುರಿತು ರಾಜ್ಯದ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿರುವು ಅವರು, ಶಾಸಕರುಗಳು & ಸಾರ್ವಜನಿಕ ಹಿತದೃಷ್ಟಿಯಿಂದ ಕುಂದುಕೊರತೆಗಳನ್ನು ಚರ್ಚಿಸಲು ತುರ್ತಾಗಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಕೆಲವು ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ. ಒಂದು ವೇಳೆ ಅಧಿಕಾರಿಗಳು ಆ […]
GIMS ನಿಂದ KIMS ಗೆ ಶಾಸಕರ ಸಂಬಂಧಿ ವರ್ಗಾವಣೆ: ನಿಯಮ ಉಲ್ಲಂಘಿಸಿದ್ದಕ್ಕೆ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ!
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಸೂಚನೆಯ ಮೇರೆಗೆ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಡಾ. ಕೇಶವ ಅಬ್ಬಯ್ಯ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ದಂತ ಚಿಕಿತ್ಸಾ ವಿಭಾಗಕ್ಕೆ ವರ್ಗಾಯಿಸಿದ್ದಕ್ಕಾಗಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಇದು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಕಿಮ್ಸ್ನ ಪ್ರಾಧ್ಯಾಪಕ ಡಾ. ಸುನೀಲ್ ಜಿ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ […]
ಬ್ಯಾಂಕ್ ಸಾಲದಲ್ಲಿ ಸುಧಾರಣೆ ಹಿನ್ನೆಲೆ ಕರ್ನಾಟಕದ NABARD ಅನುದಾನ ಕಡಿತ: ಕೇಂದ್ರ ಸರ್ಕಾರ ಸ್ಪಷ್ಟನೆ
ಶಿವಮೊಗ್ಗ: ಕರ್ನಾಟಕಕ್ಕೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಂದ ಇತ್ತೀಚಿನ ವರ್ಷಗಳಲ್ಲಿ ಅನುದಾನ ಕಡಿಮೆಯಾಗಲು ಬ್ಯಾಂಕ್ಗಳು ತಮ್ಮ ಆದ್ಯತಾ ವಲಯದ ಸಾಲ ಗುರಿಗಳನ್ನು ಉತ್ತಮವಾಗಿ ಪೂರೈಸಿರುವುದು ಕಾರಣ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.ಲೋಕಸಭೆಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರ ಪ್ರಶ್ನೆಗೆ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಉತ್ತರ ನೀಡಿದರು. ಬ್ಯಾಂಕಿಂಗ್ ವ್ಯವಸ್ಥೆಯಿಂದ ಆರ್ಥಿಕತೆಯ ನಿರ್ಣಾಯಕ ವಲಯಗಳಿಗೆ ಸಾಲದ ಹರಿವನ್ನು […]
ರಾಜ್ಯದ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ; ಡಿಜಿಪಿ ಅಲೋಕ್ ಕುಮಾರ್
ಬೆಂಗಳೂರು: ರಾಜ್ಯದಾದ್ಯಂತ ಕಳೆದ 36 ಗಂಟೆಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್ಗಳು ಮತ್ತು ಗಾಂಜಾ ಸೇರಿದಂತೆ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಕಾರಾಗೃಹ) ಅಲೋಕ್ ಕುಮಾರ್ ಬುಧವಾರ ಹೇಳಿದರು. ಬೆಂಗಳೂರಿನ ಜೈಲಿನಿಂದ ಆರು ಮೊಬೈಲ್ ಫೋನ್ಗಳು ಮತ್ತು ನಾಲ್ಕು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮೈಸೂರು ಜೈಲಿನಿಂದ ಒಂಬತ್ತು ಮೊಬೈಲ್ ಫೋನ್ಗಳು ಮತ್ತು 11 ಸಿಮ್ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ‘ಬೆಳಗಾವಿ ಜೈಲಿನಲ್ಲಿ ನಾಲ್ಕು ಮೊಬೈಲ್ ಫೋನ್ಗಳು […]
ಸೇಡಿನ ರಾಜಕಾರಣ ಮಾಡುವ ನರೇಂದ್ರ ಮೋದಿ, ಅಮಿತ್ ಶಾ ರಾಜೀನಾಮೆ ನೀಡಬೇಕು: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ದೂರನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದನ್ನು ಕಾಂಗ್ರೆಸ್ ಸ್ವಾಗತಿಸಿದೆ. ಈ ಬೆಳವಣಿಗೆಯಿಂದ ಪ್ರಕರಣವು ರಾಜಕೀಯ ದ್ವೇಷದಿಂದ ದೀರ್ಘಕಾಲದಿಂದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ ಎಂಬುದನ್ನು ಈ ಬೆಳವಣಿಗೆ ಸೂಚಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ. ಗಾಂಧಿ ಕುಟುಂಬವನ್ನು ಕಿರುಕುಳ ಮಾಡುವುದು ಮತ್ತು ವಿರೋಧ ಪಕ್ಷಗಳನ್ನು ಗುರಿಯಾಗಿಸುವುದು ಈ ಪ್ರಕರಣದ ಉದ್ದೇಶವಾಗಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. […]
ನವದೆಹಲಿ : ಭಾರತೀಯ ಸೇನೆಯ ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ಮೊದಲ ದಿನದಂದು ಭಾರತ ಸೋತಿತು. ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಅವರುವಿವಾದವನ್ನು ಹುಟ್ಟುಹಾಕಿದ್ದಾರೆ. ಪುಣೆಯಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವೇಳೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದರು. ಪಾಕಿಸ್ತಾನ ಸೇನೆಯು ಹೊಡೆದುರುಳಿಸುವ ಸಾಧ್ಯತೆಯ ನಡುವೆ ಭಾರತೀಯ ವಾಯುಪಡೆಯು ಸಂಪೂರ್ಣವಾಗಿ ನೆಲಸಮವಾಯಿತು ಎಂದು ಚವಾಣ್ ಆಘಾತಕಾರಿ ಮತ್ತು […]
NABARDನಿಂದ ಅನುದಾನ ಕಡಿತ, ಕೃಷಿ ಸಾಲಕ್ಕೆ ತೊಂದರೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: 2024–25ನೇ ಸಾಲಿನಲ್ಲಿ ರಾಜ್ಯಕ್ಕೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಿಂದ ನೀಡಲಾಗುತ್ತಿದ್ದ ಕಡಿಮೆ ಬಡ್ಡಿ ದರದ ಹಣಕಾಸು ವ್ಯವಸ್ಥೆಯಲ್ಲಿ 2,185 ಕೋಟಿ ರೂಪಾಯಿಗಳ ಕಡಿತವಾಗಿದ್ದು, ಇದರಿಂದ ರಾಜ್ಯದ ಕೃಷಿ ಸಾಲ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕುಣಿಗಲ್ ಶಾಸಕ ಡಾ.ಹೆಚ್.ಡಿ.ರಂಗನಾಥ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳು […]
ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಿ: ರಾಜ್ಯ ಸರ್ಕಾರಕ್ಕೆ ಶಾಸಕರ ಆಗ್ರಹ
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವಂತೆ ಜೆಡಿಎಸ್ ಶಾಸಕ ಶರಣಗೌಡ ಕುಂದಕೂರ್ ಅವರು ಆಗ್ರಹಿಸಿದ್ದಾರೆ.ಸದನದಲ್ಲಿ ಮಾತನಾಡಿರುವ ಅವರು, ದಕ್ಷಿಣ ಕರ್ನಾಟಕದಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ನನಗೆ ಯಾವುದೇ ರೀತಿಯ ಅಸೂಯೆ ಇಲ್ಲ. ಆದರೆ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡದಿರುವುದು ಕಳವಳ ತಂದಿದೆ. ಇಲ್ಲಿನ ಪ್ರಸ್ತುತದ ಸ್ಥಿತಿಗೆ ಜನರು ಹಾಗೂ ಚುನಾಯಿತ ಪ್ರತಿನಿಧಿಗಳು ಎಲ್ಲರೂ ಹೊಣೆಗಾರರಾಗಿರುತ್ತಾರೆಂದು ಹೇಳಿದರು. 7-8 ಬಾರಿ ಆಯ್ಕೆಯಾದ ಸದಸ್ಯರು ಈ ಪ್ರದೇಶದ ಅಭಿವೃದ್ಧಿಯ ಬಗ್ಗೆ […]
ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್ ಕಿಮೋಥೆರಪಿ ಕೇಂದ್ರಗಳ ಸ್ಥಾಪನೆ: ಡಾ. ಶರಣಪ್ರಕಾಶ್ ಪಾಟೀಲ್
ಬೆಳಗಾವಿ: ರಾಜ್ಯ ಸರ್ಕಾರವು ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್ ಕಿಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿದ್ದಾರೆ. ಎಂಎಲ್ಸಿ ಕುಶಾಲಪ್ಪ ಎಂಪಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶರಣಪ್ರಕಾಶ್ ಪಾಟೀಲ್, ಕ್ಯಾನ್ಸರ್ ಚಿಕಿತ್ಸೆಯನ್ನು ವಿಕೇಂದ್ರೀಕರಿಸುವುದು ಮತ್ತು ಬೆಂಗಳೂರಿನ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ಮೇಲಿನ ಹೊರೆ ಕಡಿಮೆ ಮಾಡುವ ಗುರಿಯನ್ನು ಸರ್ಕಾರದ್ದಾಗಿದೆ ಎಂದು ಹೇಳಿದರು. ಇದನ್ನು ಪರಿಹರಿಸಲು, ಸರ್ಕಾರವು ಕಿದ್ವಾಯಿ […]
ನಾಗರಹೊಳೆ ಅಭಯಾರಣ್ಯದಲ್ಲಿ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು……!
ಬೆಂಗಳೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ (ಎನ್ಟಿಆರ್) ಬಳಿಯ ಕಾಫಿ ಎಸ್ಟೇಟ್ನಲ್ಲಿ ಬಲೆಯಲ್ಲಿ ಸಿಲುಕಿದ ಐದು ವರ್ಷದ ಗಂಡು ಹುಲಿಯ ಸಾವು ಹಲವು ಕಳವಳಗಳನ್ನು ಹುಟ್ಟುಹಾಕಿದೆ. ಕೊಡಗು ಪ್ರಾದೇಶಿಕ ಅರಣ್ಯ ವಿಭಾಗದ ಶ್ರೀಮಂಗಲ ಗ್ರಾಮದ ಕುಶಾಲನಗರದ ಮೀನಕೊಲ್ಲಿ ವಿಭಾಗದ ದುಬಾರೆ ಅರಣ್ಯದಿಂದ 5 ಕಿಮೀ ದೂರದಲ್ಲಿರುವ ಎಸ್ಟೇಟ್ನಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಸ್ಥಳೀಯರು ಮೃತದೇಹವನ್ನು ನೋಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಹುಲಿ ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದೆ. ಮೃತದೇಹ […]
ಸಿಡ್ನಿ ಗುಂಡಿನ ದಾಳಿ ಖಂಡಿಸಿದ ಟ್ರಂಪ್……!
ವಾಷಿಂಗ್ಟನ್: ಶ್ವೇತಭವನದ ಹನುಕ್ಕಾ ಸ್ವಾಗತ ಸಮಾರಂಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮೂಲಭೂತವಾದಿ ಇಸ್ಲಾಂ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವಂತೆ ರಾಷ್ಟ್ರಗಳಿಗೆ ಕರೆ ನೀಡಿದರು. ಎಲ್ಲಾ ರಾಷ್ಟ್ರಗಳು ಮೂಲಭೂತವಾದಿ ಇಸ್ಲಾಮಿಕ್ ಭಯೋತ್ಪಾದನೆಯ ದುಷ್ಟ ಶಕ್ತಿಗಳ ವಿರುದ್ಧ ಒಟ್ಟಾಗಿ ನಿಲ್ಲಬೇಕು, ಮತ್ತು ನಾವು ಅದನ್ನೇ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಆಸ್ಟ್ರೇಲಿಯದಲ್ಲಿ ನಡೆದ ಯಹೂದಿಗಳ ಮೇಲಿನ ಭಯೋತ್ಪಾದಕ ದಾಳಿಯ ಬಳಿಕ ಟ್ರಂಪ್ರಿಂದ ಈ ಹೇಳಿಕೆಗಳು ಬಂದಿವೆ. ಯಹೂದಿ ರಜಾದಿನವು ಡಿಸೆಂಬರ್ 14 ರಂದು ಪ್ರಾರಂಭವಾಯಿತು ಮತ್ತು ಡಿಸೆಂಬರ್ […]
ʻಲ್ಯಾಂಡ್ಲಾರ್ಡ್ʼ ಸಿನಿಮಾದಿಂದ ಬಂತು ಬಿಗ್ ಅಪ್ಡೇಟ್….!
ಬೆಂಗಳೂರು : ಸದ್ಯ ಸ್ಯಾಂಡಲ್ವುಡ್ನಲ್ಲಿ ಗಮನ ಸೆಳೆಯುತ್ತಿರುವ ಚಿತ್ರಗಳಲ್ಲಿ ʼಲ್ಯಾಂಡ್ಲಾರ್ಡ್ʼ ಕೂಡ ಒಂದು. ಸ್ಯಾಂಡಲ್ವುಡ್ ಸಲಗ, ದುನಿಯಾ ವಿಜಯ್ ಅಭಿನಯದ ಚಿತ್ರ ಇದಾಗಿದ್ದು, ಸಾರಥಿ ಫಿಲಂಸ್ ಬ್ಯಾನರ್ನಡಿ ಮೂಡಿಬರುತ್ತಿದೆ. ಹೇಮಂತ್ ಗೌಡ ಕೆ.ಎಸ್. ಹಾಗೂ ಕೆ.ವಿ. ಸತ್ಯಪ್ರಕಾಶ್ ನಿರ್ಮಾಣ ಮಾಡಿದ್ದು, ಜಡೇಶ ಕೆ. ಹಂಪಿ ನಿರ್ದೇಶನದ ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ ಇದಾಗಿದೆ. ಇದೀಗ ಈ ಸಿನಿಮಾದ ನಿಂಗವ್ವ ಸಾಂಗ್ ಪ್ರೋಮೋ ಔಟ್ ಆಗಿದೆ. ದೊಡ್ಡ ಮೊತ್ತ ಸಾಲು ಸಾಲು […]
ಭಟ್ಕಳ ತಹಸೀಲ್ದಾರ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ
ಭಟ್ಕಳ : ಭಟ್ಕಳ ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಡಿಸೆಂಬರ್ 16ರ ಬೆಳಗ್ಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಸಿಬ್ಬಂದಿ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಬೆಳಗ್ಗೆ 7.25ರ ಸುಮಾರಿಗೆ ತಹಸೀಲ್ದಾರ್ ಕಚೇರಿಯ ಇ ಮೇಲ್ ಐ ಡಿಗೆ”gaina ramesh@outlook.com” ಎಂಬ ಇಮೇಲ್ನಿಂದ ಕನ್ನಡದಲ್ಲಿ ಬಂದ ಸಂದೇಶದಲ್ಲಿ ಕಚೇರಿ ಆವರಣದಲ್ಲಿ ಶೀಘ್ರದಲ್ಲೇ ಬಾಂಬ್ ಸ್ಫೋಟವಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದ್ದು, ಎಲ್ಲರನ್ನೂ ತಕ್ಷಣ ತೆರವುಗೊಳಿಸುವಂತೆ ಸೂಚಿಸಲಾಗಿತ್ತು.ಇದು ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಎಂಬ […]
ಸತ್ತಿದ್ದೇನೆ ಎಂದು ನಾಟಕವಾಡಿದ ಆರೋಪಿ ಅರೆಸ್ಟ್
ಮುಂಬೈ ಮಹಾರಾಷ್ಟ್ರದ ಲೂತೂರು ಬಳಿ ಬೆಂಕಿಯಿಂದ ಹೊತ್ತಿ ಉರಿದಿದ್ದ ಕಾರಿನಲ್ಲಿ ಸುಟ್ಟ ಶವವೊಂದು ಪತ್ತೆಯಾದ ಪ್ರಕರಣ ಇತ್ತೀಚೆಗೆ ದೇಶದ ಗಮನ ಸೆಳೆದಿತ್ತು. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇದೀಗ ಪ್ರಕರಣವನ್ನು ಭೇದಿಸಿದ್ದಾರೆ. ತನಿಖೆ ವೇಳೆ ವ್ಯಕ್ತಿಯೊಬ್ಬ ತಾನು ಸತ್ತಿದ್ದೇನೆ ಎಂದು ಗೆಳತಿ ತಿಳಿದುಕೊಳ್ಳುವಂತಾಗಲು ಬೇರೊಬ್ಬ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಂದಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ತಾನು ಸತ್ತಿದ್ದೇನೆ ಎಂದು ತಿಳಿದು ತನ್ನ ಕುಟುಂಬ, ಗೆಳತಿ ದುಃಖಿಸಬೇಕು ಎಂದು ಈ ಕೃತ್ಯವೆಸಗಿದ್ದಾನೆ […]
ಪ್ರತ್ಯೇಕ ಕಂಪನಿ ಆದ ನಂತರ ಬ್ಲೂಸ್ಪ್ರಿಂಗ್ ತನ್ನ ಹೊಸ ಬ್ರ್ಯಾಂಡ್ ಗುರುತನ್ನು ಅನಾವರಣಗೊಳಿಸಿದೆ
ಬೆಂಗಳೂರು : ಭಾರತದ ಪ್ರಮುಖ ಒಗ್ಗೂಡಿತ ಮೂಲಸೌಕರ್ಯ ನಿರ್ವಹಣಾ ಸೇವೆ ಕಂಪನಿ ಬ್ಲೂಸ್ಪ್ರಿಂಗ್ ಎಂಟರ್ಪ್ರೈಸಸ್ ಲಿಮಿಟೆಡ್ ಇಂದು ತನ್ನ ಹೊಸ ಬ್ರ್ಯಾಂಡ್ ಗುರುತನ್ನು ಪರಿಚಯಿಸಿದೆ, ಇದರಲ್ಲಿ ಹೊಸ ಲೋಗೋ ಮತ್ತು ದೃಶ್ಯ ಶೈಲಿಯನ್ನು ನೋಡಬಹುದು. ಈ ಬ್ರ್ಯಾಂಡ್ ಬ್ಲೂಸ್ಪ್ರಿಂಗ್ ನ ಕ್ವೆಸ್ ಕಾರ್ಪ್ ನಿಂದ ವಿಭಜನೆ ಆದ ನಂತರ ಸ್ವತಂತ್ರ, ಪಟ್ಟಿಯಲ್ಲಿ ದಾಖಲೆಗೊಂಡ ಸಂಸ್ಥೆಯಾಗಿ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ಅತ್ಯಾವಶ್ಯಕ ಮೂಲಸೌಕರ್ಯ ಮತ್ತು ಜನಸಂಪರ್ಕ ಸೇವೆಗಳಲ್ಲಿ ತಂತ್ರಜ್ಞಾನ ಆಧಾರಿತ, ನಿಯಮಾನುಸಾರ ಪರಿಹಾರಗಳನ್ನು ಬೇಕಾದ ಸಂಸ್ಥೆಗಳಿಗೆ ವಿಶ್ವಾಸಾರ್ಹ […]
ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ : ವಿಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ : ಡಿ.ಕೆ. ಶಿವಕುಮಾರ್
ಬೆಂಗಳೂರು ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮುನಿರಾಜು ಅವರ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಮಂಗಳವಾರ ಉತ್ತರಿಸಿದರು. ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ಪ್ರಾರಂಭ ಹಾಗೂ ಕೆಲವರಿಗೆ ಪರಿಹಾರ ಬಾಕಿ ಇರುವ ವಿಚಾರವಾಗಿ ಶಾಸಕ ಮುನಿರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ʼಈ ಅಂಡರ್ […]
ವೇದಿಕೆ ಮೇಲೆ ವೈದ್ಯೆಯ ಹಿಜಾಬ್ ಎಳೆಯಲು ಮುಂದಾದ ಸಿಎಂ ನಿತೀಶ್ ಕುಮಾರ್ ….
ಪಟನಾ: ಬಿಹಾರ ಮುಖ್ಯಮಂತ್ರಿ ನಿತೇಶ್ ಕುಮಾರ್ ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವಾಗ ಮಹಿಳಾ ಆಯುಷ್ ವೈದ್ಯೆಯೊಬ್ಬರ್ ಹಿಜಾಬ್ಅನ್ನು ಎಳೆದಿದ್ದಾರೆ. ಸೋಮವಾರದಂದು ಪಟನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಯವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಹೊಸದಾಗಿ ನೇಮಕಗೊಂಡ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸುವ ಕಾರ್ಯಕ್ರಮ ಇದಾಗಿದೆ. ನೇಮಕಾತಿಗೊಂಡವರಲ್ಲಿ ಒಬ್ಬರಾದ ಮಹಿಳೆ ನುಸ್ರತ್ ಪರ್ವೀನ್ ಅವರ ಪತ್ರವನ್ನು ಸ್ವೀಕರಿಸಲು ಮುಂದೆ […]

25 C