ನವದೆಹಲಿ: 2025ರ ಡಿಸೆಂಬರ್ ನಲ್ಲಿ ವ್ಯಾಪಕವಾದ ವಿಮಾನ ರದ್ದತಿ ಮತ್ತು ವಿಳಂಬಗಳಿಗೆ ಪ್ರತಿಕ್ರಿಯೆಯಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂಡಿಗೋಗೆ 22.2 ಕೋಟಿ ರೂ. ದಂಡ ವಿಧಿಸಿದೆ ಮತ್ತು ವಿಮಾನಯಾನ ಸಂಸ್ಥೆಗೆ 50 ಕೋಟಿ ರೂ. ಬ್ಯಾಂಕ್ ಗ್ಯಾರಂಟಿ ನೀಡುವಂತೆ ಆದೇಶಿಸಿದೆ. ಇಂಡಿಗೋ 2,507 ವಿಮಾನಗಳನ್ನು ರದ್ದುಗೊಳಿಸಿತು ಮತ್ತು 1,852 ವಿಮಾನಗಳನ್ನು ವಿಳಂಬಗೊಳಿಸಿತು, ಇದರಿಂದಾಗಿ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಿಲುಕಿಕೊಂಡರು. ಅವ್ಯವಸ್ಥೆಯು ಭಾರಿ ಅನಾನುಕೂಲತೆಯನ್ನು ಸೃಷ್ಟಿಸಿತು, ಪ್ರಯಾಣಿಕರು ಕಾಯುವ ಸಮಯ, ಗೊಂದಲ ಮತ್ತು […]
NHM ಸಿಬ್ಬಂದಿಗೆ ಆರೋಗ್ಯ ಸಚಿವರಿಂದ ಗುಡ್ ನ್ಯೂಸ್: ಇನ್ಮುಂದೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(ಎನ್.ಎಚ್.ಎಂ.) ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿ ವಿಳಂಬವಾಗಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರವು 2025–26ರ ಹಣಕಾಸು ವರ್ಷದ ಮಧ್ಯದಲ್ಲಿ SNA-SPARSH ಪಾವತಿ ವ್ಯವಸ್ಥೆಯನ್ನು ನವೀಕರಿಸುವ ನೀತಿಯನ್ನು ಜಾರಿಗೆ ತಂದಿತ್ತು. ಈ ನವೀಕರಣದ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎರಡೂ ಕಡೆ ಪಾವತಿ ಪ್ರಕ್ರಿಯೆ ಹಾಗೂ ತಾಂತ್ರಿಕ ವ್ಯವಸ್ಥೆಗಳಲ್ಲಿ ಬದಲಾವಣೆ ಮತ್ತು ಮರುಹೊಂದಾಣಿಕೆ ನಡೆಯಬೇಕಾಗಿತ್ತು. ಈ ಹೊಸ ವ್ಯವಸ್ಥೆಗೆ ಹೊಂದಿಕೊಳ್ಳುವ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ಆರೋಗ್ಯ […]
ಶಿವಮೊಗ್ಗ: ಕರ್ನಾಟಕ ಸರ್ಕಾರ ಇತ್ತೀಚೆಗೆ ವಿವಿಧ ವಿಶ್ವವಿದ್ಯಾಲಯಗಳಿಗೆ ಪಿಂಚಣಿ ಅನುದಾನವನ್ನು ಮಂಜೂರು ಮಾಡಿದ್ದು, ಈ ಬಗ್ಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್ ಅವರು ನೀಡಿರುವ ಪ್ರತಿಕ್ರಿಯೆಗೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲ ವರ್ಷಗಳಿಂದ ಪಿಂಚಣಿ ಅನುದಾನ ಬಿಡುಗಡೆಯಾಗದೆ ನಿವೃತ್ತ ನೌಕಕರ ಸಂಕಷ್ಟಕ್ಕೆ ಕಾರಣವಾಗಿದ್ದ ವಿಚಾರಕ್ಕೆ ತಾತ್ಕಾಲಿಕವಾಗಿ ಮುಕ್ತಿ ದೊರಕಿದ್ದು, ಸರ್ಕಾರ ಆರು ವಿಶ್ವವಿದ್ಯಾಲಯಗಳಿಗೆ ವಿಶ್ರಾಂತಿ ವೇತನ ಅನುದಾನ ಬಿಡುಗಡೆ ಮಾಡಿದೆ. ಮೈಸೂರು ವಿವಿ, ಕರ್ನಾಟಕ ವಿವಿ, ಬೆಂಗಳೂರು, […]
ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕ್ಷೇತ್ರದಲ್ಲಿ 1,17,603 ಮಹಿಳೆಯರು ಸೇರಿ ಒಟ್ಟು 2,31,158 ಮತದಾರರು
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿದ್ದು, ನಿಗದಿತ ಅವಧಿಯಲ್ಲಿ ಹಕ್ಕು, ಆಕ್ಷೇಣೆಗಳಿದ್ದಲ್ಲಿ ಸಲ್ಲಿಸಲು ಸರ್ಕಾರದ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಡಾ. ಶಮ್ಲಾ ಇಕ್ಬಾಲ್ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಜನವರಿ 3 ರಂದು […]
BREAKING: ಅಸ್ಸಾಂನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಗುವಾಹಟಿ(ಅಸ್ಸಾಂ): ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಅಸ್ಸಾಂನಲ್ಲಿ ಸೆಮಿಕಂಡಕ್ಟರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ವಿರೋಧ ವ್ಯಕ್ತಪಡಿಸಿದ್ದರು. ಅಸ್ಸಾಂನಲ್ಲಿ ಸೆಮಿಕಂಡಕ್ಟರ್ ಏಕೆಂದು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದರು. ಇದು ಕಾಂಗ್ರೆಸ್ ಮನಸ್ಥಿತಿಯಾಗಿದೆ ಎಂದು ಅಸ್ಸಾಂನ ಗುವಾಹಟಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ನಾವು(ಬಿಜೆಪಿ) ಅಸ್ಸಾಂನ ಕಲೆ, ಸಂಸ್ಕೃತಿ ಮತ್ತು ಗುರುತನ್ನು ಗೌರವಿಸಿದಾಗ, ಕೆಲವು ರಾಜಕೀಯ ಜನರು ವಿರೋಧಿಸುತ್ತಾರೆ. ಭೂಪೇನ್ ಹಜಾರಿಕಾ ಅವರಿಗೆ ಭಾರತ ರತ್ನ ಪ್ರಶಸ್ತಿ ಸೇರಿದಂತೆ […]
ತಹಶೀಲ್ದಾರ್ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ FDA ಲೋಕಾಯುಕ್ತ ಬಲೆಗೆ
ಕಲಬುರಗಿ: ಕಲಬುರಗಿ ಜಿಲ್ಲೆ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರಥಮ ದರ್ಜೆ ಸಹಾಯಕ ಶಶಿಕಾಂತ್ ಜಂಜೀರ್ ಲೋಕಾಯುಕ್ತ ಬಲೆಗೆ ಬಿದ್ದ ನೌಕರ. ತಹಶೀಲ್ದಾರ್ ನಡೆಸಿದ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಆದೇಶ ಪ್ರತಿಯನ್ನು ಫಲಾನುಭವಿಗಳಿಗೆ ನೀಡಲು 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡಲು ಒತ್ತಾಯಿಸುತ್ತಿದ್ದರಿಂದ ಕಿಶನ್ ರಾಥೋಡ್ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶನಿವಾರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು […]
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಈ ಮೂಲಕ ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಗೃಹ ಇಲಾಖೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA)ಗೆ ಒಪ್ಪಿಗೆ ನೀಡಿದೆ. ನ್ಯಾ. ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಗೃಹ ಇಲಾಖೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. […]
U19 ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ಮೂಲಕ ಹೊಸ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ
ಬುಲವಾಯೊ(ಜಿಂಬಾಬ್ವೆ): ಭಾರತದ ಅದ್ಭುತ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಹೆಗ್ಗುರುತು ಪ್ರದರ್ಶನವು ಶನಿವಾರ ಬುಲವಾಯೊದಲ್ಲಿ ಬಾಂಗ್ಲಾದೇಶ ವಿರುದ್ಧದ 19 ವರ್ಷದೊಳಗಿನವರ ವಿಶ್ವಕಪ್ 2026 ರ ಪಂದ್ಯದ ನಿರ್ಣಾಯಕ ಕ್ಷಣವಾಯಿತು. ಕೇವಲ 14 ವರ್ಷ ಮತ್ತು 296 ದಿನಗಳಲ್ಲಿ ವೈಭವ್ 67 ಎಸೆತಗಳಲ್ಲಿ 72 ರನ್ ಗಳಿಸುವ ಮೂಲಕ ಪಂದ್ಯಾವಳಿಯ ದಾಖಲೆ ಪುಸ್ತಕಗಳಲ್ಲಿ ತನ್ನ ಹೆಸರನ್ನು ಕೆತ್ತಿದರು, ಇದರಲ್ಲಿ ಆರು ಬೌಂಡರಿಗಳು ಮತ್ತು ಮೂರು ಸಿಕ್ಸರ್ಗಳು ಸೇರಿವೆ. ಆರಂಭದಿಂದಲೂ ಅವರ ಆಟ ದೃಢವಾಗಿತ್ತು ಮತ್ತು ಅವರು ಕೇವಲ 30 […]
BREAKING: ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಯುವಕನ ಬರ್ಬರ ಹತ್ಯೆ; ಕಾರು ಹತ್ತಿಸಿ ಕೊಲೆ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣ ಮುಂದುವರೆದಿದೆ. ಇಂದು ಮತ್ತೋರ್ವ ಹಿಂದೂ ಯುವಕನನ್ನು ಕಾರು ಹತ್ತಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಾಂಗ್ಲಾದ ರಾಜ್ ಬರಿ ಜಿಲ್ಲೆಯ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕಾರು ಹತ್ತಿಸಿ ಹತ್ಯೆ ಮಾಡಲಾಗಿದೆ. ಪೆಟ್ರೋಲ್ ಬಂಕ್ ಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದ ದುರುಳರು ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೇ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕಾರನ್ನು […]
ಬಸ್ ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವರಿಗೆ ಶಾಕ್: 8 ಲಕ್ಷ ರೂ. ದಂಡ ವಸೂಲಿ ಮಾಡಿದ ಕೆಎಸ್ಆರ್ಟಿಸಿ
ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವರಿಂದ ಕೆಎಸ್ಆರ್ಟಿಸಿ ಬರೋಬ್ಬರಿ 8.08 ಲಕ್ಷ ರೂ. ದಂಡ ವಸೂಲಿ ಮಾಡಿದೆ. ಬಸ್ ಗಳಲ್ಲಿ ಸಂಚರಿಸುವ ಕೆಲವು ಪ್ರಯಾಣಿಕರು ಟಿಕೆಟ್ ಪಡೆಯುವುದಿಲ್ಲ. ಪಾಸ್ ಇಟ್ಟುಕೊಳ್ಳುವಂತೆ, ಟಿಕೆಟ್ ಪಡೆದುಕೊಳ್ಳುವಂತೆ ನಿರ್ವಾಹಕರು ಹೇಳಿದರೂ ಟಿಕೆಟ್ ಪಡೆದುಕೊಳ್ಳುವುದಿಲ್ಲ. ಇಂತಹ ಪ್ರಯಾಣಿಕರಿಂದ ದಂಡ ವಸೂಲಿ ಮಾಡಲಾಗಿದೆ. ಕೆಎಸ್ಆರ್ಟಿಸಿ ಸಿಬ್ಬಂದಿ ಟಿಕೆಟ್ ಇಲ್ಲದ ಪ್ರಯಾಣಿಕರಿಗೆ ದಂಡ ಹಾಕುತ್ತಾರೆ. 2025ರ ಡಿಸೆಂಬರ್ ನಲ್ಲಿ 8,08,704 ರೂ. ದಂಡ ವಸೂಲಿ ಮಾಡಲಾಗಿದೆ. ಡಿಸೆಂಬರ್ ತಿಂಗಳಿನಲ್ಲಿ ಕೆಎಸ್ಆರ್ಟಿಸಿ 43,553 ವಾಹನಗಳನ್ನು ತನಿಖೆಗೊಳಪಡಿಸಿತ್ತು. ಇದರಲ್ಲಿ 4207 […]
BREAKING: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಬಿಗ್ ಶಾಕ್: ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ, ಅವರಿಗೆ ಕರೆ ಮಾಡಿ ನಿಂದಿಸಿದ್ದ, ಜೀವಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿರುವ ರಾಜೀವ್ ಗೌಡ, ಬಂಧನ ಭೀತಿಯಲ್ಲಿದ್ದು, ಈ […]
ಜನವರಿ 21ರಿಂದ ರಾಷ್ಟ್ರಪತಿ ಭವನ ಪ್ರವೇಶಕ್ಕೆ ನಿರ್ಬಂಧ
ನವದೆಹಲಿ: ಜನವರಿ 21ರಿಂದ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಗಣರಾಜ್ಯೋತ್ಸವ ಪರೇಡ್ ಹಾಗೂ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜನವರಿ 21 ರ್ಂದ ಜನವರಿ 29ರವರೆಗೆ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಗಣರಾಜ್ಯೋತ್ಸವ ಪರೇಡ್ ಕರ್ತವ್ಯ ಪಥದಲ್ಲಿ ನಡೆಯಲಿದೆ. ಬೀಟಿಂಗ್ ರೀಟ್ರೀಟ್ ಸಮಾರಂಭ ಜನವರಿ 29ರಂದು ರಾಷ್ಟ್ರಪತಿ ಭವನದ ಬಳಿಯಿರುವ ವಿಜಯ್ ಚೌಕ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜನವರಿ 21ರಿಂದ 29ರವರೆಗೆ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ […]
BIG NEWS: ಡ್ರಗ್ಸ್ ಪತ್ತೆ ಹಚ್ಚುವಲ್ಲಿ ವಿಫಲರಾದ ಪೊಲೀಸರ ಮೇಲೆ ಕ್ರಮಕ್ಕೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2003ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು […]
BREAKING: ಹರದೂರು ಹೊಳೆಯಲ್ಲಿ ದುರಂತ: ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು
ಕೊಡಗು: ಹರದೂರು ಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನಲ್ಲಿ ನಡೆದಿದೆ. ಕುಶಾಲನಗರದ ಗರಗಂದೂರು ಬಳಿ ಈ ದುರಂತ ಸಂಭವಿಸಿದೆ. ಮೊಹಮ್ಮದ್ ರಹೀಜ್ (16) ಹಾಗೂ ಮೊಹಮ್ಮದ್ ನಿಹಾರ್ (16) ಮೃತ ದುರ್ದವಿಗಳು. ಘಟನ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆ ಅಪಘಾತ –ಮಾಜಿ ಸಚಿವ ರಾಜೂ ಗೌಡ ಪಾರು
ಯಾದಗಿರಿ ರಸ್ತೆ ಅಪಘಾತ – ಮಾಜಿ ಸಚಿವ ರಾಜೂ ಗೌಡ ಪಾರ ಸಿಸಿಎಲ್ ಪಂದ್ಯ ಮುಗಿಸಿ ಹೈದ್ರಾಬಾದದಿಂದ ಯಾದಗಿರಿ ಮೂಲಕ ತಮ್ಮ ಊರಿಗೆ ಬರುತ್ತಿದ್ದ ಮಾಜಿ ಸಚಿವ ರಾಜೂ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ನಗರದ ಗಂಜ್ ಪ್ರದೇಶದಲ್ಲಿ ಹೈವೈ ರಸ್ತೆಯಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ನೆರೆಯ ವಿಶಾಖಪಟ್ಟಣ ದಿಂದ ಸೆಲೆಬ್ರಟಿ ಕ್ರಿಕೆಟ್ ಲೀಗ್ ಪಂದ್ಯ ಮುಗಿಸಿ ಹಿಂತಿರುವಾಗ ಅಪಘಾತ ಸಂಭವಿಸಿದೆ ನಗರದ ಗಂಜ್ ಪ್ರದೇಶದ […]
ಸಂಜೆ ಹೊತ್ತಿನ ಹಸಿವಿಗೆ ಬೆಸ್ಟ್ ಚೋಲೆ ಚಾಟ್: ಪ್ರೋಟೀನ್ ಯುಕ್ತ ಈ ತಿಂಡಿ ನಾಲಿಗೆಗೂ ರುಚಿ, ದೇಹಕ್ಕೂ ಹಿತ
ಬೆಂಗಳೂರು: ಸಂಜೆ ಕೆಂಪಾಗುತ್ತಿದ್ದಂತೆ ಏನಾದರೂ ಖಾರ-ಖಾರವಾಗಿ, ಚಟಪಟ ಅಂತ ಇರುವ ಚಾಟ್ಸ್ ತಿನ್ನಬೇಕು ಅನ್ನಿಸುವುದು ಸಹಜ. ಆದರೆ, ಹೊರಗಿನ ರಸ್ತೆಬದಿಯ ಚಾಟ್ಸ್ ಮಕ್ಕಳ ಆರೋಗ್ಯಕ್ಕೆ ಅಷ್ಟು ಹಿತವಲ್ಲ ಎಂಬ ಆತಂಕ ಪೋಷಕರಲ್ಲಿ ಇದ್ದೇ ಇರುತ್ತದೆ. ಹಾಗಂತ ಆಸೆಯನ್ನು ಹತ್ತಿಕ್ಕಬೇಕಿಲ್ಲ. ಮನೆಯಲ್ಲೇ ಹೋಟೆಲ್ ರುಚಿಯನ್ನು ಮೀರಿಸುವಂತಹ ಪ್ರೋಟೀನ್ ಯುಕ್ತ ಚೋಲೆ ಚಾಟ್ ಮಾಡಿ ಫ್ಯಾಮಿಲಿ ಜೊತೆ ಎಂಜಾಯ್ ಮಾಡಬಹುದು. ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಸಾಟಿ ಇಲ್ಲ ಕಾಬುಲಿ ಚನ್ನಾ ಅಥವಾ ಚೋಲೆಯಿಂದ ತಯಾರಾಗುವ ಈ ಚಾಟ್ ಕೇವಲ ನಾಲಿಗೆಗೆ […]
ಕಾರವಾರ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ಕಾರು ರಸ್ತೆ ಬದಿ ನಿಂತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಚಾಲಕ ಹಾಗೂ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಈ ಘಟನೆ ನಡೆದಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ಕಾರು ಚಾಲಕನಿಗೆ ಇದ್ದಕ್ಕಿದ್ದಂತೆ ತಲೆ ಸುತ್ತು ಬಂದಂತಾಗಿದ್ದು, ನಿಯಂತ್ರಣ ತಪ್ಪಿ ಓಮ್ನಿ ರಸ್ತೆ ಬದಿ ನಿಂತಿದ್ದ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಓಮ್ನಿ ಚಾಲಕ ಹಾಗೂ ನಾಲ್ವರು ಮಕ್ಕಳು […]
BREAING : ದೇಶದ ಮೊದಲ ‘ವಂದೇ ಭಾರತ್’ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ |WATCH VIDEO
ಹೌರಾ ಮತ್ತು ಗುವಾಹಟಿ ನಡುವಿನ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಾಲ್ಡಾ ಟೌನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು. ಇದು ಭಾರತೀಯ ರೈಲ್ವೆಯ ಆಧುನೀಕರಣ ಅಭಿಯಾನದಲ್ಲಿ ಮಹತ್ವದ ಮೈಲಿಗಲ್ಲು ಎಂದು ಗುರುತಿಸಲಾಗಿದೆ. ವಂದೇ ಭಾರತ್ನ ಸ್ಲೀಪರ್ ಆವೃತ್ತಿಯು ಸುಧಾರಿತ ಸೌಕರ್ಯ ಮತ್ತು ದಕ್ಷತೆಯೊಂದಿಗೆ ದೀರ್ಘ-ದೂರ ರೈಲು ಪ್ರಯಾಣವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಆಧುನಿಕ ಭಾರತದ ಹೆಚ್ಚುತ್ತಿರುವ ಸಾರಿಗೆ ಅಗತ್ಯಗಳನ್ನು ಪೂರೈಸಲು ಅಭಿವೃದ್ಧಿಪಡಿಸಲಾದ ಸಂಪೂರ್ಣ ಹವಾನಿಯಂತ್ರಿತ ವಂದೇ ಭಾರತ್ […]
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಿಂಗಳ ಪೂರ್ತಿ ದುಡಿದ ಸಂಬಳದಲ್ಲಿ ಅರ್ಧದಷ್ಟು ಹಣ ಮನೆ ಬಾಡಿಗೆಗೇ (House Rent) ಖಾಲಿಯಾಗುತ್ತಿದೆಯೇ? ನಮಗೂ ಒಂದು ಸ್ವಂತ ಸೂರು ಸಿಗಲಾರದೇ? ಎಂಬ ಹಂಬಲ ನಿಮ್ಮದಾಗಿದ್ದರೆ ಇಲ್ಲಿದೆ ನಿಮಗಾಗಿ ಒಂದು ಸುವರ್ಣ ಅವಕಾಶ. ಹೌದು ಬೆಂಗಳೂರಿನಲ್ಲಿ ಊಹಿಸಲೂ ಸಾಧ್ಯವಾಗದ ಬೆಲೆಗೆ ಅಂದರೆ ಕೇವಲ ₹9.70 ಲಕ್ಷಕ್ಕೆ ಸುಸಜ್ಜಿತ 1 BHK ಫ್ಲಾಟ್ ಅನ್ನು ನಿಮ್ಮದಾಗಿಸಿಕೊಳ್ಳಬಹುದು! ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆ? ಬೆಂಗಳೂರಿನ ಗಗನಕ್ಕೇರಿರುವ ರಿಯಲ್ ಎಸ್ಟೇಟ್ ಬೆಲೆಗಳ ನಡುವೆ ಬಡವರು ಮತ್ತು […]
ಚಂಡಿಗಢ: ಡಿವೈಡರ್ ಗೆ ಫಾರ್ಚೂನರ್ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳಾ ಕಾನ್ಸ್ ಟೇಬಲ್ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಪಂಜಾಬ್ ನ ಬಟಿಂಡಾ ಜಿಲ್ಲೆಯ ಗುಥರಿ ಬಳಿ ಭಾರತ್ ಮಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ದಟ್ಟವಾದ ಮಂಜು ಕವಿದಿದ್ದ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಫಾರ್ಚೂನರ್ ಕಾರು ಡಿವೈಡರ್ ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಗುಜರಾತ್ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಪೈಕಿ ಓರ್ವ […]
ಚಿಕ್ಕಬಳ್ಳಾಪುರ : ಮಹಿಳಾ ಅಧಿಕಾರಿಗೆ ಅಶ್ಲೀಲ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಹೌದು. ಚಿಕ್ಕಬಳ್ಳಾಪುರದ 2 ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆರೋಪಿ ರಾಜೀವ್ ಗೌಡ ಪರ ವಕೀಲ ಶಿವಶಂಕರ ರೆಡ್ಡಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂಬುದು ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ […]
ಚಿಕ್ಕಬಳ್ಳಾಪುರ : ಮಹಿಳಾ ಅಧಿಕಾರಿಗೆ ಅಶ್ಲೀಲ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಹೌದು. ಚಿಕ್ಕಬಳ್ಳಾಪುರದ 2 ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆರೋಪಿ ರಾಜೀವ್ ಗೌಡ ಪರ ವಕೀಲ ಶಿವಶಂಕರ ರೆಡ್ಡಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂಬುದು ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ […]
’88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಕೆಗೇಡಿನ ವಿಷಯ’ : CM ಸಿದ್ದರಾಮಯ್ಯ
ಬೆಂಗಳೂರು : ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ. ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಇದಕ್ಕೆ ಪೊಲೀಸ್ ಇಲಾಖೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯ […]
BBK 12: ಈ ಇಬ್ಬರಲ್ಲಿ ಒಬ್ಬರು ಪಕ್ಕಾ ವಿನ್ನರ್, ಕಿಚ್ಚನ ವಿರುದ್ಧ ಟೀಕೆ: ಈ ಬಾರಿಯ ಬಿಗ್ಬಾಸ್ನ ಹೈಲೈಟ್ಸ್
ಬಿಗ್ಬಾಸ್ ಕನ್ನಡ ಹಲವು ಏಳುಬೀಳುಗಳನ್ನು ಕಾಣುತ್ತಾ ಬಂದಿರುವ ಈ ರಿಯಾಲಿಟಿ ಶೋಗೆ ಅದರದ್ದೇ ಆದ ಅಭಿಮಾನಿ ಬಳಗವಿದೆ. ಐಪಿಎಲ್ ಬಂದಾಗ ಹೇಗೆ ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸುತ್ತಾರೋ ಅದೇ ರೀತಿ ಇಲ್ಲಿಯೂ ಸಹ ಸಣ್ಣ ಹಿಂಬಾಲಕ ಬಳಗ ಶೋವನ್ನು ಸಂಭ್ರಮಿಸುತ್ತದೆ, ನೆಚ್ಚಿನ ಸ್ಪರ್ಧಿಗಳ ಪರ ನಿಂತು ಇಷ್ಟವಿಲ್ಲದ ಸ್ಪರ್ಧಿ ವಿರುದ್ಧ ಟೀಕೆ ಮಾಡುತ್ತದೆ. ಹೀಗೆ ಜನರಲ್ಲಿ ಪರಸ್ಪರ ಚರ್ಚೆಯನ್ನುಟ್ಟುಹಾಕಿ ಅದು ಕೋಟಿ ಕೋಟಿ ವೋಟ್ಗಳಾಗಿ ಮಾರ್ಪಾಡಾಗುವ ಮಟ್ಟಕ್ಕೆ ತಲುಪಿರುವ ಬಿಗ್ಬಾಸ್ ನಾಳೆ ( ಜನವರಿ 18 ) ನಡೆಯಲಿರುವ […]
Big Update: ರೇಣುಕಾಸ್ವಾಮಿ ಕೇಸ್, ದರ್ಶನ್ಗೆ ಬಿಗ್ ರಿಲೀಫ್
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರು ನಗರದ ಕೋರ್ಟ್ನಲ್ಲಿ ನಡೆಯುತ್ತಿದೆ. ಶನಿವಾರ ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಾಸಿಕ್ಯೂಷನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಅವರನ್ನು ಪ್ರತಿಕೂಲ ಸಾಕ್ಷಿ ಎಂದು ಪರಿಗಣಿಸಬೇಕು ಎಂದು ಮನವಿ ಸಲ್ಲಿಕೆ ಮಾಡಿತ್ತು. ರತ್ನಪ್ರಭಾ ಅವರ ಹೇಳಿಕೆಯಲ್ಲಿ ಗೊಂದಲವಿದ್ದ ಕಾರಣ ಅವರ ಪಾಟಿ ಸವಾಲಿಗೆ ಅವಕಾಶ ನೀಡಬೇಕು ಎಂದು ಕೋರಿತ್ತು. ಆದರೆ ಕೋರ್ಟ್ ಶನಿವಾರ ಈ ಮನವಿಯನ್ನು ತಿರಸ್ಕಾರ ಮಾಡಿದೆ. […]
ಉಸಿರಾಟದ ಸಮಸ್ಯೆಯೇ? ಶ್ವಾಸಕೋಶವನ್ನು ನೈಸರ್ಗಿಕವಾಗಿ ಕ್ಲೀನ್ ಮಾಡಲು ಇಲ್ಲಿವೆ 6 ಸರಳ ಉಪಾಯಗಳು
ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ (Pollution) ಅಪಾಯಕಾರಿ ಮಟ್ಟಕ್ಕೆ ತಲುಪುತ್ತಿದೆ. ನಾವು ಉಸಿರಾಡುವ ಗಾಳಿಯಲ್ಲಿರುವ ವಿಷಕಾರಿ ಅಂಶಗಳು ನಮ್ಮ ಶ್ವಾಸಕೋಶದ (Lungs) ಕಾರ್ಯಕ್ಷಮತೆಯನ್ನು ಕುಂದಿಸುತ್ತಿವೆ. ದೀರ್ಘಕಾಲದ ಕೆಮ್ಮು, ಉಸಿರಾಟದ ತೊಂದರೆ ಮತ್ತು ಸೋಂಕುಗಳು ನಮ್ಮನ್ನು ಕಾಡುತ್ತಿವೆ. ಆದರೆ, ಭಯ ಬೇಡ ನಿಮ್ಮ ಶ್ವಾಸಕೋಶವನ್ನು ನೈಸರ್ಗಿಕವಾಗಿ ಕ್ಲೀನ್ ಮಾಡಲು ನಮ್ಮ ಅಡುಗೆಮನೆಯಲ್ಲಿರುವ ಈ ಆಹಾರಗಳೇ ಸಾಕು. ಶ್ವಾಸಕೋಶದ ರಕ್ಷಾ ಕವಚಗಳಿವು: ನುಗ್ಗೆಕಾಯಿ ಮತ್ತು ಹಸಿರು ಚಹಾ (Green Tea): ಇವೆರಡೂ ಶ್ವಾಸಕೋಶದ […]
ಜಗತ್ತಿಗೆ ಶುಭ ಸುದ್ದಿ : ಬೃಹತ್ ಚಿನ್ನದ ನಿಕ್ಷೇಪ ಪತ್ತೆ, ಬಂಗಾರದ ಬೆಲೆ ಕಡಿಮೆಯಾಗುವುದೇ.?
ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಮಧ್ಯಮ ವರ್ಗದವರಿಗೆ ಚಿನ್ನ ಖರೀದಿಸುವುದು ಕನಸಿನ ಮಾತೇ ಸರಿ.ಕೇವಲ ಒಂದು ವರ್ಷದಲ್ಲಿ, ಚಿನ್ನದ ಬೆಲೆ ಶೇ. 60 ಕ್ಕಿಂತ ಹೆಚ್ಚು ಹೆಚ್ಚಾಗಿದೆ, ಇದು ಅಭೂತಪೂರ್ವ ಹೆಚ್ಚಳ.ನಮ್ಮ ದೇಶದಲ್ಲಿ, ಚಿನ್ನವು ಕೇವಲ ಹೂಡಿಕೆ ವಸ್ತುವಲ್ಲ. ಅದಕ್ಕಿಂತ ಹೆಚ್ಚಾಗಿ, ಇದನ್ನು ಅಲಂಕಾರಕ್ಕಾಗಿ ಬಳಸಲಾಗುತ್ತದೆ. ಭಾರತೀಯ ಕುಟುಂಬಗಳು ಚಿನ್ನದೊಂದಿಗೆ ಭಾವನಾತ್ಮಕ ಸಂಬಂಧವನ್ನು ಹೊಂದಿವೆ. ಇದನ್ನು ಗಮನದಲ್ಲಿಟ್ಟುಕೊಂಡು, ಬೆಲೆಗಳು ಕಡಿಮೆಯಾದರೆ ಒಳ್ಳೆಯದು ಎಂಬ ಅಭಿಪ್ರಾಯವನ್ನು ಅನೇಕ ಜನರು ವ್ಯಕ್ತಪಡಿಸುತ್ತಿದ್ದಾರೆ. ಒಂದು ದೇಶದಲ್ಲಿ ಹೆಚ್ಚಿನ ಪ್ರಮಾಣದ ಚಿನ್ನದ […]
SHOCKING : ‘ಮೊಬೈಲ್’ಬಳಸುವ 13 ವರ್ಷದೊಳಗಿನ ಮಕ್ಕಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ : ಸಂಶೋಧನೆ
ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಜೀವನದ ಒಂದು ಭಾಗವಾಗಿದೆ. ಇದರಿಂದ ಹಲವು ಉಪಯೋಗಗಳಿವೆ. ಆದರೆ, ಅತಿಯಾದ ಬಳಕೆ ಹಲವು ಹಾನಿಗಳಿಗೆ ಕಾರಣವಾಗಬಹುದು ಎಂದು ತಜ್ಞರು ಹೇಳುತ್ತಾರೆ. ಮಕ್ಕಳ ವಿಷಯದಲ್ಲಿ, ಈ ಪರಿಣಾಮ ಇನ್ನೂ ಹೆಚ್ಚಾಗಿರುತ್ತದೆ, ವಿಶೇಷವಾಗಿ 13 ವರ್ಷದೊಳಗಿನ ಮಕ್ಕಳಿಗೆ. ಇತ್ತೀಚೆಗೆ ಜರ್ನಲ್ ಆಫ್ ಹ್ಯೂಮನ್ ಡೆವಲಪ್ಮೆಂಟ್ ಅಂಡ್ ಕೆಪಾಬಿಲಿಟೀಸ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ ಆಘಾತಕಾರಿ ವಿಚಾರಗಳು ಹೊರ ಬಿದ್ದಿದೆ. ಮಾನಸಿಕ ಆರೋಗ್ಯ ಸಮಸ್ಯೆ ಅಧ್ಯಯನದ ಭಾಗವಾಗಿ, ಸಂಶೋಧಕರು 163 ದೇಶಗಳಿಂದ 18 ರಿಂದ 24 ವರ್ಷ […]
ಫೆಕ್ಸ್ ಗಲಾಟೆ: ಬಿಜೆಪಿಯಿಂದ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ
ಬಳ್ಳಾರಿಯಲ್ಲಿ ನಡೆದ ವಾಲ್ಮೀಕಿ ಪುತ್ಥಳಿ ಅನಾವರಣ ಬ್ಯಾನರ್ ಅಳವಡಿಕೆ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಮೃತಪಟ್ಟಿದ್ದರು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಗಲಭೆ ಖಂಡಿಸಿ ಬಿಜೆಪಿ ಬಳ್ಳಾರಿ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಎಪಿಎಂಸಿ ಕೃಷಿ ಮಾರುಕಟ್ಟೆಯ ಆವರಣದಲ್ಲಿರುವ ಕವರ್ಡ್ ಆಕ್ಷನ್ ಪ್ಲಾಟ್ಫಾರಂನಲ್ಲಿ ಪ್ರತಿಭಟನಾ ಸಭೆ ನಡೆಯುತ್ತಿದೆ. ಈ ಸಭೆಗೂ ಮುನ್ನ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ನಾಯಕರು ಗುಂಡೇಟಿನಿಂದ ಮೃತಪಟ್ಟ ರಾಜಶೇಖರ ರೆಡ್ಡಿ ನಿವಾಸಕ್ಕೆ […]
BREAKING : ಮಾಜಿ ಸಚಿವ ರಾಜುಗೌಡ ಪ್ರಯಾಣಿಸುತ್ತಿದ್ದ ಕಾರು ಅಪಘಾತ , ಪ್ರಾಣಾಪಾಯದಿಂದ ಪಾರು.!
ಯಾದಗಿರಿ : ಮಾಜಿ ಸಚಿವ ರಾಜುಗೌಡ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ನಗರದ ಗಂಜ್ ಬಳಿ ಈ ಘಟನೆ ನಡೆದಿದೆ. ರಾಜುಗೌಡ ಪ್ರಯಾಣಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಅದೃಷವಶಾತ್ ರಾಜುಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯದೊಂದಿಗೆ ಅವರು ಪಾರಾಗಿದ್ದಾರೆ. ಸಿಸಿಎಲ್ ಮೊದಲ ಪಂದ್ಯ ಮುಗಿಸಿ ಹೈದರಾಬಾದ್ ಮೂಲಕ ಯಾದಗಿರಿಗೆ ರಾಜುಗೌಡ ಅವರು ಮರಳುತ್ತಿದ್ದರು. ಯಾದಗಿರಿ ಹೈವೇ ಗಂಜ್ ಬಳಿ ಟಿಪ್ಪರ್ ಒಂದು ಅವರ ಕಾರಿಗೆ ಹಿಂದಿನಿಂದ ಗುದ್ದಿದೆ. ಪರಿಣಾಮ […]
BREAKING: 25 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಅಬಕಾರಿ ಡಿಸಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ಬೆಂಗಳೂರು: ಲಂಚದ ಹಣಕ್ಕೆ ಕೈಯೊಡ್ಡಿದಾಗಲೇ ಅಬಕಾರಿ ಡಿಸಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಜಗದೀಶ್ ನಾಯ್ ಲೋಕಾಯುಕ್ತ ಬಲೆಗೆ ಬಿದ್ದು ಬಂಧಿತರಾಗಿರುವ ಅಬಕಾರಿ ಡಿಸಿ. 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಬಕಾರಿ ಡಿಸಿ ಜಗದೀಶ್ ಅವರನ್ನು ಬಂಧಿಸಿದ್ದಾರೆ. ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 75 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ […]
ಬೆಂಗಳೂರು: ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ ಜಿ […]
‘SBI’ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ಶುಲ್ಕ ಹೆಚ್ಚಳ.!
ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಾಗಿದ್ದರೆ ನಿಮಗಾಗಿ ಒಂದು ಬಿಗ್ ನ್ಯೂಸ್ ಇದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ATM ವಹಿವಾಟು ಶುಲ್ಕಗಳನ್ನು ಪರಿಷ್ಕರಿಸಿದೆ. ಉಚಿತ ವಹಿವಾಟು ಮಿತಿಯನ್ನು ತಲುಪಿದ ನಂತರ ಬ್ಯಾಂಕ್ ATM ಬಳಕೆಯ ಶುಲ್ಕವನ್ನು ಹೆಚ್ಚಿಸಿದೆ. ಇದರರ್ಥ ನೀವು SBI ಗ್ರಾಹಕರಾಗಿದ್ದರೆ, ಮಾಸಿಕ ನಗದು ಹಿಂಪಡೆಯುವಿಕೆ ಮಿತಿಯನ್ನು ತಲುಪಿದ ನಂತರ ಬೇರೆ ಬ್ಯಾಂಕಿನ ATM ನಿಂದ ಪ್ರತಿ ನಗದು ಹಿಂಪಡೆಯುವಿಕೆಗೆ ₹23 (GST ಸೇರಿದಂತೆ) ವಿಧಿಸಲಾಗುತ್ತದೆ ಮತ್ತು ಬ್ಯಾಲೆನ್ಸ್ ಚೆಕ್ಗಳಂತಹ ಹಣಕಾಸುೇತರ […]
BREAKING : ‘CM ಸಿದ್ದರಾಮಯ್ಯ’ತವರು ಕ್ಷೇತ್ರದಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ, FIR ದಾಖಲು.!
ಮೈಸೂರು : ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅಶ್ಲೀಲ ನಿಂದನೆ, ಬೆದರಿಕೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಹೌದು ಮೈಸೂರು ದಕ್ಷಿಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ವ್ಯಕ್ತಿ ಪುಟ್ಟಸ್ವಾಮಿ ಎಂಬಾತ ಗ್ರಾಮದ ಆಡಳಿತ ಅಧಿಕಾರಿಗೆ ಕೊಲೆ ಬೆದರಿಕೆ ಹಾಕಿ ನಿಂದಿಸಿದ್ದಾನೆ ಎನ್ನಲಾಗಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ ಪುಟ್ಟಸ್ವಾಮಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ […]
BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ
ದೇವನಹಳ್ಳಿ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಬವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಅಗಲಕೋಟೆ ಬಳಿ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಚಾಲಕ ಬೈಕ್ ಗೆ ಗುದ್ದಿ ಟಿಪ್ಪರ್ ಸಮೇತ ಪರಾರಿಯಾಗಿದ್ದಾನೆ. ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಲೇಜು ವಿದ್ಯಾರ್ಥಿ ತೌಸಿಫ್ ಸೇರಿದಂತೆ ಮೂವರು ಮೃತ ಪಟ್ಟಿದ್ದಾರೆ. ಇಬ್ಬರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಡಿಕೆಶಿ, ಜಾರ್ಜ್, ಸತೀಶ್ ಜಾರಕಿಹೊಳಿ: ಏನಾಗ್ತಿದೆ ಕರ್ನಾಟಕ ಕಾಂಗ್ರೆಸ್ನಲ್ಲಿ!
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿದ್ದಾರೆ. ಇಂಧನ ಸಚಿವ ಕೆ.ಜೆ.ಜಾರ್ಜ್ ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಎರಡು ದಿನದ ದೆಹಲಿ ಪ್ರವಾಸಕ್ಕೆ ತಯಾರಿ ನಡೆಸಿದ್ದಾರೆ. 2025ರ ನವೆಂಬರ್ 20ರ ಸುಮಾರಿಗೆ ಕರ್ನಾಟಕ ಕಾಂಗ್ರೆಸ್ನಲ್ಲಿ ಆರಂಭವಾದ ನಾಯಕತ್ವ ಬದಲಾವಣೆ ಚರ್ಚೆಗೆ ಅಂತಿಮ ತೆರೆ ಬಿದ್ದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೇಕ್ ಫಾಸ್ಟ್ ಮೀಟಿಂಗ್ ಮಾಡಿದರೂ ಸಮಸ್ಯೆ ಬಗೆಹರಿದಿಲ್ಲ. ನವೆಂಬರ್ ಕ್ರಾಂತಿ, ಸಂಕ್ರಾಂತಿ ಎಲ್ಲಾ ಕ್ರಾಂತಿಗಳು ಮುಗಿದರೂ ಕಾಂಗ್ರೆಸ್ ನಾಯಕರ ಬಣ ರಾಜಕೀಯ ನಿಂತಿಲ್ಲ. ಮಾರ್ಚ್ನಲ್ಲಿ ಮುಖ್ಯಮಂತ್ರಿ […]
ಬೆಂಗಳೂರು: ನೀವು ಯಾವುದೇ ರಿಸ್ಕ್ ಇಲ್ಲದೆ ಕೋಟ್ಯಾಧಿಪತಿಯಾಗುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ಅಂಚೆ ಇಲಾಖೆಯ ‘ಪಬ್ಲಿಕ್ ಪ್ರಾವಿಡೆಂಟ್ ಫಂಡ್’ (PPF) ನಿಮಗಾಗಿ ಇರುವ ಪಕ್ಕಾ ಲಾಭದ ಹಾದಿ. ಕೇಂದ್ರ ಸರ್ಕಾರದ ನೇರ ನಿಯಂತ್ರಣದಲ್ಲಿರುವ ಈ ಯೋಜನೆಯಲ್ಲಿ ಹಣ ಹೂಡಿದರೆ ನಿಮ್ಮ ಅಮೂಲ್ಯವಾದ ಉಳಿತಾಯಕ್ಕೆ ನೂರಕ್ಕೆ ನೂರರಷ್ಟು ಸುರಕ್ಷತೆ ಇರುತ್ತದೆ. ಪಿಪಿಎಫ್ (PPF) ಯಾಕೆ ಬೆಸ್ಟ್? ಬಡ್ಡಿಯ ಬಂಪರ್: ಸದ್ಯ ಈ ಯೋಜನೆಯಲ್ಲಿ ಶೇ. 7.1 ರಷ್ಟು ವಾರ್ಷಿಕ ಬಡ್ಡಿ ನೀಡಲಾಗುತ್ತಿದೆ. ಇದು ಅನೇಕ ಬ್ಯಾಂಕ್ಗಳ ಎಫ್ಡಿ (FD) […]
Business Idea : ಖರೀದಿಸಿ ಮಾರಾಟ ಮಾಡಿ, ಲಕ್ಷಗಟ್ಟಲೆ ಲಾಭ ಗಳಿಸಿ !
ವ್ಯವಹಾರಕ್ಕೆ ಭಾರಿ ಹಣ ಬೇಕು ಎಂದು ಹಲವರು ಭಾವಿಸುತ್ತಾರೆ. ಕಚೇರಿ, ಕಾರ್ಖಾನೆ, ಕಾರ್ಮಿಕರು ಮತ್ತು ಸರಕುಗಳ ತಯಾರಿಕೆ ಬಹಳಷ್ಟು. ಆದರೆ, ವಾಸ್ತವವಾಗಿ, ನೀವು ಸರಿಯಾದ ವ್ಯವಹಾರ ಮಾಡಿದರೆ, ಇವುಗಳಲ್ಲಿ ಯಾವುದೂ ಇಲ್ಲದೆ ನೀವು ಲಕ್ಷಗಳನ್ನು ಗಳಿಸಬಹುದು. ಈಗ ಅಂತಹ ವ್ಯವಹಾರದ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸೋಣ. ಏಲಕ್ಕಿ, ಮೆಣಸು ಮತ್ತು ಲವಂಗದಂತಹ ಬೆಳೆಗಳನ್ನು ನಮ್ಮ ದೇಶದ, ಕೇರಳ ರಾಜ್ಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾತ್ರ ಬೆಳೆಯಲಾಗುತ್ತದೆ. ಪ್ರಪಂಚದಾದ್ಯಂತ ಇವುಗಳಿಗೆ ಭಾರಿ ಬೇಡಿಕೆಯಿದೆ. ಅದಕ್ಕಾಗಿಯೇ ಕೇಂದ್ರ ಸರ್ಕಾರವು ಕೇರಳದ ಇಡುಕ್ಕಿ ಪ್ರದೇಶದಲ್ಲಿ […]

16 C