ಬಳ್ಳಾರಿ ಪರಿಸ್ಥಿತಿ ಅವಲೋಕಿಸಿ ವರದಿ ನೀಡಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚನೆ
ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಘರ್ಷಣೆ ಮತ್ತು ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಿ ವರದಿ ನೀಡಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಬಳ್ಳಾರಿ ಘರ್ಷಣೆಯ ಬಗ್ಗೆ ಸತ್ಯಶೋಧನಾ ಸಮಿತಿ ರಚಿಸಿದ್ದು, ಸ್ಥಳಕ್ಕೆ ತೆರಳಿ ವಾಸ್ತವ ಸ್ಥಿತಿಯ ಬಗ್ಗೆ ನಿಯೋಗ ವರದಿ ನೀಡಲಿದೆ. ನಿಯೋಗದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಮಾಜಿ ಸಂಸದ […]
ಸೈಂಧವ ಲವಣದಿಂದ ದುಪ್ಪಟ್ಟಾಗುತ್ತೆ ಮುಖದ ಕಾಂತಿ….!
ಕಾಂತಿಯುತ ಮುಖ ಯಾರಿಗೆ ಬೇಡ ಹೇಳಿ? ಆಕರ್ಷಕ ಮುಖಕ್ಕಾಗಿ ಎಷ್ಟೆಲ್ಲ ಖರ್ಚು ಮಾಡ್ತೇವೆ. ಬ್ಯೂಟಿ ಪಾರ್ಲರ್ ಗೆ ಹೋಗಿ ಬರ್ತೇವೆ. ಆದ್ರೆ ಮನೆಯಲ್ಲಿರುವ ಸೈಂಧವ ಲವಣ ನಿಮ್ಮ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಶಕ್ತಿ ಹೊಂದಿದೆ. ಆರೋಗ್ಯದ ಜೊತೆಗೆ ಸೌಂದರ್ಯ ವರ್ಧನೆಯಾಗಿ ಕೆಲಸ ಮಾಡುತ್ತೆ ಸೈಂಧವ ಲವಣ. ಮುಖವನ್ನು ಸ್ವಚ್ಛವಾಗಿ ತೊಳೆದುಕೊಂಡು ಸೈಂಧವ ಲವಣವನ್ನು ಹಚ್ಚಿಕೊಳ್ಳುವುದ್ರಿಂದ ಮೊಡವೆ ಸಮಸ್ಯೆ ಕಡಿಮೆಯಾಗುತ್ತದೆ. ಡೆಡ್ ಸ್ಕಿನ್ ಸಮಸ್ಯೆ ಕಡಿಮೆಯಾಗುತ್ತದೆ. ವಾರಕ್ಕೆ ಎರಡು ಬಾರಿ ಸೈಂಧವ ಲವಣದ ಪ್ಯಾಕ್ ಹಚ್ಚಿಕೊಳ್ಳುವುದ್ರಿಂದ ಕಪ್ಪು ಕಲೆ […]
BREAKING: ಬೈಕ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
ಕೋಲಾರ: ಕೋಲಾರ ಜಿಲ್ಲೆ, ಮಾಲೂರು ತಾಲೂಕಿನ ಕಣಗಲ ಸಮೀಪ ಬೈಕ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಮೇಶ್(48) ಮೃತಪಟ್ಟವರು ಎಂದು ಹೇಳಲಾಗಿದೆ. ಅತಿ ವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಸವಾರ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಬೈಕ್ ಹಾಗೂ ಸವಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ಗ್ರಾಮದಲ್ಲಿ ಸ್ಪೀಡ್ ಹಂಪ್ ಹಾಕುವಂತೆ ಜನರು ಒತ್ತಾಯಿಸಿದ್ದಾರೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಘೋಷಿಸಿದ್ದಾರೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 17ರಿಂದ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಸಚಿವರು ಇತರ ಪರೀಕ್ಷೆಗಳ ವೇಳಾ ಪಟ್ಟಿಯನ್ನೂ ಪ್ರಕಟಿಸಿದರು. ಕ್ರೈಸ್ ಪರೀಕ್ಷೆ ಮಾರ್ಚ್ 1, ಪಿಜಿಸಿಇಟಿ (ಎಂಬಿಎ, […]
ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ, ದುರ್ನಡತೆ: ಹೈಕೋರ್ಟ್
ಬೆಂಗಳೂರು: ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿ ಹಕ್ಕಲ್ಲ, ಶ್ರದ್ಧೆ ಇಲ್ಲದ ನೌಕರನಿಗೆ ಸಹಾನುಭೂತಿ ಬೇಡ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪೂರ್ವಾನುಮತಿ ಇಲ್ಲದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಟ್ರೈನಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವೆಂಕಟರಾಮಯ್ಯ ಎಂಬುವವರನ್ನು ಸೇವೆಯಿಂದ ತೆಗೆದು ಹಾಕಿದ್ದ ಆದೇಶ ರದ್ದುಪಡಿಸಿದ್ದ ಕಾರ್ಮಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಪುರಸ್ಕರಿಸಿದ […]
ದೇಹ ತೂಕ ಕಡಿಮೆ ಮಾಡಬೇಕು ಎಂಬ ಕಾರಣಕ್ಕೆ ಉಪವಾಸ ಇರುವವರನ್ನು ನೀವು ಕಂಡಿರಬಹುದು. ಅದು ತಪ್ಪು, ಖಾಲಿ ಹೊಟ್ಟೆಯಿಂದ ಸಮಸ್ಯೆಗಳು ಹೆಚ್ಚುತ್ತವೆಯೇ ಹೊರತು ಕಡಿಮೆಯಾಗುವುದಿಲ್ಲ. ನಿಗದಿತ ಸಮಯಕ್ಕೆ ಊಟ ಮಾಡುವುದನ್ನು ತಪ್ಪಿಸಬೇಡಿ. ಆದರೆ ತಿನ್ನುವ ಪ್ರಮಾಣ ಕಡಿಮೆ ಮಾಡಿ. ಒಂದು ಬಟ್ಟಲು ಊಟ ಮಾಡುವವರು ಮೊದಲು ಅದನ್ನು ಅರ್ಧಕ್ಕೆ ಇಳಿಸಲು ಪ್ರಯತ್ನಿಸಿ. ಗಬ ಗಬನೆ ಊಟ ಮಾಡುವುದರ ಬದಲು ನಿಧಾನವಾಗಿ ತಿಂದರೆ ಬಹುಬೇಗ ತೂಕ ಇಳಿಸಬಹುದು ಎನ್ನುತ್ತದೆ ಸಂಶೋಧನೆ. ವ್ಯಾಯಾಮ ತಪ್ಪಿಸದಿರಿ. ಬೆಳಗ್ಗೆದ್ದು ಬೆವರು ಹರಿಸಿ. ವಾಕಿಂಗ್ […]
ದೇಹದಲ್ಲಿರುವ ವಿಷಕಾರಿ ಅಂಶ ದೂರಗೊಳಿಸುತ್ತೆ ಬೆಳ್ಳುಳ್ಳಿ
ನೀವು ಸೇವಿಸುವ ಆಹಾರಕ್ಕೆ ಬೆಳ್ಳುಳ್ಳಿ ಬಳಸಿದರೆ ಅದಕ್ಕೆ ಸಿಗುವ ರುಚಿಯೇ ಬೇರೆ. ಅದರಂತೆ ಬೆಳ್ಳುಳ್ಳಿ ಸೇವನೆಯಿಂದ ದೇಹಕ್ಕೂ ಹಲವು ರೀತಿಯ ಪ್ರಯೋಜನಗಳಿವೆ. ಅದರಲ್ಲಿ ಮುಖ್ಯವಾದುದು ಎಂದರೆ ಬೆಳ್ಳುಳ್ಳಿ ಸೇವನೆಯಿಂದ ತೂಕ ಇಳಿಸಿಕೊಳ್ಳಬಹುದು ಎಂಬುದು. ಬೆಳ್ಳುಳ್ಳಿಯಲ್ಲಿ ಹೇರಳವಾದ ಔಷಧೀಯ ಗುಣಗಳಿದ್ದು ಶೀತ ಕೆಮ್ಮಿನಂಥ ಸಾಧಾರಣ ಕಾಯಿಲೆಗಳನ್ನು ಗುಣ ಪಡಿಸುವ ಶಕ್ತಿ ಇದಕ್ಕಿದೆ. ಬೆಳ್ಳುಳ್ಳಿಯಲ್ಲಿ ಇರುವ ವಿಟಮಿನ್ ಬಿ6, ಸಿ, ನಾರಿನಂಶ, ಕ್ಯಾಲ್ಸಿಯಂ ತೂಕ ಇಳಿಕೆಗೆ ನೆರವಾಗುತ್ತದೆ ಎಂಬುದು ಸಂಶೋಧನೆಗಳಿಂದ ದೃಢಪಟ್ಟಿದೆ. ಬೆಳ್ಳುಳ್ಳಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ದೂರಗೊಳಿಸಿ, ರೋಗನಿರೋಧಕ […]
ನವದೆಹಲಿ: ಗ್ರೋಕ್ AI ನಲ್ಲಿ ಅಶ್ಲೀಲ ಮತ್ತು ಲೈಂಗಿಕವಾಗಿ ಸ್ಪಷ್ಟವಾದ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಕೇಂದ್ರವು ಎಲೋನ್ ಮಸ್ಕ್ ನೇತೃತ್ವದ X ಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ಮತ್ತು ಐಟಿ ನಿಯಮಗಳು, 2021 ರ ಅಡಿಯಲ್ಲಿ ಕಡ್ಡಾಯವಾದ ಡ್ಯೂ ಡಿಲಿಜೆನ್ಸ್ ಅವಶ್ಯಕತೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಕ್ಕಾಗಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ X(ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಗೆ ಬಲವಾದ ವಾಗ್ದಂಡನೆ ನೀಡಿದೆ. ಅದರ ಅನುಸರಣೆ ಕ್ರಮಗಳು, ಅದರ ಮುಖ್ಯ […]
‘ಬಿಹಾರದಲ್ಲಿ 20-25 ಸಾವಿರಕ್ಕೆ ಹುಡುಗಿಯರು ಸಿಗ್ತಾರೆ’: ಆಕ್ರೋಶಕ್ಕೆ ಕಾರಣವಾದ ಉತ್ತರಾಖಂಡ ಸಚಿವರ ಪತಿ ಹೇಳಿಕೆ
ಡೆಹ್ರಾಡೂನ್: ಉತ್ತರಾಖಂಡ ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಹಿಳೆಯರ ಬಗ್ಗೆ ಅತ್ಯಂತ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಇದರಿಂದ ನಂತರ ಉತ್ತರಾಖಂಡದಿಂದ ಬಿಹಾರದವರೆಗೆ ಭಾರಿ ರಾಜಕೀಯ ವಿವಾದ ಭುಗಿಲೆದ್ದಿದೆ. ಈ ಹೇಳಿಕೆಯ ವೀಡಿಯೊ ವೈರಲ್ ಆಗಿದ್ದು, ರಾಜ್ಯಗಳಾದ್ಯಂತ ತೀವ್ರ ಟೀಕೆಗೆ ಗುರಿಯಾಗಿದೆ. ವೀಡಿಯೊದಲ್ಲಿ, ಬಿಹಾರದಲ್ಲಿ ಮಹಿಳೆಯರನ್ನು 20,000 ರಿಂದ 25,000 ರೂ.ಗಳಿಗೆ ಮದುವೆಗೆ “ವ್ಯವಸ್ಥೆ” ಮಾಡಬಹುದು ಎಂದು ಸಾಹು ಜನರಿಗೆ ಹೇಳುತ್ತಿರುವುದು ಕಂಡುಬರುತ್ತದೆ. […]
BREAKING: ಮೆಕ್ಸಿಕೋದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ: ಇಡೀ ಪ್ರದೇಶದಲ್ಲಿ ಭಾರೀ ಕಂಪನ
ಮೆಕ್ಸಿಕೋ ಸಿಟಿ: ದಕ್ಷಿಣ ಮೆಕ್ಸಿಕನ್ ರಾಜ್ಯವಾದ ಗೆರೆರೊದಲ್ಲಿ ಶುಕ್ರವಾರ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರ (GFZ) ತಿಳಿಸಿದೆ. ಭೂಕಂಪವು 10 ಕಿಮೀ(6.21 ಮೈಲುಗಳು) ಆಳದಲ್ಲಿ ಸಂಭವಿಸಿದೆ ಎಂದು GFZ ತಿಳಿಸಿದೆ. ಮೆಕ್ಸಿಕೋದ ರಾಷ್ಟ್ರೀಯ ಭೂಕಂಪಶಾಸ್ತ್ರ ಸಂಸ್ಥೆ ಪ್ರಕಾರ, ಭೂಕಂಪದ ಕೇಂದ್ರಬಿಂದುವು ಪೆಸಿಫಿಕ್ ಕರಾವಳಿ ರೆಸಾರ್ಟ್ ಅಕಾಪುಲ್ಕೊ ಬಳಿಯ ದಕ್ಷಿಣ ರಾಜ್ಯದ ಗೆರೆರೊದ ಸ್ಯಾನ್ ಮಾರ್ಕೋಸ್ ಪಟ್ಟಣದ ಬಳಿ ಇತ್ತು. ಅಕಾಪುಲ್ಕೊದಿಂದ ಈಶಾನ್ಯಕ್ಕೆ ಸುಮಾರು 57 ಮೈಲುಗಳಷ್ಟು ದೂರದಲ್ಲಿರುವ ಪರ್ವತಗಳಲ್ಲಿ ಇರುವ […]
ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ: ಮಾರಕಾಸ್ತ್ರದಿಂದ ತಲೆಗೆ ಹೊಡೆದು ಕೊಂದ ಯುವತಿ ಅರೆಸ್ಟ್
ಬಂದಾ: ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಮಧ್ಯವಯಸ್ಕ ವ್ಯಕ್ತಿಯೊಬ್ಬನನ್ನು ಹರಿತವಾದ ಆಯುಧದಿಂದ ಕೊಂದ ಆರೋಪದ ಮೇಲೆ 18 ವರ್ಷದ ಯುವತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮುರ್ವಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹರಿತವಾದ ಆಯುಧದಿಂದ ತಲೆಗೆ ಮಾರಕ ಗಾಯಗಳಾಗಿ ಸುಖರಾಜ್ ಪ್ರಜಾಪತಿ(50) ಅವರ ಮೃತದೇಹ ಮನೆಯೊಂದರಲ್ಲಿ ಪತ್ತೆಯಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್(ಎಸ್ಹೆಚ್ಒ) ರಾಜೇಂದ್ರ ಸಿಂಗ್ ರಾಜವತ್ ಹೇಳಿದ್ದಾರೆ. ಮೃತನ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು […]
BIG NEWS: ಸಕ್ರಿಯ ರಾಜಕಾರಣಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ ಬಿಜೆಪಿ ನಾಯಕ, ಮಾಜಿ ಸಚಿವ ಎಸ್.ಎ. ರಾಮದಾಸ್
ಮೈಸೂರು: ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಎ. ರಾಮದಾರ್ ಚುನಾವಣಾ ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಮೈಸೂರಿನಲ್ಲಿ 32 ವರ್ಷ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಎಸ್.ಎ. ರಾಮದಾಸ್ ಚುನಾವಣಾ ರಾಜಕೀಯದಿಂದ ನಿವೃತ್ತರಾಗುವುದಾಗಿ ಹೇಳಿದ್ದು, ಬಿಜೆಪಿಯನ್ನು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೈಸೂರು ನಗರ ಪತ್ರಿಕಾ ವಿತರಕರ ಸಂಘದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರಾಮದಾಸ್, ಸುತ್ತೂರು ಶ್ರೀಗಳು ಸೇರಿದಂತೆ ನನ್ನನ್ನು ಹತ್ತಿರದಿಂದ ಬಲ್ಲವರು ಮತ್ತೆ ಸಕ್ರಿಯವಾಗಿ ಸಮಾಜದೊಂದಿಗೆ ಇರುವಂತೆ ಹೇಳುತ್ತಿದ್ದಾರೆ. ನಾನು ಚುನಾವಣಾ ರಾಜಕೀಯ ಮಾಡುವುದಿಲ್ಲ. ಪರಿಸರ ಉಳಿಸುವ […]
BIG NEWS: ದಾರಿ ತಪ್ಪಿಸುವ ನಿರೂಪಣೆ: ಇವಿಎಂ ವಿಶ್ವಾಸಾರ್ಹ ಎಂಬ ಸಮೀಕ್ಷೆ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ಷೇಪ
ಚುನಾವಣೆಗಳಲ್ಲಿ ಇವಿಎಂ ವಿಶ್ವಾಸಾರ್ಹ ಎಂದು ಸಮೀಕ್ಷೆಯೊಂದು ಹೇಳಿದೆ. ರಾಜ್ಯದಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದ 5100 ಜನರ ಪೈಕಿ ಶೇಕಡ 83.61 ರಷ್ಟು ಜನ ವಿದ್ಯುನ್ಮಾನ ಮತ ಯಂತ್ರಗಳು ನಿಖರ ಫಲಿತಾಂಶ ನೀಡುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿರುವ ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ಸಮೀಕ್ಷಾ ವರದಿ ಪ್ರಕಟಿಸಿದೆ. ಮೈಸೂರು ಮೂಲದ ಗ್ರಾಸ್ ರೂಟ್ಸ್ ರಿಸರ್ಚ್ ಅಂಡ್ ಅಡ್ವೊಕಸಿ(GRAAM)ಸಂಸ್ಥೆಯು 2025ರ ಮೇ ತಿಂಗಳಲ್ಲಿ ಈ ಸಮೀಕ್ಷೆ ನಡೆಸಿದೆ. ಬೆಂಗಳೂರು, ಬೆಳಗಾವಿ, ಮೈಸೂರು, ಕಲಬುರಗಿ […]
ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿಯನ್ನು ಅಮಾನತು ಮಾಡಲಾಗಿದೆ. ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆಯಾಗಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಸರ್ಕಾರ ಅಮಾನತು ಮಾಡಿದೆ. ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಹಾಗೂ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ. ಮೇಲಾಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲವೆಂದು ಅವರನ್ನು ಅಮಾನತು […]
BREAKING: ಜವಳಿ ಪ್ರೋತ್ಸಾಹ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಮಾ.31 ರವರೆಗೆ ಅವಕಾಶ ನೀಡಿದ ಸರ್ಕಾರ
ನವದೆಹಲಿ: ಜವಳಿ ಉತ್ಪಾದನೆ ಸಂಬಂಧಿತ ಪ್ರೋತ್ಸಾಹಕ(PLI) ಯೋಜನೆಯಡಿಯಲ್ಲಿ ಹೊಸ ಅರ್ಜಿಗಳನ್ನು ಸಲ್ಲಿಸಲು ಸರ್ಕಾರ ಮಾರ್ಚ್ 31 ರವರೆಗೆ ವಿಸ್ತರಿಸಿದೆ. ಮಾನವ ನಿರ್ಮಿತ ಫೈಬರ್(MMF) ಉಡುಪು, MMF ಬಟ್ಟೆಗಳು ಮತ್ತು ತಾಂತ್ರಿಕ ಜವಳಿ ಸೇರಿದಂತೆ ಆದ್ಯತೆಯ ಕ್ಷೇತ್ರಗಳಲ್ಲಿ ಜವಳಿ ಕಂಪನಿಗಳು ಪ್ರಸ್ತಾವನೆಗಳನ್ನು ಸಲ್ಲಿಸುವುದರೊಂದಿಗೆ, ಆಗಸ್ಟ್ 2025 ರಲ್ಲಿ ಅರ್ಜಿ ಪೋರ್ಟಲ್ ಅನ್ನು ಮತ್ತೆ ತೆರೆದಾಗಿನಿಂದ ಸ್ವೀಕರಿಸಿದ ಗಮನಾರ್ಹ ಪ್ರತಿಕ್ರಿಯೆಯ ನಂತರ ಈ ವಿಸ್ತರಣೆಯನ್ನು ಮಾಡಲಾಗಿದೆ ಎಂದು ಜವಳಿ ಸಚಿವಾಲಯ ತಿಳಿಸಿದೆ. ಅಕ್ಟೋಬರ್ನಲ್ಲಿ, ಜವಳಿ ವಲಯಕ್ಕೆ PLI ಯೋಜನೆಯಡಿಯಲ್ಲಿ ಹೊಸ […]
ನಿಮ್ಮ ಕಣ್ಣುಗಳು ಹದ್ದಿನಂತಿವೆಯೇ? ಈ ಕಪ್ಪೆಗಳ ನಡುವೆ ಅಡಗಿರುವ ಎರಡು ಒಂದೇ ರೀತಿಯ ಛತ್ರಿಗಳನ್ನು ಹುಡುಕಿ ನೋಡೋಣ!
ಕಣ್ಣಿಗೊಂದು ಸವಾಲು ನೀಡುವ ವಿಚಿತ್ರ ಚಿತ್ರಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವಾಗಲೂ ವೈರಲ್ ಆಗುತ್ತಿರುತ್ತವೆ. ಈಗ ಅಂತಹದ್ದೇ ಒಂದು ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಇಲ್ಲಿ ಹಸಿರು ಬಣ್ಣದ ಕಪ್ಪೆಗಳು ತರಹೇವಾರಿ ಛತ್ರಿಗಳನ್ನು ಹಿಡಿದು ನಿಂತಿವೆ. ಆದರೆ, ಈ ನೂರಾರು ಛತ್ರಿಗಳ ನಡುವೆ ಕೇವಲ ಎರಡು ಛತ್ರಿಗಳು ಮಾತ್ರ ಅಚ್ಚರಿ ಎಂಬಂತೆ ಒಂದೇ ತರಹದ ವಿನ್ಯಾಸವನ್ನು ಹೊಂದಿವೆ. ಏನಿದು ಚಾಲೆಂಜ್? ಈ ಚಿತ್ರದಲ್ಲಿ ಕಿತ್ತಳೆ, ಹಳದಿ, ಗುಲಾಬಿ ಮತ್ತು ಕೆಂಪು ಬಣ್ಣದ ನೂರಾರು ಛತ್ರಿಗಳಿವೆ. ಪ್ರತಿಯೊಂದರ ಮೇಲೆಯೂ […]
ಭಾರತೀಯ ಕಾರ್ಪೊರೇಟ್ ವಲಯದಲ್ಲಿ 2026ನೇ ವರ್ಷವು ಉದ್ಯೋಗ ಹಬ್ಬಕ್ಕೆ ಸಾಕ್ಷಿಯಾಗಲಿದೆ. ಪ್ರಮುಖ ಸ್ಟಾಫಿಂಗ್ ಸಂಸ್ಥೆ ‘ಟೀಮ್ಲೀಸ್’ (TeamLease) ವರದಿಯ ಪ್ರಕಾರ, ಮುಂದಿನ ವರ್ಷ ದೇಶದಲ್ಲಿ ಬರೋಬ್ಬರಿ 10 ರಿಂದ 12 ಮಿಲಿಯನ್ (1 ರಿಂದ 1.2 ಕೋಟಿ) ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ. 2025ರಲ್ಲಿ ಈ ಪ್ರಮಾಣ 80 ಲಕ್ಷದಿಂದ 1 ಕೋಟಿಯಷ್ಟಿತ್ತು. ಹೊಸ ವರ್ಷದ ನೇಮಕಾತಿಯ ಪ್ರಮುಖ ಲಕ್ಷಣಗಳು: ಈ ಬಾರಿಯ ನೇಮಕಾತಿಯಲ್ಲಿ ಕಂಪನಿಗಳು ಕೇವಲ ಸಂಖ್ಯೆಗೆ ಮಾತ್ರವಲ್ಲದೆ, ವೈವಿಧ್ಯತೆ (Diversity) ಮತ್ತು ಹೊಸ ತಂತ್ರಜ್ಞಾನದ ಕೌಶಲಗಳಿಗೆ […]
ಹಾಲು ಉತ್ಪಾದಕ ರೈತರಿಗೆ ಹೊಸ ವರ್ಷದ ಗಿಫ್ಟ್: ಖರೀದಿ ದರ 1 ರೂ. ಹೆಚ್ಚಳ
ಚಿಕ್ಕಬಳ್ಳಾಪುರ: ಹಾಲು ಉತ್ಪಾದಕ ರೈತರಿಗೆ ಹೊಸ ವರ್ಷದ ಉಡುಗೊರೆಯಾಗಿ ಹಾಲಿನ ಖರೀದಿ ದರವನ್ನು ಒಂದು ರೂ. ಹೆಚ್ಚಳ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟದಿಂದ ಜಿಲ್ಲೆಯ ಹಾಲು ಉತ್ಪಾದಕರ ರೈತರಿಗೆ ಪ್ರತಿ ಲೀಟರ್ ಗೆ ಒಂದು ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಹೊಸ ವರ್ಷದ ಕೊಡುಗೆಯಾಗಿ ಪ್ರತಿ ಲೀಟರ್ ಹಾಲಿನ ಮೇಲೆ ರೈತರಿಗೆ ಒಂದು ರೂಪಾಯಿ ಹೆಚ್ಚುವರಿ ಸಿಗಲಿದೆ. ಇಷ್ಟು ದಿನ ಲೀಟರ್ ಗೆ 35.40 ರೂ. ಇದ್ದು ಒಂದು ರೂ. […]
20 ವರ್ಷಗಳ ನಂತರ ಒಂದಾದ ‘ಪೆನ್ ಪಾಲ್’ಗೆಳತಿಯರು! ಟಿಕ್ಟಾಕ್ ಪವಾಡಕ್ಕೆ ಬೆರಗಾದ ಇಂಟರ್ನೆಟ್ ಲೋಕ
ಸ್ನೇಹಕ್ಕೆ ಯಾವುದೇ ಗಡಿಗಳಿಲ್ಲ ಎಂಬ ಮಾತನ್ನು ಎಮಿ (Amy) ಮತ್ತು ಹನಾ (Hana) ಎಂಬ ಇಬ್ಬರು ಗೆಳತಿಯರು ಸಾಬೀತುಪಡಿಸಿದ್ದಾರೆ. ಬಾಲ್ಯದಲ್ಲಿ ಪತ್ರಗಳ ಮೂಲಕ ಶುರುವಾಗಿದ್ದ ಇವರ ಸ್ನೇಹ 2008 ರಲ್ಲಿ ಕಡಿದುಹೋಗಿತ್ತು. ಆದರೆ, ಸತತ 20 ವರ್ಷಗಳ ನಂತರ ಈ ಗೆಳತಿಯರು ಈಗ ಮತ್ತೆ ಒಂದಾಗಿದ್ದಾರೆ. ಇದಕ್ಕೆ ಕಾರಣವಾಗಿದ್ದು ಕೇವಲ ಒಂದು ಟಿಕ್ಟಾಕ್ ವಿಡಿಯೋ! ಪತ್ರದ ಮೂಲಕ ಶುರುವಾದ ಸ್ನೇಹ: ಎಮಿ ಮತ್ತು ಹನಾ ಬಾಲ್ಯದಲ್ಲಿ ಪೆನ್ ಪಾಲ್ಗಳಾಗಿದ್ದರು (ಪತ್ರಗಳ ಮೂಲಕ ಸ್ನೇಹ ಬೆಳೆಸುವವರು). ಈಜಿಪ್ಟ್ನಲ್ಲಿದ್ದ ಹನಾ, […]
ಬರೇಲಿ: ಉತ್ತರಪ್ರದೇಶ ಬಿಜೆಪಿ ಶಾಸಕ ಡಾ. ಶ್ಯಾಮ್ ಬಿಹಾರಿ ಲಾಲ್ ಶುಕ್ರವಾರ ನಿಧನರಾಗಿದ್ದಾರೆ. ಅವರು ಬರೇಲಿ ಜಿಲ್ಲೆಯ ಫರೀದ್ಪುರ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಶಾಸಕರು ಹೃದಯಾಘಾತದಿಂದ ಬಳಲುತ್ತಿದ್ದರು ಮತ್ತು ಪಿಲಿಭಿತ್ ರಸ್ತೆಯಲ್ಲಿರುವ ಮೆಡಿಸಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಜನವರಿ 1 ರಂದು ಕೇವಲ ಒಂದು ದಿನದ ಹಿಂದೆ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಬಿಜೆಪಿ ಶಾಸಕರಿಗೆ ಸರ್ಕ್ಯೂಟ್ ಹೌಸ್ನಲ್ಲಿ ಹೃದಯಾಘಾತವಾಯಿತು. ಸ್ವಲ್ಪ ಸಮಯದ ಹಿಂದೆ, ಅವರು ಕ್ಯಾಬಿನೆಟ್ ಸಚಿವ ಧರ್ಮಪಾಲ್ ಸಿಂಗ್ ಅವರೊಂದಿಗಿನ […]
BIG NEWS: ಬಳ್ಳಾರಿ ಘರ್ಷಣೆ, ಫೈರಿಂಗ್ ಕೇಸ್: ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು; ಐದು ಬಂದೂಕು ವಶಕ್ಕೆ
ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಶಾಸಕ ಜನಾರ್ಧನ ರೆಡ್ದಿ ಅವರ ಅವ್ವಂಬಾವಿಯಲ್ಲಿರುವ ನಿವಾಸದ ಬಳಿ ನಡೆದ ಗಲಾಟೆ, ಘರ್ಷಣೆ, ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಹೆಚ್ಚುವರಿ ಪೊಲೀಸ್ ಮಾಹಾನಿರ್ದೇಶಕ ಹಿತೇಂದ್ರ ಆರ್. ಮಾಹಿತಿ ನೀಡಿದ್ದಾರೆ. ಬಳ್ಳಾರಿ ಘರ್ಷಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ದೂರು ಆಧರಿಸಿ ಮೂರು ಪ್ರಕರಣ ಹಾಗೂ ಒಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಯುವಕ ಸಾವು, ಮಹರ್ಷಿ ವಾಲ್ಮೀಕಿಗೆ ಅಪಮಾನ, ಹಲ್ಲೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ ಎಂದು […]
ಉಗ್ರನಿಗೆ ನೆರವು ಪ್ರಕರಣ: ASI ಚಾಂದ್ ಪಾಷಾ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ಉಗ್ರ ನಾಸಿರ್ ಗೆ ಜೈಲಿನಲ್ಲಿ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎನ್ ಐಎ ಅಧಿಕಾರಿಗಳು ಎಎಸ್ಐ ಚಾಂದ್ ಪಾಷ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಆರೋಪ ಪಟ್ಟಿಯಲ್ಲಿ ಆರೋಪಿಗಳ ಪಾತ್ರದ ಬಗ್ಗೆ ಉಲ್ಲೇಖಿಸಿದ್ದು, ಸಿಎಆರ್ ಎಎಸ್ಐ ಚಾಂದ್ ಪಾಷಾ, ಅನಿಸಾ ಫಾತಿಮಾ, ಡಾ.ನಾಗರಾಜ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಹಿಂದೆ ಪರಾರುಯಾಗಿದ್ದ ಜುನದ್ ಸೇರಿದಂತೆ ೯ ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು. ಇದೀಗ ಹೆಚ್ಚುವರಿಯಾಗಿ ಎನ್ […]
ಅಂಚೆ ಪತ್ರಗಳ ವಿತರಣೆ ನಿಲ್ಲಿಸಿದ ವಿಶ್ವದ ಮೊದಲ ರಾಷ್ಟ್ರ ಡೆನ್ಮಾರ್ಕ್!
ಸಾಮಾಜಿಕ ಜಾಲತಾಣಗಳು, ಆಧುನಿಕ ಸಂವಹನ ವ್ಯವಸ್ಥೆಗಳು ಬಂದ ಬಳಿಕ ಪತ್ರ ಬರೆಯುವುದು ಕಡಿಮೆಯಾಗುತ್ತಿದೆ. ಸರ್ಕಾರಿ ವ್ಯವಹಾರಗಳು ಸಹ ಈಗ ಆನ್ಲೈನ್ ಮೂಲಕ ನಡೆಯುತ್ತಿದ್ದು, ಪತ್ರ ಬರೆಯುವುದು ಬಹುತೇಕ ತೆರೆಮರೆಗೆ ಸರಿಯುತ್ತಿದೆ. ಇಂತಹ ಹೊತ್ತಿನಲ್ಲಿ ವಿಶ್ವದ ದೇಶವೊಂದು ಅಂಚೆ ಮೂಲಕ ಪತ್ರ ವಿತರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಇನ್ನು ಮುಂದೆ ಅಂಚೆ ಇಲಾಖೆಯಲ್ಲಿ ಪತ್ರಗಳ ವಿತರಣೆ ಸೇವೆ ಇಲ್ಲ ಎಂದು ಡೆನ್ಮಾರ್ಕ್ ಘೋಷಣೆ ಮಾಡಿದೆ. ಹೀಗೆ ಘೋಷಣೆ ಮಾಡಿದ ವಿಶ್ವದ ಮೊದಲ ದೇಶ ಡೆನ್ಮಾರ್ಕ್. ಅಂಚೆ ಇಲಾಖೆ ಕಾರ್ಯ ನಿರ್ವಹಣೆ […]
ಗದಗ: ರೈತ ಕುಟುಂಬವೊಂದು 100 ಎಕರೆಯಲ್ಲಿ ಬೆಳೆದಿದ್ದ ಮೆಕ್ಕಜೋಳ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಮೆಕ್ಕೆಜೋಲದ ರಾಶಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಅತ್ತಿಕಟ್ಟಿ ಗ್ರಾಮದ ರೈತ ಸಹೋದರರು ನೂರು ಎಕರೆ ಜಾಗದಲ್ಲಿ ಮೆಕ್ಕೆಜೋಳ ಬೆಳೆದು ಫಸಲು ತೆಗೆದಿದ್ದರು. ಮೆಕ್ಕೆಜೋಳದ ಕೊಯ್ಲು ಮಾಡಿ ರಾಶಿ ಹಾಕಿದ್ದರು. ರಾತ್ರಿ ಬೆಳಗಾಗುವಷ್ಟರಲ್ಲಿ ನಾಲ್ವರು ದುಷ್ಕರ್ಮಿಗಳು ಮೆಕ್ಕೆಜೊಲದ ರಾಶಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಮೆಕ್ಕೆಜೋಳ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೆಕ್ಕೆಜೋಳದ […]
ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಘರ್ಷಣೆ ಗಲಾಟೆ ವೇಳೆ ನಡೆದ ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದು, ಶಾಸಕ ಭರತ್ ರೆಡ್ದಿಯೇ ಈ ಘಟನೆಗೆ ಕಾರಣ. ತಮ್ಮದೇ ಪಕ್ಷದ ಕಾರ್ಯಕರ್ತನ ಸಾವಿಗೆ ಅವರು ಕಾರಣರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್.ಅಶೋಕ್, ಬಳ್ಳಾರಿಯಲ್ಲಿ ನಡೆದ ಘಟನಾವಳಿ ಹಾಗೂ ರಾಜಶೇಖರ್ ಸಾವಿಗೆ ಭರತ್ ರೆಡ್ಡಿಯೇ ನೇರ ಕಾರಣ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. […]
ಬಾಂಗ್ಲಾದವರನ್ನು ಪತ್ತೆ ಮಾಡುವ ಯಂತ್ರ ನಮ್ಮಲ್ಲಿದೆ”; ಸ್ಲಂ ನಿವಾಸಿಗಳಿಗೆ ಬೆದರಿಸಿದ ಪೊಲೀಸ್!
ಘಾಜಿಯಾಬಾದ್: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊವೊಂದರಲ್ಲಿ, ಸ್ಲಂ ಪ್ರದೇಶದ ನಿವಾಸಿಗಳನ್ನು ಪೊಲೀಸ್ ಅಧಿಕಾರಿಯೊಬ್ಬರು ಬೆದರಿಸುವಂತೆ ಕಾಣಿಸಿಕೊಂಡ ದೃಶ್ಯ ವೈರಲ್ ಆದ ಹಿನ್ನೆಲೆಯಲ್ಲಿ ಘಾಜಿಯಾಬಾದ್ ಪೊಲೀಸರು ತನಿಖೆಗೆ ಆದೇಶಿಸಿದ್ದಾರೆ. ಸ್ಲಂ ನಿವಾಸಿಗಳ ಬಳಿ, ಅಕ್ರಮ ವಲಸಿಗರೇ ಅಲ್ಲವೇ ಎಂಬುದನ್ನು ಪತ್ತೆಹಚ್ಚುವ ಸಾಧನವೊಂದು ತಮ್ಮ ಬಳಿ ಇದೆ ಎಂದು ಅಧಿಕಾರಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಪೊಲೀಸರು ಇದನ್ನು ಸಾಮಾನ್ಯ ಪ್ರದೇಶ ನಿಯಂತ್ರಣ ಕಾರ್ಯಾಚರಣೆ ಎಂದು ವಿವರಣೆ ನೀಡಿದರೂ, ಈ ಘಟನೆ ಭಾರಿ ಚರ್ಚೆಗೆ ಕಾರಣವಾಗಿದೆ. […]
ಫ್ರೂಟ್ ಜಾಮ್ ನಲ್ಲಿ ಹುಳಗಳು ಪತ್ತೆ: ಮುಚ್ಚಳ ತೆಗೆಯುತ್ತಿದ್ದಂತೆ ಶಾಕ್ ಆದ ಗ್ರಾಹಕ
ಚಿಕ್ಕಬಳ್ಳಾಪುರ: ಫ್ರೂಟ್ ಜಾಮ್ ಬಾಟಲ್ ಖರೀದಿಸುವ ಮುನ್ನ ಗ್ರಾಹಕರು ಎಚ್ಚರಿಕೆ ವಹಿಸುವುದು ಅಗತ್ಯ. ಗ್ರಾಹಕರೊಬ್ಬರು ಆಗತಾನೆ ಅಂಗಡಿಯಲ್ಲಿ ಖರೀದಿಸಿದ್ದ ಫ್ರೂಟ್ ಜಾಮ್ ನಲ್ಲಿ ಹುಳಗಳು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ನಂದಿ ಗ್ರಾಮದ ಶಾಂತಕುಮಾರ್ ಎಂಬುವವರು ಬೇಕರಿಯೊಂದರಲ್ಲಿ ಫ್ರೂಟ್ ಜಾಮ್ ಬಾಟಲ್ ಖರೀದಿಸಿದ್ದರು. ಮನೆಗೆ ಬಂದು ಫ್ರೂಟ್ ಜಾಮ್ ಮುಚ್ಚಳು ತೆಗೆದರೆ ಜಾಮ್ ನಲ್ಲಿ ಹುಳಗಳು ಪತ್ತೆಯಾಗಿವೆ. ಬಾಟಲ್ ಮೇಲೆ ನಮೂದಿಸಿರುವ ದಿನಾಂಕದ ಪ್ರಕಾರ ಇನ್ನೂ ಅವಧಿ ಮೀರಿರಲಿಲ್ಲ. ಆದಾಗ್ಯೂ ಫ್ರೂಟ್ ಜಾಮ್ ನಲ್ಲಿ ಹುಳಗಳು […]
ಅಮೃತ್ 2.0 ಅಭಿಯಾನ : ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನ
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಅಮೃತ್ 2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮ ತಾಂತ್ರಿಕೇತರ ಚಟುವಟಿಕೆಯಡಿ ಪಾಲಿಕೆ ವ್ಯಾಪ್ತಿಯಲ್ಲಿ ಅನುಮೋದಿತ 19 ಪಾರ್ಕ್ಗಳನ್ನು ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿಂದ ಆಸಕ್ತಿ ವ್ಯಕ್ತಪಡಿಸುವಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಸ್ವಸಹಾಯ ಸಂಘದ ಸದಸ್ಯರು ಮಹಾನಗರ ಪಾಲಿಕೆಯ ವಲಯ ಕಚೇರಿ-2 ರಲ್ಲಿನ ಡೇ-ನಲ್ಮ್ ಶಾಖೆಯಿಂದ ನಿಗಧಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 14 […]
ಬಳ್ಳಾರಿ: ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಬಳಿ ಬ್ಯಾನರ್ ಅಳವಡಿಕೆ ವಿಚಾರವಾಗಿ ಆರಂಭವಾದ ಗಲಾಟೆ, ಘರ್ಷಣೆಗೆ ತಿರುಗಿದ್ದು, ಈ ವೇಳೆ ಫೈರಿಂಗ್ ನಡೆದು ಗುಂಡೇಟು ತಗುಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬಳ್ಳಾರಿಯಲ್ಲಿ ಗಣಿ ಧಣಿ ಜನಾರ್ಧನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಡುವಿನ ರಾಜಕೀಯ ಕೆಸರೆಚಾಟಕ್ಕೂ ಕಾರಣವಾಗಿದೆ. ಬಳ್ಳಾರಿ ಗಲಾಟೆ ವೇಳೆ ನಡೆದ ಫೈರಿಂಗ್ ವಿಚಾರವಾಗಿ ಮಾತನಾಡಿದ್ದ ಶಾಸಕ ಜನಾರ್ಧನ […]
ನಾಲ್ಕು ಚಕ್ರ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ ಸಹಾಯಧನ, ಕೂಡಲೇ ಅರ್ಜಿ ಸಲ್ಲಿಸಿ
ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ 01 ಮತ್ತು ಪರಿಶಿಷ್ಟ ಪಂಗಡದ 02 ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಗುರಿ ನಿಗದಿಪಡಿಸಲಾಗಿದ್ದು, ಖರೀದಿಸಿದ ವಾಹನಕ್ಕೆ ಶೇ.50ರಷ್ಟು ಅಥವಾ ಗರಿಷ್ಟ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ಅರ್ಜಿಯನ್ನು ಜನವರಿ 12 ರೊಳಗಾಗಿ ಜಿಲ್ಲೆಯ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ […]
ನಾಳೆಯಿಂದ ಎಡದಂಡೆ, ಜ 8. ರಿಂದ ಬಲದಂಡೆ ನಾಲೆಗೆ ‘ಭದ್ರಾ ನೀರು’ಹರಿಸಲು ನಿರ್ಣಯ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತ ನಿರ್ಣಯ ಕೈಗೊಳ್ಳಲಾಯಿತು. ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು […]
BREAKING : ಕರ್ನಾಟಕ ‘CET’ಪರೀಕ್ಷೆಯ ದಿನಾಂಕ ಘೋಷಣೆ , ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ಕರ್ನಾಟಕ ಸಿಇಟಿ ಪರೀಕ್ಷೆ ದಿನಾಂಕ ಘೋಷಣೆಯಾಗಿದೆ.. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏ.23 ಹಾಗೂ ಏ.24 ರಂದು ಪರೀಕ್ಷೆ ನಿಗಧಿಪಡಿಸಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ ನಿಗಧಿಯಾಗಿದೆ ಏಪ್ರಿಲ್ 23ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 24ರಂದು ಗಣಿತ ಹಾಗೂ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಮಾಹಿತಿ ನೀಡಿದ್ದಾರೆ. ಅದೇ ರೀತಿ […]
ಬೆಳಗಾವಿ: ಮೂರು ಮಕ್ಕಳ ತಾಯಿ ಜೊತೆ ಯುವಕನೊಬ್ಬ ಅಕ್ರಮ ಸಂಬಂಧ ಹೊಂದಿದ್ದು, ಆಕೆಯನ್ನು ಭೇಟಿಯಾಗಲೆಂದು ಬಂದಿದ್ದ ವೇಳೆ ಮಹಿಳೆಯ ಪತಿ ಹಾಗೂ ಆತನ ಸಹೋದರ ಯುವಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಯಕ್ಸಾಂಬಾ ಪಟ್ಟಣದ ಅಕ್ಷಯ್ ಕಲ್ಲಟಗಿ ಎಂಬ ಯುವಕ ನಾಲ್ಕು ವರ್ಷಗಳಿಂದ ವಿವಾಹಿತ ಮಹಿಳೆಯ ಹಿಂದೆ ಬಿದ್ದಿದ್ದ. ಮಹಿಳೆಯ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ರಾತ್ರಿ ಭೇಟಿಯಾಗಲು ಬರುವಂತೆ ಮಹಿಳೆಯೇ […]
Power Cut : ಬೆಂಗಳೂರಿಗರೇ ಗಮನಿಸಿ : ನಾಳೆಯಿಂದ 17 ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ.!
ಬೆಂಗಳೂರು : ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಶನಿವಾರದಿಂದ (ಜನವರಿ 3) ಆರಂಭವಾಗಿ 17 ದಿನಗಳವರೆಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಪ್ರಮುಖ ವಿದ್ಯುತ್ ಉಪಕೇಂದ್ರದಲ್ಲಿ ನಿಗದಿತ ನಿರ್ವಹಣಾ ಕಾರ್ಯದಿಂದಾಗಿ ವಿದ್ಯುತ್ ವ್ಯತ್ಯಯವಾಗಲಿದೆ. 220/66/11 ಕೆವಿ ಇಪಿಐಪಿ ಸಬ್ಸ್ಟೇಷನ್ನಲ್ಲಿ 31.5 ಎಂವಿಎ ಪವರ್ ಟ್ರಾನ್ಸ್ಫಾರ್ಮರ್ 3 ರ ಮರುಪೂರಣ ನಿರ್ವಹಣಾ ಕಾರ್ಯಕ್ಕೆ ಸಂಬಂಧಿಸಿದಂತೆ ವಿದ್ಯುತ್ ಸರಬರಾಜು ವ್ಯತ್ಯಯವನ್ನು ಕೈಗೊಳ್ಳಲಾಗುತ್ತಿದೆ. ಎಷ್ಟು ದಿನ..?ಜನವರಿ 3 (ಶನಿವಾರ) ದಿಂದ ಜನವರಿ 19 (ಸೋಮವಾರ) 17 ದಿನ ಎಲ್ಲೆಲ್ಲಿ ಪವರ್ […]
BIG NEWS : ರಾಜ್ಯ ಸರ್ಕಾರದಿಂದ 2026 ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ರಾಜ್ಯ ಸರ್ಕಾರವು 2026ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ ಹಾಗೂ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2026ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು ಸದರಿ ಜಯಂತಿಗಳನ್ನು ಉಲ್ಲೇಖಿತ ಮಾರ್ಗಸೂಚಿಯನ್ವಯ ಆಚರಣೆ ಮಾಡಬೇಕೆಂದು ಈ ಮೂಲಕ ಕೋರಿದೆ. 2026ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ & ಜಯಂತಿಗಳ ಆಚರಣೆಗೆ ಮಾರ್ಗ ಸೂಚಿಗಳು
BREAKING : ರಾಜ್ಯ ಸರ್ಕಾರದಿಂದ 2026 ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ ಹಾಗೂ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು : ರಾಜ್ಯ ಸರ್ಕಾರವು 2026ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ ಹಾಗೂ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2026ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು ಸದರಿ ಜಯಂತಿಗಳನ್ನು ಉಲ್ಲೇಖಿತ ಮಾರ್ಗಸೂಚಿಯನ್ವಯ ಆಚರಣೆ ಮಾಡಬೇಕೆಂದು ಈ ಮೂಲಕ ಕೋರಿದೆ. 2026ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ & ಜಯಂತಿಗಳ ಆಚರಣೆಗೆ ಮಾರ್ಗ ಸೂಚಿಗಳು
ಬೆಂಗಳೂರು: ಹೊಸ ವರ್ಷಾಚರಣೆಗೆಂದು ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಹೋಗಿದ್ದ ಬೆಂಗಳೂರು ಮೂಲದ ಉದ್ಯಮಿ ಕುಟುಂಬ ಮನೆಗೆ ವಾಪಾಸ್ ಆದಾಗ ಮನೆಯಲ್ಲಿದ್ದ ಚಿನ್ನಾಭರಣ, ವಸ್ತುಗಳು ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉದ್ಯಮಿ ಅಭಿಷೇಕ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆ ಕೆಲಸಕ್ಕಿದ್ದವರಿಂದಲೇ ಈ ಕೃತ್ಯ ನಡೆದಿದೆ. ಉದ್ಯಮಿ ಕುಟುಂಬ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಹೋಗುವಾಗ ಮನೆ ಕೆಲಸದವ ಬಳಿ ಮನೆ ಕೀ ಕೊಟ್ಟು ಹೋಗಿದ್ದು, ಮನೆಗೆ ವಾಪಾಸ್ ಆಗುವಷ್ಟರಲ್ಲಿ ಮನೆಯಲ್ಲಿದ್ದ ಬರೋಬ್ಬರಿ 1.37 ಕೋಟಿ ಮೌಲ್ಯದ […]
SHOCKING : ಮಧ್ಯಪ್ರದೇಶದಲ್ಲಿ 200 ಗಿಳಿಗಳ ಮಾರಣ ಹೋಮ : ಕಿಡಿಗೇಡಿಗಳಿಂದ ವಿಷಪ್ರಾಶನ ಶಂಕೆ |WATCH VIDEO
ಖಾರ್ಗೋನ್ : ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ನರ್ಮದಾ ನದಿಯ ದಡದಲ್ಲಿ ಆಹಾರ ವಿಷದಿಂದಾಗಿ ಕನಿಷ್ಠ 200 ಗಿಳಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಕಿಡಿಗೇಡಿಗಳಿಂದ ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ. ಬದ್ವಾ ಪ್ರದೇಶದ ನದಿ ದಂಡೆಯಲ್ಲಿರುವ ಜಲಚರ ಸೇತುವೆಯ ಬಳಿ ಕಳೆದ ನಾಲ್ಕು ದಿನಗಳಲ್ಲಿ ಈ ಗಿಳಿಗಳ ಮೃತದೇಹಗಳು ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಯು ಹಕ್ಕಿ ಜ್ವರದ ಕಾರಣವನ್ನು ತಳ್ಳಿಹಾಕಿದೆ ಎಂದು ಅವರು ಹೇಳಿದರು. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ […]

17 C