SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

16ನೇ ಹಣಕಾಸು ಆಯೋಗದ ಮುಂದೆ ಕರ್ನಾಟಕ ಮಂಡಿಸಿರುವ ಬೇಡಿಕೆಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರವು 16ನೇ ಹಣಕಾಸು ಆಯೋಗದ ಮುಂದೆ ಕೆಲವು ನ್ಯಾಯ ಸಮ್ಮತ ಮತ್ತು ಸಂವಿಧಾನಾತ್ಮಕ ಬೇಡಿಕೆಗಳನ್ನು ಮಂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ ನ್ಯಾಯಯುತ ತೆರಿಗೆ ಪಾಲು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ, ವಿಶೇಷ ಅನುದಾನ ನೀಡುವುದು ಸೇರಿದಂತೆ ಸಮಾನ ಹಂಚಿಕೆಯ ಮೂಲಕ ಸದೃಢ ಒಕ್ಕೂಟಕ್ಕೆ ಮನ್ನಣೆ ನೀಡಬೇಕು ಎಂದು ಕರ್ನಾಟಕದ ಒತ್ತಾಯವಾಗಿದೆ. ಈ ನಿಟ್ಟಿನಲ್ಲಿ ‘ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ’ ಎಂಬ ಅಭಿಯಾನ ಕೂಡ ಕೈಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 16ನೇ ಹಣಕಾಸು […]

ಕನ್ನಡ ದುನಿಯಾ 30 Jan 2026 10:00 pm

ಲಕ್ಕುಂಡಿ ಉತ್ಖನನದ ನಿರ್ದೇಶಕ ಟಿ.ಎಂ. ಕೇಶವ್ ನಿಧನ

ಗದಗ: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಉತ್ಕನದ ನಿರ್ದೇಶಕ ಡಾ.ಟಿ.ಎಂ. ಕೇಶವ್(77) ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯ ಕಾರಣ ಕೇಶವ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪುರಾತತ್ವ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದ ಕೇಶವ್ ಅವರು ಲಕ್ಕುಂಡಿ ಉತ್ಖನನ ಕಾರ್ಯದ ನಿರ್ದೇಶಕರಾಗಿದ್ದರು. ಅವರ ನೇತೃತ್ವದಲ್ಲಿ ಲಕ್ಕುಂಡಿ ಉತ್ಖನನ ಕಾರ್ಯ ಕೈಗೊಳ್ಳಲಾಗಿತ್ತು. ಕೇಂದ್ರ ಪುರಾತತ್ವ ಇಲಾಖೆ ಅಧೀಕ್ಷಕರಾಗಿ ಕೇಶವ್ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಅವರ ನಿಧನ ದೊಡ್ಡ ನೋವು ತಂದಿದೆ. ಜನವರಿ 31ರಂದು ಉತ್ಕನನ ಸ್ಥಳದಲ್ಲಿ […]

ಕನ್ನಡ ದುನಿಯಾ 30 Jan 2026 9:09 pm

ಮುಂದಿನ 5 ವರ್ಷ ಭಾರತಕ್ಕೆ ವಿಶ್ವಬ್ಯಾಂಕ್ ನಿಂದ ವಾರ್ಷಿಕ 8-10 ಶತಕೋಟಿ ಡಾಲರ್

ನವದೆಹಲಿ: ಮುಂದಿನ 5 ವರ್ಷಗಳಲ್ಲಿ ಭಾರತಕ್ಕೆ ವಾರ್ಷಿಕ 8-10 ಶತಕೋಟಿ ಅಮೆರಿಕನ್ ಡಾಲರ್ ಹಣಕಾಸು ಒದಗಿಸಲು ವಿಶ್ವ ಬ್ಯಾಂಕ್ ಬದ್ಧವಾಗಿದೆ. ಭಾರತದ ಮುಂದಿನ ಹಂತದ ಬೆಳವಣಿಗೆಯನ್ನು ವೇಗಗೊಳಿಸಲು ಮತ್ತು ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗುವ ದೇಶದ ದೃಷ್ಟಿಕೋನವನ್ನು ಬೆಂಬಲಿಸಲು ಮುಂದಿನ ಐದು ವರ್ಷಗಳಲ್ಲಿ ವಾರ್ಷಿಕ 8-10 ಶತಕೋಟಿ ಅಮೆರಿಕನ್ ಡಾಲರ್ ಹಣಕಾಸು ಒದಗಿಸುವ ಹೊಸ ಪಾಲುದಾರಿಕೆ(ಸಿಪಿಎಫ್) ಅನ್ನು ವಿಶ್ವ ಬ್ಯಾಂಕ್ ಸಮೂಹದೊಂದಿಗೆ ಕೇಂದ್ರ ಹಣಕಾಸು ಸಚಿವರು ಸ್ವಾಗತಿಸಿದ್ದಾರೆ. ಇದು ಭಾರತದ ವಿಕಸಿತ್ ಭಾರತ್ ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗಿದೆ. ಸಾರ್ವಜನಿಕ […]

ಕನ್ನಡ ದುನಿಯಾ 30 Jan 2026 8:49 pm

BIG NEWS: ಅಜಿತ್ ಪವಾರ್ ನಿಧನ ಹಿನ್ನೆಲೆ ನಾಳೆ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ

ಮುಂಬೈ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದು, ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಮುಂದಿನ ಉಪಮುಖ್ಯಮಂತ್ರಿಯಾಗಲಿದ್ದಾರೆ. ಪ್ರಫುಲ್ ಪಟೇಲ್ ಅವರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅಜಿತ್ ಪವಾರ್ ಮಹಾರಾಷ್ಟ್ರದ ಅತ್ಯಂತ ದೀರ್ಘಾವಧಿಯ ಉಪಮುಖ್ಯಮಂತ್ರಿಯಾಗಿದ್ದರು ಮತ್ತು ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಹಣಕಾಸು, ಯೋಜನೆ ಮತ್ತು ಅಬಕಾರಿ ಇಲಾಖೆಗಳನ್ನು ಹೊಂದಿದ್ದರು. ಮೂಲಗಳ ಪ್ರಕಾರ, ಶನಿವಾರ ಮಧ್ಯಾಹ್ನ 2 ಗಂಟೆಗೆ ಎನ್‌ಸಿಪಿಯ ಶಾಸಕಾಂಗ ಪಕ್ಷದ ಸಭೆ […]

ಕನ್ನಡ ದುನಿಯಾ 30 Jan 2026 8:26 pm

ಅವರೇ ಶೂಟ್ ಮಾಡಿಕೊಂಡಿದ್ದಾರೆ, ತನಿಖೆ ನಡೆದಿದೆ: ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಬಗ್ಗೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿಕೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರಾಯ್ ಅವರ ಕುಟುಂಬದವರನ್ನು ಸಂಪರ್ಕ ಮಾಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಅವರೇ ಶೂಟ್ ಮಾಡಿಕೊಂಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಆತ್ಮಹತ್ಯೆ ಬಗ್ಗೆ ತನಿಖೆ ನಡೆಸುತ್ತೇವೆ. ಐಟಿ ತಂಡದ ಜೊತೆಗೆ ನಮ್ಮ ಪೊಲೀಸರು ಸಂಪರ್ಕದಲ್ಲಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು […]

ಕನ್ನಡ ದುನಿಯಾ 30 Jan 2026 7:43 pm

ಗೂಗಲ್ ಮ್ಯಾಪ್ ಸೇರಿದ ಜೆಮಿನಿ: ವಾಕಿಂಗ್, ಸೈಕ್ಲಿಂಗ್‌ ಮಾಡುವವರಿಗೆ ಗುಡ್‌ ನ್ಯೂಸ್

ಕೃತಕ ಬುದ್ಧಿಮತ್ತೆ (ಎಐ) ಜೊತೆ ಈಗ ಹೆಜ್ಜೆ ಹಾಕಬೇಕಾಗಿದೆ. ಹೌದು ಗೂಗಲ್ ಮ್ಯಾಪ್ ವಾಕಿಂಗ್ ಮತ್ತು ಸೈಕ್ಲಿಂಗ್ ಮಾಡುವವರಿಗೆ ಮಹತ್ವದ ಅಪ್‌ಡೇಟ್ ಒಂದನ್ನು ನೀಡಿದೆ. ಗೂಗಲ್‌ ಮ್ಯಾಪ್‌ಗೆ ಜೆಮಿನಿಯನ್ನು ಜೋಡಿಸಲಾಗಿದೆ. ಗೂಗಲ್ ಮ್ಯಾಪ್ ಈಗ ಹೊಸ ಫೀಚರ್ ಒಂದನ್ನು ಪರಿಚಯಿಸಿದೆ. ಬಳಕೆದಾರರು ನಡೆಯುವಾಗ ಮತ್ತು ಸೈಕಲ್ ಚಲಾಯಿಸುವಾಗಲೂ ಜೆಮಿನಿಯನ್ನು ಬಳಸಲು ಇದು ಅವಕಾಶವನ್ನು ನೀಡುತ್ತದೆ. ವಾಹನ ಚಾಲನೆ, ಸಾರ್ವಜನಿಕ ಸಾರಿಗೆ ಬಳಕೆ ಸೇರಿದಂತೆ ಹೆಚ್ಚಿನ ನ್ಯಾವಿಗೇಷನ್ ಮೋಡ್‌ಗಳಲ್ಲಿ ಜೆಮಿನಿ-ಚಾಲಿತ ಹ್ಯಾಂಡ್ಸ್-ಫ್ರೀ ಸಂಭಾಷಣೆಗಳನ್ನು ಹೊರತಂದ ಕೆಲವು ತಿಂಗಳುಗಳ ನಂತರ […]

ಕನ್ನಡ ದುನಿಯಾ 30 Jan 2026 7:30 pm

20,000 ಸಂಬಳದಲ್ಲಿ ಬೆಂಗಳೂರಿನಲ್ಲಿ ಹೇಗೆ ಬದುಕುವುದು? ಪ್ರತಿಭಾನ್ವಿತರು ಉದ್ಯೋಗ ಬಿಟ್ಟು ಊರಿಗೆ ಹೋಗುವ ಸ್ಥಿತಿ: ಸಚಿವ ಶರಣಪ್ರಕಾಶ ಪಾಟೀಲ್ ಕಳವಳ

ಬೆಂಗಳೂರು: ಪ್ರತಿಭಾವಂತ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡಬೇಕಾದ ಅಗತ್ಯವಿದೆ. ಇಂಥವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಆಯೋಜಿಸಿದ ಎಂಎಸ್‌ಎಂಇ ಮತ್ತು ಉದ್ಯೋಗಾವಕಾಶಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಎಂಎಸ್‌ಎಂಇ ವಲಯದಲ್ಲಿ ಕಡಿಮೆ ವೇತನ ಇರುವ ಬಗ್ಗೆ ಮಾಹಿತಿ ಬಂದಿದೆ. ಬೆಂಗಳೂರಿನಂತಹ ನಗರದಲ್ಲಿ ಉದ್ಯೋಗಿಗಳು ಯೋಗ್ಯ ಜೀವನವನ್ನು ನಡೆಸಲು ಅನುವು ಮಾಡಿಕೊಡುವ ಗೌರವಾನ್ವಿತ ವೇತನವನ್ನು ಎಂಎಸ್‌ಎಂಇಗಳು ನೀಡಬೇಕು […]

ಕನ್ನಡ ದುನಿಯಾ 30 Jan 2026 7:05 pm

ರಸ್ತೆಯಲ್ಲಿ ಹಠಾತ್ ಅಡ್ಡ ಬಂದ ನಾಯಿ: ಸ್ಕೂಟರ್ ನಲ್ಲಿದ್ದ ಮಹಿಳೆ ಸಾವು

ಉಡುಪಿ: ರಸ್ತೆಯಲ್ಲಿ ಹಠಾತ್ ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆ ಕೆಳಗೆ ಬಿದ್ದು ಗಾಯಗೊಂಡು ಮೃತಪಟ್ಟಿದ್ದಾರೆ. ಬ್ರಹ್ಮಾವರ ಕಾಡೂರು ಗ್ರಾಮದ ದುರ್ಗಾಪರಮೇಶ್ವರಿ ದೇವಾಲಯದ ಬಳಿ ಘಟನೆ ನಡೆದಿದೆ. ನಾಯಿ ಅಡ್ಡ ಬಂದಿದ್ದರಿಂದ ಸ್ಕೂಟರ್ ಬ್ರೇಕ್ ಹಾಕಲಾಗಿದೆ. ಈ ವೇಳೆ ಹಿಂಬದಿ ಕುಳಿತಿದ್ದ ಸುಮತಿ ಶೆಟ್ಟಿ ಅವರು ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರ ಪತಿ ಕರುಣಾಕರ ಶೆಟ್ಟಿ ಸ್ಕೂಟರ್ ಚಾಲನೆ ಮಾಡುತ್ತಿದ್ದರು. ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸುಮತಿ ಅವರನ್ನು ಬ್ರಹ್ಮಾವರದ […]

ಕನ್ನಡ ದುನಿಯಾ 30 Jan 2026 6:53 pm

BREAKING: ಪೌರಾಯುಕ್ತಗೆ ಧಮ್ಕಿ ಪ್ರಕರಣ: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಚಿಕ್ಕಬಾಳ್ಳಾಪುರ: ಪೌರಾಯುಕ್ತೆಗೆ ಧಮ್ಕಿ ಹಾಕಿ, ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಶಿಢಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಜೀವ ಬೆದರಿಕೆ ಹಾಕಿ ಧಮ್ಕಿ ಹಾಕಿದ್ದ ಕೇಸ್ ನಲ್ಲಿ ಬಂಧನಕ್ಕೀಡಾಗಿದ್ದ ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ರ್ಬಳಿಕ ರಾಜೀವ್ ಗೌಡ ಅವರನ್ನು ಪೊಲೀಸರು ಎರಡು ದಿನ ಕಸ್ಟಡಿಗೆ ಪಡೆದಿದ್ದರು. ಇಂದು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ರಾಜೀವ್ […]

ಕನ್ನಡ ದುನಿಯಾ 30 Jan 2026 6:36 pm

ಐಷಾರಾಮಿ ಕಾರುಗಳನ್ನು ಬಿಟ್ಟು ಮಾರುತಿ 800 ಕಾರನ್ನು 10 ಲಕ್ಷಕ್ಕೆ ಖರೀದಿ ಮಾಡಿದ್ದ ಸಿ.ಜೆ.ರಾಯ್

ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಮತ್ತು ಅಧ್ಯಕ್ಷ ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಅವರ ಮೇಲೆ ಐಟಿ ದಾಳಿಯಾಗಿತ್ತು. ಕಚೇರಿಯಲ್ಲಿ ಐಟಿ ಅಧಿಕಾರಿಗಳು ಇರುವಾಗಲೇ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೂರಾರು ಕೋಟಿ ರೂ. ಆಸ್ತಿ ಹೊಂದಿರುವ ಸಿ.ಜೆ.ರಾಯ್ ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋ ಮೂಲಕ ಸದಾ ಜನರ ಸಂಪರ್ಕದಲ್ಲಿರುತ್ತಿದ್ದರು. ರಿಯಲ್ ಎಸ್ಟೇಟ್, ಸಿನಿಮಾ ನಿರ್ಮಾಣ ಸೇರಿದಂತೆ ವಿವಿಧ ಉದ್ಯಮದಲ್ಲಿ ತೊಡಗಿದ್ದರು. ಐಷಾರಾಮಿ ಕಾರುಗಳನ್ನು ಹೊಂದಿರುವ ಸಿ.ಜೆ.ರಾಯ್ ಮೊದಲು ಬಳಕೆ ಮಾಡಿದ್ದ ಕಾರು ಮಾರುತಿ-800. […]

ಕನ್ನಡ ದುನಿಯಾ 30 Jan 2026 6:30 pm

10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ಗೃಹರಕ್ಷಕ ದಳ ಸೇರಲು ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗೃಹರಕ್ಷಕರಾಗಲು ಬೇಕಾದ ಆರ್ಹತೆ: ಭಾರತೀಯ ಪ್ರಜೆಯಾಗಿರಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು /ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತರು ನಿಗದಿತ […]

ಕನ್ನಡ ದುನಿಯಾ 30 Jan 2026 6:30 pm

BREAKING: 21 ಮಂದಿ ಬಲಿ ಪಡೆದ ಕೋಲ್ಕತ್ತಾ ಅಗ್ನಿ ದುರಂತ ‘ದುಃಖಕರ’: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕನಿಷ್ಠ 21 ಜೀವಗಳನ್ನು ಬಲಿ ಪಡೆದ ಕೋಲ್ಕತ್ತಾದ ಗೋದಾಮಿನ ಅಗ್ನಿ ಅವಘಡದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ‘ತುಂಬಾ ದುರಂತ’ ಮತ್ತು ‘ದುಃಖಕರ’. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಪ್ರಧಾನ ಮಂತ್ರಿ ಮೋದಿ ಅವರು ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಇದರ ಜೊತೆಗೆ, ಗಾಯಾಳುಗಳಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ(PMO) […]

ಕನ್ನಡ ದುನಿಯಾ 30 Jan 2026 6:16 pm

BREAKING: ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾಗಲೇ ಕಚೇರಿಯ ಚೇಂಬರ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಉದ್ಯಮಿ ಸಿ.ಜೆ.ರಾಯ್

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ.ಜೆ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವರ್ತೂರು ಬಳಿ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಚೇರಿಯ ತಮ್ಮದೇ ಚೇಂಬರ್ ನಲ್ಲಿ ಉದ್ಯಮಿ ಸಿ.ಜೆ.ರಾಯ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕಾನ್ಫಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮನೆ ಹಾಗೂ ಕಚೇರಿ ಮೇಲೆ ಪದೇ ಪದೇ ಐಟಿ […]

ಕನ್ನಡ ದುನಿಯಾ 30 Jan 2026 6:04 pm

ಬಜೆಟ್ 2026: ಪತ್ರಿಕಾಗೋಷ್ಠಿ, ರೀಲ್ಸ್‌ ಸೇರಿ ಬಿಜೆಪಿಯಿಂದ ರಾಷ್ಟ್ರವ್ಯಾಪಿ ಪ್ರಚಾರ

ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಿದೆ. 2026-27ನೇ ಸಾಲಿನ ಬಜೆಟ್‌ ಅನ್ನು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರ ಭಾನುವಾರ ಮಂಡನೆ ಮಾಡುತ್ತಿದ್ದಾರೆ. ಬಿಜೆಪಿ ಸಾಂಪ್ರದಾಯಿಕ ಮತ್ತು ಡಿಜಿಟಲ್ ಮೂಲಕ ಜನರನ್ನು ಸಂಪರ್ಕಿಸಿ ಬಜೆಟ್‌ ಅನ್ನು ಅವರಿಗೆ ತಲುಪಿಸಲು ರಾಷ್ಟ್ರಮಟ್ಟದ ಅಭಿಯಾನವನ್ನು ರೂಪಿಸಿದೆ. ಇದರಲ್ಲಿ ಪತ್ರಿಕಾಗೋಷ್ಠಿ, ರೀಲ್ಸ್‌ ಸೇರಿದಂತೆ ವಿವಿಧ ಪ್ರಚಾರ ತಂತ್ರಗಳು ಸೇರಿವೆ. ಕೇಂದ್ರ ಬಜೆಟ್ 2026-27 ವಿವರಿಸಲು ಬಿಜೆಪಿ ಫೆಬ್ರವರಿ 1 ರಿಂದ 15ರ ತನಕ ರಾಷ್ಟ್ರವ್ಯಾಪಿ […]

ಕನ್ನಡ ದುನಿಯಾ 30 Jan 2026 5:55 pm

BIG NEWS: ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತುಗಳಿಗೆ ನಿರ್ಬಂಧ: ಸಚಿವ ರಾಮಲಿಂಗ ರೆಡ್ಡಿ ಖಡಕ್ ಆದೇಶ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತುಗಳಿಗೆ ನಿಷೇಧ ಹೇರಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಬಸ್ ಗಳಲ್ಲಿ ವಿವಿಧ ಜಾಹೀರಾತುಗಳು, ಅದರಲ್ಲಿಯೂ ತಂಬಾಕು ಉತ್ಪನ್ನಗಳ ಜಾಹೀರಾತು ಪೋಸ್ಟರ್ ಗಳೇ ರಾರಾಜಿಸುತ್ತಿದ್ದವು. ಈ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ತಂಬಾಕು ಉತ್ಪನ್ನಗಳ ಜಾಹೀರಾತಿನ ಮೂಲಕ ತಂಬಾಕು ಸೇವನೆಗೆ ಪ್ರಚೋದನೆ ನೀಡಲಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಸಚಿವ ರಾಮ ಲಿಂಗಾರೆಡ್ಡಿ, ಸರ್ಕಾರಿ ಬಸ್ ಗಳಲ್ಲಿ […]

ಕನ್ನಡ ದುನಿಯಾ 30 Jan 2026 5:21 pm

BREAKING: ಬಸ್-ಕಾರು ಭೀಕರ ಅಪಘಾತ: ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕ್ ಹಾಗೂ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಬೀರಲಿಂಗ (41) ಮೃತ ಹೆಡ್ ಕಾನ್ಸ್ ಟೇಬಲ್. ಚನ್ನರಾಯಪಟ್ಟಣದ ನಗರ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಧ್ಯಾಹ್ನ ಮನೆಗೆ ಊಟಕ್ಕೆಂದು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೀರಲಿಂಗ ಅವರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಅವರು […]

ಕನ್ನಡ ದುನಿಯಾ 30 Jan 2026 5:05 pm

‘ವಾರಣಾಸಿ’ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಎಸ್‌ಎಸ್ ರಾಜಮೌಳಿ

ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಎಸ್.ಎಸ್.ರಾಜಮೌಳಿ ‘ವಾರಾಣಸಿ’ ಸಿನಿಮಾಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ನಿರ್ದೇಶಕ ರಾಜಮೌಳಿ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ. ನಿರ್ದೇಶಕ ಎಸ್.ಎಸ್.ರಾಜಮೌಳಿ ಮತ್ತು ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಒಟ್ಟಾಗಿರುವ ಮೊದಲ ಸಿನಿಮಾ ‘ವಾರಣಾಸಿ’. ಈ ಚಿತ್ರದಲ್ಲಿ ಮಹೇಶ್ ಬಾಬು ರುದ್ರನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಸಿನಿಮಾ 2027ರ ಜನವರಿಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿದೆ. ನಿರ್ದೇಶಕ ಎಸ್.ಎಸ್.ರಾಜಮೌಳಿ […]

ಕನ್ನಡ ದುನಿಯಾ 30 Jan 2026 4:55 pm

ಕದ್ದುಮುಚ್ಚಿ ನಟ ದರ್ಶನ್ ಭೇಟಿಯಾಗಲು ಜೈಲಿಗೆ ಹೋದ ಕಾನ್ಸ್ ಟೇಬಲ್: ಸಿಸಿಟಿವಿಯಲ್ಲಿ ಸೆರೆ: ಜೈಲಿನ ವಾರ್ಡನ್ ಎತ್ತಂಗಡಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಕೊಲೆ ಆರೋಪದಲ್ಲಿ ಜೈಲು ಸೇರಿದ್ದರೂ ದರ್ಶನ್ ಗೆ ಅಭಿಮಾನಿಗಳ ಅಭಿಮಾನಕ್ಕಂತೂ ಕೊರತೆಯಿಲ್ಲ. ದರ್ಶನ್ ಸೆಲೆಬ್ರಿಟಿಯಾಗಿರುವುದಿರಂದ ಜೈಲಿನಲ್ಲಿ ಪ್ರತ್ಯೇಕ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಜೈಲಿನಲ್ಲಿಯೂ ದರ್ಶನ್ ನ ನೋಡಲು ಅಭಿಮಾನಿಗಳು ಕಾತರದಿದ ಕಾಯುತ್ತಿದ್ದಾರೆ. ಅದೂ ಕೂಡ ಪೊಲೀಸ್ ಅಭಿಮಾನಿಗಳು ಎಂಬುದು ವಿಶೇಷ. ನಟ ದರ್ಶನ್ ಅಭಿಮಾನಿಗಳಾಗಿರುವ ಕೆಲ ಪೊಲೀಸರು ಜೈಲಿನಲ್ಲಿ ದರ್ಶನ್ ನನ್ನು ಭೇಟಿಯಾಗಲು ಹೋಗಿ ಸಿಕ್ಕಿ ಬಿದ್ದಿದ್ದಾರೆ. ಕದ್ದುಮುಚ್ಚಿ ದರ್ಶನ್ ನನ್ನು […]

ಕನ್ನಡ ದುನಿಯಾ 30 Jan 2026 4:47 pm

ಟಿ-20 ವಿಶ್ವಕಪ್ ಮತ್ತು ಬಾಂಗ್ಲಾದೇಶ ತಂಡದ ಹಿಟ್ ವಿಕೆಟ್!

ಅಂತಿಮವಾಗಿ ಬಾಂಗ್ಲಾದೇಶ ಐಸಿಸಿ ಟಿ-20 ವಿಶ್ವಕಪ್‌ ಟೂರ್ನಿಯಿಂದ ಹೊರ ಹೋಗಿದೆ. ಭಾರತ ಮತ್ತು ಶ್ರೀಲಂಕಾ ಆಯೋಜಿಸುತ್ತಿರುವ ಟಿ-20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಬದಲು ಸ್ಕಾಟ್ಲೆಂಡ್ ಆಡಲಿದೆ. ರಾಜಕೀಯ ಕಾರಣ, ಚುನಾವಣೆಗಳ ಮೇಲೆ ಕಣ್ಣಿಟ್ಟು ಸ್ಥಳೀಯ ಮತದಾರರ ಓಲೈಕೆಗೆ ಹೋದ ತಂಡ ಪಾಕಿಸ್ತಾನದ ಬೆಂಬಲ ಪಡೆದರೂ ಸಹ ಐಸಿಸಿ ಅಸಮಾಧಾನಕ್ಕೆ ಕಾರಣವಾಗಿ ಟೂರ್ನಿಯಿಂದ ದೂರವಾಗಿದೆ ಮತ್ತು ಭಾರೀ ನಷ್ಟ ಅನುಭವಿಸಿದೆ. ಇದು ಹಣ ಮತ್ತು ಉತ್ತಮ ಅವಕಾಶವನ್ನು ಕೈ ಚೆಲ್ಲಿದಂತೆ ಎಂದು ವಿಶ್ಲೇಷಿಸಲಾಗುತ್ತಿದೆ. ರಾಜಕೀಯದಕ್ಕೆ ಕ್ರೀಡೆ ಬಲಿ: ಇವೆಲ್ಲವೂ ಪ್ರಾರಂಭವಾಗಿದ್ದು […]

ಕನ್ನಡ ದುನಿಯಾ 30 Jan 2026 4:38 pm

‘ಮರ್ದಾನಿ 3’ ಮೊದಲ ಪ್ರತಿಕ್ರಿಯೆಗಳು: ರಾಣಿ ಮುಖರ್ಜಿ ಅಪ್ರತಿಮ ಎಂದ ನೆಟ್ಟಿಗರು

ಮರ್ದಾನಿ 3 ಮೊದಲ ಪ್ರತಿಕ್ರಿಯೆಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸುತ್ತಿದ್ದು, ಬಾಲಿವುಡ್‌ನ ಶಕ್ತಿಶಾಲಿ ಮಹಿಳಾ ಪಾತ್ರಗಳ ಪಟ್ಟಿಗೆ ಮತ್ತೊಂದು ಗಟ್ಟಿಯಾದ ಸೇರ್ಪಡೆ ಆಗುತ್ತಿದೆ. ವಿಶೇಷವಾಗಿ ಮುಖ್ಯ ಪಾತ್ರದಲ್ಲಿ ನಟಿಸಿರುವ Rani Mukerji ಅವರ ಅಭಿನಯವನ್ನು ಇಂಟರ್‌ನೆಟ್ ಬಳಕೆದಾರರು ಮುಕ್ತ ಮನಸ್ಸಿನಿಂದ ಶ್ಲಾಘಿಸುತ್ತಿದ್ದಾರೆ. ಈ ಹಿಂದೆ ಬಿಡುಗಡೆಯಾದ ‘ಮರ್ದಾನಿ’ ಸರಣಿಯ ಎರಡೂ ಭಾಗಗಳು ಮಹಿಳಾ ಪ್ರಧಾನ ಪೊಲೀಸ್ ಕಥಾನಕಕ್ಕೆ ಹೊಸ ದಿಕ್ಕು ನೀಡಿದ್ದವು. ಇದೀಗ Mardaani 3 ಮೂಲಕ ಆ ಪರಂಪರೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನ […]

ಕನ್ನಡ ದುನಿಯಾ 30 Jan 2026 4:34 pm

BIG NEWS: ಗುತ್ತಿಗೆದಾರರ ಬಾಕಿ ಬಿಲ್ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಗುತ್ತಿಗೆದಾರರ ಬಾಕಿ ಬಿಲ್ ಪಾಅವತಿಸುವಂತೆ ಒತ್ತಾಯಿಸಿ ರಾಅಜ್ಯ ಗುತ್ತಿಗೆದಾರರ ಸಂಘಟನೆ ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅದು ಬಿಜೆಪಿ ಅವಧಿಯದ್ದು ಎಂದಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟುಹೋಗಿದ್ದಾರೆ ಎಂದು ತಿಳಿಸಿದರು. ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಮಾಡುವಂತೆ ರಾಜ್ಯ ಗುತ್ತಿಗೆದಾರರ ಸಂಘಟನೆ ಮತ್ತೆ […]

ಕನ್ನಡ ದುನಿಯಾ 30 Jan 2026 4:13 pm

ವ್ಯಸನದಿಂದ ಮುಕ್ತಿ ಪಡೆದ ಸುನೈನಾ ರೋಷನ್: ಬದುಕಿನ ಕಠಿಣ ಹೋರಾಟದ ಬಗ್ಗೆ ಕಣ್ಣೀರು ಹಾಕಿದ ನಟನ ತಂಗಿ

ಬಾಲಿವುಡ್ ಸ್ಟಾರ್ ನಟ ಹೃತಿಕ್ ರೋಷನ್ ಅವರ ಸಹೋದರಿ ಸುನೈನಾ ರೋಷನ್ ಅವರು ತಾವು ಅನುಭವಿಸಿದ ಮದ್ಯವ್ಯಸನ ಮತ್ತು ಜಂಕ್ ಫುಡ್ ಚಟದಿಂದ ಹೊರಬಂದ ಕಠಿಣ ಹಾದಿಯ ಬಗ್ಗೆ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು, ವ್ಯಸನ ಎನ್ನುವುದು ಮನುಷ್ಯನ ಜೀವನವನ್ನು ಹೇಗೆ ಹೈರಾಣಾಗಿಸುತ್ತದೆ ಎಂಬುದನ್ನು ವಿವರಿಸಿದ್ದಾರೆ. ಸುನೈನಾ ಅವರು ತಮ್ಮ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನದಲ್ಲಿ ಹಲವು ಏರಿಳಿತಗಳನ್ನು ಕಂಡವರು. ಒಂದು ಕಾಲದಲ್ಲಿ ಅವರು ಅತಿಯಾದ ಮದ್ಯಪಾನ ಹಾಗೂ […]

ಕನ್ನಡ ದುನಿಯಾ 30 Jan 2026 4:00 pm

BREAKING : ಋತುಸ್ರಾವ ನೈರ್ಮಲ್ಯ ಮೂಲಭೂತ ಹಕ್ಕು : ಉಚಿತ ‘ಸ್ಯಾನಿಟರಿ ಪ್ಯಾಡ್’ವಿತರಣೆಗೆ ಸುಪ್ರೀಂಕೋರ್ಟ್ ಆದೇಶ.!

ನವದೆಹಲಿ : ‘ಋತುಸ್ರಾವ ನೈರ್ಮಲ್ಯ’ (Menstrual Hygiene) ಕೇವಲ ಆರೋಗ್ಯದ ವಿಷಯವಲ್ಲ, ಅದು ಮಹಿಳೆಯರ ಮೂಲಭೂತ ಹಕ್ಕು ಮತ್ತು ಗೌಪ್ಯತೆಯ ಹಕ್ಕಿನ ಅವಿಭಾಜ್ಯ ಅಂಗವಾಗಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ ಋತುಚಕ್ರದ ನೈರ್ಮಲ್ಯದ ಹಕ್ಕು (Right to Menstrual Hygiene) ಸಂವಿಧಾನದ 21ನೇ ವಿಧಿಯಡಿ ಬದುಕುವ ಹಕ್ಕು ಮತ್ತು ಗೌಪ್ಯತೆಯ ಹಕ್ಕಿನ ಅವಿಭಾಜ್ಯ ಅಂಗವಾಗಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಹೆಣ್ಣುಮಕ್ಕಳು ಮತ್ತು ಮಹಿಳೆಯರ ಘನತೆ, ಆರೋಗ್ಯ ಮತ್ತು […]

ಕನ್ನಡ ದುನಿಯಾ 30 Jan 2026 3:50 pm

ಪದ್ಮ ಪ್ರಶಸ್ತಿಯನ್ನು ನಿರಾಕರಿಸಿದ್ದ ಗಾಯಕಿ ಎಸ್. ಜಾನಕಿ.! ಇಲ್ಲಿದೆ ಇಂಟರೆಸ್ಟಿಂಗ್ ವಿಚಾರ

ದೇಶದಲ್ಲಿ ಪದ್ಮ ನಾಗರಿಕ ಪ್ರಶಸ್ತಿಗಳಿಗೆ ಎಷ್ಟು ಗೌರವ ಮತ್ತು ಮನ್ನಣೆ ಇದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಪ್ರಶಸ್ತಿಗಾಗಿ ತಮ್ಮ ಜೀವನವಿಡೀ ತಪಸ್ಸು ಮಾಡುವವರು ಅನೇಕರಿದ್ದಾರೆ. ಪ್ರಶಸ್ತಿ ಲಭಿಸಿದಾಗ, ತಾವು ಜೀವನಪರ್ಯಂತ ಪಟ್ಟ ಕಷ್ಟಕ್ಕೆ ಮತ್ತು ತಮ್ಮ ವೃತ್ತಿಗೆ ದೊರೆತ ಅತ್ಯುನ್ನತ ಗೌರವ ಎಂದು ಭಾವಿಸುವವರೇ ಹೆಚ್ಚು. ಆದರೆ, ಇಂತಹ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದರೂ ಸಹ, ಅದನ್ನು ‘ಬೇಡ’ ಎಂದು ನಯವಾಗಿ ನಿರಾಕರಿಸಿದ ಅಪರೂಪದ ವ್ಯಕ್ತಿಗಳೂ ಇದ್ದಾರೆ. ಅವರಲ್ಲಿ ದಕ್ಷಿಣ ಭಾರತದ ದಂತಕಥೆ, ದಶಕಗಳ ಕಾಲ […]

ಕನ್ನಡ ದುನಿಯಾ 30 Jan 2026 3:33 pm

BREAKING : ಹೈಜಾಕ್ ಬೆದರಿಕೆ : ಕುವೈತ್’ನಿಂದ ದೆಹಲಿಗೆ ಹೊರಟ್ಟಿದ್ದ ‘ಇಂಡಿಗೋ ವಿಮಾನ’ತುರ್ತು ಭೂ ಸ್ಪರ್ಶ.!

ಅಹಮದಾಬಾದ್ : ಕುವೈತ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೈಜಾಕ್ ಮತ್ತು ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ಹಿನ್ನೆಲೆಯಲ್ಲಿ, ಶುಕ್ರವಾರ ಮುಂಜಾನೆ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾದ ಘಟನೆ ನಡೆದಿದೆ. ವಿಮಾನದಲ್ಲಿದ್ದ ಟಿಶ್ಯೂ ಪೇಪರ್ ಒಂದರ ಮೇಲೆ ‘ವಿಮಾನವನ್ನು ಹೈಜಾಕ್ ಮಾಡಿ ಸ್ಫೋಟಿಸಲಾಗುವುದು’ ಎಂಬ ಕೈಬರಹದ ಬೆದರಿಕೆ ಪತ್ತೆಯಾದ ತಕ್ಷಣ ಪೈಲಟ್‌ಗಳು ಎಚ್ಚೆತ್ತುಕೊಂಡರು. ಕೂಡಲೇ ವಿಮಾನವನ್ನು ಅಹಮದಾಬಾದ್‌ಗೆ ತಿರುಗಿಸಲು ನಿರ್ಧರಿಸಲಾಯಿತು. ಬೆಳಿಗ್ಗೆ ಸುಮಾರು 6:40ಕ್ಕೆ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ […]

ಕನ್ನಡ ದುನಿಯಾ 30 Jan 2026 3:19 pm

ಈಗ ಲೋಕಸಭೆ ಚುನಾವಣೆ ನಡೆದರೆ ಯಾರಿಗೆ ಅಧಿಕಾರ?: ಅಚ್ಚರಿಯ ಸಮೀಕ್ಷೆ ವರದಿ!

5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ತಯಾರಿ ನಡೆಸಿದೆ. ಆದರೆ ಈಗ ಲೋಕಸಭೆ ಚುನಾವಣೆ ನಡೆದರೆ ಯಾರಿಗೆ ಅಧಿಕಾರ ಸಿಗಲಿದೆ?. 2024ರ ಚುನಾವಣೆ ಫಲಿತಾಂಶಕ್ಕಿಂತ ಹೆಚ್ಚಿನ ಸೀಟು ಯಾರಿಗೆ ಬರಲಿದೆ?. India Today-CVoter Mood of the Nation ಸಮೀಕ್ಷೆ ವರದಿ ಜನವರಿ 2026 ಪ್ರಕಟವಾಗಿದೆ. ಸಮೀಕ್ಷೆ ವರದಿಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎ ಮೈತ್ರಿಕೂಟದ ಪ್ರಭಾವ ಹೆಚ್ಚಿದ್ದು 352 ಸೀಟುಗಳಲ್ಲಿ ಮೈತ್ರಿಕೂಟ ಜಯಗಳಿಸಲಿದೆ. ಬಿಜೆಪಿ ಏಕಾಂಗಿಯಾಗಿ 287 ಸೀಟು ಗೆಲ್ಲಲಿದೆ. ಜಾಗತಿಕ […]

ಕನ್ನಡ ದುನಿಯಾ 30 Jan 2026 3:15 pm

BREAKING: ಮಗನಿಂದಲೇ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ

ವಿಜಯನಗರ: ಮಗನೇ ತಂದೆ, ತಾಯಿ ಹಾಗೂ ಸಹೋದರಿ ಮೂವರನ್ನು ಹತ್ಯೆಗೈರುವ ಘಟನೆ ವಿಜಯನಗರದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮಗನೇ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನು ಕೊಲೆಗೈದು ಬಳಿಕ ಬೆಗಳೂರಿಗೆ ಪರಾರಿಯಾಗಿದಾನೆ. ಕೊಲೆ ಬಳಿಕ ಬೆಂಗಳೂರಿಗೆ ಬಂದ ಆರೋಪಿ, ತಿಲಕನಗರ ಠಾಣೆಯಲ್ಲಿ ತಂದೆ, ತಾಯಿ, ಸಹೋದರಿ ಮೂವರು ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದಾನೆ. ಬಳಿಕ ಪೊಲೀಸರು ಆತನನ್ನು ವಿಚಾರಿಸಿದ್ದಾಗ ತಾನೇ ಮೂವರನ್ನು ಕೊಲೆಗೈದಿರುವುದಾಗಿ ಅಸ್ಪಷ್ಟವಾಗಿ ಮಾಹಿತಿ ನೀಡಿದ್ದಾನೆ. ಆತನನ್ನು ವಶಕ್ಕೆ […]

ಕನ್ನಡ ದುನಿಯಾ 30 Jan 2026 3:11 pm

JOB ALERT : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶ, ಕೂಡಲೇ ಅರ್ಜಿ ಸಲ್ಲಿಸಿ.!

ಬಳ್ಳಾರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26ನೇ ಸಾಲಿನ ಪೋಷಣ್ ಅಭಿಯಾನ 2.0 ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನೆ ಸಂಡೂರು ತಾಲ್ಲೂಕಿನಲ್ಲಿ ಖಾಲಿಯಿರುವ 01-ಸಂಯೋಜಕರ ಹುದ್ದೆಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಡೂರು ಪಟ್ಟಣದ ಪಶು ಸಂಗೋಪನಾ ಆಸ್ಪತ್ರೆ ಮುಂಭಾಗದ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಫೆ.19 ರೊಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಇದೇ ಕಚೇರಿಗೆ ಸಲ್ಲಿಸಬೇಕು. ಕೊನೆಯ ದಿನಾಂಕದ […]

ಕನ್ನಡ ದುನಿಯಾ 30 Jan 2026 3:03 pm

SHOCKING : ‘ಕೋತಿ’ಎಂದು ಅಪಹಾಸ್ಯ ಮಾಡಿದ ಪತಿ,  ಮನನೊಂದು ಪತ್ನಿ ಆತ್ಮಹತ್ಯೆ !

ಪತಿ ತನ್ನನ್ನು ‘ಕೋತಿ’ ಎಂದು ಅಪಹಾಸ್ಯ ಮಾಡಿದ್ದರಿಂದ ಮನನೊಂದ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಈ ಘಟನೆಯು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಪತಿಯ ಒಂದು ಮಾತು ಪತ್ನಿಯ ಪ್ರಾಣವನ್ನೇ ಬಲಿಪಡೆಯಿತೇ ? ತನ್ನನ್ನು ಅಪಹಾಸ್ಯ ಮಾಡಿದ ಪತಿಯ ಮಾತಿನಿಂದ ಮನನೊಂದು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಅತ್ಯಂತ ಕ್ಷುಲ್ಲಕ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಪತಿ ತನ್ನನ್ನು ತಮಾಷೆಯಾಗಿ ‘ಕೋತಿ’ […]

ಕನ್ನಡ ದುನಿಯಾ 30 Jan 2026 2:49 pm

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘SBI’ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI Recruitment 2026

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2,273 ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ 211 ಹುದ್ದೆಗಳು ಲಭ್ಯವಿದ್ದು, ಅರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಇರುವ ತನ್ನ ವಿವಿಧ ಸರ್ಕಲ್‌ಗಳಲ್ಲಿ ಖಾಲಿ ಇರುವ ಒಟ್ಟು 2,273 ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಯ ವಿವರಗಳು: 2. ಶೈಕ್ಷಣಿಕ ಅರ್ಹತೆ: 3. ವಯೋಮಿತಿ (31-12-2025ಕ್ಕೆ ಅನ್ವಯಿಸುವಂತೆ): 4. […]

ಕನ್ನಡ ದುನಿಯಾ 30 Jan 2026 2:35 pm

‘ರಾಜ್ಯ ಸರ್ಕಾರಿ’ನೌಕರರ ಗಮನಕ್ಕೆ : ‘ಆರೋಗ್ಯ ಸಂಜೀವಿನಿ’ಯೋಜನೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಕರ್ನಾಟಕದ ಸರ್ಕಾರಿ ನೌಕರರ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದಿರುವ ಆರೋಗ್ಯ ಸಂಜೀವಿನಿ ಯೋಜನೆ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹೌದು.. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ (KASS) ಸೇರಲು ಅಥವಾ ಹೊರಗುಳಿಯಲು (Opt-in/Opt-out) ಅಭಿಮತ ನೀಡುವ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು (opt-in) ಅಥವಾ ಒಳಪಡದೇ (Opt-Out) ಇರುವ ಬಗ್ಗೆ ಲಿಖಿತ ಅಭಿಮತವನ್ನು ಸಂಬಂಧಪಟ್ಟ ಡಿ.ಡಿ.ಓ.ಗಳಿಗೆ ಸಲ್ಲಿಸಲು ಕೊನೆಯ ಬಾರಿಯ ಅವಕಾಶವಾಗಿ, […]

ಕನ್ನಡ ದುನಿಯಾ 30 Jan 2026 2:05 pm

ಉಕ್ರೇನ್-ರಷ್ಯಾ ಕದನ ವಿರಾಮ: ಡೊನಾಲ್ಡ್‌ ಟ್ರಂಪ್ ಮಹತ್ವದ ಘೋಷಣೆ

ಉಕ್ರೇನ್-ರಷ್ಯಾಯದ್ಧದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಸ್ವತಃ ಟ್ರಂಪ್ ಈ ಕುರಿತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಮಾತುಕತೆ ನಡೆಸಿದ್ದಾರೆ. ಸುಮಾರು ವರ್ಷಗಳಿಂದ ಉಭಯ ದೇಶಗಳ ನಡುವೆ ಯುದ್ಧ ನಡೆಯುತ್ತಿದೆ. ಉಕ್ರೇನ್ ರಾಜಧಾನಿ ಕೀವ್ ಮತ್ತು ಇತರ ಪಟ್ಟಣಗಳನ್ನು ಗುರಿಯಾಗಿಸಿಕೊಂಡು ಒಂದು ವಾರದ ತನಕ ದಾಳಿಗಳನ್ನು ಮಾಡುವುದಿಲ್ಲ. ಒಂದು ವಾರದ ಕದನ ವಿರಾಮ ನೀಡಲು ಪುಟಿನ್ ಒಪ್ಪಿಕೊಂಡಿದ್ದಾರೆ ಎಂದು ಟ್ರಂಪ್ ಘೋಷಣೆ ಮಾಡಿದ್ದಾರೆ. ಈ ಪ್ರದೇಶಗಳಲ್ಲಿ ಭಾರೀ ಚಳಿ ಇದ್ದು, […]

ಕನ್ನಡ ದುನಿಯಾ 30 Jan 2026 2:02 pm

ಮನರೇಗಾ ಯೋಜನೆ ಸ್ವರೂಪವೇ ಬದಲು: ಶ್ರಮಜೀವಿಗಳ ಸಂವಿಧಾನ ಬದ್ಧ ಹಕ್ಕಿಗೆ ಕೊಡಲಿ ಏಟು ಹಾಕಿದ ಕೇಂದ್ರ ಸರ್ಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

ಶಿವಮೊಗ್ಗ : ನರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರ ಶ್ರಮಜೀವಿಗಳಿಗೆ ಆಶ್ರಯವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಕೊಡಲಿ ಪೆಟ್ಟು ಹಾಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನರೇಗಾ ಯೋಜನೆಯ ಸ್ವರೂಪ ಬದಲಿಸುವ ವೇಳೆ ಒಕ್ಕೂಟದ ವ್ಯವಸ್ಥೆಯಲ್ಲಿ ರಾಜ್ಯಗಳ ಜೊತೆ ಚರ್ಚೆ ನಡೆಸಬೇಕಿತ್ತು. ಆದರೆ ಕೇಂದ್ರ ಹಾಗೆ ಮಾಡಿಲ್ಲ ಎಂದರು. […]

ಕನ್ನಡ ದುನಿಯಾ 30 Jan 2026 1:57 pm

JOB ALERT : ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ : ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ ? ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೌದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಬ್ಯಾಕೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆ. 02 […]

ಕನ್ನಡ ದುನಿಯಾ 30 Jan 2026 1:48 pm

ಕೈದಿ ಬಾಯ್‌ಫ್ರೆಂಡ್ ಹುಟ್ಟುಹಬ್ಬಕ್ಕೆ ಜೈಲೊಳಗೆ ವಿಡಿಯೋ ಶೂಟ್: ಪೊಲೀಸರ ಕಣ್ತಪ್ಪಿಸಿ ಮೊಬೈಲ್ ಕೊಂಡೊಯ್ದ ಯುವತಿ

ಛತ್ತೀಸ್‌ಗಢದ ರಾಯ್‌ಪುರ ಕೇಂದ್ರ ಕಾರಾಗೃಹವು ಮತ್ತೊಮ್ಮೆ ಭಾರಿ ವಿವಾದಕ್ಕೆ ಸಿಲುಕಿದೆ. ಜೈಲಿನ ಕಟ್ಟುನಿಟ್ಟಿನ ಭದ್ರತಾ ನಿಯಮಗಳನ್ನು ಗಾಳಿಗೆ ತೂರಿರುವ ಯುವತಿಯೊಬ್ಬಳು, ಕೈದಿಯಾಗಿರುವ ತನ್ನ ಪ್ರಿಯಕರನ ಭೇಟಿಯ ವೇಳೆ ಜೈಲಿನ ಆವರಣದೊಳಗೇ ಕುಳಿತು ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾಳೆ. NDPS ಕಾಯ್ದೆಯಡಿ ಜೈಲು ಪಾಲಾಗಿರುವ ತಾರ್ಕೇಶ್ವರ್ ಎಂಬ ವಿಚಾರಣಾಧೀನ ಕೈದಿಯ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಯುವತಿ ಆತನನ್ನು ಭೇಟಿ ಮಾಡಲು ಜೈಲಿಗೆ ಬಂದಿದ್ದಳು. ಜೈಲಿನ ಸಂದರ್ಶಕರ ಕೊಠಡಿಯಲ್ಲೇ ಮೊಬೈಲ್ ಬಳಸಿ ವಿಡಿಯೋ ಮಾಡಿರುವ ಆಕೆ, “ಇಂದು […]

ಕನ್ನಡ ದುನಿಯಾ 30 Jan 2026 1:45 pm

ಹೋಂ ವರ್ಕ್ ಮಾಡಿಲ್ಲ ಎಂದು ಬಾಲಕನಿಗೆ ಬಾಸುಂಡೆ ಬರುವಂತೆ ಹೊಡೆದ ಪ್ರಕರಣ: ಶಿಕ್ಷಕಿಯನ್ನು ವಜಾಗೊಳಿಸಿದ ಶಾಲಾ ಆಡಳಿತ ಮಂಡಳಿ

ಬೆಂಗಳೂರು: ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು 4 ನೇ ತರಗತಿ ವಿದ್ಯಾರ್ಥಿಯ ಮೇಲೆ ಮನಬಂದಂತೆ ಹೊಡೆದು ಬಾಸುಂಡೆ ಬರಿಸಿದ್ದೂ ಅಲ್ಲದೇ, ಮನೆಯಲ್ಲಿ ಹೇಳಿದರೆ ಕತ್ತು ಹಿಸುಕುವುದಾಗಿ ಬೆದರಿಕೆ ಹಾಕಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿತ್ತು. ವಿದ್ಯಾರ್ಥಿಯ ಮೇಲೆ ಶಿಕ್ಷಕಿಯ ಕ್ರೂರ ವರ್ತನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಬಾಲಕನ ತಾಯಿ ಬಿಇಒ ಅವರಿಗೂ ದೂರು ನೀಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ ಶಿಕ್ಷಕಿಯನ್ನು ಶಾಲೆಯಿಂದ ವಜಾಗೊಳಿಸಿದೆ. ಶಿಕ್ಷಕಿ ಆಂಗ್ಲಿನ್ […]

ಕನ್ನಡ ದುನಿಯಾ 30 Jan 2026 1:42 pm

ಮಹಿಳೆಯರು ‘ಗ್ರೀನ್ ಟೀ’ ಕುಡಿಯುವುದರಿಂದ ಸಿಗುವ ಪ್ರಯೋಜನಗಳು , ಪರಿಣಾಮಗಳನ್ನು ತಿಳಿಯಿರಿ

ಗ್ರೀನ್ ಟೀ ಮಹಿಳೆಯರ ಆರೋಗ್ಯಕ್ಕೆ ಅಮೃತವೋ ಅಥವಾ ವಿಷವೋ ? ತೂಕ ಇಳಿಕೆ ಮತ್ತು ಪಿಸಿಓಎಸ್ (PCOS) ನಿಯಂತ್ರಣಕ್ಕೆ ಇದು ಹೇಗೆ ಸಹಕಾರಿ ? ಗ್ರೀನ್ ಟೀ ಕುಡಿಯುವ ಸರಿಯಾದ ಸಮಯ ಮತ್ತು ವಿಧಾನ ಯಾವುದು.. ಮಹಿಳೆಯರು ಪ್ರತಿದಿನ ಗ್ರೀನ್ ಟೀ ಕುಡಿಯುವುದರಿಂದ ತೂಕ ಇಳಿಕೆ ಮತ್ತು ಚರ್ಮದ ಸೌಂದರ್ಯಕ್ಕೆ ಸಿಗುವ ಲಾಭಗಳೇನು ? ಅತಿಯಾದ ಸೇವನೆಯಿಂದ ಆಗುವ ಅಡ್ಡಪರಿಣಾಮಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ . ಹೌದು. ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರು […]

ಕನ್ನಡ ದುನಿಯಾ 30 Jan 2026 1:31 pm

BIG NEWS: ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಬಿಜಿಪಿ ಸಂಸದರ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವ್ಯಂಗ್ಯ

ಶಿವಮೊಗ್ಗ: ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ಧ್ವನಿ ಎತ್ತಿಲ್ಲ. ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗದ ಸರ್ಕಿಟ್‌ ಹೌಸ್‌ ಬಳಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಕೇಂದ್ರ ಬಜೆಟ್‌ ಬಗೆಗಿನ ನಿರೀಕ್ಷೆ ವಿಚಾರವಾಗಿ ಕೇಂದ್ರ ಬಜೆಟ್‌ ನಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು […]

ಕನ್ನಡ ದುನಿಯಾ 30 Jan 2026 1:25 pm